ಕರ್ನಾಟಕ ಪ್ರತಿಭಾ ಅಕಾಡೆಮಿ ವತಿಯಿಂದ 60 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅದ್ಧೂರಿ ಸನ್ಮಾನ.
ವಿಜಯನಗರ/ಹೊಸಪೇಟೆ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಕರ್ನಾಟಕ ಪ್ರತಿಭಾ ಅಕಾಡೆಮಿ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತ ನಗರದ ಒಳಾಂಗಣ ಕ್ರಿಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ, ಜಿಲ್ಲೆಯ SSLC ಮತ್ತು PUC ಪರೀಕ್ಷೆಗಳಲ್ಲಿ ಅತ್ಯುನ್ನತ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ವಿಶೇಷವಾಗಿ ಜಿಲ್ಲೆಯ ಹೊಸಪೇಟೆ, ಹಗರಿಬೊಮ್ಮನಹಳ್ಳಿ, ಹೂವಿನ ಹಡಗಲಿ, ಹರಪನಹಳ್ಳಿ, ಕೊಟ್ಟೂರು ಮತ್ತು […]
ತಾಲೂಕು ಕುರುಬರ ಸಂಘದ ಅಧ್ಯಕ್ಷರಾಗಿ ಕುಡುಗಾನಹಳ್ಳಿ ರಂಗಯ್ಯ ಆಯ್ಕೆ
ಕೊರಟಗೆರೆ :- ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರಮಾಪ್ತರಲ್ಲಿ ಒಬ್ಬರೆಂದು ಗುರುತಿಸಿಕೊಂಡಿದ್ದ ಕೊರಟಗೆರೆ ತಾಲೂಕ ಅಧ್ಯಕ್ಷರಾದ ಮೈಲಾರಪ್ಪನವರ ಅಕಾಲಿಕ ಮರಣದಿಂದ ತೆರವಾದಂತ ಸ್ಥಾನಕ್ಕೆ ಹಾಲಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಕುಡಗಾನಹಳ್ಳಿ ರಂಗಯ್ಯನವರನ್ನ ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಕೊರಟಿಗೆರೆ ಪಟ್ಟಣದ ಬೈಲಾಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಕನಕ ಭವನದ ಬಳಿ 26 ಜನ ಸದಸ್ಯರು ಸರ್ವಾನುಮತದಿಂದ ಆಲಿ ಉಪಾಧ್ಯಕ್ಷರಾದ ಕುರುಡಗಾನಹಳ್ಳಿ ರಂಗಯ್ಯನವರನ್ನ ಆಯ್ಕೆ ಮಾಡಲಾಗಿದೆ. ಕೊರಟಗೆರೆ ತಾಲೂಕು ಕುರುಬ ಸಂಘದ ಅಧ್ಯಕ್ಷರಾಗಿದ್ದ ಮೈಲಾರಪ್ಪನವರ […]
ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳಿಂದ ಜೈಲರ್ ಸೇರಿ ನಾಲ್ವರ ಮೇಲೆ ಹಲ್ಲೆ
ಕಾರವಾರ ಇಂದು ಮಧ್ಯಾಹ್ನ ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳು ಜೈಲರ್ ಸೇರಿದಂತೆ ನಾಲ್ವರು ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.ಮಾದಕ ವಸ್ತುಗಳಾದ ತಂಬಾಕು ಮತ್ತು ಗಾಂಜಾ ಪೂರೈಕೆಗೆ ಅವಕಾಶ ನೀಡದ ಕಾರಣಕ್ಕೆ ಆಕ್ರೋಶಗೊಂಡಿದ್ದ ಕೈದಿಗಳೇ ಈ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.ಕೌಶಿಕ್ ನಿಹಾಲ್, ಮೊಹಮ್ಮದ್ ಅಬ್ದುಲ್ ಫಯಾನ್ ಎಂಬ ಕೈದಿಗಳು ಹಲ್ಲೆ ನಡೆಸಿದವರಾಗಿದ್ದು ಇವರ ವಿರುದ್ಧ ಡಕಾಯತಿ, ಕೊಲೆ ಸೇರಿದಂತೆ […]
ಗಿಡ ಮರಗಳ ನಾಶದ ಜೊತೆ ಭೂಮಿಯ ಒಡಲು ಬಗೆಯುತ್ತಿರುವ ಅಕ್ರಮ ಮಣ್ಣು ದಂದೆ
ಶಿರಸಿ ವರದಿ: ಶ್ರೀನಿವಾಸ ಆಚಾರಿ ಶಿರಸಿ ವಿಭಾಗ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಮಣ್ಣು ಸಾಗಾಟ ದಂಧೆ. ಅರಣ್ಯ ಭೂಮಿ, ಕಂದಾಯ ಭೂಮಿ ಎಲ್ಲೆಂದರಲ್ಲಿ ಅಕ್ರಮವಾಗಿ ಮಣ್ಣು ಬಗೆದು ಅಲ್ಲಲ್ಲಿ ತಲೆ ಎತ್ತುತ್ತಿರುವ ಲೇ ಔಟ್ ಗಳಿಗೆ ಟಿಪ್ಪರ್ ಗಳಲ್ಲಿ ಸಾಗಿಸುತ್ತಿರುವ ದಂಧೆಕೋರರು ಹಾಗೂ ಕೆಲವು ಕಡೆ ತೋಟ ವಿಸ್ತರಣೆಗಾಗಿ ಬೆಟ್ಟವನ್ನು ಬಗೆದುಕೊಡುವುದಾಗಿ ಈ ಸಂದರ್ಭದಲ್ಲಿ ಯಾವುದೇ ಅಡ್ಡಿ ಬಾರದಂತೆ ನೋಡಿಕೊಳ್ಳುವುದಾಗಿ ಗ್ರಾಮೀಣ ಭಾಗದ ಜನರಿಗೆ ಭರವಸೆ ಮೂಡಿಸಿ ಮಣ್ಣನ್ನು […]
GST ದರ ಬದಲಾವಣೆಯಿಂದ ರಾಜ್ಯದ ಆದಾಯ ಕುಸಿತ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ
ಬೆಂಗಳೂರು: ಜಿಎಸ್’ಟಿ ದರ ಬದಲಾವಣೆಯಿಂದಾಗಿ ರಾಜ್ಯದಲ್ಲಿ ವಾಣಿಜ್ಯ ತೆರಿಗೆ ಸಂಗ್ರಹ ಪ್ರಮಾಣದಲ್ಲಿ ಕುಸಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.ಈ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವ ಅವರು, ಸೆಸ್ನಿಂದ ಸಂಗ್ರಹವಾಗುವ ಆದಾಯದ ಅರ್ಧದಷ್ಟು ಭಾಗವನ್ನು ರಾಜ್ಯದೊಂದಿಗೆ ಹಂಚಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಜಿಎಸ್ಟಿ ದರ ಸರಳೀಕರಣದಿಂದ ರಾಜ್ಯಗಳ ಆದಾಯಕ್ಕೆ ನಷ್ಟ ಉಂಟಾಗಿದೆ. ಜಿಎಸ್’ಟಿ ಕೌನ್ಸಿಲ್ ಸಭೆಯಲ್ಲಿ ನಾಗರಿಕರ ಹೊರೆ ಕಡಿಮೆ ಮಾಡಲು ರಾಜ್ಯಗಳು ಬೆಂಬಲ ಸೂಚಿಸಿವೆ. ಆದರೆ, ದೇಶದ […]
ಸ್ಮಸ್, ಹೊಸವರ್ಷ ರಜೆ: ಯಶವಂತಪುರ- ಕಾರವಾರ ನಡುವೆ ವಿಶೇಷ ರೈಲು
ಬೆಂಗಳೂರು: ಈ ವರ್ಷಾಂತ್ಯ ಕ್ರಿಸ್ ಮಸ್, ಹೊಸವರ್ಷ ಎಂದು ಸಾಲುಸಾಲು ರಜೆ ಇರುವುದರಿಂದ ಊರು, ಪರವೂರುಗಳಿಗೆ, ಪ್ರವಾಸ ಹೋಗುವವರ ಸಂಖ್ಯೆ ಅಧಿಕವಾಗಿರುತ್ತದೆ.ಕ್ರಿಸ್ಮಸ್ ರಜೆಗೆ ಯಶವಂತಪುರ – ಉಡುಪಿ – ಕಾರವಾರ ನಡುವೆ 2 ಟ್ರಿಪ್ ವಿಶೇಷ ರೈಲು ಓಡಿಸಲು ರೈಲ್ವೆ ಇಲಾಖೆ ಮುಂದಾಗಿದೆ. ಈ ರೈಲು ಹಬ್ಬದ ಆಸುಪಾಸಿನ ದಿನಗಳಂದು ಸಂಚಾರ ನಡೆಸಲಿದೆ. ಈ ಬಗ್ಗೆ ರೈಲ್ವೆ ಇಲಾಖೆ ಮಾಹಿತಿ ನೀಡಿದ್ದು, ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂದರ್ಭದಲ್ಲಿ ಹೆಚ್ಚಿದ ಪ್ರಯಾಣಿಕರ […]
ಆದಾಯ ತೆರಿಗೆ ಪ್ರಕರಣ :ನಟನಿಗೆ ಹೈಕೋರ್ಟ್ ರಿಲೀಫ್..!
ಬೆಂಗಳೂರು: ಆದಾಯ ತೆರಿಗೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಬಿಗ್ ರಿಲೀಫ್ ನೀಡಿದೆ.ನಟ ಯಶ್ ಅವರ ಆದಾಯ ತೆರಿಗೆ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್ ನ್ಯಾಯಪೀಠ ನೋಟಿಸ್ ನ್ನು ರದ್ದು ಮಾಡಿದೆ. 2013-14ರಿಂದ 2018-19 ಅವಧಿಯ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಐಟಿ ಇಲಾಖೆ ನೀಡಿದ್ದ ನೋಟಿಸ್ ಅನ್ನು ಯಶ್ ಹೈಕೋರ್ಟ್ ಅಲ್ಲಿ ಪ್ರಶ್ನೆ ಮಾಡಿದ್ದರು. ಈ […]
ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ: ಆರ್. ಅಶೋಕ್
ಬೆಂಗಳೂರು: ಮುಂಬರುವ ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ಬಿಜೆಪಿ-ಜೆಡಿ(ಎಸ್) ಸಮನ್ವಯ ಸಮಿತಿಯಲ್ಲಿ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಶುಕ್ರವಾರ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ನಾಯಕತ್ವ ಜಗಳ ಉತ್ತುಂಗದಲ್ಲಿದ್ದಾಗ, ವಿರೋಧ ಪಕ್ಷವು ಇತ್ತೀಚೆಗೆ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಸುಳಿವು ನೀಡಿತ್ತು.ಅಧಿವೇಶನದ […]
ಮಿಥುನ್ ರೈ-ಐವಾನ್ ಡಿ’ಸೋಜಾಗೆ ಕಾಂಗ್ರೆಸ್ ಹೈಕಮಾಂಡ್ ನೋಟಿಸ್
ಬೆಂಗಳೂರು: ಕಾಂಗ್ರೆಸ್ನಲ್ಲಿ ಕಳೆದ ಕೆಲ ತಿಂಗಳಿಂದ ಸಿಎಂ ಗದ್ದುಗೆ ಗುದ್ದಾಟ ಮಿತಿಮೀರಿದೆ. ಸಿಎಂ-ಡಿಸಿಎಂ ಬ್ರೇಕ್ ಫಾಸ್ಟ್ ಸಭೆ ಮಾಡಿ ಸಂಧಾನ ಮಾಡಿದ್ರೂ ಇದು ನಿಲ್ಲದಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಜ್ಯಕ್ಕೆ ಭೇಟಿ ನೀಡಿದ್ದ ವೇಳೆ ಸಿಎಂ ಘೋಷಣೆ ಕೂಗಿದ್ದವರಿಗೆ ಐಐಸಿಸಿ ಶಾಕ್ ನೀಡಿದೆ. ನಾರಾಯಣ ಗುರು ಹಾಗೂ ಮಹಾತ್ಮ ಗಾಂಧಿ ನಡುವಿನ ಸಂವಾದದ ಶತಮಾನೋತ್ಸವ ಕಾರ್ಯಕ್ರಮ ಇತ್ತೀಚೆಗೆ ಮಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಕೆ.ಸಿ.ವೇಣುಗೋಪಾಲ್ ಕೇರಳದಿಂದ ಮಂಗಳೂರಿಗೆ ಆಗಮಿಸಿದ್ದರು. […]
ಮದುವೆ ಮುಂದೂಡಿಕೆ ಬಳಿಕ ಮೊದಲ ಬಾರಿಗೆ ಇನ್ಸ್ಟಾದಲ್ಲಿ ಕಾಣಿಸಿಕೊಂಡ ಸ್ಮೃತಿ ಮಂಧಾನ!
ಮುಂಬೈ : ಬಾಲಿವುಡ್ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ಮುಂದೂಡಿದ ಬಳಿಕ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಸ್ಮೃತಿ ಮಂಧಾನ ಇನ್ಸಾಟಾಗ್ರಾಮ್ ನಲ್ಲಿ ಮೊದಲ ಪೋಸ್ಟ್ ಹಂಚಿಕೊಂಡಿದ್ದಾರೆ.ನವೆಂಬರ್ 23 ರಂದು ಅವರಿಬ್ಬರ ವಿವಾಹದ ದಿನದಂದು ಸ್ಮೃತಿ ಮಂಧಾನ ಅವರ ತಂದೆ ಶ್ರೀನಿವಾಸ್ ಅನಾರೋಗ್ಯದಿಂದ ಸಾಂಗ್ಲಿಯ ಆಸ್ಪತ್ರೆಯಲ್ಲಿ ದಾಖಲಾಗಿದ್ದರಿಂದ ವಿವಾಹ ಮುಂದೂಲ್ಪಟ್ಟಿತ್ತು. ಮಾರನೇ ದಿನ ಮುಚ್ಚಲ್ ಕೂಡಾ ಆಸ್ಪತ್ರೆ ಸೇರಿದ್ದರು. ಇಬ್ಬರೂ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆದರೆ, ಹೊಸ ಮದುವೆ […]
ತಾಳಗುಪ್ಪ-ಶಿರಸಿ-ಹುಬ್ಬಳ್ಳಿ ರೈಲು ಯೋಜನೆ: ಸಚಿವ ಸೋಮಣ್ಣ ಭರವಸೆ
ಶಿರಸಿ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರು ಇಂದು ಶಿರಸಿಯ ಶ್ರೀ ಮಾರಿಕಾಂಬ ದೇವಸ್ಥಾನಕ್ಕೆ ಭೇಟಿ ನೀಡಿ, ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು.ಶಿರಸಿಗೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು, ಸ್ಥಳೀಯ ಶಾಸಕ ಭೀಮಣ್ಣ ನಾಯ್ಕ್ ಅವರೊಂದಿಗೆ ಸಂಭಾಷಿಸಿ, ತಾಳಗುಪ್ಪ-ಶಿರಸಿ-ಹುಬ್ಬಳ್ಳಿ ರೈಲು ಯೋಜನೆಯ ಬಗ್ಗೆ ಮಹತ್ವದ ಹೇಳಿಕೆ ನೀಡಿದರು. ೧೬೫ ಕಿ.ಮೀ. ಉದ್ದದ ಈ ಯೋಜನೆಗೆ ಸಂಬಂಧಿಸಿದ ಸಮೀಕ್ಷೆ ಪೂರ್ಣಗೊಂಡಿದ್ದು, ವಿವರಣಾತ್ಮಕ ಯೋಜನಾ ವರದಿ (ಡಿಪಿಆರ್) ಜೂನ್ ೨೦೨೬ರೊಳಗೆ […]

20 C