SENSEX
NIFTY
GOLD
USD/INR

Weather

23    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source

BREAKING: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: 40 ವರ್ಷದ ವಿಚ್ಛೇದಿತ ಮಹಿಳೆ ಮೇಲೆ ಅತ್ಯಾಚಾರ: ಕೃತ್ಯವೆಸಗಿ ಹೆದ್ದಾರಿಯಲ್ಲಿ ಬಿಟ್ಟು ಹೋದ ದುರುಳರು

ಬಾಗಲಕೋಟೆ: ರಾಜ್ಯದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಮತ್ತೊಂದು ಹೇಯ ಘಟನೆ ನಡೆದಿದೆ. 40 ವರ್ಷದ ವಿಚ್ಛೇದಿತ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ರಾಷ್ಟ್ರೀಯ ಹೆದ್ದಾರಿ ಬಳಿ ಬಿಟ್ಟು ಹೋಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ನಡೆದಿದೆ. ಜನವರಿ 5 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಹಿಳೆಯ ಮೇಲೆ ಅತ್ಯಾಚಾರವೆಸಗಿ, ರಾಷ್ಟ್ರೀಯ ಹೆದ್ದಾರಿ ಬಳಿ ಮಹಿಳೆಯನ್ನು ಬಿಟ್ಟು ಹೋಗಿದ್ದರು. ಸ್ಥಳೀಯರು ಆಂಬುಲೆನ್ಸ್ ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸಂತ್ರಸ್ತೆಯನ್ನು ಹುನಗುಂದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. […]

ಕನ್ನಡ ದುನಿಯಾ 11 Jan 2026 4:45 pm

BREAKING: ಮನ್ ರೇಗಾ ಯೋಜನೆ ಚರ್ಚೆ: ಡಿಬೆಟ್ ಯಾವಾಗ ಟೈಂ ಫಿಕ್ಸ್ ಮಾಡಿ ಹೇಳಿ ಚರ್ಚೆಗೆ ರೆಡಿಯಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್ ಸವಾಲು

ಬೆಂಗಳೂರು: ಮನ್ ರೇಗಾ ಯೋಜನೆ ವಿಚಾರವಾಗಿ ಓಪನ್ ಡಿಬೆಟ್ ಮಾಡಬೇಕು. ಚರ್ಚೆಗೆ ಬರಲಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೀಡಿರುವ ಆಹ್ವಾನವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ವೀಕರಿಸಿದ್ದು, ಡಿಬೆಟ್ ಗೆ ಡೇಟ್ ಮತ್ತು ಟೈಂ ಫಿಕ್ಸ್ ಮಾಡಿ ಹೇಳಿ ಎಂದು ಸವಾಲು ಹಾಕಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ ನೀಡಿರುವ ಪಂಥಾಹ್ವಾನ ಸ್ವೀಕರಿಸಿದ್ದೇನೆ. ಮನ್ ರೇಗಾ ಕುರಿತ ಚರ್ಚೆಗೆ ನಾನು ಸಿದ್ಧ. ಅವರು ಯಾವತ್ತು ಹೇಳ್ತಾರೋ ಅವತ್ತು ಸಾರ್ವಜನಿಕವಾಗಿ ಚರ್ಚೆಗೆ ಬರಲಿ. ಇಲ್ಲದಿದ್ದರೆ ವಿಧಾನಸಭೆಗೆ ಬರಲಿ […]

ಕನ್ನಡ ದುನಿಯಾ 11 Jan 2026 4:21 pm

ವರದಾ-ಬೆಡ್ತಿ ನದಿ ಜೋಡಣೆ ಯೋಜನೆ ವಿಚಾರ: ಹಾವೇರಿಯಲ್ಲಿ ಮಠಾಧೀಶರು, ಜನಪ್ರತಿನಿಧಿಗಳ ಜನಜಾಗೃತಿ ಸಭೆ: ಸಂಸದ ಬಸವರಾಜ ಬೊಮ್ಮಾಯಿ

ಹಾವೇರಿ: ವರದಾ-ಬೆಡ್ತಿ ನದಿ ಯೋಜನೆ ಜಾರಿಗೆ ಜನಜಾಗೃತಿ ಮೂಡಿಸಲು ಹಾವೇರಿ ಜಿಲ್ಲೆಯಲ್ಲಿ ಮಠಾಧೀಶರು, ಜನಪ್ರತಿನಿಧಿಗಳ ನೇತೃತ್ವದಲ್ಲಿ ಜನರನ್ನು ಸೇರಿಸಿ ಜಾಗೃತಿ ಸಮಾವೇಶ ನಡೆಸಲಾಗುವುದು ಎಂದು ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಪಶ್ಚಿಮ ಘಟ್ಟಗಳನ್ನು ಉಳಿಸಿ, ವರದಾ – ಬೇಡ್ತಿ ವಿರೋಧಿಸಿ ಅಭಿಯಾನ ನಡೆಸುತ್ತಿರುವ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ್ ಬೊಮ್ಮಾಯಿ, ಹಾವೇರಿಯಲ್ಲಿಯೂ ಜನಜಾಗೃತಿ ಸಭೆ ನಡೆಸಲಾಗುವುದು. ಗೊಂದಲ ನಿವಾರಣೆಗೆ ರಾಜ್ಯ ಸರ್ಕಾರ ಸಭೆ ಕರೆಯಲಿ ಎಂದು ಹೇಳಿದರು. ವರದಾ ಬೆಡ್ತಿ […]

ಕನ್ನಡ ದುನಿಯಾ 11 Jan 2026 3:52 pm

BIG NEWS: ಸ್ಯಾಂಡಲ್ ವುಡ್ ನಟಿ, ಉದ್ಯಮಿ ಅರವಿಂದ್ ರೆಡ್ಡಿ ನಂಟಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಹಾಗೂ ಉದ್ಯಮಿ ಅರವಿಂದ್ ರೆಡ್ಡಿ ನಡುವಿನ ನಂಟು ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಅರವಿಂದ್ ರೆಡ್ಡಿ ತಾನು ನಟಿಗೆ ಕೊಡಿಸಿರುವ ದುಬಾರಿ ಉಡುಗೊರೆಗಳ ಬಗ್ಗೆ ಹಾಗೂ ನಟಿಯೊಂದಿಗಿನ ಕೆಲ ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ. ಸ್ಯಾಂಡಲ್ ವುಡ್ ನಟಿ, ಉದ್ಯಮಿ ಅರವಿಂದ್ ರೆಡ್ದಿ ವಿರುದ್ಧ ಪ್ರಕರಣ ದಾಖಲಿಸಿದ್ದರು. ಕಿರುಕುಳ ಆರೋಪ ಮಾಡಿದ್ದರು. ಅಲ್ಲದೇ ಅವರು ನೀಡಿದ್ದ ಲಕ್ಷಾಂತರ ರೂಪಾಯಿ ಗಿಫ್ಟ್ ಗಳನ್ನು ಸಂಬಂಧ ಮುರಿದುಕೊಂಡಾಗಲೇ ವಾಪಸ್ ಕೊಟ್ಟಿದ್ದಾಗಿ ತಿಳಿಸಿದ್ದರು. ಈ ಪ್ರಕರಣ ಕೆಲ […]

ಕನ್ನಡ ದುನಿಯಾ 11 Jan 2026 3:32 pm

ಅಂಡಮಾನ್ ಪ್ರವಾಸಕ್ಕೆ ತೆರಳಿದ್ದಾಗ ದುರಂತ: ಕೆಸಿಡಿ ಕಾಲೇಜು ಪ್ರೊಫೆಸರ್ ಹೃದಯಾಘಾತದಿಂದ ಸಾವು

ಧಾರವಾಡ: ಪ್ರವಾಸಕ್ಕೆಂದು ಅಂಡಮಾನ್ ಗೆ ತೆರಳಿದ್ದ ಧಾರವಾಡದ ಪ್ರೊಫೆಸರ್ ಓರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಎಸ್.ಅನ್ನಪೂರ್ಣ ಮೃತ ಪ್ರೊಫೆಸರ್. ಧಾರವಾಡದ ಕೆಸಿಡಿ ಕಾಲೇಜಿನಲ್ಲಿ ಅರ್ಥಶಾಸ್ತ್ರ ವಿಭಾಗದಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮೂರು ದಿನಗಳ ಹಿಂದೆ ಕುಟುಂಬದ ಜೊತೆ ಪ್ರವಾಸಕ್ಕೆ ಅಂಡಮಾನ್- ನಿಕೋಬಾರ್ ಗೆ ತೆರಳಿದ್ದರು. ಪೋರ್ಟ್ ಬ್ಲೇರ್ ಗೆ ಹೋಗಿದ್ದ ವೇಳೆ ಕಳೆದ ರಾತ್ರಿ ಅನ್ನಪೂರ್ಣ ಅಸ್ವಸ್ಥರಾಗಿದ್ದರು. ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟರಲ್ಲಿಯೇ ಅವರು ಕೊನೆಯುಸಿರೆಳೆದಿದ್ದರು. ಹೃದಯಾಘಾತದಿಂದ ಅನ್ನಪೂರ್ಣ ಮೃತಪಟ್ಟಿದ್ದಾರೆ ಎಂದು […]

ಕನ್ನಡ ದುನಿಯಾ 11 Jan 2026 2:51 pm

BIG NEWS: ದ್ವೇಷ ಭಾಷಣ ಮಸೂದೆ: ರಾಜ್ಯಪಾಲರು ತಿರಸ್ಕರಿಸಿಲ್ಲ ಎಂದ ಸಿಎಂ ಸಿದ್ದರಾಮಯ್ಯ

ಮಂಗಳೂರು: ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು ರಾಜ್ಯಪಾಲರು ಇದನ್ನು ವಾಪಸ್ಸು ಕಳಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದ್ವೇಷ ಭಾಷಣ ಮಸೂದೆ ಅಂಗೀಕಾರವಾಗಿದೆ. ರಾಜ್ಯಪಾಲರು ಮಸೂದೆಯನ್ನು ತಿರಸ್ಕರಿಸಿಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದರು. ಇನ್ನು ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ ಮಾಡುವ ವಿಚಾರವಾಗಿ ಪಾದಯಾತ್ರೆ ಮಾಡುವುದಾದರೆ ಮಾಡಲಿ ಬಿಡಿ. ಏಕೆ ಮಾಡುತ್ತಾರೆ? ನಾವು ಹಿಂದೆ ಪಾದಯಾತ್ರೆ ಮಾಡಿದ್ದು, ಬಳ್ಳಾರಿಯಲ್ಲಿ ಕಾನೂನುಬಾಹಿರ ಗಣಿಗಾರಿಕೆ […]

ಕನ್ನಡ ದುನಿಯಾ 11 Jan 2026 2:04 pm

BIG NEWS: ಹುಬ್ಬಳ್ಳಿ ಗ್ಯಾಂಗ್ ರೇಪ್ ಪ್ರಕರಣ: ಆರೋಪಿಗಳನ್ನು ಹಿಡಿದು ಥಳಿಸಿದ ನಾಲ್ವರ ವಿರುದ್ಧವೂ ಕೇಸ್ ದಾಖಲು

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ವಿಡಿಯೋ ಹರಿಬಿಟ್ಟ ಘಟನೆ ನಡೆದಿದ್ದು, ಪ್ರಕರಣದ ಆರೋಪಿಗಳನ್ನು ಹಿಡಿದು ಥಳಿಸಿದವರ ಮೇಲೇಯೇ ಇದೀಗ ಕೇಸ್ ದಾಖಲಾಗಿದೆ. ಮಹಿಳೆಯನ್ನು ಆಟೋದಲ್ಲಿ ಕರೆದೊಯ್ದಿದ್ದ ಇಬ್ಬರು ಕಾಮುಕರು ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರವೆಸಗಿ, ಕೃತ್ಯದ ವಿಡಿಯೋ ಮಾಡಿಕೊಂಡು ಸೋಷಿಯಲ್ ಮೀಡಿಯಾಗಳಲ್ಲಿ ಹರಿಬಿಟ್ಟಿರುವ ಘಟನೆ ಹಳೇ ಹುಬ್ಬಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜನವರಿ 9ರಂದು ಈ ಘಟನೆ ನಡೆದಿದ್ದು, ಜನವರಿ 10 ರಂದು ಸಂತ್ರಸ್ತೆ ದೂರು ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯರು ಆರೋಪಿಗಳಿಬ್ಬರನ್ನು ಹಿಡಿದು […]

ಕನ್ನಡ ದುನಿಯಾ 11 Jan 2026 1:30 pm

BIG NEWS: ಬಿಜೆಪಿ ಪಾದಯಾತ್ರೆ ಏಕೆ ಕೈಗೊಳ್ಳಬೇಕು? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮಂಗಳೂರು: ಬಳ್ಳಾರಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪಾದಯಾತ್ರೆಗೆ ಸಿದ್ಧತೆ ನಡೆಸಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರು ಏಕೆ ಪಾದಯಾತ್ರೆ ಮಾಡಬೇಕು? ಎಂದು ಪ್ರಶಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ ಮಾಡುವ ವಿಚಾರವಗಿ, ನಾವು ಹಿಂದೆ ಪಾದಯಾತ್ರೆ ಮಾಡಿದ್ದು, ಬಳ್ಳಾರಿಯಲ್ಲಿ ಕಾನೂನುಬಾಹಿರ ಗಣಿಗಾರಿಕೆ ಮಾಡುತ್ತಿರುವ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ಮಾಡಿದಾಗ ರೆಡ್ಡಿ ಸಹೋದರರು ಹಾಗೂ ಯಡಿಯೂರಪ್ಪ ಅವರು ಸವಾಲು ಹಾಕಿದ್ದರು. ಅದಕ್ಕಾಗಿ ಪಾದಯಾತ್ರೆ ಕೈಗೊಂಡಿದ್ದೆವು. ಇವರು ಪಾದಯಾತ್ರೆ […]

ಕನ್ನಡ ದುನಿಯಾ 11 Jan 2026 12:49 pm

ಬೆಂಗಳೂರಿನಲ್ಲಿ 6 ವರ್ಷದ ಬಾಲಕಿ ಹತ್ಯೆಗೆ ಸ್ಫೋಟಕ ತಿರುವು: ತನಿಖೆ ವೇಳೆ ಆರೋಪಿಯ ಬೆಚ್ಚಿ ಬೀಳಿಸುವ ಕ್ರೌರ್ಯ ಬಯಲು: ಅತ್ಯಾಚಾರವೆಸಗಿ ವೈರ್ ನಿಂದ ಕತ್ತು ಬಿಗಿದು ಕೊಲೆ

ಬೆಂಗಳೂರು: ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ಕೆಲ ದಿನಗಳ ಹಿಂದೆ ನಡೆದಿದ್ದ 6 ವರ್ಷದ ಬಾಲಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆಯ ವೇಳೆ ಬೆಚ್ಚಿ ಬೀಳಿಸುವ ಮಾಹಿತಿ ಬಹಿರಂಗವಾಗಿದೆ. 6 ವರ್ಷದ ಬಾಲಕಿಯನ್ನು ಹತ್ಯೆ ಮಾಡಿದ್ದ ಆರೋಪಿ ಯುಸೂಫ್ ನನ್ನು ಬಂಧಿಸಿ ತನಿಖೆ ನಡೆಸಿದಾಗ ಆರೋಪಿ ಬಾಲಕಿಯನ್ನು ಅಪಹರಿಸಿ, ಬಳಿಕ ಆಕೆಯ ಮೇಲೆ ಅತ್ಯಾಚಾರವೆಸಗಿ ಬಾಲಕಿ ಕತ್ತನ್ನು ವೈರ್ ನಿಂದ ಬಿಗಿದು ಕೊಲೆಗೈದಿದ್ದಾನೆ. ಬಳಿಕ ಶವವನ್ನು ಪ್ಲಾಸ್ಟಿಕ್ ಚೀಲದಲ್ಲಿ ಮೂಟೆಕಟ್ಟಿ ರಸ್ತೆ ಬದಿಯ ಚರಂಡಿಗೆ ಬಿಸಾಕಿದ್ದಾನೆ […]

ಕನ್ನಡ ದುನಿಯಾ 11 Jan 2026 12:35 pm

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರವಾಸೋದ್ಯಮಕ್ಕೆ ಅವಕಾಶ: ಹೂಡಿಕೆದಾರರಿಗೆ ಸರ್ಕಾರದಿಂದ ಎಲ್ಲಾ ರೀತಿ ಬೆಂಬಲ: ಸಿಎಂ ಸಿದ್ಧರಾಮಯ್ಯ

ಮಂಗಳೂರು: ಪ್ರವಾಸೋದ್ಯಮದಲ್ಲಿ ಹೂಡಿಕೆ ಮಾಡುವವರಿಗೆ ನಮ್ಮ ಸರ್ಕಾರ ಎಲ್ಲಾ ರೀತಿಯ ಬೆಂಬಲ ನೀಡಲಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಮಂಗಳೂರಿನಲ್ಲಿ ನಡೆದ “ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ -2026” ರಲ್ಲಿ ಅವರು ಮಾತನಾಡಿದರು. ಪ್ರವಾಸೋದ್ಯಮ ಸಮಾವೇಶ -2026 ರಲ್ಲಿ ಬಂಡವಾಳ ಹೂಡಿಕೆ ಮಾಡಲು ಲೆಟರ್ ಆಫ್ ಇಂಟೆಂಟ್ ಗೆ ಅನೇಕರು ಸಹಿ ಹಾಕಿದ್ದು, ಪ್ರವಾಸೋದ್ಯಮ ಅಭಿವೃದ್ಧಿಗೆ ಮುಂದಾಗುವವರಿಗೆ ಸರ್ಕಾರ ನೆರವಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು ಪ್ರವಾಸೋದ್ಯಮಕ್ಕೆ ಹೆಚ್ಚು ಅವಕಾಶಗಳಿರುವ ಜಿಲ್ಲೆಗಳು ಎಂದರು. ನಮ್ಮ […]

ಕನ್ನಡ ದುನಿಯಾ 11 Jan 2026 12:04 pm

ಬೈಕ್ ನಲ್ಲಿ ಬಂದು ಮಹಿಳೆಯರ ಮಾಂಗಲ್ಯ ಸರ ಕಳ್ಳತನ ಮಾಡುತ್ತಿದ್ದ ಖದೀಮರು: ಇಬ್ಬರು ಆರೋಪಿಗಳು ಅರೆಸ್ಟ್

ಮಂಡ್ಯ: ಬೈಕ್ ನಲ್ಲಿ ಬಂದು ಮಹಿಳೆಯರ ಮಾಂಗಲ್ಯ ಸರ ಕದ್ದು ಪರಾರುಯಾಗುತ್ತಿದ್ದ ಇಬ್ಬರು ಖತರ್ನಾಕ್ ಕಳ್ಳರನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ. ಮಹಿಳೆಯರ ಮಾಂಗಲ್ಯ ಸರ ಹಾಗೂ ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ. ಬಂಧಿತರನ್ನು ಮೈಸೂರಿನ ಶಾಂತಿನಗರ ನಿವಾಸಿ ಸದ್ದಾಂ ಹುಸೇನ್ ಅಲಿಯಾಸ್ ಸದ್ದಾಂ ಹಾಗೂ ರಾಜೀವ್ ನಗರದ ಸೈಯ್ಯದ್ ಅಯೂಬ್ ಎಂದು ಗುರುತಿಸಲಾಗಿದೆ. ಇಬ್ಬರೂ ಬೇರೆ ಬೇರೆ ಜಿಲ್ಲೆಗಳಲ್ಲಿ ಸರಗಳ್ಳತನ, ಮನೆಗಳ್ಳತನ ಮಾಡುತ್ತಿದ್ದರು. ಬಂಧಿತರಿಂದ 253 ಗ್ರಾಂ ಚಿನ್ನ, 178ಗ್ರಾಂ ಬೆಳ್ಳಿ ಹಾಗೂ ಕೃತ್ಯಕ್ಕೆ […]

ಕನ್ನಡ ದುನಿಯಾ 11 Jan 2026 12:02 pm

ಅಪಘಾತ: ಇಬ್ಬರು ಸವಾರರು ಸ್ಥಳದಲ್ಲೇ ಸಾವು

ಶಿವಮೊಗ್ಗ: ರಸ್ತೆ ಅಪಘಾತದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊಸನಗರ ತಾಲೂಕಿನ ಮುಂಬಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನಕಟ್ಟೆ ಬಳಿ ಶುಕ್ರವಾರ ರಾತ್ರಿ ಬೈಕ್ ಸವಾರ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ. ಚೇತನ್ ಮೊಗವೀರ ಮೃತಪಟ್ಟವರು. ಉಡುಪಿಯ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಚೇತನ್ ಹೊಸನಗರದಿಂದ ಸ್ವಗ್ರಾಮ ಮಾವಿನಕಟ್ಟೆಗೆ ಬೈಕ್ ನಲ್ಲಿ ತೆರಳುವಾಗ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ. ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಿಪ್ಪನ್ ಪೇಟೆ ಅರಸಾಳು ಗ್ರಾಪಂ ವ್ಯಾಪ್ತಿಯ 9ನೇ ಮೈಲಿಕಲ್ಲು ಸೂಡೂರು […]

ಕನ್ನಡ ದುನಿಯಾ 11 Jan 2026 11:51 am

ಕೊಡಗಿನಲ್ಲಿ ಕೆಲಸ ಖಾಲಿ ಇದೆ: ವೇತನ 25 ಮತ್ತು 20 ಸಾವಿರ ರೂ.ಗಳು

ಕೊಡಗು ಜಿಲ್ಲೆಯಲ್ಲಿ ಕೆಲಸ ಹುಡುತ್ತಿರುವ ಅಭ್ಯರ್ಥಿಗಳಿಗೆ ಮಾಹಿತಿ ಒಂದಿದೆ. ಅರಣ್ಯಾಧಾರಿತ ಬುಡಕಟ್ಟು ಸಮುದಾಯದವರಿಗೆ ಆರೋಗ್ಯ ಸೇವೆಗಳನ್ನು ಪಡೆಯಲು ಇರುವ ನ್ಯೂನ್ಯತೆ/ ಅಡೆತಡೆಗಳನ್ನು ನಿವಾರಿಸಿ ಹಾಗೂ ಉತ್ತಮ ಸೇವೆಯನ್ನು ದೊರೆಯುವಂತೆ ಮಾಡಲು ಟ್ರೈಬಲ್ ಹೆಲ್ತ್ ನ್ಯಾವಿಗೇಟರ್ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಸಂಬಂಧ ಅರಣ್ಯಾಧಾರಿತ ಬುಡಕಟ್ಟು ಸಮುದಾಯದವರಿಂದ ಜಿಲ್ಲಾ ಆದಿವಾಸಿ ಆರೋಗ್ಯ ಸಂಯೋಜಕರು (1 ಹುದ್ದೆ) ಹಾಗೂ ತಾಲ್ಲೂಕು ಆದಿವಾಸಿ ಆರೋಗ್ಯ ಕಾರ್ಯಕರ್ತೆಯರ(3 ಹುದ್ದೆ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ತಾತ್ಕಾಲಿಕವಾಗಿ ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಜಿಲ್ಲಾ ಆದಿವಾಸಿ ಆರೋಗ್ಯ […]

ಕನ್ನಡ ದುನಿಯಾ 11 Jan 2026 11:39 am

BREAKING: ಕೌಟುಂಬಿಕ ಕಲಹ: ತಂದೆಯನ್ನೇ ರಾಡ್ ನಿಂದ ಹೊಡೆದು ಕೊಂದ ಪುತ್ರ

ಹಾಸನ: ಕೌಟುಂಬಿಕ ಕಲಹದಿಂದ ಪುತ್ರನೇ ತಂದೆಯನ್ನು ಕೊಲೆ ಮಾಡಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಹಿರಿಸಾವೆ ಗ್ರಾಮದಲ್ಲಿ ಘಟನೆ ನಡೆದಿದೆ. ರಾಡ್ ನಿಂದ ಹೊಡೆದು ಸತೀಶ್(60) ಅವರನ್ನು ಪುತ್ರ ರಂಜಿತ್ ಕೊಲೆ ಮಾಡಿದ್ದಾನೆ. ಕೌಟುಂಬಿಕ ಕಲಹದಿಂದ ಪ್ರತ್ಯೇಕವಾಗಿ ತಾಯಿ ಮಗ ವಾಸವಾಗಿದ್ದರು. ಮೈಸೂರು ಜಿಲ್ಲೆ ಕೆಆರ್ ನಗರದಲ್ಲಿ ತಾಯಿ, ಮಗ ವಾಸವಾಗಿದ್ದರು. ಇದೇ ವಿಚಾರಕ್ಕೆ ತಂದೆಯ ಜೊತೆ ಆಗಾಗ ಜಗಳ ನಡೆಯುತ್ತಿತ್ತು. ನಿನ್ನೆ ಸಂಜೆ ಇದೇ ವಿಚಾರಕ್ಕೆ ತಂದೆ, ಮಗನ ನಡುವೆ ಜಗಳವಾಗಿದ್ದು, ಈ ವೇಳೆ ಸ್ಟೀಲ್ […]

ಕನ್ನಡ ದುನಿಯಾ 11 Jan 2026 11:39 am

BREAKING: ಸೋಮನಾಥ ಮಂದಿರದಲ್ಲಿ ‘ರುದ್ರಾಭಿಷೇಕ’ನೆರವೇರಿಸಿದ ಪ್ರಧಾನಿ ಮೋದಿ |ವಿಡಿಯೋ

ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ಭೇಟಿಯ ಎರಡನೇ ದಿನವಾದ ಭಾನುವಾರ ಸೋಮನಾಥ ದೇವಾಲಯವನ್ನು ರಕ್ಷಿಸುವಲ್ಲಿ ಪ್ರಾಣ ತ್ಯಾಗ ಮಾಡಿದ ಅಸಂಖ್ಯಾತ ಯೋಧರನ್ನು ಗೌರವಿಸಲು ಆಯೋಜಿಸಲಾದ ಶೌರ್ಯ ಯಾತ್ರೆಯಲ್ಲಿ ಭಾಗವಹಿಸಿದ್ದರು. ಶೌರ್ಯ ಯಾತ್ರೆಯು ಶೌರ್ಯ ಮತ್ತು ತ್ಯಾಗವನ್ನು ಪ್ರತಿಬಿಂಬಿಸುವ 108 ಕುದುರೆಗಳ ಸಾಂಕೇತಿಕ ಮೆರವಣಿಗೆಯನ್ನು ಒಳಗೊಂಡಿತ್ತು. ನಂತರ, ಪ್ರಧಾನಿಯವರು ಸೋಮನಾಥ ದೇವಾಲಯದಲ್ಲಿ ದರ್ಶನ ಮತ್ತು ಪೂಜೆ ಸಲ್ಲಿಸಿದರು. 1026 ರಲ್ಲಿ ಘಜ್ನಿಯ ಮಹಮೂದ್ ಸೋಮನಾಥ ದೇವಾಲಯದ ಮೇಲೆ ಆಕ್ರಮಣ ಮಾಡಿ 1,000 ವರ್ಷಗಳನ್ನು ಪೂರೈಸಿದ ನಂತರ ಈ […]

ಕನ್ನಡ ದುನಿಯಾ 11 Jan 2026 11:32 am

ಪತಿ ವಿರುದ್ಧ ಪತ್ನಿ ಆರೋಪಕ್ಕೆ ಬಿಗ್ ಟ್ವಿಸ್ಟ್: ಇಬ್ಬರು ಗಂಡಂದಿರನ್ನು ಬಿಟ್ಟು ಮೂರನೆಯವನ ಜೊತೆ ಲಿವ್ ಇನ್ ಸಂಬಂಧ; ನಾಲ್ಕನೇ ಮದುವೆಗೆ ಸಿದ್ಧತೆ ನಡೆಸಿದ್ದ ಮಹಿಳೆ

ಬೆಂಗಳೂರು: ಕೆಲ ದಿನಗಳ ಹಿಂದೆ ಮಹಿಳೆಯೊಬ್ಬರು ಪತಿ ವಿರುದ್ಧ ಬೆತ್ತಲೆ ಓಡಾಟ, ವಿಕೃತ ಹಿಂಸೆ ಆರೋಪ ಮಾಡಿದ್ದ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಮಹಿಳೆಯ ವಿರುದ್ಧವೇ ಮೂರನೇಯ ಪತಿ ಆರೋಪ ಮಾಡಿದ್ದು, ಹಣಕ್ಕಾಗಿ ಮದುವೆ ನಾಟಕವಾಗಿ ವಂಚಿಸುತ್ತಿರುವುದಾಗಿ ಗಂಭೀರ ಆರೋಪ ಮಾಡಿದ್ದಾರೆ. ಮೇಘಶ್ರೀ ಎಂಬ ಮಹಿಳೆ ಕೆಲ ದಿನಗಳ ಹಿಂದೆ ಪತಿ ಮಂಜುನಾಥ್ ವಿರುದ್ಧ ಕಿರುಕುಳ, ಹಲ್ಲೆ, ತನ್ನ ತಂದೆ-ತಾಯಿಗೂ ಜೀವಬೆದರಿಕೆ ಹಾಕಿರುವ ಆರೋಪ ಮಾಡಿದ್ದರು. ಅಲ್ಲದೇ ಪತಿ ಮಂಜುನಾಥ್ ವಿಕೃತ ವ್ಯಕ್ತಿ. ಬೆತ್ತಲಾಗಿ ಓಡಾಡುವುದು ತನಗೆ […]

ಕನ್ನಡ ದುನಿಯಾ 11 Jan 2026 11:14 am

ಬೆಂಗಳೂರಿಗೆ 3 ಅಮೃತ್ ಭಾರತ್ ರೈಲು, ವೇಳಾಪಟ್ಟಿ

ಕೇಂದ್ರ ಸರ್ಕಾರ ಬೆಂಗಳೂರು ನಗರಕ್ಕೆ ಬಂಪರ್ ಕೊಡುಗೆ ನೀಡಿದೆ. ಪಶ್ಚಿಮ ಬಂಗಾಳ-ಬೆಂಗಳೂರು ನಗರ ಸಂಪರ್ಕಿಸುವ 3 ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲು ಆರಂಭಿಸಲಾಗುತ್ತಿದೆ. ಇದರಿಂದಾಗಿ ಬೆಂಗಳೂರು ಮತ್ತು ಭಾರತದ ಪೂರ್ವ ಭಾಗದ ನಡುವಿನ ಪ್ರಯಾಣ ಸುಲಭವಾಗಲಿದೆ. ಈ ಹೊಸ ರೈಲುಗಳ ಬಗ್ಗೆ ತುಮಕೂರು ಸಂಸದ, ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಿಂದ ಭಾರತದ ಪೂರ್ವ ಭಾಗಕ್ಕೆ ರೈಲ್ವೆ ಸಂಪರ್ಕ ಹೆಚ್ಚಳ ಎಂದು ಹೇಳಿದ್ದಾರೆ. […]

ಕನ್ನಡ ದುನಿಯಾ 11 Jan 2026 10:59 am

Good News: ಬೆಂಗಳೂರಿಗೆ ಗುಡ್‌ನ್ಯೂಸ್, ನಮ್ಮ ಮೆಟ್ರೋ ಗುಲಾಬಿ ಮಾರ್ಗದ ಪರೀಕ್ಷಾರ್ಥ ಸಂಚಾರ ಆರಂಭ

ಬೆಂಗಳೂರು ನಗರದ ಜನರಿಗೆ ಬಿಎಂಆರ್‌ಸಿಎಲ್ ಗುಡ್ ನ್ಯೂಸ್ ಕೊಟ್ಟಿದೆ. ಗುಲಾಬಿ ಮಾರ್ಗದಲ್ಲಿ ಭಾನುವಾರ ಪರೀಕ್ಷಾರ್ಥ ಸಂಚಾರ ಆರಂಭವಾಗಿದೆ. ಈ ಮಾರ್ಗವನ್ನು ಏಪ್ರಿಲ್ 2026ರಲ್ಲಿ ಸಂಚಾರಕ್ಕೆ ಪೂರ್ಣಗೊಳಿಸುವ ಗುರಿ ಇದೆ. ಕಾಳೇನ ಅಗ್ರಹಾರ-ತಾವರೆಕೆರೆ ತನಕದ ಗುಲಾಬಿ ಮಾರ್ಗದಲ್ಲಿ (ಸುಮಾರು 7.5 ಕಿಮೀ ಉದ್ದ) ರೋಲಿಂಗ್ ಸ್ಟಾಕ್ ಪರೀಕ್ಷೆಗಳನ್ನು ಭಾನುವಾರ ಆರಂಭವಾಗಲಿದೆ. ಏಪ್ರಿಲ್ 2026ರ ಮಧ್ಯಭಾಗದೊಳಗೆ ನಿಗಮವು ಇದನ್ನು ಪೂರ್ಣಗೊಳಿಸುವ ಯೋಜನೆ ಹೊಂದಿದೆ. ಈ ಮುಖ್ಯ ಪರೀಕ್ಷೆಗಳು (Main Line Testing) ವಾಣಿಜ್ಯ ಸಂಚಾರ ಮಾಡುವ ಮೊದಲು ಕೈಗೊಳ್ಳಲಾಗುವ ಅತ್ಯಂತ […]

ಕನ್ನಡ ದುನಿಯಾ 11 Jan 2026 10:38 am

BREAKING: ಚಿಕ್ಕಮಗಳೂರಿನಲ್ಲಿ ಕಾಫಿತೋಟದ ರಸ್ತೆಯಲ್ಲಿ ಸಿಂಗಲ್ ಬ್ಯಾರಲ್ ಬಂದೂಕು ಪತ್ತೆ: FIR ದಾಖಲು

ಚಿಕ್ಕಮಗಳೂರು: ಕಾಫಿತೋಟದ ರಸ್ತೆಯಲ್ಲಿ ಸಿಂಗಲ್ ಬ್ಯಾರಲ್ ಬಂದೂಕು ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಗೊಣಕಲ್ ನಲ್ಲಿ ನಡೆದಿದೆ. ಪ್ರಕರಣ ಸಂಬಂಧ ಎಫ್ ಐ ಆರ್ ದಾಖಲಾಗಿದೆ. ಬಂದೂಕು ಹಿಡಿದು ನಾಲ್ವರು ಕಾಫಿತೋಟದ ರಸ್ತೆಯಲ್ಲಿ ಓಡಾಟ ನಡೆಸಿದ್ದರು. ಕಾರಿನ ಬೆಳಕು ಕಂಡು ಬಂದೂಕು ಎಸೆದು ಪರಾರಿಯಾಗಿದ್ದಾರೆ. ತೋಟದ ಮಾಲೀಕ ಮನದೀಪ್ ಎಂಬುವವರು ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ನಿವೃತ್ತ ಐಜಿಪಿ ಕುಟುಂಬಕ್ಕೆ ಸೇರಿದ ಕಾಫಿತೋಟದ ಸಿಬ್ಬಂದಿ ವಿರುದ್ಧ ಎಫ್ ಐ ಆರ್ […]

ಕನ್ನಡ ದುನಿಯಾ 11 Jan 2026 10:37 am

BREAKING: ಹುಬ್ಬಳ್ಳಿಯಲ್ಲಿ ಮಹಿಳೆಯ ಮೇಲೆ ಅತ್ಯಾಚಾರ: ಕೃತ್ಯದ ವಿಡಿಯೋ ಹರಿಬಿಟ್ಟು ಬ್ಲ್ಯಾಕ್ ಮೇಲ್; ಕಾಮುಕರು ಅರೆಸ್ಟ್

ಹುಬ್ಬಳ್ಳಿ: ರಾಜ್ಯದ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮಹಿಳೆಯ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರವೆಸಗಿ ಕೃತ್ಯದ ವಿಡಿಯೋ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮಹಿಳೆಯ ಮೇಲೆ ಇಬ್ಬರು ಕಾಮುಕರು ಅತ್ಯಾಚಾರವೆಸಗಿದ್ದಾರೆ. ಕೃತ್ಯದ ವಿಡಿಯೋಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡಿದ್ದೂ ಅಲ್ಲದೇ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟು ವಿಕೃತಿ ಮೆರೆದಿದ್ದಾರೆ. ಮಹಿಳೆಗೆ ಪದೇ ಪದೇ ಬ್ಲ್ಯಾಕ್ ಮೇಲ್ ಮಾಡಿ […]

ಕನ್ನಡ ದುನಿಯಾ 11 Jan 2026 10:19 am

BREAKING: ಪರಶುರಾಮ ಥೀಮ್ ಪಾರ್ಕ್ ನಲ್ಲಿ ತಾಮ್ರದ ಹೊದಿಕೆ ಕಳವು ಮಾಡಿದ್ದ ಇಬ್ಬರು ಅರೆಸ್ಟ್

ಉಡುಪಿ: ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ನಲ್ಲಿ ತಾಮ್ರ ಹೊದಿಕೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆ ಕಾರ್ಕಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾರ್ಕಳದ ಉಮಿಕಲ್ ಬೆಟ್ಟದ ಮೇಲಿರುವ ಪರಶುರಾಮ ಥೀಮ್ ಪಾರ್ಕ್ ನಿಂದ ತಾಮ್ರದ ಹೊದಿಕೆ ಕಳವು ಮಾಡಲಾಗಿತ್ತು. ಮಂಗಳೂರು ಮೂಲದ ಆರಿಫ್(37), ಅಬ್ದುಲ್ ಹಮೀದ್(32) ಅವರನ್ನು ಬಂಧಿಸಲಾಗಿದೆ. ಥೀಮ್ ಪಾರ್ಕ್ ನ ಕಟ್ಟಡದ ಮೇಲ್ಛಾವಣಿಗೆ ಹಾಕಿದ್ದ ತಾಮ್ರದ ಹೊದಿಕೆ ಹಲವು ಮಾಡಿದ್ದ ಪ್ರಕರಣ ಗಂಭೀರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಪೊಲೀಸರು ಮೂರು ತಂಡಗಳನ್ನು […]

ಕನ್ನಡ ದುನಿಯಾ 11 Jan 2026 10:02 am

BREAKING: ಖ್ಯಾತ ಮಕ್ಕಳ ವೈದ್ಯನ ಮನೆಯಲ್ಲಿ ಗಾಂಜಾ ಪತ್ತೆ

ಬೆಳಗಾವಿ: ಖ್ಯಾತ ಮಕ್ಕಳ ತಜ್ಞ ವೈದ್ಯನ ಮನೆಯಲ್ಲಿ ಗಾಂಜಾ ಪತ್ತೆಯಾಗಿದ್ದು, ವೈದ್ಯನನ್ನು ಬಂಧಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ವೈದ್ಯ ರಾಹುಲ್ ಬಂಟಿ ಯನ್ನು ಪೊಲೀಸರು ಬಂಧಿಸಿದ್ದಾರೆ. ಹಿರೇಬಾಗೇವಾಡಿ ಸಮುದಾಯ ಆರೋಗ್ಯ ಕೇಂದ್ರದ ಮಕ್ಕಳ ವೈದ್ಯನಾಗಿದ್ದ ಡಾ.ರಾಹುಲ್ ಗಾಂಜಾ ಸೇವನೆ ಮಾಡುತ್ತಿದ್ದ ಬಗ್ಗೆ ಪೊಲೀಸರುಗೆ ಮಾಹಿತಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಮಾಳಮಾರುತಿ ಠಾಣೆ ಪೊಲೀಸರು ವೈದ್ಯನ ಮನೆಯಾದ ಬೆಳಗಾವಿ ಶಿವಬಸವ ನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದಾರೆ. ಪರಿಶೀಲನೆ ವೇಳೆ ವೈದ್ಯನ ಮನೆಯಲ್ಲಿ 134 ಗ್ರಾಂ ಗಾಂಜಾ ಪತ್ತೆಯಾಗಿದೆ. […]

ಕನ್ನಡ ದುನಿಯಾ 11 Jan 2026 9:54 am

BREAKING: ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ತೊಣಚಿನಕುಪ್ಪೆ ಸಮೀಪ ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾಗಿದ್ದಾನೆ. ಅಪರಿಚಿತ ವಾಹನ ಡಿಕ್ಕಿಯಾಗಿ ಮಧುಸೂದನ್(21) ಸಾವನ್ನಪ್ಪಿದ್ದಾರೆ. ಮಾಗಡಿ ತಾಲೂಕಿನ ಬೈರಸಾಗರ ಗ್ರಾಮದ ನಿವಾಸಿಯಾಗಿರುವ ಮಧುಸೂದನ್ ಬೈಕ್ ನಲ್ಲಿ ಮನೆಗೆ ತೆರಳುವಾಗ ಅಪಘಾತ ಸಂಭವಿಸಿದೆ. ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಕನ್ನಡ ದುನಿಯಾ 11 Jan 2026 9:43 am

BREAKING: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಡರಾತ್ರಿ ಕಾಂಗ್ರೆಸ್ ಉಚ್ಚಾಟಿತ ಶಾಸಕ ರಾಹುಲ್ ಅರೆಸ್ಟ್

ತಿರುವನಂತಪುರಂ: ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿತರಾದ ಪಾಲಕ್ಕಾಡ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರನ್ನು ಶನಿವಾರ ತಡರಾತ್ರಿ ಕೇರಳ ಪೊಲೀಸರು ಹೊಸ ಲೈಂಗಿಕ ದೌರ್ಜನ್ಯ ದೂರಿಗೆ ಸಂಬಂಧಿಸಿದಂತೆ ಬಂಧಿಸಿದ್ದಾರೆ. ಪಾಲಕ್ಕಾಡ್ ಹೋಟೆಲ್‌ ನಲ್ಲಿ ನಾಟಕೀಯ ಮಧ್ಯರಾತ್ರಿಯ ಕಾರ್ಯಾಚರಣೆ ನಡೆದಿದೆ. ರಾಹುಲ್ ಅತ್ಯಾಚಾರ ಸೇರಿದಂತೆ ಮೂರು ಗಂಭೀರ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಮೂರನೇ ಅತ್ಯಾಚಾರ ಪ್ರಕರಣ ಸಂಬಂಧ ಶಾಸಕ ರಾಹುಲ್ ಬಂಧನವಾಗಿದೆ. ಈ ಹಿಂದೆಯೂ ಅತ್ಯಾಚಾರ ಪ್ರಕರಣದಲ್ಲಿ ರಾಹುಲ್ ಬಂಧನವಾಗಿತ್ತು. ಈಗ ಅತ್ಯಾಚಾರ ಆರೋಪ ಸಂಬಂಧ ಮೂರನೇ ಬಾರಿ ಪ್ರಕರಣ ದಾಖಲಾಗಿದೆ. ಜನವರಿ […]

ಕನ್ನಡ ದುನಿಯಾ 11 Jan 2026 9:29 am

BIG NEWS: ಸರ್ಕಾರಿ ಶಾಲೆ, ಕಾಲೇಜು, ಕಟ್ಟಡ, ಜಮೀನು ಉಳಿಸಿಕೊಳ್ಳಲು ಕಾನೂನು: ಬಜೆಟ್ ಅಧಿವೇಶನದಲ್ಲಿ ವಿಧೇಯಕ ಮಂಡನೆ

ಶಿವಮೊಗ್ಗ: ಸರ್ಕಾರಿ ಶಾಲೆ, ಕಾಲೇಜು, ಕಟ್ಟಡ, ಜಮೀನು ಉಳಿಸಿಕೊಳ್ಳಲು ಮುಂಬರುವ ಬಜೆಟ್ ಅಧಿವೇಶನದಲ್ಲಿ ವಿಧೇಯಕ ಮಂಡಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ನಂತರದಲ್ಲಿ ನಮ್ಮ ಹಿರಿಯರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಶಾಲೆಗಳ ನಿರ್ಮಾಣಕ್ಕೆ ದಾನವಾಗಿ ಭೂಮಿ ನೀಡಿದ್ದರು. ಭೂಮಿ ದಾನ ನೀಡಿದ್ದಕ್ಕೆ ಸಂಬಂಧಿಸಿದಂತೆ ದಾಖಲೆಗಳು ವರ್ಗಾವಣೆಯಾಗದೆ ಸಮಸ್ಯೆ ಎದುರಾಗಿದೆ. ದಾನ ನೀಡಿದ ಕುಟುಂಬದವರ ಮಕ್ಕಳು, ಮೊಮ್ಮಕ್ಕಳು ಈಗ ಭೂಮಿ ತಮಗೆ ಸೇರಿದೆ ಎಂದು ತಕರಾರು ತೆಗೆಯುತ್ತಿದ್ದಾರೆ. ಹಲವು […]

ಕನ್ನಡ ದುನಿಯಾ 11 Jan 2026 9:09 am

BREAKING: ಕೊಲ್ಹಾಪುರ ಡಿವೈಎಸ್ಪಿ ವೈಷ್ಣವಿ ಪ್ರಯಾಣಿಸುತ್ತಿದ್ದ ಕಾರ್ ಅಪಘಾತ: ತಾಯಿ, ಚಾಲಕ ಸ್ಥಳದಲ್ಲೇ ಸಾವು

ಚಿತ್ರದುರ್ಗ: ಲಾರಿಗೆ ಡಿಕ್ಕಿ ಹೊಡೆದು ಇನೋವಾ ಕಾರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ತಾಲೂಕಿನ ತಮಟಕಲ್ಲು ಗ್ರಾಮದ ಬಳಿ ನಡೆದಿದೆ. ಕೊಲ್ಲಾಪುರದ ಡಿವೈಎಸ್ಪಿ ವೈಷ್ಣವಿ ಪ್ರಯಾಣಿಸುತ್ತಿದ್ದ ಕಾರ್ ಅಪಘಾತಕ್ಕೀಡಾಗಿದೆ. ಲಾರಿಗೆ ಡಿಕ್ಕಿ ಹೊಡೆದು ಕಾರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಡಿವೈಎಸ್ಪಿ ಪಿ. ವೈಷ್ಣವಿ ಅವರ ತಾಯಿ ಕಮಲಾ(65), ಮತ್ತು ಕಾರ್ ಚಾಲಕ ರಾಕೇಶ್(40) ಮೃತಪಟ್ಟಿದ್ದಾರೆ. ಕಾರ್ ನಲ್ಲಿದ್ದ ಮಹಾರಾಷ್ಟ್ರದ ಕೊಲ್ಹಾಪುರದ ಡಿವೈಎಸ್ಪಿ ವೈಷ್ಣವಿ ಗಾಯಗೊಂಡಿದ್ದಾರೆ. ಮಹಾರಾಷ್ಟ್ರದಿಂದ ಬೆಂಗಳೂರಿಗೆ ಇನೋವಾ ಕಾರ್ ತೆರಳುತ್ತಿತ್ತು. ಅಪಘಾತದಲ್ಲಿ ಮೂವರು […]

ಕನ್ನಡ ದುನಿಯಾ 11 Jan 2026 8:54 am

ಅಶ್ಲೀಲ ದೃಶ್ಯವಿದೆ ಎಂದು ‘ಟಾಕ್ಸಿಕ್’ಟೀಸರ್ ವಿರುದ್ಧ ಸೆನ್ಸಾರ್ ಮಂಡಳಿಗೆ ಆಪ್ ದೂರು

ಬೆಂಗಳೂರು: ನಟ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಟೀಸರ್ ಅಶ್ಲೀಲ ದೃಶ್ಯ ಒಳಗೊಂಡಿದ್ದು, ಟೀಸರ್ ಗೆ ಕಡಿವಾಣ ಹಾಕಿ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಆಮ್ ಆದ್ಮಿ ಪಕ್ಷದ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷ ಲೋಹಿತ್ ಹನುಮಾಪುರ ಸೆನ್ಸಾರ್ ಮಂಡಳಿಗೆ ದೂರು ನೀಡಿದ್ದಾರೆ. ಬೆಂಗಳೂರಿನ ಕೋರಮಂಗಲದಲ್ಲಿರುವ ಸೆನ್ಸಾರ್ ಮಂಡಳಿ ಪ್ರಾದೇಶಿಕ ಕಚೇರಿಗೆ ಇ- ಮೇಲ್ ಮೂಲಕ ಅವರ ದೂರು ನೀಡಿದ್ದಾರೆ. ‘ಟಾಕ್ಸಿಕ್’ ಚಿತ್ರದ ಟೀಸರ್ ನಲ್ಲಿ ಅಶ್ಲೀಲ ದೃಶ್ಯ ಬಳಸಲಾಗಿದೆ. ಇಂತಹ ದೃಶ್ಯಗಳಿಗೆ ಎ […]

ಕನ್ನಡ ದುನಿಯಾ 11 Jan 2026 8:39 am

BREAKING: ಲಾರಿಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಮತ್ತೊಂದು ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದು ಕಾರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ತಾಲೂಕಿನ ತಮಟಕಲ್ಲು ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಮಹಾರಾಷ್ಟ್ರದಿಂದ ಬೆಂಗಳೂರಿಗೆ ಹೊರಟಿದ್ದ ಇನ್ನೋವಾ ಕಾರ್ ಅಪಘಾತಕ್ಕೀಡಾಗಿದೆ. ಡಿಕ್ಕಿಯಾದ ರಭಸಕ್ಕೆ ಕಾರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.ಸ್ಥಳಕ್ಕೆ ಸಿಪಿಐ ಬಾಲಚಂದ್ರ ನಾಯ್ಕ್, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. […]

ಕನ್ನಡ ದುನಿಯಾ 11 Jan 2026 8:21 am

BREAKING: ಆಪರೇಷನ್ ಹಾಕೈ ಸ್ಟ್ರೈಕ್: ಸಿರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಅಮೆರಿಕ ದೊಡ್ಡ ಪ್ರಮಾಣದ ವಾಯುದಾಳಿ

ವಾಷಿಂಗ್ಟನ್: ಕಳೆದ ತಿಂಗಳು ಸಿರಿಯಾದಲ್ಲಿ ಹೊಂಚುದಾಳಿ ನಡೆಸಿ ಇಬ್ಬರು ಅಮೇರಿಕನ್ ಸೈನಿಕರು ಮತ್ತು ಒಬ್ಬ ಅಮೇರಿಕನ್ ನಾಗರಿಕ ಭಾಷಾಂತರಕಾರನನ್ನು ಕೊಂದ ನಂತರ ಶನಿವಾರ ಅಮೆರಿಕ ಸಿರಿಯಾದಲ್ಲಿ ಇಸ್ಲಾಮಿಕ್ ಸ್ಟೇಟ್(ISIS) ನೆಲೆಗಳ ಮೇಲೆ ದೊಡ್ಡ ಪ್ರಮಾಣದ ವಾಯುದಾಳಿ ನಡೆಸಿದೆ. ಯುಎಸ್ ಸೆಂಟ್ರಲ್ ಕಮಾಂಡ್ ಪ್ರಕಾರ, ಪಾಲುದಾರ ಪಡೆಗಳೊಂದಿಗೆ ಯುಎಸ್ ನಡೆಸಿದ ದಾಳಿಗಳು ಮಧ್ಯಾಹ್ನ 12:30 ರ ಸುಮಾರಿಗೆ(ಸ್ಥಳೀಯ ಸಮಯ) ಸಂಭವಿಸಿದ್ದು, ದೇಶಾದ್ಯಂತ ಅನೇಕ ಐಸಿಸ್ ಗುರಿಗಳನ್ನು ಹೊಡೆದವು. ಈ ದಾಳಿಗಳು ‘ಆಪರೇಷನ್ ಹಾಕೈ ಸ್ಟ್ರೈಕ್’ನ ಭಾಗವಾಗಿತ್ತು. ಇಂದು, ಪೂರ್ವ […]

ಕನ್ನಡ ದುನಿಯಾ 11 Jan 2026 8:13 am

ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಬೀದರ್: ಮಾಜಿ ಸಚಿವ, ಶತಾಯುಷಿ ಬೀಮಣ್ಣ ಖಂಡ್ರೆ(102) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೀದರ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ, ನುರಿತ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದುಮ ನಿಗಾ ವಹಿಸಿದೆ. ಭೀಮಣ್ಣ ಖಂಡ್ರೆ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅವರ ಪುತ್ರರೂ ಆಗಿರುವ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ ತಂದೆಯ ಆರೋಗ್ಯ ವಿಚಾರಿಸಿದ ಈಶ್ವರ್ ಖಂಡ್ರೆ ಮಾಹಿತಿ ನೀಡಿ, ತಂದೆಯವರ ಆರೋಗ್ಯ ಸ್ಥಿರವಾಗಿದ್ದು, ಶೀಘ್ರ ಗುಣಮುಖರಾಗುತ್ತಾರೆ ಎನ್ನುವ ವಿಶ್ವಾಸವಿದೆ. ಅವರ ಅಭಿಮಾನಿಗಳು ಆರೋಗ್ಯದ ಬಗ್ಗೆ ಪ್ರಾರ್ಥಿಸಲಿ […]

ಕನ್ನಡ ದುನಿಯಾ 11 Jan 2026 8:03 am

ಭಾರೀ ಚಳಿ, ಶೀತ ಗಾಳಿಗೆ ಥಂಡಾ ಹೊಡೆದ ರಾಜ್ಯದ ಜನತೆಗೆ ಬಿಗ್ ಶಾಕ್: ಜ. 14ರವರೆಗೂ ಇದೇ ರೀತಿ ವಾತಾವರಣ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಚಳಿ ಉಂಟಾಗಿದೆ. ಭಾರಿ ಚಳಿ ಮತ್ತು ಶೀತ ಗಾಳಿಗೆ ರಾಜ್ಯದ ಜನ ಥಂಡಾ ಹೊಡೆದಿದ್ದಾರೆ. ಜನವರಿ 14ರ ವರೆಗೆ ಇದೇ ರೀತಿಯ ವಾತಾವರಣ ಇರಲಿದೆ ಎನ್ನಲಾಗಿದೆ. ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಂಜಿನ ವಾತಾವರಣ ಮತ್ತು ಮೈ ಕೊರೆಯುವ ಚಳಿ ಶೀತ ಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಎರಡು ದಿನ ಹಗುರ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ತಾಪಮಾನ ಕನಿಷ್ಠ ಮಟ್ಟಕ್ಕೆ […]

ಕನ್ನಡ ದುನಿಯಾ 11 Jan 2026 7:39 am

ಮನೆ ಬಾಡಿಗೆ ಕೊಡುವಾಗ ಎಚ್ಚರ ವಹಿಸಲು ಮಾಲೀಕರಿಗೆ ಮಹತ್ವದ ಸೂಚನೆ

ಬೆಂಗಳೂರು: ಮನೆ ಬಾಡಿಗೆ ಕೊಡುವಾಗ ಎಚ್ಚರ ವಹಿಸುವಂತೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ. ಅಕ್ರಮ ಬಾಂಗ್ಲಾ ವಲಸಿಗರನ್ನು ಪತ್ತೆ ಮಾಡಿ ಗಡಿಪಾರು ಮಾಡಲಾಗುತ್ತಿದೆ. ಮನೆ ಬಾಡಿಗೆಗೆ ನೀಡುವಾಗ ದಾಖಲೆಗಳನ್ನು ಪರಿಶೀಲಿಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಬಾಂಗ್ಲಾ ವಲಸಿಗರ ವಿಚಾರದಲ್ಲಿ ಸರ್ಕಾರ ಕಠಿಣವಾಗಿದೆ. ಕೇಂದ್ರ ಸರ್ಕಾರ ಗಡಿ ಭಾಗಗಳನ್ನು ಬಿಗಿಗೊಳಿಸಬೇಕು. ಹಣ ನೀಡಿ ಗಡಿಯೊಳಗೆ ಬರುತ್ತಾರೆ ಎಂದರೆ ಗಡಿ ಪ್ರದೇಶದಲ್ಲಿ ಸರಿಯಾಗಿ ಕೆಲಸವಾಗುತ್ತಿಲ್ಲ ಎನಿಸುತ್ತಿದೆ. ಈ ಬಗ್ಗೆ ರಕ್ಷಣಾ ಇಲಾಖೆ ಕ್ರಮ ವಹಿಸಬೇಕು ಎಂದು ಹೇಳಿದ್ದಾರೆ.

ಕನ್ನಡ ದುನಿಯಾ 11 Jan 2026 7:30 am

BIG NEWS: ಎಚ್ಎಂಟಿ ಕಾರ್ಖಾನೆಗೆ ಹೊಸ ತಂತ್ರಜ್ಞಾನದೊಂದಿಗೆ ಮರು ಜೀವ ನೀಡಲು ತೀರ್ಮಾನ

ಬೆಂಗಳೂರು: ಎಚ್ಎಂಟಿ ಕಾರ್ಖಾನೆಯನ್ನು ಮುಚ್ಚಿಲ್ಲ. ಸದ್ಯದದಲ್ಲಿಯೇ ಹೊಸ ತಂತ್ರಜ್ಞಾನ ಸೇರ್ಪಡೆ ಮಾಡಿ ಎಚ್ಎಂಟಿ ಕಾರ್ಖಾನೆಗೆ ಮರು ಜೀವ ನೀಡಲು ತೀರ್ಮಾನಿಸಲಾಗಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‍.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಎಚ್ಎಂಟಿ ಬಂಡವಾಳ ಹಿಂತೆಗೆತದ ಬಗ್ಗೆ 2016ರಲ್ಲಿ ತೀರ್ಮಾನವಾಗಿದೆ. ಪೂರ್ಣ ಪ್ರಮಾಣದಲ್ಲಿ ಎಚ್ಎಂಟಿ ಕಾರ್ಖಾನೆ ಮುಚ್ಚಿಲ್ಲ. ಚಿಕ್ಕ ಪ್ರಮಾಣದಲ್ಲಿ ವಾಚ್ ಉತ್ಪಾದನೆ ನಡೆಯುತ್ತಿದೆ. ಕೇರಳ, ಹೈದರಾಬಾದ್ ಸೇರಿದಂತೆ ಕೆಲವು ಕಡೆ ಎಚ್ಎಂಟಿ ಕಾರ್ಖಾನೆ ಮುಚ್ಚಿಲ್ಲ. ಈ ಕಾರ್ಖಾನೆಗೆ ಮರುಜೀವ ನೀಡುವ ಬಗ್ಗೆ ಪ್ರಧಾನಿ […]

ಕನ್ನಡ ದುನಿಯಾ 11 Jan 2026 7:19 am

ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಎರಡು ದಿನ ಹಗುರ ಮಳೆ ಮುನ್ಸೂಚನೆ

ಬೆಂಗಳೂರು: ಶ್ರೀಲಂಕಾ ಸಮೀಪ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣದ ಕೆಲವು ಜಿಲ್ಲೆಗಳಲ್ಲಿ ಒಂದೆರಡು ದಿನ ಹಗುರ ಮಳೆಯಾಗಲಿದೆ. ಚಳಿಯ ತೀವ್ರತೆ ಕೂಡ ಹೆಚ್ಚಾಗಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯ ಶ್ರೀಲಂಕಾ ಪೂರ್ವ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮಳೆ ಮಾರುತಗಳು ಸೃಷ್ಟಿಯಾಗಿವೆ. ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಮೇಲೆ ಹಾದು ಹೋಗಲಿದೆ. ಇದರಿಂದ ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಒಂದೆರಡು ದಿನ ಹಗುರ ಮಳೆಯಾಗುವ […]

ಕನ್ನಡ ದುನಿಯಾ 11 Jan 2026 7:12 am

ಇಂಡೋನೇಷ್ಯಾದ ತಲಾವ್ ದ್ವೀಪಗಳಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ ಇಲ್ಲ

ಇಂಡೋನೇಷ್ಯಾದ ತಲಾವ್ ದ್ವೀಪಗಳ ಕರಾವಳಿಯಲ್ಲಿ ಶನಿವಾರ 6.8 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜರ್ಮನ್ ಭೂವಿಜ್ಞಾನ ಸಂಶೋಧನಾ ಕೇಂದ್ರ(GFZ) ತಿಳಿಸಿದೆ. ಭೂಕಂಪವು 77 ಕಿಮೀ (47.85 ಮೈಲುಗಳು) ಆಳದಲ್ಲಿ ಸಂಭವಿಸಿದೆ ಎಂದು GFZ ತಿಳಿಸಿದೆ. ಇಂಡೋನೇಷ್ಯಾದ ಭೂಭೌತಶಾಸ್ತ್ರ ಸಂಸ್ಥೆ BMKG 17 ಕಿಮೀ ಆಳದಲ್ಲಿ 7.1 ತೀವ್ರತೆಯ ಓದುವಿಕೆಯನ್ನು ವರದಿ ಮಾಡಿದೆ. ಇದು ನಂತರದ ಕೆಲವು ಭೂಕಂಪಗಳನ್ನು ಸಹ ವರದಿ ಮಾಡಿದೆ. ಭೂಕಂಪಗಳು ಸುನಾಮಿ ಅಲೆಗಳನ್ನು ಪ್ರಚೋದಿಸುವ ಸಾಮರ್ಥ್ಯವನ್ನು ಹೊಂದಿಲ್ಲ ಎಂದು BMKG ಹೇಳಿದೆ. ಸುಲವೇಸಿ ದ್ವೀಪದ […]

ಕನ್ನಡ ದುನಿಯಾ 11 Jan 2026 7:00 am

BREAKING: ವೆನೆಜುವೆಲಾದ ತೈಲ ಆದಾಯ ರಕ್ಷಿಸಲು ಕಾರ್ಯಕಾರಿ ಆದೇಶಕ್ಕೆ ಸಹಿ ಹಾಕಿದ ಟ್ರಂಪ್

ವಾಷಿಂಗ್ಟನ್: ಅಮೆರಿಕದ ಖಾತೆಗಳಲ್ಲಿ ಸಂಗ್ರಹವಾಗಿರುವ ವೆನೆಜುವೆಲಾದ ತೈಲ ಆದಾಯವನ್ನು ರಕ್ಷಿಸಲು ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸುವ ಕಾರ್ಯಕಾರಿ ಆದೇಶಕ್ಕೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಸಹಿ ಹಾಕಿದ್ದಾರೆ ಎಂದು ಶ್ವೇತಭವನ ಶನಿವಾರ ತಿಳಿಸಿದೆ. ಲ್ಯಾಟಿನ್ ಅಮೇರಿಕನ್ ದೇಶದಲ್ಲಿ ಆರ್ಥಿಕ ಮತ್ತು ರಾಜಕೀಯ ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಟ್ರಂಪ್ ಆಡಳಿತದ ಪ್ರಯತ್ನಗಳನ್ನು ಸ್ಥಗಿತಗೊಳಿಸಬಹುದಾದ ವೆನೆಜುವೆಲಾದ ತೈಲ ಆದಾಯವನ್ನು ವಶಪಡಿಸಿಕೊಳ್ಳುವುದನ್ನು ತಡೆಯಲು ಇದು ಸಹಾಯ ಮಾಡುತ್ತದೆ. ಕಾರ್ಯನಿರ್ವಾಹಕ ಆದೇಶವು ಈ ನಿಧಿಗಳಲ್ಲಿನ ವರ್ಗಾವಣೆಗಳು ಅಥವಾ ವ್ಯವಹಾರಗಳನ್ನು “ಅಧಿಕೃತವಾಗಿ ಹೊರತುಪಡಿಸಿ, ಅವುಗಳನ್ನು ನಿರ್ಬಂಧಿಸುವ […]

ಕನ್ನಡ ದುನಿಯಾ 11 Jan 2026 6:33 am

BREAKING: ಚಿತ್ರದುರ್ಗ ಜಿಲ್ಲೆಯಲ್ಲಿ ಭೀಕರ ಅಪಘಾತ: ಲಾರಿ ಡಿಕ್ಕಿಯಾಗಿ ಕಾರ್ ನಲ್ಲಿದ್ದ ನಾಲ್ವರು ಸಾವು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಹಿಂಡಿಸಕಟ್ಟೆ ಗ್ರಾಮದ ಬಳಿ ಬೀದರ್ -ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದು ಕಾರ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ವಿಶ್ವನಾಥ(22), ನಂಜುಂಡಿ(23), ರಾಹುಲ್(23) ಯಶವಂತ(22) ಮೃತಪಟ್ಟವರು ಎಂದು ಹೇಳಲಾಗಿದೆ. ಮೃತರು ಹಿರಿಯೂರು ತಾಲೂಕಿನ ನಂಜಯ್ಯನಕೊಟ್ಟಿಗೆ ಗ್ರಾಮದವರು. ಲಾರಿ ಡಿಕ್ಕಿಯಾದ ರಭಸಕ್ಕೆ ಕಾರ್ ಸಂಪೂರ್ಣ ನಜ್ಜು ಗುಜ್ಜಾಗಿದೆ. ಅಪಘಾತದ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕನ್ನಡ ದುನಿಯಾ 11 Jan 2026 6:26 am

BREAKING: ಜೆಡಿಎಸ್ ನಾಯಕಿ ಪುತ್ರನ ಕಿರುಕುಳ, ಯುವತಿ ಆತ್ಮಹತ್ಯೆ

ಕಾರವಾರ: ಜೆಡಿಎಸ್ ನಾಯಕಿ ಪುತ್ರನ ಕಿರುಕುಳದಿಂದ ನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕದ್ರಾ ಗ್ರಾಮದಲ್ಲಿ ಘಟನೆ ನಡೆದಿದೆ. ಕೆಪಿಸಿಎಲ್ ಕಾಲೋನಿಯ ನಿವಾಸದಲ್ಲಿ 20 ವರ್ಷದ ರಿಶಾಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರೀತಿಸುವಂತೆ riಶಾಲ್ ಡಿಸೋಜಾಗೆ ಜೆಡಿಎಸ್ ನಾಯಕಿ ಚೈತ್ರಾ ಕೋಠಾರಕರ್ ಪುತ್ರ ಚಿರಾಗ್ ಚಂದ್ರಹಾಸ್ ಕೋಠಾರಕರ್ ಪೀಡಿಸುತ್ತಿದ್ದ ಆರೋಪ ಕೇಳಿ ಬಂದಿದೆ. ರಿಶಾಲ್ ತಂದೆ ಕ್ರಿಸ್ತೋದ್ ಫ್ರಾನ್ಸಿಸ್ ಈ ಕುರಿತಾಗಿ ನೀಡಿದ್ದ ದೂರಿನ ಮೇರೆಗೆ ಚಿರಾಗ್ ಚಂದ್ರಹಾಸ್ ವಿರುದ್ಧ ಪ್ರಕರಣ ದಾಖಲಾಗಿದೆ. […]

ಕನ್ನಡ ದುನಿಯಾ 10 Jan 2026 9:29 pm