SENSEX
NIFTY
GOLD
USD/INR

Weather

21    C
... ...View News by News Source

ಬೀದರ್ | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಬೀದರ್ : ಸಾಲಬಾಧೆ ತಾಳಲಾರದೆ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಔರಾದ್ ತಾಲೂಕಿನ ಪಾಶಾಪುರ್ ಗ್ರಾಮದಲ್ಲಿ ನಡೆದಿದೆ. ಪವನ್‌ (25) ಆತ್ಮಹತ್ಯೆ ಮಾಡಿಕೊಂಡ ರೈತ. ಕೌಠಾ(ಬಿ) ಗ್ರಾಮದ ಕೆನರಾ ಬ್ಯಾಂಕಿನಲ್ಲಿ ಚಿನ್ನವನ್ನು ಅಡವಿಟ್ಟು ಕೃಷಿಗಾಗಿ ಸಾಲವನ್ನು ಪಡೆದುಕೊಂಡಿದ್ದ ಪವನ್‌ ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿ ಸಾಲ ತೀರಿಸುವ ಬಗ್ಗೆ ಚಿಂತಿತನಾಗಿದ್ದ.   ಇದೇ ಕಾರಣಕ್ಕೆ ನ.10ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರವಾಗಿದ್ದ ಪವನ್‌ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.   ಘಟನೆಗೆ ಸಂಬಂಧಿಸಿದಂತೆ ಸಂತಪುರ್ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 19 Nov 2025 9:16 pm

ಉಡುಪಿ | ನ.21ರಿಂದ ಮಾಹೆ ಘಟಿಕೋತ್ಸವ; 8450 ಮಂದಿಗೆ ಪದವಿ ಪ್ರದಾನ

ಉಡುಪಿ, ನ.19: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ)ನ 33ನೇ ಘಟಿಕೋತ್ಸವ ಇದೇ ನ.21ರಿಂದ 23ರವರೆಗೆ ಮಣಿಪಾಲದ ಕೆಎಂಸಿ ಗ್ರೀನ್ಸ್‌ನಲ್ಲಿ ನಡೆಯಲಿದೆ. ಮೂರು ದಿನಗಳಲ್ಲಿ ಒಟ್ಟು 6,148 ಮಂದಿ ವಿದ್ಯಾರ್ಥಿಗಳಿಗೆ ವಿವಿಧ ಪದವಿಗಲನ್ನು ಪ್ರದಾನ ಮಾಡಲಾಗುವುದು ಎಂದು ಮಾಹೆಯ ಕುಲಪತಿ ಲೆ.ಜ.(ಡಾ) ಎಂ.ಡಿ.ವೆಂಕಟೇಶ್ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಇದೇ ವೇಳೆ ಮಾಹೆಯ ಬೆಂಗಳೂರು ಕ್ಯಾಂಪಸ್‌ನಲ್ಲಿ ನವೆಂಬರ್ 29 ಮತ್ತು 30ರಂದು ಎರಡನೇ ಘಟಿಕೋತ್ಸವ ನಡೆಯಲಿದ್ದು, ಇದರಲ್ಲಿ 902 ಮಂದಿ ಪದವಿ ಸ್ವೀಕರಿಸಲಿದ್ದು, 900 ಮಂದಿ ಆನ್‌ಲೈನ್ ಡಿಗ್ರಿಯನ್ನೂ ಸ್ವೀಕರಿಸಲಿದ್ದಾರೆ. ಈ ಮೂಲಕ ಎರಡು ಕ್ಯಾಂಪಸ್‌ಗಳಲ್ಲಿ ಒಟ್ಟಾರೆಯಾಗಿ 8450 ಮಂದಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ನಡೆಯಲಿದೆ ಎಂದು ಅವರು ವಿವರಿಸಿದರು. ಮಣಿಪಾಲ ಮತ್ತು ಬೆಂಗಳೂರು ಕ್ಯಾಂಪಸ್‌ಗಳಲ್ಲಿ ನಡೆಯುವ ಈ ಘಟಿಕೋತ್ಸವದಲ್ಲಿ ಶೈಕ್ಷಣಿಕ ದಿಗ್ಗಜರು, ಕ್ಷೇತ್ರಪರಿಣತರು, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಅವರ ಕುಟುಂಬ ಸದಸ್ಯರು ಪಾಲ್ಗೊಳ್ಳಲಿದ್ದಾರೆ. ಮಣಿಪಾಲದಲ್ಲಿ ನಡೆಯುವ 3 ದಿನಗಳ ಸಮಾರಂಭದಲ್ಲಿ ಹೊಸದಿಲ್ಲಿ ಎನ್‌ಸಿಆರ್‌ನ ಶಿವನಾಡಾರ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅನನ್ಯಾ ಮುಖರ್ಜಿ, ಹೊಸದಿಲ್ಲಿಯ ಗೂಗಲ್ ಕ್ಲೌಡ್ ಏಷ್ಯಾ ಪೆಸಿಫಿಕ್ ಸ್ಟ್ರಾಟಜೀಸ್ ಇನಿಶಿಯೇಟಿವ್ಸ್‌ನ ಉಪಾಧ್ಯಕ್ಷ ಬಿಕ್ರಮ್ ಸಿಂಗ್ ಬೇಡಿ ಹಾಗೂ ಗ್ಲಾಸ್ಗೊದ ರಾಯಲ್ ಕಾಲೇಜ್ ಆಫ್ ಫಿಸಿಶಿಯನ್ಸ್ ಆ್ಯಂಡ್ ಸರ್ಜನ್ಸ್‌ನ ಅಧ್ಯಕ್ಷ ಪ್ರೊ. ಡಾ.ಹ್ಯಾನಿ ಎಟೀಬಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದರು. ಬೆಂಗಳೂರು ಕ್ಯಾಂಪಸ್‌ನಲ್ಲಿ ನಡೆಯುವ ಎರಡು ದಿನಗಳ ಘಟಿಕೋತ್ಸವ ದಲ್ಲಿ ಆಕ್ಸಿಸ್ ಬ್ಯಾಂಕ್‌ನ ಸಮೂಹ ಕಾರ್ಯನಿರ್ವಾಹಕಿ ಹಾಗೂ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥೆ ರಾಜ್‌ಕಮಲ್ ವೆಂಪತಿ ಹಾಗೂ ರೆವೊಲ್ಯೂಟ್ ಇಂಡಿಯಾದ ಸಿಇಒ ಪರೋಮಾ ಚಟರ್ಜಿ ಮುಖ್ಯ ಅತಿಥಿಗಳಾಗಿರುವರು ಎಂದರು. ಮಾಹೆಯ ಪ್ರೊ ಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್ ಮಾತನಾಡಿ, ಮಣಿಪಾಲದಲ್ಲಿ ನಡೆಯುವ ಮೂರು ದಿನಗಳ ಘಟಿಕೋತ್ಸವದಲ್ಲಿ 4,950 ಮಂದಿ ವಿದ್ಯಾರ್ಥಿಗಳು ಸ್ವತಹ ಹಾಜರಿದ್ದು ಪದವಿ ಸ್ವೀಕರಿಸಿದರೆ, 1,198 ಮಂದಿ ಅಂಚೆಮೂಲಕ ಪದವಿ ಸ್ವೀಕರಿಸಲಿದ್ದಾರೆ. ಬೆಂಗಳೂರು ಕ್ಯಾಂಪಸ್‌ನಲ್ಲಿ 728 ಮಂದಿ ನೇರವಾಗಿ ಹಾಗೂ 189 ಮಂದಿ ಅಂಚೆ ಮೂಲಕ ಪದವಿ ಸ್ವೀಕರಿಸುವರು ಎಂದರು. ಇದರೊಂದಿಗೆ ಮಾಹೆ ಆನ್‌ಲೈನ್‌ನ 625 ಮಂದಿ ಸಮಾರಂಭದಲ್ಲಿ ಭಾಗಿಯಾಗಿ ಹಾಗೂ 760 ಮಂದಿ ಅಂಚೆಯ ಮೂಲಕ ಪಡೆಯಲಿದ್ದಾರೆ. ಒಟ್ಟಾರೆಯಾಗಿ ಮಾಹೆ ಆನ್‌ಲೈನ್‌ನ 1,385 ಮಂದಿಗೆ ಈ ಬಾರಿ ಪದವಿ ಪ್ರದಾನ ನಡೆಯಲಿದೆ. ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ, ಮ್ಯಾನೇಜ್‌ಮೆಂಟ್, ಸಮಾಜಶಾಸ್ತ್ರ ಸೇರಿದಂತೆ ವಿವಿಧ ಶೈಕ್ಷಣಿಕ ವಿಭಾಗ ವಿದ್ಯಾರ್ಥಿಗಳು ಪದವಿ ಪಡೆಯುವವರಲ್ಲಿ ಸೇರಿದ್ದಾರೆ. ಮಣಿಪಾಲದಲ್ಲಿ ಮೊದಲ ದಿನ 60 ಮಂದಿ ಪಿಎಚ್‌ಡಿ, ನಾಲ್ವರು ಚಿನ್ನದ ಪದಕ, ಎರಡನೇ ದಿನ 45 ಮಂದಿ ಪಿಎಚ್‌ಡಿ, ಮೂವರು ಚಿನ್ನದ ಪದಕ ಹಾಗೂ ಮೂರನೇ ದಿನ 50 ಮಂದಿ ಪಿಎಚ್‌ಡಿ, ಇಬ್ಬರು ಚಿನ್ನದ ಪದಕ ಸ್ವೀಕರಿಸಲಿದ್ದಾರೆ. ಬೆಂಗಳೂರು ಕ್ಯಾಂಪಸ್‌ನಲ್ಲಿ 12 ಮಂದಿ ಪಿಎಚ್‌ಡಿ ಹಾಗೂ ಒಬ್ಬರಿಗೆ ಚಿನ್ನದ ಪದಕ ಪ್ರದಾನ ಮಾಡಲಾಗುವುದು ಎಂದು ಡಾ.ವೆಂಕಟೇಶ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾಹೆ ವಿವಿಯ ಡಾನಾರಾಯಣ ಸಭಾಹಿತ್, ಡಾ.ಶರತ್ ಕೆ.ರಾವ್, ಡಾ.ಗಿರಿಧರ್ ಕಿಣಿ ಹಾಗೂ ಇತರರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 19 Nov 2025 9:16 pm

ಧರ್ಮಸ್ಥಳ ಪ್ರಕರಣದ ಎಫ್‌ಐಆರ್ ರದ್ದು ಕೋರಿ ಮತ್ತೊಂದು ಅರ್ಜಿ; ಮಧ್ಯಂತರ ತಡೆ ನೀಡಲು ಹೈಕೋರ್ಟ್ ನಕಾರ

ಬೆಂಗಳೂರು : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಸಂಸ್ಕಾರ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ತಡೆ ನೀಡಬೇಕೆಂಬ ಉಜಿರೆಯ ಗಣೇಶ್‌ ಶೆಟ್ಟಿ ಅವರ ಮನವಿ ಪರಿಗಣಿಸಲು ಹೈಕೊರ್ಟ್‌ ನಿರಾಕರಿಸಿದೆ. ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ (ಎಫ್‌ಐಆರ್ ಸಂಖ್ಯೆ- 39/2025) ಹಾಗೂ ಎಸ್‌ಐಟಿ ತನಿಖೆ ರದ್ದು ಕೋರಿ ಉಜಿರೆ ನಿವಾಸಿ ಗಣೇಶ್‌ ಶೆಟ್ಟಿ (29) ಎಂಬುವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಅರ್ಜಿ ಇತ್ಯರ್ಥವಾಗುವವರೆಗೆ ಎಫ್‌ಐಆರ್‌ ಮತ್ತು ಎಸ್‌ಐಟಿ ತನಿಖೆಗೆ ತಡೆಯಾಜ್ಞೆ ನೀಡಬೇಕು ಎಂದು ಮಧ್ಯಂತರ ಮನವಿ ಮಾಡಿದ್ದಾರೆ. ಈ ಅರ್ಜಿಯನ್ನು ನ್ಯಾಯಮೂರ್ತಿ ಮುಹಮ್ಮದ್‌ ನವಾಜ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು. ಎಸ್ಐಟಿ ಪರ ಹಾಜರಿದ್ದ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್‌. ಜಗದೀಶ್‌ ಅವರು, ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್‌ನಲ್ಲಿ ಅರ್ಜಿದಾರ ಗಣೇಶ್‌ ಶೆಟ್ಟಿ ಅವರ ಹೆಸರು ಇಲ್ಲ. ಅವರನ್ನು ವಿಚಾರಣೆಗೆ ಹಾಜರಾಗಲು ಎಸ್‌ಐಟಿ ಅಧಿಕಾರಿಗಳು ನೋಟಿಸ್‌ ಸಹ ನೀಡಿಲ್ಲ. ಆದರೂ ಅರ್ಜಿದಾರರು ಎಫ್‌ಐಆರ್‌ ರದ್ದು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಮೂಲತಃ ಎಫ್‌ಐಆರ್‌ ರದ್ದತಿಗೆ ಕೋರಲು ಅರ್ಜಿದಾರರಿಗೆ ಯಾವುದೇ ಹಕ್ಕು ಹಾಗೂ ಅವಕಾಶ ಇಲ್ಲ. ಆದ್ದರಿಂದ, ಅರ್ಜಿದಾರರ ಮಧ್ಯಂತರ ಮನವಿ ಪರಿಗಣಿಸಿ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡಬಾರದು ಎಂದು ಕೋರಿದರು. ಈ ಮನವಿ ಪರಿಗಣಿಸಿದ ನ್ಯಾಯಪೀಠ, ಎಫ್‌ಐಆರ್‌ಗೆ ತಡೆ ನೀಡಲು ನಿರಾಕರಿಸಿತು. ಜತೆಗೆ, ಎಸ್‌ಐಟಿಗೆ ನೋಟಿಸ್ ಜಾರಿಗೊಳಿಸಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.

ವಾರ್ತಾ ಭಾರತಿ 19 Nov 2025 9:15 pm

ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾತ್ರವಲ್ಲ, ಹೃದಯವಂತರನ್ನಾಗಿಸುವ ಜವಾಬ್ದಾರಿಯೂ ನಮ್ಮ ಮೇಲಿದೆ : ಕೆ.ವಿ.ಪ್ರಭಾಕರ್

ಬೆಂಗಳೂರು : ಮಗುವಿನ ಜನನದ ಜೊತೆಗೇ ಕಲಾವಿದ/ಕಲಾವಿದೆಯ ಜನನವೂ ಆಗುತ್ತದೆ. ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾತ್ರವಲ್ಲ, ಹೃದಯವಂತರನ್ನಾಗಿಸುವ ಜವಾಬ್ದಾರಿಯೂ ನಮ್ಮ ಮೇಲಿದೆ‌ ಎಂದು  ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಬಾಲಭವನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಕಲಾಶ್ರೀ ಪ್ರಶಸ್ತಿ ನೀಡಿ ಮಾತನಾಡಿದರು. ಮಕ್ಕಳು ಹುಟ್ಟುತ್ತಲೇ ಅವರೊಳಗೆ ಕಲೆಯೂ ಹುಟ್ಟುತ್ತದೆ. ಆದ್ದರಿಂದ ಒಂದು ಮಗುವಿನ ಜನನ ಆಗಿದೆ ಎಂದರೆ ಕಲಾವಿದ/ ಕಲಾವಿದೆಯೊಬ್ಬರ ಜನನವೂ ಆಗಿದೆ ಅಂತಲೇ ಅರ್ಥ. ಕಲೆ ಮಕ್ಕಳ ಕೈಗಳಲ್ಲಿ, ನಾಲಗೆಯಲ್ಲಿ, ಬಾಯಿಯಲ್ಲಿ ಅರಳುವುದಿಲ್ಲ. ಕಲೆ ಮೊದಲು ಅರಳುವುದು ಮಕ್ಕಳ ಕಲ್ಪನಾ ಲೋಕದಲ್ಲಿ, ಮಕ್ಕಳ ಆಲೋಚನೆಯಲ್ಲಿ, ಮಕ್ಕಳ ಹೃದಯದಲ್ಲಿ ಮತ್ತು ಮಕ್ಕಳ ಮನಸ್ಸಿನಲ್ಲಿ. ಮಕ್ಕಳ ಆಲೋಚನೆಗಳ ಒಳಗೆ ಮೊಳಕೆಯೊಡೆಯುವ ಕಲೆ, ಅವರ ಕೈಗಳ ಮೂಲಕ, ಕಂಠದ ಮೂಲಕ ವ್ಯಕ್ತ ಆಗುತ್ತವೆ. ಆದ್ದರಿಂದ ಮಕ್ಕಳ ಮನೋಲೋಕವನ್ನು ನಾವು ಮೊದಲಿಗೆ ಅರಳಿಸಬೇಕು‌ ಎಂದು ಕರೆ ನೀಡಿದರು. ಹೀಗೆ ಅರಳಬೇಕಾದರೆ ಮಕ್ಕಳಿಗೆ ಮಣ್ಣಿನ, ಪುಸ್ತಕಗಳ ಒಡನಾಟ ಬೇಕು. ಮೊಬೈಲ್ ಗಳ ಸಹವಾಸ ಮಕ್ಕಳಲ್ಲಿನ ಸೃಜನಶೀಲತೆಯನ್ನು ಮುದುಡುವಂತೆ ಮಾಡುತ್ತವೆ. ಉದಾಹರಣೆಗೆ ದೆವ್ವ ಮತ್ತು ಭೂತಗಳು ಹೇಗೆ ಇರುತ್ತವೆ, ಹೇಗೆ ಕಾಣುತ್ತವೆ ಎನ್ನುವುದನ್ನು ಪುಸ್ತಕಗಳ ಒಡನಾಟದಲ್ಲಿರುವ ಮಕ್ಕಳಿಗೆ, ಮೊಬೈಲ್ ಗಳ ಸಹವಾಸದಲ್ಲಿರುವ ಮಕ್ಕಳಿಗೆ ಕೇಳಿ ನೋಡಿ. ಓದುವ ಮಕ್ಕಳು ವಿವರಿಸುವ ರೀತಿ ವಿಶಾಲವಾಗಿರುತ್ತದೆ. ಅವರ ಕಲ್ಪನಾ ಲೋಕದಲ್ಲಿ ಹುಟ್ಟುವ ದೆವ್ವ, ಭೂತಗಳು ವೈವಿದ್ಯಮಯವಾಗಿರುತ್ತವೆ. ಮೊಬೈಲ್ ಮಕ್ಕಳು ಕೇವಲ ನೋಡಿದ್ದನ್ನು ವಿವರಿಸುತ್ತವೆ. ಇಲ್ಲಿ ಕಲ್ಪನಾಲೋಕ ಇರುವುದಿಲ್ಲ. ಕೇವಲ ನೋಡಿದ್ದರ ನೆನಪಿನಲೋಕ ಇರುತ್ತದೆ. ಈ ಕಾರಣಕ್ಕೇ ಮೊಬೈಲ್ ಬಿಡಿ, ಪುಸ್ತಕ ಹಿಡಿ ಎನ್ನುವ ಕಾರ್ಯಕ್ರಮವನ್ನು ಸರಕಾರ ರೂಪಿಸಿದೆ ಎಂದರು. ಆದ್ದರಿಂದ ನಾವೆಲ್ಲಾ ಸಾಧ್ಯವಾದಷ್ಟೂ ಮಕ್ಕಳ ಮನೋಲೋಕ ಅರಳಿಸುವ ಕಾರ್ಯಕ್ಕೆ ಹೆಚ್ಚೆಚ್ಚು ಪ್ರೋತ್ಸಾಹ ನೀಡೋಣ. ಈ ಕಾರ್ಯವನ್ನು ಜವಾಹರ್‌ ಲಾಲ್ ಅವರು ಸ್ಥಾಪಿಸಿದ ಬಾಲ ಭವನ ನಿರ್ವಹಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ವಾರ್ತಾ ಭಾರತಿ 19 Nov 2025 9:11 pm

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿ ಜಯಂತಿ ಆಚರಣೆ

ಕಾರ್ಕಳ: ದೇಶದ ಪ್ರಪ್ರಥಮ ಮಹಿಳಾ ಪ್ರಧಾನಿಯಾಗಿ ಗರೀಭಿ ಹಠಾವೊ, ಉಳುವವನೆ ಹೊಲದೊಡೆಯ, ಬ್ಯಾಂಕ್ ರಾಷ್ಟ್ರೀಕರಣ ಮುಂತಾದ ಯೋಜನೆಗಳನ್ನು ಜಾರಿಗೊಳಿಸಿ ದೇಶದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ ಕೀರ್ತಿ ದಿ. ಇಂದಿರಾ ಗಾಂಧಿಯವರಿಗೆ ಸಲ್ಲಬೇಕು ಎಂದು ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಹೇಳಿದರು. ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಇಂದಿರಾ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬಡವರ ಪರವಾಗಿ, ಜನ ಸಾಮಾನ್ಯರ ಪರವಾಗಿ ಇಂದಿರಾ ಅವರ ನಿಲುವು, ಅಭಿವೃದ್ಧಿ ಪರವಾದ ಚಿಂತನೆಗಳು ವಿವಿಧ ರೂಪದಲ್ಲಿ ಇಂದಿಗೂ ಜಾರಿಯಲ್ಲಿದೆ. ಇಂತಹ ಮಹಾನ್ ವ್ಯಕ್ತಿತ್ವವನ್ನು ನೆನೆಯುವುದು ಸ್ತುತ್ಯರ್ಹ ಎಂದು ಅವರು ಹೇಳಿದರು. ಹಿರಿಯ ಕಾಂಗ್ರೆಸಿಗರಾದ ಸುಂದರ ಸಮಗಾರ ಸಾಣೂರು ಅವರು ಇಂದಿರಾ ಗಾಂಧಿಯವರ ಭಾವಚಿತ್ರಕ್ಕೆ ದೀಪ ಬೆಳಗಿ ಪುಷ್ಪಾರ್ಚನೆಗೈದರು. ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ ರಾವ್ ಅವರು ಅತಿಥಿಗಳನ್ನು ಸ್ವಾಗತಿಸಿ ಇಂದಿರಾ ಗಾಂಧಿ ಜಯಂತಿ ಆಚರಣೆಯ ಕುರಿತು ಪ್ರಸ್ತಾವಿಕ ಮಾತನಾಡಿದರು.  ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ಬಿಪಿನ್ ಚಂದ್ರಪಾಲ್ ನಕ್ರೆ ಅವರು ಮಾತನಾಡಿ, ಮಹಿಳಾ ಸಬಲೀಕರಣದ ಚಿಂತನೆ ಹುಟ್ಟಿದ್ದೇ ಇಂದಿರಾ ಗಾಂಧಿ ಪ್ರಧಾನಿಯಾದ ನಂತರ. ಇಂದಿರಾ ಗಾಂಧಿಯವರು 20 ಅಂಶಗಳ ಕಾರ್ಯಕ್ರಮವನ್ನು ಜಾರಿಗೊಳಿಸಿ ಸರ್ವರಿಗೂ ಸಮಬಾಳು ಸಮಪಾಲು ದ್ಯೇಯದೊಂದಿಗೆ ಬಡವರಿಗೂ ಹಕ್ಕುಗಳನ್ನು ನೀಡಿದರು ಎಂದರು. ಬ್ಲಾಕ್ ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಭಾನು ಬಾಸ್ಕರ ಪೂಜಾರಿಯವರು ಸಂದರ್ಭೋಚಿತವಾಗಿ ಮಾತನಾಡಿದರು. ಸಭೆಯಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅದ್ಯಕ್ಷ ಅಜಿತ್ ಹೆಗ್ಡೆ ಮಾಳ, ಕುಕ್ಕುಂದೂರು ಗ್ರಾಮ ಪಪಂಚಾಯತ್ ಅಧ್ಯಕ್ಷೆ ಉಷಾ, ಜಿಲ್ಲಾ ಕೆ.ಡಿ.ಪಿ ಸದಸ್ಯರಾದ ವೀಣಾ ವಾಸು ಶೆಟ್ಟಿ, ಭ್ಯೂನ್ಯಾಯ ಮಂಡಳಿ ಸದಸ್ಯ ಸುನೀಲ್ ಭಂಡಾರಿ, ಮುಸ್ಲಿಂ ಜಮಾತ್ ಅದ್ಯಕ್ಷ ಅಶ್ಪಾಕ್ ಅಹಮ್ಮದ್, ಪುರಸಭಾ ಮಾಜಿ ಅದ್ಯಕ್ಷರುಗಳಾದ ಸೀತಾರಾಮ ದೇವಾಡಿಗ, ರೆಹಮತ್, ಸುಭಿತ್.ಎನ್.ಆರ್, ರಾಜ್ಯ ಮಹಿಳಾ ಕಾರ್ಯದರ್ಶಿ ಅನಿತಾ ಡಿಸೋಜ, ಕೆ.ಎಮ್.ಎಪ್ ನಿರ್ದೇಶಕರಾದ ಸುಧಾಕರ ಶೆಟ್ಟಿ ಮುಡಾರು, ಯುವ ಕಾಂಗ್ರೆಸಿನ ಮಂಜುನಾಥ ಜೋಗಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು. ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ ಕಾರ್ಯಕ್ರಮ ನಿರೂಪಿಸಿ, ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯ ರಮೇಶ್ ಬಜಕಳ ಧನ್ಯವಾದವಿತ್ತರು. ಮಹಿಳಾ ಪಧಾದಿಕಾರಿಗಳಾದ ಡಿಂಪಲ್, ಶೋಭಾ, ಕಾಂತಿ ಶೆಟ್ಟಿ ಮತ್ತು ಮಹಿಳಾ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ವಾರ್ತಾ ಭಾರತಿ 19 Nov 2025 9:10 pm

ಕಾವಳಕಟ್ಟೆ|ಸ್ಕೂಟರಿಗೆ ಕಾರು ಢಿಕ್ಕಿ: ವಿದ್ಯಾರ್ಥಿನಿ ಮೃತ್ಯು

ಬಂಟ್ವಾಳ: ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ಸಂಚರಿಸುತ್ತಿದ್ದ ಸ್ಕೂಟರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿನಿ ಮೃತಪಟ್ಟು ಮತ್ತೋರ್ವ ವಿದ್ಯಾರ್ಥಿನಿ ಗಂಭೀರ ಗಾಯಗೊಂಡ ಘಟನೆ ಕಾವಳಕಟ್ಟೆ ಸಮೀಪದ ಎನ್.ಸಿ.ರೋಡ್ ಬಳಿ ಬುಧವಾರ ಸಂಭವಿಸಿದೆ. ಕಡಬ ನಿವಾಸಿ ಸುನಿಲ್ ಎಂಬವರ ಪುತ್ರಿ ಅನನ್ಯ (21) ಮೃತ ವಿದ್ಯಾರ್ಥಿನಿ. ಗುರುವಾಯನಕೆರೆ ನಿವಾಸಿ ಪೃಥ್ವಿ ರಾವ್ ಎಂಬವರು ಗಾಯಗೊಂಡಿದ್ದಾರೆ.  ಗಾಯಾಳು ವಿದ್ಯಾರ್ಥಿನಿಯನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಇವರಿಬ್ಬರೂ ಮಂಗಳೂರಿನ ಕಾಲೇಜಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೂಂಜಾಲಕಟ್ಟೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಾರ್ತಾ ಭಾರತಿ 19 Nov 2025 9:05 pm

ಸೊಸೈಟಿ ಬಲವರ್ಧನೆಗೆ ಕೇಂದ್ರದ ಮಹತ್ವದ ಕ್ರಮ : 3 ಬೆಳೆಗಳ ಕಮಿಷನ್ ಹೆಚ್ಚಳ - ಯಾವ ಬೆಳೆಗಳಿಗೆ?

ಭಾರತ ಮೋದಿ ಅವರ ನಾಯಕತ್ವದಲ್ಲಿ ಇಂಧನ ಸುಸ್ಥಿರತೆ ಮಾತ್ರವಲ್ಲ ಭವಿಷ್ಯದ ಪೀಳಿಗೆಗೆ ಮಾದರಿ ಹೆಜ್ಜೆಯಿಡುತ್ತಿದೆ. ದೇಶದ ಸೊಸೈಟಿಗಳು ಇನ್ನೂ ಉತ್ಸಾಹದಿಂದ ಕೆಲಸ ಮಾಡುವಂತಾಗಲು, ಮೂರು ಬೆಳೆಗಳ ಕಮಿಷನ್ ಅನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ವಿಜಯ ಕರ್ನಾಟಕ 19 Nov 2025 9:00 pm

ಹಿರಿಯಡ್ಕ | ಚರಂಡಿಗೆ ಬಿದ್ದ ಬಸ್: ಹೊಟೇಲ್ ಜಖಂ

ಹಿರಿಯಡ್ಕ: ಬಸ್ಸೊಂದು ಚರಂಡಿಗೆ ಬಿದ್ದು ಅಲ್ಲೇ ಸಮೀಪದ ಹೊಟೇಲ್ ಜಖಂಗೊಳಿಸಿದ ಘಟನೆ ಓಂತಿಬೆಟ್ಟು ಎಂಬಲ್ಲಿ ನ.18ರಂದು ರಾತ್ರಿ ವೇಳೆ ನಡೆದಿದೆ. ಚಾಲಕ ವಿಪರೀತ ಮದ್ಯ ಸೇವಿಸಿ ಚಾಲನೆ ಮಾಡಿದ್ದರಿಂದ ಘಟನೆ ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಚಾಲಕ ವಿಜಯಪುರದ ಮಹಾಂತೇಶ ಆನಂದಗೌಡ ಪಾಟೀಲ(34) ಎಂಬಾತ ವಿಪರೀತ ಮದ್ಯ ಸೇವಿಸಿ ಪ್ರಯಾಣಿಕರಿರುವ ಬಸ್ಸನ್ನು ಮಣಿಪಾಲ ಕಡೆಯಿಂದ ಹಿರಿಯಡಕ ಕಡೆಗೆ ಚಲಾಯಿಸಿಕೊಂಡು ಬಂದು ಬಸ್ ನಿಯಂತ್ರಿಸದೇ ಚರಂಡಿಗೆ ನುಗ್ಗಿಸಿ ಹೋಟೆಲೊಂದರ ಬೋರ್ಡ್ ಮತ್ತು ಬಸ್ಸನ್ನು ಜಖಂಗೊಳಿಸಿದ್ದು, ಬಸ್ಸಿನಲ್ಲಿದ್ದ ಪ್ರಯಾಣಿಕರ ನರ ಹತ್ಯೆಗೆ ಪ್ರಯತ್ನಿಸಿ ಘೋರ ಅಪರಾಧ ಎಸಗಿರುವುದಾಗಿ ದೂರಲಾಗಿದೆ. ಈ ಬಸ್ ಕುಂದಾಪುರದಿಂದ ಬೆಂಗಳೂರಿಗೆ ಹೆಬ್ರಿ-ಶಿವಮೊಗ್ಗ ರಸ್ತೆ ಘಾಟಿ ಪ್ರದೇಶದಲ್ಲಿ ಹೋಗಬೇಕಿದ್ದು, ರಸ್ತೆಯು ತುಂಬಾ ತಿರುವುಗಳಿಂದ ಕೂಡಿರುವುದರಿಂದ ಬಸ್, ನಿಯಂತ್ರಣ ತಪ್ಪಿ ರಸ್ತೆ ಬದಿ ಪ್ರಪಾತಕ್ಕೆ ಬಿದ್ದಿದ್ದರೆ ದೊಡ್ಡ ದುರಂತ ಸಂಭವಿಸುತ್ತಿತ್ತು ಎಂದು ದೂರಲಾಗಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 19 Nov 2025 8:57 pm

ಹಿರಿಯಡ್ಕ | ಚೂರಿ ಇರಿತ ಪ್ರಕರಣ: ಆರೋಪಿಗಳ ಬಂಧನ

ಹಿರಿಯಡ್ಕ: ಮನೆ ಕಂಪೌಂಡು ಕಟ್ಟುವ ವಿಚಾರದಲ್ಲಿ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಹಿರಿಯಡ್ಕ ಪೊಲೀಸರು ನ.15ರಂದು ಬಂಧಿಸಿದ್ದಾರೆ. ಹಿರಿಯಡ್ಕ ನಿವಾಸಿ ಹುಸೇನ್ ಶೇಖ್ ಅಹಮ್ಮದ್(74), ಮುಂಬೈಯ ತಮೀಮ್ ಹುಸೇನ್ ಶೇಖ್(34) ಬಂಧಿತ ಆರೋಪಿಗಳು. ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ಕಾರು ಮತ್ತು ಕಬ್ಬಿಣದ ಕಟ್ಟರನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳಿಬ್ಬರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ರಫೀಕ್ ಮತ್ತು ಅವರ ಮಗ ಶಾರೀಕ್ ನ.11ರಂದು ಮನೆಯ ಸುತ್ತಲೂ ಕಂಪೌಂಡ್ ಕಟ್ಟಿಸುತ್ತಿರುವಾಗ ಆರೋಪಿಗಳಾದ ಹುಸೇನ್ ಮತ್ತು ಅವರ ಮಗ ತಮೀಮ್ ಕಾರಿನಲ್ಲಿ ಬಂದು ಕಂಪೌಂಡ್ ಕಟ್ಟುವ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರು. ಬಳಿಕ ಅವಾಚ್ಯ ಶಬ್ದಗಳಿಂದ ಬೈದು, ಕೊಲೆ ಬೆದರಿಕೆಯೊಡ್ಡಿ, ಶಾರೀಕ್ ಅವರನ್ನು ಕೊಲ್ಲುವ ಉದ್ದೇಶದಿಂದ ಬೆನ್ನಿನ ಭಾಗಕ್ಕೆ ಹಲವು ಬಾರಿ ಚಾಕುವಿನಿಂದ ಚುಚ್ಚಿರುವುದಾಗಿ ದೂರಲಾಗಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ವಾರ್ತಾ ಭಾರತಿ 19 Nov 2025 8:51 pm

ಗ್ಯಾಂಗ್ಸ್ಟರ್ ಅನ್ಮೋಲ್ ಬಿಷ್ಣೋಯಿಗೆ 11 ದಿನಗಳ ಎನ್ಐಎ ಕಸ್ಟಡಿ

ಹೊಸದಿಲ್ಲಿ,ನ.19:ಅಮೆರಿಕದಿಂದ ಗಡಿಪಾರುಗೊಂಡಿರುವ ಎನ್ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಕುಖ್ಯಾತ ಗ್ಯಾಂಗ್ಸ್ಟರ್ ಅನ್ಮೋಲ್ ಬಿಷ್ಣೋಯಿಯನ್ನು ಎನ್ಐಎ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ಜೈಲಿನಲ್ಲಿರುವ ಪಾತಕಿ ಲಾರೆನ್ಸ್ ಬಿಷ್ಣೋಯಿಯ ಸಹೋದರನಾದ ಅನ್ಮೋಲ್ನನ್ನು ಮಂಗಳವಾರ ಅಮೆರಿಕವು ಭಾರತಕ್ಕೆ ಗಡಿಪಾರು ಮಾಡಿತ್ತು. ಅನ್ಮೋಲ್ ಬಿಷ್ಣೋಯಿಯನ್ನು ದಿಲ್ಲಿ ವಿಮಾನನಿಲ್ದಾಣದಲ್ಲಿ ಎನ್ಐಎ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡ ಬಳಿಕ ಸ್ಥಳೀಯ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದರು. ಆತನನ್ನು 11 ದಿನಗಳ ಎನ್ಐಎ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. 2022ರಿಂದಲೂ ಅನ್ಮೋಲ್ ತಲೆಮರೆಸಿಕೊಂಡಿದ್ದನು. ಭಯೋತ್ಪಾದಕರು ಹಾಗೂ ಗ್ಯಾಂಗ್ಸ್ಟರ್ ಗಳ ಸಂಚಿಗೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾದವರಲ್ಲಿ ಈತ 19ನೇಯವನಾಗಿದ್ದಾನೆ. 2020 ಹಾಗೂ 2023ರ ನಡುವೆ ಭಯೋತ್ಪಾದಕನೆಂದು ಗುರುತಿಸಲಾದ ಗೋಲ್ಡ್ ಬ್ರಾರ್ ಗೆ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ನೆರವಾದ ಆರೋಪವನ್ನು ಆತ ಆಮೆರಿಕದಲ್ಲಿ ಎದುರಿಸುತ್ತಿದ್ದಾನೆ. ಎನ್ಐಎ ಪ್ರಕಾರ, ಲಾರೆನ್ಸ್ ಬಿಷ್ಣೋಯಿ ಬಂಧನದ ಬಳಿಕ ಆತನ ಜಾಲವನ್ನು ಅನ್ಮೋಲ್ ಅಮೆರಿಕದಿಂದಲೇ ನಿರ್ವಹಿಸುತ್ತಿದ್ದನು. ವಿದೇಶದಿಂದಲೇ ಇದ್ದುಕೊಂಡು ಭಾರತದಲ್ಲಿರುವ ಗ್ಯಾಂಗ್ ನ ಸದಸ್ಯರ ಜೊತೆ ಸಮನ್ವಯ ಸಾಧಿಸುವುದು, ಶೂಟರ್ಗಳಿಗೆ ಆಶ್ರಯ ಹಾಗೂ ಸಾಗಾಟದ ಏರ್ಪಾಡುಗಳನ್ನು ಮಾಡುತ್ತಿದ್ದ ಮತ್ತು ವಿದೇಶದಲ್ಲೇ ಇದ್ದುಕೊಂಡು ಸುಲಿಗೆ ಜಾಲವನ್ನು ನಡೆಸುತ್ತಿದ್ದ ಕಳೆದ ವರ್ಷ ಮುಂಬೈಯಲ್ಲಿ ಮಹಾರಾಷ್ಟ್ರದ ಎನ್ಸಿಪಿ ನಾಯಕ, ಮಾಜಿ ಸಚಿವ ಬಾಬಾ ಸಿದ್ದೀಕಿ ಅವರ ಹತ್ಯೆಪ್ರಕರಣದಲ್ಲೂ ಶಾಮೀಲಾಗಿರುವ ಆರೋಪವನ್ನು ಅನ್ಮೋಲ್ ಎದುರಿಸುತ್ತಿದ್ದಾನೆ. ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ಗುಂಡು ಹಾರಾಟ ನಡೆಸಿದ ಪ್ರಕರಣದಲ್ಲೂ ಈತ ಆರೋಪಿಯಾಗಿದ್ದಾನೆ. ಪಂಜಾಬಿ ಗಾಯಕ ಸಿದ್ಧು ಮೂಸೆವಾಲಾ ಕೊಲೆ ಪ್ರಕರಣದಲ್ಲೂ ಆತನ ಕೈವಾಡವಿರುವುದಾಗಿ ಆರೋಪಿಸಲಾಗಿದೆ.

ವಾರ್ತಾ ಭಾರತಿ 19 Nov 2025 8:50 pm

ಜಿಲ್ಲಾ, ತಾಲೂಕು ಪಂಚಾಯಿತಿ, ಪಾಲಿಕೆ ಚುನಾವಣೆ: ಟಿಕೆಟ್‌ ಬಗ್ಗೆ ಅಪ್‌ಡೇಟ್‌ ಕೊಟ್ಟ ಡಿಕೆ ಶಿವಕುಮಾರ್

ಬೆಂಗಳೂರು, ನವೆಂಬರ್‌ 19: ಸದ್ಯದಲ್ಲೇ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆ ನಡೆಯಲಿದೆ. ಪಾಲಿಕೆ ಚುನಾವಣೆಯ ವಾರ್ಡ್ ಮೀಸಲಾತಿ ಪಟ್ಟಿ ಇಂದು ಬಿಡುಗಡೆಯಾಗಲಿದೆ. ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುವವರಿಗೆ ಅರ್ಜಿ ಕರೆಯಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಹೇಳಿದರು. ಈ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್‌ ಅವರು ಮಾತನಾಡಿ, ಸ್ಥಳೀಯ

ಒನ್ ಇ೦ಡಿಯ 19 Nov 2025 8:48 pm

ಕೇರಳದಲ್ಲಿ ಎಸ್ಐಆರ್ ಮುಂದೂಡಿಕೆ ಕೋರುವ ಅರ್ಜಿಗಳ ವಿಚಾರಣೆ ನ.21ಕ್ಕೆ ನಿಗದಿ

ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಕೇರಳ ಸರಕಾರ, ಐಯುಎಂಎಲ್

ವಾರ್ತಾ ಭಾರತಿ 19 Nov 2025 8:42 pm

ಬೆಂಗಳೂರು ತಂತ್ರಜ್ಞಾನ ಶೃಂಗಸಭೆ : ‘ನಿಪುಣ ಕರ್ನಾಟಕ’ ಯೋಜನೆ ಪ್ರಕಟ

ಬೆಂಗಳೂರು ನಾವೀನ್ಯತಾ ವರದಿ ಬಿಡುಗಡೆ

ವಾರ್ತಾ ಭಾರತಿ 19 Nov 2025 8:42 pm

ಸುಳ್ಯ: ಕುಕ್ಕರ್ ಸಿಡಿದು ಮನೆಗೆ ಹಾನಿ

ಸುಳ್ಯ: ಗ್ಯಾಸ್ ಒಲೆಯಲ್ಲಿ ಇಟ್ಟಿದ್ದ ಕುಕ್ಕರ್ ಸಿಡಿದು ಅಡುಗೆ ಮನೆಗೆ ಹಾನಿಯಾದ ಘಟನೆ ಸುಳ್ಯದ ಬೋರುಗುಡ್ಡೆ ಎಂಬಲ್ಲಿ ಬುಧವಾರ ನಡೆದಿದೆ. ಬೋರುಗುಡ್ಡೆ ನಿವಾಸಿ ಅಬ್ಬುಲ್ಲಾ ಎಂಬವರ ಮನೆಯಲ್ಲಿ ಬುಧವಾರ ಮುಂಜಾನೆ ಬೆಳಗಿನ ಉಪಹಾರ ತಯಾರಿಸುವ ವೇಳೆ ಗ್ಯಾಸ್ ಒಲೆಯ ಮೇಲೆ ಇಟ್ಟಿದ್ದ ಕುಕ್ಕರ್ ಹಠಾತ್ ಸಿಡಿದಿದೆ. ಪರಿಣಾಮ ಅಡುಗೆ ಮನೆಯ ಗೋಡೆ, ಟೈಲ್ಸ್, ಮೇಲ್ಟಾವಣಿ ಹಾಗೂ ಅಡುಗೆ ಸಾಮಾನುಗಳು ಹಾನಿಗೊಂಡಿವೆ. ಘಟನೆ ಸಂಭವಿಸಿದ ವೇಳೆ ಮನೆಮಂದಿ ಅಡುಗೆಮನೆ ಸಮೀಪದಲ್ಲೇ ಇದ್ದರೂ, ಅದೃಷ್ಟವಶಾತ್ ಯಾವುದೇ ರೀತಿಯ ಗಾಯ ಅಥವಾ ಅಪಾಯ ಸಂಭವಿಸದೇ ಪಾರಾಗಿದ್ದಾರೆ.

ವಾರ್ತಾ ಭಾರತಿ 19 Nov 2025 8:41 pm

ರಾಜ್ಯದ ಬಿಜೆಪಿ ನಾಯಕರು ಒಂದಾಗಿ, ಒಟ್ಟಾಗಬೇಕು: ಬಿ.ವೈ.ವಿಜಯೇಂದ್ರ

ಉಡುಪಿ: ಬಿಜೆಪಿ ಪಕ್ಷದ ಎಲ್ಲ ಮುಖಂಡರು ಒಗ್ಗಟ್ಟಾಗಿ ಒಂದಾಗಿ ಹೋಗಬೇಕು ಎಂಬುದು ನಮ್ಮ ಕಾರ್ಯಕರ್ತರ ಅಪೇಕ್ಷೆಯಾಗಿದೆ. ಆ ನಿಟ್ಟಿನಲ್ಲಿ ನಾವು ರಾಜ್ಯದ ನಾಯಕರು ಒಂದಾಗಿ ಹೋಗಬೇಕಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನ.28ರ ’ಉಡುಪಿ ಶ್ರೀಕೃಷ್ಣ ಮಠ ಭೇಟಿ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆ ಹಾಗೂ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಪದಪ್ರದಾನ ಸಮಾರಂಭವನ್ನು ಬುಧವಾರ ಉಡುಪಿಯ ಹೋಟೆಲ್ ಶಾರದಾ ಇಂಟರ್ ನ್ಯಾಷನಲ್ ಸಭಾಂಗಣದಲ್ಲಿ ಉದ್ಘಾಟಿಸಿ ಅವರು ಮಾತನಾಡುತಿದ್ದರು. ನಮ್ಮ ಪಕ್ಷಕ್ಕೆ ಬೇರೆ ಪಕ್ಷದ ಮುಖಂಡರನ್ನು ಸೆಳೆಯುವ ಮೊದಲು ನಮ್ಮ ಪಕ್ಷದ ಕಾರ್ಯಕರ್ತರ ವಿಶ್ವಾಸವನ್ನು ಮುಖಂಡರು ಪಡೆದುಕೊಳ್ಳಬೇಕು. ಚುನಾವಣೆಯಲ್ಲಿ ಯಾರೇ ಅಭ್ಯರ್ಥಿಯಾಗಿ ಪಕ್ಷ ಆಯ್ಕೆ ಮಾಡಿದರೂ ಅವರ ಪರ ದುಡಿಯುವುದಕ್ಕೆ ನಮ್ಮ ಕಾರ್ಯಕರ್ತರು ಸಜ್ಜಾಗಿದ್ದಾರೆ ಎಂದು ಅವರು ತಿಳಿಸಿದರು. ಕಾಂಗ್ರೆಸ್ ಸರಕಾರದ ಕಳೆದ ಎರಡೂವರೆ ವರ್ಷಗಳ ಕಾರ್ಯವೈಖರಿ ನೋಡುವಾಗ ಬೇಸರ ಆಗುತ್ತದೆ. ಗ್ರಾಮೀಣ ಪ್ರದೇಶದ ಒಂದು ರಸ್ತೆಗಳ ಗುಂಡಿ ಮುಚ್ಚಲು ಕೂಡ ಇವರಿಗೆ ಸಾಧ್ಯವಾಗುತ್ತಿಲ್ಲ. ಯಾವುದೇ ಹೊಸ ಅಭಿವೃದ್ಧಿ ಕಾರ್ಯಕ್ರಮಗಳ ಘೋಷಣೆ ಮಾಡಲು ಇವರಿಂದ ಆಗಿಲ್ಲ. ಬೆಲೆ ಏರಿಕೆಯೇ ಕಾಂಗ್ರೆಸ್ ಸರಕಾರದ ಆರನೇ ಗ್ಯಾರಂಟಿಯಾಗಿದೆ ಎಂದು ಅವರು ಟೀಕಿಸಿದರು. ಬಡವರು, ರೈತರ ಬಗ್ಗೆ ಕಿಂಚಿತ್ತು ಕಾಳಜಿ ವಹಿಸದ ಕಾಂಗ್ರೆಸ್ ಸರಕಾರಕ್ಕೆ ಅಧಿಕಾರದ ಮದ ಏರಿದೆ. ಇವರಿಗೆ ಇಂದು ತಮ್ಮ ಗ್ಯಾರಂಟಿ ಯೋಜನೆ ಬಗ್ಗೆ ವಿಶ್ವಾಸ ಇಲ್ಲವಾಗಿದೆ. ಇದಿದ್ದರೆ ಇಷ್ಟು ಹೊತ್ತಿಗೆ ಅವರು ಜಿಪಂ ತಾಪಂ ಚುನಾವಣೆ ಘೋಷಿಸುತ್ತಿದ್ದರು. ಈ ಸರಕಾರ ಜಾತಿ ಜಾತಿಗಳ ಮಧ್ಯೆ ವಿಷ ಬೀಜ ಬಿತ್ತುವ ಕಾರ್ಯ ಮಾಡುತ್ತಿದೆಯೇ ಹೊರತು ರಾಜ್ಯದ ಬಗ್ಗೆ ಯಾವುದೇ ಕಾಳಜಿ ವಹಿಸುತ್ತಿಲ್ಲ ಎಂದು ಅವರು ಆರೋಪಿಸಿದರು. ಅಧ್ಯಕ್ಷತೆಯನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ವಹಿಸಿದ್ದರು. ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಬ್ರಿಜೇಶ್ ಚೌಟ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್‌ಪಾಲ್ ಸುವರ್ಣ, ಕಿರಣ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಹರೀಶ್ ಪೂಂಜಾ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಮುಖಂಡ ಉದಯ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 19 Nov 2025 8:38 pm

ಎಲ್ಗಾರ್ ಪರಿಷದ್ ಪ್ರಕರಣ: ಹೋರಾಟಗಾರ್ತಿ ಜ್ಯೋತಿ ಜಗತಾಪ್ ಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ,ನ.19: ಎಲ್ಗಾರ್ ಪರಿಷದ್-ಮಾವೋವಾದಿ ಸಂಪರ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ 2020ರಿಂದಲೂ ಬಂಧನದಲ್ಲಿರುವ ಸಾಮಾಜಿಕ ಹೋರಾಟಗಾರ್ತಿ ಜ್ಯೋತಿ ಜಗತಾಪ್ ಅವರಿಗೆ ಸರ್ವೋಚ್ಚ ನ್ಯಾಯಾಲಯವು ಬುಧವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ತನ್ನ ಕಕ್ಷಿದಾರರು ಐದು ವರ್ಷಗಳಿಂದಲೂ ಜೈಲಿನಲ್ಲಿ ಕೊಳೆಯುತ್ತಿದ್ದಾರೆ ಎಂದು ಜಗತಾಪ್ ಪರ ಹಿರಿಯ ನ್ಯಾಯವಾದಿ ಅಪರ್ಣಾ ಭಟ್ ತಿಳಿಸಿದ ಬಳಿಕ ನ್ಯಾಯಮೂರ್ತಿಗಳಾದ ಎಂ.ಎಂ.ಸುಂದರೇಶ ಮತ್ತು ಸತೀಶಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠವು ಜಾಮೀನು ಆದೇಶವನ್ನು ಹೊರಡಿಸಿತು. ಈ ಹಿಂದೆ ಮುಂಬೈ ಉಚ್ಚ ನ್ಯಾಯಾಲಯವು,ಜಗತಾಪ್ 2017, ಜ.31ರಂದು ಪುಣೆಯಲ್ಲಿ ನಡೆದಿದ್ದ ಎಲ್ಗಾರ್ ಪರಿಷದ್ ನ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಪ್ರದರ್ಶನದ ಸಮಯ ಆಕ್ರಮಣಕಾರಿ ಮತ್ತು ಅತ್ಯಂತ ಪ್ರಚೋದನಾಕಾರಿ ಎಂದು ಹೇಳಲಾದ ಘೋಷಣೆಗಳನ್ನು ಕೂಗಿದ್ದ ಕಬೀರ್ ಕಲಾ ಮಂಚ್ ನ (ಕೆಕೆಎಂ)ಸಕ್ರಿಯ ಸದಸ್ಯೆಯಾಗಿದ್ದಾರೆ ಎಂದು ಎತ್ತಿ ಹಿಡಿದಿತ್ತು. ಕೆಕೆಎಂ ಸಿಪಿಐ (ಮಾವೋವಾದಿ) ನಿಯಂತ್ರಣದಲ್ಲಿರುವ ಸಂಘಟನೆಯಾಗಿದೆ ಎಂದು ಎನ್ಐಎ ಪ್ರತಿಪಾದಿಸಿದೆ. ತನಗೆ ಜಾಮೀನು ನಿರಾಕರಿಸಿದ್ದ ವಿಶೇಷ ನ್ಯಾಯಾಲಯದ ಫೆಬ್ರವರಿ 2022ರ ಆದೇಶವನ್ನು ಪ್ರಶ್ನಿಸಿ ಜಗತಾಪ್ ಸಲ್ಲಿಸಿದ್ದ ಮೇಲ್ಮನವಿಯನ್ನು ಉಚ್ಚ ನ್ಯಾಯಾಲಯವು ವಜಾಗೊಳಿಸಿತ್ತು. ಜಗತಾಪ್ ಅವರನ್ನು ಸೆಪ್ಟಂಬರ್ 2020ರಲ್ಲಿ ಬಂಧಿಸಲಾಗಿತ್ತು. ಎಲ್ಗಾರ್ ಪರಿಷದ್ ನ ಕಾರ್ಯಕ್ರಮದಲ್ಲಿ ಮಾಡಲಾಗಿದ್ದ ಪ್ರಚೋದನಾಕಾರಿ ಭಾಷಣಗಳು 2018,ಜ.1ರಂದು ಪುಣೆ ಹೊರವಲಯದ ಭೀಮಾ-ಕೋರೆಗಾಂವ್ ಗ್ರಾಮದಲ್ಲಿ ಹಿಂಸಾಚಾರ ಭುಗಿಲೇಳಲು ಕಾರಣವಾಗಿದ್ದವು ಎಂದು ತನಿಖಾಧಿಕಾರಿಗಳು ಆರೋಪಿಸಿದ್ದಾರೆ.

ವಾರ್ತಾ ಭಾರತಿ 19 Nov 2025 8:35 pm

ರಾಮ್ ಚರಣ್ ಪತ್ನಿ ಉಪಾಸನಾಗೆ ನೆಟ್ಟಿಗರ ಕ್ಲಾಸ್! ಅಂಥದ್ದೇನಾಯ್ತು? ಸ್ಟಾರ್ ನಟನ ಪತ್ನಿ ಮಾಡಿದ ತಪ್ಪಾದರೂ ಏನು?

ನಟ ರಾಮ್ ಚರಣ್ ಅವರ ಪತ್ನಿ ಉಪಾಸನಾ ಕೊನಿಡೇಲಾ ಅವರು ಯುವತಿಯರಿಗೆ ನೀಡಿದ ಸಲಹೆ ಈಗ ದೊಡ್ಡ ಚರ್ಚೆಗೆ ಕಾರಣವಾಗಿದೆ. ಕೆಲಸ ಮುಗಿದ ಕೂಡಲೇ ವೃತ್ತಿಜೀವನಕ್ಕೆ ಆದ್ಯತೆ ನೀಡಿ, ಮದುವೆಯನ್ನು ನಂತರ ಮಾಡಿಕೊಳ್ಳಿ ಎಂದು ಅವರು ಹೇಳಿದ್ದಾರೆ. ಈ ಹೇಳಿಕೆಗೆ ಹಲವು ಮಹಿಳಾ ವೈದ್ಯರು ಮತ್ತು ವಿದ್ಯಾವಂತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಂಡಾಶಯಗಳನ್ನು ಫ್ರೀಜ್ ಮಾಡಿಸಿ ನಂತರ ಮದುವೆಯಾಗುವ ಬಗ್ಗೆಯೂ ಅವರು ತಿಳುವಳಿಕೆ ನೀಡಿದ್ದಾರೆ.

ವಿಜಯ ಕರ್ನಾಟಕ 19 Nov 2025 8:34 pm

ಜೋಳ ಉತ್ಪಾದನೆ, ಶೇಖರಣೆಯ ಸಮಗ್ರ ಯೋಜನೆ ಅಗತ್ಯ : ಕೆ.ಎಚ್.ಮುನಿಯಪ್ಪ

ಹೊಸದಿಲ್ಲಿ : ಸಾರ್ವಜನಿಕ ವಿತರಣಾ ವ್ಯವಸ್ಥೆಗೆ ಸಾಕಷ್ಟು ಬಿಳಿಜೋಳ ಸಿಗುತ್ತಿಲ್ಲ. ನಾವು ಜೋಳ ಖರೀದಿ ಮಾಡಲು ಪ್ರಯತ್ನಿಸುತ್ತಿದ್ದೇವೆ. ಉತ್ತರ ಕರ್ನಾಟಕದಲ್ಲಿ ಜನತೆ ಅಕ್ಕಿಗಿಂತ ಹೆಚ್ಚು ಜೋಳವನ್ನೆ ಬಳಸುತ್ತಾರೆ. ಆದುದರಿಂದ, ಜೋಳದ ಉತ್ಪಾದನೆ ಮತ್ತು ಶೇಖರಣೆಯ ಬಗ್ಗೆ ಸಮಗ್ರ ಯೋಜನೆ ಅಗತ್ಯವಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ಬುಧವಾರ ಹೊಸದಿಲ್ಲಿಯಲ್ಲಿ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿಯನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿ ಮನವಿ ಪತ್ರ ಸಲ್ಲಿಸಿದ ಬಳಿಕ ಕರ್ನಾಟಕ ಭವನದಲ್ಲಿ ಅವರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ವಿಶೇಷವಾಗಿ ‘ಮಾಲ್ದಂಡಿ' ಜೋಳದ ಬೆಲೆಯ ಸಮಸ್ಯೆಯನ್ನು ಉಲ್ಲೇಖಿಸಿದ ಅವರು, ಈ ಜೋಳದ ಬೆಲೆ ಕನಿಷ್ಠ ಬೆಂಬಲ ಬೆಲೆಗಿಂತ ಕ್ವಿಂಟಾಲ್‍ಗೆ 1000 ರಿಂದ 1500 ರೂಪಾಯಿ ಕಡಿಮೆಯಿದೆ. ಇದರ ಬೆಲೆಯನ್ನು ಹೆಚ್ಚಿಸಿದರೆ ರೈತರು ಸರಕಾರಕ್ಕೆ ಸರಬರಾಜು ಮಾಡಲು ಮುಂದೆ ಬರುತ್ತಾರೆ ಎಂದು ಹೇಳಿದರು. ಈ ಬಗ್ಗೆ ಮುಖ್ಯಮಂತ್ರಿ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಮಂತ್ರಿಗಳಿಗೆ ಮನವಿ ಮಾಡಲಾಗಿದೆ. ರಾಜ್ಯದ ಬೆಲೆ ನಿಗಧೀಕರಣ ಸಮಿತಿಯು ವಾಸ್ತವಿಕ ಪರಿಸ್ಥಿತಿಯನ್ನು ಪರಿಗಣಿಸಿ ಕ್ರಮ ಕೈಗೊಳ್ಳಬೇಕು ಎಂದು ಮುನಿಯಪ್ಪ ತಿಳಿಸಿದರು. ‘ಇಂದಿರಾ ಕಿಟ್' ಯೋಜನೆ : ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯ ಅಡಿಯಲ್ಲಿ ‘ಇಂದಿರಾ ಕಿಟ್’ ಪರಿಚಯಿಸಲಾಗುವುದು. ಈ ಕಿಟ್ಟಿನಲ್ಲಿ ಬೇಳೆ, ಎಣ್ಣೆ, ಉಪ್ಪು ಮತ್ತು ಸಕ್ಕರೆ ಸೇರಿರುತ್ತದೆ. ಈ ಪದಾರ್ಥಗಳನ್ನು ನೀಡುವುದರಿಂದ ನೇರವಾಗಿ ಆ ಕುಟುಂಬಕ್ಕೆ ಸೇರುತ್ತದೆ. ಇದು ಪ್ರೊಟೀನ್ ಸಮೃದ್ಧ ಆಹಾರವಾಗಿದ್ದು, ಮಕ್ಕಳು ಮತ್ತು ಕುಟುಂಬದ ಎಲ್ಲ ಸದಸ್ಯರ ಬೆಳವಣಿಗೆಗೆ ಉಪಯುಕ್ತವಾಗಿದೆ ಎಂದು ಅವರು ತಿಳಿಸಿದರು. ಈ ಯೋಜನೆಯನ್ನು ಮುಂದಿನ ಸಾಲಿನ ಜನವರಿ ಅಥವಾ ಫೆಬ್ರವರಿ ವೇಳೆಗೆ ಕಾರ್ಯರೂಪಕ್ಕೆ ತರಲು ಟೆಂಡರ್ ಪ್ರಕ್ರಿಯೆ ಹಾಗೂ ಗುಣಮಟ್ಟದ ಪರಿಶೀಲನೆ ನಡೆಯುತ್ತಿದೆ ಎಂದು ಮುನಿಯಪ್ಪ ಸ್ಪಷ್ಟಪಡಿಸಿದರು.

ವಾರ್ತಾ ಭಾರತಿ 19 Nov 2025 8:31 pm

ಶಬರಿಮಲೆ: ದರ್ಶನಕ್ಕಾಗಿ ಸರದಿ ಸಾಲಿನಲ್ಲಿ ಕಾಯುತ್ತಿದ್ದ ಮಹಿಳೆ ಕುಸಿದು ಬಿದ್ದು ಮೃತ್ಯು

ಪಟ್ಟಣಂತಿಟ್ಟ (ಕೇರಳ),ನ.19: ಮಂಗಳವಾರ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ದರ್ಶನಕ್ಕಾಗಿ ಸರದಿ ಸಾಲಿನಲ್ಲಿ ಕಾಯುತ್ತಿದ್ದ 58ರ ಹರೆಯದ ಮಹಿಳೆಯೋರ್ವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತವು ತಿಳಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ತಿರುವಾಂಕೂರು ದೇವಸ್ವಂ ಮಂಡಳಿಯ ಅಧ್ಯಕ್ಷ ಕೆ.ಜಯಕುಮಾರ ಅವರು, ಮಹಿಳೆಯ ಮೃತದೇಹವನ್ನು ಟಿಡಿಪಿ ವೆಚ್ಚದಲ್ಲಿ ಆ್ಯಂಬುಲೆನ್ಸ್ ಮೂಲಕ ಅವರ ಊರಿಗೆ ರವಾನಿಸಲಾಗಿದೆ ಎಂದು ತಿಳಿಸಿದರು. ಮೃತ ಮಹಿಳೆ ಕೋಝಿಕ್ಕೋಡ್ ಜಿಲ್ಲೆಯ ಕೊಯಿಲಾಂಡಿ ನಿವಾಸಿಯಾಗಿದ್ದರು ಎಂದು ಅಧಿಕಾರಿಗಳು ಹೇಳಿದರು. ಈ ನಡುವೆ, ಕರ್ನಾಟಕದಿಂದ ಮಕ್ಕಳು ಸೇರಿದಂತೆ 33 ಯಾತ್ರಿಗಳೊಂದಿಗೆ ಶಬರಿಮಲೆಗೆ ಬರುತ್ತಿದ್ದ ಬಸ್ಸೊಂದು ಕೊಟ್ಟಾಯಂ ಜಿಲ್ಲೆಯ ಎರುಮೇಲಿ ಬಳಿ ಪಲ್ಟಿಯಾಗಿದೆ. ಮೂವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಯ ಬಳಿಕ ಅವರನ್ನು ಬಿಡುಗಡೆಗೊಳಿಸಲಾಗಿದೆ ಎಂದರು. ಬಸ್ಸಿನ ಚಾಲಕ ಇಳಿಜಾರಿನಲ್ಲಿ ಇನ್ನೊಂದು ವಾಹನವನ್ನು ಹಿಂದಿಕ್ಕುತ್ತಿದ್ದಾಗ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಪೋಲಿಸರು ತಿಳಿಸಿದರು.

ವಾರ್ತಾ ಭಾರತಿ 19 Nov 2025 8:29 pm

ಪಿಎಂ ಕಿಸಾನ್‌ ಯೋಜನೆ 21 ನೇ ಕಂತಿನ ಹಣ ಬಿಡುಗಡೆ; ಖಾತೆಗೆ ಜಮೆ ಆಗಿದೆಯೋ ಇಲ್ಲವೋ ಚೆಕ್ ಮಾಡುವುದೇಗೆ?

ಪ್ರಧಾನಿ ನರೇಂದ್ರ ಮೋದಿ ಅವರು ಕೋಯಮತ್ತೂರಿನಲ್ಲಿ 21ನೇ ಕಂತಿನ ಪಿಎಂ ಕಿಸಾನ್ ಯೋಜನೆಯಡಿ ಸುಮಾರು 9 ಕೋಟಿ ರೈತರಿಗೆ 18,000 ಕೋಟಿ ರೂಪಾಯಿ ವರ್ಗಾಯಿಸಿದರು. ಇದುವರೆಗೆ 11 ಕೋಟಿಗೂ ಹೆಚ್ಚು ರೈತ ಕುಟುಂಬಗಳಿಗೆ 3.70 ಲಕ್ಷ ಕೋಟಿ ರೂಪಾಯಿ ನೀಡಲಾಗಿದೆ. ಭೂಮಿ ವಿವರ, ಆಧಾರ್ ಜೋಡಣೆ, ಇ-ಕೆವೈಸಿ ಪೂರ್ಣಗೊಳಿಸಿದ ರೈತರು ಅರ್ಹರಾಗಿರುತ್ತಾರೆ. ಹಣ ಬರದಿದ್ದರೆ ಕಾರಣ ಪರಿಶೀಲಿಸಬಹುದು.

ವಿಜಯ ಕರ್ನಾಟಕ 19 Nov 2025 8:25 pm

ಅಲ್ ಫಲಾಹ್ ಸ್ಥಾಪಕರಿಂದ ವಿದ್ಯಾರ್ಥಿಗಳು, ಪೋಷಕರಿಗೆ 415 ಕೋಟಿ ರೂ.ವಂಚನೆ: ಈಡಿ

ಹೊಸದಿಲ್ಲಿ: ಫರೀದಾಬಾದ್ ನ ಅಲ್ ಫಲಾಹ್ ವಿವಿಯ ಸ್ಥಾಪಕಾಧ್ಯಕ್ಷ ಜವಾದ್ ಅಹ್ಮದ್ ಸಿದ್ದೀಕಿ ಅವರನ್ನು ಮಂಗಳವಾರ ತಡರಾತ್ರಿ ಬಂಧಿಸಲಾಗಿದ್ದು,ದಿಲ್ಲಿಯ ನ್ಯಾಯಾಲಯವೊಂದು ಅವರನ್ನು 13 ದಿನಗಳ ಕಾಲ ಜಾರಿ ನಿರ್ದೇಶನಾಲಯದ (ಈಡಿ) ಕಸ್ಟಡಿಗೆ ನೀಡಿದೆ. ಸಿದ್ದೀಕಿ 415 ಕೋಟಿ ರೂ.ಗೂ ಅಧಿಕ ಹಣವನ್ನು ಅಪ್ರಾಮಾಣಿಕವಾಗಿ ಗಳಿಸಿದ್ದಾರೆ ಮತ್ತು ಕೊಲ್ಲಿ ದೇಶಗಳಲ್ಲಿ ಕುಟುಂಬ ಸಂಬಂಧಗಳನ್ನು ಹೊಂದಿರುವುದರಿಂದ ದೇಶವನ್ನು ತೊರೆಯುವ ಸಾಧ್ಯತೆಯಿದೆ ಎಂದು ಈಡಿ ಆರೋಪಿಸಿದೆ. ನ.10ರಂದು ದಿಲ್ಲಿಯ ಕೆಂಪು ಕೋಟೆ ಬಳಿ ಸಂಭವಿಸಿದ್ದ ಸ್ಫೋಟದ ತನಿಖೆಯ ಅಂಗವಾಗಿ ಮಂಗಳವಾರ ದಿನವಿಡೀ ಅಲ್ ಫಲಾಹ್ ಸಮೂಹಕ್ಕೆ ಸಂಬಂಧಿಸಿದ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆಗಳನ್ನು ನಡೆಸಿದ ಬಳಿಕ ಸಿದ್ದೀಕಿ ಅವರನ್ನು ಈಡಿ ಅಧಿಕಾರಿಗಳು ಬಂಧಿಸಿದ್ದಾರೆ. ಬುಧವಾರ ನಸುಕಿನ ಒಂದು ಗಂಟೆಯ ಸುಮಾರಿಗೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ಶೀತಲ ಚೌಧರಿ ಪ್ರಧಾನ ಅವರ ನಿವಾಸದಲ್ಲಿ ಸಿದ್ದೀಕಿಯವರನ್ನು ಹಾಜರು ಪಡಿಸಲಾಗಿತ್ತು. ಸಿದ್ದೀಕಿ ಗಮನಾರ್ಹ ಆರ್ಥಿಕ ಸಂಪನ್ಮೂಲಗಳು ಹಾಗೂ ಪ್ರಭಾವವನ್ನು ಹೊಂದಿದ್ದಾರೆ ಮತ್ತು ಕೊಲ್ಲಿಯಲ್ಲಿ ಅವರ ಕುಟುಂಬದ ಉಪಸ್ಥಿತಿಯಿಂದಾಗಿ ಅವರು ದೇಶದಿಂದ ಪಲಾಯನ ಮಾಡುವ ಸ್ಪಷ್ಟ ಸಾಧ್ಯತೆಗಳಿವೆ ಎಂದು ಈಡಿ ತನ್ನ ಕಸ್ಟಡಿ ಅರ್ಜಿಯಲ್ಲಿ ನ್ಯಾಯಾಲಯಕ್ಕೆ ತಿಳಿಸಿತ್ತು. ಸಿದ್ದೀಕಿ ಮತ್ತು ಅವರ ನಿರ್ದೇಶನದಡಿ ಅಲ್ ಫಲಾಹ್ ಚ್ಯಾರಿಟೇಬಲ್ ಟ್ರಸ್ಟ್ ನ್ಯಾಕ್ ಮತ್ತು ಯುಜಿಸಿ ಮಾನ್ಯತೆ ಹೊಂದಿರುವುದಾಗಿ ಸುಳ್ಳು ಹೇಳಿ ವಿದ್ಯಾರ್ಥಿಗಳು ಮತ್ತು ಪೋಷಕರನ್ನು ದಾರಿ ತಪ್ಪಿಸುವ ಮೂಲಕ 415.10 ಕೋಟಿ ರೂ.ಗಳನ್ನು ಅಪ್ರಾಮಾಣಿಕವಾಗಿ ಗಳಿಸಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಿರುವ ಈಡಿ, ಆರೋಪಿ ಗಂಭೀರ ಆರ್ಥಿಕ ಅಪರಾಧಗಳ ಇತಿಹಾಸವನ್ನು ಹೊಂದಿದ್ದಾರೆ. ಪ್ರಸ್ತುತ ಆರೋಪಗಳ ಗಂಭೀರತೆ ಮತ್ತು ಅಕ್ರಮ ಹಣ ವರ್ಗಾವಣ ತಡೆ ಕಾಯ್ದೆಯಡಿ(ಪಿಎಮ್ ಎಲ್ಎ) ಅಡಿ ಸಂಭಾವ್ಯ ಪರಿಣಾಮಗಳನ್ನು ಪರಿಗಣಿಸಿದರೆ ಅವರನ್ನು ಬಂಧಿಸದಿದ್ದರೆ ಅವರು ತಲೆಮರೆಸಿಕೊಳ್ಳಬಹುದು,ಆಸ್ತಿಗಳನ್ನು ಪರಭಾರೆ ಮಾಡಬಹುದು ಅಥವಾ ತನಿಖೆಗೆ ಅಡ್ಡಿಯನ್ನುಂಟು ಮಾಡಬಹುದು ಎಂಬ ಆತಂಕವನ್ನು ವ್ಯಕ್ತಪಡಿಸಿದೆ. ಅಲ್ ಫಲಾಹ್ ವಿವಿಯು ವಿದ್ಯಾರ್ಥಿಗಳನ್ನು ಸೆಳೆಯಲು ನಕಲಿ ಮಾನ್ಯತೆ ದಾಖಲೆಗಳನ್ನು ಸೃಷ್ಟಿಸಿದ ಆರೋಪದಲ್ಲಿ ದಿಲ್ಲಿ ಪೋಲಿಸ್ ನ ಕ್ರೈಂ ಬ್ರ್ಯಾಂಚ್ ದಾಖಲಿಸಿರುವ ಎರಡು ಎಫ್ಐಆರ್ ಗಳನ್ನು ಈಡಿ ಉಲ್ಲೇಖಿಸಿದೆ. ಟ್ರಸ್ಟ್ ವಂಚನೆಯ ಮೂಲಕ ಶುಲ್ಕಗಳ ರೂಪದಲ್ಲಿ 400 ಕೋಟಿ ರೂ.ಗೂ ಅಧಿಕ ಮೊತ್ತವನ್ನು ಸಂಗ್ರಹಿಸಿದೆ ಮತ್ತು ಸಿದ್ದೀಕಿ ಈ ಹಣವನ್ನು ತನ್ನ ವೈಯಕ್ತಿಕ ಹಾಗೂ ಖಾಸಗಿ ಹಿತಾಸಕ್ತಿಗಳಿಗೆ ಬಳಸಿಕೊಂಡಿದ್ದಾರೆ ಎಂದು ಈಡಿ ಪ್ರತಿಪಾದಿಸಿದೆ. ಸಿದ್ದೀಕಿ ಪ್ರವೇಶ ದಾಖಲೆಗಳು, ಲೆಕ್ಕಪತ್ರಗಳು, ಶುಲ್ಕಗಳ ಲೆಡ್ಜರ್ ಮತ್ತು ಐಟಿ ವ್ಯವಸ್ಥೆಗಳನ್ನು ನಿರ್ವಹಿಸುವ ಸಿಬ್ಬಂದಿಗಳ ಮೇಲೆ ನಿಯಂತ್ರಣ ಹೊಂದಿದ್ದು, ಇದು ಅವರಿಗೆ ದಾಖಲೆಗಳನ್ನ ನಾಶಮಾಡುವ ಅಥವಾ ಬದಲಾಯಿಸುವ ಅವಕಾಶವನ್ನು ಒದಗಿಸಿತ್ತು ಎಂದು ಹೇಳಿರುವ ಈಡಿ ಹಲವಾರು ಬ್ಯಾಂಕ್ ಖಾತೆಗಳಲ್ಲಿಯ ಹಣದ ಜಾಡನ್ನು ಇನ್ನಷ್ಟೇ ಕಂಡುಕೊಳ್ಳಬೇಕಿದೆ ಹಾಗೂ ಬೇನಾಮಿ ಠೇವಣಿಗಳು ಮತ್ತು ಬ್ಯಾಲೆನ್ಸ್ಶೀಟ್ನಲ್ಲಿ ಇಲ್ಲದ ಆಸ್ತಿಗಳನ್ನು ಪತ್ತೆ ಹಚ್ಚಬೇಕಿದೆ. ಇಡೀ ಅಲ್ ಫಲಾಹ್ ಶೈಕ್ಷಣಿಕ ಪರಿಸರ ವ್ಯವಸ್ಥೆಯನ್ನು ಸಿದ್ದೀಕಿ ನಿಯಂತ್ರಿಸುತ್ತಿದ್ದರು ಮತ್ತು ಅಪರಾಧದ ಆದಾಯದ 415.10 ಕೋಟಿ ರೂ.ಗಳ ಒಂದು ಭಾಗವನ್ನಷ್ಟೇ ಈವರೆಗೆ ಗುರುತಿಸಲಾಗಿದೆ ಎಂದು ತಿಳಿಸಿದೆ. ಸಿದ್ದೀಕಿಯವರನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಮತ್ತು ದಿಲ್ಲಿ ಪೋಲಿಸರ ಎಫ್‌ಐಆರ್ ಗಳು ಕಪೋಲಕಲ್ಪಿತ ಆರೋಪಗಳನ್ನು ಆಧರಿಸಿವೆ ಎಂದು ಸಿದ್ದೀಕಿ ಪರ ವಕೀಲರು ವಾದಿಸಿದರು. ಆದಾಗ್ಯೂ,ತನಿಖೆಯು ಇನ್ನೂ ಆರಂಭಿಕ ಹಂತದಲ್ಲಿದೆ ಮತ್ತು ಆರೋಪಗಳು ಗಂಭೀರ ಸ್ವರೂಪದ್ದಾಗಿವೆ ಎಂದು ಹೇಳಿದ ನ್ಯಾಯಾಲಯವು ಈಡಿ ಕಸ್ಟಡಿಗೆ ಒಪ್ಪಿಸಿದ್ದನ್ನು ಸಮರ್ಥಿಸಿಕೊಂಡಿದೆ.

ವಾರ್ತಾ ಭಾರತಿ 19 Nov 2025 8:25 pm

\2ನೇ ಬೆಳೆಗೆ ನೀರಿಲ್ಲದಿದ್ದರೆ ಎಕರೆಗೆ 50 ಸಾವಿರ ರೂ.ಪರಿಹಾರ...\

ಬೆಂಗಳೂರು, ನವೆಂಬರ್‌ 19: ತುಂಗಭದ್ರಾ ಡ್ಯಾಮ್ ನಿಂದ ಎರಡನೇ ಬೆಳೆಗೆ ನೀರು ಹರಿಸುವಂತೆ ಒತ್ತಾಯಿಸಿ, ತುಂಗಭದ್ರಾ ಡ್ಯಾಮ್ ಗೇಟ್ ಅಳವಡಿಕೆ ವಿಳಂಬ ಧೋರಣೆ ಖಂಡಿಸಿ ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಯ ಸಾವಿರಾರು ರೈತರ ನೇತೃತ್ವದಲ್ಲಿ ನವೆಂಬರ್ 25 ರಂದು ಬೃಹತ್ ಹೋರಾಟ ನಡೆಸಲಾಗುವುದು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು

ಒನ್ ಇ೦ಡಿಯ 19 Nov 2025 8:22 pm

ಯಾದಗಿರಿ | ಅರಕೇರಾ, ಆಶನಾಳ ಗ್ರಾಮದ ಕಾಂಗ್ರೆಸ್ ಮುಖಂಡರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ

ಯಾದಗಿರಿ: ಅರಕೇರಾ ಗ್ರಾಮದ ಹಲವು ಕಾಂಗ್ರೆಸ್ ಮುಖಂಡರು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರರವರ ಕಚೇರಿಯಲ್ಲಿ ಬುಧವಾರ ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ವೇಳೆ ಮಾತನಾಡಿದ ಶಾಸಕ ಶರಣಗೌಡ ಕಂದಕೂರ, ಪಕ್ಷದ ಕಾರ್ಯಕರ್ತರು ಪಕ್ಷದ ಶಿಸ್ತು, ನಿಯಮಗಳನುಸಾರ ಕಾರ್ಯನಿರ್ವಹಿಸಬೇಕು. ನಮ್ಮಲ್ಲಿ ಪ್ರತಿಯೊಬ್ಬ ಕಾರ್ಯಕರ್ತರು ಕೂಡ ಮುಖಂಡರಾಗಿದ್ದು, ಪ್ರತಿಯೊಬ್ಬರಿಗೂ ನಮ್ಮ ಪಕ್ಷದಲ್ಲಿ ಪಕ್ಷ ನಿಷ್ಠೆಯಂತೆ ಅಧಿಕಾರ ಹಂತಹಂತವಾಗಿ ಸಿಗಲಿದೆ ಎಂದು ಹೇಳಿದರು. ಶರಣಯ್ಯಸ್ವಾಮಿ ಅರಕೇರಾ, ಅಶೋಕರಡ್ಡಿ ಮಾ.ಪಾ. ಪಂಪಣ್ಣಗೌಡ, ಸಿದ್ದಪ್ಪ ಬಡಿಗೇರ್, ಮಲ್ಲಿಕಾರ್ಜುನ ಮಾ.ಪಾ, ಮೌನೇಶ ಹಳಿಮನಿ, ವೀರೇಶ ಪರದಾನಿ, ಮಲ್ಲಪ್ಪ ಪರದಾನಿ, ನಿಂಗಪ್ಪ ಹಿರಿಕುರುಬರು, ಶಿವಾನಂದ ಕಿಣಿಕೇರಿ, ಹೊನ್ನಪ್ಪ ಹಿರಿಕುರುಬರು ಸೇರಿದಂತೆ ಹಲವು ಮುಖಂಡರು ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಸುಭಾಶ್ಚಂದ್ರ ಕಟಕಟಿ, ದೊಡ್ಡಪ್ಪಗೌಡ ಹಾದಿಮನಿ, ಬಾಪುಗೌಡ ರಾಮಸಮುದ್ರ, ಶಿವಾರಡ್ಡಿ ಆಶನಾಳ, ಶರಣಗೌಡ ಆಶನಾಳ, ವೀರೇಶ ಆಶನಾಳ, ಬಸಲಿಂಗರಡ್ಡಿ ನಾನಕನಳ್ಳಿ, ಸಿದ್ದರಾಮರೆಡ್ಡಿ, ನವೀನ್‌ಕುಮಾರ್‌, ಹಣಮಂತ ಮೂಲಿಮನಿ, ಚಂದ್ರಶೇಖರ್‌, ಹೊನ್ನಪ್ಪ ಹಿರಿಕುರುಬರು, ಆಶಪ್ಪ ಮಾಸ್ತರ, ಹಣಮಂತ ಉಪ್ಪರಕಿ, ಸಾಬಣ್ಣ ದಾಸರ್ ಸಹಿತ ಹಲವರು ಉಪಸ್ಥಿತರಿದ್ದರು.  

ವಾರ್ತಾ ಭಾರತಿ 19 Nov 2025 8:11 pm

'ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ' ವರದಿ ಸಲ್ಲಿಕೆಯಾದ ಕೂಡಲೇ ಸ್ವೀಕರಿಸಿ ಜಾರಿಗೊಳಿಸುತ್ತೇವೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್ ಅವರು ‘ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ’ಯ ವರದಿಯನ್ನು ಸರಕಾರಕ್ಕೆ ಸಲ್ಲಿಸಿದ ತಕ್ಷಣವೇ ಅದನ್ನು ಸ್ವೀಕರಿಸಿ, ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಬುಧವಾರ ಇಲ್ಲಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಹಾಗೂ ಕರ್ನಾಟಕ ಶೋಷಿತ ಸಮುದಾಯಗಳ ಮಹಾಒಕ್ಕೂಟದ ಸಹಯೋಗದೊಂದಿಗೆ ಆಯೋಜಿಸಿದ್ದ ‘ಎಲ್.ಜಿ.ಹಾವನೂರು ವರದಿ ಸಲ್ಲಿಕೆಯ ಸುವರ್ಣ ಮಹೋತ್ಸವ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮೀಸಲಾತಿ ಪ್ರಮಾಣವನ್ನು ಶೇ.75ರ ವರೆಗೆ ಹೆಚ್ಚಿಸುವ ಬಗ್ಗೆಯೂ ಆಸಕ್ತಿ ಹೊಂದಿದ್ದೇನೆ. ನನ್ನ ಕೊನೆಯ ಉಸಿರು ಇರುವವರೆಗೂ ಹಾಗೂ ನಾನು ರಾಜಕಾರಣದಲ್ಲಿ ಇರುವವರೆಗೂ ಸಾಮಾಜಿಕ ನ್ಯಾಯದ ಪರವಾಗಿ ಇರುತ್ತೇನೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಹಿಂದುಳಿದ ಮತ್ತು ದಲಿತರು ತಮ್ಮ ವಿರೋಧಿಗಳಾದ ಬಿಜೆಪಿ, ಆರೆಸ್ಸೆಸ್, ಎಬಿವಿಪಿಗೆ ಸೇರುತ್ತಾರಲ್ಲಾ ಅವರಿಗೆ ಏನು ಹೇಳುವುದು. ಬಿಜೆಪಿ ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ ಹೋಗಿ ಹೋಗಿ ಅಲ್ಲಿಗೇ ಸೇರುತ್ತಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು. ದೇವರು, ಧರ್ಮದ ಹೆಸರಲ್ಲಿ ಸಾಯುತ್ತಾ ಇರೋರೆಲ್ಲಾ ನಮ್ಮ ಹಿಂದುಳಿದವರೇ. ಸ್ವಾರ್ಥಕ್ಕಾಗಿ ಬಿಜೆಪಿ, ಆರೆಸ್ಸೆಸ್ ಸೇರಿ ಇವರೇ ಮೂಲ ಆರೆಸ್ಸೆಸ್‍ನವರಂತೆ, ಇವರೇ ಹೆಡ್ಗೆವಾರ್ ರೀತಿ ಮಾತನಾಡುತ್ತಾರೆ ಎಂದು ಅವರು ಹೇಳಿದರು. ಹಾವನೂರು ವರದಿಯನ್ನು ದೇವರಾಜ ಅರಸರು ಹಿಂದುಳಿದವರ ಬೈಬಲ್ ಎಂದು ಕರೆದಿದ್ದಾರೆ. ಸುಪ್ರೀಂಕೋರ್ಟ್ ಹಾವನೂರು ವರದಿಯನ್ನು ಅಪಾರವಾಗಿ ಮೆಚ್ಚಿಕೊಂಡಿದೆ. ಸಾಮಾನ್ಯ ಹಳ್ಳಿಯ ಪರಿಶಿಷ್ಟ ಕುಟುಂಬದಲ್ಲಿ ಹುಟ್ಟಿದ ಹಾವನೂರು ಅವರು ವಿದ್ಯಾರ್ಥಿ ದೆಸೆಯಲ್ಲೇ ಪ್ರತಿಭಟನೆ ಮಾಡುವ ಗುಣ ಹೊಂದಿದ್ದರು. ಹಾವನೂರು ಅವರು ವಾಲ್ಮೀಕಿ ಜಾತಿಯ ಮೊದಲ ವಕೀಲರಾಗಿದ್ದರು ಎಂದು ಅವರು ಸ್ಮರಿಸಿದರು. ಎಲ್ಲಿಯವರೆಗೂ ಜಾತಿ ವ್ಯವಸ್ಥೆ ಇರುತ್ತದೋ ಅಲ್ಲಿಯವರೆಗೂ ಮೀಸಲಾತಿ ಇರಬೇಕು ಎನ್ನುವುದು ಡಾ.ಅಂಬೇಡ್ಕರ್ ಅವರ ಮಾತಾಗಿತ್ತು. ನಮ್ಮಲ್ಲಿ ಶಿಕ್ಷಣ ಪ್ರಮಾಣ ಶೇ.68ರಷ್ಟಿದ್ದರೂ ಜಾತಿ ವ್ಯವಸ್ಥೆ ಇನ್ನಷ್ಟು ಗಟ್ಟಿಯಾಗುತ್ತಿದೆ. ಹಿಂದುಳಿದ ವರ್ಗದವರು ಇನ್ನೂ ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬಂದಿಲ್ಲ. ಮೇಲ್ಜಾತಿಯ ಬಡವರನ್ನೂ ಬಹುವಚನದಿಂದ ಕರೆಯುವುದು, ಕೆಳ ಜಾತಿಯ ಶ್ರೀಮಂತರನ್ನು ಏಕವಚನದಲ್ಲಿ ಕರೆಯುವುದೇ ಗುಲಾಮಿ ಮನಸ್ಥಿತಿಯ ಸಂಕೇತ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಬುದ್ದ, ಬಸವಣ್ಣ, ಅಂಬೇಡ್ಕರ್ ಅವರೆಲ್ಲಾ ಬಂದು ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದರು. ಇವರು ಹೋರಾಡಿದಾಗ ಜಾತಿ ವ್ಯವಸ್ಥೆ ಸಡಿಲ ಆದಂತೆ ಕಾಣುತ್ತದೆ. ಆದರೆ ಬಳಿಕ ಮತ್ತೆ ಗಟ್ಟಿಯಾಗುತ್ತದೆ. ಜಾತಿ ವ್ಯವಸ್ಥೆ ಮಾತ್ರ ಹೋಗುತ್ತಿಲ್ಲ. ಆರ್ಥಿಕ, ಸಾಮಾಜಿಕ ಅಸಮಾನತೆಗೆ ತುತ್ತಾಗಿರುವ ಜನರೇ ಸ್ವಾತಂತ್ರ್ಯ ಸೌಧವನ್ನು ದ್ವಂಸ ಮಾಡುತ್ತಾರೆ ಎಂದು ಅಂಬೇಡ್ಕರ್ ಅವರು ಎಚ್ಚರಿಸಿದ್ದನ್ನು ನಾವು ಮರೆಯಬಾರದು ಎಂದು ಹೇಳಿದರು. ಪ್ರೊ. ರವಿವವರ್ಮ ಕುಮಾರ್ ಅವರು ಎಲ್.ಜಿ.ಹಾವನೂರು ಅವರ ಹೆಸರನ್ನು ಕರ್ನಾಟಕ ಕಾನೂನು ವಿಶ್ವ ವಿದ್ಯಾಲಯಕ್ಕೆ ನಾಮಕರಣ ಮಾಡಿ ಎಂದು ಮನವಿ ಮಾಡಿದ್ದು ಆ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಸಚಿವರಾದ ಶಿವರಾಜ ತಂಗಡಗಿ, ಬೈರತಿ ಸುರೇಶ್, ಸಂವಿಧಾನ ತಜ್ಞ ಪ್ರೊ.ರವಿವರ್ಮ ಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ಎಚ್.ಎಂ.ರೇವಣ್ಣ, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜ್, ಮಾಜಿ ಸದಸ್ಯ ಜಿ.ಡಿ.ಗೋಪಾಲ್, ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ ಮತ್ತಿತರರು ಉಪಸ್ಥಿತರಿದ್ದರು. ಮನುಸ್ಮೃತಿ ಶೂದ್ರ ವಿರೋಧಿ : ತಮ್ಮ ಭಾಷಣದ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಮನು ಸ್ಮೃ ತಿಯ ಶೂದ್ರ ವಿರೋಧಿ ಶ್ಲೋಕಗಳನ್ನು ಓದಿ, ಶೂದ್ರ ಸಮುದಾಯವನ್ನು ನಾಯಿಗೆ ಹೋಲಿಸಿ ತಾರತಮ್ಯ ಆಚರಿಸುವ ಶ್ಲೋಕಗಳ ಅರ್ಥ ತಿಳಿಸಿದರು. ನೀವೆಲ್ಲಾ ಮನು ಸ್ಮೃ ತಿ ಓದಿ ಜಾತಿ ತಾರತಮ್ಯದ ಪ್ರಮಾಣವನ್ನು ಅರ್ಥ ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ವಾರ್ತಾ ಭಾರತಿ 19 Nov 2025 8:06 pm

ಕಾಸರಗೋಡು: ಕನ್ನಡಿಗರ ರೇಶನ್ ಕಾರ್ಡ್‌ನಲ್ಲಿ ಕನ್ನಡ ಮುದ್ರಿಸಲು ಕೇರಳ ಸರಕಾರ ಆದೇಶ

ಕಾಸರಗೋಡು: ಜಿಲ್ಲೆಯ ಕನ್ನಡಿಗರ ರೇಶನ್ ಕಾರ್ಡ ಅನ್ನು ಕನ್ನಡದಲ್ಲಿ ಮುದ್ರಿಸಲು ಕೇರಳ ಸರಕಾರ ಆದೇಶಿಸಿದೆ ಎಂದು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಪ್ರಕಟನೆಯಲ್ಲಿ ತಿಳಿಸಿದೆ. ಕಾಸರಗೋಡಿನ ರೇಶನ್ ಕಾರ್ಡ್/ಮತದಾರರ ಗುರುತಿನ ಚೀಟು ಸಹಿತ ಎಲ್ಲಾ ದಾಖಲೆಗಳನ್ನು ಮಲಯಾಳಂ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮುದ್ರಿಸಲಾಗಿದೆ. ಇದರಿಂದ ಗಡಿಭಾಗದ ಕನ್ನಡಿಗರಿಗೆ ಸಮಸ್ಯೆಯಾಗಿದೆ. ಹಾಗಾಗಿ ಸ್ಥಳೀಯ ಭಾಷಾ ಅಲ್ಪಸಂಖ್ಯಾತರ ಹಿತಾಸಕ್ತಿಯನ್ನು ಪರಿಗಣಿಸಿ ರೇಶನ್ ಕಾರ್ಡ್ ಹಾಗೂ ಮತದಾರರ ಗುರುತಿನ ಚೀಟಿಗಳನ್ನು ಮುದ್ರಿಸುವಾಗ ಕನ್ನಡ ಭಾಷೆಯನ್ನು ಅಳವಡಿಸುವಂತೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇನಮರದ, ಕಾರ್ಯದರ್ಶಿ ಪ್ರಕಾಶ ಮತ್ತಿಹಳ್ಳಿ,ಶಾಸಕರಾದ ಎನ್.ಎ.ನೆಲ್ಲಿಕುನ್ನು, ಎ.ಕೆ. ಎಂ. ಅಶ್ರಫ್, ಪ್ರಾಧಿಕಾರದ ಸದಸ್ಯ ಎ.ಆರ್. ಸುಬ್ಬಯ್ಯಕಟ್ಟೆ ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಅದರಂತೆ ಕೇರಳ ಸರಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಾರ್ಯದರ್ಶಿ ಈ ಬಗ್ಗೆ ಕ್ರಮ ಕೈಗೊಳ್ಳಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಆಯುಕ್ತರಿಗೆ ಸೂಚನೆ ನೀಡಿರುತ್ತಾರೆ ಎಂದು ಪ್ರಾಧಿಕಾರದ ಪ್ರಕಟನೆ ತಿಳಿಸಿದೆ.

ವಾರ್ತಾ ಭಾರತಿ 19 Nov 2025 8:02 pm

ಕಲಬುರಗಿ | ಪೊಲೀಸರು ಮಾನವೀಯತೆಯಿಂದ‌ ನಡೆದುಕೊಂಡಲ್ಲಿ ಮಾತ್ರ ಜನಸ್ನೇಹಿ ಪೊಲೀಸ್ ವ್ಯವಸ್ಥೆ ಜಾರಿ ಸಾಧ್ಯ : ಅಲೋಕ್ ಕುಮಾರ್‌

ಕಲಬುರಗಿ: ಠಾಣೆಗೆ ಬರುವ ಸಾರ್ವಜನಿಕರನ್ನು ಗೌರವದಿಂದ ಕಂಡು ಅವರ ಸಮಸ್ಯೆ ಪರಿಹರಿಸುವ ಕೆಲಸವನ್ನು ಪೊಲೀಸರು ಮಾಡಬೇಕು. ಎಲ್ಲಕ್ಕಿಂತ ಮಿಗಿಲಾಗಿ ಮಾನವೀಯತೆಯಿಂದ‌ ನಡೆದುಕೊಂಡಲ್ಲಿ ಮಾತ್ರ ಜನಸ್ನೇಹಿ ಪೊಲೀಸ್ ವ್ಯವಸ್ಥೆ ಜಾರಿಗೆ ತರಲು ಸಾಧ್ಯ ಎಂದು ಪೊಲೀಸ್ ಇಲಾಖೆಯ ತರಬೇತಿ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಪ್ರಶಿಕ್ಷಣಾರ್ಥಿಗಳಿಗೆ ಸಲಹೆ ನೀಡಿದರು. ನಗರದ ಹೊರವಲಯದ ನಾಗನಹಳ್ಳಿಯ ಪೊಲೀಸ್ ತರಬೇತಿ ಮಹಾವಿದ್ಯಾಲಯದ ಸಭಾಂಗಣದಲ್ಲಿ 14ನೇ ತಂಡದ ಪಿ.ಎಸ್.ಐ (ಸಿವಿಲ್) 380 ಪ್ರಶಿಕ್ಷಣಾರ್ಥಿಗಳ ಬುನಾದಿ ತರಬೇತಿಯ ಉದ್ಘಾಟನಾ‌ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅಲೋಕ್ ಕುಮಾರ್, ಪೊಲೀಸ್ ಕೆಲಸವನ್ನು ಇತರೆ ಇಲಾಖೆಯ ಕೆಲಸಕ್ಕೆ ಹೋಲಿಕೆ ಮಾಡುವಂತಿಲ್ಲ. 24 ಗಂಟೆ‌ಯೂ ಸಾರ್ವಜನಿಕರ ರಕ್ಷಣೆಗೆ ನಿಲ್ಲಬೇಕಾಗುತ್ತದೆ. ಖಾಕಿಗೆ ಸಮಾಜದಲ್ಲಿ ವಿಶೇಷ ಗೌರವ ಇದೆ.‌ ಅಂತಹ ಖಾಕಿ ಧರಿಸಲು ನಮಗೆ ಸಿಕ್ಕಿರುವುದೇ ಪುಣ್ಯ ಎಂದು ಭಾವಿಸಿ ನೊಂದವರ ಕಣ್ಣೀರು ಒರೆಸುವ ಕೆಲಸ ಮಾಡಬೇಕಿದೆ ಎಂದರು. ಜನ ಸೇವೆ ಮಾಡಬೇಕಾದರೆ ಮಾನವೀಯ ಮೌಲ್ಯ, ಅತ್ಮಸ್ಥೈರ್ಯ, ಹೊಂದಿಕೊಳ್ಳುವ ಗುಣ, ಅಧುನಿಕ‌ ತಂತ್ರಜ್ಞಾನ ಅಳವಡಿಕೆ, ಶಿಸ್ತು, ದೈಹಿಕ ಸದೃಢತೆ ಅವಶ್ಯಕ. ಆ ನಿಟ್ಟಿನಲ್ಲಿ ಪ್ರೊಬೇಷನ್ ಅಧಿಕಾರಿಗಳು ಗಮನಹರಿಸಬೇಕು. ಇತ್ತೀಚೆಗೆ ಪೊಲೀಸರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ನೋವು ತಂದಿದೆ ಎಂದು ಹೇಳಿದರು.  ಪೊಲೀಸರಿಗೆ ಅತ್ಯುತ್ತಮ ತರಬೇತಿ ಕರ್ನಾಟಕದಲ್ಲಿ ನೀಡಲಾಗುತ್ತಿದೆ. ನ್ಯಾಷನಲ್ ಪೊಲೀಸ್ ಅಕಾಡೆಮಿ, ಐ.ಪಿ.ಎಸ್. ಅಕಾಡೆಮಿ ಮಾದರಿಯಲ್ಲಿ ಪಠ್ಯಕ್ರಮ ಸಿದ್ದಪಡಿಸಿಕೊಂಡು ಪ್ರಶಿಕ್ಷಣಾರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು, ಜನರೊಂದಿಗೆ ವರ್ತನೆ, ದೈಹಿಕ ಕ್ಷಮತೆ ಕಾಪಾಡಿಕೊಳ್ಳುವುದು, ಪರಿಣಿತರೊಂದಿಗೆ ಸಂವಾದ, ಜನಸಂದಣಿ ನಿಯಂತ್ರಣ ಹೀಗೆ ಪರಿಸ್ಥಿತಿಗೆ ಅನುಗುಣವಾಗಿ ಕಾರ್ಯನಿರ್ವಹಿಸುವ ಕುರಿತು ಇಲ್ಲಿ ಹೇಳಿ ಕೊಡಲಾಗುತ್ತದೆ. ಅಲ್ಲದೆ ಇಲ್ಲಿಂದ ತರಬೇತಿ‌ ಮುಗಿಸಿಕೊಂಡು ಹೋದ ನಂತರ‌ 5 ವರ್ಷ ನಿರಂತರ ಅವರ ಕಾರ್ಯವೈಖರಿ ಬಗ್ಗೆ ಅವಲೋಕನ ಮಾಡಿ ಮೇಲಾಧಿಕಾರಿಗಳಿಗೆ ವರದಿ ನೀಡಲಾಗುತ್ತದೆ. ವಿಶೇಷವಾಗಿ ಮಹಿಳಾ‌ ನೌಕರರಿಗೆ ತರಬೇತಿ ಸಂದರ್ಭದಲ್ಲಿಯೇ ಅವರ ಕುಟುಂಬಸ್ಥರೊಂದಿಗೆ ಇಲಾಖೆಯ ಕಾರ್ಯವೈಖರಿ ಬಗ್ಗೆ ಸಮಾಲೋಚನೆ ಮಾಡಲಾಗುತ್ತದೆ. ಹೀಗೆ ತರಬೇತಿಯಲ್ಲಿ ಇಲಾಖೆ ಅನೇಕ ಬದಲಾವಣೆಗಳನ್ನು ತಂದಿದೆ ಎಂದು ಅಲೋಕ್‌ ಕುಮಾರ್ ಹೇಳಿದರು.  ಇತ್ತೇಚೆಗೆ ಸೈಬರ್ ಅಪರಾಧ ಹೆಚ್ಚಾಗಿದೆ.‌ ಆನ್ ಲೈನ್ ಮುಲಕವೂ ಸಾರ್ವಜನಿಕರ ಹಣ ಲಪಟಾಯಿಸುವ ವಂಚಕರ ಸಂಖ್ಯೆ ಹೆಚ್ಚಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಅವಹೇಳನ, ತೇಜೋವಧೆ, ಸುಳ್ಳು‌ಸುದ್ದಿ ಹರಡಲಾಗುತ್ತಿದೆ. ಸಾಮಾನ್ಯ ಅಪರಾಧಗಳ ನಿಯಂತ್ರಣ ಜೊತೆಗೆ ಸೈಬರ್ ಕ್ರೈಮ್, ಸೋಷಿಯಲ್‌ ಮೀಡಿಯಾ ಪ್ರಕರಣಗಳಲ್ಲಿ ಜನರಿಗೆ ನ್ಯಾಯ ದೊರಕಿಸುವ ಸವಾಲು ಇಲಾಖೆಯ ಮುಂದಿದೆ ಎಂದು ಅಲೋಕ್‌ ಕುಮಾರ್ ಹೇಳಿದರು. ನಾಗನಹಳ್ಳಿ ಪೊಲೀಸ್ ತರಬೇತಿ ಮಹಾವಿದ್ಯಾಲಯದ ಪ್ರಾಂಶುಪಾಲ ಮತ್ತು ಎಸ್.ಪಿ. ಡೆಕ್ಕಾ ಕಿಶೋರ ಬಾಬು ಅವರು ಪ್ರಸ್ತಾವಿಕವಾಗಿ ಮಾತನಾಡಿ, 14ನೇ ತಂಡದ ಪಿ.ಎಸ್.ಐ (ಸಿವಿಲ್) 380 ಪ್ರಶಿಕ್ಷಣಾರ್ಥಿಗಳಿಗೆ ಇಲ್ಲಿ ತರಬೇತಿ ನೀಡಲಾಗುತ್ತಿದೆ. ಇದರಲ್ಲಿ 283 ಪುರುಷ ಮತ್ತು 97 ಮಹಿಳಾ ಅಭ್ಯರ್ಥಿಗಳಿದ್ದಾರೆ. ಇಲ್ಲಿ ನೀಡಲಾಗುವ‌ ಎಲ್ಲಾ ಹಂತದ ತರಬೇತಿಯನ್ನು ಪಡೆದುಕೊಂಡು ಉತ್ತಮ‌ ಅಧಿಕಾರಿಗಳಾಗಿ‌ ಇಲ್ಲಿಂದ ಹೊರಹೋಗಬೇಕೆಂದು ಪ್ರಶಿಕ್ಷಣಾರ್ಥಿಗಳಿಗೆ ಕರೆ‌ ನೀಡಿದರು. ಕರ್ನಾಟಕ ಪೊಲೀಸ್ ಬಗ್ಗೆ ದೇಶವಷ್ಟೆ ಅಲ್ಲ‌ ವಿದೇಶದಲ್ಲಿಯೂ ಗೌರವ ಇದೆ. ಅಂತಹ ಒಂದು ಪೊಲೀಸ್ ವ್ಯವಸ್ಥೆಯಲ್ಲಿ ಜನ‌ ಸೇವೆ ಮಾಡಲು ಅಣಿಯಾಗಿರುವ ಪ್ರೊಬೇಷನರಿ ಅಧಿಕಾರಿಗಳು ವೃತ್ತಿಪರತೆ, ನೈತಿಕತೆ ರೂಡಿಸಿಕೊಳ್ಳಬೇಕು. ಶಿಸ್ತು, ಕಾನೂನು ಪರಿಪಾಲನೆ ಜೊತೆಗೆ ಮಾನವೀಯತೆ, ಅಂತಕರಣ‌ ಮರೆಯದಿರಿ ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ. ಶರಣಪ್ಪ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಈಶಾನ್ಯ ವಲಯದ ಉಪ ಮಹಾನಿರೀಕ್ಷಕ ಶಾಂತನು ಸಿನ್ಹಾ, ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಡಿ.ಸಿ.ಪಿ. ಕನಿಕಾ ಸಿಕ್ರಿವಾಲ್, ಪ್ರವೀಣ ನಾಯಕ್ ಸೇರಿದಂತೆ‌ ಅನೇಕ ಪೊಲೀಸ್ ಅಧಿಕಾರಿಗಳು, ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು. 

ವಾರ್ತಾ ಭಾರತಿ 19 Nov 2025 8:02 pm

ಉಡುಪಿ: ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

ಉಡುಪಿ: ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುತ್ತವೆ. ಒತ್ತಡ ಪೂರ್ಣ ಸನ್ನಿವೇಶಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಇಲಾಖೆ ಆಯೋಜಿಸಿರುವ ಇಂಥ ಕ್ರೀಡಾಕೂಟದಿಂದ ಪೊಲೀಸರ ದೈಹಿಕ ಆರೋಗ್ಯದ ಜೊತೆಗೆ ಮನಸ್ಸು ಕೂಡ ಲವಲವಿಕೆಯಿಂದ ಇದ್ದು, ಅವರ ಕಾರ್ಯಕ್ಷಮತೆ ಹೆಚ್ಚುತ್ತದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದ್ದಾರೆ. ಇಂದು ನಗರದ ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರಾರಂಭಗೊಂಡ ಜಿಲ್ಲಾ ಪೊಲೀಸ್ ಇಲಾಖೆಯ ವಾರ್ಷಿಕ ಕ್ರೀಡಾಕೂಟ- 2025 ಅನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡಾಮನೋಭಾವನೆಯನ್ನು ಹೆಚ್ಚಿಸುವ ಇಂತಹ ಕ್ರೀಡಾಕೂಟಗಳು ನಿಯಮಿತವಾಗಿ ನಡೆಯುತ್ತಿದ್ದಾಗ ದೇಹ ಸುಸ್ಥಿತಿಯಲ್ಲಿರುತ್ತದೆ. ಪೊಲೀಸರು ಹಲವಾರು ದಿನಗಳವರೆಗೆ ನಿರಂತರವಾಗಿ ಕೆಲಸ ಮಾಡುವ ಸನ್ನಿವೇಶಗಳು ಎದುರಾಗುತ್ತವೆ. ಈ ಸಮಯದಲ್ಲಿ ದೈಕ ಹಾಗೂ ಮಾನಸಿಕವಾಗಿ ಫಿಟ್ ಆಗಿರಬೇಕಾಗುತ್ತದೆ. ನಿತ್ಯವೂ ಕ್ರೀಡೆ ಅಥವಾ ವ್ಯಾಯಾಮಗಳಲ್ಲಿ ತೊಡಗಿಸಿಕೊಂಡಾಗ ಫಿಟ್ನೆಸ್ ಅನ್ನು ಕಾಪಾಡಿಕೊಳ್ಳಬಹುದು. ಇತರ ಇಲಾಖೆಗಳು ಕೂಡ ಪೊಲೀಸ್ ಇಲಾಖೆುಂದ ಸ್ಪೂರ್ತಿ ಪಡೆದು ಕ್ರೀಡಾಕೂಟಗಳನ್ನು ಆಯೋಜಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಅವರು ಹೇಳಿದರು. ಉದ್ಘಾಟನೆಗೂ ಮುನ್ನ ಪೊಲೀಸ್ ಇಲಾಖೆಯ ವಿವಿಧ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಅತಿಥಿಗಳು ಸಾಮೂಹಿಕ ಗೌರವ ರಕ್ಷೆ ಸ್ವೀಕರಿಸಿದ ಬಳಿಕ ಕ್ರೀಡಾ ಜ್ಯೋತಿಯನ್ನು ಕ್ರೀಡಾಂಗಣಕ್ಕೆ ತರಲಾಯಿತು. ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಸ್ವಾಗತಿಸಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ್ ವಂದಿಸಿದರು. ಕ್ರೀಡಾಕೂಟದ ಸಮಾರೋಪ ಸಮಾರಂಭ ನ.21ರಂದು ನಡೆಯಲಿದೆ.  

ವಾರ್ತಾ ಭಾರತಿ 19 Nov 2025 7:58 pm

ʻಕನ್ನಡ ಕೇಳಲು ಇಂಪು, ಹುಟ್ಟಿದರೆ ಕನ್ನಡ ನಾಡಲ್ಲೇ ಹುಟ್ಟಬೇಕುʼ; ಕನ್ನಡಿಗರ ಹೃದಯ ಗೆದ್ದ ಜಪಾನಿನ ಪುಟಾಣಿ

ಏಳು ವರ್ಷದ ಜಪಾನಿ ಬಾಲಕಿಯೊಬ್ಬಳು ಬೆಂಗಳೂರಿನ ಶಾಲಾ ಕಾರ್ಯಕ್ರಮವೊಂದರಲ್ಲಿ ಸ್ಪಷ್ಟವಾಗಿ ಕನ್ನಡ ಮಾತನಾಡುತ್ತಿರುವ ಕಿರು ವಿಡಿಯೋವೊಂದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಪುಟಾಣಿಯ ಕನ್ನಡ ಮಾತು ಕರ್ನಾಟಕ ಜನರ ಹೃದಯ ಗೆದ್ದಿದೆ. ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂದು ಹೇಳುವ ಮೂಲಕ ಭಾಷೆಯ ಮೇಲಿನ ತನ್ನ ಪ್ರೀತಿಯನ್ನು ವ್ಯಕ್ತಪಡಿಸಿದ್ದು, ಈ ವಿಡಿಯೋಗೆ ನೆಟ್ಟಿಗರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಜಪಾನ್‌ ದೇಶದ ಜನರ ಕಲಿಯುವ ಹುಮ್ಮಸ್ಸಿನ ಬಗ್ಗೆ ನೆಟ್ಟಿಗರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ವಿಜಯ ಕರ್ನಾಟಕ 19 Nov 2025 7:57 pm

ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕಾ ಅಭಿಯಾನ: ಉಡುಪಿ ಡಿಸಿ

ಉಡುಪಿ: ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆ ಎನಿಸಿರುವ ಕಾಲುಬಾಯಿ ರೋಗದ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಎಂಟನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ ಜಿಲ್ಲೆಯಾದ್ಯಂತ ನಡೆಯು ತಿದ್ದು, ಜಿಲ್ಲೆಯ ಪ್ರತಿಯೊಬ್ಬ ಪಶು ಸಾಕಾಣಿಕೆ ಮಾಡುವವರು ಲಸಿಕೆ ಹಾಕಿಸುವ ಮೂಲತ ತಮ್ಮ ಜಾನುವಾರುಗಳ ಆರೋಗ್ಯ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ತಿಳಿಸಿದ್ದಾರೆ. ಬುದವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ನಡೆದ ಜಾನುವಾರುಗಳಿಗೆ ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಕಳೆದ ನವೆಂಬರ್ 3ರಿಂದ ಡಿಸೆಂಬರ್ 2ರವರೆಗೆ ಎಲ್ಲಾ ಜಾನುವಾರುಗಳಿಗೆ ಎಂಟನೇ ಸುತ್ತಿನ ಕಾಲುಬಾಯಿ ಜ್ವರ ರೋಗದ ಲಸಿಕೆ ನೀಡಲಾಗುತ್ತಿದೆ. ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಕಟ್ಟೆಚ್ಚರ ವಹಿಸುವುದರೊಂದಿಗೆ ಯಾವುದೇ ಜಾನುವಾರು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದರು. ಕಳೆದ ಏಳನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ 2,05,518 ಜಾನುವಾರುಗಳಿಗೆ ಲಸಿಕೆ ನೀಡುವ ಗುರಿ ಹೊಂದಿದ್ದು, ಇದರಲ್ಲಿ 1,93,496 ಜಾನುವಾರುಗಳಿಗೆ ಲಸಿಕೆ ಹಾಕುವ ಮೂಲಕ ಶೇ.96ರಷ್ಟು ಪ್ರಗತಿ ಸಾಧಿಸಲಾಗಿದೆ. ಇದೀಗ ಎಂಟನೇ ಸುತ್ತಿಗೆ 1,93,496 ಜಾನುವಾರುಗಳಿಗೆ ಲಸಿಕೆಯ ಗುರಿ ನಿಗದಿಯಾಗಿದ್ದು, ಈವರೆಗೆ 88,556 ಜಾನುವಾರುಗಳಿಗೆ ಲಸಿಕೆ ಹಾಕಿಸಲಾಗಿದೆ.ಅಭಿಯಾನದ ಕೊನೆಗೆ ಪ್ರತಿಶತಃ ನೂರರಷ್ಟು ಪ್ರಗತಿಯಾಗಿರಬೇಕು ಎಂದು ಸ್ವರೂಪ ಟಿ.ಕೆ. ಹೇಳಿದ್ದಾರೆ. ಲಸಿಕಾ ಕಾರ್ಯಕ್ಕಾಗಿ ಜಿಲ್ಲೆಯಲ್ಲಿ 2,28,350 ಡೋಸ್ ಲಸಿಕೆ ಲಭ್ಯವಿದೆ. ಲಸಿಕಾ ಕಾರ್ಯದ ಸಂದರ್ಭದಲ್ಲಿ ಉತ್ಪತ್ತಿಯಾಗುವ ಜೀವವೈದ್ಯ ತ್ಯಾಜ್ಯ ಗಳನ್ನು ನಿಯಮಾನುಸಾರ ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು ಎಂದ ಜಿಲ್ಲಾಧಿಕಾರಿ, ಜಿಲ್ಲೆಯ ಎಲ್ಲಾ ಗ್ರಾಮಗಳ ಜಾನುವಾರುಗಳಿಗೆ ಲಸಿಕಾ ಚುಚ್ಚುಮದ್ದು ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದರು. ಪಶುವೈದ್ಯರು, ತಾಂತ್ರಿಕ ಸಿಬ್ಬಂದಿ, ಕೆ.ಎಂ.ಎಫ್ ಸಿಬ್ಬಂದಿ, ಮೈತ್ರಿ ಕಾರ್ಯಕರ್ತರು, ಪಶು ಸಖಿಯರು ಹಾಗೂ ಇತರೆ ತರಬೇತಿ ಹೊಂದಿದ ಒಟ್ಟು 268 ಸಿಬ್ಬಂದಿಗಳನ್ನು ಲಸಿಕಾ ಕಾರ್ಯಕ್ಕೆ ನಿಯೋಜಿಸಲಾಗಿದ್ದು, ಇವರುಗಳು ಮನೆ ಭೇಟಿ ನೀಡಿದ ಸಂದರ್ಭದಲ್ಲಿ ರೈತರು ಕೇಳಿದ ಮಾಹಿತಿ ಗಳನ್ನೆಲ್ಲಾ ನೀಡಿ ಸಹಕರಿಸುವಂತೆ ಜಿಲ್ಲಾದಿಕಾರಿ ತಿಳಿಸಿದರು. ಸಭೆಯಲ್ಲಿ ಪಶುವೈದ್ಯಕೀಯ ಪಾಲಿ ಕ್ಲಿನಿಕ್ ಉಪನಿರ್ದೇಶಕ ಡಾ. ಬಾಬಣ್ಣ, ಮಂಗಳೂರು ಕೆ.ಎಂ.ಎಫ್ ಉಪ ವ್ಯವಸ್ಥಾಪಕ ಡಾ.ಮಾಧವ ಐತಾಳ್, ತಾಲೂಕು ಮುಖ್ಯ ಪಶು ವೈದ್ಯಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲೆಯ ಕಾಪು, ಉಡುಪಿ, ಬೈಂದೂರು, ಹೆಬ್ರಿ, ಕುಂದಾಪುರ, ಕಾರ್ಕಳ ಹಾಗೂ ಬ್ರಹ್ಮಾವರ ತಾಲೂಕು ಮತ್ತು ಉಡುಪಿ ಪಾಲಿಕ್ಲಿನಿಕ್‌ನಲ್ಲಿ ತಲಾ ಒಂದರಂತೆ ಒಟ್ಟು 8 ಪಶು ಸಂಜೀವಿನಿ ಅಂಬುಲೆನ್ಸ್ ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. ಪ್ರತೀ ಚಿಕಿತ್ಸಾ ಘಟಕದ ವಾಹನದಲ್ಲಿ ಪಶುವೈದ್ಯರು, ಪಶುವೈದ್ಯ ಸಹಾಯಕ ಹಾಗೂ ವಾಹನ ಚಾಲಕರು ನೇಮಕಗೊಂಡಿದ್ದಾರೆ. ಈ ವಾಹನಗಳ ಮೂಲಕ 2025ರ ಜುಲೈನಿಂದ ಸೆಪ್ಟಂಬರ್‌ವರೆಗೆ ಒಟ್ಟು 4611 ಜಾನುವಾರುಗಳಿಗೆ ಚಿಕಿತ್ಸೆ ನೀಡಲಾಗಿದೆ. -ಡಾ.ಎಂ.ಸಿ ರೆಡ್ಡಪ್ಪ, ಉಪನಿರ್ದೇಶಕ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಡುಪಿ.

ವಾರ್ತಾ ಭಾರತಿ 19 Nov 2025 7:54 pm

ಕಲಬುರಗಿ | ಎಐ ಸದ್ಬಳಕೆ ಮಾಡುವ ನಿಟ್ಟಿನಲ್ಲಿ ಪೊಲೀಸರಿಗೆ ತರಬೇತಿ : ಅಲೋಕ್ ಕುಮಾರ್‌

ಕಲಬುರಗಿ: ಸೈಬರ್ ಅಪರಾಧಗಳು ನಮ್ಮ‌ ರಾಜ್ಯ, ದೇಶಕ್ಕೆ‌ ಸೀಮಿತವಾಗಿಲ್ಲ.‌ ಹೊರದೇಶಕ್ಕೂ ವ್ಯಾಪಿಸಿದೆ. ಇದನ್ನು ಭೇದಿಸುವ ಸವಾಲು ನಮ್ಮ ಮುಂದಿದೆ. ಎಐ ಸದ್ಬಳಕೆ ಮಾಡುವ ನಿಟ್ಟಿನಲ್ಲಿ ಕೂಡ ಪೊಲೀಸರಿಗೆ ತರಬೇತಿ ನೀಡಲಾಗುತ್ತದೆ ಎಂದು ಪೊಲೀಸ್ ಇಲಾಖೆಯ ತರಬೇತಿ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆಲೋಕ್ ಕುಮಾರ್ ಹೇಳಿದರು. ನಗರದ ಹೊರವಲಯದ ನಾಗನಹಳ್ಳಿಯ ಪೊಲೀಸ್ ತರಬೇತಿ ಮಹಾವಿದ್ಯಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ‌ ಅವರು, ಇತ್ತೀಚೆಗೆ ಆನ್ ಲೈನ್ ಮೂಲಕ ಹಣ ಕಳೆದುಕೊಳ್ಳುವವರ ಸಂಖ್ಯೆ ದಿನಂಪ್ರತಿ ಹೆಚ್ಚಾಗುತ್ತಿದ್ದು, ಸೈಬರ್ ಕ್ರೈಂ ಸಂಘಟಿತ ಅಪರಾಧವಾಗುತ್ತಿದೆ. ಬೆಂಗಳೂರಿನ‌ ಇಂದಿರಾ‌ ನಗರದ ನಿವಾಸಿ‌ 32.81 ಕೋಟಿ ರೂ. ಕಳೆದುಕೊಂಡಿದ್ದಾರೆ.‌ ಇಂತಹದ್ದೇ ಪ್ರಕರಣದ ಬೆನ್ನು ಹತ್ತಿದಾಗ ಬೆಳಗಾವಿಯಲ್ಲಿ‌ 32 ಜನ‌ ಸಿಕ್ಕಿ ಬಿದ್ದಿದ್ದಾರೆ ಎಂದರು. ಕರ್ನಾಟಕ ಪೊಲೀಸರಿಗೆ ಸೈಬರ್ ಕ್ರೈಂ‌ ಸೇರಿದಂತೆ ಪರಿಸ್ಥಿತಿಗೆ ಅನುಗುಣವಾಗಿ ಕಾರ್ಯನಿರ್ವಹಿಸಲು ಎಲ್ಲಾ ಹಂತದ ತರಬೇತಿ ನೀಡಲಾಗುತ್ತಿದೆ. ಎಐ ಸದ್ಬಳಕೆ ಮಾಡುವ ನಿಟ್ಟಿನಲ್ಲಿಯೂ ಸಿಬ್ಬಂದಿಗೆ ತರಬೇತಿ ನೀಡಲಾಗುವುದು. ಒಟ್ಟಿನಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಮತ್ತು ಸಮಾಜ ಘಾತುಕ ಶಕ್ತಿಗಳನ್ನು ನಿಯಂತ್ರಿಸಲು ಸಿಬ್ಬಂದಿಗಳಿಗೆ ಪರಿಪೂರ್ಣವಾದ ತರಬೇತಿ ನೀಡಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ನಾಗಹನಹಳ್ಳಿ ಪಿ.ಟಿ.ಸಿ. ಪ್ರಾಂಶುಪಾಲ ಮತ್ತು ಎಸ್.ಪಿ. ಡೆಕ್ಕಾ ಕಿಶೋರ್‌ ಬಾಬು ಉಪಸ್ಥಿತರಿದ್ದರು. 

ವಾರ್ತಾ ಭಾರತಿ 19 Nov 2025 7:52 pm

ಮಾನವ ಕಳ್ಳ ಸಾಗಾಣಿಕೆ ದೇಶದ ಅತೀ ದೊಡ್ಡ ಕಾನೂನು ಬಾಹಿರ ಚಟುವಟಿಕೆ: ಮನು ಪಟೇಲ್

ಉಡುಪಿ: ಮಾನವ ಕಳ್ಳ ಸಾಗಾಣಿಕೆ ಎಂಬುದು ದೇಶದ ಅತೀ ದೊಡ್ಡ ಕಾನೂನು ಬಾಹಿರ ಚಟುವಟಿಕೆಯಾಗಿದೆ. ಇದು ಶೀಘ್ರವಾಗಿ ಬೆಳೆಯುತ್ತಿರುವ ವ್ಯವಸ್ಥಿತವಾದ ಅಪರಾಧವಾಗಿದೆ. ಇದನ್ನು ತಡೆಗಟ್ಟುವಲ್ಲಿ ಅಧಿಕಾರಿಗಳು ಸೂಕ್ತ ಕಾನೂನು ಕ್ರಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಉಡುಪಿಯ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನು ಪಟೇಲ್ ಬಿ.ವೈ. ಹೇಳಿದ್ದಾರೆ. ಬುಧವಾರ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ, ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕುರಿತು ಕ್ಷೇತ್ರ ಮಟ್ಟದ ವಿವಿಧ ಇಲಾಖೆಗಳ ಭಾಗೀದಾರರಿಗೆ ತರಬೇತಿಯ ಜಿಲ್ಲಾ ಮಟ್ಟದ ಕಾರ್ಯಾಗಾರ ವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಇದನ್ನು ತಡೆಗಟ್ಟುವಲ್ಲಿ ವಿವಿಧ ಭಾಗೀದಾರ ಇಲಾಖೆಗಳು ಕೈಜೋಡಿಸಿ ಇಂಥ ಕಾನೂನು ಬಾಹಿರ ಚಟವಟಿಕೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದರು. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ ಮಾತನಾಡಿ, ಮಾನವ ಕಳ್ಳ ಸಾಗಾಣಿಕೆಯು ಅತ್ಯಂತ ಗಂಭೀರ ವಿಚಾರವಾಗಿದೆ. ಇದನ್ನು ಸಂಪೂರ್ಣ ತಡೆಗಟ್ಟುವಲ್ಲಿ ಪೋಲೀಸ್, ಕಾರ್ಮಿಕ ಇಲಾಖೆಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕಿದೆ ಎಂದರು. ಉಡುಪಿ ಉಪವಿಭಾಗ ಪೋಲೀಸ್ ನಿರೀಕ್ಷಕ ಗೋಪಾಲಕೃಷ್ಣ ಜೋಗಿ ಮಾತನಾಡಿ, ಭಾಗೀದಾರ ಇಲಾಖೆಗಳಿಗೆ ಇದೊಂದು ಅರ್ಥಪೂರ್ಣ ಕಾರ್ಯಾಗಾರವಾಗಿದ್ದು, ತಮ್ಮ ವ್ಯಾಪ್ತಿಯಲ್ಲಿ ಇಂತಹ ಪ್ರಕರಣಗಳು ಕಂಡು ಬಂದಲ್ಲಿ ತಕ್ಷಣ ಸಮೀಪದ ಪೊಲೀಸ್ ಇಲಾಖೆಯನ್ನು ಸಂಪರ್ಕಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೊಳ್ಳಿ ಮಾತನಾಡಿ, ಕಾನೂನುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಎಲ್ಲಾ ಭಾಗೀದಾರ ಇಲಾಖೆಗಳ ಪಾತ್ರ ಮತ್ತು ಜವಾಬ್ದಾರಿ ಮಹತ್ವದಾಗಿದ್ದು, ಗ್ರಾಮೀಣ ಭಾಗದ ಜನರಿಗೆ ಇದರ ಅರಿವನ್ನು ಮೂಡಿಸುವ ಅವಶ್ಯಕತೆ ಇದೆ ಎಂದರು. ಸಂಪನ್ಮೂಲ ವ್ಯಕ್ತಿಗಳಾಗಿ ನೇಟಿವ್ ಆರ್ಗನೈಸೇಷನ್ ಕುಂದಾಪುರ ಇದರ ವ್ಯವಸ್ಥಾಪಕ ಪ್ರೇಮಾನಂದ ಕಲ್ಮಾಡಿ ಮಹಿಳೆಯರ ಮತ್ತು ಮಕ್ಕಳ ಕಳ್ಳ ಸಾಗಾಣಿಕೆ ತಡೆಗೆ ಕ್ರಮಬದ್ಧ ಕಾರ್ಯ ವಿಧಾನ ಎನ್ನುವ ವಿಷಯದ ಕುರಿತು ಹಾಗೂ ವಕೀಲೆ ಸೌಮ್ಯ ಅಶೋಕ್ ಮಹಿಳೆಯರ ಮತ್ತು ಮಕ್ಕಳ ಕಳ್ಳ ಸಾಗಾಣಿಕೆ ತಡೆ ಹಾಗೂ ಐಟಿಡಿಪಿ 1956 ಕಾಯ್ದೆಯ ಅನುಷ್ಟಾನ ಕುರಿತಂತೆ ಮಾಹಿತಿ ನೀಡಿದರು. ಕಾರ್ಯಾಗಾರದಲ್ಲಿ ಜಿಲ್ಲಾ ಉಪನಿರೀಕ್ಷಕರಾದ ನಾರಾಯಣ ಮತ್ತು ಪ್ರಕಾಶ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಶಿಕ್ಷಣ ಇಲಾಖೆಯ ಪ್ರಾಂಶುಪಾಲರು, ಕಾರ್ಮಿಕ ನಿರೀಕ್ಷಕರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ರಾಜ್ಯ ಮಹಿಳಾ ನಿಲಯ ಅಧೀಕ್ಷಕರು, ಬಾಲಕಿಯರ ಬಾಲಮಂದಿರ, ಬಾಲಕರ ಬಾಲಮಂದಿರ, ಪರೀಕ್ಷಣಾಧಿಕಾರಿ ನಿರೀಕ್ಷಣಾಲಯ, ಹಿರಿಯ ಮೇಲ್ವಿಚಾರಕ/ಮೇಲ್ವಿಚಾರಕಿ, ಪ್ರವಾಸೋದ್ಯಮ ಇಲಾಖೆಯ ಪ್ರವಾಸಿಮಿತ್ರರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ, ಸಖಿ ಒನ್ ಸ್ಟಾಪ್ ಸೆಂಟರ್ ಸಿಬ್ಬಂದಿಗಳು, ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರ ಉಡುಪಿ, ಕಾರ್ಕಳ, ಕುಂದಾಪುರಗಳ ಸಿಬ್ಬಂದಿಗಳು, ಆರಕ್ಷಕ ಇಲಾಖಾಅಧಿಕಾರಿ/ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಅನುರಾಧಾ ಬಿ ಹಾದಿಮನಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರೆ, ದೀಪಾ ಕಾರ್ಯಕ್ರಮ ನಿರೂಪಿಸಿ, ಶಾರದಾ ವಂದಿಸಿದರು.

ವಾರ್ತಾ ಭಾರತಿ 19 Nov 2025 7:48 pm

ಕಲಬುರಗಿ | ದುಷ್ಚಟಗಳಿಗೆ ಯುವಜನಾಂಗ ದಾಸರಾಗಬಾರದು : ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್

ಕಲಬುರಗಿ: ಇಂದಿನ ಯುವಜನಾಂಗ ಯಾವುದೇ ದುಷ್ಚಟಗಳಿಗೆ ದಾಸರಾಗಬಾರದು, ತಂಬಾಕಿನಲ್ಲಿ ನಿಕೋಟಿನ್‌ ಅಂಶವಿದ್ದು, ಆರೋಗ್ಯದ ಮೇಲೆ ವ್ಯತ್ತಿರಿಕ್ತ ದುಷ್ಪರಿಣಾಮವನ್ನು ಬೀರುವ ಕಾರಣದಿಂದ ಯಾರು ಕೂಡ ತಂಬಾಕು ಸೇವನೆ ಮಾಡಬಾರದು ಎಂದು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಹೇಳಿದರು. ಬುಧುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಎನ್.ಎಸ್.ಎಸ್. ಘಟಕ ಕಲಬುರಗಿ ಇದರ ಸಂಯುಕ್ತಾಶ್ರಯದಲ್ಲಿ “ತಂಬಾಕು ಮುಕ್ತ ಯುವ ಪೀಳಿಗೆ ಅಭಿಯಾನ 3.0” ಕಾರ್ಯಕ್ರಮವನ್ನು ಜ್ಯೋತಿ ಬೆೆಳಗಿಸಿವುದರ ಮೂಲಕ ಅವರು ಉದ್ಘಾಟಿಸಿ ಮಾತನಾಡಿದರು. ಭಾರತದಲ್ಲಿ ತಂಬಾಕು ಸೇವನೆಯು ತಡೆಗಟ್ಟಬಹುದಾದ ರೋಗಗಳು ಮತ್ತು ಸಾವುಗಳಿಗೆ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ವರ್ಷಕ್ಕೆ 13.5 ಲಕ್ಷ ಸಾವುಗಳು ಸಂಭವಿಸುತ್ತಿದ್ದು, ತಂಬಾಕು ಸೇವನೆ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು, ಉಸಿರಾಟದ ತೊಂದರೆ ಮತ್ತು ಅಕಾಲಿಕ ಮರಣಗಳಿಗೆ ಕಾರಣವಾಗುತ್ತದೆ ಎಂದು ಹೇಳಿದರು. ಸರಕಾರದ ಆದೇಶದಂತೆ ಶಾಲಾ ಕಾಲೇಜುಗಳ 100ಮೀ ಅಂತರದಲ್ಲಿ ತಂಬಾಕು ಮತ್ತುಅದರ ಉಪ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲಾಗಿದೆ. ಕಾನೂನು ನಿಯಮಗಳನ್ನು ಉಲ್ಲಂಘಿಸಿ ಮಾರಾಟ ಮಾಡುವುದು ಕಾನೂನು ಪ್ರಕಾರ ಅಪರಾಧವಾಗುತ್ತದೆ. ಅಂತಹ ಅಂಗಡಿಗಳ ಮೇಲೆ ತಂಬಾಕು ನಿಯಂತ್ರಣಕೋಶದ ಅಧಿಕಾರಿಗಳು ದಾಳಿಯನ್ನು ಮಾಡಿ ಕ್ರಮ ಕೈಗೊಳ್ಳಬೇಕೆಂದರು. ತಂಬಾಕು ಮುಕ್ತ ಯುವ ಅಭಿಯಾನ 3.0 ಎಂಬುದು ಭಾರತ ಸರ್ಕಾರದ 60 ದಿನಗಳ ರಾಷ್ಟ್ರವ್ಯಾಪ್ತಿ ಕಾರ್ಯಕ್ರಮವಾಗಿದ್ದು, ಯುವಜನರು ತಂಬಾಕು ಬಳಸುವುದನ್ನು ತಡೆಗಟ್ಟಲು ಮತ್ತು ತ್ಯಜಿಸಲು ಬಯಸುವವರನ್ನು ಬೆಂಬಲಿಸಲು ಇದನ್ನು ಪ್ರಾರಂಭಿಸಲಾಗಿದೆ. ಇದು ಶಿಕ್ಷಣ ಸಂಸ್ಥೆಗಳು ಮತ್ತು ಸಮುದಾಯಗಳಲ್ಲಿ ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ ಉದ್ದೇಶವನ್ನು ಹೊಂದಿದೆ ಎಂದರು. ಕಲಬುರಗಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪ್ರಭಾರ ಪ್ರಾದೇಶಿಕ ನಿರ್ದೇಶಕ ಡಾ. ಶುಭಾಂಗಿ ದಿಗಂಬರ್‌ ಚಿಕಟೆ ಮಾತನಾಡಿ, ಆರೋಗ್ಯವೇ ಭಾಗ್ಯ ಎನ್ನುವಂತೆ ಉತ್ತಮ ಹವ್ಯಾಸಗಳನ್ನು ರೂಡಿಸಿಕೊಂಡು ತಮ್ಮಆರೋಗವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು. ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ.ರಾಕೇಶ್‌ ಕಾಂಬಳೆ ಕಾರ್ಯಕ್ರಮದಲ್ಲಿ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಕ್ಯಾನ್ಸರ್‌ ಆಸ್ಪತ್ರೆಯ ಮುಖ್ಯಸ್ಥರಾದ ಡಾ.ಶಾಂತಲಿಂಗ ನಿಗ್ಗುಡಗಿ ಮಾತನಾಡಿ, ವಿದ್ಯಾರ್ಥಿಗಳಿಗೆ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.   ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶರಣಬಸಪ್ಪ ಖ್ಯಾತನಾಳ, ಜಿಲ್ಲಾ ಕಾಲು ಬಾಯಿ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಸಂಧ್ಯಾ ಕಾನೇಕರ್, ವಿಟಿಯು ಕಾಲೇಜಿನ ಎನ್.ಎಸ್.ಎಸ್ ಅಧಿಕಾರಿಗಳಾದ ಸಂಜಯ ಪಟ್ಟಣ ಶೆಟ್ಟಿ, ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ್ತಿ ಸುಜಾತ ಪಾಟೀಲ್, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ಪ್ರಾದೇಶಿಕ ಕೇಂದ್ರ ಕಲಬುರಗಿಯ ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿಟಿಯು ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದ ಸಹಾಯಕ ಪ್ರಾಧ್ಯಪಕ ಪೂಜಾ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

ವಾರ್ತಾ ಭಾರತಿ 19 Nov 2025 7:42 pm

ʼಮಂಗಳೂರು ಭವಿಷ್ಯದ ಡೇಟಾ ಸೆಂಟರ್ʼ: ಕೆಡಿಇಎಂ ಮತ್ತು ಎಸ್‌ಬಿಪಿಯಿಂದ ಜಂಟಿ ಅಧ್ಯಯನ ವರದಿ

ಮಂಗಳೂರು: ಭಾರತದ ಡೇಟಾ ಸೆಂಟರ್ ವಿಸ್ತರಣೆಯಲ್ಲಿ ಆರ್ಥಿಕತೆಗೆ ಬಲ ನೀಡುವಲ್ಲಿ ಕರಾವಳಿ ಭವಿಷ್ಯದ ಕೆಂದ್ರವಾಗಿ ಹೊರಹೊಮ್ಮುವಲ್ಲಿ ಮಂಗಳೂರು ಅಪಾರ ಸಾಮರ್ಥ್ಯ ಹೊಂದಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು - ಕರ್ನಾಟಕದ ಡಿಜಿಟಲ್ ಕ್ಷೇತ್ರದ ಕಾರ್ಯತಂತ್ರವನ್ನು ಮುನ್ನಡೆಸುವ ಮಹತ್ವದ ಹೆಜ್ಜೆಯಾಗಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ( ಕೆಡಿಇಎಂ), ಸಿಲಿಕಾನ್ ಬೀಚ್ ಕಾರ್ಯಕ್ರಮ (ಎಸ್‌ಬಿಪಿ) ಮತ್ತು ಡೆಲಾಯ್ಟ್ ಜಂಟಿಯಾಗಿ, ‘ಇಂದಿನ ಮಂಗಳೂರು: ಭಾರತದ ಮುಂದಿನ ಸಂಭಾವ್ಯ ಡೇಟಾ ಸೆಂಟರ್ ಹಬ್ ಒಂದು ಕಾರ್ಯಸಾಧ್ಯತಾ ಅಧ್ಯಯನ’ ಎಂಬ ಶೀರ್ಷಿಕೆಯಲ್ಲಿ ಕಾರ್ಯಸಾಧ್ಯತಾ ವರದಿಯನ್ನು ಕರ್ನಾಟಕ ಸರ್ಕಾರಕ್ಕೆ ಸಲ್ಲಿಸಿದೆ. ಬೆಂಗಳೂರು ಟೆಕ್ ಶೃಂಗಸಭೆಯ ಡೇಟಾ ಸೆಂಟರ್ ಕುರಿತಾದ ಸಭೆಯಲ್ಲಿ ಈ ವರದಿಯನ್ನು ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಮತ್ತು ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಮತ್ತು ಎಸ್ ಮತ್ತು ಟಿ ಇಲಾಖೆಯ ಕಾರ್ಯದರ್ಶಿ ಡಾ. ಎನ್. ಮಂಜುಳಾರಿಗೆ ಸಲ್ಲಿಸಿದೆ. ಕರಾವಳಿ ಅನುಕೂಲಗಳು, ಸ್ಪರ್ಧಾತ್ಮಕ ಭೂಮಿ ಮತ್ತು ಇಂಧನ ಆರ್ಥಿಕತೆ, ವಿಸ್ತರಿಸುತ್ತಿರುವ ಜಿಸಿಸಿ ಚಟುವಟಿಕೆ ಮತ್ತು ಬೆಳೆಯುತ್ತಿರುವ ಎಐ ಅಳವಡಿಕೆ, ಸಂಭಾವ್ಯ ಜಲಾಂತರ್ಗಾಮಿ ಕೇಬಲ್ ಲ್ಯಾಂಡಿಂಗ್ ಸ್ಟೇಷನ್ ಮತ್ತು ಹಸಿರು ಇಂಧನ ಬೆನ್ನೆಲುಬಿನಿಂದ ಬೆಂಬಲಿತವಾದ ಭವಿಷ್ಯಕ್ಕೆ ಸಿದ್ಧವಾಗಿರುವ 1 ಜಿಡಬ್ಲ್ಯೂ+ ಡೇಟಾ ಸೆಂಟರ್ ಕ್ಲಸ್ಟರ್ ಅಭಿವೃದ್ಧಿ ಸೇರಿ ವಿವಿಧ ಅಂಶಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಡೇಟಾ ಸೆಂಟರ್ ಕಾರ್ಯತಂತ್ರದ ಮಾರ್ಗಸೂಚಿ 2030 ರ ವೇಳೆಗೆ ರಾಷ್ಟ್ರೀಯ ಮಾರುಕಟ್ಟೆಯು 21.8 ಶತಕೋಟಿ ಅಮೆರಿಕನ್ ಬಿಲಿಯನ್ ಡಾಲರ್ ತಲುಪುವ ನಿರೀಕ್ಷೆ ಇದೆ. ಈ ನಿಟ್ಟಿನಲ್ಲಿ ಕರ್ನಾಟಕವು ಭಾರತದ ಮುಂದಿನ ಹಂತದ ಡೇಟಾ ಕೇಂದ್ರ ವಿಸ್ತರಣೆಯನ್ನು ಹೇಗೆ ಮುನ್ನಡೆಸಬಹುದು ಎಂಬುದರ ಕುರಿತು ಕಾರ್ಯಸಾಧ್ಯತಾ ಅಧ್ಯಯನವು ಭವಿಷ್ಯದ ನೀಲನಕ್ಷೆಯನ್ನು ಹೊಂದಿದೆ. ವರದಿಯ ಪ್ರಮುಖ ಅಂಶಗಳು ► ಬೆಂಗಳೂರು ಪ್ರಮುಖ ಹೈಪರ್‌ಸ್ಕೇಲ್ ಹಬ್ ► ಮಂಗಳೂರು ಮತ್ತು ಹುಬ್ಬಳ್ಳಿ ಎಡ್ಜ್ ಮೂಲಸೌಕರ್ಯ, ಕಡಿಮೆ ವಿಳಂಬ ಮತ್ತು ಸಮರ್ಥ ಇಂಧನ, ಕೃತಕ ಬುದ್ಧಿಮತ್ತೆ ಸಾಮರ್ಥ್ಯಕ್ಕಾಗಿ ಪ್ರಾದೇಶಿಕವಾಗಿ ಬೆಳೆಸುವುದು. ಈ ಚೌಕಟ್ಟಿನೊಳಗೆ, ಮಂಗಳೂರು ಭಾರತದ ಅತ್ಯಂತ ಬಲವಾದ ಮುಂದಿನ ಡೇಟಾ ಸೆಂಟರ್ ತಾಣಗಳಲ್ಲಿ ಒಂದಾಗಿ ಹೊರಹೊಮ್ಮುತ್ತಿದೆ. ಪೂರಕ ಅಂಶಗಳು  ►ಮುಂಬೈ/ಚೆನ್ನೈಗೆ ಹೋಲಿಸಿದರೆ ಭೂಮಿ ಮತ್ತು ವಿದ್ಯುತ್ ವೆಚ್ಚಗಳು ಕಡಿಮೆ ►ಕರಾವಳಿ ಕೈಗಾರಿಕಾ ಪರಿಸರ ವ್ಯವಸ್ಥೆ ಅನುಕೂಲಕಾರಿ ►ಡಿಜಿಟಲ್ ಪ್ರತಿಭೆಗಳ ವಿಸ್ತಾರ ಮತ್ತು ಜಿಸಿಸಿ ಉಪಸ್ಥಿತಿ ►ಕರಾವಳಿ ಕಾರಿಡಾರ್‌ನಾದ್ಯಂತ ಹೆಚ್ಚುತ್ತಿರುವ ಉದ್ಯಮ ಆದ್ಯತೆ ಮತ್ತು ಎಐ ತಂತ್ರಜ್ಞಾನ ಎಂಬ ಅಂಶಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. ‘ಭಾರತದ ತಂತ್ರಜ್ಞಾನ ಕ್ಷೇತ್ರವನ್ನು ನಿರಂತರವಾಗಿ ಮುನ್ನಡೆಸಿದೆ ಮತ್ತು ನಾವು ಕೃತಕ ಬುದ್ಧಿಮತ್ತೆ(AI), ಡೇಟಾ ಪ್ರಾಬಲ್ಯ, ಕ್ಲೌಡ್ ಅಳವಡಿಕೆ ಮತ್ತು ಡಿಜಿಟಲ್ ಆಯಾಮಗಳಿಂದ ರೂಪುಗೊಂಡ ಯುಗವನ್ನು ಪ್ರವೇಶಿಸುತ್ತಿರುವಾಗ, ಭವಿಷ್ಯಕ್ಕೆ ಸಿದ್ಧವಾದ ಅಡಿಪಾಯಗಳನ್ನು ನಿರ್ಮಿಸುವುದು ನಮ್ಮ ಜವಾಬ್ದಾರಿ. ಈ ನಿಟ್ಟಿನಲ್ಲಿ ಅಧ್ಯಯನದ ಒಳನೋಟಗಳು ಕರ್ನಾಟಕದ ಡಿಜಿಟಲ್ ಮೂಲಸೌಕರ್ಯ ಚೌಕಟ್ಟಿನಲ್ಲಿ ಮಂಗಳೂರು ಒಂದು ಮಾದರಿ ಆಗಲು ಅಗ್ರ ಸ್ಥಾನದಲ್ಲಿದೆ. ಕರಾವಳಿ ಅನುಕೂಲ, ಸ್ಪರ್ಧಾತ್ಮಕ ಪರಿಸರ ಮತ್ತು ವೇಗವಾಗಿ ವಿಕಸನಗೊಳ್ಳುತ್ತಿರುವ ಪ್ರತಿಭೆ ಮತ್ತು ಕೈಗಾರಿಕಾ ವ್ಯವಸ್ಥೆಯೊಂದಿಗೆ, ಈ ಪ್ರದೇಶವು ಮುನ್ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಬಹುದು. ’ ಬಿ.ವಿ. ನಾಯ್ಡು, ಅಧ್ಯಕ್ಷ, ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ‘ಮಂಗಳೂರು ಒಂದು ಬದಲಾವಣೆಯ ಹಂತದಲ್ಲಿದೆ. ಜಾಗತಿಕ ಡಿಜಿಟಲ್ ಮೂಲಸೌಕರ್ಯವು ಕೃತಕ ಬುದ್ಧಿಮತ್ತೆ, ಹೈಪರ್‌ಸ್ಕೇಲ್ ಕಂಪ್ಯೂಟಿಂಗ್ ಮತ್ತು ಹೆಚ್ಚಿನ ಕಾರ್ಯಕ್ಷಮತೆಯ ಸಂಪರ್ಕದ ಕಡೆಗೆ ಬದಲಾದಂತೆ, ಪ್ರತಿಭೆ, ವೆಚ್ಚ ದಕ್ಷತೆ ಮತ್ತು ಸ್ಥಿತಿಸ್ಥಾಪಕತ್ವವನ್ನು ನೀಡಬಲ್ಲ ಪ್ರದೇಶಗಳು ಮುಂದಿನ ದಶಕದ ಬೆಳವಣಿಗೆಯನ್ನು ವ್ಯಾಖ್ಯಾನಿಸುತ್ತವೆ. ಮಂಗಳೂರು ಭಾರತದ ಪ್ರಮುಖ ಕರಾವಳಿ ಪ್ರದೇಶ. ಈ ಸ್ಥಳವನ್ನು ಡೇಟಾ ಸೆಂಟರ್ ಆಗಿ ಹೇಗೆ ವಿಕಸನಗೊಳ್ಳಬಹುದು ಎಂಬುದಕ್ಕೆ ಈ ಕಾರ್ಯಸಾಧ್ಯತಾ ಅಧ್ಯಯನವು ಸ್ಪಷ್ಟ ನಿರೂಪಣೆ ನೀಡುತ್ತದೆ. ಸರಿಯಾದ ಬೆಂಬಲ ಮತ್ತು ಸಂಘಟಿತ ಅನುಷ್ಠಾನದೊಂದಿಗೆ ಹೆಚ್ಚಿನ ಡಿಜಿಟಲ್ ಉದ್ಯೋಗಗಳನ್ನು ಆಧಾರವಾಗಿಟ್ಟುಕೊಳ್ಳಬಹುದು ಮತ್ತು ಭಾರತಕ್ಕಾಗಿ ಜಾಗತಿಕವಾಗಿ ಸ್ಪರ್ಧಾತ್ಮಕ ಸಿಲಿಕಾನ್ ಬೀಚ್ ಆಗಿ ಮಂಗಳೂರನ್ನು ರಚಿಸಬಹುದು’ ರೋಹಿತ್ ಭಟ್, ಸಿಲಿಕಾನ್ ಬೀಚ್ ಕಾರ್ಯಕ್ರಮದ ಸ್ಥಾಪಕ ಸದಸ್ಯ, ಐಟಿ ಧುರೀಣ  

ವಾರ್ತಾ ಭಾರತಿ 19 Nov 2025 7:40 pm

ನಾನು ಕೆಪಿಸಿಸಿ ಅಧ್ಯಕ್ಷ ಹುದ್ದೆಯಲ್ಲಿಯೇ ಶಾಶ್ವತವಾಗಿ ಇರಲು ಸಾಧ್ಯವಿಲ್ಲ, ಬೇರೆಯವರಿಗೆ ಅವಕಾಶ ನೀಡಬೇಕು : ಡಿ.ಕೆ.ಶಿವಕುಮಾರ್

ಬೆಂಗಳೂರು : ನಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಹುದ್ದೆಯಲ್ಲಿಯೇ ಶಾಶ್ವತವಾಗಿ ಇರಲು ಸಾಧ್ಯವಿಲ್ಲ. ನಾನು ಅಧ್ಯಕ್ಷನಾಗಿ ಈಗಾಗಲೇ ಐದೂವರೆ ವರ್ಷವಾಗಿದೆ, ಮುಂದಿನ ಮಾರ್ಚ್ ಬಂದರೆ ಆರು ವರ್ಷವಾಗಲಿದೆ. ಬೇರೆಯವರಿಗೆ ಅವಕಾಶ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದಿಲ್ಲಿ ಅಧ್ಯಕ್ಷ ಸ್ಥಾನ ತೊರೆಯುವ ಸೂಚನೆ ನೀಡಿದ್ದಾರೆ. ಬುಧವಾರ ಇಲ್ಲಿನ ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ನಡೆದ ‘ಇಂದಿರಾ ಗಾಂಧಿ ಜನ್ಮದಿನದ ಕಾರ್ಯಕ್ರಮ’ದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾನು ಉಪಮುಖ್ಯಮಂತ್ರಿಯಾದ ದಿನವೇ ಈ ಹುದ್ದೆ ಬಿಡಬೇಕು ಎಂದು ನಿರ್ಧರಿಸಿದ್ದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಇನ್ನು ಸ್ವಲ್ಪ ದಿನ ಮುಂದುವರಿಯಲು ಹೇಳಿದ್ದಾರೆ. ಹೀಗಾಗಿ ನಾನು ನನ್ನ ಕರ್ತವ್ಯ ನಿಭಾಯಿಸುತ್ತಿದ್ದೇನೆ ಎಂದು ತಿಳಿಸಿದರು. ನಾನು ಎಲ್ಲಿದ್ದೇನೆ. ಏನಾಗಿದ್ದೇನೆ ಎನ್ನುವುದು ಮುಖ್ಯವಲ್ಲ. ನನ್ನ ಅವಧಿಯಲ್ಲಿ ಮಾಡಿದ ಕೆಲಸಗಳು ಶಾಶ್ವತವಾಗಿರುತ್ತದೆ. ಪಕ್ಷದ 100 ಹೊಸ ಭವನಗಳನ್ನು ಆರಂಭಿಸಿದ್ದೇನೆ. ಪಕ್ಷದ ಅಧ್ಯಕ್ಷನಾಗಿ ಒಂದು ಮಾದರಿಯನ್ನು ಸ್ಥಾಪಿಸಿದ್ದೇನೆ. ನಾನು ನಾಯಕತ್ವದಲ್ಲಿ ಇರುತ್ತೇನೆ, ತಲೆಕೆಡಿಸಿಕೊಳ್ಳಬೇಡಿ ಎಂದು ಅವರು ಹೇಳಿದರು. ದೇಶದ ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಅವರ ಜನ್ಮದಿನ ಆಚರಿಸುತ್ತಿದ್ದೇವೆ. ಅವರು ದೇಶದ ಮಹಿಳಾ ಶಕ್ತಿಯ ಚಿಹ್ನೆ, ದೇಶ ಪ್ರೇಮ, ದೃಢ ನಿಶ್ಚಯ, ಧೈರ್ಯದ ಪ್ರತೀಕವಾಗಿದ್ದಾರೆ. ಸೋನಿಯಾ ಗಾಂಧಿ ಅವರು ನನ್ನನ್ನು ಕರೆದು ಇಂದಿರಾ ಗಾಂಧಿ ಅವರ ಸಮಾಧಿ ಸುತ್ತಮುತ್ತಲ ಜಾಗ ಅಭಿವೃದ್ಧಿಪಡಿಸಲು ಸೂಚಿಸಿದ್ದರು. ಜೊತೆಗೆ ಪೆರಂಬೂರಿನಲ್ಲಿರುವ ರಾಜೀವ್ ಗಾಂಧಿ ಅವರ ಸಮಾಧಿಗೆ ಗ್ರಾನೈಟ್ ಹಾಕುವ ಭಾಗ್ಯ ನನಗೆ ಸಿಕ್ಕಿದೆ. ನಾನು ಹಾಗೂ ನನ್ನ ಸಹೋದರ ನಮ್ಮದೇ ಕ್ವಾರೆಯಿಂದ ಗ್ರಾನೈಟ್ ಕಲ್ಲನ್ನು ತೆಗೆದುಕೊಂಡು ಹೋಗಿ ಅಲ್ಲಿ ಹಾಕಿ ನಮ್ಮ ಕೈಲಾದ ಸೇವೆ ಮಾಡುವ ಭಾಗ್ಯ ಸಿಕ್ಕಿತು ಎಂದು ಅವರು ಸ್ಮರಿಸಿದರು. ಇಂದಿರಾ ಗಾಂಧಿ ಅವರು ಜಾರಿ ಮಾಡಿರುವ ಯೋಜನೆಗಳನ್ನು ಯಾವುದೇ ಸರಕಾರ ಬಂದರೂ, ನಿಲ್ಲಿಸಲು ಸಾಧ್ಯವಿಲ್ಲ. ನಮ್ಮ ಕಾಂಗ್ರೆಸ್ ಸರಕಾರದಲ್ಲಿ ಆಹಾರ ಭದ್ರತಾ ಕಾಯ್ದೆ, ಮಾಹಿತಿ ಹಕ್ಕು, ಶೈಕ್ಷಣಿಕ ಹಕ್ಕು, ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಲು 371ಜೆ ಜಾರಿಗೆ ತರಲಾಗಿದೆ. ಎಸ್.ಎಂ. ಕೃಷ್ಣ ಅವರ ಸರಕಾರದಲ್ಲಿ ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಬೇಕು ಎಂದು ಕೇಂದ್ರ ಸರಕಾರಕ್ಕೆ ಪತ್ರ ಬರೆಯಲಾಗಿತ್ತು. ಆದರೆ ಆಡ್ವಾಣಿ ಅವರು ಇದು ಸಾಧ್ಯವಿಲ್ಲ ಎಂದು ಬರೆದರು. ಆದರೆ ಕಾಂಗ್ರೆಸ್ ಸರಕಾರ ಸಂವಿಧಾನದ ಮೂಲಕ ಜಾರಿಗೆ ತಂದಿತು ಎಂದು ಅವರು ತಿಳಿಸಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗಿ: ರಾಜಕೀಯದಲ್ಲಿ ಶೇ.33ರಷ್ಟು ಮೀಸಲಾತಿ ಬರುವುದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ನಾವು ಮಹಿಳಾ ನಾಯಕತ್ವವನ್ನು ಬೆಳೆಸಬೇಕು. ನಾಯಕರ ಕುಟುಂಬದವರನ್ನು ನಾಯಕರಾಗಿ ಬೆಳೆಯುವುದು ಮುಖ್ಯವಲ್ಲ, ಹೊಸ ಪ್ರತಿಭೆಗಳನ್ನು ಗುರುತಿಸಿ ಬೆಳೆಸಬೇಕು. ಬೆಂಗಳೂರಿನಲ್ಲಿ ಜಿಬಿಎ ಮೂಲಕ 369 ವಾರ್ಡ್‍ಗಳನ್ನು ಮಾಡಲಾಗಿದ್ದು, ಸದ್ಯದಲ್ಲೇ ಚುನಾವಣೆ ನಡೆಯಲಿದೆ. ಜೊತೆಗೆ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಯಲಿದೆ. ಹೀಗಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗಬೇಕು ಎಂದು ಅವರು ತಿಳಿಸಿದರು. ಪಕ್ಷವನ್ನು ಮರೆತವರಿಗೆ ಎಐಸಿಸಿ ನಾಯಕರಿಂದಲೇ ಉತ್ತರ: ಸಧ್ಯದಲ್ಲಿ ನೂರು ಕಾಂಗ್ರೆಸ್ ಕಚೇರಿ ಶಂಕುಸ್ಥಾಪನೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಇದಕ್ಕೆ ಯಾರು ಸಹಕಾರ ನೀಡಿದ್ದಾರೆ, ನೀಡಿಲ್ಲ ಎಂದು ಪಟ್ಟಿ ನೀಡಿ ಎಂದು ಎಐಸಿಸಿ ನಾಯಕರು ತಿಳಿಸಿದ್ದಾರೆ. ಕೆಲವರು ಆಸಕ್ತಿ ತೋರಿದ್ದಾರೆ, ಕೆಲವರು ಆಸಕ್ತಿ ತೋರಿಲ್ಲ. ಕೆಲವರಿಗೆ ಕೇವಲ ಅಧಿಕಾರ ಮಾತ್ರ ಬೇಕು. ಈ ಕಾಂಗ್ರೆಸ್ ಕಚೇರಿ ದೇವಾಲಯ ಎಂಬುದನ್ನು ಕೆಲವರು ಮರೆತಿದ್ದಾರೆ. ಇದಕ್ಕೆ ನಾನು ಉತ್ತರ ನೀಡುವುದಿಲ್ಲ. ದಿಲ್ಲಿಯ ನಾಯಕರು ಸರಿಯಾದ ಸಮಯದಲ್ಲಿ ಉತ್ತರ ನೀಡುತ್ತಾರೆ ಎಂದು ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ‘ಇಂದಿರಾ ಗಾಂಧಿ ಅವರ ಆಯ್ದ ನುಡಿಮುತ್ತುಗಳ’ ಬಗ್ಗೆ ಸೋನಿಯಾ ಗಾಂಧಿ ಅವರು ಬರೆದಿರುವ ಪುಸ್ತಕವನ್ನು ಡಿ.ಕೆ. ಶಿವಕುಮಾರ್ ಕನ್ನಡಕ್ಕೆ ತರ್ಜುಮೆ ಮಾಡಿರುವ ಕೃತಿಯನ್ನು ಬಿಡುಗಡೆ ಮಾಡಿದರು. ಇದೇ ವೇಳೆ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್, ವಾಸಂತಿ ಶಿವಣ್ಣ, ಮುಮ್ತಾಝ್‌ ಬೇಗಂ ಅವರಿಗೆ ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಸೊರಕೆ, ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹನುಮಂತರಾಯಪ್ಪ ಮತ್ತಿತರರು ಭಾಗವಹಿಸಿದ್ದರು. ‘ಪಕ್ಷ ಏನು ಹೇಳುತ್ತದೆಯೋ ಅದನ್ನು ನಾನು ಪಾಲಿಸುತ್ತೇನೆ. ಪಕ್ಷದ ಅದ್ಯಕ್ಷರಾದವರು ಹೇಗೆ ಕೆಲಸ ಮಾಡಬೇಕು ಎಂದು ನಾನು ಉದಾಹರಣೆಯಾಗಬೇಕು. ಪಕ್ಷದಲ್ಲಿ ನಮ್ಮ ಗುರುತು ಬಿಟ್ಟುಹೋಗಬೇಕು. ನಾನು ಈ ವಿಚಾರವಾಗಿ ಮಾತನಾಡುತ್ತಿದ್ದೇನೆ ಹೊರತು, ತ್ಯಾಗ ಅಥವಾ ಓಡಿ ಹೋಗುವ ಬಗ್ಗೆ ಮಾತನಾಡುತ್ತಿಲ್ಲ. ನಾನು ಓಡಿ ಹೋಗುವ ಮನುಷ್ಯನಲ್ಲ. ಗಾಂಧಿ ಕುಟುಂಬ ಹಾಗೂ ಕಾಂಗ್ರೆಸ್ ಅಧ್ಯಕ್ಷರು ಎಲ್ಲಿಯವರೆಗೂ ಜವಾಬ್ದಾರಿ ನಿಭಾಯಿಸಲು ಸೂಚಿಸುತ್ತಾರೋ ಅಲ್ಲಿಯವರೆಗೂ ನಾನು ಕರ್ತವ್ಯ ನಿಭಾಯಿಸುತ್ತೇನೆ’ -ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ

ವಾರ್ತಾ ಭಾರತಿ 19 Nov 2025 7:27 pm

ಗಾಜಾ ಪರಿಸ್ಥಿತಿ ಹಿಡಿತಕ್ಕೆ ತರಲು ಟ್ರಂಪ್ ಎಂಟ್ರಿ, ಜಗತ್ತಿನಾದ್ಯಂತ ಸ್ವಾಗತ!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇದೀಗ ಗಾಜಾ ವಿಚಾರದಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಹೇಗಾದರೂ ಮಾಡಿ ಈ ತಿಕ್ಕಾಟ ನಿಲ್ಲಿಸಬೇಕು, ಆ ಮೂಲಕ ಎಲ್ಲವೂ ಸೈಲೆಂಟ್ ಆಗಲೇ ಬೇಕು ಅನ್ನೋ ಲೆಕ್ಕಾಚಾರ ಟ್ರಂಪ್ ಅವರದ್ದು. ಒಂದು ಕಡೆ ಸಂಧಾನ ಮಾಡಿಕೊಳ್ಳಲು ಇಸ್ರೇಲ್ ಒಪ್ಪಿಕೊಂಡರೆ, ಇನ್ನೊಂದು ಕಡೆ ಈ ವಿಚಾರಕ್ಕೆ ಹಮಾಸ್ ಸಿದ್ಧವೇ ಇರಲಿಲ್ಲ. ಇನ್ನು ಹಮಾಸ್

ಒನ್ ಇ೦ಡಿಯ 19 Nov 2025 7:23 pm

ಕನಕಗಿರಿ | ಸೇತುವೆ ದುರಸ್ಥಿಗೊಳಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಅಗ್ರಹ

ಕನಕಗಿರಿ: ಪಟ್ಟಣದ‌ 6 ‌ಮತ್ತು 7ನೇ ವಾರ್ಡ್ ವ್ಯಾಪ್ತಿಯಲ್ಲಿರುವ‌ ಸೇತುವೆಯನ್ನು ದುರಸ್ತಿಪಡಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ( ನಾರಾಯಣಗೌಡ ಬಣ)ಯ ಪದಾಧಿಕಾರಿಗಳು ಪಟ್ಟಣ ಪಂಚಾಯಿತ್‌ ಮುಖ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದ್ದಾರೆ. ಸರಕಾರಿ ಪದವಿ ಪೂರ್ವ ಕಾಲೇಜು, ಚೆನ್ನಶ್ರೀ ಪಿಯು ಕಾಲೇಜು, ಗೋರಳಕೇರಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ರುದ್ರಸ್ವಾಮಿ ಪ್ರೌಢಶಾಲೆ, ಚೆನ್ನಮಲ್ಲಸ್ವಾಮಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಗೋರಳಕೇರಿ ದುರುಗಮ್ಮ ದೇವಸ್ಥಾನಕ್ಕೆ ತೆರಳಲು ಅನುಕೂಲವಾಗುವಂತೆ 6 ಮತ್ತು 7 ವಾರ್ಡ್ ಮಧ್ಯೆ ಕಿರು ಸೇತುವೆ ನಿರ್ಮಾಣ‌ ಮಾಡಲಾಗಿತ್ತು. ಸಾವಿರಾರು ಜನರು ಸೇತುವೆ ಮೂಲಕ ಸಂಚರಿಸುತ್ತಾರೆ. ಆದರೆ ಸೇತುವೆಗೆ ಹಾಕಿದ ಕಬ್ಬಿಣದ ಸರಳುಗಳು ಹಾಗೂ ಸಣ್ಣ ಕಬ್ಬಿಣದ ಪೈಪ್ ಗಳನ್ನು ಕಿಡಿಗೇಡಿಗಳು ಕಿತ್ತಿಕೊಂಡು ಹೋಗಿದ್ದಾರೆ. ಆದ್ದರಿಂದ ಸೇತುವೆಯನ್ನು ಶೀಘ್ರವಾಗಿ ದುರಸ್ಥಿ ಮಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಈ ವೇಳೆ ಸಂಘಟನೆಯ ಪದಾಧಿಕಾರಿಗಳಾದ ದೇಸಾಯಿಗೌಡ, ರವಿ ಬಲಿಜ, ಬಸವರಾಜ ಕೋರಿ, ಅಂಬರೇಶ ಪಟ್ಟಣಶೆಟ್ಟಿ, ಮಲ್ಲಿಕಾರ್ಜುನ ಹಾದಿಮನಿ,‌ ವಿಷ್ಣುವರ್ಧನ ರೆಡ್ಡಿ ಮಾದಿನಾಳ, ಖಾದರಬಾಷ‌ ಇಟ್ಟಂಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.  

ವಾರ್ತಾ ಭಾರತಿ 19 Nov 2025 7:23 pm

ತಮಿಳುನಾಡು | ಆರ್ಮ್ ಸ್ಟ್ರಾಂಗ್ ಹತ್ಯೆ ಪ್ರಕರಣ ಸಿಬಿಐಗೆ ಹಸ್ತಾಂತರ: ಮದ್ರಾಸ್ ಹೈಕೋರ್ಟ್ ಆದೇಶಕ್ಕೆ 'ಸುಪ್ರೀಂ' ತಡೆ

ಹೊಸದಿಲ್ಲಿ: ತಮಿಳುನಾಡು ಬಿಎಸ್ಪಿಯ ಮಾಜಿ ರಾಜ್ಯಾಧ್ಯಕ್ಷ ಕೆ.ಆರ್ಮ್ ಸ್ಟ್ರಾಂಗ್ ಹತ್ಯೆ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿದ್ದ ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಬುಧವಾರ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಕೆ.ಆರ್ಮ್ ಸ್ಟ್ರಾಂಗ್ ಹತ್ಯೆ ಪ್ರಕರಣದಲ್ಲಿ ತಮಿಳುನಾಡು ಪೊಲೀಸರು ಸಲ್ಲಿಸಿದ್ದ ದೋಷಾರೋಪ ಪಟ್ಟಿಯನ್ನೂ ರದ್ದುಗೊಳಿಸಿ, ಪ್ರಕರಣವನ್ನು ಸಿಬಿಐ ತನಿಖೆಗೆ ಹಸ್ತಾಂತರಿಸಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಬೇಕು ಎಂದು ಕೋರಿ ತಮಿಳುನಾಡು ಸರಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ನ್ಯಾ. ಜೆ.ಕೆ.ಮಹೇಶ್ವರಿ ಮತ್ತು ನ್ಯಾ. ವಿಜಯ್ ಬಿಷ್ಣೋಯಿ ನೇತೃತ್ವದ ನ್ಯಾಯಪೀಠ ನಡೆಸಿತು. ಇದಕ್ಕೂ ಮುನ್ನ, ಅಕ್ಟೋಬರ್ 10ರಂದು ತಮಿಳುನಾಡು ಪೊಲೀಸರು ಸಲ್ಲಿಸಿದ್ದ ದೋಷಾರೋಪ ಪಟ್ಟಿಯನ್ನು ರದ್ದುಗೊಳಿಸಿದ್ದ ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು. ಆದರೆ, ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸುವ ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಯಾವುದೇ ತಡೆ ನೀಡಿರಲಿಲ್ಲ. ಬುಧವಾರ ವಿಚಾರಣೆಯ ವೇಳೆ ತಮಿಳುನಾಡು ಸರಕಾರದ ಪರ ನ್ಯಾಯಾಲಯದಲ್ಲಿ ಹಾಜರಿದ್ದ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ, ಸಿಬಿಐಗೆ ಪ್ರಕರಣದ ದಾಖಲೆಗಳನ್ನು ಹಸ್ತಾಂತರಿಸಲು ತಮಿಳುನಾಡು ಪೊಲೀಸರು ನಿರಾಕರಿಸುತ್ತಿದ್ದಾರೆ ಎಂಬ ಆರೋಪಗಳನ್ನು ಅಲ್ಲಗಳೆದರು. ತಮಿಳುನಾಡು ಪೊಲೀಸರು ಸಮಗ್ರ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರೂ, ಮದ್ರಾಸ್ ಹೈಕೋರ್ಟ್ ಅದನ್ನು ದೇಶಾವರಿಯಾಗಿ ವಜಾಗೊಳಿಸಿದೆ ಎಂದು ಲೂತ್ರಾ ನ್ಯಾಯಾಲಯದೆದುರು ವಾದ ಮಂಡಿಸಿದ ಬಳಿಕ, ಮದ್ರಾಸ್ ಹೈಕೋರ್ಟ್ ನ ಸಿಬಿಐ ತನಿಖೆಯ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿತು.

ವಾರ್ತಾ ಭಾರತಿ 19 Nov 2025 7:22 pm

ಬಿಹಾರ | ನೂತನ ಸರಕಾರ ರಚನೆಗೆ ಹಕ್ಕು ಮಂಡಿಸಿದ ನಿತೀಶ್ ಕುಮಾರ್: ನಾಳೆ ನ.20ಕ್ಕೆ ಪ್ರಮಾಣ ವಚನ ಸಮಾರಂಭ

ಪಾಟ್ನಾ: ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ರನ್ನು ಬುಧವಾರ ಮಧ್ಯಾಹ್ನ ಭೇಟಿಯಾದ ನಿತೀಶ್ ಕುಮಾರ್, ನೂತನ ಸರಕಾರ ರಚನೆಗೆ ಹಕ್ಕು ಮಂಡಿಸಿದರು. ಇತ್ತೀಚೆಗೆ ಮುಕ್ತಾಯಗೊಂಡ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಗಮನಾರ್ಹ 85 ಸ್ಥಾನಗಳಲ್ಲಿ ಗೆಲುವು ಸಾಧಿಸಿದ ಜೆಡಿಯು ಪಕ್ಷದ ನಾಯಕ ನಿತೀಶ್ ಕುಮಾರ್, ನಾಳೆ ಗುರುವಾರ ನ.20ರಂದು ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ 22 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದು, ಪಾಟ್ನಾದಲ್ಲಿ ಅದ್ದೂರಿಯಾಗಿ ಆಯೋಜಿಸಲಾಗಿರುವ ಈ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯಲ್ಲದೆ, ಬಿಜೆಪಿ ಆಡಳಿತಾರೂಢ ರಾಜ್ಯಗಳ ಮುಖ್ಯಮಂತ್ರಿಗಳೂ ಈ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ 22 ಮಂದಿ ಸಚಿವರ ಪೈಕಿ ಒಂಭತ್ತು ಮಂದಿ ಬಿಜೆಪಿ ಸದಸ್ಯರಿರಲಿದ್ದಾರೆ. ಈ ಪೈಕಿ, ಈ ಹಿಂದಿನ ಸರಕಾರದಲ್ಲಿ ಉಪ ಮುಖ್ಯಮಂತ್ರಿಗಳಾಗಿದ್ದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಸಿನ್ಹಾ ಕೂಡಾ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಜೆಪಿಯಿಂದ ಪ್ರಮಾಣ ವಚನ ಸ್ವೀಕರಿಸಲಿರುವ ಒಂಭತ್ತು ಸಚಿವರ ಪೈಕಿ, ಎಂಟು ಸಚಿವರು ಈ ಹಿಂದಿನ ಸರಕಾರದಲ್ಲೂ ಸಚಿವರಾಗಿದ್ದರು.

ವಾರ್ತಾ ಭಾರತಿ 19 Nov 2025 7:20 pm

ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯಲ್ಲಿ ಭಾರತದ ಮೊದಲ ‘ಕ್ವಾಂಟಮ್ ಸಿಟಿ’ ಪರಿಕಲ್ಪನೆ ಅನಾವರಣ

ಬೆಂಗಳೂರು : ಕರ್ನಾಟಕ ರಾಜ್ಯವನ್ನು ವಿಶ್ವದ ಕ್ವಾಂಟಮ್ ಭೂಪಟದ ಕೇಂದ್ರ ಸ್ಥಾನವನ್ನಾಗಿಸುವ ನಿಟ್ಟಿನಲ್ಲಿ ಬೆಂಗಳೂರಿನ ಹೆಸರುಘಟ್ಟದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ದೇಶದ ಮೊದಲ ‘ಕ್ವಾಂಟಮ್ ಸಿಟಿ’ ಪರಿಕಲ್ಪನೆಯನ್ನು ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯಲ್ಲಿ ಬುಧವಾರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಭೋಸರಾಜು, 2025ನೆ ವರ್ಷವನ್ನು ವಿಶ್ವ ಕ್ವಾಂಟಮ್ ವಿಜ್ಞಾನ ವರ್ಷವಾಗಿ ಆಚರಿಸಲಾಗುತ್ತಿರುವ ಸಂದರ್ಭದಲ್ಲಿ, ಕರ್ನಾಟಕವು ಸಂಶೋಧನೆಯಷ್ಟೇ ಅಲ್ಲದೆ ಕ್ವಾಂಟಮ್ ಹಾರ್ಡ್‍ವೇರ್, ಕ್ವಾಂಟಮ್ ಕ್ಲೌಡ್ ಸೇವೆಗಳು ಮತ್ತು ನೈಪುಣ್ಯ ಹೊಂದಿದ ಮಾನವ ಸಂಪನ್ಮೂಲಗಳನ್ನು ಜಾಗತಿಕ ಮಾರುಕಟ್ಟೆಗೆ ರಫ್ತಿಗೆ ತಯಾರಾಗುತ್ತಿದೆ ಎಂದು ಹೇಳಿದರು. ‘ಭವಿಷ್ಯದ ಕ್ವಾಂಟಮ್ ತಂತ್ರಜ್ಞಾನಗಳನ್ನು ನಿರ್ಮಿಸಿ, ಜಗತ್ತಿಗೆ ರಫ್ತು ಮಾಡುವ ಸಾಮರ್ಥ್ಯ ಕರ್ನಾಟಕಕ್ಕಿದೆ’. ರಾಜ್ಯವು ಕ್ವಾಂಟಮ್ ಮಿಷನ್ ಅಡಿಯಲ್ಲಿ 1,000 ಕೋಟಿ ರೂ. ಹೂಡಿಕೆ ಮಾಡಿದೆ. ಬೆಂಗಳೂರು ನಗರದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಭಾರತದ ಮೊದಲ ಕ್ವಾಂಟಮ್ ಸಿಟಿ ಇದರ ಪ್ರಮುಖ ಕೇಂದ್ರ ಬಿಂದುವಾಗಿರಲಿದೆ ಎಂದು ಅವರು ತಿಳಿಸಿದರು. ಈ ಕ್ವಾಂಟಮ್ ಸಿಟಿ ಅತ್ಯಾಧುನಿಕ ಸಂಶೋಧನಾ ಲ್ಯಾಬ್‍ಗಳು, ಕ್ವಾಂಟಮ್ ಹಾರ್ಡ್‍ವೇರ್ ಪಾರ್ಕ್, ಕ್ರಯೋಜೆನಿಕ್ ಪರೀಕ್ಷಾ ಕೇಂದ್ರ, ಕ್ವಾಂಟಮ್ ಕ್ಲೌಡ್ ಕ್ಲಸ್ಟರ್‌ಗಳು ಮತ್ತು ಡೀಪ್-ಟೆಕ್ ಸ್ಟಾರ್ಟ್‌ ಅಪ್ ಒಳಗೊಂಡಿರಲಿದೆ. ಬೆಂಗಳೂರಿನಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಕ್ವಾಂಟಮ್ ಸೂಪ್ರೀಮೆಸಿ ಸೆಂಟರ್‌ ಗೆ ರಾಜ್ಯವು ಇತ್ತೀಚೆಗೆ 1,136 ಕೋಟಿ ರೂ.ಹೂಡಿಕೆಯನ್ನು ಅನುಮೋದಿಸಿದೆ. ‘ಭಾರತದಲ್ಲಿ ಇನ್ನೂ ಸೆಮಿಕಂಡಕ್ಟರ್ ಬಗ್ಗೆ ಚರ್ಚೆ ನಡೆಯುತ್ತಿರುವಾಗ, ಕರ್ನಾಟಕ ಈಗಾಗಲೆ ಕ್ವಾಂಟಮ್ ಚಿಪ್ ತಯಾರಿಕೆ ಹಂತದತ್ತ ಮುನ್ನಡೆಯುತ್ತಿದೆ’ ಎಂದು ಭೋಸರಾಜು ಮಾಹಿತಿ ನೀಡಿದರು. ಕ್ವಾಂಟಮ್ ಸಿಟಿ ಭಾರತದ ತಂತ್ರಜ್ಞಾನ ಭವಿಷ್ಯಕ್ಕೆ ಹೊಸ ದಾರಿ ತೆರೆದಿಡಲಿದೆ. ಕರ್ನಾಟಕ ಜಗತ್ತಿನ ಕ್ವಾಂಟಮ್ ನವೀನತೆ ಮತ್ತು ರಫ್ತಿನ ಕ್ಷೇತ್ರದಲ್ಲಿ ಮುನ್ನಡೆಯಲು ಸಿದ್ಧವಾಗಿದೆ. ಇತ್ತೀಚಿಗೆ ಸ್ವಿಟ್ಜರ್ಲ್ಯಾಂಡ್‌ ಭೇಟಿಯ ಸಂದರ್ಭದಲ್ಲಿ ಹಲವು ಸಂಸ್ಥೆಗಳು ಕ್ವಾಂಟಮ್ ಸಿಟಿ ನಿರ್ಮಾಣದಲ್ಲಿ ಸಹಕರಿಸಲು ಆಸಕ್ತಿ ವ್ಯಕ್ತಪಡಿಸಿವೆ. ಈ ಹಿನ್ನೆಲೆಯಲ್ಲಿ ಸ್ವಿಸ್-ಕರ್ನಾಟಕ ಕ್ವಾಂಟಮ್ ಸಹಯೋಗ ಕೇಂದ್ರವನ್ನು ಸ್ಥಾಪಿಸುವ ಕ್ರಮ ಪ್ರಗತಿಯಲ್ಲಿದೆ ಎಂದು ಅವರು ಹೇಳಿದರು. ಕ್ವಾಂಟಮ್ ಟೆಕ್ನಾಲಜಿ ದುಂಡು ಮೇಜಿನ ಸಭೆಯಲ್ಲಿ ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಐಐಎಸ್ಸಿ ಪ್ರೊ.ಅರಿಂದಮ್ ಘೋಷ್‌, ಕೌನ್ಸಿಲ್ ಜನರಲ್‍ಗಳು, ಕಾರ್ಪೊರೇಟ್ ನಾಯಕರು, ಸ್ಟಾರ್ಟ್‌ ಅಪ್‍ಗಳು ಮತ್ತು ನೀತಿ ರೂಪಿಸುವವರು ಭಾಗವಹಿಸಿದರು. ಈ ದುಂಡು ಮೇಜಿನ ಸಭೆಯಲ್ಲಿ ಖಾಸಗಿ ಪಾಲುದಾರಿಕೆ, ಅಂತರ್‍ರಾಷ್ಟ್ರೀಯ ಸಹಕಾರ ಮತ್ತು ಕರ್ನಾಟಕವನ್ನು ಜಾಗತಿಕ ಕ್ವಾಂಟಮ್ ರಫ್ತು ಕೇಂದ್ರವನ್ನಾಗಿಸುವಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಯಿತು. ಇಸ್ರೋ ಅಧ್ಯಕ್ಷ ಡಾ.ನಾರಾಯಣನ್ ಭಾಗವಹಿಸಿದ್ದ ಲ್ಯಾಬ್ 2 ಮಾರ್ಕೆಟ್ ಸೆಷನ್ ನಲ್ಲಿ ಕ್ಯೂ ಸಿಟಿ ಪರಿಕಲ್ಪನೆಯ ವಿಡಿಯೋ ಅನಾವರಣಗೊಳಿಸಲಾಯಿತು.

ವಾರ್ತಾ ಭಾರತಿ 19 Nov 2025 7:13 pm

ರಾಯಚೂರು | ಶಾರ್ಟ್ ಸರ್ಕ್ಯೂಟ್‍ನಿಂದ ಮನೆಗೆ ಬೆಂಕಿ ; ನಗದು, ಧವಸ ಧಾನ್ಯ ಸುಟ್ಟು ಕರಕಲು

ರಾಯಚೂರು : ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ತಗುಲಿ ನಗ, ನಗದು, ಧವಸ ಧಾನ್ಯ ಸುಟ್ಟು ಹೋದ ಘಟನೆ ಮಾನ್ವಿ ತಾಲೂಕಿನ ಅರೋಲಿ ಗ್ರಾಮದಲ್ಲಿ ನಡೆದಿದೆ. ಅರೋಲಿ ಗ್ರಾಮದ ರೈತ ದುಗನೂರು ರಾಮಯ್ಯ ಅವರ ನಿವಾಸದಲ್ಲಿ ಶಾರ್ಟ್ ಸರ್ಕ್ಯೂಟ್‌ ಉಂಟಾಗಿದೆ. ಅಗ್ನಿ ಅವಘಡದಿಂದಾಗಿ ಮನೆಯಲ್ಲಿರುವ ಗೃಹ ಉಪಯೋಗಿ ವಸ್ತುಗಳು, 2 ತೊಲೆ ಚಿನ್ನ ಮತ್ತು ನಗದು ಸುಟ್ಟು ಕರಕಲಾಗಿದೆ.   ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

ವಾರ್ತಾ ಭಾರತಿ 19 Nov 2025 7:08 pm

ನ.28ರಂದು ಐಸಿಡಿಎಸ್ ಸುವರ್ಣ ಮಹೋತ್ಸವ, ಗೃಹಲಕ್ಷ್ಮಿ ಬ್ಯಾಂಕ್‍ಗೆ ಚಾಲನೆ : ಲಕ್ಷ್ಮೀ ಹೆಬ್ಬಾಳ್ಕರ್

ರಾಮನಗರ : ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನ.28ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಐಸಿಡಿಎಸ್ ಸುವರ್ಣ ಮಹೋತ್ಸವ, ಗೃಹಲಕ್ಷ್ಮಿ ಬ್ಯಾಂಕ್ ಹಾಗೂ ಅಕ್ಕ ಪಡೆಗೆ ಚಾಲನೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ಬುಧವಾರ ರಾಮನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಬೆಂಗಳೂರು ದಕ್ಷಿಣ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇದೊಂದು ಹೊಸ ಇತಿಹಾಸ ಸೃಷ್ಟಿಸುವ ಕಾರ್ಯಕ್ರಮವಾಗಲಿದೆ. ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕು ಎಂದು ಕರೆ ನೀಡಿದರು. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ ಕಾಂಗ್ರೆಸ್, ದೇಶಕಟ್ಟಿದ್ದು ಕಾಂಗ್ರೆಸ್ ಪಕ್ಷ. ಕಾಂಗ್ರೆಸ್ ಅಂದರೆ ಗ್ಯಾರಂಟಿ ಸರಕಾರ ಅಂತ ಅರ್ಥ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಮಹಿಳೆಯರ ಪರ ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಇಂದಿರಾ ಗಾಂಧಿ ಅವರಿಂದ ಕ್ರಾಂತಿಕಾರಕ ಬದಲಾವಣೆ : ಇಡೀ ದೇಶವೆ ಬಡತನದಿಂದ ಬಳಲುತ್ತಿದ್ದ ವೇಳೆ ಬಡ ಮಕ್ಕಳಿಗೂ ಪೌಷ್ಠಿಕ ಆಹಾರ ಸಿಗಬೇಕು. ಪೌಷ್ಠಿಕ ಆಹಾರದ ಜೊತೆಗೆ ಶಿಕ್ಷಣ ಸಿಗಬೇಕು ಎನ್ನುವ ದೃಷ್ಟಿಯಿಂದ 1975ರಲ್ಲಿ ಮೈಸೂರು ಜಿಲ್ಲೆಯಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅಂಗನವಾಡಿ ಆರಂಭಿಸಿದರು ಎಂದು ಅವರು ತಿಳಿಸಿದರು. ಇದೀಗ ಅಂಗನವಾಡಿ ಆರಂಭವಾಗಿ 50 ವರ್ಷ ಪೂರೈಸಿದೆ. ಹಾಗಾಗಿ ಅಂದಿನ ಕಾರ್ಯಕ್ರಮದಲ್ಲಿ ಅಕ್ಕಪಡೆ, ಎಲ್‍ಕೆಜಿ, ಯುಕೆಜಿಗೆ ಚಾಲನೆ ಹಾಗೂ ಗೃಹಲಕ್ಷ್ಮಿ ಯೋಜನೆಯ ಮುಂದುವರಿದ ಭಾಗವಾಗಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಆರಂಭಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು. 2028ಕ್ಕೆ ನಮ್ಮದೆ ಸರಕಾರ : ಪಂಚ ಗ್ಯಾರಂಟಿ ಯೋಜನೆಗಳನ್ನು ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಾರಥ್ಯದ ನಮ್ಮ ಸರಕಾರ ಗ್ಯಾರಂಟಿ ಸರಕಾರ ಆಗಿದ್ದು, 2028ಕ್ಕೂ ನಮ್ಮದೆ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ವಿಶ್ವಾಸ ವ್ಯಕ್ತಪಡಿಸಿದರು. ನಮ್ಮ ಪಕ್ಷದ ಯೋಜನೆಗಳನ್ನು ಬಿಜೆಪಿ ಬೇರೆ ರಾಜ್ಯಗಳಲ್ಲಿ ನಕಲು ಮಾಡುತ್ತಿದೆ. ಮಹಾರಾಷ್ಟ್ರದಲ್ಲಿ ನಮ್ಮ ಗೃಹಲಕ್ಷ್ಮಿ ಯೋಜನೆ ಮಾದರಿಯಲ್ಲಿ ಲಾಡ್ಲಿಬೆಹನ್ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಚುನಾವಣೆ ವೇಳೆ ತಿಂಗಳಿಗೆ 2,500 ರೂಪಾಯಿಯಂತೆ ಮೂರು ತಿಂಗಳ ಹಣ ಹಾಕಲಾಗಿತ್ತು. ಆದರೆ, ಚುನಾವಣೆಯಲ್ಲಿ ಗೆದ್ದ ಬಳಿಕ ಯೋಜನೆಯನ್ನೆ ಪರಿಷ್ಕರಿಸಲಾಗಿದೆ. 2,500 ರೂ.ಗಳಿಂದ 1500 ರೂಪಾಯಿಗೆ ಇಳಿಸಲಾಗಿದೆ. 3.50 ಕೋಟಿ ಫಲಾನುಭವಿಗಳ ಸಂಖ್ಯೆಯನ್ನು 1.50 ಕೋಟಿಗೆ ಇಳಿಸಲಾಗಿದೆ ಎಂದು ಅವರು ಟೀಕಿಸಿದರು. ಗೌರವ ಧನ ಹೆಚ್ಚಳವೆ ಮತ್ತೊಂದು ಗ್ಯಾರಂಟಿ : ಕಳೆದ ಬಾರಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನವನ್ನು 1000 ರೂಪಾಯಿ ಹೆಚ್ಚಿಸಲಾಗಿದೆ. ಶೀಘ್ರವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮತ್ತೊಂದು ಸಾವಿರ ಹೆಚ್ಚಿಸುವಂತೆ ಮನವಿ ಮಾಡಲಾಗುವುದು. ಇದೆ ನಮ್ಮ ಸರಕಾರದ ಮತ್ತೊಂದು ಗ್ಯಾರಂಟಿ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದರು. ಜಿಲ್ಲೆಯಿಂದ 2.50 ಲಕ್ಷಕ್ಕೂ ಹೆಚ್ಚು  ಷೇರುದಾರರ ಗುರಿ: ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 2.80 ಲಕ್ಷ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿದ್ದಾರೆ. ಈ ಪೈಕಿ ಕನಿಷ್ಠ 2.50 ಲಕ್ಷ ಫಲಾನುಭವಿಗಳನ್ನು ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಷೇರುದಾರರನ್ನಾಗಿ ಮಾಡಬೇಕು. ಗೃಹಲಕ್ಷ್ಮಿ ಯೋಜನೆಯ ಯಶಸ್ಸಿಗೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರೆ ಕಾರಣ. ಅದೇ ರೀತಿ ಗೃಹಲಕ್ಷ್ಮಿ ಬ್ಯಾಂಕ್ ಕೂಡ ಮನೆ ಮನೆ ತಲುಪುವಂತಾಗಬೇಕು ಎಂದು ಅವರು ಕರೆ ನೀಡಿದರು. ಬೆಂಗಳೂರು ದಕ್ಷಿಣದ ಜನರು ರಾಜಕೀಯವಾಗಿ ಪ್ರಬುದ್ಧರು: ಓರ್ವ ಪ್ರಧಾನಮಂತ್ರಿ ಹಾಗೂ ಮೂವರು ಮುಖ್ಯಮಂತ್ರಿಗಳನ್ನು ಕೊಟ್ಟ ಕೀರ್ತಿ ಬೆಂಗಳೂರು ದಕ್ಷಿಣ ಜಿಲ್ಲೆಗೆ ಸಲ್ಲುತ್ತದೆ. ಜಿಲ್ಲೆಯ ಜನ ರಾಜಕೀಯವಾಗಿ ಸಾಕಷ್ಟು ಪ್ರಬುದ್ಧರು. ಮನೆ ಮನೆಗಳಲ್ಲಿ ನಾಯಕರಿದ್ದಾರೆ. ಅಂತ ನಾಯಕರು ಬೆಳೆಯಲು ತಾಯಂದಿರ ಶ್ರಮವೆ ಪ್ರಮುಖ ಕಾರಣ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ನುಡಿದರು. ಈ ವೇಳೆ ರಾಮನಗರ ಶಾಸಕ ಇಕ್ಬಾಲ್ ಹುಸೇನ್, ಪರಿಷತ್ ಸದಸ್ಯ ಎಸ್.ರವಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ರಾಜು, ರೇಶ್ಮೆ ಮಾರಾಟ ಮಂಡಳಿ ಅಧ್ಯಕ್ಷ ಗಂಗಾಧರ್, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚೇತನ್ ಕುಮಾರ್, ಗ್ಯಾರಂಟಿ ಯೋಜನೆಗಳ ಅಧ್ಯಕ್ಷರು, ಇಲಾಖೆಯ ಉಪ ನಿರ್ದೇಶಕ ದಿನೇಶ್ ಜೆ.ಆರ್. ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ವಾರ್ತಾ ಭಾರತಿ 19 Nov 2025 7:04 pm

ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ನವೆಂಬರ್ ರಾತ್ರಿಗಳಲ್ಲಿ ವಿಪರೀತ ಶೀತ ಗಾಳಿ - ಹವಾಮಾನ ಇಲಾಖೆಯ ಎಚ್ಚರಿಕೆ

ಬೆಂಗಳೂರಿನಲ್ಲಿ ನವೆಂಬರ್ 19ರಿಂದ ಚಳಿ ಹೆಚ್ಚಾಗಲಿದೆ. ವಾರಾಂತ್ಯದಲ್ಲಿ, ಅಂದರೆ ನ. 22 ಮತ್ತು 23ರಂದು ಸಣ್ಣ ಮಳೆಯಾಗುವ ಸಾಧ್ಯತೆ ಇದೆ. ಹಗಲು ಹಾಗೂ ರಾತ್ರಿ ತಾಪಮಾನ 28 ಮತ್ತು 18 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿಯೂ ತಾಪಮಾನ ಇಳಿಕೆಯಾಗಿದ್ದು, ಉತ್ತರ ಕರ್ನಾಟಕದಲ್ಲಿ ಚಳಿ ಅಬ್ಬರ ಹೆಚ್ಚಾಗಲಿದೆ. ಬೀದರ್ ನಲ್ಲಿ ರಾತ್ರಿ ತಾಪಮಾನ 9.5 ಡಿಗ್ರಿ ಸೆಲ್ಸಿಯಸ್ ಗೆ ಇಳಿದಿದೆ.

ವಿಜಯ ಕರ್ನಾಟಕ 19 Nov 2025 7:02 pm

ರಾಯಚೂರು | ವಕೀಲರ ಸಂಘದ ದೇವದುರ್ಗ ತಾಲೂಕು ಹಂಗಾಮಿ ಅಧ್ಯಕ್ಷರಾಗಿ ಮೌನೇಶ್‌ ನೇಮಕ

ರಾಯಚೂರು | ವಕೀಲರ ಸಂಘದ ದೇವದುರ್ಗ ತಾಲೂಕು ಹಂಗಾಮಿ ಅಧ್ಯಕ್ಷರಾಗಿ ಮೌನೇಶ್‌ ನೇಮಕ ದೇವದುರ್ಗ: ವಕೀಲರ ಸಂಘದ ದೇವದುರ್ಗ ತಾಲೂಕು ಘಟಕದ ಹಂಗಾಮಿ ಅಧ್ಯಕ್ಷರಾಗಿ ಮೌನೇಶ್‌ ಎಂ ಅವರನ್ನು ಆಯ್ಕೆ ಮಾಡಲಾಗಿದೆ. ಹಾಲಿ ಅಧ್ಯಕ್ಷ ಸುಕುಮುನಿರೆಡ್ಡಿ ನಗರಗುಂಡ ಅವರನ್ನು ಸಂಘದ ತುರ್ತು ಸಭೆಯಲ್ಲಿ ಸರ್ವಾನುಮತದಿಂದ ಪದಚ್ಯುತಿಗೊಳಿಸಲಾಗಿದೆ ಎಂದು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾರ್ತಾ ಭಾರತಿ 19 Nov 2025 6:59 pm

ಕೊಪ್ಪಳ | ಮುಳ್ಳಿನ ಪೊದೆಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ

ಕಾರಟಗಿ : ಕೊಪ್ಪಳ ಜಿಲ್ಲೆಯ ಉಳೆನೂರು ಗ್ರಾಮದಲ್ಲಿ ಮುಳ್ಳಿನ ಪೊದೆಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಪ್ಲಾಸ್ಟಿಕ್ ಚೀಲದ ಒಳಗೆ ನವಜಾತ ಹೆಣ್ಣು ಶಿಶುವನ್ನು ಹಾಕಿ ಗ್ರಾಮದ ಹೊರಹೊಲಯದ ಮುಳ್ಳಿನ ಪೊದೆಯಲ್ಲಿ ದುಷ್ಕರ್ಮಿಗಳು ಎಸೆದಿದ್ದಾರೆ. ಮನೆಯ ಮಾಲಕ ಮನೆಯ ಬಳಿ ಸ್ವಚ್ಛತೆಗೆಂದು ತೆರಳಿದ ವೇಳೆ ಕೆಟ್ಟ ವಾಸನೆ ಬರವುದನ್ನು ಗಮನಿಸಿ ಪ್ಲಾಸ್ಟಿಕ್ ಕವರ್ ತೆಗೆದು ನೋಡಿದಾಗ ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆಯಾಗಿದೆ.   ಈ ಕುರಿತು ಸ್ಥಳೀಯರು ಕಾರಟಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪಿಎಸ್ ಐ ಕಾಮಣ್ಣ, ಎಎಸ್ ಐ ವೆಂಕರಡ್ಡಿ ಹಾಗೂ ಬೆನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸತೀಶ್ ಕುಮಾರ್ ತೆರಳಿ ಪರಿಶೀಲನೆ ನಡೆಸಿದ್ದಾರೆ.  

ವಾರ್ತಾ ಭಾರತಿ 19 Nov 2025 6:54 pm

ಡಿಸಿಎಂ ಆದ ದಿನವೇ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೆ: ಅಚ್ಚರಿ ಸಂಗತಿ ಬಿಚ್ಚಿಟ್ಟ ಡಿ ಕೆ ಶಿವಕುಮಾರ್‌

ಬೆಂಗಳೂರು, ನವೆಂಬರ್‌ 19: ನಾನು ಈ ಹುದ್ದೆಯಲ್ಲಿ ಶಾಶ್ವತವಾಗಿ ಇರಲು ಸಾಧ್ಯವಿಲ್ಲ. ಈಗಾಗಲೇ ಐದೂವರೆ ವರ್ಷವಾಗಿದೆ, ಮಾರ್ಚ್ ಬಂದರೆ ಆರು ವರ್ಷವಾಗಲಿದೆ. ಬೇರೆಯವರಿಗೆ ಅವಕಾಶ ನೀಡಬೇಕು. ನಾನು ನಾಯಕತ್ವದಲ್ಲಿ ಇರುತ್ತೇನೆ, ತಲೆಕೆಡಿಸಿಕೊಳ್ಳಬೇಡಿ. ನಾನು ಉಪಮುಖ್ಯಮಂತ್ರಿಯಾದ ದಿನವೇ ಈ ಹುದ್ದೆ ಬಿಡಬೇಕು ಎಂದು ನಿರ್ಧರಿಸಿದ್ದೆ. ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ ಅವರು ಇನ್ನು ಸ್ವಲ್ಪ ದಿನ ಮುಂದುವರಿಯಲು

ಒನ್ ಇ೦ಡಿಯ 19 Nov 2025 6:51 pm

ರಾಯಚೂರು | ಪಾಪಯ್ಯ ಸುರಂಗ ಕಾಲುವೆ ದುರಸ್ತಿಗೊಳಿಸುವಂತೆ ಶಂಕರಗೌಡ ಹರವಿ ಆಗ್ರಹ

ರಾಯಚೂರು: ತುಂಗಭದ್ರ ಎಡದಂಡೆ ಕಾಲುವೆ ವ್ಯಾಪ್ತಿಯ ರೈತರಿಗಿರುವ ನೀರಿನ ಕೊರತೆಯನ್ನು ನೀಗಿಸಲು ಪಾಪಯ್ಯ ಸುರಂಗ ಕಾಲುವೆಯ ಅಗಲ ಹೆಚ್ಚಳ ಮಾಡಲು ಸರಕಾರ ಮುಂದಾಗಬೇಕು ಎಂದು ತುಂಗಭದ್ರ ಎಡದಂಡೆ ಕಾಲುವೆ ರೈತರ ವೇದಿಕೆಯ ಸಂಚಾಲಕ ಶಂಕರಗೌಡ ಹರವಿ ಹೇಳಿದರು. ಈ ಕುರಿತು ಮಾಧ್ಯಮದ ಜೊತೆ ಮಾತನಾಡಿದ ಶಂಕರಗೌಡ ಹರವಿ, ತುಂಗಭದ್ರ ಯೋಜನೆಯು ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಜಂಟಿ ಯೋಜನೆಯಾಗಿದೆ. ಈ ಮೂರು ರಾಜ್ಯಗಳ 16 ಲಕ್ಷ ಎಕರೆ ಭೂಮಿಗೆ ನೀರಾವರಿ ಹಾಗೂ ಕಾಲುವೆ ವ್ಯಾಪ್ತಿಯ ಸಾವಿರಾರು ಹಳ್ಳಿಗಳು, ಪಟ್ಟಣಗಳಿಗೆ ಕುಡಿಯುವ ನೀರನ್ನು ಇದೇ ಯೋಜನೆಯ ಮೂಲಕ ಒದಗಿಸಲಾಗುತ್ತದೆ. ಆದರೆ ಈ ಯೋಜನೆಯ ವ್ಯಾಪ್ತಿಯ ಕೊನೆ ಭಾಗದ ರೈತರಿಗೆ ನೀರು ಸಿಗದೇ ಇರುವುದು ಬಹುದೊಡ್ಡ ವೈಫಲ್ಯವಾಗಿದೆ ಎಂದು ಹೇಳಿದರು. ಜಿಲ್ಲೆಯ ರಾಯಚೂರು, ಸಿರವಾರ ಭಾಗದ ರೈತರಿಗೆ ಈ ಯೋಜನೆಯ ಮೂಲಕ ನೀಡಲಾಗುವ ನೀರು ತಲುಪದೇ ಈ ಭಾಗದ ರೈತರು ಮೊದಲಿನಿಂದಲೂ ತೊಂದರೆ ಅನುಭವಿಸುತ್ತಿದ್ದು, ಕೃಷಿ ಚಟುವಟಿಕೆಗಳನ್ನು ನಡೆಸಲು ಆತಂಕ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದರು. ಈ ವೇಳೆ ಶರಣಪ್ಪಗೌಡ ಜಾಡಲದಿನ್ನಿ, ನಾಗನಗೌಡ ಹರವಿ, ಬಸನಗೌಡ ಬಲ್ಲಟಗಿ, ಮಹಾಂತೇಶ್‌ ಪಾಟೀಲ್ ಅತ್ತನೂರು, ಚನ್ನಬಸವ, ಅಮರೇಶ ಹೊಸಮನಿ, ನಾಗರಾಜ, ಆರ್.ಎಸ್ ಪಾಟೀಲ್ ಉಪಸ್ಥಿತರಿದ್ದರು. 

ವಾರ್ತಾ ಭಾರತಿ 19 Nov 2025 6:46 pm

ಕೆಪಿಸಿಸಿ ಕಚೇರಿಯಲ್ಲಿ ಮೊಳಗಿದ ಮುಂದಿನ ಮುಖ್ಯಮಂತ್ರಿ ಘೋಷಣೆ! ಡಿಕೆಶಿ ಪರ ಕಾರ್ಯಕರ್ತರ ಒಲವು

ಮುಖ್ಯಮಂತ್ರಿ ಸ್ಥಾನ ಬದಲಾವಣೆ, ಸಂಪುಟ ಪುನಾರಚನೆ ಹಗ್ಗಜಗ್ಗಾಟ ಕಾಂಗ್ರೆಸ್‌ ರಾಜ್ಯ ರಾಜಕೀಯಲ್ಲಿ ಜೋರಾಗಿದೆ.ಕೆಪಿಸಿಸಿ ಕಚೇರಿಯಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್‌ ಅವರ ಬಡದವರು ಮುಂದಿನ ಸಿಎಂ ಡಿಕೆಶಿ ಎಂದು ಕೂಗಿರುವುದು ಭಾರಿ ಸಂಚಲನ ಸೃಷ್ಟಿಯಾಗಿದೆ. ಅದಲ್ಲದೆ ಇಂದಿರಗಾಂಧಿಯವರ ವಾಕ್ಯವನ್ನು ಉಲ್ಲೇಖಿಸಿದ್ದಾರೆ.

ವಿಜಯ ಕರ್ನಾಟಕ 19 Nov 2025 6:41 pm

ಪ್ರತಿವರ್ಷ ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ ಪರಿಸರವಾದಿಗಳಿಗೆ ಪ್ರಶಸ್ತಿ : ಸಿಎಂ ಸಿದ್ದರಾಮಯ್ಯ

‘ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ’

ವಾರ್ತಾ ಭಾರತಿ 19 Nov 2025 6:38 pm

ಬೀದರ್ | ಹುಲಸೂರ್ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸುವಂತೆ ಆಗ್ರಹಿಸಿ ಪ್ರತಿಭಟನೆ

ಬೀದರ್ :  ಹುಲಸೂರ್ ತಾಲೂಕು ಎಂದು ಘೋಷಣೆಯಾಗಿ ವರ್ಷಗಳೇ ಕಳೆದರೂ ಇನ್ನು ಗ್ರಾಮ ಪಂಚಾಯತ್ ಆಗಿಯೇ ಉಳಿದಿದೆ. ಇದನ್ನು ಪಟ್ಟಣ ಪಂಚಾಯತ್‌ ಆಗಿ ಮೇಲ್ದರ್ಜೆಗೆ ಏರಿಸಬೇಕು ಎಂದು ಆಗ್ರಹಿಸಿ ಬುಧವಾರ ಹುಲಸೂರ್ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು. ಹುಲಸೂರ್‌ ಪಟ್ಟಣದಲ್ಲಿ ಸ್ವಯಂ ಪ್ರೇರಿತ ಬಂದ್ ಘೋಷಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲೂ ಮೇಲ್ದರ್ಜೆಯಾಗದೆ ಉಳಿದಿರುವ ಈ ಹುಲಸೂರ್ ಗ್ರಾಮ ಪಂಚಾಯತ್ ಈ ಸರಕಾರದ ಅವಧಿಯಲ್ಲೂ ಕೂಡ ಹಾಗೆಯೇ ಮುಂದುವರೆದಿದೆ. ಹುಮನಾಬಾದ್ ತಾಲೂಕಿನ ರಾಜೇಶ್ವರ್ ಗ್ರಾಮ ಸೇರಿ ಹಲವು ಗ್ರಾಮಗಳು ಪಟ್ಟಣ ಪಂಚಾಯತ್ ಹಾಗೂ ಹಲವು ಪುರಸಭೆಗಳು ನಗರಸಭೆಯಾಗಿ ಘೋಷಣೆಯಾಗಿವೆ. ಆದರೆ ಹುಲಸೂರ್ ತಾಲೂಕು ಕೇಂದ್ರ ಇದ್ದರು ಕೂಡ ಇದನ್ನು ಕಡೆಗಣಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.   ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಬೀದರ್ ಪ್ರೊಬೇಷನರಿ ಜಿಲ್ಲಾಧಿಕಾರಿ ರಮ್ಯಾ ಅವರ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು. ಈ ವೇಳೆ ಗ್ರಾಮದ ಯುವಕರು, ಉದ್ಯಮಿಗಳು ಮುಖಂಡರು ಹಾಗೂ ವಿವಿಧ ಸಂಘಟನೆಯ  ಕಾರ್ಯಕರ್ತರು ಉಪಸ್ಥಿತರಿದ್ದರು.  

ವಾರ್ತಾ ಭಾರತಿ 19 Nov 2025 6:36 pm

ಕಿವೀಸ್ ವಿರುದ್ಧ ಶಾಯ್ ಹೋಪ್ ಬಿರುಗಾಳಿ ಶತಕ; ಬ್ರಿಯಾನ್ ಲಾರಾ ಸಾಧನೆ ಸಮಗಟ್ಟಿದ ವಿಂಡೀಸ್ ನಾಯಕ

West Indies Vs New Zealand- ವೆಸ್ಟ್ ಇಂಡೀಸ್ ನಾಯಕನಾಗಿರುವ ವಿಕೆಟ್ ಕೀಪರ್ ಬ್ಯಾಟರ್ ಶಾಯ್ ಹೋಪ್ ಅವರು ನ್ಯೂಜಿಲೆಂಡ್ ವಿರುದ್ಧ 109 ರನ್ ಗಳಿಸುವ ಮೂಲಕ ಬ್ರಿಯಾನ್ ಲಾರಾ ಅವರ 19 ಏಕದಿನ ಶತಕಗಳ ದಾಖಲೆ ಸರಿಗಟ್ಟಿದರು. ಈ ಶತಕದ ನೆರವಿನಿಂದ ವೆಸ್ಟ್ ಇಂಡೀಸ್ 247 ರನ್ ಗಳಿಸಿತು. ಆದರೆ ನ್ಯೂಜಿಲೆಂಡ್ 33.3 ಓವರ್ ಗಳಲ್ಲಿ ಗುರಿ ತಲುಪಿತು. ಹೋಪ್ ಅವರು 6000 ಏಕದಿನ ರನ್ ಗಡಿ ದಾಟಿದರು.

ವಿಜಯ ಕರ್ನಾಟಕ 19 Nov 2025 6:35 pm

ಶಬರಿಮಲೆ ಯಾತ್ರಿಕರಿಗೆ ಸಹಕಾರ ನೀಡುವಂತೆ ಕೇರಳಕ್ಕೆ ಪತ್ರ : ಡಾ.ಶಾಲಿನಿ ರಜನೀಶ್

ಬೆಂಗಳೂರು : ಶಬರಿಮಲೆ ಯಾತ್ರೆ ಕೈಗೊಳ್ಳುವ ರಾಜ್ಯದ ಭಕ್ತಾಧಿಗಳಿಗೆ ಅಗತ್ಯ ಸೌಲಭ್ಯ ಹಾಗೂ ಸುರಕ್ಷತೆಯನ್ನು ನೀಡುವಂತೆ ಕೋರಿ ಕೇರಳ ಸರಕಾರದ ಮುಖ್ಯಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಹೇಳಿದ್ದಾರೆ. ಬುಧವಾರ ಈ ಕುರಿತು ಪ್ರತಿಕ್ರಿಯಿಸಿದ ಅವರು, ನಮ್ಮ ರಾಜ್ಯದಿಂದ ಪ್ರತಿ ವರ್ಷ ಶಬರಿಮಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರಾರ್ಥಿಗಳು ಅಯ್ಯಪ್ಪಸ್ವಾಮಿ ದರ್ಶನಕ್ಕೆ ಯಾತ್ರೆಯನ್ನು ಕೈಗೊಳ್ಳುತ್ತಿದ್ದಾರೆ. ಅದರಲ್ಲೂ ನವೆಂಬರ್ ನಿಂದ ಜನವರಿ ತಿಂಗಳಿನಲ್ಲಿ ಶಬರಿಮಲೆಗೆ ವಾರ್ಷಿಕ ತೀರ್ಥಯಾತ್ರೆ ಕೈಗೊಳ್ಳುವ ಭಕ್ತರ ಸುಗಮ ಸೌಲಭ್ಯ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕೇರಳ ಸರಕಾರದ ಅಗತ್ಯ ಸಹಕಾರವನ್ನು ನೀಡುವಂತೆ ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ. ಕರ್ನಾಟಕದ ಯಾತ್ರಿಕರು ಹೆಚ್ಚಾಗಿ ಬಳಸುವ ಪ್ರವೇಶ ಮಾರ್ಗ, ಹೆಚ್ಚಿನ ಜನಸಂದಣಿ ಇರುವ ಪ್ರದೇಶಗಳಲ್ಲಿ ಸೂಕ್ತ ಸಾರಿಗೆ ವ್ಯವಸ್ಥೆ ಮಾಡುವುದು. ಅಗತ್ಯ ವೈದ್ಯಕೀಯ ನೆರವು, ತುರ್ತು ಪ್ರತಿಕ್ರಿಯೆ ಸೇವೆಗಳು ಮತ್ತು ಪ್ರಮುಖ ಸಾರಿಗೆ ಕೇಂದ್ರಗಳಲ್ಲಿ ಆರೋಗ್ಯ ಅಧಿಕಾರಿಗಳೊಂದಿಗೆ ಸಮನ್ವಯ ನಡೆಸುವುದು. ಯಾತ್ರಿಕರ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಸಾಕಷ್ಟು ಪೊಲೀಸ್ ಮತ್ತು ಸುರಕ್ಷತಾ ಕ್ರಮಗಳನ್ನು ವಿಶೇಷವಾಗಿ ಸೂಕ್ಷ್ಮ ಅಥವಾ ಹೆಚ್ಚಿನ ಸಾಂದ್ರತೆಯ ಸ್ಥಳಗಳಲ್ಲಿ ವ್ಯವಸ್ಥೆ ಮಾಡುವುದು. ಯಾತ್ರಿಕರಿಗೆ ಸೌಲಭ್ಯಗಳು ಮತ್ತು ಕಾರ್ಯವಿಧಾನಗಳನ್ನು ಸಮನ್ವಯ ಮತ್ತು ಸಹಾಯ ಮಾಡಲು ಕನ್ನಡ ಭಾಷೆ ಸೇರಿದಂತೆ ಬಹುಭಾಷೆಗಳ ಸಂವಹನ ಹೊಂದಿರುವ ಸಹಾಯ ಕೇಂದ್ರಗಳು ಅಥವಾ ಮಾಹಿತಿ ಕೇಂದ್ರಗಳ ಸ್ಥಾಪನೆ ಮಾಡುವಂತೆ ಕೇರಳ ಸರಕಾರಕ್ಕೆ ಕೋರಲಾಗಿದೆ ಎಂದು ಅವರು ಹೇಳಿದ್ದಾರೆ. ತುರ್ತು ಪರಿಸ್ಥಿತಿ ಅಥವಾ ವಿಶೇಷ ಅವಶ್ಯಕತೆಗಳ ಸಂದರ್ಭದಲ್ಲಿ ಕರ್ನಾಟಕದ ಅಧಿಕಾರಿಗಳೊಂದಿಗೆ ಸಮನ್ವಯವನ್ನು ಸಾಧಿಸಲು ಕೇರಳದಲ್ಲಿ ಸಂಪರ್ಕ ಕೇಂದ್ರವನ್ನು ಸ್ಥಾಪಿಸುವಂತೆ ಕೋರಲಾಗಿದ್ದು, ಈ ನಿಟ್ಟಿನಲ್ಲಿ ನಿಮ್ಮ ಸಕಾರಾತ್ಮಕ ಸ್ಪಂದನೆ ಮತ್ತು ಅಗತ್ಯ ಸಹಕಾರಕ್ಕಾಗಿ ನಾವು ಎದುರು ನೋಡುತ್ತಿದ್ದೇವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ ಎಂದು ಶಾಲಿನಿ ರಜನೀಶ್ ತಿಳಿಸಿದ್ದಾರೆ.

ವಾರ್ತಾ ಭಾರತಿ 19 Nov 2025 6:28 pm

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಈ ಮಹತ್ವದ ಕೆಲಸ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು, ನವೆಂಬರ್ 19: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಒಂದು ಕೋಟಿ ದತ್ತಿ ನಿಧಿಯನ್ನು ಸ್ಥಾಪಿಸಿ ಠೇವಣಿ ಇರುವ ಹಣದ ಬಡ್ಡಿಯಲ್ಲಿ ಪ್ರತಿ ವರ್ಷವೂ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಹಾಗೂ ಕನಿಷ್ಠ ಐದು ಪರಿಸರವಾದಿಗಳಿಗೆ ತಿಮ್ಮಕ್ಕನವರ ಹೆಸರಿನಲ್ಲಿ ಪ್ರಶಸ್ತಿಯನ್ನು ಪ್ರತಿ ವರ್ಷ ಕೊಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಇವರ

ಒನ್ ಇ೦ಡಿಯ 19 Nov 2025 6:28 pm

Koppala | ಕೋರ್ಟ್ ಆವರಣದಲ್ಲೇ ಪತ್ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನ : ಪತಿಯ ಬಂಧನ

ಕೊಪ್ಪಳ : ಕೊಪ್ಪಳ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿನ ಮಧ್ಯಸ್ಥಿಕೆದಾರರ ಕೇಂದ್ರದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ, ಅತ್ತೆ ಮತ್ತು ಮಾವನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಘಟನೆ ನಡೆದಿದೆ. ನ್ಯಾಯಾಲಯದ ಆವರಣದಲ್ಲಿನ ಮಧ್ಯಸ್ಥಿಕೆದಾರರ ಕೇಂದ್ರದಲ್ಲಿ ಕೌನ್ಸಿಲಿಂಗ್‌ಗೆ ಮುನ್ನ ಈ ಘಟನೆ ನಡೆದಿದೆ. ಕಾರಟಗಿ ತಾಲೂಕಿನ ಸಿದ್ದಾಪುರದ ಚಿರಂಜೀವಿ ಭೋವಿ ಎಂಬಾತ ತನ್ನ ಪತ್ನಿ ರೋಜಾ, ಅತ್ತೆ ಶಾಂತಮ್ಮ, ಮಾವ ಶಂಕ್ರಪ್ಪ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದಾನೆ. ಈ ವೇಳೆ ವಕೀಲರು ಆತನನ್ನು ತಡೆದು ಮೂವರನ್ನು ರಕ್ಷಿಸಿದ್ದಾರೆ. ಚಿರಂಜೀವಿ ಭೋವಿಗೆ 12 ವರ್ಷ ಹಿಂದೆ ರೋಜಾ ಜೊತೆ ವಿವಾಹವಾಗಿತ್ತು. ಚಿರಂಜೀವಿಯ ಕಿರುಕುಳಕ್ಕೆ ಬೇಸತ್ತು ರೋಜಾ ವಿಚ್ಛೇದನಕ್ಕಾಗಿ ಕೋರ್ಟ್ ಮೊರೆ ಹೋಗಿದ್ದರು. ಇದರಿಂದ ಮಧ್ಯಸ್ಥಿಕೆದಾರರ ಕೇಂದ್ರಕ್ಕೆ ಕೌನ್ಸಿಲಿಂಗ್‌ಗೆ ತೆರಳಿದ್ದರು. ಈ ವೇಳೆ ಘಟನೆ ನಡೆದಿದೆ. ಚಿರಂಜೀವಿಯನ್ನು ಕೊಪ್ಪಳ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಾರ್ತಾ ಭಾರತಿ 19 Nov 2025 6:26 pm

ಸಿಎಂ ಸ್ಥಾನ ಡಿ.ಕೆ.ಶಿವಕುಮಾರ್‌ಗೆ ಹಸ್ತಾಂತರಿಸಿ : ಎಚ್.ವಿಶ್ವನಾಥ್

ಬೆಂಗಳೂರು : ಸರಕಾರ ರಚನೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರ ನಡುವೆ ತಲಾ 30 ತಿಂಗಳು ಅಧಿಕಾರದ ಹಂಚಿಕೆ ಒಡಂಬಡಿಕೆ ಆಗಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಹೀಗಾಗಿ ಸಿದ್ದರಾಮಯ್ಯ ಮಾತಿನಂತೆ ಮುಖ್ಯಮಂತ್ರಿ ಅಧಿಕಾರವನ್ನು ಡಿ.ಕೆ.ಶಿವಕುಮಾರ್‌ಗೆ ಹಸ್ತಾಂತರ ಮಾಡಬೇಕು ಎಂದು ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆಗ್ರಹಿಸಿದ್ದಾರೆ. ಬುಧವಾರ ನಗರದ ಪ್ರೆಸ್‍ಕ್ಲಬ್‍ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ 136 ಸ್ಥಾನಗಳೊಂದಿಗೆ ಸುಭದ್ರ ಸರಕಾರವನ್ನು ರಚಿಸಲಾಗಿದೆ. ಇದಕ್ಕೆ ಒಂದು ಜಾತಿ, ಒಂದು ಧರ್ಮ ಕಾರಣವಲ್ಲ. ನಾಡಿನ ಎಲ್ಲ ಜಾತಿ, ಜನಾಂಗ, ಧರ್ಮ, ಭಾಷಿಕರ ಸಹಯೋಗ ಮತ್ತು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತು ನಿಷ್ಠಾವಂತ ಕಾಂಗ್ರೆಸ್ಸಿಗರ ಶ್ರಮವೂ ಇದೆ ಎಂದರು. ನಿಮ್ಮಿಬ್ಬರ ನಡುವೆ ಚರ್ಚೆ ಬಿರುಸಾಗಿ ಕೊನೆಗೆ ನಿಮ್ಮಬ್ಬರಲ್ಲೇ ಸಮಾಧಾನ ಮಾಡಿಕೊಂಡು, ನೀವಿಬ್ಬರೂ ಸೇರಿ ತೆಗೆದುಕೊಂಡ ತೀರ್ಮಾನ 50:50 ಅನುಪಾತ ಅಲ್ಲವೇ? ನೀವಿಬ್ಬರೂ ಪರಸ್ಪರ ಒಪ್ಪಿ ನೀವು ಡಿ.ಕೆ.ಶಿವಕುಮಾರ್ ತಲೆಯ ಮೇಲೆ ನಿಮ್ಮ ಬಲಗೈ ಇಟ್ಟು 30 ತಿಂಗಳ ನಂತರ ನಿನಿಗೆ ಅಧಿಕಾರ ಹಸ್ತಾಂತರ ಮಾಡುತ್ತೇನೆಂಬ ನೀವು ಕೊಟ್ಟ ವಚನ ಸತ್ಯೆವಲ್ಲವೇ?. ಇಷ್ಟೆಲ್ಲಾ ನಡೆದಿದ್ದರೂ ಮತ್ಯಾಕೆ ಉಳಿದ 2.5 ವರ್ಷಗಳ ಅವಧಿಗೆ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆಂದು ತಮ್ಮ ಸಂಪುಟದ ಕೆಲವು ಸಹದ್ಯೋಗಿಗಳ ಮೂಲಕ ಹೇಳಿಕೆ ಕೊಡಿಸುತ್ತಿದ್ದೀರಿ ಎಂದು ವಿಶ್ವನಾಥ್ ಪ್ರಶ್ನಿಸಿದರು. ರಾಜಕಾರಣದಲ್ಲಿ ವಚನ ಭ್ರಷ್ಟರಾಗುವುದು ತಾಯಿಗೆ ಮಾಡಿದ ದ್ರೋಹದಂತೆ. ಈ ಹಿಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ನಡುವಿನ ವಚನವನ್ನು ಜೆಡಿಎಸ್ ಪಕ್ಷ ಭ್ರಷ್ಟವನ್ನಾಗಿಸಿದ ನಂತರ, ಬಿಜೆಪಿ ಅಧಿಕಾರಕ್ಕೆ ಬಂದ ರಾಜಕೀಯ ತಿರುವಿನ ಸತ್ಯ ಜನರ ಮುಂದಿಲ್ಲವೇ? ಈಗಲೂ ಅಷ್ಟೇ. ಸಿದ್ದರಾಮಯ್ಯನವರೇ ನಿಮ್ಮ ಸ್ವಾರ್ಥಕ್ಕೆ ನೀವು ವಚನ ಭ್ರಷ್ಟರಾದರೆ, ಮುಂದೆ ನಾಡಿನ ಆಡಳಿತ ಬಿಜೆಪಿಯ ಪರ ಎನ್ನುವುದುನ್ನು ಲಘುವಾಗಿ ತೆಗೆದುಕೊಳ್ಳಬೇಡಿ ಎಂದು ಅವರು ಎಚ್ಚರಿಕೆ ನೀಡಿದರು. ನೀವು ಹಿಂದುಳಿದ ಕುರುಬ ಸಮಾಜದವರು. ಕುರುಬರು ಮಾತಿಗೆ ತಪ್ಪದವರು ಎಂಬ ನಂಬಿಕೆ ಇನ್ನೂ ಜನ ಮಾನಸದಲ್ಲಿ ಜೀವಂತವಾಗಿದೆ. ಯಾವುದಾರೂ ವೃತ್ತಿ, ವ್ಯಾಪಾರ ಆರಂಭಿಸುವಾಗ ಮತ್ತು ಚುನಾವಣೆ ಸಂದರ್ಭಗಳಲ್ಲಿ ಮೊದಲು ಕುರುಬರಿಂದ ಬೋಣಿಯಾಗಲಿ ಎಂದು ನಂಬಿಕೆ ಇಟ್ಟು ಮಾಡಿಸುತ್ತಾರೆ. ಅಂತಹ ನಂಬಿಕೆಯನ್ನು ನಿಮ್ಮ ನಡವಳಿಕೆ ಹುಸಿಯಾಗಿಸುತ್ತದೆ. ಇಡೀ ಸಮಾಜದ ಮೇಲೆ ಇದರ ದುಷ್ಪರಿಣಾಮ ಬೀರಲು ನೀವು ಕಾರಣವಾಗುತ್ತೀರಿ ಎಂಬುದನ್ನು ಮರೆಯಬೇಡಿ ಎಂದು ಅವರು ಹೇಳಿದರು. ಕನಕದಾಸರ ಕರ್ಮಭೂಮಿ ಕಾಗಿನೆಲೆಯಲ್ಲಿ ಸ್ಥಾಪಿತವಾಗಿರುವ ನಂಬಿಕೆಯ ಪುಣ್ಯಕ್ಷೇತ್ರ ಕಾಗಿನೆಲೆ ಸಂಸ್ಥಾನ ಕನಕಗುರು ಪೀಠವನ್ನು ನೀವು ಅವಮಾನಿಸಿದಂತಾಗುತ್ತದೆ. ಯಾರಿಗೂ ಅಧಿಕಾರ ಶಾಶ್ವತವಲ್ಲ ಎಂದು ನೀವೇ ಎಷ್ಟೋ ಬಾರಿ ನಿಮ್ಮ ಭಾಷಣದಲ್ಲಿ ಹೇಳಿದ್ದೀರಿ. ಕುರುಬ ಸಮಾಜವನ್ನು ಗೌರವಿಸುವ ಇತರೇ ಸಮಾಜಗಳ ನಂಬಿಕೆಯನ್ನು ಹುಸಿ ಮಾಡುವುದರ ಮೂಲಕ ಹಿಂದುಳಿದ ಕುರುಬ ಸಮಾಜದ ಯುವಕರ, ಕನಕದಾಸರ ಭಕ್ತರ, ಹಿರಿಯರ ಭವಿಷ್ಯಕ್ಕೆ, ಗೌರವಕ್ಕೆ ಚ್ಯುತಿ ತರಬೇಡಿ ಎಂದು ವಿಶ್ವನಾಥ್ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಪ್ರದೇಶ ಕುರುಬ ಸಂಘದ ನಿರ್ದೇಶಕರಾದ ರಾಜೇಶ್ವರಿ, ಜೈಲಿಂಗೇಗೌಡ ಉಪಸ್ಥಿತರಿದ್ದರು.

ವಾರ್ತಾ ಭಾರತಿ 19 Nov 2025 6:24 pm

ಉಕ್ರೇನ್ ಮೇಲೆ 470 ಡ್ರೋನ್, 48 ಕ್ಷಿಪಣಿ ಮೂಲಕ ಭೀಕರ ದಾಳಿ ನಡೆಸಿದ ರಷ್ಯಾ - 9 ಸಾವು

ರಷ್ಯಾ ಉಕ್ರೇನ್‌ ಮೇಲೆ ರಾತ್ರಿ ವೇಳೆ 470 ಡ್ರೋನ್‌ಗಳು ಮತ್ತು 48 ಕ್ಷಿಪಣಿಗಳನ್ನು ಹಾರಿಸಿದೆ. ಈ ದಾಳಿಯಿಂದ ಒಂಬತ್ತು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಟೆರ್ನೊಪಿಲ್‌ನಲ್ಲಿ ವಸತಿ ಕಟ್ಟಡಗಳಿಗೆ ಹಾನಿಯಾಗಿದೆ. ಖಾರ್ಕಿವ್, ಇವಾನೊ-ಫ್ರಾಂಕಿವ್ಸ್ಕ್, ಲ್ವಿವ್, ಡೊನೆಟ್ಸ್ಕ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ದಾಳಿ ನಡೆದಿದೆ. ಶಕ್ತಿ ಉತ್ಪಾದನಾ ಕೇಂದ್ರಗಳು ಮತ್ತು ನಾಗರಿಕ ಮೂಲಸೌಕರ್ಯಗಳಿಗೆ ಹಾನಿಯಾಗಿದೆ.

ವಿಜಯ ಕರ್ನಾಟಕ 19 Nov 2025 6:08 pm

‘ಸೈಬರ್ ಗುಲಾಮಗಿರಿ’ ಜಾಲದ ರೂವಾರಿಯನ್ನು‌ ಬಂಧಿಸಿದ ಗುಜರಾತ್ ಪೊಲೀಸರು

► ಉದ್ಯೋಗದ ನೆಪದಲ್ಲಿ ಭಾರತೀಯ ಯುವಕರನ್ನು ದಕ್ಷಿಣ ಏಶ್ಯಾ ರಾಷ್ಟ್ರಗಳಿಗೆ ಕಳುಹಿಸುತ್ತಿದ್ದ ಜಾಲ► ಮಲೇಷ್ಯಾಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿ ನೀಲ್ ಪುರೋಹಿತ್‌ ನ ಬಂಧನ

ವಾರ್ತಾ ಭಾರತಿ 19 Nov 2025 6:07 pm

ನೀರಿನಲ್ಲಿ ಮಿದುಳು ತಿನ್ನುವ ಅಮೀಬಾ: ಆರೋಗ್ಯ ಇಲಾಖೆಯಿಂದ ಮಹತ್ವದ ಮಾರ್ಗಸೂಚಿ ಪ್ರಕಟ

ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿ (Naegleria fowleri)ನಿಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ (Amoebic meningoencephalitis) ಪ್ರಕರಣಗಳು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಕನ್ನಡಿಗರು ಸಹ ಎಚ್ಚರಿಕೆ ವಹಿಸುವಂತೆ ಹಾಗೂ ಶಬರಿಮಲೆ ಯಾತ್ರಾರ್ಥಿಗಳು ಸಹ ಎಚ್ಚರಿಕೆಯವನ್ನು ವಹಿಸುವಂತೆ ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಶಬರಿಮಲೆ ಹೊರಡುವ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ, ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ

ಒನ್ ಇ೦ಡಿಯ 19 Nov 2025 6:05 pm

̆ಮುಸ್ಲಿಮರ ಮಕ್ಕಳಿಗೆ ತಿಂದು ಕೊಬ್ಬು, ಪಾಕಿಸ್ತಾನಕ್ಕೆ ಕಳುಹಿಸಿʼ: ಶಾಸಕ ಯತ್ನಾಳ್

ಮೈಸೂರಿನಲ್ಲಿ ನಡೆದ ಹಿಂದೂ ಜಾಗೃತ ವೇದಿಕೆ ಕಾರ್ಯಕ್ರಮದಲ್ಲಿ ಮುಸ್ಲಿಮರ ವಿರುದ್ಧ ಹಾಗೂ ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದರು. ದೆಹಲಿ ಬಾಂಬ್ ಸ್ಫೋಟವನ್ನು ಮುಸ್ಲಿಮರು ಖಂಡಿಸಿಲ್ಲ. ಭಾರತದಲ್ಲಿರುವ ಮುಸ್ಲಿಂರನ್ನು ಪಾಕಿಸ್ತಾನಕ್ಕೆ ಪಾಕಿಸ್ತಾನದಲ್ಲಿರುವ ಮುಸ್ಲಿಂರನ್ನು ಭಾರತಕ್ಕೆ ಕರೆತನ್ನಿ ಎಂದರು. ಪ್ರಧಾನಿ ಮೋದಿಯಿಂದಲೇ ಭಾರತದ ರಕ್ಷಣೆಯಾಗ್ತಿದೆ ಎಂದ ಯತ್ನಾಳ್. ರಾಜ್ಯ ಸರ್ಕಾರವನ್ನು 'ಭಯೋತ್ಪಾದಕರ ರಕ್ಷಕ' ಎಂದು ಕರೆದಿದ್ದಾರೆ.

ವಿಜಯ ಕರ್ನಾಟಕ 19 Nov 2025 6:05 pm

ಮಕ್ಕಳನ್ನು ಗ್ಯಾಸ್ ಚೇಂಬರ್‌ಗೆ ತಳ್ಳುತ್ತಿದ್ದೀರಿ: ಮಾಲಿನ್ಯದ ನಡುವೆ ಕ್ರೀಡಾ ಚಟುವಟಿಕೆಗಳ ಕುರಿತು ಸುಪ್ರೀಂಕೋರ್ಟ್ ಅಸಮಾಧಾನ

ಹೊಸದಿಲ್ಲಿ: ದಿಲ್ಲಿಯಲ್ಲಿ ವಾಯುಮಾಲಿನ್ಯ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಸರ್ವೋಚ್ಚ ನ್ಯಾಯಾಲಯವು ಬುಧವಾರ ಶಾಲೆಗಳಲ್ಲಿ ಕ್ರೀಡಾ ಚಟುವಟಿಕೆಗಳನ್ನು ಮಾಲಿನ್ಯ ಸುರಕ್ಷಿತ ತಿಂಗಳುಗಳಿಗೆ ಬದಲಿಸಲು ನಿರ್ದೇಶನಗಳನ್ನು ಹೊರಡಿಸುವಂತೆ ವಾಯು ಗುಣಮಟ್ಟ ನಿರ್ವಹಣೆ ಆಯೋಗಕ್ಕೆ (ಸಿಎಕ್ಯೂಎಂ) ಸೂಚಿಸಿದೆ. ವಾಯುಮಾಲಿನ್ಯ ಮಟ್ಟವು ಉತ್ತುಂಗದಲ್ಲಿರುವ ನವಂಬರ್ ಮತ್ತು ಡಿಸೆಂಬರ್ ತಿಂಗಳುಗಳಲ್ಲಿ ಇಂತಹ ಚಟುವಟಿಕೆಗಳನ್ನು ನಡೆಸುವುದು ಶಾಲಾ ಮಕ್ಕಳನ್ನು ಗ್ಯಾಸ್ ಚೇಂಬರ್‌ಗೆ ತಳ್ಳುವುದಕ್ಕೆ ಸಮನಾಗಿದೆ ಎಂದು ನ್ಯಾಯಾಲಯವು ಆಕ್ರೋಶ ವ್ಯಕ್ತಪಡಿಸಿದೆ. ದಿಲ್ಲಿ ಸರಕಾರವು ವಾಯುಮಾಲಿನ್ಯವು ತಾರಕಕ್ಕೇರುವ ಈ ಎರಡು ತಿಂಗಳುಗಳಲ್ಲಿ 16 ವರ್ಷದೊಳಗಿನ ಮತ್ತು 14 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಅಂತರ ವಲಯ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಿದೆ ಎಂದು ಅಮಿಕಸ್ ಕ್ಯೂರೆ ಅಪರಾಜಿತಾ ಸಿಂಗ್ ಅವರು ನ್ಯಾಯಾಲಯಕ್ಕೆ ತಿಳಿಸಿದ ಬಳಿಕ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾ.ಕೆ.ವಿನೋದ ಚಂದ್ರನ್ ಅವರನ್ನೊಳಗೊಂಡ ಪೀಠವು ಈ ಆದೇಶವನ್ನು ಹೊರಡಿಸಿತು. ಮಕ್ಕಳು ಹೆಚ್ಚು ದುರ್ಬಲರಾಗಿದ್ದು,ವಾಯುಮಾಲಿನ್ಯ ಗರಿಷ್ಠವಾಗಿರುವ ಸಮಯದಲ್ಲಿ ಹೊರಾಂಗಣ ಕ್ರೀಡಾ ಚಟುವಟಿಕೆಗಳನ್ನು ನಡೆಸುವುದು ತೀವ್ರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಸಿಂಗ್ ಹೇಳಿದರು. ದಿಲ್ಲಿ-ಎನ್‌ಸಿಆರ್‌ನಲ್ಲಿ ವಾಯುಮಾಲಿನ್ಯವು ಇನ್ನಷ್ಟು ಹೆಚ್ಚುವುದನ್ನು ತಡೆಯಲು ಈವರೆಗೆ ಕೈಗೊಂಡ ಕ್ರಮಗಳ ಬಗ್ಗೆ ವಿವರವಾದ ಅಫಿಡವಿಟ್ ಸಲ್ಲಿಸುವಂತೆ ಸರ್ವೋಚ್ಚ ನ್ಯಾಯಾಲಯವು ಎರಡು ವಾರಗಳ ಹಿಂದೆ ಸಿಎಕ್ಯೂಎಮ್‌ಗೆ ನಿರ್ದೇಶನ ನೀಡಿತ್ತು. ಅಧಿಕಾರಿಗಳು ಮುನ್ನೆಚ್ಚರಿಕೆಯನ್ನು ವಹಿಸಬೇಕು ಮತ್ತು ಮಾಲಿನ್ಯ ಮಟ್ಟವು ‘ತೀವ್ರ’ಹಂತವನ್ನು ತಲುಪುವವರೆಗೆ ಕಾಯಬಾರದು ಎಂದು ನ್ಯಾಯಾಲಯವು ಆಗ ಹೇಳಿತ್ತು. ಬದಲಾಗದ ವಾಯು ಗುಣಮಟ್ಟ ಸ್ಥಿತಿಯ ಬಗ್ಗೆ ಬುಧವಾರ ಹತಾಶೆಯನ್ನು ವ್ಯಕ್ತಪಡಿಸಿದ ಸಿಂಗ್,‘ಕಳೆದ 20 ವರ್ಷಗಳಿಂದಲೂ ನಾನು ಈ ವಿಷಯವನ್ನು ನಿರ್ವಹಿಸುತ್ತಿದ್ದೇನೆ. ಹಲವಾರು ಸರಕಾರಗಳು ಬಂದಿವೆ ಮತ್ತು ಹೋಗಿವೆ,ಆದರೆ ತಳಮಟ್ಟದಲ್ಲಿ ಏನೂ ಬದಲಾಗಿಲ್ಲ’ ಎಂದು ಪೀಠಕ್ಕೆ ತಿಳಿಸಿದರು. ಆದಾಗ್ಯೂ ಹೆಚ್ಚುವರಿ ಸಾಲಿಸಿಟರ್ ಜನರಲ್ ಅವರು,ವಾಯುಮಾಲಿನ್ಯವನ್ನು ನಿಯಂತ್ರಿಸಲು ಎನ್‌ಸಿಆರ್‌ನಾದ್ಯಂತ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ನಿರ್ಮಾಣ ಕಾಮಗಾರಿ ಧೂಳು,ವಾಹನಗಳಿಂದ ಹೊರಸೂಸುವಿಕೆ ಮತ್ತು ಇತರ ಮಾಲಿನ್ಯ ಮೂಲಗಳನ್ನು ನಿಯಂತ್ರಿಸಲು ನಿರ್ದೇಶನಗಳನ್ನು ನೀಡಲಾಗಿದೆ. ಈ ಬಗ್ಗೆ ಸಿಎಕ್ಯೂಎಂ ಮತ್ತು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಹಲವಾರು ಆದೇಶಗಳನ್ನು ಹೊರಡಿಸಿವೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ತಾತ್ವಿಕವಾಗಿ ಕ್ರಮಗಳು ಈಗಾಗಲೇ ಅಸ್ತಿತ್ವದಲ್ಲಿವೆ,ಅನುಷ್ಠಾನ ಮಾತ್ರ ಸಮಸ್ಯೆಯಾಗಿದೆ ಎಂದು ಅವರು ಹೇಳಿದರು.

ವಾರ್ತಾ ಭಾರತಿ 19 Nov 2025 5:58 pm

Bescom Power Cut: ಬೆಂಗಳೂರಿನ 30 ಬಡಾವಣೆಗಳಲ್ಲಿ ನ.20 ರಿಂದ 4 ದಿನಗಳು ವಿದ್ಯುತ್‌ ವ್ಯತ್ಯಯ! ಎಲ್ಲೆಲ್ಲಿ?

ಬೆಂಗಳೂರಿನ 30ಕ್ಕೂ ಹೆಚ್ಚು ಬಡಾವಣೆಗಳಲ್ಲಿ ನವೆಂಬರ್ 20 ರಿಂದ 23ರ ವರೆಗೆ 4 ದಿನಗಳ ಕಾಲ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಬೆಳಿಗ್ಗೆ 10:30 ರಿಂದ ರಾತ್ರಿ 8:30 ರವರೆಗೆ ವಿದ್ಯುತ್ ಕಡಿತವಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ವಿಜಯ ಕರ್ನಾಟಕ 19 Nov 2025 5:55 pm

`ಬೌಲರ್ ಗಳೇನು ಮಷೀನ್ ಗಳೇ?'- ಕಾರ್ಯದೊತ್ತಡ ನಿರ್ವಹಣೆ ಇಲ್ಲದಿದ್ರೆ ಏನಾಗುತ್ತೆ ಎಂದ ಭುವನೇಶ್ವರ್ ಕುಮಾರ್

ಭಾರತ ಕಂಡ ಅತ್ಯಂತ ನುರಿತ ಸ್ವಿಂಗ್ ಬೌಲರ್ ಗಳಲ್ಲಿ ಒಬ್ಬರಾಗಿರುವ ಭುವನೇಶ್ವರ ಕುಮಾರ್ ಅವರು ಬೌಲರ್‌ಗಳ ಗಾಯದ ಸಮಸ್ಯೆ ಮತ್ತು ಕಾರ್ಯದೊತ್ತಡ ನಿರ್ವಹಣೆಯ ಮಹತ್ವವನ್ನು ಒತ್ತಿ ಹೇಳಿದ್ದಾರೆ. ಬೌಲರ್ ಗಳು ಯಂತ್ರಗಳಲ್ಲ, ಅವರಿಗೂ ವಿಶ್ರಾಂತಿ ಅಗತ್ಯ ಎಂದಿದ್ದಾರೆ. ಗಾಯದಿಂದ ಚೇತರಿಸಿಕೊಳ್ಳಲು ಬ್ಯಾಟರ್ ಗಳಿಗಿಂತ ಬೌಲರ್ ಗಳು ಹೆಚ್ಚು ಸಮಯ ತೆಗೆದುಕೊಳ್ಳುತ್ತಾರೆ. ಜೊತೆಗೆ ವೇಗದ ಬೌಲಿಂಗ್ ದೇಹದ ಮೇಲೆ ಹೆಚ್ಚು ಒತ್ತಡ ಬೀರುತ್ತದೆ. ಹಾಗಾಗಿ ದೇಶಕ್ಕಾಗಿ ಆಡುವವರಿಗೆ ಕಾರ್ಯದೊತ್ತಡ ನಿರ್ವಹಣೆ ಅತ್ಯಗತ್ಯ ಎಂದು ತಿಳಿಸಿದ್ದಾರೆ.

ವಿಜಯ ಕರ್ನಾಟಕ 19 Nov 2025 5:40 pm

SABERA™ 2025 ತೀರ್ಪುಗಾರರ ಸಮಾವೇಶ: ಉದ್ದೇಶಿತ ನಾಯಕತ್ವ ಮತ್ತು ಸುಸ್ಥಿರ ಪರಿಣಾಮಗಳನ್ನು ಮುಂದುವರಿಕೆ

SABERATM 2025: ನವದೆಹಲಿಯ ಇಂಡಿಯಾ ಹ್ಯಾಬಿಟ್ಯಾಟ್ ಸೆಂಟರ್‌ನಲ್ಲಿ ಇಂದು ನಡೆದ SABERATM 2025 ಗ್ರ್ಯಾಂಡ್ ಜ್ಯೂರಿ ಸಭೆಯು ಜವಾಬ್ದಾರಿಯುತ ಉದ್ಯಮ, ಸುಸ್ಥಿರ ಅಭಿವೃದ್ಧಿ ಮತ್ತು ಉದ್ದೇಶ ಮಾದರಿ ನಾಯಕತ್ವಕ್ಕೆ ಮೀಸಲಾಗಿರುವ ಭಾರತದ ಪ್ರಮುಖ ವೇದಿಕೆಯ ಮೌಲ್ಯಮಾಪನದ ಅತ್ಯಂತ ನಿರ್ಣಾಯಕ ಹಂತವನ್ನು ಗುರುತಿಸುತ್ತದೆ. ಈಗ ಅದರ ಎಂಟನೇ ಆವೃತ್ತಿಯಲ್ಲಿ, ಸಾಮಾಜಿಕ ಮತ್ತು ವ್ಯವಹಾರ ಉದ್ಯಮ ಜವಾಬ್ದಾರಿಯುತ ಪ್ರಶಸ್ತಿಗಳು (SABERATM)

ಒನ್ ಇ೦ಡಿಯ 19 Nov 2025 5:31 pm

Bengaluru | ಹಾಡಹಗಲೇ ಎಟಿಎಂಗೆ ಹಣ ತುಂಬುವ ವಾಹನ ತಡೆದು 7.11 ಕೋಟಿ ರೂ. ದರೋಡೆ!

ಅಧಿಕಾರಿಗಳ ಸೋಗಿನಲ್ಲಿ ಕೃತ್ಯ

ವಾರ್ತಾ ಭಾರತಿ 19 Nov 2025 5:19 pm

ಖತರ್ ಅಂಡರ್ 19 ಕ್ರಿಕೆಟ್ ತಂಡಕ್ಕೆ ಮಂಗಳೂರು ಮೂಲದ ಯುವಕ ಎಸ್ಸಾಮ್ ಮನ್ಸೂರ್ ಆಯ್ಕೆ

ದೋಹಾ: ಖತರ್ ಅಂಡರ್ 19 ಕ್ರಿಕೆಟ್ ತಂಡಕ್ಕೆ ಮಂಗಳೂರು ಮೂಲದ ಯುವಕ ಎಸ್ಸಾಮ್ ಮನ್ಸೂರ್ ಆಯ್ಕೆಯಾಗಿದ್ದಾರೆ.  ಪ್ರಸ್ತುತ ಖತರ್‌ನ ದೋಹಾದಲ್ಲಿ ನೆಲೆಸಿರುವ ಮನ್ಸೂರ್ ಹಸನಬ್ಬ ಹೆಂತಾರ್ ಮತ್ತು ರಝಿಯಾ ಸುಲೈಮಾನ್ ಸಾಲ್ಮರ ಅವರ ಹಿರಿಯ ಪುತ್ರನಾಗಿರುವ ಎಸ್ಸಾಮ್ ಮನ್ಸೂರ್, ಯುನಿವರ್ಸಿಟಿ ಆಫ್ ದೋಹಾ ಫಾರ್ ಸೈನ್ಸ್ ಅಂಡ್ ಟೆಕ್ನಾಲಜಿ (ಯುಡಿಎಸ್‌ಟಿ)ಯಲ್ಲಿ ಮೊದಲ ವರ್ಷದ ಪದವಿ ವ್ಯಾಸಾಂಗವನ್ನು ಮಾಡುತ್ತಿದ್ದಾರೆ. ಎಸ್ಸಾಮ್ ಮನ್ಸೂರ್ ಹಲವು ವರ್ಷಗಳ ಕಠಿಣ ಪರಿಶ್ರಮದ ಬಳಿಕ ಖತರ್ ಅಂಡರ್ 19 ಕ್ರಿಕೆಟ್ ತಂಡದಲ್ಲಿ ಅವಕಾಶವನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಬ್ಯಾರಿ ಸಮುದಾಯದಿಂದ ಖತರ್ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾದ ಮೊದಲ ಬಾಲಕ ಎಂಬ ಹಿರಿಮೆಗೂ ಪಾತ್ರರಾಗಿದ್ದಾರೆ. ಎಸ್ಸಾಮ್ ನವೆಂಬರ್ 17ರಂದು ಅಂಡರ್ 19 ಎಸಿಸಿ ಪ್ರೀಮಿಯರ್ ಕಪ್‌ನಲ್ಲಿ ಭಾಗವಹಿಸಲು ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ ತೆರಳಲಿದ್ದಾರೆ. ಕ್ರಿಕೆಟ್ ಮೇಲಿದ್ದ ಆಸಕ್ತಿ ಮತ್ತು ಶಿಸ್ತು, ಬದ್ಧತೆ ಎಸ್ಸಾಮ್ ಈ ಮಟ್ಟಕ್ಕೆ ಬೆಳೆಯಲು ಕಾರಣವಾಗಿದೆ. ಎಸ್ಸಾಮ್ ಆಯ್ಕೆಯಾಗಿರುವುದು ನಮ್ಮ ಕುಟುಂಬಕ್ಕೆ ಮಾತ್ರವಲ್ಲ, ಸಮುದಾಯಕ್ಕೂ ಹೆಮ್ಮೆಯ ಕ್ಷಣವಾಗಿದೆ ಎಂದು ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ. ಪ್ರೀಮಿಯರ್ ಕಪ್ ಮತ್ತು ಭವಿಷ್ಯದ ಕ್ರಿಕೆಟ್‌ಗಳಲ್ಲಿ ಉತ್ತಮ ಪ್ರದರ್ಶನ ನೀಡಿ ದೇಶವನ್ನು ಹೆಮ್ಮೆಪಡುವಂತೆ ಮಾಡುವ ಭರವಸೆ ಇದೆ ಎಂದು ಎಸ್ಸಾಮ್ ತಂದೆ ಇಂಜಿನಿಯರ್ ಆಗಿರುವ ಮನ್ಸೂರ್ ಹಸನಬ್ಬ ಹಾಗೂ ತಾಯಿ ರಝಿಯಾ ಸುಲೈಮಾನ್ ಹೇಳಿದ್ದಾರೆ. ಖತರ್ ಮತ್ತು ಕರಾವಳಿ ಕರ್ನಾಟಕದ ಜನರು ಎಸ್ಸಾಮ್ ಸಾಧನೆಯನ್ನು ಶ್ಲಾಘಿಸಿದ್ದಾರೆ. 

ವಾರ್ತಾ ಭಾರತಿ 19 Nov 2025 5:02 pm

ಯಾದಗಿರಿ | ನಗರದಲ್ಲಿ ಧೂಳು ತಡೆಗೆ ಕ್ರಮ ಕೈಗೊಳ್ಳುವಂತೆ ನಗರಸಭೆಗೆ ಕನ್ನಡ ರಕ್ಷಣಾ ವೇದಿಕೆ ಆಗ್ರಹ

ಯಾದಗಿರಿ: ನಗರದ ವಿವಿಧ ರಸ್ತೆಗಳಲ್ಲಿ ಅತಿಭಾರದ ವಾಹನಗಳ ಸಂಚಾರದಿಂದಾಗಿ ವ್ಯಾಪಕವಾಗಿ ಧೂಳು ಆವರಿಸುತ್ತಿದ್ದು ಇದರಿಂದ ಜನಸಾಮಾನ್ಯರಿಗೆ ಅಸ್ತಮಾದಂತಹ  ರೋಗಗಳ ಭೀತಿ ಉಂಟಾಗಿದೆ. ಆದ್ದರಿಂದ ಧೂಳು ನಿಯಂತ್ರಿಸಲು ಕ್ರಮವನ್ನು ಕೈಗೊಳ್ಳಬೇಕು ಎಂದು ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ನಾಗಪ್ಪ ಬಿ ಆಗ್ರಹಿಸಿದರು. ಕರವೇ ಅಧ್ಯಕ್ಷ ನಾಗಪ್ಪ ಬಿ.ಹೊನಗೇರಾ ಮಾತನಾಡಿ, ಈಗಾಗಲೇ ಲಿಖಿತ ರೂಪದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿರುವುದಿಲ್ಲ. ವಾಹನಗಳ ಸಂಚಾರ ಹೆಚ್ಚಳವಾಗಿರುವುದರಿಂದ ಅದರಲ್ಲೂ ಅತಿಭಾರದ ಲಾರಿಗಳು ಓಡಾಟದಿಂದಾಗಿ ನಗರದಲ್ಲಿ ಹೆಚ್ಚಿನ ಧೂಳಿನ ಸಮಸ್ಯೆ  ಉಂಟಾಗಿದೆ. ವಿಶೇಷವಾಗಿ ಹತ್ತಿಕುಣಿ ರಸ್ತೆ, ಡಿಸಿ ಕಚೇರಿ ರಸ್ತೆ, ನೇತಾಜಿ ಸುಭಾಶ್ಚಂದ್ರ ಬೋಸ್ ರಸ್ತೆ, ಹಳೆ, ಹೊಸ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ರಸ್ತೆ ಹಾಗೂ ತಾಣಗಳಲ್ಲಿ ಧೂಳು ಹೆಚ್ಚಾಗಿದೆ. ನಗರಸಭೆ ಧೂಳು ನಿಯಂತ್ರಿಸಲು ವಿಶೇಷ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ವಾರ್ತಾ ಭಾರತಿ 19 Nov 2025 4:40 pm

ಗ್ಲೋಬಲ್‌ ಸೆನ್ಸೇಶನ್‌ K-POP ಡಿಮನ್‌ ಹಂಟರ್ಸ್‌ ಗೆ ಇಂಗ್ಲೆಡ್‌ ಶಾಲೆಯಲ್ಲಿ ಬ್ಯಾನ್‌ ಶಾಕ್!!‌ ಕಾರಣ ಕೇಳಿದ್ರೆ ತಲೆ ಸುತ್ತೊದು ಪಕ್ಕಾ...

ಲಂಡನ್‌ನ ಲಿಲಿಪುಟ್ ಚರ್ಚ್ ಆಫ್ ಇಂಗ್ಲೆಂಡ್ ಶಾಲೆಯೊಂದು 'ಕೆ-ಪಾಪ್ ಡಿಮನ್ ಹಂಟರ್ಸ್' ಅನಿಮೇಟೆಡ್ ಚಿತ್ರ ಮತ್ತು ಅದರ ಹಾಡುಗಳನ್ನು 'ಧಾರ್ಮಿಕ' ಕಾರಣಗಳಿಗಾಗಿ ನಿಷೇಧಿಸಿದೆ. 'ಡಿಮನ್' ಪದವು ಕ್ರಿಶ್ಚಿಯನ್ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ಶಾಲೆಯು ಹೇಳಿದೆ. ಈ ನಿರ್ಧಾರ ಪೋಷಕರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ, ಆದರೆ ಶಾಲೆಯು ತನ್ನ ನಿಲುವಿಗೆ ಬದ್ಧವಾಗಿದೆ ಎಂದು ಹೇಳಿಕೊಂಡಿದೆ.

ವಿಜಯ ಕರ್ನಾಟಕ 19 Nov 2025 4:19 pm

ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ: ಗ್ರಾಮೀಣ ರಸ್ತೆ ಕ್ರಾಂತಿಗೆ ಮುನ್ನುಡಿ; ನಿಮ್ಮ ಗ್ರಾಮಕ್ಕೆ ರಸ್ತೆ ಸಂಪರ್ಕ ಪಡೆಯುವುದು ಹೇಗೆ?

ಒಂದು ಕಾಲದಲ್ಲಿ ಗ್ರಾಮೀಣ ಭಾಗಕ್ಕೆ ರಸ್ತೆಗಳೇ ಇರಲಿಲ್ಲ. ರಸ್ತೆಗಳಿದ್ದರೂ ಜನರು ಗುಂಡಿ ಬಿದ್ದ ರಸ್ತೆಗಳಲ್ಲಿ ಸಂಚರಿಸಬೇಕಾದ ಅನಿವಾರ್ಯತೆ ಇತ್ತು. ಗ್ರಾಮೀಣ ಭಾರತದ ಈ ಸ್ಥಿತಿಯನ್ನು ಸಂಪೂರ್ಣವಾಗಿ ಬದಲಿಸಿದ್ದು, ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ. ಈ ಯೋಜನೆಯು ಭಾರತದ ಗ್ರಾಮೀಣ ಮೂಲಸೌಕರ್ಯದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತರುವ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಗ್ರಾಮೀಣ ಜನರ ಜೀವನಮಟ್ಟವನ್ನು ಗಣನೀಯವಾಗಿ ಹೆಚ್ಚಿಸಲು ನೆರವಾಗುತ್ತಿದೆ. ಈ ಯೋಜನೆಯ ಮುಖ್ಯ ಉದ್ದೇಶವು ಗ್ರಾಮೀಣ ಪ್ರದೇಶಗಳಲ್ಲಿ ಸಂಪರ್ಕ ಹೊಂದಿಲ್ಲದ ವಾಸಸ್ಥಳಗಳಿಗೆ ಎಲ್ಲಾ ಹವಾಮಾನಕ್ಕೂ ಸೂಕ್ತವಾದ ರಸ್ತೆ ಸಂಪರ್ಕವನ್ನು ಒದಗಿಸುವುದಾಗಿದೆ. ಈ ಯೋಜನೆಯ ಕುರಿತ ಸಂಪೂರ್ಣ ವಿವರಗಳು ಇಲ್ಲಿವೆ.

ವಿಜಯ ಕರ್ನಾಟಕ 19 Nov 2025 4:12 pm

ನೌಗಾಮ್ ಸ್ಫೋಟ ಪ್ರಕರಣ: ವಸತಿ ಪ್ರದೇಶದಲ್ಲಿಯ ಪೋಲಿಸ್ ಠಾಣೆಯಲ್ಲಿ 2,900 ಕೆ.ಜಿ ಸ್ಫೋಟಕಗಳ ದಾಸ್ತಾನು ಪ್ರಶ್ನಿಸಿದ ತಜ್ಞರು, ನಾಯಕರು

ಶ್ರೀನಗರ: ಜನನಿಬಿಡ ಪ್ರದೇಶದಲ್ಲಿರುವ ನೌಗಾಮ್ ಪೋಲಿಸ್ ಠಾಣೆಯಲ್ಲಿ ಸುಮಾರು 2,900 ಕೆ.ಜಿ.ಗಳಷ್ಟು ಸ್ಫೋಟಕಗಳನ್ನು ದಾಸ್ತಾನಿರಿಸಿದ್ದ ಬಗ್ಗೆ ಭದ್ರತಾ ತಜ್ಞರು ಮತ್ತು ರಾಜಕೀಯ ನಾಯಕರು ಗಂಭೀರ ಪ್ರಶ್ನೆಗಳನ್ನೆತ್ತಿದ್ದಾರೆ. ಶನಿವಾರ ಸಂಜೆ ಈ ಸ್ಫೋಟಕಗಳ ಸ್ಯಾಂಪಲ್‌ಗಳನ್ನು ಸಂಗ್ರಹಿಸುತ್ತಿದ್ದಾಗ ಭೀಕರ ಸ್ಫೋಟ ಸಂಭವಿಸಿ ಒಂಭತ್ತು ಜನರು ಮೃತಪಟ್ಟಿದ್ದರು ಮತ್ತು 32 ಜನರು ಗಾಯಗೊಂಡಿದ್ದರು. ಸ್ಫೋಟಕಗಳನ್ನು ಎಂದೂ ಜನವಸತಿ ಪ್ರದೇಶಗಳಲ್ಲಿ ದಾಸ್ತಾನು ಮಾಡಬಾರದು ಎಂದು ಹೇಳಿದ ಮಾಜಿ ಜಮ್ಮುಕಾಶ್ಮೀರ ಪೋಲಿಸ್ ಮುಖ್ಯಸ್ಥ ಎಸ್.ಪಿ.ವೈದ್ ಅವರು, ‘ಸ್ಥಾಪಿತ ಮಾರ್ಗಸೂಚಿಗಳ ಪ್ರಕಾರ ಸ್ಫೋಟಕ ವಸ್ತುಗಳನ್ನು ಪ್ರತ್ಯೇಕ ಮತ್ತು ಸುರಕ್ಷಿತ ಸ್ಥಳದಲ್ಲಿ ಇರಿಸಬೇಕು. ಈ ಪ್ರಕರಣದಲ್ಲಿ ಮಾರ್ಗಸೂಚಿಗಳನ್ನು ಅನುಸರಿಸಲಾಗಿತ್ತೇ ಎನ್ನುವುದು ನನಗೆ ತಿಳಿದಿಲ್ಲ’ ಎಂದರು. ಪೋಲಿಸ್ ಠಾಣೆಯಲ್ಲಿ ಇರಿಸಲಾಗಿದ್ದ ಅಮೋನಿಯಂ ನೈಟ್ರೇಟ್ ಅತ್ಯಂತ ಸೂಕ್ಷ್ಮವಾಗಿದ್ದು, ಸುಲಭವಾಗಿ ಸ್ಫೋಟಿಸಬಹುದು. ಅದು ನೀರು ಅಥವಾ ಬೆಂಕಿಯ ಕಿಡಿಯ ಸಂಪರ್ಕಕ್ಕೆ ಬಂದರೆ ಸ್ಫೋಟಗೊಳ್ಳಬಹುದು. ಅದನ್ನು ಸೀಲ್ ಮಾಡುವಾಗ ಬೆಂಕಿ ಕಡ್ಡಿ ಗೀರಿದರೂ ಸ್ಫೋಟಗೊಳ್ಳುತ್ತದೆ ಎಂದು ಅವರು ಹೇಳಿದರು. ಅಂತರರಾಜ್ಯ ʼವೈಟ್-ಕಾಲರ್ ಭಯೋತ್ಪಾದಕ ಜಾಲʼವನ್ನು ಭೇದಿಸಿದ ಬಳಿಕ ವಶಪಡಿಸಿಕೊಳ್ಳಲಾಗಿದ್ದ ಸುಮಾರು 2,900 ಕೆ.ಜಿ.ಅಮೋನಿಯಂ ನೈಟ್ರೇಟ್‌ನ್ನು ಮೂಲ ಪ್ರಕರಣ ದಾಖಲಾಗಿದ್ದ ನೌಗಾಮ್ ಪೋಲಿಸ್ ಠಾಣೆಯಲ್ಲಿ ಇರಿಸಲಾಗಿತ್ತು. ‘ಘಟನೆಯ ಕುರಿತು ತನಿಖೆ ನಡೆಯುತ್ತಿದೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಸ್ಫೋಟಕಗಳನ್ನು ಯಾವ ಸಂದರ್ಭದಲ್ಲಿ ಇಲ್ಲಿ ತಂದು ದಾಸ್ತಾನಿರಿಸಲಾಗಿತ್ತು ಮತ್ತು ಅವುಗಳನ್ನು ಹೇಗೆ ನಿರ್ವಹಿಸಲಾಗುತ್ತಿತ್ತು ಎಂಬ ಪ್ರಶ್ನೆಗಳಿಗೆ ಉತ್ತರಗಳನ್ನು ಪಡೆಯುವ ಭರವಸೆ ನಮಗಿದೆ’ ಎಂದು ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಹೇಳಿದರು. ಜನನಿಬಿಡ ಪ್ರದೇಶದಲ್ಲಿ ನಾಲ್ಕು ದಿನಗಳ ಕಾಲ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಅಮೋನಿಯಂ ನೈಟ್ರೇಟ್ ದಾಸ್ತಾನಿರಿಸಿದ್ದೇಕೆ ಎಂದು ಪ್ರಶ್ನಿಸಿದ ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಅವರು, ಇದು ಪೋಲಿಸರ ನಿರ್ಲಕ್ಷ್ಯವನ್ನು ತೋರಿಸುತ್ತದೆ. ಈ ಬಗ್ಗೆ ತನಿಖೆ ನಡೆಯಬೇಕು ಎಂದು ಹೇಳಿದರು. ಸ್ಯಾಂಪಲ್‌ಗಳ ಸಂಗ್ರಹಣೆ ಸಮಯದಲ್ಲಿ ನಾಗರಿಕರ ಉಪಸ್ಥಿತಿಯನ್ನು ಟೀಕಿಸಿದ ಮುಫ್ತಿ, ಅಮೋನಿಯಂ ನೈಟ್ರೇಟ್ ಅನ್ನು ಹೇಗೆ ಸೀಲ್ ಮಾಡುವುದು ಎನ್ನುವುದು ಗೊತ್ತಿರದಿದ್ದ ನಾಯಿಬ್ ತಹಶೀಲ್ದಾರ್ ಸೇರಿದಂತೆ ನಾಗರಿಕರನ್ನು ಠಾಣೆಗೆ ಏಕೆ ಕರೆಸಲಾಗಿತ್ತು? ಇದು ಅತ್ಯಂತ ಅಪಾಯಕಾರಿಯಾಗಿತ್ತು ಮತ್ತು ಸಂಭವಿಸಲು ಕಾಯುತ್ತಿದ್ದ ಆಕಸ್ಮಿಕವಾಗಿತ್ತು ಎಂದರು. ಘಟನೆಯನ್ನು ‘ದೊಡ್ಡ ಲೋಪ’ ಎಂದು ಬಣ್ಣಿಸಿದ ನ್ಯಾಷನಲ್ ಕಾನ್ಫರೆನ್ಸ್ ಸಂಸದ ರುಹುಲ್ಲಾ ಮೆಹ್ದಿ ಅವರು, ಸಮಗ್ರ ತನಿಖೆಗೆ ಆಗ್ರಹಿಸಿದರು. ಬಿಜೆಪಿ ನಾಯಕ ರವೀಂದ್ರ ರೈನಾ ಕೂಡ ಘಟನೆಯ ಕುರಿತು ವಿವರವಾದ ತನಿಖೆಗೆ ಆಗ್ರಹಿಸಿದ್ದಾರೆ.

ವಾರ್ತಾ ಭಾರತಿ 19 Nov 2025 4:10 pm

ಚಂದ್ರನ ಮೇಲೆ AI ಡೇಟಾ ಸೆಂಟರ್! ರೇಸ್ ನಲ್ಲಿದ್ದಾರೆ ಸುಂದರ್ ಪಿಚ್ಚೈ, ಜೆಫ್ ಬೆರೋಸ್ ಮುಂದಾದ ಉದ್ಯಮಿಗಳು!

ಕೃತಕ ಬುದ್ಧಿಮತ್ತೆಯ (AI) ಭವಿಷ್ಯದ ಅಗತ್ಯತೆಗಳಿಗಾಗಿ ಬಾಹ್ಯಾಕಾಶದಲ್ಲಿ, ವಿಶೇಷವಾಗಿ ಚಂದ್ರನ ಮೇಲೆ, ಡೇಟಾ ಸೆಂಟರ್‌ಗಳನ್ನು ನಿರ್ಮಿಸುವ ಬಗ್ಗೆ ದೊಡ್ಡ ತಂತ್ರಜ್ಞಾನ ಕಂಪನಿಗಳು ಗಂಭೀರವಾಗಿ ಚಿಂತಿಸುತ್ತಿವೆ. ಭೂಮಿಯ ಮೇಲಿನ ಶಕ್ತಿ ಕೊರತೆ ಮತ್ತು ನಿಯಮಗಳ ನಿರ್ಬಂಧಗಳಿಂದಾಗಿ, ಬಾಹ್ಯಾಕಾಶವು ಮುಂದಿನ ದೊಡ್ಡ ಗಡಿಯಾಗಿ ಕಾಣುತ್ತಿದೆ. ಜೆಫ್ ಬೆಜೋಸ್, ಎಲಾನ್ ಮಸ್ಕ್, ಮತ್ತು ಸುಂದರ್ ಪಿಚೈ ಅವರಂತಹ ನಾಯಕರು ಈ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸುತ್ತಿದ್ದಾರೆ. ಇದು ಕೇವಲ ವೈಜ್ಞಾನಿಕ ಕಲ್ಪನೆಯಲ್ಲ, ಬದಲಿಗೆ ಭವಿಷ್ಯದ ಅವಶ್ಯಕತೆಯಾಗಿದೆ.

ವಿಜಯ ಕರ್ನಾಟಕ 19 Nov 2025 4:04 pm

LPG Price: ಎಲ್‌ಪಿಜಿ ಸಿಲಿಂಡರ್‌ ದರ ಸದ್ಯದಲ್ಲೇ ಭಾರೀ ಇಳಿಕೆ ಸಾಧ್ಯತೆ, ಕಾರಣ ಇಲ್ಲಿದೆ

ದೇಶದಾದ್ಯಂತ ಕೋಟ್ಯಂತರ ಮಹಿಳೆಯರು ಮನೆಯಲ್ಲಿ ಅಡುಗೆಗಾಗಿ ಎಲ್‌ಪಿಜಿ ಸಿಲಿಂಡರ್‌ ಬಳಸುತ್ತಿದ್ದಾರೆ. ಕೇಂದ್ರ ಸರ್ಕಾರವು ಈಗಾಗಲೇ ಸಬ್ಸಿಡಿ ಮೂಲಕ ಕಡಿಮೆ ದರಕ್ಕೆ ಎಲ್‌ಪಿಜಿ ಮನೆಬಾಗಿಲಿಗೆ ಪೂರೈಕೆ ಮಾಡುತ್ತಿದೆ. ಇದೀಗ ಎಲ್‌ಪಿಜಿ ಬಳಕೆದಾರರಿಗೆ ಮತ್ತೊಂದು ಸಿಹಿಸುದ್ದಿ ಹೊರಬಿದ್ದಿದೆ. ಸದ್ಯದಲ್ಲೇ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯು ಭಾರೀ ಇಳಿಕೆ ಕಾಣುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಕಾರಣವೇನು ಎನ್ನುವ ಮಾಹಿತಿ ಇಲ್ಲಿದೆ.

ಒನ್ ಇ೦ಡಿಯ 19 Nov 2025 3:57 pm

ಬಾಬಾ ಸಿದ್ದಿಕಿ, ಮೂಸೆವಾಲಾ ಹತ್ಯೆಯ ಮಾಸ್ಟರ್‌ಮೈಂಡ್: ಗ್ಯಾಂಗ್‌ಸ್ಟರ್ ಅನ್ಮೋಲ್ ಬಿಷ್ಣೋಯ್ NIA ವಶಕ್ಕೆ

ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ, ಗಾಯಕ ಸಿದು ಮೂಸೆವಾಲಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಲಾರೆನ್ಸ್ ಬಿಷ್ಣೋಯ್‌ನ ಸಹೋದರ ಅನ್ಮೋಲ್ ಬಿಷ್ಣೋಯ್‌ನನ್ನು ಎನ್‌ಐಎ ಅಧಿಕಾರಿಗಳು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಅಮೆರಿಕದಿಂದ ಗಡಿಪಾರುಗೊಂಡಿದ್ದ ಆತನನ್ನು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸಿಧು ಮೂಸೆವಾಲಾ ಹತ್ಯೆ , ನಟ ಸಲ್ಮಾನ್ ಖಾನ್ ಮನೆ ಹೊರಗಿನಿಂದ ಗುಂಡಿನ ದಾಳಿ ನಡೆಸಿದ ಪ್ರಕರಣದಲ್ಲಿ ಅನ್ಮೋಲ್ ಪ್ರಮುಖ ಪಾತ್ರ ವಹಿಸಿದ್ದ ಎನ್ನಲಾಗಿದೆ. ಅನ್ಮೋಲ್‌ಗೆ ರಕ್ಷಣೆ ನೀಡಬೇಕು ಎಂದು ಅವರ ಸಂಬಂಧಿಕರು ಆಗ್ರಹಿಸಿದ್ದಾರೆ.

ವಿಜಯ ಕರ್ನಾಟಕ 19 Nov 2025 3:48 pm

ದಿಲ್ಲಿಗೆ ಬಂದಿಳಿದ ಅನ್ಮೋಲ್ ಬಿಷ್ಣೋಯಿ : ಎನ್ಐಎ ವಶಕ್ಕೆ

ಹೊಸದಿಲ್ಲಿ: ಎನ್ಸಿಪಿ ಮುಖಂಡ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಅನ್ಮೋಲ್ ಬಿಷ್ಣೋಯಿ ಅಮೆರಿಕದಿಂದ ಗಡೀಪಾರು ಹಿನ್ನೆಲೆ ಬುಧವಾರ ದಿಲ್ಲಿಯ ಐಜಿಐ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾನೆ. ಭಾರತಕ್ಕೆ ಬಂದಿಳಿದ ಅನ್ಮೋಲ್ ಬಿಷ್ಣೋಯಿಯನ್ನು ಎನ್ಐಎ ಬಂಧಿಸಿದೆ. 2022ರಿಂದ ಅನ್ಮೋಲ್ ಬಿಷ್ಣೋಯಿ ತಲೆಮರೆಸಿಕೊಂಡಿದ್ದ. ಇದಕ್ಕೂ ಮೊದಲು ಅಮೆರಿಕದಿಂದ ಗಡೀಪಾರು ಮಾಡಲಾಗಿರುವ 200 ಮಂದಿ ಅಕ್ರಮ ವಲಸಿಗಳರನ್ನು ಹೊತ್ತ ವಿಶೇಷ ವಿಮಾನದಲ್ಲಿ ಬಿಷ್ಣೋಯಿ ಕೂಡಾ ಇದ್ದಾನೆ ಎಂದು ಮೂಲಗಳು ತಿಳಿಸಿತ್ತು.

ವಾರ್ತಾ ಭಾರತಿ 19 Nov 2025 3:48 pm

ICC Rankings- ರೋಹಿತ್ ಶರ್ಮಾ ODI ನಂಬರ್ 1 ಪಟ್ಟಕ್ಕೇರಿದ 22 ದಿನದಲ್ಲೇ ಕುತ್ತು; ಒಂದೇ ಅಂಕದಲ್ಲಿ ಹಿಂದೆ ಹಾಕಿದ ಡೆರಿಲ್ ಮಿಚೆಲ್

ICC Rankings- ಕ್ರಿಕೆಟ್ ಲೋಕದಲ್ಲಿ ಇದೀಗ ಅನಿರೀಕ್ಷಿತ ಬದಲಾವಣೆ! ಕೇವಲ 22 ದಿನಗಳ ಹಿಂದಷ್ಟೇ ಐಸಿಸಿ ಏಕದಿನ ಬ್ಯಾಟಿಂಗ್ ರ್‍ಯಾಂಕಿಂಗ್‌ನಲ್ಲಿ ಒಂದನೇ ಸ್ಥಾನಕ್ಕೇರಿದ್ದ ಟೀಂ ಇಂಡಿಯಾ ಮಾಜಿ ನಾಯಕ ರೋಹಿತ್ ಶರ್ಮಾ ಇದೀಗ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ. ನ್ಯೂಜಿಲೆಂಡ್‌ನ ಡೆರಿಲ್ ಮಿಚೆಲ್ ವೆಸ್ಟ್ ಇಂಡೀಸ್ ವಿರುದ್ಧ ಅಬ್ಬರಿಸಿದ ಶತಕದ ನೆರವಿನಿಂದ ಮೊದಲ ಸ್ಥಾನಕ್ಕೇರಿದ್ದಾರೆ. ಕೇವಲ ಒಂದು ರೇಟಿಂಗ್ ಅಂಕದ ವ್ಯತ್ಯಾಸದಲ್ಲಿ ಈ ಮಹತ್ವದ ಬದಲಾವಣೆ ಸಂಭವಿಸಿದೆ. ಇಷ್ಟೇ ಅಲ್ಲದೆ ಕೋಲ್ಕತಾ ಟೆಸ್ಟ್ ಮುಗಿದ ಬಳಿಕ ಟೆಸ್ಟ್ ರ್‍ಯಾಂಕಿಂಗ್‌ನಲ್ಲೂ ಕೆಲವು ಬದಲಾವಣೆಗಳು ಕಂಡುಬಂದಿವೆ.

ವಿಜಯ ಕರ್ನಾಟಕ 19 Nov 2025 3:46 pm

ಪುಣೆ ಭೂ ಅವ್ಯವಹಾರ ಪ್ರಕರಣ: ಅಜಿತ್ ಪವಾರ್ ಪುತ್ರನ ಹೆಸರು ಕೈಬಿಟ್ಟ ತನಿಖಾ ಸಮಿತಿ

ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪುತ್ರ ಪಾರ್ಥ್ ಪವಾರ್‌ ಪಾಲುದಾರರಾಗಿರುವ ಪುಣೆ ಮೂಲದ ಕಂಪೆನಿಯ 300 ಕೋಟಿ ರೂ. ಭೂ ವ್ಯವಹಾರದ ಕುರಿತು ತನಿಖೆ ನಡೆಸುತ್ತಿರುವ ಉನ್ನತ ಮಟ್ಟದ ಸಮಿತಿಯು, ಅಕ್ರಮಗಳಿಗೆ ಸಂಬಂಧಿಸಿ ಮೂರು ಜನರನ್ನು ಹೆಸರಿಸಿದೆ. ಆದರೆ ಪಾರ್ಥ್ ಪವಾರ್ ಬಗ್ಗೆ ಯಾವುದೇ ಉಲ್ಲೇಖವನ್ನು ಮಾಡಿಲ್ಲ ಎಂದು ವರದಿಯಾಗಿದೆ. ಇನ್ಸ್‌ಪೆಕ್ಟರ್‌ ಜನರಲ್ ರಾಜೇಂದ್ರ ಮುಥೆ ನೇತೃತ್ವದ ಸಮಿತಿಯು ಮಂಗಳವಾರ ಈ ಕುರಿತು ವರದಿಯನ್ನು ಸಲ್ಲಿಸಿದೆ. ವರದಿಯಲ್ಲಿ ಪುಣೆಯ ದುಬಾರಿ ಪ್ರದೇಶವಾದ ಮುಂಡ್ವಾದಲ್ಲಿ 40 ಎಕರೆ ಸರಕಾರಿ ಭೂಮಿಯ ಮಾರಾಟ-ಖರೀದಿ ಒಪ್ಪಂದದ ನೋಂದಣಿಯಲ್ಲಿ ಅಕ್ರಮಗಳು ಮತ್ತು ನಿಯಮಗಳ ಉಲ್ಲಂಘನೆ ಕಂಡುಬಂದಿದೆ ಎಂದು ತಿಳಿಸಿದೆ. ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪುತ್ರ ಪಾರ್ಥ್ ಪವಾರ್ ಪಾಲುದಾರರಾಗಿರುವ ಅಮಾದಿಯಾ ಎಂಟರ್ ಪ್ರೈಸಸ್ ಎಲ್ಎಲ್ ಪಿ ಕಂಪೆನಿಗೆ ಪುಣೆಯ ಬಳಿ 40 ಎಕರೆ ಮಹರ್ ವತನ್ ಭೂಮಿಯನ್ನು 300 ಕೋಟಿ ರೂಪಾಯಿಗೆ ಮಾರಾಟ ಮಾಡಲಾಗಿದೆ. ಈ ಭೂಮಿಯ ಮಾರಾಟ ದರ 1,800 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಪಾರ್ಥ್ ಪವಾರ್ ಅವರು ಅಮಾದಿಯಾದಲ್ಲಿ ಪಾಲುದಾರರಾಗಿದ್ದಾರೆ. ಆದರೆ ವ್ಯವಹಾರಕ್ಕೆ ಸಂಬಂಧಿಸಿದ ಯಾವುದೇ ದಾಖಲೆಯಲ್ಲಿ ಅವರ ಹೆಸರು ಕಂಡುಬಂದಿಲ್ಲ ಎಂದು ತನಿಖಾ ವರದಿಯಲ್ಲಿ ಹೇಳಲಾಗಿದೆ. ಆದ್ದರಿಂದ ಸಮಿತಿಯು ತನ್ನ ವರದಿಯಲ್ಲಿ ಅವರ ಬಗ್ಗೆ ಯಾವುದೇ ಉಲ್ಲೇಖವನ್ನು ಮಾಡಿಲ್ಲ ಎಂದು ಹೇಳಲಾಗಿದೆ. ತನಿಖಾ ವರದಿಯಲ್ಲಿ ಅಮಾನತುಗೊಂಡ ಸಬ್ ರಿಜಿಸ್ಟ್ರಾರ್ ರವೀಂದ್ರ ತರು, ಶೀತಲ್ ತೇಜ್ವಾನಿ ಮತ್ತು ಅಮಾದಿಯಾ ಎಂಟರ್ಪ್ರೈಸಸ್ ಪಾಲುದಾರ ದಿಗ್ವಿಜಯ್ ಪಾಟೀಲ್ ಅವರನ್ನು ಅಕ್ರಮಗಳಿಗೆ ಹೊಣೆಗಾರರನ್ನಾಗಿ ಮಾಡಿದೆ. ಪುಣೆ ಪೊಲೀಸರು ಸಲ್ಲಿಸಿದ ಎಫ್ಐಆರ್‌ನಲ್ಲಿ ಈ ಮೂವರನ್ನು ಆರೋಪಿಗಳೆಂದು ಹೆಸರಿಸಲಾಗಿದೆ.

ವಾರ್ತಾ ಭಾರತಿ 19 Nov 2025 3:22 pm

ಬೆಂಗಳೂರಿನಲ್ಲಿ ಹಾಡುಹಗಲೇ ಎಟಿಎಂ ವಾಹನ ದರೋಡೆ; ನಡು ರಸ್ತೆಯಲ್ಲೇ 7 ಕೋಟಿ ರೂ. ಎತ್ತಿಕೊಂಡು ಪರಾರಿಯಾದ ಕಳ್ಳರು!

ಬೆಂಗಳೂರಿನ ಡೈರಿ ಸರ್ಕಲ್ ಫ್ಲೈ ಓವರ್ ಮೇಲೆ ಬುಧವಾರ ಮಧ್ಯಾಹ್ನ ಎಟಿಎಂಗೆ ಹಣ ಸಾಗಿಸುತ್ತಿದ್ದ ವಾಹನವನ್ನು ಅಡ್ಡಗಟ್ಟಿ, 7 ಕೋಟಿ 11 ಲಕ್ಷ ರೂಪಾಯಿ ದರೋಡೆ ಮಾಡಲಾಗಿದೆ. ಹಲವು ದಿನಗಳಿಂದ ಸಂಚು ರೂಪಿಸಿದ್ದ ತಂಡವು ವಾಹನವನ್ನು ಹಿಂಬಾಲಿಸಿ, ಸಿಬ್ಬಂದಿಗೆ ಬೆದರಿಸಿ ಹಣವನ್ನು ದೋಚಿಕೊಂಡು ಪರಾರಿಯಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ವಿಜಯ ಕರ್ನಾಟಕ 19 Nov 2025 3:08 pm

ಡಿಸಿಎಂ ಆದ ತಕ್ಷಣವೇ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೊರೆಯಬೇಕು ಅಂದುಕೊಂಡಿದ್ದೆ! ಡಿಕೆಶಿ ಮಾರ್ಮಿಕ ಮಾತು

ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ತೊರೆಯುವುದಿಲ್ಲ, ಬದಲಾಗಿ ಏನಾದರೂ ಗುರುತು ಬಿಟ್ಟು ಹೋಗುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು. ಪಕ್ಷಕ್ಕೆ ಕಟ್ಟಡ ನಿರ್ಮಾಣ, ಸದಸ್ಯತ್ವ ವಿಸ್ತರಣೆ ಮುಂತಾದ ಕೆಲಸಗಳನ್ನು ಮಾಡುತ್ತಿದ್ದು, ಹೈಕಮಾಂಡ್ ಸೂಚನೆ ನೀಡುವವರೆಗೂ ಕೆಲಸ ಮುಂದುವರಿಸುವುದಾಗಿ ತಿಳಿಸಿದರು.ಇದೇ ವೇಳೆ ನಾನು ಡಿಸಿಎಂ ಆದಾಗಲೇ ಅಧ್ಯಕ್ಷ ಸ್ಥಾನ ಬಿಟ್ಟುಕೊಡಬೇಕಂತಿದ್ದೆ ಆದರೆ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್‌ ಗಾಂಧಿ ಅವರ ಮಾತಿನಿಂದ ಮುಂದುವರೆಯುತ್ತಿದ್ದೇನೆ ಎಂದು ಹೇಳಿದ್ದಾರೆ.ಅಲ್ಲದೆ, ಕಾರ್ಯಕರ್ತರ ಸ್ವಾಭಿಮಾನಕ್ಕೆ ಧಕ್ಕೆ ಬಾರದಂತೆ ನೋಡಿಕೊಳ್ಳುವುದಾಗಿ ಹೇಳಿದರು.

ವಿಜಯ ಕರ್ನಾಟಕ 19 Nov 2025 3:07 pm

ʻಹಣವಿದೆ ಭಾರತಕ್ಕೆ ಬರಲು ಖುಷಿಯಿದೆ ಆದರೆ.. ಮನಸ್ಸಿಲ್ಲʼ; ಟ್ರಾಫಿಕ್‌ಗೆ ಹೆದರಿ ವಿದೇಶದಲ್ಲೇ ಉಳಿಯುತ್ತಿರುವ NRIಗಳು

ಇಪ್ಪತ್ತೈದು ವರ್ಷದ ಬಳಿಕ ಅಮೆರಿಕದಿಂದ ತಾಯ್ನಾಡಿಗೆ ಮರಳಿದ ಅನಿವಾಸಿ ಭಾರತೀಯ ಇಲ್ಲಿನ ಭಾರತದ ಟ್ರಾಫಿಕ್‌ ಸಮಸ್ಯೆ ಬಗ್ಗೆ ಮಾತನಾಡಿದ್ದಾರೆ. ಅಮೆರಿಕದಲ್ಲಿರುವ ಎಷ್ಟೋ ಭಾರತೀಯರು ಇಲ್ಲಿಗೆ ಮರಳಲು ಇಚ್ಛಿಸದೆ ಇರುವುದು ಇಲ್ಲಿನ ದಟ್ಟಣೆ ಸಮಸ್ಯೆಯಿಂದ. ಇಲ್ಲಿ ನೆಮ್ಮದಿ, ಸಂಬಂಧ ಎಲ್ಲವೂ ಸಿಗುತ್ತದೆ. ಆದರೆ, ದಟ್ಟಣೆಯಲ್ಲಿ ಕೊಳೆಯಲು ಮಾತ್ರ ಸಾಧ್ಯವಿಲ್ಲ ಹೀಗಾಗಿ ಯಾರು ಭಾರತಕ್ಕೆ ಬರಲು ಮನಸ್ಸು ಮಾಡುತ್ತಿಲ್ಲ. ಪ್ರಧಾನಿ ಮೋದಿಯವರೇ ಟ್ರಾಫಿಕ್‌, ರಸ್ತೆ ಸಮಸ್ಯೆ ಬಗ್ಗೆ ಸ್ವಲ್ಪ ಗಮನಹರಿಸಿ ಎಂದು ಪೋಸ್ಟ್‌ ಹಂಚಿಕೊಂಡಿದ್ದಾರೆ.

ವಿಜಯ ಕರ್ನಾಟಕ 19 Nov 2025 3:00 pm

ಕಬ್ಬು, ತೈಲ ಬೀಜಗಳ ನಿರ್ದೇಶನಾಲಯದ ನಿರ್ದೇಶಕ ಅರವಿಂದ ಕುಮಾರ್ ರಾವತ್ ರನ್ನು ಭೇಟಿಯಾದ ಸಚಿವ ಆರ್.ಬಿ. ತಿಮ್ಮಾಪುರ

ಬಾಗಲಕೋಟೆ: ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ. ತಿಮ್ಮಾಪುರ ‌ ಅವರು ಇಂದು ರಾಜಧಾನಿ ದೆಹಲಿಯ ಕೃಷಿ ಭವನದಲ್ಲಿ ಕೇಂದ್ರ ಸರ್ಕಾರದ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಕಬ್ಬು ಮತ್ತು ತೈಲ ಬೀಜಗಳ ನಿರ್ದೇಶನಾಲಯದ ನಿರ್ದೇಶಕರಾದ ಅರವಿಂದ ಕುಮಾರ್ ರಾವತ್ ಅವರನ್ನು ಭೇಟಿ ಮಾಡಿ, ರಾಜ್ಯದ ಕಬ್ಬು ಬೆಳೆಗಾರರಿಗೆ, ವಿಶೇಷವಾಗಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ರೈತರಿಗೆ ಎದುರಾಗುತ್ತಿರುವ ತೀವ್ರ ಸಮಸ್ಯೆಗಳ ಕುರಿತು ವಿವರವಾದ ಚರ್ಚೆ ನಡೆಸಿದರು. ಸಭೆಯಲ್ಲಿ ಸಚಿವ ತಿಮ್ಮಾಪೂರ ಅವರು, ಕಳೆದ ಕೆಲವು ವರ್ಷಗಳಿಂದ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಕಬ್ಬಿನ ಬೆಲೆ ಕುಸಿತ, ಸಕ್ಕರೆ ಕಾರ್ಖಾನೆಗಳ ಸಾಲ ಮರುಪಾವತಿ ವಿಳಂಬ, ಕನಿಷ್ಠ ಬೆಂಬಲ ಬೆಲೆ (ಎಫ್‌ಆರ್‌ಪಿ) ಹೆಚ್ಚಳದ ಕೊರತೆ, ರಫ್ತು ನೀತಿಯಲ್ಲಿ ಏರ್ಪಡುತ್ತಿರುವ ಬದಲಾವಣೆಗಳಿಂದಾಗಿ ಉಂಟಾಗುತ್ತಿರುವ ಅನಿಶ್ಚಿತತೆ ಹಾಗೂ ಮುಧೋಳ ಸೇರಿದಂತೆ ಉತ್ತರ ಕರ್ನಾಟಕದ ಕಬ್ಬು ಬೆಳೆಗಾರರಿಗೆ ವಿಶೇಷವಾಗಿ ತಲುಪುತ್ತಿರುವ ತೊಂದರೆಗಳನ್ನು ಕೇಂದ್ರ ಅಧಿಕಾರಿಗಳ ಗಮನಕ್ಕೆ ತಂದರು. “ಕರ್ನಾಟಕದಲ್ಲಿ ಕಬ್ಬು ಬೆಳೆ ರೈತರ ಜೀವನಾಡಿಯಾಗಿದೆ. ಬಾಗಲಕೋಟೆ ಜಿಲ್ಲೆಯ ಬಹು ಭಾಗದಲ್ಲಿ ಸಾವಿರಾರು ರೈತರು ಕಬ್ಬು ಬೆಳೆಯ ಮೇಲೆಯೇ ಅವಲಂಬಿತರಾಗಿದ್ದಾರೆ. ಆದರೆ ಪ್ರಸ್ತುತ ಸ್ಥಿತಿಯಲ್ಲಿ ಅವರಿಗೆ ನ್ಯಾಯ ದೊರಕುತ್ತಿಲ್ಲ. ಕೇಂದ್ರ ಸರ್ಕಾರ ತಕ್ಷಣವೇ ಮಧ್ಯ ಪ್ರವೇಶಿಸಿ ರೈತರ ಹಿತ ಕಾಯಬೇಕು” ಎಂದು ಸಚಿವರು ನಿರ್ದೇಶಕರಲ್ಲಿ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಕಬ್ಬಿನ ಎಫ್‌ಆರ್‌ಪಿ ಯುಕ್ತಿಯುಕ್ತ ಹೆಚ್ಚಳ, ಸಕ್ಕರೆ ರಫ್ತು ನೀತಿಯಲ್ಲಿ ಸ್ಥಿರತೆ, ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕೇಂದ್ರದ ಸಹಾಯಧನ ಮತ್ತು ರೈತರ ಬಾಕಿ ಪಾವತಿಗೆ ತ್ವರಿತ ಕ್ರಮ ಕೈಗೊಳ್ಳುವಂತೆ ಸಚಿವರು ಒತ್ತಡ ಹೇರಿದರು. ನಿರ್ದೇಶಕ ಅರವಿಂದ ಕುಮಾರ್ ರಾವತ ಅವರು ಸಚಿವರ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ಈ ಬಗ್ಗೆ ಕೇಂದ್ರ ಸರ್ಕಾರದ ಉನ್ನತ ಮಟ್ಟದಲ್ಲಿ ಚರ್ಚಿಸಿ ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸದುಗೌಡ ಪಾಟೀಲ, ಬಾಗಲಕೋಟ ಜಿಲ್ಲಾ ಕಿಸಾನ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಆನಂದ ಹಟ್ಟಿ ಅವರು ಉಪಸ್ಥಿತರಿದ್ದರು

ವಾರ್ತಾ ಭಾರತಿ 19 Nov 2025 2:57 pm

ದುಬೈ ಏರ್ ಶೋ 2025ನಲ್ಲಿ ಕಮಾಲ್‌ ಮಾಡಿದ ಭಾರತದ ತೇಜಸ್ MK-2 LAC; ಏರ್ ಶೋನಲ್ಲಿ ತೇಜಸ್‌ ಶೋ ಸ್ಟಾಫರ್‌ ಪ್ರದರ್ಶನಕ್ಕೆ ನೆಟ್ಟಿಗರು ಫಿದಾ!

ದುಬೈ ಏರ್ ಶೋ 2025 ರಲ್ಲಿ ಭಾರತದ ತೇಜಸ್ ಫೈಟರ್ ಜೆಟ್ ಗಮನ ಸೆಳೆಯಿತು. ಹಲವು ದೇಶಗಳ ವಿಮಾನಗಳ ನಡುವೆ ತೇಜಸ್ MK-2 ಲೈಟ್ ಕಾಂಬ್ಯಾಟ್ ಏರ್‌ಕ್ರಾಫ್ಟ್ ತನ್ನ ಸಾಮರ್ಥ್ಯ ಪ್ರದರ್ಶಿಸಿತು. ಭಾರತೀಯ ವಾಯುಪಡೆಯ ಸೂರ್ಯಕಿರಣ್ ತಂಡದೊಂದಿಗೆ ತೇಜಸ್ ವೈಮಾನಿಕ ಕಸರತ್ತು ನಡೆಸಿತು. ಈ ಪ್ರದರ್ಶನ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಯಿತು. ಇದು ಭಾರತದ ವೈಮಾನಿಕ ಸಾಮರ್ಥ್ಯವನ್ನು ಜಾಗತಿಕ ಮಟ್ಟದಲ್ಲಿ ಎತ್ತಿ ತೋರಿಸಿತು.

ವಿಜಯ ಕರ್ನಾಟಕ 19 Nov 2025 2:40 pm

250 ಕ್ಕೂ ಹೆಚ್ಚು ಅಕ್ರಮಸಕ್ರಮ ಅರ್ಜಿಗಳು ವಿಲೇವಾರಿಗೆ ಬಾಕಿ : ಅರಣ್ಯ ಇಲಾಖೆಯ ಸಮಸ್ಯೆ

ಹೆಬ್ರಿ ತಾಲ್ಲೂಕಿನ ಹೆಬ್ರಿ ಮತ್ತು ನಾಡ್ಪಾಲು ಗ್ರಾಮದ ಜಂಟಿ ಸರ್ವೆಗೆ ತಹಶೀಲ್ಧಾರ್‌ ಹಾಗೂ ಅರಣ್ಯ ಇಲಾಖೆಗೆ ಮನವಿ

ವಾರ್ತಾ ಭಾರತಿ 19 Nov 2025 2:36 pm

ಕೆಂಪುಕಲ್ಲು ದರ ಸಮಸ್ಯೆ|ಪರವಾನಿಗೆ ಹೆಚ್ಚಿದ್ದಲ್ಲಿ 2 ತಿಂಗಳಲ್ಲಿ ದರ ಇಳಿಕೆ: ಕೆಂಪುಕಲ್ಲು ಪಾಯ ಒಕ್ಕೂಟ

ಮಂಗಳೂರು, ನ.19: ರಾಜ್ಯ ಸರಕಾರ ಈಗಾಗಲೇ ರಾಜಧನ ಇಳಿಕೆ ಮಾಡಿದ ಬಳಿಕ ಕೆಂಪು ಕಲ್ಲಿನ ದರ ಇಳಿಕೆಯ ಹಾದಿಯಲ್ಲಿದ್ದು, ಕೆಂಪು ಕಲ್ಲು ಗಣಿಗಾರಿಕೆಗೆ ಇನ್ನಷ್ಟು ಪರವಾನಿಗೆಗಳು ಲಭ್ಯವಾದಂತೆ ಮುಂದಿನ ಎರಡು ತಿಂಗಳಲ್ಲಿ ದರವೂ ಇಳಿಕೆಯಾಗಲಿದೆ ಎಂದು ದ.ಕ. ಜಿಲ್ಲಾ ಕೆಂಪು ಕಲ್ಲು ಪಾಯಗಳ ಮಾಲಕರ ಒಕ್ಕೂಟ ತಿಳಿಸಿದೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಸತೀಶ್ ಆಚಾರ್ಯ, ಹಿಂದೆ 242ರಷ್ಟು ಕೆಂಪುಕಲ್ಲು ಪಾಯಗಳಿಗೆ ಪರವಾನಿಗೆ ಇದ್ದು, ಇಷ್ಟೊಂದು ನಿಯಮಗಳೂ ಇರಲಿಲ್ಲ. ಕಳೆದ ಆರು ತಿಂಗಳಿ‌ನಿಂದೀಚೆಗೆ ಸರಕಾರದ ಕಟ್ಟುನಿಟ್ಟಿನ ಕ್ರಮದಿಂದಾಗಿ ಪರವಾನಿಗೆ ಸೀಮಿತಗೊಂಡಿದೆ. ಈಗಾಗಲೇ 55 ಕಡೆ ಕಲ್ಲು ಗಣಿಗಾರಿಕೆಗೆ ಪರವಾನಿಗೆ ದೊರಕಿದ್ದು, ಸುಮಾರು 29ರಷ್ಟು ಪರವಾನಿಗೆ ಪ್ರಕ್ರಿಯೆ ಹಂತದಲ್ಲಿದೆ. ಈ ಪರವಾನಿಗೆಗಳೂ ದೊರೆತಾಗ ಈಗಾಗಲೇ ಇಳಿಕೆಯಾಗುತ್ತಾ ಸಾಗಿರುವ ಕೆಂಪು ಕಲ್ಲಿನ ದರ ಇನ್ನಷ್ಟು ಇಳಿಕೆಯಾಗಲಿದೆ ಎಂದರು. ಕೆಂಪುಕಲ್ಲಿಗೆ ಸಾಕಷ್ಟು ಬೇಡಿಕೆ ಹೊರತಾಗಿಯೂ ಪರವಾನಿಗೆ ಸೀಮಿತವಾಗಿರುವುದರಿಂದ ಸಾಗಾಟ ದರ ಹೆಚ್ಚಳವಾಗಿದೆ. ಕೋರೆಗಳಲ್ಲಿ ಈಗಾಗಲೇ ಎರಡು ವಿಧದ ಕಲ್ಲು ತಲಾ 35 ರೂ.ದರದೊಳಗೆ ನೀಡಲಾಗುತ್ತಿದೆ. ನಗರಕ್ಕೆ ಹತ್ತಿರದಲ್ಲಿ 12 ಪರವಾನಿಗೆಗಳು ಮಾತ್ರವೇ ಇದ್ದು, ಉಳಿದೆಲ್ಲವೂ ಸುಳ್ಯ, ಪುತ್ತೂರು ಕಡೆ ಇರುವುದರಿಂದ ಸಾಗಾಟಕ್ಕೆ ಹೆಚ್ಚು ವೆಚ್ಚವಾಗುತ್ತಿದೆ ಎಂದವರು ಹೇಳಿದರು. ಪರವಾನಿಗೆ ಮಾಡಬೇಕಾದರೆ ನಕ್ಷೆ ಮಾಡಿ ಭೂ ದಾಖಲೆ ಅಧಿಕಾರಿಗಳಿಗೆ ಸಲ್ಲಿಸಿ ಗಣಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಂದ ಜಂಟಿ ಸಮೀಕ್ಷೆ ನಡೆದು ಬಳಿಕ ಅನುಮತಿ ನೀಡಲಾಗುತ್ತದೆ. ನಿಗದಿಪಡಿಸಿದ ಸ್ಥಳದಲ್ಲಿ ಕಲ್ಲು ದೊರೆಯದಿದ್ದರೆ ಇನ್ನೊಂದು ಜಾಗದಲ್ಲಿ ಅವಕಾಶ ಕೋರಲು ಮತ್ತೆ ಮರು ಅರ್ಜಿ ಸಲ್ಲಿಸಬೇಕಾಗುತ್ತದೆ. ಬಳಿಕ ಕಲ್ಲು ತೆಗೆದ ಜಾಗದಲ್ಲಿ ಮಣ್ಣು ತುಂಬಿಸುವ ಕಾರ್ಯ ನಡೆಯಬೇಕು. ಕೃಷಿಗೆ ಅಗತ್ಯವಾದ ರೀತಿಯಲ್ಲಿ ಅಭಿವೃದ್ಧಿಪಡಿಸಬೇಕು. ಈ ರೀತಿಯಾಗಿ ನಿಯಮಗಳು ಕಠಿಣಗೊಂಡಿರುವುದರಿಂದ ಪರವಾನಿಗೆ ಸಂಖ್ಯೆಯೂ ಕಡಿಮೆಯಾಗಿದೆ. 256 ರೂ.ಗಳಿಗೆ ಏರಿಕೆಯಾಗಿದ್ದ ರಾಜಧನ ಇದೀಗ ಹಿಂದಿನಂತೆ 97 ರೂ.ಗಳಿಗೆ ಇಳಿಕೆಯಾಗಿದೆ. ಒಂದು ಎಕರೆ ಭೂಮಿಯಲ್ಲಿ 16000 ಟನ್ ಮುರಕಲ್ಲು (5,28000 ಕೆಂಪುಕಲ್ಲು) ತೆಗೆಯಲು ಅವಕಾಶವಿದೆ. ಕಲ್ಲೊಂದರ ಉತ್ಪಾದನೆಗೆ ಎಲ್ಲಾ ಖರ್ಚು ವೆಚ್ಚಗಳನ್ನು ಲೆಕ್ಕ ಹಾಕಿದಾಗ 28ರೂ. ಗಳಾಗುತ್ತದೆ. ಸದ್ಯ ಕಲ್ಲು ಕೋರೆಗಳಲ್ಲಿ 32ರೂ.ನಿಂದ 35 ರೂ. ದರದಲ್ಲಿ ಕಲ್ಲು ಪೂರೈಸಲಾಗುತ್ತಿದೆ ಎಂದು ಉಪಾಧ್ಯಕ್ಷ ರವಿಶಂಕರ್ ಮಾಹಿತಿ ನೀಡಿದರು. ಗೋಷ್ಟಿಯಲ್ಲಿ ಕೋಶಾಧಿಕಾರಿ ರಾಮ ಮುಗುರೋಡಿ, ಬಂಟವಾಳ ವಲಯದ ಅಧಯಕ್ಷ ಮೋಹನ್ ಶೆಟ್ಟಿ, ರವಿ ರೈ ಪಜೀರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 19 Nov 2025 2:29 pm

ನವಜಾತ ಶಿಶು ಬಲಿ ಪಡೆದ ಹಾವೇರಿ ಜಿಲ್ಲಾಸ್ಪತ್ರೆ: ಕಾರಣ ಬಿಚ್ಚಿಟ್ಟ ಕುಟುಂಬಸ್ಥರು ಕಣ್ಣೀರು, ಆಕ್ರೋಶ

Medical Negligence: ಜಿಲ್ಲಾಸ್ಪತ್ರೆಗಳೆಂದರೆ ರೋಗಿಗಳು ಅದರಲ್ಲೂ ಗರ್ಭಿಣಿ ಮಹಿಳೆಯರಿಗೆ ಒಂದು ರೀತಿಯ ಹೆದರಿಕೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ, ಕಾಳಜಿ ಸಿಗದಿರುವುದಕ್ಕೆ ಸಾಕಷ್ಟು ಉದಾಹರಣೆಗಳಿವೆ. ಕೆಲವೊಮ್ಮೆ ವೈದ್ಯರು, ಜಿಲ್ಲಾಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಸಾವುಗಳೇ ಸಂಭವಿಸಿಬಿಡುತ್ತವೆ. ಇಂತದ್ದೇ ಒಂದು ಘಟನೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಹಾವೇರಿ ಜಿಲ್ಲಾಸ್ಪತ್ರೆಯಲ್ಲಿನ ಈ ಘಟನೆಗೆ ವಿಪಕ್ಷ ನಾಯಕ ಆರ್.ಅಶೋಕ್ ಕೆಂಡ ಕಾರಿದ್ದಾರೆ. ರಾಜ್ಯ ಸರ್ಕಾರದ

ಒನ್ ಇ೦ಡಿಯ 19 Nov 2025 2:15 pm

ಹಿರಿಯಡ್ಕ: ತಲವಾರಿನಿಂದ ಮಾರಣಾಂತಿಕ ಹಲ್ಲೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಹಿರಿಯಡ್ಕ, ನ.19: ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕಿನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ತಲವಾರಿನಿಂದ ಮಾರಾಣಾಂತಿಕ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಣಜಾರು ಪರಾರಿ ಮನೆ ನಿವಾಸಿ ಮಂಜುನಂದ ಹೆಗ್ಡೆ(49) ಹಾಗೂ ಕೊಪ್ಪಲ ನಿವಾಸಿ ಜಗದೀಶ್ ಹೆಗ್ಡೆ(48) ಬಂಧಿತ ಆರೋಪಿಗಳು. ಇವರಿಂದ ಕೃತ್ಯಕ್ಕೆ ಬಳಸಿದ್ದ ಕಬ್ಬಿಣದ ರಾಡನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಇಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ನ.15ರಂದು ರಾತ್ರಿ ವೇಳೆ ಶಿವರಾಜ್ ಎಂಬವರು ಕೆಲಸ ಮುಗಿಸಿ ವಾಪಾಸ್ಸು ಬೈಕಿನಲ್ಲಿ ಮನೆಗೆ ಬರುತ್ತಿರುವಾಗ ಕಣಜಾರು ಗ್ರಾಮದ ಕೊಪ್ಪಲ ಎಂಬಲ್ಲಿ ಮಂಜುನಂದ ಹೆಗ್ಡೆ ಅಡ್ಡಗಟ್ಟಿ ತಲವಾರಿನಲ್ಲಿ ತಲೆಗೆ ಮಾರಣಾಂತಿಕವಾಗಿ ಹೊಡೆದು ಕೊಲೆಗೆ ಪ್ರಯತ್ನಿಸಿದ್ದನು. ಬೈಕ್‌ನಿಂದ ಕೆಳಗೆ ಬಿದ್ದ ಶಿವರಾಜ್‌ಗೆ ಮಂಜುನಂದ ತಲವಾರಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಮಂಜುನಂದ ಹೆಗ್ಡೆ ಜೊತೆ ಜಯಾನಂದ ಹೆಗ್ಡೆ, ಚಂದ್ರಹಾಸ ಹೆಗ್ಡೆ ಹಾಗೂ ಇತರ 7-8 ಮಂದಿ ಇದ್ದು, ಅವರು ಕೂಡ ಹಲ್ಲೆಗೆ ಪ್ರಯತ್ನಿಸಿದ್ದಾರೆಂದು ದೂರಲಾಗಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಹಿರಿಯಡ್ಕ ಪೊಲೀಸ್ ಉಪನಿರೀಕ್ಷಕ ಪುನೀತ್ ಕುಮಾರ್ ನೇತೃತ್ವದ ತಂಡ, ಪ್ರಕರಣದ ಆರೋಪಿ ಕೊಪ್ಪಲ ನಿವಾಸಿ ಜಗದೀಶ್ ಹೆಗ್ಡೆಯನ್ನು ನ.17ರಂದು ಬಂಧಿಸಿದೆ. ಕೃತ್ಯ ನಡೆಸಿದ ಬಳಿಕ ಆರೋಪಿ ಮಂಜುನಂದ ಹೆಗ್ಡೆ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದು, ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸ್ ತಂಡ, ಆರೋಪಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ನಂತರ ನ.18ರಂದು ಬಂಧಿಸಿದೆ ಎಂದು ತಿಳಿದುಬಂದಿದೆ.

ವಾರ್ತಾ ಭಾರತಿ 19 Nov 2025 2:13 pm

ಅವಂತಿ ಫೀಡ್ಸ್‌ ಸೀಗಡಿ ಕಂಪನಿ ಷೇರುಗಳು ಶೇ. 10ಕ್ಕಿಂತ ಹೆಚ್ಚು ಏರಿಕೆ! ಕಾರಣ ಏನು?

ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಭಾರತ-ಅಮೆರಿಕ ವಾಣಿಜ್ಯ ಒಪ್ಪಂದದ ಬಗ್ಗೆ ಸಕಾರಾತ್ಮಕ ಸುಳಿವು ನೀಡಿದ ನಂತರ, ಸೀಗಡಿ ರಫ್ತು ಕಂಪನಿಗಳ ಷೇರುಗಳಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಜಪಾನಿನ ಸಮುದ್ರಾಹಾರಕ್ಕೆ ಚೀನಾ ನಿಷೇಧ ಹೇರಿರುವುದು ಕೂಡ ಈ ಬೆಳವಣಿಗೆಗೆ ಪೂರಕವಾಗಿದೆ, ಇದರಿಂದ ಭಾರತೀಯ ರಫ್ತುದಾರರಿಗೆ ಹೊಸ ಅವಕಾಶಗಳು ತೆರೆದುಕೊಳ್ಳುವ ನಿರೀಕ್ಷೆ ಇದೆ.

ವಿಜಯ ಕರ್ನಾಟಕ 19 Nov 2025 2:01 pm

ವಾಹನಗಳ ಫಿಟ್ನೆಸ್ ಪರೀಕ್ಷೆಯ ಶುಲ್ಕ ಪರಿಷ್ಕರಣೆ; ಹೊಸ ದರಗಳು ಹೀಗಿವೆ

ವಾಹನಗಳ ಫಿಟ್ನೆಸ್ ಪರೀಕ್ಷೆಯ ಶುಲ್ಕವನ್ನು ರಸ್ತೆ ಸಾರಿಗೆ ಸಚಿವಾಲಯವು ಪರಿಷ್ಕರಣೆ ಮಾಡಿದೆ. 10 ವರ್ಷಕ್ಕಿಂತ ಹಳೆಯ ವಾಹನಗಳಿಗೆ ಹೆಚ್ಚಿನ ಶುಲ್ಕ ಅನ್ವಯವಾಗಲಿದ್ದು, ವಯಸ್ಸಿನ ಆಧಾರದ ಮೇಲೆ ದ್ವಿಚಕ್ರ, ತ್ರಿಚಕ್ರ, ಎಲ್‌ಎಂವಿ ಮತ್ತು ವಾಣಿಜ್ಯ ವಾಹನಗಳಿಗೆ ವಿಭಿನ್ನ ಶುಲ್ಕ ನಿಗದಿಪಡಿಸಲಾಗಿದೆ. ಈ ನಿಯಮಗಳು ವಾಹನಗಳ ಸುರಕ್ಷತೆ ಹೆಚ್ಚಿಸಲು ಮತ್ತು ಹಳೆಯ ವಾಹನಗಳನ್ನು ರಸ್ತೆಯಿಂದ ತೆಗೆದುಹಾಕಲು ಉದ್ದೇಶಿಸಿವೆ.

ವಿಜಯ ಕರ್ನಾಟಕ 19 Nov 2025 1:59 pm

ಚುನಾವಣಾ ಆಯೋಗವನ್ನು ಟೀಕಿಸಿದ ರಾಹುಲ್ ಗಾಂಧಿ, ಕಾಂಗ್ರೆಸ್‌ ವಿರುದ್ಧ 272 ಗಣ್ಯ ನಾಗರಿಕರ ಬಹಿರಂಗ ಪತ್ರ; ಆರೋಪಗಳು ಏನು?

ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವು ಚುನಾವಣಾ ಆಯೋಗವನ್ನು ಹಾಳುಗೆಡವಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ 272 ಗಣ್ಯ ನಾಗರಿಕರು, 16 ನ್ಯಾಯಾಧೀಶರು, 123 ನಿವೃತ್ತ ಅಧಿಕಾರಿಗಳು ಮತ್ತು 133 ನಿವೃತ್ತ ಸಶಸ್ತ್ರ ಪಡೆಗಳ ಅಧಿಕಾರಿಗಳು ಬಹಿರಂಗ ಪತ್ರ ಬಿಡುಗಡೆ ಮಾಡಿದ್ದಾರೆ. ರಾಷ್ಟ್ರೀಯ ಸಂವಿಧಾನಾತ್ಮಕ ಪ್ರಾಧಿಕಾರಗಳ ಮೇಲಿನ ದಾಳಿ ಎಂಬ ಶೀರ್ಷಿಕೆಯ ಈ ಪತ್ರವು, ವಿರೋಧ ಪಕ್ಷದ ನಾಯಕರು ಪ್ರಮುಖ ಸಂಸ್ಥೆಗಳ ವಿರುದ್ಧ ವಿಷಕಾರಿ ಹೇಳಿಕೆ ನೀಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

ವಿಜಯ ಕರ್ನಾಟಕ 19 Nov 2025 1:56 pm

ಬೆಂಗಳೂರಿನಲ್ಲಿ ನಡೆವ ವರ್ಲ್ಡ್ ಟೆನಿಸ್ ಲೀಗ್ ಗೆ ಖ್ಯಾತನಾಮರು! ಪ್ರಮುಖ ಆಕರ್ಷಣೆ ಯಾರು? ಯಾವಾಗ ಪ್ರಾರಂಭ?

WTL 2025- ಈವರೆಗೂ ಯುಎಇನಲ್ಲಿ ನಡೆಯುತ್ತಿದ್ದ ವಿಶ್ವ ಟೆನಿಸ್ ಲೀಗ್ (WTL) ಇದೇ ಮೊದಲ ಬಾರಿಗೆ ಭಾರತದಲ್ಲಿ ನಡೆಯುತ್ತಿದೆ. ಡಿಸೆಂಬರ್ 17 ರಿಂದ 20 ರವರೆಗೆ ಬೆಂಗಳೂರಿನ ಎಸ್.ಎಂ. ಕೃಷ್ಣ ಟೆನಿಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಟೂರ್ನಿಯಲ್ಲಿ ವಿಶ್ವ ವಿಖ್ಯಾತರಾದ ಡೇನಿಯಲ್ ಮೆಡ್ವೆಡೆವ್, ನಿಕ್ ಕಿರ್ಗಿಯೋಸ್, ಎಲೆನಾ ರೈಬಾಕಿನಾ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ. ಭಾರತದಿಂದಲೂ ಯೂಕಿ ಬಾಂಭ್ರಿ, ಅಂಕಿತಾ ರೈನಾ, ದಕ್ಷಿಣೇಶ್ವರ ಸುರೇಶ್ ಮೊದಲಾದವರು ಕಣದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಸಂಘಟಕರು ಮಾಹಿತಿ ನೀಡಿದ್ದಾರೆ.

ವಿಜಯ ಕರ್ನಾಟಕ 19 Nov 2025 1:56 pm

ಮಧುರೈನಿಂದ ಕೊಯಮತ್ತೂರಿಗೆ ಮೆಟ್ರೋ ಯೋಜನೆ ಕುರಿತ ಪ್ರಸ್ತಾಪ ರದ್ದುಗೊಳಿಸುವ ಕೇಂದ್ರ ಸರಕಾರದ ನಿರ್ಧಾರ ಸೇಡಿನ ಕ್ರಮ : ಸಿಎಂ ಸ್ಟಾಲಿನ್

ಚೆನ್ನೈ: ಮಧುರೈನಿಂದ ಕೊಯಂಬತ್ತೂರಿನವರೆಗೆ ಯೋಜಿಸಲಾಗಿದ್ದ ಮೆಟ್ರೊ ರೈಲು ನಿರ್ಮಾಣ ಪ್ರಸ್ತಾವವನ್ನು ಕೇಂದ್ರ ಸರಕಾರ ತಳ್ಳಿ ಹಾಕಿರುವ ಕ್ರಮವನ್ನು ‘ತಮಿಳುನಾಡು ಜನರ ವಿರುದ್ಧದ ಸೇಡಿನ ಕ್ರಮ’ ಎಂದು ಬುಧವಾರ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಎಂ.ಕೆ.ಸ್ಟಾಲಿನ್, “ದೇವಾಲಯ ನಗರಿ ಮಧುರೈನಿಂದ ದಕ್ಷಿಣ ಭಾರತದ ಮ್ಯಾಂಚೆಸ್ಟರ್ ಎಂದೇ ಖ್ಯಾತವಾಗಿರುವ ಕೊಯಂಬತ್ತೂರಿಗೆ ಮೆಟ್ರೋ ರೈಲು ಯೋಜನೆ ಮಂಜೂರು ಮಾಡುವುದಿಲ್ಲ ಎಂದು ರಾಜ್ಯ ಸರಕಾರಕ್ಕೆ ಕೇಂದ್ರ ಸರಕಾರ ತಿಳಿಸಿದೆ. ಆದರೆ, ಬಿಜೆಪಿ ಆಡಳಿತಾರೂಢ ರಾಜ್ಯಗಳಲ್ಲಿನ ಇಂತಹುದೇ ನಗರಗಳಲ್ಲಿ ಇದೇ ಬಗೆಯ ಯೋಜನೆಗಳಿಗೆ ಅನುಮತಿ ನೀಡಿದೆ” ಎಂದು ಆರೋಪಿಸಿದ್ದಾರೆ. “ದೇವಾಲಯ ನಗರಿ ಮಧುರೈನಿಂದ ದಕ್ಷಿಣ ಭಾರತದ ಮ್ಯಾಂಚೆಸ್ಟರ್ ಎಂದೇ ಖ್ಯಾತವಾಗಿರುವ ಕೊಯಂಬತ್ತೂರಿಗೆ ಯೋಜಿಸಲಾಗಿದ್ದ ಮೆಟ್ರೊ ರೈಲು ನಿರ್ಮಾಣ ಪ್ರಸ್ತಾವಕ್ಕೆ ಅನುಮತಿ ನೀಡಲು ಕೇಂದ್ರ ಸರಕಾರ ನಿರಾಕರಿಸಿದೆ. ಯಾವುದೇ ಸರಕಾರ ಜನರಿಗೆ ನಿಷ್ಪಕ್ಷಪಾತವಾಗಿ ಸೇವೆ ಸಲ್ಲಿಸಲು ಇರುತ್ತದೆ. ಹೀಗಿದ್ದೂ, ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಸೇಡು ತೀರಿಸಿಕೊಳ್ಳಲು ತಮಿಳುನಾಡಿನ ಪ್ರಜಾಸತ್ತಾತ್ಮಕ ಸರಕಾರವನ್ನು ಒಂದು ನೆಪ ಮಾಡಿಕೊಂಡಿದೆ” ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. ವರದಿಗಳ ಪ್ರಕಾರ, 2011ರ ಜನಗಣತಿ ಅನ್ವಯ ಕನಿಷ್ಠ 20 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ನಗರಗಳ ನಗರಾಭಿವೃದ್ಧಿ ಯೋಜನೆಗಳಿಗೆ ಕೇಂದ್ರ ಸರಕಾರದ ನೆರವು ಒದಗಿಸಲು 2017ರ ಮೆಟ್ರೊ ರೈಲು ನೀತಿ ನಿರ್ಬಂಧಿಸುತ್ತದೆ ಎಂದು ಉಲ್ಲೇಖಿಸಿ, ದ್ವಿತೀಯ ದರ್ಜೆಯ ನಗರಗಳಲ್ಲಿ ಮೆಟ್ರೊ ನಿರ್ಮಿಸಲು ತಮಿಳುನಾಡು ಸರಕಾರ ಮಂಡಿಸಿದ್ದ ವಿಸ್ತೃತ ಯೋಜನಾ ವರದಿಯನ್ನು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ತಿರಸ್ಕರಿಸಿದೆ ಎಂದು ಹೇಳಲಾಗಿದೆ.

ವಾರ್ತಾ ಭಾರತಿ 19 Nov 2025 1:56 pm

ತಾಯಿಯಿಂದಲೇ ಮಗನಿಗೆ ISIS ಸೇರಲು ಒತ್ತಾಯ, ಕೇರಳದಲ್ಲಿ ಪ್ರಕರಣ ದಾಖಲು; ಛತ್ತಿಸ್‌ ಗಢದಲ್ಲಿ ಐಸಿಸ್‌ ಸಂಪರ್ಕ ಹೊಂದಿದ್ದ 2 ಅಪ್ರಾಪ್ತರ ಬಂಧನ

ಭಾರತದಲ್ಲಿ ಭಯೋತ್ಪಾದನೆ ಆತಂಕ ಹೆಚ್ಚುತ್ತಿದೆ.ಯುಕೆಯಲ್ಲಿ ನರ್ಸ್‌ ಆಗಿ ಕೆಲಸ ಮಾಡುತ್ತಿದ್ದ ಮಹಿಳೆ ತನ್ನ ಸ್ನೇಹಿತನ ಜೊತೆಗೂಡಿ ತನ್ನ 16 ವರ್ಷದ ಅಪ್ರಾಪ್ತ ಮಗನನ್ನು ಐಸಿಸ್‌ಗೆ ಸೇರಲು ಪ್ರೇರೇಪಿಸಿದ್ದಾಳೆ. ಈ ಬಗ್ಗೆ ಕೇರಳಕ್ಕೆ ಬಂದ ಬಾಲಕ ತನ್ನ ಚಿಕ್ಕಪ್ಪನಿಗೆ ವಿಷಯ ತಿಳಿಸಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆದರೆ ಆತನ ತಾಯಿ ಮಾತ್ರ ಆರೋಪಗಳೆಲ್ಲ ಸುಳ್ಳು, ವೈವಾಹಿಕ ಕಲಹಗಳಿಂದ ಹೀಗೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾಳೆ. ಇತ್ತ ಛತ್ತೀಸ್‌ಗಢದಲ್ಲಿ ಐಸಿಸ್‌ ಸಂಪರ್ಕ ಹೊಂದಿದ್ದ ಇಬ್ಬರು ಅಪ್ರಾಪ್ತರನ್ನು ಬಂಧಿಸಲಾಗಿದೆ. ಇವರು ಸಾಮಾಜಿಕ ಮಾಧ್ಯಮದ ಮೂಲಕ ಇತರರ ಮೇಲೆ ಪ್ರಭಾವ ಬೀರಲು ಯತ್ನಿಸುತ್ತಿದ್ದರು ಎಂದು ತಿಳಿದು ಬಂದಿದ್ದು ತನಿಖೆ ನಡೆಯುತ್ತಿದೆ.

ವಿಜಯ ಕರ್ನಾಟಕ 19 Nov 2025 1:49 pm

ಕಾಪು: ಎಚ್ಆರ್ ಎಸ್ ವತಿಯಿಂದ ಪ್ರಥಮ ಚಿಕಿತ್ಸೆ ಮಾಹಿತಿ ಶಿಬಿರ

ಕಾಪು: ಹುಮ್ಯಾನಿಟರೈನ್ ರಿಲೀಫ್ ಸೊಸೈಟಿ (ಎಚ್.ಆರ್.ಎಸ್.), ಕಾಪು ಶಾಖೆ ವತಿಯಿಂದ ಸರಕಾರಿ ಉರ್ದು ಸಂಯುಕ್ತ ಪ್ರೌಢಶಾಲೆ ಮಲ್ಲಾರ್ ಮತ್ತು ಮೌಲಾನ ಅಝಾದ್ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಯಾವುದೇ ಅಪಘಾತ, ಅವಘಡ ಸಂಭವಿಸಿದ ಸಮಯದಲ್ಲಿ ಪ್ರಥಮ ಚಿಕಿತ್ಸೆ ಯಾವ ರೀತಿ ಮಾಡಬಹುದೆಂಬ ಮಾಹಿತಿ ಶಿಬಿರ ಆಯೋಜಿಸಲಾಗಿತ್ತು. ಎಚ್.ಆರ್.ಎಸ್. ತರಬೇತುದಾರ ಮುಹಮ್ಮದ್ ಸಲೀಂ ಮಲ್ಪೆ ಮಾಹಿತಿ ನೀಡಿದರು. ಎಚ್.ಆರ್.ಎಸ್. ಮಾನವೀಯ ಸಹಕಾರಿ ಸಂಘಟನೆ ಆಗಿದ್ದು, ಇದು ಪ್ರಾಕೃತಿಕ ಅಥವಾ ಮಾನವ ವತಿಯಿಂದ ನಡೆಯುವ ದುರಂತಗಳ ಸಂದರ್ಭ ಆ ಪ್ರದೇಶಕ್ಕೆ ತೆರಳಿ ನಿಸ್ವಾರ್ಥವಾಗಿ ಜನರಿಗೆ ನೆರವಾಗುತ್ತದೆ. ಈ ಸಂಸ್ಥೆಯು ಕರ್ನಾಟಕದಲ್ಲಿ 2024ರಿಂದ ಕಾರ್ಯನಿರ್ವಹಿಸುತ್ತಿದ್ದು, ಉಡುಪಿಯಲ್ಲಿ ಈ ಸಂಸ್ಥೆಯು ಒಂದು ಆಂಬುಲೆನ್ಸ್ ಹೊಂದಿದೆ ಎಂದು ಮಾಜಿ ತ್ರಿ ಜಿಲ್ಲಾ ಸಂಚಾಲಕ ಅನ್ವರ್ ಅಲಿ ಕಾಪು ಹೇಳಿದ್ದಾರೆ. ಜಿಲ್ಲಾ ಅಧ್ಯಕ್ಷ ಮುಹಮ್ಮದ್ ಬಿಲಾಲ್ ಮಲ್ಪೆ, ತರಬೇತುದಾರ ಝುಬೇರ್ ಮಲ್ಪೆ, ಪುರಸಭೆ ಸದಸ್ಯ ನೂರುದ್ದೀನ್, ಉರ್ದು ಪ್ರೌಢಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಜೋಯ್ಸಾ, ಮೌಲಾನ ಆಝಾದ್ ನ ಸಹಾಯಕ ಮುಖ್ಯೋಪಾಧ್ಯಾಯಿನಿ ನಿಹಾ, ಮುಹಮ್ಮದ್ ಫಾರೂಕ್, ಕಲೀಮುಲ್ಲಾ, ಶೇಕ್ ಸನಾವರ್ ಉಪಸ್ಥಿತರಿದ್ದರು. ಕಾಪು ಘಟಕದ ಗ್ರೂಪ್ ಮುಖಂಡ ಮುಹಮ್ಮದ್ ಅಲಿ ಕಾರ್ಯಕ್ರಮ ನಿರೂಪಿಸಿದರು. ಅಬ್ದುಲ್ ಜಲೀಲ್ ವಂದಿಸಿದರು.

ವಾರ್ತಾ ಭಾರತಿ 19 Nov 2025 1:45 pm