SENSEX
NIFTY
GOLD
USD/INR

Weather

21    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source

T20 World Cup 2026: ಬಿದ್ದ ತಂಡದ ಕೈಹಿಡಿದ ಸೂರ್ಯ, ಬೌಲರ್ಸ್; ಯುಎಸ್ ವಿರುದ್ಧ ಗೆದ್ದ ಭಾರತ

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಟಿ ಟ್ವೆಂಟಿ ವಿಶ್ವಕಪ್ 2026ರ ಮೂರನೇ ಪಂದ್ಯದಲ್ಲಿ ಭಾರತ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ ವಿರುದ್ಧ 29 ರನ್‌ಗಳ ಗೆಲುವನ್ನು ದಾಖಲಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ ಫೀಲ್ಡಿಂಗ್ ಆರಿಸಿಕೊಂಡು ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 161 ರನ್ ಕಲೆಹಾಕಿ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾಗೆ […]

ಕನ್ನಡ ದುನಿಯಾ 7 Feb 2026 11:03 pm

T20 World Cup 2026: 115ಕ್ಕೆ 4, 147 ರನ್‌ಗೆ ಆಲ್‌ಔಟ್; ವಿಂಡೀಸ್ ವಿರುದ್ಧ ಸೋತ ಸ್ಕಾಟ್ಲೆಂಡ್

ಐಸಿಸಿ ಪುರುಷರ ಟಿ ಟ್ವೆಂಟಿ ವಿಶ್ವಕಪ್ 2026ರ ಎರಡನೇ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ವೆಸ್ಟ್ ಇಂಡೀಸ್ 35 ರನ್‌ಗಳ ಗೆಲುವನ್ನು ಸಾಧಿಸುವ ಮೂಲಕ ಶುಭಾರಂಭ ಮಾಡಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 182 ರನ್ ಕಲೆಹಾಕಿ ಸ್ಕಾಟ್ಲೆಂಡ್‌ಗೆ 183 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಸ್ಕಾಟ್ಲೆಂಡ್ 18.5 ಓವರ್‌ಗಳಲ್ಲಿ 147 ರನ್‌ಗಳಿಗೆ ಆಲ್‌ಔಟ್ ಆಯಿತು. ವೆಸ್ಟ್ ಇಂಡೀಸ್ […]

ಕನ್ನಡ ದುನಿಯಾ 7 Feb 2026 10:03 pm

ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ: ಮೂವರಿಗೆ ಗಲ್ಲು ಶಿಕ್ಷೆ ಕಾಯಂ

ಬೆಂಗಳೂರು: ಮಂಗಳೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗೆ ಕೊಲೆಗೈದ ಮೂವರು ಅಪರಾಧಿಗಳಿಗೆ ಸೆಷನ್ಸ್ ಕೋರ್ಟ್ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಹೈಕೋರ್ಟ್ ಕಾಯಂಗೊಳಿಸಿದೆ. ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಗಲ್ಲು ಶಿಕ್ಷೆ ದೃಢೀಕರಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ಮತ್ತು ಶಿಕ್ಷೆ ರದ್ದು ಮಾಡುವಂತೆ ಕೋರಿ ಅಪರಾಧಿಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ನೇತೃತ್ವದ ವಿಭಾಗೀಯ ಪೀಠದಲ್ಲಿ ನಡೆದಿದೆ. ದಕ್ಷಿಣ ಕನ್ನಡ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ(ಪೋಕ್ಸೊ) ವಿಧಿಸಿದ್ದ ಗಲ್ಲು ಶಿಕ್ಷೆಯನ್ನು […]

ಕನ್ನಡ ದುನಿಯಾ 7 Feb 2026 9:38 pm

T20 World Cup 2026: ಭಾರೀ ಮುಖಭಂಗದತ್ತ ಸಾಗಿದ್ದ ಭಾರತಕ್ಕೆ ಸೂರ್ಯ ಆಸರೆ; ಅಮೆರಿಕಾಗೆ ಪೈಪೋಟಿಯ ಗುರಿ

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ ಹಾಗೂ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ ನಡುವೆ ನಡೆಯುತ್ತಿರುವ ಐಸಿಸಿ ಟಿ ಟ್ವೆಂಟಿ ವಿಶ್ವಕಪ್ 2026ರ ಮೂರನೇ ಪಂದ್ಯದಲ್ಲಿ ಭಾರತ ರನ್‌ಗಳ 162 ಗುರಿಯನ್ನು ನೀಡಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ ಫೀಲ್ಡಿಂಗ್ ಆರಿಸಿಕೊಂಡು ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 161 ರನ್ ಕಲೆಹಾಕಿದೆ. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಅಭಿಷೇಕ್ […]

ಕನ್ನಡ ದುನಿಯಾ 7 Feb 2026 9:05 pm

BREAKING: ಒಂಟಿ ಸಲಗದ ದಾಳಿಗೆ ವ್ಯಕ್ತಿ ಬಲಿ: ರಸ್ತೆಯಲ್ಲೇ ಶವ ಇಟ್ಟು ಗ್ರಾಮಸ್ಥರ ಆಕ್ರೋಶ

ರಾಮನಗರ: ತಮಿಳುನಾಡು ಗಡಿಯಲ್ಲಿ ಆನೆ ದಾಳಿಯಿಂದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಬ್ಯಾಲಕೆರೆ ಗ್ರಾಮದ ಬಳಿ ಒಂಟಿ ಸಲಗದ ದಾಳಿಗೆ ವ್ಯಕ್ತಿ ಬಲಿಯಾಗಿದ್ದಾರೆ. ತಮಿಳುನಾಡು ಗಡಿಗೆ ಹೊಂದಿಕೊಂಡಿರುವ ಬ್ಯಾಲಕೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಆನೆ ದಾಳಿಯಿಂದ ಬ್ಯಾಲಕೆರೆಯ ವೆಂಕಟೇಶ್(58) ಸಾವನ್ನಪ್ಪಿದ್ದಾರೆ. ಗುಮ್ಮಳಾಪುರ ಗ್ರಾಮದ ರಸ್ತೆಯಲ್ಲಿ ಶವ ಇಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಡಾನೆ ಹಾವಳಿ ನಿಯಂತ್ರಿಸುತ್ತಿಲ್ಲವೆಂದು ದೂರಿದ್ದಾರೆ. ಮೃತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕನ್ನಡ ದುನಿಯಾ 7 Feb 2026 8:55 pm

SHOCKING: ಶಿವರಾತ್ರಿಗೆ 10 ಸಾವಿರ ರೂ. ಚಂದಾ ಹಣ ನೀಡದಿದ್ದಕ್ಕೆ ಯುವಕನಿಗೆ ಚಾಕುವಿನಿಂದ ತಿವಿದು ಹಲ್ಲೆ

ಬೀದರ್: ಶಿವರಾತ್ರಿಗೆ ಚಂದಾ ಹಣ ನೀಡದಿದ್ದಕ್ಕೆ ಯುವಕನ ಮೇಲೆ ತೀವ್ರವಾಗಿ ಹಲ್ಲೆ ಮಾಡಲಾಗಿದೆ. ಕೇಳಿದಷ್ಟು ಚಂದಾ ಕೊಡದಿರುವುದಕ್ಕೆ ನಾಲ್ಕೈದು ಯುವಕರು ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆ ಬೀದರ್ ನ ಮೈಲೂರು ಬಡಾವಣೆಯಲ್ಲಿ ನಡೆದಿದೆ. ಮಹೇಶ್ ಎಂಬ ಯುವಕನಿಗೆ ಚಾಕುವಿನಿಂದ ತಿವಿದು ಹಲ್ಲೆ ಮಾಡಲಾಗಿದೆ. 10,000 ರೂ. ಚಂದಾ ಕೊಡುವಂತೆ ಯುವಕರು ಕೇಳಿದ್ದರು. ಅಷ್ಟೊಂದು ಹಣ ಕೊಡಲ್ಲ ಎಂದಿದ್ದಕ್ಕೆ ಮಹೇಶ್ ಮೇಲೆ ಹಲ್ಲೆ ಮಾಡಲಾಗಿದೆ. ಮಹೇಶ್ ಮೇಲೆ ವಿದ್ಯಾನಗರ ಬಡಾವಣೆಯ ಯುವಕರು ಹಲ್ಲೆ ಮಾಡಿದ್ದಾರೆ. ಗಾಯಾಳು ಮಹೇಶ್ […]

ಕನ್ನಡ ದುನಿಯಾ 7 Feb 2026 8:42 pm

‘ಗೃಹಲಕ್ಷ್ಮಿ’ಫಲಾನುಭವಿಗಳಿಗೆ ಹೊಸ ನಿಯಮ: ಜೀವಿತ ಪ್ರಮಾಣ ಪತ್ರ ಸಲ್ಲಿಕೆ ಕಡ್ಡಾಯ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಹಣ ದುರ್ಬಳಕೆ ಆಗುವುದನ್ನು ತಡೆಯಲು ಸರ್ಕಾರ ಹೊಸ ನಿಯಮ ಜಾರಿಗೆ ಮುಂದಾಗಿದೆ. ಮೃತಪಟ್ಟ ಫಲಾನುಭವಿಗಳ ಖಾತೆಗೂ ಗೃಹಲಕ್ಷ್ಮಿ ಹಣ ಜಮಾ ಆಗುತ್ತಿರುವುದನ್ನು ತಡೆಯಲು ಜೀವಿತ ಪ್ರಮಾಣ ಪತ್ರ(ಲೈಫ್ ಸರ್ಟಿಫಿಕೇಟ್) ಸಲ್ಲಿಸುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಅವರು ಈ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದರು. ಅವರ ಮನವಿಯನ್ನು ಪುರಸ್ಕರಿಸಿದ ಸಿಎಂ […]

ಕನ್ನಡ ದುನಿಯಾ 7 Feb 2026 8:00 pm

ಬೆಂಗಳೂರು-ಮಂಗಳೂರು ವಂದೇ ಭಾರತ್ ರೈಲು ಯಾವಾಗ?; ಸಚಿವರ ಬಿಗ್ ಅಪ್‌ಡೇಟ್

ಕರ್ನಾಟಕದ ರಾಜಧಾನಿ ಬೆಂಗಳೂರು ಮತ್ತು ಕರಾವಳಿ ಕರ್ನಾಟಕದ ಪ್ರಮುಖ ನಗರ ಮಂಗಳೂರು ಸಂಪರ್ಕಿಸಲು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಬೇಕು ಎಂಬ ಬೇಡಿಕೆ ಇದೆ. ಈ ಕುರಿತು ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳು ಕೇಂದ್ರ ಸರ್ಕಾರಕ್ಕೆ, ರೈಲ್ವೆ ಸಚಿವರಿಗೆ ಮನವಿಗಳನ್ನು ಸಲ್ಲಿಕೆ ಮಾಡಿದ್ದಾರೆ. ಶನಿವಾರ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಕೇಂದ್ರ ಬಜೆಟ್‌-2026 ಕುರಿತು ಪತ್ರಿಕಾಗೋಷ್ಠಿ ನಡೆಸಿದರು. ಈ ಸಮಯದಲ್ಲಿ ಅವರು ಬೆಂಗಳೂರು-ಮಂಗಳೂರು ವಂದೇ ಭಾರತ್ ರೈಲು ಸಂಪರ್ಕದ ಕುರಿತು […]

ಕನ್ನಡ ದುನಿಯಾ 7 Feb 2026 7:54 pm

ಶಾಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿದ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಕಾರವಾರ: ಮಧ್ಯಾಹ್ನದ ಊಟ ಸೇವಿಸಿದ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಪಿಎಂಶ್ರೀ ಜವಾಹರ ನವೋದಯ ವಿದ್ಯಾಲಯದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆ ಮುಂಡಗೋಡಿನ ಪಂಚವಟಿಯಲ್ಲಿರುವ ಶಾಲೆಯಲ್ಲಿ ಫೆಬ್ರವರಿ 4ರಂದು 518 ಮಕ್ಕಳು ಮಧ್ಯಾಹ್ನದ ಬಿಸಿ ಊಟ ಸೇವಿಸಿದ್ದರು. ಈ ಪೈಕಿ 70 ಮಕ್ಕಳಿಗೆ ಜ್ವರ, ಭೇದಿ, ಹೊಟ್ಟೆ ನೋವು ಕಾಣಿಸಿಕೊಂಡಿತ್ತು, ಅಸ್ವಸ್ಥ ಮಕ್ಕಳನ್ನು ಮುಂಡಗೋಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಆರೋಗ್ಯ ಅಧಿಕಾರಿಗಳ ತಂಡ ಸ್ಥಳಕ್ಕೆ ಆಗಮಿಸಿ ಪರೀಕ್ಷೆ ನಡೆಸಿದೆ. ಸ್ಯಾಂಪಲ್ ಪಡೆದು ಬೆಳಗಾವಿ […]

ಕನ್ನಡ ದುನಿಯಾ 7 Feb 2026 7:49 pm

ಯುಪಿಎಸ್‌ಸಿ ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್: ಕಾಲ್ ಸೆಂಟರ್ ಸಮಯ ವಿಸ್ತರಣೆ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್‌ಸಿ) ಆಕಾಂಕ್ಷಿಗಳಿಗೆ ಹೆಚ್ಚಿನ ಬೆಂಬಲ ಮತ್ತು ಮಾರ್ಗದರ್ಶನ ನೀಡಲು ಕಾಲ್ ಸೆಂಟರ್‌ನ ಕಾರ್ಯಾಚರಣೆಯ ಸಮಯವನ್ನು ವಿಸ್ತರಿಸಿದೆ. ನಾಗರಿಕ ಸೇವೆಗಳ ಪರೀಕ್ಷೆ (ಸಿಎಸ್‌ಇ) 2026 ಮತ್ತು ಭಾರತೀಯ ಅರಣ್ಯ ಸೇವೆ (ಐಎಫ್‌ಒಎಸ್) ಪರೀಕ್ಷೆ 2026 ಕ್ಕೆ ಅರ್ಜಿ ನಮೂನೆಗಳನ್ನು ಸಲ್ಲಿಸುವವರೆಗೆ ಶನಿವಾರ, ಭಾನುವಾರ ಮತ್ತು ರಜಾದಿನಗಳು ಸೇರಿದಂತೆ ಎಲ್ಲಾ ದಿನಗಳಲ್ಲಿ ಕಾಲ್ ಸೆಂಟರ್ ಕಾರ್ಯನಿರ್ವಹಿಸುತ್ತದೆ ಎಂದು ಯುಪಿಎಸ್‌ಸಿ ತಿಳಿಸಿದೆ. ಇದು ಬೆಳಿಗ್ಗೆ 7 ರಿಂದ ರಾತ್ರಿ 9 ರವರೆಗೆ ಎರಡು ಪಾಳಿಗಳಲ್ಲಿ ಕಾರ್ಯನಿರ್ವಹಿಸಲಿದ್ದು, ಅಭ್ಯರ್ಥಿಗಳು […]

ಕನ್ನಡ ದುನಿಯಾ 7 Feb 2026 7:30 pm

BREAKING: ಶಿವಮೊಗ್ಗ ಸೆಂಟ್ರಲ್ ಜೈಲ್ ನಲ್ಲಿ ಗಾಂಜಾ, ಮೊಬೈಲ್, ಸಿಗರೇಟ್, ಲೈಟರ್ ಎಸೆದ ನಾಲ್ವರು ಅರೆಸ್ಟ್

ಶಿವಮೊಗ್ಗದ ಸೋಗಾನೆಯ ಕೇಂದ್ರ ಕಾರಾಗೃಹದ ಒಳಗಡೆ ಗಾಂಜಾ, ಮೊಬೈಲ್, ಸಿಗರೇಟ್ ಹಾಗೂ ಲೈಟರ್ ಅನ್ನು ಕಪ್ಪು ಬಣ್ಣದ ಗಮ್ ಟೇಪ್ ನಿಂದ ಪ್ಯಾಕ್ ಮಾಡಿ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ದಿನಾಂಕ: 01/02/2026 ರಂದು ಬೆಳಗಿನ ಜಾವ ಕಾರಾಗೃಹದೊಳಗೆ ನಡೆದ ಘಟನೆ ಸಂಬಂಧ ಕೇಂದ್ರ ಕಾರಾಗೃಹದ ಅಧೀಕ್ಷಕ ಪರಮೇಶ್ ಎಚ್.ಎ. ನೀಡಿದ ದೂರಿನ ಮೇರೆಗೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಈ ರೀತಿ ಎಸೆದಿದ್ದ ಮೊಬೈಲ್‌ ಫೋನ್‌, ಗಾಂಜಾ ಹಾಗೂ ಸಿಗರೇಟ್‌ ಅನ್ನು […]

ಕನ್ನಡ ದುನಿಯಾ 7 Feb 2026 7:18 pm

ಹಲ್ಲು ನೋವಿಗೆ ಇನ್ಸ್ಟಂಟ್ ರಿಲೀಫ್ ಬೇಕಾ? ಮನೆಯಲ್ಲೇ ಇರುವ ದಿವ್ಯೌಷಧಿ : ತಕ್ಷಣದ ಪರಿಹಾರಗಳು

ಹಲ್ಲು ನೋವು ಬಂತೆಂದರೆ ಅದು ಪ್ರಾಣ ಸಂಕಟಕ್ಕೆ ಸಮಾನ ಊಟ ಮಾಡಲು ಬಿಡಲ್ಲ, ನಿದ್ದೆ ಮಾಡಲೂ ಬಿಡಲ್ಲ. ಸಾಮಾನ್ಯವಾಗಿ ಸಿಹಿ ಪದಾರ್ಥಗಳ ಅತಿಯಾದ ಸೇವನೆ ಮತ್ತು ಹಲ್ಲುಗಳ ಸರಿಯಾದ ಸ್ವಚ್ಛತೆ ಇಲ್ಲದಿದ್ದರೆ ಬ್ಯಾಕ್ಟೀರಿಯಾಗಳು ಹಲ್ಲಿನಲ್ಲಿ ಕುಳಿ (Cavity) ಸೃಷ್ಟಿಸುತ್ತವೆ. ಈ ನೋವು ತೀವ್ರವಾದಾಗ ದಂತವೈದ್ಯರ ಬಳಿ ಹೋಗುವುದು ಅನಿವಾರ್ಯ. ಆದರೆ ಮಧ್ಯರಾತ್ರಿಯಲ್ಲೋ ಅಥವಾ ಆಸ್ಪತ್ರೆಗೆ ಹೋಗಲು ಸಾಧ್ಯವಾಗದ ತುರ್ತು ಸಂದರ್ಭದಲ್ಲೋ ನೋವು ಕಾಣಿಸಿಕೊಂಡರೆ ಏನು ಮಾಡುವುದು? ಚಿಂತೆ ಬೇಡ ನಿಮ್ಮ ಕಿಚನ್‌ನಲ್ಲಿರುವ ಈ ಸರಳ ವಸ್ತುಗಳೇ ಈಗ […]

ಕನ್ನಡ ದುನಿಯಾ 7 Feb 2026 7:11 pm

ಜನಿಸಿದ 7 ದಿನದಲ್ಲಿ ಮಗು ಮಾರಾಟ ಯತ್ನ: ದಂಪತಿ ಸೇರಿ ಐವರು ಅರೆಸ್ಟ್

ಕೋಲಾರ: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ಮಗು ಜನಿಸಿದ 7 ದಿನದಲ್ಲೇ ಮಾರಾಟಕ್ಕೆ ಯತ್ನಿಸಿದ ದಂಪತಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ದಂಪತಿ ಪತಿ, ಪತ್ನಿ ಅಲ್ಲ. ಲಿವಿಂಗ್ ಟುಗೆದರ್ ರೀತಿ ಸಂಸಾರ ಮಾಡಿಕೊಂಡಿದ್ದಾರೆ. ಮಹಿಳೆಗೆ ಈಗಾಗಲೇ ಇಬ್ಬರು ಮಕ್ಕಳಿದ್ದು, ಮೊದಲ ಗಂಡನಿಗೆ ಒಂದು ಗಂಡು ಮಗುವಿತ್ತು. ಎರಡನೇ ಗಂಡನಿಗೆ ಒಂದು ಮಗುವಿದೆ. ಈ ನಡುವೆ ಮೂರನೇ ಮಗುವನ್ನು ಹಣದ ಆಸೆಗಾಗಿ ಮಾರಾಟ ಮಾಡಲು ಯತ್ನಿಸಿದ ವೇಳೆ ಸಿಕ್ಕಿಬಿದ್ದಿದ್ದಾರೆ. ಶ್ರೀನಿವಾಸಪುರ ಪಟ್ಟಣದ ನಿವಾಸಿ ಮಹಿಳೆಗೆ ಈ ಮೊದಲು […]

ಕನ್ನಡ ದುನಿಯಾ 7 Feb 2026 7:06 pm

ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸಲು ಗಡುವು ಕೊಟ್ಟ ಅಮೆರಿಕ!

ಸುಮಾರು 4 ವರ್ಷಗಳಿಂದ ನಡೆಯುತ್ತಿರುವ ರಷ್ಯಾ ಮತ್ತು ಉಕ್ರೇನ್ ಯುದ್ಧ ನಿಲ್ಲುವುದು ಯಾವಾಗ?. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಯುದ್ಧ ನಿಲ್ಲಿಸುವುದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್ಸ್ಕಿ ಯುದ್ಧ ನಿಲ್ಲಿಸುವ ಕುರಿತು ಮಹತ್ವದ ಅಪ್‌ಡೇಟ್ ನೀಡಿದ್ದಾರೆ. ವೊಲೊಡಿಮಿರ್ ಝೆಲೆನ್ಸ್ಕಿ ಮಾತನಾಡಿ, “ಯುದ್ಧವನ್ನು ಕೊನೆಗೊಳಿಸಲು ಯುಎಸ್ ರಷ್ಯಾ ಮತ್ತು ಉಕ್ರೇನ್‌ಗೆ ಜೂನ್ ಗಡುವನ್ನು ನೀಡಿದೆ. ಇತ್ತೀಚಿನ ಗಡುವನ್ನು ಅಬುಧಾಬಿಯಲ್ಲಿ ನಡೆದ ತ್ರಿಪಕ್ಷೀಯ ಮಾತುಕತೆಗಳ ಬಳಿಕ ನೀಡಲಾಗಿದೆ” ಎಂದು ಹೇಳಿದ್ದಾರೆ. “ಎರಡೂ ಪಕ್ಷಗಳು ಪರಸ್ಪರ ಪ್ರತ್ಯೇಕ […]

ಕನ್ನಡ ದುನಿಯಾ 7 Feb 2026 7:01 pm

ನಿರ್ಮಾಪಕ ಕನಕಪುರ ಶ್ರೀನಿವಾಸ್ ವಿರುದ್ಧ ಫಿಲಂ ಚೇಂಬರ್ ಗೆ ದೂರು ನೀಡಿದ ಜೋಗಿ ಪ್ರೇಮ್

ಬೆಂಗಳೂರು: ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ನಿರ್ಮಾಪಕ ಕನಕಪುರ ಶ್ರೀನಿವಾಸ್, ಚಿತ್ರರಂಗದಲ್ಲಿರುವ ಹಲವರು ನನಗೆ ಮೋಸ ಮಾಡಿದ್ದಾರೆ. ಪ್ರೇಮ್, ಅರ್ಜುನ್ ಜನ್ಯಾ ಸೇರಿದಂತೆ ಹಲವರು ನನಗೆ ಮೋಸ ಮಾಡಿದ್ದಾಗಿ ಆರೋಪ ಮಾಡಿದ್ದರು. ಇದೇ ವಿಚಾರವಾಗಿ ನಿರ್ದೇಶಕ ಜೋಗಿ ಪ್ರೇಮ್, ಕನಕಪುರ ಶ್ರೀನಿವಾಸ್ ವಿರುದ್ಧ ಫಿಲಂ ಚೇಂಬರ್ ಗೆ ದೂರು ನೀಡಿದ್ದಾರೆ. ಫಿಲಂ ಚೇಂಬರ್ ಗೆ ಆಗಮಿಸಿದ ಪ್ರೇಮ್, ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲಾ ಅವರನ್ನು ಭೇಟಿಯಾಗಿ ಕನಕಪುರ ಶ್ರೀನಿವಾಸ್ ವಿರುದ್ಧ ದೂರು ನೀಡಿದರು. ಪ್ರೇಮ್ ನೀಡಿರುವ ದೂರಿನಲ್ಲಿ ಏನಿದೆ? […]

ಕನ್ನಡ ದುನಿಯಾ 7 Feb 2026 6:21 pm

ಇ-ಸ್ವತ್ತು ತಂತ್ರಾಂಶದಲ್ಲಿ ಮಹತ್ವದ ಬದಲಾವಣೆ: ಸಚಿವರು ಕೊಟ್ಟರು ಅಪ್‌ಡೇಟ್

ಇ-ಸ್ವತ್ತು ತಂತ್ರಾಂಶದ ಕುರಿತು ಹಲವು ಹಲವು ದೂರುಗಳು ಕೇಳಿ ಬರುತ್ತಿದ್ದವು. ಈಗ ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ-ಬಿಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಪೋಸ್ಟ್ ಹಾಕಿದ್ದಾರೆ. ಸಚಿವರ ಪೋಸ್ಟ್ ವಿವರ: ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ. […]

ಕನ್ನಡ ದುನಿಯಾ 7 Feb 2026 6:17 pm

ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋಗಿದ್ದ ವೇಳೆ ದುರಂತ: ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ನೀರುಪಾಲಾಗಿ ಮೃತಪಟ್ಟಿರುವ ಘಟನೆ ಹಸನ ಜಿಲ್ಲೆಯ ಉದ್ದೂರು ಗ್ರಾಮದಲ್ಲಿ ನಡೆದಿದೆ. 18 ವರ್ಷದ ಪ್ರಜ್ವಲ್ ಮೃತ ದುರ್ದೈವಿ. ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ. ಇಂದು ಮಧ್ಯಾಹ್ನ ನಾಲ್ವರು ಸ್ನೇಹಿತರೊಂದಿಗೆ ಉದ್ದೂರು ಕೆರೆಗೆ ಈಜಲು ಹೋಗಿದ್ದ. ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಇಳಿದಿದ್ದರು. ಉಳಿದವರು ದಡದಲ್ಲಿಯೇ ಇದ್ದರು. ಪ್ರಜ್ವಲ್ ಈಜುತ್ತಾ ಹೋದವನು ವಾಪಸ್ ಬರಲಾಗದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಘಟನ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕೆರೆಯಲ್ಲಿ ಮುಳುಗಿದ್ದ ಪ್ರಜ್ವಲ್ […]

ಕನ್ನಡ ದುನಿಯಾ 7 Feb 2026 6:05 pm

ಖಾದಿ ಉಡುಪು ಖರೀದಿಗೆ ಸರ್ಕಾರಿ ನೌಕರರ ಉತ್ಸಾಹ

ಕರ್ನಾಟಕ ಸರ್ಕಾರ ಪ್ರತಿ ತಿಂಗಳ ಮೊದಲ ಶನಿವಾರ ಎಲ್ಲಾ ಸರ್ಕಾರಿ ಅಧಿಕಾರಿಗಳು/ ನೌಕರರು ಕಡ್ಡಾಯವಾಗಿ ಖಾದಿ ಉಡುಪುಗಳನ್ನು ಧರಿಸಿ ಕಚೇರಿಗೆ ಬರಬೇಕು ಎಂದು ಸುತ್ತೋಲೆಯನ್ನು ಹೊರಡಿಸಿದೆ. ಶನಿವಾರ ರಾಜ್ಯದ ಹಲವಾರು ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ತಾತ್ಕಾಲಿಕವಾಗಿ ಖಾದಿ ಬಟ್ಟೆ ಮಳಿಗೆಯನ್ನು ತೆರೆಯಲಾಗಿತ್ತು. ಈ ಪ್ರಯತ್ನಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ಸರ್ಕಾರಿ ನೌಕರರು ಖಾದಿ ಬಟ್ಟೆ ಖರೀದಿ ಮಾಡಲು ಉತ್ಸಾಹ ತೋರಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಸರ್ಕಾರಿ ನೌಕರರು ಖಾದಿ ಉಡುಪುಗಳನ್ನು ಖರೀದಿಸಲು ಅನುಕೂಲವಾಗುವಂತೆ ಹುಬ್ಬಳ್ಳಿ ಯ ಖಾದಿ […]

ಕನ್ನಡ ದುನಿಯಾ 7 Feb 2026 5:57 pm

BIG NEWS: ಬೆಂಗಳೂರು ಏರ್ ಪೋರ್ಟ್ ನಲ್ಲಿ 3 ಕೋಟಿ ಮೌಲ್ಯದ ಗಾಂಜಾ ಪತ್ತೆ: ಮೂವರು ಅರೆಸ್ಟ್

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರೋಬ್ಬರಿ 3 ಕೋಟಿ ರೂಪಾಯಿ ಮೌಲ್ಯದ ಗಾಂಜಾ ಪತ್ತೆಯಾಗಿದೆ. ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಬೃಹತ್ ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 2.97 ಕೋಟಿ ರೂ. ಮೌಲ್ಯದ 8.5 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಥಾಯ್ಲೆಂಡ್ ಮತ್ತು ಮಲೇಶಿಯಾದಿಂದ ಬಂದ ಮೂವರು ಪ್ರಯಾಣಿಕರನ್ನು ಎನ್ ಡಿ ಪಿಎಸ್ ಕಾಯ್ದೆಯಡಿ ಬಂಧಿಸಲಾಗಿದ್ದು, ಮಾದಕವಸ್ತು ಕಳ್ಳಸಾಗಣೆ ಜಾಲದ ಕುರಿತು ತನಿಖೆ ಮುಂದುವರಿದಿದೆ. ಥಾಯ್ಲೆಂಡ್‌ನ ಪುಕೆಟ್ ಹಾಗೂ ಮಲೇಶಿಯಾದಿಂದ ಕೆಐಎಬಿಗೆ ಆಗಮಿಸಿದ್ದ ಮೂವರು ಪ್ರಯಾಣಿಕರ […]

ಕನ್ನಡ ದುನಿಯಾ 7 Feb 2026 5:43 pm

Big Breaking: ನಮ್ಮ ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ

ಬೆಂಗಳೂರು ನಗರದ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಅಪ್‌ಡೇಟ್ ಇಲ್ಲಿದೆ. ಸೋಮವಾರದಿಂದ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ಇಲ್ಲ. ಬಿಎಂಆರ್‌ಸಿಎಲ್ ನಮ್ಮ ಮೆಟ್ರೋ ಪ್ರಯಾಣ ದರವನ್ನು ಪರಿಷ್ಕರಣೆ ಮಾಡಿದ್ದು, ಅದು ಸೋಮವಾರದಿಂದ ಜಾರಿಗೆ ಬರಬೇಕಿತ್ತು. ಈ ಕುರಿತು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ. ಕೇಂದ್ರ ಸರ್ಕಾರ ಈಗಾಗಲೇ ನಮ್ಮ ಮೆಟ್ರೋ ಪ್ರಯಾಣ ದರ ಪರಿಷ್ಕರಣೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಿರಿ ಎಂದು ಬಿಎಂಆರ್‌ಸಿಎಲ್‌ಗೆ ಸೂಚನೆ ನೀಡಿದೆ. ಸಂಸದರಾದ ತೇಜಸ್ವಿ ಸೂರ್ಯ ಮತ್ತು […]

ಕನ್ನಡ ದುನಿಯಾ 7 Feb 2026 5:24 pm

ಆಸ್ಪತ್ರೆ ಬಿಲ್ ಲಕ್ಷ ದಾಟಿದ್ರೂ ಟೆನ್ಷನ್ ಇಲ್ಲ ಹೆಲ್ತ್ ಇನ್ಶೂರೆನ್ಸ್ ಬಗ್ಗೆ ನಿಮಗೊತ್ತಿರದ ಸೀಕ್ರೆಟ್ ಲಾಭಗಳು ಇಲ್ಲಿವೆ

ನಾನು ಪ್ರತಿ ವರ್ಷ ಪ್ರೀಮಿಯಂ ಕಟ್ಟುತ್ತಿದ್ದೇನೆ, ಆದ್ರೆ ನನಗೆ ಕಾಯಿಲೆಯೇ ಬಂದಿಲ್ಲ, ದುಡ್ಡೆಲ್ಲಾ ವೇಸ್ಟ್ ಆಯ್ತು ಅಂತ ಯೋಚಿಸಬೇಡಿ. ಇನ್ಶೂರೆನ್ಸ್ ಅನ್ನೋದು ಬರಿ ಖರ್ಚಲ್ಲ, ಅದು ನಮ್ಮ ಕುಟುಂಬದ ಸುತ್ತ ಇರುವ ಒಂದು ರಕ್ಷಾ ಕವಚ.ಅನಾರೋಗ್ಯ ಅನ್ನೋದು ಯಾವಾಗಲೂ ಹೇಳಿ ಕೇಳಿ ಬರೋದಿಲ್ಲ. ಅಚಾನಕ್ ಆಗಿ ದೊಡ್ಡ ಕಾಯಿಲೆ ಕಾಣಿಸಿಕೊಂಡಾಗ ಅಥವಾ ಸರ್ಜರಿ ಬೇಕಾದಾಗ ಲಕ್ಷಾಂತರ ರೂಪಾಯಿ ಬಿಲ್ ಆಗುತ್ತೆ.ಅನಾರೋಗ್ಯ ಅನ್ನೋದು ಯಾವಾಗಲೂ ಹೇಳಿ ಕೇಳಿ ಬರೋದಿಲ್ಲ. ಅಚಾನಕ್ ಆಗಿ ದೊಡ್ಡ ಕಾಯಿಲೆ ಕಾಣಿಸಿಕೊಂಡಾಗ ಅಥವಾ ಸರ್ಜರಿ […]

ಕನ್ನಡ ದುನಿಯಾ 7 Feb 2026 5:12 pm

Namma Metro: ಇತರ ನಗರಗಳ ಮೆಟ್ರೋ ಟಿಕೆಟ್ ದರ ಎಷ್ಟಿದೆ?

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ವಾರ್ಷಿಕ ದರ ಪರಿಷ್ಕರಣೆಯನ್ನು ಪ್ರಕಟಿಸಿದೆ. ಫೆಬ್ರವರಿ 9ರಿಂದ ಜಾರಿಗೆ ಬರುವಂತೆ ಶೇ 5ರಷ್ಟು ದರ ಏರಿಕೆಯಾಗಲಿದೆ. ಈ ಕುರಿತು ಭಾರೀ ವಿರೋಧ ವ್ಯಕ್ತವಾಗುತ್ತಿದೆ. ದೇಶದಲ್ಲಿಯೇ ಬೆಂಗಳೂರು ನಗರದಲ್ಲಿ ಮೆಟ್ರೋ ದರಗಳು ಹೆಚ್ಚು ಎಂದು ಬಿಜೆಪಿ ನಾಯಕರು ಆರೋಪ ಮಾಡುತ್ತಿದ್ದಾರೆ. ಮೆಟ್ರೋ ದರ ಏರಿಕೆ ವಿಚಾರದಲ್ಲಿ ಕರ್ನಾಟಕದ ಆಡಳಿತ ಪಕ್ಷ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ಜಟಾಪಟಿ ನಡೆಯುತ್ತಿದೆ. ದೇಶದ ವಿವಿಧ ನಗರಗಳ ಮೆಟ್ರೋ ದರಗಳು ಮತ್ತು ಬೆಂಗಳೂರಿನ […]

ಕನ್ನಡ ದುನಿಯಾ 7 Feb 2026 5:06 pm

ಒಂದು ಹೆಜ್ಜೆ, ಒಂದು ದೇವಾಲಯ ಭಾರತದಲ್ಲಿರುವ ಸಾವಿರ ದೇವಾಲಯಗಳ ಊರು ಯಾವುದು?

ನಮ್ಮ ಭಾರತವು ವೈವಿಧ್ಯಮಯ ಸಂಪ್ರದಾಯ ಹಾಗೂ ಅಚಲ ನಂಬಿಕೆಗಳ ಬೀಡು. ಇಲ್ಲಿನ ಪ್ರತಿ ನಗರವೂ ತನ್ನದೇ ಆದ ವಿಶಿಷ್ಟ ಇತಿಹಾಸವನ್ನು ಹೊಂದಿದ್ದು, ತಮಿಳುನಾಡಿನ ಕಾಂಚೀಪುರಂ ಈ ಸಾಲಿನಲ್ಲಿ ಅಗ್ರಪಂಕ್ತಿಗೆ ಸೇರುತ್ತದೆ. ಪ್ರಾಚೀನ ಪಲ್ಲವ ಸಾಮ್ರಾಜ್ಯದ ರಾಜಧಾನಿಯಾಗಿದ್ದ ಈ ನಗರವನ್ನು ಭಕ್ತಿಯಿಂದ ಸಾವಿರ ದೇವಾಲಯಗಳ ನಗರ ಎಂದೇ ಕರೆಯಲಾಗುತ್ತದೆ. ಭಾರತದ ಅತ್ಯಂತ ಪವಿತ್ರವಾದ ಏಳು ಮೋಕ್ಷಪುರಿಗಳಲ್ಲಿ ಒಂದಾಗಿರುವ ಕಾಂಚೀಪುರಂ ಒಂದು ವಿಶಿಷ್ಟವಾದ ಆಧ್ಯಾತ್ಮಿಕ ಹಿನ್ನೆಲೆಯನ್ನು ಹೊಂದಿದೆ. ಇಲ್ಲಿನ ವಿಶೇಷತೆಯೆಂದರೆ ನಗರದ ಯಾವುದೇ ಶಿವ ದೇವಾಲಯಗಳಲ್ಲಿ ಅಂಬಾಳ್ (ಪಾರ್ವತಿ) ದೇವಿಗೆ […]

ಕನ್ನಡ ದುನಿಯಾ 7 Feb 2026 3:37 pm

ಶರೀರದೊಳಗೆ ಶ್ವಾಸಕೋಶವೇ ಇರಲಿಲ್ಲ, ಆದರೂ ಉಸಿರಾಟ ನಿಲ್ಲಲಿಲ್ಲ; ವಿಜ್ಞಾನದ ಪವಾಡಕ್ಕೆ ಸಾಕ್ಷಿಯಾದ ಶಿಕಾಗೋ ಆಸ್ಪತ್ರೆ

ವೈದ್ಯಕೀಯ ವಿಜ್ಞಾನ ದಿನದಿಂದ ದಿನಕ್ಕೆ ಅಸಾಧ್ಯವಾದುದನ್ನು ಸಾಧ್ಯವಾಗಿಸುತ್ತಿದೆ. ಅಮೆರಿಕದ ಶಿಕಾಗೋದಲ್ಲಿ ನಡೆದ ಒಂದು ವಿಶೇಷ ಶಸ್ತ್ರಚಿಕಿತ್ಸೆ ಈಗ ಇಡೀ ವಿಶ್ವದ ಗಮನ ಸೆಳೆದಿದೆ. ತೀವ್ರವಾಗಿ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬನ ದೇಹದಿಂದ ಎರಡೂ ಶ್ವಾಸಕೋಶಗಳನ್ನು ಹೊರತೆಗೆದ ಮೇಲೂ ಆತ ಬರೋಬ್ಬರಿ ಎರಡು ದಿನಗಳ ಕಾಲ ಬದುಕಿ ಉಳಿದಿದ್ದಾನೆ. ಇದು ಕೇಳಲು ಅಚ್ಚರಿಯಾದರೂ ಸತ್ಯ. ವಾಯು ಮಾಲಿನ್ಯ ಮತ್ತು ವಿವಿಧ ಸೋಂಕುಗಳಿಂದಾಗಿ ಶ್ವಾಸಕೋಶದ ಕಾಯಿಲೆಗಳು ಹೆಚ್ಚುತ್ತಿರುವ ಈ ಕಾಲದಲ್ಲಿ, ನಾರ್ತ್ ವೆಸ್ಟರ್ನ್ ಮೆಡಿಸಿನ್ ಕ್ಯಾನಿಂಗ್ ಥೊರಾಸಿಕ್ ಇನ್‌ಸ್ಟಿಟ್ಯೂಟ್‌ನ ವೈದ್ಯರು […]

ಕನ್ನಡ ದುನಿಯಾ 7 Feb 2026 3:11 pm

ರಾಜ್ಯ ಸರ್ಕಾರದಿಂದ MSIL ಚಿಟ್ಸ್ ಸಾಫ್ಟ್‌’ವೇರ್ , ಮೊಬೈಲ್ ಆ್ಯಪ್ ಬಿಡುಗಡೆ.! ಏನಿದರ ಪ್ರಯೋಜನ

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ (MSIL) ತನ್ನ ಚಿಟ್ ಫಂಡ್ ವ್ಯವಹಾರದಲ್ಲಿ ಪಾರದರ್ಶಕತೆ ಮತ್ತು ಸುಲಭ ಸೇವೆ ಒದಗಿಸಲು ಹೊಸ ಹಂತಕ್ಕೆ ಕಾಲಿಟ್ಟಿದೆ. ರಾಜ್ಯ ಸರ್ಕಾರವು ಇಂದು ಅಧಿಕೃತವಾಗಿ MSIL ಚಿಟ್ಸ್ ಸಾಫ್ಟ್‌ವೇರ್ ಮತ್ತು ಮೊಬೈಲ್ ಆ್ಯಪ್ ಅನ್ನು ಬಿಡುಗಡೆ ಮಾಡಿದೆ. ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್‌‌ನ ನೂತನ ಚಿಟ್ಸ್ ಸಾಫ್ಟ್‌ವೇರ್ ಹಾಗೂ ಮೊಬೈಲ್ ಆ್ಯಪ್ ಬಿಡುಗಡೆಗೊಳಿಸಿ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಎಂಎಸ್ಐಎಲ್ ಸರ್ಕಾರಿ ಸಂಸ್ಥೆಯು ಹಲವು ದಶಕಗಳಿಂದ […]

ಕನ್ನಡ ದುನಿಯಾ 7 Feb 2026 2:59 pm

T20 World Cup 2026: ನೆದರ್ಲೆಂಡ್ಸ್ ವಿರುದ್ಧ ಸೋತೇಬಿಟ್ರು ಎನ್ನುವಾಗ ಕೈಹಿಡಿದ ಬೌಲರ್; ಗೆದ್ದು ಮಾನ ಉಳಿಸಿಕೊಂಡ ಪಾಕ್

ಕೊಲಂಬೊ: ಪ್ರೇಮದಾಸ ಕ್ರೀಡಾಂಗಣದಲ್ಲಿ 2026ರ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಉದ್ಘಾಟನಾ ಪಂದ್ಯ ನಡೆದಿದ್ದು, ಪಾಕಿಸ್ತಾನ ಬೌಲಿಂಗ್ ಆಲ್‌ರೌಂಡರ್‌ನ ಸಹಾಯದಿಂದ ನೆದರ್ಲೆಂಡ್ಸ್ ವಿರುದ್ಧ 3 ವಿಕೆಟ್‌ಗಳ ಗೆಲುವನ್ನು ದಾಖಲಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆರಿಸಿಕೊಂಡ ಪಾಕಿಸ್ತಾನ ಎದುರಾಳಿ ನೆದರ್ಲೆಂಡ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ನೆದರ್ಲೆಂಡ್ಸ್ 19.5 ಓವರ್‌ಗಳಲ್ಲಿ 147ಕ್ಕೆ ಆಲ್‌ಔಟ್ ಆಗಿ ಪಾಕಿಸ್ತಾನಕ್ಕೆ 148 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಲು ಮುಂದಾದ ಪಾಕಿಸ್ತಾನ ಗೆಲ್ಲಲು […]

ಕನ್ನಡ ದುನಿಯಾ 7 Feb 2026 2:53 pm

ಗರ್ಭಿಣಿಯರನ್ನು ಹಾವುಗಳು ಕಚ್ಚುವುದಿಲ್ಲವೇ ? ವಿಜ್ಞಾನ ಹೇಳೋದೇನು ತಿಳಿಯಿರಿ

ಭಾರತೀಯ ಗ್ರಾಮೀಣ ಭಾಗಗಳಲ್ಲಿ ಒಂದು ಬಲವಾದ ನಂಬಿಕೆಯಿದೆ. “ಗರ್ಭಿಣಿ ಸ್ತ್ರೀಯರನ್ನು ಹಾವುಗಳು ಕಚ್ಚುವುದಿಲ್ಲ”. ಕೇಳಲು ಅಚ್ಚರಿ ಎನಿಸಿದರೂ, ತಲೆಮಾರುಗಳಿಂದ ಈ ಮಾತು ಜನಪದ ಕಥೆಗಳಲ್ಲಿ ಮತ್ತು ಹಿರಿಯರ ಅನುಭವದ ಮಾತುಗಳಲ್ಲಿ ಹಾಸುಹೊಕ್ಕಾಗಿದೆ. ಸೃಷ್ಟಿಗೆ ಮೂಲವಾದ ಮಾತೃತ್ವವನ್ನು ಪ್ರಕೃತಿಯೇ ರಕ್ಷಿಸುತ್ತದೆ ಎಂಬುದು ಕೆಲವರ ವಾದವಾದರೆ, ಇದರ ಹಿಂದೆ ವೈಜ್ಞಾನಿಕ ಕಾರಣಗಳಿವೆ ಎಂಬುದು ಮತ್ತೆ ಕೆಲವರ ಅಭಿಪ್ರಾಯ. ಅಷ್ಟಕ್ಕೂ ಈ ನಿಗೂಢ ನಂಬಿಕೆಯ ಹಿಂದೆ ಧರ್ಮ, ಜ್ಯೋತಿಷ್ಯ ಮತ್ತು ವಿಜ್ಞಾನ ಏನು ಹೇಳುತ್ತವೆ? ಇಲ್ಲಿದೆ ಮಾಹಿತಿ. ೧. ಪೌರಾಣಿಕ ಹಿನ್ನೆಲೆ: […]

ಕನ್ನಡ ದುನಿಯಾ 7 Feb 2026 2:49 pm

‘SBI’ಗ್ರಾಹಕರಿಗೆ ಬಿಗ್ ಶಾಕ್ : ಫೆ. 15 ರಿಂದ ಹಣ ವರ್ಗಾವಣೆ ದುಬಾರಿ, ಇಲ್ಲಿದೆ ಮಾಹಿತಿ

ಮುಂಬೈ/ಬೆಂಗಳೂರು : ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಗ್ರಾಹಕರಿಗೆ ಬಿಗ್ ಶಾಕ್ ನೀಡಿದೆ. ಇನ್ಸ್ಟಂಟ್ ಮನಿ ಟ್ರಾನ್ಸ್ಫರ್ ಅಥವಾ ಐಎಂಪಿಎಸ್ (IMPS) ಮೂಲಕ ಹಣ ವರ್ಗಾವಣೆ ಮಾಡುವ ನಿಯಮಗಳಲ್ಲಿ ಬ್ಯಾಂಕ್ ಪ್ರಮುಖ ಬದಲಾವಣೆಗಳನ್ನು ಮಾಡಿದ್ದು, ಹೊಸ ಶುಲ್ಕಗಳು ಫೆಬ್ರವರಿ 15, 2026 ರಿಂದ ಜಾರಿಗೆ ಬರಲಿವೆ. ಹೊಸ ಶುಲ್ಕದ ಪಟ್ಟಿ ಹೀಗಿದೆ:ಡಿಜಿಟಲ್ ಬ್ಯಾಂಕಿಂಗ್ (Net Banking, Mobile Banking, YONO App) ಮೂಲಕ ನೀವು ಹಣ […]

ಕನ್ನಡ ದುನಿಯಾ 7 Feb 2026 2:34 pm

ಅಂಡರ್ 19 ವಿಶ್ವಕಪ್ ಗೆದ್ದ ಬೆನ್ನಲ್ಲೇ ಬಾಂಗ್ಲಾದೇಶ ಕಾಲೆಳೆದ ವೈಭವ್ ಸೂರ್ಯವಂಶಿ; ವಿಡಿಯೊ

ನಿನ್ನೆ ( ಫೆಬ್ರವರಿ 6 ) ಹರಾರೆ ಕ್ರೀಡಾಂಗಣದಲ್ಲಿ ನಡೆದ ಅಂಡರ್ 19 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ 100 ರನ್‌ಗಳ ಗೆಲುವನ್ನು ದಾಖಲಿಸಿ ಆರನೇ ಬಾರಿಗೆ ಅಂಡರ್ 19 ವಿಶ್ವಕಪ್ ಟ್ರೋಫಿಯನ್ನು ಎತ್ತಿಹಿಡಿದಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ವೈಭವ್ ಸೂರ್ಯವಂಶಿ ದಾಖಲೆಯ ಶತಕದ ನೆರವಿನಿಂದ 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಬರೋಬ್ಬರಿ 411 ರನ್ ಕಲೆಹಾಕಿ ಇಂಗ್ಲೆಂಡ್‌ಗೆ 412 ರನ್‌ಗಳ ಕಠಿಣ ಗುರಿಯನ್ನು ನೀಡಿತ್ತು. ಈ ಗುರಿಯನ್ನು […]

ಕನ್ನಡ ದುನಿಯಾ 7 Feb 2026 2:19 pm

ಮಗ ಶಿಕ್ಷಕನಾದರೂ ಬುದ್ಧಿ ಮಾತ್ರ ಮೃಗೀಯ; 80 ವರ್ಷದ ತಾಯಿಯನ್ನು ಅನಾಥವಾಗಿ ಬಿಟ್ಟು ಹೋದ ಕಟುಕನ ಕೃತ್ಯಕ್ಕೆ ಜಗತ್ತೇ ಉಗಿದಿದೆ

ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯ ಬಸ್ ನಿಲ್ದಾಣವೊಂದು ಮನಕಲಕುವ ಘಟನೆಗೆ ಸಾಕ್ಷಿಯಾಗಿದೆ. ಸುಮಾರು 80 ವರ್ಷದ ವೃದ್ಧೆಯೊಬ್ಬರು ತುಂಬಿದ ಬಸ್ ನಿಲ್ದಾಣದಲ್ಲಿ ಅನಾಥವಾಗಿ ಕುಳಿತು ಕಣ್ಣೀರಿಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ನೂರಾರು ಜನರ ನಡುವೆ ಅಸಹಾಯಕಳಾಗಿ ರೋದಿಸುತ್ತಿದ್ದ ಈ ತಾಯಿಯ ಸ್ಥಿತಿ ಕಂಡು ಸಾರ್ವಜನಿಕರು ಮರುಗಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿರುವ ಮಾಹಿತಿಯ ಪ್ರಕಾರ, ಈ ವೃದ್ಧೆಯನ್ನು ಆಕೆಯ ಮಗನೇ ಅನಾಥವಾಗಿ ಬಿಟ್ಟು ಹೋಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ವಿಶೇಷವೆಂದರೆ ಆ ಮಗ ವೃತ್ತಿಯಲ್ಲಿ […]

ಕನ್ನಡ ದುನಿಯಾ 7 Feb 2026 2:00 pm

SHOCKING : ಬಿಹಾರದಲ್ಲಿ ಕರ್ನಾಟಕದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ : ‘ಫ್ರೀ ಫೈರ್’ಗೇಮ್ ಚಟಕ್ಕೆ ಇಡೀ ಸಂಸಾರ ಬಲಿ !

ರಾಜಗೀರ್ (ಬಿಹಾರ): ಆನ್ಲೈನ್ ಗೇಮ್ ವ್ಯಸನ ಎಷ್ಟು ಅಪಾಯಕಾರಿ ಎಂಬುದಕ್ಕೆ ಸಾಕ್ಷಿಯಾಗಿ ಬಿಹಾರದಲ್ಲಿ ಒಂದು ಹೃದಯವಿದ್ರಾವಕ ಘಟನೆ ನಡೆದಿದೆ. ಕರ್ನಾಟಕ ಮೂಲದ (ಬೆಂಗಳೂರು/ತುಮಕೂರು) ಒಂದೇ ಕುಟುಂಬದ ನಾಲ್ವರು ಸದಸ್ಯರು ಬಿಹಾರದ ನಾಲಂದಾ ಜಿಲ್ಲೆಯ ರಾಜಗೀರ್ನಲ್ಲಿರುವ ಧರ್ಮಶಾಲೆಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ವಿವರ:ಕರ್ನಾಟಕದ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಈ ಕುಟುಂಬವು ಸುಮಾರು ಒಂದು ವಾರದ ಹಿಂದೆ ಬಿಹಾರದ ಪ್ರವಾಸಿ ತಾಣವಾದ ರಾಜಗೀರ್ಗೆ ಭೇಟಿ ನೀಡಿತ್ತು. ಅಲ್ಲಿನ ಧರ್ಮಶಾಲೆಯೊಂದರಲ್ಲಿ ತಂಗಿದ್ದ ಇವರ ಕೊಠಡಿಯಿಂದ ದುರ್ವಾಸನೆ ಬರುತ್ತಿದ್ದನ್ನು […]

ಕನ್ನಡ ದುನಿಯಾ 7 Feb 2026 1:45 pm

ಮೈದಾನದಲ್ಲೇ ಕುಸಿದು ಬಿದ್ದ ಆಟಗಾರ: ರತ್ನಗಿರಿಯಲ್ಲಿ ಕ್ರಿಕೆಟ್ ಪಂದ್ಯದ ವೇಳೆ ಲೈವ್ ಕ್ಯಾಮೆರಾದಲ್ಲೇ ಸೆರೆಯಾಯ್ತು ಕ್ರೀಡಾಪಟುವಿನ ಸಾವು

ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ಕ್ರೀಡಾಭಿಮಾನಿಗಳು ಬೆಚ್ಚಿಬೀಳುವಂತಹ ಘಟನೆಯೊಂದು ನಡೆದಿದೆ. ಸ್ಥಳೀಯ ಕ್ರಿಕೆಟ್ ಪಂದ್ಯವೊಂದು ನಡೆಯುತ್ತಿದ್ದಾಗಲೇ ಪ್ರವೀಣ್ ಪವಾರ್ ಎಂಬ ಆಟಗಾರ ಹೃದಯಾಘಾತದಿಂದ ಪಿಚ್ ಮೇಲೆಯೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಈ ಘಟನೆಯ ದೃಶ್ಯಗಳು ನೇರ ಪ್ರಸಾರವಾಗುತ್ತಿದ್ದ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆತಂಕ ಮೂಡಿಸಿವೆ. ರತ್ನಗಿರಿಯ ಚಿಂಚಖಾರಿ ಎಂಬಲ್ಲಿ ಪಂದ್ಯ ನಡೆಯುತ್ತಿದ್ದಾಗ ಈ ದುರಂತ ಸಂಭವಿಸಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಪ್ರವೀಣ್ ಪವಾರ್ ಅವರು ಪಂದ್ಯದ ವೇಳೆ ಅತ್ಯಂತ ಸಕ್ರಿಯರಾಗಿದ್ದರು. ಅಂಪೈರ್ ಬಳಿ ನಿಂತಿದ್ದ ಅವರು ಇದ್ದಕ್ಕಿದ್ದಂತೆ […]

ಕನ್ನಡ ದುನಿಯಾ 7 Feb 2026 1:15 pm

ಮಹಾಶಿವರಾತ್ರಿ ಹಬ್ಬ ಫೆ. 15 ಅಥವಾ 16 ಕ್ಕೋ..? ಗೊಂದಲಕ್ಕೆ ತೆರೆ ಎಳೆದ ಜ್ಯೋತಿಷಿಗಳು !

ಬೆಂಗಳೂರು: ಪ್ರತಿ ವರ್ಷದಂತೆ ಈ ಬಾರಿಯೂ ಮಹಾ ಶಿವರಾತ್ರಿ ಹಬ್ಬದ ದಿನಾಂಕದ ಬಗ್ಗೆ ಭಕ್ತರಲ್ಲಿ ಗೊಂದಲ ಉಂಟಾಗಿದೆ. ಕೆಲವು ಕ್ಯಾಲೆಂಡರ್‌ಗಳಲ್ಲಿ ಫೆಬ್ರವರಿ 15 ಎಂತಿದ್ದರೆ, ಇನ್ನು ಕೆಲವು ಕಡೆ ಫೆಬ್ರವರಿ 16 ಎಂದು ನಮೂದಿಸಲಾಗಿದೆ. ಈ ಗೊಂದಲಕ್ಕೆ ಜ್ಯೋತಿಷಿಗಳು ಶಾಸ್ತ್ರೋಕ್ತವಾಗಿ ಉತ್ತರ ನೀಡಿದ್ದಾರೆ. ಹಿಂದೂ ಪಂಚಾಂಗದ ಪ್ರಕಾರ, ಮಾಘ ಮಾಸದ ಕೃಷ್ಣ ಪಕ್ಷದ ಚತುರ್ದಶಿ ತಿಥಿಯಂದು ಮಹಾ ಶಿವರಾತ್ರಿಯನ್ನು ಆಚರಿಸಲಾಗುತ್ತದೆ. 2026ರಲ್ಲಿ ಈ ಚತುರ್ದಶಿ ತಿಥಿಯು ಎರಡು ದಿನಗಳ ಕಾಲ ಹರಡಿಕೊಂಡಿದೆ: ಜ್ಯೋತಿಷಿಗಳು ಹೇಳೋದು ಫೆಬ್ರವರಿ 15 […]

ಕನ್ನಡ ದುನಿಯಾ 7 Feb 2026 1:12 pm

ಕಿವಿಯಲ್ಲಿ ಇಯರ್‌ಫೋನ್ ಇಟ್ಟುಕೊಳ್ಳುವ ಮುನ್ನ ಹುಷಾರ್: ಸ್ಫೋಟದ ತೀವ್ರತೆಗೆ ಯುವತಿಯ ಶ್ರವಣ ಶಕ್ತಿ ಸಾವು

ಇತ್ತೀಚಿನ ದಿನಗಳಲ್ಲಿ ವಯಸ್ಸಿನ ಭೇದವಿಲ್ಲದೆ ಪ್ರತಿಯೊಬ್ಬರೂ ವೈರ್‌ಲೆಸ್ ಇಯರ್‌ಬಡ್ಸ್‌ಗಳನ್ನು ಬಳಸುತ್ತಿದ್ದಾರೆ. ಆದರೆ, ತುರ್ಕಿಯಲ್ಲಿ ನಡೆದ ಭೀಕರ ಘಟನೆಯೊಂದು ಈಗ ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿದೆ. ಯುವತಿಯೊಬ್ಬಳು ಇಯರ್‌ಬಡ್ಸ್ ಧರಿಸಿದ್ದಾಗ ಅದು ಕಿವಿಯಲ್ಲೇ ಸ್ಫೋಟಗೊಂಡಿದ್ದು, ಇದರ ಪರಿಣಾಮವಾಗಿ ಆಕೆ ಶಾಶ್ವತವಾಗಿ ಕೇಳುವ ಸಾಮರ್ಥ್ಯವನ್ನು ಕಳೆದುಕೊಂಡಿದ್ದಾಳೆ. ಈ ಘಟನೆಯ ಬಗ್ಗೆ ಬ್ರ್ಯಾಂಡ್‌ನ ಫೋರಂನಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದ್ದು, ಸ್ಫೋಟಕ್ಕೆ ನಿಖರವಾದ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ. ಇಯರ್‌ಫೋನ್ ಇಲ್ಲದೆ ಜೀವನವೇ ಇಲ್ಲ ಎನ್ನುವಂತಾಗಿರುವ ಈ ಕಾಲದಲ್ಲಿ, ಇಂತಹ ಘಟನೆಗಳು ಸ್ಮಾರ್ಟ್‌ಫೋನ್ ಬಳಕೆದಾರರಲ್ಲಿ ಭೀತಿ ಹುಟ್ಟಿಸಿವೆ. […]

ಕನ್ನಡ ದುನಿಯಾ 7 Feb 2026 1:11 pm

BREAKING : ಮುಂಬೈ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಬಿಜೆಪಿಯ ‘ರಿತು ತಾವ್ಡೆ’ಆಯ್ಕೆ !

ಮುಂಬೈ : ದೇಶದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆಯಾದ ಬೃಹನ್ಮುಂಬೈ ಮಹಾನಗರ ಪಾಲಿಕೆಯಲ್ಲಿ (BMC) ಐತಿಹಾಸಿಕ ಬದಲಾವಣೆ ಸಂಭವಿಸಿದೆ. ಕಳೆದ 25 ವರ್ಷಗಳಿಂದ ಪಾಲಿಕೆಯನ್ನು ಆಳುತ್ತಿದ್ದ ಶಿವಸೇನೆಯ ಕೈಯಿಂದ ಮೇಯರ್ ಪಟ್ಟ ಇದೀಗ ಬಿಜೆಪಿಯ ಪಾಲಾಗಿದೆ. ಬಿಜೆಪಿಯ ರಿತುತಾವ್ಡೆ ಅವರು ಮುಂಬೈನ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. :1997ರಿಂದ ಸತತವಾಗಿ ಬಿಎಂಸಿಯಲ್ಲಿ ಅಧಿಕಾರ ಚಲಾಯಿಸುತ್ತಿದ್ದ ಶಿವಸೇನೆ (ಈಗಿನ ಯುಬಿಟಿ ಬಣ), ಕಾಲು ಶತಮಾನದ ನಂತರ ಮೊದಲ ಬಾರಿಗೆ ಮೇಯರ್ ಪಟ್ಟವನ್ನು ಕಳೆದುಕೊಂಡಿದೆ. ಘಾಟ್ಕೋಪರ್‌ನ ಎರಡು ಬಾರಿಯ ಕಾರ್ಪೊರೇಟರ್ […]

ಕನ್ನಡ ದುನಿಯಾ 7 Feb 2026 1:01 pm

ಸಂಭಾಜಿನಗರದಲ್ಲಿ ನಡುರಸ್ತೆಯಲ್ಲೇ ಮಹಿಳೆ ಮೇಲೆ 15 ನಿಮಿಷ ದೌರ್ಜನ್ಯ: ಎದೆನಡುಗಿಸುವ ಸಿಸಿಟಿವಿ ದೃಶ್ಯ ವೈರಲ್

ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಜನವರಿ 31ರ ಮುಂಜಾನೆ ಮಹಿಳೆಯೊಬ್ಬರ ಮೇಲೆ ನಡೆದ ದೌರ್ಜನ್ಯದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಮುಂಜಾನೆ ಸುಮಾರು 3:27ರ ಸಮಯದಲ್ಲಿ ನಿರ್ಜನ ರಸ್ತೆಯಲ್ಲಿ ಮಹಿಳೆ ನಡೆದುಕೊಂಡು ಹೋಗುತ್ತಿದ್ದಾಗ ಎದುರಾದ ವ್ಯಕ್ತಿಯೊಬ್ಬ ಆಕೆಯನ್ನು ತಡೆದು ಹಲ್ಲೆ ನಡೆಸಿದ್ದಾನೆ. ಸುಮಾರು 15 ನಿಮಿಷಗಳ ಕಾಲ ಈ ಭೀಕರ ಕೃತ್ಯ ನಡೆದಿದ್ದು, ಮಹಿಳೆ ತನ್ನನ್ನು ರಕ್ಷಿಸಿಕೊಳ್ಳಲು ಎಷ್ಟೇ ಪ್ರಯತ್ನಿಸಿದರೂ ಕಾಮುಕ ಆಕೆಯನ್ನು ಬಿಡದೆ ಹಿಂಸಿಸಿದ್ದಾನೆ. ವಿಡಿಯೋದಲ್ಲಿ ಕಂಡುಬರುವಂತೆ, ವ್ಯಕ್ತಿಯು ಮಹಿಳೆಯನ್ನು ಬಲವಂತವಾಗಿ ಎಳೆದಾಡಿ ಮೆಟ್ಟಿಲುಗಳ ಮೇಲೆ ಕುಳ್ಳಿರಿಸಿದ್ದಾನೆ. […]

ಕನ್ನಡ ದುನಿಯಾ 7 Feb 2026 1:00 pm

T20 World Cup 2026: ಟೂರ್ನಿ ಆರಂಭ; ಮೊದಲ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಸಾಮಾನ್ಯ ಗುರಿ ನೀಡಿದ ನೆದರ್ಲೆಂಡ್ಸ್

ಕೊಲಂಬೊ: ಪ್ರೇಮದಾಸ ಕ್ರೀಡಾಂಗಣದಲ್ಲಿ 2026ರ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಉದ್ಘಾಟನಾ ಪಂದ್ಯ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ನೆದರ್ಲೆಂಡ್ಸ್ ತಂಡಗಳು ಮುಖಾಮುಖಿಯಾಗಿವೆ. ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆರಿಸಿಕೊಂಡ ಪಾಕಿಸ್ತಾನ ಎದುರಾಳಿ ನೆದರ್ಲೆಂಡ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ನೆದರ್ಲೆಂಡ್ಸ್ 19.5 ಓವರ್‌ಗಳಲ್ಲಿ 147ಕ್ಕೆ ಆಲ್‌ಔಟ್ ಆಗಿ ಪಾಕಿಸ್ತಾನಕ್ಕೆ 148 ರನ್‌ಗಳ ಗುರಿಯನ್ನು ನೀಡಿದೆ. ನೆದರ್ಲೆಂಡ್ಸ್ ಪರ ಆರಂಭಿಕರಾಗಿ ಕಣಕ್ಕಿಳಿದ ಮೈಕೆಲ್ ಲೆವಿಟ್ 24, ಮ್ಯಾಕ್ಸ್ ಓಡೌಡ್ 5, ಬಾಸ್ ಡಿ […]

ಕನ್ನಡ ದುನಿಯಾ 7 Feb 2026 12:56 pm

ಸ್ಕೂಟಿಗೆ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಡಿಕ್ಕಿ: ಅಪಘಾತದಲ್ಲಿ ಮಹಿಳೆ ಸ್ಥಳದಲ್ಲೇ ಸಾವು

ಬೆಳಗಾವಿ: ಎಲೆಕ್ಟ್ರಿಕ್ ಸ್ಕೂಟಿ ಹಾಗೂ ಕಬ್ಬು ತುಂಬಿದ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟಿಯಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಸಂಗನಕೇರಿ ಬಳಿ ಈ ದುರಂತ ಸಂಭವಿಸಿದೆ. ವಡೇರಹಟ್ಟಿ ನಿವಾಸಿ ಅನಿತಾ ಡೂಗನವರ (26) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಮಹಿಳೆ ಅನಿತಾ ತನ್ನ ಗಂಡನ ಜೊತೆ ಲೋಳಸೂರ ಬಸ್ ನಿಲ್ದಾಣಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕಬ್ಬು ತುಂಬಿದ ಟ್ರ್ಯಾಕ್ಟರ್ ಸ್ಕೂಟಿಗೆ […]

ಕನ್ನಡ ದುನಿಯಾ 7 Feb 2026 12:49 pm