ನಮ್ಮ ಸರಕಾರ ನುಡಿದಂತೆ ನಡೆಯುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್
ಕಲಬುರಗಿ: ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡಿದೆ. ಅಷ್ಟೇ ಅಲ್ಲದೇ, ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಅನೇಕ ಕಾರ್ಯಕ್ರಮ ರೂಪಿಸಿದೆ. ಆಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಯಡ್ರಾಮಿಯಲ್ಲಿ ನಡೆದ ವಿವಿಧ ಶಂಕುಸ್ಥಾಪನೆ, ಕಾಮಗಾರಿ ಕಾರ್ಯಕ್ರಮಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇಂದು ಯಡ್ರಾಮಿಯಲ್ಲಿ ಐತಿಹಾಸಿಕ ಕಾರ್ಯಕ್ರಮ ನಡೆಯುತ್ತಿದೆ. ನಾವು ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ನಡೆದಿದ್ದು, ನಿಮ್ಮ ಋಣ ತೀರಿಸಲು ಬಂದಿದ್ದೇವೆ. ನಮ್ಮ ಕಲ್ಯಾಣ ಕರ್ನಾಟಕದಲ್ಲಿ ಅತಿ ಹೆಚ್ಚು ವಿಧಾನಸಭೆ ಸದಸ್ಯರು ಹಾಗೂ ಲೋಕಸಭೆ ಸದಸ್ಯರನ್ನು ಆಯ್ಕೆ ಮಾಡಿದ್ದೀರಿ. ಆಮೂಲಕ ರಾಜ್ಯದಲ್ಲಿ ನಮಗೆ ದೊಡ್ಡ ಶಕ್ತಿ ನೀಡಿದ್ದು, ನಿಮಗೆ ನಮಿಸುತ್ತೇನೆ. 1 ಸಾವಿರ ಕೋಟಿ ರೂ. ಹಣವನ್ನು ಈ ಒಂದು ಕ್ಷೇತ್ರಕ್ಕೆ ಮಾತ್ರ ನೀಡಲಾಗಿದೆ. ಇತ್ತೀಚೆಗೆ ನಾಲ್ಕೈದು ಬಾರಿ ನಾನು ಕಲ್ಯಾಣ ಕರ್ನಾಟಕ ಭಾಗಕ್ಕೆ ಬಂದಿದ್ದೇನೆ. ಈ ಭಾಗದ ಅಭಿವೃದ್ಧಿಗೆ ಸಾವಿರಾರು ಕೋಟಿ ಮೊತ್ತದ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಬೀದರ್ ನಲ್ಲಿ 2 ಸಾವಿರ ಕೋಟಿ ರೂ. ಮೊತ್ತದ ಕಾಮಗಾರಿಗೆ ಚಾಲನೆ, ಕಲ್ಯಾಣ ಪಥ ಯೋಜನೆಗೆ ಚಾಲನೆ ಸೇರಿದಂತೆ ಅನೇಕ ಕಾರ್ಯಕ್ರಮಕ್ಕೆ ಬಂದಿದ್ದೇನೆ. ಪ್ರತಿ ವರ್ಷ 5 ಸಾವಿರ ಕೋಟಿ ರೂ. ಮೊತ್ತವನ್ನು ಈ ಭಾಗದ ಅಭಿವೃದ್ಧಿಗೆ ಮೀಸಲಿಟ್ಟಿದ್ದೇವೆ. ಇದನ್ನು ನೋಡಿದರೆ ನಮ್ಮ ಕ್ಷೇತ್ರ ಕೂಡ ಈ ಭಾಗದಲ್ಲೇ ಇದ್ದಿದ್ದರೆ ನಮಗೂ ಇಷ್ಟು ದೊಡ್ಡ ಮಟ್ಟದ ಅನುದಾನ ಸಿಗುತ್ತಿತ್ತು ಎಂದು ಭಾವಿಸುತ್ತೇನೆ. ನಾನು ಡಿಸಿಎಂ ಆಗಿದ್ದರು ನನ್ನ ಕ್ಷೇತ್ರದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಕಾಮಗಾರಿ ಕೈಗೊಳ್ಳಲು ಆಗಿಲ್ಲ. ನೀವು ಅದೃಷ್ಟವಂತರು ಎಂದರು. ಇಂದು ಕೆಪಿಎಸ್ ಶಾಲೆಗಳು, ಪ್ರಜಾಸೌಧಗಳ ಚಾಲನೆಗೆ ನಾವು ಬಂದಿದ್ದೇವೆ. ಈ ಕ್ಷೇತ್ರದ ಜನಪ್ರಿಯ ಶಾಸಕರಾದ ಅಜಯ್ ಸಿಂಗ್ ಅವರು ಎಲ್ಲರ ಮೇಲೆ ಒತ್ತಡ ತಂದು ಸಾವಿರಾರು ಕೋಟಿ ಅನುದಾನ ತಂದು ನಿಮ್ಮ ಬದುಕಿನಲ್ಲಿ ಬದಲಾವಣೆ ತರಲು ಕೆಲಸ ಮಾಡುತ್ತಿದ್ದಾರೆ. ಇಂತಹ ಶಾಸಕರು ಸಿಕ್ಕಿರುವುದು ನಿಮ್ಮ ಭಾಗ್ಯ. ಧರಂ ಸಿಂಗ್ ಅವರಿಗಿಂತ ಒಂದು ಕೈ ಹೆಚ್ಚಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು. “ಕಲ್ಯಾಣ ಕರ್ನಾಟಕದಲ್ಲಿ ಕೆಪಿಎಸ್ ಶಾಲೆಗಳ ಪ್ರಾರಂಭ ನೋಡಿದಾಗ, ಒಂದು ಮಾತು ನೆನಪಾಗುತ್ತಿದೆ. ರುಪರಪಹರಿಸದ, ದಾಯಾದಿ ದಕ್ಕಿಸದ, ನೀರಿನಲ್ಲಿ ನೆನೆಯದ, ಅಗ್ನಿಯಲ್ಲಿ ಸುಡದ ಗುಪ್ತ ನಿಧಿ ವಿದ್ಯೆ. ನಮ್ಮ ಸರ್ಕಾರ ಬಂದ ನಂತರ ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಶಿಕ್ಷಣ ಇಲಾಖೆ ಕೆಲಸ ಮಾಡುತ್ತಿದೆ. ಮುಖ್ಯಮಂತ್ರಿಗಳು ನನ್ನನ್ನು ಸಿಎಸ್ಆರ್ ಶಾಲೆಗಳ ಸಮಿತಿ ಜವಾಬ್ದಾರಿ ನೀಡಿದ್ದಾರೆ. ರಾಜ್ಯದಲ್ಲಿ 2 ಸಾವಿರ ಕೆಪಿಎಸ್ ಶಾಲೆಗಳನ್ನು ಸಿಎಸ್ಆರ್ ಅನುದಾನದ ಅಡಿ ನಿರ್ಮಿಸಲು ನಮ್ಮ ಸರ್ಕಾರ ಸಂಕಲ್ಪ ಮಾಡಿದೆ. ಮನಮೋಹನ್ ಸಿಂಗ್ ಅವರ ಸರ್ಕಾರ ಖಾಸಗಿ ಉದ್ಯಮಗಳು ಶೇ.2ರಷ್ಟು ಸಿಎಸ್ಆರ್ ನಿಧಿ ನೀಡಬೇಕು ಎಂದು ತೀರ್ಮಾನ ಮಾಡಿದರು. ಈ ನಿಧಿಯನ್ನು ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡುವ ತೀರ್ಮಾನವನ್ನು ಬೇರೆ ಯಾವುದೇ ರಾಜ್ಯಗಳ ಮಾಡಿಲ್ಲ. ಅಜಯ್ ಸಿಂಗ್ ಅವರು ನೀರಾವರಿ ವಿಚಾರವಾಗಿ ಮಲ್ಲಾಬಾದ್ ಏತ ನೀರಾವರಿ ಯೋಜನೆ ಆಗಲೇಬೇಕು ಎಂದು ಪಟ್ಟು ಹಿಡಿದು, 360 ಕೋಟಿ ರೂ. ಅನುದಾನವನ್ನು ಪಡೆದಿದ್ದಾರೆ. ಇದಕ್ಕೆ ಕಳೆದ ಡಿ.30ರಂದು ನಮ್ಮ ಸಭೆಯಲ್ಲಿ ಅನುಮೋದನೆ ನೀಡಿದ್ದೇವೆ. ಈ ಯೋಜನೆ ಕಾಮಗಾರಿ ಕೆಲಸ ಪ್ರಾರಂಭವಾಗಿದೆ ಎಂದು ವಿವರಿಸಿದರು. ಇಲ್ಲಿ ಅನೇಕ ಮಹಿಳೆಯರು ಬಂದಿದ್ದೀರಿ. ನಮ್ಮ ಸರ್ಕಾರ ನಿಮಗೆ ಗ್ಯಾರಂಟಿ ಯೋಜನೆ ನೀಡುವ ಮೂಲಕ ಆರ್ಥಿಕವಾಗಿ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ. ಇದೇ ಜಿಲ್ಲೆಯಲ್ಲಿ ನಾವು ಗೃಹಜ್ಯೋತಿ ಯೋಜನೆ ಉದ್ಘಾಟಿಸಿದೆವು. ಎಲ್ಲಾ ಐದು ಗ್ಯಾರಂಟಿಗಳನ್ನು ನೀಡಿ ನುಡಿದಂತೆ ನಡೆದಿದ್ದೇವೆ. ಇಂತಹ ಸರ್ಕಾರ, ಶಾಸಕರಿಗೆ ಹಾಗೂ ಇಲ್ಲಿನ ಸಂಸದರಿಗೆ ನಿಮ್ಮ ಆಶೀರ್ವಾದ ಹೀಗೆ ಮುಂದುವರಿಯಲಿ ಎಂದು ಮನವಿ ಮಾಡಿದರು. ನೂರು ವರ್ಷಗಳ ಹಿಂದೆ ಮಹಾತ್ಮಾ ಗಾಂಧೀಜಿ ಅವರು ಅಲಂಕರಿಸಿದ್ದ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಇಂದು ಮಲ್ಲಿಕಾರ್ಜುನ ಖರ್ಗೆ ಅವರು ಇದ್ದಾರೆ. ಎಲ್ಲಾ ಸಚಿವರು, ಶಾಸಕರು ಒಟ್ಟಾಗಿ ಸೇರಿ ನಿಮ್ಮ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇವೆ. ನಾವು ನಿಮ್ಮ ಜೊತೆ ಸದಾ ಇದ್ದೇವೆ. ನಿನ್ನೆ ಅಜಯ್ ಸಿಂಗ್ ಅವರು ಕಾಂಗ್ರೆಸ್ ಪಕ್ಷಕ್ಕೆ 1 ಎಕರೆ ಜಮೀನನ್ನು ದಾನವಾಗಿ ಬರೆದುಕೊಟ್ಟಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು. ಕೆಕೆಆರ್ಡಿಬಿ ಅಧ್ಯಕ್ಷ, ಜೇವರ್ಗಿ ಶಾಸಕ ಅಜಯ್ ಸಿಂಗ್ ಅವರು ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ, ಈ ಭಾಗದಲ್ಲಿ ಡಾ.ನಂಜುಂಡಪ್ಪ ವರದಿ ಪ್ರಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಬೇಕಾಗಿರುವುದನ್ನು ಅರಿತು ಅಕ್ಷರ ಆವಿಷ್ಕಾರ ಯೋಜನೆ ಜಾರಿಗೆ ತರುವ ಮೂಲಕ ಒತ್ತು ನೀಡಲಾಗಿದೆ. ಛಾಯಾ ದೇವಗಾಂಕರ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಶಿಕ್ಷಣದ ವರದಿ ನೀಡಿದ್ದೇವೆ, ಈಗಾಗಲೇ ನಮ್ಮ ಭಾಗಕ್ಕೆ 300 ಕೆ.ಪಿ.ಎಸ್ ಶಾಲೆಗಳು ಮಂಜೂರು ನೀಡಿದ್ದಾರೆ ಎಂದರು. ಮಲ್ಲಾಬಾದ್ ಏತ ನೀರಾವರಿ ಯೋಜನೆ ಟೆಂಡರ್ ಪ್ರಕ್ರಿಯೆ ಮುಗಿದಿದೆ, ಕಡಕೋಳ ಮಡಿವಾಳಪ್ಪನವರ ತತ್ವಪದ ಅಧ್ಯಯನ ಕೇಂದ್ರ ಸ್ಥಾಪನೆ ಆಗಬೇಕು. ಈ ವರ್ಷ 6 ಸಾವಿರ ಕೋಟಿ ರೂ. ಅನುದಾನ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದರು.
ರಾಯಚೂರು | ಅಭಿವೃದ್ಧಿ ಬಗ್ಗೆ ಪ್ರಶ್ನಿಸಿದರೆ ಶಾಸಕಿ ಬೆಂಬಲಿಗರಿಂದ ಜೀವ ಬೆದರಿಕೆ : ವಿಶ್ವನಾಥ ಬಲ್ಲಿದವ ಆರೋಪ
ರಾಯಚೂರು: ದೇವದುರ್ಗ ಕ್ಷೇತ್ರದಲ್ಲಿ ಸಾರ್ವಜನಿಕ ಸಮಸ್ಯೆಗಳಿಗೆ ಶಾಸಕಿ ಕರೆಮ್ಮ ನಾಯಕ ಅವರು ಸ್ಪಂದಿಸುತ್ತಿಲ್ಲ. ಅಕ್ರಮ ಮರಳು ಸಾಗಾಟ ಮತ್ತು ಅಭಿವೃದ್ಧಿ ಕುಂಠಿತವಾಗಿರುವ ಕುರಿತು ಧ್ವನಿ ಎತ್ತಿದರೆ, ಶಾಸಕಿಯ ಬೆಂಬಲಿಗರು ಜೀವ ಬೆದರಿಕೆ ಕರೆ ಹಾಗೂ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ ಎಂದು ಭೀಮ್ ಆರ್ಮಿಯ ದೇವದುರ್ಗ ತಾಲೂಕು ಅಧ್ಯಕ್ಷ ವಿಶ್ವನಾಥ ಬಲ್ಲಿದವ ಆರೋಪಿಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 2023-24ನೇ ಸಾಲಿನ ಅನೇಕ ಕಾಮಗಾರಿಗಳು ಇನ್ನೂ ಪೂರ್ಣಗೊಂಡಿಲ್ಲ. ಪೂರ್ಣಗೊಂಡಿರುವ ಕೆಲವು ಕಾಮಗಾರಿಗಳೂ ಅತ್ಯಂತ ಕಳಪೆ ಮಟ್ಟದ್ದಾಗಿವೆ. ದೇವದುರ್ಗ ತಾಲೂಕಿನ ಹತ್ತಾರು ಗ್ರಾಮಗಳಲ್ಲಿ ಇಂದಿಗೂ ಶೌಚಾಲಯಗಳ ವ್ಯವಸ್ಥೆಯಿಲ್ಲದೆ ಮಹಿಳೆಯರು ಪರದಾಡುವಂತಾಗಿದೆ. ಜನರಿಗೆ ಶುದ್ಧ ಕುಡಿಯುವ ನೀರು ಸಿಗುತ್ತಿಲ್ಲ. ಈ ಬಗ್ಗೆ ಪ್ರಶ್ನಿಸಿದರೆ ಶಾಸಕಿಯ ಬೆಂಬಲಿಗರು ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ತಿಳಿಸಿದರು. ತಮಗೆ ಬರುತ್ತಿರುವ ಜೀವ ಬೆದರಿಕೆ ಕರೆಗಳ ಕುರಿತು ಈಗಾಗಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP), ಡಿಜಿಪಿ ಹಾಗೂ ವಿಧಾನಸಭಾ ಅಧ್ಯಕ್ಷರಿಗೆ ಲಿಖಿತ ದೂರು ನೀಡಲಾಗಿದೆ. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು, ಜನರಿಗೆ ನೀಡಿದ ಭರವಸೆಗಳು ಈಡೇರುವವರೆಗೂ ಹೋರಾಟ ಮುಂದುವರಿಸುವುದಾಗಿ ಅವರು ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ದೀಪಕ್ ಭಂಡಾರಿ, ಬಾಬಾಖಾನ್, ಎಚ್.ಎಂ. ಬಾಬು ಉಪಸ್ಥಿತರಿದ್ದರು.
ಕನ್ನಡ ಸಾಹಿತ್ಯ ಪರಿಷತ್ | ಜ.30ರಿಂದ ಫೆ.1ರ ವರೆಗೆ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆ
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ 2025-26ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳು ಜ.30,31 ಮತ್ತು ಫೆ.1ರಂದು ಬೆಂಗಳೂರು, ಕಲಬುರಗಿ, ಚಾಮರಾಜನಗರ, ಚಿಕ್ಕಮಗಳೂರು, ದೋಣಿಮಲೈ, ಧಾರವಾಡ, ಬಂಗಾರಪೇಟೆ, ಬಾಗಲಕೋಟೆ, ಬೀದರ್, ಮೂಡುಬಿದರೆ, ಮೈಸೂರು, ಶಿವಮೊಗ್ಗ, ಹಾಸನ ಸೇರಿ ಒಟ್ಟು 13 ಕೇಂದ್ರಗಳಲ್ಲಿ ನಡೆಯಲಿವೆ ಎಂದು ಪರಿಷತ್ನ ವ್ಯವಸ್ಥಾಪಕ ಪಾಶ್ರ್ವನಾಥ ತಿಳಿಸಿದ್ದಾರೆ. ಸೋಮವಾರ ಈ ಕುರಿತು ಪ್ರಕಟನೆ ನೀಡಿರುವ ಅವರು, ಕನ್ನಡಿಗರಲ್ಲಿ ಅದರಲ್ಲಿಯೂ ಯುವಜನರಲ್ಲಿ ಕನ್ನಡ ಭಾಷೆಯ ಕುರಿತು ಆಸಕ್ತಿ ಬೆಳೆಸುವ ದೃಷ್ಟಿಯಿಂದ ಆಚಾರ್ಯ ಬಿ.ಎಂ.ಶ್ರೀಕಂಠಯ್ಯ ಅವರು ಕನ್ನಡ ಸಾಹಿತ್ಯ ಪರಿಷತ್ನಲ್ಲಿ ಮಾಡಿದ ವ್ಯವಸ್ಥೆಯೇ ಕನ್ನಡ ಪರೀಕ್ಷೆಗಳಾಗಿದ್ದು, 1940ರಿಂದಲೂ ಪರೀಕ್ಷೆಗಳು ನಿರಂತರವಾಗಿ ನಡೆದು ಕೊಂಡು ಬರುತ್ತಿವೆ. ಪರೀಕ್ಷೆಯ ಪ್ರವೇಶ ಪತ್ರಗಳನ್ನು ವಿದ್ಯಾರ್ಥಿಗಳಿಗೆ ಅಂಚೆ ಮೂಲಕ ಕಳುಹಿಸಲಾಗುವುದು. ಜ.22ರ ನಂತರವೂ ಪ್ರವೇಶ ಪತ್ರ ತಲುಪದಿರುವ ಬಗ್ಗೆ ವಿದ್ಯಾರ್ಥಿಗಳು ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ನಲ್ಲಿ ವಿಚಾರಿಸಬೇಕು. ಅಥವಾ ದೂ: 080-26612991, 26623584, 26523867 ಹಾಗೂ ಮೊ: 8618296186ಕ್ಕೆ ಸಂಪರ್ಕಿಸಬಹುದು. ಪ್ರವೇಶ ಪತ್ರ ಮತ್ತು ಪರೀಕ್ಷಾ ಕೇಂದ್ರಗಳ ವಿಳಾಸವನ್ನು www.kasapa.in ವೆಬ್ಸೈಟ್ನಲ್ಲಿಯೂ ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.
ದಯಾನಂದ ಬಳೆಗಾರ ಅವರಿಗೆ ನಿಟ್ಟೂರು ಭೋಜಪ್ಪ ಸುವರ್ಣ ಪ್ರಶಸ್ತಿ
ಉಡುಪಿ: ಗುಂಡಿಬೈಲು ಯಕ್ಷಗಾನ ಕಲಾಕ್ಷೇತ್ರದ ವತಿಯಿಂದ ಯಕ್ಷಗಾನ ರಂಗದಲ್ಲಿ ಸಾಧನೆಗೈದ ಹಿರಿಯ ಕಲಾವಿದರಿಗೆ ಕಳೆದ 28 ವರ್ಷಗಳಿಂದ ನೀಡುತ್ತಿರುವ ನಿಟ್ಟೂರು ಭೋಜಪ್ಪ ಸುವರ್ಣ ಸ್ಮಾರಕ ಪ್ರಶಸ್ತಿಗೆ ಈ ಬಾರಿ ಹಿರಿಯ ಯಕ್ಷಗಾನ ಕಲಾವಿದ ದಯಾನಂದ ಬಳೆಗಾರ ನಾಗೂರು ಆಯ್ಕೆಯಾಗಿದ್ದಾರೆ. ಇವರು ಐದು ದಶಕಗಳ ಕಾಲ ಇಡಗುಂಜಿ, ಗುಂಡಬಾಳ, ಸಾಲಿಗ್ರಾಮ, ಮಂದಾರ್ತಿ ಮೇಳಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಇವರ ಕಲಾಸೇವೆಯನ್ನು ಗುರುತಿಸಿ ಹಲವಾರು ಸಂಘ ಸಂಸ್ಥೆಗಳು ಸನ್ಮಾನಿಸಿವೆ. ಮುಂದಿನ ತಿಂಗಳ ಫೆ.8ರಂದು ಯಕ್ಷಗಾನ ಕಲಾಕ್ಷೇತ್ರದ 75ನೇ ವಾರ್ಷಿಕೋತ್ಸವ ಸಮಾರಂಭ ದಲ್ಲಿ ದಯಾನಂದ ಬಳೆಗಾರ ನಾಗೂರು ಇವರಿಗೆ ನಿಟ್ಟೂರು ಭೋಜಪ್ಪ ಸುವರ್ಣ ಸ್ಮಾರಕ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ಪ್ರಕಟಣೆ ತಿಳಿಸಿದೆ.
ಗಡಿಪಾರು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ; ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿಗಳು
ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿ ವಿಚಾರಣೆಯಿಂದ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ಅವರು ಹಿಂದೆ ಸರಿದಿದ್ದಾರೆ. ಪುತ್ತೂರು ಉಪ ವಿಭಾಗಾಧಿಕಾರಿ 2025ರ ಡಿಸೆಂಬರ್ 17ರಂದು ಹೊರಡಿಸಿರುವ ಆದೇಶ ರದ್ದುಕೋರಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ನಿಗದಿಯಾಗಿತ್ತು. ಈ ವೇಳೆ ನ್ಯಾಯಮೂರ್ತಿಗಳು ಅರ್ಜಿ ವಿಚಾರಣೆಯಿಂದ ತಾವು ಹಿಂದೆ ಸರಿಯುತ್ತಿರುವುದಾಗಿ ತಿಳಿಸಿದರಲ್ಲದೆ, ರಿಟ್ ಅರ್ಜಿಯನ್ನು ಬೇರೊಂದು ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಪಡಿಸುವಂತೆ ರಿಜಿಸ್ಟ್ರಾರ್ ಜನರಲ್ ಅವರಿಗೆ ಸೂಚಿಸಿದರು. ಪ್ರಕರಣದ ಹಿನ್ನೆಲೆ: ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವರ್ಷದ ಅವಧಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಉಪ ವಿಭಾಗಾಧಿಕಾರಿ ಆದೇಶ ಹೊರಡಿಸಿದ್ದರು. ಈ ಆದೇಶ ಪ್ರಶ್ನಿಸಿ ತಿಮರೋಡಿ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು 2025ರ ನವೆಂಬರ್ 17ರಂದು ಭಾಗಶಃ ಪುರಸ್ಕರಿಸಿದ್ದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಗಡಿಪಾರು ಆದೇಶ ಹೊರಡಿಸುವ ಮುನ್ನ ತಿಮರೋಡಿ ಅವರಿಗೆ ವಿವರಣೆ ಹಾಗೂ ಮನವಿ ಸಲ್ಲಿಸಲು ಸೂಕ್ತ ಅವಕಾಶ ನೀಡದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಇದರಿಂದ, ಗಡಿಪಾರು ಆದೇಶ ರದ್ದುಪಡಿಸಲಾಗುತ್ತಿದೆ ಎಂದು ಆದೇಶಿಸಿತ್ತು. ಜತೆಗೆ, ಪ್ರಕರಣವನ್ನು ಪುತ್ತೂರು ಉಪ ವಿಭಾಗಾಧಿಕಾರಿಗೆ ಹಿಂದಿರುಗಿಸಿದ್ದ ನ್ಯಾಯಾಲಯ, ಪ್ರಕರಣವನ್ನು ಹೊಸದಾಗಿ ವಿಚಾರಣೆ ನಡೆಸಬೇಕು. ವಿಚಾರಣೆ ವೇಳೆ ಅರ್ಜಿದಾರರ ಅಹವಾಲನ್ನೂ ಆಲಿಸಿ, ನಂತರ ಸೂಕ್ತ ಕಾರಣಗಳೊಂದಿಗೆ ಕಾನೂನು ಪ್ರಕಾರ ಆದೇಶ ಹೊರಡಿಸಬೇಕು ಎಂದು ನಿರ್ದೇಶಿಸಿತ್ತು. ಹೈಕೋರ್ಟ್ ನಿರ್ದೇಶನದಂತೆ ಪ್ರಕರಣವನ್ನು ಹೊಸದಾಗಿ ಪರಿಗಣಿಸಿದ್ದ ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರು, ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಡಿಸೆಂಬರ್ 17ರಂದು ಆದೇಶಿಸಿದ್ದರು. ಇದನ್ನು ಪ್ರಶ್ನಿಸಿ ತಿಮರೋಡಿ ಮತ್ತೊಮ್ಮೆ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಬ್ಲಿಂಕಿಟ್ ಬಾಯ್ ಆಗಿ ಡೆಲಿವರಿ ಕೆಲಸ ಮಾಡಿದ ಸಂಸದ ರಾಘವ್ ಚಡ್ಡಾ
ನವದೆಹಲಿ: ರಾಜ್ಯಸಭಾ ಸಂಸದ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ಅವರು ವಿಭಿನ್ನ ಹೆಜ್ಜೆ ಇಟ್ಟಿದ್ದಾರೆ. ಕಾರ್ಪೊರೇಟ್ ಬೋರ್ಡ್ರೂಮ್ಗಳಿಂದ ದೂರ ಸರಿದು, ಅವರು ಸ್ವತಃ ಡೆಲಿವರಿ ರೈಡರ್ ಆಗಿ ಬದಲಾಗಿದ್ದಾರೆ. ಗಿಗ್ ಕಾರ್ಮಿಕರ ಸಮಸ್ಯೆಗಳನ್ನು ದೇಶದ ಗಮನಕ್ಕೆ ತರಲು ಈ ಹೆಜ್ಜೆ ಇಟ್ಟಿದ್ದು, ಈ ಸಂಬಂಧ ಚಡ್ಡಾ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ
Google Trends: ಪಿಎಸ್ಎಲ್ವಿ ಉಡಾವಣೆ ವಿಫಲ; ಇಸ್ರೋ ಮುಖ್ಯಸ್ಥರ ಹೇಳಿಕೆಯಲ್ಲಿ ಪುಟಿದೇಳುವ ನಿರ್ಧಾರ ಅಚಲ
ಬಾಹ್ಯಾಕಾಶ ಕಾರ್ಯಾಚರಣೆಗಳು ಯಾವಾಗಲೂ ಸವಾಲಿನಿಂದ ಕೂಡಿರುತ್ತವೆ. ಒಂದು ಸಣ್ಣ ತಪ್ಪು ಲೆಕ್ಕಾಚಾರವೂ ಇಡೀ ಕಾರ್ಯಾಚರಣೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಯೇ ಹೆಚ್ಚಿರುತ್ತದೆ. ಜಾಗತಿಕ ಬಾಹ್ಯಾಕಾಶ ಸಂಸ್ಥೆಗಳೆಲ್ಲವೂ ಒಂದಲ್ಲ ಒಂದು ಬಾರಿ ಕಾರ್ಯಾಚರಣೆ ವೈಫಲ್ಯವನ್ನು ಎದುರಿಸಿರುತ್ತವೆ. ಅದೇ ರೀತಿ ಭಾರತದ ಹೆಮ್ಮೆಯ ಇಸ್ರೋ ಕೂಡ ಇಂದು (ಜ.12-ಸೋಮವಾರ) ಪಿಎಸ್ಎಲ್ವಿ- ಸಿ62 ರಾಕೆಟ್ ಉಡಾವಣೆಯ ವೈಫಲ್ಯವನ್ನು ಎದುರಿಸಿದೆ. ಈ ಕುರಿತು ಇಸ್ರೋ ಮುಖ್ಯಸ್ಥ ವಿ ನಾರಾಯಣನ್ ಏನು ಹೇಳಿದ್ದಾರೆ? ಬನ್ನಿ ನೋಡೋಣ.
ಚಿರಂಜೀವಿ, ವೆಂಕಟೇಶ್ ಅಭಿನಯದ ಈ ಹೊಸ ತೆಲುಗು ಚಿತ್ರದಲ್ಲಿ ಕನ್ನಡ ಡೈಲಾಗ್ಸ್ - ಥಿಯೇಟರ್ ನಲ್ಲಿ ಶಿಳ್ಳೆ, ಚಪ್ಪಾಳೆ
ತೆಲುಗಿನ 'ಮನ ಶಂಕರವರಪ್ರಸಾದ್ ಗಾರು' ಚಿತ್ರವು ಜನವರಿ 12ರಂದು ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಚಿರಂಜೀವಿ ಮತ್ತು ವಿಕ್ಟರಿ ವೆಂಕಟೇಶ್ ನಟಿಸಿದ್ದಾರೆ. ಚಿತ್ರದ ಒಂದು ದೃಶ್ಯದಲ್ಲಿ ಕನ್ನಡ ಸಂಭಾಷಣೆಗಳಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಥಿಯೇಟರ್ ನಲ್ಲಿ ಕನ್ನಡ ಪ್ರೇಕ್ಷಕರು ಈ ಸಂಭಾಷಣೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಚಿತ್ರದ ಮೇಲೆ ತೆಲುಗು ಚಿತ್ರರಂಗ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದೆ.
SSLC Exam: ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದ 6 ಶಿಕ್ಷಕರ ಬಂಧನ, ₹200-500ಗೆ ಮಾರಾಟ
ಬೆಂಗಳೂರು: ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಈ ಸ್ಕ್ಯಾಮ್ನಲ್ಲಿ ಭಾಗಿಯಾಗಿದ್ದರವರ ಪೈಕಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾತ್ರವಲ್ಲದೇ ಹೇಗೆಲ್ಲ ಪ್ರಶ್ನೆ ಪತ್ರಿಕೆ ಸೋರಿಕೆಗೆ ಪ್ಲಾನ್ ಮಾಡಲಾಗಿತ್ತು. ಎಷ್ಟು ಹಣಕ್ಕೆ ಹಂಚಲಾಗಿದೆ ಎಂಬುದೆಲ್ಲ ಸಂಗತಿಗಳು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿವೆ. ಬೆಂಗಳೂರಿನ ಉತ್ತರ ವಿಭಾಗದ ಸೈಬರ್
ಸಾಮಾಜಿಕ ಬಹಿಷ್ಕಾರ ನಿಷೇಧ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ
ಸಾಮಾಜಿಕ ಬಹಿಷ್ಕಾರ ವಿಧಿಸುವ ಅಪರಾಧಿಗೆ 3 ವರ್ಷಗಳ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ
ಕರ್ನಾಟಕ ಗೃಹ ಮಂಡಳಿಯಿಂದ ದೇವನಹಳ್ಳಿ ಬಳಿ 593 ಎಕರೆ ಜಮೀನಲ್ಲಿ ಬೃಹತ್ ವಸತಿ ಯೋಜನೆ; 4 ಗ್ರಾಮದಲ್ಲಿ ಭೂಸ್ವಾಧೀನ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ 593 ಎಕರೆ ಜಮೀನನ್ನು ಕರ್ನಾಟಕ ಗೃಹ ಮಂಡಳಿ ಸ್ವಾಧೀನಪಡಿಸಿಕೊಳ್ಳಲು ಅಧಿಸೂಚನೆ ಹೊರಡಿಸಿದೆ. ಫಾಕ್ಸ್ಕಾನ್ನಂತಹ ಕೈಗಾರಿಕೆಗಳ ಸ್ಥಾಪನೆಯಿಂದ ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಮನೆಗಳ ಬೇಡಿಕೆಯನ್ನು ಪೂರೈಸಲು ಈ ವಸತಿ ಯೋಜನೆ ರೂಪಿಸಲಾಗಿದೆ. ಭೂಮಾಲೀಕರು 60 ದಿನಗಳೊಳಗೆ ಆಕ್ಷೇಪಣೆ ಸಲ್ಲಿಸಬಹುದು.
Blinkit ಗಿಗ್ ಕಾರ್ಮಿಕರೊಂದಿಗೆ ದಿನ ಕಳೆದ ರಾಜ್ಯಸಭಾ ಸಂಸದ
ಹೊಸದಿಲ್ಲಿ: ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಒಂದು ದಿನದ ಮಟ್ಟಿಗೆ ಬ್ಲಿಂಕಿಟ್ ವಿತರಣಾ ರೈಡರ್ ಆಗಿ ಕೆಲಸ ಮಾಡುವ ಅನುಭವವನ್ನು ಪಡೆದಿದ್ದಾರೆ. ಈ ಸಂಬಂಧ ಅವರು ತಮ್ಮ ಎಕ್ಸ್ ಖಾತೆಯಲ್ಲಿ ‘ಸ್ಟೇ ಟ್ಯೂನ್ಡ್’ ಎಂಬ ಸಂದೇಶದೊಂದಿಗೆ ಟೀಸರ್ ವೀಡಿಯೊವನ್ನು ಹಂಚಿಕೊಂಡಿದ್ದಾರೆ. Away from boardrooms, at the grassroots. I lived their day. Stay tuned! pic.twitter.com/exGBNFGD3T — Raghav Chadha (@raghav_chadha) January 12, 2026 ವೀಡಿಯೊದಲ್ಲಿ ಬ್ಲಿಂಕಿಟ್ ಟಿ–ಶರ್ಟ್ ಹಾಗೂ ಜಾಕೆಟ್ ಧರಿಸಿರುವ ಚಡ್ಡಾ, ವಿತರಣಾ ರೈಡರ್ ಔನಿಂದ ಡೆಲಿವರಿ ಬ್ಯಾಗ್ ಸ್ವೀಕರಿಸುವುದು ಕಾಣುತ್ತದೆ. ಬಳಿಕ ಅವರು ವಿತರಣಾ ಪಾಲುದಾರರೊಂದಿಗೆ ಸ್ಕೂಟರ್ನಲ್ಲಿ ಹಿಂಬದಿ ಸವಾರಿ ಮಾಡುತ್ತಾರೆ. ವಸ್ತುಗಳನ್ನು ಸಂಗ್ರಹಿಸಲು ಅಂಗಡಿಯಲ್ಲಿ ನಿಲ್ಲುವುದು, ನಂತರ ವಿತರಣಾ ಸ್ಥಳದತ್ತ ತೆರಳುವ ದೃಶ್ಯಗಳೂ ವೀಡಿಯೊದಲ್ಲಿವೆ. ಗ್ರಾಹಕರ ಮನೆ ಬಾಗಿಲಿನ ಬಳಿ ರೈಡರ್ ಲಿಫ್ಟ್ನಿಂದ ಹೊರಬಂದು ಕರೆಗಂಟೆ ಒತ್ತುವಾಗ ಚಡ್ಡಾ ಅವರನ್ನು ನಿಕಟವಾಗಿ ಹಿಂಬಾಲಿಸುತ್ತಾರೆ. ವೀಡಿಯೊ ‘ಸ್ಟೇ ಟ್ಯೂನ್ಡ್’ ಎಂಬ ಪದಗಳೊಂದಿಗೆ ಕ್ಲಿಫ್ಹ್ಯಾಂಗರ್ನಲ್ಲಿ ಅಂತ್ಯಗೊಳ್ಳುತ್ತದೆ. ಈ ಪೋಸ್ಟ್ಗೆ ಚಡ್ಡಾ, “ಬೋರ್ಡ್ ರೂಮ್ಗಳಿಂದ ದೂರ, ತಳಮಟ್ಟದಲ್ಲಿ. ನಾನು ಅವರೊಂದಿಗೆ ಒಂದು ದಿನ ಕಳೆದೆ. ಟ್ಯೂನ್ ಆಗಿರಿ,” ಎಂದು ಶೀರ್ಷಿಕೆ ನೀಡಿದ್ದಾರೆ. ಗಿಗ್ ಹಾಗೂ ಡೆಲಿವರಿ ಪ್ಲಾಟ್ಫಾರ್ಮ್ ಕಾರ್ಮಿಕರು ಎದುರಿಸುತ್ತಿರುವ ಕಡಿಮೆ ವೇತನ, ದೀರ್ಘ ಕೆಲಸದ ಅವಧಿ ಮತ್ತು ಸಾಮಾಜಿಕ ಭದ್ರತೆಯ ಕೊರತೆ ಕುರಿತು ಚಡ್ಡಾ ಇತ್ತೀಚೆಗೆ ಸಂಸತ್ತಿನಲ್ಲಿ ಪ್ರಶ್ನೆ ಎತ್ತಿದ್ದರು. ಈ ಹಿನ್ನೆಲೆಯಲ್ಲೇ ಅವರ ಈ ಕ್ರಮ, ರಾಜಕೀಯ ಮತ್ತು ಸಾಮಾಜಿಕ ವಲಯಗಳಲ್ಲಿ ಚರ್ಚೆಗೆ ಕಾರಣವಾಗಿದೆ. ಡಿಸೆಂಬರ್ 2025ರಲ್ಲಿ ಬ್ಲಿಂಕಿಟ್ ವಿತರಣಾ ಕಾರ್ಯನಿರ್ವಾಹಕರೊಬ್ಬರು ತಮ್ಮ ಆದಾಯದ ಕುರಿತು ಹಂಚಿಕೊಂಡ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿತ್ತು. ಸಂಸತ್ತಿನ ಚಳಿಗಾಲದ ಅಧಿವೇಶನದ ನಂತರ, ಉತ್ತರಾಖಂಡದ ಥಪ್ಲಿಯಾಲ್ ಜಿ ಎಂದು ಗುರುತಿಸಲಾದ ಡೆಲಿವರಿ ಬಾಯ್ ಅವರನ್ನು ಚಡ್ಡಾ ತಮ್ಮ ನಿವಾಸಕ್ಕೆ ಊಟಕ್ಕೆ ಆಹ್ವಾನಿಸಿದ್ದರು.
ಉಡುಪಿ: ಕಾಪು ತಾಲೂಕು ನಡ್ಸಾಲು ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಮಲ್ಲಿಕಾ (34) ಎಂಬ ಮಹಿಳೆ ಜನವರಿ 05 ರಂದು ತನ್ನ ತಾಯಿ ಮನೆಯಾದ ರಾಮನಗರಕ್ಕೆ ಹೋಗುವುದಾಗಿ ಹೇಳಿ ಹೋದವರು, ತಾಯಿ ಮನೆಗೂ ಹೋಗದೇ, ವಾಪಾಸು ಮನೆಗೂ ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ ಎತ್ತರ, ಬಿಳಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ, ತುಳು, ಮರಾಠಿ ಹಾಗೂ ಮಲಯಾಳಂ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಮೊ.ನಂ: 0820-2555452, ಮೊ.ನಂ: 9480805450, ಕಾಪು ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2552133, ಮೊ.ನಂ: 9480805431 ಹಾಗೂ ಪೊಲೀಸ್ ಕಂಟ್ರೋಲ್ ರೂಂ ದೂ. ಸಂಖ್ಯೆ;0820-2525444ಅನ್ನು ಸಂಪರ್ಕಿಸಬಹುದು ಎಂದು ಪಡುಬಿದ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆ ತಿಳಿಸಿದೆ.
ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಇತಿಹಾಸ ನಿರ್ಮಿಸಿದ ದೇವದತ್ ಪಡಿಕ್ಕಲ್; ಸೆಮಿಪೈನಲ್ ಗೇರಿದ ಕರ್ನಾಟಕ!
Karnataka Vs Mumbai VHT Match- ವಿಜಯ್ ಹಜಾರೆ ಟ್ರೋಫಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮುಂಬೈಯನ್ನು ಪರಾಭವಗೊಳಿಸಿದ ಕರ್ನಾಟಕ ಸೆಮಿಫೈನಲ್ ತಲುಪಿದೆ. ಪಂದ್ಯದಲ್ಲಿ ಅಜೇಯ 81 ರನ್ ಗಳಿಸಿದ ಕರ್ನಾಟಕದ ದೇವದತ್ ಪಡಿಕ್ಕಲ್ ಅವರು ಟೂರ್ನಿಯಲ್ಲಿ 2 ಬಾರಿ 700 ರನ್ ಗಳ ಗಡಿ ದಾಟಿದ ಮೊದಲ ಆಟಗಾರರಾಗಿ ಇತಿಹಾಸ ನಿರ್ಮಿಸಿದ್ದಾರೆ. ಮಳೆ ಮತ್ತು ಕಡಿಮೆ ಬೆಳಕಿನಿಂದಾಗಿ ವಿಜೆಡಿ ನಿಯಮದ ಅನ್ವಯ ಕರ್ನಾಟಕವನ್ನು 55 ರನ್ ಗಳಿಂದ ವಿಜಯಿ ಎಂದು ಘೋಷಿಸಲಾಯಿತು.
ಉಡುಪಿ: ಗಣರಾಜ್ಯೋತ್ಸವ ಸಿದ್ಧತೆಗೆ ಪೂರ್ವಭಾವಿ ಸಭೆ
ಉಡುಪಿ: ಪ್ರತೀ ವರ್ಷದಂತೆ ಈ ಬಾರಿಯೂ ಜನವರಿ 26 ರಂದು ನಡೆಯಲಿರುವ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಯೋಜಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆಗಳನ್ನು ನೀಡಿದ್ದಾರೆ. ಸೋಮವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆ ಜ.26ರಂದು ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 8:30ಕ್ಕೆ ಆರಂಭವಾಗಲಿದೆ. 8:30ರಿಂದ 8:50ರವರೆಗೆ ದೇಶ ಭಕ್ತಿಗೀತೆ, ನಂತರ ಹುತಾತ್ಮ ಯೋಧರಿಗೆ ಗೌರವ ಸಮರ್ಪಣೆ ನಡೆಯಲಿದೆ. ಬೆಳಗ್ಗೆ 9:00ಕ್ಕೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರು ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕಾರ ಮಾಡಿ ಗಣರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ. ನಂತರ ಶಾಲಾ- ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ ಎಂದರು. ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪೊಲೀಸ್, ಅರಣ್ಯ, ಗೃಹ ರಕ್ಷಕ, ಎನ್ಸಿಸಿ, ಸ್ಕೌಟ್ ಮತ್ತು ಗೈಡ್ಸ್, ಸೇವಾದಳ ಸೇರಿದಂತೆ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಲಿದೆ. ಇದಕ್ಕಾಗಿ ಮೂರು ದಿನ ಮುಂಚಿತವಾಗಿ ಪೂರ್ವ ತಯಾರಿ ಮಾಡಿಕೊಳ್ಳಬೇಕು. ವೇದಿಕೆಯ ಸಿದ್ಧತೆ, ಸ್ವಾತಂತ್ರ್ಯ ಹೋರಾಟಗಾರರು, ಗಣ್ಯರು ಹಾಗೂ ಇತರರು ಆಸೀನರಾಗಲು ಪ್ರತ್ಯೇಕ ಆಸನ ವ್ಯವಸ್ಥೆ, ಧ್ವನಿವರ್ಧಕ, ಕುಡಿಯುವ ನೀರಿನ ವ್ಯವಸ್ಥೆ, ಸಿಹಿತಿಂಡಿ ವಿತರಣೆ, ಆಂಬುಲೆನ್ಸ್ ನಿಯೋಜನೆ ಸೇರಿದಂತೆ ಮೂಲ ಸೌಕರ್ಯ ಒದಗಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದರು. ಗಣರಾಜ್ಯೋತ್ಸವ ಆಚರಣೆಗೆ ಸಂಬಂಧಪಟ್ಟಂತೆ ಸ್ವಾಗತ, ನಿರೂಪಣೆ, ಶಿಷ್ಟಾಚಾರ ಹಾಗೂ ವೇದಿಕೆ ಸಮಿತಿ, ಪೆರೇಡ್ ಸಮಿತಿ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಿತಿ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಆಯಾ ಸಮಿತಿಯಲ್ಲಿರುವ ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಬೇಕು ಎಂದು ತಿಳಿಸಿದರು. ಭಾರತದ ಸಂವಿಧಾನ ಆಚರಣೆಯ ಪ್ರತೀಕವಾಗಿರುವ ಭಾರತದ ಗಣರಾಜ್ಯೋತ್ಸವ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ವಿವಿಧ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಎಲ್ಲರೂ ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ಯಾವುದೇ ಲೋಪವಾಗದಂತೆ ಎಚ್ಚರ ವಹಿಸಬೇಕು ಎಂದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್, ನಗರಸಭೆ ಪೌರಾಯುಕ್ತ ಮಹಾಂತೇಶ ಹಂಗರಗಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತ ರಿದ್ದರು.
ಬಳ್ಳಾರಿ | ಜ.12ರಿಂದ ವಾಣಿಜ್ಯ ಪರೀಕ್ಷೆ; ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿ : ಜಿಲ್ಲಾಧಿಕಾರಿ ಆದೇಶ
ಬಳ್ಳಾರಿ, ಜ.12 : ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ಜನವರಿ 12ರಿಂದ 20ರವರೆಗೆ ವಾಣಿಜ್ಯ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗಳ ಸುಸೂತ್ರ ಹಾಗೂ ಪಾರದರ್ಶಕ ನಿರ್ವಹಣೆಯ ದೃಷ್ಟಿಯಿಂದ, ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ–2023ರ ಕಲಂ 163ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ನಿಷೇಧಿತ ಪ್ರದೇಶವೆಂದು ಘೋಷಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅವರು ಆದೇಶ ಹೊರಡಿಸಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಸೆಂಟರ್ಗಳು ಹಾಗೂ ಇಂಟರ್ನೆಟ್ ಸೆಂಟರ್ಗಳನ್ನು ಪರೀಕ್ಷಾ ಅವಧಿಯಲ್ಲಿ ಕಾರ್ಯನಿರ್ವಹಿಸದಂತೆ ನಿರ್ಬಂಧ ವಿಧಿಸಲಾಗಿದೆ. ಜೊತೆಗೆ, ನಿಷೇಧಿತ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿಗಳು ಹಾಗೂ ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆದರೆ ಈ ಆದೇಶವು ಪರೀಕ್ಷಾ ಮೇಲ್ವಿಚಾರಣಾ ಕಾರ್ಯದಲ್ಲಿ ನಿರತರಾಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.
ಬೂತ್ ಮಟ್ಟದ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ: ಸಂಸದ ಜಿ.ಕುಮಾರ ನಾಯಕ ವಿರುದ್ಧ ರಂಗಪ್ಪ ಗೋಸಲ್ ಆರೋಪ
ದೇವದುರ್ಗ : ಲೋಕಸಭಾ ಚುನಾವಣೆಯಲ್ಲಿ ಬೂತ್ ಮಟ್ಟದಲ್ಲಿ ಪ್ರಮಾಣಿಕವಾಗಿ ಕೆಲಸ ಮಾಡಿದ ಕಾರ್ಯಕರ್ತರನ್ನು ಸಂಸದ ಜಿ. ಕುಮಾರ ನಾಯಕ ಅವರು ಕಡೆಗಣಿಸುತ್ತಿರುವ ನಡೆ ಬಹುತೇಕರಲ್ಲಿ ಬೇಸರ ಮೂಡಿಸಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ರಂಗಪ್ಪ ಗೋಸಲ್ ಆರೋಪಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿರುವ ಕೆಲ ದಲ್ಲಾಳಿಗಳ ಮಾತು ಕೇಳಿಕೊಂಡು ಪಕ್ಷಕ್ಕೆ ನಿಷ್ಠೆಯಿಂದ ಸೇವೆ ಸಲ್ಲಿಸಿದ ಮುಖಂಡರನ್ನು ಕಡೆಗಣಿಸಲಾಗುತ್ತಿದೆ ಎಂದು ದೂರಿದರು. ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಲ್ಲಿಯೇ ಎಸ್ಸಿ ಹಾಗೂ ಎಸ್ಟಿ ಸಮುದಾಯದ ಮುಖಂಡರಿಗೆ ಅನ್ಯಾಯವಾಗುತ್ತಿದ್ದು, ಲಿಂಗಾಯತ ಸಮುದಾಯದವರಿಗೆ ಮಾತ್ರ ಹುದ್ದೆಗಳು ನೀಡಲಾಗುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಟಿಎಪಿಎಂಸಿ, ಕೃಷಿ ಮಾರುಕಟ್ಟೆ, ಪಿಎಲ್ಡಿ ಬ್ಯಾಂಕ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಲಿಂಗಾಯತರಿಗೆ ಮಣೆ ಹಾಕಿ, ಹಿಂದುಳಿದ ಸಮುದಾಯದ ಜನರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಹೇಳಿದರು. ಲೋಕಸಭಾ ಚುನಾವಣೆಗೂ ಮೊದಲು ಹಿಂದುಳಿದ ವರ್ಗದ ಗಂಗಪಯ್ಯ ಪೂಜಾರಿ ಮನಸಗಲ್ ಅವರಿಗೆ ಎಪಿಎಂಸಿ ಅಧ್ಯಕ್ಷ ಸ್ಥಾನ ಲಭಿಸಿತ್ತು. ಆದರೆ ಕೆಲ ದಲ್ಲಾಳಿ ಮುಖಂಡರು ಜಿಲ್ಲಾಧ್ಯಕ್ಷರಿಗೆ ಇಲ್ಲಸಲ್ಲದ ಆರೋಪಗಳನ್ನು ಮಾಡಿದ್ದರಿಂದ ಸಿಕ್ಕ ಅವಕಾಶ ಕೈತಪ್ಪಿತು ಎಂದು ಹೇಳಿದರು. ಪಕ್ಷ ಸಂಘಟನೆಗೆ ಒತ್ತು ನೀಡದೆ, ಅಧಿಕಾರಕ್ಕಾಗಿ ಇನ್ನೊಬ್ಬರ ಬಗ್ಗೆ ಸುಳ್ಳು ಹೇಳುವುದೇ ಕೆಲವರ ಕಾಯಕವಾಗಿದೆ ಎಂದು ಆರೋಪಿಸಿದರು. ತಾಲೂಕಿನ ಮುಖಂಡರ ವಿಶ್ವಾಸಕ್ಕೆ ತೆಗೆದುಕೊಳ್ಳದೇ ಹಾಗೂ ಜಿಲ್ಲಾಧ್ಯಕ್ಷರ ಅನುಮತಿ ಪಡೆಯದೇ ಪದಾಧಿಕಾರಿಗಳ ಆಯ್ಕೆ ನಡೆಯುತ್ತಿದೆ. ಇದರಿಂದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ. ಜಿಲ್ಲಾಧ್ಯಕ್ಷರ ಅನುಮತಿ ಇಲ್ಲದೇ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕ ಮಾಡಿರುವುದನ್ನು ಮರುಪರಿಶೀಲಿಸಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಜಿಲ್ಲಾ ಉಪಾಧ್ಯಕ್ಷ ಎಕ್ಬಲ್ ಹೌದೊಡ್ಡಿ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಅಲ್ಪಸಂಖ್ಯಾತರಿಗೆ ಸೂಕ್ತ ಸ್ಥಾನಮಾನ ನೀಡದೇ ಇರುವುದರಿಂದ ಮುಂಬರುವ ತಾಲ್ಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳಲ್ಲಿ ಪಕ್ಷದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದರು. ಸಂಸದ ಜಿ. ಕುಮಾರ ನಾಯಕ ಅವರು ಗೆದ್ದ ಬಳಿಕ ತಾಲೂಕಿನಲ್ಲಿ ಒಂದೇ ಒಂದು ಕಾರ್ಯಕರ್ತರ ಸಭೆಯನ್ನೂ ನಡೆಸಿಲ್ಲ ಎಂದು ಟೀಕಿಸಿದರು. ರಾಜವಾಸುದೇವ ನಾಯಕ ಮತ್ತು ಮರಿಲಿಂಗಪ್ಪ ವಕೀಲ ಮಾತನಾಡಿದರು. ಈ ಸಂದರ್ಭದಲ್ಲಿ ಶಿವರಾಜ ವಕೀಲ, ಡಿಸಿಸಿ ಜಿಲ್ಲಾ ಸದಸ್ಯ ಸುಲ್ತಾನಬಾಬು ಕೊಪ್ಪರು, ಮಾನಪ್ಪ ಮೇಸ್ತ್ರೀ, ಚಂದಪಾಷ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಹೈಕೋರ್ಟ್ ಕಟ್ಟಡಕ್ಕೆ ಭೂಮಿ ಮಂಜೂರಾತಿಗೆ ಕೋರಿ ಪಿಐಎಲ್; ರಾಜ್ಯ ಸರಕಾರ, ರಿಜಿಸ್ಟ್ರಾರ್ ಜನರಲ್ಗೆ ನೋಟಿಸ್
ಬೆಂಗಳೂರು : ರಾಜ್ಯ ಹೈಕೋರ್ಟ್ನ ಹೊಸ ಕಟ್ಟಡ ಸಂಕೀರ್ಣ ನಿರ್ಮಾಣಕ್ಕಾಗಿ ನಗರದ ಕೇಂದ್ರ ಭಾಗದಲ್ಲಿ 30 ಎಕರೆ ಅಥವಾ ಅದಕ್ಕಿಂತ ಅಧಿಕ ಭೂಮಿ ನೀಡಲು ನಿರ್ದೇಶನ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ರಾಜ್ಯ ಸರಕಾರ ಮತ್ತು ರಿಜಿಸ್ಟ್ರಾರ್ ಜನರಲ್ಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಬೆಂಗಳೂರಿನ ಶರಣ್ ದೇಸಾಯಿ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಸೋಮವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ, ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮಾರ್ಚ್ 23ಕ್ಕೆ ಮುಂದೂಡಿತು. ಇದಕ್ಕೂ ಮುನ್ನ ಖುದ್ದು ವಾದ ಮಂಡಿಸಿದ ಅರ್ಜಿದಾರರು, ಇತ್ತೀಚೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೈಕೋರ್ಟ್ನ ನೂತನ ಸಂಕೀರ್ಣ ನಿರ್ಮಾಣ ಮಾಡಲು ನಗರದ ಸೆಂಟ್ರಲ್ ಬಿಸಿನೆಸ್ ಜಿಲ್ಲೆಯಲ್ಲಿ(ಸಿಬಿಡಿ) ಭೂಮಿ ಮಂಜೂರು ಮಾಡುವ ಬಗ್ಗೆ ಹೇಳಿಕೆ ನೀಡಿದ್ದಾರೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಕಬ್ಬನ್ ಪಾರ್ಕ್ನಲ್ಲಿ 2025ರ ಅಕ್ಟೋಬರ್ 26ರಂದು ನಡೆದ 'ವಾಕ್ ವಿತ್ ಬೆಂಗಳೂರು' ನಾಗರಿಕ ಸಂಪರ್ಕ ಕಾರ್ಯಕ್ರಮದ ಸಂದರ್ಭದಲ್ಲಿ ಶಿವಕುಮಾರ್ ಅವರು ಪ್ರಸ್ತುತ ಹೈಕೋರ್ಟ್ ಆವರಣದಲ್ಲಿ ಸ್ಥಳಾವಕಾಶದ ಕೊರತೆ ಇದೆ. ಆದ್ದರಿಂದ, ಕರ್ನಾಟಕ ಹೈಕೋರ್ಟನ್ನು ಹೊಸ ಮತ್ತು ದೊಡ್ಡ ಸ್ಥಳಕ್ಕೆ ಸ್ಥಳಾಂತರಿಸುವ ಸಾಧ್ಯತೆಯನ್ನು ಸರಕಾರ ಪರಿಶೀಲಿಸುತ್ತಿದೆ ಎಂದು ಹೇಳಿದ್ದರೆಂದು ವರದಿಯಾಗಿತ್ತು.
ಬಳ್ಳಾರಿ | ದೇಶದ ಪ್ರಗತಿ ಯುವ ಸಮುದಾಯದ ಕೊಡುಗೆಯ ಮೇಲೆ ಅವಲಂಬಿತ : ಜಯಚಂದ್ರ ರೆಡ್ಡಿ
ಬಳ್ಳಾರಿ, ಜ.12: ಯಾವುದೇ ಒಂದು ರಾಷ್ಟ್ರದ ಅಭಿವೃದ್ಧಿ ಮತ್ತು ಪ್ರಗತಿಯು ಅಲ್ಲಿನ ಯುವ ಸಮುದಾಯದ ಕೊಡುಗೆಯನ್ನು ಅವಲಂಬಿಸಿರುತ್ತದೆ ಎಂದು ಐಡಿಪಿಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷರಾದ ಜಯಚಂದ್ರ ರೆಡ್ಡಿ ಅವರು ಅಭಿಪ್ರಾಯಪಟ್ಟರು. ಭಾರತ ಸರ್ಕಾರದ 'ಮೇರಾ ಯುವ ಭಾರತ' ಹಾಗೂ ಐಡಿಪಿಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನಗರದ ಕಾಲೇಜು ಆವರಣದಲ್ಲಿ ಸೋಮವಾರ ಆಯೋಜಿಸಿದ್ದ 'ಸ್ವಾಮಿ ವಿವೇಕಾನಂದರ 164ನೇ ಜಯಂತಿ' ಹಾಗೂ 'ರಾಷ್ಟ್ರೀಯ ಯುವ ದಿನ' ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶವು ಅಭಿವೃದ್ಧಿಯ ಪಥದಲ್ಲಿ ಸಾಗಲು ಯುವಶಕ್ತಿ ಬಹಳ ಮುಖ್ಯ. ಯುವ ಸಮೂಹದ ಶಕ್ತಿ ಮತ್ತು ಸಾಮರ್ಥ್ಯದ ಬಗ್ಗೆ ಇಡೀ ವಿಶ್ವಕ್ಕೆ ಸಾರಿ ಹೇಳಿದವರಲ್ಲಿ ಸ್ವಾಮಿ ವಿವೇಕಾನಂದರು ಮೊದಲಿಗರು. ಅವರ ವಿಚಾರಧಾರೆಗಳು ಇಂದಿಗೂ ಪ್ರಸ್ತುತ ಎಂದು ಅವರು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ತಿಪ್ಪಾರೆಡ್ಡಿ ಮಾತನಾಡಿ, ದೇಶದ ಉನ್ನತಿ ಯುವಕರಿಂದ ಮಾತ್ರ ಸಾಧ್ಯ ಎಂದು ನಂಬಿದ್ದ ವಿವೇಕಾನಂದರು, ತಮ್ಮ ಚಿಂತನೆಗಳ ಮೂಲಕ ಯುವಕರನ್ನು ಒಗ್ಗೂಡಿಸಲು ಶ್ರಮಿಸಿದರು. ಯುವಕರ ಪಾಲಿನ ಸ್ಫೂರ್ತಿಯ ಚಿಲುಮೆಯಾಗಿರುವ ಅವರ ಜನ್ಮದಿನದ ಸವಿ ನೆನಪಿಗಾಗಿ ಪ್ರತಿವರ್ಷ ಜನವರಿ 12 ರಂದು 'ರಾಷ್ಟ್ರೀಯ ಯುವ ದಿನ'ವನ್ನು ಆಚರಿಸಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಐಡಿಪಿಎಸ್ ಕಾಲೇಜಿನ ಶಿವಪ್ರಸಾದ್, ಎ.ಜಿ.ಎಂ ವೆಂಕಟಕೃಷ್ಣ ಸೇರಿದಂತೆ ಕಾಲೇಜಿನ ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಈ ಹೆದ್ದಾರಿಗೆ ಬೆಂಗಳೂರು-ಅಮರಾವತಿ ಎಕ್ಸ್ಪ್ರೆಸ್ ಎಂದು ಹೆಸರಿಡಲು ಆಂಧ್ರ ಸಿಎಂ ಮನವಿ
ಬೆಂಗಳೂರು-ಕಡಪ-ವಿಜಯವಾಡ ಎಕನಾಮಿಕ್ ಕಾರಿಡಾರ್ ಹೆದ್ದಾರಿ ಯೋಜನೆಯು ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ನಾಲ್ಕು ದಾಖಲೆಗಳನ್ನು ತನ್ನದಾಗಿಸಿಕೊಂಡಿದೆ. ಈ ಸಾಧನೆಯ ಹಿನ್ನೆಲೆಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮತ್ತು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ವರ್ಚುವಲ್ ಮೂಲಕ ಭಾಗವಹಿಸಿ ಯೋಜನೆಗೆ ಕೈಜೋಡಿಸಿದ ಎಲ್ಲ ಅಧಿಕಾರಿಗಳು, ಇಂಜಿನಿಯರ್ಗಳು
ಕೇಂದ್ರ ಸರಕಾರದಿಂದ ನರೇಗಾ ಕಾಯ್ದೆ ವಿರೂಪಗೊಳಿಸುವ ಹುನ್ನಾರ : ಸಂಸದ ಜಿ.ಕುಮಾರ ನಾಯಕ
ರಾಯಚೂರು : ನರೇಗಾ ಕಾಯ್ದೆಯನ್ನು ವಿರೂಪಗೊಳಿಸಿರುವ ಕೇಂದ್ರ ಸರ್ಕಾರ ಕೂಲಿ ಕಾರ್ಮಿಕರ ದುಡಿಯುವ ಹಕ್ಕನ್ನು ಕಸಿದುಕೊಂಡಿದೆ. ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಸಂಸದ ಜಿ.ಕುಮಾರನಾಯಕ ದೂರಿದರು. ಸೋಮವಾರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ನೂರು ದಿನ ಉದ್ಯೋಗ ಖಾತ್ರಿ ಯೋಜನೆಯನ್ನು 125 ದಿನಗಳಿಗೆ ಹೆಚ್ಚಿಸುವುದಾಗಿ ಸಮರ್ಥಿಸಿಕೊಳ್ಳುವ ಕೇಂದ್ರ ಸರ್ಕಾರ ವರ್ಷವಿಡಿ ಉದ್ಯೋಗ ದೊರೆಯುವುದನ್ನು ತಡೆದಿದೆ. ಅಲ್ಲದೇ ಬೇಡಿಕೆ ಆಧಾರದ ಯೋಜನೆಯನ್ನು ಅವಶ್ಯಕತೆ ಆಧಾರದ ಮೇಲೆ ರೂಪಿತಗೊಳಿಸಿರುವುದು ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಇಲ್ಲದಂತೆ ಮಾಡಿದೆ ಎಂದರು. ಸಂಸದೀಯ ಮಂಡಳಿಯ ಶಿಫಾರಸ್ಸುಗಳನ್ನು ಕಡೆಗಣಿಸಿ ಹೊಸ ಮಸೂದೆ ರೂಪಿಸಿ ಉದ್ಯೋಗ ಖಾತ್ರಿ ಯೋಜನೆಗೆ ಇದ್ದ ಘನತೆಗೆ ಕುಂದು ತರುವ ಪ್ರಯತ್ನವಾಗಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಉದ್ಯೋಗ ಖಾತ್ರಿ, ಮಾಹಿತಿ ಹಕ್ಕು, ಶಿಕ್ಷಣ ಹಕ್ಕು ಕಾಯ್ದೆಯನ್ನು ರೂಪಿಸಿರುವ ಕ್ರಾಂತಿಕಾರಿ ಹೆಜ್ಜೆಯನ್ನು ಎನ್ಡಿಎ ಸರ್ಕಾರ ದಿಕ್ಕುತಪ್ಪಿಸುವ ಕಾರ್ಪೋರೇಟ್ ವಲಯಕ್ಕೆ ಪೂರಕವಾಗುವ ಚಿಂತನೆ ಹೊಂದಿದೆ. ರಾಮನ ಕುರಿತು ತುಟಿ ಪ್ರೀತಿ ತೋರಿಸುವ ಸರ್ಕಾರ ಜನರ ಹೃದಯದಲ್ಲಿರುವ ರಾಮನನ್ನು ಕಡೆಗಣಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ನಗರ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಮುಹಮ್ಮದ್ ಶಾಲಂ, ಪಾಲಿಕೆಯ ಸದಸ್ಯ ಜಯಣ್ಣ, ಕಾಂಗ್ರೆಸ್ ಮುಖಂಡ ರವಿಬೋಸರಾಜ, ಕೆ.ಶಾಂತಪ್ಪ, ಜಯವಂತರಾವ ಪತಂಗೆ, ಎನ್.ಶ್ರೀನಿವಾಸರೆಡ್ಡಿ, ಜಿ.ಶಿವಮೂರ್ತಿ, ಅಮರೇಗೌಡ ಹಂಚಿನಾಳ, ಯುವ ಕಾಂಗ್ರೆಸ್ ಅಧ್ಯಕ್ಷ ಮರಿಸ್ವಾಮಿ ಗಟ್ಟುಬಿಚ್ಚಾಲಿ ಸೇರಿದಂತೆ ಅನೇಕರಿದ್ದರು.
ಜನಾರ್ದನ ರೆಡ್ಡಿ ಜತೆ ಬಿಜೆಪಿ ಕೈಜೋಡಿಸಿದ್ದೇಕೆ? : ಎಂ.ಬಿ.ಪಾಟೀಲ್
ಬೆಂಗಳೂರು : ‘ಅಕ್ರಮ ಗಣಿಗಾರಿಕೆಯ ಮೂಲಕ ಕುಖ್ಯಾತಿ ಗಳಿಸಿದಂತಹ ಗಾಲಿ ಜನಾರ್ದನ ರೆಡ್ಡಿ ಅವರನ್ನು ಬಿಜೆಪಿ ಹೊರ ಹಾಕಿತ್ತು. ಇದೀಗ ಅವರ ಜೊತೆಯಲ್ಲೆ ಕೈಜೋಡಿಸಿದ್ದು ಏಕೆ?. ರೆಡ್ಡಿ ಬಳಿ ಇರುವ ದುಡ್ಡಿಗಾಗಿಯೇ? ಅಥವಾ ಅಕ್ರಮ ಗಣಿಗಾರಿಕೆಯ ಪಾಲುದಾರಿಕೆಗಾಗಿಯೇ?’ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಪ್ರಶ್ನಿಸಿದ್ದಾರೆ. ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜನಾರ್ದನ ರೆಡ್ಡಿ ಮತ್ತವರ ಬೆಂಬಲಿಗರು ಆಕ್ರಮ ಗಣಿಗಾರಿಕೆ ಮಾಡಿದ್ದಕ್ಕಾಗಿ ಬಿಜೆಪಿ ಅವರನ್ನು ಹೊರ ಹಾಕಿತ್ತು. ಈಗ ರೆಡ್ಡಿಯ ಬೆಂಬಲಕ್ಕೆ ಬಿಜೆಪಿ ನಾಯಕರು ನಿಲ್ಲುತ್ತಿದ್ದು, ಇದರ ಗೂಡಾರ್ಥ ಜನರಿಗೆ ಅರ್ಥವಾಗುತ್ತದೆ ಎಂದು ಟೀಕಿಸಿದರು. ಈ ಹಿಂದೆ ಅಕ್ರಮ ಗಣಿಗಾರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷ ಬೆಂಗಳೂರಿನಿಂದ ಬಳ್ಳಾರಿಯ ವರೆಗೂ ಪಾದಯಾತ್ರೆ ಮಾಡಿತ್ತು. ಈಗ ಬಿಜೆಪಿ ಯಾವ ಕಾರಣಕ್ಕೂ ಪಾದಯಾತ್ರೆ ಮಾಡುತ್ತಿದೆ. ಬಳ್ಳಾರಿ ಬ್ಯಾನರ್ ಗಲಾಟೆ ಇಬ್ಬರು ವ್ಯಕ್ತಿಗಳ ನಡುವಿನ ಜಗಳ. ಅದಕ್ಕಾಗಿ ಪಾದಯಾತ್ರೆ ಮಾಡುವುದು ಉಚಿತವೇ? ಎಂದು ಎಂ.ಬಿ.ಪಾಟೀಲ್ ಕೇಳಿದರು. ಜನಾರ್ದನ ರೆಡ್ಡಿ ಸಚಿವರಾಗಿದ್ದಾಗ ತಮ ದುರಾಸೆಗಾಗಿ ‘ರಿಪಬ್ಲಿಕ್ ಆಫ್ ಬಳ್ಳಾರಿ’ ಮಾಡಿಕೊಂಡಿದ್ದರು. ರಾಜ್ಯದ ಗಡಿಯನ್ನೇ ಧ್ವಂಸ ಮಾಡಿ ಅಕ್ರಮ ಗಣಿಗಾರಿಕೆ ಮಾಡಿದ್ದರು. ಗಣಿಗಾರಿಕೆ ನಡೆಸುವವರಿಂದ ಪಾಲು ಪಡೆಯುತ್ತಿದ್ದರು. ಅರಣ್ಯದಲ್ಲೂ ಗಣಿಗಾರಿಕೆ ಮಾಡಿದ ಅರೋಪಕ್ಕೆ ಗುರಿಯಾಗಿದ್ದರು ಎಂದು ಅವರು ವಾಗ್ದಾಳಿ ನಡೆಸಿದರು. ಉದ್ಯೋಗ ಖಾತರಿ ಯೋಜನೆ ವಿಚಾರವಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಬಹಿರಂಗ ಚರ್ಚೆಗೆ ಬರಲಿ. ಯಾವುದಾದರೂ ಸಭಾಂಗಣದಲ್ಲಿ ಚರ್ಚೆ ನಡೆಯಲಿ. ಕುಮಾರಸ್ವಾಮಿ ಬಹಿರಂಗ ಚರ್ಚೆಗೆ ಬರಲು ಸಿದ್ದರಿದ್ದಾರೆಯೇ? ಎಂದು ಪಾಟೀಲ್ ಸವಾಲು ಹಾಕಿದರು.
Mangaluru | ವಲಸೆ ಕಾರ್ಮಿಕನ ಮೇಲೆ ಹಲ್ಲೆ: ಕಠಿಣ ಕ್ರಮಕ್ಕೆ ಸಿಐಟಿಯು ಅಗ್ರಹ
ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೂಳೂರು ಬಳಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನ ಮೇಲೆ ನಡೆದ ಜನಾಂಗೀಯ ಹಲ್ಲೆಯನ್ನು ಸಿಐಟಿಯು ದ.ಕ ಜಿಲ್ಲಾ ಸಮಿತಿ ಖಂಡಿಸಿದೆ. ಸಂಘ ಪರಿವಾರ ದೇಶದಲ್ಲಿ ಹಬ್ಬಿಸುವ ಸುಳ್ಳು ಸುದ್ದಿಗಳನ್ನು ಸಂಘಿ ಮನಸ್ಥಿತಿಯ ತಳಮಟ್ಟದ ಕಾರ್ಯಕರ್ತರು ಯಾವ ರೀತಿಯಲ್ಲಿ ಸ್ವೀಕರಿಸುತ್ತಾರೆ ಎಂಬುದಕ್ಕೆ ಕೂಳೂರಿನ ಈ ಘಟನೆ ಸಾಕ್ಷಿಯಾಗಿದೆ. ತಕ್ಷಣ ಪೊಲೀಸ್ ಇಲಾಖೆಯು ಜನಾಂಗೀಯ ದಾಳಿ ನಡೆಸಿದ ಹಲ್ಲೆ ಆರೋಪಿಗಳನ್ನು ತಕ್ಷಣ ಬಂಧಿಸಬೇಕು. ಸರಕಾರ ಕೂಡ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ವಲಸೆ ಕಾರ್ಮಿಕರನ್ನು ರಕ್ಷಣೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಒತ್ತಾಯಿಸಿದ್ದಾರೆ.
ಟೆಕ್ಕಿಗಳಿಗೆ ಶಾಕ್ ನೀಡಿದ ಟಾಟಾ ಕಂಪನಿ, ಮೂರೇ ತಿಂಗಳಲ್ಲಿ 11,151 ಉದ್ಯೋಗಿಗಳಿಗೆ ಗೇಟ್ಪಾಸ್!
ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಡಿಸೆಂಬರ್ ತ್ರೈಮಾಸಿಕದಲ್ಲಿ 11,151 ಉದ್ಯೋಗಿಗಳನ್ನು ಕಡಿತಗೊಳಿಸಿದೆ. ತಂತ್ರಜ್ಞಾನ ಬದಲಾವಣೆ ಮತ್ತು ವೆಚ್ಚ ಕಡಿತದ ಕಾರಣದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಆದಾಗ್ಯೂ, ಇದೇ ವೇಳೆ ಎಚ್ಸಿಎಲ್ ಟೆಕ್ 261 ಹೊಸ ಉದ್ಯೋಗಿಗಳನ್ನು ಸೇರಿಸಿಕೊಂಡಿದೆ.
ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಕೆಎಸ್ಸಾರ್ಟಿಸಿ ಬಸ್ ಟಿಕೆಟ್ ಬುಕ್ ಮಾಡಲು ಅವಕಾಶ
ಬೆಂಗಳೂರು : ಕೆಎಸ್ಸಾರ್ಟಿಸಿ ಬಸ್ಗಳಲ್ಲಿ ಪ್ರಯಾಣಿಸುವವರು ಮುಂಗಡ ಬಸ್ ಟಿಕೆಟ್ಗಳನ್ನು ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳ ಮೂಲಕವೂ ಬುಕ್ ಮಾಡಬಹುದಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತಿಳಿಸಿದೆ. ಕೆಎಸ್ಸಾರ್ಟಿಸಿ ಪ್ರಯಾಣಿಕರ ಪ್ರಯಾಣವನ್ನು ಇನ್ನಷ್ಟು ಸುಲಭ ಮತ್ತು ಆರಾಮದಾಯಕವಾಗಿಸಲು ಆನ್ಲೈನ್ ಮುಂಗಡ ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆಯನ್ನು ಒದಗಿಸುತ್ತಿದೆ. ಕೆಎಸ್ಆರ್ಟಿಸಿ ವೆಬ್ಸೈಟ್, ಮೊಬೈಲ್ ಆಪ್, ಇಲಾಖಾ ಕೌಂಟರ್ಗಳು ಹಾಗೂ ಫ್ರಾಂಚೈಸಿ ಕೌಂಟರ್ಗಳ ಜೊತೆಗೆ, ಪ್ರಯಾಣಿಕರು ಈಗ ತಮ್ಮ ಮನೆಗೆ ಸಮೀಪದಲ್ಲಿರುವ ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳ ಮೂಲಕವೂ ಮುಂಗಡ ಬಸ್ ಟಿಕೆಟ್ಗಳನ್ನು ಬುಕ್ ಮಾಡಬಹುದು. ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯನ್ನು ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ ಸರ್ವಿಸಸ್ ನಿರ್ದೇಶನಾಲಯವು ಬೆಂಗಳೂರು-ಒನ್ ಹಾಗೂ ಕರ್ನಾಟಕ-ಒನ್ ಕೇಂದ್ರಗಳಲ್ಲಿ ಕಾರ್ಯಗತಗೊಳಿಸಲಾಗಿದೆ. ಈ ಸೇವೆ ಬೆಂಗಳೂರು ನಗರದಲ್ಲಿರುವ 161 ಬೆಂಗಳೂರು-ಒನ್ ಕೇಂದ್ರಗಳಲ್ಲಿ ಹಾಗೂ ಕರ್ನಾಟಕ ರಾಜ್ಯದ ಜಿಲ್ಲಾ ಕೇಂದ್ರ ಮತ್ತು ತಾಲ್ಲೂಕು ಕೇಂದ್ರಗಳಲ್ಲಿರುವ 1021 ಕರ್ನಾಟಕ-ಒನ್ ಕೇಂದ್ರಗಳಲ್ಲಿ ಲಭ್ಯವಿದೆ. ಟಿಕೆಟ್ ಕಾಯ್ದಿರಿಸುವಿಕೆ ಅಥವಾ ಯಾವುದೇ ಸಹಾಯಕ್ಕಾಗಿ, ಪ್ರಯಾಣಿಕರು ಕೆಎಸ್ಸಾರ್ಟಿಸಿ ಕರೆ ಕೇಂದ್ರವನ್ನು 080-2625 2625 ಅಥವಾ 77609 90034, 77609 90035 ಅಥವಾ ಬೆಂಗಳೂರು-ಒನ್ ಕರೆ ಕೇಂದ್ರ 080-4920 3888 ಸಂಪರ್ಕಿಸಬಹುದು ಎಂದು ಹೇಳಿದೆ.
ಹೊಸದಿಲ್ಲಿ, ಜ.12: ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ಮುಖ್ಯಸ್ಥ ರಾಜ್ ಠಾಕ್ರೆ ಅವರ ‘ರಸ್ಮಲೈ’ ಟೀಕೆಗೆ ಪ್ರತಿಕ್ರಿಯಿಸಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಕೆ. ಅಣ್ಣಾಮಲೈ, “ಮುಂಬೈಗೆ ಬರುತ್ತೇನೆ; ನನ್ನ ಕಾಲುಗಳನ್ನು ಕತ್ತರಿಸಲು ಪ್ರಯತ್ನಿಸಿ” ಎಂದು ಸವಾಲು ಹಾಕಿದ್ದಾರೆ. ಚೆನ್ನೈನಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬೈಗೆ ಬಂದರೆ ಕಾಲು ಕತ್ತರಿಸುವುದಾಗಿ ಕೆಲವರು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದರು. “ನನ್ನನ್ನು ಬೆದರಿಸಲು ಆದಿತ್ಯ ಠಾಕ್ರೆ ಮತ್ತು ರಾಜ್ ಠಾಕ್ರೆ ಯಾರು? ನಾನು ರೈತನ ಮಗನಾಗಿರುವುದಕ್ಕೆ ಹೆಮ್ಮೆಪಡುತ್ತೇನೆ. ಇಂತಹ ಬೆದರಿಕೆಗಳಿಗೆ ನಾನು ಹೆದರಿದ್ದರೆ ಹಳ್ಳಿಯಲ್ಲಿಯೇ ಉಳಿದಿರುತ್ತಿದ್ದೆ. ನಾನು ಮುಂಬೈಗೆ ಬರುತ್ತೇನೆ,” ಎಂದು ಅಣ್ಣಾಮಲೈ ಹೇಳಿದರು. “ಕಾಮರಾಜ್ ಭಾರತದ ಶ್ರೇಷ್ಠ ನಾಯಕರಲ್ಲಿ ಒಬ್ಬರು ಎಂದರೆ ಅವರು ತಮಿಳರಲ್ಲವೇ? ಮುಂಬೈ ವಿಶ್ವದರ್ಜೆಯ ನಗರ ಎಂದರೆ ಮಹಾರಾಷ್ಟ್ರೀಯರು ಅದನ್ನು ನಿರ್ಮಿಸಲಿಲ್ಲವೇ? ಇಂತಹ ಮಾತುಗಳು ಅಜ್ಞಾನವನ್ನು ತೋರಿಸುತ್ತವೆ,” ಎಂದರು. ಇದಕ್ಕೂ ಒಂದು ದಿನ ಮೊದಲು ಮುಂಬೈನಲ್ಲಿ ನಡೆದ ಯುಬಿಟಿ–ಎಂಎನ್ಎಸ್ ಜಂಟಿ ರ್ಯಾಲಿಯಲ್ಲಿ ರಾಜ್ ಠಾಕ್ರೆ, “ತಮಿಳುನಾಡಿನಿಂದ ಒಬ್ಬ ‘ರಸ್ಮಲೈ’ ಬಂದಿದ್ದಾನೆ. ಇಲ್ಲಿಗೂ ನಿಮಗೂ ಏನು ಸಂಬಂಧ?” ಎಂದು ವ್ಯಂಗ್ಯವಾಡಿದ್ದರು. ಇದೇ ವೇಳೆ 1960–70ರ ದಶಕಗಳಲ್ಲಿ ತಮ್ಮ ಚಿಕ್ಕಪ್ಪ ಬಾಲ್ ಠಾಕ್ರೆ ನೀಡಿದ್ದ ‘ಹಟಾವೊ ಲುಂಗಿ, ಬಜಾವೊ ಪುಂಗಿ’ ಘೋಷಣೆಯನ್ನು ಅವರು ಉಲ್ಲೇಖಿಸಿದ್ದರು. ಇದಲ್ಲದೆ, ಬಿಹಾರ ಮತ್ತು ಉತ್ತರ ಪ್ರದೇಶದಿಂದ ಬಂದವರು ಹಿಂದಿಯನ್ನು ಹೇರಲು ಯತ್ನಿಸಿದರೆ “ಒದೆಯುತ್ತೇನೆ” ಎಂದು ರಾಜ್ ಠಾಕ್ರೆ ಹೇಳಿರುವುದಾಗಿ ಸುದ್ದಿ ಸಂಸ್ಥೆ ANI ವರದಿ ಮಾಡಿದೆ. “ಭಾಷೆಯನ್ನು ದ್ವೇಷಿಸುವುದಿಲ್ಲ; ಆದರೆ ಹೇರಿಕೆ ಸಹಿಸುವುದಿಲ್ಲ. ಭೂಮಿ ಮತ್ತು ಭಾಷೆ ಹೋದರೆ ಎಲ್ಲವೂ ಮುಗಿಯುತ್ತದೆ,” ಎಂದು ಅವರು ಹೇಳಿದ್ದಾರೆ. ಈ ರ್ಯಾಲಿಯಲ್ಲಿ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ, ಬಿಜೆಪಿಯ ‘ನಕಲಿ ಹಿಂದುತ್ವ’ ವಿರುದ್ಧ ಜಂಟಿ ದಾಳಿ ನಡೆಸಿದರು. ಮುಂಬೈ ಎದುರಿಸುತ್ತಿರುವ ‘ಅಪಾಯ’ವೇ ತಾವು ರಾಜಕೀಯವಾಗಿ ಸಮೀಪವಾಗಿ ಕಾರಣ ಎಂದು ಅವರು ಹೇಳಿದರು. ಮರಾಠಿ ಮನುಷ್ಯ, ಹಿಂದೂಗಳು ಹಾಗೂ ಮಹಾರಾಷ್ಟ್ರದ ಹಿತಾಸಕ್ತಿಗಾಗಿ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟಿದ್ದೇವೆ ಎಂದು ಉದ್ಧವ್ ಹೇಳಿದರು. ಮಹಾರಾಷ್ಟ್ರ ರಾಜ್ಯ ಚುನಾವಣಾ ಆಯೋಗವು ರಾಜ್ಯದಾದ್ಯಂತ 29 ಮಹಾನಗರ ಪಾಲಿಕೆಗಳಿಗೆ ಚುನಾವಣೆ ಘೋಷಿಸಿದೆ. ಬೃಹನ್ಮುಂಬೈ ಮಹಾನಗರ ಪಾಲಿಕೆ, ಪುಣೆ ಮಹಾನಗರ ಪಾಲಿಕೆ ಹಾಗೂ ಪಿಂಪ್ರಿ-ಚಿಂಚ್ವಾಡ್ ಮಹಾನಗರ ಪಾಲಿಕೆ ಸೇರಿ ವಿವಿಧ ಪಾಲಿಕೆಗಳಿಗೆ ಜನವರಿ 15ರಂದು ಮತದಾನ ನಡೆಯಲಿದ್ದು, ಜನವರಿ 16ರಂದು ಮತಎಣಿಕೆ ನಡೆಯಲಿದೆ.
ವಿಜಯನಗರ | ಕಟ್ಟಕಡೆಯ ವ್ಯಕ್ತಿಗೂ ಸರಕಾರದ ಸೌಲಭ್ಯ ತಲುಪಲಿ : ಸಂಸದ ಈ. ತುಕಾರಾಂ
569 ವಿಶೇಷ ಚೇತನರಿಗೆ ಸಾಧನ ಸಲಕರಣೆ ವಿತರಣೆ
ಗ್ರೇಟರ್ ಬೆಂಗಳೂರು ಚುನಾವಣೆ: ಡಿಕೆಶಿಗೆ ಅಗ್ನಿಪರೀಕ್ಷೆ, 5 ಪಾಲಿಕೆಗಳಲ್ಲಿ ಕೈ ಶಕ್ತಿ ಪ್ರದರ್ಶನಕ್ಕೆ ಸಜ್ಜಾದ ವೇದಿಕೆ
ಗ್ರೇಟರ್ ಬೆಂಗಳೂರು ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಬೀಳುತ್ತಿದ್ದಂತೇ, ಆಡಳಿತ ಮತ್ತು ವಿರೋಧ ಪಕ್ಷಗಳು ಚುನಾವಣೆಗೆ ತಯಾರಿ ಆರಂಭಿಸಿವೆ. ಈ ಬಾರಿಯ ಜಿಬಿಎ ಚುನಾವಣೆ ಬೆಂಗಳೂರು ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಅಗ್ನಿಪರೀಕ್ಷೆ ಎಂದೇ ಹೇಳಲಾಗುತ್ತಿದ್ದು, ಕೈ ಅಭ್ಯರ್ಥಿಗಳನ್ನು ಗೆಲ್ಲಿಸುವ ಅನಿವಾರ್ಯತೆ ಅವರಿಗಿದೆ. ಒಟ್ಟು ಐದು ಪಾಲಿಕೆಗಳನ್ನು ತೆಕ್ಕೆಗೆ ತೆಗೆದುಕೊಳ್ಳಬೇಕಾದ ಟಾಸ್ಕ್ ಜೊತೆಗೆ ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಕೆಲಸ ಮಾಡಬೇಕಿದೆ. ಇಲ್ಲಿದೆ ಮಾಹಿತಿ.
ಬೆಂಗಳೂರು : ಭೂಮಿಯೊಳಗೆ ಯಾವುದೇ ಬೆಲೆ ಬಾಳುವ ವಸ್ತುಗಳು ಸಿಕ್ಕಿದರೆ ಅದು ಸರಕಾರದ ಆಸ್ತಿ ಆಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೂಮಿಯ ಒಳ ಯಾವುದೇ ಮೌಲ್ಯಯುತವಾದ ವಸ್ತುಗಳು ಸಿಕ್ಕರೆ ಅದು ಸರಕಾರದ್ದಾಗಿರುತ್ತದೆ. ಲಕ್ಕುಂಡಿಯಲ್ಲಿ ನಿಧಿ ಸಂಬಂಧ ಜಿಲ್ಲಾ ಆಡಳಿತ ಆ ಬಂಗಾರವನ್ನು ಖಜಾನೆಯಲ್ಲಿ ಭದ್ರವಾಗಿ ಇರಿಸಿದೆ. ಅದು ಆ ಕುಟುಂಬಕ್ಕೆ ಸೇರಿದ್ದಾ? ಆ ಜಾಗದ ಮೂಲ ಮಾಲಿಕರಿಗೆ ಸೇರಿದ್ದ? ಹಾಗೂ ರಾಷ್ಟ್ರ ಕೂಟರ ಕಾಲದ್ದಾ ಚಾಲುಕ್ಯರ ಕಾಲದ್ದಾ ಎಲ್ಲವೂ ಪರಿಶೀಲನೆ ಮಾಡಲಾಗುತ್ತದೆ ಎಂದರು. ಕುಟುಂಬದ ಪ್ರಾಮಾಣಿಕತೆಯನ್ನು ನಾನು ಗೌರವಿಸುತ್ತೇವೆ. ಜತೆಗೆ, ಸರಕಾರದ ವತಿಯಿಂದಲೂ ಆ ಕುಟುಂಬವನ್ನು ಗೌರವಿಸುವ ಕೆಲಸ ಮಾಡುತ್ತೇವೆ. ಸಾಂದರ್ಭಿಕವಾಗಿ ಅವರಿಗೆ ಏನು ಗೌರವಿಸಬೇಕೋ ಅದನ್ನು ಗೌರವಿಸುತ್ತೇವೆ. ಇನ್ನೊಂದೆಡೆ, ಅದು ನಿಧಿ ಅಲ್ಲ ಕುಟುಂಬದ ಬಂಗಾರ ಎಂದು ಅನಗತ್ಯ ಗೊಂದಲ ಉಂಟು ಮಾಡುತ್ತಿದ್ದಾರೆ. ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು.
ಕನಕಗಿರಿ | ವರ್ನಖೇಡ ಸರಕಾರಿ ಶಾಲೆಯ ಸಮಸ್ಯೆ ಬಗೆಹರಿಸಲು ಗ್ರಾಮಸ್ಥರಿಂದ ಪ್ರತಿಭಟನೆ
ಕನಕಗಿರಿ : ತಾಲ್ಲೂಕಿನ ಹುಲಿಹೈದರ ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ನಖೇಡ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ವಿದ್ಯಾರ್ಥಿಗಳೊಂದಿಗೆ ಇಲ್ಲಿನ ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಗ್ರಾಮಸ್ಥರು, ಕಳೆದ ಎರಡು ವರ್ಷಗಳಿಂದ ಶಾಲೆಯಲ್ಲಿ ಕಾಯಂ ಶಿಕ್ಷಕರು ಇಲ್ಲದೆ ಶಾಲಾ ಆಡಳಿತ ಹಾಗೂ ಪಾಠ ಪ್ರವಚನಗಳು ಅತಿಥಿ ಶಿಕ್ಷಕರಿಂದಲೇ ನಡೆಯುತ್ತಿವೆ ಎಂದು ಆರೋಪಿಸಿದರು. ಇಲ್ಲಿಗೆ ಸೇವೆ ಸಲ್ಲಿಸಿ ವರ್ಗಾವಣೆಯಾದ ಶಿಕ್ಷಕಿ ಸರೋಜಾ ಅವರನ್ನು ಇನ್ನೂ ಬಿಡುಗಡೆ ಮಾಡದೇ, ಶಾಲೆಯ ಬಿಸಿಯೂಟ ಯೋಜನೆಯ ಅಡುಗೆದಾರರ ಪತಿಯೊಬ್ಬರು ಹಣಕ್ಕಾಗಿ ತಡೆಹಿಡಿದಿದ್ದಾರೆ ಎಂದು ದೂರಿದರು. ಶಾಲಾ ದೃಢೀಕರಣ ಪ್ರಮಾಣಪತ್ರ ಸೇರಿದಂತೆ ಇತರೆ ಶಾಲಾ ದಾಖಲಾತಿಗಳನ್ನು ಪಡೆಯಲು ಗ್ರಾಮಸ್ಥರು ಬೇರೆ ಊರಿಗೆ ಹೋಗಬೇಕಾದ ದುಸ್ಥಿತಿ ಉಂಟಾಗಿದೆ. ಇಲ್ಲಿಗೆ ನಿಯೋಜನೆಗೊಂಡ ಶಿಕ್ಷಕರಿಗೆ ಮುಖ್ಯಶಿಕ್ಷಕ ಹುದ್ದೆಯ ಚಾರ್ಜ್ ನೀಡಬಾರದು ಹಾಗೂ ಶಿಕ್ಷಕಿ ಸರೋಜಾ ಅವರನ್ನು ಬಿಡುಗಡೆ ಮಾಡಬಾರದು ಎಂದು ಗ್ರಾಮದ ಹನುಮೇಶ ಎಂಬವರು ತಾಕೀತು ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಇತ್ತೀಚೆಗೆ ಹುಲಿಹೈದರ ಶಾಲೆಯ ಶಿಕ್ಷಕ ಶಾಮಮೂರ್ತಿ ಅವರು ವರ್ನಖೇಡ ಶಾಲೆಗೆ ನಿಯೋಜನೆಗೊಂಡು ಚಾರ್ಜ್ ಸ್ವೀಕರಿಸಲು ಬಂದ ಸಂದರ್ಭದಲ್ಲಿ, ಹನುಮೇಶ ಅವರು ಕ್ರಿಮಿಕೀಟ ನಾಶಕ ಔಷಧಿಯ ಖಾಲಿ ಬಾಟಲಿಯಲ್ಲಿ ನೀರು ತುಂಬಿಕೊಂಡು ವಿಷಸೇವನೆ ಮಾಡಿರುವಂತೆ ನಾಟಕವಾಡಿದ್ದಾರೆ. ಈ ವಿಷಯವನ್ನು ನೆಪ ಮಾಡಿಕೊಂಡು ಹನುಮೇಶನ ಪತ್ನಿ ಹಾಗೂ ಬಿಸಿಯೂಟ ಅಡುಗೆದಾರರಾದ ಶ್ರೀದೇವಿ ಅವರು ಶಾಲಾ ದಾಖಲಾತಿಗಳನ್ನು ಎತ್ತಿಕೊಂಡು ಸುಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಗ್ರಾಮಸ್ಥರು ವಿವರಿಸಿದರು. ನನ್ನ ಪತಿ ಸತ್ತರೆ ಅದಕ್ಕೆ ಅಧಿಕಾರಿಗಳು ಮತ್ತು ಗ್ರಾಮಸ್ಥರೇ ಕಾರಣ ಎಂದು ಬೆದರಿಕೆ ಹಾಕಿರುವ ವಿಡಿಯೋ ಕೂಡ ಇದೆ. ಜೊತೆಗೆ ಗ್ರಾಮಸ್ಥರ ವಿರುದ್ಧ ದೂರು ನೀಡಿ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದರು. ಇಡೀ ಗ್ರಾಮ ಶಾಲೆಯ ಪರವಾಗಿದ್ದರೂ, ಅಡುಗೆದಾರ ಹಾಗೂ ಅವರ ಪತಿ ಶಿಕ್ಷಣ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು ಮತ್ತು ಶಿಕ್ಷಕರ ಮೇಲೆ ದೌರ್ಜನ್ಯ ಎಸಗಿಸುತ್ತಿದ್ದಾರೆ. ಆದ್ದರಿಂದ ಶ್ರೀದೇವಿ ಅವರನ್ನು ಕೆಲಸದಿಂದ ವಜಾಗೊಳಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು. ಶಾಲೆಗೆ ಕಾಯಂ ಶಿಕ್ಷಕರನ್ನು ನೇಮಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟವನ್ನು ಹೆಚ್ಚಿಸಿದರೆ ಮಾತ್ರ ಮಕ್ಕಳನ್ನು ಶಾಲೆಗೆ ಕಳುಹಿಸುತ್ತೇವೆ ಎಂದು ಮನವಿಯಲ್ಲಿ ಸ್ಪಷ್ಟಪಡಿಸಿದರು. ಈ ಸಂದರ್ಭದಲ್ಲಿ ಎಸ್ಡಿಎಂಸಿ ಅಧ್ಯಕ್ಷ ಯಮನೂರಪ್ಪ, ಉಪಾಧ್ಯಕ್ಷ ಲಕ್ಷ್ಮಣ, ಗ್ರಾಮ ಪಂಚಾಯಿತಿ ಸದಸ್ಯ ಕನಕಪ್ಪ, ಮಾಜಿ ಉಪಾಧ್ಯಕ್ಷ ಹನುಮೇಶ ದೇವೇಂದ್ರಪ್ಪ, ಎಸ್ಡಿಎಂಸಿ ಮಾಜಿ ಅಧ್ಯಕ್ಷ ಮಾರುತಿ, ಎಸ್ಎಫ್ಐ ಜಿಲ್ಲಾಧ್ಯಕ್ಷ ಶಿವಕುಮಾರ ಈಚನಾಳ, ಗ್ರಾಮದ ಪ್ರಮುಖರಾದ ನಾಗರಾಜ, ಪರಪ್ಪ, ಶರಣಪ್ಪ, ವಿರುಪಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು. ತಹಶೀಲ್ದಾರ್ ವಿಶ್ವನಾಥ ಮುರುಡಿ ಅವರಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದರು.
ಸೇನೆಯಲ್ಲಿ 2026ರ ಲೆಫ್ಟಿನಂಟ್ ರ್ಯಾಂಕ್ ನ ಶಾರ್ಟ್ ಸರ್ವಿಸ್ ಕಮಿಷನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತೀಯ ಸೇನಾ ಎಸ್ಎಸ್ಸಿ ತಾಂತ್ರಿಕ 67ನೇ ಪುರುಷರ ಎಪ್ರಿಲ್ ಅಧಿಸೂಚನೆಯ ಪ್ರಕಾರ ಯಾವುದೇ ಪದವಿಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ತಾಂತ್ರಿಕ ಹುದ್ದೆಗಳಿಗೆ ಸಂಬಂಧಿಸಿದ ಎಂಜಿನಿಯರಿಂಗ್ ಪದವಿಯ ಅಗತ್ಯವಿದೆ. ಭಾರತೀಯ ಸೇನೆಯನ್ನು ಸೇರುವ ಸುವರ್ಣವಕಾಶ ದೊರೆತಿದೆ. ಭಾರತೀಯ ಸೇನೆ ಅಧಿಕೃತ ವೆಬ್ತಾನದಲ್ಲಿ ನೀಡಿರುವ ಇತ್ತೀಚೆಗಿನ ಅಧಿಸೂಚನೆಯಲ್ಲಿ 67ನೇ ಪುರುಷರ ಎಪ್ರಿಲ್ 2026 ತಂಡ 2026 ನೇಮಕಾತಿಯನ್ನು ಘೋಷಿಸಿದೆ. ಈ ಬಾರಿ 350 ಸ್ಥಾನಗಳಿಗೆ ನೇಮಕಾತಿ ಘೋಷಿಸಲಾಗಿದೆ. ಭಾರತೀಯ ನೌಕಾಸೇನೆಗೆ 20206 ಜನವರಿ 07ರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು 2026 ಫೆಬ್ರವರಿ 05ರಿಂದ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 2026 ಅಕ್ಟೊಬರ್ 01ಕ್ಕೆ ಸರಿಯಾಗಿ 20 ವರ್ಷಗಳು ಮತ್ತು ಗರಿಷ್ಠ ವಯಸ್ಸು 27 ವರ್ಷಗಳು. ಅಭ್ಯರ್ಥಿಗಳು ಸಂಪೂರ್ಣ ವಿವರವನ್ನು Indian Army SSC Technical 67th Men Recruitment 2026 ಅಧಿಸೂಚನೆಯಲ್ಲಿ ನೋಡಬಹುದಾಗಿದೆ. ಪ್ರಮುಖ ದಿನಾಂಕಗಳು • ಆನ್ಲೈನ್ ಅರ್ಜಿ ಸಲ್ಲಿಸುವ ಆರಂಭಿಕ ದಿನಾಂಕ : 07 ಜನವರಿ 2026 • ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05 ಫೆಬ್ರವರಿ 2026 • ಶುಲ್ಕ ಪಾವತಿಗೆ ಕೊನೆಯ ದಿನಾಂಕ: 05 ಫೆಬ್ರವರಿ 2026 • ಪರೀಕ್ಷೆ ದಿನಾಂಕ : ಶೀಘ್ರವೇ ಸೂಚಿಸಲಾಗುವುದು • ಭರ್ತಿ ಕಾರ್ಡ್ : ಪರೀಕ್ಷೆಗೆ ಮೊದಲು • ಫಲಿತಾಂಶ ದಿನಾಂಕ : ಶೀಘ್ರವೇ ಅಪ್ಡೇಟ್ ಮಾಡಲಾಗುವುದು. • ವಿವರಗಳಿಗೆ ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್ತಾಣವನ್ನು ಪರೀಕ್ಷಿಸಬಹುದು. ಅರ್ಜಿ ಶುಲ್ಕ • ಯಾವುದೇ ಅಭ್ಯರ್ಥಿಗೆ ಅರ್ಜಿ ಶುಲ್ಕ ಇರುವುದಿಲ್ಲ ಭಾರತೀಯ ಸೇನೆ ಎಸ್ಎಸ್ಸಿ ತಾಂತ್ರಿಕ 67ನೇ ಪುರುಷರ ಎಪ್ರಿಲ್ ಅಧಿಸೂಚನೆ 2026: ವಯೋಮಿತಿ 2026 ಅಕ್ಟೋಬರ್ 1ಕ್ಕೆ ಸರಿಯಾಗಿ, ಕನಿಷ್ಠ ವಯಸ್ಸು 20 ವರ್ಷಗಳು ಮತ್ತು ಗರಿಷ್ಠ ವಯಸ್ಸು 27 ವರ್ಷಗಳು. 1999 ಅಕ್ಟೋಬರ್ 1ರಿಂದ 2006 ಸೆಪ್ಟೆಂಬರ್ 30ರ ನಡುವೆ ಜನಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸೇನೆಯ ನಿಯಮಗಳಿಗೆ ಅನುಗುಣವಾಗಿ ವಯೋಮಿತಿ ಸಡಿಲಿಕೆ ಇರುತ್ತದೆ. ಹುದ್ದಗಳ ವಿವರ ಒಟ್ಟು ಹುದ್ದೆಗಳು 350 ಸಿವಿಲ್ ಹುದ್ದೆಗಳು 75 ಕಂಪ್ಯೂಟರ್ ಸೈನ್ಸ್ 60 ಎಲೆಕ್ಟ್ರಿಕಲ್ 33 ಎಲೆಕ್ಟ್ರಾನಿಕ್ಸ್ 64 ಮೆಕಾನಿಕಲ್ 101 ಇತರೆ ಎಂಜಿನಿಯರಿಂಗ್ ಹುದ್ದೆಗಳು 17 ಅಭ್ಯರ್ಥಿಗಳ ಅರ್ಹತೆ ಭಾರತೀಯ ಸೇನಾ ಎಸ್ಎಸ್ಸಿ ತಾಂತ್ರಿಕ 67ನೇ ಪುರುಷರ ಎಪ್ರಿಲ್ ಅಧಿಸೂಚನೆಯ ಪ್ರಕಾರ ಯಾವುದೇ ಪದವಿಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ತಾಂತ್ರಿಕ ಹುದ್ದೆಗಳಿಗೆ ಸಂಬಂಧಿಸಿದ ಎಂಜಿನಿಯರಿಂಗ್ ಪದವಿಯ ಅಗತ್ಯವಿದೆ. ಪದವಿಯ ಅಂತಿಮ ವರ್ಷದಲ್ಲಿದ್ದವರೂ (2026 ಅಕ್ಟೋಬರ್ 1ರೊಳಗೆ ಪದವಿ ಮುಗಿಸುವವರು) ಅರ್ಜಿ ಸಲ್ಲಿಸಬಹುದು. ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಆಯ್ಕೆ ಮಾಡಲಾಗುವುದು. ದೈಹಿಕ ಅರ್ಹತೆ ಕನಿಷ್ಠ ಅಗತ್ಯ ಹತ್ತು ನಿಮಿಷಗಳಲ್ಲಿ 2.4 ಕಿಮೀ ಓಟ, 40 ಪುಷ್-ಅಪ್ಗಳು, 6 ಪುಲ್-ಅಪ್ಗಳು, 30 ಸಿಟಪ್ಗಳು, ಈಜಿನ ಜ್ಞಾನ ಇತ್ಯಾದಿ. ರಾಷ್ಟ್ರೀಯತೆ ಭಾರತೀಯ ಪ್ರಜೆ, ನೇಪಾಳಿ ಪ್ರಜೆ ಅಥವಾ ಆಯ್ದ ದೇಶಗಳಲ್ಲಿರುವ ಭಾರತೀಯ ಸಂಜಾತರು. ಆಸಕ್ತಿ ಅಭ್ಯರ್ಥಿಗಳು 2026 ಫೆಬ್ರವರಿ 05ರ ಒಳಗೆ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಎಸ್ಎಸ್ ಸಂದರ್ಶನ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರಿಶೀಲನೆ ಇರುತ್ತದೆ. ಎಸ್ಎಸ್ಬಿ ಸಂದರ್ಶನ ಎರಡು ಹಂತದಲ್ಲಿ ಐದು ದಿನಗಳ ಕಾಲ ನಡೆಯುತ್ತದೆ, ಅಲಹಾಬಾದ್, ಭೋಪಾಲ್, ಬೆಂಗಳೂರು ಮತ್ತು ಕಪುರ್ತಲದಲ್ಲಿ ಸಂದರ್ಶನ ಇರಲಿದೆ. ಸಂದರ್ಶನ ಪಾಸಾದ ಮೇಲೆ ವೈದ್ಯಕೀಯ ಪರೀಕ್ಷೆ ಇರುತ್ತದೆ. ನಂತರ ಅಂತಿಮ ಮೆರಿಟ್ ಪಟ್ಟಿ ಮಾಡಲಾಗುತ್ತದೆ. ವೇತನ ಮತ್ತು ಲಾಭಗಳು ಅರ್ಹ ಅಭ್ಯರ್ಥಿಗಳಿಗೆ ಲೆಫ್ಟಿನಂಟ್ ರ್ಯಾಂಕ್ನ ಶಾರ್ಟ್ ಸರ್ವಿಸ್ ಕಮಿಷನ್ (ಎಸ್ಎಸ್ಸಿ) ಹುದ್ದೆಗೆ ನೇಮಿಸಿಕೊಳ್ಳಲಾಗುವುದು. ಇದು ಶಾಶ್ವತ ಉದ್ಯೋಗವಾಗಿರುತ್ತದೆ. ತರಬೇತಿ ಸಂದರ್ಭದಲ್ಲಿ ಮಾಸಿಕ 56,100 ರೂ. ಸ್ಟೈಪೆಂಡ್ ಇರುತ್ತದೆ. ಲೆಫ್ಟಿನಂಟ್ ವೇತನ 56,100–1,77,500 ರೂ ಮತ್ತು ಭತ್ಯೆಗಳು ಸೇರಿರುತ್ತವೆ. ಇತರ ಕ್ಷೇತ್ರವಾರು ಭತ್ಯೆ, ಪ್ರಯಾಣ, ಆಹಾರ, ಉಡುಪು, ಮಕ್ಕಳ ಶಿಕ್ಷಣ, ವಸತಿ ಸಬ್ಸಿಡಿಗೆ 15,500 ರೂ. ಮಾಸಿಕ ಭತ್ಯೆ ಇರುತ್ತದೆ. ಸೇನಾ ಗ್ರೂಪ್ ವಿಮೆ ನಿಧಿಯ ಅಡಿಯಲ್ಲಿ 1.25 ಕೋಟಿಯ ವಿಮಾ ರಕ್ಷಣೆ ಇರುತ್ತದೆ. ಈ ಕೆಳಗಿನ ಲಿಂಕ್ನಲ್ಲಿ ಅರ್ಜಿ ಸಲ್ಲಿಸಬಹುದು. https://joinindianarmy.nic.in/Authentication.aspx
ಕೊಪ್ಪಳ | ಮಹಿಳಾ ಸುರಕ್ಷತೆಗೆ ಅಕ್ಕಪಡೆ ಬಲವಾಗಲಿ: ಜ್ಯೋತಿ ಎಂ.ಗೊಂಡಬಾಳ
ಕೊಪ್ಪಳ : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹಿಳಾ ಪರ ಮತ್ತೊಂದು ಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿರುವ ಅಕ್ಕಪಡೆ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಆದರ್ಶ ಹಾಗೂ ದಿಟ್ಟತನದಂತೆ ಕಾರ್ಯನಿರ್ವಹಿಸಲಿ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಎಂ. ಗೊಂಡಬಾಳ ಅವರು ಮನವಿ ಮಾಡಿದರು. ಅವರು ಇಲ್ಲಿನ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಪೊಲೀಸ್ ಔಟ್ಪೋಸ್ಟ್ ಹತ್ತಿರ, ರಾಜ್ಯ ಕಾಂಗ್ರೆಸ್ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಆರಂಭಿಸಲಾದ ಮಹಿಳೆಯರ ಸಂರಕ್ಷಣಾ ಕಾರ್ಯಕ್ರಮ ಅಕ್ಕಪಡೆ ಸಿಬ್ಬಂದಿಯನ್ನು ಗೌರವಿಸಿ ಮಾತನಾಡಿದರು. ಗ್ಯಾರಂಟಿ ಯೋಜನೆಗಳ ಮೂಲಕ ಮಹಿಳೆಯರ ಆರ್ಥಿಕ ಸಬಲೀಕರಣ ಮಾಡಿರುವಂತೆ, ದೌರ್ಜನ್ಯ ಹಾಗೂ ಸಂಕಷ್ಟಕ್ಕೆ ಒಳಗಾಗುವ ಮಹಿಳೆಯರಿಗೆ ತುರ್ತು ಸಹಾಯ ಒದಗಿಸಲು ಅಕ್ಕಪಡೆ ಸದಾ ಸನ್ನದ್ಧವಾಗಿರುತ್ತದೆ. ಮಹಿಳೆಯರ ಸುರಕ್ಷತೆಗೆ ಅಗ್ರ ಆದ್ಯತೆ ನೀಡಲಾಗಿದ್ದು, ರಾಜ್ಯಾದ್ಯಂತ ಇರುವ ಸಹಾಯವಾಣಿ ವ್ಯವಸ್ಥೆಯ ಮೂಲಕ ಮಹಿಳೆಯರನ್ನು ತಲುಪಲು ಅಕ್ಕಪಡೆ ಲಭ್ಯವಿರುತ್ತದೆ. ದೂರದ ಪ್ರದೇಶಗಳಿಂದ ಕರೆ ಬಂದರೂ ತಕ್ಷಣ ಸ್ಪಂದಿಸಿ ಸಹಾಯ ಒದಗಿಸಲಾಗುತ್ತದೆ ಎಂದು ಹೇಳಿದರು. ದೂರುಗಳಿಗೆ ತಂಡವು ತ್ವರಿತವಾಗಿ ಪ್ರತಿಕ್ರಿಯಿಸಲಿದೆ. ಗಂಭೀರ ಪ್ರಕರಣಗಳಲ್ಲಿ ಆರೋಪಿಗಳನ್ನು ಸ್ಥಳೀಯ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗುತ್ತದೆ. ಅಕ್ಕಪಡೆಯ ಸದಸ್ಯರಿಗೆ ಹಿಂಸಾಚಾರ ಪ್ರಕರಣಗಳ ನಿರ್ವಹಣೆ, ಸಾರ್ವಜನಿಕ ಸುವ್ಯವಸ್ಥೆ ಕಾಪಾಡುವುದು ಸೇರಿದಂತೆ ವಿಶೇಷ ತರಬೇತಿ ನೀಡಲಾಗಿದೆ ಎಂದು ತಿಳಿಸಿದರು. ಅಲ್ಲದೇ ವಿದ್ಯಾರ್ಥಿಗಳು ಮತ್ತು ಮಹಿಳೆಯರಲ್ಲಿ ಬಾಲ್ಯವಿವಾಹ ನಿಷೇಧ, ಪೋಕ್ಸೊ ಕಾಯಿದೆ, ಮಹಿಳಾ ಸುರಕ್ಷತೆ ಹಾಗೂ ಮೊಬೈಲ್ ಸುರಕ್ಷತಾ ನಿಯಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತದೆ. ಜೊತೆಗೆ 1098, 112 ಮತ್ತು 1930 ಸಹಾಯವಾಣಿ ಸಂಖ್ಯೆಗಳ ಕುರಿತು ಮಾಹಿತಿ ನೀಡಲಾಗುತ್ತದೆ ಎಂದು ಹೇಳಿದರು. ಇಷ್ಟೆಲ್ಲಾ ಸಮಾಜಮುಖಿ ಕೆಲಸ ಮಾಡುತ್ತಿರುವ ಅಕ್ಕಪಡೆಗೆ ಮಹಿಳಾ ಕಾಂಗ್ರೆಸ್ ಸಂಪೂರ್ಣ ಸಹಕಾರ ನೀಡಲಿದೆ. ಗಾಂಧೀಜಿ ಅವರ ಕನಸಿನಂತೆ ಮಹಿಳೆ ಸ್ವಾಭಿಮಾನದಿಂದ ಹಾಗೂ ಸ್ವತಂತ್ರವಾಗಿ ಬದುಕಲು ಅಗತ್ಯವಾದ ಸುರಕ್ಷತೆಯನ್ನು ನೂತನ ಅಕ್ಕಪಡೆ ಇನ್ನಷ್ಟು ಬಲಪಡಿಸುವುದು ಖುಷಿಯ ಸಂಗತಿಯಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅಕ್ಕಪಡೆ ಸಿಬ್ಬಂದಿಗಳಾದ ಪೊಲೀಸ್ ಇಲಾಖೆಯ ಸಾವಿತ್ರಿ ಡಿ. ಮತ್ತು ಈರಣ್ಣ ತಾವರಗೇರಾ, ಹೋಮ್ ಗಾರ್ಡ್ಗಳಾದ ಯಲ್ಲಮ್ಮ ಎನ್. (ಕೊಪ್ಪಳ), ನಾಗರತ್ನ (ಗಂಗಾವತಿ), ಭಾಗ್ಯ (ಗಂಗಾವತಿ) ಹಾಗೂ ತಾಯೇರಾ ಬೇಗಂ ಅವರನ್ನು ಹೂಗುಚ್ಛ ನೀಡಿ ಸನ್ಮಾನಿಸಲಾಯಿತು. ಕೆಪಿಸಿಸಿ ಸದಸ್ಯೆ ಗಿರಿಜಾ ಸಂಗಟಿ, ಮುಖಂಡರಾದ ಕಿಶೋರಿ ಬೂದನೂರ್, ಜಯಶ್ರೀ ಕಂದಕೂರ್, ಕೆಡಿಪಿ ಸದಸ್ಯೆ ನಾಗರತ್ನ ಹುಲಿಗಿ, ರೇಷ್ಮಾ ಖಾಜಾವಲಿ, ಸುಮಂಗಲಾ ನಾಯಕ್, ಸೌಭಾಗ್ಯ ಗೊರವರ್, ಶರಣಮ್ಮ ಪೂಜಾರಿ, ಜಯಶ್ರೀ ಅರಕೇರಿ, ಶಿಲ್ಪಾ ಗುಡ್ಲಾನೂರ್, ಅನಿತಾ ಅಳ್ಳಮ್ಮನವರ, ಗ್ಯಾರಂಟಿ ಸಮಿತಿ ಸದಸ್ಯೆ ರೇಣುಕಮ್ಮ ಕಾರಟಗಿ, ಮುತ್ತಮ್ಮ ಕಾರಟಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಇರಾನ್ನಲ್ಲಿ ಅಯೋತೊಲ್ಲಾ ಅಲಿ ಖಮೇನಿ ಸರ್ಕಾರದ ವಿರುದ್ಧದ ಪ್ರತಿಭಟನೆಗಳು ತೀವ್ರಗೊಂಡಿದ್ದು, ಸುಮಾರು 500ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಪ್ರತಿಭಟನೆಗಳನ್ನು ಹತ್ತಿಕ್ಕಲು ಇರಾನ್ ಸರ್ಕಾರ ಉಪಗ್ರಹ ಆಧಾರಿತ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ. ಎಲಾನ್ ಮಸ್ಕ್ ಅವರ 'ಸ್ಟಾರ್ ಲಿಂಕ್' ಸೇವೆಯನ್ನು 'ಕಿಲ್ಲರ್ ಸ್ವಿಚ್' ತಂತ್ರಜ್ಞಾನ ಬಳಸಿ ನಿಷ್ಕ್ರಿಯಗೊಳಿಸಲಾಗಿದೆ.
ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಡಾ. ಸುರೇಶ್ ಬಿ. ಇಟ್ನಾಳ ದಿಢೀರ್ ಭೇಟಿ
ಕೊಪ್ಪಳ : ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಡಾ.ಸುರೇಶ್ ಬಿ.ಇಟ್ನಾಳ ಅವರು ಸೋಮವಾರ ದಿಢೀರ್ ಭೇಟಿ ನೀಡಿ ಆಸ್ಪತ್ರೆಯಲ್ಲಿನ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಈ ವೇಳೆ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳ ಹಾಜರಾತಿಯನ್ನೂ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ಆಸ್ಪತ್ರೆಯಲ್ಲಿ ಸ್ವಚ್ಛತೆ ಕಡ್ಡಾಯವಾಗಿ ಕಾಪಾಡಬೇಕು ಎಂದು ಸೂಚಿಸಿದರು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಚೀಟಿ ಪಡೆಯುವ ವೇಳೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಬೇಗನೆ ಚೀಟಿ ನೀಡಲು ಇನ್ನಷ್ಟು ಕೌಂಟರ್ಗಳನ್ನು ತೆರೆಯುವ ಜೊತೆಗೆ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಜಿಲ್ಲಾ ಆಸ್ಪತ್ರೆಯ ಸೈಕಿಯಾಟ್ರಿ ವಿಭಾಗದಲ್ಲಿ ರೋಗಿಗಳ ಚಿಕಿತ್ಸೆಗೆ ಪ್ರತ್ಯೇಕ ವ್ಯವಸ್ಥೆ ಇದೆಯೇ ಎಂಬುದನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಡ್ರಗ್ ಅಡಿಕ್ಟ್ಗಳಿಗೆ ದುಶ್ಚಟಗಳನ್ನು ಬಿಡಿಸಲು ಯಾವ ರೀತಿಯ ಕೌನ್ಸಿಲಿಂಗ್ ನೀಡಲಾಗುತ್ತಿದೆ ಎಂಬುದರ ಕುರಿತು ಮಾಹಿತಿ ಪಡೆದರು. ಡ್ರಗ್ ಅಡಿಕ್ಶನ್ನಂತಹ ದುಶ್ಚಟಗಳಿಗೆ ಜನರು ಬಲಿಯಾಗದಂತೆ ಹೆಚ್ಚಿನ ಜಾಗೃತಿ ಮೂಡಿಸುವಂತೆ ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಸೂಚಿಸಿದರು. ಇದೇ ಸಂದರ್ಭದಲ್ಲಿ ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು ಸೇರಿದಂತೆ ಇತರೆ ಹಲವರು ಉಪಸ್ಥಿತರಿದ್ದರು.
ಕುಷ್ಟಗಿ | ಪಿಎಂ ವಿಶ್ವಕರ್ಮ ಯೋಜನೆ ಕಿಟ್ ವಿತರಣೆಯಲ್ಲಿ ಅವ್ಯವಸ್ಥೆ ಆರೋಪ : ಯುವಕರಿಂದ ಪ್ರತಿಭಟನೆ
ಕುಷ್ಟಗಿ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ ವಿತರಿಸಬೇಕಾದ 15,000 ರೂ. ಮೌಲ್ಯದ ಕಟಿಂಗ್ (ಸಲೂನ್) ಕಿಟ್ ವಿತರಣೆಯಲ್ಲಿ ಭಾರೀ ಅವ್ಯವಸ್ಥೆ ನಡೆದಿದೆ ಎಂದು ಆರೋಪಿಸಿ, ಕಟಿಂಗ್ ಸಲೂನ್ ಹಾಗೂ ಹಡಪದ ಸಮುದಾಯದ ಯುವಕರು ಸೋಮವಾರ ಹನುಮಸಾಗರ ಪೋಸ್ಟ್ ಆಫೀಸ್ ಮುಂದೆ ಪ್ರತಿಭಟನೆ ನಡೆಸಿದರು. ಪಿಎಂ ವಿಶ್ವಕರ್ಮ ಯೋಜನೆಯಡಿ ಆಯ್ಕೆಯಾದ ಲಾಭಾರ್ಥಿಗಳಿಗೆ 15 ದಿನಗಳ ತರಬೇತಿ, ತರಬೇತಿ ಅವಧಿಯಲ್ಲಿ 15,000 ರೂ. ಗೌರವಧನ, ನಂತರ ಸಬ್ಸಿಡಿ ಸಾಲ ಸೌಲಭ್ಯ ಹಾಗೂ 15,000 ರೂ. ಮೌಲ್ಯದ ವೃತ್ತಿ ಸಂಬಂಧಿತ ಕಿಟ್ ವಿತರಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಅದರಂತೆ ಕಟಿಂಗ್ ಕಿಟ್ಗಳನ್ನು ಪೋಸ್ಟ್ ಆಫೀಸ್ ಮೂಲಕ ವಿತರಿಸಬೇಕಾಗಿತ್ತು. ಆದರೆ, ಹನುಮಸಾಗರ ಪೋಸ್ಟ್ ಆಫೀಸ್ನಲ್ಲಿ ವಿತರಿಸಲಾದ ಕಿಟ್ಗಳಲ್ಲಿ ಪೂರ್ಣ ಸಾಮಾನುಗಳೇ ಇಲ್ಲ. ಒಂದು ಕಿಟ್ನಲ್ಲಿ ಬರಬೇಕಾದ 15,000 ರೂ. ಮೌಲ್ಯದ ಉಪಕರಣಗಳ ಬದಲು ಕೇವಲ 1,000 ರೂ. ರಿಂದ 1,500 ರೂ. ಮೌಲ್ಯದ ಕೆಲವೇ ಸಾಮಾನುಗಳು ಮಾತ್ರ ದೊರೆತಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸುರೇಶ ಹಡಪದ, ಭರತ ಹಡಪದ, ರುದ್ರಪ್ಪ ಹೊನ್ನಪ್ಪ ಹಡಪದ, ಮಂಜುನಾಥ ಶಂಕ್ರರಪ್ಪ ಹಡಪದ, ಮಲ್ಲಪ್ಪ ಹಡಪದ, ಶಾಣಪ್ಪ ಹಡಪದ, ವರುಣ ಹಡಪದ ಹಾಗೂ ಯಮನೂರಪ್ಪ ಹಡಪದ ಮಾತನಾಡಿ, ನಿಯಮಾನುಸಾರ ಟ್ರೈನರ್ ಅಥವಾ ಅಧಿಕಾರಿಗಳ ಸಮ್ಮುಖದಲ್ಲೇ ಕಿಟ್ನ ಸೀಲ್ ತೆರೆಯಬೇಕು. ಆದರೆ ಇಲ್ಲಿ ನಾವು ಬರುವುದಕ್ಕೂ ಮುಂಚೆಯೇ ಕಿಟ್ಗಳನ್ನು ತೆರೆಯಲಾಗಿದ್ದು, ಅಪೂರ್ಣ ಸಾಮಾನುಗಳನ್ನು ವಿತರಿಸಲಾಗಿದೆ. ಕೆಲವರಿಗೆ ಸಂಪೂರ್ಣ ಕಿಟ್ ನೀಡಲಾಗಿದ್ದು, ನಮಗೆ ಮಾತ್ರ ಅಲ್ಪ ಪ್ರಮಾಣದ ಸಾಮಾನುಗಳು ಸಿಕ್ಕಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಪೋಸ್ಟ್ ಆಫೀಸ್ ಅಧಿಕಾರಿಗಳನ್ನು ಪ್ರಶ್ನಿಸಿದಾಗ, “ಮೇಲಿನಿಂದ ಬಂದಿರುವಂತೆ ವಿತರಿಸಲಾಗಿದೆ” ಎಂಬ ಜವಾಬ್ದಾರಿ ತಪ್ಪಿಸುವ ಉತ್ತರ ನೀಡುತ್ತಿದ್ದಾರೆ. ಯಾವುದೇ ಸ್ಪಷ್ಟ ಮಾಹಿತಿ ನೀಡದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.
ಯಲಬುರ್ಗಾ | ವಾಲ್ಮೀಕಿ ನಾಯಕ ಸಮಾಜದ ಹಿತಕ್ಕಾಗಿ ಸಂಘಟನೆ ಅತ್ಯಗತ್ಯ : ರಾಮಣ್ಣ ಕಲ್ಲಣ್ಣವರ
ಯಲಬುರ್ಗಾ : ವಾಲ್ಮೀಕಿ ನಾಯಕ ಸಮಾಜದ ಹಿತಕ್ಕಾಗಿ ಸಂಘಟನೆ ಅತ್ಯಗತ್ಯವಾಗಿದ್ದು, ಸಮ ಸಮಾಜ ನಿರ್ಮಾಣ, ಆರ್ಥಿಕ ಸಬಲೀಕರಣ, ಅಭಿವೃದ್ಧಿ ಹಾಗೂ ಸಮಸ್ಯೆಗಳ ಪರಿಹಾರಕ್ಕೆ ಸಂಘಟನೆ ಸಹಕಾರಿಯಾಗುತ್ತದೆ. ಸಂಘಟನೆಯಿಂದ ಸಮುದಾಯವು ತನ್ನ ಹಕ್ಕುಗಳನ್ನು ಪಡೆಯಲು ಶಕ್ತಿಯನ್ನುಗಳಿಸುತ್ತದೆ ಎಂದು ವಾಲ್ಮೀಕಿ ಗುರುಪೀಠದ ಕೊಪ್ಪಳ ಜಿಲ್ಲಾ ಪ್ರತಿನಿಧಿ ರಾಮಣ್ಣ ಕಲ್ಲಣ್ಣವರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ವಾಲ್ಮೀಕಿ ನಾಯಕ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 'ವಾಲ್ಮೀಕಿ ಜಾತ್ರೆ'ಯ ಪೂರ್ವಭಾವಿ ಸಭೆ ಹಾಗೂ ತಾಲೂಕು ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಅವರು ಮಾತನಾಡಿದರು. ಭಾರತೀಯ ಸಂಸ್ಕೃತಿಗೆ ವಾಲ್ಮೀಕಿ ಸಮಾಜದ ಕೊಡುಗೆ ಅಪಾರ. ನಮ್ಮ ಇತಿಹಾಸವನ್ನು ಯುವಪೀಳಿಗೆ ಅರ್ಥಮಾಡಿಕೊಳ್ಳಬೇಕು. ವಿವಿಧ ರಾಜಕೀಯ ಪಕ್ಷಗಳಲ್ಲಿ ಗುರುತಿಸಿಕೊಂಡಿದ್ದರೂ, ಚುನಾವಣೆ ಮುಗಿದ ನಂತರ ಸಮಾಜದ ಅಭಿವೃದ್ಧಿಗಾಗಿ ಎಲ್ಲರೂ ಒಂದಾಗಬೇಕು. ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಮರೆತು 'ವಾಲ್ಮೀಕಿ' ಎಂಬ ಭಾವನೆಯಡಿ ಸಾಗಬೇಕು ಎಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಡಾ. ಕೆ.ಎನ್. ರಾಜಣ್ಣ, ಮಾಜಿ ಅಧ್ಯಕ್ಷ ಮಾನಪ್ಪ ಪೂಜಾರ, ಮುಖಂಡರಾದ ಹನಮೇಶ ನಾಯಕ, ಶರಣಪ್ಪ ಹೊಸಕೇರಿ ಸೇರಿದಂತೆ ಕಾರಟಗಿ ಹಾಗೂ ಕನಕಗಿರಿ ತಾಲೂಕಿನ ಮುಖಂಡರು ಸಂಘಟನೆಯ ಮಹತ್ವದ ಕುರಿತು ಮಾತನಾಡಿದರು. ಸಭೆಯಲ್ಲಿ ಸರ್ವಾನುಮತದಿಂದ ತಾಲೂಕಿನ ಮಠದ ಧರ್ಮದರ್ಶಿಯಾಗಿ ಫಕೀರಪ್ಪ ತಳವಾರ ಅವರನ್ನು ಆಯ್ಕೆ ಮಾಡಲಾಯಿತು. ಯಲಬುರ್ಗಾ ತಾಲೂಕಿನ ಅಧ್ಯಕ್ಷರಾಗಿ ಯಲ್ಲಪ್ಪ ವೀರಪ್ಪ ಹಡಗಲಿ, ಉಪಾಧ್ಯಕ್ಷರಾಗಿ ದೇವಿಂದ್ರಗೌಡ ಮಾಲಿ ಪಾಟೀಲ, ಚನ್ನಬಸಪ್ಪ ಗುಮಗೇರಿ, ಮುದಿಯಪ್ಪ ಆಡಿನ್ ಹಾಗೂ ಮಾನಪ್ಪ ವಾಲ್ಮೀಕಿ (ಬೇವೂರು) ಅವರನ್ನು ಆಯ್ಕೆ ಮಾಡಲಾಯಿತು. ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಕಾಂತಗೌಡ ಪಾಟೀಲ, ಸಹ ಕಾರ್ಯದರ್ಶಿಯಾಗಿ ಶಶಿ ನಾಯಕ, ಗೌರವ ಅಧ್ಯಕ್ಷರಾಗಿ ಹಂಚಾಳಪ್ಪ ಪೂಜಾರರನ್ನು ನೇಮಕ ಮಾಡಲಾಯಿತು. ಸಂಘಟನಾ ಕಾರ್ಯದರ್ಶಿಗಳಾಗಿ ದೇವಪ್ಪ ಪೂಜಾರ (ತಳವಾರ), ಕನಕರಾಯ ಯಾಪಲದಿನ್ನಿ, ಶರಣಪ್ಪ ಗಚ್ಚಿನಮನಿ, ವೆಂಕನಗೌಡ ಪೋಲಿಸ್ ಪಾಟೀಲ, ಬಸವರಾಜ ಜಮಂಬಳ್ಳಿ ಸೇರಿದಂತೆ ಇತರರನ್ನು ಆಯ್ಕೆ ಮಾಡಲಾಯಿತು. ಜಾತ್ರಾ ಸಮಿತಿ ಅಧ್ಯಕ್ಷರಾಗಿ ಯಮನೂರಪ್ಪ ತಳವಾರ ಹಾಗೂ ಸದಸ್ಯರಾಗಿ ದ್ಯಾಮಣ್ಣ ಗೌಡ್ರ, ಶಂಕ್ರಗೌಡ ಪಾಟೀಲ ಸಾಲಭಾವಿ, ಶರಣಗೌಡ ಹೊಸಗೌಡ್ರ, ಬಸವರಾಜ ಪೂಜಾರ, ದುರಗನಗೌಡ ಪೋಲಿಸ್ ಪಾಟೀಲ, ಪರಮೇಶ್ ಚಾಕ್ರಿ, ಹನಮಗೌಡ ಕೋರಿ ಸೇರಿದಂತೆ ಇನ್ನಿತರರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ತಾಲೂಕಿನ ನೂರಾರು ಮುಖಂಡರು ಹಾಗೂ ಸಮಾಜದ ಬಂಧುಗಳು ಉಪಸ್ಥಿತರಿದ್ದರು.
ಛೂ ಬಾಣ – ಪಿ. ಮೊಹಮ್ಮದ್ ಕಾರ್ಟೂನ್
ಪಾಕಿಸ್ತಾನದ ಉನ್ನತ ನಾಯಕತ್ವ ಇಡೀ ಜಗತ್ತಿನ ಜನರು ತನ್ನ ನಾಗರಿಕರ ರೀತಿಯಲ್ಲೇ ಮುಗ್ಧರು, ಅಲ್ಲಲ್ಲ ಮೂರ್ಖರು ಎಂದು ಭಾವಿಸಿದಂತಿದೆ. ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆಯಲ್ಲಿ ಭಾರತವನ್ನು ಸೋಲಿಸಿರುವುದಾಗಿ ತನ್ನ ಜನರನ್ನು ನಂಬಿಸಿರುವ ಪಾಕಿಸ್ತಾನ, ಇದೀಗ ತನ್ನ JF-17 ಯುದ್ಧ ವಿಮಾನ ಮಾರಾಟ ಮಾಡುವ ಮೂಲಕ ಭವಿಷ್ಯದಲ್ಲಿ ಐಎಂಎಫ್ ಸಾಲವೇ ಬೇಡ ಎನ್ನುವಷ್ಟು ಲಾಭಗಳಿಸುವುದಾಗಿ ಹೇಳಿಕೊಂಡಿದೆ. ಪಾಕಿಸ್ತಾನದ ರಕ್ಷಣಾ ಸಚಿವರ ಹೇಳಿಕೆಯನ್ನು ಪಾಕಿಸ್ತಾನಿ ವಿಶ್ಲೇಷಕರೇ ಪ್ರಶ್ನಿಸಿದ್ದಾರೆ. ಈ ಕುರಿತು ಇಲ್ಲಿದೆ ಮಾಹಿತಿ.
ಗಾಯಾಳು ವಾಶಿಂಗ್ಟನ್ ಸುಂದರ್ ಬದಲಿಗೆ ಈಗ ದಿಲ್ಲಿಯ ಆಯುಷ್ ಬದೋನಿಗೆ ಬುಲಾವ್! ಇದು ವರ್ಕೌಟ್ ಆಗುತ್ತಾ?
India Vs New Zealand- ಭಾರತ ತಂಡದಲ್ಲಿ ಗಾಯದ ಸಮಸ್ಯೆ ಮುಂದುವರಿದಿದ್ದು ಇದೀಗ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಅವರು ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ದಿಲ್ಲಿಯ ಬ್ಯಾಟರ್ ಆಯುಷ್ ಬದೋನಿ ತಂಡವನ್ನು ಸೇರಿಕೊಳ್ಳಲಿದ್ದಾರೆ. ಈ ಹಿಂದೆ ತಿಲಕ್ ವರ್ಮಾ ಮತ್ತು ರಿಷಬ್ ಪಂತ್ ಕೂಡ ಗಾಯಗೊಂಡಿದ್ದರು. ಇದೀಗ ವಾಶಿಂಗ್ಟನ್ ಸುಂದರ್ ಅವರು ಸಹ ಗಾಯಗೊಂಡಿರುವುದು ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಂನಲ್ಲಿ ಆತಂಕಕ್ಕೆ ಕಾರಣವಾಗಿದೆ. ಎರಡನೇ ಏಕದಿನ ಪಂದ್ಯ ಜನವರಿ 14ರಂದು ರಾಜ್ಕೋಟ್ನಲ್ಲಿ ನಡೆಯಲಿದೆ.
ಮೊಂಟೆಪದವು: ಸ್ವಲಾತ್ ವಾರ್ಷಿಕ - ಮಾದರಿ ಮದುವೆ, ನಶೆ ಮುಕ್ತ ಸಮಾಜ ಕಾರ್ಯಾಗಾರ
ಮಂಗಳೂರು: ಉಳ್ಳಾಲ ತಾಲೂಕಿನ ಮೊಂಟೆಪದವು ಬದ್ರಿಯಾ ಜುಮಾ ಮಸ್ಜಿದ್ ಇದರ 34ನೇ ವಾರ್ಷಿಕ ಸ್ವಲಾತ್ ಅಂಗವಾಗಿ ಮಾದರಿ ಮದುವೆ ಮತ್ತು ನಶೆ ಮುಕ್ತ ಸಮಾಜ ಕಾರ್ಯಾಗಾರ ನಡೆಯಿತು. ಮೂರು ದಿನಗಳ ಕಾರ್ಯಕ್ರಮದಲ್ಲಿ ಮೊದಲನೇ ದಿನ ನಶೆ ಮುಕ್ತ ಸಮಾಜ ಎಂಬ ವಿಷಯದಲ್ಲಿ ವಿಶೇಷ ಕಾರ್ಯಾಗಾರವನ್ನು ಇಕ್ಬಾಲ್ ಬಾಳಿಲ ನಡೆಸಿಕೊಟ್ಟರು. ಮಕ್ಕಳ ಬಗ್ಗೆ ತಂದೆ ತಾಯಿಗಳ ಜವಾಬ್ದಾರಿ ಮತ್ತು ಮಕ್ಕಳು ಸುಲಭವಾಗಿ ಪೆಡ್ಲರ್ಗಳಿಗೆ ಬಲಿಯಾಗುವುದರ ಬಗ್ಗೆ ವಿವರಿಸಿದರು. ಧಾರ್ಮಿಕ ಉಪನ್ಯಾಸ ವೇದಿಕೆಯಲ್ಲಿ ಕಾಲದ ಬೇಡಿಕೆಗೆ ಅನುಗುಣವಾಗಿ ಇಂತಹ ಕಾರ್ಯಕ್ರಮವನ್ನು ಸಂಘಟಿಸಿದ್ದಕ್ಕೆ ಇದೊಂದು ಮಾದರಿ ಹೆಜ್ಜೆ ಎಂದು ಜಮಾಅತ್ ಆಡಳಿತ ಸಮಿತಿಯನ್ನು ಶ್ಲಾಘಿಸಿದರು. ಇನ್ನೊರ್ವ ಸಂಪನ್ಮೂಲ ವ್ಯಕ್ತಿ ಕೆ. ಎಂ. ಸಿದ್ದೀಕ್ ಮೊಂಟುಗೋಳಿ ಮಾತನಾಡಿ, ಮದುವೆ ಹೆಸರಲ್ಲಿ ನಡೆಯುವ ಅನಾಚಾರಗಳು ಇಸ್ಲಾಂ ಸಂಸ್ಕೃತಿ ವಿರೋಧವಾಗಿದೆ ಮತ್ತು ಸರಳ ವಿವಾಹ ಮುಂದಿನ ತಲೆಮಾರಿಗೆ ಮಾದರಿ ಮತ್ತು ಆರ್ಥಿಕ ನಿಯಂತ್ರಣ ಸಾಧಿಸಲಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಎರಡನೇ ದಿನ ಮಂಜನಾಡಿ ಜಮಾಅತ್ ಖತೀಬ್ ಪಿ. ಎ. ಅಹ್ಮದ್ ಬಾಖವಿ ಉಚ್ಚಿಲ ಅವರು ನಶಿಸುತ್ತಿವ ಇಸ್ಲಾಮಿನ ಸಂಸ್ಕೃತಿಯನ್ನು ಕಾಪಾಡುವ ಜವಾಬ್ದಾರಿ ಬಗ್ಗೆ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಕೊನೆಯ ದಿನ ಅಸಯ್ಯದ್ ಅಶ್ರಫ್ ತಂಙಳ್ ಅದೂರು ದುಆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮಸೀದಿ ಖತೀಬ್ ಬಹು ಸಿದ್ದೀಕ್ ಸಅದಿ ಮಿತ್ತೂರು , ಮಸೀದಿ ಅಧ್ಯಕ್ಷ ಕೆ. ಖಾದರ್ ಮಸೀದಿ ಮತ್ತು ಮದರಸದ ಎಲ್ಲಾ ಉಸ್ತಾದರುಗಳು, ಆಡಳಿತ ಮಂಡಳಿಯ ಸದಸ್ಯರು ಭಾಗವಹಿಸಿದ್ದರು.
ಧರ್ಮ, ದೇವರ ಹೆಸರಿನಲ್ಲಿ ಪ್ರಧಾನಿ ಮೋದಿ ದೇಶವನ್ನೇ ಲೂಟಿ ಮಾಡುತ್ತಿದ್ದಾರೆ : ಮಲ್ಲಿಕಾರ್ಜುನ ಖರ್ಗೆ
ಕಲಬುರಗಿ: ಧರ್ಮ, ದೇವರ ಹೆಸರಿನ ಮೇಲೆ ಪ್ರಧಾನಿ ಮೋದಿ ಇಡೀ ದೇಶವನ್ನೇ ಲೂಟಿ ಮಾಡುತ್ತಿದ್ದಾರೆ, ಇದರ ಬಗ್ಗೆ ಜನರು ಎಚ್ಚೆತ್ತುಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಯಡ್ರಾಮಿಯಲ್ಲಿ ಕೆಕೆಆರ್ ಡಿಬಿ, ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪ್ರಜಾಸೌಧ, 300 ಕೆ.ಪಿ.ಎಸ್ ಶಾಲೆಗಳ ಶಂಕು ಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಲೋಕ ಕಲ್ಯಾಣಕ್ಕಾಗಿ ದೇವರುಗಳು ಹುಟ್ಟಿದ್ದಾರೆ, ಆದರೆ ಮೋದಿ ವೋಟಿಗಾಗಿ ದೇವಾಲಯಗಳನ್ನು ಸುತ್ತಾಡಿ ಜನರನ್ನು ಒಲಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಪಾಂಡಿಚೇರಿ ಚುನಾವಣೆಗಾಗಿ ಇಂತಹ ನಾಟಕ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಹಿಂದೂ-ಮುಸ್ಲಿಂ, ಹಿಂದೂ -ಸಿಖ್ ಜನರ ಮಧ್ಯೆ ಜಗಳ ಹಚ್ಚುವುದು ಇವರ ಕೆಲಸವಾಗಿದೆ, ಇದು ಕಲ್ಯಾಣ ಕರ್ನಾಟಕ, ಕಲ್ಯಾಣ ಕ್ರಾಂತಿ ಮಾಡಿರುವ ಬಸವಣ್ಣನ ಊರು. ನಮ್ಮ ಭಾಗ ಸಮಾನತೆಗೆ ಹೆಸರಿರುವಂತಹ ಸ್ಥಳವಾಗಿದೆ, ಜಗಳ ಹಚ್ಚುವಂತಹ ಸನ್ನಿವೇಶದಲ್ಲಿ ಒಗ್ಗಟ್ಟಾಗಿರಬೇಕು ಎಂದು ಕರೆ ನೀಡಿದರು. ಬಡವರ ಹೊಟ್ಟೆ ಹೊಡೆಯುತ್ತಿರುವ ಮೋದಿ : ಕೇಂದ್ರದಲ್ಲಿ ಯಾವುದೋ ಜೀ ರಾಮ್ ಜೀ ಎನ್ನುವ ಹೆಸರಿನಲ್ಲಿ ಕಾಯ್ದೆ ಜಾರಿ ಮಾಡಿ ನರೇಗಾವನ್ನು ಮಣ್ಣುಪಾಲು ಮಾಡುತ್ತಿದ್ದಾರೆ. ಬೇಸಿಗೆ ಕಾಲದಲ್ಲಿ ಬಡವರಿಗೆ ಬದುಕಾಗಿರುವ ಮನರೇಗಾ ಯೋಜನೆಯನ್ನು ಬದಲಿಸಿ, ಮೋದಿ ಬಡವರ ಹೊಟ್ಟೆ ಹೊಡೆಯುತ್ತಿದ್ದಾರೆ ಎಂದ ಅವರು, ಇದಕ್ಕೆ ಯಾವ ನಾಯಕರು ಧ್ವನಿ ಎತ್ತುತ್ತಿಲ್ಲ ಅಂದರೆ ಅವರಿಗೆ ಹೊಟ್ಟೆ ತುಂಬಿದೆ ಎನ್ನುವ ಅರ್ಥ ನೀಡುತ್ತದೆ ಎಂದರು. ನರೇಗಾ ಉಳಿಸಲು ಯುದ್ಧಕ್ಕೂ ಸಿದ್ಧರಾಗಬೇಕು : ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯದಂತೆ ಬಡವರ ಸಬಲೀಕರಣಕ್ಕೆ ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರ ನೇತೃತ್ವದಲ್ಲಿ ನರೇಗಾ ಜಾರಿಗೆ ಮಾಡಲಾಗಿತ್ತು. ಆದರೆ ಈಗ ಒಂದೊಂದಾಗಿ ಕಾನೂನುಗಳನ್ನು ಕಸಿದುಕೊಂಡು ತಿನ್ನುತ್ತಿದ್ದಾರೆ. ಇಂತಹ ವೇಳೆಯಲ್ಲಿ ನರೇಗಾ ಉಳಿಸಲು ಜನರು ಯುದ್ಧಕ್ಕೂ ಸಿದ್ಧರಾಗಬೇಕು ಎಂದು ಹೇಳಿದರು. ಮೋದಿ , ಕೇಂದ್ರ ಹಾಗೂ ರಾಜ್ಯದ ನಡುವೆ 60: 40 ಅನುದಾನ ವಿಂಗಡಿಸಿದ್ದಾರೆ, ಇದು ಒಂದೇ ಮಾಡಿಲ್ಲ, ಸ್ಥಳೀಯ ವಿವಿಧ ಕೆಲಸಗಳಿಗೆ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಗೆ ಅಧಿಕಾರದ ಹಕ್ಕನ್ನು ಈಗ ಕೇಂದ್ರ ಸರ್ಕಾರಕ್ಕೆ ತೆಗೆದುಕೊಂಡಿದೆ, ದೆಹಲಿಯಿಂದ ಆದೇಶ ಮಾಡಿದರೆ ಮಾತ್ರ ಇಲ್ಲಿ ಯಾವ ಕೆಲಸ ಆಗಲಿವೆ. ಇಲ್ಲಿನ ಕೆಲಸಗಳು ಅವರಿಗೆ ಹೇಗೆ ಗೊತ್ತಾಗುತ್ತವೆ? ಎಂದು ಪ್ರಶ್ನಿಸಿದರು. ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರನ್ನು ನೇಮಿಸಿ : ಸಿದ್ದರಾಮಯ್ಯ ಅವರು ಕಾನ್ವೆಂಟ್ ಶಾಲೆಯಲ್ಲಿ ಓದಿಲ್ಲ, ಕನ್ನಡ ಶಾಲೆಯಲ್ಲಿ ಓದಿದ್ದಾರೆ, ಈಗ 2 ಬಾರಿ ಸಿಎಂ ಆಗಿದ್ದಾರೆ, ಹಾಗೇನೇ ನಮ್ಮ ಕಲ್ಯಾಣ ಕರ್ನಾಟಕದಲ್ಲಿ ಕೇವಲ ಶಾಲೆಗಳನ್ನು ಅಷ್ಟೇ ತೆರೆಯದೆ ಅವುಗಳಿಗೆ ಶಿಕ್ಷಕರನ್ನು ನೇಮಿಸಬೇಕು. ಅನೇಕ ಕಡೆಗಳಲ್ಲಿ ಶಿಕ್ಷಕರ ಕೊರತೆ ಇವೆ, ಎಲ್ಲಿಯವರೆಗೆ ಶಿಕ್ಷಕರ ಕೊರತೆ ತುಂಬುವುದಿಲ್ಲವೊ ಅಲ್ಲಿಯವರೆಗೆ ಅಭಿವೃದ್ಧಿ ಆಗುವುದಿಲ್ಲ. -ಡಾ. ಮಲ್ಲಿಕಾರ್ಜುನ್ ಖರ್ಗೆ (ಎಐಸಿಸಿ ಅಧ್ಯಕ್ಷರು)
10 ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
ಯಡ್ರಾಮಿಯಲ್ಲಿ 906 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಚಾಲನೆ
ಕುತ್ತಿಗೆ- ಕಂಕುಳದಲ್ಲಿ ಕಪ್ಪು ಕಲೆಯೆ? ತಕ್ಷಣವೇ ಆರೋಗ್ಯ ಪರೀಕ್ಷೆ ಅಗತ್ಯ!
ಇತ್ತೀಚೆಗೆ ‘ಎಕ್ಸ್’ ಸಾಮಾಜಿಕ ಜಾಲತಾಣದಲ್ಲಿ ವೈದ್ಯರು ಅಕಾಂಥೊಸಿಸ್ ನೈಗ್ರಿಕನ್ಸ್ ಎನ್ನುವ ರೋಗವೊಂದರೆ ಬಗ್ಗೆ ಚರ್ಚಿಸುತ್ತಿದ್ದಾರೆ. ಏನಿದು ಅಕಾಂಥೊಸಿಸ್ ನೈಗ್ರಿಕನ್ಸ್. ಹೈದರಾಬಾದ್ ನ ವೈದ್ಯರಾಗಿರುವ ಮಧುಮೇಹಿ/ಬೊಜ್ಜು/ಕರುಳು ಸಂಬಂಧಿತ ಲೈಂಗಿಕ ಆರೋಗ್ಯದ ತಜ್ಞರಾಗಿರುವ ಸುನೀತಾ ಸಯಮ್ಮಗಾರು ಇತ್ತೀಚೆಗೆ ‘ಎಕ್ಸ್’ ಸಾಮಾಜಿಕ ಜಾಲತಾಣದಲ್ಲಿ ಚರ್ಮದ ಮಡಿಕೆಗಳಲ್ಲಿ ಅಂದರೆ, ಕುತ್ತಿಗೆ, ಕಂಕುಳ, ತೊಡೆಸಂದು, ಒಳ ತೊಡೆಗಳು ಮತ್ತು ಸ್ತನಗಳ ಕೆಳಗೆ, ಹೊಟ್ಟೆಯ ಮೇಲೆ ಚರ್ಮ ಕಂದು ಅಥವಾ ಕಪ್ಪು ಬಣ್ಣಕ್ಕೆ ತಿರುವುದರ ಬಗ್ಗೆ ಚರ್ಚಿಸಿದ್ದಾರೆ. ಏನಿದು ಅಕಾಂಥೊಸಿಸ್ ನೈಗ್ರಿಕನ್ಸ್? ಅಕಾಂಥೊಸಿಸ್ ನೈಗ್ರಿಕನ್ಸ್ ಎಂದು ಹೇಳಲಾಗುವ ಈ ಸಮಸ್ಯೆಯನ್ನು ಮೆಟ್ರೋದಲ್ಲಿ ಪ್ರಯಾಣಿಸುವಾಗ ಶೇ 50ರಷ್ಟು ಮಂದಿಗೆ ಇದ್ದುದನ್ನು ನೋಡಿದ್ದೇನೆ ಎಂದು ಅವರು ಬರೆದುಕೊಂಡಿದ್ದಾರೆ. “ನನಗೆ ಕುತ್ತಿಗೆ ಮಾತ್ರ ಕಾಣಿಸುತ್ತದೆ. ಹೀಗಾಗಿ ಕುತ್ತಿಗೆಯ ಕಲೆಗಳ ಬಗ್ಗೆ ಹೇಳುತ್ತಿದ್ದೇನೆ. ಕೆಲವರಿಗೆ ಮಂದವಾದ ಮತ್ತು ಇನ್ನು ಕೆಲವರಿಗೆ ಕಡು ಕಪ್ಪಾದ ಕಲೆಗಳು ಇರುತ್ತವೆ. ಯುವಕರು, ಹಿರಿಯರು, ಮಹಿಳೆಯರು, ಪುರುಷರು, ಮಕ್ಕಳು ಮತ್ತು ಹದಿಹರೆಯದವರಲ್ಲಿ ಎಲ್ಲರಲ್ಲೂ ಈ ಸಮಸ್ಯೆ ಗುರುತಿಸಿದ್ದೇನೆ. ಹೆಚ್ಚು ಬೊಜ್ಜಿಲ್ಲದ ವ್ಯಕ್ತಿಗಳಲ್ಲೂ ಕಂಡಿದ್ದೇನೆ. ಅವರನ್ನು ಮುಂಭಾಗದಿಂದ ನೋಡಿದಾಗ ಹೊಟ್ಟೆ ಉಬ್ಬರಿಸಿರುತ್ತದೆ. ಹೀಗಾಗಿ ಖಂಡಿತಾ ಇದು ಅಕಾಂಥೊಸಿಸ್ ನೈಗ್ರಿಕನ್ಸ್ ಎನ್ನುವುದು ಖಚಿತವಾಗುತ್ತದೆ” ಎಂದು ಅವರು ಹೇಳಿದ್ದಾರೆ. ಅದಕ್ಕೆ ಪರಿಹಾರವನ್ನೂ ಸೂಚಿಸಿದ್ದಾರೆ. “ಸಂಸ್ಕರಿತ ಆಹಾರವನ್ನು ತೊರೆಯಿರಿ, ಕೊಬ್ಬು ನಿವಾರಿಸಿ, ಪ್ರೊಟೀನ್ ಸೇವನೆ ಹೆಚ್ಚಿಸಿ, ತೂಕ ಇಳಿಸಿ. ಸಾಕಷ್ಟು ಚಲನೆ ಇರಲಿ, ನಿದ್ರೆ ಚೆನ್ನಾಗಿ ಮಾಡಿ, ಒತ್ತಡ ಕಡಿಮೆ ಮಾಡಿಕೊಳ್ಳಿ” ಎಂದು ಅವರು ಹೇಳಿದ್ದಾರೆ. ಮಾರಕ ರೋಗಗಳಿಗೆ ಚಿಹ್ನೆಯಾಗಿರಬಹುದು? ಸುನೀತಾ ಅವರ ಪೋಸ್ಟ್ ಗೆ ಪ್ರತಿಕ್ರಿಯೆ ನೀಡಿದ ಡಾ. ಪ್ರಿಯಂ ಬೊಡ್ಡೊಲೊಯಿ, “ಕುತ್ತಿಗೆ ಸುಳ್ಳು ಹೇಳುವುದಿಲ್ಲ. ಹೀಗೆ ಕಂದು ಬಣ್ಣದ ಕಲೆಗಳು ಇದ್ದರೆ ಚಯಾಪಚಯ ಕ್ರಿಯೆ ಸಮಸ್ಯೆಯಲ್ಲಿದೆ ಎಂದು ಅರ್ಥಮಾಡಿಕೊಳ್ಳಬೇಕು. ಇಂಟರ್ನಲ್ ಮೆಡಿಸಿನ್ ನಲ್ಲಿ ನಾವು ಚಿಕಿತ್ಸೆ ನೀಡುವ ಅನೇಕ ಮಾರಕ ರೋಗಗಳಿಗೆ ಇದು ಚಿಹ್ನೆಯಾಗಿರುತ್ತದೆ. ಇಂತಹ ಕಲೆಗಳನ್ನು ಅಲಕ್ಷಿಸಬಾರದು. ಅದು ಇನ್ಸುಲಿನ್ ರೆಸಿಸ್ಟನ್ಸ್ : ಟೈಪ್ 2 ಮಧುಮೇಹ, ಮೆಲಿಟಸ್, ಬೊಜ್ಜು, ಮೆಟಬಾಲಿಕ್ ಸಿಂಡ್ರೋಮ್ ಸೂಚಕವಾಗಬಹುದು. ಅಲ್ಲದೆ, ಯುವತಿಯರಲ್ಲಿ ಪಿಸಿಒಎಸ್ ನ ಮೊದಲ ಸೂಚನೆಯಾಗಿರಬಹುದು. ಎಂಡೋಕ್ರೈನ್ ಸಮಸ್ಯೆಯಾಗಿದ್ದು, ಅಕ್ರೊಮೆಗಲಿ, ಹೈಪೊಥೈರಾಯ್ಡಿಸಮ್ನ ಸೂಚನೆಯಾಗಿರಬಹುದು ಎಂದು ಬರೆದುಕೊಂಡಿದ್ದಾರೆ. “ಗಡ್ಡೆಗಳ ಆರಂಭದ ಸೂಚನೆಯಾಗಬಹುದು. ಹಠಾತ್ ಆಗಿ ಕಾಣಿಸಿಕೊಂಡರೆ ಗ್ಯಾಸ್ಟ್ರಿಕ್ ಕ್ಯಾನ್ಸರ್ ನ ಚಿಹ್ನೆಯೂ ಆಗಿರಬಹುದು. ಕೆಲವೊಮ್ಮೆ ಔಷಧಿಯಿಂದಲೂ ಬರುತ್ತದೆ. ಸ್ಟೆರಾಯ್ಡ್ಗಳು, ಒಸಿಪಿಗಳು ಅಥವಾ ಹೈ-ಡೋಸ್ ನಿಯಾಸಿನ್ ಸೇವನೆಯಿಂದಲೂ ಕಂಡುಬರಬಹುದು” ಎಂದು ವಿವರಿಸಿದ್ದಾರೆ. ಈ ಕಲೆಗಳನ್ನು ಅಲಕ್ಷಿಸಲು ಹೋಗಬೇಡಿ ರೋಗಪರಿಶೀಲನೆ ಮಾಡಿಸಿಕೊಳ್ಳಿ. ಕುತ್ತಿಗೆ ಸುಳ್ಳು ಹೇಳುವುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ. ಸೌಂದರ್ಯ ಸಮಸ್ಯೆಯೆಂದು ಅಲಕ್ಷಿಸಬೇಡಿ: ಸುನೀತಾ ಅವರ ಪೋಸ್ಟ್ ಗೆ ಉತ್ತರಿಸಿರುವ ಕೊಲ್ಲಾಪುರದ ಹೋಮಿಯೋಪತಿ ವೈದ್ಯರಾಗಿರುವ ಡಾ. ಸಯಾಜಿರಾವ್ ಗಾಯಕ್ವಾಡ್ ಅವರೂ ಇದು ಕುತ್ತಿಗೆ ಕೊಳಕಾಗಿರುವುದಲ್ಲ, ಇನ್ಸುಲಿನ್ ರೆಸಿಸ್ಟನ್ಸ್ ಅಕಾಂಥೊಸಿಸ್ ನೈಗ್ರಿಕನ್ಸ್ ಎಂದು ಹೇಳಿದ್ದಾರೆ. ಅವರು ಮುಂದುವರಿದು, “ಹೀಗೆ ಕಂಕುಳ, ಕುತ್ತಿಗೆಯ ಸುತ್ತ ಇರುವ ಕಂದು- ಕಪ್ಪು ಕಲೆಗಳು ಸ್ಪಷ್ಟವಾಗಿ ಇನ್ಸುಲಿನ್ ರೆಸಿಸ್ಟನ್ಸ್ ಚಿಹ್ನೆಯಾಗಿದೆ. ಇನ್ಸುಲಿನ್ ರೆಸಿಸ್ಟ್ ಎಂದರೆ ದೇಹ ಇನ್ನಷ್ಟು ಇನ್ಸುಲಿನ್ ಉತ್ಪಾದಿಸುವುದಾಗಿರುತ್ತದೆ. ಹೀಗೆ ಹೆಚ್ಚುವರಿ ಇನ್ಸುಲಿನ್ ಚರ್ಮದ ಕೋಶಗಳು ಮತ್ತು ದಪ್ಪನಾದ ವರ್ಣದ್ರವ್ಯಗಳಲ್ಲಿ ಕಾಣಿಸಿಕೊಳ್ಳುತ್ತದೆ” ಎಂದು ಹೇಳಿದ್ದಾರೆ. ಸಯಾಜಿರಾವ್ ಅವರ ಪ್ರಕಾರ, ಇದು ಸೌಂದರ್ಯಕ್ಕೆ ಸಂಬಂಧಿಸಿದ ಸಮಸ್ಯೆಯಲ್ಲ. ಮಧುಮೇಹದ ಪೂರ್ವದ ಚಿಹ್ನೆಯಾಗಿರಬಹುದು. ಟೈಪ್ 2 ಮಧುಮೇಹ, ಪಿಸಿಒಎಸ್, ಕೊಬ್ಬಿದ ಲಿವರ್ ಮತ್ತು ಚಯಾಪಚಯ ಸಿಂಡ್ರೋಮ್ನ ಸಂಕೇತವಾಗಿರಬಹುದು. ಪರಿಹಾರವೆಂದರೆ ಜೀವನಶೈಲಿಯನ್ನು ಬದಲಿಸಿಕೊಂಡು ಇನ್ಸುಲಿನ್ ಕಡಿಮೆ ಮಾಡಬೇಕಾಗುತ್ತದೆ. ಮೊದಲನೆಯದಾಗಿ ಕಾರ್ಬೋಹೈಡ್ರೇಟ್ ಸೇವನೆ ಕಡಿಮೆ ಮಾಡಬೇಕು. ಪ್ರೊಟೀನ್ ಸೇವನೆ, ಆರೋಗ್ಯಕರ ಕೊಬ್ಬು ಸೇವಿಸಬೇಕು. ತೂಕ ಇಳಿಸಬೇಕು. ನಿದ್ರೆ ಸರಿಯಾಗಿ ಮಾಡಬೇಕು. ಕಪ್ಪು ಕುತ್ತಿಗೆ ಚಯಾಪಚಯ ಕ್ರಿಯೆಯ ಎಚ್ಚರಿಕೆಯ ಗುರುತು ಎಂದು ವೈದ್ಯರು ಹೇಳಿದ್ದಾರೆ. ಈ ಲೇಖನವನ್ನು ಸಾಮಾಜಿಕ ಜಾಲತಾಣಗಳಲ್ಲಿರುವ ಮಾಹಿತಿಯಿಂದ ಬರೆಯಲಾಗಿದೆ. ಯಾವುದೇ ದೈಹಿಕ ಬದಲಾವಣೆಗಳಿಗೆ ಮೊದಲು ವೈದ್ಯರನ್ನು ಸಂಪರ್ಕಿಸಿ.
ಜೂ.30ರೊಳಗೆ ಜಿಬಿಎ ಚುನಾವಣೆ ಮುಗಿಸಿ: ಸರಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಚುನಾವಣೆಯನ್ನು ಜೂನ್ ಅಂತ್ಯದೊಳಗೆ ಮುಗಿಸಬೇಕು ಎಂದು ರಾಜ್ಯ ಸರಕಾರ ಮತ್ತು ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಬರುವ ಐದು ನಗರ ಪಾಲಿಕೆಗಳ ಚುನಾವಣಾ ಪ್ರಕ್ರಿಯೆಯನ್ನು ಜೂನ್ 30 ರೊಳಗೆ ಪೂರ್ಣಗೊಳಿಸುವಂತೆ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠವು ಗಡುವು ವಿಧಿಸಿ ಆದೇಶಿಸಿದ ಹೊರಡಿಸಿದೆ.
83ನೇ ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿ ಪ್ರದಾನ ಸಮಾರಂಭವು ಜನವರಿ 11ರಂದು ಬೆವರ್ಲಿ ಹಿಲ್ಟನ್ ಹೋಟೆಲ್ನಲ್ಲಿ ನಡೆಯಿತು. ಈ ಬಾರಿ ಭಾರತೀಯ ಚಿತ್ರಗಳಿಗೆ ಯಾವುದೇ ಪ್ರಶಸ್ತಿ ಲಭಿಸದಿದ್ದರೂ, ಜಾಗತಿಕವಾಗಿ ಗಮನ ಸೆಳೆದ ಹಲವು ಚಿತ್ರಗಳು ಹಾಗೂ ಟಿವಿ ಸರಣಿಗಳು ಪ್ರಶಸ್ತಿ ಬಾಚಿಕೊಂಡಿವೆ. ಹೆಲೆನ್ ಮಿರ್ರೆನ್ ಮತ್ತು ಸಾರಾ ಜೆಸ್ಸಿಕಾ ಪಾರ್ಕರ್ ವಿಶೇಷ ಗೌರವಕ್ಕೆ ಪಾತ್ರರಾದರು.
ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಂದು(ಜನವರಿ 12) ಬೆಳಿಗ್ಗೆ 10:18 ಕ್ಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) 16 ಉಪಗ್ರಹಗಳನ್ನು ಹೊತ್ತೊಯ್ದ PSLV-C62 ರಾಕೆಟ್ ನ್ನು ಉಡಾವಣೆ ಮಾಡಿದೆ. 2026ರ ಮೊದಲ ಉಡಾವಣೆಗೆ ಇದಾಗಿದೆ. 260 ಟನ್ ತೂಕದ ಉಪಗ್ರಹಗಳನ್ನು ಹೊತ್ತು ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (PSLV)ಸಿ-62 ರಾಕೆಟ್ ನಭಕ್ಕೆ ಚಿಮ್ಮಿದ್ದು, ಮೂರನೇ ಹಂತದಲ್ಲಿ ತಾಂತ್ರಿಕ ದೋಷದಿಂದಾಗಿ ಪಥ ಬದಲಾಯಿಸಿದೆ. ಪಿಎಸ್ಎಲ್ವಿಯ ಮೂರನೇ ಹಂತದಲ್ಲಿ ಯಾವುದೇ ಅಡಚಣೆ ಬಹುತೇಕ ಸಂಪೂರ್ಣ ಮಿಷನ್ ವೈಫಲ್ಯಕ್ಕೆ ಕಾರಣವಾಗುತ್ತದೆ. PSLV-C62 ಕಾರ್ಯಾಚರಣೆ ವಿಫಲವಾಗಿದ್ದು ಇದರೊಂದಿಗೆ ಉಡಾವಣೆಯಲ್ಲಿ ಹೊತ್ತೊಯ್ಯಲಾದ ಎಲ್ಲಾ 16 ಉಪಗ್ರಹಗಳು ಬಾಹ್ಯಾಕಾಶದಲ್ಲೇ ನಿಯಂತ್ರಣ ಕಳೆದುಕೊಂಡಿವೆ. ವೈಫಲ್ಯ ವರದಿಯಾಗುತ್ತಿದ್ದಂತೆ ಪ್ರತಿಕ್ರಯಿಸಿದ ಇಸ್ರೊ ಅಧ್ಯಕ್ಷ ಡಾ. ವಿ ನಾರಾಯಣನ್, ಇಂದು ನಾವು PSLV-C62/EOS-N1 ಮಿಷನ್ ಅನ್ನು ಪ್ರಯತ್ನಿಸಿದ್ದೇವೆ. PSLV ಎರಡು ಘನ ಹಂತಗಳು ಮತ್ತು ಎರಡು ದ್ರವ ಹಂತಗಳನ್ನು ಹೊಂದಿರುವ ನಾಲ್ಕು ಹಂತದ ವಾಹನವಾಗಿದೆ. ಮೂರನೇ ಹಂತದ ಅಂತ್ಯದವರೆಗೆ ವಾಹನದ ಕಾರ್ಯಕ್ಷಮತೆ ನಿರೀಕ್ಷೆಯಂತೆ ಇತ್ತು, ಮೂರನೇ ಹಂತದ ಅಂತ್ಯದ ವೇಳೆಗೆ ರಾಕೆಟ್ ಅನಿರೀಕ್ಷಿತವಾಗಿ ತಿರುಗಲು ಶುರುವಾಯಿತು.ತರುವಾಯ ಪಥ ಬದಲಾವಣೆ ಆಗಿದೆ. ನಾವು ಈ ಬಗ್ಗೆ ವಿಶ್ಲೇಷಿಸುತ್ತಿದ್ದು, ಈ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡುತ್ತೇವೆ ಎಂದು ಹೇಳಿದ್ದಾರೆ. ಈ ಬಗ್ಗೆ Xನಲ್ಲಿ ಪೋಸ್ಟ್ ಮಾಡಿರುವ ಇಸ್ರೊ, ಪಿಎಸ್ಎಲ್ ವಿ- 62 ಕಾರ್ಯಾಚರಣೆಯ ಮೂರನೇ ಹಂತದಲ್ಲಿ ಅಸಹಜತೆ ಕಂಡು ಬಂದಿದೆ. ಈ ಬಗ್ಗೆ ವಿಶ್ಲೇಷಣೆ ಆರಂಭವಾಗಿದೆ ಎಂದು ಮಾಹಿತಿ ನೀಡಿದೆ. 22.5 ಗಂಟೆಗಳ ಕೌಂಟ್ಡೌನ್ ನಂತರ, ಭಾರತ ಮತ್ತು ವಿದೇಶಗಳ ಸ್ಟಾರ್ಟ್ಅಪ್ಗಳು ಮತ್ತು ಶಿಕ್ಷಣ ತಜ್ಞರು ಅಭಿವೃದ್ಧಿಪಡಿಸಿದ EOS-N1 ಉಪಗ್ರಹ ಮತ್ತು 15 ಇತರ ಉಪಗ್ರಹಗಳನ್ನು ಹೊಂದಿರುವ PSLV-C62 ಅನ್ನು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಸೋಮವಾರ ಬೆಳಿಗ್ಗೆ 10.18 ಕ್ಕೆ ಉಡಾವಣೆ ಮಾಡಲಾಗಿದೆ. EOS-N1 ಭೂಸರ್ವೇಕ್ಷಣಾ ಉಪಗ್ರಹವನ್ನು ಕಾರ್ಯತಂತ್ರದ ಉದ್ದೇಶಗಳಿಗಾಗಿ ನಿರ್ಮಿಸಲಾಗಿದೆ . ಇಸ್ರೊ ಅಂಗಸಂಸ್ಥೆಯಾದ ನ್ಯೂಸ್ಪೇಸ್ ಇಂಡಿಯಾ ಲಿಮಿಟೆಡ್ (NSIL) ನೇತೃತ್ವದಲ್ಲಿ ದೇಶೀಯ ಮತ್ತು ವಿದೇಶದ 14 ಉಪಗ್ರಹಗಳನ್ನು ಕಕ್ಷೆಗೆ ಸೇರಿಸುವ ಗುರಿ ಈ PSLVಯದ್ದಾಗಿತ್ತು. ಪಿಎಸ್ಎಲ್ವಿ ಇದುವರೆಗೆ 63 ಹಾರಾಟಗಳನ್ನು ಪೂರ್ಣಗೊಳಿಸಿದೆ. ಇದು ಚಂದ್ರಯಾನ-1, ಮಂಗಳಯಾನ, ಆದಿತ್ಯ-ಎಲ್1 ಮತ್ತು ಆಸ್ಟ್ರೋಸ್ಯಾಟ್ ಮಿಷನ್ನಂತಹ ಬಾಹ್ಯಾಕಾಶ ನೌಕೆಗಳನ್ನು ಉಡಾವಣೆ ಮಾಡಿದೆ. 2017 ರಲ್ಲಿ, ಪಿಎಸ್ಎಲ್ವಿ ಒಂದೇ ಕಾರ್ಯಾಚರಣೆಯಲ್ಲಿ 104 ಉಪಗ್ರಹಗಳನ್ನು ಉಡಾವಣೆ ಮಾಡುವ ಮೂಲಕ ವಿಶ್ವ ದಾಖಲೆ ಮಾಡಿತ್ತು. 15 ಉಪಗ್ರಹಗಳು: ಥೈಲ್ಯಾಂಡ್ ಮತ್ತು ಯುಕೆ SSTL (UK) ಜಂಟಿಯಾಗಿ ನಿರ್ಮಿಸಿದ ಥಿಯೋಸ್-2 ಸರ್ವೇಕ್ಷಣಾ ಉಪಗ್ರಹ, ಧ್ರುವ ಸ್ಪೇಸ್ (ಭಾರತ) ನಿಂದ CGUSAT, ಧ್ರುವ ಸ್ಪೇಸ್ ನಿಂದ DSUSAT, ಧ್ರುವ ಸ್ಪೇಸ್ ಮತ್ತು Takeme2Space (ಭಾರತ) ನಿಂದ MOI-1, ಧ್ರುವ ಸ್ಪೇಸ್ ನಿಂದ LACHIT, ಧ್ರುವ ಸ್ಪೇಸ್ ಮತ್ತು ಡಾನ್ ಬಾಸ್ಕೋ ವಿಶ್ವವಿದ್ಯಾಲಯ (ಭಾರತ) ನಿಂದ ಥೈಬೋಲ್ಟ್-3, ನೇಪಾಳ ವಿಶ್ವವಿದ್ಯಾಲಯದ ಅಂತರಕ್ಷ್ಯ ಪ್ರತಿಷ್ಠಾನ (ನೇಪಾಳ) ಮತ್ತು MEA ನಿಂದ ಮುನಾಲ್, ಆರ್ಬಿಟಲ್ ಪ್ಯಾರಡೈಮ್ (ಸ್ಪೇನ್) ನಿಂದ KID ಮತ್ತು RIDE! (ಫ್ರಾನ್ಸ್), ಆಲ್ಟೋಸ್ಪೇಸ್ (ಬ್ರೆಜಿಲ್) ನಿಂದ ಎಡುಸ್ಯಾಟ್, ಆಲ್ಟೋಸ್ಪೇಸ್ ನಿಂದ Uaisat, ಆಲ್ಟೋಸ್ಪೇಸ್ ನಿಂದ ಗ್ಯಾಲಕ್ಸಿ ಎಕ್ಸ್ಪ್ಲೋರರ್, ಆಲ್ಟೋಸ್ಪೇಸ್ ನಿಂದ ಆರ್ಬಿಟಲ್ ಟೆಂಪಲ್, ಆಲ್ಟೋಸ್ಪೇಸ್ ನಿಂದ ಅಲ್ಡೆಬರನ್-1, ಲಕ್ಷ್ಮಣ್ ಜ್ಞಾನಪೀಠ್ (ಭಾರತ) ನಿಂದ SanskarSat-1 ಮತ್ತು ಆರ್ಬಿಟ್ಏಡ್ (ಭಾರತ) ನಿಂದ ಆಯುಲ್ಸ್ಯಾಟ್. PSLV-C62 / EOS-N1 ಮಿಷನ್ ಯಾವುದರ ಬಗ್ಗೆ? PSLV-C62/EOS-N1 ಮಿಷನ್ ಅನ್ವೇಷಾ, EOS-N1 ಎಂಬ ಹೆಸರಿನ ಭೂ ಸರ್ವೇಕ್ಷಣಾ ಉಪಗ್ರಹ ಮತ್ತು ಇತರ 15 ಉಪಗ್ರಹಗಳನ್ನು ಭೂಮಿಯ ಮೇಲ್ಮೈಯಿಂದ ಕನಿಷ್ಠ ನೂರು ಕಿಲೋಮೀಟರ್ ಎತ್ತರದಲ್ಲಿರುವ Sun-Synchronous Orbit ಗೆ ಕೊಂಡೊಯ್ಯುತ್ತದೆ. PSLV-C62/EOS-N1 ಮಿಷನ್ ಆರಂಭದಲ್ಲಿ ಥೈಲ್ಯಾಂಡ್ ಮತ್ತು ಯುನೈಟೆಡ್ ಕಿಂಗ್ಡಮ್ ನಿರ್ಮಿಸಿದ ಭೂ ಸರ್ವೇಕ್ಷಣಾ ಉಪಗ್ರಹವನ್ನು ನಿಯೋಜಿಸುತ್ತದೆ, ನಂತರ 14 ಇತರ ಸಹ- ಉಪಗ್ರಹಗಳನ್ನು ಉಡಾವಣೆಯಾದ ಸುಮಾರು 17 ನಿಮಿಷಗಳ ನಂತರ ಸನ್-ಸಿಂಕ್ರೊನಸ್ ಕಕ್ಷೆಗೆ ನಿಯೋಜಿಸುತ್ತದೆ ಎಂದು ಇಸ್ರೊ ಹೇಳಿತ್ತು. ಅನ್ವೇಷಾ ಉಪಗ್ರಹ ಈ ಬಾರಿ PSLV-C62 ರಾಕೆಟ್ ಹೊತ್ತೊಯ್ದ ಪ್ರಮುಖ ಉಪಗ್ರಹದ ಹೆಸರು 'ಅನ್ವೇಷಾ'. ಇದನ್ನು EOS-N1 ಎಂದೂ ಕರೆಯಲಾಗುತ್ತದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಅಭಿವೃದ್ಧಿಪಡಿಸಿರುವ ಇದು 100 ರಿಂದ 150 ಕಿಲೋಗ್ರಾಂಗಳಷ್ಟು ತೂಕವಿರುವ ಸಣ್ಣ-ಉಪಗ್ರಹವಾಗಿದೆ ಇದು. ಅನ್ವೇಷಾ ಉಪಗ್ರಹ ಹೈಪರ್ ಸ್ಪೆಕ್ಟಲ್ ಇಮೇಜಿಂಗ್ ತಂತ್ರಜ್ಞಾನವನ್ನು ಬಳಸುತ್ತಿದ್ದು, ಮನುಷ್ಯರ ಕಣ್ಣಿಗೆ ಕಾಣದ ವಿವರವನ್ನೂ ಕಲೆಹಾಕುವ ಸಾಮರ್ಥ್ಯ ಹೊಂದಿದೆ. ಇದು ಸೂಪರ್-ಸ್ಮಾರ್ಟ್ ಕ್ಯಾಮೆರಾದಂತಿದ್ದು ಕೇವಲ ಫೋಟೋಗಳನ್ನು ಕ್ಲಿಕ್ ಮಾಡುವುದಿಲ್ಲ, ನೇರವಾಗಿ ನೋಡುತ್ತದೆ. ಇದು ಗಡಿ ಭದ್ರತೆ, ಕರಾವಳಿ ತಪಾಸಣೆ, ಕೃಷಿ, ನಗರ ಯೋಜನೆ ಮತ್ತು ಪರಿಸರ ಅಧ್ಯಯನಗಳಲ್ಲಿ ಸಹಾಯ ಮಾಡುತ್ತದೆ. ಇದು ಕಾಡು ಮತ್ತು ಅಲ್ಲಿ ಮುಚ್ಚಿಟ್ಟಿರುವ ಯುದ್ಧ ಟ್ಯಾಂಕ್ಗಳ ನಡುವಿನ ವ್ಯತ್ಯಾಸಗಳನ್ನು ನಿಖರವಾಗಿ ಗುರುತಿಸಬಲ್ಲದು .ಈ ಹೈಪರ್ಸ್ಪೆಕ್ಟ್ರಲ್ ಉಪಗ್ರಹವು ಅದಕ್ಕೆ ಕಾಣುವ ವಸ್ತುಗಳು ಏನು? ಅದು ಯಾವ ವಸ್ತುಗಳಿಂದ ಮಾಡಲ್ಪಟ್ಟಿದೆ ಎಂಬುದನ್ನು ಪತ್ತೆ ಮಾಡುತ್ತದೆ. ಇದು ಗುಪ್ತ ಮಾಹಿತಿಗಳನ್ನು ನೀಡಲು ಸಹಕರಿಸುತ್ತದೆ. PSLV ಉಡಾವಣೆಯಲ್ಲಿನ ವೈಫಲ್ಯ ಚಂದ್ರಯಾನ-1 ಹಾಗೂ ಮಂಗಳಯಾನದಂತಹ ಕಾರ್ಯಾಚರಣೆಗಳ ಯಶಸ್ವಿಯಾಗುವಲ್ಲಿ ಪ್ರಮುಖ ಪಾತ್ರವಹಿಸಿದ್ದ PSLV ರಾಕೆಟ್ ಅನ್ನು ಇಸ್ರೊದ 'ವರ್ಕ್ ಹಾರ್ಸ್ ' ಕರೆಯಲಾಗುತ್ತದೆ. 1993 ರಲ್ಲಿ ಪ್ರಾರಂಭವಾದಾಗಿನಿಂದ PSLV ಇಸ್ರೊದ ಅತ್ಯಂತ ವಿಶ್ವಾಸಾರ್ಹ ಉಡಾವಣಾ ವಾಹನವಾಗಿದ್ದು, 50 ಕ್ಕೂ ಹೆಚ್ಚು ಯಶಸ್ವಿ ಕಾರ್ಯಾಚರಣೆಗಳನ್ನು ಮಾಡಿದೆ. PSLV-C61 2025 ಮೇ 18, ರಂದು ಭೂ ಸರ್ವೇಕ್ಷಣೆಯ ಉದ್ದೇಶದಿಂದ ಉಡಾವಣೆ ಮಾಡಲಾಗಿದ್ದ PSLV-C61 ರಾಕೆಟ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಕಕ್ಷೆ ಸೇರುವಲ್ಲಿ ವಿಫಲವಾಗಿತ್ತು. ಇದು ಇಸ್ರೊದ 101ನೇ ಉಡ್ಡಯನವಾಗಿತ್ತು . ಮೇ 18ರಂದು ಬೆಳಗ್ಗೆ 5.59ಕ್ಕೆ ರಾಕೆಟ್ ಉಡಾವಣೆ ಆಗಿತ್ತು. ಒಟ್ಟು ನಾಲ್ಕು ಹಂತದಲ್ಲಿ ನಡೆಯುವ ಕಾರ್ಯಾಚರಣೆ ಇದಾಗಿತ್ತು. ಎರಡು ಹಂತಗಳವರೆಗೆ ಎಲ್ಲವೂ ಸುಸೂತ್ರವಾಗಿತ್ತು. ಮೂರನೇ ಹಂತದಲ್ಲಿ ಕಾರ್ಯಾಚರಣೆ ವಿಫಲವಾಗಿತ್ತು. ಇನ್ನಷ್ಟು ಮೇಲೆ ಹೋಗಲು ರಾಕೆಟ್ ನ ಎಂಜಿನ್ ಗೆ ಬೇಕಾದ ಒತ್ತಡ ಸೃಷ್ಟಿಯಾಗಲಿಲ್ಲ. ಎಂಜಿನ್ ಗೆ ಒತ್ತಡ ಸೃಷ್ಟಿಸಿಕೊಡಬೇಕಿದ್ದ ಇಂಧನ ಟ್ಯಾಂಕ್ ನಲ್ಲಿಯೂ ಒತ್ತಡ ಸೃಷ್ಟಿಯಾಗಲಿಲ್ಲ.ಆದ್ದರಿಂದ ನೆಲಮಟ್ಟದಿಂದ 450 ಕಿಮೀನಷ್ಟು ಎತ್ತರಕ್ಕೆ ಹಾರಿದ್ದ ರಾಕೆಟ್ ಸಮುದ್ರ ಸೇರಿತ್ತು PSLV-C39 2017 ಆಗಸ್ಟ್ 31 ರಂದು ಉಡಾವಣೆಯಾದ PSLV-C39 ಮಿಷನ್ ಅಪರೂಪದ ವೈಫಲ್ಯವನ್ನು ಎದುರಿಸಿತು. ರಾಕೆಟ್ ಎಲ್ಲಾ ನಾಲ್ಕು ಹಂತಗಳ ಪ್ರೊಪಲ್ಷನ್ ಮೂಲಕ ದೋಷರಹಿತವಾಗಿ ಕಾರ್ಯನಿರ್ವಹಿಸಿದರೂ, ಶಾಖ ಕವಚ (heat shield) ಹಾರಾಟದ 3 ನಿಮಿಷ ಮತ್ತು 23 ಸೆಕೆಂಡುಗಳ ನಿಗದಿತ ಸಮಯದಲ್ಲಿ ಬೇರ್ಪಡಿಸಲು ವಿಫಲವಾಯಿತು. ಉಪಗ್ರಹವು ರಾಕೆಟ್ನ ನಾಲ್ಕನೇ ಹಂತದಿಂದ ಆಂತರಿಕವಾಗಿ ಬೇರ್ಪಟ್ಟಿದ್ದರೂ, ಶಾಖ ಶೀಲ್ಡ್ನ ಹೆಚ್ಚುವರಿ ತೂಕವು ಉದ್ದೇಶಿತ ಕಕ್ಷೆಯನ್ನು ತಲುಪುವುದನ್ನು ತಡೆಯಿತು. ಇದರಿಂದ ಉಂಟಾದ ನಷ್ಟ ₹250-ಕೋಟಿ . ನಂತರದ ವಿಶ್ಲೇಷಣೆಯು ಪೈರೋ ಸಾಧನಗಳಲ್ಲಿನ (ಸ್ಫೋಟಕ ಬೋಲ್ಟ್ಗಳು) ಅಸಮರ್ಪಕ ಕಾರ್ಯವು ಕವಚ ಹೊರಹಾಕಲು ಉದ್ದೇಶಿಸಲಾದ ಲೋಹದ ಪಿನ್ ಮುರಿಯಲು ಸಾಕಷ್ಟು ಒತ್ತಡವನ್ನು ಉತ್ಪಾದಿಸುವಲ್ಲಿ ವಿಫಲವಾಗಿದೆ ಎಂದು ಬಹಿರಂಗಪಡಿಸಿತು. PSLV-D1 1993 ಸೆಪ್ಟೆಂಬರ್ 20 ರಂದು, ಭಾರತದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್, PSLV-D1 ನ ಮೊದಲ ಉಡಾವಣೆ ಆಗಿತ್ತು.ರಾಕೆಣ್ ಉಡಾವಣೆಯಾದ ಸುಮಾರು 12 ನಿಮಿಷಗಳ ನಂತರ ಮಾರ್ಗದರ್ಶನ ಮತ್ತು ನಿಯಂತ್ರಣ ವ್ಯವಸ್ಥೆಯಲ್ಲಿನ ಸಾಫ್ಟ್ವೇರ್ ದೋಷದಿಂದಾಗಿ ರಾಕೆಟ್ ಸಮತೋಲನವನ್ನು ಕಳೆದುಕೊಂಡಿತು. ಮೊದಲ ಎರಡು ಹಂತಗಳು ಸರಿಯಾಗಿ ಕಾರ್ಯನಿರ್ವಹಿಸಿದರೂ, ಆನ್ಬೋರ್ಡ್ ಕಂಪ್ಯೂಟರ್ನಲ್ಲಿ ಲಾಜಿಕ್ ದೋಷ ಕಂಡು ಬಂದು ಇದು ಎರಡನೇ ಹಂತದ ಬೇರ್ಪಡುವಿಕೆಯ ಸಮಯದಲ್ಲಿ ತಪ್ಪಾದ ಆದೇಶವನ್ನು ನೀಡತೊಡಗಿತು. ಈ ಅಡಚಣೆಯು ವಾಹನವನ್ನು ಅದರ ಉದ್ದೇಶಿತ ಪಥದಿಂದ ದೂರಕ್ಕೆ ಒಯ್ದಿದ್ದು, IRS-1E ಉಪಗ್ರಹವನ್ನು ಕಕ್ಷೆಗೆ ತರಲು ಅಗತ್ಯವಾದ ಎತ್ತರ ಮತ್ತು ವೇಗವನ್ನು ತಲುಪುವುದನ್ನು ತಡೆಯಿತು. ಪರಿಣಾಮವಾಗಿ ರಾಕೆಟ್ ಮತ್ತು ಅದರ ಪೇಲೋಡ್ ಬಂಗಾಳಕೊಲ್ಲಿಗೆ ಬಿದ್ದಿತ್ತು.
WPL 2026 RCB: ಯುಪಿ ವಾರಿಯರ್ಸ್ ವಿರುದ್ಧ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11
WPL 2026 RCB: ಈಗಾಗಲೇ ಡಬ್ಲ್ಯೂಪಿಎಲ್ 2026 ಉದ್ಘಾಟನಾ ಪಂದ್ಯದಲ್ಲಿ ಆರ್ಸಿಬಿಯು ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದು ಬೀಗಿದೆ. ಇನ್ನೂ ಇಂದು (ಜನವರಿ 12) ಎರಡನೇ ಪಂದ್ಯವನ್ನು ಯುಪಿ ವಾರಿಯರ್ಸ್ ಮೇಲೆ ಆಡಲಿದೆ. ಹಾಗಾದ್ರೆ ಪ್ಲೇಯಿಂಗ್ 11 ಹೇಗಿರಲಿದೆ ಹಾಗೂ ಸ್ಥಳ, ಸಮಯಗಳ ಕುರಿತು ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಡಬ್ಲ್ಯೂಪಿಎಲ್ 2026 ಚೊಚ್ಚಲ ಪಂದ್ಯದಲ್ಲಿ ಆರ್ಸಿಬಿಯು
ಜಿಬಿಎ ಚುನಾವಣೆಯಲ್ಲಿ ಈ ಕಾರಣಕ್ಕೆ ಕಾಂಗ್ರೆಸ್ ಸೋಲು ಖಚಿತ: ಆರ್ ಅಶೋಕ್
ಬೆಂಗಳೂರು: ಆದಷ್ಟು ಬೇಗ ಜಿಬಿಎ ಚುನಾವಣೆ ನಡೆಯಬೇಕು. ಬೆಂಗಳೂರಿನಲ್ಲಿ ಬಿದ್ದಿರುವ ಗುಂಡಿಗಳು, ಕಸದ ರಾಶಿ, ಕಾನೂನು ಸುವ್ಯವಸ್ಥೆ ಹಾಳಾಗಿರುವುದನ್ನು ನೋಡಿದರೆ ಕಾಂಗ್ರೆಸ್ ಚುನಾವಣೆಯಲ್ಲಿ ನೆಲ ಕಚ್ಚುವುದು ಖಚಿತವಾಗಿದೆ. ಇನ್ನೂ ಮೈತ್ರಿಗೆ ಸಂಬಂಧಿಸಿದಂತೆ ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್ ಹೇಳಿದರು. ರಾಜಭವನದಲ್ಲಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದ
ಸಿದ್ದರಾಮಯ್ಯನವರಿಗೆ ಶಕ್ತಿ ಪ್ರದರ್ಶನ ಮಾಡಲು ಅಧಿಕಾರವಿದೆ; ಡಿಕೆಶಿಗೆ ಶಕ್ತಿ ಇದ್ದರೆ ಪ್ರದರ್ಶಿಸಲಿ : ಯತ್ನಾಳ್
ವಿಜಯಪುರ : ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಅಲ್ಲ, ಅವರು ರಾಜ್ಯದ ಮುಖ್ಯಮಂತ್ರಿ. ಮುಖ್ಯಮಂತ್ರಿ ನಮ್ಮ ಕ್ಷೇತ್ರಕ್ಕೆ ಬಂದಾಗ ಗೌರವ ಸಲ್ಲಿಸಬೇಕು. ಹೀಗಾಗಿ ನಾನು ಗೌರವ ಸಲ್ಲಿಸಿದ್ದೇನೆ. ಇದರಿಂದ ಕೆಲವರಿಗೆ ನೋವಾದರೆ ನಾನೇನು ಮಾಡಲು ಆಗುವುದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ಮತ ಕ್ಷೇತ್ರಕ್ಕೆ ಬಂದಿದ್ದಾರೆ. ಅವರಿಗೆ ನಾನು ಗೌರವ ನೀಡಿದ್ದೇನೆ. ಇದಕ್ಕೆ ಕೆಲವರಿಗೆ ನೋವಾದರೆ ನಾನೇನು ಮಾಡೋಕಾಗಲ್ಲ. ನಾನು ಸಿದ್ದರಾಮಯ್ಯ ಅವರಿಗೆ ಗೌರವ ನೀಡಿದಂತೆ ಕಾಂಗ್ರೆಸ್ನವರು ಸಹ ಪ್ರಧಾನಿಗೆ ಗೌರವ ನೀಡುತ್ತಾರೆ ಎಂದರು. ರಾಜಕಾರಣಕ್ಕೆ ಶಕ್ತಿ ಪ್ರದರ್ಶನ ಅನಿವಾರ್ಯ : ರಾಜಕಾರಣ ಹೇಗಿದೆ ಎಂದರೆ, ಶಕ್ತಿ ಪ್ರದರ್ಶನ ಇಂದು ಅನಿವಾರ್ಯವಾಗಿದೆ. ಅದನ್ನು ಮಾಡದಿದ್ದರೆ ನಾಯಕತ್ವವನ್ನು ಗುರುತಿಸುವುದು ಸಾಧ್ಯವಾಗುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶಕ್ತಿ ಪ್ರದರ್ಶನ ಮಾಡಲು ಅಧಿಕಾರವಿದೆ. ಡಿ.ಕೆ.ಶಿವಕುಮಾರ್ ಅವರಿಗೂ ಶಕ್ತಿ ಇದ್ದರೆ ಪ್ರದರ್ಶಿಸಲಿ. ಉತ್ತರ ಕರ್ನಾಟಕದಲ್ಲಿ ಡಿ.ಕೆ.ಶಿವಕುಮಾರ್ ಶಕ್ತಿ ಪ್ರದರ್ಶನ ಮಾಡಲಿ ನೋಡೋಣ ಎಂದು ಯತ್ನಾಳ್ ಸವಾಲು ಹಾಕಿದರು. ಅಲ್ಲದೆ, ವಿಜಯಪುರಕ್ಕೆ ಉಪಮುಖ್ಯಂತ್ರಿ ಡಿ.ಕೆ.ಶಿವಕುಮಾರ್ ಅವರು ಬಂದು ಅವಮಾನ ಮಾಡಿಸಿಕೊಂಡು ಹೋಗಿದ್ದಾರೆ ಪುಣ್ಯಾತ್ಮ ಎಂದು ವ್ಯಂಗ್ಯವಾಡಿದರು. ಇದೇ ವೇಳೆ ಬಿಜೆಪಿ ರಾಜಾಧ್ಯಕ್ಷ ಆಯ್ಕೆ ವಿಳಂಬ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಯತ್ನಾಳ್ ಅವರು, ಬಿಜೆಪಿ ಹೈಕಮಾಂಡ್ ನಾಯಕರಿಗೆ ಎಲ್ಲವೂ ಗೊತ್ತಿದೆ. ಯಾರಿಗೆ ಯಾವಾಗ ಏನು ಕೊಡಬೇಕು ಎಂದು ಗೊತ್ತಿದೆ. ಎಲ್ಲವನ್ನೂ ಹೈಕಮಾಂಡ್ ನಿರ್ಧಾರ ಮಾಡುತ್ತೆ ಎಂದಿದ್ದಾರೆ. ಮುಖ್ಯಮಂತ್ರಿಗಳ ಎದುರು ಜನ ನನ್ನ ಪರ ಕೂಗಿದ್ದು ಕಾಂಗ್ರೆಸ್, ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿದೆ. ಜನರು ನನ್ನನ್ನು ಬೆಂಬಲಿಸಿದ್ದಾರೆ. ಅದು ನನ್ನ ಮೇಲಿರುವ ಅಭಿಮಾನ. ಜನರ ಪ್ರೀತಿ, ವಿಶ್ವಾಸಕ್ಕೆ ನಾನು ಧನ್ಯವಾದ ಸಲ್ಲಿಸುತ್ತೇನೆ ಎಂದರು.
ಭಾರತದ ಗ್ರಾಮೀಣ ಉದ್ಯೋಗ ನೀತಿಯಲ್ಲಿ ಕ್ರಾಂತಿಕಾರಿ ಬದಲಾವಣೆ ತರುವ ನಿಟ್ಟಿನಲ್ಲಿ, ಕೇಂದ್ರ ಸರ್ಕಾರವು 2005ರ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯನ್ನು ರದ್ದುಗೊಳಿಸಿ, ಅದರ ಬದಲಿಗೆ 'ವಿಕಸಿತ ಭಾರತ - ರೋಜ್ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ)'- ಉದ್ಯೋಗ ಮತ್ತು ಜೀವನೋಪಾಯ ಮಿಷನ್ ಅಥವಾ 'ವಿಬಿ-ಜಿ ರಾಮ್ ಜಿ' (VB-G RAM G) ಕಾಯ್ದೆ, 2025 ಅನ್ನು ಜಾರಿಗೆ ತಂದಿದೆ. ಅಂದರೆ, ಈ ಹಿಂದೆ ಇದ್ದೆ ಎಂಜಿನರೇಗಾ ಯೋಜನೆಯ ಬದಲು ವಿಬಿ-ಜಿ ರಾಮ್ ಜಿ ಯೋಜನೆ ಜಾರಿಗೆ ಬಂದಿದೆ. ರಾಷ್ಟ್ರಪತಿಗಳ ಅಂಕಿತ ಪಡೆದಿರುವ ಈ ಹೊಸ ಕಾಯ್ದೆಯು ಗ್ರಾಮೀಣ ಭಾಗದ ಆರ್ಥಿಕತೆಯನ್ನು ಬಲಪಡಿಸುವ ಮತ್ತು 2047ರ ವೇಳೆಗೆ 'ವಿಕಸಿತ ಭಾರತ' ನಿರ್ಮಾಣದ ಗುರಿಯನ್ನು ಹೊಂದಿದೆ. ಈ ಕಾಯ್ದೆಯ ಕುರಿತಾದ ಸಮಗ್ರ ಮಾಹಿತಿ ಇಲ್ಲಿದೆ.
ಮಧ್ಯಪ್ರಾಚ್ಯದಲ್ಲಿ ಮತ್ತೊಂದು ತಲ್ಲಣ: ಇರಾನ್ನ ಪ್ರತಿಭಟನೆಯಲ್ಲಿ 500 ಸಾವು, ಅಮೆರಿಕಾ - ಇಸ್ರೇಲ್ ಅಲರ್ಟ್
ಇಸ್ರೇಲ್ - ಇರಾನ್ ಹಾಗೂ ಅಮೆರಿಕಾದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ ಏರ್ಪಡುವ ಎಲ್ಲಾ ಲಕ್ಷಣಗಳು ಸಹ ಕಾಣಿಸುತ್ತಿವೆ. ಇರಾನ್ನಲ್ಲಿ ಆಂತರಿಕ ಗಲಭೆಗಳು ಹೆಚ್ಚಾಗಿವೆ. ಇಸ್ರೇಲ್ ಹಾಗೂ ಇರಾನ್ನ ನಡುವೆ ಸುದೀರ್ಘ ಅವಧಿಗೆ ನಡೆದಿದ್ದ ಸಂಘರ್ಷ ಹಾಗೂ ಯುದ್ಧಗಳಿಂದ ಇಲ್ಲಿನ ಜನರು ಈಗಾಗಲೇ ಹೈರಾಣಾಗಿದ್ದಾರೆ. ಈ ರೀತಿ ಇರುವಾಗಲೇ ಆತಂರಿಕ ಗಲಭೆಗಳು ತೀವ್ರ ಸ್ವರೂಪವನ್ನು ಪಡೆದುಕೊಂಡಿದ್ದು, ಈ
ಎಸ್ಬಿಐ ಗ್ರಾಹಕರ ಜೇಬಿಗೆ ಬೀಳಲಿದೆ ಕತ್ತರಿ, ವಿವಿಧ ಸೇವಾ ಶುಲ್ಕಗಳನ್ನು ಏರಿಕೆ ಮಾಡಿದ ಬ್ಯಾಂಕ್
ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ತನ್ನ ಎಟಿಎಂ ಸೇವಾ ಶುಲ್ಕಗಳನ್ನು ಹೆಚ್ಚಿಸುವ ಮೂಲಕ ಗ್ರಾಹಕರಿಗೆ ಬಿಸಿ ಮುಟ್ಟಿಸಿದೆ. 2025ರ ಡಿಸೆಂಬರ್ 1ರಿಂದ ಜಾರಿಗೆ ಬರುವಂತೆ, ಇತರೆ ಬ್ಯಾಂಕ್ಗಳ ಎಟಿಎಂಗಳಲ್ಲಿ ಉಚಿತ ಮಿತಿಯನ್ನು ಮೀರಿ ನಡೆಸುವ ವ್ಯವಹಾರಗಳಿಗೆ ಹೆಚ್ಚಿನ ಶುಲ್ಕ ವಿಧಿಸಲಾಗುತ್ತಿದೆ. ಹಣ ಹಿಂಪಡೆಯುವಿಕೆಯ ಶುಲ್ಕವನ್ನು 21 ರೂ. ನಿಂದ 23 ರೂ. ಗೆ ಹಾಗೂ ಹಣಕಾಸೇತರ ವ್ಯವಹಾರಗಳ ಶುಲ್ಕವನ್ನು 10 ರೂ. ನಿಂದ 11 ರೂ. ಗೆ ಏರಿಸಲಾಗಿದೆ.
ಮುಖ್ಯ ಚುನಾವಣಾ ಆಯುಕ್ತ, ಇಸಿಗಳಿಗೆ ಕಾನೂನು ರಕ್ಷಣೆ ವಿರುದ್ಧ ಅರ್ಜಿ: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್
ಹೊಸದಿಲ್ಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಮತ್ತು ಚುನಾವಣಾ ಆಯುಕ್ತರಿಗೆ (ಇಸಿ) ಜೀವಮಾನವಿಡೀ ಕಾನೂನು ಕ್ರಮಗಳಿಂದ ವಿನಾಯಿತಿಯನ್ನು ನೀಡಿ ಸಂಸತ್ತು ತಂದಿರುವ ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ಕುರಿತು ಸರ್ವೋಚ್ಚ ನ್ಯಾಯಾಲಯವು ಸೋಮವಾರ ಕೇಂದ್ರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ಹೊರಡಿಸಿದೆ. ಅರ್ಜಿಯ ವಿಚಾರಣೆಯನ್ನು ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ ನೇತೃತ್ವದ ಪೀಠವು,‘ನಾವು ಅದನ್ನು ಪರಿಶೀಲಿಸಲು ಬಯಸುತ್ತೇವೆ,ನಾವು ನೋಟಿಸ್ಗಳನ್ನು ಹೊರಡಿಸುತ್ತಿದ್ದೇವೆ’ ಎಂದು ಹೇಳಿತು. ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ (ನೇಮಕಾತಿ,ಸೇವಾ ಷರತ್ತುಗಳು ಮತ್ತು ಅಧಿಕಾರಾವಧಿ) ಮಸೂದೆ,೨೦೨೩ರ ನಿಬಂಧನೆಯೊಂದನ್ನು ಅರ್ಜಿಯು ಪ್ರಶ್ನಿಸಿದೆ. ಕಾನೂನು ಸಿಇಸಿ ಮತ್ತು ಇಸಿಗಳು ತಮ್ಮ ಅಧಿಕೃತ ಕರ್ತವ್ಯಗಳ ನಿರ್ವಹಣೆ ವೇಳೆ ಕೈಗೊಳ್ಳುವ ಯಾವುದೇ ಕ್ರಮಕ್ಕೆ ಸಂಬಂಧಿಸಿದಂತೆ ಸಿವಿಲ್ ಮತ್ತು ಕ್ರಿಮಿನಲ್ ಕ್ರಮಗಳ ವಿರುದ್ಧ ಜೀವಮಾನವಿಡೀ ಅಭೂತಪೂರ್ವ ರಕ್ಷಣೆಯನ್ನು ಒದಗಿಸಿದೆ ಎಂದು ಅರ್ಜಿಯು ಆರೋಪಿಸಿದೆ. ಮಸೂದೆಯು ಸಂವಿಧಾನ ನಿರ್ಮಾತೃರು ನ್ಯಾಯಾಧೀಶರಿಗೂ ನೀಡಿರದಷ್ಟು ರಕ್ಷಣೆಯನ್ನು ಸಿಇಸಿ ಮತ್ತು ಇಸಿಗಳಿಗೆ ನೀಡಲು ಸಾಧ್ಯವಿಲ್ಲ. ಸಂವಿಧಾನ ರಚನಾಕಾರರು ಇತರ ಗಣ್ಯರಿಗೆ ನೀಡಿರದ ಇಂತಹ ಹೆಚ್ಚಿನ ರಕ್ಷಣೆಯನ್ನು ಸಂವಿಧಾನವು ಒದಗಿಸುವಂತಿಲ್ಲ ಎಂದು ಅರ್ಜಿದಾರರ ಪರ ವಕೀಲರು ಹೇಳಿದರು.
ಟಿ20 ವಿಶ್ವಕಪ್ 2026 - ಈ ಎರಡು ಕ್ರೀಡಾಂಗಣಗಳಿಗೆ ಬಾಂಗ್ಲಾದೇಶದ ಪಂದ್ಯಗಳು ಸ್ಥಳಾಂತರ ಸಾಧ್ಯತೆ
2026ರ ಟಿ20 ವಿಶ್ವಕಪ್ ಪಂದ್ಯಗಳನ್ನು ಭಾರತದಿಂದ ಬೇರೆಡೆಗೆ ಸ್ಥಳಾಂತರಿಸುವ ಬಾಂಗ್ಲಾದೇಶದ ಮನವಿಗೆ ಐಸಿಸಿ ಪ್ರತಿಕ್ರಿಯೆ ನೀಡಲಿದೆ. ಶ್ರೀಲಂಕಾಗೆ ಬದಲಾಗಿ ಚೆನ್ನೈ ಮತ್ತು ತಿರುವನಂತಪುರಂ ಪರ್ಯಾಯ ಸ್ಥಳಗಳಾಗಿ ಸೂಚಿಸಲಾಗಿದೆ. ಭದ್ರತಾ ಕಾರಣಗಳನ್ನು ಮುಂದಿಟ್ಟು ಬಾಂಗ್ಲಾದೇಶ ಈ ಮನವಿ ಮಾಡಿತ್ತು. ಐಸಿಸಿ ಶೀಘ್ರದಲ್ಲೇ ಅಂತಿಮ ನಿರ್ಧಾರ ಪ್ರಕಟಿಸಲಿದೆ.
ಇಒಎಸ್-ಎನ್1 ಕಣ್ಗಾವಲು ಉಪಗ್ರಹದ ಜೊತೆಗೆ ಒಟ್ಟು 16 ಇತರ ಉಪಗ್ರಹಗಳನ್ನು ಹೊತ್ತು ಕಕ್ಷೆಗೆ ಹೊರಟಿದ್ದ ಇಸ್ರೋದ ಪಿಎಸ್ಎಲ್ವಿ-ಸಿ62 ರಾಕೆಟ್, ಮೂರನೇ ಹಂತದಲ್ಲಿ ಪಥ ಬದಲಿಸಿದ ಕಾರಣ ಕಾರ್ಯಾಚರಣೆಯನ್ನು ಪೂರ್ಣಗೊಳಿಸುವಲ್ಲಿ ವಿಫಲವಾಗಿದೆ. ಇಸ್ರೋದ ಹೊಸ ವರ್ಷದ ಮೊದಲ ಬಾಹ್ಯಾಕಾಶ ಕಾರ್ಯಾಚರಣೆ ಯಶಸ್ವಿಯಾಗದಿರುವುದು ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇಸ್ರೋ ಕೊಂಚ ನಿಧಾನಗತಿಯನ್ನು ಅನುಸರಿಸಬೇಕೆ ಎಂಬುದು ಕೂಡ ಇಂತಹ ಪ್ರಶ್ನೆಗಳಲ್ಲಿ ಒಂದಾಗಿದೆ. ಈ ಕುರಿತು ನಾಡಿನ ಖ್ಯಾತ ಬಾಹ್ಯಾಕಾಶ ಬರಹಗಾರ ಗಿರೀಶ್ ಲಿಂಗಣ್ಣ ಅವರು ತಮ್ಮ ಲೇಖನದಲ್ಲಿ ವಿಸ್ತೃತವಾಗಿ ಚರ್ಚಿಸಿದ್ದಾರೆ.
ಅಣ್ಣಾಮಲೈಯನ್ನು ‘ರಸಮಲೈ’ ಎಂದು ಕರೆದ ರಾಜ್ ಠಾಕ್ರೆ
ಮುಂಬೈ ಕುರಿತು ಮಾತನಾಡುವ ಅವರ ಹಕ್ಕು ಪ್ರಶ್ನಿಸಿದ ಎಂಎನ್ಎಸ್ ನಾಯಕ
ನನಗೆ ಬೆದರಿಕೆ ಹಾಕಲು ಆದಿತ್ಯ ಠಾಕ್ರೆ, ರಾಜ್ ಠಾಕ್ರೆ ಯಾರ್ರಿ? ಇದಕ್ಕೆಲ್ಲಾ ಡೋಂಟ್ ಕೇರ್: ಅಣ್ಣಾಮಲೈ
ತಮಿಳುನಾಡಿನ ಬಿಜೆಪಿ ನಾಯಕ ಕೆ. ಅಣ್ಣಾಮಲೈ ಅವರು ರಾಜ್ ಠಾಕ್ರೆ ಅವರ ಬೆದರಿಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಮುಂಬೈ ಮತ್ತು ಕೆ. ಕಾಮರಾಜ್ ಬಗ್ಗೆ ನೀಡಿದ ಹೇಳಿಕೆಗಳ ಕುರಿತು ಬಂದಿರುವ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದ ಅವರು, ತಮ್ಮ ಮುಂಬೈ ಭೇಟಿಯನ್ನು ತಡೆಯಲು ಯಾರಿಗೂ ಅಧಿಕಾರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕೋಗಿಲು ಪ್ರಕರಣ; 2 ಲಕ್ಷಕ್ಕೂ ಹೆಚ್ಚು ಬಾಂಗ್ಲಾದವರಿಗೆ ಮನೆ: ಎನ್ಐಎ ತನಿಖೆಗೆ ಬಿಜೆಪಿ ಆಗ್ರಹ
ಬೆಂಗಳೂರು: ಕೋಗಿಲು ಪ್ರಕರಣದಲ್ಲಿ 2 ಲಕ್ಷಕ್ಕೂ ಹೆಚ್ಚು ರೋಹಿಂಗ್ಯಾಗಳು ಮತ್ತು ಬಾಂಗ್ಲಾದವರಿದ್ದಾರೆ ಎಂದು ನಮಗೆ ವರದಿಗಳು ಬಂದಿವೆ. ಅವೆಲ್ಲವನ್ನೂ ಪರಿಶೀಲಿಸಿ, ಅಂಥವರನ್ನು ಬಂಧಿಸಬೇಕು. ಅವರ ದೇಶಕ್ಕೆ ಕಳಿಸುವುದು ಅಥವಾ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಅವರು ಒತ್ತಾಯಿಸಿದರು. ತರಾತುರಿಯಲ್ಲಿ ಹೊರದೇಶದವರಿಗೆ ಮನೆ ಕೊಡಲು ಹೊರಟಿದೆ. ವಿದೇಶದವರು ಇರುವ ಕಾರಣ ಎನ್ಐಎ ತನಿಖೆ
2026 ಗೋಲ್ಡನ್ ಗ್ಲೋಬ್ ಪ್ರಶಸ್ತಿ; ವಿಜೇತರ ಪೂರ್ಣ ವಿವರ
83ನೇ ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಯಾರಿಗೆ ಗೌರವ ದೊರೆತಿದೆ ಎಂಬ ವಿವರ ಇಲ್ಲಿದೆ
ಕೆಎಲ್ ರಾಹುಲ್- ವಾಶಿಂಗ್ಟನ್ ಸುಂದರ್ ತಮಿಳು ಸಂವಾದ; ಹಿಂದಿ ರಾಷ್ಟ್ರೀಯ ಭಾಷೆ ಎಂದು ಸಂಜಯ್ ಬಂಗಾರ್ ಅನಗತ್ಯ ವಿವಾದ
India Vs New Zealand- ಭಾರತದ ರಾಷ್ಟ್ರೀಯ ಭಾಷೆ ಹಿಂದಿ ಎಂದು ಮಾಜಿ ಕ್ರಿಕೆಟ್ ಕೋಚ್ ಸಂಜಯ್ ಬಂಗಾರ್ ಅವರು ಕ್ರಿಕೆಟ್ ಕಾಮೆಂಟರಿ ಮಾಡುತ್ತಿದ್ದ ವೇಳೆ ನೀಡಿರುವ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ನ್ಯೂಜಿಲೆಂಡ್ ವಿರುದ್ಧದ ಪಂದ್ಯದ ವೇಳೆ ನೀಡಿದ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಭಾರತಕ್ಕೆ ಯಾವುದೇ ರಾಷ್ಟ್ರೀಯ ಭಾಷೆಯಿಲ್ಲ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು ಸಂಜಯ್ ಬಂಗಾರ್ ಅವರು ತಮ್ಮ ವೃತ್ತಿಗೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
IMD Weather Forecast: ದಟ್ಟ ಮಂಜು, ಶೀತಗಾಳಿ ನಡುವೆ ಈ ಭಾಗಗಳಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ದಟ್ಟ ಮಂಜಿನ ಜೊತೆ ಭೀಕರ ಚಳಿ ಮುಂದುವರೆದಿದೆ. ಈ ನಡುವೆಯೇ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ ಹಲವು
ಮತ್ತೆ ರಾಜ್ಯ ರಾಜಕಾರಣಕ್ಕೆ ಕುಮಾರಸ್ವಾಮಿ ಎಂಟ್ರಿ: ಡಿ ಕೆ ಶಿವಕುಮಾರ್ ಏನಂದ್ರು ಗೊತ್ತಾ?
ಬೆಂಗಳೂರು: 2024 ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನ ಸೋಲಿಸಲು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿತ್ತು. ಇದೀಗ ಮುಂಬರುವ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಯಲ್ಲಿಯೂ ಮೈತ್ರಿ ಧರ್ಮ ಪಾಲನೆಗೆ ಕಮಲ-ದಳ ಮುಂದಾಗಿದ್ದು, ಮುಂಬರುವ ದಿನಗಳಲ್ಲಿ ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರು ಮತ್ತೆ ರಾಜ್ಯ ರಾಜಕರಣಕ್ಕೆ ಎಂಟ್ರಿಯಾಗಲಿದ್ದಾರೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಕೇಳಿ
ಭಾರತದಲ್ಲಿ ಮೊದಲ ದಿನವೇ ಸರ್ಗಿಯೋ ಗೊರ್ ಸಂಚಲನ, ಟ್ರಂಪ್ ಆಪ್ತನ ಒಂದೇ ಮಾತಿಗೆ ಪುಟಿದೆದ್ದ ಷೇರುಪೇಟೆ
ಸೋಮವಾರದ ಆರಂಭಿಕ ವಹಿವಾಟಿನಲ್ಲಿ ತೀವ್ರ ಕುಸಿತ ಕಂಡಿದ್ದ ಭಾರತೀಯ ಷೇರುಪೇಟೆ, ಮಧ್ಯಾಹ್ನದ ವೇಳೆಗೆ ಅಮೆರಿಕದ ನೂತನ ರಾಯಭಾರಿ ಸರ್ಗಿಯೋ ಗೊರ್ ಅವರ ಹೇಳಿಕೆಯಿಂದ ದಿಢೀರ್ ಚೇತರಿಕೆ ಕಂಡಿತು. ಭಾರತ ಮತ್ತು ಅಮೆರಿಕ ವಾಣಿಜ್ಯ ಒಪ್ಪಂದದ ಕುರಿತು ಸಕ್ರಿಯವಾಗಿ ಮಾತುಕತೆ ನಡೆಸುತ್ತಿವೆ ಮತ್ತು ಅಮೆರಿಕಕ್ಕೆ ಭಾರತ ಅತ್ಯಂತ ಅಗತ್ಯ ಪಾಲುದಾರ ರಾಷ್ಟ್ರ, ಎಂದು ಗೊರ್ ಹೇಳುತ್ತಿದ್ದಂತೆಯೇ ಹೂಡಿಕೆದಾರರ ವಿಶ್ವಾಸ ಹೆಚ್ಚಾಯಿತು. ಸೆನ್ಸೆಕ್ಸ್ ಮತ್ತು ನಿಫ್ಟಿ ತಮ್ಮ ದಿನದ ಕನಿಷ್ಠ ಮಟ್ಟದಿಂದ ಮೇಲೇರಿದವು.
ಪ್ರಕಾಶಕರ ಹಿತ ಕಾಯಲು ಪುಸ್ತಕ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ : ಸಚಿವ ಶಿವರಾಜ ತಂಗಡಗಿ
ಬೆಂಗಳೂರು : ರಾಜ್ಯದ ಪ್ರಕಾಶಕರ ಸಂಕಷ್ಟಗಳು ನನ್ನ ಗಮನಕ್ಕೆ ಬಂದಿದೆ, ಪ್ರಕಾಶಕರ ಹಿತಕಾಯಲು ಸಗಟು ಖರೀದಿ ಯೋಜನೆಗಾಗಿ ಮುಂದಿನ ದಿನಗಳಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ಒದಗಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಅವರು ಇಂದು ತಮ್ಮ ಗೃಹ ಕಚೇರಿಯಲ್ಲಿ ಪುಸ್ತಕ ಪ್ರಾಧಿಕಾರದ ಮನೆಗೊಂದು ಗ್ರಂಥಾಲಯ ಯೋಜನೆಯಡಿ ಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಕನ್ನಡ ಪುಸ್ತಕ ಪ್ರಾಧಿಕಾರ ಮನೆಗೊಂದು ಗ್ರಂಥಾಲಯ ಯೋಚನೆಯಡಿ ಉತ್ತಮ ಕೆಲಸ ಮಾಡುತ್ತಿದೆ, ಪುಸ್ತಕ ಪ್ರೀತಿ ಎಂಬುದನ್ನು ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕು, ಅವು ನಮ್ಮ ಜ್ಞಾನಾರ್ಜನೆಗೆ ನೆರವಾಗುತ್ತದೆ. ಇಂತಹ ಪುಸ್ತಕ ಪ್ರೀತಿಯ ಫಲವಾಗಿಯೇ ಸಾಹಿತಿಗಳು ಪ್ರಕಾಶಕರು ಹಾಗೂ ಪುಸ್ತಕೋದ್ಯಮ ಜೀವಂತವಾಗಿರಲು ಸಾಧ್ಯ .ಆ ನಿಟ್ಟಿನಲ್ಲಿ ಪುಸ್ತಕ ಪ್ರೇಮ ದೊಡ್ಡ ರೀತಿಯಲ್ಲಿ ಆಂದೋಲನವಾಗಿ ಬೆಳೆಯಬೇಕಿದೆ, ಅದಕ್ಕೆ ಪುಸ್ತಕ ಪ್ರಾಧಿಕಾರದ ಈ ಯೋಜನೆ ಪೂರಕವಾಗಲಿ ಎಂದು ಹಾರೈಸಿದರು. ಸಚಿವರ ಮನೆಯ ಗ್ರಂಥಾಲಯ ಅನುಷ್ಠಾನದ ಪ್ರಶಂಸಾ ಪತ್ರವನ್ನು ಸಚಿವರಿಗೆ ನೀಡಿದ ಹಿರಿಯ ಸಾಹಿತಿ ಹಾಗೂ ಮಾಜಿ ಸಚಿವೆ ಡಾ.ಬಿ.ಟಿ.ಲಲಿತ ನಾಯಕ್ ಅವರು ಮಾತನಾಡಿ, ಪುಸ್ತಕ ಮನುಷ್ಯನನ್ನು ಮೃಗತ್ವದಿಂದ ಮಾನವತ್ವದ ಕಡೆಗೆ ಕೊಂಡೊಯುತ್ತದೆ. ಪಾಶ್ಚತ್ಯ ದೇಶಗಳಲ್ಲಿರುವ ಪುಸ್ತಕ ಪ್ರೀತಿ ನಮಗೆ ಮಾದರಿಯಾಗಿದೆ, ನಮ್ಮದು ಧರ್ಮಾಧಾರಿತ ಸಮಾಜವಾಗಿದೆ. ಇದನ್ನು ಮಾನವ ಧರ್ಮವಾಗಿ ರೂಪಿಸುವ ಹೊಣೆಗಾರಿಕೆ ಪುಸ್ತಕಗಳ ಮೇಲಿದೆ ಎಂದರು. ಭಾನು ಮುಷ್ತಾಕ್ ಅವರ ಎದೆಯ ಹಣತೆ ಕೃತಿ ಯುರೋಪ್ ದೇಶಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ ಕನ್ನಡದಲ್ಲಿಯೂ ಅಂತಹ ಪುಸ್ತಕ ಸಂಸ್ಕೃತಿ ಬರಬೇಕಿದೆ ಎಂದು ಅವರು ಹೇಳಿದರು. ಸಮಾರಂಭದಲ್ಲಿ ಬೆಂಗಳೂರು ನಗರ ಜಿಲ್ಲೆಯ ಗ್ರಂಥಾಲಯ ಜಾಗೃತಿ ಸಮಿತಿ ಸದಸ್ಯರಿಗೆ ಸಚಿವ ಶಿವರಾಜ ತಂಗಡಗಿ ಅರ್ಹತಾ ಪತ್ರಗಳನ್ನು ವಿತರಣೆ ಮಾಡಿದರು. ಆರಂಭದಲ್ಲಿ ಈ ಯೋಜನೆಯ ಕುರಿತಂತೆ ಹಾಗೂ ಪ್ರಕಾಶಕರ ಸಂಕಷ್ಟಗಳನ್ನು ಕುರಿತಂತೆ ಪ್ರಾಧಿಕಾರದ ಆಡಳಿತಾಧಿಕಾರಿ ಕೆ ಬಿ ಕಿರಣ್ ಸಿಂಗ್ ಮಾತನಾಡಿದರು. ಪ್ರಾಧಿಕಾರದ ಸದಸ್ಯರಾದ ಲಕ್ಷ್ಮಣ ಕೊಡಸೆ ಹಾಗೂ ಡಾ.ಬಿ ಸಿ ಕುಶಾಲ ಅವರು ಉಪಸ್ಥಿತರಿದ್ದರು.
ಬಾಂಗ್ಲಾದೇಶಿ ವಲಸಿಗರ ಗುರುತಿಸಲು AI ಸಾಧನವನ್ನು ಅಭಿವೃದ್ಧಿಪಡಿಸಲಾಗುವುದು: ಮಹಾರಾಷ್ಟ್ರ ಸಿಎಂ ಫಡ್ನವೀಸ್
ಮುಂಬೈ: ಮುಂಬರುವ ಮುಂಬೈ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಹಾಯುತಿ ಮೈತ್ರಿಕೂಟವು ರವಿವಾರ ಸಮಗ್ರ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತು. ನಗರವನ್ನು ‘ಬಾಂಗ್ಲಾದೇಶಿ ವಲಸಿಗರು ಹಾಗೂ ರೋಹಿಂಗ್ಯಾಗಳಿಂದ ಮುಕ್ತಗೊಳಿಸುವುದು’ ಮೈತ್ರಿಕೂಟದ ಪ್ರಮುಖ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಭಾರತೀಯ ತಂತ್ರಜ್ಞಾನ ಸಂಸ್ಥೆಯ ಸಹಕಾರದೊಂದಿಗೆ ಬಾಂಗ್ಲಾದೇಶಿ ವಲಸಿಗರನ್ನು ಗುರುತಿಸುವ AI ಸಾಧನವನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ಪ್ರಣಾಳಿಕೆ ಬಿಡುಗಡೆ ಬಳಿಕ ಮಾತನಾಡಿದ ಫಡ್ನವೀಸ್, ಭ್ರಷ್ಟಾಚಾರ ನಿಯಂತ್ರಣ, ಅನುಮತಿ ಪ್ರಕ್ರಿಯೆಗಳ ಸರಳೀಕರಣ ಹಾಗೂ ನಾಗರಿಕ ಸೇವೆಗಳ ಸುಧಾರಣೆಗೆ ಕೃತಕ ಬುದ್ಧಿಮತ್ತೆ (AI) ಬಳಕೆಯಾಗಲಿದೆ ಎಂದು ಹೇಳಿದರು. ‘ನಿಮ್ಮ ಮೊಬೈಲ್ ನಲ್ಲಿ ಪುರಸಭೆ’ ಉಪಕ್ರಮದ ಮೂಲಕ ಪುರಸಭಾ ಸೇವೆಗಳನ್ನು ನಾಗರಿಕರ ಮೊಬೈಲ್ ಗಳಿಗೆ ನೇರವಾಗಿ ತಲುಪಿಸುವ ಗುರಿ ಹೊಂದಲಾಗಿದೆ ಎಂದರು. ಈ ಪ್ರಣಾಳಿಕೆಯಲ್ಲಿ ನಗರವನ್ನು ‘ಜಾಗತಿಕ ಶಕ್ತಿ ಕೇಂದ್ರ’ವನ್ನಾಗಿ ರೂಪಿಸುವ ಗುರಿಯೊಂದಿಗೆ ತಂತ್ರಜ್ಞಾನಾಧಾರಿತ ಆಡಳಿತ, ಪಾರದರ್ಶಕತೆ ಮತ್ತು ವೇಗದ ಸೇವಾ ವಿತರಣೆಗೆ ಒತ್ತು ನೀಡಲಾಗಿದೆ. ಸಾರಿಗೆ ಕ್ಷೇತ್ರದಲ್ಲಿ ಮಹಿಳೆಯರಿಗೆ ವಿಶೇಷ ಸೌಲಭ್ಯಗಳ ಭರವಸೆ ನೀಡಲಾಗಿದೆ. ಬೆಸ್ಟ್ ಬಸ್ಗಳಲ್ಲಿ ಮಹಿಳಾ ಪ್ರಯಾಣಿಕರಿಗೆ 50 ಶೇಕಡಾ ಶುಲ್ಕ ರಿಯಾಯಿತಿ, ಬಸ್ಗಳ ಸಂಖ್ಯೆಯನ್ನು 5,000ರಿಂದ 10,000ಕ್ಕೆ ಹೆಚ್ಚಿಸುವುದು, ಎಲೆಕ್ಟ್ರಿಕ್ ಬಸ್ಗಳ ಪರಿಚಯ ಹಾಗೂ ಮೆಟ್ರೋ–ರೈಲು ನಿಲ್ದಾಣಗಳ ಬಳಿ ‘ಮಿನಿ’ ಮತ್ತು ‘ಮಿಡಿ’ ಬಸ್ ಸೇವೆಗಳ ಮೂಲಕ ಕೊನೆಯ ಮೈಲಿ ಸಂಪರ್ಕ ವಿಸ್ತರಣೆ ಯೋಜನೆಗಳಿವೆ. ‘ಪ್ರವಾಹ ಮುಕ್ತ ಮುಂಬೈ’ ಯೋಜನೆಯಡಿ ಜಪಾನ್ ಮಾದರಿಯ ತಂತ್ರಜ್ಞಾನ ಅಳವಡಿಕೆಗೆ ಪ್ರಣಾಳಿಕೆ ಭರವಸೆ ನೀಡಿದೆ. ಐದು ವರ್ಷಗಳಲ್ಲಿ ನಗರವನ್ನು ಪ್ರವಾಹದಿಂದ ಮುಕ್ತಗೊಳಿಸುವ ಗುರಿಯೊಂದಿಗೆ ನಾಲ್ಕು ಹೊಸ ಅಂತರ್ಗತ ಮಳೆನೀರು ಸಂಗ್ರಹ ಟ್ಯಾಂಕ್ ಗಳ ನಿರ್ಮಾಣ, ಒಳಚರಂಡಿ ವ್ಯವಸ್ಥೆಯ ನವೀಕರಣ ಹಾಗೂ ಬ್ರಿಮ್ಸ್ಟೋವಾಡ್–2 ಯೋಜನೆಗೆ ವೇಗ ನೀಡಲಾಗುತ್ತದೆ. ಹವಾಮಾನ ಕ್ರಿಯಾ ಯೋಜನೆಗಾಗಿ 17,000 ಕೋಟಿ ರೂ.ಗಳನ್ನು ಮೀಸಲಿಡಲಾಗುತ್ತದೆ ಎಂದು ಘೋಷಿಸಲಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಎಲ್ಲಾ ಪುರಸಭಾ ಶಾಲೆಗಳಲ್ಲಿ AI ಪ್ರಯೋಗಾಲಯಗಳ ಸ್ಥಾಪನೆಗೆ ಭರವಸೆ ನೀಡಲಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ನಾಗರಿಕ ಆಸ್ಪತ್ರೆಗಳನ್ನು ಏಮ್ಸ್ ಮಾನದಂಡಗಳಿಗೆ ಮೇಲ್ದರ್ಜೆಗೇರಿಸುವುದು ಹಾಗೂ ಪ್ರತಿಯೊಬ್ಬ ಮುಂಬೈಕರ ವೈದ್ಯಕೀಯ ಇತಿಹಾಸವನ್ನು ದಾಖಲಿಸುವ ಡಿಜಿಟಲ್ ಆರೋಗ್ಯ ಕಾರ್ಡ್ ವ್ಯವಸ್ಥೆ ಜಾರಿಗೆ ತರಲಾಗುತ್ತದೆ. ಧಾರಾವಿ ಪುನರಾಭಿವೃದ್ಧಿ ಯೋಜನೆಯಲ್ಲಿ ಸಣ್ಣ ಮತ್ತು ಸೂಕ್ಷ್ಮ ಉದ್ಯಮಗಳ ಉನ್ನತೀಕರಣಕ್ಕೆ ಒತ್ತು ನೀಡಲಾಗಿದೆ. ವಸತಿ ಕ್ಷೇತ್ರದಲ್ಲಿ ‘ಪಗಡಿಮುಕ್ತ್ ಮುಂಬೈ’ ಉಪಕ್ರಮದ ಮೂಲಕ ಬಾಡಿಗೆ ಸಮಸ್ಯೆ ಪರಿಹಾರ ಮತ್ತು 20,000 ಸ್ಥಗಿತಗೊಂಡ ಕಟ್ಟಡಗಳಿಗೆ ಆಕ್ಯುಪೆನ್ಸಿ ಪ್ರಮಾಣಪತ್ರ ನೀಡುವ ಭರವಸೆ ನೀಡಲಾಗಿದೆ. ಈ ವೇಳೆ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಮಾತನಾಡಿ, ಆಧುನೀಕರಣದ ಜೊತೆಗೆ ಮರಾಠಿ ಸಂಸ್ಕೃತಿ ಮತ್ತು ಪರಂಪರೆಯ ಸಂರಕ್ಷಣೆಗೆ ಆದ್ಯತೆ ನೀಡಲಾಗುತ್ತದೆ ಎಂದರು. ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ನಲ್ಲಿ ಸಾಂಸ್ಕೃತಿಕ ವಿಭಾಗ ಸ್ಥಾಪನೆ, ಮರಾಠಿ ಗ್ರಂಥಾಲಯಗಳು, ಸಾಂಸ್ಕೃತಿಕ ಕೇಂದ್ರಗಳು ಹಾಗೂ ಮರಾಠಿ ಯುವಕರಿಗಾಗಿ ‘ಮುಂಬೈ ಫೆಲೋಶಿಪ್’ ಕಾರ್ಯಕ್ರಮ ಜಾರಿಗೆ ತರಲಾಗುತ್ತದೆ ಎಂದು ಅವರು ಹೇಳಿದರು. ಕೋಲಿ ಸಮುದಾಯ ಸೇರಿದಂತೆ ನಗರದ ಮೂಲ ನಿವಾಸಿಗಳ ಗುರುತು ಮತ್ತು ಜೀವನೋಪಾಯ ರಕ್ಷಣೆಗೆ ‘ಕೋಲಿವಾಡಾ’ ಮತ್ತು ‘ಗಾಥಾನ’ ಪುನರಾಭಿವೃದ್ಧಿ ಯೋಜನೆಗಳನ್ನೂ ಪ್ರಣಾಳಿಕೆ ಒಳಗೊಂಡಿದೆ.
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ರಾಜ್ಯಸಭಾ ಸಂಸದ ರಾಘವ್ ಚಡ್ಡಾ; ಗಿಗ್ ಕಾರ್ಮಿಕರ ನೋವು ಅರಿಯಲು ಅಖಾಡಕ್ಕೆ ಎಂಟ್ರಿ
ಗಿಗ್ ಕಾರ್ಮಿಕರ ದಿನನಿತ್ಯದ ಸಂಕಷ್ಟಗಳನ್ನು ಹತ್ತಿರದಿಂದ ಅರಿಯಲು 'ಬ್ಲಿಂಕಿಟ್' ಡೆಲಿವರಿ ಪಾರ್ಟ್ನರ್ ಆಗಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರು ಅಖಾಡಕ್ಕೆ ಇಳಿದು, ಡೆಲಿವರಿ ಬಾಯ್ ಆಗಿ ಸೇವೆ ಸಲ್ಲಿಸಲು ಮುಂದಾಗಿದ್ದಾರೆ. ಎಕ್ಸ್ನಲ್ಲಿ ಈ ಕುರಿತು ಪೋಸ್ಟ್ ಹಂಚಿಕೊಂಡಿದ್ದಾರೆ. ಒಂದು ಮನೆಗೆ ಡೆಲಿವರಿ ಕೊಡಲು ಹೋದ ಅವರಿಗೆ ಮುಂದೇನಾಯ್ತು ಎನ್ನುವುದನ್ನು ಸಸ್ಪೆನ್ಸ್ ಆಗಿ ಇಟ್ಟಿದ್ದಾರೆ. ಆ ಬಗ್ಗೆ ಇನ್ನಷ್ಟೇ ಮಾಹಿತಿ ಹೊರ ಬೀಳಬೇಕಾಗಿದೆ
ಭಾರತದ ವಿಜ್ಞಾನಯಾನ: ಪ್ರಾಚೀನ ಬುದ್ಧಿವಂತಿಕೆಯಿಂದ ಜಾಗತಿಕ ನಾಯಕತ್ವದವರೆಗಿನ ಪಯಣ
ಜಾಗತಿಕ ಭೂಪಟದಲ್ಲಿ ಆಧುನಿಕ ಭಾರತದ ಸ್ಥಾಣಮಾನ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಅದರಲ್ಲೂ ವಿವಿಧ ಕ್ಷೇತ್ರಗಳಲ್ಲಿ ಭಾರತದ ಸಾಮರ್ಥ್ಯವನ್ನು ಮನಗಂಡಿರುವ ಜಗತ್ತು, ಭಾರತಕ್ಕೆ ಬಹುಪರಾಕ್ ಹಾಕುತ್ತಿದೆ. ವಿಶೇಷವಾಗಿ ವಿಜ್ಞಾನ, ಬಾಹ್ಯಾಕಾಶ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಭಾರತ ಮಾಡುತ್ತಿರುವ ಸಾಧನೆಗಳು ಇಡೀ ಜಗತ್ತಿನ ಗಮನ ಸೆಳೆದಿವೆ. ಈ ಕುರಿತು ಯುವ ವಿಜ್ಞಾನಿ ಮತ್ತು ಬರಹಗಾರ ದೀಪಕ್ ಎಎಸ್ ಅವರು ಭಾರತದ ವಿಜ್ಞಾನ ಮತ್ತು ರಕ್ಷಣಾ ಕ್ಷೇತ್ರದ ಬೆಳವಣಿಗೆಯ ಕುರಿತು ತಮ್ಮ ಲೇಖನದಲ್ಲಿ ಸುದೀರ್ಘವಾಗಿ ಚರ್ಚಿಸಿದ್ದಾರೆ.
ಸಂಸದರ ನಿಧಿ ಅನುದಾನ ಬಳಕೆಯಲ್ಲಿ ರಾಜ್ಯದ ಯಾವ ಎಂಪಿ ಟಾಪ್ : ಇಲ್ಲಿದೆ ಪ್ರೊಗ್ರೆಸ್ ಕಾರ್ಡ್
MP Fund Utilization : ಸಂಸದರಿಗೆ ಕೇಂದ್ರ ಸರ್ಕಾರ ಬಿಡುಗಡೆ ಮಾಡುವ ಕ್ಷೇತ್ರಾಭಿವೃದ್ದಿ ಅನುದಾನವನ್ನು ಕರ್ನಾಟಕದ ಕೆಲವು ಸಂಸದರು ಸರಿಯಾಗಿ ಬಳಸಿಕೊಂಡಿದ್ದಾರೆ. ಆದರೆ, ಕೆಲವು ಸಂಸದರು ಇದರ ಲಾಭವನ್ನು ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಲಿಸ್ಟ್ ನಲ್ಲಿ ಟಾಪ್ ನಲ್ಲಿ ದಕ್ಷಿಣ ಕನ್ನಡ ಸಂಸದರು ಇದ್ದರೆ, ಜಗದೀಶ್ ಶೆಟ್ಟರ್, ಅನುದಾನವನ್ನು ಬಳಕೆ ಮಾಡಿಕೊಂಡಿಲ್ಲ.
ಕಾಂಗ್ರೆಸ್ನ ರಾಜಕೀಯ ಸೇಡಿನಿಂದ ಕಾರ್ಕಳದ ಪರಶುರಾಮ ಥೀಂ ಪಾರ್ಕ್ ನೆನೆಗುದಿಗೆ : ಬಿಜೆಪಿ ಆರೋಪ
ಕಾರ್ಕಳ:
2020 ಹಾಗೂ 2021ರ ಚಲನಚಿತ್ರ ಸಾಹಿತ್ಯ ವಾರ್ಷಿಕ ಪ್ರಶಸ್ತಿ ಪ್ರಕಟ
ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2020 ಹಾಗೂ 2021ನೇ ಕ್ಯಾಲೆಂಡರ್ ವರ್ಷಗಳ ರಾಜ್ಯ ಚಲನಚಿತ್ರ ಸಾಹಿತ್ಯ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. 2020ನೇ ಕ್ಯಾಲೆಂಡರ್ ವರ್ಷದ ಚಲನಚಿತ್ರ ಸಾಹಿತ್ಯ ಪ್ರಶಸ್ತಿಗೆ ಬಳ್ಳಾರಿ ಜಿಲ್ಲೆ ಸಿರಿಗೇರಿಯ ಅನ್ನಪೂರ್ಣ ಪ್ರಕಾಶನ ಪ್ರಕಟಿಸಿದ, ಹಿರಿಯ ಪತ್ರಕರ್ತ ರಘುನಾಥ ಚ.ಹ.ಅವರು ಆಯ್ದ 20 ಸಿನೆಮಾಗಳ ಕುರಿತು ಬರೆದ ಲೇಖನಗಳ ಸಂಗ್ರಹ ನಮೋ ವೆಂಕಟೇಶ ಕೃತಿ ಆಯ್ಕೆಯಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿಯಲ್ಲಿದ್ದ ಹಿರಿಯ ಪತ್ರರ್ತರಾದ ಡಾ.ರಾಜಶೇಖರ ಹತಗುಂದಿ ಹಾಗೂ ಬಸವರಾಜ ಮೇಗಲಕೇರಿ ಅವರು 2020ನೇ ಕ್ಯಾಲೆಂಡರ್ ವರ್ಷದ ಕೃತಿಯನ್ನು ಆಯ್ಕೆ ಮಾಡಿದ್ದರು. 2021ನೇ ಕ್ಯಾಲೆಂಡರ್ ವರ್ಷದ ಚಲನಚಿತ್ರ ವಾರ್ಷಿಕ ಸಾಹಿತ್ಯ ಪ್ರಶಸ್ತಿಗೆ ಬೆಂಗಳೂರಿನ ಸಿರಿಗಂಧ ಪ್ರಕಾಶನ ಪ್ರಕಟಿಸಿರುವ, ಲೇಖಕ ಹಾಗೂ ಚಲನಚಿತ್ರ ನಿರ್ದೇಶಕ ಪ್ರಕಾಶರಾಜ್ ಮೇಹು ಅವರು ಬರೆದ ಡಾ.ರಾಜಕುಮಾರ್ ಬದುಕಿನ ಕುರಿತ ಅಂತರಂಗದ ಅಣ್ಣ ಕೃತಿ ಆಯ್ಕೆಯಾಗಿದೆ. ಸಾಹಿತಿ ಡಾ.ಚಿದಾನಂದ ಸಾಲಿ ಹಾಗೂ ಪತ್ರಕರ್ತ ಡಾ.ಶರಣು ಹುಲ್ಲೂರು ಅವರು ಪ್ರಶಸ್ತಿ ಆಯ್ಕೆ ಸಮಿತಿಯ ಸದಸ್ಯರಾಗಿದ್ದರು. ಪ್ರಶಸ್ತಿಯು ಲೇಖಕರು ಹಾಗೂ ಪ್ರಕಾಶಕರಿಬ್ಬರಿಗೂ ತಲಾ 20 ಸಾವಿರ ರೂ.ನಗದು ಹಾಗೂ 50 ಗ್ರಾಂ ಬೆಳ್ಳಿ ಪದಕಗಳನ್ನು ಒಳಗೊಂಡಿದೆ ಎಂದು ಎಂದು ವಾರ್ತಾ ಇಲಾಖೆ ಜಂಟಿ ನಿರ್ದೇಶಕ, ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿ ಮಂಜುನಾಥ ಡೊಳ್ಳಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ನಮ್ಮ ಮೆಟ್ರೋ ಟಿಕೆಟ್ ದರ ಶೀಘ್ರದಲ್ಲೇ ಮತ್ತೆ ಏರಿಕೆ ಮುಂದಾದ BMRCL; ಯಾವಾಗ? ಯಾಕೆ? ಎಷ್ಟು?
ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶೀಘ್ರದಲ್ಲೇ ಮತ್ತೊಂದು ದರ ಏರಿಕೆ ಎದುರಾಗಲಿದೆ. ಫೆಬ್ರವರಿಯಿಂದ ಟಿಕೆಟ್ ದರ ಶೇಕಡಾ 5 ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಈ ಹೆಚ್ಚಳದಿಂದ ಪ್ರಯಾಣಿಕರ ಮೇಲಿನ ಆರ್ಥಿಕ ಭಾರ ಹೆಚ್ಚಾಗಲಿದೆ. ಮೆಟ್ರೋ ಪ್ರಯಾಣಿಕರ ಸಂಖ್ಯೆ ತಗ್ಗುವ ನಿರೀಕ್ಷೆಯಿದೆ. ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ. ಪ್ರಯಾಣಿಕರು ಈ ದರ ಏರಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಅಮೆರಿಕಕ್ಕೆ ಬಹುಶ ಮಗುವನ್ನು ಚಿವುಟುವುದೂ ಗೊತ್ತು, ತೊಟ್ಟಿಲನ್ನು ತೂಗುವುದೂ ಗೊತ್ತು. ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ವಿಚಾರವಾಗಿ ಭಾರತದೊಂದಿಗೆ ಸಂಬಂಧ ಹಾಳುಮಾಡಿಕೊಂಡಿರುವ ಅಮೆರಿಕ, ಈಗ ಮತ್ತೆ ಭಾರತದ ಸ್ನೇಹದ ಅವಶ್ಯಕತೆಯ ಜಪ ಮಾಡಿದೆ. ಭಾರತಕ್ಕೆ ಅಮೆರಿಕದ ರಾಯಭಾರಿಯಾಗಿ ನೇಮಕಗೊಂಡಿರುವ ಸೆರ್ಗಿಯೊ ಗೋರ್ ಅವರು, ಭಾರತದಷ್ಟು ಪ್ರಮುಖ ದೇಶ ಅಮೆರಿಕಕ್ಕೆ ಬೇರೆ ಯಾವುದೂ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ. ಅಲ್ಲದೇ 2027ರಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ದೆಹಲಿಗೆ ಕರೆತರುವುದಾಗಿ ವಾಗ್ದಾನ ಮಾಡಿದ್ದಾರೆ.
16 ಉಪಗ್ರಹಗಳ ಉಡಾವಣೆ ವಿಫಲ, ಕೋಟಿ ಕೋಟಿ ನಷ್ಟ ಭರಿಸೋರು ಯಾರು? ಪರಿಹಾರ ನೀಡಬೇಕಾ ಇಸ್ರೋ? | Explainer
ಜನವರಿ 12, 2026ರ ಸೋಮವಾರ ಇಸ್ರೋ ಹಮ್ಮಿಕೊಂಡಿದ್ದ ಪಿಎಸ್ಎಲ್ವಿ-ಸಿ62 ಉಡಾವಣಾ ಯೋಜನೆ ವಿಫಲವಾಗಿದೆ. ರಾಕೆಟ್ನ ಮೂರನೇ ಹಂತದಲ್ಲಿ ಕಂಡುಬಂದ ತಾಂತ್ರಿಕ ದೋಷದಿಂದಾಗಿ, ಡಿಆರ್ಡಿಒದ 'ಅನ್ವೇಷಾ' ಮತ್ತು ಖಾಸಗಿ ವಲಯದ 7 ಉಪಗ್ರಹಗಳು ಸೇರಿದಂತೆ ಒಟ್ಟು 16 ಉಪಗ್ರಹಗಳು ನಿಗದಿತ ಕಕ್ಷೆ ಸೇರಲು ಸಾಧ್ಯವಾಗಿಲ್ಲ. ಈ ವೈಫಲ್ಯದಿಂದಾಗಿ ಉಂಟಾದ ಉಪಗ್ರಹಗಳ ನಷ್ಟವನ್ನು ಇಸ್ರೋ ಭರಿಸುವುದಿಲ್ಲ; ಬದಲಾಗಿ ಉಪಗ್ರಹ ಮಾಲೀಕರು ಮಾಡಿಸಿರುವ 'ಬಾಹ್ಯಾಕಾಶ ವಿಮೆ' ಮೂಲಕ ಪರಿಹಾರ ಪಡೆಯುತ್ತಾರೆ.
ಕೋಗಿಲು ಪ್ರಕರಣ | ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ವರದಿ ಸಲ್ಲಿಸಿದ ಸತ್ಯಶೋಧನಾ ತಂಡ
ಬೆಂಗಳೂರು : ಕೋಗಿಲು ಬಡಾವಣೆಯ ಅಕ್ರಮ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರಿಗೆ ಸತ್ಯಶೋಧನಾ ತಂಡವು ಇಂದು ವರದಿ ಸಲ್ಲಿಸಿತು. ಘಟನಾವಳಿಗಳನ್ನು ಪರಿಶೀಲಿಸಿ ವರದಿ ಕೊಡಲು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ನೇತೃತ್ವದ ಸತ್ಯಶೋಧನಾ ತಂಡವನ್ನು ನೇಮಿಸಲಾಗಿತ್ತು. ಈ ತಂಡವು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ವರದಿಯನ್ನು ಸಲ್ಲಿಸಿತು. ಈ ಸಂದರ್ಭದಲ್ಲಿ ಶಾಸಕ ಎಸ್.ಮುನಿರಾಜು, ರಾಜ್ಯ ಉಪಾಧ್ಯಕ್ಷೆ ಮಾಳವಿಕ ಅವಿನಾಶ್, ರಾಜ್ಯ ಕಾರ್ಯದರ್ಶಿ ಹೆಚ್.ಸಿ. ತಮ್ಮೇಶ್ ಗೌಡ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಉಪಸ್ಥಿತರಿದ್ದರು.
IND Vs NZ- ವಾಶಿಂಗ್ಟನ್ ಸುಂದರ್ ಗಾಯದಿಂದಾಗಿ ಆತಂಕದ ಛಾಯೆ: ಕೆಎಲ್ ರಾಹುಲ್ ಪರಿಸ್ಥಿತಿ ನಿಭಾಯಿಸಿದ್ದು ಹೇಗೆ?
KL Rahul On Washington Sundar Injury- ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಪ್ರಥಮ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ವಿಕೆಟ್ ಬಳಿಕ ಭಾರತದ ಮೇಲೆ ಒತ್ತಡ ಹೆಚ್ಚಿತ್ತು. ಅನುಭವಿ ಕೆಎಲ್ ರಾಹುಲ್ ಮತ್ತು ಹರ್ಷಿತ್ ರಾಣಾ ಪರಿಸ್ಥಿತಿಯನ್ನು ಚೆನ್ನಾಗಿ ನಿಭಾಯಿಸಿದರು. ಬಳಿಕ ರಾಹುಲ್ ಅವರು ಬೆನ್ನುನೋವಿನಿಂದ ಬಳಲುತ್ತಿದ್ದ ವಾಷಿಂಗ್ಟನ್ ಸುಂದರ್ ಅವರ ಜೊತೆಗೂಡಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಈ ವೇಳೆ ಅವರಿಗಾದ ಅಡೆತಡೆಗಳ ಬಗ್ಗೆ ಕೆಎಲ್ ರಾಹುಲ್ ಮಾತನಾಡಿದ್ದಾರೆ.
ಕಲಬುರಗಿ ನಗರದಲ್ಲಿ ಗುಂಡಿಗಳದ್ದೇ ದರ್ಬಾರ್!
ಡಿಸಿ ಕಚೇರಿ ಎದುರೇ ತೆರೆದ ಚರಂಡಿ: ಅಸ್ತವ್ಯಸ್ತ ಕಾಮಗಾರಿ
ತುಂಗಭದ್ರಾ ಹಂಗಾಮಿ ನೌಕರರಿಗೆ 8 ತಿಂಗಳ ಬಾಕಿ ವೇತನ ಪಾವತಿಗೆ ವಿಳಂಬ; ಜಿಲ್ಲಾ ಉಸ್ತುವಾರಿ ಸಚಿವರಿಗೆ ಘೇರಾವ್ ಎಚ್ಚರಿಕೆ
ರಾಯಚೂರು: ತುಂಗಭದ್ರಾ ನೀರಾವರಿ ವಲಯದ ಹಂಗಾಮಿ ನೌಕರರಿಗೆ ಕಳೆದ ಎಂಟು ತಿಂಗಳಿನಿಂದ ವೇತನ ಪಾವತಿಯಾಗದೆ ಇರುವುದರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಕೆಲಸವೂ ಇಲ್ಲ, ವೇತನವೂ ಇಲ್ಲದ ಸ್ಥಿತಿ ನಿರ್ಮಾಣವಾಗಿದ್ದು, ತಕ್ಷಣ ಸಮಸ್ಯೆ ಪರಿಹರಿಸದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಘೇರಾವ್ ನಡೆಸುವುದಾಗಿ ತುಂಗಭದ್ರಾ ನೀರಾವರಿ ವಲಯ ಹಂಗಾಮಿ ಕಾರ್ಮಿಕರ ಸಂಘ ಎಚ್ಚರಿಕೆ ನೀಡಿದೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಆರ್. ಮಾನಸಯ್ಯ, “ಉಸ್ತುವಾರಿ ಸಚಿವರು ಬಾಕಿ ವೇತನ ಪಾವತಿಸಲು ಅಧಿಕಾರಿಗಳಿಗೆ ಪತ್ರ ಬರೆದಿದ್ದರೂ, ನೀರಾವರಿ ನಿಗಮದಲ್ಲಿ ಅದಕ್ಕೆ ಬೆಲೆ ಇಲ್ಲದಂತಾಗಿದೆ. ನಮಗೆ ಉತ್ಸವ ಸಚಿವರು ಬೇಡ, ಸಮಸ್ಯೆ ಪರಿಹರಿಸುವ ಉಸ್ತುವಾರಿ ಸಚಿವರು ಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು. ತುಂಗಭದ್ರಾ ಯೋಜನೆಯಡಿ ಕ್ರಸ್ಟ್ಗೇಟ್ ಅಳವಡಿಕೆಯಿಂದ ನೀರು ಹರಿವು ಸ್ಥಗಿತಗೊಂಡಿದ್ದು, ಇದರಿಂದ ಕಾರ್ಮಿಕರಿಗೆ ಕೆಲಸವೂ ಇಲ್ಲದಂತಾಗಿದೆ. ವರ್ಷಪೂರ್ತಿ ಕೆಲಸ ನೀಡುವುದಾಗಿ ನಿಗಮ ಭರವಸೆ ನೀಡಿದ್ದರೂ, ಪ್ರಸ್ತುತ ಕೆಲಸವೂ ಇಲ್ಲ, ವೇತನವೂ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಹೇಳಿದರು. ಬಾಕಿ ವೇತನವನ್ನು ತಕ್ಷಣ ಪಾವತಿಸದಿದ್ದರೆ ಜನವರಿ 26ರಂದು ಗಣರಾಜ್ಯೋತ್ಸವದ ಧ್ವಜಾರೋಹಣಕ್ಕೆ ಅವಕಾಶ ನೀಡುವುದಿಲ್ಲ. ಕಪ್ಪುಪಟ್ಟಿ ಪ್ರದರ್ಶಿಸಿ ಹಂಗಾಮಿ ಕಾರ್ಮಿಕರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಎಚ್ಚರಿಸಿದರು. ಹೊರಗುತ್ತಿಗೆ, ಗುತ್ತಿಗೆ ನೌಕರರು, ಅತಿಥಿ ಶಿಕ್ಷಕರು ಸೇರಿದಂತೆ ಅನೇಕ ಇಲಾಖೆಗಳಲ್ಲೂ ವೇತನ ಪಾವತಿಯಲ್ಲಿ ವಿಳಂಬವಾಗುತ್ತಿದೆ. ತುಂಗಭದ್ರಾ ಯೋಜನೆ 6 ಲಕ್ಷ ಎಕರೆ ಕೃಷಿಭೂಮಿಗೆ ನೀರು ಒದಗಿಸುತ್ತಿದ್ದು, ಎರಡು ಮಹಾನಗರ ಪಾಲಿಕೆಗಳು, ಮೂರು ಪಟ್ಟಣ ಪಂಚಾಯತ್ಗಳು ಹಾಗೂ 180 ಗ್ರಾಮಗಳ ಕುಡಿಯುವ ನೀರು ಸರಬರಾಜು ಇದರ ಮೇಲೆ ಅವಲಂಬಿತವಾಗಿದೆ. ಇಂತಹ ಮಹತ್ವದ ಯೋಜನೆಯಲ್ಲಿ ಕಾರ್ಮಿಕರನ್ನು ವೇತನವಿಲ್ಲದೇ ಕೆಲಸಕ್ಕೆ ನಿಲ್ಲಿಸಿರುವುದು ಅನ್ಯಾಯಕರ ಎಂದು ಅವರು ಹೇಳಿದರು. ಈ ವೇಳೆ ಸಂಘದ ಪ್ರಧಾನ ಕಾರ್ಯದರ್ಶಿ ಅಡವಿರಾವ್ ಸೇರಿದಂತೆ ಲೋಕಪ್ಪ, ರಾಧಾಕೃಷ್ಣ, ಮುದುಕಪ್ಪ, ಸಿದ್ದಪ್ಪ, ಶಂಕರಪ್ಪ, ನಾಗರಾಜ ಹಾಗೂ ಮಹದ ಸಫಿಯುದ್ದೀನ್ ಉಪಸ್ಥಿತರಿದ್ದರು.
ಯುವ ಹೃತ್ಕಮಲವಾಸ ಧೀರ ಸಂನ್ಯಾಸಿ ವಿವೇಕಾನಂದರು
ಜಗದ ಬಂಧನಗಳಿಂದ ಮುಕ್ತರಾದ ಯುವ ಸನ್ಯಾಸಿ ಸ್ವಾಮಿ ವಿವೇಕಾನಂದರು ತಮ್ಮ ದೇಶದ ಅವನತಿಯನ್ನು ಕಂಡು ದುಃಖಿಸಿದರು. 'ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ' ಎಂಬ ಅವರ ಸಂದೇಶ, ಭವದಿಂದ ಮುಕ್ತಿ ಹಾಗೂ ದೇಶ ಸೇವೆಯ ಮಹತ್ವವನ್ನು ಸಾರುತ್ತದೆ. ಯೋಗ ಮಾರ್ಗದ ಮೂಲಕ ಸ್ವರೂಪ ಅರಿತು, ಹಿಂದುಳಿದವರನ್ನು ನಾರಾಯಣನೆಂದು ಕರೆದ ಅವರ ಆದರ್ಶ ಜೀವನ ಭಾರತೀಯರಿಗೆ ಪ್ರೇರಣೆಯಾಗಿದೆ.
ಎಸ್ಪಿ, ಕಮಿಷನರ್ ವರ್ಗಾವಣೆಯ ಪ್ರಮೇಯವೇ ಇಲ್ಲ: ಪದ್ಮರಾಜ್
ಮಂಗಳೂರು : ದ.ಕ. ಜಿಲ್ಲೆಯಲ್ಲಿ ಆರೇಳು ತಿಂಗಳ ಹಿಂದೆ ಅಶಾಂತಿಯಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದಾಗ ಇಲ್ಲಿನ ಕಾಂಗ್ರೆಸ್ ಅಧಿಕಾರಿಗಳ ಆಗ್ರಹದ ಮೇರೆಗೆ ದಕ್ಷ ಪೊಲೀಸ್ ಅಧಿಕಾರಿಗಳನ್ನು ನೇಮಕ ಮಾಡಲಾಗಿತ್ತು. ಇಆದರೆ ಇದೀಗ ಕೆಲವೊಂದು ಧಾರ್ಮಿಕ ವಿಚಾರಗಳನ್ನು ಮುಂದಿಟ್ಟು ಅವರ ವರ್ಗಾವಣೆಯ ಕುರಿತಂತೆ ಗೊಂದಲ ಸೃಷ್ಟಿಸುವ ಕೆಲಸ ಬಿಜೆಪಿಯವರು ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಆಕ್ಷೇಪಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಪೊಲೀಸ್ ಕಮಿಷನರ್ ಮತ್ತು ಎಸ್ಪಿಯವರ ವರ್ಗಾವಣೆ ಆರೋಪದ ಕುರಿತಂತೆ ಈಗಾಗಲೇ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ. ಅವರನ್ನು ವರ್ಗಾವಣೆ ಮಾಡುವ ಪ್ರಮೇಯವೇ ಇಲ್ಲ ಎಂದರು. ಕಳೆದ ಏಳೆಂಟು ತಿಂಗಳಿನಿಂದ ಜಿಲ್ಲೆಯಲ್ಲಿ ಶಾಂತಿ ನೆಲೆಸಿದೆ. ಅಹಿತಕರ ಘಟನೆಗಳು ನಡೆದಿಲ್ಲ. ಅನೈತಿಕ ಚಟುವಟಿಕೆಗಳು ನಿಂತಿವೆ. ಡ್ರಗ್ಸ್ಗೆ ಸಂಬಂಧಿಸಿ ಜಿಲ್ಲೆಯ ಪೋಷಕರಲ್ಲಿದ್ದ ಭಯದ ವಾತಾವರಣ ಕಡಿಮೆಯಾಗಿದೆ. ಡ್ರಗ್ಸ್ ದಂಧೆಗೆ ತೊಡಗಿದವರ ಶೇ 90ರಷ್ಟು ಬಂಧನಾಗಿದೆ. ನಮ್ಮದು ಕೇವಲ ಚುನಾವಣೆ ಗೆಲ್ಲುವುದು ಮಾತ್ರವೇ ಆಶಯವಲ್ಲ. ಬದಲಾಗಿ ಜನ ನೆಮ್ಮದಿಂದ ಬದುಕುವುದು, ಸಮಾಜದ ಕಲ್ಯಾಣ ನಮ್ಮ ಉದ್ದೇಶವಾಗಿದೆ. ಆದರೆ ಬಿಜೆಪಿ ಧಾರ್ಮಿಕ ವಿಚಾರಗಳನ್ನು ಮುಂದಿಟ್ಟು ಗೊಂದಲ ಸೃಷ್ಟಿಸುತ್ತಿದೆ. ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಸಂಬಂಧಿಸಿ ಪೊಲೀಸ್ ಅಧಿಕಾರಿಗಳು ರಿಯಾಯಿತಿ ನೀಡಿದ್ದಾರೆ. ಅದು ವಿವಾದದ ವಿಚಾರವೇ ಅಲ್ಲ. ಅದಕ್ಕೆ ಯಾರೂ ಅಡ್ಡ ಬಂದಿಲ್ಲ. ಆದರೆ ಜೂಜಿಗೆ ಮಾತ್ರವೇ ತಡೆಯಾಗಿದೆ. ಇದರಿಂದ ಅದೆಷ್ಟೋ ಜನರು ಉದ್ಯೋಗಕ್ಕೆ ಹೋಗುವ ಊಲಕ ಮನೆಯವರು ನೆಮ್ಮದಿ ಕಾಣುವಂತಾಗಿದೆ. ಧಾರ್ಮಿಕ ಆಚರಣೆಗೆ ಕಾಂಗ್ರೆಸ್ ಯಾವತ್ತೂ ಅಡ್ಡಿಪಡಿಸಿಲ್ಲ ಎಂದು ಅವರು ಹೇಳಿದರು. ದ್ವೇಷ ಭಾಷಣ ವಿರುದ್ಧದ ಕಾನೂನು ಮಂಜೂರಾಗಿದೆ. ಅದನ್ನು ವಿರೋಧಿಸುವ ಮೂಲಕ ತಾವು ದ್ವೇಷ ಭಾಷಣ ಮಾಡುತ್ತಿರುವುದನ್ನು ಒಪ್ಪಿಕೊಳ್ಳುತ್ತೀರಾ, ನಿಮಗೆ ಯಾಕೆ ಭಯ ಎಂದು ಬಿಜೆಪಿ ನಾಯಕರನ್ನು ಪ್ರಶ್ನಿಸಿದ ಪದ್ಮರಾಜ್, ಇದಕ್ಕೆ ಉತ್ತರ ನೀಡಬೇಕು ಎಂದು ಆಗ್ರಹಿಸಿದರು. ರಾಜ್ಯ ಸರಕಾರದಿಂದ ಮಂಗಳೂರಿನಲ್ಲಿ ನಡೆದ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶದಲಿ ಸಂಸದರು, ಶಾಸಕರು ಪಕ್ಷಬೇಧವಿಲ್ಲದೆ ಭಾಗವಹಿಸಿರುವುದು ಸ್ವಾಗತಾರ್ಹ. ಅಭಿವೃದ್ಧಿ ವಿಚಾರದಲ್ಲಿ ಈ ರೀತಿಯ ನಡೆಯನ್ನು ರಾಜಕಾರಣಿಗಳು ತೋರಿಸಬೇಕಾಗಿದೆ. ಈ ಮೂಲಕ ಚುನಾವಣೆಯಲ್ಲಿ ತಮ್ಮನ್ನು ಆಯ್ಕೆ ಮಾಡಿ ಕಳುಹಿಸಿದ ಜನರಿಗೆ ನ್ಯಾಯ ಒದಗಿಸಬೇಕಾಗಿದೆ. ಅದು ಬಿಟ್ಟು ಜನರ ನಡುವೆ ಇಲ್ಲಸಲ್ಲದ ವಿಚಾರ ಹಿಡಿದು ಚಿಲ್ಲರೆ ರಾಜಕೀಯ ಮಾಡುವುದು, ಅಭಿವೃದ್ಧಿ ಕಾರ್ಯಗಳಿಗೆ ಟೀಕೆ ಮಾಡುವುದು ಸರಿಯಲ್ಲ ಎಂದು ಅವರು ಹೇಳಿದರು. ಪ್ರವಾಸೋದ್ಯಮ ಸಮಾವೇಶದಲ್ಲಿ ರಾಜ್ಯ ಸರಕಾರದ ಮಾಸ್ಟರ್ ಪ್ಲಾನ್ಗೆ ಸ್ಪಂದಿಸಿ ಹೂಡಿಕೆದಾರರನ್ನು ಆಕರ್ಷಿತರಾಗಿದ್ದಾರೆ. ಏಕ ಗವಾಕ್ಷಿ ಮಾದರಿಯಲ್ಲಿ ಮೂರು ಜಿಲ್ಲೆಗಳಿಗೆ ಅನ್ವಯ ಆಗುವಂತೆ ನೋಡಲ್ ಅಧಿಕಾರಿ ನೇಮಕ ಮಾಡುವ ಬಗ್ಗೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ತಿಳಿಸಿದ್ದಾರೆ. ಕೇಂದ್ರ ಸರಕಾರದ ಸಹಕಾರವೂ ಅಗತ್ಯವಾಗಿದ್ದು, ಕರಾವಳಿಯ ಶಾಸಕರು, ಸಂಸದರು ಭಗಾವಹಿಸುವ ಮೂಲಕ ಸಹಕಾರ ಭರವಸೆ ನೀಡಿದ್ದಾರೆ. ಈ ಮೂಲಕ ನಾವು ಕಂಡ ಕರಾವಳಿ ಕರ್ನಾಟಕದ ಅಭಿವೃದ್ಧಿಯ ಕನಸು ಈಡೇರಲಿದೆ ಎಂದು ಹೇಳಿದರು. ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಪದ್ಮರಾಜ್, ಅಭಿವೃದ್ಧಿಗೆ ಅನುದಾನ ಬಿಡುಗಡೆಯಾಗುತ್ತಿಲ್ಲ ಎನ್ನುವ ಸ್ಥಳೀಯ ಶಾಸಕರು ಕಾಮಗಾರಿಯ ಫ್ಲೆಕ್ಸ್ ಹಾಕಿಸಿಕೊಳ್ಳುವುದು ಹೇಗೆ ? ಎಂದು ಮರು ಪ್ರಶ್ನಿಸಿದರಲ್ಲದೆ, ಅನುದಾನ ಬಿಡುಗಡೆಗಾಗಿ ಶಾಸಕರು ಯಾವ ರೀತಿಯಲ್ಲಿ ಸರಕಾರ ಹಾಗೂ ಸಚಿವರನ್ನು ಸಂಪರ್ಕಿಸಿದ್ದಾರೆ ಎಂಬುದನ್ನು ಅವಲಂಬಿಸಿರುತ್ತದೆ ಎಂದರು. ಜಿಲ್ಲೆಯ ಕೆಲ ಬಿಜೆಪಿ ಶಾಸಕರು ‘ರಾಜ್ಯದಲ್ಲೀಗ ಅವರ ಸರಕಾರ ಇರುವುದು. ನಮಗೆ ಏನೂ ಮಾಡಲಾಗುತ್ತಿಲ್ಲ’ ಎಂಬ ಮಾತುಗಳನಾಡುತ್ತಿದ್ದಾರೆ. ನಿಮಗೆ ಆಗದಿದ್ದರೆ ರಾಜೀನಾಮೆ ನೀಡಿ ಮನೆಯಲ್ಲಿರಿ. ಇಲ್ಲ ಎಂದಾದಲ್ಲಿ ಜಿಲ್ಲೆಯ ಸಮಸ್ಯೆ, ಕುಂದುಕೊರತೆಗಳ ಬಗ್ಗೆ ಸಚಿವರಿಗೆ ಮನವರಿಕೆ ಮಾಡುವ ಕಾರ್ಯ ಮಾಡಿ ಎಂದರು. ಬಿಜೆಪಿ ಅವಧಿಯಲ್ಲಿ ಕೆಲವೊಂದು ಟಂಡರ್ ಇಲ್ಲದೆ ನಡೆದ ಕಾಮಗಾರಿಗಳಿಗೆ ಬಿಲ್ ಬಂದಿಲ್ಲ. ಅದನ್ನೇ ಅನುದಾನ ಬಂದಿಲ್ಲ ಎಂದು ಬಿಂಬಿಸಲಾಗುತ್ತಿದೆ. ಆದರೆ ಸರಕಾರದ ಎಲ್ಲಾ ಗ್ಯಾರಂಟಿ ಯೋಜನೆಗಳು ಚಾಲ್ತಿಯಲ್ಲಿವೆ. ಒಂದು ವೇಳೆ ಸ್ಥಳೀಯ ಶಾಸಕರಿಗೆ ತಮ್ಮಿಂದ ಜಿಲ್ಲೆಗೆ ಪೂರಕವಾಗಿ ಅನುದಾನ ತರಿಸಿಕೊಲ್ಳಲು ಸಾಧ್ಯ ಆಗದಿದ್ದರೆ ನಮ್ಮನ್ನು ಜತೆಗೆ ಕರಿಸಿಕೊಳ್ಳಿ. ನಾವು ಸಚಿವರಿಗೆ ಮನವರಿಗೆ ಮಾಡುತ್ತೇವೆ ಎಂದರು. ಗೋಷ್ಟಿಯಲ್ಲಿ ಪ್ರಕಾಶ್ ಸಾಲಿಯಾನ್, ಅಪ್ಪಿ, ನವೀನ್ ಡಿಸೋಜಾ, ವಿಕಾಸ್ ಶೆಟ್ಟಿ, ಪದ್ಮನಾಭ, ಶುಭೋದಯ ಆಳ್ವ ಉಪಸ್ಥಿತರಿದ್ದರು.
ಅವಶ್ಯಕತೆ ಇದ್ದಾಗ ಸಿದ್ದು, ಡಿಕೆಶಿಗೆ ದೆಹಲಿ ಬುಲಾವ್: ನಾಯಕತ್ವ ಬದಲಾವಣೆ ಪ್ರಶ್ನೆಗೆ ಖರ್ಗೆ ಖಡಕ್ ಪ್ರತಿಕ್ರಿಯೆ
ಕರ್ನಾಟಕ ಕಾಂಗ್ರೆಸ್ ನಾಯಕರಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಬೂದಿ ಮುಚ್ಚಿದ ಕೆಡಂದಂತಿದೆ. ಇದರ ಬಗ್ಗೆ ಮಲ್ಲಿಕಾರ್ಜುನ್ ಖರ್ಗೆಯವರು ಮಾಯನಾಡಿದ್ದು, ಅಗತ್ಯವಿದ್ದಾಗ ರಾಜ್ಯ ನಾಯಕರನ್ನು ದೆಹಲಿಗೆ ಕರೆಸಿಕೊಳ್ಳುವುದಾಗಿ ತಿಳಿಸಿದ್ದಾರೆ. ಮನರೇಗಾ ಯೋಜನೆಯನ್ನು ಬಿಜೆಪಿ ಸರ್ಕಾರ ದುರುದ್ದೇಶದಿಂದ ಹತ್ಯೆ ಮಾಡುತ್ತಿದೆ., ಬಡವರ ಹಿತಾಸಕ್ತಿಗೆ ಧಕ್ಕೆ ತರುತ್ತಿದೆ ಎಂದು ಕೇಂದ್ರ ಸರ್ಕಾರದ ನಡೆ ವಿರುದ್ಧ ಕಿಡಿಕಾರಿದರು. ಈ ಹೋರಾಟವನ್ನು ಕೊನೆಯವರೆಗೂ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದರು.
ಬೆಂಗಳೂರು: ಬಿಬಿಎಂಪಿಯನ್ನು ಜಿಬಿಎ ಆಗಿ ಮಾರ್ಪಡಿಸಿ, ಸುತ್ತಮುತ್ತಲ ಹಳ್ಳಿಗಳನ್ನು ಸೇರಿಸಿ 369 ವಾರ್ಡ್ಗಳನ್ನು ರಚಿಸಲಾಗಿದೆ. ಹಿಂದೆ ವಾರ್ಡ್ ಮರುವಿಂಗಡಣೆ ಮತ್ತು ತಾಂತ್ರಿಕ ಕಾರಣಗಳಿಂದ ಚುನಾವಣೆ ನೆನೆಗುದಿಯಲ್ಲಿತ್ತು, ಇದೀಗ ಕರ್ನಾಟಕ ಸರ್ಕಾರಕ್ಕೆ ಸುಪ್ರಿಂ ಕೋರ್ಟ್ ಒತ್ತಡ ಹೇರಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ'ದ ಅಡಿಯಲ್ಲಿ ಬರುವ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಜೂನ್ 30ರೊಳಗೆ ಪೂರ್ಣಗೊಳಿಸಲು ರಾಜ್ಯ ಸರ್ಕಾರ ಮತ್ತು
ಅಳಿವಿನಂಚಿನಲ್ಲಿದೆ ಕರಾವಳಿಯ ರಾಮಪತ್ರೆ
100ಕ್ಕೂ ಅಧಿಕ ಗಿಡಗಳನ್ನು ನೆಟ್ಟು, ಪೋಷಣೆ ಮಾಡುತ್ತಿರುವ ಪುತ್ತೂರಿನ ಪದ್ಮನಾಭ ನಾಯ್ಕ
ವಿದೇಶದಲ್ಲಿ ಓದುವ ಭಾರತೀಯ ವಿದ್ಯಾರ್ಥಿಗಳಿಗೆ ಮತ್ತೆ ಶಾಕ್ ಎದುರಾಗಿದ್ದು, ಆಸ್ಟ್ರೇಲಿಯಾ ಸರ್ಕಾರ ಭಾರತ ಸೇರಿದಂತೆ ಕೆಲವು ದೇಶಗಳ ವಿದ್ಯಾರ್ಥಿಗಳನ್ನು ಎವಿಡೆನ್ಸ್ ಲೆವಲ್ 3 ಎಂಬ ಅತ್ಯಂತ ಅಪಾಯಕಾರಿ ವರ್ಗದಲ್ಲಿ ಸೇರಿಸಿದ್ದು, ವೀಸಾ ನಿಯಮಗಳನ್ನು ಕಠಿಣಗೊಳಿಸಿದೆ. ಇದರಿಂದಾಗಿ ಹೆಚ್ಚಿನ ದಾಖಲೆಗಳು ಬೇಕಾಗಿದ್ದು, ವೀಸಾ ಪ್ರಕ್ರಿಯೆ ವಿಳಂಬವಾಗಲಿದೆ. ಇದು ವಿದ್ಯಾರ್ಥಿಗಳ ಕನಸುಗಳಿಗೆ ಅಡ್ಡಿಯಾಗುವ ಸಾಧ್ಯತೆ ಇದೆ. ಏನಿದು ಎವಿಡೆನ್ಸ್ ಲೆವಲ್3 ಎಂಬುದರ ಕಂಪ್ಲೀಟ್ ಡಿಟೇಲ್ಸ್ ತಿಳಿಯಿರಿ..
ಕಲಬುರಗಿ | ಮುಖ್ಯಮಂತ್ರಿಗಳ ಕಾರ್ಯಕ್ರಮದ ವೇದಿಕೆಯ ಬೋರ್ಡ್ನಲ್ಲಿ ಎಡವಟ್ಟು: ತಪ್ಪು ಅಂಶಗಳ ನಮೂದು
ಕಲಬುರಗಿ: ಜಿಲ್ಲೆಯ ಯಡ್ರಾಮಿಯಲ್ಲಿ ಸೋಮವಾರ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನಾ ಕಾರ್ಯಕ್ರಮದ ಮುಖ್ಯ ವೇದಿಕೆಯಲ್ಲಿ ಅಳವಡಿಸಲಾಗಿದ್ದ ಫಲಕಗಳಲ್ಲಿ ಕಂಡುಬಂದ ತಪ್ಪು ಮಾಹಿತಿಯಿಂದ ಜನರಲ್ಲಿ ಗೊಂದಲ ಉಂಟಾಯಿತು. ಯಡ್ರಾಮಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಆಶ್ರಯದಲ್ಲಿ ರೂ.163.55 ಕೋಟಿ ವೆಚ್ಚದಲ್ಲಿ 17 ಹೊಸ ಪ್ರಜಾಸೌಧಗಳ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗುತ್ತಿದೆ. ಆದರೆ ಕಾರ್ಯಕ್ರಮದ ಬ್ಯಾನರ್ನಲ್ಲಿ 16 ಪ್ರಜಾಸೌಧಗಳ ನಿರ್ಮಾಣಕ್ಕೆ ಅಡಿಗಲ್ಲು ಎಂದು ಉಲ್ಲೇಖಿಸಲಾಗಿದೆ. ಅದೇ ರೀತಿ, ಅಂದಾಜು ರೂ.600ರಿಂದ 900 ಕೋಟಿ ವೆಚ್ಚದಲ್ಲಿ 300 ಕೆಪಿಎಸ್ ಶಾಲೆಗಳ ಶಂಕುಸ್ಥಾಪನೆ ನಡೆಯುತ್ತಿದ್ದರೂ, ಬ್ಯಾನರ್ನಲ್ಲಿ ‘ರೂ.600 ರಿಂದ 900 ರೂ. ವೆಚ್ಚದಲ್ಲಿ 300 ಶಾಲೆಗಳ ಶಂಕುಸ್ಥಾಪನೆ’ ಎಂದು ತಪ್ಪಾಗಿ ನಮೂದಿಸಲಾಗಿದೆ. ಮುಖ್ಯಮಂತ್ರಿ ಭಾಗವಹಿಸುವಂತಹ ಮಹತ್ವದ ಕಾರ್ಯಕ್ರಮದಲ್ಲಿ ಈ ರೀತಿಯ ತಪ್ಪು ಹಾಗೂ ಅಪೂರ್ಣ ಮಾಹಿತಿಯನ್ನು ಪ್ರದರ್ಶಿಸಿರುವುದು ಅಸಮಾಧಾನಕ್ಕೆ ಕಾರಣವಾಗಿದ್ದು, ಸ್ಥಳೀಯರು ಆಡಳಿತದ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ತನ್ನನ್ನು ‘ವೆನೆಝುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಹೇಳಿಕೊಂಡ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್!
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಾದ ಟ್ರುತ್ ಸೋಶಿಯಲ್ನಲ್ಲಿ ತಮ್ಮನ್ನು ‘ವೆನೆಝುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಬಣ್ಣಿಸಿಕೊಂಡಿರುವುದು ಅಂತರರಾಷ್ಟ್ರೀಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ರವಿವಾರ ಹಂಚಿಕೊಂಡಿರುವ ಪೋಸ್ಟ್ನಲ್ಲಿ, “ವೆನೆಝುವೆಲಾದ ಹಂಗಾಮಿ ಅಧ್ಯಕ್ಷ – ಜನವರಿ 2026ರಿಂದ ಅಧಿಕಾರ ವಹಿಸಿಕೊಂಡವರು” ಎಂಬ ಪದನಾಮದೊಂದಿಗೆ ಟ್ರಂಪ್ ಅವರ ಅಧಿಕೃತ ಭಾವಚಿತ್ರವನ್ನು ಪ್ರಕಟಿಸಲಾಗಿದೆ. ಚಿತ್ರದಲ್ಲಿ ಅವರನ್ನು ಅಮೆರಿಕದ 45ನೇ ಹಾಗೂ 47ನೇ ಅಧ್ಯಕ್ಷರೆಂದು ಉಲ್ಲೇಖಿಸಲಾಗಿದ್ದು, ಜನವರಿ 20, 2025ರಂದು ಅಧಿಕಾರ ಸ್ವೀಕರಿಸಿದ್ದಾರೆ ಎಂದು ವಿವರಿಸಲಾಗಿದೆ. ಇತ್ತೀಚೆಗೆ ಅಮೆರಿಕ ವೆನೆಝುವೆಲಾದಲ್ಲಿ ನಡೆಸಿದ ಭಾರೀ ಸೇನಾ ಕಾರ್ಯಾಚರಣೆಯ ನಂತರ ಈ ಬೆಳವಣಿಗೆ ನಡೆದಿದೆ. ಆ ಕಾರ್ಯಾಚರಣೆಯಲ್ಲಿ ವೆನೆಝುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಹಾಗೂ ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಅವರನ್ನು ಬಂಧಿಸಿ ನ್ಯೂಯಾರ್ಕ್ಗೆ ಕರೆದೊಯ್ಯಲಾಗಿದೆ. ಅವರ ವಿರುದ್ಧ ಮಾದಕ ದ್ರವ್ಯ–ಭಯೋತ್ಪಾದನಾ ಪಿತೂರಿ ಆರೋಪಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಮೆರಿಕ ಅಧಿಕಾರಿಗಳು ತಿಳಿಸಿದ್ದಾರೆ. ವೆನೆಝುವೆಲಾದಲ್ಲಿ “ಸುರಕ್ಷಿತ ಹಾಗೂ ಸರಿಯಾದ ಆಡಳಿತ ಪರಿವರ್ತನೆ” ಸಾಧ್ಯವಾಗುವವರೆಗೆ ಅಮೆರಿಕ ಮೇಲ್ವಿಚಾರಣೆ ವಹಿಸಿಕೊಳ್ಳಲಿದೆ ಎಂದು ಟ್ರಂಪ್ ಹೇಳಿದ್ದಾರೆ. ನಾಯಕತ್ವದ ನಿರ್ವಾತವು ದೇಶದ ಹಿತಾಸಕ್ತಿಗಳಿಗೆ ಧಕ್ಕೆಯಾಗಲಿದೆ ಎಂಬುದನ್ನು ಅವರು ಉಲ್ಲೇಖಿಸಿದ್ದಾರೆ. ಮಡುರೊ ಅವರನ್ನು ತೆಗೆದುಹಾಕಿದ ನಂತರ, ವೆನೆಝುವೆಲಾದ ಉಪಾಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರನ್ನು ಕಳೆದ ವಾರ ಮಧ್ಯಂತರ ಅಧ್ಯಕ್ಷೆಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮಧ್ಯಂತರ ಆಡಳಿತವು 30ರಿಂದ 50 ಮಿಲಿಯನ್ ಬ್ಯಾರೆಲ್ಗಳಷ್ಟು ತೈಲವನ್ನು ಅಮೆರಿಕಕ್ಕೆ ಹಸ್ತಾಂತರಿಸಲಿದೆ ಎಂದು ಟ್ರಂಪ್ ಹೇಳಿದ್ದಾರೆ. ಮಾರುಕಟ್ಟೆ ದರದಲ್ಲಿ ತೈಲ ಮಾರಾಟ ಮಾಡಿ, ಅದರ ಆದಾಯವನ್ನು ಎರಡೂ ದೇಶಗಳಿಗೆ ಲಾಭವಾಗುವಂತೆ ನಿರ್ವಹಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಯೋಜನೆಯನ್ನು ತಕ್ಷಣ ಜಾರಿಗೊಳಿಸುವಂತೆ ಇಂಧನ ಕಾರ್ಯದರ್ಶಿಗೆ ಸೂಚನೆ ನೀಡಲಾಗಿದೆ. ಇದಲ್ಲದೆ, ಟ್ರಂಪ್ ತಮ್ಮ ಪೋಸ್ಟ್ನಲ್ಲಿ ಕ್ಯೂಬಾಗೆ ಎಚ್ಚರಿಕೆ ನೀಡಿದ್ದು, ವೆನೆಝುವೆಲಾದಿಂದ ಅಲ್ಲಿಗೆ ಸಾಗುತ್ತಿದ್ದ ತೈಲ ಸರಬರಾಜು ಮತ್ತು ಹಣಕಾಸು ಸಹಾಯವನ್ನು ಕಡಿತಗೊಳಿಸುವುದಾಗಿ ತಿಳಿಸಿದ್ದಾರೆ. ಆದರೆ ಈ ಘೋಷಣೆಯ ಹೊರತಾಗಿಯೂ, ಟ್ರಂಪ್ ಅವರನ್ನು ವೆನೆಝುವೆಲಾದ ಹಂಗಾಮಿ ಅಧ್ಯಕ್ಷ ಎಂದು ಯಾವುದೇ ಅಧಿಕೃತ ಅಥವಾ ಸಾರ್ವಜನಿಕ ದಾಖಲೆಗಳಲ್ಲಿ ಪಟ್ಟಿ ಮಾಡಲಾಗಿಲ್ಲ. ವಿಕಿಪೀಡಿಯಾ ಸೇರಿದಂತೆ ಲಭ್ಯವಿರುವ ದಾಖಲೆಗಳಲ್ಲಿ ಅಮೆರಿಕದ ಸೇನಾ ಕಾರ್ಯಾಚರಣೆ, ಮಡುರೊ ಬಂಧನ ಹಾಗೂ ಕ್ಯಾರಕಾಸ್ನಲ್ಲಿ ಜಾರಿಯಲ್ಲಿರುವ ವಿವಾದಿತ ಮಧ್ಯಂತರ ಆಡಳಿತದ ಕುರಿತ ಮಾಹಿತಿಯೇ ಉಲ್ಲೇಖವಾಗಿದೆ.
ಕೋಗಿಲಿನಲ್ಲಿ ಬಾಂಗ್ಲಾ ವಲಸಿಗರು, ಎನ್ಐಎ ತನಿಖೆಯೇ ಪರಿಹಾರ: ಬಿಜೆಪಿ ಸತ್ಯಶೋಧನಾ ಸಮಿತಿಯಿಂದ 5 ಶಿಫಾರಸುಗಳು
ಕೋಗಿಲು ಬಡಾವಣೆ ಅಕ್ರಮ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸತ್ಯಶೋಧನಾ ಸಮಿತಿ ವರದಿ ಸಲ್ಲಿಸಿದೆ. 108 ಪುಟಗಳ ವರದಿಯಲ್ಲಿ 5 ಶಿಫಾರಸುಗಳಿದ್ದು, ಪ್ರಕರಣದ ತನಿಖೆಯನ್ನು ಎನ್ಐಎಗೆ ನೀಡಬೇಕೆಂದು ಆಗ್ರಹಿಸಿದೆ. ಅಕ್ರಮ ಬಾಂಗ್ಲಾ ವಲಸಿಗರನ್ನು ಸ್ಥಳಾಂತರಿಸಿ, ಸ್ಥಳೀಯ ಮುಸ್ಲಿಮರನ್ನು ಅಲ್ಲಿಗೆ ಕರೆತರಲಾಗಿದೆ ಎಂದು ಸಮಿತಿ ಆರೋಪಿಸಿದೆ.
ISRO: ಪಿಎಸ್ಎಲ್ವಿಗೆ ದ್ವಿತೀಯ ವಿಘ್ನ: ಭಾರತದ ನಂಬಿಕಾರ್ಹ ರಾಕೆಟ್ ಮುಗ್ಗರಿಸಿದಾಗ
ಇಸ್ರೋದ 16 ಉಪಗ್ರಹ ಉಡಾವಣೆ ಪ್ರಮುಖ ಯೋಜನೆ ವಿಫಲವಾಗಿದೆ. ಈ ಬಗ್ಗೆ ಲೇಖಕರು ಬಾಹ್ಯಾಕಾಶ ಮತ್ತು ರಕ್ಷಣಾ ವಿಶ್ಲೇಷಕ ಗಿರೀಶ್ ಲಿಂಗಣ್ಣ ಅವರ ಬರಹ ಇಲ್ಲಿದೆ. ಇಂದು ಬೆಳಿಗ್ಗೆ ಶ್ರೀಹರಿಕೋಟಾದಲ್ಲಿ ಅತ್ಯಂತ ವಿಷಾದಕರ ಸಂಗತಿ ನಡೆದಿದೆ. ಕೇವಲ ಎಂಟು ತಿಂಗಳ ಅವಧಿಯಲ್ಲಿ, ಭಾರತದ ಅತ್ಯಂತ ನಂಬಿಕಾರ್ಹ ರಾಕೆಟ್ ಆಗಿರುವ ಪಿಎಸ್ಎಲ್ವಿ ಎರಡನೇ ಬಾರಿಗೆ ತನ್ನ ಹಾರಾಟದ ಮಧ್ಯದಲ್ಲಿ
ಉತ್ತರ ಕರ್ನಾಟಕದಲ್ಲಿಯೇ ಮೊಟ್ಟ ಮೊದಲು ಸ್ಟ್ರಾಬೆರಿ ಬೆಳೆದು ಯಶಸ್ಸು ಕಂಡ ಬೀದರ್ ರೈತ
ಬೀದರ್: ಬಿಸಿಲು ನಾಡು ಎಂದೇ ಖ್ಯಾತಿ ಪಡೆದ ಉತ್ತರ ಕರ್ನಾಟಕ ಭಾಗದ ಬೀದರಿನಲ್ಲಿ ಮೊಟ್ಟ ಮೊದಲ ಬಾರಿಗೆ ರೈತರೊಬ್ಬರು ಸ್ಟ್ರಾಬೆರಿ ಬೆಳೆದು ಆದಾಯ ಗಳಿಸುವ ಮೂಲಕ ಯಶಸ್ಸು ಕಂಡಿದ್ದಾರೆ. ಮೂಲತಃ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ನಿಡೋದಾ ಗ್ರಾಮದವರಾದ ರೈತ ವೈಜಿನಾಥ್ ನಿಡೋದಾ ಅವರು, ಜಿಲ್ಲೆಯ ಕಮಠಾಣಾ ಗ್ರಾಮದ ತಮ್ಮ ಹೊಲದಲ್ಲಿ ಸ್ಟ್ರಾಬೆರಿ ಬೆಳೆದು ಯಶಸ್ಸು ಕಂಡ ಪ್ರಗತಿಪರ ರೈತರಾಗಿದ್ದಾರೆ. ಸ್ಟ್ರಾಬೆರಿ ಶೀತ ಪ್ರದೇಶದಲ್ಲಿ ಬೆಳೆಯುವ ಅತೀ ನಾಜೂಕಿನ ಬೆಳೆಯಾಗಿದ್ದರಿಂದ ಬರೀ ಬಿಸಿಲು ಇರುವ ಉತ್ತರ ಕರ್ನಾಟಕ ಭಾಗದಲ್ಲಿ ಸ್ಟ್ರಾಬೆರಿ ಬೆಳೆಯುವ ಯೋಚನೆ ಕೂಡ ಯಾರು ಮಾಡಲಿಕ್ಕಿಲ್ಲ. ಆದರೆ ರೈತ ವೈಜಿನಾಥ್ ಅವರು ಬಾಗಲಕೋಟೆಯಲ್ಲಿ ರೈತರೊಬ್ಬರು ಸ್ಟ್ರಾಬೆರಿ ಬೆಳೆದದ್ದು ಸಾಮಾಜಿಕ ಜಾಲತಾಣಗಳಲ್ಲಿ ಗಮನಿಸಿದ್ದರು. ಬಾಗಲಕೋಟೆಯ ವಾತಾವರಣಕ್ಕಿಂತ ಬೀದರ್ ವಾತಾವರಣ ಚೆನ್ನಾಗಿದೆ. ಹಾಗಾಗಿ ನಮ್ಮಲ್ಲಿಯೂ ಸ್ಟ್ರಾಬೆರಿ ಬೆಳೆಯಬಹುದು ಎಂದು ಯೋಚಿಸಿ, ಪ್ರಾಯೋಗಿಕವಾಗಿ ಮೊದಲಿಗೆ ಅರ್ಧ ಎಕರೆ ಜಮೀನಿನಲ್ಲಿ ಸ್ಟ್ರಾಬೆರಿ ಪ್ಲಾಂಟೇಷನ್ ಮಾಡಿದ್ದರು. 2024ರಲ್ಲಿ ಮೊಟ್ಟ ಮೊದಲಿಗೆ ಪ್ರಾಯೋಗಿಕವಾಗಿ ಇವರು ತಮ್ಮ ಅರ್ಧ ಎಕರೆ ಜಮೀನಿನಲ್ಲಿ 3 ಲಕ್ಷ ರೂ. ಹಣ ಭರಿಸಿ ಸ್ಟ್ರಾಬೆರಿ ಬೆಳೆಯ ಪ್ಲಾಂಟೇಷನ್ ಮಾಡುತ್ತಾರೆ. ಈ ಅರ್ಧ ಎಕರೆ ಜಮೀನಿನಲ್ಲಿ ಬೆಳೆದ ಸ್ಟ್ರಾಬೆರಿಯಿಂದ ಬಂದ ಹಣ 6 ಲಕ್ಷ ರೂ. ಆಗಿತ್ತು. ಎಂದರೆ 3 ಲಕ್ಷ ರೂ. ಖರ್ಚು ಹೋಗಿ 3 ಲಕ್ಷ ರೂ. ಆದಾಯ ಗಳಿಸುತ್ತಾರೆ. ಹಾಗಾಗಿ ಸ್ಟ್ರಾಬೆರಿ ಬೆಳೆಯಲು ವಾತಾ ವರಣ ಹಾಗೂ ಅದಕ್ಕೆ ತಕ್ಕಂತೆ ಮಣ್ಣಿನ ಫಲವತ್ತತೆ ನಮ್ಮಲ್ಲಿ ಇದೆ ಎಂದು ಗಮನಿಸಿದ ಅವರು 2025 ರಲ್ಲಿ 2 ಎಕರೆ ಜಮೀನಿನಲ್ಲಿ ಸ್ಟ್ರಾಬೆರಿ ಪ್ಲಾಂಟೇಷನ್ ಮಾಡುತ್ತಾರೆ. ಇದೀಗ ಆ ಪ್ಲಾಂಟೇಷನ್ ಮಾಡಿದ ಸ್ಟ್ರಾಬೆರಿ ಬೆಳೆಯ ಫಸಲು ಬಂದಿದ್ದು, ದಿನಾಲೂ ಸುಮಾರು 15 ರಿಂದ 16 ಸಾವಿರ ರೂ. ಆದಾಯ ಗಳಿಸುತ್ತಿದ್ದಾರೆ. 2024ರಲ್ಲಿ ಅರ್ಧ ಎಕರೆ ಭೂಮಿಯಲ್ಲಿ 10 ಸಾವಿರ ಸ್ಟ್ರಾಬೆರಿ ಸಸಿಗಳು ಪ್ಲಾಂಟೇಷನ್ ಮಾಡಿದ್ದೆ. ಅದರಲ್ಲಿ 3 ಸಾವಿರ ಸಸಿಗಳು ಎಂದರೆ ಶೇ.30ರಷ್ಟು ಸಸಿಗಳು ಸತ್ತು ಹೋಗಿದ್ದವು. ಹಾಗಾಗಿ ಹೋದ ವರ್ಷ ಎಲ್ಲಿ ತಪ್ಪಿದ್ದೆವು ಎಂದು ಅರಿತು ಈ ವರ್ಷ ಸುಧಾರಿಸಿಕೊಂಡೆವು. ಈ ವರ್ಷ ಬರೀ ಶೇ.5ರಷ್ಟು ಮಾತ್ರ ಸಸಿಗಳ ಡೆತ್ ರೇಟ್ ಇದೆ. ಮುಂದಿನ ದಿನ ಗಳಲ್ಲಿ ಈ ಡೆತ್ ರೇಟ್ ಕೂಡ ತಪ್ಪಿಸುವ ಪ್ರಯತ್ನ ಮಾಡುತ್ತೇವೆ ಎಂದು ಅವರು ಭರವಸೆಯ ಮಾತುಗಳನ್ನಾಡುತ್ತಾರೆ. ಈ ವರ್ಷ ಎರಡು ಎಕರೆ ಭೂಮಿ ಯಲ್ಲಿ 30 ಸಾವಿರ ಸ್ಟ್ರಾಬೆರಿ ಸಸಿಗಳನ್ನು ಪ್ಲಾಂಟೇಷನ್ ಮಾಡಿದ್ದೇವೆ. ಪ್ರತಿ ಸಸಿಗೆ 13 ರೂ. ನಂತೆ 3.9 ಲಕ್ಷ ರೂ. ಬರೀ ಸಸಿ ತರುವುದಕ್ಕೆ ವೆಚ್ಚವಾಗಿದೆ. ಎಕರೆಗೆ 4 ರಿಂದ 5 ಲಕ್ಷ ರೂ. ವೆಚ್ಚದಲ್ಲಿ ಈ ಸ್ಟ್ರಾಬೆರಿ ಪ್ಲಾಂಟೇಷನ್ ಮಾಡಿದ್ದೇವೆ. ಶೇ. 90 ರಷ್ಟು ಸಾವಯವ ಪದ್ಧತಿ ಅಳವಡಿಸಿದ್ದರಿಂದ ಖರ್ಚು ಕಡಿಮೆಯಾಗಿದೆ. ಎರಡು ಎಕರೆ ಜಮೀನಿನಲ್ಲಿ ಒಟ್ಟು 10 ಲಕ್ಷ ರೂ. ಖರ್ಚಾದರೂ ಇದಕ್ಕೆ ಒಂದು ಪಟ್ಟು ಹೆಚ್ಚು ಹಣ (20ಲಕ್ಷ ರೂ.) ಬರುವ ನಿರೀಕ್ಷೆ ಇದೆ ಎಂದು ತಿಳಿಸಿದ ಅವರು, 10 ಲಕ್ಷ ರೂ. ವೆಚ್ಚ ಕಳೆದರೂ ಕೂಡ 10 ಲಕ್ಷ ರೂ. ಆದಾಯವಾಗಬಹುದು ಎನ್ನುವ ನಿರೀಕ್ಷೆಯಲ್ಲಿದ್ದಾರೆ. ಸ್ಟ್ರಾಬೆರಿ ಬೆಳೆಗೆ ನಮ್ಮ ಬೀದರ್ ಜಿಲ್ಲೆಯ ವಾತಾವರಣ, ಮಣ್ಣು, ನೀರು ಉತ್ತಮವಾಗಿದೆ. ಹಾಗಾಗಿ ಜಿಲ್ಲೆಯ ಯಾವುದೇ ರೈತರು ಈ ಬೆಳೆ ಬೆಳೆಯಬಹುದು. ಸ್ಟ್ರಾಬೆರಿ ಬೆಳೆಯಲು 15 ಡಿಗ್ರಿ ಯಿಂದ 30 ಡಿಗ್ರಿ ವರೆಗೆ ತಾಪಮಾನ ಇರಬೇಕು. ಈ ವರ್ಷ ನಮ್ಮ ಜಿಲ್ಲೆಯಲ್ಲಿ ತುಂಬಾ ಮಳೆಯಾಗಿದ್ದರಿಂದ ಈ ಚಳಿಗಾಲದಲ್ಲಿ ಕೆಲ ದಿನ 7 ಡಿಗ್ರಿ ತಾಪಮಾನ ಬಂದಿತ್ತು. ಹಾಗಾಗಿ ನಮ್ಮ ಸ್ಟ್ರಾಬೆರಿ ಇಳುವರಿಯಲ್ಲಿ ಸ್ವಲ್ಪ ಕುಂಠಿತವಾಗಿತ್ತು. ಆದರೆ ಈವಾಗ ಪರವಾಗಿಲ್ಲ, ವಾತಾವರಣ ಚೆನ್ನಾಗಿದೆ. ಹಾಗಾಗಿ ಇಳುವರಿ ಚೆನ್ನಾಗಿ ಬರುತ್ತಿದೆ ಎಂದು ಅವರು ಹೇಳುತ್ತಾರೆ. ಭಾರತದಲ್ಲಿ ‘ಮದರ್ ಆಫ್ ಸ್ಟ್ರಾಬೆರಿ’ ಎಂದು ಮಹಾರಾಷ್ಟ್ರದ ‘ಮಹಾಬಲೇಶ್ವರ್’ ನಗರಕ್ಕೆ ಕರೆಯುತ್ತಾರೆ. ಸ್ಟ್ರಾಬೆರಿ ಬೆಳೆಗೆ ಅಲ್ಲಿನ ವಾತಾವರಣ ತುಂಬಾ ಚೆನ್ನಾಗಿರುವುದರಿಂದ ಅಲ್ಲಿ ಹೆಚ್ಚಾಗಿ ಸ್ಟ್ರಾಬೆರಿ ಬೆಳೆಯುತ್ತಾರೆ. ನಾವು ಕೂಡ ಮಹಾಬಲೇಶ್ವರ್ದಿಂದಲೇ ಸಸಿಗಳು ತಂದಿದ್ದೇವೆ. ಇವಾಗ ಮಹಾಬಲೇಶ್ವರ್ ಕ್ಕಿಂತಲೂ ಚೆನ್ನಾಗಿ ನಮ್ಮಲ್ಲಿ ಫಸಲು ಬರುತ್ತಿದೆ. ಉತ್ತರ ಭಾರತದ ತಂಪು ಪ್ರದೇಶಗಳಲ್ಲಿಯೂ (ಹಿಮಾಚಲ, ಕಾಶ್ಮೀರ) ಸ್ಟ್ರಾಬೆರಿ ಬೆಳೆಯುತ್ತಾರೆ. ಉತ್ತರ ಭಾರತದ ಕಡೆಗೆ ಹೋಗಿ ಅಲ್ಲಿ ಬೆಳೆದ ಸ್ಟ್ರಾಬೆರಿ ಬಗ್ಗೆ ಅಧ್ಯಯನ ಮಾಡಿ, ನಮ್ಮಲ್ಲಿ ಏನು ಬದಲಾವಣೆ ಮಾಡಬೇಕು ಅದು ಮುಂದಿನ ದಿನಗಳಲ್ಲಿ ಮಾಡುತ್ತೇನೆ ಎಂದು ಅವರು ತಿಳಿಸಿದ್ದಾರೆ. ಸೆ.15 ರಿಂದ ಅ.15 ರಲ್ಲಿ ಸ್ಟ್ರಾಬೆರಿ ಪ್ಲಾಂಟೇಷನ್ ಮಾಡುವುದಕ್ಕೆ ಒಳ್ಳೆಯ ಸಮಯವಾಗಿರುತ್ತದೆ. ಯಾಕೆಂದರೆ ಚಳಿಗಾಲ ಪ್ರಾರಂಭವಾಗುವ ಮುಂಚೆ ಸ್ಟ್ರಾಬೆರಿ ಪ್ಲಾಂಟೇಷನ್ ಮಾಡಬೇಕು. ಕಾರಣ, ಚಳಿಗಾಲದಲ್ಲಿಯೇ ಅದು ಹೂ ಮತ್ತು ಹಣ್ಣು ಬಿಡುವುದಕ್ಕೆ ಪ್ರಾರಂಭ ಮಾಡುತ್ತದೆ. ಚಳಿಗಾಲ ಎಷ್ಟು ದಿವಸ ಇರುತ್ತದೆಯೋ ಅಷ್ಟು ದಿವಸ ಅದು ಒಳ್ಳೆಯ ಹಣ್ಣುಗಳು ಬಿಡುತ್ತದೆ. ಮಾರ್ಚ್ ತಿಂಗಳಲ್ಲಿ ಬೇಸಿಗೆ ಪ್ರಾರಂಭವಾಗುವುದರಿಂದ ಇಳುವರಿ ಕಡಿಮೆಯಾಗಿತ್ತದೆ ಎಂದು ಅವರು ವಿವರಿಸುತ್ತಾರೆ. ವೈಜಿನಾಥ್ ನಿಡೋದಾ ಅವರು ಜಿಲ್ಲಾ ಪಂಚಾಯತ್ನಲ್ಲಿ ಸರಕಾರಿ ಹುದ್ದೆಯಲ್ಲಿದ್ದರು. ಇವರಿಗೆ ಮೊದಲಿನಿಂದಲೇ ಕೃಷಿಯಲ್ಲಿ ಆಸಕ್ತಿ ಇತ್ತು. ಎರಡು ವರ್ಷದ ಹಿಂದೆ ಸರಕಾರಿ ಹುದ್ದೆಯಿಂದ ನಿವೃತ್ತಿ ಪಡೆದ ಇವರು ಸಂಪೂರ್ಣವಾಗಿ ಕೃಷಿ ಮಾಡುವುದರಲ್ಲಿಯೇ ತೊಡಗಿಸಿಕೊಂಡಿದ್ದಾರೆ. ಇವರ ಮಗನೊಬ್ಬ ಸಿವಿಲ್ ಇಂಜಿನಿಯರ್ ಪದವೀಧರನಾಗಿದ್ದರು ಕೂಡ ಕೃಷಿಯಲ್ಲಿನ ಆಸಕ್ತಿಯಿಂದ ಕೃಷಿ ಕೆಲಸದಲ್ಲಿಯೇ ತೊಡಗಿದ್ದಾರೆ. ಹಾಗೆಯೇ ವೈಜಿನಾಥ್ ನಿಡೋದಾ ಅವರ ಪತ್ನಿ ಹಾಗೂ ಇನ್ನೊಬ್ಬ ಮಗ ಕೂಡ ಇವರ ಕೃಷಿ ಕೆಲಸಕ್ಕೆ ಸಾಥ್ ನೀಡುತ್ತಿದ್ದಾರೆ. ಸಾವಯವ ಕೃಷಿ ಪದ್ಧತಿಯೇ ಬೇಕು: ಈ ಸ್ಟ್ರಾಬೆರಿ ಬೆಳೆಗೆ ಸಾವಯವ ಕೃಷಿ ಪದ್ಧತಿಯೇ ಬೇಕು. ಕೆಮಿಕಲ್ ಹೆಚ್ಚಾಗಿ ಈ ಬೆಳೆಗೆ ನಡೆಯುವುದಿಲ್ಲ. ಆದ್ದರಿಂದ ನಾವು ಇದಕ್ಕೆ ಎಂಟು ದಿವಸಕ್ಕೆ ಒಂದು ಸಲ ಜೀವಾಮೃತವೆ ನೀಡುತ್ತೇವೆ. ದೇಸಿ ಗೋಮೂತ್ರ, ಸೆಗಣಿ, ದೇಸಿ ಬೆಲ್ಲ ಹಾಗೂ ಹೊಲದಲ್ಲಿನ ಒಂದಿಷ್ಟು ಮಣ್ಣು ಸೇರಿಸಿ ಒಂದು ವಾರ ಇಟ್ಟಾಗ ಅದು ಜೀವಾಮೃತವಾಗಿ ತಯಾರಾಗುತ್ತದೆ. ಅದನ್ನೇ ಈ ಬೆಳೆಗೆ ಸಿಂಪಡಣೆ ಮಾಡುತ್ತೇವೆ. ಸ್ಟ್ರಾಬೆರಿ ಬೆಳೆಯುವುದಕ್ಕೆ ಮಣ್ಣಿನ ಪರೀಕ್ಷೆ ತುಂಬಾ ಮಹತ್ವದ್ದಾಗಿರುತ್ತದೆ. ಅದಕ್ಕೆ ಮಣ್ಣಿನ ಗುಣಮಟ್ಟ 6 ರಿಂದ 6.5 ಮಾತ್ರ ಇರಬೇಕು. ಅದಕ್ಕಿಂತ ಹೆಚ್ಚು ಕಡಿಮೆಯಾದರೂ ಸ್ಟ್ರಾಬೆರಿ ಬೆಳೆಯುವುದಿಲ್ಲ. ನಮ್ಮ ಹೊಲದಲ್ಲಿ ಮಣ್ಣಿನ ಗುಣಮಟ್ಟ 6.5 ಇದೆ. ಸ್ಟ್ರಾಬೆರಿ ಬೆಳೆಯುವುದಕ್ಕೆ ನಮ್ಮ ಜಿಲ್ಲೆಯ ಮಣ್ಣು ಅತ್ತ್ಯುತ್ತಮವಾಗಿದೆ ಎಂದು ಅವರು ಮಾಹಿತಿ ನೀಡಿದರು. ಹೊಲದಲ್ಲಿಯೇ ವೆದರ್ ರಿಪೋರ್ಟ್ ಯಂತ್ರ: ಅವರ ಹೊಲದಲ್ಲಿಯೇ ವೆದರ್ ರಿಪೋರ್ಟ್ ಯಂತ್ರ ಅಳವಡಿಸಲಾಗಿದ್ದು, ಆ ವೆದರ್ ರಿಪೋರ್ಟ್ ಯಂತ್ರವು ಸ್ಟ್ರಾಬೆರಿ ಬೆಳೆಗೆ ಎಷ್ಟು ಪ್ರಮಾಣದ ನೀರು ಬೇಕು, ಎಷ್ಟು ತೇವಾಂಶ ಇದೆ, ಮಳೆ ಬರುವ ಮುನ್ಸೂಚನೆ ಎಲ್ಲವೂ ತಿಳಿಸುತ್ತದೆ. ನನ್ನ ಪ್ರಯೋಗ ನೋಡಿ ಬೇರೆ ರೈತರು ಕೂಡ ಸ್ಟ್ರಾಬೆರಿ ಬೆಳೆಯಬಹುದು. ಆದರೆ ಇದಕ್ಕೆ ವೆಚ್ಚ ಹೆಚ್ಚಾಗಿರುತ್ತದೆ. ಹಾಗಾಗಿ ಬೆಳೆ ಬಾರದೇ ಇದ್ದರೆ ರೈತರಿಗೆ ನಷ್ಟವಾಗಬಾರದು. ಯಾರಿಗಾದರೂ ಇದರ ಬಗ್ಗೆ ಮಾಹಿತಿ ಬೇಕಿದ್ದಲ್ಲಿ ನನ್ನ ಮೊಬೈಲ್ ಸಂಖ್ಯೆ 9242982494ಗೆ ಕರೆ ಮಾಡಬಹುದು. - ವೈಜೀನಾಥ್ ನಿಡೋದಾ, ಸ್ಟ್ರಾಬೆರಿ ಬೆಳೆದ ರೈತ.
ಮೌಲಾನಾ ಸಗೀರ್ ಅಹ್ಮದ್ ಖಾನ್ ರಶಾದಿ ನಿಧನ | ತಮ್ಮ ಜೀವನವನ್ನು ʼಸಬೀಲುರ್ರಶಾದ್ʼಗೆ ಮುಡಿಪಾಗಿಟ್ಟದ್ದ ʼಅಮೀರೆ ಶರೀಅತ್ʼ
ಬೆಂಗಳೂರು : ರಾಜ್ಯದ ಪ್ರಖ್ಯಾತ ಇಸ್ಲಾಮೀ ವಿದ್ಯಾಲಯ, ಬೆಂಗಳೂರಿನ ದಾರುಲ್ ಉಲೂಮ್ ಸಬೀಲುರ್ರಶಾದ್ ಮುಖ್ಯಸ್ಥ, ಅಮೀರೆ ಶರೀಅತ್ ಕರ್ನಾಟಕ ಶೇಖುಲ್ ಹದೀಸ್ ಹಝ್ರತ್ ಮೌಲಾನಾ ಸಗೀರ್ ಅಹ್ಮದ್ ಖಾನ್ ರಶಾದಿ(75) ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ದೀರ್ಘಕಾಲದಿಂದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಮೌಲಾನಾ ಸಗೀರ್ ಅಹ್ಮದ್ ಖಾನ್ ರಶಾದಿ ಅವರು ಇಂದು ಮುಂಜಾನೆ ಫಜರ್ ನಮಾಝ್ ಬಳಿಕ ತಮ್ಮ ಮನೆಯಲ್ಲಿ ಇಹಲೋಕವನ್ನು ತ್ಯಜಿಸಿದರು. ಕಳೆದ ಮೂರು ತಿಂಗಳಿನಿಂದ ಅವರ ಆರೋಗ್ಯ ತೀವ್ರ ಹದಗೆಟ್ಟಿತು. ಈ ಹಿನ್ನೆಲೆಯಲ್ಲಿ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆನಂತರ, ವೈದ್ಯರ ಸಲಹೆ ಮೇರೆಗೆ ಒಂದು ತಿಂಗಳಿನಿಂದ ಗೋವಿಂದಪುರದಲ್ಲಿರುವ ಅವರ ಮನೆಯಲ್ಲಿಯೇ ವೈದ್ಯಕೀಯ ಆರೈಕೆ ನೀಡಲಾಗುತ್ತಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಸಾರ್ವಜನಿಕರು ಇಂದು ಹಝ್ರತ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಮಾಡಲು ಅನುಕೂಲವಾಗುವಂತೆ ಸಬೀಲುರ್ರಶಾದ್ ನಲ್ಲಿ ವ್ಯವಸ್ಥೆ ಮಾಡಲಾಗಿದೆ. ಮಂಗಳವಾರ ಬೆಳಗ್ಗೆ 10 ಗಂಟೆಗೆ ಸಬೀಲುರ್ರಶಾದ್ ಆವರಣದಲ್ಲಿ ನಮಾಝೆ ಜನಾಝ ನೆರವೇರಿಸಿ, ಅಲ್ಲಿಯೇ ದಫನ್ ಕಾರ್ಯ ನಡೆಯಲಿದೆ. ಹಝ್ರತ್ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಬೆಳಗ್ಗೆಯಿಂದಲೇ ಸಾರ್ವಜನಿಕರು ಸಬೀಲುರ್ರಶಾದ್ ನತ್ತ ಹೆಜ್ಜೆ ಹಾಕುತ್ತಿದ್ದಾರೆ. ಹಝ್ರತ್ ಅವರ ಅಂತಿಮ ದರ್ಶನಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ರಾಜ್ಯ ಹಾಗೂ ದೇಶದ ವಿವಿಧ ಭಾಗಗಳಿಂದ ಸಾರ್ವಜನಿಕರು ಹಾಗೂ ಗಣ್ಯರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಬೀಲುರ್ರಶಾದ್ ಸುತ್ತ ಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತಿದೆ. ಹಝ್ರತ್ ಮುಫ್ತಿ ಮುಹಮ್ಮದ್ ಅಶ್ರಫ್ ಅಲಿ ಬಾಖವಿ ಅವರ ನಿಧನದ ನಂತರ ಅವರ ನೆಚ್ಚಿನ ಶಿಷ್ಯರಾಗಿದ್ದ ಸಗೀರ್ ಅಹ್ಮದ್ ಖಾನ್ ಅವರನ್ನು ಮೂರನೇ ಅಮೀರೆ ಶರೀಅತ್ ಆಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿತ್ತು. ಕೇಂದ್ರ ಸರಕಾರದ ಸಿಎಎ, ಎನ್ ಆರ್ ಸಿ ವಿರೋಧಿ ಹೋರಾಟ, ಆಲ್ ಇಂಡಿಯಾ ಮುಸ್ಲಿಮ್ ಪರ್ಸನಲ್ ಲಾ ಬೋರ್ಡ್ ದೇಶವ್ಯಾಪಿ ಹಮ್ಮಿಕೊಂಡಿರುವ ವಕ್ಫ್ ಉಳಿಸಿ, ಸಂವಿಧಾನ ಉಳಿಸಿ ಚಳವಳಿಯ ಸಂಚಾಲಕರಾಗಿ ರಾಜ್ಯದಲ್ಲಿ ಮುನ್ನಡೆಸುತ್ತಿದ್ದರು. ಜೀವನ ಮತ್ತು ಸೇವೆಗಳು: ಮೌಲಾನಾ ಸಗೀರ್ ಅಹ್ಮದ್ ಖಾನ್ ರಶಾದಿ ಅವರು ಮೈಸೂರು ಜಿಲ್ಲೆಯಲ್ಲಿ ಜನಿಸಿದರು. ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಗ್ರಾಮದ ಮಖ್ತಬ್ನಲ್ಲಿ ಪೂರೈಸಿದ ನಂತರ, ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ದಾರುಲ್ ಉಲೂಮ್ ಸಬೀಲುರ್ರಶಾದ್ ಗೆ ಸೇರಿದರು. ಅಲ್ಲಿ ಅವರು ಪವಿತ್ರ ಕುರ್ ಆನ್ ಅನ್ನು ಕಂಠಪಾಠ (ಹಿಫ್ಝ್) ಮಾಡಿದರು ಮತ್ತು ನಂತರ ಅದೇ ಸಂಸ್ಥೆಯಲ್ಲಿ ಆಲಿಮಿಯತ್ ಹಾಗೂ ಫಝಿಲತ್ ಪದವಿಗಳನ್ನು ಅತ್ಯುತ್ತಮ ಶ್ರೇಣಿಯಲ್ಲಿ ಪೂರೈಸಿದರು. ವಿದ್ಯಾಭ್ಯಾಸದ ನಂತರ, ಅವರ ಪ್ರತಿಭೆಯನ್ನು ಗುರುತಿಸಿ ಅದೇ ಸಂಸ್ಥೆಯಲ್ಲಿ ಅಧ್ಯಾಪಕರನ್ನಾಗಿ ನೇಮಿಸಲಾಯಿತು. ಅವರು ಪ್ರಾಥಮಿಕ ಹಂತದ ಪುಸ್ತಕಗಳಿಂದ ಬೋಧನೆಯನ್ನು ಆರಂಭಿಸಿ, ಹಂತಹಂತವಾಗಿ ಉನ್ನತ ಸ್ಥಾನಕ್ಕೇರಿದರು. ತಮ್ಮ ಅಗಾಧವಾದ ಜ್ಞಾನದಿಂದಾಗಿ ಅವರು ಸಬೀಲುರ್ರಶಾದ್ನ 'ಶೇಖ್-ಉಲ್-ತಫ್ಸೀರ್' (ಕುರ್ ಆನ್ ವ್ಯಾಖ್ಯಾನಕಾರರ ಮುಖ್ಯಸ್ಥರು) ಮತ್ತು 'ಶೇಖ್-ಉಲ್-ಹದೀಸ್' (ಪ್ರವಾದಿ ವಚನಗಳ ಬೋಧನಾ ಮುಖ್ಯಸ್ಥರು) ಎಂಬ ಅತ್ಯುನ್ನತ ಸ್ಥಾನಗಳನ್ನು ಅಲಂಕರಿಸಿದರು. ಹಝ್ರತ್ ಮುಫ್ತಿ ಮುಹಮ್ಮದ್ ಅಶ್ರಫ್ ಅಲಿ ಬಾಖವಿ ಅವರ ನಿಧನದ ನಂತರ, ಮೌಲಾನಾ ಸಗೀರ್ ಅಹ್ಮದ್ ರಶಾದಿ ಅವರನ್ನು ದಾರುಲ್ ಉಲೂಮ್ ಸಬೀಲುರ್ರಶಾದ್ನ ಮುಖ್ಯಸ್ಥರನ್ನಾಗಿ (ಮೊಹ್ತಮಿಮ್) ನೇಮಿಸಲಾಯಿತು. ಇದರೊಂದಿಗೆ ರಾಜ್ಯದ ಮುಸ್ಲಿಮ್ ಸಮುದಾಯದ ಅತ್ಯುನ್ನತ ಧಾರ್ಮಿಕ ಹುದ್ದೆಯಾದ 'ಅಮೀರ್-ಎ-ಶರೀಅತ್' ಆಗಿ ಅವರು ಸರ್ವಾನುಮತದಿಂದ ಆಯ್ಕೆಯಾದರು. ರಾಷ್ಟ್ರೀಯ ಮಟ್ಟದ ಕೊಡುಗೆಗಳು: ಅವರು ಕೇವಲ ಕರ್ನಾಟಕಕ್ಕೆ ಸೀಮಿತವಾಗಿರದೆ, ರಾಷ್ಟ್ರೀಯ ಮಟ್ಟದಲ್ಲೂ ಸಕ್ರಿಯರಾಗಿದ್ದರು. ಅವರು ಅಖಿಲ ಭಾರತ ಮುಸ್ಲಿಮ್ ವೈಯಕ್ತಿಕ ಕಾನೂನು ಮಂಡಳಿಯ (AIMPLB) ಕಾರ್ಯಕಾರಿ ಸಮಿತಿಯ ಪ್ರಭಾವಿ ಸದಸ್ಯರಾಗಿದ್ದರು. ಅಖಿಲ ಭಾರತ ಮಿಲ್ಲಿ ಕೌನ್ಸಿಲ್ನ ಮಾರ್ಗದರ್ಶಕರಾಗಿ ಸಮುದಾಯದ ಏಳಿಗೆಗಾಗಿ ಶ್ರಮಿಸಿದರು. ಧಾರ್ಮಿಕ ಜಾಗೃತಿಗಾಗಿ ಅವರು 'ಸಲ್ಸಬೀಲ್' ಎಂಬ ಮಾಸಿಕ ಪತ್ರಿಕೆಯನ್ನು ಮರುಪ್ರಾರಂಭಿಸಿ ಅದರ ಸಂಪಾದಕರಾಗಿ ಸೇವೆ ಸಲ್ಲಿಸಿದರು. ಮೌಲಾನಾ ಅವರು ಅತ್ಯಂತ ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದರು. ಅವರು ಕರ್ನಾಟಕದ ಮುಸ್ಲಿಮ್ ಸಮುದಾಯದ ಒಗ್ಗಟ್ಟಿಗಾಗಿ ಮತ್ತು ಶೈಕ್ಷಣಿಕ ಪ್ರಗತಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. ಅವರ ಮಾರ್ಗದರ್ಶನದಲ್ಲಿ ಸಾವಿರಾರು ವಿದ್ಯಾರ್ಥಿಗಳು ಧಾರ್ಮಿಕ ಶಿಕ್ಷಣವನ್ನು ಪಡೆದು ದೇಶದಾದ್ಯಂತ ಸೇವೆ ಸಲ್ಲಿಸುತ್ತಿದ್ದಾರೆ. ತಮ್ಮ ಜೀವನವನ್ನು ʼಸಬೀಲುರ್ರಶಾದ್ʼ ಗೆ ಮುಡಿಪಾಗಿಟ್ಟ ಅಮೀರೆ ಶರೀಅತ್ ಮೌಲಾನಾ ಸಗೀರ್ ಅಹ್ಮದ್ ಖಾನ್ ರಶಾದಿ: ಅಮೀರೆ ಶರೀಅತ್ ಮೌಲಾನಾ ಸಗೀರ್ ಅಹ್ಮದ್ ಖಾನ್ ರಶಾದಿ ಅವರು ತಮ್ಮ ಜೀವನವನ್ನು ಸಬೀಲುರ್ರಶಾದ್ ಸಂಸ್ಥೆಗೆ ಮುಡಿಪಾಗಿಟ್ಟಿದ್ದರು. ಅವರ ಸಾವಿರಾರು ಶಿಷ್ಯರ ಪೈಕಿ ತಾನು ಒಬ್ಬ. ಹಝ್ರತ್ ಮುಫ್ತಿ ಮುಹಮ್ಮದ್ ಅಶ್ರಫ್ ಅಲಿ ಬಾಖವಿ ಅವರ ನಿಧನದ ಬಳಿಕ ಸಬೀಲುರ್ರಶಾದ್ ಸಂಸ್ಥೆಯ ಮುಖ್ಯಸ್ಥರನ್ನಾಗಿ ಅವರ ಪುತ್ರ ಮೌಲಾನ ಅಹ್ಮದ್ ಮಾಝ್ ಅವರನ್ನು ನೇಮಿಸಲಾಗಿತ್ತು. ಆದರೆ, ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಸಗೀರ್ ಅಹ್ಮದ್ ಖಾನ್ ಅವರನ್ನು ನೇಮಿಸಲಾಯಿತು. ತಮ್ಮ ಜೀವನದ ಕೊನೆಯ ಉಸಿರು ಇರುವವರೆಗೆ ಅವರು ಸಬೀಲುರ್ರಶಾದ್ ಸಂಸ್ಥೆಯ ಜವಾಬ್ದಾರಿಯನ್ನು ನಿರ್ವಹಿಸಿದರು ► ಮೌಲಾನಾ ಮಕ್ಸೂದ್ ಇಮ್ರಾನ್, ಖತೀಬ್ ಒ ಇಮಾಮ್, ಜಾಮಿಯಾ ಮಸೀದಿ, ಸಿಟಿ ಮಾರುಕಟ್ಟೆ, ಬೆಂಗಳೂರು .
Toxic : ಟೀಸರ್ ತಂದ ತಲ್ಲಣ - ಚಿತ್ರರಂಗದ ಎಲ್ಲಾ ನಿರ್ಮಾಣ ಸಂಸ್ಥೆಗಳಿಗೆ ಶುರುವಾದ ಹೊಸ ಭೀತಿ?
CBFC Intervention Sought : ಗೀತು ಮೋಹನದಾಸ್ ನಿರ್ದೇಶನದ, ಕೆವಿಎನ್ ಬ್ಯಾನರಿನ ಟಾಕ್ಸಿಕ್ ಚಿತ್ರದ ಟೀಸರ್ ಬಿಡುಗಡೆಯಾಗಿತ್ತು. ಚಿತ್ರದ ಟೀಸರ್’ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇನ್ನು ಮುಂದೆ, ಟೀಸರ್ ಬಿಡುಗಡೆಗೂ ಮುನ್ನ, ಸೆನ್ಸಾರ್ ಸರ್ಟಿಫಿಕೇಟ್ ತೆಗೆದುಕೊಳ್ಳಬೇಕು ಎನ್ನುವ ಒತ್ತಾಯ ಹೆಚ್ಚಾಗುತ್ತಿದೆ. ಈ ರೀತಿ ಆದರೆ ಎಲ್ಲಾ ಚಿತ್ರ ನಿರ್ಮಾಣ ಸಂಸ್ಥೆಗಳಿಗೆ ಹೊಸ ಸಮಸ್ಯೆ ಎದುರಾಗಲಿದೆ.

21 C