SHOCKING: ಗರ್ಭಿಣಿ ಸೊಸೆಯನ್ನು ಕೊಂದ ಮಾವ ಪ್ರಕರಣಕ್ಕೆ ಟ್ವಿಸ್ಟ್
ರಾಯಚೂರು: ಮಾವನೇ ಗರ್ಭಿಣಿ ಸೊಸೆಯನ್ನು ಕತ್ತು ಸೀಳಿ ಕೊಲೆಗೈದಿದ್ದ ಪ್ರಕರಣ ಹೊಸ ತಿರುವು ಪದೆದುಕೊಂಡಿದೆ. ಸೊಸೆಯನ್ನು ಕೊಂದು ಪರಾರಿಯಾಗಿದ್ದ ಆರೋಪಿ ಮಾವನನ್ನು ಪೊಲೀಸರು ಬಂಧಿಸಿದ್ದಾರೆ. ರಾಯಚೂರು ಜಿಲ್ಲೆಯ ಸಿರುವಾರ ತಾಲೂಕಿನ ಚಿಕ್ಕಹಣಗಿ ಗ್ರಾಮದಲ್ಲಿ ಗರ್ಭಿಣಿ ಸೊಸೆಯನ್ನು ಕತ್ತು ಸೀಳಿ ಕೊಲೆಗೈದ ಮಾವ ಬಳಿಕ ನಾಪತ್ತೆಯಾಗಿದ್ದ. ಕೌಟುಂಬಿಕ ಕಲಹದಿಂದ ಕೊಲೆಯಾಗಿರಬಹುದು ಎಂದು ಆರಂಭದಲ್ಲಿ ಅಂದುಕೊಳ್ಳಲಾಗಿತ್ತು. ಆದರೆ ನಾಪತ್ತೆಯಾಗಿದ್ದ ಮಾವನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೊಲೆ ಮಾಡಲು ಕಾರಣವೇನೆಂಬುದನ್ನು ಬಾಯ್ಬಿಟ್ಟಿದ್ದಾನೆ. ಸೊಸೆ ರೇಖಾ (24) ಕೊಲೆಯಾದ ಮಹಿಳೆ. ರೇಖಾ ಗುರುವಾರ […]
ರಾಹುಲ್ ಬೇಡಿಕೆ ತಳ್ಳಿ ಹಾಕಿದ ಡಿಎಂಕೆ: ತಮಿಳುನಾಡಲ್ಲಿ ಕಾಂಗ್ರೆಸ್-ಡಿಎಂಕೆ ಮೈತ್ರಿ ಅತಂತ್ರ!
ತಮಿಳುನಾಡು ವಿಧಾನಸಭೆ ಚುನಾವಣೆ 2026ರ ತಯಾರಿ ನಡೆಯುತ್ತಿದೆ. 234 ಸದಸ್ಯ ಬಲದ ವಿಧಾನಸಭೆಗೆ ಏಪ್ರಿಲ್ ಅಥವ ಮೇ ತಿಂಗಳಿನಲ್ಲಿ ಚುನಾವಣೆ ನಡೆಯಲಿದೆ. ರಾಜ್ಯದ ಆಡಳಿತ ಪಕ್ಷ ಕಾಂಗ್ರೆಸ್-ಡಿಎಂಕೆ ಮೈತ್ರಿಕೂಟ. ಮುಖ್ಯಮಂತ್ರಿ ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್. ಆದರೆ 2026ರ ಚುನಾವಣೆಯಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿ ಮುಂದುವರೆಯುವ ಕುರಿತು ಅತಂತ್ರ ಪರಿಸ್ಥಿತಿ ಇದೆ. ಕಳೆದ ಎರಡು ದಶಕದಿಂದ ಡಿಎಂಕೆಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ. ಆದರೆ ಈ ಬಾರಿ ಕಾಂಗ್ರೆಸ್ ಬೇಡಿಕೆಗೆ ಡಿಎಂಕೆ ಒಪ್ಪಿಗೆ ನೀಡುತ್ತಿಲ್ಲ. ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು […]
ನಿಮ್ಮ ಮಗಳ ಭವಿಷ್ಯಕ್ಕೆ ಕೇಂದ್ರದ ಬಂಪರ್ ಗಿಫ್ಟ್ : ಈ ಯೋಜನೆಯಡಿ ಹೂಡಿಕೆ ಮಾಡಿ 72 ಲಕ್ಷ ರೂ. ಪಡೆಯಿರಿ !
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಸುಕನ್ಯಾ ಸಮೃದ್ಧಿ ಯೋಜನೆ’ (Sukanya Samriddhi Yojana – SSY) ನಿಮ್ಮ ಮಗಳ ಉನ್ನತ ಶಿಕ್ಷಣ ಮತ್ತು ಮದುವೆಯ ವೆಚ್ಚಕ್ಕಾಗಿ ಹಣವನ್ನು ಉಳಿಸಲು ಇರುವ ಅತ್ಯುತ್ತಮ ಮತ್ತು ಸುರಕ್ಷಿತವಾದ ಮಾರ್ಗವಾಗಿದೆ. ಮಗುವಿನ ತಂದೆ-ತಾಯಿ ಅಥವಾ ಕಾನೂನುಬದ್ಧ ಪೋಷಕರು ಮಗುವಿನ ಹೆಸರಿನಲ್ಲಿ ಖಾತೆ ತೆರೆಯಬಹುದು. ಒಂದು ಕುಟುಂಬದಲ್ಲಿ ಗರಿಷ್ಠ ಇಬ್ಬರು ಹೆಣ್ಣು ಮಕ್ಕಳಿಗೆ ಮಾತ್ರ ಈ ಸೌಲಭ್ಯವಿರುತ್ತದೆ. (ಒಂದು ವೇಳೆ ಅವಳಿ ಅಥವಾ ತ್ರಿವಳಿ ಹೆಣ್ಣು ಮಕ್ಕಳು ಜನಿಸಿದರೆ, ದಾಖಲೆಗಳನ್ನು ನೀಡಿ ಹೆಚ್ಚುವರಿ […]
ಮುಂಬೈನ ಪಾರ್ಲೆ-ಜಿ ಫ್ಯಾಕ್ಟರಿಗೆ ವಿದಾಯ: ಐತಿಹಾಸಿಕ ಕಟ್ಟಡದ ಜಾಗದಲ್ಲಿ ನಿರ್ಮಾಣವಾಗಲಿದೆ ಬೃಹತ್ ವಾಣಿಜ್ಯ ಸಂಕೀರ್ಣ
ಮುಂಬೈನ ಐತಿಹಾಸಿಕ ಪಾರ್ಲೆ-ಜಿ ಫ್ಯಾಕ್ಟರಿ ಈಗ ಇತಿಹಾಸದ ಪುಟ ಸೇರಲು ಸಿದ್ಧವಾಗಿದೆ. ದಶಕಗಳ ಕಾಲ ಸವಿಯಾದ ಬಿಸ್ಕತ್ತುಗಳ ಸುಹಾಸನೆಯನ್ನು ಬೀರುತ್ತಿದ್ದ ವಿಲೆ ಪಾರ್ಲೆಯ ಈ ಬೃಹತ್ ಕಾರ್ಖಾನೆಯ ಜಾಗದಲ್ಲಿ ಶೀಘ್ರದಲ್ಲೇ ವಾಣಿಜ್ಯ ಸಂಕೀರ್ಣ ತಲೆಯೆತ್ತಲಿದೆ. ಈ ಸುದ್ದಿಯ ಬೆನ್ನಲ್ಲೇ ಪಾರ್ಲೆ-ಜಿ ಬಿಸ್ಕತ್ತು ಪ್ಯಾಕೆಟ್ ಮೇಲಿರುವ ಆ ಪುಟಾಣಿ ಮಗುವಿನ ಗುರುತಿನ ಬಗ್ಗೆಯೂ ದೊಡ್ಡ ಚರ್ಚೆ ಶುರುವಾಗಿದೆ. ಸುಮಾರು 1929 ರಲ್ಲಿ ಮೋಹನ್ ಲಾಲ್ ದಯಾಳ್ ಚೌಹಾಣ್ ಅವರಿಂದ ಆರಂಭವಾದ ಈ ಕಾರ್ಖಾನೆ ಮೊದಲು ಮಿಠಾಯಿಗಳನ್ನು ತಯಾರಿಸುತ್ತಿತ್ತು. ನಂತರ […]
ಬೆಂಗಳೂರು: ಪ್ರೀತಿ-ಪ್ರೇಮವೆಂದು ಮದುವೆ ನಾಟಕವಾಡಿ ಮೂರು ಮದುವೆಯಾಗಿ ಮೂವರು ಗಂಡಂದಿರಿಗೂ ಮಹಿಳೆಯೊಬ್ಬಳು ಕೈಕೊಟ್ಟು ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಅಣಬೆ ಗ್ರಾಮದ ಸುಧಾರಾಣಿ ಎಂಬುವವರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಮೊದಲ ಮದುವೆಯಾಗಿ ಇಬ್ಬರು ಮಕ್ಕಳಿದ್ದರೂ ಮೊದಲ ಪತಿಯನ್ನು ಬಿಟ್ಟು ಮತ್ತೊಂದು ಮದುವೆಯಾಗಿದ್ದಾಳೆ. ಬಳಿಕ ಆತನನ್ನೂ ಬಿಟ್ಟು ಮೂರನೇ ಮದುವೆಯಾಗಿದ್ದು, ಈಗ ಆತನಿಗೂ ಕೈಕೊಟ್ಟು ಎಸ್ಕೇಪ್ ಆಗಿದ್ದಾಳೆ. ಮದುವೆ ಹೆಸರಲ್ಲಿ ಹಣ ದೋಚುದುದನ್ನೇ ಮಹಿಳೆ ಕಾಯಕವನ್ನಾಗಿ ಮಾಡಿಕೊಂಡಿದ್ದಾಳೆ ಎಂಬ ಆರೋಪ […]
SHOCKING : 17 ವರ್ಷದ ವಿದ್ಯಾರ್ಥಿ ಜೊತೆ ಶಿಕ್ಷಕಿ ಸೆಕ್ಸ್ : ಆಘಾತಕಾರಿ ಮೊಬೈಲ್ ಸಂದೇಶಗಳು ಬಯಲಿಗೆ.!
ಮೆಕೆನ್ನಾ ಕಿಂಡ್ರೆಡ್ (McKenna Kindred) ಪ್ರಕರಣವು ಅಮೆರಿಕದ ವಾಷಿಂಗ್ಟನ್ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈಕೆ ಸ್ಪೋಕೇನ್ ವ್ಯಾಲಿಯ ‘ಸೆಂಟ್ರಲ್ ವ್ಯಾಲಿ ಹೈ ಸ್ಕೂಲ್’ನಲ್ಲಿ ಸ್ಪ್ಯಾನಿಷ್ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಸ್ಪೋಕೇನ್ ವ್ಯಾಲಿಯ ಸೆಂಟ್ರಲ್ ವ್ಯಾಲಿ ಪ್ರೌಢಶಾಲೆಯ ಮಾಜಿ ಶಿಕ್ಷಕಿ ಮೆಕೆನ್ನಾ ಕಿಂಡ್ರೆಡ್ (27), ತನ್ನ 17 ವರ್ಷದ ವಿದ್ಯಾರ್ಥಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು. ಇದೀಗ ಈ ಕುರಿತು ಆಘಾತಕಾರಿ ಮೊಬೈಲ್ ಸಂದೇಶಗಳು (Text Messages) ಬಹಿರಂಗಗೊಂಡಿವೆ. 2022ರಲ್ಲಿ 23 ವರ್ಷದವಳಾಗಿದ್ದ ಮೆಕೆನ್ನಾ ಕಿಂಡ್ರೆಡ್, ತನ್ನ ವಿದ್ಯಾರ್ಥಿಯ […]
ಪಿಜ್ಜಾ ಡೆಲಿವರಿ ಮಾಡುತ್ತಿದ್ದ ಹಳೆ ಗೆಳೆಯನ ನೋಡಿ ಗೇಲಿ ಮಾಡಿದ ಯುವತಿ: ನೆಟ್ಟಿಗರ ಆಕ್ರೋಶಕ್ಕೆ ಗುರಿಯಾದ ವಿಡಿಯೋ
ಜೀವನ ಎನ್ನುವುದು ಎಲ್ಲರಿಗೂ ಒಂದೇ ರೀತಿಯ ಸುಖವನ್ನು ನೀಡುವುದಿಲ್ಲ. ಕಾಲೇಜಿನ ದಿನಗಳಲ್ಲಿ ದೊಡ್ಡ ಕನಸು ಕಂಡವರೆಲ್ಲರೂ ಮುಂದೆ ಶ್ರೀಮಂತರಾಗುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ಇದಕ್ಕೆ ಪೂರಕವೆಂಬಂತೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ಭಾರಿ ಚರ್ಚೆಗೆ ಕಾರಣವಾಗಿದೆ. ಶಾಲಾ ದಿನಗಳಲ್ಲಿ ಎಲ್ಲರಿಗೂ ಸ್ಫೂರ್ತಿಯ ಮಾತುಗಳನ್ನು ಹೇಳುತ್ತಿದ್ದ ಗೆಳೆಯನೊಬ್ಬ ಇಂದು ಪಿಜ್ಜಾ ಡೆಲಿವರಿ ಮಾಡುತ್ತಿರುವುದನ್ನು ಕಂಡು ಆತನ ಹಳೆಯ ಗೆಳತಿಯೊಬ್ಬಳು ಅಣಕಿಸಿರುವ ಘಟನೆ ಈಗ ಎಲ್ಲರ ಆಕ್ರೋಶಕ್ಕೆ ಗುರಿಯಾಗಿದೆ. ವೈರಲ್ ಆಗಿರುವ ಈ ವಿಡಿಯೋದಲ್ಲಿ ಯುವತಿಯೊಬ್ಬಳು ದಾರಿಯಲ್ಲಿ ಸಿಕ್ಕ ತನ್ನ […]
ಹೈದರಾಬಾದ್ನಿಂದ ಆಸ್ಟ್ರೇಲಿಯಾಕ್ಕೆ ವಿಮಾನ ಹತ್ತಿದ ‘ಲಕ್ಕಿ’ಡಾಗ್: ಪ್ರೀತಿಗಾಗಿ ಹಣದ ಹಂಗು ತೊರೆದ ದಂಪತಿಯ ಕಥೆ ವೈರಲ್
ಸಾಮಾನ್ಯವಾಗಿ ಜನರು ವಿದೇಶಕ್ಕೆ ಹೋಗುವಾಗ ತಮ್ಮ ಸಾಕುಪ್ರಾಣಿಗಳನ್ನು ಬೇರೆಯವರಿಗೆ ದತ್ತು ನೀಡುತ್ತಾರೆ ಅಥವಾ ಮಾರಾಟ ಮಾಡುತ್ತಾರೆ. ಆದರೆ ಈ ದಂಪತಿಗಳು ಮಾತ್ರ ತಮ್ಮ ‘ಸ್ಕೈ’ ಇಲ್ಲದೆ ಬದುಕಲು ಸಾಧ್ಯವಿಲ್ಲ ಎಂದು ನಿರ್ಧರಿಸಿ, ಅತ್ಯಂತ ಕಠಿಣ ಮತ್ತು ದುಬಾರಿ ಮಾರ್ಗದ ಮೂಲಕ ಆತನನ್ನು ಆಸ್ಟ್ರೇಲಿಯಾಕ್ಕೆ ಕರೆಸಿಕೊಂಡಿದ್ದಾರೆ. ಪ್ರಯಾಣ ಯಾಕೆ ಇಷ್ಟು ದುಬಾರಿಯಾಗಿತ್ತು? ಆಸ್ಟ್ರೇಲಿಯಾ ದೇಶವು ಪ್ರಾಣಿಗಳ ಆಮದು ವಿಚಾರದಲ್ಲಿ ಅತ್ಯಂತ ಕಟ್ಟುನಿಟ್ಟಾದ ನಿಯಮಗಳನ್ನು ಹೊಂದಿದೆ: ದಂಪತಿಗಳ ಭಾವುಕ ಮಾತು: “ಹಲವರು ನಮಗೆ ಈ ನಾಯಿಯನ್ನು ಬಿಟ್ಟು ಅಲ್ಲಿಗೆ ಹೋದ […]
ತಿರುಮಲ ಬೆಟ್ಟದಲ್ಲಿ ಫೋಟೋ ಶೂಟ್ ವಿವಾದ : ಕ್ಷಮೆಯಾಚಿಸಿದ ದಂಪತಿಗಳು.!
ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನವು ಅತ್ಯಂತ ಪವಿತ್ರವಾದ ಕ್ಷೇತ್ರವೆಂದು ಪರಿಗಣಿಸಲ್ಪಟ್ಟಿದೆ. ಟಿಟಿಡಿ (TTD – Tirumala Tirupati Devasthanams) ನಿಯಮಗಳ ಪ್ರಕಾರ ದೇವಸ್ಥಾನದ ಆವರಣದಲ್ಲಿ ಮತ್ತು ಬೆಟ್ಟದ ಕೆಲವು ನಿರ್ಬಂಧಿತ ಪ್ರದೇಶಗಳಲ್ಲಿ ಫೋಟೋ ಅಥವಾ ವಿಡಿಯೋ ತೆಗೆಯುವುದು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ನವಜೋಡಿ ವಿವಾದಕ್ಕೆ ಸಿಲುಕಿದ್ದಾರೆ. ತಿರುವಣ್ಣಾಮಲೈನ ಶ್ರೀ ತಿರುಮಲ್ ಮತ್ತು ಗಾಯತ್ರಿ ಎಂಬ ದಂಪತಿಗಳು ಇತ್ತೀಚೆಗೆ ತಿರುಮಲದ ‘ಕಲ್ಯಾಣ ವೇದಿಕೆ’ಯಲ್ಲಿ ವಿವಾಹವಾಗಿದ್ದರು. ಮದುವೆಯ ನಂತರ, ಅವರು ಶ್ರೀವಾರಿ ದೇವಾಲಯದ ಆವರಣದಲ್ಲಿ (ಗೊಲ್ಲ […]
ಹಬ್ಬದ ಮುಂಗಡ: ಕರ್ನಾಟಕದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್
ಕರ್ನಾಟಕ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ನೀಡಿದೆ. ಸರ್ಕಾರಿ ನೌಕರರು ಹಬ್ಬದ ಮುಂಗಡ ಪಡೆಯಲು ಅಧಿಸೂಚಿಸಿರುವ ಹಬ್ಬಗಳೊಂದಿಗೆ ಹೆಚ್ಚುವರಿಯಾಗಿ ಕೆಲವು ಹಬ್ಬಗಳನ್ನು ಸೇರ್ಪಡೆಗೊಳಿಸಿ ಆದೇಶವನ್ನು ಹೊರಡಿಸಿದೆ. ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ನಾಗರತ್ನ ವಿ.ಪಾಟೀಲ್, ಸರ್ಕಾರದ ಅಧೀನ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಸೇವಾ ನಿಯಮಗಳು-2) ಆದೇಶವನ್ನು ಹೊರಡಿಸಿದ್ದಾರೆ. ಈ ಆದೇಶ ರಾಜ್ಯ ಸರ್ಕಾರಿ ನೌಕರರು ಹಬ್ಬದ ಮುಂಗಡ ಪಡೆಯಲು ಅಧಿಸೂಚಿಸಿರುವ ಹಬ್ಬಗಳೊಂದಿಗೆ ಹೆಚ್ಚುವರಿಯಾಗಿ ಕೆಲವು […]
ರಸ್ತೆಯಲ್ಲಿ ವಾಹನ ಚಲಾಯಿಸುವಾಗ ನಾವು ಕೆಲವು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಜನರು ಈ ನಿಯಮಗಳನ್ನು ಸರಿಯಾಗಿ ಪಾಲಿಸುತ್ತಿದ್ದಾರೆಯೇ ಇಲ್ಲವೇ ಎಂದು ಪರಿಶೀಲಿಸಲು ಟ್ರಾಫಿಕ್ ಪೊಲೀಸರು ರಸ್ತೆಯಲ್ಲಿ ನಿಂತಿರುತ್ತಾರೆ. ಎಲ್ಲವೂ ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಅವರು ಆಗಾಗ್ಗೆ ಕಾರು, ಬೈಕ್ ಮತ್ತು ಟ್ರಕ್ ಸವಾರರನ್ನು ತಡೆದು ದಾಖಲೆಗಳನ್ನು ಪರಿಶೀಲಿಸುತ್ತಾರೆ. ಇಂತಹದ್ದೇ ಒಂದು ಸಾಮಾನ್ಯ ತಪಾಸಣೆಯ ವೇಳೆ, ಟ್ರಾಫಿಕ್ ಪೊಲೀಸರೊಬ್ಬರು ಕಾರು ಚಾಲಕನಿಗೆ ನಿಲ್ಲಿಸಲು ಸೂಚಿಸಿದರು. ಆದರೆ ಅದರ ನಂತರ ಚಾಲಕ ಮಾಡಿದ ಕೃತ್ಯದ ವಿಡಿಯೋ ಈಗ ವೈರಲ್ ಆಗುತ್ತಿದೆ. ವೈರಲ್ […]
BIG NEWS: ಮತ್ತೆ ಮಂಗನ ಕಾಯಿಲೆ ಹೆಚ್ಚಳ: ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ಪತ್ತೆ
ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮತ್ತೆ ಮಂಗನ ಕಾಯಿಲೆ ಹೆಚ್ಚಳವಾಗಿದೆ. ಶಿವಮೊಗ್ಗ, ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕೆ.ಎಫ್ ಡಿ.ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಆತಂಕ ಮನೆ ಮಾಡಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ 9 ಜನರಲ್ಲಿ ಮಂಗನ ಕಾಯಿಲೆ ಅಥವಾ ಕೆ.ಎಫ್.ಡಿ.ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರಕ್ಕೆ ಸೂಚಿಸಿದೆ. ಕಾಡಂಚಿನ ಗ್ರಾಮಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಮಲೆನಾಡಿನ ಜಿಲ್ಲೆಗಳಲ್ಲಿ ಚಳಿ ಪ್ರಮಾಣ ಕಡಿಮೆಯಾಗುತ್ತಿದಂತೆಯೇ ಮಂಗನ ಕಾಯಿಲೆ ಹೆಚ್ಚುತ್ತಿದೆ. ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ಹೆಚ್ಚು ಪತ್ತೆಯಾಗುತ್ತಿದ್ದು, ಜನರ […]
BREAKING: 274 ಮಿಲಿಯನ್ ಫಾಲೋಯರ್ಸ್ ಹೊಂದಿರುವ ವಿರಾಟ್ ಕೊಹ್ಲಿ ಇನ್ಸ್ಟಾಗ್ರಾಮ್ ಖಾತೆ ಪುನಃ ಸ್ಥಾಪನೆ
ನವದೆಹಲಿ: ವಿಶ್ವ ಕ್ರಿಕೆಟ್ ಮತ್ತು ಸಾಮಾಜಿಕ ಮಾಧ್ಯಮ ಜಗತ್ತಿನಲ್ಲಿ ಆಘಾತಕಾರಿ ಅಲೆಗಳನ್ನು ಉಂಟುಮಾಡಿದ ನಂತರ ಖ್ಯಾತ ಕ್ರಿಕೆಟ್ ತಾರೆ ವಿರಾಟ್ ಕೊಹ್ಲಿ ಅವರ ಇನ್ಸ್ಟಾಗ್ರಾಮ್ ಖಾತೆಯನ್ನು ಪುನಃಸ್ಥಾಪಿಸಲಾಗಿದೆ. ಜನವರಿ 30 ರಂದು 274 ಮಿಲಿಯನ್ಗಿಂತಲೂ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ಕೊಹ್ಲಿ ಅವರ ಖಾತೆಯು ಇನ್ಸ್ಟಾಗ್ರಾಮ್ನಿಂದ ಕಣ್ಮರೆಯಾಗಿತ್ತು. ಸ್ವಲ್ಪ ಸಮಯದ ನಂತರ, ಖಾತೆಯನ್ನು ಪುನಃಸ್ಥಾಪಿಸಲಾಗಿದೆ ಮತ್ತು ಎಲ್ಲವೂ ಸಾಮಾನ್ಯ ಸ್ಥಿತಿಗೆ ಮರಳಿದೆ. ಇಂದು ವಿರಾಟ್ ಕೊಹ್ಲಿ ಖಾತೆ ಕಣ್ಮರೆಯಾಗಿರುವುದನ್ನು ಅಭಿಮಾನಿಗಳು ಗಮನಿಸಿ ಅಭಿಮಾನಿಗಳು ಸಾಮಾಜಿಕ ಮಾಧ್ಯಮದಲ್ಲಿಯೂ ಪ್ರಶ್ನಿಸಿದ್ದಾರೆ. ಕೊಹ್ಲಿ […]
ವಿದ್ಯುತ್ ವಿತರಣಾ ಕಂಪನಿಗಳ ಆರ್ಥಿಕ ಚೇತರಿಕೆಗೆ ಹೊಸ ಮಸೂದೆ: ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ವಿದ್ಯುತ್ ದರ
ನವದೆಹಲಿ: ವಿದ್ಯುತ್ ವಿತರಣಾ ಕಂಪನಿಗಳನ್ನು ಸಾಲದ ಸುಳಿಯಿಂದ ಪಾರು ಮಾಡಿ ಆರ್ಥಿಕ ಚೇತರಿಕೆ ನೀಡಲು ಕೇಂದ್ರ ಸರ್ಕಾರ 2025ರ ವಿದ್ಯುತ್ ತಿದ್ದುಪಡಿ ಮಸೂದೆ ಸಿದ್ಧಪಡಿಸಿದೆ. ಇದರ ಅನುಸಾರ ಇನ್ನು ಮುಂದೆ ವಿದ್ಯುತ್ ದರಗಳು ವಿದ್ಯುತ್ ಉತ್ಪಾದನಾ ವೆಚ್ಚಕ್ಕೆ ಅನುಕೂಲವಾಗಿ ನಿರ್ಧಾರವಾಗುತ್ತದೆ. ವಿದ್ಯುತ್ ನಿಯಂತ್ರಕರು ವಾರ್ಷಿಕ ದರ ಪರಿಷ್ಕರಣೆ ಮಾಡದಿದ್ದಲ್ಲಿ ಸ್ವಯಂಚಾಲಿತವಾಗಿ ದರ ಬದಲಾವಣೆಯಾಗುವ ವ್ಯವಸ್ಥೆ ಜಾರಿಗೆ ಬರುತ್ತದೆ. ಲೋಕಸಭೆಯಲ್ಲಿ ಈ ಕುರಿತಾಗಿ ಮಾಹಿತಿ ನೀಡಿದ ಸಚಿವ ಶ್ರೀಪಾದ್ ನಾಯ್ಕ್, ಪ್ರತಿ ವರ್ಷ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ […]
BREAKING : ‘ಕೆಂಪೇಗೌಡ’ಏರ್ ಪೋರ್ಟ್’ನಲ್ಲಿ ವಿಮಾನಗಳ ಹಾರಾಟ ವಿಳಂಬ : ಪ್ರಯಾಣಿಕರ ಪರದಾಟ.!
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ವಿಮಾನಗಳ ಹಾರಾಟ ವಿಳಂಬವಾಗಿದ್ದು, ಪ್ರಯಾಣಿಕರು ಪರದಾಡಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಕಾರ್ಯಾಚರಣೆಯು ಸಾಮಾನ್ಯವಾಗಿ ನಡೆಯುತ್ತಿದೆ. ಆದರೂ, ಕೆಲವು ನಿರ್ದಿಷ್ಟ ವಿಮಾನಗಳು ತಾಂತ್ರಿಕ ಅಥವಾ ಹವಾಮಾನ ಕಾರಣಗಳಿಂದ ವಿಳಂಬವಾಗಿರುವ ಸಾಧ್ಯತೆಯಿದೆ. ಜನವರಿ ತಿಂಗಳು ಚಳಿಗಾಲದ ಸಮಯವಾಗಿರುವುದರಿಂದ, ಮುಂಜಾನೆ ಸಮಯದಲ್ಲಿ ದಟ್ಟವಾದ ಮಂಜು (Fog) ಆವರಿಸುವ ಸಾಧ್ಯತೆ ಇರುತ್ತದೆ. ಇದು ರನ್ವೇನಲ್ಲಿ ಗೋಚರತೆಯನ್ನು (Visibility) ಕಡಿಮೆ ಮಾಡಿ ವಿಮಾನಗಳ ಹಾರಾಟ ವಿಳಂಬಕ್ಕೆ ಪ್ರಮುಖ ಕಾರಣವಾಗಿದೆ. […]
ಬೆಂಗಳೂರು: ಬಿಜೆಪಿ ಸರ್ಕಾರಕ್ಕಿಂತ ಕಾಂಗ್ರೆಸ್ ಸರ್ಕಾರದಲ್ಲೇ ಭ್ರಷ್ಟಾಚಾರ ಅಧಿಕವಾಗಿದೆ ಎಂದು ಗುತ್ತಿಗೆದಾರರು ಆರೋಪಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಗುತ್ತಿಗೆದಾರರ ಸಂಘ 37,370 ಕೋಟಿ ರೂ. ಬಾಕಿ ಬಿಲ್ ಪಾವತಿಗೆ ಮಾರ್ಚ್ 5ರ ಗಡುವು ನೀಡಿದೆ. ರಾಜ್ಯದಲ್ಲೆಡೆ ಸರ್ಕಾರಿ ಕಾಮಗಾರಿ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಲಾಗಿದೆ. ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್. ಮಂಜುನಾಥ್ ಬಾಕಿ ಬಿಲ್ ಪಾವತಿ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೂರು ವರ್ಷಗಳಿಂದ ಸರ್ಕಾರ ಬಾಕಿ ಬಿಲ್ ಬಿಡುಗಡೆ ಮಾಡದ […]
Techie Jobs At Risk : IT ಉದ್ಯೋಗಗಳು ಅಪಾಯದಲ್ಲಿ : ಆರ್ಥಿಕ ಸಮೀಕ್ಷೆ ಎಚ್ಚರಿಕೆ.!
ಭಾರತದ ಐಟಿ ಕ್ಷೇತ್ರವು ಇಷ್ಟು ದಿನ “ಔಟ್ಸೋರ್ಸಿಂಗ್” (Outsourcing) ಮಾದರಿಯ ಮೇಲೆ ಬೆಳೆದಿತ್ತು. ಅಂದರೆ, ವಿದೇಶಿ ಕಂಪನಿಗಳ ಸಣ್ಣಪುಟ್ಟ ತಾಂತ್ರಿಕ ಕೆಲಸಗಳನ್ನು ಭಾರತೀಯರು ಮಾಡುತ್ತಿದ್ದರು. ಈಗ Generative AI (ChatGPT, Claude, ಇತ್ಯಾದಿ) ತಂತ್ರಜ್ಞಾನಗಳು ಕೋಡಿಂಗ್ ಮಾಡುವುದು, ಡೇಟಾ ಎಂಟ್ರಿ ಮತ್ತು ವರದಿ ಸಿದ್ಧಪಡಿಸುವ ಕೆಲಸವನ್ನು ಮನುಷ್ಯರಿಗಿಂತ ವೇಗವಾಗಿ ಮಾಡುತ್ತಿವೆ. ಇದರಿಂದ ಕಂಪನಿಗಳು ಉದ್ಯೋಗಿಗಳನ್ನು ನೇಮಿಸಿಕೊಳ್ಳುವ ಬದಲು AI ಮೊರೆ ಹೋಗುತ್ತಿವೆ. 2025-26ರ ಆರ್ಥಿಕ ಸಮೀಕ್ಷೆಯು ಭಾರತದ ಐಟಿ ವಲಯ ಮತ್ತು ‘ವೈಟ್ ಕಾಲರ್’ ಉದ್ಯೋಗಗಳ ಕುರಿತು […]
ಕುಡಿದು ವಾಹನ ಚಾಲನೆ ಮಾಡಿದವರಿಗೆ ಬಿಗ್ ಶಾಕ್: 4479 ಡಿಎಲ್ ಅಮಾನತು
ಬೆಂಗಳೂರು: ಬೆಂಗಳೂರಿನಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಡ್ರಂಕ್ ಅಂಡ್ ಡ್ರೈವ್ ಪ್ರಕರಣದಲ್ಲಿ ಸಿಕ್ಕಿಬಿದ್ದ 19,548 ಚಾಲಕರ ಡಿಎಲ್ ಅಮಾನತುಗೊಳಿಸಲು ಶಿಫಾರಸು ಮಾಡಲಾಗಿದೆ. 4479ಕ್ಕೂ ಅಧಿಕ ಚಾಲನಾ ಪರವಾನಗಿಗಳನ್ನು ಈಗಾಗಲೇ ಮೂರು ತಿಂಗಳ ಅವಧಿಗೆ ಅಮಾನತು ಮಾಡಲಾಗಿದೆ. ಬೆಂಗಳೂರಿನಲ್ಲಿ 2025ರಲ್ಲಿ ಬರೋಬ್ಬರಿ 39,349 ಡ್ರಂಕ್ ಅಂಡ್ ಡ್ರೈವ್ ಪ್ರಕರಣಗಳು ದಾಖಲಾಗಿವೆ. ಪಾನಮತ್ತರಾಗಿ ವಾಹನ ಚಾಲನೆ ಮಾಡುವಾಗ ಸಿಕ್ಕಿಬಿದ್ದ ಚಾಲಕರು ತಲಾ 10 ಸಾವಿರ ರೂ. ದಂಡ ಪಾವತಿಸಿದ್ದಾರೆ. […]
BREAKING: ಕೊಪ್ಪಳದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ
ಕೊಪ್ಪಳ: ಕೊಪ್ಪಳದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಿಮ್ಸ್ ಆಡಳಿತಾಧಿಕಾರಿಯ ನಿವಾಸ, ಕಾಲೇಜು ಸೇರಿದಂತೆ 6 ಕಡೆ ದಾಳಿ ನಡೆಸಲಾಗಿದೆ. ಕೊಪ್ಪಳ ತಾಲೂಕಿನ ಭಾಗ್ಯನಗರದಲ್ಲಿರುವ ಬಿ. ಕಲ್ಲೇಶ್ ಅವರ ನಿವಾಸದ ಮೇಲೆ ದಾಳಿ ಮಾಡಲಾಗಿದೆ. ಕಿಮ್ಸ್ ಆಡಳಿತಾಧಿಕಾರಿ ಬಿ. ಕಲ್ಲೇಶ್ ಅವರ ಸಂಬಂಧಿಕರ ಮನೆಗಳ ಮೇಲೂ ದಾಳಿ ನಡೆದಿದೆ. 30 ಜನರ ತಂಡದಿಂದ ಏಕಕಾಲಕ್ಕೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಕೊಪ್ಪಳ ಲೋಕಾಯುಕ್ತ ಡಿವೈಎಸ್ಪಿ ಲೋಕೇಶ್, ಗದಗ, ಹಾವೇರಿ, ರಾಯಚೂರು ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ […]
ಪ್ರವಾಸಿ ಮಾರ್ಗದರ್ಶಿ ತರಬೇತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನ
ಧಾರವಾಡ : ಪ್ರವಾಸೋದ್ಯಮ ಇಲಾಖೆಯಿಂದ ಪ್ರವಾಸಿ ತಾಣಗಳ ಉತ್ತೇಜನ ಮತ್ತು ಪ್ರಚಾರದ ದೃಷ್ಠಿಯಿಂದ ಎಸ್.ಸಿ.ಎಸ್.ಪಿ., ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಗೆ 01 ತಿಂಗಳ ಪ್ರವಾಸಿ ಮಾರ್ಗದರ್ಶಿ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಧಾರವಾಡ ಜಿಲ್ಲೆಯ ಪದವಿ ಮತ್ತು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ 21 ರಿಂದ 48 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ಪ್ರವಾಸೋದ್ಯಮ ಇಲಾಖೆಯ ಕಛೇರಿಯಿಂದ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು […]
ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮೇ 9 ಕಾಮೆಡ್- ಕೆ ಪರೀಕ್ಷೆ
ಬೆಂಗಳೂರು: 2026- 27ನೇ ಶೈಕ್ಷಣಿಕ ವರ್ಷದ ಇಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶಕ್ಕೆ ಮೇ 9ರಂದು ಕಾಮೆಡ್ -ಕೆ ಪ್ರವೇಶ ಪರೀಕ್ಷೆ ನಡೆಯಲಿದೆ. ದೇಶಾದ್ಯಂತ 200 ನಗರಗಳ 400ಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ರಾಜ್ಯದ ಖಾಸಗಿ ಅನುದಾನಿತ ಇಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆದುಕೊಳ್ಳಬಹುದು. ಕಾಮೆಡ್ –ಕೆ ಪ್ರವೇಶ ಪರೀಕ್ಷೆಗೆ ಫೆಬ್ರವರಿ 3ರಂದು ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಮಾರ್ಚ್ 16 ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗಾಗಿ www.comedk.org, www.unigauge.com ವೆಬ್ಸೈಟ್ ಗಮನಿಸಬಹುದಾಗಿದೆ.
ಸಾರ್ವಜನಿಕರೇ ಗಮನಿಸಿ : ಫೆ.1 ರಿಂದ ಬದಲಾಗಲಿದೆ ಈ 10 ಪ್ರಮುಖ ನಿಯಮಗಳು |New Rules from feb.1
ಜನವರಿ ತಿಂಗಳು ಮುಗಿಯುತ್ತಿದ್ದಂತೆ ಫೆಬ್ರವರಿ ತಿಂಗಳು ಆರಂಭವಾಗಲಿದೆ. ಈ ಬಾರಿ ಫೆಬ್ರವರಿ ಆರಂಭವು ಸಾಮಾನ್ಯ ಜನರಿಗೆ ಅತ್ಯಂತ ವಿಶೇಷವಾಗಿರಲಿದೆ. 1 ಫೆಬ್ರವರಿ 2026 ರಂದು ಒಂದು ಕಡೆ ದೇಶದ ಕೇಂದ್ರ ಬಜೆಟ್ ಮಂಡನೆಯಾಗಲಿದ್ದರೆ, ಮತ್ತೊಂದು ಕಡೆ ದೈನಂದಿನ ಜೀವನಕ್ಕೆ ಸಂಬಂಧಿಸಿದ ಹಲವು ಪ್ರಮುಖ ನಿಯಮಗಳು ಬದಲಾಗಲಿವೆ. ಈ ಬದಲಾವಣೆಗಳು ನೇರವಾಗಿ ನಿಮ್ಮ ಜೇಬು, ಮನೆ ವೆಚ್ಚ, ತೆರಿಗೆ ಯೋಜನೆ (Tax Planning), ಹೂಡಿಕೆ ಮತ್ತು ದೈನಂದಿನ ಅಗತ್ಯಗಳ ಮೇಲೆ ಪ್ರಭಾವ ಬೀರಲಿವೆ. ಗ್ಯಾಸ್ ಸಿಲಿಂಡರ್ನಿಂದ ಹಿಡಿದು ಸಿಗರೇಟ್ವರೆಗೆ, […]
SHOCKING : ಮಗನ ಮೇಲೆ ದಾಳಿ ಮಾಡಿದ ಚಿರತೆಯನ್ನು ಕುಡುಗೋಲಿನಿಂದ ಕೊಚ್ಚಿ ಕೊಂದ ತಂದೆ !
ಅಹಮದಾಬಾದ್ : ಗುಜರಾತ್ನ ಗಿರ್ ಸೋಮನಾಥ್ ಜಿಲ್ಲೆಯ ಗಾಂಗ್ಡಾ ಗ್ರಾಮದ ಹೊರವಲಯದಲ್ಲಿ ಗುರುವಾರ ಮಧ್ಯಾಹ್ನ ನಡೆದ ಭೀಕರ ಮತ್ತು ರೋಚಕ ಘಟನೆಯೊಂದರಲ್ಲಿ, ತನ್ನ ಮಗನನ್ನು ಚಿರತೆಯ ದಾಳಿಯಿಂದ ರಕ್ಷಿಸಲು ವೃದ್ಧ ತಂದೆಯೊಬ್ಬರು ಅದರೊಂದಿಗೆ ಹೋರಾಡಿ ಅದನ್ನು ಕೊಂದಿದ್ದಾರೆ. ಏನಿದು ಘಟನೆ ಸ್ಥಳೀಯ ಮೂಲಗಳ ಪ್ರಕಾರ, ವೃದ್ಧರು ತಮ್ಮ ಮನೆಯ ಹೊರಗೆ ಕುಳಿತಿದ್ದಾಗ, ಹತ್ತಿರದ ಪೊದೆಗಳಿಂದ ನುಗ್ಗಿ ಬಂದ ಚಿರತೆಯೊಂದು ಅನಿರೀಕ್ಷಿತವಾಗಿ ಅವರ ಮೇಲೆ ದಾಳಿ ಮಾಡಿದೆ. ತಂದೆಯ ಚೀರಾಟ ಕೇಳಿ ಮಗ ಕೂಡಲೇ ರಕ್ಷಣೆಗೆ ಧಾವಿಸಿದ್ದಾನೆ. ಆದರೆ […]
ಬೃಹತ್ ಗೇಟ್ ಬಿದ್ದು ಸೆಕ್ಯೂರಿಟಿ ಗಾರ್ಡ್ ದುರ್ಮರಣ
ಬೆಂಗಳೂರು: ಬೃಹತ್ ಗೇಟ್ ಬಿದ್ದು ಸೆಕ್ಯೂರಿಟಿ ಗಾರ್ಡ್ ಸಾವನ್ನಪ್ಪಿದ ಘಟನೆ ಬೆಂಗಳೂರು ವಾಯುವ್ಯ ವಿಭಾಗ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯ ಬೋನ್ ಮಿಲ್ ನಲ್ಲಿರುವ ಸ್ಮಾರ್ಟ್ ಪಾಯಿಂಟ್ ನಲ್ಲಿ ನಡೆದಿದೆ. ಸ್ವಾಮಿ(53) ಮೃತಪಟ್ಟ ಸೆಕ್ಯೂರಿಟಿ ಗಾರ್ಡ್ ಎಂದು ಗುರುತಿಸಲಾಗಿದೆ. ಸ್ಮಾರ್ಟ್ ಪಾಯಿಂಟ್ ಗೆ ಬರುವ ಗೂಡ್ಸ್ ವಾಹನಗಳಿಗೆ ಗೇಟ್ ತೆಗೆಯುವ ಮತ್ತು ಹಾಕುವ ಕೆಲಸವನ್ನು ಸ್ವಾಮಿ ಮಾಡುತ್ತಿದ್ದರು. ಬುಧವಾರ ತಡರಾತ್ರಿ ಗೇಟ್ ತೆಗೆಯುವ ವೇಳೆ ಬೃಹತ್ ಗೇಟ್ ಮೈಮೇಲೆ ಬಿದ್ದು ದುರಂತ ಸಂಭವಿಸಿದೆ. ಬೆಳಗ್ಗೆ ಸಿಬ್ಬಂದಿ ಗಮನಿಸಿ […]
BIG NEWS : ‘ರಾಜ್ಯ ಸರ್ಕಾರಿ’ನೌಕರರು ಇನ್ಮುಂದೆ ‘ಖಾದಿ ಉಡುಪು’ಧರಿಸುವುದು ಕಡ್ಡಾಯ : ಸರ್ಕಾರ ಆದೇಶ
ಬೆಂಗಳೂರು : ಇನ್ಮುಂದೆ ರಾಜ್ಯ ಸರ್ಕಾರಿ ನೌಕರರು ಖಾದಿ ಉಡುಪು ಧರಿಸುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಜನವರಿ 29, 2026 ರಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಏನಿದೆ ಆದೇಶದಲ್ಲಿ..? ರಾಜ್ಯದ ಎಲ್ಲಾ ಸರ್ಕಾರಿ/ ಅನುದಾನಿತ ಸಂಸ್ಥೆಗಳು/ ನಿಗಮ/ಮಂಡಳಿ/ಸ್ನಾಯತ್ತ ಸಂಸ್ಥೆಗಳು/ ವಿಶ್ವವಿದ್ಯಾಲಯಗಳ ಅಧಿಕಾರಿ/ ನೌಕರರುಗಳು ‘ಸ್ವಯಂ ಪ್ರೇರಣೆಯಿಂದ ಪ್ರತಿ ತಿಂಗಳ ಮೊದಲ ಶನಿವಾರದಂದು ಖಾದಿ ಉಡುಪನ್ನು ಧರಿಸುವುದು ಅಲ್ಲದೇ, […]
ನಿವೃತ್ತ ಪೊಲೀಸ್ ಅಧಿಕಾರಿ ಎಲ್. ರೇವಣಸಿದ್ಧಯ್ಯ ಸೇರಿ ಮೂವರಿಗೆ ದಾವಣಗೆರೆ ವಿವಿ ಗೌರವ ಡಾಕ್ಟರೇಟ್
ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯದ 13 ನೇ ಘಟಿಕೋತ್ಸವ ಕಾರ್ಯಕ್ರಮವು ಜನವರಿ 30 ರಂದು ಜ್ಞಾನಸೌಧ ಪ್ರಾಂಗಣದಲ್ಲಿ ನಡೆಯಲಿದ್ದು, ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಅಧ್ಯಕ್ಷತೆ ವಹಿಸುವರು ಎಂದು ವಿ.ವಿ. ಕುಲಪತಿ ಪ್ರೊ. ಬಿ.ಡಿ ಕುಂಬಾರ ಅವರು ತಿಳಿಸಿದರು. ಅವರು ಗುರುವಾರ ದಾವಣಗೆರೆ ವಿಶ್ವವಿದ್ಯಾನಿಲಯದ ಎಂಬಿಎ ಸಭಾಂಗಣದಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯದ 13 ನೇ ಘಟಿಕೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಿದ್ದತೆ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಘಟಿಕೋತ್ಸವದಲ್ಲಿ ಉನ್ನತ ಶಿಕ್ಷಣ ಸಚಿವರು ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯದ ಸಮಕುಲಾಧಿಪತಿಗಳಾದ ಡಾ.ಎಂ.ಸಿ.ಸುಧಾಕರ್ ಉಪಸ್ಥಿತರಿರುವರು. […]
ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ನಿಷೇಧ ಕಡ್ಡಾಯ
ಬೆಂಗಳೂರು(ವಿಧಾನಸಭೆ): ಸರ್ಕಾರಿ ಆಸ್ಪತ್ರೆಗಳ ಸರ್ಕಾರಿ ಮತ್ತು ಗುತ್ತಿಗೆ ವೈದ್ಯರು ಕರ್ತವ್ಯದ ಅವಧಿಯ ನಂತರ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ ಕೆ.ಎಂ. ಶಿವಲಿಂಗೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರಿ ವೈದ್ಯರು ಕರ್ತವ್ಯದ ವೇಳೆಯ ನಂತರ ಯಾವುದಾದರೂ ಒಂದು ಖಾಸಗಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲು ಅವಕಾಶ ನೀಡಲಾಗಿತ್ತು. ಇದರಿಂದ ಕೆಲವು ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸಕಾಲಕ್ಕೆ ವೈದ್ಯರು […]
ಫೆ. 13 ಕಂದಾಯ ಗ್ರಾಮಗಳ 1 ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ
ಬೆಂಗಳೂರು: ಹಾವೇರಿಯಲ್ಲಿ ಫೆಬ್ರವರಿ 13ರಂದು ನಡೆಯುವ ಕಾರ್ಯಕ್ರಮದಲ್ಲಿ ಕಂದಾಯ ಗ್ರಾಮಗಳ ಒಂದು ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡಲಾಗುವುದು. ಫಲಾನುಭವಿಗಳಿಗೆ ಹಕ್ಕು ಪತ್ರ ನೀಡಲು ಮುಂದಿನ ವಾರದೊಳಗೆ ಹಕ್ಕು ಪತ್ರ ಸೇರಿದಂತೆ ಎಲ್ಲ ದಾಖಲೆ ಸಿದ್ಧ ಮಾಡಿಕೊಳ್ಳಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ ಗುರುವಾರ ವರ್ಚುಯಲ್ ಮೂಲಕ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ರಾಜ್ಯದಲ್ಲಿರುವ ಹಾಡಿ, ಹಟ್ಟಿ, ತಾಂಡಾ ವ್ಯಾಪ್ತಿಯಲ್ಲಿ ವಾಸಿಸುವ ನಿವಾಸಿಗಳು ಸರ್ಕಾರಿ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ. ಇಂತಹ ವಸತಿ […]
WPL: ಯುಪಿ ವಾರಿಯರ್ಸ್ ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟ RCB
ವಡೋದರಾ: ಯುಪಿ ವಾರಿಯರ್ಸ್ ತಂಡವನ್ನು ಎಂಟು ವಿಕೆಟ್ಗಳಿಂದ ಸೋಲಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಮ್ಮ ಎರಡನೇ ಮಹಿಳಾ ಪ್ರೀಮಿಯರ್ ಲೀಗ್(ಡಬ್ಲ್ಯೂಪಿಎಲ್) ಫೈನಲ್ಗೆ ಸ್ಥಾನ ಕಾಯ್ದುಕೊಂಡಿದೆ. ಸತತ ಸೋಲುಗಳ ನಂತರ ಪಂದ್ಯಕ್ಕೆ ಕಾಲಿಟ್ಟ ಸ್ಮೃತಿ ಮಂಧಾನ ನೇತೃತ್ವದ ತಂಡವು ಪ್ಲೇಆಫ್ಗಿಂತ ಮುಂಚಿತವಾಗಿ ಮತ್ತಷ್ಟು ತೊಡಕುಗಳ ಅಪಾಯವನ್ನು ಎದುರಿಸಿತು. ವಡೋದರಾದ ಬಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ಅವರು ಪ್ರಬಲ ಪ್ರದರ್ಶನ ನೀಡುವ ಮೂಲಕ ಮೆಗ್ ಲ್ಯಾನಿಂಗ್ ಅವರ ಯುಪಿ ವಾರಿಯರ್ಸ್ ತಂಡವನ್ನು ಆರಾಮವಾಗಿ ಸೋಲಿಸಿ ಫೈನಲ್ನಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡರು. […]
ಅಜಿತ್ ಪವಾರ್ ನಿಧನ ಹಿನ್ನೆಲೆ ಮಹಾರಾಷ್ಟ್ರ ಜಿಲ್ಲಾ ಪರಿಷತ್, ಪಂಚಾಯತ್ ಚುನಾವಣೆ ಮತದಾನ ದಿನಾಂಕ ಬದಲಾವಣೆ
ಮುಂಬೈ: ಮಹಾರಾಷ್ಟ್ರದ 12 ಜಿಲ್ಲಾ ಪರಿಷತ್ಗಳು ಮತ್ತು 125 ಪಂಚಾಯತ್ ಸಮಿತಿಗಳ ಚುನಾವಣೆಯ ಮತದಾನ ದಿನಾಂಕ ಬದಲಾವಣೆ ಮಾಡಲಾಗಿದೆ. ಫೆಬ್ರವರಿ 7 ರಂದು ಮತದಾನ ನಡೆಯಲಿದೆ ಮತ್ತು ಮತ ಎಣಿಕೆ ಫೆಬ್ರವರಿ 9 ರಂದು ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ(SEC) ಗುರುವಾರ ಪ್ರಕಟಿಸಿದೆ. ಗುರುವಾರ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನರಾದ ನಂತರ ಮಹಾರಾಷ್ಟ್ರದಲ್ಲಿ ಘೋಷಿಸಲಾದ ಮೂರು ದಿನಗಳ ಶೋಕಾಚರಣೆಯ ಹಿನ್ನೆಲೆಯಲ್ಲಿ ಚುನಾವಣೆ ದಿನಾಂಕ ಬದಲಿಸಲಾಗಿದೆ. ಮಹಾರಾಷ್ಟ್ರ ಎಸ್ಇಸಿ ಜನವರಿ 13 […]
ಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಸದನದಲ್ಲಿ ಗಮನಸೆಳೆದ ಶಾಸಕ ಯತ್ನಾಳ್: ಪತ್ತೆಗೆ ವಿಶೇಷ ತಂಡ ರಚನೆ ಭರವಸೆ
ಬೆಂಗಳೂರು: ಅಕ್ರಮ ಬಾಂಗ್ಲಾ ನಿವಾಸಿಗಳ ಬಗ್ಗೆ ವಿಧಾನಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಮನ ಸೆಳೆದಿದ್ದಾರೆ. ರಾಜ್ಯದಲ್ಲಿ 25 ಲಕ್ಷ ಅಕ್ರಮ ನುಸುಳುಕೋರರು ಇದ್ದಾರೆ. ನಕಲಿ ಆಧಾರ್ ಕಾರ್ಡ್, ಪಡಿತರ ಚೀಟಿ ಮಾಡಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಭಯಾನಕ ಸ್ಥಿತಿ ಇದೆ ಎಂದು ಯತ್ನಾಳ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇತ್ತೀಚೆಗೆ ದರೋಡೆ ನಡೆಯಿತು. ಪೊಲೀಸ್ ಇಲಾಖೆ ವಿಫಲವಾಗಿದೆ. ಬಾಂಗ್ಲಾ ನುಸುಳುಕೋರರು ಬರಲು ಏಜೆಂಟರು ನೆರವು ನೀಡುತ್ತಿದ್ದಾರೆ. ಕರ್ನಾಟಕದ ಪರಿಸ್ಥಿತಿ ಪಶ್ಚಿಮ ಬಂಗಾಳದಂತೆ ಆಗುತ್ತದೆ. ಕರ್ನಾಟಕದಲ್ಲಿ ಕನ್ನಡಿಗರಿಗೆ ರಕ್ಷಣೆ ಇಲ್ಲವಾಗಿದೆ ಎಂದು ಹೇಳಿದ್ದಾರೆ. […]
BREAKING: ಮದುವೆ ಆರತಕ್ಷತೆಗೆ ತೆರಳುತ್ತಿದ್ದ ವರನಿಗೆ ಚಾಕು ಇರಿತ
ಚಾಮರಾಜನಗರ: ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನಿಗೆ ಚೂರಿಯಿಂದ ಇರಿಯಲಾಗಿದೆ. ಕಲ್ಯಾಣ ಮಂಟಪಕ್ಕೆ ತೆರಳುವ ವೇಳೆಯಲ್ಲಿಯೇ ಚೂರಿಯಿಂದ ಇರಿಯಲಾಗಿದ್ದು, ನೀನು ಮದುವೆ ಮನೆಗಲ್ಲ, ಸ್ಮಶಾನಕ್ಕೆ ತೆರಳಬೇಕು ಎಂದು ಡೆಡ್ಲಿ ಅಟ್ಯಾಕ್ ನಡೆಸಲಾಗಿದೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಪಟ್ಟಣದಲ್ಲಿ ಘಟನೆ ನಡೆದಿದೆ. ಅಪರಿಚಿತರು ಚಾಕು, ಚೂರಿ, ಡ್ರ್ಯಾಗರ್ ನಿಂದ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಕುಣಗಳ್ಳಿ ಗ್ರಾಮದಿಂದ ಕಾರ್ ನಲ್ಲಿ ಬರುವಾಗ ವರ ರವೀಶ್ ಎಂಬುವವರಿಗೆ ಇರಿಯಲಾಗಿದೆ. ಕೊಳ್ಳೇಗಾಲದ ವೆಂಕಟೇಶ್ವರ ಮಹಲ್ ನಲ್ಲಿ ಆರತಕ್ಷತೆ ಕಾರ್ಯಕ್ರಮಕ್ಕೆ ಬರುತ್ತಿದ್ದಾಗ ಘಟನೆ ನಡೆದಿದೆ. ಚೂರಿಯಿಂದ […]
ಡಾ.ರಾಜ್ ಕುಮಾರ್ ಸಿನಿಮಾಗಳಲ್ಲಿ ಸಾಮಾಜಿಕ ಜವಾಬ್ದಾರಿ ಇತ್ತು
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಚಾಲನೆ ಸಿಕ್ಕಿದೆ. ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ವರ್ಣರಂಜಿತ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಲನ ಚಿತ್ರೋತ್ಸವ ಉದ್ಘಾಟಿಸಿದರು. ಅರ್ಥಪೂರ್ಣ ಸಿನಿಮಾಗಳ ಪ್ರದರ್ಶನದೊಂದಿಗೆ, ಅವುಗಳ ಆಶಯಗಳು ಹೆಚ್ಚೆಚ್ಚು ಜನರನ್ನು ತಲುಪುವ ಮೂಲಕ ಈ ವರ್ಷದ ಬೆಂಗಳೂರು ಚಲನಚಿತ್ರೋತ್ಸವ ಅತ್ಯಂತ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಡಾ.ರಾಜ್ ಚಿತ್ರಗಳು: ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಸಿದ್ದರಾಮಯ್ಯ ವರನಟ ಡಾ.ರಾಜ್ ಕುಮಾರ್ […]
BREAKING: ಶಾಸಕ ವೀರೇಂದ್ರ ಪಪ್ಪಿಗೆ ಮತ್ತೆ ಇಡಿ ಶಾಕ್: 177 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು
ಬೆಂಗಳೂರು: ಶಾಸಕ ವೀರೇಂದ್ರ ಪಪ್ಪಿ ವಿರುದ್ಧ ಆನ್ಲೈನ್ ಬೆಟ್ಟಿಂಗ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವೀರೇಂದ್ರ ಪಪ್ಪಿ ಅವರಿಗೆ ಸೇರಿದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಮತ್ತೆ 177.3 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಕೃಷಿ ಜಮೀನು, ನಿವೇಶನ ಸೇರಿದಂತೆ ಅನೇಕ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಬೆಟ್ಟಿಂಗ್ ಹಗರಣ, ಹಣ ಅಕ್ರಮ ವರ್ಗಾವಣೆ ಬಗ್ಗೆ ಕೇಸ್ ದಾಖಲಿಸಿ ಇಡಿ ಅಧಿಕಾರಿಗಳು ತನಿಖೆ ನಡೆಸಿದ್ದರು. ತನಿಖೆಯ ವೇಳೆ ವೀರೇಂದ್ರ ಪಪ್ಪಿ ಮತ್ತು ಸಹಚರರು ಮಾಸ್ಟರ್ ಮೈಂಡ್ ಎನ್ನುವುದು […]
ಸ್ಥಳೀಯ ಸಂಸ್ಥೆ ಚುನಾವಣೆ: ಮೀಸಲಾತಿ ನಿಗದಿಗೆ ಸರ್ಕಾರಕ್ಕೆ ಹೈಕೋರ್ಟ್ ಅಂತಿಮ ಗಡುವು
ಬೆಂಗಳೂರು: ರಾಜ್ಯದಲ್ಲಿ ಚುನಾವಣೆ ನಡೆಯಬೇಕಿರುವ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ನಿಗದಿಪಡಿಸುವ ಬಗ್ಗೆ ಉತ್ತರಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಅಂತಿಮ ಗಡುವು ನೀಡಿದೆ. ಚುನಾವಣೆ ಮೀಸಲಾತಿ ಅಧಿಸೂಚನೆ ಹೊರಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ ಪಿಐಎಲ್ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗಿಯ ಪೀಠದಲ್ಲಿ ಬುಧವಾರ ನಡೆದಿದೆ. ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್. […]
ಸಚಿವ ಶಿವಾನಂದ ಪಾಟೀಲ್ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ಯತ್ನಾಳ್ ಗೆ ನಿರ್ಬಂಧ
ಬೆಂಗಳೂರು: ಸಚಿವ ಶಿವಾನಂದ ಪಾಟೀಲ್ ಅವರ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಅಂತಹ ಹೇಳಿಕೆ ನೀಡದಂತೆ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ನಿರ್ಬಂಧ ವಿಧಿಸಲಾಗಿದೆ. ಬೆಂಗಳೂರಿನ 27ನೇ ಸಿಟಿ ಸಿವಿಲ್ ಕೋರ್ಟ್ ನಿಂದ ಈ ಕುರಿತಾಗಿ ಮಧ್ಯಂತರ ಆದೇಶ ನೀಡಲಾಗಿದೆ. ಶಾಸಕ ಯತ್ನಾಳ್ ಅವರು ಸುಳ್ಳು ನಿಂದನೆಯ ಆರೋಪ ಮಾಡುತ್ತಿದ್ದಾರೆ ಎಂದು ಶಿವಾನಂದ ಪಾಟೀಲ್ ಪರ ವಕೀಲರಾದ ವಿಜೇತಾ ಆರ್. ನಾಯ್ಕ ವಾದ ಮಂಡಿಸಿದರು. ವಾದ ಆಲಿಸಿದ ಕೋರ್ಟ್ ಮಾನಹಾನಿಕರ ಹೇಳಿಕೆ ನೀಡದಂತೆ […]
‘ಬಿಗ್ ಬಾಸ್’ ವಿನ್ನರ್ ಗಿಲ್ಲಿ ನಟಗೆ ಶಾಸಕ ಜನಾರ್ದನ ರೆಡ್ಡಿ ಅಭಿನಂದನೆ
ಬೆಂಗಳೂರು: ‘ಬಿಗ್ ಬಾಸ್’ ವಿನ್ನರ್ ಗಿಲ್ಲಿ ನಟ ಅವರಿಗೆ ಮಾಜಿ ಸಚಿವ ಜನಾರ್ದನ ರೆಡ್ಡಿ ಅಭಿನಂದಿಸಿದ್ದಾರೆ. ಕನ್ನಡದ ಹೆಸರಂತ ರಿಯಾಲಿಟಿ ಶೋ ಬಿಗ್ ಬಾಸ್ 12ರ ಆವೃತ್ತಿಯ ವಿಜೇತ, ರಾಜ್ಯ ಅಲ್ಲದೆ ದೇಶ- ವಿದೇಶದಾದ್ಯಂತ ತನ್ನ ಮಾತಿನಿಂದಲೇ ಮನೆ ಮನೆಗಳ ಮಾತಾಗಿ ನಾಡಿನ ಜನರ ಹೃದಯ ಗೆದ್ದ ಗಿಲ್ಲಿ ನಟ ಅವರನ್ನು ನಮ್ಮ ನಿವಾಸದಲ್ಲಿ ನನ್ನ ಪತ್ನಿ ಲಕ್ಷ್ಮಿ ಅರುಣ ಅವರೊಂದಿಗೆ ಭೇಟಿ ಮಾಡಿ, ಆತ್ಮೀಯವಾಗಿ ಸನ್ಮಾನಿಸಿ, ಮುಂದಿನ ಅವರ ಕಲಾಜೀವನವು ಯಶಸ್ಸಿನಿಂದ ಕೂಡಿರಲಿ ಎಂದು ಶುಭ […]
ಎಲ್ಲದಕ್ಕೂ ಕಾಲ ಉತ್ತರ ನೀಡುತ್ತದೆ: ಸಿಎಂ ಆಗುವ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ
ಶಿವಮೊಗ್ಗ: ಎಲ್ಲದಕ್ಕೂ ಕಾಲ ಉತ್ತರ ನೀಡುತ್ತದೆ. ಪಕ್ಷ ಹೇಗೆ ನಿರ್ದೇಶನ ನೀಡುತ್ತೋ ಅದರಂತೆ ನಡೆದುಕೊಳ್ಳುವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಶಿವಮೊಗ್ಗಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸಿಎಂ ಆಗುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿ, ನೋಡೋಣ ಏನಗುತ್ತೋ ಎಂದು ನಗುತ್ತಲೇ ಉತ್ತರಿಸಿದರು. ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕುರಿತ ವಿಚಾರದ ಬಗ್ಗೆ ಮಾತನಾಡಿ, ಎರಡು ವರ್ಷ ಅಥವಾ ಮುಂದಿನ ಆದೇಶದವರೆಗೂ ಅಂತ ಇದೆ. ಈ ಬಗ್ಗೆ ಪಕ್ಷ ಏನು ತೀರ್ಮಾನ ಮಾಡುತ್ತದೆ ನೋಡೋಣ ಎಂದರು. […]

23 C