ವಾಟ್ಸಾಪ್ ಬಳಕೆದಾರರಿಗೆ ಮತ್ತೊಂದು ಅದ್ಭುತ ಫೀಚರ್ ಲಭ್ಯವಾಗಿದೆ. ಇದುವರೆಗೆ ವಾಯ್ಸ್ ಮತ್ತು ವಿಡಿಯೋ ಕಾಲಿಂಗ್ ಆಯ್ಕೆಯು ಕೇವಲ ಮೊಬೈಲ್ ಆ್ಯಪ್ ಅಥವಾ ಡೆಸ್ಕ್ಟಾಪ್ ಆ್ಯಪ್ಗೆ ಮಾತ್ರ ಸೀಮಿತವಾಗಿತ್ತು. ಇದರಿಂದಾಗಿ ಕಾಲ್ ಮಾಡಬೇಕೆಂದರೆ ಮೊಬೈಲ್ ಆ್ಯಪ್ ತೆರೆಯುವುದು ಅನಿವಾರ್ಯವಾಗಿತ್ತು. ಆದರೆ ಇನ್ಮುಂದೆ ಆ ತೊಂದರೆ ಇರುವುದಿಲ್ಲ. ವಾಟ್ಸಾಪ್ ವೆಬ್ (WhatsApp Web) ವರ್ಷನ್ನಲ್ಲಿಯೂ ಇನ್ನು ಮುಂದೆ ವಾಯ್ಸ್ ಮತ್ತು ವಿಡಿಯೋ ಕಾಲ್ ಮಾಡಬಹುದು. ಹೌದು, ವಾಟ್ಸಾಪ್ ಈ ಫೀಚರ್ ಅನ್ನು ಸದ್ದಿಲ್ಲದೆ ಆರಂಭಿಸುತ್ತಿದೆ. ಹಲವು ವರ್ಷಗಳಿಂದ ಈ ಫೀಚರ್ಗಾಗಿ […]
ಉಚಿತ ಸ್ಪೆಷಲ್ ಇ ಖಾತಾ ಅಭಿಯಾನ ಪ್ರಾರಂಭ: 15 ದಿನದಲ್ಲಿ ಬಿ ಖಾತೆಯಿಂದ ಎ ಖಾತೆಗೆ ವರ್ಗಾವಣೆ
ಬೆಂಗಳೂರು: ಬೆಂಗಳೂರು ನಗರದಾದ್ಯಂತ ಇದುವರೆಗೂ 25 ಲಕ್ಷ ಆಸ್ತಿಗಳನ್ನು ಡಿಜಿಟಲೀಕರಣ ಮಾಡಲಾಗಿದೆ. 9 ಲಕ್ಷ ಇ ಖಾತೆಗಳನ್ನು ಜನರಿಗೆ ಹಂಚಿಕೆ ಮಾಡಲಾಗಿದೆ. ಉಚಿತವಾಗಿ ಸ್ಪೆಷಲ್ ಇ ಖಾತಾ ಅಭಿಯಾನ ಪ್ರಾರಂಭ ಮಾಡಲು ಎಲ್ಲಾ ಪಾಲಿಕೆಗಳಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಖಾತೆ ಪರಿವರ್ತನೆ ಮಾಡಿಸಿಕೊಂಡವರಿಗೆ ಖಾತಾ ಪತ್ರ ವಿತರಣೆ ಮಾಡಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಆಸ್ತಿ ದಾಖಲೆಗಳ ಡಿಜಿಟಲೀಕರಣ ಈ ವರ್ಷದ ಪ್ರಮುಖ ತೀರ್ಮಾನ. ಏಕೆಂದರೆ ಕಳೆದ 50 ವರ್ಷಗಳಿಂದಲೂ ಇದು […]
ಪ್ರಧಾನಿ ಮೋದಿ ನಡೆ ಸಂಸತ್’ಗೆ ಮಾಡಿದ ಅಗೌರವ, ಸತ್ಯ ಎದುರಿಸಲಾಗದ ಹೇಡಿತನ : CM ಸಿದ್ದರಾಮಯ್ಯ ಕಿಡಿ
ಬೆಂಗಳೂರು : ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಪ್ರಧಾನಿ ಮೋದಿ ಅವರು ಉತ್ತರ ನೀಡದೆ ತಪ್ಪಿಸಿಕೊಂಡಿರುವುದು ಸಂಸತ್ಗೆ ತೋರಿಸಿರುವ ಅಗೌರವ ಮಾತ್ರವಲ್ಲ, ಸತ್ಯವನ್ನು ಎದುರಿಸಲಾಗದ ಹೇಡಿತನವೂ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.ಈ ಕುರಿತು ಸಿಎಂ ಸಿದ್ದರಾಮಯ್ಯ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಪ್ರಧಾನಿ Narendra Modi ಅವರು ಉತ್ತರ ನೀಡದೆ ತಪ್ಪಿಸಿಕೊಂಡಿರುವುದು ಸಂಸತ್ಗೆ ತೋರಿಸಿರುವ ಅಗೌರವ ಮಾತ್ರವಲ್ಲ, ಸತ್ಯವನ್ನು ಎದುರಿಸಲಾಗದ ಹೇಡಿತನವೂ […]
BREAKING : ಬೆಂಗಳೂರಲ್ಲಿ ಸಿಲಿಂಡರ್ ಸ್ಪೋಟ : ಇಬ್ಬರ ಸ್ಥಿತಿ ಗಂಭೀರ
ಬೆಂಗಳೂರು: ರಾಜಧಾನಿಯ ಕೆ.ಆರ್. ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭೀಕರ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೆ.ಆರ್. ಪುರಂನ ಮಂಜುನಾಥ್ ಲೇಔಟ್ನಲ್ಲಿ ಈ ದುರಂತ ಸಂಭವಿಸಿದೆ. ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡ ಪರಿಣಾಮ, ಮನೆಯಲ್ಲಿದ್ದ ಪೂರ್ಣಿಮಾ (46) ಮತ್ತು ವೆಂಕಟೇಶ್ (40) ಅವರಿಗೆ ತೀವ್ರ ಸ್ವರೂಪದ ಸುಟ್ಟ ಗಾಯಗಳಾಗಿವೆ. ಪ್ರಸ್ತುತ ಇಬ್ಬರ ಸ್ಥಿತಿಯೂ ಗಂಭೀರವಾಗಿದ್ದು, ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಫೋಟದ ತೀವ್ರತೆಗೆ ಮನೆಯ ಕಿಟಕಿ, ಬಾಗಿಲುಗಳು […]
BREAKING: ಅಂತರರಾಜ್ಯ ಸರಗಳ್ಳರು ಅರೆಸ್ಟ್: 20 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ವಶಕ್ಕೆ
ಶಿವಮೊಗ್ಗ: ಶಿವಮೊಗ್ಗ ವಿನೋಬನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಅಂತರರಾಜ್ಯ ಸರಗಳ್ಳರು ಮತ್ತು ಒಂಟಿ ಮನೆ ದರೋಡೆಕೋರರ ಬಂಧಿಸಿದ್ದಾರೆ. ದಿನಾಂಕ 18/11/2025 ರಂದು ಮದ್ಯಾಹ್ನ ಶಿವಮೊಗ್ಗ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ 60 ಅಡಿ ರಸ್ತೆ ವಿನೋಬನಗರ 16 ಕ್ರಾಸ್ ನ ರಸ್ತೆಯಲ್ಲಿ ಒಬ್ಬ ಮಹಿಳೆಯು ನಡೆದುಕೊಂಡು ಹೋಗುವಾಗ ಯಾರೋ ಒಬ್ಬ ಅಪರಿಚಿತ ವ್ಯೆಕ್ತಿ ಹಿಂಬದಿಯಿಂದ ನಡೆದುಕೊಂಡು ಬಂದು ಕೊರಳಲ್ಲಿದ್ದ ಬಂಗಾರದ ಮಾಂಗಲ್ಯ ಸರವನ್ನು ಕಿತ್ತುಕೊಂಡು ತಳ್ಳಿ ಸ್ವಲ್ಪ ದೂರದಲ್ಲಿ ಬೈಕ್ ಸ್ಟಾಟ್ ಮಾಡಿಕೊಂಡು ಕಾಯುತ್ತಿದ್ದ ವ್ಯಕ್ತಿಯ […]
ರಾಜ್ಯದ ಅಲೆಮಾರಿ ಸಮುದಾಯಕ್ಕೆ ಗುಡ್ ನ್ಯೂಸ್ : ಆಹಾರ ಮಳಿಗೆ ವಾಹನ ಖರೀದಿಗೆ ಸಿಗಲಿದೆ 3 ಲಕ್ಷ ಸಹಾಯಧನ
ಆಹಾರ ವಾಹಿನಿ(ಆಹಾರ ಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇಗಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.3 ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುತ್ತದೆ. ಉಳಿಕೆ ಮೊತ್ತವನ್ನು ಬ್ಯಾಂಕ್ ಗಳು/ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿದೆ. ನಗರ ಪ್ರದೇಶದ ವಿಧಾನಸಭಾ ಕ್ಷೇತ್ರವಾದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಹಿಂದುಳಿದ ವರ್ಗಗಳ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಯೋಜನೆಯ ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1ರ […]
ಗ್ರೂಪ್ ಸಿ ಹುದ್ದೆ ಪರೀಕ್ಷೆ ವೇಳೆ ಮೊಬೈಲ್, ಎಲೆಕ್ಟ್ರಿಕ್ ಡಿವೈಸ್ ಬಳಸಿ ಕಳ್ಳಾಟ ಬಯಲು: 18 ಪರೀಕ್ಷಾರ್ಥಿಗಳ ವಿಚಾರಣೆ
ಬೆಂಗಳೂರು: ಆರ್ಮಿ ಗ್ರೂಪ್ ಸಿ ಹುದ್ದೆ ಪರೀಕ್ಷೆಯ ವೇಳೆ ಕಳ್ಳಾಟ ಆರೋಪ ಹಿನ್ನೆಲೆಯಲ್ಲಿ 18 ಪರೀಕ್ಷಾರ್ಥಿಗಳನ್ನು ಕರೆತಂದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಬೆಂಗಳೂರಿನ ಹಲಸೂರು ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗಿದೆ. ನಿನ್ನೆ ಹಲಸೂರು ಠಾಣಾ ವ್ಯಾಪ್ತಿಯಲ್ಲಿ ಪರೀಕ್ಷೆ ನಡೆದಿತ್ತು. ಪರೀಕ್ಷೆಯಲ್ಲಿ ಮೊಬೈಲ್, ಎಲೆಕ್ಟ್ರಿಕ್ ಡಿವೈಸ್ ಬಳಸಿ ನಕಲು ಮಾಡಲಾಗಿತ್ತು. ಮೂರು ಮೊಬೈಲ್ ಮತ್ತು ಎಲೆಕ್ಟ್ರಿಕ್ ಡಿವೈಸ್ ಗಳನ್ನು ಜಪ್ತಿ ಮಾಡಲಾಗಿತ್ತು. ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರೀಕ್ಷಾರ್ಥಿಗಳ ವಿಚಾರಣೆ ನಡೆಸಲಾಗಿದೆ.
ಸೋಶಿಯಲ್ ಮೀಡಿಯಾದಲ್ಲಿ ಲವ್ : ನೂರಾರು ಅಪ್ರಾಪ್ತ ಬಾಲಕಿಯರು ಗರ್ಭಿಣಿ, 300 ಯುವಕರ ವಿರುದ್ಧ ಕೇಸ್.!
ಸಾಮಾಜಿಕ ಜಾಲತಾಣಗಳ ಮೂಲಕ ಶುರುವಾದ ಪ್ರೇಮ ಸಂಬಂಧಗಳು ಇಂದು ನೂರಾರು ಬಾಲಕಿಯರ ಬದುಕನ್ನು ಸಂಕಷ್ಟಕ್ಕೆ ದೂಡಿವೆ. ತಮಿಳುನಾಡಿನ ತಿರುಪತ್ತೂರು ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣದ ವ್ಯಾಮೋಹದಿಂದ ನಡೆದ ಬಾಲ್ಯ ವಿವಾಹಗಳ ಪರಿಣಾಮವಾಗಿ ನೂರಾರು ಅಪ್ರಾಪ್ತೆಯರು ಗರ್ಭಿಣಿಯರಾಗಿದ್ದು, ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಹೌದು. ಇನ್ಸ್ಟಾಗ್ರಾಮ್ ಪ್ರೇಮಪಾಶಕ್ಕೆ ಬಲಿಯಾಗಿ ನೂರಾರು ಅಪ್ರಾಪ್ತ ಬಾಲಕಿಯರು ಗರ್ಭಿಣಿಯಾದ ಘಟನೆ ತಮಿಳುನಾಡಿನಲ್ಲಿ ಸಂಚಲನ ಮೂಡಿಸಿದೆ. ಈ ಸಂಬಂಧ 300ಕ್ಕೂ ಹೆಚ್ಚು ಜನರ ಮೇಲೆ ಎಫ್ಐಆರ್ ದಾಖಲಾಗಿದ್ದು, ಸಮಾಜಕ್ಕೆ ದೊಡ್ಡ ಎಚ್ಚರಿಕೆಯ ಸಂದೇಶ ರವಾನೆಯಾಗಿದೆ. ತಮಿಳುನಾಡಿನ […]
ನವದೆಹಲಿ: ಟಿ20 ವಿಶ್ವಕಪ್ ನಲ್ಲಿ ಭಾರತದ ವಿರುದ್ಧದ ಪಂದ್ಯ ಆಡಲು ಪಾಕಿಸ್ತಾನ ಒಪ್ಪಿಗೆ ಸೂಚಿಸಿದೆ ಎಂದು ಹೇಳಲಾಗಿದೆ. ಪಾಕಿಸ್ತಾನ ಯು-ಟರ್ನ್ ತೆಗೆದುಕೊಂಡು ಮುಂಬರುವ ವಿಶ್ವಕಪ್ನಲ್ಲಿ ಭಾರತವನ್ನು ಎದುರಿಸುವುದಾಗಿ ದೃಢಪಡಿಸಿದೆ, ಹೈ ಪ್ರೊಫೈಲ್ ಘರ್ಷಣೆಯ ಬಗ್ಗೆ ತನ್ನ ಹಿಂದಿನ ನಿಲುವನ್ನು ಹಿಮ್ಮೆಟ್ಟಿಸಿದೆ. ಐಸಿಸಿ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ನಡುವೆ ನಡೆಯುತ್ತಿರುವ ಚರ್ಚೆ ನಿರ್ಣಾಯಕ ಹಂತವನ್ನು ತಲುಪಿದೆ. ಭಾರತದ ವಿರುದ್ಧ ಆಡಲು ನಿರಾಕರಿಸುವ ತನ್ನ ಸಾರ್ವಜನಿಕ ನಿಲುವಿನಿಂದ ಪಿಸಿಬಿ ಹಿಂದೆ ಸರಿದು ಮತ್ತು ಮುಂದಿನ ಗಂಟೆಗಳಲ್ಲಿ ಅಂತಿಮ […]
BREAKING : ಖಜಾನೆಗೆ ಬಿಲ್ಲುಗಳ ಸಲ್ಲಿಕೆ : ಫೆ.16 ರವರೆಗೆ ಗಡುವು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಬಿಲ್ಗಳನ್ನು ಖಜಾನೆಗೆ ಸಲ್ಲಿಸುವ ಗಡುವನ್ನು ವಿಸ್ತರಿಸಿ ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 2025-26ನೇ ಸಾಲಿನ ವರ್ಷಾಂತ್ಯದ ಬಿಲ್ಗಳನ್ನು ಮಾರ್ಚ್ 31ರೊಳಗೆ ಇತ್ಯರ್ಥಪಡಿಸುವ ಉದ್ದೇಶದಿಂದ ಈ ಹಿಂದೆ ಜನವರಿ 30ರವರೆಗೆ ಕಾಲಮಿತಿ ನೀಡಲಾಗಿತ್ತು. ಆದರೆ, ಅನುದಾನದ ಲಭ್ಯತೆ ಮತ್ತು ತಾಂತ್ರಿಕ ಕಾರಣಗಳಿಂದಾಗಿ ಬಿಲ್ ಸಲ್ಲಿಕೆಗೆ ಹೆಚ್ಚಿನ ಸಮಯ ನೀಡುವಂತೆ ಕೋರಲಾಗಿತ್ತು. ಈ ಮನವಿಯನ್ನು ಪುರಸ್ಕರಿಸಿರುವ ಸರ್ಕಾರ, ಈಗ ಫೆಬ್ರವರಿ 16, 2026 ರವರೆಗೆ ಅವಧಿಯನ್ನು ವಿಸ್ತರಿಸಿದೆ. ಈ ಆದೇಶವು […]
ಸರ್ಕಾರಿ ಪ್ರಾಥಮಿಕ ಶಾಲೆಯ ಸಂಗೀತ, ಚಿತ್ರಕಲೆ ಶಿಕ್ಷಕರಿಗೆ ಗುಡ್ ನ್ಯೂಸ್: ಪ್ರೌಢಶಾಲೆಗೆ ಬಡ್ತಿ
ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಹ ಸಂಗೀತ, ಚಿತ್ರಕಲೆ ಹಾಗೂ, ಕ್ರಾಪ್ಟ್ ಶಿಕ್ಷಕರಿಗೆ ಪ್ರೌಢಶಾಲೆಗೆ ಬಡ್ತಿ ನೀಡುವಂತೆ ಸೂಕ್ತ ನಿರ್ದೇಶನ ನೀಡಲಾಗಿದೆ. ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಹ ಸಂಗೀತ, ಚಿತ್ರಕಲೆ ಹಾಗೂ ಕ್ರಾನ್ಸ್ ಶಿಕ್ಷಕರಿಗೆ ಪ್ರೌಢಶಾಲೆಗೆ ಬಡ್ತಿ ನೀಡುವಂತೆ ಸೂಕ್ತ ನಿರ್ದೇಶನ ನೀಡುವ ಬಗ್ಗೆ ಅಧ್ಯಕ್ಷರು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೋರಿದ್ದಾರೆ. ಕರ್ನಾಟಕ ರಾಜ್ಯಾದ್ಯಂತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಹ ಸಂಗೀತ, ಚಿತ್ರಕಲಾ, ಮತ್ತು […]
ಟೈಪ್-ಸಿ ಪೋರ್ಟ್ ಕೇವಲ ಚಾರ್ಜಿಂಗ್’ಗೆ ಮಾತ್ರವಲ್ಲ : ಈ ರಹಸ್ಯ ಬಳಕೆಗಳು 90% ಜನರಿಗೆ ತಿಳಿದೇ ಇಲ್ಲ!
ಬೆಂಗಳೂರು: ಇಂದಿನ ದಿನಗಳಲ್ಲಿ ಸ್ಮಾರ್ಟ್’ಫೋನ್’ನಿಂದ ಹಿಡಿದು ಲ್ಯಾಪ್’ಟಾಪ್’ವರೆಗೆ ಎಲ್ಲದರಲ್ಲೂ ಟೈಪ್-ಸಿ (USB Type-C) ಪೋರ್ಟ್ ಸರ್ವೇಸಾಮಾನ್ಯವಾಗಿದೆ. ಆದರೆ, ನಾವು ಈ ಪೋರ್ಟ್ ಅನ್ನು ಕೇವಲ ಬ್ಯಾಟರಿ ಚಾರ್ಜ್ ಮಾಡಲು ಮಾತ್ರ ಬಳಸುತ್ತಿದ್ದೇವೆ. ವಾಸ್ತವವಾಗಿ, ಈ ಪುಟ್ಟ ಪೋರ್ಟ್ನಲ್ಲಿ ಅಡಗಿರುವ ಅದ್ಭುತ ತಾಂತ್ರಿಕ ಸಾಮರ್ಥ್ಯಗಳ ಬಗ್ಗೆ ಶೇ. 90 ರಷ್ಟು ಬಳಕೆದಾರರಿಗೆ ಅರಿವೇ ಇಲ್ಲ! ನಿಮ್ಮ ಸ್ಮಾರ್ಟ್ಫೋನ್ ಅನ್ನು ಪವರ್ ಬ್ಯಾಂಕ್ ಆಗಿ ಬಳಸುವುದರಿಂದ ಹಿಡಿದು, ದೊಡ್ಡ ಪರದೆಯ ಮೇಲೆ ಸಿನಿಮಾ ನೋಡುವವರೆಗೆ ಟೈಪ್-ಸಿ ಪೋರ್ಟ್ನಿಂದ ಏನೆಲ್ಲಾ ಮಾಡಬಹುದು […]
ಆಯುಷ್ಮಾನ್ ಯೋಜನೆಯಡಿ ಪ್ರಸೂತಿ ತೀವ್ರ ನಿಗಾ ಘಟಕ ಪ್ಯಾಕೇಜ್ ಹೆಚ್ಚಿನ ದರ ನಿಗದಿಗೆ ಅನುಮೋದನೆ
ಆಯುಷ್ಮಾನ್ ಭಾರತ್ -ಆರೋಗ್ಯ ಕರ್ನಾಟಕ (AB PMJAY CM’s ArK) ಯೋಜನೆಯಡಿಯಲ್ಲಿ ಸುವರ್ಣ ಆರೋಗ್ಯ ಸುರಕ್ಷ ಟ್ರಸ್ಟ್ (SAST) ಎಂಪನೇಲ್ಡ್ ಆರೋಗ್ಯ ಸೌಲಭ್ಯಗಳಿಗಾಗಿ ಪ್ರಸೂತಿ ತೀವ್ರ ನಿಗಾ ಘಟಕ (ICU) ಪ್ಯಾಕೇಜ್ ದರ ನಿಗದಿ ಮಾಡಿ ಸರ್ಕಾರ ಆದೇಶಿಸಿದೆ. ಸುವರ್ಣ ಸುರಕ್ಷಾ ಆರೋಗ್ಯ ಟ್ರಸ್ಟ್ (SAST) ನ ಎಂಪನೇಲ್ ಮಾಡಲಾದ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಸೌಲಭ್ಯಗಳಿಗೆ ಪ್ರಸ್ತಾವಿತ ಪ್ರಸೂತಿ ಸಂಕೇತಗಳು ಮತ್ತು ಪ್ರಸೂತಿ ತೀವ್ರ ನಿಗಾ ಘಟಕ (ICU) ಪ್ಯಾಕೇಜ್ಗಳಿಗೆ ಹೆಚ್ಚಿದ ದರಗಳಿಗೆ ಅನುಮೋದನೆ ನೀಡಲಾಗಿದೆ. […]
ನವದೆಹಲಿ: ಟಿ20 ವಿಶ್ವಕಪ್ ಬಹಿಷ್ಕಾರ ವಿವಾದದ ನಡುವೆ ಭಾರತದೊಂದಿಗೆ ದ್ವಿಪಕ್ಷೀಯ ಸರಣಿಗೆ ಪಾಕಿಸ್ತಾನದ ಬೇಡಿಕೆಯನ್ನು ಐಸಿಸಿ ತಿರಸ್ಕರಿಸಿದೆ. ಹೌದು ಪ್ರಮುಖ ಬೆಳವಣಿಗೆಯೊಂದರಲ್ಲಿ ಭಾರತೀಯ ತಂಡದೊಂದಿಗೆ ದ್ವಿಪಕ್ಷೀಯ ಸರಣಿಯನ್ನು ಪುನರಾರಂಭಿಸಬೇಕೆಂಬ ಪಿಸಿಬಿಯ(ಪಾಕಿಸ್ತಾನ ಕ್ರಿಕೆಟ್ ಮಂಡಳಿ) ಬೇಡಿಕೆಯನ್ನು ಐಸಿಸಿ (ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ) ತಿರಸ್ಕರಿಸಿದೆ. 2026 ರ ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನ ಸರ್ಕಾರ ಭಾರತದ ವಿರುದ್ಧ ಆಡಲು ತಮ್ಮ ತಂಡಕ್ಕೆ ಅವಕಾಶ ನೀಡಲು ನಿರಾಕರಿಸಿದ ಕಾರಣ ಸಭೆ ನಡೆದ ನಂತರ ಪಿಸಿಬಿ ಅಂತಹ ಬೇಡಿಕೆಗಳನ್ನು ಮುಂದಿಟ್ಟಿದೆ. ಟಿ20 ವಿಶ್ವಕಪ್ನಲ್ಲಿ ನಡೆಯುತ್ತಿರುವ […]
ಗೃಹಲಕ್ಷ್ಮಿ ಫಲಾನುಭವಿಗಳಿಗೆ ಜೀವಿತ ಪ್ರಮಾಣ ಪತ್ರ ಕಡ್ಡಾಯ: ಗ್ಯಾರಂಟಿ ನಿಲ್ಲಿಸುವ ಹುನ್ನಾರ: ಆರ್. ಅಶೋಕ್ ಆಕ್ರೋಶ
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣ ಪತ್ರ(ಲೈಫ್ ಸರ್ಟಿಫಿಕೇಟ್) ಕೊಡಬೇಕು ಎನ್ನುವ ಹೊಸ ನಿಯಮ ಜಾರಿಗೊಳಿಸಲು ಸರ್ಕಾರ ಮುಂದಾಗಿರುವುದಕ್ಕೆ ವಿಧಾನಸಭೆ ವಿಪಕ್ಷ ನಾಯಕ ಾರ್. ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸರ್ಕಾರ ಬಂದ ಮೇಲೆ ಎರಡು ಲಕ್ಷ ಕೋಟಿ ರೂ. ಸಾಲ ಮಾಡಿದೆ. ಈ ಬಜೆಟ್ ಗೆ ಸಾಲದ ಮೊತ್ತ ಮೂರು ಲಕ್ಷ ಕೋಟಿ ರೂ. ಆಗಲಿದೆ. ಅವರ ಬಳಿ ಹಣವಿಲ್ಲದ ಕಾರಣ ಈಗಾಗಲೇ ಪಡಿತರ ಚೀಟಿಗಳನ್ನು ರದ್ದು ಮಾಡುತ್ತಿದ್ದಾರೆ. ಈಗ ಗ್ಯಾರಂಟಿ ಯೋಜನೆಗಳನ್ನು ಕಡಿತ […]
SHOCKNG : 8 ವರ್ಷದಿಂದ ಸುಖ ನೀಡದ ಪತ್ನಿ : ಬೇಸತ್ತು ಖಾಸಗಿ ಅಂಗವನ್ನೇ ಕತ್ತರಿಸಿಕೊಂಡ ಪತಿ.!
“ದಾಂಪತ್ಯ ಜೀವನದಲ್ಲಿ ದೈಹಿಕ ಸುಖದ ಕೊರತೆ ಎಂತಹ ಘೋರ ಅನಾಹುತಕ್ಕೆ ಕಾರಣವಾಗಬಹುದು ಎಂಬುದಕ್ಕೆ ಈ ಬೆಚ್ಚಿಬೀಳಿಸುವ ಘಟನೆಯೇ ಸಾಕ್ಷಿ. ಕಳೆದ ಎಂಟು ವರ್ಷಗಳಿಂದ ಪತ್ನಿಯು ದೈಹಿಕ ಸಂಬಂಧಕ್ಕೆ ಸಹಕರಿಸುತ್ತಿಲ್ಲ ಎಂಬ ಹತಾಶೆಯಿಂದ ಮನನೊಂದ ಪತಿಯೊಬ್ಬ, ತನ್ನ ಜನನಾಂಗವನ್ನೇ ಕತ್ತರಿಸಿಕೊಂಡಿರುವ ದಾರುಣ ಘಟನೆ ಉತ್ತರ ಪ್ರದೇಶದ ಸೀತಾಪುರದಲ್ಲಿ ನಡೆದಿದೆ. ಸಂಸಾರದಲ್ಲಿನ ಅತೃಪ್ತಿ ಮನುಷ್ಯನನ್ನು ಯಾವ ಮಟ್ಟದ ಹುಚ್ಚು ಸಾಹಸಕ್ಕೆ ತಳ್ಳುತ್ತದೆ ಎಂಬುದನ್ನು ಈ ಘಟನೆ ತೋರಿಸಿಕೊಟ್ಟಿದೆ. ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ಅತ್ಯಂತ ಆಘಾತಕಾರಿ ಮತ್ತು ವಿಲಕ್ಷಣ ಘಟನೆಯೊಂದು […]
SHOCKING: ತಡೆಗೋಡೆಗೆ ಆಟೋ ಡಿಕ್ಕಿ: ರುಂಡ, ಮುಂಡ ಬೇರ್ಪಟ್ಟು ಮಹಿಳೆ ಸಾವು
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ನಾಲೂರು ಸಮೀಪ ವೇಗವಾಗಿದ್ದ ಆಟೋ ತಡೆಗೋಡೆಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಆಟೋದಲ್ಲಿದ್ದ ಮಹಿಳೆ ರುಂಡ, ಮುಂಡ ಬೇರ್ಪಟ್ಟು ಸಾವನ್ನಪ್ಪಿದ್ದಾರೆ. ನಿಶ್ಮಿತಾ ಶೆಟ್ಟಿ(27) ಮೃತಪಟ್ಟವರು. ಅವರ ಪತಿ ಸುದರ್ಶನ್ ಶೆಟ್ಟಿ(35), ಪುತ್ರ ಸಂಚಿತ್(7) ಗಾಯಗೊಂಡಿದ್ದು ತೀರ್ಥಹಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಟೋ ಚಾಲಕ ಯಲ್ಲಪ್ಪ ಕೂಡ ಗಾಯಗೊಂಡಿದ್ದಾರೆ. ಆಟೋ ಚಾಲಕನ ನಿರ್ಲಕ್ಷವೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ತೀರ್ಥಹಳ್ಳಿ ಪಟ್ಟಣದ ಆಗುಂಬೆ ಬಸ್ ನಿಲ್ದಾಣ ಸಮೀಪದ ಹೋಟೆಲ್ ಮಾಲೀಕರಾದ ಸುದರ್ಶನ್ ಶೆಟ್ಟಿ ಮತ್ತು […]
ಬೆಸ್ಕಾಂ ನೇಮಕಾತಿ: ವೇತನ, ವಿದ್ಯಾರ್ಹತೆಯ ವಿವರಗಳು
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) 2026ನೇ ಸಾಲಿನ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 520 ಹುದ್ದೆಗಳಿದ್ದು, ಇಂಜಿನಿಯರಿಂಗ್ ಪದವೀಧರರು ಮಾತ್ರವಲ್ಲ ಬಿಎ, ಬಿಕಾಂ, ಬಿಎಸ್ಸಿ ಪದವೀಧರರಿಗೂ ತರಬೇತಿ ಪಡೆಯುವ ಅವಕಾಶವಿದೆ. ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಜ್ಞಾನ ಕಡ್ಡಾಯ. ಈಗಾಗಲೇ ಅಪ್ರೆಂಟಿಸ್ ತರಬೇತಿ ಪಡೆದವರು ಅಥವ ಒಂದು ವರ್ಷಕ್ಕೂ ಹೆಚ್ಚು ಕೆಲಸದ ಅನುಭವ ಇರುವವರು ಅರ್ಜಿಗಳನ್ನು ಸಲ್ಲಿಸುವಂತಿಲ್ಲ. ಅಭ್ಯರ್ಥಿಗಳ ಆಯ್ಕೆಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಮೆರಿಟ್ ಮೂಲಕ ಆಯ್ಕೆ […]
JOB ALERT : ಮಾಜಿ ಸೈನಿಕರಿಗಾಗಿ ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜನೆ
ಶಿವಮೊಗ್ಗ : ಡೈರೆಕ್ಟೋರೇಟ್ ಜನರಲ್ ರಿಸೆಟ್ಲ್ ಮೆಂಟ್ ಇವರ ಪ್ರಾಯೋಜಕತ್ವದಲ್ಲಿ ಮಾಜಿ ಸೈನಿಕರಿಗಾಗಿ ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್ ಅಂಡ್ ಸೆಂಟರ್, ಬೆಂಗಳೂರು ಇಲ್ಲಿ ಫೆ 27 ರಂದು ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ ಮಾಜಿ ಸೈನಿಕರು, ಮಾಜಿ ಸೈನಿಕ ಗುರುತಿನ ಚೀಟಿ ಮತ್ತು ಬಯೊಡೇಟದ 5 ಪ್ರತಿಗಳೊಂದಿಗೆ ನೇರವಾಗಿ ಭಾಗವಹಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 020-26341217/011-20863432 ಹಾಗೂ ವೆಬ್ಸೈಟ್ drzspne@desw.gov.in,/ seopadgr@desw.gov.in […]
ಬೆಂಗಳೂರು ಮಹಿಳೆಯರಿಗೆ ಗುಡ್ ನ್ಯೂಸ್: ಪ್ರೇಮಿಗಳ ದಿನದಂದೇ ಆರಂಭವಾಗಲಿದೆ ಸಖಿ ಆಟೋ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಮಹಿಳೆಯರಿಗೆ ಇಲ್ಲೊಂದು ಖುಷಿ ಸುದ್ದಿಯಿದೆ. ಮಹಿಳಾ ಸಬಲೀಕರಣ ಹಾಗೂ ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಸಖಿ ಆಟೋ ಎಂಬ ವಿಶೇಷ ಆಟೋ ಆರಂಭವಾಗಲಿದೆ. ಇದೇ ಫೆಬ್ರವರಿ 14 ರಂದು ಪ್ರೇಮಿಗಳ ದಿನದಂದೆ ಈ ಆಟೋ ಸೇವೆ ಆರಂಭವಾಗಲಿದೆ. ಮಹಿಳಾ ಚಾಲಕಿಯರೇ ಇರಲಿರುವ ಈ ಆಟೋ ಮಹಿಳೆಯರಿಗಾಗಿಯೇ ಕಾರ್ಯನಿರ್ವಹಿಸಲಿದೆ. ಮಹಿಳೆಯರೇ ಮಹಿಳೆಯರಿಗಾಗಿ ಆರಂಭಿಸಲಿರುವ ವಿಶೇಷ ಸಾರಿಗೆ ವ್ಯವಸ್ಥೆ ಇದಾಗಿದೆ. ಸಖಿ ಆಟೋದಲ್ಲಿ ಮೊದಲ 2 ಕಿ.ಮೀ.ಗೆ 50 ರೂ. ಶುಲ್ಕವಿದ್ದು, ನಂತರದ ಪ್ರತಿ ಕಿಲೋಮೀಟರ್ಗೆ […]
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಗೆದ್ದು ಬೀಗುತ್ತಿರುವ ದಕ್ಷಿಣ ಆಫ್ರಿಕಾ ತಂಡವು ಇಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಕೆನಡಾ ವಿರುದ್ಧ ಸೆಣಸುವ ಮೂಲಕ ತನ್ನ ಟಿ20 ವಿಶ್ವಕಪ್ 2026ರ ಅಭಿಯಾನವನ್ನು ಆರಂಭಿಸಲಿದೆ. ಕಳೆದ ಟಿ20 ವಿಶ್ವಕಪ್ನಲ್ಲಿ ರನ್ನರ್ ಅಪ್ ಆಗಿದ್ದ ಏಡನ್ ಮಾರ್ಕ್ರಾಮ್ ನೇತೃತ್ವದ ದಕ್ಷಿಣ ಆಫ್ರಿಕಾ ತಂಡವು ಈ ಬಾರಿ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದೆ. 2024ರ ವಿಶ್ವಕಪ್ ಫೈನಲ್ನಲ್ಲಿ ಭಾರತದ ವಿರುದ್ಧ ಅನುಭವಿಸಿದ ಸೋಲಿನ ಕಹಿ ನೆನಪನ್ನು ಮರೆತು ಹೊಸ ಹುರುಪಿನೊಂದಿಗೆ ಕಣಕ್ಕಿಳಿಯಲು ಹರಿಣಗಳ ಪಡೆ […]
ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ : ಫೆ. 16ರ ವರೆಗೆ ಗಡುವು ವಿಸ್ತರಣೆ
ಚಿತ್ರದುರ್ಗ : ಚಿತ್ರದುರ್ಗ ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ಎಲ್ಲಾ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮಾನ್ಯತೆ ನವೀಕರಣಕ್ಕೆ ಇದೇ ಫೆಬ್ರವರಿ 16ರ ವರೆಗೆ ಕಾಲಾವಕಾಶ ವಿಸ್ತರಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ. ಪ್ರತಿ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳನ್ನು ನಡೆಸಲು ಸಕ್ಷಮ ಪ್ರಾಧಿಕಾರದಿಂದ ಮಾನ್ಯತೆ ಪಡೆಯುವುದು ಕಡ್ಡಾಯವಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಮಾನ್ಯತೆ ನವೀಕರಿಸಲು 2026ರ ಫೆಬ್ರವರಿ 16 ರವರೆಗೆ ಅವಧಿ ವಿಸ್ತರಿಸಿ ಆದೇಶಿಸಿದ್ದಾರೆ. ಚಿತ್ರದುರ್ಗ […]
ಬೆಂಗಳೂರಿನ ಜಪಾನ್, ಡಚ್ ರಾಯಭಾರ ಕಚೇರಿಗೆ ಬಾಂಬ್ ಬೆದರಿಕೆ: ತಮಿಳುನಾಡು ಸಿಎಂ ಪುತ್ರನ ಹೆಸರು ಉಲ್ಲೇಖ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಜಪಾನ್ ಹಾಗೂ ಡಚ್ ರಾಯಭಾರ ಕಚೇರಿಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಕಳೆದ ಹತ್ತು ದಿನಗಳಲ್ಲಿ ಬಂದಿರುವ ಎರಡನೇ ಬಾಂಬ್ ಬೆದರಿಕೆ ಕರೆ ಇದಾಗಿದೆ. ಬೆಂಗಳೂರು ನಗರದಲ್ಲಿರುವ ಜಪಾನ್ ಹಾಗೂ ಡಚ್ ರಾಯಭಾರ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಬಾಂಬ್ ಬೆದರಿಕೆ ಇ-ಮೇಲ್ ನಲ್ಲಿ ಅಪರಿಚಿತರು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಪುತ್ರ, ಡಿಸಿಎಂ ಉದಯನಿಧಿ ಸ್ಟಾಲಿನ್ ಹೆಸರನ್ನು ಉಲ್ಲೇಖಿಸಿದ್ದಾರೆ. ಕೋರಮಂಡಲ್ ಹೋಟೆಲ್ ನ ಕೊಠಡಿ ಸಂಖ್ಯೆ 536ರಲ್ಲಿ […]
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲಿಸಿದ್ದ ಸ್ನೇಹಮಯಿ ಕೃಷ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಹಿನ್ನಡೆಯಾಗಿದ್ದರೂ, ಮತ್ತೆ ಹೋರಾಟ ಮುಂದುವರೆಸಿರುವ ಸ್ನೇಹಮಯಿ ಕೃಷ್ಣ ಇದೀಗ ಮತ್ತೊಂದು ಗಂಭೀರ ಆರೋಪ ಮಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ, ಮುಡಾ ಹಗರಣದ ತನಿಖೆ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳಿಗೆ ಕೋಟಿ ಕೋಟಿ ಲಂಚ ನೀಡಲಾಗಿದೆ. ಹಾಗಾಗಿಯೇ ಮುಡಾ ಹಗರಣದಲ್ಲಿ ಲೋಕಾಯುಕ್ತ ಬಿ ರಿಪೋರ್ಟ್ ನೀಡಿದೆ ಎಂದು ಗಂಭೀರ ಆರೋಪ […]
ಸ್ಟಾರ್ ಗಾಯಕಿ ರಾಣು ಮೊಂಡಲ್ ಬದುಕು ಈಗ ಹೀಗಿದೆ ನೋಡಿ: ನೆರೆಯವರ ದಾನವೇ ಇವರ ಜೀವನಾಧಾರ
ಬಾಲಿವುಡ್ ಎಂಬ ಬಣ್ಣದ ಲೋಕ ಎಷ್ಟು ಅದ್ಭುತವೋ ಅಷ್ಟೇ ನಿಗೂಢ. ಇಲ್ಲಿ ರಾತ್ರೋರಾತ್ರಿ ಸ್ಟಾರ್ ಆದವರು ಅಷ್ಟೇ ವೇಗವಾಗಿ ಮರೆಯಾದ ಉದಾಹರಣೆಗಳು ಸಾಕಷ್ಟಿವೆ. ಇದಕ್ಕೆ ತಾಜಾ ಉದಾಹರಣೆ ಎಂದರೆ ಗಾಯಕಿ ರಾಣು ಮೊಂಡಲ್. 2019ರಲ್ಲಿ ಪಶ್ಚಿಮ ಬಂಗಾಳದ ರಣಘಾಟ್ ರೈಲ್ವೇ ನಿಲ್ದಾಣದಲ್ಲಿ ಲತಾ ಮಂಗೇಶ್ಕರ್ ಅವರ ಹಾಡನ್ನು ಹಾಡುವ ಮೂಲಕ ಇಡೀ ದೇಶದ ಗಮನ ಸೆಳೆದಿದ್ದ ಈ ಪ್ರತಿಭೆ, ಇಂದು ಮತ್ತೆ ಹಳೆಯ ಬಡತನದ ಕೂಪಕ್ಕೆ ತಳ್ಳಲ್ಪಟ್ಟಿದ್ದಾರೆ. ಸಂಗೀತ ನಿರ್ದೇಶಕ ಹಿಮೇಶ್ ರೇಶಮಿಯಾ ಅವರು ರಾಣು ಮೊಂಡಲ್ […]
ಹೆದ್ದಾರಿಗಳ ಸುಧಾರಣೆ: ಖಡಕ್ ಸೂಚನೆ ಕೊಟ್ಟು, ಗಡುವು ನೀಡಿದ ಮೋದಿ
ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಬಜೆಟ್ 2026ರ ಬಳಿಕ ಭಾರತದ ರಾಷ್ಟ್ರೀಯ ಹೆದ್ದಾರಿಗಳ ಸುಧಾರಣೆ ಕಡೆ ಗಮನಹರಿಸಿದ್ದಾರೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಖಾತೆ ಅಧಿಕಾರಿಗಳಿಗೆ ಅವರು ಖಡಕ್ ಸೂಚನೆಗಳನ್ನು ನೀಡಿದ್ದಾರೆ. ದೇಶದಲ್ಲಿ ಹೆದ್ದಾರಿಗಳು ಸುಧಾರಣೆಯಾಗಬೇಕಿದೆ. ಕಾಮಗಾರಿಗಳು ಬೇಗ ಮುಗಿಯಬೇಕಿದೆ ಎಂದು ನಿರ್ದೇಶನ ನೀಡಿ ಮೇ ತಿಂಗಳ ಗುಡುವನ್ನು ಕೊಟ್ಟಿದ್ದಾರೆ. ಸರಿಯಾಗಿ ಕಾಮಗಾರಿ ನಿರ್ವಹಣೆ ಮಾಡದ ಕಾಂಟ್ರಾಕ್ಟರ್ಗಳನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ನಿರ್ದೇಶಿಸಿದ್ದಾರೆ. ಹೆದ್ದಾರಿಗಳ ಗುಣಮಟ್ಟವನ್ನು ಸುಧಾರಿಸಲು ಒತ್ತು ನೀಡುವಂತೆ ಸಚಿವಾಲಯಕ್ಕೆ ಪ್ರಧಾನಿ ನರೇಂದ್ರ ಮೋದಿ […]
ಬೆಂಗಳೂರು: ಕಳೆದ 12 ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿರುವ ಖಾಲಿ ಟ್ರಂಕ್ ಅನ್ನು ಸಂಸದ ತೇಜಸ್ವಿ ಸೂರ್ಯ ಅವರು ಹಿಡಿದಿರುವುದು ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಸುರೇಶ್, ಮೆಟ್ರೋ ದರ ಏರಿಕೆ ವಿಚಾರವಾಗಿ ತೇಜಸ್ವಿ ಸೂರ್ಯ ಅವರು ಮೆಟ್ರೋ ನಿಲ್ದಾಣ ಬಳಿ ಖಾಲಿ ಟ್ರಂಕ್ ಹಿಡಿದು ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಮೆಟ್ರೋ ದರ ಏರಿಕೆ ಬಗ್ಗೆ ಅವರು ಮಾತನಾಡುವುದೇನೆ ಇದ್ದರೂ ಅದು ಪ್ರಧಾನಮಂತ್ರಿಗಳ ಮುಂದೆ ಮಾತನಾಡಲಿ. ಮೆಟ್ರೋ […]
ತನ್ನದೇ ನಟನೆಯ ಸಿನಿಮಾ ಪ್ರಚಾರಕ್ಕೆ ಹೋಗದ ಬಗ್ಗೆ ಕಾರಣ ಹೇಳಿದ ಗಿಲ್ಲಿ ನಟ
ಬೆಂಗಳೂರು: ಬಿಗ್ ಬಾಸ್ ಸೀಜನ್- 12ರ ವಿನ್ನರ್ ಗಿಲ್ಲಿ ನಟನ ವಿರುದ್ಧ ಸಿನಿಮಾ ಪ್ರಚಾರಕ್ಕೆ ಬರಲಿಲ್ಲ ಎಂಬ ಕಾರಣಕ್ಕೆ ‘ಸರ್ಕಾರಿ ಶಾಲೆ ಹೆಚ್8’ ಸಿನಿಮಾ ನಿರ್ದೇಶಕರು ಫಿಲ್ಮ್ ಚೇಂಬರ್ ಗೆ ದೂರು ನೀಡಿದ್ದರು. ಇದೇ ವಿಚಾರವಾಗಿ ಗಿಲ್ಲಿ ನಟ ಪ್ರತಿಕ್ರಿಯೆ ನೀಡಿದ್ದಾರೆ. ಸರ್ಕಾರಿ ಶಾಲೆ ಹೆಚ್8 ಸಿನಿಮಾದಲ್ಲಿ ಗಿಲ್ಲಿ ನಟ ಅಭಿನಯಿಸಿದ್ದಾರೆ. ಆದರೆ ಅದರ ಪ್ರಚಾರದಲ್ಲಿ ಅವರು ಭಾಗಿಯಾಗಿಲ್ಲ. ಹಾಗಾಗಿ ಗಿಲ್ಲಿ ವಿರುದ್ಧ ಚಿತ್ರತಂಡದವರು ಫಿಲ್ಮ್ ಚೇಂಬರ್ ಗೆ ದೂರು ನೀಡಿದ್ದರು. ಈ ಬಗ್ಗೆ ಪ್ರತಿಕ್ರ್ಯಿಸಿರುವ ಗಿಲ್ಲಿ, […]
ಸಾಲು-ಸಾಲು ಚುನಾವಣೆಗಳ ಹೊತ್ತಲ್ಲಿ ಮಹತ್ವದ ಬದಲಾವಣೆ ಮಾಡಿದ ಜೆಡಿಎಸ್!
ಸ್ಥಳೀಯ ಸಂಸ್ಥೆಗಳ ಚುನಾವಣೆ, ಎರಡು ಕ್ಷೇತ್ರಗಳ ಉಪ ಚುನಾವಣೆ ಮತ್ತು ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಚುನಾವಣೆಗಳ ಹಿನ್ನಲೆಯಲ್ಲಿ ಜಾತ್ಯಾತೀತ ಜನತಾದಳ (ಜೆಡಿಎಸ್) ಪಕ್ಷ ಸಂಘಟನೆಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಈ ಕುರಿತು ಜೆಡಿಎಸ್ ಪಕ್ಷದ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಲಾಗಿದೆ. 2025ರ ನವೆಂಬರ್ನಲ್ಲಿ ಜೆಡಿಎಸ್ ರಾಷ್ಟ್ರಾಧ್ಯಕ್ಷರಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ರಾಜ್ಯಾಧ್ಯಕ್ಷರಾಗಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವಿರೋಧ ಆಯ್ಕೆಯಾಗಿದ್ದರು. ಸೋಮವಾರ ಪಕ್ಷದ ಫೇಸ್ಬುಕ್ ಖಾತೆಯಲ್ಲಿ ಈ ಕೆಳಕಂಡ ಜಿಲ್ಲೆಗಳಲ್ಲಿ ನಡೆದ ಪಕ್ಷದ ಸಾಂಸ್ಥಿಕ ಚುನಾವಣೆಯಲ್ಲಿ […]
ಕಾಲುವೆ ಬಳಿ ಬಹಿರ್ದೆಸೆಗೆ ಹೋಗಿದ್ದ ಯುವಕನ ಮೇಲೆ ಹಲ್ಲೆ: ಕೀಯಿಂದ ಕಣ್ಣು ಚುಚ್ಚಿದ ವ್ಯಕ್ತಿ: ದೃಷ್ಟಿ ಕಳೆದುಕೊಂಡ ಯುವಕ
ಭದೋಹಿ: ಕಾಲುವೆ ಬಳಿ ಬಹಿರ್ದೆಸೆಗೆ ಕುಳಿತಿದ್ದ ಯುವಕನನ್ನು ವ್ಯಕ್ತಿಯೋರ್ವ ಹಿಗ್ಗಾಮುಗ್ಗಾ ಥಳಿಸಿದ್ದಲ್ಲದೇ ಬೈಕ್ ಕೀಯಿಂದ ಆತನ ಕಣ್ಣು ಚ್ಚಿರುವ ಘಟನೆ ಉತ್ತರ ಒರದೇಶದ ಔರೈ ಪ್ರದೇಶದಲ್ಲಿ ನಡೆದಿದೆ. 20 ವರ್ಷದ ರಾಹುಲ್ ಹಲ್ಲೆಗೊಳಗಾದ ಯುವಕ. ಗಾಯಾಳುವನ್ನು ವಾರಣಾಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಣ್ಣು ದೃಷ್ಟಿ ಕಳೆದುಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಕಾಲುವೆ ಬಳಿ ಬಯಲಿನಲ್ಲಿ ಬಹಿರ್ದೆಸೆಗೆಂದು ಕುಳಿತಿದ್ದ. ಇದನ್ನು ಕಂಡು ಶಾಂಕರ್ ಎಂಬಾತ ಕಾಅಲುವೆ ಬಳಿ ಬಹಿರ್ದೆಸೆ ಮಾಡದಂತೆ ತಾಕೀತು ಮಾಡಿದ್ದ. ಇದೇ ವಿಚಾರವಾಗಿ ಇಬ್ಬರ ನಡುವೆ ಮಾತಿಗೆ ಮಾತು […]
ಇಡ್ಲಿ–ದೋಸೆಗೆ ಬ್ರೇಕ್: ಮಕ್ಕಳ ಲಂಚ್ ಬಾಕ್ಸ್ಗೆ ಸೂಪರ್ ಸಾಫ್ಟ್ ಆಲೂ ರೋಟಿ
ಬೆಂಗಳೂರು: ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಗೃಹಿಣಿಯರನ್ನು ಕಾಡುವ ದೊಡ್ಡ ಪ್ರಶ್ನೆಯೆಂದರೆ ತಿಂಡಿಗೆ ಏನು ಮಾಡುವುದು? ಇಡ್ಲಿ, ದೋಸೆ, ಉಪ್ಪಿಟ್ಟು ತಿಂದು ಮನೆಯವರಿಗೆ ಬೇಸರವಾಗಿದ್ದರೆ ಅಥವಾ ಮಕ್ಕಳ ಲಂಚ್ ಬಾಕ್ಸ್ಗೆ ಹೊಸದೇನನ್ನಾದರೂ ನೀಡಬೇಕೆಂಬ ಹಂಬಲವಿದ್ದರೆ, ನಿಮಗಾಗಿ ಇಲ್ಲಿದೆ ಒಂದು ಸೂಪರ್ ಐಡಿಯಾ ಅದೇ ರುಚಿಕರವಾದ ಆಲೂ ರೋಟಿ (Aloo Roti). ಉತ್ತರ ಭಾರತದ ಫೇಮಸ್ ಆಲೂ ಪರೋಟದ ಸರಳ ಹಾಗೂ ತೆಳುವಾದ ರೂಪವೇ ಈ ಆಲೂ ರೋಟಿ. ಇದು ಮಾಡುವ ವಿಧಾನ ಸುಲಭ ಮಾತ್ರವಲ್ಲ, ಅಷ್ಟೇ ಪೌಷ್ಟಿಕಾಂಶಯುಕ್ತವೂ […]
ಕರ್ನಾಟಕ ಬಜೆಟ್ 2026: ಸಾರಿಗೆ ಇಲಾಖೆ ನಿರೀಕ್ಷೆಗಳು
ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ಬಜೆಟ್ 2026 ಪೂರ್ವ ತಯಾರಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಮಾರ್ಚ್ ತಿಂಗಳಿನಲ್ಲಿ ಅವರು 2026-27ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಕರ್ನಾಟಕ ಸರ್ಕಾರ ತನ್ನ ಮಹತ್ವದ ‘ಶಕ್ತಿ’ ಯೋಜನೆಗೆ ಅನುದಾನ ನೀಡುವ ಜೊತೆಗೆ ಸಾರಿಗೆ ಇಲಾಖೆಯ ಇತರ ಅಂಶಗಳತ್ತಲೂ ಗಮನ ಹರಿಸಬೇಕಿದೆ. ನೇಮಕಾತಿ, ಹೊಸ ಬಸ್ ಖರೀದಿ, ಹೊಸ ಬಸ್ ನಿಲ್ದಾಣಗಳ ನಿರ್ಮಾಣದತ್ತಲೂ ಬಜೆಟ್ನಲ್ಲಿ ಚಿತ್ತ ಹರಿಸಲಿದೆ. ಹಾಗಾದರೆ ಈ ಬಾರಿಯ ಬಜೆಟ್ನಲ್ಲಿ ಸಾರಿಗೆ ಇಲಾಖೆ ನಿರೀಕ್ಷೆಗಳೇನು?. ಕೊಡಗು ಜಿಲ್ಲೆಯ […]
BIG NEWS: ಕೆನಡಾದಲ್ಲಿ ಕನ್ನಡಿಗನ ಗುಂಡಿಟ್ಟು ಹತ್ಯೆಗೈದ ದುಷ್ಕರ್ಮಿಗಳು
ಬೆಂಗಳೂರು: ಕೆನಡಾದಲ್ಲಿ ಕನ್ನಡಿಗನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 37 ವರ್ಷದ ಚಂದನ್ ಕುಮಾರ್ ಹತ್ಯೆಯಾದ ವ್ಯಕ್ತಿ. ಬೆಂಗಳೂರಿನ ನೆಲಮಂಗಲ ಮೂಲದ ತ್ಯಾಮಗೊಂಡ್ಲುವಿನ ನಿವಾಸಿ. ಕಳೆದ 6 ವರ್ಷಗಳಿಂದ ಚಂದನ್ ಕುಮಾರ್ ಕೆನಡಾದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಭಾನುವಾರ ರಾತ್ರಿ 9 ಗಂಟೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಚಂದನ್ ಕುಮಾರ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಹಲವು ಗುಂಡುಗಳು ಚಂದನ್ ದೇಹವನ್ನು ಹೊಕ್ಕಿವೆ. ಘಟನಾ ಸ್ಥಳದಲ್ಲೇ […]
ಮಾಲೀಕರ ವಿವಾಹ ವಾರ್ಷಿಕೋತ್ಸವಕ್ಕೆ ಮನೆಗೆಲಸದ ಮಹಿಳೆಯಿಂದ ಸ್ವೀಟ್ ಸರ್ಪ್ರೈಸ್ ವಿಡಿಯೋ ನೋಡಿ ಫಿದಾ ಆದ ನೆಟ್ಟಿಗರು
ಬೆಂಗಳೂರು: ಸಿಲಿಕಾನ್ ಸಿಟಿಯ ಬ್ಯುಸಿ ಲೈಫ್ನಲ್ಲಿ ಸಂಬಂಧಗಳು ಯಾಂತ್ರಿಕವಾಗುತ್ತಿವೆ ಎಂಬ ದೂರಿರುವಾಗಲೇ, ಇಲ್ಲೊಂದು ಹೃದಯಸ್ಪರ್ಶಿ ಘಟನೆ ಬೆಳಕಿಗೆ ಬಂದಿದೆ. ಮನೆಯ ಕೆಲಸದವರನ್ನು ಕೇವಲ ಕೆಲಸದವರು ಎಂದು ನೋಡದೆ ಅವರಲ್ಲಿ ದೈವತ್ವ ಮತ್ತು ಪ್ರೀತಿಯನ್ನು ಕಂಡ ದಂಪತಿಗಳ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ನಡೆದಿದ್ದೇನು?ಬೆಂಗಳೂರಿನ ನೇಹಾ ಹರ್ಚಂದಾನಿ ಎಂಬುವವರು ತಮ್ಮ ಮನೆಯಲ್ಲಿ ಕೆಲಸ ಮಾಡುವ ಮಹಿಳೆಯನ್ನು ಪ್ರೀತಿಯಿಂದ ದೀದಿ ಎಂದೇ ಕರೆಯುತ್ತಾರೆ. ಇತ್ತೀಚೆಗೆ ನೇಹಾ ಅವರು ತಮ್ಮ ವಿವಾಹ ವಾರ್ಷಿಕೋತ್ಸವದ ಬಗ್ಗೆ ದೀದಿಯ ಬಳಿ […]
ನವದೆಹಲಿ: ಇತ್ತೀಚಿನ ದಿನಗಳಲ್ಲಿ ಮಕ್ಕಳ ಮನಸ್ಥಿತಿ ಕ್ಷುಲ್ಲಕ ಕಾರಣಕ್ಕೂ ಸೇಡು ತೀರಿಸಿಕೊಳ್ಳುವುದು, ಅವಮಾನ ಎಂದು ಸಾವಿಗೆ ಶರಣಗುವಂತಹ ಸ್ಥಿತಿಗೆ ತಲುಪುತ್ತಿರುವುದು ಆತಂಕಕಾರಿ ಬೆಳವಣಿಗೆ. ಇಲ್ಲೋರ್ವ ವಿದ್ಯಾರ್ಥಿ, ವಿದ್ಯಾರ್ಥಿನಿ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದು, ಬಳಿಕ ತಾನೂ ಗುಂಡು ಹಾರಾಸಿಕೊಂಡು ಆತ್ಮಹತ್ಯೆ ಶರಣಾಗಿರುವ ಘಟನೆ ನಡೆದಿದೆ. ಪಂಜಾಬ್ ನ ತರಾನ್ ತರಾನ್ ಜಿಲ್ಲೆಯ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. ಶಾಲೆಯ ಕ್ಲಾಸ್ ರೂಂ ನಲ್ಲಿ ವಿದ್ಯಾರ್ಥಿಯೊಬ್ಬ ಪಕ್ಕದಲ್ಲಿದ್ದ ವಿದ್ಯಾರ್ಥಿನಿಯನ್ನು ಗುಂಡಿಟ್ಟು ಕೊಂದಿದ್ದಾನೆ. ಕ್ಷಣ ಮಾತ್ರದಲ್ಲಿಯೇ ತನ್ನ ತಲೆಗೂ […]
ಕೇವಲ ೪ ರನ್ ಅಂತರದಲ್ಲಿ ಸೋತರೂ ವಿಶ್ವದ ಮನಗೆದ್ದ ನೇಪಾಳ; ವೆಸ್ಟ್ ಇಂಡೀಸ್ಗೆ ಕಾಡುತ್ತಿದೆ ನೇಪಾಳಿ ಪಡೆಯ ಭೀತಿ
ವಿಶ್ವಕಪ್ನ ತನ್ನ ಮೊದಲ ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್ ತಂಡಕ್ಕೆ ಬೆವರು ಇಳಿಸಿದ ನೇಪಾಳ, ಇಡೀ ವಿಶ್ವದ ಗಮನ ಸೆಳೆದಿದೆ. ೧೮೫ ರನ್ಗಳ ಬೃಹತ್ ಗುರಿ ಬೆನ್ನಟ್ಟಿದ ನೇಪಾಳ, ಅಂತಿಮ ಎಸೆತದವರೆಗೂ ಹೋರಾಡಿ ೧೮೦ ರನ್ ಗಳಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ಮನ ಗೆದ್ದಿದೆ. ದಕ್ಷಿಣ ಆಫ್ರಿಕಾದ ವೇಗದ ಮಾಂತ್ರಿಕ ಡೇಲ್ ಸ್ಟೇನ್ ಕೂಡ ನೇಪಾಳದ ಪ್ರದರ್ಶನಕ್ಕೆ ಫಿದಾ ಆಗಿದ್ದು, ಆ ತಂಡಕ್ಕೆ ತರಬೇತಿ ನೀಡಲು ಆಸಕ್ತಿ ವ್ಯಕ್ತಪಡಿಸಿದ್ದಾರೆ. ವೇಳಾಪಟ್ಟಿ ಮತ್ತು ಸ್ಥಳ: ನೇಪಾಳ ತಂಡವು ತನ್ನ ಲೀಗ್ […]
ಶ್ರೀಲಂಕಾದ ಡಿಜಿಟಲ್ ವೀಸಾ: ಇನ್ನು ದ್ವೀಪ ರಾಷ್ಟ್ರದ ಪ್ರವಾಸ ಸುಲಭ
ಸಮುದ್ರ ತೀರ, ಬೆಟ್ಟ-ಗುಡ್ಡಗಳು, ಹಸಿರು ಪರಿಸರದ ಮೂಲಕ ಶ್ರೀಲಂಕಾ ವಿದೇಶದ ಪ್ರವಾಸಿಗರನ್ನು ಬೆರಗುಗೊಳಿಸುತ್ತದೆ, ಸೆಳೆಯುತ್ತಿದೆ. ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾದ ಶ್ರೀಲಂಕಾ ಈಗ ಪ್ರವಾಸ ಮತ್ತು ಅಲ್ಲಿ ಕೆಲಸ ಮಾಡಲು ಇಚ್ಛಿಸುವ ಜನರ ಅನುಕೂಲಕ್ಕಾಗಿ ಹೊಸ ಅವಕಾಶ ನೀಡಿದೆ, ದೇಶವು ಅಧಿಕೃತವಾದ ತನ್ನ ಡಿಜಿಟಲ್ ನೋಮ್ಯಾಡ್ ವೀಸಾ ಘೋಷಣೆ ಮಾಡಿದೆ. ಇದು ವಿದೇಶಿ ವೃತ್ತಿಪರರಿಗೆ ಒಂದು ವರ್ಷದವರೆಗೆ ದ್ವೀಪದಲ್ಲಿ ವಾಸಿಸಲು ಮತ್ತು ಕೆಲಸ ಮಾಡಲು ಅವಕಾಶ ನೀಡುತ್ತದೆ. ಈ ಹೊಸ ವೀಸಾ ಪ್ರಯಾಣ ಮತ್ತು ದೀರ್ಘಾವಧಿಯ ವಾಸ್ತವ್ಯವನ್ನು ಉತ್ತೇಜಿಸುವ ಮೂಲಕ […]
ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಖಾಲಿ ಟ್ರಂಕ್ ಹಿಡಿದು ಮೆಟ್ರೋದಲ್ಲಿ ಪ್ರತಿಭಟನೆ ಮಾಡಿದ್ದು, ಈ ಬಗ್ಗೆ ಮಾಜಿ ಸಂಸದ ಡಿ.ಕೆ.ಸುರೇಶ್ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಸುರೇಶ್, ತೇಜಸ್ವಿ ಸೂರ್ಯ ಖಾಲಿ ಟ್ರಂಕ್ ನ್ನು ಹಿಡಿದು ರಾಜ್ಯ ಸರ್ಕಾರದ ವಿರುದ್ಧವಲ್ಲ, ಕೇಂದ್ರ ಸರ್ಕಾರದ ವಿರುದ್ಧವೇ ಪ್ರತಿಭಟಿಸಿದರೆ ಒಳಿತು. ಅವರು ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿರುವ ಕೊಡುಗೆ ಖಾಲಿ ಟ್ರಂಕ್ ಎಂಬುದನ್ನು ಪರೋಕ್ಷವಾಗಿ ತೋರಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ತೇಜಸ್ವಿ ಸೂರ್ಯ ತಮ್ಮ ಬದ್ಧತೆಯನ್ನು ದೆಹಲಿಯಲ್ಲಿ […]

19 C