ಡ್ರಗ್ಸ್ ಪ್ರಕರಣ: ಕಾಂಗ್ರೆಸ್ ನಿಂದ ಲಿಂಗರಾಜ್ ಕಣ್ಣಿ ಪಕ್ಷದಿಂದ ಉಚ್ಚಾಟನೆ
ಕಲಬುರಗಿ: ಡ್ರಗ್ಸ್ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸರು ಕಲಬುರಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿ ಅವರನ್ನು ಸೋಮವಾರ ಬಂಧಿಸಿದ್ದಾರೆ. ಬಂಧನದ ಬೆನ್ನಲ್ಲೇ ಕಲಬುರಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. “ಗುಲ್ಬರ್ಗ ದಕ್ಷಿಣ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲಿಂಗರಾಜ್ ಕಣ್ಣಿ ಅವರು ಮಾದಕ ದ್ರವ್ಯ ಮಾರಾಟದಲ್ಲಿ ಭಾಗಿಯಾಗಿದ್ದಾರೆಂಬ ಆರೋಪ ಬಂದ ನಂತರ ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅವರನ್ನು ಉಚ್ಚಾಟಿಸಲಾಗಿದೆ” ಎಂದು ಕಲಬುರಗಿ […]
3 ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಕ
ನವದೆಹಲಿ: ಲಡಾಖ್ ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ಬ್ರಿಗೇಡಿಯರ್(ಡಾ) ಬಿ.ಡಿ. ಮಿಶ್ರಾ(ನಿವೃತ್ತ) ಅವರು ನೀಡಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ಅಂಗೀಕರಿಸಿದ್ದಾರೆ.ಇದೇ ವೇಳೆ ರಾಷ್ಟ್ರಪತಿಗಳು, ಲಡಾಖ್ಗೆ ಹೊಸ ಲೆಫ್ಟಿನೆಂಟ್ ಗವರ್ನರ್ ಹಾಗೂ ಹರಿಯಾಣ ಮತ್ತು ಗೋವಾ ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಹರಿಯಾಣದ ನೂತನ ರಾಜ್ಯಪಾಲರಾಗಿ ಪ್ರೊ. ಆಶಿಮ್ ಕುಮಾರ್ ಘೋಷ್ ಅವರನ್ನು ಹಾಗೂ ಗೋವಾ ರಾಜ್ಯಪಾಲರಾಗಿ ಪುಸಪತಿ ಅಶೋಕ್ ಗಜಪತಿ ರಾಜು […]
ನಿತೀಶ್ ಕುಮಾರ್ ಸೀಟು ಉಳಿಸಿಕೊಳ್ಳುವಲ್ಲಿ ಬ್ಯುಸಿಯಾಗಿದ್ದಾರೆ; ರಾಹುಲ್ ಗಾಂಧಿ
ನವದೆಹಲಿ: ಬಿಹಾರದ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ‘ಭಾರತದ ಅಪರಾಧ ರಾಜಧಾನಿ’ಯಾಗಿ ಮಾರ್ಪಟ್ಟಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ನಿರತರಾಗಿದ್ದಾರೆ ಮತ್ತು ಬಿಜೆಪಿ ಸಚಿವರು ಕಮಿಷನ್ಗಳಲ್ಲಿ ತೊಡಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ದೂರಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ 11 ದಿನಗಳಲ್ಲಿ 31 ಕೊಲೆಗಳು ಮತ್ತು ರಾಜ್ಯದಲ್ಲಿ ‘ಕಾಂಟ್ರ್ಯಾಕ್ಟ್ ಹತ್ಯೆ’ ಬಗ್ಗೆ ಸೂಚಿಸುವ ಮಾಧ್ಯಮ ವರದಿಗಳ ಸ್ಕ್ರೀನ್ಶಾಟ್ಗಳನ್ನು X ನಲ್ಲಿ ಹಂಚಿಕೊಂಡಿದ್ದು, ‘ಬಿಹಾರ ‘ಭಾರತದ ಅಪರಾಧ ರಾಜಧಾನಿ’ಯಾಗಿದೆ. ರಾಜ್ಯದ […]
ಗ್ಲಾಂಜಾ ಪ್ರೆಸ್ಟೀಜ್ ಎಡಿಷನ್ ಅನಾವರಣ ಮಾಡಿದ ಟೊಯೋಟಾ …..!
ಬೆಂಗಳೂರು: ಟೊಯೋಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಕಂಪನಿಯು ಇಂದು ತನ್ನ ಹ್ಯಾಚ್ ಬ್ಯಾಕ್ ವಾಹನವಾದ ಟೊಯೋಟಾ ಗ್ಲಾಂಜಾದಲ್ಲಿ ಎರಡು ಮಹತ್ವದ ನವೀಕರಣಗಳನ್ನು ಮಾಡಿರುವುದಾಗಿ ಘೋಷಿಸಿದ್ದು, ಈ ಮೂಲಕ ಗ್ರಾಹಕರಿಗೆ ಹೆಚ್ಚಿನ ಸುರಕ್ಷತೆಯನ್ನು ಮತ್ತು ಹೆಚ್ಚಿನ ಪ್ರಯೋಜನವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಗ್ಲಾಂಜಾದ ಎಲ್ಲಾ ವೇರಿಯಂಟ್ ಗಳಲ್ಲಿ ಆರು ಏರ್ಬ್ಯಾಗ್ ಗಳು ಸ್ಟ್ಯಾಂಡರ್ಡ್ ಗ್ರಾಹಕರಿಗೆ ಹೆಚ್ಚಿನ ಸುರಕ್ಷತೆಯನ್ನು ಒದಗಿಸಲು ಬದ್ಧವಾಗಿರುವ ಟೊಯೋ ಟಾ ಸಂಸ್ಥೆಯು ತನ್ನ ಟೊಯೋಟಾ ಗ್ಲಾಂಜಾದ ಎಲ್ಲಾ ವೇರಿಯಂಟ್ ಗಳಲ್ಲಿ ಆರು […]
ಪುಟಿನ್ ಹಗಲು ಚೆನ್ನಾಗಿ ಮಾತನಾಡಿ ರಾತ್ರಿ ಬಾಂಬ್ ಹಾಕ್ತಾರೆ : ಟ್ರಂಪ್
ವಾಷಿಂಗ್ಟನ್: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Russian President Vladimir Putin) ಹಗಲಿನಲ್ಲಿ ಚೆನ್ನಾಗಿ ಮಾತನಾಡಿ ಬಳಿಕ ರಾತ್ರಿ ಬಾಂಬ್ ಹಾಕುತ್ತಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (US President Donald Trump) ಹೇಳಿದ್ದಾರೆ. ಉಕ್ರೇನ್ (Ukraine) ಮೇಲೆ ರಷ್ಯಾ ನಡೆಸುತ್ತಿರುವ ದಾಳಿ ಬಗ್ಗೆ ವರದಿಗಾರೊಂದಿಗೆ ಮಾತನಾಡಿದ ಟ್ರಂಪ್, ರಷ್ಯಾದ ಅಧ್ಯಕ್ಷರು ಒಂದೊಂದು ಬಾರಿ ಒಂದೊಂದು ರೀತಿ ಮಾತನಾಡುತ್ತಾರೆ. ಅವರು ತುಂಬಾ ನಿರಾಶೆಗೊಂಡಿದ್ದಾರೆ. ಅವರ ಹೇಳಿಕೆಗೆ ಅರ್ಥವಿದೆ ಎಂದು ನಾನು ಭಾವಿಸಿದ್ದೆ. ಆದರೆ […]
ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ದ್ವೇಷದ ಭಾಷಣ ನಿಯಂತ್ರಿಸಿ: ಸುಪ್ರೀಂ
ನವದೆಹಲಿ: ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ದ್ವೇಷದ ಭಾಷಣ ನಿಯಂತ್ರಿಸುವಂತೆ ಕೇಂದ್ರ ಸರ್ಕಾರ ಹಾಗೂ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಸೋಮವಾರ ಸೂಚಿಸಿದೆ.ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಶರ್ಮಿಷ್ಠ ಪನೋಲಿ ವಿರುದ್ಧದ ಪ್ರಕರಣದ ದೂರುದಾರ ವಜಾಹತ್ ಖಾನ್ ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಕೋರ್ಟ್ ಈ ರೀತಿಯ ಸಲಹೆ ನೀಡಿದೆ. ದ್ವೇಷದ ಭಾಷಣವನ್ನು ‘ಅಭಿವ್ಯಕ್ತಿ ಸ್ವಾತಂತ್ರ್ಯ’ ಎಂದು ಹೇಳುವುದಕ್ಕೆ ವಿಷಾದ ವ್ಯಕ್ತಪಡಿಸಿದ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಮತ್ತು ನ್ಯಾಯಮೂರ್ತಿ ಕೆ.ವಿ.ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯಪೀಠ, ಅದನ್ನು ನಿಯಂತ್ರಿಸಲು ರಾಜ್ಯವು ಮುಂದಾಗುವುದನ್ನು ಯಾರೂ ಬಯಸುವುದಿಲ್ಲ. ಹೀಗಾಗಿ […]
ನಕಲಿ ನೋಟು ತಯಾರಕರ ಟಾರ್ಗೆಟ್ ಯಾವುದು ಗೊತ್ತಾ…..!
ನವದೆಹಲಿ: 2016ರ ನವೆಂಬರ್ನಲ್ಲಿ ಪರಿಚಯಿಸಲಾದ ಹೊಸ ₹500 ನೋಟು, ನಕಲಿ ನೋಟು (Fake Currency) ತಯಾರಕರ ಪ್ರಮುಖ ಟಾರ್ಗೆಟ್ ಆಗಿದೆ. 2024-25ರಲ್ಲಿ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ (Banking System) ಪತ್ತೆಯಾದ ಒಟ್ಟು 2.17 ಲಕ್ಷ ನಕಲಿ ಭಾರತೀಯ ಕರೆನ್ಸಿ ನೋಟುಗಳ (FICN) ಪೈಕಿ 54% (1.17 ಲಕ್ಷ) ಹೊಸ ಮಹಾತ್ಮ ಗಾಂಧಿ ಸರಣಿಯ (Mahatma Gandhi Series) ₹500 ನೋಟುಗಳಾಗಿವೆ ಎಂದು ಅಧಿಕೃತ ಡೇಟಾ ತಿಳಿಸಿದೆ. ಒಟ್ಟು ನಕಲಿ ನೋಟುಗಳ ಪೈಕಿ 4.7% […]
ಕರ್ನಾಟಕದ ಅತಿ ಉದ್ದದ ಕೇಬಲ್ ಬ್ರಿಡ್ಜ್ನ ವಿಶೇಷತೆಗಳೇನು……?
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನಲ್ಲಿ ಶರಾವತಿ ನದಿ ಹಿನ್ನೀರಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಅಂಬಾರಗೋಡ್ಲು – ಕಳಸವಳ್ಳಿ ಸೇತುವೆಯನ್ನು ಕೇಂದ್ರ ಸಚಿವೆ ನಿತಿನ್ ಗಡ್ಕರಿ ಅವರು ಲೋಕಾರ್ಪಣೆ ಮಾಡಿದ್ದಾರೆ. ಸುಮಾರು 2.1 ಕಿಲೋಮೀಟರ್ ಉದ್ದವಿರುವ ಈ ಸೇತುವೆ ದೇಶದ ಎರಡನೇ ಅತಿದೊಡ್ಡ ಕೇಬಲ್ ಆಧಾರಿತ ಸೇತುವೆ ಆಗಿದೆ. ಈ ಸೇತುವೆಯು ಸಾಗರ ಮತ್ತು ಸಿಗಂದೂರು ನಡುವಿನ ಪ್ರಯಾಣದ ಅವಧಿಯನ್ನು 2 ಗಂಟೆಗಳಷ್ಟು ಕಡಿಮೆ ಮಾಡಲಿದೆ. ಜತೆಗೆ ಪ್ರವಾಸೋದ್ಯಮ ಹಾಗೂ ವಾಣಿಜ್ಯ ಚಟುವಟಿಗಳಿಗೆ ಉತ್ತೇಜನ ನೀಡಲಿದೆ. […]
ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಯಮುನಾ ತಟದಲ್ಲಿ ಶವವಾಗಿ ಪತ್ತೆ..!
ನವದೆಹಲಿ: ಕಳೆದ ಆರು ದಿನಗಳಿಂದ ದೆಹಲಿಯಲ್ಲಿ ನಾಪತ್ತೆಯಾಗಿದ್ದ ತ್ರಿಪುರಾದ ವಿದ್ಯಾರ್ಥಿನಿಸ್ನೇಹಾ ಯಮುನಾ ತಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 19 ವರ್ಷದ ವಿದ್ಯಾರ್ಥಿನಿ ದೆಹಲಿ ವಿಶ್ವವಿದ್ಯಾಲಯದ ಆತ್ಮ ರಾಮ ಸನಾತನ ಧರ್ಮ ಕಾಲೇಜಿನಲ್ಲಿ ಎರಡನೇ ವರ್ಷದ ಬಿಎಸ್ಸಿ. ಗಣಿತಶಾಸ್ತ್ರದ ವಿದ್ಯಾರ್ಥಿನಿಯಾಗಿದ್ದರು. ಅವರು ತನ್ನ ಕುಟುಂಬದೊಂದಿಗೆ ದೆಹಲಿಯ ಪರ್ಯಾವರಣ್ ಕಾಂಪ್ಲೆಕ್ಸ್ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಜುಲೈ 7ರಂದು ನಾಪತ್ತೆಯಾಗಿದ್ದರು. ಕಳೆದ ಆರು ದಿನಗಳಿಂದ ದೆಹಲಿಯಲ್ಲಿ ನಾಪತ್ತೆಯಾಗಿದ್ದ ತ್ರಿಪುರಾದ ವಿದ್ಯಾರ್ಥಿನಿ ಸ್ನೇಹಾ ಯಮುನಾ ತಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 19 ವರ್ಷದ ವಿದ್ಯಾರ್ಥಿನಿ […]
ಗಂಧದಗುಡಿಯತ್ತ ಮುಖ ಮಾಡಿದ ಲಕ್ಷ್ಮಿ ಹೆಬ್ಬಾಳ್ಕರ್ …..!
ಬೆಳಗಾವಿ: ರಾಜ್ಯ ರಾಜಕಾರಣದ ರೆಬೆಲ್ ಲೇಡಿ ಎಂದಿನಿಸಿಕೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ರಾಜರಾಕಾರಣದ ಜೊತೆಗೆ ಇದೀಗ ಚಿತ್ರರಂಗದ ಕಡೆಗೆ ಮುಖ ಮಾಡಿದ್ದಾರೆ. ಅವರು ತಮ್ಮದೇ ಹೊಸ ಪ್ರೊಡಕ್ಷನ್ ಹೌಸ್ ತೆರಯಲು ಸಜ್ಜಾಗಿದ್ದಾರೆ. ಹೆಬ್ಬಾಳ್ಕರ್ ತಮ್ಮ ಮೊಮ್ಮಗಳ ಹೆಸರಿನಲ್ಲಿ ‘ಐರಾ ಪ್ರೊಡಕ್ಷನ್ ಹೌಸ್’ ಎಂಬ ಹೊಸ ನಿರ್ಮಾಣ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ. ಈ ಮೂಲಕ ರಾಜಕಾರಣದ ಜೊತೆಗೆ ಕನ್ನಡ ಚಿತ್ರರಂಗದಲ್ಲೂ ತಮ್ಮ ವಿಶಿಷ್ಟ ಗುರುತು ಮೂಡಿಸುವತ್ತ ಹೆಜ್ಜೆ ಇಟ್ಟಿದ್ದಾರೆ. ಮೊಮ್ಮಗಳ ಹೆಸರಿನಲ್ಲಿ ‘ಐರಾ […]
ಇಂಗ್ಲೆಂಡ್ ಟೆಸ್ಟ್ ಸಿರೀಸ್ : ವಾಷಿಂಗ್ಟನ್ ಸುಂದರ್ ಸ್ಪಿನ್ ಮೋಡಿಗೆ ತತ್ತರಿಸಿದ ಇಂಗ್ಲೆಂಡ್….!
ಲಂಡನ್: ವಾಷಿಂಗ್ಟನ್ ಸುಂದರ್ ಅವರ ಸ್ಪಿನ್ ಮೋಡಿಯ ಸಹಾಯದಿಂದ ಭಾರತ ತಂಡ, ಇಂಗ್ಲೆಂಡ್ ವಿರುದ್ಧ ಮೂರನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನ ಮೇಲುಗೈ ಸಾಧಿಸಿದೆ. ಅಲ್ಲದೆ ಐದನೇ ದಿನವಾದ ಸೋಮವಾರ ಟೀಮ್ ಇಂಡಿಯಾ ಗೆಲುವಿನ ಸನಿಹದಲ್ಲಿದೆ. ಇಂಗ್ಲೆಂಡ್ ತಂಡ ದ್ವಿತೀಯ ಇನಿಂಗ್ಸ್ನಲ್ಲಿ ಭಾರತ ತಂಡಕ್ಕೆ ಗೆಲ್ಲಲು 193 ರನ್ಗಳ ಸಾಧಾರಣ ಗುರಿಯನ್ನು ನೀಡಿದೆ. ಅದರಂತೆ ಗುರಿ ಹಿಂಬಾಲಿಸಿದ ಭಾರತ ತಂಡ ನಾಲ್ಕನೇ ದಿನದಾಟದ ಅಂತ್ಯಕ್ಕೆ 4 ವಿಕೆಟ್ ನಷ್ಟಕ್ಕೆ 58 ರನ್ ಗಳಿಸಿದೆ. ಆ […]
ಕಾಂಗ್ರೇಸ್ : ಕರ್ನಾಟಕದ ಉಸ್ತುವಾರಿ ವಿರುದ್ಧ ಹೊಗೆ ಆಡ್ತಾ ಇದಿಯಾ ಅಸಮಾಧಾನ ….!
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸ್ಥಿತಿ, ಅಧಿಕಾರ ಕಳೆದುಕೊಂಡು ಕುಳಿತಿರುವ ಬಿಜೆಪಿಗಿಂತಲೂ ಕೆಟ್ಟ ರಾಡಿಯಾತ್ತಿದೆ ಎಂದು ಕಾಂಗ್ರೆಸ್ಸಿಗರೇ ನೊಂದು ಹೇಳುತ್ತಿದ್ದಾರೆ. ಕೇವಲ ರಾಜ್ಯಾಧ್ಯಕ್ಷರನ್ನು ಬದಲಿಸಿದ ತಪ್ಪಿಗೆ ಒಳಬೇಗುದಿಯಿಂದ ಇನ್ನೂ ಬೇಯುತ್ತಿರುವ ಬಿಜೆಪಿಯನ್ನೂ ಮೀರಿಸುವಷ್ಟು ಆಂತರಿಕ ತೊಂದರೆಗೆ ಕಾಂಗ್ರೆಸ್ ಸಿಲುಕಿದೆ. ಕಾಂಗ್ರೆಸ್ ತನ್ನಲ್ಲಿ ಎಲ್ಲವೂ ಇದ್ದರೂ ಇಲ್ಲದಂತಾಗಿದೆ. ಪಕ್ಷಕ್ಕೆ ಅಪಾರ ಶಾಸಕರ ಬಲ, ಅಧಿಕಾರ, ಜನಪ್ರಿಯತೆ ಎಲ್ಲವೂ ಇದ್ದರೂ ದಿನದಿನಕ್ಕೂ ಆಂತರಿಕ ಸಮಸ್ಯೆಗಳಿಂದಾಗಿ ವರ್ಚಸ್ಸು ನಾಶ ಮಾಡಿಕೊಳ್ಳುವ ಹಾದಿಯತ್ತ ಸಾಗುತ್ತಿದೆ. […]
ಅಭಿನಯ ಸರಸ್ವತಿ ಸರೋಜಾದೇವಿ ವಿಧಿವಶ….!
ಬೆಂಗಳೂರು: ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಹಿರಿಯ ನಟಿ ಹಿರಿಯ ನಟಿ ಬಿ.ಸರೋಜಾದೇವಿ(87) ನಿಧನರಾಗಿದ್ದಾರೆ.ಮೃತದೇಹ ಮಲ್ಲೇಶ್ವರಂ ನಿವಾಸದಲ್ಲಿದ್ದು ಪೊಲೀಸರು ಭದ್ರತೆ ವ್ಯವಸ್ಥೆ ಮಾಡುತ್ತಿದ್ದಾರೆ. ಹಲವು ಗಣ್ಯರು ಈಗ ನಿವಾಸಕ್ಕೆ ಬಂದು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಸುಮಾರು 6 ದಶಕಗಳ ಕಾಲ ಚಿತ್ರರಂಗದ ಸೇವೆ ಮಾಡಿರುವ ಇವರು 5 ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಚಿತ್ರರಂಗದ ಸಾಧನೆಗೆ ಇವರಿಗೆ ಕೇಂದ್ರ ಸರ್ಕಾರ ಪದ್ಮಭೂಷಣ ನೀಡಿ ಪುರಸ್ಕರಿಸಿತ್ತು. ತಮ್ಮ 17ನೇ ವಯಸ್ಸಿನಲ್ಲಿಯೇ ಕನ್ನಡ […]
ಬ್ಯಾಡ್ಮಿಂಟನ್ ತಾರೆ ಜೀವನದಲ್ಲಿ ಬಿರುಕು….!
ಹೈದರಾಬಾದ್: ಬ್ಯಾಡ್ಮಿಂಟನ್ ಸ್ಟಾರ್, ಒಲಂಪಿಕ್ ಕಂಚಿನ ಪದಕ ವಿಜೇತೆ ಸೈನಾ ನೆಹ್ವಾಲ್ ಮತ್ತು ಮತ್ತು ಪರುಪಳ್ಳಿ ಕಶ್ಯಪ್ ದಂಪತಿ ಪರಸ್ಪರ ಬೇರ್ಪಡುವ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. 2018ರಲ್ಲಿ ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿತ್ತು. ಇದೀಗ 7 ವರ್ಷಗಳ ದಾಂಪತ್ಯವನ್ನು ಕೊನೆಗೊಳಿಸುವ ನಿರ್ಧಾರವನ್ನು ಇವರು ತೆಗೆದುಕೊಂಡಿದ್ದು, ಅಭಿಮಾನಿಗಳಿಗೆ ಶಾಕ್ ಎದುರಾಗಿದೆ. ನೆಹ್ವಾಲ್ ಇನ್ಸ್ಟಾಗ್ರಾಮ್ನಲ್ಲಿ ಈ ವಿಚಾರ ಹಂಚಿಕೊಂಡಿದ್ದಾರೆ. ಕಶ್ಯಪ್ ಜೊತೆಗಿನ 7 ವರ್ಷಗಳ ದಾಂಪತ್ಯ […]