SENSEX
NIFTY
GOLD
USD/INR

Weather

30    C

ಡಿಜಿಟಲ್ ಸುದ್ದಿ ಮೂಲಗಳು

...

T20 World Cup 2026: 213 ರನ್‌ಗಳ ಬೃಹತ್ ಗುರಿ ನೀಡಿ ಲಂಕಾ ವಿರುದ್ಧ ಗೆದ್ದ ಪಾಕ್; ಆದರೂ ಸಿಗಲಿಲ್ಲ ಸೆಮಿಫೈನಲ್ ಎಂಟ್ರಿ

ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ನಡೆದ ಪಾಕಿಸ್ತಾನ ಹಾಗೂ ಶ್ರೀಲಂಕಾ ತಂಡಗಳ ನಡುವಿನ ಸೂಪರ್ 8 ಪಂದ್ಯದಲ್ಲಿ ಪಾಕಿಸ್ತಾನ 5 ರನ್‌ಗಳ ಗೆಲುವನ್ನು ದಾಖಲಿಸಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಫೀಲ್ಡಿಂಗ್ ಆರಿಸಿಕೊಂಡು ಪಾಕಿಸ್ತಾನ ತಂಡವನ್ನು ಮೊದಲು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 212 ರನ್ ಕಲೆಹಾಕಿ ಶ್ರೀಲಂಕಾಗೆ 213 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ಶ್ರೀಲಂಕಾ ಅಂತಿಮ ಹಂತದಲ್ಲಿ ಎಡವಿ 20 ಓವರ್‌ಗಳಲ್ಲಿ […]

ಕನ್ನಡ ದುನಿಯಾ 28 Feb 2026 11:35 pm

ಖತಂ, ಟಾಟಾ, ಗುಡ್‌ಬೈ: ಲಂಕಾ ವಿರುದ್ಧದ ಪಂದ್ಯದ ಮಧ್ಯದಲ್ಲೇ ಟೂರ್ನಿಯಿಂದ ಹೊರಬಿದ್ದ ಪಾಕಿಸ್ತಾನ; ಕಿವೀಸ್ ಸೆಮಿಫೈನಲ್‌ಗೆ ಎಂಟ್ರಿ

ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ಪಾಕಿಸ್ತಾನ ಹಾಗೂ ಶ್ರೀಲಂಕಾ ತಂಡಗಳು ಐಸಿಸಿ ಟಿ20 ವಿಶ್ವಕಪ್ 2026ರ ಸೂಪರ್ 8 ಸುತ್ತಿನ ತಮ್ಮ ಅಂತಿಮ ಪಂದ್ಯದಲ್ಲಿ ಮುಖಾಮುಖಿಯಾಗಿದ್ದು, ಪಂದ್ಯ ಮುಕ್ತಾಯವಾಗುವ ಮುನ್ನವೇ ಪಾಕಿಸ್ತಾನ ಟೂರ್ನಿಯಿಂದ ಎಲಿಮಿನೇಟ್ ಆಗಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಫೀಲ್ಡಿಂಗ್ ಆರಿಸಿಕೊಂಡು ಪಾಕಿಸ್ತಾನ ತಂಡವನ್ನು ಮೊದಲು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 212 ರನ್ ಕಲೆಹಾಕಿ ಶ್ರೀಲಂಕಾಗೆ 213 ರನ್‌ಗಳ ಗುರಿಯನ್ನು ನೀಡಿತ್ತು. ಇನ್ನು […]

ಕನ್ನಡ ದುನಿಯಾ 28 Feb 2026 10:44 pm

ಲಂಕಾ ವಿರುದ್ಧ ಫರ್ಹಾನ್ ಶತಕ: ವಿರಾಟ್ ಕೊಹ್ಲಿಯ 12 ವರ್ಷಗಳ ದೊಡ್ಡ ದಾಖಲೆ ಧೂಳೀಪಟ

ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಟಿ ಟ್ವೆಂಟಿ ವಿಶ್ವಕಪ್ 2026ರ ಸೂಪರ್ 8ರಲ್ಲಿ ಪಾಕಿಸ್ತಾನ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದ್ದು, ಪಾಕಿಸ್ತಾನ ಆರಂಭಿಕರ ಅಬ್ಬರದ ಬ್ಯಾಟಿಂಗ್ ನೆರವಿನಿಂದ 213 ರನ್‌ಗಳ ಬೃಹತ್ ಗುರಿಯನ್ನು ನೀಡಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಫೀಲ್ಡಿಂಗ್ ಆರಿಸಿಕೊಂಡು ಪಾಕಿಸ್ತಾನ ತಂಡವನ್ನು ಮೊದಲು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 212 ರನ್ ಕಲೆಹಾಕಿದೆ. ಪಾಕಿಸ್ತಾನದ ಸೆಮಿಫೈನಲ್ ಪ್ರವೇಶವನ್ನು ನಿರ್ಧರಿಸುವ ಈ […]

ಕನ್ನಡ ದುನಿಯಾ 28 Feb 2026 10:05 pm

ಸಸ್ಯಾಹಾರಿಗಳಿಗೂ ಸಿಗಲಿದೆ ರಾಯಲ್ ಊಟದ ಸವಿ: ಮನೆಯಲ್ಲೇ ಸವಿಯಿರಿ ಈ 6 ಬಗೆಯ ಕೋಫ್ತಾ ಕರಿ!

ಕೋಫ್ತಾ ಎಂಬುದು ಕೇವಲ ಮಸಾಲೆಯುಕ್ತ ಉಂಡೆಗಳಲ್ಲ, ಅವುಗಳನ್ನು ವಿವಿಧ ತರಕಾರಿಗಳೊಂದಿಗೆ ಬೆರೆಸಿ ಶ್ರೀಮಂತ ಗ್ರೇವಿಯಲ್ಲಿ ಬೇಯಿಸಿದಾಗ ಅದರ ರುಚಿಯೇ ಬೇರೆ. ಆರೋಗ್ಯಕರ ಮತ್ತು ರುಚಿಕರವಾದ ಈ ಖಾದ್ಯಗಳು ನಿಮ್ಮ ಊಟದ ಸವಿಯನ್ನು ಹೆಚ್ಚಿಸಲಿವೆ. 1. ವೆಗಾನ್ ಕೋರ್ಜೆಟ್ ಮತ್ತು ಕಡಲೆ ಕೋಫ್ತಾ ಕಡಲೆ ಮತ್ತು ಸೌತೆಕಾಯಿ ಜಾತಿಗೆ ಸೇರಿದ ಕೋರ್ಜೆಟ್ (Courgette) ಬಳಸಿ ಮಾಡುವ ಈ ಕೋಫ್ತಾ ಹೊಸ ಅನುಭವ ನೀಡುತ್ತದೆ. ಇದನ್ನು ಗೋಡಂಬಿ ಮತ್ತು ಪೀನಟ್ ಬಟರ್‌ನಿಂದ ಮಾಡಿದ ಸಾಸ್ ಜೊತೆ ಸರ್ವ್ ಮಾಡಲಾಗುತ್ತದೆ. ಗಸಗಸೆ […]

ಕನ್ನಡ ದುನಿಯಾ 28 Feb 2026 10:00 pm

BIG NEWS : ಇರಾನ್ ಕ್ಷಿಪಣಿ ಭೀತಿ ಹಿನ್ನೆಲೆ ದುಬೈನಲ್ಲಿ ಹೈ ಅಲರ್ಟ್ : ಬುರ್ಜ್ ಖಲೀಫಾ ಖಾಲಿ

ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಉದ್ವಿಗ್ನತೆಯು ತಾರಕಕ್ಕೇರಿರುವುದರಿಂದ ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಭಾರಿ ಆತಂಕ ಸೃಷ್ಟಿಯಾಗಿದೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ದುಬೈನ ವಿಶ್ವಪ್ರಸಿದ್ಧ ಬುರ್ಜ್ ಖಲೀಫಾ ಕಟ್ಟಡವನ್ನು ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಖಾಲಿ ಮಾಡಿಸಿದ್ದಾರೆ. ಗಲ್ಫ್ ಪ್ರದೇಶದಲ್ಲಿನ ಅಮೆರಿಕದ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ಇರಾನ್ ಕ್ಷಿಪಣಿ ದಾಳಿ ನಡೆಸಿದ್ದರಿಂದ ದುಬೈ ನಗರದಾದ್ಯಂತ ಸ್ಫೋಟದ ಶಬ್ದ ಕೇಳಿಬಂದಿದೆ. ಇದರಿಂದಾಗಿ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ವರದಿಗಳು ತಿಳಿಸಿವೆ.ಮುಖ್ಯವಾಗಿ ಕತಾರ್, ಕುವೈತ್, ಯುಎಇ ಮತ್ತು ಬಹ್ರೇನ್‌ನಲ್ಲಿರುವ ಅಮೆರಿಕದ […]

ಕನ್ನಡ ದುನಿಯಾ 28 Feb 2026 8:47 pm

ಶಿಕ್ಷಕರ ಹಲವಾರು ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಣಕಾಸು ಸಚಿವರಾಗಿದ್ದ ಸಂದರ್ಭದಲ್ಲಿ 5 ವರ್ಷಗಳಲ್ಲಿ ಒಂದು ಲಕ್ಷ ಶಿಕ್ಷಕರನ್ನು ನೇಮಕ ಮಾಡಿದ್ದೆ. 6 ಮತ್ತು 7ನೇ ವೇತನ ಆಯೋಗವನ್ನು ಜಾರಿ ಮಾಡಿದ್ದು ನಾನೆ. ಉಳಿದ ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಒಪಿಎಸ್ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನಕ್ಕೆ ಬರುತ್ತೇವೆ. ವೇತನ ಬಡ್ತಿ ನೀಡಲು ಪ್ರಯತ್ನ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಬೆಂಗಳೂರಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಶೈಕ್ಷಣಿಕ […]

ಕನ್ನಡ ದುನಿಯಾ 28 Feb 2026 8:30 pm

Big Update : ಇಸ್ರೇಲ್-ಇರಾನ್ ಸಂಘರ್ಷ ತೀವ್ರ : ದುಬೈ ಏರ್‌ʼಪೋರ್ಟ್‌ ನಲ್ಲಿ ವಿಮಾನ ಹಾರಾಟ ಸ್ಥಗಿತ, ಪ್ರಯಾಣಿಕರ ಪರದಾಟ

ನವದೆಹಲಿ : ಮನೆಗೆ ಮರಳುವವರು, ಪ್ರವಾಸಕ್ಕೆ ಹೊರಟವರು ಅಥವಾ ಪ್ರವಾಸದಲ್ಲಿದ್ದ ಸಾವಿರಾರು ಪ್ರಯಾಣಿಕರಿಗೆ ಈ ಶನಿವಾರ ಅನಿಶ್ಚಿತತೆ ಮತ್ತು ಆತಂಕದ ದಿನವಾಗಿ ಪರಿಣಮಿಸಿತು. ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆ ತೀವ್ರಗೊಂಡ ಹಿನ್ನೆಲೆಯಲ್ಲಿ, ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (DXB) ಮತ್ತು ದುಬೈ ವರ್ಲ್ಡ್ ಸೆಂಟ್ರಲ್ (DWC) ವಿಮಾನ ನಿಲ್ದಾಣಗಳಲ್ಲಿ ವಿಮಾನಗಳ ಸಂಚಾರವನ್ನು ಇದ್ದಕ್ಕಿದ್ದಂತೆ ಸ್ಥಗಿತಗೊಳಿಸಲಾಯಿತು. ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ, ದುಬೈ ವಿಮಾನ ನಿಲ್ದಾಣಗಳ ಪ್ರಾಧಿಕಾರವು “ಮುಂದಿನ ಸೂಚನೆಯವರೆಗೆ” ಎಲ್ಲಾ ವಿಮಾನ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿತು. ಅಲ್ಲದೆ, ಪ್ರಯಾಣಿಕರು […]

ಕನ್ನಡ ದುನಿಯಾ 28 Feb 2026 7:55 pm

BREAKING : ಆಂಧ್ರಪ್ರದೇಶದ ಪಟಾಕಿ ದುರಂತಕ್ಕೆ ಪ್ರಧಾನಿ ಮೋದಿ ದಿಗ್ಭ್ರಮೆ : ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಣೆ

ಆಂಧ್ರಪ್ರದೇಶ : ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ವೇಟ್ಲಪಾಲಂನಲ್ಲಿರುವ ಸೂರ್ಯ ಪಟಾಕಿ ಉತ್ಪಾದನಾ ಘಟಕದಲ್ಲಿ ನಡೆದ ಭೀಕರ ಸ್ಫೋಟ ಮತ್ತು ಅಗ್ನಿ ಅವಘಡದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ದಿಗ್ಭ್ರಾಂತಿ ವ್ಯಕ್ತಪಡಿಸಿದ್ದಾರೆ. ಈ ಘಟನೆಯಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ಪ್ರಧಾನಿಯವರು ತಮ್ಮ ಆಳವಾದ ಸಂತಾಪವನ್ನು ಸೂಚಿಸಿದ್ದಾರೆ. “ಸಂತ್ರಸ್ತ ಕುಟುಂಬಗಳ ನೋವಿನಲ್ಲಿ ನಾನೂ ಭಾಗಿಯಾಗಿದ್ದೇನೆ, ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ” ಎಂದು ಅವರು ಹಾರೈಸಿದ್ದಾರೆ. ಪರಿಹಾರ ಘೋಷಣೆ (PMNRF): ಮೃತರ ಕುಟುಂಬದವರಿಗೆ ತಲಾ ₹2 ಲಕ್ಷ ಪರಿಹಾರ. ತೀವ್ರವಾಗಿ […]

ಕನ್ನಡ ದುನಿಯಾ 28 Feb 2026 7:33 pm

ಕಾಂಗ್ರೆಸ್ ಸರ್ಕಾರದ ಕುರ್ಚಿ ಕಾಳಗ ಬಜೆಟ್ ನಂತರ ಅಂತಿಮ ಘಟಕ್ಕೆ ತಲುಪಲಿದೆ: ಬಸವರಾಜ ಬೊಮ್ಮಾಯಿ

ಹಾವೇರಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಕುರ್ಚಿಯ ಗುದ್ದಾಟ ಬಜೆಟ್ ನಂತರ ತೀವ್ರವಾಗಿರುವ ಅಂತಿಮ ಘಟಕ್ಕೆ ತಲುಪಲಿದೆ. ಅದು ಕಾದಾಟವೇ ಆಗಲಿದೆ. ಸಂಧಾನ ಆಗಲು ಸಾಧ್ಯವಿಲ್ಲ. ಅದು ಯಾವ ರೀತಿ ಆಗುತ್ತದೆ ಎನ್ನುವುದನ್ನು ಕಾದು ನೋಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಸರ್ಕಾರದ ಮೇಲೆ ಜನರ ವಿಶ್ವಾಸ ಸಂಪೂರ್ಣ ಹೋಗಿದೆ. ಜನ ಈ ಸರ್ಕಾರ ಕಿತ್ತೊಗೆಯಲು ಕಾಯುತ್ತಿದ್ದಾರೆ. ಈಗ ಅದರ ಕಾವು ಶಾಸಕರಿಗೆ ಮುಟ್ಟುತ್ತಿದೆ. ಅನಿಶ್ಚಿತೆಯ […]

ಕನ್ನಡ ದುನಿಯಾ 28 Feb 2026 7:04 pm

ಉದ್ಯೋಗ ಮೇಳ: ಸ್ಥಳ ದಲ್ಲೇ ಆಫರ್ ಲೆಟರ್  ಪಡೆದ 193 ಅಭ್ಯರ್ಥಿಗಳು

ಚಾಮರಾಜನಗರದಲ್ಲಿ ಆಯೋಜನೆ ಮಾಡಲಾಗಿದ್ದ ಜಿಲ್ಲಾ ಮಟ್ಟದ ಉದ್ಯೋಗ ಮೇಳಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ. ಉದ್ಯೋಗ ಮೇಳದಲ್ಲಿ ಆಯ್ಕೆಯಾದ 193 ಅಭ್ಯರ್ಥಿಗಳಿಗೆ ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ನೇಮಕಾತಿ ಪತ್ರ ವಿತರಣೆ ಮಾಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಸಂಜೀವಿನಿ-ಕರ್ನಾಟಕ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ಇನ್ನಿತರ ಇಲಾಖೆ, ನಿಗಮ ಆಶ್ರಯದಲ್ಲಿ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜನೆ ಮಾಡಲಾಗಿತ್ತು. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಆನ್‌ಲೈನ್‌ ಮೂಲಕ 668, ಆಫ್‌ಲೈನ್ ಮೂಲಕ […]

ಕನ್ನಡ ದುನಿಯಾ 28 Feb 2026 7:01 pm

ಶತ್ರುಘ್ನ ಸಿನ್ಹಾ ಸಂಸಾರದಲ್ಲಿ ಅಣ್ಣನೇ ವಿಲನ್: ಎರಡನೇ ಮದುವೆ ಆಗದಿದ್ದರೆ ಗುಟ್ಟು ರಟ್ಟು ಮಾಡುವುದಾಗಿ ಧಮ್ಕಿ ಹಾಕಿದ್ದ ರಾಮ್ ಸಿನ್ಹಾ

ಬಾಲಿವುಡ್‌ನ ಹಿರಿಯ ನಟ ಶತ್ರುಘ್ನ ಸಿನ್ಹಾ ಅವರ ವೃತ್ತಿಜೀವನ ಎಷ್ಟು ವರ್ಣರಂಜಿತವೋ ಅವರ ವೈಯಕ್ತಿಕ ಜೀವನವೂ ಅಷ್ಟೇ ವಿವಾದಗಳಿಂದ ಕೂಡಿತ್ತು. ವಿಶೇಷವಾಗಿ ನಟಿ ರೀನಾ ರಾಯ್ ಮತ್ತು ಶತ್ರುಘ್ನ ಸಿನ್ಹಾ ಅವರ ಸಂಬಂಧ ಅಂದಿನ ಕಾಲದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿತ್ತು. ಆದರೆ ಈ ಪ್ರೇಮ ಕಥೆಯಲ್ಲಿ ಯಾರೂ ಊಹಿಸದಂತಹ ತಿರುವು ಎದುರಾಗಿತ್ತು ಎಂಬ ಸತ್ಯ ಈಗ ಹೊರಬಿದ್ದಿದೆ. ಶತ್ರುಘ್ನ ಸಿನ್ಹಾ ಅವರ ಪತ್ನಿ ಪೂನಂ ಸಿನ್ಹಾ ಗರ್ಭಿಣಿಯಾಗಿದ್ದ ಸಂದರ್ಭದಲ್ಲೇ, ನಟನ ಸ್ವಂತ ಅಣ್ಣ ರಾಮ್ ಸಿನ್ಹಾ […]

ಕನ್ನಡ ದುನಿಯಾ 28 Feb 2026 7:00 pm

BREAKING : ಖತಾರ್‌ ́ನಲ್ಲಿರುವ ಭಾರತೀಯರಿಗಾಗಿ ರಾಯಭಾರ ಕಚೇರಿಯಿಂದ 24/7 ಸಹಾಯವಾಣಿ ಸಂಖ್ಯೆ ಬಿಡುಗಡೆ

ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಪ್ರಸ್ತುತ ಪ್ರಾದೇಶಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಖತಾರ್‌ನಲ್ಲಿರುವ ಭಾರತೀಯ ನಾಗರಿಕರಿಗಾಗಿ ಅಲ್ಲಿನ ಭಾರತೀಯ ರಾಯಭಾರ ಕಚೇರಿಯು ಶನಿವಾರ ತುರ್ತು ಸಲಹೆಯನ್ನು (Advisory) ಬಿಡುಗಡೆ ಮಾಡಿದೆ. ಖತಾರ್‌ನಲ್ಲಿರುವ ಎಲ್ಲಾ ಭಾರತೀಯ ನಾಗರಿಕರು ಮುನ್ನೆಚ್ಚರಿಕೆ ವಹಿಸಬೇಕು, ಸ್ಥಳೀಯ ಸುದ್ದಿಗಳ ಮೇಲೆ ನಿಗಾ ಇಡಬೇಕು ಮತ್ತು ರಾಯಭಾರ ಕಚೇರಿ ಹಾಗೂ ಸ್ಥಳೀಯ ಅಧಿಕಾರಿಗಳು ನೀಡುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಲಾಗಿದೆ. ಸಹಾಯವಾಣಿ ಸಂಖ್ಯೆ: ಯಾವುದೇ ತುರ್ತು ಸಂದರ್ಭ ಅಥವಾ ವಿಚಾರಣೆಗಾಗಿ ರಾಯಭಾರ ಕಚೇರಿಯು ಈ ಕೆಳಗಿನ ಸಂಪರ್ಕ […]

ಕನ್ನಡ ದುನಿಯಾ 28 Feb 2026 6:58 pm

ಗ್ರಾಮಗಳಲ್ಲಿ ನೀರಿನ ಮಾದರಿ ಪರೀಕ್ಷೆ ಖಡಕ್ ಸೂಚನೆ

“ಎಲ್ಲ ಗ್ರಾಮಗಳಲ್ಲಿ ನೀರಿನ ಮಾದರಿ ಪರೀಕ್ಷೆ ಕೈಗೊಳ್ಳಬೇಕು. ನೀರಿನ ಟ್ಯಾಂಕರ್ ಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಬೇಕು. ಸ್ವಚ್ಛಗೊಳಿಸಿರುವ ಕುರಿತು ದಿನಾಂಕಗಳನ್ನು ಬರೆಯಿಸಬೇಕು” ಎಂದು ಬೆಳಗಾವಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು, “ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಹಾಗೂ ಎಲ್ಲ ಗ್ರಾಮಗಳಿಗೂ ಸಮರ್ಪಕವಾಗಿ ಕುಡಿಯುವ ನೀರಿನ ಪೂರೈಕೆ ಮಾಡಬೇಕು” ಎಂದರು. “ಎಲ್ಲ […]

ಕನ್ನಡ ದುನಿಯಾ 28 Feb 2026 6:43 pm

ಮಧ್ಯಪ್ರಾಚ್ಯದಲ್ಲಿ ಮಹಾಯುದ್ಧದ ಭೀತಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ, ಗಲ್ಫ್ ರಾಷ್ಟ್ರಗಳಾದ್ಯಂತ ಕ್ಷಿಪಣಿ ಮಳೆ

ನವದೆಹಲಿ: ಆ ದಿನವು ಮೊದಲು ಭೀಕರ ಶಬ್ದದೊಂದಿಗೆ ಆರಂಭವಾಯಿತು — ಬಹುತೇಕ ಎಲ್ಲಾ ರಾಜಧಾನಿಗಳಲ್ಲಿ ಏಕಕಾಲಕ್ಕೆ ಸ್ಫೋಟದ ಸದ್ದು ಕೇಳಿಬಂದವು. ಇಸ್ರೇಲಿ ಯುದ್ಧ ವಿಮಾನಗಳು ಇರಾನ್‌ನ ಮಿಲಿಟರಿ ನೆಲೆಗಳ ಮೇಲೆ ದಾಳಿ ನಡೆಸುತ್ತಿದ್ದಂತೆ, ಟೆಹ್ರಾನ್‌ನಲ್ಲಿ ವಾಯು ರಕ್ಷಣಾ ವ್ಯವಸ್ಥೆಗಳು ಸಕ್ರಿಯಗೊಂಡವು. ಹೌದು. ದೋಹಾದಲ್ಲಿ, ನಗರದಾದ್ಯಂತ ಸ್ಫೋಟದ ಸದ್ದು ಮೊಳಗಿರುವುದನ್ನು ನಿವಾಸಿಗಳು ವರದಿ ಮಾಡಿದ್ದಾರೆ. ಅಬುಧಾಬಿಯಲ್ಲಿ, ವಿದೇಶಿ ಮಿಲಿಟರಿ ಸಿಬ್ಬಂದಿ ಇರುವ ಪ್ರದೇಶಗಳ ಬಳಿ ಭಾರಿ ಸ್ಫೋಟಗಳು ಸಂಭವಿಸಿವೆ ಎಂದು ಪ್ರತ್ಯಕ್ಷದರ್ಶಿಗಳು ವಿವರಿಸಿದ್ದಾರೆ. ಮನಾಮಾದಲ್ಲಿ, ಅಮೆರಿಕ ನೌಕಾಪಡೆಯ ಐದನೇ […]

ಕನ್ನಡ ದುನಿಯಾ 28 Feb 2026 6:30 pm

Big News: 78 ಕಾಂಗ್ರೆಸ್ ಶಾಸಕರಿಗೆ ಸೋಲು, ಸಮೀಕ್ಷೆ ವರದಿ ವೈರಲ್!

2028ರ ವಿಧಾನಸಭೆ ಚುನಾವಣೆಯಲ್ಲಿ 141 ಸೀಟುಗಳಲ್ಲಿ ಜಯಗಳಿಸುವ ಮೂಲಕ ಮತ್ತೆ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದರು. ಆದರೆ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಪೋಸ್ಟ್ ನೋಡಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಬೆಂಬಲಿಗರು ಬೆಚ್ಚಿ ಬಿದ್ದಿದ್ದಾರೆ. ಹೌದು ದೆಹಲಿ ಮೂಲದ ಸಂಸ್ಥೆಯೊಂದು ಕರ್ನಾಟಕದ ಚುನಾವಣೆ ಬಗ್ಗೆ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆ ಇದಾಗಿದೆ. ಸಮೀಕ್ಷೆಯ ವರದಿ: ಸಾಮಾಜಿಕ ಜಾಲತಾಣದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ 2028ರ ಬಗ್ಗೆ ಬಿಜೆಪಿ ಮಾಡಿಸಿದ ಸಮೀಕ್ಷೆ […]

ಕನ್ನಡ ದುನಿಯಾ 28 Feb 2026 5:36 pm

BREAKING : ಇರಾನ್ ಮೇಲೆ ಇಸ್ರೇಲ್-ಅಮೆರಿಕ ಜಂಟಿ ದಾಳಿ : 40 ಶಾಲಾ ವಿದ್ಯಾರ್ಥಿನಿಯರು ಸಾವು

ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ನಡೆಸಿದ ವೈಮಾನಿಕ ದಾಳಿಯಿಂದಾಗಿ ಇರಾನ್‌ನಲ್ಲಿ ಕನಿಷ್ಠ 40 ಶಾಲಾ ವಿದ್ಯಾರ್ಥಿನಿಯರು ದುರ್ಮರಣಕ್ಕೀಡಾಗಿದ್ದಾರೆ ಎಂದು ಅಲ್ಲಿನ ಸರ್ಕಾರಿ ಸುದ್ದಿ ಸಂಸ್ಥೆ ‘ಇರ್ನಾ’ (IRNA) ವರದಿ ಮಾಡಿದೆ. ಇರಾನ್‌ನ ಸರ್ಕಾರಿ ಸ್ವಾಮ್ಯದ ಸುದ್ದಿ ಸಂಸ್ಥೆಯಾದ IRNA ವರದಿಯ ಪ್ರಕಾರ, ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ನಡೆಸಿದ ದಾಳಿಯಲ್ಲಿ 40 ಶಾಲಾ ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ. ಇದು ಬೆಳವಣಿಗೆಯಾಗುತ್ತಿರುವ ಸುದ್ದಿಯಾಗಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಡೊನಾಲ್ಡ್ ಟ್ರಂಪ್ ಅವರ ಕರೆ: ಶನಿವಾರ ಇರಾನ್‌ನಾದ್ಯಂತ ಅಮೆರಿಕ ಮತ್ತು ಇಸ್ರೇಲ್ […]

ಕನ್ನಡ ದುನಿಯಾ 28 Feb 2026 5:30 pm

10 ಗಂಟೆಗಳ ಸಂದರ್ಶನ, ಕೊನೆಯ 10 ನಿಮಿಷದಲ್ಲಿ ಶಾಕ್ ಟೆಕ್ಕಿಯ ಉತ್ತರಕ್ಕೆ ರೆಡ್ ಫ್ಲಾಗ್ ಎಂದ ಸಂಸ್ಥಾಪಕ

ಬೆಂಗಳೂರು: ತಾಂತ್ರಿಕ ಕ್ಷೇತ್ರದಲ್ಲಿ ಸಂದರ್ಶನ ಎಂದರೆ ಕೇವಲ ಜ್ಞಾನ ಪರೀಕ್ಷೆಯಲ್ಲ, ಅದು ವ್ಯಕ್ತಿತ್ವ ಮತ್ತು ತಾಳ್ಮೆಯ ಪರೀಕ್ಷೆಯೂ ಹೌದು. ಆದರೆ, 10 ಗಂಟೆಗಳ ಸುದೀರ್ಘ ಆಯ್ಕೆ ಪ್ರಕ್ರಿಯೆಯ ನಂತರ, ಅಭ್ಯರ್ಥಿಯೊಬ್ಬರು ನೀಡಿದ ಒಂದು ಸ್ಪಷ್ಟನೆ ರೆಡ್ ಫ್ಲಾಗ್ ಎಂದು ಕರೆದು ಕೆಲಸ ನಿರಾಕರಿಸಿದ ಘಟನೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಏನಿದು ಘಟನೆ? ಸುಮಾರು ಮೂರು ವರ್ಷಗಳ ಅನುಭವ ಹೊಂದಿರುವ ಫ್ಲಟರ್ (Flutter) ಡೆವಲಪರ್ ಒಬ್ಬರು ಯುರೋಪ್ ಮೂಲದ ಕಂಪನಿಯೊಂದರಲ್ಲಿ ರಿಮೋಟ್ ಹುದ್ದೆಗೆ ಅರ್ಜಿ […]

ಕನ್ನಡ ದುನಿಯಾ 28 Feb 2026 5:23 pm

ರಾಜ್ಯದ  ರೈತರಿಗೆ ಗುಡ್‌ ನ್ಯೂಸ್‌ :  ಇನ್ಮುಂದೆ ಹಗಲಲ್ಲೇ 7 ಗಂಟೆ ನಿರಂತರ ವಿದ್ಯುತ್‌ ಪೂರೈಕೆ !

ಬೆಂಗಳೂರು : : ರಾಜ್ಯದ ಲಕ್ಷಾಂತರ ರೈತರ ದಶಕಗಳ ಕಾಲದ ಬೇಡಿಕೆಗೆ ಕೊನೆಗೂ ಸರ್ಕಾರ ಸ್ಪಂದಿಸಿದೆ. ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆಯಲ್ಲಾಗುತ್ತಿದ್ದ ವ್ಯತ್ಯಯಕ್ಕೆ ಅಂತ್ಯ ಹಾಡಿರುವ ಇಂಧನ ಸಚಿವ ಕೆ.ಜೆ. ಜಾರ್ಜ್, ಇನ್ಮುಂದೆ ರೈತರಿಗೆ ಹಗಲು ವೇಳೆಯಲ್ಲೇ ಸತತ 7 ಗಂಟೆಗಳ ಕಾಲ ಗುಣಮಟ್ಟದ ವಿದ್ಯುತ್ ನೀಡುವುದಾಗಿ ಮಹತ್ವದ ಭರವಸೆ ನೀಡಿದ್ದಾರೆ. ರಾತ್ರಿ ವೇಳೆ ಜಮೀನಿಗೆ ನೀರು ಹಾಯಿಸಲು ಹೋಗಿ ಹಾವು-ಚೇಳುಗಳ ಕಡಿತ ಹಾಗೂ ವನ್ಯಮೃಗಗಳ ದಾಳಿಗೆ ತುತ್ತಾಗುತ್ತಿದ್ದ ರೈತರ ಸಂಕಷ್ಟಕ್ಕೆ ಈ ನಿರ್ಧಾರವು ದೊಡ್ಡ ಆಸರೆಯಾಗಲಿದೆ. […]

ಕನ್ನಡ ದುನಿಯಾ 28 Feb 2026 5:18 pm

15 ಮ್ಯೂಲ್ ಖಾತೆಗಳ ಮೂಲಕ ಕೋಟ್ಯಂತರ ರೂ. ವಂಚನೆ: ಮೂವರು ಆರೋಪಿಗಳು ಅರೆಸ್ಟ್

ಶಿವಮೊಗ್ಗ: 15 ಮ್ಯೂಲ್ ಖಾತೆಗಳ ಮೂಲಕ ಕೋಟ್ಯಂತರ ರೂ. ವಂಚನೆ ಮಾಡಿದ್ದ ಮೂವರು ಆರೋಪಿಗಳನ್ನು ಶಿವಮೊಗ್ಗ ಪೊಲೀಸರು ಬಂದಿಸಿದ್ದಾರೆ. ಕಮಿಷನ್ ಆಸೆ ತೋರಿಸಿ ಬ್ಯಾಂಕ್ ಖಾತೆಯನ್ನು ಬಾಡಿಗೆ ಪಡೆದು, ಕೋಟ್ಯಂತರ ರೂಪಾಯಿ ವರ್ಗಾವಣೆ ಮಾಡಿ, ವಂಚಿಸುತ್ತಿದ್ದರು. ಶಿವಮೊಗ್ಗ ಸಿಇಎನ್ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.‌ ಶಿವಮೊಗ್ಗ ಶರಾವತಿ ನಗರದ ನಿವಾಸಿ ಜಗದೀಶ್(43), ಚಿಕ್ಕಮಗಳೂರಿನ ಅರ್ಷಾದ್(39) ಹಾಗೂ ಶಿವಮೊಗ್ಗ ಹೊಸಮನೆ ಬಡಾವಣೆಯ ಅನಂತ(34) ಬಂಧಿತ ಆರೋಪಿಗಳು. ವಿಲ್ಸನ್ ಎಂಬುವರು ಸಿಇಎನ್ ಪೊಲೀಸ್ ಠಾಣೆಯಲ್ಲಿ ಫೆಬ್ರವರಿ 2ರಂದು ಆರೋಪಿ ಜಗದೀಶನ ವಿರುದ್ಧ […]

ಕನ್ನಡ ದುನಿಯಾ 28 Feb 2026 5:17 pm

ಕರ್ನಾಟಕ vs ಜಮ್ಮು ಕಾಶ್ಮೀರ ರಣಜಿ ಟ್ರೋಫಿ ಫೈನಲ್ ಡ್ರಾನಲ್ಲಿ ಅಂತ್ಯ: ಮೊದಲ ಇನ್ನಿಂಗ್ಸ್ ಲೀಡ್ ಆಧಾರದ ಮೇಲೆ ವಿನ್ನರ್ ಆಯ್ಕೆ

ಹುಬ್ಬಳ್ಳಿಯಲ್ಲಿ ನಡೆದ ಪ್ರತಿಷ್ಠಿತ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ಜಮ್ಮು ಕಾಶ್ಮೀರ ತಂಡಗಳು ಮುಖಾಮುಖಿಯಾಗಿದ್ದವು. ಆದರೆ ನಿಗದಿತ ಸಮಯದಲ್ಲಿ ಪಂದ್ಯದ ಫಲಿತಾಂಶ ಬಾರದ ಕಾರಣ ಅಂತ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಹೀಗೆ ಪಂದ್ಯ ಡ್ರಾ ಆದ ಹಿನ್ನೆಲೆಯಲ್ಲಿ ನಿಯಮದ ಪ್ರಕಾರ ಮೊದಲ ಇನ್ನಿಂಗ್ಸಿನಲ್ಲಿ ಲೀಡ್ ಪಡೆದುಕೊಂಡ ಜಮ್ಮು ಮತ್ತು ಕಾಶ್ಮೀರ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ರಣಜಿ ಟ್ರೋಫಿಯಲ್ಲಿ ಇದೆ ಮೊದಲ ಬಾರಿಗೆ ಫೈನಲ್ ತಲುಪಿದ್ದ ಜಮ್ಮು-ಕಾಶ್ಮೀರ ಗೆದ್ದು ಬೀಗಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಜಮ್ಮು […]

ಕನ್ನಡ ದುನಿಯಾ 28 Feb 2026 5:04 pm

9.34 ರೂ. ಸಾಲ, 66 ಪೈಸೆ ಚಿಲ್ಲರೆ ಬಗ್ಗೆ ಕೆನರಾ ಬ್ಯಾಂಕ್ ಸ್ಪಷ್ಟನೆ!

ಹಾಸನ ಜಿಲ್ಲೆಯ ಸಕಲೇಶಪುರದ ಕೆನರಾ ಬ್ಯಾಂಕ್ ಸುದ್ದಿಯಲ್ಲಿದೆ. ಗ್ರಾಹಕರೊಬ್ಬರು ಬ್ಯಾಂಕ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. 66 ಪೈಸೆ ಚಿಲ್ಲರೆ ವಾಪಸ್ ಕೊಡದ ಬ್ಯಾಂಕ್ ವಿರುದ್ಧ ಕಾನೂನು ಹೋರಾಟ ನಡೆಸುತ್ತೇನೆ ಎಂದು ಎಚ್ಚರಿಸಿದ್ದರು. ಈ ಪ್ರಕರಣದ ಬಗ್ಗೆ ಈಗ ಕೆನರಾ ಬ್ಯಾಂಕ್ ಸ್ಪಷ್ಟನೆ ನೀಡಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಲಾಗಿದ್ದು, ‘ಆಗಿರುವ ಅನನುಕೂಲತೆಗೆ ನಾವು ವಿಷಾದಿಸುತ್ತೇವೆ’ ಎಂದು ಹೇಳಿದೆ. ‘ನಮ್ಮ ದಾಖಲೆಗಳ ಪ್ರಕಾರ, ನಿಮ್ಮ ಸಾಲದ ಖಾತೆಯಲ್ಲಿ (NPA ಸ್ಥಿತಿಯಲ್ಲಿದ್ದ) ₹9.34 ಬಾಕಿ ಇತ್ತು. […]

ಕನ್ನಡ ದುನಿಯಾ 28 Feb 2026 5:00 pm

SHOCKING: ತಂದೆಯನ್ನೇ ಕೊಲೆಗೈದು ಪೊಲೀಸ್ ಠಾಣೆಗೆ ಹೋಗಿ ಶರಣಾದ ಮಗ

ಗದಗ: ಪ್ರತಿ ದಿನ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ ತಂದೆಯ ಕಾಟಕ್ಕೆ ಬೇಸತ್ತ ಮಗ, ತಂದೆಯನ್ನೇ ಹೊಡೆದು ಕೊಂದು, ಪೊಲೀಸ್ ಠಾಣೆಗೆ ತೆರಳಿ ಶರಣಾದ ಘಟನೆ ಗದಗದಲ್ಲಿ ನಡೆದಿದೆ. ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೋವನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಂಕರಗೌಡ ದ್ಯಾಮನಗೌಡ್ರ (60) ಕೊಲೆಯಾದ ತಂದೆ. ಪ್ರಭು ದ್ಯಾಮನಗೌಡ್ರ (23) ತಂದೆಯನ್ನೇ ಕೊಂದ ಮಗ. ಕಂಠಪೂರ್ತಿ ಕುಡಿದು ಮನೆಗೆ ಬಂದ ಶಂಕರಗೌಡ ಗಲಾಟೆ ಆರಂಭಿಸಿದ್ದರಿಂದ ತಂದೆ – ಮಗನ ನಡುವೆ ತೀವ್ರ ಜಗಳವಾಗಿದೆ. ಈ […]

ಕನ್ನಡ ದುನಿಯಾ 28 Feb 2026 4:59 pm

ಉಮರ್ ಅಬ್ದುಲ್ಲಾ ಜೊತೆ ರಣಜಿ ಟ್ರೋಫಿ ವೀಕ್ಷಿಸಿದ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿಯ ಕೆಎಸ್‌ಸಿಎ ಮೈದಾನದಲ್ಲಿ ಶನಿವಾರ ಜಮ್ಮು ಮತ್ತು ಕಾಶ್ಮೀರ ತಂಡ ಇತಿಹಾಸ ನಿರ್ಮಾಣ ಮಾಡಿದೆ. ರಣಜಿ ಟ್ರೋಫಿ ಫೈನಲ್‌ನಲ್ಲಿ ತಂಡ ಬಲಿಷ್ಠ ಕರ್ನಾಟಕವನ್ನು ಸೋಲಿಸಿ ಚಾಂಪಿಯನ್ ಪಟ್ಟಕ್ಕೇರಿದೆ. ಜಮ್ಮು ಮತ್ತು ಕಾಶ್ಮೀರ ತಂಡ ಇದೇ ಮೊದಲ ಬಾರಿಗೆ ರಣಜಿ ಟ್ರೋಫಿ ಗೆದ್ದಿದೆ. ರಣಜಿ ಪಂದ್ಯದ ಫೈನಲ್ ನೋಡಲು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಶುಕ್ರವಾರ ಸಂಜೆ ಹುಬ್ಬಳ್ಳಿಗೆ ಆಗಮಿಸಿದ್ದರು. ಇಂದು ಜಮ್ಮು ಮತ್ತು ಕಾಶ್ಮೀರ ತಂಡ ಗೆಲ್ಲುವ ಕ್ಷಣವನ್ನು ಅವರು ಕಣ್ತುಂಬಿಕೊಂಡು, ತಂಡಕ್ಕೆ ಅಭಿನಂದನೆ […]

ಕನ್ನಡ ದುನಿಯಾ 28 Feb 2026 4:42 pm

ಬ್ರಹ್ಮಾಂಡದ ಮಹಾ ಅದ್ಭುತ.. ಒಂದೇ ಸಾಲಿನಲ್ಲಿ 6 ಗ್ರಹಗಳು.. ಇಂದು ಸಂಜೆ ವೀಕ್ಷಿಸಲು ಮರೆಯಬೇಡಿ!

ಬ್ರಹ್ಮಾಂಡವು ಯಾವಾಗಲೂ ತನ್ನ ಅನಂತ ರಹಸ್ಯಗಳಿಂದ ನಮ್ಮನ್ನು ಆಶ್ಚರ್ಯಚಕಿತಗೊಳಿಸುತ್ತಲೇ ಇರುತ್ತದೆ. ಈ ವರ್ಷ ಈಗಾಗಲೇ ಚಂದ್ರಗ್ರಹಣ, ಬ್ಲೂಮೂನ್ ಮತ್ತು ಸೂಪರ್‌ಮೂನ್‌ನಂತಹ ವಿಶೇಷತೆಗಳು ನಮಗೆ ದರ್ಶನ ನೀಡಿವೆ. ಇದೀಗ ಇಂದು ಅಂದರೆ ಶನಿವಾರ (ಫೆಬ್ರವರಿ 28) ಸಾಯಂಕಾಲ ಆಕಾಶದಲ್ಲಿ ಮತ್ತೊಂದು ಅಪರೂಪದ ಮಹಾ ಅದ್ಭುತ ಅನಾವರಣಗೊಳ್ಳಲಿದೆ. ಸೌರಮಂಡಲದ ಆರು ಪ್ರಮುಖ ಗ್ರಹಗಳು ಒಂದೇ ಸಾಲಿನಲ್ಲಿ ಬರುವ ‘ಪ್ಲಾನೆಟರಿ ಪರೇಡ್’ ಇಂದು ನಡೆಯಲಿದೆ. ಖಗೋಳ ವಿಜ್ಞಾನಿಗಳ ಪ್ರಕಾರ, ಹೀಗೆ ಆರು ಗ್ರಹಗಳು ಒಂದೇ ಸರಳರೇಖೆಯಲ್ಲಿ ಕಾಣಿಸಿಕೊಳ್ಳುವುದು ಅತ್ಯಂತ ಅಪರೂಪದ ಘಟನೆ. […]

ಕನ್ನಡ ದುನಿಯಾ 28 Feb 2026 4:37 pm

WAR BREAKING: ಇಸ್ರೇಲ್-ಇರಾನ್ ಯುದ್ಧ: ಕತಾರ್, ಬಹ್ರೇನ್, ಸೌದಿಯ ಯುಎಸ್​ ವಾಯುನೆಲೆಗಳ ಮೇಲೆ ಇರಾನ್ ವೈಮಾನಿಕ ದಾಳಿ

ಬಹ್ರೇನ್: ಇರಾನ್ ರಾಜಧಾಅನಿ ಟೆಹ್ರಾಅನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕಾ ಜಂಟಿಯಾಗಿ ದಾಳಿ ನಡೆಸಿರುವ ಬೆನ್ನಲ್ಲೇ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಕ್ಷಣ ಕ್ಷಣಕ್ಕೂ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಭವನ ಗುರಿಯಾಗಿಸಿ ಇಸ್ರೇಲ್ ದಾಳಿ ​ ನಡೆದಿದ್ದು, ಟೆಹರಾನ್​ನ ಹಲವೆಡೆ ಭಾರಿ ಸದ್ದಿನೊಂದಿಗೆ ಸರಣಿ ಸ್ಫೋಟ ಸಂಭವಿಸಿದೆ. ಜನರು ಭಯಭೀತರಾಗಿ ದಿಕ್ಕಾಪಾಲಾಗಿ ಓಡಿದ್ದಾರೆ. ಇರಾನ್ ಸಂಭಾವ್ಯ ದಾಳಿಗೆ ಪ್ರತಿಕ್ರಿಯೆಯಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಈ ದಾಳಿ […]

ಕನ್ನಡ ದುನಿಯಾ 28 Feb 2026 4:36 pm

ದ್ವಿತೀಯ ಪಿಯು ವಿದ್ಯಾರ್ಥಿನಿ ಸಾವು: ಸಚಿವ ಸತೀಶ್ ಜಾರಕಿಹೊಳಿ ಸಂತಾಪ

ಬೆಳಗಾವಿಯಲ್ಲಿ ಪರೀಕ್ಷೆಗೂ ಮುನ್ನವೇ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಭೂಮಿಕಾ ಮಾಳಂಗಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ವಿದ್ಯಾರ್ಥಿನಿ ಸಾವಿಗೆ ಸಚಿವ ಸತೀಶ್ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ. ಲೋಕೋಪಯೋಗಿ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ‘ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಭೂಮಿಕಾ ಮಾಳಂಗಿ ಅವರ ಅಕಾಲಿಕ ನಿಧನ ಸುದ್ದಿ ಮನಕಲಕುವಂತಾಗಿದೆ’ ಎಂದು ಹೇಳಿದ್ದಾರೆ. ‘ಪರೀಕ್ಷೆಯಂತಹ ಮಹತ್ವದ ಘಟ್ಟವನ್ನು ಎದುರಿಸಲು ಸಜ್ಜಾಗಿದ್ದ ಹೊತ್ತಲ್ಲೇ ವಿಧಿಯಾಟಕ್ಕೆ ಬಲಿಯಾದ ಭೂಮಿಕಾ ಅವರ […]

ಕನ್ನಡ ದುನಿಯಾ 28 Feb 2026 4:25 pm

ಗುರುಗಳು ಕೊಟ್ಟ ದಿನಾಂಕದೊಳಗೆ ಡಿ.ಕೆ.ಶಿವಕುಮಾರ್​ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುತ್ತಾರೆ: ಮತ್ತೆ ಭವಿಷ್ಯ ನುಡಿದ ಶಾಸಕ ಇಕ್ಬಾಲ್ ಹುಸೇನ್

ರಾಮನಗರ: ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗೇ ಆಗ್ತಾರೆ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಮತ್ತೆ ಭವಿಷ್ಯ ನುಡಿದಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಇಕ್ಬಾಲ್ ಹುಸೇನ್, ಗುರುಗಳು ಧ್ಯಾನದಿಂದ ಎದ್ದಿಲ್ಲ, ಎದ್ದ ತಕ್ಷಣ ಡೇಟ್ ಹೇಳುತ್ತಾರೆ. ಅವರು ಕೊಟ್ಟ ದಿನಾಂಕದೊಳಗೆ ಡಿ.ಕೆ.ಶಿವಕುಮಾರ್​ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡುತ್ತಾರೆ ಎಂದು ತಿಳಿಸಿದ್ದಾರೆ. ನಾನು ನಿಜವಾಗಿಯೂ ಹೇಳುತ್ತಿದ್ದೇನೆ, ನಾನು ಸುಳ್ಳು ಹೇಳುತ್ತಿಲ್ಲ. ಗುರುಗಳು ಧ್ಯಾನದಿಂದ ಎದ್ದ ತಕ್ಷಣ ಒಂದು ಡೇಟ್ ಕೊಡುತ್ತಾರೆ. ಆ ದಿನಾಂಕವೇ ಅಂತಿಮವಾಗಿರುತ್ತದೆ. ಗುರುಗಳು ಹೇಳಿದಂತೆ ಆಗಿಲ್ಲ ಅಂದರೆ […]

ಕನ್ನಡ ದುನಿಯಾ 28 Feb 2026 4:19 pm

BIG BREAKING : ಆಂಧ್ರಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ, 18 ಮಂದಿ ಸಜೀವ ದಹನ.!

ಆಂಧ್ರಪ್ರದೇಶ : ಕಾಕಿನಾಡ ಜಿಲ್ಲೆಯ ಸಾಮರ್ಲಕೋಟ ಮಂಡಲದ ವೇಟ್ಲಪಾಲೆಂನಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಪಟಾಕಿ ತಯಾರಿಕಾ ಕೇಂದ್ರದಲ್ಲಿ ಸ್ಫೋಟ ಸಂಭವಿಸಿದ್ದರಿಂದ ಬೆಂಕಿ ಕಾಣಿಸಿಕೊಂಡಿದ್ದು, ಈ ದುರಂತದಲ್ಲಿ 18 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಕೆಲವರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ವರದಿಯಾಗಿದೆ. ಬೆಂಕಿಯ ಜ್ವಾಲೆಯಲ್ಲಿ ಹಲವು ಕಾರ್ಮಿಕರು ಸಿಲುಕಿಕೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಘಟನೆಯ ವಿವರಗಳು: ಪ್ರಮಾದ ನಡೆದ ಸಮಯದಲ್ಲಿ ಸ್ಥಳದಲ್ಲಿ 20ಕ್ಕೂ ಹೆಚ್ಚು ಕಾರ್ಮಿಕರು ಇದ್ದರು ಎಂದು ತಿಳಿದುಬಂದಿದೆ. ಸ್ಫೋಟದ ಮಾಹಿತಿ […]

ಕನ್ನಡ ದುನಿಯಾ 28 Feb 2026 4:17 pm

Big News: ಕಾಂಗ್ರೆಸ್‌ಗೆ ಹೆಚ್ಚಿನ ಸೀಟು ಇಲ್ಲ; ಡಿಎಂಕೆ ಸ್ಪಷ್ಟ ಸಂದೇಶ

ತಮಿಳುನಾಡು ವಿಧಾನಸಭಾ ಚುನಾವಣೆ 2026ರ ಸೀಟು ಹಂಚಿಕೆ ಮಾತುಕತೆ ಆರಂಭವಾಗಿದೆ. ಜಾತ್ಯತೀತ ಪ್ರಗತಿಪರ ಮೈತ್ರಿಕೂಟ (ಎಸ್‌ಪಿಎ)ದ ಪಕ್ಷಗಳಿಗೆ ಸೀಟು ಹಂಚಿಕೆ ಕುರಿತು ಡಿಎಂಕೆ ಮಾತುಕತೆ ಆರಂಭಿಸಿದೆ. ರಾಜ್ಯದ 234 ಸ್ಥಾನಗಳಿಗೆ ಮಾರ್ಚ್ ಅಂತ್ಯ ಅಥವ ಏಪ್ರಿಲ್‌ನಲ್ಲಿ ಚುನಾವಣೆ ನಡೆಯಲಿದೆ. ಸೀಟು ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್‌ ಬೇಡಿಕೆಯನ್ನು ಡಿಎಂಕೆ ಪರಿಗಣಿಸುವುದು ಕಷ್ಟವಿದೆ. ಹೆಚ್ಚಿನ ಸೀಟುಗಳಿಗೆ ಕಾಂಗ್ರೆಸ್ ಬೇಡಿಕೆ ಇಟ್ಟಿದೆ. ಆದರೆ ಮೈತ್ರಿಕೂಟದಲ್ಲಿ ಹೆಚ್ಚು ಪಕ್ಷಗಳು ಇರುವ ಕಾರಣಕ್ಕೆ ಹೆಚ್ಚಿನ ಸೀಟು ನೀಡಲಾಗದು ಎಂಬುದು ಡಿಎಂಕೆ ವಾದವಾಗಿದೆ. ತಮಿಳುನಾಡು ವಿಧಾನಸಭಾ […]

ಕನ್ನಡ ದುನಿಯಾ 28 Feb 2026 4:16 pm

BIG NEWS: ವಸತಿ ಶಾಲೆಯ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ವಸತಿ ಶಾಲೆಯಲ್ಲಿ ಬಾಲಕಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಮಾಲೀಕ ಧನಂಜಯ್, ಬಾಲಕಿಯರ ಹಾಸ್ಟೆಲ್ ಗೆ ಅನುಮತಿಯನ್ನೇ ಪಡೆಯದೇ ಅನಧಿಕೃತವಾಗಿ ನಡೆಸುತ್ತಿದ್ದ ಎಂದು ತಿಳಿದುಬಂದಿದೆ. ಲೈಸೆನ್ಸ್ ನವೀಕರಿಸದೇ ಹಾಗೂ ಪರವಾನಗಿ ಇಲ್ಲದೆ ವಸತಿ ಶಾಲೆ ನಡೆಸುತ್ತಿದ್ದ ಧನಂಜಯ್ ಗೆ ಆತನ ಪತ್ನಿ ಶೈಲಜಾ ಕೂಡ ಬಾಲಕಿಯ ಮೇಲಿನ ದೌರ್ಜನ್ಯಕ್ಕೆ ಸಾಥ್ ನೀಡಿದ್ದಳು. ಆರೋಪಿ ಧನಂಜಯ್ ಬಾಲಕರ ಹಾಸ್ಟೆಲ್‌ಗೆ ಮಾತ್ರ ಅನುಮತಿ ಪಡೆದಿದ್ದ. ಬಾಲಕಿಯರ ವಸತಿ […]

ಕನ್ನಡ ದುನಿಯಾ 28 Feb 2026 4:11 pm