SENSEX
NIFTY
GOLD
USD/INR

Weather

19    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source

7 ಕೋಟಿ EPFO ಚಂದಾದಾರರಿಗೆ ಗುಡ್ ನ್ಯೂಸ್……!

ನವದೆಹಲಿ: ನಿವೃತ್ತಿ ನಿಧಿ ಸಂಸ್ಥೆ ಇಪಿಎಫ್‌ಒ ನೌಕರರಿಗೆ ಸಿಹಿಸುದ್ದಿ ನೀಡಿದ್ದು, 2025-26ರ ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ಠೇವಣಿಗಳ ಮೇಲಿನ ಬಡ್ಡಿ ದರವನ್ನು ಹೆಚ್ಚಿಸಲು ಮುಂದಾಗಿದ್ದು, ಇಪಿಎಫ್‌ಒ ಪ್ರಸಕ್ತ ಹಣಕಾಸು ವರ್ಷದಲ್ಲಿ ಕೋಟ್ಯಂತರ ಉದ್ಯೋಗಿಗಳಿಗೆ ಮೊದಲಿಗಿಂತ ಶೇ.1 ರಷ್ಟು ಹೆಚ್ಚಿನ ಬಡ್ಡಿಯನ್ನು ನೀಡಲು ಮುಂದಾಗಿದೆ. ಹೀಗಾಗಿ ಇನ್ಮುಂದೆ ನಿಮ್ಮ ಪಿಎಫ್ ಖಾತೆಗೆ ಶೇ.9.25 ಬಡ್ಡಿ ದರವನ್ನು ನೀಡಲಾಗುತ್ತದೆ. ಕಳೆದ ವರ್ಷ 2024-25ರ ಹಣಕಾಸು ವರ್ಷಕ್ಕೆ ಇಪಿಎಫ್ ಹಣಕ್ಕೆ ಸರ್ಕಾರ ಶೇ. […]

ಪ್ರಜಾ ಪ್ರಗತಿ 25 Nov 2025 5:38 pm

ಸಂಗಮೇಶ ಚಿಕ್ಕನರಗುಂದ ಅವರಿಗೆ ಚಿತ್ರ ಸಂತೆ ರಾಜ್ಯೋತ್ಸವ ಪುರಸ್ಕಾರ ಪ್ರದಾನ

ಗುಳೇದಗುಡ್ಡ: ಕನ್ನಡ ನಾಡಿನ ಹೆಮ್ಮೆಯ ಸಾಧಕರಿಗೆ ನಿಮ್ಮ ವಿಶೇಷ ಸಾಧನಗೆ ಚಿತ್ರ ಸಂತೆ ರಾಜ್ಯೋತ್ಸವ ಅಂಗವಾಗಿ ಸೋಮವಾರ ಬೆಂಗಳೂರ ರಾಜ್ ಮಹಲ್ ವಿಲಾಸ್‌ನಲ್ಲಿ ಗೀರಿಶ್.ವಿ.ಗೌಡ ಪ್ರದಾನ ಸಂಪಾದಕರು, ವ್ಯವಸ್ಥಾಪಕ ನಿರ್ದೇಶಕರ ವತಿಯಿಂದ ನಡೆದ ಚಿತ್ರ ಸಂತೆ ರಾಜ್ಯೋತ್ಸವ ಸಮಾರಂಭದಲ್ಲಿ ಪಟ್ಟಣದ ಸಂಗಮೇಶ ಚಿಕ್ಕನರಗುಂದ ಅವರಿಗೆ ಹೆ-ಸ್ಪೀಡ್ ಕಂಪ್ಯೂಟಿಂಗ್‌ನಲ್ಲಿ ನಾವೀನ್ಯತೆ. ಕ್ಷೇತ್ರದಲ್ಲಿ ಸಲ್ಲಿಸಿರುವ ಅನುಪಮ ಸೇವೆಯನ್ನು ಸ್ಮರಿಸಿ ಚಿತ್ರಸಂತೆ ಮಾಸಿಕ ಸಿನಿಮಾ ಪತ್ರಿಕೆ ೨೦೨೫ ನೇ ಸಾಲಿನ ಚಿತ್ರ ಸಂತೆ ರಾಜ್ಯೋತ್ಸವ ಪುರಸ್ಕಾರವನ್ನು ಡಾ.ಪ್ರಿಯಾಂಕ […]

ಪ್ರಜಾ ಪ್ರಗತಿ 25 Nov 2025 5:34 pm

ವೈಟ್‌ವಾಷ್‌ ಭೀತಿಯಲ್ಲಿ ಭಾರತ ತಂಡ……!

ಗುವಾಹಟಿ: ದಕ್ಷಿಣ ಆಫ್ರಿಕಾ ಎದುರು ಎರಡನೇ ಟೆಸ್ಟ್‌ ಪಂದ್ಯದಲ್ಲಿಯೂ ಭಾರತ ತಂಡ ಹೀನಾಯ ಸೋಲಿನ ಭೀತಿಗೆ ಒಳಗಾಗಿದೆ. ಈಗಾಗಲೇ ಮೊದಲನೇ ಟೆಸ್ಟ್‌ ಪಂದ್ಯವನ್ನು ಸೋತಿರುವ ಟೀಮ್‌ ಇಂಡಿಯಾ , ಇದೀಗ ಇಲ್ಲಿನ ಬರ್ಸಪರ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಪಂದ್ಯದಲ್ಲಿ ಸೋತು, ಟೆಸ್ಟ್‌ ಸರಣಿಯನ್ನು 2-0 ಅಂತರದಲ್ಲಿ ವೈಟ್‌ವಾಷ್‌ ಆಘಾತ ಅನುಭವಿಸುವ ಆತಂಕಕ್ಕೆ ಸಿಲುಕಿದೆ. ದಕ್ಷಿಣ ಆಫ್ರಿಕಾ ನೀಡಿದ್ದ 549 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಭಾರತ ತಂಡ, ನಾಲ್ಕನೇ ದಿನದಾಟದ ಅಂತ್ಯಕ್ಕೆ […]

ಪ್ರಜಾ ಪ್ರಗತಿ 25 Nov 2025 5:18 pm

ರಣ ಭೀಕರ ಮಳೆ ಸಾಧ್ಯತೆ- ದಕ್ಷಿಣ ಭಾರತದ ರಾಜ್ಯಗಳಲ್ಲಿ ಹೈ ಅಲರ್ಟ್…….!

ನವದೆಹಲಿ: ಮಲಕ್ಕಾ ಜಲಸಂಧಿ ಮತ್ತು ಬಂಗಾಳಕೊಲ್ಲಿ ಕರಾವಳಿ ಪ್ರದೇಶಗಳಲ್ಲಿ ಪ್ರಬಲ ಚಂಡಮಾರುತ ಬೀಸುವ ಭೀತಿ ಇದ್ದು, ಹವಾಮಾನ ವೈಪರಿತ್ಯ ತೀವ್ರಗೊಳ್ಳುತ್ತಿರುವುದರಿಂದ ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಭಾರತ ಮತ್ತು ಕರಾವಳಿ ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ದಕ್ಷಿಣದ ರಾಜ್ಯಗಳ ಕರಾವಳಿ ಪ್ರದೇಶಗಳಲ್ಲಿ ಹೈಅಲರ್ಟ್‌ ಘೋಷಿಸಲಾಗಿದೆ. ನವೆಂಬರ್‌ 25 ರಿಂದ ಮತ್ತು 30ರ ನಡುವೆ ತಮಿಳುನಾಡಿನಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ. […]

ಪ್ರಜಾ ಪ್ರಗತಿ 25 Nov 2025 5:11 pm

ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಿಂದ ರೋಡ್ ಶೋ ಪ್ರಾರಂಭ

ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಆಯೋಜಿಸಿರುವ “ಕರ್ನಾಟಕ ಡೆಸ್ಟಿನೇಶನ್ ಪ್ರಮೋಶನ್ ರೋಡ್ ಶೋ” ಇಂದು ಪ್ರಾರಂಭಗೊಂಡಿದೆ. ಪ್ರವಾಸೋದ್ಯಮವನ್ನು ಉತ್ತೇಜಿಸುವ ಹಾಗೂ ಅಂತಾರಾಜ್ಯ ಪ್ರವಾಸೋದ್ಯಮ ಸಹಯೋಗವನ್ನು ಬಲಪಡಿಸುವ ಉದ್ದೇಶವನ್ನು ಹೊಂದಿರುವ ಈ ಕಾರ್ಯಕ್ರಮಕ್ಕೆ ಉದ್ಯಮ ವಲಯದಿಂದ ಉತ್ತಮ ಪ್ರತಿಕ್ರಿಯೆ ಲಭಿಸಿದೆ. ಬೆಂಗಳೂರಿನಲ್ಲಿ ಬೆಳಿಗ್ಗೆ 6.15ಕ್ಕೆ ರೋಡ್ಶೋ ಅಭಿಯಾನಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಇಂಡಿಯಾ ಟೂರಿಸಂನ ಹಿರಿಯ ಅಧಿಕಾರಿಗಳು ಮತ್ತು ಕರ್ನಾಟಕ ಟೂರಿಸಂ ಸೊಸೈಟಿ (KTS) ಸದಸ್ಯರ ಸಮ್ಮುಖದಲ್ಲಿ ವಾಹನಕ್ಕೆ ಹಸಿರು ನಿಶಾನೆ […]

ಪ್ರಜಾ ಪ್ರಗತಿ 25 Nov 2025 3:39 pm

ಇಂದು ಟಿ20 ವಿಶ್ವಕಪ್‌ ವೇಳಾಪಟ್ಟಿ ಪ್ರಕಟ….!

ಮುಂಬಯಿ ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ನಡೆಯಲಿರುವ 2026ರ ಪುರುಷರ ಐಸಿಸಿ ಟಿ20 ವಿಶ್ವಕಪ್‌ ವೇಳಾಪಟ್ಟಿ ಇಂದು ಸಂಜೆ(ಮಂಗಳವಾರ) 6:30 ಕ್ಕೆ ಪ್ರಕಟವಾಗಲಿದೆ. ಈ ಕಾರ್ಯಕ್ರಮವನ್ನು ಜಿಯೋಹಾಟ್‌ಸ್ಟಾರ್‌, ಮತ್ತು ಸ್ಟಾರ್‌ ಸ್ಪೋರ್ಟ್ಸ್‌ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. 20 ತಂಡಗಳನ್ನು 4ಗುಂಪುಗಳಾಗಿ ವಿಂಗಡಿಸಲಾಗಿದ್ದು, ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ಒಂದೇ ಗುಂಪಿನಲ್ಲಿ ಸ್ಥಾನ ಪಡೆದುಕೊಂಡಿವೆ. ಟೂರ್ನಿಯಲ್ಲಿ ಪ್ರತಿಯೊಂದು ತಂಡವು ಪ್ರತಿ ಎದುರಾಳಿಯೊಂದಿಗೆ ಒಂದು ಬಾರಿ ಮುಖಾಮುಖಿಯಾಗಲಿವೆ. ಪ್ರತಿ ಗುಂಪಿನಿಂದ […]

ಪ್ರಜಾ ಪ್ರಗತಿ 25 Nov 2025 2:28 pm

ಅಧಿಕಾರಿಗಳಿಗೆ PMOದಿಂದ ಬಂತು ಮಹತ್ವದ ಆದೇಶ…..!

ನವದೆಹಲಿ: ಅಧಿಕಾರಶಾಹಿಗೆ ತೀಕ್ಷ್ಣವಾದ ಸಂದೇಶವೊಂದರಲ್ಲಿ, ಪ್ರಧಾನ ಮಂತ್ರಿ ಕಚೇರಿ ಎಲ್ಲಾ ಸಚಿವಾಲಯಗಳು ಪರಸ್ಪರ ಪ್ರತ್ಯೇಕವಾಗಿ ಕಾರ್ಯನಿರ್ವಹಿಸುವುದನ್ನು, ಪರಸ್ಪರ ದೂಷಣೆ ಮಾಡುವುದನ್ನು ಬಿಟ್ಟು ಭಾರತೀಯ ನೀತಿಗಳು ಮತ್ತು ಜಾಗತಿಕ ಮಾನದಂಡಗಳಿಗೆ ಹೊಂದಿಕೆಯಾಗುವ ಉತ್ತಮ ಗುಣಮಟ್ಟದ ಸಂಪುಟ ಟಿಪ್ಪಣಿಗಳನ್ನು ಸಿದ್ಧಪಡಿಸಿ ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಆದೇಶ ನೀಡಿದೆ. ಕಳೆದ ವಾರ ಕಠಿಣ ಶಬ್ದಗಳಲ್ಲಿ ಆದೇಶಗಳನ್ನು ಹೊರಡಿಸಲಾಗಿದ್ದು, ಸರ್ಕಾರದ ಇಲಾಖೆಗಳ ಕಾರ್ಯದರ್ಶಿಗಳು ವಾಡಿಕೆಯ ಅಧಿಕಾರಶಾಹಿ ಮನಸ್ಥಿತಿಯನ್ನು ಬಿಟ್ಟು ಪ್ರಮುಖ ನೀತಿ ನಿರ್ಧಾರಗಳ ಅನುಮೋದನೆಗಾಗಿ ಸರ್ಕಾರದ ಮುಂದೆ […]

ಪ್ರಜಾ ಪ್ರಗತಿ 25 Nov 2025 1:18 pm

ಡಿ.14ರ ‘ಮತ ಕಳ್ಳತನ’ವಿರುದ್ಧ Rally : ಇಂಡಿಯಾ ಬ್ಲಾಕ್ ಭಾಗವಹಿಸುವಿಕೆ ಇಲ್ಲ

ನವದೆಹಲಿ: ಭಾರತೀಯ ಚುನಾವಣಾ ಆಯೋಗದ ವಿರುದ್ಧ “ಮತ ಕಳ್ಳತನ” ಆರೋಪ ಮಾಡುತ್ತಿರುವ ಕಾಂಗ್ರೆಸ್ ಡಿಸೆಂಬರ್ 14 ರಂದು ರ್ಯಾಲಿ ಆಯೋಜಿಸುತ್ತಿದ್ದು, ಅದರಲ್ಲಿ ಇಂಡಿಯಾ ಬ್ಲಾಕ್ ಘಟಕಗಳು ಭಾಗವಹಿಸುವುದಿಲ್ಲ.ಇದು ಸಂಪೂರ್ಣವಾಗಿ ಕಾಂಗ್ರೆಸ್ ವಿಷಯ ಎಂದು ಇತರ ವಿರೋಧ ಪಕ್ಷಗಳ ನಾಯಕರು ಹೇಳುತ್ತಿದ್ದಾರೆ. ಕಳೆದ ವಾರದ ಆರಂಭದಲ್ಲಿ ನಡೆದ AICC ಪರಿಶೀಲನಾ ಸಭೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರವನ್ನು ದೃಢಪಡಿಸಲಾಯಿತು. ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯುವ ರ್ಯಾಲಿಯು ಸಂಪೂರ್ಣವಾಗಿ ಕಾಂಗ್ರೆಸ್ ಪ್ರದರ್ಶನ ಎಂದು ಹಿರಿಯ ಕಾಂಗ್ರೆಸ್ […]

ಪ್ರಜಾ ಪ್ರಗತಿ 25 Nov 2025 1:14 pm

ಭಾರತದ ಸಿಂಹಿಣಿಯರ ಮುಡಿಗೇರಿದ ಕಬ್ಬಡ್ಡಿ ವಿಶ್ವಕಪ್‌ ಕಿರೀಟ….!

ಢಾಕಾ: 2025 ರ ಮಹಿಳಾ ಕಬ್ಬಡ್ಡಿ ಫೈನಲ್ ಪಂದ್ಯದಲ್ಲಿ ಭಾರತ ಚೈನೀಸ್ ತೈಪೆ ವಿರುದ್ಧ ಗೆಲುವು ಸಾಧಿಸಿದ್ದು, ಈ ಮೂಲಕ ಸತತ 2ನೇ ಬಾರಿಗೆ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ11 ತಂಡಗಳು ಪಾಲ್ಗೊಂಡಿದ್ದ ಟೂರ್ನಿಯಲ್ಲಿ ಅಜೇಯ ಓಟ ಮುಂದುವರೆಸಿದ ಭಾರತ, ನಿರೀಕ್ಷೆಯಂತೆಯೇ ಫೈನಲ್ ನಲ್ಲೂ ಗೆಲುವು ಸಾಧಿಸಿದೆ. ಈ ಮೂಲಕ 13 ವರ್ಷಗಳ ಬಳಿಕ ನಡೆದ ಟೂರ್ನಿಯಲ್ಲಿ ಟ್ರೋಫಿ ತನ್ನದಾಗಿಸಿಕೊಂಡಿದೆ. ಮೊದಲ ಆವೃತ್ತಿಯು 2012ರಲ್ಲಿ ಭಾರತದಲ್ಲೇ ನಡೆದಿತ್ತು. ಸೆಮಿಫೈನಲ್ ನಲ್ಲಿ ಭಾರತ 33-21ರಲ್ಲಿ ಇರಾನ್ […]

ಪ್ರಜಾ ಪ್ರಗತಿ 25 Nov 2025 12:35 pm

IAS ಅಧಿಕಾರಿ ವಿವಾದಾತ್ಮಕ ಹೇಳಿಕೆ….!

ಭೂಪಾಲ್: ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಅಥವಾ ಆಕೆಯೊಂದಿಗೆ ಆತ ಸಂಬಂಧ ಹೊಂದುವವರೆಗೆ ಮೀಸಲಾತಿ ಮುಂದುವರಿಯಬೇಕು ಎಂದು ಮಧ್ಯಪ್ರದೇಶದ ಹಿರಿಯ ಐಎಎಸ್ ಅಧಿಕಾರಿ ಸಂತೋಷ್ ವರ್ಮಾಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದಾರೆ. ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಧಿಕಾರಿಗಳು ಮತ್ತು ನೌಕರರ ಸಂಘದ ಸಾಮಾನ್ಯ ಸಭೆ ಭೋಪಾಲ್‌ನ ಅಂಬೇಡ್ಕರ್ ಮೈದಾನದಲ್ಲಿ ಭಾನುವಾರ ನಡೆಯಿತು. ಈ ವೇಳೆ ಮಾತನಾಡಿದ ವರ್ಮಾ, ಬ್ರಾಹ್ಮಣ ತನ್ನ ಮಗಳನ್ನು ನನ್ನ ಮಗನಿಗೆ […]

ಪ್ರಜಾ ಪ್ರಗತಿ 25 Nov 2025 12:31 pm

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ….!

ಅಯೋಧ್ಯೆ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರದ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಈ ಹಿನ್ನೆಲೆ ಇಂದು ಧಾರ್ಮಿಕ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡಲಿದ್ದಾರೆ. ರಾಮ ಮಂದಿರ ನಿರ್ಮಾಣದ ಇತಿಹಾಸವು ಶತಮಾನಗಳಷ್ಟು ಹಿಂದಿನದು. ಮೊಘಲ್ ಚಕ್ರವರ್ತಿ ಬಾಬರ್‌ನ ಸೇನಾಧಿಪತಿಯಾಗಿದ್ದ ಮೀರ್ ಬಾಕಿ ಹಳೆಯ ದೇವಾಲಯವನ್ನು ಕೆಡವಿ ಬಾಬರಿ ಮಸೀದಿಯನ್ನು ನಿರ್ಮಿಸಿದ್ದ ಎಂದು ಹೇಳಲಾಗುತ್ತದೆ. ಅಂದಿನಿಂದ ಈ ಸ್ಥಳವು ವಿವಾದದಲ್ಲೇ ಇತ್ತು. ಬರೋಬ್ಬರಿ 500 ವರ್ಷಗಳ ಹೋರಾಟ, ಬಲಿದಾನಗಳ ನಂತರ ಆಯೋಧ್ಯೆಯಲ್ಲಿ […]

ಪ್ರಜಾ ಪ್ರಗತಿ 25 Nov 2025 11:30 am

ಕೊಹ್ಲಿ ಇಲ್ಲದ ಭಾರತ ಟೆಸ್ಟ್‌ ತಂಡದಲ್ಲಿ ಆತ್ಮವಿಶ್ವಾಸ ಕಾಣಿಸುತ್ತಿಲ್ಲ : ಶ್ರೀವತ್ಸ್‌ ಗೋಸ್ವಾಮಿ

ಬೆಂಗಳೂರು: ಮಾಜಿ ಆರ್‌ಸಿಬಿ ಆಟಗಾರ ಶ್ರೀವತ್ಸ್‌ ಗೋಸ್ವಾಮಿ ಅವರು ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ಗೆ ಮಾತ್ರ ವಿದಾಯ ಹೇಳಿ ಟೆಸ್ಟ್‌ ಕ್ರಿಕೆಟ್‌ನಲ್ಲಿ ಮುಂದುವರೆಯಬಹುದಿತ್ತು ಎಂದು ಹೇಳಿದ್ದಾರೆ. ವಿರಾಟ್‌ ಕೊಹ್ಲಿಯವರ ನಾಯಕತ್ವದಲ್ಲಿ ಭಾರತ ತಂಡದಲ್ಲಿದ್ದ ಶಕ್ತಿ ಮತ್ತು ಆತ್ಮವಿಶ್ವಾಸ ಕಾಣಸಿಗುತ್ತಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ದದ ದ್ವಿತೀಯ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡ ತೀವ್ರ ಹಿನ್ನಡೆ ಅನುಭವಿಸುತ್ತಿದೆ. ಮೊದಲ ಇನಿಂಗ್ಸ್‌ನಲ್ಲಿ ಟೀಮ್‌ ಇಂಡಿಯಾ ಬ್ಯಾಟರ್‌ಗಳು ತೋರಿದ ಕಳಪೆ ಪ್ರದರ್ಶನದ ಪರಿಣಾಮ […]

ಪ್ರಜಾ ಪ್ರಗತಿ 25 Nov 2025 11:21 am

ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್‌ ಪ್ರಸಾದ್‌ ಅವಿರೋಧ ಆಯ್ಕೆ……..?

ಬೆಂಗಳೂರು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ವೆಂಕಟೇಶ್ ಪ್ರಸಾದ್ ಅವರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್‌ಸಿಎ)ಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವರದಿಯಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಬ್ರಿಜೇಶ್‌ ಪಟೇಲ್‌ ಬಣದಿಂದ ನಾಮಪತ್ರ ಸಲ್ಲಿಸಿದ್ದ ಪತ್ರಿಕೋದ್ಯಮಿ ಕೆ.ಎನ್‌.ಶಾಂತ್‌ಕುಮಾರ್‌ ಅವರ ನಾಮಪತ್ರ ತಿರಸ್ಕೃತಗೊಂಡಿದೆ ಎನ್ನುವ ಸುದ್ದಿ ಬೆನ್ನಲ್ಲೇ ವೆಂಕಟೇಶ್ ಪ್ರಸಾದ್ ಅಧ್ಯಕ್ಷರಾಗಿ ನೇಮಕಗೊಳ್ಳಲಿದ್ದಾರೆ ಎನ್ನಲಾಗಿದೆ. ಆದರೆ, ಕೆಎಸ್‌ಸಿಎ ಈ ವಿಚಾರವನ್ನು ಖಚಿತಪಡಿಸಿಲ್ಲ ಹೈಕೋರ್ಟ್ ಸೂಚನೆಯಂತೆ ಡಿಸೆಂಬರ್ 7ಕ್ಕೆ ಚುನಾವಣೆ ನಡೆಸುವಂತೆ ಸೂಚನೆ ನೀಡಿತ್ತು. […]

ಪ್ರಜಾ ಪ್ರಗತಿ 25 Nov 2025 11:03 am

ಬುರುಡೆ ಚಿನ್ನಯ್ಯನಿಗೆ ಜಾಮೀನು ಮಂಜೂರು……!

ಮಂಗಳೂರು ಶ್ರೀಕ್ಷೇತ್ರ ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದ ಆರೋಪಿಗೆ ಚಿನ್ನಯ್ಯನಿಗೆ ಜಾಮೀನು ಸಿಕ್ಕಿದೆ. ವಿಶೇಷ ತನಿಖಾ ತಂಡ ತನಿಖಾ ವರದಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ ಬೆನ್ನಲ್ಲೇ ಚಿನ್ನಯ್ಯ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ. ಅರ್ಜಿಯನ್ನು ಪುರಸ್ಕರಿಸಿದ ಮಂಗಳೂರಿನಲ್ಲಿರುವ ಜಿಲ್ಲಾ ನ್ಯಾಯಾಲಯ ನಿನ್ನೆ ಜಾಮೀನು ಮಂಜೂರು ಮಾಡಿದೆ. ಆಗಸ್ಟ್ 23 ರಂದು ಸುಧೀರ್ಘ ವಿಚಾರಣೆ ಬಳಿಕ ಬುರುಡೆ ಕೇಸ್ ನಲ್ಲಿ ಅನಾಮಿಕ ದೂರುದಾರ ಚಿನ್ನಯ್ಯ ಬಂಧನವಾಗಿತ್ತು. ಸೆಪ್ಟೆಂಬರ್ 6 ರಂದು […]

ಪ್ರಜಾ ಪ್ರಗತಿ 25 Nov 2025 10:29 am

ಟಿಪ್ಪು ವಂಶಸ್ಥೆ ಹಾಗೂ ಆಂಗ್ಲೋ-ಇಂಡಿಯನ್ ಗೂಢಚಾರಣಿ ನೂರ್ ಇನಾಯತ್ ಖಾನ್‌ಗೆ ಫ್ರಾನ್ಸ್‌ನಿಂದ ಗೌರವ

ನವದೆಹಲಿ ಎರಡನೇ ವಿಶ್ವ ಯುದ್ಧದ ಸಂದರ್ಭದಲ್ಲಿ ಅಂಡರ್ ಕವರ್ ಬ್ರಿಟಿಷ್ ಏಜೆಂಟ್ ಆಗಿ ಫ್ರೆಂಚ್ ನಿರೋಧಕದಲ್ಲಿ ಸಲ್ಲಿಸಿದ ಸೇವೆಗಾಗಿ ಪ್ರಾನ್ಸ್ ಪೋಸ್ಟೇಜ್ ಸ್ಟ್ಯಾಂಪ್ ಬಿಡುಗಡೆ ಮಾಡುವ ಮೂಲಕ ಗೌರವ ಸೂಚಿಸಿದೆ. ಮೈಸೂರು ಹುಲಿ ಟಿಪ್ಪು ಸುಲ್ತಾನನ ವಂಶದವಳಾಗಿರುವ ನೂರ್ ಇನಾಯತ್ ಖಾನ್ ಫ್ರಾನ್ಸ್‌ನಲ್ಲಿ ಈ ಗೌರವಕ್ಕೆ ಪಾತ್ರರಾದ ಪ್ರಥಮ ಭಾರತೀಯ ಮೂಲದ ಮಹಿಳೆ ಎನಿಸಿಕೊಡಿದ್ದಾರೆ. ಫ್ರಾನ್ಸ್ ದೇಶದ ಪೋಸ್ಟಲ್ ಸೇವೆಯಾಗಿರುವ ಲಾ ಪೋಸ್ಟೆ ‘ಫಿಗರ್ಸ್ ಆಫ್ ರೆಸಿಸ್ಟೆನ್ಸ್’ ಹೆಸರಿನಲ್ಲಿ ಹೊರ ತಂದಿರುವ […]

ಪ್ರಜಾ ಪ್ರಗತಿ 25 Nov 2025 10:12 am

ಇಥಿಯೋಪಿಯಾದಲ್ಲಿ ಜ್ವಾಲಾಮುಖಿ ಸ್ಫೋಟ, ದಿಲ್ಲಿ ತಲುಪಿದ ಹೊಗೆ……!

ನವದೆಹಲಿ ಆಫ್ರಿಕಾದ ಇಥಿಯೋಪಿಯಾದಲ್ಲಿ ಜ್ವಾಲಾಮುಖಿಯೊಂದು ಸ್ಫೋಟಗೊಂಡಿದ್ದು, ಇದರ ಬೂದಿ ಮಿಶ್ರಿತ ಹೊಗೆಯು ಉತ್ತರ ಭಾರತದತ್ತ ಬರುತ್ತಿದೆ. ಪರಿಣಾಮ ವಿಮಾನಗಳ ಹಾರಾಟಕ್ಕೆ ಅಡ್ಡಿಯುಂಟಾಗಿದೆ. ಹೀಗಾಗಿ ಹಲವು ವಿಮಾನ ಸೇವೆಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಹೈಲಿ ಗುಬ್ಬಿ ಎಂಬ ಹೆಸರಿನ ಜ್ವಾಲಾ ಮುಖಿಯು ಇಥಿಯೋಪಿಯಾದ ಅಫಾರ್ ಪ್ರಾಂತ್ಯದಲ್ಲಿ ಸಿಡಿದಿದೆ. ಇದರ ಸ್ಪೋಟದ ತೀವ್ರತೆಗೆ ಆಸುಪಾಸಿನ ಊರುಗಳಲ್ಲಿ ಕಂಪನದ ಅನುಭವವಾಗಿದೆ. ಜ್ವಾಲಾಮುಖಿಯ ಬೂದಿ ಮಿಶ್ರಿತ ಹೊಗೆಯು ಭೂತಾನ್‌ಗೂ ವ್ಯಾಪಿಸಲಿದ್ದು, ಹಿಮಾಲಯ ದವರೆಗೆ ಹೋಗಲಿದೆ ಎಂದು ಹವಾಮಾನ […]

ಪ್ರಜಾ ಪ್ರಗತಿ 25 Nov 2025 10:09 am

ಮಾರ್ಕೊ ಯೆನ್ಸನ್‌ ಮಾರಕ ದಾಳಿ, 201ಕ್ಕೆ ಭಾರತ ಆಲ್‌ಔಟ್‌…..!

ಗುವಾಹಟಿ: ಎರಡನೇ ಟೆಸ್ಟ್‌ ಗೆಲ್ಲುವ ಭಾರತ ತಂಡ ಕನಸು ದೂರವಾಗುತ್ತಿದೆ. ಅದೇ ರಾಗ, ಅದೇ ತಾಳ ಎಂಬಂತೆ ಟೀಮ್‌ ಇಂಡಿಯಾದ ಬ್ಯಾಟಿಂಗ್‌ ವೈಫಲ್ಯ ಗುವಾಹಟಿ ಟೆಸ್ಟ್‌ನಲ್ಲಿಯೂ ಮುಂದುವರಿದಿದೆ. ಮಾರ್ಕೊ ಯೆನ್ಸನ್‌ ಮಾರಕ ಬೌಲಿಂಗ್‌ ದಾಳಿಗೆ ನಲುಗಿದ ಭಾರತ ತಂಡ, ಎರಡನೇ ಟೆಸ್ಟ್‌ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಕೇವಲ 201 ರನ್‌ಗಳಿಗೆ ಆಲ್‌ಔಟ್‌ ಆಯಿತು. ಇದರೊಂದಿಗೆ ಟೀಮ್‌ ಇಂಡಿಯಾ ಬೃಹತ್‌ ಮೊತ್ತದ ಹಿನ್ನಡೆಯನ್ನು ಅನುಭವಿಸಿದೆ. ಭಾರತದ ಪರ ಯಶಸ್ವಿ ಜೈಸ್ಬಾಲ್‌ (58) ಹಾಗೂ ವಾಷಿಂಗ್ಟನ್‌ ಸುಂದರ್‌ […]

ಪ್ರಜಾ ಪ್ರಗತಿ 24 Nov 2025 5:21 pm

ಅಮೆರಿಕ ವೀಸಾ ರಿಜೆಕ್ಟ್‌- ಮನನೊಂದ ವೈದ್ಯೆ ಆತ್ಮಹತ್ಯೆ

ಅಮರಾವತಿ: ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ವೈದ್ಯೆಯೊಬ್ಬರು ತಮಗೆ ವೀಸಾ ಸಿಗದ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹೈದರಾಬಾದ್ ನಲ್ಲಿ ಮಹಿಳೆ ವಾಸವಾಗಿದ್ದ ಫ್ಲಾಟ್‌ನಲ್ಲೇ ಈ ಘಟನೆ ನಡೆದಿದೆ ಎಂದು ಅಲ್ಲಿನ ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ಮಾಹಿತಿ ಹಂಚಿಕೊಂಡಿದ್ದಾರೆ. ಇನ್ನು ಮೃತ ಮಹಿಳೆಯನ್ನು 38 ವರ್ಷದ ರೋಹಿಣಿ ಎಂದು ಗುರುತಿಸಲಾಗಿದೆ. ಉದ್ಯೋಗಕ್ಕಾಗಿ ತನ್ನ ಕುಟುಂಬದಿಂದ ದೂರ ಉಳಿದು ವೈದ್ಯಕೀಯ ವೃತ್ತಿ ಮಾಡುತ್ತಿದ್ದ ಆಕೆ ಕೆಲಸಕ್ಕಾಗಿ ಅಮೆರಿಕಕ್ಕೆ ಹೋಗಲು ಸಿದ್ಧತೆ ನಡೆಸಿದ್ದರು. […]

ಪ್ರಜಾ ಪ್ರಗತಿ 24 Nov 2025 5:17 pm

ಧಮೇಂದ್ರ ಸಾವು : ದಿಗ್ಗಜ ನಟನ ನಿಧನಕ್ಕೆ ಪ್ರಧಾನಿ, ಸಿಎಂ ಸಂತಾಪ

ಮುಂಬೈ: ಬಾಲಿವುಡ್‍ನ ದಂತಕತೆ ನಟ ಧರ್ಮೇಂದ್ರ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸಲ್ಲಿಸಿದರು. ಅವರನ್ನು ಅದ್ಭುತ ನಟ ಎಂದು ಕರೆದ ಮೋದಿ, ಧರ್ಮೇಂದ್ರ ಅವರ ನಿಧನವು ಭಾರತೀಯ ಚಿತ್ರರಂಗದ ಒಂದು ಯುಗದ ಅಂತ್ಯ ಎಂದು ಬರೆದಿದ್ದಾರೆ. ಧರ್ಮೇಂದ್ರ ಅವರ ನಿಧನವು ಭಾರತೀಯ ಚಿತ್ರರಂಗದಲ್ಲಿ ಒಂದು ಯುಗದ ಅಂತ್ಯವನ್ನು ಸೂಚಿಸುತ್ತದೆ. ಅವರು ಒಬ್ಬ ಅಪ್ರತಿಮ ಚಲನಚಿತ್ರ ವ್ಯಕ್ತಿತ್ವ, ಅವರು ನಿರ್ವಹಿಸಿದ ಪ್ರತಿಯೊಂದು ಪಾತ್ರಕ್ಕೂ ಜೀವ ತುಂಬಿರುವ ಅದ್ಭುತ ನಟ. […]

ಪ್ರಜಾ ಪ್ರಗತಿ 24 Nov 2025 5:00 pm

ಜಿ20 ಶೃಂಗಸಭೆಯಲ್ಲಿ ಭಾರತ, ಆಸ್ಟ್ರೇಲಿಯಾ, ಕೆನಡಾ ಘೋಷಣೆ…..!

ಜೋಹಾನ್ಸ್‌ಬರ್ಗ್‌: ಆಸ್ಟ್ರೇಲಿಯಾದ ಪ್ರಧಾನಿ ಆಂಟನಿ ಅಲ್ಬನೀಸ್ , ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ತಂತ್ರಜ್ಞಾನ, ಸಂಶೋಧನೆ ಕ್ಷೇತ್ರದ ಬೆಳವಣಿಗೆಯಲ್ಲಿ ಪರಸ್ಪರ ಸಹಕಾರ ನೀಡುವುದಾಗಿ ಘೋಷಣೆಯನ್ನು ಮಾಡಿದ್ದಾರೆ. ಕೆನಡಾದ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಅಧಿಕಾರ ವಹಿಸಿಕೊಂಡ ಬಳಿಕ ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಸುಧಾರಣೆಯಾಗುತ್ತಿದೆ ಎಂಬುದಕ್ಕೆ ಇದು ಒಂದು ಪ್ರಮುಖ ಸಾಕ್ಷಿಯಾಗಿದೆ. ಜೋಹಾನ್ಸ್‌ಬರ್ಗ್‌ನಲ್ಲಿ […]

ಪ್ರಜಾ ಪ್ರಗತಿ 24 Nov 2025 4:52 pm

ಅಕ್ರಮವಾಗಿ BPL ಕಾರ್ಡ್​​ ಪಡೆದವರಿಗೆ ಶಾಕ್….!

ಬೆಂಗಳೂರು ಅಕ್ರಮವಾಗಿಬಿಪಿಎಲ್​ ಕಾರ್ಡ್​ ಪಡೆದವರಿಗೆ ಶಾಕ್​​ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, Central Board of Direct Taxation ಮಾಹಿತಿ ಆಧಾರದ ಮೇಲೆ ರಾಜಧಾನಿ ಬೆಂಗಳೂರೊಂದರಲ್ಲೇ ಲಕ್ಷಾಂತರ ಕಾರ್ಡ್​ಗಳು ರದ್ದಾಗುವ ಸಾಧ್ಯತೆ ಇದೆ. ಆಹಾರ ಇಲಾಖೆಗೆ ಕಳೆದ ತಿಂಗಳು ದೊರೆತಿರುವ ಟ್ಯಾಕ್ಸ್​​ ರಿಪೋರ್ಟ್​​ ಆಧಾರದಲ್ಲಿ, ತೆರಿಗೆ ಕಟ್ಟುತ್ತಿದ್ದರೂ ಪಡೆದಿರುವ ಬಿಪಿಎಲ್​ ಕಾರ್ಡ್​ಗಳು ಎಪಿಎಲ್​ ಕಾರ್ಡ್​​ಗಳಾಗಿ ಪರಿವರ್ತನೆಯಾಗಲಿವೆ. ಆಹಾರ ಇಲಾಖೆಯ ರಾಜಾಜಿನಗರ ಜಂಟಿ ಆಯುಕ್ತರ ವ್ಯಾಪ್ತಿಯಲ್ಲಿಯೇ 13,329 ಬಿಪಿಎಲ್ ಕಾರ್ಡ್​ಗಳು ರದ್ದಾಗಿದ್ದು, ಅವನ್ನು […]

ಪ್ರಜಾ ಪ್ರಗತಿ 24 Nov 2025 4:26 pm

ದಂಪತಿ ಮಧ್ಯೆ ಗಲಾಟೆ: ಕಾಲುವೆಗೆ ಹಾರಿದ್ದ ಪತ್ನಿಯನ್ನ ರಕ್ಷಿಸಲು ಹೋಗಿ ಕೊಚ್ಚಿಹೋದ ಪತಿ ಸಾವು

ಹಾಸನ‌ ಕೌಟುಂಬಿಕ ಕಲಹ ಹಿನ್ನೆಲೆ ಕಾಲುವೆಗೆ ಹಾರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಹಾಸನ‌ ಜಿಲ್ಲೆ‌ಯ ಚನ್ನರಾಯಪಟ್ಟಣ ತಾಲ್ಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಎರಡು ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದ ಗೋಪಾಲ್ (27) ಮತ್ತು ದೀಪು (24) ಮೃತ ದಂಪತಿ. ಚನ್ನರಾಯಪಟ್ಟಣ ಟೌನ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ ಇಬ್ಬರ ನಡುವೆ ಗಲಾಟೆ ಉಂಟಾಗಿದೆ. ಬಳಿಕ ಪತ್ನಿ ಹೇಮಾವತಿ ಕಾಲುವೆಗೆ ಹಾರಿದ್ದಾರೆ. ಪತ್ನಿಯನ್ನು ರಕ್ಷಿಸಲು ಪತಿ ಕೂಡ ಕಾಲುವೆಗೆ ಹಾರಿದ್ದಾರೆ. ದಂಪತಿ […]

ಪ್ರಜಾ ಪ್ರಗತಿ 24 Nov 2025 4:24 pm

ಬ್ರೆಜಿಲ್ ಅಧ್ಯಕ್ಷತೆಯಲ್ಲಿ ನಡೆದ COP30 ಮುಕ್ತಾಯ….!

ಬ್ರೆಜಿಲ್‌ : ಬ್ರೆಜಿಲ್ ಅಧ್ಯಕ್ಷತೆಯಲ್ಲಿ ನಡೆದ COP30 ಶೃಂಗ ಮುಕ್ತಾಯಗೊಂಡಿದ್ದು, ಭಾರತ ಶೃಂಗಸಭೆಯಲ್ಲಿ ಅಂಗೀಕರಿಸಲಾದ ಹಲವಾರು ನಿರ್ಧಾರಗಳನ್ನೂ ಸ್ವಾಗತಿಸಿದೆ. ಆದರೆ ಹವಾಮಾನ ಬದಲಾವಣೆ ತಡೆಗಟ್ಟುವ ನೀತಿಯನ್ನು ರೂಪಿಸುವಲ್ಲಿ COP30 ಸಂಪೂರ್ಣ ಯಶಸ್ಸು ಕಂಡಿದೆ ಎಂದು ನಿರ್ದಿಷ್ಟವಾಗಿ ಹೇಳಿಲ್ಲ. ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಚೌಕಟ್ಟು ಸಮಾವೇಶ ಸಮಾರೋಪ ಸಭೆಯಲ್ಲಿ ಅಧಿಕೃತ ಘೋಷಣೆಗಳಿಗೆ ಭಾರತ ಬೆಂಬಲಿಸುವುದಾಗಿ ಅಧಿಕೃತ ಪ್ರಕಟಣೆ ತಿಳಿಸಿದೆ. ವಿಶ್ವಸಂಸ್ಥೆಯ ಹವಾಮಾನ ಕುರಿತ ಮಾತುಕತೆಗಳು, ವೈಪರೀತ್ಯಕ್ಕೆ ತುತ್ತಾಗುವ ದೇಶಗಳಿಗೆ ಹೆಚ್ಚಿನ ಹಣಕಾಸಿನ ನೆರವು […]

ಪ್ರಜಾ ಪ್ರಗತಿ 24 Nov 2025 4:15 pm

ಪುರಿ ಜಗನ್ನಾಥ ದೇಗುಲದಲ್ಲಿ ಪವಾಡ…….?

ಪುರಿ: ವಿಸ್ಮಯಗಳ ಆಗರವಾಗಿರುವ ಒಡಿಶಾದ ಪುರಿ ಜಗನ್ನಾಥ ದೇಗುಲದಲ್ಲಿ ಮತ್ತೊಂದು ಪವಾಡ ನಡೆದಿದೆ ಎಂದು ಹೇಳಲಾಗಿದ್ದು, ಕೋಮದಲ್ಲಿದ್ದ ಪುಟ್ಟ ಬಾಲಕ ದೇಗುಲದ ಆವರಣದಲ್ಲಿ ಕಣ್ಣು ಬಿಟ್ಟಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ. ಕೆಲವು ದಿನಗಳ ಹಿಂದೆ, ಪುರಿ ಶ್ರೀಮಂದಿರದಲ್ಲಿ ಮರೆಯಲಾಗದ ದೃಶ್ಯವೊಂದು ನಡೆದಿದ್ದು, ರಾಜಸ್ಥಾನ ಮೂಲದ ವ್ಯಕ್ತಿ ಪ್ರಕಾಶ್ ಭೋಯ್ ಎಂಬುವವರು ಕೋಮಾದಲ್ಲಿ ಚಲನರಹಿತವಾಗಿ ಮಲಗಿದ್ದ ತನ್ನ ಮಗ ನಿಖಿಲ್ ನನ್ನು ಹೊತ್ತುಕೊಂಡು ಪುರಿಯ ಜಗನ್ನಾಥ ದೇವಾಲಯಕ್ಕೆ ಬಂದಿದ್ದಾರೆ.ದೇಗುಲದ ಸಿಂಹ ದ್ವಾರದ […]

ಪ್ರಜಾ ಪ್ರಗತಿ 24 Nov 2025 4:09 pm

ನೂತನ CJI ನೇತೃತ್ವದಲ್ಲಿ ಸಾಂವಿಧಾನಿಕ ಮೌಲ್ಯಗಳು ಮತ್ತಷ್ಟು ಬಲಗೊಳ್ಳುತ್ತವೆ: ಖರ್ಗೆ ವಿಶ್ವಾಸ

ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದ್ದು, ನ್ಯಾಯ ವ್ಯವಸ್ಥೆಗೆ ನಿರ್ಣಾಯಕ ಹಂತದಲ್ಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ ಮತ್ತು ಅವರ ನಾಯಕತ್ವದಲ್ಲಿ ಸಾಂವಿಧಾನಿಕ ಮೌಲ್ಯಗಳು ಮತ್ತು ಕಾನೂನಿನ ಮೇಲಿನ ಸಾರ್ವಜನಿಕ ನಂಬಿಕೆ ಮತ್ತಷ್ಟು ಬಲಗೊಳ್ಳುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ 370ನೇ ವಿಧಿಯನ್ನು ರದ್ದುಪಡಿಸುವುದು ಸೇರಿದಂತೆ ಹಲವಾರು ಮಹತ್ವದ ತೀರ್ಪುಗಳ ಭಾಗವಾಗಿರುವ ನ್ಯಾಯಮೂರ್ತಿ […]

ಪ್ರಜಾ ಪ್ರಗತಿ 24 Nov 2025 4:03 pm

5 ಸ್ಟಾರ್ ಹೋಟೆಲ್‌ನಲ್ಲಿ ಮಹಿಳಾ ಪೈಲಟ್ ಮೇಲೆ ಅತ್ಯಾಚಾರ, 60 ವರ್ಷದ ಪೈಲಟ್ ವಿರುದ್ಧ ಗಂಭೀರ ಆರೋಪ

ಬೆಂಗಳೂರು: ಖಾಸಗಿ ವಿಮಾನಯಾನ ಸಂಸ್ಥೆಯ ಪೈಲಟ್ ಬೆಂಗಳೂರಿನ ಖಾಸಗಿ ಹೊಟೆಲ್ ನಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂಬ ಗಂಭೀರ ಆರೋಪ ಹೊರಿಸಲಾಗಿದೆ.ಬೆಂಗಳೂರಿನ ಹೋಟೆಲೊಂದರಲ್ಲಿ ತಮ್ಮ ಮೇಲೆ ವಿಶೇಷ ವಿಮಾನದ ಪೈಲಟ್‌ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಕ್ಯಾಬಿನ್‌ ಸಿಬ್ಬಂದಿ ಇಲ್ಲಿನ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಾಗಿದೆ. ನವೆಂಬರ್‌ 18ರಂದು ಬೆಂಗಳೂರಿನಲ್ಲಿ ಘಟನೆ ನಡೆದಿದ್ದು,ಬೇಗಂಪೇಟೆ ಠಾಣೆಯಲ್ಲಿ ಝೀರೊ ಎಫ್‌ಐಆರ್‌ ದಾಖಲಾಗಿದೆ. ‘ಬೆಂಗಳೂರಿನಿಂದ ಮರಳಿದ ನಂತರ ಸಂತ್ರಸ್ತೆ, ಇಲ್ಲಿನ ಠಾಣೆಗೆ […]

ಪ್ರಜಾ ಪ್ರಗತಿ 24 Nov 2025 4:00 pm

ಟೇಕಾಫ್‌ಗೆ ಮೀಸಲಿಟ್ಟ ರನ್‌ವೇನಲ್ಲಿ ವಿಮಾನ ಲ್ಯಾಂಡ್; ತಪ್ಪಿದ ದೊಡ್ಡ ಡಿಕ್ಕಿ ಅನಾಹುತ!

ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಕಾಬೂಲ್‌ನಿಂದ ಬಂದ ಅರಿಯಾನಾ ಅಫ್ಘಾನ್ ಏರ್‌ಲೈನ್ಸ್ ವಿಮಾನವು ಮತ್ತೊಂದು ವಿಮಾನ ಟೇಕಾಫ್ ಆಗುತ್ತಿದ್ದ ರನ್‌ವೇಯಲ್ಲಿಯೇ ತಪ್ಪಾಗಿ ಲ್ಯಾಂಡ್ ಆಗಿದ್ದು, ಅದೃಷ್ಟವಶಾತ್ ದೊಡ್ಡ ಡಿಕ್ಕಿಯೊಂದನ್ನು ತಪ್ಪಿಸಲಾಗಿದೆ ಎಂದು ಡಿಜಿಸಿಎಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯ ಬಗ್ಗೆ ಡಿಜಿಸಿಎ ಈಗಾಗಲೇ ತನಿಖೆ ಆರಂಭಿಸಿದೆ. ಅರಿಯಾನಾ ಅಫ್ಘಾನ್ ಏರ್‌ಲೈನ್ಸ್ A310 ವಿಮಾನ FG-311 (ಕಾಬೂಲ್-ದೆಹಲಿ)ಕ್ಕೆ ರನ್‌ವೇ 29Lನಲ್ಲಿ ಇಳಿಯಲು ಅನುಮತಿ ನೀಡಲಾಗಿತ್ತು. ಆದರೆ ಈ ವಿಮಾನವು […]

ಪ್ರಜಾ ಪ್ರಗತಿ 24 Nov 2025 3:55 pm

ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡದ ಬಗ್ಗೆ ಅನಿಲ್‌ ಕುಂಬ್ಳೆ ಬೇಸರ…….!

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯ ಭಾರತ ತಂಡದಲ್ಲಿ ವಿಕೆಟ್‌ ಕೀಪರ್‌-ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡದ ಬಗ್ಗೆ ಸ್ಪಿನ್‌ ದಿಗ್ಗಜ ಅನಿಲ್‌ ಕುಂಬ್ಳೆ ಬೇಸರ ವ್ಯಕ್ತಪಡಿಸಿದ್ದಾರೆ. ಭಾರತ ಏಕದಿನ ತಂಡದಲ್ಲಿ ಸ್ಥಾನ ಪಡೆಯಲು ಸಂಜು ಅರ್ಹರು ಎಂದು ಅಭಿಪ್ರಾಯ ಪಟ್ಟಿದ್ದಾರೆ. ನವೆಂಬರ್ 30 ರಂದು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಕಾದಾಟ ನಡೆಸಲಿವೆ. ಭಾರತ ಏಕದಿನ ತಂಡದಲ್ಲಿ ಸಂಜು ಸ್ಯಾಮ್ಸನ್‌ ಬದಲು […]

ಪ್ರಜಾ ಪ್ರಗತಿ 24 Nov 2025 3:46 pm

QSR ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ ಬರ್ಗರ್ ಸಿಂಗ್…..!

ಬೆಂಗಳೂರು: ಬರ್ಗರ್ ಸಿಂಗ್ ತನ್ನ ನಗರವ್ಯಾಪಿ ಅಭಿಯಾನ ದಿ ಬಿಗ್ ಸಿಂಗ್ ಫೀಸ್ಟ್ ಮೂಲಕ ಭಾರತದ QSR ಉದ್ಯಮದಲ್ಲಿ ಭಾರಿ ಮೈಲಿ ಗಲ್ಲು ನಿರ್ಮಿಸಿದೆ. ಬೆಂಗಳೂರಿನಲ್ಲಿ ತನ್ನ ಆರಂಭ ಮತ್ತು ವೇಗವಾದ ವಿಸ್ತರಣೆ ಆಚರಣೆ ಯ ಭಾಗವಾಗಿ, ಸರ್ಜಾಪುರ, HSR ಲೇಔಟ್ ಮತ್ತು BTM ಲೇಔಟ್ ಔಟ್‌ಲೆಟ್‌ಗಳಲ್ಲಿ ಒಂದೇ ದಿನದಲ್ಲಿ 3300 ಕ್ಕೂ ಹೆಚ್ಚು ಉಚಿತ ಊಟಗಳನ್ನು ವಿತರಿಸಲಾಯಿತು. ಈ ಕಾರ್ಯಕ್ರಮಕ್ಕೆ 15,000 ಕ್ಕೂ ಹೆಚ್ಚು ಜನರಿಂದ ದಾಖಲೆಮಾಡಿದ ನೋಂದಣಿಗಳು ದೊರಕಿದ್ದು, […]

ಪ್ರಜಾ ಪ್ರಗತಿ 24 Nov 2025 3:38 pm

ಬಸ್‌ಗಳ ಮುಖಾಮುಖಿ ಡಿಕ್ಕಿ; 6 ಜನರ ದುರ್ಮರಣ

ಚೆನ್ನೈ: ಎರಡು ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆರು ಜನ ದಾರುಣವಾಗಿ ಮೃತಪಟ್ಟಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ . ತೆಂಕಾಸಿ ಜಿಲ್ಲೆಯಲ್ಲಿ ಈ ಭೀಕರ ದುರ್ಘಟನೆ ಸಂಭವಿಸಿದ್ದು, ಎರಡು ಖಾಸಗಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ದುರ್ಘಟನೆಯಲ್ಲಿ 32ಕ್ಕೂ ಅಧಿಕ ಜನರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರ ಪ್ರಕಾರ, ಮಧುರೈನಿಂದ ಸೆಂಕೊಟ್ಟೈಗೆ ಹೋಗುತ್ತಿದ್ದ ಖಾಸಗಿ ಬಸ್ ಮತ್ತು ತೆಂಕಾಸಿಯಿಂದ ಕೋವಿಲ್ಪಟ್ಟಿ ಕಡೆಗೆ ಹೋಗುತ್ತಿದ್ದ ಇನ್ನೊಂದು […]

ಪ್ರಜಾ ಪ್ರಗತಿ 24 Nov 2025 2:22 pm

ನ.28ರಂದು ಉಡುಪಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ…..!

ಉಡುಪಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನ.28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸುತ್ತಿದ್ದಾರೆ. ಅವರು ಶ್ರೀಕೃಷ್ಣ ದೇವರ ದರ್ಶನ ಪಡೆದು ನಂತರ ಐತಿಹಾಸಿಕ ‘ಲಕ್ಷ ಕಂಠ ಗೀತ ಗಾಯನ’ ಕಾರ್ಯಕ್ರಮದಲ್ಲಿ ಭಾಗವಹಿಸಿ, ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಹೆಲಿಪ್ಯಾಡ್‌, ಕಾಂಕ್ರೀಟ್‌ ರಸ್ತೆ, ಭದ್ರತಾ ವ್ಯವಸ್ಥೆ ಸಹಿತ ಮೂಲ ಸೌಲಭ್ಯಗಳ ತಯಾರಿ ವೇಗವಾಗಿ ಸಾಗುತ್ತಿದೆ. ನವೆಂಬರ್ 28ರಂದು ದೆಹಲಿಯಿಂದ ನೇರವಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ […]

ಪ್ರಜಾ ಪ್ರಗತಿ 24 Nov 2025 12:22 pm

ಮಾಹೆಯ 33ನೇ ಘಟಿಕೋತ್ಸವ : ಅತ್ಯತ್ತಮ 3 ವಿದ್ಯಾರ್ಥಿಗಳಿಗೆ ಡಾ. ಟಿ.ಎಂ.ಎ. ಪೈ ಚಿನ್ನದ ಪದಕ…..!

ಮಣಿಪಾಲ್‌: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ (ಮಾಹೆ) ವಿಶ್ವವಿದ್ಯಾ ಲಯ ಎಂದು ಪರಿಗಣಿತವಾದ ಉತ್ಕೃಷ್ಟ ಸಂಸ್ಥೆಯ 33ನೇ ಘಟಿಕೋತ್ಸವದ ಮೂರನೇ ದಿನದ ಸಮಾರಂಭವು ಸಮರ್ಥ ಪದವೀಧರರನ್ನು ರೂಪಿಸುವ, ಹೊಸ ಆಲೋಚನೆ ಗಳನ್ನು ಪ್ರೋತ್ಸಾಹಿಸುವ ಮಾಹೆಯ ಬದ್ಧತೆಯನ್ನು ಎತ್ತಿ ಹಿಡಿಯಿತು. ಮೂರನೇ ದಿನದ ಘಟಿಕೋತ್ಸವದಲ್ಲಿ, 58 ಪಿಎಚ್‌ಡಿ ಪದವೀಧರರು ಸೇರಿ ಒಟ್ಟು 1,645 ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು. ಶೈಕ್ಷಣಿಕವಾಗಿ ಅತ್ಯುತ್ತಮ ಸಾಧನೆ ಮಾಡಿದ 3 ವಿದ್ಯಾರ್ಥಿಗಳು ಪ್ರತಿಷ್ಠಿತ ಡಾ. ಟಿ.ಎಂ.ಎ. […]

ಪ್ರಜಾ ಪ್ರಗತಿ 24 Nov 2025 12:13 pm

NDA ಸರ್ಕಾರಕ್ಕೆ ಓವೈಸಿ ಬೆಂಬಲ……!

ಪಾಟ್ನ: ಬಿಹಾರದಲ್ಲಿ ಎನ್ ಡಿಎ ಸರ್ಕಾರಕ್ಕೆ ಬೆಂಬಲ ಘೋಷಿಸುವ ಬಗ್ಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಘೋಷಿಸುವ ಬಗ್ಗೆ ಮಾತನಾಡಿದ್ದಾರೆ. ನಿತೀಶ್ ಕುಮಾರ್ ನೇತೃತ್ವದ ಎನ್ ಡಿಎ ಸರ್ಕಾರಕ್ಕೆ ಬೆಂಬಲ ಘೋಷಿಸುವುದಕ್ಕೆ ಷರತ್ತು ವಿಧಿಸಿರುವ ಒವೈಸಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ಮುಸ್ಲಿಂ ಪ್ರಾಬಲ್ಯದ ಸೀಮಾಂಚಲ ಪ್ರದೇಶಕ್ಕೆ ನ್ಯಾಯ ಒದಗಿಸಿ, ಕೋಮುವಾದವನ್ನು ದೂರವಿಟ್ಟರೆ ಬಿಹಾರದ ಎನ್‌ಡಿಎ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಹೈದರಾಬಾದ್ ಸಂಸದರೂ […]

ಪ್ರಜಾ ಪ್ರಗತಿ 24 Nov 2025 11:47 am

53ನೇ ಸಿಜೆಐ ಆಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಸೂರ್ಯಕಾಂತ್!

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ವಾಪಸ್ ಪಡೆಯುವ 370ನೇ ವಿಧಿಯನ್ನು ರದ್ದುಪಡಿಸುವುದು ಸೇರಿದಂತೆ ಹಲವಾರು ಮಹತ್ವದ ತೀರ್ಪುಗಳ ಭಾಗವಾಗಿರುವ ನ್ಯಾಯಮೂರ್ತಿ ಸೂರ್ಯಕಾಂತ್ ಸೋಮವಾರ ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.ನ್ಯಾಯಮೂರ್ತಿ ಬಿಆರ್ ಗವಾಯಿ ಅವರು ನವೆಂಬರ್ 23 ರಂದು ನಿವೃತ್ತರಾಗಿದ್ದು, ಅವರ ನಂತರ ಸೂರ್ಯಕಾಂತ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಪುಟ್ಟ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಸೂರ್ಯಕಾಂತ್ ಅವರಿಗೆ […]

ಪ್ರಜಾ ಪ್ರಗತಿ 24 Nov 2025 11:42 am

ಫ್ರಾನ್ಸ್ ನೌಕಾ ಪಡೆ ಕೈಲಿ ಸಿಲುಕಿ ಜಾಗತಿಕವಾಗಿ ನಗೆಪಾಟಲಿಗೀಡಾದ ಪಾಕಿಸ್ತಾನ!

ನವದೆಹಲಿ: ಪಾಕಿಸ್ತಾನ ಮತ್ತೊಮ್ಮೆ ಜಾಗತಿಕವಾಗಿ ನಗೆಪಾಟಲಿಗೀಡಾಗಿದೆ. ಜಗತ್ತಿನ ಎದುರು ಪಾಕಿಸ್ತಾನದ ಸುಳ್ಳು ಪ್ರಚಾರ ಮತ್ತೊಮ್ಮೆ ಬಯಲಾಗಿದ್ದು ತನ್ನ ಸೇನೆ ಭಾರತಕ್ಕಿಂತ ಉತ್ತಮವಾಗಿದೆ ಎಂಬ ಗ್ರಹಿಕೆಯನ್ನು ಸೃಷ್ಟಿಸಲು ಹೋಗಿ ಫ್ರಾನ್ಸ್ ನೌಕಾಪಡೆ ಕೈಲಿ ಸಿಲುಕಿಕೊಂಡಿದೆ. ತನ್ನ ಸೇನೆ ಭಾರತಕ್ಕಿಂತ ಉತ್ತಮವಾಗಿದೆ ಎಂಬ ಗ್ರಹಿಕೆಯನ್ನು ಸೃಷ್ಟಿಸಲು ಹೆಣಗಾಡುತ್ತಿರುವ ಪಾಕಿಸ್ತಾನಿ ಮಾಧ್ಯಮಗಳು, ಮೇ ನಲ್ಲಿ ನಡೆದ ಸಂಘರ್ಷವು ತಮ್ಮ ವಾಯು ಶ್ರೇಷ್ಠತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಸುಳ್ಳು ಸುದ್ದಿಗಳನ್ನು ಪ್ರಕಟಿಸಿತ್ತು. ಫ್ರೆಂಚ್ ನೌಕಾಪಡೆಯು ಅವರ ಲೇಖನವನ್ನು […]

ಪ್ರಜಾ ಪ್ರಗತಿ 24 Nov 2025 11:39 am

ಸಿಎಂ ಕುರ್ಚಿ ಗುದ್ದಾಟ: ತುರ್ತು ಸಭೆಗೆ ಹೆಚ್ಚಿದ ಒತ್ತಡ….!

ಬೆಂಗಳೂರು: ರಾಜ್ಯದಲ್ಲಿ ಸಿಎಂ ಗದ್ದುಗೆಗಾಗಿ ಗುದ್ದಾಟ ಹೆಚ್ಚಾಗುತ್ತಿರುವಂತೆಯೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಪ್ತರಾದ ಕೆಲ ಕಾಂಗ್ರೆಸ್ ಶಾಸಕರ ಮೂರನೇ ಬ್ಯಾಚ್ ಹೈಕಮಾಂಡ್ ಮೇಲೆ ಒತ್ತಡ ಹಾಕಲು ರಾತ್ರೋರಾತ್ರಿ ದೆಹಲಿ ತಲುಪಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸುತ್ತಿದ್ದಂತೆಯೇ ಕೆಲವು ದಿನಗಳಿಂದ ಚರ್ಚೆಯಾಗುತ್ತಿದ್ದ ಅಧಿಕಾರ ಹಂಚಿಕೆ ವಿವಾದ ಬಗೆಹರಿಸಲು ವರಿಷ್ಠರ ಮೇಲೆ ಹೊಸ ಒತ್ತಡ ಹೇರಲು ಎರಡು ಬ್ಯಾಚ್ ಶಾಸಕರು ಕಳೆದ ವಾರ ದೆಹಲಿಗೆ ಪ್ರಯಾಣ ಬೆಳೆಸಿದ್ದರು. ಈಗ ಎರಡನೇ […]

ಪ್ರಜಾ ಪ್ರಗತಿ 24 Nov 2025 11:37 am

ಸಿಎಂ ಕುರ್ಚಿಗಾಗಿ ಗುದ್ದಾಟ: ಸಚಿವ ಸ್ಥಾನಕ್ಕೆ ಕೋಟಿಗಟ್ಟಲೆ ಡೀಲ್ : ಛಲವಾದಿ ನಾರಾಯಣ ಸ್ವಾಮಿ ಆರೋಪ?

ಬೆಂಗಳೂರು: ರಾಜ್ಯದಲ್ಲಿ ಸಿಎಂ ಸ್ಥಾನಕ್ಕಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಣದ ನಡುವಣ ಗುದ್ದಾಟ ತೀವ್ರವಾಗಿರುವಂತೆಯೇ ಇದೀಗ ಕಾಂಗ್ರೆಸ್ ಶಾಸಕರ ಕುದುರೆ ವ್ಯಾಪಾರದ ಮಾತುಗಳು ಕೇಳಿಬರುತ್ತಿದೆ. ಮಂತ್ರಿ ಸ್ಥಾನಕ್ಕಾಗಿ ಕೋಟಿಗಟ್ಟಲೇ ಡೀಲ್ ಮಾಡಲಾಗುತ್ತಿದೆ. ಒಬ್ಬ ಶಾಸಕರಿಗೆ ರೂ.50 ಕೋಟಿ ಬೆಲೆ ನಿಗದಿಯಾಗಿದೆ ಎಂಬ ಮಾಹಿತಿ ಹೊರಬಂದಿದೆ. ಅದೇ ರೀತಿ, ಸಚಿವ ಸ್ಥಾನಕ್ಕಾಗಿ ₹200 ಕೋಟಿ ರೂಪಾಯಿ ದರ ನಿಗದಿಯಾಗಿದೆ ಎಂಬ ಸುದ್ದಿಯೂ ಹರಿದಾಡುತ್ತಿದೆ. ಮೊದಲು ರೂ. 50 ಕೋಟಿ, ನಂತರ […]

ಪ್ರಜಾ ಪ್ರಗತಿ 24 Nov 2025 11:34 am

ಪವರ್ ಶೇರಿಂಗ್ ಫೈಟ್ : ಡಿಕೆಶಿ ಜತೆ ಸಂಧಾನಕ್ಕೆ ಜಾರ್ಜ್‌ ಯತ್ನ!

ಬೆಂಗಳೂರು: ನಾಯಕತ್ವ ಬದಲಾವಣೆ ಮತ್ತು ಸಂ‍ಪುಟ ಪುನರ್‌ ರಚನೆಗೆ ಸಂಬಂಧಿಸಿದ ಕಾಂಗ್ರೆಸ್‌ ಪಕ್ಷದೊಳಗಿನ ಮುಸುಕಿನ ಗುದ್ದಾಟ ಕಿರುತೆರೆಯ ಧಾರಾವಾಹಿಯಂತೆ ಮುಂದುವರಿದಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಧ್ಯಪ್ರವೇಶಿಸಿ ನಿರ್ಧಾರ ತೆಗೆದುಕೊಳ್ಳುವವರೆಗೆ ನಾಯಕತ್ವ ಬದಲಾವಣೆ ವಿಚಾರ ಇನ್ನಷ್ಟು ದಿನ ಮುಂದುವರಿಯುವ ಸಾಧ್ಯತೆಯಿದೆ. ಶನಿವಾರ ಸಂಜೆ ಮುಖ್ಯಮಂತ್ರಿಯವರ ನಿವಾಸದಲ್ಲಿ ಒಂದೂವರೆ ಗಂಟೆಗಳಿಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಖರ್ಗೆ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ಹಂಚಿಕೆಯ ವಿಷಯವನ್ನು ಪ್ರಸ್ತಾಪಿಸಿದ್ದಾರೆ ಎಂಬ ಊಹಾಪೋಹಗಳು […]

ಪ್ರಜಾ ಪ್ರಗತಿ 24 Nov 2025 11:30 am