ಭೀಮಣ್ಣ ಖಂಡ್ರೆ, ಪ್ರೊ.ಮಾಧವ್ ಗಾಡ್ಗೀಳ್ರಿಗೆ ಉಭಯ ಸದನಗಳಲ್ಲಿ ಶ್ರದ್ಧಾಂಜಲಿ
ಬೆಂಗಳೂರು: ಮಾಜಿ ಸಚಿವ ಭೀಮಣ್ಣ ಖಂಡ್ರೆ, ಪರಿಸರ ವಿಜ್ಞಾನಿ ಪ್ರೊ.ಮಾಧವ ಗಾಡ್ಗೀಳ್ ಹಾಗೂ ಮಾಜಿ ಶಾಸಕ ಕೆ.ಲಕ್ಕಣ್ಣ ಅವರಿಗೆ ವಿಧಾನ ಮಂಡಲ ಉಭಯ ಸದನಗಳಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರುಗಳ ಗದ್ದಲದ ಮಧ್ಯೆಯೇ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಗುರುವಾರ ‘ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಿದ ರಾಜ್ಯಪಾಲರಿಗೆ ಅಪಮಾನ ಮಾಡಲಾಗಿದೆ’ ಎಂದು ಬಿಜೆಪಿ ಸದಸ್ಯರು ಆಕ್ಷೇಪಿಸಿದರು. ‘ರಾಜ್ಯಪಾಲರು ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆ’ ಎಂದು ಆರೋಪಿಸಿ ಆಡಳಿತಾರೂಢ ಕಾಂಗ್ರೆಸ್ ಸದಸ್ಯರ ಗದ್ದಲ-ಗೊಂದಲದ ನಡುವೆ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರು ಸಂತಾಪ ಸೂಚನೆ ನಿರ್ಣಯವನ್ನು ಮಂಡಿಸಿದರು. ಭೀಮಣ್ಣ ಖಂಡ್ರೆ, ಪ್ರೊ. ಮಾಧವ ಗಾಡ್ಗೀಳ್ ಹಾಗೂ ಕೆ.ಲಕ್ಕಣ್ಣರ ನಿಧನವಾಗಿರುವುದನ್ನು ಸದನಕ್ಕೆ ತಿಳಿಸಿದರು. ಭೀಮಣ್ಣ ಖಂಡ್ರೆಯವರು ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿ ಜನಿಸಿದ್ದು, ವಕೀಲರಾಗಿಯೂ ಕಾರ್ಯನಿರ್ವಹಿಸಿದ್ದರು. ಶಾಂತಿವರ್ಧಕ ಶಿಕ್ಷಣ ಸಂಸ್ಥೆ ಸ್ಥಾಪಿಸುವ ಮೂಲಕ ಗಡಿಭಾಗದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ನಾಂದಿ ಹಾಡಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಹೈ.ಕ.ವಿಮೋಚನೆಗಾಗಿ ಹೋರಾಡಿದ್ದು, ಕರ್ನಾಟಕ ಏಕೀಕರಣದ ರೂವಾರಿಯಾಗಿದ್ದರು ಎಂದು ಸ್ಮರಿಸಿದರು. ನಾಲ್ಕು ಬಾರಿ ಶಾಸಕರಾಗಿ, ಎರಡು ಬಾರಿ ಪರಿಷತ್ ಸದಸ್ಯರಾಗಿದ್ದರು. ಕನ್ನಡ ಶಿಕ್ಷಣ, ಶರಣತ್ವದ ದೀಕ್ಷೆ ಪಡೆದಿದ್ದ ಖಂಡ್ರೆ ಉರ್ದು, ಪಾರ್ಸಿ, ಇಂಗ್ಲಿಷ್ ಭಾಷೆಯ ಮೇಲೆ ಹಿಡಿತ ಹೊಂದಿದ್ದರು. ವೀರಶೈವ ಮಹಾಸಭೆಯ ರಾಷ್ಟ್ರೀಯಾಧ್ಯಕ್ಷ ಸೇವೆ ಸಲ್ಲಿಸಿದ್ದ ಅವರು, 6 ದಶಕಗಳ ಕಾಲ ಧಾರ್ಮಿಕ, ರಾಜಕೀಯ, ಶೈಕ್ಷಣಿಕ ಕ್ಷೇತ್ರ ಸೇರಿದಂತೆ ವಿವಿಧ ರಂಗಗಳಲ್ಲಿ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದರು. ಮಾಧವ ಗಾಡ್ಗೀಳ್ ಪುಣೆಯಲ್ಲಿ ಜನಿಸಿದ್ದು, ಪರಿಸರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಪಾರಿಸರಿಕ ವಿಜ್ಞಾನ ಕೇಂದ್ರ ಮತ್ತು ಸೆಂಟರ್ ಪಾರ್ಕ್ ಥಿಯೇರಿಟಿಕಲ್ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಭಾರತದಲ್ಲಿ ಆಧುನಿಕ ಪರಿಸರ ಸಂಶೋಧನೆಗಳ ಅಧ್ಯಯನಕ್ಕೆ ನಾಂದಿ ಹಾಡಿದ್ದರು. ಪಶ್ಚಿಮ ಘಟ್ಟಗಳ ತಜ್ಞರ ಸಮಿತಿಯ ಅಧ್ಯಕ್ಷರಾಗಿದ್ದರು. 250ಕ್ಕೂ ಹೆಚ್ಚು ವೈಜ್ಞಾನಿಕ ಪ್ರಬಂಧಗಳನ್ನು ಪ್ರಕಟಿಸಿದ್ದಾರೆ. ವಿಶ್ವಸಂಸ್ಥೆಯ ಅತ್ಯುನ್ನತ ಪ್ರಶಸ್ತಿ, ಚಾಂಪಿಯನ್ ಆಫ್ ದಿ ಅರ್ಥ್ ಗೌರವಕ್ಕೆ ಪಾತ್ರರಾಗಿದ್ದರು. ಪದಶ್ರೀ, ಪದಭೂಷಣ, ಶಾಂತಿ ಸ್ವರೂಪ್ ಭಟ್ನಾಗರ್, ವಿಜ್ಞಾನ ಮತ್ತು ತಂತ್ರಜ್ಞಾನ ಪ್ರಶಸ್ತಿ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಗಾಡ್ಗಿಳ್ ಅವರು ಜ.7ರಂದು ನಿಧನ ಹೊಂದಿದ್ದಾರೆ ಎಂದು ವಿಷಾದಿಸಿದರು. ಮಾಜಿ ಶಾಸಕ ಕೆ.ಲಕ್ಕಣ್ಣ ಅವರು ಕುಣಿಗಲ್ ತಾಲೂಕಿನ ಹೊಸೂರು ಗ್ರಾಮದಲ್ಲಿ ಜನಿಸಿದ್ದರು. ಕೈಗಾರಿಕೋದ್ಯಮಿಯಾಗಿದ್ದ ಅವರು 2 ಬಾರಿ ಬೆಂಗಳೂರು ನಗರ ಪಾಲಿಕೆ ಸದಸ್ಯರಾಗಿದ್ದರು. ಸಾಮಾಜಿಕ ಕಳಕಳಿ ಹೊಂದಿದ್ದ ಅವರು 1989ರಲ್ಲಿ ರಾಜಾಜಿನಗರ ಕ್ಷೇತ್ರದಿಂದ 9ನೇ ವಿಧಾನಸಭೆಗೆ ಆಯ್ಕೆಯಾಗಿದ್ದರು. ಜ.11ರಂದು ನಿಧನ ಹೊಂದಿದ್ದಾರೆ ಎಂದು ಸ್ಪೀಕರ್ ಖಾದರ್ ತಿಳಿಸಿದರು. ಸ್ಪೀಕರ್ ಮಂಡಿಸಿದ ಸಂತಾಪ ಸೂಚನಾ ನಿರ್ಣಯ ಬೆಂಬಲಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಭೀಮಣ್ಣ ಖಂಡ್ರೆ 103 ವರ್ಷಗಳ ಕಾಲ ಬದುಕಿದ್ದ ಶತಾಯುಷಿ. ನಾಲ್ಕು ಬಾರಿ ಶಾಸಕರಾಗಿದ್ದರು. ಮಹಾತ್ಮ ಗಾಂಧೀಜಿಯಿಂದ ಪ್ರೇರಣೆ ಪಡೆದು ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಭಾಗವಹಿಸಿದ್ದರು ಎಂದು ಅವರ ಗುಣಗಾನ ಮಾಡಿದರು. ಅದೇ ರೀತಿಯಲ್ಲಿ ಮಾಜಿ ಶಾಸಕ ಕೆ.ಲಕ್ಕಣ್ಣ ಹಾಗೂ ಪರಿಸರ ತಜ್ಞ ಪ್ರೊ.ಮಾಧವ ಗಾಡ್ಗೀಳ್ ಅವರ ಗುಣಗಾನ ಮಾಡಿ ಅವರ ನಿಧನಕ್ಕೆ ಸಂತಾಪ ಸೂಚಿಸಿದರು. ಆ ಬಳಿಕ ವಿಪಕ್ಷ ನಾಯಕ ಆರ್.ಅಶೋಕ್, ಸಚಿವರಾದ ಎಚ್.ಕೆ.ಪಾಟೀಲ್, ಡಾ.ಶರಣಪ್ರಕಾಶ್ ಪಾಟೀಲ್, ಕೆ.ಜೆ.ಜಾರ್ಜ್, ಈಶ್ವರ್ ಖಂಡ್ರೆ, ಸದಸ್ಯರಾದ ಜಿ.ಟಿ.ದೇವೇಗೌಡ, ಎಂ.ಟಿ.ಕೃಷ್ಣಪ್ಪ, ಬಿ.ವೈ.ವಿಜಯೇಂದ್ರ, ಬಿ.ಆರ್.ಪಾಟೀಲ್ ಸೇರಿದಂತೆ ಇನ್ನಿತರ ಸದಸ್ಯರು ಸಂತಾಪ ಸೂಚಿಸಿದರು. ಅಗಲಿದ ಗಣ್ಯರ ಗೌರವಾರ್ಥ ಒಂದು ನಿಮಿಷ ಮೌನಾಚರಣೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.
1984ರ ಸಿಖ್ ವಿರೋಧಿ ದಂಗೆ: ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ಖುಲಾಸೆ
ಹೊಸದಿಲ್ಲಿ: 1984ರಲ್ಲಿ ದಿಲ್ಲಿಯ ಜನಕ್ಪುರಿ ಹಾಗೂ ವಿಕಾಸ್ಪುರಿ ಪ್ರದೇಶಗಳಲ್ಲಿ ನಡೆದ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದ ಪ್ರಕರಣದಲ್ಲಿ, ದಿಲ್ಲಿಯ ರೌಸ್ ಅವೆನ್ಯೂ ವಿಶೇಷ ನ್ಯಾಯಾಲಯವು ಗುರುವಾರ ಕಾಂಗ್ರೆಸ್ ನ ಮಾಜಿ ಸಂಸದ ಸಜ್ಜನ್ ಕುಮಾರ್ ಅವರನ್ನು ಖುಲಾಸೆಗೊಳಿಸಿದೆ. ಈ ಹಿಂಸಾಚಾರದಲ್ಲಿ ಇಬ್ಬರು ಸಿಖ್ ನಾಗರಿಕರು ಮೃತಪಟ್ಟಿದ್ದಾರೆ. ಪ್ರಕರಣದಲ್ಲಿ ಸಜ್ಜನ್ ಕುಮಾರ್ ಅವರ ಪಾತ್ರವನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ವಿಚಾರಣೆಯ ವೇಳೆ, ಅವರು ಘಟನೆಯಲ್ಲಿ ತಮ್ಮ ಯಾವುದೇ ಪಾತ್ರವಿಲ್ಲ ಎಂದು ವಾದಿಸಿದ್ದರು. ವಿಶೇಷ ನ್ಯಾಯಾಧೀಶ ದಿಗ್ವಿಜಯ್ ಸಿಂಗ್ ಅವರು ಮೌಖಿಕವಾಗಿ ಸಂಕ್ಷಿಪ್ತ ಆದೇಶ ಪ್ರಕಟಿಸಿ ಕುಮಾರ್ ಅವರನ್ನು ಖುಲಾಸೆಗೊಳಿಸಿದರು. 1984ರ ನವೆಂಬರ್ 1ರಂದು ಜನಕ್ಪುರಿಯಲ್ಲಿ ಸೋಹನ್ ಸಿಂಗ್ ಹಾಗೂ ಅವರ ಅಳಿಯ ಅವತಾರ್ ಸಿಂಗ್ ಹತ್ಯೆ ಮತ್ತು ನವೆಂಬರ್ 2ರಂದು ವಿಕಾಸ್ಪುರಿಯಲ್ಲಿ ಗುರ್ಚರಣ್ ಸಿಂಗ್ ಅವರನ್ನು ಬೆಂಕಿ ಹಚ್ಚಿ ಕೊಂದ ಪ್ರಕರಣಗಳಿಗೆ ಸಂಬಂಧಿಸಿ, 2015ರ ಫೆಬ್ರವರಿಯಲ್ಲಿ ವಿಶೇಷ ತನಿಖಾ ತಂಡವು ಕುಮಾರ್ ವಿರುದ್ಧ ಎರಡು ಎಫ್ಐಆರ್ಗಳನ್ನು ದಾಖಲಿಸಿತ್ತು. 2023ರ ಆಗಸ್ಟ್ನಲ್ಲಿ ನ್ಯಾಯಾಲಯವು ಕುಮಾರ್ ವಿರುದ್ಧ ಗಲಭೆ ಹಾಗೂ ದ್ವೇಷ ಪ್ರಚೋದನೆ ಆರೋಪಗಳನ್ನು ರೂಪಿಸಿತ್ತು. ಆದರೆ ಕೊಲೆ ಮತ್ತು ಕ್ರಿಮಿನಲ್ ಪಿತೂರಿ ಆರೋಪಗಳಿಂದ ಅವರನ್ನು ಬಿಡುಗಡೆ ಮಾಡಲಾಗಿತ್ತು. ಸದ್ಯ ಜೈಲಿನಲ್ಲಿರುವ ಸಜ್ಜನ್ ಕುಮಾರ್ ಅವರಿಗೆ, 1984ರ ನವೆಂಬರ್ 1ರಂದು ಸರಸ್ವತಿ ವಿಹಾರ್ ಪ್ರದೇಶದಲ್ಲಿ ಜಸ್ವಂತ್ ಸಿಂಗ್ ಮತ್ತು ಅವರ ಪುತ್ರ ತರುಣದೀಪ್ ಸಿಂಗ್ ಹತ್ಯೆ ಪ್ರಕರಣದಲ್ಲಿ, ಕಳೆದ ವರ್ಷ ಫೆಬ್ರವರಿ 25ರಂದು ವಿಚಾರಣಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಪ್ರಕರಣವು ‘ಅಪರೂಪದ ಪ್ರಕರಣ’ದ ವ್ಯಾಪ್ತಿಗೆ ಬರುವುದಿಲ್ಲ ಎಂದು ನ್ಯಾಯಾಲಯ ಹೇಳಿತ್ತು. ಈ ಹತ್ಯೆ ಪ್ರಕರಣವು, 2018ರ ಡಿಸೆಂಬರ್ 17ರಂದು ದಿಲ್ಲಿ ಹೈಕೋರ್ಟ್ ಪಾಲಂ ಕಾಲೋನಿ ಪ್ರದೇಶದಲ್ಲಿ ನಡೆದ ಐದು ಜನರ ಹತ್ಯೆ ಪ್ರಕರಣದಲ್ಲಿ ಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದ ಘಟನೆಯ ಮುಂದುವರಿಕೆಯಾಗಿದೆ. ಈ ಗಲಭೆಗಳು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಯ ನಂತರ ನಡೆದವು. 1984ರ ದಂಗೆಯ ತನಿಖೆಗಾಗಿ ರಚಿಸಲಾದ ನಾನಾವತಿ ಆಯೋಗದ ವರದಿ ಪ್ರಕಾರ, ದಿಲ್ಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ 587 ಎಫ್ಐಆರ್ ಗಳು ದಾಖಲಾಗಿದ್ದು, 2,733 ಮಂದಿ ಮೃತಪಟ್ಟಿದ್ದರು. ಈ ಪೈಕಿ 240 ಪ್ರಕರಣಗಳನ್ನು ‘ಪತ್ತೆಯಾಗದ’ ಎಂದು ಮುಚ್ಚಲಾಗಿದ್ದು, 250 ಪ್ರಕರಣಗಳಲ್ಲಿ ಆರೋಪಿಗಳು ಖುಲಾಸೆಯಾಗಿದ್ದಾರೆ. ಕೇವಲ 28 ಪ್ರಕರಣಗಳಲ್ಲಿ ಮಾತ್ರ ಶಿಕ್ಷೆ ವಿಧಿಸಲಾಗಿದೆ. ಪಾಲಂ ಕಾಲೋನಿ ಹತ್ಯೆ ಪ್ರಕರಣದಲ್ಲಿ ದಿಲ್ಲಿ ಹೈಕೋರ್ಟ್ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಸಜ್ಜನ್ ಕುಮಾರ್ ಸಲ್ಲಿಸಿರುವ ಮೇಲ್ಮನವಿ ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇದೆ.
ಅಶ್ಲೀಲ ವಿಡಿಯೋ: ರಾಮಚಂದ್ರ ರಾವ್ ವಿರುದ್ಧ ಮಾನಹಾನಿ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳಿಗೆ ಕೋರ್ಟ್ ನಿರ್ಬಂಧ
ಬೆಂಗಳೂರು: ಸರ್ಕಾರಿ ಕಚೇರಿಯಲ್ಲಿ ಮಹಿಳೆಯೊಬ್ಬರೊಂದಿಗೆ ಅಸಭ್ಯ ವರ್ತನೆ ತೋರಿದ್ದ ಹಿರಿಯ ಐಪಿಎಸ್ ಅಧಿಕಾರಿ ಕೆ. ರಾಮಚಂದ್ರ ರಾವ್ ಅವರನ್ನು ಸರ್ಕಾರ ಅಮಾನತುಗೊಳಿಸಿದೆ. ಇತ್ತ ಸೋಶಿಯಲ್ ಮೀಡಿಯಾ ಹಾಗೂ ಮಾಧ್ಯಮಗಳಲ್ಲಿ ಅಶ್ಲೀಲ ವಿಡಿಯೋ ಬಹಿರಂಗವಾಗುತ್ತಿದ್ದು, ನ್ಯಾಯಲಯವು ಮಾನಹಾನಿಕರ ಸುದ್ದಿಗಳನ್ನ ಬಿತ್ತರಿಸದಂತೆ ನಿರ್ಬಂಧ ವಿಧಿಸಿದೆ. ಅಶ್ಲೀಲ ವಿಡಿಯೊ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿ ಕೆ ರಾಮಚಂದ್ರ ರಾವ್
ಮೈಸೂರು: ಆರೋಗ್ಯ ಕ್ಷೇತ್ರದಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ
ವೈದ್ಯಕೀಯ ಮತ್ತು ನರ್ಸಿಂಗ್ ಅಧಿಕಾರಿಗಳ ಹುದ್ದೆಗಳ ಭರ್ತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮೈಸೂರು ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ ಅಧಿಸೂಚನೆಯಲ್ಲಿ ಹೇಳಿದೆ. ವೈದ್ಯಕೀಯ ಮತ್ತು ನರ್ಸಿಂಗ್ ಅಧಿಕಾರಿಗಳ ಹುದ್ದೆಗಳ ಭರ್ತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ ವಿಶೇಷವಾಗಿ ಮೈಸೂರಿನಲ್ಲಿ ವೃತ್ತಿಜೀವನ ಹುಡುಕುತ್ತಿರುವವರಿಗೆ ಉತ್ತಮ ಅವಕಾಶವಾಗಿದೆ. ಆಸಕ್ತಿ ಅಭ್ಯರ್ಥಿಗಳು ಜನವರಿ 27ರೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ ಹೀಗಿದೆ ಅರಿವಳಿಕೆ ತಜ್ಞರು 2, ಪ್ರಸೂತಿ ಮತ್ತುಸ್ತ್ರೀರೋಗ ತಜ್ಞರು 1, ಮಕ್ಕಳ ತಜ್ಞರು 2, ಒ.ಟಿ. ಟೆಕ್ನಿಷಿಯನ್ 1, ತಾಲೂಕು ಆಶಾ ಮೆಂಟರ್ 1, ಪ್ರಯೋಗಶಾಲಾ ತಂತ್ರಜ್ಞರು 2, ಶೂಶ್ರೂಷಕ ಅಧಿಕಾರಿಗಳು 16, ದಂತ ಶಸ್ತ್ರಚಿಕಿತ್ಸಕರು 6, ಫಿಜಿಷಿಯನ್ 1, ವೈದ್ಯಾಧಿಕಾರಿಗಳು 2, ಆಪ್ತ ಸಮಾಲೋಚಕರು 1, ಶುಶ್ರೂಷಕ ಅಧಿಕಾರಿ 1, ಎಪಿಡಮಾಲಜಿಸ್ಟ್ 2, ವೈದ್ಯಾಧಿಕಾರಿಗಳು 2, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ 4, ಆರೋಗ್ಯ ನಿರೀಕ್ಷಣಾಧಿಕಾರಿಗಲು 2, ಶುಶ್ರೂಷಕ ಅಧಿಕಾರಿಗಳು 4, ವೈದ್ಯಾಧಿಕಾರಿಗಳು 4, ಆರೋಗ್ಯ ನಿರೀಕ್ಷಣಾಧಿಕಾರಿಗಳು 4, ಶುಶ್ರೂಷಕ ಅಧಿಕಾರಿಗಳು 5, ಹಿರಿಯ ವೈದ್ಯಾಧಿಕಾರಿ (ಡಿಆರ್ಟಿಬಿ ಕೇಂದ್ರ) 1, ವೈದ್ಯಾಧಿಕಾರಿ 1, ಕ್ಷಯರೋಗ ಆರೋಗ್ಯ ಸಂದರ್ಶಕ (ಟಿಬಿಎಚ್ವಿ) 1 ಹುದ್ದೆ ಸೇರಿದಂತೆ ಒಟ್ಟು 67 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ ಹೆಚ್ಚಿನ ಮಾಹಿತಿಗೆ ಜಿಲ್ಲಾ ಆರೋಗ್ಯ ಕಚೇರಿಯನ್ನು ಸಂಪರ್ಕಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು DHFWS ಮೈಸೂರು ನೇಮಕಾತಿ ಅಧಿಸೂಚನೆ 2026 ಪ್ರಕಾರ, ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10, 12ನೇ ತರಗತಿ, ಡಿಪ್ಲೊಮಾ, GNM, ANM, MPW, DMLT, MLT, B.Sc, BDS, ಪದವಿ, D.Ch, DA, MBBS, MPH, DNB, MD ಸೇರಿದಂತೆ ಸಂಬಂಧಿತ ಶೈಕ್ಷಣಿಕ ಅರ್ಹತೆಗಳನ್ನು ಪೂರ್ಣಗೊಳಿಸಿರಬೇಕು. ಹುದ್ದೆಯ ಪ್ರಕಾರ ಶೈಕ್ಷಣಿಕ ಅರ್ಹತೆ ಮತ್ತು ಅನುಭವದ ಮಾನದಂಡಗಳು ವಿಭಿನ್ನವಾಗಿರುವುದರಿಂದ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಗಮನದಿಂದ ಪರಿಶೀಲಿಸುವುದು ಅಗತ್ಯವಾಗಿದೆ. ಆನ್ಲೈನ್ ಅರ್ಜಿ ಪ್ರಕ್ರಿಯೆಗೆ ಮುನ್ನ ಮಾನ್ಯ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ಜೊತೆಗೆ ಗುರುತಿನ ಚೀಟಿ, ವಯಸ್ಸಿನ ಪ್ರಮಾಣಪತ್ರ, ಶೈಕ್ಷಣಿಕ ದಾಖಲೆಗಳು, ವ್ಯಕ್ತಿವಿವರ ಮತ್ತು ಅನುಭವ ಪ್ರಮಾಣಪತ್ರಗಳು (ಅನ್ವಯಿಸಿದಲ್ಲಿ) ಮುಂತಾದ ದಾಖಲೆಗಳನ್ನು ಮುಂಚಿತವಾಗಿಯೇ ಸಿದ್ಧಪಡಿಸುವುದು ಒಳಿತು. ಈ ಕೆಳಗಿನ ಲಿಂಕ್ನಲ್ಲಿ ವಿವರವಾದ ಅಧಿಸೂಚನೆಯನ್ನು ನೋಡಬಹುದು: https://pdfjobsjankari.com/dhfws-mysore-recruitment-2026-67-medical-nursing-officers-vacancies/#goog_rewarded
ಗ್ಯಾರಂಟಿ ಯೋಜನೆಗಳಿಂದ ಶೇ.89ರಷ್ಟು ಫಲಾನುಭವಿಗಳ ಕೌಟುಂಬಿಕ ಸಂಬಂಧಗಳಲ್ಲಿ ಸುಧಾರಣೆ: ರಾಜ್ಯಪಾಲರ ಭಾಷಣದಲ್ಲಿ ಉಲ್ಲೇಖ
ಬೆಂಗಳೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳಿಂದ ಶೇ.89ರಷ್ಟು ಫಲಾನುಭವಿಗಳು ತಮ್ಮ ಕೌಟುಂಬಿಕ ಸಂಬಂಧಗಳಲ್ಲಿ ಸುಧಾರಣೆ ಕಂಡಿದ್ದೇವೆ ಎಂದಿದ್ದಾರೆ ಎಂದು ರಾಜ್ಯ ಸರಕಾರವು ರಾಜ್ಯಪಾಲರ ಭಾಷಣದಲ್ಲಿ ಉಲ್ಲೇಖಿಸಿದೆ. ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಮತ್ತು ಯುವನಿಧಿ ಎಂಬ ಐದು ಗ್ಯಾರಂಟಿ ಯೋಜನೆಗಳಿಗೆ ಇದುವರೆಗೆ 1,16,706 ಕೋಟಿ ರೂ.ಗಳನ್ನು ವಿನಿಯೋಗಿಸಲಾಗಿದೆ. ಈ ಯೋಜನೆಗಳ ಸಾಮಾಜಿಕ ಮತ್ತು ಆರ್ಥಿಕ ಪರಿಣಾಮಗಳನ್ನು ವೈಜ್ಞಾನಿಕವಾಗಿ ಮೌಲ್ಯಮಾಪನ ಮಾಡಲು ಎಫ್ಪಿಐ ಮೂಲಕ ಕಿಂಗ್ಸ್ ಕಾಲೇಜ್ ಲಂಡನ್, ಜಸ್ಟ್ ಜಾಬ್ಸ್ ನೆಟ್ವರ್ಕ್, ಎಕ್ಸ್ಕೆಡಿಆರ್ ಫೋರಮ್, ಅಝೀಂ ಪ್ರೇಮ್ ಜಿ ವಿವಿ, ಇಂಡಸ್ ಆಕ್ಷನ್ ಹಾಗೂ ಲೋಕನೀತಿ/ಸಿಎಸ್ಡಿಎಸ್ ನಂತಹ ಶೈಕ್ಷಣಿಕ ಮತ್ತು ಸಂಶೋಧನಾ ಸಂಸ್ಥೆಗಳೊಂದಿಗೆ ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ. ಈ ಸಂಸ್ಥೆಗಳು ವ್ಯಾಪಕವಾಗಿ ನಡೆಸಿರುವ ಅಧ್ಯಯನಗಳು ರಾಜ್ಯದಲ್ಲಿ ಆಹಾರ ಭದ್ರತೆ, ಬಡತನ ನಿರ್ಮೂಲನೆ ಮತ್ತು ಮಹಿಳಾ ಸಬಲೀಕರಣದಲ್ಲಿ ಕ್ರಾಂತಿಕಾರಿ ಬದಲಾವಣೆಗಳಾಗಿರುವುದನ್ನು ದೃಢಪಡಿಸಿವೆ. ಜನರು ಗ್ಯಾರಂಟಿ ಯೋಜನೆಗಳ ಮೂಲಕ ಪಡೆಯುವ ಹಣವನ್ನು ಪೌಷ್ಠಿಕ ಆಹಾರ, ಔಷಧಗಳು ಮತ್ತು ಮಕ್ಕಳ ಶಿಕ್ಷಣಕ್ಕಾಗಿ ವಿನಿಯೋಗಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಬ್ಯಾಂಕ್ ಖಾತೆಗಳಿಗೆ ಸರಕಾರದಿಂದ ನಗದು ವರ್ಗಾವಣೆ ಪಡೆದ ಕುಟುಂಬಗಳ ಪ್ರಮಾಣ 2022ರಲ್ಲಿ ಶೇ.9.3ರಷ್ಟಿದ್ದದ್ದು 2024ರ ವೇಳೆಗೆ ಅದು ಶೇ.72.7ಕ್ಕೆ ಏರಿಕೆಯಾಗಿದೆ. ಅಝೀಂ ಪ್ರೇಮ್ ಜೀ ವಿಶ್ವವಿದ್ಯಾಲಯದ ಅಧ್ಯಯನದಂತೆ, ಬೆಂಗಳೂರಿನ ಪ್ರಮುಖ ವಾಣಿಜ್ಯ ಪ್ರದೇಶಗಳೂ ಸೇರಿದಂತೆ ಅನೇಕ ಮಾರ್ಗಗಳಲ್ಲಿ ಶಕ್ತಿ ಯೋಜನೆಯಡಿ ಪ್ರಯಾಣಿಸುವ ಮಹಿಳೆಯರ ಸಂಖ್ಯೆ ಪುರುಷರಿಗಿಂತ ಹೆಚ್ಚಾಗಿದ್ದು, ಇದು ನಗರದ ಚಲನಶೀಲತೆಯಲ್ಲಿ ಆದ ಪ್ರಮುಖ ಬದಲಾವಣೆಯಾಗಿದೆ ಎಂದು ತಿಳಿಸಲಾಗಿದೆ. ಈ ಯೋಜನೆಯಿಂದ ಪ್ರತಿ ಮಹಿಳೆಗೆ ಮಾಸಿಕ ಸರಾಸರಿ 1,500 ರಿಂದ 2 ಸಾವಿರ ರೂ. ಉಳಿತಾಯವಾಗುತ್ತಿದೆ. ರಾಜ್ಯದಾದ್ಯಂತ ಶೇ.19 ರಷ್ಟು ಮತ್ತು ಬೆಂಗಳೂರಿನಲ್ಲಿ ಶೇ.34ರಷ್ಟು ಮಹಿಳೆಯರು ಉತ್ತಮ ಸಂಬಳದ ಕೆಲಸಗಳನ್ನು ಪಡೆಯಲು ಈ ಯೋಜನೆ ನೆರವಾಗಿದೆ. ಶೇ.83 ರಷ್ಟು ಜನರು ಉತ್ತಮ ಆರೋಗ್ಯ ಸೇವೆಗಳನ್ನು ಪಡೆಯಲು ಸಾಧ್ಯವಾಗಿದೆ ಎಂದು ಹೇಳಲಾಗಿದೆ. ‘ಹಸಿವು ಮುಕ್ತ ಕರ್ನಾಟಕ’ದ ಕನಸನ್ನು ನನಸು ಮಾಡುತ್ತಿರುವ ‘ಅನ್ನಭಾಗ್ಯ' ಯೋಜನೆಯಿಂದಾಗಿ ಶೇ.83ರಷ್ಟು ಮಹಿಳೆಯರು ಗ್ಯಾರಂಟಿ ಯೋಜನೆಗಳಿಂದ ಆದ ಉಳಿತಾಯದ ಹಣದಲ್ಲಿ ಬೇಳೆಕಾಳು, ತರಕಾರಿ, ಹಣ್ಣು, ಮೊಟ್ಟೆ ಮತ್ತು ಮಾಂಸ ಮುಂತಾದ ಗುಣ ಮಟ್ಟದ ಆಹಾರ ಪದಾರ್ಥಗಳನ್ನು ಖರೀದಿಸುವ ಮೂಲಕ ಕುಟುಂಬದ ಪೌಷ್ಠಿಕತೆಯನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಲಾಗಿದೆ. ‘ಗೃಹಲಕ್ಷ್ಮಿ’ ಯೋಜನೆಯಿಂದ ಶೇ.80ರಷ್ಟು ಮಹಿಳೆಯರು, ತಾವು ಹೆಚ್ಚು ಆರ್ಥಿಕವಾಗಿ ಸ್ವತಂತ್ರರಾಗಿರುವುದಾಗಿ ಹಾಗೂ ಕುಟುಂಬದ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಪ್ರಧಾನ ಪಾತ್ರ ವಹಿಸುತ್ತಿರುವುದಾಗಿ ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ಶೇ.37ರಷ್ಟು ಫಲಾನುಭವಿಗಳು ಗ್ಯಾರಂಟಿ ಯೋಜನೆಗಳ ಹಣವನ್ನು ಕುಟುಂಬದ ಹಳೆಯ ಸಾಲ ಮರುಪಾವತಿಸಲು ಬಳಸುವ ಮೂಲಕ ಸಾಲ ಮುಕ್ತರಾಗುತ್ತಿದ್ದಾರೆ ಎಂದು ನುಡಿಯಲಾಗಿದೆ. ಸರಕಾರವು ಜಾರಿಗೆ ತಂದಿರುವ ಮಹಿಳಾ ಸಬಲೀಕರಣದ ಯೋಜನೆಗಳಿಂದ ಕರ್ನಾಟಕವು ಹೊಸ ಮಾದರಿಯನ್ನು ಪ್ರಾರಂಭಿಸಿದೆ. ಈ ಯೋಜನೆಗಳಿಂದ ಕೇವಲ ಆರ್ಥಿಕ ನೆರವು ಮಾತ್ರವಲ್ಲದೆ, ಸಾಮಾಜಿಕ ಪರಿವರ್ತನೆಯೂ ಸಾಧ್ಯವಾಗಿದೆ ಎಂದು ಅಭಿಪ್ರಾಯಪಡಲಾಗಿದೆ. ಯುವ ಜನತೆಗೆ ಆಸರೆಯಾಗಿರುವ ‘ಯುವ ನಿಧಿ' ಯೋಜನೆಯ ಫಲವಾಗಿ ಶೇ.28ರಷ್ಟು ಯುವಕರು ಕೌಶಲ್ಯ ಕಲಿಕೆಯಲ್ಲಿ ತೊಡಗಿಸಿಕೊಂಡರೆ, ಶೇ.20ರಷ್ಟು ಜನರು ಆರ್ಥಿಕವಾಗಿ ಸ್ವಾವಲಂಬಿಗಳಾಗುತ್ತಿದ್ದಾರೆ. ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಪೂರಕವಾಗಿ ‘ಗೃಹಲಕ್ಷ್ಮಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ'ಯನ್ನು ಸ್ಥಾಪಿಸಲಾಗಿದೆ. ಅಪಾಯ ಮತ್ತು ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ಒದಗಿಸುವ ಉದ್ದೇಶದಿಂದ 2025-26ನೇ ಸಾಲಿನಲ್ಲಿ ‘ಅಕ್ಕಪಡೆ' ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಭಾಷಣದಲ್ಲಿ ಪ್ರಸ್ತಾವಿಸಲಾಗಿದೆ.
ದುಬಾರಿ ವೇತನದ ದಾದಿಯರು! ಯುವಜನತೆಯ ಭಿನ್ನ ವೃತ್ತಿ ನೋಟ
ಆಧುನಿಕ ತಲೆಮಾರು ಕೆಲಸದಲ್ಲಿ ಹೊಂದಾಣಿಕೆ ಬಯಸುತ್ತಿದ್ದಾರೆ. ಸಮತೋಲನ ಬೇಕು ಎನ್ನುತ್ತಿದ್ದಾರೆ. ಜೊತೆಗೆ ಅರ್ಥಪೂರ್ಣ ಯಶಸ್ಸು ಬೇಗನೇ ಸಿಗಬೇಕು ಎಂದು ಬಯಸುತ್ತಾರೆ. ಇತ್ತೀಚೆಗೆ ಯುವಜನರು ಭಿನ್ನ ರೀತಿಯ ವೃತ್ತಿಜೀವನವನ್ನು ಆರಿಸಿಕೊಳ್ಳುತ್ತಿದ್ದಾರೆ. ಬಹಳಷ್ಟು ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಮಾನಸಿಕ ಆರೋಗ್ಯ ಮತ್ತು ವೃತ್ತಿ-ಜೀವನ ಸಮತೋಲನದ ಬಗ್ಗೆ ಮಾತನಾಡುತ್ತಿರುವುದರ ಜೊತೆಗೆ ನಿಜ ಜೀವನದಲ್ಲಿ ಸಾಂಪ್ರದಾಯಿಕ ವೃತ್ತಿಜೀವನವನ್ನು ತೊರೆಯಲು ಬಯಸಿದ್ದಾರೆ. ದೀರ್ಘ ಸಮಯ ಕೆಲಸ ಮಾಡುವುದು ಕಠಿಣ ಕಾರ್ಪೋರೇಟ್ ಉದ್ಯೋಗಗಳು, ಅಧಿಕ ಒತ್ತಡದ ಮ್ಯಾನೇಜ್ಮೆಂಟ್ ಉದ್ಯೋಗಗಳು ಆದ್ಯತೆಯಿಂದ ಹೊರ ಬರುತ್ತಿವೆ. ಬದಲಾಗಿ ಆಧುನಿಕ ತಲೆಮಾರು ಕೆಲಸದಲ್ಲಿ ಹೊಂದಾಣಿಕೆ ಬಯಸುತ್ತಿದ್ದಾರೆ. ಸಮತೋಲನ ಬೇಕು ಎನ್ನುತ್ತಿದ್ದಾರೆ. ಜೊತೆಗೆ ಅರ್ಥಪೂರ್ಣ ಯಶಸ್ಸು ಬೇಗನೇ ಸಿಗಬೇಕು ಎಂದು ಬಯಸುತ್ತಾರೆ. ಕಾರ್ಪೋರೇಟ್ ಉದ್ಯೋಗಕ್ಕೆ ಪರ್ಯಾಯ ಕುತೂಹಲಕಾರಿ ವಿಚಾರವೆಂದರೆ ಮಕ್ಕಳನ್ನು ನೋಡಿಕೊಳ್ಳುವ ದಾದಿಯರ ಕೆಲಸ! ಕೆಲವು ಯುವ ವೃತ್ತಿಪರರಿಗೆ ಶ್ರೀಮಂತ ಕುಟುಂಬಗಳಿಗೆ ದಾದಿಯರಾಗಿ ಕೆಲಸ ಮಾಡುವುದು ಕಾರ್ಪೋರೇಟ್ ಉದ್ಯೋಗಗಳಿಗೆ ಪರ್ಯಾಯವಾದ ಆಕರ್ಷಕ ಉದ್ಯೋಗ ಆಯ್ಕೆಯಾಗುತ್ತಿದೆ. ಈ ಕೆಲಸದಲ್ಲಿ ಆಕರ್ಷಕ ಹಣ ಪಾವತಿಯಾಗುತ್ತದೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಯಾಣ ಮಾಡುವ ಅವಕಾಶ ಸಿಗುತ್ತಿದೆ. ಹಿತಕರವಾಗಿ ಜೀವನ ನಡೆಸುವ ವ್ಯವಸ್ಥೆಯೂ ಇರುತ್ತದೆ. ಬಹುತೇಕ ಆರಂಭಿಕ ಮಟ್ಟದ ಉದ್ಯೋಗಗಳಲ್ಲಿ ಇವುಗಳ ಕೊರತೆ ಇರುತ್ತದೆ. ಎಐ ತಮ್ಮ ಕೆಲಸವನ್ನು ಬದಲಿಸುವ ಆತಂಕ ಮತ್ತು ಅನಿಶ್ಚಿತತೆ ಕಾಡುತ್ತಿರುವ ಸಂದರ್ಭದಲ್ಲಿ ದುಬಾರಿ ವೇತನದ ದಾದಿಯರ ಕೆಲಸ ಪ್ರಾಯೋಗಿಕ ಮತ್ತು ಉತ್ತಮ ಆಯ್ಕೆ ಎಂದು ಕಾಣುತ್ತಿದೆ. ಈ ಉದ್ಯೋಗದಲ್ಲಿ ಅತಿಯಾದ ನಿರೀಕ್ಷೆಗಳಿದ್ದರೂ ಮತ್ತು ದೀರ್ಘ ಕೆಲಸ ಮಾಡಬೇಕಾಗಿದ್ದರೂ ಅವರು ಸಿದ್ಧರಾಗುತ್ತಿದ್ದಾರೆ. ಮಾಧ್ಯಮದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ ಕ್ಯಾಸ್ಡಿ ಒ ಹಾಗನ್, ಕಳೆದ ವರ್ಷ ಬಿಲಿಯನೇರ್ ಕುಟುಂಬವೊಂದಕ್ಕೆ ದಾದಿಯಾಗಿ ಕೆಲಸ ಮಾಡಿ ಸುದ್ದಿಯಾಗಿದ್ದರು. 28ರ ವಯಸ್ಸಿನಲ್ಲಿ ಅವರು ಆರೋಗ್ಯಸೇವೆ, ನಿವೃತ್ತಿ ಯೋಜನೆ, ವೇತನಸಹಿತ ವಿರಾಮ, ಖಾಸಗಿ ಅಡುಗೆಭಟ್ಟರಿಂದ ತಯಾರಾದ ಉತ್ತಮ ಆಹಾರ, ಮತ್ತು ಕಾರ್ಯಸ್ಥಳದಲ್ಲಿರುವಾಗ ಧರಿಸಬೇಕಾದ ಸಮವಸ್ತ್ರವನ್ನೂ ಪಡೆದುಕೊಂಡಿದ್ದಾರೆ. ಇವೆಲ್ಲದರ ಜೊತೆಗೆ ಅಂತಾರಾಷ್ಟ್ರೀಯ ಪ್ರಯಾಣವೂ ಸಿಗುತ್ತಿದೆ. ದುಬಾರಿ ದಾದಿಯಾಗುವ ನಿರ್ಧಾರಕ್ಕೆ ಕಾರಣವೇನು? ಹೀಗಾಗಿ ದುಬಾರಿ ದಾದಿಯಾಗುವ ಕೆಲಸ ಯುವ ವೃತ್ತಿಪರರಿಗೆ ಉತ್ತಮ ಆಯ್ಕೆ ಎಂದು ಅನಿಸುತ್ತಿದೆ. ಆದರೆ ಕಾರ್ಪೋರೇಟ್ ಉದ್ಯೋಗದಲ್ಲಿ ಯುವಜನರು ಆಸಕ್ತಿ ಹೊಂದಿರದೆ ಇರಲು ಕಾರಣವೇನು? ಕಾರ್ಪೋರೇಟ್ ತರಬೇತುದಾರರು ಮತ್ತು ವೃತ್ತಿ ಪ್ರಗತಿಯ ತರಬೇತುದಾರರಾಗಿರುವ ಶಿವಾಂಗಿ ಶ್ರೀವಾಸ್ತವ ಪ್ರಕಾರ ಯುವಜನತೆ ತಮ್ಮ ಹಿರಿಯರು ದೀರ್ಘಕಾಲ ಕೆಲಸ ಮಾಡಿ ಸುಸ್ತಾಗಿರುವುದನ್ನು ಕಂಡಿದ್ದಾರೆ. “ಜನರು 10-12 ಗಂಟೆಗಳ ಕಾಲ ಕೆಲಸ ಮಾಡಿ ಕಂಪನಿಗಳಿಗೆ ಬದ್ಧತೆಯನ್ನು ತೋರಿಸಿದರೂ ಭವಿಷ್ಯದ ಪ್ರಗತಿಯನ್ನು ಕಾಣುತ್ತಿಲ್ಲ. ಕೆಲಸ ಕಳೆದುಕೊಳ್ಳುವ ಆತಂಕ, ಕೆಲಸದಲ್ಲಿ ಪ್ರಗತಿಯಾಗದೆ ಇರುವುದು ಮತ್ತು ಒತ್ತಡವನ್ನು ಅನುಭವಿಸುತ್ತಿದ್ದಾರೆ. ಹೀಗಾಗಿ ಕೆಲಸ ಕಠಿಣವಾಗಿದ್ದರೆ ಬಹುಮಾನವೂ ಸ್ಪಷ್ಟವಾಗಿರಬೇಕಲ್ಲವೆ?” ಎನ್ನುತ್ತಾರೆ ಶಿವಾಂಗಿ. ಬಹಳಷ್ಟು ಮಂದಿಗೆ ಇಂದು ಕಾರ್ಪೋರೇಟ್ ಉದ್ಯೋಗವೆಂದರೆ ದೀರ್ಘಾವಧಿ ಕೆಲಸ ಮಾಡುವುದು, ಸ್ವಾತಂತ್ರ್ಯ ಇಲ್ಲದಿರುವುದು ಮತ್ತು ಪಾವತಿಸಿದ ಹಣ ಬಾಡಿಗೆ ಮತ್ತು ಸಾಧಾರಣ ಜೀವನಶೈಲಿಗೂ ಸಾಕಾಗುವುದಿಲ್ಲ. ಪ್ರಗತಿಯ ಭರವಸೆ ಇದ್ದರೂ, ಬಹಳ ದೂರವಿರುತ್ತದೆ. ಅನಿಶ್ಚಿತತೆ ಇರುತ್ತದೆ ಮತ್ತು ಷರತ್ತುಗಳು ಇರುತ್ತವೆ. “ಹೊಸ ತಲೆಮಾರು ಸೋಮಾರಿಗಳಲ್ಲ. ಆದರೆ, ಭವಿಷ್ಯ ಚೆನ್ನಾಗಿರುತ್ತದೆ ಎಂದುಕೊಂಡು ಹೆಚ್ಚು ತ್ಯಾಗ ಮಾಡಲು ಸಿದ್ಧರಿರುವುದಿಲ್ಲ. ಜೀವನದೊಳಗೆ ತುಂಬಿಕೊಳ್ಳುವಂತಹ ವೃತ್ತಿಯನ್ನು ಬಯಸುತ್ತಾರೆ. ಜೀವನ ವೃತ್ತಿಯಲ್ಲಿ ಕಳೆದುಹೋಗುವುದು ಅವರಿಗೆ ಬೇಕಿಲ್ಲ” ಎನ್ನುತ್ತಾರೆ ಶಿವಾಂಗಿ. ಸುಸ್ತಾಗುವ ಕಾರ್ಪೋರೇಟ್ ಉದ್ಯೋಗ ಬೇಕಿಲ್ಲ! ಮನಶ್ಶಾಸ್ತ್ರಜ್ಞ ಡಾ ರಾಹುಲ್ ಚಂಢಾಕ್ ಹೇಳುವ ಪ್ರಕಾರ ಕಾರ್ಪೋರೇಟ್ ಉದ್ಯೋಗಗಳು ಮೌಲ್ಯಗಳು ಅಥವಾ ನಿರೀಕ್ಷೆಗೆ ತಕ್ಕಂತೆ ಇರುವುದಿಲ್ಲ. ಹೀಗಾಗಿ ಯುವಜನತೆ ಅದನ್ನು ಬಯಸುತ್ತಿಲ್ಲ. “ಬಹಳಷ್ಟು ಯುವಕರು ವೇತನ ಅಥವಾ ಹುದ್ದೆಯ ಹೆಸರಿಗಿಂತ ಮಿಗಿಲಾದುದನ್ನು ಬಯಸುತ್ತಾರೆ. ಕೆಲಸಕ್ಕೆ ಉದ್ದೇಶ ಬೇಕು, ಹೊಂದಾಣಿಕೆಗೆ ಅವಕಾಶವಿರಬೇಕು ಮತ್ತು ವ್ಯತ್ಯಾಸ ತರಲು ಬಯಸಿದ್ದಾರೆ. ಕಠಿಣ ಶ್ರೇಣಿ ವ್ಯವಸ್ಥೆ, ಕಠಿಣ ಕೆಲಸದ ಸಮಯ ಮತ್ತು ಸೀಮಿತವಾಗಿರುವ ಸೃಜನಶೀಲ ಸ್ವಾತಂತ್ರ್ಯ ಹಳೇ ಫ್ಯಾಷನ್ ಎಂದು ನಂಬಿದ್ದಾರೆ.” “ದೀರ್ಘಕಾಲ ಕೆಲಸ ಮಾಡುವುದು, ಒತ್ತಡ ಎದುರಿಸುವುದು ಮತ್ತು ಕೆಲಸಕ್ಕೆ ಪ್ರಶಂಸೆ ದೊರೆಯದೆ ಇದ್ದಾಗ ಮಾನಸಿಕವಾಗಿ ಮತ್ತು ದೈಹಿಕವಾಗಿ ಸುಸ್ತು ಆವರಿಸುತ್ತದೆ” ಎನ್ನುತ್ತಾರೆ ರಾಹುಲ್. ಬಹುತೇಕ ಯುವಜನರು ದೀರ್ಘ ಕೆಲಸದ ಸಮಯ ಮತ್ತು ಕಡಿಮೆ ವೇತನ, ಗುರುತಿಸುವಿಕೆ ತಡವಾಗುವ ಕಾರ್ಪೋರೇಟ್ ಉದ್ಯೋಗಗಳ ಬದಲಾಗಿ ಉತ್ತಮ ಹಣ ಸಿಗುವ, ಸ್ಪಷ್ಟವಾದ ಜವಾಬ್ದಾರಿಗಳಿರುವ ಮತ್ತು ವೃತ್ತಿಪರ ರಾಜಕೀಯ ಕಡಿಮೆ ಇರುವ ಸಾಂಪ್ರದಾಯಿಕವಲ್ಲದ ಉದ್ಯೋಗಗಳನ್ನು ಬಯಸುತ್ತಿದ್ದಾರೆ. ಹೀಗಾಗಿ ದಾದಿಯಂತಹ ವೃತ್ತಿ ಹೆಚ್ಚು ನೇರ ಉದ್ಯೋಗವಾಗಿ ಕಾಣುತ್ತಿರುವುದರಲ್ಲಿ ತಪ್ಪೇನಿಲ್ಲ. ಮಗುವಿನ ಆರೈಕೆಗೆ ಸೀಮಿತವಾಗಿಲ್ಲ ದಾದಿಯರು ಎನ್ನುವ ಪಾತ್ರ ಇದೀಗ ಕೇವಲ ಮಗುವನ್ನು ಗಮನಿಸುವುದು ಎನ್ನುವ ಪಾತ್ರಕ್ಕೆ ಸೀಮಿತವಾಗಿಲ್ಲ. ಸ್ಥಿತಿವಂತರ ಕುಟುಂಬಗಳಲ್ಲಿ ಮತ್ತು ಮುಖ್ಯವಾಗಿ ಮೆಟ್ರೋ ನಗರಗಳಲ್ಲಿ ಶಿಕ್ಷಿತ, ವಿಶ್ವಾಸಾರ್ಹ, ಇಂಗ್ಲಿಷ್ ಮಾತನಾಡುವ ದಾದಿಯರ ಅಗತ್ಯ ಹೆಚ್ಚಿದೆ. ಕಲಿಕೆಗೆ ಅವಕಾಶ, ಕುಟುಂಬದ ಜೊತೆಗೆ ಪ್ರಯಾಣದ ಅವಕಾಶ ಮತ್ತು ಮಕ್ಕಳ ಅಭಿವೃದ್ಧಿಯಲ್ಲಿ ಭಾಗವಹಿಸುವ ನಿಜವಾದ ಜವಾಬ್ದಾರಿ ಅವರದ್ದಾಗಿರುತ್ತದೆ. ಹೀಗಾಗಿ ಜೀವನಶೈಲಿ ಮತ್ತು ಹಣ ಮಾತ್ರ ಮುಖ್ಯವಾಗಿರುವುದಿಲ್ಲ, ಕೆಲಸದ ಕುರಿತ ಸ್ಪಷ್ಟತೆಯೂ ಮುಖ್ಯವಾಗುತ್ತದೆ. ಇತ್ತೀಚೆಗಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮದ ಅಭಿಪ್ರಾಯವೂ ಮುಖ್ಯವಾಗಿರುತ್ತದೆ. ಬಹುತೇಕ ದಾದಿಯರು ಶಾಂತ ಪರಿಸರ, ಸುಂದರ ಮನೆಗಳು, ಖುಷಿಯಾಗಿರುವ ಮಕ್ಕಳ ಜೊತೆಗೆ ಕಳೆಯುವುದನ್ನು ಇಷ್ಟಪಡುತ್ತಾರೆ. ಇದು ಒಂದು ತರಹ ಸಂತೋಷ ಮತ್ತು ಭಾವನಾತ್ಮಕವಾಗಿ ಸಮಾಧಾನದಿಂದ ಇರುವ ಜೀವನವೆಂದು ಕಾಣುತ್ತದೆ. ಯುವಜನರಿಗೆ ಗೌರವ, ಸ್ಪಷ್ಟವಾದ ಕೆಲಸದ ಸಮಯ, ನಿರೀಕ್ಷಿತ ದೈನಂದಿನ ಚಟುವಟಿಕೆಗಳು ಇಷ್ಟವಾಗುತ್ತವೆ. ಇಂತಹ ಕೆಲಸದ ಪರಿಸರ ಇಲ್ಲದ ದೀರ್ಘ ಕೆಲಸದ ಸಮಯ ಅಥವಾ ನಿರಂತರವಾಗಿ ಲಭ್ಯವಿರಬೇಕಾಗಿರುವ ಅಗತ್ಯವು ಮಾನಸಿಕ ಸುಸ್ತಿಗೆ ಕಾರಣವಾಗಬಹುದು. “ಯುವಜನರಿಗೆ ದಾದಿಯರಂತಹ ಕೆಲಸ ತಾತ್ಕಾಲಿಕವಾದ ವೃತ್ತಿಯ ಹಂತವಾಗಿರಬಹುದು. ಮುಂದಿನ ಹಂತವನ್ನು ನಿರ್ಧರಿಸುವ ಮೊದಲು ಕಾರ್ಪೋರೇಟ್ ಒತ್ತಡದಿಂದ ದೂರವಾಗಿ ಗೌರವಯುತವಾಗಿ ಹಣ ಗಳಿಸುವ ಸಂತೋಷ ಇರಬಹುದು. ಇನ್ನು ಕೆಲವರಿಗೆ ಇದು ದೀರ್ಘಾವಧಿಯ ವೃತ್ತಿಯೂ ಆಗಿರಬಹುದು” ಎನ್ನುತ್ತಾರೆ ಶಿವಾಂಗಿ. ಕೃಪೆ: ಇಂಡಿಯಾ ಟುಡೆ
ದೇವದುರ್ಗ | ಕ್ಷಮೆ ಕೇಳದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ : ರಮೇಶ ರಾಮನಾಳ
ದೇವದುರ್ಗ: ಶ್ರೀನಿವಾಸ ನಾಯಕ್ ಒಬ್ಬ ಅಕ್ರಮ ಮರಳು ದಂಧೆಕೋರ ಎಂಬ ವಿಷಯ ಇಡೀ ಜಿಲ್ಲೆಗೆ ತಿಳಿದಿದೆ. ಹಫ್ತಾ ವಸೂಲಿ ಮಾಡುವುದು ನಾವಲ್ಲ, ಬದಲಾಗಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಮರಳು ಮಾಫಿಯಾ ಮಾಡುತ್ತಿರುವುದು ಅವರೇ ಎಂದು ಜೆಡಿಎಸ್ ಮುಖಂಡ ರಮೇಶ್ ರಾಮನಾಳ ಆರೋಪಿಸಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀನಿವಾಸ ನಾಯಕ್ ಅವರು ಮಾಜಿ ಸಂಸದ ಬಿ.ವಿ. ನಾಯಕ್ ಹಾಗೂ ರಾಜಶೇಖರ್ ನಾಯಕ್ ಅವರ ಹೆಸರು ಬಳಸಿಕೊಂಡು ಅಕ್ರಮ ಮರಳು ಸಾಗಣೆ ಮಾಡುವ ಮೂಲಕ 20 ಕೋಟಿ ರೂ. ವೆಚ್ಚದ ಮನೆ ಕಟ್ಟಿಸಿಕೊಂಡಿದ್ದಾರೆ. ನಾನು ಉಪನ್ಯಾಸಕನಾಗಿ ಕೆಲಸ ಮಾಡುತ್ತಿದ್ದು, ದಂಧೆಕೋರರಿಂದ ಹಣ ವಸೂಲಿ ಮಾಡುವಷ್ಟು ಕೆಳಮಟ್ಟಕ್ಕೆ ಇಳಿದಿಲ್ಲ ಎಂದು ಹೇಳಿದರು. ಮಾಜಿ ತಾಲೂಕು ಪಂಚಾಯತ್ ಸದಸ್ಯ ಗೋವಿಂದರಾಜ ಮಾತನಾಡಿ, ಬಿ.ವಿ.ನಾಯಕ್ ಕುಟುಂಬದ ರಾಜಕಾರಣ ಆರಂಭವಾಗಿದ್ದೇ ನಮ್ಮ ತಾತನಿಂದ. ಅವರನ್ನು ಗ್ರಾಮ ಪಂಚಾಯತ್ನಿಂದ ಸಂಸದರವರೆಗೆ ಬೆಳೆಸಿದ್ದು ನಾವೇ. 2016ರಲ್ಲಿ ಶ್ರೀನಿವಾಸ ನಾಯಕ್ ಅವರನ್ನು ಬಿ.ವಿ. ನಾಯಕ್ ಬಳಿ ಕರೆತಂದು ರಾಜಕೀಯ ಪ್ರವೇಶ ಮಾಡಿಸಿದ್ದೇ ನಾನು. ಆದರೆ ಇಂದು ಅವರು ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಾ, ಮರಳು ದರೋಡೆ ಮಾಡುತ್ತಾ ಅಹಂಕಾರ ಪ್ರದರ್ಶಿಸುತ್ತಿದ್ದಾರೆ. ಅವರ ಕುಟುಂಬದ ದುರಹಂಕಾರಕ್ಕೆ ಬೇಸೆತ್ತು ಜನರು ಇಂದು ಕರೆಮ್ಮ ಅವರನ್ನು ಆರಿಸಿ ತಂದಿದ್ದಾರೆ ಎಂದರು. ಶಾಸಕಿ ಕರೆಮ್ಮ ಅವರು ಅಧಿಕಾರಕ್ಕೆ ಬಂದ ಮೇಲೆ ತಾಲೂಕು ಶಾಂತಿಯ ತೋಟದಂತಾಗಿದೆ ಎಂದು ಅವರು ಶ್ಲಾಘಿಸಿದರು. ಇದೇ ವೇಳೆ ಮಾತನಾಡಿದ ಜೆಡಿಎಸ್ ಮಹಿಳಾ ತಾಲೂಕು ಅಧ್ಯಕ್ಷೆ ರೇಣುಕಾ ಸ್ವಾಮಿ, ನನ್ನ ಮೇಲೆ 15 ಪ್ರಕರಣಗಳಿವೆಯೆಂದು ಹಾಗೂ ಮಟ್ಕಾ ದಂಧೆ ಮಾಡುತ್ತಿದ್ದೇನೆಂದು ಶ್ರೀನಿವಾಸ ನಾಯಕ್ ಮಾಡಿರುವ ಆರೋಪ ಸಾಬೀತುಪಡಿಸಿದರೆ ನಾನೇ ಗಡಿಪಾರಾಗಲು ಸಿದ್ಧ. ಒಬ್ಬ ಹೆಣ್ಣುಮಗಳು ರಾಜಕೀಯವಾಗಿ ಬೆಳೆಯುತ್ತಿರುವುದನ್ನು ಸಹಿಸದೆ ಈ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ಕೂಡಲೇ ಅವರು ಕ್ಷಮೆ ಯಾಚಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಹನುಮಂತರಾಯ ಚಿಂತಲಕುಂಟ, ಇಸಾಕ್ ಮೇಸ್ತ್ರಿ, ಮಯೂರ ಸ್ವಾಮಿ, ರಂಗಮ್ಮ ಇರಬಗೇರಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ʼಲ್ಯಾಂಡ್ ಲಾರ್ಡ್ʼ: ರೈತನ ಪಾತ್ರದಲ್ಲಿ ಮಿಂಚಲಿರುವ ದುನಿಯಾ ವಿಜಯ್
‘ಲ್ಯಾಂಡ್ ಲಾರ್ಡ್’ ಹೆಸರೇ ಹೇಳುವಂತೆ ಭೂಮಾಲೀಕರ ದರ್ಪದ ಕತೆ. ಜೀತದಾಳುವಿನ ನೋವಿನ ಕತೆ. ದುನಿಯಾ ವಿಜಯ್ ವಯಸ್ಸಾದ ವ್ಯಕ್ತಿಯ ಪಾತ್ರದಲ್ಲಿ ನಟಿಸಿದ್ದಾರೆ. ದುನಿಯಾ ವಿಜಯ್ ರೈತನಾಗಿ ತೆರೆಮೇಲೆ ಬರುತ್ತಿದ್ದಾರೆ. ಜಡೇಶ್ ಕೆ ಹಂಪಿ ನಿರ್ದೇಶನ ಮಾಡಿರುವ ‘ಲ್ಯಾಂಡ್ ಲಾರ್ಡ್’ ಸಿನಿಮಾ ಭೂಮಾಲೀಕರ ತುಳಿತಕ್ಕೆ ಒಳಗಾದವರ ಸುತ್ತ ಹೆಣೆದ ಕತೆಯನ್ನು ಒಳಗೊಂಡಿದೆ. ದೌರ್ಜನ್ಯಕ್ಕೆ ಒಳಗಾಗುವ ಕುಟುಂಬ ಸೆಟೆದು ನಿಂತು ಸಂತ್ರಸ್ತರಾದವರಲ್ಲಿ ಶಕ್ತಿ ತುಂಬುವ ಕತೆ ಇದೆ. ಈ ಹಿಂದೆ ಜಡೇಶ್ ಅವರು ಬರೆದಿದ್ದ ‘ಕಾಟೇರ’ ಸಿನಿಮಾದ ಕತೆಯೂ ಇದೇ ಮಾದರಿಯಲ್ಲಿತ್ತು. “ನನಗೆ ಹಳ್ಳಿ ಎಂದರೆ ಇಷ್ಟ, ನನಗೆ ಪ್ರಕೃತಿ, ಮೌನ ಮತ್ತು ಹಳ್ಳಿ ಎಂದರೆ ಇಷ್ಟ. ಅದೇ ವಿಷಯದಲ್ಲಿ ಲ್ಯಾಂಡ್ಲಾರ್ಡ್ ಅನ್ನು ನಾವು ಬೆಳಗ್ಗೆ ಬಿಡುಗಡೆ ಮಾಡುತ್ತಿದ್ದೇವೆ. ಎಲ್ಲ ರೈತರ ಮನೆಯ ಕಷ್ಟವನ್ನು ಹೇಳುವ ಸಿನಿಮಾ ಮಾಡಿರುವುದು ಸಂತೋಷ ತಂದಿದೆ. ಎಷ್ಟು ಕಷ್ಟ ಅನುಭವಿಸಿದರೂ ನಾನೊಬ್ಬ ಬಡ ರೈತನ ಮಗನಾಗಿ ರೈತರ ಪರವಾಗಿ ನಿಂತಿದ್ದೇನೆ ಎಂದು ಖುಷಿಯಾಗಿದೆ” ಎಂದು ಸಿನಿಮಾ ಬಿಡುಗಡೆಯ ಸಂದರ್ಭದಲ್ಲಿ ವಿಜಯ್ ತಮ್ಮ ಅಭಿಮಾನಿಗಳಿಗೆ ‘ಎಕ್ಸ್’ ಸಾಮಾಜಿಕ ಜಾಲತಾಣದ ಮೂಲಕ ಸಂದೇಶ ಕಳುಹಿಸಿದ್ದಾರೆ. ‘ಲ್ಯಾಂಡ್ ಲಾರ್ಡ್” ಹೆಸರೇ ಹೇಳುವಂತೆ ಭೂಮಾಲೀಕರ ದರ್ಪದ ಕತೆ. ಜೀತದಾಳುವಿನ ನೋವಿನ ಕತೆ. ದುನಿಯಾ ವಿಜಯ್ ವಯಸ್ಸಾದ ವ್ಯಕ್ತಿಯ ಪಾತ್ರದಲ್ಲಿ ನಟಿಸಿದ್ದಾರೆ. ಹಾಗಿದ್ದರೂ, ಅವರೇ ನಾಯಕ. ಅಮಾನವೀಯ, ಅಹಂಕಾರಿ ಭೂಮಾಲೀಕನ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ ನಟಿಸಿದ್ದಾರೆ. ಸಿನಿಮಾದಲ್ಲಿ ರಚಿತಾ ರಾಮ್, ರಾಜ್ ಬಿ ಶೆಟ್ಟಿ ಮತ್ತು ಹಿರಿಯ ನಟಿ ಉಮಾಶ್ರೀ ನಟಿಸಿದ್ದಾರೆ. ವಿಜಯ್ ಪುತ್ರಿ ರಿತನ್ಯ ಅವರೂ ಸಿನಿಮಾದಲ್ಲಿ ನಟಿಸಿದ್ದಾರೆ. ಅವರು ಪೊಲೀಸ್ ಕಾನ್ಸ್ಟೇಬಲ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಯುವ ನಟ ಶಿಶಿರ್ ಬೈಕಾಡಿ ಪಾತ್ರವೂ ಗಮನ ಸೆಳೆಯುವಂತಿದೆ. ರಾಕೇಶ್ ಅಡಿಗ ಸಹ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕರ್ನಾಟಕದ ಕೋಲಾರ ಪ್ರದೇಶದ ಗ್ರಾಮೀಣ ಹೋರಾಟಗಳನ್ನು ಚಿತ್ರ ಪರಿಶೋಧಿಸುತ್ತದೆ. ಅಲ್ಲಿನ ದೃಶ್ಯಗಳು, ಅಬ್ಬರದ ಸಂಗೀತ ಮತ್ತು ನಿಜವಾದ ರೈತ-ಭೂಮಾಲೀಕರ ಘರ್ಷಣೆಯಲ್ಲಿ ಬೇರೂರಿರುವ ಆಕ್ಷನ್ – ಥ್ರಿಲ್ಲರ್ ಸಿನಿಮಾ ಇದಾಗಿದೆ. ಸಿನಿಮಾವನ್ನು ಜನವರಿ 23ರಂದು ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆ ಮಾಡಲಾಗುತ್ತಿದೆ. ಬಿ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಸಿನಿಮಾಕ್ಕೆ ಹೇಮಂತ್ ಗೌಡ ಮತ್ತು ಕೆವಿ ಸಂಪತ್ ಅವರು ಬಂಡವಾಳ ಹೂಡಿದ್ದಾರೆ. ಸಂಭಾಷಣೆ ಬರೆದಿರುವುದು ಮಾಸ್ತಿ ಉಪ್ಪಾರಹಳ್ಳಿ.
ಟಿ-20 ವಿಶ್ವಕಪ್ 2026 ಟೂರ್ನಿಯಿಂದ ಹಿಂದೆ ಸರಿದ ಬಾಂಗ್ಲಾದೇಶ
T-20 World Cup 2026: ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ತನ್ನ 2026 ಟಿ-20 ವಿಶ್ವಕಪ್ ಗ್ರೂಪ್ ಪಂದ್ಯಗಳನ್ನು ಭಾರತದ ಹೊರಗೆ ಸ್ಥಳಾಂತರಿಸಬೇಕು ಎಂದು ಮನವಿ ಮಾಡಿತ್ತು. ಆದರೆ, ಈ ಮನವಿಯನ್ನ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ತಿರಸ್ಕರಿಸಿದ ಒಂದು ದಿನದ ಬಳಿಕ ಭದ್ರತಾ ಕಾಳಜಿಯನ್ನ ಉಲ್ಲೇಖಿಸಿ ಬಾಂಗ್ಲಾದೇಶ ಟೂರ್ನಿಯಿಂದ ಹಿಂದೆ ಸರಿದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಗ್ರಾಮೀಣ ಸೇವೆಗೆ ನಿಯೋಜನೆಗೊಂಡ ವೈದ್ಯರ ಮಾಸಿಕ ವೇತನ ಕಡಿತ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಸರ್ಕಾರಿ ಕೋಟಾದಡಿ ಎಂಬಿಬಿಎಎಸ್ ಪ್ರವೇಶ ಪಡೆದು 2024 ಮತ್ತು 2025ನೇ ಸಾಲಿನಲ್ಲಿ ಕೋರ್ಸ್ ಪೂರ್ಣಗೊಳಿಸಿ ಗ್ರಾಮೀಣ ಭಾಗದ ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದು ವರ್ಷದ ಕಡ್ಡಾಯ ಸೇವೆಗೆ ನಿಯೋಜನೆಗೊಂಡ ವೈದ್ಯರ ಮಾಸಿಕ ವೇತನ ಕಡಿತಗೊಳಿಸಿರುವುದನ್ನು ಪ್ರಶ್ನಿಸಿದ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಉತ್ತರಕನ್ನಡ ಜಿಲ್ಲೆ ಮುಂಡಗೋಡ ತಾಲೂಕು ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕಲಬುರಗಿ ನಿವಾಸಿ ಡಾ. ಶಶಿಕುಮಾರ್ ಸೇರಿ ರಾಜ್ಯದ ವಿವಿಧ ಸರ್ಕಾರಿ ಆಸ್ಪತ್ರೆಗಲ್ಲಿ ಕಿರಿಯ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ 38 ಮಂದಿ ಎಂಬಿಬಿಎಸ್ ಪದವೀಧರರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ ಪ್ರತಿವಾದಿಗಳಾದ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿ, ಅರ್ಜಿಗೆ ನಾಲ್ಕು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಲು ನಿರ್ದೇಶಿಸಿತು. ಇದೇ ವಿಷಯವಾಗಿ ಸಲ್ಲಿಕೆಯಾಗಿರುವ ಇತರ ಅರ್ಜಿಗಳನ್ನೂ ಸಹ ಈ ಅರ್ಜಿಯೊಂದಿಗೆ ವಿಚಾರಣೆಗೆ ನಿಗದಿಪಡಿಸಲು ರಿಜಿಸ್ಟ್ರಿಗೆ ಸೂಚಿಸಿ ವಿಚಾರಣೆ ಮುಂದೂಡಿತು. ಅರ್ಜಿದಾರರ ಮನವಿ ಏನು? ರಾಜ್ಯದ ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದಡಿ ಎಂಬಿಬಿಎಸ್ ಮುಗಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಒಂದು ವರ್ಷದ ಕಡ್ಡಾಯ ಸರ್ಕಾರಿ ಸೇವೆಗೆ ನಿಯೋಜನೆಗೊಂಡ ವೈದ್ಯರಿಗೆ ಮಾಸಿಕ 62 ಸಾವಿರ ರೂ. ಹಾಗೂ ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ನಿಯೋಜನೆಗೊಂಡ ವೈದ್ಯರಿಗೆ ಮಾಸಿಕ ವೇತನ 75 ಸಾವಿರ ರೂ. ನಿಗದಿಪಡಿಸಿ 2025ರ ಆಗಸ್ಟ್ 18ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ, ಏಕಾಏಕಿ 2025ರ ಅಕ್ಟೋಬರ್ 28ರಂದು ಪರಿಷ್ಕೃತ ಅಧಿಸೂಚನೆ ಹೊರಡಿಸಿ, ವೇತನವನ್ನು ಮಾಸಿಕ 60 ಸಾವಿರ ರೂ. ಕಡಿತಗೊಳಿಸಲಾಗಿದೆ. ಇದು ಕಾನೂನುಬಾಹಿರವಾಗಿದೆ. ಹಳೇ ಅಧಿಸೂಚನೆಯಂತೆ ಮಾಸಿಕ ವೇತನ ನೀಡಬೇಕು. ಅದರಂತೆಯೇ ಕಳೆದ ವರ್ಷ ಆಗಸ್ಟ್ ತಿಂಗಳಿನಿಂದ ಇಲ್ಲಿಯವರೆಗೆ ವೇತನದ ಹಿಂಬಾಕಿ ಪಾವತಿಸುವಂತೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಸಸ್ಯಗಳು ‘ಉಸಿರಾಡುವುದನ್ನು’ ನೋಡುವ ಸಾಧನ ಕಂಡು ಹಿಡಿದ ಸಂಶೋಧಕರು!
ಈ ಸಂಶೋಧನೆ ಏಕೆ ಮುಖ್ಯ?; ಇಲ್ಲಿದೆ ಮಾಹಿತಿ…
ದಾವೋಸ್ನಲ್ಲಿ ಅಸ್ತಿತ್ವಕ್ಕೆ ಬಂದ ಗಾಜಾ ಶಾಂತಿ ಮಂಡಳಿ; ಪಾಕಿಸ್ತಾನ ಇದೆ ಎಂದ ಮೇಲೆ ನಗುವುದೋ ಅಳುವುದೋ ನೀವೇ ಹೇಳಿ!
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಹತ್ವಾಕಾಂಕ್ಷಿ ಗಾಜಾ ಶಾಂತಿ ಮಂಡಳಿ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದೆ. ದಾವೋಸ್ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆ ಶೃಂಗಸಭೆಯಲ್ಲಿ ಈ ಶಾಂತಿ ಮಂಡಳಿಯ ಸನ್ನದು ಪ್ರತಿಗೆ ಹಲವು ರಾಷ್ಟ್ರಗಳ ಮುಖ್ಯಸ್ಥರು ಸಹಿ ಹಾಕಿದ್ದಾರೆ. ಈ ವೇಳೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಕೂಡ ಗಾಜಾ ಶಾಂತಿ ಮಂಡಳಿ ಪ್ರತಿಗೆ ಸಹಿ ಹಾಕಿದ್ದು, ಮಂಡಳಿಯ ಅಧಿಕೃತ ಸದಸ್ಯತ್ವವನ್ನೂ ಪಡೆದುಕೊಂಡಿದೆ. ಈ ಕುರಿತು ಇಲ್ಲಿದೆ ಹೆಚ್ಚಿನ ಮಾಹಿತಿ.
ಗಣರಾಜ್ಯೋತ್ಸವ 2026: ಕರ್ನಾಟಕದಿಂದ ‘ಮಿಲ್ಲೆಟ್ ಟು ಮೈಕ್ರೋಚಿಪ್’ ಸ್ತಬ್ಧಚಿತ್ರ ಪ್ರದರ್ಶನ
ಬೆಂಗಳೂರು: ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ಈ ಪಯಣವನ್ನು ಸಂಕೇತಿಸುವಂತೆ, ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ (ಮಿಲ್ಲೆಟ್ ಟು ಮೈಕ್ರೋಚಿಪ್) ಎನ್ನುವ ಸ್ತಬ್ಧಚಿತ್ರವನ್ನು 2026ರ ಜನವರಿ 26 ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಅಂಗವಾಗಿ ಕೆಂಪು ಕೋಟೆಯಲ್ಲಿ
ಭಾರತದಲ್ಲಿ 40 ಕೆಲಸ ತೊರೆಯುವ ವಯಸ್ಸಾಗುತ್ತಿದೆಯೆ?
40ರ ವಯಸ್ಸಿನ ನಂತರ ನಿಧಾನವಾಗುವ ವೃತ್ತಿಜೀವನ
ರಾಜ್ಯಪಾಲರಿಗೆ ಅವಾಜ್ ಹಾಕಿದ 'ಆ ದಿನಗಳು' ರೌಡಿ ಬಿಕೆ ಹರಿಪ್ರಸಾದ್ ಎಂದ ಬಿಜೆಪಿ! ಕಾಂಗ್ರೆಸ್ ನಾಯಕನ ವರ್ತನೆಗೆ ಖಂಡನೆ
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವಿಧಾನಸಭೆ ಜಂಟಿ ಅಧಿವೇಶನದಲ್ಲಿ ಭಾಷಣ ಓದಲು ನಿರಾಕರಿಸಿ ಹೊರಟ ಘಟನೆಗೆ ಸಂಬಂಧಿಸಿದಂತೆ, ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಅವರ ವರ್ತನೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಹರಿಪ್ರಸಾದ್ ಅವರನ್ನು ಸದನದಿಂದ ಅಮಾನತುಗೊಳಿಸುವಂತೆ ಬಿಜೆಪಿ ಆಗ್ರಹಿಸಿದೆ.
ಭಾರತದಲ್ಲೂ 16 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಸೋಷಿಯಲ್ ಮೀಡಿಯಾ ಪ್ರವೇಶ ನಿರ್ಬಂಧ ಸಾಧ್ಯತೆ
ಸೋಷಿಯಲ್ ಮೀಡಿಯಾ ಈಗ ಬಳಕೆ ಮಾತ್ರವಲ್ಲ ಅದೊಂದು ವ್ಯಸನವಾಗಿಯೂ ಬದಲಾಗಿದೆ. ಅದರಲ್ಲೂ ಅಪ್ರಾಪ್ತ ವಯಸ್ಸಿನ ಮಕ್ಕಳು ಸೋಷಿಯಲ್ ಮೀಡಿಯಾ ಬಳಕೆ ಮಾಡುವ ವಿಚಾರವು ಇತ್ತೀಚಿನ ದಿನಗಳಲ್ಲಿ ಹೆಚ್ಚು ಚರ್ಚೆ ಆಗುತ್ತಿದೆ. ಈಚೆಗೆ 16 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸೋಷಿಯಲ್ ಮೀಡಿಯಾ ಬಳಕೆ ಮಾಡುವುದನ್ನು ನಿಷೇಧಿಸುವ ಪ್ರಮುಖ ನಿರ್ಧಾರವನ್ನು ಆಸ್ಟ್ರೇಲಿಯಾ ತೆಗೆದುಕೊಂಡಿತ್ತು. ಮಕ್ಕಳ ಸುರಕ್ಷತೆ ಹಾಗೂ ಸೋಷಿಯಲ್ ಮೀಡಿಯಾ
RCB ಕಪ್ ಗೆದ್ದಿದ್ದರ ಬಗ್ಗೆ ಈಗ ಧೋನಿ ಹೇಳಿದ್ದೇನು? ಫ್ಯಾನ್ಸ್ ಕ್ರೇಝ್ ಬಗ್ಗೆ ಅಂತೂ CSK ಸ್ಟಾರ್ ಅಚ್ಚರಿಯ ಮಾತು!
MS Dhoni On RCB- ಕಳೆದ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಗೆದ್ದಾಗ ವಿಶ್ವದ ಮೂಲೆಮೂಲೆಯಿಂದ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿತ್ತು. ಆದರೆ ಕ್ಯಾಪ್ಟನ್ ಕೂಲ್ ಎಂಎಸ್ ಧೋನಿ ಏನು ಹೇಳಿದ್ದರು ಎಂದು ಯಾರಿಗೂ ನೆನಪಿಲ್ಲ. ಇದೀಗ ಅವರು ಈ ಬಗ್ಗೆ ಮಾತನಾಡಿದ್ದು ಆರ್ ಸಿಬಿಯ ಅಭೂತಪೂರ್ವ ಯಶಸ್ಸಿಗೆ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಇಷ್ಟು ಮಾತ್ರವಲ್ಲದೆ ಸಂಕಷ್ಟದ ಸಮಯದಲ್ಲೂ ತಂಡದ ಕೈಬಿಡದ ಆರ್ ಸಿಬಿ ಫ್ಯಾನ್ ಗಳ ಉತ್ಸಾಹದ ಬಗ್ಗೆಯೂ ಅವರು ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಾರ್ಮಿಕರ ಪಿಂಚಣಿ ಯೋಜನೆ: ಕಟ್ಟಡ ಕಾರ್ಮಿಕರಿಗೆ ಮಾಸಿಕ 3,000 ರೂ. ಪಿಂಚಣಿ ಹಾಗೂ ವಿವಿಧ ಸೌಲಭ್ಯಗಳು! ನೋಂದಣಿ ಹೇಗೆ?
ಕರ್ನಾಟಕ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ವೃದ್ಧಾಪ್ಯ, ಮರಣಾ ನಂತರ ಕುಟುಂಬಕ್ಕೆ ಆಸರೆಯಾಗುವ ಪಿಂಚಣಿ ಯೋಜನೆಗಳನ್ನು ನೀಡುತ್ತಿದೆ. 60 ವರ್ಷ ತುಂಬಿದವರಿಗೆ ಮಾಸಿಕ 3000 ರೂ. ಪಿಂಚಣಿ, ಅಂಗವಿಕಲರಿಗೆ 2000 ರೂ. ಹಾಗೂ ಮರಣಾ ನಂತರ ಕುಟುಂಬಕ್ಕೆ 1500 ರೂ. ಪಿಂಚಣಿ ಲಭ್ಯವಿದೆ. ಶೈಕ್ಷಣಿಕ, ಹೆರಿಗೆ, ಮದುವೆ, ಉಪಕರಣಗಳ ನೆರವೂ ಇದೆ. ನೋಂದಣಿ ಮತ್ತು ನವೀಕರಣಕ್ಕೆ ಅವಕಾಶವಿದೆ.
ಮುಂಬೈ ಮೇಯರ್ ಸ್ಥಾನ ಮಹಿಳೆಗೆ ಮೀಸಲು, ಪಟ್ಟಕ್ಕಾಗಿ ರಾಜಕೀಯ ಕಿತ್ತಾಟ ಜೋರು
ಮುಂಬೈ: ಭಾರತದ ವಾಣಿಜ್ಯ ರಾಜಧಾನಿ ಹಾಗೂ ಮಹಾನಗರಿ ಎಂದು ಮುಂಬೈ ಸಿಟಿಯನ್ನು ಜನರು ಕರೆಯುತ್ತಾರೆ, ಜಗತ್ತಿನಾದ್ಯಂತ ಗುರುತಿಸುತ್ತಾರೆ. ಕೋಟಿ ಕೋಟಿ ಜನರಿಗೆ ಆಶ್ರಯ ನೀಡಿರುವ ಇದೇ ಮುಂಬೈ ನಗರ, ಪ್ರತಿವರ್ಷ ನೂರಾರು ಲಕ್ಷ ಕೋಟಿ ರೂಪಾಯಿ ವ್ಯಾಪಾರ &ವಹಿವಾಟು ನಡೆಸುತ್ತಾ ಬಂದಿದೆ. ಪ್ರಮುಖವಾಗಿ ಮುಂಬೈ ಷೇರು ಮಾರುಕಟ್ಟೆ ದೇಶದ ಆರ್ಥಿಕತೆ ಮೇಲೆ ಪ್ರಭಾವ ಬೀರುವಷ್ಟು ಶಕ್ತಿ
ಲಕ್ಕುಂಡಿಗೆ ರಿಯಲ್ ಎಸ್ಟೇಟ್ ಕುಳಗಳ ದೌಡು - ಕೋಟಿ ರೂ. ದಾಟಿದ ಭೂಮಿ ಬೆಲೆ
ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಚಿನ್ನ ಮತ್ತು ಐತಿಹಾಸಿಕ ಕಲಾಕೃತಿಗಳು ಪತ್ತೆಯಾದ ನಂತರ ರಿಯಲ್ ಎಸ್ಟೇಟ್ ಉದ್ಯಮಿಗಳು ಆಸಕ್ತಿ ತೋರಿದ್ದಾರೆ. ಇದರಿಂದಾಗಿ ಗ್ರಾಮದಲ್ಲಿ ಭೂಮಿಯ ಬೆಲೆ ಗಗನಕ್ಕೇರಿದ್ದು, ಒಂದು ಎಕರೆ ಭೂಮಿಗೆ ಕೋಟಿ ರೂ.ಗೂ ಅಧಿಕ ಬೆಲೆ ತಲುಪಿದೆ. ಉತ್ಖನನದಿಂದ ಹೊರಬರುತ್ತಿರುವ ಸಂಪತ್ತು ಗ್ರಾಮಸ್ಥರಲ್ಲಿ ಆರ್ಥಿಕ ಭವಿಷ್ಯದ ಬಗ್ಗೆ ಆಶಾಭಾವನೆ ಮೂಡಿಸಿದೆ.
ಹಾಸನ: ಜಿಬಿಎ ಚುನಾವಣೆಯಲ್ಲಿ ಇವಿಎಂ ಬದಲಾಗಿ ಬ್ಯಾಲೆಟ್ ಪೇಪರ್ ಬಳಕೆ ವಿಚಾರವಾಗಿ ರಾಜ್ಯ ಸರ್ಕಾರ ನಡೆ ಕುರಿತು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದ್ದಾರೆ. ನಮ್ಮ ಪಕ್ಷ ಇದುವರೆಗೂ ಇವಿಎಂ ಬಗ್ಗೆ ಚರ್ಚೆ ಮಾಡಿಲ್ಲ. ಬ್ಯಾಲೆಟ್ ಪೇಪರ್ ಬಗ್ಗೆನೂ ಚರ್ಚೆ ಮಾಡಿಲ್ಲ. ಚರ್ಚೆ ಮಾಡುತ್ತಿರುವವರು ಯೋಚನೆ ಮಾಡಬೇಕು, ಕಾಂಗ್ರೆಸ್ನವರು
ಮಲೆ ಮಹದೇಶ್ವರ ಬೆಟ್ಟಕ್ಕೆ ಜ. 24ರವರೆಗೆ ಪಾದಯಾತ್ರೆ, ದ್ವಿಚಕ್ರ ವಾಹನ ಸಂಚಾರ ಬಂದ್
ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ಹಾವಳಿ ಮಿತಿ ಮೀರಿದ್ದು, ಭಕ್ತರ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ. ಇಂದಿನಿಂದ (ಜ. 22) ಜನವರಿ 24ರ ಮಧ್ಯರಾತ್ರಿಯವರೆಗೆ ಭಕ್ತರು ಕಾಲ್ನಡಿಗೆಯಲ್ಲಿ ಹಾಗೂ ದ್ವಿಚಕ್ರ ವಾಹನಗಳಲ್ಲಿ ಬೆಟ್ಟಕ್ಕೆ ತೆರಳುವುದನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಅಪರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಹನೂರು ತಾಲೂಕಿನ ಮಲೆ ಮಹದೇಶ್ವರ
ಜಮ್ಮು ಮತ್ತು ಕಾಶ್ಮೀರ | ದೋಡಾದಲ್ಲಿ ಕಂದಕಕ್ಕೆ ಉರುಳಿ ಬಿದ್ದ ಸೇನಾ ವಾಹನ: 10 ಯೋಧರು ಮೃತ್ಯು
ದೋಡಾ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾ ಪ್ರದೇಶದಲ್ಲಿ ಸೇನಾ ವಾಹನವು ಸುಮಾರು 200 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 10 ಸೇನಾ ಸಿಬ್ಬಂದಿ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಎತ್ತರದ ಪೋಸ್ಟ್ಗೆ ತೆರಳುತ್ತಿದ್ದ ವೇಳೆ 17 ಸೈನಿಕರನ್ನು ಹೊತ್ತೊಯ್ಯುತ್ತಿದ್ದ ವಾಹನದ ಮೇಲೆ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭದೇರ್ವಾ–ಚಂಬಾ ಅಂತರರಾಜ್ಯ ರಸ್ತೆಯ ಖನ್ನಿ ಮೇಲ್ಭಾಗದಲ್ಲಿ ಈ ದುರ್ಘಟನೆ ನಡೆದಿದೆ. ಅಪಘಾತದ ಮಾಹಿತಿ ಲಭ್ಯವಾದ ತಕ್ಷಣ ಸೇನೆ ಹಾಗೂ ಜಮ್ಮು–ಕಾಶ್ಮೀರ ಪೊಲೀಸರು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಆರಂಭದಲ್ಲಿ ನಾಲ್ವರು ಸೈನಿಕರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿತ್ತು. ಬಳಿಕ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ ಉಧಂಪುರ ಮಿಲಿಟರಿ ಆಸ್ಪತ್ರೆಗೆ ಏರ್ಲಿಫ್ಟ್ ಮಾಡಲಾಗಿದೆ. ಅಪಘಾತದ ಕಾರಣಗಳ ಕುರಿತು ತನಿಖೆ ಮುಂದುವರಿದಿದೆ.
ಇಸ್ರೇಲ್ ವಿರೋಧ ಲೆಕ್ಕಿಸದೆ ಗಾಜಾ ಶಾಂತಿ ಮಂಡಳಿ ಸದಸ್ಯತ್ವ ಪಡೆದ ಪಾಕಿಸ್ತಾನ; ಕೊಡಲು 1 ಬಿಲಿಯನ್ ಡಾಲರ್ ಎಲ್ಲಿದೆ?
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಹತ್ವಾಕಾಂಕ್ಷಿ ಗಾಜಾ ಶಾಂತಿ ಮಂಡಳಿ ಈಗಷ್ಟೇ ಒಂದು ರೂಪ ಪಡೆಯುತ್ತಿದೆ. ಈ ಮಂಡಳಿಯನ್ನು ಸೇರುವಂತೆ ಟ್ರಂಪ್ ಭಾರತವೂ ಸೇರಿದಂತೆ ಜಗತ್ತಿನ ಅನೇಕ ದೇಶಗಳಿಗೆ ಆಹ್ವಾನ ನೀಡಿದ್ದಾರೆ. ಅಮೆರಿಕದ ಆಹ್ವಾನವನ್ನು ಸ್ವೀಕರಿಸಿರುವ ಪಾಕಿಸ್ತಾನ, ಗಾಜಾ ಶಾಂತಿ ಮಂಡಳಿ ಸೇರುತ್ತಿರುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದೆ. ದಾವೋಸ್ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆ ಶೃಂಗಸಭೆಯಲ್ಲಿ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಡೊನಾಲ್ಡ್ ಟ್ರಂಪ್ ಭೇಟಿಯ ಕೆಲವೇ ಕ್ಷಣಗಳ ಬಳಿಕ ಈ ಘೋಷಣೆ ಹೊರಬಿದ್ದಿದೆ.
ರಾಜ್ಯಪಾಲರು Vs ಸರ್ಕಾರ - ಸಂಘರ್ಷಕ್ಕೆ 35ವರ್ಷಗಳ ಇತಿಹಾಸ : ಇಲ್ಲಿದೆ, 6 ದೊಡ್ಡ ತಿಕ್ಕಾಟದ ಘಟನೆಗಳು
Conflicts between Governor Vs Karnataka Government : ರಾಜ್ಯಪಾಲರು ಮತ್ತು ಕರ್ನಾಟಕ ಸರ್ಕಾರದ ನಡುವಿನ ಸಂಘರ್ಷ / ಮನಸ್ತಾಪ / ಶೀತಲ ಸಮರ ಇಂದು ನಿನ್ನೆಯದಲ್ಲ. 1990ರಲ್ಲಿ ವೀರೇಂದ್ರ ಪಾಟೀಲರ ಕಾಲದಿಂದ ಆರಂಭವಾಗಿ ಇಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅವಧಿಯ ವರೆಗೂ ಇದು ಮುಂದುವರಿದಿದೆ. ಸಿದ್ದರಾಮಯ್ಯ ಸರ್ಕಾರ ಬರೆದು ಕೊಟ್ಟಿದ್ದ ಭಾಷಣವನ್ನು ರಾಜ್ಯಪಾಲರಾದ ಗೆಹ್ಲೋಟ್ ಓದದೇ ಸದನದಿಂದ ಹೊರಬಂದ ವಿದ್ಯಮಾನ ಇಂದು (ಜ. 22) ನಡೆದಿದೆ. ಈ ಹಿನ್ನಲೆಯಲ್ಲಿ ಹಿಂದಿನ ಐದು ವಿದ್ಯಮಾನಗಳ ಪಟ್ಟಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.
ಮುಂಬೈ ಮೇಯರ್ ಹುದ್ದೆಯಲ್ಲಿ ಮಹಿಳಾ ಮೀಸಲು: ಲಾಟರಿ ಪ್ರಕ್ರಿಯೆಗೆ ಉದ್ಧವ್ ಶಿವಸೇನೆ ಆಕ್ಷೇಪ
ಸಭೆಯಿಂದ ಹೊರನಡೆದ ಪಕ್ಷದ ಸದಸ್ಯರು
PHOTOS | ಬೆಂಗಳೂರಿನಲ್ಲಿ ಅಂಬಾರಿ ‘ಡಬಲ್ ಡೆಕ್ಕರ್ ಬಸ್’ಗೆ ಚಾಲನೆ
ಲಕ್ನೊ: ಮಂಗಳವಾರ ವರ್ಗಾವಣೆಗೊಳಿಸಿರುವ 14 ಮಂದಿ ನ್ಯಾಯಾಂಗ ಅಧಿಕಾರಿಗಳ ಪೈಕಿ, 2024ರಲ್ಲಿ ನಡೆದ ಸಂಭಲ್ ಹಿಂಸಾಚಾರದ ವೇಳೆ ಮುಸ್ಲಿಂ ವ್ಯಕ್ತಿಗೆ ಗುಂಡಿಟ್ಟು ಹತ್ಯೆಗೈದಿದ್ದ ಆರೋಪದ ಮೇಲೆ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಆದೇಶಿಸಿದ್ದ ಸಂಭಲ್ ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ವಿಭಾಂಶು ಸುಧೀರ್ ಕೂಡ ಸೇರಿದ್ದಾರೆ. ಈ ವರ್ಗಾವಣೆಯ ವಿರುದ್ಧ ಪ್ರತಿಭಟನೆ ನಡೆಸಿರುವ ವಕೀಲರು, “ಇದು ನ್ಯಾಯದ ಹತ್ಯೆ” ಎಂದು ಖಂಡಿಸಿದ್ದಾರೆ. ಸಂಭಲ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಲ್ ಇನ್ಸ್ಪೆಕ್ಟರ್ ಅನುಜ್ ಚೌಧರಿ ಸೇರಿದಂತೆ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಜನವರಿ 9ರಂದು ನ್ಯಾ. ವಿಭಾಂಶು ಸುಧೀರ್ ಆದೇಶಿಸಿದ್ದರು. ಇದರ ಬೆನ್ನಲ್ಲೇ ಅವರ ವರ್ಗಾವಣೆಯಾಗಿದೆ. ಅವರನ್ನು ಸುಲ್ತಾನಪುರದ ಸಿವಿಲ್ ನ್ಯಾಯಾಧೀಶ (ಹಿರಿಯ ಶ್ರೇಣಿ)ರನ್ನಾಗಿ ವರ್ಗಾಯಿಸಲಾಗಿದೆ. ಇದೀಗ ಸಂಭಲ್ ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಆಗಿ ಆದಿತ್ಯ ಸಿಂಗ್ ಅವರನ್ನು ನೇಮಿಸಲಾಗಿದೆ. ಇದಕ್ಕೂ ಮುನ್ನ, ಶ್ರೀ ಹರಿಹರ ದೇವಾಲಯ ವಿರುದ್ಧ ಶಾಹಿ ಜಾಮಾ ಮಸೀದಿ ಪ್ರಕರಣದಲ್ಲಿ ಸ್ಥಳ ಸಮೀಕ್ಷೆ ನಡೆಸುವಂತೆ ನ್ಯಾ. ಆದಿತ್ಯ ಸಿಂಗ್ ಆದೇಶಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನ್ಯಾ. ವಿಭಾಂಶು ಸುಧೀರ್ ಅವರ ವರ್ಗಾವಣೆಯನ್ನು ಖಂಡಿಸಿ ಚಾಂದೌಸಿ ಪೊಲೀಸ್ ಠಾಣೆ ಹಾಗೂ ಜಿಲ್ಲಾಡಳಿತ ಕಚೇರಿ ಎದುರು ಪ್ರತಿಭಟನೆ ನಡೆಸಿದ ವಕೀಲರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ‘ಇದು ನ್ಯಾಯದ ಹತ್ಯೆ’ ಎಂದು ಬಣ್ಣಿಸಿದರು. ಪೊಲೀಸ್ ಅಧಿಕಾರಿಗಳ ವಿರುದ್ಧ ಆದೇಶ ನೀಡಿದ್ದಕ್ಕೆ ಉತ್ತಮ ನ್ಯಾಯಾಧೀಶರಿಗೆ ಹಿಂಬಡ್ತಿ ನೀಡಲಾಗಿದೆ ಎಂದು ಅವರು ಆರೋಪಿಸಿದರು. “ನ್ಯಾ. ವಿಭಾಂಶು ಸುಧೀರ್ ಅವರು ಜಿಲ್ಲೆಯ ನ್ಯಾಯ ವಿತರಣೆ ವ್ಯವಸ್ಥೆಯಲ್ಲಿ ಅದ್ಭುತ ಕೆಲಸ ಮಾಡಿದ್ದಾರೆ. ಅವರ ಅವಧಿಯಲ್ಲಿ ಕೇವಲ ಎಂಟು ದಿನಗಳಲ್ಲಿ ಪ್ರಕರಣಗಳು ಇತ್ಯರ್ಥವಾಗುತ್ತಿದ್ದವು. ಅವರು ಪೊಲೀಸ್ ಸಿಬ್ಬಂದಿ ಹಾಗೂ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯ ವಿರುದ್ಧ ಆದೇಶ ಹೊರಡಿಸಿದ ನಂತರ ಅವರನ್ನು ವರ್ಗಾವಣೆಗೊಳಿಸಲಾಗಿದೆ. ಅವರ ವರ್ಗಾವಣೆಯನ್ನು ರದ್ದುಗೊಳಿಸಲೇಬೇಕು” ಎಂದು ಜಿಲ್ಲಾ ಸೆಷನ್ಸ್ ನ್ಯಾಯಾಲಯ ಬಾರ್ ಅಸೋಸಿಯೇಷನ್ನ ಮಾಜಿ ಅಧ್ಯಕ್ಷ ರಾಜೇಶ್ ಯಾದವ್ ಆಗ್ರಹಿಸಿದ್ದಾರೆ. ನ್ಯಾ. ವಿಭಾಂಶು ಸುಧೀರ್ ಅವರ ವರ್ಗಾವಣೆ ತಪ್ಪು ಎಂದು ಹೇಳಿದ ವಕೀಲ ರೋಶನ್ ಸಿಂಗ್ ಯಾದವ್, ಈ ವರ್ಗಾವಣೆಯನ್ನು ಒತ್ತಡದ ಕಾರಣಕ್ಕೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. “ಉತ್ತಮ ನ್ಯಾಯಾಧೀಶರನ್ನು ಶಿಕ್ಷಿಸುವ ಅಧಿಕಾರ ಯಾರಿಗೂ ಇಲ್ಲ. ಈ ವರ್ಗಾವಣೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ನಾನು ಹೈಕೋರ್ಟ್ನ ಮುಖ್ಯ ನ್ಯಾಯಾಧೀಶರಿಗೆ ಮನವಿ ಮಾಡುತ್ತೇನೆ” ಎಂದು ಅವರು ಹೇಳಿದ್ದಾರೆ. What’s happening in Sambhal deserves attention and respect. The Sambhal bar is protesting the transfer of the Chief Judicial Magistrate after he passed orders directing registration of FIRs against police officials, including an ASP. Whether one agrees with those orders or not,… pic.twitter.com/pubs9UypG6 — Deadly Law (@DeadlyLaw) January 21, 2026
ಬಿಗ್ ಬಾಸ್ ಸೀಸನ್ 12 ರ ವಿಜೇತ ಗಿಲ್ಲಿ ನಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಸಿಎಂ ಗಿಲ್ಲಿಯನ್ನು ಶಬ್ಬಾಶ್ ಎಂದು ಹೊಗಳಿ, ಅವರ ಜನಪ್ರಿಯತೆ ಹೆಚ್ಚಾಗಿದೆ ಎಂದರು. ಅತಿ ಹೆಚ್ಚು ಮತಗಳನ್ನು ಪಡೆದ ಸಾಧನೆಯನ್ನು ಸಿಎಂ ಉಲ್ಲೇಖಿಸಿದರು. ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಕೂಡ ಗಿಲ್ಲಿಯ ಪ್ರತಿಭೆಯನ್ನು ಶ್ಲಾಘಿಸಿದರು. ಗಿಲ್ಲಿ 50 ಲಕ್ಷ ರೂ. ಬಹುಮಾನ ಪಡೆದರು.
SWR: ಬೆಂಗಳೂರು-ರಾಧಿಕಾಪುರ ವೀಕ್ಲಿ ಎಕ್ಸ್ಪ್ರೆಸ್ ರೈಲು ಸಂಚಾರ ಶುರು, 5 ರಾಜ್ಯಗಳ ಪ್ರಯಾಣಿಕರಿಗೆ ಅನುಕೂಲ
ಬೆಂಗಳೂರು: ನೈಋತ್ಯ ರೈಲ್ವೆಯು (SWR) ಬೆಂಗಳೂರಿನಿಂದ ರಾಧಿಕಾರಪುಕ್ಕೆ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲು (Bengaluru SMVT-Radhikapur Express Train) ಕಾರ್ಯಾಚರಣೆ ಆರಂಭಿಸಿದೆ. ಬೆಂಗಳೂರಿನಿಂದ ತೆರಳುವ ಒಟ್ಟು ಐದು ರಾಜ್ಯಗಳ ರೈಲು ಪ್ರಯಾಣಿಕರಿಗೆ ಖುಷಿ ಸುದ್ದಿ ನೀಡಿದೆ. ಕರ್ನಾಟಕದಿಂದ ಆಂಧ್ರಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳ ಹಾಗೂ ಬಿಹಾರ ರಾಜ್ಯಗಳ ರೈಲು ಸಂಪರ್ಕ ಮತ್ತಷ್ಟು ಬಲಗೊಂಡಿದೆ. ರಾಜ್ಯ ರಾಜಧಾನಿ ಬೆಂಗಳೂರು
ಭಾರತೀಯ ಸೇನಾ ವಾಹನ ಭೀಕರ ಅಪಘಾತ, 10 ಸೈನಿಕರು ಹುತಾತ್ಮ & 11 ಸೈನಿಕರ ಸ್ಥಿತಿ ಗಂಭೀರ
ಜಮ್ಮು: ಭಾರತದ ಕಿರೀಟ ಜಮ್ಮು ಮತ್ತು ಕಾಶ್ಮೀರದ ರಕ್ಷಣೆಗೆ ಭಾರತೀಯ ವೀರ ಯೋಧರು ಜೀವವನ್ನೇ ಪಣವಾಗಿಟ್ಟು ಪ್ರತಿಕ್ಷಣ ಹೋರಾಡುತ್ತಿದ್ದಾರೆ. ಆದರೆ ಒಂದು ಕಡೆ ಉಗ್ರರ ದಾಳಿ ವೇಳೆ ಹೋರಾಡಿ, ಭಾರತೀಯ ಯೋಧರು ಹುತಾತ್ಮರಾಗುತ್ತಿರುವ ಸಮಯದಲ್ಲೇ ಭೀಕರ ಅಪಘಾತದಲ್ಲಿ 10 ಸೈನಿಕರು ಜೀವ ಕಳೆದುಕೊಂಡ ಸುದ್ದಿಯು ಆಘಾತ ನೀಡಿದೆ. ಗುರುವಾರ ಜಮ್ಮು &ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸೇನಾ
ಭೋಜಶಾಲೆ ಸಂಕೀರ್ಣದಲ್ಲಿ ಹಿಂದೂ-ಮುಸ್ಲಿಂರಿಬ್ಬರಿಗೂ ಪ್ರಾರ್ಥನೆಗೆ ಅವಕಾಶ ; ಸುಪ್ರೀಂ ಕೋರ್ಟ್ನ ಮಹತ್ವದ ಆದೇಶ
ಧಾರ ಜಿಲ್ಲೆಯ ಭೋಜಶಾಲೆ ಸಂಕೀರ್ಣದಲ್ಲಿ ಹಿಂದೂ ಮತ್ತು ಮುಸ್ಲಿಂರಿಬ್ಬರಿಗೂ ಪ್ರಾರ್ಥನೆ ಸಲ್ಲಿಸಲು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಸರಸ್ವತಿ ಪೂಜೆ ಮತ್ತು ಜುಮಾ ಪ್ರಾರ್ಥನೆ ಒಂದೇ ದಿನ ಬಂದಿದ್ದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ವಿವಾದಿತ ಪ್ರಕರಣವನ್ನು ಮಧ್ಯಪ್ರದೇಶ ಹೈಕೋರ್ಟ್ಗೆ ವರ್ಗಾಯಿಸಲಾಗಿದೆ. ಅಲ್ಲಿ ಶೀಘ್ರದಲ್ಲೇ ವಿಚಾರಣೆ ನಡೆಯಲಿದೆ. ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ.
ನನ್ನ ಸರ್ಕಾರವು ಅಭಿವೃದ್ಧಿ ಸೇರಿ ಈ ವಿಚಾರಗಳಲ್ಲಿ ಅಭೂತಪೂರ್ವ ಸಾಧನೆ ಮಾಡಿದೆ: ಸಿ.ಎಂ ಸಿದ್ದರಾಮಯ್ಯ
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರವು ಜಂಟಿ ಅಧಿವೇಶನಕ್ಕೆ ಸಿದ್ಧಪಡಿಸಿದ್ದ ಭಾಷಣವನ್ನು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಓದಿರಲಿಲ್ಲ. ಬದಲಿಗೆ ಅವರೇ ಬರೆದುಕೊಂಡು ಬಂದಿದ್ದ ಭಾಷಣವನ್ನು ಓದಿ ರಾಜ್ಯಪಾಲರು ಹಿಂದಿರುಗಿದ್ದರು. ಈ ನಡೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವು ಭಾರೀ ವಿರೋಧ ವ್ಯಕ್ತಪಡಿಸಿದೆ. ಅಲ್ಲದೇ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನನ್ನ ಸರ್ಕಾರವು ಅಭಿವೃದ್ಧಿ,
ಸೋಲ್ನಲ್ಲಿ ನಡೆಯುತ್ತಿರುವ 'V TYPE非ʼ ಫೊಟೋಬುಕ್ ಎಕ್ಸಿಬಿಷನ್ ಗೆ ಸರ್ಪೈಸ್ ವಿಸಿಟ್ ಕೊಟ್ಟ BTS V
BTS V, ಸೋಲ್ನಲ್ಲಿ ನಡೆಯುತ್ತಿರುವ ತಮ್ಮ ಹೊಸ ಫೋಟೋಬುಕ್ V TYPE ಪ್ರದರ್ಶನಕ್ಕೆ ಅನಿರೀಕ್ಷಿತ ಭೇಟಿ ನೀಡಿದ್ದಾರೆ. ಅಭಿಮಾನಿಯೊಬ್ಬರು V ಯನ್ನು ಭೇಟಿಯಾಗಿ ಸಂತಸ ಹಂಚಿಕೊಂಡಿದ್ದು, ಈ ಘಟನೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಈ ಪ್ರದರ್ಶನವು ಫೆಬ್ರವರಿ 1 ರವರೆಗೆ ನಡೆಯಲಿದೆ.ಇದರಲ್ಲಿ ಹಲವು ವಿಭಿನ್ನದೃಷ್ಟಿಕೋನ ಹಾಗೂ ವೈಬ್ ನಲ್ಲಿ ಫೋಟೋ ಸರಣಿಗಳಿರಲಿವೆ.
ಹುಬ್ಬಳ್ಳಿ | ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಕೊಲೆ
ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಯುವಕನ ಕೊಲೆ ನಡೆಸಿರುವ ಘಟನೆ ನಗರದ ಗೌಶಿಯಾ ಟೌನ್ನಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಮೃತರನ್ನು ಅಹ್ಮದ್ ರಜಾಕ್ ಶಹಪೂರ್ (48) ಎಂದು ಗುರುತಿಸಲಾಗಿದೆ. ಘಟನೆಯ ಹಿನ್ನೆಲೆ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಅಹ್ಮದ್ ರಜಾಕ್ ಅವರ ಸಹೋದರ ಮತ್ತು ಅವರ ಅಳಿಯನ ನಡುವೆ ಗಲಾಟೆ ನಡೆದಿದೆ. ಅಹ್ಮದ್ ರಜಾಕ್ ಅವರ ಸಹೋದರನ ಮಗಳ ಪತಿ ಸದ್ದಾಂ, ತನ್ನ ಪತ್ನಿಯನ್ನು ಕರೆದುಕೊಂಡು ಹೋಗಲು ಮಾವನ ಮನೆಗೆ ಆಗಮಿಸಿದ್ದನು. ಈ ವೇಳೆ ಮನೆ ಹೊರಗಡೆ ನಿಂತು ಗಲಾಟೆ ಮಾಡುತ್ತಿದ್ದನು ಎಂದು ತಿಳಿದುಬಂದಿದೆ. ಗಲಾಟೆ ಹೆಚ್ಚಾಗುತ್ತಿದ್ದುದನ್ನು ಗಮನಿಸಿದ ಅಹ್ಮದ್ ರಜಾಕ್, ಅಳಿಯನಾದ ಸದ್ದಾಂಗೆ ಬುದ್ದಿವಾದ ಹೇಳಲು ಮುಂದಾದಾಗ, ದಿಢೀರನೆ ಸದ್ದಾಂ ಕಲ್ಲಿನಿಂದ ರಜಾಕ್ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ರಜಾಕ್ ಅವರನ್ನು ತಕ್ಷಣ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ ಕಸಬಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಸದ್ದಾಂನನ್ನು ಪೊಲೀಸರು ಬಂಧಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾಗೆ ಆ್ಯಸಿಡ್ ಎರಚುವುದಾಗಿ ಬೆದರಿಕೆ! ಪತ್ರ ಪೊಲೀಸರಿಗೆ ಹಸ್ತಾಂತರಿಸಿದ ಅಧಿಕಾರಿ
ಶಿಡ್ಲಘಟ್ಟ ಪೌರಾಯುಕ್ತೆಗೆ ಆ್ಯಸಿಡ್ ಎರಚುವುದಾಗಿ ಬೆದರಿಕೆ ಪತ್ರ ಬಂದಿದ್ದು, ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಅನುಮಾನ ವ್ಯಕ್ತವಾಗಿದೆ. ಈ ಹಿಂದೆ ಫ್ಲೆಕ್ಸ್ ತೆರವು ವಿಚಾರಕ್ಕೆ ಸಂಬಂಧಿಸಿ ಪೌರಾಯುಕ್ತೆಯನ್ನು ನಿಂದಿಸಿ ಧಮ್ಕಿ ಹಾಕಿದ್ದ ರಾಜೀವ್ ಗೌಡರನ್ನು ಪಕ್ಷದಿಂದ ಅಮಾನತು ಮಾಡಲು ಕೆಪಿಸಿಸಿಗೆ ಪತ್ರ ಬರೆಯಲಾಗಿದೆ.
ರಾಜ್ಯಪಾಲರ ನಡೆಯಿಂದ BJP ರಾಷ್ಟ್ರ ಗೀತೆ, ಕನ್ನಡಿಗರ ವಿರೋಧಿ ಅನ್ನೋದು ಜಗಜ್ಜಾಹೀರಾಗಿದೆ: ಪ್ರಿಯಾಂಕ್
ಇಂದು ಕನ್ನಡಿಗರ ಅಸ್ಮಿತೆ, ಸಂವಿಧಾನದ ಮೌಲ್ಯಗಳಿಗೆ ಮೊದಲ ಬಾರಿಗೆ ದೊಡ್ಡ ಹೊಡೆತ ಬಿದ್ದಿದೆ. ಜಂಟಿ ಅಧಿವೇಶನವನ್ನು ಉದ್ದೇಶಿಸಿ ಪೂರ್ಣ ಭಾಷಣ ಮಾಡದೆ ರಾಜ್ಯಪಾಲ ಥಾವರ್ ಚಂದ್ರ ಗೆಹ್ಲೋಟ್ ಹೊರನಡೆದಿದ್ದಾರೆ.ರಾಷ್ಟ್ರಗೀತೆ ನುಡಿಸುವ ಮೊದಲೇ ಸದನದಿಂದ ಹೊರನಡೆದು ರಾಷ್ಟ್ರಗೀತೆ ಮತ್ತು ಸಂವಿಧಾನಕ್ಕೆ ಅಪಮಾನಿಸಿದ್ದಾರೆ. ಇವರ ಮೂಲಕ ತಾವು ಸಂವಿಧಾನದ ವಿರೋಧಿಗಳು, ಕನ್ನಡಿಗರನ್ನು ವಿರೋಧಿಸುವವರು ಎಂದು ಬಿಜೆಪಿ ತೋರ್ಪಡಿಸಿಕೊಳ್ಳುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಟ್ವೀಟ್ಮಾಡಿದ್ದಾರೆ.
ಸರ್ಕಾರ v/s ಲೋಕಭವನ: ಕಾಂಗ್ರೆಸ್ ನಿಂದ ರಾಜ್ಯಪಾಲರಿಗೆ ಅವಮಾನ ಎಂದು ಬಿಜೆಪಿ ವಾಗ್ದಾಳಿ
ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಲು ಕೇಂದ್ರದ ವಿರುದ್ಧ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ರಾಜ್ಯಪಾಲರ ಭಾಷಣದ ವೇಳೆ ಆಡಳಿತ ಪಕ್ಷದವರು ಅಗೌರವ ತೋರಿದ್ದು ಖಂಡನೀಯ. ಇದು ಪ್ರಜಾಪ್ರಭುತ್ವದ ಕಗ್ಗೊಲೆ. ಮನ್ ರೇಗಾ ಸುಧಾರಣೆಗಳ ವಿರುದ್ಧ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ಗೂಂಡಾಗಿರಿ ಪ್ರದರ್ಶನಕ್ಕೆ ಸಿಎಂ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಆಗ್ರಹಿಸಿದ್ದಾರೆ.
Trump 2.0: ಒಂದು ವರ್ಷ, ನೂರೆಂಟು ಲೆಕ್ಕಾಚಾರ; ನಿಂತ ಯುದ್ಧಗಳ ಹಿಂದಿನ ಸತ್ಯವೇನು?
ವಾಷಿಂಗ್ಟನ್ ಡಿ.ಸಿ: ಅಮೆರಿಕದ ಅಧ್ಯಕ್ಷೀಯ ಪೀಠದಲ್ಲಿ ಡೊನಾಲ್ಡ್ ಟ್ರಂಪ್ ಅವರು ಕುಳಿತು ಇಂದಿಗೆ (ಜನವರಿ 2026) ಸರಿಯಾಗಿ ಒಂದು ವರ್ಷ. ಶ್ವೇತಭವನದ ಓವಲ್ ಆಫೀಸ್ನಲ್ಲಿ ಕುಳಿತಿರುವ ಟ್ರಂಪ್ ಅವರ ಕಣ್ಣು ಈಗ ಪಕ್ಕದ ಗೋಡೆಯ ಮೇಲಿರುವ ಗಡಿಯಾರದ ಮೇಲಲ್ಲ, ಬದಲಿಗೆ ನಾರ್ವೆಯ ಓಸ್ಲೋದಲ್ಲಿ ನೀಡಲಾಗುವ 'ನೋಬೆಲ್ ಶಾಂತಿ ಪುರಸ್ಕಾರ'ದ ಮೇಲಿದೆ. ಕಳೆದ 365 ದಿನಗಳಲ್ಲಿ ಜಗತ್ತು ಕಂಡದ್ದು
ಪುತ್ತೂರು ಯುವತಿಗೆ ವಂಚನೆ ಪ್ರಕರಣ | ಜ.31ರೊಳಗೆ ಮದುವೆ ನಡೆಯದಿದ್ದರೆ ಫೆ.7ರಂದು ಮಗುವಿಗೆ ನಾಮಕರಣ: ಪ್ರತಿಭಾ ಕುಳಾಯಿ
ಮಂಗಳೂರು, ಜ.22: ಪುತ್ತೂರಿನಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಪ್ರೀತಿಸಿ ಮಗುವಾದ ಬಳಿಕ ಮದುವೆಯಾಗಲು ನಿರಾಕರಿಸಿರುವ ಪ್ರಕರಣದಲ್ಲಿ ಸಂಧಾನಕ್ಕೆ ಯುವಕನ ಮನೆಯವರನ್ನು ಒಪ್ಪಿಸಲು ಸಂಧಾನಕ್ಕೆ ಮುಂದಾರುವ ಹಿನ್ನೆಲೆಯಲ್ಲಿ ಜ.24ರಂದು ನಿಗದಿಯಾಗಿದ್ದ ಮಗುವಿನ ನಾಮಕರಣವನ್ನು ಸದ್ಯ ಕೈಬಿಡಲಾಗಿದೆ. ಜನವರಿ 31ರೊಳಗೆ ಮದುವೆ ನಡೆಯದಿದ್ದರೆ ಫೆಬ್ರವರಿ 7ರಂದು ನಾಮಕರಣ ಕಾರ್ಯಕ್ರಮ ನಡೆಯಲಿದೆ. ನಂತರ ಯಾವುದೇ ಸಂಧಾನ ಇಲ್ಲ ಎಂದು ಹಿಂದುಳಿದ ವರ್ಗಗಳ ಅಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಹೇಳಿದ್ದಾರೆ. ಮಂಗಳೂರು ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜ.24ರಂದು ಕಲ್ಲಡ್ಕದಲ್ಲಿ ಮಗುವಿಗೆ ನಾಮಕರಣಕ್ಕೆ ದಿನ ನಿಗದಿಪಡಿಸಲಾಗಿತ್ತು. ಆದರೆ ಮಗುವಿನ ಅಜ್ಜಿ ನಮಿತಾಗೆ ಆಚಾರ್ಯ ಸಮುದಾಯದ ಉಡುಪಿ ಒಕ್ಕೂಟದ ಪದಾಧಿಕಾರಿ ಮಧು ಆಚಾರ್ಯ ಎಂಬವರು ಕರೆ ಮಾಡಿ ಕೃಷ್ಣ ಜೆ.ರಾವ್ ಅವರ ಕುಟುಂಬ ಮದುವೆಗೆ ಒಪ್ಪಿರುವುದಾಗಿ ತಿಳಿಸಿದ್ದಾರೆ. ಸ್ವಲ್ಪ ಕಾಲಾವಕಾಶ ಕೇಳಿದ್ದಲ್ಲದೆ ತೊಟ್ಟಿಲು ಹಾಕುವ ಕಾರ್ಯಕ್ರಮ ಬೇಡ ಎಂದು ಮನವಿ ಮಾಡಿದ್ದಾರೆ. ಇದಕ್ಕೆ ಒಪ್ಪಿ ನಾಮಕರಣದ ದಿನ ಬದಲಾಯಿಸಲಾಗಿದೆ. ಹಿಂದೆಯೂ ಆರು ತಿಂಗಳು ನಮ್ಮನ್ನು ದಾರಿ ತಪ್ಪಿಸಲಾಗಿದ್ದು ಈ ಬಾರಿ ಹಾಗಾಗಲು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ. ಸಂಧಾನಕ್ಕೆ ನಮಿತಾ ಮತ್ತು ಆಕೆಯ ಮಗಳು ಮಾತ್ರ ಬರಬೇಕು ಎಂಬ ಷರತ್ತನ್ನು ವಿಧಿಸಿದ್ದು, ನಾವದನ್ನು ಒಪ್ಪುವುದಿಲ್ಲ ಎಂದು ಕುಟುಂಬದವರು ತಿಳಿಸಿದ್ದಾರೆ. ಯಾಕೆಂದರೆ ಅವರಲ್ಲಿಗೆ ಹೋದರೆ ಏನು ಬೇಕಾದರೂ ಆಗಬಹುದೆನ್ನುವ ಭಯವಿದೆ. ಆದರೂ ಸಂಧಾನಕ್ಕೆ ನಾನು ಹಾಗೂ ನಂಜುಂಡಿ ಹೋಗುವುದಿಲ್ಲ. ಸಂಧಾನ ಪುತ್ತೂರು ಪೊಲೀಸ್ ಠಾಣೆಯಲ್ಲೇ ಆಗಲಿ ಅಥವಾ ಮಂಗಳೂರು ಎಸ್ಪಿ ಅವರ ಬಳಿ ನಡೆಯಲಿ ಎಂದು ಪ್ರತಿಭಾ ಬೇಡಿಕೆ ಮುಂದಿಟ್ಟಿದ್ದಾರೆ. ಕೃಷ್ಣ ಜೆ.ರಾವ್ ಕುಟುಂಬ ಮದುವೆಗೆ ಒಪ್ಪುವುದಿಲ್ಲ ಎಂದು ಪುತ್ತೂರು ಶಾಸಕರೂ ಹೇಳಿದ್ದಾರೆ. ಈಗಾಗಲೇ ಈ ಪ್ರಕರಣ ನ್ಯಾಯಾಲಯದಲ್ಲಿದ್ದು ಕೇಸಿನಿಂದ ಹೊರಬರಲು ನಾಟಕ ನಡೆಯುತ್ತಿರುವ ಶಂಕೆ ಇದೆ. ಹಿಂದೆಯೂ ಮಗುವನ್ನು ಆಶ್ರಮಕ್ಕೆ ನೀಡಬೇಕು, ಕೇಸು ಹಿಂದಕ್ಕೆ ಪಡೆಯಬೇಕು, ಮದುವೆಯ ನಂತರ ವಿಚ್ಛೇದನ ಪಡೆಯುವಂತೆ ಬೇಡಿಕೆ ಇಟ್ಟಿದ್ದರು ಎಂದು ಪ್ರತಿಭಾ ಆರೋಪಿಸಿದರು. ಮದುವೆ ಕಾನೂನುಬದ್ಧವಾಗಿ ಆನ್ ಲೈನ್ ಅಥವಾ ಯಾವುದೇ ರೀತಿಯಲ್ಲಾದರೂ ಆಗಲಿ. ಯಾವುದೇ ರೀತಿಯಲ್ಲಾದರೂ ಈ ಪ್ರಕರಣ ಅಂತ್ಯವಾಗಬೇಕು, ಇಬ್ಬರ ತಪ್ಪಿಗೂ ಪ್ರಾಯಶ್ಚಿತವಾಗಬೇಕು. ಮದುವೆಯಾಗಿ ಒಂದಾಗದಿದ್ದರೆ ಕಾನೂನು ಪ್ರಕಾರ ವಿಚ್ಛೇದನ ಪಡೆಯಲಿ. ಯಾವುದೇ ಗೋಷ್ಠಿ ಅಥವಾ ಸಭೆಗಳಿಗೆ ಹೋಗಬಾರದೆಂದು ಷರತ್ತು ವಿಧಿಸಿದ್ದರಿಂದ ನಮಿತಾ ಭಾಗವಹಿಸಿಲ್ಲ. ಜ.31ರೊಳಗೆ ಮದುವೆ ಆಗದಿದ್ದರೆ ಮುಂದಕ್ಕೆ ಸಂಧಾನವೇ ಇಲ್ಲ, ಫೆ.7ರಂದು ಅದ್ಧೂರಿಯಾಗಿ ಮಗುವಿನ ನಾಮಕರಣ ನಡೆಯಲಿದೆ. ಜೊತೆಗೆ ಕಾನೂನಾತ್ಮಕ ಹೋರಾಟ ಮುಂದುವರಿಯಲಿದೆ ಎಂದು ಪ್ರತಿಭಾ ಎಚ್ಚರಿಸಿದರು.
ಸೇನಾ ವಾಹನ ಕಂದಕಕ್ಕೆ ಬಿದ್ದು 10 ಯೋಧರ ದುರ್ಮರಣ - ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ನಡೆದ ದುರಂತ
ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸೇನಾ ವಾಹನ ಕಂದಕಕ್ಕೆ ಉರುಳಿ ಭೀಕರ ದುರಂತ ಸಂಭವಿಸಿದೆ. 17 ಯೋಧರಿದ್ದ ವಾಹನ ನಿಯಂತ್ರಣ ಕಳೆದುಕೊಂಡು 200 ಅಡಿ ಆಳಕ್ಕೆ ಬಿದ್ದ ಪರಿಣಾಮ 10 ಮಂದಿ ವೀರ ಯೋಧರು ಹುತಾತ್ಮರಾಗಿದ್ದಾರೆ. ಖಾನಿ ಟಾಪ್ ಬಳಿ ನಡೆದ ಈ ದುರ್ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಕಲಬುರಗಿ | ತೊಗರಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಅಹೋರಾತ್ರಿ ಧರಣಿ ಆರಂಭಿಸಿದ ರೈತರು
ಕಲಬುರಗಿ : ಎಂ.ಎಸ್.ಸ್ವಾಮಿನಾಥನ್ ವರದಿ ಪ್ರಕಾರ ತೊಗರಿಗೆ ಬೆಂಬಲ ಬೆಲೆ ಘೋಷಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಸಂಯುಕ್ತ ಹೋರಾಟ ಕರ್ನಾಟಕ ಸಮಿತಿ ವತಿಯಿಂದ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಎತ್ತಿನಬಂಡಿ ಹಾಗೂ ಟ್ರ್ಯಾಕ್ಟರ್ ಗಳನ್ನು ಮುಂದಿಟ್ಟುಕೊಂಡು ರೈತರು ಆಹೋರಾತ್ರಿ ಧರಣಿ ಪ್ರಾರಂಭಿಸಿದರು. ಪ್ರತಿ ಟನ್ ತೊಗರಿಗೆ 12,500 ರೂ. ಬೆಂಬಲ ಬೆಲೆ ನೀಡಬೇಕು, ಹಾಲು ಉತ್ಪಾದಕರ ಸಹಕಾರ ಸಂಘಗಳ (ಕೆಎಂಎಫ್) ಮಾದರಿಯಲ್ಲಿ ತೊಗರಿ ಖರೀದಿ ಕೇಂದ್ರ ಸ್ಥಾಪಿಸಬೇಕು, ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ತಲಾ 1,000 ರೂಪಾಯಿ ಪ್ರೋತ್ಸಾಹಧನ ನೀಡಬೇಕು. ಹೊರದೇಶದ ತೊಗರಿಗೆ ಶೇ.50ರಷ್ಟು ಆಮದು ಶುಲ್ಕ ಹಾಕಬೇಕು, ತೊಗರಿ ತುರ್ತು ಖರೀದಿ ಕೇಂದ್ರ ಸ್ಥಾಪನೆ, ಬೆಳೆ ವಿಮೆ ಮಂಜೂರು ಸೇರಿದಂತೆ ಹಲವು ಬೇಡಿಕೆಗಳು ಈಡೇರಿಸಬೇಕೆಂದು ರೈತರು ಆಗ್ರಹಿಸಿದರು. ಅಲ್ಲದೆ, ರಾಷ್ಟ್ರೀಕೃತ ಬ್ಯಾಂಕುಗಳ ರೈತರ ಸಾಲಮನ್ನಾ ಮಾಡಬೇಕು, ರೈತರ, ಕೃಷಿ ಕಾರ್ಮಿಕರ ವಿರೋಧಿಯಾಗಿರುವ ವಿಬಿ ಜಿರಾಮ್ ಜಿ ಕಾಯ್ದೆ ಜಾರಿಗೊಳಿಸುತ್ತಿರುವುದನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು. ಧರಣಿಯಲ್ಲಿ ರೈತ ಮುಖಂಡರಾದ ಶರಣಬಸಪ್ಪ ಮಮಶೆಟ್ಟಿ, ಮಹೇಶ್ ಎಸ್.ಬಿ., ಭೀಮಾಶಂಕರ ಮಾಡ್ಯಾಳ, ಮೌಲಾ ಮುಲ್ಲಾ, ಉಮಾಪತಿ ಪಾಟೀಲ್, ಕರೆಪ್ಪ ಕರಗೊಂಡ, ಸಿದ್ದು ಎಸ್.ಎಲ್, ಸಿದ್ದಪ್ಪ ಕಲಶೆಟ್ಟಿ, ಮೌನೇಶ್ ನಾಲವಾರ, ವೀರಣ್ಣ ಗಂಗಾಣಿ, ಸಿದ್ದಮ್ಮ ಮುತ್ತಗಿ, ಜಾಫರ್ ಖಾನ್, ಗುಂಡಪ್ಪ ಅರಣಕಲ, ಸಿದ್ಧಾರ್ಥ್ ಠಾಕೂರ್, ಸಲೀಂ ಅಹಮದ್ ಚಿತ್ತಾಪುರ, ವಿದ್ಯಾಸಾಗರ ಮಾಲಿ ಬಿರಾದಾರ, ಪ್ರಭು ಖೇಣಿ, ಶಂಕರ ಹೂಗಾರ್, ಶ್ಯಾಮರಾವ್ ದಿಗ್ಗಾಂವ, ಇಬ್ರಾಹಿಂ ಪಟೇಲ್, ಸೇರಿದಂತೆ ಮತ್ತಿತರರು ಹಾಜರಿದ್ದರು.
Donald Trump: ಡೊನಾಲ್ಡ್ ಟ್ರಂಪ್ ಅಧಿಕಾರಕ್ಕೆ ಬಂದು 1 ವರ್ಷ, ಯುರೋಪ್ ಒಕ್ಕೂಟ ಗಿರಗಿರ!
ಡೊನಾಲ್ಡ್ ಟ್ರಂಪ್ 2ನೇ ಬಾರಿ ಅಮೆರಿಕ ಅಧ್ಯಕ್ಷರಾಗಿ ಅಧಿಕಾರಕ್ಕೆ ಬಂದು ಇದೀಗ 1 ವರ್ಷ ತುಂಬಿದೆ. ಇಂತಹ ಸಮಯದಲ್ಲಿ ಅಮೆರಿಕದ ಮಿತ್ರ ರಾಷ್ಟ್ರಗಳಲ್ಲಿ ಖುಷಿಗಿಂತ ನೋವೇ ಹೆಚ್ಚಾಗಿದೆ, ಅದ್ಯಾಕೆ ಅಂದ್ರೆ ಡೊನಾಲ್ಡ್ ಟ್ರಂಪ್ ಅಧಿಕಾರಕ್ಕೆ ಬಂದ ನಂತರ ಅಮೆರಿಕದ ಸಾಲು ಸಾಲು ಮಿತ್ರ ರಾಷ್ಟ್ರಗಳು ಸಮಸ್ಯೆ ಸುಳಿಗೆ ಸಿಲುಕಿವೆ. ಪ್ರಮುಖವಾಗಿ ಯುರೋಪ್ ಒಕ್ಕೂಟ ಟ್ರಂಪ್ ಅವರ ಕಾಲಘಟ್ಟದಲ್ಲಿ
ಪುತ್ತೂರು | ಜಡ್ಜ್ ಎದುರಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಆಸ್ಪತ್ರೆಗೆ ದಾಖಲು
ಪುತ್ತೂರು: ಜಡ್ಜ್ ಎದುರಲ್ಲೇ ವ್ಯಕ್ತಿಯೊರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ಮಧ್ಯಾಹ್ನ ಪುತ್ತೂರಿನ 5ನೇ ಹೆಚ್ಚುವರಿ ನ್ಯಾಯಾಲಯದಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದವರನ್ನು ಪುತ್ತೂರು ತಾಲೂಕಿನ ಕಾವು ಮಾನ್ಯಡ್ಕ ನಿವಾಸಿ ರವಿ (35) ಎಂದು ಗುರುತಿಸಲಾಗಿದೆ. ರವಿ ಮತ್ತು ಆತನ ಪತ್ನಿ ವಿದ್ಯಾಶ್ರೀ ನಡುವೆ ಕಳೆದ ಕೆಲ ದಿನಗಳಿಂದ ಕಲಹ ನಡೆಯುತ್ತಿತ್ತು. ಎರಡು ದಿನಗಳ ಹಿಂದೆ ಪತ್ನಿಯ ಕುತ್ತಿಗೆ ಹಿಸುಕಿ ಕೊಲೆ ಯತ್ನ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಗಂಡ–ಹೆಂಡತಿ ನಡುವಿನ ವಿವಾದ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಬುಧವಾರ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಇಬ್ಬರ ನಡುವೆ ವಿಚ್ಛೇದನ ಸಂಬಂಧ ಮಾತುಕತೆ ಕೂಡ ನಡೆದಿತ್ತು. ಠಾಣೆಗೆ ಹಾಜರಾಗುವಂತೆ ಪೊಲೀಸರು ರವಿಗೆ ಸೂಚನೆ ನೀಡಿದ್ದರು. ಈ ಮಧ್ಯೆ ರವಿ ನೇರವಾಗಿ ಪುತ್ತೂರು ನ್ಯಾಯಾಲಯದ ಆವರಣಕ್ಕೆ ಆಗಮಿಸಿ, 5ನೇ ಹೆಚ್ಚುವರಿ ನ್ಯಾಯಾಲಯದ ಜಡ್ಜ್ ಎದುರಲ್ಲಿಯೇ ವಿಷ ಸೇವಿಸಿದ್ದಾನೆ. ರವಿ ವಿಷ ಸೇವಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಇದ್ದುದರಿಂದ ನ್ಯಾಯಾಧೀಶರು ಮುಂಚಿತವಾಗಿಯೇ ನ್ಯಾಯಾಲಯದ ಸಿಬ್ಬಂದಿಗೆ ಎಚ್ಚರಿಕೆ ನೀಡಿದ್ದರು ಎಂದು ತಿಳಿದುಬಂದಿದೆ. ವಿಷ ಸೇವಿಸಿದ ಬಳಿಕ ರವಿ ನ್ಯಾಯಾಲಯದ ಆವರಣದಲ್ಲೇ ವಾಂತಿ ಮಾಡಿದ್ದು, ತಕ್ಷಣ ಎಚ್ಚೆತ್ತ ಸಿಬ್ಬಂದಿ ಹಾಗೂ ಸಾರ್ವಜನಿಕರು ಆತನನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಗೇರು ತೋಟದಲ್ಲಿ ಸಿಂಪಡಣೆಗೆ ಬಳಸುವ, ಎಂಡೋಸಲ್ಫಾನ್ ನಿಷೇಧದ ಬಳಿಕ ಮಾರುಕಟ್ಟೆಯಲ್ಲಿ ಲಭ್ಯವಿರುವ ‘ಕರಾಟೆ’ ಎಂಬ ಕೀಟನಾಶಕವನ್ನು ರವಿ ಸೇವಿಸಿದ್ದಾನೆ ಎನ್ನಲಾಗಿದೆ. ಆತನ ಆರೋಗ್ಯ ಸ್ಥಿತಿ ಗಂಭೀರಗೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನಿಂದ ಮಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆತ್ಮಹತ್ಯೆ ಯತ್ನದ ಬಳಿಕ ದಂಪತಿ ಒಂದಾಗಿ, ಮಂಗಳೂರು ಆಸ್ಪತ್ರೆಗೆ ಸಾಗುವ ವೇಳೆ ಒಂದೇ ಆಂಬ್ಯುಲೆನ್ಸ್ನಲ್ಲಿ ತೆರಳಿದ್ದಾರೆ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.
ಮನರೇಗಾ ಯೋಜನೆಯನ್ನು ವಿಬಿ ಜಿ ರಾಂ ಜಿ ಎಂದು ಮರುನಾಮಕರಣ ಮಾಡಿದ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇದನ್ನು ಬಡವರ ಕೆಲಸದ ಅಧಿಕಾರವನ್ನು ಕಸಿದುಕೊಳ್ಳುವ ಹುನ್ನಾರ ಎಂದು ಟೀಕಿಸಿದ್ದಾರೆ. ಇದೇ ವೇಳೆ ವಿಬಿ ಜಿ ರಾಮ್ ಜಿ ಹೆಸರನ್ನು ಸರಿಯಾಗಿ ಉಚ್ಛರಿಸದ ರಾಹುಲ್ ಗಾಂಧಿ, ತಮಗೆ ಆ ಹೆಸರೇ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನು ಖಂಡಿಸಿರುವ ಬಿಜೆಪಿ, ರಾಹುಲ್ ಗಾಂಧಿ ಅವರನ್ನು ಹಿಂದೂ ವಿರೋಧಿ ಎಂದು ಕರೆದಿದೆ.
ಆಸ್ಟ್ರೇಲಿಯಾದಲ್ಲಿ ಮತ್ತೆ ಗುಂಡಿನ ಮೊರೆತ ಕೇಳಿಬಂದಿದೆ. ನ್ಯೂ ಸೌತ್ ವೇಲ್ಸ್ ರಾಜ್ಯದ ಲೇಕ್ ಕಾರ್ಗೆಲ್ಲಿಗೋ ಪಟ್ಟಣದಲ್ಲಿ ಗುರುವಾರ ಗುಂಡಿನ ದಾಳಿ ನಡೆದಿದೆ. ಈ ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ. ಬಾಂಡಿ ಬೀಚ್ ಸಾಮೂಹಿಕ ಶೂಟಿಂಗ್ ಪ್ರಕರಣದ ರಾಷ್ಟ್ರೀಯ ಶೋಕಾಚರಣೆ ದಿನವೇ ಈ ಘಟನೆ ನಡೆದಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.
ರಾಜ್ಯಪಾಲರ ಮೂಲಕ ಕನ್ನಡಿಗರಿಗೆ ಬಿಜೆಪಿಯಿಂದ ಅವಮಾನ : ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಸಾಂಸ್ಕೃತಿಕ, ಆರ್ಥಿಕ ಹಾಗೂ ಆಡಳಿತಾತ್ಮಕವಾಗಿ ಕನ್ನಡಿಗರನ್ನು ಮತ್ತು ಕರ್ನಾಟಕವನ್ನು ಕಡೆಗಣಿಸಿ ಶೋಷಿಸಿದ್ದ ಬಿಜೆಪಿ ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ ರಾಜ್ಯಪಾಲರ ಮೂಲಕವೇ ಕನ್ನಡಿಗರಿಗೆ ಅವಮಾನ ಮಾಡಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಗುರುವಾರ ವಿಧಾನಮಂಡಲದಲ್ಲಿ ನಡೆದ ಬೆಳವಣಿಗೆಗಳ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದದೆ ರಾಜ್ಯಪಾಲರು ನಡೆದುಕೊಂಡಿರುವುದು ಸಂವಿಧಾನಕ್ಕೆ ಮಾಡಿದ ಅವಮಾನವಾಗಿದೆ ಎಂದು ಹೇಳಿದ್ದಾರೆ. ‘ರಾಷ್ಟ್ರಗೀತೆ ನುಡಿಸುವವರೆಗೂ ಕಾಯದೆ ಎದ್ದು ಹೊರಟ ರಾಜ್ಯಪಾಲರು ಶಿಷ್ಟಾಚಾರವನ್ನು ಬದಿಗೊತ್ತಿ ರಾಷ್ಟ್ರಗೀತೆಗೂ ಅವಮಾನಿಸಿದ್ದಾರೆ. ಈ ಮೂಲಕ ಬಿಜೆಪಿ ರಾಷ್ಟ್ರ ಗೀತೆಯ ವಿರೋಧಿ, ಸಂವಿಧಾನ ವಿರೋಧಿ, ಕನ್ನಡಿಗರ ವಿರೋಧಿ ಎನ್ನುವುದು ಜಗಜ್ಜಾಹೀರಾಗಿದೆ’ ಎಂದಿದ್ದಾರೆ. ‘ಕನ್ನಡಿಗರನ್ನು ಉದ್ದೇಶಿಸಿ ಪೂರ್ಣ ಭಾಷಣ ಮಾಡದಷ್ಟು ತೀವ್ರ ಅಸಹನೆಯನ್ನು ತೋರಿರುವ ರಾಜ್ಯಪಾಲರು ಬಿಜೆಪಿಯ ದರ್ಪ, ದ್ರಾಷ್ಟ್ಯದ ವಕ್ತಾರರಾಗಿ ನಿರೂಪಿಸಿದ್ದಾರೆ. ಅಸಡ್ಡೆಯಿಂದ ಕೂಡಿದ ನಾಲ್ಕು ಸಾಲಿನ ಮಾತು, ಸರ್ಕಾರದ ಭಾಷಣದ ತಿರಸ್ಕಾರವು ಸಂವಿಧಾನದ ಆಶಯಗಳ ಉಲ್ಲಂಘನೆ ಮಾತ್ರವಲ್ಲ, ಕನ್ನಡಿಗರಿಗೆ ಎಸಗಿದ ಘೋರ ಅವಮಾನ. ರಾಜ್ಯಪಾಲರ ಮೂಲಕ ಒಕ್ಕೂಟ ವ್ಯವಸ್ಥೆಯ ಮೌಲ್ಯಗಳನ್ನು ನೆಲಕ್ಕೆ ಹಾಕಿ ಹೊಸಕುತ್ತಿರುವ ಬಿಜೆಪಿಗೆ ಕನ್ನಡಿಗರು ಪಾಠ ಕಲಿಸುವುದು ನಿಶ್ಚಿತ’ ಎಂದು ಹೇಳಿದ್ದಾರೆ. ಬಿಜೆಪಿ ಕನ್ನಡಿಗರನ್ನು ಅವಮಾನಿಸುವ ಪ್ರಕ್ರಿಯೆ ಮುಂದುವರೆದಿದೆ, ಸಾಂಸ್ಕೃತಿಕವಾಗಿ, ಆರ್ಥಿಕವಾಗಿ ಮತ್ತು ಆಡಳಿತಾತ್ಮಕವಾಗಿ ಕನ್ನಡಿಗರನ್ನು ಮತ್ತು ಕರ್ನಾಟಕವನ್ನು ಕಡೆಗಣಿಸಿ, ಶೋಷಿಸಿದ್ದ ಬಿಜೆಪಿ ಈಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ ರಾಜ್ಯಪಾಲರ ಮೂಲಕವೇ ಕನ್ನಡಿಗರನ್ನು ಅವಮಾನಿಸಿದೆ. ರಾಷ್ಟ್ರಗೀತೆ ನುಡಿಸುವವರೆಗೂ ಕಾಯದೆ ಎದ್ದು ಹೊರಟ… — Priyank Kharge / ಪ್ರಿಯಾಂಕ್ ಖರ್ಗೆ (@PriyankKharge) January 22, 2026
ಪ್ರತಿಭಾವಂತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ! ಕರ್ನಾಟಕ ಸರ್ಕಾರದ 'ಪ್ರೋತ್ಸಾಹ ಧನ ಯೋಜನೆ'ಯಡಿ SSLC ಯಿಂದ ಸ್ನಾತಕೋತ್ತರ ಪದವಿವರೆಗೆ ಪ್ರಥಮ ಪ್ರಯತ್ನದಲ್ಲೇ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದವರಿಗೆ 7,500 ರಿಂದ 50,000 ರೂಪಾಯಿಗಳವರೆಗೆ ಆರ್ಥಿಕ ನೆರವು. ನಿಮ್ಮ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ. ಅರ್ಜಿ ಸಲ್ಲಿಸಲು 2026ರ ಜನವರಿ 31 ಕೊನೆಯ ದಿನಾಂಕವಾಗಿದೆ. ಈ ಕುರಿತ ವಿವರಗಳು ಇಲ್ಲಿವೆ.
ಸರಕಾರ ಸಿದ್ಧಪಡಿಸಿದ ಭಾಷಣವನ್ನು ವರ್ಷದ ಆರಂಭದಲ್ಲಿ ನಡೆಯುವ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಓದುವ ಮೂಲಕ ಇಡೀ ವರ್ಷದ ಕಲಾಪಕ್ಕೆ ಚಾಲನೆ ನೀಡಲಾಗುತ್ತದೆ. ಆದರೆ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸರಕಾರ ಸಿದ್ಧಪಡಿಸಿದ ಭಾಷಣವನ್ನು ಓದಲು ನಿರಾಕರಿಸಿದ್ದಾರೆ. ಜಂಟಿ ಅಧಿವೇಶನದಲ್ಲಿ ಇಂದು (ಗುರುವಾರ)ಗೆಹ್ಲೋಟ್ ಅವರು ತಾವೇ ಸಿದ್ಧಪಡಿಸಿದ ಎರಡು ಸಾಲಿನ ಭಾಷಣವನ್ನು ಓದಿ ಸದನದಿಂದ ಹೊರನಡೆದಿದ್ದಾರೆ. ಮನರೇಗಾ ಯೋಜನೆಯ ಹೆಸರನ್ನು ಬದಲಾವಣೆ ಮಾಡಿದ ಕೇಂದ್ರ ಸರಕಾರದ ಕ್ರಮ ಖಂಡಿಸಿ, ರಾಜ್ಯ ಸರಕಾರ ಜನವರಿ 31ರವರೆಗೆ ವಿಧಾನಮಂಡಲದ ವಿಶೇಷ ಅಧಿವೇಶನವನ್ನು ಕರೆದಿದೆ. ಆದಾಗ್ಯೂ, MGNREGA ಯೋಜನೆಯನ್ನು ಪರಿಷ್ಕರಿಸುವ ಗುರಿಯನ್ನು ಹೊಂದಿರುವ ವಿವಾದಾತ್ಮಕ ಶಾಸನವನ್ನು ಉಲ್ಲೇಖಿಸುವ ನಿರ್ದಿಷ್ಟ ಪ್ಯಾರಾಗಳಿಗೆ ರಾಜ್ಯಪಾಲ ಗೆಹ್ಲೋಟ್ ಆಕ್ಷೇಪ ವ್ಯಕ್ತಪಡಿಸಿದ್ದು, ಭಾಷಣವು ಸರಕಾರದ ಪ್ರಚಾರಕ್ಕೆ ಸಮನಾಗಿದೆ ಎಂದು ಹೇಳಿದ್ದರು. ರಾಜ್ಯಪಾಲರು Vs ಕರ್ನಾಟಕ ಸರಕಾರ ಅಧಿವೇಶನ ಆರಂಭವಾಗುವ ಮುನ್ನಾದಿನ (ಬುಧವಾರ ) ರಾಜ್ಯ ಸರಕಾರ ಸಿದ್ಧಪಡಿಸಿರುವ ಭಾಷಣದಲ್ಲಿ ಕೇಂದ್ರ ಸರಕಾರವನ್ನು ಟೀಕಿಸುವ ಅಂಶಗಳಿವೆ ಎಂಬ ಆಕ್ಷೇಪ ಎತ್ತಿದ ಗೆಹ್ಲೋಟ್ ಜಂಟಿ ಅಧಿವೇಶನದಲ್ಲಿ ಭಾಷಣ ಓದಲು ನಿರಾಕರಿಸಿದ್ದರು. ಆಮೇಲೆ ಸಾಂವಿಧಾನಿಕ ಬಿಕ್ಕಟ್ಟು ತಪ್ಪಿಸಲು ಹಲವು ಸುತ್ತಿನ ಚರ್ಚೆಗಳು ನಡೆದಿವೆ. ಚರ್ಚೆಗಳ ನಂತರ ಭಾಷಣದಲ್ಲಿ ‘ವಿಬಿ ಜಿ ರಾಮ್ ಜಿ ಕಾಯ್ದೆ ಭ್ರಷ್ಟಾಚಾರಕ್ಕೆ ಆಸ್ಪದ ಮಾಡಿಕೊಡುತ್ತದೆ’ ಹಾಗೂ ‘ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಡುತ್ತದೆ’ ಎಂಬ ಅಂಶವನ್ನು ಕೈಬಿಡಲು ಸರಕಾರ ತೀರ್ಮಾನಿತ್ತು. ಇಂದು ವಿಧಾನಸೌಧಕ್ಕೆ ಬಂದ ಗೆಹ್ಲೋಟ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಸಭಾ ಸ್ಪೀಕರ್ ಯು ಟಿ ಖಾದರ್, ವಿಧಾನ ಪರಿಷತ್ ಅಧ್ಯಕ್ಷ ಬಸವರಾಜ ಹೊರಟ್ಟಿ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಬರಮಾಡಿಕೊಂಡರು. ಆಮೇಲೆ ರಾಜ್ಯ,ಪಾಲರು ಸರಕಾರದ ಭಾಷಣವನ್ನು ಓದುವುದು ಬಿಟ್ಟು ತಾವೇ ಸಿದ್ದಪಡಿಸಿದ ಎರಡು ಸಾಲಿನ ಭಾಷಣವನ್ನು ಓದಿ ಮುಗಿಸಿ ಸದನದಿಂದ ಹೊರನಡೆದರು. ರಾಜ್ಯಪಾಲರು ಸದನದಿಂದ ಹೊರಗೆ ಹೋಗುತ್ತಿದ್ದಂತೆ ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯರಾದ ಎಸ್. ರವಿ, ಬಿ.ಕೆ. ಹರಿಪ್ರಸಾದ್ ಸೇರಿದಂತೆ ಕೆಲವು ಶಾಸಕರು ತಡೆಯಲು ಮುಂದಾದರು. ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಶಾಸಕರು ಘೋಷಣೆ ಕೂಗಿದರು. ನಂತರ ಸಭಾಧ್ಯಕ್ಷ ಯು.ಟಿ. ಖಾದರ್, ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರನ್ನು ಬೀಳ್ಕೊಟ್ಟರು. ರಾಜ್ಯಪಾಲರ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ: ಸಿದ್ದರಾಮಯ್ಯ ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿದ ಕರ್ನಾಟಕ ಸಿಎಂ ಸಿದ್ದರಾಮಯ್ಯ ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ. ಇದನ್ನು ನಾವು ಖಂಡಿಸುತ್ತೇವೆ. ಈ ವಿಚಾರದ ಬಗ್ಗೆ ಸುಪ್ರೀಂ ಕೋರ್ಟ್ನಲ್ಲಿ ಮೊಕದ್ದಮೆ ಹೂಡುವ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಇಂದು ವರ್ಷದ ಮೊದಲ ಜಂಟಿ ಅಧಿವೇಶನ ಮತ್ತು ವಿಶೇಷ ಅಧಿವೇಶನವನ್ನು ಕರೆಯಲಾಗಿತ್ತು. ಮನರೇಗಾ (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ) ರದ್ದುಪಡಿಸಿ, ವಿಬಿಜಿ ರಾಮ್ ಜಿ ( ವಿಕಸಿತ ಭಾರತ - ರೋಜ್ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಎಂಬ ಕಾಯ್ದೆಯನ್ನು ಕೇಂದ್ರ ಸರಕಾರ ಹೊಸದಾಗಿ ರಚಿಸಿದೆ. ಇದಕ್ಕೆ ನಮ್ಮ ಸರಕಾರದ ತೀವ್ರ ವಿರೋಧವಿದೆ. ಆದರೆ ರಾಜ್ಯಪಾಲರು ಹೊಸ ಕಾಯ್ದೆಯನ್ನು ಉದ್ದೇಶಪೂರ್ವಕವಾಗಿ ಸಮರ್ಥಿಸಿಕೊಳ್ಳುತ್ತಿದ್ದಾರೆ. ಅವರು ಕೇಂದ್ರದ ಕಾಯ್ದೆಗಳಿಗೆ ನಾವು ಸಹಕರಿಸಲೇಬೇಕೆಂಬ ನೀತಿಯಂತೆ ನಡೆದುಕೊಳ್ಳುತ್ತಿದ್ದಾರೆ. ಆದರೆ ಆಡಳಿತ ಪಕ್ಷವಾಗಿ ನಮಗೆ ಅದರ ಬಗ್ಗೆ ವಿರೋಧವಿದ್ದು, ಈ ವಿಚಾರಗಳನ್ನು ರಾಜ್ಯಪಾಲರ ಭಾಷಣದಲ್ಲಿ ಸೇರಿಸಲಾಗಿತ್ತು ಎಂದರು. ಮನರೇಗಾ ಕಾಯ್ದೆಯನ್ನು ಮರುಸ್ಥಾಪಿಸುವುದು ಮತ್ತು ಹೊಸ ಕಾಯ್ದೆಯನ್ನು ರದ್ದುಗೊಳಿಸಬೇಕೆಂಬುದು ನಮ್ಮ ಉದ್ದೇಶ. ನಮ್ಮ ಪಕ್ಷ ಮತ್ತು ಸರಕಾರದಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ. ಮನರೇಗಾ ಮರುಸ್ಥಾಪನೆ ಮಾಡುವವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ. ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೆ, ತಾವೇ ಸಿದ್ಧಪಡಿಸಿದ ಭಾಷಣವನ್ನು ಓದುವ ಮೂಲಕ ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಸಂವಿಧಾನದ ಕಲಂ 176 ಮತ್ತು 163 ರಂತೆ ಸಚಿವ ಸಂಪುಟ ಭಾಷಣವನ್ನು ಓದಲೇಬೇಕಾಗಿದ್ದು ವಾಸ್ತವ ಅಂಶ. ಇದು ಸಂವಿಧಾನ ಸ್ಥಾಪನೆಯಾದಾಗಿನಿಂದ ನಡೆದುಕೊಂಡು ಬಂದಿರುವ ಪದ್ಧತಿ. ರಾಜ್ಯಪಾಲರ ಈ ನಡೆ, ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ. ಸಂವಿಧಾನಬದ್ಧವಾದ ವಿಚಾರದ ಉಲ್ಲಂಘನೆಯಾಗಿದೆ. ಇದನ್ನು ನಮ್ಮ ಪಕ್ಷ ಮತ್ತು ಸರಕಾರ, ಶಾಸಕರು, ಎಂಎಲ್ಸಿ ಗಳು ಪ್ರತಿಭಟನೆ ಮೂಲಕ ವಿರೋಧಿಸುತ್ತೇವೆ ಎಂದರು. ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ. ಕೇಂದ್ರ ಸರಕಾರ ತಾವು ಮಾಡಿದ ತಪ್ಪನ್ನು ಮರೆಮಾಚಲು ರಾಜ್ಯಪಾಲರ ಕೈಯಲ್ಲಿ ಬೇರೆ ಭಾಷಣವನ್ನು ಓದಿಸಿದ್ದಾರೆ. ಇದು ಸಂವಿಧಾನ ಬಾಹಿರ ಕೃತ್ಯ. ರಾಜ್ಯಪಾಲರು ತಮ್ಮ ಕರ್ತವ್ಯವನ್ನು ಪಾಲನೆ ಮಾಡಿಲ್ಲ. ಸರಕಾರ ಸಿದ್ಧಪಡಿಸಿರುವ ಭಾಷಣದ ಪ್ರತಿಯನ್ನು ಎಲ್ಲ ಶಾಸಕರು ಎಂಎಲ್ ಸಿಗಳಿಗೆ ವಿತರಿಸಲಾಗಿದೆ. ಇದರ ಬಗ್ಗೆ ಚರ್ಚಿಸಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ರಾಜ್ಯಪಾಲರ ಕಚೇರಿ ಬಿಜೆಪಿ ಕಚೇರಿಯಾಗಿದೆ: ಪ್ರಿಯಾಂಕ್ ಖರ್ಗೆ ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿದ ಸಚಿವ ಪ್ರಿಯಾಂಕ್ ಖರ್ಗೆ 176 ಮತ್ತು 163 ನೇ ವಿಧಿಯನ್ನು ಯಾರು ಉಲ್ಲಂಘಿಸುತ್ತಿದ್ದಾರೆ? ನಮ್ಮ ರಾಜ್ಯಪಾಲರ ಭಾಷಣದಲ್ಲಿರುವುದೆಲ್ಲಾ ಸತ್ಯಗಳು. ಅಲ್ಲಿ ಒಂದೇ ಒಂದು ಸುಳ್ಳೂ ಇಲ್ಲ, ಆದರೂ ರಾಜ್ಯಪಾಲರು ಅದನ್ನು ಓದಲು ಬಯಸುವುದಿಲ್ಲ. ರಾಜ್ಯಪಾಲರ ಕಚೇರಿ ಬಿಜೆಪಿ ಕಚೇರಿಯಾಗಿದೆಯೇ? ಎಂದು ಕೇಳಿದ್ದಾರೆ. ಭಾಷಣ ಓದುವುದು ರಾಜ್ಯಪಾಲರ ಸಾಂವಿಧಾನಿಕ ಕರ್ತವ್ಯ. ಆ ಭಾಷಣ ರಾಜ್ಯ ಹಿತಾಸಕ್ತಿಯ ವಿಷಯಗಳನ್ನು ಮಾತ್ರ ಒಳಗೊಂಡಿದೆ. ಇದನ್ನು ಈಗಾಗಲೇ ಪ್ರಧಾನಿ ನರೇಂದ್ರ ಮೋದಿಯವರ ಮುಂದೆ ಮಂಡಿಸಲಾಗಿದೆ. ಹಾಗೆ ಮಾಡುವುದು ಅವರ ಸಾಂವಿಧಾನಿಕ ಆದೇಶ. ಅವರು ಅದರಿಂದ ಹಿಂದೆ ಸರಿಯುತ್ತಿರುವುದೇಕೆ ಎಂದು ನನಗೆ ತಿಳಿದಿಲ್ಲ. ಒಂದು ಪ್ಯಾರಾಗ್ರಾಫ್ ಸುಳ್ಳು ಅಥವಾ ಕಟ್ಟುಕತೆ ಆಗಿದ್ದರೂ, ಅದನ್ನು ಓದಬೇಡಿ. ಈ 11 ಪ್ಯಾರಾಗ್ರಾಫ್ಗಳು ಈಗಾಗಲೇ ಸಾರ್ವಜನಿಕವಾಗಿ ಚರ್ಚೆಯಾಗುತ್ತಿವೆ. ಅದೇ ಪ್ಯಾರಾಗಳನ್ನು ಪ್ರಧಾನಿ, ಹಣಕಾಸು ಸಚಿವರು ಮತ್ತು RDPR ಸಚಿವರಿಗೆ ಸಲ್ಲಿಸಲಾಗಿದೆ.ಇದರಲ್ಲಿ ತಪ್ಪೇನಿದೆ? ಇದು ಈಗಾಗಲೇ ಸಾರ್ವಜನಿಕ ವಲಯದಲ್ಲಿದೆ. ಅವರು ಸಾರ್ವಜನಿಕರ ಕಾಳಜಿಗಳನ್ನು ಹೇಳುತ್ತಿದ್ದಾರೆ ಅಷ್ಟೆ. ಅವರಿಗೆ ಕರ್ನಾಟಕದ ಜನರ ಬಗ್ಗೆ ಕಾಳಜಿ ಇಲ್ಲದೇ ಇದ್ದರೆ ಅವರು ಎಲ್ಲಿ ಬೇಕಾದರೂ ಹೋಗಲು ಸ್ವತಂತ್ರರು. ರಾಜ್ಯಪಾಲರು ರಾಜ್ಯದ ಕಾಳಜಿಗಳ ಕುರಿತಾದ ಭಾಷಣವನ್ನು ಓದಲು ಬಯಸದಿದ್ದರೆ, ಭಾಷಣವನ್ನು ಸಾರ್ವಜನಿಕಗೊಳಿಸಬೇಕು. ಇದರಿಂದ ಅವರು ಅದು ಸತ್ಯವೋ ಅಥವಾ ಕಟ್ಟುಕತೆಯೋ ಎಂದು ನಿರ್ಧರಿಸಬಹುದು ಎಂದು ಖರ್ಗೆ ಹೇಳಿದ್ದಾರೆ. ಯಾರು ಏನು ಹೇಳಿದ್ರು ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಕರಾಳ ದಿನ. ಸಂವಿಧಾನದ ರಕ್ಷಕನಾಗಬೇಕಾದ ರಾಜ್ಯಪಾಲರು ತಮ್ಮ ಕರ್ತವ್ಯವನ್ನು ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ. ಅವರು ವಿಧಾನಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲು ಬಾಧ್ಯಸ್ಥರು. ಅವರು ಸಂವಿಧಾನವನ್ನು ಅವಮಾನಿಸಿದ್ದಾರೆ. ನಾವು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ರಾಜ್ಯ ಕಾನೂನು ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ. ಈ ಮಧ್ಯೆ, ರಾಜ್ಯ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ರಾಜ್ಯಪಾಲರು ಮತ್ತು ರಾಜ್ಯ ಸರಕಾರದ ನಡುವಿನ ಸಂಘರ್ಷದ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಖಾದರ್, ಸಾಂವಿಧಾನಿಕ ಸಂಸ್ಥೆಗಳು ಪರಸ್ಪರ ಬೆಂಬಲಿಸುತ್ತವೆ. ರಾಜ್ಯಪಾಲರ ಕಚೇರಿ ಒಂದು ಸಾಂವಿಧಾನಿಕ ಸಂಸ್ಥೆ. ಅವು ಒಟ್ಟಾಗಿ ಕೆಲಸ ಮಾಡುತ್ತವೆ. ರಾಜ್ಯಪಾಲರು ಮತ್ತು ಸರಕಾರದ ನಡುವೆ ಯಾವುದೇ ಸಂಘರ್ಷವಿಲ್ಲ ಎಂದಿದ್ದಾರೆ. 11 ಪ್ಯಾರಾಗಳಿಗೆ ರಾಜ್ಯಪಾಲ ಆಕ್ಷೇಪ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಅನುಮೋದನೆಗೊಂಡಿರುವ ಭಾಷಣದಲ್ಲಿರುವ 11 ಪ್ಯಾರಾಗಳಿಗೆ ರಾಜ್ಯಪಾಲರು ಗೆಹ್ಲೋಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಭಾಷಣವನ್ನು ಯಥಾವತ್ ಓದಲು ನಿರಾಕರಿಸಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿಯವರ ಸಲಹೆ ಮೇರೆಗೆ ಕಾನೂನು ಸಚಿವ ಎಚ್.ಕೆ.ಪಾಟೀಲ್, ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಬುಧವಾರ ಸಂಜೆ ಲೋಕಭವನಕ್ಕೆ ಭೇಟಿ ನೀಡಿ ರಾಜ್ಯಪಾಲರ ಮನವೊಲಿಕೆಗೆ ಪ್ರಯತ್ನಿಸಿದ್ದರು. ರಾಜ್ಯಪಾಲರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಎಚ್.ಕೆ. ಪಾಟೀಲ್, ‘ರಾಜ್ಯಪಾಲರು ಸರಕಾರ ಸಿದ್ಧಪಡಿಸಿರುವ ಭಾಷಣ ಓದಬೇಕು ಎಂಬುದನ್ನು ಸಂವಿಧಾನದ 176 ವಿಧಿ ಹೇಳುತ್ತದೆ. ಇದು ರಾಷ್ಟ್ರಪತಿ, ರಾಜ್ಯಪಾಲರಿಗೂ ಅನ್ವಯ. 15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯ ಆಗಿದೆ. ಈ ಎಲ್ಲ ವಿಷಯಗಳನ್ನು ಭಾಷಣದಲ್ಲಿ ಪ್ರಸ್ತಾಪ ಮಾಡಲಾಗಿದೆ. ಈ ಬಗ್ಗೆ ಜಂಟಿ ಸದನದಲ್ಲಿ ತಿಳಿಸಬಾರದು ಅಂದರೆ ಹೇಗೆ?. ರಾಜ್ಯದ ಕಲ್ಯಾಣದ ದೃಷ್ಟಿಯಿಂದ ಹಲವು ಅಂಶಗಳನ್ನು ಭಾಷಣದಲ್ಲಿ ಸೇರಿಸಿದ್ದೇವೆ. ಜಂಟಿ ಅಧಿವೇಶನಕ್ಕೆ ರಾಜ್ಯಪಾಲರು ಬರುವುದಿಲ್ಲ ಎಂದು ಹೇಳಿಲ್ಲ. ಭಾಷಣದಲ್ಲಿರುವ 11 ಪ್ಯಾರಾಗಳನ್ನು ಬದಲಿಸುವಂತೆ ಹೇಳಿದ್ದಾರೆ ಎಂದಿದ್ದರು. ಭಾಷಣ ಮೊಟಕುಗೊಳಿಸಿದ್ದು ಇದೇ ಮೊದಲಲ್ಲ ಕರ್ನಾಟಕದ ಸಂಸದೀಯ ಇತಿಹಾಸದಲ್ಲಿ ಸರಕಾರ ಸಿದ್ಧಪಡಿಸಿದ ಪೂರ್ಣ ಭಾಷಣ ಓದದೆ ಭಾಷಣವನ್ನು ಅರ್ಧದಲ್ಲಿ ಮೊಟಕುಗೊಳಿಸಿ ರಾಜ್ಯಪಾಲರು ಹೊರ ನಡೆದ ಘಟನೆ ಎರಡು ಬಾರಿ ನಡೆದಿದೆ. 1996–99 ಜೆ.ಎಚ್.ಪಟೇಲರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯಪಾಲರಾಗಿದ್ದ ಖುರ್ಷಿದ್ ಆಲಂ ಖಾನ್, ಭಾಷಣದ ಮೊದಲ ಮತ್ತು ಕೊನೆಯ ಪ್ಯಾರಾಗಳನ್ನಷ್ಟೇ ಓದಿದ್ದರು. 2008–11 ಅವಧಿಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು ಸರಕಾರ ಸಿದ್ಧಪಡಿಸಿದ ಭಾಷಣವನ್ನು ಎರಡು ನಿಮಿಷ ಓದಿದ್ದರು. ನಂತರ ಸದನದಲ್ಲಿ ಮಂಡಿಸಲಾಗಿದೆ ಎಂದು ಹೇಳಿ ಹೊರನಡೆದಿದ್ದರು. ರಾಜ್ಯದೊಂದಿಗೆ ರಾಜ್ಯಪಾಲರ ಜಟಾಪಟಿ ರಾಜ್ಯಪಾಲರು ಮತ್ತು ಸರಕಾರಗಳ ನಡುವಿನ ಸಂಘರ್ಷಗಳು ಹೊಸ ಸಂಗತಿಯೇನೂ ಅಲ್ಲ. ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳದಲ್ಲಿಯೂ ಲೋಕಭವನ ಮತ್ತು ಸರಕಾರ ನಡುವೆ ಸಂಘರ್ಷಗಳು ಆಗಾಗ ನಡೆಯುತ್ತಿರುತ್ತವೆ. ಮಸೂದೆ ಅಂಗೀಕಾರಕ್ಕೆ ವಿಳಂಬ,.ಕುಲಪತಿಗಳ ನೇಮಕ ಮೊದಲಾದ ವಿಷಯಗಳಲ್ಲಿ ರಾಜ್ಯಪಾಲರು ತಕರಾರು ತೆಗೆಯುವುದುಂಟು. ಎರಡು ದಿನಗಳ ಹಿಂದೆಯಷ್ಟೇ ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಭಾಷಣದಲ್ಲಿನ ತಪ್ಪುಗಳನ್ನು ಉಲ್ಲೇಖಿಸಿ ಭಾಷಣ ಮಾಡದೆ ರಾಜ್ಯ ವಿಧಾನಸಭೆಯಿಂದ ಹೊರನಡೆದಿದ್ದರು. ಇದಕ್ಕೂ ಮೊದಲು, ಕೇರಳದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಕೂಡ ಸರಕಾರ ಸಿದ್ಧಪಡಿಸಿದ ಭಾಷಣದ ಕೆಲವು ಭಾಗಗಳನ್ನು ಕೈಬಿಟ್ಟಿದ್ದಾರೆ, ಕೆಲವು ವಾಕ್ಯಗಳನ್ನು ಸೇರಿಸಿದ್ದಾರೆ ಎಂದು ಸಿಎಂ ಪಿಣರಾಯಿ ವಿಜಯನ್ ಆರೋಪಿಸಿದ್ದಾರೆ. ಕೆಲವೊಂದು ಪ್ಯಾರಾಗಳನ್ನು ತೆಗೆದುಹಾಕುವಂತೆ ರಾಜಭವನ ಸೂಚಿಸಿತ್ತು. ಆದರೆ ಸೂಚಿಸಿದ ಬದಲಾವಣೆಗಳನ್ನು ಭಾಷಣದಲ್ಲಿ ಮಾಡಿಲ್ಲ ಎಂದು ಪಿಣರಾಯಿ ಅವರ ಆರೋಪಕ್ಕೆ ರಾಜಭವನ ಪ್ರತಿಕ್ರಿಯಿಸಿದೆ.
ಭೋಜಶಾಲಾ-ಕಮಾಲ್ ಮೌಲಾ ಮಸೀದಿಯಲ್ಲಿ ವಸಂತ ಪಂಚಮಿಯ ದಿನ ಪ್ರಾರ್ಥನೆ ಸಲ್ಲಿಸಲು ಹಿಂದೂಗಳಿಗೆ ಸುಪ್ರೀಂಕೋರ್ಟ್ ಅನುಮತಿ
ಹೊಸದಿಲ್ಲಿ: ಮಧ್ಯಪ್ರದೇಶದ ಧಾರ್ ಜಿಲ್ಲೆಯ ವಿವಾದಿತ ಭೋಜಶಾಲಾ-ಕಮಾಲ್ ಮೌಲಾ ಮಸೀದಿಯಲ್ಲಿ ವಸಂತ ಪಂಚಮಿಯ ದಿನವಾದ ಶುಕ್ರವಾರ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಹಿಂದೂಗಳು ಪ್ರಾರ್ಥನೆ ಸಲ್ಲಿಸಲು ಸರ್ವೋಚ್ಚ ನ್ಯಾಯಾಲಯವು ಅವಕಾಶ ಕಲ್ಪಿಸಿದೆ. ಇದೇ ವೇಳೆ,ಅದೇ ದಿನ ಅಪರಾಹ್ನ ಒಂದು ಗಂಟೆಯಿಂದ ಮೂರು ಗಂಟೆಯವರೆಗೆ ನಮಾಜ್ ಮಾಡಲು ಮುಸ್ಲಿಮರಿಗೆ ಅನುಮತಿ ನೀಡಿದೆ. ನಮಾಝ್ ಗೆ ಬರುವ ಮುಸ್ಲಿಮ್ ಸಮುದಾಯದ ಜನರ ಪಟ್ಟಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸುವಂತೆಯೂ ಸರ್ವೋಚ್ಚ ನ್ಯಾಯಾಲಯವು ಗುರುವಾರ ವಿಚಾರಣೆ ಸಂದರ್ಭದಲ್ಲಿ ನಿರ್ದೇಶನ ನೀಡಿತು. ವಸಂತ ಪಂಚಮಿ ಸಂದರ್ಭದಲ್ಲಿ ಸರಸ್ವತಿ ಪೂಜೆಯನ್ನು ಆಚರಿಸಲಾಗುವ ಜ.23,ಶುಕ್ರವಾರದಂದು ಭೋಜಶಾಲಾ ಸಂಕೀರ್ಣದಲ್ಲಿ ಧಾರ್ಮಿಕ ಚಟುವಟಿಕೆಗಳನ್ನು ನಡೆಸಲು ಅನುಮತಿ ನೀಡುವಂತೆ ಹಿಂದು ಮತ್ತು ಮುಸ್ಲಿಮ್ ಗುಂಪುಗಳು ಸರ್ವೋಚ್ಚ ನ್ಯಾಯಾಲಯವನ್ನು ಕೋರಿಕೊಂಡಿದ್ದವು. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿಗಳಾದ ಜಾಯಮಾಲ್ಯ ಬಾಗ್ಚಿ ಮತ್ತು ವಿಪುಲ ಎಂ.ಪಂಚೋಲಿ ಅವರ ಪೀಠವು,ಪರಸ್ಪರ ಗೌರವಿಸುವಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಯ್ದುಕೊಳ್ಳಲು ಸರಕಾರಿ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಉಭಯ ಸಮುದಾಯಗಳಿಗೆ ಮನವಿ ಮಾಡಿಕೊಂಡಿತು. ಪ್ರಾರ್ಥನೆಗಳನ್ನು ಸಲ್ಲಿಸಲು ಸ್ಥಳದಲ್ಲಿ ಸಾಕಷ್ಟು ಭದ್ರತಾ ವ್ಯವಸ್ಥೆಗಳನ್ನು ಏರ್ಪಡಿಸುವಂತೆ ಪೀಠವು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿತು. ಭಾರತೀಯ ಪುರಾತತ್ವ ಸರ್ವೇಕ್ಷಣೆಯಿಂದ (ಎಎಸ್ಐ) ಸಂರಕ್ಷಿಸಲ್ಪಟ್ಟಿರುವ ಭೋಜಶಾಲಾವನ್ನು ವಾಗ್ದೇವಿ (ಸರಸ್ವತಿ) ದೇವಸ್ಥಾನವೆಂದು ಹಿಂದೂಗಳು ಪರಿಗಣಿಸಿದ್ದರೆ, ಮುಸ್ಲಿಮರು ಅದನ್ನು ಕಮಾಲ್ ಮೌಲಾ ಮಸೀದಿ ಎಂದು ಕರೆಯುತ್ತಾರೆ. ಎಎಸ್ಐ ಎ.7, 2003ರಂದು ಜಾರಿಗೊಳಿಸಿರುವ ವ್ಯವಸ್ಥೆಯಡಿ ಸಂಕೀರ್ಣದಲ್ಲಿ ಮಂಗಳವಾರಗಳಂದು ಹಿಂದುಗಳು ಪೂಜೆ ಸಲ್ಲಿಸಿದರೆ ಶುಕ್ರವಾರಗಳಂದು ಮುಸ್ಲಿಮರು ನಮಾಝ್ ಮಾಡುತ್ತಾರೆ.
ಜಿಲ್ಲೆಯಿಂದ ಜಿಲ್ಲೆಗೆ ಕಾಲ್ಚೆಂಡಿನಂತಾದ ಗ್ರಾಮ: ಕೆಸರಿನಲ್ಲಿ ಗ್ರಾಮಸ್ಥರು
ಗಡಿ ಗೊಂದಲವೇ ಸಮಸ್ಯೆಗೆ ಮೂಲ
ಬಿಗ್ ಬ್ಯಾಷ್ ಲೀಗ್ ಅನ್ನು ಅರ್ಧದಲ್ಲೇ ತೊರೆದ `ಬಾಬರ್'ಗೆ ಥ್ಯಾಂಕ್ಯೂ ಎಂದ ಸಿಡ್ನಿ ಸಿಕ್ಸರ್ಸ್! ಯಾಕೆ ಹೀಗಾಯ್ತು?
Babar Azam And BBL 2026- ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ಅವರು ಬಿಗ್ ಬ್ಯಾಷ್ ಲೀಗ್ನಿಂದ ಹೊರಬಂದಿದ್ದಾರೆ. ತಮ್ಮ ಕಳಪೆ ಪ್ರದರ್ಶನದ ಸಮಯದಲ್ಲೇ ಅವರಿಗೆ ರಾಷ್ಟ್ರೀಯ ತಂಡದಿಂದ ಕರೆ ಬಂದಿದ್ದರಿಂದ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಟಿ20ಯಲ್ಲಿ ಅವರು ಹೇಳಿಕೊಳ್ಳುವಂತಹ ಪ್ರದರ್ಶನ ನೀಡುತ್ತಿಲ್ಲವಾದರೂ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ಮತ್ತು ವಿಶ್ವಕಪ್ಗಾಗಿ ಪಾಕಿಸ್ತಾನ ತಂಡಕ್ಕೆ ಅವರು ಆಯ್ಕೆಯಾಗಿರುವುದು ಅಚ್ಚರಿಗೆ ಕಾರಣವಾಗಿದೆ. ಬಿಗ್ ಬ್ಯಾಷ್ ಲೀಗ್ ನಲ್ಲಿ ಅವರ ಆಟದ ವೇಗಕ್ಕೆ ಆ್ಯಡಂ ಗಿಲ್ ಕ್ರಿಸ್ಟ್ ಮತ್ತು ಮಾರ್ಕ್ ವಾ ಮೊದಲಾದವರಿಂದ ಟೀಕೆ ವ್ಯಕ್ತವಾಗಿತ್ತು.
ಕರ್ನಾಟಕ IPS ವರ್ಗಾವಣೆ: ಡಿಜಿಪಿ ರಾಮಚಂದ್ರ ರಾವ್ ಹುದ್ದೆಗೆ ಹಿರಿಯ ಪೊಲೀಸ್ ಅಧಿಕಾರಿ ನೇಮಕ ಮಾಡಿ ಸರ್ಕಾರ ಆದೇಶ
ಸರ್ಕಾರಿ ಕಚೇರಿಯಲ್ಲಿ ಮಹಿಳೆಯೊಬ್ಬರೊಂದಿಗೆ ಅಸಭ್ಯ ವರ್ತನೆ ತೋರಿದ್ದ ಹಿರಿಯ ಐಪಿಎಸ್ ಅಧಿಕಾರಿ ಕೆ. ರಾಮಚಂದ್ರ ರಾವ್ ಅವರನ್ನು ಸರ್ಕಾರ ಅಮಾನತುಗೊಳಿಸಿದೆ. ಅವರ ಜಾಗಕ್ಕೆ ಡಿಜಿಪಿ ಉಮೇಶ್ ಕುಮಾರ್ ಅವರಿಗೆ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಈ ಘಟನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೆಂಗಣ್ಣಿಗೆ ಗುರಿಯಾಗಿತ್ತು.
ವಾರದ ಸಂತೆಯಲ್ಲಿ ಹರಿಯುತ್ತಿದೆ ಚರಂಡಿ ನೀರು..!
ವ್ಯಾಪಾರಿ, ಗ್ರಾಹಕರಿಗೆ ತೊಂದರೆ: ರೋಗದ ಭೀತಿಯಲ್ಲಿ ಗ್ರಾಮಸ್ಥರು
ಅನ್ಯಕೋಮಿನ ಯುವಕನ ಪ್ರೀತಿಸಿದ್ದಕ್ಕೆ ಪ್ರೇಮಿಗಳನ್ನು ಕೊಂದ ಅಣ್ಣಂದಿರು; ಉತ್ತರ ಪ್ರದೇಶದಲ್ಲೊಂದು ಮರ್ಯಾದೆಗೇಡು ಹತ್ಯೆ
ಅನ್ಯಕೋಮಿನ ಯುವಪ್ರೀತಿಸಿದ್ದಕ್ಕೆ ಸಿಟ್ಟಾದ ಯುವತಿಯ ಸಹೋದರರು ಇಬ್ಬರನ್ನು ಕಟ್ಟಿ ಹಾಕಿ, ಕೊಲೆ ಮಾಡಿ ಹೂತು ಹಾಕಿದ ಪ್ರಕರಣ ಉತ್ತರ ಪ್ರದೇಶದಲ್ಲಿ ನಡೆದಿದೆ. ಪೊಲೀಸರು ಇಬ್ಬರು ಆರೋಪಿಗಳನ್ನು ವಿಚಾರಣೆಗೆ ಪಡೆದಾಗ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಅರ್ಮಾನ್ ಇತ್ತೀಚೆಗೆ ಮುರಾದಬಾದ್ಗೆ ಬಂದಿದ್ದರು ಇಲ್ಲಿ ಕಾಜಲ್ ಎಂಬ ಯುವತಿ ಕಂಡು ಪ್ರೀತಿ ಉಕ್ಕಿತ್ತು. ಇಬ್ಬರು ಪ್ರೀತಿಸುತ್ತಿದ್ದರು ಈ ವಿಚಾರ ತಿಳಿದ ಅಣ್ಣಂದಿರು ಕೊಲೆ ಮಾಡಿದ್ದಾರೆ.
ಒಳಾಂಗಣದಲ್ಲೂ ಮ್ಯಾಕ್ರನ್ ಸನ್ ಗ್ಲಾಸ್ ಧರಿಸಿದ್ದೇಕೆ? ಲುಕ್ ವೈರಲ್, ಕನ್ನಡಕ ಕಂಪನಿ ಷೇರು ಭರ್ಜರಿ ಏರಿಕೆ!
ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಇತ್ತೀಚೆಗೆ ಸ್ವಿಟ್ಜರ್ಲೆಂಡ್ನ ದಾವೋಸ್ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯಲ್ಲಿ ಒಳಾಂಗಣದಲ್ಲೂ ಕಪ್ಪು ಬಣ್ಣದ ಏವಿಯೇಟರ್ ಸನ್ ಗ್ಲಾಸ್ ಧರಿಸಿ ಭಾಷಣ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು. ಇದಕ್ಕೆ ಮುಖ್ಯ ಕಾರಣ ಅವರ ಕಣ್ಣಿನ ರಕ್ತನಾಳ ಒಡೆದಿರುವುದು. ಇದು ಗಂಭೀರವಲ್ಲದಿದ್ದರೂ, ನೋಡಲು ಮುಜುಗರವಾಗಬಾರದು ಎಂಬ ಕಾರಣಕ್ಕೆ ಅವರು ಸುಮಾರು 70,000 ರೂ. ಬೆಲೆಯ 'ಹೆನ್ರಿ ಜೂಲಿಯನ್' ಬ್ರಾಂಡ್ನ ಕನ್ನಡಕ ಧರಿಸಿದ್ದರು. ಮ್ಯಾಕ್ರನ್ ಅವರು ಈ ಕನ್ನಡಕ ಧರಿಸಿದ್ದರಿಂದ ಸಂಬಂಧಪಟ್ಟ ಐವೇರ್ ಕಂಪನಿಯ ಷೇರು ಮೌಲ್ಯವೂ ಏರಿಕೆಯಾಗಿದೆ.
ವಿಜಯಪುರ : ಲಕ್ಷಾಂತರ ರೂ. ಮೌಲ್ಯದ ವಸ್ತುಗಳ ಕಳ್ಳತನ; ಆರೋಪಿ ಬಂಧನ
ನಿಡಗುಂದಿ, ಜ.21: ಟ್ರಕ್ನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ನಾನಾ ಬಗೆಯ ವಸ್ತುಗಳ ಬಾಕ್ಸ್ಗಳನ್ನು ಕಳವು ಮಾಡಿದ ಆರೋಪಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದು, ಸುಮಾರು 30 ಲಕ್ಷ ರೂ. ಮೌಲ್ಯದ 525 ಬಾಕ್ಸ್ಗಳ ನಾನಾ ಬಗೆಯ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಬಾಗಲಕೋಟೆ ಜಿಲ್ಲೆಯ ಹೊಸೂರ ಕ್ರಾಸ್ ನಿವಾಸಿ, ರಾಜಸ್ಥಾನ ಮೂಲದ ವಾಲರಾಮ ತೇಜಾರಾಮ (32) ಬಂಧಿತ ಆರೋಪಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಕೆಲ ಆರೋಪಿಗಳು ಪರಾರಿಯಾಗಿದ್ದಾರೆ. ಕಳೆದ ಡಿಸೆಂಬರ್ 20ರಂದು ಪಾಂಡಿಚೇರಿಯಿಂದ ಮಹಾರಾಷ್ಟ್ರದ ಬೀವಂಡಿಗೆ ಗೋದ್ರೇಜ್ ಕನ್ಸ್ಯೂಮರ್ ಪ್ರೊಡಕ್ಟ್ಸ್ ಲಿಮಿಟೆಡ್ಗೆ ಸೇರಿದ ನಾನಾ ಬಗೆಯ ವಸ್ತುಗಳಿರುವ 1,323 ಬಾಕ್ಸ್ಗಳನ್ನು ಲೋಡ್ ಮಾಡಿಕೊಂಡು ಹೊರಟಿದ್ದ ಶುಭಂ ಟ್ರಾನ್ಸ್ಪೋರ್ಟ್ಗೆ ಸೇರಿದ ಕಂಟೈನರ್ ಟ್ರಕ್ನಲ್ಲಿದ್ದ 525 ಬಾಕ್ಸ್ಗಳನ್ನು ಆಲಮಟ್ಟಿಯಲ್ಲಿ ಕಳವು ಮಾಡಿಕೊಂಡು ಹೋಗಿರುವ ಕುರಿತು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ಇಲಾಖೆ, ಆರೋಪಿಗಳ ಪತ್ತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಮನಗೌಡ ಹಟ್ಟಿ ಹಾಗೂ ಬಸವನಬಾಗೇವಾಡಿ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ ಅವರ ಮಾರ್ಗದರ್ಶನದಲ್ಲಿ ನಿಡಗುಂದಿ ಸಿಪಿಐ ಶರಣಗೌಡ ಗೌಡರ ಮತ್ತು ಪಿಎಸ್ಐಗಳಾದ ಶಿವಾನಂದ ಪಾಟೀಲ ಹಾಗೂ ಎ.ಕೆ. ಸೊನ್ನದ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿತು. ತನಿಖೆ ಮುಂದುವರಿಸಿದ ತಂಡವು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿ, ಕಳವುಗೈದ ವಸ್ತುಗಳನ್ನು ಜಪ್ತಿ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜ್ಯಪಾಲರ ವಿರುದ್ಧ ಗೂಂಡಾಗಿರಿ: ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ
ಬೆಂಗಳೂರು: ಸದನದಲ್ಲಿ ರಾಜ್ಯಪಾಲರ ಉಪಸ್ಥಿತಿ ವೇಳೆ ಗೂಂಡಾಗಿರಿ ಪ್ರದರ್ಶನದ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಯ್ಯನವರು ತಕ್ಷಣ ರಾಜೀನಾಮೆ ಕೊಡಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ಸಿನ ಗೂಂಡಾಗಿರಿ ಕೇವಲ ರಸ್ತೆಗಳಿಗೆ ಸೀಮಿತವಾಗಿತ್ತು. ಈಗ ಅದು ಸದನ ಪ್ರವೇಶವನ್ನೂ ಮಾಡಿದೆ ಎಂದು ಆಕ್ಷೇಪಿಸಿದರು. ಗೌರವಾನ್ವಿತ
ಕಾಂಗ್ರೆಸ್ ಸರಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ವಿಜಯೇಂದ್ರ ಆರೋಪ
ಕೇಂದ್ರದ ವಿರುದ್ಧ ದ್ವೇಷ ರಾಜಕಾರಣಕ್ಕೆ ಸದನ ದುರ್ಬಳಕೆ: ಬಿಜೆಪಿ ರಾಜ್ಯಾಧ್ಯಕ್ಷ ಟೀಕೆ
ಕೆ.ಪಿ. ಸುರೇಶ ಕಂಜರ್ಪಣೆಯವರ ಹೊಸ ಕವನ ಸಂಕಲನ ‘ಅಂದಿಂದೆಂದೂ’ ಬಿಡುಗಡೆ
ಬೆಂಗಳೂರು: ಕೆ.ಪಿ. ಸುರೇಶ ಕಂಜರ್ಪಣೆ ಅವರ ಹೊಸ ಕವನ ಸಂಕಲನ ‘ಅಂದಿಂದೆಂದೂ’ ಕೃತಿಯ ಸರಳ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದಲ್ಲಿ ವಿಜಯಮ್ಮ, ಬಿ. ಸುರೇಶ್–ಗುರುಮೂರ್ತಿ ದಂಪತಿ, ಶಿವಸುಂದರ್, ವಿ.ಎಸ್. ಶ್ರೀಧರ್–ಮಂಗಳಾ ದಂಪತಿ, ಪುಷ್ಪಾ ಹಾಗೂ ಕಾನ್ಕೇವ್ ಪ್ರಕಾಶನದ ನಂದೀಶ್ ಅವರು ಉಪಸ್ಥಿತರಿದ್ದರು. ನಾಕುತಂತಿ ಪ್ರಕಾಶನದಿಂದ ಪ್ರಕಟಗೊಂಡಿರುವ ಈ ಕವನ ಸಂಕಲನದ ಬಿಡುಗಡೆ ಬಳಿಕ, ಕವಿ ಕೆ.ಪಿ. ಸುರೇಶ ಹಾಗೂ ಬಿ. ಸುರೇಶ್ ಅವರು ಕೃತಿಯಲ್ಲಿನ ಕೆಲವು ಆಯ್ದ ಕವನಗಳನ್ನು ವಾಚಿಸಿದರು. ಕೃತಿಯ ಮಾರಾಟದ ಜವಾಬ್ದಾರಿಯನ್ನು ಕಾನ್ಕೇವ್ ಪ್ರಕಾಶನ ವಹಿಸಿಕೊಂಡಿದೆ.
ರಾಹುಲ್ ಗಾಂಧಿ ’ವೋಟ್ ಚೋರಿ’ ಸುಳ್ಳು ಆರೋಪದ ಬಲೂನ್ಗೆ ಸೂಜಿ ಚುಚ್ಚಿದ ಡಿಕೆ ಸುರೇಶ್ : ಬಿಜೆಪಿ
EVM Vs Ballot Paper : ಮುಂಬರುವ ಕರ್ನಾಟಕದ ಸ್ಥಳೀಯ ಸಂಸ್ಥೆ ಮತ್ತು ಗ್ರೇಟರ್ ಬೆಂಗಳೂರು ಪಾಲಿಕೆ ಚುನಾವಣೆಯಲ್ಲಿ, ಬ್ಯಾಲಟ್ ಪೇಪರ್ ಬಳಸಿ ಚುನಾವಣೆ ನಡೆಸಲು ಕರ್ನಾಟಕ ಚುನಾವಣಾ ಆಯೋಗ ನಿರ್ಧರಿಸಿದೆ. ಈ ವಿಚಾರದ ಬಗ್ಗೆ ಪ್ರಸ್ತಾವಿಸಿದ ಮಾಜಿ ಸಂಸದ ಡಿಕೆ ಸುರೇಶ್, ಬ್ಯಾಲಟ್ ಪೇಪರ್’ಗಿಂತ ಇವಿಎಂ ಉತ್ತಮ ಎನ್ನುವ ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದಾರೆ.
ರಾಜ್ಯಪಾಲರ ನಡೆ ಕಾನೂನುಬದ್ಧ; ಕಾಂಗ್ರೆಸ್ ಶಾಸಕರ ಅಶಿಸ್ತಿನ ವರ್ತನೆ ವಿರುದ್ಧ ಶರವಣ ಆಕ್ರೋಶ
ರಾಜ್ಯಪಾಲರ ಭಾಷಣ ಸಾಂಕೇತಿಕವಾಗಿದ್ದರೂ, ಕಾಂಗ್ರೆಸ್ ಶಾಸಕರ ವರ್ತನೆ ಹದ್ದು ಮೀರಿತ್ತು ಎಂದು ವಿಧಾನ ಪರಿಷತ್ ಶಾಸಕ ಟಿ.ಎ. ಶರವಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರ ಬಾಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಟೀಕಿಸುವಂತೆ ಭಾಷಣ ರೂಪಿಸಿ, ಕ್ಷುಲ್ಲಕ ರಾಜಕೀಯ ಮಾಡಲು ಸರ್ಕಾರ ಸಂಚು ರೂಪಿಸಿತ್ತು ಎಂದು ಅವರು ಆರೋಪಿಸಿದ್ದಾರೆ. ಅಶಿಸ್ತು ತೋರಿದ ಸದಸ್ಯರ ಮೇಲೆ ಸಭಾಪತಿಗಳು ಕಠಿಣ ಕ್ರಮ ಜರುಗಿಸಬೇಕು ಎಂದು ಶರವಣ ಒತ್ತಾಯಿಸಿದ್ದಾರೆ.
ರಾಷ್ಟ್ರಗೀತೆಗೆ ರಾಜ್ಯಪಾಲ ಅವಮಾನ ಮಾಡಿದ್ದಾರೆ, ನಿರ್ಣಯಕ್ಕೆ ಅವಕಾಶ ಕೊಡಿ ಎಂದ ಎಚ್.ಕೆ ಪಾಟೀಲ್, ವಿಪಕ್ಷ ವಿರೋಧ
ರಾಜ್ಯಪಾಲರು ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆ ಎಂದು ಸಚಿವ ಎಚ್.ಕೆ. ಪಾಟೀಲ್ ಆರೋಪಿಸಿ ನಿರ್ಣಯಕ್ಕೆ ಆಗ್ರಹಿಸಿದರು. ವಿಪಕ್ಷಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿ, ರಾಜ್ಯಪಾಲರ ಭಾಷಣಕ್ಕೆ ಅಡ್ಡಿಪಡಿಸಬಾರದು ಎಂದು ನಿಯಮ ಉಲ್ಲೇಖಿಸಿ ತಿರುಗೇಟು ನೀಡುತ್ತಾ, ದಲಿತರಾದ ರಾಜ್ಯಪಾಲರಿಗೆ ಅವಮಾನ ಮಾಡಲಾಗಿದೆ ಎಂದು ವಿಪಕ್ಷಗಳು ಸರ್ಕಾರದ ವಿರುದ್ಧ ಕಿಡಿಕಾರಿದವು. ಇದು ಸದನದಲ್ಲಿ ರಾಜಕೀಯ ಜಟಾಪಟಿಗೆ ಕಾರಣವಾಗಿದೆ.
ಹೊರಟು ನಿಂತ ರಾಜ್ಯಪಾಲರನ್ನು ಎದುರು ನಿಂತು ತಡೆಯಲೆತ್ನಿಸಿದ ಬಿಕೆ ಹರಿಪ್ರಸಾದ್; ಜುಬ್ಬ ಹರಿದರೂ ತಣಿಯದ ಆಕ್ರೋಶ!
ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಕಂಡು ಕೇಳರಿಯದಂತಹ ಘಟನೆಗೆ ಇಂದು (ಜ.22-ಗುರುವಾರ) ವಿಧಾನಮಂಡಲದ ಜಂಟಿ ಅಧಿವೇಶನ ಸಾಕ್ಷಿಯಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರದ ಅಧಿಕೃತ ಭಾಷಣವನ್ನು ಓದದೇ ಇರುವುದು ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ. ಕೇವಲ ಎರಡು ನಿಮಿಷದಲ್ಲಿ ರಾಜ್ಯಪಾಲರು ತಮ್ಮ ಭಾಷಣವನ್ನು ಮುಗಿಸಿದ್ದು, ಇದರಿಂದ ಕೆರಳಿದ ಕಾಂಗ್ರೆಸ್ ಸದಸ್ಯರು ಧಿಕ್ಕಾರ ಕೂಗಿದ್ದಾರೆ. ಇನ್ನು ಭಾಣಷ ಮಾಡದೇ ಹೊರಟು ನಿಂತ ರಾಜ್ಯಪಾಲರನ್ನು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ತಡೆಯಲೆತ್ನಿಸಿದ್ದಾರೆ.
ಜಿಲ್ಲೆಯಲ್ಲಿ ಮತ್ತೆ ಅಕ್ರಮ ಮರಳುಗಾರಿಕೆ ಸದ್ದು: 19ದಿನಗಳಲ್ಲಿ 37 ಪ್ರಕರಣ, ದೇವದುರ್ಗಕ್ಕೆ ಸಿಂಹಪಾಲು
ರಾಯಚೂರು: ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೇ ನಡೆಯುತ್ತಿದ್ದು, ನದಿ, ಹಳ್ಳಗಳನ್ನು ಬರಿದು ಮಾಡಿ ನೈಸರ್ಗಿಕ ಸಂಪನ್ಮೂಲ ಕೊಳ್ಳೆ ಹೊಡೆಯಲಾಗುತ್ತಿದೆ. ಅಕ್ರಮ ಮರಳು ಗಣಿಗಾರಿಕೆ ಕುರಿತಂತೆ ಕೇವಲ ಜನವರಿ ತಿಂಗಳೊಂದರಲ್ಲಿ 37 ಪ್ರಕರಣ ದಾಖಲಾಗಿದ್ದು, ಈ ಪೈಕಿ ದೇವದುರ್ಗ ತಾಲೂಕಿನಲ್ಲೇ 21 ಪ್ರಕರಣಗಳು ದಾಖಲಾಗಿವೆ. ರಾಜಕೀಯ ನಾಯಕರು, ಪೊಲೀಸರ ಚೇಲಾಗಳು ಅಕ್ರಮದಲ್ಲಿ ಭಾಗಿಯಾಗಿದ್ದು ಅಕ್ರಮ ಮರಳು ಸಾಗಾಟ ನಿಯಂತ್ರಣಕ್ಕೆ ತೊಡಕಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಜಿಲ್ಲೆಯ ಮಾನ್ವಿ, ಸಿಂಧನೂರು, ರಾಯಚೂರು, ದೇವದುರ್ಗ, ಮಸ್ಕಿ ತಾಲೂಕುಗಳಲ್ಲಿ ಅಕ್ರಮ ಮರಳು ಸಾಗಾಣಿಕೆ ನಡೆಯುತ್ತಿದ್ದು ನಿಯಂತ್ರವಾಗುತ್ತಿಲ್ಲ. ಆಗಾಗ ಕೆಲ ಸಾಮಾಜಿಕ ಕಾರ್ಯಕರ್ತರು ಪತ್ರಿಕಾಗೋಷ್ಠಿ, ಹೋರಾಟ ಮಾಡುತ್ತಾರೆ. ಆದರೆ ಆಡಳಿತ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದ್ದಾಗ ಪ್ರಶ್ನಿಸಬೇಕಾದ ವಿರೋಧ ಪಕ್ಷದವರೂ ಧ್ವನಿ ಎತ್ತುತ್ತಿಲ್ಲ. ಇದಕ್ಕೆ ರಾಜಕೀಯ ಒಳ ಒಪ್ಪಂದ ಕಾರಣ. ಎಲ್ಲಾ ಪಕ್ಷದ ನಾಯಕರು, ಪರೋಕ್ಷವಾಗಿ ಅಕ್ರಮದಲ್ಲಿ ಶಾಮೀಲಾಗಿದ್ದಾರೆ ಎಂದು ಹೋರಾಟಗಾರರೊಬ್ಬರು ತಿಳಿಸಿದ್ದಾರೆ. ಅಕ್ರಮ ತಡೆಯಲು ಹೋದ ಶಾಸಕಿಗೆ ಬೆದರಿಕೆ?: ಜಿಲ್ಲೆಯ ದೇವದುರ್ಗ ತಾಲೂಕು ಅಕ್ರಮ ಮರಳು ಸಾಗಣೆ ವಿಷಯದಲ್ಲಿ ಸದಾ ಸುದ್ದಿಯಲ್ಲಿರುತ್ತದೆ. ದೇವದುರ್ಗ ತಾಲೂಕಿನಲ್ಲಿ ಮರಳು ಮಾಫಿಯಾದವರ ಅಟ್ಟಹಾಸ ಮೀರಿದೆ. ಅಕ್ರಮವಾಗಿ ಮರಳು ಸಾಗಣಿಕೆ ಮಾಡಲು ತಡೆಯಬೇಕು ಎಂದು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರಿಂದ ನನ್ನ ಮನೆಗೆ ಬಂದು ಬೆದರಿಕೆ ಹಾಕಿದ್ದಾರೆ ಎಂದು ಖುದ್ದು ದೇವದುರ್ಗ ಶಾಸಕಿ ಕರೆಮ್ಮಾ ಜಿ.ನಾಯಕ ಅವರೇ ಸುದ್ದಿಗೋಷ್ಠಿ ನಡೆಸಿ ಆರೋಪಿಸಿದ್ದನ್ನು ನೋಡಿದರೆ ಅಕ್ರಮ ದಂಧೆಕೋರರು ಎಷ್ಟು ಪ್ರಭಾವಿ ಇರಬಹುದು ಎಂಬುದು ಜಿಲ್ಲಾ ನಾಗರಿಕರ ಪ್ರಶ್ನೆಯಾಗಿದೆ. ನೂರಾರು ಕೋಟಿ ಕಾಮಗಾರಿಗಳು ದೇವದುರ್ಗ ತಾಲೂಕಿನಲ್ಲಿ ನಡೆಯುತ್ತಿವೆ. ನಮಗೂ ಮರಳಿನ ಅವಶ್ಯಕತೆ ಇದೆ. ಕಾಮಗಾರಿಗಳಿಗೆ ಟ್ರ್ಯಾಕ್ಟರ್ ಮೂಲಕ ಮರಳನ್ನು ಪಡೆಯುತ್ತಿದ್ದೇವೆ. ಆದರೆ ಟಿಪ್ಪರ್ಗಳಲ್ಲಿ ಆಭ್ಯಂತರವಿಲ್ಲ ದೊಡ್ಡ ಟಿಪ್ಪರ್ ಗಳ ಮೂಲಕ ಮರಳನ್ನು ಬೇರೆ ರಾಜ್ಯಗಳಿಗೆ ಹಾಗೂ ಹೊರ ಜಿಲ್ಲೆಗಳಿಗೆ ರಾಯಲ್ಟಿ ಇಲ್ಲದೆ ಮರಳು ಸಾಗಿಸಲಾಗುತ್ತಿದೆ. ರಾಯಲ್ಟಿ ಇಲ್ಲದೆ ಮರಳು ಸಾಗಣೆಗೆ ಕಡಿವಾಣ ಹಾಕಿದ್ದಕ್ಕೆ ನನಗೆ ಜೀವ ಬೆದರಿಕೆ ಹಾಕಲಾಗುತ್ತಿದೆ ಎಂದು ಕರೆಮ್ಮಾ ನಾಯಕ ಜಿಲ್ಲಾಧಿಕಾರಿ ನಿತಿಶ್ ಕೆ ಅವರಿಗೆ ಮಂಗಳವಾರ ಭೇಟಿಯಾಗಿ ಅಳಲು ತೋಡಿಕೊಂಡು ಪೊಲೀಸ್ ಇಲಾಖೆಯಿಂದ ರಕ್ಷಣೆ ಕೋರಿದ್ದು ಚರ್ಚೆಗೆ ಗ್ರಾಸವಾಗಿದೆ. ಇಂತಹ ಘಟನೆ ಇದೇ ಮೊದಲೇನಲ್ಲ. ಅಕ್ರಮ ಮರಳು ಸಾಗಾಟವನ್ನು ಪ್ರಶ್ನಿಸಿದ ಅನೇಕರ ಮೇಲೆ ದಂಧೆಕೋರರು ಕೊಠಡಿಯಲ್ಲಿ ಕೂಡಿಹಾಕಿ ಹಲ್ಲೆ ಮಾಡುವುದು, ಜೀವ ಬೆದರಿಕೆ ಹಾಕುವುದು ಆಗಾಗ ನಡೆಯುತ್ತದೆ. ಈ ಹಿಂದೆ ಮಾನ್ವಿ ತಾಲೂಕಿನಲ್ಲಿ ಅಕ್ರಮ ಮರಳು ಸಾಗಣೆ ತಡೆಯಲು ಹೋದ ಪೊಲೀಸ್ ಪೇದೆಯ ಮೇಲೆ ಟಿಪ್ಪರ್ ಹರಿಸಿ ಕೊಲೆ ಮಾಡಿದ ಘಟನೆಯೂ ಜರುಗಿದೆ. ಕಳೆದ ವರ್ಷ ರೂ. 4.25 ಕೋಟಿ ಅಕ್ರಮ ಮರಳು ವಶ: ಜಿಲ್ಲಾ ಪೊಲೀಸ್ ಇಲಾಖೆಯಿಂದ ಅಕ್ರಮ ಮರಳು ತಡೆಗಟ್ಟಲು ಕಾರ್ಯಪ್ರವೃತ್ತವಾಗಿದ್ದು 2025ರ ಜನವರಿಯಿಂದ ನವೆಂಬರ್ ವರೆಗೆ 4.25 ಕೋಟಿಗೂ ಹೆಚ್ಚು ಅಕ್ರಮ ಮರಳನ್ನು ಜಪ್ತಿ ಮಾಡಿದೆ. ಜನಸಾಮಾನ್ಯರು ಮನೆ ಕಟ್ಟಲು ಸುಲಭವಾಗಿ ಒಂದು ಟ್ರ್ಯಾಕ್ಟರ್ ಮರಳು ಸಿಗುವುದಿಲ್ಲ. ಹೆಚ್ಚಿನ ಹಣ ವಸೂಲಿಗಾಗಿ, ಅಕ್ರಮ ಮರಳು ದಂಧೆಕೋರರೇ ಕೃತಕ ಅಭಾವ ಸೃಷ್ಟಿಸುತ್ತಾರೆ. ಜಿಲ್ಲೆಯ ಕೃಷ್ಣಾ ಹಾಗೂ ತುಂಗಭದ್ರಾ ನದಿಗಳ ವ್ಯಾಪ್ತಿಯಲ್ಲಿ ಮರಳು ನಿರಂತರವಾಗಿ ಸಾಗಿಸುತ್ತಿದ್ದರೂ ಸಾಮಾನ್ಯ ಜನರು ಪ್ರಶ್ನೆ ಮಾಡುವಂಥ ಪರಿಸ್ಥಿತಿವಂತಹ ವಾತಾವರಣವಿಲ್ಲದಂತಾಗಿದೆ. ಅಕ್ರಮ ಮರಳು ತಡೆಯಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಕಂದಾಯ ಹಾಗೂ ಪೊಲೀಸ್ ಇಲಾಖೆ ಸೇರಿದಂತೆ ಕೆಲ ಇಲಾಖೆಗಳನ್ನೊಳಗೊಂಡ ಸಮಿತಿಯನ್ನು ಜಿಲ್ಲಾ ಮಟ್ಟದ ರಚನೆ ಮಾಡಿದರೂ ಸಮನ್ವಯತೆಯಿಂದ ಕೆಲಸ ಮಾಡುತ್ತಿಲ್ಲ. ಜಿಲ್ಲೆಯಲ್ಲಿ ನದಿ ತೀರದಿಂದ ಮರಳು ಸಾಗಾಣಿಕೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಪರವಾನಗಿ ಒಬ್ಬರದ್ದು ಇದ್ದರೆ ಸಾಗಾಣಿಕೆ ಪ್ರಮಾಣ ಬೇರೆಯೊಂದು. ಕೆಲ ಜನಪ್ರತಿನಿಧಿಗಳ ಬೆಂಬಲಿಗರೇ ಮರಳು ಸಾಗಿಸುತ್ತಿದ್ದರೂ ಸಂಬಂಧಿಸಿದ ಅಧಿಕಾರಿಗಳು ಜಾಣ ಕುರುಡು ಅನುಸರಿಸುತ್ತಾರೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿದೆ. ದೇವದುರ್ಗ ತಾಲೂಕಿನಲ್ಲಿ ಅಕ್ರಮ ಮರಳು ಸಾಗಣೆ ಹೆಚ್ಚಾಗಿದೆ. ಅಕ್ರಮ ಮರಳು ಸಾಗಣೆ ತಡೆಗೆ ಮುಂದಾಗಿರುವ ಶಾಸಕಿ ಕರೆಮ್ಮಾ ಅವರ ಮನೆಗೆ ತೆರಳಿ ಕೆಲ ಟಿಪ್ಪರ್ ಮಾಲಕರು ಧಮ್ಕಿ ಹಾಕಿದ್ದು ಖಂಡನೀಯ. ಆರೋಪಿಗಳ ವಿರುದ್ಧ ದೂರು ದಾಖಲಾಗಿದ್ದು ಪೊಲೀಸರು ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು. -ಜಿ.ಬಸವರಾಜ, ಪ್ರಗತಿಪರ ಹೋರಾಟಗಾರ, ದೇವದುರ್ಗ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆ ತಡೆಗಟ್ಟಲು ಪೊಲೀಸ್ ಇಲಾಖೆ ಸನ್ನದ್ದವಾಗಿದ್ದು, 2026ರ ಜ.1ರಿಂದ 19 ವರೆಗೆ 37 ಪ್ರಕರಣ ದಾಖಲಾಗಿದೆ. ಈ ಪೈಕಿ ದೇವದುರ್ಗ ತಾಲೂಕಿನದ್ದು 21 ಪ್ರಕರಣಗಳು. ಇಲಾಖೆಯಿಂದ ಅಕ್ರಮ ತಡೆಯಲು ಎಲ್ಲಾ ಪ್ರಯತ್ನ ಮಾಡುತ್ತಿದ್ದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಕಂದಾಯ ಇಲಾಖೆ ಸೇರಿ ಇತರೆ ಇಲಾಖೆಗಳು ಸಹಕಾರ ನೀಡಬೇಕು. -ಅರುಣಾಂಗ್ಷು ಗಿರಿ, ಜಿಲ್ಲಾ ಪೊಲೀಸ್ ಅಧೀಕ್ಷಕರು ರಾಯಚೂರು
ಕಲಬುರಗಿ |ಟ್ರ್ಯಾಕ್ಟರ್ ಚಲಿಸುತ್ತಲೇ ರೀಲ್ಸ್; ಚಕ್ರದಡಿ ಸಿಲುಕಿ ಚಾಲಕ ಮೃತ್ಯು
ಕಲಬುರಗಿ: ಟ್ರ್ಯಾಕ್ಟರ್ ಚಲಿಸುತ್ತಲೇ ರೀಲ್ಸ್ ಮಾಡುತ್ತಿದ್ದ ಚಾಲಕನೋರ್ವ, ಅದೇ ಟ್ರ್ಯಾಕ್ಟರ್ ಚಕ್ರದಡಿಯಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಕಮಲಾಪುರ ತಾಲ್ಲೂಕಿನ ಮಹಾಗಾಂವ ಗ್ರಾಮದಲ್ಲಿ ಬುಧವಾರ ನಡೆದಿದೆ. ಮಹಾಗಾಂವ ಗ್ರಾಮದ ನಿವಾಸಿ ಲೋಕೇಶ ಕಲ್ಲಪ್ಪ ಪೂಜಾರಿ (22) ಮೃತ ಟ್ರ್ಯಾಕ್ಟರ್ ಚಾಲಕ ಎಂದು ಗುರುತಿಸಲಾಗಿದೆ. ಟ್ರ್ಯಾಕ್ಟರ್ ಮೂಲಕ ಹೊಲದಲ್ಲಿ ಉಳುಮೆ ಮಾಡುತ್ತಿದ್ದ ವೇಳೆ, ಒಂದು ಕೈಯಲ್ಲಿ ಮೊಬೈಲ್ ಹಿಡಿದು ರೀಲ್ಸ್ ಮಾಡುತ್ತಾ, ಇನ್ನೊಂದು ಕೈಯಲ್ಲಿ ಸ್ಟೇರಿಂಗ್ ಹಿಡಿದುಕೊಂಡಿದ್ದರು. ಈ ಸಂದರ್ಭದಲ್ಲಿ ಆಯತಪ್ಪಿ ಟ್ರ್ಯಾಕ್ಟರ್ನಿಂದ ಕೆಳಗೆ ಬಿದ್ದ ಅವರು, ಚಕ್ರದಡಿಯಲ್ಲಿ ಸಿಲುಕಿಕೊಂಡ ಪರಿಣಾಮ ಟ್ರ್ಯಾಕ್ಟರ್ ದೇಹದ ಮೇಲೆ ಹರಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಬಗ್ಗೆ ತಡವಾಗಿ ಮಾಹಿತಿ ದೊರಕಿದ ನಂತರ, ಹೊಲದ ಸುತ್ತಮುತ್ತಲಿನ ರೈತರು ಸ್ಥಳಕ್ಕೆ ಆಗಮಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಮಹಾಗಾಂವ ಠಾಣೆಯ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿದು ಬಂದಿದೆ.
ದಾವೋಸ್ ಸಮಾವೇಶ: ವಿಜಯಪುರ, ಬಳ್ಳಾರಿಯಲ್ಲಿ ಸಂಜೀವ್ ಗೊಯೆಂಕಾ ಸಮೂಹದಿಂದ 10,500 ಕೋಟಿ ರೂ. ಹೂಡಿಕೆ
ದಾವೋಸ್ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯಲ್ಲಿ, ಕರ್ನಾಟಕವು ಆರ್.ಪಿ-ಸಂಜೀವ್ ಗೊಯೆಂಕಾ ಸಮೂಹದಿಂದ 10,500 ಕೋಟಿ ರೂ. ಹೂಡಿಕೆ ಆಕರ್ಷಿಸಿದೆ. ಐನಾಕ್ಸ್ ಜಿಎಫ್ಎಲ್, ರಾಮ್ಕಿ ಗ್ರೂಪ್, ಟೆಕ್ ಮಹೀಂದ್ರ, ಲೆನೋವೋ, ಎಕ್ಸಾನ್ ಕೇಬಲ್ಸ್, ಮತ್ತು ಸ್ನೈಡರ್ ಎಲೆಕ್ಟ್ರಿಕ್ ಸೇರಿದಂತೆ ಹಲವು ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಆಸಕ್ತಿ ತೋರಿವೆ. ಸಿಂಗಪುರ್ ಪಾರ್ಕ್ ಸ್ಥಾಪನೆಗೂ ಚಿಂತನೆ ನಡೆದಿದೆ.
2 ನಿಮಿಷದಲ್ಲಿ ಭಾಷಣ ಮುಗಿಸಿದ ರಾಜ್ಯಪಾಲರು, ಸಾಂವಿಧಾನಿಕ ಬಿಕ್ಕಟ್ಟಿನತ್ತ ಕರ್ನಾಟಕ? ಕಾನೂನು ಹೇಳೋದೇನು? | Explainer
ಕರ್ನಾಟಕ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಪೂರ್ಣವಾಗಿ ಓದಲು ನಿರಾಕರಿಸಿ, ಕೇವಲ ಎರಡು ನಿಮಿಷಗಳಲ್ಲಿ ಭಾಷಣ ಮುಗಿಸಿ ಸದನದಿಂದ ಹೊರನಡೆದಿದ್ದಾರೆ. ಭಾಷಣದಲ್ಲಿದ್ದ 11 ಪ್ಯಾರಾಗಳನ್ನು ಓದಲು ರಾಜ್ಯಪಾಲರು ನಿರಾಕರಿಸಿದ್ದು, ಇದು ರಾಜ್ಯ ಸರ್ಕಾರ ಮತ್ತು ಲೋಕಭವನದ ನಡುವೆ ತೀವ್ರ ಸಂಘರ್ಷಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇದನ್ನು 'ಸಂವಿಧಾನದ ಉಲ್ಲಂಘನೆ' ಎಂದು ಕರೆದರೆ, ಕಾಂಗ್ರೆಸ್ ಸದಸ್ಯರು ಸದನದಲ್ಲಿ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಸ್ತುತ ರಾಜಕೀಯ ಸನ್ನಿವೇಶದಲ್ಲಿ ಈ ಬೆಳವಣಿಗೆ ಸಾಂವಿಧಾನಿಕ ಬಿಕ್ಕಟ್ಟಿನ ಆತಂಕವನ್ನು ಸೃಷ್ಟಿಸಿದೆ.
ಜಂಟಿ ಅಧಿವೇಶನದಿಂದ ಹೊರನಡೆದ ರಾಜ್ಯಪಾಲರನ್ನು ಅಡ್ಡಗಟ್ಟಲು ಯತ್ನಿಸಿದ ಬಿ.ಕೆ ಹರಿಪ್ರಸಾದ್!
ಬೆಂಗಳೂರು: ರಾಜ್ಯ ವಿಧಾನಸಭೆಯ ವಿಶೇಷ ಜಂಟಿ ಅಧಿವೇಶನ ಗುರುವಾರ ಕೆಲವು ಪ್ರಮುಖ ಘಟನೆಗಳಿಗೆ ಸಾಕ್ಷಿಯಾಯಿತು. ಅಧಿವೇಶನದ ಸಂದರ್ಭದಲ್ಲಿ ರಾಜ್ಯ ಸರಕಾರ ಸಿದ್ಧಪಡಿಸಿದ ಭಾಷಣದಲ್ಲಿ ಕೆಲ ವಿಚಾರಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಕೊನೆಯಲ್ಲಿ ಅಧಿವೇಶನಕ್ಕೆ ಆಗಮಿಸಿದರೂ, ಕೇವಲ ಎರಡೇ ನಿಮಿಷಗಳಲ್ಲಿ ಭಾಷಣ ಮುಗಿಸಿ ವಿಧಾನಸಭೆಯಿಂದ ಹೊರನಡೆದಿದ್ದಾರೆ. ಈ ನಡೆಗೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ವೇಳೆ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ರಾಜ್ಯಪಾಲರನ್ನು ಅಡ್ಡಗಟ್ಟಿ ಹೊರ ಹೋಗದಂತೆ ತಡೆಯಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ. ಈ ವೇಳೆ ಮಾರ್ಷಲ್ ಗಳು ಹರಿಪ್ರಸಾದ್ ಅವರನ್ನು ಹಿಂದಕ್ಕೆಳೆದು ರಾಜ್ಯಪಾಲರಿಗೆ ದಾರಿ ಮಾಡಿಕೊಟ್ಟಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್ ಅಶೋಕ್ “ಕೇಂದ್ರ ಸರಕಾದ ವಿರುದ್ಧ ಮಾತನಾಡಲು ರಾಜ್ಯಪಾಲರ ಮೇಲೆ ಒತ್ತಡವಿದೆ. ಕಾಂಗ್ರೆಸ್ ನವರಿಗೆ ತಮ್ಮದೇ ಆದ ಕಾರ್ಯಸೂಚಿ ಇದೆ. ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರಿಗೆ ನಾವು ಕೇಂದ್ರ ಸರ್ಕಾರದ ವಿರುದ್ಧ ಹೋರಾಡುತ್ತಿದ್ದೇವೆ ಎಂದು ತಿಳಿಸುವುದು ಅವರ ಉದ್ದೇಶವಾಗಿದೆ ಎಂದು ಆರೋಪಿಸಿದ್ದಾರೆ.
ʻದೇವಸ್ಥಾನಗಳಲ್ಲಿ ಕೇಸರಿ ಧ್ವಜ ಹಾರಿಸಬೇಡಿʼ ಎಂದ ಮಾಜಿ ಸಚಿವ ರಮಾನಾಥ ರೈ; BJP ನಾಯಕರಿಂದ ಕಿಡಿ
ದೇವಸ್ಥಾನದಲ್ಲಿ ನಡೆಯುವ ಯಾವುದೇ ಕಾರ್ಯಕ್ರಮಗಳು ರಾಜಕೀಯಕ್ಕೆ ಸೇರಿದ್ದಲ್ಲ. ಹೀಗಾಗಿ ಯಾವುದೇ ರೀತಿಯ ಧ್ವಜ ಹಾಕುವುದು ತಪ್ಪು ಎಂದು ಹೇಳಿದರು. ಈ ಹೇಳಿಕೆ ಸದ್ಯ ಹೇಳಿಕೆ ಈಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದೆ. ಅವರ ಈ ಹೇಳಿಕೆಯು ಹಿಂದೂ ನಾಯಕರನ್ನು ಕೆರಳಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಪವನ ವಿದ್ಯುತ್ ಯೋಜನೆ, ವಿಜಯಪುರ- ಬಳ್ಳಾರಿಯಲ್ಲಿ ₹10,500 ಕೋಟಿ ಹೂಡಿಕೆ
ಬೆಂಗಳೂರು: ಕರ್ನಾಟಕ ಸೇರಿದಂತೆ ಭಾರತದಲ್ಲಿ ಇಂಧನ ವಲಯದಲ್ಲಿ ಹೆಚ್ಚಿನ ಹೂಡಿಕೆ ಆಗುತ್ತಿದೆ. ಈ ಮಾತಿಗೆ ಪೂರಕೆ ಎಂಬಂತೆ ಮರುಬಳಕೆ ಇಂಧನ ವಲಯದಲ್ಲಿ ಹೆಸರು ಮಾಡಿರುವ ಆರ್.ಪಿ-ಸಂಜೀವ್ ಗೊಯೆಂಕಾ ಉದ್ಯಮ ಸಮೂಹವು ಕರ್ನಾಟಕದ ಎರಡು ಪ್ರಮುಖ ಜಿಲ್ಲೆಗಳಲ್ಲಿ ಪವನ ವಿದ್ಯುತ್ ಯೋಜನೆ ಅನುಷ್ಠಾನಕ್ಕೆ ಬರೋಬ್ಬರಿ 10,500 ಕೋಟಿ ರೂ. ಬಂಡವಾಳ ಹೂಡಿಕೆಗೆ ಮುಂದಾಗಿದೆ ಎಂದು ಬೃಹತ್ ಮತ್ತು ಮಧ್ಯಮ
Gold, Silver Price Today: ಬಂಗಾರ, ಬೆಳ್ಳಿ ಬೆಲೆ ದಿಢೀರ್ ಭರ್ಜರಿ ಇಳಿಕೆ: ಜನವರಿ 22ರ ದರಪಟ್ಟಿ ಇಲ್ಲಿದೆ
Gold, Silver Price: ದಾಖಲೆಯ ಏರಿಕೆಯತ್ತ ಹೊರಟಿದ್ದ ಬಂಗಾರ, ಬೆಳ್ಳಿ ದರದಲ್ಲಿ ಇದೀಗ ದಿಧೀರ್ ಕುಸಿತ ಆಗಿದೆ. ಹಾಗಾದ್ರೆ ಇಂದು (ಜನವರಿ 22) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬೆಲೆ ಎಷ್ಟಿದೆ ಎನ್ನುವ ಸಂಪೂರ್ಣ ವಿವರವನ್ನು ಅಂಕಿಅಂಶಗಳ ಸಹಿತ ಇಲ್ಲಿ ನೀಡಲಾಗಿದೆ ತಿಳಿಯಿರಿ. ಬಂಗಾರ ದರಗಳ ವಿವರ: ನಿನ್ನೆ (ಜನವರಿ 21) ಬೆಂಗಳೂರು
ಅಮೆರಿಕಾ ಗ್ರೀನ್ಲ್ಯಾಂಡ್ ಸ್ವಾಧೀನಕ್ಕೆ ಮುಂದಾಗಿರುವ ಬೆನ್ನಲ್ಲೇ, ರಷ್ಯಾ ಅಧ್ಯಕ್ಷ ಪುಟಿನ್ ಈ ವಿಚಾರದಲ್ಲಿ ನಮಗೆ ಆಸಕ್ತಿಯಿಲ್ಲ ಎಂದಿದ್ದಾರೆ.ಅಲ್ಲದೆ, 19ನೇ ಶತಮಾನದಲ್ಲಿ ಅಲಾಸ್ಕಾ ಮಾರಾಟಕ್ಕೆ ಹೋಲಿಸಿ, ಗ್ರೀನ್ಲ್ಯಾಂಡ್ ಮೌಲ್ಯವನ್ನು ಸಹ ಅಂದಾಜಿಸಿದ್ದಾರೆ. ಇದೇ ವೇಳೆ ಗಾಜ ಶಾಂತಿ ಮಂಡಳಿಗೆ 1 ಶತಕೋಟಿ ಡಾಲರ್ ದೇಣಿಗೆ ನೀಡಲು ಸಿದ್ದ ಆದ್ರೆ ಇದು ರಷ್ಯಾ-ಉಕ್ರೇನ್ ಯುದ್ಧ ನಿಂತಾಗ ಮಾತ್ರ ಎಂದು ಕಂಡಿಷನ್ ವಿಧಿಸಿದ್ದು, ಇದರ ಜೊತೆಗೆ ಇನ್ನು, ನಾವು ಟ್ರಂಪ್ ಆಹ್ವಾನ ಒಪ್ಪಿಗೆ ನೀಡುವ ಬಗ್ಗೆ ಯೋಚಿಸುತ್ತಿದ್ದೇವೆ ಎಂದು ಹೇಳುವ ಮೂಲಕ ರಷ್ಯಾ ಯೋಜನೆಗೆ ಒಪ್ಪಿಕೊಂಡಿದೆ ಎಂಬ ಟ್ರಂಪ್ ಹೇಳಿಕೆಗಳಿಗೆ ಬ್ರೇಕ್ ಹಾಕಿದ್ದಾರೆ.
Greenland: ಗ್ರೀನ್ಲ್ಯಾಂಡ್ ವಿಚಾರದಲ್ಲಿ ಡೊನಾಲ್ಡ್ ಟ್ರಂಪ್ ಯು-ಟರ್ನ್, ಕಾರಣ ಗೊತ್ತಾ?
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಗ್ರೀನ್ಲ್ಯಾಂಡ್ ನಡುವೆ ನಡೆಯುತ್ತಿದ್ದ ಕದನ ಇದೀಗ ಸುಖಾಂತ್ಯ ಕಂಡಿದೆ. ಟ್ರಂಪ್ ಹೇಗಾದರೂ ಮಾಡಿ ಸಂಪೂರ್ಣ ಗ್ರೀನ್ಲ್ಯಾಂಡ್ ನೆಲವನ್ನು ಹಿಡಿತಕ್ಕೆ ಪಡೆಯಲು ಬಯಸಿದ್ದರು. ಡೆನ್ಮಾರ್ಕ್ ಸಾಮ್ರಾಜ್ಯದ ಭಾಗವಾದ ಗ್ರೀನ್ಲ್ಯಾಂಡ್ ದ್ವೀಪವನ್ನು ವಶಕ್ಕೆ ಪಡೆದು ಅಮೆರಿಕಗೆ ಸೇರಿಸಲು ಟ್ರಂಪ್ ಮುಂದಾಗಿರುವ ವಿಚಾರ ಯುರೋಪ್ ಒಕ್ಕೂಟದಲ್ಲಿ ಬಿರುಗಾಳಿ ಎಬ್ಬಿಸಿತ್ತು. ಅಲ್ಲದೆ ಜಗತ್ತಿನ ಅತ್ಯಂತ ದೊಡ್ಡ
ಬಿಜೆಪಿ ಶಾಸಕರು ಹಿಂದಿನಿಂದ ಬಂದು ನನ್ನ ಬಟ್ಟೆ ಹರಿದಿದ್ದಾರೆ: ಬಿಕೆ ಹರಿಪ್ರಸಾದ್ ಗಂಭೀರ ಆರೋಪ
ರಾಜ್ಯಪಾಲರು ಸರ್ಕಾರದ ಭಾಷಣ ಓದದೆ ತಮ್ಮದೇ ಭಾಷಣ ಓದಿ ಕರಾಳ ಇತಿಹಾಸ ಸೃಷ್ಟಿಸಿದ್ದಾರೆ. ಇದು ಕರ್ನಾಟಕ ಜನತೆಗೆ ಮಾಡಿದ ಅಪಮಾನ. ಸುಪ್ರೀಂ ಕೋರ್ಟ್ ಆದೇಶವಿದ್ದರೂ ರಾಜ್ಯಪಾಲರು ಸ್ವೇಚ್ಛಾಚಾರವಾಗಿ ನಡೆದುಕೊಂಡಿದ್ದಾರೆ ಎಂದು ಘೊಷಣೆ ಕೂಗುವ ವೇಳೆ ಬಿಜೆಪಿಗರು ಹಿಂದಿನಿಂದ ಬಂದು ಬಟ್ಟೆ ಹರಿದು ರಣಹೇಡಿತನ ಪ್ರದರ್ಶಿಸಿದ್ದಾರೆ ಎಂದು ಬಿ.ಕೆ. ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ರಾಜ್ಯಪಾಲರ ಈ ನಡೆಯ ಕುರಿತು ವಾಗ್ದಾಳಿ ನಡೆಸಿದ್ದಾರೆ.
ಜಿಲ್ಲೆಯಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ತಡೆಗೆ ಇಲಾಖೆ ಸಕ್ರಿಯ : ಐಜಿಪಿ ಡಾ.ಪಿ.ಎಸ್ ಹರ್ಷಾ ಎಚ್ಚರಿಕೆ
ಅಕ್ರಮ ದಂಧೆಕೋರರು ಎಷ್ಟೇ ಪ್ರಭಾವಿಗಳಿದ್ದರೂ ಮುಲಾಜಿಲ್ಲದೇ ಕ್ರಮ
IMD Weather Forecast: ಈ ಭಾಗಗಳಲ್ಲಿ ದಟ್ಟ ಮಂಜು, ಭೀಕರ ಚಳಿ ನಡುವೆ ನಾಲ್ಕು ದಿನ ಬಿರುಗಾಳಿ ಮಳೆ ಸಾಧ್ಯತೆ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಭೀಕರ ಚಳಿ ಮುಂದುವರೆದಿದೆ. ಈ ನಡುವೆಯೇ ಈ ಭಾಗಗಳಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂದು (ಜನವರಿ
ಕಲ್ಯಾಣ್-ಡೊಂಬಿವಲಿ ನಗರಸಭೆಯಲ್ಲಿ ಶಿಂಧೆ ಶಿವಸೇನೆ-ಎಂಎನ್ಎಸ್ ಮೈತ್ರಿ; ಅಧಿಕಾರದಿಂದ ಬಿಜೆಪಿ ದೂರ
ಕಲ್ಯಾಣ್-ಡೊಂಬಿವಲಿ ನಗರಸಭೆಯಲ್ಲಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ, ರಾಜ್ ಠಾಕ್ರೆ ಅವರ ಎಂಎನ್ಎಸ್ ಜೊತೆ ಮೈತ್ರಿ ಮಾಡಿಕೊಂಡಿದೆ. ಈ ಮೈತ್ರಿ ಬಿಜೆಪಿಯನ್ನು ಅಧಿಕಾರದಿಂದ ದೂರವಿರಿಸುವ ಗುರಿಯನ್ನು ಹೊಂದಿದೆ. ಉದ್ಧವ್ ಬಣದ ಕಾರ್ಪೋರೇಟರ್ಗಳ ಬೆಂಬಲ ಸಿಕ್ಕರೆ ಮೈತ್ರಿಕೂಟ ಸುಲಭವಾಗಿ ಬಹುಮತ ಸಾಧಿಸಬಹುದು.
ಭಾಷಣ ಮಾಡದೆ ತೆರಳಿದ ಗವರ್ನರ್ಗೆ ಧಿಕ್ಕಾರ ಘೋಷಣೆ; ಖರ್ಗೆ, ಖಂಡ್ರೆ ಹೇಳಿದ್ದೇನು?
ಬೆಂಗಳೂರು: ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾಷಣ ಮಾಡಿದ್ದಾರೆ. ಆರ್ಥಿಕ ಸ್ಥಿತಿಗತಿಗಳನ್ನು ನಿಭಾಯಿಸುವ ನಿಟ್ಟಿನಲ್ಲಿ ನನ್ನ ಸರ್ಕಾರ ಬದ್ಧವಾಗಿದೆ. ಅವರಿಗೆ ನನ್ನ ಶುಭಾಶಯ, ಜೈ ಹಿಂದ್, ಜೈಕರ್ನಾಟಕ ಎಂದು ರಾಜ್ಯಪಾಲರು ಭಾಷಣ ಮುಗಿಸಿದ್ದಾರೆ. ಈ ಮೂಲಕ ಸರ್ಕಾರ ಕೊಟ್ಟ ಭಾಷಣ ಓದದೇ ಕೆಲ ಅಂಶಗಳನ್ನು ಮಾತ್ರ ಓದಿ ಭಾಷಣ ಮುಗಿಸಿದ್ದಾರೆ. ಇನ್ನೂ
ರಾಜ್ಯಪಾಲರ ನಡೆಗೆ ಕಾಂಗ್ರೆಸ್ನಿಂದ ಆಕ್ಷೇಪ: ವಿಧಾನಮಂಡಲದಲ್ಲಿ ಗದ್ದಲ
ಭಾಷಣ ಓದಿ ತೆರಳುತ್ತಿದ್ದ ರಾಜ್ಯಪಾಲರನ್ನು ತಡೆಯಲು ಮುಂದಾದ ಕಾಂಗ್ರೆಸ್ ಸದಸ್ಯರು
ಕುಸಿತ ಕಂಡ ಚಿನ್ನದ ದರ; ಇಂದಿನ ದರವೆಷ್ಟು?
ಸತತವಾಗಿ ಏರುತ್ತಿದ್ದ ಚಿನ್ನ ಬುಧವಾರ ಗರಿಷ್ಠ ಏರಿಕೆ ಕಂಡ ಮೇಲೆ ಗುರುವಾರ ಹಠಾತ್ ಆಗಿ ಕುಸಿತ ಕಂಡಿದೆ. ನಿರಂತರವಾಗಿ ಏರು ಹಾದಿಯಲ್ಲಿದ್ದ ಚಿನ್ನದ ದರ ಗುರುವಾರ ಜ. 22ರಂದು ಭಾರೀ ಕುಸಿತ ಕಂಡಿದೆ. 2026 ಜ. 22ರ ರಾಯಿಟರ್ಸ್ ವರದಿ ಪ್ರಕಾರ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗ್ರೀನ್ ಲ್ಯಾಂಡ್ ಅನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದರಿಂದ ಹಿಂದೆ ಸರಿದಿದ್ದಾರೆ. ಅಲ್ಲದೆ, ಸುಂಕ ಬೆದರಿಕೆಗಳಿಂದ ಹಿಂದೆ ಸರಿದಿದ್ದಾರೆ. ಇದರಿಂದಾಗಿ ಚಿನ್ನ ಮತ್ತು ಇತರ ಅಮೂಲ್ಯ ಲೋಹಗಳ ಬೆಲೆ ಸ್ವಲ್ಪ ಮಟ್ಟಿಗೆ ಕುಸಿತ ಕಂಡಿದೆ. 24 ಕ್ಯಾರೆಟ್ ಚಿನ್ನದ 1 ಗ್ರಾಂ ಬೆಲೆ ಇಂದು 15,431 ರೂ. ಆಗಿದ್ದು, ನಿನ್ನೆ 15,660 ರೂ. ಇತ್ತು. ಬುಧವಾರಕ್ಕೆ ಹೋಲಿಸಿದರೆ ಇಂದು ಪ್ರತೀ ಗ್ರಾಂನಲ್ಲಿ 229 ರೂ. ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ 1 ಗ್ರಾಂ ಬೆಲೆ ಇಂದು 14,145 ರೂ. ಆಗಿದ್ದು, ಬುಧವಾರ 14,355 ರೂ. ಇತ್ತು. ನಿನ್ನೆಗೆ ಹೋಲಿಸಿದರೆ ಇಂದು 210 ರೂ. ಇಳಿಕೆಯಾಗಿದೆ. ಸಾಮಾನ್ಯವಾಗಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನಕ್ಕೆ ಹೋಲಿಸಿದರೆ 18 ಕ್ಯಾರೆಟ್ ಚಿನ್ನ ಕಡಿಮೆ ಇರುತ್ತದೆ. ಇಂದು 18 ಕ್ಯಾರೆಟ್ ಚಿನ್ನದ 1 ಗ್ರಾಂ ಚಿನ್ನದ ಬೆಲೆ 11,573 ರೂ. ಆಗಿದ್ದು, ಬುಧವಾರ 11,745 ರೂ. ಇತ್ತು. ನಿನ್ನೆಗೆ ಹೋಲಿಸಿದರೆ ಇಂದು 172 ರೂ. ಇಳಿಕೆ ಕಂಡಿದೆ. ಮಂಗಳೂರಿನಲ್ಲಿ ಇಂದಿನ ಚಿನ್ನದ ದರವೆಷ್ಟು? ಗುರುವಾರ ಜನವರಿ 22ರಂದು ಬೆಳಗಿನ 11 ಗಂಟೆಯ ವಹಿವಾಟಿನಲ್ಲಿ ಮಂಗಳೂರಿನಲ್ಲಿ ಚಿನ್ನದ ಬೆಲೆ ಮತ್ತೆ ಹಠಾತ್ ಕುಸಿತ ಕಂಡಿದೆ. ಬೆಳಗಿನ ವಹಿವಾಟಿನಲ್ಲಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ದರ 15,431 (-229) ರೂ. ಗೆ ಇಳಿಕೆ ಕಂಡಿದೆ. ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ದರ 14,145 (-210) ರೂ. ಮತ್ತು ಒಂದು ಗ್ರಾಂ 18 ಕ್ಯಾರೆಟ್ ಚಿನ್ನದ ದರ 11,573 (-172) ರೂ. ಬೆಲೆಗೆ ತಲುಪಿದೆ. ಸ್ಪಾಟ್ ಚಿನ್ನದ ಬೆಲೆ ರಾಯಿಟರ್ಸ್ ವರದಿಯ ಪ್ರಕಾರ, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಜನವರಿ 22ರಂದು ಸ್ಪಾಟ್ ಚಿನ್ನದ ಬೆಲೆ ಇಳಿಕೆ ಕಂಡಿದೆ. ಜಿಎಂಟಿ ಸಮಯ ಬೆಳಿಗ್ಗೆ 03:32 ಸಮಯಕ್ಕೆ ಸರಿಯಾಗಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ಗೆ ಸುಮಾರು ಶೇಕಡಾ 1ರಷ್ಟು ಕುಸಿತದೊಂದಿಗೆ 4,793.63 ಡಾಲರ್ ಮಟ್ಟಕ್ಕೆ ತಲುಪಿದೆ. ಇದಕ್ಕೂ ಮೊದಲು ನಡೆದ ವಹಿವಾಟಿನಲ್ಲಿ ಚಿನ್ನದ ದರ ಪ್ರತಿ ಔನ್ಸ್ಗೆ 4,887.82 ಡಾಲರ್ಗಳಷ್ಟು ದಾಖಲೆ ಗರಿಷ್ಠ ಮಟ್ಟವನ್ನು ತಲುಪಿತ್ತು. ಭಾರತದಲ್ಲಿ ಬೆಳ್ಳಿ ದರ ಎಷ್ಟಿದೆ? ಭಾರತದಲ್ಲಿ ಇಂದು ಬೆಳ್ಳಿ ಬೆಲೆಯೂ ಕೊಂಚ ಮಟ್ಟಿಗೆ ಕುಸಿತದತ್ತ ಸಾಗಿದೆ. ಇಂದು ಒಂದು ಗ್ರಾಂ ಬೆಳ್ಳಿ ದರ 325 ರೂ. ಇದೆ. ಆದರೆ ಬುಧವಾರಕ್ಕೆ ಹೋಲಿಸಿದರೆ 330 ರೂ. ಇತ್ತು. ನಿನ್ನೆಗಿಂತ ಇಂದು 5 ರೂ. ಕಡಿಮೆಯಾಗಿದೆ.
Governor: ದಕ್ಷಿಣ ಭಾರತದಲ್ಲಿ ರಾಜ್ಯಪಾಲರು &ಸರ್ಕಾರಗಳ ನಡುವೆ ತಿಕ್ಕಾಟ ಬಲು ಜೋರು!
ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರಗಳ ನಡುವೆ ಭೀಕರ ಕದನ ಆರಂಭವಾಗಿದೆ. ಅದರಲ್ಲೂ ಈ ತಿಕ್ಕಾಟ ದಕ್ಷಿಣ ಭಾರತದಲ್ಲಿ ಹೆಚ್ಚಾಗಿದ್ದು, ಇಂದು ಕರ್ನಾಟಕ ವಿಧಾನಸಭೆಯಲ್ಲಿ ಸಂಭವಿಸಿದ ಘಟನೆ ಸೇರಿದಂತೆ ಕೇರಳ ಮತ್ತು ತಮಿಳುನಾಡು ನೆಲದಲ್ಲೂ ಇದೇ ರೀತಿ ತಿಕ್ಕಾಟ ನಡೆದಿತ್ತು. ಅದರಲ್ಲೂ ಈಗ ಕರ್ನಾಟಕ ವಿಧಾನಸಭೆಯಲ್ಲಿ ನಡೆದಿರುವ ಘಟನೆ ವಿರೋಧ ಪಕ್ಷಗಳು ಆಡಳಿತದಲ್ಲಿ ಇರುವ ರಾಜ್ಯಗಳ ನಾಯಕರನ್ನು ಕೆರಳಿಸಿದೆ,
ಸರ್ಕಾರ ಸಿದ್ದಪಡಿಸಿದ ಭಾಷಣ ಓದದ ರಾಜ್ಯಪಾಲ: ಗೆಹ್ಲೋಟ್ ಆಕ್ಷೇಪದ ಅಂಶಗಳೇನು?
ಇಲ್ಲಿಯವರೆಗೂ ಕೇರಳ, ತಮಿಳುನಾಡಿನಲ್ಲಿ ರಾಜ್ಯಪಾಲರು ವರ್ಸಸ್ ಸರ್ಕಾರದಂತಹ ಪ್ರಕರಣಗಳು ಕಂಡುಬರುತ್ತಿದ್ದವು. ಸದ್ಯ ಕರ್ನಾಟಕದಲ್ಲಿಯೂ ಈ ಘಟನೆ ನಡೆದಿದೆ. ಗುರುವಾರ ವಿಧಾನಸೌಧದಲ್ಲಿ ಜಂಟಿ ಅಧಿವೇಶನದ ವೇಳೆ ನಡೆದ ಹೈಡ್ರಾಮಾ ಸದ್ಯ ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸರ್ಕಾರ ಸಿದ್ಧಪಡಿಸಿದ್ದ ಭಾಷಣ ಓದದೇ, ತಾವೇ ಸಿದ್ಧಪಡಿಸಿದ ಭಾಷಣ 2 ನಿಮಿಷಕ್ಕೇ ಓದಿ ಮುಗಿಸಿ ಹೊರನಡೆದಿದ್ದಾರೆ. ರಾಜ್ಯಪಾಲರ ಈ ನಡೆಗೆ ಕಾರಣ ಏನು?ರಾಜ್ಯಪಾಲ ಭಾಷಣದಲ್ಲಿ ಇದ್ದದ್ದಾರು ಏನು ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ.
ಚಿನ್ನ ಆಪತ್ಭಾಂಧವ ಇದ್ದ ಹಾಗೆ. ಬೇರೆಲ್ಲೋ ಬಂಡವಾಳ ಹಾಕಿ ಕೈಸುಟ್ಟುಕೊಳ್ಳುವ ಬದಲು ಚಿನ್ನಕ್ಕೆ ಹಾಕಿ ಸುರಕ್ಷಿತ ಇರುವುದರಿಂದ ಚಿನ್ನದ ಬೇಡಿಕೆ ಹೆಚ್ಚಿ ಬೆಲೆಯೂ ಹೆಚ್ಚಾಗಿದೆ. ಇನ್ನು ಮುಂದೆಯೂ ಬೆಲೆ ಏರಿಕೆ ಪರ್ವ ಹೀಗೇ ಮುಂದುವರಿಯುತ್ತದೆ. ಹೀಗಾಗಿ ಸಾಲ ಮಾಡಿ ಚಿನ್ನ ಖರೀದಿಸುವ ಬದಲು ಅಗತ್ಯವಿದ್ದಷ್ಟು ಚಿನ್ನ ಖರೀದಿ ಮಾಡುವುದು ಸೂಕ್ತ ಎಂದು ಸಾಯಿ ಗೋಲ್ಡ್ ಪ್ಯಾಲೇಸ್ ಮಾಲೀಕರಾದ ಟಿಎ ಶರವಣ ಹೇಳಿದ್ದಾರೆ.
ಅಟಲ್ ಪಿಂಚಣಿ ಯೋಜನೆ 2031ರವರೆಗೆ ವಿಸ್ತರಣೆ: ಮಾಸಿಕ 210 ರೂ. ಹೂಡಿಕೆ ಮಾಡಿ 5,000 ರೂ. ಪಿಂಚಣಿ ಪಡೆಯಿರಿ!
ಅಟಲ್ ಪಿಂಚಣಿ ಯೋಜನೆಯನ್ನು ಕೇಂದ್ರ ಸರ್ಕಾರ 2030-31ರವರೆಗೆ ವಿಸ್ತರಿಸಿದೆ. ಅಸಂಘಟಿತ ವಲಯದ ಕಾರ್ಮಿಕರಿಗೆ ವೃದ್ಧಾಪ್ಯದಲ್ಲಿ ಆರ್ಥಿಕ ಭದ್ರತೆ ನೀಡುವ ಈ ಮಹತ್ವದ ಯೋಜನೆಯು 18 ರಿಂದ 40 ವರ್ಷ ವಯಸ್ಸಿನವರಿಗೆ ಲಭ್ಯವಿದೆ. 60 ವರ್ಷದ ನಂತರ ತಿಂಗಳಿಗೆ 1,000 ದಿಂದ 5,000 ರೂ. ಪಿಂಚಣಿ ಖಚಿತ. 8.66 ಕೋಟಿಗೂ ಹೆಚ್ಚು ಜನ ನೋಂದಾಯಿಸಿಕೊಂಡಿದ್ದಾರೆ. ಇದು ಕುಟುಂಬಕ್ಕೂ ಆರ್ಥಿಕ ಭದ್ರತೆ ನೀಡುತ್ತದೆ.
Aadhaar Update : ‘ಬಾಲ್ ಆಧಾರ್’ ಬಯೋಮೆಟ್ರಿಕ್ ಸೇವೆ ಈಗ ಫ್ರೀ! ಅಪ್ಡೇಟ್ ಮಾಡುವ ಸರಳ ಪ್ರಕ್ರಿಯೆ ಹೀಗಿದೆ
ಬೆಂಗಳೂರು: ಇಂದಿನ ದಿನಗಳಲ್ಲಿ ಶಾಲಾ ಪ್ರವೇಶಾತಿಯಿಂದ ಹಿಡಿದು ಸರ್ಕಾರದ ವಿದ್ಯಾರ್ಥಿ ವೇತನದವರೆಗೆ ಪ್ರತಿಯೊಂದಕ್ಕೂ 'ಆಧಾರ್ ಕಾರ್ಡ್' ಅತ್ಯಗತ್ಯ ದಾಖಲೆಯಾಗಿದೆ. ಅದರಲ್ಲೂ ಚಿಕ್ಕ ಮಕ್ಕಳಿರುವ ಪೋಷಕರು ಆಧಾರ್ ಬಗ್ಗೆ ವಿಶೇಷ ಗಮನ ಹರಿಸಬೇಕಾದ ತುರ್ತು ಅಗತ್ಯವಿದೆ. 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ನೀಡಲಾಗುವ 'ನೀಲಿ ಬಣ್ಣದ ಬಾಲ್ ಆಧಾರ್' ಕಾರ್ಡ್ಗೆ ಬಯೋಮೆಟ್ರಿಕ್ (ಬೆರಳಚ್ಚು ಮತ್ತು ಕಣ್ಣಿನ ಸ್ಕ್ಯಾನ್)
ಮಾವಿನ ಫಸಲು ಭರ್ಜರಿ ನಿರೀಕ್ಷೆ ; ಹೆಕ್ಟೇರಿಗೆ 4-5 ಟನ್ ಬರುವ ಸಾಧ್ಯತೆ
ಧಾರವಾಡ ಜಿಲ್ಲೆಯಲ್ಲಿ ಈ ಬಾರಿ ಮಾವಿನ ಫಸಲು ಭರ್ಜರಿಯಾಗಿ ಬರಲಿದೆ. ಡಿಸೆಂಬರ್ನಲ್ಲಿ ಉತ್ತಮ ಚಳಿ ಹಾಗೂ ಹಗಲಿನಲ್ಲಿ ಬಿಸಿಲು ಮಾವಿನ ಬೆಳೆಗೆ ಅನುಕೂಲವಾಗಿದೆ. ಹೆಕ್ಟೇರ್ಗೆ 4-5 ಟನ್ ಫಸಲು ಬರುವ ಸಾಧ್ಯತೆ ಇದೆ. ಜಿಲ್ಲೆಯಲ್ಲಿ 13 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತಿದೆ. ಅಲ್ಫಾನ್ಸೋ ತಳಿಗೆ ಹೆಚ್ಚಿನ ಬೇಡಿಕೆ ಇದೆ. ರೈತರಿಗೆ ತೋಟಗಾರಿಕೆ ಇಲಾಖೆಯಿಂದ ತರಬೇತಿ ನೀಡಲಾಗುತ್ತಿದೆ.
ಔರಾದ್ | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ
ಔರಾದ್ : ಔರಾದ್ ರೈತನೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಔರಾದ್ ತಾಲೂಕಿನ ಉಜನಿ ಗ್ರಾಮದಲ್ಲಿ ಬುಧವಾರ ನಡೆದಿದೆ. ಮೃತರನ್ನು ಉಜನಿ ಗ್ರಾಮದ ನಿವಾಸಿ ಸುಭಾಷ್ ಕಾಂಬಳೆ (42) ಎಂದು ಗುರುತಿಸಲಾಗಿದೆ. ಸುಭಾಷ್ ಅವರು ಸಾಲ ಪಡೆದು ತಮ್ಮ ಹೊಲದಲ್ಲಿ ಬೆಳೆ ಬೆಳೆದಿದ್ದರು. ಆದರೆ ಇತ್ತೀಚೆಗೆ ಸುರಿದ ಅತಿವೃಷ್ಟಿಯಿಂದ ಹೊಲದಲ್ಲಿದ್ದ ಬೆಳೆಗಳು ಸಂಪೂರ್ಣ ಹಾಳಾಗಿದ್ದು, ಇದರಿಂದಾಗಿ ತೀವ್ರ ಮನನೊಂದ ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಮೃತ ರೈತರಿಗೆ ಉಜನಿ ಗ್ರಾಮದ ಪಿಕೆಪಿಎಸ್ನಲ್ಲಿ 50 ಸಾವಿರ ರೂ. ಸಾಲವಿದ್ದು, ಇತರೆ ಸಂಘ ಸಂಸ್ಥೆಗಳಲ್ಲಿ ಸುಮಾರು 2 ಲಕ್ಷ ರೂ. ಹಾಗೂ ಖಾಸಗಿ ಸಾಲವೂ ಇರುವುದಾಗಿ ತಿಳಿದು ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಚಿಂತಾಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.
ಕಾಸರಗೋಡು-ಮಂಗಳೂರು KSRTC ಪ್ರಯಾಣಿಕರಿಗೆ ಟೋಲ್ ಬಿಸಿ : ಬಸ್ ದರ 7 ರೂ.ಗೆ ಹೆಚ್ಚಳ
ಕಾಸರಗೋಡು: ಕುಂಬಳೆ ಅರಿಕ್ಕಾಡಿಯಲ್ಲಿ ಟೋಲ್ ಸಂಗ್ರಹ ಆರಂಭವಾದ ಹಿನ್ನೆಲೆಯಲ್ಲಿ, ಕಾಸರಗೋಡು-ಮಂಗಳೂರು ನಡುವೆ ಸಂಚರಿಸುವ ಕರ್ನಾಟಕ ಸಾರಿಗೆ (KSRTC) ಬಸ್ ದರವನ್ನು ಹೆಚ್ಚಿಸಲಾಗಿದ್ದು, ಪ್ರಯಾಣಿಕರಿಗೆ ಆರ್ಥಿಕ ಹೊರೆಯಾಗಿ ಪರಿಣಮಿಸಿದೆ. ಅಂತರರಾಜ್ಯ ಹೆದ್ದಾರಿಯ ಟೋಲ್ ಬೂತ್ ಮೂಲಕ ಹಾದುಹೋಗುವ ಪ್ರತಿ ಪ್ರಯಾಣಿಕರು ಈಗ ಮೂಲ ದರಕ್ಕಿಂತ ಹೆಚ್ಚುವರಿಯಾಗಿ 7 ರೂಪಾಯಿ ಪಾವತಿಸಬೇಕಾಗುತ್ತದೆ. ಈವರೆಗೆ ಕಾಸರಗೋಡಿನಿಂದ ಮಂಗಳೂರಿಗೆ 81 ರೂಪಾಯಿ ಇದ್ದ ಟಿಕೆಟ್ ದರವು ಇದೀಗ 88 ರೂಪಾಯಿಗಳಿಗೆ ಏರಿಕೆಯಾಗಿದೆ. ವಿಶೇಷವೆಂದರೆ, ಟೋಲ್ ದಾಟಿದ ತಕ್ಷಣದ ನಿಲ್ದಾಣದಲ್ಲಿ ಇಳಿಯುವ ಪ್ರಯಾಣಿಕರೂ ಈ ಹೆಚ್ಚುವರಿ ದರವನ್ನು ಭರಿಸಬೇಕಿದೆ. ಕುಂಬಳೆಯಲ್ಲಿ ಟೋಲ್ ಸಂಗ್ರಹ ಆರಂಭವಾದ ಕಾರಣ ಅನಿವಾರ್ಯವಾಗಿ ದರ ಹೆಚ್ಚಿಸಲಾಗಿದೆ ಎಂದು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಸ್ಪಷ್ಟಪಡಿಸಿದೆ. ಒಂದು ಬಸ್ ಕಾಸರಗೋಡಿನಿಂದ ಮಂಗಳೂರಿಗೆ ಹೋಗುವಾಗ ಪ್ರತಿ ಬಾರಿ ಸುಮಾರು 220 ರೂಪಾಯಿ ಟೋಲ್ ಪಾವತಿಸಬೇಕಾಗುತ್ತದೆ. ಈ ಹೊರೆಯನ್ನು ಸರಿದೂಗಿಸಲು ದರ ಏರಿಕೆ ಮಾಡಲಾಗಿದೆ ಎಂಬುದು ಅಧಿಕಾರಿಗಳ ವಾದವಾಗಿದೆ. ಪ್ರಸ್ತುತ ಕರ್ನಾಟಕದ 43 ಬಸ್ಗಳು ಈ ಮಾರ್ಗದಲ್ಲಿ ದಿನಕ್ಕೆ ತಲಾ ಏಳು ಬಾರಿ ಸಂಚರಿಸುತ್ತಿವೆ. ಕಾಸರಗೋಡಿನ ಬಹುತೇಕ ಜನರು ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಮಂಗಳೂರನ್ನು ಅವಲಂಬಿಸಿದ್ದು, ಕರ್ನಾಟಕದ ಬಸ್ಗಳಲ್ಲೇ ಹೆಚ್ಚು ಸಂಚರಿಸುತ್ತಾರೆ. ಏಕಾಏಕಿ ದರ ಏರಿಕೆಯಾಗಿರುವುದು ದಿನನಿತ್ಯದ ಪ್ರಯಾಣಿಕರಲ್ಲಿ ತೀವ್ರ ನಿರಾಸೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.
Siddaramaiah: ವಿಧಾನಸಭೆಯಲ್ಲಿ ಹೈಡ್ರಾಮಾ; ಭಾಷಣ ಓದದೆ ತೆರಳಿದ ಗವರ್ನರ್: ಸಿದ್ದರಾಮಯ್ಯ ಕಿಡಿ
ಬೆಂಗಳೂರು: ಇಂದಿನಿಂದ ಜನವರಿ 31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ನಡೆಯಲಿದೆ. ನರೇಗಾ ಹೆಸರು ಬದಲಾವಣೆಗೆ ಆಕ್ಷೇಪಿಸಿ ಕರ್ನಾಟಕ ಸರ್ಕಾರ ವಿಶೇಷ ಅಧಿವೇಶನ ಕರೆದಿದ್ದು, ಈ ಅಧಿವೇಶನಕ್ಕೆ ರಾಜ್ಯಪಾಲರು ಬರಲು ನಿರಾಕರಿಸಿದ್ದರು, ಇದೀಗ ಸದನಕ್ಕೆ ಬಂದು ಭಾಷಣ ಮಾಡಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವಿಧಾನಸೌಧಕ್ಕೆ ಆಗಮಿಸಿದ್ದು, ವಿಶೇಷ ಅಧಿವೇಶನದಲ್ಲಿ ಭಾಷಣ ಮಾಡಿದ್ದಾರೆ. ಜಂಟಿ ಅಧಿವೇಶನ ಉದ್ದೇಶಿಸಿ

26 C