ಸಂಸತ್ತಿನಲ್ಲಷ್ಟೇ ಅಲ್ಲ, ಸೀರೆ ಆಯ್ಕೆಯಲ್ಲೂ ಸಿಂಪಲ್ ಕ್ಲಾಸ್: ನಿರ್ಮಲಾ ಸೀತಾರಾಮನ್ ಅವರ 9 ಬಜೆಟ್ ಲುಕ್
ನವದೆಹಲಿ: ಭಾರತದ ಆರ್ಥಿಕ ಇತಿಹಾಸದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೊಸ ಅಧ್ಯಾಯ ಬರೆದಿದ್ದಾರೆ. 2026-27ನೇ ಸಾಲಿನ ಬಜೆಟ್ ಮಂಡಿಸುವ ಮೂಲಕ, ಸತತ ಒಂಬತ್ತು ಬಾರಿ ಆಯವ್ಯಯ ಮಂಡಿಸಿದ ದೇಶದ ಮೊದಲ ವ್ಯಕ್ತಿ ಎಂಬ ಐತಿಹಾಸಿಕ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಆದರೆ, ನಿರ್ಮಲಾ ಸೀತಾರಾಮನ್ ಅವರ ಬಜೆಟ್ ಕೇವಲ ಅಂಕಿ-ಅಂಶಗಳಿಗೆ ಸೀಮಿತವಾಗಿಲ್ಲ ಅದು ಭಾರತದ ಶ್ರೀಮಂತ ಜವಳಿ ಪರಂಪರೆಯ ಪ್ರದರ್ಶನವೂ ಹೌದು. ಪ್ರತಿ ಬಾರಿಯೂ ಅವರು ಉಡುವ ಕೈಮಗ್ಗದ ಸೀರೆಗಳು ದೇಶದ ವಿವಿಧ ರಾಜ್ಯಗಳ ಕಲೆ […]
BUDGET BREAKING: ಬಜೆಟ್ ಮಂಡನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ
ನವದೆಹಲಿ: 2026-27ನೇ ಸಾಲಿನ ಕೇಂದ್ರ ಬಜೆಟ್ ಗೆ ಕ್ಷಣಗಣನೆ ಆರಂಭವಾಗಿದೆ. ಕೇಂದ್ರ ಸಚಿವ ಸಂಪುಟ ಸಭೆ ಬಜೆಟ್ ಮಂಡನೆಗೆ ಸಮ್ಮತಿ ಸೂಚಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಂಸತ್ ಭವನದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಗೆ ಒಪ್ಪಿಗೆ ನೀಡಲಾಯಿತು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಬಜೆಟ್ ಮಂಡನೆಗೆ ಒಪ್ಪಿಗೆ ಪಡೆದಿದ್ದಾರೆ. ಈ ವೇಳೆ ವಿದೇಶಾಂಗ ಸಚಿವ ಎಸ್. ಜೈಶಂಕರ್, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಕಿರಣ್ ರಿಜಿಜು, ರಾಮ್ ಮೋಹನ್ […]
BREAKING: 2026ರ ಜನವರಿಯಲ್ಲಿ 6.2% ರಷ್ಟು ಏರಿಕೆಯಾಗಿ 1,93,384 ಕೋಟಿ ರೂ. ಜಿ.ಎಸ್.ಟಿ. ಸಂಗ್ರಹ
ನವದೆಹಲಿ: ಸರಕು ಮತ್ತು ಸೇವಾ ತೆರಿಗೆ(ಜಿ.ಎಸ್.ಟಿ.) ಸಂಗ್ರಹವು ಜನವರಿ 2026 ರಲ್ಲಿ 1,93,384 ಕೋಟಿ ರೂ.ಗಳನ್ನು ತಲುಪಿದ್ದು, ಕಳೆದ ವರ್ಷದ ಇದೇ ತಿಂಗಳಿಗಿಂತ 6.2% ರಷ್ಟು ಹೆಚ್ಚಾಗಿದೆ. ಹೌದು, ಭಾರತದ ಜಿ.ಎಸ್.ಟಿ. ಸಂಗ್ರಹವು ಜನವರಿಯಲ್ಲಿ 6.2% ರಷ್ಟು ಏರಿಕೆಯಾಗಿ ₹1.93 ಲಕ್ಷ ಕೋಟಿಗಳಿಗೆ ತಲುಪಿದೆ. ಕಳೆದ ವರ್ಷದ ಇದೇ ತಿಂಗಳಿಗಿಂತ 6.2% ರಷ್ಟು ಹೆಚ್ಚಾಗಿದೆ ಎಂದು ಸರ್ಕಾರ ಭಾನುವಾರ ತಿಳಿಸಿದೆ. ಬಲವಾದ ದೇಶೀಯ ಚಟುವಟಿಕೆ ಮತ್ತು ಆಮದು ಆದಾಯದಲ್ಲಿನ ಆರೋಗ್ಯಕರ ಬೆಳವಣಿಗೆಯಿಂದ ಇದು ಬೆಂಬಲಿತವಾಗಿದೆ. 2025 ರ […]
ಕೇಂದ್ರ ಬಜೆಟ್ 2026: ಬಜೆಟ್ ಬಳಿಕ ಕಾಲೇಜು ವಿದ್ಯಾರ್ಥಿಗಳನ್ನು ಭೇಟಿಯಾಗಲಿರುವ ಸಚಿವೆ!
ಭಾನುವಾರ ಬೆಳಗ್ಗೆ 11 ಗಂಟೆಗೆ 2026-27ನೇ ಸಾಲಿನ ಬಜೆಟ್ ಅನ್ನು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡುತ್ತಿದ್ದಾರೆ. ಈ ಬಜೆಟ್ ಮಂಡನೆ ಬಳಿಕ ಸಚಿವರು 30 ಕಾಲೇಜು ವಿದ್ಯಾರ್ಥಿಗಳನ್ನು ಭೇಟಿಯಾಗಲಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತ 9ನೇ ಬಜೆಟ್ ಅನ್ನು ಇಂದು ಮಂಡಿಸುತ್ತಿದ್ದಾರೆ. ಬಜೆಟ್ ಪ್ರಕ್ರಿಯೆಯನ್ನು ಸಂಸತ್ತಿನ ಆಚೆಗೂ ವಿಸ್ತರಿಸುವ ಮೂಲಕ, ಹಣಕಾಸು ಸಚಿವರು ದೇಶದಾದ್ಯಂತದ ಸುಮಾರು 30 ಕಾಲೇಜು ವಿದ್ಯಾರ್ಥಿಗಳೊಂದಿಗೆ ಇಂದು ಸಂವಾದ ನಡೆಸಲಿದ್ದಾರೆ. ಈ ವರ್ಷದ […]
ಈ ಬಾರಿ ಬಜೆಟ್ ಮಂಡಿಸಲು ತಮಿಳುನಾಡಿನ ಕಾಂಜೀವರಂ ಸೀರೆ ಆಯ್ಕೆ ಮಾಡಿಕೊಂಡ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಿಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ 2026–27ರ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ, ಇದು ಅವರ ಸತತ ಒಂಬತ್ತನೇ ಬಜೆಟ್ ಆಗಿದೆ. ಬಜೆಟ್ ಸರ್ಕಾರದ ಆದಾಯದ ಮುನ್ಸೂಚನೆಗಳು, ಹಣಕಾಸಿನ ಶಿಸ್ತು ಮತ್ತು ಖರ್ಚು ಆದ್ಯತೆಗಳ ಮೇಲೆ ಗಮನ ಕೇಂದ್ರೀಕರಿಸಲಾಗಿದ್ದರೂ, ಸೀತಾರಾಮನ್ ಅವರ ಬಜೆಟ್ ದಿನದ ನೋಟವು ಮತ್ತೊಂದು ಕಾರಣಕ್ಕಾಗಿಯೂ ಗಮನ ಸೆಳೆಯುತ್ತದೆ: ಅದು ಅವರ ಸೀರೆ. ಬಜೆಟ್ ವೇಳೆ ಹಣಕಾಸು ಸಚಿವರು ಕೈಮಗ್ಗ ಸೀರೆಗಳನ್ನು […]
BIG NEWS: 2026-27ರ ಹಣಕಾಸು ವರ್ಷಕ್ಕೆ 54.1 ಲಕ್ಷ ಕೋಟಿ ರೂ. ಬಜೆಟ್ ಮಂಡಿಸುವ ಸಾಧ್ಯತೆ
ನವದೆಹಲಿ: ಕೇಂದ್ರ ಸರ್ಕಾರವು 2026-27 ರ ಹಣಕಾಸು ವರ್ಷಕ್ಕೆ 54.1 ಲಕ್ಷ ಕೋಟಿ ರೂ. ಬಜೆಟ್ ಮಂಡಿಸುವ ಸಾಧ್ಯತೆ ಇದೆ. ಹೌದು, ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27 ರ ಹಣಕಾಸು ವರ್ಷಕ್ಕೆ 54.1 ಲಕ್ಷ ಕೋಟಿ ರೂ. ಕೇಂದ್ರ ಬಜೆಟ್ ಮಂಡಿಸುವ ನಿರೀಕ್ಷೆಯಿದೆ, ಇದು ವರ್ಷದಿಂದ ವರ್ಷಕ್ಕೆ ಶೇಕಡಾ 7.9 ರಷ್ಟು ಬೆಳವಣಿಗೆಯನ್ನು ದಾಖಲಿಸುತ್ತದೆ. ಒಟ್ಟು ವೆಚ್ಚ (TE) ಯಿಂದ GDP ಯ ಶೇಕಡಾವಾರು ಪ್ರಮಾಣದಲ್ಲಿ ಅಳೆಯಲಾದ ಕೇಂದ್ರ ಬಜೆಟ್ನ ಗಾತ್ರವು ಸರ್ಕಾರದ […]
BUDGET BREAKING: ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ: ರಾಷ್ಟ್ರಪತಿ ಭೇಟಿಯಾದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ನವದೆಹಲಿ: ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ದಾಖಲೆಯ 9ನೇ ಬಾರಿಗೆ ಆಯವ್ಯಯ ಮಂಡಿಸಲಿದ್ದಾರೆ. ದೇಶದ ಜನರ ಚಿತ್ತ ಕೇಂದ್ರ ಬಜೆಟ್ ನತ್ತ ನೆಟ್ಟಿದೆ. ನಿರೀಕ್ಷೆಗಳಂತು ಬೆಟ್ಟದಷ್ಟಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬೆಳಿಗ್ಗೆ ಹಣಕಾಅಸು ಇಲಖೆಯಿಂದ ಬಜೆಟ್ ಟ್ಯಾಬ್ ನ್ನು ಪಡೆದುಕೊಂಡರು. ಬಳಿಕ ಬಜೆಟ್ ಮಂಡನೆಗೆ ಅನುಮತಿ ಪಡೆಯಲು ರಾಷ್ಟ್ರಪತಿ ಭವನಕ್ಕೆ ತೆರಳಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ […]
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ ಸಂಸತ್ತಿನಲ್ಲಿ 2026-27ರ ಕೇಂದ್ರ ಬಜೆಟ್ ಅನ್ನು ಸಾಂಪ್ರದಾಯಿಕ ‘ಬಹಿ-ಖಾತಾ’ ಶೈಲಿಯ ಚೀಲದಲ್ಲಿ ಸುತ್ತುವ ಡಿಜಿಟಲ್ ಟ್ಯಾಬ್ಲೆಟ್ನೊಂದಿಗೆ ಮಂಡಿಸಲಿದ್ದಾರೆ. ಇದು ನರೇಂದ್ರ ಮೋದಿ ಸರ್ಕಾರ ಅಳವಡಿಸಿಕೊಂಡ ಕಾಗದರಹಿತ ಸ್ವರೂಪವನ್ನು ಮುಂದುವರೆಸಿದೆ. ಸೀತಾರಾಮನ್ ಮೊದಲು ವಸಾಹತುಶಾಹಿ ಯುಗದ ಬಜೆಟ್ ಬ್ರೀಫ್ಕೇಸ್ ಅನ್ನು 2019 ರಲ್ಲಿ ಬಹಿ-ಖಾತಾದೊಂದಿಗೆ ಬದಲಾಯಿಸಿದರು ಮತ್ತು 2021 ರಲ್ಲಿ ಡಿಜಿಟಲ್ ಟ್ಯಾಬ್ಲೆಟ್ ಅನ್ನು ಬಳಸಲು ಬದಲಾಯಿಸಿದರು. ಅವರು ಸತತ ಒಂಬತ್ತನೇ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಬಹಿ-ಖಾತಾ […]
BIG NEWS: ಬೆಳಗಾವಿಯ ಚೋರ್ಲಾ ಘಾಟ್ ನಲ್ಲಿ 400 ಕೋಟಿ ದರೋಡೆ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್
ಬೆಳಗಾವಿ: ಬೆಳಗಾವಿಯ ಚೋರ್ಲಾ ಘಾಟ್ನಲ್ಲಿ 400 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಎಸ್ ಐಟಿ ಅಧಿಕಾರಿಗಳು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ದರೋಡೆ ಪ್ರಕರಣದ ಪ್ರಮುಖ ಆರೋಪಿ ಕಿಶೋರ್ ಸಾಳ್ವೆಯನ್ನು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ತನಿಖೆ ಚುರುಕುಗೊಳಿಸಲಾಗಿದ್ದು, ಪ್ರಕರಣದ ಸತ್ಯಾಂಶಗಳು ಹೊರಬರಬೇಕಿದೆ. ಕರ್ನಾಟಕ-ಮಹಾರಾಷ್ಟ್ರ ಗಡಿಯ ಬೆಳಗಾವಿಯ ಚೋರ್ಲಾ ಘಾಟ್ನಲ್ಲಿ ಎರಡು ಕಂಟೇನರ್ಗಳಲ್ಲಿದ್ದ ಅಂದಾಜು 400 ಕೋಟಿ ರೂ. ಮೌಲ್ಯದ ರದ್ದಾದ ನೋಟುಗಳ ದರೋಡೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ […]
ಕೇಂದ್ರ ಬಜೆಟ್ 2026: ಬಜೆಟ್ಗಾಗಿ ಭಾನುವಾರ ಬಾಗಿಲು ತೆರೆದ ಷೇರು ಮಾರುಕಟ್ಟೆ
ಕೇಂದ್ರ ಬಜೆಟ್ ಮಂಡನೆ ಭಾನುವಾರ ನಡೆಯುತ್ತಿದೆ. ಸಂಪ್ರದಾಯದಂತೆ ಬಜೆಟ್ ಅನ್ನು ಫೆಬ್ರವರಿ 1ರಂದು ಮಂಡನೆ ಮಾಡಲಾಗುತ್ತದೆ. ಆದರೆ ಈ ಬಾರಿ ಫೆಬ್ರವರಿ 1 ಭಾನುವಾರ ಬಂದಿದೆ. ಆದರೆ 2026-27ನೇ ಸಾಲಿನ ಬಜೆಟ್ ಅನ್ನು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡುತ್ತಿದ್ದಾರೆ. ನಿರ್ಮಲಾ ಸೀತಾರಾಮನ್ ಭಾನುವಾರ ಮಂಡನೆ ಮಾಡುತ್ತಿರುವುದು ತಮ್ಮ ದಾಖಲೆಯ 9ನೇ ಬಜೆಟ್ ಆಗಿದೆ. ಬಜೆಟ್ ಮಂಡನೆ ಕಾರಣ ಭಾನುವಾರ ಷೇರು ಮಾರುಕಟ್ಟೆ ಬಾಗಿಲಿ ತೆರೆದಿದೆ. ಸಾಮಾನ್ಯವಾಗಿ ಶನಿವಾರ, ಭಾನುವಾರ […]
BIG NEWS: ಜಿಬಿಎ ಚುನಾವಣೆ: ಬ್ಯಾಲೆಟ್ ಪೇಪರ್ ಬಳಕೆಗೆ ತೀವ್ರ ವಿರೋಧ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಅಧಿಕಾಅರದ ಚುನಾಅವಣೆಗೆ ಭರದ ಸಿದ್ಧತೆ ನಡೆಯುತ್ತಿದೆ. ಈ ಬಾರಿ ರಾಜ್ಯ ಚುನಾವಣಾ ಆಯೋಗ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಮುಂದಾಗಿದೆ. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಜಿಬಿಎ ಚುನಾವಣೆಗೆ ಬ್ಯಾಲೆಟ್ ಪೇಪರ್ ಕೈ ಬಿಟ್ಟು ಇವಿಎಂನಲ್ಲೇ ಚುನಾವಣೆ ನಡೆಸುವಂತೆ ಒತ್ತಾಯ ಕೇಳಿಬರುತ್ತಿದೆ. ಈ ನಿಟ್ಟಿನಲ್ಲಿ ಆಂದೋಲನ ಕೂಡ ಶುರುವಾಗಿದೆ. ಜಿಬಿಎ ಪಾಲಿಕೆಗಳ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಸಿದ್ಧತೆ ನಡೆಸಿದ್ದು, ಸುಪ್ರೀಂ ಕೋರ್ಟ್ ಸೂಚನೆ ಬೆನ್ನಲ್ಲೇ ಕೆಲಸ ಕಾರ್ಯಗಳು ಚುರುಕುಗೊಂಡಿವೆ. ಮತದಾರರ […]
ಕೇಂದ್ರ ಬಜೆಟ್ 2026: 75 ವರ್ಷದ ಸಂಪ್ರದಾಯ ಮುರಿಯಲಿರುವ ನಿರ್ಮಲಾ ಸೀತಾರಾಮನ್!
ಕೇಂದ್ರ ಬಜೆಟ್ ಮಂಡನೆಗೆ ಎಲ್ಲಾ ತಯಾರಿ ಪೂರ್ಣಗೊಂಡಿದೆ. ಭಾನುವಾರ 2026-27ನೇ ಸಾಲಿನ ಬಜೆಟ್ ಅನ್ನು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡುತ್ತಿದ್ದಾರೆ. ಇದು ಅವರು ಮಂಡನೆ ಮಾಡುತ್ತಿರುವ ದಾಖಲೆಯ 9ನೇ ಬಜೆಟ್ ಆಗಿದೆ. ಕೇಂದ್ರ ಬಜೆಟ್ ಮಂಡಿಸಲಿರುವ ನಿರ್ಮಲಾ ಸೀತಾರಾಮನ್ 75 ವರ್ಷದ ಸಂಪ್ರದಾಯವನ್ನು ಮುರಿಯಲಿದ್ದಾರೆ. ಹೌದು ಬಜೆಟ್ ಅನ್ನು ವಿಭಾಗ-1, ವಿಭಾಗ-2 ಎಂಬ ಎರಡು ಭಾಗವಾಗಿ ಮಾಡಲಾಗಿರುತ್ತದೆ. ವಿಭಾಗ-2ರಲ್ಲಿ ತೆರಿಗೆ ಪ್ರಸ್ತಾಪ, ಹೊಸ ಘೋಷಣೆಗಳು ಸೇರಿರುತ್ತವೆ. ನಿರ್ಮಲಾ ಸೀತಾರಾಮನ್ […]
BIG NEWS: ವಾಣಿಜ್ಯ ಸಿಲಿಂಡರ್ ದರ ಮತ್ತೆ ಹೆಚ್ಚಳ: ಇಂದಿನಿಂದಲೇ ಜಾರಿ
ನವದೆಹಲಿ: ದೇಶಾದ್ಯಂತ ವಾಣಿಜ್ಯ ಸಿಲಿಂಡರ್ ದರದಲ್ಲಿ ಹೆಚ್ಚಳವಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಎಲ್ ಪಿಜಿ ಸಿಲಿಂಡರ್ ದರ ಹೆಚ್ಚಳ ಮಾಡಿವೆ. 19 ಕೆಜಿಯ ವಾಣಿಜ್ಯ ಸಿಲಿಂಡರ್ ದರ 49 ರೂಪಾಯಿ ಏರಿಕೆಯಾಗಿದೆ. ಪರಿಷ್ಕೃತ ಹೊಸ ದರ ಇಂದಿನಿಂದಲೇ ಜಾರಿಗೆ ಬಂದಿದೆ. ತಿಂಗಳ ಹಿಂದಷ್ಟೇ ಜನವರಿಯಲ್ಲಿ ವಾಣಿಜ್ಯ ಸಿಲಿಂದರ್ ದರ 111 ರೂಪಾಯಿ ಏರಿಕೆಯಾಗಿತ್ತು. ಇದೀಗ ಮತ್ತೆ ಸಿಲಿಂಡರ್ ದರವನ್ನು ಹೆಚ್ಚಳ ಮಾಡಲಾಗಿದೆ. ವಾಣಿಜ್ಯ ಸಿಲಿಂಡರ್ ದರ ಹೆಚ್ಚಳವಾದರೂ ಅಡುಗೆ ಸಿಲಿಂಡರ್ ಮೇಲೆ ಯಾವುದೇ ಬೆಲೆ […]
BREAKING: ಕೇಂದ್ರ ಬಜೆಟ್ ಮುನ್ನವೇ ದೇಶದ ಜನತೆಗೆ ಬಿಗ್ ಶಾಕ್: ಗ್ಯಾಸ್ ಸಿಲಿಂಡರ್ ದರ 50 ರೂ. ಹೆಚ್ಚಳ
ನವದೆಹಲಿ: 2026 ರ ಕೇಂದ್ರ ಬಜೆಟ್ ಗಿಂತ ಮೊದಲು ಎಲ್ಪಿಜಿ ಸಿಲಿಂಡರ್ ಬೆಲೆ 50 ರೂ. ಹೆಚ್ಚಾಗಿದೆ. ಇಂದು ಕೇಂದ್ರ ಬಜೆಟ್ ಮಂಡನೆಗೂ ಮುನ್ನ, ತೈಲ ಮಾರುಕಟ್ಟೆ ಕಂಪನಿಗಳು ಭಾನುವಾರ 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು 50 ರೂ. ಹೆಚ್ಚಿಸುವ ಮೂಲಕ ಎಲ್ಪಿಜಿ ಗ್ರಾಹಕರಿಗೆ ಹೊಡೆತ ನೀಡಿದೆ. ದೇಶೀಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳನ್ನು ಹೋಟೆಲ್ಗಳು, ರೆಸ್ಟೋರೆಂಟ್ಗಳು, ರಸ್ತೆಬದಿಯ ತಿನಿಸುಅಂಗಡಿಗಳು, ಡಾಬಾಗಳು ಮತ್ತು ಇತರ ವಾಣಿಜ್ಯ ಸಂಸ್ಥೆಗಳಲ್ಲಿ ಬಳಸಲಾಗುತ್ತದೆ. […]
BREAKING: ಮನೆಗೆಲಸದವನಿಂದ ಪೈಶಾಚಿಕ ಕೃತ್ಯ: ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆಗೈದು ಆತ್ಮಹತ್ಯೆ
ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಮೈಕೋ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 65 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಬಳಿಕ ನೇಣು ಹಾಕಿಕೊಂಡು ಆರೋಪಿ ದೇವರಾಜ್(50) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಗೆಲಸ ಮಾಡುತ್ತಿದ್ದ ದೇವರಾಜ್ ಕೃತ್ಯವೆಸಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಕೃತ್ಯ ನಡೆದಾಗ ಮನೆಯ ಮೊದಲ ಮಹಡಿಯಲ್ಲಿ ಮಹಿಳೆಯ ಪುತ್ರಿ ಇದ್ದರು. ಮುಂಜಾನೆ ಮಹಿಳೆಯ ಪತಿ ಮನೆಗೆ ಬಂದು ನೋಡಿದಾಗ ಕೃತ್ಯ ಬೆಳಕಿಗೆ […]
43 ಎಸೆತಗಳಲ್ಲಿ 103 ರನ್ ಗಳಿಸಿದ ಇಶಾನ್ ಕಿಶನ್ ಚೊಚ್ಚಲ ಟಿ20 ಶತಕ
ತಿರುವನಂತಪುರ: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ಐದನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ 46 ರನ್ ಗಳ ಗೆಲುವು ಸಾಧಿಸಿದ ಭಾರತ 4-1 ಅಂತರದಿಂದ ಸರಣಿ ಜಯಿಸಿದೆ. ಭಾರತ ನೀಡಿದ 272 ರನ್ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ 225 ರನ್ ಗಳಿಗೆ ಆಲೌಟ್ ಆಗಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ಐದು ವಿಕೆಟ್ ನಷ್ಟಕ್ಕೆ 271 ರನ್ ಗಳಿಸಿತು. ಚೊಚ್ಚಲ ಅಂತರಾಷ್ಟ್ರೀಯ ಟಿ20 ಶತಕ ಗಳಿಸಿದ ಇಶಾನ್ ಕಿಶನ್ 43 ಎಸೆತಗಳಲ್ಲಿ ಆರು ಬೌಂಡರಿ, 10 ಸಿಕ್ಸರ್ […]
ಪಿ.ಎಚ್.ಡಿ. ಪದವಿ ಪಡೆದ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ
ಚಿಕ್ಕಮಗಳೂರು: ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಮಹಾ ಪ್ರಬಂಧ ಮಂಡಿಸಿ ಪಿ.ಎಚ್.ಡಿ. ಪದವಿ ಪಡೆದುಕೊಂಡಿದ್ದಾರೆ. ಮೈಸೂರಿನಲ್ಲಿ ಶನಿವಾರ ನಡೆದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 21ನೇ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರಿಂದ ಸಿ.ಟಿ. ರವಿ ಪಿ.ಎಚ್.ಡಿ. ಪದವಿ ಸ್ವೀಕರಿಸಿದ್ದಾರೆ. ಮುಕ್ತ ಗಂಗೋತ್ರಿಯ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಡಾ.ಕೆ.ಜೆ. ಸುರೇಶ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ‘ಭಾರತದಲ್ಲಿ ಸಮ್ಮಿಶ್ರ ಸರ್ಕಾರಗಳ ಸಮಸ್ಯೆಗಳು ಹಾಗೂ ಸವಾಲುಗಳು’ ಒಂದು ಅಧ್ಯಯನ ವಿಷಯ ಕುರಿತ ಮಹಾಪ್ರಬಂಧಕ್ಕೆ ಸಿ.ಟಿ. ರವಿ ಅವರಿಗೆ ಪಿ.ಎಚ್.ಡಿ. […]
ವರ್ಗಾವಣೆ ನಿರೀಕ್ಷೆಯಲ್ಲಿರುವ ಕೆಎಸ್ಆರ್ಟಿಸಿ ನೌಕರರಿಗೆ ಗುಡ್ ನ್ಯೂಸ್
ಬೆಂಗಳೂರು: ಕೆಎಸ್ಆರ್ಟಿಸಿ ನೌಕರರ ಅಂತರ ನಿಗಮ ವರ್ಗಾವಣೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ. ಕೆಎಸ್ಆರ್ಟಿಸಿ ಮೂರು ಮತ್ತು ನಾಲ್ಕನೇ ದರ್ಜೆ ನೌಕರರ 2026 ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವ ಅಂತಿಮ ದಿನವನ್ನು ಫೆಬ್ರವರಿ 28ರ ವರೆಗೆ ವಿಸ್ತರಿಸಲಾಗಿದೆ. ಪ್ರತಿವರ್ಷ ಕೆಎಸ್ಆರ್ಟಿಸಿಯಲ್ಲಿ ನೌಕರರ ಅನುಕೂಲಕ್ಕಾಗಿ ಅಂತರ ನಿಗಮ ವರ್ಗಾವಣೆ ಮಾಡಲಾಗುವುದು. ಅದರಂತೆ ಜನವರಿ 1ರಿಂದ 31 ರವರೆಗೆ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ವರ್ಗಾವಣೆ ಅಗತ್ಯವಿರುವ ನೌಕರರಿಗೆ ಅರ್ಜಿ ಸಲ್ಲಿಸಲು […]
ಸಚಿವ ಜಮೀರ್ ಪುತ್ರ ಝೈದ್ ಖಾನ್ ‘ಕಲ್ಟ್’ ಸಿನಿಮಾ ವೀಕ್ಷಿಸಿದ ಸಿಎಂ ಸಿದ್ಧರಾಮಯ್ಯ ಶುಭ ಹಾರೈಕೆ
ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ನಾಯಕ ನಟನಾಗಿ ಅಭಿನಯಿಸಿರುವ ‘ಕಲ್ಟ್’ ಸಿನಿಮಾವನ್ನು ವೀಕ್ಷಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಓರಾಯನ್ ಮಾಲ್ ನಲ್ಲಿ ಸಿನಿಮಾ ವೀಕ್ಷಿಸಿದ ಅವರು ಮೆಚ್ಚುಗೆಯ ಮಾತುಗಳನ್ನಾಡಿದ್ದು, ಚಿತ್ರ ತಂಡಕ್ಕೆ ಶುಭ ಹಾರೈಸಿದ್ದಾರೆ. ಸಂಪುಟ ಸಹೋದ್ಯೋಗಿಗಳು, ಆತ್ಮೀಯರು ಆದ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ನಾಯಕ ನಟನಾಗಿ ಅಭಿನಯಿಸಿರುವ ‘ಕಲ್ಟ್’ ಸಿನಿಮಾವನ್ನು ವೀಕ್ಷಿಸಿದೆ. ಚಿತ್ರದ ಕತೆ, ಸಂಭಾಷಣೆ, ಸಂಗೀತ, ಕಲಾವಿದರ ಅಭಿನಯ ಈ […]
ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಮನೆ ಬಾಗಿಲಲ್ಲೇ ಆರೋಗ್ಯ ಸೇವೆ ನೀಡಲು ಜಿಬಿಎ ವ್ಯಾಪ್ತಿಗೂ ‘ಗೃಹ ಆರೋಗ್ಯ’ ವಿಸ್ತರಣೆ
ಬೆಂಗಳೂರು: ಮನೆ ಬಾಗಿಲಲ್ಲಿಯೇ ವಿವಿಧ ಅನಾರೋಗ್ಯ ಸಮಸ್ಯೆಗಳನ್ನು ಪತ್ತೆ ಮಾಡಿ, ಔಷಧ ವಿತರಿಸುವ ಗೃಹ ಆರೋಗ್ಯ ಯೋಜನೆಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೂ ವಿಸ್ತರಿಸಲು ಮುಂದಾಗಿದ್ದೇವೆ. ಈ ಸಂಬಂಧ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಾಗಿದ್ದು, ಯೋಜನೆಯಡಿ ತಪಾಸಣೆ ಜೊತೆಗೆ ಔಷಧವನ್ನೂ ನೀಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ. ಗೃಹ ಆರೋಗ್ಯ ಯೋಜನೆಯಡಿ, ರಕ್ತದೊತ್ತಡ, ಮಧುಮೇಹ, ಕ್ಯಾನ್ಸರ್ ಸೇರಿದಂತೆ ಮಾನಸಿಕ ಕಾಯಿಲೆಗಳ ಬಗ್ಗೆ ತಪಾಸಣೆ ನಡೆಸಲಾಗುತ್ತದೆ. ಆರೋಗ್ಯ ಸೇವೆಗಳನ್ನು ಬಡ ವರ್ಗದ ಜನರ ಬಳಿಗೆ […]
ಇಂದು ಕೇಂದ್ರ ಬಜೆಟ್: ಚುನಾವಣೆ ನಡೆಯುವ ರಾಜ್ಯಗಳು, ಬಡವರು, ಮಧ್ಯಮ ವರ್ಗಕ್ಕೆ ಬಂಪರ್ ಕೊಡುಗೆ ಸಾಧ್ಯತೆ
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು 2026-27 ರ ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ. ಸೀತಾರಾಮನ್ ಬಜೆಟ್ ಮಂಡಿಸುತ್ತಿರುವುದು ಇದು ಒಂಬತ್ತನೇ ಬಾರಿ. ಭೌಗೋಳಿಕ ರಾಜಕೀಯ ಉದ್ವಿಗ್ನತೆ, ಜಾಗತಿಕ ವ್ಯಾಪಾರ ಘರ್ಷಣೆಗಳು ಮತ್ತು ರಷ್ಯಾದ ಕಚ್ಚಾ ತೈಲವನ್ನು ಖರೀದಿಸಿದ್ದಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ವಿಧಿಸಿದ ವ್ಯಾಪಕ ಸುಂಕಗಳ ಸಮಯದಲ್ಲಿ ಬಜೆಟ್ ಅನ್ನು ಮಂಡಿಸಲಾಗುತ್ತಿದೆ. ಕಳೆದ ವರ್ಷ, ಸೀತಾರಾಮನ್ GST 2.0 ಎಂದು ಕರೆಯಲ್ಪಡುವ ಸರಕು ಮತ್ತು ಸೇವಾ […]
ಕೇಂದ್ರ ಬಜೆಟ್ 2026: ದಿನಾಂಕ ಸಮಯ ನೇರ ಪ್ರಸಾರ ವೀಕ್ಷಣೆ ಮತ್ತು ಪ್ರಮುಖ ನಿರೀಕ್ಷೆಗಳ ಸಂಪೂರ್ಣ ಮಾಹಿತಿ
ಭಾರತದ 2026-27ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಫೆಬ್ರವರಿ 1, 2026) ಮಂಡಿಸಲಿದ್ದಾರೆ.ಬೆಳಿಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ಬಜೆಟ್ ಭಾಷಣ ಆರಂಭವಾಗಲಿದೆ.ಇದು ನರೇಂದ್ರ ಮೋದಿ ಅವರ ಮೂರನೇ ಅವಧಿಯ ಸರ್ಕಾರದ ಎರಡನೇ ಪೂರ್ಣ ಪ್ರಮಾಣದ ಬಜೆಟ್ ಆಗಿದೆ. ಈ ಬಾರಿ ಫೆಬ್ರವರಿ 1 ಭಾನುವಾರವಾಗಿದ್ದರೂ ಸಹ, ಬಜೆಟ್ ಸಂಪ್ರದಾಯದಂತೆ ಮಂಡನೆಯಾಗುತ್ತಿದೆ.ಬಜೆಟ್ ಭಾಷಣವು ಸಾಮಾನ್ಯವಾಗಿ 1 ರಿಂದ 1.5 ಗಂಟೆಗಳ ಕಾಲ ಇರಲಿದ್ದು, ಆದಾಯ ತೆರಿಗೆ ಸ್ಲ್ಯಾಬ್ಗಳಲ್ಲಿನ […]
ಜೈಲುಗಳ ಮೇಲೆ ನಿಗಾ: ಕಮಾಂಡ್ ಸೆಂಟರ್ ಗೆ ಚಾಲನೆ: 8 ಕೇಂದ್ರ ಜೈಲುಗಳು ಮತ್ತು 4 ಜಿಲ್ಲಾ ಜೈಲುಗಳ ಮೇಲೆ 24/7 ಕಣ್ಗಾವಲು
ಬೆಂಗಳೂರು: ರಾಜ್ಯದ ಜೈಲುಗಳ ಮೇಲೆ ನಿಗಾ ವಹಿಸಲು ನೂತನ ಕಮಾಂಡ್ ಸೆಂಟರ್ ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಚಾಲನೆ ನೀಡಿದ್ದಾರೆ. ಜೈಲುಗಳಲ್ಲಿ ನಡೆಯುತ್ತಿರುವ ಮಾದಕ ವಸ್ತುಗಳ ಸರಬರಾಜು, ಮದ್ಯ ತಯಾರಿಕೆ, ಅಕ್ರಮವಾಗಿ ಹುಟ್ಟುಹಬ್ಬ ಆಚರಣೆ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಮಾಂಡ್ ಸೆಂಟರ್ ಗೆ ಚಾಲನೆ ನೀಡಲಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದಂತೆ ರಾಜ್ಯದ ವಿವಿಧ ಜೈಲುಗಳಲ್ಲಿ ಇತ್ತೀಚೆಗೆ ನಡೆದ ಕೆಲ ಅಕ್ರಮಗಳು ಭಾರಿ ಸುದ್ದಿಯಾಗಿದ್ದವು, ಇದರ ಬೆನ್ನಲ್ಲೇ ಕಮಾಂಡ್ ಸೆಂಟರ್ ಆರಂಭವಾಗಿದ್ದು, […]
BREAKING: ಫಿಲಂ ಚೇಂಬರ್ ಅಧ್ಯಕ್ಷರಾಗಿ ನಟಿ ಜಯಮಾಲಾ ಆಯ್ಕೆ: ಭಾ.ಮಾ. ಹರೀಶ್ ವಿರುದ್ಧ ಗೆಲುವು
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ(ಫಿಲಂ ಚೇಂಬರ್) ನೂತನ ಅಧ್ಯಕ್ಷರಾಗಿ ಹಿರಿಯ ನಟಿ ಜಯಮಾಲಾ ಆಯ್ಕೆಯಾಗಿದ್ದಾರೆ. 170 ಮತಗಳ ಅಂತರದಿಂದ ನಟಿ ಜಯಮಾಲಾ ಗೆಲುವು ಸಾಧಿಸಿದ್ದಾರೆ. ಭಾ.ಮಾ. ಹರೀಶ್ ಅವರ ವಿರುದ್ಧ ಜಯಮಾಲಾ ಗೆಲುವು ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಒಟ್ಟು 813 ಮತಗಳು ಚಲಾವಣೆ ಆಗಿದ್ದು, ಅವುಗಳಲ್ಲಿ 512 ಮತಗಳನ್ನು ಜಯಮಾಲಾ ಪಡೆದುಕೊಂಡು ಗೆಲುವು ಸಾಧಿಸಿದ್ದಾರೆ. ಆ ಮೂಲಕ ಮುಂದಿನ ಅವಧಿಗೆ ವಾಣಿಜ್ಯ ಮಂಡಳಿ ಅಧ್ಯಕ್ಷೆಯಾಗಿದ್ದಾರೆ. ಅವರು ಎರಡನೇ ಬಾರಿ ಫಿಲಂ ಚೇಂಬರ್ನ ಅಧ್ಯಕ್ಷರಾಗಲಿದ್ದಾರೆ. 2008ರಲ್ಲಿ ಅವರು […]
ದೇವಸ್ಥಾನದ ಆವರಣದಲ್ಲೇ ಗಾಂಜಾ ಗಿಡ ಬೆಳೆದಿದ್ದ ಅರ್ಚಕ ಅರೆಸ್ಟ್: ಹೂವಿನ ತೋಟದ ನೆಪದಲ್ಲಿ ಗಾಂಜಾ ತೋಟ
ಸಂಗಾರೆಡ್ಡಿ(ತೆಲಂಗಾಣ): ದೇವಾಲಯದ ಆವರಣದಲ್ಲಿ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಸಂಗರೆಡ್ಡಿ ಜಿಲ್ಲೆಯ ದೇವಾಲಯದ ಅರ್ಚಕರೊಬ್ಬರನ್ನು ಶನಿವಾರ ಬಂಧಿಸಲಾಗಿದೆ. ಸಂಗರೆಡ್ಡಿ ಜಿಲ್ಲೆಯ ನಾರಾಯಣಖೇಡ್ ಮಂಡಲದ ಪಂಚಗಮ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. 48 ವರ್ಷದ ಆವುತಿ ನಾಗಯ್ಯ ಎಂಬ ಆರೋಪಿ ದೇವಸ್ಥಾನದ ಅರ್ಚಕನಾಗಿ ಕೆಲಸ ಮಾಡುತ್ತಿದ್ದ ಮತ್ತು ಸ್ಥಳೀಯ ಗ್ರಾಮಸ್ಥರಲ್ಲಿ ತನ್ನನ್ನು ತಾನು ಆಧ್ಯಾತ್ಮಿಕ ಗುರು ಎಂದು ಬಿಂಬಿಸಿಕೊಂಡಿದ್ದ. ಅಕ್ರಮ ಗಾಂಜಾ ಕೃಷಿ ಮತ್ತು ವಿತರಣಾ ಕಾರ್ಯಾಚರಣೆಯನ್ನು ನಡೆಸುತ್ತಿದ್ದ ಆರೋಪದ ಮೇಲೆ ಡಿಟಿಎಫ್ ಸಂಗರೆಡ್ಡಿ ತಂಡವು […]
ಪಂಪ್ ದುರಸ್ತಿಗೆ ಬಾವಿಗೆ ಇಳಿದ ವ್ಯಕ್ತಿ ನೀರಲ್ಲಿ ಮುಳುಗಿ ಸಾವು
ಉಡುಪಿ: ಪಂಪ್ ದುರಸ್ತಿ ಮಾಡಲು ಬಾವಿಗೆ ಇಳಿದ ವ್ಯಕ್ತಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಕುಂದಾಪುರ ಸಮೀಪ ವಡೇರಾ ಹೋಬಳಿಯ ಬಿಸಿ ರೋಡ್ ಬಳಿ ನಡೆದಿದೆ. ವಡೇರಾ ಹೋಬಳಿ ನಿವಾಸಿ ನಾಗರಾಜ್(51) ಮೃತಪಟ್ಟವರು ಎಂದು ಹೇಳಲಾಗಿದೆ. ಮನೆಯ ಬಾವಿಯ ಸಬ್ ಮರ್ಸಿಬಲ್ ಪಂಪ್ ರಿಪೇರಿ ಮಾಡಲು ಬಾವಿಗೆ ನಾಗರಾಜ್ ಅವರು ಇಳಿದಿದ್ದ ವೇಳೆ ಕಾಲು ಜಾರಿ ಬಿದ್ದು ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ […]
ವಕ್ಫ್ ಆಸ್ತಿಗಳ ನಿರ್ವಹಣೆ ಪಾರದರ್ಶಕ, ಜನಸ್ನೇಹಿ, ಜವಾಬ್ದಾರಿಯುತವಾಗಿಸಲು ಸರ್ಕಾರ ಮಹತ್ವದ ಕ್ರಮ
ನವದೆಹಲಿ: ಸರ್ಕಾರವು UMEED ಪೋರ್ಟಲ್ನಲ್ಲಿ ಸರ್ವೆ ಮಾಡ್ಯೂಲ್ ಮತ್ತು ವಕ್ಫ್ ಆಸ್ತಿ ಗುತ್ತಿಗೆ ಮಾಡ್ಯೂಲ್ ಅನ್ನು ಪ್ರಾರಂಭಿಸಿದೆ. ವಕ್ಫ್ ಆಸ್ತಿಗಳ ನಿರ್ವಹಣೆಯನ್ನು ಪಾರದರ್ಶಕ, ಜನಸ್ನೇಹಿ ಮತ್ತು ಜವಾಬ್ದಾರಿಯುತವಾಗಿಸಲು ಸರ್ಕಾರವು UMEED ಪೋರ್ಟಲ್ನಲ್ಲಿ ಸರ್ವೆ ಮಾಡ್ಯೂಲ್ ಮತ್ತು ವಕ್ಫ್ ಆಸ್ತಿ ಗುತ್ತಿಗೆ ಮಾಡ್ಯೂಲ್ ಅನ್ನು ಪ್ರಾರಂಭಿಸಿದೆ. ಪೋರ್ಟಲ್ ನಲ್ಲಿ ವಕ್ಫ್ ಆಸ್ತಿಗಳ ಸಮೀಕ್ಷೆಗೆ ಸಂಬಂಧಿಸಿದ ಮಾಹಿತಿಯನ್ನು ಸೆರೆಹಿಡಿಯಲು, ನಿರ್ವಹಿಸಲು ಮತ್ತು ನವೀಕರಿಸಲು ಸರ್ವೆ ಮಾಡ್ಯೂಲ್ ಸಮಗ್ರ ಡಿಜಿಟಲ್ ಚೌಕಟ್ಟನ್ನು ಒದಗಿಸುತ್ತದೆ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ಹೇಳಿದೆ. ವಕ್ಫ್ […]
ಚಿತ್ರದುರ್ಗ: ವಿದ್ಯಾಭ್ಯಾಸ ಮುಗಿಸಿ, ವಿದ್ಯಾರ್ಹತೆಗೆ ತಕ್ಕಂತೆ ಕೆಲಸ ಹುಡುಕಿ ದುಡಿಮೆಯ ಜೀವನ ಪ್ರಾರಂಭಿಸುವ ನಿರೀಕ್ಷೆಯಲ್ಲಿರುವ ಉದ್ಯೋಗಾಕಾಂಕ್ಷಿಗಳಿಗೆ ಸೂಕ್ತ ವೇದಿಕೆ ಕಲ್ಪಿಸಿ ಕೊಡುವ ನಿಟ್ಟಿನಲ್ಲಿ ಇದೇ ಫೆಬ್ರವರಿ 1 ರಂದು ಚಿತ್ರದುರ್ಗ ನಗರದ ಸರ್ಕಾರಿ ಕಲಾ ಕಾಲೇಜು ಆವರಣದಲ್ಲಿ ಬೃಹತ್ ಉದ್ಯೋಗ ಮೇಳಕ್ಕೆ ವೇದಿಕೆ ಸಜ್ಜುಗೊಂಡಿದೆ. ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿರುವ ಬೃಹತ್ ಉದ್ಯೋಗ ಮೇಳವು ಯುವ ಜನತೆಗೆ ಸುವರ್ಣಾವಕಾಶವಾಗಿದೆ. ನಗರದ […]
BREAKING: ಟ್ರಾನ್ಸ್ ಫಾರ್ಮರ್ ಬದಲಿಸಲು ಲಂಚ ಪಡೆಯುತ್ತಿದ್ದ ಬೆಸ್ಕಾಂ ಅಧಿಕಾರಿ ಲೋಕಾಯುಕ್ತ ಬಲೆಗೆ
ಚಿತ್ರದುರ್ಗ: ಬೆಸ್ಕಾಂ ಸೆಕ್ಷನ್ ಆಫೀಸರ್ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಮಾಡದಕೆರೆಯಲ್ಲಿ ಘಟನೆ ನಡೆದಿದೆ. ಮಾಡದ ಕೆರೆ ಬೆಸ್ಕಾಂ ಕಚೇರಿಯಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ಸೆಕ್ಷನ್ ಆಫೀಸರ್ ಮಧು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅವರು ಟ್ರಾನ್ಸ್ ಫಾರ್ಮರ್ ಬದಲಿಸಲು ನಾಗಯ್ಯನಹಟ್ಟಿಯ ರಾಮಚಂದ್ರ ಅವರ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇಂದು 3000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಮೃತ್ಯುಂಜಯ […]
ನಾಳೆ ನಿರ್ಮಲಾ ಸೀತಾರಾಮನ್ ಸತತ 9ನೇ ಬಜೆಟ್ ಮಂಡನೆ
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಬಜೆಟ್ ಮಂಡಿಸಲಿದ್ದಾರೆ. ಅವರು ಸತತ 9ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. 2019ರ ಜುಲೈನಲ್ಲಿ ಮೊದಲ ಪೂರ್ಣಾವಧಿ ಹಣಕಾಸು ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದ ನಿರ್ಮಲಾ ಸೀತಾರಾಮನ್ 2024ರ ಫೆಬ್ರವರಿಯ ಮಧ್ಯಂತರ ಬಜೆಟ್ ಜೊತೆಗೆ ಸತತ 8 ಬಜೆಟ್ ಮಂಡಿಸಿದ್ದು, ಫೆಬ್ರವರಿ 1ರ ನಾಳೆ 9ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರು ಅತಿ ಹೆಚ್ಚು ಕೇಂದ್ರ ಬಜೆಟ್ ಮಂಡಿಸಿದ ದಾಖಲೆ ಹೊಂದಿದ್ದಾರೆ. ಅವರು […]
BIG NEWS: ಮಹಾರಾಷ್ಟ್ರ ಮೊದಲ ಮಹಿಳಾ ಡಿಸಿಎಂ ಆಗಿ ಸುನೇತ್ರಾ ಪವಾರ್ ಪ್ರಮಾಣವಚನ ಸ್ವೀಕಾರ
ಮುಂಬೈ: ಮಹಾರಾಷ್ಟ್ರ ಮೊದಲ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಕೆಲ ದಿನಗಳ ಹಿಂದೆ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಮೃತಪಟ್ಟಿದ್ದರು. ಅವರ ನಿಧನದಿಂದ ತೆರವಾಗಿದ್ದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹುದ್ದೆಗೆ ಪತ್ನಿ ಸುನೇತ್ರಾ ಪವಾರ್ ಹೆಸರು ಕೇಳಿಬಂದಿತ್ತು. ಇಂದು ನಡೆದ ಎನ್ ಸಿಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುನೇತ್ರಾ ಪವಾರ್ ಅವರನ್ನು ಪಕ್ಷದ ನಾಯಕಿಯನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿತ್ತು. ಬಳಿಕ ಲೋಕಭವನದಲ್ಲಿ ನಡೆದ ಸರಳ ಪದಗ್ರಹಣ ಸಮಾರಂಭದಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು […]
ಬೆಂಗಳೂರು: ರಾಜ್ಯ ಸರ್ಕಾರ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಗಳನ್ನು ಬಳಸುವಂತಿಲ್ಲ. ಪರಿಸರ ಸ್ನೇಹಿ ಪರಿಕರಗಳನ್ನು ಮಾತ್ರ ಬಳಸಬೇಕು. ಮಾತ್ರವಲ್ಲ ಯಾವುದೇ ಕಾರ್ಯಕ್ರಮ, ಸಭೆ-ಸಮಾರಂಭಗಳಲ್ಲಿ ಕೆ.ಎಂ.ಎಫ್ ನಂದಿನಿ ಉತ್ಪನ್ನಗಳನ್ನೇ ಬಳಸುವಂತೆ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಪರಿಸರ ಸ್ನೇಹಿ ಕ್ರಮಗಳನ್ನು ಅಳವಡಿಸಿಕೊಳ್ಳುವ ದೃಷ್ಟಿಯಿಂದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಕಾರ್ಯಕ್ರಮ, ಸಭೆ-ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್ ಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು […]
ಶಾಲೆಯಲ್ಲಿ ವಿದ್ಯುತ್ ತಂತಿ ತಗುಲಿ ದುರಂತ: 5ನೇ ತರಗತಿ ವಿದ್ಯಾರ್ಥಿನಿ ದುರ್ಮರಣ
ರಾಯಚೂರು: ಕುಡಿಯಲು ನೀರು ತರಲು ಹೋಗಿದ್ದಾಗ ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಧಾರುಣ ಘಟನೆ ರಾಯಚೂರಿನಲ್ಲಿ ನಡೆದಿದೆ. ಇಲ್ಲಿನ ಸಿಂಧನೂರು ತಾಲೂಕಿನ ಕುರಕಂದಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ದುರಂತ ಸಂಭವಿಸಿದೆ. ಶಾಲೆಯಲ್ಲಿ ವಿರಾಮದ ಸಂದರ್ಭದಲ್ಲಿ ಕುಡಿಯಲು ನೀರು ತರಲೆಂದು ವಿದ್ಯಾರ್ಥಿನಿ ತೆರಳಿದ್ದಳು. ಈ ವೇಳೆ ವಿದ್ಯುತ್ ತಂತಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದಳು. ತಕ್ಷಣ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾಳೆ. 5 ತರಗತಿಯ ವಿದ್ಯಾರ್ಥಿನಿ ತನುಶ್ರೀ ಮೃತ ಬಾಲಕಿ. ಮಗಳನ್ನು […]
BREAKING: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಗೆ SIT ರಚನೆ
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ಮನ್ ಡಾ.ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ಎಸ್ಐಟಿ ರಚನೆ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ ಎಸ್ ಐಟಿ ರಚನೆ ಮಾಡಲಾಗಿದೆ. ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಕೂಡ ಈ ತಂಡದಲ್ಲಿ ಇರಲಿದ್ದಾರೆ ಎಂದು ತಿಳಿಸಿದರು. ಸಿ.ಜೆ.ರಾಯ್ ಆತ್ಮಹತ್ಯೆಗೆ ನಿಖರ ಕಾರಣಗಳೇನು? ಐಟಿ ದಾಳಿಗೆ […]
BIG News: ಐಸಿಸಿ ಟಿ-20 ವಿಶ್ವಕಪ್ ಬಹಿಷ್ಕಾರ ಮಾಡಲಿದೆ ಪಾಕಿಸ್ತಾನ!
ಭಾರತದಲ್ಲಿ ವಿಶ್ವಕಪ್ ಟಿ-20 ಪಂದ್ಯಗಳನ್ನು ಆಡುವುದಿಲ್ಲ ಎಂದು ಹಠ ಹಿಡಿದಿದ್ದ ಬಾಂಗ್ಲಾದೇಶವನ್ನು ಐಸಿಸಿ ಟೂರ್ನಿಯಿಂದಲೇ ಹೊರ ಹಾಕಿದೆ. ಬಾಂಗ್ಲಾದೇಶ ಜಾಗಕ್ಕೆ ಸ್ಕಾಟ್ಲ್ಯಾಂಡ್ ಬಂದಿದೆ. ಈಗ ಪಾಕಿಸ್ತಾನ ಹೊಸ ಕ್ಯಾತೆ ತೆಗೆದಿದ್ದು, ಟೂರ್ನಿಗೆ ಬಹಿಷ್ಕಾರ ಹಾಕುವ ನಿರೀಕ್ಷೆ ಇದೆ. ಟಿ-20 ವಿಶ್ವಕಪ್ ಟೂರ್ನಿಯು ಫೆಬ್ರವರಿ 7ಕ್ಕೆ ಆರಂಭವಾಗಲಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯಲ್ಲಿ ಭಾರತ-ಪಾಕಿಸ್ತಾನ ಕೊಲಂಬೋದಲ್ಲಿ ಪಂದ್ಯವನ್ನು ಆಡಲಿವೆ. ಸಂಪ್ರದಾಯಿಕ ಎದುರಾಳಿಗಳ ಪಂದ್ಯ ನೋಡಲು ಕಾಯುವ ಅಭಿಮಾನಿಗಳಿಗೆ ನಿರಾಸೆ ಮೂಡಿಸುವ ರೀತಿ ಪಾಕಿಸ್ತಾನ ವರ್ತಿಸುತ್ತಿದೆ. […]
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆ
ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿಗೆ ಗಡಿಪಾರು ಮಾಡಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಹಾಯಕ ಕಮಿಷ್ನರ್ ಆದೇಶ ಹೊರಡಿಸಿದ್ದರು. ಗಡಿಪಾರು ಆದೇಶ ಪ್ರಶ್ನಿಸಿ ಮಹೇಶ್ ತಿಮರೋಡಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದೀಗ ಪುತ್ತೂರು ಸಹಾಯಕ ಕಮಿಷ್ನರ್ ಹೊರಡಿಸಿದ್ದ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಅಲ್ಲದೇ ಸಹಾಯಕ ಕಮಿಷನರ್ ಆದೇಶ ಸೂಕ್ತವಲ್ಲ ಎಂದು […]
ಯೋಗಿ ಆದಿತ್ಯನಾಥ್ಗೆ ಸ್ವಾಮೀಜಿಗಳಿಂದ 2 ಸವಾಲು, 40 ದಿನದ ಗಡುವು!
ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮೀಜಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಡುವಿನ ಜಟಾಪಟಿ ಮುಂದುವರೆದಿದೆ. ಮುಖ್ಯಮಂತ್ರಿಗಳಿಗೆ 2 ಸವಾಲು ಹಾಕಿರುವ ಸ್ವಾಮೀಜಿ 40 ದಿನದ ಗಡುವು ನೀಡಿದ್ದಾರೆ. ಉತ್ತರ ಪ್ರದೇಶದಲ್ಲಿ ಧರ್ಮ ಮತ್ತು ಅಧಿಕಾರದ ನಡುವೆ ಜಟಾಪಟಿ ನಡೆಯುತ್ತಿದೆ. ಜ್ಯೋತಿರ್ಮಠದ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮೀಜಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಡುವಿನ ವಾಕ್ಸಮರ ಮತ್ತೊಂದು ಹಂತ ತಲುಪಿದೆ. ಯೋಗಿಗೆ 2 ಸಾವಲುಗಳು: ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮೀಜಿ ಹಸುವನ್ನು’ರಾಜ್ಯ […]
ಭೀಮಸಮುದ್ರ ಗಣಿಯಲ್ಲಿ ಲಾರಿ ಅಪಘಾತ: ಸೂಪರ್ ವೈಸರ್ ಸ್ಥಳದಲ್ಲೇ ಸಾವು
ಚಿತ್ರದುರ್ಗ: ಭೀಮಸಮುದ್ರ ಬಳಿ ಗಣಿಯಲ್ಲಿ ಲಾರಿ ಡಿಕ್ಕಿಯಾಗಿ ಸೂಪರ್ ವೈಸರ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. 49 ವರ್ಷದ ಚಂದ್ರಶೇಖರ್ ಮೃತ ದುರ್ದೈವಿ. ಲಾರಿ ಅಪಘಾತದಲ್ಲಿ ಚಂದ್ರಶೇಖರ್ ಗಣಿಯಲ್ಲಿಯೇ ಸಾವನ್ನಪ್ಪಿದ್ದಾರೆ. ಆದರೆ ವಿಷಯವನ್ನು ಕುಟುಂಬದಿಂದ ಮುಚ್ಚಿಡಲು ಗಣಿ ಕಂಪನಿಯವರು ಯತ್ನಿಸಿದ್ದರು ಎಂದು ಆರೋಪಿಸಲಾಗಿದೆ. ಗಣಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಗಳುಗೆ ಯಾವುದೇ ಸುರಕ್ಷತೆ ಇಲ್ಲ. ಅಮಾಯಕ ಜೀವಗಳು ಬಲಿಯಾಗುತ್ತಿವೆ ಎಂದು ಮೃತರ ಕುಟುಂಬ ಆಕ್ರೋಶ ವ್ಯಕ್ತಪಡಿಸಿದೆ. ತಪ್ಪಿಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕುಟುಂಬ ಆಗ್ರಹಿಸಿದೆ. […]

23 C