ಕುಂದಾಪುರ, ಸಿದ್ದಾಪುರಗಳಲ್ಲಿ ಸತತ ಅಗ್ನಿ ದುರಂತಗಳು | ನಗರದಲ್ಲಿ ಅಗ್ನಿಶಾಮಕ ವಾಹನಗಳ ಅಗತ್ಯ: ಚರ್ಚೆ ಮುನ್ನೆಲೆಗೆ
ಕುಂದಾಪುರ : ಒಂದು ವಾರದಲ್ಲಿ ಕುಂದಾಪುರ ಮತ್ತು ಸಿದ್ದಾಪುರಗಳಲ್ಲಿ ಸಂಭವಿಸಿದ ಎರಡು ಭೀಕರ ಅಗ್ನಿ ದುರಂತಗಳಲ್ಲಿ ಕೋಟ್ಯಂತರ ರೂ. ಮೌಲ್ಯದ ಸೊತ್ತುಗಳು ಸುಟ್ಟು ಬೂದಿಯಾದ ಬಳಿಕ ಇಂಥ ಆಕಸ್ಮಿಕ ಅಗ್ನಿ ಅವಘಡಗಳ ಸಂದರ್ಭದಲ್ಲಿ ತ್ವರಿತಗತಿಯಲ್ಲಿ ಹಾಗೂ ಸುಲಭದಲ್ಲಿ ಲಭ್ಯವಾಗಬೇಕಿರುವ ಅಗ್ನಿ ಶಾಮಕ ವಾಹನಗಳ ಕುರಿತ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿವೆ. ಪ್ರಸಕ್ತ ಕುಂದಾಪುರದ ಅಗ್ನಿಶಾಮಕ ದಳ ಕಚೇರಿ ನಗರದ ಹೊರವಲಯ ವಾದ ಕೋಣೆಯಲ್ಲಿದ್ದು ಆಕಸ್ಮಿಕ ಅಗ್ನಿ ಅವಘಡಗಳ ಸಂದರ್ಭಗಳಲ್ಲಿ ತುರ್ತು ಸೇವೆಗೆ ಅನುಕೂಲವಾಗಲು ಕುಂದಾಪುರ ನಗರ ಕೇಂದ್ರದಲ್ಲಿ ಅಗ್ನಿ ಶಾಮಕ ವಾಹನ ನಿಲ್ಲಲು ವ್ಯವಸ್ಥೆ ಮಾಡಿಕೊಡಬೇಕೆಂಬ ಆಗ್ರಹ ಸಾರ್ವಜನಿಕ ವಲಯದಲ್ಲಿ ಮುಂಚೂಣಿಗೆ ಬಂದಿದೆ. ಡಿ.29ರ ಬೆಳಗಿನ ಜಾವ ಕುಂದಾಪುರದ ಕೇಂದ್ರವಾದ ರಥಬೀದಿಯಲ್ಲಿ ನಡೆದ ಬಾರೀ ಅಗ್ನಿ ಅನಾಹುತ ನಾಲ್ಕಾರು ಅಂಗಡಿಗಳನ್ನು ಸುಟ್ಟು ಭಸ್ಮ ಮಾಡಿದ್ದಲ್ಲದೆ, ಕೋಟ್ಯಂತರ ರೂ.ಗಳ ಹಾನಿ ಸಂಭವಿಸಿದೆ. 20 ವರ್ಷಗಳಲ್ಲಿ ಇಂತಹ ಘೋರ ದುರಂತ ಕಂಡಿಲ್ಲ ಎಂಬುದು ನಗರದ ಹಳೆ ತಲೆಮಾರಿನ ಹಲವರ ಅಭಿಪ್ರಾಯವಾಗಿದೆ. ಇದಾದ ಎರಡು ದಿನಗಳ ಬಳಿಕ ಸಿದ್ದಾಪುರದ ಜನ್ಸಾಲೆಯ ತೆಂಗಿನ ಎಣ್ಣೆಮಿಲ್ ನಲ್ಲಿ ಕಾಣಿಸಿಕೊಂಡ ಬೆಂಕಿಗೆ ಇಡೀ ಮಿಲ್ ಸುಟ್ಟು ಹೋಗಿದ್ದು, ಐದು ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಸೊತ್ತುಗಳಿಗೆ ಹಾನಿಯಾಗಿರುವ ಮಾಹಿತಿ ಇದೆ. ಇದಲ್ಲದೆ ಕೆಲ ದಿನಗಳ ಹಿಂದೆ ಕೋಟೇಶ್ವರ ಗ್ರಾಪಂ ಬಳಿ ಎಸ್ ಎಲ್ಆರ್ಎಂ ಘಟಕದಲ್ಲೂ ಇದೇ ರೀತಿ ಬೆಂಕಿ ಅವಘಡ ಸಂಭವಿಸಿತ್ತು. ಕಳೆದ ವರ್ಷ ಗಂಗೊಳ್ಳಿಯಲ್ಲಿ ಬೋಟ್ ಅಗ್ನಿ ದುರಂತ, ಒಂದಷ್ಟು ವರ್ಷಗಳ ಹಿಂದೆ ಕುಂದಾಪುರ ನಗರದೊಳಗೆ ಮುಖ್ಯರಸ್ತೆಯಲ್ಲಿದ್ದ ಬೃಹತ್ ವಾಣಿಜ್ಯ ಮಳಿಗೆಗೆ ಬಿದ್ದ ಬೆಂಕಿ ಅನಾಹುತಗಳು ದೊಡ್ಡ ಮಟ್ಟದಲ್ಲಿ ದುರಂತವನ್ನು ಸೃಷ್ಟಿಸಿ ಅಪಾರ ನಷ್ಟಕ್ಕೆ ಕಾರಣವಾಗಿದ್ದವು. ಆಗ್ಗಾಗೆ ನದಿ-ಸಮುದ್ರಗಳಲ್ಲಿ ನಡೆಯುವ ದೋಣಿ ದುರಂತ, ಮಾನವ ಜೀವ ಹಾನಿ ಮೊದಲಾದ ಅವಘಡಗಳ ವೇಳೆ ಆ ಸಮಯಕ್ಕೆ ಅಗತ್ಯವಾಗಿ ಬೇಕಾದ ಅಗ್ನಿಶಾಮಕ ವಾಹನಗಳು ಮತ್ತು ಸಿಬ್ಬಂದಿ ಅಲಭ್ಯತೆ ಹಲವಷ್ಟು ಸಮಸ್ಯೆಗಳಿಗೆ ಎಡೆಮಾಡಿಕೊಡುತ್ತಿವೆ. ನಗರದಿಂದ ಬಹುದೂರ! ಪ್ರಸಕ್ತ ಕುಂದಾಪುರದ ಅಗ್ನಿ ಶಾಮಕ ಠಾಣೆಯಿರುವುದು ಕುಂದಾಪುರ ಪೇಟೆಯಿಂದ ನಾಲ್ಕಾರು ಕಿ.ಮೀ. ದೂರದ ಕೋಣಿ ಎಂಬಲ್ಲಿ ಇಲ್ಲಿಂದ ಮುಖ್ಯ ರಸ್ತೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಂಪರ್ಕಕ್ಕೆ ಇಕ್ಕಟ್ಟಾದ ಹಾಗೂ ಜನನಿಬಿಡ, ವಾಹನ ನಿಬಿಡ ರಸ್ತೆ ಅಡ್ಡಿ ಯಾಗುತ್ತಿದೆ. ಕೋಣಿಯಿಂದ ಕಟ್ಕೆರೆ ಮೂಲಕ ಸಾಗಿ ಕೋಟೇಶ್ವರಕ್ಕೆ ಬರುವ ರಸ್ತೆ ಹೊಂಡಗುಂಡಿಗಳಿಂದ ಕೂಡಿದೆ. ಠಾಣೆಯಿಂದ ಅನತಿ ದೂರದಲ್ಲಿರುವ ಕುಂದಾ ಪುರ- ಸಿದ್ದಾಪುರ ರಾಜ್ಯ ಹೆದ್ದಾರಿ ಕೂಡ ಹೆಸರಿಗೆ ಹೆದ್ದಾರಿಯಾಗಿದ್ದು, ಬಹಳಷ್ಟು ಒತ್ತಡದ ಹಾಗೂ ಇಕ್ಕಾಟದ ರಸ್ತೆಯಾಗಿದೆ. ಅಗ್ನಿಶಾಮಕ ವಾಹನ ಬರಲು ವಿಳಂಬವಾಗುವುದನ್ನು ತಪ್ಪಿಸಲು ನಗರ ವ್ಯಾಪ್ತಿಯಲ್ಲಿ ಒಂದಾದರೂ ವಾಹನ ತುರ್ತು ಅವಶ್ಯಕ್ಕೆ ದೊರೆತಲ್ಲಿ ಕೋಟೇಶ್ವರ ಕುಂದಾಪುರ ನಗರಗಳ ನಡುವೆ ಸಂಭವಿಸುವ ಅಗ್ನಿದುರಂತದ ತುರ್ತು ಶಮನಕ್ಕೆ ಅನುಕೂಲವಾಗಲಿದೆ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ. ಈ ಬಗ್ಗೆ ಕಂದಾಯ ಇಲಾಖೆ ಹಾಗೂ ಪುರಸಭೆ ಅಧಿಕಾರಿಗಳಿಗೂ ಜನಪ್ರತಿನಿಧಿಗಳು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಇದು ಭಾಗ್ಯ, ಇದು ಭಾಗ್ಯ, ಇದು ‘ಬಿಟ್ಟಿ ಭಾಗ್ಯ’ವಯ್ಯ!
ದೇಶದಲ್ಲಿ ಶೇ. 60-70 ಇರುವ ಬಡ ಮತ್ತು ಮಧ್ಯಮ ವರ್ಗದ ಜನಸಮುದಾಯಗಳಿಗೆ ಯಾವುದೇ ಸರಕಾರಿ ಸವಲತ್ತು, ಸಬ್ಸಿಡಿ ನೀಡಿದಾಗ ಅದು ‘ಬಿಟ್ಟಿ ಭಾಗ್ಯ’ ಎಂದು ಹೀಗಳೆಯುವವರಿಗೆ, ಹೀಗೆ ಬಲಾಢ್ಯ ಕಾರ್ಪೊರೇಟ್ಗಳ ಲಾಬಿಯ ಒತ್ತಡಕ್ಕೆ ಮಣಿದು, ಸರಕಾರಗಳು ಮಂಡಿಯೂರಿ ಸಬ್ಸಿಡಿ ನೀಡುವುದು/ಮುಂದುವರಿಸುವುದು ಏನನ್ನಿಸುತ್ತದೆ? ಭಾರತ ಸರಕಾರವು ದೇಶದ ಒಳಗೆ ಉತ್ಪಾದನೆ ಹೆಚ್ಚಳ ಹಾಗೂ ಉದ್ಯೋಗ ಸೃಷ್ಟಿಯ ಉದ್ದೇಶದಿಂದ ಆರಂಭಿಸಿದ ಉತ್ಪಾದನೆ ಆಧರಿತ ಪ್ರೋತ್ಸಾಹಧನ (ಪಿಎಲ್ಐ) ಯೋಜನೆಯ ಕುರಿತು ರಿಸರ್ವ್ ಬ್ಯಾಂಕ್ನ ಮಾಜಿ ಗವರ್ನರ್ ರಘುರಾಂ ರಾಜನ್ ಅವರು 2023ರಲ್ಲಿ ನೀಡಿದ ಕಾರ್ಣಿಕದ ‘ನುಡಿ’ಯೊಂದು ಈಗ ಅವರ ಮುಂಗಾಣ್ಕೆ ಎಷ್ಟು ನಿಖರವಾಗಿತ್ತು ಎಂಬುದನ್ನು ಸಾಬೀತುಪಡಿಸುತ್ತಿದೆ. 2021-22ನೇ ಸಾಲಿನ ಬಜೆಟ್ನಲ್ಲಿ ಕೇಂದ್ರ ಸರಕಾರವು 14 ಕ್ಷೇತ್ರಗಳಿಗೆ 1.97 ಲಕ್ಷ ಕೋಟಿ ರೂ.ಗಳ ಗಾತ್ರದ ಪಿಎಲ್ಐ ಸಬ್ಸಿಡಿಯನ್ನು ಒದಗಿಸಲು ಬಜೆಟರಿ ಅನುದಾನವನ್ನು ಪ್ರಕಟಿಸಿತ್ತು. ಈ ಯೋಜನೆಯಡಿ ಭಾರತದಲ್ಲಿ ಉತ್ಪಾದನೆ ಆದ ಸರಕುಗಳಿಗೆ ಶೇ. 4-6 ಪ್ರೋತ್ಸಾಹಧನ ಸಿಗುತ್ತದೆ. (ಗಮನಿಸಿ: ಈ ಬಗ್ಗೆ 23 ಸೆಪ್ಟಂಬರ್, 2023ರಂದು ಪ್ರಕಟಗೊಂಡ ಪಿಟ್ಕಾಯಣದಲ್ಲಿ ವಿವರವಾಗಿ ಹೇಳಲಾಗಿದೆ.) ಈ ಯೋಜನೆಯ ಸ್ವರೂಪದ ಬಗ್ಗೆ 2023ರಲ್ಲಿ ಟೀಕೆ ಮಾಡಿದ್ದ ರಘುರಾಂ ರಾಜನ್ ಅವರು, ಮೊಬೈಲ್ ಫೋನಿನ ಪ್ರಮುಖ ಬಿಡಿಭಾಗಗಳಾದ PCBA, ಡಿಸ್ಪ್ಲೇ, ಕ್ಯಾಮರಾ, ಬ್ಯಾಟರಿ, ಸೆಮಿಕಂಡಕ್ಟರ್... ಇವು ಯಾವುವೂ ಭಾರತದಲ್ಲಿ ಉತ್ಪಾದನೆ ಆಗುವುದಿಲ್ಲ. ಇಲ್ಲಿ ಏನಿದ್ದರೂ ಅವುಗಳ ಅಸೆಂಬ್ಲಿ-ಫಿನಿಷಿಂಗ್-ಟೆಸ್ಟಿಂಗ್ ನಡೆಯುತ್ತದೆ. ಅಂತಿಮವಾಗಿ ಒಂದು ಮೊಬೈಲ್ ಫೋನಿನ ಉತ್ಪಾದನಾ ವೆಚ್ಚದ ಮೇಲೆ ಇಲ್ಲಿ ನಡೆಯುವ ವ್ಯಾಲ್ಯೂ ಎಡಿಷನ್ ಕೇವಲ ಶೇ. 4 ಮಾತ್ರ. ಅದಕ್ಕೆ ಶೇ. 4-6 ಸಬ್ಸಿಡಿಯನ್ನು ಸರಕಾರ ನೀಡುವುದಿದ್ದರೆ, ಯಾರು ತಾನೇ ಬೇಡ ಎನ್ನುತ್ತಾರೆ? ಇವು ಆರಂಭದಲ್ಲಿ ಸ್ವಲ್ಪ ಉದ್ಯೋಗ ಸೃಷ್ಟಿ ಮಾಡಬಹುದಾದರೂ, ಕೌಶಲ ವೃದ್ಧಿ ಮಾಡುವುದಿಲ್ಲ. ಅಂತಿಮವಾಗಿ ಐದು ವರ್ಷ ಮುಗಿಯುವ ಹೊತ್ತಿಗೆ ಅಕಸ್ಮಾತ್ ಪಿಎಲ್ಐ ನಿಲ್ಲಿಸಿದರೆ, ಈ ಕಂಪೆನಿಗಳು ಇಲ್ಲಿಯೇ ಮುಂದುವರಿಯುವ ಗ್ಯಾರಂಟಿಯೂ ಇಲ್ಲ. ಇದು ಸಮಸ್ಯೆಯ ಒಂದು ಮುಖವಾದರೆ, ಇನ್ನೊಂದೆಡೆ ಬಿಡಿ ಭಾಗಗಳ ಆಮದು ಪ್ರಮಾಣ ತೀವ್ರವಾಗಿ ಹೆಚ್ಚಲಿದ್ದು, ಇದು ನಮ್ಮ ಆಮದು-ರಫ್ತು ಅಸಮತೋಲನಕ್ಕೆ ಕಾರಣ ಆಗಬಹುದು ಎಂದೆಲ್ಲ ವಿವರಿಸಿದ್ದರು. ರಘುರಾಂ ರಾಜನ್ ಅವರು ಹೇಳಿದ ಮಾತುಗಳು ಇಂದು ಬಹುತೇಕ ಸತ್ಯವಾಗುವ ಹಂತದಲ್ಲಿ ಇವೆ. ಪಿಎಲ್ಐ ಯೋಜನೆಯ ಉದ್ದೇಶಿತ ಐದು ವರ್ಷಗಳು 2025-26ಕ್ಕೆ ಪೂರ್ಣಗೊಳ್ಳಲಿದ್ದು, ಆ ಹಿನ್ನೆಲೆಯಲ್ಲಿ ಕೆಲವು ಸಂಗತಿಗಳು ಗಮನ ಸೆಳೆಯುತ್ತಿವೆ. ಕಳೆದ ವಾರ ಬ್ಯುಸಿನೆಸ್ ಲೈನ್ ಪತ್ರಿಕೆಯು ಸ್ಮಾರ್ಟ್ಫೋನ್ ಉದ್ಯಮದ ಮೂಲಗಳನ್ನು ಆಧರಿಸಿ, ಕೆಲವು ಬೆಳವಣಿಗೆಗಳನ್ನು ವರದಿ ಮಾಡಿತ್ತು. ಆ ವರದಿಯ ಪ್ರಕಾರ, ಬೃಹತ್ ಇಲೆಕ್ಟ್ರಾನಿಕ್ ಉತ್ಪಾದನಾ ಕ್ಷೇತ್ರಕ್ಕೆ ನೀಡಲಾಗಿರುವ ಪಿಎಲ್ಐ ಸಬ್ಸಿಡಿ ಯೋಜನೆ ಇನ್ನು ಮೂರು ತಿಂಗಳಲ್ಲಿ ಅಂತ್ಯಕಾಣಲಿದ್ದು, ಸರಕಾರದ ಕಡೆಯಿಂದ ಆ ಯೋಜನೆಯನ್ನು ಮುಂದುವರಿಸುವ ಯಾವುದೇ ಸೂಚನೆ ಇಲ್ಲಿಯ ತನಕ ಬಂದಿಲ್ಲ. ಹಾಗಾಗಿ ಮೊಬೈಲ್ ಫೋನ್ ಉದ್ಯಮ ವಲಯ ಕಳವಳಗೊಂಡಿದೆ. ಸರಕಾರ ಒಂದೋ ಪಿಎಲ್ಐ ಅನ್ನು ವಿಸ್ತರಿಸಬೇಕು ಇಲ್ಲವೇ ಅಂತಹದೇ ಬೇರೆ ಬೆಂಬಲ ಮೆಕ್ಯಾನಿಸಂ ಒಂದನ್ನು ಯೋಜಿಸಿ ಪ್ರಕಟಿಸಬೇಕು. ಈಗಿರುವ ವೇಗದಲ್ಲಿ ಬೆಳವಣಿಗೆಯನ್ನು ಉಳಿಸಿಕೊಳ್ಳಲು, ಈ ವಿಚಾರದಲ್ಲಿ ಸ್ಪಷ್ಟ ಚಿತ್ರಣ ಸಿಗಬೇಕಾದುದು ಅಗತ್ಯ ಎಂದು ಮೊಬೈಲ್ ಫೋನ್ ಇಂಡಸ್ಟ್ರಿ ಮೂಲಗಳು ಹೇಳಿವೆ. 2030ರ ಒಳಗಡೆ ಉದ್ದೇಶಿತ 45 ಲಕ್ಷ ಕೋಟಿ ರೂ.ಗಳ ಮಾರಾಟದ ಗುರಿಯನ್ನು ಸಾಧಿಸಬೇಕಿದ್ದರೆ, ಪಿಎಲ್ಐ ಬೆಂಬಲ ಉದ್ಯಮಕ್ಕೆ ಅನಿವಾರ್ಯ. 2025ರ ಹೊತ್ತಿಗೆ ಈ ಉದ್ಯಮ 1.61ಲಕ್ಷ ಕೋಟಿ ರೂ.ಗಳ ಹೂಡಿಕೆ ಭರವಸೆಯನ್ನು ಭಾರತಕ್ಕೆ ತಂದಿದೆಯಲ್ಲದೇ ಈಗಾಗಲೇ 1.76 ಲಕ್ಷ ಕೋಟಿ ರೂ.ಗಳ ಹೂಡಿಕೆ ಆಗಿದೆ. ಮೊಬೈಲ್ ಫೋನ್ ಒಂದೇ ಕ್ಷೇತ್ರದಲ್ಲಿ, 5.45 ಲಕ್ಷ ಕೋಟಿ ರೂ.ಗಳ ಉತ್ಪಾದನೆ ಸಾಧಿಸಲಾಗಿದೆ. ಫಾಕ್ಸ್ಕಾನ್, ಪೆಗಾಟ್ರಾನ್ನಂತಹ ಪ್ರಮುಖ ಆ್ಯಪಲ್ ಫೋನ್ ಬಿಡಿಭಾಗಗಳ ಸರಬರಾಜುದಾರರು ಭಾರತದಲ್ಲಿ ಅಂಗಡಿ ತೆರೆದಿದ್ದಾರೆ. ಮೊಬೈಲ್ ಫೋನ್ ಉತ್ಪಾದಕರಿಗೆ ಪಿಎಲ್ಐ ಮಾತ್ರವಲ್ಲದೇ ತೆರಿಗೆ ರಜೆ, ಕಡಿಮೆ ಬೆಲೆಗೆ ಭೂಮಿಯಂತಹ ಹಲವು ಬೇರೆ ಭಾಗ್ಯಗಳೂ ಇವೆ. ಕರ್ನಾಟಕ ಸೇರಿದಂತೆ, ರಾಜ್ಯಸರಕಾರಗಳು ಇವರಿಗೆಲ್ಲ ಕೆಂಪುಹಾಸಿನ ಸ್ವಾಗತ ಕೋರಲು ಅತ್ಯುತ್ಸಾಹ ತೋರಿಸುತ್ತಿವೆ. ಹಾಗಾಗಿ ಬಹುರಾಷ್ಟ್ರೀಯ ಮೊಬೈಲ್ ಉತ್ಪಾದಕ ಕಂಪೆನಿಗಳಿಗೆ ಇಲ್ಲಿ ಹೂಡಿಕೆ ಆಕರ್ಷಕ ಅನ್ನಿಸುವುದು ಸಹಜ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಎಸ್. ಕೃಷ್ಣನ್ ಅವರು, ಪಿಎಲ್ಐ ಮುಂದುವರಿಕೆಯ (ಪಿಎಲ್ಐ 2.0) ಕುರಿತು ಸಂಬಂಧಿತರೊಂದಿಗೆ ಮಾತುಕತೆ ನಡೆಸಿದ್ದೇವೆ. ಇಲ್ಲಿಯ ತನಕ ಆ ಕ್ಷೇತ್ರಕ್ಕೆ 14,900 ಕೊಟಿ ರೂ.ಗಳ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ ಎಂಬ ಬಗ್ಗೆ ಕೂಡ ಪತ್ರಿಕೆ ವರದಿ ಮಾಡಿದ್ದು, ಅದರ ಅರ್ಥ- ಸರಕಾರ ಕೂಡ, ಈ ಹೊಸ ಸಬ್ಸಿಡಿ ಚಕ್ರವ್ಯೆಹದಲ್ಲಿ ಸಿಕ್ಕಿಹಾಕಿಕೊಳ್ಳಲು ಸಿದ್ಧವಾಗುತ್ತಿರುವಂತಿದೆ. ಆರಂಭದಲ್ಲಿ ಭಾರತ ಸರಕಾರದ ಉದ್ದೇಶ ಇದ್ದುದು, ಐದು ವರ್ಷಗಳಲ್ಲಿ 30 ಲಕ್ಷ ಕೋಟಿ ರೂ.ಗಳ ಹೆಚ್ಚುವರಿ ಕೈಗಾರಿಕಾ ಉತ್ಪಾದನೆ ಮತ್ತು 60 ಲಕ್ಷ ಹೊಸ ಉದ್ಯೋಗಗಳ ಸೃಷ್ಟಿ. ಆದರೆ, 2025ರ ಮಾರ್ಚ್ ಹೊತ್ತಿಗೆ ಈ ಯೋಜನೆ ಉದ್ದೇಶಿತ ಗುರಿ ತಲುಪಿಲ್ಲ ಎಂಬುದನ್ನು ಸರಕಾರವೇ ಸಂಸತ್ತಿನಲ್ಲಿ ಬಹಿರಂಗಪಡಿಸಿಕೊಂಡಿದೆ. ಉತ್ಪಾದನೆಯಲ್ಲಿ 16.5 ಲಕ್ಷ ಕೋಟಿ ರೂ.ಗಳ ಹೆಚ್ಚಳ ಆಗಿದ್ದರೆ, 12 ಲಕ್ಷ (ನೇರ ಮತ್ತು ಪರೋಕ್ಷ ಒಟ್ಟು ಸೇರಿ) ಉದ್ಯೋಗಗಳು ಸೃಷ್ಟಿ ಆಗಿವೆ (ಆಧಾರ: ಚುಕ್ಕೆ ರಹಿತ ಪ್ರಶ್ನೆ ಸಂಖ್ಯೆ 2,625. ದಿನಾಂಕ: 5 ಆಗಸ್ಟ್, 2025). ಅಂದರೆ ಸರಕಾರದ ಉದ್ದೇಶಿತ ಗುರಿಯ ಶೇ. 50 ಕೂಡ ಸಾಧನೆ ಆಗಿಲ್ಲ. ಸದ್ಯಕ್ಕೆ ದೇಶದ ರಫ್ತಿನ ಗಮನಾರ್ಹ ಭಾಗವನ್ನು ಆವರಿಸಿಕೊಂಡಿರುವ ಮೊಬೈಲ್ ಫೋನ್ ರಫ್ತು 2021-22ರಲ್ಲಿ 22,850 ಕೋಟಿ ರೂ. ಇದ್ದುದು ಈಗ 2024-25ರಲ್ಲಿ 2 ಲಕ್ಷ ಕೋಟಿ ರೂ. ಗಾತ್ರವನ್ನು ದಾಟಿದೆ; ಮೊಬೈಲ್ ಉತ್ಪಾದನೆಯ ಪ್ರಮಾಣ 2.14 ಲಕ್ಷ ಕೋಟಿ ರೂ. (2021-22) ಇದ್ದಲ್ಲಿಂದ 5.25 ಲಕ್ಷ ಕೋಟಿ ರೂ.ಗೆ ತಲುಪಿದೆ. 2023ರಲ್ಲಿ ರಘುರಾಂ ರಾಜನ್ ಅವರು ಹೇಳಿದ್ದು ಇದನ್ನೇ. ಶೇ. 4 ವ್ಯಾಲ್ಯೂ ಎಡಿಷನ್ ಮಾಡಿದ್ದಕ್ಕೆ ಶೇ. 4-6 ಸಬ್ಸಿಡಿ ನೀಡುವುದಾದರೆ, ಕಂಪೆನಿಗಳು ನಾ ಮುಂದು-ತಾ ಮುಂದು ಎಂದು ಬರುತ್ತವೆ, ಆದರೆ ಸಬ್ಸಿಡಿ ನಿಲ್ಲಿಸಿದ ದಿನ ಅವರು ಇಲ್ಲಿ ಉಳಿಯುವ ಸಾಧ್ಯತೆಗಳಿಲ್ಲ ಎಂದು. ಒಂದು ವೇಳೆ ಸಬ್ಸಿಡಿ ನಿಲ್ಲಿಸಿ, ಕಂಪೆನಿಗಳು ಇಲ್ಲಿಂದ ಗುಳೆ ಹೋದರೆ, ಇಲ್ಲಿ ಕೇವಲ ‘ಸ್ಕ್ರೂಡ್ರೈವರ್’ ಬಳಸುವ ತಾಂತ್ರಿಕ ಕೌಶಲ ಕಲಿತಿರುವ ಕೆಲಸಗಾರರು ಅತಂತ್ರರಾಗಬಹುದು. ಇದು ದೇಶದಲ್ಲಿ ಉತ್ಪಾದನಾ ಕ್ಷೇತ್ರಕ್ಕೆ ಅಗತ್ಯವಿರುವ ಕೌಶಲ ವೃದ್ಧಿಗೆ ಯಾವ ರೀತಿಯಲ್ಲೂ ಸಹಾಯಕ ಅಲ್ಲ ಎಂಬ ಕಳಕಳಿ ಅವರದಾಗಿತ್ತು. ಈಗ ಪಿಎಲ್ಐ ಮುಂದುವರಿಸಲು ನಡೆದಿರುವ ಲಾಬಿಯನ್ನು ಗಮನಿಸಿದರೆ, ರಘುರಾಂ ರಾಜನ್ ಅವರ ಮುಂಗಾಣ್ಕೆ ಎಷ್ಟು ಮಹತ್ವದ್ದೆಂಬುದು ಸ್ಪಷ್ಟವಾಗುತ್ತದೆ. ಅಂದಿನ ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಅವರು ರಘುರಾಂ ರಾಜನ್ ಅವರ ಆ ನಿಲುವನ್ನು ಕಟುವಾಗಿ ಖಂಡಿಸಿದ್ದರು. ‘‘ಅವರ ತೀರ್ಮಾನವೇನೂ ಭಯಂಕರ ರಾಕೆಟ್ ಸಯನ್ಸ್ ಅಲ್ಲ. ಆದರೆ ಅದಕ್ಕೆ ಅವರು ಬಳಸಿರುವುದು ತಪ್ಪು ಅಂಕಿ-ಸಂಖ್ಯೆಗಳನ್ನು, ಪ್ರಶ್ನಾರ್ಹ ವಿಶ್ಲೇಷಣೆಗಳನ್ನು ಹಾಗೂ ಗುರುತು ಬಹಿರಂಗಪಡಿಸದ ಉದ್ಯಮ ಪರಿಣತರನ್ನು. ಇದು ನೈತಿಕ ದಿವಾಳಿತನದ ಪ್ರತೀಕ. ಅವರಿಗೆ ಇಲೆಕ್ಟ್ರಾನಿಕ್ಸ್ ಉತ್ಪಾದನೆ, ಸರಬರಾಜು ಸರಪಣಿಯ ಬಗ್ಗೆ ಏನೂ ಅರಿವಿಲ್ಲದಿರುವುದು ಮಾತ್ರವಲ್ಲದೆ, ಕಡೆಗೆ ಅರ್ಥಶಾಸ್ತ್ರದ ಅರಿವೂ ಇಲ್ಲದಿರುವುದನ್ನು ಅವರ ಟೀಕೆ ತೋರಿಸುತ್ತದೆ’’ ಎಂದು ದೇಶದ ಪ್ರಮುಖ ಅರ್ಥಶಾಸ್ತ್ರಜ್ಞರಲ್ಲಿ ಒಬ್ಬರಾದ ರಘುರಾಂ ರಾಜನ್ ಅವರನ್ನು ಸಚಿವರು ಟೀಕಿಸಿದ್ದರು. (ಆಧಾರ: ಬ್ಯುಸಿನೆಸ್ ಸ್ಟಾಂಡರ್ಡ್ 15 ಜೂನ್, 2023). ಈ ಹಿನ್ನೆಲೆಯಲ್ಲಿ ಸರಕಾರ ಈಗ ಮೊಬೈಲ್ ಉತ್ಪಾದಕರ ಲಾಬಿಗೆ ಮಣಿದು ಅವರಿಗೆ ಮತ್ತಷ್ಟು ಪಿಎಲ್ಐ ಸಬ್ಸಿಡಿಗಳನ್ನು ನೀಡಲಿದೆಯೋ ಅಥವಾ ನೈಜ ಉತ್ಪಾದನಾ ಕ್ಷೇತ್ರಗಳತ್ತ ಗಮನ ಹರಿಸಿ, ನಿಜಕ್ಕೂ ಆತ್ಮನಿರ್ಭರ ಆಗಲಿದೆಯೋ ಎಂಬುದನ್ನು ಕಾದು ನೋಡಬೇಕಿದೆ. ದೇಶದಲ್ಲಿ ಶೇ. 60-70 ಇರುವ ಬಡ ಮತ್ತು ಮಧ್ಯಮ ವರ್ಗದ ಜನಸಮುದಾಯಗಳಿಗೆ ಯಾವುದೇ ಸರಕಾರಿ ಸವಲತ್ತು, ಸಬ್ಸಿಡಿ ನೀಡಿದಾಗ ಅದು ‘ಬಿಟ್ಟಿ ಭಾಗ್ಯ’ ಎಂದು ಹೀಗಳೆಯುವವರಿಗೆ, ಹೀಗೆ ಬಲಾಢ್ಯ ಕಾರ್ಪೊರೇಟ್ಗಳ ಲಾಬಿಯ ಒತ್ತಡಕ್ಕೆ ಮಣಿದು, ಸರಕಾರಗಳು ಮಂಡಿಯೂರಿ ಸಬ್ಸಿಡಿ ನೀಡುವುದು/ಮುಂದುವರಿಸುವುದು ಏನನ್ನಿಸುತ್ತದೆ? ಪಿಎಲ್ಐ ಮುಂದುವರಿಸುವುದಿದ್ದರೆ, ಈ ವರ್ಷದ ಬಜೆಟ್ ವೇಳೆ ಹಣಕಾಸು ಸಚಿವರು ಆ ಬಗ್ಗೆ ಬಜೆಟರಿ ಅನುದಾನವನ್ನು ಪ್ರಕಟಿಸಬೇಕಿರುತ್ತದೆ. ‘ಬಿಟ್ಟಿ ಭಾಗ್ಯ’ ಎಂದು ಮೂದಲಿಸುವವರ ಪ್ರತಿಕ್ರಿಯೆ ಆಗ ಹೇಗಿರಲಿದೆ?!
ನಾಟಕ: ಕಂದಗಲ್ಲರಿಗೆ ನಮಸ್ಕಾರ ಅರ್ಥಾತ್ ಕಂದಗಲ್ಲ ಭಾರತ ಮೂಲ: ಕಂದಗಲ್ಲ ಹನುಮಂತರಾಯರ ಮಹಾಭಾರತ ಕುರಿತ ನಾಟಕಗಳು ರಂಗರೂಪ/ನಿರ್ದೇಶನ: ಪ್ರಕಾಶ ಗರುಡ ರಂಗವಿನ್ಯಾಸ: ಶ್ವೇತಾರಾಣಿ ಎಚ್.ಕೆ. ವಸ್ತ್ರವಿನ್ಯಾಸ: ರಜನಿ ಗರುಡ ಬೆಳಕಿನ ವಿನ್ಯಾಸ: ಮಧು ಮಳವಳ್ಳಿ ಪ್ರಸ್ತುತಿ: ರೆಪರ್ಟರಿ ಕಲಾವಿದರು, ರಂಗಾಯಣ, ಧಾರವಾಡ ರಂಗದ ಮೇಲೆ: ಅಕ್ಕಮ್ಮಾ ದೇವರಮನಿ, ಹನುಮಂತ ರಾಯ್ಕರ, ರೋಹನ್ ದೇಸಾಯಿ, ವಿನೋದ ದಂಡಿನ, ದುಂಡೇಶ ಹಿರೇಮಠ, ಗೋಪಾಲ ಉಣಕಲ್, ಸುನೀಲ ಲಗಳಿ, ಕೃಷ್ಣ ಹೂಗಾರ, ಪವನ ದೇಶಪಾಂಡೆ, ಇಂದು ಡಿ., ರೇಖಾ ಹೊಂಗಲ, ಕೀರ್ತಿ ಸಿಂದೋಗಿ, ಯೋಗೇಶ ಬಗಲಿ. ರಾಜು ತಾಳಿಕೋಟಿ ಅವರ ದೊಡ್ಡ ಕನಸು ಈಡೇರಿದೆ. ಧಾರವಾಡ ರಂಗಾಯಣದ ನಿರ್ದೇಶಕರಾಗಿದ್ದ ರಾಜು ತಾಳಿಕೋಟಿ ಅವರು ನಿಧನರಾಗುವ ಮೊದಲು ‘ಕರ್ನಾಟಕದ ಷೇಕ್ಸ್ಪಿಯರ್’ ಎಂದೇ ಖ್ಯಾತರಾಗಿದ್ದ ಕಂದಗಲ್ಲ ಹನುಮಂತರಾಯರ ನಾಟಕಗಳನ್ನು ತಮ್ಮ ರಂಗಾಯಣದ ಮೂಲಕ ಪ್ರದರ್ಶಿಸಬೇಕೆಂದು ಕನಸು ಕಂಡಿದ್ದರು. ಆದರೆ ಅಕಾಲಿಕವಾಗಿ ನಿಧನರಾದರು. ಅವರ ಕನಸು ಕಮರಲಿಲ್ಲ. ಧಾರವಾಡ ರಂಗಾಯಣದ ಆಡಳಿತಾಧಿಕಾರಿ ಶಶಿಕಲಾ ಹುಡೇದ ನೇತೃತ್ವದಲ್ಲಿ, ಪ್ರಕಾಶ ಗರುಡ ಅವರು ‘ಕಂದಗಲ್ಲರಿಗೆ ನಮಸ್ಕಾರ ಅರ್ಥಾತ್ ಕಂದಗಲ್ಲ ಭಾರತ’ ನಾಟಕವನ್ನು ರಂಗಕ್ಕೇರಿಸಿದ್ದಾರೆ. ಈಮೂಲಕ ರಾಜು ತಾಳಿಕೋಟಿ ಅವರಿಗೆ ಗೌರವ ಸಲ್ಲಿಸಿದಂತಾಗಿದೆ. ರಾಜು ತಾಳಿಕೋಟಿ ಅವರು ಡಿ. ದುರ್ಗಾದಾಸ್ ಅವರ ಶಿಷ್ಯರು. ದುರ್ಗಾದಾಸ್ (ನೀನಾಸಂ ಪದವೀಧರೆಯಾಗಿದ್ದ ಹನುಮಕ್ಕ ಅವರ ತಂದೆ) ಅವರು ಕಂದಗಲ್ಲ ಹನುಮಂತರಾಯರ ಶಿಷ್ಯರು. ಹೇಗೆಂದರೆ ಕಂದಗಲ್ಲರು ಕಟ್ಟಿದ ಅರವಿಂದ ಸಂಗೀತ ನಾಟಕ ಮಂಡಳಿಯಲ್ಲಿದ್ದರು. ಕಂದಗಲ್ಲರ ‘ಚಿತ್ರಾಂಗದ’ ನಾಟಕದಲ್ಲಿ ಅರ್ಜುನನ ಪಾತ್ರಕ್ಕೆ ದುರ್ಗಾದಾಸ್ ಹೆಸರುವಾಸಿಯಾಗಿದ್ದರು. ಹೀಗಿದ್ದಾಗ ರಾಜು ತಾಳಿಕೋಟಿ ಅವರ ಕಂದಗಲ್ಲರ ನಾಟಕಗಳನ್ನು ಪ್ರದರ್ಶಿಸಬೇಕೆಂಬ ತಮ್ಮ ಕನಸನ್ನು ಪ್ರಕಾಶ ಗರುಡ ಅವರಿಗೆ ಹೇಳಿದರು. ಈ ಪ್ರಕಾಶ ಗರುಡ ಅವರು ದತ್ತಾತ್ರೇಯ ನಾಟಕ ಮಂಡಳಿ ಕಟ್ಟಿದ್ದ ಗರುಡ ಸದಾಶಿವರಾಯರು ಮೊಮ್ಮಗ. ಹೀಗೆ ಈ ನಾಟಕದ ಮೂಲಕ ರಂಗ ಪರಂಪರೆ ಬೆಳೆಯಿತು. ಈ ನಾಟಕವು ಮೈಸೂರು ರಂಗಾಯಣದಲ್ಲಿ ಕಳೆದ ವಾರ (ಡಿಸೆಂಬರ್ 28) ಬಹುರೂಪಿಗೆ ಮುನ್ನುಡಿಯಾಗಿ ಪ್ರದರ್ಶನಗೊಂಡಿತು. ಮೂರೂವರೆ ಗಂಟೆಗಳ ಈ ನಾಟಕವು ಹಿಡಿದಿಟ್ಟಿತು. ಇದಕ್ಕೆ ಕಂದಗಲ್ಲ ಹನುಮಂತರಾಯರ ನಾಟಕಗಳ ಸಮಕಾಲೀನತೆ, ರಾಘವ ಕಮ್ಮಾರ ಅವರ ಸಂಗೀತ ಪೂರಕವಾಗಿದ್ದವು. ಕಂಠಪಾಠ ಮಾಡಿದ ಉದ್ದುದ್ದದ ಸಂಭಾಷಣೆಗಳನ್ನು ಕಲಾವಿದರು ಹೇಳುವಾಗ ಅಲ್ಲಲ್ಲಿ ಎಡವಿದರೂ ಸರಿಪಡಿಸಿಕೊಂಡರು. ಇದಕ್ಕೆ ಕಾರಣ; ಕಂದಗಲ್ಲರ ಅದ್ಭುತ ಸಂಭಾಷಣೆ. ಕಬ್ಬಿಣದ ಕಡಲೆ ಎಂದೇ ಜನಪ್ರಿಯ. ಇಂಥ ಸಂಭಾಷಣೆಗಳನ್ನು ನಿಧಾನವಾಗಿ, ಮನ ಮುಟ್ಟುವ ಹಾಗೆ ಕಲಾವಿದರು ಹೇಳಬಹುದಿತ್ತು. ಆದರೆ ಸಂಭಾಷಣೆ ಒಪ್ಪಿಸುವ ಭರದಲ್ಲಿದ್ದರು. ಅದರಲ್ಲೂ ಗೋಪಾಲ ಉಣಕಲ್ ಅವರು ದ್ರೌಪದಿ ತಂದೆ ದ್ರುಪದರಾಜ, ದುಶ್ಯಾಸನ, ಕೀಚಕ ಹಾಗೂ ಕಲಿ ಪಾತ್ರಗಳನ್ನು ನಿರ್ವಹಿಸಿ ನ್ಯಾಯ ಒದಗಿಸಿದರು. ಕೃಷ್ಣನ ಪಾತ್ರಕ್ಕೆ ಅಕ್ಕಮ್ಮಾ ಒಪ್ಪಿದ್ದಾರೆ. ಆದರೆ ಸಂಭಾಷಣೆಗಳನ್ನು ಕೊಂಚ ನಿಧಾನವಾಗಿ ಹೇಳಬೇಕಾದ ಅಗತ್ಯವಿದೆ. ಶಕುನಿ ಪಾತ್ರಕ್ಕೆ ವಿನೋದ ದಂಡಿನ ಇನ್ನಷ್ಟು ಜೀವ ತುಂಬಬೇಕಿತ್ತು. ಕೃಷ್ಣ-ಶಕುನಿಯರ ಸಂಭಾಷಣೆ ಇನ್ನಷ್ಟು ಮನ ಮುಟ್ಟಬೇಕಿತ್ತು. ಸೈರಂಧ್ರಿ ಹಾಗೂ ದ್ರೌಪದಿ ಪಾತ್ರಕ್ಕೆ ಜೀವ ತುಂಬಿದವರು ರೇಖಾ ಹೊಂಗಲ. ಹೀಗೆಯೇ ಕುಂತಿ, ಭಾನುಮತಿ, ಉತ್ತರೆ ಪಾತ್ರಕ್ಕೆ ಬಣ್ಣ ಹಚ್ಚಿದ ಇಂದು ಬಗಲಿ ಅವರು ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದರು. ಒಟ್ಟಾರೆ ನಾಟಕ ಇನ್ನಷ್ಟು ಕಳೆಕಟ್ಟಬೇಕಿತ್ತು. ಏಕೆಂದರೆ ಬಳ್ಳಾರಿ ಜಿಲ್ಲೆಯಲ್ಲಿ ಕಂದಗಲ್ಲರ ನಾಟಕಗಳಲ್ಲಿ ಅಭಿನಯಿಸುತ್ತಿದ್ದ ಬೆಳಗಲ್ಲು ವೀರಣ್ಣ, ಸುಭದ್ರಮ್ಮ ಮನ್ಸೂರ ಮೊದಲಾದವರು ತಮ್ಮ ಭಾವಪೂರ್ಣ ಅಭಿನಯ ಹಾಗೂ ಸಶಕ್ತ ಸಂಭಾಷಣೆಗಳಿಂದ ಪ್ರೇಕ್ಷಕರ ಮನದಲ್ಲಿ ಅಚ್ಚೊತ್ತಿದ್ದರು. ಇಂದಿಗೂ ಬಳ್ಳಾರಿ ಜಿಲ್ಲೆಯಲ್ಲಿ ‘ರಕ್ತರಾತ್ರಿ’ ನಾಟಕವಾಡುವ ಕಲಾವಿದರು ಸಂಭಾಷಣೆ ಹೇಳುವಾಗ ತಪ್ಪಿದರೆ ಪ್ರೇಕ್ಷಕರು ಎದ್ದು ನಿಂತು ‘ಸಂಭಾಷಣೆ ತಪ್ಪಿದ್ರಿ’ ಎಂದು ಹೇಳುತ್ತಾರೆ. ಇದಕ್ಕೆಲ್ಲ ಬೆಳಗಲ್ಲು ವೀರಣ್ಣ, ಸುಭದ್ರಮ್ಮ ಮನ್ಸೂರ ಕಾರಣರು. ವೀರಣ್ಣ ಅವರು ‘ರಕ್ತರಾತ್ರಿ’ ನಾಟಕದ ಶಕುನಿ ಪಾತ್ರದಿಂದ ಪ್ರಸಿದ್ಧರಾಗಿದ್ದರು. ಭಾಷೆಯ ಮೇಲಿನ ಅವರ ಹಿಡಿತ, ಪ್ರಬುದ್ಧ ಅಭಿನಯ ಅದ್ಭುತವಾಗಿರುತ್ತಿತ್ತು. ಅವರು ಹೇಳುತ್ತಿದ್ದ ಶಕುನಿಯ ಮಾತು ಹೀಗಿದೆ- ‘‘ಈ ಶಕುನಿಯ ಎದೆ ಹುತ್ತದೊಳ್ ಅಡಗಿರುವ ಭೇದನೀತಿಯೆಂಬ ನಾಗಿಣಿಯ ಪೂತ್ಕಾರಕ್ಕೆ ಜಾತಿಗಳ ಝಳ ಹೊಡೆದು ಕಮರುವವು ಕೋಮಲ ಕರುಳ ಸೌಹಾರ್ದ ಸೂತ್ರಗಳು. ಮನುಷ್ಯತ್ವ ಮಣ್ಣುಗೂಡಿ ಸುರಶಿಲ್ಪಿ ವಿಶ್ವಕರ್ಮನ ಕೈಯ ಕುಂಚ ಕಠೋರ ಕುಠಾರಿಯಾಗುವುದು ಕೋಮು-ಜಾತಿಯ ಜಗಳದ ಘರ್ಜನೆಯಲ್ಲಿ. ಸರಸ್ವತಿಯ ತಂಬೂರಿ ಬಿರಿದು ಭೈರವ ಭೇರಿಯಾಗುವುದು ಕುಲಾಭಿಮಾನದ ಕಿಡಿಯಲಿ. ಅತಿ ತೀವ್ರವಾಗಿದೆ ಜಾತಿದ್ವೇಷ. ಇದರದೊಂದು ಕಿಡಿ ಬಗೆದು ನಿರ್ಮಿಸುವೆ ಕಾಳಾನಲ ಕಡಲನ್ನೇ ಕರ್ಣ-ಅಶ್ವತ್ಥಾಮರ ಮಧ್ಯದಲಿ. ಅಶ್ವತ್ಥಾಮನು ಪಾಂಡವರಿಗೆ ಪ್ರತಿಕಾಳಯಮ. ಅಶ್ವತ್ಥಾಮನನ್ನು ಯುದ್ಧಭೂಮಿಯಿಂದ ದೂರೀಕರಿಸದಿದ್ದರೆ ದಾರಿ ಕಾಣದು ಈ ಶಕುನಿಯ ಕಾರಸ್ಥಾನದ ಕಣ್ಣಿಗೆ ಅಶ್ವತ್ಥಾಮನ ಉರಿಗಣ್ಣು. ಸುರಸೇನಾಧಿಪತಿ ಷಣ್ಮುಖಸ್ವಾಮಿಯ ಕ್ಷಾತ್ರ ರಸಾಯನವೇ ತುಂಬಿ ತುಳುಕಾಡುತ್ತಿದೆ ಅಶ್ವತ್ಥಾಮನ ಎದೆಯೊಳು. ದುರ್ಯೋಧನನ ದಂಡಾಧಿಪತಿಯ ಪಟ್ಟವನ್ನು ಅಶ್ವತ್ಥಾಮನಿಗೆ ಕಟ್ಟಿದರೆ ಉಳಿಗಾಲವಿಲ್ಲ ಪಾಂಡವರಿಗೆ ಮತ್ ಅಳಿಗಾಲವಿಲ್ಲ ಆ ಕುರುಡನ ಕುನ್ನಿಗಳಿಗೆ. ಆದ್ದರಿಂದ ಹೂಡಿ ಹೊಡೆಯುವೆ ದುರ್ಯೋಧನನ ಎದೆಗೆ ಎರಡು ಬಾಣಗಳನ್ನು. ಗರತಿಯಾದ ಭಾನುಮತಿಯ ಶೀಲದ ಬಗ್ಗೆ ಸಂಶಯದ ಬಾಣ. ಇನ್ನೊಂದು; ಜಾತಿದ್ವೇಷದ ರಾಮಬಾಣ...’’ ಹೀಗೆ ಹೇಳಿ ವಿಕಟವಾಗಿ ನಕ್ಕು, ಕಣ್ಣು ತಿರುಗಿಸುತ್ತಿದ್ದರು ಬೆಳಗಲ್ಲು ವೀರಣ್ಣ. ಈಮೂಲಕ ಅವರು ಪ್ರೇಕ್ಷಕರ ಮನದಲ್ಲಿ ಅಚ್ಚೊತ್ತಿದ್ದರು. ಅವರ ಪುತ್ರ ಪ್ರಕಾಶ ಅವರು ಕೃಷ್ಣನ ಪಾತ್ರಕ್ಕೆ ಪ್ರಸಿದ್ಧರು. ಇವರಿಬ್ಬರು ‘ರಕ್ತರಾತ್ರಿ’ ನಾಟಕದಲ್ಲಿ ಪಾತ್ರ ನಿರ್ವಹಿಸಿದ್ದನ್ನು, ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿದ್ದನ್ನು ನೋಡಿರುವೆ. ಹೀಗೆಯೇ ಭೀಷ್ಮನ ಪಾತ್ರಕ್ಕೆ ಹಂದಿಗನೂರು ಸಿದ್ರಾಮಪ್ಪ ಪ್ರಸಿದ್ಧರಾಗಿದ್ದರು. ಹೀಗೆ ಹೇಳಲು ಕಾರಣ; ಕಲಾವಿದರು ಸಂಭಾಷಣೆ ಹೇಳಿದ ಪರಿ ಮುಖ್ಯವಾಗುತ್ತದೆ. ಧಾರವಾಡ ರಂಗಾಯಣದ ಕಲಾವಿದರು ಹೇಳಿದ ಅಷ್ಟೂ ಸಂಭಾಷಣೆಗಳಲ್ಲಿ ಯಾವುದೂ ಮನದಲ್ಲಿ ಉಳಿಯಲಿಲ್ಲ. ಉಳಿಯಬೇಕಿತ್ತು ಎನ್ನುವ ವ್ಯಥೆಯಿದೆ. ಇದಕ್ಕಾಗಿ ಹೆಚ್ಚಿನ ತರಬೇತಿ ಅಗತ್ಯವಿತ್ತೇನೋ? ಆಗಿನ ಹಾಗೆ ಆಳೆತ್ತರದ ನಟರ ಕೊರತೆ, ಕಂಚಿನ ಕಂಠದಿಂದ ಅಸ್ಖಲಿತವಾಗಿ ಸಂಭಾಷಣೆ ಹೇಳುವ ನಟರ ಕೊರತೆಯ ಕಾರಣಕ್ಕೆ ಕಂದಗಲ್ಲರ ನಾಟಕಗಳನ್ನು ಪ್ರದರ್ಶಿಸುವ ಸಾಹಸಕ್ಕೆ ಅನೇಕರು ಕೈಹಾಕುವುದಿಲ್ಲ. ಇಂಥ ಸಂದರ್ಭದಲ್ಲಿ ಧಾರವಾಡ ರಂಗಾಯಣದ ಕಲಾವಿದರ ಪ್ರಯತ್ನ ದೊಡ್ಡದು. ಅವರು ಇನ್ನಷ್ಟು ಶ್ರಮವಹಿಸಿದರೆ ನಾಟಕ ಇನ್ನಷ್ಟು ಯಶಸ್ವಿಯಾಗುತ್ತದೆ. ಇದನ್ನು ಹೇಳಲು ಕಾರಣವಿದೆ; ಕೆರೂರಿನ ಅದೃಶ್ಯಪ್ಪ ಮಾನ್ವಿ ಅವರು ಭೀಮನ ಪಾತ್ರದಿಂದ ಜನಪ್ರಿಯರಾಗಿದ್ದರು. ಕಂದಗಲ್ಲರು ಅದೃಶ್ಯಪ್ಪ ಮಾನ್ವಿ ಅವರನ್ನು ನೋಡಿರಲಿಲ್ಲ. ಆದರೆ ಅವರನ್ನು ಉದ್ದೇಶಿಸಿಯೇ ಬರೆದರೇನೋ ಎನ್ನುವ ಹಾಗೆ ಪ್ರೇಕ್ಷಕರು ಮಾತನಾಡಿಕೊಂಡರು. ಮತ್ತೆ ಧಾರವಾಡ ರಂಗಾಯಣದ ಕಂದಗಲ್ಲರ ಕುರಿತ ನಾಟಕದತ್ತ ಹೊರಳುವೆ. ಈ ನಾಟಕಕ್ಕೆ ರಾಘವ ಕಮ್ಮಾರ ಗಾಯನ ಚೆನ್ನಾಗಿತ್ತು. ಆದರೆ ಅವರ ಸಂಗೀತ ಅಬ್ಬರವಾಗಿತ್ತು. ಇದನ್ನು ಮೆಲೊಡಿ ಮಾಡಬೇಕಿತ್ತು. ಇಷ್ಟನ್ನು ಹೊರತುಪಡಿಸಿದರೆ ನಾಟಕ ಚೆನ್ನಾಗಿದೆ. ಸಮಕಾಲೀನವಾಗುವ, ಸರ್ವಕಾಲಕ್ಕೂ ಸಲ್ಲುವ ಕಂದಗಲ್ಲರ ನಾಟಕಗಳನ್ನು ಒಟ್ಟುಗೂಡಿಸಿ ಪ್ರಕಾಶ ಗರುಡ ಅವರು ನಿರ್ದೇಶಿಸಿದ್ದು ಸಾಹಸವೇ ಸರಿ. ಈಗಲೂ ಕಂದಗಲ್ಲರ ನಾಟಕಗಳಾಡುವ ಅಗತ್ಯವೇನಿದೆ ಎಂದು ಕೇಳುವವರಿಗೆ ಅವು ಸಮಕಾಲೀನವಾಗುತ್ತವೆಂಬ ಉತ್ತರ ಕೊಡಬಹುದು. ಅದರಲ್ಲೂ ‘ಟಂಗ್ ಟ್ವಿಸ್ಟ್’ ಎನ್ನುವ ಮಾದರಿಯಲ್ಲಿರುವ ಕಂದಗಲ್ಲರ ನಾಟಕದ ಸಂಭಾಷಣೆಗಳು ಕಲಾವಿದರಿಗೆ ಸವಾಲು. ಇನ್ನು ನಾಟಕದ ಕುರಿತು; ಮಹಾಭಾರತ ಆಧರಿಸಿ ಕಂದಗಲ್ಲರು ದ್ರೌಪದಿ, ಸ್ವಯಂವರ, ಅಕ್ಷಯಾಂಬರ, ಬಾಣಸಿಗ ಭೀಮ, ನರವೀರ ಪಾರ್ಥ, ದೈವದುರಂತ ಕರ್ಣ, ಕುರುಕ್ಷೇತ್ರ, ಚಿತ್ರಾಂಗದ ಹಾಗೂ ಜಗನ್ಮಾಯ ನಾಟಕಗಳನ್ನು ರಚಿಸಿದ್ದಾರೆ. ಇದರಲ್ಲಿ ಏಳು ನಾಟಕಗಳನ್ನು ಕುಮಾರವ್ಯಾಸನ ‘ಕರ್ನಾಟಕ ಭಾರತ ಕಥಾಮಂಜರಿ’ ಕಾವ್ಯ ಆಧರಿಸಿ ನಾಟಕಗಳನ್ನು ರಚಿಸಿದ್ದಾರೆ. ಪ್ರಕಾಶ ಗರುಡ ಅವರು ಹೇಳುವಂತೆ ‘‘ಕಂಪನಿ ರಂಗಭೂಮಿಗೆ ಹೊಂದುವಂತೆ ತಮ್ಮದೇ ವಿಶಿಷ್ಟ ಭಾಷಾಶೈಲಿಯನ್ನು ಬಳಕೆ ಮಾಡಿದ್ದಾರೆ. ಆಗಿನ ಪ್ರೇಕ್ಷಕ ಮಾತ್ರ ಅವರ ನಾಟಕದ ಮುಕ್ತ ಛಂದಸ್ಸಿನ ಸಂಭಾಷಣೆಗೆ, ನವೀನ ಶೈಲಿಗೆ ಆಕರ್ಷಿತನಾಗಿದ್ದ. ಹೀಗಾಗಿ ಅವರ ನಾಟಕಗಳು ಈಗಲೂ ಜನಮಾನಸದಲ್ಲಿವೆ. ಪ್ರಸ್ತುತ ರಂಗರೂಪದಲ್ಲಿ ಕಂದಗಲ್ಲರು ’ಕರ್ನಾಟಕ ಭಾರತ ಕಥಾಮಂಜರಿ’ ಆಧರಿಸಿ ಬರೆದ ಏಳು ನಾಟಕಗಳಲ್ಲಿಯ ಪ್ರಮುಖ ದೃಶ್ಯಗಳನ್ನು ಜೋಡಣೆ ಮಾಡಿ ಒಟ್ಟು ಮಹಾಭಾರತದ ಕಥಾನಕದ ನಾಟ್ಯ ಚಿತ್ರಣ ನೀಡಲು ಪ್ರಯತ್ನಿಸಲಾಗಿದೆ. ಕುರುಕ್ಷೇತ್ರ ಯುದ್ಧದ ನಂತರ ಬರುವ ಪ್ರಸಂಗಗಳಾದ ಚಿತ್ರಾಂಗದ ಮತ್ತು ಜಗನ್ಮಾಯ (ಶ್ರೀಕೃಷ್ಣ ಗಾರುಡಿ) ನಾಟಕಗಳನ್ನು ಈ ರಂಗರೂಪದಲ್ಲಿ ಸೇರಿಸಿಲ್ಲ. ಈ ರಂಗರೂಪವು ಕಂದಗಲ್ಲರು ಮಹಾಭಾರತ ಕಥಾನಕವನ್ನು ಕುರಿತು ರಚಿಸಿದ ಏಳು ಕಂಪನಿ ನಾಟಕಗಳ ಹೃಸ್ವರೂಪವಾಗಿದ್ದರೂ ಕಥಾಸಂವಿಧಾನಕ್ಕೆ ಒಂದು ತಾರ್ಕಿಕ ಜೋಡಣೆ ನೀಡಲು ಪ್ರಯತ್ನಿಸಲಾಗಿದೆ. ಜಾತಿ-ಕುಲ ತಾರತಮ್ಯ, ರಾಷ್ಟ್ರೀಯತೆ, ದೇಸಿಯತೆ, ಖಾದಿ, ಮನುಕುಲಕ್ಕೆ ಮಾರಕವಾದ ವಿನಾಶಕಾರಿ ಯುದ್ಧ, ದಾಯಾದಿ ಮತ್ಸರ, ದ್ವೇಷರಾಜಕಾರಣ ಇವು ಸಮಕಾಲೀನ ವಿಷಯಗಳಾಗಿದ್ದು, ಕಂಪನಿ ನಾಟಕದ ಚೌಕಟ್ಟಿನಲ್ಲಿ ಮಹಾಭಾರತದ ಕಥೆಯಲ್ಲಿ ಬರುವ ಪಾತ್ರಗಳ ಮೂಲಕ ಮುಖಾಮುಖಿಯಾಗಿದ್ದಾರೆ’’ ಎನ್ನುವ ಮೂಲಕ ನಾಟಕದ ಕುರಿತು ಚಿತ್ರಣ ನೀಡಿದ್ದಾರೆ. ಮಹಾತ್ಮಾ ಗಾಂಧೀಜಿ ಕರೆ ಕೊಟ್ಟ ಖಾದಿ ಬಟ್ಟೆಯ ಮಹತ್ವವನ್ನು ಸಾರುವ ಕುರಿತು ‘ಅಕ್ಷಯಾಂಬರ’ ನಾಟಕದಲ್ಲಿ ಕಂದಗಲ್ಲರು ನೇರವಾಗಿ ಹೇಳಲಿಲ್ಲ. ಹೇಳಿದ್ದರೆ ಬ್ರಿಟಿಷರಿಂದ ಪರವಾನಗಿ ಸಿಗುತ್ತಿರಲಿಲ್ಲ ಜೊತೆಗೆ ಬಂಧನವಾಗುವ ಭೀತಿಯಿತ್ತು. ಇದಕ್ಕಾಗಿ ಅವರು ಪೌರಾಣಿಕ ನಾಟಕದ ಮೊರೆ ಹೋದರು. ನೂಲುವ ಚರಕವನ್ನು ಶ್ರೀಕೃಷ್ಣನ ಸುದರ್ಶನ ಚಕ್ರಕ್ಕೂ ಖಾದಿ ಬಟ್ಟೆಯನ್ನು ದ್ರೌಪದಿಯ ಮಾನ ಕಾಯ್ದ ಅಕ್ಷಯಾಂಬರಕ್ಕೂ ಹೋಲಿಸಿ ಬರೆದದ್ದು ಅವರ ವಿಶೇಷ. ಹೀಗೆಯೇ ಉಳಿದ ನಾಟಕಗಳೂ ವಿಶೇಷವೇ.
ಫೆ. 1 ರಿಂದ ಸಿಗರೇಟ್, ಪಾನ್ ಮಸಾಲಾ ದುಬಾರಿ ಏಕೆ?
ಸಾಂದರ್ಭಿಕ ಚಿತ್ರ | Photo Credit : freepik 2026 ಫೆಬ್ರವರಿ 1 ರಿಂದ ತಂಬಾಕು ಉತ್ಪನ್ನಗಳ ಮೇಲೆ ಹೆಚ್ಚುವರಿ ಅಬಕಾರಿ ಸುಂಕ, ಪಾನ್ ಮಸಾಲಾ ಮೇಲೆ ಹೊಸ ಸೆಸ್ ವಿಧಿಸಲಾಗುವುದು ಎಂದು ಕೇಂದ್ರ ಸರ್ಕಾರ ಬುಧವಾರ ಅಧಿಸೂಚನೆ ಹೊರಡಿಸಿದೆ. ಪಾನ್ ಮಸಾಲಾ, ಸಿಗರೇಟ್, ತಂಬಾಕು ಮತ್ತು ಇದೇ ರೀತಿಯ ಉತ್ಪನ್ನಗಳ ಮೇಲೆ ಶೇ. 40 ರಷ್ಟು ಜಿಎಸ್ಟಿ ದರ, ಬೀಡಿ ಮೇಲೆ ಶೇ. 18 ರಷ್ಟು ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವಿಧಿಸಲಾಗುತ್ತದೆ ಎಂದು ಸರ್ಕಾರಿ ಅಧಿಸೂಚನೆ ತಿಳಿಸಿದೆ. ಇದರ ಜೊತೆಗೆ, ಪಾನ್ ಮಸಾಲಾ ಮೇಲೆ ಆರೋಗ್ಯ ಮತ್ತು ರಾಷ್ಟ್ರೀಯ ಭದ್ರತಾ ಸೆಸ್ ವಿಧಿಸಲಾಗುವುದು. ಇತರ ತಂಬಾಕು ಉತ್ಪನ್ನಗಳಿಗೆ ಅಂದರೆ ಹುಕ್ಕಾ ಮೇಲೆ ಶೇಕಡಾ 33 ಅಬಕಾರಿ ಸುಂಕ, ಏಕರೂಪದ ತಂಬಾಕು, ಜಗಿಯುವ ತಂಬಾಕು ಮತ್ತು ನಶ್ಯಕ್ಕೆ ಶೇಕಡಾ 60.5 ರಷ್ಟು ಸುಂಕ ಅನ್ವಯಿಸಲಾಗಿದೆ. ಜಗಿಯುವ ತಂಬಾಕು ಮತ್ತು ಜರ್ದಾ ಸುಗಂಧಭರಿತ ತಂಬಾಕಿಗೆ ಸುಂಕ ದರವು ಶೇಕಡಾ 82 ರಷ್ಟು ಹೆಚ್ಚಾಗಲಿದೆ. ಪೈಪ್ ಮತ್ತು ಸಿಗರೇಟ್ಗಳಿಗೆ ಬಳಸುವ ಮಿಶ್ರಣಗಳಿಗೆ ಶೇಕಡಾ 279 ರಷ್ಟು ಸುಂಕ ಅನ್ವಯವಾಗಲಿದೆ. ಹೊಸ ನಿಯಮಗಳು ಹೊಗೆರಹಿತ ತಂಬಾಕಿಗೆ ಸಾಮರ್ಥ್ಯ ಆಧಾರಿತ ಸುಂಕವನ್ನು ಸಹ ನಿರ್ದಿಷ್ಟಪಡಿಸುತ್ತವೆ. ಜಗಿಯುವ ತಂಬಾಕು ಮತ್ತು ಗುಟ್ಕಾ ತಯಾರಕರಿಗೆ, ಸುಂಕವು ಈಗ ಕಾರ್ಖಾನೆಯಲ್ಲಿನ ಪ್ಯಾಕಿಂಗ್ ಯಂತ್ರಗಳ ವೇಗ ಮತ್ತು ಉತ್ಪನ್ನಗಳ ಸಂಖ್ಯೆಗೆ ನೇರವಾಗಿ ಸಂಬಂಧಿಸಿದೆ. ತೆರಿಗೆಯು ಪ್ರತಿ ಯಂತ್ರಕ್ಕೆ ಗರಿಷ್ಠ ಉತ್ಪಾದನಾ ಸಾಮರ್ಥ್ಯವನ್ನು ಆಧರಿಸಿದೆ. ಉದಾಹರಣೆಗೆ, 8 ರೂ. ಚಿಲ್ಲರೆ ಬೆಲೆಯೊಂದಿಗೆ ನಿಮಿಷಕ್ಕೆ 500 ಪೌಚ್ಗಳ ವೇಗದಲ್ಲಿ ಗುಟ್ಕಾ ಉತ್ಪಾದಿಸುವ ಯಂತ್ರವು ಮಾಸಿಕ 3.28 ಕೋಟಿ ರೂ.ಗಳ ಸುಂಕವನ್ನು ಹೊಂದಿರುತ್ತದೆ. ನಿಮಿಷಕ್ಕೆ 1,500 ಪೌಚ್ಗಳಿಗಿಂತ ಹೆಚ್ಚು ಕಾರ್ಯನಿರ್ವಹಿಸುವ ಯಂತ್ರಗಳಿಗೆ, ಗುಟ್ಕಾಗೆ (0.92 × S) / 450 ನಂತಹ ನಿರ್ದಿಷ್ಟ ಸೂತ್ರಗಳನ್ನು ಬಳಸಿಕೊಂಡು ಸುಂಕಗಳನ್ನು ಲೆಕ್ಕಹಾಕಲಾಗುತ್ತದೆ. ಇಲ್ಲಿ ‘S’ ಎಂಬುದು ಯಂತ್ರದ ವೇಗವಾಗಿದೆ. ಬೇಕಿದೆ ಕಟ್ಟುನಿಟ್ಟಾದ ಕಣ್ಗಾವಲು ತೆರಿಗೆ ವಂಚನೆಯನ್ನು ತಡೆಯಲು ತಯಾರಕರು ಎಲ್ಲಾ ಪ್ಯಾಕಿಂಗ್ ಪ್ರದೇಶಗಳನ್ನು ಒಳಗೊಳ್ಳುವಂತೆ ಸಿಸಿಟಿವಿ ವ್ಯವಸ್ಥೆಗಳನ್ನು ಸ್ಥಾಪಿಸಬೇಕು ಮತ್ತು 48 ತಿಂಗಳುಗಳವರೆಗೆ ದೃಶ್ಯಾವಳಿಗಳನ್ನು ಸಂರಕ್ಷಿಸಬೇಕು ಎಂದು ಸಚಿವಾಲಯ ಹೇಳಿದೆ. ಎಲ್ಲಾ ತಯಾರಕರು 2026 ಫೆಬ್ರವರಿ 7ರೊಳಗೆ ತಮ್ಮ ಉತ್ಪಾದನಾ ಅಂಶಗಳು ಮತ್ತು ಯಂತ್ರದ ತಾಂತ್ರಿಕ ವಿಶೇಷಣಗಳನ್ನು ವಿವರಿಸುವ ವಿವರವಾದ ಘೋಷಣೆಯನ್ನು (ಫಾರ್ಮ್ CE DEC-01) ಸಲ್ಲಿಸಬೇಕು. ಯಂತ್ರದ ವೇಗ ಮತ್ತು ಗೇರ್ಬಾಕ್ಸ್ ಅನುಪಾತಗಳನ್ನು ಫಾರ್ಮ್ CE CCE-01 ಬಳಸಿ ಚಾರ್ಟರ್ಡ್ ಎಂಜಿನಿಯರ್ ಪ್ರಮಾಣೀಕರಿಸಬೇಕು. ಸುಂಕವನ್ನು ಮುಂಚಿತವಾಗಿ ಪಾವತಿಸದೆ ಯಾವುದೇ ಅಧಿಸೂಚಿತ ತಂಬಾಕು ಸರಕುಗಳನ್ನು ರಫ್ತು ಮಾಡಲಾಗುವುದಿಲ್ಲ. ಪಾನ್ ಮಸಾಲಾ ತಯಾರಿಕೆ ಮತ್ತು ತಂಬಾಕಿನ ಮೇಲಿನ ಅಬಕಾರಿ ಸುಂಕದ ಮೇಲೆ ಹೊಸ ಆರೋಗ್ಯ ಮತ್ತು ರಾಷ್ಟ್ರೀಯ ಭದ್ರತಾ ಸೆಸ್ ವಿಧಿಸಲು ಅನುಮತಿಸುವ ಎರಡು ಮಸೂದೆಗಳನ್ನು ಸಂಸತ್ತು 2025 ಡಿಸೆಂಬರ್ನಲ್ಲಿ ಅನುಮೋದಿಸಿತ್ತು. ತಂಬಾಕು ಉತ್ಪನ್ನಗಳು ಮತ್ತು ಅವುಗಳ ಉತ್ಪಾದನೆಯ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಸಂಸತ್ತು ಅಂಗೀಕರಿಸಿದ ನಂತರ ಈ ಸುಂಕ ಹೆಚ್ಚಳ ಮಾಡಲಾಗಿದೆ. ವಿಶೇಷವಾಗಿ ಉದ್ದದ ಸಿಗರೇಟ್ಗಳು ಮತ್ತು ಫಿಲ್ಟರ್ ಸಿಗರೇಟ್ಗಳು ದುಬಾರಿ ಆಗಲಿವೆ. ಯಾಕೆಂದರೆ ತಯಾರಕರು ಹೆಚ್ಚುವರಿ ತೆರಿಗೆ ವೆಚ್ಚವನ್ನು ಗ್ರಾಹಕರಿಗೆ ವರ್ಗಾಯಿಸಲಿದ್ದಾರೆ. ಜಿಎಸ್ಟಿ ಪರಿಹಾರ ಸೆಸ್ ಅವಧಿ ಮುಗಿದ ನಂತರ ತಂಬಾಕು ಮತ್ತು ಸಂಬಂಧಿತ ಉತ್ಪನ್ನಗಳ ಮೇಲಿನ ಅಬಕಾರಿ ಸುಂಕಗಳನ್ನು ಪರಿಷ್ಕರಿಸುವ ಗುರಿಯನ್ನು ಹೊಂದಿರುವ ಕೇಂದ್ರ ಅಬಕಾರಿ (ತಿದ್ದುಪಡಿ) ಮಸೂದೆ, 2025 ಅನ್ನು ಸಂಸತ್ತು ಅಂಗೀಕರಿಸಿತ್ತು. 2017ರಲ್ಲಿ ಜಿಎಸ್ಟಿ ಜಾರಿಗೆ ಬಂದ ನಂತರ ಇದೇ ಮೊದಲ ಬಾರಿಗೆ ಸರ್ಕಾರ ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಮೇಲಿನ ಅಬಕಾರಿ ಸುಂಕದ ಪ್ರಮುಖ ಪರಿಷ್ಕರಣೆಯನ್ನು ಪ್ರಕಟಿಸಿದೆ. ಇದು ಜಿಎಸ್ಟಿಯ ಜೊತೆಗೆ ಪ್ರತ್ಯೇಕ ಅಬಕಾರಿ ತೆರಿಗೆಯನ್ನು ಮರಳಿ ತರುತ್ತದೆ. ಏನೇನು ಬದಲಾಗಲಿದೆ? ಇಲ್ಲಿಯವರೆಗೆ, ಸಿಗರೇಟ್ಗೆ ಜಿಎಸ್ಟಿ ಮತ್ತು ಮೌಲ್ಯಾಧಾರಿತ ತೆರಿಗೆ ಮೂಲಕ ತೆರಿಗೆ ವಿಧಿಸಲಾಗುತ್ತಿತ್ತು. ಫೆಬ್ರವರಿ 1ರಿಂದ, ಕೇಂದ್ರ ಸರ್ಕಾರ ಸಿಗರೇಟು ಯಾವ ರೀತಿಯದ್ದು ಎಂಬುದರ ಮೇಲೆ ನಿರ್ದಿಷ್ಟ ಅಬಕಾರಿ ಸುಂಕವನ್ನು ವಿಧಿಸಲಿದೆ. ಸಿಗರೇಟ್ ಫಿಲ್ಟರ್ಡ್ ಅಥವಾ ನಾನ್-ಫಿಲ್ಟರ್ಡ್ ಆಗಿದೆಯೇ?, ಸಿಗರೇಟಿನ ಉದ್ದ (ಮಿಲ್ಲಿಮೀಟರ್ಗಳಲ್ಲಿ) ಆಧರಿಸಿ ಈ ಸುಂಕ ವಿಧಿಸಲಾಗುತ್ತದೆ. ಸಿಗರೇಟು ಯಾವ ಕೆಟಗರಿಗೆ ಸೇರಿದ್ದು ಎಂಬುದರ ಮೇಲೆ 1,000 ಸಿಗರೇಟುಗಳಿಗೆ ಅಬಕಾರಿ ಸುಂಕ 2,050 ರೂ.ವಿನಿಂದ 8,500 ರೂ. ಆಗಲಿದೆ. ಸರಳವಾಗಿ ಹೇಳುವುದಾದರೆ, ಸಿಗರೇಟ್ ಉದ್ದವಾದಷ್ಟೂ ತೆರಿಗೆ ಹೆಚ್ಚಾಗುತ್ತದೆ. ಇದರ ಲೆಕ್ಕಾಚಾರ ಹೀಗಿದೆ ಸಣ್ಣದು, ಫಿಲ್ಟರ್ ಇಲ್ಲದ ಸಿಗರೇಟ್ಗಳು (65 ಮಿಮೀ ವರೆಗೆ): ಪ್ರತಿ ಸಿಗರೇಟಿಗೆ ಸುಮಾರು 2.05 ರೂ. ಸಣ್ಣದು, ಫಿಲ್ಟರ್ ಸಿಗರೇಟ್ಗಳು (65 ಮಿಮೀ ವರೆಗೆ): ಪ್ರತಿ ಸಿಗರೇಟಿಗೆ ಸುಮಾರು 2.10 ರೂ. ಮಧ್ಯಮ-ಉದ್ದದ ಸಿಗರೇಟ್ಗಳು (65–70 ಮಿಮೀ): ಪ್ರತಿ ಸಿಗರೇಟಿಗೆ ಸುಮಾರು 3.6 ರೂ.ದಿಂದ 4 ರೂ. ಉದ್ದ, ಪ್ರೀಮಿಯಂ ಸಿಗರೇಟ್ಗಳು (70–75 ಮಿಮೀ): ಪ್ರತಿ ಸಿಗರೇಟಿಗೆ ಸುಮಾರು 5.4 ರೂ. 1,000 ಸಿಗರೇಟಿಗೆ 8,500 ರೂ. ಹೆಚ್ಚಿನ ಸುಂಕವನ್ನು ಹೊಂದಿರುವ “ಇತರ” ಕೆಟಗರಿಯೂ ಇದೆ. ಆದರೆ ಇದು ಅಸಾಮಾನ್ಯ ಅಥವಾ ಪ್ರಮಾಣಿತವಲ್ಲದ ವಿನ್ಯಾಸಗಳಿಗೆ ಮಾತ್ರ ಅನ್ವಯಿಸುತ್ತದೆ. ಹೆಚ್ಚಿನ ಜನಪ್ರಿಯ ಬ್ರ್ಯಾಂಡ್ಗಳು ಈ ಸ್ಲ್ಯಾಬ್ಗೆ ಬರುವುದಿಲ್ಲ. ಬೆಲೆ ಏರಿಕೆ ಹೇಗೆ? ಸಿಗರೇಟ್ ಕಂಪನಿಗಳು ಬೆಲೆ ಏರಿಕೆಗೆ ಕೆಲವು ಆಯ್ಕೆಗಳನ್ನು ಹೊಂದಿವೆ. ಆದರೆ ಪ್ರತಿಕ್ರಿಯೆ ಏಕರೂಪವಾಗಿರುವುದಿಲ್ಲ. ಸಮೂಹ-ಮಾರುಕಟ್ಟೆ ಬ್ರ್ಯಾಂಡ್ಗಳಲ್ಲಿ ಮಾರಾಟದ ಪ್ರಮಾಣವನ್ನು ರಕ್ಷಿಸಲು ಕಂಪನಿಗಳು ಹೆಚ್ಚಳದ ಒಂದು ಭಾಗವನ್ನು ಬಳಸಿಕೊಳ್ಳಬಹುದು. ಕೆಲವು ಕಂಪನಿಗಳು ಹಂತ ಹಂತವಾಗಿ ಏರಿಕೆಗಳನ್ನು ಮಾಡಬಹುದು. ಯಾವ ಸಿಗರೇಟ್ಗಳು ದುಬಾರಿ? ಉದ್ದವಾದ, ಪ್ರೀಮಿಯಂ ಸಿಗರೇಟ್ಗಳಿಗೆ ಅತ್ಯಧಿಕ ತೆರಿಗೆ ವಿಧಿಸಲಾಗುತ್ತದೆ. ಇದು ಭಾರತದಲ್ಲಿ ಮಾರಾಟವಾಗುವ ಗೋಲ್ಡ್ ಫ್ಲೇಕ್ ಪ್ರೀಮಿಯಂ, ರೆಡ್ & ವೈಟ್ ಕಿಂಗ್ ಸೈಜ್, ಕ್ಲಾಸಿಕ್ & ಮಾರ್ಲ್ಬೊರೊ ಸಿಗರೇಟುಗಳು, ನೇವಿ ಕಟ್ ಮತ್ತು ಇದೇ ರೀತಿಯ ಉದ್ದವಾದ ಸಿಗರೇಟುಗಳು, ಐಸ್ ಬರ್ಸ್ಟ್ನಂತಹ ಸುವಾಸನೆಯ ಸಿಗರೇಟುಗಳು ಸಹ 70–75 ಎಂಎಂ ಫಿಲ್ಟರ್ ವರ್ಗದ ಅಡಿಯಲ್ಲಿ ಬರುತ್ತವೆ. ಚಿಕ್ಕ ಸಿಗರೇಟ್ಗಳು, ಮಿನಿ ಮತ್ತು ಸ್ಟಬ್ಬಿ ನಾನ್-ಫಿಲ್ಟರ್ ಸಿಗರೇಟಿನ ದರವೂ ತುಸು ಹೆಚ್ಚಾಗಲಿದೆ. ಸಿಗರೇಟ್ಗಳ ಮೇಲಿನ ಜಿಎಸ್ಟಿ ಮತ್ತು ತೆರಿಗೆ ಹೊಸ ಅಬಕಾರಿ ಸುಂಕವು ಜಿಎಸ್ಟಿಯ ಮೇಲೆ ಅನ್ವಯಿಸುತ್ತದೆ. ಉತ್ಪನ್ನವನ್ನು ಅವಲಂಬಿಸಿ ಇದು 18% ಅಥವಾ 40% ಇರಲಿದೆ. ಅದೇ ಸಮಯದಲ್ಲಿ, ಸರ್ಕಾರವು ತಂಬಾಕಿನ ಮೇಲಿನ ಜಿಎಸ್ಟಿ ಪರಿಹಾರ ಸೆಸ್ ಅನ್ನು ಹಿಂತೆಗೆದುಕೊಂಡಿದೆ. ಈ ಬದಲಾವಣೆಯ ನಂತರವೂ, ಭಾರತದಲ್ಲಿ ಸಿಗರೇಟ್ಗಳ ಮೇಲಿನ ಒಟ್ಟು ತೆರಿಗೆಗಳು ಚಿಲ್ಲರೆ ಬೆಲೆಯ ಸರಿಸುಮಾರು 53% ರಷ್ಟಿದೆ. ಇದು ಧೂಮಪಾನವನ್ನು ನಿರುತ್ಸಾಹಗೊಳಿಸುವ ಗುರಿಯನ್ನು ಹೊಂದಿರುವ ವಿಶ್ವ ಆರೋಗ್ಯ ಸಂಸ್ಥೆಯ 75% ಮಾನದಂಡಕ್ಕಿಂತ ಇನ್ನೂ ಕಡಿಮೆಯಾಗಿದೆ. ತೆರಿಗೆ ಅನ್ವಯವಾದಾಗ ಸಿಗರೇಟಿನ ಬೆಲೆ ಎಷ್ಟಾಗುತ್ತದೆ? ಸರಳವಾಗಿ ಹೇಳುವುದಾದರೆ, ಹೊಸ ತೆರಿಗೆ ನಿಯಮಗಳು ಜಾರಿಗೆ ಬಂದ ನಂತರ, ಹೆಚ್ಚಿನ ತೆರಿಗೆಗಳಿಂದಾಗಿ ಸಿಗರೇಟ್ ದುಬಾರಿಯಾಗುತ್ತದೆ. ಜಿಎಸ್ಟಿಯನ್ನು ಶೇಕಡಾ 40ಕ್ಕೆ ನಿಗದಿಪಡಿಸಿದಾಗ, ಮೊದಲು 18 ರೂ. ಇದ್ದ ಸಿಗರೇಟಿನ ಬೆಲೆ 19.70 ರೂ.ಗೆ ಏರುತ್ತದೆ. ಇದರ ಜೊತೆಗೆ, ಸರ್ಕಾರವು ಹೆಚ್ಚುವರಿ ಅಬಕಾರಿ ಸುಂಕವನ್ನು ವಿಧಿಸುತ್ತದೆ. ಈ ಅಬಕಾರಿ ಸುಂಕವನ್ನು ಸಾಧಾರಣವಾಗಿ ಇರಿಸಿದರೂ, ಪ್ರತಿ ಸಿಗರೇಟಿಗೆ ಸುಮಾರು 1 ರೂ.ದಿಂದ 2 ರೂ. ಇದ್ದರೂ, ಅಂತಿಮ ಬೆಲೆ ಮತ್ತಷ್ಟು ಹೆಚ್ಚಾಗುತ್ತದೆ. ಪರಿಣಾಮವಾಗಿ, ಫೆಬ್ರವರಿ 1ರ ನಂತರ ಒಂದು ಸಿಗರೇಟಿನ ಬೆಲೆ ಸರಿಸುಮಾರು 21 ರೂ.ದಿಂದ 22 ರೂ.ವರೆಗೆ ಇರಲಿದೆ. ಸರ್ಕಾರದಿಂದ ಈ ಕ್ರಮ ಯಾಕೆ? ತಂಬಾಕು ವಲಯದಲ್ಲಿ ತೆರಿಗೆ ವಂಚನೆಯನ್ನು ತಡೆಯುವುದು, ಸರ್ಕಾರದ ಆದಾಯವನ್ನು ಹೆಚ್ಚಿಸುವುದು, ತಂಬಾಕು ಸಂಬಂಧಿತ ಕಾಯಿಲೆಗಳಿಗೆ, ವಿಶೇಷವಾಗಿ ಕ್ಯಾನ್ಸರ್ಗೆ ಸಂಬಂಧಿಸಿದ ಹೆಚ್ಚುತ್ತಿರುವ ಆರೋಗ್ಯ ವೆಚ್ಚಗಳನ್ನು ನಿಭಾಯಿಸಲು ಸುಂಕಗಳನ್ನು ಏರಿಕೆ ಮಾಡಲಾಗಿದೆ ಎಂದು ಹಣಕಾಸು ಸಚಿವಾಲಯ ಹೇಳಿದೆ. ಸಿಗರೇಟ್ ಕಂಪನಿಗಳ ಪ್ರತಿಕ್ರಿಯೆ ಏನು? ಫೆಬ್ರವರಿ 1ರಿಂದ ಸಿಗರೇಟ್ಗಳ ಮೇಲಿನ ಪ್ರಸ್ತಾವಿತ ಅಬಕಾರಿ ಸುಂಕ ಹೆಚ್ಚಳದ ಒಟ್ಟಾರೆ ಪರಿಣಾಮವು revenue neutral ಆಗಿರುತ್ತದೆ. ಏಕೆಂದರೆ ಇದು ಅಕ್ರಮ ವ್ಯಾಪಾರವನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂದು ಭಾರತದ ತಂಬಾಕು ಕಂಪನಿಗಳು ಹೇಳಿವೆ. ಈ ನಡುವೆ, ಐಟಿಸಿ, ಗಾಡ್ಫ್ರೇ ಫಿಲಿಪ್ಸ್ ಇಂಡಿಯಾ ಮತ್ತು ವಿಎಸ್ಟಿ ಇಂಡಸ್ಟ್ರೀಸ್ನಂತಹ ಪ್ರಮುಖ ಸಿಗರೇಟ್ ತಯಾರಕರ ಪ್ರತಿನಿಧಿ ಸಂಸ್ಥೆಯಾದ ಟಿಐಐ, ತೆರಿಗೆ ಹೆಚ್ಚಳವನ್ನು ಮರುಪರಿಶೀಲಿಸುವಂತೆ ಸರ್ಕಾರವನ್ನು ವಿನಂತಿಸಿದೆ. ಈ ರೀತಿಯ ಹೆಚ್ಚಳವು ಲಕ್ಷಾಂತರ ರೈತರು, ಎಂಎಸ್ಎಂಇಗಳು, ಚಿಲ್ಲರೆ ವ್ಯಾಪಾರಿಗಳು ಮತ್ತು ಉದ್ಯಮಗಳಿಗೆ ಅಪಾರ ಕಷ್ಟ ಮತ್ತು ನಷ್ಟವನ್ನು ಉಂಟುಮಾಡುತ್ತದೆ. ಇದು ಅಕ್ರಮ ಉದ್ಯಮಕ್ಕೆ ರಹದಾರಿಯಾಗಿದ್ದು ರಾಷ್ಟ್ರೀಯ ಉದ್ಯಮಗಳಿಗೆ ಹಾನಿಯನ್ನುಂಟುಮಾಡುತ್ತದೆ ಎಂದು ಟಿಐಐ ಹೇಳಿಕೆಯಲ್ಲಿ ತಿಳಿಸಿದೆ. ದೇಶದಲ್ಲಿ ಪ್ರತಿ ಮೂರು ಕಾನೂನುಬದ್ಧ ಸಿಗರೇಟ್ಗಳಿಗೆ ಒಂದು ಕಳ್ಳಸಾಗಣೆ/ಅಕ್ರಮ ಸಿಗರೇಟ್ ಮಾರಾಟವಾಗುತ್ತದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವಾಗಿದೆ. ಈ ತೆರಿಗೆ ಹೆಚ್ಚಳವು “ಕಾನೂನುಬಾಹಿರ ಮತ್ತು ಅಕ್ರಮ ಚಟುವಟಿಕೆ”ಯನ್ನು ಮತ್ತಷ್ಟು ಹೆಚ್ಚಿಸುತ್ತದೆ. ಇದು ಸಮಾಜವಿರೋಧಿ ಚಟುವಟಿಕೆಯನ್ನು ಉತ್ತೇಜಿಸುವುದರ ಜೊತೆಗೆ ಸರ್ಕಾರದ ಖಜಾನೆಯನ್ನು ಕಸಿದುಕೊಳ್ಳುತ್ತದೆ ಎಂದು ಉದ್ಯಮ ಸಂಸ್ಥೆ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.
PC: siliconindia ಮಂಗಳೂರು : ಹೆಜಮಾಡಿಯ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಯ ಒಂದು ತರಗತಿಯಲ್ಲಿ ಮೊಳಕೆಯೊಡೆದ ಕನಸು, ಇಂದು ಅಮೆರಿಕದ ಜಾಗತಿಕ ಏರೋಸ್ಪೇಸ್ ಸಂಸ್ಥೆಯಲ್ಲಿ ನನಸಾಗಿದೆ. ಸೀಮಿತ ಆದಾಯದ ಕುಟುಂಬ, ಇಂಗ್ಲಿಷ್ ಭಾಷೆ ಕಬ್ಬಿಣದ ಕಡಲೆಯಾಗಿದ್ದ ದಿನಗಳು ಮತ್ತು ಸಣ್ಣ ಹಳ್ಳಿಯ ವಾತಾವರಣ. ಇವೆಲ್ಲವನ್ನೂ ದಾಟಿ, ಶಿಕ್ಷಣದ ಮೇಲಿನ ಅಚಲ ನಂಬಿಕೆ ಮತ್ತು ನಿರಂತರ ಪರಿಶ್ರಮದ ಮೂಲಕ ಮುಂದೆ ಸಾಗಿದವರು ಇಮ್ತಿಯಾಝ್ ಇಕ್ಬಾಲ್. ಅವರ ಬದುಕಿನ ಪಯಣ ಕೇವಲ ವೈಯಕ್ತಿಕ ಸಾಧನೆಯ ಕಥೆಯಲ್ಲ; ಅದು ಕನ್ನಡ ಮಾಧ್ಯಮ ಹಾಗೂ ಹಳ್ಳಿ ಹಿನ್ನೆಲೆ ಜಾಗತಿಕ ವೇದಿಕೆಯಲ್ಲಿ ಸಾಧನೆಗೆ ಅಡ್ಡಿಯಾಗುವುದಿಲ್ಲ ಎಂಬುದನ್ನು ಸಾಬೀತುಪಡಿಸುವ ಸ್ಪೂರ್ತಿದಾಯಕ ಪಯಣ. ಉಡುಪಿ ಜಿಲ್ಲೆಯ ಹೆಜಮಾಡಿಯ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಕಲಿತ ಇಮ್ತಿಯಾಝ್ ಇಕ್ಬಾಲ್ ಇಂದು ಅಮೆರಿಕದ ಜಾಗತಿಕ ಏರೋಸ್ಪೇಸ್ ಸಂಸ್ಥೆಯೊಂದರ ಮುಖ್ಯ ಮಾಹಿತಿ ಅಧಿಕಾರಿ (CIO). ಹೆಜಮಾಡಿಯಂತಹ ಸಣ್ಣ ಹಳ್ಳಿಯಲ್ಲಿ ಹುಟ್ಟಿ ಬೆಳೆದ ಅವರು, ಸರ್ಕಾರಿ ಕನ್ನಡ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿದರು. ಐವರು ಸಹೋದರಿಯರಿರುವ ದೊಡ್ಡ ಕುಟುಂಬದಲ್ಲಿ, ಚಿಕ್ಕ ಮನೆಯಲ್ಲಿ ಅವರ ಬಾಲ್ಯ ಕಳೆಯಿತು. ತಂದೆ ಟ್ರಕ್ ಚಾಲಕ; ತಾಯಿ ಮಣಿ ತಯಾರಿಸುವ ಕೆಲಸ ಮಾಡುತ್ತಿದ್ದರು. ಆದಾಯ ಸೀಮಿತವಾಗಿದ್ದರೂ, ಮಕ್ಕಳ ಶಿಕ್ಷಣದ ವಿಚಾರದಲ್ಲಿ ಕುಟುಂಬ ಯಾವತ್ತೂ ರಾಜಿಮಾಡಲಿಲ್ಲ. ಇಮ್ತಿಯಾಝ್ ಅವರ ಹೆತ್ತವರಿಗೆ ಶಿಕ್ಷಣವೇ ಬದುಕನ್ನು ಬದಲಾಯಿಸಬಲ್ಲ ಏಕೈಕ ದಾರಿ ಎಂಬ ಅಚಲ ನಿರ್ಧಾರವಿತ್ತು. ಅದನ್ನೇ ಮಕ್ಕಳಿಗೆ ಹೇಳಿ ಕೊಟ್ಟಿದ್ದರು.ಪ್ರಾಥಮಿಕ ಮತ್ತು ಪ್ರೌಢಶಾಲಾ ಹಂತದಲ್ಲಿ, ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದ ಬಗ್ಗೆ ನಿಜವಾದ ಕಾಳಜಿ ಹೊಂದಿದ್ದ ಕೆಲ ಅಪರೂಪದ ಶಿಕ್ಷಕರ ಮಾರ್ಗದರ್ಶನ ಇಮ್ತಿಯಾಝ್ ಅವರಿಗೆ ದೊರಕಿತು. ಅವರ ಬೋಧನೆ ಪಠ್ಯಪುಸ್ತಕಗಳಿಗೆ ಮಾತ್ರ ಸೀಮಿತವಾಗಿರಲಿಲ್ಲ; ಜೀವನದ ದಿಕ್ಕನ್ನೇ ರೂಪಿಸುವಂತಿತ್ತು. ಆ ಪ್ರಭಾವವೇ ಇಮ್ತಿಯಾಝ್ ಅವರಲ್ಲಿ ಶಿಸ್ತು, ಪರಿಶ್ರಮ ಮತ್ತು ಕಲಿಕೆಯ ಮೇಲಿನ ಅಚಲ ನಂಬಿಕೆಯನ್ನು ಬೆಳೆಸಿತು. ಪ್ರೌಢಶಾಲೆಯ ನಂತರ, ಪಕ್ಕದ ಮುಲ್ಕಿಯ ವಿಜಯ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣಕ್ಕೆ ಸೇರಿದಾಗ ಅವರ ಜೀವನದಲ್ಲಿ ಮಹತ್ವದ ತಿರುವು ಸಿಕ್ಕಿತು. ಕನ್ನಡ ಮಾಧ್ಯಮದಿಂದ ಇಂಗ್ಲಿಷ್ ಮಾಧ್ಯಮಕ್ಕೆ ಒಮ್ಮೆಲೇ ಒಗ್ಗಿಕೊಳ್ಳಬೇಕಾದ ಪರಿಸ್ಥಿತಿ. ಈ ಬದಲಾವಣೆ ಸುಲಭವಿರಲಿಲ್ಲ. ಮೊದಲ ವರ್ಷ ಪಠ್ಯಪುಸ್ತಕಗಳ ಪ್ರತಿಯೊಂದು ಸಾಲನ್ನು ಅರ್ಥಮಾಡಿಕೊಳ್ಳಲು ನಿಯಮಿತವಾಗಿ ನಿಘಂಟು ನೋಡಿಕೊಂಡೇ ಇರಬೇಕಿತ್ತು. ಆವರೆಗೂ ಕನ್ನಡ ಮಾಧ್ಯಮದಲ್ಲೇ ಓದಿದ್ದ ಇಮ್ತಿಯಾಝ್ ಇಕ್ಬಾಲ್ ಅವರಿಗೆ ಒಂದೇ ವಿಷಯವನ್ನು ಅರ್ಥೈಸಿಕೊಳ್ಳಲು ಇಂಗ್ಲಿಷ್ ಮಾಧ್ಯಮ ಹಿನ್ನೆಲೆಯ ವಿದ್ಯಾರ್ಥಿಗಳಿಗಿಂತ ಹೆಚ್ಚಿನ ಶ್ರಮ ಬೇಕಾಗುತ್ತಿತ್ತು. ಆತ್ಮವಿಶ್ವಾಸ ಕುಸಿಯುವ ಕ್ಷಣಗಳೂ ಎದುರಾದವು. ಆದರೆ ಹಿಂದೆ ಸರಿಯುವ ಪ್ರಶ್ನೆಯೇ ಇರಲಿಲ್ಲ. ಜಾಗತಿಕ ಭಾಷೆಯಾಗಿ ಇಂಗ್ಲಿಷ್ ನ ಬೆಳವಣಿಗೆಯಾಗುತ್ತಿರುವ ಬಗ್ಗೆ ಅಧ್ಯಾಪಕರು ಹೇಳಿದ ಕಿವಿಮಾತುಗಳು ಆತ್ಮವಿಶ್ವಾಸ ತುಂಬಿದವು. ಪಿಯುಸಿಯ ಎರಡನೇ ವರ್ಷದ ಹೊತ್ತಿಗೆ, ಇಂಗ್ಲಿಷ್ ಭಾಷೆಯ ಮೇಲಿನ ಭಯ ನಿಧಾನವಾಗಿ ಆತ್ಮವಿಶ್ವಾಸವಾಗಿ ಬದಲಾಯಿತು. ಈ ಹಂತದಲ್ಲಿ ಅವರು ದೌರ್ಬಲ್ಯವನ್ನು ಮರೆಮಾಚುವುದಕ್ಕಿಂತ ಅದನ್ನು ಗುರುತಿಸಿ ಎದುರಿಸಿದರೆ ಮುಂದಿನ ದಾರಿ ತೆರೆದುಕೊಳ್ಳುತ್ತದೆ ಎಂಬ ಪಾಠ ಕಲಿತರು. ಕಾಲೇಜಿನಲ್ಲಿ ಶಿಕ್ಷಕರು ಉದ್ದೇಶಪೂರ್ವಕವಾಗಿ ಇಂಗ್ಲಿಷ್ ನಲ್ಲೇ ಸಂವಹನ ನಡೆಸುತ್ತಿದ್ದರು. ಆ ಒತ್ತಡವೇ ವಿದ್ಯಾರ್ಥಿ ಜೀವನದಲ್ಲಿ ಬದಲಾವಣೆಯನ್ನು ಸ್ವೀಕರಿಸಲು ನೆರವಾಯಿತು ಎಂದು ಅವರು ಸ್ಮರಿಸಿಕೊಳ್ಳುತ್ತಾರೆ. ಪಿಯುಸಿಯ ನಂತರ, ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಇಂಜಿನಿಯರಿಂಗ್ ಪದವಿ ಪಡೆದ ಅವರು, ಅತ್ಯುನ್ನತ ಪಲಿತಾಂಶ ಗಳಿಸಿದರು. ಪದವಿ ಪಡೆದ ತಕ್ಷಣ, ಅವರು NITK ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ ತಮ್ಮ ವೃತ್ತಿಜೀವನ ಆರಂಭಿಸಿದರು. ಆದರೆ ಅವರ ದೃಷ್ಟಿ ಶೈಕ್ಷಣಿಕ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿರಲಿಲ್ಲ; ಉದ್ಯಮ ಕ್ಷೇತ್ರದತ್ತವೂ ಅವರ ದೃಷ್ಟಿ ನೆಟ್ಟಿತ್ತು. ಅದರ ಭಾಗವಾಗಿ ಒಮಾನ್ ನ ಮಸ್ಕತ್ಗೆ ತೆರಳಿ ಸೌದ್ ಬಹ್ವಾನ್ ಗ್ರೂಪ್ನಲ್ಲಿ ವೃತ್ತಿ ಆರಂಭಿಸಿದರು. ಅಲ್ಲಿ ಸಾಫ್ಟ್ ವೇರ್ ಇಂಜಿನಿಯರಿಂಗ್ ನಿಂದ ಹಿಡಿದು ಯೋಜನಾ ನಿರ್ವಹಣೆವರೆಗೆ ವಿವಿಧ ಹುದ್ದೆಗಳನ್ನು ಕಾರ್ಯನಿರ್ವಹಿಸಿದರು. ನಂತರ ದುಬೈಗೆ ತೆರಳಿ HSBC ಬ್ಯಾಂಕ್ ನಲ್ಲಿ ಹಿರಿಯ ಐಟಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದರು. 1998ರಲ್ಲಿ ಅಮೆರಿಕದಿಂದ ಬಂದ ಅವಕಾಶ ಅವರ ಜೀವನದ ದಿಕ್ಕನ್ನೇ ಬದಲಾಯಿಸಿತು. ಅಮೆರಿಕಕ್ಕೆ ತೆರಳಿದ ಅವರು ಸ್ವಿಝರ್ಲ್ಯಾಂಡ್ ಮೂಲದ ಸುಗಂಧ ಉದ್ಯಮ ಗಿವಾಡಾನ್ ಕಂಪೆನಿಯಲ್ಲಿ ಐಟಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದರು. ನಂತರ ಯುಕೆ ಮೂಲದ ವೈದ್ಯಕೀಯ ಸಾಧನಗಳ ಕಂಪೆನಿಯಾದ ಸ್ಮಿತ್ ಮತ್ತು ನೆಫ್ಯೂನಲ್ಲಿ ಐಟಿ ಉಪಾಧ್ಯಕ್ಷನಾಗಿ ಸೇವೆ ಸಲ್ಲಿಸಿದರು. ಇದೇ ಅವಧಿಯಲ್ಲಿ ಓಹಿಯೋದ ಸಿನ್ಸಿನಾಟಿಯಲ್ಲಿರುವ ಕ್ಸೇವಿಯರ್ ವಿಶ್ವವಿದ್ಯಾಲಯದಿಂದ ಇಂಟರ್ನ್ಯಾಷನಲ್ ಬಿಸಿನೆಸ್ ನಲ್ಲಿ MBA ಪದವಿಯನ್ನು ಪಡೆದರು. ಮುಂದೆ ಕಾರ್ನಿಂಗ್ ಲೈಫ್ ಸೈನ್ಸಸ್ನಲ್ಲಿ ಮುಖ್ಯ ಮಾಹಿತಿ ಅಧಿಕಾರಿ (CIO) ಹುದ್ದೆ ವಹಿಸಿಕೊಂಡ ಅವರು, ನಂತರ ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರದ ಮರ್ಕ್ಯುರಿ ಕಂಪೆನಿಯಲ್ಲಿ ಸುಮಾರು ಐದು ವರ್ಷಗಳ ಕಾಲ CIO ಆಗಿ ಕಾರ್ಯನಿರ್ವಹಿಸಿದರು. ಪ್ರಸ್ತುತ ಅವರು ಬಾರ್ನ್ಸ್ ಏರೋಸ್ಪೇಸ್ ಸಂಸ್ಥೆಯ ಮುಖ್ಯ ಮಾಹಿತಿ ಅಧಿಕಾರಿ ಆಗಿದ್ದು, ವಿಮಾನ ಎಂಜಿನ್ ಭಾಗಗಳ ತಯಾರಿಕೆ ಹಾಗೂ ಜಾಗತಿಕ ಪೂರೈಕೆ ವ್ಯವಸ್ಥೆಗಳ ತಂತ್ರಜ್ಞಾನ ನೇತೃತ್ವ ಅವರ ಹೊಣೆಗಾರಿಕೆಯ ಕೇಂದ್ರವಾಗಿದೆ. ಮಂಗಳೂರೊಂದು 'ಮಿನಿ ಜಗತ್ತು' ಪ್ರಪಂಚದ ಅನೇಕ ದೇಶಗಳು ಮತ್ತು ನಗರಗಳಲ್ಲಿ ಕೆಲಸ ಮಾಡಿದ ಅನುಭವದ ಬಳಿಕವೂ, ಮಂಗಳೂರು ಹಾಗೂ ಕರಾವಳಿ ಕರ್ನಾಟಕವನ್ನು ವಿದ್ಯಾರ್ಥಿಗಳು ಬೆಳೆಯಲು ವಿಶ್ವದ ಅತ್ಯುತ್ತಮ ಪ್ರದೇಶಗಳಲ್ಲೊಂದು ಎಂದು ಇಮ್ತಿಯಾಝ್ ಇಕ್ಬಾಲ್ ಅಭಿಪ್ರಾಯಪಡುತ್ತಾರೆ. ಇಲ್ಲಿ ಶಿಕ್ಷಣವು ಕೇವಲ ಶಾಲೆ–ಕಾಲೇಜುಗಳಿಗೆ ಸೀಮಿತವಾಗಿಲ್ಲ; ಅದು ದೈನಂದಿನ ಸಂಭಾಷಣೆಯ ಭಾಗವಾಗಿದೆ. ಇದೇ ಈ ಪ್ರದೇಶದ ಅತಿದೊಡ್ಡ ಶಕ್ತಿ ಎಂದು ಅವರು ಹೇಳುತ್ತಾರೆ. 1970ರ ದಶಕದಲ್ಲಿ ಅವರು ಬೆಳೆಯುತ್ತಿದ್ದ ಕಾಲಕ್ಕೆ ಹೋಲಿಸಿದರೆ, ಇಂದು ಶಿಕ್ಷಣಕ್ಕೆ ಹೆಚ್ಚಿನ ಅವಕಾಶಗಳು, ಆರೋಗ್ಯ ಸೇವೆಗಳ ಸುಧಾರಣೆ ಮತ್ತು ಜೀವನಮಟ್ಟದ ಏರಿಕೆ ಕಂಡು ಬರುತ್ತದೆ. ಬಹುಭಾಷಾ ಮತ್ತು ಬಹುಸಾಂಸ್ಕೃತಿಕ ವಾತಾವರಣವು ಮಂಗಳೂರಿನ ಜನರನ್ನು ಜಾಗತಿಕ ವೇದಿಕೆಗೆ ಸಹಜವಾಗಿ ಸಿದ್ಧಪಡಿಸುತ್ತದೆ ಎಂದು ಅವರು ಹೇಳುತ್ತಾರೆ. ಆದರೆ ಅಭಿವೃದ್ಧಿಯ ದೃಷ್ಟಿಯಿಂದ ಒಂದು ಮಹತ್ವದ ಕೊರತೆ ಇನ್ನೂ ಉಳಿದಿದೆ ಎಂದು ಅವರು ಸೂಚಿಸುತ್ತಾರೆ. ಸೇವಾ ವಲಯ, ಐಟಿ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಉತ್ತಮ ಬೆಳವಣಿಗೆ ಕಂಡಿದ್ದರೂ, ಕೈಗಾರಿಕಾ ಮತ್ತು ಉತ್ಪಾದನಾ ಅಭಿವೃದ್ಧಿ ಇನ್ನೂ ನಿರೀಕ್ಷಿತ ಮಟ್ಟ ತಲುಪಿಲ್ಲ. ಇದು ಮಂಗಳೂರಿಗೆ ಮಾತ್ರವಲ್ಲ; ಭಾರತದಾದ್ಯಂತ ವ್ಯಾಪಕವಾಗಿ ಕಂಡುಬರುವ ಸಮಸ್ಯೆಯಾಗಿದೆ ಎಂದು ಅವರು ಇಮ್ತಿಯಾಝ್ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ಈ ಪ್ರದೇಶದ ಭವಿಷ್ಯವನ್ನು ಬಲಪಡಿಸಬೇಕಾದರೆ, ಉತ್ಪಾದನಾ ಕೈಗಾರಿಕೆಗಳನ್ನು ಇಲ್ಲಿಗೆ ಆಕರ್ಷಿಸುವ ಅಗತ್ಯವಿದೆ ಎಂದು ಅವರು ಉಲ್ಲೇಖಿಸಿದರು. ಒಂದೇ ಉತ್ಪನ್ನದ ಮೇಲೆ ಕೇಂದ್ರೀಕರಿಸಿ, ಸ್ಥಳೀಯ ಜನರಿಗೆ ಉದ್ಯೋಗ ಒದಗಿಸುತ್ತಾ, ಜಾಗತಿಕ ಮಾರುಕಟ್ಟೆಗೆ ಪೂರೈಕೆ ಮಾಡುವ ಸಣ್ಣ ಮತ್ತು ಮಧ್ಯಮ ಪ್ರಮಾಣದ ಕಂಪೆನಿಗಳೂ ಇಡೀ ಪ್ರದೇಶದ ಆರ್ಥಿಕ ಮಟ್ಟವನ್ನು ಮೇಲಕ್ಕೆತ್ತಬಲ್ಲವು ಎಂದು ಇಮ್ತಿಯಾಝ್ ಇಕ್ಬಾಲ್ ಸಲಹೆ ನೀಡಿದರು. AI ಬಗ್ಗೆ ಭಯ ಬೇಡ, ಅದೊಂದು ಹೊಸ ಅವಕಾಶ ಕೃತಕ ಬುದ್ಧಿಮತ್ತೆ (AI) ಮತ್ತು ರೊಬೊಟಿಕ್ಸ್ನ್ನು ಭಯಪಡುವ ಪ್ರವೃತ್ತಿ ಹೆಚ್ಚುತ್ತಿರುವ ಸಂದರ್ಭದಲ್ಲಿ, ಇಮ್ತಿಯಾಝ್ ಇಕ್ಬಾಲ್ ಅವರ ನಿಲುವು ಭಿನ್ನವಾಗಿದೆ. AI ಉದ್ಯೋಗಗಳನ್ನು ಕಸಿದುಕೊಳ್ಳುತ್ತದೆ ಎಂಬ ಆತಂಕವನ್ನು ಅವರು ಅತಿರೇಕವೆಂದು ನೋಡುತ್ತಾರೆ. ತಂತ್ರಜ್ಞಾನವು ಮಾನವ ಶ್ರಮವನ್ನು ಸಂಪೂರ್ಣವಾಗಿ ಬದಲಾಯಿಸುವುದಿಲ್ಲ; ಬದಲಾಗಿ ಮಾನವರು ತಮ್ಮ ಸಮಯ ಮತ್ತು ಬುದ್ಧಿಶಕ್ತಿಯನ್ನು ಹೆಚ್ಚು ಮೌಲ್ಯಯುತ ಕಾರ್ಯಗಳಿಗೆ ಬಳಸಲು ಅವಕಾಶ ಮಾಡಿಕೊಡುತ್ತದೆ ಎಂಬುದು ಅವರ ಅಭಿಪ್ರಾಯ. 1970ರ ದಶಕದಿಂದ ಇಂದಿನವರೆಗೆ ಜಾಗತಿಕ ಆರ್ಥಿಕತೆಯ ಬೆಳವಣಿಗೆಯನ್ನು ಗಮನಿಸಿದರೆ, ತಂತ್ರಜ್ಞಾನವೇ ಆ ಬೆಳವಣಿಗೆಯ ಪ್ರಮುಖ ವಾಹಕ ಎಂದು ಅವರು ಹೇಳುತ್ತಾರೆ. ಯಂತ್ರಗಳು ಪುನರಾವರ್ತಿತ ಮತ್ತು ಸರಳ ಕೆಲಸಗಳನ್ನು ನಿರ್ವಹಿಸಿದಾಗ, ಮಾನವರು ಸೃಜನಶೀಲತೆ ಮತ್ತು ಮಾನವೀಯ ತೀರ್ಪು ಅಗತ್ಯವಿರುವ ಕ್ಷೇತ್ರಗಳಲ್ಲಿ ತಮ್ಮ ಶಕ್ತಿಯನ್ನು ಬಳಸಬಹುದು ಎಂದು ಅವರು ಅಭಿಪ್ರಾಯಪಡುತ್ತಾರೆ. ಈ ಹಿನ್ನೆಲೆಯಲ್ಲೇ, ಯುವಜನರು ಕೃತಕ ಬುದ್ಧಿಮತ್ತೆಯನ್ನು ಎದುರಾಳಿಯಾಗಿ ಅಲ್ಲ, ಸಾಧನವಾಗಿ ನೋಡಬೇಕು ಎಂದು ಅವರು ಸಲಹೆ ನೀಡುತ್ತಾರೆ. “ಯಂತ್ರದಿಂದ ಮಾಡಬಹುದಾದ ಕೆಲಸವನ್ನು ಯಂತ್ರಕ್ಕೆ ಬಿಡಿ; ಯಂತ್ರದಿಂದ ಸಾಧ್ಯವಾಗದ ಮಾನವ ತೀರ್ಮಾನ ಮತ್ತು ಚಿಂತನೆಯ ಅಗತ್ಯವಿರುವ ಕ್ಷೇತ್ರಗಳಲ್ಲಿ ನಿಮ್ಮ ಶಕ್ತಿಯನ್ನು ಹೂಡಿ” ಎಂಬುದು ಅವರ ಸ್ಪಷ್ಟೋಕ್ತಿ. ಭಾಷಾ ಮಾಧ್ಯಮದ ಹಿಂಜರಿಕೆ ಬೇಡ ಕನ್ನಡ ಮಾಧ್ಯಮ ಅಥವಾ ಪ್ರಾದೇಶಿಕ ಭಾಷಾ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳನ್ನು ಕಡಿಮೆ ಮಟ್ಟದವರೆಂದು ಕಾಣುವ ಪ್ರವೃತ್ತಿಯನ್ನು ಇಮ್ತಿಯಾಝ್ ಇಕ್ಬಾಲ್ ಸ್ಪಷ್ಟವಾಗಿ ತಳ್ಳಿಹಾಕುತ್ತಾರೆ. ಅವರ ಪ್ರಕಾರ, ಭಾಷೆಗೆ ಯಶಸ್ಸಿನ ಅಡೆತಡೆಯಲ್ಲ; ಅದು ವ್ಯಕ್ತಿಯ ಶಕ್ತಿಯಾಗಬಹುದು. ಕನ್ನಡ ಮಾಧ್ಯಮದಲ್ಲಿ ಓದಿರುವುದನ್ನು ದೌರ್ಬಲ್ಯವೆಂದು ಎಂದಿಗೂ ನೋಡಬಾರದು ಎಂದು ಅವರು ಹೇಳುತ್ತಾರೆ. ಭಾಷೆ ಕೇವಲ ಸಂವಹನದ ಸಾಧನ; ಒಬ್ಬ ವಿದ್ಯಾರ್ಥಿ ಯಾವ ಭಾಷಾ ಮಾಧ್ಯಮದಿಂದ ಬಂದಿದ್ದಾನೆ ಎಂಬುದು ಮುಖ್ಯವಲ್ಲ ಎಂಬುದು ಅವರ ಅಭಿಪ್ರಾಯ. ತಾವು ಕನ್ನಡ ಮಾಧ್ಯಮದಲ್ಲೇ ವಿದ್ಯಾಭ್ಯಾಸ ಮಾಡಿ, ನಂತರ ಇಂಗ್ಲಿಷ್ ಮಾಧ್ಯಮಕ್ಕೆ ಬದಲಾದ ಅನುಭವವನ್ನು ನೆನಪಿಸಿಕೊಂಡು ಮಾತನಾಡುವ ಅವರು, ಪ್ರಾರಂಭದಲ್ಲಿ ಅದು ಕಷ್ಟಕರವಾಗಿದ್ದರೂ, ಆ ಹೋರಾಟವೇ ತಮ್ಮ ದೃಢಸಂಕಲ್ಪವನ್ನು ಗಟ್ಟಿಗೊಳಿಸಿತು ಎಂದು ಹೇಳುತ್ತಾರೆ. ತಮ್ಮ ದೌರ್ಬಲ್ಯವನ್ನು ಗುರುತಿಸಿ ಅದನ್ನು ಎದುರಿಸಿದಾಗ ಮಾತ್ರ ಬೆಳವಣಿಗೆ ಸಾಧ್ಯ ಎಂದು ಅವರು ಒತ್ತಿ ಹೇಳುತ್ತಾರೆ. ಬಹುಭಾಷಾ ಪರಿಸರದಲ್ಲಿ ಬೆಳೆಯುವುದೇ ಒಂದು ದೊಡ್ಡ ಬಲ ಎಂದು ಅವರು ನಂಬುತ್ತಾರೆ. ಕರಾವಳಿ ಕರ್ನಾಟಕದಂತಹ ಪ್ರದೇಶಗಳಲ್ಲಿ ಮಕ್ಕಳು ಸಹಜವಾಗಿಯೇ ಕನ್ನಡ, ತುಳು, ಕೊಂಕಣಿ, ಬ್ಯಾರಿ ಸೇರಿದಂತೆ ಹಲವು ಭಾಷೆಗಳಲ್ಲಿ ಮಾತನಾಡುತ್ತಾ ಬೆಳೆಯುತ್ತಾರೆ. ಇದು ಕೇವಲ ಭಾಷಾ ಕೌಶಲ್ಯವಲ್ಲ; ಇದು ವಿಭಿನ್ನ ಸಂಸ್ಕೃತಿಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯವನ್ನು ರೂಪಿಸುತ್ತದೆ. ಜಾಗತಿಕ ವೇದಿಕೆಯಲ್ಲಿ ಯಶಸ್ವಿಯಾಗಲು ಈ ಗುಣ ಬಹಳ ಮುಖ್ಯ ಎಂದು ಇಮ್ತಿಯಾಝ್ ವಿಶ್ವಾಸ ವ್ಯಕ್ತಪಡಿಸುತ್ತಾರೆ. ಇಮ್ತಿಯಾಝ್ ಇಕ್ಬಾಲ್ ಅವರ ಮಾತಿನಲ್ಲಿ, ಜೀವನದಲ್ಲಿ ಮುಖ್ಯವಾದುದು ನೀವು ಯಾವ ಭಾಷೆಯಲ್ಲಿ ಓದಿದ್ದೀರಿ ಎಂಬುದಲ್ಲ; ನೀವು ಎಲ್ಲಿಗೆ ಹೋಗಬೇಕು ಎಂದು ನಿರ್ಧರಿಸಿದ್ದೀರೋ ಅದು. ಗಮ್ಯಸ್ಥಾನದ ಸ್ಪಷ್ಟತೆ ಇದ್ದರೆ, ಭಾಷೆ, ಮಾಧ್ಯಮ ಮತ್ತು ಪರಿಸ್ಥಿತಿಗಳು ಅಡೆತಡೆಗಳಾಗಿ ಅಲ್ಲ, ಕಲಿಕೆಯ ಹಂತಗಳಾಗಿ ರೂಪುಗೊಳ್ಳುತ್ತವೆ. ನಿಮ್ಮ ಹಿನ್ನೆಲೆಯ ಬಗ್ಗೆ ಕೀಳರಿಮೆಯಿಂದ ನೋಡುವ ಅಗತ್ಯವಿಲ್ಲ. ಅದು ನಿಮ್ಮ ಶಕ್ತಿ. ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಂಡು, ಗುರಿಯ ಮೇಲೆ ದೃಢವಾಗಿ ಗಮನಹರಿಸಿದರೆ, ಪ್ರಾದೇಶಿಕ ಭಾಷಾ ಶಾಲೆಯೂ ಜಾಗತಿಕ ವೇದಿಕೆಗೆ ಹೋಗುವ ದಾರಿಯಾಗಬಹುದು ಎಂದು ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಅವರು ಯಶಸ್ಸಿನ ಸಂದೇಶ ನೀಡುತ್ತಾರೆ.
2017ರಿಂದ 2023ರವರೆಗಿನ ವಿಪತ್ತು ನಿರ್ವಹಣೆ ಹಣಕಾಸಿನ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸದ ರಾಜ್ಯ ಸರಕಾರ
ಬೆಂಗಳೂರು : ರಾಜ್ಯದಲ್ಲಿ ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರಕಾರವು 2017-18ರಿಂದ 2022-23ರವರೆಗೆ ಬಿಡುಗಡೆಯಾಗಿದ್ದ ಒಟ್ಟು 19,644.78 ಕೋಟಿ ರೂ.ಗಳಿಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯು ಹಣಕಾಸಿನ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸಿಲ್ಲ. ಹೆಚ್ಚಿನ ಮೌಲ್ಯದ ಹಣಕಾಸಿನ ವಹಿವಾಟುಗಳನ್ನು ನಡೆಸುತ್ತಿದ್ದರೂ ಸಹ ಹಣಕಾಸು ದಾಖಲೆಗಳನ್ನು ಕ್ರಮಬದ್ಧವಾಗಿ ನಿರ್ವಹಿಸಿಲ್ಲ. ಅಲ್ಲದೇ ಹಣಕಾಸು ಔಚಿತ್ಯದ ನಿಯಮಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿರುವುದನ್ನು ಭಾರತದ ಲೆಕ್ಕ ನಿಯಂತ್ರಕರು ಮತ್ತು ಪ್ರಧಾನ ಮಹಾಲೇಖಪಾಲರು ಪತ್ತೆ ಹಚ್ಚಿದ್ದಾರೆ. 2025ರ ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ನಡೆದ ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆಯಾಗಿರುವ ಸಿಎಜಿ ಲೆಕ್ಕ ಪರಿಶೋಧನೆ ವರದಿಯು, ಕರ್ನಾಟಕದ ವಿಪತ್ತು ನಿರ್ವಹಣೆಯಲ್ಲಿನ ಹಣಕಾಸಿನ ದುರಾಡಳಿತವನ್ನು ಅನಾವರಣಗೊಳಿಸಿದೆ. ಈ ವರದಿಯ ಪ್ರತಿಯು he-file.inಗೆ ಲಭ್ಯವಾಗಿದೆ. 2017-18ರಿಂದ 2022-23ರವರೆಗಿನ ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರವು ಎಸಗಿರುವ ಲೋಪ ಮತ್ತು ಉಲ್ಲಂಘನೆಗಳ ಪಟ್ಟಿಯನ್ನು ವರದಿಯಲ್ಲಿ ಒದಗಿಸಿದೆ. ಅಲ್ಲದೇ ಈ ಆರೂ ವರ್ಷಗಳಲ್ಲಿ ವಿಪತ್ತು ನಿರ್ವಹಣೆಗೆ ಸ್ವೀಕರಿಸಿರುವ ಅನುದಾನ, ಬಿಡುಗಡೆಯಾದ ಅನುದಾನ, ಮಾಡಿರುವ ವೆಚ್ಚದ ಕುರಿತು ಆರ್ಥಿಕ ದಾಖಲೆಗಳನ್ನು ಸಿಎಜಿಗೆ ಕಂದಾಯ ಇಲಾಖೆಯು ಒದಗಿಸಿರಲಿಲ್ಲ. ‘ನಿಗದಿತ ಆರ್ಥಿಕ ದಾಖಲೆಗಳ ಅನುಪಸ್ಥಿತಿಯಲ್ಲಿ ಲೆಕ್ಕ ಪರಿಶೋಧನೆಗೆ ಲಭ್ಯವಿರುವ ಆರ್ಥಿಕ ಹೇಳಿಕೆಗಳಲ್ಲಿ ಸ್ವೀಕೃತಿಗಳು ಮತ್ತು ಖರ್ಚುಗಳ ನಿಖರತೆಯನ್ನು ಖಚಿತಪಡಿಸಿಕೊಳ್ಳಲು ಲೆಕ್ಕಪರಿಶೋಧನೆಗೆ ಸಾಧ್ಯವಾಗಲಿಲ್ಲ,’ ಎಂದು ಸಿಎಜಿಯು ಅಭಿಪ್ರಾಯಿಸಿರುವುದು ವರದಿಯಿಂದ ತಿಳಿದು ಬಂದಿದೆ. ವಿಪತ್ತು ನಿರ್ವಹಣೆಗೆ ಸ್ವೀಕೃತವಾದ ಅನುದಾನವೆಷ್ಟು?: 2017-18ರಲ್ಲಿ ವಿಪತ್ತು ನಿರ್ವಹಣೆಯ ಖಾತೆಯಲ್ಲಿ ಆರಂಭಿಕ ಶಿಲ್ಕಿನ ರೂಪದಲ್ಲಿ 1235.52 ಕೋಟಿ ರೂ. ಇತ್ತು. ಎನ್ಡಿಆರ್ಎಫ್ನಿಂದ 913.04 ಕೋಟಿ ರೂ., ಎಸ್ಡಿಆರ್ಎಫ್ಗೆ ಕೇಂದ್ರ ಸರಕಾರವು 228.75 ಕೋಟಿ ರೂ., ರಾಜ್ಯ ಸರಕಾರವು 76.25 ಕೋಟಿ, ರಾಜ್ಯದಿಂದ ಹೆಚ್ಚುವರಿ ಅನುದಾನದ ರೂಪದಲ್ಲಿ 37.19 ಕೋಟಿ ರೂ. ಇತ್ತು. ಈ ಪೈಕಿ ಒಟ್ಟು 2,490.75 ಕೋಟಿ ರೂ. ಬಿಡುಗಡೆಯಾಗಿತ್ತು. ಇದರಲ್ಲಿ ಶೇ.97ರಷ್ಟು ಅಂದರೇ 2,411.61 ಕೋಟಿ ರೂ. ವೆಚ್ಚ ಮಾಡಿತ್ತು. 2018-19ರಲ್ಲಿ ಎನ್ಡಿಆರ್ಎಫ್ನಿಂದ 959.84 ಕೋಟಿ ರೂ. ಅನುದಾನ ಸ್ವೀಕೃತವಾಗಿತ್ತು. ಕೇಂದ್ರ ಸರಕಾರವು ಎಸ್ಡಿಆರ್ಎಫ್ಗೆ 288,.00 ಕೋಟಿ ರೂ.., ರಾಜ್ಯ ಸರಕಾರವು 32.00 ಕೋಟಿ ರೂ. ಅನುದಾನ ನೀಡಿತ್ತು. ಅಲ್ಲದೇ ರಾಜ್ಯ ಸರಕಾರವು ಹೆಚ್ಚುವರಿಯಾಗಿ 400 ಕೋಟಿ ರೂ. ಅನುದಾನ ಒದಗಿಸಿತ್ತು. ಇದರಲ್ಲಿ ಒಟ್ಟು 1,679.84 ಕೋಟಿ ರೂ. ಬಿಡುಗಡೆಯಾಗಿತ್ತು. ಈ ಪೈಕಿ 1,207.22 ಕೋಟಿ ರೂ. ವೆಚ್ಚವಾಗಿತ್ತು. 2019-20ರಲ್ಲಿ ಆರಂಭಿಕ ಶಿಲ್ಕಿನಲ್ಲಿ 434.62 ಕೋಟಿ ರೂ. ಇತ್ತು. ಎನ್ಡಿಆರ್ಎಫ್ನಿಂದ2,744.26 ಕೋಟಿ ರೂ., ಎಸ್ಡಿಆರ್ಎಫ್ಗೆ ಕೇಂದ್ರ ಸರಕಾರವು 204.00 ಕೋಟಿ, ರಾಜ್ಯ ಸರಕಾರವು 132.00 ಕೋಟಿ ರೂ. ನೀಡಿತ್ತು. ಅಲ್ಲದೇ ರಾಜ್ಯ ಸರಕಾರವು ಹೆಚ್ಚುವರಿಯಾಗಿ 1,500 ಕೋಟಿ ರೂ. ಒದಗಿಸಿತ್ತು. ಈ ಪೈಕಿ 5,014.88 ಕೋಟಿ ರೂ. ಬಿಡುಗಡೆಯಾಗಿದ್ದರೇ ಇದರಲ್ಲಿ 4,899.52 ಕೋಟಿ ರೂ. ವೆಚ್ಚವಾಗಿತ್ತು. 2020-21ರಲ್ಲಿ ಎನ್ಡಿಆರ್ಎಫ್ನಿಂದ 577.84 ಕೋಟಿ ರೂ. ಅನುದಾನ ಸ್ವೀಕೃತವಾಗಿದ್ದರೇ ಎಸ್ಡಿಆರ್ಎಫ್ಗೆ ಕೇಂದ್ರ ಸರಕಾರವು 632.40 ಕೋಟಿ ರೂ., ರಾಜ್ಯ ಸರಕಾರವು 210.80 ಕೋಟಿ ರೂ. ನೀಡಿತ್ತು. ಎಸ್ಡಿಎಂಎಫ್ಗೆ ಕೇಂದ್ರ ಸರಕಾರವು 158.20 ಕೊಟಿ ರೂ., ರಾಜ್ಯ ಸರಕಾರವು 52.60 ಕೋಟಿ ರೂ. ನೀಡಿತ್ತು. ಅಲ್ಲದೇ ರಾಜ್ಯ ಸರಕಾರವು ಇದೇ ಅವಧಿಗೆ ಹೆಚ್ಚುವರಿಯಾಗಿ 608.13 ಕೋಟಿ ರೂ. ನೀಡಿತ್ತು. ಇದರಲ್ಲಿ ಬಿಡುಗಡೆಯಾಗಿದ್ದ 2,239.97 ಕೋಟಿ ರೂ. ಪೈಕಿ 2,238.37 ಕೋಟಿ ರೂ. ವೆಚ್ಚವಾಗಿತ್ತು. 2021-22ರಲ್ಲಿ ಎನ್ಡಿಆರ್ಎಫ್ನಿಂದ 1,734.3 ಕೋಟಿ ರೂ. ಅನುದಾನ ಸ್ವೀಕೃತವಾಗಿದ್ದರೇ ಎಸ್ಡಿಆರ್ಎಫ್ಗೆ ಭಾರತ ಸರಕಾರವು 632.40 ಕೋಟಿ, ರಾಜ್ಯ ಸರಕಾರವು 210.80 ಕೋಟಿ ರೂ.., ಎಸ್ಡಿಎಂಎಫ್ಗೆ ಕೇಂದ್ರ ಸರಕಾರವು 158.20 ಕೋಟಿ, ರಾಜ್ಯ ಸರಕಾರವು 52.60 ಕೋಟಿ ರೂ. ನೀಡಿತ್ತು. ಅಲ್ಲದೆ ಇದೇ ವರ್ಷಕ್ಕೆ ರಾಜ್ಯ ಸರಕಾರವು 2,426.27 ಕೋಟಿ ರೂ. ಹೆಚ್ಚುವರಿಯಾಗಿ ನೀಡಿತ್ತು. ಬಿಡುಗಡೆಯಾಗಿದ್ದ 5,214.57 ಕೋಟಿ ರೂ. ಪೈಕಿ 5,003.75 ಕೋಟಿ ರೂ. ವೆಚ್ಚವಾಗಿತ್ತು. 2022-23ರಲ್ಲಿ ಎನ್ಡಿಆರ್ಎಫ್ನಿಂದ 939.83 ಕೋಟಿ ರೂ., ಎಸ್ಡಿಆರ್ಎಫ್ ನಿಧಿಗೆ ಕೇಂದ್ರ ಸರಕಾರವು 664.00 ಕೋಟಿ, ರಾಜ್ಯ ಸರಕಾರವು 221.33 ಕೋಟಿ ರೂ. ನೀಡಿತ್ತು. ಎಸ್ಡಿಎಂಎಫ್ಗೆ ಕೇಂದ್ರ ಮತ್ತು ರಾಜ್ಯ ಸರಕಾರವು ಹಣ ಬಿಡುಗಡೆ ಮಾಡಿರಲಿಲ್ಲ. ಬದಲಿಗೆ ಹೆಚ್ಚುವರಿಯಾಗಿ 1,179.61 ಕೋಟಿ ರೂ. ಒದಗಿಸಿತ್ತು. ಬಿಡುಗಡೆಯಾಗಿದ್ದ 3,004.77 ಕೋಟಿ ರೂ. ಪೈಕಿ 2,939.41 ಕೋಟಿ ರೂ. ವೆಚ್ಚ ಮಾಡಿತ್ತು. ಒಟ್ಟಾರೆಯಾಗಿ ಎನ್ಡಿಆರ್ಎಫ್ನಿಂದ ಈ ಆರೂ ವರ್ಷಗಳಲ್ಲಿ 7,869.11 ಕೋಟಿ ರೂ. ಅನುದಾನ ಸ್ವೀಕೃತವಾಗಿತ್ತು. ಎಸ್ಡಿಆರ್ಎಫ್ ನಿಧಿಗೆ ಕೇಂದ್ರ ಸರಕಾರವು 2,649.55 ಕೋಟಿ ರೂ.., ರಾಜ್ಯ ಸರಕಾರವು 883.18 ಕೋಟಿ ರೂ., ಎಸ್ಡಿಎಂಎಫ್ಗೆ ಕೇಂದ್ರ ಸರಕಾರವು 316.40 ಕೋಟಿ, ರಾಜ್ಯ ಸರಕಾರವು 105.20 ಕೋಟಿ ರೂ. ನೀಡಿತ್ತು. ರಾಜ್ಯ ಸರಕಾರವು ಹೆಚ್ಚುವರಿಯಾಗಿ ಒಟ್ಟು 6,151.20 ಕೋಟಿ ರೂ. ಅನುದಾನ ಒದಗಿಸಿತ್ತು. ಒಟ್ಟು ಬಿಡುಗಡೆಯಾಗಿದ್ದ 19,644.78 ಕೋಟಿ ರೂ. ಪೈಕಿ 18,699.88 ಕೋಟಿ ರೂ. ವೆಚ್ಚ ಮಾಡಿತ್ತು ಎಂದು ಸಿಎಜಿಯು ತನ್ನ ವರದಿಯಲ್ಲಿ ಪಟ್ಟಿ ನೀಡಿದೆ. ಬಿಡುಗಡೆಯಾಗದ 210.80 ಕೋಟಿ ರೂ.: ಎಸ್ಡಿಎಂಎಫ್ ಅಡಿಯಲ್ಲಿ ರಾಜ್ಯ ಸರಕಾರವು (2020-21) ಭಾರತ ಸರಕಾರದಿಂದ ಮಾರ್ಗಸೂಚಿಗಳನ್ನು ಸ್ವೀಕರಿಸುವವರೆಗೆ ಅನುದಾನ ಬಳಸದಂತೆ ಸೂಚನೆ ನೀಡಿತ್ತು. ಮತ್ತು ಜಿಲ್ಲಾ ಕಚೇರಿಗಳಿಗೆ 184.50 ಕೋಟಿ ರೂ.ಗಳನ್ನು (ಲಭ್ಯವಿದ್ದ 210.80 ಕೋಟಿ ರೂ.) ಬಿಡುಗಡೆ ಮಾಡಿತ್ತು. 2021-22ಕ್ಕೆ ಸಂಬಂಧಿಸಿ ಒಟ್ಟು 210.80 ಕೋಟಿ ರೂ.ಗಳ ನಿಧಿಯನ್ನು ಅನುಷ್ಠಾನ ಏಜೆನ್ಸಿಗಳಿಗೆ ಬಿಡುಗಡೆಯನ್ನೇ ಮಾಡಿರಲಿಲ್ಲ. ಬದಲಿಗೆ ರಾಜ್ಯ ಸರಕಾರವು ತನ್ನಲ್ಲೇ ಉಳಿಸಿಕೊಂಡಿತ್ತು ಎಂಬುದನ್ನು ಲೆಕ್ಕ ಪರಿಶೋಧನೆಯು ಗಮನಿಸಿದೆ. ಇದಲ್ಲದೇ 2022-23ನೇ ಸಾಲಿನಲ್ಲಿ ಹದಿನೈದನೇ ಹಣಕಾಸು ಆಯೋಗದ ಶಿಫಾರಸುಗಳ ಪ್ರಕಾರ ಭಾರತ ಸರಕಾರದ ಪಾಲು 166.05 ಕೋಟಿ ರೂ. ಮತ್ತು ರಾಜ್ಯ ಸರಕಾರದ ಪಾಲು 55.35 ಕೋಟಿ ರೂ. ಸೇರಿ ಒಟ್ಟು 221.40 ಕೋಟಿ ರೂ. ಗಳನ್ನು ಎಸ್ಡಿಎಂಎಫ್ ಅಡಿಯಲ್ಲಿ ಒದಗಿಸಬೇಕಿತ್ತು. ಆದರೂ ಭಾರತ ಸರಕಾರದಿಂದ ಮೀಸಲಿಟ್ಟ ಮೊತ್ತವನ್ನು ಸ್ವೀಕರಿಸಿರಲಿಲ್ಲ. ಹೀಗಾಗಿ ರಾಜ್ಯ ಸರಕಾರವೂ ತನ್ನ ಹೊಂದಾಣಿಕೆ ಪಾಲನ್ನು ಬಿಡುಗಡೆ ಮಾಡಿರಲಿಲ್ಲ. ಹೀಗಾಗಿ ಒಟ್ಟು 421.60 ಕೋಟಿ ರೂ. ನಿಧಿಯ ಲಭ್ಯತೆ ಇದ್ದರೂ ಸಹ ವಿವಿಧ ವಿಪತ್ತುಗಳನ್ನು ಶಮನಗೊಳಿಸುವ ಚಟುವಟಿಕೆಗಳನ್ನು ಕಾರ್ಯಗತಗೊಳಿಸಲಿಲ್ಲ ಎಂದು ಸಿಎಜಿ ವರದಿಯಲ್ಲಿ ವಿವರಿಸಿರುವುದು ಗೊತ್ತಾಗಿದೆ. ಖಾತೆಯಲ್ಲಿ ವ್ಯತ್ಯಾಸಗಳು ಪತ್ತೆ 2017-18ರಿಂದ 2022-23ರವರೆಗಿನ ಆರಂಭಿಕ ಶಿಲ್ಕು, ಎನ್ಡಿಆರ್ಎಫ್, ಎಸ್ಡಿಆರ್ಎಫ್, ಎಸ್ಡಿಎಂಎಫ್, ರಾಜ್ಯದಿಂದ ಹೆಚ್ಚುವರಿಯಾಗಿ ಒದಗಿಸಿದ್ದ ಅನುದಾನದ ರಸೀದಿಗಳು, ವೆಚ್ಚದಲ್ಲಿ ಅಂಕಿ ಅಂಶಗಳಲ್ಲಿ ವ್ಯತ್ಯಾಸಗಳನ್ನು ಸಿಎಜಿಯು ಪತ್ತೆ ಹಚ್ಚಿದೆ. ಇದರ ಪ್ರಕಾರ 2019-20ರ ಅವಧಿಯಲ್ಲಿ ಸಿಡಿಎಂ-ಎಟಿಐಗೆ 4.19 ಕೋಟಿ ರೂ. ವರ್ಗಾವಣೆ ಮಾಡಬೇಕಿತ್ತು. ಆದರೆ ಇಲಾಖೆಯು 0.13 ಕೋಟಿ ರೂ. ಕಡಿಮೆ ಮಾಡಿ ಕೇವಲ 4.06 ಕೋಟಿ ರೂ.ವರ್ಗಾವಣೆ ಮಾಡಿತ್ತು. ಅದೇ ರೀತಿ 2021-22ರಲ್ಲಿ ಸಿಡಿಎಂ-ಎಟಿಐಗೆ 3 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ತೋರಿಸಿದ್ದರೂ ಹಣವನ್ನು ವಾಸ್ತವಿಕವಾಗಿ ವರ್ಗಾಯಿಸಿರಲೇ ಇಲ್ಲ. ಅಲ್ಲದೇ ಹಣಕಾಸಿನ ಅಂಕಿ ಅಂಶಗಳನ್ನು ನಿಯತಕಾಲಿಕವಾಗಿ ಹೊಂದಾಣಿಕೆಯನ್ನೂ ಮಾಡಲಿಲ್ಲ. ‘ಜಿಲ್ಲೆಗಳು ಅಥವಾ ಏಜೆನ್ಸಿಗಳು ಬಿಡುಗಡೆಯಾದ ಅನುದಾನವನ್ನು ಸೆಳೆದುಕೊಳ್ಳದಿರುವುದರಿಂದ ಅಥವಾ ಕೈ ತಪ್ಪಿ ಹೋಗಿರುವುದರಿಂದ ಅಂಕಿ ಅಂಶಗಳೊಂದಿಗೆ ವ್ಯತ್ಯಾಸದ ಸಾಧ್ಯತೆಯಿದೆ’ ಎಂದು ಸಿಎಜಿ ವರದಿಯು ಅಭಿಪ್ರಾಯಿಸಿರುವುದು ಗೊತ್ತಾಗಿದೆ.
ಅಂಬೇಡ್ಕರ್ ರೂಪಿಸಿದ ಸಂವಿಧಾನದಲ್ಲಿ ಭಾರತೀಯ ಅನ್ನುವುದು ಏನೂ ಇಲ್ಲ ಎಂದು ಹೇಳಿದ ಗೋಳ್ವಾಲ್ಕರ್ ಇದರ ಬದಲಿಗೆ ಮನುಸ್ಮತಿಯನ್ನು ಆಧರಿಸಿದ ಸಂವಿಧಾನವನ್ನು ತರಬೇಕೆಂದು ಪ್ರತಿಪಾದಿಸಿದರು.ಆದರೆ ಒಮ್ಮ್ಮೆಲೇ ಇದನ್ನು ಮಾಡಲಾಗುವುದಿಲ್ಲ ಅವಸರ ಮಾಡಿದರೆ ದಲಿತ, ಹಿಂದುಳಿದ ಸಮುದಾಯಗಳ ಶೇಕಡ 90ರಷ್ಟು ಜನರು ತಿರುಗಿ ಬೀಳುತ್ತಾರೆ ಎಂಬುದನ್ನು ಅರಿತ ಇವರು ಅದಕ್ಕೆ ಕಾಲ ಪಕ್ವಗೊಳಿಸಲು ಒಂದೊಂದಾಗಿ ಹೆಜ್ಜೆ ಇಡುತ್ತ್ತಾ ಬಂದಿದ್ದಾರೆ. ಕೇಂದ್ರದಲ್ಲಿ 11 ವರ್ಷಗಳ ಹಿಂದೆ ಇವರು ಅಧಿಕಾರಕ್ಕೆ ಬಂದರು. ಆವಾಗಿನಿಂದ ಮಾಡುತ್ತ ಬಂದ ಅವಾಂತರಗಳೆಲ್ಲ ಅನಿರೀಕ್ಷಿತ ಆಗಿರಲಿಲ್ಲ. ಆದರೆ ಆ ದಿಕ್ಕಿನತ್ತ ಸಾಗಿದ ದಾರಿ ಮತ್ತು ಸಂದರ್ಭ ಮಾತ್ರ ನಿರೀಕ್ಷಿತವಾಗಿರಲಿಲ್ಲ. ಒಂದೊಂದಾಗಿ ಮುಗಿಸುತ್ತ ಬಂದರು. ಕೊನೆಗೆ ಈಗ ಉಳಿದಿರುವುದು ಬಾಬಾಸಾಹೇಬರ ನೇತೃತ್ವದಲ್ಲಿ ರೂಪುಗೊಂಡ ಸಂವಿಧಾನ.ಇದೇ ಇವರ ನಿಜವಾದ ಟಾರ್ಗೆಟ್. ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂನರೇಗಾ) ಎಂಬ ಹೆಸರನ್ನು ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ಗ್ರಾಮೀಣ) (ವಿಬಿ_-ಜಿ ರಾಮ್ ಜಿ) ಎಂದು ಬದಲಿಸಲು ಹೊರಟ ಕೇಂದ್ರದ ಕ್ರಮ ದುರುದ್ದೇಶದಿಂದ ಕೂಡಿದ ರಾಜಕೀಯ ಕ್ರಮ ಮಾತ್ರವಲ್ಲ ಅಂತಿಮವಾಗಿ ಈ ಯೋಜನೆಯನ್ನು ಸಮಾಧಿ ಮಾಡುವುದಾಗಿದೆ. ಅವಕಾಶ ವಂಚಿತರು ಮತ್ತು ಬಡವರಿಗಾಗಿ ಹಿಂದಿನ ಸರಕಾರಗಳು ರೂಪಿಸಿದ ಯಾವ ಯೋಜನೆಯನ್ನೂ ಇವರು ಉಳಿಯಗೊಡುವುದಿಲ್ಲ. ಅಧಿಕಾರಕ್ಕೆ ಬಂದ ಹನ್ನೊಂದು ವರ್ಷಗಳಲ್ಲಿ ಯಾವುದೇ ಜನಪರ ಕಾರ್ಯಕ್ರಮಗಳನ್ನು ರೂಪಿಸಲಾಗದಿದ್ದರೂ ಇರುವ ಯೋಜನೆಗಳ, ಊರುಗಳ, ಬಡಾವಣೆಗಳ ಹೆಸರುಗಳನ್ನು ಬದಲಿಸುವುದು ಇವರ ದುರುದ್ದೇಶ ಪೂರಿತ ಚಾಳಿ. ಆದರೆ ಎಂನರೇಗಾದ ಹೆಸರನ್ನು ಬದಲಿಸುವ ಹಿಂದೆ ಗಾಂಧೀಜಿ ಬಗೆಗಿನ ದ್ವೇಷ ಮಾತ್ರವಲ್ಲ ಹಿಂದಿನ ಸರಕಾರಗಳು ವಿಶೇಷವಾಗಿ ಯುಪಿಎ(1) ರೂಪಿಸಿ ಜಾರಿಗೆ ತಂದುದನ್ನೆಲ್ಲ ಮುಗಿಸುವುದಾಗಿದೆ. ಸ್ವಾತಂತ್ರ್ಯಾನಂತರ ನೆಹರೂ ಕಾಲದಿಂದ ರೂಪುಗೊಂಡದ್ದನ್ನೆಲ್ಲ ಹೊಸಕಿ ಹಾಕುತ್ತ ಬಂದರು. ಎಲ್ಲವೂ ತಮ್ಮ ಕಾಲದಲ್ಲೇ ಶುರುವಾಯಿತು ಎಂದು ದಾಖಲಿಸುವುದು ಇವರ ಮಸಲತ್ತಾಗಿದೆ. ಉದಾಹರಣೆಗೆ ಯೋಜನಾ ಆಯೋಗದ ಹೆಸರನ್ನೇ ಬದಲಿಸಿದರು. ಈಗಿರುವ ಸಂಸತ್ ಭವನಕ್ಕೆ ಬದಲಿಯಾಗಿ ಹೊಸ ಸಂಸತ್ ಭವನವನ್ನೇ ನಿರ್ಮಿಸಿದರು. ಇದರ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ, ಆಗುತ್ತಿದೆ. ಬಾಬರಿ ಮಸೀದಿ ನೆಲಸಮಗೊಳಿಸಿದ್ದನ್ನು ನ್ಯಾಯಾಲಯವನ್ನು ಮಣಿಸಿ ನ್ಯಾಯ ಸಮ್ಮತಗೊಳಿಸಿದರು.ಆಗಿನಿಂದ ಒಂದೊಂದಾಗಿ ನಾಗಪುರದಲ್ಲಿ ರೂಪುಗೊಂಡ ಕಾರ್ಯ ಸೂಚಿಗಳನ್ನು ಜಾರಿಗೊಳಿಸುತ್ತಲೇ ಇದ್ದಾರೆ. ಈಗ ಇವರ ಮುಂದಿನ ತಕ್ಷಣದ ಗುರಿ ಸಂವಿಧಾನ. ದೇಶ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳಿಗೆ ಸಂವಿಧಾನ ಕಾರಣ ಎಂದು ಸಂಘ ಪರಿವಾರ ಹೇಳುತ್ತಲೇ ಬಂದಿದೆ.ಅದನ್ನು ಹಿಂದೂ ವಿರೋಧಿ ಎಂದು ದೂಷಿಸುತ್ತಲೇ ಬಂದಿದೆ. ಇದೆಲ್ಲ ಇತ್ತೀಚೆಗೆ ರೂಪುಗೊಂಡ ಯೋಜನೆಗಳಲ್ಲ. 1992ರ ಅಕ್ಟೋಬರ್ 13-14ರಂದು ನಡೆದ ವಿಶ್ವ ಹಿಂದೂ ಪರಿಷತ್ನ ಸಂತ ಮಂಡಳಿಯ ಸಭೆಯಲ್ಲಿ ಕೈಗೊಂಡ ತೀರ್ಮಾನವಿದು. ಇದಕ್ಕಾಗಿ ಸ್ವಾಮಿ ಮುಕ್ತಾನಂದ ಸರಸ್ವತಿ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಸಮಿತಿ ಪ್ರಸಕ್ತ ಸಂವಿಧಾನವನ್ನು ಟೀಕಿಸುವ ಮತ್ತು ಹಿಂದುತ್ವ ಆಧಾರದಲ್ಲಿ ಹೊಸ ಸಂವಿಧಾನದ ಕರಡು ಪ್ರತಿಯನ್ನು ಸಿದ್ಧಪಡಿಸಿತ್ತು. ಜಾತ್ಯತೀತ ಎಂದು ಹೇಳಿಕೊಳ್ಳುವ ಪಕ್ಷಗಳು ಹಾಗೂ ಸಂಘಟನೆಗಳು ಎಚ್ಚರಗೊಳ್ಳಲೇ ಇಲ್ಲ. ಎಡಪಂಥೀಯ ಪಕ್ಷಗಳು ಹಾಗೂ ಸಂಘಟನೆಗಳು ವಿರೋಧಿಸಿದರೂ ಪ್ರಯೋಜನ ಆಗಲಿಲ್ಲ. ಚುನಾವಣಾ ರಾಜಕೀಯದಲ್ಲಿ ಅವರು ಪ್ರಬಲರಾಗುತ್ತ ಬಂದರು. ಬಾಬಾಸಾಹೇಬರ ನೇತೃತ್ವದಲ್ಲಿ ರೂಪುಗೊಂಡ ಪ್ರಸಕ್ತ ಸಂವಿಧಾನದಲ್ಲಿ ಪ್ರಜಾಪ್ರಭುತ್ವ, ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಮತ ನಿರಪೇಕ್ಷತೆಗೆ ಹೆಚ್ಚಿನ ಪ್ರಾಶಸ್ತ್ಯ ಕೊಡಲಾಗಿದೆ. ಆದ್ದರಿಂದ ಶ್ರೇಣೀಕೃತ ಜಾತಿ ಪದ್ಧ್ದತಿಯನ್ನು ಮರು ಸ್ಥಾಪಿಸಲು ಅದಕ್ಕೆ ಮನುಸ್ಮತಿ ಆಧಾರದಲ್ಲಿ ಕಾನೂನಿನ ಸ್ವರೂಪ ಕೊಡಲು ತಮ್ಮದೇ ಆದ ಹೊಸ ಸಂವಿಧಾನ ಇವರಿಗೆ ಬೇಕಾಗಿದೆ. ತಮ್ಮ ಗುರಿಯನ್ನು ಇವರು ಬಚ್ಚಿಟ್ಟುಕೊಂಡಿಲ್ಲ.ಹೇಳುತ್ತಲೇ ಬಂದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮೊದಲ ಸರ ಸಂಘಚಾಲಕ ಕೇಶವ ಬಲರಾಮ ಹೆಡ್ಗೆವಾರ್ ಅವರಿಗಿಂತ ಸಂಘಕ್ಕೆ ಸ್ಪಷ್ಟವಾದ, ನಿರ್ದಿಷ್ಟವಾದ ಸೈದ್ಧಾಂತಿಕ ಪ್ರಣಾಳಿಕೆ ನೀಡಿದವರು ಎರಡನೇ ಸರಸಂಘಚಾಲಕ ಮಾಧವ ಸದಾಶಿವ ಗೋಳ್ವಾಲ್ಕರ್ . ಅಂಬೇಡ್ಕರ್ ರೂಪಿಸಿದ ಸಂವಿಧಾನದಲ್ಲಿ ಭಾರತೀಯ ಅನ್ನುವುದು ಏನೂ ಇಲ್ಲ ಎಂದು ಹೇಳಿದ ಗೋಳ್ವಾಲ್ಕರ್ ಇದರ ಬದಲಿಗೆ ಮನುಸ್ಮತಿಯನ್ನು ಆಧರಿಸಿದ ಸಂವಿಧಾನವನ್ನು ತರಬೇಕೆಂದು ಪ್ರತಿಪಾದಿಸಿದರು.ಆದರೆ ಒಮ್ಮ್ಮೆಲೇ ಇದನ್ನು ಮಾಡಲಾಗುವುದಿಲ,್ಲ ಅವಸರ ಮಾಡಿದರೆ ದಲಿತ ,ಹಿಂದುಳಿದ ಸಮುದಾಯಗಳ ಶೇಕಡ 90ರಷ್ಟು ಜನರು ತಿರುಗಿ ಬೀಳುತ್ತಾರೆ ಎಂಬುದನ್ನು ಅರಿತ ಇವರು ಅದಕ್ಕೆ ಕಾಲ ಪಕ್ವಗೊಳಿಸಲು ಒಂದೊಂದಾಗಿ ಹೆಜ್ಜೆ ಇಡುತ್ತ ಬಂದಿದ್ದಾರೆ.ಈಗ ನಿಧಾನವಾಗಿ ಸಂವಿಧಾನದ ಬಳಿ ಬರುತ್ತಿದ್ದಾರೆ. ಇವರ ಅಂತಿಮ ಗುರಿ ಸಂವಿಧಾನ ವಾಗಿದೆ.ಅದಕ್ಕೆ ಈಗ ಅಪಾಯ ಎದುರಾಗಿದೆ. ಅಸ್ಪಶ್ಯತೆ,ಶ್ರೇಣೀಕೃತ ಜಾತಿ ಪದ್ಧ್ದತಿ, ಸತಿ ಸಹಗಮನ ಪದ್ಧ್ದತಿಗಳು ಹಿಂದೂ ಧರ್ಮದ ಅವಿಭಾಜ್ಯ ಅಂಗಗಳೆಂದು ಹಿಂದೊಮ್ಮೆ ಪುರಿ ಶಂಕರಾಚಾರ್ಯರು ಹೇಳಿದಾಗ ಅದನ್ನು ಸಮರ್ಥಿಸಿದ ವಿಶ್ವ ಹಿಂದೂ ಪರಿಷತ್ನ ಅಖಿಲ ಭಾರತ ಕಾರ್ಯದರ್ಶಿಯಾಗಿದ್ದ ಅಶೋಕ ಸಿಂಘಾಲರು ನಮ್ಮ ಧಾರ್ಮಿಕ ಆಚಾರ್ಯರು ಉಪದೇಶ ಮಾಡಿದ ಧರ್ಮವನ್ನೇ ನಾವು ಕಾನೂನಿಂತೆ ಪಾಲಿಸುತ್ತೇವೆ ಎಂದು ಹೇಳಿದ್ದರು. ಸಿಂಘಾಲ್,ಗೋಳ್ವ್ವಾಲ್ಕರ್ ನಂತರವೂ ಸಂಘ ಪರಿವಾರ ಇದೇ ನಿಲುವಿಗೆ ಬದ್ಧವಾಗಿದೆ. ಈಗ ತಮಗೆ ಅನುಕೂಲಕರವಾಗಿ ವಾತಾವರಣವನ್ನು ಹೇಗೆ ಬದಲಿಸಿಕೊಂಡಿದ್ದಾರೆ ಅಂದರೆ ಗಾಂಧೀಜಿ, ಜವಾಹರಲಾಲ್ ನೆಹರೂ ಅವರನ್ನು ದ್ವೇಷಿಸುವ, ಹೊಲಸು ಭಾಷೆಯಲ್ಲಿ ಬೈಯುವ ಬಹುದೊಡ್ಡ ಬೆಂಬಲಿಗೆ ವರ್ಗವನ್ನೇ ಸೃಷ್ಟಿಸಿಕೊಂಡಿದ್ದಾರೆ. ಹೀಗೆ ಒಂದೊಂದಾಗಿ ಜಾರಿಗೆ ತರುತ್ತಾರೆ. ಯಾವುದಕ್ಕೂ ಅವಸರ ಮಾಡುವುದಿಲ್ಲ. ಹೀಗೆ ಮಾಡುತ್ತ ಹೋಗಿ ಕೊನೆಗೆ ಸಮಾನತೆ ಹಾಗೂ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುವ ಭಾರತದ ಸಂವಿಧಾನವನ್ನು ಬದಲಿಸಲು ಕೈ ಹಾಕುತ್ತಾರೆ. ಮೊದಲು ಯಾರಾರಿಂದಲೋ ಸಂವಿಧಾನದ ವಿರುದ್ಧ ಹೇಳಿಕೆ ನೀಡಿಸುತ್ತಾರೆ.ಅದಕ್ಕೆ ಬರುವ ಪ್ರತಿಕ್ರಿಯೆಯನ್ನು ಗಮನಿಸಿ ಮುಂದಿನ ಹೆಜ್ಜೆ ಇಡುತ್ತಾರೆ. ಈಗ ಗುರಿಯತ್ತ ಎಷ್ಟು ಸಮೀಪಿಸಿದ್ದಾರೆ ಎಂದರೆ ದೇಶದ ರಾಜಧಾನಿ ದಿಲ್ಲಿಯಲ್ಲಿ ಸಂಸತ್ ಭವನದ ಸಮೀಪದಲ್ಲೇ ಹಾಡಹಗಲೇ ಸಂವಿಧಾನಕ್ಕೆ ಅಗ್ನಿಸ್ಪರ್ಶ ಮಾಡಿ ದಕ್ಕಿಸಿಕೊಂಡರು. ಇವರೇ ಸೃಷ್ಟಿಸಿದ ಭಕ್ತರ ಮೂಲಕ ಇದನ್ನೆಲ್ಲ ಮಾಡಿಸಿ ಇದಕ್ಕೆ ಬರುವ ಪ್ರತಿಕ್ರಿಯೆಯನ್ನು ಅವಲೋಕಿಸಿ ಮುಂದಿನ ಕ್ರಮವನ್ನು ರೂಪಿಸುತ್ತಾರೆ. ಚುನಾವಣೆಗಳಲ್ಲಿ ಬಿಜೆಪಿ ಗೆದ್ದು ಅಧಿಕಾರಕ್ಕೆ ಬರುವುದು ಉಳಿದ ಪಕ್ಷಗಳಂತಲ್ಲ. ಬಿಜೆಪಿ ನಾಗಪುರದ ಸಂವಿಧಾನೇತರ ಶಕ್ತಿ ಕೇಂದ್ರದ ಸೂತ್ರದ ಗೊಂಬೆಯಂತೆ ಕುಣಿಯುವ ಪಕ್ಷ.ಸಮಾನತೆ ಹಾಗೂ ಪ್ರಜಾಪ್ರಭುತ್ವ ಎಂಬ ಪದಗಳು ಬಿಜೆಪಿಗೆ ಅಪಥ್ಯ. ಅದೇ ರೀತಿ ಸಂವಿಧಾನ ಕೂಡ. ಸಂವಿಧಾನದ ಪ್ರಕಾರ ಮಹಿಳೆ ,ಪುರುಷ ಎಲ್ಲರೂ ಸಮಾನರು.ಮನುಸ್ಮತಿಯಲ್ಲಿ ನಂಬಿಕೆ ಇಟ್ಟವರಿಗೆ ಸಂವಿಧಾನ ಇಷ್ಟ ವಾಗುವುದಿಲ್ಲ. ಹೀಗಾಗಿ ಅದನ್ನು ಬದಲಿಸುವ ಬಹುದೊಡ್ಡ ಷಡ್ಯಂತ್ರ ರೂಪುಗೊಂಡಿದೆ.ಅದರ ಭಾಗವಾಗಿ ಸಾಂವಿಧಾನಿಕ ಸಂಸ್ಥೆಗಳಾದ ಚುನಾವಣಾ ಆಯೋಗ,ನ್ಯಾಯಾಂಗ ಮೊದಲಾದವುಗಳನ್ನು ಮುಗಿಸಿದ ನಂತರ ಇವರ ಕೊನೆಯ ಗುರಿ ಸಂವಿಧಾನ ಎಂಬುದು ಹಗಲಿನಷ್ಟು ನಿಚ್ಚಳವಾಗಿದೆ.ಇದು ಎಲ್ಲಿಗೆ ಹೋಗಿ ತಲುಪುವುದೋ ಗೊತ್ತಿಲ್ಲ. ಬಹುತ್ವ ಭಾರತವನ್ನು ಯಾದವೀ ಕಲಹದ ಬೆಂಕಿಗೆ ತಳ್ಳುವ ದಿಕ್ಕಿನತ್ತ ಸಾಗುತ್ತಿದ್ದಾರೆ. ಸಂವಿಧಾನವನ್ನು ನಾಶ ಮಾಡಲು ಹೊರಟವರಿಗೆ ರಾಜಕೀಯ ಅಧಿಕಾರ ಸಿಕ್ಕಿರುವುದರಿಂದ ಅವರ ಸಾಮರ್ಥ್ಯ ಹೆಚ್ಚಾಗುತ್ತಲೇ ಬಂತು.ಚುನಾವಣೆ ಬಂದಾಗ ಸರಿಯಾದ ಸಂಯುಕ್ತ ಪ್ರತಿರೋಧ ರೂಪಿಸಲಾಗದ ಪ್ರತಿಪಕ್ಷಗಳು ಕೂಡ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಎದುರಾಗಿರುವ ಅಪಾಯದ ಹೊಣೆಯನ್ನು ಹೊರಬೇಕಾಗಿದೆ.ರಾಜಕೀಯ ಅಧಿಕಾರ ಅವರಿಗೆ ಎಂದೂ ಸಿಗದಂತೆ ಎಚ್ಚರ ವಹಿಸಿದ್ದರೆ ಇದನ್ನು ತಪ್ಪಿಸಬಹುದಾಗಿತ್ತು.ಈಗ ಕಾಲ ಮಿಂಚಿ ಹೋಗಿದೆ.ತಮ್ಮ ವಿಧ್ವ್ವಂಸಕಾರಿ ಚಟುವಟಿಕೆಗಳನ್ನು ಬೆಂಬಲಿಸುವ ಬಹುದೊಡ್ಡ ಬೆಂಬಲಿಗರ ಪಡೆಯನ್ನೇ ಇವರು ಸೃಷ್ಟಿಸಿಕೊಂಡಿದ್ದಾರೆ. ಇದನ್ನು ತಡೆಯಬೇಕಾದ ದೇಶದ ಯುವಜನರನ್ನು ಜಾತಿ,ಧರ್ಮದ ಹೆಸರಿನಲ್ಲಿ ವಿಭಜಿಸಿದ್ದಾರೆ. ನಮ್ಮಂಥವರು ಏನೇ ಬರೆದರೂ ಅವಾಚ್ಯ ಭಾಷೆಯಲ್ಲಿ ಬೆದರಿಕೆಯ ಕರೆಗಳು ಬರುತ್ತವೆ. ಇವರೇನು ಮಾಡುತ್ತಾರೆ ಎಂದು ನಿರ್ಲಕ್ಷಿಸಬಹುದು.ಆದರೆ ಡಾ.ನರೇಂದ್ರ ದಾಭೋಳ್ಕರ್, ಗೋವಿಂದ ಪನ್ಸ್ಸಾರೆ, ಡಾ. ಎಂ.ಎಂ ಕಲಬುರರ್ಗಿ, ಗೌರಿ ಲಂಕೇಶ್ ನೆನಪಿಗೆ ಬರುತ್ತಾರೆ.ಜೀವ ತೆಗೆಯುತ್ತಾರೆ ಎಂದು ಬರೆಯದಿರಲಾಗುವುದಿಲ್ಲ. ಮುಂದೇನು? ಬಹುತ್ವ ಭಾರತದ ಉಳಿವಿನ ದಾರಿ ಯಾವುದು? ಈ ಪ್ರಶ್ನೆಗೆ ಉತ್ತರ ಹುಡುಕುತ್ತಾ ಮುಂದೆ ಸಾಗುವುದೊಂದೇ ಉಳಿದ ದಾರಿಯಾಗಿದೆ. ಇವರಿಗೆ ಪೂರಕವಾಗಿ ಜಾಗತಿಕವಾಗಿ ನವ ಉದಾರೀಕರಣದ ಆರ್ಥಿಕ ನೀತಿ ಬಂದಿದೆ.ಆರೋಗ್ಯ, ಶಿಕ್ಷಣ, ಸೇರಿ ಎಲ್ಲವನ್ನೂ ಖಾಸಗಿ ತಿಮಿಂಗಿಲಗಳ ಬಾಯಿಗೆ ಹಾಕುವ ಮಸಲತ್ತುಗಳು ನಿತ್ಯವೂ ನಡೆಯುತ್ತಿವೆ.ಇದನ್ನು ವಿರೋಧಿಸಬೇಕಾದವರು ಹಿಂದೂ,_ ಮುಸ್ಲಿಮ್, ಕ್ರೈಸ್ತ ,ಜಾತಿ,ಮತಗಳಲ್ಲಿ ಮುಳುಗಿಹೋಗಿದ್ದಾರೆ. ಈ ಕಾರ್ಗತ್ತಲು ಕವಿದಿರುವ ಕಾಲದಲ್ಲೂ ಭರವಸೆಯ ಬೆಳಕಿಗಾಗಿ ಕಾಯುವುದೊಂದೇ ಉಳಿದ ದಾರಿಯಾಗಿದೆ.
Rashmika Mandanna: ಕೊಡಗಿನ ಬೆಡಗಿ, ‘ಕಿರಿಕ್ ಪಾರ್ಟಿ’ ಹುಡುಗಿ ನಟಿ ರಶ್ಮಿಕಾ ಮಂದಣ್ಣ ಸದ್ಯ ಹಲವು ಸಿನಿಮಾಗಳ ಚಿತ್ರೀಕರಣದಲ್ಲಿ ಸಖತ್ ಬಿಜಿಯಾಗಿದ್ದಾರೆ. ಸ್ಟಾರ್ ನಟರ ಸಾಲು ಸಾಲು ಸಿನಿಮಾಗಳಿಗೆ ನಾಯಕಿಯಾಗಿ ಮಿಂಚುತ್ತಿರುವ ರಶ್ಮಿಕಾ, ಅ.03ರಂದು ತಮ್ಮ ಬಹುದಿನಗಳ ಸ್ನೇಹಿತ ಟಾಲಿವುಡ್ ನಟ ವಿಜಯ್ ದೇವರಕೊಂಡ ಜತೆ ಸದ್ದಿಲ್ಲದೇ ಎಂಗೇಜ್ಮೆಂಟ್ ಮಾಡಿಕೊಂಡರು. ಇತ್ತೀಚೆಗೆ, ನಟಿ ನೀಡಿದ್ದ ಹೇಳಿಕೆಯೊಂದು ವಿವಾದಕ್ಕೆ ಕಾರಣವಾಯಿತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ರಶ್ಮಿಕಾ, ಟ್ರೋಲ್ಗಳ ವಿರುದ್ಧ ಬೇಸರ ಹೊರಹಾಕಿದ್ದಾರೆ. ‘ದಿ ಗರ್ಲ್ಫ್ರೆಂಡ್’ ಚಿತ್ರಕ್ಕೆ ಉತ್ತಮ […] The post ಇದೇ ಕಾರಣಕ್ಕೆ ಸಂದರ್ಶನಕ್ಕೆ ಹೋಗಲು ಭಯ! ವಿವಾದಕ್ಕೆ ಗುರಿಯಾದ ಹೇಳಿಕೆಗೆ ನಟಿ ರಶ್ಮಿಕಾ ಪ್ರತಿಕ್ರಿಯೆ | Rashmika Mandanna first appeared on ವಿಜಯವಾಣಿ .
ಸುಂಟಿಕೊಪ್ಪ : ಬಡಾವಣೆಗಳಿಗೆ ಮೂಲಸೌಕರ್ಯ, ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಗ್ರಾಮಸ್ಥರು ಒತ್ತಾಯಿಸಿದರು. ಇಲ್ಲಿನ ಶ್ರೀ ಮಂಜುನಾಥಯ್ಯ ಮಿನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಆಯೋಜಿಸಿದ್ದ ಸುಂಟಿಕೊಪ್ಪ ಗ್ರೇಡ್ 1 ಗ್ರಾಮ ಪಂಚಾಯಿತಿ 2025-26ನೇ ಸಾಲಿನ ಗ್ರಾಮಸಭೆಯಲ್ಲಿ ಸಾರ್ವಜನಿಕರಿಂದ ದೂರುಗಳ ಸರಮಾಲೆಯೇ ಹರಿದುಬಂದಿತ್ತು. ಗ್ರಾಮಸ್ಥರಾದ ಸೂಫಿ, ಇಬ್ರಾಹಿಂ, ಕೆ.ಎ.ಲತೀಫ್, ರಜಾಕ್, ದಿನೇಶ್, ಉದಯಕುಮಾರ್, ಡೇವಿಡ್ ಜಾನ್ಸನ್, ಮಮತಾ ಸೇರಿದಂತೆ ಹಲವರು ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥ ಇಬ್ರಾಹಿಂ ಮಾತನಾಡಿ, […] The post ಗ್ರಾಮಸ್ಥರಿಂದ ದೂರಿನ ಸುರಿಮಳೆ first appeared on ವಿಜಯವಾಣಿ .
ಕಲೆ, ಸಾಹಿತ್ಯ ಸಂಸ್ಕೃತಿ ಸದಾ ಜೀವಂತ
ವಿರಾಜಪೇಟೆ : ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಮನುಜನ ಹುಟ್ಟಿನಿಂದ ಬಂದಿರುವ ಬಳುವಳಿಯಾಗಿದೆ. ಇವುಗಳು ಮರೆಯಾಗುವುದಿಲ್ಲ. ಕಲೆಯನ್ನು ಪ್ರೋತ್ಸಾಹಿಸುವ ಮನಸ್ಸುಗಳು ಇದ್ದಲ್ಲಿ ಕಲೆಗೆ ಜೀವ ಬರುತ್ತದೆ ಎಂದು ಹವ್ಯಾಸಿ ಛಾಯಾಗ್ರಹಕ ಮತ್ತು ಕಲಾವಿದ ಜುನೈಶ್ ಕಣ್ಣೂರು ಹೇಳಿದರು. ಸಾಧಿಕ್ ಆರ್ಟ್ಸ್ ಲಿಂಕ್ ವಿರಾಜಪೇಟೆ, ಚಿತ್ರಕಲೆ ಕಲಾವಿದರಾದ ಸಾಧಿಕ್ ಹಂಸ ಅವರು ಆಯೋಜಿಸಿದ್ದ ಕಲಾ ಉತ್ಸವ ಕೊಡಗು 9ನೇ ವರ್ಷದ ಕಲಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಕಲೆ ನಿಂತ ನೀರಲ್ಲ, ಬದಲಿಗೆ ಹರಿಯುವ ನದಿಯಂತೆ, ಎಲ್ಲ ಮನಸ್ಸುಗಳಲ್ಲಿ ಕಲೆ […] The post ಕಲೆ, ಸಾಹಿತ್ಯ ಸಂಸ್ಕೃತಿ ಸದಾ ಜೀವಂತ first appeared on ವಿಜಯವಾಣಿ .
ನಾಡು-ನುಡಿ ಶ್ರೀಮಂತಿಕೆ ಹೆಚ್ಚಿಸುವ ಕಾರ್ಯಗಳಲ್ಲಿ ತೊಡಗಿ
ವಿರಾಜಪೇಟೆ :ವಿದ್ಯಾರ್ಥಿಗಳು ಶೈಕ್ಷಣಿಕ ಹಂತದಿಂದಲೇ ಕನ್ನಡ ನಾಡು ನುಡಿಯ ಶ್ರೀಮಂತಿಕೆಯನ್ನು ಹೆಚ್ಚಿಸುವ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ಲೇಖಕ ಹಾಗೂ ವಿರಾಜಪೇಟೆ ಉಪ ಖಜಾನೆಯ ಅಧೀಕ್ಷಕ ಗಣೇಶ್ ನಿಲುವಾಗಿಲು ಹೇಳಿದರು. ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಕನ್ನಡ ಭಾಷಾ ವಿಭಾಗದ ವತಿಯಿಂದ ಕರುನಾಡ ಸಂಭ್ರಮ 2025ರ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಲೇಖಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಒಳ್ಳೆಯ ಪುಸ್ತಕಗಳನ್ನು ಓದಬೇಕು. ಪುಸ್ತಕಗಳನ್ನು ಓದುವುದರ ಮೂಲಕ ಇತರರಿಗೆ […] The post ನಾಡು-ನುಡಿ ಶ್ರೀಮಂತಿಕೆ ಹೆಚ್ಚಿಸುವ ಕಾರ್ಯಗಳಲ್ಲಿ ತೊಡಗಿ first appeared on ವಿಜಯವಾಣಿ .
ಕರಾಟೆಯಲ್ಲಿ ಸಂತ ಮೇರಿಸ್ ಮಕ್ಕಳ ಸಾಧನೆ
ಸುಂಟಿಕೊಪ್ಪ: ಚಿಕ್ಕಬಳ್ಳಾಪುರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ 17 ವರ್ಷದ ವಯೋಮಿತಿಯ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಂತ ಮೇರಿಸ್ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಜೀವಿಕಾ ಪ್ರಥಮ ಸ್ಥಾನ ಪಡೆಯುವ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಜೀವಿಕಾ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ನೈಜ ಅವಕಾಶವನ್ನು ಪಡೆಯುವ ಮೂಲಕ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಜೀವಿಕಾ ಅವರ ತಂದೆ ರಾಜ್ ಕುಮಾರ್ ಅವರು ಭಾರತೀಯ ಸೇನೆಯಲ್ಲಿ ಯೋಧರಾಗಿದ್ದು, ತಾಯಿ ಲಕ್ಷ್ಮೀ ಮಡಿಕೇರಿ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಶುಶ್ರೂಷಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದೇ ರೀತಿ 10ನೇ […] The post ಕರಾಟೆಯಲ್ಲಿ ಸಂತ ಮೇರಿಸ್ ಮಕ್ಕಳ ಸಾಧನೆ first appeared on ವಿಜಯವಾಣಿ .
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯಲ್ಲಿ ಕಬ್ಬಿನ(Sugar cane) ಬಾಕಿ ಬಿಲ್ ಪಾವತಿ ಮತ್ತು ದರ ಏರಿಕೆ ಸಂಬಂಧಿಸಿದಂತೆ ಕಬ್ಬು ಬೆಳೆಗಾರರ ಹೋರಾಟ ತೀವ್ರವಾಗಿದ್ದು, ಇಂದು(ನ. 13) ಸಂಜೆ ಮುಧೋಳ ತಾಲೂಕಿನ ಸೈದಾರಪುರ ಗೋದಾವರಿ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ತುಂಬಿಕೊಂಡು ನಿಂತಿದ್ದ 30ಕ್ಕೂ ಹೆಚ್ಚು ಟ್ರ್ಯಾಕ್ಟರ್ಗಳಿಗೆ ಬೆಂಕಿ ಹಚ್ಚಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿರುವ 13 ಸಕ್ಕರೆ ಕಾರ್ಖಾನೆಗಳು ಉಳಿಸಿಕೊಂಡಿರುವ ಬಾಕಿ ಬಿಲ್ ಪಾವತಿ, ಪ್ರತಿ ಟನ್ ಕಬ್ಬಿಗೆ 3,500 ರೂ. ನೀಡುವಂತೆ ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೇಡಿಕೆಯ […] The post ಕಬ್ಬಿನ ಬಾಕಿ ಬಿಲ್ ಪಾವತಿ ಮತ್ತು ದರ ಏರಿಕೆ ಹೋರಾಟ : 30ಕ್ಕೂ ಹೆಚ್ಚು ಟ್ರ್ಯಾಕ್ಟರ್ಗಳಿಗೆ ಬೆಂಕಿ ಹಚ್ಚಿ ರೈತರ ಆಕ್ರೋಶ| Sugar cane first appeared on ವಿಜಯವಾಣಿ .
ಪಾಕ್ನ ISI ಬೆಂಬಲಿತ ಗ್ರೆನೇಡ್ ದಾಳಿ ಮಾಡ್ಯೂಲ್ ಪತ್ತೆ: 10 ಜನರ ಬಂಧನ!
ಪಂಜಾಬ್: ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್ಐ ಬೆಂಬಲಿತ ಗ್ರೆನೇಡ್ ದಾಳಿ ಮಾಡ್ಯೂಲ್ ಅನ್ನು ಪತ್ತೆಹಚ್ಚಿ 10 ಜನರನ್ನು ಬಂಧಿಸಿಸಲಾಗಿದೆ ಎಂದು ಪಂಜಾಬ್ ಪೊಲೀಸರು ಗುರುವಾರ ತಿಳಿಸಿದ್ದಾರೆ. ಆರೋಪಿಗಳಿಂದ ಪೊಲೀಸ್ ತಂಡಗಳು ಚೀನಾದ ಹ್ಯಾಂಡ್ ಗ್ರೆನೇಡ್ ಅನ್ನು ಸಹ ವಶಪಡಿಸಿಕೊಂಡಿವೆ. ಪಂಜಾಬ್ನಲ್ಲಿ ಅಶಾಂತಿ ಸೃಷ್ಟಿಸಲು ಗ್ರೆನೇಡ್ ದಾಳಿ ನಡೆಸಲು ಆರೋಪಿಗಳು ಪಾಕಿಸ್ತಾನ ಮೂಲದ ನಿರ್ವಾಹಕರೊಂದಿಗೆ ಸಂಪರ್ಕದಲ್ಲಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ:ಬಿಜೆಪಿಯಿಂದ ಗೆದ್ದು ಟಿಎಂಸಿಗೆ ಪಕ್ಷಾಂತರ; 4 ವರ್ಷದ ಬಳಿಕ ಮುಕುಲ್ ರಾಯ್ ಶಾಸಕ ಸ್ಥಾನ ರದ್ದುಗೊಳಿಸಿದ […] The post ಪಾಕ್ನ ISI ಬೆಂಬಲಿತ ಗ್ರೆನೇಡ್ ದಾಳಿ ಮಾಡ್ಯೂಲ್ ಪತ್ತೆ: 10 ಜನರ ಬಂಧನ! first appeared on ವಿಜಯವಾಣಿ .
ಮಕ್ಕಳಿಗೆ ನ್ಯೂಮೇನಿಯಾ ಬಂದಾಗ ಏನು ತಿನ್ನಬೇಕು? ಇಲ್ಲಿದೆ ಉಪಯುಕ್ತ ಮಾಹಿತಿ.. | Pneumonia
ಬೆಂಗಳೂರು: ನ್ಯೂಮೋನಿಯಾ (Pneumonia) ಎಂಬುದು ಶ್ವಾಸಕೋಶಗಳ ಒಂದು ಅಥವಾ ಎರಡೂ ಬದಿಗಳಲ್ಲಿ ಉಂಟಾಗುವ ಸೋಂಕು. ಇದು ಶ್ವಾಸಕೋಶಗಳಲ್ಲಿರುವ ಗಾಳಿ ಚೀಲಗಳು (ಅಲ್ವಿಯೋಲಿ) ದ್ರವ ಅಥವಾ ಕೀವುಗಳಿಂದ ತುಂಬುವುದರಿಂದ ಸಂಭವಿಸುತ್ತದೆ. ಇದರಿಂದ ಉಸಿರಾಟದಲ್ಲಿ ತೊಂದರೆಯಾಗುತ್ತದೆ ಮತ್ತು ಆಮ್ಲಜನಕದ ಪೂರೈಕೆ ಕಡಿಮೆಯಾಗುತ್ತದೆ. ಇದು ಸೌಮ್ಯದಿಂದ ತೀವ್ರವಾಗಿ ಇರಬಹುದು, ವಿಶೇಷವಾಗಿ ಮಕ್ಕಳು, ವೃದ್ಧರು ಮತ್ತು ರೋಗ ನಿರೋಧಕ ಶಕ್ತಿ ದುರ್ಬಲವಾಗಿರುವವರಲ್ಲಿ ಅಪಾಯಕಾರಿ. ಮಕ್ಕಳಿಗೆ ನ್ಯೂಮೋನಿಯಾ ಬಂದಾಗ ಆಹಾರ ಕ್ರಮ ನ್ಯೂಮೋನಿಯಾ ಮಕ್ಕಳಲ್ಲಿ ಬಂದಾಗ, ಆರೋಗ್ಯಕ್ಕೆ ಸಹಾಯವಾಗುವ ಆಹಾರವನ್ನು ನೀಡುವುದು ಮುಖ್ಯ. ಇದು […] The post ಮಕ್ಕಳಿಗೆ ನ್ಯೂಮೇನಿಯಾ ಬಂದಾಗ ಏನು ತಿನ್ನಬೇಕು? ಇಲ್ಲಿದೆ ಉಪಯುಕ್ತ ಮಾಹಿತಿ.. | Pneumonia first appeared on ವಿಜಯವಾಣಿ .
ಚೆನ್ನೈ: ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ತಮಿಳುನಾಡಿನ ಸರ್ಕಾರಿ ಸಿಬ್ಬಂದಿ, ಶಿಕ್ಷಕರು ಹಾಗೂ ಪಿಂಚಣಿದಾರರಿಗೆ ಇಂದು(ನ. 13) ಸಿಎಂ ಎಂ.ಕೆ.ಸ್ಟಾಲಿನ್(M K Stalin) ಶೇ. 3ರಷ್ಟು ತುಟ್ಟಿಭತ್ಯೆ(ಡಿಎ) ಹೆಚ್ಚಳವನ್ನು ಘೋಷಣೆ ಮಾಡಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ ಸ್ಟಾಲಿನ್, ಸರ್ಕಾರಿ ಸಿಬ್ಬಂದಿ ಮತ್ತು ಶಿಕ್ಷಕರು ತಳಮಟ್ಟದಲ್ಲಿ ಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಾರೆ. ಮತ್ತು ಹಣಕಾಸಿನ ಒತ್ತಡಗಳ ಹೊರತಾಗಿಯೂ ರಾಜ್ಯವು ಅವರ ಕಲ್ಯಾಣಕ್ಕೆ ಬದ್ಧವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: […] The post ತಮಿಳುನಾಡಿನ ಸರ್ಕಾರಿ ಸಿಬ್ಬಂದಿ, ಶಿಕ್ಷಕರಿಗೆ ಶೇ. 3ರಷ್ಟು ತುಟ್ಟಿಭತ್ಯೆಯನ್ನು ಹೆಚ್ಚಿಸಿದ ಸಿಎಂ ಎಂ.ಕೆ.ಸ್ಟಾಲಿನ್| M K Stalin first appeared on ವಿಜಯವಾಣಿ .
Vastu tips: ವ್ಯಾಪಾರಿಗಳು ತಮ್ಮ ವ್ಯವಹಾರವನ್ನು ಉತ್ತಮವಾಗಿ ನಡೆಸಲು ಅಥವಾ ಲಾಭಗಳಿಸುವ ಸಲುವಾಗಿ ಅನೇಕ ರೀತಿಯ ವಸ್ತುಗಳನ್ನು ತಮ್ಮ ಅಂಗಡಿಯಲ್ಲಿ ಇಡಲು ಬಯಸುತ್ತಾರೆ. ಕೆಲವರು ಕುಬೇರನ ಚಿತ್ರ, ಲಕ್ಷ್ಮೀ ಫೋಟೋ, ಆಮೆ, ನಿಂಬೆಹಣ್ಣನ್ನು ಇಟ್ಟುಕೊಳ್ಳುತ್ತಾರೆ. ಇದರಿಂದ ಅಭಿವೃದ್ಧಿಯನ್ನು ಹೊಂದಬಹುದು ಎಂದು ಯೋಚಿಸಿರುತ್ತಾರೆ. ಅಂದಹಾಗೇ, ವಾಸ್ತು ಪ್ರಕಾರ, ಅಂಗಡಿಯ ಮುಂದೆ ಕೆಲವು ವಸ್ತುಗಳು ಅಥವಾ ತಪ್ಪು ವಸ್ತುಗಳು ಇದ್ದರೆ, ಲಕ್ಷ್ಮಿ ನಿಮ್ಮ ಅಂಗಡಿಯನ್ನು ಎಂದಿಗೂ ಪ್ರವೇಶಿಸುವುದಿಲ್ಲ ಎಂದು ಹೇಳುತ್ತದೆ. ಇದರಿಂದಾಗಿ, ವ್ಯವಹಾರಗಳು ನಿಧಾನಗೊಳ್ಳುತ್ತವೆ. ಅಲ್ಲದೇ, ಆರ್ಥಿಕ ನಷ್ಟಗಳು ಸಂಭವಿಸಲು […] The post ನಿಮ್ಮ ಅಂಗಡಿಯ ಮುಂದೆ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಇಡಬೇಡಿ! ಇದು ನಿಮ್ಮನ್ನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಬಹುದು.. Vastu tips first appeared on ವಿಜಯವಾಣಿ .
ಜಿಲ್ಲಾ ಮಟ್ಟದ ‘ಅಖಿಲ ಭಾರತ ಸಹಕಾರ ಸಪ್ತಾಹ’ನ.14ರಿಂದ
ಬಿ.ಜಯಕರ್ ಶೆಟ್ಟಿ ಇಂದ್ರಾಳಿ ಮಾಹಿತಿ ನ.16ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ ವಿಜಯವಾಣಿ ಸುದ್ದಿಜಾಲ ಉಡುಪಿ ಕರ್ನಾಟಕ ರಾಜ್ಯ ಸಹಕಾರ ಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಸಹಕಾರ ಇಲಾಖೆ ಹಾಗೂ ಜಿಲ್ಲೆಯ ವಿವಿಧ ಸಹಕಾರಿಗಳ ಸಹಕಾರದಲ್ಲಿ ನ.14ರಿಂದ ನ.20ರ ವರೆಗೆ ಉಡುಪಿ ಜಿಲ್ಲಾದ್ಯಂತ ಜಿಲ್ಲಾ ಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹಆರಂಭಗೊಳ್ಳಲಿದೆ. ನ.16ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ರಾಜ್ಯಮಟ್ಟದ ಸಹಕಾರ ಸಪ್ತಾಹ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ.ಜಯಕರ್ ಶೆಟ್ಟಿ […] The post ಜಿಲ್ಲಾ ಮಟ್ಟದ ‘ಅಖಿಲ ಭಾರತ ಸಹಕಾರ ಸಪ್ತಾಹ’ ನ.14ರಿಂದ first appeared on ವಿಜಯವಾಣಿ .
ಮಕ್ಕಳ ಬೆಳವಣಿಗೆಗೆ ಕ್ರೀಡೆ ಸಹಕಾರಿ
ಹುಕ್ಕೇರಿ: ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಕ್ರೀಡೆಗಳು ಸಹಕಾರಿಯಾಗಿದ್ದು, ವಿದ್ಯಾರ್ಥಿಗಳು ಶಾಲೆಯಲ್ಲಿ ಆಯೋಜಿಸುವ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳಬೇಕೆಂದು ಬೆಲ್ಲದ ಬಾಗೇವಾಡಿ ಅರ್ಬನ್ ಬ್ಯಾಂಕ್ ಅಧ್ಯಕ್ಷ ಪವನ ಕತ್ತಿ ಹೇಳಿದರು. ಪಟ್ಟಣದ ಎಸ್.ಕೆ ಪಬ್ಲಿಕ್ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ಬೌದ್ಧಿಕ ಬೆಳವಣಿಗೆಗೆ ಶಾರೀರಿಕ ಕ್ಷಮತೆ ಅವಶ್ಯ. ಮೊಬೈಲ್, ಟಿವಿ ಹಾವಳಿಯಲ್ಲಿ ಮಕ್ಕಳ ಕ್ರಿಯಾಶೀಲತೆ ಹಾಳಾಗುತ್ತಿದ್ದು, ಪಾಲಕರು ಮಕ್ಕಳ ಆಟೋಟಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕೆಂದು ಸಲಹೆ ನೀಡಿದರು. ಸಂಸ್ಥೆಯ ಅಧ್ಯಕ್ಷ ಪಿಂಟು […] The post ಮಕ್ಕಳ ಬೆಳವಣಿಗೆಗೆ ಕ್ರೀಡೆ ಸಹಕಾರಿ first appeared on ವಿಜಯವಾಣಿ .
ಚಿಕ್ಕೋಡಿ: ಹಿರಿಯರು ಕಟ್ಟಿ ಬೆಳೆಸಿದ ಬಿಡಿಸಿಸಿ ಬ್ಯಾಂಕಿನ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ರೈತರ ಹಿತಾಸಕ್ತಿಗಾಗಿ ಹೊಸ ಯೋಜನೆ ಜಾರಿಗೆ ತಂದು ಸಹಕಾರ ಕ್ಷೇತ್ರ ಬಲಪಡಿಸುವುದೇ ನನ್ನ ಧ್ಯೇಯವಾಗಿದೆ ಎಂದು ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ಹೇಳಿದರು. ತಾಲೂಕಿನ ಯಕ್ಸಂಬಾ ಶ್ರೀ ಬೀರೇಶ್ವರ ಕಚೇರಿ ಆವರಣದಲ್ಲಿ ನೂತನವಾಗಿ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಮಾಜಿ ವಿಪ ಸದಸ್ಯ ಅರುಣ ಶಹಾಪುರ ಹಾಗೂ ಜಿಲ್ಲೆಯ ವಿವಿಧ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಆಡಳಿತ ಮಂಡಳಿಯ ಸದಸ್ಯರಿಂದ ಬುಧವಾರ ಸನ್ಮಾನ […] The post ಬಿಡಿಸಿಸಿ ಪ್ರಗತಿಗೆ ಪ್ರಯತ್ನ first appeared on ವಿಜಯವಾಣಿ .
Stock Market; ನಾಳೆ ಬಿಹಾರ ಚುನಾವಣೆ ಫಲಿತಾಂಶ ಪ್ರಭಾವ: ಷೇರುಪೇಟೆಲಿ ಸೆನ್ಸೆಕ್ಸ್, ನಿಫ್ಟಿ ಅಂಕ ಸ್ಥಿರ
ಮುಂಬೈ: ದೇಶೀಯ ಷೇರು (Stock Market) ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಗುರುವಾರ(ನ.13) ಸ್ಥಿರಗೊಂಡಿದೆ. ವಹಿವಾಟಿನ ಮುಕ್ತಾಯದ ವೇಳೆಗೆ ಸೆನ್ಸೆಕ್ಸ್ 12.16 ಪಾಯಿಂಟ್ಗಳು ಅಥವಾ ಶೇಕಡಾ 0.01 ರಷ್ಟು ಏರಿಕೆಯಾಗಿ 84,478.67 ಕ್ಕೆ ತಲುಪಿತು. ಒಟ್ಟು 1,262 ಪಾಯಿಂಟ್ಗಳ ಏರಿಕೆಯೊಂದಿಗೆ ತನ್ನ ಗೆಲುವಿನ ಹಾದಿಯನ್ನು ನಾಲ್ಕು ದಿನಗಳಿಗೆ ವಿಸ್ತರಿಸಿತು. ನಿಫ್ಟಿ 50 3.35 ಪಾಯಿಂಟ್ಗಳು ಅಥವಾ ಶೇಕಡಾ 0.01 ರಷ್ಟು ಏರಿಕೆಯಾಗಿ 25,879.15 ಕ್ಕೆ ಸ್ಥಿರಗೊಂಡಿದೆ. ಸ್ಥಿರಕ್ಕೆ ಕಾರಣ ಏನು? ನಾಳೆಯೇ ಬಿಹಾರ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, […] The post Stock Market; ನಾಳೆ ಬಿಹಾರ ಚುನಾವಣೆ ಫಲಿತಾಂಶ ಪ್ರಭಾವ: ಷೇರುಪೇಟೆಲಿ ಸೆನ್ಸೆಕ್ಸ್, ನಿಫ್ಟಿ ಅಂಕ ಸ್ಥಿರ first appeared on ವಿಜಯವಾಣಿ .
ಸತ್ಯ-ಅಸತ್ಯದ ಅರಿವು ಮೂಡಿಸಿದ ಸಂತ ಕನಕ
ಉಪನ್ಯಾಸಕಿ ನಾಗರತ್ನಾ ಹೆಗಡೆ ಅನಿಸಿಕೆ ಕನಕದಾಸ ಜಯಂತಿ ಕಾರ್ಯಕ್ರಮ ವಿಜಯವಾಣಿ ಸುದ್ದಿಜಾಲ ಉಡುಪಿ ಕನಕದಾಸರು ತಮ್ಮ ಕೀರ್ತನೆಗಳ ಮೂಲಕವೇ ಸಮಾಜದಲ್ಲಿದ್ದ ಜಾತಿ ವ್ಯವಸ್ಥೆಯನ್ನು ಕಟುವಾಗಿ ಖಂಡಿಸಿದರು. ಸಮಾಜದಲ್ಲಿ ಶಾಂತಿ, ಸಮಾನತೆ, ಭ್ರಾತೃತ್ವ ಸಾರಲು ಜೀವನ ಮುಡಿಪಾಗಿಟ್ಟಿದ್ದರು. ಜೀವಿತಾವಧಿಯಲ್ಲಿ ಉಡುಪಿಗೂ ಆಗಮಿಸಿದ್ದ ಕನಕದಾಸ, ಹಳ್ಳಿ ಹಳ್ಳಿಗೆ ಸಂಚರಿಸಿ ಜನರಿಗೆ ಸತ್ಯ-ಅಸತ್ಯದ ಅರಿವು ಮೂಡಿಸಿದ್ದರು ಎಂದು ಉಪನ್ಯಾಸಕಿ ನಾಗರತ್ನಾ ಹೆಗಡೆ ಅನಿಸಿಕೆ ವ್ಯಕ್ತಪಡಿಸಿದರು. ಉಡುಪಿಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಮಾನ ಮನಸ್ಕ ಕನ್ನಡಿಗರ ವೇದಿಕೆಯಿಂದ ಆಯೋಜಿಸಿದ್ದ ಕನಕದಾಸ […] The post ಸತ್ಯ-ಅಸತ್ಯದ ಅರಿವು ಮೂಡಿಸಿದ ಸಂತ ಕನಕ first appeared on ವಿಜಯವಾಣಿ .
ಶಮಿಯಂತಹ ಬೌಲರ್ ಅಪರೂಪ ಆದರೆ…ನಾಯಕ ಶುಭಮಾನ್ ಗಿಲ್ ಹೇಳಿಕೆ ವೈರಲ್! Shubman Gill
ನವದೆಹಲಿ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಶುಕ್ರವಾರದಿಂದ ಕೋಲ್ಕತದ ಈಡನ್ ಗಾರ್ಡನ್ಸ್ನಲ್ಲಿ ಆರಂಭವಾಗಲಿದೆ. ತಂಡಕ್ಕೆ ಅನುಭವಿ ವೇಗಿ ಮೊಹಮ್ಮದ್ ಶಮಿ ಅವರನ್ನು ಆಯ್ಕೆ ಮಾಡದಿದ್ದಕ್ಕೆ ಈಗಾಗಲೇ ಭಾರಿ ಟೀಕೆಗಳು ಎದುರಾಗಿವೆ. ಇದೇ ವಿಚಾರವಾಗಿ ನಾಯಕ ಶುಭಮಾನ್ ಗಿಲ್ ( Shubman Gill ) ಪಂದ್ಯದ ಆರಂಭಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಹತ್ವದ ಹೇಳಿಕೆಗಳನ್ನು ನೀಡಿದರು. ಗಾಯದ ಕಾರಣದಿಂದಾಗಿ ತಂಡದಿಂದ ಹೊರಗುಳಿದಿರುವ ಶಮಿ, ಮತ್ತೆ ತಂಡಕ್ಕೆ ಮರಳಲು ಸಾಧ್ಯವಾಗುತ್ತಿಲ್ಲ. ಸದ್ಯ ಫಿಟ್ ಆಗಿದ್ದು […] The post ಶಮಿಯಂತಹ ಬೌಲರ್ ಅಪರೂಪ ಆದರೆ… ನಾಯಕ ಶುಭಮಾನ್ ಗಿಲ್ ಹೇಳಿಕೆ ವೈರಲ್! Shubman Gill first appeared on ವಿಜಯವಾಣಿ .
ರಾಯಬಾಗ: ರಸ್ತೆಗಳ ಸುಧಾರಣೆಯಿಂದ ಸಾರಿಗೆ ಸಂಚಾರ ಸುಗಮವಾಗುವುದರಿಂದ ಆರ್ಥಿಕ ಪ್ರಗತಿಯ ಮೂಲಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಶಾಸಕ ಡಿ.ಎಂ.ಐಹೊಳೆ ಹೇಳಿದರು. ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 1 ಕೋಟಿ ರೂ. ಅನುದಾನದಲ್ಲಿ ರಾಯಬಾಗ-ಜಲಾಲಪುರ ರಸ್ತೆ ಮರು ಡಾಂಬರೀಕರಣ ಕಾಮಗಾರಿ ಹಾಗೂ ಜಿಪಂ ಅನುದಾನದಲ್ಲಿ ತಾಲೂಕಿನ ಬಾವನಸೌಂದತ್ತಿ ಮತ್ತು ಸೌಂದತ್ತಿವಾಡಿಗಳಲ್ಲಿ ನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕೇಂದ್ರಗಳನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದ ಅವರು, ಮಗುವಿನ ಕಲಿಕೆಗೆ ಮೊದಲ ಹೆಜ್ಜೆಯಾದ ಅಂಗನವಾಡಿ ಕೇಂದ್ರಗಳನ್ನು ಸುಂದರವಾಗಿ ನಿರ್ಮಿಸಲಾಗಿದ್ದು, ಸಿಬ್ಬಂದಿ ಮಗುವಿನ ಕಲಿಕೆಗೆ ಪೂರಕ ವಾತಾವರಣ […] The post ರಸ್ತೆ ಸುಧಾರಣೆಯಿಂದ ಅಭಿವೃದ್ಧಿ first appeared on ವಿಜಯವಾಣಿ .
ಸಂಕೇಶ್ವರ: ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಶಾಲಾ-ಕಾಲೇಜು ಮಟ್ಟದಲ್ಲಿ ಗುರುತಿಸಿ ಬೆಳೆಸಿದ್ದೆ ಆದಲ್ಲಿ ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡಲು ಸಾಧ್ಯ ಎಂದು ಪಂಚಮ ಡಾ.ಶಿವಲಿಂಗೇಶ್ವರ ಸ್ವಾಮೀಜಿ ಹೇಳಿದರು. ಸಮೀಪದ ನಿಡಸೋಸಿ ಎಸ್ಎನ್ಜೆಪಿಎನ್ಎಂಎಸ್ ಟ್ರಸ್ಟ್ನ ಬಿಸಿಎ, ವಾಣಿಜ್ಯ, ವಿಜ್ಞಾನ ಮಹಾವಿದ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರಮಟ್ಟದ ಪದವಿಪೂರ್ವ ವಿದ್ಯಾರ್ಥಿಗಳ ಪ್ರತಿಭಾ ಶೋಧ ಆಹ್ವಾನ 1.0 ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಅವಕಾಶ ಸದುಪಯೋಗಪಡೆದುಕೊಂಡು ಯಶಸ್ಸಿನ ಪಥದಲ್ಲಿ ಮುನ್ನಡೆಯಬೇಕು ಎಂದು ಸಲಹೆ ನೀಡಿದರು. ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ನಿರ್ದೇಶಕ ಪೃಥ್ವಿ ಕತ್ತಿ […] The post ಅವಕಾಶಗಳ ಸದ್ಬಳಕೆ ಮಾಡಿಕೊಳ್ಳಲಿ first appeared on ವಿಜಯವಾಣಿ .
Kick start morning: ಬೆಳಗಿನ ಆರಂಭವು ಇಡೀ ದಿನವನ್ನು ಕಳೆಯಲು ಸಹಕಾರಿ ಎಂಬುದು ಎಲ್ಲರಿಗೂ ತಿಳಿದಿರುವಂತಹ ವಿಚಾರವಾಗಿದೆ. ನಮ್ಮ ಬೆಳಿಗ್ಗೆ ಹೇಗೆ ಪ್ರಾರಂಭವಾಗುತ್ತದೆಯೋ, ಅದು ಇಡೀ ದಿನವನ್ನು ನಿರ್ಧರಿಸುತ್ತದೆ. ಹಾಗೆಯೇ, ಕೆಲವರು ಬೆಳಿಗ್ಗೆ ಚಹಾ, ಕಾಫಿಯೊಂದಿಗೆ ಪ್ರಾರಂಭಿಸಿದರೆ, ಇನ್ನೂ ಕೆಲವರು ಆರೋಗ್ಯಕರ ಹಣ್ಣಿನ ರಸದೊಂದಿಗೆ ತಮ್ಮ ದಿನವನ್ನು ಪ್ರಾರಂಭಿಸುತ್ತಾರೆ. ನಟಿ ಅಮೃತಾ ಫಡ್ನವೀಸ್ ತಮ್ಮ ಬೆಳಗ್ಗೆಯನ್ನು ಅರಿಶಿನ ಮತ್ತು ಕರಿಮೆಣಸಿನ ನೀರಿನೊಂದಿಗೆ ದಿನವನ್ನು ಪ್ರಾರಂಭಿಸುವುದಾಗಿ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡುವ ಮೂಲಕ ತಿಳಿಸಿದ್ದಾರೆ. ಇವರು ಬೆಳಿಗ್ಗೆ ಖಾಲಿ […] The post ಅರಿಶಿಣ ನೀರು ಮತ್ತು ಮೆಣಸಿನ ನೀರಿನಿಂದ ದಿನ ಪ್ರಾರಂಭಿಸುತ್ತಾರಂತೆ ಮಹಾರಾಷ್ಟ್ರ ಸಿಎಂ ಪತ್ನಿ…! ಕಾರಣವೇನು..? Kick start morning first appeared on ವಿಜಯವಾಣಿ .
ನ. 16ರಂದು ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಅವಕಾಶ; ಷರತ್ತು ವಿಧಿಸಿ ಹೈಕೋರ್ಟ್ ಆದೇಶ| RSS
ಕಲಬುರಗಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತು ಬಿಜೆಪಿ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ(RSS) ಫಥಸಂಚಲನಕ್ಕೆ ನ. 16ರಂದು ಷರತ್ತು ಬದ್ದ ಅವಕಾಶ ನೀಡಿ ಕಲಬುರಗಿ ಹೈಕೋರ್ಟ್ ಪೀಠ ಆದೇಶ ನೀಡಿದೆ. ಚಿತ್ತಾಪುರದಲ್ಲಿ ನ. 02ರಂದು ನಡೆಸಲು ಉದ್ದೇಶಿಸಲಾಗಿದ್ದ ಆರೆಸ್ಸೆಸ್ ಪಥಸಂಚಲನಕ್ಕೆ ತಹಸೀಲ್ದಾರ್ ಅವಕಾಶ ನೀಡಿರಲಿಲ್ಲ. ತಹಶೀಲ್ದಾರ್ ಆದೇಶ ಪ್ರಶ್ನಿಸಿ ಅಶೋಕ ಪಾಟೀಲ್ ಎಂಬುವರು ಹೈಕೋರ್ಟ್ ಮೋರೆ ಹೋಗಿದ್ದರು. ಅಲ್ಲದೇ ಅಂದೇ ಅವಕಾಶ ನೀಡಲು ಇತರೆ ಸಂಘಟನೆಗಳು ಕೋರಿಕೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ನೇತೃತ್ವದಲ್ಲಿ ಶಾಂತಿ […] The post ನ. 16ರಂದು ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಅವಕಾಶ; ಷರತ್ತು ವಿಧಿಸಿ ಹೈಕೋರ್ಟ್ ಆದೇಶ| RSS first appeared on ವಿಜಯವಾಣಿ .
ಕಾಲುಗಳನ್ನು ಅಡ್ಡ ಹಾಕಿ ಮಲಗುವುದರಿಂದ ನಿಮ್ಮ ಜೀವಿತಾವಧಿ ಕಡಿಮೆಯಾಗುತ್ತದೆಯೇ? | Legs Crossed
ಬೆಂಗಳೂರು: ಹಿಂದು ಧರ್ಮದಲ್ಲಿ ಕಾಲುಗಳನ್ನು ಅಡ್ಡಹಾಕಿ(Legs Crossed) ಮಲಗುವುದು ಮತ್ತು ಅಡ್ಡಹಾಕಿ ಕುಳಿತುಕೊಳ್ಳವುದು ಸಾಮಾನ್ಯವಾಗಿ ಅಶುಭ ಎಂದು ಪರಿಗಣಿಸಲಾಗುತ್ತದೆ. ಅಲ್ಲದೆ, ಶಾಸ್ತ್ರಗಳಿಂದಲೂ ಮತ್ತು ದೃಷ್ಠಿಯಿಂದಲೂ ಇದನ್ನು ಅಶುಭ ಎಂದೇ ನಂಬಲಾಗಿದೆ. ಆದಾಗ್ಯೂ, ಕಾಲುಗಳನ್ನಜು ಅಡ್ಡ ಹಾಕಿ ಮಲಗುವುದು ಮತ್ತು ಕುಳಿತುಕೊಳ್ಳುವುದು ಸರಿಯೋ ಅಥವಾ ತಪ್ಪೋ ಎಂಬುದು ನೋಡೋಣ.. ಪುರಾಣಗಳ ಪ್ರಕಾರ, ಭಗವಂತ ಶ್ರೀಕೃಷ್ಣನೂ ತನ್ನ ಪಾದದ ಮೇಲೆ ಒಂದು ರತ್ನವನ್ನು ಧರಿಸಿದ್ದನು.ಅದು ಯಾವಗಲೂ ಹೊಳೆಯುತ್ತಿತ್ತು. ಒಂದು ದಿನ ಶ್ರೀಕೃಷ್ಣನು ಕಾಡಿನಲ್ಲಿ ಕಾಲುಗಳನ್ನು ಅಡ್ಡ-ಹಾಕಿ ಮಲಗಿಕೊಂಡಿದ್ದನು. ಭೇಟೆಗಾನೊಬ್ಬನಿಗೆ ಪಾದದ […] The post ಕಾಲುಗಳನ್ನು ಅಡ್ಡ ಹಾಕಿ ಮಲಗುವುದರಿಂದ ನಿಮ್ಮ ಜೀವಿತಾವಧಿ ಕಡಿಮೆಯಾಗುತ್ತದೆಯೇ? | Legs Crossed first appeared on ವಿಜಯವಾಣಿ .
ದೆಹಲಿ ಕಾರು ಸ್ಫೋಟ; ಪ್ರತಿಯೊಬ್ಬ ಕಾಶ್ಮೀರಿ ಮುಸ್ಲಿಮನೂ ಭಯೋತ್ಪಾದಕನಲ್ಲ; ಸಿಎಂ ಓಮರ್ ಅಬ್ದುಲ್ಲಾ| CM Omar Abdullah
ಜಮ್ಮು: ದೆಹಲಿಯ ಕೆಂಪುಕೋಟೆ ಬಳಿ 12 ಮಂದಿಯ ಸಾವಿಗೆ ಕಾರಣವಾದ ನ. 10ರ ಕಾರು ಸ್ಫೋಟ ಪ್ರಕರಣದಲ್ಲಿ ಕೆಲವು ಕಾಶ್ಮೀರಿ ವೈದ್ಯರನ್ನು ಬಂಧಿಸಿದ ಹಿನ್ನೆಲೆ, ಪ್ರತಿಯೊಬ್ಬ ಕಾಶ್ಮೀರಿ ಮುಸ್ಲಿಮನೂ ಭಯೋತ್ಪಾದಕನಲ್ಲ ಎಂದು ಗುರುವಾರ(ನ. 13) ಜಮ್ಮು-ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ(CM Omar Abdullah) ಹೇಳಿದ್ದಾರೆ. ಇಂದು ಬೆಳಿಗ್ಗೆ ಜಮ್ಮುವಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿ ಕಾರು ಸ್ಫೋಟವನ್ನು ಖಂಡಿಸಿದ್ದು, ಯಾವುದೇ ಧರ್ಮವು ಅಮಾಯಕರ ಹತ್ಯೆಯನ್ನು ಇಷ್ಟು ಕ್ರೂರವಾಗಿ ಸಮರ್ಥಿಸಲು ಸಾಧ್ಯವಿಲ್ಲ. ನಾವು ಒಂದು ವಿಷಯವನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಜಮ್ಮು-ಕಾಶ್ಮೀರದ […] The post ದೆಹಲಿ ಕಾರು ಸ್ಫೋಟ; ಪ್ರತಿಯೊಬ್ಬ ಕಾಶ್ಮೀರಿ ಮುಸ್ಲಿಮನೂ ಭಯೋತ್ಪಾದಕನಲ್ಲ; ಸಿಎಂ ಓಮರ್ ಅಬ್ದುಲ್ಲಾ| CM Omar Abdullah first appeared on ವಿಜಯವಾಣಿ .
ಕಪ್ಪು ಶಿಲೀಂಧ್ರ ಹೊಂದಿರುವ ಈರುಳ್ಳಿಯನ್ನು ಎಸೆಯಬೇಕೆ? ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ! Black Fungus Onions
Black Fungus Onions : ಈರುಳ್ಳಿಯ ಹೊರಪದರದಲ್ಲಿ ಕಪ್ಪು ಪುಡಿಯಂತಹ ವಸ್ತುವಿರುವುದನ್ನು ನೀವು ನೋಡಿದ್ದೀರಾ? ಈ ಕಣಗಳು ಕೊಳಕಲ್ಲ. ಇದು ಆಸ್ಪರ್ಜಿಲಸ್ ನೈಗರ್ ಎಂದು ಕರೆಯಲ್ಪಡುವ ಒಂದು ರೀತಿಯ ಶಿಲೀಂಧ್ರವಾಗಿದೆ. ಇತ್ತೀಚಿಗೆ ಮಾರಕಟ್ಟೆಯಲ್ಲಿ ಸಿಗುವಂತಹ ಎಲ್ಲಾ ಈರುಳ್ಳಿಗಳೂ ಕೂಡಾ ಈ ಕಪ್ಪು ಕಣವನ್ನು ಹೊಂದಿರುತ್ತವೆ, ಈ ಬಗ್ಗೆ ವೈದ್ಯರೊಬ್ಬರು ಮಾಡಿದ ಪೋಸ್ಟ್ ಆಹಾರ ಸುರಕ್ಷತಾ ಪದ್ಧತಿಗಳ ಬಗ್ಗೆ ಚರ್ಚೆಗೆ ನಾಂದಿ ಹಾಡಿದೆ ಎಂದರೆ ತಪ್ಪಾಗದು. ಡಾ. ನಂದಿತಾ ಅಯ್ಯರ್ ತಮ್ಮ ಎಕ್ಸ್ ಖಾತೆಯಲ್ಲಿ ಕಪ್ಪು ಶಿಲೀಂಧ್ರವನ್ನು ಹೊಂದದೆ […] The post ಕಪ್ಪು ಶಿಲೀಂಧ್ರ ಹೊಂದಿರುವ ಈರುಳ್ಳಿಯನ್ನು ಎಸೆಯಬೇಕೆ? ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ! Black Fungus Onions first appeared on ವಿಜಯವಾಣಿ .
ಬೆಳಿಗ್ಗೆ ತಣ್ಣೀರಿನಿಂದ ಮುಖ ತೊಳೆದರೆ ಏನಾಗುತ್ತದೆ ಗೊತ್ತಾ? cold water
cold water: ನಾವೆಲ್ಲರೂ ಬೆಳಿಗ್ಗೆ ಎದ್ದ ತಕ್ಷಣ ಖ ತೊಳೆಯುವ ಅಭ್ಯಾಸವನ್ನು ಹೊಂದಿದ್ದೇವೆ. ಇದು ಕೇವಲ ಅಭ್ಯಾಸವಲ್ಲ, ಇದರ ಹಿಂದೆ ನಮ್ಮ ಚರ್ಮ ಮತ್ತು ಆರೋಗ್ಯಕ್ಕೆ ತುಂಬಾ ಒಳ್ಳೆಯ ಅದ್ಭುತ ಪ್ರಯೋಜನಗಳಿವೆ. ತಣ್ಣೀರಿನಿಂದ ಮುಖ ತೊಳೆಯುವುದರಿಂದಾಗುವ ಪ್ರಯೋಜನಗಳನ್ನು ತಿಳಿದುಕೊಳ್ಳೋಣ ತಣ್ಣೀರು ನಿಮ್ಮ ಮುಖಕ್ಕೆ ತಗುಲಿದ ತಕ್ಷಣ, ದೇಹದಲ್ಲಿ ರಕ್ತ ಪರಿಚಲನೆ ಹೆಚ್ಚಾಗುತ್ತದೆ. ನರಗಳು ಉತ್ತೇಜಿತವಾಗುತ್ತವೆ. ಇದು ಬೇಗನೆ ಅರೆನಿದ್ರಾವಸ್ಥೆಯನ್ನು ನಿವಾರಿಸುತ್ತದೆ, ತಕ್ಷಣ ಎಚ್ಚರಗೊಳ್ಳಲು ಸಹಾಯ ಮಾಡುತ್ತದೆ ಮತ್ತು ದಿನವಿಡೀ ಹರ್ಷಚಿತ್ತದಿಂದ ಇರಲು ಸಹಾಯ ಮಾಡುತ್ತದೆ. ತಣ್ಣೀರು ಚರ್ಮದ […] The post ಬೆಳಿಗ್ಗೆ ತಣ್ಣೀರಿನಿಂದ ಮುಖ ತೊಳೆದರೆ ಏನಾಗುತ್ತದೆ ಗೊತ್ತಾ? cold water first appeared on ವಿಜಯವಾಣಿ .
ದೇಶದ ಅರ್ಧದಷ್ಟು ಜನರು ನನ್ನನ್ನು ಕೊಲ್ಲಲು ಬಯಸಿದ್ದರು: ನಟಿ ಅದಾ ಶರ್ಮಾ ಶಾಕಿಂಗ್ ಹೇಳಿಕೆ! Adah Sharma
ಮುಂಬೈ: 2015ರಲ್ಲಿ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಮತ್ತು ಪವನ್ ಒಡೆಯರ್ ಕಾಂಬಿನೇಷನ್ನಲ್ಲಿ ‘ರಣವಿಕ್ರಮ’ ಸಿನಿಮಾ ತೆರೆಕಂಡಿತ್ತು. ಆ ಸಿನಿಮಾ ಮೂಲಕ ಕನ್ನಡಿಗರಿಗೂ ಪರಿಚಯವಾದ ನಟಿ ಯಾರೆಂದರೆ ಅವರೇ ಹಾಟ್ ಬ್ಯೂಟಿ ಅದಾ ಶರ್ಮಾ ( Adah Sharma ). ನೀಳ ಮೈಮಾಟ ಮತ್ತು ಹಾಲಿನ ಬಣ್ಣದ ಚೆಲುವೆಯನ್ನು ಅಷ್ಟೇ ಪ್ರೀತಿಯಿಂದ ನಮ್ಮ ಕನ್ನಡಿಗರು ಸ್ವಾಗತಿಸಿದರು. ಆ ಎರಡು ಸಿನಿಮಾಗಳ ಬಳಿಕ ಅದಾ ಅವರು ಮತ್ತೆ ಕನ್ನಡಕ್ಕೆ ವಾಪಾಸ್ಸಾಗಲೇ ಇಲ್ಲ. ತೆಲುಗು, ತಮಿಳು ಮತ್ತು ಹಿಂದಿಯಲ್ಲಿ ತೊಡಗಿಸಿಕೊಂಡರಾದರೂ, ಬೆರಳಣಿಕೆ […] The post ದೇಶದ ಅರ್ಧದಷ್ಟು ಜನರು ನನ್ನನ್ನು ಕೊಲ್ಲಲು ಬಯಸಿದ್ದರು: ನಟಿ ಅದಾ ಶರ್ಮಾ ಶಾಕಿಂಗ್ ಹೇಳಿಕೆ! Adah Sharma first appeared on ವಿಜಯವಾಣಿ .
ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ 12 ಮಂದಿಯ ಸಾವಿಗೆ ಕಾರಣವಾದ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಶಂಕಿತ ಉಗ್ರರ ಜೊತೆಗಿನ ಸಂಬಂಧ ಹೊಂದಿರುವ ಅಲ್-ಫಲಾಹ್ ವಿಶ್ವವಿದ್ಯಾಲಯದ(Al-Falah University) ಹಣಕಾಸು ವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯಕ್ಕೆ(ED) ಆದೇಶಿಸಿದೆ ಎಂದು ವರದಿಯಾಗಿದೆ. ನ. 10ರಂದು ನಡೆಸಿದ ಸ್ಫೋಟದ ಪಿತೂರಿಯನ್ನು ಅದೇ ವಿವಿಯಲ್ಲಿ ರೂಪಿಸಲಾಗಿತ್ತು ಎಂದು ಆರೋಪಿಸಲಾಗಿದೆ.ಕೇಂದ್ರವು ಈಗ ಅಲ್ ಫಲಾಹ್ ವಿಶ್ವವಿದ್ಯಾಲಯದ ಖಾತೆಗಳ ವಿಧಿವಿಜ್ಞಾನ ಲೆಕ್ಕಪರಿಶೋಧನೆಯನ್ನು ಕೋರಿದ್ದು, ಜೊತೆಗೆ ಆರ್ಥಿಕ ಅಪರಾಧಗಳ ವಿಭಾಗಕ್ಕೆ […] The post ದೆಹಲಿ ಕಾರು ಸ್ಫೋಟ; ಅಲ್-ಫಲಾಹ್ ವಿವಿಯ ಹಣಕಾಸಿನ ವ್ಯವಹಾರದ ಬಗ್ಗೆ ತನಿಖೆಗೆ ಆದೇಶಿಸಿದ ಕೇಂದ್ರ ಸರ್ಕಾರ| Al-Falah University first appeared on ವಿಜಯವಾಣಿ .
personality test: ಮುಖದ ಲಕ್ಷಣಗಳು ವ್ಯಕ್ತಿಯ ಸ್ವಭಾವ, ಆಲೋಚನೆ ಮತ್ತು ಅದೃಷ್ಟಕ್ಕೆ ಸಂಬಂಧಿಸಿವೆ. ಅದೇ ರೀತಿ ಸಾಮುದ್ರಿಕ ಶಾಸ್ತ್ರದ ಪ್ರಕಾರ, ಹಣೆಯ ಆಕಾರವು ವ್ಯಕ್ತಿಯ ಬುದ್ಧಿವಂತಿಕೆ, ಅದೃಷ್ಟ ಮತ್ತು ವ್ಯಕ್ತಿತ್ವವನ್ನು ಪ್ರತಿಬಿಂಬಿಸುತ್ತದೆ. ಹಣೆಯ ಆಕಾರವು ವ್ಯಕ್ತಿತ್ವದ ಬಗ್ಗೆ ಏನು ಬಹಿರಂಗಪಡಿಸುತ್ತದೆ ಎಂಬುದನ್ನು ತಿಳಿಯಿರಿ…. ಸಣ್ಣ ಹಣೆ: ಸಣ್ಣ ಅಥವಾ ಕಿರಿದಾದ ಹಣೆಯನ್ನು ಹೊಂದಿರುವವರು ಬೇಗನೆ ಪ್ರತಿಕ್ರಿಯಿಸುವ ಮತ್ತು ಭಾವನಾತ್ಮಕವಾಗಿರುತ್ತಾರೆ. ಅವರು ಇತರರ ಭಾವನೆಗಳನ್ನು ಆಳವಾಗಿ ಅರ್ಥಮಾಡಿಕೊಳ್ಳುತ್ತಾರೆ ಮತ್ತು ಸಂಬಂಧಗಳಲ್ಲಿ ಪ್ರಾಮಾಣಿಕತೆಯನ್ನು ಕಾಪಾಡಿಕೊಳ್ಳುತ್ತಾರೆ. ಅವರು ಸೂಕ್ಷ್ಮತೆ ಮತ್ತು ಸ್ನೇಹವನ್ನು […] The post ನಿಮ್ಮ ಹಣೆಯ ಆಕಾರವು ನಿಮ್ಮ ವ್ಯಕ್ತಿತ್ವವನ್ನು ಬಹಿರಂಗಪಡಿಸುತ್ತದೆ! ನಿಮ್ಮ ಅದೃಷ್ಟದ ರಹಸ್ಯ ತಿಳಿದುಕೊಳ್ಳಿ… personality test first appeared on ವಿಜಯವಾಣಿ .
ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ವಜಾಗೊಳಿಸಿದ ಸುಪ್ರೀಂ: ಇದು ನಮಗೆ ಸಿಕ್ಕ ನ್ಯಾಯ: DK ಶಿವಕುಮಾರ್
ಬೆಂಗಳೂರು: ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದು, ನ್ಯಾಯ ಪೀಠದಿಂದ ನಮಗೆ ನ್ಯಾಯ ಸಿಕ್ಕಂತಾಗಿದೆ” ಎಂದು ಡಿಸಿಎಂ DK ಶಿವಕುಮಾರ್ ಹೇಳಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು. ಮೇಕೆದಾಟು ಯೋಜನೆ ಡಿಪಿಆರ್ ವಿರೋಧಿಸಿ ತಮಿಳುನಾಡು ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು, ಇದರಿಂದ ತಮಿಳುನಾಡಿಗೆ ಹಿನ್ನಡೆಯಾಗಿದೆಯಲ್ಲಾ ಎಂದು ಕೇಳಿದಾಗ, “ಈ ಬಗ್ಗೆ ಸಂಪೂರ್ಣ ಮಾಹಿತಿ ಸಿಕ್ಕ ನಂತರ ವಿವರವಾಗಿ ಮಾತನಾಡುತ್ತೇನೆ. ಇದು ಯಾವುದೇ ರೀತಿಯ ಹಿನ್ನಡೆಯಲ್ಲ. ಬದಲಿಗೆ ನ್ಯಾಯ […] The post ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ವಜಾಗೊಳಿಸಿದ ಸುಪ್ರೀಂ: ಇದು ನಮಗೆ ಸಿಕ್ಕ ನ್ಯಾಯ: DK ಶಿವಕುಮಾರ್ first appeared on ವಿಜಯವಾಣಿ .
ದೇಹವನ್ನು ಫಿಟ್ ಆಗಿರಿಸಲು ಈ ಆಹಾರಗಳನ್ನು ಸೇವಿಸಿರಿ! Fitness food
Fitness food: ಇಂದಿನ ದಿನಗಳಲ್ಲಿ ಜನರು ಫಿಟ್ ಆಗಿರಲು ಬಯಸುತ್ತಾರೆ. ಹಾಗಾಗಿ ಅನೇಕ ರೀತಿಯ ಆಹಾರ ಪದಾರ್ಥಗಳನ್ನು ಸೇವಿಸುತ್ತಾರೆ. ಆದರೂ, ಫಿಟ್ ಆಗಿರಲು ಸಾಧ್ಯವಾಗುವುದಿಲ್ಲ. ಈ ಕಾರಣದಿಂದ ಚಿಕಿತ್ಸೆಗೆ ಒಳಗಾಗುತ್ತಾರೆ. ಹಾಗಾಗಿ ದೇಹವನ್ನು ಫಿಟ್ ಆಗಿರಲು ಬಯಸುವವರು ಈ ರೀತಿಯ ಆಹಾರಗಳನ್ನು ಸೇವಿಸುವುದರಿಂದ ಫಿಟ್ ಆಗಿರಬಹುದು. 1. ಓಟ್ಸ್ ಸ್ಮೂಥಿ ಬೇಕಾಗುವ ಪದಾರ್ಥಗಳು * 1 ಕಪ್ ಓಟ್ಸ್ (ರಾತ್ರಿ ನೆನಸಿಡಿ) * 1 ಬಾಳೆಹಣ್ಣು * 1 ಕಪ್ ಸ್ಟ್ರಾಬೆರಿ, ಬ್ಲೂಬೆರಿ ಹಣ್ಣು * 1 […] The post ದೇಹವನ್ನು ಫಿಟ್ ಆಗಿರಿಸಲು ಈ ಆಹಾರಗಳನ್ನು ಸೇವಿಸಿರಿ! Fitness food first appeared on ವಿಜಯವಾಣಿ .
ಬೆಳಗಿನ ತಿಂಡಿಗೆ ಈ ಬೈಟ್ಸ್ ಟ್ರೈ ಮಾಡಿ ನೋಡಿ..ಇದು ಕರುಳಿನ ರೋಗಕ್ಕೂ ಬೆಸ್ಟ್ | Peanut Butter-Date Bites
Peanut Butter-Date Bites: ಬೆಳಿಗ್ಗೆ ತಿಂಡಿ ತಿನ್ನುವುದು ಎಲ್ಲರ ಆರೋಗ್ಯದ ದೃಷ್ಠಿಯಿಂದ ಒಳ್ಳೆಯದು. ಇದು ಆ ದಿನದ ಶಕ್ತಿಯ ಮಟ್ಟವನ್ನು ಕಾಪಾಡಿಕೊಳ್ಳಲು, ಮಧ್ಯಾಹ್ನದವರೆಗೆ ಹಸಿವನ್ನು ತಡೆಯಲು ನೆರವಾಗುತ್ತದೆ. ಮೂರು ಹೊತ್ತು ಸರಿಯಾದ ಸಮಯಕ್ಕೆ ತಿಂಡಿ, ಊಟ ಮಾಡುವುದರಿಂದ ಚಯಾಪಚಯ ಕ್ರಿಯೆ ಉತ್ತಮವಾಗಿರತ್ತದೆ ಎನ್ನುವುದು ವೈದ್ಯರ ಸಲಹೆ. ಇತ್ತೀಚೆಗೆ ಅನೇಕ ಜನರು ಚಿಪ್ಸ್, ಕುಕೀಸ್ ಮತ್ತು ಪಾನೀಯಗಳತ್ತ ಮುಖ ಮಾಡಿದ್ದು, ಇದು ಪೌಷ್ಟಿಕಾಂಶಗಳನ್ನು ಕಡಿಮೆ ಮಾಡುವುದರೊಂದಿಗೆ, ಅನಾರೋಗ್ಯಕ್ಕೂ ಕಾರಣವಾಗಬಹುದು. ಅಂತಹ ತಿಂಡಿಗಳನ್ನು ತಿನ್ನುವುದರಿಂದ ಪದೇ ಪದೇ ಹಸಿವಾಗುತ್ತದೆ. ಸರಿಯಾದ […] The post ಬೆಳಗಿನ ತಿಂಡಿಗೆ ಈ ಬೈಟ್ಸ್ ಟ್ರೈ ಮಾಡಿ ನೋಡಿ..ಇದು ಕರುಳಿನ ರೋಗಕ್ಕೂ ಬೆಸ್ಟ್ | Peanut Butter-Date Bites first appeared on ವಿಜಯವಾಣಿ .
ಅಲ್ಖೈದಾ ಮಾಜಿ ಕಮಾಂಡರ್, ಸಿರಿಯನ್ ಅಧ್ಯಕ್ಷ ಅಲ್-ಶರಾಗೆ ಎಷ್ಟು ಹೆಂಡತಿಯರು? ಎಂದು ಟ್ರಂಪ್ ತಮಾಷೆ| Donald Trump
ವಾಷಿಂಗ್ಟನ್: ಐತಿಹಾಸಿಕವಾಗಿ 1946ರ ಬಳಿಕ ಇದೇ ಮೊದಲ ಭಾರಿಗೆ ನಿನ್ನೆ(ನ. 12) ಸಿರಿಯನ್ ಅಧ್ಯಕ್ಷನೊಬ್ಬರು ಅಮೆರಿಕಾಕ್ಕೆ ಭೇಟಿ ನೀಡಿ ಶ್ವೇತಭವನದ ಅತಿಥ್ಯವನ್ನು ಸ್ವೀಕರಿಸಿದ್ದಾರೆ. ಸಿರಿಯನ್ ಅಧ್ಯಕ್ಷ ಅಹ್ಮದ್ ಅಲ್-ಶರಾ ಅವರು ಡೊನಾಲ್ಡ್ ಟ್ರಂಪ್(Donald Trump) ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ. ‘How many wives? One?’ Trump asks Syria’s new leader in White House — video Trump gifted Al-Shaar perfume and went on to […] The post ಅಲ್ಖೈದಾ ಮಾಜಿ ಕಮಾಂಡರ್, ಸಿರಿಯನ್ ಅಧ್ಯಕ್ಷ ಅಲ್-ಶರಾಗೆ ಎಷ್ಟು ಹೆಂಡತಿಯರು? ಎಂದು ಟ್ರಂಪ್ ತಮಾಷೆ| Donald Trump first appeared on ವಿಜಯವಾಣಿ .

21 C