ಡಿ.12, 13ರಂದು ಮಣಿಪಾಲದಲ್ಲಿ ಅಖಿಲ ಭಾರತ ಮುದ್ರಣ ಸಮಾವೇಶ-2025
ಉಡುಪಿ, ಡಿ.10: ಉಡುಪಿ ಜಿಲ್ಲಾ ಮುದ್ರಾಲಯಗಳ ಮಾಲಕರ ಸಂಘದ ಆಶ್ರಯದಲ್ಲಿ ಡಿ.12 ಮತ್ತು 13ರಂದು ಮಣಿಪಾಲದ ಡಾ.ಟಿ.ಎಂ. ಎ.ಪೈ ಪಾಲಿಟೆಕ್ನಿಕ್ ನಲ್ಲಿ ಅಖಿಲ ಭಾರತ ಮುದ್ರಣ ಸಮಾವೇಶ-2025 (ಆಲ್ ಇಂಡಿಯಾ ಪ್ರಿಂಟ್ ಸಮ್ಮಿಟ್-25) ನಡೆಯಲಿದೆ ಎಂದು ಸಂಘದ ಮಾಜಿ ಅಧ್ಯಕ್ಷ ಯು.ಮೋಹನ ಉಪಾಧ್ಯ ತಿಳಿಸಿದ್ದಾರೆ. ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಮುದ್ರಣ ಮಾಲಕರ ಸಂಘ, ಡಾ.ಟಿಎಂಎಪೈ ಪಾಲಿಟೆಕ್ನಿಕ್ ಹಾಗೂ ಮಣಿಪಾಲ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಇವುಗಳ ಸಹಯೋಗದಲ್ಲಿ ಎರಡು ದಿನಗಳ ಸಮಾವೇಶ ನಡೆಯಲಿದೆ ಎಂದರು. ಮುದ್ರಣ ಉದ್ಯಮ ರಂಗಕ್ಕೆ ಸಂಬಂಧಿಸಿದಂತೆ ವಸ್ತುಪ್ರದರ್ಶನ, ಸೆಮಿನಾರ್ ಹಾಗೂ ಸನ್ಮಾನ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದ ಮೋಹನ ಉಪಾಧ್ಯ, ಸಮ್ಮೇಳನದಲ್ಲಿ ಮುದ್ರಣಾಲಯಗಳು ಎದುರಿಸುತ್ತಿರುವ ಕೆಲವೊಂದು ಸಮಸ್ಯೆಗಳ ಕುರಿತು ಚರ್ಚಿಸಲಾಗುವುದು. 18 ಜಿಲ್ಲೆಗಳ ಮುದ್ರಕರು ಭಾಗವಹಿಸಲು ಹೆಸರು ನೊಂದಾಯಿಸಿಕೊಂಡಿದ್ದಾರೆ. ಸುಮಾರು 400 ಮಂದಿ ಪ್ರತಿನಿಧಿಗಳು ಇದರಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು. ಉಡುಪಿ ಜಿಲ್ಲೆಯಲ್ಲಿ 180 ಮುದ್ರಣಾಲಯಗಳು ಕಾರ್ಯನಿರ್ವಹಿಸುತ್ತಿವೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ಮುದ್ರಣ ರಂಗದಲ್ಲಿ ಉತ್ತಮ ಸೇವೆ ಸಲ್ಲಿಸಿರುವ ಮಣಿಪಾಲದ ಸತೀಶ್ ಯು.ಪೈ ಹಾಗೂ ಮೋಹನ್ ಉಪಾಧ್ಯ ರನ್ನು ಸನ್ಮಾನಿಸಲಾಗುವುದು. ಮಣಿಪಾಲ ಮೀಡಿಯ ನೆಟ್ವರ್ಕ್ ನ ಕಾರ್ಯ ನಿರ್ವಾಹಕ ಅಧ್ಯಕ್ಷ ಟಿ.ಸತೀಶ್ ಯು.ಪೈ ಅವರು ಸಮಾವೇಶವನ್ನು ಡಿ.12ರ ಬೆಳಗ್ಗೆ 9:30ಕ್ಕೆ ಉದ್ಘಾಟಿಸಲಿದ್ದಾರೆ. ಸಮಾರೋಪ ಸಮಾರಂಭ ಡಿ.13ರ ಅಪರಾಹ್ನ 12:00ಗಂಟೆಗೆ ನಡೆಯಲಿದೆ. ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಮುದ್ರಣಕಾರರ ಸಮನ್ವಯ ಸಮಿತಿಯ ರಾಜ್ಯ ಸಂಚಾಲಕ ಎಂ.ಮಹೇಶ್ ಕುಮಾರ್, ಸಹ ಸಂಚಾಲಕ ಅಶೋಕ್ ಶೆಟ್ಟಿ, ಜಿಲ್ಲಾ ಸಂಘದ ಮಾಜಿ ಅಧ್ಯಕ್ಷ ರಮೇಶ್ ತಿಂಗಳಾಯ, ಸಂಘದ ಉಪಾಧ್ಯಕ್ಷ ಹಾಗೂ ಪ್ರಚಾರ ಸಮಿತಿ ಸಂಚಾಲಕ ಜಿ.ಎಂ.ಶರೀಫ್, ಮುದ್ರಕರ ಸೌಹಾರ್ದ ಸಹಕಾರಿ ಬಿ.ಜಿ.ಸುಬ್ಬರಾವ್, ಉಪಾಧ್ಯಕ್ಷ ಸಂತೋಷ್ ಕುಮಾರ್ ಉಪಸ್ಥಿತರಿದ್ದರು.
ಮಂಗಳೂರು | ವಿವಾಹ ನೋಂದಣಿಗೆ ವ್ಯವಸ್ಥೆ ಕಲ್ಪಿಸಲು ಮುಸ್ಲಿಂ ಸೆಂಟ್ರಲ್ ಕಮಿಟಿ ಮನವಿ
ಮಂಗಳೂರು, ಡಿ.10: ಮುಸ್ಲಿಂ ವಿವಾಹ ನೋಂದಣಿಗೆ ಪೂರಕವಾಗಿ ಸೂಕ್ತ ಕಾನೂನನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ದ.ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ನಿಯೋಗವು ಸ್ಪೀಕರ್ ಯು.ಟಿ. ಖಾದರ್ ಮತ್ತು ರಾಜ್ಯ ವಕ್ಫ್ ಸಚಿವ ಝಮೀರ್ ಅಹ್ಮದ್ ಖಾನ್ ಅವರನ್ನು ಬುಧವಾರ ಬೆಳಗಾವಿಯ ಸುವರ್ಣ ಸೌಧದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿತು. ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್ಹಾಜ್ ಕೆ.ಎಸ್. ಮುಹಮ್ಮದ್ ಮಸೂದ್ ಅವರ ನಿರ್ದೇಶನದಂತೆ ಉಪಾಧ್ಯಕ್ಷ ಮಾಜಿ ಮೇಯರ್ ಕೆ.ಅಶ್ರಫ್ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಿದ ನಿಯೋಗವು ಈ ಹಿಂದೆ ರಾಜ್ಯದಲ್ಲಿ ವಕ್ಫ್ ಸಂಸ್ಥೆಗಳ ಮೂಲಕ ಮುಸಲ್ಮಾನರ ವಿವಾಹ ನೋಂದಣಿಗೆ ಅವಕಾಶವಿತ್ತು. ಬಳಿಕ ಅದನ್ನು ಹಿಂಪಡೆಯಲಾಗಿದೆ. ಇದರಿಂದ ಅಸಂಖ್ಯಾತ ಮುಸಲ್ಮಾನರು ತೀವ್ರ ತೊಂದರೆಗೆ ಒಳಗಾಗಿದ್ದಾರೆ. ಇತರ ಸಮುದಾಯದ ವಿವಾಹ ನೋಂದಣಿ ಕಾರ್ಯವು ಅತ್ಯಲ್ಪಸಮಯದಲ್ಲಿ ನಡೆಯುತ್ತಿದ್ದು, ಮುಸಲ್ಮಾನರು ವಿಶೇಷ ವಿವಾಹ ಕಾನೂನುಗಳ ಮೂಲಕ ನೋಂದಣಿ ಮಾಡಬೇಕಾದ ಅನಿವಾರ್ಯತೆಯಿಂದ ವಿವಾಹ ನೋಂದಣಿಗೆ ಒಂದು ತಿಂಗಳು ಕಾಯುವಂತಾಗಿದೆ. ಇದರಿಂದ ವಿದೇಶದಲ್ಲಿ ಉದ್ಯೋಗದಲ್ಲಿರುವ ರಾಜ್ಯದ ಯುವ ಜನತೆ, ವಿವಾಹವಾದ ನಂತರ ಸಂಗಾತಿಯನ್ನು ಶೀಘ್ರದಲ್ಲೇ ಕರೆದುಕೊಂಡು ಹೋಗಲು ಅಥವಾ ಅವರಿಗೆ ಪೂರಕವಾದ ಉದ್ಯೋಗವನ್ನು ಕೊಡಿಸಲು ಸಾಧ್ಯವಾಗುತ್ತಿಲ್ಲ. ಆದುದರಿಂದ ಮುಸಲ್ಮಾನರ ವಿವಾಹ ನೋಂದಣಿಗೆ ಅವಕಾಶ ಕಲ್ಪಿಸಲು ಪೂರಕವಾದ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಮಾಡಿದೆ. ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಸಮ್ಮುಖ ಮನವಿ ಸಲ್ಲಿಸಿದ ನಿಯೋಗದಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಹಾಜಿ ಬಂದರ್, ಕಾರ್ಯದಶಿ, ನ್ಯಾಯವಾದಿ ನೂರುದ್ದೀನ್ ಸಾಲ್ಮರ, ಸಿ.ಎಂ. ಹನೀಫ್, ಸಂಘಟನಾ ಕಾರ್ಯದರ್ಶಿ ಅಬ್ಬಾಸ್ ಉಚ್ಚಿಲ್ ಮತ್ತಿತರರು ಉಪಸ್ಥಿತರಿದ್ದರು.
ಅತ್ಯಂತ ಹೆಚ್ಚಿನ ಅಸಮಾನತೆಯ ದೇಶಗಳ ಸಾಲಿನಲ್ಲಿ ಭಾರತ: ವರದಿ
ಶೇ.1ರಷ್ಟು ಶ್ರೀಮಂತರ ಬಳಿ ಶೇ.40 ಸಂಪತ್ತು
ಡಿಜಿಸಿಎಯಿಂದ ಇಂಡಿಗೋ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸಮನ್ಸ್
ಹೊಸದಿಲ್ಲಿ, ಡಿ. 10: ಇಂಡಿಗೊ ವಿಮಾನಯಾನ ಸಂಸ್ಥೆಯ ಇತ್ತೀಚಿನ ಕಾರ್ಯಾಚರಣಾ ಕುಸಿತಕ್ಕೆ ವಿವರವಾದ ವಿವರಣೆಯನ್ನು ನೀಡಲು ತನ್ನ ಪ್ರಧಾನ ಕಚೇರಿಗೆ ಗುರುವಾರ ಅಪರಾಹ್ನ 3 ಗಂಟೆಗೆ ಬರುವಂತೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ)ವು ಇಂಡಿಗೊ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೀಟರ್ ಎಲ್ಬರ್ಸ್ರಿಗೆ ಬುಧವಾರ ಸಮನ್ಸ್ ನೀಡಿದೆ. ವಿಮಾನಯಾನಗಳನ್ನು ಮರುಸ್ಥಾಪಿಸಲು ನಡೆಸಿದ ಪ್ರಯತ್ನಗಳು, ಪೈಲಟ್ ಮತ್ತು ವಿಮಾನ ಸಿಬ್ಬಂದಿಯ ಲಭ್ಯತೆ, ಸಿಬ್ಬಂದಿ ನೇಮಕಾತಿ ಯೋಜನೆಗಳು, ವಿಮಾನ ರದ್ದತಿಗಳು ಹಾಗೂ ಮರುಪಾವತಿಗಳಿಗೆ ಸಂಬಂಧಿಸಿದ ಸಮಗ್ರ ಅಂಕಿಸಂಖ್ಯೆಗಳನ್ನು ಎಲ್ಬರ್ಸ್ ಹಾಗೂ ಪ್ರಮುಖ ವಿಭಾಗೀಯ ಮುಖ್ಯಸ್ಥರು ಡಿಜಿಸಿಎ ಮುಂದಿಡಬೇಕಾಗಿದೆ. ಇಂಡಿಗೊ ವಿಮಾನ ಯಾನಗಳಲ್ಲಿನ ಭಾರೀ ಪ್ರಮಾಣದ ಅಸ್ತವ್ಯಸ್ತತೆಯ ಹಿನ್ನೆಲೆಯಲ್ಲಿ ಡಿಜಿಸಿಎ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಹಲವು ದಿನಗಳಿಂದ ಇಂಡಿಗೊ ವಿಮಾನಗಳ ಸಾವಿರಾರು ಯಾನಗಳು ರದ್ದುಗೊಂಡಿವೆ, ವಿಳಂಬವಾಗಿವೆ ಅಥವಾ ಮರುನಿಗದಿಯಾಗಿವೆ. ಈ ಹಾಹಾಕಾರದ ಮೂಲ ಕಾರಣವನ್ನು ಪತ್ತೆಹಚ್ಚಲು ಡಿಜಿಸಿಎ ನಾಲ್ವರು ಸದಸ್ಯರ ತನಿಖಾ ಸಮಿತಿಯೊಂದನ್ನು ರಚಿಸಿದೆ. ಪೈಲಟ್ ಗಳ ವಾರದ ವಿಶ್ರಾಂತಿ ಅವಧಿಯನ್ನು ಡಿಜಿಸಿಎ ಹೆಚ್ಚಿಸಿತ್ತು ಹಾಗೂ ಹೆಚ್ಚುವರಿ ಪೈಲಟ್ಗಳ ನೇಮಕಾತಿಗೆ ಸಾಕಷ್ಟು ಸಮಯಾವಕಾಶವನ್ನೂ ನೀಡಲಾಗಿತ್ತು. ಆದರೆ, ಇಂಡಿಗೋ ಪೈಲಟ್ ಗಳ ಸಂಖ್ಯೆಯನ್ನು ಹೆಚ್ಚಿಸದೆ ಲಕ್ಷಾಂತರ ಪ್ರಯಾಣಿಕರ ಮೇಲೆ ಸವಾರಿ ಮಾಡಿದೆ.
ಮಹಾರಾಷ್ಟ್ರದ ಗಡ್ಚಿರೋಳಿಯಲ್ಲಿ 11 ಮಾವೋವಾದಿಗಳು ಶರಣು
ಮುಂಬೈ, ಡಿ. 10: ಹನ್ನೊಂದು ಮಾವೋವಾದಿ ಕಮಾಂಡರ್ಗಳು ಮತ್ತು ಸದಸ್ಯರು ಬುಧವಾರ ಮಹಾರಾಷ್ಟ್ರ ಪೊಲೀಸ್ ಮುಖ್ಯಸ್ಥೆ ರಶ್ಮಿ ಶುಕ್ಲಾ ಸಮ್ಮುಖದಲ್ಲಿ ರಾಜ್ಯದ ಗಡ್ಚಿರೋಳಿಯಲ್ಲಿ ಶರಣಾಗಿದ್ದಾರೆ. ಅವರ ಬಂಧನಕ್ಕೆ ಸಹಾಯವಾಗುವ ಮಾಹಿತಿಗಳನ್ನು ನೀಡಿದವರಿಗೆ ಒಟ್ಟು 82 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ಶರಣಾಗತರಾದ ನಕ್ಸಲೀಯರ ಪೈಕಿ ನಾಲ್ವರು ಸಮವಸ್ತ್ರ ಧರಿಸಿ ಶಸ್ತ್ರಧಾರಿಗಳಾಗಿದ್ದರು. ಮಾವೋವಾದಿ ವಿಭಾಗೀಯ ಸಮಿತಿ ಸದಸ್ಯರಾದ ರಮೇಶ್ ಯಾನೆ ಬಾಜು ಲೇಕಮಿ ಮತ್ತು ಭೀಮ ಯಾನೆ ಕಿರಣ್ ಹಿದ್ಮ ಕೊವಾಸಿ ಶರಣಾದವರಲ್ಲಿ ಸೇರಿದ್ದಾರೆ. ಅವರ ಶರಣಾಗತಿಯು ಛತ್ತೀಸ್ಗಢ, ಮಹಾರಾಷ್ಟ್ರ ಮತ್ತು ತೆಲಂಗಾಣವನ್ನು ಆವರಿಸಿರುವ ದಂಡಕಾರಣ್ಯದ ಮಾವೋವಾದಿಗಳಿಗೆ ದೊಡ್ಡ ಹಿನ್ನಡೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದು ಅಕ್ಟೋಬರ್ 15ರಂದು ಮಾವೋವಾದಿ ಪಾಲಿಟ್ಬ್ಯೂರೋ ಸದಸ್ಯ ಭೂಪತಿ ಯಾನೆ ಮಲ್ಲೊಜುಲ ವೇಣುಗೋಪಾಲ್ ರಾವ್ ತನ್ನ 60 ಸಂಗಡಿಗರೊಂದಿಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸಮ್ಮುಖದಲ್ಲಿ ಶರಣಾದ ಬಳಿಕ ಗಡ್ಚಿರೋಳಿ ಪೊಲೀಸರಿಗೆ ಸಿಕ್ಕಿದ ದೊಡ್ಡ ಯಶಸ್ಸು ಇದಾಗಿದೆ. ಈ ಶರಣಾಗತಿಯು ಗಡ್ಚಿರೋಳಿಯಲ್ಲಿ ಮಾವೋವಾದದ ಕೊನೆಯ ಆರಂಭವಾಗಿದೆ ಎಂದು ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಪೊಲೀಸ್ ಮುಖ್ಯಸ್ಥೆ ಶುಕ್ಲಾ ಹೇಳಿದರು. ‘‘ಮಾವೋವಾದವನ್ನು ಭಾರತದಿಂದ ನಿರ್ಮೂಲಗೊಳಿಸಲು ಕೇಂದ್ರ ಸರಕಾರ ವಿಧಿಸಿರುವ 2026 ಮಾರ್ಚ್ 31ರ ಗಡುವಿಗೆ ನಾವು ಬದ್ಧರಾಗಿದ್ದೇವೆ’’ ಎಂದು ಅವರು ಹೇಳಿದರು. ಈ ವರ್ಷ ಗಡ್ಚಿರೋಳಿಯಲ್ಲಿ 100ಕ್ಕೂ ಅಧಿಕ ಮಾವೋವಾದಿಗಳು ಶರಣಾಗಿದ್ದಾರೆ ಎಂದು ಅವರು ಹೇಳಿದರು.
ಇಂಡಿಗೋ ಬಿಕ್ಕಟ್ಟು: 11 ವಿಮಾನ ನಿಲ್ದಾಣಗಳಲ್ಲಿ ತಪಾಸಣೆಗೆ ಡಿಜಿಸಿಎ ಆದೇಶ
ಹೊಸದಿಲ್ಲಿ, ಡಿ. 10: ಇಂಡಿಗೊ ವಿಮಾನಗಳ ಯಾನಗಳಲ್ಲಿ ಸಂಭವಿಸಿದ ಬೃಹತ್ ಪ್ರಮಾಣದ ಅಸ್ತವ್ಯಸ್ತತೆಯ ಹಿನ್ನೆಲೆಯಲ್ಲಿ, ದೇಶಾದ್ಯಂತವಿರುವ 11 ವಿಮಾನ ನಿಲ್ದಾಣಗಳಲ್ಲಿ ತಕ್ಷಣ ತಪಾಸಣೆ ನಡೆಸುವಂತೆ ನಾಗರಿಕ ವಾಯುಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) ತನ್ನ ಅಧಿಕಾರಿಗಳಿಗೆ ಬುಧವಾರ ಆದೇಶಿಸಿದೆ. ವಿಮಾನ ನಿಲ್ದಾಣಗಳಿಗೆ ಎರಡು- ಮೂರು ದಿನಗಳಲ್ಲಿ ಭೇಟಿ ನೀಡಬೇಕು ಹಾಗೂ ತಪಾಸಣೆ ಮುಗಿಸಿದ ಬಳಿಕ 24 ಗಂಟೆಗಳಲ್ಲಿ ತನಗೆ ವರದಿ ಸಲ್ಲಿಸಬೇಕು ಎಂದು ಡಿಜಿಸಿಎ ಅಧಿಕಾರಿಗಳಿಗೆ ಸೂಚಿಸಿದೆ. ತಪಾಸಣೆ ನಡೆಯುವ ವಿಮಾನ ನಿಲ್ದಾಣಗಳೆಂದರೆ- ನಾಗಪುರ, ಜೈಪುರ, ಭೋಪಾಲ್, ಸೂರತ್, ತಿರುಪತಿ, ವಿಜಯವಾಡ, ಶಿರ್ಡಿ, ಕೊಚ್ಚಿ, ಲಕ್ನೋ, ಅಮೃತಸರ ಮತ್ತು ಡೆಹ್ರಾಡೂನ್. ಈ ವಿಮಾನ ನಿಲ್ದಾಣಗಳ ಸುರಕ್ಷತಾ ಸಿದ್ಧತೆ, ಕಾರ್ಯನಿರ್ವಹಣಾ ತಯಾರಿ, ಪ್ರಯಾಣಿಕರ ಸೌಕರ್ಯಗಳ ಗುಣಮಟ್ಟ ಮತ್ತು ಹಾಲಿ ವಿಮಾನ ಸಂಚಾರ ಅಸ್ಯವ್ಯಸ್ತತೆಯನ್ನು ಇಂಡಿಗೋ ನಿಭಾಯಿಸಿದ ರೀತಿಯನ್ನು ಅಧಿಕಾರಿಗಳು ಪರಿಶೀಲಿಸಲಿದ್ದಾರೆ. ವಿಮಾನಯಾನಗಳ ವಿಳಂಬ ಮತ್ತು ರದ್ದತಿಗಳು, ವಿಮಾನ ನಿಲ್ದಾಣಗಳಲ್ಲಿನ ಜನಸಂದಣಿ, ವಿಮಾನಗಳಿಗೆ ಪ್ರವೇಶ ನೀಡುವ ಕೌಂಟರ್ ಗಳಲ್ಲಿ ಜನರ ಸಾಲುಗಳ ನಿರ್ವಹಣೆ, ಭದ್ರತಾ ಸ್ಥಳಗಳು ಮತ್ತು ವಿಮನ ಹತ್ತುವ ದ್ವಾರಗಳು ಹಾಗೂ ಇಂಡಿಗೋ ಮತ್ತು ವಿಮಾನ ನಿಲ್ದಾಣವು ನಿಯೋಜಿಸಿದ ಸಿಬ್ಬಂದಿಯು ಪ್ರಯಾಣಿಕರನ್ನು ನಿಭಾಯಿಸಲು ಸಾಕಾಗುವಷ್ಟಿತ್ತೇ ಎಂಬ ವಿಷಯಗಳನ್ನು ಅಧಿಕಾರಿಗಳು ನಿಕಟವಾಗಿ ಪರಿಶೀಲಿಸಲಿದ್ದಾರೆ.
‘ಧುರಂಧರ್’ ಕುರಿತ ಅನುಮಪಾ ಚೋಪ್ರಾ ವಿಮರ್ಶೆ ವೀಡಿಯೋ ಕಣ್ಮರೆ
ಹಾಲಿವುಡ್ ರಿಪೋರ್ಟರ್ ಇಂಡಿಯಾದ ಸಂಪಾದಕಿ ಅನುಪಮಾ ಚೋಪ್ರಾ ಅವರ ‘ಧುರಂಧರ್’ ವಿಮರ್ಶೆಯ ವೀಡಿಯೋವನ್ನು ತೆಗೆದು ಹಾಕಲಾಗಿದೆ, ಆದರೆ ಸೂಕ್ತ ಕಾರಣಗಳನ್ನು ನೀಡಲಾಗಿಲ್ಲ. ರಣ್ವೀರ್ ಸಿಂಗ್ ನಟನೆಯ ಕಳೆದ ವಾರ ಬಿಡುಗಡೆಯಾದ ‘ಧುರಂಧರ್’ ಸಿನಿಮಾದ ಕುರಿತು ‘ದ ಹಾಲಿವುಡ್ ರಿಪೋರ್ಟರ್ ಇಂಡಿಯಾ’ದ ಸಂಪಾದಕಿ ಅನುಪಮಾ ಚೋಪ್ರ ಬರೆದ ವಿಮರ್ಶೆಯನ್ನು ತೆಗೆದು ಹಾಕಲಾಗಿದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಅವರ ವಿಮರ್ಶೆಯ ವೀಡಿಯೊ ಹುಡುಕಿದರೆ ಅದು ಮೌನವಾಗಿ ಗೌಪ್ಯ ಮೋಡ್ ಗೆ ಹೋಗಿದೆ. ಯಾವುದೇ ವಿವರಣೆಯಿಲ್ಲ, ಟಿಪ್ಪಣಿಯಿಲ್ಲ. ಆದರೆ ವೀಡಿಯೋ ಇದ್ದ ಸಾಕ್ಷ್ಯ ಮಾತ್ರ ಇದೆ. ನಕಾರಾತ್ಮಕ ಎಂದ ಅಭಿಮಾನಿಗಳು “ಅನುಪಮಾ ಚೋಪ್ರಾ ಅವರು ‘ಎ ಟಫ್ ಸಿಟ್’ ಎನ್ನುವ ಶೀರ್ಷಿಕೆಯಲ್ಲಿ ಅವರು ವಿಮರ್ಶೆಯನ್ನು ಮೃದುವಾಗಿ ಟೀಕಿಸಿದ್ದರು ಸಿನಿಮಾದ ಶೈಲಿ ಮತ್ತು ಸತತ ಸಾಹಸ ದೃಶ್ಯಗಳನ್ನು ಅವರು ಟೀಕಿಸಿದ್ದರು. ‘ಧುರಂದರ್’ನಲ್ಲಿ ರಣ್ವೀರ್ ಸಿಂಗ್ ಅವರ ಗೂಢಾಚಾರನ ಪಾತ್ರ ಬಹಳ ಮಾರಕ ವ್ಯಕ್ತಿಯ ಶೈಲಿಯಲ್ಲಿದೆ. ಅದಕ್ಕೆ ರಾಷ್ಟ್ರವಾದದ ಬಣ್ಣ ಬಳಿಯಲಾಗಿದೆ. ಪಾಕಿಸ್ತಾನಿ ವಿರೋಧಿ ಅಬ್ಬರದ ಡೋಸ್ ಕೊಡಲಾಗಿದೆ” ಎಂದು ವಿಮರ್ಶಿಸಿದ್ದರು. ಆದರೂ ಅನುಪಮಾ ಅವರು ಸಿನಿಮಾವನ್ನು ಒಟ್ಟಾಗಿ ತೆಗಳಿರಲಿಲ್ಲ. ಚಿತ್ರದ ಛಾಯಾಗ್ರಹಣ ಮತ್ತು ನಿರ್ಮಾಣದ ಶೈಲಿ ಮತ್ತು ಒಟ್ಟು ಸಿನಿಮಾವನ್ನು ಅವರು ಪ್ರಶಂಸಿಸಿದ್ದಾರೆ. ಅನುಪಮಾ ತಮ್ಮ ವಿಮರ್ಶೆಯ ವೀಡಿಯೋವನ್ನು ತೆಗೆದಿರುವುದಕ್ಕೆ ಸೂಕ್ತ ಕಾರಣ ನೀಡಿಲ್ಲ. ಆದರೆ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಮಾನ್ಯವಾಗಿರುವಂತೆ ಅಭಿಮಾನಿಗಳು ಮತ್ತು ವರ್ಷದ ರಾಷ್ಟ್ರವಾದಿ ಸಿನಿಮಾ ಎಂದು ಹೆಗ್ಗಳಿಕೆ ಪಡೆದ ಈ ಸಿನಿಮಾದ ಪರ ಅಭಿಮಾನ ವ್ಯಕ್ತಪಡಿಸುವವರು ಈ ‘ನಕಾರಾತ್ಮಕ’ ಅಭಿಪ್ರಾಯವನ್ನು ಟೀಕಿಸಿದ್ದಾರೆ. ಹಾಗೆ ನೋಡಿದರೆ ರಾಹುಲ್ ದೇಸಾಯಿ ಅವರ ವಿಮರ್ಶೆಯೂ ಚಿತ್ರವನ್ನು ಪ್ರಶಂಸಿಸಿರಲಿಲ್ಲ. ಪಠ್ಯರೂಪದಲ್ಲಿ ಸಿನಿಮಾವನ್ನು ಟೀಕಿಸುವುದು ಸುರಕ್ಷಿತ ಎಂದು ಅನಿಸುತ್ತದೆ. ಆ ಬಗ್ಗೆ ಯಾವುದೇ ಟೀಕೆ ವ್ಯಕ್ತವಾಗಲಿಲ್ಲ. ಇತ್ತೀಚೆಗೆ ‘ಹಾಲಿವುಡ್ ರಿಪೋರ್ಟರ್ ಇಂಡಿಯಾ’ ಒಂದು ‘ಆರ್ಪಿಎಸ್ಜಿ ಲೈಫ್ಸ್ಟೈಲ್’ ಮಾಧ್ಯಮವನ್ನು ಆರಂಭಿಸಿದೆ. ಇದು ಆರ್ಪಿ- ಸಂಜೀವ್ ಗೋಯೆಂಕಾ ಸಮೂಹದ ಭಾಗವಾಗಿದೆ. ಈ ಸಮೂಹವೇ ಸಾರೆಗಮದ ಮಾಲೀಕರು. ಸಾರೆಗಾಮ ಕಂಪನಿ ‘ಧುರಂಧರ್’ನ ಸಂಗೀತ ಪ್ರಾಯೋಜಕರು. ಹೀಗಾಗಿ ವಿಮರ್ಶೆ ತೆಗೆದಿರುವ ಬಗ್ಗೆ ಊಹಿಸಬಹುದು. ಆದರೆ ಇದೊಂದು ಔದ್ಯಮಿಕ ನಿರ್ಧಾರವೇ ಅಥವಾ ಸಂಪಾದಕೀಯ ನಿರ್ಧಾರವೇ ಎನ್ನುವುದು ಖಚಿತವಾಗಿಲ್ಲ. ವೀಡಿಯೋ ಮಾತ್ರ ಕಣ್ಮರೆಯಾಗಿದೆ. ಕೃಪೆ: ನ್ಯೂಸ್ಲಾಂಡ್ರಿ
ಸಂಸ್ಕರಿಸಿದ ಎಣ್ಣೆಯಿಂದಷ್ಟೇ ಬೊಜ್ಜು ಬರುವುದಿಲ್ಲ!
ಇತ್ತೀಚೆಗೆ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಎರಡು ಮಾತುಗಳನ್ನು ಹೇಳಿದ್ದಾರೆ. ಒಂದು ಭಾರತದಲ್ಲಿ ಅನರ್ಹ ಆಹಾರ ತಜ್ಞರು ತಪ್ಪು ಮಾಹಿತಿ ಹರಡುತ್ತಿದ್ದಾರೆ. ಎರಡನೆಯದು 1970- 80ರ ದಶಕದಲ್ಲಿ ಸಂಸ್ಕರಿತ ಎಣ್ಣೆಗಳನ್ನು ಅನಿಯಂತ್ರಿತವಾಗಿ ಬಳಸಲು ಅವಕಾಶ ಮಾಡಿಕೊಟ್ಟಿರುವುದು ಭಾರತದಲ್ಲಿ ಬೊಜ್ಜಿನ ಸಮಸ್ಯೆ ಬೆಳೆಯಲು ಕಾರಣವಾಗಿದೆ. ಈ ಬಗ್ಗೆ ಆಹಾರ ತಜ್ಞರು ಹೇಳುವುದೇನು? ಭಾರತದ ಮೂಲೆ ಮೂಲೆಯಲ್ಲಿ ಆಹಾರ ತಜ್ಞರಿದ್ದಾರೆ. ಆದರೆ ಅವರು ಅರ್ಹ ತಜ್ಞರೆ ಎನ್ನುವುದನ್ನು ಪರೀಕ್ಷಿಸುವ ವ್ಯವಸ್ಥೆಯಿಲ್ಲ. ಹೀಗಾಗಿ ತಪ್ಪು ಸುದ್ದಿಗಳು ಹರಡುತ್ತಿವೆ ಮತ್ತು ಅದರಿಂದಾಗಿ ಬೊಜ್ಜಿನ ಸಮಸ್ಯೆ ಹೆಚ್ಚಾಗುತ್ತಿದೆ ಎಂದು ಇತ್ತೀಚೆಗೆ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ. “ಅನರ್ಹ ಸ್ವಯಂ ಘೋಷಿತ ಆಹಾರ ತಜ್ಞರು ತಪ್ಪು ಮಾಹಿತಿಯ ಮೂಲಕ ಭಾರತದ ಬೊಜ್ಜಿನ ಬಿಕ್ಕಟ್ಟಿಗೆ ಕಾರಣರಾಗಿದ್ದಾರೆ. ಇಂತಹ ತಪ್ಪು ದಾರಿಗೆಳೆಯುವ ಮಾಹಿತಿಯಿಂದ ಜನರನ್ನು ರಕ್ಷಿಸುವ ಅಗತ್ಯವಿದೆ. ಅದಕ್ಕಾಗಿ ಒಂದು ಮೆಕಾನಿಸಂ ವಿನ್ಯಾಸಗೊಳಿಸುವಂತೆ ಕಾನೂನು ರಚಿಸುವವರನ್ನು ಅವರು ಒತ್ತಾಯಿಸಿದ್ದಾರೆ. ಜಿಎಲ್ಪಿ-ಆಧಾರಿತ (ಗ್ಲುಕಗೋನ್ ರೀತಿಯ ಪೆಪ್ಟೈಡ್ 1 ಅಗೊನಿಸ್ಟ್ಗಳು) ಔಷಧಿಗಳನ್ನು ತೆಗೆದುಕೊಳ್ಳುವುದು ವ್ಯಾಪಕವಾಗಿ ಫ್ಯಾಷನೇಬಲ್ ಆಗಿದೆ. ಇದರಿಂದಾಗಿ ದೀರ್ಘಕಾಲೀನ ಸಮಸ್ಯೆಗಳು ಆಗುವ ಸಾಧ್ಯತೆಯಿದೆ ಎಂದು ಅವರು ಎಚ್ಚರಿಸಿದ್ದಾರೆ. ಅಲ್ಲದೆ, ಈ ಹಿಂದೆ 1970 ಮತ್ತು 80ರ ದಶಕದಲ್ಲಿ ಸಂಸ್ಕರಿತ ಎಣ್ಣೆಗಳನ್ನು ಅನಿಯಂತ್ರಿತವಾಗಿ ಬಳಸಲು ಅವಕಾಶ ಮಾಡಿಕೊಡಲಾಗಿದೆ. ಇದು ಸಾರ್ವಜನಿಕ ಆರೋಗ್ಯದ ತಪ್ಪು ನಿರ್ದೇಶನವಾಗಿತ್ತು ಎಂದೂ ಹೇಳಿದ್ದಾರೆ. ಆಹಾರ ತಜ್ಞರು ಹೇಳುವುದೇನು? ಗುಜರಾತ್ ಮೂಲದ ಆಹಾರ ತಜ್ಞೆ ದಿವ್ಯಾ ಅವರ ಪ್ರಕಾರ, “ಮೊದಲನೆಯದು ನೂರಕ್ಕೆ ನೂರರಷ್ಟು ನಿಜ. ಈಗ ನಕಲಿ ಆಹಾರ ತಜ್ಞರು ಬೆಳೆದಿದ್ದಾರೆ. ಹಾಗೆಯೇ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಪ್ರಸಾರವಾಗಿ ಜನರನ್ನು ನಂಬಿಸಲಾಗುತ್ತಿದೆ. ಆದರೆ ಸಂಸ್ಕರಿತ ಎಣ್ಣೆಯಿಂದಾಗಿಯೇ ಬೊಜ್ಜುತನ ಸೃಷ್ಟಿಯಾಗಿದೆ ಎನ್ನುವುದನ್ನು ಶೇ 100ರಷ್ಟು ನಿಜವೆಂದು ನಂಬಲಾಗದು. ನನ್ನ ಪ್ರ್ಯಾಕ್ಟಿಸ್ನಲ್ಲಿ ನಾನು ಕಂಡುಕೊಂಡಿರುವ ಪ್ರಕಾರ ಜೀವನಶೈಲಿ ಸಮಸ್ಯೆಯಿಂದಲೇ ಬೊಜ್ಜು ಬೆಳೆಯುತ್ತಿದೆ. ಸಮತೋಲಿತ ಆಹಾರ ಮತ್ತು ವ್ಯಾಯಾಮದ ಕೊರತೆಯೇ ಮುಖ್ಯ ಕಾರಣವೆಂದು ನಾನು ಕಂಡುಕೊಂಡಿದ್ದೇನೆ. ಹೀಗಾಗಿ ಸಂಸ್ಕರಿತ ಎಣ್ಣೆ ಸಂಪೂರ್ಣ ಕಾರಣ ಎನ್ನಲು ಸಾಧ್ಯವಿಲ್ಲ.” ವಿಷಯವನ್ನು ಸಾಮಾನ್ಯೀಕರಿಸುವುದು ಸರಿಯಲ್ಲ! ಉದ್ಯಮಗಳ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ತಜ್ಞರಾಗಿರುವ ಬೆಂಗಳೂರಿನ ಸವಿತಾ ಭರಮಗೌಡ್ರ ಅವರು ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದರು. ಅವರ ಪ್ರಕಾರ, “ಸಲಹೆ ನೀಡುವವವರು ಅನರ್ಹರು ಅಥವಾ ಅರ್ಹರು ಎನ್ನುವುದನ್ನು ಹೊರತುಪಡಿಸಿ ನೋಡಿದರೆ ಒಬ್ಬರ ಸಲಹೆಯಿಂದ ಬೊಜ್ಜು ಬರಲು ಸಾಧ್ಯವಿಲ್ಲ. ಪ್ರತಿ ವ್ಯಕ್ತಿಯ ಜೀವನಶೈಲಿ, ಆಹಾರ ಕ್ರಮ, ಚಟಗಳು, ಆರೋಗ್ಯದ ಸಮಸ್ಯೆಗಳು ಇತ್ಯಾದಿ ಭಿನ್ನವಾಗಿರುತ್ತದೆ. ಸಾಮಾನ್ಯೀಕರಿಸಿ ಹೇಳುವ ಮಾಹಿತಿ ಪೂರ್ತಿ ಸರಿಯಾಗಿ ಇರದೆ ಇರಬಹುದು ಮತ್ತು ಸಲಹೆಗಳು ಎಲ್ಲಾ ವರ್ಗದವರಿಗೂ ಸೂಕ್ತವಾಗಿರಲ್ಲದೆ ಇರಬಹುದು.” ಅವರ ಪ್ರಕಾರ ಸಂಸ್ಕರಿತ ಎಣ್ಣೆಗಳು ಆಹಾರದಲ್ಲಿ ಹೆಚ್ಚಿಗೆ ಬಳಕೆಯಾದಾಗ ಮಾತ್ರ ಬೊಜ್ಜಿಗೆ ಕಾರಣವಾಗಬಹುದು. “ಸಂಸ್ಕರಿತ ಎಣ್ಣೆಗಳು ಆಹಾರ ಕಾನೂನಿನ ಅಡಿಯಲ್ಲಿ ನಿಯಂತ್ರಿಸಲ್ಪಟ್ಟರೂ ಕೂಡ ಅದು ಸರಿಯಾಗಿ ಅನುಷ್ಠಾನಗೊಂಡಿಲ್ಲ ಎನ್ನಬಹುದು. ಯಾವುದೇ ವಿಧದ ಕೊಬ್ಬು ಉತ್ತಮ ಕೊಬ್ಬುಗಳನ್ನು ಸಹ ಸೇರಿಸಿ, ಯಾವುದೇ ವಿಧಾನ ಅಥವಾ ಆಹಾರದಲ್ಲಿ ಹೆಚ್ಚಾಗಿ ಬಳಕೆಯಾದಾಗ ಅದು ಬೊಜ್ಜಿಗೆ ಕಾರಣವಾಗಬಹುದು. ಸಾಮಾಜಿಕ ಮಾಧ್ಯಮಗಳಿಂದ ಸಿಗುವ ಮಾಹಿತಿ ಅಥವಾ ತಪ್ಪು ಮಾಹಿತಿ ಇಂದ ಬೊಜ್ಜು ಹೆಚ್ಚಾಗುವುದಿಲ್ಲ ಅದರಿಂದ ಬೇರೆ ಸಮಸ್ಯೆಗಳು ಉಂಟಾಗಬಹುದೇನೋ, ಆದರೆ ನಮ್ಮ ಬೊಜ್ಜಿಗೆ ನಾವೇ ಕಾರಣ” ಎಂದು ಅವರು ಅಭಿಪ್ರಾಯಪಟ್ಟರು. ಸವಿತಾ ಅವರ ಪ್ರಕಾರ, “ಜನರು ತಮ್ಮ ಹಿನ್ನೆಲೆ, ಶಿಕ್ಷಣ ಮತ್ತು ಸ್ಥಾನಮಾನಗಳ ಹೊರತಾಗಿಯೂ ಕೂಡ ಆಹಾರದ ಬಗ್ಗೆ ಬಹಳ ಕಡಿಮೆ ತಿಳಿವಳಿಕೆ ಹೊಂದಿರುತ್ತಾರೆ. ಮುಖ್ಯವಾಗಿ ಆಹಾರ ಗುಣಮಟ್ಟ ಮತ್ತು ಸಂಬಂಧಪಟ್ಟ ಕಾನೂನಿನ ಬಗ್ಗೆ ಸಮಾಜದಲ್ಲಿ ಬಹಳಷ್ಟು ಗೊಂದಲಗಳಿವೆ. ಬಹಳ ತಪ್ಪು ಮಾಹಿತಿ ಸಹ ಹರಡುತ್ತಿದೆ. ನಮ್ಮ ಸಾಂಪ್ರದಾಯಿಕ ಆಹಾರ ಪದ್ಧತಿಗಳು ಸ್ಥಳೀಯ ಆಹಾರ, ಆಯಾ ಜನರ ಜೀವನಶೈಲಿ, ಹಬ್ಬಗಳು, ಋತುಗಳು ಮತ್ತು ವಾತಾವರಣವನ್ನು ಅನುಸರಿಸಿ ಬೆಳೆದಿವೆ. ಅದರಲ್ಲಿ ಅಪಾರ ಜಾಣ್ಮೆ ಮತ್ತು ವಿಜ್ಞಾನ ಕೂಡ ಅಡಗಿದೆ.”
Vote Theft : ’ದೇಶದಲ್ಲಿ ಆಮೇಲೆ, ಮೊದಲು ಚುನಾವಣಾ ಆಯೋಗ ಕಾಂಗ್ರೆಸ್ ನಲ್ಲೇ SIR ನಡೆಸಲಿ’
Vote Chori : ಕಾಂಗ್ರೆಸ್ಸಿನವರದ್ದು ಗೆದ್ದಾಗ ಒಂದು, ಸೋತಾಗ ಇನ್ನೊಂದು. ಗೆದ್ದಾಗ ಇವರಿಗೆ ಇವಿಎಂ ಮೇಲೆ ಸಂಶಯ ಬರುವುದಿಲ್ಲ, ಸೋತಾಗ ಕೇಂದ್ರ ಚುನಾವಣಾ ಆಯೋಗವನ್ನು ದೂರುವ ಪರಿಪಾಠ ಇವರದ್ದು ಸರಿಯಲ್ಲ. ಸಂಸತ್ ಅಧಿವೇಶನ ನಡೆಯುತ್ತಿದ್ದಾಗ, ವಿದೇಶಕ್ಕೆ ಹೋಗುವ ರಾಹುಲ್ ಗಾಂಧಿ, ಆಮೇಲೆ ಮೋದಿ ಸರ್ಕಾರ ಮಾತನಾಡಲು ಅವಕಾಶ ನೀಡುವುದಿಲ್ಲ ಎನ್ನುವ ನಾಟಕವನ್ನು ಮಾಡುತ್ತದೆ ಎಂದು ಸಚಿವ ಪ್ರಲ್ಹಾದ ಜೋಶಿ, ವ್ಯಂಗ್ಯವಾಡಿದ್ದಾರೆ.
ಬೆಳಗಾವಿ (ಸುವರ್ಣ ವಿಧಾನಸೌಧ): ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ, ಕಾಂಗ್ರೆಸ್ ಸರಕಾರ ರೈತರಿಗೆ ಪರಿಹಾರ ನೀಡಿಲ್ಲ, ಉತ್ತರ ಕರ್ನಾಟಕದ ಯಾವ ಭರವಸೆಗಳು ಈಡೇರಿದೆ ಎಂದು ತಿಳಿಸಲು ಕೂಡಲೇ ಶ್ವೇತಪತ್ರ ಹೊರಡಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ. ಬುಧವಾರ ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತ ವಿಶೇಷ ಚರ್ಚೆಯ ಮೇಲೆ ಸುದೀರ್ಘವಾಗಿ ಮಾತನಾಡಿದ ಅವರು, ಪ್ರವಾಹದ ಸಂದರ್ಭದಲ್ಲಿ ಜನರು ಗಂಜಿ ಕೇಂದ್ರದಲ್ಲಿರುತ್ತಾರೆ. ಆಗ ಸರಕಾರ ಕೂಡಲೇ ಪರಿಹಾರ ನೀಡಬೇಕಿತ್ತು. ಆದರೆ, ಸರಕಾರ ವಿಳಂಬ ಮಾಡಿ ಪರಿಹಾರ ನೀಡುವುದು ಸರಿಯಲ್ಲ ಎಂದು ಆಕ್ಷೇಪಿಸಿದರು. ʼಮಂಡಿ ಉದ್ದ ಕಬ್ಬು ಎದೆಮಟ್ಟ ಸಾಲ’ ಎಂಬ ಮಾತಿನಂತೆ ಕಬ್ಬು ಬೆಳೆಗಾರರ ಸ್ಥಿತಿ ಇದೆ. ರಾಜ್ಯದಲ್ಲಿ 41ಲಕ್ಷ ಟನ್ ಕಬ್ಬು ಉತ್ಪಾದನೆಯಾಗುತ್ತಿದ್ದು, 9.81ಲಕ್ಷ ಹೆಕ್ಟೇರ್ ನಲ್ಲಿ ಬೆಳೆಯಲಾಗುತ್ತಿದೆ. 81 ಸಕ್ಕರೆ ಕಾರ್ಖಾನೆಗಳಿದ್ದು ಎಲ್ಲವೂ ನಷ್ಟದಲ್ಲಿವೆ ಎನ್ನುತ್ತಿದ್ದಾರೆ. ಹೊಸದಾಗಿ 31 ಕಾರ್ಖಾನೆ ಆರಂಭಕ್ಕೆ ಅರ್ಜಿ ಬಂದಿದೆ. ತೂಕ ಯಂತ್ರದಲ್ಲಿ ಮೋಸವಾಗುತ್ತಿದ್ದು, ಶೇ.50ರಷ್ಟು ಮಾತ್ರ ತೂಕ ಯಂತ್ರಗಳನ್ನು ಅಳವಡಿಸಲಾಗಿದೆ. ಯಂತ್ರ ಕಟಾವಿನಲ್ಲಿ ಶೇ.6ರಷ್ಟು ಕಡಿತವಾಗುತ್ತಿದೆ. ಹಳೆ ಮಾದರಿ ಆರ್ಎಸ್ಪಿ, ಎಸ್ಎಪಿ ಕಡೆ ಸರಕಾರ ಗಮನ ಕೊಡಬೇಕಿದೆ ಎಂದರು. ಮುಧೋಳದಲ್ಲಿ 240 ಟ್ರಾಕ್ಟರ್ಗಳಿಗೆ ಬೆಂಕಿ ಬಿದ್ದು 1,033ಟನ್ ಕಬ್ಬು ಭಸ್ಮ ಆಗಿತ್ತು. ಪೊಲೀಸ್ ಇಲಾಖೆಯ ಭಯವಿದ್ದಿದ್ದರೆ ಇಷ್ಟೆಲ್ಲ ಆಗಲು ಸಾಧ್ಯವಿತ್ತೇ? 32 ಕಬ್ಬು ಬೆಳೆಗಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಯಭಾಗದ ರೈತ ಲಕ್ಕಪ್ಪ ಗುಣಕಾರ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಗ ಯಾವುದೇ ಸಚಿವರು ಭೇಟಿ ಮಾಡಲಿಲ್ಲ ಎಂದು ಅವರು ತಿಳಿಸಿದರು. ತುಂಗಭದ್ರಾ ಜಲಾಶಯದ ಗೇಟ್ನಿಂದ ನೀರು ಹರಿದು ಆಂಧ್ರಪ್ರದೇಶಕ್ಕೆ ಹೋಗಿದೆ. 33 ಗೇಟ್ ಅಳವಡಿಸದೇ ಇದ್ದಿದ್ದರಿಂದ ಈ ಸಮಸ್ಯೆಯಾಗಿದೆ. ನಾನು ಭೇಟಿ ನೀಡಿದ್ದಾಗ 12ಕೋಟಿ ರೂ.ಬಿಲ್ ಪಾವತಿಯಾಗಿಲ್ಲ ಎಂದು ಗುತ್ತಿಗೆದಾರರು ಹೇಳಿದ್ದರು. ಪಾದಯಾತ್ರೆ, ಬಂದ್ ಆಗುತ್ತಲೇ ಇದ್ದರೂ ಸರ್ಕಾರ ಕ್ರಮ ವಹಿಸಲಿಲ್ಲ. ಇದರಿಂದಾಗಿ ಎರಡು ಬೆಳೆ ನಷ್ಟವಾಗಿದೆ. ಆದ್ದರಿಂದ ಪ್ರತಿ ಎಕರೆಗೆ 25ಸಾವಿರ ರೂ.ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದರು. ಶೂನ್ಯ ಫಲಿತಾಂಶ: ಕಲ್ಯಾಣ ಕರ್ನಾಟಕದಲ್ಲಿ 2024-25ರಲ್ಲಿ 53 ಪದವಿ ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಐದು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲೂ ಶೂನ್ಯ ಫಲಿತಾಂಶ ಬಂದಿದೆ. 21ಸಾವಿರ ಶಿಕ್ಷಕ ಹುದ್ದೆ ಭರ್ತಿ ಮಾಡುತ್ತೇನೆಂದು ಸಿಎಂ ಹೇಳಿದ್ದರೂ, ಅದು ಆಗಿಲ್ಲ. ಈ ಭಾಗದಲ್ಲಿ 50,244 ಮಕ್ಕಳು ಅಪೌಷ್ಟಿಕತೆಗೆ ಒಳಗಾಗಿದ್ದಾರೆ. ಬೆಂಗಳೂರಿನಲ್ಲಿ ತಲಾ ಆದಾಯ 7 ಲಕ್ಷ ರೂ. ಇದ್ದರೆ, ಕಲಬುರ್ಗಿಯಲ್ಲಿ 1.43 ಲಕ್ಷ ರೂ.ಇದೆ ಎಂದು ಅವರು ತಿಳಿಸಿದರು. ನಾಯಕತ್ವ ಇಲ್ಲ: ಒಬ್ಬ ರಾಜ ಒಂದು ಹೆಜ್ಜೆ ಮುಂದೆ ಇಟ್ಟರೆ ಸೈನಿಕರು ಎರಡು ಹೆಜ್ಜೆ ಮುಂದಿಡುತ್ತಾರೆ. ಆದರೆ ಇಲ್ಲಿ ನಾಯಕತ್ವವೇ ಇಲ್ಲ. ಒಬ್ಬ ಶಾಸಕ ‘ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ’ ಎಂದು ಹೇಳುತ್ತಾರೆ. ಇಲ್ಲಿ ನಾಯಕತ್ವದ ಬಗ್ಗೆ ಗೊಂದಲವಿದೆ. ಕೆಲವು ಶಾಸಕರು ಡಿ.ಕೆ.ಶಿವಕುಮಾರ್ ಪರವಾಗಿ ಹೇಳಿದರೆ, ಮತ್ತೊಬ್ಬ ಶಾಸಕರು ‘ಡಿಕೆಶಿಗೆ ಕೂಲಿ ಕೊಡಿ’ ಎಂದು ಕೇಳುತ್ತಾರೆ. ಇಡ್ಲಿ ವಡೆ ತಿಂದರೆ ಸಮಸ್ಯೆ ಬಗೆಹರಿಯಲ್ಲ. ಹಾದಿ-ಬೀದಿಯಲ್ಲಿ ನಾನೇ ಸಿಎಂ ಎಂದು ಹೇಳುವುದು ಮುಖ್ಯಮಂತ್ರಿ ಹುದ್ದೆಗೆ ಶೋಭೆ ತರುವುದಿಲ್ಲ. ಸರಿಯಾಗಿ ಕುಳಿತು ಯಾರು ಸಿಎಂ ಎಂದು ತೀರ್ಮಾನಿಸಿ ಎಂದರು. ಮಂಗಳಮುಖಿಯರಿಗೆ ಮೀಸಲಾತಿ ನೀಡಿ: ಮಂಗಳಮುಖಿಯರು ರಸ್ತೆ ಸಿಗ್ನಲ್ಗಳಲ್ಲಿ ನಿಲ್ಲುತ್ತಾರೆ. ಸಮಾಜ ಅವರನ್ನು ಕೀಳಾಗಿ ನೋಡುತ್ತಿದೆ. ಆದ್ದರಿಂದ ಮಂಗಳಮುಖಿಯರಿಗೆ ಶೇ.0.5ರಷ್ಟಾದರೂ ಮೀಸಲಾತಿ ನೀಡುವ ಬಗ್ಗೆ ಸರಕಾರ ಗಂಭೀರವಾಗಿ ಚಿಂತಿಸಲಿ ಎಂದು ಅವರು ಸಲಹೆ ನೀಡಿದರು.
ಸಾಗರ್ಮಾಲಾ ಯೋಜನೆಯಡಿ ಹಂಗಾರಕಟ್ಟೆ ಕಿರುಬಂದರು ಅಭಿವೃದ್ಧಿ
ಉಡುಪಿ, ಡಿ.10: ಜಿಲ್ಲೆಯ ಹಂಗಾರಕಟ್ಟೆ ಮೀನುಗಾರಿಕಾ ಕಿರು ಬಂದರು ಯೋಜನೆಗೆ ಸಾಗರ್ಮಾಲಾ ಯೋಜನೆಯಡಿ 78.28 ಕೋಟಿ ರೂ. ಮಂಜೂರಾತಿ ಪ್ರಸ್ತಾವನೆ ಪರಿಶೀಲನೆಯಲ್ಲಿದೆ ಎಂದು ಕೇಂದ್ರ ಬಂದರು, ಹಡಗು ಹಾಗೂ ಜಲಸಾರಿಗೆ ಸಚಿವ ಸರ್ಬಾನಂದ್ ಸೋನೊವಾಲ್ ಅವರು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ತಿಳಿಸಿದ್ದಾರೆ. ಕೋಟ ಅವರ ಲಿಖಿತ ಪ್ರಶ್ನೆಗೆ ನೀಡಿದ ಉತ್ತರದಲ್ಲಿ ಸಚಿವರು ಇದನ್ನು ತಿಳಿಸಿದ್ದಾರೆ. ಹಳೆಯ ಮಂಗಳೂರು ಬಂದರಿನಲ್ಲಿ ಸರಕು ಮತ್ತು ಕ್ರೂಸ್ ಟರ್ಮಿನಲ್, ಲಕ್ಷದ್ವೀಪ ಜಟ್ಟಿ ನಿರ್ಮಾಣದ ಅಭಿವೃದ್ಧಿಗೆ 75.75 ಕೋಟಿ ರೂ, ಮಲ್ಪೆ ಮೀನುಗಾರಿಕಾ ಬಂದರನ್ನು ಮೇಲ್ದರ್ಜೆಗೇರಿಸಲು 12.50 ಕೋಟಿ ಅಲ್ಲದೆ, ಮಲ್ಪೆ ಮೀನುಗಾರಿಕಾ ಬಂದರಿನ ಮೂಲ ಸೌಕರ್ಯಗಳ ಬಹು ಮಹಡಿ ಪಾರ್ಕಿಂಗ್ ಸೌಲಭ್ಯದ ಅಭಿವೃದ್ಧಿಗೂ ಕ್ರಮಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ. ಮಲ್ಪೆಯಲ್ಲಿ ಮೀನುಗಾರಿಕಾ ಬೋಟ್ ಗಳ ತಂಗುದಾಣಕ್ಕಾಗಿ ಹೆಚ್ಚುವರಿ ಜಟ್ಟಿ, ಯಾಂತ್ರಿಕ ದೋಣಿಗಳ ಸಂಚಾರ ಸುಗಮಗೊಳಿಸಲು ಹೂಳೆತ್ತುವುದು ಸೇರಿದಂತೆ ಹಲವು ಪ್ರಸ್ತಾವನೆಗಳು ಮಂಜೂರಾತಿ ಹಂತದಲ್ಲಿವೆ ಎಂದೂ ಕೇಂದ್ರ ಸಚಿವರು ನೀಡಿದ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಸಚಿವರ ಉತ್ತರದಲ್ಲಿ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಲ್ಲಿ ಕಾರವಾರ ಬಂದರು ಅಭಿವೃದ್ಧಿ 73 ಕೋಟಿ, ಹಳೆಯ ಮಂಗಳೂರು ಬಂದರು ಅಭಿವೃದ್ಧಿಗೆ 65 ಕೋಟಿ, ಗಂಗೊಳ್ಳಿ ಬಂದರು ಅಭಿವೃದ್ಧಿಗೆ 95 ಕೋಟಿ ಕಾರವಾರದ ಬಂದರಿನ ಬ್ರೇಕ್ ವಾಟರ್ಗೆ ರೂ.249 ಕೋಟಿ ಪ್ರಸ್ತಾವನೆ ಸ್ವೀಕೃತವಾಗಿದೆ ಎಂದಿದ್ದಾರೆ. ರಾಜ್ಯ ಸರ್ಕಾರ, ಖಾಸಗಿ (ಪಿಪಿಪಿ) ಸಹಭಾಗಿತ್ವದಲ್ಲಿ ಖೇಣಿ ಬಂದರು, ಮಾವಿನಕುರ್ವೆ ಬಂದರು, ಹೊನ್ನಾವರ ಬಂದರು, ಮಂಕಿ ಬಂದರು ಗಳ ಅಭಿವೃದ್ಧಿಗೆ ಕ್ರಮ ತೆಗೆದುಕೊಂಡಿದೆ ಎಂದು ಸಚಿವ ಸೋನೊವಾಲಾ ಸಂಸದ ಕೋಟ ಅವರಿಗೆ ನೀಡಿದ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದ 8.4 ಲಕ್ಷ ಸಹಕಾರಿ ಸಂಘಗಳ ಸಬಲೀಕರಣ ಕೇಂದ್ರದ ಗುರಿ : ಸಂಸದ ಕೋಟ ಪ್ರಶ್ನೆಗೆ ಅಮಿತ್ ಶಾ ಉತ್ತರ
ಉಡುಪಿ, ಡಿ.10: ರಾಷ್ಟ್ರೀಯ ಸಹಕಾರಿ ದತ್ತಾಂಶದ ಪ್ರಕಾರ ದೇಶದಲ್ಲಿ 8.4 ಲಕ್ಷ ಸಹಕಾರಿ ಸಂಘಗಳಿದ್ದು, 2021ರಲ್ಲಿ ಆರಂಭವಾದ ನೂತನ ಸಹಕಾರಿ ಕಾಯ್ದೆಯಂತೆ ಸಹಕಾರ್-ಸೇ ಸಮೃದ್ಧಿ ದೃಷ್ಟಿಕೋನವನ್ನು ಅನುಷ್ಠಾನ ಮಾಡಿ ದೇಶದಾದ್ಯಂತ ಸಹಕಾರಿ ಸಂಘಗಳನ್ನು ಬಲಪಡಿಸಲು ಕೇಂದ್ರ ಸರಕಾರ ಶ್ರಮಿಸುತ್ತಿದೆ ಎಂದು ಕೇಂದ್ರ ಸಹಕಾರಿ ಸಚಿವ ಅಮಿತ್ ಶಾ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಕೇಂದ್ರ ಸರಕಾರದ ಮುಂದೆ ಪ್ರಾಥಮಿಕ ಸಹಕಾರಿ ಸಂಘಗಳನ್ನು ಆರ್ಥಿಕವಾಗಿ ಗಟ್ಟಿಗೊಳಿಸುವುದು ಮತ್ತು ಪಾರದರ್ಶಕ ಆಡಳಿತ ನಡೆಸುವಂತೆ ನೋಡಿಕೊಳ್ಳುವುದು, ನಗರ ಮತ್ತು ಗ್ರಾಮೀಣ ಸಹಕಾರಿ ಬ್ಯಾಂಕ್ ಗಳನ್ನು ಆರ್ಥಿಕವಾಗಿ ಬಲಿಷ್ಠ ಗೊಳಿಸುವುದು, ಆದಾಯ ತೆರಿಗೆ ಕಾಯ್ದೆಯಲ್ಲಿ ಸಹಕಾರಿ ಸಂಘಗಳಿಗೆ ಪರಿಹಾರ, ಸಹಕಾರಿ ಸಕ್ಕರೆ ಕಾರ್ಖಾನೆಗಳ ಪುನರ್ ಚೇತನ, ರಾಷ್ಟ್ರಮಟ್ಟದಲ್ಲಿ ಮೂರು ಬಹು ರಾಜ್ಯಗಳನ್ನೊಳಗೊಂಡ ಸಹಕಾರಿ ಸಂಸ್ಥೆಗಳ ಸ್ಥಾಪನೆ, ವ್ಯವಹಾರ ಸುಲಭಗೊಳಿಸಲು ಏಕರೀತಿಯ ಮಾಹಿತಿ ತಂತ್ರಜ್ಞಾನ ಬಳಕೆ, ರಾಷ್ಟ್ರೀಯ ಸಹಕಾರಿ ನೀತಿ ರಚನೆ ದೇಶದಲ್ಲಿ ಮೊದಲ ಬಾರಿಗೆ ತ್ರಿಭುವನ್ ಸಹಕಾರಿ ಯುನಿವರ್ಸಿಟಿ ನಿರ್ಮಾಣ ಮುಂತಾದ ಕ್ರಾಂತಿಕಾರಿ ಯೋಜನೆಯನ್ನು ನೂತನ ಕಾಯ್ದೆಯಲ್ಲಿ ಅನುಷ್ಠಾನ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ. ತ್ರಿಭುವನ್ ಯುನಿವರ್ಸಿಟಿಯ ಮೂಲಕ ನಾಲ್ಕು ಸ್ನಾತಕೋತ್ತರ ಪದವಿಗಳಿಗೆ ಅವಕಾಶ ನೀಡಿದ್ದು, ಐ.ಆರ್.ಎಮ್.ಎ ಮೂಲಕ ಗ್ರಾಮೀಣ ಸಹಕಾರಿ ಎಂಬಿಎ, ಕೃಷಿ ನಿರ್ವಹಣಾ ವ್ಯವಹಾರ ಎಂ.ಬಿ.ಎ, ಸಹಕಾರಿ ಬ್ಯಾಂಕಿಂಗ್ ಹಣಕಾಸು ನಿರ್ವಹಣೆಯ ಎಂ.ಬಿ.ಎ ಮುಂತಾದ ಕೋರ್ಸ್ಗಳ ಮೂಲಕ ಭವಿಷ್ಯದ ಸಹಕಾರಿ ಕ್ಷೇತ್ರಕ್ಕೆ ಅಗತ್ಯ ಮಾನವ ಶಕ್ತಿ ಒದಗಿಸುವುದು. ಸಹಕಾರಿ ಸಂಸ್ಥೆಗಳ ಉದ್ಯೋಗಿಗಳಿಗೆ ಮತ್ತು ಆಡಳಿತ ಮಂಡಳಿಯ ಸದಸ್ಯರಿಗೆ ತರಬೇತಿ, ಶಿಕ್ಷಣ, ಸಾಮರ್ಥ್ಯ ಒದಗಿಸುವುದು ನೂತನ ಸಹಕಾರಿ ಕಾಯ್ದೆ ಮತ್ತು ತ್ರಿಭುವನ್ ಯೂನಿವರ್ಸಿಟಿಯ ಗುರಿ ಎಂದು ಸಹಕಾರಿ ಸಚಿವ ಅಮಿತ್ ಶಾ ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ನೀಡಿದ ಉತ್ತರದಲ್ಲಿ ತಿಳಿಸಿದ್ದಾರೆ
ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುವ ನೆಪದಲ್ಲಿ ಟೆಕ್ಕಿಯೊಬ್ಬರಿಂದ 41 ಲಕ್ಷ ರೂ. ಪಡೆದು ವಂಚಿಸಿದ್ದ ಇಬ್ಬರು ನಕಲಿ ಗುರೂಜಿಗಳನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರ ಮೂಲದ ಆರೋಪಿಗಳು ಕಳಪೆ ಗುಣಮಟ್ಟದ ಆಯುರ್ವೇದಿಕ್ ಔಷಧಿಗಳನ್ನು ಮಾರಾಟ ಮಾಡುತ್ತಿದ್ದರು. ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಕಾರ್ಯಾಚರಣೆ ಮುಂದುವರಿದಿದೆ.
ಅಲೋಕ್ ಕುಮಾರ್, ಬಿ ದಯಾನಂದ್ ಸೇರಿ ಕರ್ನಾಟಕ ಇಬ್ಬರು IPS, 3 IAS ಅಧಿಕಾರಿಗಳ ವರ್ಗಾವಣೆ - ಸರ್ಕಾರ ಆದೇಶ
ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿಗಳಾದ ಅಲೋಕ್ ಕುಮಾರ್ ಮತ್ತು ಬಿ. ದಯಾನಂದ್ ಅವರ ವರ್ಗಾವಣೆಗೆ ಸರ್ಕಾರ ಆದೇಶಿಸಿದೆ. ಅಲೋಕ್ ಕುಮಾರ್ ಅವರಿಗೆ ಡಿಜಿಪಿ ಹುದ್ದೆಗೆ ಬಡ್ತಿ ನೀಡಿ ಕಾರಾಗೃಹ ಇಲಾಖೆಯ ಡಿಜಿಪಿಯಾಗಿ ನೇಮಿಸಲಾಗಿದೆ. ಬಿ. ದಯಾನಂದ್ ಅವರನ್ನು ಪೊಲೀಸ್ ತರಬೇತಿ ಶಾಲೆಯ ಎಡಿಜಿಪಿಯಾಗಿ ವರ್ಗಾಯಿಸಲಾಗಿದೆ. ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆಯೂ ಆಗಿದೆ. ಜ್ಯೋತಿ ಕೆ. ಅವರನ್ನು ಕೆಪಿಎಸ್ಸಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಡಾ. ವಿಶಾಲ್ ಆರ್. ಮತ್ತು ಡಾ. ಮಂಜುಳಾ ಎನ್. ಅವರ ವರ್ಗಾವಣೆಗಳು ಕೂಡಾ ಜರುಗಿದೆ.
ಕೊಂಕಣ ರೈಲ್ವೆ ಮಾರ್ಗದ ದ್ವಿಪಥಕ್ಕೆ ಸಂಸದ ಕೋಟ ಆಗ್ರಹ
ಉಡುಪಿ, ಡಿ.10: ಕೇರಳ, ಮಂಗಳೂರು, ಗೋವಾ ಮೂಲಕ ಮಹಾರಾಷ್ಟ್ರದ ಮುಂಬಯಿಯನ್ನು ಸಂಪರ್ಕಿಸುವ ಕೊಂಕಣ ರೈಲ್ವೆ ಮಾರ್ಗ ಅಭಿವೃದ್ಧಿ ಪಡಿಸಿ ಪೂರ್ಣಮಾರ್ಗವನ್ನು ದ್ವಿಪಥಗೊಳಿಸಲು ಉಡುಪಿ- ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದಾರೆ. ಕೊಂಕಣ ರೈಲ್ವೆ ನಿಗಮವನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸಲು ಕೇರಳ, ಗೋವಾ ಸರಕಾರಗಳು ಈಗಾಗಲೇ ಒಪ್ಪಿಗೆ ನೀಡಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರ ಸರಕಾರಗಳು ಕೂಡ ಸಮ್ಮತಿಸಿದ ಬಗ್ಗೆ ಮಾಹಿತಿ ಇದೆ. ಆದರೂ ಈ ವಿಲೀನ ಪ್ರಕ್ರಿಯೆ ವಿಳಂಬವಾಗುತ್ತಿದ್ದು, ಕೊಂಕಣ ರೈಲ್ವೆ ಮಾರ್ಗ ಮತ್ತು ನಿಲ್ದಾಣ ಅಭಿವೃದ್ಧಿಗೆ ತೊಡಕಾಗಿದೆ ಎಂದು ಅವರು ವಿವರಿಸಿದರು. ಸದ್ಯದ ಪರಿಸ್ಥಿತಿಯಲ್ಲಿ ಕೊಂಕಣ ರೈಲ್ವೆ ಏಕಪಥ ಹಳಿ ಹೊಂದಿರುವುದರಿಂದ ಹೊಸ ರೈಲುಗಳನ್ನು ಓಡಿಸಲಾಗದ ಒತ್ತಡವಿದೆ. ರೈಲ್ವೆ ಹಳಿಗಳ ದ್ವಿಪಥ ಮತ್ತು ಆಧುನಿಕರಣಕ್ಕೆ ಸಹಜವಾಗಿಯೆ ಕೊಂಕಣ ರೈಲ್ವೆ ಅನುದಾನದ ಕೊರತೆ ಅನುಭವಿಸುತ್ತಿದೆ. ಹಾಗೊಂದು ವೇಳೆ ನಿಯಮಗಳು ಮತ್ತು ಸಮನ್ವತೆಯ ಗೊಂದಲದಿಂದ ಕೊಂಕಣ ರೈಲ್ವೆ ಭಾರತೀಯ ರೈಲ್ವೆಯಲ್ಲಿ ವಿಲೀನ ವಿಳಂಬವಾದರೆ ಪ್ರಯಾಣಿಕರ ಹಿತದೃಷ್ಟಿಯಿಂದ ಮಂಗಳೂರು, ಮುಂಬೈವರೆಗೆ ಹಳಿಗಳ ದ್ವಿಪಥ ಕಾಮಗಾರಿ ಕೈಗತ್ತಿಕೊಳ್ಳಬೇಕೆಂದು ಸಂಸದ ಕೋಟ ಲೋಕಸಭೆಯ ನಿಯಮ 377ರಡಿ ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ.
ವಿಧಾನಸಭೆಯಲ್ಲಿ ಕೈಕೊಟ್ಟ ಮೈಕ್: ಕಲಾಪಕ್ಕೆ ಅಡ್ಡಿ
ಬೆಳಗಾವಿ (ಸುವರ್ಣ ವಿಧಾನಸೌಧ): ಧ್ವನಿವರ್ಧಕ (ಮೈಕ್) ಕೈಕೊಟ್ಟ ಕಾರಣಕ್ಕೆ ವಿಧಾನಸಭೆ ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಿದ ಅಪರೂಪದ ಪ್ರಸಂಗ ಬುಧವಾರ ನಡೆಯಿತು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಬುಧವಾರ ವಿಧಾನಸಭೆಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ವಿಧೇಯಕಗಳ ಮಂಡನೆ ಸಂದರ್ಭದಲ್ಲಿ ಸದನದ ಮೈಕ್ ಇದ್ದಕ್ಕಿದ್ದಂತೆ ಕೈಕೊಟ್ಟಿತು. ಈ ವೇಳೆ ಮಧ್ಯಪ್ರವೇಶಿಸಿದ ಬಿಜೆಪಿ ಸದಸ್ಯ ಸುರೇಶ್ ಕುಮಾರ್, ಸದನದ ಹೊರಗೆ ಸಂತೋಷ್ ಲಾಡ್ ಏರಿದ ಧ್ವನಿಯಲ್ಲಿ ಮಾತನಾಡುತ್ತಾರೆ. ಆದರೆ, ಸದನದ ಒಳಗೆ ಅವರು ಮಾತನಾಡುತ್ತಿದ್ದ ವೇಳೆ ಧ್ವನಿವರ್ಧಕ ಕೈಕೊಟ್ಟಿದೆ ಎಂದು ಮಾತಿನಲ್ಲೇ ತಿವಿದರು. ಹಲವು ಬಾರಿ ಸರಿಪಡಿಸಲು ಪ್ರಯತ್ನಿಸಿದರೂ ಮೈಕ್ ಸರಿಯಾಗಲಿಲ್ಲ. ಹೀಗಾಗಿ ವಿಧೇಯಕ ಮಂಡನೆಯೂ ಸದಸ್ಯರು ಸೇರಿದಂತೆ ಯಾರೊಬ್ಬರಿಗೂ ಏನು ನಡೆಯುತ್ತಿದೆ ಎಂಬುದು ಕೇಳದಂತಾಗಿತ್ತು. ಹೀಗೆ ಏಕಾಏಕಿ ಧ್ವನಿವರ್ಧಕ (ಮೈಕ್) ವ್ಯವಸ್ಥೆ ಹಾಳಾಗಿದ್ದರ ಬಗ್ಗೆ ವಿರೋಧ ಪಕ್ಷದ ಸದಸ್ಯರು, ‘ಸರಕಾರ ಶಾಸಕರ ಧ್ವನಿಯನ್ನು ಸದನದಲ್ಲೂ ಅಡಗಿಸುವ ಕೆಲಸ ಮಾಡುತ್ತಿದೆ’ ಎಂದು ವ್ಯಂಗ್ಯವಾಡಿದರು. ನಂತರ ಸ್ಪೀಕರ್ ಯು.ಟಿ. ಖಾದರ್, ಕಲಾಪವನ್ನು10 ನಿಮಿಷಗಳ ಕಾಲ ಮುಂದೂಡಿದರು.
ರಾಜಕೀಯದಲ್ಲೂ ’ನಟನೆ’ ಮಾಡುವ ಅನಿವಾರ್ಯತೆಯಲ್ಲಿ ಪವನ್ ಕಲ್ಯಾಣ್ : ಸಂತೋಷ್ ಲಾಡ್ ಕೊಟ್ರು ಅಮೂಲ್ಯ ಟಿಪ್ಸ್
Santosh Lad Vs Pawan Kalyan : ಕರ್ನಾಟಕ ಕಾರ್ಮಿಕ ಇಲಾಖೆಯ ಸಚಿವ ಸಂತೋಷ್ ಲಾಡ್ ಅವರು, ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರಿಗೆ ಬುದ್ದಿ ಮಾತೊಂದನ್ನು ಹೇಳಿದ್ದಾರೆ. ಇದು ತೆಲುಗು ಸಿನಿಮಾವಲ್ಲ, ಸನಾತನ ಧರ್ಮದ ವಿಚಾರ ಇಲ್ಲಿ ವರ್ಕೌಟ್ ಆಗುವುದಿಲ್ಲ ಎನ್ನುವ ಸಲಹೆಯನ್ನು ನೀಡಿದ್ದಾರೆ.
ಮೂಡುಬಿದಿರೆ | ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ : ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ
ಮೂಡುಬಿದಿರೆ: ಸ್ವಸ್ತಿ ಶ್ರೀ ಕಾಲೇಜನ್ನು ದಶಕಗಳಿಂದ ಮುನ್ನಡೆಸುತ್ತಿದ್ದು, ಇಲ್ಲಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಲಾಗುತ್ತಿದೆ. ಉತ್ತಮ ಕೌಶಲ್ಯವನ್ನು ಹೊಂದಿರುವ ಉಪನ್ಯಾಸಕ ವೃಂದ ಕಾಲೇಜಿನಲ್ಲಿದೆ. ಸ್ಪರ್ಧಾತ್ಮಕ ಭರಾಟೆಯಲ್ಲಿ ದಾಖಲಾತಿ ಕಡಿಮೆಯಾದರೂ, ಅರ್ಹ ವಿದ್ಯಾರ್ಥಿಗಳನ್ನು ಗುರುತಿಸಿ ದಾಖಲಿಸುವ ಕೆಲಸವನ್ನು ಉಪನ್ಯಾಸಕರು ಮಾಡಬೇಕಾಗಿದೆ ಎಂದು ಸ್ವಸ್ತಿಶ್ರೀ ಶಿಕ್ಷಣ ಸಂಸ್ಥೆಯ ಸ್ಥಾಪಕ ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಹೇಳಿದರು. ಅವರು ಜೈನಮಠದ ಭಟ್ಟಾರಕ ಸಭಾಭವನದಲ್ಲಿ ಬುಧವಾರ ನಡೆದ ಧವಲತ್ರಯ ಜೈನಕಾಶಿ ಟ್ರಸ್ಟ್ ಅಧೀನದ ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜಿನ 12ನೇ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉದ್ಯಮಿ ರಾಜೇಂದ್ರ ಜೈನ್ ಕಾರ್ಯಕ್ರಮ ಉದ್ಘಾಟಿಸಿ, ಸಾಮಾನ್ಯ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯಬೇಕು ಎನ್ನುವುದು ಸ್ವಾಮೀಜಿಯವರ ಆಶಯ. ಶಿಕ್ಷಣದ ಸಾಧನೆಯೊಂದಿಗೆ ಆತ್ಮವಿಶ್ವಾಸವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಸ್ವಾಮೀಜಿಯವರ ನೇತೃತ್ವದಲ್ಲಿ ಸಾಮಾಜಿಕ ಚಿಂತನೆಯೊಂದಿಗೆ ಮುನ್ನಡೆಯುತ್ತಿರುವ ಶಿಕ್ಷಣ ಸಂಸ್ಥೆ ಮುಂದೆ ಮತ್ತಷ್ಟು ಎತ್ತರವಾಗಿ ಬೆಳೆಯುತ್ತದೆ ಎಂದರು. ಎಂ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್, ಮಂಜುಳಾ ಅಭಯಚಂದ್ರ ಜೈನ್, ವಕೀಲರಾದ ರಂಜನ್ ಪೂವಣಿ, ಶ್ವೇತಾ ಜೈನ್, ಉದ್ಯಮಿ ನವ್ಯ ತೇಜಸ್ ಮುಖ್ಯ ಅತಿಥಿಗಳಾಗಿದ್ದರು. ದ್ವಿತೀಯ ಪಿಯುಸಿ ಶೃತಿ ಬೆಸ್ಟ್ ಸ್ಟೂಡೆಂಟ್, ಬೆಸ್ಟ್ ಒಬಿಡಿಯೆಂಟ್ ಸ್ಟೂಡೆಂಟ್ ಮನೋಜ್, ಬೆಸ್ಟ್ ಸೋಶಿಯಲ್ ವರ್ಕರ್ ಶಿವಾನಿ ಪುರಸ್ಕಾರಗಳನ್ನು ಪಡೆದರು. ವೈಯಕ್ತಿಕ ಚಾಂಪಿಯನ್ಶಿಪ್ ಪ್ರಶಸ್ತಿಯನ್ನು ಸುಮಂತ್ ಹಾಗೂ ಸೌಮ್ಯ ಪಡೆದರು. ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಪ್ರಾಂಶುಪಾಲ ಸೌಮಶ್ರೀ ಸ್ವಾಗತಿಸಿದರು. ಸರಸ್ವತಿ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಸುಷ್ಮಾ ವರದಿ ವಾಚಿಸಿದರು. ಅಕ್ಷತಾ ಶೈಕ್ಷಣಿಕ ಪ್ರತಿಭಾನ್ವಿತ ವಿದ್ಯಾರ್ಥಿಗಳ ವಿವರ ನೀಡಿದರು. ಸಾಂಸ್ಕೃತಿಕ ಸ್ಪರ್ಧೆಗಳ ವಿವರವನ್ನು ಪಾವನಶ್ರೀ, ಹಿತೇಶ್ ರಾವ್ ಕ್ರೀಡಾ ಸ್ಪರ್ಧೆಯ ವಿವರವನ್ನು ನೀಡಿದರು. ಸುಜಾತ ವಂದಿಸಿದರು.
ಗೌತಮ್ ಗಂಭೀರ್ ಕಾರ್ಯವೈಖರಿಗೆ ಪಾಕ್ ನ ಜಗಳಗಂಟ ಶಾಹಿದ್ ಅಫ್ರಿದಿ ವ್ಯಂಗ್ಯ; ರೋಹಿತ್- ಕೊಹ್ಲಿ ಪರ ಬ್ಯಾಟಿಂಗ್!
Shahid Afridi On Rohit Sharma And Virat Kohli- ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ ಮತ್ತು ಭಾರತದ ಗೌತಮ್ ಗಂಭೀರ್ ಅವರಿಬ್ಬರು ಮೈದಾನದಲ್ಲಿ ಆಡುತ್ತಿದ್ದ ಜಗಳಗಳು ಅವರಾಡುತ್ತಿದ್ದ ಕಾಲದಲ್ಲಿ ಫೇಮಸ್ ಆಗಿದ್ದವು. ಇದೀಗ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಪರ ಬೆಂಬಲಕ್ಕೆ ನಿಂತಿರುವ ಶಾಹಿದ್ ಅಫ್ರಿದಿ ಅವರು, ಗೌತಮ್ ಗಂಭೀರ್ ಅವರ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.. ಬ್ಬರು ಹಿರಿಯ ಆಟಗಾರರು ಭಾರತದ ಏಕದಿನ ತಂಡಕ್ಕೆ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟಿರುವ ಅವರು ಪ್ರಧಾನ ಕೋಚ್ ಗೌತಮ್ ಗಂಭೀರ್ ಅವರ ನಿರ್ವಹಣೆಯನ್ನೂ ಪ್ರಶ್ನಿಸಿದ್ದಾರೆ.
ಮಲೆನಾಡು ಪ್ರದೇಶಾಭಿವೃದ್ಧಿ ಮಂಡಲಿ ಸೇರಿ ಹನ್ನೆರಡು ವಿಧೇಯಕಗಳ ಮಂಡನೆ
ಬೆಳಗಾವಿ (ಸುವರ್ಣ ವಿಧಾನಸೌಧ): 2025ನೆ ಸಾಲಿನ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಲಿ (ತಿದ್ದುಪಡಿ) ವಿಧೇಯಕ ಸೇರಿದಂತೆ 12 ವಿಧೇಯಕವನ್ನು ಒಂದೇ ದಿನ ಒಂದೇ ಬಾರಿಗೆ ವಿಧಾನಸಭೆಯಲ್ಲಿ ಮಂಡಿಸಲಾಯಿತು. ಬುಧವಾರ ವಿಧಾನಸಭೆಯಲ್ಲಿ 2025ನೇ ಸಾಲಿನ ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ (ತಿದ್ದುಪಡಿ) ವಿಧೇಯಕ ಹಾಗೂ 2025ನೆ ಸಾಲಿನ ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) (ತಿದ್ದುಪಡಿ) ವಿಧೇಯಕಗಳನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಂಡಿಸಿದರು. ಬಳಿಕ ವಿಧೇಯಕದ ಪ್ರಸ್ತಾವವು ವಿಧಾನಸಭೆಯಲ್ಲಿ ಮಂಡನೆ ಮಾಡಲಾಯಿತು. 2025ನೆ ಸಾಲಿನ ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ, 2025ನೆ ಸಾಲಿನ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ, 2025ನೆ ಸಾಲಿನ ಚಂದ್ರಗುತ್ತಿ ಶ್ರೀ ರೇಣುಕಾಂಬ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ. 2025ನೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮತ್ತು ಇತರ ಕೆಲವು ಕಾನೂನು (ತಿದ್ದುಪಡಿ) ವಿಧೇಯಕ, 2025ನೆ ಸಾಲಿನ ಔಷಧ ಮತ್ತು ಪ್ರಸಾಧನ ಸಾಮಗ್ರಿ (ಕರ್ನಾಟಕ ತಿದ್ದುಪಡಿ) ವಿಧೇಯಕ, 2025ನೆ ಸಾಲಿನ ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕ, 2025ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ಎರಡನೇ ತಿದ್ದುಪಡಿ) ವಿಧೇಯಕ. 2025ನೆ ಸಾಲಿನ ಬಯಲುಸೀಮೆ ಪ್ರದೇಶಾಭಿವೃಧ್ಧಿ ಮಂಡಲಿ (ತಿದ್ದುಪಡಿ) ವಿಧೇಯಕ, 2025 ಸಾಲಿನ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಲಿ (ತಿದ್ದುಪಡಿ) ವಿಧೇಯಕಗಳನ್ನು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಮಂಡಿಸಿದರು. ಬಳಿಕ ಸ್ಪೀಕರ್ ಯು.ಟಿ.ಖಾದರ್ ಅವರು ವಿಧೇಯಕ ಮಂಡನೆ ಮಾಡಲಾಗಿದೆ.
B Khata: ಬಿ - ಖಾತಾದಿಂದ ಎ - ಖಾತಾ ಪರಿವರ್ತನೆ ಭರ್ಜರಿ ಗುಡ್ನ್ಯೂಸ್ ಕೊಟ್ಟ ಸರ್ಕಾರ!
B Khata: ಬೆಂಗಳೂರಿನಲ್ಲಿ ಮೊದಲ ಹಂತದಲ್ಲಿ ಆಸ್ತಿಗಳಿಗೆ ಇ - ಖಾತಾ ಪರಿಚಯಿಸಲಾಗಿತ್ತು. ಇದಾದ ನಂತರ ಕರ್ನಾಟಕದಾದ್ಯಂತ ಆಸ್ತಿಗಳಿಗೆ ಇ - ಖಾತಾ ಪರಿಚಯಿಸಲಾಗಿದೆ. ಅಲ್ಲದೇ ಮುಂದುವರಿದು ಆಸ್ತಿದಾರರು ಹಲವು ವರ್ಷಗಳಿಂದ ಕಾಯುತ್ತಿದ್ದ ಬಿ - ಖಾತಾದಿಂದ ಎ ಖಾತಾ ಪರಿವರ್ತನೆಗೂ ಅವಕಾಶ ನೀಡಲಾಗಿದೆ. ಇದೀಗ ಬಿ ಖಾತಾಗೆ ಸಂಬಂಧಿಸಿದಂತೆ ಮತ್ತೊಂದು ಬಿಗ್ ಗುಡ್ನ್ಯೂಸ್ ಕೊಟ್ಟಿದೆ. ರಾಜ್ಯದ
ಕಲಬುರಗಿ| ಬೂಕರ್ ಪ್ರಶಸ್ತಿ ವಿಜೇತೆ ದೀಪಾ ಭಾಸ್ತಿಗೆ ಸನ್ಮಾನ
ಕಲಬುರಗಿ: ಅನುವಾದ ಸಾಹಿತ್ಯದಲ್ಲಿ ಬೂಕರ್ ಪ್ರಶಸ್ತಿ ಪಡೆದಿರುವ ದೀಪಾ ಭಾಸ್ತಿ ಅವರಿಗೆ ಬುಧವಾರ ಪ್ರಾದೇಶಿಕ ಆಯುಕ್ತೆ ಝಹೀರಾ ನಸೀಮ್ ಮತ್ತು ಡಿ.ಸಿ. ಬಿ.ಫೌಝಿಯಾ ತರನ್ನುಮ್ ಅವರು ಸನ್ಮಾನಿಸಿದರು. ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಲಬುರಗಿಗೆ ಆಗಮಿಸಿದ ದೀಪಾ ಭಾಸ್ತಿ ಅವರನ್ನು ಜಿಲ್ಲಾಧಿಕಾರಿಗಳ ಕೊಠಡಿಯಲ್ಲಿ ಸನ್ಮಾನಿಸಲಾಯಿತು. ಈ ವೇಳೆ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ, ಎಸ್.ಪಿ.ಅಡ್ಡೂರು ಶ್ರೀನಿವಾಸಲು, ಕಲಬುರಗಿ ಉಪ ವಿಭಾಗದ ಸಹಾಯಕ ಆಯುಕ್ತೆ ಸಾಹಿತ್ಯ ಉಪಸ್ಥಿತರಿದ್ದರು.
ಮಾನವ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆ: ಜಿಲ್ಲಾಧಿಕಾರಿ ಡಾ.ಸುರೇಶ್ ಇಟ್ನಾಳ
ಕೊಪ್ಪಳ.ಡಿ.10: ಮಾನವ ಹಕ್ಕುಗಳನ್ನು ಸಂರಕ್ಷಣೆ ಮಾಡುವಲ್ಲಿ ನಮ್ಮ ಮತ್ತು ನಿಮ್ಮ ಮೇಲೆ ಹೆಚ್ಚಿನ ರೀತಿಯ ಜವಾಬ್ದಾರಿಗಳು ಇವೆ. ಅದನ್ನು ಎಲ್ಲರೂ ಅರಿತು ಕೊಂಡು ಇನ್ನೂ ಹೆಚ್ಚಿನ ರಿತಿಯ ಕ್ರಮ ಕೈಗೊಳ್ಳುವುದರ ಜೊತೆಗೆ ಎಲ್ಲರೂ ಒಟ್ಟಾಗಿ ಮಾನವ ಹಕ್ಕುಗಳ ರಕ್ಷಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಹೇಳಿದರು. ಬುಧವಾರ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೊಪ್ಪಳ ಇದರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ.ಸುರೇಶ ಬಿ.ಇಟ್ನಾಳ, ನಮ್ಮ ದೇಶದಲ್ಲಿ ಸಂವಿಧಾನಾತ್ಮಕ ಹಕ್ಕು, ಶಾಸನಬದ್ಧ ಹಕ್ಕು ಹಾಗೂ ಖಾಸಗಿ ಹಕ್ಕು ಎನ್ನುವ ಮೂರು ಬಗೆಯ ಹಕ್ಕುಗಳಿವೆ. ಸಮಾನತೆಯ ಹಕ್ಕು, ಸಮಾನ ಕಾನೂನು ರಕ್ಷಣೆ, ಶೋಷಣೆ ವಿರುದ್ಧದ ಹಕ್ಕು, ಆರೋಗ್ಯಪೂರ್ಣ ಪರಿಸರದಲ್ಲಿ ಗೌರವಯುತ ಜೀವನ ನಡೆಸುವ ಹಕ್ಕು, ಕಲಿಕೆಯ ಹಕ್ಕು, ಭಾರತದ ಯಾವುದೇ ಸ್ಥಳಕ್ಕೆ ಹೋಗಲು ಮತ್ತು ಅಲ್ಲಿ ವಾಸಿಸುವ ಹಕ್ಕು, ಧಾರ್ಮಿಕ ಸಾತಂತ್ರ್ಯದ ಹಕ್ಕು, ಸಮಾನತೆಯ ಮತ್ತು ಸಂವಿಧಾನಾತ್ಮಕ ಪರಿಹಾರದ ಹಕ್ಕು ಸೇರಿ ಹಲವಾರು ಹಕ್ಕುಗಳು ನಮಗೆ ಸಂವಿಧಾನ ಬದ್ಧವಾಗಿ ಬಂದಿವೆ. ಹುಟ್ಟಿನಿಂದಲೇ ಎಲ್ಲರೂ ಮಾನವ ಹಕ್ಕುಗಳನ್ನು ಪಡೆದಿರುತ್ತಾರೆ. ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಹಕ್ಕುಗಳು ಎಷ್ಟು ಮುಖ್ಯವೋ ಅಷ್ಟೇ ಕರ್ತವ್ಯಗಳು ಕೂಡ ಬಹಳ ಮುಖ್ಯ ಎನ್ನುವುದನ್ನು ನಾವು ಅರ್ಥ ಮಾಡಿಕೊಳ್ಳಬೇಕು ಎಂದರು. ಉದ್ಯೋಗದ ಬಗ್ಗೆ ನೋಡುವುದಾದರೆ, ಇವತ್ತು ಯಾವುದೇ ಒಂದು ಇಂಜಿನಿಯರಿಂಗ್ ಕಾಲೇಜ್ ನಲ್ಲಿ ಕ್ಯಾಂಪಸ್ ಸಂದರ್ಶನ ನಡುಸಿದಾಗ, ಕೇವಲ ಶೇ.40 ಪ್ರತಿಶತ ಮಕ್ಕಳು ಉದ್ಯೋಗಕ್ಕೆ ಅರ್ಹರಿದ್ದಾರೆ ಎಂದು ಉದ್ಯೋಗದಾತರು ಹೇಳುತ್ತಾರೆ. ಉಳಿದ ಶೇ. 60ರಷ್ಟು ಮಕ್ಕಳು ಆಯ್ಕೆಯಾಗದಿರುವುದಕ್ಕೆ ಕಾರಣ ಅವರಲ್ಲಿನ ಕೌಶಲ್ಯಗಳ ಕೊರತೆಯನ್ನು ಕಾಣಬಹುದು. ಅದಕ್ಕಾಗಿ ಸರ್ಕಾರ ಶಿಕ್ಷಣದ ಜೊತೆಗೆ ಕೌಶಲ್ಯ ತರಬೇತಿಗಳನ್ನು ಕೊಡುತ್ತಿದ್ದು, ಅವುಗಳನ್ನು ನಾವು ಸರಿಯಾಗಿ ಅಳವಡಿಸಿಕೊಂಡು ಉದ್ಯೋಗ ಪಡೆಯಲು ಅರ್ಹರಾಗಬೇಕು. ಮಕ್ಕಳು ಇದರ ಕಡೆಗೆ ವಿಶೇಷ ಗಮನ ಹರಿಸುವಂತೆ ತಿಳಿಸಿದರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ದರಗದ ಅವರು ಮಾತನಾಡಿ, ವಿಶ್ವ ಮಾನವ ಹಕ್ಕುಗಳ ದಿನಾಚರಣೆಯನ್ನು ಒಬ್ಬ ಮನುಷ್ಯನನ್ನು ಮನುಷ್ಯನಾಗಿ ನೋಡಿಕೊಳ್ಳಲು ಅವಕಾಶ ಬೇಕು ಎನ್ನುವ ಕಾರಣಕ್ಕೆ ಹಮ್ಮಿಕೊಳ್ಳಲಾಗುತ್ತದೆ. ನಮ್ಮ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳನ್ನು ನೀಡಲಾಗಿದೆ. ಇಂತಹ ಅವಕಾಶಗಳನ್ನು ನೀಡಿದ್ದರು ಸಹ ಇಂದಿನ ದಿನಗಳಲ್ಲಿ ನಾವು ತಾರತಮ್ಯಗಳನ್ನು ಕಾಣಬಹುದಾಗಿದೆ. ವಿಶೇಷವಾಗಿ ನಮ್ಮ ಭಾಗದಲ್ಲಿ ಕೆಲವು ಕಡೆ ಇಂದಿಗೂ ಅಸ್ಪೃಶ್ಯತೆ ಆಚರಣೆಯನ್ನು ಅನುಸರಿಸಲಾಗುತ್ತಿದೆ. ಇದು ಒಂದು ಮಾನವ ಹಕ್ಕುಗಳ ಉಲ್ಲಂಘನೆಗೆ ಉದಾಹರಣೆಯಾಗಿದೆ. ಇಂತಹ ಆಚರಣೆಯನ್ನು ನಿರ್ಮೂಲನೆ ಮಾಡಿದಾಗ ಮಾನವ ಹಕ್ಕುಗಳ ರಕ್ಷಣೆಯಾಗುತ್ತದೆ ಎಂದರು. ಒಬ್ಬರ ಹಕ್ಕುಗಳನ್ನು ಮತ್ತೊಬ್ಬರು ಉಲ್ಲಂಘನೆ ಮಾಡದಂತೆ ನೊಡಿಕೊಳ್ಳಬೇಕು. ಮಾನವ ಹಕ್ಕುಗಳಿಗೆ ಸಂಬಂಧಿಸಿದಂತೆ ಬಹಳಷ್ಟು ಹೋರಾಟಗಳನ್ನು ನಾವು ಕಾಣುತ್ತೇವೆ. ಆ ಎಲ್ಲಾ ಹೋರಾಟಗಳ ಫಲವನ್ನು ಈ ಸಂವಿಧಾನದಲ್ಲಿ ಕಂಡಿದ್ದೇವೆ. ಹಾಗಾಗಿ ಸಂವಿಧಾನದ ಆಶಯಗಳನ್ನು ನಾವು ಸರಿಯಾದ ರೀತಿಯಲ್ಲಿ ಪಾಲನೆ ಮಾಡಬೇಕು ಎನ್ನುವ ಉದ್ದೇಶದಿಂದ ಈ ಒಂದು ಕಾರ್ಯಕ್ರಮವನ್ನು ಆಚರಿಸಲಾಗುತ್ತದೆ ಎಂದು ಹೇಳಿದರು. ಮಂಗಳೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಭುರಾಜ್ ನಾಯಕ ಅವರು ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕುರಿತು ಉಪನ್ಯಾಸ ನೀಡಿದರು. ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎ.ವಿ. ಕಣವಿ ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್.ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ್, ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆ ಕೊಪ್ಪಳದ ವ್ಯವಸ್ಥಾಪಕ ಹರೀಶ್ ಜೋಗಿ, ಕೊಪ್ಪಳ ತಹಶೀಲ್ದಾರ ವೀಠ್ಠಲ್ ಚೌಗಲಾ ಸೇರಿದಂತೆ ಇತರೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಯುದ್ಧ &ಹಿಂಸಾಚಾರದ ನಡುವೆ ಚುನಾವಣೆಗೆ ರೆಡಿಯಾದ ಉಕ್ರೇನ್? ಅಧ್ಯಕ್ಷನಿಂದಲೇ ಸಿಕ್ಕಿದೆ ಮಹತ್ವದ ಮಾಹಿತಿ!
ಉಕ್ರೇನ್ ಅಧ್ಯಕ್ಷ ತನ್ನ ಹಠ ಬಿಟ್ಟು ರಷ್ಯಾ ಜೊತೆಗೆ ಸಂಧಾನ ಮಾಡಿಕೊಂಡು ಯುದ್ಧ ನಿಲ್ಲಿಸುವ ನಿರ್ಧಾರ ಮಾಡುತ್ತಿಲ್ಲ. ಇನ್ನೊಂದು ಕಡೆ ಅಮೆರಿಕ ಮಾಡುತ್ತಿರುವ ಪ್ರಯತ್ನಗಳಿಗೆ ಬೆಲೆ ಇಲ್ಲದ ರೀತಿ ಆಗಿ ಹೋಗಿದೆ. ಈ ಮೂಲಕ ರಷ್ಯಾ &ಉಕ್ರೇನ್ ಯುದ್ಧ ಯಾವುದೇ ಅಡೆತಡೆ ಇಲ್ಲದಂತೆ ಮುಂದುವರಿದು, ಆತಂಕ ಇನ್ನಷ್ಟು ಹೆಚ್ಚು ಮಾಡಿದೆ. ಇಂತಹ ಸಮಯದಲ್ಲೇ ಉಕ್ರೇನ್ ದೇಶದ
ಕೋಮು ದ್ವೇಷ ಭಾಷಣ ಪ್ರಕರಣ: ಕಲ್ಲಡ್ಕ ಪ್ರಭಾಕರ ಭಟ್ ಗೆ ಜಾಮೀನು ಮಂಜೂರು
ಪುತ್ತೂರು: ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ಪ್ರಚೋದಕ, ಮಹಿಳೆಯರ ಘನತೆಗೆ ಧಕ್ಕೆ ತರುವ ಹಾಗೂ ಸಾರ್ವಜನಿಕ ಅಶಾಂತಿ ಉಂಟು ಮಾಡುವ ಭಾಷಣ ಮಾಡಿರುವ ಆರೋಪದಡಿ ಡಾ.ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ದೂರು ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಬುಧವಾರ ಅವರಿಗೆ ಜಾಮೀನು ಮಂಜೂರು ಮಾಡಿದೆ. ಜಾಮೀನು ಕೋರಿ ಅವರು ಸಲ್ಲಿಸಿದ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ಮಂಜೂರುಗೊಳಿಸಿದೆ. ಪುತ್ತೂರು ತಾಲೂಕಿನ ಉಪ್ಪಳಿಗೆ ಎಂಬಲ್ಲಿ ಅ.22ರಂದು ನಡೆದ ದೀಪೋತ್ಸವ ಮತ್ತು ಗೋಪೂಜೆಯಲ್ಲಿ ಭಾಗವಹಿಸಿದ್ದ ಕಲ್ಲಡ್ಕ ಪ್ರಭಾಕರ ಭಟ್ ಕೋಮು ಪ್ರಚೋದನಾತ್ಮಕವಾಗಿ ಭಾಷಣ ಮಾಡಿರುವ ಬಗ್ಗೆ ಈಶ್ವರಿ ಪದ್ಮುಂಜ ಅವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿದ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಮನೆಗೆ ನೋಟೀಸ್ ಜಾರಿಗೊಳಿಸಿದ್ದರು. ಬಳಿಕದ ಬೆಳವಣಿಗೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅ. 27ರಂದು ನಡೆದ ವಿಚಾರಣೆಯಲ್ಲಿ ನ್ಯಾಯಾಲಯವು ಬಲವಂತದ ಕ್ರಮ ತೆಗೆದುಕೊಳ್ಳದಂತೆ ಮಧ್ಯಂತರ ಆದೇಶ ನೀಡಿ ಪೂರ್ಣ ವಿಚಾರಣೆಯನ್ನು ಅ. 29ಕ್ಕೆ ಮುಂದೂಡಿತ್ತು. ಅ.29ರಂದು ದೂರುದಾರೆ ಈಶ್ವರಿ ಪದ್ಮುಂಜ ಅವರ ಪರ ವಕೀಲರು ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯಕ್ಕೆ ಬಿಎನ್ಎಸ್ಎಸ್ ಸೆಕ್ಷನ್ 338, 339 ಅಡಿ ವಾದ ಮಂಡಿಸಲು ಅವಕಾಶ ಕೋರಿ ಅರ್ಜಿ ಸಲ್ಲಿಸಿದ್ದರು. ಅಂದು ನ್ಯಾಯಾಲಯ ಅರ್ಜಿಯ ವಿಚಾರಣೆಯನ್ನು ಹಲವು ಬಾರಿ ಮುಂದೂಡಿತ್ತು. ಇದೀಗ ನ್ಯಾಯಾಲಯ ಜಾಮೀನು ನೀಡಿದೆ. ಪ್ರಭಾಕರ ಭಟ್ ಪರವಾಗಿ ಪುತ್ತೂರಿನ ವಕೀಲ ಮಹೇಶ್ ಕಜೆ ವಾದಿಸಿದ್ದರು
AI ಫೋಟೋ ಎನ್ನುವವರು Fact Check ಮಾಡಿಕೊಳ್ಳಿ ಎಂದು ಪೋಸ್ಟ್
ಅರಣ್ಯ ಅತಿಕ್ರಮಣ ಮಾನವ-ವನ್ಯಜೀವಿಗಳ ಸಂಘರ್ಷಕ್ಕೆ ಪ್ರಮುಖ ಕಾರಣ: ನ್ಯಾ.ಆರ್ ನಟರಾಜ್
ವಿಜಯನಗರ: ಮನುಷ್ಯನು ಅರಣ್ಯವನ್ನು ಆಕ್ರಮಿಸಿಕೊಂಡು ವಸತಿ ಪ್ರದೇಶಗಳು, ರಸ್ತೆಗಳು ಮತ್ತು ಕೃಷಿ ಭೂಮಿಯನ್ನು ವಿಸ್ತರಿಕೊಳ್ಳುತ್ತಿದ್ದಾನೆ. ಇದರಿಂದ ವನ್ಯಜೀವಿಗಳಿಗೆ ವಾಸಿಸಲು ಜಾಗವಿಲ್ಲದೆ ಆಹಾರ ಮತ್ತು ನೀರನ್ನು ಹುಡುಕಿಕೊಂಡು ನಾಡಿಗೆ ಬರುತ್ತಿರುವುದೆ. ಇದು ಮಾನವ ಮತ್ತು ವನ್ಯ ಜೀವಿಗಳ ನಡುವಿನ ಸಂಘರ್ಷಕ್ಕೆ ಮುಖ್ಯ ಕಾರಣವಾಗಿದೆ ಎಂದು ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಆರ್.ನಟರಾಜ್ ಹೇಳಿದರು. ದರೋಜಿಯ ದರೋಜಿ ಕರಡಿ ಸಂರಕ್ಷಣಾ ಪ್ರದೇಶದಲ್ಲಿ ಜಿಲ್ಲಾ ನ್ಯಾಯಾಂಗ ಬಳ್ಳಾರಿ ಹಾಗೂ ವಿಜಯನಗರ, ಅರಣ್ಯ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬಳ್ಳಾರಿ ಇದರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಾನವ, ವನ್ಯಜೀವಿಗಳ ಸಂಘರ್ಷದ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದ ಆರ್.ನಟರಾಜ್, ಈ ಭೂಮಿ ಕೇವಲ ಮನುಷ್ಯರಿಗೆ ಮಾತ್ರ ಸೀಮಿತವಾಗಿಲ್ಲ. ಇದು ಪ್ರಕೃತಿಯ ಭಾಗವಾಗಿರುವ ಪ್ರತಿಯೊಂದು ಜೀವಿಯ ಹಕ್ಕಾಗಿದೆ. ಇತ್ತೀಚಿನ ದಿನಗಳಲ್ಲಿ ಮಾನವ ಸಮುದಾಯಗಳ ಬೆಳವಣಿಗೆ ಮತ್ತು ವನ್ಯಜೀವಿಗಳ ವಾಸಸ್ಥಾನಗಳ ನಷ್ಟದಿಂದಾಗಿ, ಮನುಷ್ಯ ಮತ್ತು ಪ್ರಾಣಿಗಳ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿದೆ. ಹೆಚ್ಚುತ್ತಿರುವ ಜನಸಂಖ್ಯೆಯಿಂದಾಗಿ ನಾವು ಕಾಡುಗಳನ್ನು ಆಕ್ರಮಿಸಿಕೊಳ್ಳುತ್ತಿದ್ದಿವೆ. ಇದರಿಂದ ವನ್ಯಜೀವಿಗಳು ನಾಡಿಗೆ ಬರುತ್ತಿವೆ ಎಂದು ಹೇಳಿದರು. ಬಳ್ಳಾರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷೆ ಕೆ.ಜಿ.ಶಾಂತಿ ಮಾತನಾಡಿ, ಮಾನವ ತನ್ನ ಸ್ವಾರ್ಥಕ್ಕಾಗಿ ಕಾಡನ್ನು ಅತಿಕ್ರಮಿಸಿ ತನ್ನ ಜಮೀನನ್ನು ವಿಸ್ತರಿಸುತ್ತಾ ಹೋದಾಗ ಸಹಜವಾಗಿ ಪ್ರಾಣಿಗಳ ಕ್ಷೇತ್ರ ಕಡಿಮೆಯಾಗಿ ಅವು ನಾಡಿಗೆ ಬರುವುದು ಸ್ವಭಾವಿಕ. ಆದ್ದರಿಂದ ಮನುಷ್ಯ ತನ್ನ ಆಸೆಯನ್ನು ಇತಿಮಿತಿಯಲ್ಲಿ ಇಟ್ಟುಕೊಳ್ಳಬೇಕು. ದೇವರು ಈ ಭೂಮಿಯನ್ನು ಸಕಲ ಜೀವರಾಶಿಗಳಿಗಾಗಿ ಸೃಷ್ಟಿಸಿದ್ದು ಅದನ್ನು ನಾವು ಎಲ್ಲರೂ ಸರಿಯಾಗಿ ಬಳಸಿಕೊಳ್ಳಬೇಕು. ಈ ಕಾರ್ಯಾಗಾರವು ಕೇವಲ ಚರ್ಚಾ ವೇದಿಕೆಯಾಗಿರದೆ ಸಮಸ್ಯೆಗೆ ಸಮಗ್ರ, ವೈಜ್ಞಾನಿಕ ಮತ್ತು ಶಾಶ್ವತ ಪರಿಹಾರಗಳನ್ನು ಕಂಡುಕೊಳ್ಳುವ ಒಂದು ಗಂಭೀರ ಪ್ರಯತ್ನವಾಗಿದೆ ಎಂದು ಹೇಳಿದರು. ವಿಜಯನಗರ ಜಿಲ್ಲೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಹೆಚ್.ಅನುಪಮ ಮಾನವ ಮತ್ತು ವನ್ಯಜೀವಿ ಸಂಘರ್ಷಕ್ಕೆ ಇರುವ ಕಾರಣಗಳು, ಸವಾಲುಗಳು ಮತ್ತು ಪರಿಹಾರ ಕುರಿತು ಉಪನ್ಯಾಸ ನೀಡಿದರು. ಕಾರ್ಯಾಗಾರದಲ್ಲಿ ವಿಜಯನಗರ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ಎಂ. ರಾಜಶೇಖರ್, ಬಳ್ಳಾರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್.ಬಸವರಾಜ್ ಸೇರಿದಂತೆ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯ ನ್ಯಾಯಾಧೀಶರು, ಅರಣ್ಯ ಇಲಾಖೆಯ ಸಿಬ್ಬಂದಿ ವರ್ಗದವರು, ನ್ಯಾಯಾಂಗ ಇಲಾಖೆಯ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಭೂ ಪರಿವರ್ತನೆ ನಿಯಮಗಳ ಸರಳೀಕರಣ: ಸಚಿವ ಕೃಷ್ಣ ಬೈರೇಗೌಡ
ಬೆಳಗಾವಿ(ಸುವರ್ಣವಿಧಾನಸೌಧ): ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪ-ಕಲಂಗಳಿಗೆ ತಿದ್ದುಪಡಿಯನ್ನು ಮಾಡಲಾಗಿದೆ. ಅದನ್ನು ಜಾರಿಗೆ ತರಲು ಈಗಾಗಲೇ ವಿವಿಧ ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಿ, ಅಭಿಪ್ರಾಯ ಹಾಗೂ ಸಲಹೆಯನ್ನು ಪಡೆದು ಸೂಕ್ತ ನಿಯಮಗಳನ್ನು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಬುಧವಾರ ವಿಧಾನ ಪರಿಷತ್ನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ರಾಮೋಜಿ ಗೌಡರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರಸ್ತುತ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸಲು ಕ್ರಮವಹಿಸಲಾಗುತ್ತಿರುವುದರಿಂದ ಜನತೆಗೆ ತೊಂದರೆಯಾಗುತ್ತಿರುವುದು ಸರಕಾರದ ಗಮನಕ್ಕೆ ಬಂದಿರುವುದಿಲ್ಲ ಎಂದರು. ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ಕ್ಕೆ ಮಾಡಲಾದ ತಿದ್ದುಪಡಿಗಳಿಗೆ ಅನುಗುಣವಾಗಿ ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ವಿವಿಧ ನಿಯಮಗಳಿಗೆ ತಿದ್ದುಪಡಿ ಮಾಡಲು ಸರಕಾರವು ದಿನಾಂಕ: 17.09.2025ರಂದು ಕರಡು ನಿಯಮಗಳ ಅಧಿಸೂಚನೆಯನ್ನು ಹೊರಡಿಸಿದ್ದು, ಶೀಘ್ರದಲ್ಲಿ ಅಂತಿಮ ಅಧಿಸೂಚನೆಯನ್ನು ಹೊರಡಿಸಲಾಗುವುದು ಎಂದು ಕೃಷ್ಣ ಬೈರೇಗೌಡ ಹೇಳಿದರು.
ಮಧ್ಯವರ್ತಿಗಳ ಉದ್ಯೋಗ ಆಮಿಷಕ್ಕೆ ಒಳಗಾಗಬೇಡಿ: ಡಿಎಚ್ ಒ ಡಾ.ಶಂಕರ್ ನಾಯ್ಕ್
ವಿಜಯನಗರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿದಂತೆ ಇತರ ಇಲಾಖೆಗಳಲ್ಲಿ ಕೆಲಸ ಕೊಡಿಸುವುದಾಗಿ ಕೆಲವು ನಕಲಿ ಸಂಸ್ಥೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ದೂರವಾಣಿ ಸಂಖ್ಯೆ ನೀಡುತ್ತಿದ್ದು, ಈ ಬಗ್ಗೆ ಅಕಾಂಕ್ಷಿಗಳು ವಿಚಾರಿಸಿದಾಗ ಅವರಿಂದ ಹಣ ದೋಚಿ ಪರಾರಿಯಾಗಿರುವ ಬಗ್ಗೆ ವರದಿಯಾಗಿದೆ. ಸಾರ್ವಜನಿಕರು ಇಂತಹ ಯಾವುದೇ ನಕಲಿ ಮತ್ತು ವಂಚನೆಗಳ ಸುದ್ದಿಗಳಿಗೆ ಕಿವಿಗೊಡಬಾರದೆಂದು ಡಿಎಚ್ ಒ ಡಾ.ಶಂಕರ್ ನಾಯ್ಕ್ ಹೇಳಿದ್ದಾರೆ. ಆರೋಗ್ಯ ಇಲಾಖೆಯಲ್ಲಿ ಯಾರಾದರೂ ಕೆಲಸ ಕೊಡಿಸಲು ಹಣದ ಬೇಡಿಕೆಯಿಟ್ಟರೆ ಕೂಡಲೇ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಗೆ ಮಾಹಿತಿ ನೀಡಬೇಕೆಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಲ್.ಆರ್.ಶಂಕರ್ ನಾಯ್ಕ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸದ್ದು ಗದ್ದಲ ಜೊತೆಗಿಷ್ಟು ಸ್ವಾರಸ್ಯಕರ ಮಾತುಕತೆ: ಡೇ 3 ಬೆಳಗಾವಿ ಅಧಿವೇಶನದ ಹೈಲೈಟ್ಸ್ ಏನೇನು?
ಬೆಳಗಾವಿ ಅಧಿವೇಶನದ ಮೂರನೇ ದಿನ, ನಾಯಕತ್ವ ಬದಲಾವಣೆ, ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಿತು. ಶಾಸಕ ತಮ್ಮಯ್ಯನವರ ಹೆಸರಿನಲ್ಲಿ ಗೊಂದಲ, ಅರವಿಂದ ಬೆಲ್ಲದ್ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ, ದ್ವೇಷ ಭಾಷಣ ಮಸೂದೆ ಮಂಡನೆ, ಯತ್ನಾಳ್ರ ಏಕಾಂಗಿ ಪ್ರತಿಭಟನೆ ಗಮನ ಸೆಳೆದವು.
ಮಂಗಳೂರು ವಿಮಾನ ನಿಲ್ದಾಣಕ್ಕೆ ಪಾಯಿಂಟ್ ಆಫ್ ಕಾಲ್ ಸ್ಥಾನಮಾನ ನೀಡಲು ಸಂಸದ ಬ್ರಿಜೇಶ್ ಚೌಟ ಆಗ್ರಹ
ಹೊಸದಿಲ್ಲಿ, ಡಿ.10: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುರ್ತಾಗಿ ಪಾಯಿಂಟ್ ಆಫ್ ಕಾಲ್ (ಟಇ) ಸ್ಥಾನಮಾನ ನೀಡಬೇಕು ಎಂದು ಸಂಸದ ಬ್ರಿಜೇಶ್ ಚೌಟ ಆಗ್ರಹಿಸಿದ್ದಾರೆ. ಲೋಕಸಭೆಯಲ್ಲಿ ನಿಯಮ 377ರಡಿ ಈ ವಿಷಯದ ಬಗ್ಗೆ ಧ್ವನಿಯೆತ್ತಿದ ಸಂಸದ ಚೌಟ ಅವರು, ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಕರಾವಳಿ ಕರ್ನಾಟಕ ಮತ್ತು ನೆರೆಯ ಕೇರಳಕ್ಕೆ ಪ್ರಮುಖ ವಾಯುಯಾನ ಹೆಬ್ಬಾಗಿಲಾಗಿದೆ. ಈ ವಿಮಾನ ನಿಲ್ದಾಣ 2024-25ರ ಅವಧಿಯಲ್ಲಿ 7.15 ಲಕ್ಷ ಅಂತರರಾಷ್ಟ್ರೀಯ ಪ್ರಯಾಣಿಕರ ಸಹಿತ ಸುಮಾರು 23.4 ಲಕ್ಷ ಪ್ರಯಾಣಿಕರ ಪ್ರಯಾಣವನ್ನು ನಿರ್ವಹಿಸಿದೆ. ಅದಕ್ಕಾಗಿ 16,800ಕ್ಕೂ ಹೆಚ್ಚು ವಿಮಾನಗಳ ಹಾರಾಟವಾಗಿದೆ. ಇದು ವಾರ್ಷಿಕವಾಗಿ ಶೇ.15ಕ್ಕಿಂತ ಹೆಚ್ಚು ಬೆಳವಣಿಗೆಯನ್ನು ದಾಖಲಿಸಿದೆ. ಈ ಅಂಕಿ-ಅಂಶಗಳು ವಿಮಾನ ನಿಲ್ದಾಣದ ಬೆಳವಣಿಗೆ ಮತ್ತು ವಾಣಿಜ್ಯ ಉತ್ತೇಜನದ ಪ್ರಾಮುಖ್ಯತೆಯನ್ನು ಎತ್ತಿ ತೋರಿಸುತ್ತವೆ ಎಂದು ಹೇಳಿದ್ದಾರೆ. ತುಳುನಾಡು ಪ್ರದೇಶಗಳ ಗಣನೀಯ ಸಂಖ್ಯೆಯ ಜನರು ಗಲ್ಫ್ ಮತ್ತು ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಔದ್ಯೋಗಿಕ ಸಮುದಾಯವು ಅಂತರರಾಷ್ಟ್ರೀಯ ಪ್ರಯಾಣಕ್ಕಾಗಿ ಮಂಗಳೂರು ವಿಮಾನ ನಿಲ್ದಾಣವನ್ನೇ ಹೆಚ್ಚು ಅವಲಂಬಿಸಿಕೊಂಡಿದೆ. ಆದರೆ, ಪಾಯಿಂಟ್ ಆಫ್ ಕಾಲ್ ಸ್ಥಾನಮಾನದ ಕೊರತೆಯಿಂದಾಗಿ ವಿದೇಶಿ ವಿಮಾನಯಾನ ಸಂಸ್ಥೆಗಳು ಇಲ್ಲಿಂದ ನೇರ ಅಂತರರಾಷ್ಟ್ರೀಯ ಸೇವೆಗಳನ್ನು ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಪ್ರಯಾಣಿಕರು ಬೆಂಗಳೂರು ಅಥವಾ ಕೊಚ್ಚಿನ್ ವಿಮಾನ ನಿಲ್ದಾಣದ ಮೂಲಕ ಸಂಚರಿಸಬೇಕಾದ ಪರಿಸ್ಥಿತಿಯಿದೆ. ಇದರಿಂದ ಅನಿವಾಸಿ ಭಾರತೀಯ ಸಮುದಾಯಕ್ಕೆ ದುಬಾರಿ ವೆಚ್ಚ, ದೀರ್ಘ ಪ್ರಯಾಣದ ಸಮಯದ ಜತೆಗೆ ನಾನಾ ರೀತಿಯ ಅನಾನುಕೂಲತೆ ಎದುರಾಗುತ್ತಿದೆ ಎಂದು ಬ್ರಿಜೇಶ್ ಚೌಟ ಸದನದ ಗಮನ ಸೆಳೆದಿದ್ದಾರೆ. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಇ ಸ್ಥಾನಮಾನ ನೀಡುವುದರಿಂದ ಈ ಭಾಗದ ಜನರಿಗೆ ನೇರ ಅಂತರರಾಷ್ಟ್ರೀಯ ಸಂಪರ್ಕ ಸಾಧ್ಯವಾಗುತ್ತದೆ. ಜತೆಗೆ ವಿಮಾನಯಾನ ಕಾರ್ಯಾಚರಣೆಗಳನ್ನು ಮತ್ತಷ್ಟು ವಿಸ್ತರಿಸುವುದಕ್ಕೆ ಅನುಕೂಲವಾಗುತ್ತದೆ. ವಿದೇಶದಲ್ಲಿ ದುಡಿಯುವ ವರ್ಗಕ್ಕೆ ಹಾಗೂ ಅವರ ಕುಟುಂಬಗಳ ಸುಗಮ ಪ್ರಯಾಣ ಸಾಧ್ಯವಾಗುತ್ತದೆ. ಈ ರೀತಿಯ ವಿಮಾನಯಾನ ಸಂಪರ್ಕವು ಸಹಜವಾಗಿಯೇ ಇಲ್ಲಿನ ವ್ಯಾಪಾರ ಮತ್ತು ಹೂಡಿಕೆ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತದೆ. ಇದು ಸಾಗರೋತ್ತರ ಉತ್ಪನ್ನಗಳ ರಫ್ತು, ಅಡಿಕೆ, ಗೋಡಂಬಿ ಸಂಸ್ಕರಣೆ ಮತ್ತು ಪೆಟ್ರೋಕೆಮಿಕಲ್ಸ್ನಂತಹ ಪ್ರಾದೇಶಿಕ ಉದ್ಯಮಗಳಿಗೂ ಬೆಂಬಲ-ಉತ್ತೇಜನ ನೀಡುತ್ತದೆ. ಜೊತೆಗೆ ಮಂಗಳೂರು ವಿಶೇಷ ಆರ್ಥಿಕ ವಲಯದ ಬೆಳವಣಿಗೆಗೂ ಪೂರಕವಾಗಲಿದೆ ಎಂದು ಸಂಸದ ಚೌಟ ಸದನಕ್ಕೆ ಮನವರಿಕೆ ಮಾಡಿದರು. ಅಂತರರಾಷ್ಟ್ರೀಯವಾಗಿ ನೇರ ಸಂಪರ್ಕ ವ್ಯವಸ್ಥೆ ಕಲ್ಪಿಸುವುದರಿಂದ ಕರಾವಳಿ ಭಾಗದ ಪ್ರವಾಸೋದ್ಯಮದ ಬೆಳವಣಿಗೆ ಜತೆಗೆ ಶಿಕ್ಷಣ ಕ್ಷೇತ್ರದ ಪ್ರಗತಿಯನ್ನು ಕೂಡ ಹೆಚ್ಚಿಸಬಹುದು. ಇದು ಎನ್ಐಟಿಕೆ ಸುರತ್ಕಲ್ ಮತ್ತು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯಂತಹ ಪ್ರತಿಷ್ಠಿತ ಸಂಸ್ಥೆಗಳ ವಿದ್ಯಾರ್ಥಿಗಳು, ಸಂಶೋಧಕರು ಮತ್ತು ಸಂದರ್ಶಕರಿಗೆ ಅಂತಾರಾಷ್ಟ್ರೀಯ ವೇದಿಕೆಗಳಿಗೆ ಸುಲಭವಾಗಿ ಪ್ರಯಾಣಿಸುವುದಕ್ಕೂ ಅನುಕೂಲ ಕಲ್ಪಿಸುತ್ತದೆ ಎಂದು ತಿಳಿಸಿದ್ದಾರೆ.
ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಹೊಣೆ: ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ
ವಿಜಯನಗರ: ಮಾನವ ಹಕ್ಕುಗಳಿಂದ ಪ್ರತಿಯೊಬ್ಬರ ಸರ್ವತೋಮುಖ ಅಭಿವೃದ್ಧಿ ಮತ್ತು ಮಾನವನ ಅಸ್ತಿತ್ವ ಸಾಧ್ಯವಾಗಿದೆ. ಇವುಗಳ ಸಂರಕ್ಷಣೆ ಎಲ್ಲರ ಹೊಣೆಯಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಏರ್ಪಡಿಸಿದ್ದ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕವಿತಾ ಎಸ್.ಮನ್ನಿಕೇರಿ, ಮಾನವ ಹಕ್ಕುಗಳ ದಿನಾಚರಣೆಯನ್ನು ಪ್ರತಿ ವರ್ಷ ಡಿಸೆಂಬರ್ 10ರಂದು ವಿಶ್ವದಾದ್ಯಂತ ಆಚರಿಸಲಾಗುತ್ತದೆ, ಇದು 1948ರಲ್ಲಿ ವಿಶ್ವಸಂಸ್ಥೆಯು ಅಂಗೀಕರಿಸಿದ ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯನ್ನು ಸ್ಮರಿಸುತ್ತದೆ. ಪ್ರತಿಯೊಬ್ಬ ವ್ಯಕ್ತಿಯ ಘನತೆ, ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಖಾತ್ರಿಪಡಿಸುವ ಈ ಹೆಗ್ಗುರುತು ದಾಖಲೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿದೆ ಎಂದು ಹೇಳಿದರು. ಹಂಪಿ ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಪಕರಾದ ವೆಂಕಟಗಿರಿ ತಳವಾಯಿ ಮಾತನಾಡಿ, ಮಾನವ ಹಕ್ಕುಗಳು ಉಲ್ಲಂಘನೆಯಾದಲ್ಲಿ ಸಂವಿಧಾನಾತ್ಮಕವಾಗಿ ಪರಿಹಾರ ಕಂಡುಕೊಳ್ಳಬಹುದು. ಅಂಬೇಡ್ಕರ್ ಅವರು ಭಾರತ ದೇಶಕ್ಕೆ ಅತಿ ದೊಡ್ಡ ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳನ್ನು ನೀಡುವ ಮೂಲಕ ಪ್ರತಿಯೊಬ್ಬರ ಅಭಿವೃದ್ದಿ ಹಾಗೂ ಅಸ್ತಿತ್ವಕ್ಕೆ ಕಾರಣವಾಗಿದ್ದಾರೆ. ಎರಡು ಮಹಾಯದ್ದಗಳ ನಂತರದಲ್ಲಿ ವಿಶ್ವ ಮಾನವ ಹಕ್ಕುಗಳ ಆಯೋಗ ಸ್ಥಾಪನೆಯಾಯಿತು. ಮಾನವ ಹಕ್ಕುಗಳ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಇದು ಕಾರ್ಯನಿರ್ವಹಿಸುತ್ತಿದೆ. ಪ್ರತಿಯೊಬ್ಬರು ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡಬೇಕು ಎಂದು ಹೇಳಿದರು. ಈ ವೇಳೆ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣನವರ್, ಹೊಸಪೇಟೆ ಬಿಇಒ ಶೇಖರಪ್ಪ ಹೊರಪೇಟೆ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಲೋಕಸಭೆಯಲ್ಲಿ ಅಬ್ಬರಿಸಿದ ಅಮಿತ್ ಶಾ: ಇವಿಎಂನಿಂದ ವೋಟ್ ಚೋರಿವರೆಗೆ, ಕಾವೇರಿದ ಸಂಸತ್ ಕಲಾಪದ 6 ಪ್ರಮುಖ ಅಂಶಗಳು
ಡಿಸೆಂಬರ್ 10, 2025ರ ಬುಧವಾರದ ಸಂಸತ್ ಕಲಾಪವು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ತೀವ್ರ ವಾಕ್ಸಮರಕ್ಕೆ ಸಾಕ್ಷಿಯಾಯಿತು. ಚುನಾವಣಾ ಸುಧಾರಣೆಗಳ ಕುರಿತ ಚರ್ಚೆಯಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಇವಿಎಂ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುತ್ತಿರುವ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ರಾಜೀವ್ ಗಾಂಧಿಯವರೇ ಇವಿಎಂಗಳನ್ನು ಪರಿಚಯಿಸಿದ್ದು ಮತ್ತು 2004ರಲ್ಲಿ ಕಾಂಗ್ರೆಸ್ ಗೆದ್ದಾಗ ಇವಿಎಂ ಸರಿಯಿತ್ತು, ಸೋತಾಗ ಮಾತ್ರ ದೋಷ ಕಾಣುತ್ತದೆ ಎಂದು ಶಾ ಲೇವಡಿ ಮಾಡಿದರು.
ಮಂಗಳೂರು | ಮಾದಕ ವಸ್ತು ಮಾರಾಟ ಆರೋಪ : ಇಬ್ಬರ ಬಂಧನ
ಮಂಗಳೂರು, ಡಿ.10: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಶಿವಮೊಗ್ಗ ಜಿಲ್ಲೆಯ ರಾಮನಗರದ ಸೈಯದ್ ಕಲಿಮುಲ್ಲಾ (31) ಮತ್ತು ಮಂಜೇಶ್ವರ ಮಂಗಲ್ಪಾಡಿಯ ಅಶ್ರಫ್ ಆಲಿ (26) ಎಂಬವರನ್ನು ಮಂಗಳವಾರ ಉರ್ವ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಬಾರೆಬೈಲ್ ಬಳಿ ಇಬ್ಬರು ಯುವಕರು ಸಂಶಯಾಸ್ಪದ ರೀತಿಯಲ್ಲಿ ಹೋಗುತ್ತಿದ್ದರು. ಯುವಕರನ್ನು ವಿಚಾರಿಸಿದಾಗ ಮಾದಕ ದ್ರವ್ಯ ಎಂಡಿಎಂಎ ಮಾರಾಟ ಮಾಡಲು ಬಂದಿರುವುದಾಗಿ ತಿಳಿಸಿದ್ದಾರೆ. ಸೈಯದ್ ಕಲಿಮುಲ್ಲಾನಿಂದ 25,000 ರೂ. ಮೌಲ್ಯದ 12.27 ಗ್ರಾಂ ಎಂಡಿಎಂಎ ಮತ್ತು 7,000 ರೂ. ಮೌಲ್ಯದ ಮೊಬೈಲ್ ಫೋನ್ ಹಾಗೂ ಅಶ್ರಫ್ ಆಲಿಯಿಂದ 12,500 ರೂ. ಮೌಲ್ಯದ 6.18 ಗ್ರಾಂ ಎಂಡಿಎಂಎ ಮತ್ತು ಮೊಬೈಲ್ ಪೋನ್ ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ವಿಜಯನಗರ| ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ : ಪ್ರಕರಣ ದಾಖಲು
ವಿಜಯನಗರ: ಕಮಲಾಪುರದ ಹೆಚ್ಪಿಸಿ ಬಳಿ ಇರುವ ಪೋರ್ವೇ ಕಾಲುವೆ ನೀರಿನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಈ ಕುರಿತು ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ವ್ಯಕ್ತಿಯು 40 ರಿಂದ 45ರ ಹರೆಯದವಾಗಿದ್ದು, 5.7 ಅಡಿ ಎತ್ತರವನ್ನು ಹೊಂದಿದ್ದಾರೆ. ದೃಢವಾದ ಮೈಕಟ್ಟು ಹೊಂದಿದ್ದು, ಎಡಗೈ ಮೇಲೆ ಶ್ರೀ ಮಂಜುನಾಥ ಎಂದು ಕನ್ನಡದಲ್ಲಿ ಹಚ್ಚೆ ಗುರುತು ಹಾಕಿಸಿಕೊಂಡಿದ್ದಾರೆ. ಈ ಅನಾಮಧೇಯ ವ್ಯಕ್ತಿಯ ಬಗ್ಗೆ ಮಾಹಿತಿ ಇದ್ದಲ್ಲಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ ಮೊಬೈಲ್ ಸಂಖ್ಯೆ 9480805700, ಜಿಲ್ಲಾ ಎಸ್.ಪಿ ಮೊಬೈಲ್ ಸಂಖ್ಯೆ 948805701, ಹೆಚ್ಚುವರಿ ಎಸ್.ಪಿ ಮೊಬೈಲ್ ಸಂಖ್ಯೆ 9480805702, ಡಿಎಸ್ಪಿ ಮೊಬೈಲ್ ಸಂಖ್ಯೆ 9480805720 ಸಂಪರ್ಕಿಸಬೇಕಾಗಿ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೀಫ್: ಎಸೆಸೆಲ್ಸಿ ಆಯ್ದ ವಿದ್ಯಾರ್ಥಿಗಳ ಕಾರ್ಯಾಗಾರ ಉದ್ಘಾಟನೆ
ಕೃಷ್ಣಾಪುರ,ಡಿ.10: ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಕೇಂದ್ರ ಘಟಕದ ವತಿಯಿಂದ ಕೃಷ್ಣಾಪುರದ ಚೈತನ್ಯ ಪಬ್ಲಿಕ್ ಸ್ಕೂಲ್ನ ಸಹಯೋಗದಿಂದ 2025-26ನೇ ಸಾಲಿನ ಎಸೆಸೆಲ್ಸಿ ಆಯ್ದ ವಿದ್ಯಾರ್ಥಿಗಳಿಗೆ ಪಾಸಿಂಗ್ ಪ್ಯಾಕೇಜ್ ಎರಡು ದಿವಸಗಳ ಕಾರ್ಯಾಗಾರದ ಉದ್ಘಾಟನೆಯು ಬುಧವಾರ ಚೈತನ್ಯ ಪಬ್ಲಿಕ್ ಸ್ಕೂಲ್ನ ಸಭಾಂಗಣದಲ್ಲಿ ನಡೆಯಿತು. ದ.ಕ. ಜಿಲ್ಲಾ ಡಿಡಿಪಿಐ ಜಿ.ಎಸ್. ಶಶಿಧರ್ ಕಾರ್ಯಾಗಾರ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮೀಫ್ ವತಿಯಿಂದ ಪ್ರತೀ ವರ್ಷ ಜಿಲ್ಲಾದ್ಯಂತ ಎಸೆಸೆಲ್ಸಿ ಫಲಿತಾಂಶ ಉತ್ತಮ ಪಡಿಸಲು ಇಂತಹ ಪಾಸಿಂಗ್ ಪ್ಯಾಕೇಜ್ ಕಾರ್ಯಾಗಾರ ನಡೆಸುತ್ತಿರುವುದು ಶ್ಲಾಘನೀಯ ಎಂದರು. ಪ್ರತೀ ವರ್ಷದಂತೆ ಈ ಬಾರಿಯೂ ದ.ಕ. ಮತ್ತು ಉಡುಪಿ ಜಿಲ್ಲೆಗಳ 14 ಕೇಂದ್ರಗಳಲ್ಲಿ ಡಿಸೆಂಬರ್ ಮತ್ತು ಜನವರಿಯಲ್ಲಿ ಎಸೆಸೆಲ್ಸಿ ಆಯ್ದ ವಿದ್ಯಾರ್ಥಿಗಳಿಗೆ ತಲಾ ಎರಡು ದಿವಸಗಳ ಕಾರ್ಯಾಗಾರವನ್ನು ಶಿಕ್ಷಣ ಇಲಾಖೆಯ ಸಹಭಾಗಿತ್ವದಲ್ಲಿ ಮೀಫ್ ನಡೆಸಲಿದೆ ಎಂದು ಅಧ್ಯಕ್ಷತೆ ವಹಿಸಿದ್ದ ಮೀಫ್ ಕೇಂದ್ರ ಘಟಕದ ಅಧ್ಯಕ್ಷ ಮೂಸಬ್ಬ ಪಿ. ಬ್ಯಾರಿ ಜೋಕಟ್ಟೆ ತಿಳಿಸಿದರು. ಅತಿಥಿಯಾಗಿ ಜಿಲ್ಲಾ ವಾರ್ತಾ ಅಧಿಕಾರಿ ಖಾದರ್ ಶಾ ಭಾಗವಹಿಸಿದ್ದರು. ಚೈತನ್ಯ ವಿದ್ಯಾಸಂಸ್ಥೆಯ ಅಧ್ಯಕ್ಷ ಕೆ.ಎ.ಖಾದರ್, ಉದ್ಯಮಿ ಟಿ. ಅಬ್ದುಲ್ ಅಝೀಝ್ ಚೊಕ್ಕಬೆಟ್ಟು, ಮೀಫ್ ಕೇಂದ್ರ ಘಟಕದ ಉಪಾಧ್ಯಕ್ಷ ಪರ್ವೇಜ್ ಅಲಿ, ಕಾರ್ಯಕಾರಿ ಸದಸ್ಯರಾದ ಅಝೀಝ್ ಅಂಬರ್ವ್ಯಾಲಿ, ಚೈತನ್ಯ ಪಬ್ಲಿಕ್ ಸ್ಕೂಲಿನ ಸಂಚಾಲಕ ಹನೀಫ್ ಎಂ.ಎ. ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಶಿಕ್ಷಣ ಇಲಾಖೆಯ ವಿಲ್ಮಾ ಲೋಬೋ, ಶಿಕ್ಷಕಿಯರಾದ ವಿಕ್ಟೊರಿಯಾ ಪ್ರೌಢಶಾಲೆ ಲೇಡಿಹಿಲ್ (ವಿಜ್ಞಾನ) ಮತ್ತು ವೈಶಾಲಿ ಉಚ್ಚಿಲ್, ವಿದ್ಯಾದಾಯಿನಿ ಪ್ರೌಢ ಶಾಲೆ ಸುರತ್ಕಲ್ (ಗಣಿತ) ಭಾಗವಹಿಸಿದ್ದಾರೆ. ಚೈತನ್ಯ ಪಬ್ಲಿಕ್ ಸ್ಕೂಲಿನ ಮುಖ್ಯ ಶಿಕ್ಷಕಿ ಶಶಿಕಲಾ ಸ್ವಾಗತಿಸಿದರು. ಸುನೀತಾ ವಂದಿಸಿದರು. ಮೀಫ್ ಕೇಂದ್ರ ಘಟಕದ ಪ್ರಧಾನ ಕಾರ್ಯದರ್ಶಿ ರಿಯಾಝ್ ಅಹ್ಮದ್ ಕೆ.ಬಿ. ಕಾರ್ಯಕ್ರಮ ನಿರೂಪಿಸಿದರು. ಕಾರ್ಯಾಗಾರದಲ್ಲಿ ಕೃಷ್ಣಾಪುರ ಪರಿಸರದ ಅಂಜುಮಾನ್ ಆಂಗ್ಲ ಮಾಧ್ಯಮ ಶಾಲೆ ಮುಕ್ಕ, ಅಂಜುಮಾನ್ ಆಂಗ್ಲ ಮಾಧ್ಯಮ ಶಾಲೆ ಜೋಕಟ್ಟೆ, ಹಿರಾ ಆಂಗ್ಲ ಮಾಧ್ಯಮ ಶಾಲೆ ಕೃಷ್ಣಾಪುರ, ನೂರುಲ್ ಹುದಾ ಆಂಗ್ಲ ಮಾಧ್ಯಮ ಶಾಲೆ ಕಾಟಿಪಳ್ಳ, ಹಿದಾಯತ್ ಆಂಗ್ಲ ಮಾಧ್ಯಮ ಶಾಲೆ ಸೂರಿಂಜೆ, ಅಸ್-ಸಿರಾತುಲ್ ಮುಸ್ತಕೀಮ್ ಆಂಗ್ಲ ಮಾಧ್ಯಮ ಶಾಲೆ ಕಾಟಿಪಳ್ಳ, ಜಾಮಿಯಾ ಆಂಗ್ಲ ಮಾಧ್ಯಮ ಶಾಲೆ ಚೊಕ್ಕಬೆಟ್ಟು ಮತ್ತು ಚೈತನ್ಯ ಪಬ್ಲಿಕ್ ಆಂಗ್ಲ ಮಾಧ್ಯಮ ಶಾಲೆ ಕೃಷ್ಣಾಪುರ ಸಹಿತ 8 ವಿದ್ಯಾ ಸಂಸ್ಥೆಗಳಿಂದ 140 ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದಾರೆ.
ಮಂಗಳೂರು | ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
ಮಂಗಳೂರು,ಡಿ.10: ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ದ.ಕ. ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಪ್ರಾಯ ಮೀರಿರಬಾರದು. ತರಬೇತಿಯ ಅವಧಿಯ ವೇಳೆ ಮಾಸಿಕ 15,000 ರೂ. ಶಿಷ್ಯವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಡಿ.20 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ನಗರದ ನೆಹರೂ ಮೈದಾನದ ಎದುರು ಇರುವ ಪಿಡಬ್ಲ್ಯುಡಿ ಕಟ್ಟಡದ 2ನೇ ಮಹಡಿಯಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ (ದೂ,ಸ: 9886068357)ನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಡಿ.22-24: ಮಂಗಳೂರು ವಿವಿ ಸರಣಿ ಉಪನ್ಯಾಸ ಮಾಲಿಕೆ
ಮಂಗಳೂರು,ಡಿ.10: ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಪಂಪ ಪ್ರಶಸ್ತಿ ಪುರಸ್ಕೃತ, ವಿಶ್ರಾಂತ ಕುಲಪತಿ ಪ್ರೊ.ಬಿ.ಎ.ವಿವೇಕ ರೈ ಅವರಿಂದ ಪಂಪ ಕವಿಯ ಆದಿಪುರಾಣ ಕಾವ್ಯದ ಕುರಿತು ಮೂರು ಉಪನ್ಯಾಸಗಳನ್ನು ಡಿ.22,23, 24ರಂದು ಸಂಜೆ 5:30 ರಿಂದ 6:30ರವರೆಗೆ ನಗರದ ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಏರ್ಪಡಿಸಲಾಗಿದೆ. ಶ್ರೀಸಾಮಾನ್ಯರಿಗೆ ಪ್ರಾಚೀನ ಕನ್ನಡ ಸಾಹಿತ್ಯ ಎಂಬ ಉದ್ದೇಶದೊಂದಿಗೆ ನಡೆಯುವ ಈ ಮಾಲಿಕೆಯ ಎರಡನೇ ಸಂಚಿಕೆಯ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಮುಂಚಿತವಾಗಿ ಮೊ.ಸಂ: 8904628052/8310300875ನ್ನು ಸಂಪರ್ಕಿಸಿ ಉಚಿತ ಹೆಸರು ನೋಂದಣಿ ಮಾಡಿಕೊಳ್ಳಬಹುದು ಎಂದು ವಿಭಾಗದ ಅಧ್ಯಕ್ಷ ಡಾ.ನಾಗಪ್ಪಗೌಡ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು | ಡಿ.19-20: ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ
ಮಂಗಳೂರು,ಡಿ.10: ಪಶುಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ವತಿಯಿಂದ ದ.ಕ.ಜಿಲ್ಲೆಯ ಆಸಕ್ತ ರೈತರಿಗೆ ಕೋಳಿ ಸಾಕಾಣಿಕೆ ತರಬೇತಿ ಡಿ.19-20 ಮತ್ತು ಹಂದಿ ಸಾಕಾಣಿಕೆ ತರಬೇತಿ ಡಿ.29-30ರಂದು ಏರ್ಪಡಿಸಲಾಗಿದೆ. ಆಸಕ್ತ ರೈತರು ಆಯಾ ತಾಲೂಕಿನ ಅಧಿಕಾರಿಗಳನ್ನು ಸಂಪರ್ಕಿಸಿ ನೋಂದಣಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ: ಮಂಗಳೂರು ತಾಲೂಕು-9243306956/0824-2950369, ಉಳ್ಳಾಲ ತಾಲೂಕು-9880424077, ಮುಲ್ಕಿ ತಾಲೂಕು- 8971024282, ಮೂಡುಬಿದಿರೆ ತಾಲೂಕು- 7204271943, ಬಂಟ್ವಾಳ ತಾಲೂಕು- 9448253010, ಬೆಳ್ತಂಗಡಿ ತಾಲೂಕು- 9481963820, ಪುತ್ತೂರು ತಾಲೂಕು-9483920208, ಕಡಬ ತಾಲೂಕು-9483922594, ಸುಳ್ಯ ತಾಲೂಕು- 9844995078ನ್ನು ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಮುಖ್ಯ ಪಶು ವೈದ್ಯಾಧಿಕಾರಿ(ಆಡಳಿತ) ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Simu Das- ಅಂಧ ಕ್ರಿಕೆಟರ್ ಬಗ್ಗೆ ಬೆಳ್ಳಂಬೆಳಗ್ಗೆ ಕಾಲ್ ಮಾಡಿ ವಿಚಾರಿಸಿದ ಮೋದಿ; ಅಸ್ಸಾಂ ಸಿಎಂ ತಬ್ಬಿಬ್ಬು!
Simu Das Achievement- ಬೆಳಗ್ಗೆ 5.30ಕ್ಕೆ ಸ್ವತಃ ಪ್ರಧಾನಿಯೇ ಕರೆ ಮಾಡಿದಲ್ಲಿ ಯಾರಿಗಾದರೂ ಪರಿಸ್ಥಿತಿ ಹೇಗಾಗಬೇಡ? ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಇತ್ತೀಚೆಗೆ ಅಂಥಹದ್ದೊಂದು ಅನುಭವ ಆಗಿದೆ? ಆ ಕಡೆಯಿಂದ ಮೋದಿ ಅವರು, ಸಿಮು ಸಮಸ್ಯೆಯನ್ನು ಬಗೆಹರಿಸಿ ಎಂದು ಹೇಳಿದ್ದಾರೆ. ಸಿಎಂಗೆ ಯಾವ ಸಿಮು ಎಂದು ತಿಳಿಯಲೇ ಇಲ್ಲ. ಬಳಿಕ ಅಂಧ ಮಹಿಳೆಯರ ವಿಶ್ವಕಪ್ ವಿಜೇತ ಭಾರತ ತಂಡದ ಸದಸ್ಯೆ ಎಂದು ಬಳಿಕ ತಿಳಿದು ಬಂತು. ತಕ್ಷಣವೇ ಆಕೆಯನ್ನು ಕರೆಸಿ ಗೌರವದ್ದಾರೆ.
ರಾಜ್ಯದಲ್ಲಿ 37,48,700 ವಸತಿ ರಹಿತರು: ಸಚಿವ ಝಮೀರ್ ಅಹ್ಮದ್
ಬೆಳಗಾವಿ (ಸುವರ್ಣವಿಧಾನಸೌಧ): ರಾಜ್ಯದಲ್ಲಿ 37,48,700 ವಸತಿ ರಹಿತರು ಇದ್ದಾರೆ ಎಂದು ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ತಿಳಿಸಿದರು. ಬುಧವಾರ ವಿಧಾನ ಪರಿಷತ್ನ ಪ್ರಶ್ನೋತ್ತರ ಕಲಾಪದಲ್ಲಿ ಆಡಳಿತ ಪಕ್ಷದ ಸದಸ್ಯ ಕೆ.ಶಿವಕುಮಾರ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರಕಾರದ ಮಾರ್ಗಸೂಚಿಯಂತೆ 2018ರಲ್ಲಿ ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ವಸತಿ/ನಿವೇಶನ ರಹಿತರ ಸಮೀಕ್ಷೆ ಹಾಗೂ 2017ರಲ್ಲಿ ಪ್ರಧಾನ ಮಂತ್ರಿ ಆವಾಸ್(ನಗರ) ಯೋಜನೆಯಡಿ ನಗರ ಪ್ರದೇಶದಲ್ಲಿ ವಸತಿ/ನಿವೇಶನ ರಹಿತರ ಸಮೀಕ್ಷೆಯನ್ನು ಕೈಗೊಳ್ಳಲಾಗಿದ್ದು, ಈ ಸಮೀಕ್ಷೆಯಲ್ಲಿ ರಾಜ್ಯದಲ್ಲಿ ಒಟ್ಟು 37,48,766 ವಸತಿ ರಹಿತರು ಕಂಡು ಬಂದಿದ್ದು, ಇದರಲ್ಲಿ 17,31,633 ನಿವೇಶನ ರಹಿತರು ಮತ್ತು 20,17,133 ವಸತಿ ರಹಿತರು ಇದ್ದಾರೆ ಎಂದು ವಿವರಿಸಿದರು. 2024-2025ನೇ ಸಾಲಿನಲ್ಲಿ ವಿವಿಧ ವಸತಿ ಯೋಜನೆಗಳಡಿ ಒಟ್ಟು 7,38,881 ಮನೆಗಳ ಗುರಿ ನೀಡಿದ್ದು, ಇವುಗಳಲ್ಲಿ 3,27,747 ಅನುಮೋದನೆಗೊಂಡಿವೆ. 411134 ಮನೆಗಳು ಅನುಮೋದನೆಗೆ ಬಾಕಿಯಿವೆ. ರಾಜ್ಯದಲ್ಲಿ ಮನೆ ನಿರ್ಮಾಣಕ್ಕೆ ನೀಡುತ್ತಿರುವ ಅನುದಾನವನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ 4 ಲಕ್ಷ ರೂ. ಮತ್ತು ಸಾಮಾನ್ಯ ವರ್ಗದವರಿಗೆ 3.5 ಲಕ್ಷ ರೂ.ಗೆ ಹೆಚ್ಚಳ ಮಾಡುವ ಚಿಂತನೆ ಇದೆ ಎಂದು ಝಮೀರ್ ಅಹ್ಮದ್ ಖಾನ್ ತಿಳಿಸಿದರು.
ಮಂಗಳೂರು | ಕರಾವಳಿ ಉತ್ಸವದ ಲೋಗೋ ತಯಾರಿಕೆ ಸ್ಪರ್ಧೆ
ಮಂಗಳೂರು,ಡಿ.10: ಪ್ರಸಕ್ತ (2025-26) ಸಾಲಿನ ಕರಾವಳಿ ಉತ್ಸವವು ಡಿ.20ರಿಂದ ನಡೆಯಲಿದೆ. ಈ ಉತ್ಸವಕ್ಕೆ ಲೋಗೋ ತಯಾರಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಕರಾವಳಿಯ ಕಲೆ, ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಮ್ಮಿಲನದ ಲೋಗೋವನ್ನು ತಯಾರಿಸಿ ಡಿ.17ರೊಳಗೆ ಪಡೀಲ್ ಪ್ರಜಾಸೌಧ ಕಟ್ಟಡದಲ್ಲಿರುವ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರ ಕಚೇರಿ (ದೂ.ಸಂ: 0824-2453926/906313259) ಅಥವಾ ಇ-ಮೇಲ್: adtourismmangalore@gmail.com ಗೆ ಸಲ್ಲಿಸಬಹುದು. ಉತ್ತಮ ಲೋಗೋ ತಯಾರಿಸಿದವರಿಗೆ 50,000 ರೂ. ಬಹುಮಾನವಾಗಿ ನೀಡಲಾಗುವುದು ಎಂದು ಪ್ರಕಟನೆ ತಿಳಿಸಿದ್ದಾರೆ.
ದ.ಕ.ಜಿಲ್ಲಾ ಮಟ್ಟದ ಗ್ಯಾರಂಟಿ ಫಲಾನುಭವಿಗಳ ಸಮಾವೇಶ : ಭರತ್ ಮುಂಡೋಡಿ
ಮಂಗಳೂರು,ಡಿ.10: ಬಿಪಿಎಲ್ ಪಡಿತರ ಚೀಟಿಯನ್ನು ಎಪಿಎಲ್ ಆಗಿ ಬದಲಾಯಿಸುವ ಪ್ರಕ್ರಿಯೆಯನ್ನು ಸಮಗ್ರವಾಗಿ ಪರಿಶೀಲನೆ ಮಾಡಲು ಸರಕಾರದ ಆದೇಶವಿದೆ. ಇದನ್ನು ಆಹಾರ ಇಲಾಖೆಯ ಅಧಿಕಾರಿಗಳು ಸರಿಯಾಗಿ ಪರಿಶೀಲಿಸಬೇಕು ಎಂದು ದ.ಕ.ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಹೇಳಿದ್ದಾರೆ. ದ.ಕ.ಜಿಪಂ ಕಚೇರಿಯಲ್ಲಿ ಬುಧವಾರ ನಡೆದ ದ.ಕ. ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಡಿ.23ರಂದು ದ.ಕ.ಜಿಲ್ಲಾ ಮಟ್ಟದ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಆಯೋಜಿಸಲಾಗುವುದು ಎಂದು ಹೇಳಿದರು. ಶಕ್ತಿ ಯೋಜನೆಯಡಿ ಮಂಗಳೂರಿನಿಂದ ಉಡುಪಿ ಹಾಗೂ ಕುಂದಾಪುರ ಕಡೆಗೆ ಕಾರ್ಯಾಚರಣೆಯಲ್ಲಿರುವ ನಿಗಮದ ಸಾರಿಗೆಗಳಿಗೆ ಮುಲ್ಕಿಯಲ್ಲಿ ನಿಲುಗಡೆ ನೀಡಿ ಪ್ರಯಾಣಿಕರನ್ನು ಹತ್ತಿಸಿ ಅಥವಾ ಇಳಿಸಲು ಕ್ರಮ ಕೈಗೊಳ್ಳುವಂತೆ ಕೆಎಸ್ಸಾರ್ಟಿಸಿ ಅಧಿಕಾರಿಗಳಿಗೆ ಭರತ್ ಮುಂಡೋಡಿ ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಕೆಲವು ಕಡೆಗಳಲ್ಲಿ ಸಿಸಿ ಬಸ್ಸುಗಳು ಕಾರ್ಯಾಚರಿಸುತ್ತಿರುವ ಬಗ್ಗೆ ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಅಧ್ಯಕ್ಷರು ವಿಷಯ ಪ್ರಸ್ತಾಪಿಸಿದರು. ಈ ಬಗ್ಗೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಕ್ರಮವಹಿಸಲು ಭರತ್ ಮುಂಡೋಡಿ ಸೂಚಿಸಿದರು. ಸುಳ್ಯ-ತೊಡಿಕಾನ ಮಾರ್ಗದ ಸಾರಿಗೆ ಕಾರ್ಯಾಚರಣೆಗೆ ಪರವಾನಗಿ ಕೋರಿ ಅರ್ಜಿ ಸಲ್ಲಿಸಲಾಗಿದೆ. ಪರವಾನಗಿ ಮಂಜೂರಾದ ಬಳಿಕ ನಿಗಮದ ಸಾರಿಗೆ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಯುವ ನಿಧಿ ಪ್ಲಸ್ ಯೋಜನೆಯಡಿ ಕೌಶಲಾಭಿವೃದ್ಧಿ ತರಬೇತಿ ಪಡೆಯಲು ಅಭ್ಯರ್ಥಿಗಳ ಮನವೊಲಿಸುವ ಜೊತೆಗೆ ಫಲಾನುಭವಿಗಳಿಗೆ ಸಲಹೆಗಳನ್ನು ನೀಡಬೇಕು ಎಂದು ತಿಳಿಸಿದರು. ಆಹಾರ ಕಿಟ್ ವಿತರಣೆಗಾಗಿ ಸರಕಾರವು ಅನುಮೋದನೆ ನೀಡಿದೆ. ಟೆಂಡರ್ ಪ್ರಕ್ರಿಯೆ ಆದ ತಕ್ಷಣ ವಿತರಣೆ ಮಾಡುವುದಾಗಿ ಮಾಹಿತಿ ಲಭ್ಯವಿರುವುದಾಗಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರು ತಿಳಿಸಿದರು. ಜಿಲ್ಲೆಯ ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಯುವನಿಧಿ ಪ್ಲಸ್ ಯೋಜನೆಯಡಿ ತರಬೇತಿ ಕಾರ್ಯಾಗಾರ ಏರ್ಪಡಿಸಲಾಗಿದೆ. ಕಾರ್ಯಾಗಾರಕ್ಕೆ ಹಾಜರಾದ ಯುವನಿಧಿ ಫಲಾನುಭವಿಗಳಿಗೆ ಜಾಬ್ ರೋಲ್ ಗಳ ಬಗ್ಗೆ ಮಾಹಿತಿ ಒದಗಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಗೃಹಲಕ್ಷ್ಮಿ ಯೋಜನೆಯಡಿ ನ.20ರಿಂದ ಡಿ.8ರವರೆಗೆ 467 ಫಲಾನುಭವಿಗಳ ಸಹಿತ ಈವರೆಗೆ 3,80,116 ಫಲಾನುಭವಿಗಳು ಈ ಯೋಜನೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು ಮಾಹಿತಿ ನೀಡಿದರು. ಸಭೆಯಲ್ಲಿ ದ.ಕ. ಜಿಪಂ ಸಿಇಒ ನರ್ವಾಡೆ ನಾಯಕ್ ಕಾರ್ಬಾರಿ, ಜಿಪಂ ಉಪಕಾರ್ಯದರ್ಶಿ ಜಯಲಕ್ಷ್ಮಿ, ಜಿಪಂ ಯೋಜನಾ ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿ ಸುಷ್ಮಾ ಕೆ.ಎಸ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಜೋಕಿಂ ಡಿಸೋಜ, ಸುರೇಖಾ ಚಂದ್ರಹಾಸ್, ನಾರಾಯಣ ನಾಯಕ್, ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ, ಆಲ್ವಿನ್ ಕ್ಲೆಮೆಂಟ್ ಕುಟಿನ್ಹ, ಜಯಂತಿ ಬಿಎ, ಶಾಹುಲ್ ಹಮೀದ್, ಉಮಾನಾಥ್ ಶೆಟ್ಟಿ, ಸುರೇಂದ್ರ ಕಂಬಳಿ, ಎಸ್. ರಫೀಕ್, ಸುಧೀರ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Yash: \ನೀವ್ಯಾಕೆ ಪ್ರತಿಯೊಂದಕ್ಕೂ ಗಂಡನನ್ನು ಕರೀತೀರಿ\.. ರಾಧಿಕಾ ಪಂಡಿತ್ ಇನ್ಸ್ಟಾಗ್ರಾಮ್ ಪೋಸ್ಟ್ ವೈರಲ್!
ಸ್ಯಾಂಡಲ್ವುಡ್ನ ಟಾಪ್ ಬೆಸ್ಟ್ ಜೋಡಿಗಳಲ್ಲಿ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಜೋಡಿ ಸಹ ಒಂದು. ತೆರೆಯ ಮೇಲೆ ಒಂದಾಗಿ ಕಾಣಿಸಿಕೊಂಡು ಸಿನಿ ಪ್ರಿಯರನ್ನು ರಂಜಿಸಿದ್ದ ಜೋಡಿ ಇದೀಗ ದಾಂಪತ್ಯ ಜೀವನಕ್ಕೆ ಕಾಲಿರಿಸಿ 8 ವರ್ಷಗಳು ಪೂರ್ಣಗೊಂಡಿವೆ. ನಟ ಯಶ್ ಅವರು ಭಾರತೀಯ ಸಿನಿಮಾರಂಗದಲ್ಲಿ ಹೊಸ ಅಲೆ ಸೃಷ್ಟಿ ಮಾಡಿದ್ದಾರೆ. ಕೆಜಿಎಫ್ ದೇಶದಾದ್ಯಂತ ಭಾರೀ ಸದ್ದು
‘ಮಂಗಳೂರು ಐಟಿ ಪಾರ್ಕ್’ ನಿಯಮ ಸರಳೀಕರಿಸಲು ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ
ಬೆಳಗಾವಿ(ಸುವರ್ಣ ವಿಧಾನಸೌಧ): ಉಡುಪಿ, ಮಂಗಳೂರು ಮತ್ತು ಮಣಿಪಾಲದಲ್ಲಿ ಬಂಡವಾಳ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಸಲು ವಿಫುಲ ಅವಕಾಶಗಳಿವೆ. ಆ ಹಿನ್ನೆಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ(ಪಿಪಿಪಿ)ದಲ್ಲಿ ವಾಣಿಜ್ಯ ಕಚೇರಿ ಟೆಕ್ ಪಾರ್ಕ್(ಐಟಿ ಪಾರ್ಕ್) ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬುಧವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಡಾ. ವೈ ಭರತ್ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಮಂಗಳೂರು ನಗರದ ಕಸಬಾ ಹೋಬಳಿ ದೇರೇಬೈಲು (ಬ್ಲೂಬೆರಿ ಹಿಲ್ಸ್ ರಸ್ತೆ) ಗ್ರಾಮದಲ್ಲಿ ಐಟಿ ಪಾರ್ಕ್ ಸ್ಥಾಪಿಸಲು ಟೆಂಡರ್ ಆಹ್ವಾನಿಸಲಾಗಿದೆ. ಕಟ್ಟಡ ವಿನ್ಯಾಸ ನಿರ್ಮಾಣ, ಹಣಕಾಸು ಕಾರ್ಯಾಚರಣೆ ಮತ್ತು ವರ್ಗಾವಣೆಗಾಗಿ 30 ವರ್ಷಗಳನ್ನು ನಿಗದಿಪಡಿಸಲಾಗಿದೆ. ಡಿಸೆಂಬರ್ 15ಕ್ಕೆ ಟೆಂಡರ್ ಬಿಡ್ ನಡೆಯಲಿದೆ ಎಂದರು. ಉದ್ದೇಶಿತ ಐಟಿ ಪಾರ್ಕ್ ಸ್ಥಾಪಿಸುವ ಮೊದಲೇ ಆ ಭಾಗದಲ್ಲಿ ಐಟಿ ಕಂಪೆನಿಗಳು, ಶಿಕ್ಷಣ ಸಂಸ್ಥೆಗಳು, ಉದ್ಯಮಿಗಳು, ಶಾಸಕರು ಸೇರಿದಂತೆ ಎಲ್ಲರೊಂದಿಗೆ ಸಮಾಲೋಚನೆ ನಡೆಸಿದ್ದು, ಉಡುಪಿ, ಮಂಗಳೂರು ಮತ್ತು ಮಣಿಪಾಲ ಮೂರು ನಗರಗಳನ್ನು ಸೇರಿಸಿ ಒಂದು ಕ್ಲಷ್ಟರ್ ಮಾಡಲಾಗಿದೆ. ಉದ್ಯೋಗ ಸೃಷ್ಟಿಸುವುದರಿಂದ ಸರಕಾರಕ್ಕೆ ಲಾಭವಾಗಲಿದೆ ಎಂದು ಪ್ರಿಯಾಂಕ್ ಖರ್ಗೆ ವಿವರ ನೀಡಿದರು. ಆರಂಭಕ್ಕೆ ವಿಷಯ ಪ್ರಸ್ತಾಪಿಸಿದ ಬಿಜೆಪಿ ಸದಸ್ಯ ಭರತ್ ಶೆಟ್ಟಿ, ಮಂಗಳೂರಿನ ಐಟಿ ಪಾರ್ಕ್ ಯೋಜನೆ ಮತ್ತು ಪ್ರಾದೇಶಿಕ ಆರ್ಥಿಕ ಅಭಿವೃದ್ಧಿಗೆ ಅನುಕೂಲಕರ. ಆದರೆ, ಭೂಮಿ ಮೌಲ್ಯದ ಶೇ.50ರಷ್ಟು ಠೇವಣಿ ಕೇಳುವುದರಿಂದ ನಿರ್ಮಾಣ ಮಾಡುವವರಿಗೆ ಬ್ಯಾಂಕ್ ಸಾಲ ಸಿಗುವುದಿಲ್ಲ. ಸರಕಾರಿ ಆಸ್ತಿಗಳಲ್ಲಿ ಇಂತಹ ನಿಯಮಗಳು ಕಾರ್ಯಸಾಧ್ಯವಲ್ಲ, ಆದುದರಿಂದ ಈ ನೀತಿಯನ್ನು ಮರುಪರಿಶೀಲಿಸಬೇಕು ಎಂದು ಮನವಿ ಮಾಡಿದರು. ಡಿ.15ಕ್ಕೆ ಟೆಂಡರ್ ಪ್ರಕ್ರಿಯೆ ನಡೆಯಲಿದ್ದು, ಅದು ಪೂರ್ಣಗೊಳ್ಳಲಿ. ಆ ಬಳಿಕ ಅಗತ್ಯವಿದ್ದರೆ ಮರು ಪರಿಶೀಲನೆ ನಡೆಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಸದನದಲ್ಲೂ ನಾಯಕತ್ವ ಬದಲಾವಣೆ ಗದ್ದಲ: ಹುಲಿ ಯಾರು, ಗೋವು ಯಾರು ಎಂದು ಪ್ರಶ್ನಿಸಿದ ಆರ್ ಅಶೋಕ್
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸ್ಥಾನದ ಬದಲಾವಣೆ ಗೊಂದಲ ಬಗ್ಗೆ ವಿಪಕ್ಷ ನಾಯಕ ಆರ್. ಅಶೋಕ್ ಆತಂಕ ವ್ಯಕ್ತಪಡಿಸಿದರು. ನಾಯಕತ್ವದ ಕಿತ್ತಾಟದಿಂದ ರಾಜ್ಯದ ಆಡಳಿತ ವ್ಯವಸ್ಥೆ ಕುಸಿದಿದೆ ಎಂದು ಆರೋಪಿಸಿದರು. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಬಣಗಳ ನಡುವಿನ ಜಗಳದಿಂದ ಅಭಿವೃದ್ಧಿ ಅಸಾಧ್ಯ ಎಂದರು.
Hardik Pandya ಕಮ್ಬ್ಯಾಕ್: ಸ್ಫೋಟಕ 59*, ಭಾರತದ ಭರ್ಜರಿ ಗೆಲುವಿನ ಹೀರೋ
ಗಾಯದಿಂದ ಮರಳಿ ಬಂದ ಹಾರ್ದಿಕ್ ಪಾಂಡ್ಯ, ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೊದಲ T20 ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿ ಭಾರತವನ್ನು ದೊಡ್ಡ ಗೆಲುವಿನತ್ತ ಕೊಂಡೊಯ್ದರು. ಕುಟ್ಟಕ್ನ ಬರಬಟಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಹಾರ್ದಿಕ್ 28 ಎಸೆತಗಳಲ್ಲಿ ಅಜೇಯ 59 ರನ್ಗಳನ್ನು ಬಾರಿಸಿದರು. ಭಾರತ ಆರಂಭದಲ್ಲಿ ಕೆಲವು ವಿಕೆಟ್ಗಳನ್ನು ಕಳೆದುಕೊಂಡ ಸಣ್ನದರ್ಭದಲ್ಲಿ ಪಾಂಡ್ಯ ಕ್ರೀಸ್ಗೆ ಬಂದರು. ನಂತರ ದಿಟ್ಟ ದಾಳಿಗೆ ಕೈ ಹಾಕಿ, 6 ಬೌಂಡರಿ ಮತ್ತು 4 ಸಿಕ್ಸರ್ಗಳೊಂದಿಗೆ 59 ರನ್ ಗಳಿಸಿ ಪಂದ್ಯವನ್ನು ... Read more The post Hardik Pandya ಕಮ್ಬ್ಯಾಕ್: ಸ್ಫೋಟಕ 59*, ಭಾರತದ ಭರ್ಜರಿ ಗೆಲುವಿನ ಹೀರೋ appeared first on Karnataka Times .
ಯಾದಗಿರಿ: ಕಲ್ಯಾಣ ಕರ್ನಾಟಕ ಸಾರಿಗೆ ಇಲಾಖೆ ಹಳೆ ಬಸ್ಗಳನ್ನು ಟೆಂಡರ್ನಲ್ಲಿ ಪಡೆದ ಏಜೆನ್ಸಿಯವರು ನಿಯಮಾವಳಿಗಳನ್ನು ಉಲ್ಲಂಘಿಸಿ ಅಪಾಯಕಾರಿ ರೀತಿಯಲ್ಲಿ ಗುಜರಿ ನಿರ್ವಹಣೆ ಮಾಡುತ್ತಾ ಪರಿಸರಕ್ಕೆ ಹಾನಿ ಮಾಡುತ್ತಿರುವುದಲ್ಲದೆ ಅಪಾಯಕ್ಕೆ ದಾರಿ ಮಾಡಿಕೊಡುತ್ತಿದ್ದು, ಎಫ್ ಐಆರ್ ದಾಖಲಾಗಿದ್ದರೂ ಕ್ರಮ ಕೈಗೊಳ್ಳದೆ ಇರುವುದು ಖಂಡನೀಯವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಟಿ.ಎನ್. ಭೀಮುನಾಯಕ್, ಗುಜರಿಗೆ ಬಿದ್ದ ನೂರಾರು ಹಳೆಯ ಬಸ್ಗಳು ಟೆಂಡರ್ ಮೂಲಕ ಪಡೆದುಕೊಂಡ ಏಜೆನ್ಸಿಗಳಾದ ಉತ್ತರ ಪ್ರದೇಶದ ಸೆವನ್ ಸ್ಟಾರ್, ಹೈದರಾಬಾದ್ ಆಟೋ ಟೆಕ್ಸ್ ಸ್ಥಾಪರ್ಸ ಏಜೆನ್ಸಿ ಹಾಗೂ ಮಧ್ಯಪ್ರದೇಶದ ನಿಯಮಾವಳಿಗಳು ಷರತ್ತುಗಳು ಉಲ್ಲಂಘಿಸಿ ತಾಲೂಕಿನ ಮುಂಡರಗಿ ಗ್ರಾಮ ಸೀಮಾಂತರ ಗಂಜ್ ಪ್ರದೇಶದ ಸಮೀಪದ ಕೈಗಾರಿಕೆ ಪ್ರದೇಶದ ಪಕ್ಕದ ಖಾಸಗಿ ಜಮೀನಿನಲ್ಲಿ ಆಕ್ರಮವಾಗಿ ಗುಜರಿ ನಿರ್ವಹಣೆ ಮಾಡುತ್ತಿರುವುದರಿಂದ ಸುತ್ತಮುತ್ತಲ ಪರಿಸರಕ್ಕೆ ಧಕ್ಕೆಯಾಗುತ್ತಿದೆ. ಇದಲ್ಲದೇ ಈ ಪ್ರದೇಶದ ಸುತ್ತಮುತ್ತ ಶಿಕ್ಷಣ ಸಂಸ್ಥೆಗಳಿದ್ದು ನೂರಾರು ವಿದ್ಯಾರ್ಥಿಗಳು ಓಡಾಡುವ ಅತ್ಯಂತ ಸೂಕ್ಷ್ಮ ಪ್ರದೇಶ ಇದಾಗಿದೆ. ಅಪಾಯಕಾರಿ ಡಿಸ್ಟೆಂಟ್ಲಿಂಗ್ ಬಗ್ಗೆ ಈಗಾಗಲೇ ಪರಿಸರ ಮಂಡಳಿಯ ಸಹಾಯಕ ಪರಿಸರ ಅಧಿಕಾರಿ ಹಣಮಂತಪ್ಪ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ಜಿಲ್ಲಾಧಿಕಾರಿಗಳು, ಸಂಬಂಧಿಸಿದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಮೇಲಾಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಕ್ರಮ ಕೈಗೊಳ್ಳದೇ ಇರುವುದರಿಂದ ಅಪಾಯದ ಹೆಚ್ಚಳದ ಭೀತಿಯಲ್ಲಿ ಮುಂಡರಗಿ ಭಾಗದ ಹಾಗೂ ನಗರದ ಗಂಜ್ ಪ್ರದೇಶದ ನಿವಾಸಿಗಳು ಬದುಕುವಂತಾಗಿದೆ. ಬಸ್ ಬಿಡಿಭಾಗಗಳನ್ನು ಹಂತ ಹಂತವಾಗಿ ಸಿಲಿಂಡರ್ ಬಳಸಿ ತೆಗೆಯುತ್ತಿದ್ದು ಮತ್ತು ಸದರಿ ವಾಹನಗಳಲ್ಲಿನ ಅಳಿದುಳಿದ ಆಯಿಲ್ ಮತ್ತು ಇನ್ನಿತರ ಪೇಟ್ರೋಕೆಮಿಕಲುಗಳು ಅಸುರಕ್ಷಿತವಾಗಿ ಮಣ್ಣಲ್ಲಿ ಸೇರಿಕೊಳ್ಳುವ ಭೀತಿಯಿದೆ ಎಂದು ಹೇಳಿದ್ದಾರೆ. ಈ ಕುರಿತು ಎರಡು ದಿನಗಳಲ್ಲಿ ಕ್ರಮ ಕೈಗೊಳ್ಳದೆ ಇದ್ದಲ್ಲಿ ಕರವೇ ಕಾರ್ಯಕರ್ತರು ಯಾದಗಿರಿ-ಹೈದರಾಬಾದ್ ಹೆದ್ದಾರಿ ತಡೆದು ಪ್ರತಿಭಟನೆ ಮಾಡುವುದಾಗಿ ಮಲ್ಲು ಮಾಳಿಕೇರಿ, ಸಿದ್ದು ನಾಯಕ ಹತ್ತಿಕುಣಿ, ಅಂಬ್ರೇಷ್ ಹತ್ತಿಮನಿ, ಸಂತೋಷ್ ನಿರ್ಮಲಕರ್, ವಿಶ್ವರಾಜ ಪಾಟೀಲ್, ಕಾಶಿನಾಥ ನಾಯಕ್, ಬಸ್ಸು ಜಗನ್ನಾಥ್ ಎಚ್ಚರಿಕೆ ನೀಡಿದ್ದಾರೆ.
ಮಲ್ಪೆ | ತೊಟ್ಟಂ ಸಂತ ಅನ್ನಮ್ಮ ದೇವಾಲಯದ ವಾರ್ಷಿಕ ಮಹೋತ್ಸವ
ಮಲ್ಪೆ, ಡಿ.10: ಪರಸ್ಪರ ಒಗ್ಗಟ್ಟಿನಿಂದ ಕೂಡಿಕೊಂಡು ಧರ್ಮಸಭೆಯ ಅಭಿವೃದ್ಧಿಗೆ ಶ್ರಮಿಸಿದಾಗ ಭರವಸೆಯ ಬಲಿಷ್ಠ ಸೌಹಾರ್ದ ಸಮುದಾಯ ರಚನೆ ಸಾಧ್ಯವಿದೆ ಎಂದು ಮಂಗಳೂರು ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಬಿಜೈ ಚರ್ಚಿನ ಪ್ರಧಾನ ಧರ್ಮಗುರು ವಂ.ಜೆ.ಬಿ.ಸಲ್ಡಾನಾ ಹೇಳಿದ್ದಾರೆ. ತೊಟ್ಟಂ ಸಂತ ಅನ್ನಮ್ಮ ದೇವಾಲಯದ ವಾರ್ಷಿಕ ಮಹೋತ್ಸವದ ಪ್ರಧಾನ ಬಲಿಪೂಜೆಯನ್ನು ಬುಧವಾರ ನೆರವೇರಿಸಿ ಅವರು ಸಂದೇಶ ನೀಡಿದರು. ದೇವರು ತಮ್ಮ ಇಚ್ಚೆಯನ್ನು ಪೊರೈಸಲು ಶ್ರೀಮಂತರನ್ನು, ಬಲಿಷ್ಠರನ್ನು ಆಯ್ಕೆ ಮಾಡದೆ ಹುಲು ಮಾನವರನ್ನು ಆರಿಸಿಕೊಳ್ಳುತ್ತಾರೆ. ಭರವಸೆಯ ಸಮುದಾಯದ ನಿರ್ಮಾಣದಲ್ಲಿ ದೇವರು ಮತ್ತು ಮಾನವನ ನಡುವಿನ ಸಂಬಂಧ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪ್ರತಿಯೊಬ್ಬರು ಒಂದಾಗಿ ದೈವಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಕಾರ್ಯದಲ್ಲಿ ಕೈ ಜೋಡಿಸಿದಾಗ ಶಾಂತಿ, ಮತ್ತು ಪ್ರೀತಿಯುತ ಸಮಾಜ ನಿರ್ಮಾಣವಾಗುತ್ತದೆ ಎಂದರು. ಮಹೋತ್ಸವಕ್ಕೆ ಸಹಕರಿಸಿದ ದಾನಿಗಳಿಗೆ ಮೇಣದ ಬತ್ತಿ ಗೌರವವನ್ನು ಪ್ರಧಾನ ಧರ್ಮಗುರುಗಳು ಸಲ್ಲಿಸಿ ಶುಭ ಹಾರೈಸಿದರು. ಪವಿತ್ರ ಬಲಿ ಪೂಜೆಯಲ್ಲಿ ಉಡುಪಿ ಧರ್ಮಪ್ರಾಂತ್ಯದ ಶ್ರೇಷ್ಠ ಗುರು ವಂ.ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಚರ್ಚಿನ ಪ್ರಧಾನ ಧರ್ಮಗುರು ವಂ.ಡೆನಿಸ್ ಡೆಸಾ, ಕಲ್ಯಾಣಪುರ ವಲಯ ಹಾಗೂ ಧರ್ಮಪ್ರಾಂತ್ಯ ವ್ಯಾಪ್ತಿಯ ವಿವಿಧ ಚರ್ಚುಗಳ ಧರ್ಮಗುರುಗಳು, ಧರ್ಮಭಗಿನಿಯರು ಭಕ್ತಾದಿಗಳು ಭಾಗಿಯಾಗಿದ್ದರು. ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಲೆಸ್ಲಿ ಆರೋಝಾ, ಕಾರ್ಯದರ್ಶಿ ಬ್ಲೆಸಿಲ್ಲಾ ಕ್ರಾಸ್ತಾ, ಸ್ಥಳೀಯಾ ಕಾನ್ವೆಂಟಿನ ಸಿರ್ಸ್ಟ ಸುಶ್ಮಾ, 20 ಆಯೋಗಗಳ ಸಂಚಾಲಕಿ ವನಿತಾ ಫೆರ್ನಾಂಡಿಸ್ ಉಪಸ್ಥಿತರಿದ್ದರು. ಮಂಗಳವಾರ ಸಂಜೆ ನಡೆದ ದೈವ ವಾಕ್ಯದ ಆರಾಧನೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಬೈಬಲ್ ಆಯೋಗದ ನಿರ್ದೇಶಕ ವಂ.ವಿನ್ಸೆಂಟ್ ಸಿಕ್ವೇರಾ ಅವರು ನೆರವೇರಿಸಿದರು. ದೈವವ್ಯಾಕ್ಯದ ಆರಾಧನೆಯ ಪ್ರಯುಕ್ತ ಮೆರವಣಿಗೆ ತೊಟ್ಟಂ ಗಣೇಶೋತ್ಸವ ಸಮಿತಿ ವೇದಿಕೆಯಿಂದ ಚರ್ಚಿನ ವರೆಗೆ ನಡೆದಿದ್ದು, ತೊಟ್ಟಂ ಸಮನ್ವಯ ಸರ್ವಧರ್ಮ ಸೌಹಾರ್ದ ಸಮಿತಿ ವಿಶೇಷವಾಗಿ ಸಹಕರಿಸಿತು.
ಬಡಗುಪೇಟೆ | ಹೊಂಡಗುಂಡಿಗಳಿರುವ ರಸ್ತೆಯ ದುರಸ್ತಿಗೆ ಆಗ್ರಹ
ಉಡುಪಿ, ಡಿ.10: ಬಡಗುಪೇಟೆ ವಾರ್ಡಿನ ವಾಸುಕಿ ಅನಂತ ಪದ್ಮನಾಭ ದೇವಸ್ಥಾನ ರಸ್ತೆಯು ಶ್ರೀಕೃಷ್ಣ ಮಠ, ಮುಕುಂದಕೃಪ ಶಾಲೆಯನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದ್ದು, ಈ ರಸ್ತೆ ಹೊಂಡ ಗುಂಡಿಗಳಿಂದಾಗಿ ಸಂಚಾರ ಕಷ್ಟಕರವಾಗಿ ಸಾರ್ವಜನಿಕರು ಪ್ರಯಾಸಪಡುವ ಪರಿಸ್ಥಿತಿ ಎದುರಾಗಿದೆ. ಈ ರಸ್ತೆಯ ನಡುವಿನ ತಳದಲ್ಲಿದ್ದ ಡ್ರೈನೇಜ್ ಕೊಳವೆಗಳನ್ನು ಬದಲಿಸುವ ಕಾಮಗಾರಿ ನಡೆದಿತ್ತು. ಗುಂಡಿ ಅಗೆದಿರುವ ಸ್ಥಳದಲ್ಲಿ ಜಲ್ಲಿಕಲ್ಲು, ಜಲ್ಲಿಹುಡಿ ಹಾಕಿ ಮುಚ್ಚಿಡಲಾಗಿತ್ತು. ಇದೀಗ ಗುಂಡಿ ತೋಡಿರುವ ಸ್ಥಳವು ಕುಸಿತ ಗೊಂಡಿದ್ದು, ರಸ್ತೆಯ ಉದ್ದಕ್ಕೂ ಗುಂಡಿಗಳು ಬಿದ್ದಿವೆ. ಕಿರುದಾಗಿರುವ ಈ ರಸ್ತೆಯಲ್ಲಿ ವಾಹನಗಳು ಸಂಚರಿಸಲು ಪ್ರಯಾಸ ಪಡಬೇಕಾಗಿದೆ. ರಸ್ತೆಯು ಹದಗೆಟ್ಟ ಕಾರಣದಿಂದ ಅಪಘಾತಗಳು ಸಂಭವಿಸುವುದು ಕಂಡುಬರುತ್ತಿವೆ. ಶಾಲಾ ವಿದ್ಯಾರ್ಥಿಗಳು, ಶ್ರೀಕೃಷ್ಣ ಮಠಕ್ಕೆ ಬರುವ ಯಾತ್ರಿಕರು ಧೂಳುಣ್ಣಬೇಕಾದ ಪರಿಸ್ಥಿತಿ ಇಲ್ಲಿ ಉದ್ಭವಿಸಿದೆ. ಧೂಳೇಳುವ ರಸ್ತೆಯಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು ಶ್ವಾಸಕೋಶ, ಕಣ್ಣಿನ ತೊಂದರೆಗಳಿಗೆ ತುತ್ತಾಗಬೇಕಾದ ಅಪಾಯಕರ ಸ್ಥಿತಿಯು ಎದುರಾಗಿದೆ. ಜಿಲ್ಲಾಡಳಿತ, ನಗರಾಡಳಿತ ತಕ್ಷಣವಾಗಿ ದುಸ್ಥಿತಿಯಲ್ಲಿರುವ ವಾಸುಕಿ ಅನಂತ ಪದ್ಮನಾಭ ರಸ್ತೆಯನ್ನು ಡಾಮರೀಕರಣ ಮಾಡಿಸುವಂತೆ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು ಹಾಗೂ ತಾರಾನಾಥ್ ಮೇಸ್ತ ಶಿರೂರು ಆಗ್ರಹಿಸಿದ್ದಾರೆ.
ಪೋಕ್ಸೊ ಪ್ರಕರಣ: ಮುರುಘಾಶ್ರೀ ಖುಲಾಸೆ ಪ್ರಶ್ನಿಸಿ ಸಂತ್ರಸ್ತೆಯರಿಂದ ಹೈಕೋರ್ಟ್ಗೆ ಮೇಲ್ಮನವಿ
ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಶಿವಮೂರ್ತಿ ಮರುಘಾ ಶರಣರು ಹಾಗೂ ಇತರ ಇಬ್ಬರನ್ನು ಖುಲಾಸೆಗೊಳಿಸಿರುವ ಚಿತ್ರದುರ್ಗ ಸೆಷನ್ಸ್ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಸಂತ್ರಸ್ತ ಬಾಲಕಿಯರು ಹೈಕೋರ್ಟ್ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದಾರೆ. ವಿಚಾರಣಾ ನ್ಯಾಯಾಲಯದ ತೀರ್ಪು ರದ್ದುಪಡಿಸುವಂತೆ ಹಾಗೂ ಖುಲಾಸೆಗೊಂಡಿರುವವರನ್ನು ಅಪರಾಧಿಗಳು ಎಂದು ತೀರ್ಮಾನಿಸಿ ಕಾನೂನು ಪ್ರಕಾರ ಶಿಕ್ಷೆಗೆ ಗುರಿಪಡಿಸುವಂತೆ ಕೋರಿ ಬಾಲಕಿಯರು ಎರಡು ಪ್ರತ್ಯೇಕ ಮೇಲ್ಮನವಿಗಳನ್ನು ಸಲ್ಲಿಸಿದ್ದು, ಚಿತ್ರದುರ್ಗ ಗ್ರಾಮೀಣ ಠಾಣೆ ಪೊಲೀಸರು, ಖುಲಾಸೆಗೊಂಡಿರುವ ಶಿವಮೂರ್ತಿ ಮುರುಘಾ ಶರಣರು, ಎಸ್. ರಶ್ಮಿ ಮತ್ತು ಎ.ಜೆ. ಪರಮಶಿವಯ್ಯ ಅವರನ್ನು ಪ್ರತಿವಾದಿಗಳನ್ನಾಗಿಸಲಾಗಿದೆ. ಮೇಲ್ಮನವಿಗಳು ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ. ಪ್ರಕರಣದ ಹಿನ್ನೆಲೆ: ಮುರುಘಾ ಮಠದ ವಸತಿ ನಿಲಯದಲ್ಲಿ ಇದ್ದುಕೊಂಡು ವ್ಯಾಸಾಂಗ ಮಾಡುತ್ತಿದ್ದ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮುರುಘಾ ಶರಣರು ಮತ್ತಿತರರ ವಿರುದ್ಧ ಪ್ರಕರಣ ದಾಖಲಾಗಿತ್ತು. ಮುರುಘಾ ಶರಣರು ನಮ್ಮನ್ನು ಖಾಸಗಿ ಕೊಠಡಿಗೆ ಹಿಂಬಾಗಿಲಿನಿಂದ ಕರೆಸಿಕೊಂಡು ಚಾಕೊಲೇಟ್ಗಳು ಮತ್ತು ಹಣ್ಣು ಇತ್ಯಾದಿಗಳನ್ನು ತಿನ್ನಲು ನೀಡುತ್ತಿದ್ದರು. ಇದರಲ್ಲಿ ಮಾದಕ ಪದಾರ್ಥಗಳನ್ನು ಬೆರಸಲಾಗಿತ್ತು. ಅದನ್ನು ಸೇವಿಸಿ ಪ್ರಜ್ಞೆ ಕಳೆದುಕೊಂಡ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಈ ವಿಚಾರವನ್ನು ಯಾರಿಗೂ ಬಹಿರಂಗಪಡಿಸಬಾರದು. ಬಹಿರಂಗಪಡಿಸಿದರೆ ತಂದೆ-ತಾಯಿಯನ್ನು ಕೊಲೆ ಮಾಡಿಸುವುದಾಗಿ ಬೆದರಿಕೆ ಹಾಕಿದ್ದರು. ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಮತ್ತವರ ಪತ್ನಿ ಸೌಜನ್ಯಾ ನೆರವಿನಿಂದ ಮೈಸೂರಿನ ಸರ್ಕಾರೇತರ ಸಂಸ್ಥೆ ಒಡನಾಡಿ ತಲುಪಿ, ಅವರ ನೆರವಿನಿಂದ ಮೈಸೂರಿನ ನಜಾರಾಬಾದ್ ಠಾಣೆಯಲ್ಲಿ ದೂರು ನೀಡಿದ್ದಾಗಿ ಬಾಲಕಿಯರು ದೂರಿನಲ್ಲಿ ವಿವರಿಸಿದ್ದರು. ಆನಂತರ ಪ್ರಕರಣ ಚಿತ್ರದುರ್ಗದ ಗ್ರಾಮೀಣ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿತ್ತು. ಕಳೆದ ನವೆಂಬರ್ 26ರಂದು ಐಪಿಸಿ ಸೆಕ್ಷನ್ಗಳಾದ 376(2)(ಎನ್), 376(3), 323, 504, 506, ಪೋಕ್ಸೊ ಕಾಯ್ದೆಯ ಸೆಕ್ಷನ್ಗಳಾದ 5(I), 6 ಮತ್ತು 17ರ ಆರೋಪಗಳಿಂದ ಸ್ವಾಮೀಜಿ ಸೇರಿ ಮೂವರನ್ನು ವಿಚಾರಣಾ ನ್ಯಾಯಾಲಯ ಖುಲಾಸೆಗೊಳಿಸಿತ್ತು.
ಮಂಗಳೂರು | ಕಾರ್ಮಿಕರಿಗೆ ಉಚಿತ ಕಾನೂನು ಸಲಹೆ , ನೆರವು ನೀಡಲು ಚಿಂತನೆ : ಕರೀಷ್ಮಾ
ಮಂಗಳೂರು, ಡಿ.10: ಕಾರ್ಮಿಕರಿಗೆ ಸಂಬಂಧಿಸಿದ ಯಾವುದೇ ಕಾನೂನು ಸಮಸ್ಯೆಗಳಿಗೆ ಉಚಿತ ಕಾನೂನು ಸಲಹೆ ಮತ್ತು ನೆರವು ನೀಡಲು ಪ್ರತ್ಯೇಕ ಘಟಕ ರಚಿಸುವ ಬಗ್ಗೆ ಚಿಂತನೆ ನಡೆಸುವುದಾಗಿ ಇಂಡಿಯನ್ ನ್ಯಾಶನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್( ಇಂಟಕ್) ಜಿಲ್ಲಾ ಯುವ ಕಾಂಗ್ರೆಸ್ ಮಹಿಳಾ ಘಟಕದ ನೂತನ ಅಧ್ಯಕ್ಷೆ ಕರೀಷ್ಮಾ ಎಸ್. ಹೇಳಿದ್ದಾರೆ. ನಗರದಲ್ಲಿ ಇತ್ತೀಚೆಗೆ ನಡೆದ ತಮ್ಮ ಪದಗ್ರಹಣ ಸಮಾರಂಭದ ಬಳಿಕ ಮಾತನಾಡಿದ ಅವರು, ತಾನು ವಕೀಲೆಯಾಗಿರುವ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ನ್ಯಾಯ ದೊರಕಿಸುವುದು ತನ್ನ ಕರ್ತವ್ಯವಾಗಿದೆ ಎಂದು ಹೇಳಿದರು. ತಮ್ಮ ಕುಟುಂಬ ಕಾಂಗ್ರೆಸ್ ಸಿದ್ಧಾಂತದಲ್ಲಿ ನಂಬಿಕೆ ಇಟ್ಟು ಪಕ್ಷಕ್ಕಾಗಿ ಹಲವು ವರ್ಷಗಳಿಂದ ದುಡಿದಿದೆ. ಆ ಮೌಲ್ಯಗಳೇ ತಮಗೆ ನ್ಯಾಯಕ್ಕಾಗಿ ಹೋರಾಡುವ ಶಕ್ತಿ ನೀಡಿ ಬೆಳೆಸಿವೆ ಎಂದು ಹೇಳಿದರು. ಇಂಟಕ್ ದೇಶದ ಕೋಟ್ಯಂತರ ಕಾರ್ಮಿಕರ ಬೆನ್ನೆಲುಬು ಆಗಿದೆ. ಕಾರ್ಮಿಕರನ್ನು ‘ಓಟ್ ಬ್ಯಾಂಕ್’ ಅಲ್ಲ, ರಾಷ್ಟ್ರ ನಿರ್ಮಾಣದ ಅಡಿಪಾಯ ಎಂದು ಪರಿಗಣಿಸುವ ಏಕೈಕ ಸಂಘಟನೆ ನಮ್ಮದು ಎಂದು ಹೇಳಿದರು. ಮಹಿಳಾ ಕಾರ್ಮಿಕರು ಎದುರಿಸುತ್ತಿರುವ ಪ್ರಮುಖ ಸವಾಲುಗಳಾದ ವೇತನ ತಾರತಮ್ಯ, ಸುರಕ್ಷತಾ ಕೊರತೆ, ಕೆಲಸದ ಸ್ಥಳದಲ್ಲಿ ಕಿರುಕುಳ, ಶಿಶುಪಾಲನಾ ಸೌಲಭ್ಯಗಳ ಅಭಾವ ಮುಂತಾದ ಸಮಸ್ಯೆಗಳ ವಿರುದ್ಧ ಹೋರಾಡುವುದಾಗಿ ತಿಳಿಸಿದರು. ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಾ. ಸುರಯ್ಯ ಅಂಜುಮ್, ಇಂಟಕ್ ರಾಜ್ಯ ಅಧ್ಯಕ್ಷ ಡಾ.ಲಕ್ಷ್ಮೀ ವೆಂಕಟೀಶ್, ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಇಂಟಕ್ ಅಧ್ಯಕ್ಷ ಟಿ.ವೈ ಕುಮಾರ್, ಉಪಾಧ್ಯಕ್ಷ ರಮೇಶ್ , ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ವಹಾಬ್ ಕುದ್ರೋಳಿ, ವಕೀಲ ಹಫೀಝ್, ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ | ನೂರುಲ್ ಫುರ್ಕಾನ್ ವಿಶೇಷ ಮಕ್ಕಳ ಶಾಲೆಗೆ ಉಪಕರಣ ಹಸ್ತಾಂತರ
ಉಡುಪಿ, ಡಿ.10: ಉಡುಪಿಯ ನೇಜಾರಿನ ನೂರುಲ್ ಫುರ್ಕಾನ್ ಟ್ರಸ್ಟ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೂರುಲ್ ಫುರ್ಕಾನ್ ವಿಶೇಷ ಮಕ್ಕಳ ಶಾಲೆಯಲ್ಲಿ, ವಿಶೇಷ ಅಗತ್ಯಗಳ ಮಕ್ಕಳ ಶಾರೀರಿಕ ಸಾಮರ್ಥ್ಯ ವೃದ್ಧಿಗೆ ಮಹತ್ತರ ಸಹಾಯವಾಗುವ ಫಿಸಿಯೊಥೆರಪಿ ಉಪಕರಣ ದಾನದ ಹಸ್ತಾಂತರ ಸಮಾರಂಭವು ಇಂದು ಶಾಲಾ ಆವರಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಸ್ಟರ್ ಡಿಎಂ ಹೆಲ್ತ್ ಕೇರ್ ಸಂಸ್ಥೆಯ ವಲಯ ಮುಖ್ಯಸ್ಥ ರೋಹನ್ ಫ್ರಾಂಕೋ, ಶಾಲೆಯ ಮಕ್ಕಳ ಪುನರ್ವಸತಿ ಕಾರ್ಯಕ್ರಮಕ್ಕೆ ಬಳಸಲಾಗುವ ಅತ್ಯಾಧುನಿಕ ಫಿಸಿಯೊಥೆರಪಿ ಉಪಕರಣಗಳನ್ನು ಅಧಿಕೃತವಾಗಿ ಹಸ್ತಾಂತರಿಸಿದರು. ವಿಶೇಷ ಅಗತ್ಯಗಳಿರುವ ಮಕ್ಕಳಿಗೆ ಗುಣಮಟ್ಟದ ಪುನರ್ವಸತಿ ಹಾಗೂ ಆರೈಕೆಯ ಸೌಲಭ್ಯ ನೀಡುವುದು ನಮ್ಮ ಸಾಮಾಜಿಕ ಜವಾಬ್ದಾರಿಯ ಒಂದು ಪ್ರಮುಖ ಅಂಗ. ನೂರುಲ್ ಫುರ್ಕಾನ್ ಸ್ಪೆಷಲ್ ಶಾಲೆಯ ಕೆಲಸ, ಸೇವಾ ಭಾವ ಹಾಗೂ ಸಮರ್ಪಣೆ ಅತ್ಯಂತ ಶ್ಲಾಘನೀಯ ಎಂದು ರೋಹನ್ ಫ್ರಾಂಕೋ ಮೆಚ್ಚುಗೆ ವ್ಯಕ್ತಪಡಿಸಿದರು. ಶಾಲೆಯ ಪ್ರಾಂಶುಪಾಲೆ ದಿಲ್ದಾರ್ ಫಜ್ಲುರ್ ರಹ್ಮಾನ್ ಮಾತನಾಡಿ, ವಿಶೇಷ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮಾತ್ರವಲ್ಲ, ಶಾರೀರಿಕ ಪುನರ್ವಸತಿ ಸಹ ಸಮಾನವಾಗಿ ಅಗತ್ಯ. ಆಸ್ಟರ್ ಡಿಎಂ ಹೆಲ್ತ್ ಕೇರ್ ಸಂಸ್ಥೆ ನೀಡಿರುವ ಈ ಅಮೂಲ್ಯ ಬೆಂಬಲದ ಮೂಲಕ ನಮ್ಮ ವಿದ್ಯಾರ್ಥಿಗಳ ಶಾರೀರಿಕ ಸಾಮರ್ಥ್ಯ ವೃದ್ಧಿ ಕಾರ್ಯಕ್ರಮ ಮತ್ತಷ್ಟು ಬಲವಾಗಲಿದೆ ಎಂದು ತಿಳಿಸಿದರು. ಟ್ರಸ್ಟ್ ನ ಉಪಾಧ್ಯಕ್ಷ ಇಕ್ಬಾಲ್ ಮನ್ನ, ಟ್ರಸ್ಟಿ ಅಶ್ರಫ್ ಬಂಗ್ರೆ ಮಾತನಾಡಿದರು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು. ಕೌಸರ್ ಬಾನು ಕಾರ್ಯಕ್ರಮ ನಿರೂಪಿಸಿದರು. ರೇಷ್ಮಾ ನಾಸೀರ್ ವಂದಿಸಿದರು.
ಉಡುಪಿ | ಮಾನವ ಹಕ್ಕು ಮತ್ತು ಕರ್ತವ್ಯಗಳು ಒಂದೇ ನಾಣ್ಯದ ಎರಡು ಮುಖ: ನ್ಯಾ.ಕಿರಣ್ ಗಂಗಣ್ಣವರ್
ಉಡುಪಿ, ಡಿ.10: ಮಾನವ ಹಕ್ಕು ಮತ್ತು ಕರ್ತವ್ಯಗಳು ಒಂದೇ ನಾಣ್ಯದ ಎರಡು ಮುಖವಿದ್ದಂತೆ. ಹಕ್ಕು ಮತ್ತು ಕರ್ತವ್ಯಗಳನ್ನು ಸಮಾನವಾಗಿ ನೋಡುವ ಮನೋಭಾವವನ್ನು ಎಲ್ಲರೂ ಹೊಂದಿದರೆ ಮಾತ್ರ ನಮ್ಮ ನಾಗರಿಕ ಸಮಾಜದಲ್ಲಿ ಮಾನವೀಯ ಮೌಲ್ಯಗಳು ಉಳಿಯಲು ಸಾಧ್ಯ ಎಂದು ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್ ಗಂಗಣ್ಣವರ್ ಹೇಳಿದ್ದಾರೆ. ಉಡುಪಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಡಾ.ಜಿ ಶಂರ್ಕ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು, ರಾಷ್ಟ್ರೀಯ ಸೇವಾ ಯೋಜನೆ ಉಡುಪಿ ವಿಭಾಗ, ಕಾಲೇಜಿನ ಮಾನವ ಹಕ್ಕುಗಳ ಸಂಘ ಮತ್ತು ಐಕ್ಯೂಎಸಿ ಇವರ ಸಹಭಾಗಿತ್ವದೊಂದಿಗೆ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳ ಲಾದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಮಾನವ ಹಕ್ಕು ಪ್ರಮಾಣ ವಚನವನ್ನು ಬೋಧಿಸಿ ಅವರು ಮಾತನಾಡುತ್ತಿದ್ದರು. ಮುಖ್ಯ ಅತಿಥಿಯಾಗಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಸದಸ್ಯ ಕಾರ್ಯದರ್ಶಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಮನು ಪಟೀಲ್ ಬಿ.ವೈ.ಮಾತನಾಡಿ, ಮಾನವ ಹಕ್ಕುಗಳು ಇಂದು ನಮ್ಮ ದೈನಂದಿನ ಅಗತ್ಯತೆಗಳಾಗಿವೆ. ನಾವು ನಮ್ಮ ಹಕ್ಕುಗಳ ಜೊತೆಗೆ ಇತರರ ಹಕ್ಕುಗಳನ್ನು ಅರಿತು ಗೌರವಿಸಿ ಬದುಕುವುದನ್ನು ಕಲಿಯಬೇಕು ಎಂದು ತಿಳಿಸಿದರು. ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಅಬಿದ್ ಗದ್ಯಲ್ ಮಾತನಾಡಿ, ಮಾನವ ಹಕ್ಕು ಮತ್ತು ಕರ್ತವ್ಯಗಳನ್ನು ಪಾಲಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಸಮಾಜದಲ್ಲಿ ಎಲ್ಲರು ಒಬ್ಬರಿಗೊಬ್ಬರು ಸಮಾನರು ಇಲ್ಲಿ ಯಾವುದೇ ತಾರತಮ್ಯಗಳಿಗೆ ಅವಕಾಶ ಮಾಡಿ ಕೊಡಬಾರದು ಎಂದು ಹೇಳಿದರು. ಸುರತ್ಕಲ್ ಗೋವಿಂದ ದಾಸ್ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಆಶಾಲತಾ ಪಿ. ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿಗಳಿಗೆ ಮಾನವ ಹಕ್ಕುಗಳ ಪ್ರಾಮುಖ್ಯತೆಯ ಕುರಿತು ವಿಶೇಷ ಉಪನ್ಯಾಸವನ್ನು ನೀಡಿದರು. ಕಾಲೇಜಿನ ಪ್ರಾಂಶುಪಾಲರು ಪ್ರೊ.ಸೋಜನ್ ಕೆ.ಜಿ., ಮತ್ತು ಐಕ್ಯೂಎಸಿ ಸಂಚಾಲಕ ಪ್ರೊ.ಶ್ರೀಮತಿ ಅಡಿಗ ಉಪಸ್ಥಿತರಿದ್ದರು. ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಮಾನವ ಹಕ್ಕು ಸಂಘದ ಸಂಚಾಲಕ ಮಂಜುನಾಥ ಸ್ವಾಗತಿಸಿದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ರಾಜೇಂದ್ರ ಕೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
Starlink –ಭಾರತ ಪ್ರವೇಶಕ್ಕೆ ಸಿದ್ಧ. ವೇಗ, ಲೇಟೆನ್ಸಿ ಬೆಲೆ, ಮತ್ತು ಎಲ್ಲ ತಾಂತ್ರಿಕ ಸೌಲಭ್ಯಗಳ ಸಂಪೂರ್ಣ ಮಾಹಿತಿ
SpaceX ಕಂಪನಿಯ ಸ್ಟಾರ್ಲಿಂಕ್ (Starlink) ಸ್ಯಾಟಲೈಟ್ ಇಂಟರ್ನೆಟ್ ಸೇವೆ ಭಾರತಕ್ಕೆ ಬರುವ ಅಂತಿಮ ಹಂತದಲ್ಲಿದೆ. ಡಿಪಾರ್ಟ್ಮೆಂಟ್ ಆ ಟೆಲಿಕಮ್ಯುನಿಕೇಷನ್ಸ್ (DoT) ಈಗಾಗಲೇ ಕಂಪನಿಗೆ ಅಗತ್ಯವಾದ ಪ್ರಮುಖ ಲೈಸೆನ್ಸ್ಗಳನ್ನು ನೀಡಿದೆ. ಆದರೆ ವ್ಯಾಪಾರಿಕ ಸೇವೆ ಪ್ರಾರಂಭಿಸಲು ಬೇಕಾದ ಕೆಲವು ಅಂತಿಮ ಅನುಮೋದನೆಗಳು ಮತ್ತು ಸ್ಪೆಕ್ಟ್ರಮ್ ಸಂಬಂಧಿತ ತೀರ್ಮಾನಗಳು ಬಾಕಿ ಇರುವುದರಿಂದ ಗ್ರಾಹಕರ ಕೈಗೆ ತಲುಪುವ ಹಂತಕ್ಕೆ ಬಂದಿಲ್ಲ. ಡಿಸೆಂಬರ್ 10, 2025ರಂದು ಮಿನಿಸ್ಟರ್ ಆಫ್ ಕಮ್ಯುನಿಕೇಷನ್ಸ್ ಜ್ಯೋತಿರಾದಿತ್ಯ ಸಿಂಧಿಯಾ ಅವರು ಸ್ಟಾರ್ಲಿಂಕ್ ಉಪಾಧ್ಯಕ್ಷೆ ಲಾರೆನ್ ಡ್ರೇಯರ್ ಸೇರಿದಂತೆ ಕಂಪನಿಯ ... Read more The post Starlink – ಭಾರತ ಪ್ರವೇಶಕ್ಕೆ ಸಿದ್ಧ. ವೇಗ, ಲೇಟೆನ್ಸಿ ಬೆಲೆ, ಮತ್ತು ಎಲ್ಲ ತಾಂತ್ರಿಕ ಸೌಲಭ್ಯಗಳ ಸಂಪೂರ್ಣ ಮಾಹಿತಿ appeared first on Karnataka Times .
ರಾಜ್ಯದ ಅತಿ ಚಿಕ್ಕ ರೈಲ್ವೆ ಮಾರ್ಗದಲ್ಲಿ ರೈಲು ಸೇವೆ ಆರಂಭ; ರೈಲ್ವೆ ಸಚಿವಾಲಯ ಒಪ್ಪಿಗೆ - 2 ಜಿಲ್ಲೆಗೆ ಅನುಕೂಲ!
ಅಳ್ನಾವರ ಮತ್ತು ದಾಂಡೇಲಿ ನಡುವೆ ರೈಲು ಸಂಚಾರ ಪುನರಾರಂಭವಾಗಲಿದೆ. ಕೇಂದ್ರ ರೈಲ್ವೆ ಸಚಿವಾಲಯವು ಈ ಚಿಕ್ಕ ರೈಲು ಮಾರ್ಗದಲ್ಲಿ ಡೆಮು ರೈಲು ಓಡಿಸಲು ಅನುಮತಿ ನೀಡಿದೆ. ಇದರಿಂದ ವಿದ್ಯಾರ್ಥಿಗಳು, ಉದ್ಯೋಗಿಗಳು ಮತ್ತು ವ್ಯಾಪಾರಿಗಳಿಗೆ ಅನುಕೂಲವಾಗಲಿದೆ. ಪ್ರವಾಸೋದ್ಯಮಕ್ಕೂ ಇದು ಉತ್ತೇಜನ ನೀಡಲಿದೆ. ಈ ಮಾರ್ಗವು ಉತ್ತರ ಕರ್ನಾಟಕದ ಜನತೆಗೆ ಮಹತ್ವದ ಸಂಪರ್ಕ ಕಲ್ಪಿಸಲಿದೆ.
ಕೃತಕ ಬುದ್ಧಿಮತ್ತೆ ಆಧಾರಿತ ಮಳೆ ಮುನ್ಸೂಚನೆ ಯೋಜನೆ: ರೈತರಿಗೆ ಪ್ರಯೋಜನಗಳೇನು? ವರದಿ ಪಡೆಯುವುದು ಹೇಗೆ?
ಕೃಷಿ ಕ್ರಾಂತಿಗೆ ನಾಂದಿ ಹಾಡಲು ಕೃತಕ ಬುದ್ಧಿಮತ್ತೆ (AI) ಸಜ್ಜಾಗಿದೆ! ಭಾರತದಲ್ಲಿ ಇದೇ ಮೊದಲ ಬಾರಿಗೆ, AI-ಚಾಲಿತ ಮುಂಗಾರು ಮುನ್ಸೂಚನೆ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ. ಈ ನೂತನ ತಂತ್ರಜ್ಞಾನವು ರೈತರಿಗೆ ಮಳೆ ಮತ್ತು ಬಿತ್ತನೆಗೆ ಸೂಕ್ತ ಸಮಯದ ಬಗ್ಗೆ ನಿಖರವಾದ ಮಾಹಿತಿಯನ್ನು ಒದಗಿಸುತ್ತದೆ. ಕೇಂದ್ರ ಕೃಷಿ ಸಚಿವಾಲಯ ಮತ್ತು ಗೂಗಲ್ನ ಮಹತ್ವಾಕಾಂಕ್ಷೆಯ ಸಹಯೋಗದಲ್ಲಿ ರೂಪುಗೊಂಡ ಈ ಯೋಜನೆ, ರೈತರ ಕೃಷಿ ನಿರ್ವಹಣೆಯನ್ನು ಸುಧಾರಿಸಲು ಮತ್ತು ಉತ್ತಮ ಇಳುವರಿಯನ್ನು ಸಾಧಿಸಲು ಸಹಾಯ ಮಾಡಲಿದೆ. ಈ ಕುರಿತ ಮಾಹಿತಿ ಇಲ್ಲಿದೆ.
ಭಾರತದಲ್ಲಿ 'ಎಐ ಪ್ಲಸ್' ಪ್ಲ್ಯಾನ್ ಬಿಡುಗಡೆಗೊಳಿಸಿದ ಗೂಗಲ್: ಮಾಸಿಕ ದರ ಎಷ್ಟು? ಏನೆಲ್ಲಾ ವಿಶೇಷತೆಗಳಿವೆ?
ಗೂಗಲ್ ಭಾರತದಲ್ಲಿ ತನ್ನ ಹೊಸ 'ಎಐ ಪ್ಲಸ್' ಚಂದಾದಾರಿಕೆ ಸೇವೆಯನ್ನು ತಿಂಗಳಿಗೆ 399 ರೂ. ದರದಲ್ಲಿ ಆರಂಭಿಸಿದೆ. ವಿಶೇಷ ಆಫರ್ ಅಡಿಯಲ್ಲಿ ಹೊಸ ಚಂದಾದಾರರು ಇದನ್ನು ಮೊದಲ ಆರು ತಿಂಗಳವರೆಗೆ ಕೇವಲ 199 ರೂ.ಗಳಿಗೆ ಪಡೆಯಬಹುದು. ಈ ಯೋಜನೆಯು ಉಚಿತ ಪ್ಲಾನ್ ಮತ್ತು ದುಬಾರಿ ಎಐ ಪ್ರೊ ಪ್ಲಾನ್ ನಡುವಿನ ಪ್ಲ್ಯಾನ್ ಆಗಿದ್ದು, ಇದರಲ್ಲಿ ಜೆಮಿನಿ 3 ಪ್ರೊ ಮಾಡೆಲ್, 200 ಜಿಬಿ ಕ್ಲೌಡ್ ಸ್ಟೋರೇಜ್, ಸುಧಾರಿತ ವಿಡಿಯೋ ಮತ್ತು ಇಮೇಜ್ ಎಡಿಟಿಂಗ್ ಟೂಲ್ಗಳು ಹಾಗೂ 5 ಜನರಿಗೆ ಫ್ಯಾಮಿಲಿ ಶೇರಿಂಗ್ ಆಯ್ಕೆ ಇದೆ.
ಶಾಶ್ವತ ಕೃಷಿ ವಲಯವೋ? ಅಥವಾ ಶಾಶ್ವತ ಬೃಹತ್ ಕೃಷಿ ಬಂಡವಾಳಶಾಹಿ ವಲಯವೋ?
ಮುಖ್ಯಮಂತ್ರಿಗಳಿಗೊಂದು ಬಹಿರಂಗ ಪತ್ರ
ಧರ್ಮಸ್ಥಳ ಪ್ರಕರಣ: ಎಸ್.ಐ.ಟಿ ವರದಿ ಅಪೂರ್ಣ : ತೀರ್ಪು ಡಿ.26ಕ್ಕೆ ಮುಂದೂಡಿಕೆ
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಎಸ್.ಐ.ಟಿ ಸಲ್ಲಿಸಿರುವ ವರದಿಯ ಕುರಿತಾಗಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ಎಸ್.ಐ.ಟಿ ಪರವಾಗಿ ವಾದ ಮಂಡನೆ ಮುಕ್ತಾಯವಾಗಿದ್ದು, ಅಪೂರ್ಣ ವರದಿಯ ಹಿನ್ನಲೆಯಲ್ಲಿ ಸುಳ್ಳು ಸಾಕ್ಷಿಯ ಕುರಿತು ಈ ಕೂಡಲೇ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಪ್ರಕರಣದ ತೀರ್ಪನ್ನು ಡಿ.26ಕ್ಕೆ ಮುಂದೂಡಿದೆ. ಎಸ್.ಐ.ಟಿ ಪರವಾಗಿ ವಾದ ಮಂಡಿಸಿದ ಸರಕಾರಿ ವಕೀಲರು ಮುಂದಿನ ತನಿಖೆಯ ಕುರಿತು ನ್ಯಾಯಾಲಯದಿಂದ ನಿರ್ದೇಶನ ನೀಡುವಂತೆ ಕೇಳಿಕೊಂಡಿತ್ತು. ವಾದ ಆಲಿಸಿದ ನ್ಯಾಯಾಲಯ ಎಸ್.ಐ.ಟಿ ನ್ಯಾಯಾಲಯದಲ್ಲಿ ಸಲ್ಲಿಸಿರುವ ವರದಿಯು ಪರಿಪೂರ್ಣ ವರದಿಯಲ್ಲ ಇದರಿಂದಾಗಿ ಸುಳ್ಳು ಸಾಕ್ಷಿಯ ಕುರಿತು ತೀರ್ಮಾನ ತೆಗೆದುಕೊಳ್ಳುವುದು ಸಾಧ್ಯವಿಲ್ಲ ಸೂಕ್ತ ಕಾನೂನು ಸಲಹೆ ಪಡೆದು ಅಂತಿಮ ವರದಿಯನ್ನು ಸಿದ್ದಪಡಿಸುವಂತೆ ನ್ಯಾಯಾಲಯ ಎಸ್.ಐ.ಟಿಗೆ ಸೂಚಿಸಿದೆ,. ಲಭಿಸಿರುವ ತಲೆ ಬುರುಡೆಯ ಸಾಕ್ಷಿಯು ಆರೋಪಿಗಳ ಸುಳ್ಳು ಸಾಕ್ಷಿಯನ್ನು ತಿಳಿಸುತ್ತದೆ. ಕೂಡಲೇ ಮುಂದಿನ ಕ್ರಮಕ್ಕೆ ಸೂಚನೆ ನೀಡಬೇಕು ಎಂಬ ವಕೀಲರು ವಾದ ಮಂಡಿಸಿದ್ದರೂ, ತಕ್ಷಣ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಧೀಶರು ಪ್ರಕರಣದ ಬಗ್ಗೆ ಇನ್ನಷ್ಟು ಪರಿಶೀಲಿಸಬೇಕಾಗಿದೆ ಎಂದು ಡಿ 26ಕ್ಕೆ ತೀರ್ಪು ನೀಡಲು ಮುಂದೂಡಿದ್ದಾರೆ.
ಡಿ.12, 13 ರಂದು ಮಂಗಳೂರು ವಿವಿಯಲ್ಲಿ'ಸ್ವಾಸ್ಥ್ಯ ಸಂಪದ-2025' ರಾಷ್ಟ್ರೀಯ ಸಮ್ಮೇಳನ
ಕೊಣಾಜೆ: ಮಂಗಳೂರು ವಿಶ್ವ ವಿದ್ಯಾನಿಲಯದ ಸೂಕ್ಷ್ಮಾಣುಜೀವ ವಿಜ್ಞಾನ ವಿಭಾಗದ ವತಿಯಿಂದ ಆಳ್ವಾಸ್ ಪಾರಂಪರಿಕ ಔಷಧೀಯ ಸಂಶೋಧನಾ ಕೇಂದ್ರ, ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮೂಡುಬಿದಿರೆ ಇದರ ಸಹಯೋಗದೊಂದಿಗೆ 'ಸ್ವಾಸ್ಥ್ಯ ಸಂಪದ-2025' ಔಷಧೀಯ ಸಸ್ಯಗಳ ಬಗ್ಗೆ ರಾಷ್ಟ್ರೀಯ ಸಮ್ಮೇಳನವು ಡಿ.12 ಮತ್ತು 13 ರಂದು ಮಂಗಳೂರು ವಿವಿಯ ಮಂಗಳಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಮಂಗಳೂರು ವಿವಿ ಸೂಕ್ಷ್ಮಾಣುಜೀವ ವಿಜ್ಞಾನ ವಿಭಾಗದ ಹಿರಿಯ ಪ್ರಾಧ್ಯಾಪಕ ಹಾಗೂ ಸಮ್ಮೇಳನದ ಸಂಘಟನಾ ಕಾರ್ಯದರ್ಶಿ ಪ್ರೊ.ಎಂ.ಜಯಶಂಕರ್ ಅವರು ಹೇಳಿದರು. ಅವರು ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಯುರ್ವೇದ, ಯೋಗ, ಸಸ್ಯ ಮೂಲಗಳಿಂದ ಬೇರ್ಪಡಿಸುವ ರಾಸಾಯನಿಕ ವಸ್ತುಗಳು, ಸಂಪ್ರದಾಯಿಕ ಚಿಕಿತ್ಸಾ ಪದ್ಧತಿಗಳು, ಹೊಸ ರೀತಿಯ ವೈದ್ಯಕೀಯ ಔಷಧಗಳ ತಯಾರಿಕೆಗಳು ಮಾನವ ಮತ್ತು ಸಾಕು ಪ್ರಾಣಿಗಳ ಆಹಾರ ಪದ್ಧತಿಗಳಲ್ಲಿ ರೋಗ ನಿರೋಧಕ ಶಕ್ತಿ ವೃದ್ಧಿಸುವ ಕ್ರಿಯೆಗಳು ಮುಂತಾದ ಪುರಾತನ ಆಹಾರ ಪದ್ಧತಿ ಮತ್ತು ರೋಗ ನಿರೋಧಕ ಶಕ್ತಿ ವೃದ್ಧಿ ಹಾಗೂ ರೋಗ ನಿಯಂತ್ರಣ ಕ್ರಮ ಮತ್ತು ರೋಗ ನಿವಾರಣ ಕ್ರಮಗಳನ್ನು ಸೂಕ್ಷ್ಮಾಣುಜೀವಿಗಳ ಅಧ್ಯಯನಗಳಿಗೆ ಮತ್ತು ಸಂಶೋಧನೆಗಳನ್ನು ಒಳಗೊಂಡ ಈ ಪಠ್ಯಕ್ರಮದಡಿಯಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದಿರುವ ವೈಜ್ಞಾನಿಕ ಅಧ್ಯಯನ ಮತ್ತು ಸಂಶೋಧನೆಗಳನ್ನು ಪ್ರಚಾರಪಡಿಸುವ ಹಿನ್ನೆಲೆಯಲ್ಲಿ ಈ ಸಮ್ಮೇಳನವನ್ನು ಆಯೋಜಿಸಲಾಗಿದೆ. ಸಮ್ಮೇಳನವನ್ನು ಪಿ.ಎಮ್. ಉಷಾ ಯೋಜನೆ, ಕರ್ನಾಟಕ ರಾಜ್ಯ ಔಷಧಿ ಗಿಡ ಮೂಲಿಕಾ ಪ್ರಾಧಿಕಾರ ಮತ್ತು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪರಿಷತ್ರವರ ನೆರವಿನೊಂದಿಗೆ ಏರ್ಪಡಿಸಲಾಗಿದೆ. ಡಿ.12ರಂದು ಬೆಳಿಗ್ಗೆ 9.30 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಂತರ ವಿವಿಧ ವಿಷಯ ತಜ್ಞರಿಂದ ವಿಚಾರ ಗೋಷ್ಠಿ, ಸಂಶೋಧಕರುಗಳ ಪ್ರಬಂಧ ಮಂಡನೆ ಮತ್ತು ಸಂಜೆ 6.00 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸ್ವಾಸ್ಥ್ಯ ಆರೋಗ್ಯಕ್ಕಾಗಿ ಪೂರಕವಾದ ಜೈವಿಕ ಮಜ್ಜಿಗೆ ಕುಡಿಯುವ ಬಗ್ಗೆ ಜಾಗೃತಿ, ಔಷಧೀಯ ಸಸ್ಯಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಸಮ್ಮೇಳನದಲ್ಲಿ ಒಟ್ಟು 450ಕ್ಕೂ ಹೆಚ್ಚು ಪ್ರತಿನಿಧಿಗಳು ರಾಜ್ಯ ಹಾಗೂ ಹೊರರಾಜ್ಯಗಳಿಂದ ಭಾಗವವಹಿಸಲಿದ್ದಾರೆ ಎಂದರು. ಪತ್ರಿಕಾ ಗೋಷ್ಠಿಯಲ್ಲಿ ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಸುಬ್ರಹ್ಮಣ್ಯ ಪದ್ಯಾಣ, ಮಂಗಳೂರು ವಿವಿ ಉಪನ್ಯಾಸಕರಾದ ಡಾ. ಶರತ್ ಚಂದ್ರ ರವರು ಉಪಸ್ಥಿತರಿದ್ದರು.
ಮಂಗಳೂರು ವಿವಿ ಕಾಲೇಜಿನಲ್ಲಿ ತುಳು ಪರ್ಬ
ಮಂಗಳೂರು, ಡಿ.10: ಶಿಕ್ಷಕ - ಶಿಕ್ಷಣ ರಂಗ ಶಿಶಿರದ ಆಶ್ರಯದಲ್ಲಿ, ಮಂಗಳೂರು ವಿ.ವಿ. ಕಾಲೇಜಿನ ಕನ್ನಡ ವಿಭಾಗ ಮತ್ತು ತುಳು ಎಂ.ಎ.ಹಳೆ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ತುಳು ಭಾಷಾ ವಿಚಾರಗೋಷ್ಠಿ ಮತ್ತು ಕವಿಗೋಷ್ಠಿಯು ಇತ್ತೀಚೆಗೆ ವಿವಿ ಕಾಲೇಜಿನಲ್ಲಿ ನಡೆಯಿತು. ರಾಜ್ಯ ವಿಧಾನ ಸಭೆಯ ಅಧ್ಯಕ್ಷ ಯು.ಟಿ. ಫರೀದ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ತುಳು ನಾಡಿನ ಕೃಷಿ ಬದ್ಕ್-ಪಿರಾಕ್ ಇನಿ-ಎಲ್ಲೆ ಎಂಬ ವಿಷಯದಲ್ಲಿ ಸರಕಾರಿ ಪಿಯು ಕಾಲೇಜಿನ ಪ್ರಾಂಶುಪಾಲೆ ಡಾ.ಜ್ಯೋತಿ ಚೇಳ್ಯಾರ ಪ್ರಬಂಧ ಮಂಡಿಸಿದರು. ಡಾ. ತುಕರಾಂ ಪೂಜಾರಿ ತುಳುನಾಡಿನ ಸಂಸ್ಕೃತಿಯ ಜೀವನ ವಿಧಾನದ ಬಗ್ಗೆ ಉಪನ್ಯಾಸ ನೀಡಿದರು. ಡಾ.ದಿನಕರ ಪಚ್ಚನಾಡಿ ಯಕ್ಷಗಾನ ಪರಂಪರೆಯಲ್ಲಿ ತುಳು ಭಾಷಾ ವ್ಯವಸಾಯ ನಡೆದುಕೊಂಡ ಬಗ್ಗೆ ಪ್ರಬಂಧ ಮಂಡಿಸಿದರು. ಪ್ರಾಧ್ಯಾಪಕಿ ಜ್ಞಾನೇಶ್ವರಿ ಗೋಷ್ಠಿ ನಡೆಸಿಕೊಟ್ಟರು. ಮುದ್ದು ಮೂಡುಬೆಳ್ಳೆ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಿತು. ಮಂಗಳೂರು ವಿಶ್ವ ವಿದ್ಯಾನಿಲಯದ ಧರ್ಮಸ್ಥಳ ತುಳು ಪೀಠದ ಸಂಯೋಜಕ ಡಾ.ಧನಂಜಯ ಕುಂಭ್ಳೆ ಸಮಾರೋಪ ಭಾಷಣ ಮಾಡಿದರು. ವೇದಿಕೆಯಲ್ಲಿ ಪ್ರೊ.ಜಯವಂತ, ಪರಿಣಿತ ಶೆಟ್ಟಿ, ಶಿಶಿರ ಅಧ್ಯಕ್ಷ ಸುಭಾಶ್ಚಂದ್ರ ಕಣ್ವತೀರ್ಥ, ಉಪಾಧ್ಯಕ್ಷ ಜಿ.ಕೆ.ಭಟ್, ತುಳು ಎಂ.ಎ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಹರೀಶ್ ಅಮೈ, ಕಾರ್ಯದರ್ಶಿ ಮೇಘಾ ಡಾ. ಮಾಧವ, ಚೇತನ್ ಆರ್ ಉಪಸ್ಥಿತರಿದ್ದರು. ಪ್ರಸಾದ್ ಅಂಚನ್ ಕಾರ್ಯಕ್ರಮ ನಿರೂಪಿಸಿದರು.
ಬೆಳ್ತಂಗಡಿ | ಡಿ.12ರಂದು ಮಾದರಿ ಮದುವೆ: ಜಮಾಅತ್ ಪ್ರತಿನಿಧಿಗಳ ಸಂಗಮ
ಬೆಳ್ತಂಗಡಿ, ಡಿ.10: ಮದುವೆಯ ಹೆಸರಿನಲ್ಲಿ ನಡೆಯುವ ಅನಾಚಾರ ಮತ್ತು ದುಂದುಬೆಚ್ಚಗಳನ್ನು ತಡೆಗಟ್ಟುವ ಸಲುವಾಗಿ ಎಸ್ವೈಎಸ್ ಕರ್ನಾಟಕ ರಾಜ್ಯ ಸಮಿತಿಯು ಹಮ್ಮಿಕೊಂಡ ಱಮಾದರಿ ಮದುವೆ: ಶತದಿನ ಅಭಿಯಾನ’ದ ಪ್ರಯುಕ್ತ ಎಸ್ವೈಎಸ್ ಬೆಳ್ತಂಗಡಿ ರೆನ್ ಜಮಾಅತ್ ಪ್ರತಿನಿಧಿಗಳ ಸಂಗಮವು ಡಿ.12ರಂದು ಅಪರಾಹ್ನ 3ಕ್ಕೆ ಗುರುವಾಯನಕೆರೆ ಮಸೀದಿ ಹಾಲ್ ನಲ್ಲಿ ನಡೆಯಲಿದೆ. ಎಸ್ವೈಎಸ್ ರೆನ್ ಅಧ್ಯಕ್ಷ ಅಬ್ದುಲ್ ರಹ್ಮಾನ್ ಸಖಾಫಿ ಆಲಟದಿಲ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಸ್ಸಯ್ಯದ್ ಇಸ್ಮಾಯಿಲ್ ಅಲ್ಹಾದಿ ತಂಞಳ್ ಉಜಿರೆ ದುಆಕ್ಕೆ ನೇತೃತ್ವ ನೀಡಲಿದ್ದಾರೆ. ಅಸ್ಸಯ್ಯದ್ ಅಬ್ದುಲ್ ರಹ್ಮಾನ್ ಬಾ-ಅಲವಿ ಸಾದಾತ್ ತಂಞಳ್ ಕುಪ್ಪೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಕಾರ್ಯದರ್ಶಿ ಡಾ.ಎಂಎಸ್ಸೆಎಂ ಅಬ್ದುಲ್ ರಶೀದ್ ಝ್ಯೆನಿ ಕಾಮಿಲ್ ಸಖಾಫಿ ಮಾದರಿ ಮದುವೆ ಬಗ್ಗೆ ವಿಷಯ ಮಂಡಿಸಲಿದ್ದಾರೆ ಎಂದು ರೆನ್ ಪ್ರಧಾನ ಕಾರ್ಯದರ್ಶಿ ಸಲೀಂ ಕನ್ಯಾಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಡಿ.13ರಂದು ಕಡಬದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ದ.ಕ. ಜಿಲ್ಲಾ ಸಮ್ಮೇಳನ
ಮಂಗಳೂರು, ಡಿ.10: ವಿಜಯ್ ದಿವಸ್ ಅಂಗವಾಗಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ(ರಿ)ದ ದ.ಕ. ಜಿಲ್ಲಾ ಸಮ್ಮೇಳನ ಡಿ.13ರಂದು ಕಡಬದ ನೆಲ್ಯಾಡಿಯ ಬಿರ್ವಾ ಸಭಾಂಗಣದಲ್ಲಿ ಬೆಳಗ್ಗೆ 9:30ರಿಂದ ನಡೆಯಲಿದೆ ಎಂದು ದ.ಕ. ಜಿಲ್ಲಾ ಘಟಕದ ಅಧ್ಯಕ್ಷ ನೋಬರ್ಟ್ ರೋಡ್ರಿಗಸ್ ತಿಳಿಸಿದ್ದಾರೆ. ಮಂಗಳೂರು ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಲವು ಜಿಲ್ಲೆಗಳ ಜಿಲ್ಲಾಧ್ಯಕ್ಷರುಗಳು, ವೀರ ನಾರಿಯರು, ಬಂಟ್ವಾಳ, ಕಡಬ, ಬೆಳ್ತಂಗಡಿ, ಪುತ್ತೂರು ಮತ್ತು ಮಂಗಳೂರು ತಾಲೂಕುಗಳ ಧುರೀಣರು, ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. 1971ರಲ್ಲಿ ಇಂಡೋ- ಪಾಕ್ ಯುದ್ಧದಲ್ಲಿ ಭಾಗಿಯಾದ ದ.ಕ. ಜಿಲ್ಲೆಯ ಯೋಧರಿಗೆ ಕಾರ್ಯಕ್ರಮದಲ್ಲಿ ಗೌರವ ಸಲ್ಲಿಸಲಾಗುವುದು. ಈ ಸಮ್ಮೇಳನದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ರಾಜ್ಯಾಧ್ಯಕ್ಷ ಡಾ.ಶಿವಣ್ಣ ಎನ್. ಕೆ , ಮಹಾ ಪೋಷಕರಾದ ಮಾಜಿ ಸಂಸದೆ ಡಾ. ತೇಜಸ್ವಿನಿ ಗೌಡ , ವಿಶೇಷ ಆಹ್ವಾನಿತರಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ , ಪುತ್ತೂರು ಸಹಾಯಕ ಆಯುಕ್ತ ಸ್ಟೇಲ್ಲಾ ವರ್ಗೀಸ್, ಇಸಿಎಚ್ಎಸ್ ಆಯುಕ್ತ ಕರ್ನಲ್ ನಿತಿನ್ ಭಿಡೆ , ಕೌಕ್ರಾಡಿ ಗ್ರಾಪಂ ಅಧ್ಯಕ್ಷ ಉದಯ್ ಕುಮಾರ್ ಗೌಡ ಭಾಗವಹಿಸಲಿದ್ದಾರೆ. ರಾಜ್ಯ ಘಟಕದ ದ.ಕ. ಹಾಗೂ ಉಡುಪಿ ಜಿಲ್ಲಾ ಸಂಚಾಲಕ ಮ್ಯಾಥ್ಯೂ ಟಿ.ಜಿ ಮಾತನಾಡಿ, ಮಾಜಿ ಸೈನಿಕರು ಮತ್ತು ಅವರ ಕುಟುಂಬ ಎದುರಿಸುತ್ತಿರುವ ಸಮಸ್ಯೆಗಳಿಗೆ ಸಂಘಟಿತ ಪರಿಹಾರ ಕಂಡುಕೊಳ್ಳಲು 2020, ಸೆ.21ರಂದು ಆರಂಭಗೊಂಡ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘವು ಇದೀಗ ರಾಜ್ಯದ 24 ಜಿಲ್ಲೆಗಳಲ್ಲಿ ಜಿಲ್ಲಾ ಘಟಕಗಳನ್ನು ಆರಂಭಿಸಿದ್ದು, ಸಂಘದಲ್ಲಿ 1.41 ಲಕ್ಷ ಮಂದಿ ಸದಸ್ಯರಿದ್ದಾರೆ. 350ಮಂದಿ ದ.ಕ. ಜಿಲ್ಲಾ ಘಟಕ ಸದಸ್ಯತ್ವ ಪಡೆದಿದ್ದಾರೆ. ಮಾಜಿ ಸೈನಿಕರ ಸಮಸ್ಯೆಗಳಾದ ಪುನರ್ವಸತಿ , ಉದ್ಯೋಗ, ಆರೋಗ್ಯ ಮತ್ತು ಕೌಟುಂಬಿಕ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸಂಘ ಕಾರ್ಯನಿರತವಾಗಿದೆ ಎಂದು ಮಾಹಿತಿ ನೀಡಿದರು . ಎಲ್ಲಾ ಜಿಲ್ಲೆಗಳಲ್ಲಿ ಯುದ್ಧ ಸ್ಮಾರಕ ಹಾಗೂ ಅಮರ್ ಜವಾನ್ ಜ್ಯೋತಿ ಸ್ಥಾಪನೆ, ಸೈನಿಕರಿಗೆ ಸಮಾಜದಲ್ಲಿ ಉತ್ತಮ ಗೌರವವನ್ನು ದೊರಕಿಸಿ ಕೊಡುವಲ್ಲಿ ಪ್ರಯತ್ನಿಸುತ್ತಿದೆ. ಮಾಜಿ ಸೈನಿಕರ ಹಕ್ಕುಗಳನ್ನು ಪಡೆಯಲು ಮತ್ತು ಸರಕಾರದಿಂದ ದೊರೆಯುವ ನ್ಯಾಯಯುತ ಸವಲತ್ತುಗಳನ್ನು ದೊರಕಿಸಿಕೊಡುವಲ್ಲಿ ಸಂಘ ಯಶಸ್ವಿಯಾಗಿದೆ ಎಂದು ಅವರು ಹೇಳಿದರು. ಈ ಸಮ್ಮೇಳನದಲ್ಲಿ ಮಾಜಿ ಸೈನಿಕರ ಸಂಘದ ಬಲವರ್ಧನೆಯೊಂದಿಗೆ ಸರಕಾರದಿಂದ ದೊರೆಯುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಸಂಘದ ಕಡಬ ತಾಲೂಕು ಅಧ್ಯಕ್ಷ ಸೆಬಾಸ್ಟಿಯನ್ ಕೆ.ಕೆ ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ದ.ಕ. ಜಿಲ್ಲಾ ಘಟಕದ ಕೋಶಾಧಿಕಾರಿ ಚಂದಪ್ಪ ಡಿಎಸ್, ಬಂಟ್ವಾಳ ಘಟಕದ ಉಪಾಧ್ಯಕ್ಷ ಧನಂಜಯ ನಾಯ್ತೋಟು, ಬೆಳ್ತಂಗಡಿ ಘಟಕದ ಅಧ್ಯಕ್ಷ ತಂಗಚ್ಚನ್ , ಪುತ್ತೂರು ಘಟಕದ ಅಧ್ಯಕ್ಷ ಗೋಪಾಲ ವಿ ಬನ್ನೂರು ಉಪಸ್ಥಿತರಿದ್ದರು.
ರೈತರಿಗೆ ಗುಡ್ ನ್ಯೂಸ್; ಬೆಳೆ ವಿಮೆ ಪರಿಹಾರ ಬಿಡುಗಡೆ ಮಾಹಿತಿ ಕೊಟ್ಟ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ
ಬೆಳಗಾವಿ, ಡಿಸೆಂಬರ್ 10: ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2022-23 ರಿಂದ 2024-25ನೇ ಸಾಲಿನವರೆಗೆ ಒಟ್ಟು 13,728 ರೈತರು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ನೊಂದಾಯಿಸಿಕೊಂಡಿದ್ದಾರೆ. ಈ ಪೈಕಿ 945 ರೈತರಿಗೆ ವಿವಿಧ ಕಾರಣಗಳಿಂದ ಬೆಳೆ ವಿಮೆ ಪರಿಹಾರ ಜಮೆಯಾಗಿರುವುದಿಲ್ಲ. ಸಮಸ್ಯೆಗಳನ್ನು ಪರಿಹರಿಸಿ ಸರ್ಕಾರ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಿದೆ ಎಂದು ಕೃಷಿ ಸಚಿವ
ಕರ್ನಾಟಕ ಸರ್ಕಾರವು ಆರೋಗ್ಯ ಕೇಂದ್ರಗಳಿಗೆ ಸೌರಶಕ್ತಿಯ ಮೂಲಕ 24/7 ವಿದ್ಯುತ್ ಒದಗಿಸಲು 'ಸೌರ ಸ್ವಾಸ್ಥ್ಯ' ಯೋಜನೆಯನ್ನು ಜಾರಿಗೊಳಿಸಿದೆ. ಇದರಿಂದ ವಿದ್ಯುತ್ ಬಿಲ್ಗಳಲ್ಲಿ ಶೇ. 80ರಷ್ಟು ಕಡಿತವಾಗಲಿದೆ. ರಾಯಚೂರು ಜಿಲ್ಲೆಯು ಸಂಪೂರ್ಣ ಸೌರಶಕ್ತಿಯಿಂದ ಕಾರ್ಯನಿರ್ವಹಿಸುವ ಮೊದಲ ಜಿಲ್ಲೆಯಾಗಿದೆ. ಈ ಯೋಜನೆಯು ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳನ್ನು ಸುಧಾರಿಸಲಿದೆ. ಸೌರ ಇ-ಮಿತ್ರ ಮೊಬೈಲ್ ಅಪ್ಲಿಕೇಶನ್ ನಿರ್ವಹಣೆಗೆ ಸಹಾಯ ಮಾಡುತ್ತದೆ. ಈ ಕುರಿತ ಮಾಹಿತಿ ಇಲ್ಲಿದೆ.
ಕೆ-ಪಾಪ್ನ ಗೋಲ್ಡನ್ ಮ್ಯಾಕ್ನೆ ಜುಂಗ್ಕುಕ್, ರೋಲಿಂಗ್ ಸ್ಟೋನ್ ಮ್ಯಾಗಜೀನ್ನ ಕೊರಿಯಾ, ಯುಕೆ ಮತ್ತು ಜಪಾನ್ ಸಂಯೋಜಿತ ಕವರ್ ಪೇಜ್ನಲ್ಲಿ ಕಾಣಿಸಿಕೊಂಡ ಮೊದಲ ಕೆ-ಪಾಪ್ ಸೋಲೋ ಕಲಾವಿದರಾಗಿ ಇತಿಹಾಸ ಸೃಷ್ಟಿಸಿದ್ದಾರೆ. ಈ ಸಾಧನೆಯು 8 ದೇಶಗಳಲ್ಲಿ ಪ್ರದರ್ಶನಗೊಂಡು ಭಾರಿ ಸದ್ದು ಮಾಡುತ್ತಿದೆ. ಸ್ಪಾಟಿಫೈನಲ್ಲಿ 10 ಶತಕೋಟಿಗೂ ಹೆಚ್ಚು ಸ್ಟ್ರೀಮ್ಗಳನ್ನು ತಲುಪಿದ ಮೊದಲ ಕೊರಿಯನ್ ಸೋಲೋ ಕಲಾವಿದ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ಸತತ 3ನೇ ದಿನವೂ ಇಳಿಕೆ ಕಂಡ ಷೇರುಪೇಟೆ, ನಿರಂತರ ಕುಸಿತಕ್ಕೆ ಇಲ್ಲಿವೆ 4 ಕಾರಣಗಳು
ಅಮೆರಿಕದ ಫೆಡರಲ್ ರಿಸರ್ವ್ ಮುಖ್ಯಸ್ಥ ಜೆರೋಮ್ ಪವಲ್ ಅವರು 2026ರ ಬಡ್ಡಿ ದರಗಳ ಬಗ್ಗೆ ನೀಡಲಿರುವ ಸುಳಿವಿಗಾಗಿ ಜಾಗತಿಕ ಹೂಡಿಕೆದಾರರು ಕಾದು ನೋಡುವ ತಂತ್ರ ಅನುಸರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತೀಯ ಷೇರುಪೇಟೆ ಬುಧವಾರದಂದು ನಷ್ಟದಲ್ಲಿ ಅಂತ್ಯಗೊಂಡಿತು. ವಿದೇಶಿ ಹೂಡಿಕೆದಾರರ ಸತತ ಮಾರಾಟ ಮತ್ತು ಕಚ್ಚಾ ತೈಲ ದರ ಏರಿಕೆಯು ಹೂಡಿಕೆದಾರರ ಮನೋಬಲವನ್ನು ಕುಗ್ಗಿಸಿದೆ. ಪರಿಣಾಮವಾಗಿ ಸೆನ್ಸೆಕ್ಸ್ ಮತ್ತು ನಿಫ್ಟಿ ಸತತ ಮೂರನೇ ದಿನವೂ ಕೆಂಪು ಬಣ್ಣದಲ್ಲಿ ವಹಿವಾಟು ಮುಗಿಸಿವೆ.
Gold Price: ಚಿನ್ನದ ಬೆಲೆ ದಿಢೀರ್ 80,000 ರೂಪಾಯಿಗೆ ಕುಸಿತ ಸಾಧ್ಯತೆ...
ಚಿನ್ನ ಬೆಲೆ ಭಾರಿ ಭರ್ಜರಿ ಏರಿಕೆ ಕಾಣುತ್ತಿದ್ದು, ಚಿನ್ನ ಇದೇ ರೀತಿ ಏರಿಕೆ ಕಾಣುತ್ತಾ ಹೋದರೆ ಇನ್ನೇನು ಕೆಲವೇ ತಿಂಗಳಲ್ಲಿ ಚಿನ್ನದ ಬೆಲೆ ಬರೋಬ್ಬರಿ 2,00,000 ರೂಪಾಯಿ ಆಗುವ ಆತಂಕ ಇದೆ ಅನ್ನೋ ಚರ್ಚೆ ಶುರುವಾಗಿತ್ತು. ಅದರಲ್ಲೂ ಬಂಗಾರ &ಬೆಳ್ಳಿ ಬೆಲೆಯಲ್ಲಿ ದಿಢೀರ್ ಹೀಗೆ ಏರಿಕೆ ಕಂಡುಬಂದ ಕಾರಣಕ್ಕೆ ಸಾಮಾನ್ಯ ಜನರು &ಬಡವರು ಚಿಂತೆ
ಗಂಡ ಅದಕ್ಕೆ ಅಸಮರ್ಥ ಎಂದು ಮದುವೆಯಾದ 3ದಿನದಲ್ಲಿ ಡಿವೋರ್ಸ್ ಕೇಳಿದ ಪತ್ನಿ!
ದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ಡಿವೋರ್ಸ್ ಪ್ರಕರಣಗಳು ಹೆಚ್ಚಾಗುತ್ತಿವೆ. ಆದರೆ ಮದುವೆಯಾಗಿ ಮೊದಲ ರಾತ್ರಿಯಲ್ಲೇ ವಿಚಿತ್ರವಾದ ಘಟನೆಯೊಂದು ಸಂಭವಿಸಿದ್ದು. ಮದುವೆಯಾದ ಮೂರೇ ದಿನಕ್ಕೆ ಪತಿಯಿಂದ ಡಿವೋರ್ಸ್ ಕೇಳಿದ್ದಾರೆ. ಗಂಡನ ಆ ಲೋಪವೇ ಇದಕ್ಕೆ ಕಾರಣ ಎಂದು ನವವಿವಾಹಿತ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಹೌದು ಇಲ್ಲಿನ ಗೋರಖ್ಪುರದ ನವವಿವಾಹಿತ ಮಹಿಳೆಯೊಬ್ಬರು ಮದುವೆಯಾದ ಕೇವಲ ಮೂರು ದಿನಗಳಲ್ಲೇ ವಿಚ್ಛೇದನ ಕೊಡುವಂತೆ
ಮುಂಬೈನಲ್ಲಿ ಬಾಲಿವುಡ್- ಫುಟ್ಬಾಲ್ ಸಂಗಮದಲ್ಲಿ ಲಿಯೊನೆಲ್ ಮೆಸ್ಸಿ ರ್ಯಾಂಪ್ ವಾಕ್ !
ಫುಟ್ಬಾಲ್ ದಿಗ್ಗಜ ಲಿಯೊನೆಲ್ ಮೆಸ್ಸಿಯ ಭಾರತ ಪ್ರವಾಸಕ್ಕೆ ಬಾಲಿವುಡ್ ಸಜ್ಜಾಗುತ್ತಿದೆ. ಜಾಗತಿಕ ಫುಟ್ಬಾಲ್ ದಿಗ್ಗಜರು ಬಾಲಿವುಡ್ ಗ್ಲಾಮರ್ ಜೊತೆಗೆ ಮೇಳೈಸುವ ಅದ್ದೂರಿ ಕಾರ್ಯಕ್ರಮಕ್ಕಾಗಿ ಮನರಂಜನಾ ಜಗತ್ತು ಸಿದ್ಧವಾಗುತ್ತಿದೆ. ಲಿಯೊನೆಲ್ ಮೆಸ್ಸಿ ಭಾರತ ಪ್ರವಾಸದ ಸಂದರ್ಭದಲ್ಲಿ ಇತರ ಫುಟ್ಬಾಲ್ ಆಟಗಾರರಾದ ಲೂಯಿಸ್ ಸೌರೆಜ್ ಮತ್ತು ರೊಡ್ರಿಗೊ ಡಿ ಪಾಲ್ ಅವರೊಂದಿಗೆ ಮುಂಬೈನಲ್ಲಿ ರ್ಯಾಂಪ್ ವಾಕ್ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಾಲಿವುಡ್ನ ದಿಗ್ಗಜರು ಭಾಗವಹಿಸುವ ನಿರೀಕ್ಷೆಯಿದೆ. ಬಾಲಿವುಡ್-ಫುಟ್ಬಾಲ್ ಸಂಗಮ ಮೆಸ್ಸಿ ಮತ್ತು ಇತರ ಫುಟ್ಬಾಲ್ ಆಟಗಾರರು ಡಿಸೆಂಬರ್ 14ರಂದು ಮುಂಬೈನಲ್ಲಿ 45 ನಿಮಿಷಗಳ ಫ್ಯಾಷನ್ ಶೋನಲ್ಲಿ ಭಾಗವಹಿಸಲಿದ್ದಾರೆ. ಇದು ದತ್ತಿ ಕಾರ್ಯಕ್ರಮವಾಗಿದ್ದು, ಟೈಗರ್ ಶ್ರಾಫ್, ಜಾಕಿ ಶ್ರಾಫ್ ಮತ್ತು ಜಾನ್ ಅಬ್ರಾಹಾಂ ಸೇರಿದಂತೆ ಬಾಲಿವುಡ್ನ ಖ್ಯಾತನಾಮರು ರ್ಯಾಂಪ್ ಮೇಲೆ ನಡೆಯಲಿದ್ದಾರೆ. 14 ವರ್ಷಗಳ ನಂತರದ ಆಗಮನ ಮುಂಬೈಗೆ ಬಂದಿಳಿಯಲಿರುವ ಮೆಸ್ಸಿ ಪ್ರಸಿದ್ಧ ವಾಂಖೆಡೆ ಸ್ಟೇಡಿಯಂನಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಕೋಲ್ಕತ್ತಾ, ಹೈದರಾಬಾದ್ ಮತ್ತು ಹೊಸದಿಲ್ಲಿಗೂ ಭೇಟಿ ನೀಡಲಿದ್ದಾರೆ. ಈ ಹಿಂದೆ 2011ರಲ್ಲಿ ಮೆಸ್ಸಿ ಭಾರತಕ್ಕೆ ಆಗಮಿಸಿದ್ದರು. ಆಗ ಕೋಲ್ಕತ್ತಾದ ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ಅರ್ಜೆಂಟಿನಾದ ತಂಡ ವೆನೆಜುವೆಲಾ ವಿರುದ್ಧ ಸ್ನೇಹಪರ ಪಂದ್ಯದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಸ್ಟೇಡಿಯಂ ತುಂಬಿ ತುಳುಕಿತ್ತು ಮತ್ತು ಫುಟ್ಬಾಲ್ ಪ್ರೇಮಿಗಳು ಬಹಳ ಹುರುಪಿನಿಂದ ಭಾಗವಹಿಸಿದ್ದರು. ಇದೀಗ ಡಿಸೆಂಬರ್ನಲ್ಲಿ 14 ವರ್ಷಗಳ ನಂತರ ಮೆಸ್ಸಿ ಭಾರತ ಪ್ರವಾಸದಲ್ಲಿ ಒಂದೇ ಪಂದ್ಯದಲ್ಲಿ ಆಡಲಿದ್ದಾರೆ. ಇದು ಕ್ರೀಡೆಗಿಂತ ಹೆಚ್ಚಾಗಿ ಅಭಿಮಾನಿಗಳನ್ನು ರಂಜಿಸಲಿರುವ ಆಗಮನವಾಗಲಿದೆ. ಅಭಿಮಾನಿಗಳನ್ನು ಭೇಟಿಯಾಗುವ ಸೆಶನ್ಗಳು, ಯುವ ಫುಟ್ಬಾಲ್ ಕ್ಲಿನಿಕ್ಗಳು, ಕಾರ್ಯಾಗಾರಗಳು ಮತ್ತು ಇತರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಹೈದರಾಬಾದ್ನಲ್ಲಿ ಗೋಟ್ ಕಪ್ ಹೈದರಾಬಾದ್ನಲ್ಲಿ ಅವರು ಸಂಜೆ 7 ಗಂಟೆಯಿಂದ ಉಪ್ಪಲ್ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಹೈದರಾಬಾದ್ ಗೋಟ್ ಕಪ್ನಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಭಾಗವಹಿಸುವ ನಿರೀಕ್ಷೆಯಿದೆ. ಮೆಸ್ಸಿಮಯವಾಗಲಿರುವ ಕೋಲ್ಕತ್ತಾ ಕೋಲ್ಕತ್ತಾದ ಶ್ರೀಭೂಮಿಯಲ್ಲಿ ತಮ್ಮ 70 ಅಡಿಯ ಪ್ರತಿಮೆಯನ್ನು ಲಿಯೊನೆಲ್ ಮೆಸ್ಸಿ ಉದ್ಘಾಟಿಸಲಿದ್ದಾರೆ. ಭದ್ರತಾ ಕಾರಣಗಳಿಂದಾಗಿ ಮೆಸ್ಸಿ ತಮ್ಮ ಹೊಟೇಲ್ನಿಂದಲೇ ವರ್ಚುವಲ್ ಆಗಿ ಇದನ್ನು ಉದ್ಘಾಟಿಸಲಿದ್ದಾರೆ. ಸ್ಥಳದಲ್ಲಿ ಉದ್ಘಾಟನೆಗೆ ಪೊಲೀಸರು ಅನುಮತಿ ನೀಡಲಿಲ್ಲ. ಕೋಲ್ಕತ್ತಾ ಕ್ರೀಡಾಂಗಣದ ಕಾರ್ಯಕ್ರಮದಲ್ಲಿ 70,000ಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ. ಟಿಕೆಟ್ಗೆ ಅತಿಯಾದ ಬೇಡಿಕೆಯಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕ್ರಿಕೆಟ್ ತಂಡಕ್ಕೆ ಆಯ್ಕೆ ಮಾಡದ ಸಿಟ್ಟಲ್ಲಿ ಕೋಚ್ ಮೇಲೆ ಹಿಗ್ಗಾಮುಗ್ಗಾ ಹಲ್ಲೆ!; ಪಾಂಡಿಚೇರಿಯಲ್ಲಿ ಹೀಗೊಂದು ಪ್ರಕರಣ
Selection Scam Allegations- ಪಾಂಡಿಚೇರಿ ಕ್ರಿಕೆಟ್ ಅಸೋಸಿಯೇಶನ್ ಸ್ಥಳೀಯ ಆಟಗಾರರ ಮೇಲೆ ತಾರತಮ್ಯ ಮಾಡುತ್ತಿದೆ ಎಂದು ವರದಿಯಾದ ಬೆನ್ನಲ್ಲೇ ಕ್ರಿಕೆಟ್ ತಂಡಕ್ಕೆ ಆಯ್ಕೆ ಮಾಡಿಲ್ಲ ಎಂಬ ಕಾರಣಕ್ಕೆ ಕೋಚ್ ಒಬ್ಬರ ಮೇಲೆ ಮೂವರು ಸ್ಥಳೀಯ ಆಟಗಾರರು ಹಲ್ಲೆ ನಡೆಸಿದ ಘಟನೆ ನಡೆದಿದೆ. ಪಾಂಡಿಚೇರಿ ಅಂಡರ್ 19 ಕ್ರಿಕೆಟ್ ತಂಡದ ಕೋಚ್ ಎಸ್. ವೆಂಕಟರಾಮನ್ ಹಲ್ಲೆಗೊಳಗಾದವರು. ಕೋಚ್ಗೆ ಗಂಭೀರ ಗಾಯಗಳಾಗಿವೆ. ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ತಂಡಕ್ಕೆ ಆಯ್ಕೆ ಮಾಡಿಲ್ಲ ಎಂಬ ಕಾರಣಕ್ಕೆ ಈ ಘಟನೆ ನಡೆದಿದೆ.
ಬೆಳ್ಳಿ ಬೆಲೆ ದಾಖಲೆ ಮಟ್ಟದಲ್ಲಿ ಏರಿಕೆ, ಚಿನ್ನವೂ ದುಬಾರಿ!
ಡಿಸೆಂಬರ್ 10ರಂದು ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಗರಿಷ್ಠ ಮಟ್ಟಕ್ಕೇರಿದ್ದು, ಶೀಘ್ರದಲ್ಲೇ 2 ಲಕ್ಷ ರೂಪಾಯಿಯಾಗುವ ಸಾಧ್ಯತೆಯಿದೆ. ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಪ್ರತಿದಿನ ಏರಿಳಿತದ ಹಾದಿಯಲ್ಲಿ ಸಾಗುತ್ತಿವೆ. ಒಂದು ದಿನ ಏರಿಕೆಯಾದರೆ ಮತ್ತೊಂದು ದಿನ ಇಳಿಯುತ್ತಿದೆ. ಹೀಗಾಗಿ ಜನರನ್ನು ಗೊಂದಲಕ್ಕೆ ಈಡುಮಾಡಿದೆ. ಬುಧವಾರ ಮಂಗಳೂರಿನಲ್ಲಿ ಮತ್ತೆ ಚಿನ್ನದ ಬೆಲೆ ಏರಿಕೆಯಾಗಿದೆ. ದಿಲ್ಲಿಯಲ್ಲಿ ಸತತ ಎರಡನೇ ದಿನವೂ ಒಂದು ಕಿಲೋಗ್ರಾಂ ಬೆಳ್ಳಿ ದುಬಾರಿಯಾಗಿದೆ. ಡಿಸೆಂಬರ್ 10ರಂದು ಚಿನ್ನ ಮತ್ತು ಬೆಳ್ಳಿ ದರ ಭಾರಿ ಪ್ರಮಾಣದಲ್ಲಿ ಏರಿದೆ. ಬೆಳ್ಳಿ ಬೆಲೆ ಗರಿಷ್ಠ ಮಟ್ಟಕ್ಕೇರಿದ್ದು, ಶೀಘ್ರದಲ್ಲೇ 2 ಲಕ್ಷ ರೂಪಾಯಿಯಾಗುವ ಸಾಧ್ಯತೆಯಿದೆ. ಚಿನ್ನದ ಬೆಲೆಯೂ ಗರಿಷ್ಠ 1 ಲಕ್ಷ 30 ಸಾವಿರ ರೂಪಾಯಿ ತಲುಪಿದೆ. ಬೆಳ್ಳಿ ಬೆಲೆ ರೂ 900 ಹೆಚ್ಚಳವಾಗಿ ಕಿಲೊಗ್ರಾಂಗೆ ರೂ 1,99,000ಕ್ಕೆ ಏರಿಕೆಯಾಗಿದೆ. ಮಂಗಳೂರಿನಲ್ಲಿ ಚಿನ್ನದ ದರವೆಷ್ಟು? ಬುಧವಾರ ಡಿಸೆಂಬರ್ 10ರಂದು ಮಂಗಳೂರಿನಲ್ಲಿ ಬಂಗಾರದ ಬೆಲೆ ಮತ್ತೆ ಏರಿಕೆ ಕಂಡಿದೆ. ಬೆಳಗಿನ ವಹಿವಾಟಿನಲ್ಲಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನಕ್ಕೆ ರೂ. 13,031 (+87), 22 ಕ್ಯಾರೆಟ್ ಚಿನ್ನಕ್ಕೆ ರೂ. 11,945 (+80) ಮತ್ತು 18 ಕ್ಯಾರೆಟ್ ಚಿನ್ನಕ್ಕೆ ರೂ. 9,773 (+65) ಬೆಲೆಗೆ ಏರಿಕೆಯಾಗಿದೆ. ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ? ಡಿಸೆಂಬರ್ 10 ಬುಧವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ ರೂ. 13,031 ಇದ್ದು, ಇಂದು 87 ರೂಪಾಯಿ ಹೆಚ್ಚಳ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ 1,30,310 ರೂಪಾಯಿ ಇದೆ. 24 ಕ್ಯಾರೆಟ್ 10 ಗ್ರಾಂ ಬೆಲೆಯಲ್ಲಿ ಇಂದು ರೂ. 870 ಏರಿಕೆ ಆಗಿದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 24 ಕ್ಯಾರಟ್ನ ಚಿನ್ನದ ಬೆಲೆ ರೂ. 1,29,430, 22 ಕ್ಯಾರಟ್ ಚಿನ್ನದ ಬೆಲೆ ರೂ. 1,18,640ಕ್ಕೆ ಏರಿದೆ. 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ: ರೂ. 13,042, 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ ರೂ, 11,955 ಇದೆ. ಬೆಳ್ಳಿಯ ಬೆಲೆ 1 ಗ್ರಾಂಗೆ ರೂ. 189ಕ್ಕೇರಿದೆ.
ಇಂಡಿಗೊ ಬಿಕ್ಕಟ್ಟು | ಟಿಕೆಟ್ಗಳ ಬೆಲೆ 40,000ರೂ. ತಲುಪಿದ್ದು ಹೇಗೆ?: ಕೇಂದ್ರ ಸರಕಾರಕ್ಕೆ ಹೈಕೋರ್ಟ್ ಚಾಟಿ
ಹೊಸದಿಲ್ಲಿ: ಹಾರಾಟದಲ್ಲಿ ಉಂಟಾದ ವ್ಯತ್ಯಯದಿಂದ ಇಂಡಿಗೋಗೆ ಸಾವಿರಾರು ವಿಮಾನಗಳ ರದ್ದತಿಯಿಂದಾಗಿ ವಿಮಾನ ನಿಲ್ದಾಣಗಳಲ್ಲಿ ಸಿಲುಕಿರುವ ಪ್ರಯಾಣಿಕರಿಗೆ ಪರಿಹಾರ ನೀಡುವಂತೆ ದಿಲ್ಲಿ ಹೈಕೋರ್ಟ್ ಬುಧವಾರ ಕೇಂದ್ರ ನಿರ್ದೇಶನ ನೀಡಿದೆ. ವಿಮಾನಯಾನದ ದರಗಳು 40,000 ರೂ.ಗೆ ಏರಿರುವುದನ್ನು ತಡೆಯುವಲ್ಲಿ ವಿಫಲವಾದ ಕೇಂದ್ರವನ್ನು ಅದು ತರಾಟೆಗೆ ತೆಗೆದುಕೊಂಡಿತು. ಪರಿಸ್ಥಿತಿಯನ್ನು ಆತಂಕಕಾರಿ ಎಂದು ಹೇಳಿದ ದಿಲ್ಲಿ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ನೇತೃತ್ವದ ವಿಭಾಗೀಯ ಪೀಠವು, ಇದರಿಂದಾಗಿ ಪ್ರಯಾಣಿಕರಿಗೆ ಅನಾನುಕೂಲತೆ ಮಾತ್ರವಲ್ಲ, ಇದರಿಂದಾಗುವ ಆರ್ಥಿಕ ಪರಿಣಾಮದ ಬಗ್ಗೆಯೂ ಬೆಳಕು ಚೆಲ್ಲಿದೆ. ವಿಮಾನ ನಿಲ್ದಾಣಗಳಲ್ಲಿ ಸಿಲುಕಿರುವ ಪ್ರಯಾಣಿಕರಿಗೆ ಪರಿಹಾರ ನೀಡಲು ನಾಗರಿಕ ವಿಮಾನಯಾನ ಸಚಿವಾಲಯ, ಡಿಜಿಸಿಎ ಮತ್ತು ಇಂಡಿಗೋ ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳುತ್ತವೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ಹೈಕೋರ್ಟ್ ಹೇಳಿದೆ. ಪರಿಸ್ಥಿತಿಯನ್ನು ಉಲ್ಬಣಗೊಳಿಸಲು ಅವಕಾಶ ನೀಡಿದ್ದಕ್ಕಾಗಿ ಮತ್ತು ಬಿಕ್ಕಟ್ಟು ಭುಗಿಲೆದ್ದ ನಂತರವೇ ಕ್ರಮ ಕೈಗೊಂಡಿದ್ದಕ್ಕಾಗಿ ನ್ಯಾಯಾಲಯವು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು. ವಿಮಾನ ಹಾರಾಟದಲ್ಲಿ ಬಿಕ್ಕಟ್ಟು ಇದ್ದಲ್ಲಿ, ಅದನ್ನು ಇತರ ವಿಮಾನಯಾನ ಸಂಸ್ಥೆಗಳು ಲಾಭ ಪಡೆಯಲು ಹೇಗೆ ಅನುಮತಿಸಬಹುದು? ವಿಮಾನಯಾನ ಟಿಕೆಟ್ ದರ 35-40 ಸಾವಿರಕ್ಕೆ ತಲುಪಲು ಹೇಗೆ ಸಾಧ್ಯ? ನೀವು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಲು ಬಿಟ್ಟಿದ್ದೀರಿ ಎಂದು ನ್ಯಾಯಾಲಯವು ಆಕ್ರೋಶ ವ್ಯಕ್ತಪಡಿಸಿತು. ಇಂತಹ ಪರಿಸ್ಥಿತಿ ಪ್ರಯಾಣಿಕರಿಗೆ ಅನಾನುಕೂಲತೆಯನ್ನುಂಟುಮಾಡುವುದಕ್ಕೆ ಮಾತ್ರ ಸೀಮಿತವಾಗಿಲ್ಲ, ಬದಲಾಗಿ ದೇಶದ ಆರ್ಥಿಕತೆಯ ಮೇಲೂ ಪರಿಣಾಮ ಬೀರುತ್ತದೆ ಎಂದು ಅದು ನ್ಯಾಯಾಲಯವು ಕಳವಳ ವ್ಯಕ್ತಪಡಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್ಜಿ) ಚೇತನ್ ಶರ್ಮಾ, ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಮತ್ತು ಈಗಾಗಲೇ ಆ ಸಂಸ್ಥೆಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಪೀಠದ ಗಮನಕ್ಕೆ ತಂದರು.
ರೋಹಿಂಗ್ಯಾ ಪ್ರಕರಣದಲ್ಲಿ ಸಿಜೆಐ ವಿರುದ್ಧದ ‘ಪ್ರೇರೇಪಿತ ಅಭಿಯಾನʼಕ್ಕೆ ನಿವೃತ್ತ ನ್ಯಾಯಾಧೀಶರಿಂದ ಖಂಡನೆ
ಹೊಸದಿಲ್ಲಿ,ಡಿ.10: ರೋಹಿಂಗ್ಯಾ ವಲಸಿಗರಿಗೆ ಸಂಬಂಧಿಸಿದ ವಿಚಾರಣೆ ಸಂದರ್ಭದಲ್ಲಿ ಭಾರತದ ಮುಖ್ಯ ನ್ಯಾಯಾಧೀಶ (ಸಿಜೆ ಐ) ಸೂರ್ಯಕಾಂತ ಅವರ ಹೇಳಿಕೆಗಳಿಗಾಗಿ ಅವರನ್ನು ಗುರಿಯಾಗಿಸಿಕೊಂಡು ‘ಪ್ರೇರೇಪಿತ ಅಭಿಯಾನʼವನ್ನು ಸರ್ವೋಚ್ಚ ನ್ಯಾಯಾಲಯ ಮತ್ತು ಉಚ್ಚ ನ್ಯಾಯಾಲಯಗಳ 44 ನಿವೃತ್ತ ನ್ಯಾಯಾಧೀಶರು ಹೇಳಿಕೆಯೊಂದರಲ್ಲಿ ಖಂಡಿಸಿದ್ದಾರೆ. ಕಸ್ಟಡಿಯಲ್ಲಿದ್ದ ರೋಹಿಂಗ್ಯಾ ನಿರಾಶ್ರಿತರು ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಿರುವ ಅರ್ಜಿಯ ವಿಚಾರಣೆಯನ್ನು ಡಿ.2ರಂದು ಕೈಗೆತ್ತಿಕೊಂಡಿದ್ದ ಸರ್ವೋಚ್ಚ ನ್ಯಾಯಾಲಯದ ಪೀಠವು ರೋಹಿಂಗ್ಯಾ ನಿರಾಶ್ರಿತರ ಕುರಿತು ನೀಡಿದ ‘ಕೆಲವು ಅವಿವೇಕದ ಹೇಳಿಕೆಗಳ ಬಗ್ಗೆ ತೀವ್ರ ಕಳವಳಗಳನ್ನು ವ್ಯಕ್ತಪಡಿಸಿ’ ಕೆಲವು ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಕ್ಯಾಂಪೇನ್ ಫಾರ್ ಜ್ಯುಡಿಷಿಯಲ್ ಅಕೌಂಟೇಬಿಲಿಟಿ ಆ್ಯಂಡ್ ರಿಫಾರ್ಮ್ಸ್ (ಸಿಜೆಎಆರ್) ಡಿ.5ರಂದು ಹೊರಡಿಸಿದ್ದ ಬಹಿರಂಗ ಪತ್ರವನ್ನು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ಸರ್ವೋಚ್ಚ ನ್ಯಾಯಾಲಯದ ಅವಹೇಳನ ಸ್ವೀಕಾರಾರ್ಹವಲ್ಲ ಎಂದು ಒತ್ತಿ ಹೇಳಿರುವ ಹೇಳಿಕೆಯು, ನ್ಯಾಯಾಂಗ ಪ್ರಕ್ರಿಯೆಗಳು ನ್ಯಾಯಯುತ ಮತ್ತು ತಾರ್ಕಿಕ ಟೀಕೆಗಳಿಗೆ ಮಾತ್ರ ಒಳಪಟ್ಟಿರಬೇಕು ಎಂದು ತಿಳಿಸಿದೆ. ‘ಆದರೆ ನಾವು ನೋಡುತ್ತಿರುವುದು ತಾತ್ವಿಕ ಭಿನ್ನಾಭಿಪ್ರಾಯವಲ್ಲ, ಬದಲಾಗಿ ನ್ಯಾಯಾಂಗದ ನಿಯಮಿತ ಕಲಾಪವನ್ನು ಪೂರ್ವಾಗ್ರಹ ಪೀಡಿತ ಕೃತ್ಯವೆಂದು ತಪ್ಪಾಗಿ ನಿರೂಪಿಸುವ ಮೂಲಕ ದುರ್ಬಲಗೊಳಿಸುವ ಪ್ರಯತ್ನವಾಗಿದೆ’ ಎಂದು ಹೇಳಿಕೆಯು ತಿಳಿಸಿದೆ. ನ್ಯಾಯಾಲಯದ ಮುಂದೆ ಹೇಳಿಕೊಳ್ಳಲಾಗುತ್ತಿರುವ ಸ್ಥಾನಮಾನವನ್ನು ಕಾನೂನಿನಲ್ಲಿ ಯಾರು ನೀಡಿದ್ದಾರೆ ಎಂಬ ಅತ್ಯಂತ ಮೂಲಭೂತ ಕಾನೂನು ಪ್ರಶ್ನೆಯನ್ನೆತ್ತಿದ್ದಕ್ಕಾಗಿ ಸಿಜೆಐ ವಿರುದ್ಧ ಅಭಿಯಾನ ನಡೆಸಲಾಗುತ್ತಿದೆ. ಈ ಪ್ರಶ್ನೆಗೆ ಉತ್ತರವನ್ನು ಕಂಡುಕೊಳ್ಳದ ಹೊರತು ಹಕ್ಕುಗಳ ಕುರಿತು ನ್ಯಾಯನಿರ್ಣಯ ಸಾಧ್ಯವಿಲ್ಲ ಎಂದು ನಿವೃತ್ತ ನ್ಯಾಯಾಧೀಶರು ತಮ್ಮ ಹೇಳಿಕೆಯಲ್ಲಿ ಬೆಟ್ಟು ಮಾಡಿದ್ದಾರೆ. ಭಾರತದಲ್ಲಿರುವ ಯಾವುದೇ ವ್ಯಕ್ತಿಯನ್ನು, ಭಾರತೀಯ ಅಥವಾ ವಿದೇಶಿ ಪ್ರಜೆಯಾಗಿರಲಿ, ಚಿತ್ರಹಿಂಸೆ, ಕಣ್ಮರೆ ಅಥವಾ ಅಮಾನವೀಯ ನಡವಳಿಕೆಗೆ ಗುರಿಯಾಗಿಸುವಂತಿಲ್ಲ ಮತ್ತು ಪ್ರತಿಯೊಬ್ಬ ವ್ಯಕ್ತಿಯ ಘನತೆಯನ್ನು ಗೌರವಿಸಬೇಕು ಎಂಬ ಪೀಠದ ಹೇಳಿಕೆಯನ್ನು ಸಿಜೆ ವಿರುದ್ಧದ ಅಭಿಯಾನವು ಗಮನಕ್ಕೆ ತೆಗೆದುಕೊಂಡಿಲ್ಲ ಎಂದು ಹೇಳಿಕೆಯು ತಿಳಿಸಿದೆ. ಇದನ್ನು ಬಚ್ಚಿಟ್ಟು ನ್ಯಾಯಾಲಯವು ಅಮಾನವೀಯತೆಯನ್ನು ತೋರಿಸಿದೆ ಎಂದು ಆರೋಪಿಸುವುದು ನಿಜವಾಗಿ ಹೇಳಿದ್ದರ ಗಂಭೀರ ತಿರುಚುವಿಕೆಯಾಗಿದೆ ಎಂದು ತಿಳಿಸಿರುವ ಹೇಳಿಕೆಯು ರಾಷ್ಟ್ರೀಯತೆ, ವಲಸೆ, ದಾಖಲೀಕರಣ ಅಥವಾ ಗಡಿ ಭದ್ರತೆ ಕುರಿತು ನ್ಯಾಯಾಂಗದ ಪ್ರತಿಯೊಂದೂ ಪ್ರಶ್ನೆಯನ್ನು ದ್ವೇಷ ಅಥವಾ ಪೂರ್ವಾಗ್ರಹ ಎಂದು ಆರೋಪಿಸಿದರೆ ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಅಪಾಯವುಂಟಾಗುತ್ತದೆ ಎಂದು ಹೇಳಿದೆ. ‘ಆದ್ದರಿಂದ ನಾವು ಸರ್ವೋಚ್ಚ ನ್ಯಾಯಾಲಯ ಮತ್ತು ಸಿಜೆಐ ಮೇಲೆ ನಮ್ಮ ಸಂಪೂರ್ಣ ವಿಶ್ವಾಸವನ್ನು ದೃಢಪಡಿಸುತ್ತೇವೆ, ನ್ಯಾಯಾಲಯದ ಹೇಳಿಕೆಗಳನ್ನು ತಿರುಚುವ ಮತ್ತು ಭಿನ್ನಾಭಿಪ್ರಾಯಗಳನ್ನು ನ್ಯಾಯಾಧೀಶರ ವಿರುದ್ಧ ವೈಯಕ್ತಿಕ ದಾಳಿಗಳನ್ನಾಗಿಸುವ ಪ್ರೇರೇಪಿತ ಪ್ರಯತ್ನಗಳನ್ನು ನಾವು ಖಂಡಿಸುತ್ತೇವೆ. ಕಾನೂನನ್ನು ಉಲ್ಲಂಘಿಸಿ ಭಾರತವನ್ನು ಪ್ರವೇಶಿಸಿರುವ ವಿದೇಶಿ ಪ್ರಜೆಗಳು ಭಾರತೀಯ ಗುರುತು ಮತ್ತು ದಾಖಲೆಗಳನ್ನು ಕಾನೂನುಬಾಹಿರವಾಗಿ ಪಡೆದುಕೊಂಡಿರುವುದನ್ನು ಪರಿಶೀಲಿಸಲು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡದ ರಚನೆಯನ್ನು ನಾವು ಬೆಂಬಲಿಸುತ್ತೇವೆ ’ಎಂದು ನಿವೃತ್ತ ನ್ಯಾಯಾಧೀಶರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
Mangaluru | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಮಾಲಿ ಕಾರ್ಮಿಕರ ಧರಣಿ
ಮಂಗಳೂರು: ಹಮಾಲಿ ಕಾರ್ಮಿಕರಿಗೆ ಭವಿಷ್ಯ ನಿಧಿ, ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಮುಂದಿನ ಕರ್ನಾಟಕ ಬಜೆಟಿನಲ್ಲಿ ಹಮಾಲಿ ಕಲ್ಯಾಣ ಮಂಡಳಿ ರಚನೆಗೆ 500 ಕೋಟಿ ಮೀಸಲಿಡಲು ಆಗ್ರಹಿಸಿ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಶನ್ ಕರೆಯಂತೆ ಇಂದು ರಾಜ್ಯವ್ಯಾಪಿ ಪ್ರತಿಭಟನೆಯ ಭಾಗವಾಗಿ ಮಂಗಳೂರಿನ ಹಳೇ ಬಂದರು ಸಗಟು ಮಾರುಕಟ್ಟೆಯಲ್ಲಿ ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಕಾರ್ಮಿಕರ ಕಟ್ಟೆ ಬಳಿ ಹಮಾಲಿ ಕಾರ್ಮಿಕರು ಧರಣಿ ನಡೆಸಿದರು. ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಷನ್ ಕಾರ್ಯದರ್ಶಿ ಮತ್ತು ಬಂದರು ಶ್ರಮಿಕರ ಸಂಘದ ಅಧ್ಯಕ್ಷ ಬಿ.ಕೆ.ಇಮ್ತಿಯಾಝ್ ಮಾತನಾಡಿ, ಅತ್ಯಂತ ಶ್ರಮ ಜೀವಿಗಳಾದ ಹಮಾಲಿ ಕಾರ್ಮಿಕರ ಶ್ರಮದಿಂದಾಗಿ ಮಾರುಕಟ್ಟೆಗಳು ಕ್ರಿಯಾಶೀಲಗೊಂಡು ಆರ್ಥಿಕ ಚೈತನ್ಯ ಪಡೆಯಲು ಸಾಧ್ಯವಾಗಿದೆ ಹಮಾಲಿ ಕಾರ್ಮಿಕರ ಶ್ರಮಕ್ಕೆ ನ್ಯಾಯ ಕೊಡಿಸಲು ರಾಜ್ಯ ಸರಕಾರ ಮುಂದಾಗಬೇಕೆಂದು ಒತ್ತಾಯಿಸಿದರು. ರಾಜ್ಯದ ವಿವಿಧ ಎಪಿಎಂಸಿ, ಗೋಡೌನ್, ವೇರ್ ಹೌಸ್ ಹಾಗೂ ನಗರ, ಗ್ರಾಮೀಣ ಬಝಾರ್ ಗಳಲ್ಲಿ ದುಡಿಯುವ ಲಕ್ಷಾಂತರ ಹಮಾಲಿ ಕಾರ್ಮಿಕರ ಬೇಡಿಕೆಗಳನ್ನು ಸರಕಾರ ನಿರಂತರವಾಗಿ ಕಡೆಗಣಿಸುತ್ತಿದೆ. ಅತ್ಯಂತ ಬಡವರಾಗಿರುವ ಹಮಾಲಿ ಕಾರ್ಮಿಕರಿಗೆ ಪಿಂಚಣಿ, ಭವಿಷ್ಯ ನಿಧಿ ಮತ್ತು ನಿವೃತ್ತಿ ವೇತನ ಯೋಜನೆ ಜಾರಿಗೊಳಿಸಲು ಕ್ರಮ ಜರುಗಿಸಬೇಕು ಮತ್ತು ಕೇರಳ ಮತ್ತು ಮಹಾರಾಷ್ಟ ಮಾದರಿಯಲ್ಲಿ ಹಮಾಲಿ ಕಾರ್ಮಿಕರ ಕಲ್ಯಾಣ ಮಂಡಳಿ ರಚನೆ ಮಾಡಿ ಮುಂದಿನ ಬಜೆಟಿನಲ್ಲಿ 500ಕೋಟಿ ಅನುದಾನ ಒದಗಿಸಬೇಕೆಂದು ಅವರು ಒತ್ತಾಯಿಸಿದರು. ಬಂದರು ಶ್ರಮಿಕರ ಸಂಘದ ಮುಖಂಡರಾದ ಫಾರೂಕ್ ಉಳ್ಳಾಲಬೈಲ್, ಮೋಹನ್ ಕುಂಪಲ, ಲೋಕೇಶ್ ಶೆಟ್ಟಿ ಶಮೀರ್ ಬೋಳಿಯಾರ್, ಮಜೀದ್ ಉಳ್ಳಾಲ, ಶರಣಪ್ಪ, ಸಿದ್ದೀಕ್ ಬೆಂಗ್ರೆ, ಪದ್ಮನಾಭ, ಅಬ್ಬಾಸ್, ಅಕ್ಬರ್ ಮತ್ತಿತರರು ಉಪಸ್ಥಿತರಿದ್ದರು.
ಸಂಸತ್ ಅಧಿವೇಶನ ವೇಳೆ ರಾಹುಲ್ ಗಾಂಧಿ ಜರ್ಮನಿ ಪ್ರವಾಸ ; ಬಿಜೆಪಿ ತೀವ್ರ ಆಕ್ಷೇಪ
ಸಂಸತ್ ಅಧಿವೇಶನ ನಡೆಯುತ್ತಿರುವಾಗಲೇ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಜರ್ಮನಿ ಪ್ರವಾಸ ಕೈಗೊಂಡಿರುವುದಕ್ಕೆ ಬಿಜೆಪಿ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ರಾಹುಲ್ ಗಾಂಧಿಯನ್ನು ಎನ್ಐಆರ್ ರಾಜಕಾರಣಿ ಎಂದು ಕರೆದರೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಅರೆಕಾಲಿಕ ಮತ್ತು ಗಂಭೀರವಲ್ಲದ ನಾಯಕ ಎಂದು ವ್ಯಂಗ್ಯವಾಡಿದ್ದಾರೆ. ಇದಕ್ಕೆ ತಿರುಗೇಟು ನೀಡಿದ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಬಗ್ಗೆ ಪ್ರಶ್ನೆ ಎತ್ತಿದೆ.
ವಿಪಕ್ಷ ನಾಯಕರ ಕಚೇರಿಯಲ್ಲಿ ಯತ್ನಾಳ್ ಹಾಗೂ ಕೆಲ ಬಿಜೆಪಿ ಶಾಸಕರಿಂದ ಬಾಗಿಲು ಮುಚ್ಚಿ ಮಾತುಕತೆ!: ಏನಿದು ಗುಸುಗುಸು?
ವಿಪಕ್ಷ ನಾಯಕ ಆರ್. ಅಶೋಕ್ ಅವರ ಕಚೇರಿಯಲ್ಲಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸೇರಿದಂತೆ ಸುನೀಲ್ ಕುಮಾರ್, ಬೈರತಿ ಬಸವರಾಜ್ ಅವರನ್ನು ಒಳಗೊಂಡಂತೆ ಕೆಲವು ಬಿಜೆಪಿ ಶಾಸಕರು ಬಾಗಿಲು ಮುಚ್ಚಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಈ ಮಧ್ಯೆ ಅಶೋಕ್ ಕಚೇರಿಯತ್ತ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಆಗಮಿಸುತ್ತಿದ್ದಂತೆ ಯತ್ನಾಳ್ ಮತ್ತು ಇತರ ಶಾಸಕರು ಹೊರನಡೆದಿದ್ದಾರೆ. ಹಾಗಾದ್ರೆ ಆ ಚರ್ಚೆ ಏನು? ವಿಜಯೇಂದ್ರ ಬರುತ್ತಿದ್ದಂತೆ ಹೊರನಡೆದಿದ್ದು ಯಾರ್ಯಾರು ಎಂಬ ಬಗ್ಗೆ ಮಾಹಿತಿ ಈ ಲೇಖನದಲ್ಲಿ ಇದೆ.
ಮೀಶೋ ಬ್ಲಾಕ್ಬಸ್ಟರ್ ಲಿಸ್ಟಿಂಗ್: ಐಪಿಒ ಬೆಲೆಗೆ ಹೋಲಿಸಿದರೆ 60% ಏರಿಕೆ, ಹೂಡಿಕೆದಾರರು ಈಗ ಏನು ಮಾಡಬೇಕು?
ಬಹುನಿರೀಕ್ಷಿತ ಮೀಶೋಕಂಪನಿಯ ಷೇರುಗಳು ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರ ನಿರೀಕ್ಷೆಗೂ ಮೀರಿ ಅದ್ಭುತ ಪ್ರದರ್ಶನ ನೀಡಿವೆ. ಗ್ರೇ ಮಾರುಕಟ್ಟೆಯ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿ, ಶೇ. 46ರಷ್ಟು ಪ್ರೀಮಿಯಂ ದರದಲ್ಲಿ ಲಿಸ್ಟ್ ಆಗುವ ಮೂಲಕ ಹೂಡಿಕೆದಾರರಿಗೆ ಮೊದಲ ದಿನವೇ ಬಂಪರ್ ಲಾಭ ತಂದುಕೊಟ್ಟಿದೆ. ಲಿಸ್ಟಿಂಗ್ ನಂತರವೂ ಷೇರುಗಳ ನಾಗಾಲೋಟ ಮುಂದುವರೆದಿದ್ದು, ಷೇರು ಬೆಲೆ ಶೇ. 60ರವರೆಗೆ ಏರಿಕೆ ಕಂಡಿತ್ತು. ಹಾಗಾದರೆ ಷೇರುಗಳನ್ನು ಮಾರಾಟ ಮಾಡಬೇಕೇ ಅಥವಾ ಹೋಲ್ಡ್ ಮಾಡಬೇಕೇ? ತಜ್ಞರು ಏನನ್ನುತ್ತಾರೆ? ಇಲ್ಲಿದೆ ಸಂಪೂರ್ಣ ವರದಿ.
ಮೈಸೂರು ಜಿಲ್ಲೆಯ 'ಗೃಹ ಆರೋಗ್ಯ' ವರದಿ: 63,000ಕ್ಕೂ ಹೆಚ್ಚು ಜನರಿಗೆ ಬಿಪಿ, ಮಧುಮೇಹದ ತೊಂದರೆ
ಮೈಸೂರು ಜಿಲ್ಲೆಯಲ್ಲಿ 'ಗೃಹ ಆರೋಗ್ಯ' ಯೋಜನೆಯಡಿ ನಡೆದ ತಪಾಸಣೆಯಲ್ಲಿ ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ಪ್ರಕರಣಗಳು ಹೆಚ್ಚಿರುವುದು ಕಳವಳ ಮೂಡಿಸಿದೆ. ಕೇವಲ ಎರಡು ತಿಂಗಳಲ್ಲಿ 37,510 ಮಂದಿಯಲ್ಲಿ ಬಿಪಿ ಮತ್ತು 25,925 ಮಂದಿಯಲ್ಲಿ ಮಧುಮೇಹ ಪತ್ತೆಯಾಗಿದೆ. 30 ವರ್ಷ ಮೇಲ್ಪಟ್ಟ 8 ಲಕ್ಷಕ್ಕೂ ಹೆಚ್ಚು ಜನರ ಆರೋಗ್ಯ ತಪಾಸಣೆ ಗುರಿಯಾಗಿದ್ದು, 14 ಬಗೆಯ ಅಸಾಂಕ್ರಾಮಿಕ ರೋಗಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ.
ʻಶಾಲೆಗಳಲ್ಲಿ ವಂದೇ ಮಾತರಂ ಗೀತೆ ಹಾಡುವುದು ಕಡ್ಡಾಯಗೊಳಿಸಿ, ಇಲ್ಲದಿದ್ದರೆ ಮರೆತೆ ಹೋಗ್ತಾರೆʼ: ಸುಧಾ ಮೂರ್ತಿ
ಶಾಲೆಗಳಲ್ಲಿ ಜನಗಣಮನ ರಾಷ್ಟ್ರ ಗೀತೆ ಮಾತ್ರ ಹಾಡೋದನ್ನು ಕಡ್ಡಾಯಗೊಳಿಸಲಾಗಿದೆ ಹಾಗೆಯೇ, ವಂದೇ ಮಾತರಂಗೂ ಕಡ್ಡಾಯ ಮಾಡಿ. ಮಕ್ಕಳಿಗೆ ಈ ಹಾಡು ಕಲಿಸಲು ಒಂದು ಮೂರು ನಿಮಿಷ ಸಾಕು. ಆದರೆ, ಈ ನಿರ್ಲಕ್ಷ್ಯ ಯಾಕೆ. ವಂದೇ ಮಾತರಂ ಹಾಡದಿದ್ರೆ ಮಕ್ಕಳು ಗೀತೆಯನ್ನು ಮರೆತೆ ಹೋಗುತ್ತಾರೆ ಎಂದು ಸುಧಾ ಮೂರ್ತಿ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ನಾನು ಸಂಸದೆ, ಲೇಖಕಿಯಾಗಿ ಕೇಳಿಕೊಳ್ಳುತ್ತಿಲ್ಲ ಭಾರತದ ಮಗಳಾಗಿ ನಿಮ್ಮ ಬಳಿ ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದರು.
ಸಿಎಎ ಅಡಿ ಅರ್ಜಿದಾರರಿಗೆ ಪೌರತ್ವ ಸ್ವಯಂಸಿದ್ಧವಲ್ಲ,ಅವರ ಹಕ್ಕು ಕೋರಿಕೆಗಳನ್ನು ಪರಿಶೀಲಿಸಬೇಕು:ಸುಪ್ರೀಂ ಕೋರ್ಟ್
ಹೊಸದಿಲ್ಲಿ,ಡಿ.10: ತಾವು ಧಾರ್ಮಿಕ ಅಲ್ಪಸಂಖ್ಯಾತರು ಮತ್ತು ಪೌರತ್ವ (ತಿದ್ದುಪಡಿ) ಕಾಯ್ದೆಯಡಿ (ಸಿಎಎ) ರಕ್ಷಿತರು ಎಂದು ಹೇಳಿಕೊಳ್ಳುವ ಜನರಿಗೆ ಭಾರತೀಯ ಪೌರತ್ವವು ಸ್ವಯಂಸಿದ್ಧವಲ್ಲ ಮತ್ತು ಅದು ಅವರ ಹಕ್ಕುಕೋರಿಕೆಗಳ ಸತ್ಯಾಸತ್ಯತೆಯನ್ನು ಅವಲಂಬಿಸಿರುತ್ತದೆ ಎಂದು ಸರ್ವೋಚ್ಚ ನ್ಯಾಯಾಲಯವು ಹೇಳಿದೆ. ಮಂಗಳವಾರ ‘ಆತ್ಮದೀಪ’ ಎನ್ಐಒ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ಭಾರತದ ಮುಖ್ಯ ನ್ಯಾಯಾಧೀಶ (ಸಿಜೆಐ) ಸೂರ್ಯಕಾಂತ ಮತ್ತು ನ್ಯಾ.ಜಾಯಮಾಲ್ಯಾ ಬಾಗ್ಚಿ ಅವರ ಪೀಠವು ಈ ಮೌಖಿಕ ಅಭಿಪ್ರಾಯವನ್ನು ವ್ಯಕ್ತಪಡಿಸಿತು. ಸಿಎಎಯಲ್ಲಿನ ತಿದ್ದುಪಡಿ ಮಾಡಲಾದ ನಿಬಂಧನೆಗಳಿಂದಾಗಿ ಈ ದೇಶದ ಪ್ರಜೆಗಳಾಗಲು ಅರ್ಹರಾಗಿದ್ದೇವೆ ಎಂದು ನೀವು ಹೇಳಿಕೊಳ್ಳುತ್ತಿದ್ದೀರಿ. ಆದರೆ ನಿಮಗೆ ಈವರೆಗೆ ಪೌರತ್ವವನ್ನು ನೀಡಲಾಗಿಲ್ಲ. ತಿದ್ದುಪಡಿ ಮಾಡಲಾದ ನಿಬಂಧನೆಗಳು ಪೌರತ್ವವನ್ನು ಕೋರಲು ನಿಮ್ಮ ಪರವಾಗಿ ಕೆಲವು ಜಾರಿಗೊಳಿಸಬಹುದಾದ ಹಕ್ಕುಗಳನ್ನು ನೀಡಿರಬಹುದು,ಆದರೆ ನೀವು ಸಿಎಎ ಅಡಿ ಸೂಚಿತ ನೆರೆಯ ದೇಶದಲ್ಲಿಯ ಯಾವುದೇ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರೇ;ಅಲ್ಪಸಂಖ್ಯಾತರಿಗೆ ಭಾರತಕ್ಕೆ ಬರಲು ಅನುಮತಿಸಲಾಗಿರುವ ದೇಶದ ನಿವಾಸಿಯೇ;ಮತ್ತು ನೀವು ಯಾವ ಆಧಾರದಲ್ಲಿ ಭಾರತಕ್ಕೆ ಬಂದಿದ್ದೀರಿ ಎಂಬಿತ್ಯಾದಿ ಪ್ರತಿಯೊಂದೂ ಶಾಸನಬದ್ಧ ಅಗತ್ಯಗಳನ್ನು ನಿರ್ಧರಿಸಬೇಕು ಎಂದು ಸಿಜೆಐ ಹೇಳಿದರು. ಆರು ದೇಶಗಳಲ್ಲಿ ಧಾರ್ಮಿಕ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಿಗೆ ‘ಜಾರಿಗೊಳಿಸಬಹುದಾದ ಹಕ್ಕುಗಳನ್ನು’ ನೀಡುವುದನ್ನು ಪ್ರತಿಪಾದಿಸಿರುವ ಬದಲಾವಣೆಗಳನ್ನು ಸಿಎಎಗೆ ತಂದಿದ್ದರೂ,ಇಂತಹ ಪ್ರತಿಯೊಂದೂ ಹಕ್ಕು ಕೋರಿಕೆಯನ್ನು ಅಧಿಕಾರಿಗಳು ಪರಿಶೀಲಿಸಬೇಕಾಗುತ್ತದೆ ಮತ್ತು ನಿರ್ಧಾರವನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ನ್ಯಾಯಾಲಯವು ಹೇಳಿತು. ನೆರೆಯ ಮೂರು ದೇಶಗಳಿಂದ,ವಿಶೇಷವಾಗಿ ಬಾಂಗ್ಲಾದೇಶದಿಂದ ಪರಾರಿಯಾಗಿ ಬಂದಿರುವ ಧಾರ್ಮಿಕ ಅಲ್ಪಸಂಖ್ಯಾತರು ಪಶ್ಚಿಮ ಬಂಗಾಳದಲ್ಲಿ ವಾಸವಾಗಿದ್ದಾರೆ ಮತ್ತು ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್ಐಆರ್) ತಮ್ಮನ್ನು ದೇಶರಹಿತರನ್ನಾಗಿಸುತ್ತದೆ ಎಂಬ ಭೀತಿಯಲ್ಲಿದ್ದಾರೆ ಎಂದು ಅರ್ಜಿದಾರರು ಹೇಳಿದ್ದರು. ಅಧಿಕಾರಿಗಳು ಪೌರತ್ವ ಪ್ರಮಾಣಪತ್ರ ನೀಡಿಕೆಯನ್ನು ವಿಳಂಬಿಸಿದ್ದಾರೆ ಮತ್ತು ಪ್ರಸ್ತುತ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆಯಲ್ಲಿ ಸ್ವೀಕೃತಿ ರಸೀದಿಗೆ ಮಾನ್ಯತೆ ನೀಡದಿರುವುದು ಸಾಂವಿಧಾನಿಕ ಬಿಕ್ಕಟ್ಟಿಗೆ ಕಾರಣವಾಗಿದೆ ಎಂದೂ ಅರ್ಜಿಯಲ್ಲಿ ಹೇಳಲಾಗಿದೆ. ಸರಕಾರವು ಕಾನೂನನ್ನು ಮಾಡಿದ್ದರೆ ಅದನ್ನು ಜಾರಿಗೊಳಿಸಲು ಅನುಸರಣಾ ಕಾರ್ಯವಿಧಾನವು ಇರುತ್ತದೆ ಎಂದು ಹೇಳಿದ ಸಿಜೆಐ,ವಲಸಿಗರು ಸೂಕ್ತ ಪ್ರಕ್ರಿಯೆಯ ಮೂಲಕ ಸಹಜ ಪ್ರಜೆಗಳಾದ ನಂತರ ಮತದಾರರ ಪಟ್ಟಿಯಲ್ಲಿ ನೋಂದಣಿಗಾಗಿ ಶಾಸನಬದ್ಧ ಯೋಜನೆಯಡಿ ಅರ್ಜಿ ಸಲ್ಲಿಸಬಹುದು ಎಂದರು.
ಪಾಕಿಸ್ತಾನದ ಕರಾಚಿಯಲ್ಲಿ 'ಸಿಂಧೂ ದೇಶ'ಕ್ಕಾಗಿ ಪ್ರತ್ಯೇಕತಾವಾದಿ ಪ್ರತಿಭಟನೆಗಳು ತೀವ್ರಗೊಂಡಿವೆ. ಭಾರತದ ರಕ್ಷಣಾ ಸಚಿವ ರಾಜ್ನಾಥ್ ಸಿಂಗ್ ಸಿಂಧೂ ಭಾರತದ ಭಾಗವಾಗಲಿದೆ ಎಂದ ಹೇಳಿಕೆ ನೀಡಿದ ಬೆನ್ನಲ್ಲೇ ಈ ಪ್ರತಿಭಟನೆಗಳು ಪಾಕಿಸ್ತಾನದಲ್ಲಿ ಹೊಸ ತಲೆನೋವಾಗಿ ಪರಿಣಮಿಸಿದೆ. ಸಿಂಧ್ ಸಮುದಾಯದವರು ತಮ್ಮ ಹಕ್ಕುಗಳ ಉಲ್ಲಂಘನೆ ಮತ್ತು ತಾರತಮ್ಯದ ವಿರುದ್ಧ ಧ್ವನಿ ಎತ್ತಿದ್ದಾರೆ. ಪಾಕಿಸ್ತಾನದಲ್ಲಿ ಭುಗಿಲೆದ್ದ ಸಿಂಧ್ ಸಮುದಾಯದ ಆಕ್ರೋಶಕ್ಕೆ ಕಾರಣ ತಿಳಿಯೋಣ..
ಧರ್ಮಸ್ಥಳ ವಿರುದ್ಧ ನಡೆದ ಷಡ್ಯಂತ್ರಕ್ಕೆ ಅಚ್ಚರಿಯ ಕಾರಣ ಕೊಟ್ಟ ಡಿಕೆ ಶಿವಕುಮಾರ್! ಬೊಟ್ಟು ಮಾಡಿದ್ದು ಯಾರತ್ತಾ?
ಬೆಳಗಾವಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಧರ್ಮಸ್ಥಳದ ಷಡ್ಯಂತ್ರದ ಬಗ್ಗೆ ಮಾತನಾಡಿದರು. ಬಿಜೆಪಿ ಮತ್ತು ಆರ್ಎಸ್ಎಸ್ ನಡುವಿನ ಭಿನ್ನಾಭಿಪ್ರಾಯವೇ ಇದಕ್ಕೆ ಕಾರಣ ಎಂದರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗುವುದು. ರೈತರ ಸಮಸ್ಯೆಗಳನ್ನು ಬಗೆಹರಿಸಿದ್ದೇವೆ ಎಂದರು. ದ್ವೇಷ ಭಾಷಣ ನಿಯಂತ್ರಣ ವಿಧೇಯಕ ಸರ್ಕಾರದ ಅಜೆಂಡಾ ಎಂದು ತಿಳಿಸಿದರು.
ಕಾಸರಗೋಡು | 48 ಸ್ಥಳೀಯಾಡಳಿತ ಸಂಸ್ಥೆಗಳಿಗೆ ಡಿ.11ರಂದು ಚುನಾವಣೆ: 1370 ಮತಗಟ್ಟೆಗಳು ಸಜ್ಜು
ಕಾಸರಗೋಡು: ಜಿಲ್ಲೆಯಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಡಿ.11ರಂದು ಚುನಾವಣೆ ನಡೆಯಲಿದ್ದು, ಮತಗಟ್ಟೆಗಳಿರುವ ಮತಯಂತ್ರ ಹಾಗೂ ಸಾಮಗ್ರಿಗಳನ್ನು ಇಂದು ಬೆಳಗ್ಗೆ ವಿತರಿಸಲಾಯಿತು. ನಾಳೆ ಬೆಳಗ್ಗೆ 7ರಿಂದ ಸಂಜೆ 6 ಗಂಟೆ ತನಕ ಮತದಾನ ನಡೆಯಲಿದೆ. ಡಿ.13ರಂದು ಫಲಿತಾಂಶ ಹೊರಬೀಳಲಿದೆ. ಜಿಲ್ಲೆಯ 38 ಗ್ರಾಮ ಪಂಚಾಯತ್ ಗಳು, ಮೂರು ನಗರಸಭೆ, ಆರು ಬ್ಲಾಕ್ ಪಂಚಾಯತ್ ಹಾಗೂ ಒಂದು ಜಿಲ್ಲಾ ಪಂಚಾಯತ್ ಸೇರಿದಂತೆ 48 ಸ್ಥಳೀಯಾಡಳಿತ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದೆ. ಗ್ರಾಮ ಪಂಚಾಯತ್ ಗಳ 725 ವಾರ್ಡ್ ಗಳಿಗೆ ಒಟ್ಟು 1,242 ಮತಗಟ್ಟೆಗಳನ್ನು ಸಜ್ಜುಗೊಳಿಸಲಾಗಿದೆ. ನಗರಸಭೆಗಳ 120 ವಾರ್ಡ್ ಗಳಿಗೆ 128 ಮತಗಟ್ಟೆಗಳು ಸೇರಿದಂತೆ ಒಟ್ಟು 1,370 ಮತಗಟ್ಟೆಗಳನ್ನು ಸಜ್ಜುಗೊಳಿಸಲಾಗಿದೆ. ಬ್ಲಾಕ್ ಪಂಚಾಯತ್ ಗಳ 92 ಡಿವಿಜನ್ ಗಳಿಗೆ ಹಾಗೂ ಜಿಲ್ಲಾ ಪಂಚಾಯತ್ ನ 18 ವಾರ್ಡ್ ಗಳು ಸೇರಿದಂತೆ 955 ವಾರ್ಡ್ ಗಳಿಗೆ ಮತದಾನ ನಡೆಯಲಿದೆ. ಜಿಲ್ಲೆಯಲ್ಲಿ 11,12,190 ಮತದಾರರಿದ್ದಾರೆ. ಈ ಪೈಕಿ 5,24,022 ಪುರುಷರು ಹಾಗೂ 5,88,156 ಮಹಿಳಾ ಮತದಾರರಿದ್ದಾರೆ.12 ಮಂಗಳಮುಖಿಯರು, 129 ಅನಿವಾಸಿ ಭಾರತೀಯ ಮತದಾರರು ಒಳಗೊಂಡಿದ್ದಾರೆ. ಒಟ್ಟು 1370 ಮತಗಟ್ಟೆಗಳನ್ನು ಸಜ್ಜುಗೊಳಿಸಲಾಗಿದೆ. ಮತಯಂತ್ರ ಸೇರಿದಂತೆ ಚುನಾವಣಾ ಸಾಮಗ್ರಿಗಳ ವಿತರಣೆಗೆ ಆರು ಬ್ಲಾಕ್ ಪಂಚಾಯತ್ ಹಾಗೂ ಮೂರು ನಗರಸಭಾ ಮಟ್ಟದಲ್ಲಿ ಮೂರು ಸೇರಿದಂತೆ 9 ಕೇಂದ್ರಗಳನ್ನು ವ್ಯವಸ್ಥೆ ಗೊಳಿಸಲಾಗಿದೆ. ಡಿ.11ರಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆಯ ತನಕ ಮತದಾನ ನಡೆಯಲಿದೆ 119 ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಸೂಕ್ಷ್ಮ ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗುವುದು. ಚುನಾವಣಾ ಕರ್ತವ್ಯಕ್ಕೆ 6,584 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 2,855 ಅಭ್ಯರ್ಥಿಗಳು ಜಿಲ್ಲೆಯಲ್ಲಿ 2,855 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದಾರೆ. 1,312 ಪುರುಷರು, 1,473 ಮಹಿಳೆಯರು ಒಳಗೊಂಡಿದ್ದಾರೆ.ಜಿಲ್ಲಾ ಪಂಚಾಯತ್ ನ 18 ಡಿವಿಜನ್ ಗಳಿಗೆ 62 ಅಭ್ಯರ್ಥಿಗಳು, ಆರು ಬ್ಲಾಕ್ ಪಂಚಾಯತ್ ಗಳಿಗೆ 293 ಅಭ್ಯರ್ಥಿಗಳು, 38 ಗ್ರಾಮ ಪಂಚಾಯತ್ ಗಳಿಗೆ 2,167 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮೂರು ನಗರಸಭೆಗಳಿಗೆ 333 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮತಗಟ್ಟೆ ಕೇಂದ್ರಗಳಿಗೆ ರಜೆ ಮತಗಟ್ಟೆಗಳೆಂದು ಗುರುತಿಸಿರುವ ಶೈಕ್ಷಣಿಕ ಸಂಸ್ಥೆಗಳಿಗೆ ಡಿ.10 ಮತ್ತು 11ರಂದು ರಜೆ ಘೋಷಿಸಿ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಕೆ.ಇನ್ಬಾ ಶೇಖರ್ ಆದೇಶ ನೀಡಿದ್ದಾರೆ. ಮತ ಎಣಿಕೆ ನಡೆಯುವ ಶೈಕ್ಷಣಿಕ ಸಂಸ್ಥೆಗಳಿಗೆ ಡಿ.13ರಂದು ರಜೆ ಘೋಷಿಸಲಾಗಿದೆ. ಮತಗಟ್ಟೆಗಳೆಂದು ಗುರುತಿಸುವ 158 ಅಂಗನವಾಡಿ ಕೇಂದ್ರಗಳಿಗೂ ರಜೆ ಅನ್ವಯವಾಗಲಿದೆ.
ನಲ್ಲೂರು ಕಸಾಯಿಖಾನೆ ಪ್ರಕರಣ: ದನ -ಕರು ಮಾರಾಟ ಮಾಡಿದ್ದ ಸಂಘ ಪರಿವಾರದ ಕಾರ್ಯಕರ್ತನ ಬಂಧನ
ಕಾರ್ಕಳ, ಡಿ.10: ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಲ್ಲೂರಿನಲ್ಲಿರುವ ಕಸಾಯಿಖಾನೆಗೆ ದನ ಮತ್ತು ಕರುವನ್ನು ಮಾರಾಟ ಮಾಡಿದ ಆರೋಪದಲ್ಲಿ ಸ್ಥಳೀಯ ಸಂಘ ಪರಿವಾರದ ಕಾರ್ಯಕರ್ತನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ನಲ್ಲೂರಿನ ಶಿವಪ್ರಸಾದ್(28) ಬಂಧಿತ ಆರೋಪಿ. ನ.12ರಂದು ನಲ್ಲೂರಿನ ಮನೆಯೊಂದಕ್ಕೆ ದಾಳಿ ನಡೆಸಿದ ಕಾರ್ಕಳ ಗ್ರಾಮಾಂತರ ಪೊಲೀಸರು ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿದ್ದ ಆರೋಪದಲ್ಲಿ ಅಶ್ರಫ್ ಅಲಿ ಹಾಗೂ ಆತನ ಪತ್ನಿಯನ್ನು ಬಂಧಿಸಿದ್ದರು. ಈ ಬಗ್ಗೆ ವಿಶ್ವ ಹಿಂದೂ ಪರಿಷತ್, ಬಜರಂಗ ದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ದನಕರುವನ್ನು ಕಳವು ಮಾಡಿ ತಂದು ಕಡಿದು ಮಾಂಸ ಮಾಡಲಾಗಿದೆ. ಈ ಅಕ್ರಮ ಕಸಾಯಿಖಾನೆಯ ಮನೆಯನ್ನು ಸರಕಾರ ಮುಟ್ಟುಗೋಲು ಹಾಕಬೇಕು ಎಂದು ಆಗ್ರಹಿಸಿದ್ದರು. ತನಿಖೆ ಚುರುಕುಗೊಳಿಸಿದ ಪೊಲೀಸರು ಆರೋಪಿಗಳನ್ನು ವಿಚಾರಣೆ ನಡೆಸಿದ್ದು, ಈ ವೇಳೆ ಅವರು ಈ ದನ ಮತ್ತು ಕರುವನ್ನು ಸಂಘ ಪರಿವಾರದ ಕಾರ್ಯಕರ್ತ ಶಿವಪ್ರಸಾದ್ ಮಾರಾಟ ಮಾಡಿರುವುದಾಗಿ ತಿಳಿಸಿದ್ದಾರೆ. ಅದರಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿ ಶಿವಪ್ರಸಾದ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈತ ಈ ದನಕರುವನ್ನು ಬೇರೆಯವರಿಂದ ಖರೀದಿಸಿ ತಂದು ಅಶ್ರಫ್ ಅಲಿಗೆ ಮಾರಾಟ ಮಾಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.
Arecanut: ಅಡಿಕೆ ದರ ಮತ್ತಷ್ಟು ಕುಸೀತಾ? ರೈತರಲ್ಲಿ ಆತಂಕ
ರಾಜ್ಯದ ರೈತರಿಗೆ ಇದೀಗ ಆಘಾತಕಾರಿ ಪರಿಸ್ಥಿತಿ ಎದುರಾಗುತ್ತಿದೆ. ಅದರಲ್ಲೂಅಡಿಕೆ ಕೃಷಿಯನ್ನೇ ನಂಬಿ ಬದುಕುತ್ತಿರುವ ಕೃಷಿಕರಿಗೆ ಇದೀಗ ಸಂಕಷ್ಟ ಎದುರಾಗುವಂತೆ ಮಾಡಿದೆ… ದೇಶದಲ್ಲಿ ಅಡಿಕೆ ಬೆಲೆಗಳು ಕುಸಿಯುವ ಭೀತಿ ಹೆಚ್ಚುತ್ತಿರುವುದು ಇವರಲ್ಲಿ ಆತಂಕ ಉಂಟುಮಾಡಿದೆ. WHO ಎಚ್ಚರಿಕೆ ವಿಶ್ವ ಆರೋಗ್ಯ ಸಂಸ್ಥೆ (WHO) ಅಡಿಕೆ ಸೇವನೆಯು ಬಾಯಿಯ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಈ ಹಿಂದೆ ಎಚ್ಚರಿಸಿದೆ. ಇದನ್ನು ಅನೇಕ ವೈದ್ಯಕೀಯ ಅಧ್ಯಯನಗಳು ದೃಢಪಡಿಸಿದ್ದರೇ, ಆರೋಗ್ಯಕ್ಕೆ ಸಂಬಂಧಿಸಿದ ಯಾವುದೇ ಲಾಭಗಳ ಬಗ್ಗೆ ಸ್ಪಷ್ಟ ವೈದ್ಯಕೀಯ ಸಾಬೀತುಗಳಿಲ್ಲ ಎಂದು ತಜ್ಞರು ... Read more The post Arecanut: ಅಡಿಕೆ ದರ ಮತ್ತಷ್ಟು ಕುಸೀತಾ? ರೈತರಲ್ಲಿ ಆತಂಕ appeared first on Karnataka Times .
ಭೂ ಕಂದಾಯ ಕಾಯ್ದೆ ತಿದ್ದುಪಡಿ: ರಾಜ್ಯದಲ್ಲಿ ಭೂ ಪರಿವರ್ತನೆ ಈಗ ಮತ್ತಷ್ಟು ಸುಲಭ ಸರಳ ಲಂಚಮುಕ್ತ - ಕಂದಾಯ ಸಚಿವ
ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಕರಡು ಸಿದ್ಧವಾಗಿದ್ದು, ಮುಂದಿನ ತಿಂಗಳಲ್ಲಿ ಅಧಿಸೂಚನೆ ಹೊರಡಿಸಿ ಜಾರಿಗೆ ತರಲಾಗುವುದು. ಭೂ ಪರಿವರ್ತನೆಯನ್ನು ಸರಳೀಕರಿಸಿ, ಆನ್ಲೈನ್ ಅರ್ಜಿ ಸೌಲಭ್ಯ ಕಲ್ಪಿಸಲಾಗಿದೆ. 30 ದಿನಗಳಲ್ಲಿ ಪರಿವರ್ತನೆಗೆ ಅವಕಾಶ, ಇಲ್ಲದಿದ್ದರೆ ಸ್ವಯಂ ಮಂಜೂರಿ ದೊರೆಯಲಿದೆ. ಸಣ್ಣ ಕೈಗಾರಿಕೆಗಳಿಗೆ 2 ಎಕರೆ ವರೆಗೆ ಪರಿವರ್ತನೆ ಅಗತ್ಯವಿಲ್ಲ.
ಭಾರತದಲ್ಲಿ 2030ರ ವೇಳೆಗೆ $35 ಬಿಲಿಯನ್ ಹೂಡಿಕೆ ಮಾಡಲಿದೆ ಅಮೆಜಾನ್: 10 ಲಕ್ಷ ಉದ್ಯೋಗ ಸೃಷ್ಟಿಯ ಗುರಿ
ಅಮೆಜಾನ್ 2030ರ ವೇಳೆಗೆ ಭಾರತದಲ್ಲಿ 35 ಬಿಲಿಯನ್ ಡಾಲರ್ ಹೂಡಿಕೆ ಮಾಡಲಿದೆ. ಕೃತಕ ಬುದ್ಧಿಮತ್ತೆ, ರಫ್ತು ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಗೆ ಈ ಹೂಡಿಕೆ ಮಾಡಲಾಗುತ್ತಿದ್ದು, ಭಾರತದಿಂದ ರಫ್ತು ಪ್ರಮಾಣವನ್ನು ನಾಲ್ಕು ಪಟ್ಟು ಹೆಚ್ಚಿಸಿ, 10 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ ಹೊಂದಿದೆ.
ಹಳೆ ಬಂದರಿನಲ್ಲಿ ಲಕ್ಷದ್ವೀಪ ಜೆಟ್ಟಿ ಅಭಿವೃದ್ಧಿ-ಪರಿಸರ ಸಾರ್ವಜನಿಕ ಸಭೆ
ಸ್ಥಳೀಯರು, ಮೀನುಗಾರರಿಗೆ ತೊಂದರೆ ಇಲ್ಲದೆ ಕಾಮಗಾರಿಗೆ ಸಲಹೆ

19 C