SENSEX
NIFTY
GOLD
USD/INR

Weather

20    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source

ಮಹಿಳೆಯರು ಮುಖ್ಯವಾಹಿನಿಗೆ ಬರಬೇಕೆಂಬುದೇ ನಮ್ಮ ಸರ್ಕಾರದ ಉದ್ದೇಶ : ಲಕ್ಷ್ಮಿ ಹೆಬ್ಬಾಳ್ಕರ್‌

ಬೆಂಗಳೂರು ಮಹಿಳೆಯರು ಮುಖ್ಯವಾಹಿನಿಗೆ ಬರಬೇಕು, ಸ್ವಚ್ಛಂದವಾದ ಬದುಕನ್ನು ಕಟ್ಟಿಕೊಳ್ಳಬೇಕು ಎಂಬುದೇ ನಮ್ಮ ಸರ್ಕಾರದ ಹಾಗೂ ನನ್ನ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದರು. ಕರ್ನಾಟಕ ರಾಜ್ಯ ಸರ್ಕಾರ ಮಹಿಳಾ ನೌಕರರಿಗೆ ಋತುಚಕ್ರ ರಜೆ ಘೋಷಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಸದಸ್ಯರಿಗೆ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ […]

ಪ್ರಜಾ ಪ್ರಗತಿ 4 Dec 2025 5:00 pm

ಸಂಚಾರಿ ಸಾಥಿ ಆ್ಯಪ್: ಮೋದಿ ಸರ್ಕಾರ ‘ಯೂ ಟರ್ನ್’

ನವದೆಹಲಿ: ದೇಶದಲ್ಲಿ ಮಾರಾಟವಾಗುವ ಎಲ್ಲ ಸ್ಮಾರ್ಟ್ ಫೋನ್ ಗಳಲ್ಲಿ ‘ಸಂಚಾರಿ ಸಾಥಿ’ ಸೈಬರ್ ಭದ್ರತಾ ಆ್ಯಪ್ ನ ಪೂರ್ವ ಅಳವಡಿಕೆಯನ್ನು ಕಡ್ಡಾಯಗೊಳಿಸಿ ಹೊರಡಿಸಿದ್ದ ಆದೇಶವನ್ನು ಕೇಂದ್ರ ಸರ್ಕಾರ ವಾಪಸ್ ಪಡೆದಿರುವುದು ಮೋದಿ ಸರ್ಕಾರದ ವಿರುದ್ಧ ಮಧ್ಯಮ ವರ್ಗದ ಜನರಿಗೆ ದೊರೆತ ಅಪರೂಪದ ಗೆಲುವು ಆಗಿದೆ. ಭಾರತದಲ್ಲಿ ಮಾರಾಟವಾಗುವ ಎಲ್ಲ ಮೊಬೈಲ್ ಗಳಲ್ಲಿ ಮತ್ತು ಈಗಾಗಲೇ ಬಳಕೆಯಲ್ಲಿರುವ ಮೊಬೈಲ್ ಗಳಲ್ಲಿ ಸಾಫ್ಟ್ ವೇರ್ ನವೀಕರಣದ ಮೂಲಕ ‘ಸಂಚಾರಿ ಸಾಥಿ’ ಆ್ಯಪ್ ನ್ನು ಕಡ್ಡಾಯವಾಗಿ […]

ಪ್ರಜಾ ಪ್ರಗತಿ 4 Dec 2025 3:59 pm

ಸಂಸ್ಕರಿಸಿದ ಆಹಾರಗಳ ಸೇವನೆಯಿಂದಾಗುವ ಅಪಾಯಗಳ ಕುರಿತು ಲೋಕಸಭೆಯಲ್ಲಿ ತೇಜಸ್ವಿ ಸೂರ್ಯ ಮಾತು!

ನವದೆಹಲಿ: ಕಪ್ ನೂಡಲ್ಸ್‌ಗಳು, ಸಿದ್ಧಪಡಿಸಿದ ಆಹಾರ ಪದಾರ್ಥಗಳು ಮತ್ತು ಸಕ್ಕರೆ ಬೆರೆಸಿದ ಪಾನೀಯಗಳಂತಹ ಅತ್ಯಂತ ಸಂಸ್ಕರಿಸಿದ ಆಹಾರಗಳು, ವಿಶೇಷವಾಗಿ ಯುವಜನರು ಮತ್ತು ಕಡಿಮೆ ಆದಾಯದ ಕುಟುಂಬಗಳಲ್ಲಿ ಸಾಂಪ್ರದಾಯಿಕ ಆಹಾರಗಳ ಸ್ಥಾನವನ್ನು ಹೆಚ್ಚಾಗಿ ಕಬಳಿಸುತ್ತಿವೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಲೋಕಸಭೆಯ ಚಳಿಗಾಲ ಅಧಿವೇಶನದ ಇಂದಿನ ಶೂನ್ಯವೇಳೆಯಲ್ಲಿ, ಭಾರತದಲ್ಲಿ ಸಂಸ್ಕರಿಸಿದ ಆಹಾರಗಳ ಸೇವನೆಯಿಂದಾಗುವ ಆರೋಗ್ಯದ ಅಪಾಯಗಳ ಕುರಿತು ಸಂಸದ ತೇಜಸ್ವಿ ಸೂರ್ಯ ಮಾತನಾಡಿದ್ದಾರೆ. ಈ ಉತ್ಪನ್ನಗಳ ಹೆಚ್ಚಿನ ಸೇವನೆಯು […]

ಪ್ರಜಾ ಪ್ರಗತಿ 4 Dec 2025 3:35 pm

ಅಹಿಂದ ಹೆಣ್ಣು ಮಕ್ಕಳ ಮೇಲೆ ಕಾಳಜಿ ಇದ್ದರೆ ‘ಸರ್ಕಾರಿ ಹಾಸ್ಟೆಲ್ ಟೂರ್’ಮಾಡಿ- ಬಿಜೆಪಿ ಒತ್ತಾಯ

ಬೆಂಗಳೂರು: ರಾಜ್ಯದ ವಿವಿಧೆಡೆ ಸರ್ಕಾರಿ ಪರಿಶಿಷ್ಟ ಜಾತಿ, ಪಂಗಡ ಮತ್ತು ಒಬಿಸಿ ಹಾಸ್ಟೆಲ್ ಗಳಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯರು ಗರ್ಭಿಣಿ ಆಗುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.ಈ ಕುರಿತ ವರದಿಯೊಂದನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ಪ್ರತಿಪಕ್ಷ ನಾಯಕ ಆರ್, ಅಶೋಕ, ಸಿಎಂ ಸಿದ್ದರಾಮಯ್ಯರೇ, ಅಹಿಂದ ಹೆಣ್ಣು ಮಕ್ಕಳ ಮೇಲೆ ಕಾಳಜಿ ಇದ್ದರೆ ‘ಸರ್ಕಾರಿ ಹಾಸ್ಟೆಲ್ ಟೂರ್’ ಮಾಡಿ ಎಂದು ಒತ್ತಾಯಿಸಿದ್ದಾರೆ. ಬಡ ಕುಟುಂಬದ ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಆಸರೆಯಾಗಿರುವ ಸರ್ಕಾರಿ […]

ಪ್ರಜಾ ಪ್ರಗತಿ 4 Dec 2025 3:26 pm

ಹಾವೇರಿ: ರೈತರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ..!

ಹಾವೇರಿ: ಕಳೆದೊಂದು ತಿಂಗಳಿನಿಂದ ರೈತರ ನಿದ್ದೆಗೆಡಿಸಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.ಕಡೂರು ಗ್ರಾಮದ ಗುಡ್ಡದ ಸಮೀಪದ‌ ರೈತರ ಜಮೀನಿನಲ್ಲಿ ಈ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಕಳೆದ‌ ಒಂದು ತಿಂಗಳಿನಿಂದ ಈ ಪ್ರದೇಶದಲ್ಲಿ ಚಿರತೆ ನಿರಂತರವಾಗಿ ಓಡಾಡುತ್ತಿದ್ದರು. ಇದರಿಂದ ಆತಂಕಗೊಂಡಿದ್ದ ರೈತರು ಚಿರತೆ ಭಯದಿಂದ ಕೃಷಿ ಕೆಲಸಕ್ಕೆ ಹೋಗಲು ಹಿಂದೇಟು ಹಾಕುತ್ತಿದ್ದರು.ಕಳೆದ ವಾರದ ತೋಟದ ಮನೆಯೊಂದರ ಸಿಸಿಟಿವಿಯಲ್ಲಿ ಚಿರತೆ ಓಡಾಡುತ್ತಿರುವ ದೃಶ್ಯ ಸೆರೆಯಾಗಿತ್ತು. ಇದೀಗ ಅರಣ್ಯ ಇಲಾಖೆ ಚಿರತೆಯನ್ನು ಪತ್ತೆ […]

ಪ್ರಜಾ ಪ್ರಗತಿ 4 Dec 2025 3:12 pm

ಕರ್ನಾಟಕದಲ್ಲಿ ಶೇ. 63 ರಷ್ಟು ಭ್ರಷ್ಟಾಚಾರ: ಸರ್ಕಾರದ ವಿರುದ್ಧ ಆರ್ ಅಶೋಕ್ ಕಿಡಿ!

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ಈಗ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಆರೋಪಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವರದಿಯೊಂದನ್ನು ಹಂಚಿಕೊಂಡು ಅವರು ಪೋಸ್ಟ್ ಮಾಡಿದ್ದು, ಶೇ.40 ರಷ್ಟು ಕಮಿಷನ್ ಎಂದು ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪ, ಅಪಪ್ರಚಾರ ಮಾಡಿ ಕನ್ನಡಿಗರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಈಗ ಸಂಪೂರ್ಣವಾಗಿ […]

ಪ್ರಜಾ ಪ್ರಗತಿ 4 Dec 2025 3:10 pm

ಕರ್ನಾಟಕ ರಾಜ್ಯಪಾಲರ ಮೊಮ್ಮಗನ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ

ಭೋಪಾಲ್: ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಮೊಮ್ಮಗ ದೇವೇಂದ್ರ ಗೆಹ್ಲೋಟ್ ಅವರ ಪತ್ನಿ ದಿವ್ಯಾ ಗೆಹ್ಲೋಟ್ ಅವರು ವರದಕ್ಷಿಣೆ ಕಿರುಕುಳ , ಕೊಲೆ ಯತ್ನ, ಕೌಟುಂಬಿಕ ಹಿಂಸೆ ಮತ್ತು ತಮ್ಮ ಅಪ್ರಾಪ್ತ ಮಗಳ ಅಪಹರಣದ ಗಂಭೀರ ಆರೋಪಗಳನ್ನು ಹೊರಿಸಿದ್ದಾರೆ. ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯ ಪೊಲೀಸ್ ಅಧೀಕ್ಷಕ ಅಮಿತ್ ಕುಮಾರ್ ಅವರ ಗಮನಕ್ಕೆ ವಿಷಯ ತಲುಪಿದ್ದು, ದಿವ್ಯಾ ತುರ್ತು ಕ್ರಮ ಮತ್ತು ತನ್ನ ನಾಲ್ಕು ವರ್ಷದ ಮಗಳನ್ನು ಸುರಕ್ಷಿತವಾಗಿ ಮರಳಿ ಪಡೆಯಲು ಲಿಖಿತ ದೂರು […]

ಪ್ರಜಾ ಪ್ರಗತಿ 4 Dec 2025 12:27 pm

ಬಲಗೊಳ್ಳುತ್ತಿದೆ ಜೈಶ್ ಮಹಿಳಾ ಘಟಕ: 5,000ಕ್ಕೂ ಹೆಚ್ಚು ಮಹಿಳೆಯರಿಗೆ ಆನ್‌ಲೈನ್ ತರಬೇತಿ

ನವದೆಹಲಿ: ದೇಶಾದ್ಯಂತ ನಡೆದಿರುವ ಹಲವಾರು ಭಯೋತ್ಪಾದಕ ದಾಳಿಯ ಸಂಚು ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿರುವ ಜೈಶ್-ಎ-ಮೊಹಮ್ಮದ್‌ನ ಮಹಿಳಾ ವಿಭಾಗ ಬಲಗೊಳ್ಳುತ್ತಿದೆ. ಗುಪ್ತಚರ ಮೂಲಗಳ ಮಾಹಿತಿಯ ಪ್ರಕಾರ ಜೈಶ್ ನ ಮಹಿಳಾ ವಿಭಾಗವಾದ ಜಮಾತ್ ಉಲ್ ಮೊಮಿನಾತ್‌ಗೆ ಅಕ್ಟೋಬರ್ 8ರಿಂದ ನೇಮಕಾತಿ ಅಭಿಯಾನ ನಡೆಸಲಾಗುತ್ತಿದೆ. ಇದರಲ್ಲಿ ಈಗಾಗಲೇ 5,000ಕ್ಕೂ ಹೆಚ್ಚು ಮಹಿಳೆಯರು ಸೇರಿಕೊಂಡಿದ್ದಾರೆ. ಇವರಿಗೆ 500 ರೂ. ಶುಲ್ಕ ವಿಧಿಸಲಾಗಿದ್ದು, ಆನ್‌ಲೈನ್ ಮೂಲಕ ತರಬೇತಿಯನ್ನೂ ನೀಡಲಾಗುತ್ತಿದೆ. ಜೈಶ್ ಪ್ರಧಾನ ಕಚೇರಿಯಾದ ಮರ್ಕಜ್ ಉಸ್ಮಾನ್-ಒ-ಅಲಿಯಲ್ಲಿ ಪ್ರಾರಂಭಿಸಲಾಗಿರುವ […]

ಪ್ರಜಾ ಪ್ರಗತಿ 4 Dec 2025 12:25 pm

ಮದುವೆ ಬಗ್ಗೆ ಯಾವಾಗ ಮಾತನಾಡಬೇಕು ಅನ್ನೋದು ಗೊತ್ತಿದೆ! : ರಶ್ಮಿಕ ಮಂದಣ್ಣ

ಹೈದ್ರಾಬಾದ್‌ : ರಶ್ಮಿಕಾ ಮಂದಣ್ಣ ಅವರ ವಿವಾಹದ ಬಗ್ಗೆ ಗುಸುಗುಸು ದಿನೇ ದಿನೇ ಜೋರಾಗುತ್ತಿದೆ. 2026 ರಲ್ಲಿ ಅವರು ತಮ್ಮ ಗೆಳೆಯ ವಿಜಯ್ ದೇವರಕೊಂಡ ಅವರನ್ನು ವಿವಾಹವಾಗಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ವಿವಾಹದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆ ನಡೆಯುತ್ತಿದೆ. ಇದೀಗ ಮತ್ತೆ ರಶ್ಮಿಕಾ ಮದುವೆ ಬಗ್ಗೆ ಮಾತನಾಡಿದ್ದಾರೆ. ರಶ್ಮಿಕಾ ದಿ ಹಾಲಿವುಡ್ ರಿಪೋರ್ಟರ್ ಇಂಡಿಯಾಗೆ ನೀಡಿದ ಸಂದರ್ಶನದಲ್ಲಿ ತಮ್ಮ ಮುಂಬರುವ ಸಿನಿಮಾ ಬಿಡುಗಡೆ ಮತ್ತು ಇನ್ನೂ ಹೆಚ್ಚಿನವುಗಳ ಬಗ್ಗೆ ಚರ್ಚಿಸಿದರು. […]

ಪ್ರಜಾ ಪ್ರಗತಿ 4 Dec 2025 12:16 pm

ಬೆಳಗಾವಿ ಚಳಿಗಾಲ ಅಧಿವೇಶನ: ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ತಂತ್ರ

ಬೆಂಗಳೂರು: ಡಿಸೆಂಬರ್ 8ರಿಂದ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶ ಆರಂಭವಾಗುತ್ತಿದ್ದು, ಈ ನಡುವೆ ವಿಪಕ್ಷಗಳನ್ನು ಸಮರ್ಥವಾಗಿ ಎದುರಿಸಲು, ಕಾರ್ಯತಂತ್ರ ರೂಪಿಸಲು ಗುರುವಾರ ಸಂಜೆ ಸಚಿವರೊಂದಿಗೆ ಸಭೆ ನಡೆಸುತ್ತಿದ್ದಾರೆ.ಇಂದು ಮಧ್ಯಾಹ್ನ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಂಪುಟ ಸಭೆ ಪೂರ್ಣಗೊಂಡ ಬಳಿಕ ವಿಧಾನಸೌಧದಲ್ಲಿ ಸಂಜೆ 4 ಗಂಟೆಗೆ ಸಚಿವರೊಂದಿಗೆ ಸಭೆ ನಡೆಯಲಿದ್ದಾರೆ. ವಿಧಾನಮಂಡಲ ಅಧಿವೇಶನದಲ್ಲಿ ಅಧಿಕಾರ ಹಂಚಿಕೆ ಕಿತ್ತಾಟ, ಮತ್ತಿತರ ವಿಷಯಗಳ ಪ್ರಸ್ತಾಪಿಸಿ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡನೆಗೆ ಸಿದ್ಧತೆ ನಡೆಸುತ್ತಿವೆ.ಈ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿ ಎತ್ತಬಹುದಾದ […]

ಪ್ರಜಾ ಪ್ರಗತಿ 4 Dec 2025 12:07 pm

IPL ಸೇರಿ ಎಲ್ಲಾ ಮಾದರಿಯ ಕ್ರಿಕೆಟ್​ಗೆ ಮೋಹಿತ್ ಶರ್ಮಾ ನಿವೃತ್ತಿ ಘೋಷಣೆ

ಮುಂಬೈ: ಭಾರತೀಯ ಕ್ರಿಕೆಟ್ ತಂಡದ ವೇಗದ ಬೌಲರ್ ಮೋಹಿತ್ ಶರ್ಮಾ ಅವರು ಐಪಿಎಲ್ ಸೇರಿ ಎಲ್ಲಾ ಮಾದರಿಯ ಕ್ರಿಕೆಟ್‌’ಗೆ ನಿವೃತ್ತಿ ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಮೋಹಿತ್ ಅವರು, ಇಂದಿನಿಂದ, ನಾನು ಎಲ್ಲಾ ರೀತಿಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸುತ್ತಿದ್ದೇನೆ. ಹರಿಯಾಣವನ್ನು ಪ್ರತಿನಿಧಿಸುವುದರಿಂದ ಹಿಡಿದು ಭಾರತೀಯ ಜೆರ್ಸಿ ಧರಿಸಿ, ಐಪಿಎಲ್‌ನಲ್ಲಿ ಆಡುವವರೆಗೆ, ನನಗೆ ತುಂಬಾ ಸವಲತ್ತು ಸಿಕ್ಕಿದೆ. ತಮ್ಮ ಕ್ರಿಕೆಟ್ ವೃತ್ತಿಜೀವನದ ಬೆನ್ನೆಲುಬಾಗಿರುವ ಹರಿಯಾಣ ಕ್ರಿಕೆಟ್ ಅಸೋಸಿಯೇಷನ್‌ಗೆ ಧನ್ಯವಾದ ಅರ್ಪಿಸುತ್ತೇನೆಂದು ಹೇಳಿದ್ದಾರೆ. […]

ಪ್ರಜಾ ಪ್ರಗತಿ 4 Dec 2025 12:05 pm

ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಾಗ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ದಕ್ಷಿಣ ಕನ್ನಡ ಅಥವಾ ಉಡುಪಿ ಜಿಲ್ಲೆಯಲ್ಲಿ ಶಿವಗಿರಿ ಶಾಖಾ ಮಠ ಸ್ಥಾಪನೆ ಮಾಡಲು 5 ಎಕರೆ ಭೂಮಿ ನೀಡುವುದಾಗಿ ರಾಜ್ಯ ಸರ್ಕಾರ ಬುಧವಾರ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆ ಕೊಣಾಜೆ, ಮಂಗಳಗಂಗೋತ್ರಿಯಲ್ಲಿ‌ ನಾರಾಯಣಗುರು‌ ಅಧ್ಯಯನ‌ ಪೀಠ, ಮಂಗಳೂರು‌ ವಿವಿ ಆಯೋಜಿಸಿದ್ದ “ಶತಮಾನದ ಪ್ರಸ್ತಾನ ನಾರಾಯಣಗುರು – ಮಹಾತ್ಮಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ ಮತ್ತು ಶ್ರೀ ಗುರುವಿನ ಮಹಾಸಮಾಧಿ ಶತಾಬ್ದಿ, ಸರ್ವಮತ ಸಮ್ಮೇಳನ‌ ಶತಮಾನೋತ್ಸವ, ಯತಿ ಪೂಜೆಯನ್ನು ಉದ್ಘಾಟಿಸಿದ ಮುಖ್ಯಮಂತ್ರಿ […]

ಪ್ರಜಾ ಪ್ರಗತಿ 4 Dec 2025 11:55 am

ಅದ್ದೂರಿಯಾಗಿ ನಡೆದ ಹನುಮ ಜಯಂತಿ, ಕನ್ನಡ ರಾಜ್ಯೋತ್ಸವ ಹಾಗೂ ಲಕ್ಷ ದೀಪೋತ್ಸವ

ಗುಬ್ಬಿ: ಗುಬ್ಬಿ ತಾಲ್ಲೂಕಿನ ಸಿ ಎಸ್ ಪುರ ಹೋಬಳಿಯ ಮಣಿಕುಪ್ಪೆ ಗ್ರಾಮದಲ್ಲಿ ಹನುಮ ಜಯಂತಿ, ಕನ್ನಡ ರಾಜ್ಯೋತ್ಸವ ಹಾಗೂ ಲಕ್ಷ ದೀಪೋತ್ಸವ ಮಂಗಳವಾರ ರಾತ್ರಿ ಅದ್ದೂರಿಯಾಗಿ ನಡೆಯಿತು. ಹಚ್ಚೇವು ಕನ್ನಡದ ದೀಪ ಹಾಡಿನೊಂದಿಗೆ ಗ್ರಾಮಸ್ಥರು ಲಕ್ಷ ದೀಪೋತ್ಸವವನ್ನು ಬೆಳಗಿಸಿದರು. ಹನುಮ ಜಯಂತಿಯ ಅಂಗವಾಗಿ ಬೆಳ್ಳಿ ಪಲ್ಲಕ್ಕಿಯಲ್ಲಿ ಶ್ರೀ ಆಂಜನೇಯಸ್ವಾಮಿಯ ಉತ್ಸವ ಮೆರವಣಿಗೆ ಊರಿನ ಪ್ರಮುಖ ರಾಜಬೀದಿಗಳಲ್ಲಿ ನಡೆಯಿತು. ಕನ್ನಡ ರಾಜ್ಯೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಶ್ರೀ ನರಸಿಂಹ ಆಂಜನೇಯ ಸ್ವಾಮಿಯ […]

ಪ್ರಜಾ ಪ್ರಗತಿ 4 Dec 2025 11:50 am

ಜೆಡಿಎಸ್‌ ಪಕ್ಷದ ಕೋರ್‌ ಕಮಿಟಿ ಮೀಟಿಂಗ್…..: ತೆಗೆದುಕೊಂಡ ಪ್ರಮುಖ ನಿರ್ಧಾರಗಳಾದರೂ ಏನು….?

ಬೆಂಗಳೂರು: ಜಾತ್ಯತೀತ ಜನತಾ ದಳ ಪಕ್ಷದ ರಾಜ್ಯ ಕೋರ್ ಸಮಿತಿ ಸಭೆ ಬುಧವಾರ ನಡೆದಿದ್ದು, ಸಭೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಡಿಯಲ್ಲಿ ಹೊಸದಾಗಿ ರಚನೆಯಾದ ಐದು ಪಾಲಿಕೆ ಚುನಾವಣೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ ಪಕ್ಷದ ಸಂಘಟನೆಯನ್ನು ಬಲಪಡಿಸುವ ಕ್ರಮಗಳ ಕುರಿತು ಚರ್ಚಿಸಲಾಯಿತು. ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯ ಕೋರ್ ಸಮಿತಿ ಅಧ್ಯಕ್ಷ ಎಂ. ಕೃಷ್ಣಾರೆಡ್ಡಿ ಅವರು, ಪಕ್ಷದ ಸಂಘಟನೆಯನ್ನು ಬಲಪಡಿಸಲು ಜಿಲ್ಲಾ ಪ್ರವಾಸಗಳನ್ನು […]

ಪ್ರಜಾ ಪ್ರಗತಿ 4 Dec 2025 11:40 am

RSS, BSY ವಿರುದ್ಧ ಸುರೇಶ್ ಗೌಡ ಆರೋಪ: ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸುರೇಶ್ ಗೌಡ ಅವರು ಮಾಡಿರುವ ಆರೋಪ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು. ಈ ನಡುವೆ ಆರೋಪ ಸಂಬಂಧ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ. ಈ ಸಂಬಂಧ ಮುಖ್ಯಮಂತ್ರಿಗಳ ಕಚೇರಿ ಬುಧವಾರ ಗೃಹ ಸಚಿವ ಪರಮೇಶ್ವರ್ ಅವರಿಗೆ ಪತ್ರ ಬರೆದಿದ್ದು, ತನಿಖೆಗೆ ಆದೇಶಿಸಿದೆ ಎಂದು ತಿಳಿದುಬಂದಿದೆ.ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ಅಧ್ಯಕ್ಷ ಎಚ್. ಜಿ. […]

ಪ್ರಜಾ ಪ್ರಗತಿ 4 Dec 2025 11:30 am

ಹೈಕಮಾಂಡ್ ನಾಯಕರನ್ನು ಭೇಟಿಯಾಗುತ್ತಿಲ್ಲ: ದೆಹಲಿಯಲ್ಲಿ ಡಿ.ಕೆ ಶಿವಕುಮಾರ್

ನವದೆಹಲಿ: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ನಡೆಯುತ್ತಿರುವ ಹೋರಾಟದ ನಡುವೆ ಬುಧವಾರ ದೆಹಲಿಗೆ ತೆರಳಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು, ಪಕ್ಷದ ಕೇಂದ್ರ ನಾಯಕರನ್ನು ಭೇಟಿ ಮಾಡುವ ಊಹಾಪೋಹಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.ಡಿಸೆಂಬರ್ 14 ರಂದು ನಡೆಯಲಿರುವ ‘ವೋಟ್ ಚೋರಿ’ ರ್ಯಾಲಿಯ ಸಿದ್ಧತೆಗಳ ಮೇಲ್ವಿಚಾರಣೆ ಮಾಡಲು ಮತ್ತು ಮದುವೆಯಲ್ಲಿ ಭಾಗವಹಿಸಲು ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷರು ಆಗಿರುವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಗೆ ಬಂದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, […]

ಪ್ರಜಾ ಪ್ರಗತಿ 4 Dec 2025 11:09 am

ಕರ್ನಾಟಕ ರಾಜಭವನಕ್ಕೂ ಸಿಕ್ತು ಹೊಸ ಹೆಸರು; ‘ಲೋಕಭವನ’ಎಂದು ಮರುನಾಮಕರಣ

ಬೆಂಗಳೂರು: ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ಕರ್ನಾಟಕ ರಾಜ್ಯದ ರಾಜಭವನದ ಹೆಸರನ್ನು ಬದಲಾಯಿಸಲಾಗಿದೆ. ರಾಜಭವನಕ್ಕೆ ಲೋಕಭವನ ಎಂದು ಮರುನಾಮಕರಣ ಮಾಡಿರುವುದಾಗಿ ರಾಜ್ಯ ಸರ್ಕಾರ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ. ಕೇಂದ್ರ ಗೃಹ ಸಚಿವಾಲಯವು ನೀಡಿರುವ ನಿರ್ದೇಶನಗಳನ್ನು ಅನುಸರಿಸಿ ರಾಜಭವನಕ್ಕೆ ಲೋಕ ಭವನ ಎಂದು ಮರುನಾಮಕರಣ ಮಾಡಲಾಗಿದೆ. ಈಗಾಗಲೇ ತಮಿಳುನಾಡು, ಕೇರಳ, ಜಾರ್ಖಂಡ್, ಪಶ್ಚಿಮ ಬಂಗಾಳ, ಉತ್ತರಾಖಂಡ ಸೇರಿದಂತೆ ಹಲವು ರಾಜ್ಯಗಳಲ್ಲಿ ರಾಜಭವನದ ಹೆಸರನ್ನು ಲೋಕ ಭವನ ಎಂದು ಮರು ನಾಮಕರಣ ಮಾಡಲಾಗಿದೆ. ವಸಾಹತುಶಾಹಿ […]

ಪ್ರಜಾ ಪ್ರಗತಿ 4 Dec 2025 10:40 am

ಡಿಸೆಂಬರ್‌ 8ರಂದು ಸಿಎಂ ಕರೆದ ಸಭೆಗೆ ಪ್ರಲ್ಹಾದ್‌ ಜೋಶಿ ಗೈರು : ಜೋಶಿಯವರು ಸಿಎಂ ಗೆ ಬರೆದಿರುವ ಪತ್ರದಲ್ಲಿ ಏನಿದೆ ….?

ನವದೆಹಲಿ ಸಂಸತ್‌ ಚಳಿಗಾಲದ ಅಧಿವೇಶನ ಹಾಗೂ ಕಾರ್ಯದೊತ್ತಡದ ಕಾರಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿರುವ ಸಂಸದರ ಸಭೆಯಲ್ಲಿ ಪಾಲ್ಗೊಳ್ಳುವುದು ಅಸಾಧ್ಯ ಎಂದು ಧಾರವಾಡ ಸಂಸದರೂ ಆಗಿರುವ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಸಭೆಯಲ್ಲಿ ಪಾಲ್ಗೊಳ್ಳದಿರುವ ಬಗ್ಗೆ ಸಕಾರಣ ಸಮೇತ ಸ್ಪಷ್ಟಪಡಿಸಿದರು. ಮೊದಲೇ ಚರ್ಚಿಸಿ ದಿನಾಂಕ ನಿಗದಿಪಡಿಸಿದ್ದಿದ್ದರೆ ಅನುಕೂಲವಾಗುತ್ತಿತ್ತು ಎಂದೂ ತಿಳಿಸಿದ್ದಾರೆ. ʼʼಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ತಾವು […]

ಪ್ರಜಾ ಪ್ರಗತಿ 4 Dec 2025 10:38 am

ತತ್ಕಾಲ್ ಟಿಕೆಟ್ ಬುಕಿಂಗ್‌ ನಿಯಮದಲ್ಲಿ ಬದಲಾವಣೆ……!

ನವದೆಹಲಿ: ರೈಲ್ವೆ ಮೀಸಲಾತಿ ಕೌಂಟರ್‌ಗಳಿಂದ ತತ್ಕಾಲ್ ರೈಲು ಟಿಕೆಟ್‌ಗಳನ್ನು ಬುಕಿಂಗ್ ಮಾಡಲು ಭಾರತೀಯ ರೈಲ್ವೆ ಒಂದು ಬಾರಿಯ ಪಾಸ್‌ವರ್ಡ್‌ಗಳನ್ನು ಕಡ್ಡಾಯಗೊಳಿಸಲು ಸಜ್ಜಾಗಿದೆ. ಕೊನೆಯ ಕ್ಷಣದ ಟಿಕೆಟ್ ಬುಕಿಂಗ್ ಸೌಲಭ್ಯದ ದುರುಪಯೋಗವನ್ನು ತಡೆಯುವ ಗುರಿಯನ್ನು ಇದು ಹೊಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರೈಲ್ವೆ ರಿಸರ್ವೇಶನ್ ಕೌಂಟರ್‌ಗಳಿಂದ ತತ್ಕಾಲ್ ರೈಲು ಟಿಕೆಟ್‌ಗಳನ್ನು ಬುಕ್ ಮಾಡಲು ಪ್ರಯಾಣಿಕರು ತಮ್ಮ ಮೊಬೈಲ್ ಫೋನ್‌ಗೆ ಬರುವ ಒಟಿಪಿ ಒದಗಿಸಬೇಕಾಗುತ್ತದೆ. ರೈಲ್ವೆ ಸಚಿವಾಲಯವು ನವೆಂಬರ್ 17ರಂದು ಪ್ರಾಯೋಗಿಕವಾಗಿ ಮೀಸಲಾತಿ ಕೌಂಟರ್‌ಗಳಿಂದ […]

ಪ್ರಜಾ ಪ್ರಗತಿ 4 Dec 2025 10:26 am

ಬಾಂಗ್ಲಾದೇಶದ ಶಾಂತಿಗಾಗಿ ಭಾರತ ತುಂಡು ತುಂಡಾಗಬೇಕು….!

ಢಾಕಾ: ಇತ್ತೀಚಿನ ದಿನಗಳಲ್ಲಿ ಭಾರತ ವಿರೋಧಿಯಾಗಿ ಗುರುತಿಸಿಕೊಂಡಿರುವ ಬಾಂಗ್ಲಾದೇಶ ಇದೀಗ ಮತ್ತೊಂದು ವಿವಾದ ಸೃಷ್ಟಿಸಿದೆ. ಭಾರತ “ತುಂಡುಗಳಾಗಿ ಒಡೆಯದ ಹೊರತು” ಬಾಂಗ್ಲಾದೇಶ “ಸಂಪೂರ್ಣ ಶಾಂತಿ” ಕಾಣುವುದಿಲ್ಲ ಎಂದು ಬಾಂಗ್ಲಾದೇಶದ ಮಾಜಿ ಸೇನಾ ಜನರಲ್ ಹೇಳಿಕೆ ನೀಡಿದ್ದು, ಭಾರೀ ವಿರೋಧ ಸೃಷ್ಟಿಯಾಗಿದೆ. ಜಮಾತೆ-ಇ-ಇಸ್ಲಾಮಿಯ ಮಾಜಿ ಮುಖ್ಯಸ್ಥ ಗುಲಾಮ್ ಅಜಮ್ ಅವರ ಪುತ್ರ ಬ್ರಿಗೇಡಿಯರ್ ಜನರಲ್ (ನಿವೃತ್ತ) ಅಬ್ದುಲ್ಲಾಹಿಲ್ ಅಮಾನ್ ಅಜ್ಮಿ ಅವರು ಢಾಕಾದ ರಾಷ್ಟ್ರೀಯ ಪ್ರೆಸ್ ಕ್ಲಬ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಈ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದು, […]

ಪ್ರಜಾ ಪ್ರಗತಿ 4 Dec 2025 10:22 am

ಗುರುಸಿದ್ದೇಶ್ವರ ಮಠ : ಇಂದಿನಿಂದ ಶರಣ ಸಂಗಮ ಸಮಾರಂಭ ಪ್ರಾರಂಭ

ಗುಳೇದಗುಡ್ಡ : ಪಟ್ಟಣದ ಶ್ರೀಗುರುಸಿದ್ದೇಶ್ವರ ಮಹಾಸ್ವಾಮಿಗಳ ೪೦ನೇ ವಾರ್ಷಿಕ ಪುಣ್ಯಾರಾಧನೆಯ ನಿಮಿತ್ತ ನಡೆಯುವ ಶರಣ ಸಂಗಮ ಸಮಾರಂಭ ಡಿ.೪ರಿಂದ ೧೨ರವರೆಗೆ ನಡೆಯಲಿದೆ ಎಂದು ಶ್ರೀಮಠದ ಪೀಠಾಧ್ಯಕ್ಷ ಶ್ರೀ. ಜ.ಗುರುಸಿದ್ಧ ಪಟ್ಟದಾರ್ಯ ಮಹಾಸ್ವಾಮಿಗಳು ಹೇಳಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶರಣ ಸಂಗಮ ಸಮಾರಂಭವು ಸಾಮಾಜಿಕ, ಸಾಮರಸ್ಯ ಭಾವೈಕ್ಯತೆಯನ್ನು ಬೆಳೆಸುತ್ತದೆ. ಪ್ರತಿ ವರ್ಷದಂತೆ ಪ್ರಭಾತ ಯಾತ್ರೆ, ಶರಣ ಧ್ವಜಾರೋಹಣವು ನಾನಾ ಧರ್ಮ ಜಾತಿ, ಮತ ಪಂಥಗಳಿAದ ನಡೆಯುತ್ತದೆ. ನಾವೆಲ್ಲರೂ ಒಂದು ಎಂಬ ಭಾವನೆ ಮೂಡಿಸುವುದು […]

ಪ್ರಜಾ ಪ್ರಗತಿ 4 Dec 2025 10:19 am

ಡಾಲರ್‌ ಎದುರು 90ರ ಆಚೆಗೆ ಕುಸಿದ ರೂಪಾಯಿ…..!

ನವದೆಹಲಿ: ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಬುಧವಾರ ಮತ್ತೆ 29 ಪೈಸೆ ಕುಸಿದಿದ್ದು, ಇದರೊಂದಿಗೆ ಭಾರತದ ಕರೆನ್ಸಿ ಮೊದಲ ಬಾರಿಗೆ ನೈಂಟಿ ಕ್ರಾಸ್ ಮಾಡಿದೆ.ಅಮೆರಿಕದ ಡಾಲರ್ ಎದುರು ರೂಪಾಯಿ ಅಪಮೌಲ್ಯ ಮುಂದುವರೆದಿದ್ದು, ಪ್ರತಿ ಡಾಲರ್ ಗೆ 90.25 ರೂ. ಗೆ ತಲುಪಿದೆ. ಇದು ಸಾರ್ವಕಾಲಿಕ ಕನಿಷ್ಠ ಮಟ್ಟವಾಗಿದೆ. ನಿನ್ನೆ ಡಾಲರ್ ಎದುರು ರೂಪಾಯಿ ಮೌಲ್ಯ 89.94 ರೂಪಾಯಿ ಇತ್ತು. ಎಫ್‌ಐಐ ಹೊರಹರಿವು ಮತ್ತು ಬ್ಯಾಂಕುಗಳು ನಿರಂತರವಾಗಿ ಡಾಲರ್‌ಗಳನ್ನು ಖರೀದಿಸುತ್ತಿರುವುದು ರೂಪಾಯಿ […]

ಪ್ರಜಾ ಪ್ರಗತಿ 3 Dec 2025 5:13 pm

ಮದುವೆಯಾದ ಸಂತಸದಲ್ಲಿದ್ದ ಮದುಮಗ ಹೃದಯಾಘಾತದಿಂದ ಸಾವು!

ಶಿವಮೊಗ್ಗ: ಶಿವಮೊಗ್ಗ ಮೂಲದ ವ್ಯಕ್ತಿಯೋರ್ವ ತಾನು ಮದುವೆಯಾದ ಮರುದಿನವೇ ಮೃತಪಟ್ಟಿರುವ ಮನಕಲಕುವ ಘಟನೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿಯ ಬಂಡ್ರಿ ಗ್ರಾಮದಲ್ಲಿ ನಡೆದಿದೆ.ಸಂಭ್ರಮದ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದ್ದು, ದೇವರ ದರ್ಶನ ಪಡೆಯಲು ತೆರಳಿದ ಸಂದರ್ಭದಲ್ಲಿ ಯುವಕನಿಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾನೆ. ಹೊಸಕೊಪ್ಪ ನಿವಾಸಿಯಾಗಿರುವ ರಮೇಶ್(30) ಮೃತಪಟ್ಟಿದ್ದಾರೆ. ನವೆಂಬರ್ 30ರಂದು ಶಿವಮೊಗ್ಗದ ಬಿ. ಹೆಚ್. ರಸ್ತೆಯ ಗಂಗಾ ಪ್ರಿಯಾ ಕಲ್ಯಾಣ ಮಂಟಪದಲ್ಲಿ ಮಧು- ರಮೇಶ್ ವಿವಾಹ ನಡೆದಿತ್ತು. ಮದುವೆಯ […]

ಪ್ರಜಾ ಪ್ರಗತಿ 3 Dec 2025 5:03 pm

ಕಾಶಿಯ ಯುವ ವೇದ ವಿದ್ವಾಂಸನ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

ಕಾಶಿ: ಕಾಶಿಯ 19 ವರ್ಷದ ಯುವ ವೇದ ವಿದ್ವಾಂಸ ದೇವವ್ರತ್ ಮಹೇಶ್ ರೇಖೆ ಸಾಧನೆ ಈಗ ದೇಶದೆಲ್ಲೆಡೆ ಸುದ್ದಿಯಾಗತೊಡಗಿದೆ. ಸ್ವತಃ ಕಾಶಿಯ ಸಂಸದರೂ ಆಗಿರುವ ಪ್ರಧಾನಿ ನರೇಂದ್ರ ಮೋದಿ ಈ ಯುವ ವೇದ ವಿದ್ವಾಂಸನ ಸ್ಮೃತಿ ಸಾಮರ್ಥ್ಯಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರೂ ಸಹ ಮಹೇಶ್ ರೇಖೆ ಅವರ ಸಾಧನೆಯನ್ನು ಮೆಚ್ಚಿ ವೇದಿಕೆಯಲ್ಲಿ ಸನ್ಮಾನ ಮಾಡಿದ್ದಾರೆ. ಭಾರತೀಯ ಸಂಸ್ಕೃತಿಯ ಬಗ್ಗೆ ಆಸಕ್ತಿ ಹೊಂದಿರುವ ಪ್ರತಿಯೊಬ್ಬ ವ್ಯಕ್ತಿಯು ಶುಕ್ಲ […]

ಪ್ರಜಾ ಪ್ರಗತಿ 3 Dec 2025 4:58 pm

ರಾಜಕೀಯ ಶಾಶ್ವತವಲ್ಲ ಎಂಬ CM ಹೇಳಿಕೆಗೆ ಹೆಚ್ಚಿನ ವಿಶ್ಲೇಷಣೆ ಅನಗತ್ಯ: ಡಿ.ಕೆ. ಸುರೇಶ್

ಬೆಂಗಳೂರು: ಮುಖ್ಯಮಂತ್ರಿಯವರು ಯಾರೊಂದಿಗೋ ಮಾತನಾಡುವಾಗ ಆಡಿರುವ ಮಾತುಗಳಿಗೆ ಹೆಚ್ಚಿನ ಮಹತ್ವ ನೀಡುವ ಅಗತ್ಯವಿಲ್ಲ. ಆ ಬಗ್ಗೆ ಹೆಚ್ಚಿನ ವಿಶ್ಲೇಷಣೆಯೂ ಅನಗತ್ಯ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ತಿಳಿಸಿದರು.ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಬುಧವಾರ ಪ್ರತಿಕ್ರಿಯಿಸಿದರು. ರಾಜಕೀಯ ಯಾರಿಗೂ ಶಾಶ್ವತವಲ್ಲ ಎಂಬ ಸಿಎಂ ಹೇಳಿಕೆ ವಿಚಾರವಾಗಿ ಕೇಳಿದಾಗ ಅವರು ಈ ರೀತಿ ಪ್ರತಿಕ್ರಿಯೆ ನೀಡಿದರು. ಮಂಗಳೂರಿನಲ್ಲಿ ಕಾರ್ಯಕ್ರಮ ಇರುವ ಹಿನ್ನೆಲೆಯಲ್ಲಿ ವೇಣುಗೋಪಾಲ್ ಆಗಮಿಸಿದ್ದಾರೆ. ಕಾರ್ಯಕ್ರಮ ಮುಗಿದ ನಂತರ ಕೇರಳದಲ್ಲಿ […]

ಪ್ರಜಾ ಪ್ರಗತಿ 3 Dec 2025 4:38 pm

ಎಂಎಂ- ಹಿಲ್ಸ್ ವನ್ಯಜೀವಿ ಅಭಯಾರಣ್ಯದಲ್ಲಿ ಪೊಲೀಸ್ ಚೆಕ್-ಪೋಸ್ಟ್ ಸ್ಥಾಪಿಸಲು ರಾಜ್ಯ ಸರ್ಕಾರದ ನಿರ್ಧಾರ

ಬೆಂಗಳೂರು: ಸಾಕಷ್ಟು ಪ್ರಯತ್ನಗಳ ನಂತರ, ರಾಜ್ಯ ಸರ್ಕಾರ ಎಂಎಂ ಹಿಲ್ಸ್ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಪೊಲೀಸ್ ಚೆಕ್-ಪೋಸ್ಟ್ ರಚಿಸಲು ಆದೇಶ ಹೊರಡಿಸಿದೆ.ಹೆಚ್ಚುತ್ತಿರುವ ಅಪರಾಧಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯ ಅರಣ್ಯ ಇಲಾಖೆ ಜೂನ್‌ನಲ್ಲಿ ಈ ಪ್ರಸ್ತಾವನೆ ಮಾಡಿತು. ನವೆಂಬರ್ 28 ರಂದು ಚೆಕ್-ಪೋಸ್ಟ್ ಸ್ಥಾಪಿಸಲು ಆದೇಶಗಳನ್ನು ಹೊರಡಿಸಲಾಗಿದೆ. ರಾಜ್ಯದ ಅರಣ್ಯ ಪ್ರದೇಶದಲ್ಲಿ ಸ್ಥಾಪಿತವಾಗುತ್ತಿರುವ ಮೊದಲ ಪೊಲೀಸ್ ಚೆಕ್-ಪೋಸ್ಟ್ ಇದಾಗಿದೆ. ಬಂಡೀಪುರ ಹುಲಿ ಮೀಸಲು ಪ್ರದೇಶದ ಮಧೂರ್‌ ನಲ್ಲಿ ಚೆಕ್ ಪೋಸ್ಟ್ ಸ್ಥಾಪನೆಯಾಗುವ […]

ಪ್ರಜಾ ಪ್ರಗತಿ 3 Dec 2025 4:34 pm

’10 ಬಾರಿ ಸಿಎಂ ಆದ್ರೂ ಒಂದು ದಿನ ಬಿಡಲೇಬೇಕಲ್ಲ : ಸತೀಶ್ ಜಾರಕಿಹೊಳಿ

ಬೆಂಗಳೂರು: ಸಿಎಂ ಹುದ್ದೆ ಬಣ ಬಡಿದಾಟಕ್ಕೆ ಸಂಬಂಧಪಟ್ಟಂತೆ ಕರಾವಳಿ ಜಿಲ್ಲೆ ಮಂಗಳೂರಿನಲ್ಲಿ ಇಂದು ಹೈಡ್ರಾಮಾವೇ ನಡೆದಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮತ್ತು ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿಯೇ ಮುಂದಿನ ಸಿಎಂ ಕೂಗಾಟ ಕೇಳಿಬಂತು. ಅಧಿಕಾರ ತ್ಯಾಗದ ಕುರಿತು ನಿನ್ನೆ ಬೇಳೂರು ಗೋಪಾಲಕೃಷ್ಣ ಮುಂದೆ ಸಿಎಂ ಆಡಿದ್ದ ಮಾತು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಸಿ.ಎಂ. […]

ಪ್ರಜಾ ಪ್ರಗತಿ 3 Dec 2025 4:01 pm

‘ಭಿನ್ನಾಭಿಪ್ರಾಯ ಬಗೆಹರಿದಿದೆ’: ಗೃಹ ಸಚಿವ ಜಿ ಪರಮೇಶ್ವರ

ಬೆಂಗಳೂರು: ಇತ್ತೀಚಿನ ರಾಜಕೀಯ ಭಿನ್ನಾಭಿಪ್ರಾಯಗಳ ಕುರಿತು ಹೆಚ್ಚಿನ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ ಬುಧವಾರ ಹೇಳಿದ್ದು, ಪಕ್ಷದೊಳಗಿನ ಯಾವುದೇ ಸಣ್ಣ ಸಮಸ್ಯೆಗಳನ್ನು ಪರಿಹರಿಸಲಾಗಿದೆ ಎಂದು ಹೇಳಿದ್ದಾರೆ.ರಾಜಕೀಯೇತರ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಮಂಗಳೂರಿಗೆ ತೆರಳುತ್ತಿರುವುದಾಗಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ, ‘ನಾನು ಅನಗತ್ಯವಾಗಿ ಪ್ರತಿಕ್ರಿಯಿಸಲು ಬಯಸುವುದಿಲ್ಲ. ಈಗ ಎಲ್ಲವೂ ಮುಗಿದಿದೆ. ಯಾವುದೇ ಸಣ್ಣ ವ್ಯತ್ಯಾಸವಿದ್ದರೂ, ಸಮಸ್ಯೆ ಇದ್ದರೂ, ಅದನ್ನು ಪರಿಹರಿಸಲಾಗಿದೆ… ನಾನು ರಾಜಕೀಯೇತರ ಕಾರ್ಯಕ್ರಮಕ್ಕಾಗಿ ಮಂಗಳೂರಿಗೆ ಹೋಗುತ್ತಿದ್ದೇನೆ’ […]

ಪ್ರಜಾ ಪ್ರಗತಿ 3 Dec 2025 3:57 pm

ನಟ ದರ್ಶನ್‌ಗೆ ಮತ್ತೊಮ್ಮೆ ಹಿನ್ನಡೆ; 82 ಲಕ್ಷ ರೂ. ಆದಾಯ ತೆರಿಗೆ ಇಲಾಖೆಯ ವಶಕ್ಕೆ ನೀಡಿದ ಕೋರ್ಟ್‌

ಬೆಂಗಳೂರು ರೇಣುಕಾಸ್ವಾಮಿ ಕೊಲೆ ಪ್ರಕರಣ ದಲ್ಲಿ ಸದ್ಯ ಜೈಲು ಪಾಲಾಗಿರುವ ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅವರಿಗೆ ಇದೀಗ ಮತ್ತೊಂಡು ಆಘಾತ ಎದುರಾಗಿದೆ. ದರ್ಶನ್‌ ನಿವಾಸದಲ್ಲಿ ಪತ್ತೆಯಾಗಿರುವ 82 ಲಕ್ಷ ರೂ. ಆದಾಯ ತೆರಿಗೆ ಇಲಾಖೆಯಲ್ಲೇ ಇರಲಿ ಎಂದು ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್‌ ಆದೇಶ ಹೊರಡಿಸಿದೆ. ಆ ಮೂಲಕ ದರ್ಶನ್‌ಗೆ ಮತ್ತೊಂದು ಹೊಡೆತ ಬಿದ್ದಿದೆ. ಕಾಮಾಕ್ಷಿಪಾಳ್ಯ ಪೊಲೀಸರು ದರ್ಶನ್ ಮನೆ ಮತ್ತು ಪ್ರದೋಷ್ ಮನೆಯಲ್ಲಿ ವಶಕ್ಕೆ ಪಡೆದ ಈ ಹಣವನ್ನು ಆದಾಯ ತೆರಿಗೆ ಇಲಾಖೆಗೆ […]

ಪ್ರಜಾ ಪ್ರಗತಿ 3 Dec 2025 3:23 pm

ಪ್ರಜ್ವಲ್‌ ರೇವಣ್ಣಗೆ ಮತ್ತೊಂದು ಶಾಕ್‌ : ಜಾಮೀನು ಮಂಜೂರು ಮಾಡಲು ಹೈಕೋರ್ಟ್ ನಕಾರ

ಬೆಂಗಳೂರು ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಸದ್ಯ ಸೆರೆವಾಸ ಅನುಭವಿಸುತ್ತಿರುವ ಪ್ರಜ್ವಲ್‌ ರೇವಣ್ಣ ಅವರಿಗೆಕರ್ನಾಟಕ ಹೈಕೋರ್ಟ್‌ ಮತ್ತೊಂದು ಶಾಕ್‌ ನೀಡಿದೆ. ಈಗಾಗಲೇ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಇದನ್ನು ಬದಿಗೆ ಸರಿಸಿ, ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಬುಧವಾರ (ಡಿಸೆಂಬರ್‌ 3) ವಜಾಗೊಳಿಸಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿರುವ ಗನ್ನಿಕಾಡದ ತೋಟದ ಮನೆಯಲ್ಲಿ ಕೆಲಸ ಮಾಡುತ್ತಿದ್ದ 48 ವರ್ಷದ […]

ಪ್ರಜಾ ಪ್ರಗತಿ 3 Dec 2025 2:46 pm

109 ಬಾಕ್ಸ್‌ ಸ್ಫೋಟಕಗಳಿದ್ದ ಟ್ರಕ್‌ ವಶಕ್ಕೆ…..!

ಜೈಪುರ: ಭಾರಿ ಪ್ರಮಾಣದಲ್ಲಿ ಸ್ಪೋಟಕಗಳನ್ನು ಸಾಗಿಸುತ್ತಿದ್ದ ಟ್ರಕ್ ವೊಂದನ್ನು ವಶಕ್ಕೆ ಪಡೆದಿರುವ ರಾಜಸ್ಥಾನ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ರಾಜಸ್ಥಾನದ ರಾಜ್‌ಸಮಂದ್‌ನಲ್ಲಿ ಅಪಾರ ಪ್ರಮಾಣ ಸ್ಪೋಟಕಗಳನ್ನು ತುಂಬಿಕೊಂಡು ಪಿಕಪ್ ವಾಹನವೊಂದು ಸಾಗುತ್ತಿತ್ತು. ಇದರ ಮಾಹಿತಿ ತಿಳಿದ ಪೊಲೀಸರು ಟ್ರಕ್ ಅನ್ನು ವಶಕ್ಕೆಪಡೆದಿದೆ. ಸುಮಾರು 10 ಕಿ.ಮೀ. ವ್ಯಾಪ್ತಿಗೆ ಹಾನಿ ಉಂಟು ಮಾಡಬಹುದಾದ ಸಾಮರ್ಥ್ಯವಿರುವ 100ಕ್ಕೂ ಹೆಚ್ಚು ಪೆಟ್ಟಿಗೆಗಳ ಜೆಲಾಟಿನ್ ಸ್ಟಿಕ್‌ಗಳು, ಡಿಟೋನೇಟರ್‌ಗಳು ಇದ್ದವು. ಗಣಿಗಾರಿಕಾ ಚಟುವಟಿಕೆಗಳಿಗಾಗಿ ಇದನ್ನು ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ಖಚಿತ ಮಾಹಿತಿಯ […]

ಪ್ರಜಾ ಪ್ರಗತಿ 3 Dec 2025 12:42 pm

ಪುಟಿನ್ ಭೇಟಿ ಮುನ್ನ ಭಾರತ-ರಷ್ಯಾ ಒಪ್ಪಂದಕ್ಕೆ ಸಹಿ‌

ನವದೆಹಲಿ : ಡಿಸೆಂಬರ್ 4-5 ರಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಭಾರತ ಭೇಟಿಯ ಸಂದರ್ಭದಲ್ಲಿ ನಾಗರಿಕ ಪರಮಾಣು ಇಂಧನ ಕ್ಷೇತ್ರದಲ್ಲಿ ಭಾರತದೊಂದಿಗೆ ದ್ವಿಪಕ್ಷೀಯ ಸಹಕಾರವನ್ನು ಗಾಢಗೊಳಿಸುವ ತಿಳುವಳಿಕೆ ಒಪ್ಪಂದಕ್ಕೆ (MoU) ಸಹಿ ಹಾಕಲು ರಷ್ಯಾದ ಸಚಿವ ಸಂಪುಟ ಅನುಮೋದನೆ ನೀಡಿದೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ತಮಿಳುನಾಡಿನ ಕೂಡಂಕುಳಂ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಹಲವಾರು ರಿಯಾಕ್ಟರ್‌ಗಳನ್ನು ನಿರ್ಮಿಸುತ್ತಿರುವ ರಷ್ಯಾದ ರೋಸಾಟಮ್ ಪರಮಾಣು ನಿಗಮವು, ರಷ್ಯಾದ ಸರ್ಕಾರದ ಪರವಾಗಿ ಸಂಬಂಧಿತ […]

ಪ್ರಜಾ ಪ್ರಗತಿ 3 Dec 2025 12:14 pm

ನೆರವು ನೀಡುವ ವಿಮಾನಗಳಿಗೆ ಅನುಮತಿ ವಿಳಂಬ : ಪಾಕ್ ಆರೋಪದ ವಿರುದ್ಧ ಭಾರತ ತೀವ್ರ ಕಿಡಿ

ನವದೆಹಲಿ: ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾ ತತ್ತರಿಸಿ ಹೋಗಿದ್ದು, ಈ ನಡುವೆ ನೆರವು ನೀಡುವ ವಿಮಾನಗಳಿಗೆ ಅನುಮತಿ ವಿಳಂಬ ಮಾಡಲಾಗಿದೆ ಎಂದ ಪಾಕಿಸ್ತಾನ ಆರೋಪವನ್ನು ಭಾರತ ಮಂಗಳವಾರ ತಿರಸ್ಕರಿಸಿದೆ.ಆರೋಪ ಕುರಿತು ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಸಚಿವಾಲಯ, ಪಾಕಿಸ್ತಾನದ ಹೇಳಿಕೆ ಆಧಾರರಹಿತ ಹಾಗೂ ಹಾಸ್ಯಸ್ಪದ ಎಂದು ಹೇಳಿದೆ. ಸೋಮವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಲ್ಲಿಸಲಾದ ಪಾಕಿಸ್ತಾನದ ಓವರ್‌ಫ್ಲೈಟ್ ವಿನಂತಿಯನ್ನು ಅದೇ ದಿನ ಸಂಜೆ 5:30 ರ ವೇಳೆಗೆ ತೆರವುಗೊಳಿಸಲಾಗಿದೆ, ಕೇವಲ ನಾಲ್ಕು ಗಂಟೆಗಳ […]

ಪ್ರಜಾ ಪ್ರಗತಿ 3 Dec 2025 12:11 pm

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ಕಬ್ಬಿನ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ

ಜಮಖಂಡಿ: ಬಾಗಲಕೋಟೆ ಜಿಲ್ಲೆಯ ಸಿದ್ದಾಪುರ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಹತ್ತಿರ ರಾತ್ರಿ 12.30ಕ್ಕೆ ಕಬ್ಬಿನ ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಯುವಕರು ಮೃತಪಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ಸಿದ್ದಾಪುರ ಬಳಿ ತಡರಾತ್ರಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ವಿಶ್ವನಾಥ್ ಕಂಬಾರ್ (17), ಪ್ರವೀಣ್ ಶೇಡಬಾಳ್ (22), ಗಣೇಶ ಅಳ್ಳಿಮಟ್ಟಿ (20), ಪ್ರಜ್ವಲ್ ಶೇಡಬಾಳ್ (17) ಮೃತ ದುರ್ದೈವಿಗಳು. […]

ಪ್ರಜಾ ಪ್ರಗತಿ 3 Dec 2025 12:04 pm

ಮಾಜಿ ಪ್ರಧಾನಿ ಭೇಟಿಯಾಗಿ ಬಂದ ಸಹೋದರಿ ಉಜ್ಮಾ ಖಾನಮ್ ಹೇಳಿದ್ದೇನು?

ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (PTI) ಸಂಸ್ಥಾಪಕ ಇಮ್ರಾನ್ ಖಾನ್ ಅವರ ಆರೋಗ್ಯದ ಬಗ್ಗೆ ಹೆಚ್ಚುತ್ತಿರುವ ವದಂತಿಗಳ ಬೆನ್ನಲ್ಲೇ ಇದೀಗ ಪಾಕಿಸ್ತಾನ ಸರ್ಕಾರ ಜೈಲಿನಲ್ಲಿ ಇಮ್ರಾನ್ ಖಾನ್ ಭೇಟಿಯಾಗಲು ಅವರ ಸಹೋದರಿಗೆ ಅವಕಾಶ ನೀಡಿದೆ. ಇಂದು ರಾವಲ್ಪಿಂಡಿಯ ಅಡಿಯಾಲ ಜೈಲಿನ ಅಧಿಕಾರಿಗಳು ಮಾಜಿ ಪ್ರಧಾನಿ ಅವರ ಸಹೋದರಿ ಉಜ್ಮಾ ಖಾನಮ್ ಅವರಿಗೆ ಭೇಟಿ ಮಾಡಲು ಅನುಮತಿ ನೀಡಲಾಗಿತ್ತು. ಅದರಂತೆ ಉಜ್ಮಾ ಖಾನಮ್ ಇಂದು ಸಂಜೆ ಜೈಲಿಯಲ್ಲಿ ಮಾಜಿ ಪ್ರಧಾನಿಯನ್ನು ಭೇಟಿಯಾದರು. ಇಮ್ರಾನ್ ಖಾನ್ ಅವರ ಭೇಟಿಯನ್ನು ನಿರ್ಬಂಧಿಸಲಾಗಿದೆ […]

ಪ್ರಜಾ ಪ್ರಗತಿ 3 Dec 2025 12:02 pm