SENSEX
NIFTY
GOLD
USD/INR

Weather

20    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source

BREAKING : ಅಮೆರಿಕದಲ್ಲಿ ಭೀಕರ ಹಿಮ ಬಿರುಗಾಳಿ : 25 ಜನ ಸಾವು !

ಅಮೆರಿಕದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ (Winter Storm) ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಈ ನೈಸರ್ಗಿಕ ವಿಕೋಪಕ್ಕೆ ಜನರು ತತ್ತರಗೊಂಡಿದ್ದು, ಸಾವಿರಾರು ವಿಮಾನ ಹಾರಾಟ ರದ್ದುಗೊಳಿಸಲಾಗಿದೆ. ಅಲ್ಲದೇ ಭೀಕರ ಹಿಮಬಿರುಗಾಳಿಗೆ 25 ಜನರು ಮೃತಪಟ್ಟಿದ್ದಾರೆ. ಹೌದು. ಹಿಮಪಾತ ಮತ್ತು ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಟೆಕ್ಸಾಸ್, ಲೂಯಿಸಿಯಾನ ಮತ್ತು ನ್ಯೂಯಾರ್ಕ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಸಾವುಗಳು ಸಂಭವಿಸಿವೆ.ಭಾರಿ ಹಿಮಪಾತ ಮತ್ತು ಬಿರುಗಾಳಿಯಿಂದಾಗಿ ವಿದ್ಯುತ್ ತಂತಿಗಳು ತುಂಡಾಗಿದ್ದು, ಸುಮಾರು 10 ಲಕ್ಷಕ್ಕೂ ಹೆಚ್ಚು […]

ಕನ್ನಡ ದುನಿಯಾ 27 Jan 2026 8:57 am

ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಬಗ್ಗೆ ಬಜೆಟ್ ನಲ್ಲಿ ಸಿಎಂ ಘೋಷಣೆ: ಮಂಕಾಳ ವೈದ್ಯ

ಕಾರವಾರ: ಕಾರವಾರದಲ್ಲಿಯೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಣೆ ಮಾಡಲಿದ್ದಾರೆ ಎಂದು ಸಚಿವ ಮಂಕಾಳ ವೈದ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲಾಗುವುದು ಎಂದರು. ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದ ಹಣ ಜಮಾ ಮಾಡಲಾಗಿದೆ. ಇನ್ನೂ ಸ್ವಲ್ಪ ಬಾಕಿ ಇದೆ. ಐವರು ಬಿಜೆಪಿ ಶಾಸಕರು ಇದ್ದಾಗ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಘೋಷಣೆ ಮಾಡಿದ್ದು, ಈಗ ಯಾಕೆ ತುಟಿ ಬಿಚ್ಚಿಲ್ಲ. ಮಾಡಿದ ತಪ್ಪನ್ನು ಒಪ್ಪಿಕೊಂಡು […]

ಕನ್ನಡ ದುನಿಯಾ 27 Jan 2026 8:44 am

JOB ALERT : ಕೇಂದ್ರೀಯ ವಿದ್ಯಾಲಯಗಳಲ್ಲಿ 987  ಶಿಕ್ಷಕರ ನೇಮಕಾತಿ, ಕೈ ತುಂಬಾ ಸಂಬಳ

ದೇಶಾದ್ಯಂತ ಇರುವ ಕೇಂದ್ರೀಯ ವಿದ್ಯಾಲಯ ಸಂಘಟನೆಯಲ್ಲಿ (KVS) ವಿಶೇಷ ಶಿಕ್ಷಕರ ಹುದ್ದೆಗಳ ಭರ್ತಿಗೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿಸಿದೆ. 2026-27ನೇ ಶೈಕ್ಷಣಿಕ ಸಾಲಿಗಾಗಿ ಒಟ್ಟು 987 ವಿಶೇಷ ಶಿಕ್ಷಕರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಇದಕ್ಕೆ ಸಂಬಂಧಿಸಿದ ಅಧಿಕೃತ ಅಧಿಸೂಚನೆ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು KVS ಮೂಲಗಳು ತಿಳಿಸಿವೆ. ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಸೌಲಭ್ಯಗಳನ್ನು ಒದಗಿಸುವುದು ಈ ನೇಮಕಾತಿಯ ಮುಖ್ಯ ಉದ್ದೇಶವಾಗಿದೆ. ಹುದ್ದೆಗಳ ವಿವರ: ಒಟ್ಟು 987 ಹುದ್ದೆಗಳಲ್ಲಿ: ಕೇಂದ್ರ ಶಿಕ್ಷಣ ಸಚಿವಾಲಯವು […]

ಕನ್ನಡ ದುನಿಯಾ 27 Jan 2026 8:38 am

ವರದಕ್ಷಿಣೆ ಕಿರುಕುಳ ತಾಳದೆ ಗೃಹಿಣಿ ಆತ್ಮಹತ್ಯೆ: ಪತಿ, ಅತ್ತೆಗೆ ಜೈಲು ಶಿಕ್ಷೆ

ಶಿವಮೊಗ್ಗ: ವರದಕ್ಷಿಣೆ ಕಿರುಕುಳ ತಾಳದೆ ಗೃಹಿಣಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಸಂಬಂಧ ಪತಿ ಮತ್ತು ಅತ್ತೆಗೆ ಜೈಲು ಶಿಕ್ಷೆ ವಿಧಿಸಿ ಶಿವಮೊಗ್ಗದ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶ ಯಶವಂತ್ ಕುಮಾರ್ ತೀರ್ಪು ನೀಡಿದ್ದಾರೆ. ಗೋಪಿಶೆಟ್ಟಿಕೊಪ್ಪದ ನಿವಾಸಿ ಪೃಥ್ವಿರಾಜ್(33), ಅವರ ತಾಯಿ ಟಿ. ಪುಷ್ಪಾ(58) ಶಿಕ್ಷೆಗೊಳಗಾದವರು. ವರದಕ್ಷಿಣೆ ತರುವಂತೆ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಿದ್ದ ಕಾರಣ ಮನನೊಂದು 2022ರ ಜೂನ್ 16ರಂದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದರು. ತುಂಗಾನಗರ ಠಾಣೆಯಲ್ಲಿ ಮೃತರ […]

ಕನ್ನಡ ದುನಿಯಾ 27 Jan 2026 8:32 am

Soaked Raisins:ಪ್ರತಿದಿನ ನೆನೆಸಿದ ಒಣದ್ರಾಕ್ಷಿ ಸೇವಿಸುವುದರಿಂದಾಗುವ ಅದ್ಭುತ ಪ್ರಯೋಜನಗಳು

ಬೆಂಗಳೂರು: ನಾವು ದಿನನಿತ್ಯ ಬಳಸುವ ಡ್ರೈ ಫ್ರೂಟ್ಸ್‌ಗಳಲ್ಲಿ ಒಣದ್ರಾಕ್ಷಿಗೆ ವಿಶೇಷ ಸ್ಥಾನವಿದೆ. ಇದು ಕೇವಲ ಪಾಯಸ ಅಥವಾ ಸಿಹಿ ತಿಂಡಿಗಳ ರುಚಿ ಹೆಚ್ಚಿಸಲು ಮಾತ್ರವಲ್ಲ, ಆರೋಗ್ಯದ ದೃಷ್ಟಿಯಿಂದಲೂ ಒಂದು ‘ಸೂಪರ್ ಫುಡ್’ ಆಗಿದೆ. ಪ್ರಸಿದ್ಧ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಶುಭಂ ವತ್ಸಯ ಅವರ ಪ್ರಕಾರ, ನೆನೆಸಿದ ಒಣದ್ರಾಕ್ಷಿಗಳನ್ನು ಪ್ರತಿದಿನ ಸೇವಿಸುವುದರಿಂದ ದೇಹಕ್ಕೆ ಅಚ್ಚರಿಯ ಪ್ರಯೋಜನಗಳು ಲಭ್ಯವಾಗಲಿವೆ. ಪೋಷಕಾಂಶಗಳ ಗಣಿಒಣದ್ರಾಕ್ಷಿಗಳಲ್ಲಿ ದೇಹಕ್ಕೆ ಅಗತ್ಯವಿರುವ ಈ ಕೆಳಗಿನ ಪ್ರಮುಖ ಅಂಶಗಳು ಅಡಗಿವೆ: ಖನಿಜಾಂಶಗಳು: ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್. ಜೈವಿಕ ಅಂಶಗಳು: […]

ಕನ್ನಡ ದುನಿಯಾ 27 Jan 2026 8:24 am

BREAKING : ಬೆಂಗಳೂರಲ್ಲಿ ಮತ್ತೊಂದು ‘ATM’ದರೋಡೆ : ‘ಹಿಟಾಚಿ’ ಕಂಪನಿ ಸಿಬ್ಬಂದಿಯಿಂದಲೇ 1.37 ಕೋಟಿ ಲೂಟಿ.!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ (ATM) ದರೋಡೆಯಾಗಿದ್ದು, ಹಿಟಾಚಿ ಎಂಬ ಕಂಪನಿ ಸಿಬ್ಬಂದಿಗಳು ಸುಮಾರು 1.37 ಕೋಟಿ ಲೂಟಿ ಮಾಡಿದ್ದಾರೆ. ಹೌದು, ಇತ್ತೀಚೆಗೆ ರಾಜ್ಯದಲ್ಲಿ ಸಾಲು ಸಾಲು ಎಟಿಎಂ ದರೋಡೆ ಪ್ರಕರಣಗಳು ನಡೆಯುತ್ತಿದ್ದು, ಆತಂಕ ಮೂಡಿಸಿದೆ. ಆದರೆ ಎಟಿಎಂಗೆ ಹಣ ಹಾಕುವ ಕಂಪನಿ ಸಿಬ್ಬಂದಿಗಳೇ ಕೋಟಿ ಕೋಟಿ ಹಣ ಲೂಟಿ ಮಾಡಿದ್ದಾರೆ. ಜ.19 ರಂದು ನಡೆದಿದ್ದ ಎಟಿಎಂ ವಾಹನ ದರೋಡೆ ತಡವಾಗಿ ಬೆಳಕಿಗೆ ಬಂದಿದೆ. ಎಟಿಎಂಗೆ ಹಣ ಹಾಕಲು ಅಧಿಕಾರಿಗಳು ಹೇಳುತ್ತಾರೆ. ಎಟಿಎಂಗಳಿಗೆ ಹಣ ಡೆಪಾಸಿಟ್ […]

ಕನ್ನಡ ದುನಿಯಾ 27 Jan 2026 8:20 am

ಕ್ರಿಕೆಟ್ ವಿಚಾರಕ್ಕೆ ಗಲಾಟೆ: ಯುವಕನ ಕೊಲೆಯಲ್ಲಿ ಅಂತ್ಯ

ಬೆಂಗಳೂರು: ಕ್ರಿಕೆಟ್ ವಿಚಾರಕ್ಕೆ ಸಂಬಂಧಿಸಿದ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯವಾಗಿದೆ. ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವೀರಸಂದ್ರ ನಿವಾಸಿ ಪ್ರಶಾಂತ್(35) ಕೊಲೆಯಾದ ಯುವಕ. ಆರೋಪಿ ವಿಜ್ಞಾನ ನಗರ ನಿವಾಸಿ ರೋಷನ್ ಹೆಗಡೆಯನ್ನು ಪೊಲೀಸ್ ಸರು ಬಂಧಿಸಿದ್ದಾರೆ. ಜನವರಿ 25ರಂದು ಕಮ್ಮಸಂದ್ರದ ಕ್ರಿಕೆಟ್ ಆಟದ ಮೈದಾನದಲ್ಲಿ ಕೃತ್ಯ ನಡೆದಿದೆ. ಬ್ರಹ್ಮಾವರ ಮೂಲದ ರೋಷನ್ ಹೆಗಡೆ ದೊಮ್ಮಲೂರಿನ ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ವೀರಸಂದ್ರ ನಿವಾಸಿಯಾಗಿರುವ ಪ್ರಶಾಂತ್ ಖಾಸಗಿ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಜನವರಿ 25ರಂದು ಕಮ್ಮಸಂದ್ರದಲ್ಲಿ ಕ್ರಿಕೆಟ್ […]

ಕನ್ನಡ ದುನಿಯಾ 27 Jan 2026 8:02 am

ಗಣರಾಜ್ಯೋತ್ಸವಕ್ಕೆ ‘BSNL’ಆಫರ್ : ಒಂದೇ ರೀಚಾರ್ಜ್’ಗೆ 1 ವರ್ಷದ ವ್ಯಾಲಿಡಿಟಿ.. ದಿನಕ್ಕೆ 2.6GB ಡೇಟಾ, ಅನ್ ಲಿಮಿಟೆಡ್ ಕರೆ.!

ಜನವರಿ 26, 2026 ರಂದು ಭಾರತದಲ್ಲಿ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಡಗರದಿಂದ ಆಚರಿಸಲಾಯಿತು. ದೇಶಾದ್ಯಂತ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ಜನರು ತಮ್ಮ ದೇಶಭಕ್ತಿಯನ್ನು ಮೆರೆದಿದ್ದಾರೆ. ಭಾರತದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಅನೇಕ ಸಂಸ್ಥೆಗಳು ವಿಶೇಷ ಕೊಡುಗೆಗಳನ್ನು ನೀಡುತ್ತಿರುತ್ತವೆ. ಈ ಕ್ರಮದಲ್ಲಿ ಭಾರತ ಸರ್ಕಾರದ ಸಾರ್ವಜನಿಕ ವಲಯದ ಟೆಲಿಕಾಂ ಸಂಸ್ಥೆಯಾದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ‘ರಿಪಬ್ಲಿಕ್ ಡೇ ಆಫರ್’ ಘೋಷಿಸಿದೆ. ಕೇವಲ ಒಂದು ರೀಚಾರ್ಜ್ ಮೂಲಕ 365 ದಿನಗಳ ವ್ಯಾಲಿಡಿಟಿಯನ್ನು ಕಲ್ಪಿಸುತ್ತಿದೆ. ಈ ಪ್ಲಾನ್ ಬಗ್ಗೆ ಹೆಚ್ಚಿನ […]

ಕನ್ನಡ ದುನಿಯಾ 27 Jan 2026 8:01 am

Longevity Tips : ರಾತ್ರಿ ವೇಳೆ ಈ 5 ನಿಯಮಗಳನ್ನು ಪಾಲಿಸಿದರೆ ನಿಮ್ಮ ಆಯುಷ್ಯ ಹೆಚ್ಚಾಗುತ್ತದೆ.!

ನಿದ್ದೆ ಮಾಡುವುದು ಕೇವಲ ವಿಶ್ರಾಂತಿ ಮಾತ್ರವಲ್ಲ, ಅದು ದೇಹವನ್ನು ದುರಸ್ತಿ ಮಾಡುವ ಸಮಯ. ಹೌದು. ರಾತ್ರಿ ವೇಳೆ ಕನಿಷ್ಠ 7 ರಿಂದ 8 ಗಂಟೆಗಳ ಕಾಲ ನಿದ್ದೆ ಮಾಡುವವರಲ್ಲಿ ಮಧುಮೇಹ, ಬೊಜ್ಜು ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಬಹಳ ಕಡಿಮೆ ಇರುತ್ತದೆ ಎಂದು ಸಂಶೋಧನೆಗಳು ತಿಳಿಸಿವೆ. ನಿದ್ರಾಹೀನತೆಯ ಸಮಸ್ಯೆಯಿಂದ ಬಳಲುತ್ತಿರುವವರು ತಮ್ಮ ದಿನಚರಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ಸುಖ ನಿದ್ರೆ ಪಡೆಯಬಹುದು. ಜೀರ್ಣಕ್ರಿಯೆಯಿಂದ ಹಿಡಿದು ಮೆದುಳಿನ ಕಾರ್ಯನಿರ್ವಹಣೆಯವರೆಗೆ ನಿದ್ದೆಯ ಪ್ರಭಾವ ಮತ್ತು ನಿದ್ದೆಯನ್ನು ಸುಧಾರಿಸುವ […]

ಕನ್ನಡ ದುನಿಯಾ 27 Jan 2026 7:47 am

ಭಾರತೀಯನಾಗಿರುವುದಕ್ಕೆ ಹೆಮ್ಮೆಯಿದೆ: ನಟ ಶಾರುಖ್ ಖಾನ್

77 ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ಹಂಚಿಕೊಂಡಿದ್ದು, ಭಾರತವನ್ನು “ವಿವಿಧತೆಯಲ್ಲಿ ಏಕತೆಯ ಭೂಮಿ” ಎಂದು ಹೇಳಿದ್ದಾರೆ. “ಭಾರತೀಯರಾಗಿರುವುದಕ್ಕೆ ಹೆಮ್ಮೆಪಡುತ್ತೇನೆ, ನಮ್ಮ ದೇಶವು ವೈವಿಧ್ಯತೆಯಲ್ಲಿ ಶಕ್ತಿ ಮತ್ತು ಏಕತೆ ಇದೆ ಎಂದು ನಮಗೆ ಕಲಿಸುತ್ತದೆ. ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು. ಜೈ ಹಿಂದ್” ಎಂದು ಶಾರುಖ್ ಭಾರತೀಯರಿಗೆ ಶುಭಾಶಯಗಳನ್ನು ಕೋರಿದ್ದಾರೆ. ನಟ ಅಕ್ಷಯ್ ಕುಮಾರ್ ಅವರು ಭಾರತದ ನಾಗರಿಕರಿಗೆ ತಮ್ಮ ಗಣರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ್ದು, ಹೆಮ್ಮೆಯಿಂದ ಹೇಳಿ, ನಾವು ಭಾರತೀಯರು! ಗಣರಾಜ್ಯೋತ್ಸವದ […]

ಕನ್ನಡ ದುನಿಯಾ 27 Jan 2026 7:43 am

BIG NEWS : ರಾಜ್ಯದ ಬಿ-ಖಾತಾ ನಿವೇಶನ , ಕಟ್ಟಡ, ಫ್ಲಾಟ್ ಗಳಿಗೆ ಎ-ಖಾತಾ ವಿತರಣೆ : ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ರಾಜ್ಯದ ಬಿ-ಖಾತಾ ನಿವೇಶನ , ಕಟ್ಟಡ, ಫ್ಲಾಟ್ ಗಳಿಗೆ ಎ-ಖಾತಾ ವಿತರಣೆ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ರಚಿತವಾಗಿರುವ ಅನಧಿಕೃತ ಬಡಾವಣೆಗಳಲ್ಲಿನ ಸ್ವತ್ತುಗಳನ್ನು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಉಪಬಂಧಗಳ ವ್ಯಾಪ್ತಿಗೆ ತಂದು ನಿಯಂತ್ರಿಸುವ ಕುರಿತು ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯ ಇವರ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯು ಬಿ-ಖಾತಾ ಹೊಂದಿರುವ ಸ್ವತ್ತುಗಳಿಗೆ ಎ-ಖಾತಾ ನೀಡಲು ಈ ಕೆಳಕಂಡ ಶಿಫಾರಸ್ಸುಗಳನ್ನು ಮಾಡಿರುತ್ತದೆ. ರಾಜ್ಯದ ನಗರ […]

ಕನ್ನಡ ದುನಿಯಾ 27 Jan 2026 7:36 am

BREAKING: ಕೆಎಸ್ಆರ್ಟಿಸಿ ಬಸ್ ಡಿಕ್ಕಿ, ಬೈಕ್ ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವು

ಮೈಸೂರು: ಅಪಘಾತದಲ್ಲಿ ಬೈಕ್ ನಲ್ಲಿ ಸಂಚರಿಸುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಯಶೋಧಪುರ ಗೇಟ್ ಬಳಿ ಅಪಘಾತ ಸಂಭವಿಸಿದೆ. ಮುಂದೆ ಹೋಗುತ್ತಿದ್ದ ಬೈಕ್ ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇಬ್ಬರಿಗೆ ಗಾಯಗಳಾಗಿವೆ. ನಾಗಮಂಗಲ ಗ್ರಾಮದ ನಿವಾಸಿ ಅಶ್ವಿನಿ(36) ಸ್ಥಳದಲ್ಲೇ ಮೃತಪಟ್ಟ ಮಹಿಳೆ ಎಂದು ಹೇಳಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

ಕನ್ನಡ ದುನಿಯಾ 27 Jan 2026 7:27 am

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸೋಮವಾರ ಜಿಟಿಜಿಟಿ ಮಳೆಯಾಗಿದ್ದು, ಕೆಲವು ಕಡೆ ಮೋಡ ಕವಿದ ವಾತಾವರಣ ಕಂಡುಬಂದಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮಂಡ್ಯ, ಕೊಡಗು, ಚಾಮರಾಜನಗರ, ಮೈಸೂರು ವ್ಯಾಪ್ತಿಯ ಕೆಲವು ಪ್ರದೇಶಗಳಲ್ಲಿ ಮುಂದಿನ ಎರಡು ದಿನ ತುಂತುರು ಮಳೆಯಾಗಲಿದೆ. ಕೆಲವು ಜಿಲ್ಲೆಗಳಲ್ಲಿ ಜನವರಿ 28ರ ವರೆಗೆ ಮೋಡ ಕವಿದ ವಾತಾವರಣ ಇರಲಿದ್ದು, ಒಂದೆರಡು ದಿನದ […]

ಕನ್ನಡ ದುನಿಯಾ 27 Jan 2026 7:17 am

ಭದ್ರಾ ಮೇಲ್ದಂಡೆ ಯೋಜನೆ ಶೀಘ್ರವೇ ಪೂರ್ಣ, ಮಾರ್ಚ್ ಅಂತ್ಯದೊಳಗೆ ನೀರು: ಸಚಿವ ಡಿ. ಸುಧಾಕರ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಜೀವನಾಡಿಯಾಗಿರುವ ಭದ್ರಾ ಮೇಲ್ದಂಡೆ ಯೋಜನೆಯಡಿ ಈ ವರ್ಷದ ಫೆಬ್ರವರಿ ಅಥವಾ ಮಾರ್ಚ್ ಅಂತ್ಯದೊಳಗೆ ಗೋನೂರುವರೆಗೆ ಪ್ರಾಯೋಗಿಕವಾಗಿ ನೀರು ಹರಿಸುವ ಗುರಿ ಹೊಂದಲಾಗಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ತಿಳಿಸಿದರು. ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಸೋಮವಾರ ಆಯೋಜಿಸಲಾಗಿದ್ದ 77ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು. ಯೋಜನೆಯ ಬಾಕಿ ಕಾಮಗಾರಿಗಳಿಗಾಗಿ 200 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು […]

ಕನ್ನಡ ದುನಿಯಾ 27 Jan 2026 6:53 am

BIG NEWS: ಸಾಯುವವರೆಗೆ ಜೀವಾವಧಿ ಶಿಕ್ಷೆ ವಿಧಿಸುವ ಅಧಿಕಾರ ಸೆಷನ್ಸ್ ಕೋರ್ಟ್ ಗಳಿಗೆ ಇಲ್ಲ: ಹೈಕೋರ್ಟ್ ಸ್ಪಷ್ಟನೆ

ಬೆಂಗಳೂರು: ಸಾಯುವವರೆಗೆ ಶಿಕ್ಷೆ ವಿಧಿಸುವ ಅಧಿಕಾರವನ್ನು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಗಳು ಮಾತ್ರ ಹೊಂದಿವೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಜೀವಾವಧಿ ಜೈಲು ಶಿಕ್ಷೆ ವಿಧಿಸಿದ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಆದೇಶ ರದ್ದು ಕೋರಿ 28 ವರ್ಷದ ರುದ್ರೇಶ್ ಎಂಬಾತ ಹೈಕೋರ್ಟ್ ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದರು. ಇದನ್ನು ಭಾಗಶಃ ಪುರಸ್ಕರಿಸಿದ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ನೇತೃತ್ವದ ವಿಭಾಗೀಯ ಪೀಠ, ರುದ್ರೇಶ್ ಗೆ ಸಾಯುವವರೆಗೂ ಜೈಲು ಶಿಕ್ಷೆ ವಿಧಿಸಿ ಸೆಷನ್ಸ್ ಕೋರ್ಟ್ ಆದೇಶಿಸಿದೆ. ಯಾವುದೇ ವಿನಾಯಿತಿ ಇಲ್ಲದೆ […]

ಕನ್ನಡ ದುನಿಯಾ 27 Jan 2026 5:54 am

BREAKING: ರಣಜಿ ಟ್ರೋಫಿ ಮಧ್ಯದಲ್ಲೇ ನಾಯಕನ ಬದಲಾಯಿಸಿದ ಕರ್ನಾಟಕ ತಂಡ: ಪಂಜಾಬ್ ಪಂದ್ಯಕ್ಕೆ ಮರಳಿದ ಕೆ.ಎಲ್. ರಾಹುಲ್, ಪ್ರಸಿದ್ಧ್ ಕೃಷ್ಣ

ಬೆಂಗಳೂರು: 2025–26ರ ರಣಜಿ ಟ್ರೋಫಿ ಅಭಿಯಾನದಲ್ಲಿ ನಿರ್ಣಾಯಕ ಹಂತಕ್ಕೆ ಮುಂಚಿತವಾಗಿ ಕರ್ನಾಟಕ ನಾಯಕತ್ವ ಬದಲಾವಣೆ ಮಾಡಿದೆ. ಪಂಜಾಬ್ ವಿರುದ್ಧದ ಮುಂಬರುವ ಪಂದ್ಯಕ್ಕೆ ದೇವದತ್ ಪಡಿಕ್ಕಲ್ ಅವರನ್ನು ನಾಯಕನನ್ನಾಗಿ ನೇಮಿಸಲಾಗಿದೆ. ಫೆಬ್ರವರಿ 1 ರಿಂದ ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ನಾಕೌಟ್ ಹಂತಕ್ಕೆ ಹೋಗುವ ಸ್ಪರ್ಧೆಯಲ್ಲಿ ಜೀವಂತವಾಗಿರಲು ಕರ್ನಾಟಕಕ್ಕೆ ಗೆಲುವು ಅಗತ್ಯವಾಗಿದೆ. ಮಯಾಂಕ್ ಅಗರ್ವಾಲ್ ಅವರಿಂದ ಪಡಿಕ್ಕಲ್ ಈ ಸ್ಥಾನವನ್ನು ವಹಿಸಿಕೊಂಡಿದ್ದಾರೆ, ಅವರು ಸಂಪೂರ್ಣವಾಗಿ ಬ್ಯಾಟ್ಸ್‌ಮನ್ ಆಗಿ ತಂಡದಲ್ಲಿ ಮುಂದುವರಿಯುತ್ತಾರೆ. ವಿಜಯ್ ಹಜಾರೆ ಟ್ರೋಫಿಯಲ್ಲಿ […]

ಕನ್ನಡ ದುನಿಯಾ 27 Jan 2026 5:42 am

BIG NEWS: ವಾರಕ್ಕೆ 5 ದಿನ ಮಾತ್ರ ಕೆಲಸಕ್ಕೆ ಆಗ್ರಹಿಸಿ ಇಂದು ಬ್ಯಾಂಕ್ ನೌಕರರ ಮುಷ್ಕರ

ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಎದುರಿಗೆ ಒತ್ತಾಯಿಸಿ ಜನವರಿ 27ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಷೇರುಪೇಟೆ, ವಿದೇಶಿ ವಿನಿಮಯ ವ್ಯವಹಾರಗಳು ವಾರದಲ್ಲಿ ಐದು ದಿನ ನಡೆಯುತ್ತದೆ. ಹೀಗಾಗಿ ಬ್ಯಾಂಕ್ ಗಳಿಗೆ 5 ಕೆಲಸದ ದಿನಗಳು ಇರಬೇಕು ಎನ್ನುವ ಬೇಡಿಕೆ ಮೊದಲಿನಿಂದಲೂ ಇದೆ. ಐದು ದಿನದ ಕೆಲಸ ದಿನಗಳನ್ನು ಜಾರಿಗೆ ತರುವುದಾಗಿ […]

ಕನ್ನಡ ದುನಿಯಾ 27 Jan 2026 5:31 am

WPL 2026: ಮುಂಬೈ ವಿರುದ್ಧ ಸೋತ ಆರ್‌ಸಿಬಿ; ಟೂರ್ನಿಯಲ್ಲಿದು ಎರಡನೇ ಸೋಲು

ವಡೋದರಾದ ಕೊಟಂಬಿಯ ಬಿಸಿಎ ಸ್ಟೇಡಿಯಂನಲ್ಲಿ ನಡೆದ ವನಿತೆಯರ ಪ್ರೀಮಿಯರ್ ಲೀಗ್ 2026ರ ಲೀಗ್ ಹಂತದ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಮುಂಬೈ ಇಂಡಿಯನ್ಸ್ ತಂಡ 15 ರನ್‌ಗಳ ಗೆಲುವನ್ನು ದಾಖಲಿಸಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆರಿಸಿಕೊಂಡು ಮುಂಬೈ ಇಂಡಿಯನ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ನ್ಯಾಟ್ ಸೀವರ್ ಬ್ರಂಟ್ ಶತಕದ ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 199 ರನ್ […]

ಕನ್ನಡ ದುನಿಯಾ 26 Jan 2026 11:19 pm

ಬೇಡ್ತಿ ವರದಾ ನದಿ ಜೋಡಣೆಗೆ ಮನೆ ಮನೆಗೂ ಜಾಗೃತಿ: ಕೇಂದ್ರಕ್ಕೆ ನಿಯೋಗ: ಸಂಸದ ಬೊಮ್ಮಾಯಿ ಮಾಹಿತಿ

ಹಾವೇರಿ: ಬೇಡ್ತಿ ವರದಾ ನದಿ ಜೋಡಣೆಯ ಅಗತ್ಯತೆ ಕುರಿತು ಹಾವೇರಿಯ ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿಗಳ ನೇತೃತ್ವದಲ್ಲಿ ನಿಯೋಗ ಕರೆದೊಯ್ದು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ಮಾಡುವುದು ಹಾಗೂ ಕೇಂದ್ರ ಜಲಶಕ್ತಿ ಸಚಿವರು ಹಾಗೂ ರಾಜ್ಯವನ್ನು ಪ್ರತಿನಿಧಿಸುವ ಸಚಿವರನ್ನು ಭೇಟಿ ಮಾಡಿ ಮನವರಿಕೆ ಮಾಡಿಕೊಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಸಂಸದ ಬೊಮ್ಮಾಯಿ, ಕೇಂದ್ರ ಸರ್ಕಾರಕ್ಕೆ ಮತ್ತು ರಾಜ್ಯಕ್ಕೂ ನಿಯೋಗ ತೆಗೆದುಕೊಂಡು ಹೋಗಿ ಬೇಡ್ತಿ-ವರದಾ ನದಿ ಜೋಡಣೆ […]

ಕನ್ನಡ ದುನಿಯಾ 26 Jan 2026 9:55 pm

ಯುವ ಜನರು ಮತ್ತು ಭಕ್ತಿ: ಮೋದಿ ಮೆಚ್ಚಿದ ಭಜನ್ ಕ್ಲಬ್ಬಿಂಗ್!

ಯುವಕರ ಭಕ್ತಿ ಹಾದಿಗೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ಜೆನ್‌ ಜಿ ಭಜನ್‌ ಕ್ಲಬ್‌ ಕುರಿತು ಮೋದಿ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ನ 130ನೇ ಸಂಚಿಕೆಯಲ್ಲಿ ಮಾತನಾಡಿದ್ದಾರೆ. ನರೇಂದ್ರ ಮೋದಿ, “ಆಧ್ಯಾತ್ಮಿಕತೆ ಮತ್ತು ಸಂಪ್ರದಾಯವನ್ನು ಆಧುನಿಕ ಸಂಸ್ಕೃತಿಯೊಂದಿಗೆ ಸುಂದರವಾಗಿ ಸಮ್ಮಿಳಿತಗೊಳಿಸಲಾಗಿದೆ” ಎಂದು ಶ್ಲಾಘಿಸಿದರು. ಮನ್ ಕಿ ಬಾತ್‌ನಲ್ಲಿ ಮೋದಿ, “ಯುವ ಭಾರತ ಭಜನ್ ಕ್ಲಬ್ಬಿಂಗ್ ಎಂಬುದನ್ನು ಇಷ್ಟಪಟ್ಟಿರುವುದು, ಅಪ್ಪಿಕೊಳ್ಳುತ್ತಿರುವುದು ಭಕ್ತಿ, ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ಆಧುನಿಕ ಸಂವೇದನೆಗಳ ಅರ್ಥಪೂರ್ಣ ಸಮ್ಮಿಲನವಾಗಿದೆ” ಎಂದು […]

ಕನ್ನಡ ದುನಿಯಾ 26 Jan 2026 9:48 pm

Big Update: ಶಾಲಾ ಪಠ್ಯ ಸೇರಲಿದೆ ಬಿಟ್ಕಾಯಿನ್, ಡಿಜಿಟಲ್ ಶಿಕ್ಷಣ ಅಗತ್ಯ, ಅನಿವಾರ್ಯ

ಬಿಟ್ಕಾಯಿನ್, ಕ್ರಿಪ್ಟೋ ಕರೆನ್ಸಿ ಸೇರಿದಂತೆ ವಿವಿಧ ವಿಚಾರಗಳು ಶಾಲಾ ಪಠ್ಯದಲ್ಲಿ ಸೇರಲಿವೆ. ಹೌದು ಡಿಜಿಟಲ್ ಶಿಕ್ಷಣ ಇಂದಿನ ಅಗತ್ಯ ಮತ್ತು ಅನಿವಾರ್ಯವಾಗಿದೆ. ಆದ್ದರಿಂದ ಶಾಲಾ ಹಂತದಲ್ಲಿಯೇ ಅವುಗಳ ಕುರಿತು ಮಾಹಿತಿ ನೀಡಲು ಸರ್ಕಾರ ತೀರ್ಮಾನ ಮಾಡಿದೆ. ಬಿಟ್ಕಾಯಿನ್ ಕುರಿತ ಶಿಕ್ಷಣವನ್ನು 2027ರ ವೇಳೆಗೆ ನ್ಯೂಜಿಲೆಂಡ್‌ನ ಶಾಲೆಗಳಲ್ಲಿ ಬೋಧಿಸಲಾಗುತ್ತದೆ. ಬಿಟ್ಕಾಯಿನ್, ಕ್ರಿಪ್ಟೊ ಕರೆನ್ಸಿ ಮತ್ತು ಬ್ಲಾಕ್ಚೈನ್ ಪಾಠಗಳನ್ನು ಡಿಜಿಟಲ್ ಕರೆನ್ಸಿ ಪಾಠಗಳು ಎಂಬ ಯೋಜನೆಯಡಿ ಶಾಲಾ ಪಠ್ಯಕ್ಕೆ ಸೇರಿಸಲಾಗುತ್ತದೆ. ಪ್ರಾಯೋಗಿಕವಾಗಿ 2026ರಲ್ಲಿ ಇದನ್ನು ಶಾಲೆಗಳಲ್ಲಿ ಪ್ರಾರಂಭಿಸಲಾಗುತ್ತದೆ. 2027ರ ವೇಳೆಗೆ […]

ಕನ್ನಡ ದುನಿಯಾ 26 Jan 2026 8:23 pm

ಟೂರಿಸ್ಟ್ ಬೋಟ್ ಮುಳುಗಿ ಇಬ್ಬರು ಸಾವು ಪ್ರಕರಣ: ತನಿಖೆಗೆ ಸೂಚಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್ ಬೋಟ್ ಮುಳುಗಿ ಇಬ್ಬರು ಪ್ರವಾಸಿಗರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತನಿಖೆಗೆ ಸೂಚಿಸಿದ್ದಾರೆ. ಉಡುಪಿ ಜಿಲ್ಲೆಯ ಮಲ್ಪೆ ಕೋಡಿಬೆಂಗ್ರೆಯಲ್ಲಿ ಪ್ರವಾಸಿಗರ ಬೋಟ್ ಮುಳುಗಿ ಇಬ್ಬರು ಮೃತಪಟ್ಟಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಘಟನೆಯ ಬಗ್ಗೆ ತೀವ್ರ ಸಂತಾಪ ಸೂಚಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಪ್ರವಾಸಿಗರ ಬೋಟ್ ಮುಳುಗಿ ಸಾವನ್ನಪ್ಪಿರುವ ಘಟನೆ ಆಘಾತ ತಂದಿದೆ ಎಂದಿದ್ದಾರೆ. ಘಟನೆಯಲ್ಲಿ ಗಾಯಗೊಂಡವರು […]

ಕನ್ನಡ ದುನಿಯಾ 26 Jan 2026 7:47 pm

BREAKING: ಹಾಡಹಗಲೇ ಕಂಟ್ರಿ ಪಿಸ್ತೂಲ್ ತೋರಿಸಿ ಚಿನ್ನದಂಗಡಿ ದರೋಡೆ: ಓರ್ವನ ಕಾಲಿಗೆ ಗುಂಡೇಟು ಹೊಡೆದು ಕಳ್ಳರ ಗ್ಯಾಂಗ್ ಎಸ್ಕೇಪ್

ವಿಜಯಪುರ: ಹಾಡಹಗಲೇ ಮೈಸೂರಿನ ಹುಣಸೂರಿನಲ್ಲಿ ಚಿನ್ನದಂಗಡಿ ದರೋಡೆ ಮಾಡಿದ್ದ ಪ್ರಕರಣ ಮಾಸುವ ಮುನ್ನವೇ ಇದೀಗ ಅಂತದ್ದೇ ಮತ್ತೊಂದು ಘಟನೆ ವಿಜಯಪುರದಲ್ಲಿ ನಡೆದಿದೆ. ಹಾಡಹಗಲೇ ಚಿನ್ನದಂಗಡಿಗೆ ನುಗ್ಗಿದ ದರೋಡೆಕೋರರ ಗ್ಯಾಂಗ್ ಕಂಟ್ರಿ ಪಿಸ್ತೂಲ್ ತೋರಿಸಿ, ಗಾಳಿಯಲ್ಲಿ ಗುಂಡು ಹಾರಿಸಿ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ಮಹಾರುದ್ರ ಕಂಚಗಾರ ಎಂಬುವವರ ಚಿನ್ನದಂಗಡಿಯಲ್ಲಿ ಈ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಚಿನ್ನದಂಗಡಿಗೆ ಹೆಲ್ಮೆಟ್ ಧರಿಸಿ ಬಂದಿರುವ ಇಬ್ಬರು ದರೋಡೆಕೋರರು ಏಕಾಏಕಿ ಪಿಸ್ತೂಲ್ […]

ಕನ್ನಡ ದುನಿಯಾ 26 Jan 2026 6:36 pm

BREAKING: ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ಕೊನೆಗೂ ರಾಜೀವ್ ಗೌಡ ಅರೆಸ್ಟ್

ಚಿಕ್ಕಬಳ್ಳಾಪುರ: ನಗರಸಭೆ ಪೌರಾಯುಕ್ತಗೆ ನಿಂದನೆ, ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು ಕೊನೆಗೂ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ 12 ದಿನಗಳಿಂದ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು ಕೇರಳದಲ್ಲಿ ಪೊಲೀಸರು ಬಂಧಿಸಿದ್ದಾರೆ. ಶಿಡ್ಲಘಟ್ಟ ಪೊಲೀಸರು ಕೇರಳದಲ್ಲಿ ರಾಜೀವ್ ಗೌಡನನ್ನು ಬಂಧಿಸಿ ಚಿಕ್ಕಬಳ್ಳಾಪುರಕ್ಕೆ ಕರೆತರುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಳೆದ 12 ದಿನಗಳಿಂದ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು ಕೇರಳದಲ್ಲಿ ಪೊಲೀಸರು ಬಂಧಿಸಿದ್ದಾರೆ. ಶಿಡ್ಲಘಟ್ಟ ಪೊಲೀಸರು ಕೇರಳದ ಗಡಿಯಲ್ಲಿ ರಾಜೀವ್ ಗೌಡನನ್ನು ಬಂಧಿಸಿ […]

ಕನ್ನಡ ದುನಿಯಾ 26 Jan 2026 6:12 pm

BIG NEWS: ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು ಅಡ್ಡಿಪಡಿಸಿದ್ದ ವಿಚಾರವಾಗಿ ಲೋಕಭವನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರುಗೆ ವರದಿ ರವಾನಿಸಿದೆ. ರಾಜ್ಯ ಕಾಂಗ್ರೆಸ್ ಸರ್ಕಾಅರ ಕರೆದಿರುವ ವಿಧಾನಮಂದಲ ಜಂಟಿ ಅಧಿವೇಶನದ ಮೊದಲ ದಿನ ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಬೇಕಿತ್ತು. ಆದರೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ರಾಜ್ಯ ಕಾಂಗ್ರೆಸ್ ಸರ್ಕಾರ ಬರೆದುಕೊಟ್ಟಿದ್ದ ಭಾಷಣ ಮಾಡಲು ನಿರಾಕರಿಸಿ, ಮೂರೇ ಸಾಲುಗಳಲ್ಲಿ ಭಾಷಣ ಮುಗಿಸಿ […]

ಕನ್ನಡ ದುನಿಯಾ 26 Jan 2026 5:57 pm

AI ಮೊರೆ ಹೋದ ಚಿಕ್ಕಮಗಳೂರು ಜಿಲ್ಲಾ ಪೊಲೀಸರು: ವಿಶೇಷತೆಗಳು

ಕೃತಕ ಬುದ್ಧಿಮತ್ತೆ (ಎಐ) ಕುರಿತು ಎಲ್ಲಾ ಕಡೆ ಮಾತುಗಳು. ಈಗ ಪೊಲೀಸರು ಎಐ ಬಳಕೆ ಮಾಡಲು ಆರಂಭಿಸಿದ್ದಾರೆ. ಅದರಲ್ಲೂ ಕರ್ನಾಟಕದಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಚಿಕ್ಕಮಗಳೂರು ಪೊಲೀಸರು ಎಐ ಬಳಕೆ ಮಾಡುತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಘಟಕವು AI-ಚಾಲಿತ ಕಮಾಂಡ್ ಕಂಟ್ರೋಲ್ ರೂಂ (ITMS) ಮೂಲಕ ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸಿದೆ. ಈ ಕಂಟ್ರೋಲ್ ರೂಂ ಹೇಗೆ ಕಾರ್ಯ ನಿರ್ವಹಣೆ ಮಾಡಲಿದೆ? ಎಂದು ಸಹ ವಿವರಣೆ ನೀಡಲಾಗಿದೆ. ಚಿಕ್ಕಮಗಳೂರು ನಗರದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಂಚಾರ […]

ಕನ್ನಡ ದುನಿಯಾ 26 Jan 2026 5:42 pm

ಗಣರಾಜ್ಯೋತ್ಸವದಂದೇ ಡಸ್ಟರ್ ಪರ್ವ ಆರಂಭ: ರೆನಾಲ್ಟ್‌ನಿಂದ ಹೊಸ ಅವತಾರದ ಎಸ್‌ಯುವಿ ಇಂದು ಅನಾವರಣ

ನವದೆಹಲಿ: ಭಾರತೀಯ ಎಸ್‌ಯುವಿ ಮಾರುಕಟ್ಟೆಯಲ್ಲಿ ಕ್ರಾಂತಿ ಮಾಡಿದ್ದ ‘ರೆನಾಲ್ಟ್ ಡಸ್ಟರ್’ (Renault Duster) ಈಗ ಹೊಸ ಅವತಾರದಲ್ಲಿ ಮರಳಿ ಬರುತ್ತಿದೆ. ಇಂದು ಅಂದರೆ ಜನವರಿ 26, 2026 ರಂದು ರೆನಾಲ್ಟ್ ಸಂಸ್ಥೆಯು ತನ್ನ ಮೂರನೇ ತಲೆಮಾರಿನ ಡಸ್ಟರ್ ಎಸ್‌ಯುವಿಯನ್ನು ಭಾರತದಲ್ಲಿ ಅಧಿಕೃತವಾಗಿ ಅನಾವರಣಗೊಳಿಸುತ್ತಿದೆ. ಆಧುನಿಕ ವಿನ್ಯಾಸ ಮತ್ತು ಸುಧಾರಿತ ತಂತ್ರಜ್ಞಾನದೊಂದಿಗೆ ಬರುತ್ತಿರುವ ಈ ಕಾರು ಮಧ್ಯಮ ಗಾತ್ರದ ಎಸ್‌ಯುವಿ ವಿಭಾಗದಲ್ಲಿ ಮತ್ತೆ ಸಂಚಲನ ಮೂಡಿಸುವ ನಿರೀಕ್ಷೆಯಿದೆ. ಹೊಸ ವೇದಿಕೆ, ಆಧುನಿಕ ವಿನ್ಯಾಸ ಹೊಸ ಡಸ್ಟರ್ ಅನ್ನು ಜಾಗತಿಕ […]

ಕನ್ನಡ ದುನಿಯಾ 26 Jan 2026 5:29 pm

ಬಿಗ್ ಬಾಸ್ ವಿನ್ನರ್ ಗಿಲ್ಲಿ ನೋಡಲು ವೇದಿಕೆಗೆ ನುಗ್ಗಿದ ಅಭಿಮಾನಿಗಳು: ಫ್ಯಾನ್ಸ್ ನಿಯಂತ್ರಿಸಲು ಪೊಲೀಸರ ಹರಸಾಹಸ

ರಾಮನಗರ: ಬಿಗ್ ಬಾಸ್ ಸೀಜನ್ -12ರ ವಿನ್ನರ್ ಗಿಲ್ಲಿ ನಟನ ಕ್ರೇಜ್ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗಿಲ್ಲಿ ಹೋದಲೆಲ್ಲೆಲ್ಲ ಅಭಿಮಾನಿಗಳು ಸ್ಟಾರ್ ನಟನನ್ನು ನೋಡಲು ಮುಗಿ ಬೀಳುವಂತೆ ಮುಗಿ ಬೀಳುತ್ತಿದ್ದಾರೆ. ಗೊಂಬೆನಾಡು ಚೆನ್ನಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಿಲ್ಲಿ ಫ್ಯಾನ್ಸ್ ಕ್ರೇಜ್ ಗೆ ಪೊಲೀಸರೇ ಸುಸ್ತಾಗಿ ಹೋಗಿದ್ದಾರೆ. ಚೆನ್ನಪಟ್ಟಣದಲ್ಲಿ ನಡೆದ ಬೊಂಬೆನಾಡು ಉತ್ಸವದಲ್ಲಿ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ ವೇದಿಕೆಗೆ ಬರುತ್ತಿದ್ದಂತೆ ಅಭಿಮಾನಿಗಳು ಜೈಕಾರಗಳನ್ನು ಹಾಕಿ ಹರ್ಷೋದ್ಘಾರ ವ್ಯಕ್ತಪಡಿಸಿದ್ದಾರೆ. ಗಲ್ಲಿಗೆ ಶೇಕ್ ಹ್ಯಾಂಡ್ ಮಾಡಿ ಮಾತನಾಡಿಸಬೇಕು ಎಂಬ […]

ಕನ್ನಡ ದುನಿಯಾ 26 Jan 2026 5:27 pm

ಅಂದು ಐಶ್ವರ್ಯ ರೈ ಪ್ರಾಣ ಉಳಿಸಲು ‘ಬಿಗ್ ಬಿ’ಮಾಡಿದ್ದ ಸಾಹಸವೇನು? ಖಾಸಗಿ ವಿಮಾನದ ಹಿಂದಿದೆ ರೋಚಕ ಕಥೆ

ಮುಂಬೈ: ಬಾಲಿವುಡ್‌ನ ‘ಬಿಗ್ ಬಿ’ ಅಮಿತಾಭ್ ಬಚ್ಚನ್ ಮತ್ತು ಐಶ್ವರ್ಯ ರೈ ಬಚ್ಚನ್ ಅವರ ನಡುವಿನ ಸಂಬಂಧ ಇಂದು ಮಾವ-ಸೊಸೆಯದ್ದು. ಆದರೆ, ಐಶ್ವರ್ಯ ಅವರು ಬಚ್ಚನ್ ಕುಟುಂಬದ ಸೊಸೆಯಾಗುವ ಐದು ವರ್ಷಗಳ ಮೊದಲೇ ಅಮಿತಾಭ್ ಅವರು ಐಶ್ವರ್ಯ ರೈ ಅವರಿಗಾಗಿ ವಿಶೇಷ ವಿಮಾನದ ವ್ಯವಸ್ಥೆ ಮಾಡುವ ಮೂಲಕ ತಮ್ಮ ಮನುಷ್ಯತ್ವ ಮೆರೆದಿದ್ದರು. ಶೂಟಿಂಗ್ ಸೆಟ್‌ನಲ್ಲಿ ನಡೆದ ಭೀಕರ ಅಪಘಾತ: 2003ರಲ್ಲಿ ನಾಸಿಕ್ ಸಮೀಪ ‘ಖಾಕಿ’ (Khakee) ಸಿನಿಮಾದ ಶೂಟಿಂಗ್ ನಡೆಯುತ್ತಿದ್ದಾಗ ಈ ಘಟನೆ ಸಂಭವಿಸಿತ್ತು. ಒಂದು ದೃಶ್ಯದ […]

ಕನ್ನಡ ದುನಿಯಾ 26 Jan 2026 5:25 pm

1 ವರ್ಷದ ಮಗು ಸಾವು ಪ್ರಕರಣ: ಸ್ಫೋಟಕ ರಹಸ್ಯ ಬಯಲು: ಕೇಸ್ ಗೆ ಟ್ವಿಸ್ಟ್ ಕೊಟ್ಟ ತಾಯಿ ಹೇಳಿಕೆ

ತಿರುವನಂತಪುರಂ: ಇತ್ತೀಚಿನ ದಿನಗಳಲ್ಲಿ ಮನುಷ್ಯನ ಸ್ವಾರ್ಥ, ದುರಾಸೆಗೆ ಮಿತಿ ಇಲ್ಲದಂತಾಗಿದೆ. ಕೇರಳದ ತಿರುವನಂತಪುರಂ ನಲ್ಲಿ ನಡೆದ ಘಟನೆಯೊಂದು ಬೆಚ್ಚಿಬೀಳಿಸುವಂತಿದೆ. ಕೆಲ ದಿನಗಳ ಹಿಂದೆ ಒಂದು ವರ್ಷದ ಮಗು ಸಾವನ್ನಪ್ಪಿದ ಘಟನೆ ಕೇರಳದ ತಿರುವನಂತಪುರಂ ನಲ್ಲಿ ನಡೆದಿತ್ತು. ಹೆತ್ತ ತಂದೆಯೇ ಮಗುವನ್ನು ಕೊಲೆಗೈದಿರುವುದು ಬೆಳಕಿಗೆ ಬಂದಿತ್ತು. ಪ್ರಕರಣ ತನಿಖೆ ನಡೆಸಿದ ಪೊಲೀಸರಿಗೆ ಮತ್ತಷ್ಟು ಆಘಾತಕಾರಿ ವಿಚಾರಗಳು ಬೆಳಕಿಗೆ ಬಂದಿವೆ. ಒಂದು ವರ್ಷದ ಕಂದಮ್ಮನನ್ನು ಮಗುವನ ತಂದೆ ಶಿಜಿಲ್ ನೆ ಕೊಲೆ ಮಾಡಿರುವುದು ತಿಳಿದುಬಂದಿದೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಹಲವು […]

ಕನ್ನಡ ದುನಿಯಾ 26 Jan 2026 5:04 pm

ALERT : OTP ಇಲ್ಲದೆ ‘ವಾಟ್ಸಾಪ್’ಹ್ಯಾಕ್ ಮಾಡಬಹುದು ! ವಂಚನೆಯಿಂದ ಪಾರಾಗಲು ಇಲ್ಲಿದೆ 5 ಟ್ರಿಕ್ಸ್

ಇಂದಿನ ದಿನಗಳಲ್ಲಿ WhatsApp ಮೂಲಕ ನಡೆಯುವ ವಂಚನೆ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಕೋಟ್ಯಂತರ ಬಳಕೆದಾರರಿರುವ ಕಾರಣ, ಈ ಆ್ಯಪ್ ಸೈಬರ್ ವಂಚಕರ ನೆಚ್ಚಿನ ತಾಣವಾಗಿದೆ. ಜನರು ತಿಳಿಯದೆಯೇ ತಮ್ಮ ವರ್ಷಗಳ ಸಂಪಾದನೆಯನ್ನು ಕಳೆದುಕೊಳ್ಳುತ್ತಿರುವ ಸುದ್ದಿಗಳು ಪ್ರತಿದಿನ ವರದಿಯಾಗುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ, WhatsApp ಭದ್ರತಾ ಸೆಟ್ಟಿಂಗ್‌ಗಳನ್ನು ಸರಿಯಾಗಿ ಬಳಸುವುದು ಮತ್ತು ‘ಘೋಸ್ಟ್ ಪೇರಿಂಗ್’ (Ghost Pairing) ನಂತಹ ಹೊಸ ಹ್ಯಾಕಿಂಗ್ ವಿಧಾನಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳುವುದು ಬಹಳ ಮುಖ್ಯ. ಟೂ-ಫ್ಯಾಕ್ಟರ್ ಅಥೆಂಟಿಕೇಶನ್ (Two-Factor Authentication) ಖಂಡಿತವಾಗಿಯೂ ಆನ್ ಮಾಡಿ WhatsApp […]

ಕನ್ನಡ ದುನಿಯಾ 26 Jan 2026 3:48 pm

ಅಗ್ನಿವೀರ್ ನೋಂದಣಿ 2027: ಯಾರು ಅರ್ಜಿ ಸಲ್ಲಿಸಬಹುದು, ವೇತನ ಎಷ್ಟು?

ಭಾರತೀಯ ವಾಯುಪಡೆ (ಐಎಎಫ್) ಅಗ್ನಿಪಥ್ ಯೋಜನೆಯಡಿ 2027ರ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಫೆಬ್ರವರಿ 1, 2026ರ ರಾತ್ರಿ 11 ಗಂಟೆ ತನಕ ಅವಕಾಶವಿದೆ. ಅರ್ಹ ಅವಿವಾಹಿತ ಭಾರತೀಯ ಪುರುಷರು ಮತ್ತು ಮಹಿಳೆಯರು 4 ವರ್ಷಗಳ ಸೇವೆಗಾಗಿ ಅರ್ಜಿ ಸಲ್ಲಿಸಬಹುದು. ನೇಮಕಾತಿ ಅಭಿಯಾನವು ಯುವ ಆಕಾಂಕ್ಷಿಗಳಿಗೆ ಮಿಲಿಟರಿ ತರಬೇತಿ, ಕೌಶಲ್ಯ ಮತ್ತು ಆರ್ಥಿಕ ಪ್ರಯೋಜನಗಳನ್ನು ಪಡೆಯುವ ಮೂಲಕ ವಾಯುಪಡೆಯಲ್ಲಿ ಸೇವೆ ಸಲ್ಲಿಸಲು ಅವಕಾಶವನ್ನು ನೀಡುತ್ತದೆ. ಆನ್‌ಲೈನ್ ನೋಂದಣಿ ಫೆಬ್ರವರಿ 1, 2026ರ ತನಕ ಇದೆ. ಅಭ್ಯರ್ಥಿಗಳು […]

ಕನ್ನಡ ದುನಿಯಾ 26 Jan 2026 3:32 pm

ಪ್ರತಿದಿನ ‘ಟೊಮೆಟೊ’ತಿನ್ನುವುದರಿಂದ ಸಿಗುವ ಅದ್ಭುತ 10 ಆರೋಗ್ಯ ಪ್ರಯೋಜನಗಳು.!

ಟೊಮೆಟೊ ಪ್ರತಿಯೊಂದು ಮನೆಯಲ್ಲೂ ಇರುವ ಸಾಮಾನ್ಯ ತರಕಾರಿಗಳಲ್ಲಿ ಒಂದಾಗಿದೆ. ಹೆಚ್ಚಿನವರು ಇದನ್ನು ದಿನನಿತ್ಯ ಅಡುಗೆಯಲ್ಲಿ ಬಳಸುತ್ತಾರೆ. ಇವು ಅಡುಗೆಗೆ ಉತ್ತಮ ರುಚಿಯನ್ನು ನೀಡುತ್ತವೆ. ಆದರೆ ಇವುಗಳನ್ನು ಹಸಿಯಾಗಿ ಸೇವಿಸುವುದರಿಂದ ಆರೋಗ್ಯಕ್ಕೆ ಅಸಂಖ್ಯಾತ ಪ್ರಯೋಜನಗಳಿವೆ ಎನ್ನಲಾಗಿದೆ. ಏಕೆಂದರೆ ಇವುಗಳಲ್ಲಿ ಪೌಷ್ಟಿಕಾಂಶಗಳು ಹೇರಳವಾಗಿವೆ. ಹಸಿಯಾಗಿ ತಿಂದಾಗ ಮಾತ್ರ ಅವು ದೇಹಕ್ಕೆ ಪೂರ್ಣ ಪ್ರಮಾಣದಲ್ಲಿ ಲಭ್ಯವಾಗುತ್ತವೆ. ಹಾಗಾದರೆ ಇವುಗಳನ್ನು ತಿನ್ನುವುದರಿಂದ ಆಗುವ ಲಾಭಗಳೇನು ಮತ್ತು ತೂಕ ಇಳಿಸಿಕೊಳ್ಳುವವರು ಇದನ್ನು ಸೇವಿಸಬಹುದೇ ಎಂದು ನೋಡೋಣ. ರೋಗನಿರೋಧಕ ಶಕ್ತಿ ಹಸಿ ಟೊಮೆಟೊಗಳಲ್ಲಿ ವಿಟಮಿನ್ ಸಿ […]

ಕನ್ನಡ ದುನಿಯಾ 26 Jan 2026 3:31 pm

ಕನ್ನಡಕಕ್ಕೆ ಗುಡ್‌ಬೈ ಹೇಳಬೇಕೆ? ಕಣ್ಣಿನ ಆರೋಗ್ಯಕ್ಕೆ ಈ 10 ಸುಲಭ ಹಾದಿ ಇಂದೇ ರೂಢಿಸಿಕೊಳ್ಳಿ

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್, ಲ್ಯಾಪ್‌ಟಾಪ್ ಮತ್ತು ಟಿವಿಯ ಅತಿಯಾದ ಬಳಕೆ ನಮ್ಮ ಕಣ್ಣುಗಳ ಮೇಲೆ ಭಾರಿ ಒತ್ತಡವನ್ನು ಹೇರುತ್ತಿದೆ. ಇದರಿಂದಾಗಿ ಚಿಕ್ಕ ವಯಸ್ಸಿನಲ್ಲೇ ದೃಷ್ಟಿ ದೋಷ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಆದರೆ, ದೈನಂದಿನ ಜೀವನದಲ್ಲಿ ಕೆಲವು ಸಣ್ಣ ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ನಿಮ್ಮ ಕಣ್ಣಿನ ಆರೋಗ್ಯವನ್ನು ದಶಕಗಳ ಕಾಲ ಕಾಪಾಡಿಕೊಳ್ಳಬಹುದು. ಕಣ್ಣಿನ ದೃಷ್ಟಿ ಚುರುಕಾಗಲು ತಜ್ಞರು ಸೂಚಿಸುವ 10 ಪ್ರಮುಖ ಸೂತ್ರಗಳು ಇಲ್ಲಿವೆ. 1. ಪೌಷ್ಟಿಕ ಆಹಾರ ಸೇವನೆ: ಕಣ್ಣಿನ ದೃಷ್ಟಿ ಸುಧಾರಿಸಲು ವಿಟಮಿನ್ ಎ, ಸಿ, […]

ಕನ್ನಡ ದುನಿಯಾ 26 Jan 2026 3:30 pm

ನೀವು ಪ್ರತಿ ತಿಂಗಳು ರೂ.1400 ಉಳಿಸಿದ್ರೆ 25 ಲಕ್ಷ ರೂ. ಸಿಗುತ್ತೆ : ಉಚಿತ ಜೀವಮಾನ ವಿಮೆ.. ಅದ್ಭುತ ಪಾಲಿಸಿ !

ಪ್ರತಿಯೊಬ್ಬರೂ ತಮ್ಮ ಭವಿಷ್ಯವನ್ನು ಸುರಕ್ಷಿತವಾಗಿರಿಸಿಕೊಳ್ಳಲು ಬಯಸುತ್ತಾರೆ. ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಸರಿಯಾದ ಸ್ಥಳದಲ್ಲಿ ಹೂಡಿಕೆ ಮಾಡುವ ವಿಷಯಕ್ಕೆ ಬಂದರೆ, ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (LIC) ದೇಶದ ಅತ್ಯಂತ ವಿಶ್ವಾಸಾರ್ಹ ಹೆಸರಾಗಿದೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ಹಲವಾರು ಆಯ್ಕೆಗಳಲ್ಲಿ, LIC ಜೀವನ್ ಆನಂದ್ (ಪ್ಲಾನ್ ನಂ. 915) ಪಾಲಿಸಿಯು ಕಡಿಮೆ ಪ್ರೀಮಿಯಂನಲ್ಲಿ ಉಳಿತಾಯ ಮತ್ತು ರಕ್ಷಣೆ ಎಂಬ ಎರಡು ಪಟ್ಟು ಪ್ರಯೋಜನವನ್ನು ಬಯಸುವವರಿಗೆ ಅತ್ಯುತ್ತಮ ಯೋಜನೆಯಾಗಿದೆ. ಪ್ರೀಮಿಯಂಗಳು ತುಂಬಾ ದುಬಾರಿಯಾಗುತ್ತವೆ ಎಂಬ ಭಯದಿಂದ ನಾವು ಅನೇಕ ಬಾರಿ […]

ಕನ್ನಡ ದುನಿಯಾ 26 Jan 2026 3:19 pm

BREAKING: ವರದಕ್ಷಿಣೆ ಕಿರುಕುಳ: ಮನನೊಂದ ಮಹಿಳೆ ಆತ್ಮಹತ್ಯೆ

ಬೆಂಗಳೂರು: ಆಧುನಿಕವಾಗಿ ಪ್ರಪಂಚ ಎಷ್ಟೇ ಮುಂದುವರೆದಿದೆ ಎಂದರೂ, ಮಹಿಳೆ ಸ್ವಾವಲಂಭಿಯಾಗಿ ದುಡಿಯುತ್ತಿದ್ದರೂ, ವರದಕ್ಷಿಣೆ ಪಿಡುಗು ಮಾತ್ರ ಸಮಾಜದಿಂದ ಮಾಯವಾಗಿಲ್ಲ. ಒಂದಿಲ್ಲ ಒಂದುಕಾರಣಕ್ಕೆ ಪತಿ ಮನೆಯವರ ಚುಚ್ಚು ಮಾತು, ಧನದಾಹ, ದೌರ್ಜನ್ಯ-ದಬ್ಬಾಳಿಕೆ ಮಹಿಳೆಯರ ಮೇಲೆ ಮುಂದುವರೆದಿದೆ. ಇಂತದ್ದೇ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪತಿ ಹಾಗೂ ಮನೆಯವರ ವರದಕ್ಷಿಣೆ ಕಿರುಕುಳ, ಹಿಂಸೆಗೆ ಮನನೊಂದು ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳುರಿನ ಯಡಿಯೂರಿನಲ್ಲಿ ನಡೆದಿದೆ. ಕೀರ್ತಿ ಮೃತ ಮಹಿಳೆ. ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯಲ್ಲಿ ಕೀರ್ತಿ ನೇಣು ಬಿಗಿದ […]

ಕನ್ನಡ ದುನಿಯಾ 26 Jan 2026 3:03 pm

GOOD NEWS : ಮುಂದಿನ ಶೈಕ್ಷಣಿಕ ವರ್ಷದೊಳಗೆ  10,800 ಹೊಸ ಶಿಕ್ಷಕರ ನೇಮಕಾತಿ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್.ಕೆ.ಜಿಯಿಂದ 12ನೇ ತರಗತಿವರೆಗೆ ಉಚಿತ ಪಠ್ಯಪುಸ್ತಕ ಗಳನ್ನು ನೀಡಲಾಗುವುದು ಹಾಗೂ ಉಚಿತ ಪುಸ್ತಕ (ನೋಟ್ ಬುಕ್) ನೀಡುವ ಪ್ರಸ್ತಾವನೆಯು ಸರ್ಕಾರದ ಹಂತದಲ್ಲಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು. ನಗರದ ನೆಹರೂ ಕ್ರೀಡಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಗಣರಾಜ್ಯೋತ್ಸವ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ನಂತರ ಮಾತನಾಡಿದರು. ಗುಣಮಟ್ಟದ ಶಿಕ್ಷಣಕ್ಕೆ ಶಿಕ್ಷಕರೇ ಆಧಾರ. ನಾವು ಈಗಾಗಲೇ 14,499 ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದೇವೆ. ಶಿಕ್ಷಕರ ಕೊರತೆ ನೀಗಿಸಲು ಪ್ರಥಮ ಬಾರಿಗೆ ನಮ್ಮ ಸರ್ಕಾರ 51000 […]

ಕನ್ನಡ ದುನಿಯಾ 26 Jan 2026 3:02 pm

ಶರಾವತಿ ಮುಳುಗಡೆ ಸಂತ್ರಸ್ತರು ಹಾಗೂ ಬಗರ್ ಹುಕುಂ ಸಾಗುವಳಿದಾರರ ಸಮಸ್ಯೆ ಇತ್ಯರ್ಥ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಈ ದಿನ ಪ್ರತಿಯೊಬ್ಬ ಭಾರತೀಯನು ಹೆಮ್ಮೆ ಪಡಬೇಕಾದ ದಿನ. ಇಂದು ವಿಶ್ವದ ಶ್ರೇಷ್ಠ ಸಂವಿಧಾನವು ಜಾರಿಗೆ ಬಂದ ಪವಿತ್ರ ದಿನವಾಗಿದ್ದು “ನಮ್ಮ ದೇಶ, ನಮ್ಮ ಸಂವಿಧಾನ ನಮ್ಮದೇ ಆಡಳಿತ” ಎಂದು ನಾವು ಸ್ವಾಭಿಮಾನದಿಂದ ಬದುಕಲು ಕಾರಣರಾದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಕೃತಜ್ಞತಾ ಪೂರ್ವಕ ನಮನಗಳು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ನಗರದ ನೆಹರೂ ಕ್ರೀಡಾಂಗಣದಲ್ಲಿ ಸೋಮವಾರ […]

ಕನ್ನಡ ದುನಿಯಾ 26 Jan 2026 2:54 pm