ಅಜಿತ್ ಪವಾರ್ ವಿಮಾನ ದುರಂತ: ಎಲ್ಲಾ ಅಂಶಗಳ ತನಿಖೆ ಕೈಗೊಂಡ ಪೊಲೀಸರು, ಹಲವರ ವಿಚಾರಣೆ
ಪುಣೆ: ಜನವರಿ 28 ರಂದು ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ವಿಮಾನ ಅಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸರು ಆಕಸ್ಮಿಕ ಸಾವಿನ ವರದಿ(ಎಡಿಆರ್) ದಾಖಲಿಸಿದ್ದಾರೆ. ಪುಣೆ ಗ್ರಾಮೀಣ ಪೊಲೀಸರು ಬಾರಾಮತಿ ತಾಲೂಕು ಪೊಲೀಸ್ ಠಾಣೆಯಲ್ಲಿ ಎಡಿಆರ್ ದಾಖಲಿಸಿದ್ದಾರೆ. ಪೊಲೀಸರ ಪ್ರಕಾರ, ಅಪಘಾತಕ್ಕೆ ಸಂಬಂಧಿಸಿದ ಎಲ್ಲಾ ಅಂಶಗಳನ್ನು ತನಿಖೆ ಮಾಡಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎಡಿಆರ್ ಅನ್ನು ಮಹಾರಾಷ್ಟ್ರ ಅಪರಾಧ ತನಿಖಾ ಇಲಾಖೆಗೆ(ಸಿಐಡಿ) ಹಸ್ತಾಂತರಿಸಲಾಗುವುದು, ಇದು ವಿಮಾನ ಅಪಘಾತ ತನಿಖಾ ಬ್ಯೂರೋ […]
ಭಾವುಕ ಪೋಸ್ಟ್: ಶಿಡ್ಲಘಟ್ಟ ಜನರಿಗೆ ಧನ್ಯವಾದ ಸಲ್ಲಿಸಿದ ರಾಜೀವ್ ಗೌಡ
ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ದೂರವಾಣಿ ಕರೆ ಮೂಲಕ ಬೆದರಿಕೆ ಹಾಕಿದ್ದ ಪ್ರಕರಣದ ಆರೋಪಿ ರಾಜೀವ್ ಗೌಡ. 12 ದಿನಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಸದ್ಯ ರಾಜೀವ್ ಗೌಡ ಪೊಲೀಸರ ವಶದಲ್ಲಿದ್ದಾರೆ. ಧಮ್ಕಿ ಹಾಕಿದ ಪ್ರಕರಣದ ಸಂಬಂಧ ದಾಖಲಾಗಿರುವ 2 ಎಫ್ಐಆರ್ ಆಧಾರದ ಮೇಲೆ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಶಿಡ್ಲಘಟ್ಟ ಜನರಿಗಾಗಿ ಭಾವುಕ ಪೋಸ್ಟ್ ಒಂದನ್ನು ಹಾಕಿದ್ದಾರೆ. ಧಮ್ಕಿ ಹಾಕಿದ ಪ್ರಕರಣದಲ್ಲಿ ರಾಜ್ಯಾದ್ಯಂತ ಸುದ್ದಿ ಮಾಡಿ, ಕಾಂಗ್ರೆಸ್ ನಾಯಕರಿಗೆ ಮುಜುಗರ ಉಂಟು […]
‘ಕಾಂತಾರ ಚಾಪ್ಟರ್- 1’ವಿಶ್ವದಾದ್ಯಂತ ಒಟ್ಟು ಕಲೆಕ್ಷನ್ ಎಷ್ಟು ? ಇಲ್ಲಿದೆ ಸಂಪೂರ್ಣ ಮಾಹಿತಿ
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ ಚಾಪ್ಟರ್ 1’ ಪ್ರೀಕ್ವೆಲ್ ಆಗಿದ್ದರೂ ಬಾಕ್ಸ್ ಆಫೀಸ್ನಲ್ಲಿ ಸುನಾಮಿ ಎಬ್ಬಿಸಿತ್ತು. ಅಕ್ಟೋಬರ್ 2, 2025 ರಂದು ಬಿಡುಗಡೆಯಾದ ಈ ಚಿತ್ರವು ಕೇವಲ ₹125 ಕೋಟಿ ಬಜೆಟ್ನಲ್ಲಿ ತಯಾರಾಗಿ ಭರ್ಜರಿ ಲಾಭ ತಂದುಕೊಟ್ಟಿದೆ. ಹೌದು, ಕನ್ನಡ ಚಿತ್ರರಂಗದ ಹೆಮ್ಮೆಯ ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ, ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ‘ಕಾಂತಾರ: ಚಾಪ್ಟರ್ 1’ ವಿಶ್ವಾದ್ಯಂತ ಬಾಕ್ಸ್ ಆಫೀಸ್ನಲ್ಲಿ ಅಭೂತಪೂರ್ವ ಯಶಸ್ಸು ಕಂಡಿದೆ. ಮೊದಲ ಭಾಗದ ಯಶಸ್ಸಿನ ನಂತರ ಬಂದ ಈ ಪ್ರೀಕ್ವೆಲ್ […]
ಚಕ್ಕುಬಂದಿ ಅಕ್ರಮವಾಗಿ ತಿದ್ದುಪಡಿ ಮಾಡಿದ ಇಬ್ಬರು ನೌಕರರು ಅಮಾನತು
ಚಿಕ್ಕಮಗಳೂರು: ಚಕ್ಕುಬಂದಿ ತಿದ್ದುಪಡಿ ಮಾಡಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಚಿಕ್ಕಮಗಳೂರು ಜಿಲ್ಲೆ ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಸಿ.ಎಸ್.ಶಂಕರ್, ಜಗದೀಶ್ ರಾಜ್ ಅರಸ್ ಅಮಾನತುಗೊಂಡ ನೌಕರರಾಗಿದ್ದಾರೆ. ವಾರ್ಡ್ ನಂಬರ್ 7ರಲ್ಲಿನ ಸ್ವತ್ತಿಗೆ ಸಂಬಂಧಿಸಿದ ಚಕ್ಕುಬಂದಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿದ ಆರೋಪ ಇವರ ಮೇಲಿದೆ. ಕ್ರಯಪತ್ರ ಅವಲೋಕನ ಮಾಡದೆ, ಸ್ಥಳ ಪರಿಶೀಲನೆ ನಡೆಸಿ ಮಹಜರು ನಡಾವಳಿಯನ್ನು ನಮೂದಿಸದೆ ಅರ್ಜಿದಾರರು ತೋರಿಸಿದ ಆಸ್ತಿ ಜಾಗದ ಚಕ್ಕುಬಂದಿ ನಮೂದಿಸಿ […]
ಅಕ್ರಮ ಸಂಬಂಧ ಗಲಾಟೆ: ಚಾಕುವಿನಿಂದ ಇರಿದು ಅಡುಗೆ ಗುತ್ತಿಗೆದಾರನ ಕೊಲೆ
ಹಾಸನ: ಅಕ್ರಮ ಸಂಬಂಧದ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಚಾಕುವಿನಿಂದ ಇರಿದು ಅಡುಗೆ ಗುತ್ತಿಗೆದಾರನ ಹತ್ಯೆ ಮಾಡಲಾಗಿದೆ. ಹಾಸನ ನಗರದ ಕೆಆರ್ ಪುರಂ ಬಡಾವಣೆಯಲ್ಲಿ ತಡರಾತ್ರಿ ಘಟನೆ ನಡೆದಿದೆ. ಅಡುಗೆ ಗುತ್ತಿಗೆದಾರ ಆನಂದ್(48) ಕೊಲೆಯಾದವರು ಎಂದು ಹೇಳಲಾಗಿದೆ.. ಐದಾರು ಬಾರಿ ಚಾಕುವಿನಿಂದ ಇರಿದು ಧರ್ಮೇಂದ್ರ ಎಂಬಾತ ಕೊಲೆ ಮಾಡಿದ ಆರೋಪ ಕೇಳಿಬಂದಿದೆ. ಮಹಿಳೆ ಜೊತೆಗೆ ಆನಂದ್ ಮತ್ತು ಧರ್ಮೇಂದ್ರ ಅನೈತಿಕ ಸಂಬಂಧ ಹೊಂದಿದ್ದರು. ಮಹಿಳೆ ಜೊತೆಗೆ ಧರ್ಮೇಂದ್ರ 8 ವರ್ಷದ ಗೆಳೆತನ ಹೊಂದಿದ್ದ. ಈ ನಡುವೆ […]
Astro Tips: ಕಾರಿನ ಡ್ಯಾಶ್ಬೋರ್ಡ್ ಮೇಲೆ ಇಡಿ ಈ ವಸ್ತುಗಳನ್ನು ಕೆಟ್ಟ ದೃಷ್ಟಿ ಹತ್ತಿರಕ್ಕೂ ಬರಲ್ಲ
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಏರುತ್ತಿರುವುದು ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಎಷ್ಟೇ ಜಾಗರೂಕತೆಯಿಂದ ಗಾಡಿ ಓಡಿಸಿದರೂ, ವಿಧಿಯಾಟ ಅಥವಾ ನಕಾರಾತ್ಮಕ ಶಕ್ತಿಗಳ ಪ್ರಭಾವದಿಂದ ಅನಾಹುತಗಳು ಸಂಭವಿಸುತ್ತವೆ ಎಂಬ ನಂಬಿಕೆ ಭಾರತೀಯ ಸಮಾಜದಲ್ಲಿದೆ. ಮನೆಗೆ ವಾಸ್ತು ನೋಡುವಂತೆ, ನಾವು ದಿನನಿತ್ಯ ಬಳಸುವ ವಾಹನಗಳಿಗೂ ವಾಸ್ತು ಶಾಸ್ತ್ರವನ್ನು ಅಳವಡಿಸಿಕೊಳ್ಳುವುದು ಸುಖಮಯ ಮತ್ತು ಸುರಕ್ಷಿತ ಪ್ರಯಾಣಕ್ಕೆ ದಾರಿಯಾಗುತ್ತದೆ. ನಿಮ್ಮ ಪ್ರಯಾಣದಲ್ಲಿ ಎದುರಾಗುವ ಅಡೆತಡೆಗಳನ್ನು ನಿವಾರಿಸಲು ಮತ್ತು ನಕಾರಾತ್ಮಕ ಶಕ್ತಿಯನ್ನು ಓಡಿಸಲು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಕಾರಿನಲ್ಲಿ ಇರಲೇಬೇಕಾದ ಆ […]
ದೈವಕ್ಕೆ ಅಪಮಾನ ಮಾಡಿದ ಆರೋಪ: ನಟ ರಣವೀರ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲು
ಬೆಂಗಳೂರು: ಕರಾವಳಿ ತುಳುನಾಡಿನ ದೈವಕ್ಕೆ ಅಪಮಾನ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ನಗರದ ಒಂದನೇ ಎಸಿಜೆಎಂ ಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ನಟ ರಣವೀರ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ರಣವೀರ್ ಸಿಂಗ್ ಅವರ ವಿರುದ್ಧ ಎಫ್ಐಆರ್ ದಾಖಲಿಸಲು ಪೊಲೀಸರಿಗೆ ನಿರ್ದೇಶನ ಕೋರಿ ವಕೀಲ ಪ್ರಶಾಂತ್ ಮೆಥಾಲ್ ನ್ಯಾಯಾಲಯ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿತ ನಟನ ವಿರುದ್ಧ ಎಫ್ಐಆರ್ […]
BREAKING : ಕೊಲಂಬಿಯಾ ಗಡಿಯಲ್ಲಿ ವಿಮಾನ ಪತನ : ಸಂಸದ ಸೇರಿ ಎಲ್ಲಾ 15 ಪ್ರಯಾಣಿಕರು ದುರ್ಮರಣ.!
ಬೊಗೋಟಾ : ಕೊಲಂಬಿಯಾ ಮತ್ತು ವೆನೆಜುವೆಲಾ ಗಡಿಯ ಸಮೀಪ ಬುಧವಾರ 15 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವೊಂದು ಪತನಗೊಂಡಿದ್ದು, ವಿಮಾನದಲ್ಲಿದ್ದ ಸಂಸದರೂ ಸೇರಿದಂತೆ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಕೊಲಂಬಿಯಾದ ನಾಗರಿಕ ವಿಮಾನಯಾನ ಸಂಸ್ಥೆ ತಿಳಿಸಿದೆ. ಸರ್ಕಾರಿ ಸ್ವಾಮ್ಯದ ‘ಸಟೆನಾ’ (Satena) ಏರ್ಲೈನ್ಸ್ಗೆ ಸೇರಿದ ಈ ವಿಮಾನವು ಗಡಿ ನಗರವಾದ ಕುಕುಟಾದಿಂದ (Cucuta) ಹೊರಟಿತ್ತು. ಮಧ್ಯಾಹ್ನ ಸುಮಾರು 12 ಗಂಟೆಗೆ (1700GMT) ಓಕಾನಾ ಎಂಬಲ್ಲಿ ಇಳಿಯುವ ಕೆಲವೇ ಕ್ಷಣಗಳ ಮೊದಲು ನಿಯಂತ್ರಣ ಕೊಠಡಿಯೊಂದಿಗೆ ಸಂಪರ್ಕ ಕಳೆದುಕೊಂಡಿತು.”ಈ […]
ತಬ್ಬಿ ಹಗ್ಗ ಬಿಗಿದುಕೊಂಡು ನದಿಗೆ ಹಾರಿ ಪ್ರೇಮಿಗಳು ಆತ್ಮಹತ್ಯೆ
ಬೆಳಗಾವಿ: ವಿವಾಹಿತ ವ್ಯಕ್ತಿ ಮತ್ತು ಆತನ ಪ್ರೇಯಸಿ ತಬ್ಬಿ ಹಗ್ಗ ಬಿಗಿದುಕೊಂಡು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮಲ್ಲಾಪುರದಲ್ಲಿ ನಡೆದಿದೆ. ಜಗದೀಶ್ ಯಲ್ಲಪ್ಪ ಕವಳೇಕರ(27) ಮತ್ತು ಗಂಗಮ್ಮ(26) ಆತ್ಮಹತ್ಯೆ ಮಾಡಿಕೊಂಡವರು. ಬುಧವಾರ ಬೆಳಗ್ಗೆ ಮಲಪ್ರಭಾ ನದಿಯಲ್ಲಿ ಇಬ್ಬರ ಮೃತದೇಹಗಳು ತೇಲುತ್ತಿರುವುದು ಕಂಡುಬಂದಿದ್ದು, ಗ್ರಾಮಸ್ಥರು ರಾಮದುರ್ಗ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಪೊಲೀಸರು ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಬೇರೆ ಯುವತಿಯೊಂದಿಗೆ ಜಗದೀಶ್ […]
‘PF ಖಾತೆ’ಹೊಂದಿರುವವರಿಗೆ ಗುಡ್ ನ್ಯೂಸ್ : ಬಜೆಟ್’ನಲ್ಲಿ ಕೇಂದ್ರದಿಂದ ಪ್ರಮುಖ ಘೋಷಣೆ ಸಾಧ್ಯತೆ.!
ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದ್ದು, ಸಾಮಾನ್ಯ ಮತ್ತು ಮಧ್ಯಮ ವರ್ಗದ ಜನರಲ್ಲಿ ಭಾರಿ ಕುತೂಹಲ ಮೂಡಿಸಿದೆ. ಬಜೆಟ್ ಘೋಷಣೆಗೆ ಇನ್ನು ಕೇವಲ ಮೂರು ದಿನಗಳು ಬಾಕಿ ಇರುವುದರಿಂದ ನಿರೀಕ್ಷೆಗಳು ಗಗನಕ್ಕೇರಿವೆ. ಕೈಗಾರಿಕಾ ವಲಯವು ತೆರಿಗೆ ವಿನಾಯಿತಿ ಮತ್ತು ಜಿಎಸ್ಟಿ ದರ ಇಳಿಕೆಯನ್ನು ನಿರೀಕ್ಷಿಸುತ್ತಿದ್ದರೆ, ಉದ್ಯೋಗಿಗಳು ತೆರಿಗೆ ಸ್ಲ್ಯಾಬ್ಗಳ ಬದಲಾವಣೆ ಮತ್ತು ಪಿಎಫ್ (PF) ಮೇಲಿನ ರಿಯಾಯಿತಿಗಳಿಗಾಗಿ ಕಾಯುತ್ತಿದ್ದಾರೆ. ಈ ಬಾರಿಯ ಬಜೆಟ್ನಲ್ಲಿ ಪಿಎಫ್ ಖಾತೆದಾರರಿಗೆ ಕೇಂದ್ರ ಸರ್ಕಾರ ಭಾರಿ ಸಿಹಿ ಸುದ್ದಿ ನೀಡುವ ಸಾಧ್ಯತೆ […]
ಮೆಟ್ರಿಕ್ ನಂತರದ ‘ವಿದ್ಯಾರ್ಥಿ ವೇತನ’ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ
ಧಾರವಾಡ : 2020-21, 2021-22, 2022-23, 2023-24, 2024-25, 2025-26ನೇ ಸಾಲಿನ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮಕ್ಕಾಗಿ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಿರುವ ಕೆಲವೊಂದು ವಿದ್ಯಾರ್ಥಿಗಳಿಗೆ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಕೊಳ್ಳದೆ ಇರುವುದು, ವಿದ್ಯಾರ್ಥಿಗಳ ಶೈಕ್ಷಣಿಕ ದತ್ತಾಂಶದಲ್ಲಿ ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ನಮೂದಿಸಿರುವ ಹೆಸರಿಗೂ ವ್ಯತ್ಯಾಸವಿರುವುದು, Counselling Course ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ Counselling ದತ್ತಾಂಶ ನಮೂದಿಸದೇ ಇರುವುದು, ವಿದ್ಯಾರ್ಥಿಗಳ ಹಿಂದಿನ ಶೈಕ್ಷಣಿಕ […]
ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಜಿತ್ ಪವಾರ್ ಅಂತ್ಯಕ್ರಿಯೆ: ಪ್ರಧಾನಿ ಮೋದಿ ಭಾಗಿ
ಮುಂಬೈ: ನಿನ್ನೆ ವಿಮಾನ ದುರಂತದಲ್ಲಿ ಮೃತಪಟ್ಟ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್(66) ಅವರ ಅಂತ್ಯಕ್ರಿಯೆ ಇಂದು ಬೆಳಿಗ್ಗೆ 11 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಅಂತ್ಯಕ್ರಿಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಪಿಯೂಷ್ ಗೋಯಲ್, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಸೇರಿದಂತೆ ಉನ್ನತ ನಾಯಕರು ಸಮಾರಂಭದಲ್ಲಿ ಭಾಗವಹಿಸುವರು. ಜನರು ಅಂತಿಮ ನಮನ ಸಲ್ಲಿಸಲು ಅಜಿತ್ ಪವಾರ್ ಅವರ ಪಾರ್ಥಿವ […]
ರಾಜ್ಯಪಾಲರ ಫೋನ್ ಕದ್ದಾಲಿಕೆ: ಸದನದಲ್ಲಿ ಗಂಭೀರ ಆರೋಪ, ಗದ್ದಲ
ಬೆಂಗಳೂರು: ರಾಜ್ಯ ಸರ್ಕಾರವು ಕೇಂದ್ರ ಮತ್ತು ಲೋಕಭವನದ ನಡುವಿನ ದೂರವಾಣಿ ಕದ್ದಾಲಿಕೆ ಮಾಡಿದೆ ಎಂದು ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರು ಗಂಭೀರ ಆರೋಪ ಮಾಡಿದ್ದಾರೆ. ದೆಹಲಿಯಿಂದ ರಾಜ್ಯಪಾಲರಿಗೆ ಕರೆ ಬಂದಿದೆ ಎಂದು ಹೇಳಿರುವ ಸಚಿವ ಹೆಚ್.ಕೆ. ಪಾಟೀಲ್ ಅವರ ಕ್ಷಮೆಯಾಚನೆಗೆ ಪಟ್ಟು ಹಿಡಿದಿದ್ದಾರೆ. ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಬಗ್ಗೆ ಮಾತನಾಡಿದ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಾಂಗ್ರೆಸ್ ಸದಸ್ಯರು ರಾಜ್ಯಪಾಲರಿಗೆ ಅವಮಾನ ಮಾಡಿದ್ದಾರೆ. ಈ ಬಗ್ಗೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ವೇಳೆ ಮಧ್ಯಪ್ರವೇಶಿಸಿದ ಸಚಿವ […]
ಸಾವಿನಲ್ಲೂ ಸಾರ್ಥಕತೆ ಮೆರೆದ ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್
ಬೆಂಗಳೂರು: ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್(85) ತೀವ್ರ ಹೃದಯಾಘಾತದಿಂದ ಬುಧವಾರ ಸಂಜೆ ವಿಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಷ್ಟ್ರಮಟ್ಟದಲ್ಲಿ ಕಮ್ಯುನಿಸ್ಟ್ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು ಕೆಎಸ್ಆರ್ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಪ್ರಧಾನ ಕಾರ್ಯದರ್ಶಿಯಾಗಿ ಸಾರಿಗೆ ನೌಕರರ ಸಮಸ್ಯೆಗಳ ಬಗ್ಗೆ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು. ಕಳೆದ ಡಿಸೆಂಬರ್ ನಲ್ಲಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೂ ಅವರ ಹೋರಾಟ ಮುಂದುವರೆದಿತ್ತು. ಕೆಎಸ್ಆರ್ಟಿಸಿ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ವತಿಯಿಂದ ಜನವರಿ 29ರಂದು ಸಾರಿಗೆ ನೌಕರರ ಪ್ರತಿಭಟನೆಗೆ ಕರೆ ನೀಡಿದ್ದರು. […]
ವಿಧಾನಮಂಡಲ ಅಧಿವೇಶನ ಎರಡು ದಿನ ವಿಸ್ತರಣೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಇದುವರೆಗೆ ಮನರೇಗಾ ವಿಶೇಷ ಚರ್ಚೆಗೆ ಅವಕಾಶ ಸಿಗದ ಕಾರಣ ಅಧಿವೇಶನವನ್ನು ಫೆಬ್ರವರಿ 2ರಿಂದ ಎರಡು ದಿನಗಳ ಕಾಲ ವಿಸ್ತರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದು, ನರೇಗಾ ವಿಶೇಷ ಚರ್ಚೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು ಕಡ್ಡಾಯವಾಗಿ ಭಾಗವಹಿಸುವಂತೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರು ಮಾತನಾಡಿ, ನರೇಗಾ ಯೋಜನೆಯ ಬಗ್ಗೆ ಚರ್ಚಿಸಲು ನರೇಗಾ ರದ್ದುಪಡಿಸಿ ವಿಬಿ ಜಿ ರಾಮ್ ಜಿ ಕಾಯ್ದೆ ತಂದಿರುವ […]
ರಾಜ್ಯದ ಯುವ ಜನತೆಗೆ ಉದ್ಯೋಗಾವಕಾಶ: ಫೆ.2 ರಂದು ವಿಜಯಪುರ, ಫೆ.6 ರಂದು ರಾಯಚೂರಿನಲ್ಲಿ ಉದ್ಯೋಗ ಮೇಳ
ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ರಾಜ್ಯದ ಯುವಜನತೆಗಾಗಿ ಕೌಶಲ್ಯದೊಂದಿಗೆ ಉದ್ಯೋಗವಕಾಶವನ್ನು ಕಲ್ಪಿಸುವ ಉದ್ದೇಶದಿಂದ ಫೆಬ್ರವರಿ 2 ರಂದು ವಿಜಪುರದಲ್ಲಿ ಹಾಗೂ ಫೆ.6 ರಂದು ರಾಯಚೂರಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಫೆ.2 ರಂದು ವಿಜಯಪುರದ ಸ್ಟೇಷನ್ ರಸ್ತೆಯ ದರಬಾರ ಹೈಸ್ಕೂಲ್ ಆವರಣದಲ್ಲಿ ಯುವ ಸಮೃದ್ಧಿ ಸಮ್ಮೇಳನವನ್ನು ಆಯೋಜಿಸಲಾಗಿದೆ. ಆಸಕ್ತರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ನೋಂದಣಿ ಲಿಂಕ್: https://udyogamela.ksdckarnataka.com/ ಬಳಸಿ ನೋಂದಣಿ ಮಾಡಿಕೊಳ್ಳಬೇಕು. ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ […]
BREAKING: ಡ್ರಿಂಕ್ ಅಂಡ್ ಡ್ರೈವ್: ನಟ ಮಯೂರ್ ಪಟೇಲ್ ರಿಂದ ಸರಣಿ ಅಪಘಾತ
ಬೆಂಗಳೂರು: ಬೆಂಗಳೂರಿನಲ್ಲಿ ನಟ ಮಯೂರ್ ಪಟೇಲ್ ರಿಂದ ಸರಣಿ ಅಪಘಾತ ಸಂಭವಿಸಿದೆ. ಫಾರ್ಚೂನರ್ ಕಾರ್ ಚಲಾಯಿಸುತ್ತಿದ್ದ ನಟ ಮಯೂರ್ ಪಟೇಲ್ ಕುಡಿದ ಮತ್ತಿನಲ್ಲಿ ನಿಂತಿದ್ದ ಕಾರ್ ಗಳಿಗೆ ಡಿಕ್ಕಿ ಹೊಡೆಸಿದ್ದಾರೆ. ರಾತ್ರಿ ದೊಮ್ಮಲೂರು ಬಳಿಯ ಕಮಾಂಡೋ ಆಸ್ಪತ್ರೆಯ ಬಳಿ ಘಟನೆ ನಡೆದಿದೆ. ಮಯೂರ್ ಕಾರ್ ಡಿಕ್ಕಿ ಹೊಡೆದ ರಭಸಕ್ಕೆ ಶ್ರೀನಿವಾಸ್, ಅಭಿಷೇಕ್ ಎಂಬುವರ ಕಾರ್ ಗಳು ಮತ್ತು ಸರ್ಕಾರಿ ವಾಹನ ಜಖಂ ಆಗಿವೆ. ನಟ ಮಯೂರ್ ಪಟೇಲ್ ಕುಡಿದು ಅಪಘಾತ ಮಾಡಿದ್ದಾರೆ ಎನ್ನಲಾಗಿದೆ. ಈ ವೇಳೆ ಪೊಲೀಸ್ […]
ಗ್ರಾಮೀಣ ಪ್ರದೇಶದ ಇ-ಖಾತಾ ಸಮಸ್ಯೆಗೆ 20 ದಿನದಲ್ಲಿ ಪರಿಹಾರ: ಪ್ರಿಯಾಂಕ್ ಖರ್ಗೆ
ಬೆಂಗಳೂರು(ವಿಧಾನಸಭೆ): ಗ್ರಾಮೀಣ ಪ್ರದೇಶದಲ್ಲಿ ಆಸ್ತಿಗಳಿಗೆ ಇ-ಖಾತಾ ಸಮಸ್ಯೆ ಉಂಟಾಗಿದ್ದು, 15- 20 ದಿನಗಳಲ್ಲಿ ಸಮಸ್ಯೆ ಬಗೆಹರಿಸಿ ಇ-ಖಾತಾ ವಿತರಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿಯ ಕಿರಣ್ ಕುಮಾರ್ ಕೊಡ್ಗಿ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮೀಣ ಭಾಗದ ಆಸ್ತಿಗಳನ್ನು ಡಿಜಿಟಲೀಕರಣ ಮಾಡಿ ಸಾರ್ವಜನಿಕರಿಗೆ ಸುಲಭವಾಗಿ ಇ-ಖಾತಾ ಸೌಲಭ್ಯ ದೊರಕುವಂತೆ ಮಾಡಬೇಕು ಎಂಬ ಉದ್ದೇಶದಿಂದ ಇ-ಸ್ವತ್ತು ಅಭಿಯಾನದಡಿ ಇ-ಸ್ವತ್ತು ತಂತ್ರಾಂಶ 2.0 ಅನ್ನು […]
4ನೇ ಟಿ-20 ಪಂದ್ಯ: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 50 ರನ್ ಸೋಲು
ಭಾರತ-ನ್ಯೂಜಿಲೆಂಡ್ ತಂಡಗಳ ನಡುವಿನ 4ನೇ ಟಿ-20 ಪಂದ್ಯ ವಿಶಾಖಪಟ್ಟಣದಲ್ಲಿ ಬುಧವಾರ ನಡೆಯಿತು. ಈಗಾಗಲೇ 5 ಪಂದ್ಯಗಳ ಸರಣಿಯಲ್ಲಿ 3-0 ಪಂದ್ಯಗಳನ್ನು ಗೆದ್ದು ವಿಶ್ವಾಸದಲ್ಲಿದ್ದ ಟೀಮ್ ಇಂಡಿಯಾ 4ನೇ ಪಂದ್ಯದಲ್ಲಿ 50 ರನ್ಗಳ ಸೋಲು ಅನುಭವಿಸಿದೆ. 4ನೇ ಟಿ-20 ಪಂದ್ಯದಲ್ಲಿ ಭಾರತ ಮೊದಲು ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ನಾಯಕ ಸೂರ್ಯ ಕುಮಾರ್ ಯಾದವ್ ನೇತೃತ್ವದ ತಂಡದ ಬ್ಯಾಟರ್ಗಳು ಉತ್ತಮ ಲಯದಲ್ಲಿದ್ದು, ರನ್ ಹೊಳೆ ಹರಿಸುತ್ತಿದ್ದಾರೆ. ಆದ್ದರಿಂದ 4ನೇ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಚೇಸಿಂಗ್ ಆಯ್ಕೆ […]
ಬೋರ್ ವೆಲ್ ಲಾರಿಗೆ ಬೊಲೆರೋ ವಾಹನ ಡಿಕ್ಕಿ: ಭೀಕರ ಅಪಘಾತದಲ್ಲಿ ಓರ್ವ ಸಾವು, 7 ಮಂದಿ ಗಂಭೀರ
ಚಿಕ್ಕಮಗಳೂರು: ರಸ್ತೆ ಬದಿ ನಿಂತಿದ್ದ ಬೋರ್ ವೆಲ್ ಲಾರಿಗೆ ಬೊಲೆರೋ ವಾಹನ ಡಿಕ್ಕಿಯಾಗಿದ್ದು, ಬೊಲೆರೋ ವಾಹನದಲ್ಲಿದ್ದ ಒಬ್ಬರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಾಯಗೊಂಡ 7 ಜನರ ಸ್ಥಿತಿ ಗಂಭೀರವಾಗಿದೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ದೋರನಾಳು ಸಮೀಪ ಅಪಘಾತ ಸಂಭವಿಸಿದೆ. ತರೀಕೆರೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಂದ್ರು(31) ಸಾವನ್ನಪ್ಪಿದ್ದಾರೆ. ಎಂ.ಸಿ. ಹಳ್ಳಿಯಿಂದ ಬೊಲೆರೋ ವಾಹನದಲ್ಲಿ ಕಲ್ಲತ್ತಗಿರಿಗೆ ತೆರಳಿದ್ದರು. ಕಲ್ಲತಗಿರಿ ದೇವಸ್ಥಾನದಿಂದ ಊರಿಗೆ ಹಿಂತಿರುಗುವಾಗ ದುರ್ಘಟನೆ ಸಂಭವಿಸಿದೆ. ಬೋರ್ ವೆಲ್ ಲಾರಿಗೆ ಡಿಕ್ಕಿಯಾದ ರಭಸಕ್ಕೆ ಬೊಲೆರೋ ವಾಹನದ ಮುಂಭಾಗ ನಜ್ಜುಗುಜ್ಜಾಗಿದೆ. […]
ಕಾರ್ಮಿಕ ವರ್ಗಕ್ಕೆ ತುಂಬಲಾರದ ನಷ್ಟ: ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ
ಬೆಂಗಳೂರು: ಸಾರಿಗೆ ನೌಕರರ ಮುಖಂಡ ಅನಂತ ಸುಬ್ಬರಾವ್(84) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ. ಭಾರತ ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಹಾಗೂ ಜನಪ್ರಿಯ ಕಾರ್ಮಿಕ ಮುಖಂಡರಾದ ಎಚ್.ವಿ. ಅನಂತ ಸುಬ್ಬರಾವ್ ಅವರು ನಿಧನರಾದ ಸುದ್ದಿ ತಿಳಿದು ದುಃಖವಾಯಿತು. ಸುದೀರ್ಘ ನಾಲ್ಕು ದಶಕಗಳ ಕಾಲ ಕಾರ್ಮಿಕ ಮುಖಂಡರಾಗಿ ಅನೇಕ ಚಳವಳಿಗಳನ್ನು ಮುನ್ನಡೆಸಿದ್ದ ಹೋರಾಟಗಾರ ಅನಂತ ಸುಬ್ಬರಾವ್ ನನಗೂ ಆತ್ಮೀಯರಾಗಿದ್ದರು. ಅವರ ದಣಿವರಿಯದ ಹೋರಾಟದ ಛಲ ಮತ್ತು ಸೈದ್ಧಾಂತಿಕ ಬದ್ಧತೆ ಹೋರಾಟಗಾರರಿಗೆ ಒಂದು ಮಾದರಿ […]
SHOCKING: ಗರ್ಭಿಣಿ ಸೊಸೆ ಕತ್ತು ಸೀಳಿ ಹತ್ಯೆಗೈದ ಮಾವ
ರಾಯಚೂರು: ಕೌಟುಂಬಿಕ ಕಲಹ ಕಾರಣದಿಂದ ಗರ್ಭಿಣಿ ಸೊಸೆಯ ಕತ್ತು ಸೀಳಿ ಮಾವ ಹತ್ಯೆ ಮಾಡಿದ ಘಟನೆ ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಅಣಗಿ ಗ್ರಾಮದಲ್ಲಿ ನಡೆದಿದೆ. ರೇಖಾ(25) ಕೊಲೆಯಾದ ಮಹಿಳೆ. 4 ತಿಂಗಳ ಗರ್ಭಿಣಿ ರೇಖಾ ಕುತ್ತಿಗೆಗೆ ಮಾವ ಸಿದ್ದಪ್ಪ ಚಾಕುವಿನಿಂದ ಇರಿದಿದ್ದಾನೆ. ಈ ವೇಳೆ ಪ್ರಾಣ ಉಳಿಸಿಕೊಳ್ಳಲು ಮನೆಯಿಂದ ಹೊರಬಂದ ರೇಖಾ ನರಳಾಡಿ ಪ್ರಾಣ ಬಿಟ್ಟಿದ್ದಾರೆ. ಕೃತ್ಯವೆಸಗಿ ಪರಾರಿಯಾಗಿದ್ದ ಆರೋಪಿ ಸಿದ್ದಪ್ಪನನ್ನು ಕವಿತಾಳ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
BREAKING: ರಾಜ್ಯದ ಎಲ್ಲಾ ಸರ್ಕಾರಿ ನೌಕರರು ಪ್ರತಿ ತಿಂಗಳ ಮೊದಲ ಶುಕ್ರವಾರ ಖಾದಿ ಉಡುಪು ಧರಿಸಲು ಮಹತ್ವದ ಸಭೆ
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿ/ನೌಕರರು ಪ್ರತಿ ತಿಂಗಳ ಮೊದಲ ಶುಕ್ರವಾರದಂದು ಖಾದಿ ಉಡುಪನ್ನು ಧರಿಸುವುದರ ಬಗ್ಗೆ ಮಹತ್ವದ ಸಭೆ ನಿಗದಿಯಾಗಿದೆ. ಎಲ್ಲಾ ಸರ್ಕಾರಿ ಅಧಿಕಾರಿ/ನೌಕರರು ಪ್ರತಿ ತಿಂಗಳ ಮೊದಲ ಶುಕ್ರವಾರದಂದು ಖಾದಿ ಉಡುಪನ್ನು ಧರಿಸುವುದು, ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಸೇರಿದಂತೆ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅಧಿಕಾರಿಗಳು/ಸಿಬ್ಬಂದಿಗಳೆಲ್ಲರೂ ಖಾದಿ ಉಡುಪನ್ನು ಧರಿಸುವ ಕುರಿತಂತೆ ಚರ್ಚಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಜ. 29 ರ ಮಧ್ಯಾಹ್ನ 12 ಘಂಟೆಗೆ ಕೊಠಡಿ ಸಂಖ್ಯೆ:320 ವಿಧಾನಸೌಧ ಇಲ್ಲಿ […]
ಜಿಬಿಎ ಮಾದರಿಯಲ್ಲೇ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಆಸ್ತಿ ತೆರಿಗೆ ಸಂಗ್ರಹ ವ್ಯವಸ್ಥೆ ಜಾರಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಮಾದರಿಯಲ್ಲೇ ಎಲ್ಲ ಮಹಾನಗರ ಪಾಲಿಕೆಗಳಲ್ಲಿ ಆಸ್ತಿ ತೆರಿಗೆ ಸಂಗ್ರಹ ವ್ಯವಸ್ಥೆ ಜಾರಿಗೆ ತರಲು ಕ್ರಮ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ವೈ.ಎಂ. ಸತೀಶ್, ಬಳ್ಳಾರಿ ಮಹಾನಗರ ಪಾಲಿಕೆ ಸಿಬ್ಬಂದಿ ಆಸ್ತಿ ಮಾಲೀಕರಿಂದ ಸಂಗ್ರಹಿಸಿದ ತೆರಿಗೆಯನ್ನು ಪಾಲಿಕೆಗೆ ಪಾವತಿಸದೆ ದುರ್ಬಳಕೆ ಮಾಡಿಕೊಂಡಿದ್ದಾರೆ. ಇಂತಹ ಅಕ್ರಮಗಳಿಗೆ ಕಡಿವಾಣ ಹಾಕಲು ಜಿಬಿಎ ಮಾದರಿಯಲ್ಲಿ ತೆರಿಗೆ ಸಂಗ್ರಹ, ಭ್ರಷ್ಟ ಅಧಿಕಾರಿಗಳ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪಿಸಬೇಕು […]
BREAKING: ನಿಗಮ, ಮಂಡಳಿ ಅಧ್ಯಕ್ಷರಿಗೆ ಗುಡ್ ನ್ಯೂಸ್: ಮುಂದಿನ ಆದೇಶದವರೆಗೆ ಅಧಿಕಾರ ಅವಧಿ ವಿಸ್ತರಣೆ
ಬೆಂಗಳೂರು: ಅವಧಿ ಮುಕ್ತಾಯವಾಗಿದ್ದ ನಿಗಮ, ಮಂಡಳಿ ಅಧ್ಯಕ್ಷರ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಎರಡು ವರ್ಷಗಳ ಅವಧಿ ಮುಗಿದಿದ್ದ ನಿಗಮ, ಮಂಡಳಿಗಳ ಅಧ್ಯಕ್ಷರನ್ನು ಮುಂದುವರೆಸಲಾಗಿದೆ. ಒಟ್ಟು 34 ನಿಗಮ, ಮಂಡಳಿಗಳ ಅಧ್ಯಕ್ಷ ಸ್ಥಾನದ ಅವಧಿ ಮುಗಿದಿತ್ತು. ಜನವರಿ 26 ಕ್ಕೆ 2 ವರ್ಷ ಅಧಿಕಾರದ ಅವಧಿ ಮುಕ್ತಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಮುಂದಿನ ಆದೇಶದ ವರೆಗೆ ವಿಸ್ತರಣೆ ಮಾಡಿ ಆದೇಶಿಸಲಾಗಿದೆ. ನಿಗಮ ಮಂಡಳಿ ಅಧ್ಯಕ್ಷರಾಗಿದ್ದ 25 ಶಾಸಕರ ಅವಧಿಯನ್ನು ಮುಂದಿನ ಆದೇಶದವರೆಗೆ ಅಧಿಕಾರ ಅವಧಿ ವಿಸ್ತರಣೆ ಮಾಡಿ ಆದೇಶಿಸಲಾಗಿದೆ.
ಪತ್ನಿ ಮೊಬೈಲ್ ನಲ್ಲಿ ರಹಸ್ಯ ಸಾಫ್ಟ್ವೇರ್ ಇನ್ಸ್ಟಾಲ್ ಮಾಡಿ ಪ್ರತಿ ಚಲನವಲನ ತಿಳಿಯುತ್ತಿದ್ದ ಪತಿ ವಿರುದ್ಧ ಎಫ್ಐಆರ್
ಬೆಂಗಳೂರು: ಪತ್ನಿಯ ಮೊಬೈಲ್ ನಲ್ಲಿ ರಹಸ್ಯವಾಗಿ ಸಾಫ್ಟ್ವೇರ್ ಇನ್ಸ್ಟಾಲ್ ಮಾಡಿ ಆಕೆಯ ಪ್ರತಿ ಚಲನವಲನ ತಿಳಿದುಕೊಳ್ಳುತ್ತಿದ್ದ ಪತಿಯ ವಿರುದ್ಧ ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪುಟ್ಟೇನಹಳ್ಳಿ ಬಿಜಿ ರಸ್ತೆಯ 28 ವರ್ಷದ ವೈದ್ಯೆ ನೀಡಿದ ದೂರಿನ ಆಧಾರದ ಮೇಲೆ ಅವರ ಪತಿ ಅಮಲ್ ವಿ. ನಾಯರ್ ಎಂಬುವರ ವಿರುದ್ಧ ಕೇಸ್ ದಾಖಲಾಗಿದೆ. 2025 ಆಗಸ್ಟ್ 1ರಿಂದ ದಂಪತಿ ಬೇರೆಯಾಗಿ ವಾಸವಾಗಿದ್ದಾರೆ. ಅವರಿಗೆ ಒಂದು ಮಗು ಇದ್ದು, ಕೌಟುಂಬಿಕ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ವಾರಕ್ಕೊಮ್ಮೆ ಮಗು […]
ಶರಾವತಿ ಸಂತ್ರಸ್ತರಿಗೆ ಶಾಶ್ವತ ಪರಿಹಾರ: ಅರಣ್ಯ ಸಂರಕ್ಷಣೆ, ಡಿನೋಟಿಫಿಕೇಷನ್ ಬಗ್ಗೆ ಸರ್ಕಾರ ಮಹತ್ವದ ನಿರ್ಧಾರ
ಶಿವಮೊಗ್ಗ: ವನ್ಯಜೀವಿ ಸಂರಕ್ಷಣೆ, ಅರಣ್ಯ ಸಂಪತ್ತು ರಕ್ಷಣೆ ಮತ್ತು ಜನರ ಅಭಿವೃದ್ದಿಯ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತನ್ನ ತೀರ್ಮಾನಗಳನ್ನು ಕೈಗೊಳ್ಳುತ್ತಿದ್ದು, ಶೆಟ್ಟಿಹಳ್ಳಿ ಅಭಯಾರಣ್ಯ ಡಿನೋಟಿಫಿಕೇಷನ್ ಮತ್ತು ಶರಾವತಿ ಸಂತ್ರಸ್ತರಿಗೆ ಪರಿಹಾರ ಕುರಿತಾದ ತೀರ್ಮಾನಗಳು ಅಂತಿಮ ಘಟ್ಟ ತಲುಪಿವೆ ಎಂದು ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ತಿಳಿಸಿದರು. ಬುಧವಾರ ತ್ಯಾವರೆಕೊಪ್ಪದ ಸಿಂಹಧಾಮದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೆಟ್ಟಿಹಳ್ಳಿ ವನ್ಯಜೀವಿಧಾಮ ಡಿ-ನೋಟಿಫಿಕೇಷನ್ ಪ್ರಸ್ತಾವನೆಯು ಸುಮಾರು 2016 ರಿಂದ ಬಾಕಿ ಇದ್ದು, ಈಗ ಅಂತಿಮ ಘಟ್ಟಕ್ಕೆ ಬಂದಿದೆ. ಹಿಂದೆ […]
ಅಜಿತ್ ಪವಾರ್ ಸಾವಿಗೀಡಾದ ಬಾರಾಮತಿ ವಿಮಾನ ದುರಂತ ಬಗ್ಗೆ ಇಂಚಿಂಚೂ ಮಾಹಿತಿ ಹಂಚಿಕೊಂಡ ನಾಗರಿಕ ವಿಮಾನಯಾನ ಸಚಿವಾಲಯ
ಬಾರಾಮತಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ ಕೆಲವೇ ಗಂಟೆಗಳ ನಂತರ, ನಾಗರಿಕ ವಿಮಾನಯಾನ ಸಚಿವಾಲಯ ಅಪಘಾತದ ಸಮಯದಲ್ಲಿ ಸಂಭವಿಸಿದ ಘಟನೆಗಳ ಅನುಕ್ರಮ ವರದಿ ಬಿಡುಗಡೆ ಮಾಡಿದೆ. VT-SSK ನೋಂದಣಿ ಹೊಂದಿರುವ ಲಿಯರ್ಜೆಟ್ 45 ವಿಮಾನವು ಬಾರಾಮತಿ ವಾಯುನೆಲೆಯಲ್ಲಿ ಇಳಿಯಲು ಪ್ರಯತ್ನಿಸುವಾಗ ಅಪಘಾತಕ್ಕೀಡಾಗಿದೆ. ಕ್ಯಾಪ್ಟನ್ ಸುಮಿತ್ ಕಪೂರ್ ಮತ್ತು ಕ್ಯಾಪ್ಟನ್ ಶಾಂಭವಿ ಪಾಠಕ್ ಇಬ್ಬರೂ ಪೈಲಟ್ ಗಳು ತಲಾ 15,000 ಗಂಟೆಗಳಿಗೂ ಹೆಚ್ಚು ಹಾರಾಟದ ಅನುಭವವನ್ನು ಹೊಂದಿದ್ದರು. ಬಾರಾಮತಿ ಒಂದು ಅನಿಯಂತ್ರಿತ ವಾಯುನೆಲೆಯಾಗಿದ್ದು, ಸಂಚಾರ […]
BREAKING: ಪೌರಾಯುಕ್ತೆಗೆ ಧಮ್ಕಿ ಪ್ರಕರಣ: ರಾಜೀವ್ ಗೌಡ 2 ದಿನ ಪೊಲೀಸ್ ಕಸ್ಟಡಿಗೆ
ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತಗೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ನೀಡಿದೆ. ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ನಿಂದನೆ, ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಕಳೆದ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ಅವರನ್ನು ಕೇರಳದ ಗಡಿ ಭಾಗದಲ್ಲಿ ಪೊಲೀಸರು ಬಂಧಿಸಿದ್ದರು. ಬಂಧಿತ ಆರೋಪಿಯನ್ನು ಮಂಗಳವಾರ ಶಿಡ್ಲಘಟ್ಟ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿತ್ತು. ಪೊಲೀಸರು […]
ಮಹಾಶಿವರಾತ್ರಿ 2026: ಬೆಂಗಳೂರು-ವಿಜಯಪುರ ವಿಶೇಷ ರೈಲು, ವೇಳಾಪಟ್ಟಿ
ಮಹಾಶಿವರಾತ್ರಿ-2026ರ ಸಂದರ್ಭದಲ್ಲಿ ಉಂಟಾಗುವ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ನೈಋತ್ಯ ರೈಲ್ವೆ ವಿಶೇಷ ರೈಲುಗಳ ಘೋಷಣೆ ಮಾಡಿದೆ. ಕ್ಯಾಲೆಂಡರ್ ಪ್ರಕಾರ ಫೆಬ್ರವರಿ 15ರ ಭಾನುವಾರ ಶಿವರಾತ್ರಿ ಹಬ್ಬವಿದೆ. ವಾರಾಂತ್ಯದ ರಜೆಯೂ ಸೇರುವ ಕಾರಣ ಹೆಚ್ಚಿನ ಜನರು ಸಂಚಾರ ನಡೆಸಬಹುದು ಎಂದು ಅಂದಾಜಿಸಲಾಗಿದೆ. ನೈಋತ್ಯ ರೈಲ್ವೆ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಎಸ್ಎಂವಿಟಿ ಬೆಂಗಳೂರು-ವಿಜಯಪುರ-ಎಸ್ಎಂವಿಟಿ ಬೆಂಗಳೂರು ನಡುವೆ ವಿಶೇಷ ರೈಲು ಓಡಿಸಲಿದೆ. ಮಹಾಶಿವರಾತ್ರಿ ಅಂಗವಾಗಿ ಮಾತ್ರ ಈ ವಿಶೇಷ ರೈಲುಗಳು ಸಂಚಾರವನ್ನು ನಡೆಸಲಿವೆ. ಈ ರೈಲುಗಳು […]
ಸಾವಿನಲ್ಲೂ ಒಂದಾದ ಸಹೋದರರು: ಅಣ್ಣನ ಅಂತ್ಯಕ್ರಿಯೆ ಮುಗಿದ ಮರುದಿನವೇ ತಮ್ಮನೂ ಕೊನೆಯುಸಿರು
ಕಲಬುರಗಿ: ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಬಡದಾಳ ಗ್ರಾಮದಲ್ಲಿ ಸಹೋದರರು ಸಾವಿನಲ್ಲಿಯೂ ಒಂದಾಗಿದ್ದಾರೆ. ಅಣ್ಣನ ಅಂತ್ಯಕ್ರಿಯೆ ಮುಗಿದ ಮರುದಿನವೇ ತಮ್ಮನೂ ಕೊನೆಯುಸಿರೆಳೆದಿದ್ದಾರೆ. ಜನವರಿ 20ರಂದು ಬಸವಂತರಾಯ್ ಸಣ್ಣಕ್(81) ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆ ಮುಗಿದ ಮರುದಿನ ತಮ್ಮ ಶಿವರಾಯ್ ಸಣ್ಣಕ್(79) ಅವರೂ ಮೃತಪಟ್ಟಿದ್ದಾರೆ. ಅಣ್ಣನ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಬಂದ ಶಿವರಾಯ್ ಹಾಸಿಗೆ ಹಿಡಿದಿದ್ದರು. ಅಣ್ಣನ ಸಾವಿನ ನೋವಿನಿಂದ ಆಘಾತಕ್ಕೆ ಒಳಗಾಗಿ ಇಹಲೋಕ ತ್ಯಜಿಸಿದ್ದಾರೆ. ಹಿರಿಯ ಸಹೋದರರಿಬ್ಬರ ಬಾಂಧವ್ಯ ನೆನೆದು ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.
BREAKING: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ನಾಲ್ವರ ವಿರುದ್ಧ ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ನ್ನು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪುರಸ್ಕರಿಸಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿಗೆ ಮುಡಾ ಕೇಸ್ ನಲ್ಲಿ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಭಾಮೈದ ಮಲ್ಲಿಕಾರ್ರ್ಜುನಸ್ವಾಮಿ ಹಾಗೂ […]
ಮಹಾರಾಷ್ಟ್ರ ರಾಜಕಾರಣದ ಅತ್ಯಂತ ಪ್ರಭಾವಿ ನಾಯಕ, ಉಪಮುಖ್ಯಮಂತ್ರಿ ಹಾಗೂ ಎನ್ಸಿಪಿ (NCP) ಮುಖ್ಯಸ್ಥ ಅಜಿತ್ ಪವಾರ್ (66) ಅವರು ಬುಧವಾರ ಬೆಳಿಗ್ಗೆ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ದುರ್ಮರಣಕ್ಕೀಡಾಗಿದ್ದಾರೆ.ಮೂರು ದಶಕಗಳ ರಾಜಕೀಯ ಪಯಣ ಹೊಂದಿದ್ದ ಅಜಿತ್ ಪವಾರ್ ಅವರ ಅಕಾಲಿಕ ನಿಧನದಿಂದ ಲಕ್ಷಾಂತರ ಅಭಿಮಾನಿಗಳು ಮತ್ತು ಕಾರ್ಯಕರ್ತರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಅಜಿತ್ ಪವಾರ್ ಅವರು ಮುಂಬೈನಿಂದ ಹೊರಟು ತಮ್ಮ ಕ್ಷೇತ್ರವಾದ ಬಾರಾಮತಿಗೆ ಸಾರ್ವಜನಿಕ ಸಭೆಯೊಂದರಲ್ಲಿ ಪಾಲ್ಗೊಳ್ಳಲು ಪ್ರಯಾಣಿಸುತ್ತಿದ್ದರು. ಅವರು ಪ್ರಯಾಣಿಸುತ್ತಿದ್ದ VT-SSK ಲಿಯರ್ಜೆಟ್ 45 ವಿಮಾನವು […]
ಜ.29ಕ್ಕೆ ಬಿಎಂಟಿಸಿ ಬಸ್ ಸಂಚಾರ ನಡೆಸಲ್ವಾ?, ಬೆಂಗಳೂರು ಚಲೋ ಬಗ್ಗೆ ಬಿಎಂಟಿಸಿ ಖಡಕ್ ಎಚ್ಚರಿಕೆ
ಸಾರಿಗೆ ನೌಕರರು ಜನವರಿ 29ರಂದು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ‘ಬೆಂಗಳೂರು ಚಲೋ’ ಪ್ರತಿಭಟನೆ ನಡೆಸಲಿದ್ದಾರೆ. ಆದ್ದರಿಂದ ಅಂದು ಸರ್ಕಾರಿ ಬಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ನಿರೀಕ್ಷೆ ಇದೆ. ಬೆಂಗಳೂರು ನಗರದಲ್ಲಿ ಗುರುವಾರ ಬಿಎಂಟಿಸಿ ಬಸ್ ಸಂಚಾರ ನಡೆಸುವುದಿಲ್ಲವೇ?. ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ಎಲ್ಲಾ ಹಿರಿಯ/ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಕಾರ್ಯ ವ್ಯವಸ್ಥಾಪಕರು, ಎಲ್ಲಾ ಹಿರಿಯ/ಘಟಕ ವ್ಯವಸ್ಥಾಪಕರು, ವಿಭಾಗೀಯ/ ಸಹಾಯಕ ಯಾಂತ್ರಿಕ ಅಭಿಯಂತರರು ಅವರುಗಳಿಗೆ ಪತ್ರವೊಂದನ್ನು ಬರೆದಿದ್ದಾರೆ. ಈ ಪತ್ರವು ಕ.ರಾ.ರ.ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ […]
ಜಯನಗರ ಬಿಜೆಪಿ ಶಾಸಕರಿಗೆ ಸುಪ್ರೀಂಕೋರ್ಟ್ನಲ್ಲಿ ಹಿನ್ನಡೆ!
ಜಯನಗರ 2023ರ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಭಾರೀ ಸುದ್ದು, ಸುದ್ದಿ ಮಾಡಿದ್ದ ಕ್ಷೇತ್ರ. ಬೆಂಗಳೂರು ನಗದ ವ್ಯಾಪ್ತಿಯ ಈ ಕ್ಷೇತ್ರದಲ್ಲಿ ಬಿಜೆಪಿಯ ಸಿ.ಕೆ.ರಾಮಮೂರ್ತಿ 57,797 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಆದರೆ ಜಯನಗರ ಕ್ಷೇತ್ರದ ಮತ ಎಣಿಕೆ ಸರಿಯಾಗಿ ನಡೆದಿಲ್ಲ ಎಂದು ಸಿ.ಕೆ.ರಾಮಮೂರ್ತಿ ಪ್ರತಿಸ್ಪರ್ಧಿ, ಕಾಂಗ್ರೆಸ್ ನಾಯಕಿ ಸೌಮ್ಯಾ ರೆಡ್ಡಿ ಆರೋಪಿಸಿದ್ದರು. ಅವರು ಚುನಾವಣೆಯಲ್ಲಿ 57,781 ಮತಗಳನ್ನು ಪಡೆದು ಸೋಲು ಕಂಡಿದ್ದರು. ಕೋರ್ಟ್ನಲ್ಲಿ ಸೌಮ್ಯಾ ರೆಡ್ಡಿ ಅವರು ಜಯನಗರ ಮತ ಎಣಿಕೆ ಸರಿಯಾಗಿ ನಡೆದಿಲ್ಲ. ಪುನಃ ಎಣಿಕೆ ನಡೆಸಬೇಕು […]
ಪೋಷಕರಿಗೆ ಕಿವಿಮಾತು : ಬಾಲ್ಯದಿಂದಲೇ ಗಂಡು ಮಕ್ಕಳಿಗೆ ಕಲಿಸಬೇಕಾದ ಅಭ್ಯಾಸಗಳಿವು.!
ಇಂದಿನ ಸಮಾಜದಲ್ಲಿ ಹೆಣ್ಣುಮಕ್ಕಳಿಗೆ ನೀಡುವಷ್ಟೇ ಪ್ರಾಮುಖ್ಯತೆಯನ್ನು ಗಂಡು ಮಕ್ಕಳ ಪಾಲನೆಗೂ ನೀಡಬೇಕಿದೆ. ಗಂಡು ಮಕ್ಕಳು ಉತ್ತಮ ಪ್ರಜೆಗಳಾಗಿ ಮತ್ತು ಜವಾಬ್ದಾರಿಯುತ ವ್ಯಕ್ತಿಗಳಾಗಿ ಬೆಳೆಯಲು ತಂದೆ-ತಾಯಿಯ ಪಾತ್ರ ಬಹಳ ದೊಡ್ಡದು. ಗಂಡು ಮಕ್ಕಳ ಪಾಲನೆಯಲ್ಲಿ ಕೇವಲ ಶಿಸ್ತು ಮಾತ್ರವಲ್ಲದೆ, ಮಾನಸಿಕ ಮತ್ತು ಸಾಮಾಜಿಕ ಬೆಳವಣಿಗೆಗೆ ಪೂರಕವಾದ ಈ ಕೆಳಗಿನ ಅಂಶಗಳನ್ನು ಅಳವಡಿಸಿಕೊಳ್ಳುವುದು ಅವರ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುತ್ತದೆ.ಸಾಮಾನ್ಯವಾಗಿ ಗಂಡು ಮಕ್ಕಳು ಕೋಪ ಅಥವಾ ಅಸಮಾಧಾನವನ್ನು ದೈಹಿಕವಾಗಿ (ವಸ್ತುಗಳನ್ನು ಎಸೆಯುವುದು ಅಥವಾ ಹೊಡೆಯುವುದು) ವ್ಯಕ್ತಪಡಿಸುತ್ತಾರೆ. ಮಗನಿಗೆ ಬಾಲ್ಯದಿಂದಲೇ ಕಲಿಸಬೇಕಾದ […]
100 ಕೋಟಿ ರೂ. ಬಾರ್ಡರ್ ದಾಟಿದ ‘ಬಾರ್ಡರ್-2′ಕಲೆಕ್ಷನ್!
ಬಾರ್ಡರ್-2 ಸಿನಿಮಾ ಬಾಲಿವುಡ್ಗೆ ಮತ್ತಷ್ಟು ಬಲವನ್ನು ತಂದುಕೊಟ್ಟಿದೆ. ಈಗಾಗಲೇ ಚಿತ್ರ ಭಾರೀ ಸುದ್ದಿ, ಸದ್ದು ಮಾಡುತ್ತಿದೆ. ಚಿತ್ರದ ಗಳಿಕೆ ಭಾರತದಲ್ಲಿ 100 ಕೋಟಿ ರೂ. ಬಾರ್ಡರ್ ದಾಟಿದ್ದು, 200 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂದು ವರದಿಗಳು ಹೇಳುತ್ತಿವೆ. ಈ ಚಿತ್ರವು 4 ದಿನಗಳ ಯಶಸ್ವಿಯಾಗಿ ಓಡಿದ್ದು, ವಾರಾಂತ್ಯದ ಸರಣಿ ರಜೆಯ ಕಾರಣದಿಂದ ಯಶಸ್ವಿಯಾಗಿ ಬಾಕ್ಸ್ ಆಫೀಸ್ನಲ್ಲಿ ಸದ್ದು ಮಾಡಿದೆ. ಚಿತ್ರದ ದೇಶಭಕ್ತಿಯ ವಿಷಯ ಮತ್ತು ಗಣರಾಜ್ಯೋತ್ಸವ 2026ರ ಸಂದರ್ಭದಲ್ಲಿ ಬಿಡುಗಡೆಯಾದ ಕಾರಣ ಚಿತ್ರಕ್ಕೆ ಉತ್ತಮ ಸ್ಪಂದನೆ […]
ಸಾಲಗಾರರಿಗೆ ‘RBI’ಶುಭ ಸುದ್ದಿ : ಆ ಸಮಯದಲ್ಲಿ ಲೋನ್ ಕಟ್ಟುವಂತಿಲ್ಲ , ಹೊಸ ಮಾರ್ಗಸೂಚಿ ಪ್ರಕಟ..!
ಬ್ಯಾಂಕ್ಗಳಲ್ಲಿ ಸಾಲ ಪಡೆದಿರುವ ಗ್ರಾಹಕರಿಗೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ಒಂದು ಶುಭ ಸುದ್ದಿ ನೀಡಿದೆ. ಪ್ರವಾಹ, ಭೂಕುಸಿತದಂತಹ ನೈಸರ್ಗಿಕ ವಿಕೋಪಗಳು ಸಂಭವಿಸಿದಾಗ ಸಾಲ ಮರುಪಾವತಿ ಮಾಡಲು ಕಷ್ಟಪಡುವ ಗ್ರಾಹಕರಿಗೆ ನೆರವಾಗಲು RBI ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಇಂತಹ ತುರ್ತು ಸಂದರ್ಭಗಳಲ್ಲಿ ಸಾಲಗಾರರಿಗೆ ತಕ್ಷಣದ ಉಪಶಮನ ನೀಡಲು ಬ್ಯಾಂಕ್ಗಳಿಗೆ ಸೂಚನೆ ನೀಡಲಾಗಿದೆ. RBI ನ ಹೊಸ ಮಾರ್ಗಸೂಚಿಗಳ ಪ್ರಮುಖ ಅಂಶಗಳು : 1) ಸಾಲದ ಪುನರ್ರಚನೆ (Loan Restructuring): ನೈಸರ್ಗಿಕ ವಿಕೋಪಗಳಿಂದಾಗಿ ಆದಾಯ ಕಳೆದುಕೊಂಡ ಗ್ರಾಹಕರು […]

19 C