SENSEX
NIFTY
GOLD
USD/INR

Weather

17    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source

BREAKING: ರಾಜ್ಯದಲ್ಲಿ ಮತ್ತೊಂದು ಘೋರ ದುರಂತ: ಲಾರಿ, 2 ಗೂಡ್ಸ್ ವಾಹನ ಮಧ್ಯೆ ಸರಣಿ ಅಪಘಾತ: 5 ಜನ ಸಾವು

ರಾಯಚೂರು: ಲಾರಿ, ಎರಡು ಗೂಡ್ಸ್ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಐದು ಜನ ಸಾವನ್ನಪ್ಪಿದ್ದಾರೆ. ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಕನ್ನಾರಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದು, ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮೃತರು, ಗಾಯಾಳುಗಳ ಗುರುತು ಪತ್ತೆಯಾಗಿಲ್ಲ. ಬೊಲೆರೊ ಪಿಕಪ್ ವಾಹನ, ಟಾಟಾ ಏಸ್ ಗೆ ಲಾರಿ ಡಿಕ್ಕಿ ಹೊಡೆದಿದೆ. ಬೊಲೆರೊ ಪಿಕಪ್ ವಾಹನ, ಟಾಟಾ ಏಸ್ ವಾಹನಗಳಲ್ಲಿ ಕುರಿಗಳನ್ನು ತುಂಬಿಸಿಕೊಂಡು ಸಾಗಿಸಲಾಗುತ್ತಿತ್ತು. ಒಂದರ ಹಿಂದೆ ಒಂದರಂತೆ […]

ಕನ್ನಡ ದುನಿಯಾ 20 Jan 2026 10:09 pm

BREAKING: ಜಿಬಿಎ ಚುನಾವಣೆಗೆ ಬಿಜೆಪಿ ಉಸ್ತುವಾರಿಗಳ ನೇಮಕ: ಶೋಭಾ ಕರಂದ್ಲಾಜೆ ಕೇರಳ ಸಹ ಉಸ್ತುವಾರಿ

ನವದೆಹಲಿ: ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಪಾಲಿಕೆಗಳ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ಉಸ್ತುವಾರಿಗಳನ್ನು ಪಕ್ಷದ ಹೈಕಮಾಂಡ್ ನೇಮಕ ಮಾಡಿದೆ. ಜಿಬಿಎ ಚುನಾವಣಾ ಉಸ್ತುವಾರಿಯಾಗಿ ರಾಮ್ ಮಾಧವ್ ಅವರನ್ನು ನೇಮಕ ಮಾಡಲಾಗಿದೆ. ಸಹ ಉಸ್ತುವಾರಿಗಳಾಗಿ ಸತೀಶ್ ಪೂನಿಯಾ ಮತ್ತು ಸಂಜಯ್ ಉಪಾಧ್ಯಾಯ ಅವರನ್ನು ನೇಮಕ ಮಾಡಲಾಗಿದೆ. ಅದೇ ರೀತಿ ಕೇರಳ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ವಿನೋದ್ ತಾವ್ಡೆ ನೇಮಕ ಮಾಡಲಾಗಿದೆ. ಸಹ ಉಸ್ತುವಾರಿಯಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ನೇಮಕ ಮಾಡಲಾಗಿದೆ. ಬಿಜೆಪಿ ನೂತನ ಅಧ್ಯಕ್ಷ […]

ಕನ್ನಡ ದುನಿಯಾ 20 Jan 2026 9:52 pm

ಮಹಿಳೆಯರ ಒಳ ಉಡುಪು ಕದ್ದು ಅವನ್ನು ಧರಿಸಿ ಫೋಟೋ ತೆಗೆದುಕೊಳ್ಳುತ್ತಿದ್ದ ವಿಕೃತ ಅರೆಸ್ಟ್

ಬೆಂಗಳೂರು: ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತನನ್ನು ಬಂಧಿಸಲಾಗಿದೆ. ಬೆಂಗಳೂರಿನ ಹೆಬ್ಬಗೋಡಿಯ ವಿದ್ಯಾನಗರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಕೇರಳ ಮೂಲದ ಅಮಲ್(23) ಬಂಧಿತ ಆರೋಪಿ. ಈತ ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿದ್ದ. ಬಳಿಕ ಒಳ ಉಡುಪು ಧರಿಸಿ ಫೋಟೋ ತೆಗೆದುಕೊಳ್ಳುತ್ತಿದ್ದ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

ಕನ್ನಡ ದುನಿಯಾ 20 Jan 2026 9:44 pm

ಪದವಿ, ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕೌಶಲ ಕಲಿಕೆ ಆರಂಭ

ಬೆಂಗಳೂರು: 95 ಸಾವಿರ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕೌಶಲ ಕಲಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. ಬ್ರಿಟಿಷ್ ಕೌನ್ಸಿಲ್, ಮೈಕ್ರೋಸಾಫ್ಟ್ ಸಹಯೋಗದಲ್ಲಿ ಈ ಬಗ್ಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. 31 ಸರ್ಕಾರಿ ಪದವಿ ಕಾಲೇಜುಗಳು, 29 ಪಾಲಿಟೆಕ್ನಿಕ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕೌಶಲ ಕಲಿಕೆ ಆರಂಭಿಸಲಾಗುತ್ತಿದೆ. 95,000 ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ. 16 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಈಗಾಗಲೇ ಯೋಜನೆ ಜಾರಿಯಲ್ಲಿದ್ದು, ವಿದ್ಯಾರ್ಥಿಗಳಿಗೆ ಉನ್ನತ ಗುಣಮಟ್ಟದ ಅಧ್ಯಯನ ಸಂಪನ್ಮೂಲಗಳು, ಡಿಜಿಟಲ್ ಸಾಧನಗಳು, ಇಂಗ್ಲಿಷ್ ತರಬೇತಿ […]

ಕನ್ನಡ ದುನಿಯಾ 20 Jan 2026 9:35 pm

ಪಿಯುಸಿ, ಐಟಿಐ, ಪದವಿ ಇತರೆ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜನವರಿ 23 ರಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 1.30ರ ವರೆಗೆ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಯೋಜಿಸಲಾಗಿದೆ. ಪಿ.ಯು.ಸಿ., ಐಟಿಐ(ಯಾವುದೇ ವೃತ್ತಿ), ಡಿಪ್ಲೊಮಾ ಮೆಕ್ಯಾನಿಕಲ್, ಡಿಪ್ಲೊಮಾ ಎಲೆಕ್ಟ್ರಿಕಲ್, ಇತರೆ ಪದವಿ ವಿದ್ಯಾರ್ಹತೆ ಹೊಂದಿದ 18 ರಿಂದ 30 ವರ್ಷದೊಳಗಿನ ನಿರುದ್ಯೋಗಿ ಪುರಷರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ 3 ಪ್ರತಿಗಳೊಂದಿಗೆ ಮತ್ತು ಆಧಾರ್ ಕಾರ್ಡಿನ ಪ್ರತಿ, ಬಯೋಡೇಟಾ(ರೆಸ್ಯುಮ್) ಹಾಗೂ ಪಾಸ್‌ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ […]

ಕನ್ನಡ ದುನಿಯಾ 20 Jan 2026 8:49 pm

ರೇಷ್ಮೆ ಸೀರೆಗಾಗಿ ಮುಂಜಾನೆ 4 ಗಂಟೆಗೆ ಮಹಿಳೆಯರ ಕ್ಯೂ, ವಿಡಿಯೋ ವೈರಲ್

ಮಂಗಳವಾರ ಮುಂಜಾನೆ ಬೆಂಗಳೂರು ನಗರದ ಹಲವು ಮಹಿಳೆಯರು ಗಡಿಬಿಡಿಯಲ್ಲಿದ್ದರು. ಮಕ್ಕಳನ್ನು ಶಾಲೆಗೆ, ಆಫೀಸಿಗೆ ಕಳಿಸುವ, ಗಂಡನನ್ನು ಕಚೇರಿಗೆ ಕಳಿಸಲು ಅಲ್ಲ. ಸೀರೆ ಕೊಳ್ಳಲು. ಹೌದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ವೈರಲ್ ಆಗಿದೆ. ಮಂಗಳವಾರ ಬೆಳಗ್ಗ 4 ಗಂಟೆಗೆ ನಗರದ ಬಹುತೇಕ ಜನರು ಸಿಹಿ ನಿದ್ದೆಯಲ್ಲಿದ್ದಾಗ ಕೆಎಸ್‌ಐಸಿ ಮಳಿಗೆಯ ಹೊರಗೆ ದೊಡ್ಡ ಸಾಲು ಇತ್ತು. ಸೂರ್ಯೋದಯವಾಗಿ ಅಂಗಡಿ ಬಾಗಿಲು ತೆರೆಯಲು ಇನ್ನೂ ಬಹಳ ಸಮಯವಿತ್ತು. ಆದರೆ ಕ್ಯೂ ಬೆಳೆಯುತ್ತಲೇ ಹೋಗಿತ್ತು. ಸರದಿಗಾಗಿ ಕಾಯುತ್ತಿದ್ದ ಮಹಿಳೆಯರು ಹ್ಯಾಂಡ್‌ಬ್ಯಾಗ್ ಹಿಡಿದು […]

ಕನ್ನಡ ದುನಿಯಾ 20 Jan 2026 8:46 pm

ರೈಲ್ವೇ ಇಲಾಖೆಯಲ್ಲಿ 22,000 ಹುದ್ದೆಗಳಿಗೆ ನೇಮಕಾತಿ: ಅರ್ಜಿ ಸಲ್ಲಿಸಲು ದಿನಾಂಕ ಪರಿಷ್ಕರಣೆ

ರೈಲ್ವೆ ನೇಮಕಾತಿ ಮಂಡಳಿ(RRB) ಗ್ರೂಪ್ D ನೇಮಕಾತಿಗಾಗಿ CEN ಸಂಖ್ಯೆ 09/2025 ರ ಅಡಿಯಲ್ಲಿ ಲೆವೆಲ್-1 ಹುದ್ದೆಗಳಿಗೆ ಟೈಮ್‌ಲೈನ್ ಅನ್ನು ಪರಿಷ್ಕರಿಸಿದೆ. 10 ನೇ ತರಗತಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು www.rrbapply.gov.in ನಲ್ಲಿರುವ ಅಧಿಕೃತ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಅಧಿಕೃತ ಅಧಿಸೂಚನೆಯ ಪ್ರಕಾರ, ಆನ್‌ಲೈನ್ ಅರ್ಜಿ ಸಲ್ಲಿಕೆ ದಿನಾಂಕವು ಹಿಂದಿನ 21 ಜನವರಿ 2026 ದಿನಾಂಕದ ಬದಲಿಗೆ 31 ಜನವರಿ 2026 ರಂದು ಪ್ರಾರಂಭವಾಗುತ್ತದೆ ಮತ್ತು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 20 ಫೆಬ್ರವರಿ 2026 ರ […]

ಕನ್ನಡ ದುನಿಯಾ 20 Jan 2026 8:14 pm

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಯುವಕನಿಗೆ 20 ವರ್ಷ ಜೈಲು, 50 ಸಾವಿರ ರೂ. ದಂಡ

ಶಿವಮೊಗ್ಗ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಯುವಕನಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್.ಟಿ.ಎಸ್.ಸಿ-1) ತೀರ್ಪು ನೀಡಿದೆ. 2022ನೇ ಸಾಲಿನಲ್ಲಿ ಶಿವಮೊಗ್ಗ ಗ್ರಾಮಾಂತರ ತಾಲ್ಲೂಕಿನ ವಾಸಿ 21 ವರ್ಷದ ಯುವಕನು 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ಈ ಬಗ್ಗೆ ಕುಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿ ತನಿಖೆ ಕೈಗೊಂಡಿರುತ್ತದೆ. ಪ್ರಕರಣದ ಆಗಿನ ತನಿಖಾಧಿಕಾರಿ […]

ಕನ್ನಡ ದುನಿಯಾ 20 Jan 2026 7:54 pm

BREAKING: ಶಬರಿಮಲೆ ಚಿನ್ನ ಕಳುವು ಪ್ರಕರಣ: ಪ್ರಮುಖ ಆರೋಪಿ ಉನ್ನಿಕೃಷ್ಣನ್ ಗೆ ಜಾಮೀನು ಮಂಜೂರು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಚಿನ್ನ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಶಬರಿಮಲೆ ಚಿನ್ನ ಕಳುವು ಪ್ರಕರಣದಲ್ಲಿ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ ಬಂಧನವಾಗಿ 90 ದಿನಗಳು ಕಳೆದರೂ ಇನ್ನೂ ಎಸ್ ಐಟಿ ಚಾರ್ಜ್ ಸೀಟ್ ಸಲ್ಲಿಕೆ ಮಾಡಿಲ್ಲ. 90 ದಿನಗಳಾದರೂ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಕೇರಳ ಕೋರ್ಟ್ ಉನ್ನಿಕೃಷ್ಣಗೆ ಜಾಮೀನು ಮಂಜೂರು ಮಾಡಿದೆ. ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದ 4.5 ಕೆಜಿ […]

ಕನ್ನಡ ದುನಿಯಾ 20 Jan 2026 7:51 pm

BREAKING: ಫ್ಯಾಮಿಲಿ ಪ್ಲಾನಿಂಗ್ ಆಪರೇಷನ್ ಬಳಿಕ ಮಹಿಳೆ ಸಾವು ಆರೋಪ: ಶವ ಇಟ್ಟು ಪ್ರತಿಭಟನೆ

ಬೀದರ್: ಫ್ಯಾಮಿಲಿ ಪ್ಲಾನಿಂಗ್ ಆಪರೇಷನ್ ಬಳಿಕ ಮಹಿಳೆಯ ಸಾವು ಕಂಡ ಆರೋಪ ಕೇಳಿಬಂದಿದೆ. ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಮೃತಪಟ್ಟಿರುವುದಾಗಿ ಆರೋಪಿಸಿ ಶವ ಇಟ್ಟು ಪ್ರತಿಭಟನೆ ನಡೆಸಲಾಗಿದೆ. ಪ್ರಜನನ ಆರೋಗ್ಯ ಕುಟುಂಬ ಯೋಜನೆ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗಿದೆ. ಬೀದರ್ ತಾಲೂಕಿನ ಚಿಮಕೋಡ್ ಗ್ರಾಮದ ಮೀನಾಕ್ಷಿ(30) ಮೃತಪಟ್ಟವರು. ಇಬ್ಬರು ಹೆಣ್ಣು ಮಕ್ಕಳು ಮತ್ತು ಇಬ್ಬರು ಗಂಡು ಮಕ್ಕಳನ್ನು ಹೊಂದಿದ್ದ ಮೀನಾಕ್ಷಿ ಮಕ್ಕಳಾಗದಂತೆ ಫ್ಯಾಮಿಲಿ ಪ್ಲಾನಿಂಗ್ ಆಪರೇಷನ್ ಮಾಡಿಸಿಕೊಂಡಿದ್ದರು. ಆದರೆ, ವೈದ್ಯರ ನಿರ್ಲಕ್ಷ್ಯದಿಂದ ಅವರು ಮೃತಪಟ್ಟಿರುವುದಾಗಿ ಬೀದರ್ ನ ಜನವಾಡ […]

ಕನ್ನಡ ದುನಿಯಾ 20 Jan 2026 7:46 pm

ಹಿರಿಯ ದಂಪತಿ ಅನುಮಾನಾಸ್ಪದ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ನಗರದಲ್ಲಿ ವೃದ್ಧ ದಂಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಭದ್ರಾವತಿ ಹಳೆನಗರ ಪೊಲೀಸ್ ಠಾಣಾ ವ್ಯಾಪ್ತಿಯ ಭೂತನಗುಡಿ ನಿವಾಸಿ ಚಂದ್ರಪ್ಪ(68), ಜಯಮ್ಮ(65) ಮೃತಪಟ್ಟ ದಂಪತಿ ಎಂದು ಹೇಳಲಾಗಿದೆ. ಮೃತದೇಹದ ಮೇಲೆ ಯಾವುದೇ ಗಾಯ, ಹಲ್ಲೆಯಾದ ಗುರುತುಗಳಿಲ್ಲ. ಶ್ವಾನದಳ, ಬೆರಳಚ್ಚು ತಜ್ಞರು ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಹಳೆನಗರ ಠಾಣೆಯಲ್ಲಿ ಸಂಶಯಾಸ್ಪದ ಸಾವಿನ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಸಾವಿನ ಕುರಿತಾಗಿ ತನಿಖೆ ಕೈಗೊಳ್ಳಲಾಗಿದೆ.

ಕನ್ನಡ ದುನಿಯಾ 20 Jan 2026 7:34 pm

ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದ ಕೇಂದ್ರದ ನಿರ್ಧಾರಗಳ ಬಗ್ಗೆ ಚರ್ಚಿಸಲು ಬೆಂಗಳೂರಿನಲ್ಲಿ ದಕ್ಷಿಣ ಭಾರತ ಮುಖ್ಯಮಂತ್ರಿಗಳ ಸಭೆ

ಬೆಂಗಳೂರು: ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿ ಕೈಗೊಳ್ಳುತ್ತಿರುವ ನಿರ್ಧಾರಗಳ ಕುರಿತಾಗಿ ಚರ್ಚೆ ನಡೆಸಲು ಬೆಂಗಳೂರಿನಲ್ಲಿ ದಕ್ಷಿಣ ಭಾರತದ ಮುಖ್ಯಮಂತ್ರಿಗಳ ಸಭೆ ಕರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ದಕ್ಷಿಣ ಭಾರತ ಸಮಾಜವಾದಿಗಳ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿ, ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದ ನಿರ್ಧಾರ ಕೈಗೊಳ್ಳುತ್ತಿದೆ. ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡುವ ರೀತಿಯಲ್ಲಿ ನಡೆದುಕೊಳ್ಳುತ್ತಿದೆ. ಇದರಿಂದ ರಾಜ್ಯಗಳಿಗೆ ಬರಬೇಕಾದ ಅನುದಾನ ಕಡಿತವಾಗಿದೆ. ದಕ್ಷಿಣ ಭಾರತದ ರಾಜ್ಯಗಳಿಗೆ ಹೆಚ್ಚಿನ ಅನ್ಯಾಯವಾಗುತ್ತಿದೆ. ಇದನ್ನು ಪ್ರಜಾಸತ್ತಾತ್ಮಕವಾಗಿಯೇ ಪ್ರಶ್ನಿಸಬೇಕಿದೆ ಎಂದು […]

ಕನ್ನಡ ದುನಿಯಾ 20 Jan 2026 7:13 pm

ಖರೀದಿದಾರರಿಗೆ ಬಿಗ್ ಶಾಕ್: 10 ಗ್ರಾಂಗೆ 1.5 ಲಕ್ಷ ರೂ. ಗಡಿ ದಾಟಿದ ಚಿನ್ನದ ದರ; ಕೆಜಿಗೆ 3.23 ಲಕ್ಷ ರೂ. ತಲುಪಿದ ಬೆಳ್ಳಿ

ನವದೆಹಲಿ: ಮಂಗಳವಾರ ರಾಷ್ಟ್ರೀಯ ರಾಜಧಾನಿಯಲ್ಲಿ ಚಿನ್ನದ ಬೆಲೆ ತೀವ್ರವಾಗಿ ಏರಿ, ಮೊದಲ ಬಾರಿಗೆ 1.5 ಲಕ್ಷ ರೂ. ಮಟ್ಟವನ್ನು ದಾಟಿದೆ. ಅಖಿಲ ಭಾರತ ಸರಾಫಾ ಅಸೋಸಿಯೇಷನ್ ​​ಪ್ರಕಾರ, ಶೇಕಡ 99.9 ರಷ್ಟು ಶುದ್ಧತೆಯ ಚಿನ್ನವು ಎಲ್ಲಾ ತೆರಿಗೆಗಳನ್ನು ಒಳಗೊಂಡಂತೆ 10 ಗ್ರಾಂಗೆ 5,100 ರೂ.ಗಳಷ್ಟು ಏರಿಕೆಯಾಗಿ 1,53,200 ರೂ.ಗಳಲ್ಲಿ ವಹಿವಾಟು ನಡೆಸಿತು. ಹಿಂದಿನ ವಹಿವಾಟಿನಲ್ಲಿ ಚಿನ್ನದ ದರ 10 ಗ್ರಾಂಗೆ 1,48,100 ರೂ.ಗಳಷ್ಟು ಇತ್ತು. ಬೆಳ್ಳಿ ಬೆಲೆಗಳು ಸಹ ತೀವ್ರ ಏರಿಕೆಯನ್ನು ಕಂಡಿದ್ದು, ಸ್ಥಳೀಯ ಮಾರುಕಟ್ಟೆಯಲ್ಲಿ ಹೊಸ […]

ಕನ್ನಡ ದುನಿಯಾ 20 Jan 2026 6:48 pm

ಹಿಂಡಲಗಾ ಜೈಲಿನಲ್ಲಿ ಕೈದಿಗಳ ನಡುವೆ ಮಾರಾಮಾರಿ: ಓರ್ವನಿಗೆ ಗಂಭೀರ ಗಾಯ

ಬೆಳಗಾವಿ: ಕೈದಿಗಖ ನಡುವೆ ಗಕಟೆ ನಡೆದು, ಮಾಅರಾಮಾರಿ ನಡೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಕೇಂದ್ರ ಕಾರಾಗೃಹ ಹಿಂಡಲಗಾ ಜೈಲಿನಲ್ಲಿ ನಡೆದಿದೆ. ಇಬ್ಬರು ಕೈದಿಗಳ ನಡುವಿನ ಹೊಡೆದಾಟದಲ್ಲಿ ಓರ್ವ ಕೈದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿಯ ಮುತ್ಯಾನಟ್ಟಿ ಮೂಲದ ಕೈದಿ ಸುರೇಶ್ ಹಲ್ಲೆಗೊಳಗಾದವನು. ಜೈಲಿನಲ್ಲಿ ಇಬ್ಬರು ಕೈದಿಗಳ ನಡುವೆ ಜಗಳ ಶುರುವಾಗಿದ್ದು, ಮಾತಿಗೆ ಮಾತು ಬೆಳೆದು ಗಲಾಟೆ ವಿಕೋಪಕ್ಕೆ ತಿರುಗಿದೆ. ಕೈದಿಗಳಾದ ಸುರೇಶ್ ಹಾಗೂ ಫಯಾನ್ ನಡುವೆ ಮಾರಾಮಾರಿ ನಡೆದಿದೆ. ಘಟನೆಯಲ್ಲಿ ಸುರೇಶ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. […]

ಕನ್ನಡ ದುನಿಯಾ 20 Jan 2026 6:27 pm

ಬೆಂಗಳೂರಿನಲ್ಲಿ ₹90 ಲಕ್ಷ ಸಂಬಳ ಕಡಿಮೆ ಅಂದ ಕೆಮಿಕಲ್ ಇಂಜಿನಿಯರ್: ಸೋಶಿಯಲ್ ಮೀಡಿಯಾದಲ್ಲಿ ಶುರುವಾಯ್ತು ಭಾರಿ ಚರ್ಚೆ

ಬೆಂಗಳೂರು: ವಿದೇಶದಲ್ಲಿ ಲಕ್ಷಾಂತರ ಸಂಬಳ, ಐಷಾರಾಮಿ ಜೀವನ ನಡೆಸುವ ಎನ್‌ಆರ್‌ಐಗಳು (NRI) ಮರಳಿ ತಾಯ್ನಾಡಿಗೆ ಬರಬೇಕೆನ್ನುವಾಗ ಮೊದಲು ಯೋಚಿಸುವುದೇ ಇಲ್ಲಿನ ವೇತನದ ಬಗ್ಗೆ. ಇದೀಗ ಅಮೆರಿಕದಲ್ಲಿ ನೆಲೆಸಿರುವ ಕೆಮಿಕಲ್ ಇಂಜಿನಿಯರಿಂಗ್ ತಜ್ಞರೊಬ್ಬರ ಪ್ರಶ್ನೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಏನಿದು ಸ್ಟೋರಿ? ಪಿಎಚ್‌ಡಿ ಪದವಿ ಮತ್ತು 12 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಈ ವೃತ್ತಿಪರರು ಪ್ರಸ್ತುತ ಅಮೆರಿಕದಲ್ಲಿ ವಾರ್ಷಿಕ ಸುಮಾರು 1.60 ಕೋಟಿ ರೂಪಾಯಿ ($190,000) ಸಂಬಳ ಪಡೆಯುತ್ತಿದ್ದಾರೆ. ಆದರೆ, ವಯಸ್ಸಾದ ಪೋಷಕರ ಆರೈಕೆಗಾಗಿ […]

ಕನ್ನಡ ದುನಿಯಾ 20 Jan 2026 5:59 pm

ಕಬ್ಬಿನ ಗದ್ದೆಯಲ್ಲಿ ಗಾಂಜಾ ಬೆಳೆದು ಸಿಕ್ಕಿಬಿದ್ದ ವ್ಯಕ್ತಿ: 4 ವರ್ಷ ಕಠಿಣ ಜೈಲುಶಿಕ್ಷೆ ವಿಧಿಸಿದ ಕೋರ್ಟ್

ಬೆಳಗಾವಿ: ಕಬ್ಬಿನ ಗದ್ದೆಯಲ್ಲಿ ಕಬ್ಬು ಬೆಳೆ ನಡುವೆ ಗಾಂಜಾ ಬೆಳೆದು ಬಂಧನಕ್ಕೀಡಾಗಿದ್ದ ಆರೋಪಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಬೆಳಗಾವಿ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿದೆ. ಮಲಗೌಡ ರಾವಜಿಗೌಡ ಪಾಟೀಲ್ ಜೈಲುಶಿಕ್ಷೆಗೆ ಗುರಿಯಾದ ಆರೋಪಿ. ಮಲಗೌಡ ರಾವಜಿಗೌಡ, ಕಬ್ಬಿನ ಗದ್ದೆಯಲ್ಲಿ ಗಾಂಜಾ ಗಿಡಗಳನ್ನು ಬೆಳೆದು ಅವುಗಳನ್ನು ಒಣಗಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದರು. ಬಂಧಿತನಿಂದ 18 ಕೆ.ಜಿ 500 ಗ್ರಾಂ ಹಸಿ ಗಾಂಜಾ ಗಿಡಗಳು ಮತ್ತು 4 ಕೆ.ಜಿ. 500ಗ್ರಾಂ […]

ಕನ್ನಡ ದುನಿಯಾ 20 Jan 2026 5:27 pm

UPI ಟಿಕೆಟ್ ಹಣ ಸ್ವಂತ ಖಾತೆಗೆ: ಮೂವರು ಬಿಎಂಟಿಸಿ ಕಂಡಕ್ಟರ್ ಸಸ್ಪೆಂಡ್

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಹಗರಣವೊಂದು ಎರಡು ದಿನಗಳಿಂದ ಸದ್ದು ಮಾಡುತ್ತಿತ್ತು. ಬಿಎಂಟಿಸಿ ಬಸ್‌ನ ಯುಪಿಐ ಹಣವನ್ನು ಸ್ವಂತ ಖಾತೆಗೆ ಕಂಡಕ್ಟರ್‌ಗಳು ಹಾಕಿಕೊಂಡಿದ್ದು, ಅಧಿಕಾರಿಗಳ ಪರಿಶೀಲನೆ ವೇಳೆ ಬೆಳಕಿಗೆ ಬಂದಿತ್ತು. ಈ ಕುರಿತು ಈಗ ಬಿಎಂಟಿಸಿ ಕ್ರಮ ಕೈಗೊಂಡಿದೆ. ಮೂವರು ಕಂಡಕ್ಟರ್‌ಗಳನ್ನು ಅಮಾನತು ಮಾಡಿ ಆದೇಶಿಸಿದೆ. ಅಮಾನತುಗೊಂಡವರು 23ನೇ ಡಿಪೋ ಕಂಡಕ್ಟರ್ ಸುರೇಶ್, 3ನೇ ಡಿಪೋ ಕಂಡಕ್ಟರ್ ಕಂ ಡ್ರೈವರ್ ಮಂಚೇಗೌಡ ಮತ್ತು 14ನೇ ಡಿಪೋ ಕಂಡಕ್ಟರ್ ಅಶ್ವಕ್ ಖಾನ್. ಘಟನೆ ವಿವರ: ಡಿಸೆಂಬರ್ 2025ರಲ್ಲಿ […]

ಕನ್ನಡ ದುನಿಯಾ 20 Jan 2026 5:15 pm

ನಟ ಕಿಚ್ಚ ಸುದೀಪ್ ಹಾಗೂ ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ವಂಚನೆ ಆರೋಪ: ದೂರು ದಾಖಲು

ಬೆಂಗಳೂರು: ನಟ ಕಿಚ್ಚ ಸುದೀಪ್ ಹಾಗೂ ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ಕಾಫಿ ತೋಟದ ಮಾಲೀಕರಿಬ್ಬರು ವಂಚನೆ ಆರೋಪ ಮಾಡಿದ್ದು, ಕಮಿಷನರ್ ಗೆ ದೂರು ನೀಡಿದ್ದಾರೆ. ಕಾಫಿ ತೋಟದ ಮಾಲೀಕ ದೀಪಕ್ ಎಂಬುವವರು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸಿ, ನಟ ಕಿಚ್ಚ ಸುದೀಪ್ ಹಾಗೂ ಅವರ ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ವಂಚನೆ ದೂರು ನೀಡಿದ್ದಾರೆ. ದೀಪಕ್ ಅವರಿಗೆ ಸೇರಿದ್ದ ಮನೆ ಹಾಗೂ ಕಾಫಿತೋಟದಲ್ಲಿ ಧಾರಾವಾಹಿಯೊಂದರ ಚಿತ್ರೀಕರಣಕ್ಕಾಗಿ ಅಗ್ರಿಮೆಂಟ್ ಮಾಡಿಕೊಂಡಿದ್ದರು. ಅಗ್ರಿಮೆಂಟ್ ನಮ್ತೆ ಹಣ ನೀಡದೇ ವಂಚಿಸಿದ್ದಾರೆ […]

ಕನ್ನಡ ದುನಿಯಾ 20 Jan 2026 5:02 pm

ಮನೆಯಲ್ಲೇ ಮಾಡಿ ರುಚಿಕರ ಸೋರೆಕಾಯಿ ಪಾಯಸ: ಹೋಟೆಲ್ ಸ್ಟೈಲ್ ಖೀರ್ ಮಾಡಲು ಇಲ್ಲಿದೆ ಸಿಂಪಲ್ ರೆಸಿಪಿ

ಬೆಂಗಳೂರು: ಸೋರೆಕಾಯಿ ಎಂದರೆ ಕೇವಲ ಸಾಂಬಾರ್ ಅಥವಾ ಪಲ್ಯಕ್ಕೆ ಸೀಮಿತ ಎಂದು ಭಾವಿಸಿದ್ದೀರಾ? ಖಂಡಿತ ಇಲ್ಲ ಪೋಷಕಾಂಶಗಳ ಗಣಿಯಾಗಿರುವ ಸೋರೆಕಾಯಿಯಿಂದ ಅದ್ಭುತವಾದ ಸಿಹಿ ತಿಂಡಿಯನ್ನೂ ತಯಾರಿಸಬಹುದು.ಅದರಲ್ಲೂ ಹಬ್ಬ-ಹರಿದಿನಗಳಲ್ಲಿ ಅಥವಾ ವ್ರತಾಚರಣೆಯ ಸಮಯದಲ್ಲಿ ಸೋರೆಕಾಯಿ ಪಾಯಸ ಅಥವಾ ಲೌಕಿ ಕಿ ಖೀರ್ ಅತ್ಯಂತ ಜನಪ್ರಿಯ. ಸೋರೆಕಾಯಿಯ ಆರೋಗ್ಯ ಲಾಭಗಳು: ಸೋರೆಕಾಯಿಯಲ್ಲಿ ಶೇ. 92ರಷ್ಟು ನೀರಿನಂಶವಿದ್ದು, ಇದು ದೇಹವನ್ನು ಸದಾ ಹೈಡ್ರೇಟ್ ಆಗಿಡಲು ನೆರವಾಗುತ್ತದೆ. ವಿಟಮಿನ್ ಸಿ ಸಮೃದ್ಧವಾಗಿರುವ ಈ ತರಕಾರಿ ಜೀರ್ಣಕ್ರಿಯೆಯನ್ನು ಸುಗಮಗೊಳಿಸುತ್ತದೆ ಮತ್ತು ದೇಹಕ್ಕೆ ತಂಪು ನೀಡುತ್ತದೆ. […]

ಕನ್ನಡ ದುನಿಯಾ 20 Jan 2026 4:54 pm

ಪಾರ್ಲರ್‌ಗೆ ಹೋಗುವ ಅಗತ್ಯವೇ ಇಲ್ಲ: ಕಾಫಿಯೊಂದಿಗೆ ಈ ಹಣ್ಣು ಬೆರೆಸಿ ಹಚ್ಚಿದರೆ ನಿಮ್ಮ ತ್ವಚೆ ಹೊಳೆಯುವುದು ಗ್ಯಾರಂಟಿ

ದುಬಾರಿ ಬ್ಯೂಟಿ ಪ್ರಾಡಕ್ಟ್‌ಗಳನ್ನು ಬಳಸಿದರೂ ಮುಖದ ಮೇಲಿನ ಕಪ್ಪು ಕಲೆಗಳು, ಪಿಗ್ಮೆಂಟೇಶನ್ ಮತ್ತು ಸುಕ್ಕುಗಳು (Wrinkles) ಕಡಿಮೆಯಾಗುತ್ತಿಲ್ಲವೇ? ಹಾಗಿದ್ದಲ್ಲಿ, ನಿಮ್ಮ ಅಡುಗೆಮನೆಯಲ್ಲಿರುವ ಕಾಫಿ ಪುಡಿ ಮತ್ತು ಬಾಳೆಹಣ್ಣು ನಿಮ್ಮ ಚರ್ಮದ ಸಮಸ್ಯೆಗೆ ರಾಮಬಾಣವಾಗಬಲ್ಲವು. ಕಾಫಿ ಮತ್ತು ಬಾಳೆಹಣ್ಣಿನ ಫೇಸ್‌ಪ್ಯಾಕ್ ಚರ್ಮಕ್ಕೆ ಹೇಗೆ ವರದಾನವಾಗುತ್ತದೆ ಮತ್ತು ಇದನ್ನು ತಯಾರಿಸುವ ವಿಧಾನ ಇಲ್ಲಿದೆ: ಕಾಫಿ ಮತ್ತು ಬಾಳೆಹಣ್ಣಿನ ಫೇಸ್‌ಪ್ಯಾಕ್‌ನ ಪ್ರಯೋಜನಗಳು: ಸುಕ್ಕುಗಳ ನಿವಾರಣೆ: ಬಾಳೆಹಣ್ಣಿನಲ್ಲಿ ವಿಟಮಿನ್ C ಮತ್ತು B6 ಸಮೃದ್ಧವಾಗಿದ್ದು, ಇದು ಚರ್ಮವನ್ನು ಬಿಗಿಗೊಳಿಸಲು (Skin Tightening) ಮತ್ತು […]

ಕನ್ನಡ ದುನಿಯಾ 20 Jan 2026 4:27 pm

BREAKING : ಬಾಲಿವುಡ್ ನಟ ಅಕ್ಷಯ್ ಕುಮಾರ್ ಕಾರು ಅಪಘಾತ ಕೇಸ್ : ಚಾಲಕ ಅರೆಸ್ಟ್.!

ಮುಂಬೈ : ಬಾಲಿವುಡ್ ನಟ ಅಕ್ಷಯ್ ಕುಮಾರ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರಾಧೇಶ್ಯಾಮ್ ರೈ ಎಂದು ಗುರುತಿಸಲಾಗಿದ್ದು,ಚಾಲಕನ ಮೇಲೆ ಅಜಾಗರೂಕತೆ ಮತ್ತು ನಿರ್ಲಕ್ಷ್ಯದ ಆರೋಪ ಹೊರಿಸಲಾಗಿದೆ. ಬಿಎನ್ಎಸ್ನ ಸೆಕ್ಷನ್ 281, 125(ಎ), ಮತ್ತು 125(ಬಿ) ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಏನಿದು ಘಟನೆ..? ಸೋಮವಾರ ರಾತ್ರಿ ನಟ ಅಕ್ಷಯ್ ಕುಮಾರ್ ಅವರ ಭದ್ರತಾ ವಾಹನವು ಮುಂಬೈನ ಜುಹುವಿನಲ್ಲಿ ಅಪಘಾತಕ್ಕೀಡಾಗಿತ್ತು. ಮುಂಬೈ ಪೊಲೀಸರ ಪ್ರಕಾರ, ಎರಡು ಕಾರುಗಳು ಮತ್ತು ಆಟೋ ರಿಕ್ಷಾ ನಡುವೆ […]

ಕನ್ನಡ ದುನಿಯಾ 20 Jan 2026 4:24 pm

ರಾಜ್ಯ ಸರ್ಕಾರದ ಖರ್ಚು ಕಡಿಮೆ ಮಾಡುವ ಸರ್ಕಾರಿ ಶಾಲೆಗಳು: ಏನಿದು ಯೋಜನೆ?

ತಮಿಳುನಾಡು ರಾಜ್ಯದ ಸರ್ಕಾರಿ ಶಾಲೆಗಳು ಸರ್ಕಾರದ ವೆಚ್ಚವನ್ನು ಕಡಿಮೆ ಮಾಡಿವೆ. ಇದಕ್ಕೆ ಕಾರಣವಾಗಿದ್ದು ಸರ್ಕಾರ ಜಾರಿಗೆ ತಂದ ‘ಹಸಿರು ಶಾಲಾ ಯೋಜನೆ’. ಈ ಯೋಜನೆಯ ಕುರಿತ ಅಧ್ಯಯನ ವರದಿ ಈಗ ಬಿಡುಗಡೆಯಾಗಿದ್ದು, ಯೋಜನೆಯನ್ನು ಎಲ್ಲಾ ಸರ್ಕಾರಿ ಶಾಲೆಗಳಿಗೆ ವಿಸ್ತರಣೆ ಮಾಡಬೇಕು ಎಂಬ ಚಿಂತನೆ ಇದೆ. ಅಧ್ಯಯನ ವರದಿಯು ತಮಿಳುನಾಡು ಸರ್ಕಾರದ ‘ಹಸಿರು ಶಾಲಾ ಯೋಜನೆ’ ಅನುಕೂಲಗಳನ್ನು ಪಟ್ಟಿ ಮಾಡಿದೆ. ಈ ಯೋಜನೆ ಎಲ್ಲಾ 45,000 ಸರ್ಕಾರಿ ಶಾಲೆಗಳಲ್ಲಿ ಜಾರಿಗೆ ಬಂದರೆ ರಾಜ್ಯದ ಶಿಕ್ಷಣ ಸಂಸ್ಥೆ ಮತ್ತು ಆಸ್ಪತ್ರೆಗಳ […]

ಕನ್ನಡ ದುನಿಯಾ 20 Jan 2026 4:18 pm

BIG NEWS : ಮೇ 25 ರ ನಂತರ GBA ವ್ಯಾಪ್ತಿಯ 5 ನಗರ ಪಾಲಿಕೆಗಳಿಗೆ ಚುನಾವಣೆ : ಚುನಾವಣಾ ಆಯೋಗ

ಬೆಂಗಳೂರು : ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಮೇ 25ರ ನಂತರ ಜೂನ್ 30ರೊಳಗೆ ಚುನಾವಣೆ ನಡೆಸಲಾಗುವುದು. 2025ರ ಅಕ್ಟೋಬರ್‌ 1ರ ಮಾಹಿತಿಯಂತೆ ಮತದಾರರ ಕರಡು ಪಟ್ಟಿ ತಯಾರಿಸಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್‌. ಸಂಗ್ರೇಶಿ ತಿಳಿಸಿದ್ದಾರೆ. ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಮೇ 25ರ ನಂತರ ಜೂನ್ 30ರೊಳಗೆ ಚುನಾವಣೆ ನಡೆಸಲಾಗುವುದು. 2025ರ ಅಕ್ಟೋಬರ್‌ 1ರ ಮಾಹಿತಿಯಂತೆ ಮತದಾರರ ಕರಡು ಪಟ್ಟಿ ತಯಾರಿಸಲಾಗಿದೆ. ಇಂದಿನಿಂದ ಫೆಬ್ರುವರಿ 3ರವರೆಗೆ ಮತಗಟ್ಟೆ ಅಧಿಕಾರಿಗಳು […]

ಕನ್ನಡ ದುನಿಯಾ 20 Jan 2026 4:02 pm

ಭಕ್ತರಿಗೆ ಶುಭ ಸುದ್ದಿ : ‘ಟಿಟಿಡಿ’ದೇವಾಲಯಗಳಲ್ಲಿ ಇನ್ಮುಂದೆ ದಿನಕ್ಕೆ ಎರಡು ಬಾರಿ ಅನ್ನಪ್ರಸಾದ ವಿತರಣೆ

ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಭಕ್ತರಿಗೆ ಶುಭ ಸುದ್ದಿಯನ್ನು ನೀಡಿವೆ. ದೇವಾಲಯಗಳಲ್ಲಿ ಉಚಿತ ಅನ್ನ ಪ್ರಸಾದ ವಿತರಣೆಯನ್ನು ಪ್ರಾರಂಭಿಸಲು ಟಿಟಿಡಿ ಸಿದ್ಧವಾಗಿದೆ. ಹೌದು, ಟಿಟಿಡಿ ಇಒ ಅನಿಲ್ ಕುಮಾರ್ ಸಿಂಘಾಲ್ ಅವರು ಸೋಮವಾರ ತಿರುಪತಿಯ ಟಿಟಿಡಿ ಆಡಳಿತ ಕಟ್ಟಡದಲ್ಲಿರುವ ಇಒ ಚೇಂಬರ್‌ನಲ್ಲಿ ಟಿಟಿಡಿ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಈ ಸಂದರ್ಭದಲ್ಲಿ, ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರ ಆದೇಶದಂತೆ, ಮಾರ್ಚ್ ಅಂತ್ಯದಿಂದ ಟಿಟಿಡಿ ದೇವಾಲಯಗಳಲ್ಲಿ ಅನ್ನ ಪ್ರಸಾದ ವಿತರಣೆಯನ್ನು ಪ್ರಾರಂಭಿಸಲು […]

ಕನ್ನಡ ದುನಿಯಾ 20 Jan 2026 3:54 pm

Business Idea : ಕೆಲಸ ಸಿಕ್ಕಿಲ್ಲ ಅಂತ ಚಿಂತಿಸ್ಬೇಡಿ, ಭಾರಿ ಬೇಡಿಕೆಯಲ್ಲಿರುವ ಈ 7 ‘ಬ್ಯುಸಿನೆಸ್’ಬಗ್ಗೆ ತಿಳಿಯಿರಿ

ನಿಮ್ಮ ಓದಿಗೆ ಸರಿಯಾದ ಕೆಲಸ ಸಿಕ್ಕಿಲ್ಲ ಅಂತ ನೀವು ಚಿಂತೆ ಮಾಡುತ್ತಿದ್ದೀರಾ? ಆದರೆ ಒತ್ತಡಕ್ಕೆ ಒಳಗಾಗಬೇಡಿ.! ನೀವು ಸುಲಭವಾಗಿ ಮಾಡಬಹುದಾದ 5 ಬ್ಯುಸಿನೆಸ್ ಬಗ್ಗೆ ತಿಳಿಸಿಕೊಡುತ್ತಿದ್ದೇವೆ.ಈ ವ್ಯವಹಾರ ವಿಚಾರಗಳು ಪ್ರತಿ ವರ್ಷ ಉತ್ತಮ ಲಾಭವನ್ನು ನೀಡುತ್ತವೆ. ಬೇಡಿಕೆಯಿರುವ ವ್ಯವಹಾರಗಳು.. ಹೆಚ್ಚಿನ ಆದಾಯವನ್ನು ಗಳಿಸಬಹುದು. ಈಗ ಆ ವ್ಯವಹಾರಗಳು ಯಾವುವು ಎಂದು ನೋಡೋಣ.. 1) ಜ್ಯೂಸ್ ಮತ್ತು ಹಣ್ಣಿನ ಅಂಗಡಿ 2)ಬೇಕರಿ ವ್ಯವಹಾರ 3)ಇಂಟರ್ನೆಟ್ ಕೆಫೆ ಮತ್ತು ಜೆರಾಕ್ಸ್ ಕೇಂದ್ರ 4) ಫಾಸ್ಟ್ ಫುಡ್ ಟ್ರಕ್ 5)ತಂಪು ಪಾನೀಯಗಳು […]

ಕನ್ನಡ ದುನಿಯಾ 20 Jan 2026 3:22 pm

BREAKING: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಈಶ್ವರ ಖಂಡ್ರೆ ಆಯ್ಕೆ

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವಿರೋಧ ಆಯ್ಕೆಯಾಗಿದ್ದಾರೆ. ಮಹಾಸಭಾದಲ್ಲಿ ನಡೆದಿರುವ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಸಚಿವ ಈಶ್ವರ ಖಂಡ್ರೆ ಅವರನ್ನು 24ನೇ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಈಶ್ವರ ಖಂಡ್ರೆ ಆಯ್ಕೆಯಾಗಿದ್ದಾರೆ. ಅಖಿಲ […]

ಕನ್ನಡ ದುನಿಯಾ 20 Jan 2026 3:13 pm

ಶಾಲೆಗೆ ಹೋಗುತ್ತಿದ್ದ ಬಾಲಕಿ ಮೇಲೆ ಆಸಿಡ್ ದಾಳಿ: ಫೋಟೋಗ್ರಾಫರ್ ಅರೆಸ್ಟ್

ಜೈಪುರ: ಫೋಟೋಗ್ರಾಫರ್ ಓರ್ವ ಶಾಅಲಾ ಬಾಲಕಿ ಮೇಲೆ ಆಸಿಡ್ ದಾಳಿ ನಡೆಸಿರುವ ಘೋರ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಮದುವೆ ಕಾರ್ಯಕ್ರಮಕ್ಕೆ ಫೋಟೋಗ್ರಾಫರ್ ಆಗಿ ಹೋಗಿದ್ದ 19 ವರ್ಷದ ಓಂಪ್ರಕಾಶ್ ಅಲಿಯಾಸ್ ಜಾನಿ ಎಂಬಾತ ಮದುವೆ ಮನೆಯಲ್ಲಿ ಬಾಲಕಿಯನ್ನು ನೋಡಿದ್ದಾನೆ. ಬಳಿಕ ಆಕೆಯನ್ನು ಮಾತನಾಡಿಸಲು ಯತ್ನಿಸಿದ್ದಾನೆ. ಬಾಲಕಿ ತಾನು ಅಪರಿಚಿತರೊಂದಿಗೆ ಮಾತನಾಡಲ್ಲ ಎಂದಿದ್ದಾಳೆ. ಇಷ್ಟಕ್ಕೆ ಕೋಪಗೊಂಡ ಯುವಕ ಆಕೆ ಮೇಲೆ ಆಸಿಡ್ ದಾಳಿ ನಡೆಸಿದ್ದಾನೆ. ಬಾಲಕಿ ತನ್ನ ಬಳಿ ಮಾತನಾಡಿಲ್ಲ ಎಂಬುದನ್ನೇ ದೊಡ್ಡ ಅವಮಾನ ಎಂಬಂತೆ ಪರಿಗಣಿಸಿದ ಯುವಕ. […]

ಕನ್ನಡ ದುನಿಯಾ 20 Jan 2026 3:04 pm

ಜಿಯೋ, ಏರ್ಟೆಲ್, ವೊಡಾಫೋನ್ ಬಳಕೆದಾರರಿಗೆ ಬಿಗ್ ಶಾಕ್ :  ರೀಚಾರ್ಜ್ ದರದಲ್ಲಿ ಶೇ.15 ರಷ್ಟು ಹೆಚ್ಚಳ.!

ದೇಶದ ಪ್ರಮುಖ ಟೆಲಿಕಾಂ ದೈತ್ಯ ಕಂಪನಿಗಳಾದ ರಿಲಯನ್ಸ್ ಜಿಯೋ, ಏರ್‌ಟೆಲ್ ಮತ್ತು ವೊಡಾಫೋನ್ ಐಡಿಯಾ ತಮ್ಮ ಸುಂಕದ ಬೆಲೆಗಳನ್ನು ಹೆಚ್ಚಿಸಲು ಸಿದ್ಧತೆ ನಡೆಸುತ್ತಿವೆ. ಹೌದು, 2026 ರ ಮಧ್ಯಭಾಗದ ವೇಳೆಗೆ ಮೊಬೈಲ್ ರೀಚಾರ್ಜ್ ಯೋಜನೆಗಳ ಬೆಲೆಗಳಲ್ಲಿ ‘ಸುಂಕ ಮರುಹೊಂದಿಸುವಿಕೆ’ ನಡೆಯಲಿದೆ ಎಂದು ಉದ್ಯಮ ಮೂಲಗಳು ಹೇಳುತ್ತವೆ. ಇದರರ್ಥ ಜೂನ್ ಅಥವಾ ಜುಲೈ ವೇಳೆಗೆ ನಿಮ್ಮ ಮೊಬೈಲ್ ಬಿಲ್‌ಗಳು ಹೆಚ್ಚು ಹೊರೆಯಾಗುತ್ತವೆ. ಬೆಲೆ ಏರಿಕೆಯು ಶೇಕಡಾ 10-20 ರ ನಡುವೆ ಇರಬಹುದು ಎಂಬ ನಿರೀಕ್ಷೆಗಳಿವೆ. ಬೆಲೆ ಏರಿಕೆ ಏಕೆ? […]

ಕನ್ನಡ ದುನಿಯಾ 20 Jan 2026 2:59 pm

Big Updare: ಕೊಡಗು ಜಿಲ್ಲೆಗೆ ಇಲ್ಲ ರೈಲು, ಮೈಸೂರು-ಕುಶಾಲನಗರ ರೈಲು ಯೋಜನೆ ರದ್ದು

ಸಾಕಷ್ಟು ವಿರೋಧಕ್ಕೆ ಕಾರಣವಾಗಿದ್ದ ರಾಜ್ಯದ ರೈಲು ಯೋಜನೆಯೊಂದನ್ನು ರೈಲ್ವೆ ಮಂಡಳಿ ರದ್ದುಗೊಳಿಸಿದೆ. ಮೈಸೂರು-ಬೆಳಗೊಳ-ಕುಶಾಲನಗರ ನೂತನ ರೈಲು ಯೋಜನೆ ರದ್ದಾಗಿದೆ. ಕೇಂದ್ರ ಸರ್ಕಾರ ಈ ಯೋಜನೆಗೆ ಒಪ್ಪಿಗೆ ನೀಡಿತ್ತು. ಕೊಡಗು ಜಿಲ್ಲೆಗೆ ರೈಲು ಸಂಪರ್ಕ ಕಲ್ಪಿಸುವ ಪ್ರಮುಖವಾದ ಯೋಜನೆ ಇದಾಗಿತ್ತು. ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ಅಧಿಕಾರಿಗಳು ಮೈಸೂರು-ಕುಶಾಲನಗರ ನಡುವಿನ 87.2 ಕಿ.ಮೀ. ನೂತನ ರೈಲು ಮಾರ್ಗ ಯೋಜನೆಯನ್ನು ರದ್ದುಗೊಳಿಸಲಾಗಿದೆ ಎಂದು ಹೇಳಿದ್ದಾರೆ. ವಿವಿಧ ಕಾರಣಕ್ಕೆ ಈ ರೈಲು ಮಾರ್ಗ ಕಾರ್ಯಸಾಧುವಲ್ಲ ಎಂದು ರೈಲ್ವೆ ಮಂಡಳಿ ಹೇಳಿದೆ. ಮೈಸೂರು-ಬೆಳಗೊಳ-ಕುಶಾಲನಗರ […]

ಕನ್ನಡ ದುನಿಯಾ 20 Jan 2026 2:46 pm

BREAKING: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಕಾನೂನು ಎಲ್ಲರಿಗೂ ಒಂದೇ. ಜೈಲಿನಲ್ಲಿರುವ ಆರೋಪಿಗಳಿಗೆ ಸವಲತ್ತು ನೀಡುವಂತಿಲ್ಲ ಎಂದು ಆದೇಶ ನೀಡಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಈ ಹಿಂದೆ ತನಗೆ ಪ್ರತಿ ದಿನ ಜೈಲಿನಲ್ಲಿ ಮನೆ ಊಟಕ್ಕೆ ಅವಕಾಶ ಕೊಡಬೇಕು ಎಂದು ಕೋರ್ಟ್ ಮೆಟ್ಟಿಲೇರಿದ್ದರು. ಇದಕ್ಕೆ […]

ಕನ್ನಡ ದುನಿಯಾ 20 Jan 2026 2:44 pm

ರೈಲುಗಳಲ್ಲಿ ಬೆಡ್‌ಶೀಟ್ ಯಾಕೆ ಬಿಳಿಯಾಗಿಯೇ ಇರುತ್ತೆ? ರೈಲ್ವೆಯ ಈ ಸಿಸ್ಟಮ್ಯಾಟಿಕ್ ಪ್ಲಾನ್ ಕೇಳಿದ್ರೆ ದಂಗಾಗ್ತೀರಿ

ಭಾರತೀಯ ರೈಲ್ವೆಯ ಎಸಿ (AC) ಕೋಚ್‌ಗಳಲ್ಲಿ ಪ್ರಯಾಣಿಸುವಾಗ ನಮಗೆ ನೀಡುವ ಬೆಡ್‌ಶೀಟ್‌ಗಳು ಯಾವಾಗಲೂ ಬಿಳಿ ಬಣ್ಣದಲ್ಲೇ ಇರುವುದನ್ನು ನೀವು ಗಮನಿಸಿರಬಹುದು. ರೈಲ್ವೆಯು ಇಷ್ಟೊಂದು ವರ್ಷಗಳಿಂದ ಈ ಬಿಳಿ ಬಣ್ಣವನ್ನೇ ಉಳಿಸಿಕೊಂಡಿರುವುದರ ಹಿಂದೆ ಒಂದು ‘ವೈಜ್ಞಾನಿಕ ಮತ್ತು ವ್ಯವಸ್ಥಿತ ಯೋಜನೆ’ ಇದೆ. ಅದರ ಹಿಂದಿನ ಕುತೂಹಲಕಾರಿ ಕಾರಣಗಳು ಇಲ್ಲಿವೆ: ರೈಲ್ವೆ ಬೆಡ್‌ಶೀಟ್‌ಗಳು ಬಿಳಿಯಾಗಿರಲು ೩ ಮುಖ್ಯ ಕಾರಣಗಳು: ೧. ಶುಚಿತ್ವ ಮತ್ತು ಹೈಜೀನ್ (Hygiene): ಬಿಳಿ ಬಣ್ಣದ ಮೇಲೆ ಕೊಳೆ ಸುಲಭವಾಗಿ ಕಾಣಿಸುತ್ತದೆ. ಇದರಿಂದ ಪ್ರಯಾಣಿಕರಿಗೆ ಬೆಡ್‌ಶೀಟ್ ಒಗೆಯಲಾಗಿದೆಯೇ […]

ಕನ್ನಡ ದುನಿಯಾ 20 Jan 2026 2:30 pm

ಕರಾಮುವಿವಿಯಲ್ಲಿ ವಿವಿಧ ಕೋರ್ಸ್’ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು, ಪ್ರಾದೇಶಿಕ ಕೇಂದ್ರ ಶಿವಮೊಗ್ಗದಲ್ಲಿ 2025-26 ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಯ ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಜ. 09 ರಂದು ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳು ಕರಾಮುವಿ, ಅಧಿಕೃತ ವೆಬ್‌ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಿ, ಆಲ್ಕೋಳ ವೃತ್ತ, ಸಾಗರ ರಸ್ತೆಯಲ್ಲಿರುವ ಕರಾಮುವಿ ಪ್ರಾದೇಶಿಕ ಕೇಂದ್ರ ಶಿವಮೊಗ್ಗ ಇಲ್ಲಿ ಪ್ರವೇಶಾತಿಯನ್ನು ಪಡೆದುಕೊಳ್ಳುವಂತೆ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 9900667916/ 9480765905/ 9739803295/7338069870/7353886706/7760620811 ಗಳನ್ನು ಸಂಪರ್ಕಿಸುವುದು […]

ಕನ್ನಡ ದುನಿಯಾ 20 Jan 2026 1:58 pm

ಭದ್ರಾ ಜಲಾಶಯದಿಂದ ತುಂಗಾ-ಭದ್ರಾ ನದಿಗೆ ನೀರು : ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಶಿವಮೊಗ್ಗ : 2025-26ನೇ ಸಾಲಿನಲ್ಲಿ ಭದ್ರಾ ಜಲಾಶಯದಿಂದ ನದಿಯ ಮೂಲಕ ವಿಜಯನಗರ ಜಿಲ್ಲೆ, ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ತುಂಗ-ಭದ್ರಾ ನದಿಗೆ ಜ.20 ರಿಂದ ಜ. 30 ಪ್ರತಿ ದಿನ 500 ಕ್ಯೂಸೆಕ್ಸ್ನಂತೆ ಹಾಗೂ ಜ. 31 ರಂದು 300 ಕ್ಯೂಸೆಕ್ಸ್ ಒಟ್ಟು 0.50 ಟಿ.ಎಂ.ಸಿ ನೀರನ್ನು ಹರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಈ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನ ಕರುಗಳನ್ನು ಮೇಯಿಸುವುದು ಮತ್ತು […]

ಕನ್ನಡ ದುನಿಯಾ 20 Jan 2026 1:53 pm

ಕೇರಳ ವಿಧಾನಸಭೆ ಚುನಾವಣೆ 2026: ಸಿಎಂ ಪಿಣರಾಯಿ ವಿಜಯನ್ ಸ್ಪರ್ಧೆ ಇಲ್ಲ?

ಕೇರಳ ವಿಧಾನಸಭೆ ಚುನಾವಣೆ 2026ರ ತಯಾರಿಯ ನಡುವೆಯೇ ಸಿಪಿಎಂ ಪ್ರಧಾನ ಕಾರ್ಯದರ್ಶಿ ಎಂ.ಎ.ಬೇಬಿ ಮಾಡಿದ ಘೋಷಣೆಯೊಂದು ಚರ್ಚೆಗೆ ಕಾರಣವಾಗಿದೆ. ಮುಂಬರುವ ಚುನಾವಣೆಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ‘ಪ್ರಚಾರ ನಾಯಕ’ ನಾಯಕರಾಗಲಿದ್ದಾರೆ ಎಂದು ಹೇಳಿದ್ದಾರೆ. ಇದು ಪಕ್ಷದ ಹಳೆ ರಾಜಕೀಯ ಸೂತ್ರಗಳ ಕುರಿತು ನಾಯಕರು ಗಮನ ಹರಿಸಿ, ಚರ್ಚಿಸಲು ಕಾರಣವಾಗಿದೆ. 2006ರಲ್ಲಿ ವಿ.ಎಸ್.ಅಚ್ಯುತಾನಂದನ್ ಇದೇ ‘ಪ್ರಚಾರ ನಾಯಕ’ ಪಟ್ಟವನ್ನು ಅಲಂಕರಿಸಿದ್ದರು. ಈಗ ಪಿಣರಾಯಿ ವಿಜಯನ್ ಅವರನ್ನು ಪ್ರಚಾರ ನಾಯಕ ಎಂದು ಉಲ್ಲೇಖಿಸಿದ್ದು, ಪಕ್ಷದೊಳಗಿನ ಹಳೆಯ ರಾಜಕೀಯ ತಂತ್ರದ […]

ಕನ್ನಡ ದುನಿಯಾ 20 Jan 2026 1:44 pm

ಜ.24 ರಿಂದ ಮಲೆನಾಡು ಕರಕುಶಲ ಉತ್ಸವ-ಸಿರಿಧಾನ್ಯ ಮೇಳ-ಫಲ ಪುಷ್ಪ ಪ್ರದರ್ಶನ

ಶಿವಮೊಗ್ಗ : ಈ ಬಾರಿ ಹಲವಾರು ವಿಶೇಷತೆಗಳೊಂದಿಗೆ ಮಲೆನಾಡು ಕರಕುಶಲ ಉತ್ಸವ ಸಿರಿಧಾನ್ಯ ಮೇಳ ಹಾಗೂ ಪುಷ್ಪಸಿರಿ-63 ನೇ ಫಲ ಪುಷ್ಪ ಪ್ರದರ್ಶನವನ್ನು ಜ.24 ರಿಂದ 27 ರವರೆಗೆ ನಾಲ್ಕು ದಿನಗಳ ಕಾಲ ನಗರದ ಅಲ್ಲಮ ಪ್ರಭು ಉದ್ಯಾನವನ (ಫ್ರೀಡಂ ಪಾರ್ಕ್) ದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ಎನ್ ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಲೆನಾಡು ಕರಕುಶಲ ಉತ್ಸವ ಹಾಗೂ ಫಲಪುಷ್ಪ ಪ್ರದರ್ಶನದ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು. […]

ಕನ್ನಡ ದುನಿಯಾ 20 Jan 2026 1:34 pm

JOB ALERT : ‘SSLC’ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : ‘ಭಾರತೀಯ ಅಂಚೆ ಇಲಾಖೆ’ಯಲ್ಲಿ 28,740 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ದೇಶಾದ್ಯಂತ ಹೆಚ್ಚಿನ ಸಂಖ್ಯೆಯ ಹುದ್ದೆಗಳನ್ನು ಭರ್ತಿ ಮಾಡಲು ಭಾರತೀಯ ಅಂಚೆ ಸಚಿವಾಲಯ ಸಿದ್ಧತೆ ನಡೆಸುತ್ತಿದೆ. ಅಂಚೆ ಇಲಾಖೆ ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಇದು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುವುದರಿಂದ, ಇಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ಹೆಚ್ಚಿನ ಸಂಬಳ ಮತ್ತು ಭತ್ಯೆಗಳು ಸಿಗುತ್ತವೆ. ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ಎಂಬಂತೆ 28,740 ಗ್ರಾಮೀಣ ಡಾಕ್ ಸೇವಕ್ ಹುದ್ದೆಗೆ ಅಂಚೆ ಇಲಾಖೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಜ.31 ರಿಂದ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ಬಗ್ಗೆ ಇಲ್ಲಿದೆ […]

ಕನ್ನಡ ದುನಿಯಾ 20 Jan 2026 1:26 pm

ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ₹12,000 ಸಹಾಯಧನ: ಅರ್ಹತೆ, ದಾಖಲೆಗಳು ಮತ್ತು ಅರ್ಜಿ ಪ್ರಕ್ರಿಯೆ ಸಂಪೂರ್ಣ ಮಾಹಿತಿ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ, ಪ್ರತಿಯೊಂದು ಗ್ರಾಮೀಣ ಕುಟುಂಬವು ವೈಯಕ್ತಿಕ ಶೌಚಾಲಯ (IHHL) ಹೊಂದಿರಬೇಕು ಎಂಬ ಗುರಿ ಹೊಂದಲಾಗಿದೆ. ಇದಕ್ಕಾಗಿ ಸರ್ಕಾರವು ಅರ್ಹ ಫಲಾನುಭವಿಗಳಿಗೆ ₹12,000 ಆರ್ಥಿಕ ಪ್ರೋತ್ಸಾಹ ಧನ ನೀಡುತ್ತಿದೆ. ಗ್ರಾಮ ಪಂಚಾಯಿತಿಗೆ ಅಲೆಯುವ ಕೆಲಸವಿಲ್ಲ ಹಿಂದಿನಂತೆ ಶೌಚಾಲಯದ ಸಹಾಯಧನಕ್ಕಾಗಿ ನೀವು ಪಂಚಾಯಿತಿ ಕಚೇರಿಗಳಿಗೆ ಅಲೆದಾಡಬೇಕಿಲ್ಲ. ಈಗ ನೀವು ನಿಮ್ಮ ಮೊಬೈಲ್ ಮೂಲಕವೇ ಮನೆಯಲ್ಲೇ ಕುಳಿತು ಸುಲಭವಾಗಿ ಅರ್ಜಿ ಸಲ್ಲಿಸಬಹುದು. ಯೋಜನೆಯ ಪ್ರಮುಖ ಅಂಶಗಳು: ಯಾರಿಗೆ ಲಭ್ಯ?: ಮನೆಯಲ್ಲಿ ಶೌಚಾಲಯ […]

ಕನ್ನಡ ದುನಿಯಾ 20 Jan 2026 1:02 pm

BREAKING: ಬೆಂಗಳೂರಿನಲ್ಲಿ ಬರೋಬ್ಬರಿ 5.15 ಕೋಟಿ ಮೌಲ್ಯದ ಡ್ರಗ್ಸ್ ಸೀಜ್: ವಿದೇಶಿ ಪ್ರಜೆ ಅರೆಸ್ಟ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ. ಬರೋಬ್ಬರಿ ೫.೧೫ ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಸಿಸಿಬಿ ಆಂಟಿ ನಾರ್ಕೋಟಿಕ್ ವುಂಗ್ ಬೃಹತ್ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ 5.15 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತ್ತಹಳ್ಳಿಯ ಬಾಡಿಗೆ ಮನೆಯೊಂದರ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಬಾಡಿಗೆ ಮನೆಯಲ್ಲಿದ್ದ ವಿದೇಶಿ […]

ಕನ್ನಡ ದುನಿಯಾ 20 Jan 2026 12:57 pm