SENSEX
NIFTY
GOLD
USD/INR

Weather

14    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source

BREAKING: ಲಾಂಗ್ ನಿಂದ ಕೊಚ್ಚಿ ದೇವಾಲಯದ ಪೂಜಾರಿ ಹತ್ಯೆ

ಕೋಲಾರ: ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಹರಳೇರಿ ಸಮೀಪ ದುಷ್ಕರ್ಮಿಗಳು ಪೂಜಾರಿಯನ್ನು ಕೊಲೆ ಮಾಡಿದ್ದಾರೆ. 45 ವರ್ಷದ ಅಂಜನಪ್ಪ ಅವರನ್ನು ಲಾಂಗ್ ನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಕಲ್ಲೂರು ಗ್ರಾಮದ ಚೌಡೇಶ್ವರಿ ದೇವಾಲಯದ ಪೂಜಾರಿಯಾಗಿ ಅಂಜಿನಪ್ಪ ಕಾರ್ಯನಿರ್ವಹಿಸುತ್ತಿದ್ದರು. ಘಟನಾ ಸ್ಥಳಕ್ಕೆ ಮಾಲೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

ಕನ್ನಡ ದುನಿಯಾ 19 Jan 2026 8:30 am

ಹುಣಸೂರಿನಲ್ಲಿ ಕೇವಲ 4 ನಿಮಿಷದಲ್ಲಿ 10 ಕೋಟಿ ರೂ. ಮೌಲ್ಯದ ಚಿನ್ನ ದೋಚಿದ್ದ ಖದೀಮರು ಬಿಹಾರದಲ್ಲಿ ಅರೆಸ್ಟ್

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಆಭರಣ ಮಳಿಗೆಯೊಂದರಲ್ಲಿ ಡಿಸೆಂಬರ್ 28ರಂದು ನಡೆದ 10 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಿಹಾರ ರಾಜ್ಯದ ಬಾಗಲ್ಪುರ್ ಜಿಲ್ಲೆಯ ಪಂಕಜ್ ಕುಮಾರ್, ದರ್ಬಾಂಗ್ ಜಿಲ್ಲೆಯ ಹೃಷಿಕೇಶ್ ಸಿಂಗ್ ಬಂಧಿತ ಆರೋಪಿಗಳು. ಕರ್ನಾಟಕ ಪೊಲೀಸರು ಬಿಹಾರದ ಎಸ್‌ಟಿಎಫ್ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಚಿನ್ನಾಭರಣ ಮಳಿಗೆಯಲ್ಲಿ ಕಳವು ಮಾಡಿದ್ದ ಉಂಗುರ, ಚಿನ್ನದ ಸರ, ಒಂದು ಲಕ್ಷ ರೂಪಾಯಿ ನಗದು, ಬೈಕ್ ವಶಕ್ಕೆ […]

ಕನ್ನಡ ದುನಿಯಾ 19 Jan 2026 8:15 am

BREAKING: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಘೋರ ದುರಂತ: ಬಸ್ ಡಿಕ್ಕಿಯಾಗಿ ತಾಯಿ, ಮಗ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಘೋರ ದುರಂತ ಸಂಭವಿಸಿದೆ. ಕಾಲೇಜ್ ಬಸ್ ಡಿಕ್ಕಿಯಾಗಿ ತಾಯಿ, ಮಗ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ವಿವೇಕ ನಗರ ಮುಖ್ಯ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಘೋರ ದುರಂತ ಸಂಭವಿಸಿದೆ. ರಸ್ತೆ ಅಪಘಾತಕ್ಕೆ ತಾಯಿ, ಮಗ ಬಲಿಯಾಗಿದ್ದಾರೆ. ಕಾಲೇಜು ಬಸ್ ಡಿಕ್ಕಿಯಾಗಿ ಘಟನೆ ನಡೆದಿದೆ. 37 ವರ್ಷದ ತಾಯಿ ಸಂಗೀತಾ, 8 ವರ್ಷದ ಬಾಲಕ ಪಾರ್ಥ ಮೃತಪಟ್ಟವರು ಎಂದು ಗುರುತಿಸಲಾಗಿದೆ. ನಡೆದುಕೊಂಡು ಶಾಲೆಗೆ ಮಗನನ್ನು ತಾಯಿ ಕರೆದೊಯ್ಯುತ್ತಿದ್ದ ವೇಳೆ ಘಟನೆ ನಡೆದಿದೆ. ಅಪಘಾತದ ಬಳಿಕ ಕಾಲೇಜು ಬಸ್ ಚಾಲಕ […]

ಕನ್ನಡ ದುನಿಯಾ 19 Jan 2026 8:01 am

BREAKING: ಸ್ಪೇನ್‌ ನಲ್ಲಿ ಎರಡು ಹೈಸ್ಪೀಡ್ ರೈಲುಗಳು ಡಿಕ್ಕಿ: 21 ಜನ ಸಾವು: ಸಾವಿನ ಸಂಖ್ಯೆ ಭಾರೀ ಏರಿಕೆ ಸಾಧ್ಯತೆ | VIDEO

ಮ್ಯಾಡ್ರಿಡ್(ಸ್ಪೇನ್): ಸ್ಪೇನ್‌ ನಲ್ಲಿ ಎರಡು ಹೈಸ್ಪೀಡ್ ರೈಲುಗಳು ಡಿಕ್ಕಿ ಹೊಡೆದ ಪರಿಣಾಮ 21 ಜನರು ಸಾವನ್ನಪ್ಪಿದ್ದಾರೆ. ದಕ್ಷಿಣ ಸ್ಪೇನ್‌ನಲ್ಲಿ ಹೈಸ್ಪೀಡ್ ರೈಲು ಹಳಿತಪ್ಪಿ ಎದುರು ಹಳಿಗೆ ನುಗ್ಗಿದೆ. ಎದುರು ಹಳಿಗೆ ಬಂದು ಎದುರಿಗೆ ಬರುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಡಜನ್ಗಟ್ಟಲೆ ಜನರು ಗಾಯಗೊಂಡಿದ್ದಾರೆ ಎಂದು ದೇಶದ ಸಾರಿಗೆ ಸಚಿವರು ತಿಳಿಸಿದ್ದಾರೆ. ರೈಲು ನಿರ್ವಾಹಕ ಅಡಿಫ್ ಅವರ ಪ್ರಕಾರ, ಸುಮಾರು 300 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮಲಗಾದಿಂದ ಮ್ಯಾಡ್ರಿಡ್‌ಗೆ ಪ್ರಯಾಣಿಸುತ್ತಿದ್ದ ಸಂಜೆ […]

ಕನ್ನಡ ದುನಿಯಾ 19 Jan 2026 7:36 am

ಪ್ರಯಾಣಿಕರೇ ಗಮನಿಸಿ: ಜ. 29ರಂದು ಸಾರಿಗೆ ನೌಕರರ ಪ್ರತಿಭಟನೆ: ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು: ಸಾರಿಗೆ ನೌಕರರಿಗೆ ಬಾಕಿ ವೇತನ ಬಿಡುಗಡೆ ಮತ್ತು ವೇತನ ಪರಿಷ್ಕರಣೆಗೆ ಒತ್ತಾಯಿಸಿ, ರಾಜ್ಯದ ಸಾರಿಗೆ ನಿಗಮಗಳ ನೌಕರರು ಜನವರಿ 29ರಂದು ಬೆಂಗಳೂರು ಚಲೋ ನಡೆಸುವುದಾಗಿ ಘೋಷಿಸಿದ್ದಾರೆ. ರಾಜ್ಯ ಸರ್ಕಾರದ ಜೊತೆಗೆ ಮಾತುಕತೆ ನಡೆಸಿದರೂ ಫಲಪ್ರದವಾಗದ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕರ ಸಂಘಗಳ ಜಂಟಿ ಕ್ರಿಯಾ ಸಮಿತಿ ಬೆಂಗಳೂರು ಪ್ರತಿಭಟನೆ ನಡೆಸಲು ನಿರ್ಧಾರ ಕೈಗೊಂಡಿದೆ. ಸಾರಿಗೆ ನೌಕರರಿಗೆ ಕಳೆದ 38 ತಿಂಗಳಿಂದ ಬಾಕಿ ವೇತನ ನೀಡಿಲ್ಲ. 2024ರ ಜನವರಿ 1ರಿಂದ ಬರಬೇಕಿದ್ದ ವೇತನ ಪರಿಷ್ಕರಣೆ […]

ಕನ್ನಡ ದುನಿಯಾ 19 Jan 2026 7:23 am

NPS ರದ್ದು ಮಾಡಿ ಹಳೆ ಪಿಂಚಣಿ ಜಾರಿ ಮಾಡದಿದ್ದರೆ ‘ಕರ್ನಾಟಕ ಬಂದ್’: ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಘೋಷಣೆ

ದಾವಣಗೆರೆ: ರಾಜ್ಯದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ(NPS)ಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆ(OPS) ಜಾರಿ ಮಾಡದಿದ್ದರೆ ಕರ್ನಾಟಕ ಬಂದ್ ಅನಿವಾರ್ಯವಾಗಲಿದೆ ಎಂದು ರಾಜ್ಯ ಸರ್ಕಾರ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಎಚ್ಚರಿಕೆ ನೀಡಿದ್ದಾರೆ. ದಾವಣಗೆರೆಯಲ್ಲಿ ಭಾನುವಾರ ನಡೆದ ಅಖಿಲ ಕರ್ನಾಟಕ ಎನ್‌ಪಿಎಸ್ ನೌಕರರ ಸಂಘದ ಎರಡನೇ ರಾಜ್ಯ ಕಾರ್ಯಕಾರನಿಣಿ ಉದ್ಘಾಟಿಸಿ ಅವರು ಮಾತನಾಡಿದರು. ಒಪಿಎಸ್ ಜಾರಿಗಾಗಿ ಹೋರಾಟ ನಡೆಸುತ್ತಲೇ ಬಂದಿದ್ದೇವೆ. ಆದರೆ, ಪ್ರಯೋಜನವಾಗಿಲ್ಲ. ಹೀಗಾಗಿ ಕರ್ನಾಟಕ ಬಂದ್ ಮಾಡಿಯಾದರೂ ಒಪಿಎಸ್ ಪಡೆದೇ ತೀರುತ್ತೇವೆ ಎಂದು ಹೇಳಿದ್ದಾರೆ. ನಮ್ಮ […]

ಕನ್ನಡ ದುನಿಯಾ 19 Jan 2026 6:55 am

ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಬಾಗಲಕೋಟೆ ಜಿಲ್ಲಾ ಪ್ರವಾಸ: ಚಾಲುಕ್ಯ ಉತ್ಸವ ಉದ್ಘಾಟನೆ, ಇಮ್ಮಡಿ ಪುಲಿಕೇಶಿ ಪುತ್ಥಳಿಗೆ ಶಿಲಾನ್ಯಾಸ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬಾಗಲಕೋಟೆ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಚಾಲುಕ್ಯ ಉತ್ಸವ ಉದ್ಘಾಟನೆಗಾಗಿ ಸಿಎಂ ಆಗಮಿಸಲಿದ್ದಾರೆ. ಇಂದು ಸಂಜೆ 4:15ಕ್ಕೆ ಬಾದಾಮಿಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ನಂತರ ರಾಮದುರ್ಗ ವೃತ್ತದಲ್ಲಿ ಇಮ್ಮಡಿ ಪುಲಿಕೇಶಿ ಪುತ್ಥಳಿಗೆ ಶಿಲಾನ್ಯಾಸ ನೆರವೇರಿಸುವರು. ನವೀಕೃತ ಬಾದಾಮಿ ಕೋರ್ಟ್ ಹೋಟೆಲ್ ಉದ್ಘಾಟನೆ ಹಾಗೂ ಶ್ರೀ ಜಿತ್ ರೆಸಾರ್ಟ್ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ನಂತರ ಅಂಜುಮನ್ ಎ ಇಸ್ಲಾಂ ಕಮಿಟಿ ಬಾದಾಮಿ, ವಕ್ಪ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇಲಾಖೆಯ ವಿವಿಧ […]

ಕನ್ನಡ ದುನಿಯಾ 19 Jan 2026 6:18 am

ಐತಿಹಾಸಿಕ ಲಕ್ಕುಂಡಿಯ 44 ತಾಣಗಳು ಸಂರಕ್ಷಿತ ಸ್ಮಾರಕ ಪಟ್ಟಿಗೆ ಸೇರ್ಪಡೆ

ಗದಗ: ಐತಿಹಾಸಿಕ ಲಕ್ಕುಂಡಿ ಗ್ರಾಮದ 44 ತಾಣಗಳನ್ನು ಸಂರಕ್ಷಿತ ಸ್ಮಾರಕಗಳ ಪಟ್ಟಿಗೆ ಸೇರ್ಪಡೆ ಮಾಡಲಾಗುತ್ತಿದೆ. ಈ ತಾಣಗಳು ಸರ್ಕಾರದ ನೇರ ಉಸ್ತುವಾರಿಗೆ ಒಳಪಡಲಿವೆ ಎಂದು ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ. ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಕ್ಕುಂಡಿ ಪಾರಂಪರಿಕ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಉನ್ನತ ಮಟ್ಟದ ಸಲಹಾ ಸಮಿತಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಕ್ಕುಂಡಿ ಗ್ರಾಮದ 44 ತಾಣಗಳನ್ನು ಸಂರಕ್ಷಿತ ಸ್ಮಾರಕಗಳ ಪಟ್ಟಿಗೆ ಸೇರ್ಪಡೆ ಮಾಡಲಾಗುವುದು. ಈ ತಾಣಗಳು ಸರ್ಕಾರದ ನೇರ ುಸ್ತುವಾರಿಗೆ ಒಳಪಡಲಿದ್ದು, ಇವುಗಳ […]

ಕನ್ನಡ ದುನಿಯಾ 19 Jan 2026 6:04 am

85ನೇ ಅಂತರರಾಷ್ಟ್ರೀಯ ಶತಕ ಬಾರಿಸುವ ಮೂಲಕ ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ

ಇಂದೋರ್: ನ್ಯೂಜಿಲೆಂಡ್ ವಿರುದ್ಧದ ಸರಣಿಯ ನಿರ್ಣಾಯಕ ಪಂದ್ಯದಲ್ಲಿ ವಿರಾಟ್ ಕೊಹ್ಲಿ 85 ನೇ ಅಂತರರಾಷ್ಟ್ರೀಯ ಶತಕ ಬಾರಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ಭಾರತದ ಐಕಾನ್ ವಿರಾಟ್ ಕೊಹ್ಲಿ ತಮ್ಮ ಅದ್ಭುತ ಕಿರೀಟಕ್ಕೆ ಮತ್ತೊಂದು ಗರಿ ಸೇರಿಸಿಕೊಂಡಿದ್ದಾರೆ. ಇಂದೋರ್‌ನ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆದ ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಭಾರತದ 338 ರನ್ ಚೇಸ್ ಅನ್ನು ಜೀವಂತವಾಗಿಡುವ ಮೂಲಕ ಕೊಹ್ಲಿ ತಮ್ಮ 85 ನೇ ಅಂತರರಾಷ್ಟ್ರೀಯ ಶತಕ ಮತ್ತು […]

ಕನ್ನಡ ದುನಿಯಾ 19 Jan 2026 5:44 am

ಫಸಲ್ ಬಿಮಾ ಜಾರಿಯಲ್ಲಿ ರಾಜ್ಯ ಕೃಷಿ ಇಲಾಖೆಗೆ ದೇಶದಲ್ಲೇ 2ನೇ ಸ್ಥಾನ: ಸಿಎಂ ಸಿದ್ಧರಾಮಯ್ಯ ಅಭಿನಂದನೆ

ಬೆಂಗಳೂರು: ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ 2024- 25 ನೇ ಸಾಲಿನ ಅನುಷ್ಠಾನಕ್ಕಾಗಿ ರಾಜ್ಯದ ಕೃಷಿ ಇಲಾಖೆಗೆ ದೇಶದಲ್ಲೇ ಎರಡನೇ ಸ್ಥಾನ ದೊರೆತಿದೆ. ಈ ಸಂಬಂಧ ಕೇಂದ್ರ ಸರ್ಕಾರದ ಕೃಷಿ ಇಲಾಖೆಯು ಪ್ರಶಂಸನಾ ಪತ್ರ ನೀಡಿದೆ. ಯೋಜನೆ ಅನುಷ್ಠಾನದ ಒಟ್ಟಾರೆ ಪ್ರಗತಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. 27,04,166 ರೈತರು ಬೆಳೆ ವಿಮೆಗೆ ನೋಂದಣಿ ಮಾಡಿಸಿದ್ದು, 11,85,642 ರೈತರು 2094 ಕೋಟಿ ರೂ. ಕ್ಲೇಮ್ ಮಾಡಿದ್ದಾರೆ. ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ […]

ಕನ್ನಡ ದುನಿಯಾ 19 Jan 2026 5:35 am

BBK 12 Finale: ವಿನ್ನರ್ ಗಿಲ್ಲಿಗೆ 50 ಲಕ್ಷ ಮಾತ್ರವಲ್ಲ ಸುದೀಪ್ ಕಡೆಯಿಂದ ದುಡ್ಡು, ಸುಜುಕಿಯಿಂದ ದುಬಾರಿ ಕಾರು!

ಬಿಗ್‌ಬಾಸ್ ಕನ್ನಡ ಸೀಸನ್ 12ಕ್ಕೆ ಇಂದು ( ಜನವರಿ 18 ) ತೆರೆಬಿದ್ದಿದೆ. ಸತತ 112 ದಿನಗಳ ಮನರಂಜನೆ ಅಂತ್ಯ ಕಂಡಿದ್ದು, ಈ ಬಾರಿ ಗಿಲ್ಲಿ ನಟ ಟ್ರೋಫಿ ಎತ್ತಿಹಿಡಿದಿದ್ದಾರೆ. ಫಿನಾಲೆಗೆ ಪ್ರವೇಶಿಸಿದ್ದ ಆರು ಸ್ಪರ್ಧಿಗಳ ಪೈಕಿ ಮೊದಲಿಗೆ ಧನುಷ್ ಎಲಿಮಿನೇಟ್ ಆಗಿ ಆರನೇ ಸ್ಥಾನ ಪಡೆದುಕೊಂಡರೆ, ಮ್ಯೂಟೆಂಟ್ ರಘು ಐದನೇ ಸ್ಥಾನ, ಕಾವ್ಯ ನಾಲ್ಕನೇ ಸ್ಥಾನ ಪಡೆದುಕೊಂಡರು. ಅಂತಿಮವಾಗಿ ಉಳಿದ ಮೂವರು ಸ್ಪರ್ಧಿಗಳನ್ನು ವೇದಿಕೆಗೆ ಕರೆತಂದು ಗಿಲ್ಲಿ ಹಾಗೂ ರಕ್ಷಿತಾ ಟಾಪ್ 2 ಎಂದು ಘೋಷಿಸಲಾಯಿತು. […]

ಕನ್ನಡ ದುನಿಯಾ 19 Jan 2026 5:00 am

BBK 12 Finale: ಟ್ರೋಫಿ ಎತ್ತಿಹಿಡಿದ ಗಿಲ್ಲಿ ನಟ; ರಕ್ಷಿತಾ ರನ್ನರ್ ಅಪ್, ಅಶ್ವಿನಿಗೆ ಮೂರನೇ ಸ್ಥಾನ

ಕಳೆದ 112 ದಿನಗಳ ಕಾಲ ಕಿರುತೆರೆ ವೀಕ್ಷಕರಿಗೆ ನಿರಂತರ ಮನರಂಜನೆ ನೀಡುತ್ತಾ ಚರ್ಚೆಯ ಒಂದು ವಿಷಯವಾಗಿ ಮಾರ್ಪಟ್ಟಿದ್ದ ಬಿಗ್‌ಬಾಸ್ ಕನ್ನಡ ಸೀಸನ್ 12ಕ್ಕೆ ಇಂದು ( ಜನವರಿ 18 ) ತೆರೆ ಬಿದ್ದಿದೆ. ಫಿನಾಲೆಗೆ ಪ್ರವೇಶಿಸಿದ್ದ ಆರು ಸ್ಪರ್ಧಿಗಳ ಪೈಕಿ ಮೊದಲಿಗೆ ಧನುಷ್ ಎಲಿಮಿನೇಟ್ ಆಗಿ ಆರನೇ ಸ್ಥಾನ ಪಡೆದುಕೊಂಡರೆ, ಮ್ಯೂಟೆಂಟ್ ರಘು ಐದನೇ ಸ್ಥಾನ, ಕಾವ್ಯ ನಾಲ್ಕನೇ ಸ್ಥಾನ ಪಡೆದುಕೊಂಡರು. ಅಂತಿಮವಾಗಿ ಉಳಿದ ಮೂವರು ಸ್ಪರ್ಧಿಗಳನ್ನು ವೇದಿಕೆಗೆ ಕರೆತಂದು ಗಿಲ್ಲಿ ಹಾಗೂ ರಕ್ಷಿತಾ ಟಾಪ್ 2 […]

ಕನ್ನಡ ದುನಿಯಾ 18 Jan 2026 11:48 pm

ಶಬರಿಮಲೆ ಯಾತ್ರೆ ಬಸ್‌ನಲ್ಲೂ ಗಿಲ್ಲಿ ಹವಾ: ಗಿಲ್ಲಿ ಗೆಲ್ಲಲೇಬೇಕು ಎಂದ ಮಾಲಾಧಾರಿಗಳು; ವಿಡಿಯೊ

ಇಂದು ( ಜನವರಿ 18 ) ಬಿಗ್‌ಬಾಸ್ ಕನ್ನಡ ಸೀಸನ್ 12ರ ಗ್ರ್ಯಾಂಡ್ ಫಿನಾಲೆ ನಡೆಯುತ್ತಿದೆ. 112 ದಿನಗಳ ಸುದೀರ್ಘ ದಿನಗಳನ್ನು ಕಳೆದು ಫಿನಾಲೆಗೆ ಅಶ್ವಿನಿ ಗೌಡ, ಗಿಲ್ಲಿ ನಟ, ರಕ್ಷಿತಾ ಶೆಟ್ಟಿ, ಮ್ಯೂಟೆಂಟ್ ರಘು, ಕಾವ್ಯ ಶೈವ ಹಾಗೂ ಧನುಷ್ ಪ್ರವೇಶ ಪಡೆದುಕೊಂಡರು. ಈ ಪೈಕಿ ಧನುಷ್ ಆರನೇ ಸ್ಥಾನ ಪಡೆದುಕೊಂಡರೆ, ಮ್ಯೂಟೆಂಟ್ ರಘು ಐದನೇ ಸ್ಥಾನ ಪಡೆದರು. ಕಾವ್ಯ ಶೈವ ನಾಲ್ಕನೇ ಸ್ಥಾನ ಪಡೆದು ಮೂರನೇ ರನ್ನರ್ ಅಪ್ ಆದರು. ಟಾಪ್ 3ಗೆ ರಕ್ಷಿತಾ […]

ಕನ್ನಡ ದುನಿಯಾ 18 Jan 2026 11:07 pm

ಕೊಹ್ಲಿ ಶತಕ ವ್ಯರ್ಥ, ತವರಿನಲ್ಲೇ ಭಾರತಕ್ಕೆ ಮುಖಭಂಗ: ಚೊಚ್ಚಲ ಏಕದಿನ ಸರಣಿ ಗೆದ್ದು ಬೀಗಿದ ನ್ಯೂಜಿಲೆಂಡ್

ಇಂಧೋರ್‌ನ ಹೊಲ್ಕರ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ಮೂರನೇ ಏಕದಿನ ಪಂದ್ಯಗಳ ಸರಣಿಯ ಅಂತಿಮ ಪಂದ್ಯದಲ್ಲಿ ನ್ಯೂಜಿಲೆಂಡ್ 41 ರನ್‌ಗಳ ಗೆಲುವನ್ನು ಸಾಧಿಸುವ ಮೂಲಕ ಸರಣಿಯನ್ನು 2 – 1 ಅಂತರದಿಂದ ವಶಪಡಿಸಿಕೊಂಡಿದೆ. ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 337 ರನ್ ಕಲೆಹಾಕಿ ಭಾರತಕ್ಕೆ 338 ರನ್‌ಗಳ ಸವಾಲಿನ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಭಾರತ ಗೆಲ್ಲುವ […]

ಕನ್ನಡ ದುನಿಯಾ 18 Jan 2026 9:56 pm

ಭರ್ಜರಿ ಶತಕ ಸಿಡಿಸಿ ಔಟಾದ ಡ್ಯಾರಿಲ್ ಮಿಚಲ್ ರನ್ನು ಮೈದಾನದಿಂದ ಹೊರತಳ್ಳಿದ ವಿರಾಟ್ ಕೊಹ್ಲಿ…! ವಿಡಿಯೋ ವೈರಲ್

ಇಂದೋರ್‌ ನ ಹೋಲ್ಕರ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದ ಸಂದರ್ಭದಲ್ಲಿ ಶತಕ ಸಿಡಿಸಿದ ಡ್ಯಾರಿಲ್ ಮಿಚೆಲ್ ಅವರನ್ನು ವಿರಾಟ್ ಕೊಹ್ಲಿ ಮೈದಾನದಿಂದ ಹೊರಗೆ ತಳ್ಳಿದರು. ಅವರ ತಮಾಷೆಯ ಕ್ಷಣದ ವಿಡಿಯೋ ವೈರಲ್ ಆಗಿದೆ. ಭಾರತದ ಹಿರಿಯ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ನ್ಯೂಜಿಲೆಂಡ್‌ ನ ಡ್ಯಾರಿಲ್ ಮಿಚೆಲ್ ಅವರೊಂದಿಗೆ ತಮಾಷೆಯ ವಾಗ್ವಾದದಲ್ಲಿ ತೊಡಗಿದ್ದರು. ಭಾರತದ ವಿರುದ್ಧದ ಏಕದಿನ ಮಾದರಿಯಲ್ಲಿ ಮಿಚೆಲ್ ತಮ್ಮ ಅದ್ಭುತ ಫಾರ್ಮ್ ಅನ್ನು ಮುಂದುವರೆಸಿದರು ಮತ್ತು ಸ್ಮರಣೀಯ ಶತಕವನ್ನು […]

ಕನ್ನಡ ದುನಿಯಾ 18 Jan 2026 7:52 pm

BBK 12 Finale: ಫಿನಾಲೆಯಲ್ಲಿ ಮೊದಲ ಎಲಿಮಿನೇ‍ಷನ್; ಇಷ್ಟು ಬೇಗ ಹೋಗ್ತಾರೆ ಎಂದುಕೊಂಡಿರಲಿಲ್ಲ ಎಂದ ಮನೆ ಮಂದಿ

ಕನ್ನಡ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದಾದ ಬಿಗ್‌ಬಾಸ್ ಕನ್ನಡ ಸೀಸನ್ 12ರ ಫಿನಾಲೆ ಇಂದು ( ಜನವರಿ 18 ) ನಡೆಯುತ್ತಿದೆ. 112 ದಿನಗಳ ಪಯಣ ಇಂದಿಗೆ ಮುಗಿದಿದ್ದು, ಫಿನಾಲೆಗೆ ಆರು ಸ್ಪರ್ಧಿಗಳು ಪ್ರವೇಶ ಪಡೆದುಕೊಂಡಿದ್ದಾರೆ. ಅಶ್ವಿನಿ ಗೌಡ, ಗಿಲ್ಲಿ ನಟ, ಮ್ಯೂಟಂರ್ ರಘು, ರಕ್ಷಿತಾ ಶೆಟ್ಟಿ, ಕಾವ್ಯ ಶೈವ ಹಾಗೂ ಧನುಷ್ ಫಿನಾಲೆಯಲ್ಲಿದ್ದಾರೆ. ಇನ್ನು ಈ ಪೈಕಿ ಕಡಿಮೆ ಮತಗಳನ್ನು ಪಡೆದುಕೊಂಡ ಧನುಷ್ ಫಿನಾಲೆಯಿಂದ ಮೊದಲ ಎಲಿಮಿನೇಷನ್‌ನಲ್ಲಿ ಹೊರಬಿದ್ದಿದ್ದಾರೆ. ಹೀಗೆ ಮೊದಲ ಎಲಿಮಿನೇ‍ಷನ್ ಮುಕ್ತಾಯವಾಗುತ್ತಿದ್ದಂತೆ ಉಳಿದ […]

ಕನ್ನಡ ದುನಿಯಾ 18 Jan 2026 7:42 pm

ನದಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ಸಾವು

ದಕ್ಷಿಣ ಕನ್ನಡ ಜಿಲ್ಲೆ ಕುಕ್ಕೆ ಸುಬ್ರಹ್ಮಣ್ಯ ಸಮೀಪ ನದಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ಮುಳುಗಿ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಸುಳ್ಯ ತಾಲೂಕಿನ ಕೊಲ್ಲಮೊಗ್ರುವಿನ ಹರಿಪ್ರಸಾದ್(37), ಸುಜಿತ್(26) ಮೃತಪಟ್ಟ ಯುವಕರು ಎಂದು ಹೇಳಲಾಗಿದೆ. ಇಬ್ಬರು ಅವಿವಾಹಿತರಾಗಿದ್ದು, ಭಾನುವಾರ ಸ್ನಾನಕ್ಕೆ ಕುಮಾರಧಾರಾ ನದಿಯ ಬಳಿ ಬಂದಿದ್ದಾರೆ. ಕುಲ್ಕುಂದ ಸಮೀಪ ನದಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸುಬ್ರಹ್ಮಣ್ಯ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರ ನೆರವಿನಿಂದ ಇಬ್ಬರ ಮೃತ ದೇಹಗಳನ್ನು ಹೊರ ತೆಗೆಯಲಾಗಿದೆ.

ಕನ್ನಡ ದುನಿಯಾ 18 Jan 2026 6:46 pm

ಮ್ಯಾಟ್ರಿಮೋನಿಯಲ್ಲಿ ಪರಿಚಯ: ಮದುವೆಯಾಗಿ ಪತ್ನಿಯಿದ್ದರೂ ಮತ್ತೊಂದು ಯುವತಿಗೆ ಗಾಳ: ವಿವಾಹಕ್ಕೆ ಮಾತುಕತೆ ನಡೆಸಿ 1.75 ಕೋಟಿ ವಂಚಿಸಿ ಪರಾರಿ

ಬೆಂಗಳೂರು: ಮ್ಯಾಟ್ರಿಮೋನಿ ವೆಬ್ ಸೈಟ್ ಮೂಲಕ ಪರಿಚಿಯನಾದ ವ್ಯಕ್ತಿಯೋರ್ವ ಮದುವೆಯಾಗುವುದಾಗಿ ನಂಬಿಸಿ ಯುವತಿ ಹಾಗೂ ಆಕೆಯ ಕುಟುಂಬಕ್ಕೆ ಬರೋಬ್ಬರಿ 1.75 ಕೋಟಿ ರೂಪಾಯಿ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿಜಯ್ ರಾಜ್ ಗೌಡ ಎಂಬಾತ 2024ರಲ್ಲಿ ಸಾಫ್ಟ್ ವೇರ್ ಉದ್ಯೋಗಿಯಾಗಿದ್ದ ಯುವತಿಗೆ ಮ್ಯಾಟ್ರಿಮೋನಿಯಲ್ಲಿ ಪರಿಚಯವಾಗಿದ್ದಾನೆ. ತಾನು ದೊಡ್ಡ ಉದ್ಯಮಿ 715 ಕೋಟಿ ಆಸ್ತಿಯಿದೆ ಎಂದು ಹೇಳಿಕೊಂಡು ಬಿಲ್ಡಪ್ ಕೊಟ್ಟಿದ್ದ. ಅಲ್ಲದೇ ತನ್ನ ತಂದೆ ನಿವೃತ್ತ ತಹಶಿಲ್ದಾರ್ ಪರಿಚಯಿಸಿದ್ದ. ಯುವತಿಯನ್ನು ಮದುವೆಯಾಗುವುದಾಗಿ ಹೇಳಿ ಕೆಂಗೇರಿ ಬಳಿ ಯುವತಿ ಹಾಗೂ […]

ಕನ್ನಡ ದುನಿಯಾ 18 Jan 2026 6:36 pm

ಡ್ಯಾರಿಲ್ ಮಿಚೆಲ್ ಐತಿಹಾಸಿಕ ದಾಖಲೆ: ಅತಿ ಹೆಚ್ಚು ರನ್‌ಗಳ ವಿಶ್ವ ದಾಖಲೆ

ನ್ಯೂಜಿಲೆಂಡ್ ತಂಡದ ಭರವಸೆಯ ಬ್ಯಾಟ್ಸ್‌ಮನ್ ಡ್ಯಾರಿಲ್ ಮಿಚೆಲ್ ಮತ್ತೆ ಕ್ರಿಕೆಟ್ ಲೋಕದ ಗಮನಸೆಳೆದಿದ್ದಾರೆ. ತನ್ನ ಶಾಂತ ಮನೋಭಾವ, ಕಷ್ಟಪಟ್ಟು ಮಾಡಿದ ಅಭ್ಯಾಸ ಮತ್ತು ದೃಢ ನಿಲುವಿನ ಬ್ಯಾಟಿಂಗ್ ಮೂಲಕ ಅವರು ಮಹತ್ವದ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಹೊಸ ವಿಶ್ವದಾಖಲೆ ಬರೆದಿದ್ದಾರೆ. ಈ ಸಾಧನೆ ಕೇವಲ ಅಂಕಿಗಳ ಹೊಳಪಲ್ಲ; ಅದು ಮಿಚೆಲ್‌ನ ಮನೋಬಲದ ನಿಜವಾದ ಪ್ರತಿಬಿಂಬ. ತಂಡ ಕಷ್ಟದ ಸ್ಥಿತಿಯಲ್ಲಿ ಇದ್ದಾಗ ಕ್ರೀಸ್‌ಗೆ ಬಂದು ಇನ್ನಿಂಗ್ಸ್‌ ಅನ್ನು ಹಿಡಿದುಕೊಳ್ಳುವ ಅವರ ಶಕ್ತಿ ಎಲ್ಲರನ್ನೂ ಮೆಚ್ಚಿಸಿದೆ. […]

ಕನ್ನಡ ದುನಿಯಾ 18 Jan 2026 6:34 pm

BREAKING: ಜಾರ್ಖಂಡ್ ನಲ್ಲಿ ಮದುವೆ ದಿಬ್ಬಣದ ಬಸ್ ಪಲ್ಟಿ: 5 ಜನ ಸಾವು, 25 ಮಂದಿಗೆ ಗಾಯ

ರಾಂಚಿ: ಜಾರ್ಖಂಡ್‌ನ ಲತೇಹಾರ್ ಜಿಲ್ಲೆಯಲ್ಲಿ ಮದುವೆ ದಿಬ್ಬಣ ಬಸ್ ಉರುಳಿಬಿದ್ದ ಪರಿಣಾಮ ಕನಿಷ್ಠ ಐದು ಜನರು ಸಾವನ್ನಪ್ಪಿದ್ದು, 25 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಛತ್ತೀಸ್‌ಗಢದ ಬಲರಾಂಪುರ ಜಿಲ್ಲೆಯಿಂದ ಮಹುವಾದರ್‌ಗೆ ಹೋಗುತ್ತಿದ್ದ ಬಸ್ ಮಹುವಾದರ್‌ ಪೊಲೀಸ್ ಠಾಣೆ ವ್ಯಾಪ್ತಿಯ ಓರ್ಸಾ ಕಣಿವೆಯಲ್ಲಿ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಐದು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಜಾರ್ಖಂಡ್ ಪೊಲೀಸರು ತಿಳಿಸಿದ್ದಾರೆ, ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಮತ್ತು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ ಮತ್ತು ತನಿಖೆಯನ್ನು […]

ಕನ್ನಡ ದುನಿಯಾ 18 Jan 2026 6:17 pm

BREAKING: ಭದ್ರಾ ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿ ದುರಂತ: ಒಂದೇ ಕುಟುಂಬದ ನಾಲ್ವರು ನೀರುಪಾಲು

ಶಿವಮೊಗ್ಗ: ಭದ್ರಾ ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿ ಒಂದೇ ಕುಟುಂಬದ ನಾಲ್ವರು ನೀರುಪಾಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಅರಬಿಳಚಿ ಕ್ಯಾಂಪ್ ಬಳಿ ನಡೆದಿದೆ. ಬಟ್ಟೆ ತೊಳೆಯಲೆಂದು ಭದ್ರಾ ನಾಲೆಗೆ ಇಳಿದಿದ್ದಾಗ, ಒಬ್ಬರು ಕಾಲು ಜಾರಿ ನಾಲೆ ನೀರಿಗೆ ಬಿದ್ದಿದ್ದಾರೆ. ಅವರನ್ನು ರಕ್ಷಿಸಲು ಇನ್ನೊಬ್ಬರು ಹೋಗಿದ್ದಾರೆ. ಹೀಗೆ ಒಬ್ಬರ ಹಿಂದೆ ಒಬ್ಬರಂತೆ ನಾಲ್ವರೂ ನಾಲೆಯ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ನೀಲಾಬಾಯಿ, ಮಗ ರವಿ ಕುಮಾರ್, ಮಗಳು ಶ್ವೇತಾ ಹಾಗೂ ಅಳಿಯ ಪರಶುರಾಮ ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಪೊಲೀಸರು, […]

ಕನ್ನಡ ದುನಿಯಾ 18 Jan 2026 6:07 pm

ಇಂದೋರ್‌ನಲ್ಲಿ ಕಣ್ಣೀರಿಡುವ ಘಟನೆ: ಹಬ್ಬದಂತಿದ್ದ ಮನೆಯಲ್ಲಿ ಸೂತಕದ ಛಾಯೆ; ಹುಟ್ಟುಹಬ್ಬದಂದೇ ಪ್ರಾಣ ಕಳೆದುಕೊಂಡ ಮಗ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಅತ್ಯಂತ ವಿಷಾದನೀಯ ಘಟನೆಯೊಂದು ನಡೆದಿದೆ. 20 ವರ್ಷದ ಯುವಕನೊಬ್ಬ ತನ್ನ ಹುಟ್ಟಿದ ಹಬ್ಬದ ಸಂಭ್ರಮದ ಬೆನ್ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದು, ಕುಟುಂಬದ ಸಂತೋಷ ಕ್ಷಣಾರ್ಧದಲ್ಲಿ ಶೋಕವಾಗಿ ಬದಲಾಗಿದೆ. ಘಟನೆಯ ವಿವರ: ಇಂದೋರ್‌ನ ಮಹಾವರ್ ನಗರದ ನಿವಾಸಿ ವಂಶ್ ಪರೋಚೆ (20) ಎಂಬ ಯುವಕನೇ ಮೃತಪಟ್ಟ ದುರ್ದೈವಿ. ಶುಕ್ರವಾರ ವಂಶ್‌ನ ಜನ್ಮದಿನವಿದ್ದ ಕಾರಣ, ಕುಟುಂಬ ಸದಸ್ಯರೆಲ್ಲರೂ ಸೇರಿ ಕೇಕ್ ಕತ್ತರಿಸಿ ಅತ್ಯಂತ ಸಡಗರದಿಂದ ಸಂಭ್ರಮಿಸಿದ್ದರು. ಮನೆಯಲ್ಲಿ ಹಬ್ಬದ ವಾತಾವರಣವಿತ್ತು. ಆದರೆ, ಸಂಭ್ರಮಾಚರಣೆ ಮುಗಿದ ಕೆಲವೇ ಹೊತ್ತಿನಲ್ಲಿ ವಂಶ್ […]

ಕನ್ನಡ ದುನಿಯಾ 18 Jan 2026 5:56 pm

ಭಾರತ vs ನ್ಯೂಜಿಲೆಂಡ್ ಅಂತಿಮ ಏಕದಿನ ಪಂದ್ಯ: ಇಬ್ಬರ ಶತಕ, ಟೀಮ್ ಇಂಡಿಯಾಗೆ ಸವಾಲಿನ ಗುರಿ ನೀಡಿದ ಕಿವೀಸ್

ಇಂಧೋರ್‌ನ ಹೊಲ್ಕರ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ಮೂರನೇ ಏಕದಿನ ಪಂದ್ಯಗಳ ಸರಣಿಯ ಅಂತಿಮ ಪಂದ್ಯ ನಡೆಯುತ್ತಿದೆ. ಮೊದಲ ಪಂದ್ಯದಲ್ಲಿ ಭಾರತ ಹಾಗೂ ಎರಡನೇ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡಗಳು ಗೆಲುವು ಸಾಧಿಸಿರುವ ಕಾರಣ ಈ ಪಂದ್ಯ ಫೈನಲ್ ಪಂದ್ಯವಾಗಿ ಮಾರ್ಪಟ್ಟಿದ್ದು, ಗೆದ್ದವರು ಚಾಂಪಿಯನ್ ಆಗಿ ಹೊರಹೊಮ್ಮಲಿದ್ದಾರೆ. ಈ ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆರಿಸಿಕೊಂಡು ನ್ಯೂಜಿಲೆಂಡ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ […]

ಕನ್ನಡ ದುನಿಯಾ 18 Jan 2026 5:44 pm

ಪಾಡ್‌ಕಾಸ್ಟ್‌ನಲ್ಲಿ ಸಚಿನ್‌ಗೆ ಪಲ್ಟಿ ಹೊಡೆಸಿದ ಮಾರ್ಕ್ ವಾ ಲೈವ್ ಶೋನಲ್ಲೇ ದಿಗ್ಗಜನಿಗೆ ಫೋನ್ ಮಾಡಿದ ಡೇವಿಡ್ ಲಾಯ್ಡ್‌

ಕ್ರಿಕೆಟ್ ಲೋಕದ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಹೆಸರಿಲ್ಲದೆ ಸಾರ್ವಕಾಲಿಕ ಶ್ರೇಷ್ಠ ಇಲೆವೆನ್ (All-time XI) ಪಟ್ಟಿ ಪೂರ್ಣಗೊಳ್ಳುವುದು ಅಸಾಧ್ಯ. ಆದರೆ, ಇತ್ತೀಚೆಗೆ ನಡೆದ ಪಾಡ್‌ಕಾಸ್ಟ್ ಒಂದರಲ್ಲಿ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಮಾರ್ಕ್ ವಾ ಸಚಿನ್ ಅವರನ್ನು ತಮ್ಮ ಪಟ್ಟಿಯಿಂದ ಕೈಬಿಟ್ಟಾಗ ನಡೆದ ಘಟನೆ ಈಗ ಭಾರಿ ವೈರಲ್ ಆಗಿದ್ದು, ನಗುವಿನ ಅಲೆ ಎಬ್ಬಿಸಿದೆ. ನಡೆದಿದ್ದೇನು? ‘ಸ್ಟಿಕ್ ಟು ಕ್ರಿಕೆಟ್’ (Stick to Cricket) ಪಾಡ್‌ಕಾಸ್ಟ್‌ನ ಸಂಚಿಕೆಯೊಂದರಲ್ಲಿ ಮಾರ್ಕ್ ವಾ ತಮ್ಮ ಸಾರ್ವಕಾಲಿಕ ಶ್ರೇಷ್ಠ ತಂಡವನ್ನು ಆಯ್ಕೆ […]

ಕನ್ನಡ ದುನಿಯಾ 18 Jan 2026 5:37 pm

BREAKING: ಕರೂರು ಕಾಲ್ತುಳಿತ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ನಟ ವಿಜಯ್ ಗೆ ಮತ್ತೆ ನೋಟಿಸ್ ನೀಡಿದ ಸಿಬಿಐ

ಚೆನ್ನೈ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಬಿಐ, ತಮಿಳು ನಟ, ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಗೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ. ಸಿಬಿಐ ವಿಚಾರಣೆಗೆ ಹಾಜರಾಗುವಂತೆ ನಟ ವಿಜಯ್ ಗೆ 2 ನೇ ಬಾರಿ ಸಮನ್ಸ್ ಜಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ ನಟ ವಿಜಯ್ ಚೆನ್ನೈ ಏರ್ ಪೋರ್ಟ್ ಮೂಲಕವಾಗಿ ದೆಹಲಿಗೆ ತೆರಳಿದ್ದಾರೆ. ಜನವರಿ 19ರಂದು ನಟ ವಿಜಯ್ ದೆಹಲಿಯ ಸಿಬಿಐ ಕಚೇರಿಯಲ್ಲಿ ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗಲಿದ್ದಾರೆ. ಸುಪ್ರೀಂ […]

ಕನ್ನಡ ದುನಿಯಾ 18 Jan 2026 5:36 pm

ಚೀನಾದ ಹಳ್ಳಿಯಲ್ಲಿ ಭಾರತೀಯ ಯುವಕನಿಗೆ ಸ್ಟಾರ್ ಪಟ್ಟಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ಯುವಕನ ಜೊತೆ ಫೋಟೋಗೆ ಮುಗಿಬಿದ್ದ ಜನ

ಚೀನಾದ ಕುಗ್ರಾಮವೊಂದಕ್ಕೆ ಭೇಟಿ ನೀಡಿದ್ದ ಭಾರತೀಯ ಯುವಕನೊಬ್ಬ ಅಲ್ಲಿನ ಸ್ಥಳೀಯರ ಪಾಲಿಗೆ ಅನಿರೀಕ್ಷಿತವಾಗಿ ‘ಸೆಲೆಬ್ರಿಟಿ’ಯಾದ ಅಪರೂಪದ ಘಟನೆ ನಡೆದಿದೆ. ಸಾಂಪ್ರದಾಯಿಕ ಹಬ್ಬವೊಂದರಲ್ಲಿ ಭಾಗವಹಿಸಿದ್ದ ಈ ಯುವಕನ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಸ್ಥಳೀಯರು ಮುಗಿಬಿದ್ದಿದ್ದು, ಕೇವಲ ಒಂದು ದಿನದಲ್ಲಿ ಆತನೊಂದಿಗೆ ಬರೋಬ್ಬರಿ 1,000ಕ್ಕೂ ಹೆಚ್ಚು ಫೋಟೋಗಳನ್ನು ತೆಗೆಸಿಕೊಂಡಿದ್ದಾರೆ! ಘಟನೆಯ ವಿವರ: ಅದ್ವಿಕ್ ಎಂಬ ಭಾರತೀಯ ಯುವಕ ಚೀನಾದ ಯುನ್ನಾನ್ (Yunnan) ಪ್ರಾಂತ್ಯದ ದೂರದ ಹಳ್ಳಿಯೊಂದಕ್ಕೆ ಭೇಟಿ ನೀಡಿದ್ದನು. ಅಲ್ಲಿ ಬುಡಕಟ್ಟು ಸಮುದಾಯವೊಂದು ಆಯೋಜಿಸಿದ್ದ ಸಾಂಪ್ರದಾಯಿಕ ಹಬ್ಬದಲ್ಲಿ ಭಾಗವಹಿಸಲು ಅವನು […]

ಕನ್ನಡ ದುನಿಯಾ 18 Jan 2026 5:32 pm

ಶಾಲಾ, ಕಾಲೇಜುಗಳಲ್ಲಿ ಕನ್ನಡ ಸಾಹಿತ್ಯ ಅಧ್ಯಯನ ಶಿಬಿರ: ಶಾಸಕ ಕೆ.ಎಸ್. ಬಸವಂತಪ್ಪ

ದಾವಣಗೆರೆ: ನಗರ ಪ್ರದೇಶಗಳಲ್ಲಿ ವಿಭಿನ್ನ ಭಾಷೆಗಳನ್ನಾಡುತ್ತಾರೆ, ಕನ್ನಡ ಭಾಷೆಯನ್ನು ಮಾತ್ರ ಮಾತನಾಡುವ ಗ್ರಾಮಾಂತರ ಪ್ರದೇಶಗಳಲ್ಲಿ ಕನ್ನಡ ಭಾಷೆಯ ಉಳಿವು ಸಾಧ್ಯ, ಶಾಲಾ, ಕಾಲೇಜುಗಳಲ್ಲಿ ಕನ್ನಡ ಸಾಹಿತ್ಯದ ನಿರಂತರ ಶಿಬಿರಗಳನ್ನು ಏರ್ಪಡಿಸಿ ಮಕ್ಕಳಲ್ಲಿ ಸಾಹಿತ್ಯದ ಅಭಿರುಚಿ ಮೂಡಿಸುವುದು ಅವಶ್ಯಕವಾಗಿದೆ ಎಂದು ಮಾಯಾಕೊಂಡ ವಿಧಾನಸಭಾ ಸದಸ್ಯರಾದ ಕೆ.ಎಸ್. ಬಸವಂತಪ್ಪ ತಿಳಿಸಿದರು. ಅವರು ಭಾನುವಾರ ದಾವಣಗೆರೆ ತಾಲ್ಲೂಕು ಸಾಹಿತ್ಯ ಪರಿಷತ್ತು ಕುರ್ಕಿ-ಹಿರೇತೊಗಲೇರಿ ಗ್ರಾಮದ ಕಮಲಮ್ಮ ಗುರುಶಾಂತಪ್ಪ ಸಮುದಾಯ ಭವನದ ಬಳಿ ಎರ್ಪಡಿಸಿದ್ದ ದಾವಣಗೆರೆ ತಾಲ್ಲೂಕು 12 ನೇ ಕನ್ನಡ ಸಾಹಿತ್ಯ ಸಮ್ಮೇಳನ-2026 […]

ಕನ್ನಡ ದುನಿಯಾ 18 Jan 2026 5:30 pm

SHOCKING: ಸಿಡ್ನಿ ಹಾರ್ಬರ್ ಬೀಚ್‌ ನಲ್ಲಿ ದೊಡ್ಡ ಶಾರ್ಕ್ ದಾಳಿ: ಗಾಯಗೊಂಡ ಬಾಲಕನ ಸ್ಥಿತಿ ಗಂಭೀರ

ಭಾನುವಾರ ಮಧ್ಯಾಹ್ನ ಸಿಡ್ನಿ ಹಾರ್ಬರ್ ಬೀಚ್‌ನಲ್ಲಿ ಶಾರ್ಕ್ ದಾಳಿಯಿಂದ ಬಾಲಕ ಗಂಭೀರ ಗಾಯಗೊಂಡಿದ್ದಾನೆ. ಸಿಡ್ನಿ ಹಾರ್ಬರ್‌ ನಲ್ಲಿ ಶಾರ್ಕ್‌ ದಾಳಿಯಿಂದ ತೀವ್ರವಾಗಿ ಗಾಯಗೊಂಡು ಬಾಲಕ ಪ್ರಾಣಕ್ಕಾಗಿ ಹೋರಾಡುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪೂರ್ವ ಸಿಡ್ನಿಯ ಉಪನಗರವಾದ ವಾಕ್ಲೂಸ್‌ನಲ್ಲಿರುವ ಶಾರ್ಕ್ ಬೀಚ್‌ನಲ್ಲಿ ಈ ದಾಳಿ ನಡೆದಿದ್ದು, ಸುಮಾರು 13 ವರ್ಷ ವಯಸ್ಸಿನವನೆಂದು ಹೇಳಲಾದ ಬಾಲಕ ನೀರಿನಲ್ಲಿದ್ದಾಗ ದೊಡ್ಡ ಶಾರ್ಕ್ ದಾಳಿ ಮಾಡಿ ಕಚ್ಚಿದ್ದು, ತೀವ್ರ ಗಾಯಗಳಾಗಿವೆ ಎಂದು ನ್ಯೂ ಸೌತ್ ವೇಲ್ಸ್ ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದ ಸ್ವಲ್ಪ […]

ಕನ್ನಡ ದುನಿಯಾ 18 Jan 2026 5:10 pm

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹಳದಿ ಮಾರ್ಗದ 8ನೇ ರೈಲು ನಾಳೆ ಆಗಮನ

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಹಳದಿ ಮಾರ್ಗದ ಮೆಟ್ರೋ ಎಂಟನೇ ರೈಲು ನಾಳೆ ಬೆಂಗಳೂರಿಗೆ ತಲುಪಲಿದೆ. ಜನವರಿ 19ರಂದು ಬೆಂಗಳೂರಿಗೆ ಹಳದಿ ಮಾರ್ಗದ ಎಂಟನೇ ರೈಲು ತಲುಪಲಿದ್ದು, ಮುಂದಿನ ದಿನಗಳಲ್ಲಿ ರೈಲಿಗಾಗಿ ಮೆಟ್ರೋ ಪ್ರಯಾಣಿಕರು ಕಾಯುವ ಸಮಯ ಮತ್ತಷ್ಟು ಕಡಿಮೆಯಾಗಲಿದೆ. ಎಂಟನೇ ರೈಲು ಆಗಮನ ಬಳಿಕ ರೈಲಿನ ಟೆಸ್ಟಿಂಗ್, ತಾಂತ್ರಿಕ ಪರೀಕ್ಷೆ ನಡೆಸಿ ವಾಣಿಜ್ಯ ಕಾರ್ಯಾಚರಣೆಗೆ ಇಳಿಸಲಾಗುವುದು. ಅದರು ಸಂಚಾರ ಆರಂಭ ಮಾಡಿದ ನಂತರ ರೈಲುಗಳ ಓಡಾಟದ ಸಮಯ ಮತ್ತಷ್ಟು ಕಡಿಮೆಯಾಗಿದೆ. ಸದ್ಯ 10 […]

ಕನ್ನಡ ದುನಿಯಾ 18 Jan 2026 4:49 pm

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಅವಕಾಶ: ನಬಾರ್ಡ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಸುವರ್ಣಾವಕಾಶ. ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD) ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. ನಬಾರ್ಡ್ ನಲ್ಲಿ 162 ಅಭಿವೃದ್ಧಿ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪದವೀಧರರು ಆನ್ ಲೈನ್ ಮೂಲಕ nabard.org ನಲ್ಲಿ ಅರ್ಜಿ ಸಲ್ಲಿಸಬಹುದು. ನೇಮಕಾತಿಯನ್ನು ಗ್ರೂಪ್ ಬಿ ಕೇಡರ್ ಅಡಿಯಲ್ಲಿ ನಡೆಸಲಾಗುತ್ತಿದೆ ಎಂದು ತಿಳಿಸಲಾಗಿದೆ. ಈ ನೇಮಕಾತಿಯನ್ನು ರಾಷ್ಟ್ರೀಯ ಮಟ್ಟದಲ್ಲಿ ನಡೆಸಲಾಗುವುದು ಮತ್ತು ಆಯ್ಕೆಯಾದ ಅಭ್ಯರ್ಥಿಗಳನ್ನು ವಿವಿಧ ನಬಾರ್ಡ್ ಕಚೇರಿಗಳಿಗೆ ನೇಮಕಮಾಡಿಕೊಳ್ಳಲಾಗುತ್ತದೆ. ನಬಾರ್ಡ್ ನಲ್ಲಿ […]

ಕನ್ನಡ ದುನಿಯಾ 18 Jan 2026 4:48 pm

BIG NEWS: ಜಾತಿಯನ್ನು ಬೇರುಸಹಿತ ಕಿತ್ತುಹಾಕಿ, ತಾರತಮ್ಯ ಅಳಿಸಿ ಹಾಕಿ: ಆರ್‌.ಎಸ್‌.ಎಸ್. ಮುಖ್ಯಸ್ಥ ಮೋಹನ್ ಭಾಗವತ್ ಕರೆ

ಮುಂಬೈ: ಒಂದು ದಶಕದಲ್ಲಿ ಮನಸ್ಸಿನಿಂದ ಜಾತಿಯನ್ನು ಅಳಿಸಿಹಾಕಿ ತಾರತಮ್ಯವನ್ನು ಕೊನೆಗೊಳಿಸಿ ಎಂದು ಆರ್.ಎಸ್‌.ಎಸ್. ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ಭಾರತೀಯರು ತಮ್ಮ ಮನಸ್ಸಿನಿಂದ ಜಾತಿಯನ್ನು ಶುದ್ಧೀಕರಿಸಿ ಆಳವಾಗಿ ಬೇರೂರಿರುವ ತಾರತಮ್ಯವನ್ನು ಬೇರುಸಹಿತ ಕಿತ್ತುಹಾಕಬೇಕೆಂದು ಒತ್ತಾಯಿಸಿದ್ದಾರೆ. ಶ್ರದ್ಧೆಯಿಂದ ಅನುಸರಿಸಿದರೆ 10-12 ವರ್ಷಗಳಲ್ಲಿ ಅದರ ಅಂತ್ಯವಾಗಲಿದೆ ಎಂದು ಹೇಳಿದ್ದಾರೆ. ಪ್ರಾಂತ್ ಸಂಘಚಾಲಕ್ ಅನಿಲ್ ಭಲೇರಾವ್ ಅವರೊಂದಿಗೆ ಆರ್‌ಎಸ್‌ಎಸ್ ಶತಮಾನೋತ್ಸವದ ಜನಸಂಘದ ಸಂದರ್ಭದಲ್ಲಿ ಸಾರ್ವಜನಿಕ ಸಂವಾದದಲ್ಲಿ ಮಾತನಾಡಿದ ಅವರು, ಜಾತಿ ವ್ಯವಸ್ಥೆಯ ವಿಕಸನ ಮತ್ತು ಸಂಘದ ಸಾಮಾಜಿಕ ದೃಷ್ಟಿಕೋನವನ್ನು ವಿಶ್ಲೇಷಿಸಿದರು. […]

ಕನ್ನಡ ದುನಿಯಾ 18 Jan 2026 4:31 pm

BIG NEWS: ಅಬಕಾರಿ ಲಂಚ ಪ್ರಕರಣ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಮೈಸೂರು: 25 ಲಕ್ಷ ಲಂಚ ಪಡೆಯುತ್ತಿದ್ದಾಗ ಅಬಕಾರಿ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಪ್ರಕರಣ ಹಾಗೂ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹಾಗೂ ಪುತ್ರನ ವಿರುದ್ಧ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯಯ, ಕಾನೂನಿನ ಮುಂದೆ ಯಾರೂ ದೊಡ್ದವರಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮವಾಗಲಿದೆ ಎಂದು ತಿಳಿಸಿದ್ದಾರೆ. ಅಬಕಾರಿ ಡಿಸಿ ಮೇಲೆ ಲೋಕಾಯುಕ್ತ ದಾಳಿ ಹಾಗೂ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಆಡಿಯೋದಲ್ಲಿ ಪ್ರಸ್ತಾಪವಾಗಿರುವ ಬಗ್ಗೆ ಕಾನೂನಿನ ಕ್ರಮಕ್ಕೆ ನಾವು […]

ಕನ್ನಡ ದುನಿಯಾ 18 Jan 2026 4:09 pm

ಬಿಗ್ ಬಾಸ್-12 ಗ್ರ್ಯಾಂಡ್ ಫಿನಾಲೆ: ಜಾಲಿವುಡ್ ಸ್ಟುಡಿಯೋ ಬಳಿ ಪೊಲೀಸ್ ಬಿಗಿ ಭದ್ರತೆ

ಬೆಂಗಳೂರು: ಬಿಗ್ ಬಾಸ್ ಸೀಜನ್ -12 ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ ಆರಂಭವಾಗಿದೆ. ಅಂತಿಮವಾಗಿ ಬಿಗ್ ಬಾಸ್ ಮನೆಯಲ್ಲಿ ಉಳಿದಿರುವ ಆರು ಸ್ಪರ್ಧಿಗಳಲ್ಲಿ ಗೆಲುವುನ ಕಿರೀಟ ಯಾರಾಪಾಲಾಗಲಿದೆ ಎಂಬುದು ಕೆಲವೇ ಸಮಯದಲ್ಲಿ ಗೊತ್ತಾಗಲಿದೆ. ತಮ್ಮ ನೆನ್ನಿಚ್ಚಿನ ಸ್ಪರ್ಧಿಗಳಿಗಾಗಿ ಅಭಿಮಾನಿಗಳು ವಿಶೇಷ ಪೂಜೆ, ಪುನಸ್ಕಾರ, ಪ್ರಾರ್ಥನೆಗಳಲ್ಲಿ ತೊಡಗಿದ್ದಾರೆ. ಇನ್ನೊಂದೆಡೆ ಬಿಗ್ ಬಾಸ್ ಮನೆಯ ಹೊರ ಭಾಗದಲ್ಲಿ ಸ್ಪರ್ಧಿಗಳ ಬೃಹತ್ ಕಟೌಟ್, ಬ್ಯಾನರ್ ಗಳನ್ನು ಅಳವಡಿಸಿ ಅಭಿಮಾನಿಗಳು ಕಾಯುತ್ತಿದ್ದಾರೆ. ಇಂದು ಬಿಗ್ ಬಾಸ್ ಸೀಜನ್ -12ರ ಗ್ರ್ಯಾಂಡ್ ಫಿನಾಲೆ ಹಿನ್ನೆಲೆಯಲ್ಲಿ ಬಿಗ್ […]

ಕನ್ನಡ ದುನಿಯಾ 18 Jan 2026 3:29 pm

SHOCKING: ಗಾಳಿಪಟ ಹಾರಿಸುವಾಗ ದುರಂತ: ಕಾಲೇಜು ಕಟ್ಟಡದ ಮೇಲಿಂದ ಬಿದ್ದು ಯುವಕ ದುರ್ಮರಣ

ಬೀದರ್: ಗಾಳಿಪಟ ಹಿಡಿಯಲು ಹೋಗಿ ಯುವಕನೊಬ್ಬ ಕಟ್ಟಡದ ಮೇಲಿಂದ ಬಿದ್ದು ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿ ನಡೆದಿದೆ. ವಾಂಜರಿ ಬಡಾವಣೆಯಲ್ಲಿ ಈ ದುರಂತ ಸಂಭವಿಸಿದೆ. ಶಶಿಕುಮಾರ್ ಶಿವಾನಂದ್ (19) ಮೃತ ದುರ್ದೈವಿ. ಖಾಸಗಿ ಕಾಲೇಜಿನ ಕಟ್ಟಡದ ಮೇಲೆ ಗಾಳಿಪಟ ಹಾರಿಸಲು ಹೋಗಿದ್ದ ವೇಳೆ ಈ ದುರಂತ ಸಂಭವಿಸಿದೆ. ಗಾಳಿಪಟ ಹಾರಿಸುತ್ತಿದ್ದಾಗ ಏಕಾಏಕಿ ದಾರ ತುಂಡಾಗಿದೆ. ಈ ವೇಳೆ ಹಾರಿ ಹೋಗುತ್ತಿದ್ದ ಗಾಳಿಪಟ ಹಿಡಿಯಲು ಹೋಗಿ ಆಯತಪ್ಪಿ ಯುವಕ ಕಟ್ಟಡದಿಂದ ಕೆಳಗೆ ಬಿದ್ದಿದ್ದಾನೆ. ಗಂಭೀರವಾಗಿ ಗಾಯಗೊಂಡ […]

ಕನ್ನಡ ದುನಿಯಾ 18 Jan 2026 2:37 pm

BREAKING: ದಾವಣಗೆರೆ ಡ್ರಗ್ಸ್ ಪ್ರಕರಣ: ಮತ್ತೋರ್ವ ಉದ್ಯಮಿ ಅರೆಸ್ಟ್

ದಾವಣಗೆರೆ: ದಾವಣಗೆರೆಯಲ್ಲಿ ಮಾದಕ ವಸ್ತು, ಸಿಂಥೆಟಿಕ್ಸ್ ಡ್ರಗ್ಸ್ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ಮುಂದುವರೆಸಿರುವ ಪೊಲೀಸರು ಮತ್ತೋರ್ವ ಉದ್ಯಮಿಯನ್ನು ಬಂಧಿಸಿದ್ದಾರೆ. ಶಿವರಾಜ್ ಬಂಧಿತ ಉದ್ಯಮಿ. ದಾವಣಗೆರೆಅ ವಿದ್ಯಾನಗರ ಠಾಣೆ ಪೊಲೀಸರು ಉದ್ಯಮಿ ಶಿವರಾಜ್ ನನ್ನು ಬಂಧಿಸಿದ್ದಾರೆ. ಉದ್ಯಮಿ ಶಿವರಾಜ್ ದಾವಣಗೆರೆಯ ಎಸ್.ಎಸ್.ಲೇಔಟ್ ನಿವಾಸಿ. ಈ ಹಿಂದೆ ಆರ್ ಟಿ ಒ ಕಚೇರಿಯಲ್ಲಿ ಏಜೆಂಟ್ ಆಗಿದ್ದರು. ಸಂಘಟನೆಯೊಂದರಲ್ಲಿ ಗುರುತಿಸಿಕೊಂಡಿದ್ದರು. ಈಗಾಗಲೇ ದಾವಣಗೆರೆ ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ, ವೀರಶೈವ ಮಹಾಸಭಾ ಸದಸ್ಯ ಶಾಮನೂರು ವೇದಮೂರ್ತಿ ಎಂಬಾತನ್ನನು ಪೊಲೀಸರು ಬಂಧಿಸಿದ್ದಾರೆ. […]

ಕನ್ನಡ ದುನಿಯಾ 18 Jan 2026 2:16 pm

ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ: ಇಬ್ಬರು ಸಾವು

ಕಾರವಾರ: ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆ ಭಟ್ಕಳದ ವೆಂಕಟಾಪುರ ಸಮೀಪ ನಡೆದಿದೆ. ಭಟ್ಕಳದ ಆಜಾದ್ ನಗರ ನಿವಾಸಿ ಬಿಲಾಲ್(15), ಅಯಾನ್(20) ಮೃತಪಟ್ಟವರು. ಅಪಘಾತದಲ್ಲಿ ಬಿಲಾಲ್ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರ್ ಚಾಲನೆ ಮಾಡುತ್ತಿದ್ದ ಅಯಾನ್ ಗಂಭೀರವಾಗಿ ಗಾಯಗೊಂಡು ಉಡುಪಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಶಿರಾಲಿಯಿಂದ ಭಟ್ಕಳಕ್ಕೆ ಕಾರ್ ನಲ್ಲಿ ಬರುತ್ತಿದ್ದಾಗ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಭಟ್ಕಳ ಶಹರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ನಡ ದುನಿಯಾ 18 Jan 2026 2:14 pm

BREAKING: ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಲಕ್ನೋದಲ್ಲಿ ತುರ್ತು ಭೂಸ್ಪರ್ಶ

ದೆಹಲಿಯಿಂದ ಬಾಗ್ಡೋಗ್ರಾಗೆ ಪ್ರಯಾಣಿಸುತ್ತಿದ್ದ ಇಂಡಿಗೋ ಏರ್ಲೈನ್ಸ್ ವಿಮಾನದಲ್ಲಿ ಬಾಂಬ್ ಬೆದರಿಕೆ ನಂತರ ಲಕ್ನೋ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ವಿಮಾನದೊಳಗೆ ಕೈಬರಹದ ಟಿಪ್ಪಣಿಯ ಮೂಲಕ ಬೆದರಿಕೆ ನೀಡಲಾಗಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ(ಎಸಿಪಿ) ರಜನೀಶ್ ವರ್ಮಾ ತಿಳಿಸಿದ್ದಾರೆ. ವಿಮಾನದ ಶೌಚಾಲಯದಲ್ಲಿ ಟಿಶ್ಯೂ ಪೇಪರ್‌ನಲ್ಲಿ ಬಾಂಬ್ ಇದೆ ಎಂದು ಬರೆಯಲಾದ ಸಂದೇಶ ಕಂಡುಬಂದಿದೆ. ವಿಮಾನದಲ್ಲಿ ಪೈಲಟ್‌ಗಳು ಮತ್ತು ಸಿಬ್ಬಂದಿ ಸೇರಿದಂತೆ 238 ಪ್ರಯಾಣಿಕರಿದ್ದರು. ವಿಮಾನವು ದೆಹಲಿಯಿಂದ ಬಾಗ್ಡೋಗ್ರಾಗೆ ತೆರಳುತ್ತಿತ್ತು. “ಲಕ್ನೋದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ ಮತ್ತು ಪ್ರಸ್ತುತ […]

ಕನ್ನಡ ದುನಿಯಾ 18 Jan 2026 2:03 pm

ಸ್ವರ್ಣಮಂದಿರದ ಆವರಣದ ಕೊಳದಲ್ಲಿ ಮುಖ ತೊಳೆದು ಉಗುಳಿದ ಯುವಕ: ಸಿಖ್ ನೀತಿ ಸಂಹಿತೆ ಉಲ್ಲಂಘನೆ ಎಂದು ಶಿರೋಮಣಿ ಗುರುದ್ವಾರ ಸಮಿತಿ ಖಂಡನೆ

ಅಮೃತಸರ: ಸಿಖ್ ರ ಪವಿತ್ರ ಸ್ಥಳ ಅಮೃತಸರದ ಸ್ವರ್ಣಮಂದಿರದ ಆವರಣದಲ್ಲಿರುವ ಕೊಳದಲ್ಲಿ ಯುವಕನೊಮ್ಮ ಕೈ-ಕಾಲು, ಮುಖ ತೊಳೆದಿದಲ್ಲದೇ ಕೊಳದ ನೀರಿನಲ್ಲಿ ಬಾಯಿ ತೊಳೆದು ಉಗುಳಿರುವ ಘಟನೆ ಬೆಳಕಿಗೆ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಯುವಕನ ವಿಡಿಯೋ ವೈರಲ್ ಆಗಿದ್ದು, ಇದನ್ನು ತೀವ್ರವಾಗಿ ಖಂಡಿಸಿರುವ ಶಿರೋಮಣಿ ಗುರುದ್ವಾರ ಪ್ರಬಂಧಕ ಸಮಿತಿ (ಎಸ್ ಜಿ ಪಿ ಸಿ) , ಇದು ಸಿಖ್ ನೀತಿ ಸಂಹಿತೆಯ ಉಲ್ಲಂಘನೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಸ್ವರಣಮಂದಿರದ ಆವರಣದಲ್ಲಿರುವ ಕೊಳದ ನೀರಿನಲ್ಲಿ ಯುವಕ ಮುಖ ತೊಳೆದು ಉಗುಳಿದ್ದಾನೆ. […]

ಕನ್ನಡ ದುನಿಯಾ 18 Jan 2026 1:48 pm