SENSEX
NIFTY
GOLD
USD/INR

Weather

32    C

ಡಿಜಿಟಲ್ ಸುದ್ದಿ ಮೂಲಗಳು

...

IPL 2026: ಸನ್‌ರೈಸರ್ಸ್ ಬೌಲಿಂಗ್ ದಾಳಿಗೆ ತತ್ತರಿಸಿದ ಕೆಕೆಆರ್; ಬೃಹತ್ ಗೆಲುವು ಸಾಧಿಸಿದ ಹೈದರಾಬಾದ್

ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಐಪಿಎಲ್ 2026ರ ಲೀಗ್ ಹಂತದ ಆರನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 65 ರನ್‌ಗಳ ಗೆಲುವನ್ನು ದಾಖಲಿಸಿ ಟೂರ್ನಿಯಲ್ಲಿ ಜಯದ ಖಾತೆ ತೆರೆದಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಕೊಲ್ಕತ್ತಾ ನೈಟ್ ರೈಡರ್ಸ್ ಫೀಲ್ಡಿಂಗ್ ಆರಿಸಿಕೊಂಡು ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಸನ್ ರೈಸರ್ಸ್ ಹೈದರಾಬಾದ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 226 ರನ್ ಕಲೆಹಾಕಿ ಕೊಲ್ಕತ್ತಾ ನೈಟ್ […]

ಕನ್ನಡ ದುನಿಯಾ 2 Apr 2026 11:19 pm

ಕುಡಿಯಲು ಹಣ ಕೊಡದ ಅಳಿಯನನ್ನು ಕೊಂದ ಮಾವನಿಗೆ ಜೀವಿತಾವಧಿ ಜೈಲು ಶಿಕ್ಷೆ

ಶಿರಸಿ: ಅಳಿಯನನ್ನು ಕೊಂದಿದ್ದ ಮಾವನಿಗೆ ಉತ್ತರ ಕನ್ನಡ ಜಿಲ್ಲೆ ಶಿರಸಿಯ 1ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಜೀವಿತಾವಧಿ ಜೈಲು ಶಿಕ್ಷೆ ಪ್ರಕಟಿಸಿದೆ. 2024ರ ಮೇ 2 ರಂದು ಮಂಜುನಾಥಗೌಡನ ತಲೆಗೆ ಹೊಡೆದು ಕೊಲೆ ಮಾಡಲಾಗಿತ್ತು. ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಮಳಲಿ ಗ್ರಾಮದಲ್ಲಿ ಹತ್ಯೆ ನಡೆದಿತ್ತು. ಕುಡಿಯಲು ಹಣ ನೀಡದಿದ್ದಕ್ಕೆ ಕಟ್ಟಿಗೆಯಿಂದ ಹೊಡೆದು ಅಳಿಯನನ್ನು ಮಾವ ಕೊಲೆ ಮಾಡಿದ್ದ. ಮಾವ ವೆಂಕಟರಮಣಗೌಡನಿಂದ ಹಲ್ಲೆಗೊಳಗಾದ ಮಂಜುನಾಥಗೌಡ ಸ್ಥಳದಲ್ಲಿ ಮೃತಪಟ್ಟಿದ್ದ. ಅಪರಾಧಿ ವೆಂಕಟರಮಣಗೌಡನಿಗೆ ಜೀವಿತಾವಧಿ ಶಿಕ್ಷೆ ವಿಧಿಸಿ ಶಿರಸಿಯ […]

ಕನ್ನಡ ದುನಿಯಾ 2 Apr 2026 9:15 pm

ಉಪ ಚುನಾವಣೆ: ಮತಗಟ್ಟೆಗಳ ಸುತ್ತ ನಿಷೇಧಾಜ್ಞೆ ಜಾರಿ, ಗುಂಪುಗಾರಿಕೆ ನಿಷೇಧ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನವು ಶಾಂತಿಯುತವಾಗಿ ಹಾಗೂ ಮುಕ್ತವಾಗಿ ನಡೆಯುವ ಹಿತದೃಷ್ಟಿಯಿಂದ, ಮತಗಟ್ಟೆಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ಅವರು ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆಯ ಅವಧಿ: ಚುನಾವಣಾ ನಿಯಮಾವಳಿಯಂತೆ ಮತದಾನ ಮುಕ್ತಾಯವಾಗುವ 48 ಗಂಟೆಗಳ ಪೂರ್ವದಲ್ಲಿ ಈ ಆದೇಶ ಜಾರಿಗೆ ಬರಲಿದೆ. ಏಪ್ರಿಲ್‌ 7 ರ ಸಂಜೆ 6 ಗಂಟೆಯಿಂದ ಆರಂಭವಾಗಿ ಏಪ್ರಿಲ್‌ 9 ರಂದು ಮತದಾನ […]

ಕನ್ನಡ ದುನಿಯಾ 2 Apr 2026 8:56 pm

ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್: ಏ. 5ರಂದು ಐಪಿಎಲ್ ಪಂದ್ಯ ಪ್ರಯುಕ್ತ ನಮ್ಮ ಮೆಟ್ರೋ ಸೇವೆ ವಿಸ್ತರಣೆ: ವಾಹನ ಪಾರ್ಕಿಂಗ್‌ ವ್ಯವಸ್ಥೆ

ಬೆಂಗಳೂರು: ಏಪ್ರಿಲ್ 5ರಂದು ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ 2026 ಪಂದ್ಯದ ಪ್ರಯುಕ್ತ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗಿದೆ. ದಿನಾಂಕ 5ನೇ ಏಪ್ರಿಲ್ 2026ರಂದು ಬೆಂಗಳೂರಿನಲ್ಲಿ ನಡೆಯಲಿರುವ ಟಾಟಾ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯದ ಪ್ರಯುಕ್ತ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (ಬಿಎಂಆರ್‌ಸಿಎಲ್) ಪ್ರಯಾಣಿಕರಿಗೆ ಸುಲಭ ಹಾಗೂ ಸುರಕ್ಷಿತ ಪ್ರಯಾಣಕ್ಕೆ ಅನುಕೂಲವಾಗುವಂತೆ ಮೆಟ್ರೋ ರೈಲು ಸೇವಾಅವದಿಯನ್ನು ವಿಸ್ತರಿಸಿದೆ. ಪಂದ್ಯದ ದಿನದಂದು, ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ಮೆಟ್ರೋ ಸೇವೆಯನ್ನು ರಾತ್ರಿ 11:00 ಗಂಟೆಯಿಂದ ಮುಂದಿನ ದಿನದ ಮುಂಜಾನೆ […]

ಕನ್ನಡ ದುನಿಯಾ 2 Apr 2026 7:58 pm

BREAKING: ಫೋನ್ ಪೇ ಮೂಲಕ 35 ಸಾವಿರ ಲಂಚ: ಎಇಇ, ಜೆಇ ಲೋಕಾಯುಕ್ತ ಬಲೆಗೆ

ಯಾದಗಿರಿ: ಗುತ್ತಿಗೆದಾರನಿಂದ ಲಂಚ ಸ್ವೀಕರಿಸುತ್ತಿದ್ದ ಕೆ.ಬಿ.ಜೆ.ಎನ್.ಎಲ್. ನ ಎಇಇ ಮತ್ತು ಜೆಇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಭೀಮರಾಯನ ಗುಡಿ ಕೆ.ಬಿ.ಜೆ.ಎನ್.ಎಲ್. ವಿಭಾಗದ ಎಇಇ ಮಧುಸೂದನ್, ಜೆಇ ಮಂಜುನಾಥ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಗುತ್ತಿಗೆದಾರ ಖಾಸಿಂ ಸಾಬ್ ಅವರಿಂದ ಫೋನ್ ಪೇ ಮೂಲಕ ಲಂಚ ಸ್ವೀಕರಿಸಿದ್ದರು. ಕಾಮಗಾರಿ ಬಿಲ್ ಮಂಜೂರು ಮಾಡಲು 35 ಸಾವಿರ ರೂಪಾಯಿ ಲಂಚ ಸ್ವೀಕರಿಸಿದ್ದ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿದೆ. ಡಿವೈಎಸ್ಪಿ ಜೆ. ಹೆಚ್. ಇನಾಂದಾರ್ ನೇತೃತ್ವದಲ್ಲಿ […]

ಕನ್ನಡ ದುನಿಯಾ 2 Apr 2026 7:41 pm

ರಾಜ್ಯಸಭೆ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾ ವಜಾ: ಆಮ್ ಆದ್ಮಿ ಪಕ್ಷದಲ್ಲಿ ಭಿನ್ನಮತ..?

ನವದೆಹಲಿ: ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾ ಅವರನ್ನು ವಜಾಗೊಳಿಸಲಾಗಿದೆ. ಪಕ್ಷದ ಅಂತರಿಕ ವಲಯದಲ್ಲಿ ಇದು ಭಾರಿ ಚರ್ಚೆಗೆ ಕಾರಣವಾಗಿದೆ. 2023ರಿಂದ ಉಪನಾಯಕರಾಗಿದ್ದ ಚಡ್ಡಾ ಅವರ ಸ್ಥಾನಕ್ಕೆ ಪಂಜಾಬ್ ಸಂಸದ ಅಶೋಕ್ ಮಿತ್ತಲ್ ಅವರನ್ನು ನೇಮಕ ಮಾಡಲಾಗಿದೆ. ಈ ಬದಲಾವಣೆಗೆ ಸಂಬಂಧಿಸಿದಂತೆ ರಾಜ್ಯಸಭಾ ಕಾರ್ಯದರ್ಶಿಗೆ ಅಧಿಕೃತ ಪತ್ರ ಕಳುಹಿಸಲಾಗಿದೆ. ಮೇಲ್ಮನೆಯಲ್ಲಿ ಉಪನಾಯಕರನ್ನಾಗಿ ರಾಘವ್ ಛಡ್ಡಾ ಅವರ ಬದಲಿಗೆ ಸಂಸದ ಅಶೋಕ್ ಕುಮಾರ್ ಮಿತ್ತಲ್ ಅವರನ್ನು ಮೇಲ್ಮನೆ ಉಪನಾಯಕರನ್ನಾಗಿ ನೇಮಿಸುವಂತೆ ಕೋರಿ ಆಮ್ ಆದ್ಮಿ […]

ಕನ್ನಡ ದುನಿಯಾ 2 Apr 2026 7:19 pm

ಪ್ರಯಾಣಿಕರ ಗಮನಕ್ಕೆ: ಏ. 5ರಂದು ‘ನಮ್ಮ ಮೆಟ್ರೋ’ಸೇವೆ 2 ಗಂಟೆ ತಾತ್ಕಾಲಿಕ ಸ್ಥಗಿತ

ಬೆಂಗಳೂರು: ನೇರಳೆ ಮಾರ್ಗದಲ್ಲಿ ದಿನಾಂಕ 5ನೇ ಏಪ್ರಿಲ್ 2026(ಭಾನುವಾರ) ಬೆಳಿಗ್ಗೆ 2 ಗಂಟೆಗಳ ಕಾಲ ನಾಡಪ್ರಭು ಕೆಂಪೇಗೌಡ ನಿಲ್ದಾಣ(ಮೆಜೆಸ್ಟಿಕ್) ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ಸೇವೆ ತಾತ್ಕಾಲಿಕ ಸ್ಥಗಿತವಾಗಲಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು(BMRCL) ನೇರಳೆ ಮಾರ್ಗದ ವಿಜಯನಗರ ಮತ್ತು ಅತ್ತಿಗುಪ್ಪೆ ಮೆಟ್ರೋ ನಿಲ್ದಾಣಗಳ ನಡುವೆ ಅಗತ್ಯ ನಿರ್ವಹಣಾ ಕಾಮಗಾರಿಗಳನ್ನು ದಿನಾಂಕ 05ನೇ ಏಪ್ರಿಲ್ 2026 (ಭಾನುವಾರ) ಕೈಗೊಳ್ಳಲಾಗುತ್ತಿದೆ. ಈ ಕಾಮಗಾರಿಯನ್ನು ನೆರವೇರಿಸಲು ನೇರಳೆ ಮಾರ್ಗದಲ್ಲಿ ಬೆಳಿಗೆ, 07:00 ರಿಂದ 09:00 […]

ಕನ್ನಡ ದುನಿಯಾ 2 Apr 2026 6:50 pm

BREAKING: ಮನೆಯಲ್ಲಿ ನೀರು ಕಾಯಿಸುವಾಗ ದುರಂತ: ವಿದ್ಯುತ್ ಪ್ರವಹಿಸಿ ಗೃಹಿಣಿ ಸಾವು

ಧಾರವಾಡ: ಮನೆಯಲ್ಲಿ ನೀರು ಕಾಯಿಸುವಾಗ ವಿದ್ಯುತ್ ಪ್ರವಹಿಸಿ ಗೃಹಿಣಿ ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯ ದೇವರ ಹುಬ್ಬಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ನಿವೇದಿತಾ ನಾಯ್ಕರ್ (24) ಮೃತ ಮಹಿಳೆ. ಬಕೆಟ್ ನಲ್ಲಿ ನೀರು ಕಾಯಿಸಲು ಕಾಯಿಲ್ ಹಾಕಿ ಇಡಲಾಗಿತ್ತು. ಈ ವೇಳೆ ಆಕಸ್ಮಿಕವಾಗಿ ಬಕೆಟ್ ತಗುಲುತ್ತಿದ್ದಂತೆ ವಿದ್ಯುತ್ ಪ್ರವಹಿಸಿದ್ದು, ಕರೆಂತ್ ಶಾಕ್ ಹೊಡೆದು ನಿವೇದಿತಾ ಸಾವನ್ನಪ್ಪಿದ್ದಾರೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನ ಅಸ್ಥಳಕ್ಕೆ ಪೊಲೀಸರು ಭೇಟಿ ನೀಡಿ […]

ಕನ್ನಡ ದುನಿಯಾ 2 Apr 2026 6:24 pm

ಹಣ ಎಲ್ಲಿ ಹೂಡಿಕೆ ಮಾಡಬೇಕು ಅಂತ ಯೋಚಿಸ್ತಿದ್ದೀರಾ? ಪ್ರತಿ ತಿಂಗಳು ₹20,000 ಆದಾಯ ನೀಡುವ ಈ ಪೋಸ್ಟ್ ಆಫೀಸ್ ಸ್ಕೀಮ್ ಮಿಸ್ ಮಾಡ್ಕೋಬೇಡಿ

ಬೆಂಗಳೂರು: ಸುರಕ್ಷಿತ ಹೂಡಿಕೆ ಮತ್ತು ಪ್ರತಿ ತಿಂಗಳು ಖಾತರಿ ಆದಾಯವನ್ನು ಬಯಸುವವರಿಗೆ ಭಾರತೀಯ ಅಂಚೆ ಇಲಾಖೆಯ ಮಾಸಿಕ ಆದಾಯ ಯೋಜನೆ (Post Office Monthly Income Scheme) ಒಂದು ವರದಾನವಾಗಿದೆ. ವಿಶೇಷವಾಗಿ ಮಧ್ಯಮ ವರ್ಗದ ಕುಟುಂಬಗಳು ಮತ್ತು ನಿವೃತ್ತರಿಗೆ ಇದು ನೆಮ್ಮದಿಯ ಜೀವನಕ್ಕೆ ದಾರಿ ಮಾಡಿಕೊಡುತ್ತಿದೆ. ಪ್ರಸ್ತುತ ಬಡ್ಡಿ ದರ ಎಷ್ಟು? ಕೇಂದ್ರ ಸರ್ಕಾರವು 2026ರ ಏಪ್ರಿಲ್-ಜೂನ್ ತ್ರೈಮಾಸಿಕಕ್ಕೆ ಅನ್ವಯವಾಗುವಂತೆ ಈ ಯೋಜನೆಯ ಬಡ್ಡಿ ದರವನ್ನು ಶೇ. 7.4 (7.4%) ರಷ್ಟು ನಿಗದಿಪಡಿಸಿದೆ. ಇದು ಸದ್ಯದ ಪರಿಸ್ಥಿತಿಯಲ್ಲಿ […]

ಕನ್ನಡ ದುನಿಯಾ 2 Apr 2026 6:20 pm

BIG NEWS: ಹೆಚ್.ಡಿ.ಕುಮಾರಸ್ವಾಮಿ ಹಾಗೂ ಎಡಿಜಿಪಿ,ಎಸ್ ಐಟಿ ಮುಖ್ಯಸ್ಥ ಚಂದ್ರಶೇಖರ್ ಪ್ರಕರಣ: ರಾಜಿ ಸಂಧಾನಕ್ಕೆ ಒಪ್ಪಿಗೆ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಲೋಕಾಯುಕ್ತ ಎಡಿಜಿಪಿ ಮತ್ತು ಎಸ್‌ಐಟಿ ಮುಖ್ಯಸ್ಥ ಎಂ.ಚಂದ್ರಶೇಖರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ರಾಜಿ ಸಂಧಾನಕ್ಕೆ ಎರಡೂ ಕಡೆಯ ವಕೀಲರು ಒಪ್ಪಿದ್ದಾರೆ ಎಂದು ತಿಳಿದುಬಂದಿದೆ. ಎಡಿಜಿಪಿ, ಎಸ್ ಐಟಿ ಮುಖ್ಯಸ್ಥ ಚಂದ್ರಶೇಖರ್ ಅವರಿಗೆ ಮತ್ತು ಅವರ ಕುಟುಂಬಕ್ಕೆ ಕೇಂದ್ರ ಸಚಿವ ಎಚ್​​ಡಿ ಕುಮಾರಸ್ವಾಮಿ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಹೈಕೋರ್ಟ್ ಸಲಹೆಯಂತೆ ಆರೋಪಿ ಎಚ್​.ಡಿ.ಕುಮಾರಸ್ವಾಮಿ ಹಾಗೂ ದೂರುದಾರ ಚಂದ್ರಶೇಖರ್ ರಾಜಿ ಸಂಧಾನದ ಮಾತುಕತೆಗೆ ಒಪ್ಪಿಕೊಂಡಿದ್ದಾರೆ. ಹೀಗಾಗಿ ಹೈಕೋರ್ಟ್ರಾಜಿ ಸಂಧಾನಕ್ಕೆ ಸೂಕ್ತ […]

ಕನ್ನಡ ದುನಿಯಾ 2 Apr 2026 5:56 pm

ಡೆಲ್ಲಿ 24ಕ್ಕೆ 4 ವಿಕೆಟ್ ಬಿದ್ದ ಕೂಡಲೇ ಬ್ಯಾಟ್ ಮಾಡಲು ಸಜ್ಜಾಗಿದ್ದ ಮಿಲ್ಲರ್‌ನ್ನು ಓಡೋಡಿ ಬಂದು ತಡೆದ ಕೋಚ್; ನಂತರ ಆಗಿದ್ದೇ ಬೇರೆ

ನಿನ್ನೆ ( ಏಪ್ರಿಲ್ 1 ) ಲಕ್ನೋದ ಏಕನ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ 2026ರ ಲೀಗ್ ಹಂತದ ಐದನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 6 ವಿಕೆಟ್‌ಗಳ ಗೆಲುವನ್ನು ಸಾಧಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿತು. ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 18.4 ಓವರ್‌ಗಳಲ್ಲಿ 141 ರನ್‌ಗೆ ಆಲ್‌ಔಟ್ ಆಗಿ ಡೆಲ್ಲಿ ಕ್ಯಾಪಿಟಲ್ಸ್‌ಗೆ 142 ರನ್‌ಗಳ ಸಾಧಾರಣ ಗುರಿಯನ್ನು ನೀಡಿತು. ಈ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ 17.1 ಓವರ್‌ಗಳಲ್ಲಿ […]

ಕನ್ನಡ ದುನಿಯಾ 2 Apr 2026 5:43 pm

BIG NEWS : ‘ಗುಡ್ ಫ್ರೈಡೆ’ಪ್ರಯುಕ್ತ ನಾಳೆ ಷೇರು ಮಾರುಕಟ್ಟೆ ಬಂದ್, 3 ದಿನಗಳ ಸುದೀರ್ಘ ರಜೆ |Share Market

ಗುಡ್ ಫ್ರೈಡೆ ಅಂಗವಾಗಿ ನಾಳೆ (ಶುಕ್ರವಾರ) ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್ (BSE) ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್ (NSE) ಎರಡೂ ಕಾರ್ಯನಿರ್ವಹಿಸುವುದಿಲ್ಲ. ಇದರೊಂದಿಗೆ ಶನಿವಾರ ಮತ್ತು ಭಾನುವಾರದ ರಜೆ ಸೇರಿ ಒಟ್ಟು ಮೂರು ದಿನಗಳ ಕಾಲ ಮಾರುಕಟ್ಟೆಗೆ ವಿರಾಮ ಸಿಗಲಿದೆ. ಹೌದು. ಇರಾನ್-ಅಮೆರಿಕ ಸಂಘರ್ಷ ಹಾಗೂ ಅಮೆರಿಕದ ಹೊಸ ಆಮದು ಸುಂಕದ ಭೀತಿಯಿಂದಾಗಿ ತಲ್ಲಣಗೊಂಡಿರುವ ಭಾರತೀಯ ಷೇರು ಮಾರುಕಟ್ಟೆಗೆ ಈಗ ‘ಗುಡ್ ಫ್ರೈಡೆ’ ನಿಮಿತ್ತ ಸತತ ಮೂರು ದಿನಗಳ ವಿರಾಮ ಸಿಕ್ಕಿದೆ. ನಾಳೆ (ಶುಕ್ರವಾರ) ಬಿಎಸ್‌ಇ (BSE) […]

ಕನ್ನಡ ದುನಿಯಾ 2 Apr 2026 5:19 pm

ಕೇಂದ್ರಿಯ ವಿದ್ಯಾಲಯ : ಬೋಧಕ ಹಾಗೂ ಬೋಧಕೇತರ ಹುದ್ದೆ ಭರ್ತಿಗೆ ಏ. 13 ರಂದು ನೇರ ಸಂದರ್ಶನ

ಚಿತ್ರದುರ್ಗ : ಚಿತ್ರದುರ್ಗದ ಕೇಂದ್ರಿಯ ವಿದ್ಯಾಲಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿವಿಧ ಬೋಧಕ ಹಾಗೂ ಬೋಧಕೇತರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಏಪ್ರಿಲ್ 13 ರಂದು ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ವಿವಿಧ ವಿಷಯಗಳವಾರು ಪ್ರಾಥಮಿಕ ಶಾಲಾ ಶಿಕ್ಷಕರು, ಕಂಪ್ಯೂಟರ್, ಯೋಗ ಹಾಗೂ ಕ್ರೀಡಾ ತರಬೇತುದಾರರು, ಸಂಗೀತ ಶಿಕ್ಷಕರು, ನರ್ಸ್, ವಿಶೇಷ ಶಿಕ್ಷಕರು ಮತ್ತು ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಸಂದರ್ಶನವು ಇದೇ ಏಪ್ರಿಲ್ […]

ಕನ್ನಡ ದುನಿಯಾ 2 Apr 2026 4:59 pm

BREAKING: ಬೆಂಗಳೂರಿನ ಐಪ್ಯಾಕ್ ಕಚೇರಿ ಮೇಲೆ ಇಡಿ ದಾಳಿ

ಬೆಂಗಳೂರು: ಪಶ್ಚಿಮ ಬಂಗಾಳದ ಕಲ್ಲಿದ್ದಲು ಕಳ್ಳಸಾಗಾಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ, ಹೈದರಾಬಾದ್ ಬಳಿಕ ಇದೀಗ ಜಾರಿ ನಿರ್ದೇಶನಾಲಯ-ಇಡಿ ಬೆಂಗಳೂರಿನ ಐಪ್ಯಾಕ್ ಕಚೇರಿ ಮೇಲೆ ದಾಳಿ ನಡೆಸಿದೆ. ಐಪ್ಯಾಕ್ ಸಹ-ಸಂಸ್ಥಾಪಕ ಮತ್ತು ನಿರ್ದೇಶಕ ರಿಷಿ ರಾಜ್ ಸಿಂಗ್ ಅವರಿಗೆ ಸಂಬಂಧಿಸಿದ ಕೆಲವು ಸ್ಥಳಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ಅವರ ಬೆಂಗಳೂರು ನಿವಾಸದ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಇದಕ್ಕೂ ಮೊದಲು ಈ ಪ್ರಕರನ ಸಂಬಂಧ ಇಡಿ ಅಧಿಕಾರಿಗಳು ಜನವರಿಯಲ್ಲಿ ಐಪ್ಯಾಕ್ ಕಚೇರಿ ಹಾಗೂ ಸಂಸ್ಥಾಪಕ, ನಿರ್ದೇಶಕ […]

ಕನ್ನಡ ದುನಿಯಾ 2 Apr 2026 4:57 pm

BREAKING: ಹಣಕಾಸಿನ ವಿಚಾರವಾಗಿ ಗಲಾಟೆ: ಕೆಫೆ ಮಾಲೀಕನಿಂದಲೇ ಕಾರ್ಮಿಕನ ಬರ್ಬರ ಹತ್ಯೆ

ಶಿವಮೊಗ್ಗ: ಹಣಕಾಸು ವಿಚಾರವಾಗಿ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಕೆಫೆ ಮಾಲೀಕನೇ ಕರಮಿಕನನ್ನು ಬರ್ಬರವಾಗಿ ಹತ್ಯೆಗೈರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ರಸ್ತೆಯಲ್ಲಿರುವ ರೂಫ್ ಟಾಪ್ ಕೆಫೆ ಸಿಬ್ಬಂದಿ ಬಿಹಾರ ಮೂಲದ ಟಿಂಕು ಶರ್ಮಾ (30) ಕೊಲೆಯಾದ ವ್ಯಕ್ತಿ. ಟಿಂಕು ಶರ್ಮಾ ಅವರ ಮೃತ ದೇಹ ಹೊಂಡಾ ಸಿಟಿ ಕಾರಿನಲ್ಲಿ ಪತ್ತೆಯಾಗಿತ್ತು. ತನಿಖೆ ನಡೆಸಿದ ಪೊಲೀಸರುಗೆ ಕೆಫೆ ಮಾಲೀಕನೇ ಕಾರ್ಮಿಕನನ್ನು ಹತ್ಯೆ ಮಾಡಿರುವ ಅಂಶ ಬಯಲಾಗಿದೆ. ಕೆಫೆ ಮಾಲೀಕ ಇಮ್ರಾನ್ ಹಾಗೂ ಟಿಂಕು ಶರ್ಮಾ ನಡುವೆ ಹಣಕಾಸಿನ […]

ಕನ್ನಡ ದುನಿಯಾ 2 Apr 2026 4:36 pm

BREAKING: ಬಿಳಿಗಿರಿ ರಂಗನ ಬೆಟ್ಟದ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಬೆಂಕಿ

ಚಾಮರಾಜನಗರ: ಬಿಳಿಗಿರಿ ರಂಗನ ಬೆಟ್ಟದ ಹುಲಿ ಸಂರಕ್ಷಿತಾರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹನೂರು ತಾಲೂಕಿನ ಲಕ್ಕೊನಹಳ್ಳಿ ಬಳಿ ಅರಣ್ಯ ಪ್ರದೇಶಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಬರೋಬ್ಬರಿ ೫೦ಕ್ಕೂ ಹೆಚ್ಚು ಎಕರೆ ಪ್ರದೇಶಕ್ಕೆ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿಕೊಂಡಿದೆ. ಅರಣ್ಯ ಸಂಪತ್ತು ಬೆಂಕಿಗಾಹುತಿಯಾಗುತ್ತಿದೆ. ಘಟನಾ ಸ್ಥಳಕ್ಕೆ ದೌಡಾಯಿಸಿರುವ ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಒಂದೆಡೆ ಬಿಸಿಲ ಝಳ, ಮತ್ತೊಂದೆಡೆ ಬೆಂಕಿ ಅರಣ್ಯ ಪ್ರದೇಶವನ್ನು ಆಪೋಷನ ತೆಗೆದುಕೊಳ್ಳುತ್ತಿದೆ. […]

ಕನ್ನಡ ದುನಿಯಾ 2 Apr 2026 4:18 pm

SHOCKING : ಪೋಷಕರೇ ಎಚ್ಚರ ; ಆಟವಾಡುತ್ತಾ ಸಂಪ್’ಗೆ ಬಿದ್ದು 8 ತಿಂಗಳ ಕಂದಮ್ಮ ಸಾವು.!

ಹೈದರಾಬಾದ್ : ಆಟವಾಡುತ್ತಿದ್ದ ಎಂಟು ತಿಂಗಳ ಕಂದಮ್ಮ ಆಕಸ್ಮಿಕವಾಗಿ ನೀರಿನ ಸಂಪ್‌ಗೆ ಬಿದ್ದು ಮೃತಪಟ್ಟಿರುವ ಘಟನೆ ನಗರದ ಗಂಡಿಪೇಟೆ ಗ್ರಾಮದಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ಶ್ರೀಕಾಂತ್ ಜಾಧವ್ ಮತ್ತು ರಾಧಿಕಾ ಎಂಬ ದಂಪತಿಗಳು ಗಂಡಿಪೇಟೆಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಇವರಿಗೆ ಸೌರಭ್ ಜಾಧವ್ ಎಂಬ ಎಂಟು ತಿಂಗಳ ಗಂಡು ಮಗು ಇತ್ತು. ಬುಧವಾರ ಮಧ್ಯಾಹ್ನ ತಾಯಿ ರಾಧಿಕಾ ಮಗುವಿನೊಂದಿಗೆ ಮಲಗಿದ್ದಾಗ, ಮಗು ಎಚ್ಚರಗೊಂಡು ತೆವಳುತ್ತಾ ಹೊರಬಂದಿದೆ. ಈ ವೇಳೆ ಮನೆಯ ಮುಂಭಾಗದಲ್ಲಿದ್ದ ತೆರೆದ ನೀರಿನ ಸಂಪ್‌ಗೆ ಆಕಸ್ಮಿಕವಾಗಿ […]

ಕನ್ನಡ ದುನಿಯಾ 2 Apr 2026 4:18 pm

ವಿಶ್ವ ಆಟಿಸಂ ಜಾಗೃತಿ ದಿನ:ಮಕ್ಕಳಲ್ಲಿ ಆಟಿಸಂ ಇರುವುದನ್ನು ಕಂಡುಹಿಡಿಯುವುದು ಹೇಗೆ

ಬೆಂಗಳೂರು: ಪ್ರತಿ ವರ್ಷ ಏಪ್ರಿಲ್ 2 ರಂದು ವಿಶ್ವದಾದ್ಯಂತ ಆಟಿಸಂ ಜಾಗೃತಿ ದಿನವನ್ನು ಆಚರಿಸಲಾಗುತ್ತದೆ. ಆಟಿಸಂ ಎಂಬುದು ರೋಗವಲ್ಲ ಅದೊಂದು ಮೆದುಳಿನ ಬೆಳವಣಿಗೆಗೆ ಸಂಬಂಧಿಸಿದ ಸ್ಥಿತಿ (Disorder). ಮಕ್ಕಳ ವರ್ತನೆ ಮಾತು ಮತ್ತು ಸಾಮಾಜಿಕ ಸಂವಹನದ ಮೇಲೆ ಇದು ಪರಿಣಾಮ ಬೀರುತ್ತದೆ. ಇದನ್ನು ಆರಂಭಿಕ ಹಂತದಲ್ಲೇ ಗುರುತಿಸುವುದು ಮಗುವಿನ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಮುಖ್ಯ. ಆಟಿಸಂ ಎಂದರೇನು? ಆಟಿಸಂ ಅಥವಾ ಆಟಿಸಂ ಸ್ಪೆಕ್ಟ್ರಮ್ ಅಸ್ವಸ್ಥತೆ (ASD) ಎಂಬುದು ನರಮಂಡಲದ ಬೆಳವಣಿಗೆಯಲ್ಲಿ ಉಂಟಾಗುವ ವ್ಯತ್ಯಾಸ. ಇದರಿಂದ ಮಕ್ಕಳು ಜಗತ್ತನ್ನು […]

ಕನ್ನಡ ದುನಿಯಾ 2 Apr 2026 4:09 pm

BREAKING: ಮದುವೆಗೆ ಪೋಷಕರ ವಿರೋಧ: ಮನನೊಂದ ಪ್ರೇಮಿಗಳು ಆತ್ಮಹತ್ಯೆ

ಚಾಮರಾಜನಗರ: ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಮನನೊಂದ ಪ್ರೇಮಿಗಳು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಇಲ್ಲಿನ ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಾದಿಯಾ (19) ಹಾಗೂ ನಾಗೇಂದ್ರ (21) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಪಾಲಾರ್ ಗ್ರಾಮದ ನಾದಿಯಾಳನ್ನು ನಾಗೇಂದ್ರ ಪ್ರೀತಿಸುತ್ತಿದ್ದ. ಇಬ್ಬರ ಮದುವೆಗೆ ಮನೆಯವರು ಒಪ್ಪಿರಲಿಲ್ಲ. ಮೂರು ದಿನಗಳ ಹಿಂದೆ ನಾಗೇಂದ್ರ ಜೊತೆಗೆ ನಾದಿಯಾ ಪೊನ್ನಾಚಿಗೆ ಹೋಗಿದ್ದಳು. ನಾಗೇಂದ್ರ ತನ್ನ ತಾತನ ಮನೆಗೆ ನಾದಿಯಾಳನ್ನು ಕರೆದುಕೊಂಡು ಹೋಗಿದ್ದ. […]

ಕನ್ನಡ ದುನಿಯಾ 2 Apr 2026 3:58 pm

BREAKING: ಕಂಟೇನರ್ ಗೆ ಹಿಂದಿನಿಂದ ಕಾರು ಡಿಕ್ಕಿ: ಭೀಕರ ಅಪಘಾತದಲ್ಲಿ ನವವಿವಾಹಿತೆ ಸೇರಿ ಇಬ್ಬರು ಸ್ಥಳದಲ್ಲೇ ದುರ್ಮರಣ

ಚಿಕ್ಕಬಳ್ಳಾಪುರ: ಕಂಟೇನರ್ ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ನವ ವಿವಾಹಿತೆ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಇಲ್ಲಿನ ಶೆಟ್ಟಿಗೆರೆ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ೫ ತಿಂಗಳ ಹಿಂದೆ ಮದುವೆಯಾಗಿದ್ದ ರಕ್ಷಿತಾ ರೆಡ್ಡಿ (28) ಹಾಗೂ ಆಕೆಯ ಸಂಬಂಧಿ ಪವನ್ ರೆಡ್ಡಿ (30) ಮೃತ ದುರ್ದೈವಿಗಳು. ರಕ್ಷಿತಾ ರೆಡ್ಡಿ ಪತಿ ರಾಜಶೇಖರ್ ರೆಡ್ಡಿ ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಆಂಧ್ರ ಮೂಲದವರಾದ ರಕ್ಷಿತಾ ಹಾಗೂ ರಾಜಶೇಖರ್ […]

ಕನ್ನಡ ದುನಿಯಾ 2 Apr 2026 3:46 pm

BREAKING: ಅನುಮಾನಾಸ್ಪದ ರೀತಿಯಲ್ಲಿ ಕಾಂಗ್ರೆಸ್ ಮುಖಂಡನ ಶವ ಪತ್ತೆ

ಚಿತ್ರದುರ್ಗ: ಮೂರು ದಿನಗಳಿಂದ ನಾಪತ್ತೆಯಾಗಿದ್ದ ಕಾಂಗ್ರೆಸ್ ಮುಖಂಡರೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹೊರವಲಯದಲ್ಲಿ ನಿರ್ಜನ ಪ್ರದೇಶದಲ್ಲಿ ಗುರುತು ಸಿಗದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಶಿವಲಿಂಗಪ್ಪ ಮೃತ ಕಾಂಗ್ರೆಸ್ ಮುಖಂಡ. ಶಿವಲಿಂಗಪ್ಪ ಅವರು ಚಿತ್ರದುರ್ಗದಲ್ಲಿ ರಸಗೊಬ್ಬರ ಅಂಗಡಿ ನಡೆಸುತ್ತಿದ್ದರು. ಕಳೆದ ಮೂರು ದಿನಗಳಿಂದ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದರು. ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಇಂದು ಮುಖ ಗುರುತು ಸಿಗದ ಸ್ಥಿತಿಯಲ್ಲಿ ಶಿವಲಿಂಗಪ್ಪ ಶವವಾಗಿ ಪತ್ತೆಯಾಗಿದ್ದಾರೆ. ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ತನಿಖೆ […]

ಕನ್ನಡ ದುನಿಯಾ 2 Apr 2026 3:34 pm

ಹಾವು ಕಡಿತದ ಸಾವುಗಳಲ್ಲಿ ಕರ್ನಾಟಕ ದೇಶದಲ್ಲೇ ನಂ.1:ಕಳೆದ 3 ವರ್ಷಗಳಲ್ಲಿ 277 ಬಲಿ

ಬೆಂಗಳೂರು: ಕರುನಾಡಿನ ಜನರಲ್ಲಿ ಈಗ ಹೊಸದೊಂದು ಭೀತಿ ಶುರುವಾಗಿದೆ. ದೇಶಾದ್ಯಂತ ಸಂಭವಿಸುವ ಹಾವು ಕಡಿತದ ಸಾವುಗಳಲ್ಲಿ ಕರ್ನಾಟಕವು ಅಗ್ರಸ್ಥಾನದಲ್ಲಿದೆ ಎಂಬ ಆಘಾತಕಾರಿ ಸತ್ಯ ಈಗ ಬಹಿರಂಗವಾಗಿದೆ. ಕೇವಲ ಮೂರು ವರ್ಷಗಳ (2023-2026) ಅವಧಿಯಲ್ಲಿ ರಾಜ್ಯದಲ್ಲಿ ಹಾವಿನ ವಿಷಕ್ಕೆ ಬಲಿಯಾದವರ ಸಂಖ್ಯೆ ಇತರ ಎಲ್ಲಾ ರಾಜ್ಯಗಳಿಗಿಂತ ಹೆಚ್ಚಿರುವುದು ಬೆಚ್ಚಿಬೀಳಿಸುವಂತಿದೆ. ಅಂಕಿ-ಅಂಶಗಳ ವಿವರ ವರದಿಗಳ ಪ್ರಕಾರ, 2025ರಲ್ಲಿ ಭಾರತದಲ್ಲಿ ದಾಖಲಾದ ಒಟ್ಟು ಹಾವು ಕಡಿತದ ಸಾವುಗಳಲ್ಲಿ ಬರೋಬ್ಬರಿ ಶೇ. 36ರಷ್ಟು ಸಾವುಗಳು ಕೇವಲ ನಮ್ಮ ಕರ್ನಾಟಕದಲ್ಲೇ ಸಂಭವಿಸಿವೆ ಅಂದರೆ ದೇಶದ […]

ಕನ್ನಡ ದುನಿಯಾ 2 Apr 2026 3:33 pm

ವಿದ್ಯಾರ್ಥಿಗಳೇ ಗಮನಿಸಿ :  ಕರಾಮುವಿವಿಯಲ್ಲಿ ವಿವಿಧ ಕೋರ್ಸ್’ಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2025-26ನೇ ಶೈಕ್ಷಣಿಕ ವರ್ಷದ ಜನವರಿ ಆವೃತ್ತಿಯ ಯುಜಿಸಿ ಅನುಮೋದಿತ ವಿವಿಧ ಶಿಕ್ಷಣಕ್ರಮಗಳ ಪ್ರವೇಶಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. *ಕೋರ್ಸ್ ಪದವಿ: ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿ.ಬಿ.ಎ., ಬಿ.ಸಿ.ಎ., ಬಿ.ಲಿಬ್.ಐ.ಎಸ್ಸಿ., ಬಿ.ಎಸ್.ಡಬ್ಲ್ಯೂ. ಸ್ನಾತಕೋತ್ತರ ಪದವಿ: ಎಂ.ಎ., ಎಂ.ಕಾಮ್., ಎಂ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ., ಎಂ.ಲಿಬ್.ಐ.ಎಸ್ಸಿ. ಇತರೆ: ಪಿಜಿ ಸರ್ಟಿಫಿಕೇಟ್, ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಶಿಕ್ಷಣ ಕ್ರಮಗಳು. ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ರಕ್ಷಣಾ ಇಲಾಖೆ ಅಥವಾ ಮಾಜಿ […]

ಕನ್ನಡ ದುನಿಯಾ 2 Apr 2026 3:19 pm

BREAKING : ಅಂತರಾಷ್ಟ್ರೀಯ ಕ್ರಿಕೆಟ್’ಗೆ ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ‘ರಾಸ್ಸಿ ವಾನ್ ಡೆರ್ ಡಸ್ಸೆನ್’ನಿವೃತ್ತಿ ಘೋಷಣೆ

ದಕ್ಷಿಣ ಆಫ್ರಿಕಾದ ಹಿರಿಯ ಬ್ಯಾಟರ್ ರಾಸ್ಸಿ ವಾನ್ ಡೆರ್ ಡಸ್ಸೆನ್ ಅವರು ಅಂತರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮಾದರಿಗಳಿಗೆ ನಿವೃತ್ತಿ ಘೋಷಿಸಿದ್ದಾರೆ. 2026-27ರ ಸೀಸನ್‌ಗೆ ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ (CSA) ಅವರಿಗೆ ಹೊಸ ಒಪ್ಪಂದವನ್ನು ನೀಡದ ಕಾರಣ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಕಳೆದ ಏಳು ತಿಂಗಳಿನಿಂದ ರಾಷ್ಟ್ರೀಯ ತಂಡದಿಂದ ಹೊರಗಿದ್ದ ಡಸ್ಸೆನ್, ಏಪ್ರಿಲ್ 2 ರಂದು ಸಾಮಾಜಿಕ ಜಾಲತಾಣದ ಮೂಲಕ ತಮ್ಮ ನಿವೃತ್ತಿಯನ್ನು ಅಧಿಕೃತವಾಗಿ ಪ್ರಕಟಿಸಿದರು. ಭಾವನಾತ್ಮಕ ಸಂದೇಶ: “ದಕ್ಷಿಣ ಆಫ್ರಿಕಾ ತಂಡದ ಪರವಾಗಿ ಆಡುವುದು […]

ಕನ್ನಡ ದುನಿಯಾ 2 Apr 2026 3:09 pm

ನಕಲಿ ಆಧಾರ್ ಕಾರ್ಡ್ ಹೊಂದಿದ್ದ 14 ಬಾಂಗ್ಲಾ ಪ್ರಜೆಗಳು ಅರೆಸ್ಟ್

ಕೋಲ್ಕತ್ತಾ: ಬಾಂಗ್ಲಾದೇಶದಿಂದ ಭಾರತಕ್ಕೆ ಅಕ್ರಮವಾಗಿ ಗಡಿ ದಾಟಿ ಬಂದಿದ್ದ ನಕಲಿ ಆಧಾರ್ ಕಾರ್ಡ್ ಹೊಂದಿದ್ದ 14 ಬಾಂಗ್ಲಾ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಸ್ಸೋಂನಿಂದ ದೆಹಲಿಗೆ ತೆರಳುತ್ತಿದ್ದಾಗ ಇವರನ್ನು ಬಂಧಿಸಲಾಗಿದೆ. ಬುಧವಾರ ರಾತ್ರಿ ಜಲ್ಪೈಗುರಿ ನಿಲ್ದಾಣದಲ್ಲಿ ರೈಲ್ವೆ ಸಂರಕ್ಷಣಾ ಪಡೆ (ಆರ್‌ಪಿಎಫ್) ದೆಹಲಿಗೆ ತೆರಳುತ್ತಿದ್ದ ಕಾಮಾಕ್ಯ-ಈಶಾನ್ಯ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಪ್ರಾಪ್ತ ವಯಸ್ಕರು ಸೇರಿದಂತೆ 14 ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಆರ್‌ಪಿಎಫ್ ಸಿಬ್ಬಂದಿ ವಿಶೇಷ ಭದ್ರತಾ ತಪಾಸಣೆ ನಡೆಸುತ್ತಿದೆ. ತಪಾಸಣೆ ವೇಳೆ […]

ಕನ್ನಡ ದುನಿಯಾ 2 Apr 2026 3:08 pm

JOB ALERT : ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ನಗರದ ಮಾಚೇನಹಳ್ಳಿಯಲ್ಲಿರುವ 8ನೇ ಪಡೆ, ಕೆ.ಎಸ್.ಆರ್.ಪಿ ಘಟಕದ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಖಾಲಿ ಇರುವ ವಿವಿಧ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಂಗ್ಲಿಷ್ ಶಿಕ್ಷಕರ ಹುದ್ದೆ, 02 ಸಂಖ್ಯೆ, ವಿದ್ಯಾರ್ಹತೆ ಬಿಎ/ಎಂಎ ಮತ್ತು ಬಿಡ್ ಆಗಿರಬೇಕು. ಸಮಾಜ ವಿಜ್ಞಾನ ಶಿಕ್ಷಕರು 02 ಸಂಖ್ಯೆ, ಬಿಎ/ಎಂಎ ಮತ್ತು ಬಿಎಡ್. ನರ್ಸರಿ ಶಿಕ್ಷಕರ ಹುದ್ದೆ 01 ಸಂಖ್ಯೆ, ಎನ್‌ಟಿಟಿ/ಇಸಿಸಿಇ/ಎಂಟಿಟಿ. ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ 01 ಸಂಖ್ಯೆ, ಬಿಪಿಎಡ್/ಎಂಪಿಎಡ್. ಸಂಗೀತ […]

ಕನ್ನಡ ದುನಿಯಾ 2 Apr 2026 3:03 pm

BREAKING : ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಏ.7 ರಂದು ವಿಶೇಷ ‘ಸಾಂದರ್ಭಿಕ ರಜೆ’ಮಂಜೂರು |Govt Employee

ಬೆಂಗಳೂರು: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಆಯೋಜಿಸಿರುವ ವಿಶೇಷ ಕಾರ್ಯಾಗಾರದಲ್ಲಿ ಭಾಗವಹಿಸುವ ಮಹಿಳಾ ನೌಕರರಿಗೆ ರಾಜ್ಯ ಸರ್ಕಾರವು ಏಪ್ರಿಲ್ 7, 2026 ರಂದು ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಘೋಷಿಸಿದೆ. ಬೆಂಗಳೂರು ನಗರ ವ್ಯಾಪ್ತಿಯ ಮಹಿಳಾ ನೌಕರರು ಮತ್ತು ಎಲ್ಲಾ ಜಿಲ್ಲೆ/ತಾಲ್ಲೂಕುಗಳ ಮಹಿಳಾ ಪದಾಧಿಕಾರಿಗಳಿಗೆ ಈ ರಜೆ ಅನ್ವಯವಾಗಲಿದೆ.ಈ ರಜೆಯನ್ನು ಪಡೆಯುವ ನೌಕರರು ತಮ್ಮ ಮೇಲಧಿಕಾರಿಗಳಿಂದ ಅನುಮತಿ ಪಡೆಯಬೇಕು ಮತ್ತು ಕಾರ್ಯಾಗಾರದಲ್ಲಿ ಭಾಗವಹಿಸಿದ ಬಗ್ಗೆ ಹಾಜರಾತಿ ಪ್ರಮಾಣ ಪತ್ರವನ್ನು […]

ಕನ್ನಡ ದುನಿಯಾ 2 Apr 2026 2:52 pm

ಬೆಂಗಳೂರಿನಲ್ಲಿ ಬುಲೆರೋದಲ್ಲಿ ಅಪರಿಚಿತ ಗ್ಯಾಂಗ್ ಅನುಮಾನಾಸ್ಪದ ಓಡಾಟ: ಹೆಣ್ಣುಮಕ್ಕಳೇ ಹುಷಾರ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಪರಿಚಿತ ಗ್ಯಾಂಗ್ ವೊಂದು ಬುಲೆರೋ ವಾಹನದಲ್ಲಿ ಮನೆಗಳ ಮುಂದೆ ಓಡಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಬನಶಂಕರಿಯಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಬೊಲೆರೋ ವಾಹನದಲ್ಲಿ ಓಡಾಟ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶ ನೋಂದಣಿ ಹೊಂದಿರುವ ಬುಲೆರೋ ವಾಹನ ಇದಾಗಿದ್ದು, ರಸ್ತೆಯಲ್ಲಿ ತೆರಳುತ್ತಿರುವ ಬೊಲೆರೋ ವಾಹನ ಮನೆಯೊಂದರ ಗೇಟ್​​ ಬಳಿ ಶಾಲಾ ಬಾಲಕಿ ಕಾಣುತ್ತಿದ್ದಂತೆ ನಿಂತಿದೆ. ಬಳಿಕ ಹಿಮ್ಮುಖವಾಗಿ ಹೋಗಿ ಬಾಲಕಿ ಬಳಿ ವಾಹನದಲ್ಲಿದ್ದವರು ಮಾತನಾಡಿದ್ದಾರೆ. ಈ ವೇಳೆ […]

ಕನ್ನಡ ದುನಿಯಾ 2 Apr 2026 2:40 pm

‘ದ್ವಿತೀಯ PUC’ನಂತರದ ‘ಗೋಲ್ಡನ್’ಕೋರ್ಸ್‌’ಗಳು : ಜಾಬ್ ಪಕ್ಕಾ , ಲಕ್ಷಾಂತರ ರೂ. ಸಂಬಳ.!

ದ್ವಿತೀಯ ಪಿಯುಸಿ ಪರೀಕ್ಷೆ ಮುಗಿಸಿ ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಈಗ ಮುಂದಿನ ದಾರಿ ಯಾವುದು ಎಂಬ ಗೊಂದಲ ಸಹಜ. ಕೇವಲ ಸಾಂಪ್ರದಾಯಿಕ ಪದವಿಗಳ ಬೆನ್ನತ್ತುವ ಬದಲು, ಇಂದಿನ ಡಿಜಿಟಲ್ ಯುಗಕ್ಕೆ ತಕ್ಕಂತೆ ಹೊಸ ಕೌಶಲ್ಯ ಆಧಾರಿತ ಕೋರ್ಸ್‌ಗಳನ್ನು ಆರಿಸಿಕೊಂಡರೆ ಉದ್ಯೋಗ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆಯಿದೆ. ಡೇಟಾ ಸೈನ್ಸ್, ಎಐ (AI), ಡಿಜಿಟಲ್ ಮಾರ್ಕೆಟಿಂಗ್ ಮತ್ತು ಸೈಬರ್ ಸೆಕ್ಯೂರಿಟಿಯಂತಹ ಕ್ಷೇತ್ರಗಳಲ್ಲಿ ಕೇವಲ 6 ತಿಂಗಳಿನಿಂದ 1 ವರ್ಷದ ವೃತ್ತಿಪರ ತರಬೇತಿ ಪಡೆದರೂ ಸಾಕು, ಆರಂಭದಲ್ಲೇ ಲಕ್ಷಾಂತರ ರೂಪಾಯಿಗಳ ವಾರ್ಷಿಕ […]

ಕನ್ನಡ ದುನಿಯಾ 2 Apr 2026 2:15 pm

ಸಿಎಸ್‌ಕೆ ಆಟಗಾರರ ವಿಕೆಟ್ ಪಡೆದು ಬೇಕಂತಲೇ ‘ಗನ್‌ಶಾಟ್’ಸೆಲೆಬ್ರೇಷನ್ ಮಾಡಿದ್ರಾ?; ಸತ್ಯ ಬಿಚ್ಚಿಟ್ಟ ರವೀಂದ್ರ ಜಡೇಜಾ

ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ 2026ರಲ್ಲಿ ರವೀಂದ್ರ ಜಡೇಜಾ ರಾಜಸ್ಥಾನ್ ರಾಯಲ್ಸ್ ತಂಡ ಸೇರಿಕೊಂಡಿದ್ದಾರೆ. ಈ ಹಿಂದಿನ ಆವೃತ್ತಿಯಲ್ಲಿ ರಾಜಸ್ಥಾನ್ ರಾಯಲ್ಸ್ ನಾಯಕನಾಗಿದ್ದ ಸಂಜು ಸ್ಯಾಮ್ಸನ್‌ರನ್ನು ಪಡೆದುಕೊಂಡ ಚೆನ್ನೈ ಸೂಪರ್ ಕಿಂಗ್ಸ್ ರವೀಂದ್ರ ಜಡೇಜಾರನ್ನು ಬಿಟ್ಟುಕೊಟ್ಟಿದೆ. ಈ ಮೂಲಕ ಹದಿನೈದು ವರ್ಷಗಳ ಬಳಿಕ ರವೀಂದ್ರ ಜಡೇಜಾ ಮತ್ತೊಮ್ಮೆ ಪಿಂಕ್ ಜೆರ್ಸಿ ತೊಟ್ಟು ಕಣಕ್ಕಿಳಿದಿದ್ದಾರೆ. ಸೋಮವಾರ ( ಮಾರ್ಚ್ 30 ) ಗುವಾಹಟಿಯ ಬರ್ಸಾಪರ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ನ ತನ್ನ ಮೊದಲ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಚೆನ್ನೈ […]

ಕನ್ನಡ ದುನಿಯಾ 2 Apr 2026 2:03 pm

ಪ್ರಯಾಣಿಕರಿಗೆ ಗುಡ್ ನ್ಯೂಸ್: ಕುವೈತ್-ಮಂಗಳೂರು ನಡುವೆ ಏಪ್ರಿಲ್ 8ರಿಂದ ವಿಶೇಷ ವಿಮಾನ ಯಾನ ಆರಂಭ

ಮಂಗಳೂರು: ಪ್ರಯಾಣಿಕರಿಗೆ ಗುಡ್ ನ್ಯೂಸ್. ಜಜೀರಾ ಏರ್ ವೇಸ್ ಏಪ್ರಿಲ್ 8ರಿಂದ ಮಂಗಳೂರು-ಕುವೈತ್ ನಡುವೆ ವಿಶೇಷ ವಿಮಾನ ಯಾನ ಆರಂಭಿಸಲಿದೆ ಎಂದು ತಿಳಿಸಿದೆ. ಇದರಿಂದ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉದ್ಯೋಗದಲ್ಲಿರುವ ಕರಾವಳಿ ಭಾಗದ ಜನರಿಗೆ ಹಾಗೂ ದಕ್ಷಿಣ ಭಾರತದ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಏಪ್ರಿಲ್ 8ರಿಂದ ಸೌದಿ ಅರೇಬಿಯಾದ ದಮ್ಮಮ್ ಮೂಲಕ ಕುವೈತ್ ಮತ್ತು ಮಂಗಳೂರು ನಡುವೆ ವಾರಕ್ಕೆ ಎರಡು ಬಾರಿ ವಿಶೇಷ ವಿಮಾನಯಾನ ಸೇವೆ ಆರಂಭವಾಗಲಿದೆ. ಜಜೀರಾ ಏರ್‌ವೇಸ್ ಭಾರತದ ನಾಲ್ಕು ಪ್ರಮುಖ ನಗರಗಳಾದ ಮಂಗಳೂರು, ಕೋಝಿಕ್ಕೋಡ್ (ಕ್ಯಾಲಿಕಟ್), […]

ಕನ್ನಡ ದುನಿಯಾ 2 Apr 2026 1:04 pm

ALERT : ‘ಮಾಯಾಂಗನೆ’ಜಾಲಕ್ಕೆ ಬಿದ್ದ ಬೆಂಗಳೂರಿನ ಟೆಕ್ಕಿ : ಮದುವೆ ಆಮಿಷವೊಡ್ಡಿ ಯುವತಿಯಿಂದ 18 ಲಕ್ಷ ಪಂಗನಾಮ.!

ಬೆಂಗಳೂರು : ಸಿಲಿಕಾನ್ ಸಿಟಿಯ ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬರು ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾದ ಯುವತಿಯೊಬ್ಬಳ ಮಾಯಾಜಾಲಕ್ಕೆ ಬಿದ್ದು ಬರೋಬ್ಬರಿ 18.25 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಮದುವೆಯಾಗುವ ಆಮಿಷವೊಡ್ಡಿ, ನಂತರ ಕ್ರಿಪ್ಟೋ ಟ್ರೇಡಿಂಗ್‌ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಸಿಗುತ್ತದೆ ಎಂದು ನಂಬಿಸಿ ಆಕೆ ಈ ಕೃತ್ಯ ಎಸಗಿದ್ದಾಳೆ. ಹಣ ವರ್ಗಾವಣೆಯಾದ ಬೆನ್ನಲ್ಲೇ ಆಕೆ ನಾಪತ್ತೆಯಾಗಿದ್ದು, ಸಂತ್ರಸ್ತ ಟೆಕ್ಕಿ ಈಗ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ ಮೊರೆ ಹೋಗಿದ್ದಾರೆ. ಹೌದು. ಬೆಂಗಳೂರಿನಲ್ಲಿ ಡೇಟಿಂಗ್ ಆ್ಯಪ್ ಮೂಲಕ […]

ಕನ್ನಡ ದುನಿಯಾ 2 Apr 2026 12:57 pm

ಸೈಬರ್ ಕ್ರೈಂ ಸೇರಿದಂತೆ ಕೆಲವು ಅಪರಾಧಗಳಲ್ಲಿ ರಾಜ್ಯದ ಪ್ರಮಾಣ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿದೆ; ಇದನ್ನು ತಡೆಗಟ್ಟಿ: ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಕೋರಮಂಗಲದ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ “ಪೊಲೀಸ್ ಧ್ವಜ ದಿನಾಚರಣೆ” ಕಾರ್ಯಕ್ರಮದಲ್ಲಿ “ಮುಖ್ಯಮಂತ್ರಿಗಳ ಪದಕ” ಪ್ರದಾನ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯಾವುದೇ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಆಯಾ ಠಾಣಾಧಿಕಾರಿಯ ಗಮನಕ್ಕೆ ಬರದಂತೆ ಯಾವುದೇ ಅಪರಾಧಗಳು, ಕೆಟ್ಟ ವ್ಯವಹಾರಗಳು ನಡೆಯಲು ಸಾಧ್ಯವಿಲ್ಲ ಎನ್ನುವುದು ನನ್ನ ನಂಬಿಕೆ ಎಂದರು. ಹಲವು ರೀತಿಯ ಅಪರಾಧ […]

ಕನ್ನಡ ದುನಿಯಾ 2 Apr 2026 12:46 pm

ಬಂಗಾರ ಕೊಳ್ಳುವವರಿಗೆ ಬಂಪರ್ ಲಾಟರಿ:ಚಿನ್ನದ ದರದಲ್ಲಿ ₹1530, ಬೆಳ್ಳಿಯಲ್ಲಿ ₹5000 ದಿಢೀರ್ ಕುಸಿತ ಇಂದಿನ ಲೇಟೆಸ್ಟ್ ರೇಟ್ ಇಲ್ಲಿದೆ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಸತತವಾಗಿ ಏರಿಕೆಯಾಗುತ್ತಿದ್ದ ಚಿನ್ನದ ಬೆಲೆ ಇಂದು (ಏಪ್ರಿಲ್ 2, ಗುರುವಾರ) ದಿಢೀರ್ ಕುಸಿತ ಕಂಡಿದೆ. ಇರಾನ್-ಇಸ್ರೇಲ್ ಸಂಘರ್ಷದಂತಹ ಯುದ್ಧದ ಪರಿಸ್ಥಿತಿಯ ನಡುವೆಯೂ ಬಂಗಾರದ ಬೆಲೆ ಇಳಿಕೆಯಾಗಿರುವುದು ಮಾರುಕಟ್ಟೆ ತಜ್ಞರು ಮತ್ತು ಹೂಡಿಕೆದಾರರಲ್ಲಿ ಅಚ್ಚರಿ ಮೂಡಿಸಿದೆ. ಇಂದಿನ ದರ ಇಳಿಕೆಯ ಲೆಕ್ಕಾಚಾರ: ಬೆಂಗಳೂರಿನ ಇಂದಿನ ದರ ಪಟ್ಟಿ ಹೀಗಿದೆ: 24 ಕ್ಯಾರೆಟ್ (ಅಪರಂಜಿ ಚಿನ್ನ): ಪ್ರತಿ 10 ಗ್ರಾಂಗೆ ₹1,530 ಇಳಿಕೆಯಾಗಿದ್ದು, ಪ್ರಸ್ತುತ ₹1,51,420 ಕ್ಕೆ ತಲುಪಿದೆ. (1 ಗ್ರಾಂ ಬೆಲೆ: ₹15,142) […]

ಕನ್ನಡ ದುನಿಯಾ 2 Apr 2026 12:40 pm

ಹಾವು ಕಡಿದು ಸಾವು ಪ್ರಕರಣ: ಕರ್ನಾಟಕ ದೇಶದಲ್ಲಿಯೇ ನಂಬರ್ 1 ಸ್ಥಾನದಲ್ಲಿ: ಆತಂಕಕಾರಿ ಮಾಹಿತಿ ಬಹಿರಂಗ

ಬೆಂಗಳೂರು: ಹವು ಕಡಿತದ ಪ್ರಕರಣದಲ್ಲಿ ಕರ್ನಾಟಕ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂಬ ಆತಂಕಕಾರಿ ವರದಿಯೊಂದು ಬಹಿರಂಗವಾಗಿದೆ. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಒಟ್ಟು 277 ಜನರು ಹಾವು ಕಡಿತದಿಂದ ಮೃತಪಟ್ಟಿದ್ದಾರೆ ಎಂದು ಅಂಕಿ-ಅಂಶಗಳು ತಿಳಿಸಿವೆ. ಕಳೆದ ಮೂರು ವರ್ಷಗಳಲ್ಲಿ ಅಂದರೆ 2023 ರಿಂದ 2026ರ ಅವಧಿಯಲ್ಲಿ ರಾಅಜ್ಯದಲ್ಲಿ ಅತಿ ಹೆಚ್ಚು ಸರ್ಪ ಕಚ್ಚಿದ ಪ್ರಕರಣಗಳು ಮತ್ತು ಸಾವುಗಳ ವರದಿಯಾಗಿವೆ. ಇದು ಇತರ ರಾಜ್ಯಗಳಿಗಿಂತ ಹೆಚ್ಚಿನ ಸಂಖ್ಯೆಯಾಗಿದೆ. ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ಕೃಷಿ ಕಾರ್ಮಿಕರು ಮತ್ತು ಗ್ರಾಮೀಣ ಭಾಗದ ಜನರು. […]

ಕನ್ನಡ ದುನಿಯಾ 2 Apr 2026 12:07 pm

ಹನುಮಂತನ ವಿಗ್ರಹಕ್ಕೆ ಸೂರ್ಯನ ಸ್ಪರ್ಶ ; ಅದ್ಭುತ ವೀಡಿಯೋ ಹಂಚಿಕೊಂಡ ಮೆಗಾಸ್ಟಾರ್ ಚಿರಂಜೀವಿ |WATCH VIDEO

ಮೆಗಾಸ್ಟಾರ್ ಚಿರಂಜೀವಿ ಅವರು ಮೊದಲಿನಿಂದಲೂ ಆಂಜನೇಯ ಸ್ವಾಮಿಯ ಪರಮ ಭಕ್ತರು. ಇಂದು (ಏಪ್ರಿಲ್ 2, 2026) ಹನುಮಾನ್ ಜಯಂತಿಯ ಶುಭ ಸಂದರ್ಭದಲ್ಲಿ, ಚಿರಂಜೀವಿ ಅವರು ತಮ್ಮ ಮನೆಯ ಪೂಜಾ ಮಂದಿರದಲ್ಲಿ ನಡೆದ ಒಂದು ಅದ್ಭುತ ಸನ್ನಿವೇಶದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಚಿರಂಜೀವಿ ಅವರ ಮನೆಯ ಪೂಜಾ ಮಂದಿರದಲ್ಲಿರುವ ಹನುಮಂತನ ವಿಗ್ರಹದ ಮೇಲೆ ಸೂರ್ಯನ ಕಿರಣಗಳು ನೇರವಾಗಿ ಬಿದ್ದಿವೆ. ಈ ದೃಶ್ಯವು ಅಯೋಧ್ಯೆಯ ಬಾಲರಾಮನ ಹಣೆಯ ಮೇಲೆ ಸೂರ್ಯ ಕಿರಣಗಳು ಬಿದ್ದ ‘ಸೂರ್ಯ ತಿಲಕ’ದ ವೈಭವವನ್ನು ನೆನಪಿಸುವಂತಿದೆ.”ಪ್ರತಿ […]

ಕನ್ನಡ ದುನಿಯಾ 2 Apr 2026 12:07 pm

ಹೋಟೆಲ್ ಪ್ರಿಯರಿಗೆ ಶಾಕ್: ಬೆಂಗಳೂರಲ್ಲಿ ಕಾಫಿ-ತಿಂಡಿ, ಊಟದ ದರ ದಿಢೀರ್ ಏರಿಕೆ ಕಾರಣವೇನು ಗೊತ್ತಾ?

ಬೆಂಗಳೂರು: ಸಿಲಿಕಾನ್ ಸಿಟಿ ಮಂದಿಗೆ ಈಗ ಹೋಟೆಲ್ ಊಟ ಅಷ್ಟೊಂದು ಸುಲಭವಿಲ್ಲ ಕಳೆದ ಒಂದು ತಿಂಗಳಿನಿಂದ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ದರ ಗಗನಕ್ಕೇರುತ್ತಿರುವುದರಿಂದ ನಗರದ ಪ್ರಮುಖ ಹೋಟೆಲ್‌ಗಳು ಹಾಗೂ ದರ್ಶಿನಿಗಳಲ್ಲಿ ತಿಂಡಿ-ತಿನಿಸುಗಳ ದರವನ್ನು ಸದ್ದಿಲ್ಲದೆಯೇ ಹೆಚ್ಚಿಸಲಾಗಿದೆ. ಗ್ಯಾಸ್ ಬೆಲೆಯಲ್ಲಿ ₹497 ಏರಿಕೆ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲದ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಕೇವಲ ಒಂದು ತಿಂಗಳ ಅವಧಿಯಲ್ಲಿ 19 ಕೆ.ಜಿ ವಾಣಿಜ್ಯ ಸಿಲಿಂಡರ್ ದರ ಭರ್ತಿ 497 ರೂಪಾಯಿ ಏರಿಕೆಯಾಗಿದೆ. ಮಾರ್ಚ್ 1ರಂದು […]

ಕನ್ನಡ ದುನಿಯಾ 2 Apr 2026 11:59 am

SHOCKING: ಮಗನ ಅನಾರೋಗ್ಯ ಸರಿಪಡಿಸಲು ಮಾಟಗಾತಿಯ ಮಾತು ನಂಬಿ ಮಗಳನ್ನೇ ನರಬಲಿ ಕೊಟ್ಟ ತಾಯಿ

ರಾಂಚಿ: ಮಗನ ರೋಗ ಗುಣಪಡಿಸಲು ಮಾಟಗಾತಿಯ ಮಾತು ಕೇಳಿದ ತಾಅಯಿಯೊಬ್ಬಳು ಅನ್ನ ಮಗಳನ್ನೇ ನರಬಲಿ ಕೊಟ್ಟಿರುವ ಅಮಾನವೀಯ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ. ಪ್ರಕರಣ ಸಂಬಂಧ ಬಾಲಕಿಯ ತಾಯಿ, ಆಕೆಯ ಪ್ರಿಯಕರ ಸೇರಿ ಮೂವರನ್ನು ಬಂಧಿಸಲಾಗಿದೆ. ಕುಸುಂಭ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಾರ್ಚ್ 24ರ ಸಂಜೆ ಗ್ರಾಮದಲ್ಲಿ ರಾಮ ನವಮಿ ಮೆರವಣಿಗೆ ನಡೆಯುತ್ತಿತ್ತು ಅಂದು ಬಾಲಕಿ ನಾಅಪತ್ತೆಯಾಗಿದ್ದಳು. ಮರುದಿನ ಬೆಳಗ್ಗೆ 8.30 ರ ಸುಮಾರಿಗೆ ಸ್ಥಳೀಯ ಮಾಧ್ಯಮಿಕ ಶಾಲೆಯ ಹಿಂಭಾಗದ ಬಿದಿರಿನ ತೋಪಿನಲ್ಲಿ ಬಾಲಕಿಯ ಶವ […]

ಕನ್ನಡ ದುನಿಯಾ 2 Apr 2026 11:49 am