ಗುಬ್ಬಿ ವಿಜೃಂಭಣೆಯಿಂದ ನೆರವೇರಿದ ಚನ್ನಬಸವೇಶ್ವರ ಹಾಗೂ ಮಲ್ಲಿಕಾರ್ಜುನ ಸ್ವಾಮಿಯ ಕೃತಿಕೋತ್ಸವ
ಗುಬ್ಬಿ: ಇತಿಹಾಸ ಪ್ರಸಿದ್ಧ ಗುಬ್ಬಿ ಚನ್ನಬಸವೇಶ್ವರ ಸ್ವಾಮಿ ಹಾಗೂ ಬ್ರಮರಾಂಬ ಸಮೇತ ಮಲ್ಲಿಕಾರ್ಜುನ ಸ್ವಾಮಿ ಯವರ ಕೃತಿಕೋತ್ಸವ ಗುರುವಾರ ರಾತ್ರಿ ವಿಜೃಂಭಣೆಯಿಂದ ನೆಡೆಯಿತು, ಬೆಳಿಗ್ಗೆ ಹನ್ನೊಂದು ಗಂಟೆಯಿಂದ ಲೇ ಪ್ರಾರಂಭವಾದ ಅಭಿಷೇಕ ಹಾಗೂ ಧಾರ್ಮಿಕ ಕಾರ್ಯಗಳು ಸಂಜೆಯವರೆಗೆ ನೆಡೆದವು ಸಂಜೆ ದೇವಾಲಯದ ಆವರಣದಲ್ಲಿ ದೀಪೋತ್ಸವವನ್ನು ಬರುವ ಭಕ್ತರೆಲ್ಲರೂ ಸೇರಿ ನೆರವೇರಿಸಿಕೊಟ್ಟರು. ರಾತ್ರಿ ಹನ್ನೊಂದು ಗಂಟೆಗೆ ಸ್ವಾಮಿಯವರನ್ನು ಹೂವಿನ ವಾನದಲ್ಲಿ ಕೂರಿಸಿ ನಂತರ ದೇವರ ಮುಂದೆ ಗೊನೆ ಸಹಿತ […]
ರಜೆ ಕಳೆಯಲು ಬಂದು ಮಸಣ ಸೇರಿದ ಕುಟುಂಬ…..!
ಟರ್ಕಿ: ರಜೆ ಕಳೆಯಲೆಂದು ಜರ್ಮನಿಯಿಂದ ಟರ್ಕಿಗೆ ಹೋಗಿದ್ದ ನಾಲ್ವರ ಪುಟ್ಟ ಕುಟುಂಬ ಮಸಣ ಸೇರಿದೆ. ಬೀದಿ ಬದಿಯ ಆಹಾರ ಸೇವಿಸಿ ಒಂದೇ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ.ಇಸ್ತಾನ್ಬುಲ್ನ ಓರ್ಟಕೋಯ್ ಜಿಲ್ಲೆಯಲ್ಲಿ ಬಾಸ್ಫರಸ್ ಸೇತುವೆಯ ಬಳಿ ಇರುವ ಸ್ಟ್ರೀಟ್ನಲ್ಲಿ ಈ ಕುಟುಂಬ ಆಹಾರ ಸೇವಿಸಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ. ಮಹಿಳೆ ಆಕೆಯ ಪತಿ ಹಾಗೂ ಚಿಕ್ಕ ಮಕ್ಕಳಿಬ್ಬರು ಆಹಾರ ಸೇವಿಸಿದ ಬಳಿಕ ಅಸ್ವಸ್ಥರಾಗಿದ್ದರು. ಕುಟುಂಬವು ರಜೆಗಾಗಿ ಜರ್ಮನಿಯಿಂದ ಪ್ರಯಾಣಿಸಿತ್ತು ಎಂದು ಪೀಪಲ್ ವರದಿ ಮಾಡಿದೆ. […]
ವಿಶ್ವದ ಯಾವುದೇ ರಾಷ್ಟ್ರ ಮಾಡದ ‘ಸಾಹಸ’ಮಾಡಿದ ರಷ್ಯಾ!
ಮಾಸ್ಕೋ: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಮುಂದಿನ ತಿಂಗಳ ಭಾರತ ಭೇಟಿಗೆ ದಿನಗಣನೆ ಆರಂಭವಾಗಿರುವಂತೆಯೇ ರಷ್ಯಾ ಸರ್ಕಾರ ಭಾರತಕ್ಕೆ ಅತೀ ದೊಡ್ಡ ಆಫರ್ ನೀಡಿದ್ದು ಭಾರತಕ್ಕೆ ಬೇಕಾದ್ದನ್ನು ನೀಡುತ್ತೇವೆ ಎಂದು ಘೋಷಣೆ ಮಾಡಿದೆ.ರಷ್ಯಾ ಅಧ್ಯಕ್ಷರ ಭಾರತ ಭೇಟಿಗೆ ಭರ್ಜರಿ ವೇದಿಕೆ ಸಿದ್ಧವಾಗುತ್ತಿದ್ದು, ರಷ್ಯಾ ಭಾರತಕ್ಕೆ ಮಹತ್ವದ ಮಿಲಿಟರಿ ಪ್ರಸ್ತಾವನೆ ಮಾಡಿದೆ. ರಷ್ಯಾದ ಈ ಆಫರ್ ಭಾರತೀಯ ವಾಯು ಶಕ್ತಿಯ ಭವಿಷ್ಯವನ್ನು ಮರು ರೂಪಿಸಬಲ್ಲದು ಎಂದು ಹೇಳಲಾಗುತ್ತಿದೆ. ಅದರಂತೆ ಭಾರತದ ದೀರ್ಘಕಾಲದ […]
ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಶೃಂಗಸಭೆಯಲ್ಲಿ ಭಾರಿ ಬೆಂಕಿ ಅವಘಡ; 13 ಮಂದಿಗೆ ಗಾಯ
ಬೆಲೆಮ್: ಬ್ರೆಜಿಲ್ನ ಬೆಲೆಮ್ ನಗರದಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಕುರಿತ ಶೃಂಗಸಭೆಯ (ಸಿಒಪಿ–30) ಮುಖ್ಯ ಸಭಾಂಗಣದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಈ ಬೆಂಕಿ ಅವಘಡದಲ್ಲಿ ಕನಿಷ್ಠ 13 ಜನರು ಗಾಯಗೊಂಡಿದ್ದು, ಸಾವಿರಾರು ಜನರು ಜೀವ ರಕ್ಷಿಸಿಕೊಳ್ಳಲು ಹೊರ ಓಡಿದ್ದಾರೆ ಎಂದು ವರದಿಯಾಗಿದೆ. ಮುಖ್ಯ ಸಭಾಂಗಣದಲ್ಲಿ ಬ್ಲೂ ಝೋನ್ನಲ್ಲಿ ಸಭೆ, ಮಾತುಕತೆ, ಮಾಧ್ಯಮ ಕೇಂದ್ರ ಮತ್ತು ಪ್ರಮುಖ ಗಣ್ಯರ ಕಚೇರಿಯನ್ನು ಸ್ಥಾಪಿಸಲಾಗಿದೆ. ಗುರುವಾರ ಮಧ್ಯಾಹ್ನ 2 ಗಂಟೆ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ […]
ನಿತೀಶ್ ಸಂಪುಟದಲ್ಲಿ ಜಾತಿ ಸಮೀಕರಣ ಹೇಗಿದೆ ಗೊತ್ತಾ……?
ಪಾಟ್ನಾ: ಬಿಹಾರದಲ್ಲಿ 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಅವರು 26 ಮಂದಿ ಸಚಿವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ್ದು, ಈ ಪೈಕಿ 14 ಮಂದಿ ಬಿಜೆಪಿಯವರು. ನಿತೀಶ್ ನೇತೃತ್ವದ ಸಂಯುಕ್ತ ಜನತಾದಳ ಕೇವಲ ಏಳು ಸಚಿವ ಸ್ಥಾನಗಳನ್ನು ಪಡೆದಿದೆ. ಇತರ ಮೂರು ಘಟಕ ಪಕ್ಷಗಳ ನಾಲ್ವರು ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ಸಂಪುಟದಲ್ಲಿ ಮೂವರು ಮಹಿಳೆಯರು ಸೇರ್ಪಡೆಯಾಗಿದ್ದಾರೆ, ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿರುವ 10 ಮಂದಿಗೂ ಸಚಿವರಾಗುವ ಭಾಗ್ಯ ದೊರಕಿದೆ. ಮೊದಲ ಬಾರಿಗೆ ಆಯ್ಕೆಯಾದ […]
KPCC ಅಧ್ಯಕ್ಷ ಸ್ಥಾನದ ಬಗ್ಗೆ ಅವರನ್ನೇ ಕೇಳಬೇಕು: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಸ್ಥಾನದ ವಿಚಾರವಾಗಿ ಡಿ.ಕೆ.ಶಿವಕುಮಾರ್ ಅವರ ಬಳಿಯೆ ಕೇಳಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಗುರುವಾರ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇತ್ತೀಚೆಗೆ ನೀಡಿದ್ದ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ್ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಯಾವುದೇ ಚರ್ಚೆಗಳು ನಡೆದರೆ, ಅದನ್ನು ಡಿಕೆ.ಶಿವಕುಮಾರ್ ಅವರನ್ನೇ ಕೇಳಬೇಕು. ನಮಗೂ ಅದಕ್ಕೂ ಯಾವುದೇ ಸಂಬಂಧವಿಲ್ಲ. ಕಾಂಗ್ರೆಸ್ ಹೈಕಮಾಂಡ್ ಅವರನ್ನು ಮುಂದುವರಿಸಲು ಬಯಸಿದರೆ, ಅವರು ಆ […]
ರಾಜ್ಯದ 5000 ಅಂಗನವಾಡಿಗಳಲ್ಲಿ ನ.28ರಿಂದ ತರಗತಿಗಳು ಆರಂಭ..!
ಬೆಂಗಳೂರು: ಕರ್ನಾಟಕದಾದ್ಯಂತ 5,000 ಅಂಗನವಾಡಿ ಕೇಂದ್ರಗಳಲ್ಲಿ ನವೆಂಬರ್ 28ರಿಂದ ಎಲ್ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗುರುವಾರ ಘೋಷಿಸಿದ್ದಾರೆ.ಗುರುವಾರ ವಿಧಾನಸೌಧದಲ್ಲಿ ನಡೆದ 25ನೇ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಸಂಸತ್ತಿನಲ್ಲಿ ಮಕ್ಕಳು ಕೇಳಿದ ಪ್ರಶ್ನೆಗೆ ಸಚಿವೆ ಉತ್ತರಿಸಿದರು. ನಾನು ಸಚಿವಳಾದ ನಂತರ ಕಳೆದ ಎರಡೂವರೆ ವರ್ಷಗಳಲ್ಲಿ ಅಂಗನವಾಡಿಗಳಿಗೆ 200 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ನವೆಂಬರ್ 28, 2025 ರಿಂದ […]
ಬಳ್ಳಾರಿಯಲ್ಲಿ 36 ಜೀನ್ಸ್ ಘಟಕಗಳು ಸ್ಥಗಿತ: ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷ
ಬಳ್ಳಾರಿ: ಬಳ್ಳಾರಿಯಲ್ಲಿ 36 ಜೀನ್ಸ್ ಬಟ್ಟೆ ತೊಳೆಯುವ ಘಟಕಗಳನ್ನು ಮುಚ್ಚುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕ್ರಮವು ರಾಜಕೀಯ ತಿಕ್ಕಾಟಕ್ಕೆ ಎಡೆಮಾಡಿಕೊಟ್ಟಿದೆ.ಕೆಎಸ್ಪಿಸಿಬಿ ಕ್ರಮದಿಂದ ಸಾವಿರಾರು ಕಾರ್ಮಿಕರು ಹಾಗೂ ಸಂಸ್ಥೆಗಳ ಮಾಲೀಕರು ಸಂಕಷ್ಟಕ್ಕೆ ಸಿಲುಕಲಿದ್ದಾರೆಂದು ಬಿಜೆಪಿ ಕಿಡಿಕಾರಿದೆ. ಈ ನಡುವೆ ಬಳ್ಳಾರಿ ಸಂಸದ, ಸ್ಥಳೀಯ ಶಾಸಕರು ಮತ್ತು ಜಿಲ್ಲಾ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಸ್ಯೆಯನ್ನು ಪರಿಹರಿಸುವುದಾಗಿ ಮತ್ತು ಎರಡು ವಾರಗಳ ಹಿಂದೆ ಮುಚ್ಚಲಾದ ಎಲ್ಲಾ 36 ಜೀನ್ಸ್ […]
ಜಾರ್ಖಂಡ್-ಪಶ್ಚಿಮ ಬಂಗಾಳದಲ್ಲಿ 40 ಕ್ಕೂ ಹೆಚ್ಚು ಸ್ಥಳಗಳ ಮೇಲೆ ED ದಾಳಿ, ತೀವ್ರ ಶೋಧ
ಪ.ಬಂಗಾಳ : ಕಲ್ಲಿದ್ದಲು ಮಾಫಿಯಾ ವಿರುದ್ಧ ಹಣ ವರ್ಗಾವಣೆ ತನಿಖೆಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯವು, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದ 40ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ನಡೆಸಿದ್ದು, ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿದೆ.ದೊಡ್ಡ ಪ್ರಮಾಣದ ಕಲ್ಲಿದ್ದಲು ಮಾಫಿಯಾ ನಡೆದಿದ್ದು, ಇದರಿಂದ ಸರ್ಕಾರಕ್ಕೆ ನೂರಾರು ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಬೆಳಿಗ್ಗೆ 6 ಗಂಟೆ ಸುಮಾರಿಗೆ ನಡೆದ ದಾಳಿಯಲ್ಲಿ ಫೆಡರಲ್ ತನಿಖಾ ಸಂಸ್ಥೆಯ ಸುಮಾರು 100 ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.ಜಾರ್ಖಾಂಡ್ […]
ಸಚಿವರ ಎದುರೇ ಬೆಂಗಳೂರು ಟ್ರಾಫಿಕ್ ಕುರಿತು ಶುಭಾಂಶು ಶುಕ್ಲಾ ತಮಾಷೆ….!
ಬೆಂಗಳೂರು: ಗಗನಯಾತ್ರಿ ಶುಭಾಂಶು ಶುಕ್ಲಾ ಬೆಂಗಳೂರು ಹೊರವಲಯ ನೆಲಮಂಗಲ ಬಳಿಯ ಬಿಐಇಸಿಯಲ್ಲಿ ನಡೆಯುತ್ತಿರುವ ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು ಬಾಹ್ಯಾಕಾಶದಿಂದ ಬೆಂಗಳೂರಿಗೆ ಬರುವುದು ಸುಲಭ ಆದರೆ ಮಾರತ್ತಹಳ್ಳಿಯಿಂದ ಮಾದಾವರಕ್ಕೆ ಹೋಗುವುದು ತುಂಬಾ ಕಷ್ಟ ಎಂದು ಐಟಿ ಸಚಿವರ ಎದುರೇ ತಮಾಶೆ ಮಾಡಿದ್ದಾರೆ. ಮಾರತ್ತಹಳ್ಳಿಯಿಂದ ಮಾದಾವರ ತಲುಪುವ ಸಮಯಕ್ಕಿಂತ ಬೇಗ ಬಾಹ್ಯಾಕಾಶವನ್ನೇ ತಲುಪಬಹುದು ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಐಟಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ […]
ಶುಭಮನ್ ಗಿಲ್ ತಂಡದಿಂದ ಔಟ್ : ಗುವಾಹಟಿ ಟೆಸ್ಟ್ನಲ್ಲಿ ರಿಷಭ್ ಪಂತ್ ನಾಯಕ…..!
ಗುವಾಹಟಿ: ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಿಂದ ಭಾರತ ತಂಡದ ನಾಯಕ ಶುಭಮನ್ ಗಿಲ್ ಅವರನ್ನು ಹೊರಗಿಡಲಾಗಿದ್ದು, ಬಿಸಿಸಿಐ ಅವರನ್ನು ಶುಕ್ರವಾರ ತಂಡದಿಂದ ಬಿಡುಗಡೆ ಮಾಡಿದೆ. ಕುತ್ತಿಗೆ ನೋವಿನಿಂದ ಬಳಲುತ್ತಿರುವ ಗಿಲ್, ಹೆಚ್ಚಿನ ಮೌಲ್ಯಮಾಪನ ಮತ್ತು ಗಾಯದ ನಿರ್ವಹಣೆಗಾಗಿ ತಜ್ಞರನ್ನು ಸಂಪರ್ಕಿಸಲು ಮುಂಬೈ ತೆರಳಲಿದ್ದಾರೆ. ಗಿಲ್ ಅಲಭ್ಯತೆಯಲ್ಲಿ ಉಪನಾಯಕ ರಿಷಭ್ ಪಂತ್ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಆ ಮೂಲಕ ಭಾರತ ಟೆಸ್ಟ್ ಕ್ರಿಕೆಟ್ ತಂಡದ 38ನೇ ನಾಯಕರೆನಿಸಲಿದ್ದಾರೆ. […]
ಚಿನ್ನದ ದರದಲ್ಲಿ ಮತ್ತೆ ಏರಿಕೆ; ಸ್ವರ್ಣಪ್ರಿಯರಿಗೆ ಶಾಕ್…..!
ಬೆಂಗಳೂರು: ಚಿನ್ನದ ದರದಲ್ಲಿ ಇಂದು ಮತ್ತೆ ಏರಿಕೆ ಕಂಡು ಬಂದಿದೆ. ಇಂದು 22ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 20ರೂ. ಏರಿಕೆ ಕಂಡು ಬಂದಿದ್ದು, 11,410 ರೂ. ಗೆ ತಲುಪಿದೆ. 24 ಕ್ಯಾರಟ್ 1 ಗ್ರಾಂ ಚಿನ್ನದ ದರದಲ್ಲಿ 22 ರೂ. ಏರಿಕೆಯಾಗಿ, 12,448 ರೂ ಆಗಿದೆ. 22 ಕ್ಯಾರಟ್ನ 8 ಗ್ರಾಂ ಚಿನ್ನ 91,280 ರೂ. ಬಾಳಿದರೆ, 10 ಗ್ರಾಂಗೆ ನೀವು 1,14,100 ಹಾಗೂ 100 ಗ್ರಾಂಗೆ 11,41,000 ರೂ., ನೀಡಬೇಕಾಗುತ್ತದೆ. 24 […]
ಗುವಾಹಟಿ ಟೆಸ್ಟ್ ಸಮಯದಲ್ಲಿ ಬದಲಾವಣೆ….!
ಗುವಾಹಟಿ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಶನಿವಾರ ಅಸ್ಸಾಂನ ಗುವಾಹಟಿ ಯಲ್ಲಿ ಆರಂಭಗೊಳ್ಳಲಿದೆ. ಭಾರತದಲ್ಲಿ ನಡೆಯುವ ಟೆಸ್ಟ್ಪಂದ್ಯಗಳು ಬೆಳಿಗ್ಗೆ 9.30ಕ್ಕೆ ಆರಂಭವಾಗುವುದು ವಾಡಿಕೆ. ಆದರೆ ಇದೇ ಮೊದಲ ಬಾರಿಗೆ ಟೆಸ್ಟ್ ಪಂದ್ಯಕ್ಕೆ ಆತಿಥ್ಯ ವಹಿಸುತ್ತಿರುವ ಗುವಾಹಟಿಯಲ್ಲಿ ಈ ಸಂಪ್ರದಾಯ ಬದಲಾಗಲಿದೆ. ನಿಗದಿತ ಸಮಯಕ್ಕೆ ಬದಲಾಗಿ ಅರ್ಧ ಗಂಟೆ ಮೊದಲೇ ಪಂದ್ಯ ಆರಂಭಗೊಳ್ಳಲಿದೆ. ಇದಕ್ಕೆ ಕಾರಣ ಈ ಪ್ರದೇಶದಲ್ಲಿ ಸೂರ್ಯಾಸ್ತವು ಬೇಗನೇ ಆಗುತ್ತದೆ. ಆದ್ದರಿಂದ ಟೆಸ್ಟ್ ಪಂದ್ಯದ […]
ಕಾಶ್ಮೀರ ಟೈಮ್ಸ್ ಪತ್ರಿಕಾ ಕಚೇರಿಯ ಮೇಲೆ ದಾಳಿ……!
ಶ್ರೀನಗರ: ಜಮ್ಮುವಿನಲ್ಲಿರುವ ಕಾಶ್ಮೀರ ಟೈಮ್ಸ್ ಪತ್ರಿಕೆಯ ಕಚೇರಿಯ ಮೇಲೆ ನಡೆದ ದಾಳಿಯಲ್ಲಿ ಎ.ಕೆ. ರೈಫಲ್ ಗುಂಡುಗಳು, ಕಾರ್ಟ್ರಿಡ್ಜ್ಗಳು, ಪಿಸ್ತೂಲ್ ಗುಂಡುಗಳು ಮತ್ತು 3 ಗ್ರೆನೇಡ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ದೇಶದ ಸಾರ್ವಭೌಮತೆಗೆ ಧಕ್ಕೆ ತರುವ ವಿಚಾರವನ್ನು ಪ್ರಚಾರ ಮಾಡಿದ ಆರೋಪದ ಮೇಲೆ ರಾಜ್ಯ ತನಿಖಾ ಸಂಸ್ಥೆ (SIA) ಜಮ್ಮುವಿನ ರೆಸಿಡೆನ್ಸಿ ರಸ್ತೆಯಲ್ಲಿರುವ ಪತ್ರಿಕೆಯ ಕಚೇರಿಯ ಮೇಲೆ ದಾಳಿ ನಡೆಸಿತು. ಪತ್ರಿಕೆಗೆ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಾದ ನಂತರ ಎಸ್ಐಎ ಅಧಿಕಾರಿಗಳು […]
ತಂದೆ ಮಾಡಿದ ತಪ್ಪಿಗೆ ಮಗಳ ಮೇಲೆ ಲೈಂಗಿಕ ದೌರ್ಜನ್ಯ
ಕಾರವಾರ ತಂದೆ ಪಡೆದ ಸಾಲ ಮರುಕಳಿಸದ್ದಕ್ಕೆ 10 ವರ್ಷದ ಮಗಳ ಮೇಲೆ ವ್ಯಕ್ತಿಯೋರ್ವ ಲೈಂಗಿಕ ದೌರ್ಜನ್ಯವೆಸಗಿರುವಂತಹ ಘಟನೆ ಜಿಲ್ಲೆಯ ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮತೀನ್ ಎಂಬಾತನಿಂದ ದೌರ್ಜನ್ಯವೆಸಗಲಾಗಿದೆ. ಸದ್ಯ ಶಿರಸಿ ಗ್ರಾಮಾಂತರ ಠಾಣೆಗೆ ಬಾಲಕಿ ತಾಯಿ ದೂರು ನೀಡಿದ್ದು, ಆರೋಪಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ. ಬಾಲಕಿಯ ತಂದು ಸಂಘದಿಂದ ಪಡೆದ ಸಾಲ ಮರುಕಳಿಸದೆ ಸತಾಯಿಸುತ್ತಿದ್ದರಂತೆ. ಹೀಗಾಗಿ ಕೊಟ್ಟ ಸಾಲ ವಾಪಸ್ ಕೇಳಲು ಆರೋಪಿ ಮತೀನ್ ನಿನ್ನೆ ಸಂಜೆ […]
ಬೀದರ್: ಹೈವೇನಲ್ಲಿ ಸಿನಿಮೀಯ ಶೈಲಿಯಲ್ಲಿ ದರೋಡೆ…..!
ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದ ರಾಷ್ಟ್ರೀಯ ಹೆದ್ದಾರಿ 65ರ ಮಂಠಾಳ ಕ್ರಾಸ್ ಹತ್ತಿರ ದರೋಡೆ ನಡೆದಿದೆ. ಮಹಾರಾಷ್ಟ್ರ ಮೂಲದ ವ್ಯಕ್ತಿಗೆ ಜೀವ ಬೆದರಿಕೆ ಹಾಕಿ ಬರೋಬ್ಬರಿ 23 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನು ದರೋಡೆಕೋರರು ಲೂಟಿ ಮಾಡಿ ಪರಾರಿಯಾಗಿರುವಂತಹ ಘಟನೆ ನಡೆದಿದೆ. ಸದ್ಯ ದೂರು ದಾಖಲಿಸಿಕೊಂಡು ಬಸವಕಲ್ಯಾಣ ನಗರ ಠಾಣೆ ಪೊಲೀಸರು ದರೋಡೆಕೋರರ ಪತ್ತೆಗೆ ಜಾಲ ಬೀಸಿದ್ದಾರೆ. ಬುಧವಾರ ಸೊಲ್ಲಾಪುರ-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ ಮೇಲೆ ಸಿನಿಮೀಯ ಶೈಲಿಯಲ್ಲಿ ದರೋಡೆ ನಡೆದಿದೆ. 8 ಜನ […]
ಕುನೋದಲ್ಲಿ ಐದು ಮರಿಗಳಿಗೆ ಜನ್ಮ ನೀಡಿದ ಭಾರತದಲ್ಲಿ ಜನಿಸಿದ ಚೀತಾ
ಕುನೋ: ಮಧ್ಯಪ್ರದೇಶದ ಕುನೋ ನೈಟೋನಲ್ ಪಾರ್ಕ್ನಲ್ಲಿರುವ ಭಾರತದಲ್ಲಿ ಜನಿಸಿದ ಮೊದಲ ಹೆಣ್ಣು ಚೀತಾ ಮುಖಿ ಐದು ಮರಿಗಳಿಗೆ ಜನ್ಮ ನೀಡುವುದರೊಂದಿಗೆ ಭಾರತಕ್ಕೆ ಚೀತಾಗಳನ್ನು ಮರುಪರಿಚಯಿಸುವ ಯೋಜನೆಯು ಒಂದು ಪ್ರಮುಖ ಮೈಲಿಗಲ್ಲನ್ನು ಸಾಧಿಸಿದೆ.33 ವರ್ಷದ ಮುಖಿ ಭಾರತದಲ್ಲಿ ಪ್ರಾಜೆಕ್ಟ್ ಚೀತಾ ಅಡಿಯಲ್ಲಿ ಸ್ಥಳಾಂತರಗೊಂಡ ನಮೀಬಿಯಾದ ಹೆಣ್ಣು ಚೀತಾಗೆ ಜನಿಸಿದೆ. ಇದೊಂದು “ಐತಿಹಾಸಿಕ ಮೈಲಿಗಲ್ಲು. ಭಾರತದಲ್ಲಿ ಜನಿಸಿದ ಚೀತಾ ಮುಖಿ 5 ಮರಿಗಳಿಗೆ ಜನ್ಮ ನೀಡಿದೆ. ಭಾರತಕ್ಕೆ ಚೀತಾಗಳನ್ನು ಮರುಪರಿಚಯ ಉಪಕ್ರಮದಲ್ಲಿ ಒಂದು ಸಂತೋಷಕರ […]
ಶಶಿ ತರೂರ್ ಗೆ ಕಾಂಗ್ರೆಸ್ ತರಾಟೆ…..!
ನವದೆಹಲಿ: ತಿರುವನಂತಪುರಂ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಪ್ರಧಾನಿ ನರೇಂದ್ರ ಮೋದಿಯವರ ಇತ್ತೀಚಿನ ರಾಮನಾಥ್ ಗೋಯೆಂಕಾ ಉಪನ್ಯಾಸವನ್ನು ಶ್ಲಾಘಿಸುವ ಮೂಲಕ ಪಕ್ಷದಲ್ಲಿ ಮತ್ತೊಮ್ಮೆ ವಿವಾದ ಹುಟ್ಟುಹಾಕಿದ್ದಾರೆ.ಕಳೆದ ಮಂಗಳವಾರ X ನಲ್ಲಿ ಪೋಸ್ಟ್ ಮಾಡಲಾದ ಅವರ ಹೇಳಿಕೆಗೆ ಕಾಂಗ್ರೆಸ್ ನಾಯಕರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅವರು ಪ್ರಧಾನಿಯವರ ಆಲೋಚನೆಗಳು ಶ್ಲಾಘನೀಯವೆಂದು ಭಾವಿಸುವುದಾದರೆ ಕಾಂಗ್ರೆಸ್ನಲ್ಲಿ ಏಕೆ ಇದ್ದಾರೆ? ಎಂದು ಪ್ರಶ್ನಿಸಿದ್ದಾರೆ. “ನಿಮ್ಮ ಪ್ರಕಾರ, ಯಾರಾದರೂ ಕಾಂಗ್ರೆಸ್ ನೀತಿಗಳಿಗೆ ವಿರುದ್ಧವಾಗಿ ದೇಶಕ್ಕೆ ಒಳ್ಳೆಯದನ್ನು ಮಾಡುತ್ತಿದ್ದರೆ, ನೀವು […]
ರಷ್ಯಾದಿಂದ ತೈಲ ಖರೀದಿಯನ್ನು ಭಾರತ ಸ್ಥಗಿತಗೊಳಿಸಲಿದೆಯೇ…….?
ದೆಹಲಿ 2025ರ ನವೆಂಬರ್ 21ರಿಂದ ಅಂದರೆ ಶುಕ್ರವಾರದಿಂದಲೇ ರಷ್ಯಾದಿಂದ ಭಾರತಕ್ಕೆ ಕಚ್ಚಾ ತೈಲ ಬಂದ್ ಆಗಲಿದೆಯೇ? ನಡು ಸಮುದ್ರದಲ್ಲಿ 11 ಹಡಗಗುಗಳು ಅತಂತ್ರವಾಗಿದೆಯೇ? ಹಾಗಾದರೆ ಏನಾಗಲಿದೆ? ಮುಂತಾದ ಪ್ರಶ್ನೆ ಕಾಡುತ್ತಿದೆ. ಈ ಬಗ್ಗೆ ಹಲವರಲ್ಲಿ ಗೊಂದಲ, ಆತಂಕವೂ ಕಾಡುತ್ತಿದೆ. ಹಾಗಾದರೆ ವಾಸ್ತವ ಏನು? ನೋಡೋಣ ಬನ್ನಿ. ಮೊದಲನೆಯದಾಗಿ ರಷ್ಯಾದಿಂದ ಭಾರತಕ್ಕೆ ನವೆಂಬರ್ 21ರಿಂದ ಸಂಪೂರ್ಣವಾಗಿ ಕಚ್ಚಾ ತೈಲ ಬಂದ್ ಆಗುವುದಿಲ್ಲ. ಆದರೆ ರಿಲಯನ್ಸ್ ಇಂಡಸ್ಟ್ರೀಸ್, ಭಾರತ್ ಪೆಟ್ರೋಲಿಯಂ, ಹಿಂದೂಸ್ತಾನ್ ಪೆಟ್ರೋಲಿಯಂ, ಎಂಆರ್ಪಿಎಲ್, ಎಚ್ಪಿಸಿಎಲ್ನಂತಹ ಪ್ರಮುಖ […]
ಕಿಲ್ಲರ್ BMTC ಗೆ ಮತ್ತೊಂದು ಬಲಿ …..!
ಬೆಂಗಳೂರು: ಬಿಎಂಟಿಸಿ ಬಸ್ಗೆ ಇಂದು ಮತ್ತೊಬ್ಬರನ್ನು ಬಲಿ ಪಡೆದುಕೊಂಡಿದೆ. ಮಡಿವಾಳದ ಪೊಲೀಸ್ ಠಾಣೆ ಹತ್ತಿರ ನಡೆದುಕೊಂಡು ಹೋಗುತ್ತಿದ್ದ ವೃದ್ಧನ ಮೇಲೆ ಬಸ್ ಹರಿದಿದ್ದು, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಡಿವಾಳ ನಿವಾಸಿ ವೆಂಕಟರಾಮಯ್ಯ ಮೃತ ವ್ಯಕ್ತಿ. ಘಟನೆಗೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಜನರು ಅಕ್ರೋಶ ಹೊರಹಾಕಿದ್ದಾರೆ. ವೃದ್ಧನ ತಲೆ ಮೇಲೆಯೇ ಬಸ್ ಚಕ್ರಗಳು ಹರಿದಿದ್ದು, ತಲೆ ಛಿದ್ರವಾಗಿದೆ. ಮಡಿವಾಳ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ […]
ಕ್ಯಾಬ್ಗಳಲ್ಲಿ 112 ತುರ್ತು ಸಹಾಯವಾಣಿ ಸ್ಟಿಕ್ಕರ್ ಅಂಟಿಸಲು ಸೂಚನೆ……!
ಬೆಂಗಳೂರು: ಪ್ರಯಾಣಿಕ ಸುರಕ್ಷತೆಗೆ ಮತ್ತಷ್ಟು ಒತ್ತು ನೀಡಲು ಪೊಲೀಸ್ ಇಲಾಖೆ ಹೆಚ್ಚಿನ ಕ್ರಮ ಕೈಗೊಂಡಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುವ ಕ್ಯಾಬ್ಗಳು ತುರ್ತು ಸಂಖ್ಯೆ 112 ಮತ್ತು ಕರ್ನಾಟಕ ರಾಜ್ಯ ಪೊಲೀಸ್ (KSP) ಮೊಬೈಲ್ ಅಪ್ಲಿಕೇಶನ್ ಬಗ್ಗೆ ಮಾಹಿತಿಯನ್ನು ಹೊಂದಿರುವ ಸ್ಟಿಕ್ಕರ್ಗಳನ್ನು ಪ್ರದರ್ಶಿಸಬೇಕೆಂದು ಪೊಲೀಸರು ಹೊಸ ಸುರಕ್ಷತಾ ನಿಯಮವನ್ನು ಪರಿಚಯಿಸಿದ್ದಾರೆ. ಸಾರ್ವಜನಿಕ ಸುರಕ್ಷತೆಯನ್ನು ಸುಧಾರಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಮಹಿಳಾ ಪ್ರಯಾಣಿಕರ ಮೇಲೆ ನಿರ್ದಿಷ್ಟ ಗಮನ ಹರಿಸಲಾಗಿದೆ. ಸ್ಪಷ್ಟವಾಗಿ ಗೋಚರಿಸುವ ತುರ್ತು ವಿವರಗಳು […]
ರೋಕೊ ಟೆಸ್ಟ್ಗೆ ವಿದಾಯಕ್ಕೆ ಗಂಭೀರ್ ಕಾರಣ : ಮನೋಜ್ ತಿವಾರಿ
ನವದೆಹಲಿ: ಭಾರತ ತಂಡದ ಮಾಜಿ ನಾಯಕರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರು ಟೆಸ್ಟ್ ಕ್ರಿಕೆಟ್ನಲ್ಲಿ ಮುಂದುವರಿಯಲು ಬಯಸಿದ್ದರು. ಆದರೆ, ಈ ಇಬ್ಬರೂ ದಿಗ್ಗಜರು ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳವಂತಹ ಕೆಟ್ಟ ವಾತಾವರಣವನ್ನು ತಂಡದಲ್ಲಿ ರೂಪಿಸಲಾಗಿದೆ ಎಂದು ಮಾಜಿ ಕ್ರಿಕೆಟಿಗ ಮನೋಜ್ ತಿವಾರಿ ಗಂಭೀರ ಆರೋಪ ಮಾಡಿದ್ದಾರೆ. ಆ ಮೂಲಕ ಹೆಡ್ ಕೋಚ್ ಗೌತಮ್ ಗಂಭೀರ್ ವಿರುದ್ಧ ಪರೋಕ್ಷವಾಗಿ ಆರೋಪ ಮಾಡಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಅಂದರೆ 2025ರ […]
ನಾಗರಿಕ ಸಮಾಜದಲ್ಲಿ ಇಂತಹ ಪದ್ಧತಿಗೆ ಅವಕಾಶ ನೀಡಬೇಕೆ? : ಸುಪ್ರೀಂ ಪ್ರಶ್ನೆ
ನವದೆಹಲಿ ಮುಸ್ಲಿಂಸಮುದಾಯದಲ್ಲಿ ಸಾಮಾನ್ಯವಾಗಿ ಕಂಡುಬರುವ ವಿಚ್ಛೇದನ ಪ್ರಕ್ರಿಯೆಯಾದ ತಲಾಖ್-ಎ-ಹಸನ್ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಾಗರಿಕ ಸಮಾಜದಲ್ಲಿ ಈ ಪದ್ಧತಿಗೆ ಅವಕಾಶ ನೀಡಬಹುದೇ ಎಂದು ನ್ಯಾಯಾಲಯ ಪ್ರಶ್ನಿಸಿದೆ. ಪತಿಯ ಉಪಸ್ಥಿತಿಯಿಲ್ಲದೆ ವಕೀಲರ ಮೂಲಕ ವಿಚ್ಛೇದನ ಪ್ರಕ್ರಿಯೆಗಳನ್ನು ಒಳಗೊಂಡ ಪ್ರಕರಣವನ್ನು ಸುಪ್ರೀಂ ಕೋರ್ಟ್ ಪ್ರಸ್ತುತ ವಿಚಾರಣೆ ನಡೆಸುತ್ತಿದೆ. ಮುಸ್ಲಿಂ ಪುರುಷರು ತ್ರಿವಳಿ ತಲಾಖ್ ಮೂಲಕ ತಮ್ಮ ಪತ್ನಿಯರಿಗೆ ವಿಚ್ಛೇದನ ನೀಡುವ ಪದ್ಧತಿಯನ್ನು ಸುಪ್ರೀಂ ಕೋರ್ಟ್ ಬುಧವಾರ ಪ್ರಶ್ನಿಸಿದೆ. ವಿಚ್ಛೇದನ ನೋಟಿಸ್ನಲ್ಲಿ […]
ಫೈನಲ್ಗೆ ಭಾರತದ 15 ಬಾಕ್ಸರ್ಗಳ ಪ್ರವೇಶ !
ನವದೆಹಲಿ: ಹಾಲಿ ವಿಶ್ವ ಚಾಂಪಿಯನ್ ಜಾಸ್ಮಿನ್ ಲಂಬೋರಿಯಾ ಮತ್ತು ಎರಡು ಬಾರಿ ವಿಶ್ವ ಚಾಂಪಿಯನ್ ನಿಖತ್ ಜರೀನ್ ಆತಿಥೇಯ ಭಾರತವನ್ನು 2025ರ ವಿಶ್ವ ಬಾಕ್ಸಿಂಗ್ ಕಪ್ ಫೈನಲ್ಗೆ ತಲುಪಿಸಿದ್ದಾರೆ. ಗುರುವಾರದ ಪ್ರಶಸ್ತಿ ಸುತ್ತಿನಲ್ಲಿ ದಾಖಲೆಯ 15 ಬಾಕ್ಸರ್ಗಳನ್ನು ಚಿನ್ನದ ಪದಕದ ಪಂದ್ಯಗಳಿಗೆ ಕಳುಹಿಸುವ ಮೂಲಕ ಭಾರತ ಇತಿಹಾಸ ನಿರ್ಮಿಸಿದೆ. ಶಹೀದ್ ವಿಜಯ್ ಸಿಂಗ್, ಪಥಿಕ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಎಲೈಟ್ ಎಂಟು-ಮಾತ್ರ ಸ್ಪರ್ಧೆಯಲ್ಲಿ ಯಾವುದೇ ದೇಶವು ಫೈನಲ್ಗೆ ತಲುಪಿದ ಅತ್ಯಧಿಕ ಸಂಖ್ಯೆ ಇದಾಗಿದೆ. […]
ಭ್ರಷ್ಟಾಚಾರ ನಡೆದಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ :ಡಿ ಕೆ ಶಿವಕುಮಾರ್
ಬೆಂಗಳೂರು: ಜೆಡಿಎಸ್ ಅವರ ಯೋಗ್ಯತೆಗೆ ಒಂದು ಕೆಲಸ ಮಾಡಿಲ್ಲ. ತುಂಗಭದ್ರಾ ಅಣೆಕಟ್ಟಿನ ಗೇಟ್ ಕಿತ್ತು ಹೋದಾಗ ಒಂದೇ ವಾರದಲ್ಲಿ ಗೇಟ್ ದುರಸ್ತಿ ಮಾಡಲಾಗಿದೆ. ಜೆಡಿಎಸ್ ಅವರಿಗೆ ಏನೂ ಮಾಡಲು ಆಗಿಲ್ಲ. ಈಗ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಡಿಸಿಎಂಡಿ.ಕೆ. ಶಿವಕುಮಾರ್ ಹರಿಹಾಯ್ದರು. ‘ನೀಲಿ ದಳ’ ಹಾಗೂ ರೋಬೋಟಿಕ್ ತಂತ್ರಜ್ಞಾನ ಬಳಕೆಗೆ ಚಾಲನೆ ನೀಡಿದ ನಂತರ ಮಾಧ್ಯಮಗಳಿಗೆ ಬುಧವಾರ ಅವರು ಪ್ರತಿಕ್ರಿಯೆ ನೀಡಿದರು. ಎರಡನೇ ಬೆಳೆಗೆ ತುಂಗಭದ್ರಾ ನೀರು […]
ಬಯಲಾಗುತ್ತಾ ಜೆಫ್ರಿ ಫೈಲ್ಸ್ನಲ್ಲಿರುವ ಅತೀ ದೊಡ್ಡ ಲೈಂಗಿಕ ಹಗರಣ……?
ವಾಷಿಂಗ್ಟನ್: ವಿಶ್ವದಾದ್ಯಂತ ಭಾರೀ ಚರ್ಚೆಯನ್ನು ಹುಟ್ಟು ಹಾಕಿದ್ದ ಜೆಫ್ರಿ ಎಪ್ಸ್ಟೀನ್ ಫೈಲ್ಗೆ ಇನ್ನು ತೆರೆ ಬೀಳಲಿದೆ. ರಾಜಕೀಯ ಒತ್ತಡಕ್ಕೆ ಮಣಿದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶಿಕ್ಷೆಗೊಳಗಾದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ಗೆ ಸಂಬಂಧಿಸಿದ ಎಲ್ಲಾ ಕಡತಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡುವಂತೆ ತಮ್ಮ ಆಡಳಿತಕ್ಕೆ ಆದೇಶಿಸುವ ಮಸೂದೆಗೆ ಸಹಿ ಹಾಕಿರುವುದಾಗಿ ಘೋಷಿಸಿದ್ದಾರೆ. ಎಪ್ಸ್ಟೀನ್ ಫೈಲ್ಸ್ ಟ್ರಾನ್ಸ್ಪರೆನ್ಸಿ ಆಕ್ಟ್ ಎಂದು ಕರೆಯಲ್ಪಡುವ ಈ ಮಸೂದೆಯು, ಎಪ್ಸ್ಟೀನ್ ಪ್ರಕರಣದ ತನಿಖೆಯ ಕುರಿತು ಎಲ್ಲಾ ಮಾಹಿತಿಯನ್ನು “ಹುಡುಕಬಹುದಾದ ಮತ್ತು […]
ಭಾರತದ ಅತ್ಯಾಧುನಿಕ e-passports: ನೀವು ತಿಳಿದುಕೊಳ್ಳಬೇಕಾದ ವಿಷಯಗಳು
ನವದೆಹಲಿ: ದೇಶಾದ್ಯಂತ ಇ-ಪಾಸ್ಪೋರ್ಟ್ಗಳನ್ನು ಪರಿಚಯಿಸುವುದರೊಂದಿಗೆ, ಭದ್ರತೆಯನ್ನು ಹೆಚ್ಚಿಸಲು ಮತ್ತು ಜಾಗತಿಕ ಚಲನಶೀಲತೆಯನ್ನು ಸುಗಮಗೊಳಿಸಲು ವಿನ್ಯಾಸಗೊಳಿಸಲಾದ ಪ್ರಮುಖ ತಾಂತ್ರಿಕ ಅಪ್ಗ್ರೇಡ್ ಭಾರತದ ಪಾಸ್ ಪೋರ್ಟ್ ನಲ್ಲಿ ವ್ಯವಸ್ಥೆಯಾಗಿದೆ .ಪಾಸ್ಪೋರ್ಟ್ ಸೇವಾ ಕಾರ್ಯಕ್ರಮ (PSP) ಆವೃತ್ತಿ 2.0 ರ ಅಡಿಯಲ್ಲಿ ಪರಿಚಯಿಸಲಾದ ಈ ಉಪಕ್ರಮವು ದೇಶದಲ್ಲಿ ಕೈಗೊಂಡ ಅತ್ಯಂತ ಮಹತ್ವಾಕಾಂಕ್ಷೆಯ ಇ-ಆಡಳಿತ ಯೋಜನೆಗಳಲ್ಲಿ ಒಂದಾಗಿದೆ. ಇದು ಅತ್ಯಾಧುನಿಕ ಡಿಜಿಟಲ್ ಪರಿಕರಗಳನ್ನು ಪ್ರಯಾಣ ದಾಖಲಾತಿ ವ್ಯವಸ್ಥೆಯಲ್ಲಿ ಸಂಯೋಜಿಸುತ್ತದೆ. ಇ-ಪಾಸ್ಪೋರ್ಟ್ನ ಮೂಲತತ್ವವೆಂದರೆ ಹಿಂಬದಿಯ ಕವರ್ನಲ್ಲಿ ಹುದುಗಿರುವ ಸಂಪರ್ಕವಿಲ್ಲದ […]
ಲಾಲು ಕುಟುಂಬದ ‘ಆಪ್ತ’ನನ್ನು ಬಂಧಿಸಿದ ED
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುಗ್ರಾಮದಲ್ಲಿ ಮನೆ ಖರೀದಿದಾರರಿಗೆ ವಂಚಿಸಿದ ಆರೋಪದ ಮೇಲೆ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ ಕುಟುಂಬಕ್ಕೆ ಆಪ್ತ ಎಂದು ಪರಿಗಣಿಸಲಾದ ರಿಯಲ್ ಎಸ್ಟೇಟ್ ಉದ್ಯಮಿ ಅಮಿತ್ ಕಟ್ಯಾಲ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕಟ್ಯಾಲ್ ಅವರನ್ನು ಸೋಮವಾರ ಸಂಸ್ಥೆಯ ಗುರುಗ್ರಾಮ ವಲಯ ಕಚೇರಿಯು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್ಎ) ಅಡಿಯಲ್ಲಿ ವಶಕ್ಕೆ ತೆಗೆದುಕೊಂಡಿದೆ ಎಂದು ಅವರು […]
ಬೆಂಗಳೂರಿನಲ್ಲಿ ಹಾಡಹಗಲೇ 7 ಕೋಟಿ ರೂ. ಹಣ ದರೋಡೆ; ಗ್ಯಾಂಗ್ ಪರಾರಿ!
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ ಬರೋಬ್ಬರಿ 7 ಕೋಟಿ 11 ಲಕ್ಷ ರೂಪಾಯಿ ನಗದು ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಬುಧವಾರ ನಡೆದಿದೆ.ಇಂದು ಮಧ್ಯಾಹ್ನ ಜಯದೇವ ಡೇರಿ ಸರ್ಕಲ್ ಬಳಿ ದರೋಡೆ ನಡೆದಿದ್ದು, ಇನ್ನೋವಾ ಕಾರಿನಲ್ಲಿ ಬಂದ ದರೋಡೆಕೋರರ ಗ್ಯಾಂಗ್ ಏಕಾಏಕಿ ಎಟಿಎಂಗೆ ಹಣ ಹಾಕಲು ಹೊರಟಿದ್ದ ವಾಹನ ತಡೆದು 7.11 ಕೋಟಿ ರೂಪಾಯಿ ಹಣ ದರೋಡೆ ಮಾಡಿ ಪರಾರುಯಾಗಿದೆ. ಬೆಂಗಳೂರಿನ ಸುದ್ದಗುಂಟೆಪಾಳ್ಯ ಠಾಣೆ ವ್ಯಾಪ್ತಿಯಲಿ ಘಟನೆ […]
ಇಂದಿರಾ ಗಾಂಧಿ ಯವರ 108ನೇ ಜನ್ಮ ದಿನಾಚರಣೆಯ ಹಿನ್ನಲೆಯಲ್ಲಿ ಆಹಾರ ಸಚಿವ ಕೆಹೆಚ್. ಮುನಿಯಪ್ಪ ಪುಷ್ಪ ನಮನ ಸಲ್ಲಿಸಿದರು
ನವದೆಹಲಿ: ಭಾರತದ ಶಕ್ತಿ, ಸ್ಫೂರ್ತಿ ಮತ್ತು ದೃಢ ನಾಯಕತ್ವದ ಪ್ರತಿರೂಪರಾದ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿಯವರ 108ನೇ ಜನ್ಮಜಯಂತಿಯನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತದೆ ಈ ಸಂದರ್ಭದಲ್ಲಿ ಆಹಾರ ಸಚಿವ ಕೆ. ಹೆಚ್. ಮುನಿಯಪ್ಪ ರವರು ನವದೆಹಲಿಯ ಶಕ್ತಿ ಸ್ಥಳದಲ್ಲಿ ಇಂದಿರಾ ಗಾಂಧಿಯ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಗೌರವ ಸಲ್ಲಿಸಿದರು. “ರಾಷ್ಟ್ರದ ಪ್ರಗತಿ, ಏಕತೆ ಮತ್ತು ಸಾಮರ್ಥ್ಯವನ್ನು ಬಲಪಡಿಸಲು ಶ್ರೀಮತಿ ಇಂದಿರಾ ಗಾಂಧಿ ಯವರು ಮಾಡಿದ ಅಪರೂಪದ ಕೊಡುಗೆಗಳು ಇಂದಿಗೂ ನಮ್ಮ ರಾಷ್ಟ್ರಕ್ಕೆ ದಾರಿದೀಪವಾಗಿವೆ. […]
ಪ್ರತಿರೋಧದ ಬಳಿಕ ಪುರುಷೋತ್ತಮ ಬಿಳಿಮಲೆ ಕ್ಷಮೆಯಾಚನೆ……!
ಮೈಸೂರು: ಯಕ್ಷಗಾನ ಕಲಾವಿದರಲ್ಲಿ ಬಹುತೇಕರಲ್ಲಿ ಸಲಿಂಗಕಾಮ ಪ್ರವೃತ್ತಿ ಬೆಳೆಯುತ್ತಿತ್ತು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದಕ್ಕೆ ವ್ಯಾಪಕ ಪ್ರತಿರೋಧ ವ್ಯಕ್ತವಾದ ಬಳಿಕ ಕ್ಷಮೆಯಾಚನೆ ಮಾಡಿದ್ದಾರೆ. ಯಕ್ಷಗಾನ ಕಲಾವಿದರು, ಅಭಿಮಾನಿಗಳು, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ಅನೇಕರು ಈ ಹೇಳಿಕೆಯನ್ನು ಖಂಡಿಸಿದ್ದರು. ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು ಇರುತ್ತಿದ್ದರು. ಅಲ್ಲಿ ಅಂತಹ ಅನಿವಾರ್ಯತೆ ಇತ್ತು. ಯಕ್ಷಗಾನ ಕಲಾವಿದರೊಳಗೆ ಎಷ್ಟೋ ಬಾರಿ ಹೋಮೋಸೆಕ್ಸ್ ಬೆಳೀತಿತ್ತು ಎಂದು […]
ನಾಳೆ ನಿತೀಶ್ ಕುಮಾರ್ ಬಣದ ಪ್ರಮಾಣವಚನ ಫಿಕ್ಸ್……!
ಪಟನಾ: ಬಿಹಾರದಲ್ಲಿ ಹೊಸ ಎನ್ಡಿಎ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ನಾಳೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಇಪ್ಪತ್ತೆರಡು ಸಚಿವರು ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆಯಿದೆ ಎಂದು ಆಡಳಿತ ಒಕ್ಕೂಟದ ಉನ್ನತ ಮೂಲಗಳು ತಿಳಿಸಿವೆ. ಬಿಜೆಪಿಯ ಒಂಬತ್ತು ಶಾಸಕರು, ಜೆಡಿಯುನ 10 ಶಾಸಕರು ಮತ್ತು ಚಿರಾಗ್ ಪಾಸ್ವಾನ್ ಅವರ ಎಲ್ಜೆಪಿ , ಜಿತನ್ ರಾಮ್ ಮಾಂಝಿ ಅವರ ಹಿಂದೂಸ್ತಾನಿ ಅವಾಮಿ ಮೋರ್ಚಾ ಮತ್ತು ಉಪೇಂದ್ರ ಕುಶ್ವಾಹ ಅವರ ರಾಷ್ಟ್ರೀಯ ಲೋಕ ಮೋರ್ಚಾದಿಂದ ತಲಾ ಒಬ್ಬರು […]
ಸಿದ್ದರಾಮಯ್ಯ ಪ್ರಶಸ್ತಿಗೆ ಸುಶೀಲಾ ಸುಬ್ರಹ್ಮಣ್ಯ, ನೀಳಾ ಎಂ.ಎಚ್ ಆಯ್ಕೆ
ಬೆಂಗಳೂರು: ಕರ್ನಾಟಕ ಪತ್ರಕರ್ತೆಯರ ಸಂಘ ನೀಡುವ ಸಿಎಂ ಸಿದ್ದರಾಮಯ್ಯ ಹೆಸರಿನ 2024-25ನೇ ಸಾಲಿನ ದತ್ತಿನಿಧಿ ಪ್ರಶಸ್ತಿ ಹಿರಿಯ ಪತ್ರಕರ್ತೆಯರಾದ ಸುಶೀಲಾ ಸುಬ್ರಹ್ಮಣ್ಯ ಹಾಗೂ ನೀಳಾ ಎಂ.ಎಚ್. ಅವರಿಗೆ ದೊರೆತಿದೆ. ನಲವತ್ತು ವರ್ಷಗಳಿಂದ ʼಸದರ್ನ್ ಎಕನಾಮಿಸ್ಟ್ʼ ಪತ್ರಿಕೆ ನಡೆಸುತ್ತಿರುವ ಹಿರಿಯ ಪತ್ರಕರ್ತೆ ಸುಶೀಲಾ ಸುಬ್ರಹ್ಮಣ್ಯ ಹಾಗೂ ‘ಪ್ರಜಾವಾಣಿʼ ಪತ್ರಿಕೆಯ ಮುಖ್ಯ ಉಪಸಂಪಾದಕಿ ನೀಳಾ ಎಂ.ಎಚ್. 2025ನೇ ಸಾಲಿನ ಸಿದ್ದರಾಮಯ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು, ತಮ್ಮದೇ ಹೆಸರಿನಲ್ಲಿ ಪ್ರಶಸ್ತಿ ಪ್ರಕಟಿಸಲು ದತ್ತಿನಿಧಿ […]
Delhi Blast : ಪಾಕಿಸ್ತಾನ, ದುಬೈನಿಂದ ಮಾಡ್ಯೂಲ್ ನಿರ್ವಹಿಸುತ್ತಿದ್ದ ಉಗ್ರರು……!
ನವದೆಹಲಿ: ದೆಹಲಿ ಸ್ಫೋಟಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ ಜೊತೆ ಸಂಪರ್ಕ ಹೊಂದಿರುವ ಭಯೋತ್ಪಾದಕ ಮಾಡ್ಯೂಲ್ ಬಗ್ಗೆ ತನಿಖೆ ನಡೆಯುತ್ತಿರುವಾಗ, ಗಡಿಯಾಚೆಯಿಂದ ಆನ್ಲೈನ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಕಳೆದ 48 ಗಂಟೆಗಳಲ್ಲಿ, ಜಮ್ಮುವಿನ ಪೂಂಚ್, ರಾಜೌರಿ, ದೋಡಾ ಮತ್ತು ಕಿಶ್ತ್ವಾರ್ ಜಿಲ್ಲೆಗಳಲ್ಲಿ ಹಲವಾರು ಸಾಮಾಜಿಕ ಮಾಧ್ಯಮ ಹ್ಯಾಂಡಲ್ಗಳು ಮತ್ತು ಫೋನ್ ಸಂಖ್ಯೆಗಳು ಯುವಕರನ್ನು ಗುರಿಯಾಗಿಸಲು ಉಗ್ರರು ಪ್ರಯತ್ನಿಸಿವೆ ಎಂದು ತಿಳಿದು ಬಂದಿದೆ. ಈ ಖಾತೆಗಳು ಮತ್ತು ಸಂಖ್ಯೆಗಳು ಪಾಕಿಸ್ತಾನ, ಪಾಕ್ ಆಕ್ರಮಿತ ಕಾಶ್ಮೀರ ಮತ್ತು ದುಬೈ […]
ಫಡ್ನವೀಸ್ ನೇತೃತ್ವದ ಸಂಪುಟ ಸಭೆ ‘ಬಹಿಷ್ಕರಿಸಿದ’ಶಿಂಧೆ ಸಚಿವರು!
ಮುಂಬೈ: ಮಹಾರಾಷ್ಟ್ರದ ಆಡಳಿತಾರೂಢ ಮಹಾಯುತಿ ಮೈತ್ರಿಕೂಟದಲ್ಲಿನ ಬಿರುಕು ಮತ್ತಷ್ಟು ದೊಡ್ಡದಾಗಿದ್ದು, ಡೊಂಬಿವಲಿಯ ಸೇನಾ ನಾಯಕರೊಬ್ಬರನ್ನು ಬಿಜೆಪಿಗೆ ಸೇರಿಸಿಕೊಳ್ಳುವುದನ್ನು ವಿರೋಧಿಸಿ, ಮಂಗಳವಾರ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಸಚಿವರು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ವಾರದ ಸಚಿವ ಸಂಪುಟ ಸಭೆಯನ್ನು ಬಹಿಷ್ಕರಿಸಿದ್ದಾರೆ. ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುನ್ನ ಮಹಾಯುತಿ ಮೈತ್ರಿಕೂಟದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ನಾಸಿಕ್ ಜಿಲ್ಲೆಯ ಯೆಯೋಲಾದಲ್ಲಿ ಶಿಂಧೆ ಅವರ ಶಿವಸೇನೆಯು ಪ್ರತಿಪಕ್ಷದ ಭಾಗವಾಗಿರುವ ಎನ್ಸಿಪಿ(ಎಸ್ಪಿ) ಜೊತೆ ಕೈಜೋಡಿಸಲು […]
ಬೆಂಗಳೂರು ಪಿಜಿ ಮಾಲೀಕರಿಗೆ GBA ಶಾಕ್……!
ಬೆಂಗಳೂರು: ಪೂರ್ವ ನಗರ ಪಾಲಿಕೆ ದಿಟ್ಟ ನಿರ್ಧಾರ ಕೈಗೊಂಡಿದ್ದು, ತನ್ನ ವ್ಯಾಪ್ತಿಯಲ್ಲಿ ಉದ್ದಿಮೆ ಪರವಾನಗಿ ಪಡೆಯದೇ ಎಸ್.ಒ.ಪಿ ಮಾನದಂಡಗಳನ್ನು ಉಲ್ಲಂಘಿಸಿ, ಕಾನೂನುಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ 14 ವಸತಿ ಗೃಹಗಳಿಗೆ ಬೀಗ ಜಡಿದಿದೆ. ನವೆಂಬರ್ 10-15 ರವರೆಗೆ ವ್ಯಾಪಾರ ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ ಪಿಜಿಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸುವಂತೆ ಪಾಲಿಕೆ ಆರೋಗ್ಯ ಅಧಿಕಾರಿಗಳಿಗೆ ಆದೇಶಿಸಿರುವುದಾಗಿ ಪೂರ್ವ ನಗರ ಪಾಲಿಕೆ ಆಯುಕ್ತರಾದ ಡಿ.ಎಸ್.ರಮೇಶ್ ಅವರು ತಿಳಿಸಿದ್ದಾರೆ. ವಸತಿ ಪ್ರದೇಶಗಳಲ್ಲಿ ನಿಯಮಬಾಹಿರವಾಗಿ ವಾಣಿಜ್ಯ/ವಸತಿಯೇತರ ಚಟುವಟಿಕೆಗಳನ್ನು ನಡೆಸುತ್ತಿರುವ […]
ನಾಗರಹೊಳೆಯಲ್ಲಿ ಚೈನ್ ಲಿಂಕ್ ಮೆಶ್ ಅಳವಡಿಕೆ..!
ಮೈಸೂರು: ಹೆಚ್ಚುತ್ತಿರುವ ಮಾನವ-ವನ್ಯಜೀವಿ ಸಂಘರ್ಷವನ್ನು ಪರಿಹರಿಸುವ ಪ್ರಯತ್ನದಲ್ಲಿ, ಅರಣ್ಯ ಅಧಿಕಾರಿಗಳು ಮೈಸೂರಿನ ಎಚ್ಡಿ ಕೋಟೆ ತಾಲ್ಲೂಕಿನ ನಾಗರಹೊಳೆ ಹುಲಿ ಮೀಸಲು ಪ್ರದೇಶದಲ್ಲಿ 13 ಕಿ.ಮೀ. ಉದ್ದಕ್ಕೂ ಚೈನ್ ಲಿಂಕ್ ಮೆಶ್ ಅಳವಡಿಸಲು ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ. ಈ ತಡೆಗೋಡೆಯನ್ನು ಪ್ರಸ್ತುತ ಪ್ರಾಯೋಗಿಕವಾಗಿ ನಿರ್ಮಿಸಲಾಗುತ್ತಿದ್ದು, ಈ ಪ್ರಯೋಗ ಯಶಸ್ವಿಯಾದರೆ, ಮತ್ತಷ್ಟು ವಿಸ್ತರಿಸಿ 10 ಅಡಿ ಎತ್ತರಕ್ಕೆ ಏರಿಸಿ ಅಳವಡಿಸಲಾಗುವುದು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.ಯೋಜನೆಯು ಆರಂಭಿಕ ಹಂತದಲ್ಲಿದ್ದರೂ, ಜಾಲರಿ ಬೇಲಿ ಬಲವಾದ ಭೌತಿಕ ನಿರೋಧಕವಾಗಿ […]
ಕಾರ್ಕಳ: ಜನಿವಾರ -ಮಣಿಕಟ್ಟಿನ ದಾರದ ವಿಚಾರಕ್ಕೆ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕಿರುಕುಳ; ದೈಹಿಕ ಶಿಕ್ಷಕ ವಜಾ
ಉಡುಪಿ: ವಿದ್ಯಾರ್ಥಿಗಳು ಧರಿಸುತ್ತಿದ್ದ ಧಾರ್ಮಿಕ ಚಿಹ್ನೆಗಳನ್ನು ತೆಗೆಸಿದ ಆರೋಪದಲ್ಲಿ ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅತಿಥಿ ಶಿಕ್ಷಕರೊಬ್ಬರನ್ನು ವಜಾಗೊಳಿಸಲಾಗಿದೆ. ಮೊರಾರ್ಜಿ ದೇಸಾಯಿ ಇಂಗ್ಲಿಷ್ ಮಾಧ್ಯಮ ವಸತಿ ಶಾಲೆಯ ಪ್ರಾಂಶುಪಾಲರು ಸೋಮವಾರ ಅತಿಥಿ ಶಿಕ್ಷಕ ಮದರಶಾ ಎಸ್ ಮಕಂದಾರ್ ಅವರನ್ನು ವಜಾಗೊಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ಅನಿಯಮಿತವಾಗಿ ಬಸ್ಕಿ ಹೊಡೆಸುವುದು, ಜನಿವಾರ ಮತ್ತು ಕೈಗೆ ಕಟ್ಟಿರುವ ದಾರ ತೆಗೆಯುವಂತೆ ಸೂಚಿಸುತ್ತಿದ್ದರು ಎಂದು ಪೋಷಕರು ಆರೋಪಿಸಿದ್ದಾರೆ. ವಿದ್ಯಾರ್ಥಿಗಳು ಶಿಕ್ಷಕರ ವರ್ತನೆಯನ್ನು ವರದಿ ಮಾಡಿದ ನಂತರ ವಿವಾದ ಭುಗಿಲೆದ್ದಿತು. […]

21 C