SENSEX
NIFTY
GOLD
USD/INR

Weather

22    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source

ಅಂಬಾನಿ ಮದುವೆಯನ್ನು ಮೀರಿಸಿದ ಸಮಾರಂಭ ಇದು…..!

ನವದೆಹಲಿ ಮದುವೆ ಸಮಾರಂಭಕ್ಕೆ ಆಗಮಿಸುವ ಗಣ್ಯರು, ಅತಿಥಿಗಳ ಊಟ ಉಪಚಾರ ಚೆನ್ನಾಗಿ ಮಾಡಬೇಕು ಎಂದು ಲಕ್ಷ ಗಟ್ಟಲೆ ಹಣ ವ್ಯಯಿಸುವವರು ಇದ್ದಾರೆ. ಇನ್ನು ಕೆಲವರು ಬಗೆ ಬಗೆಯ ಕಂಡು ಕೇಳರಿಯದ ಹೊಸ ವೆರೈಟಿ ಊಟೋಪಚಾರವನ್ನು ಮೆನುವಲ್ಲಿ ಅಳವಡಿಸಿಕೊಳ್ಳುವ ಮೂಲಕ ಗಮನ ಸೆಳೆಯುತ್ತಾರೆ. ಇದೀಗ ಅಂತಹದ್ದೊಂದು ವಿಶೇಷ ಔತಣ ಕೂಟವೊಂದರ ವಿಡಿಯೊ ವೈರಲ್‌ ಆಗಿದೆ. ಅತಿಥಿಗಳಿಗೆ ಆತಿಥ್ಯವನ್ನು ನೀಡುವ ಸಲುವಾಗಿ ರಾಜ ಮಹಾರಾಜರ ಕಾಲದ ಅದ್ಧೂರಿ ಔತಣಕೂಟವನ್ನು ಮತ್ತೆ ರೀ ಕ್ರಿಯೆಟ್ ಮಾಡಿರುವ ಘಟನೆ […]

ಪ್ರಜಾ ಪ್ರಗತಿ 13 Dec 2025 4:42 pm

ಯರಗಟ್ಟಿ : 4 ವರ್ಷ ಕಳೆದರೂ ಬಾರದ ಕಛೇರಿಗಳು : ಜನರ ಗೋಳು ಕೇಳೊರು ಯಾರು …..?

ಯರಗಟ್ಟಿ: ನೂತನ ಯರಗಟ್ಟಿ ತಾಲೂಕು ಕೇಂದ್ರವಾಗಿ ನಾಲ್ಕು ವರ್ಷಗಳ ಕಳೆದರೂ ಬಾರದ ಸರಕಾರಿ ಕಚೇರಿ ಗಳು ಸಾರ್ವಜನಿಕರಿಗೆ ತಪ್ಪದ ಕಿರಿಕಿರಿ. ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿ, ಪ್ರತಿಯೊಬ್ಬ ರಿಗೂ ಸರಕಾರಿ ಸೌಲಭ್ಯ ಮುಟ್ಟಿಸುವುದು, ಜನರಿಗೆ ಎಲ್ಲ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಹೊಸದಾಗಿ ರಚನೆಗೊಂಡಿರುವ ಯರಗಟ್ಟಿ ತಾಲೂಕು ಕಚೇರಿಗಳಿಲ್ಲದೆ ಸಂಕಷ್ಟಕ್ಕೆ ಸಿಲುಕಿದೆ. ಎರಡು ದಶಕಗಳ ಹೋರಾಟದ ಫಲವಾಗಿ 2018ರಲ್ಲಿ ಸವದತ್ತಿ ತಾಲೂಕಿನಿಂದ ಪ್ರತ್ಯೇಕಗೊಳಿಸಿ ಯರಗಟ್ಟಿ ಹೊಸ ತಾಲೂಕು ಎಂದು ಸರಕಾರ ಘೋಷಿಸಿತ್ತು. ಆದರೆ, […]

ಪ್ರಜಾ ಪ್ರಗತಿ 13 Dec 2025 2:35 pm

ದೆಹಲಿಗೆ ಹೋಗುತ್ತಿರುವುದು ಶಕ್ತಿ ಪ್ರದರ್ಶನಕ್ಕಲ್ಲ,’ವೋಟ್ ಚೋರಿ’ಪ್ರತಿಭಟನೆಗೆ: ಡಿ ಕೆ ಶಿವಕುಮಾರ್

ಬೆಳಗಾವಿ: ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ನಾಯಕತ್ವದ ಗೊಂದಲಗಳ ನಡುವೆ, ಶಾಸಕರ ಬೆಂಬಲದ ಬಲಪ್ರದರ್ಶನ ನಡೆಯುತ್ತಿದೆ ಎಂಬ ಆರೋಪಗಳನ್ನು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಾರಾಸಗಟಾಗಿ ತಳ್ಳಿಹಾಕಿದ್ದಾರೆ. ತಮಗೆ ಅಧಿಕಾರವನ್ನು ಪ್ರದರ್ಶಿಸುವ ಅಗತ್ಯವಿಲ್ಲ ಅಥವಾ ಶಾಸಕರನ್ನು ತಮ್ಮ ಹಿಂದೆ ಒಗ್ಗೂಡಿಸಿ ಬೆಂಬಲ ತೋರಿಸಲು ಪ್ರಯತ್ನಿಸುವುದಿಲ್ಲ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ನಾನು ಯಾವುದೇ ಶಕ್ತಿ ಪ್ರದರ್ಶನವನ್ನು ಮಾಡುತ್ತಿಲ್ಲ. ನನಗೆ ಅದರ ಅಗತ್ಯವೂ ಇಲ್ಲ. ಯಾರೂ ನನ್ನ ಹಿಂದೆ ಬರಬೇಡಿ, ಯಾರೂ ನನ್ನ ಪರವಾಗಿ […]

ಪ್ರಜಾ ಪ್ರಗತಿ 13 Dec 2025 11:46 am

ಜನೌಷಧಿ ಕೇಂದ್ರಗಳಿಗೆ ಶಕ್ತಿ ತುಂಬಿದ ಕರ್ನಾಟಕ, ಕೇರಳ, ತಮಿಳುನಾಡು!

ಮಂಗಳೂರು: ದಕ್ಷಿಣ ರಾಜ್ಯಗಳು ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಯೋಜನೆಯ ಪರಿಣಾಮಕಾರಿಯಾಗಿ ಬೆಳವಣಿಗೆ ಸಾಧಿಸುತ್ತಿದೆ. ಆದರೆ ಇತರ ರಾಜ್ಯಗಳು ಗಮನಾರ್ಹವಾಗಿ ಕಡಿಮೆ ವ್ಯಾಪಾರ ಕಾರ್ಯಕ್ಷಮತೆಯನ್ನು ತೋರಿಸುತ್ತವೆ. ಇದರಿಂದ ಕೈಗೆಟುಕುವ ಜೆನೆರಿಕ್ ಔಷಧಿಗಳ ಲಭ್ಯತೆ ಮತ್ತು ಬಳಕೆಯಲ್ಲಿ ದೇಶದಲ್ಲಿ ಮಿಶ್ರ ಪ್ರತಿಕ್ರೆಯ ವ್ಯಕ್ತವಾಗುತ್ತಿದೆ. ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಲ್ಲಿ ಜನೌಷಧಿ ಕೇಂದ್ರ ಸಾಂದ್ರತೆ ಮತ್ತು ವ್ಯವಹಾರದ ಪ್ರಮಾಣದಲ್ಲಿ ಮುಂಚೂಣಿಯಲ್ಲಿವೆ. ಆದರೆ ಮಧ್ಯಪ್ರದೇಶ ಮತ್ತು ತೆಲಂಗಾಣದಂತಹ ರಾಜ್ಯಗಳು ಜನಸಂಖ್ಯಾ ಅಥವಾ ಆರ್ಥಿಕ ಬಲದ ಹೊರತಾಗಿಯೂ […]

ಪ್ರಜಾ ಪ್ರಗತಿ 13 Dec 2025 11:33 am

ಆಳಂದ ಮತಗಳ್ಳತನ ಪ್ರಕರಣದಲ್ಲಿ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ CID ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದ ಮತಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಬೆಂಗಳೂರು ನಗರದ ಎಪಿಎಂಎಂ ನ್ಯಾಯಾಲಯಕ್ಕೆ ನಿನ್ನೆ ಶುಕ್ರವಾರ ದೋಷರೋಪಟ್ಟಿ ಸಲ್ಲಿಸಿದೆ. ಪ್ರಭಾವಿ ನಾಯಕನ ಪಾತ್ರ ಸಿಐಡಿ ತನಿಖೆಯಲ್ಲಿ ಸಾಬೀತಾಗಿದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿಯ ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಅವರ ಪುತ್ರ ಹರ್ಷಾನಂದ ಸೇರಿದಂತೆ ಒಟ್ಟು 7 ಜನರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. 22 ಸಾವಿರ ಪುಟಗಳ ದೋಷರೋಪ ಪಟ್ಟಿಯಲ್ಲಿ ಮಾಜಿ ಶಾಸಕ ಸುಭಾಷ್ […]

ಪ್ರಜಾ ಪ್ರಗತಿ 13 Dec 2025 11:27 am

ಒಂದು ತಿಂಗಳೊಳಗೆ ರಾಜ್ಯಾದ್ಯಂತ ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯ: ಶಿವರಾಜ್ ತಂಗಡಗಿ

ಬೆಳಗಾವಿ: ಕರ್ನಾಟಕದಾದ್ಯಂತ ಎಲ್ಲಾ ವಾಣಿಜ್ಯ ಸಂಸ್ಥೆಗಳು, ಕೈಗಾರಿಕೆಗಳು, ಟ್ರಸ್ಟ್ ನಡೆಸುವ ಸಂಸ್ಥೆಗಳು, ಆಸ್ಪತ್ರೆಗಳು, ಮನರಂಜನಾ ಕೇಂದ್ರಗಳು, ಹೋಟೆಲ್‌ ಗಳು ಸೇರಿದಂತೆ ಮತ್ತಿತರ ಕಡೆಗಳಲ್ಲಿ 15 ದಿನಗಳಿಂದ ಒಂದು ತಿಂಗಳೊಳಗೆ ಕಡ್ಡಾಯವಾಗಿ ಕನ್ನಡ ನಾಮಫಲಕಗಳನ್ನು ಅಳವಡಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ. ಕಡ್ಡಾಯ ಕನ್ನಡ ಭಾಷಾ ನಾಮಫಲಕ ಅಳವಡಿಕೆ ಕುರಿತು ನಿಗಾವಹಿಸಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಆದಷ್ಟೂ ಬೇಗ ರಾಜ್ಯದಲ್ಲಿ ನಿಯಮ ಸಂಪೂರ್ಣ ಅನುಷ್ಠಾನಕ್ಕೆ […]

ಪ್ರಜಾ ಪ್ರಗತಿ 13 Dec 2025 11:25 am

ಮುಂಡಗೋಡ : ದಲಾಯಿ ಲಾಮಾರಿಗೆ ಅದ್ಧೂರಿ ಸ್ವಾಗತ

ಮುಂಡಗೋಡ : 45 ದಿನಗಳ ಭೇಟಿಗಾಗಿ ಶುಕ್ರವಾರ ಮುಂಡಗೋಡ ನಗರಕ್ಕೆ ಬಂದ ಟಿಬೆಟಿಯನ್ನರ ಧರ್ಮ ಗುರು ಹಾಗೂ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ 14 ನೇಯ ದಲಾಯಿ ಲಾಮಾ ಅವರಿಗೆ ಜಿಲ್ಲಾಡಳಿತ, ಬೌದ್ಧ ಬಿಕ್ಕುಗಳು ಮತ್ತು ಟಿಬೆಟಿಯನ್ನರು ಅದ್ಧೂರಿಯಾಗಿ ಸ್ವಾಗತ ನೀಡಿದರು. ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದಿಂದ ರಾಜ್ಯ ಹೆದ್ದಾರಿ 69 ರ ಮೂಲಕ ರಸ್ತೆಮಾರ್ಗವಾಗಿ ಬಿಗಿ ಭದ್ರತೆ ಯಲ್ಲಿ ಬಂದ ದಲಾ ಯಿ ಲಾಮಾ ಅವರ ವಿಶೇಷ ವಾಹನಕ್ಕೆ ಝೆಡ್ + […]

ಪ್ರಜಾ ಪ್ರಗತಿ 13 Dec 2025 11:11 am

ಹೊಸ ಬಾಂಬ್‌ ಸಿಡಿಸಿದ ಯತ್ನಾಳ್…..!

ಬೆಳಗಾವಿ: ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿಗೆ ಸೆಳೆಯುವ ಪ್ರಯತ್ನ ನಡೆದಿತ್ತು. ಆದರೆ ನಾನು ಪಕ್ಷದಲ್ಲಿದ್ದರೆ ಅದು ಸಾಧ್ಯವಿಲ್ಲ ಎಂದು ನನ್ನನ್ನು ಉಚ್ಛಾಟಿಸಲಾಯಿತು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಡಿಸಿಎಂ ಆಗಲೇಂದು ದೆಹಲಿಯಲ್ಲಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ಸಹ ನಡೆಸಿದ್ದರು. ಆದರೆ ಈ ಪ್ರಯತ್ನವನ್ನು ಹೈಕಮಾಂಡ್ ತಿರಸ್ಕರಿಸಿತು ಎಂದು ಯತ್ನಾಳ್ ಹೇಳಿದ್ದಾರೆ. ಇಂದು ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, […]

ಪ್ರಜಾ ಪ್ರಗತಿ 13 Dec 2025 10:47 am

‘ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ’: ಸಿಎಂ ಪುತ್ರ ಯತೀಂದ್ರ ಪುನರುಚ್ಛಾರ

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನ ಮಂಡಲ ಚಳಿಗಾಲ ಅಧಿವೇಶನ ಮಧ್ಯೆ ಸಿಎಂ ಹುದ್ದೆ ಬದಲಾವಣೆ ವಿಷಯ ಚರ್ಚೆಯಾಗುತ್ತಲೇ ಇದೆ, ಇಂದು ಸಿಎಂ ಸಿದ್ದರಾಮಯ್ಯ ಪುತ್ರ ವಿಧಾನ ಪರಿಷತ್ ಸದಸ್ಯ ಡಾ ಯತೀಂದ್ರ, ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಹೇಳಿಕೆ ಪುನರುಚ್ಛರಿಸಿದ್ದಾರೆ. ‘ಲೀಡರ್‌ ಶಿಪ್ ಬದಲಾವಣೆ ಇಲ್ಲ’ ಇಂದು ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಮುಖ್ಯಮಂತ್ರಿ ಹುದ್ದೆಯಲ್ಲಿ ಯಾವುದೇ ಗೊಂದಲವಾಗಲಿ, ಭಿನ್ನಾಭಿಪ್ರಾಯವಾಗಲಿ ಇಲ್ಲ. ಎಲ್ಲವೂ ಸ್ಪಷ್ಟವಾಗಿದೆ. ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು […]

ಪ್ರಜಾ ಪ್ರಗತಿ 13 Dec 2025 10:44 am

ಟೈಗರ್‌ ಜಿಂದಾ ಹೈ, ಕಿಂಗ್‌ ಈಸ್ ಅಲೈವ್‌ : ಭೈರತಿ ಗುಣಗಾನ

ಬೆಂಗಳೂರು: ತಮ್ಮ ತಂದೆ ಮುಖ್ಯಮಂತ್ರಿಯಾಗಿ ಐದು ವರ್ಷಗಳನ್ನು ಪೂರ್ಣಗೊಳಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ನೀಡಿರುವ ಹೇಳಿಕೆ ಕಾಂಗ್ರೆಸ್‌ನಲ್ಲಿ ಕೋಲಾಹಲ ಸೃಷ್ಟಿಸಿದೆ. ಇದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪಾಳಯವನ್ನು ಕೆರಳಿಸಿದೆ. ಆದರ ಎರಡೂ ಬಣಗಳ ಬಗ್ಗೆ ತಟಸ್ಥರಾಗಿದ್ದ ಕೆಲವು ಶಾಸಕರಿಗೆ ಮುಜುಗರಕ್ಕೀಡು ಮಾಡಿದೆ. ವಿಧಾನಸಭೆಯ ಜಂಟಿ ಅಧಿವೇಶನ ನಡೆಯುತ್ತಿದ್ದು, ಇದು ವಿರೋಧ ಪಕ್ಷಗಳು ಸರ್ಕಾರದ ಮೇಲೆ ದಾಳಿ ಮಾಡಲು ಆಹಾರವಾಗುವುದರಿಂದ ನಾಯಕತ್ವ ಬದಲಾವಣೆಯ ಕುರಿತು ಅಂತಹ ಹೇಳಿಕೆಗಳನ್ನು ನೀಡಬೇಡಿ […]

ಪ್ರಜಾ ಪ್ರಗತಿ 13 Dec 2025 10:41 am

ಕಳ್ಳತನ ಪ್ರಕರಣದಲ್ಲಿ ಬೆಂಗಳೂರು ವಿಮಾನ ನಿಲ್ದಾಣವೇ ಫಸ್ಟ್ ಪ್ಲೇಸ್‌……!

ಬೆಂಗಳೂರು: ದೇಶದ ಅತ್ಯಂತ ಆಧುನಿಕ ವಿಮಾನಗಳಲ್ಲಿ ಒಂದಾದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣವ ಇದೀಗ ಕಳ್ಳತನದ ಕೇಸ್‌ನಲ್ಲಿ ಸುದ್ದಿಯಲ್ಲಿದೆ. 2025ರ ಜನವರಿ 1ರಿಂದ ನವೆಂಬರ್ 27ರವರೆಗೆ ದೇಶದ ವಿವಿಧ ವಿಮಾನ ನಿಲ್ದಾಣಗಳಲ್ಲಿ ಭದ್ರತಾ ತಪಾಸಣೆ ಮತ್ತು ಸರಕು ನಿರ್ವಹಣೆ ವೇಳೆ ಒಟ್ಟು 9 ಕಳ್ಳತನ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಬೆಂಗಳೂರಿನ ಕೆಐಎಯಲ್ಲಿ ಮಾತ್ರ 4 ಪ್ರಕರಣಗಳು ನಡೆದಿವೆ. ಉಳಿದಂತೆ ದೆಹಲಿ, ಮುಂಬೈ, ಹೈದರಾಬಾದ್, ನಾಗಪುರ ಮತ್ತು ರಾಜ್‌ಕೋಟ್ ವಿಮಾನ ನಿಲ್ದಾಣಗಳಲ್ಲಿ ತಲಾ ಒಂದು ಪ್ರಕರಣ […]

ಪ್ರಜಾ ಪ್ರಗತಿ 13 Dec 2025 10:30 am

ನಾನು, ಸಿದ್ದರಾಮಯ್ಯ ಒಂದೇ ಗುಂಪು : ಡಿ.ಕೆ. ಶಿವಕುಮಾರ್‌

ಬೆಳಗಾವಿ ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿಯ ಸರ್ಕಿಟ್ ಹೌಸ್ ಹಾಗೂ ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಅವರು ಪ್ರತಿಕ್ರಿಯೆ ನೀಡಿದರು. ಡಿನ್ನರ್ ಮೀಟಿಂಗ್ ಮೂಲಕ ಬಲ ಪ್ರದರ್ಶನ ಮಾಡಲಾಗುತ್ತಿದೆಯೇ ಎಂದು ಕೇಳಿದಾಗ, ಅದರ ಅಗತ್ಯ ನನಗಿಲ್ಲ. ನನ್ನ ಹಿಂದೆ ಯಾರೂ ಬರುವುದು ಬೇಡ, ನನ್ನ ಪರವಾಗಿ ಯಾರು ಮಾತನಾಡುವುದೂ ಬೇಡ. ನಾನು, ಸಿಎಂ ಸೇರಿದಂತೆ 140 ಶಾಸಕರದೂ […]

ಪ್ರಜಾ ಪ್ರಗತಿ 13 Dec 2025 10:23 am

ಕಾಂಗ್ರೆಸ್‌ ನಾಯಕತ್ವ ಕುರಿತು ಮತ್ತೆ ಯತೀಂದ್ರ ಹೇಳಿಕೆ; ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೇಗಿತ್ತು ಗೊತ್ತಾ…..?

ಬೆಳಗಾವಿ ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ, ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಹೇಳಿದ್ದಾರೆ. ಈ ಹಿಂದೆ ಹೇಳಿದ್ದ ಮಾತನ್ನೇ ಪುನರುಚ್ಚರಿಸಿರುವ ಅವರು, ನಾಯಕತ್ವದ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ನಾಯಕತ್ವದ ಬಗ್ಗೆ ಯಾರೂ ಮಾತನಾಡಬೇಡಿ ಎಂದು ಹೈಕಮಾಂಡ್‌ ಎಚ್ಚರಿಸಿದ್ದರೂ ಯತೀಂದ್ರ ಮತ್ತೆ ಮಾತನಾಡಿದ್ದಾರೆ. ಬೆಳಗಾವಿಯಲ್ಲಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದ ಹಿನ್ನೆಲೆಯಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಡಾ. ಯತೀಂದ್ರ ಸಿದ್ದರಾಮಯ್ಯ, ‘ರಾಜ್ಯದಲ್ಲಿ ನಾಯಕತ್ವದ ವಿಚಾರದಲ್ಲಿ […]

ಪ್ರಜಾ ಪ್ರಗತಿ 11 Dec 2025 4:37 pm

ದರ್ಶನ್‌ ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ : ಸಹೋದರ ದಿನಕರ್ ಹೇಳಿದ್ದೇನು?

ಬೆಂಗಳೂರು : ದರ್ಶನ್‌ ಅಭಿನಯದ ‘ಡೆವಿಲ್’ ಸಿನಿಮಾ ಇಂದು (ಡಿಸೆಂಬರ್ 11) ಬಿಡುಗಡೆ ಆಗಿದೆ. ಬೆಂಗಳೂರು ಮಾತ್ರವಲ್ಲದೆ ಹಲವೆಡೆ ಮುಂಜಾನೆ ಶೋ ಅನ್ನು ಅಭಿಮಾನಿಗಳು ವೀಕ್ಷಿಸಿದ್ದಾರೆ. ಸಿನಿಮಾ ನೋಡಿದ ಅಭಿಮಾನಿಗಳು ಸಿನಿಮಾ ಚೆನ್ನಾಗಿದೆ, ಸೂಪರ್ ಹಿಟ್ ಆಗಲಿದೆ ಎಂದಿದ್ದಾರೆ. ಇದೀಗ ದರ್ಶನ್‌ ಸಹೋದರ ದಿನಕರ್‌ ಮಾಧ್ಯಮವೊಂದಕ್ಕೆ ಸಿನಿಮಾ ಕುರಿತಾಗಿ ಮಾತನಾಡಿದ್ದಾರೆ. ದಿನಕರ್‌ ಮಾತನಾಡಿ, ಅಭಿಮಾನಿಗಳು ಯಾವ ಸಮಯದಲ್ಲಿ ಚಾಲೆಂಜಿಂಗ್‌ ಸ್ಟಾರ್‌ ಅಂತ ಬಿರುದು ಕೊಟ್ರೋ ಗೊತ್ತಿಲ್ಲ. ಅಲ್ಲಿಂದ ದರ್ಶನ್‌ ಲೈಫ್‌ನಲ್ಲಿ ಚಾಲೆಂಜ್‌ ಫೇಸ್‌ […]

ಪ್ರಜಾ ಪ್ರಗತಿ 11 Dec 2025 12:24 pm