ಪಾಟ್ನ: ಬಿಹಾರದಲ್ಲಿ ಎನ್ ಡಿಎ ಸರ್ಕಾರಕ್ಕೆ ಬೆಂಬಲ ಘೋಷಿಸುವ ಬಗ್ಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಘೋಷಿಸುವ ಬಗ್ಗೆ ಮಾತನಾಡಿದ್ದಾರೆ. ನಿತೀಶ್ ಕುಮಾರ್ ನೇತೃತ್ವದ ಎನ್ ಡಿಎ ಸರ್ಕಾರಕ್ಕೆ ಬೆಂಬಲ ಘೋಷಿಸುವುದಕ್ಕೆ ಷರತ್ತು ವಿಧಿಸಿರುವ ಒವೈಸಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ಮುಸ್ಲಿಂ ಪ್ರಾಬಲ್ಯದ ಸೀಮಾಂಚಲ ಪ್ರದೇಶಕ್ಕೆ ನ್ಯಾಯ ಒದಗಿಸಿ, ಕೋಮುವಾದವನ್ನು ದೂರವಿಟ್ಟರೆ ಬಿಹಾರದ ಎನ್ಡಿಎ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಹೈದರಾಬಾದ್ ಸಂಸದರೂ […]
53ನೇ ಸಿಜೆಐ ಆಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಸೂರ್ಯಕಾಂತ್!
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ವಾಪಸ್ ಪಡೆಯುವ 370ನೇ ವಿಧಿಯನ್ನು ರದ್ದುಪಡಿಸುವುದು ಸೇರಿದಂತೆ ಹಲವಾರು ಮಹತ್ವದ ತೀರ್ಪುಗಳ ಭಾಗವಾಗಿರುವ ನ್ಯಾಯಮೂರ್ತಿ ಸೂರ್ಯಕಾಂತ್ ಸೋಮವಾರ ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.ನ್ಯಾಯಮೂರ್ತಿ ಬಿಆರ್ ಗವಾಯಿ ಅವರು ನವೆಂಬರ್ 23 ರಂದು ನಿವೃತ್ತರಾಗಿದ್ದು, ಅವರ ನಂತರ ಸೂರ್ಯಕಾಂತ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಪುಟ್ಟ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಸೂರ್ಯಕಾಂತ್ ಅವರಿಗೆ […]
ಫ್ರಾನ್ಸ್ ನೌಕಾ ಪಡೆ ಕೈಲಿ ಸಿಲುಕಿ ಜಾಗತಿಕವಾಗಿ ನಗೆಪಾಟಲಿಗೀಡಾದ ಪಾಕಿಸ್ತಾನ!
ನವದೆಹಲಿ: ಪಾಕಿಸ್ತಾನ ಮತ್ತೊಮ್ಮೆ ಜಾಗತಿಕವಾಗಿ ನಗೆಪಾಟಲಿಗೀಡಾಗಿದೆ. ಜಗತ್ತಿನ ಎದುರು ಪಾಕಿಸ್ತಾನದ ಸುಳ್ಳು ಪ್ರಚಾರ ಮತ್ತೊಮ್ಮೆ ಬಯಲಾಗಿದ್ದು ತನ್ನ ಸೇನೆ ಭಾರತಕ್ಕಿಂತ ಉತ್ತಮವಾಗಿದೆ ಎಂಬ ಗ್ರಹಿಕೆಯನ್ನು ಸೃಷ್ಟಿಸಲು ಹೋಗಿ ಫ್ರಾನ್ಸ್ ನೌಕಾಪಡೆ ಕೈಲಿ ಸಿಲುಕಿಕೊಂಡಿದೆ. ತನ್ನ ಸೇನೆ ಭಾರತಕ್ಕಿಂತ ಉತ್ತಮವಾಗಿದೆ ಎಂಬ ಗ್ರಹಿಕೆಯನ್ನು ಸೃಷ್ಟಿಸಲು ಹೆಣಗಾಡುತ್ತಿರುವ ಪಾಕಿಸ್ತಾನಿ ಮಾಧ್ಯಮಗಳು, ಮೇ ನಲ್ಲಿ ನಡೆದ ಸಂಘರ್ಷವು ತಮ್ಮ ವಾಯು ಶ್ರೇಷ್ಠತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಸುಳ್ಳು ಸುದ್ದಿಗಳನ್ನು ಪ್ರಕಟಿಸಿತ್ತು. ಫ್ರೆಂಚ್ ನೌಕಾಪಡೆಯು ಅವರ ಲೇಖನವನ್ನು […]
ಸಿಎಂ ಕುರ್ಚಿ ಗುದ್ದಾಟ: ತುರ್ತು ಸಭೆಗೆ ಹೆಚ್ಚಿದ ಒತ್ತಡ….!
ಬೆಂಗಳೂರು: ರಾಜ್ಯದಲ್ಲಿ ಸಿಎಂ ಗದ್ದುಗೆಗಾಗಿ ಗುದ್ದಾಟ ಹೆಚ್ಚಾಗುತ್ತಿರುವಂತೆಯೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಪ್ತರಾದ ಕೆಲ ಕಾಂಗ್ರೆಸ್ ಶಾಸಕರ ಮೂರನೇ ಬ್ಯಾಚ್ ಹೈಕಮಾಂಡ್ ಮೇಲೆ ಒತ್ತಡ ಹಾಕಲು ರಾತ್ರೋರಾತ್ರಿ ದೆಹಲಿ ತಲುಪಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸುತ್ತಿದ್ದಂತೆಯೇ ಕೆಲವು ದಿನಗಳಿಂದ ಚರ್ಚೆಯಾಗುತ್ತಿದ್ದ ಅಧಿಕಾರ ಹಂಚಿಕೆ ವಿವಾದ ಬಗೆಹರಿಸಲು ವರಿಷ್ಠರ ಮೇಲೆ ಹೊಸ ಒತ್ತಡ ಹೇರಲು ಎರಡು ಬ್ಯಾಚ್ ಶಾಸಕರು ಕಳೆದ ವಾರ ದೆಹಲಿಗೆ ಪ್ರಯಾಣ ಬೆಳೆಸಿದ್ದರು. ಈಗ ಎರಡನೇ […]
ಸಿಎಂ ಕುರ್ಚಿಗಾಗಿ ಗುದ್ದಾಟ: ಸಚಿವ ಸ್ಥಾನಕ್ಕೆ ಕೋಟಿಗಟ್ಟಲೆ ಡೀಲ್ : ಛಲವಾದಿ ನಾರಾಯಣ ಸ್ವಾಮಿ ಆರೋಪ?
ಬೆಂಗಳೂರು: ರಾಜ್ಯದಲ್ಲಿ ಸಿಎಂ ಸ್ಥಾನಕ್ಕಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಣದ ನಡುವಣ ಗುದ್ದಾಟ ತೀವ್ರವಾಗಿರುವಂತೆಯೇ ಇದೀಗ ಕಾಂಗ್ರೆಸ್ ಶಾಸಕರ ಕುದುರೆ ವ್ಯಾಪಾರದ ಮಾತುಗಳು ಕೇಳಿಬರುತ್ತಿದೆ. ಮಂತ್ರಿ ಸ್ಥಾನಕ್ಕಾಗಿ ಕೋಟಿಗಟ್ಟಲೇ ಡೀಲ್ ಮಾಡಲಾಗುತ್ತಿದೆ. ಒಬ್ಬ ಶಾಸಕರಿಗೆ ರೂ.50 ಕೋಟಿ ಬೆಲೆ ನಿಗದಿಯಾಗಿದೆ ಎಂಬ ಮಾಹಿತಿ ಹೊರಬಂದಿದೆ. ಅದೇ ರೀತಿ, ಸಚಿವ ಸ್ಥಾನಕ್ಕಾಗಿ ₹200 ಕೋಟಿ ರೂಪಾಯಿ ದರ ನಿಗದಿಯಾಗಿದೆ ಎಂಬ ಸುದ್ದಿಯೂ ಹರಿದಾಡುತ್ತಿದೆ. ಮೊದಲು ರೂ. 50 ಕೋಟಿ, ನಂತರ […]
ಪವರ್ ಶೇರಿಂಗ್ ಫೈಟ್ : ಡಿಕೆಶಿ ಜತೆ ಸಂಧಾನಕ್ಕೆ ಜಾರ್ಜ್ ಯತ್ನ!
ಬೆಂಗಳೂರು: ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನರ್ ರಚನೆಗೆ ಸಂಬಂಧಿಸಿದ ಕಾಂಗ್ರೆಸ್ ಪಕ್ಷದೊಳಗಿನ ಮುಸುಕಿನ ಗುದ್ದಾಟ ಕಿರುತೆರೆಯ ಧಾರಾವಾಹಿಯಂತೆ ಮುಂದುವರಿದಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಧ್ಯಪ್ರವೇಶಿಸಿ ನಿರ್ಧಾರ ತೆಗೆದುಕೊಳ್ಳುವವರೆಗೆ ನಾಯಕತ್ವ ಬದಲಾವಣೆ ವಿಚಾರ ಇನ್ನಷ್ಟು ದಿನ ಮುಂದುವರಿಯುವ ಸಾಧ್ಯತೆಯಿದೆ. ಶನಿವಾರ ಸಂಜೆ ಮುಖ್ಯಮಂತ್ರಿಯವರ ನಿವಾಸದಲ್ಲಿ ಒಂದೂವರೆ ಗಂಟೆಗಳಿಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಖರ್ಗೆ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ಹಂಚಿಕೆಯ ವಿಷಯವನ್ನು ಪ್ರಸ್ತಾಪಿಸಿದ್ದಾರೆ ಎಂಬ ಊಹಾಪೋಹಗಳು […]
‘ಬೆಂಕಿಯೊಂದಿಗೆ ಸರಸ’ಬೇಡ- ವಾಟಾಳ್ ನಾಗರಾಜ್ ಎಚ್ಚರಿಕೆ!
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾಯಿಸುವ ಯಾವುದೇ ಪ್ರಯತ್ನ ಬೆಂಕಿಯೊಂದಿಗೆ ಆಡುವ ಸರಸವಾಗಬಹುದು ಎಂದು ಕನ್ನಡ ಹೋರಾಟಗಾರ ಮತ್ತು ಮಾಜಿ ಶಾಸಕ ವಾಟಾಳ್ ನಾಗರಾಜ್ ಭಾನುವಾರ ಎಚ್ಚರಿಸಿದ್ದಾರೆ. ಪ್ರಸ್ತುತ ರಾಜ್ಯದ ಯಾವುದೇ ಪಕ್ಷದಲ್ಲಿ ಸಿದ್ದರಾಮಯ್ಯರಂತಹ ಸಾಮರ್ಥ್ಯ ಹೊಂದಿರುವ ನಾಯಕರಿಲ್ಲ ಎಂದಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ನಾಗರಾಜ್, ಸಿದ್ದರಾಮಯ್ಯ ಅವರನ್ನು ಬದಲಾಯಿಸುವ ಅಗತ್ಯವಿಲ್ಲ. ಕಾಂಗ್ರೆಸ್, ಬಿಜೆಪಿ ಅಥವಾ ಜೆಡಿಎಸ್ ಯಾವುದೇ ಪಕ್ಷದಲ್ಲೂ ಸಿದ್ದರಾಮಯ್ಯರಂತಹ ನಾಯಕರಿಲ್ಲ. ಅವರು ಅದ್ಭುತ ವಿಚಾರಗಳನ್ನು ಹೊಂದಿರುವ ವ್ಯಕ್ತಿ ಮತ್ತು […]
ಬೆಂಗಳೂರು ದರೋಡೆ ಆರೋಪಿ ಕಾನ್ಸ್ಟೇಬಲ್ ವಜಾ…..
ಬೆಂಗಳೂರು ಬೆಂಗಳೂರಿನ ಜನನಿಬಿಡ ಪ್ರದೇಶದಲ್ಲಿ ಹಾಡಹಗಲೇ ನಡೆದ 7.11 ಕೋಟಿ ರೂಪಾಯಿ ರಾಬರಿ ಪ್ರಕರಣದ ಮಾಸ್ಟರ್ ಮೈಂಡ್, ಗೋವಿಂದಪುರ ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ನಾಯ್ಕ್ನನ್ನು ಇಲಾಖೆ ಕೆಲಸದಿಂದ ವಜಾ ಮಾಡಲಾಗಿದೆ. ಖದೀಮರ ಜೊತೆ ಸೇರಿ ಪ್ಲಾನ್ ಮಾಡಿದ್ದ ಈತನನ್ನು ಅಮಾನತು ಮಾಡಿ ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ದೇವರಾಜ್ ಆದೇಶ ಹೊರಡಿಸಿದ್ದಾರೆ. ರಾಬರಿ ಪ್ರಕರಣದಲ್ಲಿ ಪೊಲೀಸ್ ಕಾನ್ಸ್ಟೇಬಲ್ನೇ ಶಾಮೀಲು ಆಗಿರುವುದರಿಂದ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ […]
ರಾಜ್ಯದ 2 ಲಕ್ಷ ಶಿಕ್ಷಕರ ಭವಿಷ್ಯ ಅತಂತ್ರ; ದೆಹಲಿಯಲ್ಲಿ ಇಂದು ಪ್ರತಿಭಟನೆ
ಬೆಂಗಳೂರು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಸೋಮವಾರ ನವದೆಹಲಿಯ ಜಂತರ್ ಮಂತರ್ನಲ್ಲಿ ಬೃಹತ್ ಪ್ರತಿಭಟನೆ ಜರುಗಲಿದೆ. ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಫೆಡರೇಷನ್ ವತಿಯಿಂದ ನಡೆಯಲಿರುವ ಈ ಪ್ರತಿಭಟನೆಯಲ್ಲಿ ಕರ್ನಾಟಕ ಸೇರಿದಂತೆ ದೇಶದ ಸಹಸ್ರಾರು ಶಿಕ್ಷಕರು ಪಾಲ್ಗೊಳ್ಳಲಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದಂತೆ ಕರ್ನಾಟಕದ 2 ಲಕ್ಷ, ದೇಶದ 30 ಲಕ್ಷ ಶಿಕ್ಷಕರು ಶಿಕ್ಷಕ ವೃತ್ತಿಯಲ್ಲಿ ಮುಂದುವರೆಯಬೇಕಾದರೇ 2 ವರ್ಷದಲ್ಲಿ ಕಡ್ಡಾಯವಾಗಿ ಟಿಇಟಿ ಪಾಸಾಗಬೇಕಿದೆ. ಕೇಂದ್ರ ಸರ್ಕಾರ ದೇಶದ 30 […]
ಮತ್ತೆ ತನ್ನ ಕುತಂತ್ರಿ ಬುದ್ಧಿ ತೋರಿದ ಚೀನಾ ….!
ನವದೆಹಲಿ: ವಿಶ್ವದ ದೊಡ್ಡಣ್ಣನಾಗುವ ಕನಸು ಕಾಣುತ್ತಿರುವ ನಮ್ಮ ನೆರೆ ರಾಷ್ಟ್ರ ಚೀನಾ ದಿನೇ ದಿನೆ ತಂತ್ರಜ್ಞಾನ ಮತ್ತು ಅತ್ಯಾಧುನಿಕ ಶಸ್ತ್ರಾಸ್ತ್ರಗಳ ತಯಾರಿ, ಪರೀಕ್ಷೆ ಮತ್ತು ಸಂಗ್ರಹದತ್ತ ದಾಪುಗಾಲಿಡುತ್ತಿದೆ. ಇದೀಗ ಇಂತಹ ಚೀನಾದ ಕುತಂತ್ರ ಬುದ್ದಿಯೊಂದು ಹೊರಬಿದ್ದಿದ್ದು, ಇತ್ತೀಚೆಗೆ ನಡೆದ ಭಾರತ-ಪಾಕ್ ಕಿರು ಸಮರದ ಸಂದರ್ಭದಲ್ಲಿ ತನ್ನ ಶಸ್ತ್ರಾಸ್ತ್ರ ಸಾಮರ್ಥ್ಯವನ್ನು ಪರೀಕ್ಷಿಸುವ ಮೂಲಕ ಅವಕಾಶವಾದಿತನವನ್ನು ಮೆರೆದ ಘಟನೆಯೊಂದು ವರದಿಯಾಗಿದೆ. ಈ ಮಾಹಿತಿ ಅಮೆರಿಕದ ದ್ವಿಪಕ್ಷೀಯ ಕಮಿಷನ್ನ ವಾರ್ಷಿಕ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅಮೆರಿಕ-ಚೀನಾ ಆರ್ಥಿಕ […]
ಭೂಮಿಯ ಮೇಲೆ ಜಿರಳೆಗಳೇ ಇಲ್ಲದ ಸ್ಥಳ ಯಾವುದು ಗೊತ್ತೆ?
ಬೆಂಗಳೂರು: ಸಾಮಾನ್ಯವಾಗಿ ಚರಂಡಿಯಿಂದ ಹಿಡಿದು ಅತ್ಯಂತ ಸ್ವಚ್ಛ ಪ್ರದೇಶಗಳಲ್ಲೂ ಜಿರಳೆಗಳು ಕಾಣಸಿಗುತ್ತವೆ. ಹೀಗಾಗಿ ಜಿರಳೆಗಳೇ ಇಲ್ಲದ ಪ್ರದೇಶವೇ ಇಲ್ಲ ಎಂದು ನೀವಂದುಕೊಂಡಿದ್ದಾರೆ ನಿಮ್ಮ ಊಹೆ ತಪ್ಪು. ಯಾಕೆಂದರೆ ಭೂಮಿಯ ಮೇಲೆ ಇರುವ ಕೆಲವೊಂದು ಪ್ರದೇಶಗಳಲ್ಲಿ ಜಿರಳೆಗಳೇ ಇಲ್ಲ. ಲಕ್ಷಾಂತರ ವರ್ಷಗಳಿಂದ ಭೂಮಿಯ ಮೇಲೆ ವಾಸವಾಗಿರುವ ಜಿರಳೆಗಳು ಭೂಮಿಯ ಕೆಲವು ಭಾಗಗಳಲ್ಲಿ ಇಲ್ಲವೇ ಇಲ್ಲ ಎನ್ನಬಹುದು. ಇದಕ್ಕೆ ಮುಖ್ಯ ಕಾರಣ ಅಲ್ಲಿನ ಪರಿಸರ ವ್ಯವಸ್ಥೆ ಎಂಬುದನ್ನು ಸಂಶೋಧಕರು ಪತ್ತೆ ಹಚ್ಚಿದ್ದಾರೆ. ಸಾಮಾನ್ಯವಾಗಿ […]

24 C