SENSEX
NIFTY
GOLD
USD/INR

Weather

19    C
... ...View News by News Source

ಕರ್ನಾಟಕದ ಗೃಹಲಕ್ಷ್ಮೀಯರು ಅತಂತ್ರ! ಗ್ಯಾರಂಟಿ ಹಣ ಈ ವರ್ಷ ಬಂದಿರುವುದು ಕೇವಲ 5 ತಿಂಗಳು ಮಾತ್ರ!

ಗೃಹಲಕ್ಷ್ಮಿ ಯೋಜನೆಯಡಿ 2000 ರೂ. ಹಣ ಮೂರು ತಿಂಗಳಿಂದ ಬಾರದೆ ಮಡಿಕೇರಿ ಜಿಲ್ಲೆಯ ಮಹಿಳೆಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರದ ಗ್ಯಾರಂಟಿ ನಂಬಿ ಚೀಟಿ, ಚಿನ್ನದ ಯೋಜನೆಗಳಿಗೆ ಹಣ ತೊಡಗಿಸಿದ್ದ ಗೃಹಿಣಿಯರು ಇದೀಗ ಸಾಲ ಮಾಡುವ ಪರಿಸ್ಥಿತಿಗೆ ತಲುಪಿದ್ದಾರೆ. ಆಗಸ್ಟ್‌ನಿಂದ ಹಣ ಬಂದಿಲ್ಲ, ಫೆಬ್ರವರಿ-ಮಾರ್ಚ್‌ ಬಾಕಿ ಹಣವೂ ಪಾವತಿಯಾಗಿಲ್ಲ. ಇದರಿಂದ ಮಹಿಳೆಯರು ಆತಂಕಗೊಂಡಿದ್ದಾರೆ.

ವಿಜಯ ಕರ್ನಾಟಕ 25 Nov 2025 6:59 am

ಕೊಳೆರೋಗಕ್ಕೆ ಭಾರೀ ಪ್ರಮಾಣದಲ್ಲಿ ಬೆಳೆ ನಾಶ, ಏರುಗತಿಯಲ್ಲಿ ಹಸಿ ಶುಂಠಿ ದರ; ಎಷ್ಟಿದೆ ಸದ್ಯದ ಬೆಲೆ?

ಮಲೆನಾಡಿನಲ್ಲಿ ಸುದೀರ್ಘ ಮಳೆಯಿಂದಾಗಿ ಶುಂಠಿ ಬೆಳೆ ಕೊಳೆ ರೋಗಕ್ಕೆ ತುತ್ತಾಗಿದ್ದು, ಮಾರುಕಟ್ಟೆಯಲ್ಲಿ ಹಸಿ ಶುಂಠಿ ದರ ಕಳೆದ ವರ್ಷಕ್ಕಿಂತ ದ್ವಿಗುಣಗೊಂಡು ಕ್ವಿಂಟಾಲ್‌ಗೆ 5100 ರೂಪಾಯಿ ತಲುಪಿದೆ. ಹೊರ ರಾಜ್ಯಗಳಲ್ಲಿ ಅಧಿಕ ಬೇಡಿಕೆ ಮತ್ತು ಇತರ ರಾಜ್ಯಗಳಲ್ಲೂ ಕಡಿಮೆ ಇಳುವರಿಯಿಂದಾಗಿ ಬೆಲೆ ಇನ್ನಷ್ಟು ಏರಿಕೆಯಾಗುವ ನಿರೀಕ್ಷೆಯಿದೆ.

ವಿಜಯ ಕರ್ನಾಟಕ 25 Nov 2025 6:42 am

ರೇಷ್ಮೆ ಗೂಡಿಗೆ ಬಂಗಾರದ ಬೆಲೆ, ದಿನ ದಿನಕ್ಕೂ ಧಾರಣೆ ಏರಿಕೆ, ಸಾವಿರ ರೂ.ನತ್ತ ದ್ವಿತಳಿ ಗೂಡಿನ ದರ

ಕಳೆದೊಂದು ತಿಂಗಳಿನಿಂದ ರೇಷ್ಮೆ ಧಾರಣೆಯಲ್ಲಿ ಗಣನೀಯ ಏರಿಕೆಯಾಗಿದ್ದು, ದ್ವಿತಳಿ ರೇಷ್ಮೆ ಗೂಡಿನ ಬೆಲೆ 905 ರೂ.ಗೆ ತಲುಪಿದೆ. ಆವಕ ಕಡಿಮೆಯಾಗುತ್ತಿರುವುದು ಮತ್ತು ಮಾರುಕಟ್ಟೆಯಲ್ಲಿ ಸುಧಾರಣೆಗಳು ಈ ಏರಿಕೆಗೆ ಕಾರಣವಾಗಿವೆ. ಇದರಿಂದ ರೇಷ್ಮೆ ಬೆಳೆಗಾರರಲ್ಲಿ ಭಾರಿ ಲಾಭದ ನಿರೀಕ್ಷೆ ಮೂಡಿದೆ. ದ್ವಿತಳಿ ರೇಷ್ಮೆ ಗೂಡಿನ ಬೆಲೆ ಸಾವಿರ ರೂಪಾಯಿ ಸಮೀಪಿಸುತ್ತಿದೆ.

ವಿಜಯ ಕರ್ನಾಟಕ 25 Nov 2025 6:42 am

Rain Alert: ರಾಜ್ಯಾದ್ಯಂತ ಭಾರೀ ಚಳಿ, ಮುಂದಿನ ಐದು ದಿನ ಮಳೆ ಎಚ್ಚರಿಕೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗಿದೆ. ಬೆಳಿಗ್ಗೆ ವೇಳೆ ದಟ್ಟವಾದ ಮಂಜು ಆವರಿಸುತ್ತಿದೆ. ಸಂಜೆಯಿಂದಲೇ ನಡುಗುವ ಚಳಿಗೆ ಜನ ತತ್ತರಿಸುತ್ತಿದ್ದಾರೆ. ಇದರೊಂದಿಗೆ ಹಲವು ಜಿಲ್ಲೆಗಳಲ್ಲಿ ಮಳೆ ಕೂಡ ಮುಂದುವರಿದಿದೆ. ಕರಾವಳಿ ಕರ್ನಾಟಕದಾದ್ಯಂತ ಈಶಾನ್ಯ ಮಾನ್ಸೂನ್ ಸಕ್ರಿಯವಾಗಿದೆ. ಒಳನಾಡಿನ ಕರ್ನಾಟಕದಾದ್ಯಂತ ದುರ್ಬಲವಾಗಿದ್ದು, ಕರಾವಳಿ ಕರ್ನಾಟಕದ ಕೆಲವು ಸ್ಥಳಗಳಲ್ಲಿ, ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಕರ್ನಾಟಕದಾದ್ಯಂತ ಒಣ

ಒನ್ ಇ೦ಡಿಯ 25 Nov 2025 6:30 am

ಇ.ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ಹುಬ್ಬಳ್ಳಿಯಲ್ಲಿ ₹3.2 ಕೋಟಿ ಮೌಲ್ಯದ ಚಿನ್ನಾಭರಣ ದರೋಡೆ, ಇಬ್ಬರು ವಶಕ್ಕೆ

ಹುಬ್ಬಳ್ಳಿಯಲ್ಲಿ ಇ.ಡಿ ಅಧಿಕಾರಿಗಳ ಸೋಗಿನಲ್ಲಿ ಬಂದ ಐವರು, ಕೇರಳ ಮೂಲದ ಚಿನ್ನಾಭರಣ ವ್ಯಾಪಾರಿ ಸುದಿನ್ ಎಂಆರ್ ಅವರಿಂದ 3.2 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿಕೊಂಡು ಪರಾರಿಯಾಗಿದ್ದರು. ಈ ಪ್ರಕರಣ ಸಂಬಂಧ ಕಾರು ಚಾಲಕ ಸೇರಿದಂತೆ ಇಬ್ಬರನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿಜಯ ಕರ್ನಾಟಕ 25 Nov 2025 5:57 am

ಧರ್ಮಸ್ಥಳ ಪ್ರಕರಣದಲ್ಲಿ ಬಂಧಿತನಾಗಿದ್ದ ಚಿನ್ನಯ್ಯನಿಗೆ ಷರತ್ತು ಬದ್ಧ ಜಾಮೀನು ಮಂಜೂರು; 12 ಷರತ್ತುಗಳೇನು?

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣದಲ್ಲಿ ಆರೋಪಿಯಾಗಿದ್ದ ಚಿನ್ನಯ್ಯನಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 1 ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್ ಮತ್ತು 12 ಷರತ್ತುಗಳೊಂದಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಮತ್ತೊಂದೆಡೆ, ಮನೆಯಲ್ಲಿ ಅನಧಿಕೃತ ಶಸ್ತ್ರಾಸ್ತ್ರ ಇರಿಸಿಕೊಂಡ ಆರೋಪ ಎದುರಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಕರಣದ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ವಿಸ್ತರಿಸಿದೆ.

ವಿಜಯ ಕರ್ನಾಟಕ 25 Nov 2025 5:39 am

ಮಹಾಲಕ್ಷ್ಮೀ ಬ್ಯಾಂಕ್ ಸಾಲಕ್ಕಾಗಿ ನಕಲಿ ಸಹಿ ಬಳಕೆ ಪ್ರಕರಣ: ಎಫ್‌ಎಸ್‌ಎಲ್ ವರದಿ ತರಿಸಿ ಸೂಕ್ತ ತನಿಖೆಗೆ ಸಂತ್ರಸ್ತರ ಆಗ್ರಹ

ಉಡುಪಿ: ಶ್ರೀಮಹಾಲಕ್ಷ್ಮೀ ಬ್ಯಾಂಕ್ ಮಲ್ಪೆ ಶಾಖೆಯಲ್ಲಿ ನಕಲಿ ಸಹಿ ಬಳಸಿ ನೀಡಿರುವ ಸಾಲಕ್ಕೆ ಸಂಬಂಧಿಸಿ ವಿಧಿವಿಜ್ಞಾನ ಪ್ರಯೋಗಾಲಯ ದಿಂದ ಪರೀಕ್ಷಿಸಿ ಸೂಕ್ತ ತನಿಖೆ ನಡೆಸಿ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ಉಡುಪಿ ತಾಲೂಕು ಸಂತ್ರಸ್ತರ ಸಮಿತಿಯ ನೇತೃತ್ವದಲ್ಲಿ ಸೋಮವಾರ ಉಡುಪಿ ಸಹಕಾರ ಇಲಾಖೆಯ ಉಪನಿಬಂಧಕಿ ಲಾವಣ್ಯ ಅವರಿಗೆ ಮನವಿ ಸಲ್ಲಿಸಲಾಯಿತು. ಶ್ರೀಮಹಾಲಕ್ಷ್ಮೀ ಬ್ಯಾಂಕ್ ಮಲ್ಪೆ ಶಾಖೆಯಲ್ಲಿ ಕೋವಿಡ್ ಸಂದರ್ಭದಲ್ಲಿ ಕೋವಿಡ್ ಸಾಲಮೇಳ ಎಂಬ ಯೋಜನೆ ಅಡಿಯಲ್ಲಿ ಸಾರ್ವಜನಿಕರಿಗೆ ನಗದು ರೂಪದಲ್ಲಿ ಸಾಲಗಳನ್ನು ನೀಡಲಾಗಿದ್ದು, ಆ ಸಾಲವನ್ನು ಒಂದು ವರ್ಷದ ಬಳಿಕ ಮರು ಪಾವತಿಸಬೇಕಾಗಿತ್ತು. ಆದರೆ ಈ ಯೋಜನೆಯಲ್ಲಿ ಅಲ್ಪ ಪ್ರಮಾಣದ ಸಾಲವನ್ನು ಪಡೆದ ಸಾಲಗಾರರ ಸಾಲವನ್ನು 2ಲಕ್ಷ ರೂ. ಎಂದು ತಪ್ಪಾಗಿ ನಮೂದಿಸಿ ಈಗ ಅಸಲು ಮತ್ತು ಬಡ್ಡಿ ಸೇರಿಸಿ 3 ಲಕ್ಷಕ್ಕಿಂತ ಅಧಿಕ ಪಾವತಿಸುವಂತೆ ನೋಟಿಸು ನೀಡಲಾಗಿತ್ತು. ಈ ಬಗ್ಗೆ ಬ್ಯಾಂಕಿನಲ್ಲಿ ವಿಚಾರಿಸಿ ಸಾಲ ಪತ್ರಗಳನ್ನು ಪರಿಶೀಲಿಸಿದಾಗ ಅದರಲ್ಲಿ ನಮ್ಮ ನಕಲಿ ಸಹಿ ಬಳಸಿ ಹೆಚ್ಚಿನ ಹಣ ನೀಡಿರುವುದನ್ನು ನಮೂದಿಸಿ ದುರುಪಯೋಗ ಮಾಡಿರುವುದು ಗಮನಕ್ಕೆ ಬಂತು. ಬಳಿಕ ಬ್ಯಾಂಕ್ ಸಾಲ ಪತ್ರದಲ್ಲಿನ ನಕಲಿ ಸಹಿಯಿಂದ ಅನ್ಯಾಯ ಕ್ಕೊಳಗಾದ ಸಂತ್ರಸ್ತರು ಒಟ್ಟಾಗಿ ಹೋರಾಟ ನಡೆಸಿ ನ್ಯಾಯ ಒದಗಿಸುವಂತೆ ಸರಕಾರದ ಗಮನಕ್ಕೆ ತಂದು ಒತ್ತಾಯ ಮಾಡಿದಾಗ ಸರಕಾರ ಈ ವಿಷಯದ ಬಗ್ಗೆ ನಿಯಮ 64ರ ಅಡಿಯಲ್ಲಿ ಸಹಕಾರ ಇಲಾಖೆ ಉಪನಿಬಂಧಕರು ಸೂಕ್ತ ತನಿಖೆಯನ್ನು ನಡೆಸುವಂತೆ ಆದೇಶ ಜಾರಿಗೊಳಿಸಿತು. ಈ ತನಿಖೆಗೆ ಆದೇಶವಾಗಿ ಒಂದು ವರ್ಷ ಕಳೆದರೂ ಈವರೆಗೆ ನ್ಯಾಯ ಸಿಕ್ಕಿಲ್ಲ. ಹಾಗೆಯೇ ತನಿಖೆಗೆ ಆದೇಶವಾದ ದಿನದಿಂದಲೇ ನಮ್ಮ ಸಹಿಯ ನಕಲಿಯ ಬಗ್ಗೆ ಬ್ಯಾಂಕಿನಿಂದ ಸಾಲ ಪತ್ರವನ್ನು ತರಿಸಿ ನಮ್ಮ ಸಹಿಯ ಸತ್ಯಾಸತ್ಯತೆಯ ಬಗ್ಗೆ ವಿಧಿ ವಿಜ್ಞಾನ ಸಂಸ್ಥೆಯಿಂದ ತನಿಖೆ ನಡೆಸಬೇಕೆಂದು ತನಿಖಾಧಿಕಾರಿಯವರಿಗೆ ಮನವಿ ಸಲ್ಲಿಸಲಾಗಿದೆ. ಆದರೆ ಇದನ್ನು ವಿಧಿವಿಜ್ಞಾನ ಸಂಸ್ಥೆಗೆ ಕಳುಹಿಸಿದ ಬಗ್ಗೆ ನಮಗೆ ಯಾವುದೇ ಮಾಹಿತಿಯಿಲ್ಲ. ಅನ್ಯಾಯಕ್ಕೊಳಗಾದ ನಮ್ಮ ಅಭಿಪ್ರಾಯವನ್ನು ಕೇಳದೆ ಒಂದೇ ನೋಟಿಸಿನಲ್ಲಿ ಸಾಲ ಮರುಪಾವತಿಸುವ ಬಗ್ಗೆ ಸಹಕಾರಿ ಸಂಘಗಳ ನ್ಯಾಯಾಲಯ ಬೆಂಗಳೂರು ಏಕಪಕ್ಷೀಯ ತೀರ್ಪು ಕೈಗೊಂಡು ಆದೇಶಿಸಿದೆ. ಈ ತನಿಖೆಯ ವರದಿ ಬಾಕಿಯಿದ್ದರೂ ಬ್ಯಾಂಕಿನವರು ವಸೂಲಾತಿಗೆ ಮನೆ ಜಪ್ತಿ, ಆಸ್ತಿ ಜಪ್ತಿ ಹಾಗೂ ಚೆಕ್ ಹಾಕುವುದಾಗಿ ಸಂತ್ರಸ್ತರನ್ನು ಕಾನೂನಿನ ನೆಪದ ಮೂಲಕ ಬೆದರಿಸುತ್ತಿದ್ದಾರೆ. ಆದ್ದರಿಂದ ಬ್ಯಾಂಕಿನ ಮಲ್ಪೆ ಶಾಖೆಯಲ್ಲಿ ನಮ್ಮ ಸಹಿಯನ್ನು ನಕಲಿ ಮಾಡಿ ಸಾಲ ನೀಡಿರುವ ಆ ಸಹಿಯ ಸತ್ಯಾಸತ್ಯತೆಯನ್ನು ತಿಳಿಯಲು ವಿಧಿವಿಜ್ಞಾನ ಪ್ರಯೋಗಾಲಯದಿಂದ ಪರೀಕ್ಷಿಸಿ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಬೇಕು. ಈ ತನಿಖೆ ಪೂರ್ಣಗೊಂಡು ವರದಿ ಬರುವವರೆಗೆ ನಮಗೆ ಸಾಲ ಮರುಪಾವತಿಗೆ ಕಿರುಕುಳ ನೀಡದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ವಾರ್ತಾ ಭಾರತಿ 25 Nov 2025 12:39 am

ಕವಿ ಕೂರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ ಪ್ರದಾನ

ಉಡುಪಿ: ಅಂಬಲಪಾಡಿ ಶ್ರೀಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಆಶ್ರಯದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಮತ್ತು ವಿಶ್ವಭಾರತಿ ಕರ್ನಾಟಕ ಪ್ರತಿಷ್ಠಾನ ಬೆನಗಲ್ ವತಿಯಿಂದ ಕವಿ ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ ಪ್ರದಾನ, ಪುಸ್ತಕ ಮತ್ತು ಸಾಕ್ಷ ಚಿತ್ರ ಬಿಡುಗಡೆ ಕಾರ್ಯಕ್ರಮ ಅಂಬಲಪಾಡಿ ಭವಾನಿ ಮಂಟಪದಲ್ಲಿ ರವಿವಾರ ಜರಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಅಂಬಲಪಾಡಿ ದೇವಸ್ಥಾನದ ಧರ್ಮ ದರ್ಶಿ ಡಾ.ನಿ.ಬಿ.ವಿಜಯ ಬಲ್ಲಾಳ ಮಾತನಾಡಿ, ಉಡುಪಿಯು ಸಂಸ್ಕೃತಿಕ ಮತ್ತು ಧಾರ್ಮಿಕ ಕೇಂದ್ರವಾಗಿದೆ. ಇಲ್ಲಿ ಪ್ರತಿನಿತ್ಯ ವಿವಿಧ ರೀತಿಯ ವೈಶಿಷ್ಟ ಪೂರ್ಣವಾದ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿರುವ ಕಾರಣ ನಮ್ಮ ಆಚಾರ ವಿಚಾರ, ಸಂಸ್ಕೃತಿಗಳ ಪರಿಚಯ ಇತರರಿಗೂ ಪ್ರಸಾರ ವಾಗುತ್ತಿದೆ ಎಂದು ತಿಳಿಸಿದರು. ಯುವ ಉದಯೋನ್ಮುಖ ಕವಿ ಶಶಿ ತರಿಕೆರೆ ಅನುಪಸ್ಥಿತಿಯಲ್ಲಿ ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿಯನ್ನು ಅವರ ಪರವಾಗಿ ಪತ್ನಿ ರಶ್ಮಿ ತರಿಕೆರೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಂಜುಶ್ರೀ ಕೃಷ್ಣ ಭಟ್ ಅವರ ಜೀವನ ಧರ್ಮ ಕೃತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಬಿಡುಗಡೆಗೊಳಿಸಿದರು. ಹಿರಿಯ ಪತ್ರಕರ್ತ ಎಸ್ ನಿತ್ಯಾನಂದ ಪಡ್ರೆ ಮಾತನಾಡಿದರು. ಹಿರಿಯ ಶಿಕ್ಷಣ ತಜ್ಞ ರಂಗಪ್ಪಯ್ಯ ಹೊಳ್ಳ ಪುಸ್ತಕ ಪರಿಚಯ ಮಾಡಿದರು. ವೇದಿಕೆಯಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ಉಡುಪಿ ವಿಶ್ವನಾಥ್ ಶೆಣೈ, ಅಧ್ಯಕ್ಷ ಪ್ರೊ. ಶಂಕರ್ ಮೊದಲಾದವರು ಉಪಸ್ಥಿತರಿದ್ದರು. ಉರಗ ತಜ್ಞ ಗುರುರಾಜ್ ಸನಿಲ್ ಅವರ ಸಾಕ್ಷ್ಯಚಿತ್ರವನ್ನು ಕಾರ್ಯಕ್ರಮದ ಸಂಯೋಜಕ ಅವಿನಾಶ್ ಕಾಮತ್ ಉಪಸ್ಥಿತಿಯಲ್ಲಿ ಶಿವರಾಮ ಕಾರಂತ ಪ್ರತಿಷ್ಟಾನದ ಅಧ್ಯಕ್ಷ ಡಾ.ಗಣನಾಥ ಎಕ್ಕಾರು ಬಿಡುಗಡೆಗೊಳಿಸಿದರು. ಕಾರ್ಯಕ್ರಮದ ಸಂಚಾಲಕಿ ಪೂರ್ಣಿಮಾ ಜನಾರ್ದನ್ ಸ್ವಾಗತಿಸಿದರು. ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ ಪ್ರಸ್ತಾವನೆಗೈದರು. ವಿಶ್ವ ಭಾರತಿ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಸ್ಥಾಪಕ ಅಧ್ಯಕ್ಷ ನಾರಾಯಣ ಮಡಿ ವಂದಿಸಿದರು. ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು.

ವಾರ್ತಾ ಭಾರತಿ 25 Nov 2025 12:36 am

ಗಂಗೊಳ್ಳಿಯಿಂದ ಕುಂದಾಪುರ ನಗರ ಸಂಪರ್ಕಿಸುವ ಸೇತುವೆಗೆ ಡಿಪಿಆರ್: ಬಿ.ವೈ.ರಾಘವೇಂದ್ರ

ಗಂಗೊಳ್ಳಿ: ಗಂಗೊಳ್ಳಿಯಿಂದ ಕುಂದಾಪುರ ನಗರವನ್ನು ಸಂಪರ್ಕಿ ಸುವ ಸುಮಾರು ೧.೩ಕಿ.ಮೀ. ದೂರದ ಸೇತುವೆಗೆ ಡಿಪಿಆರ್ ಪ್ರಕ್ರಿಯೆ ನಡೆಯುತ್ತಿದೆ. ಜ.೩೦ರೊಳಗೆ ಡಿಪಿಆರ್ ಸಲ್ಲಿಸುವಂತೆ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಯವರು ಸೂಚಿಸಿದ್ದು, ಅದಕ್ಕಾಗಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ೩ ಪ್ರತ್ಯೇಕ ಡಿಪಿಆರ್ ತಯಾರಿಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಪಂಚಗಂಗಾವಳಿ ನದಿಗೆ ಅಡ್ಡಲಾಗಿ ಗಂಗೊಳ್ಳಿ -ಕುಂದಾಪುರ ಸೇತುವೆ ನಿರ್ಮಾಣದ ಪ್ರಸ್ತಾವಿತ ಪ್ರದೇಶವನ್ನು ಸೋಮವಾರ ವೀಕ್ಷಿಸಿ, ಅಧಿಕಾರಿ ಗಳಿಂದ ಡಿಪಿಆರ್ ಬಗ್ಗೆ ಮಾಹಿತಿ ಪಡೆದು, ಬಳಿಕ ಅವರು ಪತ್ರಕರ್ತರೊಂದಿಗೆ ಮಾತನಾಡಿದರು. ಸಿಗಂದೂರು ಸೇತುವೆ ಸಹಿತ ಶಿವಮೊಗ್ಗ ಜಿಲ್ಲೆಯ ಅನೇಕ ಊರುಗಳಿಗೆ ಸೇತುವೆ ನಿರ್ಮಿಸುವ ಮೂಲಕ ಸಂಪರ್ಕ ಸಾಧ್ಯವಾಗಿದೆ. ಅದೇ ರೀತಿ ಗಂಗೊಳ್ಳಿಗೂ ಸಂಪರ್ಕ ಸೇತುವೆ ನಿರ್ಮಿಸಬೇಕು ಅನ್ನುವುದು ನನ್ನ ಕನಸು. ಅದನ್ನು ಸಾಧ್ಯವಾಗಿಸಲು ಎಲ್ಲ ರೀತಿಯ ಪ್ರಯತ್ನವೂ ನಡೆಯುತ್ತಿದೆ. ಭೂಸಾರಿಗೆ ಸಚಿವ ನಿತಿನ್ ಗಡ್ಕರಿಯವರಿಗೂ ಈ ಬಗ್ಗೆ ಈಗಾಗಲೇ ಮನವಿ ಮಾಡಿಕೊಂಡಿದ್ದೇವೆ. ಸೇತುವೆ ಕನಸು ಈಡೇರುವ ನಿರೀಕ್ಷೆಯಿದೆ ಎಂದವರು ಹೇಳಿದರು. ಇದೇ ವೇಳೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹೊನ್ನಾವರದ ವಿಭಾಗದ ಯೋಜನಾ ನಿರ್ದೇಶಕ ಶಿವಕುಮಾರ್ ಅವರೊಂದಿಗೆ ಚರ್ಚಿಸಿದ ಸಂಸದರು, ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಹಿಂದೆ ಕೊಲ್ಲೂರು ಕಾರಿಡಾರ್ ಯೋಜನೆ ಕುರಿತಂತೆ ಪ್ರವಾಸೋದ್ಯಮ ಸಚಿವ ಗಜೇಂದ್ರ ಶೇಖಾವತ್ ಅವರು ಇಲ್ಲಿಗೆ ಭೇಟಿ ನೀಡಿದ್ದಾಗ ಪ್ರಸ್ತಾವನೆ ಸಲ್ಲಿಸಲಾಗಿದೆ. ಮರವಂತೆ ಬೀಚ್, ಸೋಮೇಶ್ವರ ಬೀಚ್, ಕೊಲ್ಲೂರು ದೇವಸ್ಥಾನವನ್ನು ಸೇರಿಸಿಕೊಂಡು ಪ್ರವಾಸೋದ್ಯಮ ಕೇಂದ್ರವಾಗಿ ಅಭಿವೃದ್ಧಿಪಡಿಸುವ ೧೦೦ ಕೋ.ರೂ. ವೆಚ್ಚದ ಯೋಜನೆ ಇದಾಗಿದ್ದು, ಕೆಲವೊಂದು ಅಡೆತಡೆಗಳನ್ನು ನಿವಾರಿಸಿದ್ದು, ಮುಂಬರುವ ಬಜೆಟ್ ನಲ್ಲಿ ಮಂಜೂರಾಗುವ ವಿಶ್ವಾಸವನ್ನು ಸಂಸದರು ವ್ಯಕ್ತಪಡಿಸಿದ್ದಾರೆ. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಬಿಜೆಪಿ ಮಂಡಲದ ಅಧ್ಯಕ್ಷೆ ಅನಿತಾ ಆರ್.ಕೆ., ಜಿಲ್ಲಾ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಉಪಾಧ್ಯಕ್ಷ ಸುರೇಶ ಬಟವಾಡಿ, ಪಕ್ಷದ ಮುಖಂಡರು, ಸ್ಥಳೀಯ ಪ್ರಮುಖರು, ಮೀನುಗಾರ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 25 Nov 2025 12:30 am

ಗಂಗೊಳ್ಳಿ | ಕೋಳಿ ಅಂಕಕ್ಕೆ ಪೊಲೀಸರ ದಾಳಿ: ಐವರ ಬಂಧನ

ಗಂಗೊಳ್ಳಿ: ಆಲೂರು ಮಾವಿನಗುಳಿ ಎಂಬಲ್ಲಿ ನ.23ರಂದು ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ನಡೆಸಿದ ಗಂಗೊಳ್ಳಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ದಿವಾಕರ(56), ಗಣೇಶ್(40), ಗಣೇಶ್(29), ಪ್ರಶಾಂತ್(37), ಎಚ್.ಬಾಬು(55) ಬಂಧಿತ ಆರೋಪಿಗಳು. ಜಯಶೀಲ ಶೆಟ್ಟಿ ಹಾಗೂ ಇತರರು ಪೊಲೀಸ್ ದಾಳಿ ವೇಳೆ ಸ್ಥಳದಿಂದ ಓಡಿ ಹೋಗಿದ್ದಾರೆ. 7 ಕೋಳಿ ಹುಂಜ, 5 ಕೋಳಿಬಾಳು ಹಾಗೂ 2400ರೂ. ನಗದು, ಏಳು ಬೈಕುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 25 Nov 2025 12:26 am

ಮಹಿಳಾ ಟಿ20 ವಿಶ್ವಕಪ್ ನಂತರ ಭಾರತಕ್ಕೆ ಮಹಿಳೆಯರ ಕಬಡ್ಡಿ ವಿಶ್ವಕಪ್! ಪ್ರಧಾನಿ ಮೋದಿ ಶುಭಾಶಯ

ಭಾರತ ಮಹಿಳಾ ಕಬಡ್ಡಿ ತಂಡವು ಕಬಡ್ಡಿ ವಿಶ್ವಕಪ್ 2025 ಅನ್ನು ಗೆದ್ದು ದೇಶಕ್ಕೆ ಹೆಮ್ಮೆ ತಂದಿದೆ. ಫೈನಲ್‌ನಲ್ಲಿ ಚೀನೀಸ್ ತೈಪೆಯನ್ನು 35-28 ಅಂತರದಿಂದ ಸೋಲಿಸಿ ಭಾರತ ಎರಡನೇ ಬಾರಿಗೆ ವಿಶ್ವಕಪ್ ಗೆದ್ದಿದೆ. ತಂಡವು ಟೂರ್ನಿಯಲ್ಲಿ ಅಜೇಯವಾಗಿ ಉಳಿದಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಈ ಗೆಲುವು ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಲಿದೆ.

ವಿಜಯ ಕರ್ನಾಟಕ 25 Nov 2025 12:26 am

ಎಐ ಕಾಲಘಟ್ಟದಲ್ಲಿ ಸುದ್ದಿ, ಚಿತ್ರಗಳ ನೈಜತೆ ಖಾತ್ರಿ ಅಗತ್ಯ : ಈಶ್ವರ್ ಖಂಡ್ರೆ

ಕೆ.ಯು.ಡಬ್ಲ್ಯು.ಜೆ. ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ವಾರ್ತಾ ಭಾರತಿ 25 Nov 2025 12:23 am

ಬಂಟ್ವಾಳ: ಪೂರ್ವಾನುಮತಿ ಪಡೆಯದೆ ಕಾರ್ಯಕ್ರಮದಲ್ಲಿ ಕರ್ಕಶ ಡಿಜೆ ಬಳಕೆ; ಪ್ರಕರಣ ದಾఖలు

ಬಂಟ್ವಾಳ: ಪೊಲೀಸ್ ಇಲಾಖೆಯಿಂದ ಪೂರ್ವಾನುಮತಿ ಪಡೆಯದೆ ಮದುವೆ ಕಾರ್ಯಕ್ರಮದಲ್ಲಿ ಕರ್ಕಶ ಡಿಜೆ ಬಳಸಿದ್ದಾರೆನ್ನಲಾದ ಘಟನೆ ಬಂಟ್ವಾಳ-ಭಂಡಾರಿಬೆಟ್ಟು ಎಂಬಲ್ಲಿ ಶನಿವಾರ ರಾತ್ರಿ ನಡೆದಿದ್ದು, ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಂಡಾರಿಬೆಟ್ಟು ಎಂಬಲ್ಲಿ ನಿಗದಿತ ಪ್ರಮಾಣಕ್ಕಿಂತ ಅಧಿಕವಾಗಿ ಹಾಗೂ ಕರ್ಕಶವಾಗಿ ಸಾರ್ವಜನಿಕ ಶಾಂತಿ ನೆಮ್ಮದಿಗೆ ತೊಂದರೆಯಾಗುವಂತೆ ಧ್ವನಿವರ್ಧಕ ಬಳಸುತ್ತಿರುವ ಬಗ್ಗೆ ಬಂಟ್ವಾಳ ನಗರ ಠಾಣಾ ಪೊಲೀಸರಿಗೆ ಮಾಹಿತಿ ಬಂದ ಮೇರೆಗೆ, ಸದ್ರಿ ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮದುವೆ ಕಾರ್ಯಕ್ರಮದಲ್ಲಿ ಯಾವುದೇ ಪೂರ್ವಾನುಮತಿ ಪಡೆಯದೇ ಕರ್ಕಶವಾಗಿ ಡಿ.ಜೆ. ಧ್ವನಿವರ್ಧಕ ಬಳಸುತ್ತಿರುವುದು ಕಂಡು ಬಂದಿದೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 25 Nov 2025 12:22 am

ಜಿಬಿಎ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ; ದಾಖಲೆಗಳು ಭಸ್ಮ

ಬೆಂಗಳೂರು : ಜಯನಗರದ 4ನೇ ಬ್ಲಾಕ್‌ನಲ್ಲಿರುವ ಜಿಬಿಎ ಕಚೇರಿಯಲ್ಲಿ ಸೋಮವಾರ ಬೆಳಗ್ಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಕೆಲವು ದಾಖಲೆಗಳು ಸುಟ್ಟುಕರಕಲಾಗಿರುವ ಘಟನೆ ವರದಿಯಾಗಿದೆ. ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಆತಂಕಗೊಂಡ ಸಿಬ್ಬಂದಿ ಕೂಡಲೇ ಹೊರಗೆ ಓಡಿ ಬಂದಿದ್ದಾರೆ. ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಎರಡು ಅಗ್ನಿಶಾಮಕ ವಾಹನಗಳ ಸಮೇತ ಸ್ಥಳಕ್ಕೆ ಧಾವಿಸಿದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ ಲಿಫ್ಟ್‌ನಲ್ಲಿ ಸಿಲುಕಿದ್ದ ಇಬ್ಬರನ್ನು ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಿಸಿ ಹೊರ ಕರೆತಂದಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಈ ಘಟನೆ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳದಲ್ಲಿ ಜಯನಗರದ ಪೊಲೀಸರು ಪರಿಶೀಲಿಸಿದ್ದು, ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

ವಾರ್ತಾ ಭಾರತಿ 25 Nov 2025 12:18 am

ನಮೀಬಿಯಾದಲ್ಲಿ ಮತ್ತೆ ಗೆಲುವಿನ ಅಂಚಿನಲ್ಲಿ ʼಅಡಾಲ್ಫ್ ಹಿಟ್ಲರ್ʼ!

ವಿಂಡ್ಹೋಕ್: ಜರ್ಮನ್ ನ ನಾಝೀ ನಾಯಕ ಅಡಾಲ್ಫ್ ಹಿಟ್ಲರ್ ಅವರ ಹೆಸರೆಂದರೆ ಜಗತ್ತಿನಲ್ಲಿ ಇವತ್ತಿಗೂ ದ್ವೇಷ, ತಿರಸ್ಕಾರ ಮತ್ತು ಕಳಂಕದ ಸಂಕೇತ. 1945ರಲ್ಲಿ ಜರ್ಮನಿಯ ಅಡಾಲ್ಫ್ ಹಿಟ್ಲರ್ ನಿಧನ ಹೊಂದಿದ್ದಾರೆ. ಆದರೆ ಅದೇ ಹೆಸರು ನಮೀಬಿಯಾದಲ್ಲಿ ಭಿನ್ನ ಪ್ರತಿಕ್ರಿಯೆ ಹುಟ್ಟುಹಾಕಿದೆ. ಅಡಾಲ್ಫ್ ಹಿಟ್ಲರ್ ಉನೋನಾ ಎಂಬ ರಾಜಕಾರಣಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎರಡನೇ ಬಾರಿ ಭಾರೀ ಬಹುಮತದಿಂದ ಗೆಲ್ಲುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ. ಸ್ವಾಪೋ ಪಕ್ಷದ ಅಭ್ಯರ್ಥಿಯಾಗಿರುವ 59 ವರ್ಷದ ಉನೋನಾ, ಓಂಪುಂಡ್ಜಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದು ಮತ ಎಣಿಕೆಯ ಪ್ರಾಥಮಿಕ ಅಂಕಿ ಅಂಶಗಳ ಪ್ರಕಾರ ಅವರು ಎದುರಾಳಿಗಳಿಗಿಂತ ಮುನ್ನಡೆ ಸಾಧಿಸಿದ್ದಾರೆ. 2020ರಲ್ಲಿ ಇದೇ ಹೆಸರಿನ ಕಾರಣಕ್ಕೆ ಅವರು ಅಂತಾರಾಷ್ಟ್ರೀಯ ಮಾಧ್ಯಮಗಳ ಗಮನ ಸೆಳೆದಿದ್ದರು. ಐದು ವರ್ಷಗಳ ನಂತರವೂ ಅದೇ ಕಾರಣದಿಂದ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ನಮೀಬಿಯಾ ಒಮ್ಮೆ ನೈಋತ್ಯ ಆಫ್ರಿಕಾ ಎಂಬ ಹೆಸರಿನಲ್ಲಿ ಜರ್ಮನ್ ವಸಾಹತುಶಾಹಿ ಆಳ್ವಿಕೆಗೆ ಒಳಪಟ್ಟಿತ್ತು. 1904 ರಿಂದ 1908ರ ನಡುವೆ ಹೆರೆರೊ ಮತ್ತು ನಮಕ್ವಾ ಸಮುದಾಯದ 60,000ರಿಂದ 100,000 ಜನರನ್ನು ಜರ್ಮನ್ ಪಡೆಗಳು ನರಮೇಧ ಮಾಡಿದ್ದವು. ಇಂದಿಗೂ ಜರ್ಮನ್ ಹೆಸರುಗಳು ಮತ್ತು ಪ್ರಭಾವ ಈ ದೇಶದಲ್ಲಿ ಕಾಣಸಿಗುತ್ತವೆ. ಜರ್ಮನ್ ಮಾಧ್ಯಮಕ್ಕೆ ನೀಡಿದ್ದ ಸಂದರ್ಶನದಲ್ಲಿ ಉನೋನಾ, ತನ್ನನ್ನು “ಅಡಾಲ್ಫ್ ಉನೋನಾ” ಎಂದು ಕರೆಸಿಕೊಳ್ಳಲು ಇಷ್ಟಪಡುತ್ತೇನೆಂದು ತಿಳಿಸಿದ್ದರು. “ಬಾಲ್ಯದಲ್ಲಿ ಇದು ಸಾಮಾನ್ಯ ಹೆಸರು ಆಗಿತ್ತು. ಹದಿಹರೆಯದಲ್ಲಿ ಮಾತ್ರ ಹಿಟ್ಲರ್‌ ನ ಇತಿಹಾಸ ತಿಳಿಯಿತು,” ಎಂದು ಅವರು ಹೇಳಿದ್ದಾರೆ. ತಮ್ಮ ಅಧಿಕೃತ ದಾಖಲೆಗಳಲ್ಲಿ ಅದೇ ಹೆಸರು ಇರುವುದರಿಂದ ಈಗ ಬದಲಾಯಿಸಲು ಹೋಗುವುದು ತುಂಬಾ ತಡವಾಗಿದೆ ಎಂದೂ ಸ್ಪಷ್ಟಪಡಿಸಿದ್ದಾರೆ. ಸೌಜನ್ಯ: indianexpress.com

ವಾರ್ತಾ ಭಾರತಿ 25 Nov 2025 12:12 am

ನ. 25ರಂದು ಅಯೋಧ್ಯೆ ರಾಮಮಂದಿರದ ಮೇಲೆ ಕೇಸರಿ ಧ್ವಜ ಪ್ರತಿಷ್ಠಾಪಿಸಲಿರುವ ಪ್ರಧಾನಿ - ನೀವು ತಿಳಿಯಬೇಕಾದ 5 ಸಂಗತಿ

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಶ್ರೀ ರಾಮ ಜನ್ಮಭೂಮಿ ದೇಗುಲದ ಶಿಖರದ ಮೇಲೆ ಕೇಸರಿ ಧ್ವಜವನ್ನು ಹಾರಿಸುವ ಮೂಲಕ ದೇಗುಲ ನಿರ್ಮಾಣದ ಔಪಚಾರಿಕ ಪೂರ್ಣತೆಯನ್ನು ಗುರುತಿಸಲಿದ್ದಾರೆ. ಈ ಸಮಾರಂಭವು ದೇಶಾದ್ಯಂತ ಗಮನ ಸೆಳೆಯುವ ನಿರೀಕ್ಷೆಯಿದೆ. ದೇಗುಲದ ನಿರ್ಮಾಣದ ವೈಶಿಷ್ಟ್ಯಗಳು ಮತ್ತು ಭದ್ರತಾ ಸಿದ್ಧತೆಗಳ ಬಗ್ಗೆಯೂ ತಿಳಿಸಲಾಗಿದೆ. ಇದು ಅಯೋಧ್ಯೆಯ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪರಿವರ್ತನೆಯಲ್ಲಿ ಮತ್ತೊಂದು ಮೈಲಿಗಲ್ಲು.

ವಿಜಯ ಕರ್ನಾಟಕ 24 Nov 2025 11:55 pm

ಮಂಗಳೂರು | ರಸ್ತೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ: ಸ್ಪಂದಿಸದ ಮೆಸ್ಕಾಂ; ಆರೋಪ

ಮಂಗಳೂರು: ನಗರದ ಬಿಕರ್ನಕಟ್ಟೆ ಜಯಶ್ರೀ ಗೇಟ್‌ನಿಂದ ಮರೋಳಿ ದೇವಸ್ಥಾನ ಮತ್ತು ಪಂಪವೆಲ್‌ಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ರವಿವಾರ ರಾತ್ರಿ ವಿದ್ಯುತ್ ತಂತಿ ತುಂಡಾದ ಬಗ್ಗೆ ಸಂಬಂಧಪಟ್ಟವರಿಗೆ ಮಾಹಿತಿ ನೀಡಿದರೂ ಸ್ಪಂದಿಸಲಿಲ್ಲ ಎಂದು ಛಾಯಾಗ್ರಾಹಕ ಸ್ಟ್ಯಾನ್ಲಿ ಬಂಟ್ವಾಳ ಆರೋಪಿಸಿದ್ದಾರೆ. ರವಿವಾರ ರಾತ್ರಿ ಸುಮಾರು 8:25ರ ವೇಳೆಗೆ ತಾನು ಮಕ್ಕಳ ಜೊತೆ ಈ ದಾರಿಯಾಗಿ ಮನೆಗೆ ನಡೆದುಕೊಂಡು ಹೋಗುವಾಗ ವಿದ್ಯುತ್ ತಂತಿ ತುಂಡಾಗಿ ರಸ್ತೆಯಲ್ಲಿ ಬಿದ್ದಿತ್ತು. ತಕ್ಷಣ ಸ್ಥಳೀಯ ಮೆಸ್ಕಾಂ ಜೆಇ ಅವರಿಗೆ ಕರೆ ಮಾಡಿ ವಿಷಯ ತಿಳಿಸಿದೆ. 5 ನಿಮಿಷದ ಬಳಿಕ ವಿದ್ಯುತ್ ಸಂಪರ್ಕ ಕಡಿದು ಹಾಕಲಾಯಿತು. ಅಲ್ಲದೆ ಸಿಬ್ಬಂದಿಯನ್ನು ಕಳುಹಿಸುತ್ತೇನೆ ಎಂದು ಹೇಳಿದ 15 ನಿಮಿಷದ ನಂತರ ಲೈನ್ ಮ್ಯಾನ್ ಕರೆ ಮಾಡಿದಾಗ ತಾನು ನಿರ್ದಿಷ್ಟ ಸ್ಥಳ ಹೇಳಿದರೂ ಬರಲಿಲ್ಲ. ಪೊಲೀಸ್ ಠಾಣೆಗೆ ತೆರಳಿದರೂ ಕರೆ ಸ್ವೀಕರಿಸಲಿಲ್ಲ. ಮತ್ತೆ ಲೈನ್‌ಮ್ಯಾನ್‌ಗೆ ಕರೆ ಮಾಡಿದಾಗ ಉಡಾಫೆಯಿಂದ ಉತ್ತರಿಸಿದರು ಎಂದು ದೂರಿರುವ ಛಾಯಾಗ್ರಾಹಕ ಸ್ಟ್ಯಾನ್ಲಿ ಬಂಟ್ವಾಳ, ತಾನು ಈ ಬಗ್ಗೆ ಎಚ್ಚರಿಕೆ ವಹಿಸದೇ ಇದ್ದಿದ್ದರೆ ಮೆಸ್ಕಾಂನವರ ನಿರ್ಲಕ್ಷ್ಯದಿಂದ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು ಎಂದು ತಿಳಿಸಿದ್ದಾರೆ.

ವಾರ್ತಾ ಭಾರತಿ 24 Nov 2025 11:51 pm

Hubballi : ಈ.ಡಿ. ಹೆಸರಿನಲ್ಲಿ 3 ಕೋಟಿ ರೂ. ಮೌಲ್ಯದ ಚಿನ್ನಾಭರಣ ಸುಲಿಗೆ; ತಡವಾಗಿ ಬೆಳಕಿಗೆ ಬಂದ ಘಟನೆ

ಹುಬ್ಬಳ್ಳಿ : ಈ.ಡಿ. ಹೆಸರಲ್ಲಿ ಮೂರು ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ನ.20 ರಂದು ಹುಬ್ಬಳ್ಳಿಯ ಚೆನ್ನಮ್ಮ ವೃತ್ತ ಸಮೀಪದ ನೀಲಿಜನ್ ರಸ್ತೆಯಲ್ಲಿ ಘಟನೆ ನಡೆದಿದ್ದು, ಕೇರಳ ಮೂಲದ ಚಿನ್ನಾಭರಣ ವ್ಯಾಪಾರಿಗೆ ವಂಚನೆ ಮಾಡಲಾಗಿದೆ. ಈ.ಡಿ. ಅಧಿಕಾರಿಗಳೆಂದು ಹೇಳಿಕೊಂಡ ಐವರ ತಂಡ ವಿಚಾರಣೆ ನಡೆಸುವ ನೆಪದಲ್ಲಿ 2 ಕೆ.ಜಿ 942 ಗ್ರಾಂ ಚಿನ್ನಾಭರಣ ಹಾಗೂ 2 ಲಕ್ಷ ನಗದು ದೋಚಿ ಪರಾರಿಯಾಗಿದೆ ಎಂದು ತಿಳಿದು ಬಂದಿದೆ. ಕೇರಳ ಮೂಲದ ವ್ಯಾಪಾರಿ ಸುದೀನ್ ಎಂ.ಆರ್. ಎಂಬವರು ಚಿನ್ನಾಭರಣ ಅಂಗಡಿಗಳಿಗೆ ಆಭರಣ ಪೂರೈಸುವ ವ್ಯವಹಾರ ಮಾಡುತ್ತಿದ್ದರು. ನ.15ರಂದು ಮಂಗಳೂರಿನಿಂದ ಬೆಳಗಾವಿಗೆ ಕೆಲಸಗಾರ ವಿವೇಕ ಜೊತೆ ಬಂದಿದ್ದ ಸುದೀನ್, ಚೈನ್, ಬ್ರೆಸ್ಲೆಟ್, ಉಂಗುರ ಕಿವಿಯೋಲೆ, ನೆಕ್ಲೆಸ್, ಲಾಕೆಟ್, ಬಳೆ ಸೇರಿ ಒಟ್ಟು 3.2 ಕೋಟಿ ರೂ. ಮೌಲ್ಯದ ಆಭರಣಗಳನ್ನು ತಂದಿದ್ದರೆನ್ನಲಾಗಿದೆ. ಬೆಳಗಾವಿ, ಧಾರವಾಡ, ಹುಬ್ಬಳ್ಳಿಯಲ್ಲಿರುವ ವಿವಿಧ ಆಭರಣ ಮಳಿಗೆಗಳಿಗೆ ತೆರಳಿ ಆರ್ಡರ್‌ಗಳನ್ನು ಪಡೆದಿದ್ದು, ಹುಬ್ಬಳ್ಳಿಯ ಹಳೇ ಬಸ್ ನಿಲ್ದಾಣದ ಎದುರಿನ ಹೊಟೇಲೊಂದರಲ್ಲಿ ವಾಸ್ತವ್ಯ ಹೂಡಿದ್ದರು. ನ.19ರಂದು ಧಾರವಾಡಕ್ಕೆ ಹೋಗಿ ಹೋಟೆಲ್‌ಗೆ ವಾಪಸ್ ಆಗುವಾಗ, ನೀಲಿಜಿನ್ ರಸ್ತೆಯಲ್ಲಿ ಸುದೀನ್ ಮತ್ತು ಕೆಲಸಗಾರ ವಿವೇಕ ಅವರನ್ನು ಐವರು ತಡೆದಿದ್ದರು. ಅಲ್ಲದೆ, ಈ.ಡಿ. ಅಧಿಕಾರಿಗಳು ಎಂದು ಹಿಂದಿಯಲ್ಲಿ ಮಾತನಾಡಿದ್ದ ದುಷ್ಕರ್ಮಿಗಳು, ಗುರುತಿನ ಪತ್ರ ತೋರಿಸಿ ವಿಚಾರಣೆಗೆ ಕಚೇರಿಗೆ ಬನ್ನಿ ಎಂದು ಕಾರಿನಲ್ಲಿ ಕರೆದೊಯ್ದಿದ್ದರು. ಚಿನ್ನಾಭರಣಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ತಿಳಿದು ಬಂದಿದೆ ಎಂದು ಬೆದರಿಸಿದ್ದರು. ಮೊಬೈಲ್ ಫೋನ್ ಪಡೆದು ಸಿಮ್ ತೆಗೆದಿದ್ದ ದುಷ್ಕರ್ಮಿಗಳು, ನಂತರ ಹಲ್ಲೆ ನಡೆಸಿ ಚಿನ್ನಾಭರಣವಿದ್ದ ಬ್ಯಾಗ್ ಕಿತ್ತುಕೊಂಡಿದ್ದರು. ಬೆಳಗಾವಿ ಮಾರ್ಗ ಮಧ್ಯದಲ್ಲಿ ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ಸುದೀನ್ ದೂರು ನೀಡಿದ್ದಾರೆ. ಈ ಸಂಬಂಧ ಉಪ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಲಾಗಿದೆ. ಹುಬ್ಬಳ್ಳಿಯಲ್ಲಿ ಇಬ್ಬರನ್ನೂ ಕಾರಿನಲ್ಲಿ ಹತ್ತಿಸಿಕೊಂಡಿದ್ದ ದುಷ್ಕರ್ಮಿಗಳು, ಬೆಳಗಾವಿಯ ಕಿತ್ತೂರು ಸಮೀಪ ಕೆಲಸಗಾರ ವಿವೇಕ ಅವರನ್ನು ಇಳಿಸಿದ್ದಾರೆ. ನಂತರ ಸುದೀನ ಅವರನ್ನು ಎಂ.ಕೆ. ಹುಬ್ಬಳ್ಳಿ ರಸ್ತೆಗೆ ಕರೆದೊಯ್ದು ಮಾರ್ಗ ಮಧ್ಯೆ ಬಿಟ್ಟು ನಗದು ಹಾಗೂ ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದಾರೆ. ಆದರೆ, ಪ್ರಕರಣ ನಡೆದ ಎರಡು ದಿನಗಳ ನಂತರ ದೂರು ದಾಖಲಿಸಿರುವುದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಕುರಿತು ಉಪ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ. ಮಹಾನಿಂಗ ನಂದಗಾವಿ, ಕಾನೂನು ಸುವ್ಯವಸ್ಥೆ ಡಿಸಿಪಿ, ಹು-ಧಾ

ವಾರ್ತಾ ಭಾರತಿ 24 Nov 2025 11:45 pm

ಕಾರ್ಕಳ : ಸರಕಾರಿ ಪದವಿ ಪೂರ್ವ ಕಾಲೇಜು ಬೈಲೂರು ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟ

ಕಾರ್ಕಳ : ಸರಕಾರಿ ಪದವಿಪೂರ್ವ ಕಾಲೇಜಿನ ಹಳೆವಿದ್ಯಾರ್ಥಿಗಳ ಕ್ರೀಡಾಕೂಟವು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಅಂತರಾಷ್ಟ್ರೀಯ ಕ್ರೀಡಾಪಟು ಬಾಬು ಶೆಟ್ಟಿ ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿ ಆರೋಗ್ಯಕರ ಜೀವನಕ್ಕೆ ಕ್ರೀಡೆ ಅತ್ಯವಶ್ಯಕ. ಕ್ರೀಡೆಯಿಂದ ದೈಹಿಕ, ಮಾನಸಿಕವಾಗಿ ದೇಹವು ವಿಕಾಸನಗೊಳ್ಳುತ್ತದೆ. ರಾಷ್ಟ್ರ ಅಂತರಾಷ್ಟ್ರೀಯ ನನ್ನ ಸಾಧನೆಗೆ ಈ ಕ್ರೀಡಾಂಗಣವೇ ಸ್ಪೂರ್ತಿ ಎಂದರು. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವಂತೆ ಕರೆ ನೀಡಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ ಕಾಲೇಜಿನ ಅಭಿವೃದ್ಧಿಗಾಗಿ ಹಳೆವಿದ್ಯಾರ್ಥಿ ಸಂಘವನ್ನು ಪುನರಚಿಸಲಾಗಿದೆ. ಈ ಶಾಲೆಯಿಂದ ಕಲಿತ ಅದೇಷ್ಟೋ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ರಾಜ್ಯ, ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ್ದಾರೆ ಅಂತಹ ವಿದ್ಯಾರ್ಥಿಗಳ ಸಮ್ಮೀಲನಕ್ಕಾಗಿ ಕ್ರೀಡಾಕೂಟವನ್ನು ಹಂಬಿಕೊಳ್ಳಲಾಗಿದೆ ಎಂದರು. ಉದ್ಯಮಿ ಲಾರೆನ್ಸ್ ಸಲ್ದಾನ ಕ್ರೀಡಾ ಧ್ವಜರೋಹಣಗೈದರು. ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಸಂತೋಷ್ ವಾಗ್ಲೆ, ಹಳೆವಿದ್ಯಾರ್ಥಿ ಗೌರವಾಧ್ಯಕ್ಷ ಪ್ರಸನ್ನ ಶೆಟ್ಟಿ, ಬೈಲೂರು ಕಾಲೇಜು ಪ್ರಾಂಶುಪಾಲರಾದ ಸೀತಾರಾಮ್, ಉಪ ಪ್ರಾಂಶುಪಾಲರಾದ ನಾಗರಾಜ್, ದೈಹಿಕ ಶಿಕ್ಷಣ ಶಿಕ್ಷಕರಾದ ಫೆಡ್ರಿಕ್ ರೆಬೆಲ್ಲೊ, ಕ್ರೀಡಾ ಕಾರ್ಯದರ್ಶಿ ಶಾಕೀರ್ ಹುಸೇನ್, ನೀರೆ ಗ್ರಾಮ ಪಂಚಾಯತ್ ಸದಸ್ಯರಾದ ಹೈದರಾಲಿ ಉಪಸ್ಥಿತರಿದ್ದರು. ರಮೇಶ್ ಶೆಟ್ಟಿ ನಿರೂಪಿಸಿದರು, ಕಾರ್ಕಳ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಶಾಕಿರ್ ಹುಸೇನ್ ಸ್ವಾಗತಿಸಿದರು, ಸುರೇಶ್ ಶೆಟ್ಟಿ ವಂದಿಸಿದರು.

ವಾರ್ತಾ ಭಾರತಿ 24 Nov 2025 11:43 pm

ಕ್ಯಾನ್ಸರ್ ವಿರುದ್ಧದ ಹೋರಾಟಕ್ಕೆ ಮಾರ್ಗೋಪಾಯಗಳನ್ನು ಹುಡುಕಬೇಕು : ಬೋಳ ಪ್ರಶಾಂತ್ ಕಾಮತ್

ಕಾರ್ಕಳದಲ್ಲಿ ಕ್ಯಾನ್ಸರ್ ಜಾಗೃತಿ ಜಾಥಾ

ವಾರ್ತಾ ಭಾರತಿ 24 Nov 2025 11:40 pm

ಕಾಸರಗೋಡು | ರಸಮಂಜರಿ ಕಾರ್ಯಕ್ರಮದಲ್ಲಿ ನೂಕುನುಗ್ಗಲು; ಆರು ಮಂದಿ ವಿರುದ್ಧ ಪ್ರಕರಣ ದಾಖಲು

ಕಾಸರಗೋಡು: ನಗರ ಹೊರವಲಯದ ನುಳ್ಳಿಪ್ಪಾಡಿಯಲ್ಲಿ ರವಿವಾರ ರಾತ್ರಿ ನಡೆದ ರಸಮಂಜರಿ ಕಾರ್ಯಕ್ರಮದ ಸಂದರ್ಭದಲ್ಲಿ ಉಂಟಾದ ನೂಕುನುಗ್ಗಲು ಹಾಗೂ ಕಾಲ್ತುಳಿತಕ್ಕೆ ಆಯೋಜಕರ ನಿರ್ಲಕ್ಷ್ಯವೇ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಪಟ್ಟಂತೆ ಆರು ಮಂದಿ ವಿರುದ್ಧ ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯುವಜನ ಸಂಘಟನೆಯಾದ ʼಫ್ಲೀʼ ನೇತೃತ್ವದಲ್ಲಿ ಆಯೋಜಿಸಿದ್ದ ರಸಮಂಜರಿ ಕಾರ್ಯಕ್ರಮ ವೀಕ್ಷಣೆಗೆ ಮೂರು ಸಾವಿರ ಮಂದಿಗೆ ಪ್ರವೇಶ ಪಾಸ್ ನೀಡುವಂತೆ ಪೊಲೀಸರು ಲಿಖಿತವಾಗಿ ಮುನ್ನೆಚ್ಚರಿಕೆ ನೀಡಿದ್ದರು. ಆದರೆ ಹತ್ತು ಸಾವಿರ ಮಂದಿಗೆ ಪಾಸ್ ನೀಡಲಾಗಿತ್ತು ಎನ್ನಲಾಗಿದೆ. ನಿರೀಕ್ಷೆಗೂ ಮೀರಿ ಜನರು ಆಗಮಿಸಿದ್ದರಿಂದ ಜನರನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಕಾರ್ಯಕ್ರಮದ ವೇಳೆ ನೂಕು ನುಗ್ಗಲು ಉಂಟಾಗಿ ಹದಿನಾರು ಮಂದಿ ಗಾಯಗೊಂಡಿದ್ದರು. ಈ ವೇಳೆ ಮೈದಾನದ ಹೊರಗಡೆ ಸೇರಿದ್ದವರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಗಾಯಕ ಹನಾನ್ ಶಾ ನೇತೃತ್ವದಲ್ಲಿ ನಡೆದ ರಸಮಂಜರಿ ಕಾರ್ಯಕ್ರಮಕ್ಕೆ ಐದು ಸಾವಿರಕ್ಕೂ ಅಧಿಕ ಮಂದಿ ಆಗಮಿಸುವ ಸಾಧ್ಯತೆ ಇರುವ ಬಗ್ಗೆ ಪೊಲೀಸರು ಸಂಶಯ ವ್ಯಕ್ತಪಡಿಸಿದ್ದರು. ಆದರೆ ಮೂರು ಸಾವಿರ ಮಂದಿಗೆ ಮಾತ್ರ ಅನುಮತಿ ನೀಡುವಂತೆ ಪೊಲೀಸರು ಆಯೋಜಕರಿಗೆ ಮುನ್ನೆಚ್ಚರಿಕೆ ನೀಡಿದ್ದರು. ಪೊಲೀಸರು ನೀಡಿದ ಮುನ್ನೆಚ್ಚರಿಕೆಯನ್ನು ಉಲ್ಲಂಘಿಸಿ ಹತ್ತು ಸಾವಿರಕ್ಕೂ ಅಧಿಕ ಮಂದಿಗೆ ಪಾಸ್ ವಿತರಿಸಲಾಗಿತ್ತು. ಇದರ ಪರಿಣಾಮ ಸಾವಿರಾರು ಮಂದಿ ಕಾರ್ಯಕ್ರಮ ವೀಕ್ಷಣೆಗೆ ಸ್ಥಳಕ್ಕೆ ಆಗಮಿಸಿದ್ದರಿಂದ ನೂಕುನುಗ್ಗಲು ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾರ್ತಾ ಭಾರತಿ 24 Nov 2025 11:33 pm

ಸಿಬಿಎಸ್‌ಇ ಅಂಡರ್ -19 ಕ್ರಿಕೆಟ್ ತಂಡಕ್ಕೆ ಅಬ್ದುಲ್ ರಹಿಮಾನ್ ಆಯ್ಕೆ

ಮಂಗಳೂರು: ಮುಂಬರುವ ನ್ಯಾಶನಲ್ ಸ್ಕೂಲ್ ಗೇಮ್ಸ್(ಎಸ್‌ಜಿಪಿಐ)ನ ರಾಷ್ಟ್ರಮಟ್ಟದ ಕ್ರಿಕೆಟ್ ಟೂರ್ನಮೆಂಟ್‌ಗೆ ಸಿಬಿಎಸ್‌ಇ ಅಂಡರ್ -19 ಕ್ರಿಕೆಟ್ ತಂಡಕ್ಕೆ ಹೆಬ್ಬಾಳದ ಜೈನ್ ಹೆರಿಟೇಜ್ ಸ್ಕೂಲ್‌ನ ವಿದ್ಯಾರ್ಥಿ ಅಬ್ದುಲ್ ರಹಿಮಾನ್ ಆಯ್ಕೆಯಾಗಿದ್ದಾರೆ. ಎಸ್‌ಜಿಪಿಐ ಕ್ರಿಕೆಟ್ ಟೂರ್ನಮೆಂಟ್ ಡಿಸೆಂಬರ್‌ನಲ್ಲಿ ಚಂಡೀಗಢದಲ್ಲಿ ನಡೆಯಲಿದೆ. ಅಬ್ದುಲ್ ರಹಿಮಾನ್ ಅವರು ಬೆಂಗಳೂರಿನ ಗೋವಿಂದಪುರದ ಉಮರ್‌ನಗರ ನಿವಾಸಿಯಾಗಿರುವ ಅಬ್ದುಲ್ ರವೂಫ್ -ರೇಷ್ಮಾ ಬಾನು ದಂಪತಿಯ ಪುತ್ರ.

ವಾರ್ತಾ ಭಾರತಿ 24 Nov 2025 11:26 pm

ಚಲಿಸುವ ರೈಲಿನಿಂದ ಹಾರಿದ ಪ್ರಯಾಣಿಕನನ್ನು ರಕ್ಷಿಸಿದ ರೈಲ್ವೆ ಪೊಲೀಸರು

ಉಡುಪಿ: ಚಲಿಸುತಿದ್ದ ರೈಲಿನಿಂದ ಇಳಿಯಲು ಪ್ರಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕರೊಬ್ಬರನ್ನು ಚುರುಕಾಗಿದ್ದ ರೈಲ್ವೆ ಪೊಲೀಸ್ ಸಿಬ್ಬಂದಿಗಳು ರಕ್ಷಿಸಿದ ಘಟನೆ ಮಡಗಾಂವ್ ರೈಲ್ವೆ ನಿಲ್ದಾಣದಲ್ಲಿ ರವಿವಾರ ನಡೆದಿದೆ. ಸಂಜೆ 7:00 ಸುಮಾರಿಗೆ ಪ್ಲಾಟ್‌ಪಾರಂ ನಂ.1ರಿಂದ ಹೊರಟ ಕೊಂಕಣ ಕನ್ಯಾ ಎಕ್ಸ್‌ಪ್ರೆಸ್ ರೈಲು ಚಲಿಸುತಿದ್ದಂತೆ ಪ್ರಯಾಣಿಕರೊಬ್ಬರು ಇಳಿಯಲು ಪ್ರಯತ್ನಿಸಿದ್ದರು. ಕಾಲು ಜಾರಿ ಅವರು ರೈಲು ಹಾಗೂ ಪ್ಲಾಟ್‌ಫಾರಂ ನಡುವೆ ಬಿದ್ದರು. ಆಗ ಅಲ್ಲೇ ಫ್ಲಾಟ್‌ಫಾರಂ ನಂ1ರ ಬಳಿ ನಿಂತಿದ್ದ ರೈಲ್ವೆ ಪೊಲೀಸ್ ಕಾನ್‌ಸ್ಟೇಬರ್ ಕಪಿಲ್ ಸಯಾನಿ ಹಾಗೂ ಹೆಡ್ ಕಾನ್‌ಸ್ಟೇಬಲ್ ಆರ್.ಎಸ್. ಬಾಯ್ ತಕ್ಷಣವೇ ಆತನನ್ನು ಮೇಲಕ್ಕೆತ್ತಿ ರಕ್ಷಿಸಿದರು. ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರೂ ತನ್ನ ಜೀವರಕ್ಷಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಕೊಂಕಣ ರೈಲ್ವೆಯ ಪೊಲೀಸ್ ಸಿಬ್ಬಂದಿಗಳಿಬ್ಬರ ಕಾರ್ಯವನ್ನು ಶ್ಲಾಘಿಸಿದ ಕೊಂಕಣ ರೈಲ್ವೆಯ ಸಿಎಂಡಿ ಸಂತೋಷ್‌ಕುಮಾರ್ ಝಾ ಅವರು ಇಬ್ಬರು ಸಿಬ್ಬಂದಿಗಳಿಗೆ ತಲಾ 10,000ರೂ.ಗಳ ನಗದು ಬಹುಮಾನವನ್ನು ಘೋಷಿಸಿದರು.

ವಾರ್ತಾ ಭಾರತಿ 24 Nov 2025 11:19 pm

12,000 ವರ್ಷಗಳ ನಂತರ ಸ್ಫೋಟಗೊಂಡ ಇಥಿಯೋಪಿಯಾ ಅಗ್ನಿಪರ್ವತ - ಭಾರತದ ಕಡೆಗೆ ಬರುತ್ತಿದೆ ಬೂದಿಯ ಮೋಡ!

ಇಥಿಯೋಪಿಯಾದಲ್ಲಿ 12,000 ವರ್ಷಗಳ ನಂತರ ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟಗೊಂಡಿದ್ದು, ಅದರ ಬೂದಿ ಮೋಡ ಕೆಂಪು ಸಮುದ್ರ ದಾಟಿ ಯೆಮೆನ್, ಒಮಾನ್ ಮತ್ತು ಉತ್ತರ ಅರೇಬಿಯನ್ ಸಮುದ್ರವನ್ನು ತಲುಪಿದೆ. ಈ ಬೂದಿ ಮೋಡ ಭಾರತದ ಕಡೆಗೆ ಬರುತ್ತಿರುವುದರಿಂದ ಹಲವು ವಿಮಾನಗಳನ್ನು ರದ್ದುಪಡಿಸಲಾಗಿದೆ ಮತ್ತು ವಿಮಾನಯಾನ ಸಂಸ್ಥೆಗಳಿಗೆ ಎಚ್ಚರಿಕೆ ನೀಡಲಾಗಿದೆ.

ವಿಜಯ ಕರ್ನಾಟಕ 24 Nov 2025 11:17 pm

ಗುಂಡಿಮುಕ್ತ ಬೊಮ್ಮನಹಳ್ಳಿ ಅಭಿಯಾನ: ಶಾಸಕ ಸತೀಶ್ ರೆಡ್ಡಿ ಮಾಹಿತಿ

ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಗುಂಡಿ ಬಗ್ಗೆ ಸವಾರರು ಚಿಂತೆ ಮಾಡುವಂತೆ ಆಗಿದೆ, ಗುಂಡಿ ಕಾರಣಕ್ಕೆ ವಾಹನ ಓಡಿಸುವುದು ಕೂಡ ಕಷ್ಟವಾಗಿರುವ ಸಮಯದಲ್ಲೇ ಹೊಸ ಅಭಿಯಾನ ಒಂದು ಶುರುವಾಗಿದೆ. ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ಒಂದಾಗಿರುವ ಬೊಮ್ಮನಹಳ್ಳಿ ಕ್ಷೇತ್ರದಲ್ಲಿ, ಇದೀಗ ‘ಗುಂಡಿಮುಕ್ತ ಬೊಮ್ಮನಹಳ್ಳಿ' ಅಭಿಯಾನ ಶುರು ಮಾಡಲಾಗಿದೆ. ಈ ಮೂಲಕ ಸ್ಥಳೀಯ ಸವಾರರು ಹಾಗೂ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ಶಾಸಕ

ಒನ್ ಇ೦ಡಿಯ 24 Nov 2025 11:15 pm

ಉಡುಪಿ ಜಿಲ್ಲಾಡಳಿತದಿಂದ ‘ಉಡುಪಿ ಫುಲ್ ಮ್ಯಾರಥಾನ್’

ಮಣಿಪಾಲ: ಉಡುಪಿ ಜಿಲ್ಲಾಡಳಿತ ಇದೇ ಮೊದಲ ಬಾರಿ ಮ್ಯಾರಥಾನ್ ಸ್ಪರ್ಧೆಯನ್ನು ಸಂಘಟಿಸಲು ಮುಂದಾಗಿದ್ದು, ಇದು ಮುಂದೆ ಪ್ರತಿವರ್ಷ ನಿರ್ದಿಷ್ಟ ದಿನದಂದು ನಡೆಯುವಂತೆ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ಬೆಂಗಳೂರಿನ ಕ್ರೀಡಾ ಸಂಘಟಕ ಸಂಸ್ಥೆ ಎನ್‌ಇಬಿಯ ಸಹಯೋಗದೊಂದಿಗೆ ಈ ಫುಲ್ ಮ್ಯಾರಥಾನ್ ಮುಂದಿನ ವರ್ಷದ ಜನವರಿ 11ರ ರವಿವಾರ ನಡೆಯಲಿದೆ. ಮುಂದೆ ಪ್ರತಿವರ್ಷ ಜನವರಿ ತಿಂಗಳ ಎರಡನೇ ರವಿವಾರದಂದು ಇದು ನಡೆಯಲಿದೆ ಎಂದವರು ಅವರು ಹೇಳಿದರು. ‘ಉಡುಪಿ ಫುಲ್ ಮ್ಯಾರಥಾನ್’ ಎಂದು ಕರೆಯಲಾಗುವ ಈ ಸ್ಪರ್ಧೆಯಲ್ಲಿ 42.195ಕಿ.ಮೀ.ನ ಫುಲ್ ಮ್ಯಾರಥಾನ್, 21.097 ಕಿ.ಮೀ.ನ ಹಾಫ್ ಮ್ಯಾರಥಾನ್, 10ಕಿ.ಮೀ. ಹಾಗೂ 5ಕಿ.ಮೀ.ನ ಮ್ಯಾರಥಾನ್ ಸ್ಪರ್ಧೆಗಳು ನಡೆಯಲಿದ್ದು, ಎಲ್ಲಾ ವಯೋಮಾನದ, ದೈಹಿಕವಾಗಿ ಸಮರ್ಥರಿರುವ ಪ್ರತಿಯೊಬ್ಬರು ಇದರಲ್ಲಿ ಭಾಗವಹಿಸಬಹುದು ಎಂದರು. ಜಿಲ್ಲಾಡಳಿತದ ವತಿಯಿಂದ ಈ ಮ್ಯಾರಥಾನ್ ನಡೆಯಲಿದೆ. ದೇಶದ ಪ್ರಮುಖ ಕ್ರೀಡಾ ಸಂಘಟಕ ಸಂಸ್ಥೆ ಎನ್‌ಇಬಿ ಸ್ಪೋರ್ಟ್ಸ್ ಸ್ಪರ್ಧೆಯನ್ನು ಸಂಘಟಿಸಲಿದೆ ಎಂದ ಜಿಲ್ಲಾದಿಕಾರಿಗಳು, ಉಡುಪಿ ಫುಲ್ ಮ್ಯಾರಥಾನ್‌ನ ಲೋಗೊವನ್ನು ಬಿಡುಗಡೆಗೊಳಿಸಿದರು. ಎನ್‌ಇಬಿಯ ಸ್ಪರ್ಧಾ ನಿರ್ದೇಶಕ ನಾಗರಾಜ್ ಅಡಿಗ ಮಾತನಾಡಿ, ತಮ್ಮ ಸಂಸ್ಥೆ ದೇಶದ 22 ನಗರಗಳಲ್ಲಿ ಮ್ಯಾರಥಾನ್ ಸ್ಪರ್ಧೆಯನ್ನು ಆಯೋಜಿ ಸುತ್ತಿದೆ. ತನ್ನ ಹುಟ್ಟೂರಿನಲ್ಲಿ ಇದೇ ಮೊದಲ ಬಾರಿ ಸ್ಪರ್ಧೆಯನ್ನು ಸಂಘಟಿಸುವ ಅವಕಾಶ ಸಿಕ್ಕಿದೆ ಎಂದರಲ್ಲದೇ ಮೊದಲ ವರ್ಷದ ಮ್ಯಾರಥಾನ್‌ನಲ್ಲಿ 6ರಿಂದ 7ಸಾವಿರ ಮಂದಿ ಸ್ಪರ್ಧಿಗಳು ಭಾಗವಹಿಸುವ ನಿರೀಕ್ಷೆ ಇದೆ. ಮುಂದಿನ ವರ್ಷಗಳಲ್ಲಿ ಕನಿಷ್ಠ 10ಸಾವಿರ ಮಂದಿ ಪಾಲ್ಗೊಳ್ಳುವಂತೆ ನೋಡಲಾಗುವುದು. ತಮ್ಮ ಸಂಸ್ಥೆ ಈ ಮ್ಯಾರಥಾನ್‌ನ್ನು ಸಂಪೂರ್ಣವಾಗಿ ವೃತ್ತಿಪರವಾಗಿ ಸಂಘಟಿಸಲಿದೆ ಎಂದರು. ಮುಂದಿನ ಜ.11ರಂದು ನಡೆಯುವ ಮೊದಲ ಫುಲ್ ಮ್ಯಾರಥಾನ್‌ನಲ್ಲಿ ಒಟ್ಟು 10 ಲಕ್ಷ ರೂ. ಬಹುಮಾನವಿದ್ದು, ಹೊಸ ರಾಷ್ಟ್ರೀಯ ದಾಖಲೆಯನ್ನು ಬರೆಯುವ ಪುರುಷ ಅಥವಾ ಮಹಿಳಾ ಮ್ಯಾರಥಾನ್‌ಪಟುವಿಗೆ 2.5 ಲಕ್ಷ ರೂ. ಬಂಪರ್ ಬಹುಮಾನ ಮೊತ್ತವನ್ನು ನೀಡಲಾಗುವುದು ಎಂದರು. ಮ್ಯಾರಥಾನ್‌ನಲ್ಲಿ ಮುಕ್ತ, 18ರಿಂದ 35ವರ್ಷ, 35ರಿಂದ 45ವರ್ಷ, 45ರಿಂದ 55ವರ್ಷ ಹಾಗೂ 55+ ವರ್ಷದವರಿಗೆ ಪ್ರತ್ಯೇಕ ವಿಭಾಗಗಳಿವೆ. ಫುಲ್ ಮ್ಯಾರಥಾನ್ ಗೆಲ್ಲುವ ಪುರುಷ ಮತ್ತು ಮಹಿಳಾ ಅತ್ಲೀಟ್‌ಗೆ 20,000 ರೂ.ನಗದು ಬಹುಮಾನವಿದೆ. ಹಾಫ್ ಮ್ಯಾರಥಾನ್ ವಿಜೇತರಿಗೆ 10ಸಾವಿರ ಹಾಗೂ 10ಕಿ.ಮೀ. ವಿಜೇತರಿಗೆ 5,000ರೂ. ನಗದು ಬಹುಮಾನವಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಉಡುಪಿ ಶಾಸಕ ಯಶಪಾಲ್ ಸುವರ್ಣ, ಎಡಿಸಿ ಅಬಿದ್ ಗದ್ಯಾಳ್, ಉಡುಪಿ ಜಿಲ್ಲಾ ಅಮೆಚೂರ್ ಅತ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ, ಜಿಲ್ಲಾ ಕ್ರೀಡಾಧಿಕಾರಿ ಡಾ.ರೋಶನ್‌ಕುಮಾರ್ ಶೆಟ್ಟಿ ಮುಂತಾದವರಿದ್ದರು.

ವಾರ್ತಾ ಭಾರತಿ 24 Nov 2025 11:09 pm

ಬ್ಯಾರಿ ಮಹಿಳೆಯರು ಮತ್ತು ಮಕ್ಕಳಿಗೆ ವಿವಿಧ ಸ್ಪರ್ಧೆಗಳಿಗೆ ಆಹ್ವಾನ

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಡಿ.7ರಂದು ಪುತ್ತೂರು ಪುರಭವನದಲ್ಲಿ ಹಮ್ಮಿಕೊಂಡಿರುವ ಱಬ್ಯಾರಿ ಅಕಾಡಮಿ ಚಮ್ಮನ’ (ಗೌರವ ಪುರಸ್ಕಾರ) ಮತ್ತು ʼವಿದ್ಯಾರ್ಥಿ ಸಂಗಮ’ ಕಾರ್ಯಕ್ರಮದ ಅಂಗವಾಗಿ ಮಹಿಳೆಯರಿಗೆ ಸಾಂಪ್ರದಾಯಿಕ ಬ್ಯಾರಿ ಆಹಾರ ಮತ್ತು ಮೆಹಂದಿ ವಿನ್ಯಾಸ ಹಾಗೂ ಮಕ್ಕಳಿಗೆ ಬ್ಯಾರಿ ಹಾಡು ಸ್ಪರ್ಧೆ ಆಯೋಜಿಸಿದೆ. ಸಾಂಪ್ರದಾಯಿಕ ಆಹಾರ ಸ್ಪರ್ಧೆಯ ವಿಜೇತರಿಗೆ 4,000 ರೂ., 3,000 ರೂ., 2,000 ರೂ. ಮತ್ತು ಮೆಹಂದಿ ವಿನ್ಯಾಸಕ್ಕೆ 3,000, ರೂ. 2,000 ರೂ., 1,000 ರೂ. ಹಾಗೂ ಮಕ್ಕಳ ಬ್ಯಾರಿ ಹಾಡು ಸ್ಪರ್ಧೆಗೆ 1,000 ರೂ., 750 ರೂ., 500 ರೂ.ವನ್ನು ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ನಗದು ಬಹುಮಾನ ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲರಿಗೂ ಅಕಾಡಮಿಯ ವತಿಯಿಂದ ಪ್ರಮಾಣ ಪತ್ರ ನೀಡಲಾಗುವುದು. ಆಸಕ್ತರು ಹೆಚ್ಚಿನ ಮಾಹಿತಿ ಮತ್ತು ಹೆಸರು ನೋಂದಣಿಗೆ ಡಿ.4ರೊಳಗೆ ಡಾ. ಹಾಜಿ ಎಸ್. ಅಬೂಬಕರ್ ಆರ್ಲಪದವು (ಮೊ.ಸಂ. 9901726144) ಅಥವಾ ಸಾರಾ ಅಲಿ ಪರ್ಲಡ್ಕ (ಮೊ.ಸಂ. 9353306183) ಅವರನ್ನು ಸಂಪರ್ಕಿಸಬಹುದು ಎಂದು ಅಕಾಡಮಿಯ ಅಧ್ಯಕ್ಷ ಉಮರ್ ಯು. ಎಚ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ವಾರ್ತಾ ಭಾರತಿ 24 Nov 2025 11:02 pm

ಕುತೂಹಲ ಕೆರಳಿಸಿದ ರಾಹುಲ್‌ ಗಾಂಧಿ- ಹರಿಪ್ರಸಾದ್‌ ಭೇಟಿ; ಹೈಕಮಾಂಡ್‌ ಬಳಿ ಸಿದ್ದರಾಮಯ್ಯ ಪರ ಬ್ಯಾಟಿಂಗ್‌

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಭಾರಿ ಚರ್ಚೆ, ವಾದ ಪ್ರತಿವಾದಗಳು ನಡೆಯುತ್ತಿರುವ ಬೆನ್ನಲ್ಲೇ ಹರಿಪ್ರಸಾದ್‌ ಅವರು ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿ ಪವರ್‌ ಶೇರಿಂಗ್‌ನಿಂದಾಗುವ ಸಮಸ್ಯೆ. ಅಧಿಕಾರ ಹಸ್ತಾಂತರದ ಗೊಂದಲದಿಂದ ರಾಜ್ಯ ರಾಜಕರಣದ ಮೇಲಾಗುವ ಪರಿಣಾಮವನ್ನು ತಿಳಿಸಿ ಸಿಎಂ ಸಿದ್ದರಾಮಯ್ಯನವರ ಗುಣಗಾನ ಮಾಡಿದ್ದಾರೆ ಎನ್ನಲಾಗಿದೆ. ಸಿಎಂ ಹಾಗೂ ಡಿಸಿಎಂ ಬಣ ಒಂದೊಂದರಂತೆ ಹೈ ಕಮಾಂಡ್‌ ಭೇಟಿ ಮಾಡುತ್ತಿದ್ದಾರೆ.

ವಿಜಯ ಕರ್ನಾಟಕ 24 Nov 2025 10:57 pm

ʼಚಳಿಗಾಲದ ಅಧಿವೇಶʼ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ಅಧಿಕ ಅವಕಾಶ : ಯು.ಟಿ.ಖಾದರ್

ಬೆಂಗಳೂರು : ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆ ಆಗಿದ್ದು, ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ಈ ಬಾರಿ ಅಧಿಕ ಅವಕಾಶ ನೀಡಲಾಗುವುದು ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನಕ್ಕೆ ಸಂಪೂರ್ಣ ತಯಾರಿ ನಡೆಸಿದ್ದೇವೆ. ಈಗಾಗಲೇ ಅಧಿಕಾರಿಗಳ ಜೊತೆ ಸಭೆ ಮಾಡಿದ್ದೇವೆ. ಅಧಿವೇಶನಕ್ಕೆ ಬರುವ ಯಾರಿಗೂ ಸಮಸ್ಯೆ ಆಗದಂತೆ ಕ್ರಮ ತೆಗೆದುಕೊಂಡಿದ್ದೇವೆ ಎಂದು ಹೇಳಿದರು. ಅಧಿವೇಶನ ಮಾರ್ಗಸೂಚಿ, ನಿಯಮದ ಪ್ರಕಾರ ಮಸೂದೆಗಳು ಸಹ ಚರ್ಚೆಗೆ ಬರಲಿವೆ. ವಿಧಾನಸಭೆಯಲ್ಲಿ ಆಡಳಿತ ಮತ್ತು ವಿಪಕ್ಷಗಳ ನಾಯಕರು ಇರುತ್ತಾರೆ. ಅಲ್ಲಿ ಏನೆಲ್ಲಾ ಚರ್ಚೆ ಆಗಬೇಕೆಂದು ಸೂಚನೆ ನೀಡಲಾಗುವುದು ಎಂದು ತಿಳಿಸಿದರು.

ವಾರ್ತಾ ಭಾರತಿ 24 Nov 2025 10:52 pm

ಬಜ್ಪೆ| ತಂಡದಿಂದ ವ್ಯಕ್ತಿಗೆ ಚೂರಿ ಇರಿತ ಪ್ರಕರಣ; ಓರ್ವ ವಶಕ್ಕೆ

ಬಜ್ಪೆ: ಒಂದು ಬೈಕ್‌ನಲ್ಲಿ ಆಗಮಿಸಿದ ನಾಲ್ವರ ತಂಡ, ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ಬಜ್ಪೆಪೊಲೀಸ್ ಠಾಣಾ ವ್ಯಾಪ್ತಿಯ ಎಡಪದವು ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ. ಗಾಯಾಳುವನ್ನು ಎಡಪದವು ಪೂಪಾಡಿಕಲ್ಲು ನಿವಾಸಿ ಅಖಿಲೇಶ್ ಎಂದು ಗುರುತಿಸಲಾಗಿದೆ. ಅಖಿಲೇಶ್ ಎಡಪದವಿನಿಂದ ಮಂಗಳೂರು ಕಡೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಸಂದರ್ಭ ದ್ವಿಚಕ್ರ ವಾಹನದಲ್ಲಿ ನಾಲ್ಕು ಮಂದಿ ಚೂರಿಗಳನ್ನು ಕೊಂಡುಹೋಗುತ್ತಿರುವುದನ್ನು ಗಮನಿಸಿ, ತನ್ನ ಮೊಬೈಲ್‌ನಲ್ಲಿ ಅವರ ವೀಡಿಯೊ ಚಿತ್ರೀಕರಣಕ್ಕೆ ಮುಂದಾಗಿದ್ದಾರೆ. ಅದನ್ನು ಗಮನಿಸಿದ ದುಷ್ಕರ್ಮಿಗಳ ತಂಡ ಅಖಿಲೇಶ್‌ರ ಮೇಲೆ ಚೂರಿ ಝಳಪಿಸಿದೆ. ಈ ವೇಳೆ ಅವರ ಕೈಗೆ ಗಾಯವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆ ನಡೆದ ಕೂಡಲೇ ಎಚ್ಚೆತ್ತುಕೊಂಡ ಸಾರ್ವಜನಿಕರು ಓರ್ವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಮೂವರು ದ್ವಿಚಕ್ರ ವಾಹನದಲ್ಲಿ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ. ಕೃತ್ಯ ಎಸಗಿದ ಎಲ್ಲಾ ಆರೋಪಿಗಳ ಗುರುತು ಪತ್ತೆಹಚ್ಚಲಾಗಿದ್ದು, ಶೀಘ್ರದಲ್ಲೇ ಎಲ್ಲಾ ಆರೋಪಿಗಳನ್ನು ಬಂಧಿಸಲಾಗುವುದು. ಘಟನೆ ನಡೆಯುವ ಮುನ್ನ ನಾಲ್ವರು ಆರೋಪಿಗಳು ಬಾರ್‌ನಿಂದ ಹೊರಬರುತ್ತಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ. ಆರೋಪಿಗಳು ಮದ್ಯದ ಪ್ರಭಾವದಲ್ಲಿದ್ದಾರೆಯೇ ಅಥವಾ ಯಾವುದೇ ಇತರ ಮಾದಕ ದ್ರವ್ಯದ ಪ್ರಭಾವದಲ್ಲಿದ್ದರೇ ಎಂದು ನಾವು ಪರಿಶೀಲಿಸುತ್ತಿದ್ದೇವೆ. ಹಿರಿಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

ವಾರ್ತಾ ಭಾರತಿ 24 Nov 2025 10:46 pm

ಬಿಹಾರ ಸಂಪುಟ | ಜೀನ್ಸ್ ಪ್ಯಾಂಟ್ ಧರಿಸಿ ಪ್ರಮಾಣವಚನ ಸ್ವೀಕರಿಸಿದ ದೀಪಕ್ ಪ್ರಕಾಶ್ ಯಾರು?

ಮಣಿಪಾಲದಲ್ಲಿ ಓದಿದ್ದ ದೀಪಕ್ ಈಗ ಬಿಹಾರದ ಸಚಿವ

ವಾರ್ತಾ ಭಾರತಿ 24 Nov 2025 10:42 pm

ರಾಯಚೂರು | ಮೇಥೋಡಿಸ್ಟ್ ಚರ್ಚ್ ನಿರ್ಮಾಣ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ

ರಾಯಚೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮೀಣ ಶಾಸಕರಾದ ಬಸನಗೌಡ ದದ್ದಲ್ ಅವರು ನ.24ರಂದು ರಾಯಚೂರು ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ಇಡಪನೂರು ಗ್ರಾಮಕ್ಕೆ ಭೇಟಿ ನೀಡಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೇಥೋಡಿಸ್ಟ್ ಚರ್ಚ್ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿದರು. ಈ ಸಂಧರ್ಭದಲ್ಲಿ ಊರಿನ ಹಿರಿಯ ಮುಖಂಡರು, ಸುತ್ತಲಿನ ಗ್ರಾಮಗಳ ಮುಖಂಡರು, ಅಧಿಕಾರಿಗಳು, ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 24 Nov 2025 10:37 pm

ಬಿಹಾರದ ತಪ್ಪುಗಳನ್ನು ಪುನರಾವರ್ತಿಸಬೇಡಿ: ಕಾರ್ಯಕರ್ತರಿಗೆ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ತಾಕೀತು

ಕೋಲ್ಕತ್ತಾ: ಬಿಹಾರದ ತಪ್ಪುಗಳನ್ನು ಪುನರಾವರ್ತಿಸಬೇಡಿ ಎಂದು ಸೋಮವಾರ ಟಿಎಂಸಿ ಪಕ್ಷದ ಕಾರ್ಯಕರ್ತರಿಗೆ ಕಿವಿಮಾತು ಹೇಳಿರುವ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ, ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗ ಮತದಾರರಿಗೆ ವಿತರಿಸಿರುವ ಶೇ. 100ರಷ್ಟು ಎಣಿಕೆ ಅರ್ಜಿಗಳನ್ನು ಸಲ್ಲಿಸುವ ಗುರಿಯನ್ನು ಹೊಂದಿರಬೇಕು ಎಂದು ತಾಕೀತು ಮಾಡಿದ್ದಾರೆ. ವರ್ಚುಯಲ್ ಕಾನ್ಫರೆನ್ಸ್ ಮೂಲಕ 25,000 ಪಕ್ಷದ ನಾಯಕರು ಹಾಗೂ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅಭಿಷೇಕ್ ಬ್ಯಾನರ್ಜಿ, ಇತ್ತೀಚೆಗೆ ಮುಕ್ತಾಯಗೊಂಡ ಬಿಹಾರ ವಿಧಾನಸಭಾ ಚುನಾವಣೆಯನ್ನು ಉಲ್ಲೇಖಿಸಿದರಲ್ಲದೆ, ನೆರೆಯ ರಾಜ್ಯದಲ್ಲಿ ವಿಪಕ್ಷಗಳು ಮಾಡಿದ ತಪ್ಪನ್ನು ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರು ಪುನರಾವರ್ತಿಸಬಾರದು ಎಂದು ಕರೆ ನೀಡಿದರು. “ಎಣಿಕೆ ಅರ್ಜಿಗಳನ್ನು ಸಲ್ಲಿಸುವುದು ನಮ್ಮ ಆದ್ಯತೆಯಾಗಿರಬೇಕು” ಎಂದು ಸಭೆಯಲ್ಲಿ ಭಾಗಿಯಾಗಿದ್ದ ಟಿಎಂಸಿ ಸಂಸದರು, ಶಾಸಕರು, ಪಕ್ಷದ ಎಲ್ಲ ಹಂತದ ರಾಜ್ಯ ಮತ್ತು ಜಿಲ್ಲಾ ನಾಯಕರಿಗೆ ಅಭಿಷೇಕ್ ಬ್ಯಾನರ್ಜಿ ಸೂಚಿಸಿದರು ಎಂದು ಮೂಲಗಳು ತಿಳಿಸಿವೆ. “ಶೇ. 99ರಷ್ಟು ಅರ್ಜಿ ಸಲ್ಲಿಕೆಯಲ್ಲ; ನಾವು ಶೇ. 100ರಷ್ಟು ಎಣಿಕೆ ಅರ್ಜಿಗಳನ್ನು ಸಲ್ಲಿಸಬೇಕು. ನಮ್ಮ ವಾರ್ ರೂಂಗಳು ಭಾರಿ ಜಾಗೃತ ಸ್ಥಿತಿಯಲ್ಲಿರಬೇಕು. ಮುಂಬರುವ ಚುನಾವಣೆಯಲ್ಲಿ ಭಾರಿ ಪ್ರಾಮುಖ್ಯತೆ ಹೊಂದಿರುವ ಈ ವಿಷಯದ ಕರ್ತವ್ಯವನ್ನು ನಮ್ಮ ಶಾಸಕರೇ ಮುನ್ನಡೆಸಬೇಕು” ಎಂದೂ ಅವರು ಕಿವಿಮಾತು ಹೇಳಿದ್ದಾರೆ. ಟಿಎಂಸಿ ಪಕ್ಷವು ಸದ್ಯ ನಡೆಯುತ್ತಿರುವ ‘ವೋಟ್ ಸುರಕ್ಷಾ’ ಶಿಬಿರಗಳನ್ನು ಮುಂದಿನ ವರ್ಷದ ಜನವರಿ 31ರವರೆಗೆ ವಿಸ್ತರಿಸಲಿದೆ ಎಂದೂ ಅವರು ಘೋಷಿಸಿದರು.

ವಾರ್ತಾ ಭಾರತಿ 24 Nov 2025 10:35 pm

ಬಿಹಾರದ ಅರ್ಧದಷ್ಟು ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣ: ADR

ಹೊಸದಿಲ್ಲಿ, ನ. 24: ಬಿಹಾರದ ಸುಮಾರು ಅರ್ಧದಷ್ಟು ಸಚಿವರು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಬಹುತೇಕ ಎಲ್ಲರೂ ಕೋಟ್ಯಾಂತರ ರೂಪಾಯಿ ಆಸ್ತಿ ಹೊಂದಿದ್ದಾರೆ ಎಂದು ಅಸೋಸಿಯೇಶನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್ (ADR)ನ ವರದಿ ಹೇಳಿದೆ. 24 ಸಚಿವರ ಅಫಿಡಾವಿಟ್ ಅನ್ನು ಪರಿಶೀಲಿಸಿರುವ ಈ ವರದಿ ಬಿಹಾರ್ ವಿಧಾನ ಸಭೆ-2025ರ ಸಚಿವರ ಕ್ರಿಮಿನಲ್ ಹಿನ್ನೆಲೆ, ಹಣಕಾಸು, ಶಿಕ್ಷಣ, ಲಿಂಗ ಹಾಗೂ ಇತರ ವಿವರಗಳನ್ನು ವಿಶ್ಲೇಷಿಸಿದೆ. 24 ಸಚಿವರಲ್ಲಿ 11 ಮಂದಿ ಕ್ರಿಮಿನಲ್ ಪ್ರಕರಣ ಎದುರಿಸುತ್ತಿದ್ದಾರೆ. 9 ಮಂದಿ ಗಲಭೆ, ಸರಕಾರಿ ಸಿಬ್ಬಂದಿ ಮೇಲೆ ಹಲ್ಲೆ, ವಂಚನೆ, ನಕಲಿ, ಗಂಭೀರ ಗಾಯ, ಚುನಾವಣಾ ಅಕ್ರಮಗಳಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ ಎಂದು ವರದಿ ಹೇಳಿದೆ. ಎಲ್ಲಾ ಪಕ್ಷಗಳ ಸಚಿವರ ಮೇಲೂ ಕ್ರಿಮಿನಲ್ ಪ್ರಕರಣಗಳಿವೆ ಎಂದು ವರದಿ ಹೇಳಿದೆ. ಬಿಜೆಪಿಯ 6 ಸಚಿವರು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಜೆಡಿ(ಯು) ಇಬ್ಬರು ಸಚಿವರು ಕೂಡ ಇದೇ ರೀತಿಯ ಪ್ರಕರಣ ಎದುರಿಸುತ್ತಿದ್ದಾರೆ. ಎಲ್‌ಜೆಪಿ (ಆರ್‌ವಿ)ಯ ಇಬ್ಬರು ಸಚಿವರನ್ನು ದೂರುಗಳಲ್ಲಿ ಹೆಸರಿಸಲಾಗಿದೆ. ಎಚ್‌ಎಎಂ (ಎಸ್)ನ ಏಕೈಕ ಸಚಿವರು ಕೂಡ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ. ಇಲ್ಲಿವರೆಗೆ ಯಾರೂ ಶಿಕ್ಷೆಗೆ ಒಳಗಾಗಿಲ್ಲ. ಸಚಿವ ಸಂಪುಟ ಆರ್ಥಿಕವಾಗಿ ಸಶಕ್ತವಾಗಿದೆ ಎಂಬುದನ್ನು ವರದಿ ತೋರಿಸಿದೆ. 24 ಸಚಿವರಲ್ಲಿ 21 ಮಂದಿ 1 ಕೋಟಿ ರೂ.ಗಿಂತ ಅಧಿಕ ಆಸ್ತಿ ಹೊಂದಿದ್ದಾರೆ. ಸಚಿವರ ಸರಾಸರಿ ಸಂಪತ್ತು 5.32 ಕೋ.ರೂ.ಗಿಂತ ಸ್ಪಲ್ಪ ಹೆಚ್ಚಿದೆ ಎಂದು ವರದಿ ಹೇಳಿದೆ.

ವಾರ್ತಾ ಭಾರತಿ 24 Nov 2025 10:23 pm

ಕಲಬುರಗಿ | ಕನ್ನಡ ಭಾಷೆಯ ಸಂರಕ್ಷಣೆ ಪ್ರತಿಯೊಬ್ಬ ಕನ್ನಡಿಗರ ಕರ್ತವ್ಯ : ಸಾಹಿತಿ ಎ.ಕೆ.ರಾಮೇಶ್ವರ

ಕಲಬುರಗಿ : ಕನ್ನಡ ಭಾಷೆ ಸಂರಕ್ಷಣೆ ಅದರ ಬಳಕೆ ಮತ್ತು ಅದನ್ನು ಗೌರವಿಸುವುದು ಪ್ರತಿಯೊಬ್ಬ ಕನ್ನಡಿಗರ ಆದ್ಯ ಕರ್ತವ್ಯವಾಗಿದೆ ಎಂದು ಹಿರಿಯ ಖ್ಯಾತ ಮಕ್ಕಳ ಸಾಹಿತಿ ಎ.ಕೆ.ರಾಮೇಶ್ವರ ಹೇಳಿದರು. ನಗರದ ಶರಣಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಕರ್ನಾಟಕ ರಾಜ್ಯೋತ್ಸವ ಆಚರಣೆ ಇದು ಕೇವಲ ಒಂದು ದಿನದ ಆಚರಣೆಯಲ್ಲ, ಇದು ಕನ್ನಡದ ಗೌರವ, ಕನ್ನಡಿಗನ ಅಸ್ತಿತ್ವ ಮತ್ತು ನಮ್ಮ ನಾಡಿನ ಸಮೃದ್ಧ ಪರಂಪರೆಯ ಸಂಕೇತ. ಕನ್ನಡ ಅದು ನಮ್ಮ ಸಂಸ್ಕೃತಿ, ಮನೋಭಾವ ಮತ್ತು ಬದುಕಿನ ಶೈಲಿಯನ್ನು ರೂಪಿಸುವ ಶಕ್ತಿಯಾಗಿದೆ ಎಂದರು. ಕಾರ್ಯಕ್ರಮದ ಅತಿಥಿಯಾದ ವಿಶ್ರಾಂತ ಪ್ರಾಧ್ಯಾಪಕ ಕೆ.ಎಸ್.ನಾಯಕ್ ಮಾತನಾಡಿ, ಜಾಗತೀಕರಣದ ಈ ಭರಾಟೆಯಲ್ಲಿ ಬಹುತೇಕ ಭಾಷೆ ಮತ್ತು ಸಂಸ್ಕೃತಿಗಳು ಕೊಚ್ಚಿ ಹೋಗುತ್ತಿರುವ ಈ ಸಂದರ್ಭದಲ್ಲಿ ಇಂದು ನಾವು ನಮ್ಮ ನಾಡು, ನುಡಿ, ಸಂಸ್ಕೃತಿಯನ್ನು ಉಳಿಸಿಕೊಂಡು ಮುಂದಿನ ಪೀಳಿಗೆಗೆ ವರ್ಗಾಯಿಸುವ ದೊಡ್ಡ ಹೊಣೆಗಾರಿಕೆ ನಮ್ಮ ಮೇಲಿದೆ. ಕನ್ನಡ ಭಾಷೆ ಮತ್ತು ಸಂಸ್ಕೃತಿ ಬಹಳ ಶ್ರೀಮಂತವಾಗಿದೆ. ಪಂಪ, ರನ್ನ, ಶಂಕರಾಚಾರ್ಯರಿಂದ ಹಿಡಿದು ಕುವೆಂಪು, ಡಾ.ರಾಜಕುಮಾರ, ಕೆ.ಎಸ್.ನರಸಿಂಹಸ್ವಾಮಿ, ಪೂರ್ಣಚಂದ್ರ ತೇಜಸ್ವಿಗಳವರೆಗೆ ನಮ್ಮ ಕನ್ನಡಕ್ಕೆ ಅಭಿಮಾನ ಸಲ್ಲಿಸುವ ಅನೇಕ ಮಹಾನುಭಾವರು ನಮ್ಮ ನಾಡಿಗೆ ಮಾದರಿಯಾಗಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮದ ಇನ್ನೋರ್ವ ಅತಿಥಿ ವಿಶ್ರಾಂತ ಪ್ರಾಧ್ಯಾಪಕ ವೆಂಕಣ್ಣ ಡೊಣ್ಣೆಗೌಡರ್ ಮಾತನಾಡಿ, ಇಂದಿನ ವೇಗದ ಜಗತ್ತಿನಲ್ಲಿ ನಾವು ಕನ್ನಡವನ್ನು ಕಳೆದುಕೊಳ್ಳುವಂತೆ ಆಗಬಾರದು. ನಮ್ಮ ಮಕ್ಕಳಲ್ಲಿ ಕನ್ನಡದ ಪ್ರೀತಿ, ಭಾಷೆಯ ಗೌರವ ಮತ್ತು ಸಂಸ್ಕೃತಿಯ ಬೇರನ್ನು ಬಿತ್ತುವುದು ನಮ್ಮಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಹಾವಿದ್ಯಾಲಯದ ಕನ್ನಡ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ.ಶಿವರಾಜ ಶಾಸ್ತ್ರಿ ಹೇರೂರ್, ಕಮಲಾನಗರದ ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಶಿವಕುಮಾರ, ಪ್ರಾಧ್ಯಾಪಕಿ ಡಾ.ಸಂಗೀತಾ ಪಾಟೀಲ, ವಿದ್ಯಾರ್ಥಿಗಳಾದ ಚೆನ್ನಬಸವ, ಸಂಜನಾ ಹಾಗೂ ಚೇತನ ಕವನ ವಾಚನ ಮಾಡಿದರು. ಪ್ರಾಧ್ಯಾಪಕಿ ಅನಿತಾ ಗೊಬ್ಬುರ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಡಾ.ಪಿಂಕ್ಯಾಯಿನಿ ವಂದಿಸಿದರು. ಸಂಜನಾ ನಿರೂಪಿಸಿದರು. ಸಂಗೀತ ವಿಭಾಗದ ಪ್ರಾಧ್ಯಾಪಕರಾದ ಚನ್ನಬಸವ, ಕಲ್ಮೇಶ ಮತ್ತು ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಾರ್ತಾ ಭಾರತಿ 24 Nov 2025 10:23 pm

ಕಲಬುರಗಿ| ಹೆಸರು ಕಾಳು ಖರೀದಿ ಕೇಂದ್ರಗಳಿಗೆ ಭೇಟಿ ನೀಡಿದ ಸೈಯದ್ ಮೆಹಮೂದ

ಕಲಬುರಗಿ: 2025-26ನೇ ಸಾಲಿನ ಮುಂಗಾರು ಹಂಗಾಮಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಹೆಸರು ಕಾಳು ಖರೀದಿಸಲು ಸರ್ಕಾರವು ಪ್ರತಿ ಕ್ವಿಂಟಾಲ್‌ಗೆ 8,768 ರೂ. ನಿಗದಿ ಮಾಡಿ ಆದೇಶಿಸಿದೆ. ಇದರ ಪ್ರಯುಕ್ತ ಕಲಬುರಗಿ ಜಿಲ್ಲೆಯಲ್ಲಿ 72 ಹೆಸರು ಕಾಳು ಖರೀದಿ ಕೇಂದ್ರಗಳನ್ನು ತೆರೆದು ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ಇದರ ಪ್ರಯುಕ್ತ ಕಲಬುರಗಿ ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ನಿಯಮಿತದ ಅಧ್ಯಕ್ಷರಾದ ಸೈಯದ್ ಮೆಹಮೂದ ಚಿಸ್ತಿ ಅವರು ಹೆಸರು ಕಾಳು ಖರೀದಿ ಕೇಂದ್ರಗಳಾದ ಅಲ್ಲೂರ (ಬಿ), ಡೊಣಗಾಂವ ಹಾಗೂ ಸಿಂಧನಮಡು ಭೇಟಿ ನೀಡಿ ರೈತರು ಹಾಗೂ ಖರೀದಿ ಕೇಂದ್ರಗಳ ಮುಖ್ಯಸ್ಥರೊಂದಿಗೆ ಚರ್ಚಿಸಿದರು. ನಂತರ ಮಂಡಳಿ ಅಧ್ಯಕ್ಷರು ಸೇಡಂ ಹಾಗೂ ಚಿತ್ತಾಪೂರ ತಾಲ್ಲೂಕಿನ ಕೇಂದ್ರ/ ರಾಜ್ಯ ಉಗ್ರಾಣಗಳಿಗೆ ಭೇಟಿ ನೀಡಿ ಹೆಸರು ಕಾಳು ಖರೀದಿ ಪ್ರಕ್ರಿಯೆ ಮತ್ತು ಗುಣಮಟ್ಟವನ್ನು ಸಹ ವೀಕ್ಷಣೆ ಮಾಡಿದರು. ಪ್ರಸ್ತುತ ಜಿಲ್ಲೆಯಲ್ಲಿ ಒಟ್ಟು 3,593 ರೈತರ ನೋಂದಣಿಯಾಗಿದ್ದು, 6,296.50 ಕ್ವಿಂಟಾಲ್ ರೈತರಿಂದ ಹೆಸರು ಕಾಳು ಖರೀದಿಸಲಾಗಿದೆ ಎಂದು ಕರ್ನಾಟಕ ರಾಜ್ಯದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ನಿ. ಕಲಬುರಗಿ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾರ್ತಾ ಭಾರತಿ 24 Nov 2025 10:15 pm

ಬೀದರ್ | ವೇತನಕ್ಕಾಗಿ ಆಗ್ರಹಿಸಿ ಗ್ರಾಮ ಪಂಚಾಯತ್ ಸ್ವಚ್ಚತಾ ವಾಹನಿ ಮಹಿಳಾ ಸಿಬ್ಬಂದಿಗಳಿಂದ ಧರಣಿ

ಬೀದರ್ : ವೇತನ ನೀಡುವಂತೆ ಆಗ್ರಹಿಸಿ ಗ್ರಾಮ ಪಂಚಾಯತ್ ಸ್ವಚ್ಚತಾ ವಾಹನಿ ಮಹಿಳಾ ಸಿಬ್ಬಂದಿಗಳು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಇಂದು ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರಿಗೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಿದ ಸ್ವಚ್ಚತಾ ವಾಹನಿ ಮಹಿಳಾ ಸಿಬ್ಬಂದಿಗಳು, ಗ್ರಾಮ ಪಂಚಾಯತ್, ಜಿಲ್ಲಾ ಪಂಚಾಯತ್ ಅಧಿಕಾರಿ ಹಾಗೂ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಧರಣಿಯಲ್ಲಿ 100ಕ್ಕೂ ಅಧಿಕ ಮಹಿಳಾ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಪ್ರತಿ ತಿಂಗಳು ಚಾಲಕರಿಗೆ 5 ಸಾವಿರ ರೂ., ಸಿಬ್ಬಂದಿಗೆ 3 ಸಾವಿರ ರೂ. ನೀಡುತ್ತೇವೆ ಎಂದು ಕೆಲಸಕ್ಕೆ ನೇಮಿಸಿಕೊಂಡಿದ್ದಾರೆ. ಆದರೆ 3 ವರ್ಷಗಳಿಂದ ಚಾಲಕ ಹಾಗೂ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು ವೇತನ ನೀಡಿಲಿಲ್ಲ ಎಂದು ಪ್ರತಿಭಟನಾನಿರತರು ಆರೋಪಿಸಿದ್ದಾರೆ. ಜಿಲ್ಲಾದ್ಯಂತ 300ಕ್ಕೂ ಅಧಿಕ ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದಾರೆ. ಆದರೆ ಯಾವುದೇ ವೇತನ ನೀಡದೇ ಪಿಡಿಓಗಳು ಉಡಾಫೆಯಾಗಿ ಮಾತಾಡುತ್ತಿದ್ದಾರೆ. ಹಲವು ಬಾರಿ ಜಿಪಂ ಸಿಇಒ ಅವರಿಗೆ ಮನವಿ ಸಲ್ಲಿಸಿದ್ದರೂ, ಕೂಡ ವೇತನ ನೀಡಲಿಲ್ಲ. ಕೆಲಸಕ್ಕೆ ತಕ್ಕ ಕೂಲಿ ಸಿಗುವವರೆಗೂ ಹೋರಾಟ ಕೈ ಬಿಡುವುದಿಲ್ಲ ಎಂದು ಸಿಬ್ಬಂದಿಗಳು ಎಚ್ಚರಿಕೆ ನೀಡಿದ್ದಾರೆ.

ವಾರ್ತಾ ಭಾರತಿ 24 Nov 2025 10:12 pm

Bengaluru | ‘ಪ್ರಧಾನಮಂತ್ರಿ ಕಚೇರಿಯ ಅಧಿಕಾರಿ’ ಎಂದು ಹೇಳಿಕೊಂಡು ವೈದ್ಯನಿಗೆ ಕೋಟ್ಯಂತರ ರೂ.ವಂಚನೆ : ಆರೋಪಿ ಬಂಧನ

ಬೆಂಗಳೂರು : ಪ್ರಧಾನ ಮಂತ್ರಿ ಕಚೇರಿಯ ಅಧಿಕಾರಿ ಎಂದು ಹೇಳಿಕೊಂಡು ಕಾಶ್ಮೀರದ ವೈದ್ಯರೊಬ್ಬರಿಗೆ ಕೋಟ್ಯಂತರ ರೂ. ಹಣ ವಂಚಿಸಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಇಲ್ಲಿನ ವಿಜಯನಗರ ಠಾಣಾ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಬಂಧಿತನನ್ನು ವಿಜಯನಗರ ನಿವಾಸಿ ಸುಜಯ್ ಯಾನೆ ಸುಜಯೇಂದ್ರ(40) ಎಂದು ಗುರುತಿಸಲಾಗಿದೆ. ಆರೋಪಿ ಸುಜಯೇಂದ್ರ ಸಿಕ್ಕ ಸಿಕ್ಕವರ ಬಳಿ ತಾನು ಪ್ರಧಾನ ಮಂತ್ರಿ ಕಚೇರಿಯ ಅಧಿಕಾರಿ ಎಂದು ಪರಿಚಯ ಮಾಡಿಕೊಂಡಿದ್ದಾನೆ. ಅದೇ ರೀತಿ ಜಮ್ಮು-ಕಾಶ್ಮೀರದ ವೈದ್ಯರೊಬ್ಬರ ಬಳಿ ದೇವನಹಳ್ಳಿಯ ಬಳಿಯಲ್ಲಿ ಆಯುರ್ವೇದ ಆಸ್ಪತ್ರೆಯನ್ನು ತೆರೆಯಲು ಅವಕಾಶ ಮಾಡಿಕೊಡುತ್ತೇನೆಂದು 2.7 ಕೋಟಿ ಹಣವನ್ನು ವಸೂಲಿ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಸದ್ಯ ಸುಜಯೇಂದ್ರನನ್ನು ಬಂಧಿಸಿರುವ ವಿಜಯನಗರ ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿರುವುದಾಗಿ ಮೂಲಗಳು ತಿಳಿಸಿವೆ.

ವಾರ್ತಾ ಭಾರತಿ 24 Nov 2025 10:11 pm

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್ ಸಿಎ) ಅಧ್ಯಕ್ಷರಾಗಿ ವೆಂಕಟೇಶ ಪ್ರಸಾದ್ ಆಯ್ಕೆಯಾಗಿದ್ದಾರೆ. ಶಾಂತಕುಮಾರ್ ನಾಮಪತ್ರ ತಿರಸ್ಕೃತಗೊಂಡ ಕಾರಣ ವೆಂಕಟೇಶ ಪ್ರಸಾದ್ ಅವಿರೋಧವಾಗಿ ಅಧ್ಯಕ್ಷರಾಗಿದ್ದಾರೆ. 12 ವರ್ಷಗಳ ಬಳಿಕ ಅವರು ಕೆಎಸ್ ಸಿಎ ಆಡಳಿತ ಮಂಡಳಿಗೆ ಮರಳಿದ್ದಾರೆ. ಹಿಂದೆ ಅನಿಲ್ ಕುಂಬ್ಳೆ ಅಧ್ಯಕ್ಷರಾಗಿದ್ದಾಗ ವೆಂಕಟೇಶ ಪ್ರಸಾದ್ ಉಪಾಧ್ಯಕ್ಷರಾಗಿದ್ದರು.

ವಿಜಯ ಕರ್ನಾಟಕ 24 Nov 2025 10:03 pm

Dharwad | ಮೆಕ್ಕೆಜೋಳ ಖರೀದಿ ಭರವಸೆ: ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ರೈತರು

ಧಾರವಾಡ : ಕಳೆದ ಮೂರು ದಿನಗಳಿಂದ ನವಲಗುಂದ ಪಟ್ಟಣದಲ್ಲಿ ಸರಕಾರದ ಬೆಂಬಲ ಬೆಲೆ ಯೋಜನೆಯಲ್ಲಿ ಮೆಕ್ಕೆಜೋಳ ಖರೀದಿಗೆ ಅಗ್ರಹಿಸಿ ರೈತರು ನಡೆಸುತ್ತಿದ್ದ ಧರಣಿ, ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಸೋಮವಾರ  ಶಾಸಕ ಎನ್.ಎಚ್.ಕೋನರಡ್ಡಿ ಹಾಗೂ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಭೇಟಿ ನೀಡಿ ರೈತರೊಂದಿಗೆ ಚರ್ಚಿಸಿದರು. ಸರಕಾರದಿಂದ ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿಸಲು ಸರಕಾರ ಮಟ್ಟದಲ್ಲಿ ಚರ್ಚಿಸಿ, ಕ್ರಮವಹಿಸಲಾಗುತ್ತಿದೆ. ಸ್ವಲ್ಪ ದಿನಗಳ ಕಾಲಾವಕಾಶ ನೀಡಿ, ಉಪವಾಸ ಸತ್ಯಾಗ್ರಹ, ಧರಣಿ ಹಿಂಪಡೆಯುವಂತೆ ಶಾಸಕರು ಮತ್ತು ಜಿಲ್ಲಾಧಿಕಾರಿ ಮಾಡಿದ ಮನವಿ ಪರಗಣಿಸಿ, ರೈತರು ಎಳನೀರು ಸೇವಿಸುವ ಮೂಲಕ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿ, ಧರಣಿ ಹಿಂಪಡೆದರು. ಈ ಸಂದರ್ಭದಲ್ಲಿ ಶಾಸಕ ಎನ್.ಎಚ್.ಕೋನರಡ್ಡಿ ಮಾತನಾಡಿ, ಸರಕಾರದ ಮಟ್ಟದಲ್ಲಿ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಗೋವಿನ ಜೋಳದ ಖರೀದಿ ಬಗ್ಗೆ ಮಾತನಾಡಿದ್ದೇನೆ. ಕೇಂದ್ರ ಸರಕಾರ ಅನುಮತಿ ಕೊಡಲಿ ಬಿಡಲಿ ಗೋವಿನ ಜೋಳ ಖರೀದಿಗೆ ಸರಕಾರ ಬದ್ಧವಾಗಿದೆ. ಸಚಿವರಾದ ಎಚ್.ಕೆ.ಪಾಟೀಲ್ ಹಾಗೂ ಚಲವರಾಯಸ್ವಾಮಿ ಅವರನ್ನು ದಿಲ್ಲಿಗೆ ಕಳುಹಿಸಿ, ಗೊಂದಲಗಳನ್ನು ಸರಿಪಡಿಸಲು ಮುಖ್ಯಮಂತ್ರಿ ಸೂಚಿಸಿದ್ದಾರೆ. ಶೀಘ್ರದಲ್ಲೆ ಖರೀದಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಭರವಸೆ ನೀಡಿದರು. ಜಿಲ್ಲಾಧಿಕಾರಿ ದಿವ್ಯಾ ಪ್ರಭು ಮಾತನಾಡಿ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ..ಶಾಲನಿ ರಜನೀಶ್ ಹಾಗೂ ಹಿರಿಯ ಅಧಿಕಾರಿಗಳು, ಮೆಕ್ಕೆಜೋಳ ಖರೀದಿಗೆ ಅಗತ್ಯವಿರುವ ಕ್ರಮಕೈಗೊಳ್ಳಲು ನಿರಂತರ ಪ್ರಯತ್ನ ಮಾಡುತ್ತಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಬೆಳೆ ಹಾನಿ ಸಮೀಕ್ಷೆ ಮಾಡಿ ನವಲಗುಂದ ತಾಲೂಕಿಗೆ ಆದ್ಯತೆ ಮೇರೆಗೆ ಪರಿಹಾರ ನೀಡಿದ್ದು, ಇನ್ನೊಂದು ಹಂತದಲ್ಲಿ ಪರಿಹಾರ ಸಿಗಲಿದೆ ಎಂದು ರೈತರಿಗೆ ತಿಳಿಸಿದರು. ಧಾರವಾಡ ಜಿಲ್ಲೆಯಲ್ಲಿ 95 ಸಾವಿರ ಹೆಕ್ಟರ್ ಬೆಳೆ ನಷ್ಟವಾಗಿದೆ. ಜಿಲ್ಲಾಡಳಿತವು 2 ಸಾರಿ ಪಟ್ಟಿಯನ್ನು ಸಿದ್ಧಪಡಿಸಿದೆ. ಈಗಾಗಲೇ 65 ಕೋಟಿ ರೂ. ಮೊತ್ತವನ್ನು ರೈತರಿಗೆ ಜಮಾ ಮಾಡಲಾಗಿದೆ. ಇನ್ನೂ ಅನುದಾನ ಬರುವುದು ಇದೆ. ನಂತರ ಅದನ್ನು ಸಹ ತಕ್ಷಣವೇ ನೇರವಾಗಿ ರೈತರ ಖಾತೆಗೆ ಜಮಾ ಮಾಡುತ್ತೇವೆ ಎಂದು ಅವರು ಹೇಳಿದರು. ಶಾಸಕರು ಹಾಗೂ ಜಿಲ್ಲಾಧಿಕಾರಿ ಮನವಿಗೆ ಸ್ಪಂದಿಸಿ ರೈತ ಸೇನಾ ರಾಜ್ಯಾಧ್ಯಕ್ಷ ಶಂಕರ ಅಂಬಲಿ ಮಾತನಾಡಿ, ನಿಮ್ಮ ಮೇಲೆ ನಂಬಿಕೆ ಇಟ್ಟು ಕಾಲವಕಾಶ ನೀಡುತ್ತೇವೆ. ಭರವಸೆ ಭರವಸೆಯಾದರೆ ಮತ್ತೆ ಹೋರಾಟ ಮಾಡುತ್ತೇವೆ ಎಂದರು. ಈ ಸಂದರ್ಭದಲ್ಲಿ ರೈತ ಮುಖಂಡರಾದ ಲೋಕನಾಥ ಹೆಬಸೂರು, ರಘುನಾಥ ನಡುವಿನಮನಿ, ರಾಮದುರ್ಗ ರೈತ ಹೋರಾಟಗಾರ ಶಂಕರಗೌಡ ಪಾಟೀಲ್, ಆನಂದ ಹವಳಕೋಡ, ದೇವೆಂದ್ರಪ್ಪ ಹಳ್ಳದ, ಜೀವನ್ ಪವಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಂ.ಹೊನಕೇರಿ, ತಹಶೀಲ್ದಾರ್ ಸುಧೀರ್ ಸಾಹುಕಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 24 Nov 2025 9:58 pm

ಕರ್ನಾಟಕ ಹೈಕೋರ್ಟ್‌ನ ಬೆಂಗಳೂರಿನ ಪ್ರಧಾನ ಪೀಠ ಸ್ಥಳಾಂತರಕ್ಕೆ ವಕೀಲರ ಸಂಘ ನಿರ್ಣಯ! ಯಾವ ಸ್ಥಳ ಆಯ್ಕೆ?

ಬೆಂಗಳೂರು ವಕೀಲರ ಸಂಘವು ಹೈಕೋರ್ಟ್‌ನ ಪ್ರಧಾನ ಪೀಠವನ್ನು ಬೆಂಗಳೂರಿನ ಹೃದಯ ಭಾಗಕ್ಕೆ ಸ್ಥಳಾಂತರಿಸಲು ನಿರ್ಣಯಿಸಿದೆ. ಭ್ರಷ್ಟಾಚಾರ ತಡೆಗಟ್ಟಲು, ನ್ಯಾಯಮೂರ್ತಿಗಳ ವರ್ಗಾವಣೆ ಸ್ಥಗಿತಗೊಳಿಸಲು, ಹಾಗೂ ಹೈಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆಯನ್ನು 100ಕ್ಕೆ ಏರಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ.

ವಿಜಯ ಕರ್ನಾಟಕ 24 Nov 2025 9:51 pm

ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ನೇತೃತ್ವದ ನಿಯೋಗದಿಂದ ಇಂಗ್ಲೆಂಡ್ ಪ್ರವಾಸ

ಮೊದಲ ದಿನ ಮಾರ್ಟಿನ್ ಬೇಕರ್ ಸಹಿತ 7 ಕಂಪೆನಿ ಜತೆ ಹೂಡಿಕೆ ಮಾತುಕತೆ

ವಾರ್ತಾ ಭಾರತಿ 24 Nov 2025 9:48 pm

ಮುಹಮ್ಮದ್ ಸಿರಾಜ್ ರ ವೇಗದ ಥ್ರೋ ಕೈಚೆಲ್ಲಿದ ಪಂತ್; ಕೆ.ಎಲ್.ರಾಹುಲ್ ಪ್ರತಿಕ್ರಿಯೆ ಹೀಗಿತ್ತು…

ಗುವಾಹಟಿ: ಇಲ್ಲಿನ ಬರ್ಸಪಾರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ದ್ವಿತೀಯ ಟೆಸ್ಟ್ ನ ಮೂರನೆಯ ದಿನದಾಟದಲ್ಲಿ ಭಾರತದ ಬ್ಯಾಟರ್ ಗಳ ದಯನೀಯ ವೈಫಲ್ಯ ಮತ್ತೊಮ್ಮೆ ಮುಂದುವರಿಯಿತು. ಗಾಯಕ್ಕೆ ಉಪ್ಪು ಸವರಿದಂತೆ, ಭಾರತದ ಬೌಲರ್ ಗಳನ್ನು ದಕ್ಷಿಣ ಆಫ್ರಿಕಾದ ಆರಂಭಿಕ ಬ್ಯಾಟರ್ ಗಳಾದ ಏಡನ್ ಮರ್ಕ್ರಮ್ ಹಾಗೂ ರಯಾನ್ ರಿಕೆಲ್ಟನ್ ಮತ್ತೊಮ್ಮೆ ಕಾಡಿದರು. ಇದು ಸಹಜವಾಗಿಯೇ ಆತಿಥೇಯ ತಂಡದ ಆಟಗಾರರಲ್ಲಿ ಮತ್ತಷ್ಟು ಹತಾಶ ಭಾವನೆ ಮೂಡಿಸಿತು. ಈ ಹತಾಶ ಭಾವನೆ ಸ್ಪಷ್ಟವಾಗಿ ಕಂಡು ಬಂದಿದ್ದು ಭಾರತ ತಂಡದ ವೇಗಿ ಮುಹಮ್ಮದ್ ಸಿರಾಜ್ ರಲ್ಲಿ. ದಿನದಾಟದ ಅಂತಿಮ ಓವರ್ ಬೌಲ್ ಮಾಡುವ ಹೊಣೆಯನ್ನು ನಾಯಕ ರಿಷಭ್ ಪಂತ್, ಎಡಗೈ ಸ್ಪಿನ್ನರ್ ಕುಲದೀಪ್ ಯಾದವ್ ಗೆ ವಹಿಸಿದರು. ಕುಲದೀಪ್ ಯಾದವ್ ಎಸೆದ ಬಾಲ್ ಅನ್ನು ದಕ್ಷಿಣ ಆಫ್ರಿಕಾ ತಂಡದ ಬ್ಯಾಟರ್ ರಯಾನ್ ರಿಕಲ್ಟನ್ ಲಾಂಗ್ ಆಫ್ ನತ್ತ ಬಾರಿಸಿದರು. ಆ ಬಾಲನ್ನು ಹಿಡಿದ ಮುಹಮ್ಮದ್ ಸಿರಾಜ್, ಅದನ್ನು ವಿಕೆಟ್ ಕೀಪರ್ ರಿಷಭ್ ಪಂತ್ ರತ್ತ ವೇಗವಾಗಿ ಎಸೆದರು. ಹಾಗೆ ವೇಗವಾಗಿ ಎಸೆದ ಬಾಲ್ ಅನ್ನು ಹಿಡಿತಕ್ಕೆ ತೆಗೆದುಕೊಳ್ಳುವಲ್ಲಿ ರಿಷಭ್ ಪಂತ್ ವಿಫಲರಾದರು. ಆಗ ಬ್ಯಾಕಪ್ ನಲ್ಲಿದ್ದ ಕೆ.ಎಲ್.ರಾಹುಲ್ ಆ ಬಾಲ್ ಅನ್ನು ಹಿಡಿಯುವಲ್ಲಿ ಯಶಸ್ವಿಯಾದರು. ಆದರೆ, ಮುಹಮ್ಮದ್ ಸಿರಾಜ್ ಎಸೆದ ಬಾಲ್ ನಿಂದ ಅತೃಪ್ತರಾದಂತೆ ಕಂಡು ಬಂದ ಕೆ.ಎಲ್.ರಾಹುಲ್, ಅವರತ್ತ ನೋಡುತ್ತಾ “ಸಮಾಧಾನ” ಎಂದು ಹೇಳಿದ್ದು ಕಂಡು ಬಂದಿತು. ನಂತರ, ಇಬ್ಬರೂ ಪರಸ್ಪರ ತೆಳು ನಗೆಯನ್ನು ವಿನಿಮಯ ಮಾಡಿಕೊಂಡು ಹಗುರಾದರು. ಪ್ರಥಮ ಟೆಸ್ಟ್ ನಂತೆಯೇ ದ್ವಿತೀಯ ಟೆಸ್ಟ್ ನಲ್ಲೂ ಭಾರತೀಯ ಬ್ಯಾಟರ್ ಗಳು ದಯನೀಯವಾಗಿ ವಿಫಲಗೊಂಡರು. ಇದರೊಂದಿಗೆ ಬೌಲಿಂಗ್ ಪಡೆಯೂ ವಿಫಲಗೊಂಡಿದ್ದರಿಂದ, ಭಾರತ ತಂಡದ ಹತಾಶೆ ಮುಗಿಲು ಮುಟ್ಟಿತು. ದಕ್ಷಿಣ ಆಫ್ರಿಕಾ ತಂಡ ಪ್ರಥಮ ಇನಿಂಗ್ಸ್ ನಲ್ಲಿ ಪೇರಿಸಿದ 489 ರನ್ ಗಳಿಗೆ ಪ್ರತಿಯಾಗಿ, ಭಾರತ ತಂಡ ಕೇವಲ 201 ರನ್ ಗಳಿಗೆ ತನ್ನೆಲ್ಲ ವಿಕೆಟ್ ಗಳನ್ನು ಕಳೆದುಕೊಂಡಿತು. ಆದರೆ, ಭಾರತ ತಂಡಕ್ಕೆ ಫಾಲೋ ಆನ್ ಹೇರದ ದಕ್ಷಿಣ ಆಫ್ರಿಕಾ ತಂಡ ದಿನದಾಂತ್ಯಕ್ಕೆ ಯಾವುದೇ ವಿಕೆಟ್ ನಷ್ಟವಿಲ್ಲದೆ 26 ರನ್ ಗಳಿಸಿದೆ. ದ್ವಿತೀಯ ಟೆಸ್ಟ್ ನಲ್ಲೂ ಕೂಡಾ ದಕ್ಷಿಣ ಆಫ್ರಿಕಾ ತಂಡ ಮೇಲುಗೈ ಸಾಧಿಸುವ ಎಲ್ಲ ಲಕ್ಷಣಗಳೂ ಪಂದ್ಯದ ಮೂರನೆಯ ದಿನದಂದು ವ್ಯಕ್ತವಾಗಿದೆ. ಇದು ಸಹಜವಾಗಿಯೇ ಭಾರತ ತಂಡದ ಆಟಗಾರರು ಹಾಗೂ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.

ವಾರ್ತಾ ಭಾರತಿ 24 Nov 2025 9:43 pm

ಉಡುಪಿ: ನ.25ರಿಂದ ಕಿಶೋರ ಯಕ್ಷಗಾನ ಸಂಭ್ರಮ-2025 ಪ್ರಾರಂಭ

ಉಡುಪಿ: ಉಡುಪಿ ಜಿಲ್ಲೆಯ 94 ಪ್ರೌಢಶಾಲೆಗಳ ಯಕ್ಷಗಾನ ಪ್ರದರ್ಶನವು ನ.25ರಿಂದ ಪ್ರಾರಂಭಗೊಂಡು ಡಿಸೆಂಬರ್ 31ರ ವರೆಗೆ ಉಡುಪಿ, ಕಾಪು, ಕುಂದಾಪುರ ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಥಳೀಯ ಶಾಸಕರ ಸಹಕಾರದೊಂದಿಗೆ ನಡೆಯಲಿದೆ. ಈ ಬಾರಿಯ ಯಕ್ಷ ಸಂಭ್ರಮ ಜಿಲ್ಲೆಯ 12 ಕಡೆಗಳಲ್ಲಿ ಪ್ರದರ್ಶನ ಗೊಳ್ಳಲಿದೆ. ಈ ಬಾರಿ 41 ಗುರುಗಳು ಯಕ್ಷಗಾನವನ್ನು ಕಲಿಸುತ್ತಿದ್ದು, 3000ಕ್ಕೂ ಮೇಲ್ಪಟ್ಟು ವಿದ್ಯಾರ್ಥಿಗಳು ಈ ಅಭಿಯಾನದಲ್ಲಿ ಪಾಲ್ಗೊಳ್ಳಲಿರುವರು. ಈ ಬಾರಿಯ ಕಿಶೋರ ಯಕ್ಷ ಸಂಭ್ರಮದ ಉದ್ಘಾಟನೆ ನಾಳೆ ಸಂಜೆ 6:30ಕ್ಕೆ ಬ್ರಹ್ಮಾವರ ಬಂಟರ ಭವನದ ಮುಂಭಾಗದಲ್ಲಿ ನಡೆಯಲಿದೆ. ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ವಿದ್ಯಾರ್ಥಿಗಳ ಯಕ್ಷಗಾನ ಉದ್ಘಾಟಿಸಲಿದ್ದಾರೆ. ಸಂಸ್ಥೆಯ ಅಧ್ಯಕ್ಷ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಸ್ಥಳೀಯ ಗಣ್ಯರಾದ ಬಿ.ಭುಜಂಗ ಶೆಟ್ಟಿ, ಬಿಜು ಜಿ.ನಾಯರ್, ಬಿ.ಎನ್. ಶಂಕರ ಪೂಜಾರಿ, ಜ್ಞಾನವಸಂತ ಶೆಟ್ಟಿ, ಬೈಕಾಡಿ ಸುಪ್ರಸಾದ ಶೆಟ್ಟಿ, ಧನಂಜಯ ಅಮೀನ್, ಅಶೋಕ್‌ಕುಮಾರ್ ಶೆಟ್ಟಿ ಮೈರ್ಮಾಡಿ, ರಾಜೇಶ್ ಶೆಟ್ಟಿ ಬಿರ್ತಿ, ಪ್ರತಾಪ್ ಹೆಗ್ಡೆ ಮಾರಾಳಿ ಉಪಸ್ಥಿತರಿರುವರು ಎಂದು ಯಕ್ಷ ಶಿಕ್ಷಣ ಟ್ರಸ್ಟ್‌ನ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ. ಉದ್ಘಾಟನೆಯ ಬಳಿಕ ಎಸ್‌ಎಂಎಸ್ ಇಂಗ್ಲೀಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಂದ ‘ವೀರ ವೃಷಸೇನ’ ಯಕ್ಷಗಾನ ನರಸಿಂಹ ತುಂಗರ ನಿರ್ದೇಶನದಲ್ಲಿ ಪ್ರದರ್ಶನಗೊಳ್ಳಲಿದೆ.

ವಾರ್ತಾ ಭಾರತಿ 24 Nov 2025 9:42 pm

ಬೀದರ್ | ಡಾ.ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ ಕಾರ್ಯಕ್ರಮ ಆಯೋಜನಾ ಸಮಿತಿಗೆ ಪದಾಧಿಕಾರಿಗಳ ನೇಮಕ

ಬೀದರ್ : ಡಿ.6 ರಂದು ಆಯೋಜಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ ಕಾರ್ಯಕ್ರಮದ ಆಯೋಜನಾ ಸಮಿತಿಗೆ ಇಂದು ಪದಾಧಿಕಾರಿಗಳ ನೇಮಿಸಲಾಯಿತು ಎಂದು ಶಿವಕುಮಾರ್ ನಿಲಿಕಟ್ಟಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇಂದು ಮುಂಜಾನೆ 11 ಗಂಟೆಗೆ ನಗರದ ಶಾಹಗಂಜ್ ನ ಡಾ.ಅಂಬೇಡ್ಕರ್ ಭವನದಲ್ಲಿ ನಡೆದ ವಿವಿಧ ದಲಿತ ಸಂಘಟನೆಗಳ ಮುಖಂಡರು, ಹೋರಾಟಗಾರರು, ಚಿಂತಕರು ಮತ್ತು ಡಾ.ಅಂಬೇಡ್ಕರ್ ಅವರ ಅನುಯಾಯಿಗಳ ನೇತೃತ್ವದಲ್ಲಿ, ಸಮಾಜ ಸೇವಕ ಈಶ್ವರ್ ಕನ್ನೇರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು ಎಂದು ಮಾಹಿತಿ ನೀಡಿದ್ದಾರೆ. ಅಧ್ಯಕ್ಷರಾಗಿ ರಮೇಶ ಡಾಕುಳಗಿ, ಕಾರ್ಯಾಧ್ಯಕ್ಷರಾಗಿ ಮಹೇಶ್ ಗೋರನಾಳಕರ್, ಗೌರವಾಧ್ಯಕ್ಷರಾಗಿ ಪ್ರಕಾಶ್ ಮಾಳಗೆ, ಪ್ರಧಾನ ಕಾರ್ಯದರ್ಶಿಯಾಗಿ ಶಿವಕುಮಾರ್ ನಿಲಿಕಟ್ಟಿ, ಕಾರ್ಯದರ್ಶಿಗಳಾಗಿ ವಿನಯಕುಮಾರ್ ಮಾಳಗೆ ಹಾಗೂ ಸಾಯಿ ಶಿಂದೆ ಅವರನ್ನು ನೇಮಕ ಮಾಡಲಾಗಿದೆ. ಸಲಹೆಗಾರರಾಗಿ ಅನೀಲಕುಮಾರ ಬೆಲ್ದಾರ, ಮಾರುತಿ ಬೌಧ್ದೆ, ಬಾಬುರಾವ ಪಾಸ್ವಾನ, ಬಕ್ಕಪ್ಪಾ ದಂಡಿನ, ಅಶೋಕ ಮಾಳಗೆ, ಶ್ರೀಪತರಾವ ದೀನೆ, ಡಾ.ಕಾಶಿನಾಥ ಚೆಲ್ವಾ, ವಿಠಲದಾಸ ಪ್ಯಾಗೆ, ಅಂಬಾದಾಸ ಗಾಯಕವಾಡ, ಈಶ್ವರಪ್ಪಾ ಗಾಯಕವಾಡ ಹಾಗೂ ದಶರಥ ಗುರು ಅವರನ್ನು ನೇಮಿಸಲಾಗಿದೆ. ಉಪಾಧ್ಯಕ್ಷರಾಗಿ ಮಾರುತಿ ಕಂಟಿ, ಬಾಬುರಾವ್ ಮಿಠಾರೆ, ಸುನೀಲ್ ಸಂಗಮ್, ಜಗನಾಥ ಗಾಯಕವಾಡ, ರಮೇಶ ಮಂದಕನಳ್ಳಿ, ರಮೇಶ ಪಾಸ್ವಾನ, ಮೊಗಲಪ್ಪಾ ಮಾಳಗೆ, ಸಂದೀಪ ಕಾಂಟೆ, ಪ್ರದೀಪ ನಾಟೆಕರ್, ಪ್ರಸನ್ನ ಡಾಂಗೆ, ಮುಕೇಶ ರಾಯ್, ಶಾಲಿವಾನ ಬಡಿಗೆರ್, ಪುಟ್ಟರಾಜ ದೀನೆ, ನಾಗೇಶ ಸಾಗರ,ವಿನೋದ ಅಪ್ಪೆ, ಅವಿನಾಶ್ ದೀನೆ, ಸಂಜುಕುಮಾರ ಸಾಗರ, ನರಸಿಂಗ ಸಾಮ್ರಾಟ, ಸತೀಶ್ ಲಕ್ಕಿ, ಅಂಬೇಡ್ಕರ್ ಸಾಗರ, ಅರುಣ ಪಟೇಲ್, ಅಜಯ ದೀನೆ, ಪವನ ಮಿಠಾರೆ, ರಾಹುಲ್ ಡಾಂಗೆ, ಪ್ರಕಾಶ ರಾವಣ ಅವರನ್ನು ನೇಮಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಡಿ.6 ರಂದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ನಿಮಿತ್ತ ಬೀದರ್ ನ ಅಂಬೇಡ್ಕರ್ ವೃತ್ತದಲ್ಲಿ ಮುಂಜಾನೆ 9 ಗಂಟೆಗೆ ಜಿಲ್ಲಾಡಳಿತ ಮತ್ತು ಮಹಾಪರಿನಿರ್ವಾಣ ಕಾರ್ಯಕ್ರಮ ಆಯೋಜನಾ ಸಮಿತಿ ವತಿಯಿಂದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಲಾಗುವುದು. ಮುಂಜಾನೆ 11 ಗಂಟೆಗೆ ಅಂಬೇಡ್ಕರ್ ವೃತ್ತದ ಎದುರಿಗೆ ಭೀಮ ಗೀತೆಗಳ ಗಾಯನ ಮತ್ತು ನುಡಿನಮನ ಕಾರ್ಯಕ್ರಮ ನಡೆಯುತ್ತದೆ. ಸಂಜೆ 5 ಗಂಟೆಗೆ ಪ್ರತಿವರ್ಷದಂತೆ ನಡೆಯುವ ಬೃಹತ್ ಬಹಿರಂಗ ಸಭೆಯಲ್ಲಿ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಚಿಂತಕರನ್ನು ಅತಿಥಿಗಳಾಗಿ ಆಹ್ವಾನಿಸಲು ತಿರ್ಮಾನಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ವಾರ್ತಾ ಭಾರತಿ 24 Nov 2025 9:38 pm

Mangaluru| ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು

ಮಂಗಳೂರು: ರಾ.ಹೆ.75ರ ಅಡ್ಯಾರ್-ವಳಚ್ಚಿಲ್ ಮಧ್ಯೆ ಇರುವ ಸೋಮನಾಥ ಕಟ್ಟೆಯ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅಡ್ಯಾರ್ ಕಣ್ಣೂರು ನಿವಾಸಿ ಇಕ್ಬಾಲ್ (42) ಎಂಬವರು ಮೃತರಾಗಿದ್ದಾರೆ. ಇಕ್ಬಾಲ್ ಅವರು ದ್ವಿಚಕ್ರ ವಾಹನದಲ್ಲಿ ವಳಚ್ಚಿಲ್‌ನಿಂದ ಸೋಮನಾಥ ಕಟ್ಟೆ ಬಳಿ ಬರುವಾಗ ಪಂಪ್‌ವೆಲ್‌ನಿಂದ ವಳಚ್ಚಿಲ್‌ನತ್ತ ತೆರಳುತ್ತಿದ್ದ ಬೈಕ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಗಂಭೀರ ಗಾಯಗೊಂಡ ಇಕ್ಬಾಲ್‌ರನ್ನು ತಕ್ಷಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಪ್ರಕರಣ ದಾಖಲಿಸಿಕೊಂಡಿರುವ ಸಂಚಾರ ದಕ್ಷಿಣ ಠಾಣೆಯ ಪೊಲೀಸರು ತಿಳಿಸಿದ್ದಾರೆ. ಕಲ್ಲಾಪು ಗ್ಲೋಬಲ್ ಮಾರ್ಕೆಟ್‌ನಲ್ಲಿ ದುಡಿಯುತ್ತಿದ್ದ ಇಕ್ಬಾಲ್ ಅವರು ಪತ್ನಿ, ಪುತ್ರಿ ಮತ್ತು ಇಬ್ಬರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ವಾರ್ತಾ ಭಾರತಿ 24 Nov 2025 9:37 pm

ಕಲಬುರಗಿ | ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಏಕತಾ ದಿನಾಚರಣೆ ಅಂಗವಾ ಜಿಲ್ಲಾ ಮಟ್ಟದ ಪಾದಯಾತ್ರೆ

ಕಲಬುರಗಿ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಕಲಬುರಗಿಯಲ್ಲಿ ಜಿಲ್ಲಾ ಮಟ್ಟದ ಪಾದಯಾತ್ರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ. ನಮೋಶಿ ಅವರು ಸರ್ದಾರ್ ಪಟೇಲ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, “ದೇಶದ ವಿವಿಧ ಸಂಸ್ಥಾನಗಳನ್ನು ಭಾರತೀಯ ಒಕ್ಕೂಟಕ್ಕೆ ವಿಲೀನಗೊಳಿಸುವಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಮಹತ್ವದ ಪಾತ್ರ ವಹಿಸಿದ್ದಾರೆ. ಜುನಾಗಢ ಹಾಗೂ ಹೈದರಾಬಾದ್ ಸಂಸ್ಥಾನಗಳು ಒಕ್ಕೂಟಕ್ಕೆ ಸೇರ್ಪಡೆಗೆ ಹಿಂಜರಿದಾಗ, ಅವರು ದೃಢವಾದ ಕ್ರಮಗಳಿಂದ ಅವನ್ನು ಭಾರತೀಯ ಒಕ್ಕೂಟಕ್ಕೆ ಸೇರಿಸಿದರು,” ಎಂದು ಹೇಳಿದರು. ಕಲಬುರಗಿ ಲೋಕಸಭಾ ಮಾಜಿ ಸದಸ್ಯ ಡಾ. ಉಮೇಶ ಜಾಧವ್ ಮಾತನಾಡಿ, “ಸರ್ದಾರ್ ಪಟೇಲ್ ಅವರ ಜನ್ಮದಿನವನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ಏಕತಾ ದಿನವಾಗಿ ಘೋಷಿಸಿದೆ. ಸರ್ಕಾರದ ಕಾರ್ಯಕ್ರಮವಾಗಿರುವುದರಿಂದ ಎಲ್ಲರೂ ಒಂದಾಗಿ ಭಾಗವಹಿಸಿ ರಾಷ್ಟ್ರದ ಏಕತೆಯನ್ನು ಬಲಪಡಿಸಬೇಕು, ಎಂದು ಹೇಳಿದರು. ಇತಿಹಾಸ ತಜ್ಞ ಡಾ. ಎನ್.ಎಸ್. ಜಾಧವ್ ಅವರು ಸರ್ದಾರ್ ಪಟೇಲ್ ಅವರ ಅಖಂಡ ಭಾರತ ನಿರ್ಮಾಣದಲ್ಲಿ ವಹಿಸಿದ ಪಾತ್ರದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಈ ಮೊದಲು, ಜಗತ್ ವೃತ್ತದಲ್ಲಿ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಡೊಳ್ಳು ಕುಣಿತದೊಂದಿಗೆ ಪಾದಯಾತ್ರೆ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತಕ್ಕೆ ತೆರಳಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು. ನಂತರ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಸಮಾರೋಪ ಕಾರ್ಯಕ್ರಮ ನಡೆಯಿತು. ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ನಗರಾಧ್ಯಕ್ಷ ಚಂದು ಪಾಟೀಲ್, ವಿಶ್ವವಿದ್ಯಾಲಯದ ಎನ್.ಎಸ್.ಎಸ್. ಅಧಿಕಾರಿ ಹಣಮಂತ ಜಂಗೆ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ತರಬೇತಿದಾರ ಸಂಜಯ ಬಾಣದ, ಮೇರಾ ಯುವ ಭಾರತ ಜಿಲ್ಲಾ ಯುವ ಅಧಿಕಾರಿ ಮಯೂರ ಕುಮಾರ ಗೋರ್ಮೆ, ಬಿಜೆಪಿ ಜಿಲ್ಲಾಧ್ಯಕ್ಷ ಅಶೋಕ ಬಗಲಿ, ನಿತೀನ್ ಗತ್ತೇದಾರ, ಸಂಗಮೇಶ ವಾಲಿ, ಉಮೇಶ ಪಾಟೀಲ, ಮಹಾದೇವ ಬೆಳಮಗಿ, ಚನ್ನಬಸಪ್ಪಾ ಭಂಗೆ, ಮಹೇಶ ಚವ್ಹಾಣ, ನಾಗಪ್ಪಾ ಕೊಳ್ಳಿ, ಮಹೇಂದ್ರ ಪೂಜಾರಿ, ಸಂತೋಷ್ ಹಾದಿಮನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಎನ್.ಎಸ್.ಎಸ್. ಅಧಿಕಾರಿ ದಯಾನಂದ ಹೊಡಲ್ ನಿರೂಪಿಸಿದರು.  

ವಾರ್ತಾ ಭಾರತಿ 24 Nov 2025 9:28 pm

ನವೀಕರಿಸಿದ ಶಾಂತಿ ಯೋಜನೆಗೆ ಉಕ್ರೇನ್-ಅಮೆರಿಕ ಸಹಮತ: ಶ್ವೇತಭವನ ಹೇಳಿಕೆ

ಉಕ್ರೇನ್‌ ಗೆ ಭದ್ರತಾ ಖಾತರಿ ಬಲಪಡಿಸಲು ಆದ್ಯತೆ

ವಾರ್ತಾ ಭಾರತಿ 24 Nov 2025 9:27 pm

ತೇಜಸ್ ವಿಮಾನ ಪತನ ಅಪರೂಪದ ಘಟನೆ: HAL

ಹೊಸದಿಲ್ಲಿ, ನ. 24: ಇತ್ತೀಚೆಗೆ ದುಬೈಯಲ್ಲಿ ನಡೆದ ವೈಮಾನಿಕ ಪ್ರದರ್ಶನದ ವೇಳೆ ತೇಜಸ್ ಯುದ್ಧವಿಮಾನ ಪತನಗೊಂಡಿರುವುದು ಒಂದು ಅಪರೂಪದ ಘಟನೆಯಾಗಿದೆ ಎಂದು ಯುದ್ಧವಿಮಾನದ ಉತ್ಪಾದನಾ ಕಂಪೆನಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಸೋಮವಾರ ಹೇಳಿದೆ. ‘‘ಊಹಿಸಲಾಗದ ಸನ್ನಿವೇಶಗಳಿಂದಾಗಿ ವಿಮಾನ ಪತನಗೊಂಡಿದೆ ಎಂಬುದಾಗಿ ‘ರಾಯ್ಟರ್ಸ್’ ವರದಿಯೊಂದು ತಿಳಿಸಿದೆ ಎಂದು HAL ಹೇಳಿತು. ಈ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡಲು ನಿರಾಕರಿಸಿತು. ಈ ಪತನವು ತನ್ನ ವ್ಯವಹಾರ ಅಥವಾ ಭವಿಷ್ಯದ ವಿತರಣೆಗಳ ಮೇಲೆ ಪರಿಣಾಮ ಬೀರುತ್ತದೆ ಎಂಬುದಾಗಿ ತಾನು ಭಾವಿಸುವುದಿಲ್ಲ ಎಂದು HAL ಹೇಳಿತು. ಯುದ್ಧವಿಮಾನ ಅಪಘಾತ ಕುರಿತ ತನಿಖೆಗೆ ಸಹಕಾರ ನೀಡುವುದಾಗಿ ಅದು ಹೇಳಿತು. ಶುಕ್ರವಾರ ದುಬೈ ವೈಮಾನಿಕ ಪ್ರದರ್ಶನದ ಸಂದರ್ಭದಲ್ಲಿ ಭಾರತದ ತೇಜಸ್ ಯುದ್ಧವಿಮಾನವು ನೆಲಕ್ಕೆ ಅಪ್ಪಳಿಸಿ ಬೆಂಕಿಯುಂಡೆಯಾಗಿ ಪರಿವರ್ತನೆಗೊಂಡಿತು. ಈ ದುರಂತದಲ್ಲಿ, ವಿಮಾನದಲ್ಲಿದ್ದ ಭಾರತೀಯ ವಾಯುಪಡೆ ಪೈಲಟ್ ವಿಂಗ್ ಕಮಾಂಡರ್ ನಮಾಂಶ್ ಸಯಾಲ್ ಮೃತಪಟ್ಟಿದ್ದಾರೆ. ಪ್ರಖರ ಚಲನೆ ಮತ್ತು ಸಾಹಸಿಕ ಹಾರಾಟಕ್ಕೆ ಹೆಸರಾಗಿರುವ 37 ವರ್ಷದ ಪೈಲಟ್ ತಗ್ಗಿನಲ್ಲಿ ಕಸರತ್ತು ನಡೆಸುತ್ತಿದ್ದಾಗ ದುರಂತ ಸಂಭವಿಸಿತ್ತು.

ವಾರ್ತಾ ಭಾರತಿ 24 Nov 2025 9:24 pm

ಕೆನಡಾದ `ಮೋಸ್ಟ್ ವಾಂಟೆಡ್' ಪಟ್ಟಿಯಲ್ಲಿದ್ದ ಭಾರತೀಯ ಮೂಲದ ವ್ಯಕ್ತಿಯ ಬಂಧನ

ಒಟ್ಟಾವ, ನ.24: ಕೆನಡಾದ `25 ಮೋಸ್ಟ್ ವಾಂಟೆಡ್' ಪಟ್ಟಿಯಲ್ಲಿದ್ದ ಭಾರತೀಯ ಮೂಲದ ನಿಕೋಲಸ್ ಸಿಂಗ್(24 ವರ್ಷ)ನನ್ನು ಗನ್ ಹಾಗೂ ಮದ್ದುಗುಂಡುಗಳ ಸಹಿತ ಟೊರಂಟೋದ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ದರೋಡೆ ಹಾಗೂ ಇತರ ಅಪರಾಧ ಕೃತ್ಯಗಳಿಗಾಗಿ ಈತನಿಗೆ ಕೆನಡಾದ ನ್ಯಾಯಾಲಯ 5 ವರ್ಷ 5 ತಿಂಗಳು 10 ದಿನಗಳ ಜೈಲುಶಿಕ್ಷೆ ವಿಧಿಸಿತ್ತು. ಆದರೆ ಪರೋಲ್ ಮೇಲೆ ಬಿಡುಗಡೆಗೊಂಡು ತಲೆಮರೆಸಿಕೊಂಡಿದ್ದ ನಿಕೋಲಸ್ ಸಿಂಗ್(24 ವರ್ಷ) ಶುಕ್ರವಾರ ಡ್ಯುಪೋಂಟ್ ರಸ್ತೆಯ ಬಳಿ ಇರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ವಾಹನದಲ್ಲಿದ್ದ ಸಿಂಗ್‍ ನನ್ನು ಬಂಧಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ `ಸಿಟಿ ನ್ಯೂಸ್' ವರದಿ ಮಾಡಿದೆ.

ವಾರ್ತಾ ಭಾರತಿ 24 Nov 2025 9:23 pm

ಮನೆಗಳ್ಳತನ ತಡೆಗೆ AI ತಂತ್ರಜ್ಞಾನದ ಮೊರೆ ಹೋದ ತುಮಕೂರು ಪೊಲೀಸರು! ಸೂಪರ್ ಆಗಿದೆ ‘ಲಾಕ್ಡ್ ಹೌಸ್ ಮಾನಿಟರಿಂಗ್ ಸಿಸ್ಟಂ’

ತುಮಕೂರು ಪೊಲೀಸರು ಮನೆಗಳ್ಳತನ ತಡೆಯಲು ಹೊಸ ಹೆಜ್ಜೆ ಇಟ್ಟಿದ್ದಾರೆ. ಲಾಕ್ಡ್ ಹೌಸ್ ಮಾನಿಟರಿಂಗ್ ಸಿಸ್ಟಂ (LHMS) ಮೂಲಕ ಬೀಗ ಹಾಕಿದ ಮನೆಗಳ ಮೇಲೆ ನಿಗಾ ಇಡಲಾಗುತ್ತದೆ. ದೂರ ಪ್ರಯಾಣ ಮಾಡುವವರು ಆ್ಯಪ್ ಮೂಲಕ ಮಾಹಿತಿ ನೀಡಿದರೆ, ಪೊಲೀಸರು ಸಿಸಿ ಕ್ಯಾಮರಾ ಅಳವಡಿಸುತ್ತಾರೆ. ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೆ ತಕ್ಷಣ ಎಚ್ಚರಿಕೆ ನೀಡಲಾಗುತ್ತದೆ. ಈ ವ್ಯವಸ್ಥೆ ರಾಜ್ಯದಲ್ಲೇ ಮೊದಲು ಜಾರಿಗೆ ಬಂದಿದೆ.

ವಿಜಯ ಕರ್ನಾಟಕ 24 Nov 2025 9:22 pm

ಬೆಂಗಳೂರು CMS ವಾಹನ ಮಹಾ ದರೋಡೆ: ಪೊಲೀಸರ ದಿಕ್ಕು ತಪ್ಪಿಸಲು 'ಇಮೋ' ಆ್ಯಪ್‌ ಬಳಕೆ! ಬಂಧಿತರ ಸಂಖ್ಯೆ 9ಕ್ಕೆ ಏರಿಕೆ

7.11 ಕೋಟಿ ರೂ. ದರೋಡೆ ಪ್ರಕರಣದಲ್ಲಿ ಪೊಲೀಸರು ದಿನೇಶ್‌ ಹಾಗೂ ಜಿನೇಶ್‌ ಎಂಬುವರನ್ನು ಬಂಧಿಸಿದ್ದು, ಒಟ್ಟು ಬಂಧಿತರ ಸಂಖ್ಯೆ 9ಕ್ಕೆ ಏರಿದೆ. ಆರೋಪಿಗಳು ಪೊಲೀಸರ ದಿಕ್ಕು ತಪ್ಪಿಸಲು 'ಇಮೋ' ಎಂಬ ಪ್ರತ್ಯೇಕ ಆ್ಯಪ್‌ ಬಳಸುತ್ತಿದ್ದರು. ದರೋಡೆಗೆ ಬಳಸಿದ ವಾಹನವನ್ನು ಕಾನ್‌ಸ್ಟೆಬಲ್‌ ಅಣ್ಣಪ್ಪ ನಾಯಕ್‌ ಒದಗಿಸಿದ್ದಾನೆ.

ವಿಜಯ ಕರ್ನಾಟಕ 24 Nov 2025 9:19 pm

ದೆಹಲಿ ವಾಯುಮಾಲಿನ್ಯ: ಉಗ್ರ ಸ್ವರೂಪ ಪಡೆದುಕೊಂಡ ಪ್ರತಿಭಟನೆ: ಪೊಲೀಸರ ಮೇಲೆ ಪೆಪ್ಪರ್ ಸ್ಪ್ರೇ!

Delhi Air Pollution: ದೆಹಲಿಯ ಇತಿಹಾಸದಲ್ಲೇ ಈ ಬಾರಿ ವಾಯುಮಾಲಿನ್ಯ ಪ್ರಮಾಣವು ತೀವ್ರ ಸ್ವರೂಪ ಪಡೆದುಕೊಂಡಿದೆ. ವಾಯುಮಾಲಿನ್ಯ ಹಾಗೂ ಮೂಲಸೌಕರ್ಯ ವಿಚಾರದಲ್ಲಿ ರಸ್ತೆಗೆ ಇಳಿಯದ ಜನ ಇದೀಗ ಬೀದಿಗೆ ಇಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಈ ಬಾರಿ ಪ್ರತಿಭಟನೆಯು ಬೇರೆ ಬೇರೆ ಕಾರಣಕ್ಕೆ ವಿವಾದ ಸ್ವರೂಪ ಪಡೆದುಕೊಂಡಿದೆ. ದೆಹಲಿಯಲ್ಲಿ ಸೋಮವಾರ ಇಂಡಿಯಾ ಗೇಟ್‌ನಲ್ಲಿ ವಾಯು ಮಾಲಿನ್ಯ ಹದಗೆಡುತ್ತಿರುವ

ಒನ್ ಇ೦ಡಿಯ 24 Nov 2025 9:07 pm

ದಂಪತಿ ನಡುವೆ ಕಲಹ | ʼಕ್ರೈಂ ಸೀನ್ʼ ಮರುಸೃಷ್ಠಿಯ ವೇಳೆ ಪತಿ ಕೈಗೆ ಪಿಸ್ತೂಲ್ ಕೊಟ್ಟು ಅತೀ ಬುದ್ದಿವಂತಿಕೆ ಮೆರೆದ UP ಪೊಲೀಸರು!

ಬುಲಂದ್ಶಹರ್ : ಉತ್ತರ ಪ್ರದೇಶದ ಬುಲಂದ್‌ ಶಹರ್‌ನ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದರಲ್ಲಿ ಪೊಲೀಸ್ ಅಧಿಕಾರಿಗಳು ದಂಪತಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಘಟನೆಯನ್ನು ಹೇಗೆ ವಿವರಿಸಬೇಕೆಂದು ಹೇಳುತ್ತಿರುವುದು, ಪತಿಯ ಬಂಧನಕ್ಕೆ ಸಂಬಂಧಿಸಿದ ಸಾಕ್ಷಿಗಳನ್ನು ಸಿದ್ಧಪಡಿಸುತ್ತಿರುವುದು ಕಂಡು ಬಂದಿದೆ. ಅಲ್ಲದೇ 4 ಕಾಡತೂಸುಗಳನ್ನೂ ಹಿಡಿದು ಆರೋಪಿತನಿಗೆ ತೋರಿಸಿದ್ದಾರೆ. ಇನ್ಸ್‌ಪೆಕ್ಟರ್‌ ಸಹೋದ್ಯೋಗಿಗಳಿಗೆ ಸಂಭಾಷಣೆಯನ್ನು ರೆಕಾರ್ಡ್ ಮಾಡಲು ನಿರ್ದೇಶಿಸುತ್ತಿರುವುದು ಕಂಡು ಬಂದ ನಂತರ ಪೊಲೀಸರು ಈ ಕುರಿತು ಅಧಿಕೃತ ತನಿಖೆಗೆ ಆದೇಶಿಸಿದ್ದಾರೆ. ಉತ್ತರ ಪ್ರದೇಶದ ಬುಲಂದ್ಶಹರ್‌ ನಲ್ಲಿ ನವೆಂಬರ್ 3ರಂದು, ಪೂಜಾ ಸೋಲಂಕಿ ಎಂಬಾಕೆ ತನ್ನ ಪತಿ ಅಜಯ್ ಪದೇ ಪದೇ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತು ಪರಿಶೀಲಿಸಲು ಅಧಿಕಾರಿಗಳು ಸ್ಥಳಕ್ಕೆ ತೆರಳಿದ್ದರು. ಮಾಹಿತಿಯ ಪ್ರಕಾರ, ಅಧಿಕಾರಿಗಳು ಪತಿ-ಪತ್ನಿಯ ಮಾತನ್ನು ಆಲಿಸಿದರು. ಹೊಸ ಕಾನೂನಿನ ಪ್ರಕಾರ ಮುಂದೇನು ಮಾಡಬೇಕು ಎಂದು ಮೇಲಾಧಿಕಾರಿಗಳಿಂದ ಮಾಹಿತಿ ಪಡೆದರು. ಬಂಧನಕ್ಕೆ ಮೊದಲು, ವೀಡಿಯೋ ದಾಖಲಾತಿ ಮಾಡಬೇಕೆಂಬ ಹೊಸ ನಿಯಮದಂತೆ, ದಂಪತಿಗೆ ಏನು ಹೇಳಬೇಕು ಎಂದು ಪೊಲೀಸರೇ ಸ್ಕ್ರಿಪ್ಟ್ ತಯಾರಿಸಿದರು. ವೀಡಿಯೋದಲ್ಲಿ ಪೊಲೀಸರು ದಂಪತಿಗೆ ಘಟನೆ ಬಗ್ಗೆ ಹೇಗೆ ವಿವರಿಸಬೇಕು ಎಂದು ಹೇಳುತ್ತಿರುವುದು ಮತ್ತು ಸಹೋದ್ಯೋಗಿಗಳಿಗೆ ಅದನ್ನು ಚಿತ್ರೀಕರಿಸುವಂತೆ ಸೂಚಿಸುತ್ತಿರುವುದು ಕಂಡು ಬಂದಿದೆ. ಮರುದಿನ ಅಜಯ್ ಸೋಲಂಕಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಯಿತು. ನವೆಂಬರ್ 7ರಂದು ಅವರನ್ನು ಬಿಡುಗಡೆ ಮಾಡಲಾಯಿತು. ನವೆಂಬರ್ 22ರಂದು ಸಾಮಾಜಿಕ ಮಾಧ್ಯಮಗಳಲ್ಲಿ ಈ ಕುರಿತ ವೀಡಿಯೊ ವೈರಲ್ ಆಗಿದೆ. ಹೊಸ ಕಾನೂನುಗಳು ಮತ್ತು ಕಾರ್ಯವಿಧಾನಗಳನ್ನು ಪಾಲಿಸುವ ಬಗ್ಗೆ ಕೆಲವು ಅಧಿಕಾರಿಗಳ ಅನುಭವದ ಕೊರತೆಯ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾಗಿದೆ.

ವಾರ್ತಾ ಭಾರತಿ 24 Nov 2025 9:06 pm

Bengaluru | ಪೊಲೀಸರ ಸೋಗಿನಲ್ಲಿ ಯುವತಿಯ ಕೊಠಡಿಗೆ ನುಗ್ಗಿ ಸುಲಿಗೆ; 6 ಮಂದಿ ಸೆರೆ

ಬೆಂಗಳೂರು : ಪೊಲೀಸರ ಸೋಗಿನಲ್ಲಿ ಯುವತಿಯೊಬ್ಬಳ ಕೊಠಡಿಗೆ ನುಗ್ಗಿ ಸುಲಿಗೆ ಮಾಡಿದ ಪ್ರಕರಣದಡಿ 6 ಮಂದಿ ಆರೋಪಿಗಳನ್ನು ಎಚ್‍ಎಎಲ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಮುಹಮ್ಮದ್ ನಜಾಶ್(24), ಸರುಣ್(38), ಬೆಂಗಳೂರಿನ ವಿಷ್ಣು ಕೆ.ಟಿ.(23), ದಿವಾಕರ್(34), ಮಧುಕುಮಾರ್(32) ಹಾಗೂ ಕಿರಣ್(29) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. ದೂರಿನ ವಿವರ: ನವೆಂಬರ್ 7ರಂದು ರಾತ್ರಿ ಮಾರತ್ ಹಳ್ಳಿಯ ಕೊಠಡಿಯೊಂದಕ್ಕೆ ನುಗ್ಗಿದ್ದ ಆರೋಪಿಗಳು, ಯುವತಿಯರ ಬಳಿಯಿದ್ದ ಎರಡು ಮೊಬೈಲ್ ಫೋನ್‍ಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ದೂರುದಾರ ಯುವತಿಗೆ ಟೀ ಅಂಗಡಿಯೊಂದರಲ್ಲಿ ಮುಹಮ್ಮದ್ ನಜಾಶ್ ಪರಿಚಯವಾಗಿತ್ತು. ನವೆಂಬರ್ 7ರಂದು ಆತನ ಹುಟ್ಟುಹಬ್ಬ ಇದ್ದಿದ್ದರಿಂದ ಆಚರಿಸಲು ದೂರುದಾರ ಯುವತಿ ತನ್ನ ಕೊಠಡಿಗೆ ಆಹ್ವಾನಿಸಿದ್ದಳು. ಅದರಂತೆ ಯುವತಿಯ ಕೊಠಡಿಗೆ ನಜಾಶ್ ತೆರಳಿದ್ದ. ಮನೆಯಲ್ಲಿದ್ದಾಗ ರಾತ್ರಿ 2 ಗಂಟೆಗೆ ಆರೋಪಿಗಳು ಬಾಗಿಲು ತಟ್ಟಿದ್ದರು. ಬಾಗಿಲು ತೆರೆಯುತ್ತಿದ್ದಂತೆ ತಾವು ಪೊಲೀಸರು ಎಂದು ಹೇಳುತ್ತ ಬೆದರಿಸಿದ್ದ ಆರೋಪಿಗಳು, ಮನೆಯಲ್ಲಿದ್ದ ಯುವತಿಯರ ಬಳಿಯಿದ್ದ ಎರಡು ಮೊಬೈಲ್ ಫೋನ್‍ಗಳನ್ನು ಕಿತ್ತುಕೊಂಡಿದ್ದರು. ಬಳಿಕ 5 ಲಕ್ಷ ಹಣ ನೀಡದಿದ್ದರೆ ಮತ್ತೊಮ್ಮೆ ಬರುವುದಾಗಿ ಬೆದರಿಸಿ ಪರಾರಿಯಾಗಿದ್ದರು ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ. ಸದ್ಯ, ಆರೋಪಿಗಳನ್ನು ಬಂಧಿಸಿ ತನಿಖೆ ಕೈಗೊಂಡಾಗ ಕೃತ್ಯದಲ್ಲಿ ಯುವತಿಯ ಪರಿಚಿತ ನಜಾಶ್‍ನ ಕೈವಾಡ ಇರುವುದು ಬೆಳಕಿಗೆ ಬಂದಿದೆ. ಆರೋಪಿಗಳ ಪೈಕಿ ಸರುಣ್ ಈ ಹಿಂದೊಮ್ಮೆ ಹನಿಟ್ರ್ಯಾಪ್ ಪ್ರಕರಣವೊಂದರಲ್ಲಿ ಬಂಧಿತನಾಗಿದ್ದ. ಸದ್ಯ ಆರು ಮಂದಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾರ್ತಾ ಭಾರತಿ 24 Nov 2025 9:00 pm

ರಾಯಚೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷ–ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ರಾಯಚೂರು: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ರಾಯಚೂರು ವತಿಯಿಂದ ಭಾನುವಾರ ನಗರದ ಕನ್ನಡ ಭವನದಲ್ಲಿ, ರಾಯಚೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನವಾಗಿ ಆಯ್ಕೆಯಾದ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಹಿರಿಯ ರಂಗಕರ್ಮಿ ವಿ.ಎನ್.ಅಕ್ಕಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ತನ್ನದೇ ಆದ ಘನತೆಯನ್ನು ಹೊಂದಿದ ಬಹು ದೊಡ್ಡ ಸಂಸ್ಥೆ. ಆ ಘನತೆಯನ್ನು ಎತ್ತಿ ಹಿಡಿಯುವ ಕೆಲಸವನ್ನು ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮಾಡಬೇಕು ಜೊತೆಗೆ ಮುಂದಿನ ದಿನಗಳಲ್ಲಿ ಉತ್ತಮವಾದ ಕಾರ್ಯಕ್ರಮಗಳನ್ನು ಆಯೋಜಿಸಿ ಪರಿಷತ್ತಿನ ಗೌರವವನ್ನು ಮತ್ತಷ್ಟು ಹೆಚ್ಚಿಸಿ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಂಗಣ್ಣ ಪಾಟೀಲ್ ಅಳ್ಳುಂಡಿ ಮಾತನಾಡಿ, ಈ‌ ಹಿಂದಿನ ಅಧ್ಯಕ್ಷರು ಉತ್ತಮವಾದ ಕೆಲಸವನ್ನು ಮಾಡಿ ಪರಿಷತ್ತಿಗೆ ಗೌರವವನ್ನು ತಂದುಕೊಟ್ಟಿದ್ದಾರೆ. ಅವರಂತೆ ನೀವು ಕೂಡ ಮುಂದಿನ ದಿನಗಳಲ್ಲಿ ಉತ್ತಮವಾದ ಕೆಲಸವನ್ನು ಮಾಡಿ ಪರಿಷತ್ತಿನ ಗೌರವವನ್ನು ಹೆಚ್ಚಿಸಬೇಕು ಎಂದರು. ಮುಂದಿನ ದಿನಗಳಲ್ಲಿ ಕಾರ್ಯಕ್ರಮದ ಕ್ರಿಯಾ ಯೋಜನೆಯನ್ನು ರೂಪಿಸಿ ಉತ್ತಮವಾದ ಕಾರ್ಯಕ್ರಮಗಳನ್ನು ಆಯೋಜಿಸಿ ಎಂದರು. ನಂತರ ನೂತನವಾಗಿ ಆಯ್ಕೆಯಾದ ರಾಯಚೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಬಿ.ವಿಜಯ ರಾಜೇಂದ್ರ ಅವರಿಗೆ ಪರಿಷತ್ತಿನ ಧ್ವಜವನ್ನು ನೀಡುವುದರ ಮೂಲಕ ಕಾರ್ಯಕ್ರಮಗಳನ್ನು ಆರಂಭಿಸಿ ಎಂದು ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನವಾಗಿ ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳಿಗೆ ಆದೇಶ ಪತ್ರವನ್ನು ನೀಡಲಾಯಿತು. ವೇದಿಕೆಯ ಮೇಲೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧ್ಯಕ್ಷರಾದ ನಾಗಪ್ಪ ಹೊರಪ್ಯಾಟಿ ಉಪಸ್ಥಿತರಿದ್ದರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾದ ರಾವುತ ರಾವ್ ಬರೂರ ಅವರು ಸರ್ವರನ್ನು ಸ್ವಾಗತಿಸಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಕೊನೆಯಲ್ಲಿ ಗೌರವ ಕಾರ್ಯದರ್ಶಿಗಳಾದ ಪ್ರತಿಭಾ ಗೋನಾಳ್ ಅವರು ಸರ್ವರಗೆ ವಂದಿಸಿದರು.

ವಾರ್ತಾ ಭಾರತಿ 24 Nov 2025 8:57 pm

ಗ್ಯಾರಂಟಿಯ ಸಮರ್ಪಕ ಅನುಷ್ಟಾನಕ್ಕೆ ‘ನಮ್ಮ ನಡಿಗೆ ವಾರ್ಡ್ ಕಡೆಗೆ’: ರಮೇಶ್ ಕಾಂಚನ್

ಉಡುಪಿ: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜನರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ‘ನಮ್ಮ ನಡಿಗೆ ವಾರ್ಡ್ ಕಡೆಗೆ’ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದ್ದಾರೆ. ಇಂದು ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರದ 35 ವಾರ್ಡ್‌ಗಳಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸದಸ್ಯರು ಮತ್ತು ಅಧಿಕಾರಿಗಳು ಮುಂದಾಗಬೇಕು ಎಂದವರು ಹೇಳಿದರು. ಉಡುಪಿ ತಾಲೂಕಿನ 16 ಗ್ರಾಮ ಪಂಚಾಯತ್‌ಗಳಲ್ಲಿ ನಮ್ಮ ನಡಿಗೆ ಪಂಚಾಯತ್ ಕಡೆಗೆ ಕಾರ್ಯಕ್ರಮ ಪೂರ್ಣಗೊಂಡಿದ್ದು, ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ನಡೆದಿರುವ ಬಗ್ಗೆ ಪರಿಶೀಲಿಸಲಾಗಿದೆ. ಮುಂದಿನ ದಿನಗಳಲ್ಲಿ ವಾರ್ಡ್‌ವಾರು ಪರಿಶೀಲನೆ ನಡೆಸಿ ಯೋಜನೆಗಳ ಅನುಷ್ಠಾನದಲ್ಲಿ ಫಲಾನುಭವಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದು ಎಂದರು. ಜಿಲ್ಲೆಯಲ್ಲಿ ಇದುವರೆಗೆ ಗೃಹಲಕ್ಷ್ಮಿ ಯೋಜನೆಯಡಿ ಜುಲೈ ತಿಂಗಳಿನವರೆಗೆ 1,67,57,30,000ರೂ. ನಗದು ಹಣ ಫಲಾನುಭವಿಗಳ ಖಾತೆಗೆ ಜಮೆ ಯಾಗಿದೆ. ಉಳಿದ ಕಂತುಗಳಿಗೆ ಸರಕಾರದಿಂದ ಅನುದಾನ ಬಿಡುಗಡೆ ಗೊಳಿಸಲಾಗಿದ್ದು ಆಗಸ್ಟ್ ತಿಂಗಳಿನಿಂದ ಬಾಕಿ ಇರುವ ಕಂತುಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷರು, ಗ್ಯಾರಂಟಿ ಯೋಜನೆಯ ಅರ್ಹತೆ ಹೊಂದಿದ್ದು, ಹಲವರಿಗೆ ಆದಾಯ ತೆರಿಗೆ ಮತ್ತು ಜಿಎಸ್‌ಟಿ ನೋಂದಣಿ ಕಾರಣಗಳಿಂದ ಯೋಜನೆಯ ನೆರವು ಸಿಗುತ್ತಿಲ್ಲ. ಈ ಬಗ್ಗೆ ಜಿಲ್ಲೆಯಿಂದ ರಾಜ್ಯಕ್ಕೆ ಪ್ರಸ್ತಾವನೆ ಕಳುಹಿಸಿ ಇಂತಹ ಫಲಾನುಭವಿಗಳಿಗೆ ವಿನಾಯತಿ ಪಡೆದು ಕೊಳ್ಳಬೇಕು. ಕುಟುಂಬ ಆ್ಯಪ್‌ನಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ಬಗೆ ಹರಿಸಬೇಕು. ಯೋಜನೆಗೆ ಹೆಚ್ಚಿನ ಪ್ರಚಾರ ನೀಡುವ ನಿಟ್ಟಿನಲ್ಲಿ ಎಲ್ಲ ನ್ಯಾಯ ಬೆಲೆ ಅಂಗಡಿಗಳಲ್ಲಿ ಫಲಕಗಳನ್ನು ಅಳವಡಿಸಬೇಕು ಎಂದರು. ಗೃಹ ಜ್ಯೋತಿ ಯೋಜನೆಯಡಿ ಪ್ರತಿ ತಿಂಗಳಿಗೆ ಸರಾಸರಿ 59,983 ಫಲಾನುಭಗಳಲ್ಲಿ 36,408 ಮಂದಿಗೆ ಶೂನ್ಯ ಬಿಲ್ ಬರುತ್ತಿದ್ದು 5,48,23,843 ರೂ. ಅನುದಾನದ ಲಾಭ ಪಡೆಯಲಾಗಿದೆ ಎಂದು ಮೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದರು. ಗ್ರಾಹಕರಿಗೆ 5-6 ತಿಂಗಳಿಗೊಮ್ಮೆ ವಿದ್ಯುತ್ ಬಿಲ್ ಬರುತ್ತಿದ್ದು ಪ್ರತಿ ತಿಂಗಳ ಬಿಲ್ ಆಯಾ ತಿಂಗಳಿನಲ್ಲಿ ನೀಡಬೇಕು. ಕೆಲವೊಂದು ಕಡೆ ನಿಗದಿತ ಯುನಿಟ್‌ಗಿಂತಲು ಕಡಿಮೆ ದ್ಯುತ್ ಬಳಕೆಯಾಗಿದ್ದರೂ ಬಿಲ್ ಬರುವ ಬಗ್ಗೆ ಸದಸ್ಯರು ಸಭೆಗೆ ತಿಳಿಸಿದಾಗ ಈ ರೀತಿ ಸಮಸ್ಯೆಗಳಾದಾಗ ಅಧಿಕಾರಿಗಳು ಮುತುವರ್ಜಿ ವಹಿಸಿ ಸಮಸ್ಯೆ ಬಗೆಹರಿಸಬೇಕು ಎಂದರು. ಯುವನಿಧಿ ಯೋಜನೆಯಡಿ 778 ಯುವಕರು ನೋಂದಣಿಯಾಗಿದ್ದು 622 ಫಲಾನುಭವಿಗಳಿಗೆ 1,53,37,500 ರೂ. ಅಂದಾಜು ಮೊತ್ತ ಪಾವತಿಸಲಾಗಿದೆ. ಉದ್ಯೋಗ ಅರಸುವ ಯುವಕರು ಮತ್ತು ಅವರ ಕುಟುಂಬಗಳಿಗೆ ಆರ್ಥಿಕ ಸಹಾಯ ಒದಗಿಸಲು ಯೋಜನೆ ತರಲಾಗಿದೆ. ಇದಕ್ಕೆ ಹೆಚ್ಚಿನ ಪ್ರಚಾರ ನೀಡಬೇಕು. ಮುಂದಿನ ದಿನಗಳಲ್ಲಿ ನರ್ಸಿಂಗ್ ಕಾಲೇಜುಗಳಲ್ಲಿ ಸಮಾವೇಶ ನಡೆಸಿಯೋಜನೆ ಬಗ್ಗೆ ಮಾಹಿತಿ ನೀಡಿ ಎಂದರು. ಶಕ್ತಿ ಯೋಜನೆಯಡಿ ಅಕ್ಟೋಬರ್ ತಿಂಗಳವರೆಗೆ 31756767 ವಯಸ್ಕ, 560631 ಮಕ್ಕಳು ಪ್ರಯಾಣಿಸಿದ್ದು 125,71,28,685 ರೂ. ಲಾಭ ಪಡೆದುಕೊಂಡಿದ್ದಾರೆ. ಕೊರೊನಾ ಕಾಲದಲ್ಲಿ ಸ್ಥಗಿತವಾಗಿರುವ ಮಾರ್ಗಗಳಲ್ಲಿ ಬಸ್‌ಗಳ ಪುನರಾರಂಭಕ್ಕೆ ಜನರಿಂದ ಬೇಡಿಕೆ ಇದೆ. ಈಗಾಗಲೇ 12 ಬಸ್‌ಗಳ ಪರ್ಮಿಟ್‌ಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದ್ದು ಸರಕಾರದಿಂದ ಅನುಮತಿ ಬಂದ ಕೂಡಲೇ ಹೆಚ್ಚುವರಿ ಬಸ್‌ಗಳನ್ನು ಬಿಡಲಾಗುವುದು ಎಂದರು. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿ ತರಿಸಲಾಗುತ್ತಿದ್ದು ಶೇ.94.02ರಷ್ಟು ವಿತರಣೆ ಪ್ರಗತಿಯಲ್ಲಿದೆ. ಪಡಿತರ ಚೀಟಿಯಲ್ಲಿ ತಿದ್ದುಪಡಿ ಗಳಿದ್ದರೆ ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಕ್ಕೆ ಭೇಟಿ ನೀಡಬೇಕು. ಅನ್ನಭಾಗ್ಯ ಅಕ್ಕಿ ವಿತರಣೆಯಲ್ಲಿ ಸಮಸ್ಯೆ ಗಳಿದ್ದರೆ ಅಧ್ಯಕ್ಷರ ಗಮನಕ್ಕೆ ತಂದಲ್ಲಿ ಪರಿಹರಿಸಲಾಗುವುದು ಎಂದರು. ಸಭೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಜಯಾ, ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಸದಸ್ಯರಾದ ಪ್ರೇಮಲತಾ ಸೋನ್ಸ್, ಅರ್ಚನಾ ದೇವಾಡಿಗ, ಮಾಲತಿ ಬಿ ಆಚಾರ್ಯ, ವೆಂಕಟೇಶ್ ಸುವರ್ಣ, ಉಸ್ತಾದ್ ಸಾದಿಕ್ ತೋನ್ಸೆ, ಸುಧಾಕರ್ ಪೂಜಾರಿ, ಗಣೇಶ್, ಶಬರೀಶ್ ಸುವರ್ಣ, ಸಂತೋಷ್ ಶೆಟ್ಟಿ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ವಾರ್ತಾ ಭಾರತಿ 24 Nov 2025 8:56 pm

Bengaluru | 60 ವರ್ಷದ ಪೈಲಟ್ ವಿರುದ್ಧ ಅತ್ಯಾಚಾರ ಆರೋಪ: ಎಫ್‍ಐಆರ್ ದಾಖಲು

ಬೆಂಗಳೂರು : ಖಾಸಗಿ ವಿಮಾನಯಾನ ಸಂಸ್ಥೆಯ 60 ವರ್ಷದ ಪೈಲಟ್‍ವೊಬ್ಬರು ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‍ನಲ್ಲಿ ತಂಗಿದ್ದಾಗ 26 ವರ್ಷದ ಕ್ಯಾಬಿನ್ ಸಿಬ್ಬಂದಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ನ.18ರಂದು ಈ ಘಟನೆ ನಡೆದಿದ್ದು, ಚಾರ್ಟರ್ಡ್ ವಿಮಾನದಲ್ಲಿ ಪ್ರಯಾಣದ ನಂತರ ವಿಶ್ರಾಂತಿ ಪಡೆಯುವ ವೇಳೆಯಲ್ಲಿ ಕೃತ್ಯ ಸಂಭವಿಸಿದೆ ಎಂದು ತಿಳಿದುಬಂದಿದೆ. ಆರೋಪಿ ಪೈಲಟ್‍ನನ್ನು ರೋಹಿತ್ ಸರನ್ ಎಂದು ಗುರುತಿಸಲಾಗಿದೆ. ರೋಹಿತ್ ಸರನ್, ಸಂತ್ರಸ್ತೆಯಾದ ಕ್ಯಾಬಿನ್ ಸಿಬ್ಬಂದಿ ಮತ್ತು ಇನ್ನೊಬ್ಬ ಪೈಲಟ್-ಮೂವರು ಹೈದರಾಬಾದ್‍ನ ಬೇಗಂಪೇಟೆ ಮತ್ತು ಆಂಧ್ರಪ್ರದೇಶದ ಪುಟ್ಟಪರ್ತಿಯಿಂದ ವಿಮಾನದಲ್ಲಿ ಬಂದ ನಂತರ ಹೋಟೆಲ್ ತಲುಪಿದ್ದರು. ಮರುದಿನ ಅವರು ಪುಟ್ಟಪರ್ತಿಗೆ ಹಿಂತಿರುಗಬೇಕಿತ್ತು, ಹೀಗಾಗಿ ವಿಶ್ರಾಂತಿ ಪಡೆಯಲು ಹೋಟೆಲ್‍ನಲ್ಲಿ ಉಳಿದಿದ್ದರು. ಧೂಮಪಾನ ಮಾಡಲು ಹೊರಗೆ ಹೋಗುವ ನೆಪದಲ್ಲಿ ರೋಹಿತ್ ತನ್ನನ್ನು ತನ್ನ ಕೋಣೆಯ ಬಳಿಗೆ ಕರೆದೊಯ್ದ. ನಂತರ ಆತ ಬಲವಂತದಿಂದ ತನ್ನನ್ನು ಕೋಣೆಯೊಳಗೆ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ. ಸಂತ್ರಸ್ತೆಯು ನವೆಂಬರ್ 20ರಂದು ಹೈದರಾಬಾದ್‍ನ ಬೇಗಂಪೇಟೆಗೆ ಹಿಂದಿರುಗಿದ ನಂತರ ತಕ್ಷಣವೇ ವಿಮಾನಯಾನ ಕಂಪೆನಿಯ ಆಡಳಿತ ಮಂಡಳಿಗೆ ಈ ಘಟನೆಯ ಬಗ್ಗೆ ಮಾಹಿತಿ ನೀಡಿದರು. ನಂತರ, ಅವರು ಬೇಗಂಪೇಟ್ ಪೊಲೀಸ್ ಠಾಣೆಯಲ್ಲಿ ಝೀರೋ ಎಫ್‍ಐಆರ್ ದಾಖಲಿಸಿದರು. ಇದು ಯಾವುದೇ ನ್ಯಾಯವ್ಯಾಪ್ತಿಯನ್ನು ಲೆಕ್ಕಿಸದೆ ಪ್ರಕರಣವನ್ನು ದಾಖಲಿಸಲು ಅವಕಾಶ ನೀಡುತ್ತದೆ. ಇನ್ನು, ಈ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಬೆಂಗಳೂರು ಪೊಲೀಸರಿಗೆ ವರ್ಗಾಯಿಸಲಾಗಿದ್ದು, ಬೆಂಗಳೂರಿನ ಹಲಸೂರು ಪೊಲೀಸ್ ಠಾಣೆಯಲ್ಲಿ ಬಿಎನ್‍ಎಸ್ ಸೆಕ್ಷನ್ 63ರ ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವಾರ್ತಾ ಭಾರತಿ 24 Nov 2025 8:52 pm

ಎಟಿಎಂ ಹಣ ದರೋಡೆ ಪ್ರಕರಣ : ಮತ್ತಿಬ್ಬರ ಬಂಧನ, ಬಂಧಿತರ ಸಂಖ್ಯೆ 9ಕ್ಕೆ ಏರಿಕೆ

ಬೆಂಗಳೂರು : ಎಟಿಎಂ ಯಂತ್ರಗಳಿಗೆ ತುಂಬಿಸಲು ಕೊಂಡೊಯ್ಯುತ್ತಿದ್ದ 7.11 ಕೋಟಿ ರೂ. ಹಣ ದರೋಡೆ ಪ್ರಕರಣದ ಮತ್ತಿಬ್ಬರು ಆರೋಪಿಗಳನ್ನು ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಚೆನ್ನೈನಲ್ಲಿದ್ದ ದಿನೇಶ್ ಹಾಗೂ ಜಿನೇಶ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಸದ್ಯ ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಇದಕ್ಕೂ ಮೊದಲು ಸಿಎಂಎಸ್ ಏಜೆನ್ಸಿ ವಾಹನದ ಮೇಲ್ವಿಚಾರಕ ಗೋಪಾಲ್ ಪ್ರಸಾದ್, ಮಾಜಿ ಉದ್ಯೋಗಿ ಕ್ಸೇವಿಯರ್, ಗೋವಿಂದಪುರ ಠಾಣೆಯ ಕಾನ್‍ಸ್ಟೇಬಲ್ ಅಣ್ಣಪ್ಪ ನಾಯ್ಕ್, ಕೃತ್ಯಕ್ಕೆ ಸಾಥ್ ನೀಡಿದ್ದ ನವೀನ್, ನೆಲ್ಸನ್, ರವಿ ಹಾಗೂ ರಾಕೇಶ್ ಎಂಬುವರನ್ನು ಬಂಧಿಸಲಾಗಿತ್ತು. ಈ ಪ್ರಕರಣದ ಬಗ್ಗೆ ಸೋಮವಾರ ನಗರದ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಪ್ರಕರಣದಲ್ಲಿ ಒಟ್ಟು 6.29 ಕೋಟಿ ರೂಪಾಯಿ ವಶಕ್ಕೆ ಪಡೆಯಲಾಗಿದ್ದು, ಉಳಿದ 82 ಲಕ್ಷ ಹಣಕ್ಕಾಗಿ ಶೋಧ ನಡೆಸುತ್ತಿದೆ. ಕೊನೆಯದಾಗಿ ಬಂಧಿತರಾಗಿರುವ ಇಬ್ಬರು ಆರೋಪಿಗಳ ಬಳಿ ಯಾವುದೇ ಹಣ ಪತ್ತೆಯಾಗಿಲ್ಲ. ಬೇರೆ ಎಲ್ಲಿ ಹಣ ಇಟ್ಟಿರುವುದಾಗಿ ಆರೋಪಿಗಳು ಬಾಯ್ಬಿಡುತ್ತಿದ್ದು, ಇನ್ನುಳಿದ ಹಣವನ್ನು ವಶಕ್ಕೆ ಪಡೆಯುವ ನಿಟ್ಟಿನಲ್ಲಿ ತನಿಖೆ ಮುಂದುವರೆದಿದೆ. ಇನ್ನು, ಪ್ರಕರಣದ ಎಲ್ಲ ಪ್ರಮುಖ ಆರೋಪಿಗಳನ್ನು ಬಂಧಿಸಿದಂತಾಗಿದೆ ಎಂದು ತಿಳಿಸಿದ್ದಾರೆ. ಪ್ರಕರಣದ ಹಿನ್ನೆಲೆ  : ಎಟಿಎಂ ಯಂತ್ರಗಳಿಗೆ ತುಂಬಿಸಬೇಕಿದ್ದ 7.11 ಕೋಟಿ ರೂ. ಹಣವನ್ನು ಹಾಡಹಗಲೇ ದೋಚಿರುವ ಘಟನೆ ನವೆಂಬರ್ 19ರಂದು ಬೆಂಗಳೂರಿನ ಡೈರಿ ಸರ್ಕಲ್ ಮೇಲ್ಸೇತುವೆ ಬಳಿ ನಡೆದಿತ್ತು. ಆರ್‍ಬಿಐ ಅಧಿಕಾರಿಗಳ ಸೋಗಿನಲ್ಲಿ ಕಾರಿನಲ್ಲಿ ಬಂದಿದ್ದ ಆರೋಪಿಗಳ ಗುಂಪು ಎಟಿಎಂಗಳಿಗೆ ಹಣ ತುಂಬಿಸುವ ಕಸ್ಟೋಡಿಯನ್ ಕಂಪೆನಿಯ ವಾಹನವನ್ನು ತಡೆದು ಹಣದ ಪೆಟ್ಟಿಗೆಯನ್ನು ದೋಚಿಕೊಂಡು ಪರಾರಿಯಾಗಿತ್ತು.

ವಾರ್ತಾ ಭಾರತಿ 24 Nov 2025 8:47 pm

ʼಹೇಮಾಮಾಲಿನಿ ಗೆಲ್ಲದಿದ್ದರೆʼ ಸಾಯುತ್ತೇನೆ ಎಂದಿದ್ದ ಧರ್ಮೇಂದ್ರ!

ಮರೆಯಲಾಗದ ಬಾಲಿವುಡ್‌ ನ ‘ಹಿ-ಮ್ಯಾನ್’ ಧರಮ್ ಪಾಜಿ

ವಾರ್ತಾ ಭಾರತಿ 24 Nov 2025 8:47 pm

ಡಾಲರ್‌ ನೆದುರು 90ರ ಅಂಚಿಗೆ ಕುಸಿದ ರೂಪಾಯಿ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಹೊಸದಿಲ್ಲಿ,ನ.24: ಅಮೆರಿಕದ ಡಾಲರ್‌ ನೆದುರು ರೂಪಾಯಿ ಮೌಲ್ಯದ ತೀವ್ರ ಕುಸಿತ ಕುರಿತು ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, 2013ರಲ್ಲಿ ರೂಪಾಯಿ ಮೌಲ್ಯ ಕುಸಿತ ಕುರಿತು ಆಗಿನ ಯುಪಿಎ ಸರಕಾರದ ವಿರುದ್ಧ ಅವರು ಮಾಡಿದ್ದ ಟೀಕೆಗಳನ್ನು ನೆನಪಿಸಿದೆ. ಸೋಮವಾರ ಡಾಲರ್‌ ನೆದುರು 89.46ರಲ್ಲಿ ಆರಂಭಗೊಂಡ ರೂಪಾಯಿ ನಂತರ ಚೇತರಿಸಿಕೊಂಡು 89.17ಕ್ಕೆ ತಲುಪಿದ್ದು, ತನ್ಮೂಲಕ ತನ್ನ ಹಿಂದಿನ ಮುಕ್ತಾಯಕ್ಕಿಂತ 49 ಪೈಸೆ ಏರಿಕೆಯನ್ನು ದಾಖಲಿಸಿದೆ. ಶುಕ್ರವಾರ ರೂಪಾಯಿ ಡಾಲರ್‌ ನೆದುರು 98 ಪೈಸೆಗಳಷ್ಟು ನಾಟಕೀಯ ಕುಸಿತವನ್ನು ದಾಖಲಿಸಿತ್ತು ಮತ್ತು 89.66ರ ಸಾರ್ವಕಾಲಿಕ ಕನಿಷ್ಠ ಮಟ್ಟದೊಂದಿಗೆ ದಿನದಾಟವನ್ನು ಮುಗಿಸಿತ್ತು. ದೇಶಿಯ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್‌ಗೆ ಬಲವಾದ ಬೇಡಿಕೆ, ಸ್ಥಳೀಯ ಮತ್ತು ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ಭಾರೀ ಮಾರಾಟದ ಒತ್ತಡ ಹಾಗೂ ಜಾಗತಿಕ ವ್ಯಾಪಾರಕ್ಕೆ ಸಂಬಂಧಿಸಿದಂತೆ ದೀರ್ಘಕಾಲದಿಂದ ಮುಂದುವರಿದಿರುವ ಅನಿಶ್ಚಿತತೆಗಳು ರೂಪಾಯಿ ಕುಸಿತಕ್ಕೆ ಕಾರಣ ಎನ್ನಲಾಗಿದೆ. ಎಕ್ಸ್ ಪೋಸ್ಟ್‌ ನಲ್ಲಿ ಸರಕಾರವನ್ನು ಟೀಕಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ಅವರು, ರೂಪಾಯಿ ನಿರಂತರವಾಗಿ ಕುಸಿಯುತ್ತಿದ್ದು, ಡಾಲರ್‌ ನೆದರು 90ರ ಗಡಿಯನ್ನು ದಾಟುವ ಅಂಚಿನಲ್ಲಿದೆ ಎಂದು ಹೇಳಿದ್ದಾರೆ. ಮೋದಿಯವರು ಜುಲೈ 2013ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ರೂಪಾಯಿ ಮೌಲ್ಯವನ್ನು ರಕ್ಷಿಸುವಲ್ಲಿ ವೈಫಲ್ಯಕ್ಕಾಗಿ ಯುಪಿಎ ಸರಕಾರವನ್ನು ಅಣಕಿಸಿದ್ದು ಅವರಿಗೆ ನೆನಪಿದೆಯೇ ಎಂದು ಪ್ರಶ್ನಿಸಿದ್ದಾರೆ. ಆ ಅವಧಿಯ ಹಳೆಯ ವೀಡಿಯೊ ತುಣುಕೊಂದನ್ನು ಹಂಚಿಕೊಂಡಿರುವ ರಮೇಶ್,‘ರೂಪಾಯಿ ಎಷ್ಟು ವೇಗವಾಗಿ ಕುಸಿಯುತ್ತಿದೆ ನೋಡಿ. ಕೆಲವೊಮ್ಮೆ ರೂಪಾಯಿ ಮತ್ತು ದಿಲ್ಲಿಯಲ್ಲಿನ ಸರಕಾರದ ನಡುವೆ ಯಾರ ಘನತೆ ವೇಗವಾಗಿ ಕುಸಿಯುತ್ತದೆ ಎಂಬ ಬಗ್ಗೆ ಸ್ಪರ್ಧೆ ನಡೆಯುತ್ತಿರುವಂತೆ ಕಂಡು ಬರುತ್ತದೆ’ ಎಂಬ ಮೋದಿ ಹೇಳಿಕೆಯನ್ನು ಎತ್ತಿ ತೋರಿಸಿದ್ದಾರೆ. ರೂಪಾಯಿ ಶುಕ್ರವಾರ ಮೂರು ವರ್ಷಗಳಿಗೂ ಹೆಚ್ಚಿನ ಅವಧಿಯಲ್ಲಿ ಡಾಲರ್‌ ನೆದುರು ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿತ್ತು. ಹೋಲಿಸಬಹುದಾದ ಕೊನೆಯ ಕುಸಿತ ಫೆ.24,2022ರಲ್ಲಿ ಉಂಟಾಗಿತ್ತು, ಆಗ ರೂಪಾಯಿ ಡಾಲರ್ ವಿರುದ್ಧ 99 ಪೈಸೆಗಳಷ್ಟು ಪತನಗೊಂಡಿತ್ತು.

ವಾರ್ತಾ ಭಾರತಿ 24 Nov 2025 8:43 pm

ನ್ಯಾ.ಸೂರ್ಯಕಾಂತ್‌ ನೇತೃತ್ವದಡಿ ಸಾಂವಿಧಾನಿಕ ಮೌಲ್ಯಗಳು ಇನ್ನಷ್ಟು ಬಲಗೊಳ್ಳಲಿವೆ: ಖರ್ಗೆ ವಿಶ್ವಾಸ

ಹೊಸದಿಲ್ಲಿ,ನ.24: ನ್ಯಾಯಾಂಗ ವ್ಯವಸ್ಥೆಯು ನಿರ್ಣಾಯಕ ಘಟ್ಟದಲ್ಲಿರುವಾಗ ನ್ಯಾ.ಸೂರ್ಯಕಾಂತ್‌ ಅವರು ಭಾರತದ ಮುಖ್ಯ ನ್ಯಾಯಾಧೀಶರ ಹುದ್ದೆಗೆ ಪದೋನ್ನತಿಗೊಂಡಿದ್ದಾರೆ ಎಂದು ಸೋಮವಾರ ಹೇಳಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು, ಅವರ ನೇತೃತ್ವದಡಿ ಸಾಂವಿಧಾನಿಕ ಮೌಲ್ಯಗಳು ಮತ್ತು ಕಾನೂನಿನ ಆಡಳಿತದಲ್ಲಿ ಸಾರ್ವಜನಿಕ ವಿಶ್ವಾಸ ಹಾಗೂ ಪ್ರತಿಯೊಬ್ಬ ಪ್ರಜೆಗೂ ನ್ಯಾಯದ ಭರವಸೆಯು ಇನ್ನಷ್ಟು ಬಲಗೊಳ್ಳಲಿವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ನ್ಯಾ.ಸೂರ್ಯಕಾಂತ್‌ ಅವರು ಸೋಮವಾರ ಭಾರತದ 53ನೇ ಮುಖ್ಯ ನ್ಯಾಯಾಧೀಶರಾಗಿ ಪ್ರಮಾಣ ವಚನವನ್ನು ಸ್ವೀಕರಿಸಿದರು. ‘ಭಾರತದ 53ನೇ ಮುಖ್ಯ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿರುವ ನ್ಯಾ.ಸೂರ್ಯಕಾಂತ್‌ ಅವರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು. ನಮ್ಮ ನ್ಯಾಯ ವ್ಯವಸ್ಥೆಯು ನಿರ್ಣಾಯಕ ಘಟ್ಟದಲ್ಲಿರುವಾಗ ಅವರು 14 ತಿಂಗಳುಗಳ ಅವಧಿಗೆ ಸಿಜೆಐ ಆಗಿ ಪದೋನ್ನತಿ ಪಡೆದಿದ್ದಾರೆ ’ ಎಂದೂ ಖರ್ಗೆ ಎಕ್ಸ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ವಾರ್ತಾ ಭಾರತಿ 24 Nov 2025 8:42 pm

ಸಿದ್ದರಾಮಯ್ಯ ನಮ್ಮ ಪಕ್ಷಕ್ಕೆ ದೊಡ್ಡ ಆಸ್ತಿ : ಡಿ.ಕೆ.ಶಿವಕುಮಾರ್

ʼಶಾಸಕರ ಖರೀದಿ, ಕುದುರೆ ವ್ಯಾಪಾರ ಬಿಜೆಪಿಯ ಸಂಸ್ಕೃತಿʼ

ವಾರ್ತಾ ಭಾರತಿ 24 Nov 2025 8:37 pm

ಕಲಬುರಗಿ | ʼಆರೆಸ್ಸೆಸ್ ಹಠಾವೋ, ಸಂವಿಧಾನ ಬಚಾವೋʼ ಪ್ರತಿಭಟನಾ ಮೆರವಣಿಗೆ

ಕಲಬುರಗಿ: ಆರೆಸ್ಸೆಸ್ ಚಟುವಟಿಕೆಗಳನ್ನು ಸರಕಾರಿ ಸ್ಥಳಗಳಲ್ಲಿ ನಿಷೇಧಿಸುವಂತೆ ಸಿಎಂ ಅವರಿಗೆ ಪತ್ರ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಬೆಂಬಲಿಸಿ ರಾಷ್ಟ್ರೀಯ ಅಹಿಂದ ಸಂಘಟನೆಯ ವತಿಯಿಂದ ನಗರದಲ್ಲಿ ʼಆರೆಸ್ಸೆಸ್ ಹಠಾವೋ, ಸಂವಿಧಾನ ಬಚಾವೋʼ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಸಂಘಟನೆಯ ರಾಜ್ಯಾಧ್ಯಕ್ಷ ಮುತ್ತಣ್ಣ ಶಿವಳ್ಳಿ, ನೋಂದಣಿಯಾಗದ ಆರೆಸ್ಸೆಸ್ ಸಂಘಟನೆಯು ನಮ್ಮ ದೇಶದ ಸಂವಿಧಾನವನ್ನು ಗೌರವಿಸುವುದಿಲ್ಲ. ಹಾಗಾಗಿ ನಾವು ಈ ಸಂಘಟನೆಯನ್ನು ವಿರೋಧಿಸುತ್ತೇವೆ, ಇದರ ವಿರುದ್ಧ ರಾಜ್ಯಾದ್ಯಂತ ಚಳುವಳಿ ಕೂಡ ಮಾಡುತ್ತಿದ್ದೇವೆ ಎಂದರು. ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ಆರೆಸ್ಸೆಸ್ ನವರು ಮಾಡಿದ್ದಾರೆ. ಸಚಿವರ ವಿರುದ್ಧ ಮಾಡುತ್ತಿರುವ ಷಡ್ಯಂತ್ರವನ್ನು ಅಹಿಂದ ಸಂಘಟನೆ ಖಂಡಿಸುತ್ತದೆ, ಸಂವಿಧಾನ ವಿರೋಧಿ ಕೆಲಸ ಮಾಡುವವರ ವಿರುದ್ಧ ನಮ್ಮ ಹೋರಾಟ ನಿರಂತರವಾಗಿ ಇರಲಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ವಿಲಾಸ ಕೊಪ್ಪಳ, ಜೋಸೆಫ್ ಉಮೋಜಿ, ರತ್ನಾ ಕಾಮನಹಳ್ಳಿ, ಲಕ್ಷ್ಮಣ್ ದೇವಕುತ್ತ, ಜಿಲ್ಲಾಧ್ಯಕ್ಷ ಶಿವಶಂಕರ್ ಬಳ್ಳಬಟ್ಟಿ, ರವೀಂದ್ರ, ದೇವೇಂದ್ರ ಬಳ್ಳಾವರ, ಮರಿಯಪ್ಪ ಕಡಕೋಳ ಸೇರಿದಂತೆ ಹಲವರು ಇದ್ದರು.

ವಾರ್ತಾ ಭಾರತಿ 24 Nov 2025 8:31 pm

ಮುಗಿಯದ ದೆಹಲಿ ಆಟ, ಒಗ್ಗೂಡುತ್ತಿದೆ ಡಿಕೆ ಶಿವಕುಮಾರ್‌ ಬಣ! ಒಳಗುಟ್ಟು ಬಲ್ಲವರಾರು

ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ಡಿಸಿಎಂ ಡಿಕೆ ಶಿವಕುಮಾರ್, ತಮ್ಮ ಬೆಂಬಲಿಗ ಶಾಸಕರೊಂದಿಗೆ ದೆಹಲಿಗೆ ಭೇಟಿ ನೀಡಿ ಶಕ್ತಿ ಪ್ರದರ್ಶನ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಅವರ ಸಂಪುಟ ಪುನಾರಚನೆ ಯತ್ನಕ್ಕೆ ಇದು ಅಡ್ಡಿಯಾಗಿದ್ದು, ಹೈಕಮಾಂಡ್‌ಗೆ ಸ್ಪಷ್ಟ ಸಂದೇಶ ರವಾನಿಸುವ ಪ್ರಯತ್ನದಲ್ಲಿದ್ದಾರೆ.

ವಿಜಯ ಕರ್ನಾಟಕ 24 Nov 2025 8:29 pm

ʼಪೆಗಾಸಸ್ ಸ್ಪೈವೇರ್ʼ ಪ್ರಕರಣದಲ್ಲಿ ಸರಕಾರವನ್ನು ಪ್ರಶ್ನಿಸಿ ಸುದ್ದಿಯಾಗಿದ್ದ ನೂತನ ಸಿಜೆಐ ಸೂರ್ಯಕಾಂತ್‌ ಯಾರು?

49ನೇ ವಯಸ್ಸಿಗೆ ಕಾನೂನಿನಲ್ಲಿ ಸ್ನಾತಕೋತ್ತರ ಪಡೆದಿದ್ದ ನೂತನ ಸಿಜೆಐ!

ವಾರ್ತಾ ಭಾರತಿ 24 Nov 2025 8:28 pm

ಬೀದರ್ | ನ.30 ರಂದು ಜಿಲ್ಲಾ ಮಟ್ಟದ ಸ್ವಾಭಿಮಾನಿ ಮರಾಠ ಸಮಾವೇಶ : ಪದ್ಮಾಕರ್ ಪಾಟೀಲ್

ಬೀದರ್ : ನ.30 ರಂದು ಬೆಳಿಗ್ಗೆ 11:30 ಗಂಟೆಗೆ ನಗರದ ಗಣೇಶ್ ಮೈದಾನದಲ್ಲಿ ಜಿಲ್ಲಾ ಮಟ್ಟದ ಸ್ವಾಭಿಮಾನಿ ಮರಾಠ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಉದ್ಘಾಟಕರಾಗಿ ಆಗಮಿಸುತ್ತಿದ್ದಾರೆ ಎಂದು ಪದ್ಮಾಕರ್ ಪಾಟೀಲ್ ಅವರು ತಿಳಿಸಿದರು. ಇಂದು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಯಾವುದೇ ರೀತಿಯ ರಾಜಕೀಯ ಉದ್ದೇಶವಿಲ್ಲ. ಎಲ್ಲ ರಾಜಕೀಯ ಪಕ್ಷದಲ್ಲಿನ ನಮ್ಮ ಸಮುದಾಯದ ಮುಖಂಡರು ಸೇರಿಸಿಕೊಂಡು ಈ ಸಮಾವೇಶ ನಡೆಸಲಾಗುತ್ತಿದೆ ಎಂದರು. ನಮ್ಮ ಸಮುದಾಯವು ವಿಶ್ವಾಸ ತೆಗೆದುಕೊಳ್ಳುವ ಮೂಲಕ ಸಮಾಜದಲ್ಲಿನ ಶೈಕ್ಷಣಿಕ, ಆರ್ಥಿಕ, ಮಹಿಳಾ ಸಬಲೀಕರಣ, ಸಾಮಾಜಿಕ, ರಾಜಕೀಯ ಅವ್ಯವಸ್ಥೆಯನ್ನು ಸರಿಪಡಿಸುವುದೇ ಈ ಸಮಾವೇಶದ ಉದ್ದೇಶವಾಗಿದೆ ಎಂದು ಹೇಳಿದರು. ನ.30ರಂದು ಗಣೇಶ್ ಮೈದಾನದಲ್ಲಿ ನಡೆಯುವ ಈ ಸಮಾವೇಶ ಕಾರ್ಯಕ್ರಮದಲ್ಲಿ ಸುಮಾರು 5 ಸಾವಿರಕ್ಕಿಂತ ಹೆಚ್ಚಿನ ಜನರು ಭಾಗಿಯಾಗುವ ನಿರೀಕ್ಷೆ ಇದೆ. ಜಿಲ್ಲೆಯ ಮರಾಠ ಸಮುದಾಯದ ಎಲ್ಲ ಜನರು ಇದರಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು. ಈ ಸಂದರ್ಭದಲ್ಲಿ ತಾತ್ಯಾರಾವ್ ಪಾಟೀಲ್, ದಿಗಂಬರ್ ಮಾನಕರಿ, ಬಾಬುರಾವ್ ಬಿರಾದಾರ್, ಪ್ರಕಾಶ್ ಪಾಟೀಲ್, ಕಿಶನರಾವ್ ಪಾಟೀಲ್, ಅಂಗದ ಜಗತಾಪ್, ಜನಾರ್ದನ ಬಿರಾದಾರ್, ವೆಂಕಟೇಶ್, ಅನಿಲ್ ಕಾಳೆ, ಅಮರ್, ಪಾಂಡುರಂಗ್ ಕನಸೆ ಹಾಗೂ ನಾರಾಯಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 24 Nov 2025 8:28 pm

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯ - ಭಾರತಕ್ಕೆ ಗೆಲ್ಲೋ ಅವಕಾಶ ಇದೆಯಾ? ಡ್ರಾ ಮಾಡಿಕೊಳ್ಳಲು ಸಾಧ್ಯವಾ?

ಗುವಾಹಟಿ ಟೆಸ್ಟ್ ಪಂದ್ಯದ ಪಿಚ್ ವರದಿ ಪ್ರಕಟವಾಗಿದೆ. ಮೊದಲ ಮೂರು ದಿನ ಬೌಲರ್ ಗಳಿಗೆ ಅನುಕೂಲವಿದ್ದು, ನಂತರ ಬ್ಯಾಟಿಂಗ್ ಗೆ ಬದಲಾಗುತ್ತದೆ. ದಕ್ಷಿಣ ಆಫ್ರಿಕಾವನ್ನು ಬೇಗನೆ ಆಲೌಟ್ ಮಾಡಿ, ಭಾರತ 400 ರನ್ ಗಳ ಗುರಿ ತಲುಪಿದರೆ ಗೆಲುವು ಸಾಧ್ಯ. ಇಲ್ಲದಿದ್ದರೆ, ಪಂದ್ಯ ಡ್ರಾ ಆಗುವ ಸಾಧ್ಯತೆ ಇದೆ. ಸರಣಿ 1-0 ಅಂತರದಲ್ಲಿ ದಕ್ಷಿಣ ಆಫ್ರಿಕಾ ಪಾಲಾಗುತ್ತದೆ.

ವಿಜಯ ಕರ್ನಾಟಕ 24 Nov 2025 8:27 pm

ಕಲಬುರಗಿಯಲ್ಲಿ 1 ಸಾವಿರ ಕೋಟಿ ರೂ.ವೆಚ್ಚದಲ್ಲಿ ಉದ್ಯಮಶೀಲತಾ ಕೇಂದ್ರ ಸ್ಥಾಪನೆ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ಸ್ಥಳೀಯ ಆರ್ಥಿಕ ವೇಗವರ್ಧಕ ಕಾರ್ಯಕ್ರಮ(ಲೀಪ್)ಅಡಿಯಲ್ಲಿ ಕಲಬುರಗಿಯಲ್ಲಿ ಹೊಸ ಉದ್ಯಮಶೀಲತಾ ಕೇಂದ್ರ ಪ್ರಾರಂಭಿಸುವುದಾಗಿ ಐಟಿ-ಬಿಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸೋಮವಾರ ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಲೀಪ್ ಒಂದು ಸಾವಿರ ಕೋಟಿ ರೂ. ವೆಚ್ಚದ ಐದು ವರ್ಷಗಳ ಉಪಕ್ರಮವಾಗಿದೆ. ಪ್ರಾದೇಶಿಕ ಉದ್ಯಮಶೀಲತೆಗೆ ಚೇತರಿಕೆ ನೀಡಲು, ನಾವೀನ್ಯತೆ ವಿಕೇಂದ್ರೀಕರಿಸಲು ಮತ್ತು ರಾಜ್ಯದ ಪ್ರವರ್ಧಮಾನಕ್ಕೆ ಬರುತ್ತಿರುವ ತಂತ್ರಜ್ಞಾನ ಕ್ಲಸ್ಟರ್‍ಗಳಲ್ಲಿ ಆರ್ಥಿಕ ಬೆಳವಣಿಗೆ ತ್ವರಿತಗೊಳಿಸಲು ಇದು ನೆರವಾಗಲಿದೆ ಎಂದು ಹೇಳಿದ್ದಾರೆ. ಕಲ್ಯಾಣ ಕರ್ನಾಟಕದಾದ್ಯಂತ ಕೃಷಿ-ತಂತ್ರಜ್ಞಾನ, ಗ್ರಾಮೀಣ ನಾವೀನ್ಯತೆ ಮತ್ತು ಯುವಜನರಲ್ಲಿ ಉದ್ಯಮಶೀಲತೆ ಉತ್ತೇಜಿಸಲು 15 ಸಾವಿರ ಚದರ ಅಡಿ ವಿಸ್ತೀರ್ಣದ ಹೊಸ ನವೋದ್ಯಮ ಕೇಂದ್ರ ಮತ್ತು ಪ್ರಾಥಮಿಕ ಮಾದರಿ ಪ್ರಯೋಗಾಲಯ ಸ್ಥಾಪನೆಯಾಗಲಿದ್ದು ಮುಂದಿನ ವರ್ಷದ ಜನವರಿಯಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಕೃಷಿಕಲ್ಪ ಪ್ರತಿಷ್ಠಾನದ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುತ್ತಿರುವ ಉದ್ಯಮಶೀಲತಾ ಕೇಂದ್ರವು, ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ನಾವೀನ್ಯತೆ ವ್ಯವಸ್ಥೆ ಬಲಪಡಿಸುವ ಗುರಿ ಹೊಂದಿದೆ. ಕೃಷಿ, ಸಂಬಂಧಿತ ವಲಯಗಳು, ಗ್ರಾಮೀಣ ನಾವೀನ್ಯತೆ ಮತ್ತು ಪ್ರವರ್ಧಮಾನಕ್ಕೆ ಬರುತ್ತಿರುವ ತಂತ್ರಜ್ಞಾನಗಳ ಮೇಲೆ ಗಮನ ಕೇಂದ್ರೀಕರಿಸಲಿದೆ ಎಂದು ಅವರು ಹೇಳಿದ್ದಾರೆ. ಈ ಉಪಕ್ರಮದ ಭಾಗವಾಗಿ, ಕಲಬುರಗಿ ಜಿಲ್ಲಾಡಳಿತವು 15 ಸಾವಿರ ಚದರ ಅಡಿ ವಿಸ್ತೀರ್ಣದ ಬಳಕೆಗೆ ಸಿದ್ಧವಾದ ಸ್ಥಳಾವಕಾಶ ಹಂಚಿಕೆ ಮಾಡಿದೆ. ಇದು ಈ ಪ್ರದೇಶಕ್ಕೆ ಮೀಸಲಾದ ನವೋದ್ಯಮ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ. ನವೋದ್ಯಮಗಳ ಸಂಸ್ಥಾಪಕರು, ಕೃಷಿ ಉದ್ಯಮಿಗಳು, ನಾವೀನ್ಯಕಾರರು ಮತ್ತು ಪೂರಕ ಉದ್ದಿಮೆಗಳ ಪಾಲುದಾರರಿಗೆ ಅಗತ್ಯ ನೆರವು ಒದಗಿಸಲಿದೆ ಎಂದು ಪ್ರಿಯಾಂಕ್ ಖರ್ಗೆ ವಿವರಿಸಿದ್ದಾರೆ. ಈ ಕೇಂದ್ರವು ಮಾರ್ಗದರ್ಶನ, ಮಾರುಕಟ್ಟೆ ಲಭ್ಯತೆ ಮತ್ತು ಹಣಕಾಸು ನೆರವಿನ ಲಭ್ಯತೆ ಚೌಕಟ್ಟು ಆಧರಿಸಿ ಕಾರ್ಯನಿರ್ವಹಿಸಲಿದೆ, ನವೋದ್ಯಮಗಳ ವೇಗವರ್ಧನೆ, ಸಾಮರ್ಥ್ಯ ವೃದ್ಧಿ ಮತ್ತು ಉದ್ಯಮಶೀಲತೆಗೆ ಉತ್ತೇಜನ ತತ್ವಗಳಡಿ ಇದು ಕಾರ್ಯನಿರ್ವಹಿಸಲಿದೆ ಎಂದು ಅವರು ತಿಳಿಸಿದ್ದಾರೆ. ಮೂಲಸೌಲಭ್ಯ ಮತ್ತು ಮಾರುಕಟ್ಟೆ ಲಭ್ಯತೆ ಅಡೆತಡೆಗಳನ್ನು ಗಮನಾರ್ಹವಾಗಿ ಕಡಿಮೆ ಮಾಡುವ ಮೂಲಕ ನವೋದ್ಯಮಗಳು ಸ್ಥಳೀಯವಾಗಿ ವಿಶ್ವ ದರ್ಜೆಯ ನಾವೀನ್ಯತೆಗಳನ್ನು ವಿನ್ಯಾಸಗೊಳಿಸಲು, ನಿರ್ಮಿಸಲು ಮತ್ತು ಪರೀಕ್ಷಿಸಲು ಅನುವು ಮಾಡಿಕೊಡಲು ಅತ್ಯಾಧುನಿಕ ಮೂಲಮಾದರಿ ಪ್ರಯೋಗಾಲಯವನ್ನು (ಪ್ರೊಟೊಟೈಪಿಂಗ್ ಲ್ಯಾಬ್) ಸ್ಥಾಪಿಸಲಾಗುವುದು ಎಂದು ಅವರು ಹೇಳಿದ್ದಾರೆ. ಕಲಬುರಗಿಯು ಗ್ರಾಮೀಣ ಕರ್ನಾಟಕದ ಬಳಕೆಯಾಗದ ಅಪಾರ ಸಾಮರ್ಥ್ಯ ವನ್ನು ಪ್ರತಿನಿಧಿಸುತ್ತದೆ. ಈ ಪ್ರದೇಶದಲ್ಲಿ ಶೇ.70ಕ್ಕೂ ಹೆಚ್ಚು ಉದ್ಯೋಗಿಗಳು ಕೃಷಿ ಆರ್ಥಿಕತೆಗೆ ಕೊಡುಗೆ ನೀಡುತ್ತಿದ್ದಾರೆ. ‘ಲೀಪ್’ ಉಪಕ್ರಮದಡಿ ಮತ್ತು ಹೊಸ ಉದ್ಯಮಶೀಲತಾ ಕೇಂದ್ರದ ಮೂಲಕ, ನಾವು ತಂತ್ರಜ್ಞಾನ, ನಾವೀನ್ಯತೆ ಮತ್ತು ಅವಕಾಶಗಳನ್ನು ನೇರವಾಗಿ ನಮ್ಮ ಸಮುದಾಯಗಳಿಗೆ ತಲುಪಿಸುವ ಮೂಲಕ ಗ್ರಾಮೀಣ ಹಾಗೂ ನಗರ ಪ್ರದೇಶಗಳ ನಡುವಣ ಅಂತರವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತಿದ್ದೇವೆ ಎಂದು ಅವರು ವಿವರಿಸಿದ್ದಾರೆ. ರಾಜ್ಯದ ಐಟಿ-ಬಿಟಿ ವಲಯದ ವಹಿವಾಟು 1.5 ಲಕ್ಷ ಕೋಟಿ ರೂ. ದಾಟಿದೆ. ‘ಲೀಪ್’ ಉಪಕ್ರಮದಡಿ 5 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ನಿರೀಕ್ಷೆಯೊಂದಿಗೆ, ಈ ಶ್ರೇಷ್ಠತಾ ಕೇಂದ್ರವು ಕಲಬುರಗಿಯ ಯುವಕರಿಗೆ ಕೃಷಿ-ತಂತ್ರಜ್ಞಾನ, ಡೀಪ್-ಟೆಕ್ ಮತ್ತು ಸಂಬಂಧಿತ ವಲಯದ ನಾವೀನ್ಯತೆಗಳ ಮೂಲಕ ಸುಸ್ಥಿರ ಜೀವನೋಪಾಯ ನಿರ್ಮಿಸಲು ಶಕ್ತಿ ತುಂಬಲಿದೆ ಎಂದು ಪ್ರಿಯಾಂಕ್ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಾಚೆಗೆ(ಬಿಯಾಂಡ್ ಬೆಂಗಳೂರು) ನಾವೀನ್ಯತೆಯ ಪ್ರಯೋಜನವು ಎಲ್ಲರಿಗೂ ಸಮಾನವಾಗಿ ದೊರೆಯುವಂತೆ ಮಾಡುವ ರಾಜ್ಯ ಸರಕಾರದ ಧ್ಯೇಯವನ್ನು ‘ಲೀಪ್’ ಉಪಕ್ರಮವು ಪ್ರತಿಬಿಂಬಿಸುತ್ತದೆ. ಕಲಬುರಗಿಯಲ್ಲಿ ಆರಂಭವಾಗಲಿರುವ ಉದ್ಯಮಶೀಲತಾ ಕೇಂದ್ರವು ಈ ಪ್ರದೇಶದ ಕೃಷಿ ಸಾಮರ್ಥ್ಯ ಮತ್ತು ಪ್ರವರ್ಧಮಾನಕ್ಕೆ ಬರುತ್ತಿರುವ ತಂತ್ರಜ್ಞಾನ ಸಾಮರ್ಥ್ಯವನ್ನು ಬಳಸಿಕೊಳ್ಳಲಿದೆ, ಗ್ರಾಮೀಣ ನಾವೀನ್ಯಕಾರರು ಸುಸ್ಥಿರ ಮತ್ತು ಸ್ಪರ್ಧಾತ್ಮಕ ಉದ್ಯಮಗಳನ್ನು ಬೆಳೆಸಲು ಅನುವು ಮಾಡಿಕೊಡಲಿದೆ ಎಂದು ಅವರು ವಿವರಿಸಿದ್ದಾರೆ. ನವೋದ್ಯಮಗಳಿಗೆ ಚಿಮ್ಮುಹಲಗೆಯಾಗಿ ಕಾರ್ಯನಿರ್ವಹಿಸುವ ಸಂಸ್ಥೆಗಳು (ಇನ್‍ಕ್ಯುಬೇಟರ್) ಮತ್ತು ವ್ಯವಸ್ಥೆಯ ಬಲವರ್ಧನೆ: ಪ್ರತ್ಯೇಕ ಕೆಲಸದ ಸ್ಥಳಗಳು, ರಚನಾತ್ಮಕ ವೇಗವರ್ಧಿಸುವ ಕಾರ್ಯಕ್ರಮಗಳು ಮತ್ತು ನವೋದ್ಯಮಗಳು ಹಾಗೂ ಗ್ರಾಮೀಣ ಉದ್ಯಮಿಗಳಿಗೆ ಅಗತ್ಯ ಬೆಂಬಲ. ಮಾರ್ಗದರ್ಶನ ಮತ್ತು ಸಾಮರ್ಥ್ಯ ವೃದ್ಧಿ: ತಜ್ಞರ ನೇತೃತ್ವದ ಮಾರ್ಗದರ್ಶನ, ಮಾರುಕಟ್ಟೆ ಸಂಪರ್ಕ ಮತ್ತು ಕೌಶಲ-ಅಭಿವೃದ್ಧಿ ಮಾರ್ಗದರ್ಶನ-ಮಾರುಕಟ್ಟೆ ಲಭ್ಯತೆ-ಹಣಕಾಸು ನೆರವು. ಕೃಷಿ ಹಾಗೂ ಸಂಬಂಧಿತ ವಲಯಗಳಿಗೆ ಡೀಪ್-ಟೆಕ್ ಮತ್ತು ಐಟಿ ಸೇವೆಗಳು: ಗ್ರಾಮೀಣ ಕೃಷಿ ವಹಿವಾಟಿನಲ್ಲಿ ತಂತ್ರಜ್ಞಾನ ಅಳವಡಿಕೆ ಹೆಚ್ಚಿಸಲು ಐಒಟಿ, ರೋಬೊಟಿಕ್ಸ್, ಎಐ, ಆಹಾರ ಸಂಸ್ಕರಣೆ, ಯಾಂತ್ರೀಕರಣ, ಎಆರ್/ವಿಆರ್ ಮತ್ತು ಐಟಿ-ಸೌಲಭ್ಯಗಳ ಸೇವೆಗಳಿಗೆ ಪ್ರಯೋಗಾಲಯಗಳು. ಮೂಲ ಮಾದರಿ ಮತ್ತು ಉತ್ಪನ್ನ ಅಭಿವೃದ್ಧಿ: ನವೋದ್ಯಮಗಳು ಸ್ಥಳೀಯವಾಗಿ ನಾವೀನ್ಯತೆಗಳನ್ನು ಅಭಿವೃದ್ಧಿಪಡಿಸಲು ಮತ್ತು ಪರೀಕ್ಷಿಸಲು ಸಹಾಯ ಮಾಡುವ ಪೂರ್ಣ ಪ್ರಮಾಣದ ಮೂಲಮಾದರಿ ಪ್ರಯೋಗಾಲಯವು, ವೆಚ್ಚ ತಗ್ಗಿಸಲಿದೆ. ಸ್ಥಳೀಯ ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಬೆಳವಣಿಗೆ: ಸ್ಥಳೀಯವಾಗಿ ಉದ್ಯೋಗ ಅವಕಾಶಗಳನ್ನು ಹೆಚ್ಚಿಸುವುದು, ಗ್ರಾಮೀಣ-ನಗರ ವಲಸೆಯನ್ನು ಕಡಿಮೆ ಮಾಡುವುದು. ಸರಕಾರಿ ಇಲಾಖೆಗಳು, ಶೈಕ್ಷಣಿಕ ಸಂಸ್ಥೆಗಳು, ನವೋದ್ಯಮಗಳಲ್ಲಿ ಹೂಡಿಕೆ ಮಾಡುವವರು ಮತ್ತು ಇತರರ ಪಾಲುದಾರಿಕೆಯಡಿ 15 ಸಾವಿರ ಚದರ ಅಡಿಗಳಷ್ಟು ಪ್ರತ್ಯೇಕ ನವೋದ್ಯಮ ಸ್ಥಳಾವಕಾಶ ಲಭ್ಯವಾಗಲಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ವಾರ್ತಾ ಭಾರತಿ 24 Nov 2025 8:26 pm

ಸೋಮೇಶ್ವರದಲ್ಲಿ ವಿಪರೀತ ನಾಯಿಗಳ ಕಾಟ; ಸೋಮೇಶ್ವರ ಪುರಸಭೆ ಸಾಮಾನ್ಯ ಸಭೆಯಲ್ಲಿ ಬಿರುಸಿನ ಚರ್ಚೆ

ಉಳ್ಳಾಲ: ಸೋಮೇಶ್ವರ ಪುರಸಭೆ ವ್ಯಾಪ್ತಿಯಲ್ಲಿ ವಿಪರೀತಗೊಂಡಿರುವ ನಾಯಿಗಳ ಕಾಟ ಮತ್ತದರ ಪರಿಹಾರದ ಬಗ್ಗೆ  ಪುರಸಭೆ ಸಾಮಾನ್ಯ ಸಭೆಯಲ್ಲಿ ವ್ಯಾಪಕ ಚರ್ಚೆ ನಡೆಯಿತು. ಸೋಮೇಶ್ವರ ಪುರಸಭೆ ಅಧ್ಯಕ್ಷ ಕಮಲ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಾಮಾನ್ಯ ಸಭೆಯಲ್ಲಿ ಉಳ್ಳಾಲ ಸಬ್ ಇನ್ಸ್ಪೆಕ್ಟರ್ ಸಂತೋಷ್ ಮಾತನಾಡಿ, ಕುಂಪಲ ಬೈಪಾಸ್ ಬಳಿ ವಾರದ ಹಿಂದೆ ನಡೆದ ದಯಾನಂದ್ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಶವಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಾಣಿಗಳ ದಾಳಿಯಿಂದ ಮುಖಕ್ಕೆ ಆಗಿರುವ ಗಾಯಗಳಿಂದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತನಿಖೆ ಮುಂದುವರಿದಿದೆ . ಆರ್ ಎಫ್ ಎಸ್ ಎಲ್ ವರದಿ ಇನ್ನು ಬರಬೇಕಾಗಿದೆ ಎಂದು ಹೇಳಿದರು. ನಾಯಿಗಳ ಕಾಟದ ಬಗ್ಗೆ ‌ಸೂಕ್ತ ಚರ್ಚೆ ಮಾಡಿ ತೀರ್ಮಾನ ಆಗಬೇಕು ಎಂದು ಉಪಾಧ್ಯಕ್ಷ ರವಿಶಂಕರ್ ಹೇಳಿದರು. ಕುಂಪಲದಲ್ಲಿ ಒಂದು ಘಟನೆ ನಡೆದು ಹೋಗಿದೆ. ಸೋಮೇಶ್ವರ ವ್ಯಾಪ್ತಿಯಲ್ಲಿ ನಾಯಿಗಳ ಕಾಟ ಜಾಸ್ತಿ ಇದೆ. ಇದಕ್ಕೆ ಪರಿಹಾರ ಆಗಬೇಕು ಎಂದು ವಿರೋಧ ಪಕ್ಷದ ನಾಯಕ ಪುರುಷೋತ್ತಮ ಶೆಟ್ಟಿ ಒತ್ತಾಯಿಸಿದರು. ಪಶು ಸಂಗೋಪನಾ ಇಲಾಖೆ ಅಧಿಕಾರಿ ರಚನಾ ಮಾತನಾಡಿ, ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ ಆಗುತ್ತದೆ. ನಾಯಿಗಳ ಬೆಳವಣಿಗೆ ಆಗದಂತೆ ಸಂತಾನ ಹರಣ ಚಿಕಿತ್ಸೆ ಆಗಿದೆ. ಬೀದಿ ನಾಯಿಗಳಿಗೆ ರಸ್ತೆ ಬದಿ ಊಟ ಹಾಕುತ್ತಾರೆ. ಇದರಿಂದ ನಾಯಿ ಅದೇ ಜಾಗದಲ್ಲಿ ಸೇರುತ್ತದೆ ದಯಾನಂದ್ ಸಾವಿಗೆ ಕಾರಣ ಎನ್ನಲಾದ ನಾಯಿ ಹುಚ್ಚು ನಾಯಿ ಅಲ್ಲ ಎಂದು ಹೇಳಿದಾಗ ಸಭೆಯಲ್ಲಿ ಆಕ್ರೋಶ ವ್ಯಕ್ತವಾಯಿತು. ಮೊನ್ನೆ ನಡೆದ ಘಟನೆಯಿಂದ ಸೋಮೇಶ್ವರ ಪುರಸಭೆಗೆ ಕಪ್ಪು ಚುಕ್ಕೆ ಆಗಿದೆ. ಇನ್ನಾದರೂ ನಾಯಿಗಳ ನಿಯಂತ್ರಣ ಆಗಬೇಕು. ಸಾಂಕ್ರಾಮಿಕ ರೋಗಗಳು ತಡೆಗಟ್ಟುವ ಕೆಲಸ ಆಗಬೇಕು ಎಂದು ಸದಸ್ಯರು ಒತ್ತಾಯಿಸಿದರು. 321 ನಾಯಿಗಳಿಗೆ ಸಂತಾನ ಹರಣ ಚಿಕಿತ್ಸೆ ಆಗಿದೆ. ನಾಯಿಗಳ ಸಂಖ್ಯೆ ಜಾಸ್ತಿ ಇದೆ. ಪ್ರಾಣಿ ದಾಳಿಯಿಂದ ವ್ಯಕ್ತಿ ಮೃತಪಟ್ಟಿದ್ದಾರೆ ಎಂಬ ಶಂಕೆ ಅಧಿಕಾರಿಗಳಿಂದ ವ್ಯಕ್ತವಾಗಿದೆ. ಅಗತ್ಯ ಒದಗಿ ಬಂದಲ್ಲಿ ಐದು ಲಕ್ಷ ಪರಿಹಾರ ನೀಡಲು ತಯಾರಿದ್ದೇವೆ. ಸತ್ತ ನಾಯಿಗಳನ್ನು ಇಲಾಖೆ ಅಧಿಕಾರಿಗಳು ಜೊತೆಗೂಡಿ ಕಾರ್ಯ ನಿರ್ವಹಣೆ ಮಾಡಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಆಗಬೇಕು ಎಂದು ಮುಖ್ಯಾಧಿಕಾರಿ ಮತ್ತಡಿ ಹೇಳಿದರು. ಈ ಬಗ್ಗೆ ಸಭೆಯಲ್ಲಿ ವ್ಯಾಪಕ ಚರ್ಚೆ ನಡೆಯಿತು. ಬೀರಿಯಲ್ಲಿ ಹೆದ್ದಾರಿಯಲ್ಲೇ ಬಸ್ ನಿಲ್ಲಿಸುತ್ತಾರೆ. ಈ ಬಗ್ಗೆ ಹಿಂದಿನ ಸಭೆಯಲ್ಲಿ ಚರ್ಚೆ ಆಗಿತ್ತು. ಈ ವೇಳೆ ಸಂಚಾರಿ ಪೊಲೀಸರು ಮೇಲಧಿಕಾರಿಗಳಿಗೆ ತಿಳಿಸುತ್ತೇವೆ ಎಂದು ಭರವಸೆ ನೀಡಿದ್ದರು. ಇದರ ಬಳಿಕವೂ ಬಸ್ ಹೆದ್ದಾರಿಯಲ್ಲೇ ನಿಲುಗಡೆ ಆಗುತ್ತದೆ. ಉಚ್ಚಿಲದಲ್ಲೂ ಸರ್ವಿಸ್ ರಸ್ತೆಯಲ್ಲಿ ಬಸ್ ನಿಲುಗಡೆ ಮಾಡುವುದಿಲ್ಲ. ಇದಕ್ಕೆ ಕ್ರಮ ಆಗಬೇಕು ಎಂದು ಸಲಾಮ್ ಉಚ್ಚಿಲ ಒತ್ತಾಯಿಸಿದರು. ಬಸ್ ನಿಲುಗಡೆ ವಿಚಾರದಲ್ಲಿ ಖಾಸಗಿ ಬಸ್ ಮಾಲಕರ ಸಂಘ ಇದೆ. ಅವರು ಜವಾಬ್ದಾರಿ ನಿರ್ವಹಿಸಬೇಕು. ಇಲಾಖೆ ವತಿಯಿಂದ ದಂಡ ವಿಧಿಸಿ ಪರವಾನಿಗೆ ರದ್ದು ಮಾಡಲು ಮಾತ್ರ ಸಾಧ್ಯ. ನಾವು ಈ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತರುತ್ತೇವೆ. ಕೊಲ್ಯದಲ್ಲಿ ಬಹಳಷ್ಟು ಅಂಗಡಿಗಳಿವೆ. ಸಿ.ಸಿ. ಕ್ಯಾಮರಾ ಅಳವಡಿಸುವಂತೆ ನೊಟೀಸ್ ನೀಡಲಾಗಿದೆ. ಆದರೂ ಸಿ.ಸಿ ಕ್ಯಾಮರಾ ವ್ಯವಸ್ಥೆ ಆಗಿಲ್ಲ.ಅಲ್ಲಿ ಯಾವುದೇ ಘಟನೆ ನಡೆದರೂ ಗೊತ್ತಾಗುತ್ತಿಲ್ಲ ಎಂದು ಉಳ್ಳಾಲ ಠಾಣಾ ಉಪ ನಿರೀಕ್ಷಕ ಸಂತೋಷ್ ಸಭೆಯ ಗಮನ ಸೆಳೆದರು. ಕೊಲ್ಯದಲ್ಲಿ ಸಿಸಿ ಕ್ಯಾಮೆರಾ ಇಲ್ಲದ ಅಂಗಡಿಗಳಿಗೆ ಉದ್ದಿಮೆ ಪರವಾನಿಗೆ ನೀಡಬಾರದು. ಅವರ ವಿರುದ್ಧ ಕ್ರಮ ಆಗಬೇಕು ಎಂದು ಮನೋಜ್ ಹೇಳಿದರು. ಈಗಾಗಲೇ ಡಿ ಮಾರ್ಟ್ ಗೆ ಸಿ.ಸಿ ಕ್ಯಾಮರಾ ಹಾಕಲು ಹೇಳಿದ್ದೇವೆ. ಅವರು ಹಾಕುತ್ತಾರೆ. ಒಂದು ವಾರದೊಳಗೆ 15 ಕಡೆ ಸಿ.ಸಿ ಕ್ಯಾಮರಾ ಹಾಕುವ ಕೆಲಸ ನಡೆಯಲಿದೆ ಎಂದು ಉಪಾಧ್ಯಕ್ಷ ರವಿಶಂಕರ್ ಹೇಳಿದರು. ಕುಡಿಯುವ ನೀರು ಸರಬರಾಜು ಮಾಡುವ ಕೆಲಸ ಸಮರ್ಪಕವಾಗಿ ಆಗುತ್ತಿಲ್ಲ. ಜವಾಬ್ದಾರಿಯುತವಾಗಿ ನಿರ್ವಹಣೆ ಮಾಡಿ ಎಂದು ಕುಡಿಯುವ ನೀರು ಸರಬರಾಜು ಸಹಾಯಕ ಇಂಜಿನಿಯರ್ ಶ್ರೀಕಾಂತ್ ಗೆ ಸದಸ್ಯರು ಗಮನ ಸೆಳೆದರು ಉಪಾಧ್ಯಕ್ಷ ರವಿಶಂಕರ್, ಸ್ಥಾಯಿ ಸಮಿತಿ ಅಧ್ಯಕ್ಷ ಪುರುಷೋತ್ತಮ ಗಟ್ಟಿ ಉಪಸ್ಥಿತರಿದ್ದರು.

ವಾರ್ತಾ ಭಾರತಿ 24 Nov 2025 8:21 pm

ವಿಜಯನಗರ | ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಮಕ್ಕಳಿಗಾಗಿ ಅರಿವು, ಜಾಗೃತಿ ಕಾರ್ಯಕ್ರಮ

ವಿಜಯನಗರ /ಹೊಸಪೇಟೆ : ನಗರದ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ತೆರೆದ ಮನೆ ಕಾರ್ಯಕ್ರಮವನ್ನು ಆಯೋಜಿಸಿ, ಶಾಲಾ ಮಕ್ಕಳಿಗೆ 112 ತುರ್ತು ಸಹಾಯವಾಣಿ,1930 ಸೈಬರ್ ಅಪರಾಧ ಸಹಾಯವಾಣಿ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ ಹಾಗೂ ಸಂಚಾರ ನಿಯಮಗಳು ಮತ್ತು ಠಾಣೆಯ ಕಾರ್ಯವೈಖರಿಯ ಕುರಿತು ಅರಿವು ಮತ್ತು ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಠಾಣಾಧಿಕಾರಿ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಭಾಗವಹಿಸಿದ್ದರು.

ವಾರ್ತಾ ಭಾರತಿ 24 Nov 2025 8:20 pm

ಭಾರತದಲ್ಲಿ ಒಂದೇ ಟೆಸ್ಟ್‌ನಲ್ಲಿ ಅರ್ಧಶತಕ, ಆರು ವಿಕೆಟ್ ಪಡೆದ ದಕ್ಷಿಣ ಆಫ್ರಿಕಾದ ಮೊದಲ ಆಟಗಾರ ಜಾನ್ಸನ್

ಗುವಾಹಟಿ, ನ.24: ಭಾರತ ತಂಡದ ವಿರುದ್ಧ ಆಲ್‌ ರೌಂಡ್ ಪ್ರದರ್ಶನ ನೀಡಿದ ಮಾರ್ಕೊ ಜಾನ್ಸನ್ ದಕ್ಷಿಣ ಆಫ್ರಿಕಾ ಕ್ರಿಕೆಟಿನ ಟೆಸ್ಟ್ ದಾಖಲೆಯಲ್ಲಿ ತನ್ನ ಹೆಸರನ್ನು ಕೆತ್ತಿದರು. 25ರ ವಯಸ್ಸಿನ ಜಾನ್ಸನ್ ಭಾರತದ ಮಣ್ಣಿನಲ್ಲಿ ಒಂದೇ ಟೆಸ್ಟ್ ಪಂದ್ಯದಲ್ಲಿ ಅರ್ಧಶತಕ (93 ರನ್)ಹಾಗೂ ಆರು ವಿಕೆಟ್‌ ಗೊಂಚಲು(6-48) ಕಬಳಿಸಿದ ದಕ್ಷಿಣ ಆಫ್ರಿಕಾದ ಮೊದಲ ಆಟಗಾರ ಎನಿಸಿಕೊಂಡು ಇತಿಹಾಸ ನಿರ್ಮಿಸಿದರು. ತನ್ನ ಸ್ಮರಣೀಯ ಪ್ರದರ್ಶನದ ಮೂಲಕದ ದಕ್ಷಿಣ ಆಫ್ರಿಕಾ ತಂಡವು ಮೂರನೇ ದಿನದಾಟದಲ್ಲಿ ಸಂಪೂರ್ಣ ಮೇಲುಗೈ ಸಾಧಿಸುವಲ್ಲಿ ಮಹತ್ತರ ಕೊಡುಗೆ ನೀಡಿದರು. ಮೊದಲ ಇನಿಂಗ್ಸ್‌ ನಲ್ಲಿ 489 ರನ್ ಕಲೆ ಹಾಕಿರುವ ದಕ್ಷಿಣ ಆಫ್ರಿಕಾ ತಂಡವು ಈಗಾಗಲೇ ಆತಿಥೇಯರಿಗೆ ಒತ್ತಡ ಹೇರಿದೆ. 2ನೇ ದಿನದಾಟವಾದ ರವಿವಾರ ಜಾನ್ಸನ್ ಅವರು 91 ಎಸೆತಗಳಲ್ಲಿ 93 ರನ್ ಗಳಿಸಿದ್ದರು. ಸೋಮವಾರ ಬೌಲಿಂಗ್‌ ನ ಮೂಲಕ ಮತ್ತೊಮ್ಮೆ ಮೇಲುಗೈ ಸಾಧಿಸಿದರು. ಧ್ರುವ ಜುರೆಲ್ ವಿಕೆಟನ್ನು ಉರುಳಿಸುವ ಮೂಲಕ ಸೋಮವಾರ ಬೆಳಗ್ಗಿನ ಅವಧಿಯಲ್ಲಿ ಭಾರತದ ಕುಸಿತಕ್ಕೆ ನಾಂದಿ ಹಾಡಿದರು. ಮಧ್ಯಾಹ್ನದ ವೇಳೆಗೆ ರಿಷಭ್ ಪಂತ್, ನಿತೀಶ್ ರೆಡ್ಡಿ ಹಾಗೂ ರವೀಂದ್ರ ಜಡೇಜ ವಿಕೆಟ್‌ ಗಳನ್ನು ಕಬಳಿಸಿ ದಕ್ಷಿಣ ಆಫ್ರಿಕಾ ಬಿಗಿ ಹಿಡಿತ ಸಾಧಿಸುವಲ್ಲಿ ನೆರವಾದರು. ಕುಲದೀಪ ಯಾದವ್(19 ರನ್)ವಿಕೆಟನ್ನು ಉರುಳಿಸಿದ ಜಾನ್ಸನ್ ಅವರು ಐದು ವಿಕೆಟ್ ಗೊಂಚಲು ಪೂರೈಸಿದರು. ಬುಮ್ರಾ(5ರನ್)ವಿಕೆಟನ್ನು ಉರುಳಿಸಿರುವ ಜಾನ್ಸನ್ 19.5 ಓವರ್‌ ಗಳಲ್ಲಿ 48 ರನ್‌ ಗೆ ಆರು ವಿಕೆಟ್‌ ಗಳನ್ನು ಪಡೆದರು. ಜಾನ್ಸನ್ ಅವರು ಭಾರತದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ದಕ್ಷಿಣ ಆಫ್ರಿಕಾದ ವೇಗದ ಬೌಲರ್‌ ಗಳ ಪೈಕಿ ಒಬ್ಬರಾಗಿದ್ದಾರೆ. ಲ್ಯಾನ್ಸ್ ಕ್ಲೂಸ್ನರ್(1996ರಲ್ಲಿ 8/64)ಹಾಗೂ ಡೇಲ್ ಸ್ಟೇಯ್ನ್(2010ರಲ್ಲಿ 7/51)ಈ ಹಿಂದೆ ಉತ್ತಮ ಪ್ರದರ್ಶನ ನೀಡಿದ್ದರು. ಭಾರತದಲ್ಲಿ ಆಡಿರುವ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ತಂಡದ ಎಡಗೈ ವೇಗಿಗಳ ಪೈಕಿ ಜಾನ್ಸನ್ ನಾಲ್ಕನೇ ಶ್ರೇಷ್ಠ ಪ್ರದರ್ಶನ ನೀಡಿದರು. ಭಾರತದಲ್ಲಿ ಈ ಶತಮಾನದಲ್ಲಿ 50 ಪ್ಲಸ್ ಸ್ಕೋರ್ ಹಾಗೂ ಐದು ವಿಕೆಟ್ ಗೊಂಚಲು ಪಡೆದ ಆಯ್ದ ಆಟಗಾರರ ಗುಂಪಿಗೆ ಜಾನ್ಸನ್ ಸೇರ್ಪಡೆಯಾದರು. ನಿಕಿ ಬೋಯೆ(2000ರಲ್ಲಿ ಬೆಂಗಳೂರಿನಲ್ಲಿ)ಹಾಗೂ ಜೇಸನ್ ಹೋಲ್ಡರ್(2008ರಲ್ಲಿ ಹೈದರಾಬಾದ್‌ನಲ್ಲಿ)ಜಾನ್ಸನ್‌ಗಿಂತ ಮೊದಲು ಡಬಲ್ ಸಾಧನೆ ಮಾಡಿದ್ದಾರೆ. ಜಾನ್ಸನ್ 1988ರ ನಂತರ ಭಾರತದಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಐದು ವಿಕೆಟ್ ಗೊಂಚಲು ಪಡೆದ ಕೇವಲ ಮೂರನೇ ಎಡಗೈ ವೇಗದ ಬೌಲರ್ ಆಗಿದ್ದಾರೆ. ಈ ಹಿಂದೆ ಝಹೀರ್ ಖಾನ್ ಹಾಗೂ ಮಿಚೆಲ್ ಜಾನ್ಸನ್ ಈ ಸಾಧನೆ ಮಾಡಿದ್ದರು. ಭಾರತ ತಂಡವು 201 ರನ್‌ ಗೆ ಗಂಟುಮೂಟೆ ಕಟ್ಟಿದಾಗ ದಕ್ಷಿಣ ಆಫ್ರಿಕಾ ಬೃಹತ್ ಮುನ್ನಡೆ ಸಂಪಾದಿಸಿತು. ಫಾಲೋ ಆನ್ ಹೇರುವ ಅವಕಾಶವಿದ್ದರೂ ನಾಯಕ ಟೆಂಬಾ ಬವುಮಾ ಸಹ ಆಟಗಾರರು ಹಾಗೂ ಪ್ರಧಾನ ಕೋಚ್ ಜೊತೆ ಚರ್ಚಿಸಿದ ನಂತರ ಮತ್ತೊಮ್ಮೆ ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. 

ವಾರ್ತಾ ಭಾರತಿ 24 Nov 2025 8:20 pm

ಅಪಾರ್ಟ್‌ಮೆಂಟ್‌ಗಳಲ್ಲಿ ಹೆಚ್ಚು ನಿರ್ವಹಣಾ ಶುಲ್ಕ ಮಾದರಿ ರದ್ದುಗೊಳಿಸಿದ ಬೆಂಗಳೂರು ಸಿಟಿ ಸಿವಿಲ್‌ ಕೋರ್ಟ್‌!

ಬೆಂಗಳೂರಿನ ಸಿವಿಲ್ ಕೋರ್ಟ್, ದೊಡ್ಡ ಫ್ಲ್ಯಾಟ್‌ಗಳಿಗೆ ಹೆಚ್ಚಿನ ನಿರ್ವಹಣಾ ಶುಲ್ಕ ವಿಧಿಸುವ ಮಾದರಿ ನಿಯಮ ಕಾನೂನುಬಾಹಿರ ಎಂದು ಆದೇಶಿಸಿದೆ. ಎಲ್ಲಾ ಫ್ಲ್ಯಾಟ್ ಮಾಲೀಕರು ಸಾಮಾನ್ಯ ಸೌಲಭ್ಯಗಳನ್ನು ಸಮಾನವಾಗಿ ಬಳಸುವುದರಿಂದ ನಿರ್ವಹಣಾ ಶುಲ್ಕವೂ ಸಮಾನವಾಗಿರಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಈ ಆದೇಶವು ಅಪಾರ್ಟ್‌ಮೆಂಟ್‌ಗಳ ನಿರ್ವಹಣಾ ಶುಲ್ಕ ವಿಧಿಸುವ ವಿಧಾನದ ಮೇಲೆ ಗಮನಾರ್ಹ ಪರಿಣಾಮ ಬೀರಲಿದೆ.

ವಿಜಯ ಕರ್ನಾಟಕ 24 Nov 2025 8:18 pm

ಮಹಿಳೆಯರ ಕಬಡ್ಡಿ ವಿಶ್ವಕಪ್: ಭಾರತ ತಂಡ ಚಾಂಪಿಯನ್

ಫೈನಲ್‌ ನಲ್ಲಿ ಚೈನೀಸ್ ತೈಪೆ ವಿರುದ್ಧ ಜಯಭೇರಿ

ವಾರ್ತಾ ಭಾರತಿ 24 Nov 2025 8:17 pm

ಸತತ ಮೂರನೇ ಬಾರಿ ಡೇವಿಸ್ ಕಪ್ ಪ್ರಶಸ್ತಿ ಗೆದ್ದ ಇಟಲಿ

ಬೊಲೊಗ್ನಾ, ನ.24: ಮ್ಯಾಟಿಯೊ ಬೆರ್ರೆಟ್ಟಿನಿ ಹಾಗೂ ಫ್ಲಾವಿಯೊ ಕೊಬೊಲ್ಲಿ ಸ್ಪೇನ್ ತಂಡದ ವಿರುದ್ಧ ತಮ್ಮ ಸಿಂಗಲ್ಸ್ ಪಂದ್ಯಗಳನ್ನು ಗೆದ್ದ ಹಿನ್ನೆಲೆಯಲ್ಲಿ ಇಟಲಿ ಟೆನಿಸ್ ತಂಡವು ಸತತ ಮೂರನೇ ಬಾರಿ ಡೇವಿಸ್ ಕಪ್ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಸ್ವದೇಶೀ ಪ್ರೇಕ್ಷಕರ ಬೆಂಬಲದೊಂದಿಗೆ ಆಡಿದ ಬೆರ್ರೆಟ್ಟಿನಿ ರವಿವಾರ ನಡೆದ ಮೊದಲ ಸಿಂಗಲ್ಸ್ ಪಂದ್ಯದಲ್ಲಿ ಪಾಬ್ಲೊ ಕರ್ರೆನೊ ಬುಸ್ಟಾರನ್ನು 6-3, 6-4 ನೇರ ಸೆಟ್‌ ಗಳ ಅಂತರದಿಂದ ಮಣಿಸಿದರು. ಮತ್ತೊಂದು ಸಿಂಗಲ್ಸ್ ಪಂದ್ಯದಲ್ಲಿ ಕೊಬೊಲ್ಲಿ ಅವರು ಜೌಮ್ ಮುನಾರ್‌ರನ್ನು 1-6, 7-6(5), 7-5 ಸೆಟ್‌ ಗಳ ಅಂತರದಿಂದ ಮಣಿಸುವುದರೊಂದಿಗೆ ಬೆಸ್ಟ್ ಆಫ್ ತ್ರೀ ಪಂದ್ಯದಲ್ಲಿ ಇಟಲಿ ತಂಡಕ್ಕೆ 2-0 ಅಂತರದ ಗೆಲುವು ತಂದುಕೊಟ್ಟರು. ಆರು ಬಾರಿಯ ವಿನ್ನರ್ ಸ್ಪೇನ್ ತಂಡದ ವಿರುದ್ಧ ಜಯಭೇರಿ ಬಾರಿಸಿರುವ ಇಟಲಿ ತಂಡವು 1976, 2023 ಹಾಗೂ 2024ರ ನಂತರ ನಾಲ್ಕನೇ ಬಾರಿ ಡೇವಿಸ್ ಕಪ್‌ಗೆ ಮುತ್ತಿಟ್ಟಿದೆ. ಇಟಲಿ ಸತತ ಮೂರು ಡೇವಿಸ್ ಕಪ್ ಟ್ರೋಫಿಗಳನ್ನು ಗೆದ್ದಿರುವ ಮೊದಲ ದೇಶವಾಗಿದೆ. ಉಭಯ ತಂಡಗಳು ಪ್ರಮುಖ ಆಟಗಾರರಿಂದ ವಂಚಿತವಾಗಿದ್ದು, ಸ್ಪೇನ್ ತಂಡವು ಕಾರ್ಲೊಸ್ ಅಲ್ಕರಾಝ್ ಇಲ್ಲದೇ ಆಡಿದರೆ, ಇಟಲಿ ತಂಡವು ಜನ್ನಿಕ್ ಸಿನ್ನರ್ ಹಾಗೂ ಲೊರೆಂರೊ ಮುಸೆಟ್ಟಿ ಅನುಪಸ್ಥಿತಿಯಲ್ಲಿ ಕಣಕ್ಕಿಳಿದಿತ್ತು. ಬೆರ್ರೆಟ್ಟಿನಿ ಹಾಗೂ ಕೊಬೊಲ್ಲಿ ಸಾಂದರ್ಭಿಕ ಪ್ರದರ್ಶನ ಮೂಲಕ ಇಟಲಿಗೆ ಪ್ರಶಸ್ತಿ ಗೆದ್ದುಕೊಟ್ಟರು.

ವಾರ್ತಾ ಭಾರತಿ 24 Nov 2025 8:13 pm

Kalaburagi | ಆಳಂದ ಶಾಸಕ ಬಿ.ಆರ್ ಪಾಟೀಲ್‌ಗೆ ಸಚಿವ ಸ್ಥಾನ ನೀಡಲು ಶಿವಕುಮಾರ್ ಯಲ್ದೆ ಆಗ್ರಹ

ಕಲಬುರಗಿ: ರಾಜ್ಯ ನೀತಿ ಮತ್ತು ಆಯೋಗದ ಉಪಾಧ್ಯಕ್ಷ ಹಾಗೂ ಆಳಂದ ಶಾಸಕರಾಗಿರುವ ಬಿ.ಆರ್.ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಳಂದ ಮತಕ್ಷೇತ್ರದ ಕಾಂಗ್ರೆಸ್ ಮುಖಂಡ ಶಿವಕುಮಾರ್ ಯಲ್ದೆ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ದೊಡ್ಡ ತಾಲ್ಲೂಕು ಎಂದು ಹೇಳಲಾಗುತ್ತಿರುವ ಆಳಂದ ತಾಲೂಕಿಗೆ ಇಲ್ಲಿಯವರೆಗೆ ಸಚಿವ ಸ್ಥಾನ ದೊರಕಿಲ್ಲ. ಈ ಮತಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಸಚಿವ ಸ್ಥಾನ ಕೊಡಲೇಬೇಕಾಗಿದೆ ಎಂದು ಹೇಳಿದರು ಶಾಸಕ ಬಿ.ಆರ್.ಪಾಟೀಲ ಅವರು ರಾಜಕೀಯ ಮುತ್ಸದ್ದಿ, ಅಭಿವೃದ್ಧಿ ಹರಿಕಾರ, ನಾಲ್ಕು ಬಾರಿ ಶಾಸಕ, ಉಪಾಸಭಾಪತಿ, ವಿಧಾನ ಪರಿಷತ್ ಸದಸ್ಯರಾಗಿ ಅನುಭವ ಹೊಂದಿರುವ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡಬೇಕು, ನಮ್ಮದೇ ಜಿಲ್ಲೆಯವರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಪಾಟೀಲ್ ಅವರನ್ನು ಪರಿಗಣಿಸಿ ಮಂತ್ರಿಯನ್ನಾಗಿ ಮಾಡಬೇಕೆಂದು ಮನವಿ ಮಾಡಿದ್ದಾರೆ.

ವಾರ್ತಾ ಭಾರತಿ 24 Nov 2025 8:11 pm

ಕಿವುಡರ ಒಲಿಂಪಿಕ್ಸ್: ಮೊದಲ ವೈಯಕ್ತಿಕ ಚಿನ್ನ ಗೆದ್ದ ಪ್ರಾಂಜಲಿ

ಟೋಕಿಯೊ, ನ.24: ಪ್ರಾಂಜಲಿ ಪ್ರಶಾಂತ್ ಧುಮಾಲ್ ಮಹಿಳೆಯರ 25 ಮೀ. ಪಿಸ್ತೂಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಈ ಮೂಲಕ ಜಪಾನಿನಲ್ಲಿ ನಡೆಯುತ್ತಿರುವ 2025ರ ಆವೃತ್ತಿಯ ಡೆಫ್ಲಂಪಿಕ್ಸ್‌ನಲ್ಲಿ(ಕಿವುಡರ ಒಲಿಂಪಿಕ್ಸ್)ಎರಡನೇ ಚಿನ್ನ ಹಾಗೂ ಮೂರನೇ ಪದಕವನ್ನು ತನ್ನದಾಗಿಸಿಕೊಂಡರು. ಸೋಮವಾರ ನಡೆದ ಫೈನಲ್‌ ನಲ್ಲಿ ಪ್ರಾಂಜಲಿ 34 ಸ್ಕೋರ್ ಗಳಿಸಿದರು. 32 ಅಂಕ ಗಳಿಸಿದ ಉಕ್ರೇನ್‌ನ ಹಲಿನಾ ಮೊಸಿನಾ ಬೆಳ್ಳಿ ಪದಕ ಗೆದ್ದರು. ಜಿವೊನ್ ಜೆಯೊನ್(30 ಅಂಕ)ಕಂಚಿನ ಪದಕ ತನ್ನದಾಗಿಸಿಕೊಂಡರು. ಭಾರತದ ಅನುಯಾ ಪ್ರಸಾದ್ ನಾಲ್ಕನೇ ಸ್ಥಾನ ಪಡೆದರು. ಪ್ರಾಂಜಲಿ ಈ ಮೊದಲು ಅಭಿನವ್ ದೇಶ್ವಾಲ್ ಜೊತೆಗೂಡಿ 10 ಮೀ. ಏರ್ ಪಿಸ್ತೂಲ್ ಮಿಕ್ಸೆಡ್ ಟೀಮ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಪ್ರಾಂಜಲಿ ವಿಶ್ವ ಡೀಫ್ ಕ್ವಾಲಿಫಿಕೇಶನ್ ಹಾಗೂ ಡೆಫ್ಲೆಂಪಿಕ್ಸ್ ದಾಖಲೆಯನ್ನು ಮುರಿದು ಅಗ್ರ 2 ಸ್ಥಾನದೊಂದಿಗೆ ಫೈನಲ್‌ ಗೆ ಅರ್ಹತೆ ಪಡೆದಿದ್ದರು. ಈಗ ನಡೆಯುತ್ತಿರುವ ಕಿವುಡರ ಒಲಿಂಪಿಕ್ಸ್‌ನಲ್ಲಿ ಭಾರತದ ಶೂಟರ್‌ ಗಳು ಏಳು ಚಿನ್ನ, ಆರು ಬೆಳ್ಳಿ ಹಾಗೂ ಮೂರು ಕಂಚು ಸಹಿತ ಒಟ್ಟು 16 ಪದಕಗಳನ್ನು ಗೆದ್ದಿದ್ದಾರೆ. ಪುರುಷರ 25 ಮೀ. ರ‍್ಯಾಪಿಡ್ ಫೈರ್ ಪಿಸ್ತೂಲ್ ಫೈನಲ್ ಮೂಲಕ ನ.25ರಂದು ಶೂಟಿಂಗ್ ಸ್ಪರ್ಧೆಗಳು ಮುಕ್ತಾಯವಾಗಲಿವೆ.

ವಾರ್ತಾ ಭಾರತಿ 24 Nov 2025 8:09 pm

ಕಲಬುರಗಿ | ಕೆಕೆಆರ್‌ಡಿಬಿಯಲ್ಲಿ ಘೋಷಣೆಯಾದ ಯೋಜನೆಗಳು ಕಾರ್ಯರೂಪಕ್ಕೆ ತರುವುದು ಯಾವಾಗ?: ತಾಹೇರ್ ಹುಸೇನ್ ಪ್ರಶ್ನೆ

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಪ್ರತಿವರ್ಷ ಹಲವಾರು ಯೋಜನೆಗಳನ್ನು ಘೋಷಿಸುತ್ತಿದ್ದರೂ, ಅವುಗಳ ಅನುಷ್ಠಾನವು ಕೇವಲ 'ಕಾಗದ'ದಲ್ಲಿಯೇ ಉಳಿದಿವೆ, ಅವುಗಳು ಕಾರ್ಯರೂಪಕ್ಕೆ ಬರುವುದು ಯಾವಾಗ? ಎಂದು ವೆಲ್ಫೇರ್ ಪಾರ್ಟಿಯ ರಾಜ್ಯಾಧ್ಯಕ್ಷ ತಾಹೇರ್ ಹುಸೇನ್ ಪ್ರಶ್ನಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಅಡಿಯಲ್ಲಿ ಘೋಷಣೆಯಾದ 160ಕ್ಕೂ ಹೆಚ್ಚು ಕಾಮಗಾರಿಗಳು 2025ರ ಅಕ್ಟೋಬರ್ ತಿಂಗಳವರೆಗೂ ಪ್ರಾರಂಭವೇ ಆಗಿಲ್ಲ ಎಂದರು. ಬಾಲಭವನ ನಿರ್ಮಾಣ, ಮಹಿಳಾ ಕ್ರೀಡಾ ಸಂಕೀರ್ಣದ 8 ಕಾಮಗಾರಿಗಳು, ಚಂದ್ರಕಾಂತ್ ಪಾಟೀಲ್ ಕ್ರೀಡಾಂಗಣಕ್ಕೆ ಸಂಬಂಧಿಸಿದ 12 ಕಾಮಗಾರಿಗಳು ಸೇರಿ ಒಟ್ಟು 45 ಕಾಮಗಾರಿಗಳಲ್ಲಿ ಒಂದೂ ಪ್ರಾರಂಭವಾಗಿಲ್ಲ. ಕೂಡಲೇ ಘೋಷಣೆಯಾಗಿರುವ ಕಾಮಗಾರಿಗಳನ್ನು ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು. ಲೋಕೋಪಯೋಗಿ ಇಲಾಖೆ ಅಡಿಯಲ್ಲಿ ನಗರದ ಎಂ.ಬಿ.ನಗರ, ಅಂಬಿಕಾ ನಗರ, ಮಹಾಗಾಂವ್‌ನಲ್ಲಿ ಮೆಟ್ರಿಕ್ ನಂತರದ ಸ್ನಾತಕೋತ್ತರ ಬಾಲಕ/ಬಾಲಕಿಯರ ವಸತಿ ನಿಲಯಗಳ ನಿರ್ಮಾಣ, ಮಿನಿ ವಿಧಾನಸೌಧದಲ್ಲಿ ಸಭಾಂಗಣ ನಿರ್ಮಾಣ, ಮಿಲ್ಲತ್ ನಗರದಲ್ಲಿ ರಸ್ತೆ ಕಾಮಗಾರಿಗಳು ಸೇರಿ ಒಟ್ಟು 25 ಕಾಮಗಾರಿಗಳಲ್ಲಿ ಒಂದೂ ಪ್ರಾರಂಭವಾಗಿಲ್ಲ. ಇಲ್ಲಿನ ಮೆಹಬೂಬ್ ಗುಲ್ಷನ್ ಗಾರ್ಡನ್ ಅಭಿವೃದ್ಧಿ, ರಾಜೀವ್ ಗಾಂಧಿ ಥೀಮ್ ಪಾರ್ಕ್ ಅಭಿವೃದ್ಧಿ, ಸೂಪರ್ ಮಾರ್ಕೆಟ್‌ನಲ್ಲಿ ಬಹುಮಟ್ಟದ ಕಾರ್ ಪಾರ್ಕಿಂಗ್, ಡಾಗ್ ಶೆಲ್ಟರ್ ನಿರ್ಮಾಣ, ಶರಣಬಸವೇಶ್ವರ ಕೆರೆ ಅಭಿವೃದ್ಧಿ ಸೇರಿದಂತೆ ಒಟ್ಟು 13 ಕಾಮಗಾರಿಗಳಲ್ಲಿ ಒಂದೂ ಪ್ರಾರಂಭವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಡಿಜಿಟಲ್ ಕ್ಲಾಸ್ ರೂಮ್, ಡಿಜಿಟಲ್ ಲೈಬ್ರರಿ, RO ವಾಟರ್ ಪ್ಲಾಂಟ್ ಸೇರಿ ಒಟ್ಟು 15 ಕಾಮಗಾರಿಗಳು ಹಾಗೂ ಗುಲ್ಬರ್ಗ ವಿಶ್ವವಿದ್ಯಾಲಯದ 9 ಕಾಮಗಾರಿಗಳು ಸೇರಿದಂತೆ ಒಂದು ಕಾಮಗಾರಿಯೂ ಆರಂಭವಾಗಿಲ್ಲ ಎಂದು ದೂರಿದರು. ಹಲವು ಕಾಮಗಾರಿಗಳು ಈವರೆಗೆ ಪ್ರಾರಂಭವಾಗಿಲ್ಲ, ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರದ ಅನುಮಾನ ಎದ್ದು ಕಾಣುತ್ತಿದೆ, ಕೂಡಲೇ ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾರ್ಯದರ್ಶಿ ಮುಬೀನ್ ಅಹ್ಮದ್, ಜಿಲ್ಲಾ ಅಧ್ಯಕ್ಷ ಸಲೀಂ ಚಿತಾಪುರಿ, ಜಿಲ್ಲಾ ಕಾರ್ಯದರ್ಶಿ ಮುನೀರ್ ಹಶ್ಮಿ, ಸಲೀಂ ಸಾಗರಿ, ಅಕ್ರಮ, ನಸೀರ್ ಕಲ್ಯಾಣಿ ಮತ್ತಿತರರು ಇದ್ದರು.

ವಾರ್ತಾ ಭಾರತಿ 24 Nov 2025 8:08 pm

ಕಲಬುರಗಿ | ಶಿಕ್ಷಣ ಕ್ಷೇತ್ರಕ್ಕೆ ಪ್ರಿಯಾಂಕ್ ಖರ್ಗೆ ಅವರ ಕೊಡುಗೆ ಅಪಾರ: ಶೇಖ್ ಬಬ್ಲು

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಾಮಾಣಿಕ ಹಾಗೂ ಪ್ರಬುದ್ಧ ರಾಜಕಾರಣಿ ಯಾಗುವುದರ ಜೊತೆಗೆ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶೇಖ್ ಬಬ್ಲು ಹೇಳಿದರು. ಚಿತ್ತಾಪುರ ಪಟ್ಟಣದ ಬಿಆರ್'ಸಿ ಕಚೇರಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ-ಬಿಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ 47ನೇ ಜನ್ಮದಿನದ ಪ್ರಯುಕ್ತ ಗೆಳೆಯರ ಬಳಗದ ವತಿಯಿಂದ ಸಂವಿಧಾನ ಓದು ವಿದ್ಯಾರ್ಥಿ ಯುವಜನರಿಗಾಗಿ ಕೈಪಿಡಿ‌ ವಿತರಿಸಿ ಮಾತನಾಡಿದರು. ಚಿತ್ತಾಪುರ ಮತಕ್ಷೇತ್ರದಿಂದ ಹ್ಯಾಟ್ರಿಕ್ ಗೆಲುವು ಸಾಧಿಸಿದ ಪ್ರಿಯಾಂಕ್ ಖರ್ಗೆ ಅವರು ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡುವುದರ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿ ಶೈಕ್ಷಣಿಕ ಕ್ಷೇತ್ರಕ್ಕೆ ಅತೀ ಹೆಚ್ಚು ಅನುದಾನ ಬಿಡುಗಡೆ ಮಾಡಿ ಸೌಲಭ್ಯವನ್ನು ಕಲ್ಪಿಸುತ್ತಿರುವ ರಾಜ್ಯದ ಏಕೈಕ ನಾಯಕರಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು. ಇದೇ ವೆಳೆ 1,000 ಸಂವಿಧಾನ ಓದು ಪುಸ್ತಕಗಳನ್ನು 49 ಸರ್ಕಾರಿ ಪ್ರೌಢ ಶಾಲೆಗಳಿಗೆ, ಸಮಾಜ ಕಲ್ಯಾಣ ಇಲಾಖೆಗೆ 100 ಪುಸ್ತಕಗಳು, ತಾಪಂ ಅಡಿಯಲ್ಲಿ ಬರುವ ಅರಿವು ಕೇಂದ್ರಗಳಿಗೆ 300 ಹಾಗೂ ಅಲ್ಪಸಂಖ್ಯಾತ ಇಲಾಖೆಗೆ 100 ಪುಸ್ತಕಗಳನ್ನು ಉಚಿತವಾಗಿ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ಮುಹಮ್ಮದ್‌ ಶರೀಫ್, ರಫೀಕ್ ಲಿಂಕ್, ಎಂ.ಎ ನಯೀಮ್, ಸೀರಾಜ್, ರಾಜು ಸಾಹುಕಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

ವಾರ್ತಾ ಭಾರತಿ 24 Nov 2025 8:04 pm

ಉಡುಪಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ; ಮಂಗಳವಾರ ಸ್ಪಷ್ಟ ಚಿತ್ರಣ

ಉಡುಪಿ: ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಸ್ವಾಮೀಜಿ ಅವರ ವಿಶೇಷ ಆಹ್ವಾನದ ಮೇಲೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಅಂಗವಾಗಿ ನ.28ರಂದು ನಡೆಯುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಪಾಲ್ಗೊಳ್ಳಲು ಪ್ರದಾನ ಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸುವ ಕುರಿತು ಸ್ಪಷ್ಟ ಚಿತ್ರಣ ಮಂಗಳವಾರ ಸಿಗಲಿದೆ. ಪಧಾನ ಮಂತ್ರಿಗಳ ಭೇಟಿಯ ಭದ್ರತೆಯ ಸಂಪೂರ್ಣ ಜವಾಬ್ದಾರಿ ಹೊತ್ತಿರುವ ವಿಶೇಷ ಭದ್ರತಾ ಪಡೆಯ (ಎಸ್‌ಪಿಜಿ) ಹಿರಿಯ ಅಧಿಕಾರಿಗಳು ನಾಳೆ ಉಡುಪಿಗೆ ಆಗಮಿಸಲಿದ್ದು, ಶ್ರೀಕೃಷ್ಣ ಮಠವೂ ಸೇರಿದಂತೆ ಪ್ರಧಾನಿ ಭೇಟಿ ನೀಡುವ ಎಲ್ಲಾ ಸ್ಥಳಗಳಿಗೆ ಭೇಟಿ ನೀಡಿ ಕೈಗೊಳ್ಳಬೇಕಾದ ಭದ್ರತಾ ವ್ಯವಸ್ಥೆಗಳ ಕುರಿತು ಪರಿಶೀಲಿಸಿದ ಬಳಿಕ ಜಿಲ್ಲಾಡಳಿತದೊಂದಿಗೆ ಸಭೆಯನ್ನು ನಡೆಸಲಿದ್ದು, ಇದರಲ್ಲಿ ಪ್ರಧಾನಿ ಭೇಟಿಯ ಸ್ಪಷ್ಟ ಚಿತ್ರಣ ಗೊತ್ತಾಗಲಿದೆ. ಎಸ್‌ಪಿಜಿಯ ಕೆಲವು ಕಿರಿಯ ಅಧಿಕಾರಿಗಳ ಇಂದು ಉಡುಪಿಗೆ ಆಗಮಿಸಿದ್ದರೆ, ಹಿರಿಯ ಅಧಿಕಾರಿಗಳು ನಾಳೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯ ವೇಳೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರನ್ನು ಮೋದಿ ಭೇಟಿಯ ಕುರಿತಂತೆ ಪ್ರಶ್ನಿಸಿದಾಗ, ನಾಳೆ ಎಸ್‌ಪಿಜಿಯ ಹಿರಿಯ ಅಧಿಕಾರಿಗಳೊಂದಿಗೆ ನಡೆಯುವ ಸಭೆಯ ಬಳಿಕ ಎಲ್ಲಾ ಮಾಹಿತಿಗಳನ್ನು ನೀಡುವುದಾಗಿ ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ಇದಕ್ಕೆ ಧ್ವನಿಗೂಡಿಸಿದರು. ಸುಮಾರು ಮೂರು ದಶಕದ ಬಳಿಕ ದೇಶದ ಪ್ರಧಾನಮಂತ್ರಿಯೊಬ್ಬರು ಉಡುಪಿಗೆ ಭೇಟಿ ನೀಡುವ ಕುರಿತಂತೆ ಕಳೆದ ಒಂದು ವಾರದಿಂದ ಬಿರುಸಿನ ಸಿದ್ಧತೆ ಜಿಲ್ಲಾಡಳಿತ, ಪರ್ಯಾಯ ಪುತ್ತಿಗೆ ಮಠ ಹಾಗೂ ಬಿಜೆಪಿ ಪಕ್ಷದ ವತಿಯಿಂದ ನಡೆಯುತ್ತಿದೆ. ಸದ್ಯ ಸಿಕ್ಕಿರುವ ಮಾಹಿತಿಯಂತೆ ಪ್ರಧಾನಮಂತ್ರಿ ಅವರು ಮಂಗಳೂರಿಗೆ ವಿಶೇಷ ವಿಮಾನದಲ್ಲಿ ಬಂದು ಅಲ್ಲಿಂದ ಹೆಲಿಕಾಪ್ಟರ್‌ನಲ್ಲಿ ಆದಿಉಡುಪಿಯ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ಇದಕ್ಕಾಗಿ ಆದಿಉಡುಪಿಯಲ್ಲಿ ಹೊಸದಾದ ಹೆಲಿಪ್ಯಾಡ್‌ನ ನಿರ್ಮಾಣ ಅಂತಿಮ ಹಂತದಲ್ಲಿದೆ. ಪ್ರಧಾನಮಂತ್ರಿ ಅವರು ಬಿಗುಭದ್ರತೆಯ ನಡುವೆ ಆದಿಉಡುಪಿಯಿಂದ ಕರಾವಳಿ ಬೈಪಾಸ್, ಬನ್ನಂಜೆ, ಕಲ್ಸಂಕ ಮಾರ್ಗವಾಗಿ ಅಪರಾಹ್ನ 12ಗಂಟೆಗೆ ಶ್ರೀಕೃಷ್ಣ ಮಠಕ್ಕೆ ಆಗಮಿಸಲಿದ್ದಾರೆ. ಮಠದಲ್ಲಿ ಶ್ರೀಕೃಷ್ಣ, ಮುಖ್ಯಪ್ರಾಣರ ದರ್ಶನವೂ ಸೇರಿದಂತೆ ಕೆಲವು ನಿಗದಿತ ಕಾರ್ಯಕ್ರಮಗಳ ಬಳಿಕ ಶ್ರೀಕೃಷ್ಣಮಠದ ಪಾರ್ಕಿಂಗ್ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿರುವ ಜರ್ಮನ್ ತಂತ್ರಜ್ಞಾನದ ಬೃಹತ್ ವೇದಿಕೆಯಲ್ಲಿ ನಡೆಯುವ ಲಕ್ಷಕಂಠ ಗೀತಗಾಯನ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಗವದ್ಗೀತೆಯ 10 ಶ್ಲೋಕಗಳನ್ನು ಪಠಿಸಲಿದ್ದಾರೆ. ಅಪರಾಹ್ನ 1:45ರ ಸುಮಾರಿಗೆ ಪ್ರಧಾನಿಗಳು ಆದಿಉಡುಪಿಯಿಂದ ಹೆಲಿಕಾಪ್ಟರ್‌ನಲ್ಲಿ ಮಂಗಳೂರು ಮೂಲಕ ನಿಗದಿತ ಕಾರ್ಯಕ್ರಮಕ್ಕಾಗಿ ಗೋವಾದ ಕಾಣಕೋಣದ ಪರ್ತಗಾಳಿ ಮಠಕ್ಕೆ ತೆರಳಲಿದ್ದಾರೆ. ಇದೀಗ ಉಡುಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾಗತಕ್ಕಾಗಿ ಭರದ ಸಿದ್ಧತೆ ನಡೆಯುತ್ತಿದೆ. ಆದಿಉಡುಪಿಯಿಂದ ಕರಾವಳಿ ಬೈಪಾಸ್‌ವರೆಗೆ 169ಎ ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ಕಾಂಕ್ರೀಟೀಕರಣ ಕಾಮಗಾರಿಯನ್ನು ಅತ್ಯಂತ ವೇಗದಲ್ಲಿ ನಡೆಸಲಾಗುತ್ತಿದೆ. ಅದೇ ರೀತಿ ವಿವಿಧ ಅಭಿವೃದ್ಧಿ ಕಾಮಗಾರಿಗಳು, ಸ್ವಚ್ಛತಾ ಕಾರ್ಯಗಳು ಕರಾವಳಿ ಬೈಪಾಸ್‌ನಿಂದ ಕಲ್ಸಂಕ ಹಾಗೂ ಕೃಷ್ಣ ಮಠದ ಪರಿಸರದಲ್ಲಿ ಕೈಗೊಳ್ಳಲಾಗುತ್ತಿದೆ. ನಗರಸಭೆಯ ಸ್ವಚ್ಛತಾ ಯಂತ್ರದ ಮೂಲಕ ರಸ್ತೆಯ ಇಕ್ಕೆಲ್ಲಗಳಲ್ಲಿ, ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯವನ್ನು ಕಾರ್ಮಿಕರು ನಡೆಸುತಿದ್ದಾರೆ. ಕೃಷ್ಣ ಮಠದ ಪರಿಸರವನ್ನು ಬಣ್ಣ ಬಣ್ಣದ ಹೂಗಳ ಗಿಡಗಳನ್ನು ಇರಿಸುವ ಮೂಲಕ ಸುಂದರಗೊಳಿಸಲಾಗುತ್ತಿದೆ. ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಅಧಿಕಾರಿಗಳೊಂದಿಗೆ ಆದಿಉಡುಪಿಯ ಹೆಲಿಪ್ಯಾಡ್‌ಗೆ, ಮಠದ ಪಾರ್ಕಿಂಗ್ ಪ್ರದೇಶದ ಸಭೆಯ ನಡೆಯುವ ಸ್ಥಳದಲ್ಲಿ ನಿರ್ಮಾಣಗೊಳ್ಳುತ್ತಿರುವ ಪೆಂಡಾಲ್ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳಗಳ ಪರಿಶೀಲನೆ ನಡೆಸಿದರು. ಅಲ್ಲದೇ ಅವರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಸಕರು, ಪೊಲೀಸ್ ವರಿಷ್ಠಾಧಿಕಾರಿ ಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಪ್ರಧಾನಿ ಭೇಟಿಗೆ ಕೈಗೊಳ್ಳಬೇಕಾದ ಸಿದ್ಧತೆ ಕುರಿತಂತೆ ಚರ್ಚಿಸಿದರು. ಈಗಾಗಲೇ ಕರಾವಳಿ ಬೈಪಾಸ್‌ನಿಂದ ಕಲ್ಸಂಕದವರೆಗೆ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ತಡೆಗೋಡೆಗಳನ್ನು ಅಳವಡಿಸಲಾಗಿದೆ. ಹೆಲಿಪ್ಯಾಡ್ ನಿಂದ ಮಠದ ಪಾರ್ಕಿಂಗ್ ಪ್ರದೇಶದವರೆಗಿನ 1.8ಕಿ.ಮೀ. ಉದ್ದದ ರಸ್ತೆಯಲ್ಲಿ ಒಂದೆರಡು ಕಡೆಗಳಲ್ಲಿ ಮಾತ್ರ ಸಾರ್ವಜನಿಕರಿಗೆ, ಕಾರ್ಯಕರ್ತರಿಗೆ ನಿಲ್ಲಲು ಅವಕಾಶ ನೀಡುವ ಸಾದ್ಯತೆ ಇದೆ. ಹೆಲಿಪ್ಯಾಡ್ ಎದುರಿನ ಎಪಿಎಂಸಿಯಲ್ಲಿ ನಡೆಯುವ ಸಂತೆಯನ್ನು ಮೂರು ದಿನಗಳ ಕಾಲ (ನ.26ರಿಂದ 28ರವರೆಗೆ) ಕಲ್ಯಾಣಪುರಕ್ಕೆ ಸ್ಥಳಾಂತರಿಸಲಾಗಿದೆ.      ನ.28ರಂದು ಶಾಲೆಗಳಿಗೆ ರಜೆ ಘೋಷಿಸಲು ಮನವಿ ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಆಯೋಜಿಸಿ ರುವ ಬೃಹತ್ ಗೀತೋತ್ಸವದ ಅಂಗವಾಗಿ ನ.28ರಂದು ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಅಂದು ಸ್ಥಳೀಯ ರಜೆ ಘೋಷಣೆ ಮಾಡುವಂತೆ ಉಡುಪಿ ಜಿಲ್ಲಾಧಿಕಾರಿಗಳಿಗೆ ಶಾಸಕ ಯಶ್‌ಪಾಲ್ ಸುವರ್ಣ ಮನವಿ ಮಾಡಿದ್ದಾರೆ. ದೇಶದ ಪ್ರಧಾನಿಯೋರ್ವರು ಸರಿಸುಮಾರು ಮೂರು ದಶಕಗಳ ಬಳಿಕ (ಚುನಾವಣಾ ಪ್ರಚಾರವನ್ನು ಹೊರತುಪಡಿಸಿ) ಉಡುಪಿಗೆ ಭೇಟಿ ನೀಡುತ್ತಿರುವುದು ಜಿಲ್ಲೆಗೆ ಸಂಭ್ರಮದ ವಿಚಾರವಾಗಿದೆ. ಜಿಲ್ಲಾಡಳಿತ ಸ್ಥಳೀಯ ರಜೆ ನೀಡಿದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಜಿಲ್ಲೆಯ ಜನತೆ ಭಾಗಿಯಾಗಲು ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ ಪ್ರಧಾನಮಂತ್ರಿಗಳ ಭೇಟಿ ಸಮಯದಲ್ಲಿ ಶಿಷ್ಟಾಚಾರಕ್ಕೆ ಸಂಬಂಧಿಸಿದಂತೆ ವಾಹನಗಳ ಸಂಚಾರ ಮತ್ತು ಸಾರ್ವಜನಿಕ ಓಡಾಟದ ನಿರ್ಬಂಧವಿರುವ ಹಿನ್ನೆಲೆಯಲ್ಲಿ ನ.28ರ ಶುಕ್ರವಾರದಂದು ತುರ್ತು ಮತ್ತು ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಅಂಗನವಾಡಿ, ಶಾಲಾ-ಕಾಲೇಜು ಹಾಗೂ ಸರಕಾರಿ ಕಛೇರಿಗಳೂ ಸೇರಿದಂತೆ ಜಿಲ್ಲಾದ್ಯಂತ ಒಂದು ದಿನದ ಸಾರ್ವತ್ರಿಕ ಸ್ಥಳೀಯ ರಜೆ ಘೋಷಿಸಬೇಕೆಂದು ಯಶ್‌ಪಾಲ್ ಸುವರ್ಣ ಜಿಲ್ಲಾಧಿಕಾರಿಗಳಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.

ವಾರ್ತಾ ಭಾರತಿ 24 Nov 2025 8:02 pm

ಬೀದರ್ | ಯರಂಡಗಿ ಗ್ರಾಮದಲ್ಲಿ 7 ಮಂದಿಗೆ ಹುಚ್ಚು ನಾಯಿ ಕಡಿತ : ಗಾಯಾಳುಗಳು ಆಸ್ಪತ್ರೆಗೆ ದಾಖಲು

ಬೀದರ್ : ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಯರಂಡಗಿ ಗ್ರಾಮದಲ್ಲಿ ಇಂದು ಒಂದೆ ದಿನ ಏಳು ಜನರಿಗೆ ಮತ್ತು ಒಂದು ಎಮ್ಮೆಗೆ ಹುಚ್ಚು ನಾಯಿ ಕಚ್ಚಿದ ಘಟನೆ ನಡೆದಿದ್ದು, ಗ್ರಾಮ ಪಂಚಾಯತಿಯವರ ನಿರ್ಲಕ್ಷವೇ ಇದಕ್ಕೆಲ್ಲ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕಳೆದ ಎರೆಡು ದಿನಗಳಿಂದ ಹುಚ್ಚು ನಾಯಿಯೊಂದು ಯರಂಡಗಿ ಗ್ರಾಮದಲ್ಲಿ ಓಡಾಡುತ್ತಿತ್ತು. ಇವತ್ತು ಆ ನಾಯಿ ಏಳು ಜನರಿಗೆ ಕಚ್ಚಿದೆ. ಗಾಯಾಳುಗಳನ್ನು ಬಸವಕಲ್ಯಾಣ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಇತ್ತೀಚಿಗಷ್ಟೇ ಜಿಲ್ಲಾಧಿಕಾರಿಗಳು ಬೀದಿ ನಾಯಿಗಳ ಹಾವಳಿ ತಡೆಯಲು ಕ್ರಮವಹಿಸಲು ಸೂಚಿಸಿದ್ದರು. ಜಿಲ್ಲಾಧಿಕಾರಿಗಳ ಆದೇಶ ನಂತರವೂ ಇಂತಹ ದುರ್ಘಟನೆ ನಡೆದಿರುವುದು ಆತಂಕಕ್ಕಿಡಾಗಿದೆ. ಗ್ರಾಮ ಪಂಚಾಯತ್‌ ಮಾತ್ರ ಕಣ್ಣಿದ್ದು ಕುರುಡಾದಂತೆ ವರ್ತಿಸುತ್ತಿದೆ ಎಂದು ಗ್ರಾಮಸ್ಥ ಬಾಬುರಾವ್ ಪಾಟೀಲ್ ಆರೋಪಿಸಿದ್ದಾರೆ.

ವಾರ್ತಾ ಭಾರತಿ 24 Nov 2025 8:00 pm

ಎಲಾನ್ ಮಸ್ಕ್ ಟೆಸ್ಲಾಗೆ ಲೋಕಲ್‌ ಟೆಸ್ಲಾ EV ತಲೆನೋವು! ದಿಲ್ಲಿ ಹೈಕೋರ್ಟ್ ಮೆಟ್ಟಿಲೇರಿದ ಯುಎಸ್‌ ಟೆಸ್ಲಾ

ಹೊಸದಿಲ್ಲಿ: ಅಮೆರಿಕದ ಬಿಲಿಯನೇರ್ ಉದ್ಯಮಿ ಎಲಾನ್ ಮಸ್ಕ್ ರ ವಿಶ್ವ ವಿಖ್ಯಾತ ‘ಟೆಸ್ಲಾ’ ಬ್ರ್ಯಾಂಡ್ ಹೆಸರಲ್ಲಿ ಸ್ಥಾಪನೆಯಾಗಿದ್ದ ಭಾರತೀಯ ಮೂಲದ ಟೆಸ್ಲಾ ಪವರ್ ಇಂಡಿಯಾ ಸಂಸ್ಥೆಯ ಸಿಇಒಗೆ ಮುಂದಿನ ಆದೇಶದವರೆಗೂ ಆ ಹೆಸರನ್ನು ದುರ್ಬಳಕೆ ಮಾಡಬಾರದು ಅಥವಾ ಅದೇ ಹೆಸರಿನಲ್ಲಿ ಮರೆಮಾಚಿದ ರೀತಿಯಲ್ಲಿ ಬ್ರಾಂಡಿಂಗ್ ಮಾಡಬಾರದು ಎಂದು ದಿಲ್ಲಿ ಹೈಕೋರ್ಟ್ ನಿರ್ದೇಶನ ನೀಡಿದ್ದು, ಟ್ರೇಡ್ ಮಾರ್ಕ್ ಹಕ್ಕು ಸ್ವಾಮ್ಯ ಕುರಿತು ಅರ್ಜಿ ಸಲ್ಲಿಸಿದ್ದ ಎಲಾನ್ ಮಸ್ಕ್ ಮಾಲಕತ್ವದ ಟೆಸ್ಲಾ ಕಂಪೆನಿಗೆ ತಾತ್ಕಾಲಿಕ ಉಪಶಮನ ನೀಡಿದೆ ಎಂದು barandbench.com ವರದಿ ಮಾಡಿದೆ. ಟೆಸ್ಲಾ ಪವರ್ ಇಂಡಿಯಾ ಸಂಸ್ಥೆಯು ನಮ್ಮ ಟೆಸ್ಲಾ ಟ್ರೇಡ್ ಮಾರ್ಕ್ ಅನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಹಾಗೂ EV ಮಾರುಕಟ್ಟೆಗೆ ಪ್ರವೇಶಿಸಲಾಗುವುದು ಎಂದು ಪ್ರಕಟನೆ ನೀಡಿದೆ ಎಂದು ಉಲ್ಲೇಖಿಸಿ ಮೇ 2024ರಲ್ಲಿ ಟೆಸ್ಲಾ ಇಂಕ್ ಸಂಸ್ಥೆ ದಿಲ್ಲಿ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಸಂಬಂಧ ಟೆಸ್ಲಾ ಪವರ್ ಇಂಡಿಯಾ ತನ್ನ ನಡೆಯ ಕುರಿತು ಪತ್ರಿಕಾ ಜಾಹೀರಾತುಗಳನ್ನು ಬಿಡುಗಡೆ ಮಾಡಿದೆ ಎಂದೂ ಈ ಅರ್ಜಿಯಲ್ಲಿ ನ್ಯಾಯಾಲಯದ ಗಮನಕ್ಕೆ ತರಲಾಗಿತ್ತು. ಎಪ್ರಿಲ್ 2022ರಲ್ಲಿ ಟೆಸ್ಲಾ ಪವರ್ ಇಂಡಿಯಾ ಹಾಗೂ ಅದರ ಸಹ ಸಂಸ್ಥೆ ಟೆಸ್ಲಾ ಪವರ್ ಯುಎಸ್ಎಗೆ ತಮ್ಮ ಚಟುವಟಿಕೆಗಳನ್ನು ಸ್ಥಗಿತಗೊಳಿಸುವಂತೆ ಮುಟ್ಟುಗೋಲು ನೋಟಿಸ್ ಅನ್ನು ಜಾರಿಗೊಳಿಸಲಾಗಿತ್ತು. ಹೀಗಿದ್ದೂ, ಟೆಸ್ಲಾ ಪವರ್ ಇಂಡಿಯಾ ತಾನು ಟೆಸ್ಲಾ ಟ್ರೇಡ್ ಮಾರ್ಕ್ ಬಳಸಿಕೊಂಡು ಮಾರುಕಟ್ಟೆಯನ್ನು ಪ್ರವೇಶಿಸುತ್ತಿರುವುದಾಗಿ ಪ್ರಕಟಿಸಿದೆ ಎಂದು ಎಲಾನ್ ಮಸ್ಕ್ ರ ಟೆಸ್ಲಾ ಕಂಪೆನಿ ವಾದಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ತೇಜಸ್ ಕಾರಿಯಾ, ಅಂತಿಮ ಆದೇಶದವರೆಗೂ ಟೆಸ್ಲಾ ಟ್ರೇಡ್ ಮಾರ್ಕ್ ಅನ್ನು ದುರ್ಬಳಕೆ ಮಾಡಿಕೊಳ್ಳುವುದಾಗಲಿ ಅಥವಾ ಅದೇ ಹೆಸರಿನಲ್ಲಿ ಮರೆಮಾಚಿದ ರೀತಿಯಲ್ಲಿ ಬ್ರಾಂಡಿಂಗ್ ಮಾಡುವುದಾಗಲಿ ಮಾಡಕೂಡದು ಎಂದು ಟೆಸ್ಲಾ ಪವರ್ ಇಂಡಿಯಾಗೆ ಸೂಚಿಸಿದ್ದಾರೆ. ಟೆಸ್ಲಾ ಇಂಕ್ ಪರ ವಕೀಲರಾದ ನ್ಯಾನ್ಸಿ ರಾಯ್, ರಾಘವ್ ಮಲಿಕ್, ಪ್ರಕೃತಿ ವರ್ಷಿಣಿ, ಲಲಿತ್ ಅಲ್ಲೆ ಹಾಗೂ ಪ್ರಶಾಂತ್ ರೊಂದಿಗೆ ಹಿರಿಯ ವಕೀಲ ಚಂದರ್ ಎಂ. ಲಾಲ್ ನ್ಯಾಯಾಲಯದಲ್ಲಿ ವಾದ ಮಂಡಿಸಿದರೆ, ಟೆಸ್ಲಾ ಪವರ್ ಇಂಡಿಯಾ ಪರವಾಗಿ ವಕೀಲರಾದ ಸಿದ್ಧಾಂತ್ ಗೋಯೆಲ್ ಮತ್ತು ಮೋಹಿತ್ ಗೋಯೆಲ್ ರೊಂದಿಗೆ ಹಿರಿಯ ವಕೀಲ ಸಾಯಿ ದೀಪಕ್ ಪ್ರತಿವಾದ ಮಂಡಿಸಿದರು.

ವಾರ್ತಾ ಭಾರತಿ 24 Nov 2025 7:56 pm

ʼವಾರ್ತಾಭಾರತಿʼ ಜನರ ನೈಜ ಧ್ವನಿ : ಪತ್ರಕರ್ತ ಅನಿಲ್ ಹೊಸಮನಿ

ವಿಜಯಪುರದಲ್ಲಿ ಕಲ್ಯಾಣ ಕರ್ನಾಟಕ ಆವೃತ್ತಿ ಲೋಕಾರ್ಪಣೆ ಪ್ರಯುಕ್ತ ಓದುಗ, ಹಿತೈಷಿಗಳ ಸಭೆ

ವಾರ್ತಾ ಭಾರತಿ 24 Nov 2025 7:56 pm

ʻಡಿಕೆ ಶಿವಕುಮಾರ್‌ಗೆ 50 ಶಾಸಕರ ಬೆಂಬಲವಿಲ್ಲ, ಇದ್ದರೆ ಸಿಎಂ ಆಗಬಹುದು ʼ: ರಮೇಶ್ ಜಾರಕಿಹೊಳಿ

ಶಾಸಕ ರಮೇಶ ಜಾರಕಿಹೊಳಿ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಡಿಕೆ ಶಿವಕುಮಾರ್‌ಗೆ 50 ಶಾಸಕರ ಬೆಂಬಲ ಇದ್ದರೆ ಸಿಎಂ ಆಗಬಹುದು. ಆದರೆ ಅಷ್ಟು ಬೆಂಬಲ ಅವರಿಗಿಲ್ಲ ಎಂದಿದ್ದಾರೆ. ಕಾಂಗ್ರೆಸ್‌-ಜೆಡಿಎಸ್‌ ಸರಕಾರ ಪತನಕ್ಕೆ ಡಿಕೆ ಶಿವಕುಮಾರ್‌ ಕಾರಣ ಎಂದೂ ಆರೋಪಿಸಿದ್ದಾರೆ. ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ಸಿಕ್ಕರೆ ಸಿಗಲಿ ಎಂದು ಬೆಂಬಲ ವ್ಯಕ್ತಪಡಿಸಿದ್ದಾರೆ.

ವಿಜಯ ಕರ್ನಾಟಕ 24 Nov 2025 7:39 pm

ಬಿಜೆಪಿಯಲ್ಲೂ ಕುರ್ಚಿ ಕಿತ್ತಾಟ: ಏಕಾಏಕಿ ಅಮಿತ್‌ ಶಾ ಭೇಟಿಯಾದ ವಿಜಯೇಂದ್ರ: ಕಾರಣವೇನು?

ದೆಹಲಿ, ನವೆಂಬರ್‌ 24: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಭಾರೀ ಚರ್ಚೆ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್‌ ನಡುವೆ ಜಟಾಪಟಿ ಏರ್ಪಟ್ಟಿದ್ರೆ, ಇತ್ತ ರಾಜ್ಯ ಬಿಜೆಪಿಯಲ್ಲೂ ಪದೇ ಪದೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಕುರಿತು ಚರ್ಚೆ ನಡೆಯುತ್ತಿರುವ ಹೊತ್ತಲ್ಲಿ ಏಕಾಏಕಿ ಕೇಂದ್ರ ಗೃಹ ಸಚಿವರಾದ

ಒನ್ ಇ೦ಡಿಯ 24 Nov 2025 7:39 pm

ಧರ್ಮೇಂದ್ರ ನಟನೆಯ ಕೊನೆಯ ಚಿತ್ರ ʼಇಕ್ಕೀಸ್’ ಪೋಸ್ಟರ್ ಬಿಡುಗಡೆ

ಮುಂಬೈ: ಧರ್ಮೇಂದ್ರ ಅವರ ನಟನೆಯ ಕೊನೆಯ ಸಿನಿಮಾ ‘ಇಕ್ಕೀಸ್’ ಪೋಸ್ಟರ್ ಅನ್ನು ಚಿತ್ರದ ನಿರ್ಮಾಪಕರು ಸೋಮವಾರ ಬಿಡುಗಡೆ ಮಾಡಿದರು. ಈ ಚಿತ್ರದಲ್ಲಿ ಅಗಸ್ತ್ಯ ನಂದಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ತಂದೆಯ ಪಾತ್ರವನ್ನು ಧರ್ಮೇಂದ್ರ ನಿರ್ವಹಿಸಿದ್ದಾರೆ. ಡಿಸೆಂಬರ್ 25ರಂದು ಈ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಸೋಮವಾರ ನಿಧನರಾದರು. ಅವರ ನಿಧನದ ದಿನವೇ ಅವರ ಕೊನೆಯ ಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ.   ‘ಅಪ್ಪಂದಿರು ಮಕ್ಕಳನ್ನು ಬೆಳೆಸಿದರೆ, ಶ್ರೇಷ್ಠ ವ್ಯಕ್ತಿಗಳು ದೇಶವನ್ನು ಬೆಳೆಸುತ್ತಾರೆ. ಧರ್ಮೇಂದ್ರ ಅವರು 21 ವರ್ಷದಲ್ಲಿ ಅಮರರಾದ ಯೋಧನ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ’ ಎಂದು ಇಕ್ಕೀಸ್ ಪೋಸ್ಟರ್ ಜೊತೆಗೆ ಚಿತ್ರ ತಂಡ ಬರೆದುಕೊಂಡಿದೆ. ಇಕ್ಕೀಸ್ ಚಿತ್ರ 1971ರ ಭಾರತ, ಪಾಕಿಸ್ತಾನ ಯುದ್ಧದ ವೇಳೆ ಮರಣ ಹೊಂದಿದ ಪರಮವೀರ ಚಕ್ರ ಪುರಸ್ಕೃತ ಲೆಫ್ಟಿನೆಂಟ್ ಅರುಣ್ ಖೇತ್ರಪಾಲ್ ಅವರ ಜೀವನ ಕಥೆಯಾಗಿದೆ. ಮ್ಯಾಕ್ಡಾಕ್ ಫಿಲ್ಮ್ಸ್ ಅವರು ಚಿತ್ರ ನಿರ್ಮಾಣ ಮಾಡಿದ್ದು, ಶ್ರೀರಾಮ್ ರಾಘವನ್ ಚಿತ್ರವನ್ನು ನಿರ್ದೇಶಿಸಿದ್ದಾರೆ.

ವಾರ್ತಾ ಭಾರತಿ 24 Nov 2025 7:32 pm

Mangaluru: ಬಜ್ಪೆಯಲ್ಲಿ ಯುವಕನ ಮೇಲೆ ತಲವಾರು ದಾಳಿ

ಬಜ್ಪೆ: ಇಲ್ಲಿನ ಎಡಪದವು ಎಂಬಲ್ಲಿ ಯುವಕನೋರ್ವನಿಗೆ‌ 4 ಮಂದಿ ದುಷ್ಕರ್ಮಿಗಳ ತಂಡವೊಂದು ತಲವಾರು ದಾಳಿ ಮಾಡಿರುವ ಘಟನೆ ಸೋಮವಾರ ಸಂಜೆ ನಡೆದಿದೆ‌. ಎಡಪದವು ಪೂಪಾಡಿ ಕಲ್ಲು ನಿವಾಸಿ ಅಖಿಲೇಶ್ ತಲವಾರು ದಾಳಿಗೆ ಒಳಗಾದವರು ಎಂದು ತಿಳಿದು ಬಂದಿದ್ದು, ಇವರ ಬಲ‌ಕೈಗೆ ಗಂಭೀರ ಗಾಯವಾಗಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಅಖಿಲೇಶ್ ಅವರು ಎಡಪದವು ಕಡೆಯಿಂದ ಮಂಗಳೂರು ಕಡೆಗೆ ತನ್ನ ಆಕ್ಟಿವಾದಲ್ಲಿ ಹೋಗುತ್ತಿದ್ದ ಸಂದರ್ಭ ಎಡಪದವಿನಲ್ಲಿ ಎರಡು ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ನಾಲ್ಕು ಮಂದಿ ದುಷ್ಕರ್ಮಿಗಳ ತಂಡ ತಲವಾರಿನಿಂದ‌ ದಾಳಿ ಮಾಡಿದೆ ಎಂದು ತಿಳಿದು ಬಂದಿದೆ. ಘಟನೆ ನಡೆದ ತಕ್ಷಣ ಸ್ಥಳದಲ್ಲಿ ಜಮಾವಣೆಗೊಂಡ ಸಾರ್ವಜನಿಕರು ಅಖಿಲೇಶ್ ಅವರನ್ನು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಇವರು ಸ್ಥಳಿಯವಾಗಿ ಕೇಟರಿಂಗ್ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಬಜ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ‌ ತನಿಖೆ ಆರಂಭಿಸಿದ್ದಾರೆ.

ವಾರ್ತಾ ಭಾರತಿ 24 Nov 2025 7:30 pm

ಗುರುಮಠಕಲ್ ನಲ್ಲಿ 113 ಕೋಟಿ ರೂ. ಅನುದಾನದಲ್ಲಿ 42 ವಿವಿಧ ಕಾಮಗಾರಿಗಳಿಗೆ ಚಾಲನೆ

2026ರಿಂದ ಕ್ಷೇತ್ರದ ಅಭಿವೃದ್ಧಿಗೆ ನಾಗಲೋಟದ ವೇಗ ನೀಡುವೆ : ಶಾಸಕ ಕಂದಕೂರ

ವಾರ್ತಾ ಭಾರತಿ 24 Nov 2025 7:30 pm

ಇತ್ತ ಶಾಲೆಯಲ್ಲಿ ಪಾಠ, ಅತ್ತ SIR ಕೆಲಸ; ಎಲ್ಲವೂ ಮ್ಯಾನೇಜ್‌ ಮಾಡೋಕಾಗಲ್ಲ ಎಂದು BLO ಸ್ಥಾನಕ್ಕೆ ಶಿಕ್ಷಕಿ ರಾಜೀನಾಮೆ!

ಎಸ್‌ಐಆರ್‌ ಕೆಲಸ, ಶಾಲೆಯಲ್ಲಿ ಮಕ್ಕಳಿಗೆ ಪಾಠ, ನಿವಾಸಕ್ಕೆ ತೆರಳಿದರೆ ಅಲ್ಲಿ ಪಾಠ ಎಲ್ಲವನ್ನೂ ನಿಭಾಯಿಸಲು ಭಾರಿ ಕಷ್ಟವಾಗುತ್ತಿದೆ ಎಂದು ಶಾಲಾ ಶಿಕ್ಷಕಿಯೊಬ್ಬರು ಬಿಎಲ್‌ಓ ಸ್ಥಾನಕ್ಕೆ ರಾಜೀನಾಮೆ ಕಟ್ಟ ಘಟನೆ ನೊಯ್ಡಾದಲ್ಲಿ ನಡೆದಿದೆ. ಉತ್ತರ ಪ್ರದೇಶದಲ್ಲಿ ಎಸ್‌ಐಆರ್‌ ಕೆಲಸದ ಮೇಲೆ ನಿರ್ಲಕ್ಷ್ಯ ವಹಿಸಿದ ಆರೋಪದ ಮೇಲೆ ಶಿಕ್ಷಕರ ಮೇಲೆ ಎಫ್‌ಐಆರ್‌ ದಾಖಲಿಸಲಾಗಿತ್ತು. ಈ ಘಟನೆ ನಂತರ ಶಿಕ್ಷಕಿ ರಾಜೀನಾಮೆ ಪತ್ರ ಬರೆದಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ.

ವಿಜಯ ಕರ್ನಾಟಕ 24 Nov 2025 7:26 pm