SENSEX
NIFTY
GOLD
USD/INR

Weather

25    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source

ಶೇಖ್ ಹಸೀನಾರ ಮತದಾರರ ಚೀಟಿಯನ್ನು ಅಮಾನತುಗೊಳಿಸಿದ ಬಾಂಗ್ಲಾದೇಶ ಚುನಾವಣಾ ಆಯೋಗ

ಶೇಖ್ ಹಸೀನಾ | PC : PTI  ಢಾಕಾ: ಪದಚ್ಯುತ ಪ್ರಧಾನಿ ಶೇಖ್ ಹಸೀನಾರ ರಾಷ್ಟ್ರೀಯ ಗುರುತಿನ ಚೀಟಿಯನ್ನು ಅಮಾನತುಗೊಳಿಸಿರುವುದಾಗಿ ಬುಧವಾರ ಬಾಂಗ್ಲಾದೇಶ ಚುನಾವಣಾ ಆಯೋಗ ತಿಳಿಸಿದೆ. ಹೀಗಾಗಿ, ಮುಂದಿನ ವರ್ಷ ನಡೆಯಲಿರುವ ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಶೇಖ್ ಹಸೀನಾ ಮತದಾನದ ವಂಚಿತರಾಗಲಿದ್ದಾರೆ. “ಯಾರದ್ದಾದರೂ ರಾಷ್ಟ್ರೀಯ ಗುರುತಿನ ಚೀಟಿಯನ್ನು ಅಮಾನತುಗೊಳಿಸಿದರೆ, ಅಂಥವರು ವಿದೇಶದಿಂದ ಮತ ಚಲಾಯಿಸಲು ಆಗದು. ಹಸೀನಾರ ರಾಷ್ಟ್ರೀಯ ಗುರುತಿನ ಚೀಟಿಯನ್ನು ಅಮಾನತುಗೊಳಿಸಲಾಗಿದೆ” ಎಂದು ಚುನಾವಣಾ ಆಯೋಗದ ಕಾರ್ಯದರ್ಶಿ ಅಖ್ತರ್ ಅಹಮದ್ ಹೇಳಿದ್ದಾರೆ. “ಹಸೀನಾರ ತಂಗಿ ಶೇಖ್ ರೆಹಾನಾ, ಪುತ್ರ ಸಜೀದ್ ವಾಜೆದ್ ಜಾಯ್ ಹಾಗೂ ಪುತ್ರಿ ಸಮಿಯಾ ಅವರ ಗುರುತಿನ ಚೀಟಿಯನ್ನೂ ಅಮಾನತುಗೊಳಿಸಲಾಗಿದೆ” ಎಂದು ಹೆಸರು ಹೇಳಲು ಇಚ್ಛಿಸದ ಚುನಾವಣಾಧಿಕಾರಿಯನ್ನು ಉಲ್ಲೇಖಿಸಿ ‘ಢಾಕಾ ಟ್ರಿಬ್ಯೂನ್’ ಪತ್ರಿಕೆ ವರದಿ ಮಾಡಿದೆ. ಇದರೊಂದಿಗೆ, ರೆಹಾನಾ ಅವರ ಮಕ್ಕಳಾದ ತುಲಿಪ್ ರಿಜ್ವಾನಾ ಸಿದ್ದೀಕ್, ಅಜ್ಮಿನಾ ಸಿದ್ದೀಕ್ ಹಾಗೂ ಸೋದರಳಿಯ ರದ್ವಾನ್ ಮುಜೀಬ್ ಸಿದ್ದೀಕ್ ಬಾಬಿ, ಅವರ ಸೋದರ ಮಾವ ಮತ್ತು ಹಸೀನಾರ ಮಾಜಿ ಭದ್ರತಾ ಸಲಹೆಗಾರ ನಿವೃತ್ತ ಮೇಜರ್ ಜನರಲ್ ತಾರಿಕ್ ಅಹ್ಮದ್ ಸಿದ್ದೀಕ್, ಅವರ ಪತ್ನಿ ಶಾಹಿನ್ ಸಿದ್ದೀಕ್ ಮತ್ತು ಅವರ ಪುತ್ರಿ ಬುಶ್ರಾ ಸಿದ್ದೀಕ್ ಅವರ ಗುರುತಿನ ಚೀಟಿಗಳನ್ನೂ ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ.

ವಾರ್ತಾ ಭಾರತಿ 18 Sep 2025 5:34 pm

ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ….!

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಚುನಾವಣಾ ಆಯೋಗದ (ಇಸಿಐ) ವಿರುದ್ಧ ಮತಗಳ್ಳತನದ ಆರೋಪ ಮಾಡಿದ ಕೂಡಲೇ, ಆಡಳಿತಾರೂಢ ಬಿಜೆಪಿ ತಿರುಗೇಟು ನೀಡಿದೆ. ಕಾಂಗ್ರೆಸ್ ನಾಯಕ ಮತ್ತು ಅವರ ಪಕ್ಷಕ್ಕೆ ಭಾರತದ ಪ್ರಜಾಪ್ರಭುತ್ವದ ಬಗ್ಗೆ ನಂಬಿಕೆ ಇಲ್ಲ ಎಂದು ಆರೋಪಿಸಿದೆ. ರಾಹುಲ್ ಗಾಂಧಿ ಚುನಾವಣಾ ಆಯೋಗ ಮತ್ತು ಮೋದಿ ಸರ್ಕಾರದ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿರುವುದರಿಂದ ಬಿಜೆಪಿ ಅವರ ಮೇಲೆ ತನ್ನ ದಾಳಿಯನ್ನು ತೀವ್ರಗೊಳಿಸಿದೆ. ಪಕ್ಷದ ಪ್ರಧಾನ ಕಚೇರಿಯಲ್ಲಿ ಮಾಜಿ ಕೇಂದ್ರ […]

ಪ್ರಜಾ ಪ್ರಗತಿ 18 Sep 2025 5:26 pm

ಮಗಳನ್ನು ಮಲಗಿಸಿ ಸರೋವರಕ್ಕೆ ಎಸೆದು ಕೊಂದ ತಾಯಿ

ಅಜ್ಮೀರ್ ಮೂರು ವರ್ಷದ ಮಗಳನ್ನು ಕಲ್ಲು ಬೆಂಚಿನ ಮೇಲೆ ಮಲಗಿಸಿ ನಿದ್ರೆ ಬಂದ ಬಳಿಕ ಆಕೆಯನ್ನು ತಾಯಿ ಸರೋವರಕ್ಕೆ ಎಸೆದು ಕೊಲೆ ಮಾಡಿರುವ ಘಟನೆ ರಾಜಸ್ಥಾನದ ಅಜ್ಮೀರ್​ನಲ್ಲಿ ನಡೆದಿದೆ. ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ. ಮಂಗಳವಾರ ತಡರಾತ್ರಿ ಮಹಿಳೆ ಅಜ್ಮೀರ್‌ನ ಅನಾ ಸಾಗರ್ ಸರೋವರದ ಬಳಿ ಮಗುವಿನೊಂದಿಗೆ ಹಲವು ಗಂಟೆಗಳ ಕಾಲ ಕಳೆದ ನಂತರ ತಾಯಿ ಈ ಕೃತ್ಯವೆಸಗಿದ್ದಾಳೆ. ಆರೋಪಿಯನ್ನು ಅಂಜಲಿ ಅಲಿಯಾಸ್ ಪ್ರಿಯಾ ಸಿಂಗ್ ಎಂದು ಗುರುತಿಸಲಾಗಿದ್ದು, ಆಕೆ ಮೂಲತಃ ಉತ್ತರ ಪ್ರದೇಶದ ಬನಾರಸ್ […]

ಪ್ರಜಾ ಪ್ರಗತಿ 18 Sep 2025 4:19 pm

ಬೆಂಗಳೂರಿನ 110 ಕಿ.ಮೀ ಉದ್ದದ ಕಾರಿಡಾರ್ : 18,000 ಕೋಟಿ ವೆಚ್ಚದ ಯೋಜನೆಗೆ ಡಿಪಿಆರ್

ಬೆಂಗಳೂರು: ಬೆಂಗಳೂರಿನ ಟ್ರಾಫಿಕ್‌ ಸಮಸ್ಯೆ ನಿವಾರಣೆಗಾಗಿ 110 ಕಿ.ಮೀ. ಎತ್ತರದ ಕಾರಿಡಾರ್‌ಗಾಗಿ ವಿವರವಾದ ಯೋಜನಾ ವರದಿ ಅನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ತಾಂತ್ರಿಕ ಸಲಹಾ ಸಮಿತಿ ಅನುಮೋದಿಸಿದೆ. ಈಗಾಗಲೇ 22,000 ಕೋಟಿ ರೂ. ಅಂದಾಜು ವೆಚ್ಚದ ಸುರಂಗ ರಸ್ತೆ ಯೋಜನೆಯ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಅದರ ನಡುವೆಯೇ ಈ ಯೋಜನೆ ಬಂದಿದೆ. ಇದರ ಅಂದಾಜು ವೆಚ್ಚ 18,000 ಕೋಟಿ ರೂ. ಬೆಂಗಳೂರಿನಾದ್ಯಂತ ಚಲಿಸುವ ಈ ಕಾರಿಡಾರ್‌ಗೆ ಭೂಸ್ವಾಧೀನಕ್ಕಾಗಿ ರೂ 3,000 ಕೋಟಿ ಸೇರಿದಂತೆ ರೂ […]

ಪ್ರಜಾ ಪ್ರಗತಿ 18 Sep 2025 4:06 pm

ಹೊಸ ಜಿಎಸ್‌ಟಿ : ₹2-3 ಸಾವಿರ ಕೋಟಿ ವಿದ್ಯುತ್‌ ಖರೀದಿ ವೆಚ್ಚ ಉಳಿಕೆ : ಪ್ರಲ್ಹಾದ್‌ ಜೋಶಿ

ನವದೆಹಲಿ: ಹೊಸ ಜಿಎಸ್‌ಟಿ ಡಿಸ್ಕಾಂಗಳ ವಿದ್ಯುತ್‌ ಖರೀದಿ ಹೊರೆಯನ್ನು ತಗ್ಗಿಸಲಿದ್ದು, ದೇಶಾದ್ಯಂತ ವಾರ್ಷಿಕ ₹2-3 ಸಾವಿರ ಕೋಟಿ ವಿದ್ಯುತ್‌ ಖರೀದಿ ವೆಚ್ಚ ಉಳಿತಾಯವಾಗಲಿದೆ. ಅಲ್ಲದೇ, ಪಿಎಂ ಸೂರ್ಯಘರ್‌ ಮತ್ತು ಪಿಎಂ ಕುಸುಮ್‌ ಘಟಕಗಳ ವೆಚ್ಚವೂ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಲಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ. ಜಿಎಸ್‌ಟಿ@2ರಲ್ಲಿ ನವೀಕರಿಸಬಹುದಾದ ಇಂಧನ ಸಾಧನ-ಸಲಕರಣೆಗಳ ಮೇಲಿನ ತೆರಿಗೆಯನ್ನು ಶೇ.12ರಿಂದ ಶೇ.5ಕ್ಕೆ ಇಳಿಸಲಾಗಿದ್ದು, ಇದು ಭಾರತದ ಶುದ್ಧ ಇಂಧನ ಪರಿವರ್ತನಾ […]

ಪ್ರಜಾ ಪ್ರಗತಿ 18 Sep 2025 3:38 pm

ಭ್ರಷ್ಟಾಚಾರದಿಂದಾಗಿ ದೇಶಕ್ಕೆ ಅಪಖ್ಯಾತಿ: ಖವಾಜಾ ಆಸಿಫ್

ಇಸ್ಲಾಮಾಬಾದ್: ಸದಾ ಒಂದಲ್ಲ ಒಂದು ರೀತಿಯ ಹೇಳಿಕೆಯಿಂದ ಅಪಹಾಸ್ಯಕ್ಕೆ ಗುರಿಯಾಗುತ್ತಿರುವ ಪಾಕಿಸ್ತಾನ ಇದೀಗ ಮತ್ತೊಮ್ಮೆ ವಿಲಕ್ಷಣ ಹೇಳಿಕೆ ನೀಡಿ ಸುದ್ದಿಯಲ್ಲಿದೆ. ಭ್ರಷ್ಟಾಚಾರದಿಂದಾಗಿ ದೇಶಕ್ಕೆ ಅಪಖ್ಯಾತಿ ಬರುತ್ತಿದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಹೇಳಿದ್ದಾರೆ. ಮಾಧ್ಯಮಕ್ಕೆ ನೀಡಿರುವ ಸಂದರ್ಶನವೊಂದರಲ್ಲಿ ಮಾತಾನಾಡಿರುವ ಅವರು, ಭ್ರಷ್ಟಾಚಾರದ ಕಾರಣದಿಂದಾಗಿ ಪಾಕಿಸ್ತಾನದ ಪ್ರತಿಷ್ಠೆಗೆ ಧಕ್ಕೆಯಾಗಿದೆ. ರಾಜಕೀಯ ನಿಧಿಯ ನೆಪದಲ್ಲಿ ಅಮೆರಿಕವು ಅಂತಹ ಪದ್ಧತಿಗಳನ್ನು ಪ್ರಚೋದಿಸುತ್ತಿದೆ. ಅಮೆರಿಕವು ಇಸ್ರೇಲ್‌ ನಿಂದ ಬಹಿರಂಗವಾಗಿ ಲಂಚ ಪಡೆಯುತ್ತಿದೆ ಎಂದು ಆರೋಪಿಸಿದರು. […]

ಪ್ರಜಾ ಪ್ರಗತಿ 18 Sep 2025 2:41 pm

ಉಕ್ರೇನ್ ಯುದ್ಧ ಪರಿಹರಿಸಲು ಸಹಾಯಕ್ಕೆ ಭಾರತ ಸಿದ್ಧವಿದೆ: ಮೋದಿ ಭರವಸೆ

ನವದೆಹಲಿ: ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕೆ ಭಾರತ ಸಾಧ್ಯವಿರುವ ಎಲ್ಲಾ ಕೊಡುಗೆಗಳನ್ನು ನೀಡಲು ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ನಿನ್ನೆ ಬುಧವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ತಿಳಿಸಿದ್ದಾರೆ.ಪ್ರಧಾನಿ ಮೋದಿಯವರ 75ನೇ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಕರೆ ಮಾಡಿದ್ದ ಸಂದರ್ಭದಲ್ಲಿ ಮೋದಿ ಈ ಮಾತುಗಳನ್ನು ಹೇಳಿದ್ದಾರೆ. ಮೊನ್ನೆ ಮಂಗಳವಾರ ರಾತ್ರಿ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ದೂರವಾಣಿ ಸಂಭಾಷಣೆಯಲ್ಲಿ ಉಕ್ರೇನ್‌ನಲ್ಲಿ […]

ಪ್ರಜಾ ಪ್ರಗತಿ 18 Sep 2025 12:24 pm

ಸಿಂಹ ಅಲ್ಲ ‘ನಾಯಿ’ಎಂದು ಹೆಸರಿಡಬೇಕಿತ್ತು : ಕೆ ಎಂ ಉದಯ್

ಮಂಡ್ಯ : ಅವನ್ಯಾರೋ ಪ್ರತಾಪ ಸಿಂಹನಂತೆ, ಅಪ್ಪಿತಪ್ಪಿ ಸಿಂಹ ಅಂತ ಹೆಸರಿಟ್ಟುಬಿಟ್ಟವರೆ. ಅತನ ಹೆಸರ ಮುಂದೆ ‘ನಾಯಿ’ ಅಂತ ಹೆಸರಿಡಬೇಕಾಗಿತ್ತು. ಅವನ ಹಿನ್ನೆಲೆ ಎಲ್ಲ ಗೊತ್ತಿದೆ. ಇವನ ನಡೆತೆ ಸರಿಯಿಲ್ಲ, ಕಚ್ಚೆಹರುಕ ಎಂದು ಮೈಸೂರಿನಲ್ಲಿ ಹಲವರು ಮಾತನಾಡ್ತಾರೆ ಎಂದು ಮದ್ದೂರು ಶಾಸಕ ಕೆ ಎಂ ಉದಯ್ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮದ್ದೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಅವನ ಹೆಂಡತಿಯೇ ಅವನ ಕಾಟ ಸಹಿಸಿಕೊಳ್ಳಲಾಗದೆ ಬಿಜೆಪಿ ಹೈಕಮಾಂಡ್‍ಗೆ […]

ಪ್ರಜಾ ಪ್ರಗತಿ 18 Sep 2025 12:19 pm

ಮಂಜುನಾಥ್ ಗೆದ್ದರೆ ರಾಜಕೀಯ ನಿವೃತ್ತಿ: ಮಾಲೂರು ಶಾಸಕ ನಂಜೇಗೌಡ

ಕೋಲಾರ: ಕರ್ನಾಟಕ ಹೈಕೋರ್ಟ್ ಆದೇಶದಂತೆ ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಯಲ್ಲಿ ಕೆ.ಎಸ್. ಮಂಜುನಾಥ ಗೌಡ ವಿಜೇತರಾದರ, ರಾಜಕೀಯ ತ್ಯಜಿಸುವುದಾಗಿ ಶಾಸಕ ಕೆ.ವೈ. ನಂಜೇಗೌಡ ಹೇಳಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೊಸಕೋಟೆಯಿಂದ ಮಂಜುನಾಥ ಗೌಡ ಅವರನ್ನು ಕರೆತಂದು ಮಾಲೂರು ಕ್ಷೇತ್ರದಿಂದ ಗೆಲ್ಲುವಂತೆ ಮಾಡಿದ್ದು ನಾನು. ಆದರೆ ಈಗ ಚುನಾವಣೆಯನ್ನು ಪ್ರಶ್ನಿಸುವ ಮೂಲಕ ಶಾಸಕರಾಗಲು ಬಯಸಿದ್ದಾರೆ ಎಂದು ನಂಜೇಗೌಡ ಹೇಳಿದರು. ಮತಎಣಿಕೆ ಅಥವಾ ಹೊಸದಾಗಿ ಚುನಾವಣೆ ನಡೆದರೆ, ಅವರು ಮತ್ತೆ ಸೋಲುತ್ತಾರೆ ಎಂದು ಅವರು ಹೇಳಿದರು. […]

ಪ್ರಜಾ ಪ್ರಗತಿ 18 Sep 2025 12:12 pm

ಪೊಲೀಸ್ ಆಗಬೇಕಾದವನು, ಅಪ್ಪನನ್ನು ಕೊಂದು ಜೈಲುಪಾಲಾದ…..!

ಲಾತೂರ್ ಇನ್ನೇನು ಪರೀಕ್ಷೆ ಬರೆದು ಪೊಲೀಸ್ ಆಗುವ ಕನಸು ಕಂಡಿದ್ದ ವ್ಯಕ್ತಿಯೊಬ್ಬ, ತಂದೆಯನ್ನೇ ಹತ್ಯೆ ಮಾಡಿ ಜೈಲು ಪಾಲಾಗಿರುವ ಘಟನೆ ಮಹಾರಾಷ್ಟ್ರದ ಲಾತೂರ್​​ನಲ್ಲಿ ನಡೆದಿದೆ. ಪರೀಕ್ಷಾ ಶುಲ್ಕದ ಹಣದ ವಿಚಾರದಲ್ಲಿ 70 ವರ್ಷದ ತಂದೆಯೊಂದಿಗೆ ಜಗಳವಾಡಿ ಅವರನ್ನು ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಮಂಗಳವಾರ ಬೆಳಗ್ಗೆ ಹಿನ್‌ಪಲ್ನರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತರ ಪತ್ನಿ ನೀಡಿದ ದೂರಿನ ಮೇರೆಗೆ ಅಜಯ್ ಪಾಂಚಾಲ್ ಎಂದು ಗುರುತಿಸಲಾದ ಆರೋಪಿಯನ್ನು ಬಂಧಿಸಲಾಗಿದೆ […]

ಪ್ರಜಾ ಪ್ರಗತಿ 18 Sep 2025 12:09 pm

ದಿಶಾ ಪಟಾನಿ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ…..!

ಲಖನೌ: ಬಾಲಿವುಡ್ ನಟಿ ದಿಶಾ ಪಟಾನಿ ಅವರ ಬರೇಲಿಯ ನಿವಾಸದ ಹೊರಗೆ ರೋಹಿತ್ ಗೋದಾರ-ಗೋಲ್ಡಿ ಬರಾರ್ ಗ್ಯಾಂಗ್‌ನ ಇಬ್ಬರು ಸದಸ್ಯರು ಗುಂಡಿನ ದಾಳಿ ನಡೆಸಿದ್ದರು. ಅದರ ವಿಡಿಯೋ ಇದೀಗ ವೈರಲ್‌ ಆಗಿದೆ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಬುಧವಾರ ಗಾಜಿಯಾಬಾದ್‌ನ ಟ್ರೋನಿಕಾ ನಗರದ ಬಳಿ ಇಬ್ಬರು ಆರೋಪಿಗಳ ಎನ್‌ಕೌಂಟರ್‌ ಮಾಡಿದ್ದಾರೆ. ದೆಹಲಿ ಪೊಲೀಸ್ ವಿಶೇಷ ಘಟಕ, ಉತ್ತರ ಪ್ರದೇಶ ಎಸ್‌ಟಿಎಫ್ ಮತ್ತು ಹರಿಯಾಣ ಎಸ್‌ಟಿಎಫ್ ಜಂಟಿ ಕಾರ್ಯಾಚರಣೆಯಲ್ಲಿ ಈ ಎನ್‌ಕೌಂಟರ್ ನಡೆಸಲಾಗಿದೆ ಎಂದು ಅವರು […]

ಪ್ರಜಾ ಪ್ರಗತಿ 18 Sep 2025 11:53 am

ಮೋದಿಗೆ ವಿಶೇಷ ಉಡುಗೊರೆ ಕಳುಹಿಸಿದ ಲಿಯೋನೆಲ್ ಮೆಸ್ಸಿ…..!

ನವದೆಹಲಿ: ಈ ವರ್ಷದ ಕೊನೆಯಲ್ಲಿ ಭಾರತಕ್ಕೆ ತಮ್ಮ ಬಹುನಿರೀಕ್ಷಿತ ಭೇಟಿಗೆ ಸಿದ್ಧತೆ ನಡೆಸುತ್ತಿರುವ ಅರ್ಜೆಂಟೀನಾದ ಸೂಪರ್‌ಸ್ಟಾರ್ ಲಿಯೋನೆಲ್ ಮೆಸ್ಸಿ, 75ನೇ ಹುಟ್ಟುಹಬ್ಬದ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ಅವರಿಗೆ 2022 ರ ಫಿಫಾ ವಿಶ್ವಕಪ್ ವಿಜಯೋತ್ಸವದ ಸಹಿ ಹಾಕಿದ ಜೆರ್ಸಿಯನ್ನು ಕಳುಹಿಸಿದ್ದಾರೆ. “ಭಾರತ ಭೇಟಿಯ ಬಗ್ಗೆ ಚರ್ಚಿಸಲು ಫೆಬ್ರವರಿಯಲ್ಲಿ ನಾನು ಮೆಸ್ಸಿಯನ್ನು ಭೇಟಿಯಾದಾಗ, ಪ್ರಧಾನಿಯವರ 75 ನೇ ಹುಟ್ಟುಹಬ್ಬವೂ ಬರುತ್ತಿದೆ ಎಂದು ನಾನು ಅವರಿಗೆ ಹೇಳಿದ್ದೆ ಮತ್ತು ಅವರು ಪ್ರಧಾನಿಗೆ ಸಹಿ ಮಾಡಿದ […]

ಪ್ರಜಾ ಪ್ರಗತಿ 18 Sep 2025 11:48 am

15 ಕ್ವಿಂಟಲ್ ಗೋಧಿಯನ್ನು ಜೆಸಿಬಿಯಿಂದ ಗುಂಡಿ ತೋಡಿ ಮುಚ್ಚಿಸಿದ ವಾರ್ಡನ್ : ಕಾರಣ ಕೇಳಿದ್ರೆ ಷಾಕ್‌ ಆಗೋದು ಪಕ್ಕಾ

ರಾಮನಗರ ಸರ್ಕಾರಿ ಹಾಸ್ಟೆಲ್​​ನಲ್ಲಿರುವ ಬಡ ವಿದ್ಯಾರ್ಥಿಗಳ ಹೊಟ್ಟೆ ತುಂಬಿಸಬೇಕಾದ ಆಹಾರ ಹಾಸ್ಟೆಲ್​​ ವಾರ್ಡನ್​ ದಿವ್ಯ ನಿರ್ಲಕ್ಷ್ಯಕ್ಕೆ ಮಣ್ಣು ಪಾಲಾಗಿದೆ. ರಾಮನಗರ ಹೊರವಲಯದ ಹೆಲ್ತ್ ಸಿಟಿಯಲ್ಲಿರುವ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಮಾದರಿ ಮೆಟ್ರಿಕ್ ನಂತರದ ಪುರುಷರ ಹಾಸ್ಟೆಲ್​​ನಲ್ಲಿ ಘಟನೆ ನಡೆದಿದ್ದು, ಬರೋಬ್ಬರಿ 15 ಕ್ವಿಂಟಲ್ ಗೋಧಿಯನ್ನು ಜೆಸಿಬಿ ಮೂಲಕ ಗುಂಡಿ ತೋಡಿ ಮುಚ್ಚಲಾಗಿದೆ. ಸರ್ಕಾರಿ ಹಾಸ್ಟೆಲ್​​​ ವಾರ್ಡನ್​​ ದಿವ್ಯ ನಿರ್ಲಕ್ಷ ಹಾಗೂ ಅಸಡ್ಡೆಯಿಂದಾಗಿ ಬಡ ವಿದ್ಯಾರ್ಥಿಗಳ‌ ಹೊಟ್ಟೆ ಸೇರಬೇಕಾದ ಗೋಧಿ ಮಣ್ಣು […]

ಪ್ರಜಾ ಪ್ರಗತಿ 18 Sep 2025 11:27 am

ಭಟ್ಕಳ ದನಗಳ ರಾಶಿ ಅಸ್ಥಿಪಂಜರ ಪ್ರಕರಣಕ್ಕೆ ತಿರುವು: ಕೊನೆಗೂ ರಹಸ್ಯ ಬಯಲಿಗೆಳೆದ ಪೊಲೀಸರು

ಕಾರವಾರ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಅರಣ್ಯದಲ್ಲಿ ದನಗಳ ರಾಶಿ ಅಸ್ಥಿಪಂಜರ ಸಿಕ್ಕಿದ್ದ ಪ್ರಕರಣವನ್ನು ಬಯಲಿಗೆಳೆಯುವಲ್ಲಿ ಪೊಲೀಸರು ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ. ಹಲವು ಊರುಗಳಲ್ಲಿ ಕದ್ದ ಗೋವುಗಳನ್ನು ಭಟ್ಕಳಕ್ಕೆ ತಂದು ಮಾಂಸಕ್ಕಾಗಿ ಕಡಿದ ನಂತರ ಉಳಿದ ಮೂಳೆಗಳನ್ನು ಅರಣ್ಯದಲ್ಲಿದಲ್ಲಿ ಹಾಕಿ ಪರಾರಿಯಾಗುತಿದ್ದರು ಎಂಬುದು ಇದೀಗ ಗೊತ್ತಾಗಿದೆ. ಈ ಸಂಬಂಧ ಇಬ್ಬರನ್ನು ಬಂಧಿಸಿರುವ ಪೊಲೀಸರು, ಇತರ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಭಟ್ಕಳದ ಮಗ್ದೂಂ ಕಾಲೂನಿ ಬಳಿಯ ಬೆಳ್ನೆ ಗ್ರಾಮದ ಸರ್ವೆ ನಂಬರ್ 74 ರ […]

ಪ್ರಜಾ ಪ್ರಗತಿ 18 Sep 2025 11:21 am

ಬೆಂಗಳೂರು : ಪೊಲೀಸರ ಲೋಗೋ ತೋರಿಸಿ ನಿವೃತ್ತ ವೈದ್ಯೆಗೆ 70 ಗಂಟೆ ಡಿಜಿಟಲ್‌ ಆರೆಸ್ಟ್‌ : ಹೃದಯಾಘಾತದಿಂದ ಸಾವು

ಹೈದರಾಬಾದ್ : ಬೆಂಗಳೂರು ಪೊಲೀಸರ ಲೋಗೋ ಪ್ರದರ್ಶಿಸಿ ನಿವೃತ್ತ ಸರಕಾರಿ ವೈದ್ಯೆಯೊಬ್ಬರನ್ನು ಆನ್‌ಲೈನ್‌ ದುಷ್ಕರ್ಮಿಗಳು ತೆಲಂಗಾಣದ ಹೈದರಾಬಾದ್‌ನಲ್ಲಿ ಡಿಜಿಟಲ್ ಆರೆಸ್ಟ್‌ನಲ್ಲಿ ಸುಮಾರು 70 ಗಂಟೆಗಳ ಕಾಲ ಸಿಲುಕಿಸಿದ್ದು, ಇದರಿಂದ ಬಳಲಿ ಹೃದಯಾಘಾತಕ್ಕೀಡಾಗಿ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರಿಗೆ 76 ವರ್ಷವಾಗಿತ್ತು, ಇವರು ನಿವೃತ್ತ ಸರ್ಕಾರಿ ವೈದ್ಯೆಯಾಗಿದ್ದರು ಎಂದು ಗೊತ್ತಾಗಿದೆ. ಕಾನೂನು ಜಾರಿ ಅಧಿಕಾರಿಗಳಂತೆ ನಟಿಸಿ ಸೈಬರ್ ವಂಚಕರು ಮೂರು ದಿನಗಳ ಕಾಲ ಈ ವೃದ್ಧೆಗೆ ನಿರಂತರ ಕಿರುಕುಳ ನೀಡಿದ್ದರು. ಇದಾದ ನಂತರ 76 […]

ಪ್ರಜಾ ಪ್ರಗತಿ 18 Sep 2025 10:57 am

ನವೆಂಬರ್‌ನಲ್ಲಿ ‘ಸಮಾಜಮುಖಿ ಸಾಹಿತ್ಯ ಸಂಭ್ರಮ’: ಸಾಹಿತ್ಯಾಸಕ್ತರಿಗೆ ಮುಕ್ತ ಆಹ್ವಾನ

ಬೆಂಗಳೂರು: ಕನ್ನಡ ಸಾಹಿತ್ಯ ಲೋಕದಲ್ಲಿ ಹೊಸ ಸಂಚಲನ ಮೂಡಿಸುವ ಉದ್ದೇಶದಿಂದ, ‘ಸಮಾಜಮುಖಿ’ ಪತ್ರಿಕೆಯು 2025ರ ನವೆಂಬರ್ 8 ಮತ್ತು 9ರಂದು ಬೆಂಗಳೂರಿನಲ್ಲಿ ‘ಸಮಾಜ ಮುಖಿ ಸಾಹಿತ್ಯ ಸಮ್ಮೇಳನ’ವನ್ನು ಆಯೋಜಿಸಿದೆ. ನಗರದ ಅರಮನೆ ರಸ್ತೆಯಲ್ಲಿರುವ ಸ್ಕೌಟ್ಸ್ ಮತ್ತು ಗೈಡ್ಸ್ ಆವರಣದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಈ ಸಮ್ಮೇಳನವು, ಕನ್ನಡ ಸಾಹಿತ್ಯದ ಗಂಭೀರ ಚರ್ಚೆ, ವಿಮರ್ಶೆ ಮತ್ತು ಸಂವಾದಕ್ಕೆ ಹೊಸ ವೇದಿಕೆಯನ್ನು ಕಲ್ಪಿಸುವ ಗುರಿ ಹೊಂದಿದೆ. ಕಳೆದ ಎಂಟು ವರ್ಷಗಳಿಂದ ‘ಸಮಾಜಮುಖಿ ಪ್ರಕಾಶನ’ ಮತ್ತು […]

ಪ್ರಜಾ ಪ್ರಗತಿ 18 Sep 2025 10:54 am

ಬೆಂಗಳೂರು ತೊರೆಯಲು ಮುಂದಾದ ಸ್ಟಾರ್ಟಪ್‌ : ಕಾರಣ ಗೊತ್ತಾ….?

ಬೆಂಗಳೂರು: ಹದಗೆಟ್ಟಿರುವ ರಸ್ತೆಗಳು ಧೂಳು ಮತ್ತು ಸುದೀರ್ಘ ಪ್ರಯಾಣದ ಸಮಯದ ಹಿನ್ನೆಲೆಯಲ್ಲಿ ತನ್ನ ಕಚೇರಿಯನ್ನು ನಗರದಿಂದ ಸ್ಥಳಾಂತರಿಸಲು ನಿರ್ಧರಿಸಿರುವುದಾಗಿ ಬೆಂಗಳೂರು ಮೂಲದ ಲಾಜಿಸ್ಟಿಕ್ಸ್ ಸ್ಟಾರ್ಟ್ಅಪ್ ಕಂಪನಿ ಬ್ಲ್ಯಾಕ್‌ಬಕ್ ತಿಳಿಸಿದೆ. ಈ ಕಂಪನಿಯ ಕಚೇರಿ ನಗರದ ಹೊರ ವರ್ತುಲ ರಸ್ತೆ ಪ್ರದೇಶದಲ್ಲಿದೆ. ಕಳೆದ ಒಂಬತ್ತು ವರ್ಷಗಳಿಂದ ಔಟರ್ ರಿಂಗ್ ರೋಡ್‌ನಲ್ಲಿ ಬೆಳ್ಳಂದೂರಿನಿಂದ ಕಾರ್ಯನಿರ್ವಹಿಸುತ್ತಿದ್ದ ಕಂಪನಿ, ಹದಗೆಟ್ಟಿರುವ ರಸ್ತೆ ಮೂಲಸೌಕರ್ಯ ಉದ್ಯೋಗಿಗಳಿಗೆ ಕೆಲಸ ಮಾಡುವುದನ್ನು ಹೆಚ್ಚು ಕಷ್ಟಕರವಾಗಿಸಿದೆ ಎಂದು ಹೇಳಿದೆ. ಬ್ಲ್ಯಾಕ್‌ಬಕ್‌ನ ಸಹ-ಸಂಸ್ಥಾಪಕ ಮತ್ತು […]

ಪ್ರಜಾ ಪ್ರಗತಿ 18 Sep 2025 10:12 am

ಯೂಟ್ಯೂಬ್‌ ಚಾನೆಲ್‌ ಆರಂಭಕ್ಕೆ ಅನುಮತಿ: ಸಿಎಂ ಇಂಗಿತ

ಹುಬ್ಬಳ್ಳಿ: ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು. ಸೋಮವಾರದಂದು ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು. ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ […]

ಪ್ರಜಾ ಪ್ರಗತಿ 18 Sep 2025 9:59 am

ಬಿಗ್ ಬಾಸ್ ಕನ್ನಡ 12ರ ಮನೆಯ ಫೋಟೋ ಲೀಕ್….!

ಬೆಂಗಳೂರು : ಕನ್ನಡದ ಜನಪ್ರಿಯ ಹಾಗೂ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇದೇ ಸೆಪ್ಟೆಂಬರ್ 28 ರಿಂದ ದೊಡ್ಮನೆ ಆಟ ಶುರುವಾಗಿದೆ. ಇತ್ತೀಚೆಗಷ್ಟೆ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ದಿನ ಬಿಗ್ ಬಾಸ್ ಕನ್ನಡ ಸೀಸನ್ 12ರ ಮೊದಲ ಪ್ರೋಮೋವನ್ನು ಕಲರ್ಸ್ ಕನ್ನಡ ವಾಹಿನಿ ಬಿಡುಗಡೆ ಮಾಡಿತು. ಬಳಿಕ ಕಳೆದ ಶನಿವಾರ ಎರಡನೇ ಪ್ರೋಮೋ ರಿಲೀಸ್ ಮಾಡಿದ್ದು, ಇದನ್ನು ನೋಡಿದ ಬಳಿಕ ಶೋ ಮೇಲಿನ ಕುತೂಹಲ […]

ಪ್ರಜಾ ಪ್ರಗತಿ 18 Sep 2025 9:50 am

ಅಕ್ರಮ ಸಂಬಂಧ ಶಂಕೆಯಿಂದ ಪತ್ನಿಯನ್ನು ಕಂಬಕ್ಕೆ ಕಟ್ಟಿ ಥಳಿಸಿದ ಪತಿ….!

ಪ್ರಕಾಶಂ: ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆಯ ತರ್ಲುಪಾಡು ಮಂಡಲದಲ್ಲಿ ಸೆಪ್ಟೆಂಬರ್ 13ರಂದು ಬಲರಾಜು ಎಂಬಾತ ತನ್ನ ಮೊದಲ ಪತ್ನಿ ಭಾಗ್ಯಮ್ಮನನ್ನು ಕಂಬಕ್ಕೆ ಕಟ್ಟಿ, ಅಕ್ರಮ ಸಂಬಂಧದ ಶಂಕೆಯಿಂದ ದೌರ್ಜನ್ಯ ಎಸಗಿದ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಆರೋಪಿ ಬಲರಾಜು ಪರಾರಿಯಾಗಿದ್ದಾನೆ. ಪೊಲೀಸರು ಆತನಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಬಲರಾಜು ತನ್ನ ಎರಡನೇ ಪತ್ನಿಯೊಂದಿಗೆ ವಾಸಿಸುತ್ತಿದ್ದು, ಭಾಗ್ಯಮ್ಮ ತಮ್ಮ ನಾಲ್ಕು ಮಕ್ಕಳೊಂದಿಗೆ ಗ್ರಾಮದಲ್ಲಿ ವಾಸವಾಗಿದ್ದಳು. ಪತಿ ಆರೋಗ್ಯ ಸಮಸ್ಯೆಯಿಂದ […]

ಪ್ರಜಾ ಪ್ರಗತಿ 17 Sep 2025 5:33 pm

ಕಲಬುರಗಿ : ಸಿಎಂಗೆ ಮುತ್ತಿಗೆ ಎಚ್ಚರಿಕೆ ನೀಡಿದ ರೈತ ಮುಖಂಡರ ಬಂಧನ

ಕಲಬುರಗಿ: ಕಳೆದ ವರ್ಷದ ಬಾಕಿ ಬೆಳೆ ವಿಮೆ ಹಾಗೂ ಈ ವರ್ಷದ ಮಳೆ ಹಾನಿ ಪರಿಹಾರ ಘೋಷಣೆಗೆ ಆಗ್ರಹಿಸಿ ಸಿಎಂಗೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ ರೈತ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ವರ್ಷದ 321 ಕೋಟಿ ರೂಪಾಯಿ ಬಾಕಿ ವಿಮೆ ಇನ್ನೂ ಬಿಡುಗಡೆಗೊಳಿಸಿಲ್ಲ. ಕೂಡಲೇ ಮುಖ್ಯಮಂತ್ರಿಗಳು ಪರಿಹಾರ ನೀಡಬೇಕು ಎಂದು ಕಲಬುರಗಿಯಲ್ಲಿ ರೈತ ಮುಖಂಡರು ಬುಧವಾರ ಬೆಳಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದರು. ಸ್ಥಳಕ್ಕೆ ಯಾವ ಸಚಿವ ಪ್ರತಿನಿಧಿಗಳು ಭೇಟಿ ನೀಡದ ಹಿನ್ನೆಲೆ […]

ಪ್ರಜಾ ಪ್ರಗತಿ 17 Sep 2025 5:24 pm

ಡಾ. ರಶ್ಮಿ ಹೆಗಡೆ ಭಾರತೀಯ ಸೇನೆಯಲ್ಲಿ ಕ್ಯಾಪ್ಟನ್ ಆಗಿ ಆಯ್ಕೆ

ಶಿರಸಿ: ತಾಲೂಕಿನ ಹೆಣ್ಮಗಳೊಬ್ಬಳು ಭಾರತೀಯ ಸೇನೆಯ ಮಿಲಿಟರಿ ಆಸ್ಪತ್ರೆಯಲ್ಲಿ ಕ್ಯಾಪ್ಟನ್ ಆಗಿ ನೇಮಕಗೊಂಡಿದ್ದಾರೆ. ಆಂಧ್ರ ಪ್ರದೇಶದ ಸಿಕಂದರಾಬಾದಿನ ಮಿಲಿಟರಿ ಆಸ್ಪತ್ರೆಯಲ್ಲಿ ಡಾ. ರಶ್ಮಿ ಹೆಗಡೆ, ಎಂ.ಡಿ. (ಜನರಲ್ ಮೆಡಿಸಿನ್) ಇದೀಗ ಸೈನಿಕರ ನೆರವಿನ ಸೇವೆಗೆ ಕಂಕಣತೊಟ್ಟಿದ್ದಾರೆ. ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಎಂಬಿಬಿಎಸ್ ಮುಗಿಸಿ, ಕಳೆದ ಜನೆವರಿ ತಿಂಗಳಿನಲ್ಲಿ ಕೆಎಂಸಿ ಹುಬ್ಬಳ್ಳಿಯಿಂದ ತಮ್ಮ ಎಂಡಿ ಪದವಿಯನ್ನು ಗಳಿಸಿದ್ದರು. ತಾಲೂಕಿನ ಬೊಪ್ಪನಳ್ಳಿಯ ರೋಹಿಣಿ ಮತ್ತು ಡಾ. ಲಕ್ಷ್ಮೀನಾರಾಯಣ ಹೆಗಡೆ, ವಿಶ್ರಾಂತ ಡೀನ್(ಸ್ನಾತಕೋತ್ತರ), ತೋಟಗಾರಿಕಾ ವಿಶ್ವವಿದ್ಯಾಲಯದ, ಬಾಗಲಕೋಟ […]

ಪ್ರಜಾ ಪ್ರಗತಿ 17 Sep 2025 4:56 pm

ಚಡಚಣ : ಎಸ್‌ಬಿಐ ಬ್ಯಾಂಕ್‌ನಲ್ಲಿ 21 ಕೋಟಿ ಮೌಲ್ಯದ ನಗದು

ವಿಜಯಪುರ: ಚಡಚಣ ಎಸ್‌ಬಿಐ ಶಾಖೆಯಲ್ಲಿ1 ಕೋಟಿ ರೂ. ನಗದು, 20 ಕೆಜಿ ಚಿನ್ನಾಭರಣ ಸೇರಿ ಒಟ್ಟು 21 ಕೋಟಿ ಮೌಲ್ಯದ ವಸ್ತುಗಳು ದರೋಡೆಯಾಗಿದೆ . ದರೋಡೆಕೋರರ ಬಂಧನಕ್ಕೆ 8 ತನಿಖಾ ತಂಡ ರಚಿಸಲಾಗಿದೆ ಎಂದು ವಿಜಯಪುರ ಎಸ್‌ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ. ಬ್ಯಾಂಕ್‌ ದರೋಡೆ ಪ್ರಕರಣದ ಬಗ್ಗೆ ಮಾತನಾಡಿದ ಅವರು, ಬ್ಯಾಂಕ್ ದರೋಡೆಗೆ 5 ಜನರು ಬಂದಿದ್ದರು. 6 ಜನ ಬ್ಯಾಂಕ್ ಸಿಬ್ಬಂದಿ ಹಾಗೂ 4 ಜನ ಗ್ರಾಹಕರನ್ನು ದರೋಡೆಕೋರರು […]

ಪ್ರಜಾ ಪ್ರಗತಿ 17 Sep 2025 4:24 pm

ಮಾಜಿ ಸಿಎಂ ಬ್ಯಾಂಕ್‌ ಖಾತೆ ಹ್ಯಾಕ್‌….!

ಬೆಂಗಳೂರು: ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಅವರ ಬ್ಯಾಂಕ್‌ ಖಾತೆ ಹ್ಯಾಕ್ ಆಗಿದ್ದು, ಸೈಬರ್‌ ಕಳ್ಳರು 3 ಲಕ್ಷ ರೂ. ಹಣವನ್ನು ದೋಚಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಆರ್‌ಎಂವಿ ಎಕ್ಸ್‌ಟೆನ್ಷನ್‌ನ ಬಿಬಿಎಂಪಿ ಪಾರ್ಕ್‌ನಲ್ಲಿ ಆಯೋಜಿಸಿದ್ದ75 ಪೌರ ಕಾರ್ಮಿಕರರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಈ ಬಗ್ಗೆ ಮಾತನಾಡಿದ್ದಾರೆ. ನೆನ್ನೆ ನನ್ನ 3 ಅಕೌಂಟ್ ಹ್ಯಾಕ್ ಮಾಡಿದ್ದಾರೆ. ಅದರಲ್ಲಿದ್ದ ತಲಾ ಒಂದೊಂದು ಲಕ್ಷ […]

ಪ್ರಜಾ ಪ್ರಗತಿ 17 Sep 2025 4:07 pm

ಸ್ವದೇಶಿ ಉತ್ಪನ್ನ ಬಳಸಲು ಸಂಸದ ವಿಶ್ವೇಶ್ವರ ಹೆಗಡೆ ಕರೆ

ಶಿರಸಿ ಸ್ವದೇಶಿ ಉತ್ಪಾದಿತ ವಸ್ತುಗಳ ಬಳಕೆಯ ಅಗತ್ಯತೆ ಈಗ ಹಿಂದೆoದಿಗಿoತ ಹೆಚ್ಚಿದೆ.ವಿದೇಶಿ ಉತ್ಪಾದನೆಗಿಂತ ಗುಣಮಟ್ಟದ ಉತ್ಪನ್ನಗಳು ನಮ್ಮಲ್ಲಿಯೇ ಸಿದ್ಧವಾಗುತ್ತಿದ್ದು, ಅವನ್ನೇ ಬಳಸುವ ಮೂಲಕ ನಮ್ಮ ಆರ್ಥಿಕತೆಯನ್ನು ಇನ್ನಷ್ಟು ಬಲಪಡಿಸಿಕೊಳ್ಳಬೇಕಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.ಶಿರಸಿ ನಗರದ ಶಿವಾಜಿ ಚೌಕ ಗಣೇಶ ಮಂಟಪದಲ್ಲಿ ಮಂಗಳವಾರ ಆತ್ಮನಿರ್ಭರ ಭಾರತಕ್ಕಾಗಿ ಸ್ವದೇಶಿ ಅಭಿಯಾನ ಚರ್ಚೆಯಲ್ಲಿ ಅವರು ಮಾತನಾಡಿದರು. ಸ್ವದೇಶಿ ಆಂದೋಲನ ಮಹಾತ್ಮಾಗಾಂಧೀಜಿ ಅವರಿಂದಲೇ ಆರಂಭಗೊoಡಿದ್ದು,ಸ್ವಾತಂತ್ರ್ಯ ಹೋರಾಟದಲ್ಲಿಯೂ ಮಹತ್ವದ ಪಾತ್ರ ನಿಭಾಯಿಸಿದೆ. ಆದಾಗ್ಯೂ ಕಾಲ ಕಾಲಕ್ಕೆ […]

ಪ್ರಜಾ ಪ್ರಗತಿ 17 Sep 2025 3:51 pm

ದೇವಸ್ಥಾನ ಕಳ್ಳರ ಬಂಧನ

ಭಟ್ಕಳ: ಭಟ್ಕಳ ತಾಲೂಕಿನ ಹೆಬಳೆಯಲ್ಲಿರುವ ಶ್ರೀ ಅರಿಕಲ್ಲ ಜಟಕೇಶ್ವರ ಹಾಗೂ ಶ್ರೀ ಶೇಡಬರೆ ಜಟಿಕ ಮಹಾಸತಿ ದೇಗುಲದಲ್ಲಿ ಇತ್ತೀಚಿಗೆ ನಡೆದ ಕಳ್ಳತನ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಭಟ್ಕಳ ಪೊಲೀಸರು ಯಶಸ್ವಿಯಾಗಿದ್ದಾರೆ. ಶಿರಾಲಿಯ ಅಮೀರ ಹಸನ್ ಬ್ಯಾರಿ ಹಾಗೂ ಮಹಮ್ಮದ್ ಇಮ್ರಾನ್ ಅಬ್ದುಲ್ ಗಫಾರ್ ಸಾ:ಭಟ್ಕಳ ಇವರು ಆರೋಪಿಗಳಾಗಿದ್ದು ಇವರುಗಳನ್ನು ಬಂಧಿಸಿ, ಆರೋಪಿತರಿಂದ ಕೃತ್ಯಕ್ಕೆ ಬಳಸಲಾದ ಎರಡು ಮೋಟಾರ್ ಬೈಕ್ ಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಪ್ರಜಾ ಪ್ರಗತಿ 17 Sep 2025 3:43 pm

ಮೋದಿ ರೂಪದಲ್ಲಿ ದೇವರೇ ಅವತರಿಸಿದ್ದಾನೆ: ಅಂಬಾನಿ

ನವದೆಹಲಿ ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನ ಇಂದು. ದೇಶ ವಿದೇಶಗಳಿಂದ ಬಹಳಷ್ಟು ಜನರು ಅವರಿಗೆ ಶುಭಾಶಯಗಳನ್ನು ಕೋರಿದ್ದಾರೆ. ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತದಲ್ಲಿ ಉದ್ಯಮ ವಲಯ ಹುಲುಸಾಗಿ ಬೆಳೆಯುತ್ತಿದೆ. ಅಂತೆಯೇ ಹಲವು ಉದ್ಯಮಿಗಳು ನರೇಂದ್ರ ಮೋದಿ ಅವರನ್ನು ಪ್ರಶಂಸಿಸಿದ್ದಾರೆ. ಮುಕೇಶ್ ಅಂಬಾನಿ ಅವರು ಮೋದಿಯನ್ನು ಅವತಾರ ಪುರುಷ ಎಂದೂ ಬಣ್ಣಿಸಿದ್ದಾರೆ. ‘ಭಾರತದ ಅಮೃತ ಘಳಿಗೆಯಲ್ಲಿ ನರೇಂದ್ರ ಮೋದಿ ಅವರ ಅಮೃತ ಮಹೋತ್ಸವ ಬಂದಿರುವುದು ಕಾಕತಾಳೀಯ ಅಲ್ಲ. ಭಾರತವನ್ನು ಈ […]

ಪ್ರಜಾ ಪ್ರಗತಿ 17 Sep 2025 3:15 pm

ಉಳ್ಳವರಿಗೆ ಮೀಸಲಾತಿ ತೆಗೆದು ಹಾಕುವ ಕಾಯ್ದೆ ಸರ್ಕಾರ ಮಾಡಲಿ : ಹೆಚ್‌ ವಿಶ್ವನಾಥ್

ಮೈಸೂರು: ಉಳ್ಳವರು ಮೀಸಲಾತಿ ಬಿಟ್ಟು ಕೊಡಬೇಕು. ಉಳ್ಳವರಿಗೆ ಮೀಸಲಾತಿ ತೆಗೆದು ಹಾಕುವ ಕಾಯ್ದೆ ಸರ್ಕಾರ ಮಾಡಲಿ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಆಗ್ರಹಿಸಿದ್ದಾರೆ. ಮೈಸೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೀಸಲಾತಿ ಮೂಲಕ ಮೇಲೆ ಬಂದವರು ಆ ಮೀಸಲಾತಿ ಬಿಟ್ಟು ಕೊಡಲಿ. ಖರ್ಗೆಗೂ ಮೀಸಲಾತಿ, ಖರ್ಗೆ ಮಗನಿಗೂ ಮೀಸಲಾತಿ. ತಮಟೆ ಬಾರಿಸುವ ಜನ ಸಾಮಾನ್ಯನಿಗೂ ಮೀಸಲಾತಿ. ನನಗೂ ಮೀಸಲಾತಿ, ಸಾಮಾನ್ಯ ಕುರಿ ಕಾಯುವ ಜನರಿಗೂ ಮೀಸಲಾತಿ ಎಂದು ವಿಶ್ವನಾಥ್ ವ್ಯಂಗ್ಯವಾಡಿದ್ರು. ಅಂಬೇಡ್ಕರ್ […]

ಪ್ರಜಾ ಪ್ರಗತಿ 17 Sep 2025 11:41 am

ಜಾತಿಗಣತಿ ಹೆಸರಲ್ಲಿ ಸಮುದಾಯದಲ್ಲಿ ಬಿರುಕು ಮೂಡಿಸುವ ಕುತಂತ್ರ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ಜಾತಿ ಗಣತಿ ಹೆಸರಿಲ್ಲಿ ವೀರಶೈವ ಲಿಂಗಾಯತ ಸಮುದಾಯದಲ್ಲಿ ಬಿರುಕು ಮೂಡಿಸುವ ಕುತಂತ್ರ ನಡೆಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಲಿಂಗಾಯತ ನಾಯಕರ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, ರಾಜ್ಯ ಸರ್ಕಾರ ನಡೆಸಿದ ಜಾತಿ ಸಮೀಕ್ಷೆಯ ಹೆಸರಿನಲ್ಲಿ ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯವನ್ನು ವಿಭಜಿಸುವ ಪ್ರಯತ್ನ ನಡೆಸುತ್ತಿದೆ. […]

ಪ್ರಜಾ ಪ್ರಗತಿ 17 Sep 2025 11:40 am

ಚಿತ್ರದುರ್ಗ : ಆಕಸ್ಮಿಕವಾಗಿ ಹೊತ್ತಿ ಉರಿದ ಕಾರು : ಯುವಕ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಕಾರೊಂದು ಆಸ್ಮಿಕವಾಗಿ ಹೊತ್ತಿ ಉರಿದು, ಅದರೊಳಗಿದ್ದ ಯುವಕ ಸಜೀವವಾಗಿ ದಹನಗೊಂಡಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಅರಳೀಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ. ಮೃತರನ್ನು ಸಿದ್ದೇಶ್ವರ್ (35) ಎಂದು ಗುರುತಿಸಲಾಗಿದೆ. ಟಾಟಾ ನೆಕ್ಸಾನ್ ಕಾರು ಹೊತ್ತಿ ಉರಿದಿದೆ. ಅದರೊಳಗೆ ಸಿಲುಕಿ ಸಿದ್ದೇಶ್ವರ್ ಸಜೀವವಾಗಿ ಬೆಂಕಿಗೆ ತುತ್ತಾಗಿದ್ದಾರೆ. ಸಿದ್ದೇಶ್ವರ್ ಟಾಟಾ ನೆಕ್ಸಾನ್ ಕಾರಿನಲ್ಲಿ ಹಿರಿಯೂರಿನಿಂದ ಅರಳೀಕಟ್ಟೆಗೆ ಮರಳುತ್ತಿದ್ದರು. ಈ ವೇಳೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಕಾರು ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ. […]

ಪ್ರಜಾ ಪ್ರಗತಿ 17 Sep 2025 10:43 am

ಬಿಗ್ ಬಾಸ್ ಸೀಸನ್ 12ರ 18 ಕಂಟೆಸ್ಟೆಂಟ್​ಗಳ ಹೆಸರು ಲೀಕ್……?

ಬೆಂಗಳೂರು : ಕನ್ನಡದ ಜನಪ್ರಿಯ ಹಾಗೂ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇದೇ ಸೆಪ್ಟೆಂಬರ್ 28 ರಿಂದ ದೊಡ್ಮನೆ ಆಟ ಶುರುವಾಗಿದೆ. ಈಗಾಗಲೇ ಕಲರ್ಸ್ ಕನ್ನಡ ಎರಡು ಪ್ರೋಮೋ ಬಿಟ್ಟು ವೀಕ್ಷಕರ ತಲೆಗೆ ಹುಳ ಬಿಟ್ಟಿದೆ. ಈ ಪ್ರೋಮೋಗಳನ್ನು ನೋಡಿದ ಬಳಿಕ ಶೋ ಮೇಲಿನ ಕುತೂಹಲ ದುಪ್ಪಟ್ಟಾಗಿದೆ. ಅದರಲ್ಲೂ ಎರಡನೇ ಪ್ರೋಮೋಗೆ ಎಐ ಟಚ್ ನೀಡಲಾಗಿದ್ದು, ಇದೇ ಈ ಬಾರಿಯ ಕಾನ್ಸೆಪ್ಟ್ ಎಂಬ ಸುದ್ದಿ ಕೂಡ […]

ಪ್ರಜಾ ಪ್ರಗತಿ 17 Sep 2025 10:08 am

ಯೂ ಟರ್ನ್ ಹೊಡೆದ ಪಾಕ್‌; ಯುಎಇ ವಿರುದ್ಧ ಆಡಲು ನಿರ್ಧಾರ

ದುಬೈ: ಮ್ಯಾಚ್ ರೆಫ್ರಿಯನ್ನು ವಜಾಗೊಳಿಸದಿದ್ದರೆ ಏಷ್ಯಾಕಪ್‌ ಟಿ20 ಟೂರ್ನಿಯಿಂದಲೇ ಹೊರನಡೆಯುವುದಾಗಿ ಬೆದರಿಕೆ ಹಾಕಿದ್ದ ಪಾಕಿಸ್ತಾನ, ಇದೀಗ ಯೂ ಟರ್ನ್ ಹೊಡೆದಿದೆ. ಬುಧವಾರ ನಡೆಯುವ ಯುಎಇ ವಿರುದ್ಧದ ಪಂದ್ಯದಲ್ಲಿ ಪಾಕ್‌ ತಂಡ ಆಡಲು ನಿರ್ಧರಿಸಿದೆ. ಸತತ ಚರ್ಚೆಗಳ ಬಳಿಕ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಈ ನಿರ್ಧಾರವನ್ನು ತೆಗೆದುಕೊಂಡಿದೆ.‌ ಆದರೆ ಯುಎಇ ವಿರುದ್ಧದ ಪಂದ್ಯಕ್ಕೂ ಮುನ್ನ ನಿಗದಿಯಾಗಿದ್ದ ಸುದ್ದಿಗೋಷ್ಠಿಯನ್ನು ಪಾಕಿಸ್ತಾನ ತಂಡ ರದ್ದುಗೊಳಿಸಿತ್ತು. ಇದೇ ವೇಳೆ ಪಾಕಿಸ್ತಾನವನ್ನು ಒಳಗೊಂಡ ಪಂದ್ಯಗಳಿಗೆ ವಿವಾದಿತ ಮ್ಯಾಚ್ ರೆಫ್ರಿ ಆ್ಯಂಡಿ ಪೈಕ್ರಾಫ್ಟ್‌ […]

ಪ್ರಜಾ ಪ್ರಗತಿ 17 Sep 2025 10:03 am

ಪ್ರಧಾನಿ ನರೇಂದ್ರ ಮೋದಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ ಟ್ರಂಪ್

ನವದೆಹಲಿ ಪ್ರಧಾನಿ ನರೇಂದ್ರ ಮೋದಿ ಇಂದು 75ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರ ಹುಟ್ಟುಹಬ್ಬಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಕರೆ ಮಾಡಿ ಶುಭಾಶಯ ತಿಳಿಸಿದ್ದಾರೆ. ಭಾರತವು ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವ ಬಗ್ಗೆ ಟ್ರಂಪ್​​ಗೆ ಬೇಸರವಿದೆ, ಅದೇ ಕಾರಣಕ್ಕೆ ಭಾರತಕ್ಕೆ ಶೇ.50ರಷ್ಟು ಸುಂಕ ವಿಧಿಸಿದ್ದಾರೆ. ಈ ಎಲ್ಲಾ ಭಿನ್ನಾಭಿಪ್ರಾಯಗಳ ನಡುವೆ ಎಲ್ಲವನ್ನೂ ಮರೆತು ಟ್ರಂಪ್ ಪ್ರಧಾನಿಗೆ ಶುಭಾಶಯ ತಿಳಿಸಿದ್ದಾರೆ. ಭಾರತ-ಅಮೆರಿಕ ಸಂಬಂಧಗಳು ಮತ್ತು ಜಾಗತಿಕ ಸಮಸ್ಯೆಗಳ ಬಗ್ಗೆಯೂ ಉಭಯ ನಾಯಕರು ಚರ್ಚಿಸಿದ್ದಾರೆ. ಉಭಯ ದೇಶಗಳ […]

ಪ್ರಜಾ ಪ್ರಗತಿ 17 Sep 2025 9:21 am

ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್‌ಗೆ ವಿಶ್ರಾಂತಿ….!

ಬೆಂಗಳೂರು 2025 ರ ಏಷ್ಯಾಕಪ್‌ನ ಆರನೇ ಪಂದ್ಯದಲ್ಲಿ ಕಳೆದ ಭಾನುವಾರ ಭಾರತ ತಂಡ ಪಾಕಿಸ್ತಾನವನ್ನು ಎದುರಿಸಿತು. ಆ ಪಂದ್ಯದಲ್ಲಿ, ಭಾರತೀಯ ತಂಡದ ಆಟಗಾರರು ಪಾಕಿಸ್ತಾನಿ ಆಟಗಾರರೊಂದಿಗೆ ಕೈಕುಲುಕಲಿಲ್ಲ. ಪಂದ್ಯ ಪ್ರಾರಂಭವಾಗುವ ಮೊದಲು ಟಾಸ್ ಸಮಯದಲ್ಲಿ ಎರಡೂ ತಂಡಗಳ ನಾಯಕರ ನಡುವೆ ಯಾವುದೇ ಹಸ್ತಲಾಘವ ಇರಲಿಲ್ಲ. ಪಂದ್ಯ ಮುಗಿದ ಬಳಿಕವೂ ಇದು ನಡೆಯಲಿಲ್ಲ. ಇದರ ನಂತರ, ಪಿಸಿಬಿ ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್ ಅವರನ್ನು ಏಷ್ಯಾಕಪ್‌ನಿಂದ ತೆಗೆದುಹಾಕಲು ಐಸಿಸಿಯನ್ನು ಸಂಪರ್ಕಿಸಿತು. ಆದರೆ, ಐಸಿಸಿ ಅವರ ಬೇಡಿಕೆಯನ್ನು […]

ಪ್ರಜಾ ಪ್ರಗತಿ 17 Sep 2025 9:19 am

ಒಟಿಟಿಗೆ ಬಂದರೂ ಥಿಯೇಟರ್​​ನಲ್ಲಿ ನಿಲ್ಲದ ‘ಸು ಫ್ರಮ್ ಸೋ’ ಅಬ್ಬರ

ಬೆಂಗಳೂರು : ಒಂದು ಸಿನಿಮಾ ಒಟಿಟಿಗೆ ಬಂತು ಎಂದರೆ ಥಿಯೇಟರ್​ನಲ್ಲಿ ಅದರ ಪ್ರದರ್ಶನ ಕೊನೆಯಾಯಿತು ಎಂದೇ ಅರ್ಥ. ಆದರೆ, ಕೆಲವು ಸಿನಿಮಾಗಳ ವಿಚಾರದಲ್ಲಿ ಈ ರೀತಿ ಆಗೋದಿಲ್ಲ. ಕೆಲವು ಸಿನಿಮಾಗಳು ಒಟಿಟಿಗೆ ಕಾಲಿಟ್ಟ ಬಳಿಕವೂ ಥಿಯೇಟರ್​ನಲ್ಲಿ ಒಳ್ಳೆಯ ಪ್ರದರ್ಶನ ಕಂಡ ಉದಾಹರಣೆ ಇದೆ. ಇದಕ್ಕೆ ‘ಸು ಫ್ರಮ್ ಸೋ’ ಉತ್ತಮ ಉದಾಹರಣೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸಿ ಒಟಿಟಿ​ಗೆ ಕಾಲಿಟ್ಟಿದೆ. ವಿಶೇಷ ಎಂದರೆ, ಈಗಲೂ ಚಿತ್ರ ಥಿಯೇಟರ್​ನಲ್ಲಿ ಪ್ರದರ್ಶನ ಕಾಣುತ್ತಿದೆ. ‘ಸು […]

ಪ್ರಜಾ ಪ್ರಗತಿ 17 Sep 2025 9:14 am

ಬುಡಕಟ್ಟು ಜನರ ಆಶಾಕಿರಣ ಇಲಾಜ್ ಸ್ಮಾರ್ಟ್ ಕ್ಲಿನಿಕ್: ಶಾಸಕ ಭೀಮಣ್ಣ

ಶಿರಸಿ: ದುರ್ಗಮ ಪ್ರದೇಶದ ಜನರ ಆರೋಗ್ಯ ರಕ್ಷಣೆಯಲ್ಲಿ ಇಲಾಜ್ ಸ್ಮಾರ್ಟ್ ಕ್ಲಿನಿಕ್ ಸೇವೆ ಅತ್ಯಂತ ಪರಿಣಾಮಕಾರಿಯಾಗಿದೆ ಎಂದು ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಅಭಿಪ್ರಾಯಪಟ್ಟರು.ಇಂದು ಬಂಡಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ಕೊಡ್‌ವೆಸ್ ಸಂಸ್ಥೆ, ಬಯೋಕಾನ್ ಫೌಂಡೇಶನ್ ಹಾಗೂ ಬಂಡಲ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಆರಂಭಿಸಲಾದ ಇಲಾಜ್ ಸ್ಮಾರ್ಟ್ ಕ್ಲಿನಿಕ್‌ನ್ನು ಉದ್ಘಾಟಿಸಿ ಮಾತನಾಡಿದರು. ಪಶ್ಚಿಮ ಘಟ್ಟದ ಕಡಿದಾದ ಗುಡ್ಡ ಬೆಟ್ಟಗಳು ಹಾಗೂ ಅರಣ್ಯ ಪ್ರದೇಶಗಳಲ್ಲಿರುವ ಜನರ ಆರೋಗ್ಯ ಸೇವೆಗೆ ವಿನೂತನ […]

ಪ್ರಜಾ ಪ್ರಗತಿ 17 Sep 2025 8:55 am

ಶಿರಸಿ ಕೆಡಿಸಿಸಿ ಬ್ಯಾಂಕಿಗೆ ಪ್ರಸಕ್ತ ಸಾಲಿನಲ್ಲಿ 25.11 ಕೋಟಿ ರೂ. ನಿವ್ವಳ ಲಾಭ

ಶಿರಸಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಕೆಡಿಸಿಸಿ ಬ್ಯಾಂಕ್ 2024 -25 ನೇ ಸಾಲಿನಲ್ಲಿ ಉತ್ತಮ ಸಾಧನೆ ತೋರಿದ್ದು 25.11 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದೆ. ಇಂದು ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಬ್ಯಾಂಕಿನ ಅಧ್ಯಕ್ಷ ಶಿವರಾಮ ಹೆಬ್ಬಾರ್ ಈ ವಿಷಯ ತಿಳಿಸಿದರು.ಬ್ಯಾಂಕಿನ ಶೇರು ಬಂಡವಾಳ 131.28 ಕೋಟಿಗಳಿಂದ 145.11 ಕೋಟಿ ರೂಗೆ ಏರಿಕೆಯಾಗಿದೆ ಎಂದು ಅವರು ತಿಳಿಸಿದರು. ಬ್ಯಾಂಕ್ ಈಗಾಗಲೇ ಕೋರ್ ಬ್ಯಾಂಕಿಂಗ್ ತಂತ್ರಜ್ಞಾನವನ್ನು ಅಳವಡಿಸಿಕೊಂಡಿದ್ದು,ಗ್ರಾಹಕರಿಗೆ ವಿವಿಧ […]

ಪ್ರಜಾ ಪ್ರಗತಿ 17 Sep 2025 8:52 am

ಶಾಸಕ ಸ್ಥಾನ ಕಳೆದುಕೊಂಡಿದ್ದ ನಂಜೇಗೌಡಗೆ ತಾತ್ಕಾಲಿಕ ರಿಲೀಫ್….!

ಬೆಂಗಳೂರು ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆ ವಿಚಾರಕ್ಕೆ ಸಂಬಂಧ ಪಟ್ಟಂತೆ ಇಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು, ಶಾಸಕರಾಗಿರುವ ಕಾಂಗ್ರೆಸ್‌ನ ಕೆವೈ ನಂಜೇಗೌಡ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್​ ಆದೇಶ ನೀಡಿದೆ. ಜೊತೆಗೆ ಮರು ಮತ ಎಣಿಕೆಗೆ ಸೂಚನೆ ನೀಡಿದೆ. ಇನ್ನು ಇದೇ ವೇಳೆ ನಂಜೇಗೌಡ ಪರ ವಕೀಲೆ ನಳಿನಾ ಮಾಯಗೌಡ ಅವರು ಈ ತೀರ್ಪಿಗೆ ಮಧ್ಯಂತರ ತಡೆ ನೀಡಬೇಕೆಂದು ಮನವಿ ಮಾಡಿದ್ದು, ಇದಕ್ಕೆ ಕೋರ್ಟ್ ಸಹ […]

ಪ್ರಜಾ ಪ್ರಗತಿ 16 Sep 2025 5:47 pm