SENSEX
NIFTY
GOLD
USD/INR

Weather

26    C

ಡಿಜಿಟಲ್ ಸುದ್ದಿ ಮೂಲಗಳು

...

BREAKING: ಶಾಸಕ ಬೈರತಿ ಬಸವರಾಜ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಇಸಿಜಿಯಲ್ಲಿ ಸ್ವಲ್ಪ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಶಾಸಕ ಬೈರತಿ ಬಸವರಾಜ್ ಅವರನ್ನು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಳೆ ಬೈರತಿ ಬಸವರಾಜ್ ಗೆ ಆಂಜಿಯೋಗ್ರಾಂ ಮಾಡಲಾಗುವುದು. ಅವರು ಇಂದು ರಾತ್ರಿ ಆಸ್ಪತ್ರೆಯಲ್ಲೇ ಉಳಿಯಲಿದ್ದಾರೆ. ಅವರ ರಕ್ತದ ಪರೀಕ್ಷೆಗಾಗಿ ರಕ್ತದ ಮಾದರಿಯನ್ನು ಜಯದೇವ ಆಸ್ಪತ್ರೆ ವೈದ್ಯರು ಪಡೆದಿದ್ದಾರೆ. ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ದಿನೇಶ್ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗಿದೆ. ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ಎ5 ಆರೋಪಿ ಬೈರತಿ ಬಸವರಾಜ್ ಗೆ […]

ಕನ್ನಡ ದುನಿಯಾ 13 Feb 2026 9:16 pm

BREAKING: ಅಧಿಕಾರಿ ವರ್ಗಾವಣೆ ಬಗ್ಗೆ ಸುಳ್ಳು ಆದೇಶ ಪ್ರತಿ ಸೃಷ್ಟಿ: ಸಿಎಂ ಸಿದ್ದರಾಮಯ್ಯ ಗರಂ: ದೂರು ದಾಖಲು, ಕಾನೂನು ಕ್ರಮಕ್ಕೆ ಸೂಚನೆ

ಬೆಂಗಳೂರು: ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ ಎಂದು ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿ ಸೃಷ್ಟಿ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕೆ. ಮೋಹನ್ ಅವರನ್ನು ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಪತ್ರ ಹರಿಬಿಟ್ಟು ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಸಿಎಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾರೋ ಕೆಲವು ಕಿಡಿಗೇಡಿಗಳು […]

ಕನ್ನಡ ದುನಿಯಾ 13 Feb 2026 9:06 pm

ಶಿವರಾತ್ರಿಗೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: 2 ಸಾವಿರಕ್ಕೂ ಅಧಿಕ ಹೆಚ್ಚುವರಿ ಬಸ್, ವಿಶೇಷ ರೈಲು

ಬೆಂಗಳೂರು: ಮಹಾಶಿವರಾತ್ರಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಸಾರಿಗೆ ಸಂಸ್ಥೆ ಸಿಹಿ ಸುದ್ದಿ ನೀಡಿದೆ. ಶಿವರಾತ್ರಿ ಹಬ್ಬಕ್ಕೆ ಹೆಚ್ಚಿನ ಸಂಖ್ಯೆಯ ಜನ ಊರಿಗೆ ತೆರಳುವ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ನಿಯಂತ್ರಿಸಲು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ 2155 ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಹಬ್ಬಗಳ ರಜೆ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿಯಿಂದ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವವರ ಸಂಖ್ಯೆ ಹೆಚ್ಚಾಗುತ್ತದೆ. ಹೀಗಾಗಿ ಕೆಎಸ್ಆರ್ಟಿಸಿ, ಬಿಎಂಟಿಸಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳು ಜಂಟಿಯಾಗಿ ಹೆಚ್ಚುವರಿ […]

ಕನ್ನಡ ದುನಿಯಾ 13 Feb 2026 8:58 pm

Basrur Loot Day: ಫೆಬ್ರವರಿ 13 ‘ಬಸ್ರೂರು ಸ್ವತಂತ್ರ ದಿನ’ಅಥವಾ ಶಿವಾಜಿ ‘ಬಸ್ರೂರು ಲೂಟಿಗೈದ ದಿನ’? ಏನಿದು ‘ಬಸ್ರೂರ್ ಲೂಟ್ ಡೇ’ಟ್ರೆಂಡ್?

ಬಸ್ರೂರು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪ್ರಸಿದ್ಧ ಪಟ್ಟಣ. ರಾಜ್ಯದ ಹಲವು ಶ್ರೀಮಂತ ನಗರಗಳ ಹಾಗೆ ಲೂಟಿಕೋರರು ದೋಚುವ ಮುನ್ನ ಬಸ್ರೂರು ಸಹ ಶ್ರೀಮಂತತೆಯಿಂದ ಕೂಡಿದ್ದ ಪಟ್ಟಣ. ವರಾಹಿ ನದಿ ದಂಡೆಯಲ್ಲಿದ್ದ ಬಸ್ರೂರು ಕರಾವಳಿಯ ಪ್ರಮುಖ ಬಂದರು ಪಟ್ಟಣವಾಗಿ ಗುರುತಿಸಿಕೊಂಡಿತ್ತು. ಅಕ್ಕಿ, ಮಸಾಲೆಗಳು, ವಸ್ತ್ರಗಳು ಮತ್ತು ಇತರ ವಸ್ತುಗಳ ವ್ಯಾಪಾರಕ್ಕೆ ಪ್ರಸಿದ್ಧವಾಗಿದ್ದ ಬಸ್ರೂರು ಪಟ್ಟಣದ ಮೇಲೆ ದಂಡೆತ್ತಿ ಬಂದಿದ್ದ ಡಚ್ಚರು ಹಾಗೂ ಪೋರ್ಚುಗೀಸರು ಆಕ್ರಮಣ ಮಾಡಿಕೊಂಡು ಕೊಳ್ಳೆ ಹೊಡೆದಿದ್ದರು. ಹೀಗೆ ವಿದೇಶಿಗರ ಕೈಗೆ ಸಿಕ್ಕು ನಲುಗಿದ್ದ ಬಸ್ರೂರಿಗೆ […]

ಕನ್ನಡ ದುನಿಯಾ 13 Feb 2026 8:43 pm

BREAKING: ಆಧಾರ್ ಸಂಖ್ಯೆ ಮೂಲಕ ಸಿಇಟಿಗೆ 2.9 ಲಕ್ಷ ಮಂದಿ ನೋಂದಣಿ: ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ನಡೆಸಲಿದ್ದು, ಇದಕ್ಕೆ ಅರ್ಜಿ ಸಲ್ಲಿಸುವ ಕೊನೆ ದಿನಾಂಕವನ್ನು ಫೆಬ್ರುವರಿ 22ರವರೆಗೆ ವಿಸ್ತರಿಸಲಾಗಿದೆ. ಇದುವರೆಗೂ 2.9 ಲಕ್ಷ ಮಂದಿ ಆಧಾರ್ ಸಂಖ್ಯೆ ಮೂಲಕ ನೋಂದಣಿ ಮಾಡಿಕೊಂಡಿದ್ದು ಇನ್ನೂ ಅನೇಕರು ಫೆ.17ರ ಕೊನೆ ದಿನಾಂಕವನ್ನು ವಿಸ್ತರಿಸುವಂತೆ ಕೋರಿದ್ದಾರೆ, ಆ ಪ್ರಕಾರ ಅರ್ಜಿ ಸಲ್ಲಿಸಲು ಫೆ.22 ಹಾಗೂ ಶುಲ್ಕ ಪಾವತಿಗೆ ಫೆ.24ರವರೆಗೆ ದಿನಾಂಕ ವಿಸ್ತರಿಸಲಾಗಿದೆ. ಇದುವರೆಗೆ ನೋಂದಣಿ ಮಾಡಿಕೊಂಡಿರುವ ಒಟ್ಟು ಅಭ್ಯರ್ಥಿಗಳ ಪೈಕಿ […]

ಕನ್ನಡ ದುನಿಯಾ 13 Feb 2026 8:20 pm

BIG NEWS: ‘ಬಾಂಗ್ಲಾದೇಶಕ್ಕೆ ಶೇಖ್ ಹಸೀನಾ ವಾಪಸ್ ಕಳುಹಿಸಿ’: ಚುನಾವಣೆಯಲ್ಲಿ ಗೆದ್ದ ಬೆನ್ನಲ್ಲೇ ಭಾರತಕ್ಕೆ ಬೇಡಿಕೆ ಇಟ್ಟ ಬಿ.ಎನ್‌.ಪಿ.

ಢಾಕಾ: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ವಾಪಸ್ ಕಳುಹಿಸಿ ಎಂದು ಚುನಾವಣೆಯಲ್ಲಿ ಐತಿಹಾಸಿಕ ಗೆಲುವಿನ ನಂತರ ನವೆಂಬರ್ 2025 ರ ಹಸ್ತಾಂತರ ಬೇಡಿಕೆಯನ್ನು ಬಿ.ಎನ್‌.ಪಿ. ಪುನರುಚ್ಚರಿಸಿದೆ. 2026ರ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ(ಬಿ.ಎನ್‌.ಪಿ.) ಅಧ್ಯಕ್ಷ ತಾರಿಕ್ ರೆಹಮಾನ್ ಐತಿಹಾಸಿಕ ಗೆಲುವು ದಾಖಲಿಸಿದ ನಂತರ, ಪಕ್ಷವು ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ವಿಚಾರಣೆಗೆ ಒಳಪಡಿಸಲು ಢಾಕಾಗೆ ಕಳುಹಿಸುವಂತೆ ಭಾರತವನ್ನು ಒತ್ತಾಯಿಸಿದೆ. ಹಿರಿಯ ಬಿ.ಎನ್‌.ಪಿ. ನಾಯಕ ಸಲಾಹುದ್ದೀನ್ ಅಹ್ಮದ್ ಅವರ ಪ್ರಕಾರ, 2024 ರಲ್ಲಿ ವಿದ್ಯಾರ್ಥಿಗಳ […]

ಕನ್ನಡ ದುನಿಯಾ 13 Feb 2026 8:10 pm

ಮೃತರ ಹೆಸರಲ್ಲಿರುವ ಜಮೀನು ವಾರಸುದಾರರ ಹೆಸರಿಗೆ: ಮನೆ ಬಾಗಿಲಿಗೆ ಪೌತಿ ಖಾತೆ ಆಂದೋಲನ

ಕೃಷಿ ಜಮೀನುಗಳ ಮೂಲ ಮಾಲೀಕರು ಮೃತರಾಗಿದ್ದಲ್ಲಿ, ಅವರ ವಾರಸುದಾರರಿಗೆ ಆಸ್ತಿಯನ್ನು ವರ್ಗಾಯಿಸಲು ಪೌತಿ ಖಾತೆ ಆಂದೋಲನ ಎಂಬ ವಿಶೇಷ ಅಭಿಯಾನವನ್ನು ರಾಜ್ಯ ಸರ್ಕಾರವು ಹಮ್ಮಿಕೊಂಡಿದೆ. ಇದರಿಂದಾಗಿ ಜನಸಾಮಾನ್ಯರು ಕಚೇರಿಗಳಿಗೆ ಅಲೆದಾಡಬೇಕಿಲ್ಲ, ಅರ್ಜಿ ಹಾಕಬೇಕಾಗಿಲ್ಲ. ನಿಮ್ಮ ಪೂರ್ವಜರ ಹೆಸರಲ್ಲಿರುವ ದಾಖಲೆಗಳನ್ನು ಯಾವುದೇ ತೊಂದರೆಯಿಲ್ಲದೆ ವಾರಸುದಾರರ ಹೆಸರಿಗೆ ಮಾಡಿಸಿಕೊಳ್ಳಬಹುದು. ಈಗಾಗಲೇ ರಾಜ್ಯದಲ್ಲಿ 14.50 ಲಕ್ಷಕ್ಕೂ ಹೆಚ್ಚು ಸರ್ವೇ ನಂಬರ್‌ಗಳ ಪೌತಿ ಖಾತೆ ಸಂಪೂರ್ಣಗೊಂಡಿದೆ. ಈಗಲೇ ನಿಮ್ಮ ಗ್ರಾಮ ಲೆಕ್ಕಿಗರನ್ನು (ವಿಎ) ಸಂಪರ್ಕಿಸಿ. ಭೂಮಿಯ ವಾರಸುದಾರಿಕೆಯ ಅಧಿಕೃತ ಹಕ್ಕು ಪಡೆದುಕೊಳ್ಳಿ ಎಂದು […]

ಕನ್ನಡ ದುನಿಯಾ 13 Feb 2026 7:43 pm

ಎಂಬಿಬಿಎಸ್ ಮೊದಲ ವೃತ್ತಿಪರ ವರ್ಷದ ಪರೀಕ್ಷೆಗೆ ಮತ್ತೊಂದು ಪ್ರಯತ್ನ, ಮರುಮೌಲ್ಯಮಾಪನಕ್ಕೆ ಕೇಂದ್ರ ಸಚಿವ ನಡ್ಡಾಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಮನವಿ

ನವದೆಹಲಿ: ಎಂಬಿಬಿಎಸ್ ಮೊದಲ ವೃತ್ತಿಪರ ವರ್ಷದ ಪರೀಕ್ಷೆಗೆ ಮತ್ತೊಂದು ಪ್ರಯತ್ನ, ಮರುಮೌಲ್ಯಮಾಪನಕ್ಕೆ(Re-Evaluation) ಅವಕಾಶ ಒದಗಿಸಬೇಕೆಂದು ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಸಚಿವ ಜಗತ್ ಪ್ರಕಾಶ್ ನಡ್ಡಾ ಅವರಿಗೆ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಮನವಿ ಸಲ್ಲಿಸಿದ್ದಾರೆ. ಪ್ರಸ್ತುತ ನಿಯಮದ ಪ್ರಕಾರ, ಎಂ.ಬಿ.ಬಿ.ಎಸ್. ಮೊದಲ ವರ್ಷದ ಪರೀಕ್ಷೆಯಲ್ಲಿ ಉತ್ತೀರ್ಣಗೊಳ್ಳಲು ವಿದ್ಯಾರ್ಥಿಗಳಿಗೆ ಗರಿಷ್ಠ ನಾಲ್ಕು ಪ್ರಯತ್ನಗಳು ಮಾತ್ರ ಸಿಗುತ್ತವೆ. ನಾಲ್ಕು ಪ್ರಯತ್ನಗಳಲ್ಲಿಯೂ ಉತ್ತೀರ್ಣರಾಗದಿದ್ದರೆ, ಅವರು ವೈದ್ಯಕೀಯ ವಿದ್ಯಾಭ್ಯಾಸವನ್ನು ಮುಂದುವರಿಸಲು ಅವಕಾಶವಿಲ್ಲ. ಈ ನಿಯಮದ ಕಾರಣದಿಂದ ಕರ್ನಾಟಕದಲ್ಲಿ 275 […]

ಕನ್ನಡ ದುನಿಯಾ 13 Feb 2026 7:34 pm

ತೆಲಂಗಾಣ ಸ್ಥಳೀಯ ಚುನಾವಣೆ ಫಲಿತಾಂಶ: 1522 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಪ್ರಚಂಡ ಮುನ್ನಡೆ; ಬಿಆರ್‌ಎಸ್, ಬಿಜೆಪಿ ಸುಸ್ತು

ಇದೇ ತಿಂಗಳ 11ರಂದು ತೆಲಂಗಾಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದಿದ್ದು, ಇಂದು ( ಫೆಬ್ರವರಿ 23 ) ಅವುಗಳ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಬೆಳಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಆರಂಭವಾಗಿದ್ದು, ಕಾಂಗ್ರೆಸ್ ಪ್ರಚಂಡ ಮುನ್ನಡೆಯನ್ನು ಸಾಧಿಸಿದೆ. ಒಟ್ಟು 7 ಕಾರ್ಪೋರೇಷನ್‌ಗಳ 414 ವಾರ್ಡ್ ಹಾಗೂ 116 ಪುರಸಭೆಗಳ 2581 ವಾರ್ಡ್‌ಗಳಿಗೆ ಚುನಾವಣೆ ನಡೆದಿತ್ತು. ಇಂದು ಸಂಜೆ 7 ಗಂಟೆ ಸಮಯಕ್ಕೆ ಕಾಂಗ್ರೆಸ್ 2581 ಪುರಸಭೆ ವಾರ್ಡ್‌ಗಳ ಪೈಕಿ 1346 ವಾರ್ಡ್‌ಗಳಲ್ಲಿ ಮುನ್ನಡೆ ಸಾಧಿಸಿದ್ದು, 414 […]

ಕನ್ನಡ ದುನಿಯಾ 13 Feb 2026 7:21 pm

ಬಿಜೆಪಿ ಸುಳ್ಳಿನ ಫ್ಯಾಕ್ಟರಿಯ ಹುನ್ನಾರ ತೆರೆದಿಟ್ಟ ದಿನೇಶ್ ಗುಂಡೂರಾವ್

ಬಿಜೆಪಿ ನಾಯಕ, ಕಾರ್ಕಳದ ಶಾಸಕ ವಿ.ಸುನಿಲ್ ಕುಮಾರ್ ಹಾಕಿದ್ದ ‘ಸಿಎಂ ಸಿದ್ದರಾಮಯ್ಯನವರ ಹಳಿ ತಪ್ಪಿದ ಆಡಳಿತದ ಕ್ಲಾಸಿಕ್ ಉದಾಹರಣೆ’ ಎಂಬ ಸಾಮಾಜಿಕ ಜಾಲತಾಣದ ಪೋಸ್ಟ್‌ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ‘ಒಂದೇ ಸುಳ್ಳನ್ನು ನೂರು ಬಾರಿ ಹೇಳಿ ಅದನ್ನೇ ಸತ್ಯವಾಗಿಸುವ ಬಿಜೆಪಿಯ ಸುಳ್ಳಿನ ಫ್ಯಾಕ್ಟರಿಯ ಮತ್ತೊಂದು ವಿಫಲ ಹುನ್ನಾರವಿದು. ಸನ್ಮಾನ್ಯ ಸುನಿಲ್ ಕುಮಾರ್ ಅವರೇ, ದಿನಾಂಕವಿಲ್ಲದ, ರೆಫರೆನ್ಸ್ ಸಂಖ್ಯೆಯಿಲ್ಲದ ಒಂದು ನಕಲಿ ಪತ್ರವನ್ನು ಹಿಡಿದು ಜನರಲ್ಲಿ ಗೊಂದಲ ಸೃಷ್ಟಿಸಲು ಹೊರಟಿರುವ ನಿಮಗೆ ಕನಿಷ್ಠ […]

ಕನ್ನಡ ದುನಿಯಾ 13 Feb 2026 7:14 pm

BREAKING: ರೈತರು, ಸಕ್ಕರೆ ಕಾರ್ಖಾನೆಗಳಿಗೆ ಗುಡ್ ನ್ಯೂಸ್: ಗೋಧಿ, ಸಕ್ಕರೆ ರಫ್ತಿಗೆ ಕೇಂದ್ರ ಸರ್ಕಾರ ಅನುಮತಿ

ನವದೆಹಲಿ: ರೈತರು, ಸಕ್ಕರೆ ಕಾರ್ಖಾನೆಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಗೋಧಿ, ಸಕ್ಕರೆ ರಫ್ತಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. 25 ಲಕ್ಷ ಮೆಟ್ರಿಕ್ ಟನ್ ಗೋಧಿ ರಫ್ತು ಮಾಡಲು ಒಪ್ಪಿಗೆ ನೀಡಲಾಗಿದೆ. 5 ಲಕ್ಷ ಮೆಟ್ರಿಕ್ ಟನ್ ಗೋಧಿ ಉತ್ಪನ್ನಗಳ ರಫ್ತಿಗೂ ಅವಕಾಶ ನೀಡಿದೆ. ದೇಶದಲ್ಲಿ ಗೋಧಿ ದಾಸ್ತಾನು ಹೆಚ್ಚಳ ಮತ್ತು ಬೆಲೆ ಸ್ಥಿರತೆ ಕಾಪಾಡಲು ಕೇಂದ್ರ ಸರ್ಕಾರ ಮಾಸ್ಟರ್ ಪ್ಲಾನ್ ಮಾಡಿದೆ. ರೈತರಿಗೆ ಲಾಭದಾಯಕ ಬೆಲೆ ಸಿಗುವಂತೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಸರಳ […]

ಕನ್ನಡ ದುನಿಯಾ 13 Feb 2026 7:04 pm

ವಿಬಿ-ಜಿ ರಾಮ್‌-ಜಿ ಯೋಜನೆ: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಕಾಂಗ್ರೆಸ್ ನಾಯಕರು ವಿಬಿ-ಜಿ ರಾಮ್‌-ಜಿ ಕಾಯ್ದೆಯ ವಿರುದ್ಧ ಆಕ್ರೋಶಗೊಂಡಿದ್ದಾರೆ. ಮಹಾತ್ಮ ಗಾಂಧಿ ಹೆಸರನ್ನು ತೆಗೆದಿರುವುದು ಸೇರಿದಂತೆ ವಿವಿಧ ಕಾರಣಕ್ಕೆ ಯೋಜನೆ ವಿರುದ್ಧ ಎನ್‌ಡಿಎ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಗರಂ ಆಗಿದ್ದಾರೆ. ಕರ್ನಾಟಕದಲ್ಲಿ ವಿಬಿ-ಜಿ ರಾಮ್‌-ಜಿ ಕಾಯ್ದೆಯ ವಿರುದ್ಧ ಚರ್ಚೆ ಮಾಡಲು ವಿಶೇಷ ವಿಧಾನಸಭೆ ಅಧಿವೇಶನವನ್ನು ಮಾಡಿ, ಯೋಜನೆ ವಿರುದ್ಧ ನಿರ್ಣಯವನ್ನು ಮಂಡನೆ ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ವಿಬಿ-ಜಿ ರಾಮ್‌-ಜಿ ಕಾಯ್ದೆಯು ಹೇಗೆ ರಾಜ್ಯಗಳ ಮೇಲೆ ವೆಚ್ಚವನ್ನು ಹಾಕಲಿದೆ? […]

ಕನ್ನಡ ದುನಿಯಾ 13 Feb 2026 7:03 pm

ಪ್ರಧಾನಿ ಹೊಸ ಕಚೇರಿ ಸೇವಾ ತೀರ್ಥ ಉದ್ಘಾಟಿಸಿದ ಮೋದಿ: ಮೊದಲಿಗೆ ರಸ್ತೆ ಅಪಘಾತ ಸಂತ್ರಸ್ತರಿಗೆ ನಗದು ರಹಿತ ಚಿಕಿತ್ಸೆ ಕಡತಕ್ಕೆ ಸಹಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಮ್ಮ ಹೊಸ ಕಚೇರಿ ಸಂಕೀರ್ಣವಾದ ಸೇವಾ ತೀರ್ಥದಿಂದ ಪ್ರಮುಖ ಕಡತಗಳಿಗೆ ಸಹಿ ಹಾಕಿದ್ದಾರೆ. ಮಹಿಳೆಯರು, ಯುವಕರು, ರೈತರು ಮತ್ತು ದುರ್ಬಲ ನಾಗರಿಕರಿಗೆ ಪ್ರಯೋಜನವನ್ನು ನೀಡುವ ಗುರಿಯನ್ನು ಹೊಂದಿರುವ ಪ್ರಮುಖ ನೀತಿ ನಿರ್ಧಾರಗಳನ್ನು ಅನುಮೋದಿಸಿದ್ದಾರೆ. ಸೇವಾ ತೀರ್ಥದಿಂದ ಪ್ರಧಾನಿ ಮೋದಿ ಅವರ ಮೊದಲ ನಿರ್ಧಾರಗಳು ಸೇವಾ ಮನೋಭಾವವನ್ನು ಪ್ರತಿಬಿಂಬಿಸುತ್ತವೆ ಮತ್ತು ಸಮಾಜದ ಪ್ರತಿಯೊಂದು ವರ್ಗವನ್ನು ಸ್ಪರ್ಶಿಸುತ್ತವೆ. ಸೇವಾ ತೀರ್ಥಕ್ಕೆ ಸ್ಥಳಾಂತರಗೊಂಡ ನಂತರ ಅವರ ಮೊದಲ ನಿರ್ಧಾರಗಳಲ್ಲಿ, ಪ್ರಧಾನ ಮಂತ್ರಿ ಅವರು “ಸೇವೆ” […]

ಕನ್ನಡ ದುನಿಯಾ 13 Feb 2026 6:47 pm

100 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ

ಮದೆನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 100 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಶುಕ್ರವಾರ ಚಾಲನೆ ನೀಡಿದರು. ಕಾಟಕೇರಿ ಬಳಿಯ ಕಾಸ್ಪಾಡಿ ರಸ್ತೆ, ಭಗವತಿ ದೇವಸ್ಥಾನ ರಸ್ತೆ ಕಾಮಗಾರಿಗೆ ಭೂಮಿ ಪೂಜೆ, ಅಪ್ಪೇಂದ್ರೀಯಪ್ಪ ದೇವಸ್ಥಾನ ರಸ್ತೆ ಉದ್ಘಾಟನೆ, ಕಾಟಕೇರಿ ಗೋಳಿಕಟ್ಟೆ ಮುಖ್ಯ ರಸ್ತೆ, ಮದೆನಾಡು ಬೈರೆಟ್ಟಿರ ಜಂಕ್ಷನ್ ರಸ್ತೆ ಮತ್ತು ಮದೆನಾಡು ಮಠದ ಮನೆ ರಸ್ತೆಯನ್ನು ಉದ್ಘಾಟಿಸಿದರು. ಬಳಿಕ ಗೋಳಿಕಟ್ಟೆ ಸರ್ಕಾರಿ ಶಾಲೆ ಪರಿಶೀಲಿಸಿದರು, […]

ಕನ್ನಡ ದುನಿಯಾ 13 Feb 2026 6:45 pm

ಹೈಕಮಾಂಡ್ ಭೇಟಿ ಬಳಿಕ ನೊಣವಿನಕೆರೆ ಮಠಕ್ಕೆ ಡಿಕೆಶಿ ದಿಢೀರ್ ಭೇಟಿ!

ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶುಕ್ರವಾರ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ದಿಢೀರ್ ಭೇಟಿ ನೀಡಿ ಅಚ್ಚರಿ ಮೂಡಿಸಿದರು. ಡಿ.ಕೆ.ಶಿವಕುಮಾರ್ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಭೇಟಿ ನೀಡಿ ವೀರ ಗಂಗಾಧರ ಅಜ್ಜಯ್ಯನ ಗದ್ದುಗೆಗೆ ನಮಸ್ಕರಿಸಿ, ವಿಶೇಷ ಪೂಜೆ ಸಲ್ಲಿಸಿ ಶ್ರೀಗಳ ಆಶೀರ್ವಾದವನ್ನು ಪಡೆದರು. “ನಾನು ಡಿಸಿಎಂ ಆಗಿ ಅಲ್ಲ, ಮಠದ ಒಬ್ಬ ಭಕ್ತನಾಗಿ, ಶ್ರೀಗಳ ಶಿಷ್ಯನಾಗಿ, ಅಜ್ಜನ ಒಬ್ಬ ಅನುಯಾಯಿಯಾಗಿ ಸೇವೆ ಮಾಡುತ್ತಿದ್ದೇನೆ” […]

ಕನ್ನಡ ದುನಿಯಾ 13 Feb 2026 6:12 pm

T20 World Cup 2026: ಪಾಕ್‌ನ ತಾರಿಖ್ ವಿಭಿನ್ನ ಬೌಲಿಂಗ್‌ಗೆ ಭಾರತೀಯರು ಹೀಗೆ ಮಾಡಿದ್ರೆ ಅಂಪೈರ್‌ಗೆ ತಲೆನೋವು ಪಕ್ಕಾ; ಅಶ್ವಿನ್ ಸಲಹೆ

ಐಸಿಸಿ ಟಿ ಟ್ವೆಂಟಿ ವಿಶ್ವಕಪ್ 2026 ಟೂರ್ನಿಯಲ್ಲಿ ಸದ್ಯ ಗ್ರೂಪ್ ಹಂತದ ಪಂದ್ಯಗಳು ಮುಕ್ತಾಯದ ಹಂತದ ಸನಿಹಕ್ಕೆ ಬಂದಿದ್ದು, ಪೈಪೋಟಿ ಹೆಚ್ಚಾಗಿದೆ. ಇನ್ನು ಎ ಗುಂಪಿನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ತಮ್ಮ ಮೊದಲೆರಡು ಪಂದ್ಯಗಳಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ನಾಲ್ಕು ಅಂಕಗಳನ್ನು ಪಡೆದು ಕ್ರಮವಾಗಿ ಮೊದಲ ಹಾಗೂ ಎರಡನೇ ಸ್ಥಾನದಲ್ಲಿವೆ. ಹೀಗೆ ಎ ಗುಂಪಿನ ಅಂಕಪಟ್ಟಿಯಲ್ಲಿ ಟಾಪ್‌ನಲ್ಲಿರುವ ಭಾರತ ಹಾಗೂ ಪಾಕಿಸ್ತಾನ ತಂಡಗಳು ಟೂರ್ನಿಯಲ್ಲಿನ ತಮ್ಮ ಮೂರನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಗೆಲ್ಲುವ ತಂಡ ಸೂಪರ್ 8 ಸುತ್ತಿಗೆ […]

ಕನ್ನಡ ದುನಿಯಾ 13 Feb 2026 6:09 pm

ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು ಯೋಜನೆ ಜಾರಿ

“ಕೇಂದ್ರ ಸರ್ಕಾರ ಅಗತ್ಯ ಅನುಮತಿ ನೀಡಿದರೆ ಕರ್ನಾಟಕ ಸರ್ಕಾರ ಮೇಕೆದಾಟು ಹಾಗೂ ಕೃಷ್ಣಾ ಮೇಲ್ದಂಡೆ ಬಾಕಿ ಯೋಜನೆಗಳನ್ನು ಜಾರಿ ಮಾಡಲಿದೆ. ಕೇಂದ್ರ ಸರ್ಕಾರ ನಮಗೆ ಸಹಕಾರ ನೀಡುವ ಭರವಸೆ ಇದೆ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ಭಾರತೀಯ ವಿಜ್ಞಾನ ಸಂಸ್ಥೆಯ ಜೆಜೆ ಟಾಟಾ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಮಾತನಾಡಿದರು. “ನೀವೆಲ್ಲರೂ ಬೆಂಗಳೂರಿನಲ್ಲಿದ್ದೀರಿ. ಇಲ್ಲಿ 1.50 ಕೋಟಿ ಜನಸಂಖ್ಯೆ ಇದ್ದು, ವಿಶ್ವದಾದ್ಯಂತ ಕೈಗಾರಿಕೋದ್ಯಮಿಗಳು […]

ಕನ್ನಡ ದುನಿಯಾ 13 Feb 2026 5:54 pm

GOOD NEWS: ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆ ವೇಳೆ KSRTC ಬಸ್ ನಿಂದ ಉಚಿತ ಪ್ರಯಾಣ

ಬೆಂಗಳೂರು: ಪಿಯುಸಿ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ ಗುಡ್ ನ್ಯೂಸ್ ಕೊಟ್ಟಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ಕೆ.ಎಸ್.ಆರ್.ಟಿ.ಸಿ ಉಚಿತ ಪ್ರಯಾಣ ಘೋಷಿಸಿದೆ. ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ದಿನಗಳಂದು ಉಚಿತ ಪ್ರಯಾಣಕ್ಕೆ ಅವಕಶ ಕಲ್ಪಿಸಲಾಗುವುದು ಎಂದು ತಿಳಿಸಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದವರೆಗೂ ಉಚಿತ ಬಸ್ ಪ್ರಯಾಣವಿರಲಿದೆ ಎಂದು ತಿಳಿಸಿದೆ. ಕೆ.ಎಸ್.ಆರ್.ಟಿ.ಸಿ ಈ ನಿರ್ಧಾರ ಪಿಯುಸಿ ವಿದ್ಯಾಅರ್ಥಿಗಳಿಗೆ ಪರೀಕ್ಷೆಗೆ ತೆರಳುವವರಿಗೆ ಸಾಕಷ್ಟು ಅನುಕೂಲವಾಗಲಿದೆ.

ಕನ್ನಡ ದುನಿಯಾ 13 Feb 2026 5:53 pm

ಮಕ್ಕಳ ಆದಾಯ ತೆರಿಗೆ ಪಾವತಿ ಮತ್ತು ತಂದೆ ತಾಯಿಗೆ ಬಿಪಿಎಲ್‌ ಕಾರ್ಡ್‌, ಸ್ಪಷ್ಟನೆ

“ಕುಟುಂಬದಲ್ಲಿ ಮಕ್ಕಳು ಬೇರೆ ಕಡೆ ಕೆಲಸ ಮಾಡಿಕೊಂಡು ಆದಾಯ ತೆರಿಗೆ ಪಾವತಿಸುತ್ತಿದ್ದರೆ ತಂದೆ-ತಾಯಿಗೆ ಬಿಪಿಎಲ್‌ ಕಾರ್ಡ್‌ ನೀಡಬಹುದು. ಈ ಬಗ್ಗೆ ಸೂಕ್ಷ್ಮವಾಗಿ ಪರಿಶೀಲಿಸಬೇಕು” ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ. ಹಾಸನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು, ಕಾನೂನು ಮಾಪನ ಶಾಸ್ತ್ರ ಹಾಗೂ ಆಹಾರ ನಿಗಮದ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. “ಬಿಪಿಎಲ್ ಕಾರ್ಡ್ ಪರಿಷ್ಕರಣೆ ವೇಳೆ ಮನೆ ಸಾಲ, […]

ಕನ್ನಡ ದುನಿಯಾ 13 Feb 2026 5:44 pm

BREAKING: ಹಿರಿಯ ನಿರ್ದೇಶಕ ಜೋ ಸೈಮನ್ ಹೃದಯಾಘಾತಕ್ಕೆ ಬಲಿ; ಫಿಲ್ಮ್ ಚೇಂಬರ್ ಸಭೆಯಲ್ಲಿ ಭಾಗಿಯಾಗಿದ್ದಾಗಲೇ ದುರಂತ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಫಿಲ್ಮ್ ಚೇಂಬರ್ ಸಭೆಯಲ್ಲಿ ಭಾಗಿಯಾಗಿದ್ದ ನಿರ್ದೇಶಕ ಜೋ ಸೈಮನ್ ಅವರಿಗೆ ಸಭೆಯಲ್ಲಿದ್ದಾಗಲೇ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಜೋ ಸೈಮನ್ ಕನ್ನಡ ಚಲನಚಿತ್ರದ ನಿರ್ದೇಶಕ ಮತ್ತು ಲೇಖಕ. ಸಹೋದರರ ಸವಾಲ್(1977), ಒಂದು ಪ್ರೇಮದ ಕಥೆ(1977), ಬಂಗಾರದ ಗುಡಿ(1976) ಮೊದಲಾದವು. ಸಾಹಸಸಿಂಹ, ನ್ಯಾಯ ಗೆದ್ದಿತು, ಪ್ರೇಮ ಜಾಲ, ರವಿ ವರ್ಮ, ಊರಿಗೆ ಉಪಕಾರಿ, ನನ್ನ ರೋಷ […]

ಕನ್ನಡ ದುನಿಯಾ 13 Feb 2026 5:37 pm

BREAKING: ಶಾಸಕ ಭೈರತಿ ಬಸವರಾಜ್ ಗೆ ಚಿಕಿತ್ಸೆ ಕೊಡಿಸುವಂತೆ ಸಿಐಡಿಗೆ ಕೋರ್ಟ್ ಸೂಚನೆ

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಸಿಐಡಿ ಅಧಿಕಾರಿಗಳಿಂದ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರಿಗೆ ಚಿಕಿತ್ಸೆ ಕೊಡಿಸುವಂತೆ ಕೋರ್ಟ್ ಆದೇಶ ನೀಡಿದೆ. ಸುಪ್ರೀಂ ಕೋರ್ಟ್ ನಲ್ಲಿ ನಿರೀಕ್ಷಣ ಅಜಾಮೀನು ಅರ್ಜಿ ವಜಾಗೊಳ್ಳುತ್ತಿದ್ದಂತೆ ಸಿಐಡಿ ಮುಂದೆ ಶರಣಾಗಲು ಅಹಮದಾಬಾದ್ ನಿಂದ ಬೆಂಗಳೂರಿಗೆ ಬಂದಿಳಿದ ಶಾಸಕ ಭೈರತಿ ಬಸವರಾಜ್ ಅವರನ್ನು ನಿನ್ನೆ ಸಿಐಡಿ ಪೊಲಿಸರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೇ ವಶಕ್ಕೆ ಪಡೆದು ಬಂಧಿಸಿದ್ದರು. ಬಂಧಿತ ಶಾಸಕರನ್ನು ಇಂದು ಸಿಐಡಿ ಅಧಿಕಾರಿಗಳು ಬೆಂಗಳೂರಿನ […]

ಕನ್ನಡ ದುನಿಯಾ 13 Feb 2026 5:26 pm

ಇಟ್ಟಿಗೆ ಭಟ್ಟಿಯಲ್ಲಿ ಜೀತಕ್ಕೆ ದುಡಿತ: ಐವರು ಬಾಲ ಕಾರ್ಮಿಕರು ಸೇರಿ 24 ಜನರ ರಕ್ಷಣೆ

ಬಾಗಲಕೋಟೆ: ಇಟ್ಟಿಗೆ ಭಟ್ಟಿಯಲ್ಲಿ ಜೀತಕ್ಕೆ ಇಟ್ಟುಕೊಂಡಿದ್ದ ಐವರು ಬಾಲ ಕಾರ್ಮಿಕರು ಸೇರಿದಂತೆ ಒಟ್ಟು 24 ಜನರನ್ನು ರಕ್ಷಣೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ನಲ್ಲಿ ನಡೆದಿದೆ. ಇಳಕಲ್ ತಾಲೂಕಿನ ಸಂಕ್ಲಾಪುರ ಗ್ರಾಮದ ಇಟ್ಟಿಗೆ ಭಟ್ಟಿಯ ಮೇಲೆ ಇಳಕಲ್ ತಹಶೀಲ್ದಾರ್, ಕಾರ್ಮಿಕ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಐವರು ಬಾಲ ಕಾರ್ಮಿಕರು ಸೇರಿದಂತೆ 24 ಜನರನ್ನು ರಕ್ಷಿಸಿದ್ದಾರೆ. ಎಲ್ಲರೂ ಒಡಿಶಾ ಮೂಲದವರು ಎಂದು ತಿಳಿದುಬಂದಿದೆ. ಈರಪ್ಪ ಕುಂಬಾರ ಎಂಬುವರ ಇಟ್ಟಿಗೆ ಭಟ್ಟಿಯಲ್ಲಿ ಇವರು ಕೆಲಸ ಮಾಡುತ್ತಿದ್ದು, ಈ […]

ಕನ್ನಡ ದುನಿಯಾ 13 Feb 2026 5:02 pm

ಕ್ರಿಕೆಟ್ ಮೈದಾನದಲ್ಲಷ್ಟೇ ಅಲ್ಲ, ಜೀವನದಲ್ಲೂ ಪಾಂಡ್ಯ ಸಖತ್ ರೋಮ್ಯಾಂಟಿಕ್:ಮಹಿಕಾ ಶರ್ಮಾ ಹಂಚಿಕೊಂಡ ಫೋಟೋ ಈಗ ಇಂಟರ್ನೆಟ್ ನಲ್ಲಿ ವೈರಲ್!

ಕಳೆದ ಕೆಲವು ತಿಂಗಳುಗಳಿಂದ ಹಾರ್ದಿಕ್ ಪಾಂಡ್ಯ ಮತ್ತು ಮಹಿಕಾ ಶರ್ಮಾ ಪ್ರೀತಿಯ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದವು. ಅಕ್ಟೋಬರ್ 2025 ರಲ್ಲಿ ತಮ್ಮ ಸಂಬಂಧವನ್ನು ಅಧಿಕೃತಗೊಳಿಸಿದ್ದ ಈ ಜೋಡಿ, ಈಗ ಪ್ರೇಮಿಗಳ ದಿನದ ಅಂಗವಾಗಿ ದೆಹಲಿಯಲ್ಲಿ ಒಂದಾಗಿದ್ದಾರೆ. ಹಾರ್ದಿಕ್ ಅವರು ಹೋಟೆಲ್ ರೂಮ್‌ನಲ್ಲಿ ಗುಲಾಬಿ ಹೂವಿನ ಬೊಕ್ಕೆಯನ್ನು ಹಿಡಿದು ಕುಳಿತಿರುವ ಫೋಟೋವನ್ನು ಮಹಿಕಾ ಹಂಚಿಕೊಂಡಿದ್ದು, “ನನ್ನ ಜೀವನದ ಮ್ಯಾನ್ ಆಫ್ ದಿ ಮ್ಯಾಚ್” ಎಂದು ಕ್ಯಾಪ್ಶನ್ ನೀಡಿದ್ದಾರೆ. ಬರ್ತ್ ಡೇ ಮತ್ತು ವ್ಯಾಲೆಂಟೈನ್ ಸಂಭ್ರಮ ಮಹಿಕಾ ಅವರ […]

ಕನ್ನಡ ದುನಿಯಾ 13 Feb 2026 4:44 pm

ಸರಿಯಾದ ಆರೋಗ್ಯ ವಿಮೆ ಆಯ್ಕೆ ಮಾಡುವುದು ಹೇಗೆ? ಇಲ್ಲಿದೆ ಮಾರುಕಟ್ಟೆಯ ಟಾಪ್ ಪಾಲಿಸಿಗಳ ಪಟ್ಟಿ

ಇಂದಿನ ಕಾಲದಲ್ಲಿ ಆರೋಗ್ಯ ವಿಮೆ ಇರುವುದು ಎಷ್ಟು ಮುಖ್ಯವೋ, ಸರಿಯಾದ ಪಾಲಿಸಿಯನ್ನು ಆರಿಸುವುದು ಅಷ್ಟೇ ಸವಾಲಿನ ಕೆಲಸ. ಮಾರುಕಟ್ಟೆಯಲ್ಲಿ ನೂರಾರು ಆಯ್ಕೆಗಳಿರುವುದರಿಂದ, ಜನಸಾಮಾನ್ಯರ ಗೊಂದಲ ನಿವಾರಿಸಲು ತಜ್ಞರು ಶಿಫಾರಸು ಮಾಡಿದ ಕೆಲವು ಪ್ರಮುಖ ಯೋಜನೆಗಳು ಮತ್ತು ವಿಮೆ ಖರೀದಿಸುವ ಮುನ್ನ ಗಮನಿಸಬೇಕಾದ ಅಂಶಗಳನ್ನು ಇಲ್ಲಿ ನೀಡಲಾಗಿದೆ. 65 ವರ್ಷದೊಳಗಿನವರಿಗೆ ಲಭ್ಯವಿರುವ ಟಾಪ್ ಆರೋಗ್ಯ ವಿಮಾ ಯೋಜನೆಗಳು ವಿಮಾ ತಜ್ಞರ ವಿಶ್ಲೇಷಣೆಯಂತೆ, ಈ ಕೆಳಗಿನ ಯೋಜನೆಗಳು ಉತ್ತಮ ಕವರೇಜ್ ಮತ್ತು ಸೇವೆಗೆ ಹೆಸರುವಾಸಿಯಾಗಿವೆ: ಕಂಪನಿವಿಮಾ ಯೋಜನೆ (Policy Name)HDFC […]

ಕನ್ನಡ ದುನಿಯಾ 13 Feb 2026 4:33 pm

BIG NEWS: ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗುವ ಹಂತಕ್ಕೆ ಬಂದಿದೆ: ಶಾಸಕ ಯತ್ನಾಳ್ ಹೇಳಿಕೆ

ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗುವ ಹಂತ ತಲುಪಿದೆ ಎಂದು ಶಾಸಕ ಬಸನಗೌಡ ಪಾಟಿಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಶಾಸಕ ಯತ್ನಾಳ್, ರಾಜ್ಯ ಸರ್ಕಾರ ಪತನವಾಗುವ ಹಂತ ತಲುಪಿದೆ. ಡಿ.ಕೆ.ಶಿವಕುಮಾರ್ ಶತಾಯಗತಾಯ ಸಿಎಂ ಆಗುವುದಕ್ಕೆ ಹೊರಟಿದ್ದಾರೆ. ಸರ್ಕಾರ ಹೋದರೂ ತೊಂದರೆ ಇಲ್ಲ ಎಂಬ ಹಂತಕ್ಕೆ ಬಂದಿದ್ದಾರೆ ಎಂದರು. 2-3 ದಿನಗಳ ಹೇಳಿಕೆಯಲ್ಲಿ ಡಿ.ಕೆ.ಶಿವಕುಮಾರ್ ಗಟ್ಟಿಯಾಗಿ ಮಾತನಾಡಿದ್ದಾರೆ. ದೆಹಲಿಯಲ್ಲಿ ಗಾಳಿ ಕುಡಿಯಲು ಬಂದಿಲ್ಲ ಎಂದಿದ್ದಾರೆ. ಈ ಎಲ್ಲಾ ಬೆಳವಣಿಗೆ ನಡೆಯುತ್ತಿರುವಾಗ ರಾಜ್ಯ ಸರ್ಕಾರ ಪತನವಾದರೂ ಆಶ್ಚರ್ಯವಿಲ್ಲ […]

ಕನ್ನಡ ದುನಿಯಾ 13 Feb 2026 4:24 pm

T20 World Cup 2026: ಜಿಂಬಾಬ್ವೆ ವಿರುದ್ಧ ಸೋತ ಆಸ್ಟ್ರೇಲಿಯಾ ಟೂರ್ನಿಯಿಂದ ಔಟ್? ಸೂಪರ್ 8 ತಲುಪಲು ಇರುವುದು ಇದೊಂದೇ ದಾರಿ!

ಇಂದು ( ಫೆಬ್ರವರಿ 13 ) ಕೊಲಂಬೊದ ಪ್ರೇಮದಾಸ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 2026ರ ವಿಶ್ವಕಪ್ ಟೂರ್ನಿಯ 19ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಿಂಬಾಬ್ವೆ ವಿರುದ್ಧ 23 ರನ್‌ಗಳ ಹೀನಾಯ ಸೋಲನ್ನು ಅನುಭವಿಸಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆರಿಸಿಕೊಂಡು ಜಿಂಬಾಬ್ವೆ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಜಿಂಬಾಬ್ವೆ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 169 ರನ್ ಕಲೆಹಾಕಿ ಆಸ್ಟ್ರೇಲಿಯಾಗೆ 170 ರನ್‌ಗಳ ಸವಾಲಿನ ಗುರಿ ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ […]

ಕನ್ನಡ ದುನಿಯಾ 13 Feb 2026 4:23 pm

ಮಕ್ಕಳು ಮೊಬೈಲ್ ಗೀಳಿಗೆ ಬಿದ್ದಿದ್ದಾರೆ ಸಚಿವ ಶಿವರಾಜ್ ಎಸ್. ತಂಗಡಗಿ

“ಓದುವುದೇ ಒಂದು ದೊಡ್ಡ ಜವಾಬ್ದಾರಿ ಅನ್ನುವ ರೀತಿ ಪೋಷಕರು ಮಕ್ಕಳ ಮೇಲೆ ಒತ್ತಡ ಹೇರುತ್ತಿದ್ದು, ಓದಿನ ಜತೆಗೆ ಸಾಮಾಜಿಕ ಮೌಲ್ಯಗಳನ್ನು ಕಲಿಸುವ ಅಗತ್ಯವಿದೆ” ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ಅಭಿಪ್ರಾಯಪಟ್ಟರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಯನ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಕಲಾಪ್ರತಿಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಇವತ್ತಿನ ಕಾಲಘಟ್ಟದ ಮಕ್ಕಳು ಮೊಬೈಲ್‌ಗೀಳಿಗೆ ಬಿದ್ದಿದ್ದು, ಮೊಬೈಲೇ ಎಲ್ಲವು ಅನ್ನುವಂತಾಗಿದೆ.‌‌ ಮೊಬೈಲ್ ವಿಡಿಯೋ […]

ಕನ್ನಡ ದುನಿಯಾ 13 Feb 2026 4:16 pm

ಚಳಿಗಾಲದ ಸೂಪರ್‌ಫುಡ್ ಪಾಲಕ್: ಈ ಹಸಿರು ಸೊಪ್ಪಿನಲ್ಲಿದೆ ಆರೋಗ್ಯದ ರಹಸ್ಯ

ಚಳಿಗಾಲ ಬಂತೆಂದರೆ ಮಾರುಕಟ್ಟೆಯಲ್ಲಿ ಹಸಿರು ಸೊಪ್ಪುಗಳದ್ದೇ ಹಬ್ಬ. ಅದರಲ್ಲಿಯೂ ಪೌಷ್ಟಿಕಾಂಶಗಳ ರಾಜ ಎನಿಸಿಕೊಂಡಿರುವ ಪಾಲಕ್ ಸೊಪ್ಪು (Spinach) ನಮ್ಮ ಆಹಾರದ ಅವಿಭಾಜ್ಯ ಅಂಗ. ಮೂಲತಃ ಪರ್ಷಿಯನ್ ಬೆಳೆಯಾದರೂ, ಇಂದು ಭಾರತೀಯ ಮನೆಗಳಲ್ಲಿ ಇದು ಚಳಿಗಾಲದ ಸಂಜೀವಿನಿಯಾಗಿದೆ. ಚಳಿಗಾಲದಲ್ಲಿ ಪಾಲಕ್ ಏಕೆ ತಿನ್ನಬೇಕು? ಚಳಿಗಾಲದ ಹವಾಮಾನ ಬದಲಾದಂತೆ ಶೀತ, ಕೆಮ್ಮು ಮತ್ತು ಜ್ವರದಂತಹ ಸೋಂಕುಗಳು ನಮ್ಮನ್ನು ಸುಲಭವಾಗಿ ಬಾಧಿಸುತ್ತವೆ. ಈ ಸಮಯದಲ್ಲಿ ದೇಹದ ರೋಗನಿರೋಧಕ ಶಕ್ತಿಯನ್ನು (Immunity) ಬಲಪಡಿಸಲು ಮತ್ತು ದೇಹಕ್ಕೆ ಅಗತ್ಯವಾದ ಉಷ್ಣತೆ ಹಾಗೂ ಪೋಷಣೆ ನೀಡಲು […]

ಕನ್ನಡ ದುನಿಯಾ 13 Feb 2026 4:15 pm

ಅಬಕಾರಿ ಇಲಾಖೆಗೆ ಆರೋಗ್ಯಾಧಿಕಾರಿ ವರ್ಗಾವಣೆ, ಇದೆಂಥ ಸರ್ಕಾರ

ಕರ್ನಾಟಕದ ಕಾಂಗ್ರೆಸ್ ಸರ್ಕಾರ ವರ್ಗಾವಣೆ ವಿಚಾರದಲ್ಲಿ ಮತ್ತೆ ಸುದ್ದಿಯಲ್ಲಿದೆ. ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಯೊಬ್ಬರ ವರ್ಗಾವಣೆಗೆ ಟಿಪ್ಪಣಿಯನ್ನು ಹೊರಡಿಸಿದ್ದು, ಅದು ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಡಾ.ಕೆ.ಮೋಹನ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಮಂಡ್ಯ ಜಿಲ್ಲೆ ಇಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇವರನ್ನು ಅಬಕಾರಿ ಉಪ ಆಯುಕ್ತರು, ಮೈಸೂರು ಗ್ರಾಮಾಂತರ ಜಿಲ್ಲೆ, ಮೈಸೂರು ಇಲ್ಲಿಗೆ ನಿಯೋಜಿಸಲು ಸೂಚಿಸಿದೆ ಎಂದು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರಿಗೆ ಟಿಪ್ಪಣಿ ಹೊರಡಿಸಿದ್ದಾರೆ. ಆರ್.ಅಶೋಕ […]

ಕನ್ನಡ ದುನಿಯಾ 13 Feb 2026 3:50 pm

BREAKING: ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಮಲೈ ಮಹದೇಶ್ವರ ಬೆಟ್ಟದಲ್ಲಿ ಎರಡು ಬಸ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ 4 ನೇ ತಿರುವಿನಲ್ಲಿ ಎರಡು ಬಸ್ ಗಳು ಮುಖಾಮುಖಿ ಡಿಕ್ಕಿಯಾಗಿವೆ. ಮಲೆ ಮಹದೇಶ್ವರ ಬೆಟ್ಟದ ಕಡೆಯಿಂದ ಬರುತ್ತಿದ್ದ ಸರ್ಕಾರಿ ಬಸ್ ಹಾಗೂ ಮೈಸೂರಿನಿಂದ ಮಲೆ ,ಮಹದೇಶ್ವರ ಬೆಟ್ಟದತ್ತ ತೆರಳುತ್ತಿದ್ದ ಬಸ್ ಗಳ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ […]

ಕನ್ನಡ ದುನಿಯಾ 13 Feb 2026 3:49 pm

SHOCKING : ‘ಲವರ್’ಜೊತೆ ಕಾರಿನಲ್ಲಿ ಮೋಜು, 6 ವರ್ಷದ ಬಾಲಕನ ಪ್ರಾಣ ತೆಗೆದ ‘PUC ವಿದ್ಯಾರ್ಥಿ’|WATCH VIDEO

ಲಕ್ನೋ: ಉತ್ತರ ಪ್ರದೇಶದ ಲಕ್ನೋದ ಬಂತ್ರಾ ಎಂಬಲ್ಲಿ ಗುರುವಾರ ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. 12ನೇ ತರಗತಿಯ ವಿದ್ಯಾರ್ಥಿಯೊಬ್ಬ ಚಲಾಯಿಸುತ್ತಿದ್ದ ವೇಗದ ಸ್ವಿಫ್ಟ್ ಡೈರ್ ಕಾರು ನಿಯಂತ್ರಣ ತಪ್ಪಿ ಪಾದಚಾರಿಗಳು ಮತ್ತು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ, ಆರು ವರ್ಷದ ಬಾಲಕ ಮೃತಪಟ್ಟಿದ್ದಾನೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ. ಲಕ್ನೋದಿಂದ ಕಾನ್ಪುರದತ್ತ ಸಾಗುತ್ತಿದ್ದ ಕಾರು, ಸಂಜೆ 6 ಗಂಟೆ ಸುಮಾರಿಗೆ ಕಾನ್ಪುರ ರಸ್ತೆಯ ಹನುಮಾನ್ ದೇವಾಲಯದ ಸಮೀಪವಿರುವ ಚಾಟ್ ಸ್ಟಾಲ್ ಬಳಿ ನಿಂತಿದ್ದ ಜನರ ಗುಂಪಿಗೆ ಡಿಕ್ಕಿ […]

ಕನ್ನಡ ದುನಿಯಾ 13 Feb 2026 3:48 pm

ಬಂಗಾರ ಖರೀದಿಗೆ ಸಕಾಲ: ಸತತ 2ನೇ ದಿನವೂ ಚಿನ್ನದ ಬೆಲೆ ಇಳಿಕೆ, ಬೆಳ್ಳಿ ₹15,000 ಇಳಿಕೆ 

ಕಳೆದ ತಿಂಗಳು ದಾಖಲೆಯ ಗರಿಷ್ಠ ಮಟ್ಟ ತಲುಪಿದ್ದ ಚಿನ್ನದ ಬೆಲೆ ಈಗ ಗ್ರಾಹಕರಿಗೆ ನಿರಾಳ ತಂದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯ ಏರಿಳಿತದ ನಡುವೆಯೂ ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ಮದುವೆ ಸೀಸನ್ ಆರಂಭವಾಗುತ್ತಿರುವ ಈ ಸಮಯದಲ್ಲಿ ದರ ಇಳಿಕೆಯಾಗಿರುವುದು ಖರೀದಿದಾರರಲ್ಲಿ ಸಂತಸ ಮೂಡಿಸಿದೆ. ಇಂದಿನ ಬೆಲೆ ಇಳಿಕೆಯ ಮುಖ್ಯಾಂಶಗಳು (ಫೆಬ್ರವರಿ 13, 2026): ಭಾರಿ ಕುಸಿತ: ಗರಿಷ್ಠ ಮಟ್ಟಕ್ಕೆ ಹೋಲಿಸಿದರೆ ಚಿನ್ನದ ಬೆಲೆ ಸುಮಾರು ₹23,000 ರಷ್ಟು ಇಳಿಕೆಯಾಗಿದೆ. ಬೆಳ್ಳಿ ದರ: […]

ಕನ್ನಡ ದುನಿಯಾ 13 Feb 2026 3:40 pm

T20 World Cup 2026: ವಿಶ್ವ ಗೆದ್ದ ಆಸ್ಟ್ರೇಲಿಯಾಗೆ ಈ ಸಣ್ಣ ತಂಡವೆಂದರೆ ನಡುಕ; ವಿಶ್ವಕಪ್‌ನಲ್ಲಿ ಆಡಿದ ಎಲ್ಲ ಪಂದ್ಯದಲ್ಲೂ ಸೋಲು!

ಆಸ್ಟ್ರೇಲಿಯಾ ವಿಶ್ವ ಕ್ರಿಕೆಟ್ ಕಂಡ ಶ್ರೇಷ್ಠ ತಂಡ. ಅದರಲ್ಲೂ ಐಸಿಸಿ ಟೂರ್ನಿಗಳೆಂದರೆ ಆಸ್ಟ್ರೇಲಿಯಾ ತಂಡದ ಅಬ್ಬರ ಅಷ್ಟಿಷ್ಟಲ್ಲ. ಆಸ್ಟ್ರೇಲಿಯಾ ತಂಡದಿಂದ ಇನ್ನೇನೂ ಕಪ್ ನಮ್ದೇ ಎನ್ನುತ್ತಿದ್ದ ಅದೆಷ್ಟೋ ತಂಡಗಳು ಬರಿಗೈನಲ್ಲಿ ನಿರಾಸೆಗೊಳಗಾಗಿ ಟೂರ್ನಿಯಿಂದ ಹೊರಬಂದ ಸಾಕಷ್ಟು ಉದಾಹರಣೆಗಳಿವೆ. ಹೀಗೆ ತನ್ನದೇ ಆದ ಪಾರುಪತ್ಯ ಸಾಧಿಸಿರುವ ಆಸ್ಟ್ರೇಲಿಯಾಗೆ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗಳಲ್ಲಿ ಜಿಂಬಾಬ್ವೆ ಎಂದರೆ ನಡುಕ ಶುರುವಾಗಿದೆ. ಹೌದು, ಇಂದು ( ಫೆಬ್ರವರಿ 13 ) ಕೊಲಂಬೊದ ಪ್ರೇಮದಾಸ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 2026ರ ವಿಶ್ವಕಪ್ ಟೂರ್ನಿಯ […]

ಕನ್ನಡ ದುನಿಯಾ 13 Feb 2026 3:26 pm

ಬೆಂಗಳೂರಿಗರ ಗಮನಕ್ಕೆ: ನಾಳೆ ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳುರಿನ ಹಲವು ಪ್ರದೇಶಗಳಲ್ಲಿ ನಾಳೆ ಫೆಬ್ರವರಿ 14ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಬೆಸ್ಕಾಂನ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಪವರ್ ಕಟ್ ಆಗಲಿದೆ. ಗ್ರಾಹಕರು ಸಹಕರಿಸುವಂತೆ ಮನವಿ ಮಾಡಿದೆ. ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಫೆಬ್ರವರಿ 14 ಶನಿವಾರದಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಬೆಂಗಳೂರಿನ ವಿವಿಧೆಡೆ ವಿದ್ಯುತ್​​ ವ್ಯತ್ಯಯವಾಗಲಿದೆ. ತುಮಕೂರಿನ ಶಿರಾ ಹಾಗೂ ಗ್ರಾಮೀಣ ಉಪ […]

ಕನ್ನಡ ದುನಿಯಾ 13 Feb 2026 3:24 pm

ನಿಮ್ಮ ಪಾಸ್‌ಪೋರ್ಟ್ ಸ್ಟೇಟಸ್ ತಿಳಿಯಬೇಕೆ? ಕೇವಲ ಎರಡು ನಿಮಿಷದಲ್ಲಿ ಹೀಗೆ ಚೆಕ್ ಮಾಡಿ

ಒಂದು ಕಾಲದಲ್ಲಿ ಪಾಸ್‌ಪೋರ್ಟ್ ಮಾಡಿಸುವುದು ಎಂದರೆ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದು, ಉದ್ದನೆಯ ಕ್ಯೂನಲ್ಲಿ ನಿಲ್ಲುವುದು ದೊಡ್ಡ ತಲೆನೋವಿನ ಕೆಲಸವಾಗಿತ್ತು. ಆದರೆ ಈಗ ಕಾಲ ಬದಲಾಗಿದೆ! ತಂತ್ರಜ್ಞಾನದ ನೆರವಿನಿಂದ ಪಾಸ್‌ಪೋರ್ಟ್ ಅರ್ಜಿ ಸಲ್ಲಿಸುವುದರಿಂದ ಹಿಡಿದು, ಅದು ಯಾವ ಹಂತದಲ್ಲಿದೆ ಎಂದು ತಿಳಿಯುವವರೆಗೆ ಎಲ್ಲವೂ ನಿಮ್ಮ ಬೆರಳ ತುದಿಯಲ್ಲಿದೆ. ನೀವು ಹೊಸದಾಗಿ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸಬೇಕೇ ಅಥವಾ ನಿಮ್ಮ ಅಪ್ಲಿಕೇಶನ್ ಎಲ್ಲಿದೆ ಎಂದು ತಿಳಿಯಬೇಕೇ? ಹಾಗಿದ್ದರೆ ಈ ಮಾಹಿತಿ ನಿಮಗಾಗಿ… ಪಾಸ್‌ಪೋರ್ಟ್‌ಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? (ಹಂತ ಹಂತವಾದ […]

ಕನ್ನಡ ದುನಿಯಾ 13 Feb 2026 3:23 pm

ಸರ್ಕಾರಕ್ಕೆ 1000 ದಿನಗಳ ಸಂಭ್ರಮ: 6ನೇ ಗ್ಯಾರಂಟಿಯಾಗಿ ಜಾರಿ

ಕರ್ನಾಟಕದ ಕಾಂಗ್ರೆಸ್ ಸರ್ಕಾರ 1000 ದಿನಗಳನ್ನು ಪೂರೈಸಿದೆ. ಈ ಹಿನ್ನಲೆಯಲ್ಲಿ ಹಾವೇರಿ ನಗರದ ಅಜ್ಜಯಸ್ವಾಮಿ ದೇವಸ್ಥಾನ ಬಳಿಯ ಮೈದಾನದಲ್ಲಿ ಫೆಬ್ರವರಿ 14ರಂದು ರಾಜ್ಯ ಸರ್ಕಾರದ ಸಾಧನಾ ಸಮಾವೇಶ ಹಾಗೂ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ ನಡೆಯಲಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಸಮಾವೇಶದ ತಯಾರಿಯನ್ನು ಪರಿಶೀಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಯಶಸ್ವಿಯಾಗಿ 1000 ದಿನಗಳ ಆಡಳಿತವನ್ನು ಪೂರೈಸಿದ ಹಿನ್ನಲೆಯಲ್ಲಿ ಸಮಾವೇಶ ಆಯೋಜಿಸಲಾಗಿದೆ. ಈ ಸಾರ್ಥಕ ಆಡಳಿತದ ಸಂಭ್ರಮವನ್ನು […]

ಕನ್ನಡ ದುನಿಯಾ 13 Feb 2026 3:22 pm

ಪ್ರಧಾನಿ ಮೋದಿಯ ಅಭಿನಂದನೆ ಸಂದೇಶ ಸ್ವೀಕರಿಸಿದ ‘BNP’ : ಉಭಯ ದೇಶಗಳ ನಡುವೆ ಬಾಂಧವ್ಯ ಸೃಷ್ಟಿ..!

ಢಾಕಾ : ಬಾಂಗ್ಲಾದೇಶದಲ್ಲಿ ನಡೆದ ಸಂಸದೀಯ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿರುವ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (BNP) ತಮಗೆ ಅಭಿನಂದನೆ ಸಲ್ಲಿಸಿದ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದೆ. ಗುರುವಾರ, ಫೆಬ್ರವರಿ 12 ರಂದು ನಡೆದ ಚುನಾವಣೆಯಲ್ಲಿ ಬಿಎನ್‌ಪಿ ಅಭೂತಪೂರ್ವ ಜಯಗಳಿಸಿದೆ. ತಾರಿಕ್ ರೆಹಮಾನ್ ನೇತೃತ್ವದಲ್ಲಿ ಬಿಎನ್‌ಪಿ 200ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಎರಡೂ ಮುಕ್ಕಾಲು ಭಾಗದಷ್ಟು ಬಹುಮತವನ್ನು ಸಾಧಿಸಿದೆ. ಇದರೊಂದಿಗೆ ತಾರಿಕ್ ರೆಹಮಾನ್ ಬಾಂಗ್ಲಾದೇಶದ ಮುಂದಿನ ಪ್ರಧಾನಿಯಾಗುವುದು ಬಹುತೇಕ ಖಚಿತವಾಗಿದೆ. ಬಿಎನ್‌ಪಿ […]

ಕನ್ನಡ ದುನಿಯಾ 13 Feb 2026 3:14 pm

ಇಟಲಿ ಕ್ರಿಕೆಟ್ ನ ಹೀರೊ ಪಿಜ್ಜಾ ಮೇಕರ್ ಕ್ರಿ ಶನ್:ಅಚ್ಚರಿಯ ಜಯದೊಂದಿಗೆ ವಿಶ್ವಕಪ್ ನಲ್ಲಿ ಇಟಲಿ ಶುಭಾರಂಭ

ಇಟಲಿ ತಂಡದ ನಾಯಕ ಹ್ಯಾರಿ ಮ್ಯಾನೆಂಟಿ ಹೇಳುವಂತೆ, ಅವರ ತಂಡದ 15 ಆಟಗಾರರಲ್ಲಿ 12 ಮಂದಿ ಕ್ರಿಕೆಟ್ ಹೊರತಾಗಿ ಜೀವನೋಪಾಯಕ್ಕಾಗಿ ಬೇರೆ ಕೆಲಸಗಳನ್ನು ಮಾಡುತ್ತಾರೆ. ಅದರಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಕ್ರಿಶನ್ ಕಲುಗಮಗೆ ಒಬ್ಬರು. ಇವರು ಇಟಲಿಯ ಲೂಕಾದಲ್ಲಿ ಪಿಜ್ಜಾ ತಯಾರಕನಾಗಿ (Pizzaiolo) ಕೆಲಸ ಮಾಡುತ್ತಲೇ ವಿಶ್ವಕಪ್ ಕನಸು ಕಂಡವರು. ದೋಸೆ ಹಿಟ್ಟಿನಂತೆ ಚೆಂಡನ್ನು ತಿರುಗಿಸಿದ ಕ್ರಿಶನ್! ನೇಪಾಳ ತಂಡವು ಕೆಲವು ದಿನಗಳ ಹಿಂದೆಯಷ್ಟೇ ಬಲಿಷ್ಠ ಇಂಗ್ಲೆಂಡ್‌ಗೆ ಬೆವರಿಳಿಸಿತ್ತು. ಅಂತಹ ತಂಡವನ್ನು ಇಟಲಿ ಕೇವಲ 123 ರನ್‌ಗಳಿಗೆ […]

ಕನ್ನಡ ದುನಿಯಾ 13 Feb 2026 3:14 pm