SENSEX
NIFTY
GOLD
USD/INR

Weather

18    C
... ...View News by News Source

ಚಿಕ್ಕಮಗಳೂರು: 77ನೇ ಗಣರಾಜ್ಯೋತ್ಸವದ ಆಕರ್ಷಣೆಯಾದ ಫಲಪುಷ್ಪ ಪ್ರದರ್ಶನ

ಚಿಕ್ಕಮಗಳೂರು: 77ನೇ ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಪಂ ಹಾಗೂ ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾ ಆಟದ ಮೈದಾನದಲ್ಲಿ ಆಯೋಜಿಸಿರುವ ಚೈತ್ರೋತ್ಸವ ಹೆಸರಿನ ಫಲಪುಷ್ಪ ಪ್ರದರ್ಶನ ನಗರದ ಸಾರ್ವಜನಿಕರು, ಶಾಲಾ ಕಾಲೇಜು ಮಕ್ಕಳ ಮನಸೂರೆಗೊಳ್ಳುವಲ್ಲಿ ಯಶಸ್ವಿಯಾಗಿದೆ. ವಿವಿಧ ಬಗೆಯ ಹೂವುಗಳು, ಸಿರಿಧಾನ್ಯ, ತರಕಾರಿ, ಹಣ್ಣುಗಳಲ್ಲಿ ಮೂಡಿರುವ ಕಲೆ, ಸಾಹಿತ್ಯ, ಕ್ರೀಡೆ, ರಾಜಕೀಯ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡಿರುವ ಗಣ್ಯರು, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಕುವೆಂಪು, ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಕಲಾಕೃತಿಗಳು ಹಾಗೂ ಸಾವಿರಾರು ಬಗೆಯ ಸಸ್ಯ ರಾಶಿ, ಕೀಟ ಲೋಕ, ಅಕ್ವೇರಿಯಂ ಸಾರ್ವಜನಿಕರನ್ನು ಮಂತ್ರಮುಗ್ಧಗೊಳಿಸುತ್ತಿವೆ. ನಗರದ ಸುಭಾಶ್ಚಂದ್ರಭೋಸ್ ಜಿಲ್ಲಾ ಆಟದ ಮೈದಾನದಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನ 77ನೇ ಗಣರಾಜ್ಯೋತ್ಸವದ ಆಕರ್ಷಣೆಯಾಗಿದ್ದು, ರವಿವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ವಿಪ ಉಪಸಭಾಪತಿ ಪ್ರಾಣೇಶ್, ಶಾಸಕ ತಮ್ಮಯ್ಯ, ವಿಪ ಸದಸ್ಯರಾದ ಭೋಜೇಗೌಡ, ಸಿ.ಟಿ.ರವಿ ಚೈತ್ರೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ್ದು, ಸುಮಾರು 1 ಎಕರೆ ಪ್ರದೇಶದಲ್ಲಿ ಜಗತ್ತಿನ ವಿವಿಧ ದೇಶಗಳ ಸಸ್ಯ ಪ್ರಪಂಚ, ಹೂವು, ಹಣ್ಣುಗಳು, ತರಕಾರಿ ಸಿರಿಧಾನ್ಯಗಳಿಂದ ಮಾಡಿರುವ ಅತ್ಯಾಕರ್ಷಕ ಕಲಾಕೃತಿಗಳು, ಕಲಾವಿದರ ಕೈಚಳಕಕ್ಕೆ ಸಾರ್ವಜನಿಕರು ಬೇಸ್ ಎನ್ನುತ್ತಿದ್ದಾರೆ. ಫಲಪುಷ್ಪ ಆವರಣ ಪ್ರವೇಶಿಸುತ್ತಿದ್ದಂತೆ ಸಸ್ಯ, ಹೂವಿನ ಎಸಳು ಹಾಗೂ ವಿವಿಧ ಬಗೆಯ ಹೂವುಗಳಿಂದ ನಿರ್ಮಿಸಿರುವ ಐ ಲವ್ ಸಿಕೆಎಂ ಎಂಬ ಬರಹ ಸಾರ್ವಜನಿಕರನ್ನು ಸ್ವಾಗತಿಸುತ್ತದೆ. ಪ್ರದರ್ಶನದ ಒಳಹೊಕ್ಕುತ್ತಿದ್ದಂತೆ ಸಸ್ಯ, ಹೂವು, ತರಕಾರಿ, ಹಣ್ಣು, ಸಿರಿಧಾನ್ಯಗಳಿಂದ ನಿರ್ಮಿಸಿರುವ ಆಕರ್ಷಕ ಕಲಾಕೃತಿಗಳ ಲೋಕ ಬೆರೆಗುಗೊಳಿಸುತ್ತದೆ. ಸಮಾಜಕಲ್ಯಾಣ ಇಲಾಖೆಯಿಂದ ಬಾಳೆದಿಂಡು, ಹಾಗಲಕಾಯಿ, ಬದನೆಕಾಯಿ, ಹೀರೇಕಾಯಿ, ಮೂಲಂಗಿ ಬಳಸಿ ನಿರ್ಮಿಸಿರುವ ಹಳೆಯ ಸಂಸತ್ ಭವನದ ಕಲಾಕೃತಿ, ಸಿರಿಧಾನ್ಯಗಳನ್ನೇ ಬಳಸಿ ನಿರ್ಮಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ನಿಂತ ಭಂಗಿಯ ಪ್ರತಿಕೃತಿಯ ಕಲಾಕೃತಿ, ಸಸ್ಯರಾಶಿಯ ಮಧ್ಯೆ ಮೂಡಿರುವ ಸಂವಿಧಾನದ ಪೂರ್ವ ಪೀಠಿಕೆ ಕಲಾಕೃತಿ ಸಂವಿಧಾನದ ಮಹತ್ವ ಸಾರುತ್ತಿವೆ. ಬಣ್ಣಬಣ್ಣದ ಸೇವಂತಿಗೆ, ಗುಲಾಬಿ ಹೂವುಗಳಿಂದ ಪಿಯಾನೋ, ವೀಣೆ, ಗಿಟಾರ್, ತಬಲ, ಡಾಲ್ಫಿನ್‍ಗಳ ಕಲಾಕೃತಿಗಳು ಮೂಡಿಬಂದಿವೆ. ಶೃಂಗೇರಿ ತಾಲೂಕಿನ ಗಂಡಗಟ್ಟ ಸರಕಾರಿ ಶಾಲೆ ಹೂವಿನಿಂದಲೇ ನಿರ್ಮಾಣಗೊಂಡಿದೆ. ಭದ್ರಬಾಲ್ಯದಿಂದ ಸಾಧನೆ ಶಿಖರಕ್ಕೆ ಶೀರ್ಷಿಕೆಯಡಿ ಭದ್ರಬಾಲ್ಯ ಯೋಜನೆ ಅನಾವರಣಗೊಂಡಿದೆ. ಬೋಧಿವೃಕ್ಷದ ಕೆಳಗೆ ಗೌತಮಬುದ್ಧ ಧ್ಯಾನಸ್ಥರಾಗಿದ್ದರೆ, ಇದರ ಪಕ್ಕದಲ್ಲೇ ದೇವೀರಮ್ಮ ದೇಗುಲಹೂವಿನಿಂದ ಮೂಡಿದೆ. ಸಿರಿಧಾನ್ಯದಲ್ಲಿ ಸಾಲುಮರದ ತಿಮ್ಮಕ್ಕೆ, ಸರಸ್ವತಿ, ಬಿರ್ಸಾಮುಂಡಾ ಮೂಡಿಬಂದಿದ್ದಾರೆ. ಇತ್ತೀಚೆಗೆ ಮಹಿಳಾ ವಿಶ್ವಕಪ್ ವಿಜೇತರ ಭಾವಚಿತ್ರಗಳು ಹಣ್ಣುಗಳಲ್ಲಿ ಮೂಡಿ ಬಂದಿವೆ. ಹೂವಿನಿಂದ ಟ್ರೋಫಿಯನ್ನು ನಿರ್ಮಿಸಲಾಗಿದೆ. ಹೂವಿನಿಂದ ಮೂಡಿಬಂದಿರುವ ಕಲಾಕೃತಿಗಳನ್ನು ವೀಕ್ಷಿಸಲು ಸಾರ್ವಜನಿಕರು ಮುಗಿಬೀಳುತ್ತಿದ್ದಾರೆ. ಕಲಾವಿದರ ಕೈಚಳಕದಲ್ಲಿ ಚಲನ ಚಿತ್ರನಟರು, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರಗಳನ್ನು ಕಲ್ಲಂಗಡಿ ಹಣ್ಣುಗಳಲ್ಲಿ ಮೂಡಿಬಂದಿದ್ದಾರೆ. ಕಲ್ಲಂಗಡಿಯಲ್ಲಿ ರಾಷ್ಟ್ರಕವಿಕುವೆಂಪು, ದ.ರಾ.ಬೇಂದ್ರೆ, ಶಿವರಾಮಕಾರಂತರು, ಗಿರೀಶ್‍ಕಾರ್ನಾರ್ಡ್, ಕಂಬಾರ, ಮಾಸ್ತಿವೆಂಕಟೇಶ್ ಅಯ್ಯಂಗಾರ್, ಚಲನಚಿತ್ರ ನಟರಾದ ಡಾ.ರಾಜ್‍ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಶಂಕರ್‍ನಾಗ್, ಪುನೀತ್‍ರಾಜ್‍ಕುಮಾರ್, ಸಂಚಾರಿ ವಿಜಯ್ ಅವರುಗಳನ್ನು ಬಿಡಿಸಲಾಗಿದೆ. ಬಧನೆ, ಕ್ಯಾರೆಟ್,ಮೂಲಂಗಿಯಲ್ಲಿ ನವಿಲು, ಗರುಡ ಮೂಡಿದ್ದರೆ, ಸಹಿಗುಂಬಳದಲ್ಲಿ ಜಿಂಕೆ,ಮೀನು, ಹಾಗಲಕಾಯಿಯಲ್ಲಿ ಮೊಸಳೆಯನ್ನು ನಿರ್ಮಿಸಲಾಗಿದೆ. ತರಕಾರಿ ಬಳಸಿ ಅರಣ್ಯ ಇಲಾಖೆಯಿಂದ ಕೃತಕ ಆನೆಗಳನ್ನು ಸೃಷ್ಟಿಸಲಾಗಿದೆ. ಮೀನುಗಾರಿಕೆ ಇಲಾಖೆಯಿಂದ ಬಣ್ಣಬಣ್ಣದ ಮೀನುಗಳ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ನೇಕಾರರಿಂದ ನೇಯ್ದಿರುವ ರೇಷ್ಮೆ ಸೀರೆಗಳು, ಖಾದಿವಸ್ತುಗಳಿಂದ ತಯಾರಿಸಿದ ಬಟ್ಟೆಗಳ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಒಟ್ಟಾರೆಯಾಗಿ ಇಂದಿನಿಂದ ಜ 28ರವರೆಗೆ ಆಯೋಜಿಸಿರುವ ಫಲಪುಷ್ಪಗಳ ಪ್ರದರ್ಶನಕ್ಕೆ ಉತ್ತಮ ಸ್ಪಂದನೆ ದೊರೆಕುತ್ತಿದೆ. ಬಣ್ಣಬಣ್ಣಹೂವುಗಳಿಂದ ಮೂಡಿರುವ ಕಲಾಕೃತಿಗಳು ನೋಡುಗಳ ಮನ ಸೆಳೆಯುತ್ತಿವೆ.              

ವಾರ್ತಾ ಭಾರತಿ 27 Jan 2026 12:24 am

ಬಿಜೆಪಿ ಸರಕಾರ ರಾಷ್ಟ್ರದ ಅಭಿವೃದ್ದಿಗೆ ರಿವರ್ಸ್ ಗೇರ್ ಹಾಕಿದೆ: ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಬಿಜೆಪಿಯವರಿಗೆ ಈ ರಾಷ್ಟ್ರವನ್ನು ಮುನ್ನಡೆಸುವ ಶಕ್ತಿಯೂ ಇಲ್ಲ, ಆಸಕ್ತಿಯೂ ಇಲ್ಲ. ಸ್ವಾತಂತ್ರ್ಯೋತ್ತರದಲ್ಲಿ ಕಾಂಗ್ರೆಸ್ ಮಾಡಿರುವ ಅಭಿವೃದ್ಧಿಗಳನ್ನೆಲ್ಲ ಸಾಯಿಸುವ ಮೂಲಕ ಮತ್ತೆ ರಾಷ್ಟ್ರವನ್ನು ಹಿಂದಕ್ಕೆ ಒಯ್ಯುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಮವಾರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಗ್ರಾಮ ಪಂಚಾಯಿತಿ ವ್ಯವಸ್ಥೆ ಬಲಪಡಿಸುವ ಉದ್ದೇಶದಿಂದ ನಾವು ಮಾಡಿದ ವಿಕೇಂದ್ರೀಕರಣ ವ್ಯವಸ್ಥೆಯನ್ನು ಕೇಂದ್ರೀಕರಣದತ್ತ ತಿರುಗಿಸುತ್ತಿದ್ದಾರೆ. ನರೇಗಾ ಯೋಜನೆಯನ್ನು ಕುಲಗೆಡಿಸಿ, ಕೇವಲ ಯೋಜನೆಯ ಹೆಸರಿನಲ್ಲಿ ರಾಮನ ಹೆಸರು ಸೇರಿಸಿ ಜನರನ್ನು ಭಾವನಾತ್ಮಕವಾಗಿ ಆಟವಾಡಿಸಬಹುದು ಎಂದುಕೊಂಡಿದ್ದಾರೆ. ತನ್ಮೂಲಕ ಮೌಢ್ಯವನ್ನು ಬಿತ್ತುವ ಕೆಲಸವನ್ನು ಮಾಡುತ್ತಿದ್ದಾರೆ. ನಾವು ಜನರನ್ನು ಮೌಢ್ಯದಿಂದ ಹೊರತಂದು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದರೆ ಅವರು ಕೇವಲ ಓಟಿಗೋಸ್ಕರ ರಾಷ್ಟ್ರವನ್ನು ಹಿಂದಕ್ಕೆ ಒಯ್ಯುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಮನರೇಗಾ ಯೋಜನೆಯಲ್ಲಿ ಲೋಪವಿದ್ದರೆ ಅದನ್ನು ಸರಿಪಡಿಸಿ, ಇನ್ನಷ್ಟು ಶಕ್ತಿ ತುಂಬುವ ಕೆಲಸ ಮಾಡಬಹುದಿತ್ತು. ಅದರ ಬದಲು ಇಂತಹ ಜನಪರ, ಜನಪ್ರಿಯ ಯೋಜನೆಯನ್ನೆ ಮುಗಿಸಲು ಹೊರಟಿದ್ದಾರೆ. ಅಂದರೆ, ರೋಗಿಗೆ ಚಿಕಿತ್ಸೆ ನೀಡಿ ಗುಣಪಡಿಸುವ ಬದಲು ರೋಗಿಯನ್ನೇ ಸಾಯಿಸಲು ಹೊರಟಿದ್ದಾರೆ. ಯೋಜನೆಯಲ್ಲಿ ಭ್ರಷ್ಟಾಚಾರ ಇದ್ದಿದ್ದರೆ ಸರಿಪಡಿಸಲು ಕೇಂದ್ರ ಸರಕಾರಕ್ಕೆ 12ವರ್ಷ ಅವಕಾಶವಿತ್ತಲ್ಲವೇ?. 12 ವರ್ಷದಿಂದ ಕೇಂದ್ರದಲ್ಲಿ ಆಡಳಿತ ನಡೆಸುತ್ತಿದ್ದರೂ ಯೋಜನೆಯಲ್ಲಿ ಯಾವೊಂದು ಬದಲಾವಣೆ, ಸುಧಾರಣೆ ಮಾಡದೆ, ಈಗ ಇದ್ದಕ್ಕಿದ್ದಂತೆ ಜ್ಞಾನೋದಯವಾದಂತೆ ಒಂದು ವ್ಯವಸ್ಥೆಯನ್ನೇ ನೇಣಿಗೆ ಹಾಕಲು ಹೊರಟಿದ್ದಾರೆ. ಅಂದರೆ ಇಷ್ಟು ವರ್ಷ ಅವರು ಭ್ರಷ್ಟಾಚಾರದ ಭಾಗವಾಗಿದ್ದರೆ? ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಪ್ರಶ್ನಿಸಿದ್ದಾರೆ. ದೇಶದ ಸುಮಾರು 12 ಕೋಟಿಗೂ ಅಧಿಕ ಬಡಜನರು, ಕಾರ್ಮಿಕರು, 6 ಕೋಟಿಗೂ ಅಧಿಕ ಮಹಿಳಾ ಕಾರ್ಮಿಕರು, 3 ಕೋಟಿಗೂ ಅಧಿಕ ಪರಿಶಿಷ್ಟ ಜಾತಿ, ವರ್ಗದ ಜನರು ತಮ್ಮ ಜೀವನೋಪಾಯಕ್ಕಾಗಿ ಕಳೆದ 20 ವರ್ಷಗಳಿಂದ ಯಾವ ಯೋಜನೆಯ ಮೇಲೆ ಅವಲಂಬಿತರಾಗಿದ್ದಾರೋ ಆ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿದ್ದಾರೆ. ಬಡವರು ಬಡವರಾಗಿಯೇ ಇರಬೇಕು, ಅವರು ಜೀತದ ಆಳಾಗಿಯೇ ಇರಬೇಕು, ಮಹಿಳೆಯರು ಸಬಲೀಕರಣಗೊಳ್ಳಬಾರದು, ಅವರು ಸಮಾಜದ ಮುಖ್ಯ ವಾಹಿನಿಗೆ ಬರಬಾರದು ಎನ್ನುವ ಮನೋಸ್ಥಿತಿ ಬಿಜೆಪಿಯವರದ್ದು ಎಂದು ಅವರು ಹೇಳಿದ್ದಾರೆ. ಸೋನಿಯಾಗಾಂಧಿ ನಾಯಕತ್ವದಲ್ಲಿ ಮನಮೋಹನ್ ಸಿಂಗ್ ಸರಕಾರ 20 ವರ್ಷಗಳ ಹಿಂದೆ ಜಾರಿಗೆ ತಂದಿದ್ದ ಸಾಂವಿಧಾನಿಕ ಹಕ್ಕಾಗಿ ಬಂದಿರುವ ಮನರೇಗಾ ಯೋಜನೆಯನ್ನು ನಾಶ ಮಾಡಲು ಹೊರಟಿರುವುದು ದೊಡ್ಡ ಆಘಾತವಾಗಿದೆ. ಮನರೇಗಾ ಉಳಿಸಬೇಕೆಂದು ಕಾಂಗ್ರೆಸ್ ಪಕ್ಷ ನಾಳೆ(ಜ.27) ರಾಜಭವನ ಚಲೋ ನಡೆಸಲಿದೆ. ಪ್ರತಿ ತಾಲೂಕಿನಲ್ಲೂ ಪಾದಯಾತ್ರೆ ನಡೆಸಲಾಗುವುದು. ಪ್ರತಿ ಪಂಚಾಯತಿ ಮಟ್ಟದಲ್ಲೂ ಹೋರಾಟ ಹಮ್ಮಿಕೊಳ್ಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ. ಮನರೇಗಾ ಮರು ಸ್ಥಾಪಿಸುವವರೆಗೂ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸಿದ್ದರಾಮಯ್ಯ ನೇತೃತ್ವದಲ್ಲಿ ಹೋರಾಟ ಮಾಡಲಾಗುವುದು ಎಂದು ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ.

ವಾರ್ತಾ ಭಾರತಿ 27 Jan 2026 12:13 am

‘ಗೋ ಮೂತ್ರ’ ಸೇವೆನೆಗೆ ಕರೆ ನೀಡಿದ್ದ ಪ್ರೊಫೆಸರ್ ಕಾಮಕೋಟಿಗೆ ಪದ್ಮಶ್ರೀ - ಕಾಂಗ್ರೆಸ್ ಟೀಕೆ

ಐಐಟಿ ಮದ್ರಾಸ್ ನಿರ್ದೇಶಕ ವಿ. ಕಾಮಕೋಟಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಈ ಗೌರವ ಸಂದಿದ್ದರೂ, ಗೋಮೂತ್ರ ಕುರಿತು ಅವರು ನೀಡಿದ್ದ ಹೇಳಿಕೆಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಟೀಕಿಸಿದೆ. ಈ ಪ್ರಶಸ್ತಿ ರಾಷ್ಟ್ರೀಯ ಅಭಿವೃದ್ಧಿ ಗುರಿಗಳಿಗಾಗಿ ಇನ್ನಷ್ಟು ಶ್ರಮಿಸಲು ಪ್ರೇರಣೆ ನೀಡುತ್ತದೆ ಎಂದು ಕಾಮಕೋಟಿ ಪ್ರತಿಕ್ರಿಯಿಸಿದ್ದಾರೆ.

ವಿಜಯ ಕರ್ನಾಟಕ 27 Jan 2026 12:06 am

ಗಣರಾಜ್ಯೋತ್ಸವ ಪರೇಡ್ | ಖರ್ಗೆ–ರಾಹುಲ್‌ಗೆ ಮೂರನೇ ಸಾಲಿನಲ್ಲಿ ಆಸನ!

‘ಪ್ರೋಟೋಕಾಲ್ ಅವ್ಯವಸ್ಥೆ’ ಎಂದು ಕಾಂಗ್ರೆಸ್ ಆರೋಪ

ವಾರ್ತಾ ಭಾರತಿ 27 Jan 2026 12:01 am

ಆಳ್ವಾಸ್‌ನ ಗಣರಾಜ್ಯೋತ್ಸವದ ವೈಭವದಲ್ಲಿ 30,000ಕ್ಕೂ ಅಧಿಕ ಮಂದಿ ಭಾಗಿ

ಮಂಗಳೂರು, ಜ.26: ಕ್ರಿಯಾಶೀಲ ನ್ಯಾಯಾಂಗದಿಂದ ಸದೃಢ ಪ್ರಜಾಪ್ರಭುತ್ವ, ಜಾತಿ ಮತ ಮೀರಿದ ಬಾಂಧವ್ಯ ಹಾಗೂ ಸಮಾನತೆಯೇ ದೇಶದ ಸುಭದ್ರ ಅಡಿಪಾಯ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅಭಿಪ್ರಾಯಪಟ್ಟಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಪುತ್ತಿಗೆ ವನಜಾಕ್ಷಿ ಶ್ರೀಪತಿ ಭಟ್ ವೇದಿಕೆಯಲ್ಲಿ ಸೋಮವಾರ ಹಮ್ಮಿಕೊಂಡ ಗಣರಾಜ್ಯೋತ್ಸವ ಆಚರಣೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು, ಆಡಳಿತಾಧಿಕಾರಿಗಳು, ಬೋಧಕ, ಬೋಧಕೇತರ ಸಿಬ್ಬಂದಿ, ಪೋಷಕರು, ವಿದ್ಯಾರ್ಥಿಗಳು, ಸ್ಥಳೀ ಯರು ಸೇರಿದಂತೆ 30,000ಕ್ಕೂ ಅಧಿಕ ಜನರು ವಿದ್ಯಾಗಿರಿಯಲ್ಲಿ ಸೇರಿದ್ದರು. ಆಳ್ವಾಸ್ ಸಂಸ್ಥೆಯ 6,257 ವಿದ್ಯಾರ್ಥಿಗಳು ಕೇಸರಿ, ಬಿಳಿ, ಹಸಿರು ಬಣ್ಣದಲ್ಲಿ ಭಾರತವನ್ನು ಪ್ರದರ್ಶಿಸಿದರು. ಸಾಂಸ್ಕೃತಿಕ ತಂಡದಿಂದ ಗಾಯನ ನಡೆಯಿತು. ಸುಮಾರು 300ಕ್ಕೂ ಅಧಿಕ ಮಾಜಿ ಸೈನಿಕರು ಧ್ವಜ ವಂದನೆ ಸಲ್ಲಿಸಿದರು. ಎನ್‌ಸಿಸಿ ಸೀನಿಯರ್ ಅಂಡರ್ ಆಫೀಸರ್ ಗೌರಿ ಜಿ.ಪಿ. ಅವರಿಂದ ಗೌರವ ರಕ್ಷೆ ಸ್ವೀಕರಿಸಿದ ನ್ಯಾಯಮೂರ್ತಿ, ಬ್ಯಾಂಡ್ ಹಾಗೂ ಗೌರವಗಳೊಂದಿಗೆ ವೇದಿಕೆಗೆ ಬಂದರು. ಸೀನಿಯರ್ ಅಂಡರ್ ಆಫೀಸರ್ ಯದುನಂದನ್ ಪರೇಡ್ ವರದಿ ಸಲ್ಲಿಸಿದರು. ಕರ್ನಾಟಕ ಸಿಇಟಿಯಲ್ಲಿ ಪ್ರಥಮ ರ‍್ಯಾಂಕ್ ಪಡೆದ ಅಕ್ಷಯ್ ಹೆಗ್ಡೆ ಅವರಿಗೆ 2 ಲಕ್ಷ ರೂ. ನೀಡಿ ಗೌರವಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ, ವ್ಯವಸ್ಥಾಪಕ ಟ್ರಸ್ಟಿಗಳಾದ ವಿವೇಕ್ ಆಳ್ವ, ಡಾ.ವಿನಯ್ ಆಳ್ವ, ಶ್ರೀಪತಿ ಭಟ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಉಪಸ್ಥಿತರಿದ್ದರು. ಉಪನ್ಯಾಸಕ ರಾಜೇಶ್ ಡಿಸೋಜ, ಕಲಾ ವಿಭಾಗದ ಡೀನ್ ಕೆ.ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.    

ವಾರ್ತಾ ಭಾರತಿ 26 Jan 2026 11:54 pm

ಕರ್ನಾಟಕ ರಣಜಿ ತಂಡದಲ್ಲಿ ಮಹತ್ವದ ಬೆಳವಣಿಗೆ: ಮಾಯಾಂಕ್ ಅಗರ್ವಾಲ್ ಕೆಳಗಿಳಿಸಿ ದೇವದತ್ ಪಡಿಕ್ಕಲ್ ಗೆ ನಾಯಕತ್ವ!

Karnataka Ranji Team- ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ವಿರುದ್ಧ ಸೋಲಿನ ಬಳಿಕ ಕರ್ನಾಟಕ ರಣಜಿ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಮುಂಬರುವ ಪಂಜಾಬ್ ವಿರುದ್ಧದ ಪಂದ್ಯಕ್ಕೆ ಮಾಯಾಂಕ್ ಅಗರ್ವಾಲ್ ಅವರ ಬದಲಿಗೆ ಯುವ ಬ್ಯಾಟರ್ ದೇವದತ್ ಪಡಿಕ್ಕಲ್ ಅವರು ನೂತನ ನಾಯಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಹಿರಿಯ ಆಟಗಾರ ಕೆಎಲ್ ರಾಹುಲ್ ತಂಡಕ್ಕೆ ಮರಳಿದ್ದು, ಕರುಣ್ ನಾಯರ್ ಅವರು ಗಾಯದ ಸಮಸ್ಯೆಯಿಂದಾಗಿ ಹೊರಗುಳಿದಿದ್ದಾರೆ. ನಾಕೌಟ್ ಹಂತಕ್ಕೇರಲು ಕರ್ನಾಟಕ ಈ ಪಂದ್ಯವನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ವಿಜಯ ಕರ್ನಾಟಕ 26 Jan 2026 11:40 pm

WPL 2026: ಡಬ್ಲ್ಯೂಪಿಎಲ್‌ ಇತಿಹಾಸದಲ್ಲೇ ಮೊದಲ ಶತಕ ಸಿಡಿಸಿದ ನ್ಯಾಟ್ ಸಿವರ್-ಬ್ರಂಟ್

WPL 2026: ಮಹಿಳಾ ಪ್ರೀಮಿಯರ್ ಲೀಗ್‌ (WPL) ಇತಿಹಾಸದಲ್ಲಿ ಕೊನೆಗೂ ಮೊದಲ ಶತಕ ದಾಖಲಾಗಿದೆ. ನಾಲ್ಕನೇ ಸೀಸನ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ಆಲ್‌ರೌಂಡರ್ ನ್ಯಾಟ್ ಸಿವರ್-ಬ್ರಂಟ್ ಈ ಅಪರೂಪದ ಸಾಧನೆ ಮಾಡಿದ್ದಾರೆ. ಹಾಗಾದ್ರೆ, ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಡಬ್ಲ್ಯೂಪಿಎಲ್ ಆರಂಭ ಆದಾಗಿನಿಂದಲೂ ಹಲವು ಆಟಗಾರ್ತಿಯರು ಶತಕ ಹತ್ತಿರ ಬಂದು ಕೈ ತಪ್ಪುತ್ತಲೇ ಇತ್ತು.

ಒನ್ ಇ೦ಡಿಯ 26 Jan 2026 11:34 pm

ಮಂಗಳೂರು | ಫಾದರ್ ಮುಲ್ಲರ್‌ನಲ್ಲಿ ಗಣರಾಜ್ಯೋತ್ಸವ ಆಚರಣೆ

ಮಂಗಳೂರು, ಜ.26: ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ವತಿಯಿಂದ ಭಾರತದ 77ನೇ ಗಣರಾಜ್ಯೋತ್ಸವವನ್ನು ಸೋಮವಾರ ಆಚರಿಸಲಾಯಿತು. ಸಂಸ್ಥೆಯ ಮುಂಭಾಗದ ಮೈದಾನದಲ್ಲಿ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಆಡಳಿತಾಧಿಕಾರಿ ರೆ.ಡಾ.ಮೈಕೆಲ್ ಸಾಂತುಮಾಯುರ್ ರಾಷ್ಟ್ರ ಧ್ವಜಾರೋಹಣ ಮಾಡಿದರು. ಭಾರತದ ಪ್ರಜಾಪ್ರಭುತ್ವದ ಅಡಿಪಾಯವಾಗಿ ಜಾತ್ಯತೀತತೆಯನ್ನು ರಕ್ಷಿಸುವ ಮಹತ್ವವನ್ನು ಅವರು ವಿವರಿಸಿದರು. ಫಾದರ್ ಮುಲ್ಲರ್ ಕಾಲೇಜ್ ಆಫ್ ನರ್ಸಿಂಗ್‌ನ ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆಯನ್ನು ಹಾಡಿದರು, ನಂತರ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ದೇಶಭಕ್ತಿ ಹಾಡನ್ನು ಹಾಡಿದರು. ನಿರ್ವಹಣಾ ಸಮಿತಿ, ಸಲಹಾ ಮಂಡಳಿ ಮತ್ತು ಫಾದರ್ ಮುಲ್ಲರ್ ಚಾರಿಟೇಬಲ್ ಶತಮಾನೋತ್ಸವ ಸಮಾಜದ ಸದಸ್ಯರು, ಅಧ್ಯಾಪಕರು, ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ಹಿತೈಷಿಗಳು, ಹೆಚ್ಚಿನ ಸಂಖ್ಯೆಯಲ್ಲಿ ಒಟ್ಟುಗೂಡಿದರು. ರೋಗಿಗಳು ಮತ್ತು ಅವರ ಸಹಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಡಾ.ಶಿವಶಂಕರ್ ಸ್ವಾಗತಿಸಿದರು. ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ ವಿಭಾಗದ ಡಾ.ಕ್ಯಾರೊಲ್ ಥಾಮಸ್ ನಿರೂಪಿಸಿದರು. ಫಾದರ್ ಮುಲ್ಲರ್ ಕಾಲೇಜ್ ಆಫ್ ನರ್ಸಿಂಗ್‌ನ ದೈಹಿಕ ಶಿಕ್ಷಣ ನಿರ್ದೇಶಕಿ ಸುಷ್ಮಾ ಸಹಕಾರ ನೀಡಿದರು. ನೇತ್ರವಿಜ್ಞಾನದ ಮುಖ್ಯಸ್ಥೆ ಡಾ.ಸರಿತಾ ಲೋಬೊ ಎಆರ್ ವಂದಿಸಿದರು.    

ವಾರ್ತಾ ಭಾರತಿ 26 Jan 2026 11:33 pm

ಮಂಗಳೂರು | ಕೆಲಸ ಸಿಗದ ಕಾರಣ ಆತ್ಮಹತ್ಯೆ ಮಾಡಲು ಮರವೇರಿದ ಯುವಕ !

ಮಂಗಳೂರು, ಜ.26: ಕೆಲಸ ಸಿಗದ ಹಿನ್ನೆಲೆಯಲ್ಲಿ ಯುವಕನೊಬ್ಬ ಮರವೇರಿ ಕುಳಿತು, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳುತ್ತಾ ಕೆಲಹೊತ್ತು ಆತಂಕ ಸೃಷ್ಟಿಸಿರುವ ಘಟನೆ ನಗರದ ಕರಂಗಲ್ಪಾಡಿಯಲ್ಲಿ ಸೋಮವಾರ ಸಂಜೆ ನಡೆದಿದೆ. ಬಾಗಲಕೋಟೆಯ ಭೀಮಪ್ಪ(24) ಮರ ಏರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಎಂದು ತಿಳಿದು ಬಂದಿದೆ. ಪೊಲೀಸರು, ಅಗ್ನಿಶಾಮಕ ದಳದವರು, ಸ್ಥಳೀಯರ ನೆರವಿನಿಂದ ಆತನನ್ನು ಸುರಕ್ಷಿತವಾಗಿ ಕೆಳಗಿಳಿಸಿದರು. ಉದ್ಯೋಗ ಹುಡುಕಿಕೊಂಡು ಸ್ನೇಹಿತರೊಂದಿಗೆ ಮಂಗಳೂರಿಗೆ ಬಂದಿದ್ದ ಈತ ಕೆಲಸ ಸಿಗದ ಕಾರಣಕ್ಕಾಗಿ ಮನನೊಂದು ಮರವೇರಿ ಆತ್ಮಹತ್ಯೆ ಮಾಡುವ ಯೋಚನೆ ಮಾಡಿದ್ದ ಎನ್ನಲಾಗಿದೆ. ಮರದಿಂದ ಇಳಿದ ಮೇಲೆ ಆತನನ್ನು ತಪಾಸಣೆಗಾಗಿ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ತಿಳಿದು ಬಂದಿದೆ.

ವಾರ್ತಾ ಭಾರತಿ 26 Jan 2026 11:27 pm

Lakkundi | ಚಿನ್ನದ ನಿಧಿ ಒಪ್ಪಿಸಿದ ಕುಟುಂಬಕ್ಕೆ ನಿವೇಶನ, ನಗದು, ಸರಕಾರಿ ಕೆಲಸ: ಸಚಿವ ಎಚ್.ಕೆ. ಪಾಟೀಲ್ ಘೋಷಣೆ

ಗದಗ: ಜಿಲ್ಲೆಯ ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ ನಿವೇಶನ, ಮನೆ ನಿರ್ಮಾಣಕ್ಕಾಗಿ 5 ಲಕ್ಷ ರೂ. ನಗದು ಸಹಾಯ ಹಾಗೂ ಪ್ರಜ್ವಲ್ ಅವರ ತಾಯಿ ಕಸ್ತೂರೆವ್ವ ರಿತ್ತಿಗೆ ಹೊರಗುತ್ತಿಗೆ ಆಧಾರದ ಸರಕಾರಿ ಕೆಲಸ ನೀಡಲಾಗುತ್ತದೆ ಎಂದು ಸಚಿವ ಎಚ್.ಕೆ.ಪಾಟೀಲ್ ಘೋಷಣೆ ಮಾಡಿದ್ದಾರೆ. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣದ ಬಳಿಕ ಮಾತನಾಡಿದ ಅವರು, ಪ್ರಜ್ವಲ್ ರಿತ್ತಿ ತೋರಿದ ಪ್ರಾಮಾಣಿಕತೆ ರಾಷ್ಟ್ರಕ್ಕೆ ಮಾದರಿಯಾಗಿದೆ. ಲಕ್ಕುಂಡಿಯ ಗತವೈಭವ ಸಾರುವ ನಿಧಿಯನ್ನು ಅವರು ಸರಕಾರದ ಸೊತ್ತು ಎಂದು ಭಾವಿಸಿ ಒಪ್ಪಿಸಿದ್ದಾರೆ. ಅವರಿಗೆ ಸದ್ಯ ನಿವೇಶನ, ಧನಸಹಾಯ ಹಾಗೂ ತಾಯಿ ಗಂಗಮ್ಮ ಅವರಿಗೆ ಹೊರಗುತ್ತಿಗೆ ಕೆಲಸ ನೀಡಿದ್ದೇವೆ ಎಂದರು. ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಪತ್ತೆಯಾದ ಬಂಗಾರದ ಪುರಾತನ ಮೌಲ್ಯ ನಿರ್ಧರಿಸಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಲಾಗಿದೆ. ಸಮಿತಿಯ ವರದಿ ಬಂದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದ ಸಚಿವರು, ಲಕ್ಕುಂಡಿಯನ್ನು ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿಸುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ ಎಂದು ತಿಳಿಸಿದರು.

ವಾರ್ತಾ ಭಾರತಿ 26 Jan 2026 11:22 pm

Bengaluru Sleeper Vande Bharat: ಬೆಂಗಳೂರು ಸೇರಿ ಈ 3 ಮಾರ್ಗಗಳಲ್ಲಿ ಸ್ಲೀಪರ್ ವಂದೇ ಭಾರತ್ ರೈಲು ಸೇವೆ

ನವದೆಹಲಿ:ಭಾರತೀಯ ರೈಲ್ವೆ ಜಾಲದಲ್ಲಿ ವಂದೇ ಭಾರತ್ ರೈಲುಗಳು ಕ್ರಾಂತಿಕಾರಕ ಬದಲಾವಣೆ ತಂದಿವೆ. ಇದೀಗ ಇದೇ ಜಾಲದಲ್ಲಿ ವಂದೇ ಭಾರತ್ ಸ್ಲೀಪರ್ ರೈಲು ಸಹ ಕಾರ್ಯಾಚರಣೆ ಆರಂಭಿಸಿವೆ. ರಾಜ್ಯದಿಂದ ಬೇರೆ ರಾಜ್ಯಕ್ಕೆ ತೆರಳುವ ಸುದೀರ್ಘ ಪ್ರಯಾಣದ ಸಮಯವನ್ನು ಈ ರೈಲುಗಳು ಕಡಿಮೆಗೊಳಿಸಿವೆ. ವೇಗದ ಹಾಗೂ ಸುರಕ್ಷಿತ ರೈಲು ಇವಾಗಿದ್ದು, ಅತ್ಯಾಧುನಿಕ ಸೌಲಭ್ಯ ಹೊಂದಿವೆ. ಬೆಂಗಳೂರಿಗೂ ಈ ಸ್ಲೀಪರ್ ವಂದೇ

ಒನ್ ಇ೦ಡಿಯ 26 Jan 2026 11:21 pm

ರಾಯಚೂರು| ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಕೊಲೆ ಖಂಡಿಸಿ ಮೌನ ಪ್ರತಿಭಟನೆ

ಲಿಂಗಸುಗುರು: ಧಾರವಾಡ ನಗರ ನಿವಾಸಿಯಾಗಿರುವ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಝಕಿಯಾ ಮುಲ್ಲಾರ ಕೊಲೆ ಇಡೀ ಮಾನವ ಕುಲ ತಲೆ ತಗ್ಗಿಸುವ ಹಾಗೂ ಖಂಡಿಸುವ ಘಟನೆಯಾಗಿದೆ ಎಂದು ಅಂಜುಮನ್-ಎ-ಮುಸ್ಲಿಮೀನ್ ಲಿಂಗಸೂಗೂರ ತಾಲೂಕು ಕಮಿಟಿಯು ಲಿಂಗಸುಗುರಿನ ಗಡಿಯಾರ ಚೌಕಿನಲ್ಲಿ ಮೇಣದ ಬತ್ತಿ ಬೆಳಗಿಸಿ ಮೌನ ಪ್ರತಿಭಟನೆ ನಡೆಸಿತು.   ಈ ಸಂದರ್ಭದಲ್ಲಿ ಅಂಜುಮನ್ ಲಿಂಗಸೂಗೂರ ತಾಲೂಕು ಕಮಿಟಿಯ ಗೌರವ ಅಧ್ಯಕ್ಷರಾದ ಅನ್ಸರ್, ಅಧ್ಯಕ್ಷರಾದ ಹುಸೇನ್ ಭಾಷಾ ಕೆ., ಉಪಾಧ್ಯಕ್ಷರಾದ ಮುಸ್ತಫಾ, ಪ್ರಧಾನ ಕಾರ್ಯದರ್ಶಿಯಾದ ಅಮೀನ್ , ಹಸನ್, ಆರಿಫ್, ವಸಿಂ, ಸಲೀಂ, ಅಬ್ದುಲ್ಲ ರಜಾಕ್, ಲಾಲಾ ಸಾಬ್, ಹಜರತ್, ಖಯ್ಯುಮ್, ಯುನುಸ್, ಬಾಬರ್, ಮಹೇಬೂಬ್, ಅಬ್ದುಲ್ಲ ವಹೀದ್ ಇಬ್ರಾಹಿಂ, ಅಬ್ಬಾಸ್, ಇರ್ಫಾನ್, ಹುಸೇನ್, ಅಯ್ಯುಬ್, ವಸಿಂ ಪಾಷಾ, ದಾದಾಪೀರ್ ಹಾಗೂ ಅಂಜುಮನ್ ಲಿಂಗಸೂಗೂರ ತಾಲೂಕು ಕಮಿಟಿಯ ಕಾರ್ಯಕಾರಿ ಸಮಿತಿಯ ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.  

ವಾರ್ತಾ ಭಾರತಿ 26 Jan 2026 11:19 pm

ಕೊಪ್ಪಳ| ಬೆಣಕಲ್‌ನಲ್ಲಿ ಜನಸಂಪರ್ಕ ಸಭೆ ವೇಳೆ ಶಾಸಕ ಬಸವರಾಜ ರಾಯರೆಡ್ಡಿ ಮೇಲೆ ಕಲ್ಲೆಸೆತ

ಕುಕನೂರು: ತಾಲೂಕಿನ ಬೆಣಕಲ್ ಗ್ರಾಮದಲ್ಲಿ ರವಿವಾರ ರಾತ್ರಿ ಆಯೋಜಿಸಿದ್ದ ಜನಸಂಪರ್ಕ ಸಭೆ ಕಾರ್ಯಕ್ರಮದ ವೇಳೆ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ ಅವರ ಮೇಲೆ ಕಲ್ಲೆಸೆದ ಘಟನೆ ನಡೆದಿದೆ. ಗ್ರಾಮದ ಅನ್ನದಾನೇಶ್ವರ ಮಠದ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕ ಬಸವರಾಜ ರಾಯರೆಡ್ಡಿ ಅವರು ತಮ್ಮ ಸರಕಾರದ ಸಾಧನೆಗಳನ್ನು ನೆರೆದ ಜನತೆಗೆ ವಿವರಿಸುತ್ತಿದ್ದ ಸಂದರ್ಭದಲ್ಲಿ, ಅವರ ಮುಂದೆ ಅಕಸ್ಮಾತ್ತಾಗಿ ಕಲ್ಲೊಂದು ಬಿದ್ದಿದೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಸ್ಥಳದಲ್ಲಿದ್ದ ಗ್ರಾಮಸ್ಥರು ಪರಿಶೀಲನೆ ನಡೆಸಿದಾಗ, ಮಾನಸಿಕ ಅಸ್ವಸ್ಥನೊಬ್ಬ ಈ ಕೃತ್ಯ ಎಸಗಿರುವುದು ತಿಳಿದು ಬಂದಿದೆ.

ವಾರ್ತಾ ಭಾರತಿ 26 Jan 2026 11:12 pm

ಮಂಗಳೂರು | ಇಕ್ರಾ ಅರೆಬಿಕ್ ಸ್ಕೂಲ್‌ನಲ್ಲಿ ಗಣರಾಜ್ಯೋತ್ಸವ ಆಚರಣೆ

ಮಂಗಳೂರು: ನಗರದ ಇಕ್ರಾ ಅರೆಬಿಕ್ ಸ್ಕೂಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ 77ನೇ ಗಣರಾಜ್ಯ ದಿನಾಚರಣೆಯ ಸಂದರ್ಭದಲ್ಲಿ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತವು ಬಹು ಸಂಸ್ಕೃತಿಗಳ ದೇಶವಾಗಿದ್ದು, ಜನರು ಪರಸ್ಪರ ಪ್ರೀತಿ, ವಿಶ್ವಾಸ, ಘನತೆ ಮತ್ತು ಗೌರವದೊಂದಿಗೆ ಬದುಕುವ ಅವಕಾಶವನ್ನು ಸಂವಿಧಾನ ನೀಡಿದೆ. ಆ ಮೌಲ್ಯಗಳನ್ನು ಪ್ರತಿಯೊಬ್ಬರೂ ಅರಿತುಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ರಚನಾ ಸಂಸ್ಥೆಯ ಅಧ್ಯಕ್ಷ ರಾಯ್ ಕ್ಯಾಸ್ಟಲಿನೋ ಅವರು, ದೇಶದ ಸಂವಿಧಾನವು ನಮಗೆ ನೀಡಿರುವ ಮೂಲಭೂತ ಹಕ್ಕುಗಳು ಹಾಗೂ ನಮ್ಮ ಕರ್ತವ್ಯಗಳ ಕುರಿತು ವಿವರಿಸಿದರು. ಸಂವಿಧಾನದ ಪೀಠಿಕೆಯಲ್ಲಿ ಉಲ್ಲೇಖಿಸಿರುವ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಆಶಯಗಳನ್ನು ಜೀವನದಲ್ಲಿ ಅನುಸರಿಸುವ ಅಗತ್ಯವಿದೆ ಎಂದು ಹೇಳಿದರು. ಇನ್ನೋರ್ವ ಮುಖ್ಯ ಅತಿಥಿಯಾಗಿ ಗೋಲ್ಡ್ ಸೂಕ್‌ನ ಕಾರ್ಯನಿರ್ವಾಹಕ ನಿರ್ದೇಶಕ ಆಸಿಫ್ ಇಕ್ಬಾಲ್ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇಕ್ರಾ ಅರೆಬಿಕ್ ಸ್ಕೂಲ್ ಅಧ್ಯಕ್ಷ ಮೌಲಾನಾ ಸಾಲಿಂ ನದ್ವಿ ಅವರು ವಹಿಸಿ, ಗಣರಾಜ್ಯ ದಿನದ ಮಹತ್ವವನ್ನು ವಿವರಿಸಿ ಶುಭಾಶಯಗಳನ್ನು ಕೋರಿದರು. ಕಾರ್ಯಕ್ರಮವನ್ನು ಮುಹಮ್ಮದ್ ಹುಝಾಪ ಅವರು ನಿರೂಪಿಸಿದರು.      

ವಾರ್ತಾ ಭಾರತಿ 26 Jan 2026 11:11 pm

ತುಂಗಭದ್ರಾ ಜಲಾಶಯಕ್ಕೆ ಕ್ರೆಸ್ಟ್‌ಗೇಟ್ ಅಳವಡಿಸಲು ನೀಡಲಾಗಿದ್ದ ಹಣ ಹಿಂದಕ್ಕೆ ಪಡೆದಿಲ್ಲ: ಸಚಿವ ಶಿವರಾಜ್‌ ತಂಗಡಗಿ

ಕೊಪ್ಪಳ: ತುಂಗಭದ್ರಾ ಜಲಾಶಯಕ್ಕೆ ಹೊಸ ಕ್ರೆಸ್ಟ್‌ಗೇಟ್ ಅಳವಡಿಸಲು ರಾಜ್ಯ ಸರಕಾರದಿಂದ  ನೀಡಲಾಗಿದ್ದ ಅನುದಾನವನ್ನು ಹಿಂದಕ್ಕೆ ಪಡೆದಿಲ್ಲ. ಬಿಜೆಪಿ ನಾಯಕರು ಆಧಾರ ರಹಿತ ಹೇಳಿಕೆ ನೀಡಿದ್ದಾರೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್‌ ತಂಗಡಗಿ ಹೇಳಿದರು. ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಚಿವ ಶಿವರಾಜ್‌ ತಂಗಡಗಿ, ಹೊಸ ಕ್ರೆಸ್ಟ್‌ಗೇಟ್ ಅಳವಡಿಸುವ ಕಾಮಗಾರಿ ನಿಗದಿತ ಸಮಯದಲ್ಲಿ ಪೂರ್ಣಗೊಳ್ಳಲಿದೆ. ರಾಜ್ಯ ಸರಕಾರ ತನ್ನ ಪಾಲಿನ 10 ಕೋಟಿ ಹಿಂದಕ್ಕೆ ಪಡೆದಿಲ್ಲ. ಇದೆಲ್ಲ ಆಧಾರ ರಹಿತ ಹೇಳಿಕೆಗಳಾಗಿವೆ. ಹಣವನ್ನು ಹಿಂದಕ್ಕೆ ಪಡೆಯಲಾಗಿದ್ದರೆ ದಾಖಲೆಗಳನ್ನು ಕೊಡಲಿ ಎಂದು ಹೇಳಿದರು. ಕೇಂದ್ರ ಸರಕಾರದಿಂದ ಪ್ರತಿವರ್ಷ ತುಂಗಭದ್ರಾ ಮಂಡಳಿಗೆ ಎಲ್ಲ ರಾಜ್ಯಗಳ ಪಾಲಿನ ಅನುದಾನ ಬರುತ್ತದೆ. ಅದೇ ಹಣದ ಬುಕ್ ಅಡ್ಜೆಸ್ಟ್‌ಮೆಂಟ್‌ನಿಂದ ಹಣ ಪಾವತಿಯಾಗುತ್ತದೆ. ಮೊದಲ ಬಾರಿಗೆ ಕರ್ನಾಟಕ 10 ಕೋಟಿ ಕೊಟ್ಟಿದೆ’ ಇದರ ಜೊತೆಗೆ ಆಂದ್ರ-ತೆಲಂಗಾಣ ರಾಜ್ಯಗಳು ತಮ್ಮ ಪಾಲಿನ ಹಣ ನೀಡಿವೆ ಎಂದು ಹೇಳಿದರು.  ಗೇಟ್‌ಗಳ ಅಳವಡಿಕೆ ಮಾಡಿದ ಗುತ್ತಿಗೆದಾರರಿಗೆ ಈಗಾಗಲೇ 11 ಕೋಟಿ ಪಾವತಿಸಲಾಗಿದ್ದು, ಇಂದು ಇನ್ನೂ 3.80 ಕೋಟಿ ನೀಡಲಾಗುವುದು. ‘ಜಲಾಶಯಗಳ ಸುರಕ್ಷತಾ ತಜ್ಞ ಕನ್ನಯ್ಯ ನಾಯ್ಡು ಅವರಿಗೆ ಮಾಹಿತಿ ಕೊರತೆಯಿದೆ. ನಿಗದೀತ ಸಮಯದೊಳಗೆ ಕ್ರೆಸ್ಟ್‌ಗೇಟ್‌ಗಳ ಅಳವಡಿಕೆ ಕಾಮಗಾರಿ ಪೂರ್ಣಗೊಳ್ಳುತ್ತೆ ಎಂದರು. ಈಗಾಗಲೇ 18ನೇ ಕ್ರೆಸ್ಟ್‌ಗೇಟ್ ಅಳವಡಿಸಲಾಗಿದೆ, ಇದೇ ತಿಂಗಳ 30ರ ಒಳಗೆ 4, 11, 19, 20 ಮತ್ತು 27 ಗೇಟ್ ಅಳವಡಿಕೆ ಮುಗಿಯಲಿದೆ’ ಈ ಕುರಿತು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಜೊತೆಗೂ ಚರ್ಚಿಸಲಾಗುವುದು ಎಂದರು. ಇದರ ಕುರಿತು ಮಾಧ್ಯಮಗಳಿಗೆ ತಪ್ಪು ಮಾಹಿತಿ ನೀಡಿದ ಅಧಿಕಾರಿಗಳಿಗೆ ನೋಟಿಸ್ ನೀಡಲಾಗುವುದು ಎಂದು ಶಿವರಾಜ್‌ ತಂಗಡಗಿ ಹೇಳಿದರು.   

ವಾರ್ತಾ ಭಾರತಿ 26 Jan 2026 11:03 pm

ಎದುರುಪದವು ಮಸೀದಿಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

ಮಂಗಳೂರು : ಹಯಾತುಲ್ ಇಸ್ಲಾಂ ಬದ್ರಿಯಾ ಜುಮಾ ಮಸೀದಿ ಮತ್ತು ಮದರಸ ಎದುರುಪದವು ಮೂಡುಶೆಡ್ಡೆ ಇದರ ವತಿಯಿಂದ 77ನೇ ಗಣರಾಜ್ಯೋತ್ಸವ ಸಮಾರಂಭ ನೆರವೇರಿತು. ಹಯಾತುಲ್ ಇಸ್ಲಾಂ ಬದ್ರಿಯಾ ಜುಮ್ಮಾ ಮಸೀದಿ ಮತ್ತು ಮದರಸದ ಅಧ್ಯಕ್ಷ ಮುಹಮ್ಮದ್ ಇಕ್ಬಾಲ್ ಎ.ಪಿ., ಖತೀಬ್ ಸಫ್ವಾನ್ ಇರ್ಫಾನಿ ಮುಂಡೋಳೆ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮಸೀದಿ ಉಪಾಧ್ಯಕ್ಷ ಅಬ್ದುಲ್ ರಝಕ್ ಎ ಆರ್, ಮುಅಲ್ಲಿಂ ಜಾಬೀರ್ ಜೌಹರಿ ಕಲ್ಲಡ್ಕ, ಹಿರಿಯ ಹಾಜಿ ಹನೀಫ್ ಮೌಲವಿ, ಮಾಜಿ ಉಪಾಧ್ಯಕ್ಷ ಎಂ ಡಿ ಜಬ್ಬಾರ್, ಮಾಜಿ ಸದಸ್ಯರಾದ ಅಬ್ದುಲ್ ರಝಕ್ ಮಂದಾರ, ಸಾಹುಲ್ ಹಮೀದ್, ಶೇಕ್ ಅಬ್ದುಲ್ ಖಾದರ್, ಸದಸ್ಯರಾದ ಅತಾವುಲ್ಲಾ, ಶಾಕೀರ್, ಮನ್ಸೂರ್, ಹನೀಫ್ ಕಲಾಯಿ, ಅಬ್ದುಲ್ ರಝಕ್ ಸ್ಕೈ ಮತ್ತಿತರರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 26 Jan 2026 11:01 pm

ಕಲ್ಕಟ್ಟ | ಇಲ್ಯಾಸ್ ಜುಮಾ ಮಸೀದಿಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

ಉಳ್ಳಾಲ: ಇಲ್ಯಾಸ್ ಜುಮಾ ಮಸೀದಿ ಹಾಗೂ ರಿಫಾಯಿಯ್ಯ ಮದ್ರಸ ಕಲ್ಕಟ್ಟ ಇದರ ಆಶ್ರಯದಲ್ಲಿ 77ನೇ ಗಣರಾಜ್ಯೋತ್ಸವ ಸಮಾರಂಭ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಖತೀಬ್ ಇಸ್ಹಾಕ್ ಸಖಾಫಿ ನಂದಾವರ ದುಆ ನೆರವೇರಿಸಿ ಗಣರಾಜ್ಯೋತ್ಸವದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಗೌರವ ಅಧ್ಯಕ್ಷ ಪೊಡಿಯಬ್ಬ ಹಾಜಿ, ಉಪಾಧ್ಯಕ್ಷ ಮುಹಮ್ಮದ್ ಹಾಜಿ ಕಂಡಿಕ ಧ್ವಜಾರೋಹಣಗೈದರು. ಸದುರ್ ಉಸ್ತಾದ್ ಶೆರೀಫ್ ಸಅದಿ, ಮುಅಲ್ಲಿಂ ಅಬ್ದುಲ್ ರಝಾಕ್ ಸಅದಿ, ಕಾರ್ಯದರ್ಶಿ ಹಸೈನಾರ್ ತಟ್ಲ, ಮುಹಮ್ಮದ್ ಮಾಸ್ಟರ್ ಮತ್ತಿತರರು ಉಪಸ್ಥಿತರಿದ್ದರು. ಬಶೀರ್ ಕಲ್ಕಟ್ಟ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಮೋನು ಕಲ್ಕಟ್ಟ ವಂದಿಸಿದರು.

ವಾರ್ತಾ ಭಾರತಿ 26 Jan 2026 10:56 pm

ಗದಗ: ಸಚಿವರ ಭಾಷಣ ಮಧ್ಯೆಯೇ ಎಂಎಲ್ಸಿ ಸಂಕನೂರ ಸಭಾತ್ಯಾಗ

ಗದಗ: ಜಿಲ್ಲಾ ಕ್ರೀಡಾಂಗಣದಲ್ಲಿ ಸಚಿವ ಎಚ್.ಕೆ.ಪಾಟೀಲ್ ಅವರು ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡುತ್ತಿರುವ ವೇಳೆ ವಿಬಿಜಿ ರಾಮ್ ಜಿ ಹಾಗೂ ರಾಜ್ಯಪಾಲರ ಕುರಿತು ಮಾತನಾಡಿದಾಗ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ವಿರೋಧ ವ್ಯಕ್ತಪಡಿಸಿ ಸಭಾತ್ಯಾಗ ಮಾಡಿದ ಘಟನೆ ನಡೆಯಿತು. ಸಚಿವರು ತಮ್ಮ ಭಾಷಣದ ವೇಳೆ, ರಾಜ್ಯಪಾಲರು ಹಾಗೂ ಸರಕಾರಗಳ ಮಧ್ಯೆ ಸಂವಿಧಾನಿಕ ಬಿಕಟ್ಟು ಉದ್ಭವವಾಗುತ್ತಿದೆ. ಮನರೇಗಾ ಕಾನೂನು ಕೇಂದ್ರ ಸರಕಾರ ನಿರಸನಗೊಳಿಸಿದೆ. ಮನರೇಗಾ ಮರು ಸ್ಥಾಪಿಸಬೇಕು ಎಂದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಸಂಕನೂರ, ಸಚಿವರು ಭಾಷಣ ಮಾಡುತ್ತಿದ್ದ ಸ್ಥಳಕ್ಕೆ ಬಂದು ಕೇಂದ್ರ ಸರಕಾರ ಕೂಲಿ ಕಾರ್ಮಿಕರ ಹಕ್ಕನ್ನು ಕಸಿದುಕೊಂಡಿಲ್ಲ ಎಂದು ಹೇಳಿದರೂ, ಸಚಿವರು ಭಾಷಣ ಮುಂದುವರಿಸಿದಾಗ ಸಭಾತ್ಯಾಗ ಮಾಡಿ ವೇದಿಕೆಯಿಂದ ನಿರ್ಗಮಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಕನೂರ, ಕೇಂದ್ರ ಸರಕಾರ ವಿಕಸಿತ ಭಾರತ ಜಿ ರಾಮ್ ಜಿ ಕಾನೂನು ಬಡವರ, ಕೂಲಿಕಾರರ ಉದ್ಯೋಗ ಹಕ್ಕನ್ನು ಎಲ್ಲಿ ಕಸಿದುಕೊಂಡಿದೆ. ವರ್ಷಕ್ಕೆ 100 ಇದ್ದ ದಿನವನ್ನು 125 ದಿನಕ್ಕೆ ಏರಿಸಲಾಗಿದೆ. 15 ಇಲ್ಲವೇ 30 ದಿನಗಳಿಗೊಮ್ಮೆ ಆಗುತ್ತಿದ್ದ ವೇತನವನ್ನು ಕಾನೂನಿನಡಿ ವಾರಕ್ಕೊಮ್ಮೆ ವೇತನ ನೀಡುವಂತೆ ಮಾಡಿದೆ. ವೇತನ ನೀಡುವುದು ತಡವಾದರೆ ಹೆಚ್ಚಿನ ಹಣ ನೀಡಬೇಕೆಂದು ತಿಳಿಸಲಾಗಿದೆ. ಗ್ರಾಮೀಣಾಭಿವೃದ್ಧಿಗೆ ಗ್ರಾಮಸಭೆಯಲ್ಲೇ ಯೋಜನೆಗಳನ್ನು ರೂಪಿಸಿ ಎಂದು ಹೇಳಲಾಗಿದೆ. ಇದು ಯಾವ ರೀತಿ ಕೂಲಿ ಕಾರ್ಮಿಕರ, ಬಡವರ ವಿರೊಧಿ ಎಂದು ಸಚಿವರು ಹೇಳಬೇಕು. ಆದರೆ, ಸಚಿವರು ಕೆವಲ ರಾಜಕೀಯ ಕಾರಣಕ್ಕಾಗಿ ವಿರೋಧ ಮಾಡಬಾರದು ಎಂದರು.

ವಾರ್ತಾ ಭಾರತಿ 26 Jan 2026 10:55 pm

400 ಕೋಟಿ ರೂ.ದರೋಡೆ ಪ್ರಕರಣದ ಕುರಿತು ಕೇಂದ್ರ ಸರಕಾರವೇ ತನಿಖೆ ಮಾಡಿಸಲಿ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಬೆಳಗಾವಿಯಲ್ಲಿ ಬೆಳಕಿಗೆ ಬಂದಿರುವ 400 ಕೋಟಿ ದರೋಡೆ ಪ್ರಕರಣಕ್ಕೆ ಸಂಬoಧಿಸಿದoತೆ ಕೇಂದ್ರ ಸರಕಾರವೇ ತನಿಖೆ ನಡೆಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ. ಸೋಮವಾರ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಆ ಹಣ ಯಾರದ್ದು? ಏನು ? ಎಲ್ಲಿಂದ ಬಂದಿದೆ? ಎಂಬುದೇ ಸ್ಪಷ್ಟವಾಗಿಲ್ಲ. ಮಾಧ್ಯಮ ವರದಿಗಳ ಪ್ರಕಾರ ಈ ಪ್ರಕರಣಕ್ಕೆ ಗುಜರಾತ್, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಲಿಂಕ್ ಇದೆ ಎಂದು ತಿಳಿದು ಬಂದಿದೆ. ಈ ಮೂರು ರಾಜ್ಯಗಳಲ್ಲೂ ಅದೇ ಪಕ್ಷದ ಸರಕಾರಗಳಿವೆ.  ಹಾಗಾದರೆ ಇವೆಲ್ಲವೂ ಆ ಸರಕಾರಗಳ ಮೂಗಿನ ನೆರಳಲ್ಲೇ ಹೇಗೆ ನಡೆಯುತ್ತಿದೆ ? ಹಣ ಯಾರದು ಎಂಬುದರ ಬಗ್ಗೆ ತನಿಖೆ ನಡೆಯಲಿ ಎಂದು ಒತ್ತಾಯ ಮಾಡಿದರು. ಆ 400 ಕೋಟಿ ದರೋಡೆ ಹಣ ಕಾಂಗ್ರೆಸ್ ನದ್ದಾಗಿರಲಿ ಅಥವಾ ಬಿಜೆಪಿಯದ್ದಾಗಿರಲಿ ಮೊದಲು ಈ ಬಗ್ಗೆ ಸಮಗ್ರ ತನಿಖೆ ನಡೆದರೆ ಮಾತ್ರ ಸತ್ಯಾಂಶ ಹೊರಬರಲಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು. ಡಿಮೋನಿಟೈಸೇಶನ್ ಅಂತ ದೊಡ್ಡ ಸ್ಲೋಗನ್ ಕೊಟ್ಟು, ಎಲ್ಲ ಕಪ್ಪು ಹಣ ವಾಪಸ್ ಬಂತು ಎಂದು ಪ್ರಧಾನಮಂತ್ರಿಯವರೇ ದೇಶದೆಲ್ಲೆಡೆ ಹೇಳಿಕೊಂಡು ಓಡಾಡಿದ್ದರು. ಹಾಗಿದ್ದರೆ ಈಗ ಈ 400 ಕೋಟಿ ಎಲ್ಲಿಂದ ಬಂತು ? ಎಂದು ಪ್ರಶ್ನಿಸಿದರು.   ಕರ್ನಾಟಕದ ಕೆಲ ಬಿಜೆಪಿ ಮುಖಂಡರು ಈ ಹಣವನ್ನು ತಿರುಪತಿಗೆ ಕಪ್ಪು ಹಣವನ್ನು ಬಿಳಿ ಹಣ ಮಾಡಲು ಅಥವಾ ಚುನಾವಣೆಗೆ ಬಳಸಲು ಕೊಂಡೊಯ್ಯಲಾಗುತ್ತಿದೆ ಎಂದು ಹೇಳಿರುವುದನ್ನು ಉಲ್ಲೇಖಿಸಿದ ಪ್ರಿಯಾಂಕ್ ಖರ್ಗೆ, ಹಾಗಾದರೆ ಅವರಿಗೆ ಈ ಮಾಹಿತಿ ಹೇಗೆ ಗೊತ್ತು ? ಸರಕಾರಕ್ಕೆ, ಪೊಲೀಸರಿಗೆ ಇಲ್ಲದ ಮಾಹಿತಿ ಬಿಜೆಪಿ ಶಾಸಕರಿಗೆ ಹೇಗೆ ಗೊತ್ತಾಗುತ್ತದೆ? ಅವರನ್ನು ಮೊದಲು ತನಿಖೆಗೆ ಒಳಪಡಿಸಬೇಕು ಎಂದು ಹೇಳಿದರು. ಪ್ರಧಾನಮಂತ್ರಿ ಅವರು 'ಮನ್ ಕಿ ಬಾತ್'ನಲ್ಲಿ ಭಜನ್ ಕ್ಲಬ್ ಬಗ್ಗೆ ಮಾತನಾಡುತ್ತಾರೆ. ಆದರೆ 400 ಕೋಟಿ ಹಣ ಟ್ರಕ್‌ಗಳಲ್ಲಿ ಸಾಗುತ್ತಿದೆ ಎಂಬುದು ಅವರಿಗೆ ಗೊತ್ತಿಲ್ಲವೇ? ಅಮಿತ್ ಶಾ ಅವರು ಎಲ್ಲಿದ್ದಾರೆ ? ನಿದ್ದೆ ಮಾಡುತ್ತಿದ್ದಾರಾ? ಚುನಾವಣೆ ಬಂದಾಗ ಮಾತ್ರ ಇವರೆಲ್ಲ ಕಾಣಿಸಿಕೊಳ್ಳುತ್ತಾರೆ. ಇಂತಹ ಪ್ರಶ್ನೆಗಳು ಬಂದಾಗ ಕೇವಲ ಕಾಂಗ್ರೆಸ್ ಮಾತ್ರ ಉತ್ತರಿಸಬೇಕೇ? ಬಿಜೆಪಿ ಕೂಡ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು. ಪ್ರಧಾನಮಂತ್ರಿಗೆ ಕಲಬುರಗಿ ರೊಟ್ಟಿ ಬಗ್ಗೆ ಗೊತ್ತಿರುತ್ತದೆ. ಹಾಗಾದರೆ ಈ 400 ಕೋಟಿ ಹಣ ಎಲ್ಲಿಂದ ಹೋಗುತ್ತಿದೆ ಎಂಬುದೂ ಗೊತ್ತಿರಬೇಕಲ್ವಾ? ಎಂದು ಟೀಕಿಸಿದರು. 2028ರ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಸ್ಪರ್ಧೆ ನಡೆಸಲಿದೆ ಮತ್ತು ಎಚ್.ಡಿ. ಕುಮಾರಸ್ವಾಮಿ ಸಿಎಂ ಆಗಲಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಎರಡೂ ಪಕ್ಷಗಳಿಗೆ ತಮ್ಮ ಸ್ವಂತ ಬಲದ ಮೇಲೆ ಚುನಾವಣೆ ಎದುರಿಸುವ ಶಕ್ತಿ ಇಲ್ಲ. ಅದಕ್ಕಾಗಿ ಒಂದಾಗಬೇಕಾದ ಸ್ಥಿತಿ ಬಂದಿದೆ. ಬಿಜೆಪಿಯವರು ಮೊದಲು ಕುಮಾರಸ್ವಾಮಿ ಅವರನ್ನು ತಮ್ಮ ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡಲಿ ನೋಡೋಣ. ಇವೆಲ್ಲವೂ ಈಗ ಊಹಾಪೋಹಗಳಷ್ಟೇ ಎಂದು ಹೇಳಿದರು.

ವಾರ್ತಾ ಭಾರತಿ 26 Jan 2026 10:54 pm

ಚಿತ್ರದುರ್ಗ ಬಸ್ ಸ್ಟ್ಯಾಂಡಿನಲ್ಲಿ ಬಿಎಂಟಿಸಿ ಬಸ್ಸುಗಳು ಪ್ರತ್ಯಕ್ಷ! ಮಹಾನಗರ ಸಾರಿಗೆ ಸೇವೆ ಅಷ್ಟು ದೂರಕ್ಕೂ ವಿಸ್ತರಣೆ?

ಬಿಎಂಟಿಸಿ ಬಸ್ಸುಗಳು ಬೆಂಗಳೂರಿನ ಹೊರಗಿನ ಚಿತ್ರದುರ್ಗದವರೆಗೂ ಸಂಚರಿಸುತ್ತಿವೆ. ಪ್ರಯಾಣಿಕರ ಅನುಕೂಲಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ. ರಜಾ ದಿನಗಳಲ್ಲಿ ಬೆಂಗಳೂರಿನಿಂದ ಊರುಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವುದರಿಂದ ಕೆಎಸ್ಆರ್ ಟಿಸಿ ಬಸ್ಸುಗಳ ಜೊತೆಗೆ ಬಿಎಂಟಿಸಿ ಬಸ್ಸುಗಳನ್ನೂ ಬಳಸಲಾಗುತ್ತಿದೆ. ಇದರಿಂದ ಪ್ರಯಾಣಿಕರಿಗೆ ಅನುಕೂಲವಾಗುವುದರ ಜೊತೆಗೆ ಬಿಎಂಟಿಸಿಗೂ ಆದಾಯ ಲಭಿಸುತ್ತಿದೆ.

ವಿಜಯ ಕರ್ನಾಟಕ 26 Jan 2026 10:52 pm

ಅಮೆರಿಕಕ್ಕೆ ಪರಮಾಣು ರಹಸ್ಯ ಮಾರಾಟ ಆರೋಪ; ಚೀನಾದ ಉನ್ನತ ಮಿಲಿಟರಿ ಜನರಲ್‌ ಬಂಧನಕ್ಕೆ ಕ್ಸಿ ಆದೇಶ!

ಚೀನಾದ ಪರಮಾಣು ಯೋಜನೆಗಳ ರಹಸ್ಯ ಮಾಹಿತಿಯನ್ನು ಅಮೆರಿಕಕ್ಕೆ ಮಾರಾಟ ಮಾಡಿದ ಆರೋಪದ ಮೇಲೆ, ಪೀಪಲ್ಸ್‌ ಲಿಬರೇಷನ್‌ ಆರ್ಮಿ (ಪಿಎಲ್‌ಎ) ಜನರಲ್‌ ಜಾಂಗ್ ಯೂಕ್ಸಿಯಾ ಅವರನ್ನು ಬಂಧಿಸಲಾಗಿದೆ. ಹಿರಿಯ ಸೈನ್ಯಾಧಿಕಾರಿಗಳ ಬಡ್ತಿಯಲ್ಲಿ ಲಂಚ ಸ್ವೀಕರಿಸಿದ ಆರೋಪವನ್ನೂ ಜಾಂಗ್ ಯೂಕ್ಸಿಯಾ ಎದುರಿಸುತ್ತಿದ್ದಾರೆ. ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರ ಆದೇಶದ ಮೇಲೆ ಜಾಂಗ್ ಯೂಕ್ಸಿಯಾ ಅವರನ್ನು ಬಂಧಿಸಲಾಗಿದ್ದು, ತನಿಖೆಯಲ್ಲಿ ಆರೋಪ ಸಾಬೀತಾದರೆ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಇಲ್ಲಿದೆ ಮಾಹಿತಿ.

ವಿಜಯ ಕರ್ನಾಟಕ 26 Jan 2026 10:50 pm

ಮಂಗಳೂರು | ಮಾದಕ ವಸ್ತು ಸೇವನೆ ಆರೋಪ: ಓರ್ವನ ಬಂಧನ

ಮಂಗಳೂರು, ಜ.26: ನಗರದ ಜೆಪ್ಪು ಕುಡ್ಪಾಡಿ ಮೈದಾನದ ಬಳಿ ಅಮಲು ಪದಾರ್ಥ ಸೇವಿಸಿದ್ದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ವಿಜೇಶ್ ಕುಮಾರ (38) ಬಂಧಿತ ಆರೋಪಿ. ಜ. 23 ರಂದು ರಾತ್ರಿ 9ಗಂಟೆಯ ಹೊತ್ತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಲಕ್ಷ್ಮಣ್ ಸಾಲಾಟಾಗಿ ಎಂಬವರು ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಜೆಪ್ಪು ಕುಡ್ಪಾಡಿ ಮೈದಾನ ಬಳಿ ಸಾರ್ವಜನಿಕ ಸ್ಥಳದಲ್ಲಿ ಯಾವುದೋ ಮಾದಕ ವಸ್ತುವನ್ನು ಸೇವನೆ ಮಾಡಿಕೊಂಡು ಅಮಲಿನಲ್ಲಿ ಸಾರ್ವಜನಿಕರಿಗೆ ತೊಂದರೆಪಡಿಸುತ್ತಿದ್ದವನನ್ನು ಕಂಡು ಆತನನ್ನು ಹಿಡಿದು ವಿಚಾರಿಸಿದಾಗ ಆತನು ಮಾದಕ ವಸ್ತು ಸೇವನೆ ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾನೆ. ಬಳಿಕ ಆತನನ್ನು ಮಂಗಳೂರು ನಗರ ಸರಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಪರೀಕ್ಷೆಗೆ ಒಳಪಡಿಸಿದಾಗ ಆತ ಮಾದಕ ವಸ್ತು ಸೇವನೆ ಮಾಡಿರುವುದು ದೃಡಪಟ್ಟಿದೆ ಎಂದು ತಿಳಿದು ಬಂದಿದೆ. ಆರೋಪಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಾರ್ತಾ ಭಾರತಿ 26 Jan 2026 10:49 pm

ಮಂಗಳೂರು | ಬಸ್‌ನಲ್ಲಿ ಚಿನ್ನಾಭರಣವಿದ್ದ ಬ್ಯಾಗ್ ಕಳವು : ದೂರು ದಾಖಲು

ಮಂಗಳೂರು, ಜ.26: ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವಿರುವ ವ್ಯಾನಿಟಿ ಬ್ಯಾಗ್ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನ್ನಿಂದ ಕಳವಾದ ಘಟನೆ ವರದಿಯಾಗಿದೆ. ಮಂಗಳೂರಿನ ದೇವಸ್ಥಾನಗಳಿಗೆ ದರ್ಶನ ಪಡೆಯಲು ಬಂದಿದ್ದ ಪದ್ಮಜಾ ಎಂಬವರು ಜ.23ರಂದು ಬೆಂಗಳೂರಿಗೆ ವಾಪಸಾಗಲು ಮಂಗಳೂರು ಬಸ್ ನಿಲ್ದ್ದಾಣದಲ್ಲಿ ರಾತ್ರಿ 7:15ಕ್ಕೆ ಬಸ್ ನ ಕ್ಯಾಬಿನ್ ನಲ್ಲಿ ಬ್ಯಾಗನ್ನು ಇಟ್ಟಿದ್ದರು. ಬಸ್ ಹೊರಟು ಸ್ವಲ್ಪ ದೂರ ತಲುಪಿದಾಗ ಚಿನ್ನಭರಣವಿರುವ ಬ್ಯಾಗ್ ಕಾಣೆಯಾಗಿತ್ತು. ನಂತರ ಬಸ್ ಅನ್ನು ನಿಲ್ಲಿಸಿ ಬಸ್ ನ ಎಲ್ಲಾ ಕಡೆ ಹುಡುಕಾಡಿದರೂ ಬ್ಯಾಗ್ ಸಿಗಲಿಲ್ಲ. ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳರು ಅವರ ಬ್ಯಾಗ್ ಅನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಬ್ಯಾಗ್ ನಲ್ಲಿ 20 ಸಾವಿರ ರೂಪಾಯಿ ನಗದು ಹಣ, 18 ಗ್ರಾಂ ತೂಕದ ಎರಡು ಚಿನ್ನದ ಬಳೆ , 18 ಗ್ರಾಂ ತೂಕದ ಚಿನ್ನದ ಚೈನ್, 6 ಗ್ರಾಂ ತೂಕದ ಚಿನ್ನದ ನೆಕ್ಲೆಸ್ ,3 ಗ್ರಾಂ ತೂಕದ ಒಂದು ಚಿನ್ನದ ಉಂಗುರ ಸೇರಿದಂತೆ ಒಟ್ಟು 45 ಗ್ರಾಂ ತೂಕದ ಚಿನ್ನಾಭರಣ, 1ಇಯರ್ ಫೋನ್ ಚಾರ್ಜರ್, 2 ಪೆನ್ ಡ್ರೈವ್ ಗಳು-ಸೇರಿದಂತೆ ಒಟ್ಟು 4,80,000 ರೂ. ಮೊತ್ತದ ಸೊತ್ತುಗಳು ಕಳವಾಗಿದೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಈ ಸಂಬಂಧ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ವಾರ್ತಾ ಭಾರತಿ 26 Jan 2026 10:36 pm

ಮಂಗಳೂರು | ಕಾರಿನಲ್ಲಿ ಮಾರಕಾಸ್ತ್ರ ಸಾಗಾಟ ಪತ್ತೆ : ಪ್ರಕರಣ ದಾಖಲು

ಮಂಗಳೂರು, ಜ.26: ಮುಡಿಪು ಚೆಕ್ ಪೋಸ್ಟ್ ಬಳಿ ಶನಿವಾರ ರಾತ್ರಿ ಕಾರಿನಲ್ಲಿವ್ಯಕ್ತಿಯೊಬ್ಬನು ಮಾರಕಾಸ್ತ್ರ ವನ್ನು ಕೊಂಡೊಯ್ಯುತ್ತಿರುವುದನ್ನು ಕೊಣಾಜೆ ಪೊಲೀಸರು ಪತ್ತೆ ಹಚ್ಚಿ ವಶಪಡಿಸಿಕೊಂಡಿರುವ ಘಟನೆ ವರದಿಯಾಗಿದೆ. ಕೊಣಾಜೆ ಪೊಲೀಸ್ ಠಾಣೆಯ ಎಎಸ್ಐ ಮೋಹನ್ ಎಲ್ ಅವರು ಸಿಬ್ಬಂದಿಯೊಂದಿಗೆ ಪೊಲೀಸ್ ಠಾಣಾ ಸರಹದ್ದಿನಲ್ಲಿ ತಡರಾತ್ರಿ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಮುಡಿಪು ಚೆಕ್ ಪೋಸ್ಟ್ ಬಳಿ ಕಾರೊಂದನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ಕಾರಿನ ಡಿಕ್ಕಿಯಲ್ಲಿ 6 ಇಂಚು ಮರದ ಇಡಿ ಇರುವ 2 ಅಡಿ ಉದ್ದದ ತುದಿ ಬೆಂಡಾಗಿರುವ ಮಚ್ಚು ಪತ್ತೆಯಾಗಿದೆ. ಈ ಮಚ್ಚನ್ನು ಆರೋಪಿಯು ಅಕ್ರಮವಾಗಿ ತಡರಾತ್ರಿಯಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರುವ ಉದ್ದೇಶದಿಂದ ಕೊಂಡೊಯ್ಯುತ್ತಿದ್ದ ಎನ್ನಲಾಗಿದ್ದು, ಕಾರನ್ನು ಮಾರಕಾಸ್ತ್ರ ಸಮೇತ ವಶಪಡಿಸಿಕೊಂಡು ಆರೋಪಿ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಾರ್ತಾ ಭಾರತಿ 26 Jan 2026 10:31 pm

Venezuelaದಲ್ಲಿ ಅಮೆರಿಕಾದಿಂದ ರಹಸ್ಯ ಅಸ್ತ್ರ ಬಳಕೆ: ಟ್ರಂಪ್

ವಾಷಿಂಗ್ಟನ್, ಜ.26: ವೆನೆಝುವೆಲಾ ಅಧ್ಯಕ್ಷ ನಿಕೋಲಸ್ ಮಡುರೋರನ್ನು ಸೆರೆ ಹಿಡಿಯಲು ಅಮೆರಿಕಾ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಎದುರಾಳಿಗಳನ್ನು ‘ದಿಗ್ಭ್ರಮೆಗೊಳಿಸುವ’ ರಹಸ್ಯ ಅಸ್ತ್ರವನ್ನು ಅಮೆರಿಕಾ ಬಳಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ವೆನೆಝುವೆಲಾದ ಪಡೆಗಳ ಬಳಿ ರಷ್ಯ ಮತ್ತು ಚೀನಾದ ರಾಕೆಟ್‌ಗಳಿದ್ದವು. ಆದರೆ ನಮ್ಮ ರಹಸ್ಯ ಅಸ್ತ್ರವನ್ನು ಪ್ರಯೋಗಿಸಿದಾಗ ಅವು ನಿಷ್ಕ್ರಿಯಗೊಂಡವು. ನಾವು ಅಧ್ಯಕ್ಷರ ಅರಮನೆಯೊಳಗೆ ಪ್ರವೇಶಿಸಿದರೂ ಅವರು ರಾಕೆಟ್‌ನ ಬಟನ್ ಒತ್ತುತ್ತಲೇ ಇದ್ದರು. ಆದರೆ ರಾಕೆಟ್‌ಗಳು ನಿಷ್ಕ್ರಿಯವಾಗಿದ್ದವು. ನಾವು ರಾಜಧಾನಿ ಕ್ಯಾರಕಾಸ್‌ನಲ್ಲಿ ಬಹುತೇಕ ಎಲ್ಲಾ ದೀಪಗಳನ್ನೂ ಆರಿಸಿದ್ದೆವು’ ಎಂದು ಟ್ರಂಪ್ ಹೇಳಿರುವುದಾಗಿ ವರದಿಯಾಗಿದೆ.

ವಾರ್ತಾ ಭಾರತಿ 26 Jan 2026 10:31 pm

ಎಲ್ಲವನ್ನೂ ಪರಿಶೀಲಿಸುತ್ತೇವೆ: ಮಿನ್ನಿಯಾಪೋಲಿಸ್ ಗುಂಡಿನ ದಾಳಿ ಬಳಿಕ ಟ್ರಂಪ್ ಹೇಳಿಕೆ

ವಾಷಿಂಗ್ಟನ್, ಜ.26: ಶನಿವಾರ ಮಿನ್ನಿಯಾಪೋಲಿಸ್‌ನಲ್ಲಿ ವಲಸೆ ಅಧಿಕಾರಿಗಳ ಗುಂಡಿನ ದಾಳಿಯಲ್ಲಿ 37 ವರ್ಷದ ನರ್ಸ್ ಅಲೆಕ್ಸ್ ಪ್ರೆಟ್ಟಿ ಸಾವನ್ನಪ್ಪಿದ ಬಳಿಕ, ತನ್ನ ಆಡಳಿತವು ‘ಎಲ್ಲವನ್ನೂ ಪರಿಶೀಲಿಸುತ್ತಿದೆ’ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಘಟನೆಯ ಸಂದರ್ಭದಲ್ಲಿ ಅಧಿಕಾರಿಯ ನಡೆ ಸರಿಯೇ ಎಂಬ ಪ್ರಶ್ನೆಗೆ ಟ್ರಂಪ್, ‘ನಾವು ಪರಿಶೀಲಿಸುತ್ತೇವೆ. ನಾವು ಎಲ್ಲವನ್ನೂ ಪರಿಶೀಲಿಸುತ್ತೇವೆ ಮತ್ತು ಒಂದು ನಿರ್ಣಯಕ್ಕೆ ಬರುತ್ತೇವೆ’ ಎಂದು ಉತ್ತರಿಸಿದ್ದಾರೆ. ಅಂತಿಮವಾಗಿ ನಗರದಿಂದ ವಲಸೆ ಅಧಿಕಾರಿಗಳನ್ನು ಹಿಂತೆಗೆದುಕೊಳ್ಳುವುದಾಗಿ ಟ್ರಂಪ್ ಹೇಳಿದ್ದಾರೆ. ಆದರೆ ಕಾಲಮಿತಿ ನೀಡಿಲ್ಲ ಎಂದು ‘ವಾಲ್ ಸ್ಟ್ರೀಟ್ ಜರ್ನಲ್’ ವರದಿ ಮಾಡಿದೆ. ಈ ನಡುವೆ, ರವಿವಾರ ಮಿನ್ನಿಯಾಪೋಲಿಸ್ ಹಾಗೂ ಅಮೆರಿಕಾದ ಇತರ ನಗರಗಳಲ್ಲಿ ಪ್ರತಿಭಟನೆ ಮುಂದುವರಿದಿದೆ. ಈ ಘಟನೆ ಫೆಡರಲ್ ಅಧಿಕಾರಿಗಳು ಹಾಗೂ ರಾಜ್ಯದ ಅಧಿಕಾರಿಗಳ ನಡುವೆ ಹೊಸ ತಿಕ್ಕಾಟಕ್ಕೆ ನಾಂದಿ ಹಾಡಿದೆ. ಟ್ರಂಪ್ ಆಡಳಿತವು ಪ್ರೆಟ್ಟಿಯ ಮೇಲೆ ಗುಂಡು ಹಾರಿಸಿದ ಅಧಿಕಾರಿಯನ್ನು ಸಮರ್ಥಿಸಿಕೊಂಡಿದ್ದು, ಪ್ರೆಟ್ಟಿ ಪಿಸ್ತೂಲನ್ನು ಝಳಪಿಸುತ್ತಿದ್ದರಿಂದ ಗುಂಡು ಹಾರಿಸಬೇಕಾಯಿತು ಎಂದು ಪ್ರತಿಪಾದಿಸಿದೆ. ಸ್ಥಳೀಯ ಅಧಿಕಾರಿಗಳು ಇದನ್ನು ನಿರಾಕರಿಸಿದ್ದು, ಪ್ರೆಟ್ಟಿಯ ಕೈಯಲ್ಲಿದ್ದ ಪಿಸ್ತೂಲ್ ನೋಂದಾಯಿತವಾಗಿತ್ತು ಮತ್ತು ಪಿಸ್ತೂಲನ್ನು ಕಸಿದುಕೊಂಡ ಬಳಿಕವೇ ಗುಂಡು ಹಾರಿಸಲಾಗಿದೆ ಎಂದು ತಿಳಿಸಿದ್ದಾರೆ. ಟ್ರಂಪ್ ಆಡಳಿತಕ್ಕೆ ಕೆಲವು ಪ್ರಮುಖ ರಿಪಬ್ಲಿಕನ್ನರಿಂದಲೂ ಒತ್ತಡ ಎದುರಾಗಿದ್ದು, ವ್ಯಾಪಕ ತನಿಖೆ ನಡೆಸಬೇಕೆಂಬ ಡೆಮಾಕ್ರಟಿಕ್ ಪಕ್ಷದ ಆಗ್ರಹಕ್ಕೆ ಧ್ವನಿ ಸೇರಿಸಿದ್ದಾರೆ.

ವಾರ್ತಾ ಭಾರತಿ 26 Jan 2026 10:30 pm

ನಕ್ಸಲ್‌ ನಿಗ್ರಹ ಕಾರ್ಯಾಚರಣೆ: ಬಾಂಬ್‌ ಸ್ಫೋಟಿಸಿ 11 ಭದ್ರತಾ ಸಿಬ್ಬಂದಿಗೆ ಗಾಯ

ರಾಯ್ಪುರ, ಜ. 26: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ರವಿವಾರ ನಡೆಸಲಾದ ನಕ್ಸಲ್‌ ನಿಗ್ರಹ ಕಾರ್ಯಾಚರಣೆಯ ವೇಳೆ ಆರು ಸ್ಫೋಟಗಳು ಸಂಭವಿಸಿ 11 ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ‘‘ಗಾಯಗೊಂಡ ಭದ್ರತಾ ಸಿಬ್ಬಂದಿಯನ್ನು ಚಿಕಿತ್ಸೆಗೆ ರಾಯ್ಪುರಕ್ಕೆ ಹೆಲಿಕಾಪ್ಟರ್‌ನಲ್ಲಿ ಒಯ್ಯಲಾಗಿದೆ. ಅವರ ಸ್ಥಿತಿ ಸ್ಥಿರವಾಗಿದೆ ಹಾಗೂ ಅವರು ಚೇತರಿಸಿಕೊಳ್ಳುತ್ತಿದ್ದಾರೆ’’ ಎಂದು ಇನ್‌ಸ್ಪೆಕ್ಟರ್‌ ಜನರಲ್‌ ಸುಂದರ್‌ರಾಜ್‌ ಪಿ. ಹೇಳಿದರು. ಛತ್ತೀಸ್‌ಗಢ–ತೆಲಂಗಾಣ ಗಡಿಯಲ್ಲಿರುವ ಕರೆಗುಟ್ಟ ಸಮೀಪದ ಅರಣ್ಯ ಪ್ರದೇಶದಲ್ಲಿ ಮಾವೋವಾದಿಗಳು ಇದ್ದಾರೆ ಎಂಬ ಮಾಹಿತಿಯ ಆಧಾರದ ಮೇಲೆ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಈ ವೇಳೆ ಬಾಂಬ್‌ಗಳು ಸ್ಫೋಟಗೊಂಡಿವೆ. ಆ ಪ್ರದೇಶವನ್ನು ಮಾವೋವಾದಿಗಳ ಸಶಸ್ತ್ರ ಘಟಕ ‘ಪೀಪಲ್ಸ್‌ ಲಿಬರೇಶನ್‌ ಗೆರಿಲ್ಲಾ ಆರ್ಮಿ’ಯ ಮೊದಲ ಬೆಟಾಲಿಯನ್‌ನ ಭದ್ರಕೋಟೆ ಎಂದು ಭಾವಿಸಲಾಗಿದೆ. ಸ್ಫೋಟಗಳು ವಿವಿಧ ಹಂತಗಳಲ್ಲಿ ಸಂಭವಿಸಿವೆ. ಮೂವರು ಭದ್ರತಾ ಸಿಬ್ಬಂದಿಗೆ ಕಾಲುಗಳಲ್ಲಿ ತೀವ್ರ ಗಾಯಗಳಾಗಿವೆ. ಇತರ ಮೂವರಿಗೆ ಕಣ್ಣಿನ ಗಾಯಗಳಾಗಿವೆ. ರಾಜ್ಯದಲ್ಲಿ ಈ ವರ್ಷ ನಡೆಸಲಾಗಿರುವ ಮಾವೋ ನಿಗ್ರಹ ಕಾರ್ಯಾಚರಣೆಯಲ್ಲಿ ಒಟ್ಟು 20 ಮಾವೋವಾದಿಗಳು ಹತರಾಗಿದ್ದಾರೆ.

ವಾರ್ತಾ ಭಾರತಿ 26 Jan 2026 10:30 pm

Mexico: ಫುಟ್‍ಬಾಲ್ ಪಂದ್ಯದ ಸಂದರ್ಭ ಶೂಟೌಟ್‌ನಲ್ಲಿ 11 ಮೃತ್ಯು

ಮೆಕ್ಸಿಕೋ ಸಿಟಿ, ಜ.26: ಮಧ್ಯ ಮೆಕ್ಸಿಕೋದ ಗ್ವಾನಾಜುವಾಟೊ ರಾಜ್ಯದ ಸಲಮ್ಯಾಂಕ ನಗರದಲ್ಲಿ ಫುಟ್‍ಬಾಲ್ ಪಂದ್ಯ ನಡೆಯುತ್ತಿದ್ದ ಮೈದಾನದಲ್ಲಿ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ 11 ಮಂದಿ ಸಾವನ್ನಪ್ಪಿರುವುದಾಗಿ ನಗರದ ಮೇಯರ್‍ರನ್ನು ಉಲ್ಲೇಖಿಸಿ ಎಎಫ್‍ಪಿ ಸುದ್ದಿಸಂಸ್ಥೆ ವರದಿ ಮಾಡಿದೆ. ಸಲಮ್ಯಾಂಕ ನಗರದ ಲೊಮ ಡೆ ಫ್ಲೋರ್ಸ್ ಪ್ರದೇಶದಲ್ಲಿ ಹವ್ಯಾಸಿ ಫುಟ್‍ಬಾಲ್ ಪಂದ್ಯ ನಡೆಯುತ್ತಿದ್ದಾಗ ದಾಳಿ ನಡೆದಿದ್ದು, ದುಷ್ಕರ್ಮಿಗಳನ್ನು ಪತ್ತೆಹಚ್ಚುವ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಾರ್ತಾ ಭಾರತಿ 26 Jan 2026 10:30 pm

ಐಸಿಸಿ ಟಿ20 ವಿಶ್ವಕಪ್ ಬಹಿಷ್ಕರಿಸಿದ ಬಾಂಗ್ಲಾದೇಶಕ್ಕೆ ಇದೀಗ ಅಂಡರ್ 19 ಕ್ರಿಕೆಟ್ ನಲ್ಲಿ ಮುಖಭಂಗ!

ICC U19 World Cup 2026- ಐಸಿಸಿ ಟಿ20 ವಿಶ್ವಕಪ್ ಬಹಿಷ್ಕರಿಸಿದ ಬಾಂಗ್ಲಾದೇಶ ಇದೀಗ ಅಂಡರ್ 19 ವಿಶ್ವಕಪ್‌ನಲ್ಲಿ ಪರಾಭವಗೊಂಡು ಹೊರಬೀಳುವ ಹಂತದಲ್ಲಿದೆ. ಸೋಮವಾರ ಇಂಗ್ಲೆಂಡ್ ವಿರುದ್ಧ ನಡೆದ ಸೂಪರ್ ಸಿಕ್ಸ್ ಹಂತದ ಪಂದ್ಯದಲ್ಲಿ ಪರಾಭವಗೊಳ್ಳುವುದರೊಂದಿಗೆ ಬಾಂಗ್ಲಾ ತಂಡದ ಸೆಮಿಫೈನಲ್ ಕನಸು ಬಹುತೇಕ ಅಂತ್ಯಗೊಂಡಿದೆ. ಟಿ20 ವಿಶ್ವಕಪ್ ಅನ್ನು ಸ್ವಯಂಕೃತಾಪರಾಧದಿಂದ ಕಳೆದುಕೊಂಡಿರುವ ಬಾಂಗ್ಲಾದೇಶ ಇದೀಗ ಕಿರಿಯರ ಕ್ರಿಕೆಟ್ ನಲ್ಲಿ ಹಿನ್ನಡೆ ಅನುಭವಿಸಿರುವುದು ಭಾರತದ ನೆರೆ ರಾಷ್ಟ್ರದ ದೊಡ್ಡ ಮುಖಭಂಗಕ್ಕೆ ಕಾರಣವಾಗಿದೆ.

ವಿಜಯ ಕರ್ನಾಟಕ 26 Jan 2026 10:29 pm

ರಿಮ್ಸ್ ನಿರ್ದೇಶಕ ಡಾ.ರಮೇಶ್‌ ಬಿ ಅವರಿಂದ ಕಲ್ಯಾಣ ಕರ್ನಾಟಕ ಭಾಗಕ್ಕೆ ಅನ್ಯಾಯ: ಡಾ.ರಝಾಕ್ ಉಸ್ತಾದ್

ರಾಯಚೂರು: ಇಲ್ಲಿನ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ರಿಮ್ಸ್) ಯಲ್ಲಿ ಲಭ್ಯವಿರುವ ವಿವಿಧ ವೃಂದದ ಹುದ್ದೆಗಳಿಗೆ ನಿಯೋಜನೆ ಮೇರೆಗೆ ಸೇವೆ ಸಲ್ಲಿಸಲು ಅವಕಾಶ ನೀಡುವಲ್ಲಿ ಸಂಸ್ಥೆಯ ಡೀನ್ ಡಾ.ರಮೇಶ್‌ ಬಿ.ಎಚ್. ರವರು ಕಲ್ಯಾಣ ಕರ್ನಾಟಕ ಪ್ರದೇಶದ ಉದ್ಯೋಗಿಗಳಿಗೆ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ರಾಜ್ಯ ಉಪಾಧ್ಯಕ್ಷ ಡಾ.ರಝಾಕ್ ಉಸ್ತಾದ್ ಅವರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದರು. ಆಡಳಿತಾತ್ಮಕ ಹುದ್ದೆಗಳಿಗೆ ನಿಯೋಜಿಸುವಾಗ ಕಲ್ಯಾಣ ಕರ್ನಾಟಕದ ಹೊರಗಿನ (ನಾನ್ ಹೆಚ್ ಕೆ) ಉದ್ಯೋಗಿಗಳಿಗೆ ಅವಕಾಶ ನೀಡುವ ಮೂಲಕ ಕಲ್ಯಾಣ ಕರ್ನಾಟಕ ಭಾಗದ ಉದ್ಯೋಗಿಗಳಿಗೆ ಅವಕಾಶವಂಚಿತರಾಗಿಸುತ್ತಿದ್ದಾರೆ. ರಿಮ್ಸ್ ಸಂಸ್ಥೆಯ ನಿರ್ದೇಶಕ ಡಾ.ರಮೇಶ್‌ ಬಿ.ಎಚ್. ಅವರು ಕಲ್ಯಾಣ ಕರ್ನಾಟಕ ಪ್ರದೇಶದವರಲ್ಲ. ಹಾಗಾಗಿ ಈ ಭಾಗದವರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ದೂರಿದರು. ಕಳೆದ ವರ್ಷ ರಿಮ್ಸ್ ಸಂಸ್ಥೆಯಡಿಯಲ್ಲಿ ನಡೆಸಲಾಗುತ್ತಿರುವ ಬಿ.ಎಸ್ಸಿ. ನರ್ಸಿಂಗ್ ಕಾಲೇಜಿಗೆ ಪ್ರಾಚಾರ್ಯರನ್ನು 371ಜೆ ನಿಯಮದಂತೆ ಕಲ್ಯಾಣ ಕರ್ನಾಟಕ ಪ್ರದೇಶದವರಿಗೆ ವಹಿಸುವಂತೆ ಕೋರಲಾಗಿತ್ತು, ಅದರಂತೆ ತಾವು ಡೀನ್ ಡಾ.ರಮೇಶ್‌ ಬಿ.ಎಚ್. ರವರಿಗೆ ಸೂಚಿಸಿದಾಗಲೂ ಇಲ್ಲಿಯವರೆಗೆ ಕ್ರಮವಹಿಸಿರುವದಿಲ್ಲ. ವಿದ್ಯಾರ್ಹತೆಯಲ್ಲಿ ಕಡಿಮೆ ಅರ್ಹತೆ, ಕಡಿಮೆ ಅನುಭವ ಹೊಂದಿರುವ, ಇತ್ತೀಚಿಗೆ ಎಂ.ಎಸ್ಸಿ. ನರ್ಸಿಂಗ್ ಪೂರೈಸಿದ ಉದ್ಯೋಗಿಗೆ ನರ್ಸಿಂಗ್ ಕಾಲೇಜು ಪ್ರಾಚಾರ್ಯರ ಹುದ್ದೆಯಲ್ಲಿ ಕಾರ್ಯನಿರ್ವಹಿಸಲು ಅವಕಾಶ ನೀಡಿರುವುದು 371ಜೆ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ.  ಬಿಎಸ್ಸಿ ನರ್ಸಿಂಗ್ ಕಾಲೇಜಿಗೆ ಕ್ಲಿನಿಕಲ್ ನರ್ಸಿಂಗ್ ವಿಭಾಗದಿಂದ ನಿಯೋಜನೆ ಮಾಡುವಾಗ 371ಜೆ ನಿಯಮಗಳನ್ವಯ  ಮೆರಿಟ್ ಆಧಾರದಲ್ಲಿ ಹಾಗೂ ಶೇ 75 ರಷ್ಟು ಕಲ್ಯಾಣ ಕರ್ನಾಟಕದವರಿಗೆ ಮಾಡಬೇಕು ಹಾಗೂ ಅರ್ಹತೆ, ಅನುಭವ, ಜೇಷ್ಠತೆಯ ಆಧಾರದಲ್ಲಿ ನಿಯೋಜನೆ ಮಾಡಬೇಕು. ಬಿ.ಎಸ್ಸಿ. ನರ್ಸಿಂಗ್ ಕಾಲೇಜಿಗೆ ಕಡ್ಡಾಯವಾಗಿ ಕಲ್ಯಾಣ ಕರ್ನಾಟಕ ಪ್ರದೇಶದವರಿಗೆ ಪ್ರಾಚಾರ್ಯರನ್ನಾಗಿ ನೇಮಿಸಬೇಕು. ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ರಿಮ್ಸ್)ಯು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಇರುವುದರಿಂದ ಕಡ್ಡಾಯವಾಗಿ ಕಲ್ಯಾಣ ಕರ್ನಾಟಕ ಪ್ರದೇಶದವರನ್ನೇ ಸಂಸ್ಥೆಯ ಡೀನ್( ನಿರ್ದೇಶಕರು) ಹುದ್ದೆಗೆ ನೇಮಿಸಬೇಕು. ಸಂಸ್ಥೆಯಲ್ಲಿ ಲಭ್ಯವಿರುವ ಆಡಳಿತಾತ್ಮಕ ಹುದ್ದೆಗಳಿಗೆ ನಿಯೋಜನೆ ಮಾಡುವಾಗ 371ಜೆ ನಿಯಮದಂತೆ ಮೀಸಲಾತಿ ನಿಗದಿಗೊಳಿಸಿ ನಿಯೋಜನೆ ಮಾಡಬೇಕು ಎಂದು ಆಗ್ರಹಿಸಿದರು. ವದು. ಬಿ.ಎಸ್ಸಿ. ನರ್ಸಿಂಗ್ ಕಾಲೇಜಿಗೆ ಕಡ್ಡಾಯವಾಗಿ ಕಲ್ಯಾಣ ಕರ್ನಾಟಕ ಪ್ರದೇಶದವರಿಗೆ ಪ್ರಾಚಾರ್ಯರನ್ನಾಗಿ ನೇಮಿಸಬೇಕು. ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ರಿಮ್ಸ್)ಯು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಇರುವದರಿಂದ ಕಡ್ಡಾಯವಾಗಿ ಕಲ್ಯಾಣ ಕರ್ನಾಟಕ ಪ್ರದೇಶದವರನ್ನೇ ಸಂಸ್ಥೆಯ ಡೀನ್( ನಿರ್ದೇಶಕರು) ಹುದ್ದೆಗೆ ನೇಮಿಸಬೇಕು. ಸಂಸ್ಥೆಯಲ್ಲಿ ಲಭ್ಯವಿರುವ ಆಡಳಿತಾತ್ಮಕ ಹುದ್ದೆಗಳಿಗೆ ನಿಯೋಜನೆ ಮಾಡುವಾಗ 371ಜೆ ನಿಯಮದಂತೆ ಮೀಸಲಾತಿ ನಿಗದಿಗೊಳಿಸಿ ನಿಯೋಜನೆ ಮಾಡಬೇಕು ಎಂದು ಆಗ್ರಹಿಸಿದರು.

ವಾರ್ತಾ ಭಾರತಿ 26 Jan 2026 10:27 pm

Bengaluru Weather: ವಾಯುಭಾರ ಕುಸಿತ ರಾಜಧಾನಿಯಲ್ಲಿ 4 ದಿನ ದಟ್ಟ ಮಂಜು! ಚಳಿ ಇನ್ನಷ್ಟು ಏರಿಕೆ - ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಬೆಂಗಳೂರು ಸೇರಿದಂತೆ ಹಲವೆಡೆ ಚಳಿಯ ಪ್ರಮಾಣ ಹೆಚ್ಚಾಗಲಿದೆ. ಮುಂದಿನ 4 ದಿನಗಳ ಕಾಲ ಮಂಜು ಮುಸುಕಿದ ವಾತಾವರಣ ಇರಲಿದ್ದು, ಉತ್ತರ ಒಳನಾಡಿನಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದ್ದು, ಬೆಳಗಿನ ವೇಳೆ ದಟ್ಟ ಹಿಮ ಬೀಳುವ ನಿರೀಕ್ಷೆಯಿದೆ.

ವಿಜಯ ಕರ್ನಾಟಕ 26 Jan 2026 10:24 pm

ಸರ್ಕಾರಿ ಅಧಿಕಾರಿಗಳಿಗೆ ಸರ್ಕಾರ ಖಡಕ್‌ ಆದೇಶ; ಜನಪ್ರತಿನಿಧಿಗಳ ಫೋನ್ ಕರೆ ಸ್ವೀಕರಿಸುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು: ಕರ್ನಾಟಕ ಸರ್ಕಾರದ ಎಲ್ಲಾ ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳಾದ ವಿಧಾನಸಭಾ ಹಾಗೂ ವಿಧಾನಪರಿಷತ್ತಿನ ಸದಸ್ಯರು ಮತ್ತು ಲೋಕಸಭಾ ಹಾಗೂ ರಾಜ್ಯ ಸಭಾ ಸದಸ್ಯರುಗಳ ದೂರವಾಣಿ ಸಂಖ್ಯೆಯನ್ನು ತಮ್ಮ ಬಳಿ ಕಡ್ಡಾಯವಾಗಿ ಇಟ್ಟುಕೊಳ್ಳಬೇಕು. ಅಲ್ಲದೇ ಇನ್ಮುಂದೆ ಅವರು ಕರೆ ಮಾಡಿದಾಗ ಕಡ್ಡಾಯವಾಗಿ ಸ್ವೀಕರಿಸುವಂತೆ ರಾಜ್ಯ ಸರ್ಕಾರವು ಖಡಕ್ ಆದೇಶ ಹೊರಡಿಸಿದೆ. ಇನ್ಮುಂದೆ ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು

ಒನ್ ಇ೦ಡಿಯ 26 Jan 2026 10:23 pm

Vijayapura | ಹಿಂದೂ ಸಮಾವೇಶದಲ್ಲಿ ಸಂವಿಧಾನ, ಅಂಬೇಡ್ಕರ್, ರಾಷ್ಟ್ರಧ್ವಜಕ್ಕೆ ಅವಮಾನ: ಡಿವಿಪಿ ಆರೋಪ

ವಿಜಯಪುರ: ವಿಜಯಪುರದಲ್ಲಿ ನಡೆದ ಹಿಂದೂ ಸಮಾವೇಶದಲ್ಲಿ ಸಂವಿಧಾನ, ಅಂಬೇಡ್ಕರ್, ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದು, ಕೂಡಲೇ ಜಿಲ್ಲಾಡಳಿತವು ಆ ಸಂಘಟಕರ ವಿರುದ್ಧ ಕ್ರಮ ಜರುಗಿಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ ಒತ್ತಾಯಿಸಿದರು. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶನಿವಾರ ಜಲನಗರದ ಬಿಡಿಎ ಮೈದಾನದಲ್ಲಿ ನಡೆದ ಹಿಂದೂ ಸಮಾವೇಶದಲ್ಲಿ ಧರ್ಮ ಜಾಗರಣ ಪ್ರಾಂತ ಸದಸ್ಯ ಹಣಮಂತ ಮಳಲಿ ಅವರು ಭಾರತವೆಂದರೆ ಕೇವಲ ಸಂವಿಧಾನ, ಅಂಬೇಡ್ಕರ್, ರಾಷ್ಟ್ರಧ್ವಜ ಅಲ್ಲ ಎಂದು ಹೇಳಿ, ನಮ್ಮ ದೇಶದ ಶ್ರೇಷ್ಠ ಸಂವಿಧಾನಕ್ಕೆ, ಅಂಬೇಡ್ಕರ್, ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಅವರ ಮೇಲೆ ಪೊಲೀಸ್ ಇಲಾಖೆ, ಜಿಲ್ಲಾಡಳಿತ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು. ಸಂವಿಧಾನಕ್ಕೆ, ಅಂಬೇಡ್ಕರ್, ರಾಷ್ಟ್ರಧ್ವಜ ಅಪಮಾನ ಮಾಡುವುದು ಹಿಂದೂ ಸಮಾವೇಶವೇ ಎಂದು ಅವರು ಪ್ರಶ್ನಿಸಿದರು. ಹಿಂದೂ ಸಮಾವೇಶ ಅಂದರೆ ಹಿಂದೂಗಳ ಹಿನ್ನೆಲೆ, ಅವರ ಉಗಮದ ಬಗ್ಗೆ ಹೇಳಿ. ಅದನ್ನು ಬಿಟ್ಟು, ಸಂವಿಧಾನ, ರಾಷ್ಟ್ರಧ್ವಜ, ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಿ, ಹಿಂದೂ ಸಮಾಜ ನಿರ್ಮಾಣ ಮಾಡಲು ಹೊರಟಿದ್ದಾರೆ. ದೇಶದಲ್ಲಿ ಎಲ್ಲರಿಗೂ ಮಾತನಾಡುವ ಹಕ್ಕು ಸಂವಿಧಾನ ನೀಡಿದೆ. ಜನರಿಗೆ ಒಳ್ಳೆಯ ಸಂದೇಶ ನೀಡುವುದನ್ನು ಬಿಟ್ಟು ಸಮಾಜದಲ್ಲಿ ಒಡಕು ಮಾಡುವ ಕೆಲಸ ಮಾಡಬೇಡಿ ಎಂದರು. ಇಂದು ಹಿಂದೂ ಸಮಾವೇಶ ಹೆಸರಲ್ಲಿ ಸುಳ್ಳನ್ನೇ ಅಫೀಮ್ ರೀತಿ ಹೇಳಿ, ಸಮಾಜದಲ್ಲಿ ಜಗಳ ಉಂಟು ಮಾಡುವ ಕೆಲಸ ಮಾಡುತ್ತಿದ್ದಾರೆ. ಜನರಿಗೆ ನೀವು ಏನು ಮಾಡಲು ಹೊರಟಿದ್ದೀರಿ ಎನ್ನುವುದನ್ನು ನೇರವಾಗಿ ಹೇಳಿ. ಇಷ್ಟವಾದರೆ ನಿಮ್ಮ ಜತೆ ಬರುತ್ತಾರೆ. ಇಲ್ಲದಿದ್ದರೆ ಬಿಡುತ್ತಾರೆ. ಅದನ್ನು ಬಿಟ್ಟು ಸುಳ್ಳು ಹುಟ್ಟು ಹಾಕಿ ಹೇಳಿಬೇಡಿ. ಕೂಡಲೇ ನೀವು ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಇವರ ಮೇಲೆ ಕಾನೂನ ಕ್ರಮ ಜರುಗಿಸಬೇಕು. ಇನ್ನೂ ನಗರದಲ್ಲಿ ಮೂರು ಕಡೆ ಸಮಾವೇಶ ಮಾಡಲು ಹೊರಟಿದ್ದಾರೆ. ಅಲ್ಲಿ ಇದೇ ತರಹ ಮಾತುಗಳು ಬಂದರೆ ನಾವು ಕಾರ್ಯಕ್ರಮಕ್ಕೆ ಅಡ್ಡಿ ಪಡೆಸುತ್ತೇವೆ. ನೀವು ಕ್ಷೇಮೆ ಕೇಳಿ ಮುಂದಿನ ಕಾರ್ಯಕ್ರಮ ಆಯೋಜನೆ ಮಾಡದಿದ್ದರೆ ನಾವು ತಡೆಯುತ್ತೇವೆ ಎಂದು ಎಚ್ಚರಿಕೆ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ರಾಜ್ಯ ಸಂಚಾಲಕ ಬಾಲಾಜಿ ಕಾಂಬಳೆ, ವಿರೇಶ ತೆಗ್ಗಿನಮನಿ ಸೇರಿದಂತೆ ಮುಂತಾದವರು ಇದ್ದರು.

ವಾರ್ತಾ ಭಾರತಿ 26 Jan 2026 10:16 pm

Gujarat : ನೆರೆಕರೆಯವರ ಜಗಳದಲ್ಲಿ ವ್ಯಕ್ತಿಯ ಬರ್ಬರ ಹತ್ಯೆ

ಅಹ್ಮದಾಬಾದ್, ಜ.26: ಮನೆಯ ಹೊರಗೆ ಕುಳಿತುಕೊಳ್ಳುವ ಕುರಿತ ಕ್ಷುಲ್ಲಕ ವಿವಾದವು ಕ್ರೂರ ಹತ್ಯೆಗೆ ಕಾರಣವಾದ ಘಟನೆ ಗುಜರಾತ್‌ನ ಗಾಂಧಿಧಾಮದ ಸತ್ರಾಹಜಾರ್ ಜುನ್ಪಾಡಾ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ಮಧ್ಯವಯಸ್ಕ ವ್ಯಕ್ತಿಯೋರ್ವನ ಮೇಲೆ ಹಲ್ಲೆ ನಡೆಸಿದ ನೆರೆಕರೆಯವರು, ಜೀವಭಯದಿಂದ ಪರಾರಿಯಾಗಲು ಯತ್ನಿಸಿದ್ದ ಆತನನ್ನು ಬೆನ್ನಟ್ಟಿ, ಆತನ ಮನೆಯ ಬಾತ್‌ರೂಮಿನಲ್ಲಿ ಮೈಮೇಲೆ ಡೀಸಿಲ್ ಸುರಿದು ಬೆಂಕಿ ಹಚ್ಚಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಆತ ಮರುದಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಕರ್ಸನ್‌ಭಾಯಿ ಮಹೇಶ್ವರಿ ಮೃತವ್ಯಕ್ತಿಯಾಗಿದ್ದು, ಅವಿವಾಹಿತನಾಗಿದ್ದ ಆತ ತಾಯಿಯೊಂದಿಗೆ ವಾಸವಾಗಿದ್ದ. ಶುಕ್ರವಾರ ಮಧ್ಯಾಹ್ ನೆರೆಕರೆಯವರೊಂದಿಗೆ ನಡೆದ ಮಾಮೂಲು ಜಗಳ ಉಲ್ಬಣಗೊಂಡು ಆತನ ಜೀವವನ್ನು ಬಲಿಪಡೆದಿದೆ. ಮೃತನ ಸೋದರನ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಮೂವರು ಮಹಿಳೆಯರು ಮತ್ತು ಓರ್ವ ಅಪರಿಚಿತ ಪುರುಷನನ್ನು ಆರೋಪಿಗಳೆಂದು ಹೆಸರಿಸಿದ್ದಾರೆ. ಮೂವರು ಮಹಿಳೆಯರನ್ನು ಬಂಧಿಸಲಾಗಿದೆ.

ವಾರ್ತಾ ಭಾರತಿ 26 Jan 2026 10:13 pm

ದ.ಕ.ಜಿಲ್ಲಾ ಕಾಂಗ್ರೆಸ್‌ನಿಂದ ಗಣರಾಜ್ಯೋತ್ಸವ ಆಚರಣೆ

ಮಂಗಳೂರು, ಜ.26: ಸಂವಿಧಾನ ಆಶಯಗಳಾದ ಅಭಿವ್ಯಕ್ತಿ ಸ್ವಾತಂತ್ರ್ಯ, ಸಾಮಾಜಿಕ ನ್ಯಾಯ, ಆರ್ಥಿಕ ಸಮಾನತೆ ಎತ್ತಿಹಿಡಿಯುವ ಕೆಲಸ ಸರಕಾರಗಳು ಮಾಡಬೇಕು. ಸರಕಾರ ಸಂವಿಧಾನ ವಿರೋಧಿ ನೀತಿ ಜಾರಿಗೆ ತಂದರೆ ಸಂವಿಧಾನದ ಮೂಲ ಆಶಯಗಳು ನಾಶವಾಗುತ್ತದೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಕಳವಳ ವ್ಯಕ್ತಪಡಿಸಿದ್ದಾರೆ. ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ 77ನೇ ಗಣರಾಜ್ಯೋತ್ಸವ ಅಂಗವಾಗಿ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಿದ್ದರು. ರಾಜ್ಯ ಕಾಂಗ್ರೆಸ್ ಸರಕಾರ ಸಂವಿಧಾನದ ಆಶಯದಡಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಸಮಸಮಾಜ ನಿರ್ಮಾಣಕ್ಕೆ ಪಣತೊಟ್ಟಿದೆ. ಸಂವಿಧಾನ ಮತ್ತು ಅದರ ಆಶಯಗಳನ್ನು ರಕ್ಷಿಸಲು ಕಾಂಗ್ರೆಸ್ ಸದಾ ಸಿದ್ಧವಾಗಿದೆ ಎಂದು ಹೇಳಿದರು. ಮನಮೋಹನ ಸಿಂಗ್ ಅವರು ದೇಶ ಪ್ರಧಾನಿ ಆಗಿದ್ದಾಗ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಗೊಳಿಸಿ ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಬಲ ನೀಡಿದ್ದರು. ಈಗ ಈ ಉದ್ಯೋಗದ ಹಕ್ಕನ್ನೇ ಕಸಿಯುವ ಕೆಲಸಕ್ಕೆ ಕೇಂದ್ರ ಸರಕಾರ ಕೈ ಹಾಕಿದೆ ಎಂದರು. ಈ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ, ಮಾಜಿ ಶಾಸಕ ಜೆ.ಆರ್.ಲೋಬೊ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಬ್ಲಾಕ್ ಅಧ್ಯಕ್ಷ ಜೆ.ಅಬ್ದುಲ್ ಸಲೀಂ, ಜಿಲ್ಲಾ ಮುಂಚೂಣಿ ಘಟಕಾಧ್ಯಕ್ಷರಾದ ಕೆ.ಕೆ.ಶಾಹುಲ್ ಹಮೀದ್, ಅಪ್ಪಿ.ಎಸ್, ಉಷಾ ಅಂಚನ್, ದಿನೇಶ್ ಮುಳೂರು, ಮುಖಂಡರಾದ ಜಯಶೀಲ ಅಡ್ಯಂತಾಯ, ಡೆನ್ನಿಸ್ ಡಿಸಿಲ್ವ, ನೀರಜ್ ಚಂದ್ರಪಾಲ್, ಟಿ.ಕೆ.ಸುಧೀರ್, ನವೀನ್ ಡಿಸೋಜಾ, ಶುಭೋದಯ ಆಳ್ವ, ಭಾಸ್ಕರ್ ರಾವ್, ಶಬ್ಬೀರ್.ಎಸ್, ಅಶೋಕ್ ಡಿ.ಕೆ, ನಮಿತಾ ಡಿ ರಾವ್, ಮಂಜುಳ ನಾಯಕ್, ರಮಾನಂದ ಪೂಜಾರಿ, ಆಲ್ವಿನ್ ಪ್ರಕಾಶ್, ಮೋಹನ್ ದಾಸ್ ಕೊಟ್ಟಾರಿ, ಕೃಷ್ಣ ಶೆಟ್ಟಿ, ಪ್ರೇಮ್, ದುರ್ಗಾ ಪ್ರಸಾದ್, ರವಿರಾಜ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಕಾಂಗ್ರೆಸ್ ಸೇವಾದಳ ಅಧ್ಯಕ್ಷ ಜೋಕಿಂ ಡಿ ಸೋಜ ಧ್ವಜ ಪ್ರಭಾರಿಯಾಗಿ ಕಾರ್ಯನಿರ್ವಹಿಸಿದರು.

ವಾರ್ತಾ ಭಾರತಿ 26 Jan 2026 10:13 pm

ಭಟ್ಕಳ | ಮುರ್ಡೇಶ್ವರ ಬಳಿ ಬಸ್–ಬೈಕ್ ನಡುವೆ ಅಪಘಾತ: ಸವಾರ ಮೃತ್ಯು

ಭಟ್ಕಳ: ಭಟ್ಕಳ ತಾಲ್ಲೂಕಿನ ಮುರ್ಡೇಶ್ವರ ಬಸ್ತಿ ಮಕ್ಕಿ ರಾಷ್ಟ್ರೀಯ ಹೆದ್ದಾರಿ–66ರಲ್ಲಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತರನ್ನು ಸಮೀಪದ ತೆರ್ನಮಕ್ಕಿ ನಿವಾಸಿ ಜೋಸೆಫ್ ಡಿ’ಸೋಜಾ (40) ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ಸುಮಾರು ಎಂಟು ಗಂಟೆ ಸುಮಾರಿಗೆ ಭಟ್ಕಳದಿಂದ ಹೊನ್ನಾವರ ಮಾರ್ಗವಾಗಿ ಬೆಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್, ರಸ್ತೆ ದಾಟುತ್ತಿದ್ದ ಬೈಕ್‌ಗೆ ಢಿಕ್ಕಿ ಹೊಡೆದಿದೆ. ಢೀಕ್ಕಿಯ ತೀವ್ರತೆಗೆ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಮರ್ಡೇಶ್ವರ ಪೊಲೀಸ್ ಠಾಣೆಯ ಪಿಎಸ್‌ಐ ಹನುಮಂತ ಬಿರಾದರ್ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಧಾವಿಸಿ, ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಕುರಿತು ಮರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ವಾರ್ತಾ ಭಾರತಿ 26 Jan 2026 10:09 pm

ಅಕ್ರಮ ಮರಳು ಗಣಿಗಾರಿಕೆ ತಡೆಯಲು ಟಾಸ್ಕ್ ಫೋರ್ಸ್ ಸಮಿತಿ ಸಮನ್ವಯತೆಯಿಂದ ಕೆಲಸ ಮಾಡಲಿದೆ: ಸಚಿವ ಶರಣಪ್ರಕಾಶ್‌ ಪಾಟೀಲ್‌

ರಾಯಚೂರು: ಜಿಲ್ಲೆಯಲ್ಲಿ ಅಕ್ರಮ ಮರಳುಗಣಿಗಾರಿಕೆ ತಡೆಯಲು ಜಿಲ್ಲಾಧಿಕಾರಿ ಅಧ್ಯಕ್ಷತೆಯ ಟಾಸ್ಕ್ ಫೋರ್ಸ್ ಸಮಿತಿ ಸಭೆ ಕರೆದು ಅಧಿಕಾರಿಗಳಿಗೆ ಸಮನ್ವಯತೆಯಿಂದ ಕೆಲಸ ಮಾಡಲು ನಿರ್ದೇಶನ ನೀಡಲಾಗುವುದು, ಅಕ್ರಮ ಗಣಿಗಾರಿಕೆ ತಡೆಯಲು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್ ತಿಳಿಸಿದರು. ಅಕ್ರಮ ಗಣಿಗಾರಿಕೆ ಬಗ್ಗೆ ಪ್ರಶ್ನಿಸಿದ್ದಕ್ಕಾಗಿ ದೇವದುರ್ಗ ಶಾಸಕಿ ಜಿ.ಕರೆಯಮ್ಮ ನಾಯಕ ಅವರ ಮನೆಗೆ ನುಗ್ಗಿರುವ ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ, ನಿರ್ಲಕ್ಷಿಸಿಲ್ಲ. ಈಗಾಗಲೇ ಎಫ್‍ಐಆರ್ ದಾಖಲಾಗಿದ್ದು ತನಿಖೆ ಮುಂದುವರಿದಿದೆ. ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆಗೆ ಯಾವುದೇ ಹೊಂದಾಣಿಕೆ ಇಲ್ಲ. ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಡಿಸಿ, ಎಸ್‍ಪಿಯವರಿಗೆ ಸೂಚಿಸಲಾಗಿದೆ. ಟೆಂಡರ್ ಆಗಿರುವ ಮರಳು ಕೇಂದ್ರಗಳಿಂದ ಕಾನೂನು ಬದ್ದವಾಗಿ ವಿಲೇವಾರಿ ನಡೆಸುವಂತೆ ಸೂಚಿಸಲಾಗುತ್ತದೆ. ಯಾವುದೇ ಅಕ್ರಮ ಚಟುವಟಿಕೆಗಳಿಗೆ ನಾನು ಬೆಂಬಲಿಸುವುದಿಲ್ಲ. ಯಾರನ್ನೂ ರಕ್ಷಿಸುವೂದೂ ಇಲ್ಲ ಎಂದು ಸ್ಪಷ್ಚಪಡಿಸಿದರು. ರಾಯಚೂರು ಶಾಖೋತ್ಪನ್ನ ಕೇಂದ್ರ ಮಾತ್ರವಲ್ಲ, ಜಿಲ್ಲೆಯಲ್ಲಿ ಏಲ್ಲಿಯೂ ಅಣುಸ್ಥಾವರ ಸ್ಥಾಪನೆಗೆ ಸಹಮತವಿಲ್ಲ. ಈಗಾಗಲೇ ಸರ್ಕಾರಕ್ಕೆ ಪತ್ರ ಬರೆದು ಸೂಚಿಸಲಾಗಿದೆ. ಕೇಂದ್ರದಿಂದ ಅಣುಸ್ಥಾವರ ಅಧಿಕಾರಿಗಳು ಭೇಟಿ ನೀಡಿರುವ ಕುರಿತು ಮಾಹಿತಿಯಿಲ್ಲ. ರಾಜ್ಯದೊಂದಿಗೆ ಯಾವುದೇ ಸಮಾಲೋಚನೆಯೂ ನಡೆದಿಲ್ಲ. ಈ ಕುರಿತು ಮಾಹಿತಿ ಸಂಗ್ರಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಲಿಂಗಸೂಗೂರು ತಾಲೂಕಿನ ಹಲ್ಕಾವಟಗಿಯಲ್ಲಿ ಅಣುಸ್ಥಾವರ ಸ್ಥಾಪಿಸುವ ಕುರಿತು ಮಾಹಿತಿ ಕೇಳಿದಾಗ ಜನರ ವಿರೋಧ ಇರುವುದಾಗಿ ಮಾಹಿತಿಯನ್ನು ನೀಡಲಾಗಿದೆ. ಕೇಂದ್ರ ಸರಕಾರ ಅಣುಸ್ಥಾವರ ಸ್ಥಾಪಿಸುವ ಕುರಿತು ಸ್ಪಷ್ಟತೆಯಿಲ್ಲ. ಅಧಿಕಾರಿಗಳು ಭೇಟಿಯಾದ ಕುರಿತು ಮಾಹಿತಿ ಪಡೆಯಲಾಗುತ್ತದೆ ಎಂದರು. ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದ್ದು 40 ಕೋಟಿ ರೂ ವೆಚ್ಚದ ಯಂತ್ರೋಪಕರಣ ಖರೀದಿಗೆ ಟೆಂಡರ್ ಪ್ರಕ್ರಿಯೆ ನಡೆಸಲು ಸೂಚಿಸಲಾಗಿದೆ. ಏಮ್ಸ್ ಸ್ಥಾಪನೆಗೆ ಕೇಂದ್ರದ ಮೇಲೆ ಒತ್ತಡ ಹಾಕುವ ಪ್ರಯತ್ನ ಮುಂದುವರೆದಿದ್ದು ಮುಖ್ಯಮಂತ್ರಿಗಳು ಮತ್ತೊಂದು ಪತ್ರ ಬರೆದು ಆಗ್ರಹಿಸಿದ್ದಾರೆ. ಮಕ್ಕಳ ಅತ್ಯಾಧುನಿಕ ಆಸ್ಪತ್ರೆ ಸ್ಥಾಪಿಸುವ ಕುರಿತು ಪ್ರಸ್ತಾವನೆಯಿಲ್ಲ. ಮುಖ್ಯಮಂತ್ರಿಗಳೊಂದಿಗೆ ಈ ಬಗ್ಗೆ ಚರ್ಚಿಸಲಾಗುತ್ತದೆ. ಎಸೆಸೆಲ್ಸಿ ಫಲಿತಾಂಶ ಹೆಚ್ಚಿಸಲು ಸ್ವಯಂಸೇವಾ ಸಂಸ್ಥೆಯೊಂದಿಗೆ ಸೇರಿ ಯೋಜನೆ ರೂಪಿಸಲು ಉದ್ದೇಶಿಸಲಾಗಿದೆ. ಈ ಬಗ್ಗೆ ಶೀಘ್ರದಲ್ಲಿ ರೂಪುರೇಷ ರೂಪಿಸಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಶಾಸಕ ದದ್ದಲ ಬಸನಗೌಡ, ಪರಿಷತ್ ಸದಸ್ಯ ಎ.ವಸಂತಕುಮಾರ್‌, ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್, ಡಿಸಿ ನಿತೀಶ್‌, ಎಸ್ಪಿ ಅರುಣಾಂಶ್ಷುಗಿರಿ, ಜಿ.ಪಂ ಸಿಇಒ ಈಶ್ವರ ಕಾಂದೂ, ಜುಬಿನ್ ಮಹೊಪಾತ್ರ ಉಪಸ್ಥಿತರಿದ್ದರು. 

ವಾರ್ತಾ ಭಾರತಿ 26 Jan 2026 10:09 pm

ಬೆಂಗಳೂರಿನಲ್ಲಿ ಜಿಟಿ ಜಿಟಿ ಮಳೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವೆಡೆ ಸೋಮವಾರ ಸಂಜೆ ಜಿಟಿ ಜಿಟಿ ಮಳೆ ಸುರಿದಿದ್ದು, ಇನ್ನೆರಡು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಸೋಮವಾರ ಬೆಐಗ್ಗೆಯಿಂದಲೂ ನಗರದಲ್ಲಿ ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನ ಬಳಿಕ ನಗರದ ವಿವಿಧ ಪ್ರದೇಶಗಳಲ್ಲಿ ಜಿಟಿ ಜಿಟಿ ಮಳೆ ಸುರಿಯಿತು. ಅದರಲ್ಲೂ ಹೆಬ್ಬಾಳ, ಆರ್‍ಟಿನಗರ, ಯಲಹಂಕ, ಸದಾಶಿವ ನಗರ, ವಿಧಾನಸೌಧ, ಮಡಿವಾಳ, ಲಕ್ಕಸಂದ್ರ, ಶಾಂತಿನಗರ, ಕೆ.ಎಚ್. ರಸ್ತೆ ಸೇರಿದಂತೆ ಅನೇಕ ಕಡೆ ಮಳೆ ಬಿದ್ದಿದೆ. ಈ ಜಿಟಿ ಜಿಟಿ ಮಳೆಯಿಂದ ಸಂಜೆ ಮನೆಗೆ ತಲುಪಬೇಕಾದ ವಾಹನ ಸವಾರರು ರಸ್ತೆಯಲ್ಲಿ ಸಿಲುಕಿದ್ದ ದೃಶ್ಯ ಕಂಡಿತು. ಕೆಲ ದಿನಗಳಿಂದ ಹಲವು ಜಿಲ್ಲೆಗಲ್ಲಿ ಮಳೆಯಾಗುತ್ತಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಬೆಂಗಳೂರು, ಹಾಸನ, ಕೊಡಗು, ಚಾಮರಾಜನಗರ ಸೇರಿದಂತೆ ಹಲವು ಕಡೆ ಮಳೆ ಸಾಧ್ಯತೆ ಇದೆ.

ವಾರ್ತಾ ಭಾರತಿ 26 Jan 2026 10:06 pm

ಕೋಟ ಹಂದಟ್ಟು ಮೂಲದ ಡಾ.ಎಚ್.ವಿ.ಹಂದೆಗೆ ಪದ್ಮಶ್ರೀ

ಉಡುಪಿ, ಜ.26: ಎರಡು ತಿಂಗಳ ಹಿಂದಷ್ಟೇ ತಮ್ಮ 99ನೇ ಜನ್ಮದಿನವನ್ನು ಆಚರಿಸಿಕೊಂಡ ತಮಿಳುನಾಡಿನ ಎಂ.ಜಿ.ರಾಮಚಂದ್ರನ್ ನೇತೃತ್ವದ ಸರಕಾರದಲ್ಲಿ ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಚೆನ್ನೈನ ಪ್ರಸಿದ್ಧ ವೈದ್ಯ ಡಾ.ಎಚ್.ವಿ.ಹಂದೆ ಅವರಿಗೆ ಈ ಬಾರಿಯ ಪದ್ಮಶ್ರೀ ಪ್ರಶಸ್ತಿ ದೊರಕಿದೆ. ಡಾ.ಎಚ್.ವಿ.ಹಂದೆ ಅವರು ಉಡುಪಿ ಜಿಲ್ಲೆ ಕೋಟ ಹಂದಟ್ಟಿನ ಪ್ರಸಿದ್ಧ ಹಂದೆ ಕುಟುಂಬದ ಮೂಲದವರು. ಆದರೆ ಹುಟ್ಟಿ ಬೆಳೆದಿದ್ದು ಎಲ್ಲವೂ ತಮಿಳುನಾಡಿನ ಕೊಯಮತ್ತೂರಿನಲ್ಲಿ. ಆದರೆ ಸ್ವಲ್ಪ ಸಮಯ ಅವರು ಮಂಗಳೂರಿನಲ್ಲೂ ಶಿಕ್ಷಣ ಪಡೆದಿದ್ದರು ಎಂಬ ಮಾಹಿತಿ ಇದೆ. ಬ್ರಿಟಿಷ್ ಆಡಳಿತದಲ್ಲಿ ಕೊಯಮತ್ತೂರಿನಲ್ಲಿ ಪ್ರಸಿದ್ಧ ಸರ್ಜನ್ ಆಗಿದ್ದ ಡಾ.ಎಚ್.ಎಂ.ಹಂದೆ ಅವರ 10 ಮಂದಿ ಮಕ್ಕಳಲ್ಲಿ ಡಾ.ಎಚ್.ವಿ.ಹಂದೆ ಅವರೂ ಒಬ್ಬರು 1927ರ ನ.28ರಂದು ಕೊಯಮತ್ತೂರಿನಲ್ಲಿ ಜನಿಸಿದ್ದ ಹಂದೆ ಅವರು ನೆಲ್ಲೂರು, ಪೆನುಕೊಂಡ, ಮಂಗಳೂರಿನಲ್ಲಿ ಆರಂಭಿಕ ವಿದ್ಯಾಭ್ಯಾಸದ ಬಳಿಕ 1950ರಲ್ಲಿ ವೈದ್ಯಕೀಯ ಪದವಿ ಪಡೆದಿದ್ದರು. 1984ರಿಂದ ಚೆನ್ನೈಯಲ್ಲಿ ‘ಹಂದೆ ಹಾಸ್ಪಿಟಲ್’ನ್ನು ಪ್ರಾರಂಭಿಸಿದ ಅವರ ಮಕ್ಕಳಿಬ್ಬರೂ ಪ್ರಸಿದ್ಧ ವೈದ್ಯರಾಗಿದ್ದು, ಡಾ. ಕೃಷ್ಣ ಹಂದೆ ಸದ್ಯ ಆಸ್ಪತ್ರೆಯ ಆಡಳಿತ ನೋಡಿಕೊಳ್ಳುತಿದ್ದಾರೆ. ಡಾ.ಎಚ್.ವಿ.ಹಂದೆ ಅವರು ಒಂದೆರಡು ವರ್ಷಗಳ ಹಿಂದಿನವರೆಗೂ ವೈದ್ಯರಾಗಿ ತನ್ನ ಆಸ್ಪತ್ರೆಯಲ್ಲಿ ರೋಗಿಗಳನ್ನು ನೋಡಿ ಸಲಹೆ ನೀಡುತ್ತಿದ್ದರು. ವೈದ್ಯ ವೃತ್ತಿಯ ಜೊತೆಗೆ ಅವರು ಸಕ್ರಿಯ ರಾಜಕಾರಣಿ ಆಗಿಯೂ ಜನಪ್ರಿಯತೆ ಪಡೆದಿದ್ದರು. ಸ್ವತಂತ್ರ ಪಾರ್ಟಿಯೊಂದಿಗೆ ಪ್ರಾರಂಭಗೊಂಡ ಅವರ ರಾಜಕೀಯ ಜೀವನ ಮುಂದೆ ಎಐಎಡಿಎಂಕೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಅರಳಿತು. ಬಳಿಕ ಬಿಜೆಪಿಗೆ ಸೇರ್ಪಡೆಗೊಂಡ ಅವರು ಅಲ್ಲೂ ಕೆಲವು ವರ್ಷ ಸಕ್ರಿಯರಾಗಿದ್ದರು. ಅಣ್ಣಾಡಿಎಂಕೆ ಪಕ್ಷದಲ್ಲಿ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಡಾ.ಹಂದೆ, ಎರಡು ಅವಧಿಗೆ ಆರೋಗ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಅವರು ರಾಜಾಜಿ ಹಾಗೂ ಎಂಜಿಆರ್ ಅವರಿಗೆ ಆತ್ಮೀಯರಾಗಿದ್ದರು. ಕೆಲವು ವರ್ಷಗಳ ಹಿಂದೆ ಅವರು ಬಿಜೆಪಿಯ ನಳಿನ್‌ಕುಮಾರ್ ಕಟೀಲು ಹಾಗೂ ಸದಾನಂದ ಗೌಡರ ಪರವಾಗಿ ಮಂಗಳೂರು ಮತ್ತು ಉಡುಪಿಗಳಲ್ಲಿ ಚುನಾವಣಾ ಪ್ರಚಾರ ಭಾಷಣಕ್ಕೂ ಆಗಮಿಸಿದ್ದರು. ಮಂಗಳೂರಿನಲ್ಲಿದ್ದಾಗ ಕ್ವಿಟ್‌ಇಂಡಿಯಾ ಚಳವಳಿಯಲ್ಲಿ ಎಚ್.ವಿ.ಹಂದೆ ಭಾಗವಹಿಸಿದ್ದರು ಎಂದು ಹೇಳಲಾಗಿದೆ. 1964ರಲ್ಲಿ ತಮಿಳುನಾಡು ವಿಧಾನಪರಿಷತ್‌ಗೆ ಸ್ವತಂತ್ರ ಅಭ್ಯರ್ಥಿಯಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ರಂಗಕ್ಕೆ ಕಾಲಿರಿಸಿದ ಅವರು ಬಳಿಕ ಸ್ವತಂತ್ರ ಪಾರ್ಟಿ ಸೇರಿದ್ದರು. 1967 ಹಾಗೂ 1971ರಲ್ಲಿ ಅವರು ಸ್ವತಂತ್ರ ಪಾರ್ಟಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದು, ರಾಜಾಜಿ ಅವರ ನಿಧನದ ಬಳಿಕ ಅಣ್ಣಾಡಿಎಂಕೆ ಪಕ್ಷ ಸೇರಿದ್ದರು. 1980ರಲ್ಲಿ ಅಸೆಂಬ್ಲಿ ಚುನಾವಣೆಯಲ್ಲಿ ಕರುಣಾನಿಧಿ ಕೈಯಲ್ಲಿ ಅಣ್ಣಾನಗರದಲ್ಲಿ 699ಮತಗಳಿಂದ ಸೋಲನನುಭವಿಸಿದ ಬಳಿಕ 1984ರಲ್ಲಿ ವಿಧಾನಪರಿಷತ್‌ಗೆ ಆಯ್ಕೆಯಾದರು. ಎಂಜಿಎಂ ರಾಮಚಂದ್ರನ್ ಸರಕಾರದಲ್ಲಿ ಎರಡು ಬಾರಿ (1980-86) ಆರೋಗ್ಯ ಸಚಿವರಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿ ಶಿಶುಮರಣದ ಸಂಖ್ಯೆ ಹಾಗೂ ಕ್ಷಯರೋಗವನ್ನು ನಿಯಂತ್ರಣಕ್ಕೆ ತಂದು ಡಾ.ಬಿ.ಸಿ.ರಾಯ್ ಪ್ರಶಸ್ತಿ ಪಡೆದಿದ್ದರು. 1999ರಲ್ಲಿ ಅವರು ಬಿಜೆಪಿಗೆ ಸೇರ್ಪಡೆಗೊಂಡು 2006ರಲ್ಲಿ ಅಣ್ಣಾನಗರದಿಂದ ಸ್ಪರ್ಧಿಸಿ ಸೋಲನನುಭವಿಸಿದರು. ಈಗಲೂ ಅವರು ಪ್ರಸ್ತುತ ರಾಜಕೀಯ ಬೆಳವಣಿಗೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸುತಿದ್ದಾರೆ. ಲೇಖಕರಾಗಿ ಅವರು ಕಂಬ ರಾಮಾಯಣವನ್ನು ಇಂಗ್ಲೀಷ್ ಹಾಗೂ ತಮಿಳಿಗೆ ಭಾಷಾಂತರಿಸಿ ಸಾಹಿತ್ಯ ವಲಯದಲ್ಲಿಯೂ ಗುರುತಿಸಿಕೊಂಡಿದ್ದಾರೆ.

ವಾರ್ತಾ ಭಾರತಿ 26 Jan 2026 9:57 pm

2030ರ ವೇಳೆಗೆ ಭಾರತದಿಂದ ಮಲೇರಿಯಾ ನಿರ್ಮೂಲನೆ ಸಾಧ್ಯವೇ?

2016ರಲ್ಲಿ ಮಲೇರಿಯಾ ನಿರ್ಮೂಲನೆಗಾಗಿ ರಾಷ್ಟ್ರೀಯ ಚೌಕಟ್ಟಿನಡಿ (2016–2030) 2030ರ ವೇಳೆಗೆ ಮಲೇರಿಯಾ ನಿರ್ಮೂಲನೆ ಮಾಡುವ ಮಹತ್ವಾಕಾಂಕ್ಷೆಯ ಗುರಿಯನ್ನು ಭಾರತ ನಿಗದಿಪಡಿಸಿದೆ. 2025ರ ಅಂತ್ಯದ ವೇಳೆಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ (MOHFW) ಕಣ್ಗಾವಲು ಹಾಗೂ ನಿರಂತರ ಮಧ್ಯಸ್ಥಿಕೆಗಳ ಫಲವಾಗಿ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 160 ಜಿಲ್ಲೆಗಳಲ್ಲಿ 2022ರಿಂದ 2024ರವರೆಗೆ ಮಲೇರಿಯಾ ಪ್ರಕರಣಗಳೇ ವರದಿಯಾಗಿಲ್ಲ ಎಂದು ತಿಳಿಸಿದೆ. ಇದು ಮಹತ್ವದ ಮೈಲುಗಲ್ಲು ಎಂದೇ ಹೇಳಬೇಕು. ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, “ಎಲ್ಲಾ ಮಾನವ ಮಲೇರಿಯಾ ಪರಾವಲಂಬಿಗಳ ಸ್ಥಳೀಯ ಪ್ರಸರಣ ಸರಪಳಿಯು ಕನಿಷ್ಠ ಮೂರು ವರ್ಷಗಳ ಕಾಲ ದೇಶಾದ್ಯಂತ ಅಡಚಣೆಗೊಂಡಿದ್ದರೆ ಮತ್ತು ಸ್ಥಳೀಯ ಪ್ರಸರಣದ ಮರುಸ್ಥಾಪನೆಯನ್ನು ತಡೆಯಲು ಸಂಪೂರ್ಣ ಕ್ರಿಯಾತ್ಮಕ ಕಣ್ಗಾವಲು ಹಾಗೂ ಪ್ರತಿಕ್ರಿಯೆ ವ್ಯವಸ್ಥೆ ಜಾರಿಯಲ್ಲಿದ್ದರೆ, ಒಂದು ದೇಶಕ್ಕೆ ಮಲೇರಿಯಾ ನಿರ್ಮೂಲನಾ ಪ್ರಮಾಣೀಕರಣವನ್ನು ನೀಡಲಾಗುತ್ತದೆ.” 2025ರ ಮಧ್ಯಭಾಗದ ವೇಳೆಗೆ 47 ದೇಶಗಳು ಅಥವಾ ಪ್ರಾಂತ್ಯಗಳು ವಿಶ್ವ ಆರೋಗ್ಯ ಸಂಸ್ಥೆಯಿಂದ ಅಧಿಕೃತವಾಗಿ ಮಲೇರಿಯಾ ಮುಕ್ತ ಪ್ರಮಾಣೀಕರಣವನ್ನು ಪಡೆದಿವೆ. ಭಾರತ ಯಾವ ಸ್ಥಾನದಲ್ಲಿದೆ? ವಿಶ್ವ ಮಲೇರಿಯಾ ವರದಿ–2025 ಪ್ರಕಾರ, ಭಾರತವು ತನ್ನ ಹೆಚ್ಚಿನ ಸ್ಥಳೀಯ ರಾಜ್ಯಗಳಲ್ಲಿ ಮಲೇರಿಯಾ ಪ್ರಮಾಣ ಮತ್ತು ಮರಣ ಪ್ರಮಾಣವನ್ನು ಕಡಿಮೆ ಮಾಡುವಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ. 2024ರಲ್ಲಿ ಭಾರತವು ವಿಶ್ವ ಆರೋಗ್ಯ ಸಂಸ್ಥೆಯ “ಹೈ ಬರ್ಡನ್ ಟು ಹೈ ಇಂಪ್ಯಾಕ್ಟ್” ಗುಂಪಿನಿಂದ ಅಧಿಕೃತವಾಗಿ ನಿರ್ಗಮಿಸಿತು. 2015ರಿಂದ 2023ರವರೆಗೆ ದೇಶದಲ್ಲಿ ಮಲೇರಿಯಾ ಪ್ರಕರಣಗಳು ಸುಮಾರು 80%ರಷ್ಟು ಕಡಿಮೆಯಾಗಿವೆ. 2024ರಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಆಗ್ನೇಯ ಏಷ್ಯಾ ಪ್ರದೇಶದಲ್ಲಿ ಅಂದಾಜು ಮಾಡಲಾದ 2.7 ಮಿಲಿಯನ್ ಮಲೇರಿಯಾ ಪ್ರಕರಣಗಳಲ್ಲಿ ಭಾರತದಲ್ಲಿನ ಪ್ರಕರಣಗಳ ಪ್ರಮಾಣ 73.3%ರಷ್ಟಿತ್ತು. ಜನರು ಪ್ರದೇಶಗಳ ನಡುವೆ ಚಲಿಸುವುದು ಮತ್ತು ಗಡಿಯಾಚೆಯಿಂದ ವಲಸೆ ಬರುವ ಜನರಿಂದ ರೋಗ ಹರಡುವಿಕೆ ಸೇರಿದಂತೆ ಹಲವು ಸವಾಲುಗಳ ಹೊರತಾಗಿಯೂ, ಭಾರತವು 2030ರ ಮಲೇರಿಯಾ ಗುರಿಗಳನ್ನು ತಲುಪುವ ಹಾದಿಯಲ್ಲಿದೆ. 2024ರ ವೇಳೆಗೆ ದೇಶವು 2015ಕ್ಕೆ ಹೋಲಿಸಿದರೆ ಈಗಾಗಲೇ 70%ಕ್ಕಿಂತ ಹೆಚ್ಚು ಮಲೇರಿಯಾ ಪ್ರಕರಣಗಳನ್ನು ಕಡಿಮೆ ಮಾಡಿದೆ. ಇದು 2025ರ ಅಂತ್ಯದ ವೇಳೆಗೆ 75% ಕಡಿತದ ಗುರಿಯನ್ನು ತಲುಪಲು ಸಾಧ್ಯ ಎಂಬುದನ್ನು ಸೂಚಿಸುತ್ತದೆ. ತಮಿಳುನಾಡನ್ನು ಉದಾಹರಣೆಯಾಗಿ ತೆಗೆದುಕೊಂಡರೆ, ರಾಜ್ಯದ ಸಾರ್ವಜನಿಕ ಆರೋಗ್ಯ ಮತ್ತು ತಡೆಗಟ್ಟುವ ಔಷಧ ನಿರ್ದೇಶನಾಲಯದ ದತ್ತಾಂಶವು ಮಲೇರಿಯಾ ಪ್ರಕರಣಗಳಲ್ಲಿ ನಿರಂತರ ಕುಸಿತವನ್ನು ತೋರಿಸುತ್ತದೆ. 2015ರಲ್ಲಿ 5,587 ಪ್ರಕರಣಗಳಿದ್ದರೆ, 2025ರಲ್ಲಿ ಅದು 321ಕ್ಕೆ ಇಳಿದಿದೆ. 2023ರಿಂದ 38 ಜಿಲ್ಲೆಗಳ ಪೈಕಿ 33 ಜಿಲ್ಲೆಗಳು ಸ್ಥಳೀಯ ಪ್ರಕರಣಗಳೇ ಇಲ್ಲ (ಶೂನ್ಯ) ಎಂದು ವರದಿ ಮಾಡಿವೆ. ಅವುಗಳನ್ನು “ವರ್ಗ–0” (ಪುನಃ ಸ್ಥಾಪನೆ ತಡೆಗಟ್ಟುವ ಹಂತ)ಯಲ್ಲಿ ಇರಿಸಲಾಗಿದೆ. ರಾಜಧಾನಿ ಚೆನ್ನೈ ಸೇರಿದಂತೆ ಉಳಿದ ಐದು ಜಿಲ್ಲೆಗಳನ್ನು “ವರ್ಗ–1” (ನಿರ್ಮೂಲನ ಹಂತ) ಎಂದು ವರ್ಗೀಕರಿಸಲಾಗಿದೆ. ಅಲ್ಲಿ Annual Parasite Incidence (API) — ಅಂದರೆ ಒಂದು ನಿರ್ದಿಷ್ಟ ವರ್ಷದೊಳಗೆ ಪ್ರತಿ 1,000 ನಿವಾಸಿಗಳಿಗೆ ದೃಢಪಟ್ಟ ಮಲೇರಿಯಾ ಪ್ರಕರಣಗಳ ಸಂಖ್ಯೆ — ಅಪಾಯದಲ್ಲಿರುವ 1,000 ಜನಸಂಖ್ಯೆಗೆ ಒಂದಕ್ಕಿಂತ ಕಡಿಮೆ ಇದೆ. ಮಲೇರಿಯಾ ನಿರ್ಮೂಲನೆಗೆ ಭಾರತ ಹೇಗೆ ಕೆಲಸ ಮಾಡುತ್ತಿದೆ? ಮಲೇರಿಯಾ ನಿರ್ಮೂಲನೆಗೆ ಮಾರ್ಗದರ್ಶನ ನೀಡಲು ಮತ್ತು ಕಾರ್ಯವನ್ನು ವೇಗಗೊಳಿಸಲು ದೇಶವು ಎರಡು ರಾಷ್ಟ್ರೀಯ ಯೋಜನೆಗಳನ್ನು ಜಾರಿಗೆ ತಂದಿದೆ. ರಾಷ್ಟ್ರೀಯ ಚೌಕಟ್ಟು (2016–2030): ಇದು ದೀರ್ಘಾವಧಿಯ ದೃಷ್ಟಿಕೋನ ಹೊಂದಿದ್ದು, 2030ರ ವೇಳೆಗೆ ಮಲೇರಿಯಾ ಮುಕ್ತ ಭಾರತ ಎಂಬ ಅಂತಿಮ ಗುರಿಯನ್ನು ನಿಗದಿಪಡಿಸುತ್ತದೆ. ದೇಶವನ್ನು ಪ್ರಕರಣಗಳ ಪ್ರಮಾಣದ ಆಧಾರದಲ್ಲಿ ವಿವಿಧ ವಲಯಗಳಾಗಿ ವಿಭಜಿಸುತ್ತದೆ. ರಾಷ್ಟ್ರೀಯ ಕಾರ್ಯತಂತ್ರದ ಯೋಜನೆ (2023–2027): ಇದು ತಕ್ಷಣದ ಕಾರ್ಯಯೋಜನೆ. 2027ರ ವೇಳೆಗೆ ಎಲ್ಲಾ ಸ್ಥಳೀಯ ಹರಡುವಿಕೆಯನ್ನು ನಿಲ್ಲಿಸುವ ಗುರಿಯೊಂದಿಗೆ “3Ts” ತಂತ್ರ (Testing, Treating and Tracking) ಅನ್ನು ಅನುಸರಿಸುತ್ತದೆ. NSP ಪ್ರಕಾರ, ಮಲೇರಿಯಾ ನಿರ್ಮೂಲನೆಗಾಗಿ ಭಾರತ ಹುಡುಕಾಟ ಮತ್ತು ರಕ್ಷಣಾ ತಂತ್ರವನ್ನು ಅಳವಡಿಸಿಕೊಂಡಿದೆ. ರೋಗಿಗಳು ಚಿಕಿತ್ಸಾಲಯಗಳಿಗೆ ಬರುವವರೆಗೆ ಕಾಯುವ ಬದಲು, ಸಕ್ರಿಯ ಕಣ್ಗಾವಲು ನಡೆಸಲಾಗುತ್ತದೆ. ಪ್ರತಿಯೊಬ್ಬರನ್ನು ತ್ವರಿತವಾಗಿ ಪರೀಕ್ಷಿಸಿ, ಸಂಪೂರ್ಣ ಔಷಧ ಕೋರ್ಸ್ ನೀಡಲಾಗುತ್ತದೆ ಹಾಗೂ ಮುಂದಿನ ಹರಡುವಿಕೆಯನ್ನು ತಡೆಯಲು ಕ್ರಮ ಕೈಗೊಳ್ಳಲಾಗುತ್ತದೆ. ಜೊತೆಗೆ, ಹೆಚ್ಚಿನ ಅಪಾಯದ ಬುಡಕಟ್ಟು ಮತ್ತು ಅರಣ್ಯ ಪ್ರದೇಶಗಳಲ್ಲಿ ಔಷಧೀಯ ಹಾಸಿಗೆ ಪರದೆಗಳು ಮತ್ತು ಒಳಾಂಗಣ ಸಿಂಪಡಣೆಗೆ ಸಾರ್ವತ್ರಿಕ ಪ್ರವೇಶ ಒದಗಿಸಲಾಗುತ್ತಿದೆ. ತಮಿಳುನಾಡಿನಲ್ಲಿ ಸರ್ಕಾರಿ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಲೇರಿಯಾ ಪತ್ತೆ ಕಾರ್ಯವನ್ನು ತೀವ್ರಗೊಳಿಸಲಾಗಿದೆ. ಲಾರ್ವಾ ನಿಯಂತ್ರಣ ಕ್ರಮಗಳನ್ನೂ ಸಮಾನಾಂತರವಾಗಿ ಜಾರಿಗೆ ತರಲಾಗಿದೆ. ವಲಸೆ ಕಾರ್ಮಿಕರ ಮೇಲ್ವಿಚಾರಣೆ ಪ್ರಮುಖ ಗಮನ ಕ್ಷೇತ್ರವಾಗಿದೆ. ಮಲೇರಿಯಾ ಪೀಡಿತ ನೆರೆಯ ರಾಜ್ಯಗಳಿಂದ ಬರುವ ಕಾರ್ಮಿಕರ ಮೇಲೆ ವಿಶೇಷ ಕಣ್ಗಾವಲು ನಡೆಸಲಾಗುತ್ತಿದೆ. ಸವಾಲುಗಳೇನು? ಮಲೇರಿಯಾ ಪೀಡಿತ ನೆರೆಯ ರಾಜ್ಯಗಳಿಂದ ವಲಸೆ ಬರುವುದು ಕಡಿಮೆ ಹರಡುವ ಪ್ರದೇಶಗಳಲ್ಲಿ ಮರುಪರಿಚಯದ ಅಪಾಯವನ್ನುಂಟುಮಾಡುತ್ತದೆ. NSP ಪ್ರಕಾರ, ನಗರ ಪ್ರದೇಶಗಳು ಮಲೇರಿಯಾ ನಿರ್ಮೂಲನೆಗೆ ವಿಭಿನ್ನ ಸವಾಲುಗಳನ್ನು ಒಡ್ಡುತ್ತವೆ. ನಗರ, ಅರಣ್ಯ, ಬುಡಕಟ್ಟು, ಗಡಿ ಪ್ರದೇಶಗಳು, ತಲುಪಲು ಕಷ್ಟಕರವಾದ ಪ್ರದೇಶಗಳು ಮತ್ತು ವಲಸೆ ಜನಸಂಖ್ಯೆಯಂತಹ ಸವಾಲಿನ ಮಲೇರಿಯಾ ಮಾದರಿಗಳಿಗೆ ವಿಶೇಷ ಗಮನ ನೀಡಲಾಗುತ್ತದೆ ಎಂದು ಅದು ತಿಳಿಸಿದೆ. WHO ಆಗ್ನೇಯ ಏಷ್ಯಾ ಪ್ರದೇಶವು ಕಳೆದ ಎರಡು ದಶಕಗಳಲ್ಲಿ ಪ್ರಕರಣಗಳು ಮತ್ತು ಮರಣ ಎರಡರಲ್ಲೂ ಗಮನಾರ್ಹ ಇಳಿಕೆಯನ್ನು ಸಾಧಿಸಿದೆ ಎಂದು ವಿಶ್ವ ಮಲೇರಿಯಾ ವರದಿ ಒಪ್ಪಿಕೊಂಡಿದೆ. ಆದರೆ, ಸವಾಲುಗಳು ಇನ್ನೂ ಉಳಿದಿವೆ. ಪ್ರಾದೇಶಿಕ ಪ್ರಕರಣಗಳ ಸುಮಾರು ಎರಡು ತೃತೀಯಾಂಶಕ್ಕೆ ಕಾರಣವಾಗುವ ನಿರಂತರ ಪ್ಲಾಸ್ಮೋಡಿಯಂ ವೈವಾಕ್ಸ್ ಪ್ರಸರಣವು ನಿರ್ಮೂಲನಾ ಪ್ರಯತ್ನಗಳನ್ನು ಸಂಕೀರ್ಣಗೊಳಿಸುತ್ತಿದೆ. ಜನಸಂಖ್ಯಾ ಚಲನೆ ಮತ್ತು ಗಡಿಯಾಚೆಗಿನ ಆಮದು ಮೂಲಕ ಭಾರತ ಮತ್ತು ನೇಪಾಳದಲ್ಲಿ ಸ್ಥಳೀಯ ಪ್ರಸರಣ ಮುಂದುವರಿಯುತ್ತಿರುವುದರಿಂದ ಉಪರಾಷ್ಟ್ರೀಯ ಮತ್ತು ಪ್ರಾದೇಶಿಕ ಸಮನ್ವಯ ಅಗತ್ಯವೆಂದು ವರದಿ ಹೇಳಿದೆ. ಭಾರತದ ಇತರ ತಂತ್ರಗಳಲ್ಲಿ ಔಷಧ ನಿರೋಧಕತೆ ಮೇಲ್ವಿಚಾರಣೆ, ಕೀಟನಾಶಕ ನಿರೋಧಕತೆ ಮೇಲ್ವಿಚಾರಣೆ ಮತ್ತು ಪ್ಲಾಸ್ಮೋಡಿಯಂ ವೈವಾಕ್ಸ್ ಪ್ರಕರಣಗಳಿಗೆ 14 ದಿನಗಳ ಸಂಪೂರ್ಣ ಚಿಕಿತ್ಸೆಯ ಅನುಸರಣೆಯನ್ನು ಖಚಿತಪಡಿಸಿಕೊಳ್ಳುವುದು ಸೇರಿವೆ. ವಿಶ್ವ ಮಲೇರಿಯಾ ವರದಿ–2025 ಮಲೇರಿಯಾ ವಿರೋಧಿ ಔಷಧ ನಿರೋಧಕತೆಯ ಹೆಚ್ಚುತ್ತಿರುವ ಬೆದರಿಕೆಯನ್ನು ಕೂಡ ಎತ್ತಿ ತೋರಿಸಿದೆ. ಕ್ಲೋರೊಕ್ವಿನ್‌ನಂತಹ ಔಷಧಗಳು ವಿಫಲವಾದಂತೆಯೇ, ಆರ್ಟೆಮಿಸಿನಿನ್ ಈಗ “ಭಾಗಶಃ ಪ್ರತಿರೋಧ”ವನ್ನು ಎದುರಿಸುತ್ತಿದೆ. ಇದರರ್ಥ ರೋಗಿಯ ರಕ್ತದಿಂದ ರೋಗಾಣುಗಳನ್ನು ತೆರವುಗೊಳಿಸಲು ಔಷಧ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ; ಇದರಿಂದ ಸೂಕ್ಷ್ಮಜೀವಿಗಳು ಹೊಂದಿಕೊಳ್ಳಲು ಮತ್ತು ಇತರರಿಗೆ ಹರಡಲು ಅವಕಾಶ ಸಿಗುತ್ತದೆ. ಈ ಸಮಸ್ಯೆ ಹಿಂದೆ ಆಗ್ನೇಯ ಏಷ್ಯಾಕ್ಕೆ ಸೀಮಿತವಾಗಿದ್ದರೂ, ಈಗ ಅದು ಆಫ್ರಿಕಾದ ಕನಿಷ್ಠ ಎಂಟು ದೇಶಗಳಿಗೆ ಹರಡಿದೆ ಎಂದು ವರದಿ ದೃಢಪಡಿಸುತ್ತದೆ. ಇದು ದೊಡ್ಡ ಬೆದರಿಕೆಯಾಗಿದ್ದು, ಆರ್ಟೆಮಿಸಿನಿನ್ ಜೊತೆಗೆ ಬಳಸಲಾಗುವ ಇತರ ಔಷಧಗಳೂ ವಿಫಲಗೊಳ್ಳಲು ಆರಂಭಿಸಿರುವುದು ಆತಂಕಕಾರಿ. ಮುಂದಿನ ಪೀಳಿಗೆಯ ಔಷಧಗಳನ್ನು ತ್ವರಿತವಾಗಿ ಅಭಿವೃದ್ಧಿಪಡಿಸದಿದ್ದರೆ, ದಶಕಗಳ ಪ್ರಗತಿ ಹಿಮ್ಮೆಟ್ಟುವ ಅಪಾಯವಿದೆ ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಮುಂದಿನ ಹಾದಿ ಏನು? 2024–25ರ ವಾರ್ಷಿಕ ವರದಿ ಪ್ರಕಾರ, 2023ರಲ್ಲಿ 34 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ತ್ರಿಪುರ (5.69) ಮತ್ತು ಮಿಜೋರಾಂ (14.23) ಎಂಬ ಎರಡು ರಾಜ್ಯಗಳನ್ನು ಹೊರತುಪಡಿಸಿ, ವಾರ್ಷಿಕ ಪರಾವಲಂಬಿ ಪ್ರಕರಣ ಸೂಚ್ಯಂಕವನ್ನು ಒಂದಕ್ಕಿಂತ ಕಡಿಮೆ ಮಟ್ಟದಲ್ಲಿ ಸಾಧಿಸಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಈ ಹಂತದಲ್ಲಿ ದತ್ತಾಂಶದ ನಿಖರತೆ ಅತ್ಯಂತ ಮುಖ್ಯವಾಗಿದೆ. ಖಾಸಗಿ ವೈದ್ಯರೂ ಪ್ರಕರಣಗಳನ್ನು ವರದಿ ಮಾಡುತ್ತಾರೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಕಟ್ಟುನಿಟ್ಟಾದ ಸಾರ್ವಜನಿಕ ಆರೋಗ್ಯ ಕಣ್ಗಾವಲು ಅಗತ್ಯವಿದೆ. ಮಲೇರಿಯಾ ಶಂಕಿತ ಪ್ರಕರಣಗಳನ್ನೂ ಕಡ್ಡಾಯವಾಗಿ ವರದಿ ಮಾಡಬೇಕು ಎಂದು ಹಿರಿಯ ವೈರಾಲಜಿಸ್ಟ್ ಟಿ. ಜಾಕೋಬ್ ಜಾನ್ ಹೇಳಿದ್ದಾರೆ. ನಗರ ಪ್ರದೇಶಗಳಲ್ಲಿ ಮಲೇರಿಯಾ ಇನ್ನೂ ಸವಾಲಾಗಿಯೇ ಉಳಿದಿದೆ. ಚೆನ್ನೈನಂತಹ ಮಹಾನಗರಗಳಲ್ಲಿ ತ್ವರಿತ ನಗರೀಕರಣ, ವಿಸ್ತರಿಸುತ್ತಿರುವ ಮೂಲಸೌಕರ್ಯ ಮತ್ತು ಹೆಚ್ಚುತ್ತಿರುವ ಅಪಾರ್ಟ್‌ಮೆಂಟ್ ಸಂಕೀರ್ಣಗಳು ನೀರು ಸಂಗ್ರಹಣೆಯ ಸಮಸ್ಯೆಗಳನ್ನು ಉಂಟುಮಾಡುತ್ತಿವೆ. ಇಲ್ಲಿ ಸರ್ಕಾರ ಮಾತ್ರವಲ್ಲದೆ, ನೀರಿನ ಮೂಲ ಶುದ್ಧವಾಗಿರುವುದರಿಂದ ವೈಯಕ್ತಿಕ ಮನೆಯ ಮಟ್ಟದಲ್ಲೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ತಮಿಳುನಾಡು ಸರ್ಕಾರದ ಸಾರ್ವಜನಿಕ ಆರೋಗ್ಯ ಮತ್ತು ತಡೆಗಟ್ಟುವ ಔಷಧದ ಮಾಜಿ ನಿರ್ದೇಶಕ ಟಿ.ಎಸ್. ಸೆಲ್ವವಿನಾಯಗಂ ತಿಳಿಸಿದ್ದಾರೆ.

ವಾರ್ತಾ ಭಾರತಿ 26 Jan 2026 9:50 pm

CRPF ಅಧಿಕಾರಿಗೆ ಶೌರ್ಯ ಚಕ್ರ: ಕುಕಿ-ರೆ ಸಂಘಟನೆಗಳ ವಿರೋಧ

ಗುವಾಹಟಿ, ಜ.26: ಸಿಆರ್‌ಪಿಎಫ್‌ನ 20ನೇ ಬೆಟಾಲಿಯನ್‌ನ ಸಹಾಯಕ ಕಮಾಂಡಂಟ್ ವಿಪಿನ್ ವಿಲ್ಸನ್ ಅವರಿಗೆ ಶೌರ್ಯ ಚಕ್ರವನ್ನು ಪ್ರದಾನಿಸುವ ನಿರ್ಧಾರಕ್ಕಾಗಿ ಕೇಂದ್ರ ಸರ್ಕಾರವನ್ನು ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿನ ಕುಕಿ-ರೆ ಸಂಘಟನೆಗಳು ಸೋಮವಾರ ಟೀಕಿಸಿವೆ. ಈ ಪ್ರಶಸ್ತಿಯು ಕಾನೂನುಬಾಹಿರ ಹತ್ಯೆಗಳಿಗೆ ಅನುಮೋದನೆಯಾಗಿದೆ ಎಂದು ಹೇಳಿರುವ ಅವು, ಪ್ರಶಸ್ತಿಯನ್ನು ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿವೆ. ಅಧಿಕೃತ ಹೇಳಿಕೆಯಂತೆ, 2024ರ ನ.11ರಂದು ಮಣಿಪುರದ ಜಿರಿಬಾಮ್ ಜಿಲ್ಲೆಯ ಬೊರೊಬೆಕ್ರಾ ಪ್ರದೇಶದಲ್ಲಿ ಸಿಆರ್‌ಪಿಎಫ್ ಠಾಣೆಯ ಮೇಲೆ ಸಶಸ್ತ್ರ ಬಂಡುಕೋರರು ನಡೆಸಿದ್ದ ದಾಳಿಯನ್ನು ವಿಫಲಗೊಳಿಸಿದ್ದಕ್ಕಾಗಿ ವಿಲ್ಸನ್ ಅವರನ್ನು ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ. ಸಿಆರ್‌ಪಿಎಫ್ ಅವರ ಅದಮ್ಯ ಚೈತನ್ಯ ಮತ್ತು ಸಾಟಿಯಿಲ್ಲದ ಶೌರ್ಯವನ್ನು ಪ್ರಶಂಸಿಸಿದೆ. ವಿಲ್ಸನ್ ಅವರಿಗೆ ಶೌರ್ಯ ಚಕ್ರ ಪ್ರಕಟಿಸಿರುವುದು ಕುಕಿ ಆರ್ಗನೈಸೇಷನ್ ಫಾರ್ ಹ್ಯೂಮನ್ ರೈಟ್ಸ್ ಟ್ರಸ್ಟ್ (ಕೊಹುರ್) ಮತ್ತು ಇಂಡಿಜಿನಿಯಸ್ ಟ್ರೈಬಲ್ ಲೀಡರ್ಸ್ ಫೋರಮ್ (ಐಟಿಎಲ್‌ಎಫ್) ಅನ್ನು ಕೆರಳಿಸಿದೆ. ಈ ಗೌರವವು ರಾಷ್ಟ್ರೀಯ ಹೆಮ್ಮೆಯಲ್ಲ; ಬದಲಿಗೆ ಅದು 10 ಕುಕಿ-ರೆ (ಹಮರ್) ಗ್ರಾಮ ಸ್ವಯಂಸೇವಕರ ಕಾನೂನುಬಾಹಿರ ಹತ್ಯೆಗೆ ಸರ್ಕಾರದ ಅನುಮೋದನೆಯಾಗಿದೆ ಎಂದು ಕೊಹುರ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಸಂಘಟನೆಯ ಪ್ರಕಾರ, ವಿಧಿವಿಜ್ಞಾನ ವರದಿಗಳು ಹಾಗೂ ಪ್ರತ್ಯಕ್ಷದರ್ಶಿಗಳ ಹೇಳಿಕೆಗಳು ಸೇರಿದಂತೆ ವಿಶ್ವಾಸಾರ್ಹ ಪುರಾವೆಗಳು, ಮೃತರು ನಿರಾಯುಧರಾಗಿದ್ದರು ಅಥವಾ ಕನಿಷ್ಠ ಪ್ರಮಾಣದಲ್ಲಿ ಶಸ್ತ್ರಗಳನ್ನು ಹೊಂದಿದ್ದ ನಾಗರಿಕರಾಗಿದ್ದರು ಹಾಗೂ ಜನಾಂಗೀಯ ಹಿಂಸಾಚಾರದ ಅವಧಿಯಲ್ಲಿ ಸಮುದಾಯಗಳನ್ನು ರಕ್ಷಿಸುವ ಕರ್ತವ್ಯ ನಿರ್ವಹಿಸುತ್ತಿದ್ದರು ಎಂಬುದನ್ನು ದೃಢಪಡಿಸಿವೆ. ಅವರಿಗೆ ಉಗ್ರಗಾಮಿಗಳು ಎಂದು ಹಣೆಪಟ್ಟಿ ಕಟ್ಟುವ ಸರ್ಕಾರದ ನಿರೂಪಣೆಯು ಏಕಪಕ್ಷೀಯವಾಗಿದ್ದು, ಮಾರಕ ಬಲಪ್ರಯೋಗವನ್ನು ಸಮರ್ಥಿಸಿಕೊಳ್ಳಲು ರಚಿಸಿದ ಕಟ್ಟುಕಥೆಯಾಗಿದೆ. ಅದು ಎನ್‌ಕೌಂಟರ್ ಆಗಿರಲಿಲ್ಲ; ಅದು ಮರಣದಂಡನೆಯಾಗಿತ್ತು ಎಂದು ಕೊಹುರ್ ಹೇಳಿದೆ.

ವಾರ್ತಾ ಭಾರತಿ 26 Jan 2026 9:49 pm

WPL 2026- ಬ್ರಂಟ್ ರೋಷಾವೇಷದ ಆಟಕ್ಕೆ RCB ಗಡಗಡ! ಮಹಿಳಾ ಪ್ರೀಮಿಯರ್ ಲೀಗ್ ನ ಮೊದಲ ಶತಕಕ್ಕೆ ಸಾಕ್ಷಿಯಾತ್ತು ವಡೋದರಾ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಮುಂಬೈ ಇಂಡಿಯನ್ಸ್ ನ ನ್ಯಾಟ್ ಸಿವಿರ್ ಬ್ರಂಟ್ ಅವರು ಇದೀಗ ಮಹಿಳಾ ಪ್ರೀಮಿಯರ್ ಲೀಗ್ (WPL) ಇತಿಹಾಸದಲ್ಲಿ ಮೊದಲ ಶತಕ ಬಾರಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆರ್ ಸಿಬಿ ದಾಳಿಯನ್ನು ದಿಟ್ಟವಾಗಿ ಎದುರಿಸಿ ನಿಂತ ಅವರು ಕೇವಲ 57 ಎಸೆತದಿಂದ ಭರ್ತಿ ನೂರು ರನ್ ಗಳಿಸಿ ಅಜೇಯರಾಗಿ ಉಳಿದರು. ಈ ಹಿಂದೆ ನ್ಯೂಜಿಲೆಂಡ್ ನ ಹಿರಿಯ ಆಟಗಾರ್ತಿ ಸೋಫಿ ಡಿವೈನ್ (95) ಮತ್ತು ಭಾರತದ ಸ್ಟಾರ್ ಆಟಗಾರ್ತಿಯಾಗಿರುವ ಆರ್ ಸಿಬಿ ನಾಯಕಿ (96) ಅವರು 90ರ ಗಡಿ ತಲುಪಿದ್ದರೂ ಶತಕ ಗಳಿಸುವಲ್ಲಿ ವಿಫಲರಾಗಿದ್ದರು. ಹಾಗಾಗಿ ಸ್ಮೃತಿ ಮಂದಾನ ಅವರು ಗಳಿಸಿದ್ದ 96 ರನ್ ಗಳೇ ಈವರೆಗೆ ಡಬ್ಲ್ಯೂಪಿಎಲ್ ನಲ್ಲಿ ಅತಿ ದೊಡ್ಡ ವೈಯಕ್ತಿಕ ಗಳಿಕೆಯಾಗಿತ್ತು. ಈ ದಾಖಲೆಯ್ನು ಬ್ರಂಟ್ ಅವರು ಸ್ಮೃತಿ ಮಂದಾನ ನೇತೃತ್ವದ ತಂಡದ ವಿರುದ್ಧವೇ ಮುರಿದರು. ವಡೋದರಾದಲ್ಲಿ ಸೋಮವಾರ ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್ ನ ಲೀಗ್ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಮುಂಬೈ ಇಂಡಿಯನ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 199 ರನ್ ಪೇರಿಸಿತು. 16 ರನ್ ಆಗುವಷ್ಟರಲ್ಲೇ ಸಜೀವನ್ ಸಜನಾ ಅವರ ವಿಕೆಟ್ ಪತನಗೊಂಡಾಗ ಕ್ರೀಸಿಗೆ ಆಗಮಿಸಿದ ನಟ್ ಸಿವಿರ್ ಬ್ರಂಟ್ ಕೊನೇವರೆಗೂ ಮುಂಬೈ ಇಂಡಿಯನ್ಸ್ ತಂಡದ ಇನ್ನಿಂಗ್ಸ್ ಅನ್ನು ಆಧರಿಸಿದರು. ಹೇಲಿ ಮ್ಯಾಥ್ಯೂಸ್ ಅವರ ಜೊತೆ ಎರಡನೇ ವಿಕೆಟ್ ಗೆ ಅವರು ಮಹತ್ವದ 131 ರನ್ ಗಳ ಜೊತೆಯಾಟ ಆಡಿದ್ದು ನಿರ್ಣಾಯಕವೆನಿಸಿತು. ಕೇವಲ 32 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ಬ್ರಂಟ್ ಅವರು ಅಂತಿಮವಾಗಿ 57 ಎಸೆತಗಳಲ್ಲಿ ಭರ್ತಿ 100 ರನ್ ಗಳಸಿದರು. ಅವರ ಇನ್ನಿಂಗ್ಸ್ ನಲ್ಲಿ 16 ಬೌಂಡರಿ ಮತ್ತು 1 ಭರ್ಜರಿ ಸಿಕ್ಸರ್ ಗಳಿದ್ದವು. ಅವರಿಗೆ ಉತ್ತಮ ಸಾಥ್ ನೀಡಿದ ಹೇಲಿ ಮ್ಯಾಥ್ಯೂಸ್ ಅವರು 39 ಎಸೆತಗಳಲ್ಲಿ 9 ಬೌಂಡರಿಗಳಿದ್ದ 56 ರನ್ ಗಳಿಸಿ ಲಾರೆನ್ ಬೆಲ್ ಗೆ ಕ್ಲೀನ್ ಬೌಲ್ಡ್ ಆದರು. ಈ ವಿಕೆಟ್ ಪತನದ ಬಳಿಕ ನಾಯಕಿ ಹರ್ಮನ್ ಪ್ರೀತ್ ಕೌರ್ ಅವರೊಂದಿಗೆ ಬ್ರಂಟ್ ಅವರು 3ನೇ ವಿಕೆಟ್ ಗೆ 42 ರನ್ ಗಳ ಜೊತೆಯಾಟವಾಡಿದರು. ಕೌರ್ ಅವರು ಕೇಲಲ 12 ಎಸೆತಗಳಲ್ಲಿ 2 ಬೌಂಡರಿ ಮತ್ತು 2 ಸಿಕ್ಸರ್ ಗಳಿದ್ದ 20 ರನ್ ಬಾರಿಸಿ ಔಟಾದರು.ಈ ಸೀಸನ್ ನಲ್ಲಿ ನಿರಂತರ 5 ಪಂದ್ಯ ಗೆದ್ದು ಇತಿಹಾಸ ನಿರ್ಮಿಸಿತ್ತು. ಆದರೆ ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮೊದಲ ಬಾರಿಗೆ ಸೋಲಿನ ರುಚಿ ತೋರಿಸಿತು. ನವಿ ಮುಂಬೈನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ದಲ್ಲಿ ಆರ್ ಸಿಬಿ ಜಯಭೇರಿ ಬಾರಿಸಿತ್ತು.

ವಿಜಯ ಕರ್ನಾಟಕ 26 Jan 2026 9:48 pm

ರಾಯಚೂರು| ಮದ್ಯ‌ ನಿಷೇಧಕ್ಕೆ ಆಗ್ರಹಿಸಿ ಮಹಿಳೆಯರಿಂದ ಪ್ರತಿಭಟನೆ

ರಾಯಚೂರು:  ರಾಜ್ಯದಲ್ಲಿ ಕಿರಾಣಿ ಅಂಗಡಿ, ಪಾನ್ ಶಾಪ್ ಸೇರಿ ಹಲವೆಡೆ ಅಕ್ರಮವಾಗಿ ಮದ್ಯ ಮಾರಾಟ ನಿಷೇಧಿಸುವಂತೆ ಒತ್ತಾಯಿಸಿ ಮದ್ಯ ನಿಷೇಧ ಆಂದೋಲನ ಕರ್ನಾಟಕ ಸಂಘಟನೆಯ ನೇತೃತ್ವದಲ್ಲಿ ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಮಹಿಳೆಯರು ಕಪ್ಪು ಪಟ್ಟಿ ಧರಿಸಿ ಧರಣಿ ನಡೆಸಿದರು. ಪ್ರತಿಭಟನಾ ನಿರತ ಮಹಿಳೆಯರು ಬೀರು ಬೇಡ ನೀರು ಬೇಕು, ಬೀರ್ ಬೇಡ ಶಿಕ್ಷಣ ಬೇಕು ಎಂದು ಘೋಷಣೆ ಕೂಗಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಅಕ್ರಮವಾಗಿ ಕಿರಾಣಿ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಅನೇಕ ಬಾರಿ ಜಿಲ್ಲಾ ಅಬಕಾರಿ ಇಲಾಖೆ ಹಾಗೂ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರದ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಮದ್ಯ ನಿಷೇಧ ಆಂದೋಲನದ ವತಿಯಿಂದ ಕಳೆದ 10 ವರ್ಷಗಳಿಂದ ರಾಜ್ಯದಲ್ಲಿ ಮದ್ಯ ನಿಷೇಧ ಮಾಡುವಂತೆ ಹೋರಾಡುತ್ತಾ ಬಂದರೂ ಸರಕಾರ ಮದ್ಯ ನಿಷೇಧಕ್ಕೆ ಮುಂದಾಗುತ್ತಿಲ್ಲ. ನವೆಂಬರ್ 25ರಂದು ಹೋರಾಟಕ್ಕೆ ಮಣಿದ ಮುಖ್ಯಮಂತ್ರಿಗಳು ಕಾಲಾವಕಾಶ ಕೊಡಿ ಎಂದು ಕೇಳಿದ್ದರೂ, ಆದರೇ ಭರವಸೆ ಈಡೇರಿಸದೆ ಹುಸಿಗೊಳಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.   ಮದ್ಯ ಮಾರಾಟಕ್ಕೆ ಪರವಾನಿಗೆ ಹೊಂದಲು ಹರ್ಯಾಣ, ಮಹಾರಾಷ್ಟ್ರ, ರಾಜಸ್ಥಾನದಂತಹ ರಾಜ್ಯಗಳಲ್ಲಿ ಗ್ರಾಮ ಸಭೆಗಳಿಗೆ ಪರಮಾಧಿಕಾರ ನೀಡಲಾಗಿದೆ. ವಿವಿಧ ರಾಜ್ಯಗಳ ಪಂಚಾಯತ್ ರಾಜ್ ಕಾನೂನಿನಂತೆ ರಾಜ್ಯ ಸರಕಾರ ಯಾವುದೇ ಒಂದು ಮದ್ಯದ ಅಂಗಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪರವಾನಿಗೆ ನೀಡಲು ಗ್ರಾಮ ಸಭೆಯಲ್ಲಿ ಕನಿಷ್ಠ ಶೇಕಡಾ 20 ರಷ್ಟು ಮಹಿಳೆಯರ ಒಪ್ಪಿಗೆ ಪಡೆಯಬೇಕು. ಗ್ರಾಮಸಭೆಯ ಈ ಠರಾವಿಗೆ ಮಾನ್ಯತೆ ನೀಡಲೇ ಬೇಕು. ಹಾಗೆ ನಮ್ಮಲ್ಲೂ ಈ ಅಂಶವನ್ನು ಪಂಚಾಯತ್‌ ರಾಜ್ ಕಾನೂನಲ್ಲಿ ಅಳವಡಿಸಿ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು. ಒಂದು ಕಡೆ ಪರವಾನಗಿ ಪಡೆದ ಅಂಗಡಿಗಳ ಸಮಸ್ಯೆಯಾದರೆ ಅದಕ್ಕಿಂತ ಹೆಚ್ಚು ಮನೆ ಮನೆಗಳಲ್ಲಿ, ಪಾನ್ ಶಾಪ್, ಕಿರಾಣ ಅಂಗಡಿ, ಗೂಡಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟವಾಗುತ್ತಿದೆ. ಪ್ರತಿ ಹಳ್ಳಿಯಲ್ಲಿ ಮಹಿಳೆಯರ ಜಾಗೃತ ಸಮಿತಿಗಳನ್ನು ರಚಿಸಿ ಈ ಸಮಿತಿಗೆ ಅರೆ ನ್ಯಾಯಿಕ ಅಧಿಕಾರ ಕೊಡಬೇಕು. ಕರ್ನಾಟಕ ಪಂಚಾಯತ್‌ ರಾಜ್ ಕಾನೂನಿನಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಈಗಾಗಲೆ ಹೆಚ್ಚುವರಿ ಸಮಿತಿಗಳು ಮಾಡುವ ಅವಕಾಶ ಇದೆ. ಕೂಡಲೇ ಬೇಡಿಕೆ ಈಡೇರಿಕೆಗೆ ಮುಂದಾಗಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಮಧ್ಯಪಾನ ನಿಷೇಧ ಆಂದೋಲನದ ಮುಖಂಡರಾದ ವಿರೂಪಮ್ಮ, ಚಂದ್ರಕಲಾ, ಕವಿತಾ, ಲಕ್ಷ್ಮಿ, ಕಾಮಲಾಕ್ಷಿ ಮತ್ತಿತರರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 26 Jan 2026 9:46 pm

EDಯಿಂದ ಪಿಎಸಿಎಲ್‌ನ 1,986 ಕೋಟಿ ರೂ. ಮೌಲ್ಯದ ಸೊತ್ತು ಮುಟ್ಟುಗೋಲು

ಹೊಸದಿಲ್ಲಿ, ಜ. 26: 48,000 ಕೋ. ರೂ. ಪೊಂಜಿ ಯೋಜನೆ ನಡೆಸುತ್ತಿದ್ದ ಆರೋಪದಲ್ಲಿ ಚಂಡಿಗಢ ಮೂಲದ ಪಿಎಸಿಎಲ್ (ಪರ್ಲ್ ಸಮೂಹ) ವಿರುದ್ಧ ಹಣ ಅಕ್ರಮ ವರ್ಗಾವಣೆ ತನಿಖೆಯ ಭಾಗವಾಗಿ 1,986 ಕೋ.ರೂ. ಮೌಲ್ಯದ ಸೊತ್ತುಗಳನ್ನು ಹೊಸತಾಗಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ (ED) ಸೋಮವಾರ ತಿಳಿಸಿದೆ. ಇತ್ತೀಚಿನ ಕ್ರಮದೊಂದಿಗೆ ಈ ಪ್ರಕರಣದಲ್ಲಿ ಇದುವರೆಗೆ ಮುಟ್ಟುಗೋಲು ಹಾಕಿಕೊಳ್ಳಲಾದ ಆಸ್ತಿಯ ಒಟ್ಟು ಮೊತ್ತ 7,589 ಕೋ. ರೂ.ಗೆ ತಲುಪಿದೆ. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಪಂಜಾಬ್‌ನ ಲುಧಿಯಾನ ಹಾಗೂ ರಾಜಸ್ಥಾನದ ಜೈಪುರದಲ್ಲಿರುವ 1,986.48 ಕೋ.ರೂ. ಮೌಲ್ಯದ 37 ಸ್ಥಿರ ಸೊತ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ಹೇಳಿಕೆಯಲ್ಲಿ ತಿಳಿಸಿದೆ. ಈ ವಂಚನೆಯಿಂದ ಸಂಗ್ರಹಿಸಲಾದ ಅಕ್ರಮ ನಿಧಿಯ ಭಾಗವನ್ನು ಈ 37 ಸೊತ್ತುಗಳ ಖರೀದಿಗೆ ಬಳಸಲಾಗಿದೆ ಎಂದು ಅದು ತಿಳಿಸಿದೆ. ಈ ಹಿಂದೆ ಸಿಬಿಐ ಪಿಎಸಿಎಲ್ ಲಿಮಿಟೆಡ್, ಅದರ ದಿವಂಗತ ಪ್ರವರ್ತಕ ನಿರ್ಮಲ್ ಸಿಂಗ್ ಭಾಂಗೂ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿತ್ತು. ಈ ಪ್ರಕರಣದ ಆಧಾರದಲ್ಲಿ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ.

ವಾರ್ತಾ ಭಾರತಿ 26 Jan 2026 9:46 pm

ವಿ.ಎಸ್. ಅಚ್ಯುತಾನಂದ್‌ ಗೆ ಪದ್ಮವಿಭೂಷಣ ಪ್ರಶಸ್ತಿ: ಸಿಪಿಎಂ ಸ್ವಾಗತ

ತಿರುವನಂತಪುರಂ: ಕೇರಳದ ಮಾಜಿ ಮುಖ್ಯಮಂತ್ರಿ ವಿ.ಎಸ್. ಅಚ್ಯುತಾನಂದ್ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿ ನೀಡಿರುವುದನ್ನು ಸೋಮವಾರ ಸಿಪಿಎಂ ಸ್ವಾಗತಿಸಿದ್ದು, ವಿ.ಎಸ್. ಅಚ್ಯುತಾನಂದ್ ಅವರ ಕುಟುಂಬದ ಸಂತೋಷವನ್ನು ನಾವು ಹಂಚಿಕೊಳ್ಳುತ್ತಿದ್ದೇವೆ ಎಂದು ಹೇಳಿದೆ. ವಿ.ಎಸ್. ಅಚ್ಯುತಾನಂದ್ ಅವರ ಕುಟುಂಬವು ಈ ಪ್ರಶಸ್ತಿಯನ್ನು ಅಂಗೀಕರಿಸಿರುವುದರಿಂದ, ಈ ಗೌರವವನ್ನು ವಿರೋಧಿಸಲು ಯಾವುದೇ ಕಾರಣವಿಲ್ಲ ಎಂದು ಅದು ತಿಳಿಸಿದೆ. ದೀರ್ಘಕಾಲದಿಂದ ಸರಕಾರಿ ಪ್ರಶಸ್ತಿಗಳನ್ನು ಸ್ವೀಕರಿಸದಿರುವ ನಿರ್ಧಾರವನ್ನು ಸಿಪಿಎಂ ಕೈಗೊಂಡಿತ್ತು. ಈ ಕುರಿತು ಪ್ರತಿಕ್ರಿಯಿಸಿದ ಸಿಪಿಎಂ ರಾಜ್ಯ ಕಾರ್ಯದರ್ಶಿ ಎಂ.ವಿ. ಗೋವಿಂದನ್, ಇಂತಹ ಪ್ರಶಸ್ತಿಗಳನ್ನು ನಿರಾಕರಿಸಿದ್ದ ಇ.ಎಂ.ಎಸ್. ನಂಬೂದರಿಪಾದ್, ಜ್ಯೋತಿ ಬಸು ಹಾಗೂ ಬುದ್ಧದೇವ್ ಭಟ್ಟಾಚಾರ್ಯರ ನಿರ್ಧಾರವು ಅವರ ವೈಯಕ್ತಿಕವಾಗಿತ್ತು ಹಾಗೂ ಆ ನಿರ್ಧಾರವನ್ನು ಪಕ್ಷ ಬೆಂಬಲಿಸಿತ್ತು ಎಂದು ಹೇಳಿದ್ದಾರೆ. ತಮ್ಮ ತಂದೆಗೆ ಪದ್ಮವಿಭೂಷಣ ಪ್ರಶಸ್ತಿ ನೀಡಿರುವುದಕ್ಕೆ ಅವರ ಪುತ್ರ ಅರುಣ್ ಕುಮಾರ್ ರವಿವಾರ ಸಾಮಾಜಿಕ ಮಾಧ್ಯಮದಲ್ಲಿ ಹರ್ಷ ವ್ಯಕ್ತಪಡಿಸಿದ್ದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ವಿ. ಗೋವಿಂದನ್, “ಕಲೆ ಸೇರಿದಂತೆ ವಿವಿಧ ಸೇವಾ ಕ್ಷೇತ್ರಗಳಲ್ಲಿ ಅಭೂತಪೂರ್ವ ಸಾಧನೆ ಮಾಡಿದವರಿಗೆ ಸರಕಾರ ಹಲವು ಪ್ರಶಸ್ತಿಗಳನ್ನು ನೀಡುತ್ತದೆ. ಇ.ಎಂ.ಎಸ್. ನಂಬೂದರಿಪಾದ್ ಅವರನ್ನು ಕೇಳಿದಾಗ ಅವರು ಪ್ರಶಸ್ತಿಯನ್ನು ನಿರಾಕರಿಸಿದ್ದರು. ಜ್ಯೋತಿ ಬಸು ಹಾಗೂ ಬುದ್ಧದೇವ್ ಭಟ್ಟಾಚಾರ್ಯರೂ ಅದನ್ನೇ ಮಾಡಿದ್ದರು. ವಿ.ಎಸ್. ಅಚ್ಯುತಾನಂದ್ ಅವರ ವಿಷಯಕ್ಕೆ ಸಂಬಂಧಿಸಿದಂತೆ ಮರಣೋತ್ತರವಾಗಿ ಪ್ರಶಸ್ತಿ ನೀಡಲಾಗಿದೆ. ಅವರ ಕುಟುಂಬ ಇದನ್ನು ಸಂತೋಷದಿಂದ ಅಂಗೀಕರಿಸಿರುವುದರಿಂದ, ನಾವೂ ಅದನ್ನು ಒಪ್ಪಿಕೊಳ್ಳಬೇಕಿದೆ. ವಿಭಿನ್ನ ನಿಲುವು ತೆಗೆದುಕೊಳ್ಳಬೇಕಾದ ಯಾವುದೇ ಅಗತ್ಯವಿಲ್ಲ. ಕುಟುಂಬದವರ ಸಂತೋಷದಲ್ಲಿ ನಾವೂ ಭಾಗಿಯಾಗುತ್ತೇವೆ” ಎಂದು ಸ್ಪಷ್ಟಪಡಿಸಿದರು. ಆದರೆ, ಇಂತಹುದೇ ಪುರಸ್ಕಾರಗಳನ್ನು ಈ ಹಿಂದೆ ತಿರಸ್ಕರಿಸುವ ನಿಲುವು ತೆಗೆದುಕೊಂಡಿದ್ದ ಸಿಪಿಎಂನ ಹಳೆಯ ನಿಲುವಿಗೆ ಇದು ವ್ಯತಿರಿಕ್ತವಾಗಿದೆ. 1992ರಲ್ಲಿ ಇ.ಎಂ.ಎಸ್. ನಂಬೂದರಿಪಾದ್, 2008ರಲ್ಲಿ ಜ್ಯೋತಿ ಬಸು ಹಾಗೂ 2022ರಲ್ಲಿ ಬುದ್ಧದೇವ್ ಭಟ್ಟಾಚಾರ್ಯ ಸರಕಾರಿ ಪುರಸ್ಕಾರಗಳನ್ನು ನಿರಾಕರಿಸಿದ್ದರು. ಈ ನಿಲುವನ್ನು ಅವರ ಮಾತೃಪಕ್ಷ ಸಿಪಿಎಂ ಕೂಡಾ ಬೆಂಬಲಿಸಿತ್ತು.

ವಾರ್ತಾ ಭಾರತಿ 26 Jan 2026 9:43 pm

ತಿರುಮಪರಂಕುಂದ್ರಂ ದೀಪೋತ್ಸವ: ಪುರಾತತ್ವ ಇಲಾಖೆಯ ಅನುಮತಿ ಕಡ್ಡಾಯವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಗೆ ಮೇಲ್ಮನವಿ

ಹೊಸದಿಲ್ಲಿ: ಭಾರತೀಯ ಪುರಾತತ್ವ ಇಲಾಖೆ ಹಾಗೂ ಪೊಲೀಸರೊಂದಿಗೆ ಮುಂಚಿತ ಸಮಾಲೋಚನೆ ಮತ್ತು ಅನುಮತಿ ಪಡೆದ ಬಳಿಕವೇ ತಿರುಮಪರಂಕುಂದ್ರಂ ಬೆಟ್ಟದ ಮೇಲೆ ಕಾರ್ತಿಕ ದೀಪೋತ್ಸವ ನಡೆಸಬೇಕು ಎಂದು ಜನವರಿ 6ರಂದು ಮದ್ರಾಸ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ, ಮೂಲ ಅರ್ಜಿದಾರ ರಾಮ ರವಿಕುಮಾರ್ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಹೈಕೋರ್ಟ್ ನೀಡಿರುವ ಈ ತೀರ್ಪು, ಅರುಳ್ ಮಿಗು ಸುಬ್ರಮಣ್ಯ ಸ್ವಾಮಿ ದೇವಾಲಯದ ಮಾಲಕತ್ವ ಹಾಗೂ ನಿಯಂತ್ರಣದ ಕುರಿತು ಸಿವಿಲ್ ನ್ಯಾಯಾಲಯ ನೀಡಿರುವ ಪಾಲಿಸಲೇಬೇಕಾದ ತೀರ್ಪನ್ನು ಕಾನೂನುಬಾಹಿರವಾಗಿ ದುರ್ಬಲಗೊಳಿಸುತ್ತದೆ. ಜೊತೆಗೆ, ಇದು ಅತ್ಯಗತ್ಯ ಧಾರ್ಮಿಕ ಆಚರಣೆಯ ಕುರಿತು ಅನುಮತಿಯಿಲ್ಲದ ನ್ಯಾಯಾಂಗ ಸೂಚನೆಯಾಗಿದೆ ಎಂದು ಅರ್ಜಿದಾರ ರವಿಕುಮಾರ್ ಪರವಾಗಿ ವಕೀಲ ಜಿ. ಬಾಲಾಜಿ ನ್ಯಾಯಾಲಯದ ಮುಂದೆ ವಾದಿಸಿದ್ದಾರೆ. ದೀಪೋತ್ಸವದ ವೇಳೆ ದೇವಾಲಯಕ್ಕೆ ದೀಪ ಹಚ್ಚುವ ಅಧಿಕಾರವಿದೆ ಎಂದು ನ್ಯಾಯಾಲಯ ಸಮ್ಮತಿಸಿದ್ದರೂ, ಅದು ಆಡಳಿತದ ಇಚ್ಛೆಗೆ ಒಳಪಟ್ಟಿರುವ ಷರತ್ತುಬದ್ಧ ಹಕ್ಕಾಗಿದೆ ಎಂದು ಹೇಳಿದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ. ಇದಕ್ಕೂ ಮುನ್ನ, ಡಿಸೆಂಬರ್ 1, 2025ರಂದು ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್‌ನ ಏಕಸದಸ್ಯ ಪೀಠ, ದೀಪೋತ್ಸವದಂದು ಕಾರ್ತಿಕ ದೀಪವನ್ನು ದೇವಾಲಯದ ಸ್ಥಳದಲ್ಲಿಯೇ ಹಚ್ಚಬೇಕು ಹಾಗೂ ಸಿಕಂದರ್ ಬಾದುಶಾ ದರ್ಗಾದ ಹೊರಗೆ ಗುರುತಿಸಿರುವ ಗಡಿಯೊಳಗೆ ಮಾತ್ರ ಈ ಕಾರ್ಯಕ್ರಮ ನಡೆಸಬೇಕು ಎಂದು ಆದೇಶಿಸಿತ್ತು. ಜನವರಿ 6, 2026ರಂದು ಸಂಪ್ರದಾಯವನ್ನು ಸೈದ್ಧಾಂತಿಕವಾಗಿ ವಿಭಾಗೀಯ ನ್ಯಾಯಪೀಠ ಎತ್ತಿ ಹಿಡಿದರೂ, ಕೆಲವು ಶಾಸನಾತ್ಮಕ ನಿರ್ಬಂಧಗಳನ್ನು ವಿಧಿಸಿತ್ತು. ಕಾರ್ತಿಕ ದೀಪವನ್ನು ಹಚ್ಚುವ ಮೊದಲು ದೇವಾಲಯವು ಭಾರತೀಯ ಪುರಾತತ್ವ ಇಲಾಖೆಯನ್ನು ಸಂಪರ್ಕಿಸಬೇಕು. ಸಂರಕ್ಷಿತ ಸ್ಮಾರಕ ಎಂದು ಪರಿಗಣಿಸಲಾಗಿರುವ ಬೆಟ್ಟವನ್ನು ರಕ್ಷಿಸುವ ಸಲುವಾಗಿ ಭಾರತೀಯ ಪುರಾತತ್ವ ಇಲಾಖೆ ಷರತ್ತುಗಳನ್ನು ವಿಧಿಸಬಹುದು ಹಾಗೂ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಭಕ್ತಾದಿಗಳ ಸಂಖ್ಯೆಗೆ ನಿರ್ಬಂಧ ಹೇರಬಹುದು ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ತಿಳಿಸಿದೆ.

ವಾರ್ತಾ ಭಾರತಿ 26 Jan 2026 9:30 pm

ಇಸ್ಲಾಮಾಬಾದ್ ವಿಮಾನ ನಿಲ್ದಾಣ ಒಪ್ಪಂದದಿಂದ ನಿರ್ಗಮಿಸಿದ UAE

ಅಬುಧಾಬಿ, ಜ.26: ಇಸ್ಲಾಮಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ವಹಿಸುವ ಯೋಜನೆಯಿಂದ ಯುಎಇ ಸೋಮವಾರ ಹಿಂದಕ್ಕೆ ಸರಿದಿದ್ದು, ಪಾಕಿಸ್ತಾನಕ್ಕೆ ಅನಿರೀಕ್ಷಿತ ಹಿನ್ನಡೆಯಾಗಿದೆ. ಯುಎಇ ಅಧ್ಯಕ್ಷ ಶೇಖ್ ಮುಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರು ಭಾರತಕ್ಕೆ ಅನಿರೀಕ್ಷಿತ ಭೇಟಿ ನೀಡಿದ ಬಳಿಕ ಈ ಬೆಳವಣಿಗೆ ನಡೆದಿದೆ. ಸ್ಥಳೀಯ ಪಾಲುದಾರರನ್ನು ಹುಡುಕಲು ಯುಎಇ ವಿಫಲವಾದ ನಂತರ ಮತ್ತು ಯೋಜನೆಯಲ್ಲಿ ಆಸಕ್ತಿ ಕಳೆದುಕೊಂಡ ಹಿನ್ನೆಲೆಯಲ್ಲಿ ಆಗಸ್ಟ್ 2025ರಿಂದ ಚರ್ಚೆಯಲ್ಲಿರುವ ಪ್ರಸ್ತಾವನೆಯು ವಿಫಲವಾಯಿತು. ಈ ನಿರ್ಧಾರವು ರಾಜಕೀಯ ಪರಿಗಣನೆಗಳಿಗೆ ನೇರವಾಗಿ ಸಂಬಂಧಿಸಿಲ್ಲ ಎಂದು ಮೂಲಗಳನ್ನು ಉಲ್ಲೇಖಿಸಿ ‘ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್’ ವರದಿ ಮಾಡಿದೆ. ಪಾಕಿಸ್ತಾನದ ಹದಗೆಡುತ್ತಿರುವ ಆರ್ಥಿಕ ಪರಿಸ್ಥಿತಿಯ ನಡುವೆ ಈ ಯೋಜನೆಯು ಪ್ರಾಮುಖ್ಯತೆಯನ್ನು ಪಡೆದುಕೊಂಡಿತ್ತು.

ವಾರ್ತಾ ಭಾರತಿ 26 Jan 2026 9:26 pm

2028ಕ್ಕೆ ಮತ್ತೊಮ್ಮೆ HD ಕುಮಾರಸ್ವಾಮಿ ಸಿಎಂ ಚರ್ಚೆ: ಒಳ್ಳೆ ದಿನ ಏಕೆ ಅಶುಭ ಎಂದ ಡಿ ಕೆ ಶಿವಕುಮಾರ್

ಬೆಂಗಳೂರು: ಮುಂದಿನ 2028ಕ್ಕೆ ಎಚ್‌.ಡಿ. ಕುಮಾರಸ್ವಾಮಿ ರಾಜ್ಯ ರಾಜಕಾರಣಕ್ಕೆ ಬರಬೇಕು ಎನ್ನುವುದು ರಾಜ್ಯದ ಜನರ ಬಯಕೆಯಾಗಿದೆ. ಮುಂದಿನ ಚುನಾವಣೆಯಲ್ಲಿ ಗೆದ್ದು ಹೆಚ್‌ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಚರ್ಚೆ ಜೆಡಿಎಸ್‌ನಲ್ಲಿ ಶುರುವಾಗಿದ್ದು, 2028 ಕ್ಕೆ ಮುಖ್ಯಮಂತ್ರಿಯಾಗುತ್ತೇನೆ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಡಿ ಕೆ ಶಿವಕುಮಾರ್‌ ಪ್ರತಿಕ್ರಿಯಿಸಿದ್ದು, ಇಂತಹ ಒಳ್ಳೆ ದಿನ ಏಕೆ ಅಶುಭ ಮಾತನ್ನಾಡುವುದು,

ಒನ್ ಇ೦ಡಿಯ 26 Jan 2026 9:25 pm

ಕರ್ನಾಟಕದ ‘ಮಿಲೆಟ್ಸ್ ಟು ಮೈಕ್ರೋಚಿಪ್’ ಸ್ತಬ್ಧಚಿತ್ರ ಗಣರಾಜ್ಯೋತ್ಸವ ಪರೇಡ್ ತಪ್ಪಿಸಿಕೊಂಡಿದ್ದು ಏಕೆ?

ಹೊಸದಿಲ್ಲಿ, ಜ.26: ಗಣರಾಜ್ಯೋತ್ಸವ ಸಂಭ್ರಮವು ಭಾರತದ ಹೆಮ್ಮೆ ಮತ್ತು ಪರಂಪರೆಯ ಅದ್ಭುತ ಪ್ರದರ್ಶನದೊಂದಿಗೆ ಸಂಪನ್ನಗೊಂಡಿದೆ. ಪರೇಡ್ ವೀಕ್ಷಿಸಲು ದಿಲ್ಲಿಯ ಕರ್ತವ್ಯ ಪಥದಲ್ಲಿ ಅಪಾರ ಜನಸಮೂಹ ನೆರೆದಿತ್ತು. ಆದಾಗ್ಯೂ, ಈ ವರ್ಷ ಕರ್ನಾಟಕದ ‘ಮಿಲೆಟ್ಸ್ ಟು ಮೈಕ್ರೋಚಿಪ್ (ಸಿರಿಧಾನ್ಯಗಳಿಂದ ಮೈಕ್ರೋಚಿಪ್‌ವರೆಗೆ)’ ಸ್ತಬ್ಧಚಿತ್ರವು ಪರೇಡ್‌ನ ಭಾಗವಾಗಿರಲಿಲ್ಲ. ಬದಲಿಗೆ, ಅದನ್ನು ಕೆಂಪುಕೋಟೆಯಲ್ಲಿ 30 ದಿನಗಳ ಕಾಲ ನಡೆಯಲಿರುವ ಭಾರತ ಪರ್ವ್ ಸಾಂಸ್ಕೃತಿಕ ಉತ್ಸವದಲ್ಲಿ ಪ್ರದರ್ಶಿಸಲಾಗಿದ್ದು, ಸಂದರ್ಶಕರಿಗೆ ಸಾಂಪ್ರದಾಯಿಕ ಕೃಷಿಯಿಂದ ಆಧುನಿಕ ತಂತ್ರಜ್ಞಾನ ಆವಿಷ್ಕಾರಗಳವರೆಗಿನ ರಾಜ್ಯದ ಪಯಣವನ್ನು ಹತ್ತಿರದಿಂದ ವೀಕ್ಷಿಸಲು ಅವಕಾಶ ಕಲ್ಪಿಸಿದೆ. ಅಧಿಕಾರಿಗಳ ಪ್ರಕಾರ, ಈ ವರ್ಷದ ಮುಖ್ಯ ಪರೇಡ್‌ಗೆ ಕರ್ನಾಟಕ ಸ್ತಬ್ಧಚಿತ್ರದ ವಿಷಯವನ್ನು ಆಯ್ಕೆ ಮಾಡಲಾಗಿಲ್ಲ. ಭಾರತ ಪರ್ವ್ ವೇದಿಕೆಯು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ಪ್ರಾದೇಶಿಕ ಪಾಕ ಪದ್ಧತಿಗಳು, ಕರಕುಶಲ ವಸ್ತುಗಳು ಮತ್ತು ನವೀನತೆಗಳನ್ನು ಪ್ರದರ್ಶಿಸಲು ಅವಕಾಶ ನೀಡುತ್ತಿದ್ದು, ಇದು ಕರ್ನಾಟಕದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಸೂಕ್ತ ಪರ್ಯಾಯವಾಗಿದೆ. 2022ರ ಕೇಂದ್ರ ಸರ್ಕಾರದ ನಿರ್ಧಾರದ ಬಳಿಕ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಒಂದು ವರ್ಷ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಿದ್ದರೆ, ಮರು ವರ್ಷ ಭಾರತ ಪರ್ವ್‌ನಲ್ಲಿ ಪಾಲ್ಗೊಳ್ಳುತ್ತವೆ. 2026ರ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಅನುಪಸ್ಥಿತಿಗೆ ಇದು ಕಾರಣವಾಗಿರಬಹುದು. ದಿಲ್ಲಿಯಲ್ಲಿ ನಿಯೋಜಿಸಲಾದ 200 ಕುಶಲಕರ್ಮಿಗಳ ತಂಡವು ಸುಮಾರು ಎರಡು ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ನಿರ್ಮಿಸಿದೆ.

ವಾರ್ತಾ ಭಾರತಿ 26 Jan 2026 9:23 pm

ವಾರದಲ್ಲಿ 5 ದಿನಗಳ ಕೆಲಸ ಜಾರಿಗೆ ಒತ್ತಾಯಿಸಿ ನಾಳೆ(ಜ. 27) ಬ್ಯಾಂಕ್‌ ನೌಕರರ ರಾಷ್ಟ್ರವ್ಯಾಪಿ ಮುಷ್ಕರ

ಹೊಸದಿಲ್ಲಿ: ವಾರದಲ್ಲಿ ಐದು ದಿನಗಳ ಕೆಲಸದ ವ್ಯವಸ್ಥೆಯನ್ನು ತಕ್ಷಣವೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ, ಬ್ಯಾಂಕ್‌ ನೌಕರರು ಮಂಗಳವಾರ ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ. ಜನವರಿ 23ರಂದು ಮುಖ್ಯ ಕಾರ್ಮಿಕ ಆಯುಕ್ತರೊಂದಿಗೆ ನಡೆದ ಸಂಧಾನ ಸಭೆ ಯಾವುದೇ ಸಕಾರಾತ್ಮಕ ಫಲಿತಾಂಶ ನೀಡದ ಹಿನ್ನೆಲೆಯಲ್ಲಿ, ಬ್ಯಾಂಕ್‌ ಸಂಘಟನೆಗಳ ಸಂಯುಕ್ತ ವೇದಿಕೆ (ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್–ಯುಎಫ್‌ಬಿಯು) ಮುಷ್ಕರಕ್ಕೆ ಕರೆ ನೀಡಿದೆ. ಈ ಮುಷ್ಕರದಿಂದ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ), ಪಂಜಾಬ್ ನ್ಯಾಷನಲ್‌ ಬ್ಯಾಂಕ್‌, ಬ್ಯಾಂಕ್‌ ಆಫ್ ಬರೋಡಾ ಸೇರಿದಂತೆ ಸರ್ಕಾರಿ ಸ್ವಾಮ್ಯದ ಎಲ್ಲಾ ಬ್ಯಾಂಕ್‌ಗಳ ಶಾಖೆಗಳಲ್ಲಿ ಠೇವಣಿ, ಹಣ ಹಿಂಪಡೆಯುವಿಕೆ, ಚೆಕ್ ಕ್ಲಿಯರೆನ್ಸ್‌ ಮೊದಲಾದ ಬ್ಯಾಂಕಿಂಗ್ ಸೇವೆಗಳು ಅಡಚಣೆಗೆ ಒಳಗಾಗುವ ಸಾಧ್ಯತೆ ಇದೆ. ಆದರೆ ಎಚ್‌ಡಿಎಫ್‌ಸಿ ಬ್ಯಾಂಕ್‌, ಐಸಿಐಸಿಐ ಬ್ಯಾಂಕ್‌, ಎಕ್ಸಿಸ್ ಬ್ಯಾಂಕ್‌ ಸೇರಿದಂತೆ ಖಾಸಗಿ ವಲಯದ ಬ್ಯಾಂಕ್‌ಗಳ ನೌಕರರು ಮುಷ್ಕರದಲ್ಲಿ ಭಾಗವಹಿಸುವುದಿಲ್ಲ. ಹೀಗಾಗಿ ಖಾಸಗಿ ಬ್ಯಾಂಕ್‌ಗಳ ವಹಿವಾಟಿನ ಮೇಲೆ ಮುಷ್ಕರದ ಯಾವುದೇ ಪರಿಣಾಮ ಇರುವುದಿಲ್ಲ ಎಂದು ತಿಳಿಸಲಾಗಿದೆ. ಯುಪಿಐ ಹಾಗೂ ಇಂಟರ್‌ನೆಟ್‌ ಬ್ಯಾಂಕಿಂಗ್ ಸೇರಿದಂತೆ ಡಿಜಿಟಲ್‌ ಮಾಧ್ಯಮಗಳ ಮೂಲಕ ಲಭ್ಯವಿರುವ ಬ್ಯಾಂಕಿಂಗ್ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಆದರೆ ಕೆಲವೆಡೆ ಎಟಿಎಂಗಳಲ್ಲಿ ನಗದು ಲಭ್ಯತೆಗೆ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಎಸ್‌ಬಿಐ ಸೇರಿದಂತೆ ಸರ್ಕಾರಿ ಸ್ವಾಮ್ಯದ ಹಲವು ಬ್ಯಾಂಕ್‌ಗಳು ಮುಷ್ಕರದ ಕುರಿತು ಷೇರು ವಿನಿಮಯ ಕೇಂದ್ರಗಳಿಗೆ ಮಾಹಿತಿ ನೀಡಿವೆ. ಎಲ್ಲ ಶನಿವಾರಗಳನ್ನು ರಜಾದಿನಗಳನ್ನಾಗಿ ಘೋಷಿಸುವ ಕುರಿತು ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ (ಐಬಿಎ) ಮತ್ತು ಯುಎಫ್‌ಬಿಯು ನಡುವೆ 2024ರ ಮಾರ್ಚ್‌ನಲ್ಲಿ ನಡೆದ ವೇತನ ಪರಿಷ್ಕರಣೆ ಚರ್ಚೆಗಳ ಸಂದರ್ಭದಲ್ಲಿ ಒಪ್ಪಂದವಾಗಿತ್ತು. ಆದರೆ ಸರ್ಕಾರವು ಈ ಬೇಡಿಕೆಗೆ ಸ್ಪಂದಿಸುತ್ತಿಲ್ಲ ಎಂದು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟದ (ಎಐಬಿಒಸಿ) ಪ್ರಧಾನ ಕಾರ್ಯದರ್ಶಿ ರೂಪಮ್ ರಾಯ್ ಹೇಳಿದ್ದಾರೆ. ‘ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿದಿನ 40 ನಿಮಿಷ ಹೆಚ್ಚುವರಿ ಕೆಲಸ ಮಾಡಲು ನಾವು ಒಪ್ಪಿಕೊಂಡಿದ್ದೇವೆ. ಪ್ರತೀ ಶನಿವಾರ ರಜೆ ನೀಡಿದರೂ ಕೆಲಸದ ದಿನಗಳು ನಷ್ಟವಾಗುವುದಿಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಮುಖ್ಯ ಕಾರ್ಮಿಕ ಆಯುಕ್ತರೊಂದಿಗೆ ನಡೆದ ಸಭೆಯಲ್ಲಿ ನಮ್ಮ ಬೇಡಿಕೆಗಳ ಕುರಿತು ಯಾವುದೇ ಭರವಸೆ ಸಿಗದ ಹಿನ್ನೆಲೆಯಲ್ಲಿ ಮುಷ್ಕರಕ್ಕೆ ಮುಂದಾಗಬೇಕಾಯಿತು ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ (ಎಐಬಿಇಎ) ಪ್ರಧಾನ ಕಾರ್ಯದರ್ಶಿ ಸಿ.ಎಚ್‌. ವೆಂಕಟಾಚಲಂ ತಿಳಿಸಿದ್ದಾರೆ. ಪ್ರಸ್ತುತ ನಿಯಮಗಳ ಪ್ರಕಾರ ಪ್ರತೀ ತಿಂಗಳ ಎರಡನೇ ಹಾಗೂ ನಾಲ್ಕನೇ ಶನಿವಾರ ಬ್ಯಾಂಕ್‌ಗಳಿಗೆ ರಜೆ ಇರುತ್ತದೆ. ಈ ಬ್ಯಾಂಕ್‌ಗಳಲ್ಲಿ ನಾಳೆ ಅಡಚಣೆ ಸಾಧ್ಯ ಭಾರತೀಯ ಸ್ಟೇಟ್‌ ಬ್ಯಾಂಕ್‌, ಪಂಜಾಬ್ ನ್ಯಾಷನಲ್‌ ಬ್ಯಾಂಕ್‌, ಬ್ಯಾಂಕ್‌ ಆಫ್ ಬರೋಡಾ, ಕೆನರಾ ಬ್ಯಾಂಕ್‌ ಸೇರಿದಂತೆ ಎಲ್ಲಾ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಶಾಖೆಗಳಲ್ಲಿ ಶಾಖೆಗೆ ಭೇಟಿ ನೀಡಿ ಪಡೆಯುವ ಠೇವಣಿ, ಹಣ ಹಿಂಪಡೆಯುವಿಕೆ, ಚೆಕ್ ಕ್ಲಿಯರೆನ್ಸ್‌ ಮೊದಲಾದ ಸೇವೆಗಳು ಅಡಚಣೆಗೆ ಒಳಗಾಗುವ ಸಾಧ್ಯತೆ ಇದೆ. ಕೆಲವೆಡೆ ಎಟಿಎಂಗಳಲ್ಲಿ ನಗದು ಲಭ್ಯತೆಗೆ ಸಮಸ್ಯೆ ಎದುರಾಗಬಹುದು. ಈ ಸೇವೆಗಳು ಎಂದಿನಂತೆ ಇರಲಿದೆ ಯುಪಿಐ ಹಾಗೂ ಇಂಟರ್‌ನೆಟ್‌ ಬ್ಯಾಂಕಿಂಗ್ ಸೇರಿದಂತೆ ಡಿಜಿಟಲ್‌ ಬ್ಯಾಂಕಿಂಗ್ ಸೇವೆಗಳು ಯಾವುದೇ ವ್ಯತ್ಯಯವಿಲ್ಲದೆ ಎಂದಿನಂತೆ ಕಾರ್ಯನಿರ್ವಹಿಸಲಿವೆ.

ವಾರ್ತಾ ಭಾರತಿ 26 Jan 2026 9:20 pm

ವಿದೇಶಿ ಯುದ್ಧನೌಕೆಗಳ ಉಪಸ್ಥಿತಿಗೆ ಹೆದರುವುದಿಲ್ಲ: Iran

ಭಿತ್ತಿಚಿತ್ರದ ಮೂಲಕ ಅಮೆರಿಕಾಕ್ಕೆ ಎಚ್ಚರಿಕೆ

ವಾರ್ತಾ ಭಾರತಿ 26 Jan 2026 9:18 pm

Philippines: ಹಡಗು ಮುಳುಗಿ 15 ಮೃತ್ಯು; 28 ಮಂದಿ ನಾಪತ್ತೆ

ಮನಿಲಾ, ಜ.26: ದಕ್ಷಿಣ ಫಿಲಿಪ್ಪೀನ್ಸ್‌ನ ಬಾಲುಕ್ ದ್ವೀಪದ ಬಳಿ ಸೋಮವಾರ ಪ್ರಯಾಣಿಕರ ಹಡಗು ಮುಳುಗಿ, ಕನಿಷ್ಠ 15 ಮಂದಿ ಸಾವನ್ನಪ್ಪಿದ್ದು, 28 ಮಂದಿ ನಾಪತ್ತೆಯಾಗಿರುವುದಾಗಿ ವರದಿಯಾಗಿದೆ. ಜಂಬೋವಂಗ ನಗರದಿಂದ ಸುಲು ಪ್ರಾಂತದ ಜೊಲೊ ನಗರಕ್ಕೆ ಪ್ರಯಾಣಿಸುತ್ತಿದ್ದ ಹಡಗಿನಲ್ಲಿ 332 ಪ್ರಯಾಣಿಕರು ಮತ್ತು 27 ಸಿಬ್ಬಂದಿ ಇದ್ದರು. ಸ್ಥಳೀಯ ಕಾಲಮಾನ ಸೋಮವಾರ ಮಧ್ಯಾಹ್ನ 1:50ಕ್ಕೆ ಹಡಗಿನೊಳಗೆ ಏಕಾಏಕಿ ನೀರು ಪ್ರವೇಶಿಸಿ ಹಡಗು ಮುಳುಗತೊಡಗಿತು. ಹಡಗಿನ ಕ್ಯಾಪ್ಟನ್ ಅಪಾಯದ ಸಂದೇಶ ರವಾನಿಸಿದ್ದು, ಫಿಲಿಪ್ಪೀನ್ಸ್‌ನ ಕರಾವಳಿ ಕಾವಲು ಪಡೆ, ನೌಕಾಪಡೆ, ವಾಯುಪಡೆ ಹಾಗೂ ಸ್ಥಳೀಯ ತಂಡಗಳು ರಕ್ಷಣಾ ಕಾರ್ಯಾಚರಣೆ ಮುಂದುವರಿಸಿವೆ. 316 ಮಂದಿಯನ್ನು ರಕ್ಷಿಸಲಾಗಿದ್ದು, 15 ಮೃತದೇಹಗಳನ್ನು ಪತ್ತೆಹಚ್ಚಲಾಗಿದೆ. ಇನ್ನೂ 28 ಮಂದಿ ನಾಪತ್ತೆಯಾಗಿರುವುದಾಗಿ ವರದಿಯಾಗಿದೆ.

ವಾರ್ತಾ ಭಾರತಿ 26 Jan 2026 9:13 pm

T20 ಕ್ರಿಕೆಟ್: ಭಾರತದ ಪರ ಎರಡನೇ ವೇಗದ ಅರ್ಧಶತಕ ಗಳಿಸಿದ ಅಭಿಷೇಕ್

ಹೊಸದಿಲ್ಲಿ, ಜ.26: ನ್ಯೂಝಿಲ್ಯಾಂಡ್ ವಿರುದ್ಧ ರವಿವಾರ ಗುವಾಹಟಿಯಲ್ಲಿ ನಡೆದ ಮೂರನೇ ಟಿ–20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಮೂಲಕ ಟಿ–20 ಕ್ರಿಕೆಟ್‌ನಲ್ಲಿ ಭಾರತದ ಪರ ಎರಡನೇ ವೇಗದ ಅರ್ಧಶತಕ ದಾಖಲಿಸಿದರು. ಕಳೆದ ತಿಂಗಳು ದಕ್ಷಿಣ ಆಫ್ರಿಕಾ ವಿರುದ್ಧ ಕೇವಲ 16 ಎಸೆತಗಳಲ್ಲಿ 50 ರನ್ ಗಳಿಸಿದ್ದ ಅಭಿಷೇಕ್ ಶರ್ಮಾ ಸಹ ಆಟಗಾರ ಹಾರ್ದಿಕ್ ಪಾಂಡ್ಯ ದಾಖಲೆಯನ್ನು ಮುರಿದಿದ್ದರು. ಭಾರತದ ಪರ ವೇಗದ ಅರ್ಧಶತಕ ಗಳಿಸಿದವರ ಪಟ್ಟಿಯಲ್ಲಿ ಅಭಿಷೇಕ್ ಶರ್ಮಾ ತಮ್ಮ ಮೆಂಟರ್ ಯುವರಾಜ್ ಸಿಂಗ್ ಬಳಿಕ ಎರಡನೇ ಸ್ಥಾನದಲ್ಲಿದ್ದಾರೆ. ಯುವರಾಜ್ 2007ರಲ್ಲಿ ಇಂಗ್ಲೆಂಡ್ ವಿರುದ್ಧ ಕೇವಲ 12 ಎಸೆತಗಳಲ್ಲಿ 50 ರನ್ ಗಳಿಸಿದ್ದರು. ಆ ವೇಳೆ ಅವರು ಸ್ಟುವರ್ಟ್ ಬ್ರಾಡ್ ಓವರ್‌ನಲ್ಲಿ ಆರು ಸಿಕ್ಸರ್‌ಗಳನ್ನು ಸಿಡಿಸಿದ್ದರು. ಒಟ್ಟಾರೆ, ಯುವರಾಜ್ ಅವರ ಪ್ರಯತ್ನವು ಟಿ–20 ಕ್ರಿಕೆಟ್‌ನ ಎರಡನೇ ವೇಗದ ಅರ್ಧಶತಕವಾಗಿದೆ. 2023ರ ಏಷ್ಯನ್ ಗೇಮ್ಸ್‌ನಲ್ಲಿ ಮಂಗೋಲಿಯಾ ವಿರುದ್ಧ 9 ಎಸೆತಗಳಲ್ಲಿ ಅರ್ಧಶತಕ ಗಳಿಸಿದ್ದ ನೇಪಾಳದ ದೀಪೇಂದ್ರ ಸಿಂಗ್ ಅವರು ಯುವರಾಜ್ ದಾಖಲೆಯನ್ನು ಮುರಿದಿದ್ದರು. ಜ.21ರಂದು ನಾಗಪುರದಲ್ಲಿ ನಡೆದ ಮೊದಲ ಪಂದ್ಯದಲ್ಲೂ ಅಬ್ಬರಿಸಿದ್ದ ಅಭಿಷೇಕ್, ರವಿವಾರ ಗುವಾಹಟಿಯಲ್ಲಿ 20 ಎಸೆತಗಳಲ್ಲಿ ಏಳು ಬೌಂಡರಿ ಹಾಗೂ ಐದು ಸಿಕ್ಸರ್‌ಗಳೊಂದಿಗೆ ಔಟಾಗದೆ 68 ರನ್ ಗಳಿಸಿ ಭಾರತಕ್ಕೆ ಎಂಟು ವಿಕೆಟ್ ಜಯ ತಂದುಕೊಟ್ಟಿದ್ದರು.

ವಾರ್ತಾ ಭಾರತಿ 26 Jan 2026 9:11 pm

BCCI ಮಾಜಿ ಅಧ್ಯಕ್ಷ ಐ.ಎಸ್. ಬಿಂದ್ರಾ ನಿಧನ

ಚೆನ್ನೈ, ಜ.26: ಐ.ಎಸ್. ಬಿಂದ್ರಾ ಎಂದೇ ಜನಪ್ರಿಯರಾಗಿದ್ದ, ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಾಜಿ ಅಧ್ಯಕ್ಷ ಇಂದರ್‌ಜಿತ್ ಸಿಂಗ್ ಬಿಂದ್ರಾ ರವಿವಾರ ಹೊಸದಿಲ್ಲಿಯಲ್ಲಿ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಅಧ್ಯಕ್ಷ ಜಯ್ ಶಾ ಸಾಮಾಜಿಕ ಮಾಧ್ಯಮದಲ್ಲಿ ಈ ಸುದ್ದಿಯನ್ನು ದೃಢಪಡಿಸಿದರು. ‘‘ಮಾಜಿ ಬಿಸಿಸಿಐ ಅಧ್ಯಕ್ಷ ಹಾಗೂ ಭಾರತೀಯ ಕ್ರಿಕೆಟ್ ಆಡಳಿತದ ದಿಗ್ಗಜ ಐ.ಎಸ್. ಬಿಂದ್ರಾ ನಮ್ಮನ್ನು ಅಗಲಿದ್ದು, ಅವರಿಗೆ ಶ್ರದ್ದಾಂಜಲಿ ಸಲ್ಲಿಸುತ್ತೇನೆ. ಅವರ ಪರಂಪರೆ ಭವಿಷ್ಯದ ಪೀಳಿಗೆಗೆ ಸ್ಫೂರ್ತಿಯಾಗಿದೆ. ಓಂ ಶಾಂತಿ’’ ಎಂದು ಶಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಮಾಜಿ ಕ್ರಿಕೆಟಿಗರಾದ ಹರ್ಭಜನ್ ಸಿಂಗ್ ಹಾಗೂ ಯುವರಾಜ್ ಸಿಂಗ್ ಅವರು ಬಿಂದ್ರಾ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ. ಬಿಂದ್ರಾ ಅವರು 1993ರಿಂದ 1996ರ ತನಕ ಬಿಸಿಸಿಐ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. 1978ರಿಂದ 2014ರ ತನಕ ಪಂಜಾಬ್ ಕ್ರಿಕೆಟ್ ಸಂಸ್ಥೆ (ಪಿಸಿಎ)ಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಆಡಳಿತಗಾರನಾಗಿ ಅವರ ಸೇವೆಗಳನ್ನು ಗುರುತಿಸಿ ಮೊಹಾಲಿಯ ಪಿಸಿಎ ಸ್ಟೇಡಿಯಂಗೆ ‘ಐ.ಎಸ್. ಬಿಂದ್ರಾ ಸ್ಟೇಡಿಯಂ’ ಎಂದು ಮರುನಾಮಕರಣಗೊಳಿಸಲಾಗಿದೆ. ಶರದ್ ಪವಾರ್ ಐಸಿಸಿ ಅಧ್ಯಕ್ಷರಾಗಿದ್ದಾಗ ಬಿಂದ್ರಾ ಅವರು ಪ್ರಮುಖ ಸಲಹೆಗಾರನಾಗಿ ಕಾರ್ಯನಿರ್ವಹಿಸಿದ್ದರು. 1987ರಲ್ಲಿ ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯ ಶ್ರೇಯಸ್ಸು ಬಿಂದ್ರಾ ಹಾಗೂ ಬಿಸಿಸಿಐ ಮಾಜಿ ಅಧ್ಯಕ್ಷರಾದ ಜಗಮೋಹನ್ ದಾಲ್ಮಿಯಾ ಮತ್ತು ಎನ್.ಕೆ.ಪಿ. ಸಾಳ್ವೆಗೆ ಸಲ್ಲುತ್ತದೆ. ಕ್ರಿಕೆಟ್ ಪಂದ್ಯಗಳ ಪ್ರಸಾರದಲ್ಲಿ ದೂರದರ್ಶನದ ಏಕಸ್ವಾಮ್ಯವನ್ನು ಮುರಿಯಲು ಬಿಂದ್ರಾ ಅವರು 1994ರಲ್ಲಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ನ್ಯಾಯಾಲಯವು ಬಿಂದ್ರಾ ಹಾಗೂ ಅವರ ತಂಡದ ಪರ ತೀರ್ಪು ನೀಡಿತ್ತು. ಹೀಗಾಗಿ ಇಎಸ್‌ಪಿಎನ್ ಹಾಗೂ ಟಿಟಬ್ಲ್ಯುಐ ನಂತಹ ಜಾಗತಿಕ ಕಂಪೆನಿಗಳು ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದ್ದವು. ಆ ನಂತರ ಕ್ರಿಕೆಟ್ ವಿಶ್ವದ ಅತಿ ದೊಡ್ಡ ಕ್ರೀಡೆಯಾಗಿ ಬೆಳೆಯಿತು.

ವಾರ್ತಾ ಭಾರತಿ 26 Jan 2026 9:08 pm

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಅದ್ಧೂರಿ ಗಣರಾಜ್ಯೋತ್ಸವ

ಮಂತ್ರಮುಗ್ಧಗೊಳಿಸಿದ ಸಂಕ್ರಾಂತಿ ಸಂಭ್ರಮ, ಏಕೀಕರಣ ಮತ್ತು ನವಭಾರತ ರೂಪಕಗಳು

ವಾರ್ತಾ ಭಾರತಿ 26 Jan 2026 9:02 pm

ಗಣರಾಜ್ಯೋತ್ಸವದಲ್ಲಿ ವಿಪಕ್ಷ ನಾಯಕರಿಗೆ 3ನೇ ಸಾಲಿನ ಆಸನ; 2014ರ ಫೋಟೋ ಬಿಡುಗಡೆ ಮಾಡಿದ ಕಾಂಗ್ರೆಸ್‌, ನಿಯಮ ಏನು?

ಭಾರತ ಇಂದು (ಜ.26-ಸೋಮವಾರ) 77ನೇ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಿದೆ. ರಾಷ್ಟ್ರ ರಾಜಧಾನಿ ನವದೆಹಲಿಯ ಕರ್ತವ್ಯ ಪಥದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್‌, ಭವ್ಯ ಬಾರತದ ಸ್ವರೂಪವನ್ನು ಇಡೀ ಜಗತ್ತಿಗೆ ಪರಿಚಯಿಸಿದೆ. ಈ ಮಧ್ಯೆ ಗಣರಾಜ್ಯೋತ್ಸವ ಸಮಾರಂಭದಲ್ಲಿ ವಿಪಕ್ಷ ನಾಯಕರಾದ ರಾಹುಲ್‌ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮೂರನೇ ಸಾಲಿನಲ್ಲಿ ಆಸನ ವ್ಯವಸ್ಥೆ ಕಲ್ಪಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಕೇಂದ್ರದ ಈ ನಡೆಯನ್ನು ಪ್ರತಿಪಕ್ಷ ಕಾಂಗ್ರೆಸ್‌ ತೀವ್ರವಾಗಿ ಖಂಡಿಸಿದೆ. ಇಲ್ಲಿದೆ ಹೆಚ್ಚಿನ ಮಾಹಿತಿ.

ವಿಜಯ ಕರ್ನಾಟಕ 26 Jan 2026 8:57 pm

ಮಂಗಳೂರು | ಬಡವರ ಸೇವೆಗೆ ದೇವರ ಆಶೀರ್ವಾದ ಇದೆ : ಪೀಟರ್ ಪಾವ್ಲ್ ಸಲ್ದಾನ

ಮಂಗಳೂರು, ಜ.26: ಬಡವರಿಗಾಗಿ ಮಾಡುವ ಸಹಾಯಕ್ಕೆ ದೇವರ ಆಶೀರ್ವಾದ ಸದಾ ಇದೆ. ಬಡವರ ಸೇವೆಯಲ್ಲಿ ದೇವರನ್ನು ಕಾಣಲು ಸಾಧ್ಯವಿದೆ ಎಂದು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ.ಪೀಟರ್ ಪಾವ್ಲ್ ಸಲ್ಡಾನಾ ಹೇಳಿದ್ದಾರೆ ಮಂಗಳೂರು ಫಾದರ್ ಮುಲ್ಲರ್ ಕನ್ವೆನ್ಶನ್ ಸೆಂಟರ್ ನಲ್ಲಿ ರವಿವಾರ ನಡೆದ ಸಮಾರಂಭದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಸಂತ ವಿನ್ಸೆಂಟ್ ದಿ ಪಾವ್ಲ್ ಸೊಸೈಟಿ ಇದರ ಶತಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ದ.ಕ. ಜಿಲ್ಲೆಯ ಅರ್ಹ ಬಡರೋಗಿಗಳಿಗಾಗಿ ಶೇ.50 ರಿಯಾಯತಿ ದರದಲ್ಲಿ ಡಯಾಲಿಸಿಸ್ ಚಿಕಿತ್ಸೆ ನೀಡುವ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದರು. ಎರಡನೇ ಯೋಜನೆಯ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಜೋಸೆಫ್ ಮಿನೇಜಸ್ ಸಾಸ್ತಾನ ಇವರ ನೇತೃತ್ವದಲ್ಲಿ ಮತ್ತು ಫ್ರೀಡಾ ರೇಗೊ ಮತ್ತು ಜಾನೆಟ್ ಫೆರ್ನಾಂಡಿಸ್ ಇವರ ಸಹಕಾರದೊಂದಿಗೆ ಟ್ರಿನಿಟಿ ಮೆಡಿಕೇರ್ ಸರ್ವಿಸ್ ಈ ಯೋಜನೆಯನ್ನು ಕೈಗೊಳ್ಳಲಾಗಿದೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಮಾತನಾಡಿ ಕ್ರೈಸ್ತ ಸಮುದಾಯ ತನ್ನ ಸೇವೆಯ ಮೂಲಕ ಜಗತ್ತಿಗೆ ಮಾದರಿಯಾಗಿದೆ ಎಂದರು. ಟ್ರಿನಿಟಿ ಮೆಡಿಕೇರ್ ಸರ್ವಿಸ್ ಇದರ ರೂವಾರಿ ಜೊಸೇಫ್ ಮಿನೇಜಸ್, ಸೊಸೈಟಿ ಆಫ್ ವಿನ್ಸೆಂಟ್ ದಿ ಪೌಲ್ ಸಂಘಟನೆಯ ಅಂತರಾಷ್ಟ್ರೀಯ ಅಧ್ಯಕ್ಷ ಜುವಾನ್ ಮಾನ್ವೆಲ್ ಬ್ಯೂರೆಗೊ ಗೋಮ್ಸ್, ಸೊಸೈಟಿ ಆಫ್ ವಿನ್ಸೆಂಟ್ ದಿ ಪೌಲ್ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಜೂಡ್ ಮಂಗಳ್ರಾಜ್, ಅಂತರ್ರಾಷ್ಟ್ರೀಯ ಜನರಲ್ ಕೌನ್ಸಿಸ್ ವಿಶೇಷ ಒಂಬುಡ್ಸ್ಮನ್ ಜೋಸೆಫ್ ಪಾಂಡ್ಯನ್, ಫಾದರ್ ಮುಲ್ಲರ್ ಸಂಸ್ಥೆಗಳ ನಿರ್ದೇಶಕ ವಂ.ಫಾವುಸ್ತಿನ್ ಲೂಕಾಸ್ ಲೋಬೊ, ಸೊಸೈಟಿ ಆಫ್ ವಿನ್ಸೆಂಟ್ ದಿ ಪೌಲ್ ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿ ಸಾಂತಿಗೂ ಮಾನಿಕ್ಯಮ್, ಸಂಯೋಜಕರಾದ ಆಶಾ ವಾಜ್, ಯುವ ಪ್ರತಿನಿಧಿ ಆಲಿಸ್ಟರ್ ನಜರೆತ್, ಸೈಂಟ್ ವಿನ್ಸೆಂಟ್ ದಿ ಪಾವ್ಲ್ ಕೇಂದ್ರ ಸಮಿತಿಯ ಅಧ್ಯಕ್ಷ ಗ್ಯಾಬ್ರಿಯಲ್ ಜೋ ಕುವೆಲ್ಲೊ, ಆಧ್ಯಾತ್ಮಿಕ ನಿರ್ದೇಶಕ ವಂ. ಫ್ಲೇವಿಯಾನ್ ಲೋಬೊ, ಕಾರ್ಯದರ್ಶಿ ಲಿಗೋರಿ ಫೆರ್ನಾಂಡಿಸ್, ಕೋಶಾಧಿಕಾರಿ ಕ್ಲಾರೆನ್ಸ್ ಮಚಾದೊ, ಸಂಚಾಲಕರಾದ ಫಿಲೋಮಿನಾ ಮಿನೇಜಸ್ ಉಪಸ್ಥಿತರಿದ್ದರು.

ವಾರ್ತಾ ಭಾರತಿ 26 Jan 2026 8:57 pm

ತಲಪಾಡಿ ಫಲಾಹ್ ವಿದ್ಯಾಸಂಸ್ಥೆಯಲ್ಲಿ ಗಣರಾಜ್ಯೋತ್ಸವ

ಮಂಗಳೂರು : ತಲಪಾಡಿ ಫಲಾಹ್ ವಿದ್ಯಾಸಂಸ್ಥೆಯಲ್ಲಿ ಗಣರಾಜ್ಯೋತ್ಸವ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಆಡಳಿತ ಮಂಡಳಿಯ ಕಾರ್ಯದರ್ಶಿ ಎನ್ .ಅರಬಿ ಕುಂಞಿ ಧ್ವಜಾರೋಹಣಗೈದರು. ಫಲಾಹ್ ಮದರಸ ಮುಖ್ಯೋಪಾಧ್ಯಾಯ ಮುಸ್ತಫಾ ಕಮಾಲ್, ಸಂಸ್ಥೆಯ ಜೊತೆ ಕಾರ್ಯದರ್ಶಿ ಹಾಗೂ ತಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಟಿ.ಇಸ್ಮಾಯಿಲ್ ತಲಪಾಡಿ ಮಾತನಾಡಿದರು. ಸಂಸ್ಥೆಯ ಕೋಶಾಧಿಕಾರಿ ಅಬ್ಬಾಸ್ ಮಜಲ್, ಕಾಲೇಜು ಪ್ರಾಂಶುಪಾಲ ರೇವತಿ ಎನ್.ರೈ., ಕನ್ನಡ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಮುಹಮ್ಮದ್ ರಫೀಕ್, ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಗೀತಾಂಜಲಿ, ಸಂಸ್ಥೆಯ ಮ್ಯಾನೇಜರ್ ಅಬ್ದುಲ್ ನಾಸಿರ್, ಶಬೀರ್ ಇಸ್ಮಾಯಿಲ್ ಹಾಗೂ ಇಸ್ಮಾಯಿಲ್ ಇರ್ಫಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕಿ ಪವನ ಕಾರ್ಯಕ್ರಮ ನಿರೂಪಿಸಿದರು. ಆಶಾ ಸ್ವಾಗತಿಸಿದರು, ಸಂಧ್ಯಾ ವಂದಿಸಿದರು.

ವಾರ್ತಾ ಭಾರತಿ 26 Jan 2026 8:54 pm

ಭಾರತ–ಚೀನಾ ಉತ್ತಮ ನೆರೆಹೊರೆಯವರು, ಸ್ನೇಹಿತರು: ಗಣರಾಜ್ಯೋತ್ಸವ ಶುಭಾಶಯ ಕೋರಿದ ಕ್ಸಿಜಿನ್‌ಪಿಂಗ್

ಹೊಸದಿಲ್ಲಿ, ಜ.26: ಭಾರತದ ಗಣರಾಜ್ಯೋತ್ಸವ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿರುವ ಚೀನಾ ಅಧ್ಯಕ್ಷ ಕ್ಸಿಜಿನ್‌ಪಿಂಗ್ ಅವರು, ‘ಉಭಯ ರಾಷ್ಟ್ರಗಳು ಉತ್ತಮ ನೆರೆಹೊರೆಯವರು, ಸ್ನೇಹಿತರು ಮತ್ತು ಪಾಲುದಾರರು’ ಎಂದು ಬಣ್ಣಿಸಿದ್ದಾರೆ ಎಂದು ಅಧಿಕೃತ ಸುದ್ದಿಸಂಸ್ಥೆ ಶಿನುವಾ ವರದಿ ಮಾಡಿದೆ. ಕಳೆದೊಂದು ವರ್ಷದಲ್ಲಿ ಭಾರತ–ಚೀನಾ ಸಂಬಂಧಗಳು ಸುಧಾರಿಸುತ್ತಿವೆ. ಇದು ಜಾಗತಿಕ ಶಾಂತಿ ಮತ್ತು ಸಮೃದ್ಧಿಯನ್ನು ಕಾಯ್ದುಕೊಳ್ಳುವಲ್ಲಿ ಮತ್ತು ಉತ್ತೇಜಿಸುವಲ್ಲಿ ಮಹತ್ವದ ಪಾತ್ರವನ್ನು ಹೊಂದಿದೆ ಎಂದು ಹೇಳಿರುವ ಕ್ಸಿಜಿನ್‌ಪಿಂಗ್, ಉತ್ತಮ ನೆರೆಹೊರೆಯವರು, ಸ್ನೇಹಿತರು ಮತ್ತು ಪಾಲುದಾರರಾಗಿರುವುದು ಚೀನಾ ಮತ್ತು ಭಾರತಕ್ಕೆ ಸರಿಯಾದ ಆಯ್ಕೆಯಾಗಿದೆ ಎಂದು ಹೇಳಿದ್ದಾರೆ. ಚೀನಾ ಮತ್ತು ಭಾರತವನ್ನು ಒಟ್ಟಿಗೆ ನರ್ತಿಸುತ್ತಿರುವ ‘ಡ್ರ್ಯಾಗನ್ ಮತ್ತು ಆನೆ’ ಎಂದು ಬಣ್ಣಿಸಿರುವ ಅವರು, ಆರೋಗ್ಯಕರ ಮತ್ತು ಸ್ಥಿರ ಸಂಬಂಧಗಳನ್ನು ಉತ್ತೇಜಿಸಲು ಉಭಯ ದೇಶಗಳು ಪರಸ್ಪರ ವಿನಿಮಯ ಮತ್ತು ಸಹಕಾರವನ್ನು ಹೆಚ್ಚಿಸಬೇಕು ಹಾಗೂ ಪರಸ್ಪರರ ಕಳವಳಗಳನ್ನು ಪರಿಹರಿಸಬೇಕು ಎಂದು ತಾನು ಆಶಿಸಿರುವುದಾಗಿ ಕ್ಸಿಜಿನ್‌ಪಿಂಗ್ ಹೇಳಿದ್ದಾರೆ.

ವಾರ್ತಾ ಭಾರತಿ 26 Jan 2026 8:50 pm

ಸರ್ವ ಪುರುಷರ CRPF ತುಕಡಿಯ ನೇತೃತ್ವ ವಹಿಸಿದ ಮಹಿಳಾ ಅಧಿಕಾರಿ ಸಿಮ್ರಾನ್ ಬಾಲಾ

ಹೊಸದಿಲ್ಲಿ, ಜ. 26: ಇಲ್ಲಿನ ಕರ್ತವ್ಯ ಪಥದಲ್ಲಿ ಸೋಮವಾರ ನಡೆದ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಸಿಆರ್‌ಪಿಎಫ್‌ನ ಸಹಾಯಕ ಕಮಾಂಡೆಂಟ್ ಸಿಮ್ರಾನ್ ಬಾಲಾ ಅವರು ಸರ್ವ ಪುರುಷರ ಸಿಆರ್‌ಪಿಎಫ್ ತುಕಡಿಯ ನೇತೃತ್ವ ವಹಿಸುವ ಮೂಲಕ ಚರಿತ್ರೆ ಸೃಷ್ಟಿಸಿದ್ದಾರೆ. ಜಮ್ಮು ಹಾಗೂ ಕಾಶ್ಮೀರದ ರಾಜೌರಿ ಜಿಲ್ಲೆಯ ನೌಶೇರಾ ಹಳ್ಳಿಯವರಾದ 26 ವರ್ಷದ ಅಧಿಕಾರಿ ಸಿಮ್ರಾನ್ ಬಾಲಾ ಅವರು, ದೇಶದ ಅತಿ ದೊಡ್ಡ ಅರೆಸೇನಾ ಪಡೆಯಾಗಿರುವ ಸಿಆರ್‌ಪಿಎಫ್‌ನ 147 ಸಿಬ್ಬಂದಿಯ ತುಕಡಿಯ ನೇತೃತ್ವ ವಹಿಸಿದ್ದಾರೆ. ಕರ್ತವ್ಯ ಪಥದಲ್ಲಿ ಸಿಆರ್‌ಪಿಎಫ್‌ನ ಬ್ಯಾಂಡ್ ತಂಡ ಬಾರಿಸಿದ ಹಾಡು ‘ದೇಶ್ ಕೆ ಹಮ್ ಹೆ ರಕ್ಷಕ್’ ಗೆ ಅನುಗುಣವಾಗಿ ತುಕಡಿ ಸಾಗಿತು. ಗಣರಾಜ್ಯೋತ್ಸವದ ಸಂದರ್ಭಗಳಲ್ಲಿ ವಿವಿಧ ತುಕಡಿಗಳಿಗೆ ಮಹಿಳಾ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಅಧಿಕಾರಿಗಳು ನೇತೃತ್ವ ವಹಿಸಿರುವ ಹಲವು ನಿದರ್ಶನಗಳಿವೆ. ಆದರೆ, ವಾರ್ಷಿಕ ರಾಷ್ಟ್ರೀಯ ಕಾರ್ಯಕ್ರಮದಲ್ಲಿ ಪೂರ್ಣ ಪ್ರಮಾಣದಲ್ಲಿ ಸರ್ವ ಪುರುಷರನ್ನು ಒಳಗೊಂಡ ತುಕಡಿಯನ್ನು ಮಹಿಳಾ ಅಧಿಕಾರಿಯೇ ಮುನ್ನಡೆಸಿರುವುದು ಇದೇ ಮೊದಲು. ಜಮ್ಮು ಹಾಗೂ ಕಾಶ್ಮೀರದ ರಾಜೌರಿಯವರಾದ ಬಾಲಾ ಅವರು ಒಂದು ವರ್ಷದ ಹಿಂದೆ ಸಿಆರ್‌ಪಿಎಫ್‌ಗೆ ಸೇರಿದ್ದರು. ದೇಶದ ಅತಿ ದೊಡ್ಡ ಅರೆಸೇನಾ ಪಡೆಯ ಅಧಿಕಾರಿ ಶ್ರೇಣಿಯ ಹುದ್ದೆಗೆ ಸೇರಿದ ಜಿಲ್ಲೆಯ ಮೊದಲ ಮಹಿಳೆ ಬಾಲಾ. ಅವರ ಗ್ರಾಮ ನೌಶೇರಾ ಭಾರತ–ಪಾಕಿಸ್ತಾನ ಗಡಿ ನಿಯಂತ್ರಣ ರೇಖೆಯಿಂದ ಕೇವಲ 11 ಕಿ.ಮೀ. ದೂರದಲ್ಲಿದೆ. ಈ ಪ್ರದೇಶ ಗಡಿಯಾಚೆಗಿನ ಶೆಲ್ ದಾಳಿಗಳ ಹಲವು ನಿದರ್ಶನಗಳಿಗೆ ಸಾಕ್ಷಿಯಾಗಿದೆ. “ಗಣರಾಜ್ಯೋತ್ಸವ ಪಥಸಂಚಲನದಲ್ಲಿ ತುಕಡಿಯ ನೇತೃತ್ವ ವಹಿಸುವ ಅವಕಾಶ ದೊರಕಿರುವುದು ನನಗೆ ನಿಜವಾಗಿಯೂ ಹೆಮ್ಮೆಯ ವಿಚಾರ. ನನಗೆ ಈ ಅವಕಾಶ ನೀಡಿದ ಸಿಆರ್‌ಪಿಎಫ್‌ಗೆ ಗೌರವ ಸಲ್ಲಿಸುತ್ತೇನೆ” ಎಂದು ಅಭ್ಯಾಸದ ವೇಳೆ ಸಿಮ್ರಾನ್ ಬಾಲಾ ಹೇಳಿದ್ದಾರೆ.

ವಾರ್ತಾ ಭಾರತಿ 26 Jan 2026 8:50 pm

ಜಾಗತಿಕ ಸಂಸ್ಥೆಗಳು, ಒಪ್ಪಂದಗಳಿಂದ ಹೊರನಡೆದ ಅಮೆರಿಕ ಕೆಲವೊಂದರಲ್ಲಿ ಇನ್ನೂ ಸದಸ್ಯರಾಗಿ ಉಳಿದಿರುವುದೇಕೆ?

ಈ ತಿಂಗಳ ಆರಂಭದಲ್ಲಿ, ಅಮೆರಿಕವು ತನ್ನ ಹಿತಾಸಕ್ತಿಗಳಿಗೆ ವಿರುದ್ಧವಾಗಿವೆ ಎಂದು ಹೇಳುತ್ತಾ 60ಕ್ಕೂ ಹೆಚ್ಚು ಪ್ರಮುಖ ಅಂತರರಾಷ್ಟ್ರೀಯ ಸಂಸ್ಥೆಗಳು ಮತ್ತು ಒಪ್ಪಂದಗಳಿಂದ ಹಿಂದೆ ಸರಿದಿದೆ. ಈ ರೀತಿ ಅಮೆರಿಕ ಹೊರನಡೆದ ಸಂಸ್ಥೆಗಳಲ್ಲಿ ಅತ್ಯಂತ ಪ್ರಮುಖವಾದವು ಪರಿಸರ ಮತ್ತು ಹವಾಮಾನ ಸಂಬಂಧಿತ ಒಪ್ಪಂದಗಳಾಗಿವೆ. ಹವಾಮಾನ ಬದಲಾವಣೆಯ ಕುರಿತ ಯುಎನ್ ಫ್ರೇಮ್‌ವರ್ಕ್ ಕನ್ವೆನ್ಷನ್ (UNFCCC), ಹವಾಮಾನ ಬದಲಾವಣೆಯ ಕುರಿತ ಅಂತರಸರ್ಕಾರಿ ಸಮಿತಿ (IPCC), ಅಂತರರಾಷ್ಟ್ರೀಯ ನವೀಕರಿಸಬಹುದಾದ ಇಂಧನ ಸಂಸ್ಥೆ (IRENA), ಅಂತರರಾಷ್ಟ್ರೀಯ ಸೌರ ಒಕ್ಕೂಟ (ISA), ಪ್ರಕೃತಿ ಸಂರಕ್ಷಣೆಗೆ ಸಂಬಂಧಿಸಿದ ಅಂತರರಾಷ್ಟ್ರೀಯ ಒಕ್ಕೂಟ (IUCN) ಇವುಗಳಲ್ಲಿ ಪ್ರಮುಖವಾಗಿವೆ. ಹವಾಮಾನ ಕ್ರಿಯೆಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ತಿರಸ್ಕಾರ ಎಲ್ಲರಿಗೂ ತಿಳಿದಿದೆ. ಅವರು ಹವಾಮಾನ ಬದಲಾವಣೆಯನ್ನು ‘ವಂಚನೆ’ ಎಂದು ಬಣ್ಣಿಸಿದ್ದಾರೆ. ಕಳೆದ ವರ್ಷ ಜನವರಿಯಲ್ಲಿ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡ ತಕ್ಷಣವೇ ಅಮೆರಿಕ 2015ರ ಪ್ಯಾರಿಸ್ ಒಪ್ಪಂದದಿಂದ ಹೊರಬಂದಿತು. ಈ ಸಂಸ್ಥೆಗಳಿಂದ ಹಿಂದೆ ಸರಿದಿರುವುದು, ಹವಾಮಾನ ಕ್ರಿಯೆ ಮತ್ತು ಇಂಧನ ಪರಿವರ್ತನೆಯನ್ನು ಉತ್ತೇಜಿಸುವ ಸಂಸ್ಥೆಗಳು ಅಥವಾ ಕಾರ್ಯಕ್ರಮಗಳ ಬಗ್ಗೆ ಅವರಿಗೆ ಇರುವ ನಿರಾಸಕ್ತಿಯನ್ನು ಸ್ಪಷ್ಟಪಡಿಸುತ್ತದೆ. ಆದಾಗ್ಯೂ, ಅಮೆರಿಕ ಅಂತಹ ಎಲ್ಲಾ ಸಂಸ್ಥೆಗಳು ಅಥವಾ ಒಪ್ಪಂದಗಳಿಂದ ಹೊರಬಂದಿಲ್ಲ. ಜಾಗತಿಕ ಹವಾಮಾನ ನೀತಿ ಮತ್ತು ಚರ್ಚೆಗಳಲ್ಲಿ ಗಮನಾರ್ಹ ಹೆಜ್ಜೆಗುರುತನ್ನು ಹೊಂದಿರುವ ವಿಶ್ವಸಂಸ್ಥೆಯ 31 ಸಂಸ್ಥೆಗಳಿಂದ ಅದು ಹೊರಬಂದಿದೆ. ಆದರೆ ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮ (UNEP)ದಿಂದ ಹೊರಬಂದಿಲ್ಲ. ಅದು IRENAಯಿಂದ ಹೊರಬಂದಿದ್ದರೂ, ಜಾಗತಿಕ ಇಂಧನ ಪರಿವರ್ತನೆಗಳ ಮೇಲೆ ಪ್ರಭಾವ ಬೀರುವ ಅಂತರರಾಷ್ಟ್ರೀಯ ಇಂಧನ ಸಂಸ್ಥೆ (IEA)ಯಿಂದ ಹೊರಬಂದಿಲ್ಲ. ಅದೇ ರೀತಿ, ಹವಾಮಾನ ವಿಜ್ಞಾನದ ಆವರ್ತಕ ಮೌಲ್ಯಮಾಪನಗಳನ್ನು ಮಾಡುವ ವೈಜ್ಞಾನಿಕ ಸಂಸ್ಥೆಯಾದ IPCCಯಿಂದ ಅಮೆರಿಕ ಹಿಂದೆ ಸರಿದಿದ್ದರೂ, ಹವಾಮಾನ ವಿಜ್ಞಾನ ಮತ್ತು IPCCಯ ಆತಿಥೇಯ ಸಂಸ್ಥೆಯಾಗಿರುವ ವಿಶ್ವ ಹವಾಮಾನ ಸಂಸ್ಥೆ (WMO)ಯಿಂದ ಹೊರಬಂದಿಲ್ಲ. ಅಮೆರಿಕ ಇನ್ನೂ ಸದಸ್ಯರಾಗಿ ಉಳಿದಿರುವ ಪರಿಸರ, ಇಂಧನ ಮತ್ತು ಹವಾಮಾನಕ್ಕೆ ಸಂಬಂಧಿಸಿದ ಕೆಲವು ಇತರ ಸಂಸ್ಥೆಗಳು ಮತ್ತು ಒಪ್ಪಂದಗಳೂ ಇವೆ. ಆದಾಗ್ಯೂ, ಅಮೆರಿಕ ಇನ್ನೂ ಕೆಲವು ಹವಾಮಾನ ಮತ್ತು ವಿಜ್ಞಾನ ಗುಂಪುಗಳ ಸದಸ್ಯನಾಗಿರುವುದರಿಂದ ಅದು ಹವಾಮಾನ ಬದಲಾವಣೆಯ ವಿರುದ್ಧ ಹೋರಾಡಲು ಅಥವಾ ಆ ವಿಜ್ಞಾನವನ್ನು ಬೆಂಬಲಿಸಲು ಬದ್ಧವಾಗಿದೆ ಎಂದು ಅರ್ಥವಲ್ಲ. ಈ ಸಂಸ್ಥೆಗಳಲ್ಲಿ ಮುಂದುವರಿಯಲು ಪ್ರೇರಣೆಗಳು ತುಂಬಾ ವಿಭಿನ್ನವಾಗಿರಬಹುದು. ಇತರ ಸಂಸ್ಥೆಗಳನ್ನು ತೊರೆಯಲು ನೀಡಿರುವ ಕಾರಣಗಳನ್ನು ಗಮನಿಸಿದರೆ, ಅಮೆರಿಕ ಈಗಲೂ ಭಾಗವಾಗಿರುವ ಪರಿಸರ ಮತ್ತು ಹವಾಮಾನ ಸಂಬಂಧಿತ ಸಂಸ್ಥೆಗಳು ಹಾಗೂ ಒಪ್ಪಂದಗಳು ಅಮೆರಿಕನ್ ಹಿತಾಸಕ್ತಿಗಳನ್ನು ಪೂರೈಸುತ್ತವೆ ಎಂಬುದನ್ನು ಇದು ಸೂಚಿಸುತ್ತದೆ. ಹವಾಮಾನ ಸಂಸ್ಥೆಗಳನ್ನು ತೊರೆಯುವುದರಿಂದ ಉಂಟಾಗುವ ಪರಿಣಾಮಗಳು ನವೀಕರಿಸಬಹುದಾದ ಇಂಧನ ಅಥವಾ ‘ಹಸಿರು ಆರ್ಥಿಕತೆ’ ಸಂಸ್ಥೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಹವಾಮಾನ ವೇದಿಕೆಗಳಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಪ್ರಪಂಚದಾದ್ಯಂತದ ವ್ಯಾಪಾರ ನಿಯಮಗಳು, ನಿಯಂತ್ರಣ ಮಾನದಂಡಗಳು ಮತ್ತು ಪೂರೈಕೆ ಸರಪಳಿಗಳ ಮೇಲೆ ಪ್ರಭಾವ ಬೀರುತ್ತವೆ. ಉದಾಹರಣೆಗೆ, ಯುರೋಪಿಯನ್ ಒಕ್ಕೂಟ ಮತ್ತು ಚೀನಾದಂತಹ ದೇಶಗಳು ಸಾಮಾನ್ಯವಾಗಿ ಹೊರಸೂಸುವಿಕೆ ಮಾನದಂಡಗಳು ಅಥವಾ ಇಂಗಾಲದ ಗಡಿ ಹೊಂದಾಣಿಕೆ ಕ್ರಮಗಳನ್ನು ಜಾರಿಗೆ ತರುತ್ತವೆ. ಇದು ಅಮೆರಿಕದ ರಫ್ತುದಾರರ ಮೇಲೆ ಪರಿಣಾಮ ಬೀರುತ್ತದೆ. ನೇರ ಹವಾಮಾನ ಮಾನ್ಯತೆ ಇಲ್ಲದ ಕಂಪನಿಗಳೂ ಸಹ ಹೆಚ್ಚಿದ ವೆಚ್ಚಗಳು ಅಥವಾ ಕಡಿಮೆ ಮಾರುಕಟ್ಟೆ ಪ್ರವೇಶವನ್ನು ಎದುರಿಸಬೇಕಾಗುತ್ತದೆ. ಚರ್ಚೆಯಲ್ಲಿರುವ ಒಪ್ಪಂದಗಳು ಪ್ರಸ್ತುತ ಚರ್ಚೆಯಲ್ಲಿರುವ ಕೆಲವು ಪ್ರಮುಖ ಅಂತರರಾಷ್ಟ್ರೀಯ ಒಪ್ಪಂದಗಳು ಅಮೆರಿಕದ ಆದ್ಯತೆಗಳಿಗೆ ಹೊಂದಿಕೆಯಾಗುವಂತೆ ನೋಡಿಕೊಳ್ಳುವುದೂ ಆ ಹಿತಾಸಕ್ತಿಗಳಲ್ಲೊಂದು ಆಗಿರಬಹುದು. ಉದಾಹರಣೆಗೆ, 2022ರಿಂದ UNEP ಜಾಗತಿಕ ಪ್ಲಾಸ್ಟಿಕ್ ಒಪ್ಪಂದದ ಕುರಿತು ಮಾತುಕತೆಗಳನ್ನು ಸುಗಮಗೊಳಿಸುತ್ತಿದೆ. ಇದು ಸಾಗರಗಳನ್ನೂ ಒಳಗೊಂಡಂತೆ ಪ್ಲಾಸ್ಟಿಕ್ ಮಾಲಿನ್ಯವನ್ನು ನಿಯಂತ್ರಿಸಲು ಕಾನೂನುಬದ್ಧವಾಗಿ ಬಾಧ್ಯತೆ ವಿಧಿಸುವ ಅಂತರರಾಷ್ಟ್ರೀಯ ಒಪ್ಪಂದವಾಗಿದೆ. ಈ ಒಪ್ಪಂದವನ್ನು ಕಳೆದ ವರ್ಷ ಅಂತಿಮಗೊಳಿಸಬೇಕಾಗಿತ್ತು. ಆದರೆ ಪ್ಲಾಸ್ಟಿಕ್ ಉತ್ಪಾದನೆಗೆ ಮಿತಿ ವಿಧಿಸುವ ನಿಬಂಧನೆಗಳ ಕುರಿತು ಅಮೆರಿಕ ಸೇರಿದಂತೆ ಕೆಲವು ದೇಶಗಳ ಆಕ್ಷೇಪಣೆಗಳು ಮಾತುಕತೆಗಳನ್ನು ತಡೆಹಿಡಿದಿವೆ. ಅಮೆರಿಕ ಈ ಮಾತುಕತೆಗಳಿಂದ ಹಿಂದೆ ಸರಿಯಲು ಮತ್ತು ಪ್ಲಾಸ್ಟಿಕ್ ಒಪ್ಪಂದದ ಭಾಗವಾಗದಿರಲು ನಿರ್ಧರಿಸಬಹುದು. ಆದರೆ ಪ್ರತಿಕೂಲವಾದ ಒಪ್ಪಂದ ಇನ್ನೂ ಅದರ ಉದ್ಯಮಕ್ಕೆ ಹಾನಿ ಮಾಡಬಹುದು. ಉದಾಹರಣೆಗೆ, ಪಳೆಯುಳಿಕೆ ಇಂಧನಗಳಿಂದ ತಯಾರಿಸಲ್ಪಟ್ಟ ಪ್ಲಾಸ್ಟಿಕ್‌ಗಳ ಅತಿದೊಡ್ಡ ಉತ್ಪಾದಕರಲ್ಲಿ ಅಮೆರಿಕವೂ ಒಂದು. ಅಂತಿಮ ಒಪ್ಪಂದವು ತನ್ನ ಉದ್ಯಮಕ್ಕೆ ಅಪಾಯ ಉಂಟುಮಾಡದಂತೆ ನೋಡಿಕೊಳ್ಳುವುದು ಅಮೆರಿಕಕ್ಕೆ ಮುಖ್ಯವಾಗಿದೆ. ಖಚಿತವಾಗಿ ಹೇಳಬೇಕಾದರೆ, ಪ್ಲಾಸ್ಟಿಕ್‌ಗಳ ಮೇಲಿನ ಪ್ರಸ್ತಾವಿತ ಉತ್ಪಾದನಾ ಮಿತಿಗಳನ್ನು ವಿರೋಧಿಸುವಲ್ಲಿ ಅಮೆರಿಕ ಒಬ್ಬಂಟಿಯಲ್ಲ. ಚೀನಾ, ಸೌದಿ ಅರೇಬಿಯಾ ಮತ್ತು ಭಾರತ ಸೇರಿದಂತೆ ಹಲವಾರು ಪ್ರಭಾವಿ ರಾಷ್ಟ್ರಗಳೂ ಇದೇ ರೀತಿಯ ನಿಲುವುಗಳನ್ನು ಹೊಂದಿವೆ. ಆದರೆ ಪ್ರಸ್ತುತ ಹಂತದಲ್ಲಿ ಈ ಮಾತುಕತೆಯಿಂದ ಹೊರಗುಳಿಯುವುದು ಲಾಭದಾಯಕವೆಂದು ಟ್ರಂಪ್ ಆಡಳಿತ ಸ್ಪಷ್ಟವಾಗಿ ಕಾಣುತ್ತಿಲ್ಲ. ಅಂತರರಾಷ್ಟ್ರೀಯ ಸಾಗರ ಸಂಸ್ಥೆ (IMO) ಅಡಿಯಲ್ಲಿ ನಡೆಯುತ್ತಿರುವ ಹಡಗುಗಳಿಂದ ಇಂಗಾಲ ಹೊರಸೂಸುವಿಕೆಯ ಕುರಿತ ಚರ್ಚೆಗಳೂ ಸ್ವಲ್ಪ ಮಟ್ಟಿಗೆ ಹೋಲುತ್ತವೆ. ಈ ಚರ್ಚೆಯ ಗುರಿಗಳಲ್ಲಿ ಒಂದು 2050ರ ವೇಳೆಗೆ ನಿವ್ವಳ-ಶೂನ್ಯ ಹೊರಸೂಸುವಿಕೆಯ ಚೌಕಟ್ಟನ್ನು ಅಂತಿಮಗೊಳಿಸುವುದಾಗಿದೆ. ಇದರಲ್ಲಿ ಇತರ ವಿಷಯಗಳ ಜೊತೆಗೆ, ಹಡಗುಗಳಿಂದ ಹೊರಸೂಸುವ ಇಂಗಾಲದ ಮೇಲೆ ತೆರಿಗೆ ವಿಧಿಸುವ ಪ್ರಸ್ತಾವವೂ ಸೇರಿದೆ. ಇದನ್ನೂ ಕಳೆದ ವರ್ಷ ಅಂತಿಮಗೊಳಿಸಬೇಕಾಗಿತ್ತು. ಆದರೆ ಅಮೆರಿಕ ಮತ್ತು ಅದೇ ರೀತಿಯ ನಿಲುವು ಹೊಂದಿರುವ ಇತರ ದೇಶಗಳ ವಿರೋಧದಿಂದಾಗಿ ಅದು ಸಾಧ್ಯವಾಗಿಲ್ಲ. ಈ ಎರಡೂ ವಿಷಯಗಳಲ್ಲೂ ಟ್ರಂಪ್ ಆಡಳಿತ ಅಧಿಕಾರ ವಹಿಸಿಕೊಂಡ ನಂತರ ಅಮೆರಿಕದ ನಿಲುವು ಬದಲಾಗಿದೆ. ನಿರಂತರ ಪ್ರಭಾವ ಅಮೆರಿಕ ಕೆಲವು ಬಹುಪಕ್ಷೀಯ ಹವಾಮಾನ ಮತ್ತು ವಿಜ್ಞಾನ ಸಂಬಂಧಿತ ಸಂಸ್ಥೆಗಳಿಂದ ಹಿಂದೆ ಸರಿಯದಿರಲು ಮತ್ತೊಂದು ಸಾಧ್ಯ ಕಾರಣವೆಂದರೆ, ಈ ಸಂಸ್ಥೆಗಳ ನೀತಿ ಮತ್ತು ನಿರ್ಧಾರ ಪ್ರಕ್ರಿಯೆಗಳ ಮೇಲೆ ಅದರ ಪ್ರಭಾವ. ಇದಕ್ಕೆ ಉತ್ತಮ ಉದಾಹರಣೆ ಎಂದರೆ ಅಮೆರಿಕ IRENAಯಿಂದ ಹಿಂದೆ ಸರಿದಿದ್ದು, IEAಯಲ್ಲೇ ಉಳಿದಿರುವುದು. ಇವೆರಡೂ ಇಂಧನ ಸಂಬಂಧಿತ ಸಂಸ್ಥೆಗಳಾಗಿದ್ದು, ಇಂಧನ ಪ್ರವೇಶ, ಲಭ್ಯತೆ ಮತ್ತು ನ್ಯಾಯಯುತ ಹಾಗೂ ಸಮಾನ ಇಂಧನ ನೀತಿಗಳನ್ನು ಉತ್ತೇಜಿಸಲು ಪ್ರಯತ್ನಿಸುತ್ತವೆ. ಆದರೆ ನವೀಕರಿಸಬಹುದಾದ ಶಕ್ತಿಯ ನಿಯೋಜನೆಯನ್ನು ಉತ್ತೇಜಿಸುವುದು IRENAಯ ಪ್ರಮುಖ ಉದ್ದೇಶವಾಗಿದೆ. ಇದು ಹೆಚ್ಚು ತೈಲ ಮತ್ತು ಅನಿಲ ಬಳಕೆಯನ್ನು ಬಯಸುವ ಟ್ರಂಪ್ ಆಡಳಿತದ ಆದ್ಯತೆಗಳಿಗೆ ಹೊಂದಿಕೆಯಾಗುವುದಿಲ್ಲ. ತೈಲ ಪೂರೈಕೆಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು 1974ರಲ್ಲಿ ಸ್ಥಾಪನೆಯಾದ ಸಂಸ್ಥೆಯೇ IEA. ಇತ್ತೀಚಿನ ವರ್ಷಗಳಲ್ಲಿ ಇದು ಸುಸ್ಥಿರ ಶಕ್ತಿಯನ್ನು ಉತ್ತೇಜಿಸುತ್ತಿದ್ದರೂ, ಸೈದ್ಧಾಂತಿಕವಾಗಿ ಇದು ನವೀಕರಿಸಬಹುದಾದ ಶಕ್ತಿಯತ್ತ ಒಲವು ತೋರುವ ಸಂಸ್ಥೆಯಲ್ಲ. ಅಲ್ಲದೆ, ಇದರ ನಿರ್ಧಾರ ಪ್ರಕ್ರಿಯೆಯನ್ನು 31 ದೇಶಗಳ ಗುಂಪು ನಿಯಂತ್ರಿಸುತ್ತದೆ, ಇದರಲ್ಲಿ ಅಮೆರಿಕವೂ ಸೇರಿದೆ. 2009ರಲ್ಲಿ ಅಸ್ತಿತ್ವಕ್ಕೆ ಬಂದ IRENAಗೆ 170ಕ್ಕೂ ಹೆಚ್ಚು ದೇಶಗಳು ಸದಸ್ಯರಾಗಿದ್ದು, ಅಲ್ಲಿ ಅಮೆರಿಕ ಯಾವುದೇ ರಚನಾತ್ಮಕ ಪ್ರಾಬಲ್ಯ ಹೊಂದಿಲ್ಲ. 21ನೇ ಶತಮಾನದ ನವೀಕರಿಸಬಹುದಾದ ಇಂಧನ ನೀತಿ ಜಾಲ, 24/7 ಕಾರ್ಬನ್-ಮುಕ್ತ ಇಂಧನ ಕಾಂಪ್ಯಾಕ್ಟ್ ಮತ್ತು ಅಂತರರಾಷ್ಟ್ರೀಯ ಇಂಧನ ವೇದಿಕೆಯಂತಹ ಕೆಲವು ಕಡಿಮೆ ಪರಿಚಿತ ನವೀಕರಿಸಬಹುದಾದ ಇಂಧನ ಕೇಂದ್ರೀಕೃತ ಸಂಸ್ಥೆಗಳಿಂದಲೂ ಅಮೆರಿಕ ಹಿಂದೆ ಸರಿದಿದೆ. ವಿಶ್ವಸಂಸ್ಥೆಯ ಅಂಗಸಂಸ್ಥೆಯಾದ ವಿಶ್ವ ಹವಾಮಾನ ಸಂಸ್ಥೆಯಲ್ಲಿ ಅಮೆರಿಕ ಉಳಿದಿರುವುದಕ್ಕೆ ಕಾರಣ ಅಲ್ಲಿ ಅದರ ಪ್ರಭಾವ ಹೆಚ್ಚು ಇರುವುದೇ ಆಗಿದೆ. ವಿಶ್ವ ಹವಾಮಾನ ಸಂಸ್ಥೆಯ ಪ್ರಮುಖ ಕೆಲಸಗಳು ಜಾಗತಿಕ ಹವಾಮಾನ ಮುನ್ಸೂಚನೆ, ಸಾಗರ ಮತ್ತು ವಾತಾವರಣದ ಮೇಲ್ವಿಚಾರಣೆ, ವಿಪತ್ತುಗಳ ಮುಂಚಿತ ಎಚ್ಚರಿಕೆ ಮತ್ತು ಹವಾಮಾನ ದತ್ತಾಂಶ ಹಾಗೂ ವಿಶ್ಲೇಷಣೆಗಳಾಗಿವೆ. ಈ ಕಾರ್ಯಗಳಿಗಾಗಿ ವಿಶ್ವ ಹವಾಮಾನ ಸಂಸ್ಥೆ NOAA (National Oceanic and Atmospheric Administration), ನಾಸಾ ಮತ್ತು ಅವುಗಳ ವೀಕ್ಷಣಾ ಉಪಗ್ರಹ ವ್ಯವಸ್ಥೆಗಳ ಮೇಲೆ ಹೆಚ್ಚಿನ ಅವಲಂಬನೆ ಹೊಂದಿದೆ. WMOಗೆ ಅಮೆರಿಕ ಆದ್ಯತೆ ನೀಡುವುದಕ್ಕೆ ಕಾರಣ, ಅಮೆರಿಕದ ದತ್ತಾಂಶ ಅವಶ್ಯಕವಾಗಿರುವುದು. ಇದರಿಂದ ಅಮೆರಿಕಕ್ಕೆ ಹೆಚ್ಚಿನ ನಿಯಂತ್ರಣ ಮತ್ತು ತಕ್ಷಣದ ಪ್ರಯೋಜನಗಳು ದೊರಕುತ್ತವೆ. ವ್ಯವಹಾರಗಳ ಮೇಲೆ ಪ್ರಭಾವ ಅಮೆರಿಕ ಕೆಲವು ಹವಾಮಾನ ವೇದಿಕೆಗಳಿಂದ ಹಿಂದೆ ಸರಿದಿದ್ದರೂ, ಅಂತರರಾಷ್ಟ್ರೀಯ ಮಟ್ಟದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಅಮೆರಿಕದ ಕಂಪನಿಗಳ ಮೇಲೆ ಪರಿಣಾಮ ಬೀರುತ್ತಲೇ ಇರುತ್ತವೆ. ತಮ್ಮ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳಲು, ವ್ಯವಹಾರಗಳು ವಿದೇಶಿ ಸರ್ಕಾರಗಳು ಮತ್ತು ಕೈಗಾರಿಕಾ ಒಕ್ಕೂಟಗಳೊಂದಿಗೆ ನೇರ ಸಂಪರ್ಕವನ್ನು ಹೆಚ್ಚಿಸಬೇಕಾಗಬಹುದು. ಅಮೆರಿಕದ ಆದ್ಯತೆಗಳು ಪ್ರತಿನಿಧಿಸಲ್ಪಟ್ಟಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು, ವಿಶೇಷವಾಗಿ ದೇಶ ಇನ್ನೂ ಸಕ್ರಿಯವಾಗಿರುವ ವೇದಿಕೆಗಳಲ್ಲಿ, ಅಮೆರಿಕ ಸರ್ಕಾರದೊಂದಿಗೆ ಆರಂಭಿಕ ಹಂತದಲ್ಲೇ ಸಮನ್ವಯ ಸಾಧಿಸುವುದೂ ಮುಖ್ಯವಾಗಿದೆ. ಒಟ್ಟಿನಲ್ಲಿ, ಅಮೆರಿಕ ಬಹುಪಕ್ಷೀಯತೆಯಿಂದ ಸಂಪೂರ್ಣವಾಗಿ ದೂರ ಸರಿಯುತ್ತಿರುವಂತೆ ಕಾಣುತ್ತಿಲ್ಲ. ಆದರೆ ನಿರ್ಧಾರ ತೆಗೆದುಕೊಳ್ಳುವ ಸ್ಥಾನಮಾನ ಇಲ್ಲದ ಬಹುಪಕ್ಷೀಯ ಸಂಸ್ಥೆಗಳ ಬಗ್ಗೆ ಅದು ಆಸಕ್ತಿ ತೋರಿಸುತ್ತಿಲ್ಲ ಎಂಬುದು ಸ್ಪಷ್ಟ.

ವಾರ್ತಾ ಭಾರತಿ 26 Jan 2026 8:50 pm

77ನೇ ಗಣರಾಜ್ಯೋತ್ಸವ | ಸಂವಿಧಾನವನ್ನು ಎತ್ತಿ ಹಿಡಿಯಲು ಕಾಂಗ್ರೆಸ್ ಕರೆ

ಹೊಸದಿಲ್ಲಿ, ಜ.26: ಭಾರತದ 77ನೇ ಗಣರಾಜ್ಯೋತ್ಸವ ದಿನವಾದ ಸೋಮವಾರ ಕಾಂಗ್ರೆಸ್, ದೇಶದ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸಂವಿಧಾನ ಶಿಲ್ಪಿಗಳಿಗೆ ಗೌರವ ಸಲ್ಲಿಸಿದೆ. ಅವರ ತ್ಯಾಗ ಮತ್ತು ದೂರದೃಷ್ಟಿಯು ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದಲ್ಲಿ ಬೇರೂರಿರುವ ಗಣರಾಜ್ಯದ ಅಡಿಪಾಯವನ್ನು ಹಾಕಿತು ಎಂದು ಪಕ್ಷವು ಸ್ಮರಿಸಿದೆ. ‘ನಮ್ಮ ಸ್ವಾತಂತ್ರ್ಯವೀರರ ಕೆಚ್ಚೆದೆಯ ಹೋರಾಟ ಮತ್ತು ಅಮರ ಪರಂಪರೆಯು ನಮ್ಮ ಗಣರಾಜ್ಯದ ಹಾದಿಯನ್ನು ಸದಾಕಾಲ ಬೆಳಗಿಸುತ್ತಿರಲಿ’ ಎಂದು ಹೇಳಿಕೆಯೊಂದರಲ್ಲಿ ತಿಳಿಸಿರುವ ಕಾಂಗ್ರೆಸ್, ಎಲ್ಲ ಭಾರತೀಯರಿಗೆ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದೆ. ಎಕ್ಸ್ ಪೋಸ್ಟ್‌ನಲ್ಲಿ ಭಾರತೀಯರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು, ಈ ವರ್ಷದ ಮಹತ್ವವನ್ನು ಪ್ರತಿಬಿಂಬಿಸುತ್ತ, ‘ಭಾರತೀಯ ಸಂವಿಧಾನವು ಅಂಗೀಕಾರಗೊಂಡು ಇಂದಿಗೆ 76 ವರ್ಷಗಳು ಪೂರೈಸಿವೆ. ಸಂವಿಧಾನವು ನಮ್ಮ ಆತ್ಮಸಾಕ್ಷಿಯ ಶಾಶ್ವತ ರಕ್ಷಕ ಮತ್ತು ಭಾರತೀಯ ಗಣರಾಜ್ಯದ ಆತ್ಮವಾಗಿದೆ’ ಎಂದು ಹೇಳಿದ್ದಾರೆ. ಸಂವಿಧಾನದ ರಕ್ಷಣೆಗಾಗಿ ಸದಾ ದೃಢವಾಗಿ ನಿಲ್ಲುವಂತೆ ನಾಗರಿಕರನ್ನು ಆಗ್ರಹಿಸಿರುವ ಅವರು, ‘ನಮ್ಮ ಸಂವಿಧಾನವನ್ನು ರಕ್ಷಿಸಲು ಪ್ರತಿಯೊಂದು ತ್ಯಾಗಕ್ಕೂ ನಾವು ಸಿದ್ಧರಾಗಿರೋಣ. ಇದು ನಮ್ಮ ಪೂರ್ವಜರ ಧೀರೋದಾತ್ತ ತ್ಯಾಗಗಳಿಗೆ ನಾವು ಸಲ್ಲಿಸುವ ನಿಜವಾದ ಗೌರವವಾಗಿದೆ’ ಎಂದು ಹೇಳಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ದೇಶದ ಜನರಿಗೆ ತನ್ನ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ್ದು, ಸಂವಿಧಾನವು ಭಾರತೀಯ ಪ್ರಜಾಪ್ರಭುತ್ವದ ಮೂಲಾಧಾರವಾಗಿದೆ ಎಂದು ಒತ್ತಿ ಹೇಳಿದ್ದಾರೆ. ‘ನಮ್ಮ ಸಂವಿಧಾನವು ಪ್ರತಿಯೊಬ್ಬ ಭಾರತೀಯನಿಗೂ ಶ್ರೇಷ್ಠವಾದ ಆಯುಧವಾಗಿದೆ. ಅದು ನಮ್ಮ ಧ್ವನಿ, ನಮ್ಮ ರಕ್ಷಣಾ ಕವಚ ಮತ್ತು ನಮ್ಮ ಹಕ್ಕುಗಳ ರಕ್ಷಕನಾಗಿದೆ’ ಎಂದು ಎಕ್ಸ್‌ನಲ್ಲಿ ಅವರು ಬರೆದಿದ್ದಾರೆ. ಭಾರತೀಯ ಗಣರಾಜ್ಯದ ಶಕ್ತಿಯು ಸಮಾನತೆ, ಸಾಮರಸ್ಯ ಮತ್ತು ಸಂವಿಧಾನದಲ್ಲಿ ಪ್ರತಿಪಾದಿಸಲಾಗಿರುವ ತತ್ವಗಳಲ್ಲಿದೆ ಎಂದು ಒತ್ತಿ ಹೇಳಿರುವ ರಾಹುಲ್, ‘ಸಂವಿಧಾನದ ರಕ್ಷಣೆ ಎಂದರೆ ಭಾರತೀಯ ಗಣರಾಜ್ಯದ ರಕ್ಷಣೆ. ಅದು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಗಳಿಗೆ ನಾವು ಸಲ್ಲಿಸಬಹುದಾದ ಅತ್ಯುನ್ನತ ಗೌರವವಾಗಿದೆ’ ಎಂದು ಹೇಳಿದ್ದಾರೆ. ಎಲ್ಲ ಭಾರತೀಯರಿಗೆ ತನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿರುವ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ‘ಈ ದಿನ ನಮ್ಮ ಸಂವಿಧಾನವು ಜಾರಿಗೆ ಬಂದಿತ್ತು ಮತ್ತು ಪ್ರತಿ ಭಾರತೀಯನಿಗೆ ಸ್ವಾತಂತ್ರ್ಯ, ಸಮಾನತೆ, ನ್ಯಾಯ ಮತ್ತು ಭ್ರಾತೃತ್ವವನ್ನು ಖಚಿತಪಡಿಸಿತ್ತು’ ಎಂದಿದ್ದಾರೆ. ಸಂವಿಧಾನವನ್ನು ಭಾರತದ 140 ಕೋಟಿ ಪ್ರಜೆಗಳನ್ನು ರಕ್ಷಿಸುವ ದೃಢವಾದ ಗುರಾಣಿ ಎಂದು ಬಣ್ಣಿಸಿರುವ ಅವರು, ‘ಅದನ್ನು ರಕ್ಷಿಸುವ ನಮ್ಮ ಸಂಕಲ್ಪವು ಬಂಡೆಯಂತೆ ಬಲವಾಗಿದೆ’ ಎಂದಿದ್ದಾರೆ. ಈ ಪರಂಪರೆಯನ್ನು ರಕ್ಷಿಸುವುದು ದೇಶದ ಪವಿತ್ರ ಕರ್ತವ್ಯವಾಗಿದೆ ಎಂದು ಅವರು ನೆನಪಿಸಿದ್ದಾರೆ. ಈ ಭಾವನೆಗಳನ್ನು ಪ್ರತಿಧ್ವನಿಸಿರುವ ಕಾಂಗ್ರೆಸ್ ಸಂಸದ ಕೆ.ಸಿ. ವೇಣುಗೋಪಾಲ ಅವರು, ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತ, ಅಚಲ ಸಂಕಲ್ಪದೊಂದಿಗೆ ಸಂವಿಧಾನವನ್ನು ರಕ್ಷಿಸುವಂತೆ ನಾಗರಿಕರಿಗೆ ಕರೆ ನೀಡಿದ್ದಾರೆ.

ವಾರ್ತಾ ಭಾರತಿ 26 Jan 2026 8:50 pm

ಬಿಜೆಪಿ ಸರಕಾರ ದೇಶದ ಅಭಿವೃದ್ದಿಗೆ ರಿವರ್ಸ್ ಗೇರ್ ಹಾಕಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪ

ಉಡುಪಿ : ಬಿಜೆಪಿಯವರಿಗೆ ಈ ದೇಶವನ್ನು ಮುನ್ನಡೆಸುವ ಶಕ್ತಿಯೂ ಇಲ್ಲ, ಆಸಕ್ತಿಯೂ ಇಲ್ಲ. ಸ್ವಾತಂತ್ರ್ಯೋತ್ತರದಲ್ಲಿ ಕಾಂಗ್ರೆಸ್ ಮಾಡಿರುವ ಅಭಿವೃದ್ಧಿಗಳನ್ನೆಲ್ಲ ಸಾಯಿಸುವ ಮೂಲಕ ಮತ್ತೆ ರಾಷ್ಟ್ರವನ್ನು ಹಿಂದಕ್ಕೆ ಒಯ್ಯುತ್ತಿದ್ದಾರೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಮವಾರ ಮಾಧ್ಯಮಗಳಿಗೆ ಬಿಡುಗಡೆಗೊಳಿಸಿರುವ ಹೇಳಿಕೆಯಲ್ಲಿ ಈ ಆರೋಪ ಮಾಡಿರುವ ಸಚಿವರು, ಗ್ರಾಮಪಂಚಾಯತ್‌ ವ್ಯವಸ್ಥೆ ಬಲ ಪಡಿಸುವ ಉದ್ದೇಶದಿಂದ ನಾವು ಮಾಡಿದ ವಿಕೇಂದ್ರೀಕರಣ ವ್ಯವಸ್ಥೆಯನ್ನು ಅವರು ಕೇಂದ್ರೀಕರಣದತ್ತ ತಿರುಗಿಸುತ್ತಿದ್ದಾರೆ. ನರೇಗಾ ಯೋಜನೆಯನ್ನು ಕುಲಗೆಡಿಸಿ, ಕೇವಲ ಯೋಜನೆಯ ಹೆಸರಿನಲ್ಲಿ ರಾಮನ ಹೆಸರು ಸೇರಿಸಿ ಜನರನ್ನು ಭಾವನಾತ್ಮಕವಾಗಿ ಆಟವಾಡಿಸಬಹುದು ಎಂದುಕೊಂಡಿದ್ದಾರೆ. ತನ್ಮೂಲಕ ಮೌಢ್ಯವನ್ನು ಬಿತ್ತುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ದೂರಿದ್ದಾರೆ. ನಾವು ಜನರನ್ನು ಮೌಢ್ಯದಿಂದ ಹೊರತಂದು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದರೆ, ಅವರು ಕೇವಲ ಓಟಿಗೋಸ್ಕರ ರಾಷ್ಟ್ರವನ್ನು ಹಿಂದಕ್ಕೆ ಒಯ್ಯುತ್ತಿದ್ದಾರೆ ಎಂದು ಹೇಳಿದ್ದಾರೆ. ನರೇಗಾ ಯೋಜನೆಯಲ್ಲಿ ಲೋಪವಿದ್ದರೆ ಅದನ್ನು ಸರಿಪಡಿಸಿ, ಇನ್ನಷ್ಟು ಶಕ್ತಿ ತುಂಬುವ ಕೆಲಸ ಮಾಡಬಹುದಿತ್ತು. ಅದರ ಬದಲು ಇಂತಹ ಜನಪರ, ಜನಪ್ರಿಯ ಯೋಜನೆಯನ್ನೆ ಮುಗಿಸಲು ಹೊರಟಿದ್ದಾರೆ. ಅಂದರೆ, ರೋಗಿಗೆ ಚಿಕಿತ್ಸೆ ನೀಡಿ ಗುಣಪಡಿಸುವ ಬದಲು ರೋಗಿಯನ್ನೇ ಸಾಯಿಸಲು ಹೊರಟಿದ್ದಾರೆ ಎಂದು ಅವರು ವ್ಯಂಗ್ಯವಾಡಿದ್ದಾರೆ. ಯೋಜನೆಯಲ್ಲಿ ಭ್ರಷ್ಟಾಚಾರ ಇದ್ದಿದ್ದರೆ ಸರಿಪಡಿಸಲು ಕೇಂದ್ರ ಸರಕಾರಕ್ಕೆ 12 ವರ್ಷ ಅವಕಾಶವಿತ್ತಲ್ಲವೇ? ಕಳೆದ 12 ವರ್ಷಗಳಿಂದ ಕೇಂದ್ರದಲ್ಲಿ ಆಡಳಿತ ನಡೆಸುತ್ತಿದ್ದರೂ ಯೋಜನೆಯಲ್ಲಿ ಯಾವೊಂದು ಬದಲಾವಣೆ, ಸುಧಾರಣೆ ಮಾಡದೆ, ಈಗ ಇದ್ದಕ್ಕಿದ್ದಂತೆ ಜ್ಞಾನೋದಯವಾದಂತೆ ಒಂದು ವ್ಯವಸ್ಥೆಯನ್ನೇ ನೇಣಿಗೆ ಹಾಕಲು ಹೊರಟಿದ್ದಾರೆ. ಅಂದರೆ ಇಷ್ಟು ವರ್ಷ ಅವರು ಭ್ರಷ್ಟಾಚಾರದ ಭಾಗವಾಗಿದ್ದರೆ? ಎಂದು ಹೆಬ್ಬಾಳ್ಕರ್ ಪ್ರಶ್ನಿಸಿದ್ದಾರೆ. ದೇಶದ ಸುಮಾರು 12 ಕೋಟಿಗೂ ಅಧಿಕ ಬಡಜನರು, ಕಾರ್ಮಿಕರು, 6 ಕೋಟಿಗೂ ಅಧಿಕ ಮಹಿಳಾ ಕಾರ್ಮಿಕರು, 3 ಕೋಟಿಗೂ ಅಧಿಕ ಪರಿಶಿಷ್ಟ ಜಾತಿ, ವರ್ಗದ ಜನರು ತಮ್ಮ ಜೀವನೋಪಾಯಕ್ಕಾಗಿ ಕಳೆದ 20 ವರ್ಷಗಳಿಂದ ಯಾವ ಯೋಜನೆಯ ಮೇಲೆ ಅವಲಂಬಿತರಾಗಿದ್ದಾರೋ ಆ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿದ್ದಾರೆ. ಬಡವರು ಬಡವರಾಗಿಯೇ ಇರಬೇಕು, ಅವರು ಜೀತದ ಆಳಾಗಿಯೇ ಇರಬೇಕು, ಮಹಿಳೆಯರು ಸಬಲೀಕರಣಗೊಳ್ಳಬಾರದು, ಅವರು ಸಮಾಜದ ಮುಖ್ಯ ವಾಹಿನಿಗೆ ಬರಬಾರದು ಎನ್ನುವ ಮನೋಸ್ಥಿತಿ ಬಿಜೆಪಿಯವರದ್ದು ಎಂದು ಅವರು ತಿಳಿಸಿದ್ದಾರೆ. ಸೋನಿಯಾಗಾಂಧಿ ಅವರ ನಾಯಕತ್ವದಲ್ಲಿ ಮನಮೋಹನ್ ಸಿಂಗ್ ಸರಕಾರ 20 ವರ್ಷಗಳ ಹಿಂದೆ ಜಾರಿಗೆ ತಂದಿದ್ದ ಸಾಂವಿಧಾನಿಕ ಹಕ್ಕಾಗಿ ಬಂದಿರುವ ಮನರೇಗಾವನ್ನು ನಾಶ ಮಾಡಲು ಹೊರಟಿರುವುದು ದೊಡ್ಡ ಆಘಾತವಾಗಿದೆ. ಮನರೇಗಾ ಉಳಿಸಬೇಕೆಂದು ಮಂಗಳವಾರ ಕಾಂಗ್ರೆಸ್ ಪಕ್ಷ ರಾಜಭವನ ಚಲೋ ನಡೆಸಲಿದೆ. ಪ್ರತಿ ತಾಲೂಕಿನಲ್ಲೂ ಪಾದಯಾತ್ರೆ ನಡೆಸಲಾಗುವುದು. ಪ್ರತಿ ಪಂಚಾಯತ್‌ ಮಟ್ಟದಲ್ಲೂ ಹೋರಾಟ ಹಮ್ಮಿಕೊಳ್ಳಲು ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ. ಶಿವಕುಮಾರ್ ಅವರು ಸೂಚನೆ ನೀಡಿದ್ದಾರೆ. ಮನರೇಗಾ ಮರು ಸ್ಥಾಪಿಸುವವರೆಗೂ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಅವರ ನೇತೃತ್ವದಲ್ಲಿ ಹೋರಾಟ ಮಾಡಲಾಗುವುದು ಎಂದು ಹೆಬ್ಬಾಳ್ಕರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಾರ್ತಾ ಭಾರತಿ 26 Jan 2026 8:43 pm

ನ್ಯಾಯಾಲಯದ ಅನುಮತಿ ಇಲ್ಲದೆ ಪೊಲೀಸರು ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಾಧ್ಯವಿಲ್ಲ: Delhi ಹೈಕೋರ್ಟ್

ಮಲಬಾರ್ ಬ್ಯಾಂಕ್ ಖಾತೆಗಳ ಮುಟ್ಟುಗೋಲು ಕ್ರಮವನ್ನು ರದ್ದುಗೊಳಿಸಿದ ನ್ಯಾಯಾಲಯ

ವಾರ್ತಾ ಭಾರತಿ 26 Jan 2026 8:42 pm

ಬೇಡ್ತಿ-ವರದಾ ನದಿ ಜೋಡಣೆ: ಸಮಾವೇಶ, ಹೋರಾಟ ಬಗ್ಗೆ ವಿವರಿಸಿದ ಬಸವರಾಜ ಬೊಮ್ಮಾಯಿ

ಹಾವೇರಿ: ಬೇಡ್ತಿ ವರದಾ ನದಿ ಜೋಡಣೆ ಯೋಜನೆ ನಮ್ಮ ಬದುಕಿನ ಪ್ರಶ್ನೆ, ಭವಿಷ್ಯದ ಪ್ರಶ್ನೆ. ಅದಕ್ಕಾಗಿ ನಮ್ಮ ಹೋರಾಟ ನಮ್ಮ ಬದುಕಿಗಾಗಿ ಹೊರತು ಯಾರ ವಿರುದ್ಧವೂ ಅಲ್ಲ ಎಂದು ಸ್ಪಷ್ಟಪಡಿಸಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಬೇಡ್ತಿ ವರದಾ ನದಿ ಜೋಡಣೆಯ ಅಗತ್ಯತೆ ಕುರಿತು ಹಾವೇರಿಯ ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿಗಳ ನೇತೃತ್ವದ ನಿಯೋಗವನ್ನು ಸಿಎಂ,

ಒನ್ ಇ೦ಡಿಯ 26 Jan 2026 8:40 pm

ನನ್ನ ಉಳಿದ ನ್ಯಾಯಾಂಗ ಸೇವೆಗೆ ಸನಾತನ ಧರ್ಮ ಮಾರ್ಗದರ್ಶನ ಮಾಡಬೇಕು: ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶರಿಂದ ವಿವಾದಾತ್ಮಕ ಹೇಳಿಕೆ

ಚೆನ್ನೈ: ಸಾರ್ವಜನಿಕ ಕರ್ತವ್ಯಗಳನ್ನು ನಿರ್ವಹಿಸುವಾಗ ಸನಾತನ ಧರ್ಮ ಹೃದಯದಲ್ಲಿರಬೇಕು ಎಂದು ಶನಿವಾರ ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ಜಿ.ಆರ್. ಸ್ವಾಮಿನಾಥನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಚೆನ್ನೈನ ದಾರಾ ಪ್ರತಿಷ್ಠಾನ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನ್ಯಾ. ಜಿ.ಆರ್. ಸ್ವಾಮಿನಾಥನ್, “ಸಾರ್ವಜನಿಕ ಜೀವನದಲ್ಲಿ ವ್ಯಕ್ತಿಯೊಬ್ಬನ ವೃತ್ತಿಪರ ಜ್ಞಾನವೊಂದೇ ಆತನ ಪಾತ್ರ ಅಥವಾ ವ್ಯಕ್ತಿತ್ವವನ್ನು ವ್ಯಾಖ್ಯಾನಿಸಲು ಸಾಧ್ಯವಿಲ್ಲ” ಎಂದು ಅಭಿಪ್ರಾಯಪಟ್ಟರು. ತಮ್ಮ ಉಳಿದಿರುವ ಸೇವಾವಧಿಯ ಬಗ್ಗೆ ಬೆಳಕು ಚೆಲ್ಲಿದ ಅವರು, “ಈ ಸಂದರ್ಭದಲ್ಲಿ ವೈಯಕ್ತಿಕ ಮೌಲ್ಯಗಳಲ್ಲಿ ಅಡಗಿರುವ ಉತ್ಕೃಷ್ಟತೆಯನ್ನು ಮುಂದುವರಿಸುವ ಜವಾಬ್ದಾರಿಯನ್ನು ನಿರ್ವಹಿಸಲು ಶ್ರಮಿಸುತ್ತೇನೆ” ಎಂದು ಹೇಳಿದರು. “ಆಶಾದಾಯಕ ಸಂಗತಿಯೆಂದರೆ, ನನಗೆ ಇನ್ನೂ ನಾಲ್ಕೂವರೆ ವರ್ಷಗಳ ಸೇವಾವಧಿ ಇದೆ. ಈ ನಾಲ್ಕೂವರೆ ವರ್ಷಗಳಲ್ಲಿ ನಾನು ಉತ್ಕೃಷ್ಟತೆಯನ್ನು ಪ್ರದರ್ಶಿಸಬೇಕಿದೆ. ಸನಾತನ ಧರ್ಮವನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡು ಕಾರ್ಯನಿರ್ವಹಿಸಬೇಕಿದೆ” ಎಂದು ಅವರು ಪ್ರತಿಪಾದಿಸಿದರು. ಈ ದಿಕ್ಕಿನಲ್ಲಿ ಮುಂದುವರಿಯಲು ಈ ಕಾರ್ಯಕ್ರಮವೇ ನನಗೆ ಯೋಜನೆ ಮತ್ತು ಜವಾಬ್ದಾರಿ ಎರಡನ್ನೂ ನೀಡಿದೆ ಎಂದೂ ಅವರು ಹೇಳಿದರು. ಈ ಕಾರ್ಯಕ್ರಮದಲ್ಲಿ ನ್ಯಾ. ಜಿ.ಆರ್. ಸ್ವಾಮಿನಾಥನ್ ಅವರೊಂದಿಗೆ ಭಾಗವಹಿಸಿದ್ದ ಚುನಾವಣಾ ಆಯೋಗದ ಮಾಜಿ ಮುಖ್ಯ ಆಯುಕ್ತ ಎನ್. ಗೋಪಾಲಸ್ವಾಮಿ, ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ಕೊಡುಗೆ ನೀಡಿದವರಿಗೆ ಪ್ರಶಸ್ತಿಗಳನ್ನು ವಿತರಿಸಿದರು. ಸೌಜನ್ಯ: barandbench.com

ವಾರ್ತಾ ಭಾರತಿ 26 Jan 2026 8:38 pm

ಮುಡಿಪು | ಜೆನಿತ್ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಮುಡಿಪು: ಜೆನಿತ್ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಗೌರವದೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪ್ರಜ್ಞಾ ಕೌನ್ಸೆಲಿಂಗ್ ಸೆಂಟರ್–ಮಂಗಳೂರು ಇದರ ಸಂಸ್ಥಾಪಕಿ ಹಿಲ್ದಾ ರಾಯಪ್ಪನ್ ಅವರು ಭಾಗವಹಿಸಿ ಮಾತನಾಡಿ, ಮಕ್ಕಳು ತಮ್ಮ ಜೀವನವನ್ನು ಮೌಲ್ಯಗಳು, ಶಿಸ್ತು ಹಾಗೂ ಆತ್ಮವಿಶ್ವಾಸದೊಂದಿಗೆ ನಡೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಸಂಚಾಲಕರಾದ ನಹದ ಮಜೀದ್ ಅವರು ವಹಿಸಿದ್ದರು. ಈ ಸಂದರ್ಭದಲ್ಲಿ ಮುಖ್ಯಶಿಕ್ಷಕಿ ಸಫೂರಾ, ಆಡಳಿತಾಧಿಕಾರಿ ಮೊಯ್ದೀನ್, ಪಿಟಿಎ ಅಧ್ಯಕ್ಷ ಹನೀಫ್, ಕಾರ್ಯದರ್ಶಿ ಅಬ್ದುಲ್ ಖಾದರ್ ಸೇರಿದಂತೆ ಪಿಟಿಎ ಸದಸ್ಯರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 26 Jan 2026 8:35 pm

Maharashtra | ಮಾಜಿ ರಾಜ್ಯಪಾಲರಿಗೆ ಪದ್ಮ ಪ್ರಶಸ್ತಿ: ವಿರೋಧ ಪಕ್ಷಗಳ ಅಸಮಾಧಾನಕ್ಕೆ ಕಾರಣವೇನು?

ಹೊಸದಿಲ್ಲಿ: ಮಹಾರಾಷ್ಟ್ರ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದ ಸುಮಾರು ಮೂರು ವರ್ಷಗಳ ನಂತರ ಭಗತ್ ಸಿಂಗ್ ಕೋಶಿಯಾರಿ ಅವರಿಗೆ ಪದ್ಮ ಪ್ರಶಸ್ತಿ ನೀಡಿ ಪುರಸ್ಕರಿಸಲಾಗಿದೆ. ಆದರೆ, ತಮ್ಮ ಅವಧಿಯಲ್ಲಿ ರಾಜ್ಯದ ಮುಖ್ಯಸ್ಥರಾಗಿ ಅವರು ಕಾರ್ಯನಿರ್ವಹಿಸಿದ ರೀತಿಯ ಬಗ್ಗೆ ವಿರೋಧ ಪಕ್ಷಗಳ ನಾಯಕರ ಮನಸ್ಸಿನಲ್ಲಿ ಈಗಲೂ ಅಸಮಾಧಾನ ಮನೆಮಾಡಿದ್ದು, ಅವರಿಗೆ ಪದ್ಮ ಪ್ರಶಸ್ತಿ ನೀಡಿ ಗೌರವಿಸಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಈ ನಿರ್ಧಾರವನ್ನು ಶಿವಸೇನೆ (ಉದ್ಧವ್ ಬಣ)ದ ನಾಯಕ ಸಂಜಯ್ ಸಿಂಗ್ ಖಂಡಿಸಿದ್ದು, ಕೋಶಿಯಾರಿ ವಿರುದ್ಧದ ವಾಗ್ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಉದ್ಧವ್ ಠಾಕ್ರೆ ನೇತೃತ್ವದ ಸರಕಾರವನ್ನು ಪತನಗೊಳಿಸುವ ಮೂಲಕ ಅವರು ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ಹತ್ಯೆಗೈದಿದ್ದರು ಎಂದು ಅವರು ಆರೋಪಿಸಿದ್ದಾರೆ. ಇದರ ಬೆನ್ನಿಗೇ ಏಕನಾಥ ಶಿಂದೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. “ಕೋಶಿಯಾರಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ಹತ್ಯೆಗೈದು ಉದ್ಧವ್ ಠಾಕ್ರೆ ಸರಕಾರವನ್ನು ಪತನಗೊಳಿಸಿದ್ದಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ 2019ರಿಂದ ಫೆಬ್ರವರಿ 2023ರವರೆಗೆ ಮಹಾರಾಷ್ಟ್ರ ರಾಜ್ಯಪಾಲರಾಗಿದ್ದ ಕೋಶಿಯಾರಿ ಹಲವು ವಿವಾದಗಳಿಗೆ ಕಾರಣರಾಗಿದ್ದರು. ನವೆಂಬರ್ 2019ರಲ್ಲಿ ಮುಂಜಾನೆ ದೇವೇಂದ್ರ ಫಡ್ನವಿಸ್ ಹಾಗೂ ಅಜಿತ್ ಪವಾರ್ ಅವರಿಗೆ ಕ್ರಮವಾಗಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಪ್ರಮಾಣವಚನ ಬೋಧಿಸುವ ಮೂಲಕ ಅವರು ವಿವಾದಾಸ್ಪದರಾಗಿದ್ದರು. ಬಿಜೆಪಿ ಮತ್ತು ಶಿವಸೇನೆ ನಡುವೆ ಅಧಿಕಾರ ಕಾದಾಟ ನಡೆಯುತ್ತಿದ್ದ ಸಮಯದಲ್ಲೇ ಅವರು ಇಂತಹ ದಿಢೀರ್ ಕ್ರಮ ಕೈಗೊಂಡಿದ್ದರು. ಆದರೆ, ಆ ಸರಕಾರ ಕೇವಲ ಮೂರು ದಿನಗಳಷ್ಟೇ ಅಸ್ತಿತ್ವದಲ್ಲಿತ್ತು. ಈ ಬೆಳವಣಿಗೆ ರಾಜ್ಯದ ಭವಿಷ್ಯದ ರಾಜಕೀಯ ಸ್ಥಿತ್ಯಂತರಕ್ಕೆ ಮುನ್ನಂದಾಜಿನಂತೆಯೇ ಪರಿಣಮಿಸಿತು. 2022ರಲ್ಲಿ ಏಕನಾಥ ಶಿಂದೆ ಬಂಡಾಯ ಎದ್ದ ಬಳಿಕ, ಬಹುಮತ ಸಾಬೀತುಪಡಿಸುವಂತೆ ಉದ್ಧವ್ ಠಾಕ್ರೆಗೆ ಸೂಚಿಸಿದ್ದ ಅವರ ಕ್ರಮವೂ ತೀವ್ರ ಟೀಕೆಗೆ ಗುರಿಯಾಗಿತ್ತು. ಈ ಬೆಳವಣಿಗೆಯಿಂದ ಶಿವಸೇನೆ ಇಬ್ಭಾಗವಾಗಿತ್ತು. ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಕೋಶಿಯಾರಿ ನೀಡಿದ್ದ ನಿರ್ದೇಶನಕ್ಕೆ ತಡೆ ನೀಡಲು ನ್ಯಾಯಾಲಯ ನಿರಾಕರಿಸಿದ ಬೆನ್ನಿಗೇ, ಉದ್ಧವ್ ಠಾಕ್ರೆ ತಮ್ಮ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಬೇಕಾಯಿತು. ಈ ರೀತಿಯ ಹಲವು ವಿವಾದಗಳಲ್ಲಿ ಭಗತ್ ಸಿಂಗ್ ಕೋಶಿಯಾರಿ ಹೆಸರು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಅವರಿಗೆ ನೀಡಲಾಗಿರುವ ಪದ್ಮ ಪ್ರಶಸ್ತಿಯ ಬಗ್ಗೆ ವಿರೋಧ ಪಕ್ಷಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿವೆ.

ವಾರ್ತಾ ಭಾರತಿ 26 Jan 2026 8:35 pm

77ನೇ ಗಣರಾಜ್ಯೋತ್ಸವ | ಭಾರತಕ್ಕೆ ಐತಿಹಾಸಿಕ ಬಾಂಧವ್ಯದ ಸಂದೇಶ ರವಾನಿಸಿದ ಡೊನಾಲ್ಡ್ ಟ್ರಂಪ್

ಹೊಸದಿಲ್ಲಿ: ಇಂದು (ಸೋಮವಾರ) ತಮ್ಮ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಕಪ್ಪು–ಬಿಳುಪು ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, 77ನೇ ಗಣರಾಜ್ಯೋತ್ಸವದ ಪ್ರಯುಕ್ತ ಭಾರತಕ್ಕೆ ಶುಭಾಶಯಗಳನ್ನು ಕೋರಿದ್ದಾರೆ. “ಅಮೆರಿಕ ಜನತೆಯ ಪರವಾಗಿ, 77ನೇ ಗಣರಾಜ್ಯೋತ್ಸವವನ್ನು ಆಚರಿಸಿಕೊಳ್ಳುತ್ತಿರುವ ಭಾರತ ಸರ್ಕಾರ ಹಾಗೂ ಜನತೆಗೆ ನಾನು ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ,” ಎಂದು ಅವರು ಹೇಳಿದ್ದಾರೆ. “ಭಾರತ ಮತ್ತು ಅಮೆರಿಕ ಜಗತ್ತಿನ ಅತ್ಯಂತ ಪುರಾತನ ಪ್ರಜಾಪ್ರಭುತ್ವ ರಾಷ್ಟ್ರಗಳಾಗಿ ಐತಿಹಾಸಿಕ ಬಾಂಧವ್ಯವನ್ನು ಹಂಚಿಕೊಂಡಿವೆ,” ಎಂದೂ ಟ್ರಂಪ್ ಹೇಳಿದ್ದಾರೆ. ದಿಲ್ಲಿಯ ಕರ್ತವ್ಯ ಪಥದಲ್ಲಿ ಗಣರಾಜ್ಯೋತ್ಸವ ಪಥಸಂಚಲನ ಮುಕ್ತಾಯಗೊಂಡ ಬಳಿಕ, ಮಧ್ಯಾಹ್ನ 2.14ಕ್ಕೆ ಅಮೆರಿಕದ ರಾಜತಾಂತ್ರಿಕ ಕಚೇರಿ ಡೊನಾಲ್ಡ್ ಟ್ರಂಪ್ ಅವರ ಈ ಸಂದೇಶವನ್ನು ಪೋಸ್ಟ್ ಮಾಡಿದೆ. ಭಾರತದ ಮೇಲೆ ದುಬಾರಿ ಸುಂಕ ವಿಧಿಸುವ ಡೊನಾಲ್ಡ್ ಟ್ರಂಪ್ ಅವರ ನೀತಿಯನ್ನು ಭಾರತ ಕಟುವಾಗಿ ಟೀಕಿಸಿತ್ತು. ಇದರ ಬೆನ್ನಲ್ಲೇ ಟ್ರಂಪ್ ಈ ಸಂದೇಶವನ್ನು ರವಾನಿಸಿರುವುದು ಗಮನ ಸೆಳೆದಿದೆ.

ವಾರ್ತಾ ಭಾರತಿ 26 Jan 2026 8:33 pm

ಮಂಗಳೂರು | ನ್ಯಾಷನಲ್ ಟ್ಯುಟೋರಿಯಲ್ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಮಂಗಳೂರು: ನಗರದ ನ್ಯಾಷನಲ್ ಟ್ಯುಟೋರಿಯಲ್ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಯು.ಎಚ್. ಖಾಲಿದ್ ಉಜಿರೆ ಅವರು ವಹಿಸಿ ಮಾತನಾಡಿದ ಅವರು, ಭಾರತದ ಸಂವಿಧಾನವು ಜಗತ್ತಿನ ಶ್ರೇಷ್ಠ ಸಂವಿಧಾನಗಳಲ್ಲಿ ಒಂದಾಗಿದ್ದು, ಅದನ್ನು ಅನುಸರಿಸಿ ರಕ್ಷಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ನಮ್ಮ ಪ್ರಜಾಪ್ರಭುತ್ವದ ಆದರ್ಶಗಳು ಹಾಗೂ ದೇಶದ ಒಕ್ಕೂಟ ವ್ಯವಸ್ಥೆ ವಿಶ್ವಕ್ಕೆ ಮಾದರಿಯಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ವಿದ್ಯಾ, ಕಚೇರಿ ವ್ಯವಸ್ಥಾಪಕಿ ಅನಿತಾ, ಶಿಕ್ಷಕಿಯರಾದ ಶೋಭಾ, ರಿಂಷಾ, ಶುಭಾ ಉಪಸ್ಥಿತರಿದ್ದರು. ವಿದ್ಯಾರ್ಥಿ ನಾಯಕರಾದ ಸಲ್ಮಾನ್ ಫಾರಿಷ್, ಸೌಬಾನ್, ಅನಾಸ್ ಹಾಗೂ ಡಿ.ಅಬ್ದುಲ್ಲಾ ಕಾರ್ಯಕ್ರಮದ ಯಶಸ್ಸಿಗೆ ಸಹಕಾರ ನೀಡಿದರು.

ವಾರ್ತಾ ಭಾರತಿ 26 Jan 2026 8:31 pm

ವಾಟ್ಸ್ಆ್ಯಪ್ ಗೌಪ್ಯತೆ ಕಾಪಾಡುತ್ತಿಲ್ಲ ಎಂದು ಮೊಕದ್ದಮೆ ಹೂಡಿದ ವಕೀಲರು

ಎಂಡ್-ಟು-ಎಂಡ್ ಎನ್ಕ್ರಿಪ್ಷನ್ ಕಾರಣದಿಂದ ಅಪ್ಲಿಕೇಶನ್ ಮೂಲಕ ಕಳುಹಿಸಲಾದ ಸಂದೇಶಗಳು, ಫೋಟೋಗಳು, ವೀಡಿಯೋಗಳು ಹಾಗೂ ಫೋನ್ ಕರೆಗಳಿಗೆ ಕಳುಹಿಸುವವರು ಮತ್ತು ಸ್ವೀಕರಿಸುವವರು ಮಾತ್ರ ಪ್ರವೇಶಿಸಬಹುದೇ ಹೊರತು ಕಂಪನಿಗೆ ಅಲ್ಲ ಎಂದು ಮೆಟಾ ಸಂಸ್ಥೆ ಪದೇಪದೆ ಹೇಳಿಕೊಂಡಿದೆ. ಸಂದೇಶ ಕಳುಹಿಸುವ ಆ್ಯಪ್ ಆಗಿರುವ ವಾಟ್ಸ್ಆ್ಯಪ್ ಬಳಕೆದಾರರಿಗೆ ನೀಡಲಾಗುವ ಗೌಪ್ಯತೆ ಮತ್ತು ಸುರಕ್ಷೆಯ ಕುರಿತು ಸುಳ್ಳು ಹೇಳಿಕೆಗಳನ್ನು ನೀಡಿದೆ ಎಂದು ಅದರ ಪೋಷಕ ಸಂಸ್ಥೆ ಮೆಟಾ ವಿರುದ್ಧ ಮೊಕದ್ದಮೆ ಹೂಡಲಾಗಿದೆ. ಜನವರಿ 23, ಶುಕ್ರವಾರ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಅಮೆರಿಕ ಸಂಯುಕ್ತ ಸಂಸ್ಥಾನದ ಜಿಲ್ಲಾ ನ್ಯಾಯಾಲಯದಲ್ಲಿ ಅಂತರರಾಷ್ಟ್ರೀಯ ವಕೀಲರ ಸಮೂಹ ಈ ಮೊಕದ್ದಮೆ ದಾಖಲಿಸಿದೆ. ಬ್ಲೂಮ್ಬರ್ಗ್ ವರದಿಯ ಪ್ರಕಾರ, ಈ ವಕೀಲರ ಗುಂಪಿನಲ್ಲಿ ಆಸ್ಟ್ರೇಲಿಯಾ, ಬ್ರೆಜಿಲ್, ಭಾರತ, ಮೆಕ್ಸಿಕೊ ಮತ್ತು ದಕ್ಷಿಣ ಆಫ್ರಿಕಾದ ವಕೀಲರು ಸೇರಿದ್ದಾರೆ. ವಾಟ್ಸ್ಆ್ಯಪ್ ಮಾಹಿತಿ ಎನ್ಕ್ರಿಪ್ಟ್ ಆಗಿಲ್ಲವೇ? ಮೆಟಾ ಮತ್ತು ವಾಟ್ಸ್ಆ್ಯಪ್ ಬಳಕೆದಾರರ ಎಲ್ಲಾ ಖಾಸಗಿ ಸಂವಹನಗಳನ್ನು ಸಂಗ್ರಹಿಸುತ್ತವೆ, ವಿಶ್ಲೇಷಿಸುತ್ತವೆ ಮತ್ತು ಸಂದೇಶಗಳಿಗೆ ಆಕ್ಸೆಸ್ ಪಡೆಯಬಹುದಾಗಿದೆ ಎಂದು ಮೊಕದ್ದಮೆಯಲ್ಲಿ ಆರೋಪಿಸಲಾಗಿದೆ. ವಾಟ್ಸ್ಆ್ಯಪ್ ತನ್ನ ಬಳಕೆದಾರರ ಚಾಟ್ ಲಾಗ್‌ಗಳನ್ನು ಸಂಗ್ರಹಿಸಿ ಇಡುತ್ತದೆ ಮತ್ತು ಅದಕ್ಕೆ ಮೆಟಾ ಉದ್ಯೋಗಿಗಳು ಪ್ರವೇಶಿಸಬಹುದಾಗಿದೆ ಎನ್ನಲಾಗಿದೆ. ಈ ಕುರಿತು ಅನಾಮಧೇಯ ಉದ್ಯೋಗಿಗಳು ನೀಡಿದ ಮಾಹಿತಿಯನ್ನು ಮೊಕದ್ದಮೆಯಲ್ಲಿ ಉಲ್ಲೇಖಿಸಲಾಗಿದೆ. ವಕೀಲರ ಗುಂಪು ಈ ಮೊಕದ್ದಮೆಯನ್ನು ಕ್ಲಾಸ್–ಆಕ್ಷನ್ ಮೊಕದ್ದಮೆಯಾಗಿ ಪ್ರಮಾಣೀಕರಿಸುವಂತೆ ನ್ಯಾಯಾಲಯವನ್ನು ಒತ್ತಾಯಿಸಿದೆ. ಕ್ಲಾಸ್–ಆಕ್ಷನ್ ಮೊಕದ್ದಮೆ ಎಂದರೆ, ಒಂದು ಅಥವಾ ಹೆಚ್ಚಿನ ವ್ಯಕ್ತಿಗಳು ದೊಡ್ಡ ಸಾಮಾನ್ಯ ಹಿತಾಸಕ್ತಿ ಗುಂಪನ್ನು ಪ್ರತಿನಿಧಿಸಿ ಹೂಡುವ ಕಾನೂನು ಪ್ರಕ್ರಿಯೆ. ಇದರಲ್ಲಿ ಸಾಮಾನ್ಯವಾಗಿ ಒಂದು ಕಾರ್ಪೋರೇಶನ್ ಅಥವಾ ಕಂಪನಿಯ ವಿರುದ್ಧ ಹಾನಿ ಅಥವಾ ಹಣಕಾಸು ನಷ್ಟಕ್ಕೆ ಸಂಬಂಧಿಸಿದಂತೆ ಸಾಮೂಹಿಕವಾಗಿ ಮೊಕದ್ದಮೆ ಹೂಡಲಾಗುತ್ತದೆ. ಎಂಡ್-ಟು-ಎಂಡ್ ಎನ್ಕ್ರಿಪ್ಷನ್ ಎಂಡ್-ಟು-ಎಂಡ್ ಎನ್ಕ್ರಿಪ್ಷನ್ ವಾಟ್ಸ್ಆ್ಯಪ್‌ನ ಕೇಂದ್ರ ತತ್ವವಾಗಿದೆ. ಈ ಎನ್ಕ್ರಿಪ್ಷನ್ ಕಾರಣದಿಂದ ಅಪ್ಲಿಕೇಶನ್ ಮೂಲಕ ಕಳುಹಿಸಲಾದ ಸಂದೇಶಗಳು, ಫೋಟೋಗಳು, ವೀಡಿಯೋಗಳು ಮತ್ತು ಫೋನ್ ಕರೆಗಳಿಗೆ ಕಳುಹಿಸುವವರು ಹಾಗೂ ಸ್ವೀಕರಿಸುವವರು ಮಾತ್ರ ಪ್ರವೇಶಿಸಬಹುದೇ ಹೊರತು ಕಂಪನಿಗೆ ಸಾಧ್ಯವಿಲ್ಲ ಎಂದು ಮೆಟಾ ಸಂಸ್ಥೆ ಹೇಳುತ್ತಿದೆ. ವಾಟ್ಸ್ಆ್ಯಪ್ ಮತ್ತು ಮೆಟಾದ ಫೇಸ್‌ಬುಕ್ ಮೆಸೆಂಜರ್ ಸಿಗ್ನಲ್ ಪ್ರೊಟೋಕಾಲ್ ಅನ್ನು ಬಳಸುತ್ತವೆ. ವಾಟ್ಸ್ಆ್ಯಪ್‌ನಲ್ಲಿ ಎನ್ಕ್ರಿಪ್ಟ್ ಮಾಡಿದ ಚಾಟ್ ಎಲ್ಲಾ ಬಳಕೆದಾರರಿಗೆ ಪೂರ್ವನಿಯೋಜಿತವಾಗಿ ಆನ್ ಆಗಿರುತ್ತದೆ. ಅಪ್ಲಿಕೇಶನ್‌ನ ಸಂದೇಶದಲ್ಲಿ, “ಈ ಚಾಟ್‌ನಲ್ಲಿರುವ ಜನರು ಮಾತ್ರ ಸಂದೇಶಗಳನ್ನು ಓದಬಹುದು, ಕೇಳಬಹುದು ಅಥವಾ ಹಂಚಿಕೊಳ್ಳಬಹುದು” ಎಂದು ತಿಳಿಸಲಾಗುತ್ತದೆ. ಈ ಮೊಕದ್ದಮೆಗೆ ಪ್ರತಿಕ್ರಿಯೆ ನೀಡಿರುವ ಮೆಟಾ, ಇದನ್ನು “ಕ್ಷುಲ್ಲಕ” ಎಂದು ತಳ್ಳಿ ಹಾಕಿದೆ. “ವಕೀಲರ ಸಮೂಹದ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಮೆಟಾ ಹೇಳಿದೆ. “ಜನರ ವಾಟ್ಸ್ಆ್ಯಪ್ ಸಂದೇಶಗಳನ್ನು ಎನ್ಕ್ರಿಪ್ಟ್ ಮಾಡಲಾಗಿಲ್ಲ ಎನ್ನುವುದು ಸುಳ್ಳು ಹಾಗೂ ಅಸಂಬದ್ಧ. ಒಂದು ದಶಕದಿಂದ ಸಿಗ್ನಲ್ ಪ್ರೊಟೋಕಾಲ್ ಬಳಸಿ ವಾಟ್ಸ್ಆ್ಯಪ್ ಅನ್ನು ಕೊನೆಯಿಂದ ಕೊನೆಯವರೆಗೆ ಎನ್ಕ್ರಿಪ್ಟ್ ಮಾಡಲಾಗಿದೆ. ಈ ಮೊಕದ್ದಮೆ ಕ್ಷುಲ್ಲಕ ಕಾಲ್ಪನಿಕ ಕೃತಿ” ಎಂದು ಮೆಟಾ ವಕ್ತಾರ ಆಂಡಿ ಸ್ಟೋನ್ ಮಾಧ್ಯಮಗಳಿಗೆ ಹೇಳಿದ್ದಾರೆ. ಎನ್ಕ್ರಿಪ್ಷನ್ ಎಂದರೇನು? ಎನ್ಕ್ರಿಪ್ಷನ್ ಎಂದರೆ ಡೇಟಾವನ್ನು ಅನಧಿಕೃತ ಪ್ರವೇಶ ಅಥವಾ ತಿದ್ದುಪಡಿಯಿಂದ ರಕ್ಷಿಸುವ ವಿಧಾನ. ಇದು ದತ್ತಾಂಶವನ್ನು ರಹಸ್ಯ ಸಂಕೇತವಾಗಿ ಪರಿವರ್ತಿಸುವ ಮೂಲಕ ಕಾರ್ಯನಿರ್ವಹಿಸುತ್ತದೆ. ಆ ಸಂಕೇತವನ್ನು ಉದ್ದೇಶಿತ ಸ್ವೀಕರಿಸುವವರು ಮಾತ್ರ ಅರ್ಥೈಸಿಕೊಳ್ಳಬಹುದು. ಆನ್‌ಲೈನ್ ಸಂವಹನವನ್ನು ಸುರಕ್ಷಿತಗೊಳಿಸುವುದು, ಸೂಕ್ಷ್ಮ ಮಾಹಿತಿಯನ್ನು ಸಂಗ್ರಹಿಸುವುದು ಮತ್ತು ಡಿಜಿಟಲ್ ಗುರುತುಗಳನ್ನು ಪರಿಶೀಲಿಸುವುದು ಸೇರಿದಂತೆ ಹಲವು ಸಂದರ್ಭಗಳಲ್ಲಿ ಎನ್ಕ್ರಿಪ್ಷನ್ ಉಪಯುಕ್ತವಾಗಿದೆ. ಎನ್ಕ್ರಿಪ್ಷನ್‌ಗೆ ಎರಡು ಪ್ರಮುಖ ವಿಧಾನಗಳಿವೆ: ಸಮ್ಮಿತೀಯ ಮತ್ತು ಅಸಮ್ಮಿತೀಯ. ಸಮ್ಮಿತೀಯ ಎನ್ಕ್ರಿಪ್ಷನ್‌ನಲ್ಲಿ ಡೇಟಾವನ್ನು ಎನ್ಕ್ರಿಪ್ಟ್ ಮತ್ತು ಡಿಕ್ರಿಪ್ಟ್ ಮಾಡಲು ಒಂದೇ ಕೀಲಿಯನ್ನು ಬಳಸಲಾಗುತ್ತದೆ. ಅಸಮ್ಮಿತೀಯ ಎನ್ಕ್ರಿಪ್ಷನ್‌ನಲ್ಲಿ ಎರಡು ಕೀಲಿಗಳನ್ನು ಬಳಸಲಾಗುತ್ತದೆ — ಒಂದು ಸಾರ್ವಜನಿಕ, ಮತ್ತೊಂದು ಖಾಸಗಿ. ಸಾರ್ವಜನಿಕ ಕೀಲಿಯನ್ನು ಯಾರೊಂದಿಗೆ ಬೇಕಾದರೂ ಹಂಚಿಕೊಳ್ಳಬಹುದು; ಆದರೆ ಖಾಸಗಿ ಕೀಲಿಯನ್ನು ರಹಸ್ಯವಾಗಿಡಬೇಕು. ಎಂಡ್-ಟು-ಎಂಡ್ ಎನ್ಕ್ರಿಪ್ಷನ್ ಎಂದರೆ ಡೇಟಾ ಸ್ಥಳಾಂತರವಾಗುವ ಸಂಪೂರ್ಣ ಅವಧಿಯಲ್ಲೂ ರಕ್ಷಣೆ ಒದಗಿಸುವುದು. ವಾಟ್ಸ್ಆ್ಯಪ್‌ನಂತಹ ತ್ವರಿತ ಸಂದೇಶ ವಿನಿಮಯ ಸೇವೆಗಳಲ್ಲಿ ಇದು ಅತ್ಯಂತ ನಿರ್ಣಾಯಕವಾಗಿದೆ. ಆದರೆ ವಾಟ್ಸ್ಆ್ಯಪ್‌ನಂತೆ ಎನ್ಕ್ರಿಪ್ಟ್ ಮಾಡಲಾದ ಅಪ್ಲಿಕೇಶನ್‌ಗಳು ಸಾಧನದ ಸುರಕ್ಷೆಯಷ್ಟೇ ಸುರಕ್ಷಿತವಾಗಿರುತ್ತವೆ. ಅತಿಕ್ರಮಣಕಾರರು ಅನ್ಲಾಕ್ ಮಾಡಲಾದ ಸಾಧನಕ್ಕೆ ಪ್ರವೇಶ ಪಡೆದರೆ, ಸ್ಪೈವೇರ್ ಸ್ಥಾಪಿಸಿದರೆ ಅಥವಾ ಬಳಕೆದಾರರನ್ನು ತಮ್ಮ ಖಾತೆಯನ್ನು ದುರುದ್ದೇಶಪೂರಿತ ಸಾಧನಕ್ಕೆ ಲಿಂಕ್ ಮಾಡುವಂತೆ ಮೋಸಗೊಳಿಸಿದರೆ, ಎನ್ಕ್ರಿಪ್ಟ್ ಮಾಡಿದ ಸಂದೇಶಗಳೂ ಸೋರಿಕೆಯಾಗುವ ಸಾಧ್ಯತೆ ಇದೆ.

ವಾರ್ತಾ ಭಾರತಿ 26 Jan 2026 8:29 pm

ಬೆಂಗಳೂರಿನ ಈ ಹೋಟೆಲ್ಲಿನಲ್ಲಿ ನೀವು ತುಂಬಾ ಹೊತ್ತು ಕೂತರೆ ನಿಮಗೆ 1 ಸಾವಿರ ರೂ. ಹೆಚ್ಚುವರಿ ಶುಲ್ಕ ಬೀಳುತ್ತೆ!

ಬೆಂಗಳೂರಿನ ಹೋಟೆಲ್‌ನಲ್ಲಿ ಮೀಟಿಂಗ್‌ಗಳಿಗೆ ನಿರ್ಬಂಧ ವಿಧಿಸಿ, 1 ಗಂಟೆಗಿಂತ ಹೆಚ್ಚು ಕಾಲ ಟೇಬಲ್ ಆಕ್ರಮಿಸಿಕೊಂಡರೆ ದಂಡ ವಿಧಿಸುವ ಸೂಚನಾ ಫಲಕ ಆನ್‌ಲೈನ್‌ನಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸ್ಟಾರ್ಟ್‌ಅಪ್‌ಗಳ ಹೆಚ್ಚಳದಿಂದಾಗಿ ಕೆಫೆಗಳು ಸಭೆಗಳ ತಾಣಗಳಾಗಿದ್ದು, ಇದರಿಂದ ವ್ಯಾಪಾರಕ್ಕೆ ತೊಂದರೆಯಾಗುತ್ತಿರುವುದಾಗಿ ಹೋಟೆಲ್ ಮಾಲೀಕರು ಬೇಸರ ವ್ಯಕ್ತಪಡಿಸಿದ್ದಾರೆ.

ವಿಜಯ ಕರ್ನಾಟಕ 26 Jan 2026 8:29 pm

Pension: ನೀವು 60 ವರ್ಷ ಮೇಲ್ಪಟ್ಟವರಾಗಿದ್ರೆ ತಿಂಗಳಿಗೆ 5,000 ರೂಪಾಯಿ ಪಿಂಚಣಿ ಪಡೆಯಬಹುದು: ಅನುಸರಿಸಬೇಕಾದ ವಿಧಾನಗಳು

Pension: ಕೇಂದ್ರ ಸರ್ಕಾರ ಆಗಾಗ ಮಹತ್ವ ನಿರ್ಧಾರ ತೆಗೆದುಕೊಳುತ್ತಿರುತ್ತದೆ. ಇದೀಗ ದೇಶದಲ್ಲಿ ಮಧ್ಯಮ ವರ್ಗ ಮತ್ತು ಹಿರಿಯ ನಾಗರಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಕೇಂದ್ರ ಹಿರಿಯರ ಆರ್ಥಿಕ ಭದ್ರತೆಗೆ ಹೆಚ್ಚಿನ ಒತ್ತು ನೀಡಿದೆ. ಇದರ ಭಾಗವಾಗಿ ಅಟಲ್ ಪಿಂಚಣಿ ಯೋಜನೆಯನ್ನು ನವೀಕರಿಸಿ, ಸಿಂಧುತ್ವವನ್ನು ಇನ್ನೂ 5 ವರ್ಷಗಳವರೆಗೆ ವಿಸ್ತರಣೆ ಮಾಡಲಾಗಿದೆ. ಈ ಯೋಜನೆಯ

ಒನ್ ಇ೦ಡಿಯ 26 Jan 2026 8:26 pm

ವಾರಾಹಿ ಯೋಜನೆ ಸಮಸ್ಯೆ ಶೀಘ್ರವೇ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ, ಜ.26: ಜಿಲ್ಲೆಯ ರೈತರ ಅನುಕೂಲಕ್ಕಾಗಿ ಅನುಷ್ಠಾನಗೊಂಡಿರುವ ವಾರಾಹಿ ನೀರಾವರಿ ಯೋಜನೆ ಜಿಲ್ಲೆಯ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದು, ಯೋಜನೆಯ ಬಗ್ಗೆ ತಾಂತ್ರಿಕ ತಂಡದ ಜೊತೆ ಸಭೆ ಮಾಡುತ್ತೇವೆ. ಸಮಸ್ಯೆಗೆ ಆದಷ್ಟು ಬೇಗ ಪರಿಹಾರ ಕಲ್ಪಿಸುತ್ತೇವೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ವಾರಾಹಿ ನೀರಾವರಿ ಯೋಜನೆಯ ವಿಷಯದಲ್ಲಿ ಕಾಂಗ್ರೆಸ್ ನಾಯಕರ ನಡುವೆ ನಡೆದಿರುವ ಕಚ್ಚಾಟದ ಕುರಿತು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು. ವಾರಾಹಿ ಯೋಜನೆ ಜಿಲ್ಲೆಯ ಬಹುದಿನದ ಬೇಡಿಕೆಯಾಗಿದ್ದು, ಯೋಜನೆ ಬಗ್ಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಮಾಹಿತಿ ಇದೆ. ಇದು ರೈತರ ಅನುಕೂಲಕ್ಕಾಗಿ ಮಾಡಿದ ಯೋಜನೆ, ತಾಂತ್ರಿಕ ತಂಡ ಬಂದು ಹೋಗಿದೆ. ಹಿರಿಯ ಕಾಂಗ್ರೆಸ್ ನಾಯಕ ಪ್ರತಾಪ್ ಚಂದ್ರ ಶೆಟ್ಟಿ ಅವರ ಬಗ್ಗೆ ನಾನು ಮಾತನಾಡಲ್ಲ. ತಾಂತ್ರಿಕ ತಂಡ ಪರಿಶೀಲನೆ ನಡೆಸಿದೆ, ಜಿಲ್ಲಾಡಳಿತಕ್ಕೆ ಸಂಪೂರ್ಣ ಮಾಹಿತಿ ಇದ್ದು, ಆದಷ್ಟು ಬೇಗ ಪರಿಹಾರ ಕಂಡುಕೊಳ್ಳುತ್ತೇವೆ. ಈ ಯೋಜನೆ ನೆನೆಗುದಿಗೆ ಬಿದ್ದಿರುವುದು ದುರ್ದೈವ. ನಮ್ಮ ಕಾಲಘಟ್ಟದಲ್ಲಿ ಖಂಡಿತವಾಗಿ ಇದನ್ನು ಪೂರ್ಣಗೊಳಿಸುತ್ತೇವೆ ಎಂದರು. ಪರಶುರಾಮ ಮೂರ್ತಿ ಶೀಘ್ರ : ಪರಶುರಾಮ ಥೀಂ ಪಾರ್ಕ್ ಬಗ್ಗೆ ರಾಜ್ಯ ಸರಕಾರ ನಿರ್ಲಕ್ಷ್ಯ ವಹಿಸಿದೆ ಎಂಬ ಮಾಜಿ ಸಚಿವ ಸುನೀಲ್ ಕುಮಾರ್ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಪರಶುರಾಮನನ್ನು ಕರಾವಳಿಯಲ್ಲಿ ಆರಾಧಿಸಲಾಗುತ್ತದೆ. ನಮಗೂ ಕೂಡ ಈ ವಿಚಾರದಲ್ಲಿ ರಾಜಕಾರಣ ಮಾಡುವುದು ಇಷ್ಟ ಇಲ್ಲ. ಸುನೀಲ್ ಕುಮಾರ್ ಪರಶುರಾಮನ ಮೂರ್ತಿ ಯನ್ನು ಫೈಬರ್ ನಲ್ಲಿ ಮಾಡಿಸಿದ್ದರು. ಫೈಬರ್ ನಲ್ಲಿ ಮಾಡಿ ಕಂಚಿನ ಮೂರ್ತಿ ಎಂದು ನಂಬಿಸಿದ್ದರು. ಅವರು ಜನರ ದಿಕ್ಕು ತಪ್ಪಿಸಿ ರಾಜಕೀಯ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು. ಜನರನ್ನು ನಂಬಿಸಿ ಮೋಸ ಮಾಡಿದ್ದು, ರಾಜಕೀಯ ಮಾಡಿದ್ದು ಸುನೀಲ್ ಕುಮಾರ್, ಕಾಂಗ್ರೆಸ್ ನವರಿಗೆ ದೇವರ ವಿಚಾರದಲ್ಲಿ ರಾಜಕೀಯ ಮಾಡುವ ದರ್ದು ಇಲ್ಲ. ಆದಷ್ಟು ಬೇಗ ಪರಶುರಾಮ ಮೂರ್ತಿಯ ಕಾಮಗಾರಿಯನ್ನು ಪೂರ್ಣಗೊಳಿಸಿ ಲೋಕಾರ್ಪಣೆ ಮಾಡ್ತೇವೆ ಎಂದು ಸ್ಪಷ್ಟ ಪಡಿಸಿದರು. ಡಿಸಿ ಧ್ವಜ   ಹಾರಿಸಿದ ವಿಚಾರ : ಉಡುಪಿ ಪರ್ಯಾಯ ವೇಳೆ ಜಿಲ್ಲಾಧಿಕಾರಿ ಅವರು ಭಗವದ್ವಜ ಹಾರಿಸಿ ಮೆರವಣಿಗೆಗೆ ಚಾಲನೆ ನೀಡಿದ ವಿವಾದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಉಡುಪಿಯ ಪರ್ಯಾಯ ಒಂದು ಧಾರ್ಮಿಕ ಕಾರ್ಯಕ್ರಮ. ಧಾರ್ಮಿಕ ಮನೋಭಾವನೆಯನ್ನು ಕೆರಳಿಸಬಾರದು. ಈ ವಿಚಾರ ನನಗೆ ಗೊತ್ತಿದೆ. ದ್ವಜ ಹಾರಿಸಿದ ವಿಚಾರ ಇಲ್ಲಿಗೆ ಬಿಟ್ಟುಬಿಡಿ ಎಂದು ಸಚಿವೆ ಮನವಿ ಮಾಡಿದರು. ಐಕ್ಯತೆಗಾಗಿ ದ್ವೇಷ ಭಾಷಣ ವಿರುದ್ಧ ಕಾನೂನು : ದ್ವೇಷ ಭಾಷಣ ಕಾನೂನು ಜಾರಿಗೂ ಮುನ್ನ ನೋಟಿಸ್ ನೀಡಿರುವುದರ ಬಗ್ಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಈಗ ಕಾಂಗ್ರೆಸ್ ಸರಕಾರ ಇದೆ. ದ್ವೇಷ ಭಾಷಣ ವಿರುದ್ಧ ಕಾನೂನು ರೀತಿಯಲ್ಲಿ ಮಸೂದೆ ತಂದಿದ್ದೇವೆ. ಭವಿಷ್ಯದಲ್ಲಿ ಯಾವತ್ತಾದರೂ ಬಿಜೆಪಿ ಸರ್ಕಾರ ಬರಬಹುದು. ಅವರು ನಮ್ಮ ವಿರುದ್ಧವೂ ಇದನ್ನು ಬಳಕೆ ಮಾಡಬಹುದು. ದೇಶದ ಐಕ್ಯತೆ, ಸಮಗ್ರತೆ ಮಾತ್ರ ದ್ವೇಷ ಭಾಷಣ ಮಸೂದೆ ತಂದಿರುವ ಉದ್ದೇಶ ಎಂದರು. ಜನರು ಒಟ್ಟಿಗೆ ಇರಬೇಕಾದರೆ ಜಾತಿ, ಸ್ಥಳ, ಭಾಷೆ, ವ್ಯಕ್ತಿತ್ವಗಳನ್ನು ನಿಂದಿಸಬಾರದು. ಈ ಕಾರಣಕ್ಕೆ ಸಂವಿಧಾನದ ಆಶಯದಂತೆ ಮಸೂದೆ ತಂದಿದ್ದೇವೆ. ಬಿಜೆಪಿಯವರು ಏನಾದರೂ ಹೇಳಲಿ, ದೇಶದ ಸಂವಿಧಾನಕ್ಕೆ ಧಕ್ಕೆ ಬರಬಾರದು ಎಂಬುದು ಮಾತ್ರ ನಮ್ಮ ಉದ್ದೇಶ, ಕಾಂಗ್ರೆಸಿಗರು ಯಾರಾದರೂ ದ್ವೇಷ ಭಾಷಣ ಮಾಡಿದರೆ ಅವರ ಮೇಲೂ ಕಾನೂನು ಜಾರಿಯಾಗುತ್ತದೆ ಎಂದರು. ಸೈಂಟ್ ಮೇರಿಸ್ ದ್ವೀಪದಲ್ಲಿ ರಾಷ್ಟ್ರಧ್ವಜ ಹಾರಿಸಿದ್ದು ಹೊಸ ಅನುಭವ. ಇಂದು ಸೈಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ ಮಾಡಿದ್ದು ಖುಷಿ ನೀಡಿತು. ಉಡುಪಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ದ್ವೀಪದಲ್ಲಿ ಧ್ವಜಾರೋಹಣ ಮಾಡಿದೆ. ಇದು ರೋಮಾಂಚಕ ಅನುಭವ. ಇದು ನನ್ನ ಭಾಗ್ಯ ಕೂಡ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ವಾರ್ತಾ ಭಾರತಿ 26 Jan 2026 8:25 pm

ಕಲಬುರಗಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ನೆಕ್ಸ್ಟ್ ಫೌಂಡೇಶನ್ ಟ್ರಸ್ಟ್ ಸ್ಥಾಪನೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ಜನರಿಂದ-ಜನರಿಗಾಗಿ- ಜನರಿಗೋಸ್ಕರವಾಗಿ ದೇಶದಲ್ಲಿಯೇ ಮೊದಲ ಬಾರಿಗೆ ಸರಕಾರದ ವತಿಯಿಂದಲೆ ಕಲಬುರಗಿ ನೆಕ್ಸ್ಟ್ ಫೌಂಡೇಶನ್ ಎಂಬ ಟ್ರಸ್ಟ್ ಸ್ಥಾಪಿಸಲಾಗಿದ್ದು, ಜನಸಾಮಾನ್ಯರು ಸೇರಿದಂತೆ ಸಂಘ-ಸಂಸ್ಥೆಗಳು ಮತ್ತು ಖಾಸಗಿ ಕಂಪನಿಗಳು ಜಿಲ್ಲೆಯ ಅಭಿವೃದ್ಧಿಗಾಗಿ ತಮ್ಮದೇ ಆದ ದೇಣಿಗೆ ನೀಡಲು ಮತ್ತು ದೇಣಿಗೆ ಹಣ ಜನರ ಬೇಡಿಕೆ ಅನುಗುಣವಾಗಿ ಖರ್ಚು ಮಾಡಲು ಟ್ರಸ್ಟ್ ಮೂಲಕ ಒಂದು ವೇದಿಕೆ ಕಲ್ಪಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಸೋಮವಾರ ಕಲಬುರಗಿ ನಗರದ ಝೆಸ್ಟ್ ಕ್ಲಬ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಕಲಬುರಗಿ ನೆಕ್ಸ್ಟ್ ಫೌಂಡೇಶನ್ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಇದೊಂದು ದೇಶದಲ್ಲಿ ವಿನೂತನ ಪ್ರಯತ್ನವಾಗಿದ್ದು, ಸಮುದಾಯದ ತೊಡಗಿಸಿಕೊಳ್ಳುವಿಕೆ, ಪಾಲುದಾರರ ಸಹಯೋಗ, ಕಾರ್ಪೊರೇಟ್ ಪಾಲುದಾರಿಕೆಗಳ ಖಾಸಗಿಯವರ ಸಹಭಾಗಿತ್ವದಲ್ಲಿ ಸರ್ಕಾರವೇ ಟ್ರಸ್ಟ್ ರಚಿಸಿದೆ. ಜಿಲ್ಲೆಯಲ್ಲಿ ಲಭ್ಯವಿರುವ ಮಾನವ ಸಂಪನ್ಮೂಲ ಬಳಸಿಕೊಂಡು ಗುಣಾತ್ಮಕ ಬದಲಾವಣೆ ತರಲು ಪಣ ತೊಡಲಾಗಿದೆ ಎಂದರು. ಸರಕಾರ ಸಾರ್ವಜನಿಕರ ಕಲ್ಯಾಣ, ಮೂಲಸೌಕರ್ಯ ಮತ್ತು ಅಭಿವೃದ್ಧಿಗಾಗಿ ಸಾವಿರಾರು ಕೋಟಿ ರೂ. ಹಣ ಖರ್ಚು ಮಾಡಿದರೂ ಕೂಡ  ಕೆಲವು ಸವಾಲುಗಳು ಮತ್ತು ಅವಕಾಶಗಳಿಗೆ ತುರ್ತು, ಕೇಂದ್ರೀಕೃತ ಮತ್ತು ನವೀನ ಮಧ್ಯಸ್ಥಿಕೆ ಅತ್ಯವಶ್ಯಕವಾಗಿರುತ್ತದೆ. ಇವು ಸಾರ್ವಜನಿಕ ಕಾರ್ಯಕ್ರಮಗಳ ಸಾಂಪ್ರದಾಯಿಕ ವ್ಯಾಪ್ತಿಗೆ ಬರುವುದಿಲ್ಲ. ಈ ನಿರ್ಣಾಯಕ ಅಂತವನ್ನು ಪರಿಹರಿಸಲು ಪ್ರತಿಷ್ಠಾನವು ಹೆಜ್ಜೆ ಹಾಕುವ ಮೂಲಕ ಜನರ ಬೇಡಿಯಂತೆ ಅಂತರ ತುಂಬುವ ಕೆಲಸವನ್ನು ಪರಿಣಾಮಕಾರಿಯಾಗಿ ಮಾಡಲಿದೆ ಎಂದರು. ವಿಶೇಷವಾಗಿ ಶಿಕ್ಷಣ ಮತ್ತು ಆರೋಗ್ಯ, ಕ್ರೀಡಾ ಮತ್ತು ಯುವ ಸಬಲೀಕರಣ, ಕೌಶಲ್ಯಾಭಿವೃದ್ಧಿ ಮತ್ತು ಸ್ವಯಂ ಉದ್ಯೋಗ, ಪರಿಸರ ಮತ್ತು ವನ್ಯಜೀವಿ ರಕ್ಷಣೆ, ಬಡತನ ಮತ್ತು ನಿರುದ್ಯೋಗ ನಿವಾರಣೆ, ಅನಾರೋಗ್ಯ ಮತ್ತು ಅಪೌಷ್ಠಿಕತೆ ಹೋಗಲಾಡಿಸುವಿಕೆ, ಮಹಿಳಾ ಸಬಲೀಕರಣ, ಬಾಲ್ಯ ವಿವಾಹ ತಡೆಯುವಿಕೆ, ಗ್ರಾಮೀಣ ಅಭಿವೃದ್ಧಿ, ಹವಾಮಾನ ಬದಲಾವಣೆ ಮತ್ತು ಪರಿಸರ ಮಾಲಿನ್ಯ ತಡೆಗಟ್ಟುವಿಕೆ ಹೀಗೆ ಮುಂತಾದ ಕ್ಷೇತ್ರದಲ್ಲಿ ಟ್ರಸ್ಟ್ ಕಾರ್ಯನಿರ್ವಹಿಸಲಿದೆ ಎಂದರು. ಟ್ರಸ್ಟ್ ನಲ್ಲಿ ನಾಲ್ಕು ಜನ ಚುನಾಯಿತ ಜನಪ್ರತಿನಿಧಿಗಳು ಮತ್ತು 8 ಜನ ಅಧಿಕಾರಿಗಳು ಸೇರಿ ಒಟ್ಟು 12 ಜನರಿದ್ದು, ಎಲ್ಲರು ಪದನಿಮಿತ್ಯ ಸದಸ್ಯರಾಗಿದಾರೆ. ದೇಣಿಗೆ ಪ್ರತಿ ರೂಪಾಯಿಗೂ ಇಲ್ಲಿ ಉತ್ತರದಾಯಿತ್ವ, ಹೊಣೆಗಾರಿಕೆ ಇದೆ. ದೇಣಿಗೆ ಹಣ ಸಮರ್ಪಕ ಬಳಕೆ ಹಾಗೂ ಪಾರದರ್ಶಕತೆ ಕಾಯ್ದುಕೊಳ್ಳಲು ಜಿಲ್ಲಾಧಿಕಾರಿಗಳನ್ನು ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಜನೋಪಯೋಗಿ ಕೆಲಸ ಕಾರ್ಯಗಳಿಂದ ಮುಂದಿನ ದಿನದಲ್ಲಿ ಈ ಟ್ರಸ್ಟ್ ಭಾರತದ ಭರವಸೆಯ ಟ್ರಸ್ಟ್ ಆಗಿ ರೂಪ ತಾಳಲಿದೆ ಎಂದು ಭರವಸೆಯ ಮಾತುಗಳನ್ನಾಡಿದರು. ರಾಜ್ಯದ ಜಿಡಿಪಿ ನೋಡಿದಾಗ ಬೆಂಗಳೂರು ನಗರದ ಕೊಡುಗೆ ಶೇ.39.90 ಇದ್ದರೆ ನಂತರದ ಸ್ಥಾನ ದಕ್ಷಿಣ ಕನ್ನಡ ಜಿಲ್ಲೆ ಶೇ.5.40 ಹೊಂದಿದೆ. ಬೆಂಗಳೂರು ಗ್ರಾಮೀಣ ಮತ್ತು ಕಲಬುರಗಿ ಜಿಲ್ಲೆಯ ಕೊಡುಗೆ ಶೇ.1.90 ರಷ್ಟಿದೆ. ಕಲಬುರಗಿ ಜಿಲ್ಲೆಯಲ್ಲಿ 40 ವಯಸ್ಸಿನ ಕಡಿಮೆ ಇರುವ ಜನಸಂಖ್ಯೆ ಹೆಚ್ಚಿದ್ದು, ಇಂತಹ ಶಕ್ತಿಶಾಲಿ ಮಾನವ ಸಂಪನ್ಮೂಲ ಸದ್ಬಳಕೆ ಮಾಡಿಕೊಂಡು ಟ್ರಸ್ಟನ ಸಹಕಾರದಿಂದ ರಾಜ್ಯದ ಜಿ.ಡಿ.ಪಿ.ಗೆ ಜಿಲ್ಲೆಯ ಕೊಡುಗೆ ಪ್ರಮಾಣ ಹೆಚ್ಚಿಸುವ ಗುರಿ ಹೊಂದಲಾಗಿದೆೆ ಎಂದರು. ಟ್ರಸ್ಟ್ ಉದ್ದೇಶ ಮತ್ತು ಕಾರ್ಯಚಟುವಟಿಕೆ ನೋಡಿಕೊಂಡು ಈಗಾಗಲೆ ಹತ್ತಾರು ಮಲ್ಟಿ ನ್ಯಾಷನಲ್ ಕಂಪೆನಿಗಳು ಜಿಲ್ಲೆಯ ಪ್ರಗತಿಗೆ ನಮ್ಮೊಂದಿಗೆ ಕೈಜೋಡಿಸಿ ಒಪ್ಪಂದ ಮಾಡಿಕೊಂಡಿವೆ. ಜೇಯಿಸ್ ಕಂಪೆನಿ ಜಿಲ್ಲೆಯ 11 ಲಕ್ಷ ವಿದ್ಯಾರ್ಥಿಗಳಿಗೆ ಕಣ್ಣಿನ ತಪಾಸಣೆ ನಡೆಸಿ ಅಗತ್ಯವಿದ್ದರೆ ಕನ್ನಡಕ ಸಹ ಉಚಿತವಾಗಿ ನೀಡಲಿದೆ. ಅನ್‌ಸ್ಟಾಪ್ ಸಂಸ್ಥೆ 2,500 ಜನ ಯುವಕರಿಗೆ ಉದ್ಯೋಗಾಧರಿತ ಕೌಶಲ್ಯ ಮತ್ತು ಹೆಡ್-ಹೆಲ್ಡ್-ಹೈ ಸಂಸ್ಥೆ 15 ಸಾವಿರ ಯುವಕರಿಗೆ ಡಿಜಿಟಲ್ ಔದ್ಯೋಗಿಕ ತರಬೇತಿ ನೀಡಲಿದೆ. ಕೃಷಿ ಉತ್ಪನ್ನಗಳ ಸಂಸ್ಕರಣೆ, ಬ್ರ್ಯಾಂಡಿಂಗ್, ಮಾರುಕಟ್ಟೆ ಕುರಿತು ರೈತರಿಗೆ ತಿಳಿಹೇಳಲು ಕೃಷಿ ಕಾಯಕಲ್ಪ ಸಂಸ್ಥೆ ಅನ್ನದಾತರ ನೆರವಿಗೆ ಬಂದಿದೆ. 500 ಜನರಿಗೆ ಡ್ರೋನ್ ಪೈಲಟ್ ಟ್ರೇನಿಂಗ್ ನೀಡಲು ನೀಯೋ ಸ್ಕೈ ಮುಂದೆ ಬಂದಿದೆ. 250 ಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಸಿತಾರಾ ಅಕ್ಕ ಸಂಸ್ಥೆ ಸಹಾಯ ಹಸ್ತ ಚಾಚಿದೆ. ಜಲಮೂಲಗಳ ಸಂರಕ್ಷಣೆಗೆ ಟಾಟಾ ಎಲೆಕ್ಟಾನಿಕ್ಸ್ ಸಂಸ್ಥೆ ತನ್ನ ಪರಿಸರ ಕಾಳಜಿ ತೋರಿದೆ. ಆಡಳಿತ ವರ್ಗಕ್ಕೆ ನೆರವಾಗಲು ಫೈಡ್‌ಲಿಟಿ ಸಂಸ್ಥೆ ಸರ್ಕಾರಿ ಕಚೇರಿಗಳಿಗೆ 800 ಗಣಕಯಂತ್ರ ನೀಡಲಿದೆ. ಕಿಯೋನಿಕ್ಸ್ ಸಂಸ್ಥೆ ಶಿಕ್ಷಣ ಸಂಸ್ಥೆಗಳಿಗೆ 1,095 ಕೆ.ಇ.ಓ. ಅತ್ಯಾಧುನಿಕ ಎ.ಐ. ಚಾಲಿತ ಕಾಂಪ್ಯಾಕ್ಟ್ ಪಿ.ಸಿ. ನೀಡಲಿದೆ. ಗ್ರಾಮೀಣ ಭಾಗದ ಮಹಿಳೆಯರ ಸಬಲೀಕರಣ ಮತ್ತು ಅವರ ಜೀವನಮಟ್ಟ ಸುಧಾರಣೆಗೆ ಗ್ರಾಮ ವಿಕಾಸ್‌ ಸಂಸ್ಥೆಯೊಂದಿಗೆ ಟ್ರಸ್ಟ್ ಕೆಲಸ ಮಾಡಲಿದೆ ಎಂದು ಟ್ರಸ್ಟ್ ಮುಂದಿನ ಕಾರ್ಯಯೋಜನೆಗಳ ಕುರಿತು ಸಚಿವರು ಮಾಹಿತಿ ನೀಡಿದರು. ಮುಂದಿನ ಒಂದು ವರ್ಷದಲ್ಲಿ ಡ್ರೀಂ ಸ್ಪೋರ್ಟ್ ಸಂಸ್ಥೆಯ ಸಹಭಾಗಿತ್ವದಲ್ಲಿ ಜಿಲ್ಲೆಯಲ್ಲಿ ಸುಮಾರು 20 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ಸಂಕೀರ್ಣ ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ. ಈ ಮೂಲಕ ಯುವ ಸಮೂಹ ಪಾಠದ ಜೊತೆಗೆ ಕ್ರೀಡೆಯಲ್ಲಿ ಸಕ್ರೀಯವಾಗಿರಲು ಪೂರಕವಾದ ವಾತಾವರಣ ಕಲ್ಪಿಸಲಾಗುತ್ತದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಇದೇ ಸಂದರ್ಭದಲ್ಲಿ ಘೋಷಿಸಿದರು. ಕಲಬುರಗಿ ನೆಕ್ಸ್ಟ್ ಫೌಂಡೇಶನ್ ಉಪಾಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಪ್ರಸ್ತಾವಿಕವಾಗಿ ಮಾತನಾಡಿ, ರಾಜ್ಯ ಸರ್ಕಾರದಿಂದ ಅನುಮೋದನೆ ಪಡೆದು ಕಲಬುರಗಿ ನೆಕ್ಸ್ಟ್ ಫೌಂಡೇಶನ್, ಕಲಬುರಗಿ ಎಂಬ ಹೆಸರಿನ ಸಾರ್ವಜನಿಕ ದತ್ತಿ ಟ್ರಸ್ಟ್ (ಪಬ್ಲಿಕ್ ಚಾರಿಟೆಬಲ್ ಟ್ರಸ್ಟ್) ನೋಂದಾಯಿಸಲಾಗಿದೆ ಎಂದರಲ್ಲದೆ ಟ್ರಸ್ಟ್ ಧ್ಯೇಯ ಮತ್ತು ಉದ್ದೇಶ ವಿವರಿಸಿದರು. ಇದೇ ಸಂದರ್ಭದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ವೈಯಕ್ತಿಕ ಹಣದಿಂದ ಎಸ್.ಎಸ್.ಎಲ್.ಸಿ. ಮಕ್ಕಳಿಗೆ ಪರೀಕ್ಷೆಗೆ ಸಹಾಯವಾಗಲೆಂದು ಪಠ್ಯಪುಸ್ತಕ ಅನುಗುಣವಾಗಿ ಮಾದರಿ ಪ್ರಶ್ನೆ ಪತ್ರಿಕೆ ಕೈಪಿಡಿವುಳ್ಳ 35,000 ಪುಸ್ತಕಗಳನ್ನು ವಿತರಿಸಲಾಗುತ್ತಿದ್ದು, ಇಲ್ಲಿ ಸಾಂಕೇತಿಕವಾಗಿ ಐವರು ಮಕ್ಕಳಿಗೆ ನೀಡಲಾಯಿತು. ಇದಲ್ಲದೆ ಫೈಡ್‌ಲಿಟಿ ಐ.ಟಿ. ಸಂಸ್ಥೆಯಿಂದ ನೀಡಲಾದ ಗಣಕಯಂತ್ರಗಳನ್ನು ಸರಕಾರಿ ಕಚೇರಿ ಕೆಲಸ ಕಾರ್ಯಗಳಿಗೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ನೀಡಲಾಯಿತು. ಕಲಬುರಗಿ ನೆಕ್ಷ್ಟ್‌ ಫೌಂಡೇಷನ್ ಏನಿದು?: ಖಾಸಗಿ ಮತ್ತು ಸಾರ್ವಜನಿಕ ಉದ್ದಿಮೆಗಳು/ ಕಾರ್ಖಾನೆಗಳಿಂದ ಅವರ ಸಿ.ಎಸ್.ಆರ್(ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ) ಅನುದಾನವನ್ನು ಸಂಗ್ರಹಿಸಿ, ಅದನ್ನು ನಿಯಮಾನುಸಾರವಾಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಬಳಸುವುದು. ಸರಕಾರದ ಯೋಜನೆಗಳಿಂದ ಬರುವ ಅನುದಾನ ಹೊರತಾಗಿ ಜನರ ಬೇಡಿಕೆ ಅನುಗುಣವಾಗಿ ಟ್ರಸ್ಟ್ ಅನುದಾನವನ್ನು ಹೆಚ್ಚುವರಿಯಾಗಿ ಬಳಸಿ ಅಂತರ ತುಂಬುವಿಕೆ ಕೆಲಸ ಪರಿಣಾಮಕಾರಿಯಾಗಿ ಮಾಡುವುದು. ಜಿಲ್ಲೆಯ ಪ್ರಗತಿಗೆ ಕಂಪನಿಗಳ ಸಿ.ಎಸ್.ಆರ್ ಅನುದಾನ ಮತ್ತು ದೇಣಿಗೆ ಹಣವನ್ನು ಸರಿಯಾಗಿ ಮತ್ತು ಸೂಕ್ತವಾಗಿ ಬಳಕೆಯಾಗಲು ಒಂದು ವೇದಿಕೆಯನ್ನು ಕಲ್ಪಿಸಲಾಗಿದೆ. ಟ್ರಸ್ಟ್‌ಗೆ ದೇಣಿಗೆ ನೀಡುವವರಿಗೆ ಆದಾಯ ತೆರಿಗೆ ಕಾಯ್ದೆಯಡಿ ತೆರಿಗೆ ವಿನಾಯಿತಿ ಸಹ ಸಿಗಲಿದೆ. ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯ ಟ್ರಸ್ಟ್ ನಲ್ಲಿ ಜಿಲ್ಲಾಧಿಕಾರಿಗಳು ಉಪಾಧ್ಯಕ್ಷರು ಮತ್ತು ಸೆಟಲರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಉಳಿದಂತೆ ಲೋಕಸಭಾ ಸದಸ್ಯರು, ಕಲಬುರಗಿ ಉತ್ತರ ಮತ್ತು ಕಲಬುರಗಿ ದಕ್ಷಿಣ ವಿಧಾನಸಭಾ ಸದಸ್ಯರು, ನಗರ ಪೊಲೀಸ್ ಆಯುಕ್ತರು, ಎಸ್.ಪಿ., ಜಿಲ್ಲಾ ಪಂಚಾಯತ್ ಸಿ.ಇ.ಓ, ಮಹಾನಗರ ಪಾಲಿಕೆ ಆಯುಕ್ತರು, ಜಂಟಿ ಕೃಷಿ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪದನಿಮಿತ್ಯ ಸದಸ್ಯರಾಗಿದ್ದು, ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಟ್ರಸ್ಟಿನ ಎಲ್ಲಾ 12 ಟ್ರಸ್ಟಿಗಳು ಪದನಿಮಿತ್ತ ಸದಸ್ಯರಾಗಿರುತ್ತಾರೆ. ಕಾರ್ಯಕ್ರಮದಲ್ಲಿ ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ನಿಯಮಿತದ ಅಧ್ಯಕ್ಷೆ ಹಾಗೂ ಉತ್ತರ ಶಾಸಕಿ ಕನೀಜ್ ಫಾತೀಮಾ, ಅಲ್ಲಮಪ್ರಭು ಪಾಟೀಲ್‌, ವಿಧಾನ ಪರಿಷತ್ ಶಾಸಕರುಗಳಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ್, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಜಿಲ್ಲಾ ಗ್ಯಾರಮಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರಿ, ಕಲಬುರಗಿ ಮಹಾನಗರ ಪಾಲಿಕೆಯ ಮಹಾಪೌರರಾದ ವರ್ಷಾ ರಾಜೀವ ಜಾನೆ, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ರಾಹುಲ ಪಾಂಡ್ವೆ, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆಯ ಆಯುಕ್ತ ಅವಿನಾಶ ಶಿಂಧೆ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತೆ ಸಾಹಿತ್ಯ, ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಸೇರಿದಂತೆ ಇತರೆ ಚುನಾಯಿತ ಜನಪ್ರತಿನಿಧಿಗಳು, ಅಧಿಕಾರಿಗಳು, ಉದ್ಯಮಿಗಳು, ಕಾರ್ಪೋರೇಟ್ ಕಂಪನಿ ಪ್ರತಿನಿಧಿಗಳು ಭಾಗವಹಿಸಿದ್ದರು. ಫೌಂಡೇಷನ್ ಸದಸ್ಯ ಕಾರ್ಯದರ್ಶಿಯಾಗಿರುವ ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ಅಬ್ದುಲ್ ಅಜೀಮ್ ಸ್ವಾಗತಿಸಿ ವಂದಿಸಿದರು. ಆರ್.ಜೆ.ವಾಣಿ ನಿರೂಪಿಸಿದರು.

ವಾರ್ತಾ ಭಾರತಿ 26 Jan 2026 8:24 pm

ಪೌರಾಯುಕ್ತೆಗೆ ನಿಂದನೆ ಪ್ರಕರಣ: ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧನ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ದೂರವಾಣಿ ಮೂಲಕ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿಯಾಗಿರುವ ರಾಜೀವ್ ಗೌಡನನ್ನು ಚಿಕ್ಕಬಳ್ಳಾಪುರ ಪೊಲೀಸರು ಇಂದು ಸಂಜೆ ಕೇರಳ–ಕರ್ನಾಟಕ ಗಡಿ ಪ್ರದೇಶದಲ್ಲಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಬಂಧಿತ ರಾಜೀವ್ ಗೌಡನನ್ನು ಇಂದು ಮಧ್ಯರಾತ್ರಿ ಚಿಕ್ಕಬಳ್ಳಾಪುರಕ್ಕೆ ಕರೆತರುವ ಸಾಧ್ಯತೆ ಇದ್ದು, ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆ ಇದೆ ಎಂದು ಮಾಹಿತಿ ಲಭ್ಯವಾಗಿದೆ. ರಾಜೀವ್ ಗೌಡನ ಬಂಧನವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಅವರು ಖಚಿತಪಡಿಸಿದ್ದು, ಅಗತ್ಯ ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗುವುದೆಂದು ತಿಳಿಸಿದ್ದಾರೆ. ಶಿಡ್ಲಘಟ್ಟ ನಗರ ವ್ಯಾಪ್ತಿಯಲ್ಲಿ ‘ಕಲ್ಟ್’ ಸಿನಿಮಾದ ಫ್ಲೆಕ್ಸ್ ತೆರವುಗೊಳಿಸಿದ ಹಿನ್ನೆಲೆಯಲ್ಲಿ, ನಗರಸಭೆಯ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ದೂರವಾಣಿ ಮೂಲಕ ಧಮ್ಕಿ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಪೌರಾಯುಕ್ತೆ ಅಮೃತಾ ಗೌಡ ಅವರು ಶಿಡ್ಲಘಟ್ಟ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆಯೇ ರಾಜೀವ್ ಗೌಡ ಅವರು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಜಾಮೀನು ನಿರಾಕರಣೆಯ ನಂತರ, ಅವರ ಬಂಧನಕ್ಕಾಗಿ ಚಿಕ್ಕಬಳ್ಳಾಪುರ ಪೊಲೀಸರು ನಿರಂತರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು.

ವಾರ್ತಾ ಭಾರತಿ 26 Jan 2026 8:23 pm

ಉಡುಪಿ | ಹುತಾತ್ಮರಿಗೆ ಸಚಿವರಿಂದ ಗೌರವಾರ್ಪಣೆ

ಉಡುಪಿ : 77ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಗರದ ಅಜ್ಜರಕಾಡಿನ ಹುತಾತ್ಮ ಸೈನಿಕರ ಯುದ್ಧ ಸ್ಮಾರಕಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇಂದು ಮುಂಜಾನೆ ಭೇಟಿ ನೀಡಿ, ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಜಿಲ್ಲಾಧಿಕಾರಿ ಟಿ.ಕೆ.ಸ್ವರೂಪ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ವಿವಿಧ ಇಲಾಖೆಗಳು ಅಧಿಕಾರಿಗಳು ಉಪಸ್ಥಿತರಿದ್ದರು.

ವಾರ್ತಾ ಭಾರತಿ 26 Jan 2026 8:19 pm

IND Vs NZ- ತಿಲಕ್ ವರ್ಮಾ ಈಗಲೂ ಅಲಭ್ಯ; ಲೆಕ್ಕಕ್ಕುಂಟು ಆಟಕ್ಕಿಲ್ಲ ಎಂಬಂತಾಗ್ತಾರಾ ಶ್ರೇಯಸ್ ಅಯ್ಯರ್?

Tilak Varma Injury- ಟಿ20 ಸ್ಪೆಷಲಿಸ್ಟ್ ಬ್ಯಾಟರ್ ಆಗಿರುವ ತಿಲಕ್ ವರ್ಮಾ ಅವರು ಸಂಪೂರ್ಣ ಗುಣಮುಖರಾಗದ ಕಾರಣ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಕೊನೆಯ ಎರಡು ಪಂದ್ಯಗಳಿಗೆ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಹೀಗಾಗಿ ಶ್ರೇಯಸ್ ಅಯ್ಯರ್ ಅವರು ತಂಡದಲ್ಲಿ ಮುಂದುವರಿಯಲಿದ್ದಾರೆ. ಬೆಂಗಳೂರಿನಲ್ಲಿರುವ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ನಲ್ಲಿ ಪುನಶ್ಚೇತನ ಶಿಬಿರದಲ್ಲಿ ಇರುವ ತಿಲಕ್ ವರ್ಮಾ ಅವರು ಫೆಬ್ರವರಿ 3 ರಂದು ದಕ್ಷಿಣ ಆಫ್ರಿಕಾ ವಿರುದ್ಧದ ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ತಂಡವನ್ನು ಸೇರಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

ವಿಜಯ ಕರ್ನಾಟಕ 26 Jan 2026 8:12 pm

ರವೆ ಮೈದಾದ ವೈಭವೀಕೃತ ಆವೃತ್ತಿಯೇ?

ಭಾರತೀಯ ಅಡುಗೆಯಲ್ಲಿ ರವೆ ಅಥವಾ ಸೆಮೊಲಿನಾವನ್ನು ಬಹಳ ಹಿಂದಿನಿಂದಲೂ ಮೈದಾಗೆ ಪರ್ಯಾಯವೆಂದು ಪರಿಗಣಿಸಲಾಗುತ್ತಿದೆ. ಭಾರತೀಯರು ತೂಕ ಇಳಿಸುವ ಆಹಾರಕ್ರಮದಲ್ಲಿ ಉಪ್ಪಿಟ್ಟು, ಇಡ್ಲಿ ಮೊದಲಾದವುಗಳನ್ನು ಬಳಸುತ್ತಾರೆ. ಆದರೆ ಎಂಜಿನಿಯರ್ ಕಮ್ ವೈದ್ಯೆಯಾಗಿರುವ ಆಕೃತಿ ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಂ ಪುಟದಲ್ಲಿ, “ಉಪ್ಪಿಟ್ಟು ಹೆಸರಲ್ಲಿ ರವೆ ತಿನ್ನುವವರು ತಕ್ಷಣವೇ ನಿಲ್ಲಿಸಬೇಕು” ಎಂದು ಹೇಳಿದ್ದಾರೆ. ರವೆಯನ್ನು ಮೈದಾಗೆ ಪರ್ಯಾಯ ಆಹಾರ ಎಂದು ಪರಿಗಣಿಸುವುದರ ಬಗ್ಗೆ ಅವರು ಎಚ್ಚರಿಕೆ ನೀಡಿದ್ದಾರೆ. ರವೆಯು ಮೈದಾದ ವೈಭವೀಕೃತ ಆವೃತ್ತಿ! “ರವೆಯು ಮೈದಾದ ವೈಭವೀಕೃತ ಆವೃತ್ತಿ. ರವೆ ಅಥವಾ ಉಪ್ಪಿಟ್ಟು ಮೈದಾವೇ ಆಗಿರುತ್ತದೆ. ಮೈದಾದಲ್ಲಿ ಸ್ವಲ್ಪ ಗ್ಲೈಸೆಮಿಕ್ ಇಂಡೆಕ್ಸ್ ಹೆಚ್ಚಿರುತ್ತದೆ ಎನ್ನುವುದನ್ನು ಬಿಟ್ಟರೆ, ಉಳಿದಂತೆ ಫೈಬರ್ ಅಂಶವೇ ಇಲ್ಲ. ಇದು ಸಂಸ್ಕರಿತ ಕಾರ್ಬೋಹೈಡ್ರೇಟ್ ಆಗಿರುತ್ತದೆ. ಮೈದಾಗಿಂತ ಸ್ವಲ್ಪ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಇದೆ ಎಂದ ಮಾತ್ರಕ್ಕೆ ಅದು ಆರೋಗ್ಯಕರ ಆಯ್ಕೆ ಆಗುವುದಿಲ್ಲ” ಎಂದು ಅವರು ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ಅಭಿಪ್ರಾಯ ವ್ಯಕ್ತಪಡಿಸಿರುವ ಪೌಷ್ಟಿಕ ತಜ್ಞೆ ಆಶ್ಲೇಷಾ ಜೋಶಿಯವರು, ಈ ಹೋಲಿಕೆಯಲ್ಲಿ ಎಲ್ಲವನ್ನೂ ಅತಿಯಾಗಿ ಸರಳೀಕರಿಸಲಾಗಿದೆ ಎಂದು ಹೇಳಿದ್ದಾರೆ. “ರವೆ ಮತ್ತು ಮೈದಾ ಎರಡೂ ಗೋಧಿಯ ಉತ್ಪನ್ನಗಳೇ. ಆದರೆ ಅವು ವಿಭಿನ್ನವಾಗಿ ಸಂಸ್ಕರಿಸಲಾಗುತ್ತದೆ. ಮೈದಾವನ್ನು ಸಂಸ್ಕರಿತ ಎಂಡೋಸ್ಪರ್ಮ್‌ನಿಂದ (ಬೀಜಪೋಷಕ ಭಾಗ) ತಯಾರಿಸಲಾಗುತ್ತದೆ. ಇದರಲ್ಲಿ ಫೈಬರ್ ಅಂಶ ಹಾಗೂ ಸೂಕ್ಷ್ಮ ಪೋಷಕಾಂಶಗಳನ್ನು ತೆಗೆದುಹಾಕಲಾಗುತ್ತದೆ. ಆದರೆ ರವೆ ಸ್ವಲ್ಪ ಹೆಚ್ಚು ಪ್ರೋಟೀನ್ ಹಾಗೂ ರಚನೆಯನ್ನು ಉಳಿಸಿಕೊಂಡಿರುತ್ತದೆ” ಎಂದು ಆಶ್ಲೇಷಾ ವಿವರಿಸಿದ್ದಾರೆ. ಹಾಗಿದ್ದರೂ ರವೆ ಸಂಪೂರ್ಣ ಧಾನ್ಯವಲ್ಲ. ಹಾಗೆಂದು ಮೈದಾದ ವೈಭವೀಕರಿಸಿದ ಆವೃತ್ತಿ ಎಂದು ಹೇಳಲೂ ಸಾಧ್ಯವಿಲ್ಲ. ರವೆ ಅತಿಯಾಗಿ ಪೌಷ್ಟಿಕಾಂಶ ಹೊಂದಿದೆ ಎನ್ನುವುದೂ ತಪ್ಪು. ಇವೆರಡರ ಮಧ್ಯದಲ್ಲಿ ರವೆ ಬರುತ್ತದೆ. ಮೈದಾಗೆ ಹೋಲಿಸಿದರೆ ರವೆ ಕಡಿಮೆ ಸಂಸ್ಕರಿತ “ಹಾಗಾದರೆ ಸೂಜಿ ಮೈದಾಗೆ ಆರೋಗ್ಯಕರ ಪರ್ಯಾಯವೇ?” ಎಂಬ ಪ್ರಶ್ನೆಗೆ, “ಮೈದಾಗೆ ಹೋಲಿಸಿದರೆ ರವೆ ಕಡಿಮೆ ಸಂಸ್ಕರಿತವಾಗಿದ್ದು ಹೆಚ್ಚು ತೃಪ್ತಿ ನೀಡುತ್ತದೆ. ಮುಖ್ಯವಾಗಿ ತರಕಾರಿಗಳು, ದ್ವಿದಳ ಧಾನ್ಯಗಳ ಜೊತೆಗೆ ಹಾಗೂ ಆರೋಗ್ಯಕರ ಕೊಬ್ಬುಗಳೊಂದಿಗೆ ಸೇವಿಸಿದರೆ ಉತ್ತಮ. ಆದರೆ ಉಪ್ಪಿಟ್ಟು ಮತ್ತು ಇಡ್ಲಿಯನ್ನು ಅತಿಯಾಗಿ ಸೇವಿಸುವುದು ಸೂಕ್ತವಲ್ಲ. ಸಿರಿಧಾನ್ಯಗಳು, ಓಟ್ಸ್ ಅಥವಾ ಸಂಪೂರ್ಣ ಗೋಧಿಗೆ ಇದನ್ನು ಪರ್ಯಾಯವೆಂದು ಪರಿಗಣಿಸಲು ಸಾಧ್ಯವಿಲ್ಲ” ಎಂದು ಆಶ್ಲೇಷಾ ಹೇಳಿದ್ದಾರೆ. ರಕ್ತದಲ್ಲಿನ ಸಕ್ಕರೆ ಪ್ರಮಾಣದ ವಿಚಾರದಲ್ಲಿ ರವೆಗೆ ಮಿತಿಗಳಿವೆ ಎನ್ನುವುದನ್ನು ಆಶ್ಲೇಷಾ ಒಪ್ಪಿಕೊಳ್ಳುತ್ತಾರೆ. “ರವೆಯಲ್ಲಿ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಇರುವುದಿಲ್ಲ. ಏಕೆಂದರೆ ಇದು ಸಂಸ್ಕರಿತ ಗೋಧಿಯಿಂದ ತಯಾರಿಸಲ್ಪಟ್ಟಿದ್ದು ಬೇಗನೇ ಜೀರ್ಣವಾಗುತ್ತದೆ. ಸಂಪೂರ್ಣ ಧಾನ್ಯಗಳಿಗೆ ಹೋಲಿಸಿದರೆ ಫೈಬರ್ ಅಂಶ ಕಡಿಮೆ. ಆದರೆ ತರಕಾರಿಗಳು, ಬೇಳೆಗಳು ಅಥವಾ ಮೊಸರಿನೊಂದಿಗೆ ಮಿಶ್ರಣ ಮಾಡಿ ಸೇವಿಸುವುದರಿಂದ ಅದು ಹೆಚ್ಚು ಆರೋಗ್ಯಕರವಾಗುತ್ತದೆ. ಜೊತೆಗೆ ಎಣ್ಣೆ ಮತ್ತು ತುಪ್ಪದಂತಹ ಕೊಬ್ಬುಗಳು ಗ್ಲೂಕೋಸ್ ಹೀರುವಿಕೆಯನ್ನು ನಿಧಾನಗೊಳಿಸುವ ಕಾರಣ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸಲು ಸಹಕಾರಿಯಾಗಬಹುದು” ಎಂದು ಅವರು ಹೇಳಿದ್ದಾರೆ. ನಿತ್ಯ ಸೇವನೆ ಸೂಕ್ತವಲ್ಲ ಆದರೆ ನಿತ್ಯವೂ ದೊಡ್ಡ ಪ್ರಮಾಣದಲ್ಲಿ ಸೇವಿಸುವುದು ಉತ್ತಮವಲ್ಲ. ಸಂಸ್ಕರಿತ ಕಾರ್ಬೋಹೈಡ್ರೇಟ್‌ಗಳ ಭಾಗವಾಗಿ ಸೇವಿಸಿದರೆ ರವೆಯಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣದಲ್ಲಿ ಏರಿಳಿತ ಉಂಟಾಗಬಹುದು ಹಾಗೂ ಹಸಿವು ಹೆಚ್ಚಾಗಬಹುದು. ಜೊತೆಗೆ ಇದರಲ್ಲಿ ಗ್ಲೂಟೆನ್ ಇರುವುದರಿಂದ ಕೆಲವರಿಗೆ ಸಮಸ್ಯೆ ಉಂಟಾಗುವ ಸಾಧ್ಯತೆಯೂ ಇದೆ. ಸಮತೋಲಿತ ಆಹಾರದ ಭಾಗವಾಗಿ ಅಪರೂಪಕ್ಕೊಮ್ಮೆ ಸೇವಿಸುವುದರಲ್ಲಿ ತಪ್ಪೇನಿಲ್ಲ. ಕೃಪೆ: indianexpress

ವಾರ್ತಾ ಭಾರತಿ 26 Jan 2026 8:10 pm

ಎಕ್ಸಿಮ್ ಬ್ಯಾಂಕ್‌ನಲ್ಲಿ ಡೆಪ್ಯುಟಿ ಮ್ಯಾನೇಜರ್ ಹುದ್ದೆಗೆ ನೇಮಕಾತಿ

ಇಂಡಿಯನ್ ಎಕ್ಸಿಮ್ ಬ್ಯಾಂಕ್ನ ಡೆಪ್ಯೂಟಿ ಮ್ಯಾನೇಜರ್ ನೇಮಕಾತಿಗೆ ಅಧಿಸೂಚನೆಯನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. 20 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಇಂಡಿಯನ್ ಎಕ್ಸಿಮ್ ಬ್ಯಾಂಕ್ನ ಡೆಪ್ಯೂಟಿ ಮ್ಯಾನೇಜರ್ ನೇಮಕಾತಿಗೆ ಅಧಿಸೂಚನೆಯನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. 20 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಎಕ್ಸಿಮ್ ಬ್ಯಾಂಕ್ ಅರ್ಜಿ ಸಲ್ಲಿಕೆ 2026 ಜನವರಿ 26ರಿಂದ ಪ್ರಾರಂಭವಾಗಲಿದ್ದು, ಅಭ್ಯರ್ಥಿಗಳು 2026 ಫೆಬ್ರವರಿ 15 ರವರೆಗೆ ಅರ್ಜಿ ಸಲ್ಲಿಸಬಹುದು. 31 ಡಿಸೆಂಬರ್ 2025ರಂತೆ ಕನಿಷ್ಠ ವಯಸ್ಸು 21 ವರ್ಷಗಳು ಮತ್ತು ಗರಿಷ್ಠ ವಯಸ್ಸು 28 ವರ್ಷಗಳು. ಕೆಳಗೆ ನೀಡಲಾದ ಎಕ್ಸಿಮ್ ಬ್ಯಾಂಕ್ ಡೆಪ್ಯೂಟಿ ಮ್ಯಾನೇಜರ್ ನೇಮಕಾತಿ 2026 ಗಾಗಿ ಅಭ್ಯರ್ಥಿಗಳು ಕೆಳಗಿನ ಲಿಂಕ್‌ನಲ್ಲಿ ಅರ್ಜಿ ಸಲ್ಲಿಸಬಹುದು: https://ibpsreg.ibps.in/iebdmnov25/ ಪ್ರಮುಖ ದಿನಾಂಕಗಳು • ಆನ್‌ಲೈನ್ ಅರ್ಜಿ ಆರಂಭ: 26 ಜನವರಿ 2026 • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15 ಫೆಬ್ರವರಿ 2026 • ಶುಲ್ಕ ಪಾವತಿಗೆ ಕೊನೆಯ ದಿನಾಂಕ: 15 ಫೆಬ್ರವರಿ 2026 • ಪರೀಕ್ಷೆ ದಿನಾಂಕ: ಶೀಘ್ರವೇ ಅಪ್‌ಡೇಟ್ ಮಾಡಲಾಗುವುದು. • ಭರ್ತಿ ಕಾರ್ಡ್: ಪರೀಕ್ಷೆಗೆ ಮೊದಲು • ಫಲಿತಾಂಶ ದಿನಾಂಕ: ಶೀಘ್ರವೇ ಅಪ್‌ಡೇಟ್ ಮಾಡಲಾಗುವುದು. ವಿವರಗಳಿಗೆ ಅಭ್ಯರ್ಥಿಗಳು ಈ ಕೆಳಗಿನ ಎಕ್ಸಿಮ್ ಬ್ಯಾಂಕ್‌ನ ಅಧಿಕೃತ ವೆಬ್‌ತಾಣವನ್ನು ಪರೀಕ್ಷಿಸಬೇಕು: ಅರ್ಜಿ ಶುಲ್ಕ • ಜನರಲ್‌/ಒಬಿಸಿ/ಇಡಬ್ಲ್ಯುಎಸ್‌: 600 ರೂ. • ಎಸ್‌ಸಿ/ಎಸ್‌ಟಿ/ ಪಿಡಬ್ಲ್ಯುಡಿ: 100 ರೂ. • ಡೆಬಿಟ್ ಕಾರ್ಡ್‌, ಕ್ರೆಡಿಟ್ ಕಾರ್ಡ್, ಇಂಟರ್‌ನೆಟ್ ಬ್ಯಾಂಕಿಂಗ್, ಐಎಂಪಿಎಸ್‌, ಕ್ಯಾಶ್ ಕಾರ್ಡ್/ ಮೊಬೈಲ್ ವಾಲೆಟ್‌ ಮೂಲಕ ಪಾವತಿಸುವ ಅವಕಾಶವಿದೆ. ವಯೋಮಿತಿ: ಕನಿಷ್ಢ ವರ್ಷ: 21 ವರ್ಷಗಳು ಗರಿಷ್ಠ ವರ್ಷ: 28 ವರ್ಷಗಳು ಎಕ್ಸಿಮ್ ಬ್ಯಾಂಕ್ ನೇಮಕಾತಿ ಹುದ್ದೆಗೆ ಅವರ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ನೀಡುತ್ತದೆ. ಒಟ್ಟು ಹುದ್ದೆಗಳು 20 ಹುದ್ದೆಗಳು ಹುದ್ದೆಗಳ ವಿವರ ಎಕ್ಸಿಮ್ ಬ್ಯಾಂಕ್ ಡೆಪ್ಯುಟಿ ಮ್ಯಾನೇಜರ್- 20 ಹುದ್ದೆಗಳು ವಿದ್ಯಾರ್ಹತೆ ಅಭ್ಯರ್ಥಿಗಳು MBA / PGDBA / PGDBM / MMS ನಂತಹ ಸ್ನಾತಕೋತ್ತರ ಪದವಿಯನ್ನು ಹಣಕಾಸು / ಅಂತರರಾಷ್ಟ್ರೀಯ ವ್ಯವಹಾರ / ವಿದೇಶಿ ವ್ಯಾಪಾರದಲ್ಲಿ ವಿಶೇಷತೆಯೊಂದಿಗೆ ಹೊಂದಿರಬೇಕು, ಅಥವಾ ಚಾರ್ಟರ್ಡ್ ಅಕೌಂಟೆಂಟ್ (CA) ಆಗಿರಬೇಕು (ವೃತ್ತಿಪರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರೆ ಸಾಕಾಗುತ್ತದೆ).

ವಾರ್ತಾ ಭಾರತಿ 26 Jan 2026 8:10 pm

‘ಚೌಕೀದಾರ್’ ತಂಡಕ್ಕೆ ಶುಭ ಹಾರೈಸಿದ ನಟ ಶಿವರಾಜ್‌ಕುಮಾರ್

ಪೃಥ್ವಿ ಅಂಬರ್ ಮತ್ತು ಧನ್ಯಾ ರಾಮ್‌ಕುಮಾರ್ ನಟನೆಯ ‘ಚೌಕೀದಾರ್’ ಸಿನಿಮಾ ಜನವರಿ 30ರಂದು ಬಿಡುಗಡೆಯಾಗುತ್ತಿದೆ. ಬಿಗ್‌ಬಾಸ್ ಖ್ಯಾತಿಯ ಗಿಲ್ಲಿ ನಟರಾಜ್ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ‘ರಥಾವರ’ ಸಿನಿಮಾ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶನದ ‘ಚೌಕೀದಾರ್’ ಸಿನಿಮಾದ ಬಿಡುಗಡೆ ಪೂರ್ವ ಪ್ರಚಾರ ಕಾರ್ಯಕ್ರಮ ಖಾಸಗಿ ಮಾಲ್ ಒಂದರಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿದ ನಟ ಶಿವರಾಜ್‌ಕುಮಾರ್ ಚಿತ್ರತಂಡಕ್ಕೆ ಶುಭ ಹಾರೈಸಿದರು. ಸಿನಿಮಾಗೆ ಪೃಥ್ವಿ ಅಂಬರ್ ನಾಯಕನಾಗಿ ನಟಿಸಿದ್ದು, ನಾಯಕಿಯಾಗಿ ಧನ್ಯಾ ರಾಮ್‌ಕುಮಾರ್ ಅಭಿನಯಿಸಿದ್ದಾರೆ. ಸಿನಿಮಾದಲ್ಲಿ ಸಾಯಿ ಕುಮಾರ್ ತಂದೆ ಪಾತ್ರದಲ್ಲಿ ವಿಶೇಷವಾಗಿ ಮಿಂಚಿದ್ದಾರೆ. ‘ಚೈತ್ರದ ಪ್ರೇಮಾಂಜಲಿ’ ಖ್ಯಾತಿಯ ಶ್ವೇತಾ, ಹಿರಿಯ ನಟಿ ಸುಧಾರಣಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಬಿಗ್‌ಬಾಸ್ ಸರಣಿಯನ್ನು ಗೆದ್ದ ಗಿಲ್ಲಿ ಖ್ಯಾತಿಯ ನಟರಾಜ್ ಹಾಗೂ ‘ಧರ್ಮ’ ಸಿನಿಮಾದ ನಟ ಧರ್ಮ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ನಟ ಶಿವರಾಜ್‌ಕುಮಾರ್ ಹೊಸ ನಟರು ಹಾಗೂ ನಿರ್ದೇಶಕರ ಸಿನಿಮಾಗಳಿಗೆ ಸದಾ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಚಿತ್ರತಂಡಕ್ಕೆ ಶುಭ ಹಾರೈಸಿದ ಅವರು, ನಟ ಸಾಯಿ ಕುಮಾರ್ ಅವರೊಂದಿಗೆ ಇರುವ ತಮ್ಮ ಸ್ನೇಹವನ್ನು ಪ್ರಶಂಸಿಸಿದರು. ತಮ್ಮದೇ ಕುಟುಂಬದ ನಟಿ ಧನ್ಯಾರನ್ನು ಚಿಕ್ಕಂದಿನಿಂದಲೇ ನೋಡಿರುವುದಾಗಿ ಸ್ಮರಿಸಿದರು. ನಿರ್ಮಾಪಕ ಕಲ್ಲಹಳ್ಳಿ ಚಂದ್ರಶೇಖರ್ ಅರ್ಥಪೂರ್ಣ ಸಿನಿಮಾಗಳನ್ನು ನಿರ್ಮಿಸುವುದರಿಂದ ಇನ್ನೂ ಹೆಚ್ಚಿನ ಯಶಸ್ಸು ಗಳಿಸಲಿ ಎಂದು ಹಾರೈಸಿದರು. ಹಿರಿಯ ನಟ ಸಾಯಿ ಕುಮಾರ್ ಅವರು ಪ್ರಿ–ರಿಲೀಸ್ ಕಾರ್ಯಕ್ರಮಕ್ಕೆ ಆಗಮಿಸಿ ಚಿತ್ರತಂಡಕ್ಕೆ ಸ್ಫೂರ್ತಿ ನೀಡಿದ ಶಿವರಾಜ್‌ಕುಮಾರ್ ಅವರಿಗೆ ಧನ್ಯವಾದ ಅರ್ಪಿಸಿದರು. ‘ಚೌಕೀದಾರ್’ ಪ್ರಬಲ ಕಥಾವಸ್ತು, ಉತ್ತಮ ಅಭಿನಯ ಮತ್ತು ಬಲಿಷ್ಠ ತಾಂತ್ರಿಕ ಕೆಲಸಗಳಿರುವ ಸಿನಿಮಾ ಎಂದು ಅವರು ಮಾಹಿತಿ ನೀಡಿದರು. ಸಿನಿಮಾದಲ್ಲಿ ತಂದೆ–ಮಗನ ಭಾವನಾತ್ಮಕ ಸಂಬಂಧದ ಕುರಿತ ಕೌಟುಂಬಿಕ ನಿರೂಪಣೆಯ ಕಥೆಯಿದೆ. ವಿಎಸ್ ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ಕಲ್ಲಹಳ್ಳಿ ಚಂದ್ರಶೇಖರ್ ಅವರು ಸಿನಿಮಾ ನಿರ್ಮಿಸಿದ್ದು, ವಿದ್ಯಾದೇವಿ ಸಹ–ನಿರ್ಮಾಪಕರಾಗಿದ್ದಾರೆ. ವಿ. ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ ಮತ್ತು ಸಂತೋಷ್ ನಾಯ್ಕ್ ಅವರು ಹಾಡುಗಳನ್ನು ಬರೆದಿದ್ದಾರೆ. ಸಿದ್ದು ಕಾಂಚನಹಳ್ಳಿ ಅವರ ಛಾಯಾಗ್ರಹಣವಿದ್ದು, ಸಚಿನ್ ಬಸ್ರೂರು ಸಂಗೀತ ನೀಡಿದ್ದಾರೆ.

ವಾರ್ತಾ ಭಾರತಿ 26 Jan 2026 8:10 pm

ಉಳ್ಳಾಲದಲ್ಲಿ ಪ್ರಥಮ ಬೋಟ್ ಆ್ಯಂಬುಲೆನ್ಸ್‌ಗೆ ಚಾಲನೆ : ನದಿಮಧ್ಯೆ ಧ್ವಜಾರೋಹಣ

ಉಳ್ಳಾಲದ ಘನತೆ ಹೆಚ್ಚಿಸಿದ ಐತಿಹಾಸಿಕ ಕಾರ್ಯಕ್ರಮ: ಯು.ಟಿ.ಖಾದರ್

ವಾರ್ತಾ ಭಾರತಿ 26 Jan 2026 8:07 pm

ಕಲಬುರಗಿ| ಬಿಜೆಪಿ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮುಖಂಡರಾದ ವಿಠಲ ನಾಯಕ್‌ ಹಾಗೂ ಬಸವರಾಜ ಪಂಚಾಳ ಅವರು ಗಾಂಧೀಜಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಬಿಜೆಪಿ ಮುಖಂಡ ವೀರಣ್ಣ ಯಾರಿ, ರಾಜ ಪ್ರಭುತ್ವವನ್ನು ತ್ಯಜಿಸಿ ಪ್ರಜಾಪ್ರಭುತ್ವದಲ್ಲಿ ತನ್ನ ನಿಜ ಅಸ್ಥಿತ್ವವನ್ನು ಸ್ಥಾಪಿಸಿದ ಈ ದಿನ ನಮ್ಮ ಪಾಲಿಗೆ ಅತ್ಯಂತ ಮಹತ್ವದ ದಿನವಾಗಿದೆ. ಡಾ. ಬಿ.ಆರ್.ಅಂಬೇಡ್ಕರ್ ಅವರಂಥಹ ಮಹಾನ್‌ ಮಾನವತಾವಾದಿಗಳು ರಾಷ್ಟ್ರದ ಅಭಿವೃದ್ಧಿಯ ಬಗ್ಗೆ ಹಗಲಿರುಳೆನ್ನದೆ ಚಿಂತಿಸಿ ರಚಿಸಿದ ಸಂವಿಧಾನವು ನಮ್ಮ ಭವ್ಯಭಾರತಕ್ಕೆ ದಾರಿದೀಪವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ರವಿ ನಾಯಕ್‌, ಎಸ್‌ಸಿ ಮೋರ್ಚಾ ಅಧ್ಯಕ್ಷ ದೌಲತರಾವ ಚಿತ್ತಾಪುರಕರ, ಮುಖಂಡರಾದ ಯಮನಪ್ಪ ಪುಜಾರಿ, ಹರಿ ಗಲಾಂಡೆ, ಅರ್ಜುನ ಕಾಳೆಕರ, ಶರಣಗೌಡ ಚಾಮನೂರ, ಕಿಶನ್‌ ಜಾಧವ್‌, ಪ್ರಕಾಶ್‌ ಪುಜಾರಿ, ಶಿವಶಂಕರ್‌ ಕಾಶೆಟ್ಟಿ, ಅಶೋಕ್‌ ಪವಾರ, ರಿಚರ್ಡ್‌ ಮಾರೆಡ್ಡಿ, ರಾಜು ಪವಾರ್‌, ಅಯ್ಯಣ್ಣ ದಂಡೋತಿ, ಮಲ್ಲಿಕಾರ್ಜುನ ಸಾತಖೇಡ, ಹಣಮಂತ್‌ ಚವ್ಹಾಣ, ಕಾಶಿನಾಥ್‌, ನಾಮದೇವ್‌ ರಾಠೊಡ್‌, ಮಹೇಂದ್ರ ಕುಮಾರ್‌ ಪುಜಾರಿ, ಪ್ರೇಮ ರಾಠೊಡ, ಸಂತೋಷ ದಹಿಹಂಡೆ, ವಿಶಾಲ ನಿಂಬರ್ಗಾ, ಯಂಕಮ್ಮ ಗೌಡಗಾಂವ, ಇಂಡಿ, ಉಮಾಭಾಯಿ ಗೌಳಿ, ಶರಣಮ್ಮ ಯಾದಗಿರಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ವಾರ್ತಾ ಭಾರತಿ 26 Jan 2026 8:07 pm

ವಿಜಯಪುರದಲ್ಲಿ ಸಿನಿಮೀಯ ಶೈಲಿಯಲ್ಲಿ ದರೋಡೆ; ಪಿಸ್ತೂಲ್ ತೋರಿಸಿ ಚಿನ್ನದಂಗಡಿ ಲೂಟಿ

ವಿಜಯಪುರ: ಬೈಕ್ ನಲ್ಲಿ ಬಂದ ಇಬ್ಬರು ಮುಸುಕುಧಾರಿಗಳು ಕಂಟ್ರಿ ಪಿಸ್ತೂಲ್ ತೋರಿಸಿ ಸಿನಿಮೀಯ ಶೈಲಿಯಲ್ಲಿ ಚಿನ್ನದ ಅಂಗಡಿ ದರೋಡೆ ಮಾಡಿರುವ ಘಟನೆ ಸೋಮವಾರ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ನಡೆದಿದೆ. ಸೋಮವಾರ 3 ಗಂಟೆಗೆ ಹಲಸಂಗಿ ಗ್ರಾಮದ ಮಹಾರೋದ್ರ ಕಾಂಚಾಗಾರ ಎಂಬವರಿಗೆ ಸೇರಿದ ಚಿನ್ನದ ಅಂಗಡಿಗೆ ಬಂದ ಇಬ್ಬರು ಮುಸುಕುಧಾರಿಗಳು ಅಂಗಡಿಯಲ್ಲಿದ್ದ ಬಂಗಾರ ಮತ್ತು ಬೆಳ್ಳಿಯ ಆಭರಣಗಳು ದೋಚಿ ಪರಾರಿಯಾಗಿದ್ದಾರೆ. ಸಿನಿಮೀಯ ರೀತಿಯಲ್ಲಿ ಹೆಲ್ಮೆಟ್, ಜಾಕೆಟ್ ಹಾಗೂ ಕೈಗೆ ಗ್ಲೌಸ್ ಧರಿಸಿಕೊಂಡು ಬೈಕ್‌ ನಲ್ಲಿ ಬಂದು ಅಂಗಡಿಗೆ ನುಗ್ಗಿದ ದರೋಡೆಕೋರರು ಪಿಸ್ತೂಲ್ ತೋರಿಸಿ, ಅಂಗಡಿಯಲ್ಲಿದ್ದ ಸುಮಾರು 205 ಗ್ರಾಂ ಬಂಗಾರದ ಆಭರಣ ಮತ್ತು 1ಕೆಜಿ ಬೆಳ್ಳಿಯನ್ನು ದೋಚಿ ಪರಾರಿಯಾಗಿದ್ದಾರೆ. ಘಟನೆಯ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ದರೋಡೆ ಸಂದರ್ಭ ಅಂಗಡಿಯ ಬಳಿ ವೃದ್ಧೆಯೊಬ್ಬರು ಬಂದಿದ್ದಾರೆ. ಈ ವೇಳೆ ಮುಸುಕುಧಾರಿಗಳು ಅವರತ್ತ ಕಂಟ್ರಿ ಪಿಸ್ತೂಲ್ ಗುರಿ ಹಿಡಿದು ಹೆದರಿಸಿ ಕಳಿಸಿದ್ದಾರೆ. ಸ್ಥಳದಲ್ಲಿ ಭೀತಿ ಸೃಷ್ಟಿಸಲು ದರೋಡೆಕೋರರು ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿದ್ದಾರೆ. ಈ ವೇಳೆ ಆತ್ಮಲಿಂಗ ಹೂಗಾರ ಎಂಬ ಯುವಕನ ಬಲಗಾಲಿಗೆ ಗುಂಡು ತಗುಲಿದ್ದು, ಆತನನ್ನು ಕೂಡಲೇ ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಎಎಸ್ಪಿ ರಾಮನಗೌಡ ಹಟ್ಟಿ, ಡಿವೈಎಸ್ಪಿ ಕಟ್ಟಿಮನಿ ಹಾಗೂ ಇನ್ಸ್ಪೆಕ್ಟರ್ ಪರಶುರಾಮ ಮನಗೂಳಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.   ಈ ಕುರಿತು ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಮುಸುಕುದಾರಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ತಂಡಗಳನ್ನು ರಚಿಸಲಾಗಿದ್ದು, ಗಡಿ ಭಾಗಗಳಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ದರೋಡೆಕೋರರನ್ನು ಹಿಡಿಯಲು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಬೈಕ್‌ ನಲ್ಲಿ ಬಂದ ಇಬ್ಬರು ಮುಸುಕುಧಾರಿಗಳು ಹಲಸಂಗಿ ಗ್ರಾಮದ ಮಹಾರೋದ್ರ ಕಾಂಚಾಗಾರ ಎಂಬವರಿಗೆ ಸೇರಿದ ಚಿನ್ನದಂಗಡಿಗೆ ನುಗ್ಗಿ 205 ಗ್ರಾಂ ಬಂಗಾರದ ಆಭರಣ ಮತ್ತು 1ಕೆಜಿ ಬೆಳ್ಳಿಯನ್ನು ದೋಚಿ ಪರಾರಿಯಾಗಿದ್ದಾರೆ. ಇದೇ ವೇಳೆಯಲ್ಲಿ ಪಕ್ಕದ ಮೊಬೈಲ್ ಅಂಗಡಿ ಬಳಿ ಅನಿಲ್ ಬಸಣ್ಣ ಗಲಗಲಿ ಎಂಬವರು ದರೋಡೆ ಮಾಡುತ್ತಿರುವ ಕೃತ್ಯವನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಳ್ಳುತ್ತಿದ್ದನ್ನು ನೋಡಿ, ಅವರ ಕಡೆಗೆ ಮುಸುಕುಧಾರಿಗಳು ಗುಂಡು ಹಾರಿಸಿದ್ದಾರೆ. ಈ ಸಂದರ್ಭ ಪಕ್ಕದಲ್ಲೇ ಇದ್ದ 18 ವರ್ಷದ ಯುವಕನ ಕಾಲಿಗೆ ಗುಂಡು ತಗುಲಿದೆ. ಯುವಕನ್ನು ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ.

ವಾರ್ತಾ ಭಾರತಿ 26 Jan 2026 8:02 pm

ಕಲಬುರಗಿ| 10.30 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಶಂಕುಸ್ಥಾಪನೆ

ಕಲಬುರಗಿ:  ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಡಿ.ಎ.ಆರ್. ಪೊಲೀಸ್ ಪರೇಡ್ ಮೈದಾನದಲ್ಲಿ ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯಕ್ಕೆ ಸೇರಿದ 10.30 ಕೋಟಿ ರೂ. ಮೊತ್ತದ ವಸತಿ ಗೃಹಗಳು, ಸಂಚಾರಿ ಪೊಲೀಸ್ ಠಾಣೆ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಕಲಬುರಗಿ ನಗರ ಪೊಲೀಸ್‌ ಆಯುಕ್ತಾಲಯ ಘಟಕಕ್ಕೆ ಪೊಲೀಸ್ ವಸತಿ ಗೃಹ 2025ರ ಹಂತ-5 ಯೋಜನೆಯಡಿಯಲ್ಲಿ ಡಿ.ಎ.ಆರ್ ಆವರಣದಲ್ಲಿ 718.30 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ 24 ಪೊಲೀಸ್‌ ವಸತಿ ಗೃಹ ಕಟ್ಟಡ, ಶಾಂತಿ ನಗರದಲ್ಲಿ 236.15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ 6 ಪಿ.ಎಸ್.ಐ ವಸತಿ ಗೃಹ ಕಟ್ಟಡ ಹಾಗೂ ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ 82.25 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಸಂಚಾರಿ ಪೊಲೀಸ್‌ ಠಾಣೆ-2ರ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ನಿಯಮಿತದ ಅಧ್ಯಕ್ಷೆ ಹಾಗೂ ಉತ್ತರ ಶಾಸಕಿ ಕನೀಜ್ ಫಾತೀಮಾ, ಅಲ್ಲಮಪ್ರಭು ಪಾಟೀಲ್‌, ವಿಧಾನ ಪರಿಷತ್ ಶಾಸಕರುಗಳಾದ ತಿಪ್ಪಣ್ಣಪ್ಪ ಕಮಕನೂರ್‌, ಜಗದೇವ ಗುತ್ತೇದಾರ್, ಜಿಲ್ಲಾಧಿಕಾರಿ ಬಿ. ಫೌಝಿಯಾ ತರನ್ನುಮ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ  ಉಪಸ್ಥಿತರಿದ್ದರು.

ವಾರ್ತಾ ಭಾರತಿ 26 Jan 2026 7:59 pm

ಕಲಬುರಗಿ| “ಅಕ್ಕ ಪಡೆ” ವಾಹನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ

ಕಲಬುರಗಿ: ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸೋಮವಾರ ಡಿ.ಎ.ಆರ್. ಪೊಲೀಸ್ ಪರೇಡ್ ಮೈದಾನದಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ಸಕಾಲಿಕ ಸಹಾಯ ಹಸ್ತ ಚಾಚುವ “ಅಕ್ಕ ಪಡೆ” ವಾಹನಕ್ಕೆ  ಚಾಲನೆ ನೀಡಿದರು. ಸಂಕಷ್ಟದಲ್ಲಿರುವ ದುರ್ಬಲ, ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ಜೊತೆಗೆ ದೌರ್ಜನ್ಯ, ಹಿಂಸೆ, ನಿರ್ಲಕ್ಷ ಅಥವಾ ಶೋಷಣೆ ಎದುರಿಸುತ್ತಿರುವ ಮಹಿಳೆಯರು ಮತ್ತು ಮಕ್ಕಳಿಗೆ ಸಕಾಲಿಕ ಸಹಾಯ ಹಸ್ತ ಚಾಚಲು ಪ್ರಸಕ್ತ 2025-26ನೇ ಸಾಲಿಗೆ ರಾಜ್ಯದಾದ್ಯಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪೊಲೀಸ್ ಇಲಾಖಾ ಸಹಯೋಗದೊಂದಿಗೆ “ಅಕ್ಕ ಪಡೆ” ಕಾರ್ಯಕ್ರಮ ಜಾರಿಗೊಳಿಸಿದೆ. ಅದರಂತೆ ಕಲಬುರಗಿಯಲ್ಲಿಯೂ  ಅಕ್ಕ ಪಡೆ” ವಾಹನಕ್ಕೆ ಚಾಲನೆ ನೀಡಲಾಗಿದೆ.  ಈ ವೇಳೆ ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ನಿಯಮಿತದ ಅಧ್ಯಕ್ಷೆ ಹಾಗೂ ಉತ್ತರ ಶಾಸಕಿ ಕನೀಜ್ ಫಾತೀಮಾ, ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ್‌, ವಿಧಾನ ಪರಿಷತ್ ಶಾಸಕರುಗಳಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ್, ಜಿಲ್ಲಾಧಿಕಾರಿ ಬಿ. ಫೌಝಿಯಾ ತರನ್ನುಮ್, ನಗರ ಪೊಲೀಸ್ ಆಯುಕ್ತ ಡಾ. ಎಸ್.ಡಿ. ಶರಣಪ್ಪ, ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಕುಮಾರ್‌ ರಾಠೋಡ್‌, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುಳಾ ಪಾಟೀಲ್‌ ಉಪಸ್ಥಿತರಿದ್ದರು.

ವಾರ್ತಾ ಭಾರತಿ 26 Jan 2026 7:53 pm

ದಾವಣಗೆರೆ ದಕ್ಷಿಣ ವಿಧಾನಸಭಾ ಟಿಕೆಟ್‌: ಶಾಮನೂನು ಶಿವಶಂಕರಪ್ಪ ಬದುಕಿದ್ದಾಗ ಕೊಟ್ಟ ಮಾತನ್ನ ಉಲ್ಲೇಖಿಸಿದ ಸಚಿವ ಜಮೀರ್

ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಾಗಿ ತೀವ್ರ ಪೈಪೋಟಿ ಏರ್ಪಟ್ಟಿದೆ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕೆಂದು ಸಚಿವ ಜಮೀರ್ ಅಹಮದ್ ಖಾನ್ ಆಗ್ರಹಿಸಿದ್ದಾರೆ. ಶಾಮನೂರು ಅವರ ಹಿಂದಿನ ಮಾತುಗಳನ್ನು ಉಲ್ಲೇಖಿಸಿ, ಹೈಕಮಾಂಡ್‌ಗೆ ವರದಿ ನೀಡುವುದಾಗಿ ತಿಳಿಸಿದ್ದಾರೆ.

ವಿಜಯ ಕರ್ನಾಟಕ 26 Jan 2026 7:51 pm

ಗಣರಾಜ್ಯೋತ್ಸವ| ಹೆಚ್.ಆರ್.ಗವಿಯಪ್ಪ ವೃತ್ತದಲ್ಲಿ ಸಚಿವ ರಹೀಂ ಖಾನ್ ಧ್ವಜಾರೋಹಣ

ಬಳ್ಳಾರಿ,ಜ.26:  77ನೇ ಗಣರಾಜ್ಯೋತ್ಸವದ ಅಂಗವಾಗಿ ಪೌರಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ನಗರದ ಹೆಚ್.ಆರ್.ಗವಿಯಪ್ಪ ವೃತ್ತದ 150 ಅಡಿ ಎತ್ತರದ ಬೃಹತ್ ಧ್ವಜ ಸ್ತಂಭದಲ್ಲಿ ಸೋಮವಾರ ಧ್ವಜಾರೋಹಣ ನೆರವೇರಿಸಿದರು. ಇದಕ್ಕೂ ಮುನ್ನ ನಗರದ ಡಾ.ರಾಜ್ ಕುಮಾರ್ ಉದ್ಯಾನವನದಲ್ಲಿ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸದ ಈ.ತುಕಾರಾಮ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯುಲು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಪಾಲಿಕೆ ಉಪಮೇಯರ್ ಮುಬೀನಾ, ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕ ಡಾ.ಪಿ.ಎಸ್ ಹರ್ಷ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ ಪೆನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಸಹಾಯಕ ಆಯುಕ್ತ ರಾಜೇಶ್.ಹೆಚ್.ಡಿ., ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ್‌, ಡಿಎಂಎಫ್ ವಿಶೇಷಾಧಿಕಾರಿ ಲೋಕೇಶ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ-ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. 

ವಾರ್ತಾ ಭಾರತಿ 26 Jan 2026 7:48 pm

ಮಹಿಳಾಧಿಕಾರಿಗೆ ಧಮ್ಕಿ ಹಾಕಿದ್ದ ರಾಜೀವ್‌ ಗೌಡ ಕೊನೆಗೂ ಬಂಧನ, ಕೇರಳ ಗಡಿಯಲ್ಲಿ ಲಾಕ್‌

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಏಕವಚನದಲ್ಲಿ ಅವಾಚ್ಯ ಪದ ಬಳಸಿ ನಿಂದನೆ ಮಾಡಿ, ಕಚೇರಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಚಿಕ್ಕಬಳ್ಳಾಪುರ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಅಕ್ರಮವಾಗಿ ಅಳವಡಿಸಲಾಗಿದ್ದ ಬ್ಯಾನರ್‌ಗಳನ್ನು ತೆರವುಗೊಳಿಸಿದ್ದಕ್ಕೆ ಆಕ್ರೋಶಗೊಂಡ ರಾಜೀವ್ ಗೌಡ, ಜನವರಿ 12ರಂದು ಪೌರಾಯುಕ್ತೆ ಅಮೃತಾಗೌಡ ಅವರಿಗೆ ಕರೆ

ಒನ್ ಇ೦ಡಿಯ 26 Jan 2026 7:47 pm