BREAKING NEWS: ಮುಡಾ ನಿವೇಶನ ಅಕ್ರಮ ಹಂಚಿಕೆ ಕೇಸ್: ಸಿಎಂ ಆಪ್ತ ಮರಿಗೌಡಗೆ ಸೇರಿದ 10 ಸ್ಥಿರಾಸ್ತಿ ಮುಟ್ಟುಗೋಲು
ಬೆಂಗಳೂರು: ಸಿಎಂ ಪತ್ನಿ ಪಾರ್ವತಿ ಅವರಿಗೆ ಆಕ್ರಮವಾಗಿ ಮುಡಾ ನಿವೇಶನ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಆಪ್ತ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೆ. ಮರಿಗೌಡ ಅಕ್ರಮವಾಗಿ ನಿವೇಶನ ಪಡೆದಿರುವುದು ಬೆಳಕಿಗೆ ಬಂದಿದೆ. ಮರಿಗೌಡರಿಗೆ ಸೇರಿದ 10 ಸ್ಥಿರಾಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಮುಡಾದಿಂದ ಅಕ್ರಮವಾಗಿ ಪಡೆದಿದ್ದ ಆರು ನಿವೇಶನಗಳು, ಮೂರು ಸ್ಥಿರಾಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. 20.85 ಮೌಲ್ಯದ ಒಂದು ವಾಣಿಜ್ಯ ಕಟ್ಟಡ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಇಡಿ ದಾಳಿಯ ವೇಳೆ ಸೈಟ್ ಹಂಚಿಕೆಯಲ್ಲಿ ನಿಯಮ ಉಲ್ಲಂಘನೆ […]
BREAKING: RCB ಖರೀದಿಗೆ ಮುಂದಾದ ಆದಾರ್ ಪೂನಾವಾಲಾ: ಸ್ಪರ್ಧಾತ್ಮಕ ಬಿಡ್ ಸಲ್ಲಿಸಲು ಬಲವಾದ ಪ್ಲಾನ್
ನವದೆಹಲಿ: ಪೂನಾ ಉದ್ಯಮಿ, ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದಾರ್ ಪೂನಾವಾಲಾ ಗುರುವಾರ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಫ್ರಾಂಚೈಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಅನ್ನು ಸ್ವಾಧೀನಪಡಿಸಿಕೊಳ್ಳಲು “ಬಲವಾದ ಮತ್ತು ಸ್ಪರ್ಧಾತ್ಮಕ ಬಿಡ್” ಸಲ್ಲಿಸಲು ಯೋಜಿಸಿರುವುದಾಗಿ ಹೇಳಿದ್ದಾರೆ. ಎಕ್ಸ್ನಲ್ಲಿ ಪೋಸ್ಟ್ ಮಾಡುವ ಮೂಲಕ ಪೂನವಾಲ್ಲಾ ಈ ಘೋಷಣೆ ಮಾಡಿದ್ದಾರೆ, ಫ್ರಾಂಚೈಸಿಗಾಗಿ ಬಿಡ್ಡಿಂಗ್ ಪ್ರಕ್ರಿಯೆಯನ್ನು ಪ್ರವೇಶಿಸುವ ಉದ್ದೇಶವನ್ನು ತಿಳಿಸಿದ್ದಾರೆ. ಮುಂದಿನ ಕೆಲವು ತಿಂಗಳುಗಳಲ್ಲಿ, ಐಪಿಎಲ್ನ ಅತ್ಯುತ್ತಮ ತಂಡಗಳಲ್ಲಿ ಒಂದಾದ RCB ಗಾಗಿ ನಾನು ಬಲವಾದ ಮತ್ತು ಸ್ಪರ್ಧಾತ್ಮಕ ಬಿಡ್ […]
ದಾವೋಸ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಸ್ವಿಟ್ಜರ್ಲ್ಯಾಂಡ್ ನ ದಾವೋಸ್ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯ(WEF) ನೇಪಥ್ಯದಲ್ಲಿ ತಮ್ಮ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಭೇಟಿಯಾಗಿದ್ದಾರೆ. ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಕೊನೆಗೊಳ್ಳಬೇಕು ಎಂದು ಅವರು ಪುನರುಚ್ಚರಿಸಿದ್ದಾರೆ. ಅಲ್ಲದೇ ರಷ್ಯಾದ ವ್ಲಾಡಿಮಿರ್ ಪುಟಿನ್ ಅವರನ್ನು ಶೀಘ್ರದಲ್ಲೇ ಭೇಟಿಯಾಗುವುದಾಗಿ ಹೇಳಿದ್ದು, ಫೆಬ್ರವರಿ 2022ರಲ್ಲಿ ಭುಗಿಲೆದ್ದ ಸಂಘರ್ಷವನ್ನು ಕೊನೆಗೊಳಿಸುವ ಮಾರ್ಗಗಳನ್ನು ಚರ್ಚಿಸಿದ್ದಾರೆ. ನಾನು ಇಲ್ಲಿ ಅಧ್ಯಕ್ಷ ಝೆಲೆನ್ಸ್ಕಿಯನ್ನು ಭೇಟಿಯಾದೆ. ಸಭೆ ಚೆನ್ನಾಗಿತ್ತು. ನಾವು(ಯುಎಸ್ ನಿಯೋಗ) ಇಂದು […]
ಮದ್ಯಪಾನ ಬಿಡು ಎಂದು ಬುದ್ಧಿ ಹೇಳಿದ ಪೋಷಕರು: ವ್ಯಕ್ತಿ ಆತ್ಮಹತ್ಯೆ
ಶಿವಮೊಗ್ಗ: ಕುಡಿತದ ಚಟ ಬಿಡುವಂತೆ ಪೋಷಕರು ಬುದ್ಧಿವಾದ ಹೇಳಿದ್ದರಿಂದ ಮನನೊಂದ ವ್ಯಕ್ತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಸಮೀಪದ ಹರಕೆರೆಯಲ್ಲಿ ನಡೆದಿದೆ. 35 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡವ. ಆತನಿಗೆ ತಂದೆ, ತಾಯಿ ಮದ್ಯಪಾನ ಮಾಡದಂತೆ ಬುದ್ಧಿವಾದ ಹೇಳಿದ್ದರು. ಇದರಿಂದ ಮನನೊಂದು ತಮ್ಮ ಅಡಿಕೆ ತೋಟದಲ್ಲಿ ಮರಕ್ಕೆ ನೇಣು ಹಾಕಿಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಳೆಹೊನ್ನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರತದಲ್ಲಿ ಟಿ-20 ವಿಶ್ವಕಪ್ ಆಡಲ್ಲ: ಹಠ ಬಿಡದ ಬಾಂಗ್ಲಾ, ಐಸಿಸಿ ಖಡಕ್ ಎಚ್ಚರಿಕೆ
ಭಾರತದಲ್ಲಿ ಟಿ-20 ಪುರುಷರ ವಿಶ್ವಕಪ್ ಪಂದ್ಯಗಳನ್ನು ಆಡುವುದಿಲ್ಲ ಎಂದು ಬಾಂಗ್ಲಾದೇಶ ಮತ್ತೊಮ್ಮೆ ಹೇಳಿದೆ. ಅಲ್ಲದೇ ಸುರಕ್ಷತೆಯ ಕಾರಣಕ್ಕೆ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರ ಮಾಡುವಂತೆ ಹಳೆಯ ಬೇಡಿಕೆಯನ್ನು ಮತ್ತೆ ಮುಂದಿಟ್ಟಿದೆ. ಭಾರತದಲ್ಲಿ ಟಿ-20 ವಿಶ್ವಕಪ್ ಪಂದ್ಯಗಳನ್ನು ಆಡುವುದಿಲ್ಲ ಎಂಬ ತನ್ನ ನಿಲುವನ್ನು ಬಾಂಗ್ಲಾದೇಶ ಬದಲಿಸಿಲ್ಲ, ಈ ಹಿಂದೆ ನೀಡಿದ್ದ ಹೇಳಿಕೆಯನ್ನೇ ಪುನರುಚ್ಚರಿಸಿದೆ. ಭದ್ರತೆ ಮತ್ತು ರಾಜಕೀಯ ಕಾರಣಕ್ಕೆ ಅದರ ಪಂದ್ಯಗಳನ್ನು ಶ್ರೀಲಂಕಾಗೆ ಸ್ಥಳಾಂತರಿಸಬೇಕು ಎಂದು ಮತ್ತೊಮ್ಮೆ ಹೇಳಿದೆ. ಇಎಸ್ಪಿಎನ್ ಕ್ರಿಕ್ಇನ್ಫೋ ವರದಿ ಪ್ರಕಾರ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) […]
BREAKING: ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಸಿಬಿಐ ಅರ್ಜಿ: ಮಾಜಿ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ನಿರೀಕ್ಷಣಾ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸಿಬಿಐ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ನಿಗಮದ ಹಣವನ್ನು ಮುಂಬೈನ ಇಬ್ಬರು ಮಹಿಳೆಯರಿಗೆ ವರ್ಗಾವಣೆ ಮಾಡಲಾಗಿದೆ. ನಿಗಮದ ಅಕ್ರಮಗಳ ಬಗ್ಗೆ ಸಿಬಿಐ ಹೆಚ್ಚಿನ ತನಿಖೆ ನಡೆಸುತ್ತಿದೆ. ಬಿ. ನಾಗೇಂದ್ರ ಬಂಧಿಸಿ ವಿಚಾರಣೆಗೆ ಒಳಪಡಿಸುವ ಅಗತ್ಯವಿದೆ ಎಂದು ಸಿಬಿಐ ಪರ ಎಸ್.ಪಿ.ಪಿ. ಪ್ರಸನ್ನ ಕುಮಾರ್ ವಾದ ಮಂಡಿಸಿದ್ದಾರೆ. ಅರ್ಜಿ ಸಂಬಂಧ ಮಾಜಿ ಸಚಿವ ನಾಗೇಂದ್ರಗೆ ನೋಟಿಸ್ […]
ಬೆಂಗಳೂರು: ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರತಿ ವರ್ಷದ ಆರಂಭದಲ್ಲಿ ನಡೆಯುವ ಹಾಗೂ ಹೊಸ ಸರ್ಕಾರ ಸ್ಥಾಪನೆಗೊಂಡ ಸಂದರ್ಭದಲ್ಲಿ ನಡೆಸಲಾಗುವ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡುವುದು ಸಂವಿಧಾನದ ರೀತಿ ರಾಜ್ಯಪಾಲರ ಕರ್ತವ್ಯವಾಗಿರುತ್ತದೆ. ಸಂವಿಧಾನ ಕಲಂ176 ಮತ್ತು 163 ರಂತೆ […]
ರಾಜ್ಯಪಾಲರ ಭಾಷಣದೊಂದಿಗೆ ಅಧಿವೇಶನ ಆರಂಭಿಸುವುದನ್ನು ನಿಲ್ಲಿಸಬೇಕು: ಸಿಎಂ ಎಂ.ಕೆ. ಸ್ಟಾಲಿನ್
ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದಿರುವ ಮೂಲಕ, ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಸಂವಿಧಾನವನ್ನು ಉಲ್ಲಂಘಿಸಿದ್ದಾರೆ. ಈ ಕೃತ್ಯವು ಚುನಾಯಿತ ಪ್ರತಿನಿಧಿಗಳ ಸದನಕ್ಕೆ ಮಾಡಿದ ಅವಮಾನವಾಗಿದೆ. ಇದನ್ನು ನಾವು ಬಲವಾಗಿ ಖಂಡಿಸುತ್ತೇವೆ ಮತ್ತು ಸೂಕ್ತ ಚರ್ಚೆಯ ನಂತರ, ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್, ರಾಜ್ಯಪಾಲರ ಭಾಷಣದೊಂದಿಗೆ ವಿಧಾನಮಂಡಲ ಅಧಿವೇಶನ ಆರಂಭಿಸುವುದನ್ನು ನಿಲ್ಲಿಸಬೇಕು ಎಂದು […]
BIG NEWS: ಖ್ಯಾತ ಗಾಯಕಿ ಎಸ್.ಜಾನಕಿ ಪುತ್ರ ಮುರಳಿಕೃಷ್ಣ ಹೃದಯಾಘಾತಕ್ಕೆ ಬಲಿ
ಹೈದರಾಬಾದ್: ಜನಪ್ರಿಯ ಗಾಯಕಿ ಎಸ್.ಜಾನಕಿ ಅವರ ಪುತ್ರ, ಖ್ಯಾತ ಭರತನಾಟ್ಯ ಕಲಾವಿದ ಮುರಳಿಕೃಷ್ಣ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ಮುರಳಿಕೃಷ್ಣ ಹೈದರಾಬಾದ್ ನಲ್ಲಿರುವ ಮನೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಭರತನಾಟ್ಯ ಕಲಾವಿದರಾಗಿದ್ದ ಮುರಳಿಕೃಷ್ಣ ಹಲವು ಶೋಗಳನ್ನು ನಡೆಸಿದ್ದರು. ಅನೇಕ ಸಿನಿಮಾಗಳಿಗೆ ಭರತನಾಟ್ಯ ಕ್ರೊರಿಯೋಗ್ರಫಿಯನ್ನು ಮಾಡಿದ್ದರು. ಭರತನಾಟ್ಯ ಹಾಗೂ ಕುಚಿಪುಡಿ ನೃತ್ಯಗಾತಿ ಉಮಾ ಅವರನ್ನು ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಹೆಣ್ಣುಮಕ್ಕಳು. ಆದರೆ ಉಮಾ ಹಾಗೂ ಮುರಳಿಕೃಷ್ಣ ವಿಚ್ಛೇದನ ಪಡೆದು ದೂರಾಗಿದ್ದರು ಎನ್ನಲಾಗಿದೆ. ಮುರಳಿಕೃಷ್ಣ ಕೆಲ […]
SHOCKING: ರೀಲ್ಸ್ ಮಾಡುವಾಗ ದುರಂತ: ತನ್ನದೇ ಟ್ರ್ಯಾಕ್ಟರ್ ಚಕ್ರಕ್ಕೆ ಸಿಲುಕಿ ವ್ಯಕ್ತಿ ದುರ್ಮರಣ
ಕಲಬುರಗಿ: ರೀಲ್ಸ್ ಮಾಡುವಾಗ ಟ್ರ್ಯಾಕ್ಟರ್ ನಿಂದ ಕೆಳಗೆ ಬಿದ್ದ ವ್ಯಕ್ತಿ ತನ್ನದೇ ಟ್ರ್ಯಾಕ್ಟರ್ ಚಕ್ರಕೆ ಸಿಲುಕಿ ಮ್ರಿತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮಹಾಗಾಂವ್ ಗ್ರಾಮದಲ್ಲಿ ನಡೆದಿದೆ. ಲೋಕೇಶ್ ಕಲ್ಲಪ್ಪ ಪೂಜಾರಿ ಮೃತ ದುರ್ದೈವಿ. ಬಡ ಕುಟುಂಬದಿಂದ ಬಂದಿದ್ದ ಲೋಕೇಶ್ ಚಿಕ್ಕಂದಿನಿಂದಲೇ ಟ್ರ್ಯಾಕ್ಟರ್ ಚಾಲನೆ ಮಾಡುತ್ತಿದ್ದ. ಲೋಕೇಶ್ ರೀಲ್ಸ್ ಮಾಡುತ್ತ ಕೃಷಿ ಚಟುವಟಿಕೆ, ಟ್ರ್ಯಾಕ್ಟರ್ ಚಾಲನೆ ವಿಡಿಯೋಗಳನ್ನು ಅಪ್ ಲೋಡ್ ಮಾಡುತ್ತಿದ್ದ. ಇತ್ತೀಚೆಗೆ ಯುವಕ ಲೋಕೇಶ್ ನ ಇನ್ ಸ್ಟಾ ರೀಲ್ಸ್ ಗಳು ಹೆಚ್ಚಾಗಿದ್ದವು. ಎಂದಿನಂತೆ […]
ಗಣರಾಜ್ಯೋತ್ಸವ 2026: ಕರ್ನಾಟಕದ ಸ್ತಬ್ಧಚಿತ್ರದ ವಿಶೇಷತೆಗಳು
ಅಂತಿಮವಾಗಿ ಗಣರಾಜ್ಯೋತ್ಸವ 2026ರ ಪರೇಡ್ನಲ್ಲಿ ಕರ್ನಾಟಕ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನವಾಗಲಿದೆ. ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ಈ ಪಯಣವನ್ನು ಸಂಕೇತಿಸುವಂತೆ ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ (ಮಿಲೆಟ್ ಟು ಮೈಕ್ರೋಚಿಪ್) ಎನ್ನುವ ಸ್ತಬ್ಧಚಿತ್ರವನ್ನು ಜನವರಿ 26 ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಪರೇಡ್ನಲ್ಲಿ ಕರ್ನಾಟಕವು ಪ್ರದರ್ಶಿಸುತ್ತಿದೆ. ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನ ಮತ್ತು ಭಾರತ ಪರ್ವದಲ್ಲಿ […]
BIG BREAKING: ಸರ್ಕಾರಿ ನೇಮಕಾತಿಯಲ್ಲಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ: ಸಂಪುಟ ನಿರ್ಧಾರ
ಬೆಂಗಳೂರು: ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಸಾಮಾನ್ಯ ವರ್ಗದ ವಯೋಮಿತಿಯನ್ನು 40 ವರ್ಷಕ್ಕೆ ವಿಸ್ತರಣೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಕುರಿತಾಗಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
BREAKING: ಆಕಸ್ಮಿಕ ಅಗ್ನಿ ಅವಘಢ: ಹೊತ್ತಿ ಉರಿದ ಗುಜರಿ ಅಂಗಡಿ: ಆಲೆಮನೆಗೂ ವ್ಯಾಪಿಸಿದ ಬೆಂಕಿ
ಮಂಡ್ಯ: ಮಂಡ್ಯದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಗುಜರಿ ಅಂಗಡಿ ಹೊತ್ತಿ ಉರಿದಿದೆ. ಅಂಗಡಿಯಲ್ಲಿದ್ದ ಪ್ಲಾಸ್ಟಿಕ್ ವಸ್ತುಗಳು ಬೆಂಕಿಗಾಹುತಿಯಾಗಿದೆ. ಗುಜರಿ ಅಂಗಡಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಿಂದಾಗಿ ಅಂಗಡಿಯ ಪಕ್ಕದಲ್ಲಿದ್ದ ಆಲೆಮನೆಗೂ ಹಾನಿಯುಂಟಾಗಿದೆ. ಗುಜರಿ ಅಂಗಡಿಗೆ ಹೊತ್ತಿಕೊಂಡ ಬೆಂಕಿಯ ಕೆನ್ನಾಲಿಗೆ ಪಕ್ಕದ ಆಲೆಮನೆಗೂ ವ್ಯಾಪಿಸಿದ್ದು, ಸುತ್ತಮುತ್ತಲಿನ ಪ್ರದೇಶಕ್ಕೂ ಪಸರಿಸಿ, ಧಗಧಗನೆ ಹೊತ್ತಿ ಉರಿದಿದೆ. ಬೆಂಕಿ ಅವಘಡದಿಂದಾಗಿ ಮುಗಿಲೆತ್ತರದವರೆಗೆ ದಟ್ಟ ಹೊಗೆ ಆವರಿಸಿದೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಬೆಂಕಿ ಅವಘಡಕ್ಕೆ […]
ಕಿರುಕುಳ ನೀಡುತ್ತಿದ್ದ ಪತಿಯನ್ನೇ ಬರ್ಬರವಾಗಿ ಹತ್ಯೆಗೈದ ಪತ್ನಿ
ಬೆಂಗಳೂರು: ಪತಿಯ ಕಿರುಕುಳಕ್ಕೆ ಬೇಸತ್ತ ಪತ್ನಿ, ಪತಿಯನ್ನೇ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿಯ ಹೊಂಗಸಂದ್ರದಲ್ಲಿ ನಡೆದಿದೆ. ಮುರುಗೇಶ್ ಪತ್ನಿಯಿಂದಳೆ ಕೊಲೆಯಾದ ವ್ಯಕ್ತಿ. ಲಕ್ಷ್ಮೀ ಪತಿಯನ್ನೇ ಚಾಕುವಿನಿಂದ ಇರಿದು ಕೊಂದ ಪತ್ನಿ. ಬೊಮ್ಮನಹಳ್ಳಿಯ ಹೊಂಗಸಂದ್ರದಲ್ಲಿ ದಂಪತಿ ವಾಸವಾಗಿದ್ದರು. ಮುರುಗೇಶ್ ಹಾಗೂ ಲಕ್ಷ್ಮೀ ದಂಪತಿಯ ಮಗಳು ಪ್ರೀತಿಸಿದವನ ಜೊತೆ ಮದುವೆಯಾಗಿ ಮನೆಬಿಟ್ಟು ಹೋಗಿದ್ದಳು. ಇದೇ ಕಾರಣಕ್ಕೆ ಮುರುಗೇಶ್ ಪತ್ನಿಯನ್ನು ಹಿಂಸಿಸುತ್ತಿದ್ದ. ಮಗಳು ಮನೆ ಬಿಟ್ಟು ಹೋಗಿದ್ದಕ್ಕೆ ಪದೇ ಪದೇ ಪತ್ನಿಯನ್ನು ಬೈಯ್ಯುವುದು, ಜಗಳಮಾಡಿ ಹಲ್ಲೆ ನಡೆಸುವುದು ಮಾಡುತ್ತಿದ್ದ. ಜನವರಿ […]
Good News: ಈಗ ಸುಲಭವಾಗಿ ಹಿಂದಿಯಲ್ಲಿ AI ಕೋರ್ಸ್
ಕೃತಕ ಬುದ್ಧಿಮತ್ತೆ (ಎಐ) ಕೋರ್ಸ್ಗಳನ್ನು ಬಹು ಜನರಿಗೆ ತಲುಪಿಸುವತ್ತ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಐಐಟಿ ಮದ್ರಾಸ್ ನೇತೃತ್ವದ ಡಿಜಿಟಲ್ ಲರ್ನಿಂಗ್ ಪ್ಲಾಟ್ ಫಾರ್ಮ್ ‘ಸ್ವಯಂ ಪ್ಲಸ್’ ತನ್ನ ಪ್ರಮುಖ ಎಐ ಫಾರ್ ಆಲ್ ಉಪಕ್ರಮದ ಭಾಗವಾಗಿ ಹಿಂದಿ ಆವೃತ್ತಿಯನ್ನು ಪ್ರಾರಂಭಿಸಿದೆ. ಇದು ದೇಶಾದ್ಯಂತ ಎಐ ಕಲಿಯುವವರಿಗೆ ಇನ್ನಷ್ಟು ಅನುಕೂಲ ಮಾಡಿಕೊಟ್ಟಿದೆ. ಎಐ ಕೋರ್ಸ್ ಕಲಿಕೆಗೆ ಇದ್ದ ಭಾಷೆಯ ಅಡೆತಡೆಗಳನ್ನು ತೆಗೆದುಹಾಕುವ ಮೂಲಕ ಎಐ ಕಲಿಕೆಯನ್ನು ಇನ್ನಷ್ಟು ಸುಲಭಗೊಳಿಸಲು ಹಿಂದಿ ಕೋರ್ಸ್ಗಳನ್ನು ಆರಂಭಿಸಲಾಗಿದೆ. ಈ ಕೋರ್ಸ್ಗಳನ್ನು ಕಲಿಯಲು ಯಾವುದೇ […]
BREAKING: ಬೆಂಗಳೂರು ಏರ್ ಪೋರ್ಟ್ ನಲ್ಲಿ ಬರೋಬ್ಬರಿ 38.60 ಕೋಟಿ ಮೌಲ್ಯದ ಕೊಕೇನ್ ಜಪ್ತಿ
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬರೋಬ್ಬರಿ 38.60 ಕೋಟಿ ಮೌಲ್ಯದ ಕೊಕೇನ್ ಜಪ್ತಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. ಬ್ರೆಜಿಲ್ ನ ಸೌಪಾಲೊ ಏರ್ ಪೋರ್ಟ್ ನಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನೊಬ್ಬನನ್ನು ಪರಿಶೀಲನೆ ನಡೆಸಿದಾಗ ಕಸ್ಟಮ್ಸ್ ಅಧಿಕಾರಿಗಳಿಗೆ ಅನುಮಾನ ವ್ಯಕ್ತವಾಗಿತ್ತು. ತಕ್ಷಣ ಆತನನ್ನು ವಶಕ್ಕೆ ಪಡೆದು, ಆತನ ಬ್ಯಾಗ್ ತಪಾಸಣೆ ನಡೆಸಿದಾಗ ಅಪಾರ ಪ್ರಮಾಣದ ಕೊಕೇನ್ ಪತ್ತೆಯಾಗಿದೆ. ಪ್ರಯಾಣಿಕನ ಬ್ಯಾಗ್ ನಲ್ಲಿ 7.72 […]
ಹರಳೆಣ್ಣೆ: ಕೇವಲ ಎಣ್ಣೆಯಲ್ಲ ಇದು ನಿಮ್ಮ ಆರೋಗ್ಯ ಮತ್ತು ಸೌಂದರ್ಯಕ್ಕೆ ಒನ್-ಸ್ಟಾಪ್ ಸೊಲ್ಯೂಷನ್
ಆಯುರ್ವೇದದ ಅಮೂಲ್ಯ ಕೊಡುಗೆಯಾದ ಹರಳೆಣ್ಣೆ (Castor Oil), ಯುಗ ಯುಗಾಂತರಗಳಿಂದಲೂ ಆರೋಗ್ಯ ಮತ್ತು ಸೌಂದರ್ಯದ ರಕ್ಷಣೆಗೆ ಪರ್ಯಾಯವಿಲ್ಲದ ಮದ್ದಾಗಿ ಉಳಿದುಕೊಂಡಿದೆ. ವಿಶೇಷವಾಗಿ ಸಾವಿರಾರು ವರ್ಷಗಳ ಇತಿಹಾಸವಿರುವ ‘ನಾಭಿ ಚಿಕಿತ್ಸೆ‘ ಅಂದರೆ ಹೊಕ್ಕಳಿಗೆ ಹರಳೆಣ್ಣೆ ಹಚ್ಚಿ ಮಸಾಜ್ ಮಾಡುವ ಪದ್ಧತಿಯು ಜೀರ್ಣಶಕ್ತಿಯನ್ನು ವೃದ್ಧಿಸುವುದಲ್ಲದೆ, ಹೊಟ್ಟೆಯ ಸೆಳೆತವನ್ನು ನಿವಾರಿಸಿ ಇಡೀ ದೇಹಕ್ಕೆ ತಂಪು ನೀಡುತ್ತದೆ. ಇದು ಕೇವಲ ಚರ್ಮದ ಕಾಂತಿಯನ್ನು ಹೆಚ್ಚಿಸುವುದಕ್ಕೆ ಸೀಮಿತವಾಗದೆ, ದೈಹಿಕ ಸಮತೋಲನ ಕಾಯ್ದುಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇನ್ನು ಕೂದಲಿನ ಆರೈಕೆಯ ವಿಷಯಕ್ಕೆ ಬಂದರೆ ಹರಳೆಣ್ಣೆ […]
BREAKING: ಕೋರ್ಟ್ ಆವರಣದಲ್ಲಿ ಜಡ್ಜ್ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
ಮಂಗಳೂರು: ವ್ಯಕ್ತಿಯೋರ್ವ ಕೋರ್ಟ್ ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ 5ನೇ ಹೆಚ್ಚುವರಿ ನ್ಯಾಯಾಲಯದಲ್ಲಿ ನಡೆದಿದೆ. ಕಾವು ಮಣಿಯಡ್ಕ ನಿವಾಸಿ ರವಿ (35) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ರವಿ ಹಾಗೂ ಪತ್ನಿ ವಿದ್ಯಾಶ್ರೀ ನಡುವೆ ಕೌಟುಂಬಿಕ ಕಲಹವಾಗಿತ್ತು. ಎರಡು ದಿನಗಳ ಹಿಂದೆ ರವಿ ತನ್ನ ಪತ್ನಿ ವಿದ್ಯಾಶ್ರೀಯನ್ನು ಕತ್ತು ಹಿಸುಕಿ ಕೊಲೆಗೆ ಯತ್ನಿಸಿದ್ದ. ಗಂಡ-ಹೆಂಡತಿ ಜಗಳ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು. ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು […]
ತಮಿಳುನಾಡು ಚುನಾವಣೆ; ನಟ ವಿಜಯ್ ಪಕ್ಷಕ್ಕೆ ಚಿಹ್ನೆ ನೀಡಿದ ಆಯೋಗ
ತಮಿಳುನಾಡು ವಿಧಾನಸಭೆ ಚುನಾವಣೆ-2026 ತಯಾರಿ ನಡೆಸುತ್ತಿರುವ ನಟ ವಿಜಯ್ ಪಕ್ಷಕ್ಕೆ ಕೇಂದ್ರ ಚುನಾವಣಾ ಆಯೋಗ ಚಿಹ್ನೆಯನ್ನು ಹಂಚಿಕೆ ಮಾಡಿದೆ. ತಮಿಳುನಾಡು ಮತ್ತು ಪುದುಚೇರಿ ಚುನಾವಣೆಗೆ ನಟ ವಿಜಯ್ ನೇತೃತ್ವದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. ಗುರುವಾರ ಕೇಂದ್ರ ಚುನಾವಣಾ ಆಯೋಗ ನಟ ವಿಜಯ್ ಮತ್ತು ಕಮಲ್ ಹಾಸನ್ ಅವರ ಪಕ್ಷಗಳಿಗೆ ಚುನಾವಣಾ ಚಿಹ್ನೆಯನ್ನು ಹಂಚಿಕೆ ಮಾಡಿ ಆದೇಶವನ್ನು ಹೊರಡಿಸಿದೆ. ಇನ್ನು ಮುಂದೆ ವಿಜಯ್ ಪಕ್ಷದ ಚಿಹ್ನೆಯನ್ನು ಮುಂದಿಟ್ಟುಕೊಂಡು ಚುನಾವಣಾ ಪ್ರಚಾರ ನಡೆಸಬಹುದು. ಆಯೋಗ ನಟ ವಿಜಯ್ ಅವರ ತಮಿಳಗ ವೆಟ್ರಿ […]
BREAKING: ತಹಶಿಲ್ದಾರ್ ವಿರುದ್ಧ ಕಿರುಕುಳ ಆರೋಪ: ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ ಶಿರಸ್ತೇದಾರ್
ಬೇಲೂರು: ತಹಶಿಲ್ದಾರ್ ಕಿರುಕುಳಕ್ಕೆ ಬೇಸತ್ತು ಶಿರಸ್ತೇದಾರ್ ಕಚೇರಿ ಆವರಣದಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹಾಸನ ಜಿಲ್ಲೆಯ ಬೇಲೂರಿನಲ್ಲಿ ನಡೆದಿದೆ. ಬೇಲೂರು ತಹಶ್ಲಿಲ್ದಾರ್ ಶ್ರೀಧರ್ ಕಂಕನವಾಡಿ ವಿರುದ್ಧ ಆರೋಪ ಮಾಡಿರುವ ಶಿರಸ್ತೇದಾರ್ ತನ್ವೀರ್ ಅಹ್ಮದ್, ಕಚೇರಿ ಆವರಣದಲ್ಲಿಯೇ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಹಶಿಲ್ದಾರ್ ಶ್ರೀಧರ್ ಕಂಕನವಾಡಿ, ಬೇಕಂತಲೇ ಕೆಲಸದ ಒತ್ತಡ ಹೇರುತ್ತಿದ್ದಾರೆ. ಮಾನಸಿಕವಾಗಿ ಕಿರುಕುಳ ನೀಡಿ ಹಿಂಸಿಸುತ್ತಿದ್ದಾರೆ ಎಂದು ತನ್ವೀರ್ ಅಹ್ಮದ್ ಆರೋಪಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿರುವ ಶಿರಸ್ತೇದಾರ್ ನನ್ನು ಬೆಲೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿರಸ್ತೇದಾರ್ […]
BREAKING: ಸೈಕಲ್ ಗೆ ಡಿಕ್ಕಿ ಹೊಡೆದ ಕಾರು: ಭೀಕರ ಅಪಘಾತದಲ್ಲಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು
ಹಾಸನ: ಸೈಕಲ್ ಗೆ ಕಾರು ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಮಾಳೇಕೊಪ್ಪಲು ಬಳಿ ನಡೆದಿದೆ. ಮಾಳೇಕೊಪ್ಪಲು ಬಳಿ ಮೇಲ್ಸೇತುವೆಯಲ್ಲಿ ಈ ದುರಂತ ಸಂಭವಿಸಿದೆ. ವಿದ್ಯಾರ್ಥಿ ಕಾಲೇಜಿಗೆ ಸೈಕಲ್ ನಲ್ಲಿ ತೆರಳುತ್ತಿದ್ದ. ಈ ವೇಳೆ ವೇಗವಾಗಿ ಬಂದ ಕಾರು ಸೈಕಲ್ ಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ವಿದ್ಯಾರ್ಥಿ ಮೃತಪಟ್ಟಿದ್ದಾನೆ. 16 ವರ್ಷದ ಸಂಜು ಮೃತ ವಿದ್ಯಾರ್ಥಿ. ಹೊನ್ನಶಟ್ಟಿಹಳ್ಳಿ ಗ್ರಾಮದ ಗಿರೀಶ್ ಎಂಬುವವರ ಪುತ್ರ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. […]
BIG NEWS : ರಾಜ್ಯಪಾಲರು ಓದದ ಭಾಷಣದ ಪ್ರಮುಖ ಮುಖ್ಯಾಂಶಗಳು ಹೀಗಿದೆ.!
ಬೆಂಗಳೂರು : ಜಂಟಿ ಅಧಿವೇಶನದಲ್ಲಿ ಎರಡೇ ಮಾತಿನಲ್ಲಿ ಭಾಷಣ ಮುಗಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತೆರಳಿದ್ದು, ಕಾಂಗ್ರೆಸ್ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಜಂಟಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ತಯಾರಿಸಿದ್ದ ಭಾಷಣವನ್ನು ರಾಜ್ಯಪಾಲರು ಓದುವುದು ವಾಡಿಕೆ. ಆದರೆ, ಭಾಷಣದ ಪೂರ್ಣ ಪಠ್ಯವನ್ನು ಓದದೆ ಕೇವಲ ಒಂದು ಅಥವಾ ಎರಡು ಸಾಲುಗಳಲ್ಲಿ ಮುಗಿಸಿ ಹೊರನಡೆದರು. ರಾಜ್ಯಪಾಲರ ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ ಹರಿಪ್ರಸಾದ್ ಮತ್ತು ಇತರ ಕಾಂಗ್ರೆಸ್ ನಾಯಕರು, ಅವರನ್ನು ತಡೆಯಲು ಪ್ರಯತ್ನಿಸಿದರು, ಆದರೆ ರಾಜ್ಯಪಾಲರು ಅದಕ್ಕೆ ಸ್ಪಂದಿಸದೆ […]
BREAKING : ಜಮ್ಮು-ಕಾಶ್ಮೀರದಲ್ಲಿ ಕಂದಕಕ್ಕೆ ಸೇನಾ ವಾಹನ ಉರುಳಿ ಬಿದ್ದು 10 ಮಂದಿ ಯೋಧರು ಹುತಾತ್ಮ.!
ಜಮ್ಮು -ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾ ಪ್ರದೇಶದಲ್ಲಿ 200 ಅಡಿ ಆಳದ ಕಂದಕಕ್ಕೆ ವಾಹನ ಉರುಳಿ ಬಿದ್ದ ಪರಿಣಾಮ 10 ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಒಟ್ಟು 17 ಸಿಬ್ಬಂದಿಯನ್ನು ಕರೆದುಕೊಂಡು ಹೋಗುತ್ತಿದ್ದ ಸೇನಾ ವಾಹನವು ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಆಳದ ಕಂದಕಕ್ಕೆ ಉರುಳಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭದೇರ್ವಾ-ಚಂಬಾ ಅಂತರರಾಜ್ಯ ರಸ್ತೆಯ ಖನ್ನಿ ಮೇಲ್ಭಾಗದಲ್ಲಿ ಅಪಘಾತ ಸಂಭವಿಸಿದೆ. ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ […]
ನಿಮ್ಮ ‘ಇನ್ಸ್ಟಾಗ್ರಾಮ್ ರೀಲ್ಸ್’ಗೆ ಹೆಚ್ಚು ವೀವ್ಸ್ ಬರಬೇಕಾ..? ಈ ಟ್ರಿಕ್ಸ್ ಅನುಸರಿಸಿ
Instagram Reels ಕೇವಲ ಮನರಂಜನೆಗಾಗಿ ಅಲ್ಲ.. ಅವು ಸೃಷ್ಟಿಕರ್ತರ ಒಂದು ಬ್ರ್ಯಾಂಡ್ ನಿರ್ಮಿಸಲು, ವ್ಯವಹಾರವನ್ನು ಬೆಳೆಸಲು ಮತ್ತು ಲಕ್ಷಾಂತರ ಫಾಲೋವರ್ಸ್ ಗಳನ್ನು ತಲುಪಲು ಸಹಾಯ ಮಾಡುತ್ತವೆ. ಆದರೆ ಇಲ್ಲಿರುವ ಪ್ರಶ್ನೆ ಏನೆಂದರೆ.. ಕೆಲವು ರೀಲ್ಸ್ ಗಳು ಲಕ್ಷಾಂತರ ವೀಕ್ಷಣೆಗಳನ್ನು ಸುಲಭವಾಗಿ ಪಡೆಯುತ್ತವೆ. ಇನ್ನು ಕೆಲವು ಕೇವಲ 1,000 ರಿಂದ 2,000 ವೀಕ್ಷಣೆಗಳನ್ನು ಪಡೆದು ನಿಲ್ಲುತ್ತವೆ. ಇದು ಹೀಗಾಗಲು ಕಾರಣ ಏನು..? ಹೌದು, ರೀಲ್ಸ್ ಗಳು ಸರಿಯಾಗಿ ತಲುಪದಿರಲು ದೊಡ್ಡ ಕಾರಣವೆಂದರೆ ರೀಲ್ಸ್ ನ ಉದ್ದ. ನಿಮ್ಮ ರೀಲ್ಸ್ […]
ಒಣ ಚರ್ಮದ ಸಮಸ್ಯೆಗೆ ಇಲ್ಲಿದೆ 5 ಸುಲಭ ಮನೆಮದ್ದು ಮನೆಯಲ್ಲೇ ತಯಾರಿಸಿ ನ್ಯಾಚುರಲ್ ಫೇಸ್ಪ್ಯಾಕ್
ಒಣ ಚರ್ಮದ (Dry Skin) ಸಮಸ್ಯೆ ಇರುವವರಿಗೆ ಚಳಿಗಾಲವಿರಲಿ ಅಥವಾ ಬೇಸಿಗೆಯಿರಲಿ, ತ್ವಚೆಯ ತೇವಾಂಶವನ್ನು ಕಾಪಾಡಿಕೊಳ್ಳುವುದು ಒಂದು ದೊಡ್ಡ ಸವಾಲು. ಮಾರುಕಟ್ಟೆಯಲ್ಲಿ ಸಿಗುವ ರಾಸಾಯನಿಕಯುಕ್ತ ಕ್ರೀಮ್ಗಳಿಗಿಂತ ಮನೆಯಲ್ಲೇ ತಯಾರಿಸಬಹುದಾದ ಈ 5 ನೈಸರ್ಗಿಕ ಫೇಸ್ಪ್ಯಾಕ್ಗಳು ನಿಮ್ಮ ಚರ್ಮವನ್ನು ಮೃದುವಾಗಿ ಮತ್ತು ಹೊಳೆಯುವಂತೆ ಮಾಡುತ್ತವೆ. ಒಣ ಚರ್ಮಕ್ಕಾಗಿ ಅತ್ಯುತ್ತಮವಾದ 5 ಮನೆಮದ್ದುಗಳು ಇಲ್ಲಿವೆ: ೧. ಅಲೋವೆರಾ ಮತ್ತು ಸೌತೆಕಾಯಿ ಜ್ಯೂಸ್ ಫೇಸ್ಪ್ಯಾಕ್ ಅಲೋವೆರಾ ಒಣ ಚರ್ಮಕ್ಕೆ ಅದ್ಭುತ ಪೋಷಣೆ ನೀಡುತ್ತದೆ. ಸೌತೆಕಾಯಿಯು ಚರ್ಮವನ್ನು ತಂಪಾಗಿಸುವ ಮತ್ತು ಹೈಡ್ರೇಟ್ ಮಾಡುವ […]
ಮ್ಯಾಜಿಕ್ ಸೂಪ್ ಕುಡಿದು ತೂಕ ಇಳಿಸಿ: ಪೌಷ್ಟಿಕಾಂಶ ಭರಿತ ಆರೋಗ್ಯಕರ ಈ ರೆಸಿಪಿ ತಪ್ಪದೇ ಟ್ರೈ ಮಾಡಿ
ಬೆಂಗಳೂರು: ತೂಕ ಇಳಿಸಬೇಕು ಎಂದು ನಿರ್ಧರಿಸಿದ ಕೂಡಲೇ ಹಲವರು ಮಾಡುವ ಮೊದಲ ಕೆಲಸವೆಂದರೆ ಊಟ ಬಿಡುವುದು. ಆದರೆ, ಉಪವಾಸ ಮಾಡುವುದರಿಂದ ದೇಹದ ಪೋಷಕಾಂಶಗಳು ಕುಸಿಯುತ್ತವೆ ಎಂಬುದು ನಿಮಗೆ ಗೊತ್ತೇ? ಆರೋಗ್ಯಕರವಾಗಿ ತೂಕ ಇಳಿಸಲು ಇರುವ ಅತ್ಯುತ್ತಮ ಮಾರ್ಗವೆಂದರೆ ಅದು ವೆಜಿಟೇಬಲ್ ಡಯಟ್ ಸೂಪ್. ಹೋಟೆಲ್ಗಳಲ್ಲಿ ಸಿಗುವ ಸಂರಕ್ಷಕಗಳು (Preservatives) ಮತ್ತು ಅತಿಯಾದ ಉಪ್ಪು ಇರುವ ಸೂಪ್ಗಳಿಗಿಂತ, ಮನೆಯಲ್ಲೇ ತಯಾರಿಸುವ ಪೌಷ್ಟಿಕಾಂಶಭರಿತ ಸೂಪ್ ನಿಮ್ಮ ಜೀರ್ಣಕ್ರಿಯೆಯನ್ನು ಹೆಚ್ಚಿಸಿ, ಕೊಬ್ಬನ್ನು ಕರಗಿಸಲು ನೆರವಾಗುತ್ತದೆ. ಈ ಡಯಟ್ ಸೂಪ್ ಏಕೆ ವಿಶೇಷ? […]
BREAKING: ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು: ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಜೀವಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್ ತೆರವು ಮಾಡಿದ್ದಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಕರೆ ಮಾಡಿ ನಿಂದಿಸಿದ್ದಲ್ಲದೇ ಜೀವ ಬೆದರಿಕೆ ಹಾಕಿದ್ದರು. ಈ ಕುರಿತ ಆಡಿಯೋ ವೈರಲ್ ಆಗಿತ್ತು. ಕಾಂಗ್ರೆಸ್ ಮುಖಂಡನ ವಿರುದ್ಧ ಅಮೃತಾ ಗೌಡ ದೂರು ದಾಖಲಿಸಿದ್ದರು. ಜೆಡಿಎಸ್ […]
BIG NEWS : ತಂತಿಗಳಿಲ್ಲದೇ ವಿದ್ಯುತ್ ಪ್ರಸರಣ : ಫಿನ್ಲ್ಯಾಂಡ್ ವಿಜ್ಞಾನಿಗಳಿಂದ ಅದ್ಭುತ ಆವಿಷ್ಕಾರ.!
ಹೆಲ್ಸಿಂಕಿ ವಿಶ್ವವಿದ್ಯಾಲಯ ಮತ್ತು ಫಿನ್ಲೆಂಡ್ನ ಔಲು ವಿಶ್ವವಿದ್ಯಾಲಯದ ವಿಜ್ಞಾನಿಗಳು ಗಾಳಿಯ ಮೂಲಕ ವಿದ್ಯುತ್ ತಲುಪಿಸುವ ವಿಶ್ವದ ಮೊದಲ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ್ದಾರೆ. ಹೌದು. ಅಲ್ಟ್ರಾಸಾನಿಕ್ ಧ್ವನಿ ತರಂಗಗಳು, ಲೇಸರ್ಗಳು ಮತ್ತು ವಿಶೇಷ ರೇಡಿಯೋ ಆವರ್ತನವನ್ನು ಬಳಸಿಕೊಂಡು, ಅವರು ‘ಅಕೌಸ್ಟಿಕ್ ವೈರ್’ ಎಂಬ ಅದೃಶ್ಯ ಚಾನಲ್ ಮೂಲಕ ಗುರಿ ಪ್ರದೇಶಕ್ಕೆ ವಿದ್ಯುತ್ ಕಳುಹಿಸಿದರು. ಈ ಪ್ರಯೋಗದಲ್ಲಿ, ಅವರು ಎಲೆಕ್ಟ್ರಾನಿಕ್ ಮತ್ತು ಸ್ಮಾರ್ಟ್ ಸಾಧನಗಳಿಗೆ ಅಗತ್ಯವಿರುವ ಕಡಿಮೆ ಮಟ್ಟದ ವಿದ್ಯುತ್ ಅನ್ನು ಯಶಸ್ವಿಯಾಗಿ ಪೂರೈಸಿದರು. ಈ ವಿದ್ಯುತ್ ಪ್ರಸರಣವನ್ನು ಪ್ಲಗ್ಗಳು, ತಂತಿಗಳು […]
6 ರೂ. ಬಿಎಂಟಿಸಿ ಟಿಕೆಟ್ಗೆ 60,000 ಪೇ ಮಾಡಿದ ವ್ಯಕ್ತಿ, ಮುಂದೇನು?
ಯುಪಿಐ ಮೂಲಕ ಹಣ ಪಾವತಿ ಮಾಡುವಾಗ ಆಗಾಗ ಯಡವಟ್ಟು ಆಗುತ್ತದೆ. ಇಂತಹ ಘಟನೆ ಈಗ ಬಿಎಂಟಿಸಿ ಬಸ್ನಲ್ಲಿ ನಡೆದಿದೆ. ಪ್ರಯಾಣಿಕರೊಬ್ಬರು 6 ರೂ. ಟಿಕೆಟ್ಗಾಗಿ 60,000 ರೂ. ಯುಪಿಐ ಮೂಲಕ ಪಾವತಿ ಮಾಡಿದ್ದಾರೆ. ಜನವರಿ 14ರಂದು ಬನಶಂಕರಿ-ಕದಿರೇನಹಳ್ಳಿ ಮಾರ್ಗದಲ್ಲಿ ಈ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಏರಿದ್ದ ವ್ಯಕ್ತಿ 6 ರೂ. ಟಿಕೆಟ್ ಪಡೆಯಲು ಯುಪಿಐ ಮೂಲಕ ಹಣ ಪಾವತಿ ಮಾಡುತ್ತೇನೆ ಎಂದು ಹೇಳಿದ್ದ. ಇದಕ್ಕೆ ಕಂಡಕ್ಟರ್ ಸಹ ಒಪ್ಪಿಗೆ ನೀಡಿ, 6 ರೂ. ಟಿಕೆಟ್ ನೀಡಿದರು. […]
‘EEDS’ತಂತ್ರಾಂಶದಲ್ಲಿ ಶಿಕ್ಷಕರು , ನೌಕರರ ಸೇವಾ ವಿವರಗಳನ್ನು ಇಂದೀಕರಿಸುಂತೆ ‘ಶಿಕ್ಷಣ ಇಲಾಖೆ’ಸೂಚನೆ.!
ಬೆಂಗಳೂರು : EEDS ತಂತ್ರಾಂಶದಲ್ಲಿ ಶಿಕ್ಷಕರು, ನೌಕರರ ಸೇವಾ ವಿವರಗಳನ್ನು ಇಂದೀಕರಿಸುಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಇ.ಇ.ಡಿ.ಎಸ್ ನಲ್ಲಿ ಇರುವ ಸೇವಾ ಮಾಹಿತಿಯು ಅಂತಿಮವಾಗಿರುವುದರಿಂದ ಈ ಕೆಳಕಂಡ ಅಂಶಗಳ ಸೇವಾ ವಿವರಗಳನ್ನು ನಿಖರವಾಗಿ ಇ.ಇ.ಡಿ.ಎಸ್ ತಂತ್ರಾಂಶದಲ್ಲಿ ಗಣಕೀಕರಣ ಮಾಡಿ ದಿನಾಂಕ:30/01/2026ರೊಳಗೆ ಅಂತಿಮಗೊಳಿಸಲು ಆಯಾ ಬಟವಾಡೆ ಅಧಿಕಾರಿಗಳು ಈ ಕೆಳಕಂಡ ನಿರ್ದೇಶನದಂತೆ ಕ್ರಮವಹಿಸುವುದು ಎಂದು ಸೂಚನೆ ನೀಡಿದೆ. ರಾಜ್ಯದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯಶಿಕ್ಷಕರ/ಸಹಶಿಕ್ಷಕರ/ದೈಹಿಕ/ವಿಶೇಷ ಶಿಕ್ಷಕರ ಹಾಗೂ ತತ್ಸಮಾನ ವೃಂದದಲ್ಲಿ ಕರ್ತವ್ಯ […]
BIG NEWS: ಗವರ್ನರ್ ಹಠಾವೋ…ಕರ್ನಾಟಕ ಬಚಾವೋ…: ವಿಧಾನಸೌಧದಲ್ಲಿ ಶಾಸಕ ಪ್ರದೀಪ್ ಈಶ್ವರ್ ಘೋಷಣೆ
ಬೆಂಗಳೂರು: ನರೇಗಾ ಯೋಜನೆ ಹೆಸರು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಆಕ್ಷೇಪಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ಕರೆದಿರುವ ರಾಜ್ಯ ವಿಧಾನಮಂಡಲ ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರ ಬರೆದುಕೊಟ್ಟ ಭಾಷಣ ಓದದೇ ತೆರಳಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ. ರಾಜ್ಯಪಾಲರ ನಡೆಗೆ ಆಡಳಿತ ಪಕ್ಷ ಕಾಂಗ್ರೆಸ್ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಿವೇಶನಕ್ಕೆ ಆಗಮಿಸಿದ್ದ ರಾಜ್ಯಪಾಲ ಥಾವರ್ ಚಂದ್ ಗೆ ಗೆಹ್ಲೋಟ್, ಜಂಟಿ ಸದನ ಉದ್ದೇಶಿಸಿ ಸರ್ಕಾರ ಬರೆದುಕೊಟ್ಟ ಭಾಷಣ ಓದಬೇಕಿತ್ತು. ಆದರೆ […]
ಮೀನುಗಾರರಿಗೆ ಉಪಯುಕ್ತ ಮಾಹಿತಿ : ಸಲಕರಣೆ ಕಿಟ್ ಪಡೆಯಲು ಅರ್ಜಿ ಆಹ್ವಾನ
ಬಳ್ಳಾರಿ : ಮೀನುಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನುಗಾರರಿಗೆ ಉಚಿತ ಮೀನುಗಾರಿಕೆ ಸಲಕರಣೆಗಳ ಕಿಟ್ ವಿತರಿಸಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳೊಂದಿಗೆ ಆನ್ ಲೈನ್ ವೆಬ್ ಸೈಟ್ https://ballari.nic.in ಅಥವಾ ಬಳ್ಳಾರಿ, ಸಂಡೂರು ತಾಲ್ಲೂಕಿನ ಮೀನುಗಾರಿಕೆ ಇಲಾಖೆಯ ಕಚೇರಿಯ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜ.31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ಬಳ್ಳಾರಿ, ಸಂಡೂರು […]
Personal Loan : ‘ಫೋನ್ ಪೇ’ನಲ್ಲಿ 5 ಲಕ್ಷದವರೆಗೆ ಸಿಗುತ್ತೆ ಸಾಲ.! ಜಸ್ಟ್ ಹೀಗೆ ಅರ್ಜಿ ಸಲ್ಲಿಸಿ
ಇತ್ತೀಚಿನ ದಿನಗಳಲ್ಲಿ ಏನಾದರೂ ಅಗತ್ಯವಿದ್ದಾಗ ಮೊದಲು ನೆನಪಿಗೆ ಬರುವುದು ಸಾಲ. ಹಿಂದಿನಂತೆ, ಸಾಲ ಪಡೆಯಲು ಬ್ಯಾಂಕ್ಗಳಿಗೆ ಹೋಗಬೇಕಾಗಿಲ್ಲ. ನಿಮಗೆ ಬೇಕಾಗಿರುವುದು ನಿಮ್ಮ ಕೈಯಲ್ಲಿ ಫೋನ್ ಮಾತ್ರ. ಹಣವು ನಿಮಿಷಗಳಲ್ಲಿ ನಿಮ್ಮ ಖಾತೆಗೆ ಸೇರುತ್ತದೆ. ಹೌದು, ಡಿಜಿಟಲ್ ಪಾವತಿಗಳಲ್ಲಿ ಸಂಚಲನ ಮೂಡಿಸಿದ ಫೋನ್ಪೇ, ಈಗ ಸಾಮಾನ್ಯ ಜನರಿಗೆ ಸಾಲ ನೀಡುವಲ್ಲಿ ಮುಂಚೂಣಿಯಲ್ಲಿದೆ. ತುರ್ತು ಆರ್ಥಿಕ ಅಗತ್ಯಗಳಿಗಾಗಿ ಬ್ಯಾಂಕುಗಳ ಸುತ್ತಲೂ ಅಲೆದಾಡುವ ಅಗತ್ಯವಿಲ್ಲದೆ ವಿವಿಧ ಬ್ಯಾಂಕುಗಳು ಮತ್ತು ಎನ್ಬಿಎಫ್ಸಿಗಳೊಂದಿಗೆ ಪಾಲುದಾರಿಕೆ ಮಾಡಿಕೊಳ್ಳುವ ಮೂಲಕ ತ್ವರಿತ ಸಾಲಗಳನ್ನು ಒದಗಿಸುತ್ತಿದೆ. ನಿಮ್ಮ ಕ್ರೆಡಿಟ್ […]
BIG NEWS: ಜನವರಿ.28ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿ
ಬೆಂಗಳೂರು: ನರೇಗಾ ಯೋಜನೆ ಹೆಸರು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಆಕ್ಷೇಪಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ಕರೆದಿರುವ ರಾಜ್ಯ ವಿಧಾನಮಂಡಲ ವಿಶೇಷ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಜನವರಿ 31ರವರೆಗೆ ನಡೆಯಲಿದೆ. ವಿಧಾನಮಂಡಲ ಅಧಿವೇಶನದ ಮೊದಲ ದಿನ ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸರ್ಕಾರ ಬರೆದುಕೊಟ್ಟ ಭಾಷಣ ಓದದೇ ಸದನದಿಂದ ನಿರ್ಗಮಿಸಿರುವ ಘಟನೆ ನಡೆದಿದೆ. ಇದು ಭಾರಿ ಚರ್ಚೆಗೆ ಕಾರಣವಾಗಿದೆ. ರಾಜ್ಯಪಾಲರ ನಡೆ ವಿರುದ್ಧ ಆಡಳಿತ ಪಕ್ಷ ಕಾಂಗ್ರೆಸ್ ಕಾನೂನು ಹೋರಾಟಕ್ಕೆ […]
ಗುರುವಾರ ದೇಶಾದ್ಯಂತ ಸುದ್ದಿ ಮಾಡಿದ ಥಾವರ್ ಚಂದ್ ಗೆಹ್ಲೋಟ್ ಪರಿಚಯ
ಕರ್ನಾಟಕದ ರಾಜ್ಯಪಾಲರಾದ 77 ವರ್ಷದ ಥಾವರ್ ಚಂದ್ ಗೆಹ್ಲೋಟ್ ಗುರುವಾರ ದೇಶಾದ್ಯಂತ ಸುದ್ದಿ ಮಾಡಿದ್ದಾರೆ. ಕರ್ನಾಟಕ ವಿಧಾನಸಭೆ ಜಂಟಿ ಅಧಿವೇಶನದಲ್ಲಿ ಸರ್ಕಾರದ ಅನುಮೋದಿತ ಭಾಷಣ ಓದದೇ ಅವರು ವಿಧಾನಸಭೆಯಿಂದ ಹೊರ ನಡೆದಿದ್ದಾರೆ. ಕಾಂಗ್ರೆಸ್ ಆಡಳಿತ ಇರುವ ಕರ್ನಾಟಕದಲ್ಲಿ ಥಾವರ್ ಚಂದ್ ಗೆಹ್ಲೋಟ್ ನಡೆ ಆಕ್ರೋಶಕ್ಕೆ ಕಾರಣವಾಗಿದೆ. ಕರ್ನಾಟಕ ಸರ್ಕಾರ ಮತ್ತು ಲೋಕಭವನದ ನಡುವೆ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಥಾವರ್ ಚಂದ್ ಗೆಹ್ಲೋಟ್ ಕರ್ನಾಟಕದ 19ನೇ ರಾಜ್ಯಪಾಲರು. ಜುಲೈ 6ರಂದು ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕರ್ನಾಟಕದ ರಾಜ್ಯಪಾಲರಾಗಿ […]
ವಿಶ್ವದ ಗೋಡಂಬಿ ನಗರ ಎಂಬ ಖ್ಯಾತಿ ಪಡೆದ ಭಾರತದ ಈ ನಗರ ಯಾವುದು? ಕಾರಣವೇನು?
ನಾವೆಲ್ಲರೂ ಸವಿಯುವ ಗೋಡಂಬಿಯ ಹಿಂದೆ ಒಂದು ನಗರದ ಬೃಹತ್ ಇತಿಹಾಸ ಅಡಗಿದೆ. ವೈಟ್ ಗೋಲ್ಡ್ (ಬಿಳಿ ಚಿನ್ನ) ಎಂದೇ ಕರೆಯಲ್ಪಡುವ ಗೋಡಂಬಿ ಉದ್ಯಮದಲ್ಲಿ ಇಡೀ ವಿಶ್ವದ ಭೂಪಟದಲ್ಲೇ ರಾರಾಜಿಸುತ್ತಿರುವ ನಗರ ನಮ್ಮ ಪಕ್ಕದ ಕೇರಳದ ಕೊಲ್ಲಂ. ದಶಕಗಳಿಂದಲೂ ಜಾಗತಿಕ ಮಟ್ಟದಲ್ಲಿ ಗೋಡಂಬಿ ಉದ್ಯಮವನ್ನು ತನ್ನ ಬೆರಳ ತುದಿಯಲ್ಲಿ ನಿಯಂತ್ರಿಸುತ್ತಿರುವ ಈ ನಗರವನ್ನು ಇಡೀ ಜಗತ್ತು ಈಗ ಕ್ಯಾಶಿವ್ ಕ್ಯಾಪಿಟಲ್ ಆಫ್ ದಿ ವರ್ಲ್ಡ್ (ವಿಶ್ವದ ಗೋಡಂಬಿ ರಾಜಧಾನಿ) ಎಂದು ಕರೆಯುತ್ತಿದೆ. ದಶಕಗಳಿಂದಲೂ ಜಾಗತಿಕ ಗೋಡಂಬಿ ಉದ್ಯಮದಲ್ಲಿ ಮೌನವಾಗಿ, […]
ಬೆಂಗಳೂರು: ನರೇಗಾ ಯೋಜನೆಯ ಹೆಸರು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ಕರೆದಿದ್ದ ವಿಶೇಷ ಅಧಿವೇಶನದ ಮೊದಲ ದಿನವೇ ವಿಧಾನಸಭೆಯಲ್ಲಿ ಹೈಡ್ರಾಮಾ ನಡೆದಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸರ್ಕಾರ ಬರೆದುಕೊಟ್ಟ ಭಾಷಣ ಓದದೇ ಸದನದಿಂದ ತೆರಳಿರುವ ಘಟನೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ರಾಜ್ಯಪಾಲರ ಈ ನಡೆ ಕರ್ನಾಟಕ ರಾಜಕೀಯ ಇತಿಹಾಸದಲ್ಲಿಯೇ ಮೊದಲು. ವಿಶೇಷ ಅಧಿವೇಶನದ ಮೊದಲ ದಿನವೇ ರಾಜ್ಯ ವಿಧಾನಸಭೆ ಹೈಡ್ರಾಮಾಕ್ಕೆ ಸಾಕ್ಷಿಯಾಯಿತು. ಇಷ್ಟಕ್ಕೂ ರಾಜ್ಯ ಕಾಂಗ್ರೆಸ್ […]
BREAKING : ಜಾರ್ಖಂಡ್’ನಲ್ಲಿ ಭದ್ರತಾ ಪಡೆಗಳಿಂದ ಎನ್’ಕೌಂಟರ್ : 10 ಮಂದಿ ನಕ್ಸಲರ ಹತ್ಯೆ.!
ಜಾರ್ಖಂಡ್ : ಜಾರ್ಖಂಡ್’ನ ಸಾರಂಡಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ 10 ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಭದ್ರತಾ ಪಡೆಗಳು ತಿಳಿಸಿವೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದ್ದು, ಎನ್ಕೌಂಟರ್ ನಡೆದ ಪ್ರದೇಶದಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ. ಈ ಪ್ರದೇಶದಲ್ಲಿ ಮಾವೋವಾದಿಗಳಿಗಾಗಿ ಶೋಧ ಕಾರ್ಯಾಚರಣೆಗಳು ಇನ್ನೂ ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಾರ್ಖಂಡ್’ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯ ದಟ್ಟವಾದ ಸಾರಂಡಾ ಕಾಡಿನಲ್ಲಿ ಇಂದು ಬೆಳಿಗ್ಗೆ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ಗುಂಡಿನ […]

20 C