SENSEX
NIFTY
GOLD
USD/INR

Weather

19    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source

ಜನಾರ್ಧನ ರೆಡ್ಡಿ ಅಮೇರಿಕಾದಿಂದ ಸೆಕ್ಯೂರಿಟಿ ತರಿಸಿಕೊಳ್ಳಲಿ: ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯ

ಬೆಂಗಳೂರು: ಬಳ್ಳಾರಿ ಗಲಾಟೆ-ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ರಚಿಸಿದ್ದ ಎಚ್.ಎಂ.ರೇವಣ್ಣ ನೇಯೃತ್ವದ ಸಮಿತಿ ಒಳ್ಳೆಯ ಮಾಹಿತಿಗಳನ್ನು ಪಡೆದುಕೊಂಡು ಬಂದಿದೆ. ಅಧಿಕೃತ ಹಾಗೂ ಅನಧಿಕೃತ ವಿಚಾರಗಳನ್ನು ಭೇಟಿ ಮಾಡಿ ತಿಳಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಈ ವಿಚಾರ ತಿಳಿಸಿದರು. ವಾಲ್ಮೀಕಿ ಮಹರ್ಷಿ ಎಲ್ಲಾ ಸಮುದಾಯಕ್ಕೆ ಸೇರಿದವರು. ಎಲ್ಲಾ ಕಡೆಯೂ ಪ್ರತಿಮೆಗಳನ್ನು ಇಡುತ್ತಾರೆ. ಇದಕ್ಕೆ ಅಸೂಯೆ ಏಕೆ ಪಡಬೇಕು. ವಾಲ್ಮೀಕಿ ಮಹರ್ಷಿಯವರು ಒಂದು ಸಮುದಾಯಕ್ಕೆ ಸೇರಿದವರೇ? ಅವರು ಎಲ್ಲಾ ಸಮುದಾಯದ ಆಸ್ತಿ. […]

ಕನ್ನಡ ದುನಿಯಾ 4 Jan 2026 9:54 pm

ಒಂದೇ ವರ್ಷದಲ್ಲಿ ಎರಡನೇ ಬಾರಿಗೆ ಭರ್ತಿಯಾದ ಜೀವನಾಡಿ ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಣೆ

ಚಿತ್ರದುರ್ಗ: ಒಂದೇ ವರ್ಷದಲ್ಲಿ ಸತತ ಎರಡನೇ ಬಾರಿಗೆ ಜೀವನಾಡಿ ವಾಣಿ ವಿಲಾಸ ಸಾಗರ ಜಲಾಶಯ ಭರ್ತಿಯಾಗಿದ್ದು, ಇಂದು ಬಾಗಿನ ಅರ್ಪಿಸಲಾಗಿದೆ. ವಾಣಿವಿಲಾಸ ಸಾಗರ ಜಲಾಶಯ ಭರ್ತಿಯಾದ ಹಿನ್ನಲೆಯಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಭಾನುವಾರ ಬಾಗಿನ ಅರ್ಪಣೆ ಮಾಡಿದರು. ತರಹೇವಾರಿ ಪುಷ್ಪಗಳಿಂದ ಅಲಂಕಾರಗೊಂಡಿದ್ದ ವಿ.ವಿ.ಸಾಗರ ಜಲಾಶಯದ ಅಣೆಕಟ್ಟೆ ಮೇಲಿಂದ ಸಚಿವ ಡಿ.ಸುಧಾಕರ್ ಹಾಗೂ ಶಾಸಕರಾದ ಬಿ.ಜಿ. ಗೋವಿಂದಪ್ಪ, ಟಿ.ರಘುಮೂರ್ತಿ, ಡಾ.ಎಂ.ಚಂದ್ರಪ್ಪ ಸೇರಿದಂತೆ ವಿವಿಧ ಗಣ್ಯರು ಪುಷ್ಪಾರ್ಚನೆ ಮಾಡಿ, ಹಾಲುತುಪ್ಪ […]

ಕನ್ನಡ ದುನಿಯಾ 4 Jan 2026 8:56 pm

BREAKING: ಮರ್ಯಾದಾಗೇಡು ಹತ್ಯೆ ತಡೆಗೆ ವಿಶೇಷ ಕಾನೂನು: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರದ ಮಾನ್ಯ ಎಂಬ ಯುವತಿಯ ಮರ್ಯಾದಾಗೇಡು ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣದ ತ್ವರಿತ ವಿಚಾರಣೆ ನಡೆದು, ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಪ್ರಮುಖ ಆದ್ಯತೆ. ಈ ಹಿನ್ನೆಲೆಯಲ್ಲಿ ತ್ವರಿತಗತಿ ನ್ಯಾಯಾಲಯ ರಚನೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮೂಕ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಲ್ಲಿ ದಲಿತರ ಮೇಲಿನ ದೌರ್ಜನ್ಯ ಹಾಗೂ ಕೊಲೆ ಪ್ರಕರಣ ದಾಖಲಾಗಿದೆ. ಇದು ಅಟ್ರಾಸಿಟಿ ಪ್ರಕರಣವಾಗಿರುವುದರಿಂದ 60 ದಿನಗಳ ಒಳಗಾಗಿ ದೋಷರೋಪ ಪಟ್ಟಿ ಸಲ್ಲಿಸಬೇಕಾಗಿದೆ. ಹೀಗಾಗಿ ಖಾಸಗಿ ಪ್ರಾಸಿಕ್ಯೂಟರ್‌ರನ್ನು ನೇಮಕ ಮಾಡಿಕೊಳ್ಳಲು […]

ಕನ್ನಡ ದುನಿಯಾ 4 Jan 2026 7:18 pm

ನೈಜೀರಿಯಾದಲ್ಲಿ ಭಾರೀ ಶಸ್ತ್ರಸಜ್ಜಿತ ಬಂದೂಕುಧಾರಿಗಳ ದಾಳಿ: ಕನಿಷ್ಠ 30 ಜನ ಸಾವು: ಗ್ರಾಮಸ್ಥರ ಅಪಹರಣ

ಉತ್ತರ ನೈಜೀರಿಯಾದ ನೈಜರ್ ರಾಜ್ಯದಲ್ಲಿ ಗ್ರಾಮೀಣ ಸಮುದಾಯದ ಮೇಲೆ ಭಾರೀ ಶಸ್ತ್ರಸಜ್ಜಿತ ಬಂದೂಕುಧಾರಿಗಳು ದಾಳಿ ನಡೆಸಿದಾಗ ಕನಿಷ್ಠ 30 ಗ್ರಾಮಸ್ಥರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಅಪಹರಿಸಲ್ಪಟ್ಟಿದ್ದಾರೆ. ಇದು ಪುನರಾವರ್ತಿತ ಹಿಂಸಾಚಾರ ಮತ್ತು ಅಭದ್ರತೆಯಿಂದ ಬಳಲುತ್ತಿರುವ ಪ್ರದೇಶದಲ್ಲಿ ಇತ್ತೀಚಿನ ಮಾರಕ ಘಟನೆಯಾಗಿದೆ. ನೈಜರ್ ರಾಜ್ಯದ ಬೋರ್ಗು ಸ್ಥಳೀಯ ಸರ್ಕಾರಿ ಪ್ರದೇಶದಲ್ಲಿರುವ ಕಸುವಾನ್-ದಾಜಿ ಗ್ರಾಮದಲ್ಲಿ ಶನಿವಾರ ಸಂಜೆ ಈ ದಾಳಿ ನಡೆದಿದೆ. ಪೊಲೀಸರ ಪ್ರಕಾರ, ದಾಳಿಕೋರರು ಗ್ರಾಮಕ್ಕೆ ನುಗ್ಗಿ ನಿವಾಸಿಗಳ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾರೆ. ಅವರು ಸ್ಥಳೀಯ […]

ಕನ್ನಡ ದುನಿಯಾ 4 Jan 2026 7:09 pm

ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಕೇಸ್ ದಾಖಲು

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಮತ್ತು ಅದಕ್ಕೆ ಕೊಲೆ ಬೆದರಿಕೆ ಕಮೆಂಟ್ ಮಾಡಿದವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನರ್ಲಪದವು ಬಳಿ ಇತ್ತೀಚೆಗೆ ದನದ ಮಾಂಸ ಅಕ್ರಮವಾಗಿ ಸಾಗಿಸುತ್ತಿದ್ದವನ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಲಾಗಿದೆ. ಇಬ್ಬರು ಯುವಕರ ಫೋಟೋ ಹಾಕಿ ಸಮುದಾಯವನ್ನು ಪ್ರಚೋದಿಸುವಂತೆ ಉದ್ದೇಶಪೂರ್ವಕವಾಗಿ ಪೋಸ್ಟ್ ಹಾಕಲಾಗಿದೆ. ಈ ಪೋಸ್ಟ್ […]

ಕನ್ನಡ ದುನಿಯಾ 4 Jan 2026 6:47 pm

ಒಂದನೇ ತರಗತಿಯಿಂದ ಪದವಿ ಓದುತ್ತಿರುವ ಮಾಜಿ ಸೈನಿಕರ ಮಕ್ಕಳಿಗೆ ಗುಡ್ ನ್ಯೂಸ್

ಚಿತ್ರದುರ್ಗ: ಪ್ರಸಕ್ತ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ, ಡಿಪ್ಲೋಮಾ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳ ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸುವ ದಿನಾಂಕವನ್ನು ಜನವರಿ 15 ರವರೆಗೆ ವಿಸ್ತರಿಸಲಾಗಿದೆ. ಕೇಂದ್ರಿಯ ಸೈನಿಕ ಮಂಡಳಿ ಮತ್ತು ಇತರೆ ಸರ್ಕಾರಿ ಮೂಲಗಳಿಂದ ಯಾವುದೇ ಶಿಷ್ಯವೇತನವನ್ನು ಪಡೆಯದಿರುವ ಮಾಜಿ ಸೈನಿಕರ ಮಕ್ಕಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿಯಲ್ಲಿ ಶುಲ್ಕ ರಹಿತ ಅರ್ಜಿಗಳನ್ನು ವಿತರಿಸಲಾಗುತ್ತಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು […]

ಕನ್ನಡ ದುನಿಯಾ 4 Jan 2026 6:29 pm

ಪ್ರತಿ ವರ್ಷ 5 ಕೋಟಿ ಸಸಿ ನೆಟ್ಟು ಕಾಡು ಹೆಚ್ಚಳ, ಎಲ್ಲಾ ಜಿಲ್ಲೆಯಲ್ಲೂ ಸಾಧಕರ ವಸ್ತುಸಂಗ್ರಹಾಲಯ ನಿರ್ಮಾಣಕ್ಕೆ ಚಿಂತನೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿಯಾಗಿ 8ನೇ ಬಾರಿಗೆ ಚಿತ್ರ ಸಂತೆಯಲ್ಲಿ ಭಾಗವಹಿಸುತ್ತಿದ್ದೇನೆ ಎನ್ನುವುದು ಖುಷಿಯ ವಿಚಾರ. ಕಲಾವಿದರನ್ನು ಪ್ರೋತ್ಸಾಹಿಸುವುದು, ಅವರ ಚಿತ್ರಗಳ ಪ್ರದರ್ಶನ ಹಾಗೂ ಅವುಗಳ ಮಾರಾಟಕ್ಕೆ ವೇದಿಕೆ ಸೃಷ್ಟಿ ಮಾಡುವ ಕೆಲಸವನ್ನು ಚಿತ್ರಕಲಾ ಪರಿಷತ್ತು ಅರವತ್ತು ವರ್ಷಗಳಿಂದ ಮಾಡುತ್ತಾ ಬಂದಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಚಿತ್ರಕಲಾ ಪರಿಷತ್ ಆವರಣದಲ್ಲಿ ಇಂದು ಆಯೋಜಿಸಿದ್ದ ಚಿತ್ರಸಂತೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಚಿತ್ರಸಂತೆ ತನ್ನ 23ನೇ ವರ್ಷಕ್ಕೆ ಕಾಲಿಟ್ಟಿದೆ. ಸುಮಾರು 22 ರಾಜ್ಯಗಳು, ನಾಲ್ಕು ಕೇಂದ್ರಾಡಳಿತ […]

ಕನ್ನಡ ದುನಿಯಾ 4 Jan 2026 6:23 pm

BREAKING: ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ, ದೇಹ ಛಿದ್ರ ಛಿದ್ರ

ಮೈಸೂರು: ಮೈಸೂರಿನಲ್ಲಿ ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕುಕ್ಕರಹಳ್ಳಿ ರೈಲ್ವೆ ಗೇಟ್ ಸಮೀಪ ರೈಲುಗೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು, ದೇಹ ಛಿದ್ರ ಛಿದ್ರವಾಗಿದೆ. ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಸ್ಥಳಾಂತರಿಸಲಾಗಿದೆ. ಮೃತನ ಗುರುತು ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಮೈಸೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ನಡ ದುನಿಯಾ 4 Jan 2026 6:10 pm

BREAKING: ಗ್ಯಾಸ್ ಸೋರಿಕೆಯಾಗಿ ಮನೆಗೆ ಬೆಂಕಿ, ಬಾಲಕಿ ಗಂಭೀರ

ಕಾರವಾರ: ಅಡುಗೆ ಅನಿಲ ಸೋರಿಕೆಯಾಗಿ ಮನೆ ದಿಢೀರ್ ಹೊತ್ತಿ ಉರಿದಿದೆ. ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಕೇಣಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಸುದರ್ಶನ ಎಂಬುವರ ಮನೆ ಬೆಂಕಿಗಾಹುತಿಯಾಗಿದೆ. ಘಟನೆಯಲ್ಲಿ 12 ವರ್ಷದ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಂಕೋಲಾ ಸಿಪಿಐ ಹಿರೇಮಠ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

ಕನ್ನಡ ದುನಿಯಾ 4 Jan 2026 6:05 pm

ಆತ್ಮಹತ್ಯೆಗೆ ಯತ್ನಿಸಿದ್ದ SP ಪವನ್ ನಜ್ಜೂರ್ ಬರೆದಿಟ್ಟಿದ್ದ ಡೆತ್ ನೋಟ್ ಬಹಿರಂಗಪಡಿಸಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ

ಬೆಂಗಳೂರು: ಸಸ್ಪೆಂಡ್ ಆಗಿರುವ ಬಳ್ಳಾರಿ ಎಸ್ ಪಿ ಪವನ್ ನಜ್ಜೂರ್ ಆತ್ಮಹತ್ಯೆ ಯತ್ನಕ್ಕೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದಾರೆ ಎಂಬ ಮಾಹಿತಿ ಇದೆ. ರಾಜ್ಯ ಸರ್ಕಾರ ಆ ಡೆತ್ ನೋಟ್ ಬಹಿರಂಗಪಡಿಸಲಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಸರ್ಕಾರ ಪವನ್ ನಜ್ಜೂರ್ ಅವರ ಡೆತ್ ನೋಟ್ ಮುಚ್ಚಿಟ್ಟಿದೆ. ಅಧಿಕಾರಿಗಳು ನಿನ್ನೆ ಪವನ್ ನಜ್ಜೂರ್ ಬರೆದಿದ್ದ ಡೆತ್ ನೋಟ್ ಕೈಯಲ್ಲಿ ಮುಚ್ಚಿಟ್ಟುಕೊಂಡು ಮಾತನಾಡಿದ್ದರು. ಅದರಲ್ಲಿ […]

ಕನ್ನಡ ದುನಿಯಾ 4 Jan 2026 6:03 pm

BREAKING: ಆಸ್ಪತ್ರೆ ಬಾಗಿಲಿಗೆ ಬಂದು ಕಾರ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಕೊಚ್ಚಿ: ಕೇರಳದಲ್ಲಿ ಭಾನುವಾರ ಬೆಳಿಗ್ಗೆ ಖಾಸಗಿ ಆಸ್ಪತ್ರೆಯ ತುರ್ತು ದ್ವಾರದಲ್ಲಿ ವೈದ್ಯರು ಚಿಕಿತ್ಸೆ ನೀಡಿದ ನಂತರ 21 ವರ್ಷದ ಮಹಿಳೆಯೊಬ್ಬರು ಕಾರ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ. ವಿಪಿಎಸ್ ಲೇಕ್‌ಶೋರ್ ಆಸ್ಪತ್ರೆಯ ವೈದ್ಯರ ಪ್ರಕಾರ, ತುರ್ತು ವಿಭಾಗದ ಆವರಣವನ್ನು ತಲುಪಿದ ಕೆಲವೇ ಕ್ಷಣಗಳಲ್ಲಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತು. ಹೆರಿಗೆ ನೋವು ಗಮನಿಸಿದ ತುರ್ತು ವೈದ್ಯ ಡಾ. ಆದಿಲ್ ಅಶ್ರಫ್ ತುರ್ತು ದ್ವಾರಕ್ಕೆ ಧಾವಿಸಿದ್ದಾರೆ, ಅಲ್ಲಿ ಮಗು ಈಗಾಗಲೇ ಹೆರಿಗೆಯಾಗುತ್ತಿತ್ತು. […]

ಕನ್ನಡ ದುನಿಯಾ 4 Jan 2026 5:50 pm

ನೆಟ್ ವರ್ಕ್ ಸಿಗುತ್ತಿಲ್ಲವೆಂದು ಮಹಡಿಯ ಮೇಲೆ ಹೋಗಿದ್ದ ವೇಳೆ ದುರಂತ: 17ನೇ ಫ್ಲೋರ್ ನಿಂದ ಬಿದ್ದು ಇಂಡಿಯನ್ ಆಯಿಲ್ ಎಕ್ಸಿಕೂಟಿವ್ ಸಾವು

ನೊಯ್ಡಾ: ನೆಟ್ ವರ್ಕ್ ಸಮಸ್ಯೆ ಎಂಬುದು ಇಂದು ದೇಶಾದ್ಯಂತ ತಲೆದೂರಿದೆ. ಇದೇ ರೀತಿ ನೆಟ್ ವರ್ಕ್ ಸಮಸ್ಯೆಯಾಗುತ್ತಿದೆ ಎಂದು ಕಟ್ಟಡದ ಮೇಲೆ ಹೋಗಿ ಫೋನ್ ನಲ್ಲಿ ಮಾತನಾಡುತ್ತಿದ್ದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಎಕ್ಸಿಕೂಟಿವ್ ಕಟ್ಟಡಿದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ನೊಯ್ಡಾದಲ್ಲಿ ನಡೆದಿದೆ. ನೊಯ್ಡಾದ ಸೆಕ್ಟರ್ 104ರಲ್ಲಿ ಈ ದುರಂತ ಸಂಭವಿಸಿದೆ. ದೆಹಲಿಯ ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಕಾಅರ್ಯ ನಿರ್ವಹಿಸುತ್ತಿದ್ದ ಅಜಯ್ ಗರ್ಗ್, 17ನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾರೆ. ಉತ್ತರ ಪ್ರದೇಶದ […]

ಕನ್ನಡ ದುನಿಯಾ 4 Jan 2026 5:39 pm

ಮೂವರು ಹೆಣ್ಣುಮಕ್ಕಳು ಎಂದು ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಬಿಟ್ಟು ಮತ್ತೋರ್ವ ಯುವತಿಯ ಹಿಂದೆಬಿದ್ದ ಪತಿ!

ಬೆಂಗಳೂರು: ಮೂವರು ಹೆಣ್ಣುಮಕ್ಕಳು ಎಂಬ ಕಾರಣಕ್ಕೆ ಪತಿ ಮಹಾಶಯನೊಬ್ಬ ಪತ್ನಿಯನ್ನೇ ಬಿಟ್ಟು ಬೇರೊಂದು ಯುವತಿಯ ಹಿಂದೆ ಬಿದ್ದುರುವ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ. ಹರೀಶ್ ಎಂಬಾತ ಪತ್ನಿ ಹಾಗೂ ಮೂವರು ಹೆಣ್ಣುಮಕ್ಕಳನ್ನು ಬಿಟ್ಟು ಇನ್ನೋರ್ವ ಯುವತಿಯೊಂದಿಗೆ ಪರಾರಿಯಾಗಿದ್ದಾನೆ ಎಂದು ಪತ್ನಿ ವರಲಕ್ಷ್ಮೀ ಆರೋಪಿಸಿದ್ದಾರೆ. ಹರೀಶ್ ಹಾಗೂ ವರಲಕ್ಷ್ಮೀ ಕೆಲ ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಹರೀಶ್ ಸೇಲ್ಸ್ ಎಕ್ಸಿಕುಟೀವ್, ವರಲಕ್ಷ್ಮೀ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಾರೆ. ದಂಪತಿಗೆ ಮೂವರು ಹೆಣ್ಣುಮಕ್ಕಳು. ಮೂರನೇ ಮಗುವಿಗೆ ಇನ್ನೂ ಒಂದೂವರೆ […]

ಕನ್ನಡ ದುನಿಯಾ 4 Jan 2026 5:04 pm

BIG NEWS: ತ್ರಿಶೂರ್ ರೈಲು ನಿಲ್ದಾಣದಲ್ಲಿ ಭೀಕರ ಬೆಂಕಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲು

ತಿರುವನಂತಪುರಂ: ಕೇರಳದ ತ್ರಿಶೂರ್ ನಲ್ಲಿರುವ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿಯಾಗಿವೆ. ತ್ರಿಶೂರ್ ರೈಲು ನಿಲ್ದಾಣದ ಪಕ್ಕದಲ್ಲಿರುವ ಪಾರ್ಕಿಂಗ್ ಸ್ಥಳದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ರೈಲು ನಿಲ್ದಾಣದ ಪ್ಲಾಟ್ ಫಾರ್ಮ್ ಸಂಖ್ಯೆ 2ರ ಬಳಿ ಇರುವ ದ್ವಿಚಕ್ರವಾಹನಗಳ ಪಾರ್ಕಿಂಗ್ ಸ್ಥಳದಲ್ಲಿ ಈ ಘಟನೆ ನಡೆದಿದೆ. 200ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಸುಟ್ತು ಕರಕಲಾಗಿವೆ. ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ವ್ಯಾಪಿಸಿದ್ದು, ದಟ್ಟ ಹೊಗೆ ಆವರಿಸಿದೆ. ರೈಲು ನಿಲ್ದಾಣದಲ್ಲಿದ್ದ ಪ್ರಯಾಣಿಕರು ಹಾಗೂ […]

ಕನ್ನಡ ದುನಿಯಾ 4 Jan 2026 4:23 pm

SHOCKING: ಚಿಕ್ಕಮಗಳೂರಿನಲ್ಲಿ ಘೋರ ಘಟನೆ: ಮಗನನ್ನೇ ಹತ್ಯೆಗೈದ ತಂದೆ

ಚಿಕ್ಕಮಗಳೂರು: ಅಪ್ಪ-ಮಗನ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಕುಡಿದು ಬಂದ ಅಪ್ಪ, ತನ್ನ ಮಗನನ್ನೇ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಆನೆಗುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪ್ರದೀಪ್ ಆಚಾರ್ (29) ಕೊಲೆಯಾದ ಮಗ. ರಮೇಶ್ ಆಚಾರ್ ಮಗನನ್ನೇ ಕೊಲೆಗೈದ ಅಪ್ಪ. ಕುಡಿದು ಬರುತ್ತಿದ್ದ ಅಪ್ಪ ಹಾಗೂ ಮಗನ ನಡುವೆ ಆಗಾಗ ಜಗಳವಾಗುತ್ತಿತ್ತು. ಅಪ್ಪ-ಮಗನ ಗಲಾಟೆಯಿಂದ ನೊಂದು ಪ್ರದೀಪ್ ತಾಯಿ ಮನೆ ಬಿಟ್ಟು ಹೋಗಿದ್ದರು. ಮನೆಯಲ್ಲಿ ಅಪ್ಪ-ಮಗ ಇಬ್ಬರೇ […]

ಕನ್ನಡ ದುನಿಯಾ 4 Jan 2026 3:33 pm

BREAKING: ಬಳ್ಳಾರಿಯಲ್ಲಿ ಗಲಾಟೆ-ಫೈರಿಂಗ್ ಪ್ರಕರಣ: ಸತೀಶ್ ರೆಡ್ಡಿಯ ಮೂವರು ಗನ್ ಮ್ಯಾನ್ ಗಳು ಸೇರಿ 20 ಜನರು ಅರೆಸ್ಟ್

ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ಜನವರಿ 1ರಂದು ನಡೆದಿದ್ದ ಗಲಾಟೆ ಹಾಗೂ ಫೈರಿಂಗ್ ಪ್ರಕರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸತೀಶ್ ರೆಡ್ದಿಯ ಮೂವರು ಖಾಸಗಿ ಗನ್ ಮ್ಯಾನ್ ಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ಶಾಸಕ ಭರತ್ ರೆಡ್ಡಿಯ ಆಪ್ತ ಸತೀಶ್ ರೆಡ್ಡಿಯ ಮೂವರು ಖಾಸಗಿ ಗನ್ ಮ್ಯಾನ್ ಗಳನ್ನು ಬಳ್ಳಾರಿ ಬ್ರೂಸ್ ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಲ್ಜಿತ್ ಸಿಂಗ್, ಮಹೇಂದ್ರ ಸಿಂಗ್ ಹಾಗೂ ಗುರುಚರಣ ಸಿಂಗ್ ಬಂಧಿತ ಗನ್ ಮ್ಯಾನ್ […]

ಕನ್ನಡ ದುನಿಯಾ 4 Jan 2026 3:16 pm

ವೈದ್ಯಕೀಯ ಶಿಕ್ಷಣ ಇಲಾಖೆಯ ಸಿಬ್ಬಂದಿಗಳಿಗೆ ಗುಡ್ ನ್ಯೂಸ್: ಸಿಬ್ಬಂದಿ ಕುಟುಂಬಗಳಿಗೆ ಸಂಪೂರ್ಣ ವಿಮಾ ಭದ್ರತೆ ಒದಗಿಸಲು ಕ್ರಮ

ಬೆಂಗಳೂರು: ಸರ್ಕಾರದ ಆಡಳಿತದಲ್ಲಿ ಪ್ರಮುಖ ಪಾತ್ರ ವಹಿಸುವ ಸಿಬ್ಬಂದಿಗಳಿಗೆ ಸೂಕ್ತ ವಿಮಾ ಭದ್ರತೆ ಒದಗಿವುಸುದು ಮುಖ್ಯ. ಈ ನಿಟ್ಟಿನಲ್ಲಿ ಸಿಬ್ಬಂದಿ ಸ್ನೇಹಿ ಕ್ರಮ ಕೈಗೊಳ್ಳಲು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ‌. ಶರಣಪ್ರಕಾಶ್ ಆರ್. ಪಾಟೀಲ್ ಮುಂದಾಗಿದ್ದಾರೆ. ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯ ಎಲ್ಲ ಅಧಿಕಾರಿಗಳಿಗೆ, ಸಿಬ್ಬಂದಿಗೆ ಮತ್ತು ಕುಟುಂಬ ಸದಸ್ಯರಿಗೆ ವಿಮಾ ಭದ್ರತೆ ಒದಗಿಸಲು ಕ್ರಮ ಕೈಗೊಂಡಿದ್ದಾರೆ. ಕಳೆದ ತಿಂಗಳು ರಸ್ತೆ ಅಪಘಾತದಲ್ಲಿ ನಿಧನರಾದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಕುಟುಂಬ ಸದಸ್ಯರು […]

ಕನ್ನಡ ದುನಿಯಾ 4 Jan 2026 2:54 pm

ಶಿವಮೊಗ್ಗದ ಪ್ರಮುಖ ಸರ್ಕಲ್ ಗಳಲ್ಲಿ ಅಂಡರ್ ಪಾಸ್, ಸ್ಕೈವಾಕ್ ನಿರ್ಮಾಣ: ಅಗತ್ಯ ಕ್ರಮಕ್ಕೆ ಸಂಸದ ರಾಘವೇಂದ್ರ ಸೂಚನೆ

ಶಿವಮೊಗ್ಗ: ನಗರದಲ್ಲಿ ವಾಹನ ದಟ್ಟಣೆಯಿಂದ ಉಂಟಾಗಿರುವ ಟ್ರಾಫಿಕ್‌ ನಿಯಂತ್ರಿಸಲು ಪ್ರಮುಖ ಸರ್ಕಲ್ ಗಳಲ್ಲಿ ಸ್ಕೈವಾಕ್ ಅಥವಾ ಅಂಡರ್ ಪಾಸ್ ನಿರ್ಮಿಸುವ ಮೂಲಕ ಸಾರ್ವಜನಿಕರು ಸುರಕ್ಷಿತವಾಗಿ ಓಡಾಡಲು ಅನುಕೂಲ ಮಾಡಬೇಕೆಂದು ಸಂಸದ ಬಿ.ವೈ. ರಾಘವೇಂದ್ರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ನೂತನ ಜಿಲ್ಲಾಧಿಕಾರಿಗಳೊಂದಿಗೆ ಏರ್ಪಡಿಸಿದ್ದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಂದೇಶ್ ಮೋಟಾರ್ ಸರ್ಕಲ್, ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣ, ಆಲ್ಕೊಳ ಸರ್ಕಲ್ ಸೇರಿದಂತೆ ನಗರದ ಅನೇಕ ಸರ್ಕಲ್‌ಗಳು ಮತ್ತು ಮುಖ್ಯ […]

ಕನ್ನಡ ದುನಿಯಾ 4 Jan 2026 2:10 pm

ಮನೆಯಲ್ಲೇ ಶವವಾಗಿ ಪತ್ತೆಯಾದ ನಿವೃತ್ತ ಶಿಕ್ಷಕ, ಪತ್ನಿ: ಕೊಲೆ ಶಂಕೆ

ನವದೆಹಲಿ: ದೆಹಲಿಯ ಶಹದಾರಾದಲ್ಲಿರುವ ತಮ್ಮ ಮನೆಯಲ್ಲಿ ವೃದ್ಧ ದಂಪತಿ ನಿಗೂಢ ರೀತಿಯಲ್ಲಿ ಮೃತಪಟ್ಟಿದ್ದಾರೆ. ದಂಪತಿಯ ಮಗನಿಂದ ಪೊಲೀಸರಿಗೆ ಪಿಸಿಆರ್ ಕರೆ ಬಂದಿದ್ದು, ಅವರ ತಾಯಿ(65), ಮತ್ತು ತಂದೆ(75), ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದಾರೆ ಮತ್ತು ಬಹುಶಃ ಸತ್ತಿರಬಹುದು ಎಂದು ತಿಳಿಸಲಾಗಿದೆ. ಪೊಲೀಸರು ಸ್ಥಳಕ್ಕೆ ತಲುಪಿದಾಗ, ಮನೆಯ ಮೂರನೇ ಮಹಡಿಯಲ್ಲಿ ಎರಡು ಶವಗಳು ಪತ್ತೆಯಾಗಿವೆ. ಮೂರನೇ ಮಹಡಿಯ ಎರಡು ಪ್ರತ್ಯೇಕ ಕೊಠಡಿಗಳಲ್ಲಿ ಶವಗಳು ಪತ್ತೆಯಾಗಿವೆ. ವೃದ್ಧ ವ್ಯಕ್ತಿ ನಿವೃತ್ತ ಶಿಕ್ಷಕ. ವ್ಯಕ್ತಿಯ ಮುಖದ ಮೇಲೆ ಗಾಯಗಳು ಕಂಡುಬಂದಿದ್ದು, ಕೊಲೆಯ ಅನುಮಾನವನ್ನು […]

ಕನ್ನಡ ದುನಿಯಾ 4 Jan 2026 1:44 pm

BIG NEWS: ಅನುಯಾಯಿಗಳ ಮೇಲೆ ಅತ್ಯಾಚಾರ ಪ್ರಕರಣ: ಡೇರಾ ಸಚ್ಚಾ ಸೌದ ಗುರ್ಮಿತ್ ಸಿಂಗ್ ಗೆ 15ನೇ ಬಾರಿ ಪೆರೊಲ್

ಚಂಡೀಗಢ: ತನ್ನ ಇಬ್ಬರು ಅನುಯಾಯಿಗಳ ಮೇಲೆ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿರುವ ಡೇರಾ ಸಚ್ಚಾ ಸೌದದ ಗುರ್ಮಿತ್ ರಾಮ್ ರಹೀಮ್ ಸಿಂಗ್ ಗೆ ಮತ್ತೆ ಪೆರೋಲ್ ನೀಡಲಾಗಿದೆ. ಹರಿಯಾಣದ ರೋಹ್ಟಕ್ ಸುನಾರಿಯಾ ಜೈಲಿನಲ್ಲಿರುವ ಗುರ್ಮಿತ್ ಸಿಂಗ್ ಗೆ 40 ದಿನಗಳ ಕಾಲ ಪೆರೊಲ್ ನೀಡಲಾಗಿದೆ. ಕಳೆದ ವರ್ಷದ ಆಗಸ್ಟ್ ನಲ್ಲಿಯೂ ಗುರ್ಮಿತ್ ಸಿಂಗ್ 40 ದಿನಗಳ ಪೆರೊಲ್ ಪಡೆದಿದ್ದರು. ಜೈಲುಶಿಕ್ಷೆಗೆ ಗುರಿಯಾದ ಬಳಿಕ ಗುರ್ಮಿತ್ ರಾಮ್ ರಹೀಮ್ ಸಿಂಗ್ ಪಡೆಯುತ್ತಿರುವ 15ನೇ […]

ಕನ್ನಡ ದುನಿಯಾ 4 Jan 2026 1:33 pm

BIG NEWS: ಕೋಳಿ ಅಂಕಕ್ಕೆ ತಡೆ: ದೈವದ ಮೊರೆ ಹೋದ ಕಂಕನಾಡಿ ಗರೋಡಿ ಆಡಳಿತ ಸಮಿತಿ

ಮಂಗಳೂರು: ಕಂಕನಾಡಿ ಗರೋಡಿ ದೈವಸ್ಥಾನದ ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಪೊಲೀಸರು ತಡೆ ನೀಡಿರುವ ವಿಚಾರ ಇದೀಗ ಕೋಟಿ ಚೆನ್ನಯ್ಯರ ಕಟಕಟೆ ತಲುಪಿದ್ದು, ಗರೋಡಿ ಆಡಳಿತ ಸಮಿತಿ ದೈವದ ಮೊರೆ ಹೋಗಿದೆ. ಕೋಳಿ ಅಂಕಕ್ಕೆ ಕಾನೂನು ನೆಪ ಹೇಳಿ ಜೂಜು, ಪ್ರಾಣಿ ಹಿಂಸೆ ಕಾರಣ ನೀಡಿ ಮಂಗಳೂರು ಪೊಲೀಸರು ಅನುಮತಿ ನಿರಾಕರಿಸಿದ್ದರು. ವಿಟ್ಲ ಕೇಪು ಉಳ್ಳಾಲ್ತಿ ಬಳಿಕ ಈಗ 150 ವರ್ಷಗಳ ಇತಿಹಾಸವಿರುವ ಕಂಕನಾಡಿ ಗರೋಡಿ ಜಾತ್ರೆಯಲ್ಲಿ ಸಾಂಪ್ರದಾಯಿಕ ಕೋಳಿ ಅಂಕಕ್ಕೆ ತಡೆ ನೀಡಲಾಗಿತ್ತು. ಕೋಳಿ ಅಂಕಕ್ಕೆ ಅವಕಾಶ […]

ಕನ್ನಡ ದುನಿಯಾ 4 Jan 2026 1:12 pm

ಬೆಳಗಿನಜಾವ ಮನೆಗೆ ನುಗ್ಗಿ ಮಹಿಳೆಗೆ ಲೈಂಗಿಕ ಕಿರುಕುಳ

ಪಾಲಕ್ಕಾಡ್:(ಕೇರಳ): ಪಾಲಕ್ಕಾಡ್‌ನಲ್ಲಿ ವೃದ್ಧ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದೆ. ಆರೋಪಿ ಬಿಜೆಪಿ ಕಾರ್ಯಕರ್ತ ತಲೆಮರೆಸಿಕೊಂಡಿದ್ದಾನೆ. ವೃದ್ಧ ಮಹಿಳೆಯ ಮನೆಗೆ ಅತಿಕ್ರಮಣ ಮಾಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ. ಆಲತ್ತೂರಿನ ಶಿಥಿಲಗೊಂಡ ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ 64 ವರ್ಷದ ಮಹಿಳೆ ಶುಕ್ರವಾರ ಮುಂಜಾನೆ ಆರೋಪಿಯಿಂದ ಕಿರುಕುಳಕ್ಕೆ ಒಳಗಾಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಆರೋಪಿಯನ್ನು ಸುರೇಶ್ ಎಂದು ಗುರುತಿಸಲಾಗಿದ್ದು, ಪೊರುಳಿಪ್ಪಡಂ ಮೂಲದವನಾಗಿದ್ದು, […]

ಕನ್ನಡ ದುನಿಯಾ 4 Jan 2026 1:07 pm

BREAKING: ವಿಜಯಲಕ್ಷ್ಮೀ ದರ್ಶನ್ ಗೆ ಅಶ್ಲೀಲ ಕಮೆಂಟ್: ಮತ್ತಿಬ್ಬರು ಆರೋಪಿಗಳು ಅರೆಸ್ಟ್; ಬ್ಯಾಂಕ್ ಮ್ಯಾನೇಜರ್, ಆಡಿಟರ್ ಬಂಧನ

ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರಿಗೆ ಅಶ್ಲೀಲ ಕಮೆಂಟ್ ಮಾಡಿದ್ದ ಮತ್ತಿಬ್ಬರು ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಾಗರಾಜ್ ತಳವಾರ್ ಹಾಗೂ ಪ್ರಶಾಂತ್ ತಳವಾರ್ ಬಂಧಿತ ಆರೋಪಿಗಳು. ನಾಗರಾಜ್ ತಳವಾರ್ ಹುಬ್ಬಳ್ಳಿಯಲ್ಲಿ ಪೆಟ್ರೋಲ್ ಬ್ಯಾಂಕ್ ಮ್ಯಾನೇಜ್. ಪ್ರಶಾಂತ್ ತಳವಾರ್ ಧಾರವಾಡದಲ್ಲಿ ಆಡಿಟರ್ ಆಗಿ ಕೆಲಸ ಮಾಡುತ್ತಿದ್ದ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ವಿಜಯಲಕ್ಷ್ಮೀ ದರ್ಶನ್ ಅವರಿಗೆ ಅಶ್ಲೀಲ ಕಮೆಂಟ್ ಮಾಡಿದ್ದ ಪ್ರಕರಣದಲ್ಲಿ ಈ ಹಿಂದೆ ಪೊಲೀಸರು ಇಬ್ಬರನ್ನು ಬಂಧಿಸಿದ್ದರು. ಬೆಂಗಳೂರಿನ […]

ಕನ್ನಡ ದುನಿಯಾ 4 Jan 2026 12:34 pm

BREAKING: ಬಳ್ಳಾರಿ ಫೈರಿಂಗ್ ವೇಳೆ ಕಾಂಗ್ರೆಸ್ ಕಾರ್ಯಕರ್ತ ಸಾವು ಪ್ರಕರಣ: ಸತೀಶ್ ರೆಡ್ಡಿಯ ಇಬ್ಬರು ಗನ್ ಮ್ಯಾನ್ ಗಳು ಅರೆಸ್ಟ್

ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ಗಲಾಟೆ ನಡೆದು ಫೈರಿಂಗ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಖಾಸಗಿ ಗನ್ ಮ್ಯಾನ್ ಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ಶಾಸಕ ಭರತ್ ರೆಡ್ಡಿಯ ಆಪ್ತ ಸತೀಶ್ ರೆಡ್ಡಿ ಅವರ ಇಬ್ಬರು ಖಾಸಗಿ ಗನ್ ಮ್ಯಾನ್ ಗಳನ್ನು ಬಳ್ಳಾರಿಯ ಬ್ರೂಸ್ ಠಾಣೆ ಪೊಲಿಸರು ಬಂಧಿಸಿದ್ದಾರೆ. ಗುರುಚರಣ್ ಸಿಂಗ್ ಹಾಗೂ ಬಲ್ಜಿತ್ ಸಿಂಗ್ ಬಂಧಿತ ಗನ್ ಮ್ಯಾನ್ ಗಳು. ಗನ್ ಮ್ಯಾನ್ ಗುರುಚರಣ್ ಸಿಂಗ್ ಗನ್ ನಿಂದ […]

ಕನ್ನಡ ದುನಿಯಾ 4 Jan 2026 12:14 pm

BREAKING: ಕಂದಾಯ ಸಚಿವ ಕೃಷ್ಣ ಭೈರೇಗೌಡ ನಾಪತ್ತೆ ಪೋಸ್ಟರ್: ಬಿಜೆಪಿ ಕಾರ್ಯಕರ್ತರ ವಿರುದ್ಧ FIR ದಾಖಲು

ಬೆಂಗಳೂರು: ಕಂದಾಯ ಸಚಿವ ಕೃಷ್ಣ ಭೈರೇಗೌಡ ನಾಪತ್ತೆ ಎಂದು ಪೋಸ್ಟರ್ ಅಂಟಿಸಿದ್ದವರ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. ಬ್ಯಾಟರಾಯನಪುರ ವಾರ್ಡ್ ಅಸಿಸ್ಟೆಂಟ್ ಇಂಜಿನಿಯರ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಪೋಸ್ಟರ್ ಅಭಿಯಾನ ನಡೆಸಿದ್ದವರ ವಿರುದ್ಧ ಎಫ್ ಐ ಅರ್ ದಾಖಲಾಗಿದೆ. ರಸ್ತೆ ಬದಿ ಭಿತ್ತಿ ಪತ್ರ ಅಂಟಿಸಿ ನಗರದ ಸೌಂದರ್ಯಕ್ಕೆ ಧಕ್ಕೆ ತರಲಾಗಿದೆ. ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ದಾಖಲಾಗಿತ್ತು. ಇಂಜಿನಿಯರ್ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ. ಕಂದಾಯ […]

ಕನ್ನಡ ದುನಿಯಾ 4 Jan 2026 12:07 pm

ಆನ್ ಲೈನ್ ನಲ್ಲಿ ವಶೀಕರಣ ಜಾಹೀರಾತು ನಂಬಿ ಮೋಸ ಹೋದ ಯುವತಿ: ಪ್ರೀತಿಸಿದ ಯುವಕ ಸಿಗುವಂತೆ ಮಾಡುತ್ತೇವೆ ಎಂದು ಲಕ್ಷ ಲಕ್ಷ ದೋಚಿದ ಗುರೂಜಿ

ಬೆಂಗಳೂರು: ಆನ್ ಲೈನ್ ನಲ್ಲಿ ವಶೀಕರಣ ಜಾಹೀರಾತು ನಂಬಿ ಯುವತಿ ಲಕ್ಷ ಲಕ್ಷಣ ಹಣ ಕಳೆದುಕೊಂಡಿರುವ ಘಟನೆ ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರೀತಿಸಿದ ಯುವಕ ಸಿಗುವಂತೆ ಮಾಡಲು ವಶೀಕರಣ ಮಾಡುವುದಾಗಿ ಹೇಳಿ ಯುವತಿಯಿಂದ ಹಂತ ಹಂತವಾಗಿ ಲಕ್ಷ ಲಕ್ಷ ಹಣ ದೋಚಿದ ಖದೀಮರ ಗ್ಯಾಂಗ್ 2 ಲಕ್ಷಕ್ಕೂ ಅಧಿಕ ಹಣ ಪಡೆದು ಪರಾರಿಯಾಗಿದ್ದಾರೆ. ಕೃಷ್ಣಮೂರ್ತಿ ಗುರೂಜಿ ಎಂಬಾತನ ಹೆಸರಲ್ಲಿ ಕಷ್ಟಕ್ಕೆ ಪರಿಹಾರ ನೀಡುವುದಾಗಿ ಹೇಳಿ ಸೋಷಿಯಲ್ ಮೀಡಿಯಾ ಅಕೌಂಟ್ ನಲ್ಲಿ ಜಾಹೀರಾತು ನೀಡಲಾಗಿತ್ತು. […]

ಕನ್ನಡ ದುನಿಯಾ 4 Jan 2026 11:41 am

ಚುನಾವಣೆ ನಡೆಯುವ ರಾಜ್ಯಗಳಿಗೆ ಕಾಂಗ್ರೆಸ್ ಸ್ಕ್ರೀನಿಂಗ್ ಸಮಿತಿ ಪ್ರಕಟ: ಅಸ್ಸಾಂ ಕಮಿಟಿಗೆ ಪ್ರಿಯಾಂಕಾ ಗಾಂಧಿ, ಪಶ್ಚಿಮ ಬಂಗಾಳಕ್ಕೆ ಬಿ.ಕೆ. ಹರಿಪ್ರಸಾದ್ ನೇತೃತ್ವ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಪ್ರಾರಂಭಿಸಲು ಕಾಂಗ್ರೆಸ್ ಶನಿವಾರ ಸ್ಕ್ರೀನಿಂಗ್ ಸಮಿತಿಗಳನ್ನು ಪ್ರಕಟಿಸಿದೆ. ಅಸ್ಸಾಂ ವಿಧಾನಸಭಾ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಮಿತಿಯ ಅಧ್ಯಕ್ಷರನ್ನಾಗಿ ಪಕ್ಷವು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ನೇಮಿಸಿದೆ. ವಯನಾಡಿನ ಲೋಕಸಭಾ ಸಂಸದೆ ಉತ್ತರ ಪ್ರದೇಶದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪಾತ್ರದಿಂದ ಕೆಳಗಿಳಿದ ನಂತರ ಇದೇ ಮೊದಲ ಬಾರಿಗೆ ಅವರಿಗೆ ಸಾಂಸ್ಥಿಕ ಕಾರ್ಯವನ್ನು ವಹಿಸಲಾಗಿದೆ. ಪಕ್ಷವು ಶನಿವಾರ ಕೇರಳ, ಪಶ್ಚಿಮ ಬಂಗಾಳ, […]

ಕನ್ನಡ ದುನಿಯಾ 4 Jan 2026 11:20 am

BREAKING: ಚಿಗರಿ ಬಸ್ ಹಾಗೂ ಕಾರು ಭೀಕರ ಅಪಘಾತ: ಚಾಲಕ ಸ್ಥಳದಲ್ಲೇ ದುರ್ಮರಣ

ಹುಬ್ಬಳ್ಳಿ: ಚಿಗರಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಉಣಕಲ್ ಬಳಿಯ ಚಿಗರಿ ಪಥದಲ್ಲಿ ಈ ದುರಂತ ಸಂಭವಿಸಿದೆ. ಚಿಗರಿ ಬಸ್ ಹಾಗೂ ನೆಕ್ಸಾನ್ ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಿರೀಶ್ ಬಣವಿ (62) ಮೃತ ದುರ್ದೈವಿ. ಗಿರೀಶ್ ಧಾರವಾಡ ನಗರದ ಸರಸ್ವತಿ ನಗರ ನಿವಾಸಿ. ಹುಬ್ಬಳ್ಳಿ ಕಡೆಯಿಂದ ಧಾರವಾಡದ ಕಡೆಗೆ ಹೋಗುತ್ತಿದ್ದ ಚಿಗರಿ ಬಸ್ […]

ಕನ್ನಡ ದುನಿಯಾ 4 Jan 2026 11:04 am

BREAKING: ಕಲ್ಲು ಕ್ವಾರಿಯಲ್ಲಿ ಸ್ಫೋಟ: ನಾಲ್ವರು ಕಾರ್ಮಿಕರು ಸಾವು

ಧೆಂಕನಲ್: ಒಡಿಶಾದ ಧೆಂಕನಲ್ ಜಿಲ್ಲೆಯ ಮೋಟಂಗಾ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಲ್‌ಪುರ ಗ್ರಾಮದ ಬಳಿಯ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ದಿನನಿತ್ಯದ ಕಲ್ಲು ಕ್ವಾರಿ ಕೆಲಸ ನಡೆಸುತ್ತಿದ್ದ ನಾಲ್ವರು ಕಾರ್ಮಿಕರು ಸ್ಫೋಟ ಸಂಭವಿಸಿದಾಗ ಸಾವನ್ನಪ್ಪಿದ್ದಾರೆ. ಪ್ರಬಲವಾದ ಸ್ಫೋಟವು ನಾಲ್ವರು ಜನರಿಗೆ ಮಾರಕವಾಗಿದ್ದು, ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಓಡಪದ ತಹಶೀಲ್ದಾರ್ ಮತ್ತು ಮೋಟಂಗಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಾಥಮಿಕ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಹೆಚ್ಚಿನ […]

ಕನ್ನಡ ದುನಿಯಾ 4 Jan 2026 10:59 am

BREAKING: ಬೆಂಗಳೂರಿನಲ್ಲಿ 5 ಕೋಟಿ ಮೌಲ್ಯದ ಐಷಾರಾಮಿ ಬೆಂಟ್ಲಿ ಕಾರು ಸೀಜ್ ಮಾಡಿದ RTO ಅಧಿಕಾರಿಗಳು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 5 ಕೋಟಿ ಮೌಲ್ಯದ ಐಷಾರಾಮಿ ಬೆಂಟ್ಲಿ ಕಾರನ್ನು ಸೀಜ್ ಮಾಡಿರುವ ಘಟನೆ ನಡೆದಿದೆ. ಕಾರು ನೊಂದಣಿ ವೇಳೆ ಕಡಿಮೆ ಮೌಲ್ಯವನ್ನು ತೀರಿಸಿದ್ದ ಕಾರಿನ ಮಾಲೀಕ ಈ ಮೂಲಕ ತೆರಿಗೆ ವಂಚನೆ ಮಾಡಿದ್ದರು. ಐದುವರೆ ಕೋಟಿ ಮೌಲ್ಯದ ಬೆಂಟ್ಲಿ ಕಾರನ್ನು ಎರಡುವರೆ ಕೋಟಿ ಮೌಲ್ಯದ ಕಾರು ಎಂದು ಸುಳ್ಳು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಕಾರನ್ನು ಆರ್ ಟಿಒ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಕೋರಮಮಂಗಲದಲ್ಲಿರುವ ಕಾರಿನ ಮಾಲೀಕನ ಮನೆಗೆ ದೌಡಾಯಿಸಿದ ಆರ್ ಟಿಒ […]

ಕನ್ನಡ ದುನಿಯಾ 4 Jan 2026 10:48 am

BREAKING: ನಟ ಯಶ್ ಗೆ ಭೂ ಒತ್ತುವರಿ ತೆರವು ಶಾಕ್: ಮನೆಯ ಸುತ್ತ ಅಕ್ರಮವಾಗಿ ನಿರ್ಮಿಸಿದ್ದ ಕಾಂಪೌಂಡ್ ತೆರವು

ಹಾಸನ: ರಾಕಿಂಗ್ ಸ್ಟಾರ್ ಯಶ್ ಗೆ ಭೂ ಒತ್ತುವರಿ ತೆರವು ಶಾಕ್ ನೀಡಲಾಗಿದೆ. ಹಾಸನದಲ್ಲಿರುವ ಲಕ್ಷ್ಮಮ್ಮ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಲಾಗಿದ್ದ ಕಾಂಪೌಂಡ್ ನ್ನು ತೆರವು ಮಾಡಲಾಗಿದೆ. ಹಾಸನದ ವಿದ್ಯಾನಗರದಲ್ಲಿರುವ ಲಕ್ಷ್ಮಮ್ಮ ಜಾಗದಲ್ಲಿ ನಟ ಯಶ್ ತಾಯಿ ಪುಷ್ಪಾ ಅವರಿಗೆ ಸೇರಿದ ಮನೆ ನಿರ್ಮಿಸಲಾಗಿತ್ತು. ಮನೆಯ ಸುತ್ತಲು 1500 ಅಡಿಗಳಷ್ಟು ಅಕ್ರಮವಾಗಿ ಕಾಂಪೌಂಡ್ ನಿರ್ಮಾಣ ಮಾಡಲಾಗಿದೆ ಎಂದು ಜಾಗದ ಮಾಲೀಕರು ಆರೋಪಿಸಿದ್ದರು. ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಕೋರ್ಟ್ ಆದೇಶದ ಮೇರೆಗೆ ಕೋರ್ಟ್ ನಿಂದ ಅನುಮತಿ ಪಡೆದು […]

ಕನ್ನಡ ದುನಿಯಾ 4 Jan 2026 10:14 am

ವಿದ್ಯುತ್ ಚಾಲಿತ ವಾಹನಗಳಿಗೆ ಆಧಾರ್ ಮಾದರಿಯಲ್ಲಿ ವಿಶಿಷ್ಟ ಗುರುತಿನ ಸಂಖ್ಯೆ

ನವದೆಹಲಿ: ವಿದ್ಯುತ್ ಚಾಲಿತ ವಾಹನಗಳಿಗೆ ಆಧಾರ್ ಮಾದರಿಯ ವಿಶಿಷ್ಟ ಗುರುತಿನ ಸಂಖ್ಯೆ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ವಿದ್ಯುತ್ ವಾಹನ(ಎಲೆಕ್ಟ್ರಿಕ್ ವೆಹಿಕಲ್) ಬ್ಯಾಟರಿಗಳನ್ನು ಪತ್ತೆ ಹಚ್ಚುವುದಕ್ಕೆ ಮತ್ತು ಪರಿಣಾಮಕಾರಿ ಮರು ಸಂಸ್ಕರಣೆ ಮಾಡಲು ಅನುಕೂಲವಾಗುವಂತೆ ಆಧಾರ್ ರೀತಿಯ ವಿಶಿಷ್ಟ ಗುರುತಿನ ಸಂಖ್ಯೆ ನೀಡುವ ಪ್ರಸ್ತಾವನೆಯನ್ನು ಸಾರಿಗೆ ಸಚಿವಾಲಯ ಸಿದ್ಧಪಡಿಸಿದೆ. ಬ್ಯಾಟರಿ ಉತ್ಪಾದಕರು ಅಥವಾ ಆಮದುದಾರರು ಬ್ಯಾಟರಿಗಳಿಗೆ 21 ಅಂಕೆಗಳ ಬ್ಯಾಟರಿ ಪ್ಯಾಕ್ ಆಧಾರ್ ಸಂಖ್ಯೆಯನ್ನು(ಬಿಪಿಎಎನ್) ನೀಡುವುದು ಕಡ್ಡಾಯವಾಗಿರುತ್ತದೆ. ಇದರಿಂದ ಬ್ಯಾಟರಿಗಳ ಮರುಬಳಕೆ, ಪತ್ತೆ ಸುಲಭವಾಗಲಿದೆ. ಸಂಖ್ಯೆಯನ್ನು […]

ಕನ್ನಡ ದುನಿಯಾ 4 Jan 2026 10:08 am

BIG NEWS: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಮೂವರು ಅಪ್ರಾಪ್ತರು ಪೊಲೀಸ್ ವಶಕ್ಕೆ

ಹುಬ್ಬಳ್ಳಿ: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚುತ್ತಿವೆ. ಅಪ್ರಾಪ್ತ ಬಾಲಕಿ ಮೇಲೆ ಮೂವರು ಅಪ್ರಾಪ್ತರು ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕೇಸ್ ದಾಖಲಾಗುತ್ತಿದ್ದಂತೆ ಶಹರ ಠಾಣೆ ಪೊಲೀಸರು ಮೂವರು ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದಿದ್ದಾರೆ. ಮೂವರ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಅಪ್ರಾಪ್ತ ಬಾಲಕಿ ಮೇಲೆ ಮೂವರಿಂದ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ […]

ಕನ್ನಡ ದುನಿಯಾ 4 Jan 2026 10:02 am

BIG NEWS: ಉತ್ತರಾಖಂಡದ ಸೇನಾ ಕ್ಯಾಂಪ್ ನಲ್ಲಿ ಭಾರಿ ಬೆಂಕಿ ಅವಘಡ

ಡೆಹ್ರಾಡೂನ್: ಉತ್ತರಾಖಂಡದಲ್ಲಿರುವ ಸೇನಾ ಕ್ಯಾಂಪ್ ನಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಏಕಾಏಕಿ ಆರ್ಮಿ ಕ್ಯಾಂಪ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಧಗಧಗನೆ ಹೊತ್ತಿ ಉರಿದಿದೆ. ಉತ್ತರಾಖಂಡದ ಜೋಶಿ ಮಠದ ಔಲಿ ರಸ್ತೆಯಲ್ಲಿರುವ ಸೇನಾ ಶಿಬಿರದ ಅಂಗಡಿಯೊಂದಲ್ಲಿ ಈ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿಗಳು ಸೇನಾ ಕ್ಯಾಪ್ ಗೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಬೆಂಕಿ ನಂದಿಸಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಳೆದ ವರ್ಷ ಮೇ ತಿಂಗಳಲ್ಲಿ […]

ಕನ್ನಡ ದುನಿಯಾ 4 Jan 2026 9:50 am

BREAKING: ಕುಟುಂಬಕ್ಕೆ Z ಶ್ರೇಣಿ ಭದ್ರತೆ ಒದಗಿಸಿ: ಬಳ್ಳಾರಿ ಗಲಾಟೆ ಬಗ್ಗೆ ಅಮಿತ್ ಶಾ, ಸಿಎಂಗೆ ಪತ್ರ ಬರೆದ ಜನಾರ್ದನ ರೆಡ್ಡಿ

ಬಳ್ಳಾರಿ: ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಮನೆ ಬಳಿ ನಡೆದ ಘರ್ಷಣೆ, ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಡಿಜಿಪಿ ಡಾ. ಸಲೀಂ ಅವರಿಗೆ ಜನಾರ್ದನ ರೆಡ್ಡಿ ಪತ್ರ ಬರೆದಿದ್ದಾರೆ. ತಮ್ಮ ಕುಟುಂಬಕ್ಕೆ Z ಶ್ರೇಣಿಯ ಭದ್ರತೆ ನೀಡಬೇಕು. ಶಾಸಕ ಭರತ್ ರೆಡ್ಡಿ, ಸತೀಶ್ ರೆಡ್ಡಿ ಬಂಧನಕ್ಕೆ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಒಂದು ವೇಳೆ […]

ಕನ್ನಡ ದುನಿಯಾ 4 Jan 2026 9:24 am

BREAKING: ಮದುವೆಗೆ ಒಪ್ಪದ ವಿಚ್ಛೇದಿತ ಮಹಿಳೆಗೆ ಚಾಕು ಇರಿದು ಹತ್ಯೆ ಪ್ರಕರಣ: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಆರೋಪಿ

ಕಾರವಾರ: ಮದುವೆಗೆ ಒಪ್ಪದ ವಿಚ್ಛೇದಿತ ಮಹಿಳೆಯನ್ನು ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿ ತಾನೂ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ಯಲ್ಲಾಪುರ ನಿವಾಸಿ ರಂಜಿತಾ (30) ಎಂಬ ಮಹಿಳೆಯ ಹಿಂದೆ ಬಿದ್ದಿದ್ದ ಮುಸ್ಲಿಂ ಯುವಕ ರಫೀಕ್, ತನ್ನನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ. ರಂಜಿತಾ ಮದುವೆಗೆ ಒಪ್ಪಿಲ್ಲ. ಇದರಿಂದ ನಿನ್ನೆ ನಡುರಸ್ತೆಯಲ್ಲಿಯೇ ರಂಜಿತಾಳಿಗೆ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದ. ಘಟನೆಯನ್ನು ತೀವ್ರವಾಗಿ ಖಂಡಿಸಿದ್ದ ಹಿಂದೂಪರ ಸಂಘಟನೆಗಳು […]

ಕನ್ನಡ ದುನಿಯಾ 4 Jan 2026 9:21 am

ಶಾಮನೂರು ಶಿವಶಂಕರಪ್ಪ, ಹೆಚ್.ವೈ. ಮೇಟಿ ನಿಧನದಿಂದ ತೆರವಾದ 2 ಕ್ಷೇತ್ರಗಳಿಗೆ ಉಪ ಚುನಾವಣೆಗೆ ಸಿದ್ಧತೆ

ಬೆಂಗಳೂರು: ಕಾಂಗ್ರೆಸ್ ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪ ಮತ್ತು ಹೆಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಚುನಾವಣಾ ಆಯೋಗ ಸಿದ್ದತೆ ಆರಂಭಿಸಿದೆ. ಎರಡೂ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆಗೆ ಚಾಲನೆ ನೀಡಲಾಗಿದ್ದು, ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ಆದೇಶ ಹೊರಡಿಸಲಾಗಿದೆ. ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕೈಗೊಳ್ಳಲಾಗಿದೆ. ಎರಡೂ ಕ್ಷೇತ್ರಗಳಿಗೆ ಸಂಬಂಧಿಸಿದ ಮತದಾರರ ಪಟ್ಟಿಗಳ ಕರಡನ್ನು ಶನಿವಾರ ಬಿಡುಗಡೆ ಮಾಡಲಾಗಿದೆ. ಚುನಾವಣಾ ಆಯೋಗದ ವೆಬ್ಸೈಟ್, ಎರಡು […]

ಕನ್ನಡ ದುನಿಯಾ 4 Jan 2026 9:16 am

ಜೈಲಿನಲ್ಲಿ ಮನೆ ಊಟ ಕೇಳಿದ್ದ ಪವಿತ್ರಾಗೌಡಗೆ ಬಿಗ್ ಶಾಕ್: ಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಕಾರಾಗೃಹ ಅಧಿಕಾರಿಗಳ ನಿರ್ಧಾರ

ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಾಗೃಹದಲ್ಲಿ ಮನೆ ಊಟ ಕೇಳಿದ್ದ ಎ1 ಆರೋಪಿ ಪವಿತ್ರಾಗೌಡಗೆ ಶಾಕ್ ಎದುರಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾಗೌಡ ಅವರಿಗೆ ಮನೆ ಊಟ ನೀಡಲು ನ್ಯಾಯಾಲಯ ಅನುಮತಿ ನೀಡಿತ್ತು. ಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ನಿರ್ಧಾರ ಕೈಗೊಳ್ಳಲಾಗಿದೆ. ನಾಳೆ ಕಾರಾಗೃಹ ಇಲಾಖೆ ಅಧಿಕಾರಿಗಳು ಮೇಲ್ಮನವಿ ಸಲ್ಲಿಸಲಿದ್ದಾರೆ. ಕಾರಾಗೃಹದಲ್ಲಿ 4700 ಕೈದಿಗಳು ಕೂಡ ಅದೇ ಆಹಾರ ಸೇವಿಸುತ್ತಿದ್ದಾರೆ. ಜೈಲಿನಲ್ಲಿ ನೀಡುವ ಆಹಾರದಿಂದ ಯಾರಿಗೂ […]

ಕನ್ನಡ ದುನಿಯಾ 4 Jan 2026 8:54 am