LPG ಗ್ರಾಹಕರಿಗೆ ಗುಡ್ ನ್ಯೂಸ್: ಗ್ಯಾಸ್ ಸಿಲಿಂಡರ್ ಡೆಲಿವರಿಗೆ ಶುಲ್ಕ ನೀಡುವ ಅಗತ್ಯವಿಲ್ಲ
ಅಡುಗೆ ಅನಿಲದ ಸಿಲಿಂಡರನ್ನು ಡಿಸೆಂಬರ್-2025 ರ ಮಾಹೆಯಲ್ಲಿ ಮನೆಗೆ ಸರಬರಾಜು ಮಾಡುವ ಡೆಲಿವರಿ ಹುಡುಗರಿಗೆ ಗ್ರಾಹಕರು ಡೆಲಿವರಿಗೆ ಶುಲ್ಕ ನೀಡುವ ಅಗತ್ಯವಿಲ್ಲ. ಬಿಲ್ಲಿನಲ್ಲಿ ನಮೂದಿಸಿರುವ ಮೊತ್ತವನ್ನು ಮಾತ್ರ ನೀಡುವಂತೆ ತಿಳಿಸಿದೆ. ಗ್ಯಾಸ್ ಏಜೆನ್ಸಿಗಳು ಗೃಹ ಬಳಕೆಯ ಅನಿಲ ಸಿಲಿಂಡರನ್ನು ನೇರವಾಗಿ ಗೋದಾಮಿನಿಂದ ಗ್ರಾಹಕರಿಗೆ ಸರಬರಾಜು ಮಾಡತಕ್ಕದ್ದು, ಯಾವುದೇ ಕಾರಣಕ್ಕಾಗಿಯೂ ಅನಿಲ ಸಿಲಿಂಡರನ್ನು ರಸ್ತೆ ಬದಿಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ, ಮೈದಾನಗಳಲ್ಲಿ ಇಟ್ಟು ಮಾರಾಟ ಮಾಡತಕ್ಕದ್ದಲ್ಲ. ಸರ್ಕಾರದ ಆದೇಶದನ್ವಯ ಈ ಕೆಳಗಿನಂತೆ ಗೃಹೊಪಯೋಗಿ ಗ್ಯಾಸ್ ಸಿಲಿಂಡರ್ ಗೆ ನಾಗರಿಕ ತಿದ್ದುಪಡಿಯಲ್ಲಿ […]
ಹೊಸ ವರ್ಷಾಚರಣೆಯಲ್ಲಿ ಪಾಲ್ಗೊಳ್ಳುವವರಿಗೆ ಗುಡ್ ನ್ಯೂಸ್: ಡಿ. 31 ತಡರಾತ್ರಿವರೆಗೆ ಬಸ್ ಸೇವೆ
ಬೆಂಗಳೂರು: ಹೊಸ ವರ್ಷಾಚರಣೆಯಲ್ಲಿ ಪಾಲ್ಗೊಳ್ಳುವವರ ಅನುಕೂಲಕ್ಕಾಗಿ ಡಿಸೆಂಬರ್ 31 ರಂದು ತಡರಾತ್ರಿವರೆಗೆ ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ಬಸ್ ಸೇವೆ ನೀಡಲು ಬಿಎಂಟಿಸಿ ಕ್ರಮ ಕೈಗೊಂಡಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಬ್ರಿಗೇಡ್ ರಸ್ತೆ, ಎಂಜಿ ರಸ್ತೆ, ಸರ್ವಜ್ಞ ನಗರದ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣ, ಮೆಜೆಸ್ಟಿಕ್ ನ ಕೆಂಪೇಗೌಡ ಬಸ್ ನಿಲ್ದಾಣದಿಂದ ವಿವಿಧ ಕಡೆಗಳಿಗೆ ರಾತ್ರಿ 11 ಗಂಟೆಯಿಂದ ತಡರಾತ್ರಿ 2 ಗಂಟೆಯವರೆಗೆ 70 ಬಸ್ ಗಳು ಸೇವೆ ನೀಡಲಿವೆ. ಈ ಬಸ್ ಗಳು ಎಲೆಕ್ಟ್ರಾನಿಕ್ ಸಿಟಿ, ಜಿಗಣಿ, ಸರ್ಜಾಪುರ, […]
BREAKING: ಮುಂಬೈನಲ್ಲಿ ಘೋರ ದುರಂತ: ಬಸ್ ಡಿಕ್ಕಿಯಾಗಿ ನಾಲ್ವರು ಪಾದಚಾರಿಗಳು ಸಾವು, 9 ಮಂದಿಗೆ ಗಾಯ
ಮುಂಬೈ: ಮುಂಬೈನ ಭಾಂಡಪ್ ಪ್ರದೇಶದಲ್ಲಿ ಸೋಮವಾರ ರಾತ್ರಿ ಬೃಹನ್ಮುಂಬೈ ವಿದ್ಯುತ್ ಸರಬರಾಜು ಮತ್ತು ಸಾರಿಗೆ(ಬೆಸ್ಟ್) ಬಸ್ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ 10:05 ರ ಸುಮಾರಿಗೆ ಭಾಂಡಪ್(ಪಶ್ಚಿಮ) ದ ಜನನಿಬಿಡ ಸ್ಟೇಷನ್ ರಸ್ತೆಯಲ್ಲಿ ಬೆಸ್ಟ್ ಬಸ್ ಹಿಮ್ಮುಖವಾಗಿ ಚಲಿಸುವಾಗ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ. ಅಪಘಾತ ಸಂಭವಿಸಿದಾಗ ಬಲಿಪಶುಗಳು ಕೆಲಸದಿಂದ ಮನೆಗೆ ಮರಳುತ್ತಿದ್ದರು. ಪೊಲೀಸರ ಮಾಹಿತಿಯ ಪ್ರಕಾರ, ಅಪಘಾತದಲ್ಲಿ […]
ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಡಿಸೆಂಬರ್-2025 ರ ಮಾಹೆಗೆ ಹಾಸನ ಜಿಲ್ಲೆಯ ಪ್ರತಿ ಅಂತ್ಯೋದಯ(ಎ.ಎ.ವೈ) ಪಡಿತರ ಚೀಟಿಗೆ 21 ಕೆ.ಜಿ ರಾಗಿಯನ್ನು ಹಾಗೂ 14 ಕೆ.ಜಿ ಸಾರವರ್ಧಿತ(Fortified) ಅಕ್ಕಿ ಹಾಗೂ ಪಿ.ಹೆಚ್.ಹೆಚ್.(ಬಿ.ಪಿ.ಎಲ್) ಪಡಿತರ ಚೀಟಿಯಲ್ಲಿನ ಪ್ರತಿ ಫಲಾನುಭವಿಗೆ 3 ಕೆ.ಜಿ ರಾಗಿಯನ್ನು ಹಾಗೂ 02 ಕೆ.ಜಿ ಸಾರವರ್ಧಿತ(Fortified) ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಇದರ ಜೊತೆಗೆ ಏಕ ಸದಸ್ಯ, ದ್ವಿಸದಸ್ಯ ಮತ್ತು ತ್ರಿಸದಸ್ಯ ಎಎವೈ ಪಡಿತರ ಚೀಟಿಗಳನ್ನು ಹೊರತುಪಡಿಸಿ ನಾಲ್ಕು ಮತ್ತು ನಾಲ್ಕಕ್ಕಿಂತ ಹೆಚ್ಚಿನ ಸದಸ್ಯರುಳ್ಳ ಎಎವೈ ಪಡಿತರ […]
BREAKING: ಎಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ: ಮುಗಿಲುಮುಟ್ಟಿದ ಗೋವಿಂದ ನಾಮಸ್ಮರಣೆ
ದೇಶದೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದೆ. ವೈಕುಂಠ ಏಕಾದಶಿಯಂದು ಸ್ವರ್ಗದ ಬಾಗಿಲು ತೆರೆಯುತ್ತದೆ ಎಂಬ ನಂಬಿಕೆ ಇದ್ದು, ಭಕ್ತರು ದೇವಾಲಯಗಳಿಗೆ ತೆರಳಿ ದೇವರ ದರ್ಶನ ಪಡೆದುಕೊಂಡಿದ್ದಾರೆ. ವರ್ಷದ ಕೊನೆಯ ವೈಕುಂಠ ಏಕಾದಶಿ ಆಚರಣೆ ನಡೆದಿದ್ದು, ವೆಂಕಟೇಶ್ವರ, ಶ್ರೀನಿವಾಸ ದೇವಾಲಯಗಳು ಸೇರಿದಂತೆ ಬಹುತೇಕ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಲಂಕಾರ ಮಾಡಲಾಗಿದೆ. ಅಪಾರ ಭಕ್ತರು ದರ್ಶನ ಪಡೆದುಕೊಂಡಿದ್ದಾರೆ. ತಿರುಪತಿ ವೆಂಕಟೇಶ್ವರನಿಗೆ ವಿಶೇಷ ಪೂಜೆ ನೆರವೇರಿಸಲಾಗಿದ್ದು, ಗೋವಿಂದ ನಾಮ ಸ್ಮರಣೆ ಮುಗಿಲು ಮುಟ್ಟಿದೆ. ಇಂದು ವೈಕುಂಠ ದ್ವಾರ ತೆರೆಯುತ್ತದೆ ಎನ್ನುವ […]
BREAKING: ಟ್ರ್ಯಾಕ್ಟರ್ ನಲ್ಲಿದ್ದ ನಾಲ್ವರು ಕೂಲಿ ಕಾರ್ಮಿಕರ ಮೇಲೆ 30ಕ್ಕೂ ಹೆಚ್ಚು ಜನರಿಂದ ಹಲ್ಲೆ
ದಾವಣಗೆರೆ: ಟ್ರ್ಯಾಕ್ಟರ್ ಗೆ ಪಿಕಪ್ ವಾಹನ ಟಚ್ ಆಗಿ ಗಲಾಟೆ ನಡೆದು ಕೂಲಿ ಕಾರ್ಮಿಕರ ಮೇಲೆ ಹಲ್ಲೆ ನಡೆಸಲಾಗಿದೆ. ನಾಲ್ವರ ಮೇಲೆ ಮೂವತ್ತಕ್ಕೂ ಹೆಚ್ಚು ಜನರು ಹಲ್ಲೆ ಮಾಡಿದ ಘಟನೆ ಅರಿಶಿನಘಟ್ಟ ಬಳಿ ನಡೆದಿದೆ. ದಾವಣಗೆರೆ ಜಿಲ್ಲೆ, ಚೆನ್ನಗಿರಿ ತಾಲೂಕಿನ ಅರಿಶಿನಘಟ್ಟ ಗ್ರಾಮದ ಬಳಿ ಅಡಿಕೆ ಚೀಲಗಳನ್ನು ತುಂಬಿಕೊಂಡು ಟ್ರ್ಯಾಕ್ಟರ್ ಹೋಗುತ್ತಿತ್ತು. ಬೊಲೆರೋ ಪಿಕಪ್ ವಾಹನ ಅಡಿಕೆ ಚೀಲಕ್ಕೆ ಟಚ್ ಆಗಿದ್ದರಿಂದ ಚೀಲ ಹರಿದು ರಸ್ತೆಗೆ ಅಡಿಕೆ ಚೆಲ್ಲಿದ್ದಕ್ಕೆ ಪರಸ್ಪರ ವಾಗ್ವಾದ ನಡೆದಿದೆ. ಪಿಕಪ್ ವಾಹನ ಚಾಲಕ […]
BREAKING NEWS: ಶಿವಮೊಗ್ಗದಲ್ಲಿ ಯುವಕನ ಕೊಲೆ
ಶಿವಮೊಗ್ಗ: ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಾರುಕಟ್ಟೆ ಸಮೀಪ ಯುವಕನನ್ನು ಕೊಲೆ ಮಾಡಲಾಗಿದೆ. 26 ವರ್ಷದ ಅರುಣ್ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಕೌಟುಂಬಿಕ ಕಲಹದ ಕಾರಣಕ್ಕೆ ಆತನ ಸಂಬಂಧಿಕರೇ ಈ ಕೃತ್ಯ ಎಸಗಿದ್ದಾರೆಂದು ಶಂಕಿಸಲಾಗಿದೆ. ವೈವಾಹಿಕ ವಿವಾದವೇ ಕೊಲೆಗೆ ಕಾರಣವೆಂದು ಶಂಕಿಸಲಾಗಿದ್ದು, ಇಬ್ಬರು ಆರೋಪಿಗಳನ್ನು ಗುರುತಿಸಲಾಗಿದೆ. ಎಸ್ಪಿ ಮಿಥುನ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.
BREAKING: ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಾಯ
ಬೆಂಗಳೂರು: ಬೆಂಗಳೂರಿನ ಪಿಜಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಓರ್ವ ಸಾವನ್ನಪ್ಪಿದ್ದಾರೆ. ಕುಂದಲಹಳ್ಳಿ ಕಾಲೋನಿಯ ಪಿಜಿಯೊಂದರಲ್ಲಿ ಘಟನೆ ನಡೆದಿದೆ. ಅರವಿಂದ್(23) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವಿ, ವಿಶಾಲ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ವೆಂಕಟೇಶ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೆಚ್.ಎ.ಎಲ್. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಪ್ರಾಥಮಿಕ ಶಾಲೆ ದೈಹಿಕ ಶಿಕ್ಷಕರಿಗೆ ಗುಡ್ ನ್ಯೂಸ್: ಪ್ರೌಢಶಾಲೆ ಗ್ರೇಡ್ -1 ಹುದ್ದೆಗೆ ಬಡ್ತಿ: ಶಿಕ್ಷಣ ಇಲಾಖೆ ಆದೇಶ
ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೇಡ್ -2 ದೈಹಿಕ ಶಿಕ್ಷಣ ಶಿಕ್ಷಕರನ್ನು ಸರ್ಕಾರಿ ಪ್ರೌಢಶಾಲೆಗಳಲ್ಲಿನ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-1 ಹುದ್ದೆಗೆ ಬಡ್ತಿ ನೀಡುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಅಧ್ಯಕ್ಷರು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ), ಬೆಂಗಳೂರು. ರವರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿ.ಪಿ.ಇಡಿ. ಪದವಿ ಪಡೆದ ದೈಹಿಕ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದು ರಾಜ್ಯಾದ್ಯಂತ ಹಲವಾರು ಪ್ರೌಢಶಾಲಾ ದೈಹಿಕ ಶಿಕ್ಷಕರ ಗ್ರೇಡ್-1 ಹುದ್ದೆಗಳು ಖಾಲಿ ಇದ್ದು, ಆದ್ದರಿಂದ ಸರ್ಕಾರಿ […]
ಹೊಸ ವರ್ಷಕ್ಕೆ ಹೊಸ ಟಿವಿ ಖರೀದಿಸುವವರಿಗೆ ಭರ್ಜರಿ ಸುದ್ದಿ: 32 ಇಂಚಿನ ಸ್ಮಾರ್ಟ್ ಟಿವಿ ಬೆಲೆಗೆ 53 ಇಂಚಿನ ಟಿವಿ ಲಭ್ಯ
ನವದೆಹಲಿ: ಸೋನಿ, ಟಿಸಿಎಲ್, ರಿಯಲ್ಮಿ 53-ಇಂಚಿನ ಸ್ಮಾರ್ಟ್ ಟಿವಿಗಳು 32-ಇಂಚಿನ ಮಾದರಿಗಳ ಬೆಲೆಯಲ್ಲಿ ಲಭ್ಯವಿದೆ, ಮುಂದಿನ ವರ್ಷ ಸ್ಮಾರ್ಟ್ ಟಿವಿಗಳು ಸೇರಿದಂತೆ ಎಲೆಕ್ಟ್ರಾನಿಕ್ಸ್ ಬೆಲೆಗಳು ಹೆಚ್ಚಾಗುವ ನಿರೀಕ್ಷೆಯಿರುವುದರಿಂದ, 55-ಇಂಚಿನ ಸ್ಮಾರ್ಟ್ ಎಲ್ಇಡಿ ಟಿವಿಯನ್ನು ಭಾರಿ ರಿಯಾಯಿತಿಯಲ್ಲಿ ಪಡೆಯಲು ಇದು ನಿಮಗೆ ಉತ್ತಮ ಅವಕಾಶ. ಫ್ಲಿಪ್ಕಾರ್ಟ್ನಲ್ಲಿ, ಹೈ-ಎಂಡ್ 55-ಇಂಚಿನ ಮಾದರಿಗಳು ಪ್ರಸ್ತುತ ಸ್ಟ್ಯಾಂಡರ್ಡ್ 32-ಇಂಚಿನ ಆವೃತ್ತಿಗಳ ಬೆಲೆಗೆ ಮಾರಾಟವಾಗುತ್ತಿವೆ. ಸೋನಿ, ಟಿಸಿಎಲ್, ರಿಯಲ್ಮಿ ಮತ್ತು ಫಾಕ್ಸ್ಸ್ಕಿಯಂತಹ ಉನ್ನತ ಬ್ರ್ಯಾಂಡ್ಗಳು ಶೇಕಡಾ 74 ರಷ್ಟು ರಿಯಾಯಿತಿಗಳನ್ನು ನೀಡುತ್ತಿವೆ, ಕೆಲವು ದೊಡ್ಡ […]
BREAKING: ಬೆಂಗಳೂರಿನಲ್ಲಿ ಕಿರುತೆರೆ ನಟಿ ನಂದಿನಿ ಆತ್ಮಹತ್ಯೆ
ಬೆಂಗಳೂರು: ಬೆಂಗಳೂರಿನಲ್ಲಿ ಕಿರುತರೆ ನಟಿ ನಂದಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕನ್ನಡ, ತಮಿಳು ಸೇರಿ ಹಲವಾರು ಧಾರಾವಾಹಿಗಳಲ್ಲಿ ನಟಿಸಿದ್ದ ನಂದಿನಿ ಬೆಂಗಳೂರಿನ ಆರ್.ಆರ್. ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತ: ಕೊಟ್ಟೂರಿನವರಾದ ನಂದಿನಿ ಬೆಂಗಳೂರಿನಲ್ಲಿ ನೆಲೆಸಿದ್ದರು. ಜೀವ ಹೂವಾಗಿದೆ, ಸಂಘರ್ಷ, ನೀನಾದೆ ನಾ, ಮದುಮಗಳು, ಸೇರಿ ಹಲವು ಧಾರಾವಾಹಿಗಳಲ್ಲಿ ಅಭಿನಯಿಸಿದ್ದರು. ತಮಿಳು ಧಾರಾವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ದ್ವಿಪಾತ್ರದಲ್ಲಿ ನಟಿಸುತ್ತಿದ್ದರು. ಗೌರಿ ಧಾರಾವಾಹಿಯಲ್ಲಿ ಅಭಿನಯಿಸಿದ್ದ ಅವರು ಕುಡಿಯುವ ಸನ್ನಿವೇಶವಿತ್ತು. ಇದೀಗ ಅವರು ನಿಜ ಜೀವನದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಕಾರಣ ತಿಳಿದು […]
ಬೆಂಗಳೂರು: ಕೋಗಿಲು ಲೇಔಟ್ ನಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಮನೆಗಳನ್ನು ತೆರವುಗೊಳಿಸಲಾಗಿದ್ದು, ತೆರವಾದ ನಿವಾಸಿಗಳಿಗೆ ತಲಾ ಒಂದು ಮನೆ ನಿರ್ಮಿಸಿಕೊಡಲಾಗುವುದು ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ನಡೆದ ಸಭೆಯ ನಂತರ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ನೋಟಿಸ್ ನೀಡಿದ ಬಳಿಕ ಮನೆಗಳನ್ನು ತೆರವುಗೊಳಿಸಲಾಗಿದೆ. ಡಿಸೆಂಬರ್ 20ರಂದು ಸುಮಾರು 167 ಮನೆಗಳನ್ನು ತೆರವುಗೊಳಿಸಲಾಗಿತ್ತು. ನಿನ್ನೆ ಸ್ಥಳಕ್ಕೆ ಸಚಿವ ಜಮೀರ್ ಅಹ್ಮದ್, ಇಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ ನೀಡಿದ್ದರು ಎಂದು ತಿಳಿಸಿದ್ದಾರೆ. ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಶೆಡ್ ನಿರ್ಮಿಸಿದ್ದರು. ಪರ್ಯಾಯ […]
BREAKING: ಡ್ರಗ್ಸ್ ಫ್ಯಾಕ್ಟರಿ ಕೇಸ್ ನಲ್ಲಿ ಮೂವರ ತಲೆದಂಡ: 3 ಠಾಣೆಗಳ ಇನ್ ಸ್ಪೆಕ್ಟರ್ ಗಳು ಅಮಾನತು
ಬೆಂಗಳೂರು: ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಇನ್ ಸ್ಪೆಕ್ಟರ್ ಗಳನ್ನು ಅಮಾನತು ಮಾಡಲಾಗಿದೆ. ಕೊತ್ತನೂರು, ಆವಲಹಳ್ಳಿ, ಬಾಗಲೂರು ಪೊಲೀಸ್ ಠಾಣೆಗಳ ಇನ್ ಸ್ಪೆಕ್ಟರ್ ಗಳನ್ನು ಅಮಾನತು ಮಾಡಲಾಗಿದೆ. ಕೊತ್ತನೂರು ಠಾಣೆ ಇನ್ ಸ್ಪೆಕ್ಟರ್ ಚೇತನ್ ಕುಮಾರ್ ಹಾಗೂ ಅವಲಹಳ್ಳಿ ಠಾಣೆ ಇನ್ ಸ್ಪೆಕ್ಟರ್ ರಾಮಕೃಷ್ಣಾರೆಡ್ಡಿ ಮತ್ತು ಬಾಗಲೂರು ಠಾಣೆ ಇನ್ ಸ್ಪೆಕ್ಟರ್ ಶಬರೀಶ್ ಅವರನ್ನು ಅಮಾನತು ಮಾಡಲಾಗಿದೆ.
ಪ್ರಯಾಣಿಕರಿಗೆ ಗುಡ್ ನ್ಯೂಸ್: ಜ. 5ರಿಂದ ಸಾರಿಗೆ ಬಸ್ ಪ್ರಯಾಣದಲ್ಲಿ ಭಾರಿ ರಿಯಾಯಿತಿ
ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಾರಿಗೆಗಳಾದ ವೋಲ್ವೋ/ಇ.ವಿ.ಪವರ್ ಪ್ಲಸ್ ಮತ್ತು ನಾನ್ ಎಸಿ ಸ್ಪೀಪರ್ ಬಸ್ ಗಳ ಟಿಕೆಟ್ ದರಗಳಲ್ಲಿ 2026 ಜನವರಿ 5 ರಿಂದ ಬಾರಿ ರಿಯಾಯಿತಿ ದರವನ್ನು ನೀಡಲಾಗಿದೆ. ದಾವಣಗೆರೆಯಿಂದ ಬೆಂಗಳೂರು ವೋಲ್ವೋ ಬಸ್ ನಲ್ಲಿ ಪ್ರಸ್ತುತ ದರ ಹಗಲು 689 ರೂ. ರಾತ್ರಿ 748 ರೂ.ನಿಗದಿಪಡಿಸಿದ್ದು, ಪ್ರಸ್ತುತ ರಿಯಾಯಿತಿ ಹಗಲು ಮತ್ತು ರಾತ್ರಿ ದರ 650 ರೂ.ನಿಗದಿಪಡಿಸಿದೆ, ಇ.ವಿ.ಪವರ್ ಪ್ಲಸ್ ಎ/ಸಿ ಪ್ರಸ್ತುತ ದರ ಹಗಲು ವೇಳೆಯಲ್ಲಿ 663 ರೂ., ರಾತ್ರಿ 720 […]
BREAKING: ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್.ಡಿ.ರೇವಣ್ಣಗೆ ಬಿಗ್ ರಿಲೀಫ್
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಹೊಳೆನರಸಿಪುರ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ರೇವಣ್ಣಗೆ ರಿಲೀಫ್ ಸಿಕ್ಕಿದೆ. ವಿಳಂಬವಾಗಿ ಕೇಸ್ ದಾಖಲಿಸಿದ ಕಾರಣಕ್ಕೆ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ನ ನ್ಯಾಯಾಧೀಶ ಕೆ.ಎಂ.ಶಿವಕುಮಾರ್, ರೇವಣ್ಣ ವಿರುದ್ಧದ ಪ್ರಕರಣ ಕೈಬಿಟ್ಟು ಆದೇಶ ಹೊರಡಿಸಿದ್ದಾರೆ. ರೇವಣ್ಣ ವಿರುದ್ಧ ದಾಖಲಾಗಿದ್ದ 354A ಅಡಿಯ ಪ್ರಕರಣವನ್ನು ಕೋರ್ಟ್ ಕೈಬಿಟ್ಟಿದೆ. ಹೊಳೆನರಸಿಪುರ ಮೂಲದ ಮಹಿಳೆ ಹೆಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ […]
BREAKING: ಮಂಡ್ಯ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಿಢೀರ್ ದಾಳಿ
ಮಂಡ್ಯ: ಜೈಲುಗಳಿಗೆ ನಿಷೇಧಿತ ವಸ್ತುಗಳು, ಮಾಧಕ ವಸ್ತುಗಳು ಪೂರೈಕೆಯಾಗುತ್ತಿವೆ ಎಂಬ ಆರೋಪ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಕಾರಾಗೃಹಗಳ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಇದರ ಮುಂದುವರೆದ ಭಾಗವಾಗಿ ಇದೀಗ ಮಂಡ್ಯ ಜಿಲ್ಲಾ ಕಾರಾಗೃಹದ ಮೇಲೂ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಮಂಡ್ಯ ಜೈಲಿನಲ್ಲಿ ಮಾದಕ ವಸ್ತುಗಳ ಸಾಗಾಟ ಆರೋಪ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಅಡಿಷನಲ್ ಎಸ್ ಪಿ ತಿಮ್ಮಯ್ಯ, ಗಂಗಾಧರ ಸ್ವಾಮಿ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಕಾರಾಗೃಹದ ಒಳಗೆ ಇಂಚಿಂಚೂ ಪರಿಶೀಲನೆ […]
ಹುಣಸೂರು: ಕೇವಲ 4 ನಿಮಿಷದಲ್ಲೇ ಕೆಜಿ ಕೆಜಿ ಚಿನ್ನ ದರೋಡೆ
ಹುಣಸೂರು: ಇಲ್ಲಿನ ಜ್ಯುವೆಲ್ಲರಿ ಶಾಪ್ನಲ್ಲಿ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿಯೊಂದು ಲಭ್ಯವಾಗಿದೆ. ದರೋಡೆಕೋರರು 7 ಗನ್ ಬಳಸಿ, ಕೇವಲ 4 ನಿಮಿಷದಲ್ಲೇ ಕೆಜಿಗಟ್ಟಲೇ ಚಿನ್ನ ದೋಚಿ ಪರಾರಿಯಾಗಿದ್ದಾರೆ. ಭಾನುವಾರ ಮಧ್ಯಾಹ್ನ 2 ಗಂಟೆ 4 ನಿಮಿಷಕ್ಕೆ ಚಿನ್ನದ ಅಂಗಡಿಗೆ ನುಗ್ಗಿದ್ದ ದರೋಡೆಕೋರರು 2 ಗಂಟೆ 8 ನಿಮಿಷಕ್ಕೆ ಪರಾರಿಯಾಗಿದ್ದಾರೆ. ಚಿನ್ನ ತೆಗೆದುಕೊಂಡು ಹೋಗಲು ಮೊದಲೇ ಎರಡು ಚೀಲವನ್ನು ತಂದಿದ್ದ ದರೋಡೆಕೋರರು, ಶೋಕೆಸ್ನಲ್ಲಿದ್ದ ದೊಡ್ಡ ದೊಡ್ಡ ಗಾತ್ರದ ಚಿನ್ನಾಭರಣವನ್ನು ಒಂದು ಕಡೆ ಗುಡ್ಡೆ ಹಾಕಿದ್ದರು. ಒಬ್ಬ ಚಿನ್ನ […]
ಮೈಸೂರು: ಪ್ರೀತಿ ವಿಚಾರವಾಗಿ ಹಲ್ಲೆ; ಮನನೊಂದು ಯುವಕ ಆತ್ಮಹತ್ಯೆ
ಮೈಸೂರು: ಯುವತಿಯ ಪ್ರೀತಿ ವಿಚಾರವಾಗಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದ್ದು, ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಬಿ.ಸೀಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, 23 ವರ್ಷದ ನಾಗೇಂದ್ರ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ. ಪ್ರೀತಿ ವಿಷಯ ತಿಳಿದು ನಾಗೇಂದ್ರನ ಮೇಲೆ ಯುವತಿಯ ಸಂಬಂಧಿಕರು ಹಲ್ಲೆ ನಡೆಸಿದ್ದರು. ಯುವತಿಯ ಕುಟುಂಬದ ಜಯಕುಮಾರ್, ಮಂಜು ಸೇರಿದಂತೆ ಐವರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಹಲ್ಲೆಯಿಂದ ಅವಮಾನವಾಗಿದೆ ಎಂದು ಮನನೊಂದು ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬನ್ನೂರು […]
ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್ಮೇಲ್: ಕಾಮುಕನನ್ನೇ ಹೊಡೆದು ಕೊಂದ ಸಾಫ್ಟ್ವೇರ್ ಇಂಜಿನಿಯರ್ ಸಹೋದರಿಯರು!
ತೆಲಂಗಾಣದ ಜಗತಿಯಾಲ ಜಿಲ್ಲೆಯಲ್ಲಿ ಖಾಸಗಿ ವಿಡಿಯೋ ಮುಂದಿಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಇಬ್ಬರು ಸಹೋದರಿಯರು ತಮ್ಮ ಸಂಬಂಧಿಕರೊಂದಿಗೆ ಸೇರಿ ಹೊಡೆದು ಕೊಂದಿರುವ ಭೀಕರ ಘಟನೆ ನಡೆದಿದೆ. ಡಿಸೆಂಬರ್ 26ರಂದು ಈ ಘಟನೆ ನಡೆದಿದ್ದು, ಪ್ರಸ್ತುತ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಹಿನ್ನೆಲೆ ಕೊಲೆಯಾದ ವ್ಯಕ್ತಿಯನ್ನು ಪೆದ್ದಪಲ್ಲಿ ಜಿಲ್ಲೆಯ ತುರ್ಕಲಮದ್ದಿಕುಂಟ ಗ್ರಾಮದ ಬುರ್ರಾ ಮಹೇಂದರ್ (32) ಎಂದು ಗುರುತಿಸಲಾಗಿದೆ. ಹೈದರಾಬಾದ್ನಲ್ಲಿ ಮೆಡಿಕಲ್ ರಿಪ್ರೆಸೆಂಟೇಟಿವ್ ಆಗಿ ಕೆಲಸ ಮಾಡುತ್ತಿದ್ದ ಮಹೇಂದರ್ಗೆ ಜಗತಿಯಾಲ ಮೂಲದ ಸಾಫ್ಟ್ವೇರ್ ಇಂಜಿನಿಯರ್ ಯುವತಿಯೊಂದಿಗೆ ಪರಿಚಯವಾಗಿತ್ತು. ಈ […]
ಒಂದೇ ಒಂದು ಬಾಲ್ನಲ್ಲಿ 286 ರನ್! ಕ್ರಿಕೆಟ್ ಇತಿಹಾಸದ ಈ ವಿಚಿತ್ರ ದಾಖಲೆಯ ಬಗ್ಗೆ ನಿಮಗೆ ಗೊತ್ತೇ?
ಕ್ರಿಕೆಟ್ ಎನ್ನುವುದು ಅನಿಶ್ಚಿತತೆಗಳ ಆಟ. ಇಲ್ಲಿ ದಾಖಲೆಗಳು ನಿರ್ಮಾಣವಾಗುವುದು ಮತ್ತು ಮುರಿಯುವುದು ಸಹಜ. ಆದರೆ, ಒಂದೇ ಒಂದು ಎಸೆತಕ್ಕೆ 286 ರನ್ ಗಳಿಸಿದ ಕಥೆಯನ್ನು ನೀವು ಕೇಳಿದ್ದೀರಾ? ಕೇಳಲು ನಂಬಲಾಗದಿದ್ದರೂ, ಕ್ರಿಕೆಟ್ ಇತಿಹಾಸದ ಪುಟಗಳಲ್ಲಿ ಇಂದಿಗೂ ಚರ್ಚೆಯಾಗುವ ಅತ್ಯಂತ ವಿಚಿತ್ರ ಮತ್ತು ಅಚ್ಚರಿಯ ಸಂಗತಿ ಇದು. ಏನಿದು ಘಟನೆ? ಎಲ್ಲಿ ನಡೆದಿತ್ತು? ಈ ಕುತೂಹಲಕಾರಿ ಕಥೆಯ ಮೂಲ 1865ರ ‘ಪಾಲ್ ಮಾಲ್ ಗೆಜೆಟ್’ ಎಂಬ ಲಂಡನ್ ಪತ್ರಿಕೆಯಲ್ಲಿ ಪ್ರಕಟವಾಗಿತ್ತು. ವರದಿಯ ಪ್ರಕಾರ, ಪಶ್ಚಿಮ ಆಸ್ಟ್ರೇಲಿಯಾದ ಬನ್ಬರಿಯಲ್ಲಿ ವಿಕ್ಟೋರಿಯಾ […]
BIG NEWS: ಅರಾವಳಿ ಬೆಟ್ಟಗಳ ಏಕರೂಪ ವ್ಯಾಖ್ಯಾನ ಕೇಸ್: ನವೆಂಬರ್ 20ರ ತನ್ನದೇ ಆದೇಶಕ್ಕೆ ತಡೆ ನೀಡಿದ ಸುಪ್ರೀಂ ಕೋರ್ಟ್
ನವದೆಹಲಿ: ಅರಾವಳಿ ಬೆಟ್ಟಗಳ ಏಕರೂಪ ವ್ಯಾಖ್ಯಾನ ಕುರಿತ ಪ್ರಕರಣ ಸಂಬಂಧ ನವೆಂಬರ್ 20ರಂದು ನೀಡಿದ್ದ ತನ್ನದೇ ಆದೇಶಕ್ಕೆ ಇಂದು ಸುಪ್ರೀಂ ಕೋರ್ಟ್ ತಡೆ ನೀಡಿದೆ. ಅರಾವಳಿ ಬೆಟ್ಟಗಳು ಹಾಗೂ ಪರ್ವತ ಶ್ರೇಟಿಗಳ ಏಕರೂಪ ವ್ಯಾಖ್ಯಾನವನ್ನು ಒಪ್ಪಿಕೊಂಡು ದೆಹಲಿ, ಹರಿಯಾಣ, ರಾಜಸ್ಥಾನ ಮತ್ತು ಗುಜರಾತ್ ಗಳಲ್ಲಿ ಹೊಸ ಗಣಿಗಾರಿಕೆ ಗುತ್ತಿಗೆ ನೀಡುವುದನ್ನು ನಿಷೇಧಿಸಿದ ಸುಪ್ರೀಂ ಕೋರ್ಟ್ ನ ಹಿಂದಿನ ತೀರ್ಪು ಪ್ರಕಟವಾಗುತ್ತಿದ್ದಂತೆ ಅನಿಯಂತ್ರಿತ ಗಣಿಗಾರಿಕೆ ಮತ್ತು ಪರಿಸರ ಹಾನಿಯ ಬಗ್ಗೆ ಕಳವಳ ವ್ಯಕ್ತವಾಗಿತ್ತು. ತೀರ್ಪಿನ ವಿರುದ್ಧ ಸಾಕಷ್ಟು ಪ್ರತಿಭಟನೆಗಳು […]
ರಾತ್ರಿಯ ಗಸ್ತಿನ (Night Patrol) ವೇಳೆ ಭಾರತೀಯ ಅರಣ್ಯ ಸೇವಾ (IFS) ಅಧಿಕಾರಿ ಪರ್ವೀನ್ ಕಸ್ವಾನ್ ಅವರು ಅತ್ಯಂತ ವಿಷಕಾರಿ ಹಾವೊಂದನ್ನು ಕಂಡು ಅದರ ಸೌಂದರ್ಯಕ್ಕೆ ಮಾರುಹೋಗಿದ್ದಾರೆ. ಈ ಕುರಿತಾದ ವಿಡಿಯೋವನ್ನು ಅವರು ಸಾಮಾಜಿಕ ಜಾಲತಾಣವಾದ ‘X’ ನಲ್ಲಿ ಹಂಚಿಕೊಂಡಿದ್ದು, ಸದ್ಯ ಇದು ಭಾರಿ ವೈರಲ್ ಆಗುತ್ತಿದೆ. ಕತ್ತಲಲ್ಲಿ ಹೊಳೆಯುವ ಹಳದಿ-ಕಪ್ಪು ಪಟ್ಟಿಗಳು ಐಎಫ್ಎಸ್ ಅಧಿಕಾರಿ ಪರ್ವೀನ್ ಕಸ್ವಾನ್ ಅವರು ರಾತ್ರಿ ವೇಳೆ ಅರಣ್ಯ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದಾಗ, ಹರಿಯುವ ನೀರಿನಲ್ಲಿ ವಿಶಿಷ್ಟವಾದ ಕಪ್ಪು ಮತ್ತು ಹಳದಿ […]
ಆರೋಗ್ಯಕರ ಅಂದುಕೊಂಡು ಇವುಗಳನ್ನು ತಿನ್ನುತ್ತಿದ್ದೀರಾ? ಚೆನ್ನೈ ವೈದ್ಯರು ನೀಡಿದ ಈ ಎಚ್ಚರಿಕೆ ವರದಿ ಓದಿ!
ಆರೋಗ್ಯಕರ ಎಂದು ಭಾವಿಸಿ ನಾವು ಸೇವಿಸುವ ಕೆಲವು ಆಹಾರಗಳು ವಾಸ್ತವವಾಗಿ ನಮ್ಮ ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಚೆನ್ನೈ ಮೂಲದ ಪ್ರಖ್ಯಾತ ಲ್ಯಾಪ್ರೊಸ್ಕೋಪಿಕ್ ಮತ್ತು ಬಾರಿಯಾಟ್ರಿಕ್ ಸರ್ಜನ್ ಡಾ. ಪ್ರೀತಿ ಮೃಣಾಲಿನಿ ಅವರು, ‘ಆರೋಗ್ಯಕರ’ ಎಂಬ ಹಣೆಪಟ್ಟಿ ಹೊತ್ತಿರುವ ಆದರೆ ಗುಪ್ತವಾಗಿ ಸಕ್ಕರೆ ಮತ್ತು ಸಂಸ್ಕರಿಸಿದ ಎಣ್ಣೆಗಳನ್ನು ಹೊಂದಿರುವ 5 ಆಹಾರಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಈ ಆಹಾರಗಳು ಕಾಲಾನಂತರದಲ್ಲಿ ನಮ್ಮ ಜೀರ್ಣಕ್ರಿಯೆ, ತೂಕ ಮತ್ತು ಚಯಾಪಚಯ ಕ್ರಿಯೆಯ (Metabolism) ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ ಎಂದು ಅವರು ತಮ್ಮ […]
ಮದುವೆಯಾದ 22 ದಿನಕ್ಕೇ ದಾರುಣ ಅಂತ್ಯ: ವಿವಾಹ ನಡೆದ ಮರದಲ್ಲೇ ನೇಣಿಗೆ ಶರಣಾದ ಪ್ರೇಮಿಗಳು
ಸೀತಾಪುರ: ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಪ್ರೀತಿಸಿ ಮದುವೆಯಾಗಿದ್ದ ನವಜೋಡಿಯು, ತಾವು ವಿವಾಹವಾದ ದೇವಸ್ಥಾನದ ಆವರಣದಲ್ಲೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮದುವೆಯಾಗಿ ಕೇವಲ 22 ದಿನಗಳು ಕಳೆಯುವಷ್ಟರಲ್ಲೇ ಈ ದುರಂತ ಸಂಭವಿಸಿದೆ. ಘಟನೆಯ ವಿವರ ಹರಗಾಂವ್ ಪೊಲೀಸ್ ಠಾಣಾ ವ್ಯಾಪ್ತಿಯ ಅನಿಯಾ ಕಲಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಖುಷಿ ರಾಮ್ (22) ಮತ್ತು ಮೋಹಿನಿ (19) ಎಂದು ಗುರುತಿಸಲಾಗಿದೆ. ಇವರಿಬ್ಬರು ಕಳೆದ ಡಿಸೆಂಬರ್ 6 […]
BREAKING: ಸತ್ತ ಹಲ್ಲಿ ಬಿದ್ದಿದ್ದ ಊಟ ಸೇವಿಸಿ ಐವರು ಮಕ್ಕಳು ಅಸ್ವಸ್ಥ
ಯಾದಗಿರಿ: ಸತ್ತ ಹಲ್ಲಿ ಬಿದ್ದಿದ್ದ ಊಟ ಸೇವಿಸಿ ಐವರು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಸುರಪುರದ ತಿಮ್ಮಾಪುರ ಬಡಾವಣೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಅವಘಡ ಸಂಭವಿಸಿದೆ. ಶಾಲೆಗೆ ವಿಶ್ವಗಂಗಾ ಎನ್ ಜಿಒದಿಂದ ಬಿಸಿಯೂಟ ಪೂರೈಕೆಯಾಗುತ್ತದೆ. ಹೀಗೆ ಪೂರೈಕೆಯಾಗ ಊಟದಲ್ಲಿ ಸತ್ತ ಹಲ್ಲಿ ಬಿದ್ದಿತ್ತು ಎನ್ನಲಾಗಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿರುವ ಐವರು ಮಕ್ಕಳು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಪ್ಪ ಕಡ್ಲೂರ್ ಭೇಟ್ ನೀಡಿ […]
Good News: ಬೆಂಗಳೂರಿನ ಈ ಅಂಡರ್ ಪಾಸ್ ಕಾಮಗಾರಿ ಮುಕ್ತಾಯ, ವಾಹನ ಸವಾರರಿಗೆ ಗುಡ್ ನ್ಯೂಸ್
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕೈಗೊಂಡಿದ್ದ ಮಹತ್ವದ ಅಂಡರ್ಪಾಸ್ ನಿರ್ಮಾಣ ಕಾಮಗಾರಿ ಅಂತಿಮ ಹಂತ ತಲುಪಿದೆ. ಇದರಿಂದಾಗಿ ಮೈಸೂರು ರಸ್ತೆ ಮತ್ತು ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಸಂಪರ್ಕ ಸುಲಭವಾಗಲಿದ್ದು, ವಾಹನ ಸವಾರರು ನಿಟ್ಟುಸಿರು ಬಿಡಲಿದ್ದಾರೆ. ಬಿಡಿಎ ಚಲ್ಲಘಟ್ಟ ರೈಲ್ವೆ ಅಂಡರ್ಪಾಸ್ ಕಾಮಗಾರಿಯ ಅಪ್ಡೇಟ್ ನೀಡಿದೆ. ಚಲ್ಲಘಟ್ಟದಲ್ಲಿ ನಿರ್ಮಾಣವಾಗುತ್ತಿರುವ ಹೊಸ ರೈಲ್ವೆ ಅಂಡರ್ಪಾಸ್ ಕಾಮಗಾರಿ ಭರದಿಂದ ಸಾಗುತ್ತಿದೆ. ಅತ್ಯಾಧುನಿಕ ಬಾಕ್ಸ್-ಪುಷಿಂಗ್ ತಂತ್ರಜ್ಞಾನ ಬಳಸಿ ಬಿಡಿಎ ವೇಗವಾಗಿ ಹಾಗೂ ಸುರಕ್ಷಿತವಾಗಿ ಕಾಮಗಾರಿಯನ್ನು ಕೈಗೊಂಡಿದೆ. ಅಧಿಕಾರಿಗಳ ಪ್ರಕಾರ ಈಗಾಗಲೇ 32.86 ಮೀಟರ್ […]
BREAKING: ತುಮಕೂರಿನಲ್ಲಿ ಘೋರ ಘಟನೆ: 8 ವರ್ಷದ ಮಗನ ಜೊತೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ
ತುಮಕೂರು: 8 ವರ್ಷದ ಮಗನ ಜೊತೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ತುಮಕೂರು ಜಿಲ್ಲೆಯ ಶಿರಾದಲ್ಲಿ ನಡೆದಿದೆ. ಶಿರಾ ತಾಲೂಕಿನ ಕಳ್ಳಂಬೆಳ್ಳ ಕೆರೆಗೆ ಹಾರಿ ತಾಯಿ ಹಾಗೂ 8 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಗಾಬೇಕಿದೆ.
ಬೆಂಗಳೂರಲ್ಲಿ ಹೊಸ ವರ್ಷಾಚರಣೆ: ಸಿಎಂ ಸಿದ್ದರಾಮಯ್ಯ ನೀಡಿದ ಸೂಚನೆಗಳು
ಬೆಂಗಳೂರು ನಗರದಲ್ಲಿ ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಬೆಂಗಳೂರು ನಗರ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ. ಜನರ ಸುರಕ್ಷತೆ ದೃಷ್ಟಿಯಿಂದ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ನಗರದಲ್ಲಿ 20,000 ಪೊಲೀಸರನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು. ಗೃಹ ಸಚಿವ ಡಾ.ಜಿ.ಪರಮೇಶ್ವರ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು. ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ […]
BREAKING: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ಭೀಕರ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ
ಹಾಸನ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಚನ್ನರಾಯ ಪಟ್ಟಣದಲ್ಲಿ ನಡೆದಿದೆ. ದಡದರಹಳ್ಳಿ ನಿವಾಸಿಗಳಾದ ಸುನೀಲ್ (20) ಹಾಗೂ ಶೃಂಗಾರ್ (18) ಮೃತ ದುರ್ದೈವಿಗಳು. ಬಸ್ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
BREAKING: ದಾವಣಗೆರೆ ಡ್ರಗ್ಸ್ ದಂಧೆ ಪ್ರಕರಣ: ಮತ್ತೋರ್ವ ಸಚಿವರ ಆಪ್ತ ಅರೆಸ್ಟ್
ದಾವಣಗೆರೆ: ದಾವಣಗೆರೆಯಲ್ಲಿ ನಡೆದಿದ್ದ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನ ಘಟಾನುಘಟಿ ಸಚಿವರ ಆಪ್ತರೇ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಇದೀಗ ಮತ್ತೋರ್ವ ಸಚಿವರ ಆಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ಡ್ರಗ್ಸ್ ಪ್ರಕರಣದಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ ಅವರ ಪರಮಾಪ್ತ ಅನ್ವರ್ ಬಾಷಾ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸಿಂಥೆಟಿಕ್ ಡ್ರಗ್ಸ್ ಕೇಸ್ ನಲ್ಲಿ ಈವರೆಗೆ ಒಟ್ಟು 8 ಆರೋಪಿಗಳನ್ನು ಬಂಧಿಸಲಾಗಿದೆ. ಈ ಮೂಲಕ ಪೊಲೀಸರು ದಾವಣಗೆರೆಯ ಪ್ರಭಾವಿ ನಾಯಕರ ನಶೆ ಇಳಿಸಿದ್ದಾರೆ. ಡಿಸೆಂಬರ್ 23ರಂದು ದಾವಣಗೆರೆಯಲ್ಲಿ […]
BREAKING: ಹಾಸನ ವಿಮಾನ ನಿಲ್ದಾಣ ಭೂಸ್ವಾಧೀನ ಪರಿಹಾರವನ್ನು ರೈತರಿಗೆ ತಕ್ಷಣ ವಿತರಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೇ, ವಿಮಾನ ನಿಲ್ದಾಣ ಯೋಜನೆಗಳ ಭೂಸ್ವಾಧಿನ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅಧಿಅಕರಿಗಳಿಗೆ ಹಲವು ಸೂಚನೆಗಳನ್ನು ನೀಡಿದರು. ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಆಗಬಾರದು. ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲಾ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ಮಾಡಬೇಕು ಎಂದು ಮುಖ್ಯಮಂತ್ರಿ ಅವರು ತಿಳಿಸಿದರು. ಇನ್ನು ಬಾಕಿಯಿರುವ 19 ಕ್ಷೇತ್ರಗಳಿಂದ ಪ್ರಸ್ತಾವನೆಗಳನ್ನು ಪಡೆದ ಬಳಿಕ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು. […]
ಬೆಂಗಳೂರು : ಬೆಂಗಳೂರು & ಕರಾವಳಿ ಜಿಲ್ಲೆಗಳ ನಡುವೆ ‘ವಂದೇ ಭಾರತ್’ ರೈಲು ಸೇವೆ ಒದಗಿಸುವಂತೆ ಕೇಂದ್ರ ರೈಲ್ವೇ ಸಚಿವರಿಗೆ ಸಚಿವ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದಾರೆ. ”ಕರಾವಳಿ ಮತ್ತು ಬೆಂಗಳೂರು ನಡುವಿನ ಸಂಪರ್ಕಕ್ಕೆ ಹೊಸ ವೇಗ ನೀಡಲು ವಂದೇ ಭಾರತ್ (Vande Bharat) ರೈಲು ಸೇವೆ ಒದಗಿಸುವಂತೆ ಮಾನ್ಯ ಕೇಂದ್ರ ರೈಲ್ವೆ ಸಚಿವರಾದ ಅಶ್ವೀನ್ ವೈಷ್ಣವ್ ಅವರಿಗೆ ಮಂಗಳೂರು ಜನತೆಯ ಪರವಾಗಿ ಮನವಿ ಮಾಡಿ ಪತ್ರ ಬರೆದಿದ್ದೇನೆ. ಮಂಗಳೂರು ಮತ್ತು ಬೆಂಗಳೂರು ಕರ್ನಾಟಕದ ಎರಡು ಪ್ರಮುಖ […]
BREAKING: ಕರ್ನಾಟಕ ಬ್ಯಾಡ್ಮಿಂಟನ್ ಸಂಸ್ಥೆಯ ಅಧ್ಯಕ್ಷರಾಗಿ ಕುಮಾರ್ ಬಂಗಾರಪ್ಪ ಅಧಿಕಾರ ಸ್ವೀಕಾರ
ಬೆಂಗಳೂರು: ಕರ್ನಾಟಕ ಬ್ಯಾಡ್ಮಿಂಟನ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಕುಮಾರ್ ಬಂಗಾರಪ್ಪ ಅಧಿಕಾರ ಸ್ವೀಕರಿಸಿದ್ದಾರೆ. ಬೆಂಗಳೂರಿನ ವಸಂತನಗರದಲ್ಲಿರುವ ಕೆಬಿಎ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಕುಮಾರ್ ಬಂಗಾರಪ್ಪ ಕರ್ನಾಟಕ ಬ್ಯಾಡ್ಮಿಂತನ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಡಿಸೆಂಬರ್ 28ರಂದು ನಡೆದ ಕೆಬಿಎ ಚುನಾವಣೆಯಲ್ಲಿ ಕುಮಾರ್ ಬಂಗಾರಪ್ಪ ಗೆಲುವು ಸಾಧಿಸಿದ್ದರು. 2025-2029ನೇ ಸಾಲಿನ ಆಡಳಿತ ಮಂಡಳಿಗೆ ನಡೆದಿದ್ದ ಚುನಾವಣೆಯಲ್ಲಿ ಕುಮಾರ್ ಬಂಗಾರಪ್ಪ ಬಣ ಭರ್ಜರಿ ಜಯಗಳಿಸಿತ್ತು. ಈ ಹಿನ್ನೆಲೆಯಲ್ಲಿ ಕುಮಾರ್ ಬಂಗಾರಪ್ಪ ಇಂದು ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಕಣ್ಣಿಗೆ ಏಕೆ ‘ಕಾಡಿಗೆ’ಹಚ್ಚುತ್ತಾರೆ..? ಇದರ ಹಿಂದಿನ ರಹಸ್ಯ ತಿಳಿಯಿರಿ
ಹಿಂದೂ ಆಚರಣೆಗಳು ಮತ್ತು ಸಂಪ್ರದಾಯಗಳಲ್ಲಿ, ಸೌಂದರ್ಯ ಮತ್ತು ಆಧ್ಯಾತ್ಮಿಕ ಕಾರಣಗಳಿಗಾಗಿ ಕಣ್ಣುಗಳಿಗೆ ಕಾಡಿಗೆ ಹಚ್ಚಲಾಗುತ್ತದೆ. ಇದನ್ನು ಹೆಚ್ಚಾಗಿ ಮಹಿಳೆಯರು ಧರಿಸುತ್ತಾರೆ. ಇದನ್ನು ಶಿಶುಗಳು ಸಹ ಧರಿಸುತ್ತಾರೆ. ಆದರೆ ಕಣ್ಣುಗಳಿಗೆ ಕಣ್ಣಿಗೆ ಕಾಡಿಗೆ ಹಚ್ಚಲು ಕಾರಣವೇನು? ಹಿಂದೂ ಪುರಾಣಗಳು ಏನು ಹೇಳುತ್ತವೆ? ವಿವರವಾಗಿ ತಿಳಿದುಕೊಳ್ಳೋಣ. ಅದೃಷ್ಟದ ಸಂಕೇತ: ಇದನ್ನು ಅದೃಷ್ಟದ ಸಂಕೇತವೆಂದು ಪರಿಗಣಿಸಲಾಗುತ್ತದೆ. ವಿಶೇಷವಾಗಿ ಹಿಂದೂ ವಿವಾಹ ಸಮಾರಂಭಗಳಲ್ಲಿ ಆಶೀರ್ವಾದ ಮತ್ತು ಸಮೃದ್ಧಿಯನ್ನು ತರಲು ಕಣ್ಣಿನ ಮೋಡಿಗಳನ್ನು ಬಳಸಲಾಗುತ್ತದೆ. ಅದಕ್ಕಾಗಿಯೇ ಕಣ್ಣಿನ ಮೋಡಿಗಳನ್ನು ಧರಿಸುವುದು ಒಂದು ಸಂಪ್ರದಾಯವಾಗಿದೆ. ಕಣ್ಣಿನ […]
ರಾಮನಗರ: ಡಿಸಿಎಂ ಡಿ.ಕೆ.ಶಿವಕುಮಾರ್ ಜನವರಿ 6 ಅಥವಾ 9ರಂದು ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡುತ್ತಾರೆ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಪುನರುಚ್ಛರಿಸಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಸಾಕ ಇಕ್ಬಾಲ್ ಹುಸೇನ್, ಜನವರಿ 6 ಅಥವಾ 9ಕ್ಕೆ ಡಿ.ಕೆ.ಶಿವಕುಮಾರ್ ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಾರೆ. ಇದು ನಾನು ಹೇಳುತ್ತಿರುವ ಮಾತಲ್ಲ, ಶರಣರು ಹೇಳಿರುವುದು. ಅವರ ಮಾತುಗಳನ್ನು ಕೇಳಿ ನಾನು ಹೇಳುತ್ತಿದ್ದೇನೆ ಎಂದಿದ್ದಾರೆ. 200 ಪರ್ಸೆಂಟ್ ಈ ಎರಡು ಡೇಟ್ ಗಳಲ್ಲಿ ಡಿ.ಕೆ.ಶಿವಕುಮಾರ್ […]
BIG NEWS : CM ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಹೈಲೆಟ್ಸ್ ಹೀಗಿದೆ.!
ಬೆಂಗಳೂರು : ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೆ ಯೋಜನೆಗಳ ಭೂಸ್ವಾಧೀನ ಕುರಿತು ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಸೂಚನೆ ನೀಡಿದರು. – 2024-25ರಲ್ಲಿ ಮಳೆ ಹಾನಿಯಿಂದ ಉಂಟಾದ ರಸ್ತೆ ದುರಸ್ತಿಗಾಗಿ ರೂ.1,890 ಕೋಟಿ ಮೊತ್ತಕ್ಕೆ ಅನುಮೋದನೆ ನೀಡಲಾಗಿದ್ದು, ರೂ.250 ಕೋಟಿ ಬಿಡುಗಡೆ ಮಾಡಲಾಗಿದೆ ಎಂದರು. ಸಿಎಂ ಸಿದ್ದರಾಮಯ್ಯ ನೀಡಿದ ಸೂಚನೆಗಳು 2023-24 ರಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನ ಯೋಜನೆಯಡಿ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ತಲಾ ರೂ.25 ಕೋಟಿಯಂತೆ […]
BREAKING: ಕಲಬುರಗಿಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ
ಕಲಬುರಗಿ: ವ್ಯಕ್ತಿಯೋರ್ವ ರಿವಾಲ್ವರ್ ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಕಲಬುರಗಿಯ ಶಿವಶಕ್ತಿ ನಗರದಲ್ಲಿ ನಡೆದಿದೆ. ಖಂಡುರಾವ್ ದವಳಜಿ (36) ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡವರು. ತನ್ನದೇ ರಿವಾಲ್ವರ್ ನಿಂದ ಶೂಟ್ ಮಾಡಿಕೊಂಡು ಸಾವನ್ನಪ್ಪಿದ್ದಾರೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಕಲಬುರಗಿ ಚೌಕ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಖಂಡುರಾವ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆ ಮುಂದುವರೆದಿದೆ.
BIG NEWS : ರಾಷ್ಟ್ರಗೀತೆಯನ್ನು ತಪ್ಪಾಗಿ ಹಾಡಿದ ಕಾಂಗ್ರೆಸ್ ನಾಯಕರು : ವೈರಲ್ ವೀಡಿಯೋಗೆ ವ್ಯಾಪಕ ಟೀಕೆ |WATCH VIDEO
ಕೇರಳ : ಕೇರಳದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಂಗ್ರೆಸ್ ನಾಯಕರು ರಾಷ್ಟ್ರಗೀತೆಯನ್ನು ತಪ್ಪಾಗಿ ಹಾಡಿದ್ದಾರೆ ಎನ್ನಲಾದ ವಿಡಿಯೋ ಭಾರಿ ವೈರಲ್ ಆಗಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಕೇರಳದಲ್ಲಿ ಭಾನುವಾರ ನಡೆದ ಪಕ್ಷದ 140ನೇ ಸಂಸ್ಥಾಪನಾ ದಿನಾಚರಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಾಷ್ಟ್ರಗೀತೆಯನ್ನು ತಪ್ಪಾಗಿ ಹಾಡಿದ್ದಾರೆ ಎಂದು ಹೇಳಲಾಗುತ್ತಿದೆ. ವರದಿಯಾದ ನಂತರ ಕಾಂಗ್ರೆಸ್ ತೀವ್ರ ಮುಜುಗರದ ಪರಿಸ್ಥಿತಿಗೆ ಸಿಲುಕಿತು ಎನ್ನಲಾಗಿದೆ. ಈ ಕಾರ್ಯಕ್ರಮದಲ್ಲಿ ಮಾಜಿ ರಕ್ಷಣಾ ಸಚಿವ ಎ.ಕೆ. ಆಂಟನಿ ಸೇರಿದಂತೆ ಹಲವಾರು ಹಿರಿಯ ನಾಯಕರು ಭಾಗವಹಿಸಿದ್ದರು. ತಿರುವನಂತಪುರಂನಲ್ಲಿರುವ ಕೇರಳ […]

17 C