ತಪ್ಪೇ ಇಲ್ಲದಿದ್ದರೆ, ಕ್ಷಮೆ ಕೇಳುವುದಿಲ್ಲ: ಕಮಲ್ ಹಾಸನ್
ಕಮಲ್ ಹಾಸನ್ | PC : PTI ಚೆನ್ನೈ: ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ಹೇಳಿಕೆ ನೀಡುವ ಮೂಲಕ ವಿವಾದಕ್ಕೆ ಒಳಗಾಗಿರುವ ನಟ ಹಾಗೂ ರಾಜಕಾರಣಿ ಕಮಲ್ ಹಾಸನ್, ತನ್ನ ತಪ್ಪೇ ಇಲ್ಲದಿದ್ದರೆ ಕ್ಷಮೆ ಕೇಳುವುದಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ. ಚೆನ್ನೈಯಲ್ಲಿ ತನ್ನ ಮುಂದಿನ ಚಿತ್ರ ‘ಥಗ್ ಲೈಫ್’ನ ಪ್ರಚಾರ ಕಾರ್ಯಕ್ರಮದ ಸಂದರ್ಭ ಅವರು ನೀಡಿದ ಹೇಳಿಕೆಗೆ ಕರ್ನಾಟಕದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕನ್ನಡ ಪರ ಸಂಘಟನೆಗಳು ಅವರು ಕ್ಷಮೆ ಕೋರುವಂತೆ ಆಗ್ರಹಿಸಿವೆ. ಇಲ್ಲದಿದ್ದರೆ, ಅವರ ಚಿತ್ರವನ್ನು ಬಹಿಷ್ಕರಿಸುವುದಾಗಿ ಬೆದರಿಕೆ ಒಡ್ಡಿವೆ. ಕನ್ನಡಿಗರ ಈ ಆಕ್ರೋಶದ ಬಗ್ಗೆ ಪ್ರತಿಕ್ರಿಯಿಸಿರುವ ಮಕ್ಕಳ್ ನೀಧಿ ಮಯ್ಯಮ್ (ಎಂಎನ್ಎಂ)ನ ವರಿಷ್ಠ, ನಾನು ಈ ಹಿಂದೆ ಕೂಡ ಇಂತಹ ಬೆದರಿಕೆಗಳನ್ನು ಎದುರಿಸಿದ್ದೇನೆ. ಆದರೆ, ಅದರಿಂದ ವಿಚಲಿತನಾಗಿಲ್ಲ ಎಂದಿದ್ದಾರೆ. ‘‘ಈ ಹಿಂದೆ ಕೂಡ ನನಗೆ ಬೆದರಿಕೆ ಒಡ್ಡಲಾಗಿದೆ. ಆದರೆ, ಪ್ರೀತಿ ಯಾವಾಗಲೂ ಗೆಲ್ಲುತ್ತದೆ. ನಿರ್ದಿಷ್ಟ ಉದ್ದೇಶವನ್ನು ಹೊಂದಿರುವವರು ಮಾತ್ರ ನನ್ನ ಹೇಳಿಕೆಯನ್ನು ಬೇರೆ ರೀತಿಯಲ್ಲಿ ಅರ್ಥ ಮಾಡಿಕೊಳ್ಳುತ್ತಾರೆ’’ ಎಂದು ಅವರು ಹೇಳಿದ್ದಾರೆ. ಇದು ಪ್ರಜಾಪ್ರಭುತ್ವ. ನಾನು ಸಂವಿಧಾನ ಮತ್ತು ಕಾನೂನಿನಲ್ಲಿ ನಂಬಿಕೆ ಇರಿಸಿದವನು. ನನ್ನ ಪ್ರೀತಿ ಕರ್ನಾಟಕ, ಕನ್ನಡ, ತೆಲುಗು, ಮಲೆಯಾಳಂಗೆ ಇದ್ದೇ ಇದೆ ಎಂದು ಅವರು ತಿಳಿಸಿದ್ದಾರೆ. ತಾನು ಎಲ್ಲಾ ದಕ್ಷಿಣದ ಭಾಷೆಗಳು ಹಾಗೂ ಸಂಸ್ಕೃತಿಗೆ ಗೌರವ ನೀಡುತ್ತೇನೆ ಎಂದು ಸ್ಪಷ್ಟಪಡಿಸಿದ ಕಮಲ್ ಹಾಸನ್, ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ. ನಾನು ತಪ್ಪೆಸಗಿದ್ದೇನೆ ಎಂದು ಮನದಟ್ಟಾದರೆ ಮಾತ್ರ ಕ್ಷಮೆ ಕೇಳುತ್ತೇನೆ. ತಪ್ಪೆಸಗದಿದ್ದರೆ ಕ್ಷಮೆ ಕೇಳುವುದಿಲ್ಲ ಎಂದಿದ್ದಾರೆ.
ಪ್ರಜಾಪ್ರಗತಿ ಫಲಶೃತಿ : ಮೇಲ್ಸೇತುವೆ ಕಾಮಗಾರಿಗೆ ಶಾಸಕರಿಂದ ಭೂಮಿ ಪೂಜೆ
ನಾಯಕನಹಟ್ಟಿ : ಜಿಲ್ಲಾಧಿಕಾರಿ ಸ್ಥಳ ಪರಿಶೀಲನೆ ನಡೆಸಿದ್ದರು ಪೂರ್ಣವಾಗದ ರಸ್ತೆ ಕಾಮಗಾರಿ ಶೀಘ್ರ ಮೆಲ್ಸೇತುವೆ ಕಾಮಗಾರಿ ಆರಂಭಿಸಿ ಎಂಬ ತಲೆ ಬರಹದಡಿಯಲ್ಲಿ ಪ್ರಜಾಪ್ರಗತಿ ಸುದ್ಧಿ ಪ್ರಕಟಿಸಿದ ಬೆನ್ನಲೆ ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ ಮೇಲ್ಸೇತುವೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು ಸತತವಾಗಿ ೭ ಬಾರಿ ಶಾಸಕನಾಗಿದ್ದೇನೆ ನನಗೆ ಹಿಂದೆ ಬಂದವರು ಮಂತ್ರಿಗಳಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಹಲವರಿಗೆ ಸಚಿವ ಸ್ಥಾನ ನೀಡಲಾಗಿದೆ ಆದರೆ ಹಿರಿಯನಿದ್ದೇನೆ ೭ ಬಾರಿ ಗೆದ್ದರೂ ಸಚಿವ ಸ್ಥಾನ ನೀಡಲಿಲ್ಲವೆಂದು […]
ಚಿತ್ರನಟ ಕಮಲ್ ಹಾಸನ್ ಕ್ಷಮೆಯಾಚಿಸದೇ ಇದ್ದರೆ ಕಾನೂನು ಕ್ರಮ ಜರುಗಿಸಿ.
ನಾಯಕನಹಟ್ಟಿ : ತಮಿಳಿನಿಂದ ಕನ್ನಡ ಹುಟ್ಟಿತು ಎಂದು ಕನ್ನಡ ಭಾಷೆ ಬಗ್ಗೆ ತಮಿಳು ನಟ ಕಮಲ್ ಹಾಸನ್ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿರುವ ನಟ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಇಲ್ಲವಾದಲ್ಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಡಾ. ವಾಸುದೇವ್ಮೇಟಿ ಬಣ ಮತ್ತು ಕರವೇ ಪ್ರವೀಣ್ ಶೆಟ್ಟಿ ಬಣದ ಹೋಬಳಿ ಘಟಕ ಉಪತಹಶೀಲ್ದಾರ್ರವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಿದರು. […]
ಸಣ್ಣ, ಮಧ್ಯಮ ಕೈಗಾರಿಕೆಗಳ ಸಮಸ್ಯೆ ಬಗೆಹರಿಸಲು ನಮ್ಮ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ಬೆಂಗಳೂರು “ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಶಕ್ತಿ. ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿ ಅಗತ್ಯ ನೆರವು ನೀಡುವುದು ಸರ್ಕಾರಗಳ ಜವಾಬ್ದಾರಿ. ಹೀಗಾಗಿ ನಿಮ್ಮ ಸಮಸ್ಯೆ ಬಗೆಹರಿಸಲು ನಾವು ಬದ್ಧವಾಗಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಶುಕ್ರವಾರ ನಡೆದ ಇಂಡಿಯಾ ಎಂಎಸ್ಎಂಇ ಸಮಾವೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿ ಮಾತನಾಡಿದರು. “ನಿಮ್ಮ ಸಮಸ್ಯೆಗಳ ಬಗ್ಗೆ ನಮಗೆ ಅರಿವಿದೆ. ನಿಮಗೆ ಅಗತ್ಯವಾಗಿರುವ ವಿದ್ಯುತ್ […]
ಶಾಲಾ ಪ್ರಾರಂಭೋತ್ಸವಕ್ಕೆ ಮಾನ್ಯ ಶಾಸಕರಾದ ಎನ್. ವೈ. ಗೋಪಾಲಕೃಷ್ಣ ಅಧ್ಧೂರಿ ಚಾಲನೆ
ನಾಯಕನಹಟ್ಟಿ ಶಾಲಾ ಪ್ರಾರಂಭೋತ್ಸವಕ್ಕೆ ಮಾನ್ಯ ಶಾಸಕರಾದ ಎನ್. ವೈ. ಗೋಪಾಲಕೃಷ್ಣ ಅಧ್ಧೂರಿ ಚಾಲನೆ ಶುಕ್ರವಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜೋಗಿ ಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜೋಗಿ ಹಟ್ಟಿ ಶಾಲಾ ಪ್ರಾರಂಬೊತ್ಸವ ಕಾರ್ಯಕ್ರಮ ದಲ್ಲಿ ಸನ್ಮಾನ್ಯ ಶ್ರೀ ಎನ್ ವೈ ಗೋಪಾಲಕೃಷ್ಣ ಮೊಳಕಾಲ್ಮುರು ಶಾಸಕರು ಇವರು ಮಕ್ಕಳಿಗೆ ಪಠ್ಯ ಪುಸ್ತಕ ಹಾಗೂ ಸಮ ವಸ್ತ್ರ ಹಾಗೂ ಸಿಹಿ ವಿತರಣೆ ಮಾಡಿ ಮಕ್ಕಳಿಗೆ ಗುಲಾಬಿ ಹೂವು ನೀಡಿ ಮಕ್ಕಳನ್ನು ಶಾಲೆಗೆ ಬರಮಾಡಿಕೊಳ್ಳಲಾಯಿತು […]
ʼಕಣ್ಣಪ್ಪ’ ಸಿನಿಮಾದ ಹಾರ್ಡ್ಡ್ರೈವ್ ಕಳವು…..!
ಹೈದರಾಬಾದ್ ಪ್ರಭಾಸ್ ಅಕ್ಷಯ್ ಕುಮಾರ್, ಮೋಹನ್ಲಾಲ್ ಅಂಥಹಾ ಸ್ಟಾರ್ ನಟರು ಅತಿಥಿ ಪಾತ್ರದಲ್ಲಿ ನಟಿಸಿರುವ, ಮಂಚು ವಿಷ್ಣು ಮಂಚು ಮೋಹನ್ಬಾಬು, ಕನ್ನಡದ ನಟ ದೇವರಾಜ್ ಇನ್ನೂ ಹಲವಾರು ಪ್ರತಿಭಾವಂತ ನಟರು ನಟಿಸಿರುವ ನೂರಾರು ಕೋಟಿ ಬಜೆಟ್ನ ಪೌರಾಣಿಕ ಸಿನಿಮಾ ‘ಕಣ್ಣಪ್ಪ’ ಸಿನಿಮಾದ ಹಾರ್ಡ್ಡ್ರೈವ್ ಕಳುವಾಗಿದೆ. ಇದರಿಂದಾಗಿ ನೂರಾರು ಕೋಟಿ ಬಜೆಟ್ ಹಾಕಿ ನಿರ್ಮಿಸಿದ್ದ ಸಿನಿಮಾ ಕಳ್ಳರ ಪಾಲಾದಂತಾಗಿದೆ. ಹೈದರಾಬಾದ್ನ ಫಿಲಂ ನಗರ್ ಪೊಲೀಸ್ ಠಾಣೆಯಲ್ಲಿ ‘ಕಣ್ಣಪ್ಪ’ ಸಿನಿಮಾದ ನಿರ್ಮಾಪಕರು ದೂರು ದಾಖಲಿಸಿದ್ದಾರೆ. ಯಾರೋ ಕೆಲ […]
ನೀರಿನ ವಿಚಾರದಲ್ಲಿ ರಾಜಿಯಿಲ್ಲ: ಆಸಿಮ್ ಮುನೀರ್
ಇಸ್ಲಾಮಾಬಾದ್ ನೀರಿನ ವಿಚಾರದಲ್ಲಿ ಪಾಕಿಸ್ತಾನ ಎಂದೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪಾಕಿಸ್ತಾನ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಹೇಳಿದ್ದಾರೆ. ಏಕೆಂದರೆ ಇದು 24 ಕೋಟಿ ಜನರಿಗೆ ಸಂಬಂಧಿಸಿದ ವಿಷಯವಾಗಿದೆ ಎಂದರು. ಸಿಂಧೂ ನದಿ ನೀರು ವಿಚಾರದಲ್ಲಿ ಭಾರತದ ನಿರ್ಧಾರವನ್ನು ಉಲ್ಲೇಖಿಸಿದ ಮುನೀರ್, ಪಾಕಿಸ್ತಾನದ ಜನರಿಗೆ ಈ ನೀರಿನ ಹಕ್ಕಿದೆ ಎಂದು ಹೇಳಿದರು. ಇಂತಹ ಪರಿಸ್ಥಿತಿಯಲ್ಲಿ, 24 ಕೋಟಿ ಪಾಕಿಸ್ತಾನಿಗಳ ಈ ಮೂಲಭೂತ ಹಕ್ಕಿನ ಮೇಲೆ ಪಾಕಿಸ್ತಾನ ಸೇನೆ ಯಾವುದೇ ರಾಜಿ ಮಾಡಿಕೊಳ್ಳಲು ಅವಕಾಶ ನೀಡುವುದಿಲ್ಲ. […]
ಮತ್ತೊಂದು ಹೊಸ ಇತಿಹಾಸ ಬರೆದ RCB….!
ಬೆಂಗಳೂರು : ಫೈನಲ್ ಸೋತ ದಿನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೈನಲ್ಗೇರಿದೆ. ಅದು ಕೂಡ 9 ವರ್ಷಗಳ ಬಳಿಕ. 2016 ರ ಮೇ 29 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಎಸ್ಆರ್ಹೆಚ್ ತಂಡದ ನಾಯಕ ಡೇವಿಡ್ ವಾರ್ನರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಸನ್ರೈಸರ್ಸ್ ಹೈದರಾಬಾದ್ ತಂಡವು 16.2 […]
ಪಂಜಾಬ್ನಲ್ಲಿ ಪಟಾಕಿ ಕಾರ್ಖಾನೆ ಸ್ಫೋಟ, 4 ಮಂದಿ ಸಾವು….!
ಪಂಜಾಬ್ ಪಂಜಾಬ್ನ ಶ್ರೀ ಮುಕ್ತಸರ್ ಸಾಹಿಬ್ ಜಿಲ್ಲೆಯ ಲಂಬಿ ಗ್ರಾಮದ ಬಳಿ ಶುಕ್ರವಾರ ಪಟಾಕಿ ತಯಾರಿಕೆ ಮತ್ತು ಪ್ಯಾಕೇಜಿಂಗ್ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ವಲಸೆ ಕಾರ್ಮಿಕರು ಸಾವನ್ನಪ್ಪಿ, ಸುಮಾರು 25 ಜನರು ಗಾಯಗೊಂಡಿದ್ದಾರೆ.ಶ್ರೀ ಮುಕ್ತಸರ್ ಸಾಹಿಬ್ನ ಲಂಬಿ ಪ್ರದೇಶದ ಸಿಂಘಾವಲಿ-ಕೋಟ್ಲಿ ರಸ್ತೆಯಲ್ಲಿರುವ ಎರಡು ಅಂತಸ್ತಿನ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ.ಸ್ಫೋಟದ ನಂತರ, ಗಾಯಾಳುಗಳನ್ನು ಚಿಕಿತ್ಸೆಗಾಗಿ ಏಮ್ಸ್ ಭಟಿಂಡಾ ಆಸ್ಪತ್ರೆಗೆ ಕಳುಹಿಸಲಾಯಿತು. ಪರಿಸ್ಥಿತಿಯನ್ನು ನಿಯಂತ್ರಿಸಲು ಮತ್ತು ಬಲಿಪಶುಗಳಿಗೆ ಸಹಾಯ ಮಾಡಲು ಪೊಲೀಸರು ಮತ್ತು ತುರ್ತು ಸೇವೆಗಳು […]
ಯುಪಿಎ ಅವಧಿಯಲ್ಲಿ 6 ಸರ್ಜಿಕಲ್ ಸ್ಟ್ರೈಕ್ : ಕಾಂಗ್ರೆಸ್ ಫೋಸ್ಟ್ ನಲ್ಲಿ ಏನಿದೆ….?
ನವದೆಹಲಿ: ಭಾರತ ಮೊದಲ ಬಾರಿಗೆ ಸರ್ಜಿಕಲ್ ಸ್ಟ್ರೈಕ್ಸ್ ನಡೆಸಿದ್ದು 2016ರಲ್ಲಿ ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ಬಹಿರಂಗ ಹೇಳಿಕೆ ಇದೀಗ ಸ್ವಪಕ್ಷದವರನ್ನೇ ಮುಜುಗರಕ್ಕೀಡು ಮಾಡಿದೆ. ಇದೀಗ ಶಶಿ ತರೂರು ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದು, ಯಪಿಎ ಅವಧಿಯಲ್ಲಿ ಬರೋಬ್ಬರಿ ಆರು ಸರ್ಜಿಕಲ್ ಸ್ಟ್ರೈಕ್ ನಡೆದಿತ್ತು ಎಂದಿದೆ. ಆದರೆ ಕಾಂಗ್ರೆಸ್ ಹೇಳಿಕೆಯನ್ನು ತಳ್ಳಿ ಹಾಕಿರುವ ಬಿಜೆಪಿ ಇದೊಂದು ಶುದ್ಧ ಸುಳ್ಳು ಎಂದು ಘೋಷಿಸಿದೆ. ಶಶಿ ತರೂರ್ ಹೇಳಿಕೆಗೆ […]
ದಕ್ಷಿಣ ಕನ್ನಡದಲ್ಲಿ ಮಳೆ ಅನಾಹುತ : ಗುಡ್ಡ ಕುಸಿತ, ಬಾಲಕಿ ಸಾವು, ಶಾಲೆಗಳಿಗೆ ರಜೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದ್ದು , ಜನಜೀವನ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯಾದ್ಯಂತ ವರುಣ ನಾನಾ ಅವಾಂತರ ಸೃಷ್ಟಿಸಿದ್ದಾನೆ. ದೇರಳಕಟ್ಟೆ ಸಮೀಪದ ಮೊಂಟೆಪದವು ಕೋಡಿ ಎಂಬಲ್ಲಿ ಗುಡ್ಡ ಕುಸಿದು ಮನೆ ಮೇಲೆ ಕಾಂಪೌಡ್ ಗೋಡೆ ಬಿದ್ದ ಪರಿಣಾಮ ಬಾಲಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮತ್ತೊಂದೆಡೆ ಉಳ್ಳಾಲ ತಾಲೂಕಿನ 2 ಕಡೆ ಮನೆಗಳ ಮೇಲೆ ಗುಡ್ಡ ಕುಸಿದಿದೆ. ಕಾನಕರೆ ನಿವಾಸಿ ನೌಶಾದ್ ಎಂಬುವರ ಪುತ್ರಿ ನಹೀಮಾ (10) ಮೃತ ಬಾಲಕಿ. ನೌಶಾದ ಅವರ ಮನೆಯ […]
ಬೆಂಗಳೂರು: ಅಭಿಮಾನಿಗಳ ಬಹು ವರ್ಷಗಳ ಕನಸಾದ ಐಪಿಎಲ್ ಟ್ರೋಫಿಯನ್ನು ಈ ಬಾರಿ ಆರ್ಸಿಬಿ ತಂಡ ನನಸು ಮಾಡುವ ಸಾಧ್ಯತೆಯೊಂದು ಕಂಡು ಬಂದಿದೆ. ಗುರುವಾರ ನಡೆದಿದ್ದ ಪಂಜಾಬ್ ಕಿಂಗ್ಸ್ ವಿರುದ್ಧದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್ ಭರ್ಜರಿಯಾಗಿ ಗೆಲುವು ಸಾಧಿಸಿ 9 ವರ್ಷಗಳ ಬಳಿಕ ಫೈನಲ್ ಪ್ರವೇಶಿಸಿತ್ತು. ಹಿಂದಿನ ಐಪಿಎಲ್ ಅಂಕಿ ಅಂಶದ ಭವಿಷ್ಯ ನೋಡುವಾಗ ಆರ್ಸಿಬಿ ಈ ಬಾರಿ ಕಪ್ ಗೆಲ್ಲುವುದು ಖಚಿತ. ಪ್ಲೇ […]
ಖ್ಯಾತ ಸಾಹಿತಿ ಎಚ್ ಎಸ್ ವೆಂಕಟೇಶಮೂರ್ತಿ ನಿಧನ
ಬೆಂಗಳೂರು : ಕನ್ನಡದ ಗೀತ ಸಾಹಿತಿ, ಸಾಹಿತಿ, ಕವಿ ಕಥೆಗಾರ, ಸಂಭಾಷಣಕಾರ ಎಚ್ಎಸ್ ವೆಂಕಟೇಶಮೂರ್ತಿ ನಿಧನ ಹೊಂದಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಅವರ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. 1944ರ ಜೂನ್ 23ರಂದು ವೆಂಕಟೇಶಮೂರ್ತಿ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಹೊದಿಗೆರೆ ಎಂಬ ಹಳ್ಳಿಯಲ್ಲಿ ಜನಿಸಿದರು. ಅವರದ್ದು ಮಧ್ಯಮವರ್ಗದ ಕುಟುಂಬ. ಇವರು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿ, ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂಎ ಪದವಿ ಪಡೆದರು. ‘ಕನ್ನಡದಲ್ಲಿ ಕಥನ ಕವನಗಳು’ […]
ಬೇಸಿಗೆ ರಜೆಯಲ್ಲಿ ನಲಿದ ಮಕ್ಕಳು ಮತ್ತೆ ಶಾಲೆಯತ್ತ ಮುಖ…!
ಶಾಲಾ ಪ್ರಾರಂಭೋತ್ಸವ: ಚಿಣ್ಣರಿಗೆ ಭವ್ಯ ಸ್ವಾಗತ ಕೋರಿದ ಶಿಕ್ಷಕರು ತುಮಕೂರು: ಕಳೆದ ಒಂದೂವರೆ ತಿಂಗಳಿನಿಂದ ಬೇಸಿಗೆ ರಜೆಯಲ್ಲಿದ್ದ ಶಾಲೆಗಳು ಪುನರಾರಂಭಗೊಂಡಿದ್ದು, ಬೇಸಿಗೆರಜೆಯ ಖುಷಿಯಲ್ಲಿದ್ದ ಮಕ್ಕಳು ಶಾಲೆಗಳತ್ತ ಹೆಜ್ಜೆ ಹಾಕಿದರು.ಬೇಸಿಗೆ ರಜೆ ಬಳಿಕ ಆರಂಭವಾಗುತ್ತಿರುವ ಸರ್ಕಾರಿ ಶಾಲೆಗಳನ್ನು ವಿವಿಧ ಹೂವುಗಳಿಂದ ಅಲಂಕರಿಸಿ ಹಬ್ಬದ ರೀತಿಯಲ್ಲಿ ಶಾಲಾ ಪ್ರಾರಂಭೋತ್ಸವ ನಡೆಸಿ ವಿದ್ಯಾರ್ಥಿಗಳನ್ನು ಶಾಲೆಗಳಿಗೆ ಸ್ವಾಗತಿಸಲಾಯಿತು. ೨೦೨೫-೨೬ನೇ ಶೈಕ್ಷಣಿ ವರ್ಷದ ಮೊದಲ ದಿನವಾದ ಗುರುವಾರ ಶಾಲೆಗಳಲ್ಲಿ ಸಿಹಿಯೂಟ ಸಿದ್ದಪಡಿಸಿದ್ದು, ಮಧ್ಯಾಹ್ನದ ಬಿಸಿಯೂಟಕ್ಕೆ ವಿದ್ಯಾರ್ಥಿಗಳಿಗೆ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ […]
ಮಕ್ಕಳಲ್ಲಿ ಸಕಾರಾತ್ಮಕ ಬೆಳವಣಿಗೆ ಮೂಡಿಸುವುದು ಅಗತ್ಯ :ನಾಗರಾಣಿ.ಎನ್.ಎಸ್
ನಾಯಕನಹಟ್ಟಿ: ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡುವುದರಿಂದ ಮುಂದಿನ ದಿನಗಳಲ್ಲಿ ಭವ್ಯ ಶಿಲ್ಪಿಗಳಾಗುತ್ತಾರೆ.ಎಂದು ಸಿ.ಇ.ಓ & ಫೌಂಡರ್ ಆಫ್ ಸ್ಕೂನೊವೇಟ್ ದಾವಣಗೆರೆ ನಾಗರಾಣಿ.ಎನ್.ಎಸ್ ಹೇಳಿದರು. ಪಟ್ಟಣದ ಸ್ಕೂನೊವೇಟ್ ಅಕಾಡಮಿ ಶಾಲೆಯಲ್ಲಿ ಶಾಲೆಯ ಮೊದಲ ದಿನವಾದ ಗುರುವಾರ ವಿದ್ಯಾರ್ಥಿಗಳನ್ನು ಸಂತೋಷದಿಂದ ಆಗಮಿಸಿ ಶಿಕ್ಷಕಿಯರು ನಗು ಮುಖದೊಂದಿಗೆ ಆರ್ಟ್ & ಕ್ರಾಫ್ಟ್ ಹೂವು ನೀಡಿ ಮಕ್ಕಳನ್ನು ಬರಮಾಡಿಕೊಂಡರು. ನಂತರ ಮಾತನಾಡಿದ ಅವರು ಮಕ್ಕಳಿಗೆ ಸಕರಾತ್ಮಕ ಬೆಳವಣಿಗೆಯನ್ನು ಮೂಡಿಸುವುದು.ಶುಚಿತ್ವ, ಶಿಸ್ತುಬದ್ಧ ಶಿಕ್ಷಣವನ್ನು ಹೇಳಿಕೊಡುತ್ತೇವೆ.ನಮ್ಮ ಶಾಲೆಯಲ್ಲಿ 20 ಮಕ್ಕಳು ಮಾತ್ರ […]
ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ತಕ್ಷಣ ಜಾರಿಗೆ :ಡಾ||ಜಿ ಪರಮೇಶ್ವರ್
ಬೆಂಗಳೂರು ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ ಪ್ರದೇಶಗಳಾಗಿ ಪರಿಗಣಿಸಿ, ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಯಾವುದೇ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರತಿಸಾರಿ ಈರೀತಿ ಆಗುತ್ತಿದ್ದರೆ ಸುಮ್ಮನೆ ಕೂರಲು ಆಗುವುದಿಲ್ಲ. ಕಾನೂನನ್ನು ಮತ್ತಷ್ಟು ಬಿಗಿ ಮಾಡುತ್ತೇವೆ ಎಂದರು. ಕಳೆದ ಬಾರಿ ಘಟನೆ ನಡೆದಾಗ ಪರಿಸ್ಥಿತಿ ಅರ್ಥೈಸಿಕೊಂಡು, ಕೋಮು ಹಿಂಸೆ […]
ಸಾಮರ್ ಇಂಟರ್ನ್ಯಾಷನಲ್ ಇಸ್ಲಾಮಿಕ್ ಶಾಲೆಯ ಮಾನ್ಯತೆಯನ್ನು ರದ್ದು ಪಡಿಸಿ : ಕನ್ನಡ ರಕ್ಷಣಾ ವೇದಿಕೆ
ಬೆಂಗಳೂರು ಥಣಿಸಂದ್ರದ ಜಾಮೀಯಾ ಮಹಮದೀಯ ಮನ್ಸೂರ್ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಸಾಮರ್ ಇಂಟರ್ನ್ಯಾಷನಲ್ ಇಸ್ಲಾಮಿಕ್ ಶಾಲೆಯ ಮಾನ್ಯತೆಯನ್ನು ರದ್ದು ಪಡಿಸುವಂತೆ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಇಲಾಖೆಯ ಆಯುಕ್ತರಿಗೆ ಪ್ರಸ್ತಾವನೆ ಸಲ್ಲಿಸಿರುತ್ತಾರೆ. ಕನ್ನಡ ರಕ್ಷಣಾ ವೇದಿಕೆಯ ಚಾಮರಾಜಪೇಟೆ ವಿಭಾಗದ ಅಧ್ಯಕ್ಷ ಚಾಂದ್ ಪಾಷಾ ಅವರು ಸಲ್ಲಿಸಿದ್ದ ದೂರನ್ನು ಪರಿಶೀಲಿಸಿದ ಉಪ ನಿರ್ದೇಶಕರು ದಾಖಲೆಗಳನ್ನು ಸಲ್ಲಿಸುವಂತೆ ಸಾಮರ್ ಶಾಲೆಯ ಮುಖ್ಯಸ್ಥರಿಗೆ ನೋಟಿಸ್ ಜಾರಿ ಮಾಡಿದ್ದರು. ಎರಡು ಬಾರಿ ನೋಟಿಸ್ ಜಾರಿ ಮಾಡಿದ್ದರೂ ಶಾಲೆಯ […]
ಕೊರೋನಾ ಸೋಂಕಿಗೆ ಬೆಳಗಾವಿಯಲ್ಲಿ ಮೊದಲ ಬಲಿ…..!
ಬೆಳಗಾವಿ: ನಗರದ ತಾಲೂಕಿನ 70 ವರ್ಷದ ರೋಗಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಕೊರೊನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿಯಾಗಿದೆ.ರೋಗಿಯು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಪತ್ತೆಯಾಗಿತ್ತು. ಬಳಿಕ ಅವರನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ರೋಗಿಗೆ ಬುಧವಾರವಷ್ಟೇ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಪಾಸಿಟಿವ್ ಅಂತಾ ಗೊತ್ತಾದ ತಕ್ಷಣವೇ ರೋಗಿಯನ್ನು ಕೋವಿಡ್ ವಾರ್ಡ್ಗೆ ಶಿಫ್ಟ್ ಮಾಡಲಾಗಿತ್ತು. ಇವರು ವಯೋಸಹಜ ಕಾಯಿಲೆಯಿಂದಲೂ ಬಳಲುತ್ತಿದ್ದರು. ತಡರಾತ್ರಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ರೋಗಿಯ ಕುಟುಂಬಸ್ಥರು […]
ಕಮಲ್ ಹಾಸನ್ ವಿರುದ್ಧ ಕೇಸ್ ದಾಖಲು…..!
ಬೆಂಗಳೂರು: ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ ಎಂದು ಹಿರಿಯ ನಟ ಕಮಲ್ ಹಾಸನ್ ಅವರ ವಿವಾದಾತ್ಮಕ ಹೇಳಿಕೆ ಬಗ್ಗೆ ರಾಜ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಕನ್ನಡದ ಬಗ್ಗೆ ಬಾಲಿಶ ಹೇಳಿಕೆ ನೀಡಿ ಕನ್ನಡಿಗರನ್ನು ಕೆಣಕಿದ ಕಮಲ್ ಹಾಸನ್ ವಿರುದ್ಧ ಕೇಸ್ ದಾಖಲಿಸಲಾಗಿದೆ. ನಟ ಕಮಲ್ ಹಾಸನ್ ಬೆಂಗಳೂರಿನ ಆರ್.ಟಿ. ನಗರ ಪೊಲೀಸ್ ಠಾಣೆಗೆ ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ ಅವರು ದೂರು ಸಲ್ಲಿಕೆ ಮಾಡಿದ್ದಾರೆ. ಕನ್ನಡಿಗರ ಭಾವನೆಗೆ ನಟ ಕಮಲ್ ಹಾಸನ್ ಧಕ್ಕೆ ತಂದಿದ್ದಾರೆ. ಆತನ […]
ಕಾಂಗ್ರೆಸ್ ನಾಯಕರಿಗೆ ತಿರುಗೇಟು ಕೊಟ್ಟ ಸಚಿವ ರಿಜುಜು….!
ನವದೆಹಲಿ: ಆಪರೇಷನ್ ಸಿಂದೂರ್ನಲ್ಲಿ ಸರ್ಕಾರವನ್ನು ಬೆಂಬಲಿಸಿದ್ದಕ್ಕಾಗಿ ತಮ್ಮದೇ ಪಕ್ಷದಿಂದಲೂ ಟೀಕೆ ಎದುರಿಸುತ್ತಿರುವ ಕಾಂಗ್ರೆಸ್ನ ಶಶಿ ತರೂರ್ಗೆ ಬಿಜೆಪಿ ಪಾಳಯದಿಂದ ಅನಿರೀಕ್ಷಿತ ಬೆಂಬಲ ಸಿಕ್ಕಿದೆ. ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಶಶಿ ತರೂರ್ ಅವರನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ತರೂರ್ ಬಿಜೆಪಿ ವಕ್ತಾರರಾಗಿ ಮಾತನಾಡುತ್ತಿದ್ದಾರೆ ಎಂಬ ಕಾಂಗ್ರೆಸ್ನ ಟೀಕೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆಪರೇಷನ್ ಸಿಂದೂರ್ ಅನ್ನು ವಿವರಿಸಲು ಕೇಂದ್ರವು ಪ್ರಮುಖ ರಾಷ್ಟ್ರಗಳಿಗೆ ಕಳುಹಿಸಿರುವ ಸರ್ವಪಕ್ಷ ತಂಡಗಳಿಂದ ಕಾಂಗ್ರೆಸ್ ಏನನ್ನು ನಿರೀಕ್ಷೆ […]
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ : ಹ್ಯಾಟ್ರಿಕ್ ಹೀರೋ ಹೇಳಿದ್ದಾದರೂ ಏನು….?
ಬೆಂಗಳೂರು: ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ ಎಂದು ಹಿರಿಯ ನಟ ಕಮಲ್ ಹಾಸನ್ ಅವರ ವಿವಾದಾತ್ಮಕ ಹೇಳಿಕೆ ಬಗ್ಗೆ ರಾಜ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಅದರಲ್ಲೂ ಕನ್ನಡದ ನಟ ಶಿವರಾಜ್ ಕುಮಾರ್ ಉಪಸ್ಥಿತರಿದ್ದ ಕಾರ್ಯಕ್ರಮದಲ್ಲೇ ಕಮಲ್ ಹಾಸನ್ ಈ ಹೇಳಿದ್ದರು. ಹೀಗಿದ್ದರೂ ಶಿವಣ್ಣ ಏನೂ ಹೇಳದೇ ಸುಮ್ಮನೆ ಕುಳಿತಿದ್ದರು ಎಂಬುದು ಹಲವರ ಅಸಮಾಧಾನಕ್ಕೂ ಕಾರಣವಾಗಿತ್ತು. ಇದೀಗ ವಿವಾದಾತ್ಮಕ ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ಬಗ್ಗೆ ನಟ ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮದವರ […]
ಶೋಪಿಯಾನ್ನಲ್ಲಿ ಇಬ್ಬರು ಲಷ್ಕರ್ ಉಗ್ರರ ಬಂಧನ….!
ಶ್ರೀನಗರ: ಪಹಲ್ಗಾಮ್ ದಾಳಿಯ ನಂತರ ಭಯೋತ್ಪಾದನೆ ವಿರುದ್ಧ ಸಶಸ್ತ್ರ ಪಡೆಗಳು ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಕಾಶ್ಮೀರದಾದ್ಯಂತ ಉಗ್ರರಿಗಾಗಿ ಸೇನೆ ಶೋಧ ನಡೆಸುತ್ತಿದೆ. ಶೋಪಿಯಾನ್ನಲ್ಲಿ ಸೇನೆ, ಪೊಲೀಸರು ಮತ್ತು ಸಿಆರ್ಪಿಎಫ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರನ್ನು ಬಂಧಿಸಲಾಗಿದೆ. ಬಂಧಿತರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶ ಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಬಂಧಿತರಿಂದ ಎರಡು ಎಕೆ -56 ರೈಫಲ್ಗಳು, ನಾಲ್ಕು ಮ್ಯಾಗಜೀನ್ಗಳು, ಎರಡು ಹ್ಯಾಂಡ್ ಗ್ರೆನೇಡ್ಗಳು ಮತ್ತು ಮದ್ದುಗುಂಡುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. 5,400 ರೂ. ಮೌಲ್ಯದ ನಗದು […]
ಬಿಎಂಟಿಸಿಯಿಂದ ‘ದಿವ್ಯ ದರ್ಶನ’…..!
ಬೆಂಗಳೂರು ಕರ್ನಾಟಕ ರಾಜಧಾನಿ ಬೆಂಗಳೂರಿನಪ್ರಸಿದ್ದ ದೇವಾಲಯಗಳ ದರ್ಶನಕ್ಕಾಗಿ ಸಾರ್ವಜನಿಕರಿಗೆ ಬಿಎಂಟಿಸಿ ಹೊಸ ವಿಕೇಂಡ್ ಟೂರ್ ಪ್ಯಾಕೇಜ್ ಘೋಷಣೆ ಮಾಡಿದೆ. ‘ದಿವ್ಯ ದರ್ಶನ’ ಹೆಸರಿನಲ್ಲಿ ಎಸಿ ಬಸ್ ಮೂಲಕ ಒಂದೇ ದಿನ ಬೆಂಗಳೂರಿನ 8 ಪ್ರಸಿದ್ಧ ದೇಗುಲಗಳ ವೀಕ್ಷಣೆಗೆ ಅವಕಾಶ ನೀಡಲಾಗಿದೆ. ದೇವಾಲಯಗಳ ವೀಕ್ಷಣೆಯ ‘ಒನ್ ಡೇ ಟೆಂಪಲ್ ಟೂರ್’ ಯೋಜನೆಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಬುಧವಾರ ಚಾಲನೆ ನೀಡಿದ್ದಾರೆ. ಬಿಎಂಟಿಸಿ ‘ದಿವ್ಯ ದರ್ಶನ’ದಲ್ಲಿ ಯಾವೆಲ್ಲ ದೇಗುಲ? ಮೈಸೂರು ರಸ್ತೆಯಲ್ಲಿರುವ ಗಾಳಿ ಆಂಜನೇಯ ಸ್ವಾಮಿ ದೇಗುಲ […]
ಕೊರಟಗೆರೆ ಪೊಲೀಸರ ಮಿಂಚಿನ ಕಾರ್ಯಾಚರಣೆ: 2 ಗಂಟೆಯಲ್ಲಿ ದರೋಡೆಕೊರರ ಹೆಡಮುರಿ ಕಟ್ಟಿದ ಪೊಲೀಸರು….
ಕೊರಟಗೆರೆ:- ಮೈಕ್ರೋ ಫೈನಾನ್ಸ್ ನವದಿಂದ 4.5 ಲಕ್ಷ ರೂಪಾಯಿ ರಸ್ತೆ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆ ಮಾಡಿದ ದರೋಡೆಕೋರರನ್ನ ಕೊರಟಗೆರೆ ಪೊಲೀಸ್ ನವರು ದರೋಡೆಯಾದ 2 ಗಂಟೆಯಲ್ಲಿ ಎಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಕೊರಟಗೆರೆ ತಾಲೂಕಿನ ಹೊರವಲಯದ ಹಂಚಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹರಯ್ಯರಪ್ಪನಪಾಳ್ಯ ಬಳಿ ಈ ದರೋಡೆ ನಡೆದಿದ್ದು, ಸುಂದರ್ ಎಂಬುವ ವ್ಯಕ್ತಿ 4.5 ಲಕ್ಷ ಫೈನಾನ್ಸ್ ಅಮೌಂಟ್ ತೆಗೆದುಕೊಂಡು ದ್ವಿಚಕ್ರವಾಹನದಲ್ಲಿ ಹೋಗುತ್ತಿರುವ ಸಂದರ್ಭದಲ್ಲಿ ಕಾರಿನಲ್ಲಿ ಅಡ್ಡಗಟ್ಟಿ ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಸಿ ಮಿಂಚಿನ […]
ಆಯ್ಕೆ ಮಾಡಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ
ನಾಯಕನಹಟ್ಟಿ : ನನ್ನನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷನಾಗಿ ಆಯ್ಕೆ ಮಾಡಿದಂತಹ ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ ತಳಕು ಮತ್ತು ನಾಯಕನಹಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ರೆಡ್ಡಿ ಗ್ರಾಮ ಪಂಚಾಯಿತಿ ಸರ್ವ ಸದಸ್ಯರುಗಳಿಗೆ, ಕಾಂಗ್ರೆಸ್ ಪಕ್ಷದ ಮುಖಂಡರುಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ನೂತನ ಬೇಡರೆಡ್ಡಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅರುಣ್ಕುಮಾರ್.ಕೆ ಹೇಳಿದ್ದಾರೆ. ಸಮೀಪದ ತಳಕು ಹೋಬಳಿಯ ಬೇಡರೆಡ್ಡಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ತೆರವಾದ ಹಿನ್ನಲೆಯಲ್ಲಿ ಚಳ್ಳಕೆರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣ […]
ನಮ್ಮ ಬೇಡಿಕೆಗಳನ್ನು ರಾಜ್ಯ ಸರ್ಕಾರ ಹಿಡೇರಿಸುತ್ತಿಲ್ಲ:ಲವ
ನಾಯಕನಹಟ್ಟಿ : ನಮ್ಮ ಬೇಡಿಕೆಗಳನ್ನು ರಾಜ್ಯ ಸರ್ಕಾರ ಹಿಡೇರಿಸುತ್ತಿಲ್ಲ ಎಂದು ಸರ್ಕಾರಿ ಪೌರಸೇವ ನೌಕರರ ಜಿಲ್ಲಾಧ್ಯಕ್ಷರಾದ ಲವ ಆರೋಪಿಸಿದ್ದಾರೆ. ಪಟ್ಟಣ ಪಂಚಾಯಿತಿ ಕಛೇರಿ ಮುಂಭಾಗದಲ್ಲಿ ವಿವಿಧ ಬೇಡಿಕೆಗಳನ್ನು ಹಿಡೇರಿಸುವಂತೆ ಪಟ್ಟಣ ಪಂಚಾಯಿತಿ ಸಿಬ್ಬಂದಿ ಹಾಗೂ ಪೌರಕಾರ್ಮಿಕರು ಅನರ್ದಿಷ್ಟ ಧರಣಿ ಸತ್ಯಗ್ರಹ ಎರಡನೇ ದಿನದ ಮುಷ್ಕರ ಆರಂಭಿಸಿದ್ದಾರೆ. ನಂತರ ಮಾತನಾಡಿದ ಅವರು ನಾಯಕನಹಟ್ಟಿ ಪಂಚಾಯಿತಿ ಸರ್ಕಾರಿ ನೌಕರರಿಗೆ, ಸಿಬ್ಬಂದಿಗಳಿಗೆ ಬೆಂಬಲ ಸೂಚಿಸಿದರು. ಕಂಪ್ಯೂಟರ್ ಅಪರೇಟರ್ಗಳಿಗೆ, ಪೌರಕಾರ್ಮಿಕರಿಗೆ, ಹೊರಗುತ್ತಿಗೆ ನೌಕರರನ್ನು ಪರ್ಮನೆಂಟ್ […]
ಕರ್ನಾಟಕದಲ್ಲಿ ಬ್ಯಾನ್ ಆಗಲಿದೆಯೇ ಕಮಲ್ ಹಾಸನ್ ‘ಥಗ್ ಲೈಫ್’ ……..?
ಬೆಂಗಳೂರು : ಕಮಲ್ ಹಾಸನ್ ಕನ್ನಡ ಭಾಷೆಯ ಬಗ್ಗೆ ನೀಡಿರುವ ಹೇಳಿಕೆ ವಿವಾದ ಉಂಟು ಮಾಡಿದೆ. ಅವರ ನಟನೆಯ ‘ಥಗ್ ಲೈಫ್’ ಸಿನಿಮಾದ ಆಡಿಯೋ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕಮಲ್ ಹಾಸನ್, ‘ತಮಿಳಿನಿಂದಲೇ ಕನ್ನಡ ಜನಿಸಿದ್ದು’ ಎಂದಿದ್ದರು. ಕಮಲ್ರ ಈ ಹೇಳಿಕೆ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ದು, ಕೆಲ ಕನ್ನಡಪರ ಸಂಘಟನೆಗಳು ಕಮಲ್ ಅವರ ಹೇಳಿಕೆಯನ್ನು ಖಂಡಿಸಿವೆ. ಇದರ ಜೊತೆಗೆ ಕಮಲ್ ನಟನೆಯ ‘ಥಗ್ ಲೈಫ್’ ಸಿನಿಮಾವನ್ನು ಕರ್ನಾಟಕದಲ್ಲಿ ನಿಷೇಧಿಸಬೇಕು ಎಂಬ ಒತ್ತಾಯವೂ ಜೋರಾಗಿ ಕೇಳಿ ಬರುತ್ತಿದೆ. […]
ರಾಜ್ಯಸಭೆಗೆ ಕಮಲ್ ಹಾಸನ್….: ಯಾವ ಪಕ್ಷ ಬೆಂಬಲಿಸುತ್ತಿದೆ ಗೊತ್ತಾ….?
ತಮಿಳುನಾಡು : ನಟ ಕಮಲ್ ಹಾಸನ್ ಅವರು ಸದ್ಯ ಸಾಕಷ್ಟು ಚರ್ಚೆಯಲ್ಲಿದ್ದಾರೆ. ಕನ್ನಡದ ಬಗ್ಗೆ ಅವರು ನೀಡಿದ ದೋಷಪೂರಿತ ಹೇಳಿಕೆ ಸರಿಯಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಹೀಗಿರುವಾಗಲೇಕಮಲ್ ಹಾಸನ್ ಅವರು ರಾಜ್ಯಸಭೆ ಪ್ರವೇಶಿಸಲು ರೆಡಿ ಆಗಿದ್ದಾರೆ. ಜೂನ್ 19ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ತಮಿಳುನಾಡಿನ ಡಿಎಂಕೆ ಪಕ್ಷ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಪಕ್ಷದ ಮೈತ್ರಿ ಕೂಟದ ಕಮಲ್ ಹಾಸನ್ ಹೆಸರು ಕೂಡ ಇದೆ. ಡಿಎಂಕೆ ಬಿಡುಗಡೆ ಮಾಡಿರುವ […]
ಭಾರತದ ಮನವಿ ಮೇರೆಗೆ ಇಂಟರ್ಪೋಲ್ನಿಂದ ಸಿಲ್ವರ್ ನೊಟೀಸ್ ; ಆರೋಪಿ ಯಾರು?
ನವದೆಹಲಿ: ವೀಸಾ ವಂಚನೆ ಆರೋಪ ಎದುರಿಸುತ್ತಿರುವ ಫ್ರಾನ್ಸ್ ರಾಯಭಾರಿ ಕಚೇರಿ ಮಾಜಿ ಅಧಿಕಾರಿ ಶುಭಂ ಶೋಕೀನ್ಗೆ ಸಂಬಂಧಿಸಿದಂತೆ ಇಂಟರ್ಪೋಲ್ ಸಿಲ್ವರ್ ನೊಟೀಸ್ ಜಾರಿಗೊಳಿಸಿದೆ. ಜಗತ್ತಿನಾದ್ಯಂತ ಶೋಕೀನ್ಗೆ ಸಂಬಂಧಿಸಿದ ಆಸ್ತಿ ಪತ್ತೆ ಹಚ್ಚುವ ಸಲುವಾಗಿ ಭಾರತದ ಮನವಿಯನ್ನು ಪುರಸ್ಕರಿಸಿರುವ ಇಂಟರ್ಪೋಲ್ ಮೊದಲ ಸಿಲ್ವರ್ ನೊಟೀಸ್ ಜಾರಿಗೊಳಿಸಿದೆ. ಜಗತ್ತಿನಾದ್ಯಂತ ಅಕ್ರಮ ಆಸ್ತಿಗಳ ವಿವರ ಪಡೆಯುವ ಸಲುವಾಗಿ ಇಂಟರ್ಪೋಲ್ ಕೆಲವು ತಿಂಗಳುಗಳ ಹಿಂದೆಯಷ್ಟೇ ಪರಿಚಯಿಸಿದ ನೊಟೀಸ್ ಇದಾಗಿದೆ. ಇದರಲ್ಲಿ ಭಾಗಿಯಾಗಿರುವ ದೇಶಗಳಲ್ಲಿ ಭಾರತ ಕೂಡ ಒಂದಾಗಿದೆ. […]
ದಿಲೀಪ್ ಕುಮಾರ್ ಪ್ರಶ್ನೆಗೆ ಶ್ರೀನಿವಾಸ್ ಪ್ರತ್ಯುತ್ತರ….!
ಗುಬ್ಬಿ: ನನಗೆ ಮತ ಹಾಕಿದ್ದಾನಾ, ಅವನ ಹೋರಾಟ ಜನಪರವಾಗಿ ಮಾಡಿಕೊಳ್ಳಲಿ. ಅವರ ಪಕ್ಷದ ಸಂಸದರನ್ನು ಮೊದಲು ಕರೆಯಲಿ. ಅದನ್ನು ಬಿಟ್ಟು ನನ್ನ ಬಗ್ಗೆ ಯಾಕೆ ಮಾತನಾಡಬೇಕು. ಅವನು ಹೇಳಿದ ಅಂತ ರಾಜೀನಾಮೆ ಕೊಡಲು ಸಾಧ್ಯವಿಲ್ಲ. ನನ್ನ ಜನ ಕೇಳಿದ್ರೆ ಕೊಡ್ತೀನಿ ಅಷ್ಟೇ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಅವರು ಬಿಜೆಪಿ ಮುಖಂಡ ದಿಲೀಪ್ ಕುಮಾರ್ ಹೇಳಿಕೆಗೆ ಖಡಕ್ ಪ್ರತ್ಯುತ್ತರ ಕೊಟ್ಟರು. ತಾಲ್ಲೂಕಿನ ನಿಟ್ಟೂರು ಗ್ರಾಮದಲ್ಲಿ ನಡೆದ ಪಂಚಾಯತ್ ರಾಜ್ ಇಲಾಖೆಯ 50 ಲಕ್ಷ […]
ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದಾಗಲೇ ಯುವಕ ಕುಸಿದುಬಿದ್ದು ಸಾವು…..!
ಕಲಬುರಗಿ: ಇತ್ತೀಚೆಗೆ ಚಿಕ್ಕ ವಯಸ್ಸಿನವರಲ್ಲೂ ಆತಂಕಕಾರಿ ಎನ್ನುವಷ್ಟು ಸಂಖ್ಯೆಯಲ್ಲಿ ಹೃದಯಾಘಾತ , ಹೃದಯ ಸ್ತಂಭನದಿಂದ ಸಾವು ಉಂಟಾಗುತ್ತಿದೆ. ಇದೀಗ ಕಲಬುರಗಿಯಲ್ಲಿ ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುತ್ತಲೇ ಯುವಕನೊಬ್ಬ ಕುಸಿದು ಬಿದ್ದು ಸಾವನಪ್ಪಿದ್ದಾನೆ. ಕಲಬುರಗಿ ತಾಲ್ಲೂಕಿನ ಹತಗುಂದಾ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಮೆರವಣಿಗೆಯಲ್ಲಿ ನೃತ್ಯ ಮಾಡುತ್ತಿದ್ದ ಯುವಕ ಕುಸಿದುಬಿದ್ದು ಮೃತಪಟ್ಟಿದ್ದಾನೆ. ಮೃತ ಯುವಕನನ್ನು ಯಳವಂತಗಿ (ಕೆ) ಗ್ರಾಮದ ನಿವಾಸಿ ಸಚಿನ್ ಪರಮೇಶ್ವರ ಮಾನೆ (22) ಎಂದು ಗುರುತಿಸಲಾಗಿದೆ. ಘಟನೆ ಕುರಿತು ಸಬರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ […]
ಉಡಾವಣೆಗೊಂಡ ಕೆಲವೇ ನಿಮಿಷದಲ್ಲಿ ಸ್ಟಾರ್ಶಿಪ್ ರಾಕೆಟ್ ಸ್ಫೋಟ…!
ವಾಷಿಂಗ್ಟನ್: ಗಗನಯಾತ್ರಿಗಳನ್ನು ಚಂದ್ರ, ಮಂಗಳ ಸೇರಿದಂತೆ ಅದರಾಚೆಗಿನ ಗ್ರಹಗಳೆಡೆಗೆ ಕಳುಹಿಸಲು ವಿನ್ಯಾಸಗೊಳಿಸಲಾದ ಹಾಗೂ ಇದುವರೆಗೆ ನಿರ್ಮಿಸಲಾದ ಅತ್ಯಂತ ಶಕ್ತಿಶಾಲಿ ರಾಕೆಟ್ ಸ್ಟಾರ್ಶಿಪ್ ಉಡಾವಣೆಗೊಂಡು ಕೆಲವೇ ಕ್ಷಣಗಳಲ್ಲಿ ವಿಫಲಗೊಂಡಿದೆ. ಮಂಗಳವಾರ ಟೆಕ್ಸಾಸ್ನಿಂದ ತನ್ನ ಒಂಬತ್ತನೇ ಸಿಬ್ಬಂದಿರಹಿತ ಪರೀಕ್ಷಾ ಉಡಾವಣೆಯಲ್ಲಿ ಬಾಹ್ಯಾಕಾಶಕ್ಕೆ ಹಾರಿತು. ಆದರೆ ಬಾಗಿಲಿನ ಅಸಮರ್ಪಕ ಕಾರ್ಯ ಮತ್ತು ಇಂಧನ ಸೋರಿಕೆಯಿಂದಾಗಿ ಮಿಷನ್ ವಿಫಲವಾಯಿತು. ಯಾವುದೇ ಗಾಯಗಳು ವರದಿಯಾಗಿಲ್ಲವಾದರೂ, ಚಂದ್ರ ಮತ್ತು ಮಂಗಳ ಗ್ರಹಕ್ಕೆ ಗಗನಯಾತ್ರಿಗಳನ್ನು ಕಳುಹಿಸುವ ಎಲೋನ್ ಮಸ್ಕ್ ಅವರ ಮಹತ್ವಾಕಾಂಕ್ಷೆಯ ಯೋಜನೆಗಳಿಗೆ ಇದು […]
ಮಾಜಿ TTD ಅಧ್ಯಕ್ಷನ ಮೊಮ್ಮಗನ ಪುಂಡಾಟ : ದೂರು ದಾಖಲು
ಬೆಂಗಳೂರು: ಬೆಂಗಳೂರಿನಲ್ಲಿರುವ ಶಾಂಗ್ರಿ-ಲಾ ಹೋಟೆಲ್ನಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗೀತಾ ವಿಷ್ಣು ವಿರುದ್ಧ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈತ ತಿರುಮಲ ತಿರುಪತಿ ದೇವಸ್ಥಾನದ ಮಾಜಿ ಅಧ್ಯಕ್ಷ ಮತ್ತು ಮಾಜಿ ಸಂಸದ ಡಿ ಕೆ ಆದಿಕೇಶವುಲು ನಾಯ್ಡು ಅವರ ಮೊಮ್ಮಗ. ಮೇ 19ರಂದು ವಿಷ್ಣು (35) ತನ್ನ ಮೇಲೆ ಹಲ್ಲೆ ನಡೆಸಿ, ತಳ್ಳಿ, ಬೆನ್ನಿಗೆ ಗಾಯಗೊಳಿಸಿದ್ದಾರೆ ಎಂದು ಉಮರ್ ನಗರ ನಿವಾಸಿ ಮತ್ತು ಹೋಟೆಲ್ನ ಕ್ಲಬ್ನ ಸದಸ್ಯ ಸೈಯದ್ ಸಾದಿಕ್ ಎಚ್ […]
ಲಕ್ನೋ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹಂಗಾಮಿ ನಾಯಕ ಜಿತೇಶ್ ಶರ್ಮಾ ಅವರ ಅಜೇಯ 85 ರನ್ಗಳ (33 ಎಸೆತ) ಅಮೋಘ ಆಟದಿಂದ ಮಂಗಳವಾರ ನಡೆದಿದ್ದ ಐಪಿಎಲ್ ನ ಕೊನೆಯ ಲೀಗ್ ಪಂದ್ಯದಲ್ಲಿ ಆರ್ಸಿಬಿ ಆರು ವಿಕೆಟ್ಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿ ಮೊದಲ ಕ್ವಾಲಿಫೈಯರ್ ಆಡುವ ಅವಕಾಶ ಪಡೆಯಿತು. ಗೆಲುವಿನ ಮೂಲಕ ಆರ್ಸಿಬಿ ಐಪಿಎಲ್ ಇತಿಹಾಸದಲ್ಲಿ ನೂತನ ದಾಖಲೆಯೊಂದನ್ನು ನಿರ್ಮಿಸಿದೆ. ಲಕ್ನೋ ವಿರುದ್ಧದ ಗೆಲುವಿನೊಂದಿಗೆ ಆರ್ಸಿಬಿ ಹಾಲಿ ಆವೃತ್ತಿಯಲ್ಲಿ […]
ನಾಳೆಯಿಂದ ಶಾಲಾರಂಭ : ಪ್ರಾರಂಭೋತ್ಸವಕ್ಕೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ
ಬೆಂಗಳೂರು: 2025-26ನೇ ಶೈಕ್ಷಣಿಕ ವರ್ಷದ ತರಗತಿಗಳು ಮೇ 29ರಿಂದ ಆರಂಭವಾಗಲಿವೆ. ಇದಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಾರಂಭೋತ್ಸವ, ಸ್ವಚ್ಛತೆ, ಸಿಹಿಯೂಟದ ಜೊತೆಗೆ ಬಿಸಿಯೂಟ, ಕ್ಷೀರಭಾಗ್ಯ, ಆಹಾರ ಪದಾರ್ಥಗಳ ಪರಿಶೀಲನೆ, ನೀರಿನ ಟ್ಯಾಂಕ್ ಮತ್ತಿತರ ವ್ಯವಸ್ಥೆಗಳ ಸ್ವಚ್ಛತೆ ಹಾಗೂ ಸುರಕ್ಷತೆ ಇತ್ಯಾದಿಗಳಿಗೆ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿ ಹಾಗೂ ಮುಖ್ಯ ಶಿಕ್ಷಕರಿಗೆ ಪ್ರಮುಖ ಸೂಚನೆಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ನೀಡಿದೆ. 1) ಶಾಲೆಗಳಲ್ಲಿ ಪಿ.ಎಂ.ಪೋಷಣ್ (ಮಧ್ಯಾಹ್ನ ಉಪಾಹಾರ ಯೋಜನೆ) ಮತ್ತು ಕ್ಷೀರಭಾಗ್ಯ ಯೋಜನೆಯನ್ನು ರಾಜ್ಯದ ಎಲ್ಲಾ ಸರಕಾರಿ […]