SENSEX
NIFTY
GOLD
USD/INR

Weather

24    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source

‘ಸಂಚಾರ ಸಾಥಿ’ಆ್ಯಪ್‌ ಅಳವಡಿಕೆ ಕಡ್ಡಾಯ: ಸರ್ವಾಧಿಕಾರ ರಾಷ್ಟ್ರವನ್ನಾಗಿಸುವ ಹುನ್ನಾರ; ಪ್ರಿಯಾಂಕಾ ಆಕ್ರೋಶ

ನವದೆಹಲಿ: ದೇಶದಲ್ಲಿ ತಯಾರಾದ ಅಥವಾ ಆಮದು ಮಾಡಿಕೊಳ್ಳುವ ಎಲ್ಲಾ ಮೊಬೈಲ್‌ಗಳಲ್ಲಿ ಸಂಚಾರ ಸಾಥಿ ಆ್ಯಪ್‌ ಅಳವಡಿಕೆ ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿರುವುದರ ವಿರುದ್ಧ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಸೈಬರ್ ವಂಚನೆ ವರದಿ ಮಾಡುವ ಕಾರ್ಯವಿಧಾನದ ಅಗತ್ಯತೆ ಇದೆ. ಆದರೆ, ಮೊಬೈಲ್‌ಗಳಲ್ಲಿ ‘ಸಂಚಾರ ಸಾಥಿ’ ಆ್ಯಪ್‌ ಅಳವಡಿಕೆ ಕಡ್ಡಾಯಗೊಳಿಸುವಿಕೆಯಿಂದ ಬಳಕೆದಾರರ ಗೌಪ್ಯತೆ ಉಲ್ಲಂಘಿಸುವ ಸಾಧ್ಯತೆ ಹೆಚ್ಚಿದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಇದು ಕೇವಲ ಒಂದು ವಿಷಯ […]

ಪ್ರಜಾ ಪ್ರಗತಿ 2 Dec 2025 3:56 pm

ನಾನು ಹಾಗೂ ಡಿ.ಕೆ.ಶಿವಕುಮಾರ್‌ ಸಹೋದರರು : ಸಿಎಂ ಸಿದ್ದರಾಮಯ್ಯ

ಬೆಂಗಳೂರು ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರಿದ್ದಂತೆ, ಒಂದೇ ಪಕ್ಷದಲ್ಲಿದ್ದು, ಒಂದೇ ಸಿದ್ಧಾಂತ ನಂಬಿಕೊಂಡಿದ್ದೇವೆ. 2028ರ ಚುನಾವಣೆಯಲ್ಲಿಯೂ ಒಟ್ಟಿಗೆ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಡಿಸಿಎಂ ಡಿ.ಕೆ. ಶಿವಕುಮಾರ್‌ ನಿವಾಸದಲ್ಲಿ ಮಂಗಳವಾರ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ನಂತರ ಅವರು ಮಾತನಾಡಿ, ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಹ್ವಾನದ ಮೇರೆಗೆ ಬೆಳಗಿನ ಉಪಹಾರಕ್ಕಾಗಿ ಅವರ ನಿವಾಸಕ್ಕೆ ಭೇಟಿ ನೀಡಿದೆ. ಕಾಂಗ್ರೆಸ್ ಪಕ್ಷದ ವಿಚಾರಗಳನ್ನು ಈ ಭೇಟಿಯಲ್ಲಿ ಚರ್ಚಿಸಲಾಗಿದೆ ಎಂದು ಹೇಳಿದರು. […]

ಪ್ರಜಾ ಪ್ರಗತಿ 2 Dec 2025 2:30 pm

ಜಗತ್ತಿನೆದುರು ಮತ್ತೆ ಜೋಕರ್‌ ಆದ ಪಾಕ್‌…..!

ಕೊಲೊಂಬೋ: ಸದಾ ಒಂದಿಲ್ಲೊಂದು ಎಡವಟ್ಟವನ್ನು ಮಾಡುವ ಪಾಕಿಸ್ತಾನ ಇದೀಗ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ದಿತ್ವಾ ಚಂಡಮಾರುತದಿಂದ ತತ್ತರಿಸುತ್ತಿರುವ ಶ್ರೀಲಂಕಾಗೆ ಪಾಕಿಸ್ತಾನದಿಂದ ಅವಧಿ ಮೀರಿದ ಮೆಡಿಕಲ್‌ ಕಿಟ್‌ ಮತ್ತು ಆಹಾರ ಪದಾರ್ಥಗಳನ್ನು ನೀಡಿದೆ ಎಂಬ ಬಹು ದೊಡ್ಡ ಆರೋಪವೊಂದು ಕೇಳಿ ಬಂದಿದ್ದು, ಇದಕ್ಕೆ ಸಬಂಧಿಸಿದಂತೆ ಕೆಲ ಫೋಟೋಗಳು ವೈರಲ್‌ ಆಗುತ್ತಿವೆ. ಇದು ಪಾಕಿಸ್ತಾನವನ್ನು ಮುಜುಗರಕ್ಕೀಡು ಮಾಡಿದ್ದು, ಶ್ರೀಲಂಕಾ ಮತ್ತು ವಿದೇಶಾಂಗ ಇಲಾಖೆಗಳಲ್ಲಿ ಕಳವಳ ಹುಟ್ಟುಹಾಕಿದೆ. ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾ ನಲುಗಿ ಹೋಗಿದ್ದು, ಜನರ ಬದುಕು […]

ಪ್ರಜಾ ಪ್ರಗತಿ 2 Dec 2025 2:28 pm

ನಾವು ಒಗ್ಗಟ್ಟಾಗಿದ್ದೇವೆ, ನಮ್ಮದು ಒಂದೇ ಧ್ವನಿ: ಸಿಎಂ –ಡಿಸಿಎಂ ಜಂಟಿ ಹೇಳಿಕೆ

ಬೆಂಗಳೂರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಇಂದು ಮತ್ತೆ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ನಡೆಸಿದ್ದಾರೆ. ಆ ಬಳಿಕ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ, ನಾವು ಯಾವಾಗಲೂ ಒಗ್ಗಟ್ಟಾಗಿದ್ದೇವೆ. ಹೈಕಮಾಂಡ್‌ ಸೂಚನೆಯಂತೆ ನಡೆಯುತ್ತೇವೆ. ಪಕ್ಷದ ವಿಚಾರ ಹಾಗು ಬೆಳಗಾವಿ ಅಧಿವೇಶನದ ಕುರಿತು ನಾವು ಚರ್ಚಿಸಿದ್ದೇವೆ ಎಂದು ಸಿಎಂ ಹೇಳಿದರು. ʼನಮ್ಮದು ಒಂದೇ ಧ್ವನಿ, ಒಂದೇ ಆಚಾರ- ವಿಚಾರʼ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು. 2028ಕ್ಕೂ ನಾವು ಒಟ್ಟಿಗೇ ಕೆಲಸ ಮಾಡುತ್ತೇವೆ. ಪಕ್ಷವನ್ನು ಅಧಿಕಾರಕ್ಕೆ […]

ಪ್ರಜಾ ಪ್ರಗತಿ 2 Dec 2025 12:27 pm

ಇಮ್ರಾನ್‌ ಖಾನ್‌ ಸಾವಿನ ಸುದ್ದಿ ಕೊನೆಗೂ ನಿಜವಾಯ್ತಾ…….?

ಇಸ್ಲಾಮಾಬಾದ್‌: ಭ್ರಷ್ಟಾಚಾರ ಸೇರಿದಂತೆ ಹಲವು ಆರೋಪಗಳ ಹಿನ್ನೆಲೆ ಜೈಲಿನಲ್ಲಿ ಮುದ್ದೆ ಮುರಿಯುತ್ತಿರುವ ಪಾಕಿಸ್ತಾನ ಪ್ರಧಾನಿ ಮಾಜಿ ಇಮ್ರಾನ್‌ ಖಾನ್‌ ಆರೋಗ್ಯದಲ್ಲಿ ಇತ್ತೀಚಿಗೆ ಏರುಪೇರು ಕಾಣಿಸಿಕೊಂಡಿದೆ. ಇದರ ನಡುವೆ ಆತನ ಬೆಂಬಲಿಗರು ಮಂಗಳವಾರ ಒಳಗಿಂದೊಳಗೆ ಇಸ್ಲಾಮಾಬಾದ್‌ ಮತ್ತು ರಾವಲ್ಪಂಡಿ ನಗರಗಳಲ್ಲಿ ಪ್ರತಿಭಟನೆ ನಡೆಸಲು ತಯಾರಿ ನಡೆಸುತ್ತಿದ್ದಾರೆ. ಸದ್ಯ ಜೈಲಿನಲ್ಲಿರುವ ಇಮ್ರಾನ್‌ ಖಾನ್‌ ಕಳೆದ ಒಂದು ತಿಂಗಳಿಂದ ಯಾರೊಂದಿಗೂ ಸಂಪರ್ಕ ಹೊಂದಿಲ್ಲ ಎನ್ನಲಾಗುತ್ತಿದೆ. ಪಾಕಿಸ್ತಾನ್‌ ತೆಹ್ರೀಕ್‌-ಇ-ಇನ್ಸಾಫ್‌ ಪಕ್ಷ ಆಯೋಜಿಸಿದ್ದ ಪೂರ್ವನಿಗದಿತ ಯೋಜನೆಗಳಿಗೆ ಪೋಲಿಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಎರಡೂ […]

ಪ್ರಜಾ ಪ್ರಗತಿ 2 Dec 2025 12:17 pm

ಶ್ರೀಲಂಕೆಗೆ ನೆರವಿನ ಪಾಕ್‌ ವಿಮಾನಕ್ಕೆ ಭಾರತದ ವಾಯುಪ್ರದೇಶ ಕ್ಷಿಪ್ರ ತೆರವು

ನವದೆಹಲಿ: ಪ್ರವಾಹ ಪೀಡಿತ ಶ್ರೀಲಂಕಾಗೆ ನೆರವು ನೀಡಲು ತನ್ನ ವಾಯುಪ್ರದೇಶ ಬಳಸಲು ಭಾರತ ಅನುಮತಿ ನೀಡಿಲ್ಲ ಎಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಈ ವರದಿಗಳೆಲ್ಲಾ ಸುಳ್ಳು ಎಂದು ಭಾರತ ತಳ್ಳಿಹಾಕಿದೆ.ಪಾಕಿಸ್ತಾನವು ಡಿಸೆಂಬರ್ 1 ರಂದು ಮಧ್ಯಾಹ್ನ 1 ಗಂಟೆಗೆ (IST) ಭಾರತೀಯ ವಾಯುಪ್ರದೇಶದ ಮೇಲೆ ಹಾರಲು ಅನುಮತಿ ಕೋರಿ ತನ್ನ ಔಪಚಾರಿಕ ವಿನಂತಿಯನ್ನು ಸಲ್ಲಿಸಿತು. ಶ್ರೀಲಂಕಾಕ್ಕೆ ಮಾನವೀಯ ನೆರವಿಗೆ ಸಂಬಂಧಿಸಿದ ವಿನಂತಿಯನ್ನು ಪರಿಗಣಿಸಿ, ಭಾರತ ಸರ್ಕಾರ ನಿನ್ನೆ ಸಂಜೆ […]

ಪ್ರಜಾ ಪ್ರಗತಿ 2 Dec 2025 12:00 pm

ಇಂದಿನ ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ಸ್ವಾರಸ್ಯವೇನು ಗೊತ್ತಾ….?

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಮೊದಲ ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಇಂದು ಮಂಗಳವಾರ ಡಿಸಿಎಂ ಡಿ ಕೆ ಶಿವಕುಮಾರ್ ಅವರ ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಯುತ್ತಿದೆ.ಸಿಎಂ ಸಿದ್ದರಾಮಯ್ಯ ಇಂದು ಉಪಾಹಾರ ಕೂಟಕ್ಕೆ ಡಿ ಕೆ ಶಿವಕುಮಾರ್ ಅವರ ನಿವಾಸಕ್ಕೆ ಆಗಮಿಸಿದರು. ಅಲ್ಲಿ ಅವರನ್ನು ಡಿ ಕೆ ಶಿವಕುಮಾರ್ ಮತ್ತು ಅವರ ಸೋದರ ಮಾಜಿ ಸಂಸದ ಡಿ.ಕೆ. ಸುರೇಶ್ ಸ್ವಾಗತಿಸಿದರು. ನಿವಾಸದೊಳಗೆ ಡಿ ಕೆ […]

ಪ್ರಜಾ ಪ್ರಗತಿ 2 Dec 2025 11:54 am

ಡಿಸಿಎಂ ನಿವಾಸಕ್ಕೆ ಬ್ರೇಕ್ ಫಾಸ್ಟ್ ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ- ಡಿಕೆ ಸೋದರರಿಂದ ಸ್ವಾಗತ

ಬೆಂಗಳೂರು: ಉಪಾಹಾರ ಕೂಟಕ್ಕೆ ಆಹ್ವಾನದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ ಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿದ್ದಾರೆ.ಡಿ ಕೆ ಶಿವಕುಮಾರ್ ಮತ್ತು ಅವರ ಸೋದರ ಮಾಜಿ ಸಂಸದ ಡಿ ಕೆ ಸುರೇಶ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆದರದಿಂದ ಸ್ವಾಗತಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಪುಟ ಸದಸ್ಯ, ಗೃಹ ಸಚಿವ ಡಾ ಪರಮೇಶ್ವರ್, “ನಮ್ಮ ನಾಯಕರು ಮತ್ತೆ ಉಪಾಹಾರಕ್ಕಾಗಿ ಒಟ್ಟಿಗೆ ಸೇರುತ್ತಿರುವುದು ಒಳ್ಳೆಯದು. ಕಳೆದ ಒಂದು ತಿಂಗಳಿನಿಂದ ನಡೆದ ಘಟನೆಗಳ […]

ಪ್ರಜಾ ಪ್ರಗತಿ 2 Dec 2025 11:51 am

‘ಪುರುಷ ಸಲಿಂಗಿ’ಗಳಲ್ಲಿ ಹೆಚ್ಚಿನ ಏಡ್ಸ್ ರೋಗ: ಸಚಿವ ದಿನೇಶ್ ಗುಂಡೂರಾವ್

ಮೈಸೂರು: 2030 ರೊಳಗೆ ಏಡ್ಸ್ ಹರಡುವಿಕೆ ಶೂನ್ಯಕ್ಕೆ ಇಳಿಸಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದ ಜೆ ಕೆ ಅಡಿಟೋರಿಯಂನಲ್ಲಿ ನಡೆದ ವಿಶ್ವ ಏಡ್ಸ್ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ಇತ್ತೀಚಿಗೆ ಪುರುಷ ಸಲಿಂಗಿಗಳಲ್ಲಿ ಹೆಚ್ಚಿನ ರೋಗಿಗಳು ದಾಖಲಾಗುತ್ತಿರುವುದು ಆತಂಕ ಮೂಡಿಸುತ್ತದೆ. ಬೇರೆ ಬೇರೆ ಆಪ್ ಗಳ ಮೂಲಕ, ಹಾಸ್ಟೆಲ್ ಗಳಲ್ಲಿ ಸ್ನೇಹಿತರ ಸಂಪರ್ಕ ಸಾಧಿಸುತ್ತಾರೆ. ಇದನ್ನು ತಡೆಯಲು ಹೆಚ್ಚಿನ ಶ್ರಮ ಹಾಕಬೇಕಾದ ಅನಿವಾರ್ಯತೆ ಇದೆ ಎಂದರು. […]

ಪ್ರಜಾ ಪ್ರಗತಿ 2 Dec 2025 11:04 am

ಮಹಿಳಾ ವಿಶ್ವಕಪ್ ಗೆದ್ದ ಬಳಿಕ ಹರ್ಮನ್ ಪ್ರೀತ್ ಕೌರ್ ಗೆ ಮತ್ತೊಂದು ‘ಜಾಕ್ ಪಾಟ್’…….!

ನವದೆಹಲಿ : ಮಹಿಳಾ ವಿಶ್ವಕಪ್ 2025 ಗೆದ್ದ ನಂತರ ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಗೆ ಮತ್ತೊಂದು ಜಾಕ್ ಪಾಟ್ ಹೊಡೆದಿದೆ .ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ. ಕೌರ್ ತನ್ನ ಮೊದಲ ಮಹಿಳಾ ಬ್ರಾಂಡ್ ಅಂಬಾಸಿಡರ್ ಎಂದು ಬ್ಯಾಂಕ್ ಹೇಳಿಕೆಯಲ್ಲಿ ತಿಳಿಸಿದೆ. ಅವರ ಹೆಸರು ಮತ್ತು ಸಂಖ್ಯೆಯನ್ನು ಹೊಂದಿರುವ ಫ್ರೇಮ್ ಮಾಡಿದ PNB ಜೆರ್ಸಿ ಮತ್ತು ಬ್ಯಾಟ್ ನ್ನು ನೀಡಲಾಗಿದೆ. ಈ ಕುರಿತು ಪ್ರತಿಕ್ರಿಸಿರುವ ಹರ್ಮನ್ […]

ಪ್ರಜಾ ಪ್ರಗತಿ 2 Dec 2025 11:02 am

ಚಿಕ್ಕಪೇಟೆ ಮಾಜಿ ಶಾಸಕ ಆರ್ ವಿ ದೇವರಾಜ್ ನಿಧನ

ಬೆಂಗಳೂರು: ಚಿಕ್ಕಪೇಟೆ ಮಾಜಿ ಶಾಸಕ ಆರ್ ವಿ ದೇವರಾಜ್ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.ತೀವ್ರ ಹೃದಯಾಘಾತದಿಂದ ಆರ್ ವಿ ದೇವರಾಜ್ ಅವರು ಮೈಸೂರಿನಲ್ಲಿ ನಿಧನರಾಗಿದ್ದಾರೆ ಎಂದು ಹೇಳಲಾಗಿದ್ದು, ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದಾಗ ಅವರಿಗೆ ಹೃದಯಾಘಾತವಾಗಿದೆ ಎಂದು ತಿಳಿದುಬಂದಿದೆ. ಕೂಡಲೇ 67 ವರ್ಷ ವಯಸ್ಸಿನ ಆರ್ ವಿ ದೇವರಾಜ್ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಅವರನ್ನು ಜಯದೇವ ಆಸ್ಪತ್ರೆಗೆ ರವಾನಿಸಿ ದಾಖಲಿಸಲಾಗಿತ್ತು ಎಂದು ಮಾಧ್ಯಮಗಳು ವರದಿ ಮಾಡಿವೆ.ಡಿಸೆಂಬರ್ […]

ಪ್ರಜಾ ಪ್ರಗತಿ 2 Dec 2025 10:57 am

ಮತಗಳ್ಳತನ : ಆಳಂದಕ್ಕೆ ಬನ್ನಿ ನಿಮ್ಮ ವೆಚ್ಚ ನಾನೇ ಭರಿಸುತ್ತೇನೆ: ಬಿ.ಆರ್.ಪಾಟೀಲ್ ಸವಾಲು

ಕಲಬುರಗಿ: ಆಳಂದಕ್ಕೆ ಬನ್ನಿ ಮತಗಳ್ಳತನ ಸಾಬೀತು ಪಡಿಸುತ್ತೇನೆಂದು ‘ಮತಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ರಾಹುಲ್ ಗಾಂಧಿಗೆ ಪತ್ರ ಬರೆದಿರುವ ನ್ಯಾ. ಎಸ್.ಎನ್.ಧಿಂಗ್ರಾ, ನಿರ್ಮಲ್ ಕೌರ್ ಸೇರಿದಂತೆ 272 ಬುದ್ಧಿಜೀವಿಗಳಿಗೆ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ, ಆಳಂದ ಶಾಸಕ ಬಿ.ಆರ್.ಪಾಟೀಲ್ ಅವರು ಸೋಮವಾರ ಸವಾಲು ಹಾಕಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮತಗಳ್ಳತನ ಆರೋಪದ ಬಗ್ಗೆ ಪತ್ರ ಬರೆದಿರುವ ಬುದ್ಧಿಜೀವಿಗಳು, […]

ಪ್ರಜಾ ಪ್ರಗತಿ 2 Dec 2025 10:55 am

ದಿತ್ವಾ ಚಂಡಮಾರುತದಿಂದ ಬೆಂಗಳೂರು ಕೂಲ್

ಬೆಂಗಳೂರು ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ದಿತ್ವಾ ಚಂಡಮಾರುತ ದುರ್ಬಲಗೊಂಡು ಆಳವಾದ ವಾಯುಭಾರ ಕುಸಿತವಾಗಿ ಉತ್ತರ ತಮಿಳುನಾಡು- ಪುದುಚೇರಿ ಕರಾವಳಿಯ ಕಡೆಗೆ ಗಂಟೆಗೆ 5 ಕಿಲೋಮೀಟರ್ ವೇಗದಲ್ಲಿ ಚಲಿಸುತ್ತಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಇದರಿಂದ ತಮಿಳುನಾಡಿನಲ್ಲಿ ಜೋರಾಗಿ ಮಳೆಯಾಗಲಿದ್ದು, ಬೆಂಗಳೂರು ತೀವ್ರ ತಾಪಮಾನ ಕುಸಿತವನ್ನು ಅನುಭವಿಸಲಿದೆ. ದಿತ್ವಾ ಚಂಡಮಾರುತ ಚೆನ್ನೈನಿಂದ ಪೂರ್ವ-ಆಗ್ನೇಯಕ್ಕೆ 50 ಕಿಲೋಮೀಟರ್ ಮತ್ತು ಪುದುಚೇರಿಯಿಂದ ಈಶಾನ್ಯಕ್ಕೆ 130 ಕಿಲೋಮೀಟರ್ ದೂರದಲ್ಲಿ ಕೇಂದ್ರೀಕೃತವಾಗಿದೆ. ಆಳವಾದ ವಾಯುಭಾರ ಕುಸಿತವು ಉತ್ತರ ತಮಿಳುನಾಡು-ಪುದುಚೇರಿ […]

ಪ್ರಜಾ ಪ್ರಗತಿ 2 Dec 2025 10:42 am

ಸಮಗ್ರ ಘನ ತ್ಯಾಜ್ಯ ವಿಂಗಡಣಾ ಘಟಕದ 1ನೇ ಹಂತಕ್ಕೆ ಶಿಲಾನ್ಯಾಸ ನೆರವೇರಿಸಿದ ಡಿ.ಕೆ. ಶಿವಕುಮಾರ್‌. –

ಬೆಂಗಳೂರು ಕಸದ ಮಾಫಿಯಾದವರು ನನ್ನ ಮೇಲೆ ಏನೇನು ಗೂಬೆ ಕೂರಿಸಬೇಕೋ ಅದೆಲ್ಲವನ್ನು ಮಾಡಿದರು. ನಾನು ಯಾವುದಕ್ಕೂ ಬಗ್ಗದೆ, ಹೆದರದೆ 33 ಪ್ಯಾಕೇಜ್ ಮೂಲಕ ಕಸ ವಿಲೇವಾರಿಗೆ ತೀರ್ಮಾನಿಸಲಾಗಿದೆ. ಕಸದಿಂದ ರಸ ತೆಗೆಯಬೇಕು ಎಂದು ಹೊರಟಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಮಾಗಡಿ ಮುಖ್ಯ ರಸ್ತೆಯ ಕನ್ನಹಳ್ಳಿಯಲ್ಲಿ ಸಮಗ್ರ ಘನ ತ್ಯಾಜ್ಯ ವಿಂಗಡಣಾ ಘಟಕದ 1ನೇ ಹಂತಕ್ಕೆ ಸೋಮವಾರ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. ಈ 33 ಪ್ಯಾಕೇಜ್‌ಗೆ ನ್ಯಾಯಾಲಯ ಸಮ್ಮತಿ […]

ಪ್ರಜಾ ಪ್ರಗತಿ 2 Dec 2025 10:26 am

ನಿಜವಾದ ನಾಯಿಗಳು ಸಂಸತ್ತಿನಲ್ಲಿ ಕುಳಿತಿವೆ: ರೇಣುಕಾ ಚೌಧರಿ ವಿವಾದಾತ್ಮಕ ಹೇಳಿಕೆ

ನವದೆಹಲಿ: ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ ಅವರು ಸೋಮವಾರ ಸಂಸತ್ತಿನ ಆವರಣಕ್ಕೆ ನಾಯಿಯೊಂದನ್ನು ಕರೆತಂದಿದ್ದು, ಅದು ಬೀದಿ ನಾಯಿ ಎಂದು ಹೇಳಿಕೊಂಡರು ಮತ್ತು ಅದಕ್ಕೆ ಇತರ ಸಂಸದರ ಆಕ್ಷೇಪಣೆಗಳನ್ನು ಸ್ಪಷ್ಟ ತಳ್ಳಿಹಾಕಿದರು. “ನಿಜವಾದ ನಾಯಿಗಳು ಸಂಸತ್ತಿನಲ್ಲಿ ಕುಳಿತಿವೆ” ಮತ್ತು ಪ್ರತಿದಿನ ಜನರನ್ನು ಕಚ್ಚುತ್ತಿವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದರು. ಇಂದು ಬೆಳಗ್ಗೆ ಸಂಸತ್ತಿಗೆ ಹೋಗುವಾಗ ನಾಯಿಮರಿಯನ್ನು ರಕ್ಷಿಸಿದೆ ಎಂದು ಚೌಧರಿ ವಿವರಿಸಿದರು. ರಸ್ತೆಯಲ್ಲಿ ಸ್ಕೂಟರ್-ಕಾರು ಡಿಕ್ಕಿ ಹೊಡೆದಿದ್ದರಿಂದ ಗಾಯಗೊಂಡಿದ್ದ ನಾಯಿಮರಿಯನ್ನು ಗಮನಿಸಿದ […]

ಪ್ರಜಾ ಪ್ರಗತಿ 1 Dec 2025 5:31 pm

SIR ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ; ಗದ್ದಲದ ನಡುವೆ ಮಣಿಪುರ GST ಮಸೂದೆ ಅಂಗೀಕಾರ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಸೋಮವಾರ ಮತದಾರರ ಪಟ್ಟಿಯ ವಿವಾದಾತ್ಮಕ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷಗಳು ನಿರಂತರವಾಗಿ ಪ್ರತಿಭಟನೆ ನಡೆಸಿದ ಕಾರಣ ಲೋಕಸಭಾ ಕಲಾಪವನ್ನು ನಾಳೆಗೆ ಮುಂದೂಡಲಾಯಿತು. ಕೆಲಸದ ಒತ್ತಡದಿಂದಾಗಿ ಬೂತ್ ಮಟ್ಟದ ಅಧಿಕಾರಿಗಳ ಹೆಚ್ಚುತ್ತಿರುವ ಆತ್ಮಹತ್ಯೆಗಳು ಸೇರಿದಂತೆ ಹಲವಾರು ಸಮಸ್ಯೆಗಳನ್ನು ಪ್ರಸ್ತಾಪಿಸಿ ಚುನಾವಣಾ ಆಯೋಗ ಪ್ರಾರಂಭಿಸಿರುವ ಈ ಎಸ್ಐಆರ್ ಕುರಿತು ಚರ್ಚೆಗೆ ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ. ಇಂದು ಮಧ್ಯಾಹ್ನ 2.20 […]

ಪ್ರಜಾ ಪ್ರಗತಿ 1 Dec 2025 5:28 pm

KIITಯ ಮೊದಲ ವರ್ಷದ ಬಿಟೆಕ್ ವಿದ್ಯಾರ್ಥಿ ಆತ್ಮಹತ್ಯೆ; ಈ ವರ್ಷದಲ್ಲಿ ಮೂರನೇ ಸಾವು

ಭುವನೇಶ್ವರ: ಭುವನೇಶ್ವರದಲ್ಲಿರುವ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ(ಕೆಐಐಟಿ) ವಿಶ್ವವಿದ್ಯಾಲಯದ ಪ್ರಥಮ ವರ್ಷದ ಬಿಟೆಕ್ ವಿದ್ಯಾರ್ಥಿಯೊಬ್ಬ ತನ್ನ ಹಾಸ್ಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಇದು ಈ ವರ್ಷ ನಡೆದ ಮೂರನೇ ಘಟನೆಯಾಗಿದೆ. ರಾಜಧಾನಿಯ ಖಾಸಗಿ ವಿಶ್ವವಿದ್ಯಾಲಯದಲ್ಲಿ ಬಿಟೆಕ್ ಓದುತ್ತಿದ್ದ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬ ಭಾನುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. 19 ವರ್ಷದ ಮೃತ ವ್ಯಕ್ತಿ ಛತ್ತೀಸ್‌ಗಢ ಮೂಲದವನಾಗಿದ್ದು, ಕೆಐಐಟಿ ವಿಶ್ವವಿದ್ಯಾಲಯದಲ್ಲಿ ಕಂಪ್ಯೂಟರ್ ಸೈನ್ಸ್ ಪ್ರೋಗ್ರಾಂಗೆ ದಾಖಲಾಗಿದ್ದ ಎಂದು ಪ್ರಾಥಮಿಕ ತನಿಖೆಯಲ್ಲಿ […]

ಪ್ರಜಾ ಪ್ರಗತಿ 1 Dec 2025 5:26 pm

ಮೋದಿಯೇ ‘ಅತಿದೊಡ್ಡ ಡ್ರಾಮಾಬಾಜಿ’: ‘ನಾಟಕ ಬೇಡ’ಎಂದ ಪ್ರಧಾನಿಗೆ ಕಾಂಗ್ರೆಸ್ ತಿರುಗೇಟು

ನವದೆಹಲಿ: ಸಂಸತ್ತಿನಲ್ಲಿ “ನಾಟಕ ಬೇಡ, ಕೇವಲ ಚರ್ಚೆ” ಎಂದು ಚಳಿಗಾಲದ ಅಧಿವೇಶನಕ್ಕೂ ಮುನ್ನ ಹೇಳಿದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸೋಮವಾರ ತೀವ್ರ ವಾಗ್ದಾಳಿ ನಡೆಸಿದರು. ಕಳೆದ 11 ವರ್ಷಗಳಲ್ಲಿ ಸರ್ಕಾರವು ಸಂಸತ್ತಿನ ಸಭ್ಯತೆಯನ್ನು ವ್ಯವಸ್ಥಿತವಾಗಿ ತುಳಿದು ಸಂಸದೀಯ ವ್ಯವಸ್ಥೆಯನ್ನು ಬುಡಮೇಲು ಮಾಡುತ್ತಿದೆ ಎಂದು ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು X ನಲ್ಲಿ ಪೋಸ್ಟ್‌ ಮಾಡಿರುವ ಖರ್ಗೆ, […]

ಪ್ರಜಾ ಪ್ರಗತಿ 1 Dec 2025 5:23 pm

ತಂಬಾಕು ಮೇಲಿನ ಅಬಕಾರಿ ಸುಂಕ, ಪಾನ್ ಮಸಾಲ ಮೇಲೆ ದುಪ್ಪಟ್ಟು ಸೆಸ್

ನವದೆಹಲಿ: ಜಿಎಸ್‌ಟಿ ಪರಿಹಾರ ಸೆಸ್ ಅನ್ನು ರದ್ದುಗೊಳಿಸಿದ ನಂತರವೂ ತಂಬಾಕು, ಪಾನ್ ಮಸಾಲ ಮತ್ತು ಇತರ ತಂಬಾಕು ಉತ್ಪನ್ನಗಳ ಮೇಲಿನ ಒಟ್ಟಾರೆ ತೆರಿಗೆ ಹೊರೆಯನ್ನು ಕಾಯ್ದುಕೊಳ್ಳಲು ಸೋಮವಾರ ಲೋಕಸಭೆಯಲ್ಲಿ ಎರಡು ಮಸೂದೆಗಳನ್ನು ಮಂಡಿಸಲಾಯಿತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ವಿರೋಧ ಪಕ್ಷದ ಸದಸ್ಯರ ಗದ್ದಲದ ನಡುವೆಯೇ ಈ ಮಸೂದೆಗಳನ್ನು ಮಂಡಿಸಿದರು. ತಂಬಾಕು ಉತ್ಪನ್ನಗಳ ಮೇಲಿನ ಈ ಸೆಸ್ ಮಾರ್ಚ್ 2026 ರಿಂದ ಜಾರಿಗೆ ಬರಲಿದೆ. ವಿರೋಧ ಪಕ್ಷದ ಸದಸ್ಯರು SIR ಮತ್ತು ಇತರ […]

ಪ್ರಜಾ ಪ್ರಗತಿ 1 Dec 2025 5:21 pm

ಶೇ. 50 ರಷ್ಟು ಮಹಿಳಾ ಮೀಸಲಾತಿ ರಾಜೀವ್ ಗಾಂಧಿ ಮತ್ತು ಕಾಂಗ್ರೆಸ್ಸಿನ ಕೊಡುಗೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಿಂದುಳಿದವರ, ದಲಿತರ ಹಾಗೂ ಮಹಿಳೆಯರ ಮೀಸಲಾತಿಯನ್ನು ವಿರೋಧಿಸಿದ್ದು ಬಿಜೆಪಿ, ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್ ಪಕ್ಷ. ಈಗಿರುವ ಶೇ.50 ರಷ್ಟು ಮಹಿಳಾ ಮೀಸಲಾತಿ ರಾಜೀವ್ ಗಾಂಧಿ ಮತ್ತು ಕಾಂಗ್ರೆಸ್ಸಿನ ಕೊಡುಗೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ಇ-ಸ್ವತ್ತು 2.0 ತಂತ್ರಾಂಶದ ಚಾಲನೆ ಸಮಾರಂಭದಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿ ವಿರೋಧ ಮಾಡಿದ್ದು ಬಿಜೆಪಿಯ ಉಪಾಧ್ಯಕ್ಷರಾಗಿದ್ದ ರಾಜ್ಯ ಸಭಾ […]

ಪ್ರಜಾ ಪ್ರಗತಿ 1 Dec 2025 5:18 pm

ಗದ್ದುಗೆ ಗುದ್ದಾಟದ ನಡುವೆ ಕೋಡಿಮಠಕ್ಕೆ ಪರಮೇಶ್ವರ್ ಭೇಟಿ

ಹಾಸನ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಕೋಡಿಮಠಕ್ಕೆ ಭೇಟಿ ನೀಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಒಂದೆರಡು ತಿಂಗಳ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಕೂಡಾ ಕೋಡಿಮಠಕ್ಕೆ ಭೇಟಿ ನೀಡಿದ್ದರು. ಜಿಲ್ಲೆಯ ಅರಸೀಕೆರೆ ತಾಲೂಕಿನ ಕೋಡಿಮಠ ಶ್ರೀಗಳು ಭವಿಷ್ಯ ನುಡಿಯುವಲ್ಲಿ ಖ್ಯಾತಿ ಪಡೆದಿದ್ದು ಸಚಿವರು ಇಲ್ಲಿಗೆ ಭೇಟಿ ನೀಡಿರುವುದು ಕುತೂಹಲ ಕೆರಳಿಸಿದೆ. ಪರಮೇಶ್ವರ್ ಅವರು ಶ್ರೀಗಳೊಂದಿಗೆ ಒಂದು […]

ಪ್ರಜಾ ಪ್ರಗತಿ 1 Dec 2025 5:16 pm

ಎಐ ಕ್ರಾಂತಿಯಿಂದ ಉದ್ಯೋಗವೇ ಅನಗತ್ಯ: ಎಲಾನ್‌ ಮಸ್ಕ್

ಬೆಂಗಳೂರು ಜೆರೋಧಾ ಆನ್‌ಲೈನ್‌ ಬ್ರೋಕರೇಜ್‌ ಕಂಪನಿಯ ಸ್ಥಾಪಕ ನಿಖಿಲ್‌ ಕಾಮತ್‌ ವಿಶ್ವದ ಅತ್ಯಂತ ಶ್ರೀಮಂತ ಟೆಕ್‌ ಉದ್ಯಮಿ ಎಲಾನ್‌ ಮಸ್ಕ್‌ ಅವರ ಜತೆ ನಡೆಸಿದ ಪಾಡ್‌ ಕಾಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ಸಂಚಲನವನ್ನೇ ಸೃಷ್ಟಿಸಿದೆ. ಟೆಸ್ಲಾ ಸ್ಥಾಪಕ ಎಲಾನ್‌ ಮಸ್ಕ್‌ ಒಂದೂವರೆ ಗಂಟೆಗಳ ಕಾಲ ನಡೆಸಿದ ಈ ಪಾಡ್‌ ಕಾಸ್ಟ್‌ ಅನ್ನು 14 ಗಂಟೆಗಳಲ್ಲಿ 20 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ಪೀಪಲ್‌ ಬೈ WTF ಎಂಬ ಪಾಡ್‌ ಕಾಸ್ಟ್‌ನಲ್ಲಿ ನಿಖಿಲ್‌ ಕಾಮತ್‌ […]

ಪ್ರಜಾ ಪ್ರಗತಿ 1 Dec 2025 4:32 pm

ಮೂಢನಂಬಿಕೆಗೆ ಮತ್ತೊಂದು ಬಲಿ….!

ಕಾನ್ಪುರ: ಮಾಜಿ ಗೆಳತಿಯನ್ನು ಒಲಿಸಿಕೊಳ್ಳಲು ಮಂತ್ರವಾದಿಯ ಸಹಾಯ ಪಡೆದಿದ್ದ ಯುವಕನೊಬ್ಬ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾದ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಶಿವಲಿಯಲ್ಲಿರುವ ಮಜಾರ್ ಬಳಿ ವಶೀಕರಣ ಆಚರಣೆಗಳ ನಂತರ ವಿವಾದ ಏರ್ಪಟ್ಟು, ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿದೆ. 26 ವರ್ಷದ ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಸ್ವಯಂ ಘೋಷಿತ ಮಂತ್ರವಾದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅರ್ಷದ್‌ಪುರ ಗ್ರಾಮದ ರಾಜಬಾಬು ಮೃತ ಯುವಕ. ಕಳೆದ ಏಪ್ರಿಲ್‌ನಲ್ಲಿ ಬೇರೊಬ್ಬನನ್ನು ಮದುವೆಯಾಗಿದ್ದ ತನ್ನ ಮಾಜಿ ಗೆಳತಿಯನ್ನು […]

ಪ್ರಜಾ ಪ್ರಗತಿ 1 Dec 2025 4:10 pm

ಕೆ ಎನ್‌ ಮಧುಸೂಧನ್‌ ರಾವ್‌ ರವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ……!

ತುಮಕೂರು:- ತುಮಕೂರು ತಾಲೂಕಿನ ಕೋರ ಹೋಬಳಿ ಕೋರ ಗ್ರಾಮದ ಶ್ರೀಮತಿ ಸರ್ವ ಮಂಗಳ ನಾಗಯ್ಯ ಸರ್ಕಾರಿ ಮಾದರಿ ಪ್ರಾಥಮಿಕ ಹಿರಿಯ ಪಾಠಶಾಲೆಯಲ್ಲಿ‌ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಕೆ ಎನ್ ಮಧುಸೂಧನ್ ರಾವ್ ರವರಿಗೆ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ, ಎಸ್ಡಿಎಂಸಿ ಸದಸ್ಯರು ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಹೃದಯಸ್ಪರ್ಶಿ ಬೀಳ್ಕೊಡುಗೆ ಎಂಬ ಸಮಾರಂಭ ಹಮ್ಮಿಕೊಂಡು ಇಂದು ಅವರನ್ನು ಗೌರವಿಸಿ ಸನ್ಮಾನಿಸಿ, ಹೃದಯಸ್ಪರ್ಶಿ ಬಿಳ್ಕೊಡುಗೆ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ […]

ಪ್ರಜಾ ಪ್ರಗತಿ 1 Dec 2025 3:10 pm

ನನ್ನ ರಾಜಕೀಯ ನೇರವಾದದ್ದು, ಯಾರ ಬೆನ್ನಿಗೂ ಚೂರಿ ಹಾಕಲ್ಲ : ಡಿ ಕೆ ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗಿನ ಕದನ ವಿರಾಮಕ್ಕೆ ನೀಡಿದ ನಂತರ ಸಿಎಂ ಜೊತೆಗೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ನನ್ನ ಇತಿಮಿತಿ ತಿಳಿದಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಭಾನುವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನ್ನ ಮತ್ತು ಮುಖ್ಯಮಂತ್ರಿ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಪಕ್ಷದ ಅಧ್ಯಕ್ಷನಾಗಿ, ನನ್ನ ಇತಿಮಿತಿ ಗೊತ್ತಿದೆ. ಸಿಎಂ ಜೊತೆಗಿನ ಭಿನ್ನಾಭಿಪ್ರಾಯ ಕುರಿತು ಎಲ್ಲಿಯೂ, ಯಾವುದೇ ಹೇಳಿಕೆಗಳನ್ನು ನೀಡಿಲ್ಲ ಅಥವಾ ಭಿನ್ನಾಭಿಪ್ರಾಯ ವ್ಯಕ್ತಪಡಿಸಿಲ್ಲ. […]

ಪ್ರಜಾ ಪ್ರಗತಿ 1 Dec 2025 1:16 pm

ಆತ್ಮ ನಿರ್ಭರತೆಯೆಡೆಗೆ ಮಹತ್ವದ ಮೈಲಿಗಲ್ಲು ಇಟ್ಟ ಕರ್ನಾಟಕ…..!

ಬೆಂಗಳೂರು : ಕರ್ನಾಟಕ ಮೂಲದ ನವೋದ್ಯಮ ಕಂಪನಿಯಾದ ನ್ಯೂರಾಲಿಕ್ಸ್ AI, ರಕ್ಷಣಾ ವಲಯಕ್ಕಾಗಿ ದೇಶದ ಮೊದಲ ‘ದೇಶೀಯ ರಕ್ಷಣಾ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ’ವನ್ನು ಅಭಿವೃದ್ಧಿಪಡಿಸಿದೆ. ಇತ್ತೀಚೆಗೆ ದೆಹಲಿಯ ಮಾಣಿಕ್ ಶಾ ಕೇಂದ್ರದಲ್ಲಿ ಆಯೋಜಿಸಲಾದ ‘ಚಾಣಕ್ಯ ರಕ್ಷಣಾ’ ಸಂವಾದದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾರತದ ಮೊದಲ ಸಂಪೂರ್ಣ ‘ದೇಶೀಯ ರಕ್ಷಣಾ AI-as-a-Service’ ನ್ನು ಬಿಡುಗಡೆ ಮಾಡಿದರು. ಕನ್ನಡಿಗರು ಸ್ಥಾಪಿಸಿದ ಡೀಪ್ ಟೆಕ್ ಕಂಪನಿಯಾದ ನ್ಯೂರಾಲಿಕ್ಸ್, ರಕ್ಷಣಾ ಸಚಿವಾಲಯದ IDEX ADITY […]

ಪ್ರಜಾ ಪ್ರಗತಿ 1 Dec 2025 1:13 pm

ಪಠ್ಯ ಪುಸ್ತಕಗಳಲ್ಲಿ ‘ಭಗವದ್ಗೀತೆ’ಸೇರಿಸಲು ಕೇಂದ್ರಕ್ಕೆ ಎಚ್.ಡಿ. ಕುಮಾರಸ್ವಾಮಿ ಒತ್ತಾಯ!

ಶಿವಮೊಗ್ಗ: ಶಾಲಾ, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳ ಪಠ್ಯಕ್ರಮದಲ್ಲಿ ಭಗವದ್ಗೀತೆಯನ್ನು ಸೇರಿಸಲು ಪ್ರಯತ್ನಿಸಲಾಗುವುದು. ಈ ಕುರಿತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಚರ್ಚಿಸಲಾಗುವುದು ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಭಾನುವಾರ ನಡೆದ ಭಗವದ್ಗೀತಾ ಅಭಿಯಾನ ಮಹಾಸಮರ್ಪಣೆ ಕಾರ್ಯಕ್ರಮದಲ್ಲಿ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಭಗವದ್ಗೀತೆಯನ್ನು ಪಠ್ಯಪುಸ್ತಕಗಳಲ್ಲಿ ಸೇರಿಸುವಂತೆ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದರು.ತದ ನಂತರ ಮಾತನಾಡಿದ ಕುಮಾರಸ್ವಾಮಿ, ಮುಂದಿನ ದಿನಗಳಲ್ಲಿ […]

ಪ್ರಜಾ ಪ್ರಗತಿ 1 Dec 2025 1:08 pm

ಗ್ರಾಮ ಪಂಚಾಯ್ತಿ ಸದಸ್ಯರಿಗೆ ವಂಚನೆ; ಪ್ರಕರಣ ದಾಖಲು

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ ನಕಲಿ ಸರ್ಕಾರಿ ಆದೇಶಗಳನ್ನು ಹೊರಡಿಸಿ, ಯೋಜನೆಗಾಗಿ ಗ್ರಾಮ ಪಂಚಾಯತ್ ಸದಸ್ಯರಿಂದ ಹಣ ವಸೂಲಿ ಮಾಡಿ ವಂಚಿಸಿದ ಆರೋಪದ ಮೇಲೆ ವಿಧಾನಸೌಧ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ವಿಜಯಪುರದ ದೇವರಹಿಲೋರಗಿ ನಿವಾಸಿ ಚಿದಾನಂದ ಪ್ರಭುಗೌಡ ಬಿರಾದಾರ್ ಆರೋಪಿ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಸ್ತುತ ಉಸ್ತುವಾರಿ ಕಾರ್ಯದರ್ಶಿಯಾಗಿರುವ ಎನ್ ರವಿಕುಮಾರ್ ಸಲ್ಲಿಸಿದ ದೂರಿನ ಪ್ರಕಾರ, ಗ್ರಾಮ ಪಂಚಾಯತ್ ಸದಸ್ಯ ಮಲ್ಲಣ್ಣ ಸಿದ್ದಪ್ಪ ನಾಕೆಟ್ಟಿನ್ ಅವರು […]

ಪ್ರಜಾ ಪ್ರಗತಿ 1 Dec 2025 1:04 pm

ತುಳುನಾಡ ದೈವಕ್ಕೆ ರಣವೀರ್‌ ಸಿಂಗ್‌ ಅಪಮಾನ…..!

ಮಂಗಳೂರು ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ತುಳುನಾಡಿನ ದೈವಗಳನ್ನು ಕೆಟ್ಟದಾಗಿ ಅನುಕರಣೆ ಮಾಡಿದ ಬಾಲಿವುಡ್‌ ನಟ ರಣ್‍ವೀರ್ ಸಿಂಗ್ ವಿರುದ್ಧ ದೈವಾರಾಧಕರು ತೀವ್ರ ಬೇಸರ ಹೊರಹಾಕಿದ್ದಾರೆ. ಕಾಂತಾರ ಚಾಪ್ಟರ್‌ 1 ಚಿತ್ರದಲ್ಲಿ ರಿಷಬ್‌ ಶೆಟ್ಟಿ ಅಭಿನಯವನ್ನು ಕೊಂಡಾಡುವ ಭರದಲ್ಲಿ, ರಿಷಬ್‌ ಸಮ್ಮುಖದಲ್ಲಿಯೇ ಚಾಮುಂಡಿ ದೈವದ ಅವಾಹನೆಯನ್ನು ರಣವೀರ್‌ ಸಿಂಗ್‌ ಅಣಕಿಸಿದ್ದರು. ಈ ಘಟನೆಗೆ ತುಳುನಾಡ ದೈವಾರಾಧನೆ ರಕ್ಷಣಾ ಚಾವಡಿ ಸಂಚಾಲಕ ಕಮಲಾಕ್ಷ ಗಂಧಕಾಡು ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ತುಳುನಾಡಿನ ದೈವಗಳಿಗೆ ನಿರಂತರ […]

ಪ್ರಜಾ ಪ್ರಗತಿ 1 Dec 2025 12:55 pm

ದರ್ಶನ್ ‘ಡೆವಿಲ್’ಚಿತ್ರದ ಟ್ರೇಲರ್ ರಿಲೀಸ್‌ ಡೇಟ್‌ ಅನೌನ್ಸ್‌!

ಬೆಂಗಳೂರು : ನಟ ದರ್ಶನ್ ಅಭಿನಯದ ಹೈ ವೋಲ್ಟೇಜ್ ಸಿನಿಮಾ ದಿ ಡೆವಿಲ್ ಬಿಡುಗಡೆಗೆ ಕೆಲ ದಿನಗಳಷ್ಟೇ ಬಾಕಿ ಇದೆ ಅಭಿಮಾನಿಗಳಲ್ಲಿ ಕ್ರೇಜ್ ಹೆಚ್ಚಾಗ್ತಿದೆ. ಕಾಯುವಿಕೆ ಬಹುತೇಕ ಅಂತ್ಯವಾಗಿದೆ. ಟ್ರೈಲರ್ ರಿಲೀಸ್‌ ಯಾವಗ ಅಂತ ಅನೌನ್ಸ್‌ ಕೂಡ ಆಗೇ ಹೋಗಿದೆ. ನಾನು ಬರ್ತೀನಿ ಚಿನ್ನ ಅಂತ ದರ್ಶನ್‌ ವಾಯ್ಸ್‌ ಕೇಳಿ ಫ್ಯಾನ ಅಂತೂ ದಿಲ್‌ ಖುಷ್‌ ಆಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರ ಎಕ್ಸ್ ಖಾತೆಯಿಂದ ‘ದಿ ಡೆವಿಲ್’ […]

ಪ್ರಜಾ ಪ್ರಗತಿ 1 Dec 2025 11:54 am

ಪಾಕಿಸ್ತಾನ ಮತ್ತೆ ಬಾಲ ಬಿಚ್ಚಿದರೆ ಆಪರೇಷನ್‌ ಸಿಂದೂರ್‌ 2.0……

ಶ್ರೀನಗರ ಜಮ್ಮು ಮತ್ತು ಕಾಶ್ಮೀರ ಪಹಲ್ಗಾಮ್‌ನಲ್ಲಿ ನಡೆದ ಪ್ರವಾಸಿಗರ ಮೇಲಿನ ಉಗ್ರರ ದಾಳಿಗೆ ಪ್ರತಿಯಾಗಿ ಭಾರತ ನಡೆಸಿದ ಆಪರೇಷನ್‌ ಸಿಂದೂರ್‌ ಕಾರ್ಯಾಚರಣೆಯ ಹೊಡೆತಕ್ಕೆ ಸಿಲುಕಿ ನಲುಗಿದ ಪಾಕಿಸ್ತಾನ ಇನ್ನೂ ಚೇತರಿಸಿಕೊಂಡಿಲ್ಲ. ಅದಾಗಲೇ ಭಾರತೀಯ ಸೇನೆ ಆಪರೇಷನ್‌ ಸಿಂದೂರ್‌ 2.0 ಕಾರ್ಯಾಚರಣೆಯ ಸೂಚನೆ ನೀಡಿದೆ. ಪಾಕಿಸ್ತಾನ ಈಗಾಗಲೇ 72ಕ್ಕಿಂತ ಅಧಿಕ ಉಗ್ರರ ಲಾಂಚ್‌ಪ್ಯಾಡ್‌ಗಳನ್ನು ದಟ್ಟ ಕಾಡಿಗೆ, ಒಳ ಪ್ರದೇಶಗಳಿಗೆ ವರ್ಗಾಯಿಸಿದೆ. ಪಾಕಿಸ್ತಾನ ಸರ್ಕಾರವು ಗಡಿಯಾಚೆಗಿನ ಕಾರ್ಯಾಚರಣೆಯನ್ನು ಪುನರಾರಂಭಿಸಲು ನಿರ್ಧರಿಸಿದರೆ ಭಾರಿ ಪ್ರಮಾಣದಲ್ಲಿ ಮರು ದಾಳಿ […]

ಪ್ರಜಾ ಪ್ರಗತಿ 1 Dec 2025 10:59 am