SENSEX
NIFTY
GOLD
USD/INR

Weather

18    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source

ಆಗ್ನೇಯ ಪದವೀಧರ ಕ್ಷೇತ್ರ: ಕೊರಟಗೆರೆಯಲ್ಲಿ 2399 ಮತದಾರರ ನೋಂದಣಿ

‌ಕೊರಟಗೆರೆ :- ಆಗ್ನೇಯ ಪದವಿದಾರರ ಕ್ಷೇತ್ರದಲ್ಲಿ ಇಲ್ಲಿಯವರೆಗೆ 2399 ಪದವಿದಾರರು ನೋಂದಣಿಯಾಗಿದ್ದು , ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪದವೀಧರರು ನೋಂದಾಯಿಸಿಕೊಳ್ಳಬೇಕು ಜೊತೆಗೆ ಈವರೆಗಿನ ಮತದಾರರ ಪಟ್ಟಿಯಲ್ಲಿ ಆಕ್ಷೇಪಣೆ ಕಂಡು ಬಂದಲ್ಲಿ ಲಿಖಿತ ರೂಪದಲ್ಲಿ ಸಲ್ಲಿಸುವಂತೆ ತಹಸಿಲ್ದಾರ್ ಮಂಜುನಾಥ್ ತಿಳಿಸಿದ್ದರು. ಸೋಮವಾರ ತಾಲೂಕ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ವಿವಿಧ ಪಕ್ಷಗಳ ಮುಖಂಡರುಗಳ ಸಭೆಯಲ್ಲಿ ಮಾಹಿತಿ ನೀಡುತ್ತಾ ಈವರೆಗೆ 2399 ಪದವಿದಾರರು ನೋಂದಣಿಯಾಗಿದ್ದು , ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ನೋಂದಣಿ ಮಾಡಿಸಿಕೊಳ್ಳುವುದರ ಜೊತೆ […]

ಪ್ರಜಾ ಪ್ರಗತಿ 27 Nov 2025 9:26 pm

RSS ಕಾರ್ಯಕರ್ತನ ಕೊಲೆ ಪ್ರಕರಣ…ಹಂತಕನಿಗೆ ಪೊಲೀಸರಿಂದ ಗುಂಡೇಟು

ಫಿರೋಜ್‌ಪುರ: ಆರ್‌ಎಸ್‌ಎಸ್ ಕಾರ್ಯಕರ್ತ ನವೀನ್ ಅರೋರಾ ಹತ್ಯೆಯಲ್ಲಿ ಭಾಗಿಯಾಗಿದ್ದ ಎನ್ನಲಾದ ಪ್ರಮುಖ ಆರೋಪಿಯ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ ಘಟನೆ ಫಜಿಲ್ಕಾದಲ್ಲಿ ನಡೆದಿದೆ. ಕಳೆದ ಕೆಲವು ದಿನಗಳ ಹಿಂದೆ ನವೀನ್ ಅರೋರಾ ಎಂಬಾತನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಇದರ ಪ್ರಮುಖ ಶೂಟರ್ ಬಾದಲ್ ಮೇಲೆ ಬುಧವಾರ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಬಾದಲ್ ಮತ್ತು ಹೆಡ್ ಕಾನ್‌ಸ್ಟೆಬಲ್‌ ಇಬ್ಬರಿಗೂ ತೀವ್ರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನವೀನ್ ಅರೋರಾ […]

ಪ್ರಜಾ ಪ್ರಗತಿ 27 Nov 2025 4:07 pm

ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿರುದ್ದ ಮೊಹಮ್ಮದ್‌ ಸಿರಾಜ್‌ ಕಿಡಿ….!

ಗುವಾಹಟಿ: ಭಾರತ ತಂಡದ ವೇಗಿ ಮೊಹಮ್ಮದ್‌ ಸಿರಾಜ್‌ ಅವರಿಗೆ ಬುಧವಾರ ವಿಮಾನ ಪ್ರಯಾಣದ ವೇಳೆ ತೊಂದರೆ ಉಂಟಾಗಿದೆ. ಈ ಕುರಿತು ಸಿರಾಜ್‌ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದ ವಿರುದ್ದ ಅಸಮಧಾನ ವ್ಯಕ್ತಪಡಿಸಿದ್ದಾರೆ. ಬುಧವಾರ ರಾತ್ರಿ ಗುವಾಹಟಿಯಿಂದ ಹೈದರಾಬಾದ್‌ಗೆ ಹೊರಟಿದ್ದ ಸಿರಾಜ್‌ ಅವರ ವಿಮಾನ ಸಂಜೆ 7:25ಕ್ಕೆ ನಿರ್ಗಮಿಸಬೇಕಿತ್ತು. ಆದರೆ ವಿಮಾನ ಕೆಲ ತಾಂತ್ರಿಕ ಸಮಸ್ಯೆಗಳ ಕಾರಣ ಸೂಕ್ತ ಸಮಯಕ್ಕೆ ಹಾರಲು ಸಾಧ್ಯವಾಗಲಿಲ್ಲ. ಈ ಕುರಿತು ಮಾಹಿತಿ ಕೇಳಿದರೆ ವಿಮಾನಯಾನ ಸಂಸ್ಥೆ ಸ್ಪಷ್ಟ ವಿವರಣೆ ನೀಡಿಲ್ಲ. […]

ಪ್ರಜಾ ಪ್ರಗತಿ 27 Nov 2025 3:53 pm

ಬೆಂಗಳೂರು: ಟ್ರ್ಯಾಕ್ಟರ್ ಪಡೆದು ರೈತರಿಗೆ ವಂಚನೆ; ಖಾಸಗಿ ಬಸ್ ಚಾಲಕನ ಬಂಧನ

ಬೆಂಗಳೂರು: ರೈತರ ಟ್ರ್ಯಾಕ್ಟರ್‌ಗಳನ್ನು ಬಾಡಿಗೆಗೆ ಪಡೆದು ನಂತರ ಮಾರಾಟ ಮಾಡುವ ಮೂಲಕ ವಂಚಿಸಿದ ಆರೋಪದ ಮೇಲೆ ಚಿಕ್ಕಜಾಲ ಪೊಲೀಸರು 35 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಸುಮಾರು 70 ಲಕ್ಷ ರೂ. ಮೌಲ್ಯದ 17 ಟ್ರ್ಯಾಕ್ಟರ್‌ಗಳು ಮತ್ತು ಟ್ರೇಲರ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಚಿಕ್ಕಬಳ್ಳಾಪುರದ ದಿಟ್ಟೂರಹಳ್ಳಿ ನಿವಾಸಿ ಮತ್ತು ಖಾಸಗಿ ಬಸ್ ಚಾಲಕ ದೇವರಾಜ್ ಪಿ. ಮಾಸಿಕ ಬಾಡಿಗೆ ಪಾವತಿಸುವ ನೆಪದಲ್ಲಿ ದೇವರಾಜ್ ಚಿಕ್ಕಜಾಲದ ಹಲವಾರು ರೈತರಿಂದ ಟ್ರ್ಯಾಕ್ಟರ್‌ಗಳು ಮತ್ತು ಟ್ರೇಲರ್‌ಗಳನ್ನು ಪಡೆದಿದ್ದ. ಕೆಲವು ತಿಂಗಳುಗಳಿಂದ, […]

ಪ್ರಜಾ ಪ್ರಗತಿ 27 Nov 2025 12:26 pm

ಹೊರಗುತ್ತಿಗೆ ಅನ್ಯಾಯ ಸರಿಪಡಿಸಲು ರಾಜ್ಯಸರ್ಕಾರ ಬದ್ಧ: ಸಚಿವ ಎಚ್.ಕೆ. ಪಾಟೀಲ್

ಬೆಂಗಳೂರು: ರಾಜ್ಯ ಸರ್ಕಾರ ಉದ್ಯೋಗ ಮತ್ತು ಮೀಸಲಾತಿಯಲ್ಲಿ ಹೊರಗುತ್ತಿಗೆ ಮೂಲಕ ಆಗುತ್ತಿರುವ ಅನ್ಯಾಯ ಸರಿಪಡಿಸಲು ಬದ್ಧವಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಮ ಎಚ್.ಕೆ. ಪಾಟೀಲ್‌ ಅವರು ಬುಧವಾರ ಹೇಳಿದರು. ಡಾ.ಮನಮೋಹನ ಸಿಂಗ್ ಬೆಂಗಳೂರು ನಗರ ವಿವಿ ಡಾ.ಅಂಬೇಡ್ಕರ್‌ ಅಧ್ಯಯನ ಕೇಂದ್ರ, ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆಯ ಆಶ್ರಯದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ, ಸಂವಿಧಾನ ಸೈನಿಕರ ಸಮಾವೇಶ ಉದ್ಘಾಟಿಸಿ ಸಚಿವರುಮಾತನಾಡಿದರು. ಕೇಂದ್ರ, ರಾಜ್ಯ ಸರ್ಕಾರಿ ಉದ್ಯೋಗಗಳಿಗೆ ಅರ್ಹತೆ […]

ಪ್ರಜಾ ಪ್ರಗತಿ 27 Nov 2025 12:24 pm

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್

ಚೆನ್ನೈ : ಎಐಎಡಿಎಂಕೆಯಿಂದ ಉಚ್ಚಾಟಿತರಾದ ಹಿರಿಯ ನಾಯಕ ಕೆ.ಎ. ಸೆಂಗೋಟ್ಟೈಯನ್, ಗೋಬಿಚೆಟ್ಟಿಪಾಳ್ಯಂ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಇಂದು ಗುರುವಾರ ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಔಪಚಾರಿಕವಾಗಿ ಸೇರ್ಪಡೆಗೊಂಡರು. ಟಿವಿಕೆ ರಚನೆಯಾದ ನಂತರ ಸೆಂಗೋಟ್ಟೈಯನ್ ಅವರ ಸೇರ್ಪಡೆಯನ್ನು ಅತ್ಯಂತ ಮಹತ್ವದ ಪಕ್ಷಾಂತರಗಳಲ್ಲಿ ಒಂದೆಂದು ಪರಿಗಣಿಸಲಾಗುತ್ತಿದೆ. ಒಂಬತ್ತು ಬಾರಿ ಶಾಸಕರಾಗಿದ್ದ ಅವರು ತಮ್ಮ ರಾಜೀನಾಮೆ ಪತ್ರವನ್ನು ವಿಧಾನಸಭಾ ಸ್ಪೀಕರ್ ಎಂ. ಅಪ್ಪಾವು ಅವರಿಗೆ […]

ಪ್ರಜಾ ಪ್ರಗತಿ 27 Nov 2025 12:22 pm

ಎಲ್ಲಾ ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ ; ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವೆ ನಡೆಯುತ್ತಿರುವ ಸಂಘರ್ಷ ಶೀಘ್ರವೇ ಇತ್ಯರ್ಥವಾಗಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬುಧವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ. ರಾಜ್ಯದ ನಾಯಕತ್ವ ವಿಚಾರ ಕುರಿತು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಜೊತೆಗೆ ಚರ್ಚಿಸಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು. ಈ […]

ಪ್ರಜಾ ಪ್ರಗತಿ 27 Nov 2025 12:05 pm

ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

ನವದೆಹಲಿ : ಭಾರತೀಯ ಕಾಲಮಾನ ಪ್ರಕಾರ ನಿನ್ನೆ ಬುಧವಾರ ಅಮೆರಿಕಾದ ಶ್ವೇತಭವನದ ಬಳಿ ಇಬ್ಬರು ರಾಷ್ಟ್ರೀಯ ಗಾರ್ಡ್ ಸದಸ್ಯರ ಮೇಲೆ ನಡೆದ ಗುಂಡಿನ ದಾಳಿಯನ್ನು ಭಯೋತ್ಪಾದನಾ ಕೃತ್ಯ ಮತ್ತು ಮಾನವೀಯತೆಯ ವಿರುದ್ಧದ ಅಪರಾಧ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಂಡಿಸಿದ್ದಾರೆ. ಫ್ಲೋರಿಡಾದಲ್ಲಿ ಮಾತನಾಡಿದ ಅವರು, ದಾಳಿಯನ್ನು ಘೋರ, ದುಷ್ಟ ಮತ್ತು ದ್ವೇಷದ ಕೃತ್ಯ ಎಂದು ಕರೆದಿದ್ದಾರೆ. ಅಪರಾಧಿಯು ತುಂಬಾ ದುಬಾರಿ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಕಳೆದ ಹಾರಿ ಜೋ ಬೈಡೆನ್ […]

ಪ್ರಜಾ ಪ್ರಗತಿ 27 Nov 2025 12:00 pm

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಕೈದಿಗಳ ಮೋಜು ಮಸ್ತಿಯ ತಾಣವಾಗಿ ಮಾರ್ಪಟ್ಟಿದೆ. ಜೈಲಲ್ಲೇ ರೌಡಿಗಳ ಹುಟ್ಟುಹಬ್ಬ ಆಚರಣೆ, ಗುಂಡು-ತುಂಡಿನ ಪಾರ್ಟಿಯ ಜೊತೆಗೆ ಉಗ್ರರ ಕೈನಲ್ಲೂ ಮೊಬೈಲ್​ ಇರುವ ಸಾಕಷ್ಟು ವಿಡಿಯೋಗಳು ಈಗಾಗಲೇ ಹೊರ ಬಂದಿವೆ. ಈ ನಡುವಲ್ಲೇ ಮತ್ತೊಂದು ಕರ್ಮಕಾಂಡದ ವಿಡಿಯೋ ವೈರಲ್ ಆಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮದ್ಯ ತಯಾರಿ ಮಾಡಿದ್ದಾರೆ ಎನ್ನಲಾದ ವಿಡಿಯೋ ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಆ್ಯಪಲ್, ದ್ರಾಕ್ಷಿಮತ್ತು ಪೈನ್ ಆ್ಯಪಲ್‌ಗಳನ್ನು ಬಳಸಿ […]

ಪ್ರಜಾ ಪ್ರಗತಿ 27 Nov 2025 11:53 am

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ : ಡಿ ಕೆ ಶಿವಕುಮಾರ್‌

ಬೆಂಗಳೂರು: ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ. ನ್ಯಾಯಾಧೀಶರಾಗಲಿ, ರಾಷ್ಟ್ರಪತಿಯಾಗಲಿ, ನಾನಾಗಲಿ, ಕೊಟ್ಟ ಮಾತಿಗೆ ತಕ್ಕಂತೆ ನಡೆಯಬೇಕೆಂದು ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬುಧವಾರ ಹೇಳಿದ್ದು, ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾನೂನು ಸಲಹೆಗಾರ ಪೊನ್ನಣ್ಣ ಅವರಿಗೆ ವರ್ಡ್ ಪವರ್ ಈಸ್ ವರ್ಲ್ಡ್ ಪವರ್ ಎಂದು ಹೇಳುತ್ತಿರುತ್ತೇನೆ. ಮಾತು ಕೊಡುತ್ತೇವೆ, ಆಡುತ್ತೇವೆ. ಅದನ್ನು […]

ಪ್ರಜಾ ಪ್ರಗತಿ 27 Nov 2025 11:48 am

ಮೊದಲು ಪರಮೇಶ್ವರ್ ಕೂಲಿ ಚುಕ್ತಾ ಮಾಡಲಿ: ನಂತರ ವಿಧಾನಸಭೆ ವಿಸರ್ಜಿಸಿ ಡಿಕೆಶಿ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ : ಕೆ ಎನ್‌ ರಾಜಣ್ಣ

ಬೆಂಗಳೂರು: ನಾಯಕತ್ವ ಗೊಂದಲ ಬಗೆಹರಿಯಬೇಕಾದರೆ ವಿಧಾನಸಭೆ ವಿಸರ್ಜಿಸಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ, ಚುನಾವಣೆಯಲ್ಲಿ ಗೆದ್ದ ನಂತರ ಡಿಕೆ ಶಿವಕುಮಾರ್ 5 ವರ್ಷ ಮುಖ್ಯಮಂತ್ರಿಯಾಗಿರಲಿ ಎಂದು ಶಾಸಕ ಕೆ.ಎನ್.ರಾಜಣ್ಣ ಮಾರ್ಮಿಕವಾಗಿ ನುಡಿದಿದ್ದಾರೆ. ಚಿಕ್ಕನಾಯಕನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಬದಲಾವಣೆ ಮಾಡುವುದಿದ್ದರೆ ಸಿಎಲ್‌ಪಿ ಸಭೆಯಲ್ಲೇ ನಿರ್ಧಾರವಾಗಲಿ. ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಯಾರೂ ಹೇಳಿಲ್ಲ. 30–30 ತಿಂಗಳು ಅಧಿಕಾರ ಹಂಚಿಕೆ ಒಪ್ಪಂದವಾಗಿದೆ ಎಂದು ಸುಮ್ಮನೆ […]

ಪ್ರಜಾ ಪ್ರಗತಿ 27 Nov 2025 11:38 am

ನಾವು ಬಿಟ್ಟರು ಧರ್ಮ, ಜಾತಿ ನಮ್ಮನ್ನು ಬಿಡುವುದಿಲ್ಲ ; ಡಿಕೆಶಿ

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರು ಪಕ್ಷದ ಹಿರಿಯ ನಾಯಕರು. ಕಾಂಗ್ರೆಸ್ ಪಕ್ಷವನ್ನು 2028 ಹಾಗೂ 2029 ರ ಚುನಾವಣೆಯಲ್ಲಿ ಅಧಿಕಾರಕ್ಕೆ ತರುವ ಕಾರ್ಯತಂತ್ರದ ಬಗ್ಗೆ ಅವರ ಜತೆ ಚರ್ಚೆ ನಡೆಸಲಾಯಿತು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ನೀವು ಒಕ್ಕಲಿಗರ ನಾಯಕರಲ್ಲ ಎಂದು ಆರ್.ಅಶೋಕ್ ಅವರು ಹೇಳಿರುವ ಬಗ್ಗೆ ಕೇಳಿದಾಗ, […]

ಪ್ರಜಾ ಪ್ರಗತಿ 27 Nov 2025 11:35 am

ಡಾ. ಶಾಹೀನ್ ಪ್ರೇಯಸಿಯಲ್ಲ…ಹೆಂಡತಿ : ಮುಝಮ್ಮಿಲ್!

ದೆಹಲಿ: ರಾಷ್ಟ್ರ ರಾಜಧಾನಿಯ ದೆಹಲಿ ಕೆಂಪುಕೋಟೆ ಕಾರು ಸ್ಫೋಟದ ತನಿಖೆಯಲ್ಲಿ ಮತ್ತೊಂದು ಹೊಸ ವಿಚಾರ ಬಹಿರಂಗವಾಗಿದೆ. ಪ್ರಕರಣದ ಆರೋಪಿಗಳಲ್ಲಿ ಒಬ್ಬಳಾಗಿರುವ ಡಾ. ಶಾಹೀನ್ ಶಾಹಿದ್ ತನ್ನ ಗೆಳತಿಯಲ್ಲ, ಆಕೆ ತನ್ನ ಪತ್ನಿ ಎಂದು ಬಂಧಿತ ಆರೋಪಿ ಮುಝಮ್ಮಿಲ್ ಅಹ್ಮದ್ ಗನೈ ಹೇಳಿದ್ದಾನೆ. ಸೆಪ್ಟೆಂಬರ್ 2023 ರಲ್ಲಿ ಇಬ್ಬರೂ ಔಪಚಾರಿಕವಾಗಿ ವಿವಾಹವಾದರು ಎಂದು ಅವನು ಹೇಳಿಕೊಂಡಿದ್ದಾನೆ. ವರದಿಯ ಪ್ರಕಾರ, ಕಳೆದ ವರ್ಷ ಅಲ್-ಫಲಾಹ್ ವಿಶ್ವವಿದ್ಯಾಲಯದ ಬಳಿಯ ಮಸೀದಿಯಲ್ಲಿ ತಮ್ಮ ನಿಕಾಹ್ ಕಾರ್ಯಕ್ರಮ ನಡೆಸಿದ್ದರು […]

ಪ್ರಜಾ ಪ್ರಗತಿ 27 Nov 2025 11:00 am

ಥಾಣೆ: ಸೂಟ್‌ಕೇಸ್‌ನಲ್ಲಿ ಯುವತಿಯ ಶವ ಪತ್ತೆ; ಲಿವ್-ಇನ್ ಪಾರ್ಟನರ್ ಬಂಧನ

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತೊರೆಯ ದಡದಲ್ಲಿ ಸೂಟ್‌ಕೇಸ್‌ನಲ್ಲಿ ಯುವತಿಯೊಬ್ಬರ ಶವ ಪತ್ತೆಯಾಗಿದ್ದು, ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ ಅವರ ಲಿವ್-ಇನ್ ಪಾರ್ಟನರ್ ಅನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.ನವೆಂಬರ್ 21 ರಂದು ಇಬ್ಬರ ನಡುವೆ ಜಗಳ ನಡೆದಿದ್ದು, ಆರೋಪಿಯು ಯುವತಿಯನ್ನು ಕೊಂದು ಮರುದಿನ ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿ, ತೊರೆಯ ಬಳಿ ಎಸೆದಿದ್ದಾರೆ ಎಂದು ಅವರು ಹೇಳಿದ್ದಾರೆ. ಸೋಮವಾರ ದೇಸಾಯಿ ಗ್ರಾಮದ ಬಳಿಯ ತೊರೆಯ ಸೇತುವೆಯ ಕೆಳಗೆ ಪ್ರಿಯಾಂಕಾ ವಿಶ್ವಕರ್ಮ(22) […]

ಪ್ರಜಾ ಪ್ರಗತಿ 26 Nov 2025 5:41 pm

ಜೈಲಿನೊಳಗೆ ಹತ್ಯೆಗೀಡಾದ್ರಾ ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌………?

ಇಸ್ಲಾಮಾಬಾದ್: ಕಳೆದ ಒಂದು ತಿಂಗಳಿನಿಂದ ತಮ್ಮ ಸಹೋದರನನ್ನು ಭೇಟಿ ಮಾಡಲು ಪಾಕಿಸ್ತಾನ ಸರ್ಕಾರ ಅವಕಾಶ ನೀಡಿಲ್ಲ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಮೂವರು ಸಹೋದರಿಯರು ಆರೋಪಿಸಿದ್ದಾರೆ. ಈ ನಡುವೆಯೇ ಇಮ್ರಾನ್ ಖಾನ್ ಅವರು ಜೈಲಿನಲ್ಲಿ ಸಾವನ್ನಪ್ಪಿದ್ದಾರೆ ಎನ್ನುವ ವದಂತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಇಮ್ರಾನ್ ಖಾನ್ ಅವರನ್ನು ಭೇಟಿಯಾಗಲು ಹೋಗಿದ್ದ ಮೂವರು ಸಹೋದರಿಯರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಇಮ್ರಾನ್ ಖಾನ್ ಅವರು ಜೈಲಿನಲ್ಲಿ ನಿಧನರಾಗಿದ್ದಾರೆ […]

ಪ್ರಜಾ ಪ್ರಗತಿ 26 Nov 2025 5:30 pm

ಆರೋಪಿಗಳನ್ನು ರಕ್ಷಿಸಲು ತನಿಖಾಧಿಕಾರಿಗಳು ಸರಿಯಾದ ದಾಖಲೆ ಸಲ್ಲಿಸಿರಲಿಲ್ಲ: ಒಡನಾಡಿ ಪರಶು

ಮೈಸೂರು: ತನಿಖಾಧಿಕಾರಿಗಳು ಸಾಕ್ಷಿಯನ್ನು ಕೊಡುವಲ್ಲಿ ಬಹಳಷ್ಟು ಎಡವಿದ್ದರು. ಆರೋಪಿಗಳನ್ನು ರಕ್ಷಿಸಲು ಸರಿಯಾದ ದಾಖಲೆಗಳನ್ನು ಸಲ್ಲಿಸಿರಲಿಲ್ಲ. ನಾವು ಪ್ರಶ್ನೆ ಮಾಡಿದ್ದಕ್ಕೆ ನಮ್ಮ ಮೇಲೆಯೇ ಷಡ್ಯಂತ್ರದ ಕೇಸ್‌ ಹಾಕಿದ್ದರು ಎಂದು ಒಡನಾಡಿ ಸಂಸ್ಥೆಯ ಪರಶು ಹೇಳಿದ್ದಾರೆ. ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ಖುಲಾಸೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅವರು, ಈಗ ನಾನು ಯಾರನ್ನು ದೂಷಿಸಲು ಹೋಗುವುದಿಲ್ಲ. ನ್ಯಾಯಾಲಯ ಏನು ಹೇಳಿದೆಯೋ ಆ ತೀರ್ಪನ್ನು ಓದಬೇಕು. ವಕೀಲರ ಜೊತೆ ಸೇರಿ ಚರ್ಚೆ […]

ಪ್ರಜಾ ಪ್ರಗತಿ 26 Nov 2025 5:05 pm

ಕರ್ನಾಟಕದ 9 ಜಿಲ್ಲೆಗಳನ್ನೊಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರದ ಒಲವು

ನವದೆಹಲಿ: ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರಿಂದ ಪ್ರಸ್ತಾಪಿತ ಕರ್ನಾಟಕದ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಕರ್ನಾಟಕದ ಕೈಗಾರಿಕೆ ಹಾಗೂ ಸಾಗಣೆ ಕ್ಷೇತ್ರಗಳಿಗೆ ಪರಿವರ್ತನಾತ್ಮಕ ಕಾಯಕಲ್ಪ ನೀಡುವ ಈ ಯೋಜನೆಗೆ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ (Piyush Goyal) ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಒಂಬತ್ತು ಕೈಗಾರಿಕಾ ಪಾರ್ಕ್‌ಗಳನ್ನು ಸ್ಥಾಪಿಸುವ […]

ಪ್ರಜಾ ಪ್ರಗತಿ 26 Nov 2025 5:04 pm

ಕಟ್ಟಡ ನಕ್ಷೆ ಉಲ್ಲಂಘನೆ ತಡೆಗೆ GBA ಮಾರ್ಗಸೂಚಿ ಪ್ರಕಟ…..!

ಬೆಂಗಳೂರು: ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಇದ್ದ ನಕ್ಷೆ ಮಂಜೂರಾತಿ ನೀಡುವ ಅಧಿಕಾರವನ್ನ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಗೆ ವರ್ಗಾಯಿಸಿದ ಬೆನ್ನಲ್ಲೇ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ. ಕಟ್ಟಡ ನಕ್ಷೆ ಉಲ್ಲಂಘನೆ ತಡೆಯಲು ಮುಂದಾಗಿರುವ ಜಿಬಿಎ ತಳಪಾಯಕ್ಕೂ ಪ್ರಮಾಣ ಪತ್ರ ಪಡೆಯುವುದನ್ನ ಕಡ್ಡಾಯಗೊಳಿಸಿದೆ. ನಗರ ಯೋಜನೆ ಅಧಿಕಾರಿಗಳು ಕಡ್ಡಾಯವಾಗಿ ಈ ಕುರಿತು ಜವಾಬ್ದಾರಿ ಪಾಲಿಸಬೇಕು ಎಂದು ತಾಕೀತು ಮಾಡಿದೆ. ಇನ್ನೂ ಅನಧಿಕೃತ ಕಟ್ಟಡಗಳ ತಡೆಗೆ ಏನೆಲ್ಲ ಮಾರ್ಗಸೂಚಿ ಅನುಸರಿಸಬೇಕು ಅನ್ನೋದನ್ನ ನೋಡೋದಾದ್ರೆ… […]

ಪ್ರಜಾ ಪ್ರಗತಿ 26 Nov 2025 5:03 pm

ಅಲ್ ಫಲಾಹ್ ವಿವಿಗೆ ಅಲ್ಪಸಂಖ್ಯಾತ ಸ್ಥಾನಮಾನ ರದ್ದಾಗುವ ಭೀತಿ

ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಆತ್ಮಾಹುತಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ ಫಲಾಹ್ ವಿಶ್ವವಿದ್ಯಾಲಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನವನ್ನು ಸಹ ರದ್ದಾಗುವ ಭೀತಿ ಎದುರಾಗಿದೆ. ರಾಷ್ಟ್ರೀಯ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಆಯೋಗದಿಂದ ವಿಶ್ವವಿದ್ಯಾಲಯಕ್ಕೆ ಶೋಕಾಸ್ ನೋಟಿಸ್ ನೀಡಿದ್ದು, ಅಲ್ಪಸಂಖ್ಯಾತ ಸ್ಥಾನಮಾನವನ್ನು ಏಕೆ ರದ್ದುಗೊಳಿಸಬಾರದು ಎಂದು ಕೇಳಲಾಗಿದೆ. ಆಯೋಗವು ಡಿ.4 ರಂದು ಈ ಸೂಚನೆಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ವಿಶ್ವವಿದ್ಯಾಲಯದ ಕುಲಸಚಿವರು ಮತ್ತು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ತಮ್ಮ ಅಭಿಪ್ರಾಯಗಳನ್ನು ಮಂಡಿಸಲಿದ್ದಾರೆ. ವಿಶೇಷ ಸ್ಥಾನಮಾನವನ್ನು […]

ಪ್ರಜಾ ಪ್ರಗತಿ 26 Nov 2025 4:56 pm

ರೈಲ್ವೆಗಳಲ್ಲಿ ಕೇವಲ ಹಲಾಲ್ ಮಾಂಸ – ರೈಲ್ವೆ ಬೋರ್ಡ್‌ಗೆ NHRC ನೋಟಿಸ್

ನವದೆಹಲಿ: ಭಾರತೀಯ ರೈಲ್ವೆಯಲ್ಲಿ ನೀಡುವ ಊಟದಲ್ಲಿ ಕೇವಲ ಹಲಾಲ್ ಪ್ರಮಾಣಪತ್ರ ಹೊಂದಿರುವ ಮಾಂಸವನ್ನು ಮಾತ್ರ ನೀಡಲಾಗುತ್ತಿದೆ ಎಂಬ ದೂರನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ರೈಲ್ವೆ ಬೋರ್ಡ್‌ಗೆ ನೋಟಿಸ್ ಜಾರಿ ಮಾಡಿದೆ. ಈ ವಿಚಾರವಾಗಿ ತೆಗೆದುಕೊಂಡ ಕ್ರಮಗಳ ಬಗ್ಗೆ ಎರಡು ವಾರಗಳೊಳಗೆ ವರದಿ ಸಲ್ಲಿಸಲು ಸೂಚಿಸಿದೆ. ಈ ಸಂಬಂಧ ಸಲ್ಲಿಸಿದ ದೂರಿಗಳಲ್ಲಿ ಈ ಅಭ್ಯಾಸ ಹಿಂದೂಗಳು, ಸಿಖ್‌ರು ಮತ್ತು ಎಸ್‌ಸಿಯ ಸಮುದಾಯಗಳ ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಆರೋಪಿಸಲಾಗಿದೆ. ವಿಶೇಷವಾಗಿ ಮಾಂಸ […]

ಪ್ರಜಾ ಪ್ರಗತಿ 26 Nov 2025 4:54 pm

SIR ಸಭೆಗೆ ಗೈರಾಗಿದ್ದಕ್ಕೆ ಅಮಾನತು – ಹಸೆಮಣೆ ಏರಬೇಕಿದ್ದ ಅಧಿಕಾರಿ ಆತ್ಮಹತ್ಯೆ

ಲಕ್ನೋ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR)ಗೆ ಸಂಬಂಧಿಸಿದ ಸಭೆಗೆ ಗೈರಾದ ಕಾರಣ ಅಮಾನತುಗೊಂಡ ಅಧಿಕಾರಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.25 ವರ್ಷದ ಗುಮಾಸ್ತ ಸುಧೀರ್ ಕುಮಾರ್ ಆತ್ಮಹತ್ಯೆಗೆ ಶರಣಾದವರು. ಇವರಿಗೆ ಮದುವೆ ನಿಶ್ಚಯವಾಗಿತ್ತು. ವಿವಾಹಕ್ಕೆ ಒಂದು ದಿನವಷ್ಟೇ ಬಾಕಿ ಇರುವಾಗ, ನಿವಾಸದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ವಿವಾಹದ ಸಿದ್ಧತೆಗಳಿಂದಾಗಿ ಭಾನುವಾರ ಅಧಿಕೃತ ಸಭೆಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಕುಮಾರ್‌ನನ್ನು ಅಮಾನತು ಮಾಡಿದ್ದರು. ಇದರಿಂದ ನನ್ನ […]

ಪ್ರಜಾ ಪ್ರಗತಿ 26 Nov 2025 4:52 pm

ಲಾಲು ಕುಟುಂಬದ ಕೈಯಿಂದ ಜಾರಿದ ಬಂಗಲೆ…..!

ಪಾಟ್ನಾ ಬಿಹಾರದಲ್ಲಿ ಮತ್ತೊಮ್ಮೆ ಎನ್​ಡಿಎ ಸರ್ಕಾರ ರಚನೆಯಾಗಿದೆ. ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಬಿಹಾರ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿಗೆ ಬೇರೆ ನಿವಾಸವನ್ನು ಮಂಜೂರು ಮಾಡಲಾಗಿದೆ. ರಾಬ್ರಿ ದೇವಿಗೆ ಹೊಸ ಸರ್ಕಾರಿ ನಿವಾಸವನ್ನು ಮಂಜೂರು ಮಾಡುವ ನಿರ್ಧಾರದ ವಿರುದ್ಧ ಲಾಲು ಪ್ರಸಾದ್ ಯಾದವ್ ಮತ್ತು ರಾಬ್ರಿ ದೇವಿ ಅವರ ಪುತ್ರಿ ರೋಹಿಣಿ ಆಚಾರ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನೀವು ಅವರನ್ನು ನಿಮ್ಮ ಮನೆಯಿಂದ ಹೊರಗೆ ಹಾಕಬಹುದು, ಆದರೆ ಬಿಹಾರದ ಜನರ ಹೃದಯದಿಂದ ಅವರನ್ನು […]

ಪ್ರಜಾ ಪ್ರಗತಿ 26 Nov 2025 4:44 pm

ಕಮಲಾ ಪಸಂದ್ ಪಾನ್ ಮಸಾಲಾ ಮಾಲೀಕನ ಸೊಸೆಯ ದುರಂತ ಅಂತ್ಯ

ನವದೆಹಲಿ: ಕಮಲಾ ಪಸಂದ್ ಪಾನ್ ಮಸಾಲಾ ಕಂಪನಿಯ ಮಾಲೀಕ ಕಮಲ್ ಕಿಶೋರ್ ಅವರ ಸೊಸೆ ದೀಪ್ತಿ ಚೌರಾಸಿಯಾ (40) ನಿನ್ನೆ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಆಕೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೊಲೀಸರು ಡೈರಿಯೊಂದನ್ನು ವಶಪಡಿಸಿಕೊಂಡಿದ್ದು, ಅದರಲ್ಲಿ ಆಕೆಯ ಪತಿ ಹರ್‌ಪ್ರೀತ್ ಚೌರಾಸಿಯಾ ಅವರೊಂದಿಗಿನ ವಿವಾದದ ಬಗ್ಗೆ ಉಲ್ಲೇಖಿಸಿದ್ದಾರೆ. ದೀಪ್ತಿ 2010 ರಲ್ಲಿ ಹರ್‌ಪ್ರೀತ್ ಅವರನ್ನು ವಿವಾಹವಾದರು. ದಂಪತಿಗೆ 14 ವರ್ಷದ ಮಗನಿದ್ದಾನೆ. ಮೂಲಗಳ ಪ್ರಕಾರ, ಅವರು ದುಪಟ್ಟಾ ಬಳಸಿ […]

ಪ್ರಜಾ ಪ್ರಗತಿ 26 Nov 2025 3:46 pm

ತಲೆಗೆ 1.19 ಕೋಟಿ ಬಹುಮಾನ ಹೊಂದಿದ್ದ 32 ನಕ್ಸಲರು ಸೇರಿ 41 ಮಾವೋವಾದಿಗಳು ಪೊಲೀಸರಿಗೆ ಶರಣು

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ ನಲವತ್ತೊಂದು ನಕ್ಸಲರು ಶರಣಾಗಿದ್ದಾರೆ. ಅವರಲ್ಲಿ 32 ಮಂದಿ ತಲೆಗೆ ಒಟ್ಟಾರೆಯಾಗಿ 1.19 ಕೋಟಿ ರೂ. ಬಹುಮಾನ ಹೊಂದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.12 ಮಹಿಳೆಯರು ಸೇರಿದಂತೆ 41 ನಕ್ಸಲರು ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಮುಂದೆ ಶರಣಾದರು. ರಾಜ್ಯ ಸರ್ಕಾರದ ಹೊಸ ಶರಣಾಗತಿ ಮತ್ತು ಪುನರ್ವಸತಿ ನೀತಿ ಹಾಗೂ “ಪೂನಾ ಮಾರ್ಗಮ್”ದಿಂದ ಪ್ರಭಾವಿತರಾಗಿ ನಕ್ಸಲರು ಶರಣಾಗಿದ್ದಾರೆ ಎಂದು ಬಿಜಾಪುರ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ಯಾದವ್ […]

ಪ್ರಜಾ ಪ್ರಗತಿ 26 Nov 2025 3:43 pm

ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ: ವಿಐಟಿ ಭೋಪಾಲ್ ವಿವಿ ಕ್ಯಾಂಪಸ್ ಧ್ವಂಸ

ಭೂಪಾಲ್: ಮೂಲಭೂತ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದಿದ್ದು, ಭೂಪಾಲ್ ವಿಐಟಿ ಕ್ಯಾಂಪಸ್ ಧ್ವಂಸಗೊಳಿಸಿ ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯ ವಿಐಟಿ ಭೋಪಾಲ್ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಮತ್ತು ಬುಧವಾರ ಮಧ್ಯರಾತ್ರಿಯಿಂದ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಹಿಂಸಾಚಾರ ಭುಗಿಲೆದ್ದಿದೆ ಈ ಹಿನ್ನೆಲೆಯಲ್ಲಿ ನವೆಂಬರ್ 30 ರವರೆಗೆ ವಿಶ್ವವಿದ್ಯಾಲಯವು ರಜೆ ಘೋಷಿಸಬೇಕಾಯಿತು ಎಂದು ಅಧಿಕೃತ ಮೂಲವೊಂದು ತಿಳಿಸಿದೆ. ಶುದ್ದವಿಲ್ಲದ ಕುಡಿಯುವ ನೀರು, […]

ಪ್ರಜಾ ಪ್ರಗತಿ 26 Nov 2025 3:41 pm

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

ಅಬುಧಾಬಿ: ರಷ್ಯಾದೊಂದಿಗಿನ ಯುದ್ಧವನ್ನು ಕೊನೆಗೊಳಿಸಲು ಪ್ರಸ್ತಾವಿತ ಒಪ್ಪಂದದ ಚೌಕಟ್ಟಿಗೆ ಯುಕ್ರೇನ್ ಒಪ್ಪಿಕೊಂಡಿದೆ ಎಂದು ಅಮೆರಿಕದ ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ಹೇಳಿದ್ದಾರೆ.ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹಲವಾರು ಸಮಸ್ಯೆಗಳು ಬಗೆಹರಿಯದೆ ಉಳಿದಿವೆ ಎಂದು ಹೇಳಿದ್ದರೂ, ಶಾಂತಿ ಒಪ್ಪಂದಕ್ಕೆ ಯುಕ್ರೇನ್ ಒಪ್ಪಿಕೊಂಡಿದೆ ಎಂದು ಅಮೆರಿಕದ ಅಧಿಕಾರಿ ಹೇಳಿದ್ದನ್ನು ಸಿಎನ್‌ಎನ್ ವರದಿ ಮಾಡಿದೆ. ಅಬುಧಾಬಿಯಲ್ಲಿ ರಷ್ಯಾದ ಪ್ರತಿನಿಧಿಗಳೊಂದಿಗೆ ಯುಎಸ್ ಸೇನಾ ಕಾರ್ಯದರ್ಶಿ ಡಾನ್ ಡ್ರಿಸ್ಕಾಲ್ ಮಾತುಕತೆ ನಡೆಸಿದ ಬಳಿಕ ಮಾತನಾಡಿದ ಅಧಿಕಾರಿ, “ಯುಕ್ರೇನಿಯನ್ನರು ಶಾಂತಿ ಒಪ್ಪಂದಕ್ಕೆ ಒಪ್ಪಿಕೊಂಡಿದ್ದಾರೆ. ಕೆಲವು […]

ಪ್ರಜಾ ಪ್ರಗತಿ 26 Nov 2025 2:49 pm

ಅರುಣಾಚಲ ಪ್ರದೇಶ ಭಾರತದ “ಅವಿಭಾಜ್ಯ-ಅಳಿಸಲಾಗದ”ಭಾಗ: ಚೀನಾಗೆ ಭಾರತ ತಿರುಗೇಟು

ನವದೆಹಲಿ: ಅರುಣಾಚಲ ಪ್ರದೇಶದ ಮಹಿಳೆಯನ್ನು ಚೀನಾ ಬಂಧನಕ್ಕೊಳಪಡಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಮತ್ತು ಅಳಿಸಲಾಗದ ಭಾಗವಾಗಿದೆ ಎಂದು ಪುನರುಚ್ಛರಿಸಿದೆ. ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರರ ಇತ್ತೀಚಿನ ಹೇಳಿಕೆಗಳ ಕುರಿತು ಮಾಧ್ಯಮ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು, ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ, ಎಂದಿಗೂ ಬೇರ್ಪಡಿಸಲಾಗದ ಭಾಗವಾಗಿದೆ. ಇದು ಸ್ವಯಂ-ಸ್ಪಷ್ಟ ಹಾಗೂ ಸತ್ಯ. ಚೀನಾದ ಕಡೆಯಿಂದ ಎಷ್ಟೇ ನಿರಾಕರಣೆ ಬಂದರೂ ಈ ನಿರ್ವಿವಾದದ […]

ಪ್ರಜಾ ಪ್ರಗತಿ 26 Nov 2025 2:44 pm

ಕಾಡಸಿದ್ದೇಶ್ವರ ಸ್ವಾಮೀಜಿ ಪ್ರಕರಣ : ಜಿಲ್ಲಾಧಿಕಾರಿ ಆದೇಶ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಮಹಾರಾಷ್ಟ್ರದ ಕನೇರಿ ಮಠದ ಕಾಡೇಶ್ವರ ಸ್ವಾಮೀಜಿಗೆ ಧಾರವಾಡ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ನ ಧಾರವಾಡ ಪೀಠವು ಮಂಗಳವಾರ ವಜಾಗೊಳಿಸಿದೆ. ಧಾರವಾಡ ಜಿಲ್ಲಾಧಿಕಾರಿಯು 05.11.2025ರಿಂದ 3.01.2026ರವರೆಗೆ ನಿರ್ಬಂಧ ವಿಧಿಸಿ ನವೆಂಬರ್‌ 4ರಂದು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಕಾಡಸಿದ್ದೇಶ್ವರ ಸ್ವಾಮೀಜಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸುವ ಮೂಲಕ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ತೀರ್ಪು ನೀಡಿದೆ. ನ್ಯಾಯಾಲಯದಲ್ಲಿ ವಾದ ಮಂಡಿಸಿದ ಕಾಡಸಿದ್ದೇಶ್ವರ ಸ್ವಾಮೀಜಿ ಪರ ವಕೀಲರು, ಕಾಡಸಿದ್ದೇಶ್ವರ […]

ಪ್ರಜಾ ಪ್ರಗತಿ 26 Nov 2025 2:39 pm

ನಕಲಿ ನಂದಿನಿ ತುಪ್ಪ ರಾಕೆಟ್ : ಕಿಂಗ್‌ಪಿನ್ ದಂಪತಿ ಬಂಧನ…..!

ಬೆಂಗಳೂರು: ತಮಿಳುನಾಡಿನಲ್ಲಿ ನಕಲಿ ತುಪ್ಪ ತಯಾರಿಕಾ ಘಟಕವನ್ನು ಸ್ಥಾಪಿಸಿ ರಾಜ್ಯಾದ್ಯಂತ ನಕಲಿ ಉತ್ಪನ್ನಗಳನ್ನು ವಿತರಿಸುತ್ತಿದ್ದ ಪ್ರಮುಖ ಸೂತ್ರಧಾರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಶಿವಕುಮಾರ್ ಮತ್ತು ಆತನ ಪತ್ನಿ ರಮ್ಯಾ ಎಂದು ಗುರುತಿಸಲಾಗಿದೆ. ಸಿಸಿಬಿ ಪೊಲೀಸರ ತನಿಖೆ ವೇಳೆ ಈ ದಂಪತಿಯೇ ನಕಲಿ ನಂದಿನಿ ಉತ್ಪನ್ನಗಳ ತಯಾರಿಕೆ ಘಟಕದ ಕಿಂಗ್‌ಪಿನ್‌ಗಳು ಎಂಬುದು ದೃಢಪಟ್ಟಿದೆ. ಸಿಸಿಬಿ ಡಿಸಿಪಿ ಶ್ರೀಹರಿಬಾಬು ಅವರು ನೀಡಿರುವ ಮಾಹಿತಿ ಪ್ರಕಾರ, ಆರೋಪಿ ದಂಪತಿಗಳು ನೆರೆಯ ತಮಿಳುನಾಡಿನಲ್ಲಿ ನಕಲಿ ತುಪ್ಪ […]

ಪ್ರಜಾ ಪ್ರಗತಿ 26 Nov 2025 2:35 pm

ಬೆಂಗಳೂರಿನಲ್ಲಿರುವ ಶ್ರೀಲಂಕಾದ ವಿದ್ಯಾರ್ಥಿಗೆ ಬ್ಲ್ಯಾಕ್‌ಮೇಲ್…….!

ಬೆಂಗಳೂರು: ಬೆಂಗಳೂರಿನಲ್ಲಿದ್ದ 24 ವರ್ಷದ ಶ್ರೀಲಂಕಾದ ಪ್ರಜೆಯೊಬ್ಬರು ಆನ್‌ಲೈನ್ ಲೈಂಗಿಕ ಕಿರುಕುಳ ಜಾಲಕ್ಕೆ ಬಲಿಯಾಗಿದ್ದು, ಈ ಸಂಬಂಧ ದೂರು ದಾಖಲಾಗಿದೆ.ದೂರುದಾರರ ಪ್ರಕಾರ, ಅಪರಿಚಿತ ವ್ಯಕ್ತಿ ಇನ್‌ಸ್ಟಾಗ್ರಾಂನಲ್ಲಿ ಸಂತ್ರಸ್ತ ವಿದ್ಯಾರ್ಥಿನಿಯನ್ನು ಸಂಪರ್ಕಿಸಿದ್ದಾನೆ. ಕ್ರಮೇಣ ಆನ್‌ಲೈನ್ ಮೂಲಕ ಸ್ನೇಹ ಬೆಳೆಸಿಕೊಂಡು ನಂತರ ವಾಟ್ಸಾಪ್‌ನಲ್ಲಿ ಸಂತ್ರಸ್ತೆಯನ್ನು ಸಂಪರ್ಕಿಸಿದ್ದಾನೆ. ವಿಡಿಯೋ ಕರೆಗಳ ಸಮಯದಲ್ಲಿ, ಆರೋಪಿಯು ತನ್ನ ಒಪ್ಪಿಗೆಯಿಲ್ಲದೆ ವೈಯಕ್ತಿಕ ಫೋಟೊಗಳು ಮತ್ತು ಖಾಸಗಿ ವಿಡಿಯೋಗಳನ್ನು ರಹಸ್ಯವಾಗಿ ತೆಗೆದುಕೊಂಡಿದ್ದಾನೆ. ನಂತರ ಅವುಗಳನ್ನು ಡಿಲೀಟ್ ಮಾಡಲು ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ […]

ಪ್ರಜಾ ಪ್ರಗತಿ 26 Nov 2025 2:33 pm

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ವಿಷಯವು ಸಾರ್ವಜನಿಕವಾಗಿ ಚರ್ಚಿಸಬೇಕಾದ ವಿಷಯವಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಹೇಳಿದ್ದಾರೆ.ನವೆಂಬರ್ 26 ರಂದು ನಡೆಯುವ ಸಂವಿಧಾನ ದಿನಾಚರಣೆಯಲ್ಲಿ ಭಾಗವಹಿಸಲು ಇಂದು ಬೆಂಗಳೂರಿನಿಂದ ದೆಹಲಿಗೆ ಆಗಮಿಸಿದ ಖರ್ಗೆ, “ಇದು ಇಲ್ಲಿ ಮತ್ತು ಸಾರ್ವಜನಿಕವಾಗಿ ಚರ್ಚಿಸಬೇಕಾದ ವಿಷಯವಲ್ಲ ಎಂದು ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. ನವೆಂಬರ್ 26 ರಂದು ನಡೆಯುವ ಸಂವಿಧಾನ ದಿನಾಚರಣೆಗೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ಇಲ್ಲಿಗೆ […]

ಪ್ರಜಾ ಪ್ರಗತಿ 26 Nov 2025 2:28 pm

KSCA ಚುನಾವಣೆಯಿಂದ ನಿಷೇಧ: ಹೈಕೋರ್ಟ್ ಮೊರೆ ಹೋದ ಕೆಎನ್ ಶಾಂತ ಕುಮಾರ್

ಬೆಂಗಳೂರು ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ ಅಧ್ಯಕ್ಷರಾಗಿ ಮಾಜಿ ವೇಗಿ ವೆಂಕಟೇಶ್‌ ಪ್ರಸಾದ್ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವೆನಿಸಿದೆ. ಬ್ರಿಜೇಶ್‌ ಪಟೇಲ್‌ ಬಣದಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಪತ್ರಿಕೋದ್ಯಮಿ ಕೆ.ಎನ್‌.ಶಾಂತ್‌ಕುಮಾರ್‌ ಅವರ ನಾಮಪತ್ರವನ್ನು ಚುನಾವಣಾಧಿಕಾರಿ ತಿರಸ್ಕೃತಗೊಳಿಸಿದ್ದಾರೆ. ಅಚ್ಚರಿ ಎಂದರೆ 200 ಸಬ್‌ಸ್ಕ್ರಿಷ್ಷನ್‌ ಶುಲ್ಕ ಪಾವತಿಸಿಲ್ಲ ಎನ್ನುವ ಕಾರಣಕ್ಕೆ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ಕೇವಲ 200 ಶುಲ್ಕ ಕಟ್ಟಿಲ್ಲ ಎನ್ನುವ ಕಾರಣವನ್ನು ಮುಂದಿಟ್ಟುಕೊಂಡು ನಾಮಪತ್ರ ತಿರಸ್ಕೃತಗೊಳಿಸಿರುವ ಚುನಾವಣಾ ಅಧಿಕಾರಿ ವಿರುದ್ಧ ಕೆಎಸ್‌ಸಿಎ ಅಧ್ಯಕ್ಷ […]

ಪ್ರಜಾ ಪ್ರಗತಿ 26 Nov 2025 2:21 pm

ಚಿನ್ನದ ದರದಲ್ಲಿ ಮತ್ತೆ ಏರಿಕೆ….!

ಬೆಂಗಳೂರು: ಇಂದು ಮತ್ತೆ ಚಿನ್ನದ ದರದಲ್ಲಿ ಭಾರೀ ಏರಿಕೆ ಕಂಡಿದೆ . ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 80 ರೂ. ಏರಿಕೆ ಆಗಿದ್ದು, 11,725 ರೂ. ಇದ್ದರೆ, 24 ಕ್ಯಾರಟ್‌ ಚಿನ್ನದ 1 ಗ್ರಾಂ ಚಿನ್ನದ ಬೆಲೆಯಲ್ಲಿ 87 ಏರಿಕೆ ಆಗಿದ್ದು ಇಂದು 12,791 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ಇಂದು, 93,800 ರೂ. ಇದ್ದರೆ, 10 ಗ್ರಾಂಗೆ ನೀವು 1,17,250 ರೂ. ಪಾವತಿ […]

ಪ್ರಜಾ ಪ್ರಗತಿ 26 Nov 2025 12:38 pm

ಮೊಟ್ಟೆ ಬೆಲೆಯಲ್ಲಿ ಭಾರೀ ಏರಿಕೆ…..!

ಬೆಂಗಳೂರು: ಮೊದಲೇ ತರಕಾರಿ ಬೆಲೆ ಹೆಚ್ಚಾಗಿದ್ದು,ಇದರ ನಡುವೆ ಮೊಟ್ಟೆ ಬೆಲೆಯೂ ಹೆಚ್ಚಾಗುತ್ತಿರುವುದು ಸಾಮಾನ್ಯ ಜನರ ಮೇಲೆ ತೀವ್ರ ಪ್ರಭಾವವನ್ನು ಉಂಟು ಮಾಡುತ್ತಿದೆ. ಮೀನು ಮಟನ್ ಚಿಕನ್ ಗಿಂತ ಜನರಿಗೆ ಕೈಗೆಟುಕುವ ಬೆಲೆಯಲ್ಲಿ ಸಿಗುವ ವಸ್ತು ಎಂದರೆ ಅದು ಮೊಟ್ಟೆ ಇದೀಗ ಬಡವರು ದುಬಾರಿ ಮೊಟ್ಟೆ ಖರೀದಿಸಿ ತಿನ್ನುವುದು ಕಷ್ಟವಾಗಿ ಬಿಟ್ಟಿದೆ. ಉತ್ಪಾದನೆಯಲ್ಲಿ ಶೇ,10 ರಷ್ಟು ಕಡಿಮೆಯಾಗಿರುವ ಕಾರಣ ಮತ್ತು ದುಬೈ ಏಪ್ರಿಕ ಶ್ರೀಲಂಕಾ ಹಾಗೂ ಓಮನ್ ದೇಶಗಳಿಗೆ ದಿನಕ್ಕೆ ಅಂದಾಜು 50 60 […]

ಪ್ರಜಾ ಪ್ರಗತಿ 26 Nov 2025 12:37 pm

26/11 ಮುಂಬೈ ದಾಳಿಗೆ 17 ವರ್ಷ: ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ನವದೆಹಲಿ: ಭಾರತದಲ್ಲಿ ಕರಾಳ ಅಧ್ಯಾಯ ಬರೆದ 26/11 2008ರಮುಂಬೈ ಭಯೋತ್ಪಾದಕ ದಾಳಿಗೆ 17 ವರ್ಷಗಳು ಕಳೆದಿದ್ದು, ಅಮಾಯಕ ಜನರು, ಹುತಾತ್ಮ ಯೋಧರನ್ನು ಕಳೆದುಕೊಂಡ ಕರಾಳ ದಿನವನ್ನು ದೇಶದ ಜನತೆ ನೆನೆಯುತ್ತಿದೆ.ಪಾಕಿಸ್ತಾನದ ಕರಾಚಿಯಿಂದ ಸಮುದ್ರ ಮಾರ್ಗದ ಮೂಲಕ ಬಂದಿದ್ದ 10 ಮಂದಿ ಲಷ್ಕರ್-ಇ-ತೊಯ್ಬಾ ಉಗ್ರರು 2008ರ ನ.26ರಂದು ಮುಂಬೈನ ತಾಜ್ ಹೋಟೆಲ್, ಶಿವಾಜಿ ಟರ್ಮಿನಲ್ ಸೇರಿದಂತೆ 12 ಸ್ಥಳಗಳ ಮೇಲೆ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ವಿದೇಶಿಗರೂ ಸೇರಿದಂತೆ 174 ಮಂದಿ ನಾಗರೀಕರು ಸಾವನ್ನಪ್ಪಿದ್ದರು. […]

ಪ್ರಜಾ ಪ್ರಗತಿ 26 Nov 2025 11:53 am

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ಪ್ರಧಾನಿ ಮೋದಿ

ನವದೆಹಲಿ : ಸಾಂವಿಧಾನಿಕ ಕರ್ತವ್ಯಗಳನ್ನು ಎತ್ತಿಹಿಡಿಯುವಂತೆ ಕರೆ ನೀಡಿರುವ ಪ್ರಧಾನ ಮಂತ್ರಿಗಳು ಅವು ಬಲವಾದ ಮತ್ತು ಚೈತನ್ಯಶೀಲ ಪ್ರಜಾಪ್ರಭುತ್ವದ ಮೂಲಾಧಾರ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬುಧವಾರ ದೇಶದ ಜನತೆಗೆ ಕರೆ ನೀಡಿದ್ದಾರೆ. ಸಂವಿಧಾನ ದಿನದಂದು ದೇಶದ ನಾಗರಿಕರಿಗೆ ಬರೆದ ಪತ್ರದಲ್ಲಿ ಅವರು, ಮತದಾನದ ಹಕ್ಕನ್ನು ಸಕ್ರಿಯವಾಗಿ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸುವ ಸಾಮೂಹಿಕ ಜವಾಬ್ದಾರಿಯನ್ನು ಒತ್ತಿ ಹೇಳಿದರು. 18 ವರ್ಷ ತುಂಬಿದ ಮೊದಲ ಬಾರಿಗೆ ಮತದಾನ ಮಾಡುವವರನ್ನು […]

ಪ್ರಜಾ ಪ್ರಗತಿ 26 Nov 2025 11:51 am

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್

ಬೆಂಗಳೂರು: ಹಬ್ಬ ಹಾಗೂ ವಾರಾಂತ್ಯ ರಜೆ ವೇಳೆ ಜನರು ಊರು ಹಾಗೂ ಪ್ರವಾಸಕ್ಕೆ ತೆರಳಿದ ಜನರು ಸೋಮವಾರ ಬೆಂಗಳೂರಿಗೆ ಮರಳುತ್ತಾರೆ. ಇದರಿಂದ ಸಹಜವಾಗಿ ನಮ್ಮ ಮೆಟ್ರೋದಲ್ಲಿ ಪ್ರಯಾಣಿಕರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇರುತ್ತದೆ.ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಹಳದಿ ಮಾರ್ಗದ ರೈಲು ಸಂಚಾರವನ್ನು ಸೋಮವಾರದಂದು ಬೇಗ ಆರಂಭಿಸಲು ನಿರ್ಧರಿಸಿದೆ. ಇನ್ನು ಮುಂದೆ ನಮ್ಮ ಮೆಟ್ರೋ ಹಳದಿ ಮಾರ್ಗದ ರೈಲುಗಳು ಸೋಮವಾರ ಬೆಳಿಗ್ಗೆ 5:05 […]

ಪ್ರಜಾ ಪ್ರಗತಿ 26 Nov 2025 11:49 am

ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ….!

ನವದೆಹಲಿ: ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆ ಭಿನ್ನಮತ ತಾರಕಕ್ಕೇರುವಭೀತಿಯಲ್ಲಿದ್ದು, ಅಧಿಕಾರ ಹಂಚಿಕೆ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಲು ಕಾಂಗ್ರೆಸ್ ವರಿಷ್ಠರು ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ದೆಹಲಿಗೆ ಕರೆಸಿಕೊಂಡು ಮಾತುಕತೆ ನಡೆಸುವ ಸಾಧ್ಯತೆಯಿದೆ. ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಬಣಗಳ ನಡುವಿನ ಕಲಹ ಮತ್ತು ನಾಯಕತ್ವದ ಸಮಸ್ಯೆಗಳನ್ನು ಬಗೆಹರಿಸಲು ತೊಡಗಿಸಿಕೊಂಡಿರುವ ಪಕ್ಷದ ಉಸ್ತುವಾರಿಗಳ ಶಿಫಾರಸುಗಳ ಆಧಾರದ ಮೇಲೆ ಹೈಕಮಾಂಡ್ ಮಧ್ಯಪ್ರವೇಶಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. […]

ಪ್ರಜಾ ಪ್ರಗತಿ 26 Nov 2025 11:48 am