SENSEX
NIFTY
GOLD
USD/INR

Weather

25    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source

ಕಾಂಗ್ರೆಸ್ ಕಾರ್ಯಕರ್ತರ ವರ್ತನೆ ಖಂಡಿಸಿದ ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಸದನದಲ್ಲಿ ಆಡಿದ ಮಾತುಗಳನ್ನು ವಿರೋಧಿಸಿ ಅವರ ಮನೆಯ ಗೋಡೆಗಳಿಗೆ ಕೀಳು ಮಟ್ಟದ ಪೋಸ್ಟರ್ ಅಂಟಿಸಿ ತೇಜೋವಧೆ ಮಾಡಿದ ಪ್ರಕರಣವನ್ನು ಹಕ್ಕು ಬಾಧ್ಯತಾ ಸಮಿತಿಗೆ ವಹಿಸುವುದಾಗಿ ಸ್ವೀಕರ್ ಯು.ಟಿ.ಖಾದರ್ ರೂಲಿಂಗ್ ನೀಡಿದ್ದಾರೆ. ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸುರೇಶ್ ಕುಮಾರ್, ಸಾಮಾನ್ಯವಾಗಿ ರೂಢಿಯಲ್ಲಿರುವ ಒಂದು ಮಾತನ್ನು ನಾನು ಹೇಳಿದ್ದೇನೆ. ನಂತರ ಅದನ್ನು ಕಡತದಿಂದ ತೆಗೆಯುವಂತೆ ಮತ್ತು ಆ ಮಾತನ್ನು ವಾಪಸ್ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದ್ದೇನೆ. ಮುಖ್ಯಮಂತ್ರಿಗಳು ಕೂಡ ಕಡತದಿಂದ ಮಾತು ತೆಗೆಯುವಂತೆ […]

ಕನ್ನಡ ದುನಿಯಾ 27 Jan 2026 7:53 pm

10 ಕೆಜಿ ಮಾದಕ ದ್ರವ್ಯ ವಶಕ್ಕೆ: ಪೊಲೀಸ್ ಕಾನ್‌ ಸ್ಟೆಬಲ್ ಸೇರಿದಂತೆ ನಾಲ್ವರು ಅರೆಸ್ಟ್

ಪುಣೆ: ಜಿಲ್ಲೆಯಲ್ಲಿ 9.6 ಕೆಜಿ ಮಾದಕ ವಸ್ತು ವಶಪಡಿಸಿಕೊಂಡಿದ್ದು, ಪೊಲೀಸ್ ಕಾನ್‌ ಸ್ಟೆಬಲ್ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪುಣೆ ಗ್ರಾಮೀಣ ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಜನವರಿ 17 ರಂದು ಶಿರೂರ್ ಪೊಲೀಸರು ಶಾದಾಬ್ ಶೇಖ್(41) ಅವರ ಬಳಿಯಿಂದ ಸುಮಾರು 2 ಕೋಟಿ ರೂ. ಮೌಲ್ಯದ 1.5 ಕೆಜಿ ಶಂಕಿತ ಮಾದಕ ದ್ರವ್ಯವನ್ನು ವಶಪಡಿಸಿಕೊಂಡ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ವಶಪಡಿಸಿಕೊಂಡ ಮಾದಕ ದ್ರವ್ಯ ಮೆಫೆಡ್ರೋನ್ ಅಥವಾ ಆಲ್ಪ್ರಜೋಲಮ್ ಆಗಿದೆಯೇ ಎಂದು ಇನ್ನೂ ಖಚಿತವಾಗಿಲ್ಲ. ಶೇಖ್ ಅವರ […]

ಕನ್ನಡ ದುನಿಯಾ 27 Jan 2026 7:17 pm

ಬೆಂಗಳೂರು ಚಲೋ ಕೈಗೊಂಡಿದ್ದ ಸಾರಿಗೆ ನೌಕರರಿಗೆ ಮತ್ತೊಂದು ಶಾಕ್

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಕರೆ ನೀಡಿರುವ ಬೆಂಗಳೂರು ಚಲೋ ಹೋರಾಟಕ್ಕೆ ಕೆ.ಎಸ್.ಆರ್.ಟಿ.ಸಿ ಬಿಗ್ ಶಾಕ್ ನೀಡಿದೆ. ಮುಷ್ಕರದಲ್ಲಿ ಭಾಗಿಯಾಗದಂತೆ ಸಾರಿಗೆ ಸಿಬ್ಬಂದಿಗಳಿಗೆ ಖಡಕ್ ಎಚ್ಚರಿಕೆ ನೀಡಿದೆ. ವೇತನ ಪರಿಷ್ಕರಣೆಗೆ ಸಂಬಂಧಿಸಿದ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಾಲ್ಕು ನಿಗಮಗಳ ಸಾರಿಕೆ ನೌಕರರು ಹಾಗೂ ಸಿಬ್ಬಂದಿಗಳು ಜನವರಿ 29ರಂದು ಮುಷ್ಕರ ನಿಟ್ಟಿನಲ್ಲಿ ಬೆಂಗಳೂರು ಚಲೋಗೆ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಷ್ಕರ ತಡೆಯುವ ನಿಟ್ಟಿನಲ್ಲಿ ಕೆ.ಎಸ್.ಆರ್.ಟಿ.ಸಿ ಎಂ.ಡಿ ಸಾರಿಗೆ ಸಿಬ್ಬಂದಿಗಳಿಗೆ […]

ಕನ್ನಡ ದುನಿಯಾ 27 Jan 2026 7:12 pm

ರೈತರಿಗೆ ಗುಡ್ ನ್ಯೂಸ್: ಮೆಕ್ಕೆಜೋಳಕ್ಕೆ ಬೆಲೆ ವ್ಯತ್ಯಾಸದ ಮೊತ್ತ ಪಾವತಿಗೆ ಹೆಸರು ನೋಂದಾಯಿಸಿ

ಬಳ್ಳಾರಿ: ಜಿಲ್ಲೆಯಲ್ಲಿ 2025-26 ನೇ ಸಾಲಿಗೆ ಮುಂಗಾರು ಹಂಗಾಮಿಗೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಮೆಕ್ಕೆಜೋಳ ಉತ್ಪನ್ನಕ್ಕೆ ರೈತರಿಗೆ ಬೆಲೆ ವ್ಯತ್ಯಾಸದ ಮೊತ್ತವನ್ನು ಪಾವತಿಸಲು ಉದ್ದೇಶಿಸಲಾಗಿದ್ದು, ಅರ್ಹ ರೈತರು ನೋಂದಾಯಿಸಿಕೊಳ್ಳುವAತೆ ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ರಾಜ್ಯ ಸರ್ಕಾರದಿಂದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಬೆಂಗಳೂರು ಶಾಖಾ ವ್ಯವಸ್ಥಾಪಕರು, ವಿಜಯನಗರ ಜಿಲ್ಲೆ ಇವರಿಂದ ಎಫ್.ಎ.ಕ್ಯೂ. ಗುಣಮಟ್ಟದ ಮೆಕ್ಕೆಜೋಳ ಉತ್ಪನ್ನಕ್ಕೆ ಮಾರುಕಟ್ಟೆ ಮಧ್ಯಪ್ರವೇಶ ದರ ಪ್ರತಿ ಕ್ವಿಂಟಾಲ್‌ಗೆ ಗರಿಷ್ಠ ರೂ. 2,150 ನಿಗದಿಪಡಿಸಿದ […]

ಕನ್ನಡ ದುನಿಯಾ 27 Jan 2026 6:52 pm

BREAKING: ಪೌರಾಯುಕ್ತೆಗೆ ಧಮ್ಕಿ ಪ್ರಕರಣ: ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ನ್ಯಾಯಾಂಗ ಬಂಧನ: ಜೈಲೇ ಗತಿ

ಚಿಕ್ಕಬಳ್ಳಾಪುರ: ನಗರಸಭೆ ಪೌರಾಯುಕ್ತೆಗೆ ನಿಂದಿಸಿ, ಜೀವಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ನ್ಯಾಯಾಂಗ ಬಂಧನ ವಿಧಿಸಿ ಶಿಡ್ಲಘಟ್ಟ ಕೋರ್ಟ್ ಆದೇಶ ನೀಡಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆಯೊಡ್ಡಿ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 12 ದಿನಗಳಿಂದ ತಲೆ ಮರೆಸಿಕೊಂಡಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಕೇರಳದಲ್ಲಿ ಪೊಲೀಸರು ಬಂಧಿಸಿದ್ದರು. ಇಂದು ರಾಜೀವ್ ಗೌಡ ಅವರನ್ನು ಶಿಡ್ಲಘಟ್ಟ ಜೆ.ಎಂ.ಎಫ್.ಸಿ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ವೇಳೆ […]

ಕನ್ನಡ ದುನಿಯಾ 27 Jan 2026 6:48 pm

ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ v/s ಯೋಗಿ ಆದಿತ್ಯನಾಥ್: ಅಯೋಧ್ಯೆ ಅಧಿಕಾರಿ ರಾಜೀನಾಮೆ!

ಉತ್ತರ ಪ್ರದೇಶ ರಾಜ್ಯ ಸುದ್ದಿಯಲ್ಲಿದೆ. ಕಾರಣ ಶಂಕರಾಚಾರ್ಯಅವಿಮುಕ್ತೇಶ್ವರಾನಂದ v/s ಯೋಗಿ ಆದಿತ್ಯನಾಥ್. ಹೌದು ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಾಘಮೇಳದಲ್ಲಿ ಶಂಕರಾಚಾರ್ಯ ಪಟ್ಟದ ಸುತ್ತ ನಡೆಯುತ್ತಿರುವ ವಿವಾದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಶಂಕರಾಚಾರ್ಯಅವಿಮುಕ್ತೇಶ್ವರಾನಂದ ನಡುವಿನ ಜಟಾಪಟಿಗೆ ಕಾರಣವಾಗಿದೆ. ಈಗ ಅಧಿಕಾರಿಯೊಬ್ಬರ ರಾಜೀನಾಮೆ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸ್ವಾಮಿ ಮತ್ತು ಯೋಗಿ ಆದಿತ್ಯನಾಥ್ ನಡುವಿನ ವಿವಾದ ತೀವ್ರ ಸ್ವರೂಪವನ್ನು ಬಯಲು ಮಾಡಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ, ಪ್ರಧಾನಮಂತ್ರಿ ಮತ್ತು ಸಂವಿಧಾನಕ್ಕೆ ಬೆಂಬಲ ಸೂಚಿಸಿ ಅಯೋಧ್ಯೆಯ ಅಧಿಕಾರಿಯೊಬ್ಬರು ತಮ್ಮ ಹುದ್ದೆಗೆ […]

ಕನ್ನಡ ದುನಿಯಾ 27 Jan 2026 6:46 pm

ಕೊರಟಗೆರೆ : ವಿಜೃಂಭಣೆಯಿಂದ ಜರುಗಿದ ಕ್ಯಾಮಯನಹಳ್ಳಿ ಬ್ರಹ್ಮರಥೋತ್ಸವ

ಕೊರಟಗೆರೆ:- ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರದಲ್ಲಿ ಒಂದಾದ ಕ್ಯಾಮೇನಹಳ್ಳಿ ಶ್ರೀ ಆಂಜನೇಯ ಸ್ವಾಮಿಯ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ವೈಭವದಿಂದ ಜರುಗಿತು . ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಕ್ಯಾಮೇನಹಳ್ಳಿ ಕಮನೀಯ ಕ್ಷೇತ್ರವೆಂದೆ ಪ್ರಸಿದ್ಧಿ ಪಡೆದಿರುವ ಶ್ರೀ ಆಂಜನೇಯ ಸ್ವಾಮಿಯ ಬ್ರಹ್ಮ ರಥೋತ್ಸವ ಜಿಲ್ಲೆ, ತಾಲೂಕು ಸೇರಿದಂತೆ ರಾಜ್ಯದ ವಿವಿಧ ಕಡೆಗಳಿಂದ ಬಂದಿದ್ದ ಸಾವಿರಾರು ಭಕ್ತರು ದೇವರ ದರ್ಶನ ಪಡೆದು ಪುನೀತ ಭಾವನೆಯಲ್ಲಿ ಹಿಂದಿರುಗುತ್ತಿದ್ದು ಕಂಡುಬಂದು. ಪಾಂಡು ವಂಶದ ಜನಮೆ ಜಯ ರಾಜ ಪ್ರತಿಷ್ಠಾಪಿಸಲ್ಪಟ್ಟ […]

ಪ್ರಜಾ ಪ್ರಗತಿ 27 Jan 2026 6:38 pm

ಮನರೇಗಾ ಯೋಜನೆ ಮರುಸ್ಥಾಪಿಸಲು ಒತ್ತಾಯ: ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಸಿಎಂ, ಡಿಸಿಎಂ, ಕಾಂಗ್ರೆಸ್ ನಾಯಕರ ನಿಯೋಗ

ಬೆಂಗಳೂರು: ಮನರೇಗಾ ಯೋಜನೆ ಮರುಸ್ಥಾಪಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕರ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಬಳಿಕ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅವರ ನೇತೃತ್ವದ ಕಾಂಗ್ರೆಸ್ ಪಕ್ಷದ ನಿಯೋಗ ಬಸ್ ಮೂಲಕ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಉದ್ಯೋಗ ಖಾತರಿಯಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ […]

ಕನ್ನಡ ದುನಿಯಾ 27 Jan 2026 6:23 pm

BIG UPDATE: ಪ್ರಿಯಕರನೊಂದಿಗೆ ನವ ವಿವಾಹಿತೆ ಪರಾರಿ: ಪತಿ, ಮದುವೆ ಮಾಡಿಸಿದ ಸೋದರ ಮಾವ ಆತ್ಮಹತ್ಯೆ

ದಾವಣಗೆರೆ: ನವ ವಿವಾಹಿತೆ ಪ್ರಿಯಕರನೊಂದಿಗೆ ಪರಾರಿಯಾಗಿದ್ದರಿಂದ ಮನನೊಂದ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮಾಹಿತಿ ತಿಳಿದ ಮದುವೆ ಮಾಡಿಸಿದ ವಧುವಿನ ಸೋದರ ಮಾವ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ದಾವಣಗೆರೆ ತಾಲೂಕಿನ ಗುಮ್ಮನೂರು ಗ್ರಾಮದ ಹರೀಶ್(30), ದಾವಣಗೆರೆಯ ಆನೆಕೊಂಡದ ರುದ್ರೇಶ್(36) ಆತ್ಮಹತ್ಯೆ ಮಾಡಿಕೊಂಡವರು. ದಾವಣಗೆರೆ ತಾಲೂಕಿನ ಹುಲಿಕಟ್ಟೆ ಗ್ರಾಮದ ಸರಸ್ವತಿ ಅವರನ್ನು ಮೂರು ತಿಂಗಳ ಹಿಂದೆ ಹರೀಶ್ ಮದುವೆಯಾಗಿದ್ದರು. ಜನವರಿ 23ರಂದು ಪ್ರಿಯಕರನೊಂದಿಗೆ ಸರಸ್ವತಿ ಪರಾರಿಯಾಗಿದ್ದರು. ಹುಡುಕಾಟ ನಡೆಸಿದ ನಂತರ ಜನವರಿ 25ರಂದು ಪ್ರಿಯಕರನೊಂದಿಗೆ ಸರಸ್ವತಿ ಪತ್ತೆಯಾಗಿದ್ದರು. ಇದರಿಂದ […]

ಕನ್ನಡ ದುನಿಯಾ 27 Jan 2026 6:21 pm

BIG NEWS: ಶ್ರೀಶೈಲಂ ದೇವಾಲಯದ ಬಳಿ ಕಾರಿನಲ್ಲಿ 30 ಲಕ್ಷ ಹಣ ಪತ್ತೆ!

ಅಮರಾವತಿ: ಬೆಳಗಾವಿಯ ಚೋರ್ಲಾ ಘಾಟ್ ನಲ್ಲಿ ಬರೋಬ್ಬರಿ 400 ಕೋಟಿ ದರೋಡೆ ಪ್ರಕರಣ ದೇಶಾದ್ಯಂತ ಭಾರಿ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಬೆಂಗಳೂರಿನಲ್ಲಿ ಎಟಿಎಂಗೆ ಹಾಕಲು ಕೊಟ್ಟಿದ್ದ 1 ಕೋಟಿಗೂ ಅಧಿಕ ಹಣದ ಸಮೇತ ಸಿಬ್ಬಂದಿಗಳೇ ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಎರಡೂ ಪ್ರಕರಣಗಳ ತನಿಖೆ ಮುಂದುವರೆದಿರುವಾಗಲೇ ಶ್ರೀಶೈಲಂ ದೇವಾಲಯದ ಬಳಿ ಕಾರಿನಲ್ಲಿ 30 ಲಕ್ಷ ಹಣ ಪತ್ತೆಯಾಗಿರುವುದು ತೀವ್ರ ಕುತೂಹಲ ಮೂಡಿಸಿದೆ. ಆಂಧ್ರಪ್ರದೆಷದ ಶ್ರೀಶೈಲಂ ದೇವಸ್ಥಾನದ ಬಳಿ ಮಹಾರಾಷ್ಟ್ರದ ನೋಂದಣಿ ಇರುವ ಕಾರಿನಲ್ಲಿ ಬರೋಬ್ಬರಿ 30 ಲಕ್ಷ […]

ಕನ್ನಡ ದುನಿಯಾ 27 Jan 2026 6:12 pm

ಇಡೀ ಕರ್ನಾಟಕದ ಗಮನ ಸೆಳೆದ ಚಿತ್ರದುರ್ಗದ ‘ಎಡ್ ಲ್ಯಾಬ್’

ಕೋಟೆನಾಡು ಚಿತ್ರದುರ್ಗ ಶೈಕ್ಷಣಿಕ ಚಿತ್ರಣ ಬದಲಿಸುತ್ತಿರುವ ‘ಎಡ್ ಲ್ಯಾಬ್’ ಇಡೀ ಕರ್ನಾಟಕದ ಗಮನ ಸೆಳೆದಿದೆ. ಸಚಿವ ಡಿ. ಸುಧಾಕರ್ ‘ಎಡ್‍ ಲ್ಯಾಬ್’ ಹಾಗೂ ಡಿಜಿಟಲ್ ಕೊಠಡಿಯನ್ನು ಉದ್ಘಾಟಿಸಿದ್ದಾರೆ. ಚಿತ್ರದುರ್ಗ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಸೋಮವಾರ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್, ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರು ‘ಎಡ್ ಲ್ಯಾಬ್’ ಹಾಗೂ ಡಿಜಿಟಲ್ ಕೊಠಡಿ ಉದ್ಘಾಟಿಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಮಾತನಾಡಿ, “ಸುಮಾರು […]

ಕನ್ನಡ ದುನಿಯಾ 27 Jan 2026 5:49 pm

BREAKING: ಯೋಗೀಶ್ ಗೌಡ ಹತ್ಯೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಹೇಳಿದ್ದೇನು?

ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದಂತೆ ಮತ್ತೆ ಜೈಲು ಸೇರಿದ್ದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಮೇಲೆ ಬಿಡುಗಡೆಯಾಗಿದ್ದ ವಿನಯ್ ಕುಲಕರ್ಣಿ ಅವರ ವಿರುದ್ಧ ಸಾಕ್ಷ್ಯ ನಾಶ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ವಿನಯ್ ಕುಲಕರ್ಣಿ ಜಾಮೀನು ರದ್ದುಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಮತ್ತೆ ಪರಪ್ಪನ […]

ಕನ್ನಡ ದುನಿಯಾ 27 Jan 2026 5:41 pm

ಭಾರತ-ಯುರೋಪ್ ನಡುವೆ ಮದರ್ ಆಫ್ ಆಲ್ ಟ್ರೇಡ್ ಡೀಲ್ಸ್ ಅಗ್ಗವಾಗಲಿರುವ ಉತ್ಪನ್ನಗಳ ಪಟ್ಟಿ ಇಲ್ಲಿದೆ

ನವದೆಹಲಿ: ಶೀಘ್ರದಲ್ಲೇ ನಿಮ್ಮ ನೆಚ್ಚಿನ ಸೂಪರ್ ಮಾರ್ಕೆಟ್ ಮತ್ತು ಶೋರೂಂಗಳಲ್ಲಿ ಯುರೋಪಿಯನ್ ಉತ್ಪನ್ನಗಳ ಬೆಲೆ ಇಳಿಕೆಯಾಗಲಿದೆ. ಭಾರತ ಮತ್ತು ಯುರೋಪಿಯನ್ ಯೂನಿಯನ್ (EU) ಇತಿಹಾಸದಲ್ಲೇ ಅತಿದೊಡ್ಡ ಮುಕ್ತ ವ್ಯಾಪಾರ ಒಪ್ಪಂದಕ್ಕೆ (FTA) ಸಹಿ ಹಾಕಿವೆ. ಈ ಒಪ್ಪಂದದ ಅಡಿಯಲ್ಲಿ ಹಲವು ಉತ್ಪನ್ನಗಳ ಮೇಲೆ ಶೂನ್ಯ ಸುಂಕ(Zero Duty) ವಿಧಿಸಲು ನಿರ್ಧರಿಸಲಾಗಿದೆ. ಇದರಿಂದಾಗಿ ಚಾಕೊಲೇಟ್ ವೈನ್‌ನಿಂದ ಹಿಡಿದು ಐಷಾರಾಮಿ ಕಾರುಗಳವರೆಗೆ ಹಲವು ವಸ್ತುಗಳು ಅಗ್ಗವಾಗಲಿವೆ. ಏನೆಲ್ಲಾ ಅಗ್ಗವಾಗಲಿದೆ? ಇಲ್ಲಿದೆ ಡೀಟೇಲ್ಸ್: 1.ಐಷಾರಾಮಿ ಕಾರುಗಳು: ಆಡಿ, ಬಿಎಂಡಬ್ಲ್ಯು ಮತ್ತು ಮರ್ಸಿಡಿಸ್‌ನಂತಹ […]

ಕನ್ನಡ ದುನಿಯಾ 27 Jan 2026 5:40 pm

BREAKING: ಸರ್ಕಾರಿ ಶಾಲೆಯಲ್ಲಿ ಖನಿಜಾಂಶದ ಮಾತ್ರೆ ಸೇವಿಸಿದ್ದ 59 ವಿದ್ಯಾರ್ಥಿಗಳು ಅಸ್ವಸ್ಥ

ಶಿವಮೊಗ್ಗ: ಸರ್ಕಾರಿ ಶಾಲೆಯಲ್ಲಿ ಖನಿಜಾಂಶದ ಮಾತ್ರೆ ಸೇವಿಸಿದ್ದ 59 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಳಿಹಳ್ಳಿ ಶಾಲೆಯಲ್ಲಿ ನಡೆದಿದೆ. ಅರಳಿಹಳ್ಳಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಅನಿಮಿಯಾ ತಡೆಗಟ್ಟಲು ಶಾಲೆಯಲ್ಲಿ ವಾರಕ್ಕೆ ಒಮ್ಮೆ ವಿದ್ಯಾರ್ಥಿಗಳಿಗೆ ಖನಿಜಾಂಶದ ಮಾತ್ರೆ ನೀಡಲಾಗುತ್ತದೆ. ಅದರಂತೆ ಇಂದು ಕೂಡ ಮಾತ್ರೆ ಕೊಡಲಾಗಿತ್ತು. ಮಧ್ಯಾಹ್ನ ಊಟದ ಬಳಿಕ ವಿದ್ಯಾರ್ಥಿಗಳಿಗೆ ಖನಿಜಾಂಶದ ಮಾತ್ರೆ ಕೊಡಲಾಗಿತ್ತು. ಮಾತ್ರೆ ಸೇವಿಸ ಕೆಲ ಸಮಯದಲ್ಲೇ ಇಬ್ಬರು ಮಕ್ಕಳು ಹೊಟ್ಟೆ ನೋವು ಎಂದು ಹೇಳಿದ್ದರು. […]

ಕನ್ನಡ ದುನಿಯಾ 27 Jan 2026 5:15 pm

ನಟಿ ಕಾವ್ಯಾ ಗೌಡ ಹಾಗೂ ಪತಿ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಂಗಳೂರು: ರಾಧಾ ರಮಣ, ಗಾಂಧಾರಿ ಧಾರಾವಾಹಿ ಖ್ಯಾತಿಯ ನಟಿ ಕಾವ್ಯಾ ಗೌಡ ಕುಟುಂಬದ ಆಸ್ತಿ ಕಲಹ ಬೀದಿಗೆ ಬಂದಿದೆ. ಕಾವ್ಯಾ ಗೌಡ ಹಾಗೂ ಆಕೆಯ ಪತಿ ಸೋಮಶೇಖರ್ ಮೇಲೆ ಹಲ್ಲೆ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ನಟಿ ಕಾವ್ಯಾ ಗೌಡ, ಪತಿ ಸೋಮಶೇಖರ್ ಸಂಬಂಧಿಕರೇ ನನ್ನ ಹಾಗೂ ನನ್ನ ಪತಿ ಮೇಲೆ ಹಲ್ಲೆ ನಡೆಸಿದ್ದಾರೆ. ನಮ್ಮ ಜನಪ್ರಿಯತೆಯನ್ನು ಸಹಿಸದೇ ನನ್ನ ಹಾಗೂ ಪತಿ ಸೋಮಶೇಖರ್ ಮೇಲೆ ಹಲ್ಲೆ ನಡೆದಿದ್ದು, ಪತಿಗೆ ಚಾಕುವಿನಿಂದ ಇರಿದಿದ್ದಾರೆ ಎಂದು ಆರೋಪಿಸಿದ್ದರು. […]

ಕನ್ನಡ ದುನಿಯಾ 27 Jan 2026 4:52 pm

ಟಿ-20 ವಿಶ್ವಕಪ್: ಬಲಿಷ್ಠವಾದ ವೆಸ್ಟ್‌ ಇಂಡೀಸ್‌ ತಂಡ ಪ್ರಕಟ!

ಐಸಿಸಿ ಟಿ-20 ವಿಶ್ವಕಪ್ 2026ರ ಬಿಸಿ ಏರುತ್ತಿದೆ. ಪುರುಷರ ಟಿ-20 ವಿಶ್ವಕಪ್ ಪಂದ್ಯಾವಳಿಗೆ ವೆಸ್ಟ್ ಇಂಡೀಸ್ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ತಂಡವನ್ನು ಶೈ ಹೋಪ್ ನಾಯಕನಾಗಿ ಮುನ್ನಡೆಸಲಿದ್ದಾರೆ. ಟಿ-20 ವಿಶ್ವಕಪ್ ಫೆಬ್ರವರಿ 7ರಂದು ಆರಂಭವಾಗಲಿದೆ. ಭಾರತ ಮತ್ತು ಶ್ರೀಲಂಕಾದಲ್ಲಿ ಪಂದ್ಯಗಳು ನಡೆಯಲಿದ್ದು, ಮಾರ್ಚ್ 8ಕ್ಕೆ ಫೈನಲ್ ಪಂದ್ಯವಿದೆ. ವೆಸ್ಟ್ ಇಂಡೀಸ್ ತಂಡವನ್ನು ಇಂಗ್ಲೆಂಡ್, ಇಟಲಿ, ಸ್ಕಾಟ್ಲೆಂಡ್ ಮತ್ತು ನೇಪಾಳದೊಂದಿಗೆ ‘ಸಿ’ ಗುಂಪಿಗೆ ಸೇರಿಸಲಾಗಿದೆ. ತಂಡ ಫೆಬ್ರವರಿ 7ರಂದು ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ಸ್ಕಾಟ್ಲೆಂಡ್ ವಿರುದ್ಧ ಮೊದಲ […]

ಕನ್ನಡ ದುನಿಯಾ 27 Jan 2026 4:34 pm

ಸೈಟ್ ಅಥವಾ ಜಮೀನು ಕೊಳ್ಳುವ ಪ್ಲಾನ್ ಇದೆಯೇ? ಈ ದಾಖಲೆಗಳಲ್ಲಿ ಒಂದಿಲ್ಲದಿದ್ದರೂ ನಿಮ್ಮ ಆಸ್ತಿ ಸೇಫ್ ಅಲ್ಲ

ಬೆಂಗಳೂರು: ಇಂದು ಭೂಮಿ ಎಂದರೆ ಬಂಗಾರಕ್ಕಿಂತಲೂ ದುಬಾರಿ. ಒಂದು ಸಣ್ಣ ನಿವೇಶನ ಅಥವಾ ಕೃಷಿ ಜಮೀನು ಖರೀದಿಸುವುದು ಪ್ರತಿಯೊಬ್ಬರ ಜೀವನದ ಬಹುದೊಡ್ಡ ಕನಸು. ಕಳೆದ ಕೆಲವು ವರ್ಷಗಳಲ್ಲಿ ಸೈಟುಗಳ ಬೆಲೆ ಮಾತ್ರವಲ್ಲ, ಹಳ್ಳಿಗಳಲ್ಲಿನ ಕೃಷಿ ಭೂಮಿಯ ದರವೂ ದುಪ್ಪಟ್ಟಾಗಿದೆ. ಪ್ರತಿಯೊಬ್ಬರಿಗೂ ಸ್ವಂತ ಮನೆ ಕಟ್ಟಬೇಕು ಅಥವಾ ಒಂದಷ್ಟು ಜಮೀನು ಮಾಡಿ ನೆಮ್ಮದಿಯಿಂದ ಇರಬೇಕು ಎಂಬ ಕನಸಿರುವುದು ಸಹಜ. ಆದರೆ, ಈ ರಿಯಲ್ ಎಸ್ಟೇಟ್ ಭರಾಟೆಯಲ್ಲಿ ಸರಿಯಾದ ಮಾಹಿತಿ ಇಲ್ಲದೆ ವ್ಯವಹಾರಕ್ಕೆ ಇಳಿದರೆ, ನೀವು ಕಷ್ಟಪಟ್ಟು ಕೂಡಿಟ್ಟ ಹಣ […]

ಕನ್ನಡ ದುನಿಯಾ 27 Jan 2026 4:08 pm

ಬೆಂಗಳೂರಲ್ಲಿ ವಿದೇಶಿಯರಿಗೆ ಮನೆ ಬಾಡಿಗೆ ಕೊಡಲು ಹೊಸ ನಿಯಮ

ಬೆಂಗಳೂರು ನಗರದಲ್ಲಿ ಬಾಡಿಗೆ ಮನೆಗೆ ಭಾರೀ ಬೇಡಿಕೆ ಇದೆ. ಹೊರ ರಾಜ್ಯದವರು, ವಿದೇಶದವರು ಬಂದು ನಗರದಲ್ಲಿ ನೆಲೆಸಿದ್ದಾರೆ. ಆದರೆ ವಿದೇಶಿಯರಿಗೆ ಮನೆ ಬಾಡಿಗೆ ಕೊಡುವ ಮುನ್ನ ಇದನ್ನು ತಿಳಿಯಿರಿ. ಪೊಲೀಸರು ಕೆಲವು ಸೂಚನೆಗಳನ್ನು ನೀಡಿದ್ದಾರೆ. ಈಶಾನ್ಯ ವಿಭಾಗದ ಪೊಲೀಸರು ಕೊತ್ತನೂರು ವ್ಯಾಪ್ತಿಯಲ್ಲಿರುವ ಮನೆ ಮಾಲೀಕರಿಗೆ ವೀಸಾ ಅವಧಿ ಮೀರಿದ ಮತ್ತು ವಿದೇಶಿ ಪ್ರಜೆಗಳು ಮಾದಕವಸ್ತು ಮಾರಾಟದಲ್ಲಿ ಭಾಗಿಯಾಗಿರುವುದನ್ನು ಉಲ್ಲೇಖಿಸಿ ಕಠಿಣ ಎಚ್ಚರಿಕೆಗಳನ್ನು ನೀಡಿದ್ದಾರೆ. ಇಂತಹ ನಿಯಮ ಉಲ್ಲಂಘನೆಗಳಿಗಾಗಿ ಕಾನೂನು ಕ್ರಮವನ್ನು ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಬೆಂಗಳೂರು […]

ಕನ್ನಡ ದುನಿಯಾ 27 Jan 2026 4:01 pm

BREAKING: ದೊಣ್ಣೆಯಿಂದ ತಲೆಗೆ ಹೊಡೆದು ಪತ್ನಿಯನ್ನೇ ಕೊಲೆಗೈದ ಪತಿ

ಚಿತ್ರದುರ್ಗ: ಕ್ಷುಲ್ಲಕ ಕಾರಣಕ್ಕೆ ಹಲ್ಲೆ, ಕೌಟುಂಬಿಕ ಕಲಹದಂತಹ ಘಟನೆ ಕೊಲೆಯಲ್ಲಿ ಅಂತ್ಯವಾಗುತ್ತಿರುವ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇತ್ತೀಚಿನ ದಿನಗಳಲ್ಲಿ ಸಂಬಂಧಗಳು, ಕೌಟುಂಬಿಕ ನೆಲೆಗಟ್ಟು ಸಡಿಲಗೊಳುತ್ತಿದ್ದು, ಮನುಷ್ಯ ಕ್ರೂರಿಯಾಗಿ ಬದಲಾಗುತ್ತಿದ್ದಾನೆ. ಇಲ್ಲೋರ್ವ ಪತಿ ಮಹಾಶಯ ಪತ್ನಿಯನ್ನೇ ದೊಣ್ಣೆಯಿಂದ ಹೊಡೆದು ಕೊಂದಿರುವ ಘಟನೆ ಬೆಳಕಿಗೆ ಬಂದಿದೆ. ಕೌಟುಂಬಿಕ ಕಲಹದಿಂದ ಕೋಪದ ಕೈಗೆ ಬುದ್ಧಿಕೊಟ್ಟ ಪತಿ ಮಹಾಶಯ ಪತ್ನಿಯ ತಲೆ ಮೇಲೆ ದೊಣ್ಣೆಯಿಂದ ಹೊಡೆದು ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ಈ […]

ಕನ್ನಡ ದುನಿಯಾ 27 Jan 2026 3:59 pm

‘ರೈತರಿಗೆ ಹವಾಮಾನ ಆಧಾರಿತ ವಿಮೆ ಸಮರ್ಪಕವಾಗಿ ತಲುಪಿಸಲು ಕ್ರಮ’ : ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ: ಹವಾಮಾನ ಆಧಾರಿತ ಬೆಳೆ ವಿಮೆಯು ರೈತರಿಗೆ ಸಮರ್ಪಕವಾಗಿ ಲಭಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಹಾಗೂ ಕಳೆದ ಬಾರಿ ವಿಮೆ ಪಡೆಯುವಲ್ಲಿ ರೈತರಿಗೆ ಆದ ಅನ್ಯಾಯವನ್ನು ಸಹ ಸರಿಪಡಿಸಬೇಕೆಂದು ಸಂಸದರಾದ ಬಿ.ವೈ.ರಾಘವೇಂದ್ರ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹವಾಮಾನ ಆಧಾರಿತ ಬೆಳೆ ವಿಮೆಯಲ್ಲಿ ಜಿಲ್ಲೆಯ ರೈತರಿಗೆ ಸಾಕಷ್ಟು ಅನ್ಯಾಯವಾಗಿದೆ. ಕಳೆದ ಸಾಲಿನಲ್ಲಿ ರೂ. 70-80 ಕೋಟಿಯಷ್ಟು […]

ಕನ್ನಡ ದುನಿಯಾ 27 Jan 2026 3:51 pm

BREAKING: ಸಾರಿಗೆ ನೌಕರರಿಂದ ಬೆಂಗಳೂರು ಚಲೋ ಕರೆ: ಚಿಕ್ಕಮಗಳೂರು KSRTC ಸಿಬ್ಬಂದಿಗಳಿಗೆ ಎಚ್ಚರಿಕೆ ನೋಟಿಸ್ ಜಾರಿ

ಚಿಕ್ಕಮಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಹಾಗೂ ಸಿಬ್ಬಂದಿಗಳು ಬೆಂಗಳೂರು ಚಲೋ, ಮುಷ್ಕರಕ್ಕೆ ಕರೆ ನೀಡಿದ್ದು, ಸಾರಿಗೆ ಸಂಚಾರದಲ್ಲಿ ಮತ್ತೆ ವ್ಯತ್ಯಯವಾಗುವ ಸಾಧ್ಯತೆ ದಟ್ಟವಾಗಿದೆ. ಸರ್ಕಾರದ ವಿರುದ್ಧ ಜನವರಿ 29ರಿಂದ ಸಾರಿಗೆ ನೌಕರರು, ಸಿಬ್ಬಂದಿಗಳ ಮುಷ್ಕರ ಹಾಗೂ ಬೆಂಗಳೂರು ಚಲೋಗೆ ಸಾರಿಗೆ ಸಂಘಟನೆಗಳು ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ವಿಭಾಗದ ಕೆ.ಎಸ್,ಆರ್.ಟಿ.ಸಿ ಸಾರಿಗೆ ನೌಕರರು ಹಾಗೂ ಎಲ್ಲಾ ಸಿಬ್ಬಂದಿಗಳಿಗೆ ಮುಷ್ಕರ, ಪ್ರತಿಭಟನೆ ನಡೆಸದಂತೆ ನೋಟಿಸ್ ಜಾರಿ ಮಾಡಲಾಗಿದೆ. ಸರ್ಕಾರದ ವಿರುದ್ಧ ಸಾರಿಗೆ ಸಿಬ್ಬಂದಿ […]

ಕನ್ನಡ ದುನಿಯಾ 27 Jan 2026 3:46 pm

SHOCKING : ಕಾರು ಡಿಕ್ಕಿಯಾಗಿ ಓರ್ವ ಸಾವು, ಐವರ ಸ್ಥಿತಿ ಗಂಭೀರ : ಭಯಾನಕ ವೀಡಿಯೋ ವೈರಲ್ |WATCH VIDEO

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಸಾಸ್ನಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿ-93ರಲ್ಲಿ (NH-93) ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅತಿವೇಗವಾಗಿ ಬಂದ ಹುಂಡೈ ಐ10 (i10) ಕಾರೊಂದು ರಸ್ತೆ ಬದಿಯ ಹೋಟೆಲ್ ಮುಂದೆ ನಿಂತಿದ್ದ ಕಿಯಾ ಕ್ಯಾರೆನ್ಸ್ (Kia Carens) ಕಾರಿಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಒಬ್ಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಒಂದು ಯುವಕರ ತಂಡ ಹೋಟೆಲ್‌ನಲ್ಲಿ ಊಟ ಮುಗಿಸಿ ಹೊರಬಂದು, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ತಮ್ಮ ಕಿಯಾ ಕ್ಯಾರೆನ್ಸ್ ಕಾರಿನ ಬಳಿ […]

ಕನ್ನಡ ದುನಿಯಾ 27 Jan 2026 3:39 pm

Gold Price Hike : 2050 ರ ವೇಳೆಗೆ 10 ಗ್ರಾಂ ಚಿನ್ನದ ಬೆಲೆ ಎಷ್ಟಾಗುತ್ತೆ.! ಕೇಳಿದ್ರೆ ಶಾಕ್ ಆಗ್ತೀರಾ!

ಚಿನ್ನದ ಬೆಲೆಗಳು ಗಗನಕ್ಕೇರಿದೆ.. ಬಡವರು, ಮಧ್ಯಮ ವರ್ಗದ ಜನರು ಚಿನ್ನ ಕೊಳ್ಳುವುದು ಕನಸಿನ ಮಾತೇ ಸರಿ. ಚಿನ್ನದ ಬೆಲೆಗಳು ಹೊಸ ದಾಖಲೆಯನ್ನು ಸೃಷ್ಟಿಸುತ್ತಿವೆ. ಚಿನ್ನ ಇಷ್ಟೊಂದು ದುಬಾರಿಯಾಗುತ್ತೆ ಎಂದು ಯಾರೂ ಕೂಡ ಊಹಿಸಿರಲಿಲ್ಲ. ಅಮೆರಿಕಾ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಮತ್ತೆ ಶುರುವಾಗಿದೆ. ಇರಾನ್ ಮೇಲೆ ಅಮೆರಿಕಾ ಯುದ್ಧಕ್ಕೆ ಇಳಿಯುವ ಸಾಧ್ಯತೆಯಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಭಾರಿ ಬದಲಾವಣೆಗಳಾಗುತ್ತಿವೆ. ಈಗಾಗಲೇ ಅಮೆರಿಕದ ಯುದ್ಧನೌಕೆಗಳು ಇರಾನ್ ಕಡೆಗೆ ಧಾವಿಸುತ್ತಿದ್ದರೆ, ಇರಾನ್ ಸುಪ್ರೀಂ ಲೀಡರ್ […]

ಕನ್ನಡ ದುನಿಯಾ 27 Jan 2026 2:53 pm

BIG NEWS: ಗ್ರಾಮ ಪಂಚಾಯ್ತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರಿಡಲಾಗುವುದು: ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿರುವ ಸುಮಾರು 6 ಸಾವಿರ ಪಂಚಾಯ್ತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಅವರ ಹೆಸರಿಡಲಾಗುವುದು. ಇದು ಕಾಂಗ್ರೆಸ್ ಪಕ್ಷದ ತೀರ್ಮಾನ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ರಾಜಭವನ ಚಲೋ ಮಹಾತ್ಮ ಗಾಂಧಿ ನರೇಗಾ ಬಚಾವ್ ಪ್ರತಿಭಟನೆ ಕಾರ್ಯಕ್ರಮದಲ್ಲಿ ಮತನಾಡಿದ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಉಪಾಧ್ಯಕ್ಷರಾದ ಉಗ್ರಪ್ಪ ಹಾಗೂ ಕೆಪಿಸಿಸಿ ಪದಾಧಿಕಾರಿಗಳು ಈ ವಿಚಾರವಾಗಿ ನಮಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಲಾಗಿದೆ. ಆ ಮೂಲಕ […]

ಕನ್ನಡ ದುನಿಯಾ 27 Jan 2026 2:43 pm

ಈಜಿಪುರ ಫ್ಲೈ ಓವರ್: ಬೆಂಗಳೂರು ಜನರಿಗೆ ಬಿಗ್ ಅಪ್‌ಡೇಟ್

ಬೆಂಗಳೂರು ನಗರದ ಅಪೂರ್ಣ ಯೋಜನೆಗಳಲ್ಲಿ ಮೊದಲ ಸ್ಥಾನ ಪಡೆದಿದೆ ಈಜಿಪುರ ಫ್ಲೈ ಓವರ್. ವಿವಿಧ ಕಾರಣಕ್ಕೆ ಆಗಿನ ಬಿಬಿಎಂಪಿ ಕೈಗೊಂಡಿದ್ದ ಯೋಜನೆ ಇನ್ನೂ ಪೂರ್ಣಗೊಂಡಿಲ್ಲ. ಬಿಬಿಎಂಪಿ ಜಿಬಿಎ ಆದ ಮೇಲೆ ಯೋಜನೆ ಪೂರ್ಣವಾಗಲಿದೆಯೇ? ಎಂಬುದು ಜನರ ಪ್ರಶ್ನೆ. ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಮುಖ್ಯ ಆಯುಕ್ತ ಎಂ.ಮಹೇಶ್ವರ ರಾವ್ ಈಜಿಪುರ ಫ್ಲೈ ಓವರ್ ಕುರಿತು ಬಿಗ್ ಅಪ್‌ಡೇಟ್ ನೀಡಿದ್ದಾರೆ. ಸೆಂಟ್‌ ಜಾನ್ಸ್ ಮುಂದೆ ಸಾಗುವಾಗ ಸಂಚಾರ ದಟ್ಟಣೆಯಲ್ಲಿ ಸಿಲುಕುವ ವಾಹನ ಸವಾರರಿಗೆ ಇದು ನಿಜಕ್ಕೂ ಗುಡ್ ನ್ಯೂಸ್. […]

ಕನ್ನಡ ದುನಿಯಾ 27 Jan 2026 2:30 pm

BIG NEWS: ರಾಜೀವ್ ಗೌಡ ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ದ ಉದ್ಯಮಿ ಅರೆಸ್ಟ್

ಮಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಧಮ್ಕಿ ಹಾಕಿ ಬೆದರಿಕೆಯೊಡ್ಡಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು ಚಿಕ್ಕಬಳ್ಳಪೌರ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಕಳೆದ 12 ದಿನಗಳಿಂದ ತಲೆಮರೆಸಿಕೊಂಡಿದ್ದ ರಾಜೀವ್ ಗೌಡನನ್ನು ಕೇರಳದ ಗಡಿ ಭಾಗದಲ್ಲಿ ಸೋಮವಾರ ಪೊಲೀಸರು ಬಂಧಿಸಿದ್ದರು. ರಾಜೀವ್ ಗೌಡಗೆ ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ದ ಮಂಗಳೂರು ಮೂಲದ ಉದ್ಯಮಿಯನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಮೂಲದ ಮೈಕೆಲ್ ಜೊಸೆಫ್ ರೆಗೋ ಬಂಧಿತ ಆರೋಪಿ. ಪಚ್ಚೆನಾಡಿ ಬಳಿ ಮೆಕೆಲ್ ಗೆ ಸೇರಿದ ಜೆ.ಕೆ.ಫಾರ್ಮ್ ಹೌಸ್ ನಲ್ಲಿ […]

ಕನ್ನಡ ದುನಿಯಾ 27 Jan 2026 2:20 pm

ಬಡವರಿಗೆ ‘ಮನರೇಗಾ’ಅಡಿ ಕೂಲಿ ಕೆಲಸ ಕೊಟ್ಟಿದ್ದು ಮನಮೋಹನ್ ಸಿಂಗ್ ಸರ್ಕಾರ : DCM ಡಿ.ಕೆ ಶಿವಕುಮಾರ್

ಬೆಂಗಳೂರು : ಮನರೇಗಾ ಯೋಜನೆ ಇದು ಬಡವರ ಹಕ್ಕು ಹಾಗೂ ಉದ್ಯೋಗ. ಬಡವರ ಹಕ್ಕಿಗೋಸ್ಕರ ನಾವು ಹೋರಾಟ ಮಾಡುತ್ತಿದ್ದೇವೆ. ಬಡವರಿಗೆ ಮನರೇಗಾ ಅಡಿ ಕೂಲಿ ಕೆಲಸ ಕೊಟ್ಟಿದ್ದು ಮನಮೋಹನ್‌ ಸಿಂಗ್‌ ಅವರ ಸರ್ಕಾರ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ಫ್ರೀಡಂಪಾರ್ಕ್‌ನಿಂದ ರಾಜಭವನದವರೆಗೆ “ರಾಜಭವನ ಚಲೋ – ಮನರೇಗಾ ಬಚಾವೋ ಸಂಗ್ರಾಮ”ವನ್ನು ಹಮ್ಮಿಕೊಳ್ಳಲಾಗಿದ್ದು, ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದರು. 2013ರಲ್ಲಿ ಮನರೇಗಾ ಒಂದು ಉತ್ತಮವಾದ ಯೋಜನೆ ಎಂದು ವಿಶ್ವಬ್ಯಾಂಕ್‌ ಪ್ರಮಾಣಪತ್ರವನ್ನು ಕೊಟ್ಟಿತ್ತು. 6000 […]

ಕನ್ನಡ ದುನಿಯಾ 27 Jan 2026 2:16 pm

DCM ಡಿ.ಕೆ ಶಿವಕುಮಾರ್ ತಲೆಗೆ ಪೇಟ ಕಟ್ಟಿದ CM ಸಿದ್ದರಾಮಯ್ಯ : ಫೋಟೋ ವೈರಲ್.!

ಬೆಂಗಳೂರು : ರಾಜ್ಯದಲ್ಲಿ ‘ಮನರೇಗಾ’ (MGNREGA) ಯೋಜನೆಯನ್ನು ಮರು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ನಾಯಕರು ಹಮ್ಮಿಕೊಂಡಿದ್ದ ಪ್ರತಿಭಟನೆಯ ವೇಳೆ ಅಪರೂಪದ ದೃಶ್ಯವೊಂದು ಎಲ್ಲರ ಗಮನ ಸೆಳೆಯಿತು. ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆಗೆ ಸಿದ್ಧವಾಗುತ್ತಿದ್ದಾಗ, ಡಿ.ಕೆ. ಶಿವಕುಮಾರ್ ಅವರು ಸರಿಯಾಗಿ ಪೇಟ ಕಟ್ಟಿಕೊಳ್ಳಲು ಪ್ರಯತ್ನಿಸುತ್ತಿದ್ದರು. ಆಗ ಪಕ್ಕದಲ್ಲೇ ಇದ್ದ ಸಿಎಂ ಸಿದ್ದರಾಮಯ್ಯ ಅವರು ತಾವೇ ಖುದ್ದಾಗಿ ಡಿ.ಕೆ. ಶಿವಕುಮಾರ್ ಅವರ ತಲೆಗೆ ಪೇಟ ಕಟ್ಟಿ ಸರಿಪಡಿಸಿದರು. ಹೌದು. ಗ್ರಾಮೀಣ ಭಾಗದ ಕೂಲಿ ಕಾರ್ಮಿಕರ ಮತ್ತು ರೈತರ ಸಂಕೇತವಾಗಿ ಕಾಂಗ್ರೆಸ್ […]

ಕನ್ನಡ ದುನಿಯಾ 27 Jan 2026 2:06 pm

‘ಮನರೇಗಾ’ಮರು ಜಾರಿ ಮಾಡುವವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯಲ್ಲ : CM ಸಿದ್ದರಾಮಯ್ಯ

ಬೆಂಗಳೂರು : ಮನರೇಗಾ ಮರು ಜಾರಿ ಮಾಡುವವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು ಕೆಪಿಸಿಸಿ ವತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ಆಯೋಜಿಸಿದ್ದ “ನರೇಗಾ ಉಳಿಸಿ ಆಂದೋಲನ ಮತ್ತು ಲೋಕಭವನ ಚಲೋ” ಪ್ರತಿಭಟನಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು. ದೇಶದ ಲಕ್ಷಾಂತರ ಬಡ ಕುಟುಂಬಗಳಿಗೆ ವರ್ಷವಿಡೀ ಉದ್ಯೋಗ ಒದಗಿಸುತ್ತಾ, ಅವರ ಜೀವನ ನಿರ್ವಹಣೆಗೆ ಆಧಾರವಾಗಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ರದ್ದು ಮಾಡಿ, ಕೇಂದ್ರ ಸರ್ಕಾರ ಬಯಸಿದಾಗಷ್ಟೇ […]

ಕನ್ನಡ ದುನಿಯಾ 27 Jan 2026 1:53 pm

ಮನರೇಗಾ ಹೆಸರು ಬದಲಾವಣೆಗೆ ವಿರೋಧ: ಕೇಂದ್ರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ; ರಾಜಭವನ ಚಲೋ ನಡೆಸಿದ ಕೈ ನಾಯಕರು

ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ, ರಾಜಭವನ ಚಲೋ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಮನರೇಗಾ ಹೆಸರು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ […]

ಕನ್ನಡ ದುನಿಯಾ 27 Jan 2026 1:44 pm

SHOCKING : 11 ವರ್ಷದ ಮಗನ ಕತ್ತು ಸೀಳಿ ಕೊಂದು, ಮಗಳ ಮೇಲೆ ಹಲ್ಲೆ ನಡೆಸಿದ ತಾಯಿ.!

ಮಹಾರಾಷ್ಟ್ರದ ಪುಣೆಯಲ್ಲಿ ಮಹಿಳೆಯೊಬ್ಬಳು ತನ್ನ 11 ವರ್ಷದ ಮಗನ ಗಂಟಲು ಸೀಳಿ ಕೊಲೆ ಮಾಡಿದ್ದಲ್ಲದೆ, 13 ವರ್ಷದ ಮಗಳ ಮೇಲೂ ಹಲ್ಲೆ ನಡೆಸಿ ಗಾಯಗೊಳಿಸಿರುವ ಘಟನೆ ನಡೆದಿದೆ. ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದರೆ, ಆತನ ಸಹೋದರಿಯ ಸ್ಥಿತಿ ಚಿಂತಾಜನಕವಾಗಿದೆ. ಈ ಘಟನೆಯು ಪುಣೆಯ ಬೈಫ್ ರೋಡ್ (Baif Road) ಪ್ರದೇಶದಲ್ಲಿ ನಡೆದಿದ್ದು, ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ.ಆರೋಪಿ ಮಹಿಳೆಯನ್ನು ಸೋನಿ ಸಂತೋಷ್ ಜೈಭಾಯ್ ಎಂದು ಗುರುತಿಸಲಾಗಿದೆ. ಈಕೆ ಮೂಲತಃ ನಾಂದೇಡ್ ಜಿಲ್ಲೆಯ ಕಂಧಾರ್ ಗ್ರಾಮದವಳು ಎಂದು ತಿಳಿದುಬಂದಿದೆ. […]

ಕನ್ನಡ ದುನಿಯಾ 27 Jan 2026 1:37 pm

ಅಮೆಜಾನ್ ಉದ್ಯೋಗ ಕಡಿತ: ಭಾರತದ ಮೇಲೆ ಪರಿಣಾಮ ಬೀರುತ್ತದೆಯೇ?

ಇ-ಕಾಮರ್ಸ್ ದೈತ್ಯ ಅಮೆಜಾನ್ ಈ ವಾರ ತನ್ನ ಸಾವಿರಾರು ಸಿಬ್ಬಂದಿಯನ್ನು ವಜಾಗೊಳಿಸಲು ಸಜ್ಜಾಗುತ್ತಿದೆ. ಟೆಕ್ ಕಂಪನಿಯು ಜನವರಿ 27ರ ಮಂಗಳವಾರದಿಂದ ಸುಮಾರು 16,000 ಉದ್ಯೋಗಿಗಳನ್ನು ವಜಾಗೊಳಿಸುವ ನಿರೀಕ್ಷೆಯಿದೆ. ಈ ಹೊಸ ಸುತ್ತಿನ ಉದ್ಯೋಗ ಕಡಿತ 2026ರ ಮಧ್ಯದ ವೇಳೆಗೆ ಒಟ್ಟು 30,000 ಉದ್ಯೋಗಗಳನ್ನು ತೆಗೆದುಹಾಕುವ ಕಂಪನಿಯ ಯೋಜನೆಯ ವಿಸ್ತರಣೆಯಾಗಿದೆ. ಈ ಬೆಳವಣಿಗೆಯು ಭಾರತದಲ್ಲಿರುವ ಅಮೆಜಾನ್ ತಂಡಗಳಿಗೆ ಆತಂಕವನ್ನುಂಟುಮಾಡಿದೆ. ಏಕೆಂದರೆ ಅದರ ವ್ಯಾಪಾರ ಘಟಕಗಳಾದ ಅಮೆಜಾನ್ ವೆಬ್ ಸರ್ವೀಸಸ್ ಮತ್ತು ಅಮೆಜಾನ್ ಪ್ರೈಮ್ ಮೇಲೆ ಪರಿಣಾಮ ಬೀರುವ ನಿರೀಕ್ಷೆಯಿದೆ. […]

ಕನ್ನಡ ದುನಿಯಾ 27 Jan 2026 1:34 pm

ತಾಪಮಾನ ಏರಿಕೆಯ ಹೊಡೆತಕ್ಕೆ ಭಾರತವೇ ನಂಬರ್ 1 ಟಾರ್ಗೆಟ್: ಮುಂದಿನ 25 ವರ್ಷಗಳಲ್ಲಿ ಎದುರಾಗಲಿದೆ ಭೀಕರ ಪರಿಸ್ಥಿತಿ

ಲಂಡನ್: ಜಾಗತಿಕ ತಾಪಮಾನ ಏರಿಕೆಯು ಕೇವಲ ಪರಿಸರದ ಮೇಲಷ್ಟೇ ಅಲ್ಲ, ಮನುಷ್ಯನ ಅಸ್ತಿತ್ವದ ಮೇಲೆಯೇ ಗಂಭೀರ ಪರಿಣಾಮ ಬೀರಲಿದೆ. ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಹೊಸ ಸಂಶೋಧನೆಯ ಪ್ರಕಾರ, 2050ರ ವೇಳೆಗೆ ಜಗತ್ತಿನ ಅರ್ಧದಷ್ಟು ಜನಸಂಖ್ಯೆಯು (ಸುಮಾರು 379 ಕೋಟಿ ಜನ) ಅಸಹನೀಯ ಮತ್ತು ಅಪಾಯಕಾರಿ ಶಾಖದ ವಾತಾವರಣದಲ್ಲಿ ಬದುಕಬೇಕಾದ ಪರಿಸ್ಥಿತಿ ಎದುರಾಗಲಿದೆ. ಭಾರತಕ್ಕೆ ಅತಿ ದೊಡ್ಡ ಭೀತಿ: ಈ ಅಧ್ಯಯನದ ಪ್ರಕಾರ, ಅತಿ ಹೆಚ್ಚು ಶಾಖಕ್ಕೆ ತುತ್ತಾಗುವ ದೇಶಗಳ ಪಟ್ಟಿಯಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಭಾರತದ ಜೊತೆಗೆ ನೈಜೀರಿಯಾ, […]

ಕನ್ನಡ ದುನಿಯಾ 27 Jan 2026 1:23 pm

ಗಣರಾಜ್ಯೋತ್ಸವದಂದೇ ಮಕ್ಕಳಿಗೆ ಅವಮಾನ: ಹರಿದ ಪುಸ್ತಕದ ಹಾಳೆಗಳ ಮೇಲೆ ಬಡಿಸಲಾಯಿತು ಮಧ್ಯಾಹ್ನದ ಬಿಸಿಯೂಟ

ಮೈಹರ್ (ಮಧ್ಯಪ್ರದೇಶ): ಗಣರಾಜ್ಯೋತ್ಸವವು ಮಕ್ಕಳಿಗೆ ಘನತೆ, ಸಮಾನತೆ ಮತ್ತು ಸಂವಿಧಾನದ ಬಗ್ಗೆ ಹೆಮ್ಮೆ ಮೂಡಿಸುವ ದಿನ. ಆದರೆ, ಮಧ್ಯಪ್ರದೇಶದ ಮೈಹರ್ ಜಿಲ್ಲೆಯ ಭಟ್ಗವಾನ್ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಅಕ್ಷರಶಃ ಅವಮಾನ ಮಾಡಲಾಗಿದೆ. ಈ ಶಾಲೆಯಲ್ಲಿ ಗಣರಾಜ್ಯೋತ್ಸವದ ವಿಶೇಷ ಭೋಜನವನ್ನು ತಟ್ಟೆಗಳ ಬದಲಾಗಿ ಹರಿದ ಪುಸ್ತಕದ ಹಾಳೆಗಳ ಮೇಲೆ ಬಡಿಸಲಾಗಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಪುಸ್ತಕದ ಹಾಳೆಗಳೇ ತಟ್ಟೆಗಳಾದವು! ಸರ್ಕಾರದ ಆದೇಶದಂತೆ ಜನವರಿ 26 ರಂದು ಮಕ್ಕಳಿಗೆ ಪೂರಿ […]

ಕನ್ನಡ ದುನಿಯಾ 27 Jan 2026 1:15 pm

BREAKING: ಬೆಳಗಾವಿ ಚೋರ್ಲಾ ಘಾಟ್ ನಲ್ಲಿ 400 ಕೋಟಿ ದರೋಡೆ ಪ್ರಕರಣ: ಕಾರು ಚಾಲಕ ಅರೆಸ್ಟ್

ನಾಸಿಕ್: ಕರ್ನಾಟಕ-ಮಹಾರಾಷ್ಟ್ರ-ಗೋವಾ ಗಡಿಯಲ್ಲ 400 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಎಸ್ ಐಟಿ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಫಾರ್ಚೂನರ್ ಕಾರು ಚಾಅಲಕನನ್ನು ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದ ಬೆಳಗಾವಿಯ ಚೋರ್ಲಾ ಘಾಟ್ ನಲ್ಲಿ ಹಣ ಸಾಗಿತ್ತಿದ್ದು ಎರಡು ಕಂಟೈನರ್ ಗಳನ್ನು ಹೈಜಾಕ್ ಮಾಡಿ ದರೋಡೆಕೋರರು 400 ಕೋಟಿ ದರೋಡೆ ಮಾಡಿರುವ ಘಟನೆ ನಡೆದಿದೆ. ಹಣ ಸಾಗಿಸುತ್ತಿದ್ದ ಸಿಬ್ಬಂದಿ ಸಂದೀಪ್ ಪಾಟೀಲ್ ಎಂಬಾತ ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಒಂದೂವರೆ ತಿಂಗಳ […]

ಕನ್ನಡ ದುನಿಯಾ 27 Jan 2026 1:12 pm

ಆದಾಯ ತೆರಿಗೆದಾರರೇ ಗಮನಿಸಿ : ಏ. 1 ರಿಂದ ಜಾರಿಗೆ ಬರಲಿದೆ ಈ ಹೊಸ ನಿಯಮಗಳು |New Income tax Rules

ನವದೆಹಲಿ : ಭಾರತದ ಆರ್ಥಿಕ ಇತಿಹಾಸದಲ್ಲಿ ಒಂದು ಹೊಸ ಮೈಲಿಗಲ್ಲು ಸ್ಥಾಪನೆಯಾಗುತ್ತಿದೆ. ದಶಕಗಳ ಕಾಲ ತೆರಿಗೆದಾರರನ್ನು ಕಾಡುತ್ತಿದ್ದ ಸಂಕೀರ್ಣ ನಿಯಮಗಳಿಗೆ ಮುಕ್ತಿ ನೀಡಲು ಕೇಂದ್ರ ಸರ್ಕಾರ ಸಜ್ಜಾಗಿದೆ. ಈ ವರ್ಷದಿಂದಲೇ ಜಾರಿಗೆ ಬರಲಿರುವ ‘ಹೊಸ ಆದಾಯ ತೆರಿಗೆ ನಿಯಮಗಳು 2025’ ದೇಶದ ನೇರ ತೆರಿಗೆ ವ್ಯವಸ್ಥೆಯನ್ನು ಸಂಪೂರ್ಣವಾಗಿ ಬದಲಿಸಲಿದೆ. ಯೆಸ್, ಭಾರತೀಯ ತೆರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯ ಪರ್ವ ಆರಂಭವಾಗಿದೆ. ಕೇಂದ್ರ ಸರ್ಕಾರವು ದಶಕಗಳಷ್ಟು ಹಳೆಯದಾದ ತೆರಿಗೆ ಕಾನೂನುಗಳನ್ನು ಬದಿಗಿಟ್ಟು, ಅತ್ಯಂತ ಸರಳ ಹಾಗೂ ಆಧುನಿಕವಾದ ‘ಆದಾಯ […]

ಕನ್ನಡ ದುನಿಯಾ 27 Jan 2026 1:10 pm

ರೈಲು ವಿಳಂಬದಿಂದ ಒಂದು ವರ್ಷ ನಷ್ಟ: 7 ವರ್ಷದ ಹೋರಾಟದ ಬಳಿಕ ರೈಲ್ವೆಯಿಂದ ವಿದ್ಯಾರ್ಥಿನಿಗೆ ₹9.10 ಲಕ್ಷ ಪರಿಹಾರ

ಲಕ್ನೋ: ರೈಲುಗಳು ವಿಳಂಬವಾಗುವುದು ಭಾರತದಲ್ಲಿ ಸಾಮಾನ್ಯ ಎನ್ನುವಂತಾಗಿದೆ. ಆದರೆ, ರೈಲ್ವೆ ಇಲಾಖೆಯ ಈ ನಿರ್ಲಕ್ಷ್ಯದಿಂದಾಗಿ ವಿದ್ಯಾರ್ಥಿನಿಯೊಬ್ಬಳು ತನ್ನ ಅಮೂಲ್ಯವಾದ ಒಂದು ವರ್ಷದ ಶೈಕ್ಷಣಿಕ ಜೀವನವನ್ನು ಕಳೆದುಕೊಂಡಿದ್ದಾಳೆ. ಈ ಬಗ್ಗೆ ಸುದೀರ್ಘ 7 ವರ್ಷಗಳ ಕಾಲ ಕಾನೂನು ಹೋರಾಟ ನಡೆಸಿದ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯ ವಿದ್ಯಾರ್ಥಿನಿ ಸಮೃದ್ಧಿ, ಈಗ ರೈಲ್ವೆ ಇಲಾಖೆಯಿಂದ 9.10 ಲಕ್ಷ ರೂಪಾಯಿ ಪರಿಹಾರ ಪಡೆಯುವಲ್ಲಿ ಯಶಸ್ವಿಯಾಗಿದ್ದಾಳೆ. ಏನಿದು ಪ್ರಕರಣ? ಮೇ 7, 2018 ರಂದು ಸಮೃದ್ಧಿ ಅವರು ಲಕ್ನೋದ ಜೈ ನಾರಾಯಣ್ ಪಿಜಿ […]

ಕನ್ನಡ ದುನಿಯಾ 27 Jan 2026 12:57 pm

BIG NEWS: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಪ್ರತಿಭಟನೆ: ಅಬಕಾರಿ ಸಚಿವರ ರಾಜೀನಾಮೆಗೆ ಬಿಗಿ ಪಟ್ಟು

ಬೆಂಗಳೂರು: ಒಂದೆಡೆ ಕಾಂಗ್ರೆಸ್ ಸರ್ಕಾರದ ನಾಯಕರೇ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರೆ ಮತ್ತೊಂದೆಡೆ ವಿಪಕ್ಷ ಬಿಜೆಪಿ-ಜೆಡಿಎಸ್ ನಾಯಕರು ರಾಅಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ನರೇಗಾ ಯೋಜನೆಗೆ ವಿಬಿಜಿ ರಾಮ್ ಜಿ ಎಂದು ಹೆಸರು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ, ನರೇಗಾ ಯೋಜನೆ ಮರುಸ್ಥಾಪನೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜಭವನ ಚಲೋ ನಡೆಸಲು ಯೋಜನೆ ರೂಪಿಸಿದ್ದಾರೆ. ಈ […]

ಕನ್ನಡ ದುನಿಯಾ 27 Jan 2026 12:49 pm