ಅಧಿವೇಶನದಲ್ಲಿ ಅವಹೇಳನಕಾರಿ ಹೇಳಿಕೆ: ಶಾಸಕ ಎಸ್. ಸುರೇಶ್ ಕುಮಾರ್ ವಿರುದ್ಧ ದೂರು
ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ಸಚಿವ ಬೈರತಿ ಸುರೇಶ್ ವಿರುದ್ಧ ಶಾಸಕ ಎಸ್. ಸುರೇಶ್ ಕುಮಾರ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಮುಖಂಡರು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಶನಿವಾರ ಸುರೇಶ್ ಕುಮಾರ್ ನಿವಾಸದ ಬಳಿ ಪ್ರತಿಭಟನೆ ನಡೆಸಿ ಮಹಿಳೆಯರಿಗೆ ಅಪಮಾನ ಮಾಡಿದ ಶಾಸಕರು ಕ್ಷಮೆ ಯಾಚಿಸಲಿ ಎಂದು ಪೋಸ್ಟರ್ ಹಿಡಿದು ಒತ್ತಾಯಿಸಿದ್ದರು. ಭಾನುವಾರ ಕಾಂಗ್ರೆಸ್ ಮುಖಂಡರ ನಿಯೋಗ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮಹಿಳೆಯರ ಗೌರವಕ್ಕೆ […]
ರಾಜ್ಯದ 8 ಮಂದಿ ಸೇರಿ 131 ಸಾಧಕರಿಗೆ ‘ಪದ್ಮ’ ಪ್ರಶಸ್ತಿ ಘೋಷಣೆ: ಇಲ್ಲಿದೆ ಸಂಪೂರ್ಣ ಪಟ್ಟಿ
ನವದೆಹಲಿ: ಭಾರತದ ಅತ್ಯಂತ ಪ್ರತಿಷ್ಠಿತ ನಾಗರಿಕ ಗೌರವಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ. ವಿವಿಧ ಕ್ಷೇತ್ರಗಳಲ್ಲಿನ ಅತ್ಯುತ್ತಮ ಕೊಡುಗೆಗಳನ್ನು ನೀಡಿದ ಸಾಧಕರ ಗುರುತಿಸಿ ಪ್ರಶಸ್ತಿ ನೀಡಲಾಗಿದೆ. ಗೃಹ ವ್ಯವಹಾರಗಳ ಸಚಿವಾಲಯ(MHA) ಭಾನುವಾರ 2026 ರ ಪದ್ಮ ಪ್ರಶಸ್ತಿ ಪುರಸ್ಕೃತರ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಭಾರತದ ರಾಷ್ಟ್ರಪತಿಗಳು ಈ ವರ್ಷ 131 ಪದ್ಮ ಪ್ರಶಸ್ತಿಗಳನ್ನು ನೀಡಲು ಅನುಮೋದಿಸಿದ್ದಾರೆ, ಇದರಲ್ಲಿ ಎರಡು ಜೋಡಿ ಪ್ರಕರಣಗಳು ಸೇರಿವೆ, ಇವುಗಳನ್ನು ಒಂದೇ ಪ್ರಶಸ್ತಿ ಎಂದು ಪರಿಗಣಿಸಲಾಗುತ್ತದೆ. ಗೌರವಗಳಲ್ಲಿ ಐದು ಪದ್ಮ […]
BREAKING: ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ
ಮೈಸೂರು: ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಹೆಚ್.ಮಠದ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಕೌಟುಂಬಿಕ ಕಲಹದಿಂದ ನೇಣು ಬಿಗಿದುಕೊಂಡು ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೇಮಲತಾ(38), ಮಕ್ಕಳಾದ ಅನು(13) ಹಾಗೂ ಚೇತನ(15) ಮೃತಪಟ್ಟವರು ಎಂದು ಹೇಳಲಾಗಿದೆ. ಪಿರಿಯಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ನಿಂತಿದ್ದ ಕಾರ್ ಗೆ ಲಾರಿ ಡಿಕ್ಕಿ: ದಂಪತಿ ಸಾವು
ಬೆಳಗಾವಿ: ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೂಗನೊಳ್ಳಿ ಸಮೀಪ ನಿಂತಿದ್ದ ಕಾರ್ ಗೆ ಕಂಟೇನರ್ ಲಾರಿ ಡಿಕ್ಕಿ ಹೊಡೆದು ದಂಪತಿ ಮೃತಪಟ್ಟಿದ್ದಾರೆ. ಕೊಲ್ಲಾಪುರ ಮೂಲದ ಜಿಗರ್ ನಾಕ್ರಾನಿ ಹಾಗೂ ಅವರ ಪತ್ನಿ ಮೃತಪಟ್ಟಿದ್ದಾರೆ. ಹುಬ್ಬಳ್ಳಿಯಿಂದ ಕೊಲ್ಲಾಪುರಕ್ಕೆ ತೆರಳುವ ಮಾರ್ಗ ಮಧ್ಯೆ ಕೂಗನೊಳ್ಳಿ ಸಮೀಪ ಕಾರ್ ನಿಲ್ಲಿಸಿದ್ದಾರೆ. ಈ ವೇಳೆ ವೇಗವಾಗಿ ಬಂದ ಕಂಟೇನರ್ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಜಿಗರ್ ನಾಕ್ರಾನಿ ದಂಪತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನಿಪ್ಪಾಣಿ […]
ಚಲಿಸುತ್ತಿದ್ದ ಖಾಸಗಿ ಬಸ್ ಗೆ ಬೆಂಕಿ: ಅದೃಷ್ಟವಶಾತ್ ಪ್ರಯಾಣಿಕರು ಪಾರು
ಶಿವಮೊಗ್ಗ: ಆಕಸ್ಮಿಕ ಬೆಂಕಿಯಿಂದಾಗಿ ಖಾಸಗಿ ಬಸ್ ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಸಿಗಂದೂರು ಕ್ಷೇತ್ರದ ಬಳಿ ನಡೆದಿದೆ. ಅದೃಷ್ಟವಶಾತ್ ಖಾಸಗಿ ಬಸ್ ನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ ಸಿಗಂದೂರು ಸಮೀಪ ಹುಲಿದೇವರಬನ ಗ್ರಾಮದ ಬಳಿ ಘಟನೆ ನಡೆದಿದೆ. ಖಾಸಗಿ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಇದನ್ನು ಹುಲಿದೇವರಬನ ಗ್ರಾಮಸ್ಥರು ಗಮನಿಸಿ ಬಸ್ ನಿಲ್ಲಿಸಿದ್ದಾರೆ. ಗ್ರಾಮಸ್ಥರು ಕೂಡಲೇ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.
ಭಾರತೀಯ ಸಂವಿಧಾನ ವಿಶ್ವದಲ್ಲೇ ಅತಿದೊಡ್ಡ ಗಣರಾಜ್ಯದ ಅಡಿಪಾಯ ದಾಖಲೆ: ರಾಷ್ಟ್ರಪತಿ ದ್ರೌಪದಿ ಮುರ್ಮು
ನವದೆಹಲಿ: 77 ನೇ ಗಣರಾಜ್ಯೋತ್ಸವದ ಮುನ್ನಾದಿನ ಭಾನುವಾರ ದೇಶವನ್ನುದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಿದ್ದಾರೆ. ಸಂವಿಧಾನದ ನಿರ್ಮಾತೃಗಳಿಗೆ ಗೌರವ ಸಲ್ಲಿಸಿದ ಅವರು ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಬಲಪಡಿಸಲು ಮಹಿಳೆಯರ ಸಬಲೀಕರಣಕ್ಕೆ ಒತ್ತಾಯಿಸಿದರು. ಗಣರಾಜ್ಯೋತ್ಸವವು ದೇಶದ ಭೂತ, ವರ್ತಮಾನ ಮತ್ತು ಭವಿಷ್ಯದ ಸ್ಥಿತಿ ಮತ್ತು ದಿಕ್ಕನ್ನು ಪ್ರತಿಬಿಂಬಿಸಲು ಅವಕಾಶವನ್ನು ಒದಗಿಸುತ್ತದೆ ಎಂದು ಹೇಳಿದರು. ಭಾರತದ ಪ್ರಜಾಪ್ರಭುತ್ವದ ಪ್ರಯಾಣವನ್ನು ಪ್ರತಿಬಿಂಬಿಸುತ್ತಾ, ಭಾರತೀಯ ಸಂವಿಧಾನವು ವಿಶ್ವ ಇತಿಹಾಸದಲ್ಲಿ ಅತಿದೊಡ್ಡ ಗಣರಾಜ್ಯದ ಅಡಿಪಾಯ ದಾಖಲೆಯಾಗಿದೆ ಮತ್ತು ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ […]
ಟಿ-20 ವಿಶ್ವಕಪ್: ಬಲಿಷ್ಠ ತಂಡವನ್ನು ಘೋಷಿಸಿದ ಪಾಕಿಸ್ತಾನ
ಭಾರತದಲ್ಲಿ ಟಿ-20 ವಿಶ್ವಕಪ್ ಆಡುವುದಿಲ್ಲ ಎಂಬ ಬಾಂಗ್ಲಾದೇಶದ ನಿಲುವನ್ನು ಸಮರ್ಥಿಸಿಕೊಂಡು ಕೂತಿದ್ದ ಪಾಕಿಸ್ತಾನ ಟೂರ್ನಿಗೆ ತನ್ನ 15 ಸದಸ್ಯರ ತಂಡವನ್ನು ಘೋಷಣೆ ಮಾಡಿದೆ. ಅವರ ಪ್ರಕಾರ ಬಲಿಷ್ಠ ತಂಡವನ್ನು ಆಯ್ಕೆ ಮಾಡಲಾಗಿದ್ದು, ಕಪ್ ಗೆಲ್ಲುವುದು ಗುರಿಯಾಗಿದೆ. ಟಿ-20 ವಿಶ್ವಕಪ್ ಬಹಿಷ್ಕಾರ ಮಾಡುವ ಬೆದರಿಕೆಯ ಒಂದು ದಿನದ ನಂತರ ಪಾಕಿಸ್ತಾನ 15 ಸದಸ್ಯರ ತಂಡವನ್ನು ಘೋಷಣೆ ಮಾಡಿದೆ. ನಾಯಕರಾಗಿ ಸಲ್ಮಾನ್ ಅಲಿ ಆಗಾ ಫೆಬ್ರವರಿ 7ರಿಂದ ಪ್ರಾರಂಭವಾಗುವ ಪಂದ್ಯಾವಳಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಪಾಕಿಸ್ತಾನ ತನ್ನ ಎಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ […]
ಶಾಲಾ ಹಂತದಲ್ಲೇ ಮಕ್ಕಳಿಗೆ ಆಯಾ ಭಾಗದ ಕಲೆ ಕಲಿಸಲು ಚಿಂತನೆ: ಮಧು ಬಂಗಾರಪ್ಪ
ಶಿವಮೊಗ್ಗ: ಸ್ವಸಹಾಯ ಗುಂಪುಗಳ ಮಹಿಳೆಯರು, ಕುಶಲಕರ್ಮಿಗಳು ತಯಾರಿಸಿದ ವಿವಿಧ ಉತ್ಪನ್ನಗಳನ್ನು ಖರೀದಿಸುವ ಮೂಲಕ ಕಲೆಗೆ ಉತ್ತೇಜನ ನೀಡಿ, ಬೆಳೆಸಬೇಕು ಹಾಗೂ ನಮ್ಮ ಈ ಕಲೆ-ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ವರ್ಗಾಯಿಸಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಎಂದು ತಿಳಿಸಿದರು. ಗಣರಾಜ್ಯೋತ್ಸವದ ಪ್ರಯುಕ್ತ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಮತ್ತು ಜಿಲ್ಲಾ ಉದ್ಯಾನ ಕಲಾ ಸಂಘ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ನಗರದ ಅಲ್ಲಮ ಪ್ರಭು ಮೈದಾನ(ಫ್ರೀಡಂ ಪಾರ್ಕ್)ದಲ್ಲಿ ಜ.24 ರಿಂದ […]
BREAKING: ರೌಡಿಶೀಟರ್ ಆಟೋ ನಾಗನ ಬರ್ಬರ ಹತ್ಯೆ
ಬೆಂಗಳೂರು: ರಾಜ್ಯ ರಾಜಧಾನಿ ಬ್ರೆಂಗಳುರಿನಲ್ಲಿ ಮತ್ತೋರ್ವ ರೌಡಿಶೀಟರ್ ನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ನಡೆದಿದೆ. ನೆಲಮಂಗಲದ ಕುಖ್ಯತ ರೌಡಿಶೀಟರ್ ಆಟೋ ನಾಗ ಕೊಲೆಯಾಗಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬಳಿಯ ಬಾಲಾಜಿ ಫಾರ್ಮ್ ಹೌಸ್ ನಲ್ಲಿ ಆಟೋ ನಾಗನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೃತ್ಯದ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಲಗ್ಗೆರೆ, ಹುಲಿಯೂರುದುರ್ಗ ಠಾಣೆ ವ್ಯಾಪ್ತುಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಳೇ ದ್ವೇಷದ […]
ಬೈಕ್ ಟ್ಯಾಕ್ಸಿಗೆ ಒಪ್ಪಿಗೆ: ಸರ್ಕಾರಕ್ಕೆ ತಲೆನೋವಾದ ಆಟೋ ಚಾಲಕರ ಬೇಡಿಕೆ!
ಹಲವು ದಿನಗಳ ಕಾನೂನು ಹೋರಾಟದ ಬಳಿಕ ಕರ್ನಾಟಕದಲ್ಲಿ ಉಬರ್, ರ್ಯಾಪಿಡೋ ಸೇರಿದಂತೆ ವಿವಿಧ ಕಂಪನಿಗಳ ಬೈಕ್ ಟ್ಯಾಕ್ಸಿ ಸೇವೆಗೆ ಹೈಕೋರ್ಟ್ ಒಪ್ಪಿಗೆ ನೀಡಿದೆ. ಇಷ್ಟು ದಿನ ಬೈಕ್ ಟ್ಯಾಕ್ಸಿ ಬೇಡ ಎನ್ನುತ್ತಿದ್ದ ಆಟೋ ಚಾಲಕರಿಗೆ ಮುಖಭಂಗವಾಗಿದೆ. ಆದರೆ ಈಗ ಚಾಲಕರು ಸರ್ಕಾರದ ಮುಂದೆ ಹೊಸ ಬೇಡಿಕೆ ಇಟ್ಟಿದ್ದಾರೆ. ಕರೆದಲ್ಲಿಗೆ ಬರದ, ಸಂಚಾರಿ ನಿಯಮ ಉಲ್ಲಂಘಿಸಿ ಓಡಿಸುವ, ಬಾಯಿಗೆ ಬಂದಷ್ಟು ದರ ಹೇಳುವ ಆಟೋ ಚಾಲಕರ ದುಡಿಮೆಗೆ ಬೈಕ್ ಟ್ಯಾಕ್ಸಿ ಸೇವೆ ಪೆಟ್ಟು ನೀಡಿದೆ. ಬೆಂಗಳೂರು ನಗರದಲ್ಲಿ ಬೈಕ್ […]
ರಾಮನಗರ: ಮುಂದಿನ ಬಾರಿ ರಾಜ್ಯದಲ್ಲಿ ಮತ್ತೆ ರೈತ ಪರ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಹೇಳುವ ಮೂಲಕ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, 2028ರಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಬಿಡದಿ ಬಳಿ ಟೌನ್ ಶಿಪ್ ನಿರ್ಮಾಣಕ್ಕೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಸಿಎಂ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ 2028ಕ್ಕೆ ರಾಮರಾಜ್ಯ, ರೈತರ ಸರ್ಕಾರ ಅಧಿಕಾರಕ್ಕೆ ಬರಲಿದೆ. ಅದಕ್ಕಾಗಿಯೇ ಭಗವಣ್ತ ನನ್ನನ್ನು ೫ನೇ ಬಾರಿ ಬದುಕಿಸಿದ್ದಾನೆ ಎಂದು ಭರವಸೆ ನೀಡಿದ್ದಾರೆ. […]
ಮುಂಬೈ: ಪ್ಲಾಟ್ಫಾರ್ಮ್ ಆರ್ಥಿಕತೆಯಲ್ಲಿ ನಡೆಯುತ್ತಿರುವ ಶೋಷಣೆ ಮತ್ತು ಅಭದ್ರತೆಯ ವಿರುದ್ಧ, ಕಾರ್ಮಿಕರಾಗಿ ಗುರುತಿಸುವಿಕೆ ಮತ್ತು ಕೇಂದ್ರ ಗಿಗ್ ಕಾನೂನನ್ನು ಜಾರಿಗೆ ತರಲು ಒತ್ತಾಯಿಸಿ ಜನವರಿ 26 ರಂದು ಗಿಗ್ ಮತ್ತು ಪ್ಲಾಟ್ಫಾರ್ಮ್ ಸೇವಾ ಕಾರ್ಮಿಕರ ಒಕ್ಕೂಟ(GIPSWU) ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಿಸಿದೆ. ಈ ಸಾಮೂಹಿಕ ಕ್ರಿಯೆಯ ಭಾಗವಾಗಿ, ಗಿಗ್ ಮತ್ತು ಪ್ಲಾಟ್ಫಾರ್ಮ್ ಸೇವಾ ಕಾರ್ಯಕರ್ತರು ಜನವರಿ 26ರಂದು ತಮ್ಮ ಆ್ಯಪ್ಗಳನ್ನು ಸ್ವಿಚ್ ಆಫ್ ಮಾಡಲು ಮತ್ತು ಆನ್ಲೈನ್ ಪ್ರತಿಭಟನೆಯನ್ನು ನಡೆಸಲು ಕೇಳಿಕೊಳ್ಳಲಾಗಿದೆ. ಫೆಬ್ರವರಿ 3 ರಂದು ಒಕ್ಕೂಟವು ರಾಷ್ಟ್ರವ್ಯಾಪಿ […]
ನಿಯಮ ಉಲ್ಲಂಘಿಸಿ ಒನ್ ವೇ ಸಂಚಾರ: ಕೇವಲ 4 ದಿನದಲ್ಲಿ 11,498 ಕೇಸ್ ದಾಖಲು
ಬೆಂಗಳೂರು: ಬೆಂಗಳೂರು ಸಂಚಾರಿ ಪೊಲೀಸರು ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದವರ ವಿರುದ್ಧ ಸಮರ ಸಾರಿದ್ದಾರೆ. ಇದರ ಬೆನ್ನಲ್ಲೇ ನಿಯಮ ಉಲ್ಲಂಘಿಸಿ ಏಕಮುಖ ಸಂಚಾರ ಮಾಡುತ್ತಿರುವ ಸವಾರರ ವಿರುದ್ಧವೂ ಕಾರ್ಯಾಚರಣೆ ಕೈಗೊಂಡಿದ್ದಾರೆ. ಕೇವಲ 4 ದಿನದಲ್ಲಿ ಸಂಚಾರ ಪೊಲೀಸರು 11,498 ಪ್ರಕರಣ ದಾಖಲಿಸಿದ್ದಾರೆ. ಜನವರಿ 21ರಿಂದ 24ರ ವರೆಗೆ ಕಾರ್ಯಾಚರಣೆ ನಡೆಸಿ ಸಿಸಿಟಿವಿ ಆಧಾರದ ಮೇಲೆ ಒನ್ ವೇ ನಿಯಮ ಉಲ್ಲಂಘಿಸಿದ ವಾಹನಗಳ ಮಾಲೀಕರಿಗೆ ಬಿಸಿ ಮುಟ್ಟಿಸಲಾಗಿದೆ. ಒನ್ ವೇ ರಸ್ತೆಗಳಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚರಿಸುವ ಸವಾರರ […]
ರೈಲ್ವೆ ಸ್ಟೆಷನ್ ನಲ್ಲಿ ಪ್ರೊಫೆಸರ್ ಹತ್ಯೆ ಪ್ರಕರಣ: ಆರೋಪಿ ಅರೆಸ್ಟ್
ಮುಂಬೈ: ರೈಲ್ವೆ ನಿಲ್ದಾಣದಲ್ಲಿಯೇ ಕಾಲೇಜು ಪ್ರೊಫೆಸ್ ಓರ್ವರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಅರು ಬಂಧಿಸಿದ್ದಾರೆ. ವಿಲೇ ಪಾರ್ಲೆಯ ಪ್ರತಿಷ್ಠಿತ ಕಾಲೇಜಿನ ಪ್ರಾಧ್ಯಾಪಕ ಅಲೋಕ್ ಸಿಂಗ್ ಅವರನ್ನು ಮಲಾಡ್ ರೈಲು ನಿಲ್ದಾಣದಲ್ಲಿ ಬರ್ಬರವಾಗಿ ಹತ್ಯೆ ಮಾಡಿ ಆರೋಪಿ ಪರಾರಿಯಾಗಿದ್ದ. 27 ವರ್ಷದ ಓಂಕಾರ್ ಶಿಂಧೆ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಾಧ್ಯಾಪಕ ಅಲೋಕ್ ಸಿಂಗ್ ಹಾಗೂ ಆರೋಪಿ ಓಂಕಾರ್ ಶಿಂಧೆ ಒಂದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಕ್ಷುಲ್ಲಕ ವಿಚಾರವಗಿ ಇಬ್ಬರ ನಡುವೆ ಮಾತು […]
ಬೆಂಗಳೂರು : ಮುಂದಿನ 25 ವರ್ಷಗಳಲ್ಲಿ ಆಗಲಿರುವ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ಎಲ್ಲಾ ನಗರಗಳಲ್ಲೂ ಸಂಚಾರಿ ಗ್ರಿಡ್ ರೂಪಿಸಲು ಚಿಂತನೆ ನಡೆಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ದಾವೋಸ್ ವಿಶ್ವ ಆರ್ಥಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸ್ಸಾದ ಬಳಿಕ ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ದಾವೋಸ್ ಕಾರ್ಯಕ್ರಮದಲ್ಲಿ ಕೆಲವು ಕಂಪನಿಗಳು ಕರ್ನಾಟಕದ 2-3ನೇ ಹಂತದ ನಗರಗಳ ಬಗ್ಗೆಯೂ ಆಸಕ್ತಿ ಹೊಂದಿದ್ದು, ಈ ನಗರಗಳು ಪ್ರಕಾಶಮಾನವಾಗಿ, ಯುವ ಪ್ರತಿಭೆಗಳನ್ನು ಹೊಂದಿರಬೇಕು ಎಂದು ಚರ್ಚೆ […]
ಮಾದಕ ವಸ್ತು ಮಾರಾಟ ಯತ್ನ: ಓರ್ವ ಅರೆಸ್ಟ್
ಮಂಗಳೂರು: ಕಂಕನಾಡಿ ನಗರ ಠಾಣಾ ಪೋಲೀಸರು ಪಡೀಲ್ ಸಮೀಪ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಮಹಮ್ಮದ್ ದಾವೂದ್ ಬಂಧಿತ ಆರೋಪಿ. ಪಡೀಲ್ ರೈಲ್ವೆ ಸೇತುವೆಯಿಂದ ಸರಿಪಳ್ಳ ಕಡೆಗೆ ಹೋಗುವ ರಸ್ತೆಯಲ್ಲಿ ಸ್ಕೂಟರ್ ನಲ್ಲಿ ಮಾದಕ ವಸ್ತು ಮಾರಾಟ ಮಾಡಲು ಗ್ರಾಹಕರಿಗೆ ಕಾಯುತ್ತಿದ್ದ ವೇಳೆ ಪೊಲೀಸ್ ವಾಹನ ಕಂಡು ಪರಾರಿಯಾಗಿದ್ದಾನೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಆತನನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ 80 ಸಾವಿರ ರೂ. ಮೌಲ್ಯದ 16.11 ಗ್ರಾಂ ತೂಕದ ಎಂಡಿಎಂಎ ಗಾಂಜಾ, […]
ನವದೆಹಲಿ: ಅಂದುಕೊಂಡಂತೆ ಆಗಿದ್ದರೆ ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂದಾನಾ ಹಾಗೂ ಪಲಾಶ್ ಮುಚ್ಚಲ್ ವಿವಾಹ ನವೆಂಬರ್ 23, 2025ರಂದು ಆಗಬೇಕಿತ್ತು. ಆದರೆ ಸ್ಮೃತಿ ಮಂದಾನ ಅವರ ತಂದೆಯವರ ಅನಾರೋಗ್ಯದಿಂದಾಗಿ ಮುಂದೂಡಲಾಗಿದ್ದ ಮದುವೆ ಬಳಿಕ ಎರಡೂ ಕುಟುಂಬಗಳು ಮದುವೆಯನ್ನೇ ರದ್ದುಗೊಳಿಸಿದ್ದರು. ಕೆಲ ದಿನಗಳ ಬಳಿಕ ಸ್ಮೃತಿ ಮಂದಾನ ತಮ್ಮ ಮದುವೆ ಮುರಿದು ಬಿದ್ದಿದೆ ಎಂದು ಹೇಳುವ ಮೂಲಕ ಮದುವೆ ರದ್ದಾಗಿದ್ದಾಗಿ ಸ್ಪಷ್ಟಪಡಿಸಿದ್ದರು. ಈಗ ಸ್ಮೃತಿ ಮಂದಾನ ಬಾಲ್ಯದ ಗೆಳೆಯ, ನಟ-ನಿರ್ಮಾಪಕ ವಿದ್ಯಾನ್ ಮಾನೆ ಪಲಾಶ್ […]
ನವದೆಹಲಿ: 2026ನೇ ಸಾಲಿನ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 45 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಪ್ರಕಟವಾಗಿದೆ. ಈ ಬಾರಿ ಕನ್ನಡಿಗ ಪುಸ್ತಕ ಮನೆ ಖ್ಯಾತಿಯ ಅಂಕೇಗೌಡ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅಂಕೇಗೌಡ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದವರು. 20 ಲಕ್ಷಕ್ಕೂ ಹೆಚ್ಚು ಪುಸ್ತಗಳನ್ನು ಸಂಗ್ರಹಿಸಿರುವ ಕೀರ್ತಿ ಅಂಕೇಗೌಡ ಅವರದ್ದು. ಪುಸ್ತಕ ಮನೆ ಎಂಬ ಗ್ರಂಥಾಲಯನ್ನು ನಿರ್ಮಿಸಿ ಜನಪ್ರಿಯರಾಗಿದ್ದಾರೆ. 20ನೇ ವಯಸ್ಸಿನಲ್ಲಿಯೇ ಅಂಕೇಗೌಡ ಪುಸ್ತಕಗಳನ್ನು ಸಂಗ್ರಹಿಸುವ […]
BIG NEWS: ಗಣರಾಜ್ಯೋತ್ಸವ: ಶೌರ್ಯ ಮತ್ತು ಸೇವಾ ಪದಕಗಳಿಗೆ 982 ಪೊಲೀಸ್ ಸಿಬ್ಬಂದಿ ಆಯ್ಕೆ
ನವದೆಹಲಿ: 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಗಣರಾಜ್ಯೋತ್ಸವ ದಿನಾಚರಣೆಯಂದು ಪೊಲೀಸ್ ಸಿಬ್ಬಂದಿಗೆ ನೀಡುವ ಶೌರ್ಯ ಮತ್ತು ಸೇವಾ ಪದಕಗಳಿಗೆ ಈ ಬಾರಿ 982 ಸಿಬ್ಬಂದಿಗಳು ಆಯ್ಕೆಯಾಗಿದ್ದಾರೆ. ಪೊಲೀಸ್, ಅಗ್ನಿಶಾಮಕ, ಗೃಹರಕ್ಷಕ, ನಾಗರಿಕ ರಕ್ಷಣಾ ಮತ್ತು ತಿದ್ದುಪಡಿ ಸೇವೆಗಳಿಗಾಗಿ 982 ಸಿಬ್ಬಂದಿಯನ್ನು ಶೌರ್ಯ ಮತ್ತು ಸೇವಾ ಪದಕಗಳಿಗೆ ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ 982 ಪದಕಗಳಲ್ಲಿ 125 ಶೌರ್ಯ ಪದಕಗಳು ಸೇರಿವೆ. ಮುಖ್ಯವಾಗಿ ಜಮ್ಮು ಕಾಶ್ಮೀರದ ನಕ್ಸಲ್ ಪೀಡಿತ ಹಿಂಸಾಚಾರ ಪ್ರದೇಶದಲ್ಲಿ ಕಾರ್ಯ […]
ಮೊಟ್ಟೆ ಬೇಯಿಸುವಾಗ ಸಿಪ್ಪೆ ಅಂಟಿಕೊಳ್ಳುತ್ತಿದೆಯೇ? ಸುಲಭವಾಗಿ ಸುಲಿಯಲು ನೀರಿನೊಂದಿಗೆ ಈ ಒಂದು ಪದಾರ್ಥ ಬೆರೆಸಿ!
ಮೊಟ್ಟೆ ಆರೋಗ್ಯಕ್ಕೆ ಉತ್ತಮ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ವೈದ್ಯರ ಪ್ರಕಾರ ಪ್ರತಿದಿನ ಒಂದು ಮೊಟ್ಟೆ ತಿನ್ನುವುದು ದೇಹಕ್ಕೆ ಅಗತ್ಯವಾದ ಪ್ರೋಟೀನ್ ಮತ್ತು ವಿಟಮಿನ್ಗಳನ್ನು ಒದಗಿಸುತ್ತದೆ. ಆದರೆ, ಮೊಟ್ಟೆಯನ್ನು ಬೇಯಿಸುವಾಗ ಸಿಪ್ಪೆ ಸುಲಿಯುವುದು ಒಂದು ದೊಡ್ಡ ತಲೆನೋವಿನ ಕೆಲಸ. ಸಿಪ್ಪೆಯ ಜೊತೆಗೆ ಮೊಟ್ಟೆಯ ಬಿಳಿ ಭಾಗವೂ ಅಂಟಿಕೊಂಡು ಬರುವುದು ಅಥವಾ ಬೇಯುವಾಗ ಮೊಟ್ಟೆ ಒಡೆಯುವುದು ಸಾಮಾನ್ಯ. ಇನ್ನು ಮುಂದೆ ಈ ಚಿಂತೆ ಬೇಡ, ಇಲ್ಲಿದೆ ಒಂದು ಸರಳ ಉಪಾಯ. ನಿಂಬೆ ರಸದ ಮ್ಯಾಜಿಕ್ ನೀವು ಮೊಟ್ಟೆಯನ್ನು ಬೇಯಿಸಲು […]
ರಕ್ಕಸ ವೇಗಕ್ಕೆ ಇಬ್ಬರು ಬಾಲಕರು ಬಲಿ: ಅಂಬ್ಯುಲೆನ್ಸ್ ಅಡಿಯಲ್ಲಿ ಸಿಲುಕಿದ ಬಾಲಕನನ್ನು 40 ಮೀಟರ್ ಎಳೆದೊಯ್ದ ಪಾಪಿ ಚಾಲಕ
ಪ್ರಯಾಗ್ರಾಜ್: ಉತ್ತರ ಪ್ರದೇಶದ ಪ್ರಯಾಗ್ರಾಜ್-ರೇವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಜೆ ನಡೆದ ಭೀಕರ ರಸ್ತೆ ಅಪಘಾತವೊಂದು ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ. ಅತಿವೇಗವಾಗಿ ಬಂದ ಅಂಬ್ಯುಲೆನ್ಸ್ ಚಾಲಕನ ನಿರ್ಲಕ್ಷ್ಯಕ್ಕೆ ಸೈಕಲ್ನಲ್ಲಿ ತೆರಳುತ್ತಿದ್ದ ಇಬ್ಬರು ಬಾಲಕರು ಬಲಿಯಾಗಿದ್ದಾರೆ. ಈ ಭೀಕರ ದೃಶ್ಯವು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. 40 ಮೀಟರ್ ಎಳೆದೊಯ್ದ ಅಂಬ್ಯುಲೆನ್ಸ್ ಘಟನೆಯಲ್ಲಿ ಕಾಂತಿ ಗ್ರಾಮದ ನಿವಾಸಿಗಳಾದ ರಿಂಕು ಪಟೇಲ್ (15) ಮತ್ತು ಶೋಭಿತ್ ಪಟೇಲ್ (12) ಎಂಬುವವರು ಮೃತಪಟ್ಟಿದ್ದಾರೆ. ಇವರಿಬ್ಬರು ಸೈಕಲ್ನಲ್ಲಿ ಮನೆಗೆ ಬೇಕಾದ ಸಾಮಗ್ರಿಗಳನ್ನು ಖರೀದಿಸಲು […]
ಬೆಳಿಗ್ಗೆ ಹಚ್ಚಿದ ಲಿಪ್ಸ್ಟಿಕ್ ರಾತ್ರಿಯವರೆಗೂ ಅಳಿಸಬಾರದೇ? ಮೇಕಪ್ ತಜ್ಞರು ನೀಡಿದ ಈ 5 ಟಿಪ್ಸ್ ಫಾಲೋ ಮಾಡಿ!
ನೀವು ಎಷ್ಟೇ ದುಬಾರಿ ಲಿಪ್ಸ್ಟಿಕ್ ಬಳಸಿದರೂ ಊಟ ಅಥವಾ ಕಾಫಿ ಸೇವಿಸಿದ ನಂತರ ಅದು ಮಸುಕಾಗುವುದು ಅಥವಾ ಹರಡುವುದು ಸಾಮಾನ್ಯ. ಕಚೇರಿ ಕೆಲಸ ಅಥವಾ ಸಮಾರಂಭಗಳ ನಡುವೆ ಪದೇ ಪದೇ ಟಚ್-ಅಪ್ ಮಾಡುವುದು ಕಿರಿಕಿರಿಯ ಉಂಟುಮಾಡಬಹುದು. ಆದರೆ ಮೇಕಪ್ ತಜ್ಞರ ಪ್ರಕಾರ, ಕೇವಲ ಬ್ರಾಂಡ್ ಮುಖ್ಯವಲ್ಲ, ಲಿಪ್ಸ್ಟಿಕ್ ಹಚ್ಚುವ ವಿಧಾನವೂ ಅಷ್ಟೇ ಮುಖ್ಯ. ಈ ಕೆಳಗಿನ ಐದು ಸರಳ ಹಂತಗಳನ್ನು ಪಾಲಿಸಿದರೆ ನಿಮ್ಮ ಲಿಪ್ಸ್ಟಿಕ್ ಸುಮಾರು 8 ರಿಂದ 12 ಗಂಟೆಗಳ ಕಾಲ ಅಳಿಸದಂತೆ ಇರುತ್ತದೆ. 1. […]
ಬೆಂಗಳೂರು: ರಾಜ್ಯ ಸರ್ಕಾರ ಕೇವಲ ರಾಜಕಾರಣಕ್ಕಾಗಿ ಮತ್ತು ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ವಿರುದ್ದ ಆರೋಪ ಮಾಡುತ್ತಿರುವುದು ರಾಜ್ಯಪಾಲರಿಗೆ ತೋರಿರುವ ಅಗೌರವ. ಅದು ಸಂವಿಧಾನಕ್ಕೆ ಮಾಡಿರುವ ಅಪಚಾರ. ಅವರ ಮೇಲೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳುತ್ತಿರುವುದು ಅತ್ಯಂತ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಸಂಸದ ಬಸವರಾಜ್ ಬೊಮ್ಮಾಯಿ, ಹಿಂದಿನ ರಾಜ್ಯಪಾಲರು ಮೊದಲ ಪುಟ ಕೊನೆ ಪುಟ ಓದದೆ ಇರುವ ಅನೇಕ ಉದಾಹರಣೆಗಳಿವೆ. ರಾಜ್ಯಪಾಲರ […]
BIG NEWS: ಪೀಠೋಪಕರಣ ಮಳಿಗೆಯಲ್ಲಿ ಬೆಂಕಿ ಅವಘಡ: ಇಬ್ಬರು ಮಕ್ಕಳು ಸೇರಿ ಐವರು ದುರ್ಮರಣ
ಹೈದರಾಬಾದ್: ಪೀಠೋಪಕರಣ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನ ನಾಂಪಲ್ಲಿ ಪ್ರದೇಶದಲ್ಲಿ ನಡೆದಿದೆ. ನಾಲ್ಕು ಅಂತಸ್ತಿನ ಪೀಠೋಪಕರಣ ಕಟ್ಟಡದ ಮಳಿಗೆಯಲ್ಲಿ ಈ ದುರಂತ ಸಂಭವಿಸಿದೆ. ಬೆಂಕಿ ಅವಘಡದಲ್ಲಿ ಅವರು ಉಸಿರುಗಟ್ಟಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೃತರಲ್ಲಿ ಇಬ್ಬರು ಮಕ್ಕಳು, ಓರ್ವ ವೃದ್ಧೆ ಸೇರಿ ಐವರು ಇದ್ದಾರೆ. ಮೃತದೇಹಗಳನ್ನು ಕಟ್ಟಡದ ನೆಲಮಾಳಿಗೆಯಿಂದ ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆ ನಡೆಸಲಾಗುತ್ತಿದೆ. ಮಳಿಗೆ […]
ಜೀವಕ್ಕೆ ಕುತ್ತು ತರುತ್ತಾ ರೈಲಿನ ಈ ಬಾಗಿಲು? ದೀಪಕ್ ವೇದಿ ಹಂಚಿಕೊಂಡ ವಿಡಿಯೋ ಕಂಡು ಬೆಚ್ಚಿಬಿದ್ದ ಪ್ರಯಾಣಿಕರು!
ನವದೆಹಲಿ: ಭಾರತೀಯ ರೈಲ್ವೆಯ ಫಸ್ಟ್ ಎಸಿ ಕೋಚ್ಗಳಲ್ಲಿನ ಸುರಕ್ಷತೆಯ ಬಗ್ಗೆ ಈಗ ದೊಡ್ಡ ಮಟ್ಟದ ಚರ್ಚೆ ಆರಂಭವಾಗಿದೆ. ಖ್ಯಾತ ಟ್ರಾವೆಲ್ ಬ್ಲಾಗರ್ ದೀಪಕ್ ವೇದಿ ಅವರು ಹಂಚಿಕೊಂಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದ್ದು, ರೈಲ್ವೇ ಇಲಾಖೆಯ ವಿನ್ಯಾಸದ ಬಗ್ಗೆ ಅನೇಕರು ಪ್ರಶ್ನೆ ಎತ್ತಿದ್ದಾರೆ. ವೈರಲ್ ವಿಡಿಯೋದಲ್ಲಿ ಏನಿದೆ? ದೀಪಕ್ ವೇದಿ ಅವರು ಫಸ್ಟ್ ಎಸಿ ಕೋಚ್ನಲ್ಲಿ ಪ್ರಯಾಣಿಸುತ್ತಿದ್ದಾಗ ಅಲ್ಲಿನ ಒಂದು ಬಾಗಿಲನ್ನು ತೆರೆದಿದ್ದಾರೆ. ಆಶ್ಚರ್ಯವೆಂದರೆ, ಆ ಬಾಗಿಲು ತೆರೆದ ಕೂಡಲೇ ಯಾವುದೇ ತಡೆಗೋಡೆ ಇಲ್ಲದೆ ನೇರವಾಗಿ […]
ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ-ಫೈರಿಂಗ್ ಪ್ರಕರಣದ ಬೆನ್ನಲ್ಲೇ ಶಾಸಕ ಜನಾರ್ಧನ ರೆಡ್ಡಿ ಹಾಗೂ ಶ್ರೀರಾಮುಲುಗೆ ಸೇರಿದ ಮಾಡೆಲ್ ಹೌಸ್ ನಲ್ಲಿ ಬೆಂಕಿ ಪ್ರಕರಣ, ರೆಡ್ಡಿ ಸಹೋದರರು ಹಾಗೂ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ನಡುವೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ರೆಡ್ದಿ ಮಾಡೆಲ್ ಹೌಸ್ ಗೆ ಬೆಂಕಿ ಪ್ರಕರಣದಲ್ಲಿ ಆರು ಅಪ್ರಾಪ್ತರು ಸೇರಿ ಪೊಲೀಸರು ಎಂಟು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಹುಡುಗರು ರೀಲ್ಸ್ ಹಾಗೂ ಫೋಟೋ ಶೂಟ್ ಗೆ ಮಾಡೆಲ್ ಹೌಸ್ ಗೆ ಹೋಗಿದ್ದ ವೇಳೆ […]
Republic Day 2026: ಗಣರಾಜ್ಯೋತ್ಸವದ ಕುರಿತು ಕುತೂಹಲಕಾರಿ ಸಂಗತಿಗಳು
ಭಾರತ ಗಣರಾಜ್ಯೋತ್ಸವ 2026ರ ಆಚರಣೆಗೆ ಸಿದ್ಧವಾಗಿದೆ. ಜನವರಿ 26ರ ಬಗೆಗಿನ ಕುತೂಹಲಕಾರಿ ಸಂಗತಿಗಳು ಎಲ್ಲರಿಗೂ ತಿಳಿದಿರಲಿಲ್ಲ, ಗಣರಾಜ್ಯೋತ್ಸವ ಭಾರತದ ಪ್ರಜಾಸತ್ತಾತ್ಮಕ ಮೌಲ್ಯವನ್ನು ಸೂಚಿಸುತ್ತದೆ. ಜನವರಿ 26 ಸಂವಿಧಾನ ಮತ್ತು ಭಾರತವು ಗಣರಾಜ್ಯವಾದ ಬಗೆಗಿನ ಅಷ್ಟೇನೂ ತಿಳಿದಿಲ್ಲದ ಸಂಗತಿಗಳನ್ನು ತಿಳಿದುಕೊಳ್ಳಿ. ಜನವರಿ 26, 2026ರಂದು ಗಣರಾಜ್ಯೋತ್ಸವ ಆಚರಿಸಲು ಸಜ್ಜಾಗುತ್ತಿದೆ. ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಜನರ ಶಕ್ತಿಯತ್ತ ಗಮನವನ್ನು ಕೇಂದ್ರೀಕರಿಸುತ್ತದೆ. ನವದೆಹಲಿಯಲ್ಲಿ ನಡೆಯುವ ಭವ್ಯ ಮೆರವಣಿಗೆ ದೇಶಭಕ್ತಿಯ ಪ್ರತೀಕವಾಗಿದೆ. ಭಾರತವು ಗಣರಾಜ್ಯವಾಗಿ ತನ್ನ ಗುರುತನ್ನು ಎಷ್ಟು ಚಿಂತನಶೀಲವಾಗಿ ರೂಪಿಸಿದೆ ಮತ್ತು […]
ಕಾಫಿ ಕುಡಿಯುವ ಅಭ್ಯಾಸ ನಿಮಗಿದೆಯೇ? ಈ ಒಂದು ತಪ್ಪು ಮಾಡಿದರೆ ಲಾಭಕ್ಕಿಂತ ಹಾನಿಯೇ ಹೆಚ್ಚು!
ಬೆಂಗಳೂರು:ಕಾಫಿ ಪ್ರಿಯರಿಗೆ ಇದೊಂದು ಮುಖ್ಯವಾದ ಎಚ್ಚರಿಕೆ. ದಿನವಿಡೀ ಕಾಫಿ ಕುಡಿಯುವ ಅಭ್ಯಾಸ ನಿಮಗಿದ್ದರೆ, ಅದು ನಿಮ್ಮ ಆರೋಗ್ಯದ ಮೇಲೆ ಲಾಭಕ್ಕಿಂತ ಹೆಚ್ಚು ಹಾನಿ ಮಾಡಬಹುದು ಎಂಬ ಅಂಶ ಇತ್ತೀಚಿನ ಸಂಶೋಧನೆಯಿಂದ ತಿಳಿದುಬಂದಿದೆ. ಕಾಫಿ ಕೇವಲ ನಿದ್ರೆಯಿಂದ ಎಬ್ಬಿಸುವ ಪಾನೀಯವಲ್ಲ, ಅದು ದೀರ್ಘಾಯುಷ್ಯದ ಗುಟ್ಟು ಕೂಡ ಹೌದು. ಆದರೆ, ಈ ಲಾಭ ಪಡೆಯಲು ನೀವು ಕಾಫಿ ಕುಡಿಯುವ ‘ಸಮಯ’ ಬಹಳ ಮುಖ್ಯ. ಇತ್ತೀಚಿನ ಯುರೋಪಿಯನ್ ಸ್ಟಡಿ ಆಫ್ ಕಾರ್ಡಿಯಾಲಜಿ (European Study of Cardiology) ವರದಿಯ ಪ್ರಕಾರ, ಕಾಫಿ […]
ಗುಟ್ಕಾ-ಪಾನ್ ಮಸಾಲಾ ಪ್ರಿಯರಿಗೆ ಶಾಕ್: ಏಪ್ರಿಲ್ 2026 ರಿಂದ ದೇಶಾದ್ಯಂತ ತಂಬಾಕು ಉತ್ಪನ್ನಗಳ ನಿಷೇಧಕ್ಕೆ ಸಿದ್ಧತೆ?
ನವದೆಹಲಿ: ಭಾರತದಲ್ಲಿ ತಂಬಾಕು ಮತ್ತು ನಿಕೋಟಿನ್ ಮುಕ್ತ ಸಮಾಜ ನಿರ್ಮಾಣದ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ದೊಡ್ಡ ಹೆಜ್ಜೆಯನ್ನಿಡಲು ಮುಂದಾಗಿದೆ ಎಂಬ ಚರ್ಚೆಗಳು ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಜೋರಾಗಿ ಕೇಳಿಬರುತ್ತಿವೆ. ಒಡಿಶಾ ಸರ್ಕಾರವು ಇತ್ತೀಚೆಗೆ ರಾಜ್ಯಾದ್ಯಂತ ಗುಟ್ಕಾ ಮತ್ತು ಪಾನ್ ಮಸಾಲಾ ಉತ್ಪನ್ನಗಳನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ, ಈ ನಿಯಮ ಏಪ್ರಿಲ್ 2026 ರಿಂದ ದೇಶಾದ್ಯಂತ ಜಾರಿಯಾಗುವ ಸಾಧ್ಯತೆ ಇದೆ ಎಂಬ ವರದಿಗಳು ಹರಿದಾಡುತ್ತಿವೆ. ಒಡಿಶಾ ಸರ್ಕಾರದ ಕ್ರಾಂತಿಕಾರಿ ನಿರ್ಧಾರ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ […]
ಈಜುಕೊಳದಲ್ಲಿ ಶವವಾಗಿ ಪತ್ತೆಯಾದ ಮಹಿಳೆ: ಪತಿಯಿಂದಲೇ ಕೊಲೆ ಶಂಕೆ
ರಾಮನಗರ: ಈಜುಕೊಳದಲ್ಲಿ ಮಹಿಳೆಯೊಬ್ಬರು ಶವವಾಗಿ ಪತ್ತೆಯಾಗಿದ್ದು, ಪತಿಯೇ ಪತ್ನಿಯನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ರಾಮನಗರದ ಕನಕಪುರ ತಾಲೂಕಿನ ಬೆಟ್ಟೆಗೌಡನಪಾಳ್ಯದಲ್ಲಿ ಈ ಘಟನೆ ನಡೆದಿದೆ. 29 ವರ್ಷದ ಪ್ರತಿಭಾ ಮೃತ ಮಹಿಳೆ. ಪ್ರತಿಭಾ ಹಾಗೂ ಪತಿ ಬಾಬು ಗ್ರಾಮದ ಹೊರವಲಯದಲ್ಲಿರುವ ತೋಟದ ಮನೆಯಲ್ಲಿ ವಾಸವಾಗಿದ್ದರು. ಪತ್ರಿಭಾ ಬಾಬುಗೆ ಎರಡನೇ ಹೆಂಡತಿ. ದಂಪತಿಗೆ ಇಬ್ಬರು ಮಕ್ಕಳಿದ್ದರು. ಪತಿ-ಪತ್ನಿ ನಡುವೆ ಆಗಾಗ ಗಲಾಟೆಯಾಗುತ್ತಿತ್ತು. ಕೌಟುಂಬಿಕ ಕಲಹಕ್ಕೆ ಪತ್ನಿಯನ್ನೇ ಪತಿ ಬಾಬು ಹತ್ಯೆ ಮಡಿದ್ದಾನೆ ಎಂದು ಪ್ರತಿಭಾ ಪೋಷೋಷಕರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ […]
BIG NEWS: ಕರ್ನಾಟಕ ಎಂಜಿನಿಯರಿಂಗ್ ಸೀಟ್ ಬ್ಲಾಕಿಂಗ್, ಪಿಎಸ್ಐ ನೇಮಕಾತಿ ಹಗರಣ: ಇಡಿಯಿಂದ 21 ಕೋಟಿ ರೂ.ಆಸ್ತಿ ಜಪ್ತಿ
ಬೆಂಗಳೂರು: ಮಹತ್ವದ ತನಿಖೆಯಲ್ಲಿ ಕರ್ನಾಟಕದ ಎಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ಮತ್ತು ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಒಟ್ಟು 21 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. ಬೆಂಗಳೂರಿನ ಬಿಎಂಎಸ್ ಎಜುಕೇಶನ್ ಟ್ರಸ್ಟ್ಗೆ ಸಂಬಂಧಿಸಿದ ಎಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಮಹತ್ವದ ಕ್ರಮ ಕೈಗೊಂಡಿದ್ದು, 19.46 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ಅದಲ್ಲದೆ ರಾಜ್ಯದಲ್ಲಿ 2021–22ರಲ್ಲಿ ನಡೆದ 545 ಪಿಎಸ್ಐಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 1.53 […]
‘ಧುರಂಧರ್’ಖ್ಯಾತಿಯ ಸಾರಾ ಅರ್ಜುನ್ ಈಗ ಟಾಲಿವುಡ್ ನಾಯಕಿ: ಬಹುನಿರೀಕ್ಷಿತ ಚಿತ್ರ ಯಾವುದು?
ಹೈದರಾಬಾದ್: ಖ್ಯಾತ ನಿರ್ದೇಶಕ ಗುಣಶೇಖರ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ‘ಯುಫೋರಿಯಾ’ (Euphoria) ಚಿತ್ರದ ಮೂಲಕ ಬಾಲನಟಿ ಸಾರಾ ಅರ್ಜುನ್ ಈಗ ಪೂರ್ಣಪ್ರಮಾಣದ ನಾಯಕಿಯಾಗಿ ಟಾಲಿವುಡ್ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಬಾಲಿವುಡ್ನ ‘ಧುರಂಧರ್’ ಚಿತ್ರದಲ್ಲಿ ಮಿಂಚಿದ್ದ ಈ ಪ್ರತಿಭಾವಂತ ನಟಿ, ಈಗ ತೆಲುಗು ಪ್ರೇಕ್ಷಕರನ್ನು ಸೆಳೆಯಲು ಸಜ್ಜಾಗಿದ್ದಾರೆ. ನೀಲಿ ಸೀರೆಯಲ್ಲಿ ಕಂಗೊಳಿಸಿದ ನಟಿ ಚಿತ್ರದ ಪ್ರಚಾರದ ಅಂಗವಾಗಿ ಹೈದರಾಬಾದ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಾರಾ ಅರ್ಜುನ್ ಉಟ್ಟಿದ್ದ ನೀಲಿ ಬಣ್ಣದ ಆರ್ಗನ್ಜಾ ಸಿಲ್ಕ್ ಸೀರೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. […]
ಬೆಳಗಾವಿ: ದೇಶದ ಅತಿ ದೊಡ್ಡ ರಾಬರಿ ಪ್ರಕರಣ ಎಂದೇ ಹೇಳಲಾಗುತ್ತಿರುವ ಕರ್ನಾಟಕದ ಗಡಿ ಜಿಲ್ಲೆ ಬೆಳಗಾವಿಯ ಚೋರ್ಲಾ ಘಾಟ್ ನಲ್ಲಿ ನಡೆದ 400 ಕೋಟಿ ರೂ ಹಣವಿದ್ದ 2 ಕಂಟೇನರ್ಗಳು ನಾಪತ್ತೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಬೆಳಗಾವಿಯಲ್ಲಿ ಚೋರ್ಲಾ ಘಾಟ್ ನಲ್ಲಿ ನಡೆದಿದ್ದು 400 ಕೋಟಿಯಲ್ಲ ಬರೋಬ್ಬರಿ 1000 ಕೋಟಿ ದರೋಡೆ ಎಂದು ಹೇಳಲಾಗುತ್ತಿದೆ. ಚೋರ್ಲಾ ಘಾಟ್ ನಲ್ಲಿ ದರೋಡೆಯಾಗಿದ್ದು 1000 ಕೋಟಿ ರೂಪಾಯಿ. ಅದರಲ್ಲಿ ಬ್ಯಾನ್ ಆಗಿದ್ದ 2000 ರೂ ಮುಖ ಬೆಲೆಯ ನೋಟುಗಳು […]
ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ 5 ಕೋಟಿ ರೂ. ಮಾನನಷ್ಟ ಮೊಕದ್ದಮೆ: ಹರತಾಳು ಹಾಲಪ್ಪ
ಬೆಂಗಳೂರು: ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ವಿರುದ್ಧ ಮಾನನಷ್ಟ ಮೊಕದ್ದಮೆಯ ನೋಟಿಸ್ ಕೊಟ್ಟಿದ್ದೇನೆ. ಅವರು ಸಮರ್ಪಕ ಉತ್ತರ ಕೊಡದೇ ಇದ್ದಲ್ಲಿ 5 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲಿದ್ದೇನೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಅವರು ತಿಳಿಸಿದ್ದಾರೆ. ಪದೇಪದೇ ಅವರು ಸಿಗಂದೂರು ದೇವಸ್ಥಾನದ ವಿಷಯ ಪ್ರಸ್ತಾಪ ಮಾಡುತ್ತಾರೆ. ಹಾಲಪ್ಪ ಅವರು ಶಾಸಕರಾಗಿದ್ದಾಗ ಸಿಗಂದೂರು ದೇವಸ್ಥಾನವನ್ನು ಮುಜರಾಯಿಗೆ ಸೇರಿಸುವ ಪ್ರಯತ್ನ ಮಾಡಿದ್ದರೆಂದು ಸುಳ್ಳು ಹೇಳುತ್ತಿದ್ದಾರೆ. ನಾನು ಯಾವತ್ತೂ ಸಿಗಂದೂರು ದೇವಸ್ಥಾನವನ್ನು ಮುಜರಾಯಿಗೆ ಸೇರಿಸುವುದಾಗಲೀ, ಸರ್ಕಾರದ ವಶಕ್ಕೆ ಪಡೆಯುವ […]
ಇಂದು ಭಾರತ –ನ್ಯೂಜಿಲೆಂಡ್ 3ನೇ ಟಿ20 ಸಮರ: ಸರಣಿ ವಶಪಡಿಸಿಕೊಳ್ಳುತ್ತಾ ಭಾರತ?
ಗುವಾಹಟಿ: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಸತತ ಎರಡು ಗೆಲುವುಗಳೊಂದಿಗೆ ಅಬ್ಬರಿಸುತ್ತಿರುವ ಟೀಮ್ ಇಂಡಿಯಾ ಈಗ ಸರಣಿ ಕೈವಶ ಮಾಡಿಕೊಳ್ಳುವ ಗುರಿಯೊಂದಿಗೆ ಅಖಾಡಕ್ಕಿಳಿಯುತ್ತಿದೆ. ರಾಯ್ಪುರದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಭರ್ಜರಿ ಜಯ ದಾಖಲಿಸಿರುವ ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತ ತಂಡ ಇಂದು ಗುವಾಹಟಿಯ ಬರ್ಸಾಪಾರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಮೂರನೇ ಪಂದ್ಯದಲ್ಲಿ ಕಿವೀಸ್ ಪಡೆಯನ್ನು ಎದುರಿಸಲಿದೆ. ಸರಣಿ ಗೆಲುವಿನ ಮೇಲೆ ಕಣ್ಣು ಐದು ಪಂದ್ಯಗಳ ಈ ಸರಣಿಯಲ್ಲಿ ಭಾರತ ಈಗಾಗಲೇ 2-0 ಅಂತರದ ಮುನ್ನಡೆ ಸಾಧಿಸಿದೆ. […]
ಮೈದಾನದಲ್ಲಿ ಸ್ಪಿನ್ ಮೋಡಿ, ವೈಯಕ್ತಿಕ ಬದುಕಿನಲ್ಲಿ ಸಂಚಲನ: ಧನಶ್ರೀ ಬಳಿಕ ಆರ್ಜೆ ಮಹ್ವಶ್ ಜೊತೆಗೂ ಚಹಲ್ ಬ್ರೇಕಪ್?
ಮುಂಬೈ: ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಸದ್ಯ ಮೈದಾನದ ಹೊರಗಿನ ವೈಯಕ್ತಿಕ ವಿಚಾರಗಳಿಂದಾಗಿ ಸುದ್ದಿಯಲ್ಲಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಟೀಮ್ ಇಂಡಿಯಾದಿಂದ ಹೊರಗಿರುವ ಚಹಲ್, ಈಗ ಗ್ಲಾಮರ್ ಮತ್ತು ಮನರಂಜನಾ ಲೋಕದ (Showbiz) ಪ್ರಮುಖ ಚರ್ಚಾ ವಿಷಯವಾಗಿದ್ದಾರೆ. ಧನಶ್ರೀ ವರ್ಮಾ ಜೊತೆಗಿನ ವಿವಾಹ ಬಂಧನ ಅಂತ್ಯ ಚಹಲ್ ಮತ್ತು ಖ್ಯಾತ ಕೊರಿಯೋಗ್ರಾಫರ್ ಧನಶ್ರೀ ವರ್ಮಾ 2020ರ ಡಿಸೆಂಬರ್ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಈ ಜೋಡಿ ಸಾಕಷ್ಟು ಫೇಮಸ್ ಆಗಿತ್ತು. ಆದರೆ […]
ಕೇಂದ್ರದ ಸಲಹೆಯಂತೆ ನ್ಯಾಯಮೂರ್ತಿ ವರ್ಗಾವಣೆ: ಕೊಲಿಜಿಯಂ ವಿರುದ್ಧ ಸಿಡಿದೆದ್ದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಉಜ್ಜಲ್ ಭೂಯಾನ್ PC: x.com/thewire_in ಹೊಸದಿಲ್ಲಿ: ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, “ಆಂತರಿಕ ವ್ಯವಸ್ಥೆ”ಯಿಂದಲೇ ಇದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಉಜ್ಜಲ್ ಭೂಯಾನ್, ಕೇಂದ್ರ ಸರ್ಕಾರದ ಸಲಹೆಯಂತೆ ಮಧ್ಯಪ್ರದೇಶ ಹೈಕೋರ್ಟ್ ನ್ಯಾಯಮೂರ್ತಿ ಅತುಲ್ ಶ್ರೀಧರನ್ ಅವರನ್ನು ಅಲಹಾಬಾದ್ ಹೈಕೋರ್ಟ್ಗೆ ವರ್ಗಾಯಿಸಿರುವ ಕ್ರಮವನ್ನು ಬಹಿರಂಗವಾಗಿ ಟೀಕಿಸಿದ್ದಾರೆ. ಕೊಲಿಜಿಯಂ ವ್ಯವಸ್ಥೆಯ ಮೇಲೆ ಇದು “ಕಾರ್ಯಾಂಗದ ಒತ್ತಡಕ್ಕೆ ಬಹಿರಂಗ ನಿದರ್ಶನ”ವಾಗಿದ್ದು, “ದುರದೃಷ್ಟಕರ ಬೆಳವಣಿಗೆ” ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನ್ಯಾಯಮೂರ್ತಿ ಶ್ರೀಧರನ್ ಅವರ ಹೆಸರನ್ನು ನೇರವಾಗಿ ಉಲ್ಲೇಖಿಸದೆ, ಸರ್ಕಾರಕ್ಕೆ ಅನಾನುಕೂಲವೆನಿಸುವ ಆದೇಶ ನೀಡಿದ ಕಾರಣಕ್ಕೆ ಒಬ್ಬ ನ್ಯಾಯಮೂರ್ತಿಯನ್ನು ಒಂದು ಹೈಕೋರ್ಟ್ನಿಂದ ಮತ್ತೊಂದು ಹೈಕೋರ್ಟ್ಗೆ ವರ್ಗಾಯಿಸುವ ಅಗತ್ಯವೇನಿದೆ ಎಂದು ನ್ಯಾಯಮೂರ್ತಿ ಭೂಯಾನ್ ಪ್ರಶ್ನಿಸಿದ್ದಾರೆ. ನ್ಯಾಯಮೂರ್ತಿ ಶ್ರೀಧರನ್ ಅವರನ್ನು ಮಧ್ಯಪ್ರದೇಶ ಹೈಕೋರ್ಟ್ನಿಂದ ಛತ್ತೀಸ್ಗಢ ಹೈಕೋರ್ಟ್ಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಕಳೆದ ಆಗಸ್ಟ್ನಲ್ಲಿ ಶಿಫಾರಸು ಮಾಡಿತ್ತು. ಆದರೆ ಕೇಂದ್ರ ಸರ್ಕಾರದ ಮನವಿಯ ಮೇರೆಗೆ ಕೊಲಿಜಿಯಂ ತನ್ನ ನಿರ್ಧಾರವನ್ನು ಬದಲಿಸಿ, ಅವರನ್ನು ಅಕ್ಟೋಬರ್ನಲ್ಲಿ ಅಲಹಾಬಾದ್ ಹೈಕೋರ್ಟ್ಗೆ ವರ್ಗಾಯಿಸಿತು. ನ್ಯಾಯಮೂರ್ತಿ ಶ್ರೀಧರನ್ ನೇತೃತ್ವದ ಮಧ್ಯಪ್ರದೇಶ ಹೈಕೋರ್ಟ್ ಪೀಠವು ಅಲ್ಲಿನ ಸರ್ಕಾರಕ್ಕೆ ಅನಾನುಕೂಲವಾಗುವ ಆದೇಶ ನೀಡಿದ್ದ ಹಿನ್ನೆಲೆಯಲ್ಲಿ, ದಂಡನಾತ್ಮಕ ಕ್ರಮವಾಗಿ ಅವರನ್ನು ವರ್ಗಾಯಿಸಲಾಗಿದೆ ಎಂದು ಹಲವಾರು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದರು. ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಕೀಳುಹಾಸ್ಯದ ಭಾಷೆ ಬಳಸಿದ ಆರೋಪದ ಸಂಬಂಧ ಬಿಜೆಪಿ ಸಚಿವ ವಿಜಯ್ ಶಾ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ ಎಂಬ ಆರೋಪವೂ ಕೇಳಿಬಂದಿತ್ತು. “ನಿರ್ದಿಷ್ಟ ಹೈಕೋರ್ಟ್ ನ್ಯಾಯಮೂರ್ತಿಗಳನ್ನು ಮತ್ತೊಂದು ಹೈಕೋರ್ಟ್ಗೆ ವರ್ಗಾಯಿಸುವ ಸಂಬಂಧ ತಾನೇ ನೀಡಿದ್ದ ಶಿಫಾರಸ್ಸನ್ನು, ಕೇಂದ್ರ ಸರ್ಕಾರದ ಕೋರಿಕೆಯ ಮೇರೆಗೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಬದಲಾಯಿಸಿರುವುದು, ಕೊಲಿಜಿಯಂ ವ್ಯವಸ್ಥೆಯ ಸಮಗ್ರತೆಯ ವಿಷಯದಲ್ಲಿ ಮಾಡಿಕೊಂಡ ರಾಜಿಯಲ್ಲವೇ?” ಎಂದು ನ್ಯಾಯಮೂರ್ತಿ ಭೂಯಾನ್ ಕಟುವಾಗಿ ಪ್ರಶ್ನಿಸಿದ್ದಾರೆ.
ಬೆಂಗಳೂರು: ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿದ್ದ ರಾಜೀವ್ ಗೌಡ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಮೊದಲ ದಿನವೇ ಅವರನ್ನು ಬಂಧಿಸಲು ಆದೇಶ ನೀಡಿದ್ದೆ. ಬಂಧಿಸುವಷ್ಟರಲ್ಲಿ ತಪ್ಪಿಸಿಕೊಂಡು ಹೋಗಿದ್ದಾರೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾಅತನಾಡಿದ ಗೃಹ ಸಚಿವ ಪರಮೇಶ್ವರ್, ರಾಜೀವ್ ಗೌಡ ಎಷ್ಟು ದಿನ ಅಂತಾ ತಪ್ಪಿಸಿಕೊಳ್ಳಲು ಸಾಧ್ಯ? ಅವರನ್ನು ಮುಲಾಜಿಲ್ಲದೇ ಬಂಧಿಸುತ್ತೇವೆ ಎಂದು ಹೇಳಿದರು. ರಾಜೀವ್ ಗೌಡರನ್ನು ಖಂಡಿತವಗಿ ಬಂಧಿಸುತ್ತೇವೆ. ಯಾರ ಒತ್ತಡಕ್ಕೂ ಮಣಿಯುವ ಪ್ರಶ್ನೆ ಇಲ್ಲ […]

19 C