ಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಸದನದಲ್ಲಿ ಗಮನಸೆಳೆದ ಶಾಸಕ ಯತ್ನಾಳ್: ಪತ್ತೆಗೆ ವಿಶೇಷ ತಂಡ ರಚನೆ ಭರವಸೆ
ಬೆಂಗಳೂರು: ಅಕ್ರಮ ಬಾಂಗ್ಲಾ ನಿವಾಸಿಗಳ ಬಗ್ಗೆ ವಿಧಾನಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಮನ ಸೆಳೆದಿದ್ದಾರೆ. ರಾಜ್ಯದಲ್ಲಿ 25 ಲಕ್ಷ ಅಕ್ರಮ ನುಸುಳುಕೋರರು ಇದ್ದಾರೆ. ನಕಲಿ ಆಧಾರ್ ಕಾರ್ಡ್, ಪಡಿತರ ಚೀಟಿ ಮಾಡಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಭಯಾನಕ ಸ್ಥಿತಿ ಇದೆ ಎಂದು ಯತ್ನಾಳ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇತ್ತೀಚೆಗೆ ದರೋಡೆ ನಡೆಯಿತು. ಪೊಲೀಸ್ ಇಲಾಖೆ ವಿಫಲವಾಗಿದೆ. ಬಾಂಗ್ಲಾ ನುಸುಳುಕೋರರು ಬರಲು ಏಜೆಂಟರು ನೆರವು ನೀಡುತ್ತಿದ್ದಾರೆ. ಕರ್ನಾಟಕದ ಪರಿಸ್ಥಿತಿ ಪಶ್ಚಿಮ ಬಂಗಾಳದಂತೆ ಆಗುತ್ತದೆ. ಕರ್ನಾಟಕದಲ್ಲಿ ಕನ್ನಡಿಗರಿಗೆ ರಕ್ಷಣೆ ಇಲ್ಲವಾಗಿದೆ ಎಂದು ಹೇಳಿದ್ದಾರೆ. […]
BREAKING: ಮದುವೆ ಆರತಕ್ಷತೆಗೆ ತೆರಳುತ್ತಿದ್ದ ವರನಿಗೆ ಚಾಕು ಇರಿತ
ಚಾಮರಾಜನಗರ: ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನಿಗೆ ಚೂರಿಯಿಂದ ಇರಿಯಲಾಗಿದೆ. ಕಲ್ಯಾಣ ಮಂಟಪಕ್ಕೆ ತೆರಳುವ ವೇಳೆಯಲ್ಲಿಯೇ ಚೂರಿಯಿಂದ ಇರಿಯಲಾಗಿದ್ದು, ನೀನು ಮದುವೆ ಮನೆಗಲ್ಲ, ಸ್ಮಶಾನಕ್ಕೆ ತೆರಳಬೇಕು ಎಂದು ಡೆಡ್ಲಿ ಅಟ್ಯಾಕ್ ನಡೆಸಲಾಗಿದೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಪಟ್ಟಣದಲ್ಲಿ ಘಟನೆ ನಡೆದಿದೆ. ಅಪರಿಚಿತರು ಚಾಕು, ಚೂರಿ, ಡ್ರ್ಯಾಗರ್ ನಿಂದ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಕುಣಗಳ್ಳಿ ಗ್ರಾಮದಿಂದ ಕಾರ್ ನಲ್ಲಿ ಬರುವಾಗ ವರ ರವೀಶ್ ಎಂಬುವವರಿಗೆ ಇರಿಯಲಾಗಿದೆ. ಕೊಳ್ಳೇಗಾಲದ ವೆಂಕಟೇಶ್ವರ ಮಹಲ್ ನಲ್ಲಿ ಆರತಕ್ಷತೆ ಕಾರ್ಯಕ್ರಮಕ್ಕೆ ಬರುತ್ತಿದ್ದಾಗ ಘಟನೆ ನಡೆದಿದೆ. ಚೂರಿಯಿಂದ […]
ಡಾ.ರಾಜ್ ಕುಮಾರ್ ಸಿನಿಮಾಗಳಲ್ಲಿ ಸಾಮಾಜಿಕ ಜವಾಬ್ದಾರಿ ಇತ್ತು
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಚಾಲನೆ ಸಿಕ್ಕಿದೆ. ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ವರ್ಣರಂಜಿತ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಲನ ಚಿತ್ರೋತ್ಸವ ಉದ್ಘಾಟಿಸಿದರು. ಅರ್ಥಪೂರ್ಣ ಸಿನಿಮಾಗಳ ಪ್ರದರ್ಶನದೊಂದಿಗೆ, ಅವುಗಳ ಆಶಯಗಳು ಹೆಚ್ಚೆಚ್ಚು ಜನರನ್ನು ತಲುಪುವ ಮೂಲಕ ಈ ವರ್ಷದ ಬೆಂಗಳೂರು ಚಲನಚಿತ್ರೋತ್ಸವ ಅತ್ಯಂತ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಡಾ.ರಾಜ್ ಚಿತ್ರಗಳು: ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಸಿದ್ದರಾಮಯ್ಯ ವರನಟ ಡಾ.ರಾಜ್ ಕುಮಾರ್ […]
BREAKING: ಶಾಸಕ ವೀರೇಂದ್ರ ಪಪ್ಪಿಗೆ ಮತ್ತೆ ಇಡಿ ಶಾಕ್: 177 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು
ಬೆಂಗಳೂರು: ಶಾಸಕ ವೀರೇಂದ್ರ ಪಪ್ಪಿ ವಿರುದ್ಧ ಆನ್ಲೈನ್ ಬೆಟ್ಟಿಂಗ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವೀರೇಂದ್ರ ಪಪ್ಪಿ ಅವರಿಗೆ ಸೇರಿದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಮತ್ತೆ 177.3 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಕೃಷಿ ಜಮೀನು, ನಿವೇಶನ ಸೇರಿದಂತೆ ಅನೇಕ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಬೆಟ್ಟಿಂಗ್ ಹಗರಣ, ಹಣ ಅಕ್ರಮ ವರ್ಗಾವಣೆ ಬಗ್ಗೆ ಕೇಸ್ ದಾಖಲಿಸಿ ಇಡಿ ಅಧಿಕಾರಿಗಳು ತನಿಖೆ ನಡೆಸಿದ್ದರು. ತನಿಖೆಯ ವೇಳೆ ವೀರೇಂದ್ರ ಪಪ್ಪಿ ಮತ್ತು ಸಹಚರರು ಮಾಸ್ಟರ್ ಮೈಂಡ್ ಎನ್ನುವುದು […]
ಸ್ಥಳೀಯ ಸಂಸ್ಥೆ ಚುನಾವಣೆ: ಮೀಸಲಾತಿ ನಿಗದಿಗೆ ಸರ್ಕಾರಕ್ಕೆ ಹೈಕೋರ್ಟ್ ಅಂತಿಮ ಗಡುವು
ಬೆಂಗಳೂರು: ರಾಜ್ಯದಲ್ಲಿ ಚುನಾವಣೆ ನಡೆಯಬೇಕಿರುವ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ನಿಗದಿಪಡಿಸುವ ಬಗ್ಗೆ ಉತ್ತರಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಅಂತಿಮ ಗಡುವು ನೀಡಿದೆ. ಚುನಾವಣೆ ಮೀಸಲಾತಿ ಅಧಿಸೂಚನೆ ಹೊರಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ ಪಿಐಎಲ್ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗಿಯ ಪೀಠದಲ್ಲಿ ಬುಧವಾರ ನಡೆದಿದೆ. ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್. […]
ಸಚಿವ ಶಿವಾನಂದ ಪಾಟೀಲ್ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ಯತ್ನಾಳ್ ಗೆ ನಿರ್ಬಂಧ
ಬೆಂಗಳೂರು: ಸಚಿವ ಶಿವಾನಂದ ಪಾಟೀಲ್ ಅವರ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಅಂತಹ ಹೇಳಿಕೆ ನೀಡದಂತೆ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ನಿರ್ಬಂಧ ವಿಧಿಸಲಾಗಿದೆ. ಬೆಂಗಳೂರಿನ 27ನೇ ಸಿಟಿ ಸಿವಿಲ್ ಕೋರ್ಟ್ ನಿಂದ ಈ ಕುರಿತಾಗಿ ಮಧ್ಯಂತರ ಆದೇಶ ನೀಡಲಾಗಿದೆ. ಶಾಸಕ ಯತ್ನಾಳ್ ಅವರು ಸುಳ್ಳು ನಿಂದನೆಯ ಆರೋಪ ಮಾಡುತ್ತಿದ್ದಾರೆ ಎಂದು ಶಿವಾನಂದ ಪಾಟೀಲ್ ಪರ ವಕೀಲರಾದ ವಿಜೇತಾ ಆರ್. ನಾಯ್ಕ ವಾದ ಮಂಡಿಸಿದರು. ವಾದ ಆಲಿಸಿದ ಕೋರ್ಟ್ ಮಾನಹಾನಿಕರ ಹೇಳಿಕೆ ನೀಡದಂತೆ […]
ಎಲ್ಲದಕ್ಕೂ ಕಾಲ ಉತ್ತರ ನೀಡುತ್ತದೆ: ಸಿಎಂ ಆಗುವ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ
ಶಿವಮೊಗ್ಗ: ಎಲ್ಲದಕ್ಕೂ ಕಾಲ ಉತ್ತರ ನೀಡುತ್ತದೆ. ಪಕ್ಷ ಹೇಗೆ ನಿರ್ದೇಶನ ನೀಡುತ್ತೋ ಅದರಂತೆ ನಡೆದುಕೊಳ್ಳುವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಶಿವಮೊಗ್ಗಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸಿಎಂ ಆಗುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿ, ನೋಡೋಣ ಏನಗುತ್ತೋ ಎಂದು ನಗುತ್ತಲೇ ಉತ್ತರಿಸಿದರು. ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕುರಿತ ವಿಚಾರದ ಬಗ್ಗೆ ಮಾತನಾಡಿ, ಎರಡು ವರ್ಷ ಅಥವಾ ಮುಂದಿನ ಆದೇಶದವರೆಗೂ ಅಂತ ಇದೆ. ಈ ಬಗ್ಗೆ ಪಕ್ಷ ಏನು ತೀರ್ಮಾನ ಮಾಡುತ್ತದೆ ನೋಡೋಣ ಎಂದರು. […]
ಕಾಮಗಾರಿ ಟೆಂಡರ್ ಕೊಡುವುದಕ್ಕೂ ಮಂತ್ರಿಗಳಿಗೂ ಏನು ಸಂಬಂಧ? ಸಚಿವ ಭೈರತಿ ಸುರೇಶ್ ಕಿಡಿ
ಬೆಂಗಳೂರು: ಸ್ಥಳೀಯ ಗುತ್ತಿಗೆದಾರರಿಗೆ ಅನ್ಯಾಯವಾಗುವಂತೆ ಪ್ಯಾಕೇಜ್ ಟೆಂಡರ್ ಮಾಡಲಾಗುತ್ತಿದೆ ಎಂಬ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ಆರೋಪಕ್ಕೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಭೈರತಿ ಸುರೇಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಭೈರತಿ ಸುರೇಶ್, ಗುತ್ತಿಗೆದಾರರು ತಮ್ಮ ಆರೋಪಗಳಿಗೆ ಯಾವುದೇ ಸಾಕ್ಷ್ಯಾಧಾರಗಳನ್ನು ನೀಡದೇ ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಮಾಡುತ್ತಿದ್ದಾರೆ. ಯಾವುದೇ ಕಾಮಗಾರಿಯ ಗುತ್ತಿಗೆಯನ್ನು ನೀಡುವ ವಿಚಾರದಲ್ಲಿ ಸಚಿವರ ಹಸ್ತಕ್ಷೇಪ ಇರುವುದಿಲ್ಲ. ಎಲ್ಲವೂ ಪಾರದರ್ಶಕವಾಗಿ ನಡೆಯುತ್ತದೆ ಎಂದು ಹೇಳಿದರು. ಟೆಂಡರ್ ಕೊಡುವುದಕ್ಕೂ […]
ನಾನು ರಾಜೀನಾಮೆ ನೀಡಿಲ್ಲ, ಆ ಪ್ರಶ್ನೆಯೇ ಉದ್ಭವಿಸಿಲ್ಲ: ಸಚಿವ ಜಾರ್ಜ್ ಸ್ಪಷ್ಟನೆ
ಬೆಂಗಳೂರು: ನಾನು ರಾಜೀನಾಮೆ ನೀಡಿಲ್ಲ, ರಾಜೀನಾಮೆ ನೀಡುವ ಪ್ರಶ್ನೆಗೆ ಉದ್ಭವವಾಗಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟಪಡಿಸಿದ್ದಾರೆ. ರಾಜೀನಾಮೆ ಕುರಿತಾದ ವದಂತಿ ಬಗ್ಗೆ ಮಾತನಾಡಿದ ಅವರು, ನಾನು ರಾಜೀನಾಮೆ ನೀಡಿಲ್ಲ. ಅಂತಹ ಪ್ರಶ್ನೆ ಉದ್ಭವವಾಗಿಲ್ಲ ಎಂದು ತಿಳಿಸಿದ್ದಾರೆ. ಕಲಾಪದ ವೇಳೆ ಶಾಸಕ ಸುನಿಲ್ ಕುಮಾರ್, ಜಾರ್ಜ್ ರಾಜೀನಾಮೆ ಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಸದನದಲ್ಲಿಯೇ ಸಚಿವರು ಇದ್ದಾರೆ. ಸಿಎಂ ಪುತ್ರನ ಹಸ್ತಕ್ಷೇಪ ಜಾಸ್ತಿಯಾಗಿದೆ ಎಂದು ಜಾರ್ಜ್ ರಾಜೀನಾಮೆ ನೀಡಿದ್ದಾರೆ ಎಂದು ಮಾಧ್ಯಮಗಳಲ್ಲಿ ಬಂದಿದೆ. ಈ ಬಗ್ಗೆ ಸ್ಪಷ್ಟನೆ […]
BREAKING: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ: ಬೈಕ್ ಸವಾರನ ದೇಹ ಛಿದ್ರ ಛಿದ್ರ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಪಘಾತಗಳ ಸಂಖ್ಯೆ ಮತ್ತೆ ಹೆಚ್ಚುತ್ತಿದೆ. ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಯಲಹಂಕ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಟಿಪ್ಪರ್ ಬೈಕ್ ಗೆ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರನ ದೇಹ ಛಿದ್ರ ಛಿದ್ರಗೊಂಡಿದೆ. ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮೃತ ಬೈಕ್ ಸವಾರ ಹೊರ ರಾಜ್ಯದವನೆಂದು ತಿಳಿದುಬಂದಿದೆ. ಮೃತನ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ […]
BREAKING: ಹುಲ್ಲಿನ ಬಣವಿಯಲ್ಲಿ ಮಾದಕ ವಸ್ತು ಸಂಗ್ರಹ: ಶಿವಮೊಗ್ಗದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ಸೀಜ್: ಆರೋಪಿ ಅರೆಸ್ಟ್
ಶಿವಮೊಗ್ಗ: ಮಾದಕ ವಸ್ತುಗಳ ವಿರುದ್ಧ ರಾಜ್ಯಾದ್ಯಂತ ಸಮರ ಸಾರಿರುವ ಪೊಲೀಸರು, ಹಲವು ಆರೋಪಿಗಳನ್ನು ಬಂಧಿಸುತ್ತಿದ್ದಾರೆ. ಶಿವಮೊಗ್ಗದಲ್ಲಿ 4 ಲಕ್ಷ ಮೌಲ್ಯದ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿ ಆರೋಪಿಯನ್ನು ಬಂಧಿಸಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಬೊಮ್ಮನಕಟ್ಟಿ ಗ್ರಾಮದಲ್ಲಿ ದಾಳಿ ನಡೆಸಿದ ಭದ್ರಾವತಿ ಪೇಪರ್ ಟೌನ್ ಠಾಣೆ ಪೊಲೀಸರು ಹುಲ್ಲಿನ ಬಣವಿಯಲ್ಲಿ ಅಡಗಿಸಿಟ್ಟಿದ್ದ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. 4 ಲಕ್ಷ ರೂಪಾಯಿ ಮೌಲ್ಯದ 8 ಕೆಜಿ ಗಾಂಜಾವನ್ನು ಹುಲ್ಲಿನ ಬಣವಿಯಲ್ಲಿ ಸಂಗ್ರಹಿಸಿದಳಾಗಿತ್ತು. ಇವುಗಳನ್ನು ಜಪ್ತಿ ಮಾಡಿದ […]
BREAKING: 4 ಲಕ್ಷ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್ ಪೆಕ್ಟರ್
ಬೆಂಗಳೂರು: 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಲೆ ಇನ್ಸ್ ಪೆಕ್ಟರ್ ಓರ್ವರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೈಸೂರು ರಸ್ತೆಯ ಸಿಎಆರ್ ಗ್ರೌಂಡ್ ಬಳಿ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಪೊಲೀಸ್ ಇನ್ಸ್ ಪೆಕ್ಟರ್ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಕೆ.ಪಿ.ಅಗ್ರಹಾರ ಠಾಣೆಯ ಇನ್ಸ್ ಪೆಕ್ಟರ್ ಗೋವಿಂದರಾಜು ಬಂಧಿತ ಇನ್ಸ್ ಪೆಕ್ಟರ್. ಚೀಟಿ ವ್ಯವಹಾರ ಕೇಸ್ ಗೆ ಸಂಬಂಧಿಸಿದಂತೆ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಎಸ್ ಪಿ ಶಿವಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಇನ್ಸ್ […]
ಪಿಎಸ್ಐ ನೇಮಕಾತಿ ಹಗರಣ: ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಮೈಸೂರು ಕಾರಾಗೃಹಕ್ಕೆ ಶಿಫ್ಟ್
ಕಲಬುರಗಿ: ಪಿಎಸ್ ಐ ನೇಮಕಾತಿ ಹಗರಣದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ನನ್ನು ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೈಸೂರು ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಪಿಎಸ್ ಐ ನೇಮಕಾತಿ ಹಗರಣದಲ್ಲಿ ಜೈಲು ಸೇರಿರುವ ಆರ್.ಡಿ.ಪಾಟೀಲ್, ಕಲಬುರಗಿ ಕಾರಾಗೃಹದಲ್ಲಿ ಜೈಲಿನ ನಿಯಮಗಳನ್ನು ಉಲ್ಲಂಘನೆ ಮಾಡಿ ಸರಣಿ ವಿವಾದಗಳನ್ನು ಸೃಷ್ಟಿಸುತ್ತಿದ್ದ ಹಿನ್ನೆಲೆಯಲ್ಲಿ ಆರ್.ಡಿ.ಪಾಟಿಲ್ ನನ್ನು ಬೇರೆ ಜೈಲಿಗೆ ಸ್ಥಳಾಂತರಿಸಲಾಗಿದೆ. ಕೆಲ ದಿನಗಳ ಹಿಂದೆ ಕಲಬುರಗಿ ಕಾರಾಗೃಹದಲ್ಲಿ ಕೈದಿಗಳು ಜೂಜಾಟಟದಲ್ಲಿ ತೊಡಗಿರುವ, ಮದ್ಯ ಸೇವನೆ ಮಾಡುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ […]
ಮುಂದುವರಿದ ಉದ್ಯೋಗ ಕಡಿತ: 2026ರಲ್ಲಿ ಯಾವ ಯಾವ ಕಂಪನಿಗಳು?
2026ನೇ ವರ್ಷ ತಂತ್ರಜ್ಞಾನ ಕ್ಷೇತ್ರದಲ್ಲಿ ಉದ್ಯೋಗ ಕಡಿತದೊಂದಿಗೆ ಆರಂಭವಾಗಿದೆ. ಜನವರಿಯಲ್ಲಿಯೇ ಹೊಸ ಸುತ್ತಿನ ಉದ್ಯೋಗ ಕಡಿತ ಮತ್ತು ವಜಾ ಪ್ರಕ್ರಿಯೆ ಸುದ್ದಿಯಾಗುತ್ತಿದೆ. ಜನವರಿ ಮೊದಲ ವಾರದಲ್ಲೇ ಘೋಷಣೆ ಮಾಡಿದಂತೆ ಅಮೆಜಾನ್ ಮತ್ತು ಮೆಟಾ ಕಂಪನಿಗಳು ಉದ್ಯೋಗ ಕಡಿತವನ್ನು ಪ್ರಾರಂಭಿಸಿವೆ. ಕೃತಕ ಬುದ್ಧಿಮತ್ತೆ (ಎಐ) ಮೇಲಿನ ಅತಿಯಾದ ಬಂಡಾವಳ ಹೂಡಿಕೆ ಈ ವರ್ಷ ಇನ್ನಷ್ಟು ಹೆಚ್ಚಾಗಲಿದ್ದು, ಹಿಂದಿನ ವರ್ಷಗಳಿಗೆ ಹೋಲಿಕೆ ಮಾಡಿದರೆ ಭಾರೀ ಸಂಖ್ಯೆಯ ಉದ್ಯೋಗ ಕಡಿತವಾಗಲಿದೆ ಎಂದು ಅಂದಾಜಿಸಲಾಗಿದೆ. ಹೊಸ ನೇಮಕಾತಿಗಾಗಿ ಕಾಯುವ ಬದಲು ಕೆಲಸ ಉಳಿಸಿಕೊಳ್ಳುವ, […]
BREAKING: ಗರ್ಭಿಣಿ ಸೊಸೆಯನ್ನೇ ಕತ್ತು ಸೀಳಿ ಕೊಲೆಗೈದ ಮಾವ
ರಾಯಚೂರು: ಗರ್ಭಿಣಿ ಸೊಸೆಯನ್ನೇ ಮಾವ ಕತ್ತು ಸೀಳಿ ಕೊಲೆಗೈದಿರುವ ಹೃದಯವಿದ್ರಾವಕ ಘಟನೆ ರಾಯಚೂರಿನಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕಾಗಿ ಮಾವ, ಗಭಿಣಿ ಸೊಸೆಯನ್ನೇ ಹತ್ಯೆಗೈದಿದ್ದಾನೆ. ರಾಯಚೂರು ಜಿಲ್ಲೆಯ ಸಿರುವಾರ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ನಾಲ್ಕು ತಿಂಗಳ ಗರ್ಭಿಣಿ ರೇಖಾ (25) ಕೊಲೆಯಾದ ದುರ್ದೈವಿ. ಗರ್ಭಿಣಿಯಾಗಿದ್ದ ರೇಖಾ ತವರು ಮನೆಗೆ ಹೋಗಿದ್ದಳು. ಎರಡು ದಿನಗಳ ಹಿಂದೆ ತವರಿನಿಂದ ಕರೆದುಕೊಂಡು ಬಂದಿದ್ದ ಮಾವ, ಮನೆಯಲ್ಲಿ ಕೆಲಸ ಮಾಡಲು ಯಾರೂ ಇಲ್ಲ ಎಂದು ಕ್ಯಾತೆ ತೆಗೆದಿದ್ದಾನೆ. ಇದೇ ವಿಚಾರವಾಗಿ ಮನೆಯಲ್ಲಿ ಗಲಾಟೆಯಾಗಿತ್ತು. […]
ಸರ್ವರೋಗಕ್ಕೆ ‘ತಂಗಳನ್ನ’ ರಾಮಬಾಣ : ವಿಜ್ಞಾನಿಗಳೇ ಮೆಚ್ಚಿದ ಈ ಆಹಾರದ ಮಹತ್ವ ತಿಳಿಯಿರಿ.!
ರಾತ್ರಿ ಉಳಿದ ಅನ್ನದಿಂದ ತಯಾರಿಸುವ ಈ ಸಾಂಪ್ರದಾಯಿಕ ಆಹಾರ ‘ತಂಗಳನ್ನ’ ಆಧುನಿಕ ಜೀವನಶೈಲಿಯಿಂದಾಗಿ ಮರೆಯಾಗುತ್ತಿದೆ. ಆದರೆ, ‘ಅಮೇರಿಕನ್ ಡಯಟೆಟಿಕ್ ಅಸೋಸಿಯೇಷನ್’ ಕೂಡ ಇದರ ಅದ್ಭುತ ಆರೋಗ್ಯ ಪ್ರಯೋಜನಗಳನ್ನು ಗುರುತಿಸಿದೆ ಎಂಬುದು ವಿಶೇಷ. ಜೀರ್ಣಕ್ರಿಯೆ ಸುಧಾರಿಸುವುದು, ಎಲುಬುಗಳನ್ನು ಬಲಪಡಿಸುವುದು, ರಕ್ತದೊತ್ತಡ ನಿಯಂತ್ರಣ ಮತ್ತು ದೇಹದ ಉಷ್ಣತೆಯನ್ನು ಕಡಿಮೆ ಮಾಡುವಲ್ಲಿ ಇದು ರಾಮಬಾಣ. ಇಂದಿನ ವೇಗದ ಜಗತ್ತಿನಲ್ಲಿ ಜನರು ಜಂಕ್ ಫುಡ್ ಮತ್ತು ಅನಾರೋಗ್ಯಕರ ಜೀವನಶೈಲಿಗೆ ಒಗ್ಗಿಕೊಂಡಿದ್ದಾರೆ. ಇದರಿಂದಾಗಿ ತಲೆಮಾರುಗಳಿಂದ ಬಂದ ಅತ್ಯುತ್ತಮ ಆಹಾರ ಪದ್ಧತಿಗಳು ಮರೆಯಾಗುತ್ತಿವೆ. ಅಂತಹವುಗಳಲ್ಲಿ ಪ್ರಮುಖವಾದುದು […]
ಏಷ್ಯಾದಲ್ಲಿ ನೆಮ್ಮದಿಯ ಬದುಕಿಗೆ ಈ ದೇಶಗಳೇ ಬೆಸ್ಟ್ ಭಾರತಕ್ಕೆ ಎಷ್ಟನೇ ಸ್ಥಾನ?
ದೇಶ ಸುತ್ತಿ ನೋಡು, ಕೋಶ ಓದಿ ನೋಡು ಎಂಬ ಗಾದೆ ಮಾತಿನಂತೆ, ಒಂದು ದೇಶದ ನೈಜ ಚಿತ್ರಣ ಸಿಗುವುದು ಅಲ್ಲಿನ ಜನರ ಜೀವನಶೈಲಿಯನ್ನು ಹತ್ತಿರದಿಂದ ನೋಡಿದಾಗ ಮಾತ್ರ. ಆದರೆ, ಇಂದಿನ ದಿನಗಳಲ್ಲಿ ಒಂದು ದೇಶ ಎಷ್ಟು ಮುಂದುವರಿದಿದೆ ಎಂಬುದನ್ನು ಕೇವಲ ಅಲ್ಲಿನ ಹಣಕಾಸಿನ ಬೆಳವಣಿಗೆ ಅಥವಾ ಜಿಡಿಪಿ (GDP) ಮೇಲೆ ಅಳೆಯಲಾಗುತ್ತಿಲ್ಲ. ಬದಲಾಗಿ, ಅಲ್ಲಿನ ಜನರು ಎಷ್ಟು ಸುರಕ್ಷಿತವಾಗಿದ್ದಾರೆ? ಅವರಿಗೆ ಸಿಗುವ ಆರೋಗ್ಯ ಸೇವೆ ಎಂತದ್ದು? ಮತ್ತು ಅವರ ಉಸಿರಾಡುವ ಗಾಳಿ ಎಷ್ಟು ಶುದ್ಧವಾಗಿದೆ? ಎಂಬ ಅಂಶಗಳ […]
BREAKING: ವಿಧಾನಮಂಡಲ ಜಂಟಿ ಅಧಿವೇಶನ ವಿಸ್ತರಣೆ
ಬೆಂಗಳೂರು: ವಿಧಾನಮಂಡಲ ವಿಶೇಶ ಜಂಟಿ ಅಧಿವೇಶನದ ಅವಧಿ ವಿಸ್ತರಣೆಯಾಗಿದೆ. ಈ ಬಗ್ಗೆ ವಿಧಾನಸಭೆಯ ಕಾರ್ಯಕಲಾಪ ಸಲಹಾ ಸಮಿತಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ವಿಧಾನಮಂಡಲ ಜಂಟಿ ಅಧಿವೇಶನವನ್ನು ಮೂರು ದಿನಗಳ ಕಾಲ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಜನವರಿ 31ರವರೆಗೆ ನಡೆಯಬೇಕಾಗಿದ್ದ ಜಂಟಿ ಅಧಿವೇಶನ ಇದೀಗ ಫೆಬ್ರವರಿ ೪ರವರೆಗೆ ನಡೆಯಲಿದೆ. ವಿಧಾನಸೌಧದಲ್ಲಿ ನಡೆದ ವಿಧಾನಸಭೆ ಕಾರ್ಯಕಲಾಪ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಮನರೇಗಾ ಹೆಸರು ಬದಲಾಯಿಸಿ ಕೇಂದ್ರ ಸರ್ಕಾರ ವಿಬಿಜಿ ರಾಮ್ ಜಿ ಕಾಯ್ದೆ ಜಾರಿಗೆ ತಂದಿದ್ದು, ಕೇಂದ್ರ […]
BIG NEWS : ಭಾರತದ ಯುವಜನತೆಯಲ್ಲಿ ‘ಡಿಜಿಟಲ್ ವ್ಯಸನ’ಅಪಾಯಕಾರಿ ಮಟ್ಟ ತಲುಪಿದೆ ‘ : ಆರ್ಥಿಕ ಸಮೀಕ್ಷೆ ಎಚ್ಚರಿಕೆ
ಭಾರತದ ಯುವಜನತೆಯಲ್ಲಿ ಹೆಚ್ಚುತ್ತಿರುವ ಡಿಜಿಟಲ್ ವ್ಯಸನ (Digital Addiction) ಕೇವಲ ಒಂದು ಹವ್ಯಾಸವಲ್ಲ, ಅದೊಂದು ಗಂಭೀರ ಸಾಮಾಜಿಕ ಮತ್ತು ಆರೋಗ್ಯ ಸಮಸ್ಯೆಯಾಗಿ ಮಾರ್ಪಟ್ಟಿದೆ. ಡಿಜಿಟಲ್ ಸಾಧನಗಳ (ಸ್ಮಾರ್ಟ್ಫೋನ್, ಲ್ಯಾಪ್ಟಾಪ್) ಅಥವಾ ಆನ್ಲೈನ್ ಚಟುವಟಿಕೆಗಳ (ಸೋಷಿಯಲ್ ಮೀಡಿಯಾ, ಗೇಮಿಂಗ್) ಮೇಲಿನ ಅತಿಯಾದ ಮತ್ತು ನಿಯಂತ್ರಿಸಲಾಗದ ಅವಲಂಬನೆಯನ್ನು ಡಿಜಿಟಲ್ ವ್ಯಸನ ಎನ್ನಲಾಗುತ್ತದೆ. ಇದು ವ್ಯಕ್ತಿಯ ದೈನಂದಿನ ಕೆಲಸ, ಶಿಕ್ಷಣ ಮತ್ತು ಮಾನಸಿಕ ನೆಮ್ಮದಿಗೆ ಅಡ್ಡಿಪಡಿಸುತ್ತದೆ. ಭಾರತದ ಯುವಜನತೆಯಲ್ಲಿ ಅಪಾಯಕಾರಿ ‘ಡಿಜಿಟಲ್ ವ್ಯಸನ’ ಹೆಚ್ಚುತ್ತಿದೆ ಎಂದು ಆರ್ಥಿಕ ಸಮೀಕ್ಷೆಯಲ್ಲಿ ಕೇಂದ್ರ ಸರ್ಕಾರ […]
ಇಂಜೆಕ್ಷನ್, ಇನ್ಸ್ಟಾ ಪೋಸ್ಟ್, ವೈರಲ್ ವಿಡಿಯೋ: ರಾಜಸ್ಥಾನದ ಸಾಧ್ವಿ ಪ್ರೇಮ್ ಬೈಸಾ ನಿಗೂಢ ಸಾವು!
ರಾಜಸ್ಥಾನದ ಪ್ರಸಿದ್ಧ ಕಥಾ ವಾಚಕಿ ಸಾಧ್ವಿ ಪ್ರೇಮ್ ಬೈಸಾ ಜನವರಿ 28ರಂದು ಜೋಧ್ಪುರದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಅವರನ್ನು ಕರೆದುಕೊಂಡು ಬರುವಷ್ಟರಲ್ಲಿಯೇ ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ಈ ಸಾವು ನಿಗೂಢವಾಗಿದ್ದು, ಹಲವಾರು ಪಶ್ನೆಗಳನ್ನು ಎತ್ತಿದೆ. ಸಾಧ್ವಿ ಪ್ರೇಮ್ ಬೈಸಾ ಮೃತಪಟ್ಟ ಸುಮಾರು 4 ಗಂಟೆಗಳ ಬಳಿಕ ಅವರ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಒಂದು ಪೋಸ್ಟ್ ಹಾಕಲಾಗಿದೆ. “ನನಗೆ ಬದುಕಿದ್ದಾಗ ನ್ಯಾಯ ಸಿಗಲಿಲ್ಲ, ಸಾವಿನ ನಂತರವಾದರೂ ಸಿಗಬಹುದು” ಎಂದು ಬರಹವಿದ್ದು, ಇದು ಕುತೂಹಲಕ್ಕೆ ಕಾರಣವಾಗಿದೆ. ಸದ್ಯದ ಮಾಹಿತಿ […]
BREAKING: ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಕಡ್ಡಾಯ
ಬೆಂಗಳೂರು: ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಕಡ್ಡಾಯ ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಮುಖ್ಯಕಾರ್ಯದರ್ಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೇಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಕಡ್ಡಾಯ ತೀರ್ಮಾನ ಕೈಗೊಳ್ಳಲಾಯಿತು. ಪ್ರತಿ ತಿಂಗಳ ಮೊದಲ ಶನಿವಾರ ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಕಡ್ಡಾಯವಾಗಿ ಧರಿಸಬೇಕು. ಖಾದಿ ಬಟ್ಟೆಗಳನ್ನು ನೌಕರರು ಸರ್ಕಾರಿ ಸ್ವಾಮ್ಯದ ಖಾದಿ ಗ್ರಾಮೋದ್ಯೋಗ […]
ಬೆಂಗಳೂರು : ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2026-27ನೇ ಸಾಲಿಗಾಗಿ ರಾಜ್ಯಾದ್ಯಂತ ಇರುವ ಕ್ರೀಡಾ ಶಾಲೆಗಳು ಹಾಗೂ ಕ್ರೀಡಾ ವಸತಿ ನಿಲಯಗಳಿಗೆ 5 ನೇ ತರಗತಿ ಹಾಗೂ 8 ನೇ ತರಗತಿ ಪ್ರವೇಶಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆ ಪ್ರಕ್ರಿಯೆ: ಆಯ್ಕೆಯು ಕೇವಲ ಅಂಕಗಳ ಮೇಲೆ ಇರುವುದಿಲ್ಲ, ಬದಲಾಗಿ ಈ ಕೆಳಗಿನ ಹಂತಗಳನ್ನು ಒಳಗೊಂಡಿರುತ್ತದೆ: ದೈಹಿಕ ಸಾಮರ್ಥ್ಯ ಪರೀಕ್ಷೆ: ಎತ್ತರ, ತೂಕ ಮತ್ತು ಕ್ರೀಡಾ ಕೌಶಲಗಳ ಪರೀಕ್ಷೆ ನಡೆಸಲಾಗುತ್ತದೆ. ಜಿಲ್ಲಾ ಮಟ್ಟದ ಆಯ್ಕೆ: ಮೊದಲು […]
ಬೆಂಗಳೂರು: ಇಂಧನ ಇಲಾಖೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯನವರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿದ್ದರು ಎಂಬ ಸುದ್ದಿ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇದೇ ವಿಚಾರ ಇಂದು ವಿಧಾನಮಂಡಲ ಅಧಿವೇಶನದಲ್ಲಿಯೂ ಪ್ರತಿಧ್ವನಿಸಿದೆ. ರಾಜೀನಾಮೆ ಗೊಂದಲದ ಬಗ್ಗೆ ಸ್ವತಃ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರೇ ಸ್ಪಷ್ಟನೆ ನೀಡಿದರೂ ಸದನದಲ್ಲಿ ಪದೇ ಪದೇ ವಿಷಯ ಚರ್ಚೆಗೆ ಬಂದಿದೆ. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ರಹಸ್ಯದ ಬಗ್ಗೆ ವಿಧಾನಸಭೆಯಲ್ಲಿ ಪ್ರತಿಕ್ರಿಯೆ ನೀಡಿದರು. ಇಂಧನ […]
‘ESIC’ನೋಂದಣಿ : ಉದ್ಯೋಗಿಗಳಿಗೆ ಬಿಗ್ ಅಪ್ ಡೇಟ್.!
ಕಾರ್ಮಿಕರ ರಾಜ್ಯ ವಿಮಾ ನಿಗಮವು (ಇಎಸ್ಐಸಿ) ಉದ್ಯೋಗದಾತರು ಮತ್ತು ಉದ್ಯೋಗಿಗಳ ನೋಂದಣಿಯನ್ನು ಉತ್ತೇಜಿಸುವ ಯೋಜನೆಯಡಿ ಉದ್ಯೋಗದಾತರು ಮತ್ತು ಉದ್ಯೋಗಿಗಳು ನೋಂದಾಯಿಕೊಳ್ಳಲು ಜ.31 ರ ವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕಲಬುರಗಿ ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕ ಯುವರಾಜ ಎಸ್.ವಿ ಅವರು ತಿಳಿಸಿದ್ದಾರೆ. ಉದ್ಯೋಗದಾತರು ಮತ್ತು ಉದ್ಯೋಗಿಗಳ ನೋಂದಣಿಯನ್ನು ಉತ್ತೇಜಿಸುವ ಯೋಜನೆಯು ಕಾರ್ಮಿಕರ ರಾಜ್ಯ ವಿಮಾ ನಿಗಮವು ಸಾಮಾಜಿಕ ಭದ್ರತಾ ವ್ಯಾಪ್ತಿಯನ್ನು ವಿಸ್ತರಿಸಲು ಅನುಮೋದಿಸಿದ ಒಂದು ವಿಶೇಷ ಉಪಕ್ರಮವಾಗಿದ್ದು, ಇದರಡಿ ನೋಂದಾಯಿಸಿಕೊಳ್ಳಲು 31ನೇ ಡಿಸೆಂಬರ್ 2025 ರವರೆಗೆ ಅವಕಾಶ […]
₹15 ಲಕ್ಷ ಖರ್ಚು ಮಾಡಿ ಸಾಕುನಾಯಿಯನ್ನು ಆಸ್ಟ್ರೇಲಿಯಾಕ್ಕೆ ಕರೆದೊಯ್ದ ಹೈದರಾಬಾದ್ ದಂಪತಿ: ಹಣಕ್ಕಿಂತ ಮಿಗಿಲು ಮಮಕಾರ
ಹೈದರಾಬಾದ್: ನಾಯಿಯ ಪ್ರೀತಿ ಪ್ರೀತಿಯ ಅತ್ಯಂತ ಶುದ್ಧ ರೂಪ ಎಂಬ ಮಾತಿಗೆ ಹೈದರಾಬಾದ್ನ ದಿವ್ಯಾ ಮತ್ತು ಜಾನ್ ದಂಪತಿ ಜೀವಂತ ಉದಾಹರಣೆಯಾಗಿ ನಿಂತಿದ್ದಾರೆ. ವೃತ್ತಿ ಬದುಕಿನ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾಕ್ಕೆ ವಲಸೆ ಹೋದ ಈ ದಂಪತಿ ತಮ್ಮ ಪ್ರೀತಿಯ ಸಾಕುನಾಯಿ ಸ್ಕೈ (Sky) ನನ್ನು ಬಿಟ್ಟಿರಲಾರದೆ ಬರೋಬ್ಬರಿ 15 ಲಕ್ಷ ರೂಪಾಯಿ ಖರ್ಚು ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಹೈದರಾಬಾದ್ನ ದಂಪತಿಗಳು ತಮ್ಮ ಪ್ರೀತಿಯ ಸಾಕುನಾಯಿ ‘ಸ್ಕೈ’ (Sky) ನನ್ನು ಆಸ್ಟ್ರೇಲಿಯಾಕ್ಕೆ ಕರೆದೊಯ್ಯಲು ಸುಮಾರು 15 ಲಕ್ಷ […]
ಬೆಂಗಳೂರು : ಕರ್ನಾಟಕ ಸರ್ಕಾರವು ಪೊಲೀಸ್ ಸಿಬ್ಬಂದಿಗಳ ಕೆಲಸದ ಒತ್ತಡವನ್ನು ಕಡಿಮೆ ಮಾಡಲು ಮತ್ತು ಅವರ ಕೌಟುಂಬಿಕ ಜೀವನಕ್ಕೆ ಪ್ರಾಮುಖ್ಯತೆ ನೀಡಲು ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಸಾಂದರ್ಭಿಕ ರಜೆ (Casual Leave) ಮಂಜೂರು ಮಾಡಿ ಮಹತ್ವದ ಆದೇಶ ಹೊರಡಿಸಿದೆ. ದಿನದ 24 ಗಂಟೆಯೂ ಕರ್ತವ್ಯದಲ್ಲಿರುವ ಪೊಲೀಸರು ತಮ್ಮ ವೈಯಕ್ತಿಕ ಮತ್ತು ಕೌಟುಂಬಿಕ ಸಂಭ್ರಮಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.ಪೊಲೀಸ್ ಇಲಾಖೆಯ ಕೆಲಸದ ದಕ್ಷತೆಯನ್ನು ಹೆಚ್ಚಿಸಲು ಮತ್ತು ಸಿಬ್ಬಂದಿಗಳ ಮಾನಸಿಕ ಆರೋಗ್ಯ […]
ಟಿ-20 ವಿಶ್ವಕಪ್: ಭಾರತ-ಪಾಕಿಸ್ತಾನ ತಂಡದ ಭದ್ರತೆಗೆ ವಿಶೇಷ ಪಡೆ ನಿಯೋಜಿಸಿದ ಶ್ರೀಲಂಕಾ
ಐಸಿಸಿ ಟಿ-20 ಪುರುಷರ ವಿಶ್ವಕಪ್ ಪಂದ್ಯಗಳು ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿವೆ. ಮುಂದಿನ ತಿಂಗಳು ಆರಂಭವಾಗಲಿರುವ ಪಂದ್ಯಗಳಿಗೆ ಭದ್ರತೆ ಒದಗಿಸಲು ಶ್ರೀಲಂಕಾ ವಿಶೇಷ ಪಡೆಯನ್ನು ನಿಯೋಜನೆ ಮಾಡಿದೆ. ಅದರಲ್ಲೂ ಸಂಪ್ರಾದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ತಂಡ, ಪಂದ್ಯಕ್ಕೆ ವಿಶೇಷ ಭದ್ರತೆ ಇರಲಿದೆ. ಟಿ-20 ವಿಶ್ವಕಪ್ ತಂಡಗಳ ಭದ್ರತೆಗೆ ಶ್ರೀಲಂಕಾ ಗಣ್ಯರ ಭದ್ರತೆಗೆ ಬಳಕೆ ಮಾಡುವ ಸಶಸ್ತ್ರ ಪಡೆಗಳನ್ನು ನಿಯೋಜಿಸಲಿದೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಪಂದ್ಯಗಳಿಗೆ ವಿಶೇಷ ಒತ್ತು ನೀಡುವ ಭದ್ರತಾ ಕ್ರಮಗಳ ಕುರಿತು ಈಗಾಗಲೇ ಯೋಜನೆ ತಯಾರು […]
BREAKING : ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಭೇಟಿಯಾದ ಕಾನ್ಸ್’ಟೇಬಲ್ ಗೆ ಸಂಕಷ್ಟ.!
ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ನಿಯಮ ಉಲ್ಲಂಘಿಸಿ ಭೇಟಿಯಾದ ಯಲಹಂಕ ಮೂಲದ ಕಾನ್ಸ್ಟೇಬಲ್ ಒಬ್ಬರ ಪ್ರಕರಣ ಈಗ ಭಾರೀ ಸುದ್ದಿಯಲ್ಲಿದೆ. ಹೌದು ಈ ಘಟನೆಯು ಜನವರಿ 24, 2026 ರಂದು ನಡೆದಿದೆ. ಯಲಹಂಕ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಒಬ್ಬರು ಬೇರೊಂದು ಪ್ರಕರಣದ ಆರೋಪಿಗಳನ್ನು ಜೈಲಿಗೆ ಬಿಡಲು ಬಂದಿದ್ದರು. ಆದರೆ, ತಮ್ಮ ಅಧಿಕೃತ ಕೆಲಸ ಮುಗಿಸಿದ ನಂತರ ನಟ ದರ್ಶನ್ ಅವರನ್ನು ಭೇಟಿ ಮಾಡುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಜೈಲಿನ ವಾರ್ಡನ್ ಪ್ರಭು […]
ಮನುಷ್ಯನ ಆಯಸ್ಸು 150 ವರ್ಷಕ್ಕೆ ಏರುತ್ತಾ? ವಿಜ್ಞಾನಿಗಳು ಪತ್ತೆಹಚ್ಚಿದ ಜೈವಿಕ ಗಡಿಯಾರದ ರಹಸ್ಯವೇನು?
ಇತ್ತೀಚಿನ ವೈಜ್ಞಾನಿಕ ಬೆಳವಣಿಗೆಗಳ ಪ್ರಕಾರ, ಮನುಷ್ಯನ ಜೀವಿತಾವಧಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ದೊಡ್ಡ ಮಟ್ಟದ ಸಂಶೋಧನೆಗಳು ನಡೆಯುತ್ತಿವೆ. ಈ ಬಗ್ಗೆ ತಜ್ಞರು ನೀಡಿರುವ ಪ್ರಮುಖ ಮಾಹಿತಿಗಳು ಇಲ್ಲಿವೆ: 1. ಎಪಿಜೆನೆಟಿಕ್ ಗಡಿಯಾರ (Horvath Clock): ಆಂಟಿ-ಏಜಿಂಗ್ ತಂತ್ರಜ್ಞಾನದ ತಜ್ಞ ಸ್ಟೀವ್ ಹೋರ್ವತ್ ಅವರ ಪ್ರಕಾರ, ಮನುಷ್ಯ ಶೀಘ್ರದಲ್ಲೇ 150 ವರ್ಷಗಳವರೆಗೆ ಬದುಕುವ ಸಾಧ್ಯತೆ ಇದೆ. ಅವರು ಅಭಿವೃದ್ಧಿಪಡಿಸಿರುವ ‘ಡಿಎನ್ಎ ಮೆತಿಲೇಷನ್’ (DNA Methylation) ಪರೀಕ್ಷೆಯು ಒಬ್ಬ ವ್ಯಕ್ತಿಯ ಜೈವಿಕ ವಯಸ್ಸನ್ನು (Biological Age) ಅಳೆಯಬಲ್ಲದು. ಅಂದರೆ, ನಿಮ್ಮ ನಿಜವಾದ […]
ತಿಂಗಳಿಗೆ ₹12 ಲಕ್ಷದವರೆಗೆ ಗಳಿಸಬಹುದು: ಪೈಲಟ್ ವೃತ್ತಿಯ ಆಕರ್ಷಕ ಸಂಬಳ ಮತ್ತು ಸವಾಲುಗಳ ಮಾಹಿತಿ ಇಲ್ಲಿದೆ
ಪೈಲಟ್ ಆಗುವುದು ಎಂದರೆ ಅದು ಕೇವಲ ಆಕಾಶದಲ್ಲಿ ಹಾರಾಡುವ ಕನಸಲ್ಲ, ಅದೊಂದು ಜವಾಬ್ದಾರಿಯುತ ಮತ್ತು ಸವಾಲಿನ ವೃತ್ತಿ. ಪೈಲಟ್ಗಳ ಸಂಬಳ, ತರಬೇತಿ ಮತ್ತು ಜವಾಬ್ದಾರಿಗಳ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ: ಪೈಲಟ್ ಸಂಬಳ: ತಿಂಗಳಿಗೆ ಎಷ್ಟು ಗಳಿಸಬಹುದು? ವಾಣಿಜ್ಯ ಪೈಲಟ್ (Commercial Pilot) ಆಗಿ ಕೆಲಸ ಮಾಡುವವರಿಗೆ ಅವರ ಅನುಭವ ಮತ್ತು ಹಾರಾಟದ ಸಮಯದ ಆಧಾರದ ಮೇಲೆ ಆಕರ್ಷಕ ಸಂಬಳ ನೀಡಲಾಗುತ್ತದೆ. ಆರಂಭಿಕ ಹಂತ (Fresher): ಕಮರ್ಷಿಯಲ್ ಪೈಲಟ್ ಲೈಸೆನ್ಸ್ (CPL) ಹೊಂದಿರುವ ಹೊಸಬರಿಗೆ ತಿಂಗಳಿಗೆ ಸುಮಾರು […]
ವೆಸ್ಪಾದಿಂದ ಹೊಸ ಐಷಾರಾಮಿ ಸ್ಕೂಟರ್ 946 ಹಾರ್ಸ್ ಅನಾವರಣ: ಕುದುರೆಯ ಜೀನಿನಂತಹ ಸೀಟ್ ಇದರ ವಿಶೇಷತೆ
ಲೂನಾರ್ ಕ್ಯಾಲೆಂಡರ್ ಆಧಾರಿತವಾಗಿ ಪ್ರತಿ ವರ್ಷ ವಿಶೇಷ ಆವೃತ್ತಿಗಳನ್ನು ಬಿಡುಗಡೆ ಮಾಡುವ ಸಂಪ್ರದಾಯವನ್ನು ವೆಸ್ಪಾ ಮುಂದುವರಿಸಿದೆ. ಈ ಹಿಂದೆ ಬಿಡುಗಡೆಯಾದ ಡ್ರ್ಯಾಗನ್ ಮತ್ತು ಸ್ನೇಕ್ ಎಡಿಷನ್ಗಳ ನಂತರ, ಈಗ ಕುದುರೆಯ ಥೀಮ್ ಹೊಂದಿರುವ ಈ ಮಾದರಿಯನ್ನು ಪರಿಚಯಿಸಲಾಗಿದೆ. ಪ್ರಮುಖ ವೈಶಿಷ್ಟ್ಯಗಳು: ವಿಶಿಷ್ಟ ಬಣ್ಣ ಮತ್ತು ವಿನ್ಯಾಸ: ಈ ಸ್ಕೂಟರ್ ಕುದುರೆಗಳ ಬಣ್ಣವನ್ನು ಹೋಲುವ ‘ಬೇ ಬ್ರೌನ್’ (Bay Brown) ಎಂಬ ಗಾಢ ಕಂದು ಬಣ್ಣದಲ್ಲಿದೆ. ಇದರ ಬಾಡಿಯು ಸ್ಟೀಲ್ ಮೋನೊಕಾಕ್ ವಿನ್ಯಾಸ ಹೊಂದಿದ್ದು, ಮ್ಯಾಟ್ ಮತ್ತು ಗ್ಲೋಸಿ […]
Ajit Pawar Plane Crash: “ಓಹ್ ಶಟ್” : ಅಪಘಾತಕ್ಕೂ ಮುನ್ನ ಪೈಲಟ್ ಹೇಳಿದ ಕೊನೆಯ ಮಾತುಗಳು ಇವು.!
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಭೀಕರ ವಿಮಾನ ಅಪಘಾತಕ್ಕೆ ಸಂಬಂಧಿಸಿದಂತೆ ಕೆಲವು ಆಘಾತಕಾರಿ ವಿಷಯಗಳು ಬೆಳಕಿಗೆ ಬರುತ್ತಿವೆ. ವಿಮಾನವು ಪತನಗೊಳ್ಳುವ ಕೆಲವೇ ಕ್ಷಣಗಳ ಮೊದಲು ಕಾಕ್ಪಿಟ್ನಲ್ಲಿ ದಾಖಲಾದ ಕೊನೆಯ ಮಾತುಗಳು ಈಗ ಎಲ್ಲರನ್ನೂ ದಿಗ್ಭ್ರಮೆಗೊಳಿಸಿವೆ. ಮುಂಬೈನಿಂದ ಬಾರಾಮತಿಗೆ ಪ್ರಯಾಣಿಸುತ್ತಿದ್ದ ಈ ಖಾಸಗಿ ವಿಮಾನವು ಲ್ಯಾಂಡಿಂಗ್ ಸಮಯದಲ್ಲಿ ನಿಯಂತ್ರಣ ತಪ್ಪಿ ನೆಲಕ್ಕೆ ಅಪ್ಪಳಿಸಿತು. ಈ ವೇಳೆ ಅಜಿತ್ ಪವಾರ್ ಅವರೊಂದಿಗೆ ಪೈಲಟ್ ಸುಮಿತ್ ಕಪೂರ್, ಸಹ-ಪೈಲಟ್ ಶಾಂಭವಿ ಪಾಠಕ್ ಮತ್ತು ಸಿಬ್ಬಂದಿ ಸೇರಿದಂತೆ ಒಟ್ಟು […]
BREAKING : ಆರ್ಥಿಕ ಸಮೀಕ್ಷೆ ವರದಿ ಮಂಡನೆ : 2026-27 ರಲ್ಲಿ ಶೇ. 6.8 ರಿಂದ 7.2 ರಷ್ಟು ‘GDP’ಬೆಳವಣಿಗೆ ನಿರೀಕ್ಷೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ (ಜನವರಿ 29) ಸಂಸತ್ತಿನಲ್ಲಿ ಆರ್ಥಿಕ ಸಮೀಕ್ಷೆಯನ್ನು (Economic Survey) ಬಿಡುಗಡೆ ಮಾಡಿದರು. ಇದರ ಪ್ರಕಾರ, 2026-27ರ ಹಣಕಾಸು ವರ್ಷದಲ್ಲಿ (FY27) ಭಾರತದ ಆರ್ಥಿಕತೆಯು ಶೇಕಡಾ 6.8 ರಿಂದ 7.2 ರಷ್ಟು ವೃದ್ಧಿ ದರವನ್ನು ದಾಖಲಿಸಲಿದೆ ಎಂದು ಅಂದಾಜಿಸಲಾಗಿದೆ. ಜಾಗತಿಕ ರಾಜಕೀಯ ಉದ್ವಿಗ್ನತೆ ಮತ್ತು ಆರ್ಥಿಕ ಅನಿಶ್ಚಿತತೆಯ ನಡುವೆಯೂ ಭಾರತದ ಆರ್ಥಿಕತೆಯು ಸ್ಥಿರವಾಗಿ ಮುನ್ನುಗ್ಗುತ್ತಿರುವುದು ಗಮನಾರ್ಹ. ದೇಶದ ಸಂಭಾವ್ಯ ಬೆಳವಣಿಗೆ ದರ (Potential Growth) ಸುಮಾರು ಶೇ. 7 […]
BIG NEWS: ಪಂಜಾಬ್ ಹಾಗೂ ಹರಿಯಾಣ ಸಚಿವಾಲಯಕ್ಕೆ ಬಾಂಬ್ ಬೆದರಿಕೆ
ನವದೆಹಲಿ: ರಾಷ್ಟ್ರಾದ್ಯಂತ ಇತ್ತೀಚಿನ ದಿನಗಳಲ್ಲಿ ಬಾಂಬ್ ಬೆದರಿಕೆ ಕರೆಗಳು ಹೆಚ್ಚುತ್ತಿವೆ. ರಾಷ್ಟ್ರ ರಾಜಧಾನಿ ದೆಹಲಿಯ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಬೆನ್ನಲ್ಲೇ ಇದೀಗ ಪಂಜಾಬ್, ಹರಿಯಾಣ ಸಚಿವಾಲಯಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಪಂಜಾಬ್ ಹಾಗೂ ಹರಿಯಾಣ ಸಚಿವಾಲಯಕ್ಕೆ ದುಷ್ಕರ್ಮಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನಿಸಿದ್ದಾರೆ. ತಕ್ಷಣ ಪೊಲೀಸರು, ಬಾಂಬ್ ಪತ್ತೆದಳ, ಬಾಂಬ್ ನಿಷ್ಕ್ರಿಯ ದಳ ಕಾರ್ಯಪ್ರವೃತ್ತರಾಗಿದ್ದು, ಸಚಿವಾಲಯದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸಚಿವಾಲಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಪರಿಶೀಲನೆ ನಡೆಸಿದ್ದು, ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ […]
ಮಲೆ ಮಹದೇಶ್ವರ ಜಾತ್ರೆ 2026: ಭಕ್ತರಿಗೆ ಅಪ್ಡೇಟ್ಗಳು
ಕರ್ನಾಟಕದ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟ 2026ನೇ ಸಾಲಿನ ಜಾತ್ರೆಗೆ ತಯಾರಾಗುತ್ತಿದೆ. ಮಹಾಶಿವರಾತ್ರಿ ಹಾಗೂ ಯುಗಾದಿ ಜಾತ್ರಾ ಸಂದರ್ಭದಲ್ಲಿ ಭಕ್ತಾಧಿಗಳಿಗೆ ಹೆಚ್ಚಿನ ಮೂಲಸೌಲಭ್ಯಗಳನ್ನು ಕಲ್ಪಿಸಲು ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಸೂಚನೆ ನೀಡಿದ್ದಾರೆ. ಬೆಂಗಳೂರಿನ ವಿಕಾಸಸೌಧದ 4ನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 419ರಲ್ಲಿ ಮಹಾಶಿವರಾತ್ರಿ ಹಾಗೂ ಯುಗಾದಿ ಜಾತ್ರಾ ಸಂಬಂಧ ನಡೆದ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು. ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಉಪಾಧ್ಯಕ್ಷರು ಆಗಿರುವ ಜಿಲ್ಲಾ ಉಸ್ತುವಾರಿ […]
BREAKING NEWS : ‘UGC’ಯ ಹೊಸ ನಿಯಮಗಳಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ.!
ನವದೆಹಲಿ : ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯ ತಡೆಯಲು ವಿಶ್ವವಿದ್ಯಾಲಯ ಧನಸಹಾಯ ಆಯೋಗ (UGC) ಹೊರತಂದಿದ್ದ ಹೊಸ ನಿಯಮಗಳಿಗೆ ಸುಪ್ರೀಂ ಕೋರ್ಟ್ ಗುರುವಾರ ಮಧ್ಯಂತರ ತಡೆ ನೀಡಿದೆ. ಈ ನಿಯಮಗಳು ಸಮಾಜದಲ್ಲಿ ಒಡಕು ಮೂಡಿಸುವ ಸಾಧ್ಯತೆಯಿದೆ ಎಂದು ನ್ಯಾಯಾಲಯ ಕಳವಳ ವ್ಯಕ್ತಪಡಿಸಿದೆ. ಹೌದು, ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (UGC) ಹೊರತಂದಿದ್ದ ಹೊಸ ತಾರತಮ್ಯ ವಿರೋಧಿ ನಿಯಮಗಳ ಜಾರಿಗೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದೆ. ಈ ಮಾರ್ಗಸೂಚಿಗಳು “ಅಸ್ಪಷ್ಟವಾಗಿವೆ” ಮತ್ತು ಇವುಗಳು ದುರ್ಬಳಕೆಯಾಗುವ ಸಾಧ್ಯತೆಯಿದೆ […]
ಬೆಂಗಳೂರು: ಗುತ್ತಿಗೆದಾರರ ಬಾಕಿ ಬಿಲ್ ಪಾವತಿ ಮಾಡುವಂತೆ ರಾಜ್ಯ ಗುತ್ತಿಗೆದಾರರ ಸಂಘಟನೆ ಮತ್ತೆ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದು, ರಾಜ್ಯ ಸರ್ಕಾರಕ್ಕೆ ಡೆಡ್ ಲೈನ್ ನೀಡಿದೆ. ರಾಜ್ಯ ಸರ್ಕಾರ ವಿವಿಧ ಇಲಾಖೆಗಳಲ್ಲಿ ಗುತ್ತಿಗೆದಾರರಿಗೆ ಹಣ ಪಾವತಿಸದೇ ಬಾಕಿ ಉಳಿಸಿಕೊಂಡಿದ್ದು, ತಕ್ಷಣ ಬಾಕಿ ಹಣ ಬಿಡುಗಡೆ ಮಾಡುವಂತೆ ಗುತ್ತಿಗೆದಾರರ ಸಂಘಟನೆ ಆಗ್ರಹಿಸಿದೆ. ಇಲ್ಲವಾದಲ್ಲಿ ಕಾಮಗಾರಿ ಸ್ಥಗಿತಗೊಳಿಸುವುದಾಗಿ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಗುತ್ತಿಗೆದಾರರ ಸಂಘಟನೆ ಅಧ್ಯಕ್ಷ, ಆರ್.ಮಂಜುನಾಥ್, ರಾಜ್ಯ ಸರ್ಕಾರ 37,370 ಕೋಟಿ ರೂ.ಬಾಕಿ ಉಳಿಸಿಕೊಂಡಿದೆ. ಕಳೆದ ಎರಡು […]
ಗ್ರಾಮೀಣ ಜನರ ಹಕ್ಕುಗಳನ್ನು ಕಸಿಯುತ್ತಿರುವ ಕೇಂದ್ರದ ವಿರುದ್ಧ ‘ಗ್ರಾಮಸಂಗ್ರಾಮ’ : ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು : ಗ್ರಾಮೀಣ ಜನರು ವಲಸೆ ಹೋಗುವುದನ್ನು ತಪ್ಪಿಸಬೇಕು, ಗ್ರಾಮೀಣ ಜನರಿಗೆ ಉದ್ಯೋಗ ನೀಡಬೇಕು ಎಂಬ ಸದುದ್ದೇಶದಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿಯನ್ನು ಜಾರಿಗೆ ತರಲಾಗಿತ್ತು. ಇದರಿಂದ ಗ್ರಾಮೀಣ ಭಾಗದ ಪುರುಷರಿಗೂ, ಮಹಿಳೆಯರಿಗೆ ಸಮಾನವಾದ ವೇತನ ನೀಡುವ ಮೂಲಕ ವಾರ್ಷಿಕವಾಗಿ 100 ದಿನದ ಉದ್ಯೋಗವನ್ನು ನೀಡುತ್ತಿತ್ತು. ಆದರೆ ಕೇಂದ್ರ ಸರ್ಕಾರ ವಿಬಿ ಗ್ರಾಮ್ ಜಿ ಇದೆಲ್ಲ ಹಕ್ಕುಗಳನ್ನು ಹಿಂಪಡೆದು, ಮರಣ ಶಾಸನ ಬರೆಯುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ರಾಜ್ಯಗಳೂ ಅನುದಾನದ ಪಾಲು ಹಂಚಿಕೊಳ್ಳಬೇಕು […]

16 C