SENSEX
NIFTY
GOLD
USD/INR

Weather

25    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source

BIG NEWS: ನಿರ್ಮಾಪಕ ಕನಕಪುರ ಶ್ರೀನಿವಾಸ್ ಹೇಳಿಕೆಗೆ ನಟ ಕಿಚ್ಚ ಸುದೀಪ್ ಖಡಕ್ ಮಾತು

ಬೆಂಗಳೂರು: ಇತ್ತೀಚೆಗೆ ನಿರ್ಮಾಪಕ ಕನಕಪುರ ಶ್ರೀನಿವಾಸ್ ಕನ್ನಡ ಚಿತ್ರರಂಗದ ಹಲವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಅಶ್ಲೀಲವಾಗಿ ಮಾತನಾಡಿದ್ದರು. ಇದೇ ವಿಚಾರವಾಗಿ ಇದೀಗ ನಟ ಕಿಚ್ಚ ಸುದೀಪ್ ಪ್ರತಿಕ್ರಿಯಿಸಿದ್ದಾರೆ. ಕೆಲ ದಿನಗಳ ಹಿಂದೆ ಕನಕಪುರ ಶ್ರೀನಿವಾಸ್, ಡಿ.ಕೆ ಶಿವಕುಮಾರ್, ಧ್ರುವ ಸರ್ಜಾ, ಎ.ಪಿ. ಅರ್ಜುನ್, ಜೋಗಿ ಪ್ರೇಮ್, ಪುನೀತ್ ರಾಜ್​ಕುಮಾರ್ ಸೇರಿದಂತೆ ಹಲವರ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದರು. ಪ್ರೇಮ್ ಹಾಗೂ ಅರ್ಜುನ್ ಜನ್ಯಾ ವಿರುದ್ಧ ವಂಚನೆ ಆರೋಪವನ್ನೂ ಮಾಡಿದ್ದರು. ಇದಕ್ಕೆ ಚಿತ್ರರಂಗದಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ. ಇದೀಗ ಸಿಸಿಎಲ್ […]

ಕನ್ನಡ ದುನಿಯಾ 8 Feb 2026 12:00 pm

ಎಲ್ಲ ವಸತಿ ನಿಲಯಗಳಲ್ಲಿ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಕಡ್ಡಾಯ

ಮಹಿಳೆಯರಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಮಹಿಳಾ ಆಯೋಗವು ಸದಾ ಸಿದ್ದವಾಗಿದ್ದು, ಮಹಿಳೆಯರ ರಕ್ಷಣೆಗೆ ಹಾಗೂ ಮಹಿಳೆಯರಿಗೆ ಕಾನೂನಾತ್ಮಕ ನೆರವು ನೀಡಲು ಬದ್ಧವಾಗಿರುತ್ತದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮೀ ಚೌಧರಿ ಅವರು ಹೇಳಿದರು. ಕೊಪ್ಪಳ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಹಮ್ಮಿಕೊಂಡಿದ್ದ ಪ್ರವಾಸ ಕಾರ್ಯಕ್ರಮದಲ್ಲಿ ಗಮನಿಸಿದ ಅಂಶಗಳು, ಸಮಸ್ಯೆಗಳ ಕುರಿತು ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡಲು ಕೊಪ್ಪಳ ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರದಂದು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. […]

ಕನ್ನಡ ದುನಿಯಾ 8 Feb 2026 11:59 am

BREAKING: ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಪತ್ನಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಅರೆಸ್ಟ್

ಮಂಗಳೂರು: ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಪತ್ನಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಶರಣ್ ರೈ (29) ಬಂಧಿತ ಆರೋಪಿ. ಶಾಸಕ ವೇದವ್ಯಾಸ್ ಕಾಮತ್ ಪತ್ನಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದ. ಈ ಬಗ್ಗೆ ಮಹಿಳೆಯೊಬ್ಬರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿ ಶರಣ್ ರೈನನ್ನು ಬಂಧಿಸಲಾಗಿದೆ. ಅಧಿವೇಶನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಹಾಗೂ ಬಿಇಜೆಪಿ […]

ಕನ್ನಡ ದುನಿಯಾ 8 Feb 2026 11:42 am

ಮದುವೆ ಆಮಂತ್ರಣ ಪತ್ರಿಕೆ ಕೊಡಲು ಹೋಗುತ್ತಿದ್ದಾಗಲೇ ಘೋರ ದುರಂತ: ಕಾರ್ ಡಿಕ್ಕಿಯಾಗಿ ವರ ಸೇರಿ ಮೂವರು ಸಾವು

ರೇವಾ: ಮಧ್ಯಪ್ರದೇಶದ ರೇವಾದಲ್ಲಿ ವೇಗವಾಗಿ ಬಂದ ಆಡಿ ಕಾರ್ ಬೈಕ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ರಾಯ್‌ಪುರ್ ಕರ್ಚುಲಿಯನ್ ಪೊಲೀಸ್ ವ್ಯಾಪ್ತಿಯ ರೇವಾ-ಪ್ರಯಾಗರಾಜ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಮೃತರು, ತಂದೆ, ಅವರ ಮಗ ಮತ್ತು ಮಹಿಳಾ ಸಂಬಂಧಿ, ಮದುವೆ ಆಮಂತ್ರಣ ಪತ್ರಿಕೆಗಳನ್ನು ತಲುಪಿಸುತ್ತಿದ್ದ ಮೋಟಾರ್ ಸೈಕಲ್‌ನಲ್ಲಿ ಹೋಗುತ್ತಿದ್ದಾಗ ಅವರ ವಾಹನಕ್ಕೆ ಕಾರ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ರೇವಾದಿಂದ ಸುಮಾರು 20 ಕಿಲೋಮೀಟರ್ ದೂರದಲ್ಲಿರುವ ಕೋಸ್ಟಾ ಜಿಯುಲಾ ತಿರುವಿನ ಬಳಿ ಅಪಘಾತ […]

ಕನ್ನಡ ದುನಿಯಾ 8 Feb 2026 11:29 am

ಖಾಸಗಿ ಶಾಲೆಗಳಲ್ಲಿ ಉಚಿತ ಸೀಟು: ಆರ್.ಟಿ.ಇ. ಅಡಿ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ(ಆರ್‌ಟಿಇ) ಅಡಿ ಖಾಸಗಿ ಶಾಲೆಗಳಲ್ಲಿ ಶೇಕಡ 25 ರಷ್ಟು ಉಚಿತ ಸೀಟು ಪಡೆಯಲು ಶಾಲಾ ಶಿಕ್ಷಣ ಇಲಾಖೆ 2026- 27 ನೇ ಸಾಲಿನ ಅರ್ಜಿ ಸಲ್ಲಿಕೆ ಮತ್ತು ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ನೆರೆಹೊರೆಯ ಎಲ್ಲಾ ಶಾಲೆಗಳ ಪಟ್ಟಿಯನ್ನು ಫೆಬ್ರವರಿ 12ರಂದು ಬಿಡುಗಡೆ ಮಾಡಲಿದ್ದು, ಇದಕ್ಕೆ ಆಕ್ಷೇಪಣೆಗಳಿದ್ದಲ್ಲಿ ಫೆಬ್ರವರಿ 16ರೊಳಗೆ ಸಲ್ಲಿಸಬಹುದು. ಫೆಬ್ರವರಿ 18ರಂದು ನೆರೆಹೊರೆ ಶಾಲೆಗಳ ಅಂತಿಮ ಪಟ್ಟಿ ನೀಡಲಾಗುವುದು. ಎಲ್ಕೆಜಿ ಮತ್ತು ಒಂದನೇ ತರಗತಿ ಪ್ರವೇಶಕ್ಕೆ ಖಾಸಗಿ […]

ಕನ್ನಡ ದುನಿಯಾ 8 Feb 2026 11:18 am

BIG NEWS: ಬಳ್ಳಾರಿಯಲ್ಲಿ ಉತ್ಖನನದ ವೇಳೆ 5000 ವರ್ಷಗಳ ಹಿಂದಿನ ಮಾನವನ ಅಸ್ಥಿಪಂಜರ ಪತ್ತೆ

ಬಳ್ಳಾರಿ: ಗದಗ ಜಿಲ್ಲೆಯ ಐತಿಹಾಸಿಕ ಸ್ಥಳ ಲಕ್ಕುಂಡಿಯ ವೀರಭದ್ರಸ್ವಾಮಿ ದೇವಾಲಯದ ಬಳಿ ನಡೆಯುತ್ತಿರುವ ಉತ್ಖನನದ ವೇಳೆ ಮುತ್ತು, ಹವಳ, ಅಮೂಲ್ಯ ವಸ್ತುಗಳು, ಪುರಾತನ ವಸ್ತುಗಳು, ದೇವರ ವಿಗ್ರಹ ಪತ್ತೆಯಾಗುತ್ತಿರುವುದು ಸಾಕಷ್ಟು ಕುತೂಹಲ ಮೂಡಿಸಿತ್ತು. ಇದರ ನಡುವೆಯೇ ಬಳ್ಳಾರಿಯಲ್ಲಿ ನಡೆಯುತ್ತಿರುವ ಉತ್ಖನನದ ವೇಳೆ 5000 ವರ್ಷಗಳ ಹಿಂದಿನ ಮಾನವನ ಅಸ್ಥಿಪಂಜರ ಪತ್ತೆಯಾಗಿದೆ. ಬಳ್ಳಾರಿ ಜಿಲ್ಲೆಯ ತೆಕ್ಕಲಕೋಟೆ ಪಟ್ಟಣದ ಗೌಡ್ರ ಮೂಲೆ ಬೆಟ್ಟದಲ್ಲಿ ಉತ್ಖನನ ನಡೆಸುತ್ತಿದ್ದ ವೇಳೆ ಸುಮಾರು 3-5 ಸಾವಿರ ವರ್ಷಗಳ ಹಿಂದಿನ ಮಾನವ ಅಸ್ಥಿಪಂಜರಗಳು ಪತ್ತೆಯಾಗಿದೆ. ಕಳೆದ […]

ಕನ್ನಡ ದುನಿಯಾ 8 Feb 2026 11:17 am

ನೀವು ನೀಡಿದ ಒಂದು ಯುನಿಟ್ ರಕ್ತ ದೇಹದಲ್ಲಿ ಮರುಪೂರಣವಾಗಲು ಎಷ್ಟು ಸಮಯ ಬೇಕು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ರಕ್ತದಾನ ಮಾಡುವುದು ಒಂದು ಪುಣ್ಯದ ಕೆಲಸ. ಇದು ಕೇವಲ ರೋಗಿಯ ಜೀವ ಉಳಿಸುವುದು ಮಾತ್ರವಲ್ಲದೆ, ದಾನಿಯ ಆರೋಗ್ಯದ ಮೇಲೂ ಧನಾತ್ಮಕ ಪರಿಣಾಮ ಬೀರುತ್ತದೆ. ಆದರೆ ಮೊದಲ ಬಾರಿಗೆ ರಕ್ತದಾನ ಮಾಡುವವರಲ್ಲಿ “ನನ್ನ ದೇಹದಲ್ಲಿ ರಕ್ತದ ಕೊರತೆಯಾಗಬಹುದೇ?” ಅಥವಾ “ನಾನು ಸುಸ್ತಾಗಿ ಬಿದ್ದುಬಿಡುತ್ತೇನೆಯೇ?” ಎಂಬ ಆತಂಕವಿರುವುದು ಸಹಜ. ಆದರೆ ವಾಸ್ತವದಲ್ಲಿ, ರಕ್ತದಾನ ಮಾಡಿದ ಕ್ಷಣದಿಂದಲೇ ನಮ್ಮ ದೇಹವು ಅತ್ಯಂತ ವೇಗವಾಗಿ ಚೇತರಿಸಿಕೊಳ್ಳಲು ಆರಂಭಿಸುತ್ತದೆ. ನಮ್ಮ ದೇಹವು ರಕ್ತದಾನದ ನಂತರದ ಮೊದಲ 24 ಗಂಟೆಗಳಲ್ಲಿ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದು ನಿಜಕ್ಕೂ […]

ಕನ್ನಡ ದುನಿಯಾ 8 Feb 2026 11:00 am

ಅಕ್ಷಯ್ ಖನ್ನಾ ಜೊತೆ ಫ್ಲರ್ಟ್ ಮಾಡಿದ್ದ ಕಂಗನಾ ರಣಾವತ್; ನಟನ ಸಕ್ಸಸ್ ನಡುವೆಯೇ ವೈರಲ್ ಆಗುತ್ತಿದೆ ಕಿರಿಕ್ ಸುಂದರಿಯ ಹಳೆಯ ವೀಡಿಯೋ

ಬಾಲಿವುಡ್‌ನ ವಿವಾದಾತ್ಮಕ ಮತ್ತು ನೇರನುಡಿಯ ನಟಿ ಕಂಗನಾ ರಣಾವತ್ ಹಾಗೂ ನಟ ಅಕ್ಷಯ್ ಖನ್ನಾ ನಡುವಿನ ಹಳೆಯ ಘಟನೆಯೊಂದರ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಕಂಗನಾ ರಣಾವತ್ ನೀಡಿದ ಹೇಳಿಕೆಯೊಂದು ಇದೀಗ ಸಿನಿಮಾ ಪ್ರೇಮಿಗಳ ನಡುವೆ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ಹಲವು ವರ್ಷಗಳ ಹಿಂದೆ ಕರಣ್ ಜೋಹರ್ ಅವರ ಚಾಟ್ ಶೋನಲ್ಲಿ ಭಾಗವಹಿಸಿದ್ದ ಕಂಗನಾ, ಶೂಟಿಂಗ್ ಸೆಟ್‌ನಲ್ಲಿ ಅಕ್ಷಯ್ ಖನ್ನಾ ಅವರ ವ್ಯಕ್ತಿತ್ವ ಹೇಗಿರುತ್ತದೆ ಎಂಬುದನ್ನು ಹಂಚಿಕೊಂಡಿದ್ದರು. ‘ನೋ ಪ್ರಾಬ್ಲಂ’ ಚಿತ್ರದ ಚಿತ್ರೀಕರಣದ […]

ಕನ್ನಡ ದುನಿಯಾ 8 Feb 2026 10:45 am

BREAKING: ಸೊಸೆಯನ್ನೇ ವೇಶ್ಯಾವಾಟಿಕೆಗೆ ಒತ್ತಾಯಿಸಿದ ಅತ್ತೆ: ಮನನೊಂದ ಮಹಿಳೆ ಆತ್ಮಹತ್ಯೆ

ಬೀದರ್: ಇದೆಂತಹ ಅಮಾನುಷ ಘಟನೆ. ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ ಅತ್ತೆ ಬರಬರುತ್ತಾ ಸೊಸೆಯನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಿದ್ದು, ಮನನೊಂದ ಗೃಹಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಬೀದರ್ ನ ಓಂ ಬಡಾವಣೆಯಲ್ಲಿ ಅತ್ತೆ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂಜನಾಬಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. 2022ರಲ್ಲಿ ಅಂಜನಾಬಾಯಿ ಶೇಖರ್ ಎಂಬಾತನ ಜೊತೆ ವಿವಾಹವಾಗಿದ್ದರು. ಎರಡೂ ಕುಟುಂಬ ನೋಡಿಯೇ ಮಾಡಿದ್ದ ಮದುವೆ. ಮದುವೆ ಬಳಿಕ ಪತಿ ಹಾಗೂ ಅತ್ತೆ ಕಿರಿಕಿರಿ ಮಾಡುತ್ತಿದ್ದರು. ವರದಕ್ಷಿಣೆ […]

ಕನ್ನಡ ದುನಿಯಾ 8 Feb 2026 10:41 am

ಕ್ಲಾಸಿಗೆ ಲೇಟಾಗಿ ಬಂದಿದ್ದಕ್ಕೆ ಪ್ರಶ್ನಿಸಿದ ಶಿಕ್ಷಕಿಗೆ ಕಪಾಳಮೋಕ್ಷ ಮಾಡಿದ ವಿದ್ಯಾರ್ಥಿ: ವಿಡಿಯೋ ವೈರಲ್ ಬೆನ್ನಲ್ಲೇ ಸಾರ್ವಜನಿಕರ ಆಕ್ರೋಶ

ಗುಜರಾತ್‌ನ ಪಂಚಮಹಲ್ ಜಿಲ್ಲೆಯ ಶಾಲೆಯೊಂದರಲ್ಲಿ ಶಿಕ್ಷಕ ಮತ್ತು ವಿದ್ಯಾರ್ಥಿಯ ಪವಿತ್ರ ಸಂಬಂಧಕ್ಕೆ ಕಪ್ಪುಚುಕ್ಕೆ ಹಚ್ಚುವಂತಹ ಘಟನೆ ನಡೆದಿದೆ. 12ನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ತಡವಾದ ಆಗಮನವನ್ನು ಪ್ರಶ್ನಿಸಿದ ಶಿಕ್ಷಕಿಯ ಮೇಲೆ ಹಲ್ಲೆ ನಡೆಸಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ ಮತ್ತು ಆಕ್ರೋಶಕ್ಕೆ ಕಾರಣವಾಗಿವೆ. ಸಿಸಿಟಿವಿ ದೃಶ್ಯಗಳ ಪ್ರಕಾರ, ಮೊಹಮ್ಮದ್ ಖಾನ್ ಅನ್ಸಾರಿ ಎಂಬ ವಿದ್ಯಾರ್ಥಿಯು ಪರೀಕ್ಷಾ ಕೊಠಡಿಗೆ ತಡವಾಗಿ ಬಂದಿದ್ದನು. ಈ ವೇಳೆ ಅಲ್ಲಿದ್ದ ಮೇಲ್ವಿಚಾರಕ ಶಿಕ್ಷಕಿ ತಡವಾಗಿ ಬಂದಿದ್ದಕ್ಕೆ […]

ಕನ್ನಡ ದುನಿಯಾ 8 Feb 2026 10:39 am

BREAKING: ಪಾರ್ಟಿ ವೇಳೆ ಸ್ಪಿರೀಟ್ ಕುಡಿದು ಅಸ್ವಸ್ಥರಾಗಿದ್ದ ಇಬ್ಬರು ಯುವಕರು ಸಾವು

ಕೊಪ್ಪಳ: ಪಾರ್ಟಿಯಲ್ಲಿ ಸ್ಪಿರೀಟ್ ಸೇವಿಸಿ ತೀವ್ರವಾಗಿ ಅಸ್ವಸ್ಥರಾಗಿದ್ದ ನಾಲ್ವರಲ್ಲಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ ಕೂಕನಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಫೆಬ್ರವರಿ 4೪ರಂದು ಕೂಕನಳ್ಳಿಯಲ್ಲಿ ಪಾರ್ಟಿ ಮಾಡಿದ್ದ ನಾಲ್ಕೈದು ಯುವಕರು ಸ್ಪಿರೀಟ್ ಕುಡಿದಿದ್ದರು. ಸ್ಪಿರೀಟ್ ಸೇವಿಸಿದ್ದ ನಾಲ್ವರು ಯುವಕರು ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ನಾಲ್ವರನ್ನೂ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು. ಇದೀಗ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಓರ್ವ ಯುವಕ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಯುವಕ ಚಿಕಿತ್ಸೆ ಫಲಿಸದೇ […]

ಕನ್ನಡ ದುನಿಯಾ 8 Feb 2026 10:17 am

ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪಕ್ಕೆ ಶಾಸಕ ತನ್ವೀರ್ ಸೇಠ್ ಅಸಮಾಧಾನ: ಕಾರ್ಯಕ್ರಮದಿಂದ ಹೊರ ನಡೆಯಲು ಮುಂದಾದಾಗ ತಡೆದ ಗೃಹ ಸಚಿವ

ಮೈಸೂರು: ಮುಖ್ಯಮಂತ್ರಿ ಸಿದದ್ರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪ ವಿಚಾರ ಇದೀಗ ಮತ್ತೆ ಭಾರಿ ಸುದ್ದಿಗೆ ಗ್ರಾಸವಾಗಿದೆ. ಇಂಧನ ಸಚಿವ ಕೆ.ಜೆ.ಜಾರ್ಜ್ ಬಳಿಕ ಇದೀಗ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಕೂಡ ಅಸಮಾಧಾನಗೊಂಡಿದ್ದಾರೆ. ಪೊಲೀಸ್ ಠಾಣೆ ಉದ್ಘಾಟನೆ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್​ ಶಾಸಕ ತನ್ವೀರ್ ಸೇಠ್ ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಬಳಿ ಅಸಮಾಧಾನ ವ್ಯಕ್ತಪಡಿಸಿ ಕಾರ್ಯಕ್ರಮದಿಂದಲೇ ಹೊರ ನಡೆಯಲು ಮುಂದಾಗಿದ್ದ ಘಟನೆ ನಡೆದಿದೆ. ಈ ವೇಳೆ ಸಚಿವ ಪರಮೇಶ್ವರ್​​ […]

ಕನ್ನಡ ದುನಿಯಾ 8 Feb 2026 9:50 am

ಚಿರತೆಗೂ MRI ಸ್ಕ್ಯಾನಿಂಗ್: ಕಾಲಿನ ಸ್ವಾಧೀನ ಕಳೆದುಕೊಂಡ ‘ಭದ್ರ’ನಿಗೆ ತಪಾಸಣೆ

ಶಿವಮೊಗ್ಗ: ನಗರದ ನಂಜಪ್ಪ ಆಸ್ಪತ್ರೆಗೆ ಶುಕ್ರವಾರ ತಡರಾತ್ರಿ ಲಯನ್ ಸಫಾರಿಯ ಚಿರತೆಯೊಂದನ್ನು ಎಂಆರ್‍ಐ ಸ್ಕ್ಯಾನಿಂಗ್‍ಗೆ ತಂದ ಅಪರೂಪದ ಘಟನೆ ನಡೆದಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ ವನ್ಯಜೀವಿ ವಿಭಾಗದ ಡಿಎಫ್‍ಒ ಡಾ|| ಅಮರಾಕ್ಷರ್ ಮಾಹಿತಿ ನೀಡಿದ್ದು, ಲಯನ್ ಸಫಾರಿಯಲ್ಲಿ ಭದ್ರ ಎನ್ನುವ 14 ವರ್ಷದ ಚಿರತೆ ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಕುಂಟುತ್ತಾ ನಡೆಯುತ್ತಿತ್ತು. ಮೊನ್ನೆಯಿಂದ ಎದ್ದು ನಿಲ್ಲದ ಸ್ಥಿತಿಯಲ್ಲಿತ್ತು. ತಕ್ಷಣ ನಾವು ಅದನ್ನು ಉಳಿಸುವ ನಿಟ್ಟಿನಲ್ಲಿ ಎಂಆರ್‍ಐ ಸ್ಕ್ಯಾನಿಂಗ್ ಮೂಲಕ ಅದರ […]

ಕನ್ನಡ ದುನಿಯಾ 8 Feb 2026 9:45 am

ಬೆಂಗಳೂರಿನಲ್ಲಿ ನಶೆಯಲ್ಲಿ ಕಾರಿಗೆ ಬೈಕ್ ಗುದ್ದಿ ಯುವತಿಯರ ರಂಪಾಟ: ಪೊಲೀಸರ ಮೇಲೂ ಹಲ್ಲೆಗೆ ಯತ್ನ

ಬೆಂಗಳೂರು: ವೀಕೆಂಡ್ ಹಿನ್ನೆಲೆಯಲ್ಲಿ ಕಂಠ ಪೂರ್ತಿ ಕುಡಿದು ಮಧ್ಯದ ಅಮಲಿನಲ್ಲಿ ಯುವತಿಯರಿಬ್ಬರು ರಸ್ತೆಯಲ್ಲಿಯೇ ಕಿರಿಕ್ ಮಾಡಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಹುಳಿಮಾವು ಬಳಿ ನಡೆದಿದೆ. ನಶೆಯಲ್ಲಿ ಬೈಕ್ ಚಲಾಯಿಸುತ್ತಿದ್ದ ಯುವತಿಯರಿಬ್ಬರು ಮಧ್ಯರಾತ್ರಿ ಹುಳಿಮಾವು ಬಳಿ ಕ್ಯಾಬ್ ಗೆ ಬೈಕ್ ಡಿಕ್ಕಿ ಹೊಡೆದಿದ್ದಾರೆ. ತಾವಾಗಿಯೇ ಕಾರಿಗೆ ಬೈಕ್ ಗುದ್ದಿ ನಡುರಸ್ತೆಯಲ್ಲಿ ರಂಪಾಟ ನಡೆಸಿದ್ದಾರೆ. ಕ್ಯಾಬ್ ಚಾಲಕ ಪ್ರಶ್ನೆ ಮಾಡಿದ್ದಾಕೆ ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಕ್ಯಾಬ್ ಚಾಲಕ ಹಾಗೂ ಯುವತಿಯರ ನಡುವೆ ಗಲಾಟೆ ಜೋರಾಗುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸ್ಥಳೀಯರ […]

ಕನ್ನಡ ದುನಿಯಾ 8 Feb 2026 9:18 am

BREAKING: ಲಗ್ನಪತ್ರಿಕೆ, ಹೊಸ ಸೀರೆ ತೋರಿಸಿ ಕೈಕೊಟ್ಟ ಪ್ರೀತಿಸಿದ ಯುವತಿ, ಬಾಡಿ ಬಿಲ್ಡರ್ ಆತ್ಮಹತ್ಯೆ

ಬೆಂಗಳೂರು: ಪ್ರೀತಿಸಿದ ಯುವತಿ ಕೈ ಕೊಟ್ಟಿದ್ದಕ್ಕೆ ಬಾಡಿ ಬಿಲ್ಡರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಡಿ ಬಿಲ್ಡರ್ ಕಿರಣ್(26) ಆತ್ಮಹತ್ಯೆ ಮಾಡಿಕೊಂಡವರು. ಮೂರು ವರ್ಷಗಳಿಂದ ಯುವತಿಯನ್ನು ಕಿರಣ್ ಪ್ರೀತಿಸುತಿದ್ದ. ವ್ಯಾಲೆಂಟೆನ್ಸ್ ಡೇ ದಿನ ಗಿಫ್ಟ್ ಕೊಡಲು ಕಿರಣ್ ಪ್ಲಾನ್ ಮಾಡಿಕೊಂಡಿದ್ದ. ಆದರೆ ಕಿರಣ್ ಬಿಟ್ಟು ಬೇರೆ ಯುವಕನೊಂದಿಗೆ ಯುವತಿ ಮದುವೆ ಫಿಕ್ಸ್ ಆಗಿದೆ. ಲಗ್ನಪತ್ರಿಕೆ ಮತ್ತು ಹೊಸ ಸೀರೆಯನ್ನು ಯುವತಿ ತೋರಿಸಿದ್ದಾರೆ. ಇದರಿಂದ ಮನನೊಂದು ಕಿರಣ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮಿಲೇಔಟ್ ನಲ್ಲಿರುವ ಮನೆಗೆ ಬಂದ ಕಿರಣ್ ಮನೆಯಲ್ಲಿ ನೇಣು […]

ಕನ್ನಡ ದುನಿಯಾ 8 Feb 2026 8:49 am

ಗುಡ್ ನ್ಯೂಸ್: ಬಿ ಖಾತಾ ನಿವೇಶನ ಮಾಲೀಕರಿಗೆ ಭೂಮಿ ಸ್ವಯಂ ಪರಿವರ್ತನೆ ತಂತ್ರಾಂಶ ಬಿಡುಗಡೆ

ಬೆಂಗಳೂರು: ಮಾಸ್ಟರ್ ಪ್ಲಾನ್ ಪ್ರದೇಶದಲ್ಲಿ ಪ್ರತ್ಯೇಕ ಭೂ ಪರಿವರ್ತನೆ ಅಗತ್ಯವಿಲ್ಲ. ಬಿ ಖಾತಾ ನಿವೇಶನ ಮಾಲೀಕರಿಗೆ ಭೂಮಿ ಸ್ವಯಂ ಪರಿವರ್ತನೆ ತಂತ್ರಾಂಶ ಬಿಡುಗಡೆ ಮಾಡಲಾಗಿದೆ. ಶನಿವಾರ ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಬಿಎ ವ್ಯಾಪ್ತಿಯ ಭೂಮಿ ಸ್ವಯಂ ಪರಿವರ್ತನೆ ನೂತನ ತಂತ್ರಾಂಶ ಬಿಡುಗಡೆಗೊಳಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಈ ಮಾಹಿತಿ ನೀಡಿದ್ದಾರೆ. ಮಾಸ್ಟರ್ ಪ್ಲಾನ್ ಪ್ರದೇಶದಲ್ಲಿ ಭೂಮಿಯನ್ನು ಸ್ವಯಂ ಪರಿವರ್ತನೆ ಮಾಡುವ ಅಗತ್ಯವಿಲ್ಲ. ನೇರವಾಗಿ ಯೋಜನೆಗೆ ಅನುಮೋದನೆ ಪಡೆದುಕೊಳ್ಳಬಹುದಾಗಿದೆ. ಯೋಜನಾ ಅನುಮೋದನೆಯ ಭಾಗವಾಗಿ ಪರಿವರ್ತನೆ ಮಾಡಲಾಗುವುದು. ಅಲ್ಲದೆ, […]

ಕನ್ನಡ ದುನಿಯಾ 8 Feb 2026 8:32 am

ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಜೀವ ಬೆದರಿಕೆ: ರೌಡಿಶೀಟರ್ ಅರೆಸ್ಟ್

ಬೆಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ರೌಡಿಶೀಟರ್ ಪಳನಿ ಅಲಿಯಾಸ್ ಕರ್ಚಿಫ್ ಪಳನಿಯನ್ನು ಪೊಲೀಸರು ಬಂಧಿಸಿದ್ದಾರೆ. ಫೆ. 5ರಂದು ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಗಳು, ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾದವರನ್ನು ಪರಿಶೀಲಿಸುತ್ತಿದ್ದ ವೇಳೆ ಆರೋಪಿ ಪೊಲೀಸರಿಗೆ ಬೆದರಿಕೆ ಹಾಕಿದ್ದ. ಅಶೋಕನಗರ, ಕೋಣನಕುಂಟೆ, ಕೆಎಸ್ ಲೇಔಟ್, ವಿಲ್ಸನ್ ಗಾರ್ಡನ್, ಬೆಳ್ಳಂದೂರು ಮತ್ತು ಇತರೆ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ಕಳ್ಳತನ ಸೇರಿ 15ಕ್ಕೂ ಹೆಚ್ಚು ಪ್ರಕರಣಗಳಲ್ಲಿ […]

ಕನ್ನಡ ದುನಿಯಾ 8 Feb 2026 7:59 am

BREAKING: ರಷ್ಯಾದಲ್ಲಿ ನಾಲ್ವರು ಭಾರತೀಯ ವಿದ್ಯಾರ್ಥಿಗಳು ಸೇರಿ ಆರು ಮಂದಿಗೆ ಚಾಕು ಇರಿತ

ಮಾಸ್ಕೋ: ರಷ್ಯಾದ ಬಾಷ್ಕೋರ್ಟೋಸ್ತಾನ್ ಗಣರಾಜ್ಯದ ವಿಶ್ವವಿದ್ಯಾಲಯವೊಂದರಲ್ಲಿ ಶನಿವಾರ ನಡೆದ ಇರಿತ ದಾಳಿಯಲ್ಲಿ ನಾಲ್ವರು ಭಾರತೀಯರು ಸೇರಿದಂತೆ ಆರು ಜನರು ಗಾಯಗೊಂಡಿದ್ದಾರೆ ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ಆರಂಭಿಕ ಮಾಹಿತಿಯ ಪ್ರಕಾರ, ಚಾಕು ಹೊಂದಿದ್ದ ಹದಿಹರೆಯದ ಬಾಲಕನೊಬ್ಬ ಉಫಾದಲ್ಲಿರುವ ರಾಜ್ಯ ವೈದ್ಯಕೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿ ನಿಲಯದೊಳಗೆ ಪ್ರವೇಶಿಸಿದ್ದಾನೆ. ಕಟ್ಟಡದಲ್ಲಿ ವಾಸಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿದ್ದಾನೆ. ಇದರಿಂದಾಗಿ ಅವರಲ್ಲಿ ಹಲವರಿಗೆ ಇರಿತದ ಗಾಯಗಳಾಗಿವೆ ಎಂದು ಆಂತರಿಕ ಸಚಿವಾಲಯ ತಿಳಿಸಿದೆ. ದಾಳಿಕೋರನ ಬಂಧಿಸಿದ್ದು, ಈ ಸಮಯದಲ್ಲಿ ಇಬ್ಬರು ಪೊಲೀಸ್ […]

ಕನ್ನಡ ದುನಿಯಾ 8 Feb 2026 7:48 am

BREAKING: ರೌಡಿಶೀಟರ್ ಡಿಚ್ಚಿ ಮುಬಾರಕ್ ಮೇಲೆ ಫೈರಿಂಗ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ಪೊಲೀಸರು ದರೋಡೆಗೆ ಹೊಂಚು ಹಾಕಿದ್ದ ರೌಡಿಶೀಟರ್ ಡಿಚ್ಚಿ ಮುಬಾರಕ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಶಿವನಿ ಕ್ರಾಸ್ ಬಳಿ ದರೋಡೆಗೆ ಹೊಂಚು ಹಾಕಿದ ವೇಳೆ ಪೊಲೀಸರು ದಾಳಿ ಮಾಡಿದ್ದು, ಬಂಧಿಸಲು ಮುಂದಾದಾಗ ಪೊಲೀಸರ ಮೇಲೆಯೇ ಆರೋಪಿಗಳು ಹಲ್ಲೆ ಮಾಡಿದ್ದಾರೆ. ಡಿಚ್ಚಿ ಮುಬಾರಕ್ ಮತ್ತು ಆತನ ಏಳೆಂಟು ಮಂದಿ ಸಹಚರರು ದರೋಡೆಗೆ ಹೊಂಚು ಹಾಕಿ ರಸ್ತೆಯಲ್ಲಿ ಕಾಯುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿದೆ. ಭದ್ರಾವತಿಯ ಹೊಸಮನೆ ಮತ್ತು ನ್ಯೂಟೌನ್ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಈ […]

ಕನ್ನಡ ದುನಿಯಾ 8 Feb 2026 7:30 am

ಕೋರ್ಟ್ ಗೆ ಅಲೆದಾಡಿ ಸಾಕಾದವರಿಗೆ ಗುಡ್ ನ್ಯೂಸ್: ಮಾ. 14 ರಂದು ದೇಶಾದ್ಯಂತ ಏಕಕಾಲದಲ್ಲಿ ವರ್ಷದ ಪ್ರಥಮ ‘ರಾಷ್ಟ್ರೀಯ ಲೋಕ ಅದಾಲತ್’

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, 2026 ರ ಮಾರ್ಚ್ 14 ರಂದು ದೇಶಾದ್ಯಂತ ಏಕಕಾಲದಲ್ಲಿ ವರ್ಷದ ಪ್ರಥಮ ‘ರಾಷ್ಟ್ರೀಯ ಲೋಕ ಅದಾಲತ್’ ಆಯೋಜಿಸಲಾಗಿದೆ ಎಂದು ದಾವಣಗೆರೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ತಿಳಿಸಿದ್ದಾರೆ. ರಾಷ್ಟ್ರೀಯ ಲೋಕ್ ಅದಾಲತ್ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಸುವರ್ಣಾವಕಾಶ ಕಲ್ಪಿಸಲಾಗಿದೆ. […]

ಕನ್ನಡ ದುನಿಯಾ 8 Feb 2026 7:15 am

BREAKING: ಕುಡಿದ ಮತ್ತಿನಲ್ಲಿ ಯುವತಿಯರ ರಂಪಾಟ: ಕ್ಯಾಬ್ ಚಾಲಕನ ಮೇಲೆ ಹಲ್ಲೆ

ಬೆಂಗಳೂರು: ಕುಡಿದ ಮತ್ತಿನಲ್ಲಿ ಕ್ಯಾಚ್ ಚಾಲಕನ ಮೇಲೆ ಯುವತಿಯರು ಹಲ್ಲೆ ಮಾಡಿದ್ದಾರೆ. ಬೆಂಗಳೂರಿನ ದೇವರ ಚಿಕ್ಕನಹಳ್ಳಿ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದೆ. ಜೆಸಿ ನಗರ ಮತ್ತು ಕೋರಮಂಗಲದ ಇಬ್ಬರು ಯುವತಿಯರು ಸ್ನೇಹಿತರ ಜೊತೆಗೆ ಖಾಸಗಿ ಹೋಟೆಲ್ ಗೆ ಬಂದಿದ್ದಾರೆ. ವಾಪಸ್ ಹೋಗುವಾಗ ಕ್ಯಾಬ್ ಚಾಲಕನ ಜೊತೆಗೆ ಕಿರಿಕ್ ಮಾಡಿದ್ದಾರೆ. ಹಿಂದಿನಿಂದ ಕ್ಯಾಬ್ ಗೆ ಬೈಕ್ ಡಿಕ್ಕಿ ಹೊಡೆಸಿದ್ದಾರೆ. ಈ ವೇಳೆ ಯುವತಿಯರನ್ನು ಕ್ಯಾಬ್ ಚಾಲಕ ಅಹ್ಮದ್ ಪ್ರಶ್ನಿಸಿದ್ದಾರೆ. ಆಗ ಕ್ಯಾಬ್ ಚಾಲಕನನ್ನು ನಿಂದಿಸಿ ಯುವತಿಯರು ಪರಾರಿಯಾಗಲೆತ್ನಿಸಿದ್ದಾರೆ. ಎಸ್ಕೇಪ್ […]

ಕನ್ನಡ ದುನಿಯಾ 8 Feb 2026 7:07 am

ಫೆ. 12 ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ದೇಶಾದ್ಯಂತ ಸಾರ್ವತ್ರಿಕ ಮುಷ್ಕರ: ಅಂಗನವಾಡಿ ಫೆಡರೇಷನ್‌ ಬೆಂಬಲ

ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಫೆಬ್ರವರಿ 12ರಂದು ನಡೆಯುವ ಸಾರ್ವತ್ರಿಕ ಮುಷ್ಕರದಲ್ಲಿ ಅಂಗನವಾಡಿ ಫೆಡರೇಷನ್ ಭಾಗವಹಿಸಲಿದೆ. ಎಐಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ಈ ಬಗ್ಗೆ ಮಾಹಿತಿ ನೀಡಿದೆ. ಫೆಡರೇಷನ್ ರಾಜ್ಯ ಕಾರ್ಯದರ್ಶಿ ಎಂ. ಜಯಮ್ಮ ಈ ಬಗ್ಗೆ ಹೇಳಿಕೆ ನೀಡಿದ್ದು, ಕಾರ್ಮಿಕ ವಿರೋಧಿ ಆಡಳಿತ ನಡೆಸುತ್ತಿರುವ ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ. 12ರಂದು ದೇಶವ್ಯಾಪಿ ಮುಷ್ಕರ ಕೈಗೊಳ್ಳಲಾಗಿದೆ. ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ನಲ್ಲಿ […]

ಕನ್ನಡ ದುನಿಯಾ 8 Feb 2026 6:35 am

T20 World Cup 2026: ಬಿದ್ದ ತಂಡದ ಕೈಹಿಡಿದ ಸೂರ್ಯ, ಬೌಲರ್ಸ್; ಯುಎಸ್ ವಿರುದ್ಧ ಗೆದ್ದ ಭಾರತ

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಟಿ ಟ್ವೆಂಟಿ ವಿಶ್ವಕಪ್ 2026ರ ಮೂರನೇ ಪಂದ್ಯದಲ್ಲಿ ಭಾರತ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ ವಿರುದ್ಧ 29 ರನ್‌ಗಳ ಗೆಲುವನ್ನು ದಾಖಲಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ ಫೀಲ್ಡಿಂಗ್ ಆರಿಸಿಕೊಂಡು ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 161 ರನ್ ಕಲೆಹಾಕಿ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾಗೆ […]

ಕನ್ನಡ ದುನಿಯಾ 7 Feb 2026 11:03 pm

T20 World Cup 2026: 115ಕ್ಕೆ 4, 147 ರನ್‌ಗೆ ಆಲ್‌ಔಟ್; ವಿಂಡೀಸ್ ವಿರುದ್ಧ ಸೋತ ಸ್ಕಾಟ್ಲೆಂಡ್

ಐಸಿಸಿ ಪುರುಷರ ಟಿ ಟ್ವೆಂಟಿ ವಿಶ್ವಕಪ್ 2026ರ ಎರಡನೇ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ವೆಸ್ಟ್ ಇಂಡೀಸ್ 35 ರನ್‌ಗಳ ಗೆಲುವನ್ನು ಸಾಧಿಸುವ ಮೂಲಕ ಶುಭಾರಂಭ ಮಾಡಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 182 ರನ್ ಕಲೆಹಾಕಿ ಸ್ಕಾಟ್ಲೆಂಡ್‌ಗೆ 183 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಸ್ಕಾಟ್ಲೆಂಡ್ 18.5 ಓವರ್‌ಗಳಲ್ಲಿ 147 ರನ್‌ಗಳಿಗೆ ಆಲ್‌ಔಟ್ ಆಯಿತು. ವೆಸ್ಟ್ ಇಂಡೀಸ್ […]

ಕನ್ನಡ ದುನಿಯಾ 7 Feb 2026 10:03 pm

ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ: ಮೂವರಿಗೆ ಗಲ್ಲು ಶಿಕ್ಷೆ ಕಾಯಂ

ಬೆಂಗಳೂರು: ಮಂಗಳೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗೆ ಕೊಲೆಗೈದ ಮೂವರು ಅಪರಾಧಿಗಳಿಗೆ ಸೆಷನ್ಸ್ ಕೋರ್ಟ್ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಹೈಕೋರ್ಟ್ ಕಾಯಂಗೊಳಿಸಿದೆ. ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಗಲ್ಲು ಶಿಕ್ಷೆ ದೃಢೀಕರಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ಮತ್ತು ಶಿಕ್ಷೆ ರದ್ದು ಮಾಡುವಂತೆ ಕೋರಿ ಅಪರಾಧಿಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ನೇತೃತ್ವದ ವಿಭಾಗೀಯ ಪೀಠದಲ್ಲಿ ನಡೆದಿದೆ. ದಕ್ಷಿಣ ಕನ್ನಡ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ(ಪೋಕ್ಸೊ) ವಿಧಿಸಿದ್ದ ಗಲ್ಲು ಶಿಕ್ಷೆಯನ್ನು […]

ಕನ್ನಡ ದುನಿಯಾ 7 Feb 2026 9:38 pm

T20 World Cup 2026: ಭಾರೀ ಮುಖಭಂಗದತ್ತ ಸಾಗಿದ್ದ ಭಾರತಕ್ಕೆ ಸೂರ್ಯ ಆಸರೆ; ಅಮೆರಿಕಾಗೆ ಪೈಪೋಟಿಯ ಗುರಿ

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ ಹಾಗೂ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ ನಡುವೆ ನಡೆಯುತ್ತಿರುವ ಐಸಿಸಿ ಟಿ ಟ್ವೆಂಟಿ ವಿಶ್ವಕಪ್ 2026ರ ಮೂರನೇ ಪಂದ್ಯದಲ್ಲಿ ಭಾರತ ರನ್‌ಗಳ 162 ಗುರಿಯನ್ನು ನೀಡಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ ಫೀಲ್ಡಿಂಗ್ ಆರಿಸಿಕೊಂಡು ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 161 ರನ್ ಕಲೆಹಾಕಿದೆ. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಅಭಿಷೇಕ್ […]

ಕನ್ನಡ ದುನಿಯಾ 7 Feb 2026 9:05 pm

BREAKING: ಒಂಟಿ ಸಲಗದ ದಾಳಿಗೆ ವ್ಯಕ್ತಿ ಬಲಿ: ರಸ್ತೆಯಲ್ಲೇ ಶವ ಇಟ್ಟು ಗ್ರಾಮಸ್ಥರ ಆಕ್ರೋಶ

ರಾಮನಗರ: ತಮಿಳುನಾಡು ಗಡಿಯಲ್ಲಿ ಆನೆ ದಾಳಿಯಿಂದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಬ್ಯಾಲಕೆರೆ ಗ್ರಾಮದ ಬಳಿ ಒಂಟಿ ಸಲಗದ ದಾಳಿಗೆ ವ್ಯಕ್ತಿ ಬಲಿಯಾಗಿದ್ದಾರೆ. ತಮಿಳುನಾಡು ಗಡಿಗೆ ಹೊಂದಿಕೊಂಡಿರುವ ಬ್ಯಾಲಕೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಆನೆ ದಾಳಿಯಿಂದ ಬ್ಯಾಲಕೆರೆಯ ವೆಂಕಟೇಶ್(58) ಸಾವನ್ನಪ್ಪಿದ್ದಾರೆ. ಗುಮ್ಮಳಾಪುರ ಗ್ರಾಮದ ರಸ್ತೆಯಲ್ಲಿ ಶವ ಇಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಡಾನೆ ಹಾವಳಿ ನಿಯಂತ್ರಿಸುತ್ತಿಲ್ಲವೆಂದು ದೂರಿದ್ದಾರೆ. ಮೃತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕನ್ನಡ ದುನಿಯಾ 7 Feb 2026 8:55 pm

SHOCKING: ಶಿವರಾತ್ರಿಗೆ 10 ಸಾವಿರ ರೂ. ಚಂದಾ ಹಣ ನೀಡದಿದ್ದಕ್ಕೆ ಯುವಕನಿಗೆ ಚಾಕುವಿನಿಂದ ತಿವಿದು ಹಲ್ಲೆ

ಬೀದರ್: ಶಿವರಾತ್ರಿಗೆ ಚಂದಾ ಹಣ ನೀಡದಿದ್ದಕ್ಕೆ ಯುವಕನ ಮೇಲೆ ತೀವ್ರವಾಗಿ ಹಲ್ಲೆ ಮಾಡಲಾಗಿದೆ. ಕೇಳಿದಷ್ಟು ಚಂದಾ ಕೊಡದಿರುವುದಕ್ಕೆ ನಾಲ್ಕೈದು ಯುವಕರು ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆ ಬೀದರ್ ನ ಮೈಲೂರು ಬಡಾವಣೆಯಲ್ಲಿ ನಡೆದಿದೆ. ಮಹೇಶ್ ಎಂಬ ಯುವಕನಿಗೆ ಚಾಕುವಿನಿಂದ ತಿವಿದು ಹಲ್ಲೆ ಮಾಡಲಾಗಿದೆ. 10,000 ರೂ. ಚಂದಾ ಕೊಡುವಂತೆ ಯುವಕರು ಕೇಳಿದ್ದರು. ಅಷ್ಟೊಂದು ಹಣ ಕೊಡಲ್ಲ ಎಂದಿದ್ದಕ್ಕೆ ಮಹೇಶ್ ಮೇಲೆ ಹಲ್ಲೆ ಮಾಡಲಾಗಿದೆ. ಮಹೇಶ್ ಮೇಲೆ ವಿದ್ಯಾನಗರ ಬಡಾವಣೆಯ ಯುವಕರು ಹಲ್ಲೆ ಮಾಡಿದ್ದಾರೆ. ಗಾಯಾಳು ಮಹೇಶ್ […]

ಕನ್ನಡ ದುನಿಯಾ 7 Feb 2026 8:42 pm

BREAKING NEWS: ಆರ್.ಎಸ್.ಎಸ್. ಕಾರ್ಯಕ್ರಮದಲ್ಲಿ ಖ್ಯಾತ ನಟ ಸಲ್ಮಾನ್ ಖಾನ್ ಭಾಗಿ

ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್.ಎಸ್.ಎಸ್.) ಮುಂಬೈನಲ್ಲಿ ಆಯೋಜಿಸಿರುವ ‘100 ವರ್ಷಗಳ ಸಂಘ ಪಯಣ: ಹೊಸ ದಿಗಂತಗಳು’ ಎಂಬ ಎರಡು ದಿನಗಳ ಉಪನ್ಯಾಸ ಸರಣಿಯ ಶನಿವಾರದ ಕಾರ್ಯಕ್ರಮದಲ್ಲಿ ನಟ ಸಲ್ಮಾನ್ ಖಾನ್ ಭಾಗವಹಿಸಿದ್ದರು. ಮುಂಬೈನ ವರ್ಲಿ ಪ್ರದೇಶದ ನೆಹರೂ ಕೇಂದ್ರದಲ್ಲಿ ಈ ಕಾರ್ಯಕ್ರಮವನ್ನು ಆರ್‌ಎಸ್‌ಎಸ್‌ನ ಶತಮಾನೋತ್ಸವ ಆಚರಣೆಯ ಭಾಗವಾಗಿ ಆಯೋಜಿಸಲಾಗಿದೆ. ಫೆಬ್ರವರಿ 7 ಮತ್ತು 8ರಂದು ನೆಹರು ಸೆಂಟರ್ ಆಡಿಟೋರಿಯಂನಲ್ಲಿ ವ್ಯಾಖ್ಯಾನಮಾಲಾ ನಡೆಯಲಿದೆ. ಸಂಘದ ಶತಮಾನೋತ್ಸವದ ಕಾರ್ಯಕ್ರಮದ ಭಾಗವಾಗಿ, ಸಾರ್ವಜನಿಕರೊಂದಿಗೆ ಚರ್ಚೆಗಾಗಿ ಹಿರಿಯ ಆರ್‌ಎಸ್‌ಎಸ್ ನಾಯಕರು ಮತ್ತು ಆಹ್ವಾನಿತ […]

ಕನ್ನಡ ದುನಿಯಾ 7 Feb 2026 8:30 pm

‘ಗೃಹಲಕ್ಷ್ಮಿ’ಫಲಾನುಭವಿಗಳಿಗೆ ಹೊಸ ನಿಯಮ: ಜೀವಿತ ಪ್ರಮಾಣ ಪತ್ರ ಸಲ್ಲಿಕೆ ಕಡ್ಡಾಯ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಹಣ ದುರ್ಬಳಕೆ ಆಗುವುದನ್ನು ತಡೆಯಲು ಸರ್ಕಾರ ಹೊಸ ನಿಯಮ ಜಾರಿಗೆ ಮುಂದಾಗಿದೆ. ಮೃತಪಟ್ಟ ಫಲಾನುಭವಿಗಳ ಖಾತೆಗೂ ಗೃಹಲಕ್ಷ್ಮಿ ಹಣ ಜಮಾ ಆಗುತ್ತಿರುವುದನ್ನು ತಡೆಯಲು ಜೀವಿತ ಪ್ರಮಾಣ ಪತ್ರ(ಲೈಫ್ ಸರ್ಟಿಫಿಕೇಟ್) ಸಲ್ಲಿಸುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಅವರು ಈ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದರು. ಅವರ ಮನವಿಯನ್ನು ಪುರಸ್ಕರಿಸಿದ ಸಿಎಂ […]

ಕನ್ನಡ ದುನಿಯಾ 7 Feb 2026 8:00 pm

ಶಾಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿದ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಕಾರವಾರ: ಮಧ್ಯಾಹ್ನದ ಊಟ ಸೇವಿಸಿದ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಪಿಎಂಶ್ರೀ ಜವಾಹರ ನವೋದಯ ವಿದ್ಯಾಲಯದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆ ಮುಂಡಗೋಡಿನ ಪಂಚವಟಿಯಲ್ಲಿರುವ ಶಾಲೆಯಲ್ಲಿ ಫೆಬ್ರವರಿ 4ರಂದು 518 ಮಕ್ಕಳು ಮಧ್ಯಾಹ್ನದ ಬಿಸಿ ಊಟ ಸೇವಿಸಿದ್ದರು. ಈ ಪೈಕಿ 70 ಮಕ್ಕಳಿಗೆ ಜ್ವರ, ಭೇದಿ, ಹೊಟ್ಟೆ ನೋವು ಕಾಣಿಸಿಕೊಂಡಿತ್ತು, ಅಸ್ವಸ್ಥ ಮಕ್ಕಳನ್ನು ಮುಂಡಗೋಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಆರೋಗ್ಯ ಅಧಿಕಾರಿಗಳ ತಂಡ ಸ್ಥಳಕ್ಕೆ ಆಗಮಿಸಿ ಪರೀಕ್ಷೆ ನಡೆಸಿದೆ. ಸ್ಯಾಂಪಲ್ ಪಡೆದು ಬೆಳಗಾವಿ […]

ಕನ್ನಡ ದುನಿಯಾ 7 Feb 2026 7:49 pm

ಯುಪಿಎಸ್‌ಸಿ ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್: ಕಾಲ್ ಸೆಂಟರ್ ಸಮಯ ವಿಸ್ತರಣೆ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್‌ಸಿ) ಆಕಾಂಕ್ಷಿಗಳಿಗೆ ಹೆಚ್ಚಿನ ಬೆಂಬಲ ಮತ್ತು ಮಾರ್ಗದರ್ಶನ ನೀಡಲು ಕಾಲ್ ಸೆಂಟರ್‌ನ ಕಾರ್ಯಾಚರಣೆಯ ಸಮಯವನ್ನು ವಿಸ್ತರಿಸಿದೆ. ನಾಗರಿಕ ಸೇವೆಗಳ ಪರೀಕ್ಷೆ (ಸಿಎಸ್‌ಇ) 2026 ಮತ್ತು ಭಾರತೀಯ ಅರಣ್ಯ ಸೇವೆ (ಐಎಫ್‌ಒಎಸ್) ಪರೀಕ್ಷೆ 2026 ಕ್ಕೆ ಅರ್ಜಿ ನಮೂನೆಗಳನ್ನು ಸಲ್ಲಿಸುವವರೆಗೆ ಶನಿವಾರ, ಭಾನುವಾರ ಮತ್ತು ರಜಾದಿನಗಳು ಸೇರಿದಂತೆ ಎಲ್ಲಾ ದಿನಗಳಲ್ಲಿ ಕಾಲ್ ಸೆಂಟರ್ ಕಾರ್ಯನಿರ್ವಹಿಸುತ್ತದೆ ಎಂದು ಯುಪಿಎಸ್‌ಸಿ ತಿಳಿಸಿದೆ. ಇದು ಬೆಳಿಗ್ಗೆ 7 ರಿಂದ ರಾತ್ರಿ 9 ರವರೆಗೆ ಎರಡು ಪಾಳಿಗಳಲ್ಲಿ ಕಾರ್ಯನಿರ್ವಹಿಸಲಿದ್ದು, ಅಭ್ಯರ್ಥಿಗಳು […]

ಕನ್ನಡ ದುನಿಯಾ 7 Feb 2026 7:30 pm

BREAKING: ಶಿವಮೊಗ್ಗ ಸೆಂಟ್ರಲ್ ಜೈಲ್ ನಲ್ಲಿ ಗಾಂಜಾ, ಮೊಬೈಲ್, ಸಿಗರೇಟ್, ಲೈಟರ್ ಎಸೆದ ನಾಲ್ವರು ಅರೆಸ್ಟ್

ಶಿವಮೊಗ್ಗದ ಸೋಗಾನೆಯ ಕೇಂದ್ರ ಕಾರಾಗೃಹದ ಒಳಗಡೆ ಗಾಂಜಾ, ಮೊಬೈಲ್, ಸಿಗರೇಟ್ ಹಾಗೂ ಲೈಟರ್ ಅನ್ನು ಕಪ್ಪು ಬಣ್ಣದ ಗಮ್ ಟೇಪ್ ನಿಂದ ಪ್ಯಾಕ್ ಮಾಡಿ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ದಿನಾಂಕ: 01/02/2026 ರಂದು ಬೆಳಗಿನ ಜಾವ ಕಾರಾಗೃಹದೊಳಗೆ ನಡೆದ ಘಟನೆ ಸಂಬಂಧ ಕೇಂದ್ರ ಕಾರಾಗೃಹದ ಅಧೀಕ್ಷಕ ಪರಮೇಶ್ ಎಚ್.ಎ. ನೀಡಿದ ದೂರಿನ ಮೇರೆಗೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಈ ರೀತಿ ಎಸೆದಿದ್ದ ಮೊಬೈಲ್‌ ಫೋನ್‌, ಗಾಂಜಾ ಹಾಗೂ ಸಿಗರೇಟ್‌ ಅನ್ನು […]

ಕನ್ನಡ ದುನಿಯಾ 7 Feb 2026 7:18 pm

ಹಲ್ಲು ನೋವಿಗೆ ಇನ್ಸ್ಟಂಟ್ ರಿಲೀಫ್ ಬೇಕಾ? ಮನೆಯಲ್ಲೇ ಇರುವ ದಿವ್ಯೌಷಧಿ : ತಕ್ಷಣದ ಪರಿಹಾರಗಳು

ಹಲ್ಲು ನೋವು ಬಂತೆಂದರೆ ಅದು ಪ್ರಾಣ ಸಂಕಟಕ್ಕೆ ಸಮಾನ ಊಟ ಮಾಡಲು ಬಿಡಲ್ಲ, ನಿದ್ದೆ ಮಾಡಲೂ ಬಿಡಲ್ಲ. ಸಾಮಾನ್ಯವಾಗಿ ಸಿಹಿ ಪದಾರ್ಥಗಳ ಅತಿಯಾದ ಸೇವನೆ ಮತ್ತು ಹಲ್ಲುಗಳ ಸರಿಯಾದ ಸ್ವಚ್ಛತೆ ಇಲ್ಲದಿದ್ದರೆ ಬ್ಯಾಕ್ಟೀರಿಯಾಗಳು ಹಲ್ಲಿನಲ್ಲಿ ಕುಳಿ (Cavity) ಸೃಷ್ಟಿಸುತ್ತವೆ. ಈ ನೋವು ತೀವ್ರವಾದಾಗ ದಂತವೈದ್ಯರ ಬಳಿ ಹೋಗುವುದು ಅನಿವಾರ್ಯ. ಆದರೆ ಮಧ್ಯರಾತ್ರಿಯಲ್ಲೋ ಅಥವಾ ಆಸ್ಪತ್ರೆಗೆ ಹೋಗಲು ಸಾಧ್ಯವಾಗದ ತುರ್ತು ಸಂದರ್ಭದಲ್ಲೋ ನೋವು ಕಾಣಿಸಿಕೊಂಡರೆ ಏನು ಮಾಡುವುದು? ಚಿಂತೆ ಬೇಡ ನಿಮ್ಮ ಕಿಚನ್‌ನಲ್ಲಿರುವ ಈ ಸರಳ ವಸ್ತುಗಳೇ ಈಗ […]

ಕನ್ನಡ ದುನಿಯಾ 7 Feb 2026 7:11 pm

ಜನಿಸಿದ 7 ದಿನದಲ್ಲಿ ಮಗು ಮಾರಾಟ ಯತ್ನ: ದಂಪತಿ ಸೇರಿ ಐವರು ಅರೆಸ್ಟ್

ಕೋಲಾರ: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ಮಗು ಜನಿಸಿದ 7 ದಿನದಲ್ಲೇ ಮಾರಾಟಕ್ಕೆ ಯತ್ನಿಸಿದ ದಂಪತಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ದಂಪತಿ ಪತಿ, ಪತ್ನಿ ಅಲ್ಲ. ಲಿವಿಂಗ್ ಟುಗೆದರ್ ರೀತಿ ಸಂಸಾರ ಮಾಡಿಕೊಂಡಿದ್ದಾರೆ. ಮಹಿಳೆಗೆ ಈಗಾಗಲೇ ಇಬ್ಬರು ಮಕ್ಕಳಿದ್ದು, ಮೊದಲ ಗಂಡನಿಗೆ ಒಂದು ಗಂಡು ಮಗುವಿತ್ತು. ಎರಡನೇ ಗಂಡನಿಗೆ ಒಂದು ಮಗುವಿದೆ. ಈ ನಡುವೆ ಮೂರನೇ ಮಗುವನ್ನು ಹಣದ ಆಸೆಗಾಗಿ ಮಾರಾಟ ಮಾಡಲು ಯತ್ನಿಸಿದ ವೇಳೆ ಸಿಕ್ಕಿಬಿದ್ದಿದ್ದಾರೆ. ಶ್ರೀನಿವಾಸಪುರ ಪಟ್ಟಣದ ನಿವಾಸಿ ಮಹಿಳೆಗೆ ಈ ಮೊದಲು […]

ಕನ್ನಡ ದುನಿಯಾ 7 Feb 2026 7:06 pm

ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸಲು ಗಡುವು ಕೊಟ್ಟ ಅಮೆರಿಕ!

ಸುಮಾರು 4 ವರ್ಷಗಳಿಂದ ನಡೆಯುತ್ತಿರುವ ರಷ್ಯಾ ಮತ್ತು ಉಕ್ರೇನ್ ಯುದ್ಧ ನಿಲ್ಲುವುದು ಯಾವಾಗ?. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಯುದ್ಧ ನಿಲ್ಲಿಸುವುದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್ಸ್ಕಿ ಯುದ್ಧ ನಿಲ್ಲಿಸುವ ಕುರಿತು ಮಹತ್ವದ ಅಪ್‌ಡೇಟ್ ನೀಡಿದ್ದಾರೆ. ವೊಲೊಡಿಮಿರ್ ಝೆಲೆನ್ಸ್ಕಿ ಮಾತನಾಡಿ, “ಯುದ್ಧವನ್ನು ಕೊನೆಗೊಳಿಸಲು ಯುಎಸ್ ರಷ್ಯಾ ಮತ್ತು ಉಕ್ರೇನ್‌ಗೆ ಜೂನ್ ಗಡುವನ್ನು ನೀಡಿದೆ. ಇತ್ತೀಚಿನ ಗಡುವನ್ನು ಅಬುಧಾಬಿಯಲ್ಲಿ ನಡೆದ ತ್ರಿಪಕ್ಷೀಯ ಮಾತುಕತೆಗಳ ಬಳಿಕ ನೀಡಲಾಗಿದೆ” ಎಂದು ಹೇಳಿದ್ದಾರೆ. “ಎರಡೂ ಪಕ್ಷಗಳು ಪರಸ್ಪರ ಪ್ರತ್ಯೇಕ […]

ಕನ್ನಡ ದುನಿಯಾ 7 Feb 2026 7:01 pm

ಹೋಂ ವರ್ಕ್ ಪೂರ್ಣಗೊಳಿಸಿಲ್ಲವೆಂದು 2ನೇ ತರಗತಿ ವಿದ್ಯಾರ್ಥಿಗೆ 150 ಬಾರಿ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕ

ಲಖನೌ: ಇತ್ತೀಚಿನ ದಿನಗಳಲ್ಲಿ ಶಾಲೆಗಳಲ್ಲಿ ಶಿಕ್ಷಕ-ಶಿಕ್ಷಕಿಯರೇ ಮಕ್ಕಳನ್ನು ಥಳಿಸುವ, ಹಲ್ಲೆ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಇಲ್ಲೊಂದು ಘಟನೆಯಲ್ಲಿ ಶಿಕ್ಷಕನೊಬ್ಬ ಎರಡನೇ ತರಗತಿ ವಿದ್ಯಾರ್ಥಿಗೆ 150 ಬಾರಿ ಬಾಸುಂಡೆ ಬರುವಂತೆ ಹೊಡೆದು ರಾಕ್ಷಸನಂತೆ ವರ್ತಿಸಿದ್ದಾನೆ. ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಕರ್ನೈಲಗಂಜ್ ಪ್ರದೇಶದ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿ ಹೋಂ ವರ್ಕ್ ಪೂರ್ಣಗೊಳಿಸಿಲ್ಲ ಎಂಬ ಕಾರಣಕ್ಕೆ ಮನಬಂದಂತೆ ಶಿಕ್ಷಕ ಥಳಿಸಿದ್ದಾನೆ. ಶಿಕ್ಷಕ ಹೊಡೆದ ಏಟಿಗೆ ವಿದ್ಯಾರ್ಥಿಯ ಎರಡೂ ಕಾಲಿಗೂ ಬಾಸುಂಡೆ ಬಂದಿದ್ದು, ಊದಿಕೊಂಡಿದೆ. ಶಿಕ್ಷಕ 150 […]

ಕನ್ನಡ ದುನಿಯಾ 7 Feb 2026 7:00 pm

ನಿರ್ಮಾಪಕ ಕನಕಪುರ ಶ್ರೀನಿವಾಸ್ ವಿರುದ್ಧ ಫಿಲಂ ಚೇಂಬರ್ ಗೆ ದೂರು ನೀಡಿದ ಜೋಗಿ ಪ್ರೇಮ್

ಬೆಂಗಳೂರು: ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ನಿರ್ಮಾಪಕ ಕನಕಪುರ ಶ್ರೀನಿವಾಸ್, ಚಿತ್ರರಂಗದಲ್ಲಿರುವ ಹಲವರು ನನಗೆ ಮೋಸ ಮಾಡಿದ್ದಾರೆ. ಪ್ರೇಮ್, ಅರ್ಜುನ್ ಜನ್ಯಾ ಸೇರಿದಂತೆ ಹಲವರು ನನಗೆ ಮೋಸ ಮಾಡಿದ್ದಾಗಿ ಆರೋಪ ಮಾಡಿದ್ದರು. ಇದೇ ವಿಚಾರವಾಗಿ ನಿರ್ದೇಶಕ ಜೋಗಿ ಪ್ರೇಮ್, ಕನಕಪುರ ಶ್ರೀನಿವಾಸ್ ವಿರುದ್ಧ ಫಿಲಂ ಚೇಂಬರ್ ಗೆ ದೂರು ನೀಡಿದ್ದಾರೆ. ಫಿಲಂ ಚೇಂಬರ್ ಗೆ ಆಗಮಿಸಿದ ಪ್ರೇಮ್, ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲಾ ಅವರನ್ನು ಭೇಟಿಯಾಗಿ ಕನಕಪುರ ಶ್ರೀನಿವಾಸ್ ವಿರುದ್ಧ ದೂರು ನೀಡಿದರು. ಪ್ರೇಮ್ ನೀಡಿರುವ ದೂರಿನಲ್ಲಿ ಏನಿದೆ? […]

ಕನ್ನಡ ದುನಿಯಾ 7 Feb 2026 6:21 pm