’10 ಬಾರಿ ಸಿಎಂ ಆದ್ರೂ ಒಂದು ದಿನ ಬಿಡಲೇಬೇಕಲ್ಲ : ಸತೀಶ್ ಜಾರಕಿಹೊಳಿ
ಬೆಂಗಳೂರು: ಸಿಎಂ ಹುದ್ದೆ ಬಣ ಬಡಿದಾಟಕ್ಕೆ ಸಂಬಂಧಪಟ್ಟಂತೆ ಕರಾವಳಿ ಜಿಲ್ಲೆ ಮಂಗಳೂರಿನಲ್ಲಿ ಇಂದು ಹೈಡ್ರಾಮಾವೇ ನಡೆದಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮತ್ತು ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿಯೇ ಮುಂದಿನ ಸಿಎಂ ಕೂಗಾಟ ಕೇಳಿಬಂತು. ಅಧಿಕಾರ ತ್ಯಾಗದ ಕುರಿತು ನಿನ್ನೆ ಬೇಳೂರು ಗೋಪಾಲಕೃಷ್ಣ ಮುಂದೆ ಸಿಎಂ ಆಡಿದ್ದ ಮಾತು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಸಿ.ಎಂ. […]
‘ಭಿನ್ನಾಭಿಪ್ರಾಯ ಬಗೆಹರಿದಿದೆ’: ಗೃಹ ಸಚಿವ ಜಿ ಪರಮೇಶ್ವರ
ಬೆಂಗಳೂರು: ಇತ್ತೀಚಿನ ರಾಜಕೀಯ ಭಿನ್ನಾಭಿಪ್ರಾಯಗಳ ಕುರಿತು ಹೆಚ್ಚಿನ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ ಬುಧವಾರ ಹೇಳಿದ್ದು, ಪಕ್ಷದೊಳಗಿನ ಯಾವುದೇ ಸಣ್ಣ ಸಮಸ್ಯೆಗಳನ್ನು ಪರಿಹರಿಸಲಾಗಿದೆ ಎಂದು ಹೇಳಿದ್ದಾರೆ.ರಾಜಕೀಯೇತರ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಮಂಗಳೂರಿಗೆ ತೆರಳುತ್ತಿರುವುದಾಗಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ, ‘ನಾನು ಅನಗತ್ಯವಾಗಿ ಪ್ರತಿಕ್ರಿಯಿಸಲು ಬಯಸುವುದಿಲ್ಲ. ಈಗ ಎಲ್ಲವೂ ಮುಗಿದಿದೆ. ಯಾವುದೇ ಸಣ್ಣ ವ್ಯತ್ಯಾಸವಿದ್ದರೂ, ಸಮಸ್ಯೆ ಇದ್ದರೂ, ಅದನ್ನು ಪರಿಹರಿಸಲಾಗಿದೆ… ನಾನು ರಾಜಕೀಯೇತರ ಕಾರ್ಯಕ್ರಮಕ್ಕಾಗಿ ಮಂಗಳೂರಿಗೆ ಹೋಗುತ್ತಿದ್ದೇನೆ’ […]
ನಟ ದರ್ಶನ್ಗೆ ಮತ್ತೊಮ್ಮೆ ಹಿನ್ನಡೆ; 82 ಲಕ್ಷ ರೂ. ಆದಾಯ ತೆರಿಗೆ ಇಲಾಖೆಯ ವಶಕ್ಕೆ ನೀಡಿದ ಕೋರ್ಟ್
ಬೆಂಗಳೂರು ರೇಣುಕಾಸ್ವಾಮಿ ಕೊಲೆ ಪ್ರಕರಣ ದಲ್ಲಿ ಸದ್ಯ ಜೈಲು ಪಾಲಾಗಿರುವ ಸ್ಯಾಂಡಲ್ವುಡ್ ನಟ ದರ್ಶನ್ ಅವರಿಗೆ ಇದೀಗ ಮತ್ತೊಂಡು ಆಘಾತ ಎದುರಾಗಿದೆ. ದರ್ಶನ್ ನಿವಾಸದಲ್ಲಿ ಪತ್ತೆಯಾಗಿರುವ 82 ಲಕ್ಷ ರೂ. ಆದಾಯ ತೆರಿಗೆ ಇಲಾಖೆಯಲ್ಲೇ ಇರಲಿ ಎಂದು ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ಆದೇಶ ಹೊರಡಿಸಿದೆ. ಆ ಮೂಲಕ ದರ್ಶನ್ಗೆ ಮತ್ತೊಂದು ಹೊಡೆತ ಬಿದ್ದಿದೆ. ಕಾಮಾಕ್ಷಿಪಾಳ್ಯ ಪೊಲೀಸರು ದರ್ಶನ್ ಮನೆ ಮತ್ತು ಪ್ರದೋಷ್ ಮನೆಯಲ್ಲಿ ವಶಕ್ಕೆ ಪಡೆದ ಈ ಹಣವನ್ನು ಆದಾಯ ತೆರಿಗೆ ಇಲಾಖೆಗೆ […]
ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್ : ಜಾಮೀನು ಮಂಜೂರು ಮಾಡಲು ಹೈಕೋರ್ಟ್ ನಕಾರ
ಬೆಂಗಳೂರು ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಸದ್ಯ ಸೆರೆವಾಸ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣ ಅವರಿಗೆಕರ್ನಾಟಕ ಹೈಕೋರ್ಟ್ ಮತ್ತೊಂದು ಶಾಕ್ ನೀಡಿದೆ. ಈಗಾಗಲೇ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದನ್ನು ಬದಿಗೆ ಸರಿಸಿ, ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ (ಡಿಸೆಂಬರ್ 3) ವಜಾಗೊಳಿಸಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿರುವ ಗನ್ನಿಕಾಡದ ತೋಟದ ಮನೆಯಲ್ಲಿ ಕೆಲಸ ಮಾಡುತ್ತಿದ್ದ 48 ವರ್ಷದ […]
ಪಾಕ್ ಪರ ಬೇಹುಗಾರಿಕೆ ಆರೋಪ; ವಕೀಲನ ಬಂಧನ
ನವದೆಹಲಿ: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐಗೆ ಬೇಹುಗಾರಿಕೆ ಮತ್ತು ಮಾಹಿತಿ ರವಾನಿಸಿದ ಆರೋಪದ ಮೇಲೆ ಗುರುಗ್ರಾಮದ ವಕೀಲನೊಬ್ಬನನ್ನು ಬಂಧಿಸಲಾಗಿದೆ. ಬಂಧಿತ ವಕೀಲನ ಬಳಿ ಎರಡು ಬ್ಯಾಂಕ್ ಖಾತೆಗಳಿದ್ದು, ಹಣ ಸಂಗ್ರಹಿಸಲು ಏಳು ಬಾರಿ ಅಮೃತಸರಕ್ಕೆ ಭೇಟಿ ನೀಡಿದ್ದ ಎಂದು ಆತನ ಸ್ನೇಹಿತ ಮುಷರಫ್ ಅಲಿಯಾಸ್ ಪರ್ವೇಜ್ ಪೊಲೀಸರಿಗೆ ತಿಳಿಸಿದ್ದಾನೆ. ಮುಷರಫ್ ಪ್ರಕಾರ, 2022 ರಲ್ಲಿ ಸೋಹ್ನಾ ನ್ಯಾಯಾಲಯದಲ್ಲಿ ಇಂಟರ್ನ್ಶಿಪ್ ಮಾಡುವಾಗ ಬಂಧಿತ ವಕೀಲ ರಿಜ್ವಾನ್ ಅವರೊಂದಿಗೆ ಸ್ನೇಹ ಬೆಳೆಸಿದ್ದ. ರಿಜ್ವಾನ್ ಗುರುಗ್ರಾಮ್ ನ್ಯಾಯಾಲಯದಲ್ಲಿ ಪ್ರಾಕ್ಟೀಸ್ […]
109 ಬಾಕ್ಸ್ ಸ್ಫೋಟಕಗಳಿದ್ದ ಟ್ರಕ್ ವಶಕ್ಕೆ…..!
ಜೈಪುರ: ಭಾರಿ ಪ್ರಮಾಣದಲ್ಲಿ ಸ್ಪೋಟಕಗಳನ್ನು ಸಾಗಿಸುತ್ತಿದ್ದ ಟ್ರಕ್ ವೊಂದನ್ನು ವಶಕ್ಕೆ ಪಡೆದಿರುವ ರಾಜಸ್ಥಾನ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ರಾಜಸ್ಥಾನದ ರಾಜ್ಸಮಂದ್ನಲ್ಲಿ ಅಪಾರ ಪ್ರಮಾಣ ಸ್ಪೋಟಕಗಳನ್ನು ತುಂಬಿಕೊಂಡು ಪಿಕಪ್ ವಾಹನವೊಂದು ಸಾಗುತ್ತಿತ್ತು. ಇದರ ಮಾಹಿತಿ ತಿಳಿದ ಪೊಲೀಸರು ಟ್ರಕ್ ಅನ್ನು ವಶಕ್ಕೆಪಡೆದಿದೆ. ಸುಮಾರು 10 ಕಿ.ಮೀ. ವ್ಯಾಪ್ತಿಗೆ ಹಾನಿ ಉಂಟು ಮಾಡಬಹುದಾದ ಸಾಮರ್ಥ್ಯವಿರುವ 100ಕ್ಕೂ ಹೆಚ್ಚು ಪೆಟ್ಟಿಗೆಗಳ ಜೆಲಾಟಿನ್ ಸ್ಟಿಕ್ಗಳು, ಡಿಟೋನೇಟರ್ಗಳು ಇದ್ದವು. ಗಣಿಗಾರಿಕಾ ಚಟುವಟಿಕೆಗಳಿಗಾಗಿ ಇದನ್ನು ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ಖಚಿತ ಮಾಹಿತಿಯ […]
ನೆರವು ನೀಡುವ ವಿಮಾನಗಳಿಗೆ ಅನುಮತಿ ವಿಳಂಬ : ಪಾಕ್ ಆರೋಪದ ವಿರುದ್ಧ ಭಾರತ ತೀವ್ರ ಕಿಡಿ
ನವದೆಹಲಿ: ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾ ತತ್ತರಿಸಿ ಹೋಗಿದ್ದು, ಈ ನಡುವೆ ನೆರವು ನೀಡುವ ವಿಮಾನಗಳಿಗೆ ಅನುಮತಿ ವಿಳಂಬ ಮಾಡಲಾಗಿದೆ ಎಂದ ಪಾಕಿಸ್ತಾನ ಆರೋಪವನ್ನು ಭಾರತ ಮಂಗಳವಾರ ತಿರಸ್ಕರಿಸಿದೆ.ಆರೋಪ ಕುರಿತು ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಸಚಿವಾಲಯ, ಪಾಕಿಸ್ತಾನದ ಹೇಳಿಕೆ ಆಧಾರರಹಿತ ಹಾಗೂ ಹಾಸ್ಯಸ್ಪದ ಎಂದು ಹೇಳಿದೆ. ಸೋಮವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಲ್ಲಿಸಲಾದ ಪಾಕಿಸ್ತಾನದ ಓವರ್ಫ್ಲೈಟ್ ವಿನಂತಿಯನ್ನು ಅದೇ ದಿನ ಸಂಜೆ 5:30 ರ ವೇಳೆಗೆ ತೆರವುಗೊಳಿಸಲಾಗಿದೆ, ಕೇವಲ ನಾಲ್ಕು ಗಂಟೆಗಳ […]
ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ಕಬ್ಬಿನ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ
ಜಮಖಂಡಿ: ಬಾಗಲಕೋಟೆ ಜಿಲ್ಲೆಯ ಸಿದ್ದಾಪುರ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಹತ್ತಿರ ರಾತ್ರಿ 12.30ಕ್ಕೆ ಕಬ್ಬಿನ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಯುವಕರು ಮೃತಪಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ಸಿದ್ದಾಪುರ ಬಳಿ ತಡರಾತ್ರಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ವಿಶ್ವನಾಥ್ ಕಂಬಾರ್ (17), ಪ್ರವೀಣ್ ಶೇಡಬಾಳ್ (22), ಗಣೇಶ ಅಳ್ಳಿಮಟ್ಟಿ (20), ಪ್ರಜ್ವಲ್ ಶೇಡಬಾಳ್ (17) ಮೃತ ದುರ್ದೈವಿಗಳು. […]
ಮಾಜಿ ಪ್ರಧಾನಿ ಭೇಟಿಯಾಗಿ ಬಂದ ಸಹೋದರಿ ಉಜ್ಮಾ ಖಾನಮ್ ಹೇಳಿದ್ದೇನು?
ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (PTI) ಸಂಸ್ಥಾಪಕ ಇಮ್ರಾನ್ ಖಾನ್ ಅವರ ಆರೋಗ್ಯದ ಬಗ್ಗೆ ಹೆಚ್ಚುತ್ತಿರುವ ವದಂತಿಗಳ ಬೆನ್ನಲ್ಲೇ ಇದೀಗ ಪಾಕಿಸ್ತಾನ ಸರ್ಕಾರ ಜೈಲಿನಲ್ಲಿ ಇಮ್ರಾನ್ ಖಾನ್ ಭೇಟಿಯಾಗಲು ಅವರ ಸಹೋದರಿಗೆ ಅವಕಾಶ ನೀಡಿದೆ. ಇಂದು ರಾವಲ್ಪಿಂಡಿಯ ಅಡಿಯಾಲ ಜೈಲಿನ ಅಧಿಕಾರಿಗಳು ಮಾಜಿ ಪ್ರಧಾನಿ ಅವರ ಸಹೋದರಿ ಉಜ್ಮಾ ಖಾನಮ್ ಅವರಿಗೆ ಭೇಟಿ ಮಾಡಲು ಅನುಮತಿ ನೀಡಲಾಗಿತ್ತು. ಅದರಂತೆ ಉಜ್ಮಾ ಖಾನಮ್ ಇಂದು ಸಂಜೆ ಜೈಲಿಯಲ್ಲಿ ಮಾಜಿ ಪ್ರಧಾನಿಯನ್ನು ಭೇಟಿಯಾದರು. ಇಮ್ರಾನ್ ಖಾನ್ ಅವರ ಭೇಟಿಯನ್ನು ನಿರ್ಬಂಧಿಸಲಾಗಿದೆ […]
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಇದ್ದ ವೇದಿಕೆಗೆ ನುಗ್ಗಿದ ಆಗಂತುಕ!
ವಾರಣಾಸಿ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಇದ್ದ ವೇಗಿಕೆಯತ್ತ ಆಗಂತುಕನೋರ್ವ ನುಗ್ಗಿದ ಘಟನೆ ವರದಿಯಾಗಿದ್ದು, ಕೂಡಲೇ ಕಮಾಂಡೋ ಸಿಬ್ಬಂದಿ ಆತನನ್ನು ಬಂಧಿಸಿದ್ದಾರೆ.ಮಂಗಳವಾರ ಉತ್ತರ ಪ್ರದೇಶದ ವಾರಣಾಸಿಯ ನಮೋ ಘಾಟ್ನಲ್ಲಿ ನಡೆಯುತ್ತಿದ್ದ ಕಾಶಿ ತಮಿಳು ಸಂಗಮ್ 4.0 ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಭದ್ರತಾ ವ್ಯವಸ್ಥೆಯನ್ನು ಭೇದಿಸಿ, ವ್ಯಕ್ತಿಯೊಬ್ಬ ವೇದಿಕೆಯತ್ತ ಸಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸರು ಮತ್ತು ಭದ್ರತಾ ಪಡೆಯ ಕಮಾಂಡೋಗಳು ಆತನನ್ನು […]
‘ಬಾಬರಿ ಮಸೀದಿ ನಿರ್ಮಾಣಕ್ಕೆ ಸಾರ್ವಜನಿಕ ಹಣ” : ಏನಿದು ಹೊಸ ಬಾಂಬ್
ದೆಹಲಿ: ಭಾರತದ ಮೊದಲ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರೂ ಬಾಬರಿ ಮಸೀದಿ ನಿರ್ಮಾಣಕ್ಕೆ ಸಾರ್ವಜನಿಕ ನಿಧಿ ಬಳಸಲು ಬಯಸಿದ್ದರು, ಆದರೆ ಸರ್ದಾರ್ ವಲ್ಲಭಭಾಯಿ ಪಟೇಲ್ ತೀವ್ರವಾಗಿ ವಿರೋಧಿಸಿ ತಡೆದಿದ್ದರು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಗುಜರಾತಿನ ವಡೋದರ ಹತ್ತಿರದ ಸಾಧ್ಲಿ ಗ್ರಾಮದಲ್ಲಿ ಸರ್ದಾರ್ ಪಟೇಲ್ 150ನೇ ಜಯಂತ್ಯೋತ್ಸವದ ‘ಯುನಿಟಿ ಮಾರ್ಚ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಟೇಲ್ ನಿಜವಾದ ಸೆಕ್ಯುಲರ್ ನಾಯಕರಾಗಿದ್ದರು, ಯಾರನ್ನೂ ತೃಪ್ತಿಪಡಿಸುವ ರಾಜಕೀಯ ಮಾಡದೆ ಸಮಾನತೆಯ […]
ಕೇರಳದ ಮುನ್ನಾರ್ ಪಂಚಾಯತ್ ಎಲೆಕ್ಷನ್ ಗೆ ಬಿಜೆಪಿಯಿಂದ ‘ಸೋನಿಯಾ ಗಾಂಧಿ’ಸ್ಪರ್ಧೆ
ಕೇರಳ ಮುನ್ನಾರ್ ಪಂಚಾಯತ್ನಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸೋನಿಯಾ ಗಾಂಧಿ ಇತ್ತೀಚೆಗೆ ಸ್ಥಳೀಯರ ಗಮನ ಸೆಳೆದಿದ್ದಾರೆ. ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೆಸರು ಹೊಂದಿರುವ ಇವರ ರಾಜಕೀಯ ಹಾದಿ ಸಂಪೂರ್ಣವಾಗಿ ವಿಭಿನ್ನವಾದ ಮಾರ್ಗವಾಗಿದೆ. ಅವರ ತಂದೆ, ಹಿರಿಯ ಕಾಂಗ್ರೆಸ್ ನಾಯಕ ಮತ್ತು ನಲ್ಲತನ್ನಿ ಕಲ್ಲಾರ್ನ ಕಾರ್ಯಕರ್ತ ದಿವಂಗತ ದೂರ್ ರಾಜ್, ಸೋನಿಯಾ ಗಾಂಧಿ ಅವರ ಮೇಲಿನ ಅಭಿಮಾನದಿಂದ ತಮ್ಮ ಮಗಳಿಗೂ ಸೋನಿಯಾ ಗಾಂಧಿ ಎಂದು ಹೆಸರಿಟ್ಟರಂತೆ. ಸೋನಿಯಾ […]
ಗೋಲ್ಗಪ್ಪ ತಿನ್ನೋಕೆ ಹೋಗಿ ದವಡೆ ಲಾಕ್, ಆಸ್ಪತ್ರೆಗೆ ಓಡಿದ ಸಂಬಂಧಿಕರು!
ಕಾನ್ಪುರ: ಗೋಲ್ಗಪ್ಪ ತಿನ್ನೋಕೆ ಹೋದ ಮಹಿಳೆಯೊಬ್ಬರ ದವಡೆ ಲಾಕ್ ಆಗಿದ್ದು ಬಾಯಿ ಮುಚ್ಚಲೂ ಆಗದೆ ಪರದಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.ಉತ್ತರ ಪ್ರದೇಶದ ಔರಿಯಾ ಜಿಲ್ಲೆಯ ದಿಬಿಯಾಪುರ ಪ್ರದೇಶದ ಗೌರಿ ಕಿಶನ್ಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗೋಲ್ಗಪ್ಪಾ ತಿನ್ನಲು ಹೋದ ಗ್ರಾಮದ 42 ವರ್ಷದ ನಿವಾಸಿ ಇಂಕಲಾ ದೇವಿ ಅವರ ದವಡೆ ಲಾಕ್ ಆಗಿದೆ.ಈ ವೇಳೆ ಆಕೆಯ ದವಡೆಯ ಮೂಳೆ ಜರುಗಿದ್ದು ಆಕೆ ಬಾಯಿ ಮುಚ್ಚಲು ಆಗದೆ ಪರದಾಡಿದ್ದಾರೆ. ಇದನ್ನು ಗಮನಿಸಿದ ಕುಟುಂಬಸ್ಥರು […]
ಮುಸ್ಲಿಮರು ಇನ್ನೂ 2 ಐತಿಹಾಸಿಕ ಸ್ಥಳಗಳ ಬಿಟ್ಟುಕೊಡಿ :ಕೆ ಕೆ ಮುಹಮ್ಮದ್
ಕೋಝಿಕ್ಕೋಡ್: ಅಯೋಧ್ಯೆ ರಾಮಮಂದಿರ ಮಾತ್ರವಲ್ಲ.. ಮುಸ್ಲಿಮರು ಇನ್ನೂ ಎರಡು ಐತಿಹಾಸಿಕ ಸ್ಥಳಗಳನ್ನು ಹಿಂದೂಗಳಿಗೆ ಬಿಟ್ಟುಕೊಡಬೇಕು ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ಮಾಜಿ ಪ್ರಾದೇಶಿಕ ನಿರ್ದೇಶಕ ಕೆ.ಕೆ. ಮುಹಮ್ಮದ್ ಹೇಳಿದ್ದಾರೆ. ಕೇರಳದ ಕೋಝಿಕ್ಕೋಡ್ ನಲ್ಲಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಕೆ.ಕೆ. ಮುಹಮ್ಮದ್, ‘ನನ್ನ ಪ್ರಕಾರ ಮುಸ್ಲಿಮರು ಇನ್ನೂ ಎರಡು ಐತಿಹಾಸಿಕ ಸ್ಥಳಗಳನ್ನು ಹಿಂದೂಗಳಿಗೆ ಬಿಟ್ಟುಕೊಡಬೇಕೆಂದು ನಾನು ಹೇಳಿದ್ದೆ. ಅವುಗಳೆಂದರೆ ಶ್ರೀಕೃಷ್ಣನ ಜನ್ಮಸ್ಥಳವಾದ ಮಥುರಾ ಮತ್ತು ಶಿವನೊಂದಿಗೆ ಸಂಬಂಧ ಹೊಂದಿರುವ ಜ್ಞಾನವಾಪಿ ದೇಗುಲಗಳಾಗಿವೆ […]
ದೇಶದ ಮೊದಲ ‘ವೇಸ್ಟ್-ಟು-ವ್ಯಾಲ್ಯೂ ಪಾರ್ಕ್’ಗೆ ಡಿಸಿಎಂ ಚಾಲನೆ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ಪಶ್ಚಿಮ ಭಾಗದ ಕನ್ನಹಳ್ಳಿಯಲ್ಲಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತ್ಯಾಜ್ಯ ಸಂಸ್ಕರಣಾ ಕೇಂದ್ರದಲ್ಲಿ ಸಮಗ್ರ ‘ತ್ಯಾಜ್ಯ ಮರುಬಳಕೆ ಮತ್ತು ಮೌಲ್ಯವರ್ಧನೆ ಯೋಜನೆ’ಗೆ ಭೂಮಿ ಪೂಜೆ ನೆರವೇರಿಸಿದ್ದಾರೆ. ಈ ಶಂಕುಸ್ಥಾಪನೆ ಸಮಾರಂಭವು ಕನ್ನಹಳ್ಳಿ ಮುನ್ಸಿಪಲ್ ತ್ಯಾಜ್ಯ ಘಟಕದಲ್ಲಿ ನಡೆಯಿತು. ಕಾರ್ಯ ಕ್ರಮದಲ್ಲಿ […]
ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡ್ತಾರಾ ಕೊಹ್ಲಿ …..!?
ನವದೆಹಲಿ: ದೆಹಲಿಯ ಇಬ್ಬರು ದಿಗ್ಗಜರಾದ ವಿರಾಟ್ ಕೊಹ್ಲಿ ಮತ್ತು ಮಾಜಿ ಕ್ರಿಕೆಟಿಗ ಮತ್ತು ಪ್ರಸ್ತುತ ಮುಖ್ಯ ಕೋಚ್ ಗೌತಮ್ ಗಂಭೀರ್ ನಡುವೆ ಭಾರತೀಯ ಕ್ರಿಕೆಟ್ ತಂಡದ ಡ್ರೆಸ್ಸಿಂಗ್ ಕೋಣೆಯಲ್ಲಿ ನಡೆಯುತ್ತಿರುವ ಶೀತಲ ಸಮರದ ನಡುವೆ, ಹೊಸ ಸುದ್ದಿ ಹೊರಬಿದ್ದಿದೆ. ವಿರಾಟ್ ಕೊಹ್ಲಿ ವಿಜಯ್ ಹಝಾರೆ ಟ್ರೋಫಿ ಟೂರ್ನಿಯಲ್ಲಿ ದೆಹಲಿ ಪರ ಆಡಲು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ರೋಹಿತ್ ಶರ್ಮಾ ವಿಜಯ್ ಹಜಾರೆ ಟ್ರೋಫಿಯಲ್ಲಿ ಮುಂಬೈ ಪರ ಆಡಲು ಸಿದ್ಧರಿದ್ದಾರೆ ಎಂಬ ವರದಿಗಳ ಕೆಲವೇ ಗಂಟೆಗಳ […]
‘ಆಪರೇಷನ್ ಸಿಂಧೂರ’ವೇಳೆ ಭಾರತದ ನೌಕಪಡೆಯ ಸಿದ್ಧತೆ ಹೇಗಿತ್ತು! ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ ನೀಡಿದ ಮಾಹಿತಿ ಏನು?
ಪುಣೆ: ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಇನ್ನೂ ಮುಂದುವರೆದಿದ್ದು, ಸಶಸ್ತ್ರ ಪಡೆಗಳ ನಡುವೆ ಕಾರ್ಯವಿಧಾನದ ಮಾಹಿತಿ ಹಂಚಿಕೆ ಸೇರಿದಂತೆ ಉನ್ನತ ಮಟ್ಟದ ಸಮನ್ವಯತೆಯ ಅಗತ್ಯವಿದೆ ಎಂದು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ ಹೇಳಿದ್ದಾರೆ.ವಾರ್ಷಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಪರೇಷನ್ ಸಿಂಧೂರ ಇನ್ನೂ ನಡೆಯುತ್ತಿದೆ. ಅದು ಮುಗಿದಿಲ್ಲ. ಕಾರ್ಯಾಚರಣೆಗೆ ಸಂಬಂಧಿಸಿದಂತೆ ಯಾವುದೇ ರೀತಿಯಲ್ಲಿ ಸಜ್ಜಾಗುವುದು ಉತ್ತಮ ಎಂದಿದ್ದಾರೆ. ಮೂರು ಪಡೆಗಳ ನಡುವೆ ವಾಯು ರಕ್ಷಣೆಯನ್ನು ಸಂಯೋಜಿಸಲಾಗಿದೆ. ಅದನ್ನು ಆಪರೇಷನ್ ಸಿಂಧೂರ ಸಮಯದಲ್ಲಿಯೂ […]
ಕುವೈತ್ ಗೆ ತೆರಳುತ್ತಿದ್ದ ‘ಇಂಡಿಗೋ ವಿಮಾನ’ಮುಂಬೈಯಲ್ಲಿ ತುರ್ತು ಲ್ಯಾಂಡಿಂಗ್!
ಮುಂಬೈ: ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಹೈದರಾಬಾದ್ ನಿಂದ ಕುವೈತ್ ಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಇಂದು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಆಗಿದೆ.ವಿಮಾನವನ್ನು ಮುಂಬೈಯಲ್ಲಿ ಸುರಕ್ಷಿತವಾಗಿ ಕೆಳಕ್ಕಿಳಿಸಲಾಗಿದೆ ಎಂದು ವಿಮಾನ ನಿಲ್ದಾಣದಲ್ಲಿನ ಪೊಲೀಸರು ತಿಳಿಸಿದ್ದಾರೆ. ಹೈದರಾಬಾದ್ ನಲ್ಲಿ ವಿಮಾನ ಲ್ಯಾಂಡಿಂಗ್ ಆದಾಗ ರಿಮೋಟ್ ಕಂಟ್ರೋಲ್ ನಿಯಂತ್ರಿತ ಸ್ಫೋಟಕ ಸಾಧನಗಳನ್ನು ಬಳಸಿ ದಾಳಿ ನಡೆಸಲು ಯೋಜಿಸಲಾಗಿದೆ ಎಂದು ಕೆಲ ಸಮಾಜ ವಿರೋಧಿ ಶಕ್ತಿಗಳು ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆಯ […]
ಗುಬ್ಬಿ ಕೆ ಎಂ ಎಫ್ ಬಾರಿ ಅವ್ಯವಹಾರ ಬಯಲಿಗಿಟ್ಟ ನಿರ್ದೇಶಕಿ ಭಾರತಿ ಶ್ರೀನಿವಾಸ್
ಗುಬ್ಬಿ: ಕಳೆದ ಎರಡು ಮೂರು ದಿನಗಳ ಹಿಂದೆ ಎನ್ ಡಿ ಎ ನಾಯಕರುಗಳು ತು ಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್ ಮೇಲೆ ಅಧಿಕಾರ ದುರುಪಯೋಗ ಹಾಗೂ ಸ್ವಪಕ್ಷವಾದ ಆರೋಪ ಮಾಡಿದ್ದರು,ಈ ಸಂಬಂಧ ಇಂದು ಗುಬ್ಬಿಯ ನಂದಿನಿ ಭವನದಲ್ಲಿ ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು So called ಸಮಾಜಸೇವಕರೇ ಕಳೆದ ಇಪ್ಪತೈದು ವರ್ಷಗಳಿಂದ ನಮ್ಮ ತಾಕತ್ತು ಏನು ಎಂಬುದನ್ನು ತೋರೋಸುತ್ತಲೇ ಬಂದಿದ್ದೀವಿ ನಿಮ್ಮ ಎಲ್ಲಾ ಪ್ರಯೋಗಗಳು ವಿಫಲವಾಗಿವೆ ಇನ್ನು ತಾಕತ್ತಿನಿ ಮಾತನಾಡುತ್ತಲೇ […]
ಎಸ್ಐಟಿಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಕುರಿತು ವಿಶೇಷ ಸಂವಾದ
ತುಮಕೂರು: ಇಲ್ಲಿನ ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯದ ಬಿರ್ಲಾ ಸಭಾಂಗಣದಲ್ಲಿ ಮಂಗಳವಾರ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದಿಂದ ಇನ್ಟ್ಟ್ಯೂಷನ್ ಆಫ್ ಎಂಜಿನಿಯರ್ಸ್ ಇಂಡಿಯಾ(ಐಇಐ) ತುಮಕೂರು ಚಾಪ್ಟರ್ ಸಹಯೋಗದಲ್ಲಿ ‘ಸ್ಮಾರ್ಟ್ ಎಂಜಿನಿಯರಿಂಗ್ ಫಾರ್ ಬೆಟರ್ವರ್ಲ್ಡ್ ಹಾಗೂ ಕರ್ನಾಟಕ ರಾಜ್ಯದ ನೀರಿನ ಪರಿಸ್ಥಿತಿ’ ಕುರಿತಂತೆ ವಿಶೇಷ ಸಂವಾದ ಕಾರ್ಯಕ್ರಮ ಜರುಗಿತು. ಸಂವಾದ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಜಲಸಂಪನ್ಮೂಲ ಇಲಾಖೆ ನಿವೃತ್ತ ಕಾರ್ಯದರ್ಶಿ ಕೆ.ಜೈಪ್ರಕಾಶ್ ಅವರು, ಅತ್ಯಮೂಲ್ಯ ಹಾಗೂ ದುರ್ಲಬಸಂಪತ್ತೆಂದರೆ ನೀರು. ಸಿಂಧೂ ನಾಗರಿಕತೆ, ಈಜಿಪ್ಟ್ […]
ಗಿಲ್ಲಿ ನಟ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ಟೀಸರ್ ಬಿಡುಗಡೆ!
ಬೆಂಗಳೂರು : ಕಾಮಿಡಿ ಶೋಗಳ ಮೂಲಕ ಪ್ರವರ್ಧಮಾನಕ್ಕೆ ಬಂದು, ಇದೀಗ ಬಿಗ್ ಬಾಸ್ ಶೋನಲ್ಲಿಯೂ ಸ್ಪರ್ಧಿಯಾಗಿ ಮಿಂಚುತ್ತಿರುವವರು ಗಿಲ್ಲಿ ನಟ. ಗಿಲ್ಲಿ ನಾಯಕನಾಗಿ ನಟಿಸಿರುವ ಸೂಪರ್ ಹಿಟ್ ಚಿತ್ರವೀಗ ಬಿಡುಗಡೆಗೆ ತಯಾರಾಗಿ ನಿಂತಿದೆ. ವಿಜಯಾನಂದ್ ನಿರ್ದೇಶನದ ಈ ಸಿನಿಮಾದ ಟೀಸರ್ ಇದೀಗ ಬಿಡುಗಡೆಗೊಂಡಿದೆ. ಈ ಕುರಿತಾದ ಪತ್ರಿಕಾಗೋಷ್ಠಿಯ ಮೂಲಕ ಚಿತ್ರತಂಡ ಒಟ್ಟಾರೆ ಸಿನಿಮಾದ ಬಗೆಗಿನ ಒಂದಷ್ಟು ಮಹತ್ವದ ವಿಚಾರಗಳನ್ನು ಹಂಚಿಕೊಂಡಿದೆ. ಹೀಗೆ ಬಿಡುಗಡೆಗೊಂಡಿರುವ `ಸೂಪರ್ ಹಿಟ್’ ಟೀಸರ್ ಸು ಫ್ರಂ ಸೋ ನಂತರದಲ್ಲಿ ಮತ್ತೊಂದು […]
‘ಸಂಚಾರ ಸಾಥಿ’ಆ್ಯಪ್ ಅಳವಡಿಕೆ ಕಡ್ಡಾಯ: ಸರ್ವಾಧಿಕಾರ ರಾಷ್ಟ್ರವನ್ನಾಗಿಸುವ ಹುನ್ನಾರ; ಪ್ರಿಯಾಂಕಾ ಆಕ್ರೋಶ
ನವದೆಹಲಿ: ದೇಶದಲ್ಲಿ ತಯಾರಾದ ಅಥವಾ ಆಮದು ಮಾಡಿಕೊಳ್ಳುವ ಎಲ್ಲಾ ಮೊಬೈಲ್ಗಳಲ್ಲಿ ಸಂಚಾರ ಸಾಥಿ ಆ್ಯಪ್ ಅಳವಡಿಕೆ ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿರುವುದರ ವಿರುದ್ಧ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಸೈಬರ್ ವಂಚನೆ ವರದಿ ಮಾಡುವ ಕಾರ್ಯವಿಧಾನದ ಅಗತ್ಯತೆ ಇದೆ. ಆದರೆ, ಮೊಬೈಲ್ಗಳಲ್ಲಿ ‘ಸಂಚಾರ ಸಾಥಿ’ ಆ್ಯಪ್ ಅಳವಡಿಕೆ ಕಡ್ಡಾಯಗೊಳಿಸುವಿಕೆಯಿಂದ ಬಳಕೆದಾರರ ಗೌಪ್ಯತೆ ಉಲ್ಲಂಘಿಸುವ ಸಾಧ್ಯತೆ ಹೆಚ್ಚಿದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಇದು ಕೇವಲ ಒಂದು ವಿಷಯ […]
ಜಗತ್ತಿನೆದುರು ಮತ್ತೆ ಜೋಕರ್ ಆದ ಪಾಕ್…..!
ಕೊಲೊಂಬೋ: ಸದಾ ಒಂದಿಲ್ಲೊಂದು ಎಡವಟ್ಟವನ್ನು ಮಾಡುವ ಪಾಕಿಸ್ತಾನ ಇದೀಗ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ದಿತ್ವಾ ಚಂಡಮಾರುತದಿಂದ ತತ್ತರಿಸುತ್ತಿರುವ ಶ್ರೀಲಂಕಾಗೆ ಪಾಕಿಸ್ತಾನದಿಂದ ಅವಧಿ ಮೀರಿದ ಮೆಡಿಕಲ್ ಕಿಟ್ ಮತ್ತು ಆಹಾರ ಪದಾರ್ಥಗಳನ್ನು ನೀಡಿದೆ ಎಂಬ ಬಹು ದೊಡ್ಡ ಆರೋಪವೊಂದು ಕೇಳಿ ಬಂದಿದ್ದು, ಇದಕ್ಕೆ ಸಬಂಧಿಸಿದಂತೆ ಕೆಲ ಫೋಟೋಗಳು ವೈರಲ್ ಆಗುತ್ತಿವೆ. ಇದು ಪಾಕಿಸ್ತಾನವನ್ನು ಮುಜುಗರಕ್ಕೀಡು ಮಾಡಿದ್ದು, ಶ್ರೀಲಂಕಾ ಮತ್ತು ವಿದೇಶಾಂಗ ಇಲಾಖೆಗಳಲ್ಲಿ ಕಳವಳ ಹುಟ್ಟುಹಾಕಿದೆ. ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾ ನಲುಗಿ ಹೋಗಿದ್ದು, ಜನರ ಬದುಕು […]
ನಾವು ಒಗ್ಗಟ್ಟಾಗಿದ್ದೇವೆ, ನಮ್ಮದು ಒಂದೇ ಧ್ವನಿ: ಸಿಎಂ –ಡಿಸಿಎಂ ಜಂಟಿ ಹೇಳಿಕೆ
ಬೆಂಗಳೂರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಇಂದು ಮತ್ತೆ ಬ್ರೇಕ್ಫಾಸ್ಟ್ ಮೀಟಿಂಗ್ ನಡೆಸಿದ್ದಾರೆ. ಆ ಬಳಿಕ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ, ನಾವು ಯಾವಾಗಲೂ ಒಗ್ಗಟ್ಟಾಗಿದ್ದೇವೆ. ಹೈಕಮಾಂಡ್ ಸೂಚನೆಯಂತೆ ನಡೆಯುತ್ತೇವೆ. ಪಕ್ಷದ ವಿಚಾರ ಹಾಗು ಬೆಳಗಾವಿ ಅಧಿವೇಶನದ ಕುರಿತು ನಾವು ಚರ್ಚಿಸಿದ್ದೇವೆ ಎಂದು ಸಿಎಂ ಹೇಳಿದರು. ʼನಮ್ಮದು ಒಂದೇ ಧ್ವನಿ, ಒಂದೇ ಆಚಾರ- ವಿಚಾರʼ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. 2028ಕ್ಕೂ ನಾವು ಒಟ್ಟಿಗೇ ಕೆಲಸ ಮಾಡುತ್ತೇವೆ. ಪಕ್ಷವನ್ನು ಅಧಿಕಾರಕ್ಕೆ […]
ಇಮ್ರಾನ್ ಖಾನ್ ಸಾವಿನ ಸುದ್ದಿ ಕೊನೆಗೂ ನಿಜವಾಯ್ತಾ…….?
ಇಸ್ಲಾಮಾಬಾದ್: ಭ್ರಷ್ಟಾಚಾರ ಸೇರಿದಂತೆ ಹಲವು ಆರೋಪಗಳ ಹಿನ್ನೆಲೆ ಜೈಲಿನಲ್ಲಿ ಮುದ್ದೆ ಮುರಿಯುತ್ತಿರುವ ಪಾಕಿಸ್ತಾನ ಪ್ರಧಾನಿ ಮಾಜಿ ಇಮ್ರಾನ್ ಖಾನ್ ಆರೋಗ್ಯದಲ್ಲಿ ಇತ್ತೀಚಿಗೆ ಏರುಪೇರು ಕಾಣಿಸಿಕೊಂಡಿದೆ. ಇದರ ನಡುವೆ ಆತನ ಬೆಂಬಲಿಗರು ಮಂಗಳವಾರ ಒಳಗಿಂದೊಳಗೆ ಇಸ್ಲಾಮಾಬಾದ್ ಮತ್ತು ರಾವಲ್ಪಂಡಿ ನಗರಗಳಲ್ಲಿ ಪ್ರತಿಭಟನೆ ನಡೆಸಲು ತಯಾರಿ ನಡೆಸುತ್ತಿದ್ದಾರೆ. ಸದ್ಯ ಜೈಲಿನಲ್ಲಿರುವ ಇಮ್ರಾನ್ ಖಾನ್ ಕಳೆದ ಒಂದು ತಿಂಗಳಿಂದ ಯಾರೊಂದಿಗೂ ಸಂಪರ್ಕ ಹೊಂದಿಲ್ಲ ಎನ್ನಲಾಗುತ್ತಿದೆ. ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಪಕ್ಷ ಆಯೋಜಿಸಿದ್ದ ಪೂರ್ವನಿಗದಿತ ಯೋಜನೆಗಳಿಗೆ ಪೋಲಿಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಎರಡೂ […]
ಶ್ರೀಲಂಕೆಗೆ ನೆರವಿನ ಪಾಕ್ ವಿಮಾನಕ್ಕೆ ಭಾರತದ ವಾಯುಪ್ರದೇಶ ಕ್ಷಿಪ್ರ ತೆರವು
ನವದೆಹಲಿ: ಪ್ರವಾಹ ಪೀಡಿತ ಶ್ರೀಲಂಕಾಗೆ ನೆರವು ನೀಡಲು ತನ್ನ ವಾಯುಪ್ರದೇಶ ಬಳಸಲು ಭಾರತ ಅನುಮತಿ ನೀಡಿಲ್ಲ ಎಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಈ ವರದಿಗಳೆಲ್ಲಾ ಸುಳ್ಳು ಎಂದು ಭಾರತ ತಳ್ಳಿಹಾಕಿದೆ.ಪಾಕಿಸ್ತಾನವು ಡಿಸೆಂಬರ್ 1 ರಂದು ಮಧ್ಯಾಹ್ನ 1 ಗಂಟೆಗೆ (IST) ಭಾರತೀಯ ವಾಯುಪ್ರದೇಶದ ಮೇಲೆ ಹಾರಲು ಅನುಮತಿ ಕೋರಿ ತನ್ನ ಔಪಚಾರಿಕ ವಿನಂತಿಯನ್ನು ಸಲ್ಲಿಸಿತು. ಶ್ರೀಲಂಕಾಕ್ಕೆ ಮಾನವೀಯ ನೆರವಿಗೆ ಸಂಬಂಧಿಸಿದ ವಿನಂತಿಯನ್ನು ಪರಿಗಣಿಸಿ, ಭಾರತ ಸರ್ಕಾರ ನಿನ್ನೆ ಸಂಜೆ […]
HR88B8888 ಭಾರತದ ಅತ್ಯಂತ ದುಬಾರಿ ಕಾರು ನೋಂದಣಿ ಸಂಖ್ಯೆ ಮರು ಹರಾಜಿಗೆ..!
ನವದೆಹಲಿ: ದುಬಾರಿ ಬೆಲೆಗೆ ಬಿಕರಿಯಾಗಿ ದಾಖಲೆ ನಿರ್ಮಿಸಿದ್ದ ಹರ್ಯಾಣ ನೋಂದಣಿ ಸಂಖ್ಯೆ ಮರು ಹರಾಜಿಗೆ ಆದೇಶಿಸಲಾಗಿದೆ.HR88 B8888 ಸಂಖ್ಯೆ ಈ ಹಿಂದೆ ಹರಾಜಿನಲ್ಲಿ ಬರೊಬ್ಬರಿ 1.17 ಕೋಟಿ ರೂಗೆ ಮಾರಾಟವಾಗಿತ್ತು. ಈ ಸಂಖ್ಯೆಗಾಗಿ ವ್ಯಾಪಕ ಪೈಪೋಟಿ ಎದುರಾಗಿತ್ತು. ಈ ಸಂಖ್ಯೆಯು ಅತಿ ಹೆಚ್ಚು ಅಂದರೆ 45 ಅರ್ಜಿಗಳನ್ನು ಸ್ವೀಕರಿಸಿತ್ತು. ಸಂಖ್ಯೆಯ ಮೂಲ ಬಿಡ್ಡಿಂಗ್ ಬೆಲೆಯನ್ನು 50,000 ರೂ. ಎಂದು ನಿಗದಿಪಡಿಸಲಾಗಿತ್ತು. ಇದು ಪ್ರತಿ ನಿಮಿಷ ಕಳೆದಂತೆ ಹೆಚ್ಚುತ್ತಲೇ ಇತ್ತು, ಮಧ್ಯಾಹ್ನ 12 […]
ಇಂದಿನ ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ಸ್ವಾರಸ್ಯವೇನು ಗೊತ್ತಾ….?
ಬೆಂಗಳೂರು : ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಮೊದಲ ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಇಂದು ಮಂಗಳವಾರ ಡಿಸಿಎಂ ಡಿ ಕೆ ಶಿವಕುಮಾರ್ ಅವರ ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಯುತ್ತಿದೆ.ಸಿಎಂ ಸಿದ್ದರಾಮಯ್ಯ ಇಂದು ಉಪಾಹಾರ ಕೂಟಕ್ಕೆ ಡಿ ಕೆ ಶಿವಕುಮಾರ್ ಅವರ ನಿವಾಸಕ್ಕೆ ಆಗಮಿಸಿದರು. ಅಲ್ಲಿ ಅವರನ್ನು ಡಿ ಕೆ ಶಿವಕುಮಾರ್ ಮತ್ತು ಅವರ ಸೋದರ ಮಾಜಿ ಸಂಸದ ಡಿ.ಕೆ. ಸುರೇಶ್ ಸ್ವಾಗತಿಸಿದರು. ನಿವಾಸದೊಳಗೆ ಡಿ ಕೆ […]
ಡಿಸಿಎಂ ನಿವಾಸಕ್ಕೆ ಬ್ರೇಕ್ ಫಾಸ್ಟ್ ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ- ಡಿಕೆ ಸೋದರರಿಂದ ಸ್ವಾಗತ
ಬೆಂಗಳೂರು: ಉಪಾಹಾರ ಕೂಟಕ್ಕೆ ಆಹ್ವಾನದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ ಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿದ್ದಾರೆ.ಡಿ ಕೆ ಶಿವಕುಮಾರ್ ಮತ್ತು ಅವರ ಸೋದರ ಮಾಜಿ ಸಂಸದ ಡಿ ಕೆ ಸುರೇಶ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆದರದಿಂದ ಸ್ವಾಗತಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಪುಟ ಸದಸ್ಯ, ಗೃಹ ಸಚಿವ ಡಾ ಪರಮೇಶ್ವರ್, “ನಮ್ಮ ನಾಯಕರು ಮತ್ತೆ ಉಪಾಹಾರಕ್ಕಾಗಿ ಒಟ್ಟಿಗೆ ಸೇರುತ್ತಿರುವುದು ಒಳ್ಳೆಯದು. ಕಳೆದ ಒಂದು ತಿಂಗಳಿನಿಂದ ನಡೆದ ಘಟನೆಗಳ […]
‘ಪುರುಷ ಸಲಿಂಗಿ’ಗಳಲ್ಲಿ ಹೆಚ್ಚಿನ ಏಡ್ಸ್ ರೋಗ: ಸಚಿವ ದಿನೇಶ್ ಗುಂಡೂರಾವ್
ಮೈಸೂರು: 2030 ರೊಳಗೆ ಏಡ್ಸ್ ಹರಡುವಿಕೆ ಶೂನ್ಯಕ್ಕೆ ಇಳಿಸಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದ ಜೆ ಕೆ ಅಡಿಟೋರಿಯಂನಲ್ಲಿ ನಡೆದ ವಿಶ್ವ ಏಡ್ಸ್ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ಇತ್ತೀಚಿಗೆ ಪುರುಷ ಸಲಿಂಗಿಗಳಲ್ಲಿ ಹೆಚ್ಚಿನ ರೋಗಿಗಳು ದಾಖಲಾಗುತ್ತಿರುವುದು ಆತಂಕ ಮೂಡಿಸುತ್ತದೆ. ಬೇರೆ ಬೇರೆ ಆಪ್ ಗಳ ಮೂಲಕ, ಹಾಸ್ಟೆಲ್ ಗಳಲ್ಲಿ ಸ್ನೇಹಿತರ ಸಂಪರ್ಕ ಸಾಧಿಸುತ್ತಾರೆ. ಇದನ್ನು ತಡೆಯಲು ಹೆಚ್ಚಿನ ಶ್ರಮ ಹಾಕಬೇಕಾದ ಅನಿವಾರ್ಯತೆ ಇದೆ ಎಂದರು. […]
ಚಿಕ್ಕಪೇಟೆ ಮಾಜಿ ಶಾಸಕ ಆರ್ ವಿ ದೇವರಾಜ್ ನಿಧನ
ಬೆಂಗಳೂರು: ಚಿಕ್ಕಪೇಟೆ ಮಾಜಿ ಶಾಸಕ ಆರ್ ವಿ ದೇವರಾಜ್ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.ತೀವ್ರ ಹೃದಯಾಘಾತದಿಂದ ಆರ್ ವಿ ದೇವರಾಜ್ ಅವರು ಮೈಸೂರಿನಲ್ಲಿ ನಿಧನರಾಗಿದ್ದಾರೆ ಎಂದು ಹೇಳಲಾಗಿದ್ದು, ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದಾಗ ಅವರಿಗೆ ಹೃದಯಾಘಾತವಾಗಿದೆ ಎಂದು ತಿಳಿದುಬಂದಿದೆ. ಕೂಡಲೇ 67 ವರ್ಷ ವಯಸ್ಸಿನ ಆರ್ ವಿ ದೇವರಾಜ್ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಅವರನ್ನು ಜಯದೇವ ಆಸ್ಪತ್ರೆಗೆ ರವಾನಿಸಿ ದಾಖಲಿಸಲಾಗಿತ್ತು ಎಂದು ಮಾಧ್ಯಮಗಳು ವರದಿ ಮಾಡಿವೆ.ಡಿಸೆಂಬರ್ […]
ಮತಗಳ್ಳತನ : ಆಳಂದಕ್ಕೆ ಬನ್ನಿ ನಿಮ್ಮ ವೆಚ್ಚ ನಾನೇ ಭರಿಸುತ್ತೇನೆ: ಬಿ.ಆರ್.ಪಾಟೀಲ್ ಸವಾಲು
ಕಲಬುರಗಿ: ಆಳಂದಕ್ಕೆ ಬನ್ನಿ ಮತಗಳ್ಳತನ ಸಾಬೀತು ಪಡಿಸುತ್ತೇನೆಂದು ‘ಮತಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ರಾಹುಲ್ ಗಾಂಧಿಗೆ ಪತ್ರ ಬರೆದಿರುವ ನ್ಯಾ. ಎಸ್.ಎನ್.ಧಿಂಗ್ರಾ, ನಿರ್ಮಲ್ ಕೌರ್ ಸೇರಿದಂತೆ 272 ಬುದ್ಧಿಜೀವಿಗಳಿಗೆ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ, ಆಳಂದ ಶಾಸಕ ಬಿ.ಆರ್.ಪಾಟೀಲ್ ಅವರು ಸೋಮವಾರ ಸವಾಲು ಹಾಕಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮತಗಳ್ಳತನ ಆರೋಪದ ಬಗ್ಗೆ ಪತ್ರ ಬರೆದಿರುವ ಬುದ್ಧಿಜೀವಿಗಳು, […]
ದಿತ್ವಾ ಚಂಡಮಾರುತದಿಂದ ಬೆಂಗಳೂರು ಕೂಲ್
ಬೆಂಗಳೂರು ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ದಿತ್ವಾ ಚಂಡಮಾರುತ ದುರ್ಬಲಗೊಂಡು ಆಳವಾದ ವಾಯುಭಾರ ಕುಸಿತವಾಗಿ ಉತ್ತರ ತಮಿಳುನಾಡು- ಪುದುಚೇರಿ ಕರಾವಳಿಯ ಕಡೆಗೆ ಗಂಟೆಗೆ 5 ಕಿಲೋಮೀಟರ್ ವೇಗದಲ್ಲಿ ಚಲಿಸುತ್ತಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಇದರಿಂದ ತಮಿಳುನಾಡಿನಲ್ಲಿ ಜೋರಾಗಿ ಮಳೆಯಾಗಲಿದ್ದು, ಬೆಂಗಳೂರು ತೀವ್ರ ತಾಪಮಾನ ಕುಸಿತವನ್ನು ಅನುಭವಿಸಲಿದೆ. ದಿತ್ವಾ ಚಂಡಮಾರುತ ಚೆನ್ನೈನಿಂದ ಪೂರ್ವ-ಆಗ್ನೇಯಕ್ಕೆ 50 ಕಿಲೋಮೀಟರ್ ಮತ್ತು ಪುದುಚೇರಿಯಿಂದ ಈಶಾನ್ಯಕ್ಕೆ 130 ಕಿಲೋಮೀಟರ್ ದೂರದಲ್ಲಿ ಕೇಂದ್ರೀಕೃತವಾಗಿದೆ. ಆಳವಾದ ವಾಯುಭಾರ ಕುಸಿತವು ಉತ್ತರ ತಮಿಳುನಾಡು-ಪುದುಚೇರಿ […]
ಸಮಗ್ರ ಘನ ತ್ಯಾಜ್ಯ ವಿಂಗಡಣಾ ಘಟಕದ 1ನೇ ಹಂತಕ್ಕೆ ಶಿಲಾನ್ಯಾಸ ನೆರವೇರಿಸಿದ ಡಿ.ಕೆ. ಶಿವಕುಮಾರ್. –
ಬೆಂಗಳೂರು ಕಸದ ಮಾಫಿಯಾದವರು ನನ್ನ ಮೇಲೆ ಏನೇನು ಗೂಬೆ ಕೂರಿಸಬೇಕೋ ಅದೆಲ್ಲವನ್ನು ಮಾಡಿದರು. ನಾನು ಯಾವುದಕ್ಕೂ ಬಗ್ಗದೆ, ಹೆದರದೆ 33 ಪ್ಯಾಕೇಜ್ ಮೂಲಕ ಕಸ ವಿಲೇವಾರಿಗೆ ತೀರ್ಮಾನಿಸಲಾಗಿದೆ. ಕಸದಿಂದ ರಸ ತೆಗೆಯಬೇಕು ಎಂದು ಹೊರಟಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಮಾಗಡಿ ಮುಖ್ಯ ರಸ್ತೆಯ ಕನ್ನಹಳ್ಳಿಯಲ್ಲಿ ಸಮಗ್ರ ಘನ ತ್ಯಾಜ್ಯ ವಿಂಗಡಣಾ ಘಟಕದ 1ನೇ ಹಂತಕ್ಕೆ ಸೋಮವಾರ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. ಈ 33 ಪ್ಯಾಕೇಜ್ಗೆ ನ್ಯಾಯಾಲಯ ಸಮ್ಮತಿ […]
ಭಾರತದಲ್ಲಿನ ಯುವ ಉದ್ಯಮಿಗಳಿಗೆ ಎಲಾನ್ ಮಸ್ಕ್ ಸಲಹೆ ಏನು?
ಬೆಂಗಳೂರು ಜೆರೋಧಾ ಆನ್ಲೈನ್ ಬ್ರೋಕರೇಜ್ ಕಂಪನಿಯ ಸ್ಥಾಪಕ ನಿಖಿಲ್ ಕಾಮತ್ ವಿಶ್ವದ ಅತ್ಯಂತ ಶ್ರೀಮಂತ ಟೆಕ್ ಉದ್ಯಮಿ ಎಲಾನ್ ಮಸ್ಕ್ ಅವರ ಜತೆ ನಡೆಸಿದ ಪಾಡ್ ಕಾಸ್ಟ್ ಸಾಮಾಜಿಕ ಜಾಲತಾಣದಲ್ಲಿ ಸಂಚಲನವನ್ನೇ ಸೃಷ್ಟಿಸಿದೆ. ಟೆಸ್ಲಾ ಸ್ಥಾಪಕ ಎಲಾನ್ ಮಸ್ಕ್ ಒಂದೂವರೆ ಗಂಟೆಗಳ ಕಾಲ ನಡೆಸಿದ ಈ ಪಾಡ್ ಕಾಸ್ಟ್ ಅನ್ನು 14 ಗಂಟೆಗಳಲ್ಲಿ 20 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ಪೀಪಲ್ ಬೈ WTF ಎಂಬ ಪಾಡ್ ಕಾಸ್ಟ್ನಲ್ಲಿ […]
ನಿಜವಾದ ನಾಯಿಗಳು ಸಂಸತ್ತಿನಲ್ಲಿ ಕುಳಿತಿವೆ: ರೇಣುಕಾ ಚೌಧರಿ ವಿವಾದಾತ್ಮಕ ಹೇಳಿಕೆ
ನವದೆಹಲಿ: ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ ಅವರು ಸೋಮವಾರ ಸಂಸತ್ತಿನ ಆವರಣಕ್ಕೆ ನಾಯಿಯೊಂದನ್ನು ಕರೆತಂದಿದ್ದು, ಅದು ಬೀದಿ ನಾಯಿ ಎಂದು ಹೇಳಿಕೊಂಡರು ಮತ್ತು ಅದಕ್ಕೆ ಇತರ ಸಂಸದರ ಆಕ್ಷೇಪಣೆಗಳನ್ನು ಸ್ಪಷ್ಟ ತಳ್ಳಿಹಾಕಿದರು. “ನಿಜವಾದ ನಾಯಿಗಳು ಸಂಸತ್ತಿನಲ್ಲಿ ಕುಳಿತಿವೆ” ಮತ್ತು ಪ್ರತಿದಿನ ಜನರನ್ನು ಕಚ್ಚುತ್ತಿವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದರು. ಇಂದು ಬೆಳಗ್ಗೆ ಸಂಸತ್ತಿಗೆ ಹೋಗುವಾಗ ನಾಯಿಮರಿಯನ್ನು ರಕ್ಷಿಸಿದೆ ಎಂದು ಚೌಧರಿ ವಿವರಿಸಿದರು. ರಸ್ತೆಯಲ್ಲಿ ಸ್ಕೂಟರ್-ಕಾರು ಡಿಕ್ಕಿ ಹೊಡೆದಿದ್ದರಿಂದ ಗಾಯಗೊಂಡಿದ್ದ ನಾಯಿಮರಿಯನ್ನು ಗಮನಿಸಿದ […]
SIR ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ; ಗದ್ದಲದ ನಡುವೆ ಮಣಿಪುರ GST ಮಸೂದೆ ಅಂಗೀಕಾರ
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಸೋಮವಾರ ಮತದಾರರ ಪಟ್ಟಿಯ ವಿವಾದಾತ್ಮಕ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷಗಳು ನಿರಂತರವಾಗಿ ಪ್ರತಿಭಟನೆ ನಡೆಸಿದ ಕಾರಣ ಲೋಕಸಭಾ ಕಲಾಪವನ್ನು ನಾಳೆಗೆ ಮುಂದೂಡಲಾಯಿತು. ಕೆಲಸದ ಒತ್ತಡದಿಂದಾಗಿ ಬೂತ್ ಮಟ್ಟದ ಅಧಿಕಾರಿಗಳ ಹೆಚ್ಚುತ್ತಿರುವ ಆತ್ಮಹತ್ಯೆಗಳು ಸೇರಿದಂತೆ ಹಲವಾರು ಸಮಸ್ಯೆಗಳನ್ನು ಪ್ರಸ್ತಾಪಿಸಿ ಚುನಾವಣಾ ಆಯೋಗ ಪ್ರಾರಂಭಿಸಿರುವ ಈ ಎಸ್ಐಆರ್ ಕುರಿತು ಚರ್ಚೆಗೆ ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ. ಇಂದು ಮಧ್ಯಾಹ್ನ 2.20 […]
KIITಯ ಮೊದಲ ವರ್ಷದ ಬಿಟೆಕ್ ವಿದ್ಯಾರ್ಥಿ ಆತ್ಮಹತ್ಯೆ; ಈ ವರ್ಷದಲ್ಲಿ ಮೂರನೇ ಸಾವು
ಭುವನೇಶ್ವರ: ಭುವನೇಶ್ವರದಲ್ಲಿರುವ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ(ಕೆಐಐಟಿ) ವಿಶ್ವವಿದ್ಯಾಲಯದ ಪ್ರಥಮ ವರ್ಷದ ಬಿಟೆಕ್ ವಿದ್ಯಾರ್ಥಿಯೊಬ್ಬ ತನ್ನ ಹಾಸ್ಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಇದು ಈ ವರ್ಷ ನಡೆದ ಮೂರನೇ ಘಟನೆಯಾಗಿದೆ. ರಾಜಧಾನಿಯ ಖಾಸಗಿ ವಿಶ್ವವಿದ್ಯಾಲಯದಲ್ಲಿ ಬಿಟೆಕ್ ಓದುತ್ತಿದ್ದ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬ ಭಾನುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. 19 ವರ್ಷದ ಮೃತ ವ್ಯಕ್ತಿ ಛತ್ತೀಸ್ಗಢ ಮೂಲದವನಾಗಿದ್ದು, ಕೆಐಐಟಿ ವಿಶ್ವವಿದ್ಯಾಲಯದಲ್ಲಿ ಕಂಪ್ಯೂಟರ್ ಸೈನ್ಸ್ ಪ್ರೋಗ್ರಾಂಗೆ ದಾಖಲಾಗಿದ್ದ ಎಂದು ಪ್ರಾಥಮಿಕ ತನಿಖೆಯಲ್ಲಿ […]

25 C