ಜನವರಿ 3ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ
Petrol, Diesel Price: ಪೆಟ್ರೋಲ್, ಡೀಸೆಲ್ ದರದಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದ್ರೂ ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಜನವರಿ 3) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ.
ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕುಟುಂಬಕ್ಕೆ ಸರ್ಕಾರಿ ಉದ್ಯೋಗ
ಇತ್ತೀಚೆಗೆ ಭೀಕರ ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಸಾವನ್ನಪ್ಪಿದ್ದರು. ಇವರ ನಿಧನಕ್ಕೆ ಇಡೀ ಕರ್ನಾಟಕವೇ ಕಂಬನಿ ಮಿಡಿದಿತ್ತು. ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಯಾಗಿ ಜನಪ್ರಿಯರಾಗಿದ್ದ ಮಹಾಂತೇಶ ಅವರ ನಿಧನದ ಹಿನ್ನೆಲೆ, ಅವರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದರು. ಕೊನೆಗೂ ಮಹಾಂತೇಶ್ ಬೀಳಗಿ ಅವರ ಕುಟುಂಬಕ್ಕೆ ಉದ್ಯೋಗ ಭಾಗ್ಯ ನೀಡಿದೆ.
26 ಕಿ.ಮೀ. ಫುಟ್ಪಾತ್ ನಡಿಗೆ ಮೂಲಕ ಹೊಸ ವರ್ಷಾಚರಣೆ; ವಾಕಲೂರು ಜಾಗೃತಿ ಕಾರ್ಯಕ್ರಮ ಯಶಸ್ವಿ
ರಾಜಧಾನಿ ಬೆಂಗಳೂರಿನ ಫುಟ್ಪಾತ್ಗಳ ಸ್ಥಿತಿ ಪರಿಶೀಲನೆ ಮತ್ತು ನಡಿಗೆಯ ಮಹತ್ವವನ್ನು ಸಾರುವ ಉದ್ಧೇಶದಿಂದ, ವಾಕಲೂರು ತಂಡ ಆಯೋಜಿಸಿದ್ದ 26 ಕಿ.ಮೀ. ನಡಿಗೆ ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿದೆ. ನಡಿಗೆ ಮೂಲಕ ಹೊಪಸ ವರ್ಷಾಚರಣೆ ಆಚರಿಸಿದ ವಾಕಲೂರು ತಂಡ, ಸಾರ್ವಜನಿಕರಲ್ಲಿ ನಡಿಗೆಯ ಮಹತ್ವವನ್ನು ಸಾರಿತು. ಈ ವಿನೂತನ ಅಭಿಯಾನದಲ್ಲಿ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನ ಈಶ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಇಲ್ಲಿದೆ ಮಾಹಿತಿ.
ರಸ್ತೆ ಕತ್ತರಿಸಲು ಮಾರ್ಕ್ಸ್ ತಂತ್ರಾಶದ ಮೂಲಕ ಅನುಮತಿ ಕಡ್ಡಾಯ; ಜಿಬಿಎ ಆಯುಕ್ತರ ಖಡಕ್ ಸೂಚನೆ
ನಿನ್ನೆ (ಜ.2-ಶುಕ್ರವಾರ) ಮುಖ್ಯ ಆಯುಕ್ತ ಮಹೇಶ್ವರ ರಾವ್ ನೇತೃತ್ವದಲ್ಲಿ ಜಿಬಿಎ ಸಮನ್ವಯ ಸಭೆ ನಡೆದಿದ್ದು, ಈ ಸಭೆಯಲ್ಲಿ ಮಾರ್ಕ್ಸ್ ತಂತ್ರಾಂಶದ ಅನುಮತಿ ಪಡೆಯದೇ ರಸ್ತೆ ಅಗೆಯುವ ಯಾವುದೇ ಇಲಾಖೆಗೆ ದಂಡ ಹಾಕಲಾಗುವುದು ಎಂದು ಮುಖ್ಯ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಿ ರಸ್ತೆ ದುರಸ್ತಿ ಕಾರ್ಯವನ್ನು ಸಂಪೂರ್ಣಗೊಳಿಸಬೇಕು ಎಂದೂ ಆಯುಕ್ತರು ಸೂಚನೆ ನೀಡಿದ್ದಾರೆ. 5 ವಾಟರ್ ಜೆಟ್ಟಿಂಗ್ ಯಂತ್ರಗಳನ್ನು ಖರೀದಿಸುವ ಬಗ್ಗೆಯೂ ಸಭೆಯಲ್ಲಿ ತೀರ್ಮಾನ ಕೈಗೊಳ್ಳಾಗಿದೆ.
ದಾವಣಗೆರೆ | ಬಲೆಗೆ ಬಿದ್ದ 32 ಕೆಜಿ ತೂಕದ ಹದ್ದಿನ ಮೀನು!
ದಾವಣಗೆರೆ, ಜ.2: ಮೀನುಗಾರರು ಬೀಸಿದ ಬಲೆಗೆ ಬೃಹತ್ ಗಾತ್ರದ (ಸುಮಾರು 32 ಕೆಜಿ) ಹದ್ದಿನ ಜಾತಿಗೆ ಸೇರಿದ ಮೀನು ಬಿದ್ದಿರುವುದಾಗಿ ವರದಿಯಾಗಿದೆ. ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿ ಗ್ರಾಮದ ಪಕ್ಕದಲ್ಲೇ ಹರಿಯುತ್ತಿರುವ ತುಂಗಭದ್ರಾ ನದಿಯ ಗೋರಿಕಲ್ಲು ಸಮೀಪ 12 ರಿಂದ 15 ಆಳ ಹರಿಯುವ ಸ್ಥಳದಲ್ಲಿ ಶುಕ್ರವಾರ ಭದ್ರಾವತಿಯ ಮೀನುಗಾರರಾದ ಮಣಿ, ಬಾಬು, ಅಯ್ಯಪ್ಪಎಂಬವರು ಮೀನು ಹಿಡಿಯಲು ದೋಣಿಯ ಮೂಲಕ ತೆರಳಿ ಬೀಸುವ ಬಲೆ ಹಾಕಿದ್ದಾರೆ. ಈ ಸಂದರ್ಭದಲ್ಲಿ ಕಲ್ಲಿನ ಪೊಟರೆಗಳಲ್ಲಿ ವಾಸಿಸುವ ಹದ್ದಿನ ಜಾತಿಗೆ ಸೇರಿದ ಬೃಹತ್ ಗಾತ್ರದ ಮೀನು ಬಿದ್ದಿದೆ ಎಂದು ತಿಳಿದು ಬಂದಿದೆ. ಬಲೆಗೆ ಬಿದ್ದ 4 ರಿಂದ 5 ಅಡಿ ಉದ್ದವಿರುವ ಬರೋಬ್ಬರಿ 32 ಕೆಜಿ ತೂಕದ ಹದ್ದಿನ ಜಾತಿಗೆ ಸೇರಿದ ಮೀನನ್ನು ದಡಕ್ಕೆ ತರಲು ಅರ್ಧ ಗಂಟೆಗಳ ಕಾಲ ಮೀನುಗಾರರು ಹರಸಾಹಸ ಪಟ್ಟರು. ಸುದ್ದಿ ತಿಳಿದು ಜಮಾಯಿಸಿದ ಜನರು : ಮೀನುಗಾರರ ಬಲೆಗೆ ಭಾರೀ ಗಾತ್ರದ ಮೀನು ಬಿದ್ದಿದೆ ಎಂಬ ಸುದ್ದಿ ತಿಳಿದ ಗ್ರಾಮಸ್ಥರು ಮೀನು ಮಾರುವ ಅಂಗಡಿ ಬಳಿ ಜಮಾಯಿಸಿ ವೀಕ್ಷಣೆ ಮಾಡಿದರು. 11,200 ರೂ.ಗೆ ಮಾರಾಟ : 32 ಕೆಜಿ ಭಾರೀ ಗಾತ್ರದ ಮೀನನ್ನು ಸ್ಥಳೀಯ ಮೀನು ವ್ಯಾಪಾರಿ ಸಾದಿಕ್ ಎಂಬವರಿಗೆ 11,200 ರೂ.ಗೆ ಮೀನುಗಾರರು ಮಾರಾಟ ಮಾಡಿದ್ದಾರೆ ಎನ್ನಲಾಗಿದೆ.
ಜಿ ರಾಮ್ ಜಿ ಜಾರಿ ತೀರ್ಮಾನವನ್ನು ಖಂಡಿಸಿದ ಸಂಪುಟ; ಯಲಹಂಕದಲ್ಲಿ ಬೃಹತ್ ಉದ್ಯಾನ ನಿರ್ಮಾಣಕ್ಕೆ ಅಸ್ತು
ರಾಜ್ಯ ಸಚಿವ ಸಂಪುಟವು ಕೇಂದ್ರದ ಮನರೇಗಾ ಯೋಜನೆ ಬದಲಾವಣೆ ನಿರ್ಧಾರವನ್ನು ಖಂಡಿಸಿದೆ. ಇದು ಗ್ರಾಮೀಣ ಜನರ ಉದ್ಯೋಗ ಹಕ್ಕನ್ನು ಕಸಿದುಕೊಳ್ಳುವ ಕ್ರಮ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ ಮುಖ್ಯಮಂತ್ರಿಗಳು ಮುಂದಿನ ಹೆಜ್ಜೆ ಪ್ರಕಟಿಸಲಿದ್ದಾರೆ. ಇದೇ ವೇಳೆ ಬೆಂಗಳೂರಿನಲ್ಲಿ 153 ಎಕರೆಯಲ್ಲಿ 'ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನ' ನಿರ್ಮಾಣಕ್ಕೆ 50 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ. ಇದು ನಗರದ ಮೂರನೇ ಅತಿದೊಡ್ಡ ಉದ್ಯಾನವಾಗಲಿದೆ.
ಬೆಳಗಾವಿ| ಯುವಕನನ್ನು ಮರಕ್ಕೆ ಕಟ್ಟಿ ಹಾಕಿ ಥಳಿತ
ಬೆಳಗಾವಿ, ಜ.2: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಹೊರವಲಯದಲ್ಲಿ ಯುವಕನೊಬ್ಬನನ್ನು ಮರಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ವರದಿಯಾಗಿದೆ. ಯಕ್ಸಾಂಬಾ ಪಟ್ಟಣದ ಅಕ್ಷಯ್ ಕಲ್ಲಟಗಿ ಎಂಬ ಯುವಕ, ಮೂವರು ಮಕ್ಕಳ ತಾಯಿಯಾದ ವಿವಾಹಿತ ಮಹಿಳೆಯೊಂದಿಗೆ ಕಳೆದ ನಾಲ್ಕು ವರ್ಷಗಳಿಂದ ಸಂಪರ್ಕದಲ್ಲಿದ್ದನು ಎನ್ನಲಾಗಿದೆ. ಯುವಕ ಆಗಾಗ ಮಹಿಳೆಯನ್ನು ಭೇಟಿಯಾಗುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಗುರುವಾರ ರಾತ್ರಿ ಮಹಿಳೆ ಯುವಕನಿಗೆ ಭೇಟಿಯಾಗಲು ಬರುವಂತೆ ಕರೆ ಮಾಡಿದ್ದಳು. ಇದನ್ನು ನಂಬಿ ಯುವಕ ಕರೋಶಿ ಗ್ರಾಮದತ್ತ ತೆರಳುತ್ತಿದ್ದಾಗ, ಅರ್ಧ ದಾರಿಯಲ್ಲೇ ಮಹಿಳೆಯ ಪತಿ ಹಾಗೂ ಆತನ ಸಹೋದರ ಯುವಕನನ್ನು ತಡೆದು ಮರಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿಸಿರುವುದು ಬೆಳಕಿಗೆ ಬಂದಿದೆ. ಗಂಭೀರವಾಗಿ ಗಾಯಗೊಂಡ ಯುವಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಚಿಕ್ಕೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಚಾಮರಾಜನಗರ | ವೃದ್ಧನನ್ನು ಕುಟುಂಬದವರೊಂದಿಗೆ ಸೇರಿಸಲು ನೆರವಾದ ಸಾಮಾಜಿಕ ಜಾಲತಾಣ
ಚಾಮರಾಜನಗರ, ಜ.2: ಸಾವಿರಾರು ಕಿಲೋ ಮೀಟರ್ ದೂರದೂರಿನಿಂದ ಬಂದು ತವರಿಗೆ ಮರಳಲಾಗದೇ ನಿರ್ಗತಿಕ ಪುನರ್ವಸತಿ ಕೇಂದ್ರದಲ್ಲಿದ್ದ ವೃದ್ದರೊಬರನ್ನು ಸಾಮಾಜಿಕ ಜಾಲತಾಣದ ಮೂಲಕ ಕುಟುಂಬದವರೊಡನೆ ಒಂದುಗೂಡಿಸಿದ ಅಪರೂಪ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ. ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯ ಅಮರ್ ಪುರ್ ತಾಲೂಕಿನ ಧನ್ವಾಸಿ ಗ್ರಾಮದ ನಿವಾಸಿ ಪ್ರೀತಂ ಸಿಂಗ್(60), ಕೆಲವು ತಿಂಗಳ ಹಿಂದೆ ಕುಟುಂಬಸ್ಥರೊಂದಿಗೆ ಚಾಮರಾಜನಗರ ಜಿಲ್ಲೆಯ ಯಳಂದೂರಿಗೆ ಕೂಲಿ ಕೆಲಸಕ್ಕೆ ಬಂದಿದ್ದರು. ಆದರೆ ಕುಟುಂಬದವರಿಂದ ಅಚಾನಕ್ ಆಗಿ ಬೇರೆಯಾದರು. ಹಿಂದಿ ಬಿಟ್ಟು ಬೇರೆ ಭಾಷೆ ಗೊತ್ತಿಲ್ಲ. ಮನೆಯವರ ನಂಬರ್ ಗೊತ್ತಿಲ್ಲ. ವಾಪಸ್ ಹೋಗಲು ತಿಳಿಯುತ್ತಿಲ್ಲ, ಬಸ್ ಟಿಕೆಟ್ಗೆ ಹಣವೂ ಇಲ್ಲದೆ, ಮನೆಯವರ ಪಾಲಿಗೆ ನಾಪತ್ತೆಯಾಗಿ ಯಳಂದೂರು ಬಸ್ ನಿಲ್ದಾಣದ ಸುತ್ತಮುತ್ತ ಓಡಾಡುತ್ತ, ರಾತ್ರಿ ವೇಳೆ ರಸ್ತೆ ಬದಿ ಮಲಗಿಕೊಂಡು ದಿನಗಳನ್ನು ಕಳೆಯುತ್ತಿದ್ದರು. ನಿರ್ಗತಿಕ ವೃದ್ಧನನ್ನು ಗಮನಿಸಿದ ಯಳಂದೂರು ಠಾಣೆ ಪೊಲೀಸರು ನ.11ರಂದು ಸಂತೇಮರಹಳ್ಳಿಯ ಜ್ಞಾನ ಸಿಂಧು ವೃದ್ಧಾಶ್ರಮಕ್ಕೆ ಸೇರಿಸಿದ್ದರು. ಎರಡು ತಿಂಗಳು ವೃದ್ಧಾಶ್ರಮದಲ್ಲಿದ್ದ ಪ್ರೀತಂ ಸಿಂಗ್ ಊರು, ಮನೆಯವರ ಬಗ್ಗೆ ಹಿಂದಿಯಲ್ಲಿ ಹೇಳಿಕೊಂಡು ಪೇಚಾಡುತ್ತಿದ್ದರು. ಸರಿಯಾಗಿ ಊರಿನ ಹೆಸರು ಹೇಳುತ್ತಿದ್ದಾರಾ ಎನ್ನುವ ಗೊಂದಲ ಮೂಡಿತ್ತು. ವೃದ್ಧಾಶ್ರಮದ ಅಧೀಕ್ಷಕ ಎಂ.ಮಹದೇವಸ್ವಾಮಿ, ಸಾಮಾಜ ಸೇವಕ ಎಚ್.ಬಿ.ಪ್ರಕಾಶ್ಗೆ ಪ್ರೀತಂ ಸಿಂಗ್ನನ್ನು ಕುಟುಂಬದ ಮಡಿಲು ಸೇರಿಸಬೇಕೆಂಬ ಆಸೆ ಇತ್ತು. ಈ ಸಂದರ್ಭದಲ್ಲಿ ವೃದ್ದಾಶ್ರಮದಲ್ಲಿ ಆರೋಗ್ಯ ಜಾಗೃತಿ ಮೂಡಿಸಲು ಬಂದಿದ್ದ ಸತ್ಯ ಎಜುಕೇರ್ ಕಾಂಪೆಟೆನ್ಸಿ ಟ್ರಸ್ಟ್ನ ಮಹೇಶ್ ಪ್ರೀತಂ ಸಿಂಗ್ ಅವರ ವೀಡಿಯೊ ಮಾಡಿದರು. ಇನ್ಸ್ಟಾಗ್ರಾಂನಲ್ಲಿರುವ ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯ ಗ್ರೂಪ್ಗೆ ಈ ವಿಡಿಯೋವನ್ನು ಹಾಕಿ ಸಹಾಯ ಕೋರಿದರು. ದಿಂಡೋರಿ ಗ್ರೂಪ್ ನ ಅಡ್ಮಿನ್ ಪ್ರೀತಂ ಸಿಂಗ್ ಕುಟುಂಬಕ್ಕೆ ವಿಷಯ ತಿಳಿಸಿ ಮಹೇಶ್ಗೆ ಅವರ ಸಂಪರ್ಕ ಸಂಖ್ಯೆಯನ್ನು ಕೊಟ್ಟರು. ಇನ್ಸ್ಟಾಗ್ರಾಂನಿಂದ ಸಿಕ್ಕ ಮಾಹಿತಿ ಆಧರಿಸಿ 2025 ರ ಡಿ.30ರಂದು ವೃದ್ಧ ಪ್ರೀತಂ ಸಿಂಗ್ ಪುತ್ರ ರಾಜೇಶ್ ಸಿಂಗ್ ಧುರ್ವಿ ಬಂದರು. ಕಾನೂನು ನಿಯಮಾವಳಿ ಪ್ರಕಾರ, ಪ್ರೀತಂ ಸಿಂಗ್ ಅನ್ನು ಚಾಮರಾಜನಗರ ಜಿಲ್ಲೆಯ ಯಳಂದೂರು ಪೊಲೀಸರ ಮೂಲಕ ಪುತ್ರನ ಒಪ್ಪಿಸಲಾಯಿತು.
ಬಳ್ಳಾರಿ ಬ್ಯಾನರ್ ಘರ್ಷಣೆ; ಸತೀಶ್ ರೆಡ್ಡಿ ಗನ್ ಮ್ಯಾನ್ ಗುಂಡೇಟಿಗೆ ಕಾರ್ಯಕರ್ತ ಬಲಿ?; ಪೊಲೀಸರು ಹೇಳಿದ್ದೇನು?
ಬಳ್ಳಾರಿಯಲ್ಲಿ ಬ್ಯಾನರ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ರಾಜಶೇಖರ್ ಎಂಬ ಕಾಂಗ್ರೆಸ್ ಕಾರ್ಯಕರ್ತನಿಗೆ ಗುಂಡು ತಗುಲಿ ಮೃತಪಟ್ಟಿದ್ದ. ಸದ್ಯ ಶಾಸಕ ನಾರಾ ಭರತ್ ರೆಡ್ಡಿ ಅವರ ಆಪ್ತ ಸತೀಶ್ ರೆಡ್ಡಿ ಅವರ ಖಾಸಗಿ ಗನ್ಮ್ಯಾನ್ನಿಂದ ಈ ಫೈರಿಂಗ್ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ಅವರು ಸಹ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮೃತ ರಾಜಶೇಖರ್ ಅವರಿಗೆ ಬಿದ್ದ ಗುಂಡೇಟು ಯಾರದು ಎಂದು ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.
ಅನಧಿಕೃತವಾಗಿ ಉದ್ಯೋಗಕ್ಕೆ ಗೈರಾಗುವುದು ದುರ್ನಡತೆ : ಬಿಎಂಟಿಸಿ ಟ್ರೈನಿ ಚಾಲಕನ ವಜಾ ಆದೇಶ ಎತ್ತಿಹಿಡಿದ ಹೈಕೋರ್ಟ್
ಬೆಂಗಳೂರು, ಜ.2: ರಜೆ ಇಲ್ಲದೆಯೇ ಉದ್ಯೋಗಕ್ಕೆ ಗೈರಾಗುವುದು ದುರ್ನಡತೆಯಾಗಲಿದ್ದು, ಶ್ರದ್ಧೆಯಿಂದ ಕೆಲಸ ಮಾಡದ ಉದ್ಯೋಗಿಗೆ ಸಹಾನುಭೂತಿ ತೋರುವ ಅಗತ್ಯವಿಲ್ಲ ಎಂದು ತೀಕ್ಷ್ಣವಾಗಿ ನುಡಿದಿರುವ ಹೈಕೋರ್ಟ್, ಬಿಎಂಟಿಸಿ ಟ್ರೈನಿ ಚಾಲಕರೊಬ್ಬರನ್ನು ಸೇವೆಯಿಂದ ವಜಾಗೊಳಿಸಿದ್ದ ಕ್ರಮವನ್ನು ಎತ್ತಿಹಿಡಿದಿದೆ. ಟ್ರೈನಿ ಚಾಲಕರಾಗಿದ್ದ ವೆಂಕಟರಾಮಯ್ಯ ಎಂಬಾತನ ವಜಾ ಆದೇಶ ರದ್ದುಪಡಿಸಿದ್ದ ಕಾರ್ಮಿಕ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಬಿಎಂಟಿಸಿ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿರುವ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ. ಹೈಕೋರ್ಟ್ ಆದೇಶ:ಪೂರ್ವಾನುಮತಿ ಮತ್ತು ರಜೆ ಪಡೆಯದೆ ವೆಂಕಟೇಶಯ್ಯ 2016ರ ಡಿಸೆಂಬರ್ 1ರ ನಂತರ ಅನಧಿಕೃತವಾಗಿ ಉದ್ಯೋಗಕ್ಕೆ ಗೈರಾಗಿದ್ದಾರೆ. ಈ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಬಿಎಂಟಿಸಿ ಶಿಸ್ತು ಪ್ರಾಧಿಕಾರ ವೆಂಕಟೇಶಯ್ಯ ಅವರನ್ನು ಸೇವೆಯಿಂದ ವಜಾಗೊಳಿಸಿದೆ. ಉದ್ಯೋಗ ನಿರ್ವಹಣೆ ಮಾಡುವ ಸಮಯದಲ್ಲಿ ಸಕಾರಣವಿಲ್ಲದೆ ಉದ್ಯೋಗಕ್ಕೆ ನೌಕರ ಅನಧಿಕೃತವಾಗಿ ಗೈರಾಗಬಾರದು. ರಜೆಯಿಲ್ಲದೆ ಉದ್ಯೋಗಕ್ಕೆ ಗೈರಾಗುವುದು ದುರ್ನಡತೆ ಆಗಲಿದೆ. ದುರ್ನಡತೆಯು ಶಿಸ್ತು ಕ್ರಮವನ್ನು ಸಮರ್ಥಿಸುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಚಿಕ್ಕಬಳ್ಳಾಪುರ| ದಲಿತ ಯುವಕನ ಮೇಲೆ ಹಲ್ಲೆ : ಪ್ರಕರಣ ದಾಖಲು
ಭಾಗ್ಯನಗರ(ಚೇಳೂರು), ಜ.2: ಚೇಳೂರು ತಾಲೂಕಿನ ಚಾಕವೇಲು ಗ್ರಾಮದ ಪೆಟ್ರೋಲ್ ಬಂಕ್ನಲ್ಲಿ ಹಣದ ವಿಚಾರವಾಗಿ ನಡೆದ ಮಾತಿನ ಚಕಮುಕಿ ವಿಕೋಪಕ್ಕೆ ತಿರುಗಿ, ದಲಿತ ಯುವಕನ ಮೇಲೆ ಜಾತಿ ನಿಂದನೆ ಹಾಗೂ ಹಲ್ಲೆ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಚಿಂತಾಮಣಿ ಡಿವೈಎಸ್ಪಿ ಶಿವಕುಮಾರ್ ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ಡಿ.31ರಂದು ಮಧ್ಯಾಹ್ನ ಸುಮಾರು 1.00 ಗಂಟೆಯ ಸಮಯದಲ್ಲಿ ಚಾಕವೇಲು ಗ್ರಾಮದ ನಿವಾಸಿ ದಲಿತ ಸಮುದಾಯದ ವೆಂಕಟೇಶ್ ಬಿನ್ ವೆಂಕಟರವಣ (30) ಎಂಬವರು ಅಲ್ಲಿನ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ಗೆ ಪೆಟ್ರೋಲ್ ಹಾಕಿಸಿಕೊಳ್ಳಲು ತೆರಳಿದ್ದರು. ಈ ವೇಳೆ ಅಲ್ಲಿ ಕೆಲಸ ಮಾಡುತ್ತಿದ್ದ ಪಾಯಲೋಲ್ಲಪಲ್ಲಿ ಗ್ರಾಮದ ಬೈಯ್ಯಾರೆಡ್ಡಿ ಎಂಬವರಿಗೆ ವೆಂಕಟೇಶ್ 500 ರೂಪಾಯಿ ಫೋನ್-ಪೇ ಮಾಡುತ್ತೇನೆ, ನಗದು ಹಣ ಕೊಡಿ ಎಂದು ಕೇಳಿದ ವಿಚಾರವಾಗಿ ಗಲಾಟೆ ಆರಂಭವಾಗಿದ್ದು ಸವರ್ಣಿಯರಾದ ಮನುಮೋಹನ್ ರೆಡ್ಡಿ ಎಂಬವರು ವೆಂಕಟೇಶ್ ಅವರನ್ನು ನಿಂದಿಸಿದ್ದಲ್ಲದೆ, ಜಾತಿ ನಿಂದನೆ ಮಾಡಿ ಕೆನ್ನೆಗೆ ಹೊಡೆದು ರಕ್ತಸ್ರಾವ ವಾಗುವಂತೆ ಮಾಡಿ ಸಾರ್ವಜನಿಕವಾಗಿ ಕೊಲೆ ಬೆದರಿಕೆ ಹಾಕಿದ್ದಾರೆ. ತೀವ್ರ ಹಲ್ಲೆಗೊಳಗಾದ ವೆಂಕಟೇಶ್ ಅವರನ್ನು ಚೇಳೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಚೇಳೂರು ಪೋಲೀಸ್ ಠಾಣೆಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ. ಈ ಸಂಬಂದ ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಡಿವೈಎಸ್ಪಿ ಶಿವಕುಮಾರ್ ಹಾಗೂ ಚೇಳೂರು ಸಬ್ ಇನ್ಸ್ಪೆಕ್ಟರ್ ಹರೀಶ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಹಾಗೂ ಸಾಕ್ಷಿಗಳ ಮಾಹಿತಿಯನ್ನು ಅಧಿಕಾರಿಗಳು ಸಂಗ್ರಹಿಸಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಅಝೀಮ್ ಪ್ರೇಮ್ಜಿ ಫೌಂಡೇಶನ್ ಮೂಲಕ ಅಂಗಾಂಗ ಕಸಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ : ಡಾ.ಶರಣಪ್ರಕಾಶ್ ಪಾಟೀಲ್
ಬೆಂಗಳೂರು, ಜ.2: ಅಝೀಮ್ ಪ್ರೇಮ್ ಜಿ ಫೌಂಡೇಶನ್ ಮೂಲಕ ರಾಜೀವ್ ಗಾಂಧಿ ಹೃದ್ರೋಗಗಳ ಆಸ್ಪತ್ರೆ ಆವರಣದಲ್ಲಿ 10 ಎಕರೆ ಜಮೀನಿನಲ್ಲಿ ಎಲ್ಲ ಅಂಗಾಂಗ ಕಸಿಗಳನ್ನು ಒಳಗೊಂಡ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಟರ್ಷಿಯರಿ ಆರೈಕೆ ಆಸ್ಪತ್ರೆ ನಿರ್ಮಾಣ ಮಾಡುವ ಒಡಂಬಡಿಕೆಗೆ ಸಹಿ ಹಾಕಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಇನ್ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ರೋ ಎಂಟ್ರಾಲಜಿ ಸೈನ್ಸಸ್ ಆಂಡ್ ಆರ್ಗನ್ ಟ್ರಾನ್ಸ್ ಪ್ಲಾಂಟ್(ಐಜಿಒಟಿ) ಸಂಸ್ಥೆಗೆ 2016ರಲ್ಲಿ ನಮ್ಮ ಸರಕಾರ ರಾಜೀವ್ ಗಾಂಧಿ ಹೃದ್ರೋಗಗಳ ಆಸ್ಪತ್ರೆ ಆವರಣದಲ್ಲಿ 10 ಎಕರೆ ಜಮೀನನ್ನು ಕಾಯ್ದಿರಿಸಿತ್ತು ಎಂದು ಹೇಳಿದರು. ಅಲ್ಲಿ ಆಸ್ಪತ್ರೆಯನ್ನು ನಿರ್ಮಾಣ ಮಾಡಲು ಅಝೀಮ್ ಪ್ರೇಮ್ಜಿ ಫೌಂಡೇಶನ್ಗೆ 99 ವರ್ಷಗಳ ಅವಧಿಗೆ ಗುತ್ತಿಗೆ ನೀಡಿ, ಒಡಂಬಡಿಕೆಗೆ ಸಹಿ ಹಾಕಲು ನಿರ್ಧರಿಸಲಾಗಿದೆ. ಎಲ್ಲ ಅಂಗಾಂಗ ಕಸಿಯ ಸೌಲಭ್ಯ, ಎಲ್ಲ ರೀತಿಯ ಕ್ಯಾನ್ಸರ್ಗೆ ಚಿಕಿತ್ಸೆ ನೀಡಲು 1,000 ಕೋಟಿ ರೂ. ವೆಚ್ಚದಲ್ಲಿ ಅವರ ಸ್ವಂತ ಖರ್ಚಿನಲ್ಲಿ ಆಸ್ಪತ್ರೆ ನಿರ್ಮಾಣ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು. ಪ್ರತಿ ವರ್ಷ 350 ಕೋಟಿ ರೂ.ವೆಚ್ಚದಲ್ಲಿ ಆಸ್ಪತ್ರೆ ನಿರ್ವಹಣೆ ಮಾಡುತ್ತಾರೆ. ಅಲ್ಲದೇ, ಆಸ್ಪತ್ರೆಯನ್ನು ಅವರೇ ನಡೆಸುತ್ತಾರೆ. ಅಝೀಮ್ ಪ್ರೇಮ್ ಜೀ ಫೌಂಡಶನ್ ನಮ್ಮ ಪ್ರಸ್ತಾವ ಒಪ್ಪಿದ್ದಾರೆ. ಐದು ವರ್ಷದಲ್ಲಿ ಈ ಆಸ್ಪತ್ರೆ ಸ್ಥಾಪನೆಯಾಗಲಿದೆ. ಮೊದಲು ಮೂರು ವರ್ಷಗಳಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣವಾಗಲಿದೆ. ಅದರಲ್ಲಿ ಶೇ.70ರಷ್ಟು ಉಚಿತ ಹಾಸಿಗೆ ಹಾಗೂ ಶೇ.30ರಷ್ಟು ಸರಕಾರಿ ಆಸ್ಪತ್ರೆಗಳಲ್ಲಿ ಇರುವಂತೆ ಕನಿಷ್ಠ ದರ ಇರಲಿದೆ ಎಂದು ಡಾ.ಶರಣ ಪ್ರಕಾಶ್ ಪಾಟೀಲ್ ಹೇಳಿದರು. ಆಸ್ಪತ್ರೆಗೆ ಸಂಬಂಧಿಸಿ ಅಝೀಮ್ ಪ್ರೇಮ್ ಜಿ ಅವರು ರಚಿಸಲಿರುವ ಆಡಳಿತ ಮಂಡಳಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವರು, ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಹಾಗೂ ಆರ್ಥಿಕ ಇಲಾಖೆಯ ಕಾರ್ಯದರ್ಶಿ ಸದಸ್ಯರಾಗಿರುತ್ತಾರೆ. -ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ವೈದ್ಯಕೀಯ ಶಿಕ್ಷಣ
ಚಿನ್ನದ ಮೇಲಿನ ಸಾಲ ಬರೋಬ್ಬರಿ 125% ಜಂಪ್, ಕಾರಣ ಬಂಗಾರದ ದರ ಏರಿಕೆ!
ಚಿನ್ನದ ಮೇಲಿನ ಬ್ಯಾಂಕ್ ಸಾಲ ನವೆಂಬರ್ ಅಂತ್ಯಕ್ಕೆ 125% ಹೆಚ್ಚಳವಾಗಿದೆ. ಚಿನ್ನದ ಬೆಲೆ ಏರಿಕೆಯಿಂದಾಗಿ ಗ್ರಾಹಕರು ಹೆಚ್ಚಿನ ಸಾಲ ಪಡೆಯುತ್ತಿದ್ದಾರೆ. ವಾಹನ ಸಾಲ 11% ಏರಿದೆ. ಹಬ್ಬದ ಋತು ಮುಗಿದಿದ್ದರಿಂದ ಗೃಹೋಪಯೋಗಿ ವಸ್ತುಗಳ ಮೇಲಿನ ಸಾಲ ಕಡಿಮೆಯಾಗಿದೆ. ಚಿನ್ನದ ಸಾಲ ನೀಡಿಕೆಯಲ್ಲಿ ಬ್ಯಾಂಕುಗಳು ಮತ್ತು ಎನ್ಬಿಎಫ್ಸಿಗಳು ಸ್ಪರ್ಧಿಸುತ್ತಿವೆ. ಎನ್ಬಿಎಫ್ಸಿಗಳು 3 ಲಕ್ಷ ಕೋಟಿ ರೂ. ಸಾಲ ನೀಡಿದ್ದರೆ, ಬ್ಯಾಂಕುಗಳು 50.35% ಮಾರುಕಟ್ಟೆ ಪಾಲು ಹೊಂದಿವೆ.
153 ಎಕರೆಯಲ್ಲಿ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನವನ ಅಭಿವೃದ್ದಿಗೆ ಸಂಪುಟ ಸಮ್ಮತಿ: ಸಚಿವ ಈಶ್ವರ್ ಖಂಡ್ರೆ
ಬೆಂಗಳೂರು, ಜ.2: ನಿವೃತ್ತರ ಸ್ವರ್ಗ, ಉದ್ಯಾನನಗರಿ ಎಂಬ ಹಿರಿಮೆಯ ಬೆಂಗಳೂರಿಗೆ ಮತ್ತೊಂದು ಗರಿ ಮೂಡುತ್ತಿದ್ದು, ಅರಣ್ಯ ಇಲಾಖೆ 153 ಎಕರೆಯಲ್ಲಿ ಅಭಿವೃದ್ಧಿ ಪಡಿಸಲುದ್ದೇಶಿಸಿರುವ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಶುಕ್ರವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಸಚಿವ ಈಶ್ವರ್ ಖಂಡ್ರೆ, ಬೆಂಗಳೂರು ನಗರಕ್ಕೆ ಅತ್ಯಗತ್ಯವಾದ ಶ್ವಾಸತಾಣ ಮತ್ತು ಮನೋಲ್ಲಾಸ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಸಂಪುಟ 50 ಕೋಟಿ ರೂ. ಮಂಜೂರು ಮಾಡಿದ್ದು, ಇದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಲ್ಲ ಸಂಪುಟ ಸಹೋದ್ಯೋಗಿಗಳಿಗೆ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದರು. 265 ವರ್ಷಗಳ ಹಿಂದೆ ಅಂದರೆ 1760ರಲ್ಲಿ 240 ಎಕರೆ ಪ್ರದೇಶದಲ್ಲಿ ಲಾಲ್ ಬಾಗ್ ನಿರ್ಮಾಣವಾಗಿತ್ತು. 155 ವರ್ಷಗಳ ಹಿಂದೆ ಅಂದರೆ 1870ರಲ್ಲಿ ಕಬ್ಬನ್ ಪಾರ್ಕ್ 197 ಎಕರೆ ಪ್ರದೇಶದಲ್ಲಿ ನಿರ್ಮಾಣಗೊಂಡು ಜನಾಕರ್ಷಣೆಯ ತಾಣವಾಗಿದೆ. ಇದಾದ ಬಳಿಕ ಬೆಂಗಳೂರಿನಲ್ಲಿ ಹಲವು ಸಣ್ಣ ಉದ್ಯಾನಗಳ ನಿರ್ಮಾಣವಾಗಿದೆಯಾದರೂ ಬೃಹತ್ ಉದ್ಯಾನ ನಿರ್ಮಾಣ ಆಗಿರಲಿಲ್ಲ. ಈಗ ಅಂತಹ ಒಂದು ಬೃಹತ್ ಜೀವವೈವಿಧ್ಯ ಉದ್ಯಾನವನ್ನು ನಮ್ಮ ಸರಕಾರ ಜನತೆಗೆ ಸಮರ್ಪಿಸುತ್ತಿದೆ ಎಂದು ಹೇಳಿದರು. ಬೆಂಗಳೂರು ಉತ್ತರ ತಾಲೂಕು ಯಲಹಂಕ ಬಳಿಯ ಮಾದಪ್ಪನಹಳ್ಳಿಯಲ್ಲಿ 153 ಎಕರೆ ಪ್ರದೇಶದಲ್ಲಿ ಅಭಿವೃದ್ಧಿ ಆಗಲಿರುವ ಈ ಉದ್ಯಾನ ರಾಜ್ಯ ರಾಜಧಾನಿಯ 3ನೇ ಅತಿದೊಡ್ಡ ಉದ್ಯಾನವನವೆಂಬ ಖ್ಯಾತಿಗೆ ಪಾತ್ರವಾಗಲಿದೆ. ಬಹುತೇಕ ಒಂದೂವರೆ ಶತಮಾನದ ಬಳಿಕ ಬೆಂಗಳೂರಿನಲ್ಲಿ ಮತ್ತೊಂದು ಬೃಹತ್ ಉದ್ಯಾನ ನಿರ್ಮಾಣದ ಕಲ್ಪನೆ ಇಂದು ಸಾಕಾರವಾಗುತ್ತಿದ್ದು, ಇದನ್ನು ಶತಮಾನದ ಸಾಧನೆ ಎಂದರೂ ಅತಿಶಯೋಕ್ತಿಯಾಗಲಾರದು ಎಂದು ಈಶ್ವರ್ ಖಂಡ್ರೆ ತಿಳಿಸಿದರು. ಈ ಹಿಂದೆ ಅರಣ್ಯ ಇಲಾಖೆ ಮಾದಪ್ಪನಹಳ್ಳಿಯಲ್ಲಿರುವ 153 ಎಕರೆ ಪ್ರದೇಶವನ್ನು ನೆಡುತೋಪು ಬೆಳೆಸಲು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮಕ್ಕೆ ನೀಡಿತ್ತು. ಈಗ ಈ ಜಾಗವನ್ನು ಮರಳಿ ಇಲಾಖೆಗೆ ಪಡೆಯಲಾಗಿದ್ದು, ಇಲ್ಲಿರುವ ನೀಲಗಿರಿ ಮರಗಳನ್ನು ಹಂತಹಂತವಾಗಿ ತೆಗೆದು ಇಲ್ಲಿ ಸ್ಥಳೀಯ ಪ್ರಭೇದದ ಗಿಡ ಮರ ಬೆಳೆಸಿ, ಜಲ ಗುಂಡಿ ನಿರ್ಮಿಸಿ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನ ನಿರ್ಮಿಸಲಾಗುವುದು ಎಂದು ಹೇಳಿದರು. ಈ ಪ್ರದೇಶದಲ್ಲಿ ಬೆಳೆಸಲಾಗಿರುವ ನೀಲಗಿರಿ ಮರಗಳನ್ನು ತೆಗೆದು ಸ್ಥಳೀಯ ಜಾತಿಯ ನಂದಿ, ಹೊನ್ನೆ, ಬಿಲ್ವ, ಮಹಾಬಿಲ್ವವೇ ಮೊದಲಾದ ನೂರಾರು ಪ್ರಭೇದದ ಸಸಿಗಳನ್ನು ನೆಟ್ಟು ಬೆಳೆಸಲಾಗುವುದು. ಹೀಗೆ ಬೆಳೆಸುವ ಎಲ್ಲ ಮರಗಳ ಬಳಿ ವೃಕ್ಷದ ಹೆಸರು, ಪ್ರಭೇದ ಇತ್ಯಾದಿ ವೈಜ್ಞಾನಿಕ ವಿವರದ ಫಲಕ ಹಾಕುವ ಮೂಲಕ ಮುಂದಿನ ಪೀಳಿಗೆ ಕನಿಷ್ಠ 50 ಮರಗಳನ್ನು ಗುರುತಿಸುವಂತೆ ಅರಿವು ಮೂಡಿಸಲು ತೀರ್ಮಾನಿಸಲಾಗಿದೆ ಎಂದು ಈಶ್ವರ್ ಖಂಡ್ರೆ ಹೇಳಿದರು.
ಇಂದಿನ ವೇಗದ ಯುಗದಲ್ಲಿ ನೈತಿಕತೆ ಮತ್ತು ವೃತ್ತಿಧರ್ಮವನ್ನು ಎತ್ತಿಹಿಡಿಯುವುದು ಸವಾಲಿನ ಕೆಲಸ: ಕೆವಿ ಪ್ರಭಾಕರ್
ಬೆಂಗಳೂರು ಜ2: ಇಂದಿನ ವೇಗದ ಯುಗದಲ್ಲಿ ನೈತಿಕತೆ ಮತ್ತು ವೃತ್ತಿಧರ್ಮವನ್ನು ಎತ್ತಿಹಿಡಿಯುವುದು ಸವಾಲಿನ ಕೆಲಸ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯ ಪಟ್ಟರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಆಯೋಜಿಸಿದ್ದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮತ್ತು ಮಾಹಿತಿ ಆಯುಕ್ತರಾದ ಪತ್ರಕರ್ತರಿಗೆ ಸನ್ಮಾನಿಸಿ ಮಾತನಾಡಿದ ಕೆ.ವಿ.ಪ್ರಭಾಕರ್, ಇಂದು ಇಲ್ಲಿ ಸನ್ಮಾನಿತರಾಗುತ್ತಿರುವ ಐವರು ಪತ್ರಕರ್ತರಿಗೆ ಮತ್ತು ಅವರನ್ನು ಸನ್ಮಾನಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಇವರಲ್ಲಿ ಸಿದ್ದರಾಜು ಅವರು ಹಿರಿಯರಾಗಿ ನಮಗೆಲ್ಲಾ ಮಾದರಿ ಆಗಿದ್ದವರು. ಉಳಿದವರು ನನ್ನ ಸಮಕಾಲೀನರಾಗಿ ಮಾದರಿಗಳಾಗಿರುವವರು. ಹಿರಿಯ ಮತ್ತು ಮಾದರಿ ಪತ್ರಕರ್ತರನ್ನು ಸನ್ಮಾನಿಸುವುದು ಕೇವಲ ಒಂದು ಶಿಷ್ಟಾಚಾರವಲ್ಲ, ಅದು ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ 'ಜಾಗೃತ ಕಣ್ಣು'ಗಳಿಗೆ ಸಲ್ಲಿಸುವ ಗೌರವವಾಗಿದೆ ಎಂದು ಹೇಳಿದರು. ಇಲ್ಲಿ ಸನ್ಮಾನಿತರಾಗುತ್ತಿರುವ ಪತ್ರಕರ್ತ ಸ್ನೇಹಿತರು ದಶಕಗಳ ಕಾಲ ಸಮಾಜದ ಏರಿಳಿತಗಳನ್ನು ಹತ್ತಿರದಿಂದ ಕಂಡಿದ್ದಾರೆ. ಗೂಗಲ್, ಜಿ-ಮೇಲ್, ವಾಟ್ಸಾಪ್ ನಂತಹ ತಂತ್ರಜ್ಞಾನವಿಲ್ಲದ ಕಾಲದಿಂದ ಹಿಡಿದು ಅಪಾರ ತಂತ್ರಜ್ಞಾನದ ಹಾವಳಿಯ ಕಾಲಘಟ್ಟದ ಎರಡೂ ಸಂದರ್ಭಗಳ ಪತ್ರಿಕೋದ್ಯಮಕ್ಕೂ ಸಾಕ್ಷಿಯಾಗಿರುವವರು. ತಂತ್ರಜ್ಞಾನ ಇಲ್ಲದಿದ್ದಾಗ ಸತ್ಯವನ್ನು ಹುಡುಕಿ ಹೊರತಂದ ಇವರ ಕಾಳಜಿ, ಪರಿಶ್ರಮ, ವೃತ್ತಿಪರತೆಗೆ ಸನ್ಮಾನವು ಒಂದು ರೀತಿಯ ಮಾನ್ಯತೆ ತಂದು ಕೊಟ್ಟಿದೆ ಎಂದು ಹೇಳಿದರು. ಇಂದಿನ ವೇಗದ ಯುಗದಲ್ಲಿ ನೈತಿಕತೆ ಮತ್ತು ವೃತ್ತಿಧರ್ಮವನ್ನು ಎತ್ತಿಹಿಡಿಯುವುದು ಸವಾಲಿನ ಕೆಲಸ. ಹಿರಿಯರನ್ನು ಗೌರವಿಸುವುದರಿಂದ, ಉದಯೋನ್ಮುಖ ಪತ್ರಕರ್ತರಿಗೆ ಮೌಲ್ಯಾಧಾರಿತ ಪತ್ರಿಕೋದ್ಯಮದ ಬಗ್ಗೆ ಆಸಕ್ತಿ ಮತ್ತು ಸ್ಫೂರ್ತಿ ಮೂಡುತ್ತದೆ. ಈ ಅರ್ಥಪೂರ್ಣ ಕೆಲಸವನ್ನು ಕಾರ್ಯನಿರತ ಪತ್ರಕರ್ತರ ಸಂಘ ಮಾಡುತ್ತಿದೆ ಎಂದರು. ಸಾಮಾಜಿಕ ಜವಾಬ್ದಾರಿಯನ್ನು ಗುರುತಿಸುವುದೂ ಜವಾಬ್ದಾರಿಯುತ ಕೆಲಸ. ಸಾಮಾಜಿಕ ಕಾಳಜಿಗಳನ್ನು ಕಾಪಾಡಿಕೊಂಡಿರುವವರನ್ನು ಗುರುತಿಸುವುದು ಮತ್ತು ಸನ್ಮಾನಿಸುವುದರಿಂದ ಸಮಾಜವು ಪ್ರಾಮಾಣಿಕ ಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂಬ ಸಂದೇಶ ಕೊಟ್ಟಂತೆ ಆಗುತ್ತದೆ. ಇದು ಸಮಾಜದಲ್ಲಿ ಸತ್ಯವಂತರ, ಸಾಮಾಜಿಕ ಕಾಳಜಿ ಇಟ್ಟುಕೊಂಡವರ ಪರವಾಗಿ ನಿಲ್ಲುವ ಧೈರ್ಯವನ್ನು ತುಂಬುತ್ತದೆ. ಇತಿಹಾಸದ ಕೊಂಡಿಯಾಗಿ ಹಿರಿಯ ಪತ್ರಕರ್ತರು ಒಂದು ಕಾಲಘಟ್ಟದ ಜೀವಂತ ಇತಿಹಾಸವಿದ್ದಂತೆ. ಅವರನ್ನು ಸನ್ಮಾನಿಸುವ ನೆಪದಲ್ಲಿ ಅವರ ಅನುಭವದ ನುಡಿಗಳನ್ನು ದಾಖಲಿಸುವ ಕೆಲಸವನ್ನೂ ಕಾರ್ಯನಿರತ ಪತ್ರಕರ್ತರ ಸಂಘ ಮಾಡಬೇಕು ಎಂದು ಕರೆ ನೀಡಿದರು. ವೃತ್ತಿಜೀವನದಿಂದ ನಿವೃತ್ತರಾದ ನಂತರ ಅಥವಾ ಇಳಿ ವಯಸ್ಸಿನಲ್ಲಿ ಅನೇಕ ಪತ್ರಕರ್ತರು ಆರ್ಥಿಕ ಅಥವಾ ಮಾನಸಿಕ ಏಕಾಂಗಿತನ ಅನುಭವಿಸುತ್ತಾರೆ ಎನ್ನುವುದು ನನಗೆ ಗೊತ್ತಿದೆ. ಇಂತಹ ಸಮಯದಲ್ಲಿ ಪತ್ರಕರ್ತರ ಸಂಘಗಳು, ಪ್ರೆಸ್ ಕ್ಲಬ್ ನಂತಹ ಸಂಸ್ಥೆಗಳು ಅವರನ್ನು ಗುರುತಿಸಿ ಸನ್ಮಾನಿಸಿದರೆ, ಅವರಿಗೆ ಆತ್ಮವಿಶ್ವಾಸ ಮತ್ತು ಗೌರವಯುತ ಬದುಕು ನಡೆಸಲು ನೆರವಾಗುತ್ತದೆ. ಪತ್ರಿಕೋದ್ಯಮವು ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭ. ಈ ಸ್ತಂಭವನ್ನು ಭದ್ರವಾಗಿ ಕಟ್ಟಿದವರನ್ನು ಸನ್ಮಾನಿಸುವುದು ಎಂದರೆ ನಾವು ನಮ್ಮ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗೌರವಿಸಿದಂತೆ ಎಂದು ಭಾವಿಸುತ್ತೇನೆ ಎಂದರು. ಸಂಕ್ರಾಂತಿ ವೇಳೆಗೆ ಸರಕಾರದ ಹೊಸ ಜಾಹಿರಾತು ನೀತಿ ಜಾರಿಗೆ ಬರಲಿದೆ ಎಂದು ಕೆವಿಪಿ ಇದೇ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯೋತ್ಸವ ಪುರಸ್ಕೃತರಾದ ಸಿದ್ದರಾಜು, ಬಿ.ಎಂ.ಹನೀಫ್, ಶಾಂತಕುಮಾರ್ ಹಾಗೂ ಮಾಹಿತಿ ಆಯುಕ್ತರಾದ ಮಹೇಶ್ ವಾಳ್ವೇಕರ್, ವೆಂಕಟ್ ಸಿಂಗ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. KUWJ ಅಧ್ಯಕ್ಷರಾದ ಶಿವಾನಂದ ತಗಡೂರು, ಉಪಾಧ್ಯಕ್ಷರಾದ ಮದನ್ ಗೌಡರು, ಕಾರ್ಯದರ್ಶಿ ಸೋಮಶೇಖರ್ ಕೆರಗೋಡು ಸೇರಿ ಸಂಘದ ಮುಖಂಡರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮಾಜಿ ಉಪ ನಿರ್ದೇಶಕ ಜೆ.ಎಂ.ನಿಸಾರ್ ಅಹ್ಮದ್ ನಿಧನ
ಬೆಂಗಳೂರು, ಜ.2: ರಾಜ್ಯ ಸರಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮಾಜಿ ಉಪ ನಿರ್ದೇಶಕ ಜೆ.ಎಂ.ನಿಸಾರ್ ಅಹ್ಮದ್(80) ವಯೋ ಸಹಜ ಅನಾರೋಗ್ಯದಿಂದಾಗಿ ಇಂದಿರಾ ನಗರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಇಂದಿರಾ ನಗರದ ಮಸ್ಜಿದೆ ಉಮ್ಮುಲ್ ಹಸ್ನೈನ್ ಆಡಳಿತ ಸಮಿತಿಯ ಮಾಜಿ ಸದಸ್ಯ, ಹಝ್ರತ್ ಅಬು ಉಬೈದಾ ಬೈತುಲ್ ಮಾಲ್ ಟ್ರಸ್ಟ್ನ ಖಜಾಂಚಿ ಹಾಗೂ ಸಿಲಿಕಾನ್ ಸಿಟಿ ಪಬ್ಲಿಕ್ ಶಾಲೆಯ ಜಂಟಿ ಕಾರ್ಯದರ್ಶಿಯಾಗಿ ನಿಸಾರ್ ಅಹ್ಮದ್ ಸೇವೆ ಸಲ್ಲಿಸುತ್ತಿದ್ದರು. ಆಂಧ್ರಪ್ರದೇಶದ ಶ್ರೀ ಸತ್ಯ ಸಾಯಿ ಜಿಲ್ಲೆಯ ಹಿಂದೂಪುರ ಖಬರಸ್ಥಾನ್ನಲ್ಲಿ ಶನಿವಾರ ಇವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇವರ ನಿಧನಕ್ಕೆ ಸಿಲಿಕಾನ್ ಸಿಟಿ ಪಬ್ಲಿಕ್ ಶಾಲೆಯ ಕಾರ್ಯದರ್ಶಿ ಮುಹಮ್ಮದ್ ಇಬ್ರಾಹೀಂ ಶಫೀಕ್, ಮಸ್ಜಿದೆ ಉಮ್ಮುಲ್ ಹಸ್ನೈನ್ ಅಧ್ಯಕ್ಷ ಅಬ್ದುಲ್ ರಹ್ಮಾನ್ ಖಾನ್ ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಬಳ್ಳಾರಿ ಗಲಭೆಯಲ್ಲಿ ಗಾಯಗೊಂಡ ಬಿಜೆಪಿ ಕಾರ್ಯಕರ್ತರನ್ನು ಭೇಟಿಯಾದ ವಿಜಯೇಂದ್ರ
ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ಕಾಂಗ್ರೆಸ್-ಬಿಜೆಪಿ ಬೆಂಬಲಿಗರ ನಡುವೆ ನಡೆದ ಗಲಭೆಯಲ್ಲಿ ಹಲವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಳ್ಳಾರಿ ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಕಾರ್ಯಕರ್ತರನ್ನು ಭೇಟಿ ಮಾಡಿ, ಅವರ ಆರೋಗ್ಯ ಕ್ಷೇಮ ವಿಚಾರಿಸಿ ಧೈರ್ಯ ತುಂಬಿದ್ದಾರೆ. ನಮ್ಮ ಪಕ್ಷದ ಶಾಸಕ ಜನಾರ್ದನ್ ರೆಡ್ಡಿ ಅವರ ಬಳ್ಳಾರಿಯ ಮನೆ ಎದುರು ನಿನ್ನೆ
ಭಟ್ಕಳ| ನಿಷೇಧಿತ ಎಲೆಕ್ಟ್ರಾನಿಕ್ ಸಿಗರೇಟ್ ಮಾರಾಟ ಪ್ರಕರಣ: ಆರೋಪಿ ಸೆರೆ
ಭಟ್ಕಳ: ನಗರದ ಹೂವಿನ ಚೌಕ್ ಸಮೀಪದ ಮಾರ್ಕೆಟ್ನಲ್ಲಿ ನಿಷೇಧಿತ ಎಲೆಕ್ಟ್ರಾನಿಕ್ ಸಿಗರೇಟ್ ಹಾಗೂ ನಿಕೋಟಿನ್ ಲಿಕ್ವಿಡ್ ರಿಫಿಲ್ಗಳನ್ನು (ವೇಪ್ಸ್) ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಭಟ್ಕಳ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಾರಗದ್ದೆ ನಿವಾಸಿ ಸಿದ್ದಿಕ್ ಅಬ್ದುಲ್ ರೆಹಮಾನ್ @ ಮಸ್ತಾನ್ (58) ಎಂದು ಗುರುತಿಸಲಾಗಿದೆ. ಯಾವುದೇ ಪರವಾನಗಿ ಅಥವಾ ಅನುಮತಿ ಇಲ್ಲದೆ ತನ್ನ ಅಂಗಡಿಯಲ್ಲಿ ನಿಷೇಧಿತ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜನವರಿ 1ರಂದು ರಾತ್ರಿ ಸುಮಾರು 10.30 ಗಂಟೆಗೆ ಪೊಲೀಸರು ನಡೆಸಿದ ದಾಳಿಯಲ್ಲಿ ಒಟ್ಟು 1,38,500 ಮೌಲ್ಯದ ನಿಷೇಧಿತ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಇದರಲ್ಲಿ 76,000 ಮೌಲ್ಯದ 38 ಎಲೆಕ್ಟ್ರಾನಿಕ್ ಸಿಗರೇಟ್ಗಳು ಹಾಗೂ 62,500 ಮೌಲ್ಯದ 125 ನಿಕೋಟಿನ್ ಲಿಕ್ವಿಡ್ ರಿಫಿಲ್ಗಳು ಸೇರಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಭಟ್ಕಳ ಉಪ ಪೊಲೀಸ್ ಅಧೀಕ್ಷಕ ಮಹೇಶ್ ಎಂ.ಕೆ. ಅವರ ಮಾರ್ಗದರ್ಶನದಲ್ಲಿ, ಶಹರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ದಿವಾಕರ ಪಿ.ಎಂ. ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯಿತು. ಕಾರ್ಯಾಚರಣೆಯಲ್ಲಿ ಪಿಎಸ್ಐ ನವೀನ ನಾಯ್ಕ ಸೇರಿದಂತೆ ಸಿಬ್ಬಂದಿಗಳಾದ ಉದಯ ನಾಯ್ಕ, ದೀಪಕ ನಾಯ್ಕ, ಮಹಾಂತೇಶ ಹಿರೇಮಠ, ಕಾಶಿನಾಥ ಕೊಟಗೊಣಸಿ, ಸುರೇಶ್, ರೇವಣಸಿದ್ದಪ್ಪ ಮಾಗಿ, ಜಗದೀಶ ನಾಯ್ಕ ಹಾಗೂ ಸುರೇಶ್ ಮರಾಠಿ ಭಾಗವಹಿಸಿದ್ದರು. ಈ ಕುರಿತು ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು ಉಪನಗರ ಸಾರಿಗೆ ಯೋಜನೆ| 16,876 ಕೋಟಿ ರೂ.ಪರಿಷ್ಕೃತ ಅಂದಾಜಿಗೆ ಸಚಿವ ಸಂಪುಟ ಅನುಮೋದನೆ
ಬೆಂಗಳೂರು,ಜ.2: ಬೆಂಗಳೂರು ಉಪನಗರ ಸಾರಿಗೆ ಯೋಜನೆಯ ಕಾರಿಡಾರ್ 2 ಮತ್ತು 4ರ ಪರಿಷ್ಕೃತ ಅಂದಾಜು ವೆಚ್ಚ 16,876 ಕೋಟಿ ರೂ.ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇತರ ನಿರ್ಣಯಗಳು: ದೇವನಹಳ್ಳಿ ತಾಲೂಕಿನ ಗುಟ್ಟಹಳ್ಳಿ ಗ್ರಾಮದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದಿಂದ ಅನುಮೋದನೆ ನೀಡಲಾಗಿರುವ ವಸತಿ ಬಡಾವಣೆಯಲ್ಲಿನ 3,300.16 ಚ.ಮೀ.ವಿಸ್ತೀರ್ಣದ ನಾಗರಿಕ ಸೌಲಭ್ಯ ನಿವೇಶನವನ್ನು ‘ಕಾಂಗ್ರೆಸ್ ಭವನ ಟ್ರಸ್ಟ್, ಬೆಂಗಳೂರು’ ಇವರಿಗೆ 30 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಮಂಜೂರು ಮಾಡಲು ನಿರ್ಧರಿಸಲಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ 100 ಹಾಸಿಗೆಗಳ ಹೊಸ ತಾಲೂಕು ಸಾರ್ವಜನಿಕ ಆಸ್ಪತ್ರೆಯನ್ನು 40 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ತಾತ್ವಿಕ ಅನುಮೋದನೆ ನೀಡಲಾಗಿದೆ. 6 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ನಾಗರಿಕ ಸೌಲಭ್ಯ ನಿವೇಶನಗಳನ್ನು ಬ್ಲಾಕ್ ಕಾಂಗ್ರೆಸ್ ಕಚೇರಿ ಕಟ್ಟಡ ನಿರ್ಮಾಣ ಮಾಡುವ ಸಲುವಾಗಿ ‘ಕಾಂಗ್ರೆಸ್ ಭವನ ಟ್ರಸ್ಟ್, ಬೆಂಗಳೂರು’ ಇವರಿಗೆ ಗುತ್ತಿಗೆ ಆಧಾರದ ಮೇಲೆ ಮಂಜೂರು ಮಾಡಲು ನಿರ್ಧಾರಿಸಲಾಗಿದೆ. ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅನುಮೋದನೆಗೊಂಡ ಶೇಖರೋಜಾ ಸರ್ವೆ ನಂ.111/2ರಲ್ಲಿನ 2338.91 ಚ.ಮೀ ವಿಸ್ತೀರ್ಣವುಳ್ಳ ನಾಗರಿಕ ಸೌಲಭ್ಯ ನಿವೇಶನ ಪಿ.ಎಲ್-01 ಅನ್ನು ಶಿಕ್ಷಕರ ಭವನ ನಿರ್ಮಿಸಲು ರಾಜ್ಯ ಪ್ರೌಢ ಶಾಲಾ ಶಿಕ್ಷಕರ ಸಂಘ ಹಾಗೂ ಕಲಬುರಗಿ ಜಿಲ್ಲಾ ಸಂಘಕ್ಕೆ ರಿಯಾಯಿತಿ ದರದಲ್ಲಿ ಹಂಚಿಕೆ ಮಾಡಲು ನಿರ್ಧರಿಸಲಾಗಿದೆ. 2025-26ನೆ ಸಾಲಿಗೆ ರಾಜ್ಯದ ಸರಕಾರಿ ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢ ಶಾಲೆಗಳಿಗೆ ಅಗತ್ಯವಿರುವ 41,685 ಪಿಠೋಪಕರಣಗಳನ್ನು ಕೆಎಸ್ಎಫ್ಐಸಿಯಿಂದ ನೇರ ಖರೀದಿಯ ಮೂಲಕ ಅಂದಾಜು 8.67 ಕೋಟಿ ರೂ.ವೆಚ್ಚದಲ್ಲಿ ಮತ್ತು ಅಲ್ಪಾವಧಿಯ ಟೆಂಡರ್ ಮೂಲಕ ಅಂದಾಜು 26.67 ಕೋಟಿ ರೂ.ವೆಚ್ಚದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. 100 ಪಶುವೈದ್ಯಕೀಯ ಸಂಸ್ಥೆಗಳ ನೂತನ ಕಟ್ಟಡಗಳನ್ನು 50 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ನಬಾರ್ಡ್ ಅನುದಾನದೊಂದಿಗೆ ನಿರ್ಮಿಸಲು ಹಾಗೂ ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಮಗಳು ಚೈತನ್ಯಾ ಮಹಾಂತೇಶ್ ಅವರಿಗೆ ವಿಶೇಷ ಪ್ರಕರಣವೆಂದು ಪರಿಗಣಿಸಿ, ರಾಜ್ಯ ಸರಕಾರ ಸಚಿವಾಲಯದ ‘ಗ್ರೂಪ್ ಸಿ’ ಸೇವೆಗೆ ಅನುಕಂಪದ ಆಧಾರದ ಮೇಲೆ ನೇಮಕ ಮಾಡಲು ನಿರ್ಧರಿಸಲಾಗಿದೆ. ಹೈದರಾಬಾದ್ನ ಐಐಟಿ ಸಹಯೋಗದೊಂದಿಗೆ ಹೊಸ ‘ಕರ್ನಾಟಕ ಜಿಎಸ್ಟಿ ಅನಲೈಟಿಕ್ಸ್ ಪೋರ್ಟಲ್’ 19 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಹಾಗೂ ಕಾರ್ಯಗತಗೊಳಿಸಲು ಅನುಮೋದನೆ ನೀಡಲಾಗಿದೆ.
EVM ಬಗ್ಗೆ ಹಳೆಯ ಸಮೀಕ್ಷೆ ಮುಂದಿಟ್ಟು ‘ವಿಶ್ವಾಸ’ ತೋರಿಸುವ ಪ್ರಯತ್ನ?
‘ಮತಗಳ್ಳತನ’ ಆರೋಪಗಳ ಬೆನ್ನಲ್ಲೇ ಕರ್ನಾಟಕದ ಸಮೀಕ್ಷೆ ವಿವಾದ
ಪ್ರವಾದಿ ಮುಹಮ್ಮದ್ ಅವರ ಆಶಯದಂತೆ ಮನುಕುಲದ ಏಳಿಗೆಗೆ ಶ್ರಮಿಸೋಣ: ಡಾ. ಜಯಬಸವಾನಂದ ಸ್ವಾಮೀಜಿ
ಯುನಿವೆಫ್ನ ‘ಅರಿಯಿರಿ ಮನುಕುಲದ ಪ್ರವಾದಿಯನ್ನು’ ಅಭಿಯಾನ ಸಮಾರೋಪ
ಬಳ್ಳಾರಿ ಗುಂಪು ಘರ್ಷಣೆ | ಹಲ್ಲೆ ನಡೆಸಿ ನನ್ನನ್ನು ಕೊಲ್ಲುವ ಪ್ರಯತ್ನ: ಜನಾರ್ಧನ ರೆಡ್ಡಿ
ಕಾರ್ಯಕರ್ತನ ಸಾವಿಗೆ ಶಾಸಕ ಭರತ್ ರೆಡ್ಡಿ ಕಾರಣ: ಶ್ರೀರಾಮುಲು ಆರೋಪ
ಮೋದಿ ಸರಕಾರ ಶುದ್ಧ ಗಾಳಿ ಅಥವಾ ನೀರು ಒದಗಿಸುವಲ್ಲಿ ವಿಫಲವಾಗಿದೆ: ಖರ್ಗೆ
ಹೊಸದಿಲ್ಲಿ, ಜ. 2: ಪ್ರಧಾನಿ ನರೇಂದ್ರ ಮೋದಿ ಅವರು ‘ಜಲಜೀವನ್ ಮಿಷನ್’ ಅನ್ನು ನಿರಂತರವಾಗಿ ಪ್ರಚಾರ ಮಾಡುತ್ತಿದ್ದಾರೆ. ಆದರೆ, ಇಂದೋರ್ನಲ್ಲಿ ಕಲುಷಿತ ನೀರು ಸೇವಿಸಿ ಸಂಭವಿಸಿದ ಸಾವಿನ ಕುರಿತು ಅವರು ಮೌನ ವಹಿಸಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಆರೋಪಿಸಿದ್ದಾರೆ. ಮೋದಿ ಸರಕಾರ ಹಾಗೂ ಬಿಜೆಪಿ ದೇಶಕ್ಕೆ ಶುದ್ಧ ಗಾಳಿ ಅಥವಾ ಶುದ್ಧ ನೀರು ಒದಗಿಸುವಲ್ಲಿ ವಿಫಲವಾಗಿವೆ ಎಂದು ಅವರು ಹೇಳಿದರು. ಕೇಂದ್ರ ಸರಕಾರದ ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆಯಲ್ಲಿ ಸತತ ಎಂಟು ಬಾರಿ ಅತ್ಯಂತ ಸ್ವಚ್ಛ ನಗರ ಪ್ರಶಸ್ತಿ ಪಡೆದಿರುವ ಇಂದೋರ್ ನಗರದಲ್ಲಿ ಈ ಘಟನೆ ಸಂಭವಿಸಿರುವುದು ನಾಚಿಕೆಗೇಡಿನ ವಿಷಯ ಎಂದು ಖರ್ಗೆ ಹೇಳಿದ್ದಾರೆ. ಬಿಜೆಪಿಯ ಅಸಮರ್ಥತೆಯಿಂದಾಗಿ ಅಲ್ಲಿನ ಜನರು ಶುದ್ಧ ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ ಎಂದು ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. ಸಚಿವರನ್ನು ಪ್ರಶ್ನಿಸಿದರೆ ಅವರು ನಿಂದಿಸುತ್ತಾರೆ ಹಾಗೂ ಬೆದರಿಸುತ್ತಾರೆ. ಅಧಿಕಾರದ ಮದದಿಂದ ಬೀಗುತ್ತಿರುವ ಅವರು ಪತ್ರಕರ್ತರನ್ನೇ ದೂಷಿಸುತ್ತಿದ್ದಾರೆ ಎಂದು ಖರ್ಗೆ ಆರೋಪಿಸಿದ್ದಾರೆ. ಬಿಜೆಪಿ ಸರಕಾರದ ದುರಾಡಳಿತವನ್ನು ಮುಚ್ಚಿ ಹಾಕಲು ಸಂಪೂರ್ಣ ಆಡಳಿತ ಯಂತ್ರ ಕಾರ್ಯಪ್ರವೃತ್ತವಾಗಿದೆ ಎಂದು ಅವರು ತಿಳಿಸಿದ್ದಾರೆ.
ಜವಳಿ ನೀತಿಯಲ್ಲಿ ಕೈಮಗ್ಗ ಉದ್ದಿಮೆಗೆ ಉತ್ತೇಜನ: ಸಚಿವ ಶಿವಾನಂದ ಪಾಟೀಲ್
ಬೆಂಗಳೂರು, ಜ.2: ಕೈಮಗ್ಗ ಉತ್ಪನ್ನಗಳ ಉತ್ತೇಜನಕ್ಕೆ ಪೂರಕವಾದ ಅಂಶಗಳನ್ನು ನೂತನ ಜವಳಿ ನೀತಿಯಲ್ಲಿ ಅಳವಡಿಸಲಾಗುವುದು ಎಂದು ಜವಳಿ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ. ಶುಕ್ರವಾರ ಮಹಾಲಕ್ಷ್ಮೀ ಲೇಔಟ್ನ ರಾಣಿ ಅಬ್ಬಕ್ಕ ಮೈದಾನದಲ್ಲಿ ಜವಳಿ ಮಂತ್ರಾಲಯ, ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಆಯೋಜಿಸಿರುವ 15 ದಿನಗಳ ರಾಷ್ಟ್ರೀಯ ಕೈಮಗ್ಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹೊಸತನ ಅಳವಡಿಸಿಕೊಂಡರೆ ಮಾತ್ರ ಕೈಮಗ್ಗ ಉದ್ಯಮಕ್ಕೆ ಭವಿಷ್ಯ ಇದೆ. ಈ ನಿಟ್ಟಿನಲ್ಲಿ ಪೂರಕ ಅಂಶಗಳನ್ನು ಜವಳಿ ನೀತಿಯಲ್ಲಿ ಸೇರ್ಪಡೆ ಮಾಡಲಾಗುವುದು ಎಂದರು. ನೇಕಾರ ಸಮ್ಮಾನ್ ಯೋಜನೆಯಲ್ಲಿ ನೀಡುತ್ತಿದ್ದ 2 ಸಾವಿರ ರೂ. ಆರ್ಥಿಕ ನೆರವನ್ನು ರಾಜ್ಯ ಸರಕಾರ 5 ಸಾವಿರ ರೂ.ಗಳಿಗೆ ಹೆಚ್ಚಳ ಮಾಡಿದೆ. 2024-25ನೇ ಸಾಲಿನಲ್ಲಿ 1,17,459 ನೇಕಾರರ ಬ್ಯಾಂಕ್ ಖಾತೆಗಳಿಗೆ 58.69 ಕೋಟಿ ರೂ.ಗಳನ್ನು ಜಮಾ ಮಾಡಲಾಗಿದೆ. 2025-26ನೇ ಸಾಲಿನಲ್ಲಿ 1.2 ಲಕ್ಷ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರನ್ನು ಈ ಯೋಜನೆಯಲ್ಲಿ ಅಳವಡಿಸಲು 60 ಕೋಟಿ ರೂ. ಹಂಚಿಕೆ ಮಾಡಲಾಗಿದ್ದು, ಮೊದಲ ಕಂತಿನಲ್ಲಿ ತಲಾ 2,500 ರೂ.ಗಳಂತೆ 29.99 ಕೋಟಿ ರೂ.ಗಳನ್ನು ಡಿಬಿಟಿ ಮೂಲಕ ಬಿಡುಗಡೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು. ನೇಕಾರರ ಮಕ್ಕಳ ಉನ್ನತ ಶಿಕ್ಷಣ ಪ್ರೋತ್ಸಾಹದ ದೃಷ್ಟಿಯಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತಿದ್ದು, 2024-25ನೇ ಸಾಲಿನಲ್ಲಿ 2,843 ವಿದ್ಯಾರ್ಥಿಗಳಿಗೆ 1.65 ಕೋಟಿ ರೂ. ಹಾಗೂ 2025-26ನೇ ಸಾಲಿನಲ್ಲಿ ಇದುವರೆಗೆ 1,137 ವಿದ್ಯಾರ್ಥಿಗಳಿಗೆ 62.62 ಲಕ್ಷ ರೂ. ನೀಡಲಾಗಿದೆ. ಕೈಮಗ್ಗ ಉತ್ಪನ್ನಗಳ ಮಾರಾಟವನ್ನು ಉತ್ತೇಜಿಸಲು ಪ್ರತಿಶತ 20ರಷ್ಟು ರಿಯಾಯಿತಿ ನೀಡಲಾಗುತ್ತಿದ್ದು, 2024-25ನೇ ಸಾಲಿನಲ್ಲಿ ಈ ಉದ್ದೇಶಕ್ಕೆ 5.04 ಕೋಟಿ ರೂ., 2025-26ನೇ ಸಾಲಿನಲ್ಲಿ 54.93 ಲಕ್ಷ ರೂ.ಗಳನ್ನು ಸರಕಾರ ಕೈಮಗ್ಗ ನೇಕಾರರ ಸಹಕಾರ ಸಂಘ ಹಾಗೂ ಕೈಮಗ್ಗ ಮಹಾಮಂಡಳಗಳಿಗೆ ನೀಡಲಾಗಿದೆ ಎಂದು ಶಿವಾನಂದ ಪಾಟೀಲ್ ತಿಳಿಸಿದರು. ವಿದ್ಯುತ್ ಮಗ್ಗಗಳಿಗೆ ಹತ್ತು ಎಚ್ಪಿವರೆಗೆ ಪ್ರತಿಶತ ನೂರರಷ್ಟು ವಿದ್ಯುತ್ ರಿಯಾಯಿತಿ ನೀಡಲಾಗಿದೆ. 10.1 ರಿಂದ 20 ಎಚ್ಪಿ ವರೆಗಿನ ಮಗ್ಗಗಳಿಗೆ ಪ್ರತಿ ಯೂನಿಟ್ಗೆ 1.25 ರೂ.ಗಳಂತೆ ರಿಯಾಯಿತಿ ದರದಲ್ಲಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಇದುವರೆಗೆ ವಿದ್ಯುತ್ ಸಹಾಯ ಯೋಜನೆಗೆ 252.97 ಕೋಟಿ ರೂ. ಗಳನ್ನು ಜವಳಿ ಇಲಾಖೆಯಿಂದ ಇಂಧನ ಇಲಾಖೆಗೆ ಭರಿಸಲಾಗಿದೆ ಎಂದು ಹೇಳಿದರು. ಕಲಬುರಗಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ಸಹಭಾಗಿತ್ವದಲ್ಲಿ ಸಮಗ್ರ ಜವಳಿ ಪಾರ್ಕ್ ನಿರ್ಮಾಣ ಮಾಡಲಾಗುತ್ತಿದ್ದು, ಮೂಲ ಸೌಕರ್ಯ ಕಲ್ಪಿಸಲು 390.26 ಕೋಟಿ ರೂ. ಬಿಡುಗಡೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಜವಳಿ ಪಾರ್ಕ್ಗೆ 180 ಮೆಗಾ ವ್ಯಾಟ್ ವಿದ್ಯುತ್ ಪೂರೈಕೆಗೆ ಪವರ್ ಸ್ಟೇಷನ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಈ ಯೋಜನೆಗೆ ನಂದಿಕೂರು ಗ್ರಾಮದ ಎಸ್ಟಿಪಿಯಿಂದ 12.09 ಎಂಎಲ್ಡಿ ನೀರು ಪೂರೈಕೆ ಮಾಡಲು ಸಮೀಕ್ಷೆ ಕೈಗೊಂಡಿದ್ದು, ಪೈಪ್ಲೈನ್ ಡಿಸೈಜ್ ಕಾರ್ಯ ಪ್ರಗತಿಯಲ್ಲಿದೆ ಎಂದು ಶಿವಾನಂದ ಪಾಟೀಲ್ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಶಾಸಕ ಕೆ.ಗೋಪಾಲಯ್ಯ, ಕಾವೇರಿ ಹ್ಯಾಂಡ್ಲೂಮ್ ಅಧ್ಯಕ್ಷ ಜೆ.ಬಿ.ಗಣೇಶ್, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಕಾರ್ಯದರ್ಶಿ ರೋಹಿಣಿ ಸಿಂಧೂರಿ, ಜವಳಿ ಅಭಿವೃದ್ಧಿ ಆಯುಕ್ತೆ ಕೆ.ಜ್ಯೋತಿ, ಕೆಎಸ್ಟಿಐಡಿಸಿ ಅಧ್ಯಕ್ಷ ಚೇತನ್, ಉಪಾಧ್ಯಕ್ಷ ಬಾಲಾಜಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಭಾರತೀಯ ಮಹಿಳಾ ಹಾಕಿ ತಂಡದ ಮುಖ್ಯ ಕೋಚ್ ಆಗಿ ಮರಳಿದ ಶೋರ್ಟ್ ಮರೀನ್
ಹೊಸದಿಲ್ಲಿ, ಜ. 2: ಭಾರತೀಯ ಮಹಿಳಾ ಹಾಕಿ ತಂಡದ ಮಾಜಿ ಮುಖ್ಯ ಕೋಚ್, ನೆದರ್ಲ್ಯಾಂಡ್ಸ್ನ ಶೋರ್ಟ್ ಮರೀನ್ ಮತ್ತೆ ತಂಡದ ಮುಖ್ಯ ಕೋಚ್ ಆಗಿ ವಾಪಸಾಗಲಿದ್ದಾರೆ. ಈ ವಿಷಯವನ್ನು ಹಾಕಿ ಇಂಡಿಯಾ ಶುಕ್ರವಾರ ಅಧಿಕೃತವಾಗಿ ಖಚಿತಪಡಿಸಿದೆ. ಮಹಿಳಾ ತಂಡದ ಮುಖ್ಯ ಕೋಚ್ ಆಗಿದ್ದ ಹರೇಂದ್ರ ಸಿಂಗ್ ರಾಜೀನಾಮೆ ನೀಡಿದ ಒಂದು ತಿಂಗಳ ಬಳಿಕ ಈ ಬೆಳವಣಿಗೆ ನಡೆದಿದೆ. ಹರೇಂದ್ರ ಸಿಂಗ್ ಕಿರುಕುಳ ನೀಡುತ್ತಾರೆ ಮತ್ತು ಅವರ ತರಬೇತಿ ಪರಿಣಾಮಕಾರಿಯಾಗಿಲ್ಲ ಎಂದು ಆಟಗಾರ್ತಿಯರು ದೂರಿದ ಬಳಿಕ ಅವರು ರಾಜೀನಾಮೆ ನೀಡಿದ್ದರು. ಮರೀನ್ ಉಸ್ತುವಾರಿಯಲ್ಲಿದ್ದ ಭಾರತೀಯ ಮಹಿಳಾ ತಂಡವು 2021ರ ಟೋಕಿಯೊ ಒಲಿಂಪಿಕ್ಸ್ನಲ್ಲಿ ಐತಿಹಾಸಿಕ ನಾಲ್ಕನೇ ಸ್ಥಾನವನ್ನು ಪಡೆದಿತ್ತು. ಹರೇಂದ್ರ ಸಿಂಗ್ ರಾಜೀನಾಮೆಗೆ ಮುನ್ನವೇ ಅವರ ಸ್ಥಾನಕ್ಕೆ ಮರೀನ್ ಅವರನ್ನು ನೇಮಿಸುವ ಕುರಿತು ಮಾತುಕತೆ ನಡೆದಿತ್ತು ಎನ್ನಲಾಗಿದೆ. ಈಗ ಮರೀನ್ ಮೂರು ತಿಂಗಳ ಅವಧಿಯಲ್ಲಿ ತಮ್ಮ ‘ಮ್ಯಾಜಿಕ್’ ಅನ್ನು ಪುನರಾವರ್ತಿಸುವ ಕಠಿಣ ಸವಾಲನ್ನು ಎದುರಿಸುತ್ತಿದ್ದಾರೆ. ಮಾರ್ಚ್ನಲ್ಲಿ ಹೈದರಾಬಾದ್ನಲ್ಲಿ ನಡೆಯಲಿರುವ ವಿಶ್ವಕಪ್ ಅರ್ಹತಾ ಪಂದ್ಯಗಳಲ್ಲಿ ಭಾರತೀಯ ಮಹಿಳಾ ತಂಡ ಪಾಲ್ಗೊಳ್ಳಲಿದೆ. ಹಾಕಿ ಇಂಡಿಯಾದೊಂದಿಗೆ ಕೋಚ್ ಸಹಿ ಹಾಕಿರುವ ಗುತ್ತಿಗೆಯಂತೆ, ಅವರ ಎರಡನೇ ಅವಧಿ 2028ರ ಲಾಸ್ ಏಂಜಲಿಸ್ ಒಲಿಂಪಿಕ್ಸ್ವರೆಗೆ ಇರುತ್ತದೆ. ಅವರು ತಮ್ಮೊಂದಿಗೆ ಹಲವು ಸಹಾಯಕ ಸಿಬ್ಬಂದಿಯನ್ನೂ ಕರೆತಂದಿದ್ದಾರೆ. ಅರ್ಜೆಂಟೀನಾದ ಮಾಜಿ ರಕ್ಷಣಾ ಆಟಗಾರ ಹಾಗೂ ಒಲಿಂಪಿಯನ್ ಮಟಿಯಾಸ್ ವಿಲ್ಲಾ ಎದುರಾಳಿ ಆಟಗಾರರ ಬಲಾಬಲಗಳನ್ನು ವಿಶ್ಲೇಷಿಸುವ ಅನಾಲಿಟಿಕಲ್ ಕೋಚ್ ಆಗಿ ತಂಡವನ್ನು ಸೇರಲಿದ್ದಾರೆ. ವೇನ್ ಲೊಂಬಾರ್ಡ್ ಅತ್ಲೆಟಿಕ್ ಪರ್ಫಾರ್ಮನ್ಸ್ನ ಮುಖ್ಯಸ್ಥರಾಗಿ ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಭಾರತೀಯ ಆಟಗಾರರ ಅಮೋಘ ದೈಹಿಕ ಕ್ಷಮತೆಯ ಯಶಸ್ಸಿನ ಶ್ರೇಯಸ್ಸು ಅವರಿಗೆ ನೀಡಲಾಗಿತ್ತು. ದಕ್ಷಿಣ ಆಫ್ರಿಕಾದ ರೋಡೆಟ್ ಯಿಲ್ ಮತ್ತು ಸಿಯಾರಾ ಯಿಲ್ ವೈಜ್ಞಾನಿಕ ಸಲಹೆಗಾರರಾಗಿ ಲೊಂಬಾರ್ಡ್ ಅವರಿಗೆ ಸಹಾಯ ಮಾಡಲಿದ್ದಾರೆ.
ಉಡುಪಿ: ಕುರ್ಚಿಯಲ್ಲಿ ಕುಳಿತಲ್ಲಿಯೇ ಹೋಂ ನಸ್೯ ಮೃತ್ಯು
ಉಡುಪಿ: ಕುರ್ಚಿಯ ಮೇಲೆ ಕೂತಲ್ಲಿಯೇ ಹೋಮ್ ನರ್ಸೊಬ್ಬರು ಮೃತಪಟ್ಟ ಘಟನೆ ಕಿನ್ನಿಮೂಲ್ಕಿ ಗರಡಿರಸ್ತೆಯಲ್ಲಿ ಶುಕ್ರವಾರ ನಡೆದಿದೆ. ಮೃತರನ್ನು ಹೊಮ್ ನರ್ಸ್ ಪ್ರದೀಪ್ ಅಜ್ಜರಕಾಡು(55) ಎಂದು ಗುರುತಿಸಲಾಗಿದೆ. ಇವರು ತನ್ನ ಬಾಡಿಗೆ ಮನೆಯಲ್ಲಿ ಕುರ್ಚಿಯಲ್ಲಿ ಕುಳಿತು ವಿಶ್ರಾಂತಿ ಪಡೆಯುತ್ತಿದ್ದು ಇದೇ ವೇಳೆ ತೀವ್ರ ಅಸ್ವಸ್ಥಗೊಂಡಿದ್ದರೆನ್ನಲಾಗಿದೆ. ತಕ್ಷಣ ತಾಳಿಯರು ನೀಡಿದ ಮಾಹಿತಿಯಂತೆ ಆಗಮಿಸಿದ ಸಮಾಜಸೇವಕ ನಿತ್ಯಾನಂದ ಒಳಕಾಡು ಪ್ರದೀಪ್ ಅವರನ್ನು ಆಂಬುಲೆನ್ಸ್ ಮೂಲಕ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದು, ಅಲ್ಲಿ ಪರಿಕ್ಷೀಸಿದ ವೈದ್ಯರಿಂದ ಪ್ರದೀಪ್ ಮೃತಪಟ್ಟಿರುವುದಾಗಿ ತಿಳಿಸಿದರು. ಮೃತ ವ್ಯಕ್ತಿ ಸಮಾಜಮುಖಿಯಾಗಿದ್ದು, ಸಮಾಜಸೇವಕ ನಿತ್ಯಾನಂದ ಒಳಕಾಡುವರು ನೇತ್ರತ್ವ ನಡೆಯುವ ಅನಾಥ ಶವಗಳ ಅಂತ್ಯಸಂಸ್ಕಾರ ನೇರವೆರಿಸುವ ಕಾರ್ಯದಲ್ಲಿ ಭಾಗಿಯಾಗುತ್ತಿದ್ದರು.
ಜ.3-4: ತಣ್ಣೀರುಬಾವಿ ಮ್ಯೂಸಿಕ್ ಫೆಸ್ಟಿವಲ್; ವಾಹನ ಪಾರ್ಕಿಂಗ್ ಸ್ಥಳ ನಿಗದಿ, ಸಂಚಾರ ನಿಯಮ ಪಾಲನೆಗೆ ಸೂಚನೆ
ಮಂಗಳೂರು: ದ.ಕ. ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿರುವ ಕರಾವಳಿ ಉತ್ಸವ ಕಾರ್ಯಕ್ರಮದ ಪ್ರಯುಕ್ತ ತಣ್ಣೀರುಬಾವಿ ಬೀಚ್ನಲ್ಲಿ ಜ.3 ಮತ್ತು 4ರಂದು ಸಂಜೆ ಮ್ಯೂಸಿಕ್ ಫೆಸ್ಟಿವಲ್, ಕೈಲಾಶ್ ಖೇರ್ ನೈಟ್, ವಿಜಯ ಪ್ರಕಾಶ್ ನೈಟ್ ಕಾರ್ಯಕ್ರಮಗಳು ನಡೆಯಲಿದೆ. ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಸೂಚನೆ ನೀಡಿದೆ. ಕಾರ್ಯಕ್ರಮಗಳು ನಡೆಯುವ ಸಮಯ ಕುದುರೆಮುಖ ಜಂಕ್ಷನ್ನಿಂದ ತಣ್ಣೀರುಬಾವಿ ಬೀಚ್ವರೆಗಿನ ರಸ್ತೆಯ ಎರಡು ಬದಿಗಳಲ್ಲಿ ಯಾವುದೇ ವಾಹನಗಳನ್ನು ಪಾರ್ಕ್ ಮಾಡುವಂತಿಲ್ಲ. ಸಾರ್ವಜನಿಕರು ತನ್ನ ವಾಹನಗಳನ್ನು ತಣ್ಣೀರುಬಾವಿ ಬೀಚ್ ರಸ್ತೆಯಲ್ಲಿ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ನಿಲ್ಲಿಸಬೇಕು. ಕಾರ್ಯಕ್ರಮದ ಮಾರ್ಗದಲ್ಲಿ ವಾಹನ ನಿಲುಗಡೆಯ ಸೂಚನಾ ಫಲಕದ ಫ್ಲೆಕ್ಸ್ಗಳನ್ನು ಅಳವಡಿಸಿದ್ದು, ಮಾರ್ಗಸೂಚಿಯನ್ನು ಅನುಸರಿಸುವುದು ಹಾಗೂ ಕಾರ್ಯಕ್ರಮ ಪ್ರಾರಂಭವಾಗುವ ಮುಂಚಿತವಾಗಿ ಬಂದು ನಿರ್ಧಿಷ್ಟ ಸ್ಥಳದಲ್ಲಿ ನಿಲ್ಲಿಸಬೇಕು ಎಂದು ಸೂಚನೆಯಲ್ಲಿ ತಿಳಿಸಲಾಗಿದೆ. ನಿಗದಿ ಪಡಿಸಿರುವ ಪಾರ್ಕಿಂಗ್ ಸ್ಥಳಗಳು:- 1. ಫೀಜಾ ಕ್ರಿಕೆಟ್ ಗ್ರೌಂಡ್ (ಹೊಟೇಲ್ ನಿತ್ಯಾಧರ ಮುಂಭಾಗದ ಪಾಕಿರ್ಂಗ್ ಮೈದಾನ) 2. ಡೆಲ್ಟಾ ಮೈದಾನ ಪಾರ್ಕಿಂಗ್ 3. ರಫ್ತಾರ್ ಪಾರ್ಕಿಂಗ್ 4. ಬೆಂಗ್ರೆ ತಣ್ಣೀರುಬಾವಿ ಮಸೀದಿ ಪಾರ್ಕಿಂಗ್ ಸ್ಥಳ 5. ಕಟ್ಟೆ ಗ್ರೌಂಡ್ ಪಾರ್ಕಿಂಗ್ ಸ್ಥಳ 6. ದೋಸ್ತ್ ಗ್ರೌಂಡ್ 7. ಫಾತಿಮ ಚರ್ಚ್ ಪಾರ್ಕಿಂಗ್ 8. ಎ.ಜೆ ಶೆಟ್ಟಿ ರವರ ಗ್ರೌಂಡ್ (ಎಸ್.ಇ.ಝ್ ರಸ್ತೆ) ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರು ಸುಲ್ತಾನ್ ಬತ್ತೇರಿಯಿಂದ ಫೇರಿಯನ್ನು ಬಳಸಬಹುದಾಗಿದೆ. ಕಾರ್ಯಕ್ರಮಗಳ ಸಮಯ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾಧ್ಯತೆಗಳು ಇರುವುದರಿಂದ ಸಾರ್ವಜನಿಕರು ರಸ್ತೆಯಲ್ಲಿ ಅನಾವಶ್ಯಕವಾಗಿ ನಿಲ್ಲದೆ ಶಿಸ್ತನ್ನು ಕಾಪಾಡಬೇಕು. ಪೊಲೀಸರು ನೀಡುವ ಸೂಚನೆಗಳನ್ನು ಪಾಲಿಸಲು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸೂಚನೆ ನೀಡಿದ್ದಾರೆ.
ಮಮ್ದಾನಿಯಿಂದ ಉಮರ್ ಖಾಲಿದ್ ಗೆ ಪತ್ರ | ಆಂತರಿಕ ವ್ಯವಹಾರಗಳಲ್ಲಿ ಬಾಹ್ಯ ಹಸ್ತಕ್ಷೇಪವನ್ನು ಭಾರತ ಸಹಿಸದು: ಬಿಜೆಪಿ
ಹೊಸದಿಲ್ಲಿ, ಜ. 2: ಜೈಲಿನಲ್ಲಿರುವ ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಗೆ ಪತ್ರ ಬರೆಯುವ ಮೂಲಕ ನ್ಯೂಯಾರ್ಕ್ ನಗರದ ಮೇಯರ್ ರೆಹ್ರಾನ್ ಮಮ್ದಾನಿ ಅವರು ಭಾರತದ ಆಂತರಿಕ ವಿಷಯಗಳಲ್ಲಿ ಹಸ್ತಕ್ಷೇಪ ನಡೆಸುತ್ತಿದ್ದಾರೆ ಎಂದು ಬಿಜೆಪಿ ಶುಕ್ರವಾರ ಆರೋಪಿಸಿದೆ. ಅಂತಹ ಯಾವುದೇ ಪ್ರಯತ್ನವನ್ನು ಭಾರತ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದೆ. ಭಾರತದ ಆಂತರಿಕ ವಿಷಯಗಳ ಬಗ್ಗೆ ಪ್ರತಿಕ್ರಿಯಿಸಿರುವ ಮಮ್ದಾನಿಯ ನಿಲುವನ್ನು ಪ್ರಶ್ನಿಸಿದ ಬಿಜೆಪಿಯ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ, ಇಂತಹ ಪ್ರಯತ್ನಗಳನ್ನು ನಡೆಸುವುದರ ವಿರುದ್ಧ ನ್ಯೂಯಾರ್ಕ್ ನಗರದ ಮೇಯರ್ರಿಗೆ ಎಚ್ಚರಿಕೆ ನೀಡಿದ್ದಾರೆ. ‘‘ಒಂದು ವೇಳೆ ಭಾರತದ ಸಾರ್ವಭೌಮತೆಗೆ ಸವಾಲು ಬಂದರೆ, ಎಲ್ಲಾ 140 ಕೋಟಿ ಭಾರತೀಯರು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಡಿಯಲ್ಲಿ ಒಗ್ಗೂಡಲಿದ್ದಾರೆ’’ ಎಂದು ಅವರು ಹೇಳಿದ್ದಾರೆ. ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಭಾರತದ ಜನತೆಗೆ ಸಂಪೂರ್ಣ ನಂಬಿಕೆ ಇದೆ ಎಂದು ಭಾಟಿಯಾ ತಿಳಿಸಿದ್ದಾರೆ.
ಬಳ್ಳಾರಿ | ಮಹಿಳೆಯ ಮೃತ ದೇಹ ಪತ್ತೆ : ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ, ಜ. 2: ನಗರದ ಸತ್ಯಂ ಕಾಲೇಜಿನ ಮುಂಭಾಗದಲ್ಲಿ ಎಚ್ಎಲ್ಸಿ ಉಪ ಕಾಲುವೆಯಲ್ಲಿ ಸುಮಾರು 60ರಿಂದ 65 ವರ್ಷದ ಮೃತ ಮಹಿಳೆಯೊಬ್ಬರ ಮೃತದೇಹ ಜ.2ರಂದು ತೇಲಿಕೊಂಡು ಬಂದಿದ್ದು, ವಾರಸುದಾರರ ಪತ್ತೆಗೆ ಸಹರಿಸಬೇಕು ಎಂದು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ಠಾಣಾಧಿಕಾರಿ ಮನವಿ ಮಾಡಿದ್ದಾರೆ. ಚಹರೆ ಗುರುತು: ಎತ್ತರ ಅಂದಾಜು 5.4 ಅಡಿ, ಕೆಂಪು ಮೈಬಣ್ಣ, ದುಂಡು ಮುಖ, ಹಸಿರು ಬಣ್ಣದ ಸೀರೆ ಮತ್ತು ಕಪ್ಪು ಬಣ್ಣದ ಕುಪ್ಪಸ, ಎರಡು ಕೈಗಳಿಗೆ ಹಸಿರು ಬಳೆ ಧರಿಸಿರುತ್ತಾರೆ. ಅನಾಮಧೇಯ ಮೃತ ಮಹಿಳೆಯ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392258100 ಅಥವಾ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ಪಿಐ ದೂ.08392-276461 ಹಾಗೂ ಮೊ.9480803049 ಗೆ ಸಂಪರ್ಕಿಸಬಹುದು ಎಂದು ಪ್ರಕಟನೆ ಯಲ್ಲಿ ತಿಳಿಸಿದ್ದಾರೆ.
ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಅಶ್ಲೀಲ ಸಂದೇಶ ರವಾನೆ: ಇಬ್ಬರು ಆರೋಪಿಗಳ ಬಂಧನ
ಬೆಂಗಳೂರು, ಜ.2: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶ ಹಾಗೂ ಅವಹೇಳನಾಕಾರಿ ಕಾಮೆಂಟ್ ಮಾಡಿದ ಆರೋಪದಡಿ ಇಬ್ಬರು ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಾಣಾವರ ನಿವಾಸಿ ಆಟೋ ಚಾಲಕ ಚಂದ್ರಶೇಖರ್(45) ಹಾಗೂ ದಾವಣಗೆರೆಯ ಸಾಫ್ಟ್ವೇರ್ ಇಂಜಿನಿಯರ್ ನಿತಿನ್(31) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಈ ಮೊದಲು ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಹಾಗೂ ಕುಟುಂಬದ ಸದಸ್ಯರ ಕುರಿತು ಅಶ್ಲೀಲ ಕಮೆಂಟ್, ಪೋಸ್ಟ್ಗಳನ್ನು ಮಾಡಲಾಗುತ್ತಿದೆ ಎಂದು ವಿಜಯಲಕ್ಷ್ಮೀ ಆರೋಪಿಸಿದ್ದರು. ಈ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ತೆರಳಿ ಸುಮಾರು 18 ಸಾಮಾಜಿಕ ಜಾಲತಾಣ ಖಾತೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು. ಈ ದೂರಿನನ್ವಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿತ್ತು. ಸದ್ಯ ಇಬ್ಬರನ್ನು ಬಂಧಿಸಲಾಗಿದ್ದು, ವಿಚಾರಣೆ ಕೈಗೊಳ್ಳಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.
ಯಾದಗಿರಿ | ಕೆಪಿಎಸ್ ಮ್ಯಾಗ್ನೆಟ್ ಯೋಜನೆಗೆ ವಿರೋಧ : ನಾಲ್ವಡಗಿಯಲ್ಲಿ AIDSO ನೇತೃತ್ವದಲ್ಲಿ ಪ್ರತಿಭಟನೆ
ಯಾದಗಿರಿ : ಸರ್ಕಾರಿ ಶಾಲೆಗಳನ್ನು ಮುಚ್ಚುವ ಉದ್ದೇಶದ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ವಿರೋಧಿಸಿ ಶುಕ್ರವಾರ ನಾಲ್ವಡಗಿಯ ಶಹಾಪುರ ಗೇಟ್ ಬಳಿ ಪೋಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸಭೆಯ ನೇತೃತ್ವ ವಹಿಸಿ ಮಾತನಾಡಿದ AIDSO ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ.ಕೆ. ಅವರು, ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿ ರಾಜ್ಯ ಸರ್ಕಾರ ಸುಮಾರು 40,000 ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವುದು ಅತ್ಯಂತ ಬಡ ಜನ ವಿರೋಧಿ ಕ್ರಮವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಯೋಜನೆಯ ವಿರುದ್ಧ ರಾಜ್ಯಾದ್ಯಂತ ಪೋಷಕರು, ಗ್ರಾಮಸ್ಥರು ಹಾಗೂ ಶಿಕ್ಷಣ ಪ್ರೇಮಿಗಳು ಧ್ವನಿ ಎತ್ತುತ್ತಿದ್ದಾರೆ. ಕರ್ನಾಟಕದ ಹಿರಿಯ ಸಾಹಿತಿಗಳು ಸಹ ಶಾಲೆಗಳ ಉಳಿವಿಗಾಗಿ ಹೋರಾಟಕ್ಕೆ ಬೆಂಬಲ ನೀಡುತ್ತಿದ್ದಾರೆ ಎಂದು ಹೇಳಿದರು. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು “ಒಂದೇ ಒಂದು ಮಗು ಇದ್ದರೂ ಶಾಲೆ ಮುಚ್ಚುವುದಿಲ್ಲ” ಎಂದು ಹೇಳಿಕೆ ನೀಡುತ್ತಿದ್ದರೂ, ವಾಸ್ತವದಲ್ಲಿ ಶಾಲೆ ವಿಲೀನಕ್ಕೆ ಸರ್ಕಾರವೇ ದಾರಿ ಮಾಡಿಕೊಡುತ್ತಿದೆ ಎಂದು ಆರೋಪಿಸಿದರು. ಸ್ವಯಂ ಪ್ರೇರಿತ ವಿಲೀನ ಎನ್ನುವ ಹೆಸರಿನಲ್ಲಿ ಸರ್ಕಾರ ನಯವಾದ ವಂಚನೆ ನಡೆಸುತ್ತಿದೆ. ಕೆಪಿಎಸ್ ಯೋಜನೆ ರೂಪಿಸುವ ಮುನ್ನ ಎಸ್ಡಿಎಂಸಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿ ಸಂಘಟನೆಗಳ ಜೊತೆ ಯಾವುದೇ ಸಮಾಲೋಚನೆ ನಡೆಸಿಲ್ಲ ಎಂದು ಅವರು ದೂರಿದರು. ಎಡಿಬಿ ಬ್ಯಾಂಕ್ ಸಾಲ ಯೋಜನೆ, ಕೆಕೆಆರ್ಡಿಬಿ, ಮೈನಿಂಗ್ ಹಾಗೂ ಸಿಎಸ್ಆರ್ ಹಣ ಬಳಸಿ ಕೆಪಿಎಸ್ ಯೋಜನೆ ಜಾರಿಗೊಳಿಸಲಾಗುತ್ತಿದೆ. ಆದರೆ ಸರ್ಕಾರಿ ಶಾಲೆಗಳನ್ನು ಬಲಪಡಿಸಲು ನೇರ ಸರ್ಕಾರಿ ಅನುದಾನ ಕುರಿತು ಯಾವುದೇ ಸ್ಪಷ್ಟತೆ ಇಲ್ಲ. ಇದು ಶಿಕ್ಷಣದ ಸಂಪೂರ್ಣ ಖಾಸಗೀಕರಣಕ್ಕೆ ನಡೆಸುತ್ತಿರುವ ಷಡ್ಯಂತ್ರ ಎಂದು ಹೇಳಿದರು. ಸರ್ಕಾರಕ್ಕೆ ನಿಜವಾಗಿಯೂ ಶಿಕ್ಷಣದ ಬಗ್ಗೆ ಕಾಳಜಿ ಇದ್ದರೆ 61,000 ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಿ, ಶಾಲೆಗಳಿಗೆ ಸುಸಜ್ಜಿತ ಕಟ್ಟಡಗಳು ಹಾಗೂ ಶೌಚಾಲಯಗಳನ್ನು ಒದಗಿಸಲಿ. ಆದರೆ ಶಾಲೆಗಳನ್ನು ಮುಚ್ಚಲು ಬಂದರೆ ರಾಜ್ಯದ ಜನತೆ ಒಪ್ಪುವುದಿಲ್ಲ. ಅಗತ್ಯವಿದ್ದರೆ ಹೋರಾಟ ನಡೆಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಸಭೆಯ ಅಧ್ಯಕ್ಷತೆಯನ್ನು ರಾಜ್ಯ ಸಮಿತಿ ಸದಸ್ಯ ನಾಗರಾಜ್ ವಹಿಸಿದ್ದರು. ಪ್ರತಿಭಟನೆಯಲ್ಲಿ ಮಲ್ಲಪ್ಪ, ಅಯ್ಯಪ್ಪ, ಮಾಳಿಂಗರಾಯ, ತಿಮ್ಮಪ್ಪ, ಮರೆಪ್ಪ ಸೇರಿದಂತೆ ನಾಲ್ವಡಗಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳು, ಪೋಷಕರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ಇಂದೋರ್ ದುರಂತ | 10 ವರ್ಷದ ಪ್ರಾರ್ಥನೆ, ಹರಕೆ ಬಳಿಕ ಜನಿಸಿದ ಮಗು ಮೃತ್ಯು
ಸರಕಾರದ ಪರಿಹಾರ ತಿರಸ್ಕರಿಸಿದ ಕುಟುಂಬ
ಇ-ಸ್ವತ್ತು ಆನ್ಲೈನ್ ಅರ್ಜಿ ಸಲ್ಲಿಕೆಯಲ್ಲಿ ಎನ್ಐಸಿ ತಾಂತ್ರಿಕ ದೋಷ ಸರಿಪಡಿಸಲು ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು, ಜ.2: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು-2025 ಅನ್ನು ಅಧಿಸೂಚನೆ ಹೊರಡಿಸಲಾಗಿದ್ದು, ಈ ನಿಯಮಗಳನ್ವಯ, ಈ ಹಿಂದೆ ಇದ್ದ ಇ-ಸ್ವತ್ತು ತಂತ್ರಾಂಶವನ್ನು ಮಾರ್ಪಡಿಸಿ ಚಾಲನೆಗೊಳಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಶುಕ್ರವಾರ ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, ತಂತ್ರಾಂಶದಲ್ಲಿ ಈವರೆಗೂ ಒಟ್ಟು 8886 ಅರ್ಜಿಗಳನ್ನು ಆನ್ಲೈನ್ ಮೂಲಕ ಸ್ವೀಕರಿಸಲಾಗಿದ್ದು, ತಂತ್ರಾಂಶ ಸಿದ್ಧಪಡಿಸಿರುವ ಎನ್.ಐ.ಸಿ ತಂತ್ರಾಂಶದ ದೋಷದಿಂದಾಗಿ ಕೆಲವೊಂದು ಅರ್ಜಿಗಳನ್ನು ಸಲ್ಲಿಸುವಾಗ ತಾಂತ್ರಿಕ ಸಮಸ್ಯೆಗಳು ಉಂಟಾಗುತ್ತಿರುವುದು ಸರಕಾರದ ಗಮನಕ್ಕೆ ಬಂದಿದ್ದು, ಅವುಗಳನ್ನು ಸರಿಪಡಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಇ-ಸ್ವತ್ತು ತಂತ್ರಾಂಶವನ್ನು ನಿಯಮಗಳನ್ವಯ ಮಾರ್ಪಡು ಮಾಡಲಾಗಿದ್ದು, ಸಾರ್ವಜನಿಕರಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಲಾಗಿನ್ ಸೃಜಿಸಲಾಗಿದೆ. ಇ-ಸ್ವತ್ತು 2.0 ತಂತ್ರಾಂಶವನ್ನು ‘ಭೂಮಿ’, ‘ಕಾವೇರಿ’, ‘ಪಂಚತಂತ್ರ’, ‘ಮೋಜಿಣಿ’ ಹಾಗೂ ಎಸ್ಕಾಂಗಳ ತಂತ್ರಾಂಶಗಳೊಂದಿಗೆ ಸಂಯೋಜಿಸಲಾಗಿದೆ. ಈ ಸಂಯೋಜನೆಯಿಂದ ತಾಂತ್ರಿಕ ಸಮಸ್ಯೆಗಳು/ಎಪಿಐ ಸಮಸ್ಯೆಗಳು ಉಂಟಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸಹಾಯವಾಣಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಈಗಾಗಲೆ ತರಬೇತಿಯನ್ನು ನೀಡಲಾಗಿದ್ದು, ಮತ್ತೊಮ್ಮೆ ಪುನಶ್ಚೇತನ ತರಬೇತಿಯನ್ನು ಆಯೊಜೀಸಲಾಗಿದೆ. ಇ-ಸ್ವತ್ತು 2.0 ತಂತ್ರಾಂಶದಲ್ಲಿ ಸಾರ್ವಜನಿಕ ಪೋರ್ಟಲ್ ಮೂಲಕ ತಮ್ಮ ಆಸ್ತಿಗೆ ಸಂಬಂಧಿಸಿದಂತೆ ನಮೂನೆ-11ಎ ಅಥವಾ ನಮೂನೆ 11-ಬಿ ಗಳನ್ನು ತಾವಿರುವಲ್ಲಿಯೇ ಇ-ಸ್ವತ್ತು ತಂತ್ರಾಂಶದ ಮೂಲಕ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ. ಇ-ಸ್ವತ್ತು 2.0 ತಂತ್ರಾಂಶದಲ್ಲಿ ಸಾರ್ವಜನಿಕ ಪೋರ್ಟಲ್ ಮೂಲಕ ಪಂಚತಂತ್ರ ತಂತ್ರಾಂಶದಲ್ಲಿನ ಆಸ್ತಿಗಳ ಅರ್ಜಿ, ತೆರಿಗೆ ವ್ಯಾಪ್ತಿಯಿಂದ ಹೊರಗಿನ ಆಸ್ತಿಗಳ ಅರ್ಜಿ, ನಮೂನೆ-11 ಎ/ 11ಬಿ ಪಡೆಯಲು ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ಹೊಸ ಬಡವಾಣೆ ಮತ್ತು ಬಹುಮಹಡಿ (ಅಪಾಟ್ಮೆರ್ಂಟ್) ಕಟ್ಟಡಗಳಿಗೆ ಅರ್ಜಿಗಳನ್ನು ಸಲ್ಲಿಸಲು ಇ-ಸ್ವತ್ತು 2.0 ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಸಾರ್ವಜನಿಕರಿಗೆ ಅರ್ಜಿ ಸಲ್ಲಿಸಲು ಯಾವುದೇ ಕಾಲಾವಧಿಯನ್ನು ನಿಗದಿಪಡಿಸಲಾಗಿಲ್ಲ. ಆದ್ದರಿಂದ, ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆ ಇಲ್ಲ. ಇ-ಸ್ವತ್ತು 2.0 ತಂತ್ರಾಂಶದಲ್ಲಿ ಸಲ್ಲಿಸುವ ಅರ್ಜಿಗಳನ್ನು ನಿಯಮಗಳ ಅನ್ವಯ ಪರಿಶೀಲಿಸಿ ನಮೂನೆಗಳನ್ನು ವಿತರಿಸಲು ಕ್ರಮವಹಿಸಲಾಗುತ್ತಿದ್ದು, ಇಲಾಖೆಯೊಂದಿಗೆ ಸಹಕರಿಸಬೇಕೆಂದು ಪ್ರಿಯಾಂಕ್ ಖರ್ಗೆ ಸಾರ್ವಜನಿಕರನ್ನು ಕೋರಿದ್ದಾರೆ.
ಯಾದಗಿರಿ | ಜ.6ರಂದು ಫ್ರೀಡಂ ಪಾರ್ಕ್ನಲ್ಲಿ ಮಹಾಬೋಧಿ ಮಹಾವಿಹಾರ ಮುಕ್ತಿ ಆಂದೋಲನ : ಮರೆಪ್ಪ ಬುಕ್ಕಲ್
ಯಾದಗಿರಿ: ಬೋಧಗಯಾ ಮಹಾಬೋಧಿ ಮಹಾವಿಹಾರವನ್ನು ಬೌದ್ಧರ ಆಡಳಿತಕ್ಕೆ ಒಪ್ಪಿಸಬೇಕು ಹಾಗೂ ಬೋಧಗಯಾ ಟೆಂಪಲ್ ಆಕ್ಟ್–1949ನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿ, ಮಿಷನ್ ಮಹಾಬೋಧಿ ಮಹಾವಿಹಾರ ಮುಕ್ತಿ ಆಂದೋಲನದ ವತಿಯಿಂದ ಜ.6ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಸಂಘಟನೆಯ ಮುಖಂಡ ಮರೆಪ್ಪ ಬುಕ್ಕಲ್ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಗತ್ತಿಗೆ ಶಾಂತಿ, ಕರುಣೆ ಮತ್ತು ಪ್ರೀತಿಯ ಸಂದೇಶ ನೀಡಿದ ಭಗವಾನ್ ಬುದ್ಧರ ಪಾವನ ಕ್ಷೇತ್ರವಾದ ಬೋಧಗಯಾದ ಮಹಾಬೋಧಿ ಮಹಾವಿಹಾರವನ್ನು, ಬೋಧಗಯಾ ಟೆಂಪಲ್ ಆಕ್ಟ್–1949 ಎಂಬ ಅಸಂವಿಧಾನಿಕ ಕಾಯ್ದೆಯ ಮೂಲಕ ಬೌದ್ಧರ ಆಡಳಿತದಿಂದ ವಂಚಿಸಿ ಇತರರ ನಿಯಂತ್ರಣಕ್ಕೆ ನೀಡಲಾಗಿದೆ. ಇದು ಬೌದ್ಧ ಸಮುದಾಯದ ಮೇಲೆ ಮಾಡಿದ ಅನ್ಯಾಯವಾಗಿದೆ ಎಂದು ಆರೋಪಿಸಿದರು. ಸ್ವಾತಂತ್ರ್ಯ ಪೂರ್ವದಿಂದಲೂ ಈ ಕುರಿತು ಹೋರಾಟ ನಡೆಯುತ್ತಿದ್ದರೂ ಇದುವರೆಗೆ ನ್ಯಾಯ ಸಿಕ್ಕಿಲ್ಲ. ಸಂವಿಧಾನದ ಕಾಲಂ 13, 25, 26 ಮತ್ತು 29ರ ಅಡಿಯಲ್ಲಿ ದೊರಕಿರುವ ಧಾರ್ಮಿಕ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಬೋಧಗಯಾ ಟೆಂಪಲ್ ಆಕ್ಟ್–1949ನ್ನು ರದ್ದುಗೊಳಿಸಿ, ಮಹಾಬೋಧಿ ಮಹಾವಿಹಾರದ ಆಡಳಿತವನ್ನು ಸಂಪೂರ್ಣವಾಗಿ ಬೌದ್ಧರಿಗೆ ಹಸ್ತಾಂತರಿಸಬೇಕು ಎಂದು ಅವರು ಒತ್ತಾಯಿಸಿದರು. ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಕನಸಿನ ಪ್ರಬುದ್ಧ ಭಾರತ ನಿರ್ಮಾಣಕ್ಕಾಗಿ, ದೇಶದ ಬಿಕ್ಕು ಮಹಾಸಂಘವು ಫೆ.12ರ, 2026ರಂದು “ದೆಹಲಿ ಚಲೋ- ಮಿಷನ್ ಮಹಾಬೋಧಿ ಮಹಾವಿಹಾರ ಮುಕ್ತಿಗಾಗಿ” ಎಂಬ ಘೋಷಣೆಯೊಂದಿಗೆ ರಾಷ್ಟ್ರಮಟ್ಟದ ಹೋರಾಟಕ್ಕೆ ಕರೆ ನೀಡಿದೆ ಎಂದರು. ಮನವಿಯಲ್ಲಿ ಬೋಧಗಯಾ ಟೆಂಪಲ್ ಆಕ್ಟ್–1949 ರದ್ದುಪಡಿಸುವುದು, ಮಹಾಬೋಧಿ ಮಹಾವಿಹಾರದ ಆಡಳಿತವನ್ನು ಬೌದ್ಧರಿಗೆ ಒಪ್ಪಿಸುವುದು, ಬೋಧಗಯಾ ಆವರಣದ ಅತಿಕ್ರಮಿತ ಜಾಗ ವಾಪಸು ನೀಡುವುದು, ಸನ್ನತಿ ಅಭಿವೃದ್ಧಿ ಪ್ರಾಧಿಕಾರವನ್ನು ಪೂರ್ಣ ಪ್ರಮಾಣದಲ್ಲಿ ರಚಿಸುವುದು, ಕರ್ನಾಟಕ ಬೌದ್ಧ ಅಭಿವೃದ್ಧಿ ನಿಗಮ ಸ್ಥಾಪನೆ, ಬುದ್ಧ ಜಯಂತಿಗೆ ಸಾರ್ವತ್ರಿಕ ರಜೆ ಘೋಷಣೆ, ಬುದ್ಧ ವಿಹಾರಗಳಿಗೆ ಭೂಮಿ ಹಾಗೂ ಮೂಲಸೌಕರ್ಯ ಒದಗಿಸುವುದು ಹಾಗೂ ಅಶೋಕ ಶಿಲಾಶಾಸನಗಳ ಸಂರಕ್ಷಣೆಗೆ ವಿಶೇಷ ಯೋಜನೆ ರೂಪಿಸುವಂತೆ ಆಗ್ರಹಿಸಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ವೆಂಕಟೇಶ ಹೊಸಮನಿ, ನಾಗಣ್ಣ ಕಲ್ಲದೇವನಹಳ್ಳಿ, ಶರಣು ನಾಟೇಕಾರ್, ರಾಹುಲ್ ಹುಲಿಮನಿ, ಡಾ. ಭಗವಂತ ಅನ್ವಾರ, ಕಾಶಿನಾಥ ನಾಟೇಕಾರ್, ಚಂದ್ರಕಾಂತ ಚಲುವಾದಿ, ಮಾಳಪ್ಪ ಕೀರದಳ್ಳಿ ಸೇರಿದಂತೆ ಅನೇಕ ದಲಿತ ಹಾಗೂ ಬೌದ್ಧ ಮುಖಂಡರು ಉಪಸ್ಥಿತರಿದ್ದರು.
ರಾಯಚೂರು : ಯರಮರಸ್ ನೂಲಿ ಗಿರಣಿಯಲ್ಲಿ ಕೆಲಸ ಮಾಡಿದ್ದ ಸುಮಾರು 550 ಕಾರ್ಮಿಕರಿಗೆ ಬಾಕಿ ವೇತನ, ಗ್ರಾಚ್ಯುಟಿ ಹಾಗೂ ಪಿಎಫ್ ಹಣ ಪಾವತಿಸದೆ ವಂಚಿಸಲಾಗಿದ್ದು, ಜೊತೆಗೆ ಸರ್ಕಾರಿ ಭೂಮಿಯನ್ನು ಅನಧಿಕೃತವಾಗಿ ಹರಾಜು ಮಾಡಿ ಗಂಭೀರ ಅನ್ಯಾಯ ಮಾಡಲಾಗಿದೆ. ಒಂದು ತಿಂಗಳೊಳಗೆ ಪ್ರಕರಣ ಇತ್ಯರ್ಥಗೊಳಿಸದಿದ್ದಲ್ಲಿ ನ್ಯಾಯಾಂಗ ಮೊರೆ ಹೋಗುವುದರ ಜೊತೆಗೆ ಕಾರ್ಮಿಕರ ಅನಿರ್ದಿಷ್ಟ ಹೋರಾಟ ನಡೆಸಲಾಗುವುದು ಎಂದು ಹೋರಾಟಗಾರ ಶಿವಕುಮಾರ ಮ್ಯಾಗಳಮನಿ ಎಚ್ಚರಿಕೆ ನೀಡಿದರು. ಅವರು ಮಂಗಳವಾರ ಮಾಧ್ಯಮಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿ, ಸರ್ಕಾರಿ ಜಮೀನಿನಲ್ಲಿ ಸ್ಥಾಪಿತವಾಗಿದ್ದ ಸಹಕಾರಿ ನೂಲಿ ಗಿರಣಿಯನ್ನು 1997ರಲ್ಲಿ ಮುಚ್ಚಲಾಗಿದ್ದು, ಗಿರಣಿಗೆ ಮಾಲಕತ್ವವೇ ಇಲ್ಲದಿದ್ದರೂ ಸಹಕಾರಿ ಇಲಾಖೆ ಅಧಿಕಾರಿಗಳು 40 ಎಕರೆ 25 ಗುಂಟೆ ಸರ್ಕಾರಿ ಭೂಮಿಯನ್ನು ಖಾಸಗಿ ಕಂಪನಿಗಳಿಗೆ ಹರಾಜು ಮಾಡಿದ್ದಾರೆ ಎಂದು ಆರೋಪಿಸಿದರು.ಸರ್ವೆ ನಂ.55/1 ರಲ್ಲಿ ಒಂದು ಎಕರೆ, 16ಎ ಯಲ್ಲಿ 35 ಗುಂಟೆ, ಸರ್ಕಾರಿ ಗೈರಾಣಿ 55/2ಸಿ ಯಲ್ಲಿ 6 ಎಕರೆ 13 ಗುಂಟೆ, ಏಗನೂರು ಗ್ರಾಮದ ಸರ್ವೆ ನಂ.254/3/2 ರಲ್ಲಿ 17 ಎಕರೆ 37 ಗುಂಟೆ ಹಾಗೂ ಸರ್ವೆ ನಂ.254/4 ರಲ್ಲಿ 1 ಎಕರೆ 20 ಗುಂಟೆ ಸೇರಿ ಒಟ್ಟು 40 ಎಕರೆ 25 ಗುಂಟೆ ಭೂಮಿ ನೂಲಿ ಗಿರಣಿಗೆ ಮಂಜೂರಾಗಿರಲಿಲ್ಲ ಎಂದು ವಿವರಿಸಿದರು. ಈ ಸರ್ಕಾರಿ ಜಮೀನನ್ನು ಬಸಂತ ಟೆಕ್ಸಟೈಲ್ ಕಂಪನಿ, ಮರ್ಸೆಂಟೈಲ್ ಹಾಗೂ ಮೋಹಿನಿ ಇನ್ಫ್ರಾ ಕಂಪನಿಗಳಿಗೆ ಹರಾಜು ಮಾಡಲಾಗಿದೆ. 2011ರಲ್ಲಿ ಸಹಾಯಕ ಆಯುಕ್ತರು ಈ ಭೂಮಿ ಕರ್ನಾಟಕ ಸರ್ಕಾರಕ್ಕೆ ಸೇರಿದ್ದೆಂದು ದಾಖಲಿಸಿದ್ದರೂ, 2017–18ರಲ್ಲಿ ದೀಪಕ್ ಇನ್ನಾಣಿ ಹೆಸರನ್ನು ಪಹಣಿಯಲ್ಲಿ ಸೇರ್ಪಡೆ ಮಾಡಲಾಗಿದೆ. ಆದರೆ ಗಿರಣಿಯ ಕಾರ್ಮಿಕರಿಗೆ ಇಂದಿಗೂ ಬಾಕಿ ವೇತನ, ಗ್ರಾಚ್ಯುಟಿ ಹಾಗೂ ಪಿಎಫ್ ಹಣ ಪಾವತಿಯಾಗಿಲ್ಲ ಎಂದು ದೂರಿದರು. 550 ಕಾರ್ಮಿಕರಿಗೆ ನ್ಯಾಯ ಒದಗಿಸಲು ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಪ್ರಕರಣವನ್ನು ತ್ವರಿತವಾಗಿ ಇತ್ಯರ್ಥಪಡಿಸಬೇಕು. ಇಲ್ಲದಿದ್ದರೆ ಜಿಲ್ಲಾಮಟ್ಟದಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು. ಈ ಸಂದರ್ಭದಲ್ಲಿ ಇ. ನಸದುಲ್ಲಾ, ರುದ್ರಗೌಡ, ಕೃಷ್ಣ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಇಂದೋರ್ ದುರಂತ | 10 ಮಂದಿ ಸಾವನ್ನಪ್ಪಿರುವುದನ್ನು ದೃಢಪಡಿಸಿದ ಮೇಯರ್
ಇಂದೋರ್, ಜ. 2: ನಗರದ ಭಗೀರಥಪುರ ಪ್ರದೇಶದಲ್ಲಿ ಕಲುಷಿತ ನೀರು ಸೇವನೆಯಿಂದ ಅತಿಸಾರ ಹರಡಿದ ಪರಿಣಾಮ 10 ಮಂದಿ ಸಾವನ್ನಪ್ಪಿರುವ ಬಗ್ಗೆ ತಾನು ಮಾಹಿತಿ ಪಡೆದಿರುವುದಾಗಿ ಇಂದೋರ್ ಮೇಯರ್ ಪುಷ್ಯಮಿತ್ರ ಭಾರ್ಗವ ಶುಕ್ರವಾರ ತಿಳಿಸಿದ್ದಾರೆ. ಆದರೆ, ಕಲುಷಿತ ನೀರು ಸೇವಿಸಿ ಅನಾರೋಗ್ಯಕ್ಕೀಡಾಗಿ ಆರು ತಿಂಗಳ ಶಿಶು ಸೇರಿದಂತೆ 14 ಮಂದಿ ಸಾವನ್ನಪ್ಪಿದ್ದಾರೆ ಎಂದು ಭಗೀರಥಪುರ ನಿವಾಸಿಗಳು ಹೇಳಿಕೊಂಡಿದ್ದಾರೆ. ಆರೋಗ್ಯ ಇಲಾಖೆ ಈ ಹೇಳಿಕೆಯನ್ನು ದೃಢಪಡಿಸಿಲ್ಲ. ಭಗೀರಥಪುರದಲ್ಲಿ ಅತಿಸಾರದಿಂದ ಸಾವನ್ನಪ್ಪಿದವರ ಸಂಖ್ಯೆ ನಾಲ್ಕು ಎಂದು ಅಧಿಕೃತ ಮಾಹಿತಿ ತಿಳಿಸುತ್ತದೆ. ಭಗೀರಥಪುರದಿಂದ ಸಂಗ್ರಹಿಸಿದ ಕುಡಿಯುವ ನೀರಿನ ಮಾದರಿಗಳ ಪ್ರಾಥಮಿಕ ಪರೀಕ್ಷಾ ವರದಿಗಳ ಆಧಾರದಲ್ಲಿ ಶಂಕಿತ ಕಾಲರಾ ಹರಡಿರುವ ಬಗ್ಗೆ ಮೇಯರ್ ಅವರನ್ನು ಪ್ರಶ್ನಿಸಲಾಯಿತು. 이에 ಅವರು, ಈ ಕುರಿತು ಆರೋಗ್ಯ ಇಲಾಖೆ ಮಾತ್ರ ವಿವರ ನೀಡಬಹುದು ಎಂದು ಹೇಳಿದರು. ಮುಖ್ಯ ವೈದ್ಯಕೀಯ ಹಾಗೂ ಆರೋಗ್ಯಾಧಿಕಾರಿ (ಸಿಎಂಎಚ್ಒ) ಡಾ. ಮಾಧವ್ ಪ್ರಸಾದ್ ಹಸನಿ, ನಗರದ ವೈದ್ಯಕೀಯ ಕಾಲೇಜಿನ ಪ್ರಯೋಗಾಲಯ ಪರೀಕ್ಷಾ ವರದಿಯಲ್ಲಿ ಪೈಪ್ಲೈನ್ ಸೋರಿಕೆಯಿಂದ ಕುಡಿಯುವ ನೀರು ಕಲುಷಿತಗೊಂಡಿರುವುದು ದೃಢಪಟ್ಟಿದೆ ಎಂದು ಗುರುವಾರ ತಿಳಿಸಿದ್ದಾರೆ. ಆದರೆ ವರದಿಯ ವಿಸ್ತೃತ ವಿವರಗಳನ್ನು ಅವರು ಹಂಚಿಕೊಂಡಿಲ್ಲ. ಆಡಳಿತಾಧಿಕಾರಿಗಳೂ ಈ ವಿಷಯದಲ್ಲಿ ಸ್ಪಷ್ಟ ಮಾಹಿತಿ ನೀಡಲು ಹಿಂಜರಿದಿದ್ದಾರೆ. ಭಗೀರಥಪುರದ ಪೊಲೀಸ್ ಹೊರಠಾಣೆ ಬಳಿ ಕುಡಿಯುವ ನೀರು ಸರಬರಾಜು ಮಾಡುವ ಮುಖ್ಯ ಪೈಪ್ಲೈನ್ ನಲ್ಲಿ ಸೋರಿಕೆ ಕಂಡುಬಂದಿದ್ದು, ಸೋರಿಕೆಯ ಮೇಲೆ ಶೌಚಾಲಯ ಇರುವುದರಿಂದ ನೀರು ಕಲುಷಿತಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಳ್ಳಾರಿ ಗುಂಪು ಘರ್ಷಣೆ| ಜನಾರ್ಧನ ರೆಡ್ಡಿಯನ್ನು ಗುರಿಯಾಗಿಸಿ ಗುಂಡು ಹಾರಿಸಲಾಗಿದೆ : ಆರ್.ಅಶೋಕ್ ಆರೋಪ
ಬೆಂಗಳೂರು, ಜ.2: ಬಳ್ಳಾರಿ ಶಾಸಕ ಜನಾರ್ಧನ ರೆಡ್ಡಿಯನ್ನು ಗುರಿಯಾಗಿಟ್ಟುಕೊಂಡು ಗುಂಡು ಹಾರಿಸಲಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಬಳ್ಳಾರಿಯಲ್ಲಿ ಕಳೆದ ರಾತ್ರಿ ನಡೆದ ಗಲಭೆಗೆ ಶಾಸಕ ನಾರಾ ಭರತ್ ರೆಡ್ಡಿ ಅವರ ಆಪ್ತ ಸತೀಶ್ ರೆಡ್ಡಿ ಹಾಗೂ ಬೆಂಬಲಿಗರು ಕಾರಣಕರ್ತರು ಎಂಬುದರಲ್ಲಿ ಯಾವುದೇ ಅನುಮಾನವೇ ಇಲ್ಲ. ರಾಜಕೀಯವಾಗಿ ಬೆಳೆಯುತ್ತಿರುವ ಜನಾರ್ಧನ ರೆಡ್ಡಿ ಅವರನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಿದ್ದಾರೆ ಎಂದು ದೂರಿದರು. ರೆಡ್ಡಿ ಅವರನ್ನು ಗುರಿಯಾಗಿಟ್ಟುಕೊಂಡು ಗುಂಡು ಹಾರಿಸಲಾಗಿತ್ತು. ಆದರೆ ಅದು ಕಾಂಗ್ರೆಸ್ ಕಾರ್ಯಕರ್ತನಿಗೆ ತಗುಲಿದ್ದರಿಂದ ಆತ ಮೃತಪಟ್ಟಿದ್ದಾನೆ. ಬಳ್ಳಾರಿಯಲ್ಲಿ ವ್ಯಕ್ತಿಯ ಸಾವಿಗೆ ಭರತ್ ರೆಡ್ಡಿಯೇ ಕಾರಣ. ತಕ್ಷಣವೇ ಸರಕಾರ ಗೂಂಡಾ ಕಾಯ್ದೆಯಡಿ ಅವರನ್ನು ಬಂಧಿಸಿ ಪ್ರಕರಣದ ಸತ್ಯಾಸತ್ಯತೆ ಹೊರಬರಲು ನ್ಯಾಯಾಂಗ ತನಿಖೆ ನಡೆಸಬೇಕು ಜೊತೆಗೆ ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲುಗೆ ಸರಕಾರ ರಕ್ಷಣೆ ಕೊಡಬೇಕೆಂದು ಮನವಿ ಮಾಡಿದರು. ನಿನ್ನೆ ರಾತ್ರಿ ರೆಡ್ಡಿಯವರ ಮನೆ ಮುಂದೆ ಗುಂಪು ಕಟ್ಟಿಕೊಂಡು ಬಂದಿದ್ದರು. ಸತೀಶ್ ರೆಡ್ಡಿ, ಜನಾರ್ಧನ ರೆಡ್ಡಿ ಮನೆ ಮುಂದೆನೇ ಕಾಲು ಮೇಲೆ ಕಾಲು ಹಾಕಿ ಕೂತು ಬ್ಯಾನರ್ ಕಟ್ಟಿಸುತ್ತಿದ್ದರು. ಜನಾರ್ದನ ರೆಡ್ಡಿ ಮೇಲೆ ಹಲ್ಲೆ ಮಾಡಬೇಕು, ಅವರನ್ನು ಹತ್ಯೆ ಮಾಡಬೇಕು ಎನ್ನುವ ಕಾರಣಕ್ಕಾಗಿಯೇ ಕಾಂಗ್ರೆಸ್ನವರು ಬಂದಿದ್ದರು. ಇದು ಪೂರ್ವಯೋಜಿತ ಕೃತ್ಯ ಎಂದು ಅಶೋಕ್ ಆರೋಪಿಸಿದರು. ಈ ಗಲಭೆ ನಡೆದಿದ್ದು ಕಾಂಗ್ರೆಸ್ನಿಂದಲೇ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಮಾತ್ರ ಅಲ್ಲ, ವಿಕೋಪಕ್ಕೆ ಹೋಗಿದೆ. ಇದು ಸರಕಾರಿ ಪ್ರಾಯೋಜಕತ್ವದ ದಾಳಿ ಎಂದು ವಾಗ್ದಾಳಿ ನಡೆಸಿದರು.
ಏ.23, 24ರಂದು ಸಿಇಟಿ 2026; ಆನ್ಲೈನ್ ಅರ್ಜಿ ಸಲ್ಲಿಕೆಗೆ ಈ ದಿನದಿಂದ ಅವಕಾಶ
2026ನೇ ಸಾಲಿನ ಸಿಇಟಿ ವೇಳಾಪಟ್ಟಿ ಪ್ರಕಟವಾಗಿದೆ. ಏಪ್ರಿಲ್ 23 ಮತ್ತು 24 ರಂದು ಪರೀಕ್ಷೆ ನಡೆಯಲಿದೆ. ಜನವರಿ 17 ರಿಂದ ಆನ್ಲೈನ್ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಹೊರನಾಡು ಮತ್ತು ಗಡಿನಾಡು ಕನ್ನಡಿಗರಿಗೆ ಏಪ್ರಿಲ್ 22 ರಂದು ಕನ್ನಡ ಭಾಷಾ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಆಧಾರ್ ಮೂಲಕ ಅಭ್ಯರ್ಥಿಗಳ ವಿವರಗಳನ್ನು ಪ್ರಮಾಣೀಕರಿಸುವ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.
Hyderabad | ಐಐಟಿ ವಿದ್ಯಾರ್ಥಿಗೆ 2.5 ಕೋಟಿ ರೂ. ವೇತನದ ಆಫರ್
ಹೊಸದಿಲ್ಲಿ, ಜ. 2: ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿದ್ಯಾರ್ಥಿ ಎಡ್ವರ್ಡ್ ನಾಥನ್ ವರ್ಗೀಸ್ (21) ಅವರು 2.5 ಕೋಟಿ ರೂ.ಗಳ ವಾರ್ಷಿಕ ವೇತನದ ಅದ್ಭುತ ಪ್ಯಾಕೇಜ್ ಪಡೆದು ಐಐಟಿ ಹೈದರಾಬಾದ್ ನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಇದು ಸಂಸ್ಥೆ 2008ರಲ್ಲಿ ಸ್ಥಾಪನೆಯಾದ ಬಳಿಕ ಸ್ವೀಕರಿಸಿರುವ ಅತ್ಯಂತ ದೊಡ್ಡ ಪ್ಯಾಕೇಜ್ ಆಗಿದೆ. ನೆದರ್ಲ್ಯಾಂಡ್ಸ್ನ ಜಾಗತಿಕ ಟ್ರೇಡಿಂಗ್ ಕಂಪೆನಿ ಆಪ್ಟಿವರ್ ಈ ಆಫರ್ ನೀಡಿದೆ. ಎಡ್ವರ್ಡ್ ಜುಲೈನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕಂಪೆನಿಯನ್ನು ಸೇರಿಕೊಳ್ಳಲಿದ್ದಾರೆ. ಆಪ್ಟಿವರ್ನಲ್ಲಿ ಎರಡು ತಿಂಗಳ ಬೇಸಿಗೆ ಇಂಟರ್ನ್ಶಿಪ್ ಪೂರ್ಣಗೊಳಿಸಿ ಪೂರ್ವ ನೇಮಕಾತಿ ಆಫರ್ ಪಡೆಯುವ ಮೂಲಕ ಅವರು ಈ ಸಾಧನೆ ಮಾಡಿದ್ದಾರೆ. ಇದರಿಂದ ಇಂಟರ್ನ್ಶಿಪ್ಗೆ ಆಯ್ಕೆಯಾಗಿದ್ದ ಇನ್ನೊಬ್ಬ ವಿದ್ಯಾರ್ಥಿಯನ್ನು ಹಿಂದಿಕ್ಕಿದ್ದಾರೆ. ತಮ್ಮ ಯಶಸ್ಸಿಗೆ ಐಐಟಿ ಟ್ಯಾಗ್, ಅನುಕೂಲಕರ ಶೈಕ್ಷಣಿಕ ಪಠ್ಯಕ್ರಮ ಹಾಗೂ ಇಂಜಿನಿಯರಿಂಗ್ನ ಮೊದಲ ವರ್ಷದಿಂದಲೇ ಕೋಡಿಂಗ್ ಮತ್ತು ಸ್ಪರ್ಧಾತ್ಮಕ ಪ್ರೋಗ್ರಾಮಿಂಗ್ ಮೇಲೆ ಗಮನ ಕೇಂದ್ರೀಕರಿಸಿದ್ದೇ ಕಾರಣ ಎಂದು ವರ್ಗೀಸ್ ತಿಳಿಸಿದ್ದಾರೆ. ಪೂರ್ವ ನೇಮಕಾತಿ ಪ್ರಕ್ರಿಯೆಯಲ್ಲಿ ತಾವು ಸಂದರ್ಶನ ನೀಡಿದ್ದ ಮೊದಲ ಹಾಗೂ ಏಕೈಕ ಕಂಪೆನಿ ಆಪ್ಟಿವರ್ ಆಗಿತ್ತು ಎಂದು ವರ್ಗೀಸ್ ಅವರನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ. ಹೈದರಾಬಾದ್ ನಲ್ಲಿ ಹುಟ್ಟಿ ಬೆಳೆದ ವರ್ಗೀಸ್, ಏಳರಿಂದ 12ನೇ ತರಗತಿವರೆಗೆ ಬೆಂಗಳೂರಿನಲ್ಲಿ ಶಿಕ್ಷಣ ಪಡೆದಿದ್ದರು. 2022ರಲ್ಲಿ ಜೆಇಇ ಮುಖ್ಯ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 1100ನೇ ರ್ಯಾಂಕ್ ಹಾಗೂ ಜೆಇಇ ಅಡ್ವಾನ್ಸ್ಡ್ನಲ್ಲಿ 558ನೇ ರ್ಯಾಂಕ್ ಗಳಿಸಿದ್ದರು. 2025ರ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಎಟಿ)ಯಲ್ಲಿ ಶೇ. 99.96 ಅಂಕಗಳೊಂದಿಗೆ 120ನೇ ರ್ಯಾಂಕ್ ಪಡೆದಿದ್ದರು. ಎಡ್ವರ್ಡ್ ಅವರ ಲಿಂಕ್ಡ್ಇನ್ ಪ್ರೊಫೈಲ್ ಪ್ರಕಾರ, ಅವರು ಐಐಟಿ ಹೈದರಾಬಾದ್ ನ ವೃತ್ತಿಜೀವನ ಸೇವೆಗಳ ಕಚೇರಿಯ ಮುಖ್ಯಸ್ಥರಾಗಿದ್ದು, ಪ್ಲೇಸ್ಮೆಂಟ್ ಮತ್ತು ಇಂಟರ್ನ್ಶಿಪ್ಗಳಿಗೆ ಸಂಬಂಧಿಸಿದ ವಿವಿಧ ಸೆಲ್ಗಳ ಎಂಟು ವಿದ್ಯಾರ್ಥಿ ಮ್ಯಾನೇಜರ್ ಗಳು ಹಾಗೂ 250 ಸಂಯೋಜಕರ ತಂಡವನ್ನು ಮುನ್ನಡೆಸಿದ್ದಾರೆ. ಅದಕ್ಕೂ ಮುನ್ನ ಸುಮಾರು 11 ತಿಂಗಳುಗಳ ಕಾಲ ಇಂಟರ್ನ್ಶಿಪ್ ಸೆಲ್ ನ ಸಂಯೋಜಕರಾಗಿ ಕಾರ್ಯನಿರ್ವಹಿಸಿದ್ದರು.
ಕಲುಷಿತ ನೀರು ಸೇವನೆ: ದಂಪತಿಗೆ 10 ವರ್ಷಗಳ ನಂತರ ಜನಿಸಿದ್ದ ಹಸುಗೂಸು ಸಾವು
ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಕಲುಷಿತ ನೀರಿನಿಂದಾಗಿ ಹಸುಗೂಸು ಜನಿಸಿದ ಕೆಲವೇ ದಿನಗಳಲ್ಲಿ ಸಾವನ್ನಪ್ಪಿದೆ. ದಂಪತಿಗೆ 10 ವರ್ಷಗಳ ನಂತರ ಈ ಮಗು ಜನಿಸಿತ್ತು. ಭಗೀರಥಪುರ ಪ್ರದೇಶದ ಮರಾಠಿ ಮೊಹಲ್ಲಾದ ಒಂದು ಗಲ್ಲಿಯಲ್ಲಿ ಈ ಭಯಾನಕ ಘಟನೆ ಸಂಭವಿಸಿದೆ. ಈ ಭಾಗದಲ್ಲಿ ಕುಡಿಯುವ ನೀರಿಗೆ ಚರಂಡಿ ನೀರು ಮಿಶ್ರಣವಾಗಿ ಜನರ ಜೀವಕ್ಕೆ ಕಂಟಕವಾಗಿ ಪರಿಣಮಿಸಿದೆ. ಇದರಿಂದ ಅವ್ಯಾನ್ ಸಾಹು
ಬಳ್ಳಾರಿ ಗುಂಪು ಘರ್ಷಣೆ| ಪರಿಸ್ಥಿತಿ ಅವಲೋಕಿಸಲು ಕಾಂಗ್ರೆಸ್ ನಿಯೋಗ ರವಾನೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು,ಜ.2: ಬಳ್ಳಾರಿ ನಗರದಲ್ಲಿ ರಾಜಕೀಯ ಪಕ್ಷಗಳ ಮುಖಂಡರ ಮಧ್ಯೆ ನೆಡೆದಿರುವ ಅಹಿತಕರ ಘಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟಿದ್ದು, ಈ ಘಟನೆಯಿಂದ ಬಳ್ಳಾರಿಯಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ಆ ಹಿನ್ನೆಲೆಯಲ್ಲಿ ಸ್ಥಳೀಯ ಪರಿಸ್ಥಿತಿಯನ್ನು ಅವಲೋಕಿಸಲು ಕಾಂಗ್ರೆಸ್ ಮುಖಂಡರ ನಿಯೋಗವನ್ನು ರವಾನಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮಾಜಿ ಸಚಿವ ಎಚ್.ಎಂ.ರೇವಣ್ಣ, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಶಾಸಕ ಟಿ. ರಘುಮೂರ್ತಿ, ಸಂಸದ ಕುಮಾರ್ ನಾಯಕ್, ಪರಿಷತ್ ಸದಸ್ಯರಾದ ಜಕ್ಕಪ್ಪನವರ್, ಬಸವನಗೌಡ ಬಾದರ್ಲಿ ಅವರು ನಿಯೋಗದಲಿ ಇದ್ದಾರೆ. ತಕ್ಷಣವೇ ಬಳ್ಳಾರಿಗೆ ತೆರಳಿ ಘಟನೆ ನಡೆದಿರುವ ಸ್ಥಳಕ್ಕೆ ಖುದ್ದು ಭೇಟಿ ನೀಡಿ, ಸ್ಥಳೀಯ ಮುಖಂಡರ ಸಹಕಾರದೊಂದಿಗೆ ಘಟನೆಯನ್ನು ಸಂಪೂರ್ಣವಾಗಿ ಅವಲೋಕಿಸಿ ಮಾಹಿತಿಯನ್ನು ನೀಡಬೇಕು ಎಂದು ಶಿವಕುಮಾರ್ ಸೂಚನೆ ನೀಡಿದ್ದಾರೆ.
ಉಪ್ಪಿನಂಗಡಿ| ಬ್ಯಾಂಕ್ ಉದ್ಯೋಗಿ ಪುಲುಗುಜ್ಜು ಸುಬ್ರಹ್ಮಣ್ಯಂ ನಾಪತ್ತೆ ಪ್ರಕರಣಕ್ಕೆ ಮಹತ್ವದ ತಿರುವು
ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೆರ್ನೆ ಎಂಬಲ್ಲಿನ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಉಪ ಶಾಖಾ ಪ್ರಬಂಧಕನಾಗಿ ಕಾರ್ಯನಿರ್ವಹಿಸುತ್ತಿದ್ದ ಪುಲುಗುಜ್ಜು ಸುಬ್ರಹ್ಮಣ್ಯಂ (30) ನಾಪತ್ತೆ ಪ್ರಕರಣವು ಮಹತ್ವದ ತಿರುವು ಪಡೆದುಕೊಂಡಿದೆ. ನಾಪತ್ತೆಯಾಗಿರುವ ಬ್ಯಾಂಕ್ ಉದ್ಯೋಗಿ ತಾನು ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಂಕಿಗೆ 71.41 ಲಕ್ಷ ರೂ. ವಂಚನೆ ನಡೆಸಿರುವ ಬಗ್ಗೆ ಬ್ಯಾಂಕ್ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಬಿ.ಸಿ.ರೋಡಿನಲ್ಲಿ ವಿಷ್ಣು ಎಂಬವರ ಜೊತೆ ರೂಮೊಂದರಲ್ಲಿ ವಾಸ್ತವ್ಯ ಹೊಂದಿದ್ದ ಎನ್ನಲಾದ ಸುಬ್ರಹ್ಮಣ್ಯಂ ಡಿ. 17ರಂದು ತನ್ನ ತಮ್ಮನಿಗೆ ಹುಷಾರಿಲ್ಲ ಎಂದು ರೂಮಿಗೆ ಹೋಗುತ್ತೇನೆಂದು ಬ್ಯಾಂಕಿನಲ್ಲಿ ಹೇಳಿ ಹೋದವ ಬಳಿಕ ಪತ್ತೆಯಾಗಿರುವುದಿಲ್ಲವೆಂದೂ, ತನ್ನ ರೂಂನಲ್ಲಿ ಜೊತೆಯಾಗಿ ವಾಸ್ತವ್ಯ ಹೊಂದಿದ್ದ ವಿಷ್ಣುವಿನಲ್ಲಿ ತಾನು ಊರಿಗೆ ಹೋಗುವುದಾಗಿ ತಿಳಿಸಿ ಹೋಗಿದ್ದಾನೆನ್ನಲಾಗಿದ್ದು, ಊರಿಗೂ ಹೋಗದೆ ಎಲ್ಲಿಯೂ ಕಾಣಿಸದೆ ನಾಪತ್ತೆ ಯಾಗಿರುವುದಾಗಿ ದೂರಲಾಗಿತ್ತು. ಈ ಸಂಬಂಧ ಸುಬ್ರಹ್ಮಣ್ಯಂ ಅವರ ಸಹೋದರ ಪುಲುಗುಜ್ಜು ನಾಗ ಫಣೀಂದ್ರ ಅವರು ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದಾರೆ. ಈ ಮಧ್ಯೆ ಬ್ಯಾಂಕ್ ಆಫ್ ಬರೋಡಾದ ಮಂಗಳೂರು ಪ್ರಾದೇಶಿಕ ವ್ಯವಸ್ಥಾಪಕ ಸಿ.ವಿ.ಎಸ್. ಚಂದ್ರಶೇಖರ್ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದು, ಅದರಲ್ಲಿ 2023ರ ಸೆಪ್ಟೆಂಬರ್ ತಿಂಗಳ 4 ರಿಂದ 2025 ರ ಡಿಸೆಂಬರ್ ತಿಂಗಳ 19 ರವರೆಗೆ ಪೆರ್ನೆ ಶಾಖೆಯಲ್ಲಿ ಉಪ ಶಾಖಾ ಪ್ರಬಂಧಕರಾಗಿ ಕೆಲಸ ಮಾಡುತ್ತಿದ್ದ ಸುಬ್ರಹ್ಮಣ್ಯಂ ಸದ್ರಿ ಬ್ರಾಂಚಿನ ಎ.ಟಿ.ಎಂ. ನ ಮೇಲ್ವಿಚಾರಣೆಯನ್ನು ನೋಡಿಕೊಳ್ಳುತ್ತಿದ್ದು, ದಿನಾಂಕ 06-02-2024 ರಿಂದ ದಿನಾಂಕ 16-12-2025 ರ ಅವಧಿಯಲ್ಲಿ ಆರೋಪಿಯು ಅದೇ ಬ್ಯಾಂಕಿನ ಎ.ಟಿ.ಎಂ ಮಿಷನ್ ಗೆ ಪ್ರತಿ ದಿನ ನಿಗದಿ ಪಡಿಸಿದ ಹಣವನ್ನು ಜಮಾ ಮಾಡದೇ ಕಡಿಮೆ ನಗದು ಹಣವನ್ನು ಜಮಾ ಮಾಡಿ ಸತತವಾಗಿ ಬ್ಯಾಂಕಿನ ಹಣವನ್ನು ದುರುಪಯೋಗಪಡಿಸಿಕೊಂಡು ಒಟ್ಟು ರೂ 70,86,000 ರೂ. ಹಣವನ್ನು ವಂಚನೆ ಮಾಡಿರುತ್ತಾರೆಂದೂ ಹಾಗೂ ಸೇಫ್ ಲಾಕರ್ ನ್ನು ಪರಿಶೀಲಿಸಿದಾಗ 4.400 ಗ್ರಾಂ ತೂಕದ ರೂ 55,000/- ಅಂದಾಜು ಮೌಲ್ಯದ 1 ಪ್ಯಾಕೆಟ್ ಚಿನ್ನವನ್ನು ಲಪಟಾಯಿಸಿ ವಂಚಿಸಿರುತ್ತಾರೆಂದೂ ಆರೋಪಿಸಿದ್ದಾರೆ. ಆರೋಪಿಯು ದುರುಪಯೋಗ ಪಡಿಸಿದ ಹಣದ ವ್ಯವಹಾರಗಳು ಬೆಳಕಿಗೆ ಬಂದಿರುವುದು ತಿಳಿದು ಬಂದಾಗ ದಿನಾಂಕ 17-12-2025 ರಂದು ಅಸೌಖ್ಯದ ಕಾರಣ ಹೇಳಿ ಕಚೇರಿಯಿಂದ ನಿರ್ಗಮಿಸಿದವರು ಬಳಿಕ ನಾಪತ್ತೆಯಾಗಿದ್ದಾರೆಂದೂ, ಈ ಮೂಲಕ ಬ್ಯಾಂಕಿಗೆ ನಂಬಿಕೆ ದ್ರೋಹ ಮಾಡಿ ಒಟ್ಟು ಮೌಲ್ಯ ರೂ 71,41,000 ರೂ. ವಂಚನೆ ಮಾಡಿರುವುದಾಗಿ ದೂರಲಾಗಿದೆ. ದೂರನ್ನು ಸ್ವೀಕರಿಸಿದ ಉಪ್ಪಿನಂಗಡಿ ಪೊಲೀಸರು ವಂಚನೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ರಾಯಚೂರು ನಗರದಲ್ಲಿ ಜ.3ರಂದು ವಿದ್ಯುತ್ ವ್ಯತ್ಯಯ
ರಾಯಚೂರು : ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾದ ಕಂಡಕ್ಟರಿಂಗ್ ದುರಸ್ತಿ ಕಾಮಗಾರಿ ನಿರ್ವಹಿಸುತ್ತಿರುವ ಪ್ರಯುಕ್ತ ಜ.3ರ ಬೆಳಿಗ್ಗೆ 10:30 ಗಂಟೆಯಿಂದ ಸಂಜೆ 5 ಗಂಟೆವರೆಗೆ ಬನಶಂಕರಿ ರೊಟ್ಟಿ ಕೇಂದ್ರದಿಂದ ಮಾರೆಮ್ಮ ಗುಡಿ ರಾಂಪೂರು ರೋಡ್ವರೆಗೆ, ಮಾರೆಮ್ಮ ಗುಡಿ ರಾಂಪೂರು ರೋಡ್ರಿಂದ ವಿಜಿಲೆನ್ಸ್ ಆಫೀಸ್ನಲ್ಲಿ ಕೆಲಸ ಮಾಡುತ್ತಿರುವ ದೀಪಕ್ ಮನೆವರೆಗೆ ಮತ್ತು ಬೆಲ್ಲಂ ಕಾಲೋನಿಯ ಸುಬ್ರಮಣ್ಯ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08532-226386, 08532-231999, 9480845955 ಮತ್ತು 9448395624ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
U19 ಕೂಚ್ ಬೆಹಾರ್ ಕ್ರಿಕೆಟ್ ಟೂರ್ನಿ | ಗುಜರಾತ್ ವಿರುದ್ಧ ಕರ್ನಾಟಕ 160/3; ಧ್ರುವ ಕೃಷ್ಣನ್ ಅರ್ಧಶತಕ
ವಲ್ಸಾಡ್, ಜ.2: ಅಂಡರ್-19 ಕೂಚ್ ಬೆಹಾರ್ ಕ್ರಿಕೆಟ್ ಟೂರ್ನಿಯ ನಾಲ್ಕನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಗುಜರಾತ್ ತಂಡದ ಬೃಹತ್ ಮೊತ್ತಕ್ಕೆ ಉತ್ತರಿಸಹೊರಟಿರುವ ಕರ್ನಾಟಕ ತಂಡ ಶುಕ್ರವಾರ ಎರಡನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್ ಗಳ ನಷ್ಟಕ್ಕೆ 160 ರನ್ ಗಳಿಸಿದೆ. ಆರಂಭಿಕ ಬ್ಯಾಟರ್ ಧ್ರುವ್ ಕೃಷ್ಣನ್ ಅರ್ಧಶತಕ (82 ರನ್, 124 ಎಸೆತ) ಗಳಿಸಿ ಗಮನ ಸೆಳೆದಿದ್ದಾರೆ. ಸರ್ದಾರ್ ಪಟೇಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಕರ್ನಾಟಕದ ಇನಿಂಗ್ಸ್ ಆರಂಭಿಸಿದ ಧ್ರುವ್ ಹಾಗೂ ಆದೇಶ್ (37 ರನ್) ಮೊದಲ ವಿಕೆಟ್ ಗೆ 125 ರನ್ ಗಳ ಜೊತೆಯಾಟ ನಡೆಸಿ ಉತ್ತಮ ಆರಂಭ ಒದಗಿಸಿದರು. ಆದರೆ 139 ರನ್ ಗೆ 3 ವಿಕೆಟ್ ಗಳನ್ನು ಕಳೆದುಕೊಂಡ ಕರ್ನಾಟಕ ತಂಡ ದಿಢೀರ್ ಕುಸಿತ ಕಂಡಿತು. ನಾಯಕ ಅನ್ವಯ್ ದ್ರಾವಿಡ್ (9) ಹಾಗೂ ವರುಣ್ ಪಟೇಲ್ (11 ರನ್) ನಾಲ್ಕನೇ ವಿಕೆಟ್ ಗೆ 21 ರನ್ ಸೇರಿಸಿ ತಂಡವನ್ನು ಆಧರಿಸಿದ್ದಾರೆ. ಕರ್ನಾಟಕ ತಂಡವು ಇನ್ನೂ 291 ರನ್ ಹಿನ್ನಡೆಯಲ್ಲಿದೆ. ►ಗುಜರಾತ್ 451 ರನ್; ಮಾನಸ್ ಶತಕ, ರತನ್ ಗೆ ನಾಲ್ಕು ವಿಕೆಟ್ ಇದಕ್ಕೂ ಮೊದಲು 9 ವಿಕೆಟ್ ಗಳ ನಷ್ಟಕ್ಕೆ 348 ರನ್ ನಿಂದ ಮೊದಲ ಇನಿಂಗ್ಸ್ ಮುಂದುವರಿಸಿದ ಗುಜರಾತ್ ತಂಡವು 451 ರನ್ ಗಳಿಸಿ ಆಲೌಟಾಯಿತು. ಮಧ್ಯಮ ಕ್ರಮಾಂಕದ ಬ್ಯಾಟರ್ ಮಾನಸ್ ಎಂ. ದವೆ 245 ಎಸೆತಗಳಲ್ಲಿ 184 ರನ್ ಗಳಿಸಿ ತಂಡದ ಪರ ಸರ್ವಾಧಿಕ ಸ್ಕೋರ್ ದಾಖಲಿಸಿದರು. ಮಲೈ ಶಾ (78 ರನ್) ಅರ್ಧಶತಕ ಗಳಿಸಿ ಮಾನಸ್ಗೆ ಸಾಥ್ ನೀಡಿದರು. ದೈವಿಕ್ ಶಾ ಅವರೊಂದಿಗೆ 10ನೇ ವಿಕೆಟ್ ಗೆ 147 ರನ್ ಗಳ ಜೊತೆಯಾಟದಲ್ಲಿ ಭಾಗಿಯಾದ ಮಾನಸ್, ಗುಜರಾತ್ ತಂಡದ ಮೊತ್ತವನ್ನು 450ರ ಗಡಿ ದಾಟಿಸಿದರು. ಇದರಲ್ಲಿ ಮಾನಸ್ 127 ರನ್ ಹಾಗೂ ದೈವಿಕ್ 13 ರನ್ ಕೊಡುಗೆ ನೀಡಿದರು. ಕರ್ನಾಟಕದ ಬೌಲಿಂಗ್ ವಿಭಾಗದಲ್ಲಿ ರತನ್ ಬಿ.ಆರ್. (4–120) ಯಶಸ್ವಿ ಪ್ರದರ್ಶನ ನೀಡಿದರು. ವೈಭವ್ ಶರ್ಮಾ (2–55), ಈಸಾ ಪುತ್ತಿಗೆ (2–56) ಹಾಗೂ ಧ್ಯಾನ್ ಎಂ. ಹಿರೇಮಠ (2–98) ತಲಾ ಎರಡು ವಿಕೆಟ್ ಗಳನ್ನು ಪಡೆದರು.
ಕಲಬುರಗಿ | ಕೈದಿಗಳ ಜೂಜಾಟದ ವೀಡಿಯೊ ವೈರಲ್ ಪ್ರಕರಣ : ನಾಲ್ವರ ವಿರುದ್ಧ ಪ್ರಕರಣ ದಾಖಲು
ಉನ್ನತ ಮಟ್ಟದ ತನಿಖೆ ಆರಂಭ
T20 ವಿಶ್ವಕಪ್ ಟೂರ್ನಿಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ
ರಿಕೆಲ್ಟನ್, ಟ್ರಿಸ್ಟನ್ ಸ್ಟಬ್ಸ್ಗೆ ಸ್ಥಾನವಿಲ್ಲ!
ಉದ್ಯಾವರ ಸೇತುವೆಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು
ಕಾಪು, ಜ.2: ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆ ತಡೆಗೋಡೆಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ನಸುಕಿನ ವೇಳೆ 1.50ರ ಸುಮಾರಿಗೆ ನಡೆದಿದೆ. ಮೃತರನ್ನು ಸುಬ್ರಹ್ಮಣ್ಯದ ಯುವರಾಜ್ ಎಂದು ಗುರುತಿಸಲಾಗಿದೆ. ಇವರು ತನ್ನ ಬೈಕಿನಲ್ಲಿ ಮಂಗಳೂರಿನಿಂದ ಬ್ರಹ್ಮಾವರದಲ್ಲಿ ತನ್ನ ರೂಂಗೆ ಹೊರಟಿದ್ದು, ದಾರಿ ಮಧ್ಯೆ ಬೈಕ್ ಅತಿ ವೇಗ ಹಾಗೂ ಅಜಾಗರೂಕತೆ ಯಿಂದಾಗಿ ನಿಯಂತ್ರಣ ತಪ್ಪಿ ಉದ್ಯಾವರ ಸೇತುವೆಯ ತಡೆಗೋಡೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಸವಾರ ಯುವರಾಜ ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದು ಬಂದಿದೆ. ಮೃತದೇಹವನ್ನು ಉಚ್ಚಿಲದ ಎಸ್ಡಿಪಿಐ ಆಂಬುಲೆನ್ಸ್ನಲ್ಲಿ ಕೆಎಂ ಸಿರಾಜ್, ಜಲಾಲುದ್ದೀನ್ ಅಜ್ಜರಕಾಡು ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ| ಅಂತರಾಜ್ಯ ಕಳವು ಆರೋಪಿ ಉಮೇಶ್ ಬಳೆಗಾರ ಬಂಧನ
ಉಡುಪಿ, ಜ.2: ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಅಂತರಾಜ್ಯ ಕಳವು ಆರೋಪಿಯೊಬ್ಬನನ್ನು ಕಾಪು ಪೊಲೀಸರು ಜ.2ರಂದು ಬಂಧಿಸಿದ್ದಾರೆ. ಮಲ್ಲಾರು ಗ್ರಾಮದ ಫಕೀರ್ಣಕಟ್ಟೆಯ ಮೂಲದ ಪ್ರಸ್ತುತ ತಮಿಳುನಾಡು ಕನ್ಯಾಕುಮಾರಿಯ ಉಮೇಶ್ ಬಳೆಗಾರ ಯಾನೆ ಉಮೇಶ್ ಪಿ ಯಾನೆ ಉಮೇಶ್ ರೆಡ್ಡಿ(47) ಬಂಧಿತ ಆರೋಪಿ. ಡಿ.4ರಂದು ಕಾಪು ಮಲಾರು ಗ್ರಾಮದ ರಾಘವೇಂದ್ರ ಕಿಣಿ ಎಂಬವರ ಮನೆಗೆ ನುಗ್ಗಿದ ಕಳ್ಳರು, ಕಪಾಟಿನಲ್ಲಿದ್ದ ಒಟ್ಟು 3,90,000ರೂ. ಮೌಲ್ಯದ ಸುಮಾರು 72 ಗ್ರಾಂ ತೂಕದ ಚಿನ್ನಾಭರಣ ಹಾಗೂ 1,500ರೂ. ಮೌಲ್ಯದ ಬೆಳ್ಳಿ ವಸ್ತುಗಳನ್ನು ಕಳವು ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಮಾರ್ಗದರ್ಶನದಲ್ಲಿ ತನಿಖಾಧಿಕಾರಿ ಕಾಪು ಪೊಲೀಸ್ ವೃತ್ತ ನಿರೀಕ್ಷಕ ಅಝಮತ್ ಅಲಿ ಜಿ. ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿ ಉಮೇಶ್ ಬಳೆಗಾರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಈತನ ವಿರುದ್ಧ ಕೇರಳ, ತಮಿಳುನಾಡು ಹಾಗೂ ಆಂಧ್ರಪ್ರದೇಶ ರಾಜ್ಯಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 16 ಪ್ರಕರಣಗಳು ಹಾಗೂ ಕರ್ನಾಟಕ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 17 ಪ್ರಕರಣಗಳು ದಾಖಲಾಗಿವೆ. ಈತನ ವಿರುದ್ಧ ದಾಖಲಾಗಿರುವ ಪ್ರಕರಣಗಳಲ್ಲಿ ಸುಮಾರು 8 ಪ್ರಕರಣಗಳಲ್ಲಿ ಆತನಿಗೆ ಶಿಕ್ಷೆಯಾಗಿದೆ. ಈತನ ವಿರುದ್ಧ ಕೇರಳ ರಾಜ್ಯದ ತನ್ನಿಪಲಂ, ಮಾವೂರು, ತ್ರಿಶೂರ್ ಹಾಗೂ ಕರ್ನಾಟಕ ರಾಜ್ಯದ ದ.ಕ. ಜಿಲ್ಲೆಯ ಸುಬ್ರಹ್ಮಣ್ಯ, ಬೆಳ್ತಂಗಡಿ, ಪುತ್ತೂರು ನಗರ, ಮೂಡಬಿದ್ರೆ, ಉತ್ತರ ಕನ್ನಡ ಜಿಲ್ಲೆಯ ಶಿಶಿರ ಗ್ರಾಮಾಂತರ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಬಸವನಹಳ್ಳಿ, ಪೊಲೀಸ್ ಠಾಣೆಗಳಲ್ಲಿ ವರದಿಯಾಗಿರುವ ಪ್ರಕರಣಗಳಲ್ಲಿ ನ್ಯಾಯಾಲಯಗಳು ಜಾಮೀನು ರಹಿತ ದಸ್ತಗಿರಿ ವಾರಂಟ್ ಹೊರಡಿಸಿವೆ. ಅಲ್ಲದೇ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಈತ ದಸ್ತಗಿರಿಗೆ ಸಿಗದೇ ಇದ್ದುದರಿಂದ ಎಲ್.ಪಿ.ಸಿ ವಾರಂಟ್ ಕೂಡ ಆಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ವರದಿಯಾಗಿರುವ ಎರಡು ಪ್ರಕರಣಗಳಲ್ಲಿ ನ್ಯಾಯಾಲಯವು ಪ್ರೊಮೇಶನ್ ಹೊರಡಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಪಡುಬಿದ್ರೆ ಎಸ್ಸೈ ಅನಿಲ್ ಕುಮಾರ್ ಟಿ. ನಾಯ್ಕ, ಕಾಪು ಎಸ್ಸೈ ಶುಭಕರ ಮತ್ತು ಸಿಬ್ಬಂದಿ ರಾಜೇಶ್, ಮೋಹನಚಂದ್ರ, ರಘು, ಜೀವನ್, ಜೀಪು ಚಾಲಕರಾದ ಜಗದೀಶ್ ಹಾಗೂ ಸಿಡಿಆರ್ ವಿಭಾಗದ ದಿನೇಶ್ ಮತ್ತು ನಿತಿನ್ ಭಾಗವಹಿಸಿದ್ದಾರೆ.
ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆ ನಿಯಂತ್ರಣಕ್ಕೆ ಸಂಘದ ಆಗ್ರಹ
ಉಡುಪಿ, ಜ.2: ಇತ್ತೀಚೆಗೆ ಉಡುಪಿ-ಮಣಿಪಾಲದಲ್ಲಿ ಹೊರ ರಾಜ್ಯದ ಖಾಸಗಿ ಸಂಸ್ಥೆಯೊಂದು ‘ನಮ್ಮ ಯಾತ್ರಿ’ ಆ್ಯಪ್ ಮೂಲಕ, ರಾಜ್ಯ ಸರಕಾರ ಟ್ಯಾಕ್ಸಿಗಳಿಗೆ ನಿಗದಿ ಪಡಿಸಿದ ದರಕ್ಕಿಂತ ಕಡಿಮೆ ಬೆಲೆಗೆ ಜಿಲ್ಲೆಯಾದ್ಯಂತ ಟ್ಯಾಕ್ಸಿ ಮತ್ತು ಅಟೋರಿಕ್ಷಾಗಳ ಬಾಡಿಗೆ ಮಾಡುತಿದ್ದು, ಇದಕ್ಕೆ ನಿಯಂತ್ರಣ ಹೇರಬೇಕು ಎಂದು ಜಿಲ್ಲಾ ಟ್ಯಾಕ್ಸಿಮನ್ ಅಸೋಸಿಯೇಷನ್ ಪ್ರದಾನ ಕಾರ್ಯದರ್ಶಿ ರಮೇಶ್ ಕೆ.ಕೋಟ್ಯಾನ್ ಇಲಾಖೆಯನ್ನು ಆಗ್ರಹಿಸಿದ್ದಾರೆ. ಇದನ್ನು ತಡೆಯದಿದ್ದರೆ ಸ್ಥಳೀಯ ಟ್ಯಾಕ್ಸಿ ಚಾಲಕ ಮತ್ತು ಮಾಲಕರಿಗೆ ದೊಡ್ಡ ರೀತಿಯಲ್ಲಿ ಹೊಡೆತ ಬೀಳಲಿದ್ದು, ಪ್ರಯಾಣಿಕರಿಗೂ ಇದರಿಂದ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ ಎಂದು ಅವರು ಪತ್ರಿಕಾಗೋಷ್ಠಿ ಯಲ್ಲಿ ತಿಳಿಸಿದರು. ಆ್ಯಪ್ ಮೂಲಕ ನಿಗದಿಗಿಂತ ಕಡಿಮೆ ದರದಲ್ಲಿ ಬಾಡಿಗೆ ಮಾಡುವುದರಿಂದ ಜಿಲ್ಲೆಯ ಸಾವಿರಾರು ಮಂದಿ ಟ್ಯಾಕ್ಸಿ ಚಾಲಕ-ಮಾಲಕರು ಆತಂಕಕ್ಕೆ ಒಳಗಾಗಿದ್ದಾರೆ. ಸರಕಾರದ ದರಪಟ್ಟಿಯಂತೆ ನಾವು ಮಣಿಪಾಲದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ 1,700 ರೂ. ಬಾಡಿಗೆ ತೆಗೆದುಕೊಳ್ಳು ತಿದ್ದೇವೆ. ಆದರೆ ನಮ್ಮ ಯಾತ್ರಿ ಆ್ಯಪ್ ಮೂಲಕ ಬುಕ್ ಮಾಡಿದವರಿಗೆ 1050ರೂ. ಬಾಡಿಗೆ ಪಡೆಯಲಾಗುತ್ತಿದೆ ಎಂದವರು ವಿವರಿಸಿದರು. ಇಲ್ಲಿಂದ ಸ್ಥಳೀಯ ಟ್ಯಾಕ್ಸಿಗಳು ಪ್ರಯಾಣಿಕರನ್ನು ಮಂಗಳೂರಿಗೆ ಕರೆದೊಯ್ದು, ಖಾಲಿಯಾಗಿ ಮರಳಿ ಬರುತ್ತವೆ. ಆದರೆ ಆ್ಯಪ್ನಲ್ಲಿ ಹೋಗುವಾಗ ಮಾತ್ರ ಕಡಿಮೆ ದರ ಪಡೆದು ಬರುವಾಗ ಸ್ಥಳೀಯ ಟ್ಯಾಕ್ಸಿಗಿಂತಲೂ ದುಬಾರಿ ದರವಿದೆ. ಅವರು 2000ರೂ. ಪಡೆಯುತಿದ್ದಾರೆ ಎಂದು ರಮೇಶ್ ಕೋಟ್ಯಾನ್ ದೂರಿದರು. ಈಗಾಗಲೇ ಜಿಲ್ಲೆಯಾದ್ಯಂತ ಖಾಸಗಿ ವಾಹನಗಳು (ವೈಟ್ ಬೋರ್ಡ್) ಬಾಡಿಗೆ ಮಾಡುತ್ತಿರುವುದು ಹಾಗೂ ಸರಕಾರಗಳ ಪ್ಯಾನಿಕ್ ಬಟನ್ ಅಳವಡಿಕೆಯ ಅವೈಜ್ಞಾನಿಕ ನಿರ್ಧಾರದಿಂದ ಟ್ಯಾಕ್ಸಿ ಚಾಲಕರು ಬಹಳಷ್ಟು ಕಷ್ಟ ಅನುಭವಿಸುತಿದ್ದಾರೆ. ನ್ಯಾಯಾಲಯದ ಆದೇಶದ ಹೊರತಾಗಿಯೂ ಪ್ಯಾನಿಕ್ ಬಟನ್ನ ವಾರ್ಷಿಕ ನಿರ್ವಹಣಾ ವೆಚ್ಚವೆಂದು 1,800ರೂ. ಬದಲಿಗೆ 4,000ರೂ.ಗಳನ್ನು ಖಾಸಗಿ ಕಂಪೆನಿ ಮೂಲಕ ವಸೂಲಿ ಮಾಡಲಾಗುತ್ತಿದೆ ಎಂದು ಅಳಲು ತೋಡಿಕೊಂಡರು. ಆದ್ದರಿಂದ ನಮ್ಮ ಯಾತ್ರಿ ಆ್ಯಪ್ನ ಮಾಲಕರನ್ನು ಕರೆಸಿ ಅವರಿಗೆ ಸರಕಾರದ ನಿಯಮಾವಳಿಯನ್ನು ಪಾಲಿಸಲು ಸೂಚಿಸಬೇಕು. ಇಲ್ಲದಿದ್ದರೆ ಉಡುಪಿ ಜಿಲ್ಲೆ ಯಲ್ಲಿ ಆ್ಯಪ್ನ್ನು ನಿಷ್ಕೃಿಯಗೊಳಿಸಬೇಕು ಹಾಗೂ ಪ್ಯಾನಿಕ್ ಬಟನ್ಗೆ ನ್ಯಾಯಾಲಯದ ಆದೇಶದಂತೆ ಸಾರಿಗೆ ಇಲಾಖೆ ನಿಗದಿ ಪಡಿಸಬೇಕು ಎಂದು ಅವರು ಸರಕಾರಕ್ಕೆ ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರಿನ ಜಿ.ಆರ್.ಷಣ್ಮುಗಪ್ಪ, ಶಿವಣ್ಣ, ಪ್ರಕಾಶ್ ಅಡಿಗ, ಸತೀಶ್ ನಾಯಕ್, ಸತೀಶ್ ಶೆಟ್ಟಿ, ಕೃಷ್ಣ, ಮಹೇಶ್ಕುಮಾರ್, ಜಾನ್ ಮುಂತಾದವರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾಸ್ಪತ್ರೆಯ ಸೇವಾ ನಿವೃತ್ತ ವೈದ್ಯರಿಗೆ ಬೀಳ್ಕೋಡುಗೆ
ಉಡುಪಿ, ಜ.2: ಅಜ್ಜರಕಾಡಿನ ಜಿಲ್ಲಾ ಆಸ್ಪತ್ರೆಯಲ್ಲಿ ಡಿ.31ರಂದು ವೈದ್ಯಕೀಯ ಸೇವೆಯಿಂದ ನಿವೃತ್ತರಾದ ಜನರಲ್ ಸರ್ಜನ್ (ಅಂಕೋಲಾಜಿಸ್ಟ್) ಡಾ. ವೆಂಕಟೇಶ್ ಎನ್. ಹಾಗ ಹಿರಿಯ ಅರವಳಿಕೆ ತಜ್ಞ ಡಾ.ಉಮೇಶ್ ಉಪಾಧ್ಯ ಇವರಿಗೆ ಜಿಲ್ಲಾ ಆಸ್ಪತ್ರೆ ವತಿಯಿಂದ ಬೀಳ್ಕೋಡುಗೆ ಕಾರ್ಯಕ್ರಮವನ್ನು ಆಸ್ಪತ್ರೆಯಲ್ಲಿ ಆಯೋಜಿಸಲಾಗಿತ್ತು. ನಿವೃತ್ತ ವೈದ್ಯರ ನಿವೃತ್ತ ಜೀವನಕ್ಕೆ ಶುಭ ಹಾರೈಸಿ ಮಾತನಾಡಿದ ಜಿಲ್ಲಾ ಸರ್ಜನ್ ಡಾ.ಎಚ್.ಅಶೋಕ್, ಇಬ್ಬರು ತಜ್ಞ ವೈದ್ಯರು ನಗುಮೊಗದ ಉತ್ತಮ ಸೇವೆಯ ಮೂಲಕ ಕ್ಯಾನ್ಸರ್ ರೋಗಿಗಳ ಪಾಲಿಗೆ ಆಶಾಕಿರಣವಾ ಗಿದ್ದರು ಎಂದರು. ಈ ಸಂದರ್ಭದಲ್ಲಿ ಇಬ್ಬರು ವೈದ್ಯರಿಗೂ ಶಾಲು ಹೊದಿಸಿ, ಸ್ಮರಣಿಕೆಗಳನ್ನು ನೀಡಿ ಗೌರವಿಸಿ ಬೀಳ್ಕೊಡಲಾಯಿತು. ಡಾ. ಎಚ್.ಅಶೋಕ್ ಅಧ್ಯಕ್ಷತೆಯಲ್ಲಿ ನಡೆದ ಕಾಯಕ್ರಮದಲ್ಲಿ ನಿವಾಸಿ ವೈದ್ಯಾಧಿಕಾರಿ ಡಾ.ವಾಸುದೇವ್, ತಜ್ಞ ವೈದ್ಯರಾದ ಡಾ ನಿಖಿನ್ ಶೆಟ್ಟಿ, ಇಎನ್ಟಿ ತಜ್ಞರಾದ ಡಾ.ಮುರಳೀಧರ್ ಪಾಟೀಲ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆಸ್ಪತ್ರೆಯ ತಜ್ಞ ವೈದ್ಯರು, ನರ್ಸಿಂಗ್ ಅಧಿಕಾರಿ ಗಳು, ಸಿಬ್ಬಂದಿಗಳು, ತಾಯಿ ಮಕ್ಕಳ ಆಸ್ಪತ್ರೆಯ ಎಲ್ಲಾ ತಜ್ಞ ವೈದ್ಯರು ಉಪಸ್ಥಿತರಿದ್ದರು.
ನಾಡ ಕಚೇರಿಯಿಂದ ತ್ವರಿತ ಸೇವೆ: ರಾಜ್ಯದಲ್ಲಿಯೇ ಕಲಬುರಗಿ ನಂಬರ್-1
ಕಲಬುರಗಿ: ಅಟಲ್ಜೀ ಜನಸ್ನೇಹಿ ಕೇಂದ್ರದ ಮೂಲಕ ಡಿಸೆಂಬರ್-2025ರ ಮಾಹೆಯಲ್ಲಿ ಸ್ವೀಕರಿಸಿದ 39,964 ಅರ್ಜಿಗಳಲ್ಲಿ 38,133 ಅರ್ಜಿಗಳನ್ನು ಕಾಲಮಿತಿಯಲ್ಲಿಯೇ ವಿಲೇವಾರಿ ಮಾಡಿ ಶೇ.95.42ರಷ್ಟು ಪ್ರಗತಿ ಸಾಧಿಸುವ ಮೂಲಕ ರಾಜ್ಯದಲ್ಲಿಯೇ ಅರ್ಜಿ ವಿಲೇವಾರಿಯಲ್ಲಿ ಕಲಬುರಗಿ ಜಿಲ್ಲೆ ಮತ್ತೆ ನಂಬರ್-1 ಸ್ಥಾನ ಪಡೆದಿದೆ. ನಾಡ ಕಚೇರಿಯಿಂದ ಕಂದಾಯ ಇಲಾಖೆಯ 41 ಸೇವೆ ನೀಡಲು ಡಿಸೆಂಬರ್ -2025ರ ಮಾಹೆಯಲ್ಲಿ ಸ್ವೀಕರಿಸಲಾಗಿರುವ ಅರ್ಜಿಗಳನ್ನು ನಿಗಧಿತ ಅವಧಿಯಲ್ಲಿ 9.31 ವಿಲೇವಾರಿ ಸೂಚ್ಯಂಕದ ಪ್ರಕಾರ ವಿಲೇವಾರಿ ಮಾಡುವ ಮೂಲಕ ಈಶಾನ್ಯದ ತುದಿಯಲ್ಲಿರುವ ಕಲಬುರಗಿ ಜಿಲ್ಲೆ ಸಾರ್ವಜನಿಕರ ಸೇವೆ ವಿಲೇವಾರಿಯಲ್ಲಿ ರಾಜ್ಯದ ಗಮನ ಸೆಳೆದಿದೆ. ಕಳೆದ 2025ರ ಜುಲೈ ಮಾಹೆಯಲ್ಲಿಯೂ ಕಲಬುರಗಿ ಜಿಲ್ಲೆ ಅಟಲ್ಜೀ ಜನಸ್ನೇಹಿ ಕೇಂದ್ರದಿಂದ ಅರ್ಜಿ ವಿಲೇವಾರಿಯಲ್ಲಿ ಮೊದಲನೇ ಸ್ಥಾನ ಪಡೆದಿತ್ತು. ಇದೀಗ ಮತ್ತೆ ವಿಲೇವಾರಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡಿದ್ದು, ಕಲಬುರಗಿ ಜಿಲ್ಲಾಡಳಿತ ಕಾರ್ಯವೈಖರಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಕಲಬುರಗಿ ಜಿಲ್ಲೆಯ ಅಫಜಲಪೂರ ತಾಲೂಕಿನಲ್ಲಿ ಸ್ವೀಕೃತ 3,344 ರಲ್ಲಿ 3,070, ಆಳಂದದಲ್ಲಿ 4,880 ರಲ್ಲಿ 4,572, ಚಿಂಚೋಳಿಯಲ್ಲಿ ಸ್ವೀಕೃತ 2,654 ರಲ್ಲಿ 2,599, ಚಿತ್ತಾಪುರನಲ್ಲಿ ಸ್ವೀಕೃತ 3,330 ರಲ್ಲಿ 3,285, ಜೇವರ್ಗಿಯಲ್ಲಿ ಸ್ವೀಕೃತ 5,081 ರಲ್ಲಿ 4,905, ಕಲಬುರಗಿಯಲ್ಲಿ ಸ್ವೀಕೃತ 9,566 ರಲ್ಲಿ 8,926, ಕಾಳಗಿಯಲ್ಲಿ ಸ್ವೀಕೃತ 1,950 ರಲ್ಲಿ 1,881, ಕಮಲಾಪುರನಲ್ಲಿ ಸ್ವೀಕೃತ 1,782 ರಲ್ಲಿ 1,691, ಸೇಡಂನಲ್ಲಿ ಸ್ವೀಕೃತ 3,101 ರಲ್ಲಿ 3,051, ಶಹಾಬಾದ್ ನಲ್ಲಿ ಸ್ವೀಕೃತ 2,043 ರಲ್ಲಿ 2,008, ಯಡ್ರಾಮಿಯಲ್ಲಿ ಸ್ವೀಕೃತ 2,233 ರಲ್ಲಿ 2,145 ಅರ್ಜಿ ವಿಲೇವಾರಿ ಮಾಡುವ ಜಿಲ್ಲೆಯ ಜನತೆಗೆ ನಾಡ ಸೇವೆ ಕಚೇರಿ ತ್ವರಿತವಾಗಿ ಸ್ಪಂದಿಸಿದಿರುವುದು ಅಂಕಿ ಅಂಶಗಳು ಖಚಿತಪಡಿಸಿವೆ. ಜಿಲ್ಲೆಯಲ್ಲಿನ ಈ ಕಾರ್ಯ ಸಾಧನೆಗೆ ನಾಡ ಕಚೇರಿ ಮತ್ತು ಆಟಲ್ಜೀ ಜನಸ್ನೇಹಿ ಕೇಂದ್ರದ ಸಿಬ್ಬಂದಿಗಳ ಸಹಕಾರ, ಕಾರ್ಯತತ್ಪರತೆ ಕಾರಣವಾಗಿರುತ್ತದೆ. ಇದಕ್ಕಾಗಿ ಶ್ರಮಿಸಿದ ಎಲ್ಲಾ ಸಿಬ್ಬಂದಿ ವರ್ಗದವರಿಗೆ ಅಭಿನಂದನೆ ಸಲ್ಲಿಸಿರುವ ಡಿ.ಸಿ ಬಿ.ಫೌಜಿಯಾ ತರನ್ನುಮ್ ಅವರು, ಮುಂದಿನ ದಿನಗಳಲ್ಲಿ ಇದೇ ರೀತಿಯ ಸಾಧನೆ ಮಾಡುವಂತೆ ಸಿಬ್ಬಂದಿಗಳನ್ನು ಹುರಿದುಂಬಿಸಿದ್ದಾರೆ. ಟಾಪ್ 10ರಲ್ಲಿ ಕಲ್ಯಾಣದ 4 ಜಿಲ್ಲೆಗಳು: ಇನ್ನು ರಾಜ್ಯದಾದ್ಯಂತ ಜಿಲ್ಲಾವಾರು ಅರ್ಜಿ ವಿಲೇವಾರಿ ಪಟ್ಟಿ ಅವಲೋಕಿಸಿದಾಗ ಅಗ್ರ 10 ರಲ್ಲಿ ಕಲಬುರಗಿ, ವಿಜಯನಗರ ಜಿಲ್ಲೆಗಳು ಕ್ರಮವಾಗಿ ಪ್ರಥಮ, ದ್ವಿತೀಯ ಸ್ಥಾನ ಪಡೆದರೆ, ರಾಯಚೂರು ನಾಲ್ಕನೇ ಮತ್ತು ಯಾದಗಿರಿ ಜಿಲ್ಲೆ ಒಂಭತ್ತನೇ ಸ್ಥಾನ ಪಡೆದಿದೆ. ಈ ಮೂಲಕ ಕಲ್ಯಾಣ ಕರ್ನಾಟಕ ಭಾಗದ 4 ಜಿಲ್ಲೆಗಳು ಸಾರ್ವಜನಿಕ ಸೇವೆ ನೀಡುವಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಂತಾಗಿದೆ.
ಸ್ವಉದ್ಯೋಗಕ್ಕೆ ಸಂಜೀವಿನಿ ಮಾದರಿಯಾಗಲಿ: ಗುರುರಾಜ್ ಗಂಟಿಹೊಳೆ
ಉಡುಪಿ, ಜ.2: ಗ್ರಾಮೀಣ ಮಹಿಳೆಯರ ಸಾಮಾಜಿಕ ಸಬಲೀಕರಣಕ್ಕಾಗಿ ಪ್ರಾರಂಭಿಸಲಾಗಿರುವ ಸಂಜೀವಿನಿ ಸ್ವಸಹಾಯ ಗುಂಪುಗಳ ಮೂಲಕ ಮಹಿಳೆಯರು ಸ್ವಉದ್ಯೋಗದ ಚಟುವಟಿಕೆಗಳನ್ನು ನಡೆಸುತ್ತಿದ್ದು, ಇದು ಎಲ್ಲರಿಗೂ ಮಾದರಿಯಾಗಲಿ ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದ್ದಾರೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಜಿಲ್ಲಾ ಪಂಚಾಯತ್ನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಗುರುವಾರ ನಡೆದ ಸಂಜೀವಿನಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಈಗಾಗಲೇ ಸಂಜೀವಿನಿಯ ಮಹಿಳೆಯರು ಸಮುದಾಯ ಬಂಡವಾಳ ನಿಧಿ, ಬ್ಯಾಂಕ್ ಸಾಲ, ಇಲಾಖೆಗಳ ಸಾಲ ಸೌಲಭ್ಯ ಪಡೆದು ಸ್ವ ಉದ್ಯೋಗ ಚಟುವಟಿಕೆ ನಡೆಸುತ್ತಿದ್ದಾರೆ. ಈ ಮಹಿಳೆಯರನ್ನು ಮಾದರಿಯಾಗಿಸಿ ಪ್ರತಿ ಗ್ರಾಮದ ಸಂಜೀವಿನಿ ಮಹಿಳೆಯರು ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ಉದ್ಯಮಿಗಳಾಗಲು ಪ್ರಯತ್ನಿಸಬೇಕು ಎಂದು ಕಿವಿಮಾತು ಹೇಳಿದರು. ಕೃಷಿ, ಕೃಷಿಯೇತರ, ಪ್ರವಾಸೋದ್ಯಮ ಹಾಗೂ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಪ್ರತಿನಿಧಿಸಬೇಕು. ಇಂದು ಗ್ರಾಮೀಣ ಜನರು ನಿರುದ್ಯೋಗದ ಸಮಸ್ಯೆಯಿಂದ ಬೇರೆ ಕಡೆಗೆ ವಲಸೆ ಹೋಗುತ್ತಿದ್ದಾರೆ. ಹೀಗಾಗಿ ಸ್ಥಳೀಯ ವಾಗಿ ಮಹಿಳೆಯರಿಗೆ ಉದ್ಯೋಗ ಕಲ್ಪಿಸುವ ವ್ಯವಸ್ಥೆ ನಿರ್ಮಾಣವಾಗಬೇಕು ಎಂದು ಗಂಟಿಹೊಳೆ ತಿಳಿಸಿದರು. ಪ್ರತಿ ಗ್ರಾಮಪಂಚಾಯತ್ನಲ್ಲಿ ಗ್ರಾಮೋತ್ಸವ ನಡೆಸಲಾಗುತ್ತಿದ್ದು ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರು ಇದರಲ್ಲಿ ಆಸಕ್ತಿಯಿಂದ ಭಾಗವಹಿಸಿ ಇಲ್ಲಿ ದೊರಕುವ ಪ್ರಯೋಜನ ಪಡೆಯಬೇಕು ಎಂದರು. ಬೈಂದೂರು ಉತ್ಸವದಲ್ಲಿ ಸಂಜೀವಿನಿ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ನೂರು ಮಾರಾಟ ಮಳಿಗೆ ಸ್ಥಾಪಿಸುವ ಗುರಿಯನ್ನು ಹೊಂದಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಮಹಿಳೆಯರು ಆಸಕ್ತಿ ಯಿಂದ ಭಾಗವಹಿಸುವುದರ ಮೂಲಕ ಭವಿಷ್ಯದಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ಸಂಜೀವಿನಿ ಸ್ವಸಹಾಯ ಗುಂಪಿನ ಮಹಿಳೆಯರೇ ನಡೆಸಿಕೊಂಡು ಹೋಗುವಷ್ಟು ಸಬಲರಾಗಬೇಕು ಎಂದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರತೀಕ್ ಭಾಯಲ್, ಉಪಕಾರ್ಯದರ್ಶಿ ಶ್ಯಾಮ್ ಎಸ್ ಕದ್ರೊಳ್ಳಿ, ಯೋಜನಾ ನಿರ್ದೇಶಕ ವಿಜಯ್ ಕುಮಾರ್, ನಿವೃತ್ತ ರಾಜ್ಯ ಕಾರ್ಯಕ್ರಮ ವ್ಯವಸ್ಥಾಪಕ ಅಲಿ, ಲೀಡ್ಬ್ಯಾಂಕ್ ವ್ಯವಸ್ಥಾಪಕ ಹರೀಶ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಸತೀಶ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಹೇಮಂತ್ ಕುಮಾರ್, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕಿ ನವ್ಯ, ಜಿಲ್ಲಾ ವ್ಯವಸ್ಥಾಪಕ ಅವಿನಾಶ್, ಸೌಮ್ಯ, ಜಿಲ್ಲಾ, ತಾಲೂಕು ಅಭಿಯಾನ ನಿರ್ವಹಣಾ ಘಟಕದ ಸಿಬ್ಬಂದಿಗಳು, ಗ್ರಾಪಂ ಮಟ್ಟದ ಸಂಜೀವಿನಿ ಒಕ್ಕೂಟ ಅಧ್ಯಕ್ಷರು, ಕೃಷಿ ಸಖಿಯರು, ಪಶು ಸಖಿಯರು ಹಾಗೂ ಇತರರು ಉಪಸ್ಥಿತರಿದ್ದರು.
ಬೆಂಗಳೂರು ರೈಲು ನಿಲ್ದಾಣದಲ್ಲಿ ನವೀಕರಣದ ಹಿನ್ನೆಲೆ: ಯಲಹಂಕದವರೆಗೆ ರೈಲು ಸಂಚಾರ
ಕಲಬುರಗಿ: ಬೆಂಗಳೂರು (SMVT) ಎಸ್.ಎಮ್.ವಿ.ಟಿ. ರೈಲು ನಿಲ್ದಾಣದಲ್ಲಿ ಮೂಲ ಸೌಕರ್ಯ ನವೀಕರಣ ಕಾರ್ಯಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಈ ಕೆಳಕಂಡ ಎರಡು ವಿಶೇಷ ರೈಲುಗಳು ಯಲಹಂಕ ರೈಲು ನಿಲ್ದಾಣದವರೆಗೆ ಮಾತ್ರ ಸಂಚರಿಸಲಿದ್ದು, ಪ್ರಯಾಣಿಕರು ಈ ಬದಲಾವಣೆಯನ್ನು ಗಮನಿಸಿ ತಮ್ಮ ಪ್ರಯಾಣವನ್ನು ಮಾಡಬೇಕೆಂದು ಕೇಂದ್ರ ರೈಲ್ವೆಯ ಸೋಲಾಪುರ ವಿಭಾಗದ ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಜನವರಿ 3 ರಂದು ಬೀದರ್ನಿಂದ ಹೊರಡುವ ಬೀದರ್-(SMVT) (ಎಸ್.ಎಮ್.ವಿ.ಟಿ.) ಬೆಂಗಳೂರು ಎಕ್ಸ್ ಪ್ರೆಸ್ (ರೈಲು ಸಂಖ್ಯೆ 06540) ರೈಲು ಹಾಗೂ ಜನವರಿ 4 ರಂದು ಕಲಬುರಗಿ ರೈಲು ನಿಲ್ದಾಣದಿಂದ ಹೊರಡುವ ಕಲಬುರಗಿ-(SMVT) (ಎಸ್.ಎಮ್.ವಿ.ಟಿ.) ಬೆಂಗಳೂರು ವಂದೇ ಭಾರತ್ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 22231) ರೈಲುಗಳು ಯಲಹಂಕ ರೈಲು ನಿಲ್ದಾಣದವರೆಗೆ ಮಾತ್ರ ಪ್ರಯಾಣಿಸಲಿದೆ. ಅದೇ ರೀತಿ ಜನವರಿ 4 ರಂದು (SMVT) ((ಎಸ್.ಎಮ್.ವಿ.ಟಿ.) ಬೆಂಗಳೂರು-ಕಲಬುರಗಿ (ರೈಲು ಸಂಖ್ಯೆ 22232) ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಹಾಗೂ (SMVT) (ಎಸ್.ಎಮ್.ವಿ.ಟಿ.) ಬೆಂಗಳೂರು-ಬೀದರ್ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 06539) ರೈಲು ಯಲಹಂಕ ರೈಲು ನಿಲ್ದಾಣದಿಂದ ನಿಗದಿತ ಸಮಯದಲ್ಲಿ ಸಂಚಾರ ಆರಂಭಿಸಲಿದೆ.
Madhya Pradesh | ಕಲುಷಿತ ಆಹಾರ ಸೇವಿಸಿ 200 ಗಿಳಿಗಳ ಸಾವು
ಖರ್ಗೋನ್, ಜ. 2: ಮಧ್ಯಪ್ರದೇಶದ ಖರ್ಗೋನ್ ಜಿಲ್ಲೆಯಲ್ಲಿ ನರ್ಮದಾ ನದಿಯ ದಡದಲ್ಲಿ ಕಲುಷಿತ ಆಹಾರ ಸೇವನೆಯಿಂದಾಗಿ ಕನಿಷ್ಠ 200 ಗಿಳಿಗಳು ಮೃತಪಟ್ಟಿವೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಬದ್ವಾ ಪ್ರದೇಶದಲ್ಲಿ ನದಿ ದಡದಲ್ಲಿನ ನೀರನ್ನು ಸಾಗಿಸುವ ಕಾಲುವೆಯ ಬಳಿ ಕಳೆದ ನಾಲ್ಕು ದಿನಗಳಲ್ಲಿ ಮೃತ ಗಿಳಿಗಳು ಪತ್ತೆಯಾಗಿವೆ. ಶಂಕಿತ ಹಕ್ಕಿ ಜ್ವರದಿಂದ ಅವು ಮೃತಪಟ್ಟಿವೆ ಎಂಬ ಊಹಾಪೋಹವನ್ನು ಮರಣೋತ್ತರ ಪರೀಕ್ಷೆ ವರದಿ ತಳ್ಳಿ ಹಾಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ ಕೆಲವು ಗಿಳಿಗಳು ಜೀವಂತವಾಗಿದ್ದರೂ, ಆಹಾರದಲ್ಲಿದ್ದ ವಿಷತ್ವದ ತೀವ್ರತೆಯಿಂದಾಗಿ ಅವುಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಜಿಲ್ಲಾ ವನ್ಯಜೀವಿ ವಾರ್ಡನ್ ಟೋನಿ ಶರ್ಮಾ ವಿಷಾದ ವ್ಯಕ್ತಪಡಿಸಿದರು. ಹಕ್ಕಿ ಜ್ವರದ ಶಂಕೆಯಿಂದಾಗಿ ಪ್ರದೇಶದಲ್ಲಿ ಆತಂಕ ಸೃಷ್ಟಿಯಾಗಿತ್ತು. ಆದರೆ ಪಶುವೈದ್ಯಕೀಯ ಪರೀಕ್ಷೆಗಳಲ್ಲಿ ಸೋಂಕಿನ ಯಾವುದೇ ಕುರುಹು ಕಂಡುಬಂದಿಲ್ಲ. ಈ ಕಾಲುವೆಯ ಬಳಿ ಹಕ್ಕಿಗಳಿಗೆ ಆಹಾರ ನೀಡುವುದನ್ನು ಅರಣ್ಯ ಇಲಾಖೆ ಅಧಿಕಾರಿಗಳು ನಿಷೇಧಿಸಿದ್ದು, ಆದೇಶದ ಕಟ್ಟುನಿಟ್ಟಿನ ಜಾರಿಗೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮೃತ ಗಿಳಿಗಳ ವಿಸೆರಾ ಮಾದರಿಗಳನ್ನು ಹೆಚ್ಚಿನ ಪರೀಕ್ಷೆಗಾಗಿ ಜಬಲ್ಪುರಕ್ಕೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಶುವೈದ್ಯಕೀಯ ಇಲಾಖೆಯ ಅಧಿಕಾರಿಗಳ ಪ್ರಕಾರ, ಕಲುಷಿತ ಹಾಗೂ ಅಸಮರ್ಪಕ ಆಹಾರ ಸೇವನೆಯಿಂದ ಈ ಸಾವುಗಳು ಸಂಭವಿಸಿವೆ. ಸ್ಥಳೀಯ ನಿವಾಸಿಗಳು ಮಾಹಿತಿ ನೀಡಿದ ಬಳಿಕ ಕಳೆದ ನಾಲ್ಕು ದಿನಗಳಿಂದ ಪಶುವೈದ್ಯಕೀಯ, ಅರಣ್ಯ ಇಲಾಖೆ ಹಾಗೂ ವನ್ಯಜೀವಿ ವಿಭಾಗದ ತಂಡಗಳು ಈ ಪ್ರದೇಶದ ಮೇಲೆ ನಿಗಾ ಇರಿಸಿವೆ. ಗಿಳಿಗಳಲ್ಲಿ ಕಲುಷಿತ ಆಹಾರ ಸೇವನೆಯ ಲಕ್ಷಣಗಳು ಪತ್ತೆಯಾಗಿವೆ. ಆದರೆ ಹಕ್ಕಿ ಜ್ವರದ ಯಾವುದೇ ಕುರುಹು ಕಂಡುಬಂದಿಲ್ಲ ಎಂದು ಮರಣೋತ್ತರ ಪರೀಕ್ಷೆ ನಡೆಸಿದ ಪಶುವೈದ್ಯೆ ಡಾ. ಮನೀಷಾ ಚೌಹಾಣ್ ತಿಳಿಸಿದ್ದಾರೆ. ಜನಸಾಮಾನ್ಯರು ಅನಾಯಾಸವಾಗಿ ಹಕ್ಕಿಗಳ ಜೀರ್ಣಾಂಗ ವ್ಯವಸ್ಥೆಗೆ ಮಾರಕವಾಗುವ ಆಹಾರವನ್ನು ನೀಡುತ್ತಾರೆ ಎಂದು ಅವರು ಹೇಳಿದ್ದಾರೆ. ಮೃತ ಗಿಳಿಗಳ ಹೊಟ್ಟೆಯಲ್ಲಿ ಅಕ್ಕಿ ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಮೇಲ್ನೋಟಕ್ಕೆ ಸಾವುಗಳು ಅಸಮರ್ಪಕ ಆಹಾರ ಸೇವನೆಯಿಂದ ಸಂಭವಿಸಿರುವುದು ಕಂಡುಬರುತ್ತದೆ ಎಂದು ಪಶುವೈದ್ಯಕೀಯ ವಿಸ್ತರಣಾಧಿಕಾರಿ ಡಾ. ಸುರೇಶ್ ಬಘೇಲ್ ಹೇಳಿದ್ದಾರೆ. ಕೀಟನಾಶಕ ಸಿಂಪಡಿಸಿದ ಹೊಲಗಳಲ್ಲಿ ಬೆಳೆದ ಧಾನ್ಯಗಳು ಹಾಗೂ ನರ್ಮದಾ ನದಿ ನೀರಿನ ಸೇವನೆ ಸಾವುಗಳಿಗೆ ಕಾರಣವಾಗಿರಬಹುದು ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ. ಕಾಲುವೆಗೆ ಭೇಟಿ ನೀಡುವ ಸಂದರ್ಶಕರು ಬೇಯಿಸಿದ ಆಹಾರ ಅಥವಾ ಉಳಿದ ಆಹಾರವನ್ನು ನೀಡುವುದು ಹಕ್ಕಿಗಳಿಗೆ ಮಾರಣಾಂತಿಕವಾಗುತ್ತದೆ ಎಂದೂ ಅವರು ಎಚ್ಚರಿಸಿದರು.
ಮೋದಿಯವರ ಅಂಧಾಭಿಮಾನಿ ನಡೆಸಿದ ಸಮೀಕ್ಷೆ ಹಿಡಿದು ರಾಹುಲ್ ಆರೋಪ ತಿರುಚುವ ಯತ್ನ: ಸಿದ್ದರಾಮಯ್ಯ ಕಿಡಿ
ರಾಜ್ಯದಲ್ಲಿನ ಚುನಾವಣಾ ಅಕ್ರಮಗಳ ಕುರಿತು ರಾಹುಲ್ ಗಾಂಧಿಯವರು ಎತ್ತಿರುವ ಪ್ರಶ್ನೆಗಳನ್ನು ದಿಕ್ಕು ತಪ್ಪಿಸುವ ಸಲುವಾಗಿ, ಮೇ 2025ರಲ್ಲಿ ಚುನಾವಣಾ ಆಯೋಗವು ಮತಜಾಗೃತಿಗಾಗಿ ನಡೆಸಿದ ಹಳೆಯ ಸಮೀಕ್ಷೆಯನ್ನು ಅಸ್ತ್ರವನ್ನಾಗಿ ಬಳಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. 5 ಕೋಟಿಗೂ ಹೆಚ್ಚು ಮತದಾರರಿರುವಲ್ಲಿ ಕೇವಲ 5,100 ಜನರ ಸ್ಯಾಂಪಲ್ ಪಡೆದು ನಡೆಸಲಾದ ಈ ಸಮೀಕ್ಷೆಯು ಅವೈಜ್ಞಾನಿಕ ಎಂದಿರುವ ಅವರು, ಇದನ್ನು ನಡೆಸಿದ ಸಂಸ್ಥೆಯು ಬಿಜೆಪಿ ಪರ ಒಲವು ಹೊಂದಿದೆ ಎಂದು ದೂರಿದ್ದಾರೆ.
ಕೇಂದ್ರದ ಹಸ್ತಕ್ಷೇಪಕ್ಕೆ ಆಗ್ರಹ
ಬಳ್ಳಾರಿ ಗಲಭೆ: ಅಧಿಕಾರ ಸ್ವೀಕರಿಸಿದ ಒಂದೇ ದಿನಕ್ಕೆ ಎಸ್ಪಿ ಪವನ್ ನೆಜ್ಜೂರು ಸಸ್ಪೆಂಡ್
ಬ್ಯಾನರ್ ವಿಚಾರವಾಗಿ ಬಳ್ಳಾರಿಯಲ್ಲಿ ಹೊಸ ವರ್ಷದ ದಿನವೇ ಗಲಭೆ ನಡೆದಿದೆ. ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ನಡುವಿನ ಗಲಾಟೆಯಲ್ಲಿ ಖಾಸಗಿ ಗನ್ ಮ್ಯಾನ್ ಮಾಡಿದ ಫೈರಿಂಗ್ನಲ್ಲಿ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವುದು ರಾಜಕೀಯ ತಿರುವು ಪಡೆದುಕೊಂಡಿದೆ. ಈ ಘಟನೆ ಸಂಬಂಧ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರು ಅವರನ್ನು ಅಮಾನತು ಮಾಡಲಾಗಿದೆ.
Uttar Pradesh | ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯನ್ನು ಕೊಲೆಗೈದ ಯುವತಿಯ ಬಂಧನ
ಬಂಡಾ, ಜ. 2: ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಲು ಯತ್ನಿಸಿದ್ದನೆನ್ನಲಾದ ಮಧ್ಯವಯಸ್ಕನೊಬ್ಬನನ್ನು 18 ವರ್ಷದ ಯುವತಿಯೊಬ್ಬಳು ಹರಿತವಾದ ಆಯುಧದಿಂದ ಕಡಿದು ಹತ್ಯೆಗೈದ ಘಟನೆ ಉತ್ತರಪ್ರದೇಶದ ಬಂಡಾ ಜಿಲ್ಲೆಯಲ್ಲಿ ವರದಿಯಾಗಿದೆ. ಆರೋಪಿ ಯುವತಿಯನ್ನು ಪೊಲೀಸರು ಬಂಧಿಸಿದ್ದು, ಆಕೆಯ ವಿಚಾರಣೆ ನಡೆಯುತ್ತಿದೆ. ಉತ್ತರಪ್ರದೇಶದ ಮುರ್ವಾಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗುರುವಾರ ಮಧ್ಯಾಹ್ನ 3.30ರ ವೇಳೆಗೆ ಸ್ಥಳೀಯ ನಿವಾಸಿ ಸುಖರಾಜ್ ಪ್ರಜಾಪತಿ (50) ಅವರ ಮೃತದೇಹ ಆತನ ಮನೆಯಲ್ಲಿ ಪತ್ತೆಯಾಗಿದೆ. ಮೃತನ ತಲೆಗೆ ಹರಿತವಾದ ಆಯುಧದಿಂದ ಕಡಿದ ಗಾಯದ ಗುರುತುಗಳು ಕಂಡುಬಂದಿವೆ. ಮೃತನ ಕುಟುಂಬ ಸದಸ್ಯರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಯುವತಿಯನ್ನು ಬಂಧಿಸಿದ್ದಾರೆ. ಕೊಲೆಗೆ ಬಳಸಿದ ಆಯುಧವನ್ನು ಆಕೆಯಿಂದ ವಶಪಡಿಸಿಕೊಂಡಿದ್ದಾರೆ. ಹತ್ಯೆಯಾದ ವ್ಯಕ್ತಿ ಸುಖರಾಜ್ ಪ್ರಜಾಪತಿ ತನ್ನ ಮನೆಗೆ ಪ್ರವೇಶಿಸಿ ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಲು ಯತ್ನಿಸಿದ್ದನೆಂದು ಬಂಧಿತ ಯುವತಿ ವಿಚಾರಣೆ ವೇಳೆ ತಿಳಿಸಿದ್ದಾಳೆ. ಆತ್ಮರಕ್ಷಣೆಯ ಪ್ರಯತ್ನವಾಗಿ ತನ್ನ ಮನೆಯಲ್ಲಿದ್ದ ‘ಫರ್ಸಾ’ ಎಂಬ ಹರಿತವಾದ ಆಯುಧದಿಂದ ಆತನನ್ನು ಕಡಿದು ಹತ್ಯೆಗೈದಿರುವುದಾಗಿ ಬಂಧಿತ ಯುವತಿ ತಿಳಿಸಿದ್ದಾಳೆ ಎಂದು ಪೊಲೀಸ್ ಅಧಿಕಾರಿ ರಾಜೇಂದ್ರ ಸಿಂಗ್ ರಜಾವತ್ ತಿಳಿಸಿದ್ದಾರೆ.
ಸಫಾರಿ ಕುರಿತು ಅಧ್ಯಯನಕ್ಕೆ ತಜ್ಞರ ಸಮಿತಿ ರಚಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು, ಜ.2: ಸಫಾರಿ ವಾಹನಗಳ ಕಿರಿಕಿರಿಯಿಂದ ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬರುತ್ತಿವೆಯೇ ಎನ್ನುವ ಕುರಿತು ಹಾಗೂ ಬಂಡೀಪುರ-ನಾಗರಹೊಳೆಯಲ್ಲಿ ಸಫಾರಿ ವಾಹನಗಳ ಧಾರಣಾ ಸಾಮರ್ಥ್ಯವೆಷ್ಟು ಎಂಬ ಬಗ್ಗೆ ಅಧ್ಯಯನಕ್ಕಾಗಿ ತಜ್ಞರ ಸಮಿತಿ ರಚಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಶುಕ್ರವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ರಾಜ್ಯ ವನ್ಯಜೀವಿ ಮಂಡಳಿಯ 20ನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅರಣ್ಯ ಪ್ರವಾಸೋದ್ಯಮದಿಂದ ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸಫಾರಿ ಬಗೆಗಿನ ನಿರ್ಣಯವನ್ನು ಪುನರ್ ಪರಿಶೀಲಿಸಲು ಪರಿಣಿತರನ್ನೊಳಗೊಂಡ ತಾಂತ್ರಿಕ ಸಮಿತಿ ರಚಿಸಿ, ಅಭಿಪ್ರಾಯ ಪಡೆಯಲು ಸೂಚನೆ ನೀಡಲಾಗಿದೆ ಎಂದು ಹೇಳಿದರು. ಇದಕ್ಕೂ ಮೊದಲು ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಕಳೆದ ಅಕ್ಟೋಬರ್ ಮತ್ತು ನವೆಂಬರ್ನಲ್ಲಿ ಹುಲಿಗಳ ದಾಳಿಯಿಂದ ಮೂವರು ಮೃತಪಟ್ಟು ಒಬ್ಬರು ಶಾಶ್ವತ ವಿಶೇಷಚೇತನರಾದ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿ ಸ್ಥಗಿತಗೊಳಿಸಲಾಗಿತ್ತು. ಈ 2 ತಿಂಗಳ ಅವಧಿಯಲ್ಲಿ ಕಾಡಿನ ಹೊರಗೆ ಹುಲಿ ದಾಳಿ ನಡೆದಿಲ್ಲ, ಯಾವುದೇ ಜೀವಹಾನಿ ಆಗಿಲ್ಲ ಎಂದು ವಿವರಿಸಿದರು. ಸಫಾರಿ ವಾಹನದ ಕಿರಿಕಿರಿಯಿಂದ, ವಾಹನಗಳ ಬೆಳಕಿನಿಂದ ವನ್ಯಜೀವಿಗಳು ಹೊರಬರುತ್ತವೆ ಎಂಬುದು ಸ್ಥಳೀಯರು ಮತ್ತು ರೈತರ ಆರೋಪವಾಗಿದೆ. ಈ ಬಗ್ಗೆ ಅಧ್ಯಯನ ನಡೆಸುವ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. 1972ರಲ್ಲಿ ಬಂಡೀಪುರದಲ್ಲಿ ಕೇವಲ 12 ಹುಲಿ ಇತ್ತು. ಇಂದು ಸುಮಾರು 175-200 ಹುಲಿಗಳಿವೆ. ಒಂದು ಹುಲಿ ಸ್ವಚ್ಛಂದವಾಗಿ ಜೀವಿಸಲು 10 ಚದರ ಕಿಲೋ ಮೀಟರ್ ಪ್ರದೇಶ ಬೇಕು ಎಂದು ತಜ್ಞರು ಹೇಳುತ್ತಾರೆ. ಆದರೆ 900 ಚದರ ಕಿಲೋ ಮೀಟರ್ ಕಾಡಿನಲ್ಲಿ 2 ಪಟ್ಟು ಹುಲಿಗಳಿವೆ. ಇದು ಸಹ ಹುಲಿಗಳು ಕಾಡಿನಿಂದ ನಾಡಿನತ್ತ ಬರಲು ಕಾರಣವಾಗಿದೆ ಎಂದು ಉಲ್ಲೇಖಿಸಿದರು. ವನ ಮತ್ತು ವನ್ಯಜೀವಿ ವಿಭಾಗದ ರಾಯಭಾರಿ ಅನಿಲ್ ಕುಂಬ್ಳೆ ಮಾತನಾಡಿ, ವನ್ಯಜೀವಿಗಳು ಕಾಡಿನಿಂದ ಹೊರಗೆ ಬರುವುದಕ್ಕೂ ಸಫಾರಿಗೂ ಸಂಬಂಧವಿಲ್ಲ. ಸಫಾರಿಗೆ ಕೇವಲ ಶೇ.8ರಷ್ಟು ಅರಣ್ಯ ಪ್ರದೇಶವೂ ಬಳಕೆ ಆಗುವುದಿಲ್ಲ. ಸ್ಥಳೀಯರ ಜೀವನೋಪಾಯವೂ ಇದರಲ್ಲಿ ಅಡಗಿದೆ. ಹೀಗಾಗಿ ಪುನರ್ ಪರಿಶೀಲಿಸಬೇಕು ಎಂದು ಸಲಹೆ ಮಾಡಿದರು. ಶಾಸಕ ಗಣೇಶ್ ಪ್ರಸಾದ್ ಮಾತನಾಡಿ, ಸಫಾರಿ ಸ್ಥಗಿತಗೊಳಿಸಿರುವುದರಿಂದ ಸ್ಥಳೀಯರ ಜೀವನೋಪಾಯಕ್ಕೂ ತೊಂದರೆ ಆಗಿದೆ. ಪ್ರವಾಸೋದ್ಯಮಕ್ಕೂ ಪೆಟ್ಟು ಬಿದ್ದಿದೆ ಎಂದು ತಿಳಿಸಿದರು. ಸಭೆಯಲ್ಲಿ ಸಚಿವ ಭೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕ ಪಿ.ಸಿ.ರೇ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
Delhi | ದಟ್ಟ ಮಂಜು: 66 ವಿಮಾನಗಳ ಹಾರಾಟ ರದ್ದು
ಮುಂಬೈ, ಜ. 2: ದಟ್ಟವಾದ ಮಂಜು ಹಾಗೂ ತೀವ್ರವಾಗಿ ಕಡಿಮೆ ಗೋಚರತೆ ಇರುವ ಹಿನ್ನೆಲೆಯಲ್ಲಿ ಶುಕ್ರವಾರ ದಿಲ್ಲಿ ವಿಮಾನ ನಿಲ್ದಾಣದಲ್ಲಿ 66 ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ. ಮಂಜು ಹಾಗೂ ಕಡಿಮೆ ಗೋಚರತೆ ಪರಿಸ್ಥಿತಿಯ ಕಾರಣದಿಂದಾಗಿ ವಿವಿಧ ವಿಮಾನಯಾನ ಸಂಸ್ಥೆಗಳು ಒಟ್ಟು 66 ಹಾರಾಟಗಳನ್ನು ರದ್ದುಪಡಿಸಿವೆ. ಈ ಪೈಕಿ 32 ಆಗಮನ ವಿಮಾನಗಳಾಗಿದ್ದು, ಉಳಿದ 34 ನಿರ್ಗಮನ ವಿಮಾನಗಳಾಗಿವೆ ಎಂದು ಮೂಲಗಳು ತಿಳಿಸಿವೆ. ಡಿಸೆಂಬರ್ 10ರಿಂದ ಫೆಬ್ರವರಿ 10ರವರೆಗೆ ವಾರ್ಷಿಕ ಮಂಜಿನ ಅವಧಿಯೆಂದು ಘೋಷಿಸಲಾಗಿದೆ. ವಿಮಾನಯಾನ ನಿಯಂತ್ರಕ ಸಂಸ್ಥೆ ಡಿಜಿಸಿಎ ನಿಯಮಾವಳಿಗಳ ಪ್ರಕಾರ, ದಟ್ಟ ಮಂಜು ನೆಲೆಸಿರುವ ಸಂದರ್ಭಗಳಲ್ಲಿ ವಿಮಾನಯಾನ ಸಂಸ್ಥೆಗಳು ಕಡಿಮೆ ದೃಗ್ಗೋಚರತೆಯ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸಲು ತರಬೇತಿ ಪಡೆದ ಪೈಲಟ್ ಗಳನ್ನು ನಿಯೋಜಿಸಬೇಕಾಗುತ್ತದೆ. ಜೊತೆಗೆ III ಬಿ ಶ್ರೇಣಿಯ ನ್ಯಾವಿಗೇಶನ್ ವ್ಯವಸ್ಥೆಗೆ ಹೊಂದಿಕೊಳ್ಳುವ ವಿಮಾನಗಳನ್ನು ಬಳಸಬೇಕಾಗುತ್ತದೆ.
ಜೇವರ್ಗಿ | ಅಮರಶಿಲ್ಪಿ ಜಕಣಾಚಾರ್ಯ ಜಯಂತೋತ್ಸವ
ಜೇವರ್ಗಿ: ಪಟ್ಟಣದ ಬುಟ್ನಾಳ ರಸ್ತೆಯ ಪಕ್ಕದಲ್ಲಿರುವ ನಾಟ್ಯಲೋಕ ಡ್ಯಾನ್ಸ್ ಅಕಾಡೆಮಿ ವತಿಯಿಂದ ಅಮರಶಿಲ್ಪಿ ಜಕಣಾಚಾರ್ಯ ಜಯಂತೋತ್ಸವ ಆಚರಿಸಲಾಯಿತು. ವಿಶ್ವಕರ್ಮ ಸಮಾಜದ ಜಕಣಾಚಾರಿ ಜಯಂತಿಯ ಕುರಿತು ಸವಿಸ್ತಾರವಾಗಿ ಕರುಣಾಸಾಗರ ಪತ್ತಾರವರು ಮಾತನಾಡಿದರು. ವಿಶ್ವಕರ್ಮ ಸಮಾಜದ ಅಧ್ಯಕ್ಷರಾದ ಜಗದೀಶ್ ವಿಶ್ವಕರ್ಮ ಅವರು ಪೂಜೆಯನ್ನು ನೆರವೇರಿಸಿದರು. ಅಕಾಡೆಮಿಯ ಮಾಸ್ಟರ್ ಗಳಾದ ಮೋಹನ್ ಬಡಿಗೇರ ಮಾಸ್ಟರ್ ಮತ್ತು ರಾಜು ಮಾಸ್ಟರ್ ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರವೀಣ್ ಪತ್ತಾರ್,ರಮೇಶ್ ವಿಶ್ವಕರ್ಮ, ನಿಂಗರಾಜ ವಿಶ್ವಕರ್ಮ, ಮಂಜುನಾಥ ವಿಶ್ವಕರ್ಮ, ಸುಧಾಕರ್ ಪತ್ತಾರ, ಗಿರೀಶ ಪತ್ತಾರ, ಮಹಾಂತೇಶ ವಿಶ್ವಕರ್ಮ, ಗುಂಡಪ್ಪ ಪತ್ತಾರ, ವಿಜಯಕುಮಾರ್ ಪತ್ತಾರ, ಶರಣು ವಿಶ್ವಕರ್ಮ ಇದ್ದರು.
ಶಹಾಬಾದ್ | ಸರಕಾರಿ ನೌಕರರ ಸಂಘದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ
ಶಹಾಬಾದ್ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮುದ್ರಿಸಿರುವ 2026ರ ನೂತನ ವರ್ಷದ ಕ್ಯಾಲೆಂಡರ್ನ್ನು ತಹಶೀಲ್ದಾರ್ ಕಚೇರಿಯಲ್ಲಿ ಗುರುವಾರ ತಹಶೀಲ್ದಾರ್ ನೀಲಪ್ರಭಾ ಬಬಲಾದ ಅವರು ಸರಕಾರಿ ನೌಕರರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಬಿಡುಗಡೆಗೊಳಿಸಿದರು. ಸರಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಶಿವಪುತ್ರ ಕರಣಿಕ್ ಅವರು ಮಾತನಾಡಿ, ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು 2026ನೇ ಸಾಲಿನ ಆಕರ್ಷಕ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಿದ್ದು, ರಾಜ್ಯದ ಸುಮಾರು 6 ಲಕ್ಷ ನೌಕರರಿಗೆ ಉಚಿತವಾಗಿ ವಿತರಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಬಿಡುಗಡೆಯಾದ ಈ ಕ್ಯಾಲೆಂಡರ್ ಸರ್ಕಾರಿ ಯೋಜನೆಗಳು, ಜವಾಬ್ದಾರಿಗಳ ಕುರಿತು ಮಾಹಿತಿ ನೀಡುತ್ತದೆ ಎಂದರು. ತಹಶೀಲ್ದಾರ್ ನೀಲಪ್ರಭಾ ಬಬಲಾದ ಮಾತನಾಡಿ, ಈ ಕ್ಯಾಲೆಂಡರ್ ಕೇವಲ ದಿನಾಂಕಗಳನ್ನು ಹೊಂದಿಲ್ಲದೆ, ಸರ್ಕಾರದ ಯೋಜನೆಗಳು, ನೌಕರರ ಕರ್ತವ್ಯ ಮತ್ತು ಜವಾಬ್ದಾರಿಗಳ ಬಗ್ಗೆ ಜಾಗೃತಿ ಮೂಡಿಸುವ ಕ್ಯಾಲೆಂಡರ್ ಆಗಿದೆ. ದೇಶದಲ್ಲೇ ಇಷ್ಟು ದೊಡ್ಡ ಪ್ರಮಾಣದಲ್ಲಿ ನೌಕರರಿಗೆ ಉಚಿತ ಕ್ಯಾಲೆಂಡರ್ ವಿತರಿಸುತ್ತಿರುವ ಮೊದಲ ಸಂಘ ಎಂಬ ಹೆಗ್ಗಳಿಕೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪಾತ್ರವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಗ್ರೇಡ್-2 ತಹಶೀಲ್ದಾರ್ ಗುರುರಾಜ ಸಂಗಾವಿ, ರವಿಕುಮಾರ ಮುತ್ತಗಿಕರ್, ಅಣ್ಣಾರಾವ, ಗಫರ್, ಮುನೀರ್, ಶಕುಂತಲಾ ಸಾಕ್ರೆ, ಕಲಾವತಿ, ವಿಠಾಬಾಯಿ, ಸುಲೋಚನಾ ಜಾಧವ, ಸುಶೀಲ, ಶಶಿಕಾಂತ, ನರಸಪ್ಪ, ನಝೀರ್, ಹಬೀಬ್, ಯುಸೂಫ್ ನಾಕೇದಾರ, ಮುಹಮ್ಮದ್ ಖಾದ್ರಿ ಸೇರಿದಂತೆ ಕಂದಾಯ ಇಲಾಖೆಯ ಸಿಬ್ಬಂದಿ ವರ್ಗದವರು ಇದ್ದರು.
ಕಲಬುರಗಿ | ಮನೆಗೊಂದು ಗ್ರಂಥಾಲಯ ಯೋಜನೆ ಅಭಿಯಾನ
ಕಲಬುರಗಿ: ಇಲ್ಲಿನ ಶಹಾಬಜಾರ ನಾಕಾದಲ್ಲಿರುವ ಶಿಕ್ಷಣ ಪ್ರೇಮಿ ರಾಜಶೇಖರ ಚೌದ್ರಿ ಅವರ ಮನೆಯಲ್ಲಿ ಗ್ರಂಥಾಲಯ ನಿರ್ಮಿಸುವ ಮೂಲಕ ಕನ್ನಡ ಪುಸ್ತಕ ಪ್ರಾಧಿಕಾರದ ಮನೆಗೊಂದು ಗ್ರಂಥಾಲಯ ಯೋಜನೆಗೆ ಚಾಲನೆ ನೀಡಲಾಯಿತು. ಮನೆಯ ಗ್ರಂಥಾಲಯವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಇಂದಿನ ಒತ್ತಡದ ಬದುಕಿನಲ್ಲಿ ಮಕ್ಕಳಲ್ಲಿ ಓದುವ ಸಂಸ್ಕೃತಿ ಕಡಿಮೆಯಾಗಿದೆ. ಈ ದಿಸೆಯಲ್ಲಿ ಓದುವ ಅಭಿರುಚಿ ಬೆಲೆಸುವ ನಿಟ್ಟಿನಲ್ಲಿ ಮನೆಯಿಂದಲೇ ಆರಂಭವಾಗಲಿ ಎಂಬ ಆಶಯದೊಂದಿಗೆ ಕನ್ನಡ ಪುಸ್ತಕ ಪ್ರಾಧಿಕಾರ ಹೊಸ ಯೋಜನೆ ಅನುಷ್ಠಾನಗೊಳಿಸಿದ್ದು, ಅದರ ಸದುಪಯೋಗವಾಗಬೇಕಾದರೆ ಮಕ್ಕಳಿಗೆ ಪುಸ್ತಕ ಓದು, ಬರಹಗಳತ್ತ ಆಸಕ್ತಿ ಮೂಡಿಸಬೇಕು ಎಂದರು. ಮನೆಗೊಂದು ಗ್ರಂಥಾಲಯ ಜಾಗೃತ ಸಮಿತಿ ಸದಸ್ಯ ರಾಜಶೇಖರ ಚೌದ್ರಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಿಂದ ಪ್ರಕಟಿಸಿದ ಕೃತಿಗಳನ್ನು ಗ್ರಂಥಾಲಯಕ್ಕೆ ಉಡುಗೊರೆಯಾಗಿ ನೀಡಿದರು. ಜಿಲ್ಲಾ ಕಸಾಪದ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್.ಧನ್ನಿ, ನ್ಯಾಯವಾದಿ ವಿನೋದಕುಮಾರ ಜೆ.ಎಸ್., ಅಫಜಲಪೂರ ಕಸಾಪ ನೂತನ ಅಧ್ಯಕ್ಷೆ ಪ್ರಭಾವತಿ ಮೇತ್ರಿ, ಕಾರ್ಯದರ್ಶಿ ಪರಮಾನಂದ ಸರಸಂ, ಜಯಶ್ರೀ ಚೌದ್ರಿ, ಬಸವರಾಜ ಸಜ್ಜನ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಬ್ರಹ್ಮಾವರ: ಅಕ್ರಮ ಮರಳುಗಾರಿಕೆ ಆರೋಪ; 17 ದೋಣಿಗಳು ವಶ
ಬ್ರಹ್ಮಾವರ, ಜ.2: ಬ್ರಹ್ಮಾವರ ಪೊಲೀಸ್ ವ್ಯಾಪ್ತಿಯ ವಿವಿಧೆಡೆ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಪ್ರದೇಶಗಳಿಗೆ ದಾಳಿ ನಡೆಸಿದ ಬ್ರಹ್ಮಾವರ ಪೊಲೀಸರು ಒಟ್ಟು 17 ದೋಣಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಿವಿಧೆಡೆ ದೋಣಿಗಳನ್ನು ಬಳಸಿ ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಬಗ್ಗೆ ದೊರೆತ ಮಾಹಿತಿಯಂತೆ ದಾಳಿ ನಡೆಸಿದ ಬ್ರಹ್ಮಾವರ ಪೊಲೀಸರು, ಹಾವಂಜಿ ಗ್ರಾಮದ ಮುಗ್ಗೇರಿ ಹಾಗೂ ಉಳ್ಳೂರು ಗ್ರಾಮದ ಅಮ್ಮುಂಜೆ ಪರಿಸರದ ಸ್ವರ್ಣ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ 17 ದೋಣಿಗಳನ್ನು ವಶ ಪಡಿಸಿಕೊಂಡರೆನ್ನಲಾಗಿದೆ. ಉಡುಪಿ ಎಸ್ಪಿ ಹರಿರಾಂ ಶಂಕರ್ ನಿರ್ದೇಶನದಂತೆ ಹೆಚ್ಚುವರಿ ಎಸ್ಪಿ ಸುಧಾಕರ ನಾಯ್ಕ, ಡಿವೈಎಸ್ಪಿ ಪ್ರಭು ಡಿ.ಟಿ. ಮತ್ತು ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ಗೋಪಿಕೃಷ್ಣ ಮಾರ್ಗದರ್ಶನದಲ್ಲಿ ಬ್ರಹ್ಮಾವರ ಪೊಲೀಸ್ ಉಪ ನಿರೀಕ್ಷಕರುಗಳಾದ ಅಶೋಕ ಮಾಳಾಬಗಿ, ಸುದರ್ಶನ್ ದೊಡಮನಿ ಹಾಗೂ ಠಾಣಾ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದ್ದಾರೆ.
ಜೇವರ್ಗಿ | ಹಿಂಗಾರು ಬೆಳೆ ಸಮಿಕ್ಷೆ ನಡೆಸಿ ಪಹಣಿಯಲ್ಲಿ ನೋಂದಾಯಿಸುವಂತೆ ಆಗ್ರಹ
ಜೇವರ್ಗಿ : ಹಿಂಗಾರು ಬೆಳೆಗಳ ಸಮೀಕ್ಷೆ ನಡೆಸಿ ರೈತರ ಪಹಣಿಯಲ್ಲಿ ಕೂಡಲೇ ನೋಂದಣಿ ಮಾಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಕಲ್ಯಾಣ ಕರ್ನಾಟಕ ವಿಭಾಗ ಸಂಚಾಲಕರಾದ ರಾಜಶೇಖರ ಚವಡಿ ಆಗ್ರಹಿಸಿದರು. ಈ ಸಂಬಂಧ ಜೇವರ್ಗಿಯ ಕೃಷಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ ತಾಲೂಕಿನಾದ್ಯಂತ ಮುಂಗಾರು ಬೆಳೆ ಅತಿಯಾದ ಮಳೆಯಿಂದಾಗಿ ಸಂಪೂರ್ಣವಾಗಿ ನಾಶವಾಗಿದೆ. ಇದರಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಇದೀಗ ತಮ್ಮ ಜಮೀನಿನಲ್ಲಿ ಹಿಂಗಾರು ಬೆಳೆ ಬೆಳೆಸುತ್ತಿದ್ದಾರೆ. ಆದರೆ ಹಿಂಗಾರು ಬೆಳೆಗಳ ಸಮೀಕ್ಷೆ ನಡೆಸಿ ಪಹಣಿಯಲ್ಲಿ ನೋಂದಣಿ ಮಾಡುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು. ಇದರಿಂದ ರೈತರು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಕೂಡಲೇ ಹಿಂಗಾರು ಬೆಳೆ ಸಮೀಕ್ಷೆ ನಡೆಸಿ ಪಹಣಿಯಲ್ಲಿ ನೋಂದಣಿ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಬೇಕು. ವಿಳಂಬವಿಲ್ಲದೆ ಸಮೀಕ್ಷೆ ಪೂರ್ಣಗೊಳಿಸಿ ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ರೈತ ಸೇನೆ ಜಿಲ್ಲಾ ಕಾರ್ಯಾಧ್ಯಕ್ಷ ಸಂತೋಷಗೌಡ ಮಾಲಿ ಪಾಟೀಲ, ಜಿಲ್ಲಾ ಉಪಾಧ್ಯಕ್ಷ ರಮೇಶ ಹವಲ್ದಾರ, ಸಂಚಾಲಕ ವಿಶ್ವನಾಥ ದೊರೆ, ಜೇವರ್ಗಿ ತಾಲೂಕ ಖಜಾಂಚಿ ಮಲ್ಲಣ್ಣಗೌಡ ಹಳ್ಳಿ ಸೇರಿದಂತೆ ಅನೇಕ ರೈತ ಮುಖಂಡರು ಉಪಸ್ಥಿತರಿದ್ದರು.
ಚಂದ್ರಶೇಖರ ಕಂಬಾರಗೆ ರಾಮನಾಥ ಗೋಯಂಕಾ ‘ಜೀವಮಾನ ಸಾಧನೆ’ ಪ್ರಶಸ್ತಿ
ನಾಲ್ವರು ಲೇಖಕರಿಗೆ ಪ್ರಶಸ್ತಿ ಪ್ರದಾನ
ಬೆಂಗಳೂರು, ಜ.2: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಕೈದಿ ಟಿ.ನಸೀರ್ಗೆ ನೆರವು ನೀಡಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸಿದೆ. ಈ ಪ್ರಕರಣದಲ್ಲಿ ಎರಡನೇ ದೋಷಾರೋಪ ಪಟ್ಟಿ ಇದಾಗಿದ್ದು, ಆರೋಪಿ ಜುನೈದ್ನ ತಾಯಿ ಅನೀಸ್ ಫಾತಿಮಾ, ಎಎಸ್ಐ ಚಾಂದ್ಪಾಷಾ ಎ. ಹಾಗೂ ಕಾರಾಗೃಹದ ವೈದ್ಯ ಡಾ.ನಾಗರಾಜ್ ಎಸ್. ವಿರುದ್ಧ ಐಪಿಸಿ, ಯುಎ(ಪಿ) ಕಾಯ್ದೆ, ಸ್ಫೋಟಕ ವಸ್ತುಗಳ ಕಾಯ್ದೆ, ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ಕರ್ನಾಟಕ ಕಾರಾಗೃಹ ಕಾಯ್ದೆಯ ವಿವಿಧ ವಿಭಾಗಗಳಡಿಯಲ್ಲಿ ಆರೋಪಿಗಳು ಎಂದು ದೋಷಾರೋಪ ಪಟ್ಟಿ ಉಲ್ಲೇಖಿಸಿರುವುದಾಗಿ ತಿಳಿದು ಬಂದಿದೆ. ಈ ಹಿಂದೆಯೂ ಎನ್ಐಎ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಪರಾರಿಯಾಗಿದ್ದ ಆರೋಪಿ ಜುನೈದ್ ಸಹಿತ 9 ಮಂದಿ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆಯಾಗಿತ್ತು. ಇದೀಗ ಹೆಚ್ಚುವರಿಯಾಗಿ ಎನ್ಐಎ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದೆ. ಜುನೈದ್ನ ತಾಯಿ ಅನೀಸ್ ಫಾತಿಮಾ, ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ ಕೈದಿ ಟಿ.ನಸೀರ್ಗೆ ಹಣಕಾಸಿನ ವ್ಯವಸ್ಥೆ ಮಾಡುತ್ತಿದ್ದರು. ಮಗನ ನಿರ್ದೇಶನದ ಮೇರೆಗೆ ಮದ್ದುಗುಂಡುಗಳು ಮತ್ತು ವಾಕಿ-ಟಾಕಿಗಳನ್ನು ಸಂಗ್ರಹಿಸಿ ಪ್ರಕರಣದ ವಿವಿಧ ಆರೋಪಿಗಳ ನಡುವೆ ಸಂವಹನವನ್ನು ಸುಗಮಗೊಳಿಸಿದ್ದರು. ಅಲ್ಲದೆ, ಪ್ರಮುಖ ಆರೋಪಿ ಸಲ್ಮಾನ್ ಖಾನ್ಗೆ ಆಶ್ರಯ ನೀಡುವಲ್ಲಿ ಮತ್ತು ಅವನ ಪ್ರಯಾಣ ದಾಖಲೆಗಳನ್ನು ವ್ಯವಸ್ಥೆ ಮಾಡುವ ಮೂಲಕ ದುಬೈಗೆ ಪರಾರಿಯಾಗಲು ಸಹಾಯ ಮಾಡಿದ್ದರು ಎಂಬುದು ಎನ್ಐಎ ತನಿಖೆಯಿಂದ ಬಹಿರಂಗವಾಗಿತ್ತು. ನಂತರ ಆಫ್ರಿಕಾದ ರುವಾಂಡಾ ರಿಪಬ್ಲಿಕ್ನಲ್ಲಿದ್ದ ಸಲ್ಮಾನ್ ಖಾನ್ನನ್ನು ಬಂಧಿಸಿ ಭಾರತಕ್ಕೆ ಕರೆತರಲಾಗಿತ್ತು. ಬೆಂಗಳೂರು ನಗರದ ನಗರ ಸಶಸ್ತ್ರ ಮೀಸಲು- ದಕ್ಷಿಣ ವಿಭಾಗದಲ್ಲಿ ಎಎಸ್ಐ ಆಗಿದ್ದ ಚಾಂದ್ ಪಾಷಾ ಕೈದಿಗಳ ಬೆಂಗಾವಲು ಕರ್ತವ್ಯದಲ್ಲಿದ್ದಾಗ ಟಿ.ನಸೀರ್ನನ್ನು ನ್ಯಾಯಾಲಯಕ್ಕೆ ಕರೆದೊಯ್ಯುವ ಸಮಯ, ಮಾರ್ಗದ ವಿವರಗಳನ್ನು ಆರೋಪಿಗಳೊಂದಿಗೆ ಹಂಚಿಕೊಳ್ಳುತ್ತಿದ್ದ ಮತ್ತು ಇದಕ್ಕಾಗಿ ಆರೋಪಿ ಸಲ್ಮಾನ್ ನಿಂದ ಪ್ರತಿಫಲವನ್ನು ಪಡೆಯುತ್ತಿದ್ದ. ಪರಪ್ಪನ ಅಗ್ರಹಾರ ಕಾರಾಗೃಹದ ಆಸ್ಪತ್ರೆಯಲ್ಲಿ ಮನೋವೈದ್ಯನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ನಾಗರಾಜ್, ಕಾನೂನು ಬಾಹಿರವಾಗಿ ಜೈಲಿನಲ್ಲಿ ಕೈದಿಗಳಿಂದ ಹಣ ಪಡೆದು ಮೊಬೈಲ್ ಮಾರಾಟ ಮಾಡುತ್ತಿದ್ದ. ಟಿ.ನಸೀರ್ಗೂ ಮೊಬೈಲ್ ಮಾರಾಟ ಮಾಡಿದ್ದ ಎಂದು ಎನ್ಐಎ ವಿವರಿಸಿರುವುದಾಗಿ ಮೂಲಗಳು ತಿಳಿಸಿವೆ.
ನರಿಂಗಾಣ: ಗ್ರಾಮದ ಕೈರಂಗಳ ನಿವಾಸಿ ಶರೀಫ್ ಎನ್.ಎಸ್ (46) ಇಂದು ಮಧ್ಯಾಹ್ನ ಜುಮಾ ನಮಾಝ್ ಬಳಿಕ ಹೃದಯಾಘಾತದಿಂದ ನಿಧನರಾದರು. ಮೃತರ ಅಂತ್ಯ ಸಂಸ್ಕಾರವು ಇಂದು ರಾತ್ರಿ 10 ಗಂಟೆಗೆ ತೋಟಾಲ್ ಜುಮಾ ಮಸೀದಿಯ ವಠಾರದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ತಂದೆ, ತಾಯಿ ಹಾಗು ಮೂವರು ಸಹೋದರರು, ಇಬ್ಬರು ಸಹೋದರಿಯರ ಸಹಿತ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ.
ಜೇವರ್ಗಿ | ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ
ಜೇವರ್ಗಿ : 30 ಸಾವಿರ ಪೇಶ್ವೆಗಳನ್ನು ಕೇವಲ 500 ಮಹಾರ್ ಸೈನಿಕರು ಸೋಲಿಸಿ ವಿಜಯಪತಾಕೆ ಹಾರಿಸಿದ ಐತಿಹಾಸಿಕ ದಿನವನ್ನು ಭೀಮಾ ಕೋರೆಗಾಂವ್ ವಿಜಯೋತ್ಸವವಾಗಿ ದೇಶಾದ್ಯಂತ ಆಚರಿಸಲಾಗುತ್ತಿದೆ. ಪೇಶ್ವೆಗಳ ಆಡಳಿತದಲ್ಲಿದ್ದ ಜಾತಿ, ಅಸ್ಪೃಶ್ಯತೆ ಹಾಗೂ ಮೇಲುಕೀಳು ವ್ಯವಸ್ಥೆಗಳ ವಿರುದ್ಧ ನಿಂತು ಮಾನವೀಯ ಮೌಲ್ಯಗಳಿಗಾಗಿ ಹೋರಾಡಿದ ಮಹಾರ್ ಸೈನಿಕರ ಧೈರ್ಯ, ಸಾಹಸ ಮತ್ತು ಕೆಚ್ಚೆದೆಯ ಹೋರಾಟ ಮೆಚ್ಚುವಂತದ್ದು ಎಂದು ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಹೇಳಿದರು. ಪಟ್ಟಣದ ಡಾ.ಅಂಬೇಡ್ಕರ್ ಪುತ್ಥಳಿ ಬಳಿ ಭೀಮಾ ಕೋರೆಗಾಂವ್ ವಿಜಯೋತ್ಸವ ತಾಲ್ಲೂಕು ಸಮಿತಿ ವತಿಯಿಂದ ಗುರುವಾರ ಆಯೋಜಿಸಿದ್ದ 208ನೇ ಶೌರ್ಯ ದಿನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿ.ಪಂ. ಮಾಜಿ ಸದಸ್ಯ ಶಾಂತಪ್ಪ ಕೂಡಲಗಿ ಮಾತನಾಡಿದರು. ಬಹುಜನ ಚಿಂತಕ ಅನಿಲ ಟೆಂಗಳಿ ಹಾಗೂ ನಿಜಲಿಂಗ ದೊಡ್ಡಮನಿ ಪಂಡಿತ ಮುದಗುಣಗಿ ಉಪನ್ಯಾಸ ನೀಡಿ, ಕೋರೆಗಾಂವ್ ಯುದ್ಧದ ಐತಿಹಾಸಿಕ ಮಹತ್ವ ಮತ್ತು ಅದರ ಸಾಮಾಜಿಕ ಸಂದೇಶವನ್ನು ವಿವರಿಸಿದರು. ಈ ಸಂದರ್ಭದಲ್ಲಿ ದಲಿತ ಮುಖಂಡರಾದ ಸಂತೋಷ ಚನ್ನೂರ, ರೇಣುಕಾ ಗಾಯಕವಾಡ, ಖಾಜಪ್ಪ ಮಯೂರ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಶೇಖರ ಹರನಾಳ, ಮಲ್ಲಣ್ಣ ಕೊಡಚಿ, ಜಗದೇವಿ ಜಟ್ನನಕರ, ಗ್ರಾಮ ಪಂಚಾಯತ್ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಹಾಗೂ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ಮರೆಪ್ಪ ಬೇಗಾರ, ಡಾ. ಅಶೋಕ ದೊಡ್ಡಮನಿ ಸೇರಿದಂತೆ ಹಲವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಸಿದ್ದರಾಮ ಕಟ್ಟಿ, ಮಾಪಣ್ಣ ಕಟ್ಟಿ, ಗ್ಯಾರಂಟಿ ಸಮಿತಿ ಸದಸ್ಯ ಶರಣಬಸವಪ್ಪ ರೇವನೂರ, ದೇವೇಂದ್ರ ಮುದವಾಳ, ಬೆಣ್ಣೆಪ್ಪ ಕೊಂಬಿನ, ಪ್ರಭಾಕರ ಸಾಗರ್, ಪುರಸಭೆ ಸದಸ್ಯ ಶಿವುಬಾಯಿ ಕೊಂಬಿನ, ಗುಂಡಪ್ಪ ಜಡಗಿ, ಸಂಗಣ್ಣ ಗುಡುರ್, ಸಂಗಣ್ಣ ಕಟ್ಟಿ ಸಂಗಾವಿ, ಶರಣಬಸವಪ್ಪ, ರಮೇಶ್ ಧನಕರ, ಮೌನೇಶ್ ಹಂಗಾರಗಿ, ಮಾರುತಿ ಕನ್ನಾ, ವಿಜಯಕುಮಾರ ಜಟ್ನಾಕರ, ಆನಂದ ಕೊಂಬಿನ, ಮಿತೇಶ್ ಡುಗನಕರ್, ಮಿಲಿಂದ್ ಸಾಗರ, ವಿಶ್ವ ಬಾರಿಗಿಡ, ಶ್ರೀಮಂತ ಕಿಲ್ಲದಾರ, ಭಾಗಣ್ಣ ಕಟ್ಟಿ ಸೇರಿದಂತೆ ಅನೇಕ ಗಣ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಯಶವಂತ ಬಡಿಗೇರ ಕ್ರಾಂತಿಗೀತೆ ಹಾಡಿದರು. ಸಿದ್ದು ಕೆರೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸೂರ್ಯಕಾಂತ ಡುಗನಕರ್ ಸ್ವಾಗತಿಸಿದರು. ಶರಣಪ್ಪ ಬಡಿಗೇರ ನಿರೂಪಿಸಿದರು. ಶ್ರೀಹರಿ ಕರಕಿಹಳ್ಳಿ ವಂದಿಸಿದರು.
ರಾಹುಲ್ ಗಾಂಧಿಗೂ ಅಮೆರಿಕ ಸಂಸದರ ಪತ್ರಕ್ಕೂ ತಳುಕು ಹಾಕಿದ ಬಿಜೆಪಿ
ಹೊಸದಿಲ್ಲಿ, ಜ. 2: ಬಂಧನದಲ್ಲಿರುವ ವಿದ್ಯಾರ್ಥಿ ಕಾರ್ಯಕರ್ತ ಉಮರ್ ಖಾಲಿದ್ ಅವರ ನ್ಯಾಯಯುತ ಮತ್ತು ಸಕಾಲಿಕ ವಿಚಾರಣೆಗೆ ಆಗ್ರಹಿಸಿ ಅಮೆರಿಕದ ಎಂಟು ಸಂಸದರು ಭಾರತಕ್ಕೆ ಪತ್ರ ಬರೆದಿರುವುದನ್ನು ಬಲವಾಗಿ ಆಕ್ಷೇಪಿಸಿರುವ ಬಿಜೆಪಿಯು, ಆ ಪತ್ರದ ಹಿಂದಿನ ‘ಭಾರತ ವಿರೋಧಿ’ ಗುಂಪಿಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೂ ತಳುಕು ಹಾಕಿದೆ. ಅಮೆರಿಕದ ಎಂಟು ಸಂಸದರ ಪೈಕಿ ಒಬ್ಬರಾಗಿರುವ ಜಾನ್ ಶಾಕೋವಸ್ಕಿ ಅವರು 2024ರಲ್ಲಿ ರಾಹುಲ್ ಗಾಂಧಿಯವರೊಂದಿಗೆ ಮಾತುಕತೆ ನಡೆಸಿದ್ದರು. ಈ ವೇಳೆ ‘ಭಾರತ ವಿರೋಧಿ’ ಇಲ್ಹಾನ್ ಉಮರ್ ಉಪಸ್ಥಿತರಿದ್ದರು ಎಂದು ಬಿಜೆಪಿ ನಾಯಕ ಪ್ರದೀಪ ಭಂಡಾರಿ ಶುಕ್ರವಾರ ಆರೋಪಿಸಿದರು. ರಾಹುಲ್ ಅವರು ಶಾಕೋವಸ್ಕಿ, ಸ್ಯಾಮ್ ಪಿತ್ರೋಡಾ ಮತ್ತು ಇತರರೊಂದಿಗೆ ಇದ್ದ ಛಾಯಾಚಿತ್ರವನ್ನು ಹಂಚಿಕೊಂಡ ಭಂಡಾರಿ, ‘ವಿದೇಶಗಳಲ್ಲಿ ಭಾರತ ವಿರೋಧಿ ನಿರೂಪಣೆ ಹರಡಿಕೊಂಡಾಗಲೆಲ್ಲ ಹಿನ್ನೆಲೆಯಲ್ಲೊಂದು ಹೆಸರು ಅನುರಣಿಸುತ್ತಲೇ ಇರುತ್ತದೆ: ರಾಹುಲ್ ಗಾಂಧಿ’ ಎಂದು ಆರೋಪಿಸಿದರು. 2024ರಲ್ಲಿ ರಾಹುಲ್ ಅವರನ್ನು ಭೇಟಿಯಾದ ಬಳಿಕ, ಮರುವರ್ಷ ಶಾಕೋವಸ್ಕಿ ಭಾರತವನ್ನು ಹೆಸರಿಸಿ ಮುಸ್ಲಿಂ ಸಮುದಾಯಗಳ ಮೇಲೆ ದಾಳಿಗಳು ನಡೆದಿವೆ ಎಂದು ಆರೋಪಿಸಿ ‘ಅಂತರರಾಷ್ಟ್ರೀಯ ಇಸ್ಲಾಮೋಫೋಬಿಯಾ ವಿರುದ್ಧ ಕಾಯ್ದೆ’ಯನ್ನು ಮಂಡಿಸಿದ್ದರು. ಈಗ ಇದೇ ಶಾಕೋವಸ್ಕಿ, ಗಲಭೆಗಳು ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದ ಗಂಭೀರ ಪ್ರಕರಣಗಳಲ್ಲಿ ಯುಎಪಿಎ ಅಡಿ ಆರೋಪಿ ಆಗಿರುವ ಉಮರ್ ಖಾಲಿದ್ ಕುರಿತು ಕಳವಳ ವ್ಯಕ್ತಪಡಿಸಿ ಭಾರತ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಎಂದು ಭಂಡಾರಿ ಹೇಳಿದರು. ಭಾರತವನ್ನು ಅಸ್ಥಿರಗೊಳಿಸಲು, ಅದರ ಚುನಾಯಿತ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಮತ್ತು ಭಯೋತ್ಪಾದನೆ ನಿಗ್ರಹ ಕಾನೂನುಗಳನ್ನು ದುರ್ಬಲಗೊಳಿಸಲು ಬಯಸುವವರು ರಾಹುಲ್ ಸುತ್ತ ಸೇರಿರುವಂತೆ ಕಾಣುತ್ತಿದೆ ಎಂದೂ ಭಂಡಾರಿ ಹೇಳಿದರು.
ವಿನಯ ಹೆಗ್ಡೆಯಂತಹ ಮತ್ತೊಬ್ಬ ವ್ಯಕ್ತಿಯನ್ನು ಕಾಣಲು ಸಾಧ್ಯವಿಲ್ಲ: ಡಾ.ಬಿ.ಎ.ವಿವೇಕ ರೈ
ಸಾರ್ವಜನಿಕ ಶ್ರದ್ಧಾಂಜಲಿ ಸಭೆ
ಶಹಾಬಾದ್ | ದೇಶದಲ್ಲಿರುವ ಅವೈಜ್ಞಾನಿಕ ಪದ್ದತಿಯ ದಿಕ್ಕನ್ನೇ ಬದಲಾಯಿಸಿದವರು ಅಂಬೇಡ್ಕರ್ : ಮರಿಯಪ್ಪ ಹಳ್ಳಿ
ಶಹಾಬಾದ್ : ಹುಟ್ಟಿನಿಂದ ಹಿಡಿದು ಅವರ ಕೊನೆ ಉಸಿರು ಇರುವ ತನಕ ಅನೇಕ ಹೋರಾಟಗಳನ್ನು ಮಾಡಿ ಈ ದೇಶದಲ್ಲಿರುವ ಅವೈಜ್ಞಾನಿಕ ಪದ್ದತಿಯ ದಿಕ್ಕನ್ನೇ ಬದಲಾಯಿಸಿ ಹೊಸ ಬದಲಾವಣೆಯನ್ನು ತಂದಂತಹ ಮಹಾನ್ ವ್ಯಕ್ತಿ ಡಾ.ಬಿ.ಆರ್.ಅಂಬೇಡ್ಕರ್ ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ಮರಿಯಪ್ಪ ಹಳ್ಳಿ ಹೇಳಿದರು. ಅವರು ತಾಲೂಕಿನ ತೊನಸನಹಳ್ಳಿ(ಎಸ್) ಗ್ರಾಮದಲ್ಲಿ ಆಯೋಜಿಸಲಾದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇಂದು ಸಮಾಜದಲ್ಲಿ ಅಂಬೇಡ್ಕರ್ ವೇಷಧಾರಿಗಳು ಕಾಣಸಿಗುತ್ತಾರೆಯೇ ಹೊರತು, ಅವರಂತೆ ನಡೆದುಕೊಳ್ಳುವವರು ಕಡಿಮೆ. ದೇಶ, ಸಮಾಜ ಮತ್ತು ತನ್ನವರಿಗಾಗಿ ಬಾಬಾಸಾಹೇಬರು ಬಾಳಿದಂತೆ ಬಾಳು ನಡೆಸಬಾಕಾದವರು ಬೇಕಾಗಿದೆ. ಕೇವಲ ಅವರ ಭಾವಚಿತ್ರಕ್ಕೆ ಮತ್ತು ಪ್ರತಿಮೆಗೆ ಮಾಲಾರ್ಪಣೆ ಹಾಗೂ ಪೂಜೆ ಮಾಡುವುದಕ್ಕಿಂತಲೂ ಅವರ ಚರಿತ್ರೆಯನ್ನು ಅರಿತು ನಡೆಯಬೇಕಾಗಿದೆ ಎಂದರು. ಜಿಪಂ ಮಾಜಿ ಸದಸ್ಯ ಶಿವಾನಂದ ಪಾಟೀಲ ಮರತೂರ ಮಾತನಾಡಿದರು. ಗ್ರಾ.ಪಂ ಅಧ್ಯಕ್ಷೆ ಮುತ್ತಮ್ಮ ಶಿವರಾಯ ಮರತೂರ ಅಧ್ಯಕ್ಷತೆ ವಹಿಸಿದ್ದರು. ಕಾಡಾ ಅಧ್ಯಕ್ಷ ಡಾ.ಎಂ.ಎ.ರಶೀದ ಧ್ವಜಾರೋಹಣ ನೆರವೇರಿಸಿದರು. ತಹಶೀಲ್ದಾರ್ ನೀಲಪ್ರಭಾ ಬಬಲಾದ, ಅಣದೂರಿನ ಬೌದ್ಧ ವಿಹಾರದ ವರಜ್ಯೋತಿ ಭಂತೆಜೀ, ಅಲ್ಲಮಪ್ರಭು ಸಂಸ್ಥಾನದ ಡಾ.ಮಲ್ಲಣಪ್ಪ ಮಹಾಸ್ವಾಮಿಗಳು ಮಾತನಾಡಿದರು. ಮುಖಂಡರಾದ ಬಸವರಾಜ ಬೆಣ್ಣೂರ್, ಮಲ್ಲಪ್ಪ ಹೊಸಮನಿ, ನಗರಸಭೆ ಆಯುಕ್ತ ಕೆ.ಗುರಲಿಂಗಪ್ಪ, ತಾಪಂ ಇಓ ಮಲ್ಲಿನಾಥ ರಾವೂರ, ಕೋತ್ತಲಪ್ಪ ಮುತ್ಯಾ ,ಅಜಿತ್ಕುಮಾರ ಪಾಟೀಲ, ಅಪ್ಪುಗೌಡ ತರನಳ್ಳಿ, ಪಿಡಿಓ ನಿಂಗಪ್ಪ ಕೆಂಭಾವಿ, ಮಲ್ಲಣ್ಣ ಮರತೂರ, ಕರವೇ ಅಧ್ಯಕ್ಷ ಯಲ್ಲಾಲಿಂಗ ಹೈಯ್ಯಾಳಕರ್, ಗ್ರಾಪಂ ಸರ್ವ ಸದಸ್ಯರು ಸೇರಿದಂತೆ ಗ್ರಾಮಸ್ಥರು ಇದ್ದರು.
ಮಹಿಳೆಯರ ಅಸಭ್ಯ ಚಿತ್ರಗಳನ್ನು ರಚಿಸುತ್ತಿದೆ Grok AI; ಏನ್ ನಡೀತಿದೆ?
ಸಾಮಾಜಿಕ ಜಾಲತಾಣದಲ್ಲಿ ಫೊಟೋ ಅಪ್ಲೋಡ್ ಮಾಡಿದ್ದೀರಾ? ದುರುಪಯೋಗದ ಬಗ್ಗೆ ಇರಲಿ ಎಚ್ಚರ!
ದಾವಣಗೆರೆ: ಚಲಿಸುವ ರೈಲಿನಲ್ಲಿ ಪ್ರಯಾಣಿಕರೊಬ್ಬರ ಚಿನ್ನಾಭರಣ, ಲ್ಯಾಪ್ಟಾಪ್ ಕಳ್ಳತನ ಮಾಡಿದ್ದ ಆರೋಪಿಯನ್ನು ಆರ್ ಪಿಎಒಫ್ ಮತ್ತು ಜಿಆರ್ ಪಿ ಪೊಲೀಸರು ಬಂಧಿಸಿ 3.43 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಲ್ಯಾಪ್ಟಾಪ್ ವಶಪಡಿಸಿಕೊಂಡಿದ್ದಾರೆ. ಮುಹಮ್ಮದ್ ಅಮ್ಜದ್ ಬಂಧಿತ ಆರೋಪಿ. ಕಳೆದ ಡಿ.21ರಂದು ಬೆಂಗಳೂರಿನಿಂದ ಬೆಳಗಾವಿಗೆ ಹೊರಟ್ಟಿದ್ದ ಎಕ್ಸ್ ಪ್ರೆಸ್ ರೈಲಿನಲ್ಲಿ ಹುಬ್ಬಳ್ಳಿಯ ಮೇಲುಗಿರಿ ಶಿರೂರ್ ಪಾಕ್೯ ಸಮೀಪದ ನಿವಾಸಿ ಎಂ.ವಿನಯ್ ಪ್ರಯಾಣಿಸುತ್ತಿದ್ದಾಗ ಅವರ ಬಳಿಯಿದ್ದ 3.43 ಲಕ್ಷ ರೂ. ಮೌಲ್ಯದ ಮೊಬೈಲ್, ಲ್ಯಾಪ್ಟಾಪ್ ಹಾಗೂ ಚಿನ್ನಾಭರಣಗಳನ್ನು ಕಳ್ಳತನ ಮಾಡಲಾಗಿದೆ. ಈ ಬಗ್ಗೆ ಆನ್ ಲೈನ್ ಮೂಲಕ ಆರ್ ಪಿಎಫ್ ಠಾಣೆಗೆ ದೂರು ನೀಡಲಾಗಿತ್ತು. ಈ ಕುರಿತು ಜಿಆರ್ ಪಿ ಇನ್ಸ್ ಪೆಕ್ಟರ್ ಕೃಷ್ಣ ನಾಯಕ್ ಹಾಗೂ ಆರ್ ಪಿಎಫ್ ಇನ್ಸ್ ಪೆಕ್ಟರ್ ರಂಜನ್ ಕುಮಾರ್ ಭಾರಾಧ್ವಜ ನೇತೃತ್ವದ ಜಂಟಿ ತಂಡ ಪರಿಶೀಲಿಸಿ ಅದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮುಹಮ್ಮದ್ ಅಮ್ಜದ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ.
ಭೀಮಾ ಕೋರೆಗಾಂವ್ ಕಥೆಗಳನ್ನು ಕೇಳುತ್ತಲೇ ಯುವ ಪೀಳಿಗೆಯೊಳಗೆ ಹೋರಾಟದ ಕಿಚ್ಚು ಹಚ್ಚುತ್ತದೆ : ಡಾ.ಅರುಣ ಜೋಳದಕೂಡ್ಲಗಿ
ವಾಡಿ : ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಿಸುವುದೆಂದರೆ ಸ್ವಾಭಿಮಾನದ ಹೋರಾಟವನ್ನು ನೆನೆಸಿಕೊಳ್ಳುವ ದಿನವಾಗಿದ್ದು, ಆ ಹೋರಾಟದ ಕಥೆಗಳನ್ನು ಕೇಳುತ್ತಲೇ ಯುವ ಪೀಳಿಗೆಯೊಳಗೆ ಹೋರಾಟದ ಕಿಚ್ಚು ಹಚ್ಚುತ್ತದೆ ಎಂದು ಡಾ. ಅಂಬೇಡ್ಕರ್ ಪದವಿ ಕಾಲೇಜಿನ ಉಪನ್ಯಾಸಕ ಹಾಗೂ ಯುವ ಬರಹಗಾರ ಡಾ.ಅರುಣ ಜೋಳದಕೂಡ್ಲಗಿ ಹೇಳಿದರು. ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಅಂತರರಾಷ್ಟ್ರೀಯ ಬೌದ್ಧ ಯುವ ಸಂಘಟನೆ ಹಾಗೂ ಸ್ಥಳೀಯ ಬೌದ್ಧ ಸಮಾಜದ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಭೀಮಾ ಕೋರೆಗಾಂವ್ 208ನೇ ವಿಜಯೋತ್ಸವ ಅಂಗವಾಗಿ ನಡೆದ ಶೌರ್ಯ ದಿನ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು. ಅಂದು ಪೇಶ್ವೆಗಳ ಆಡಳಿತದ ಮಾದರಿಯಲ್ಲೇ ಇಂದು ಬಿಜೆಪಿ ಆಡಳಿತ ನಡೆಯುತ್ತಿದೆ ಎಂಬ ವಿಚಾರದ ಕುರಿತು 2018ರಲ್ಲಿ ಭೀಮಾ ಕೋರೆಗಾಂವ್ ನಲ್ಲಿ ದೇಶದ ಹಲವು ವಿದ್ವಾಂಸರು ನಡೆಸಿದ ಮಹತ್ವದ ಚರ್ಚೆಯಿಂದ ಕೇಂದ್ರ ಬಿಜೆಪಿ ಸರ್ಕಾರ ಭಯಗೊಂಡು ಅನೇಕ ವಿದ್ವಾಂಸರು ಹಾಗೂ ಹೋರಾಟಗಾರರನ್ನು ವರ್ಷಗಟ್ಟಲೆ ಜೈಲಿನಲ್ಲಿ ಬಂಧಿಸಿದೆ. ಇಂದಿಗೂ ಹಲವರು ಜೈಲಿನಲ್ಲೇ ಇದ್ದಾರೆ ಎಂದು ಆರೋಪಿಸಿದರು. ಶಿವಾಜಿ ಕಾಲದಲ್ಲಿ ಸೈನ್ಯ ಮತ್ತು ಆಡಳಿತದ ವಿವಿಧ ವಿಭಾಗಗಳಲ್ಲಿ ಮೇಲ್ಜಾತಿಯ ಮರಾಠ ಹಾಗೂ ಬ್ರಾಹ್ಮಣರು ಷಡ್ಯಂತ್ರ ರೂಪಿಸುತ್ತಿದ್ದರು. ಇದನ್ನು ಅರಿತ ಶಿವಾಜಿ, ಅವರನ್ನು ತಡೆಗಟ್ಟಲು ಮಹಾರರನ್ನು ಸೈನ್ಯಕ್ಕೆ ಸೇರಿಸಿಕೊಂಡಿದ್ದರು. ಈ ಇತಿಹಾಸವನ್ನು ಅಧ್ಯಯನ ಮಾಡಿದ ಬ್ರಿಟಿಷರು 1750ರಲ್ಲಿ ಮೊದಲ ಬಾರಿಗೆ ಮಹಾರರನ್ನು ಸೈನ್ಯಕ್ಕೆ ಸೇರಿಸಿಕೊಂಡರು. 1818ರಲ್ಲಿ ನಡೆದ ಯುದ್ಧವು ಬ್ರಿಟಿಷ್ ಪರವಲ್ಲ, ನಾತನವಾದಿ ಪೇಶ್ವೆಗಳ ವಿರುದ್ಧ ಸ್ವಾಭಿಮಾನಕ್ಕಾಗಿ ನಡೆದ ಹೋರಾಟ ಎಂಬುದನ್ನು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು. ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕರಾದ ಮರಿಯಪ್ಪ ಹಳ್ಳಿ ಮಾತನಾಡಿ, ಭೀಮಾ ಕೋರೆಗಾಂವ್ ವಿಜಯೋತ್ಸವವನ್ನು ಭಾವನಾತ್ಮಕವಾಗಿ ಆಚರಿಸದೆ, ಅದರ ಐತಿಹಾಸಿಕ ಸತ್ಯವನ್ನು ಅರಿತು ಸಂವಿಧಾನ ರಕ್ಷಣಾ ಪಡೆಗಳಾಗಿ ನಿಲ್ಲಬೇಕು ಎಂದರು. ಆರೆಸ್ಸೆಸ್ ಸನಾತನಿಗಳ ಪ್ರಭಾವದಲ್ಲಿರುವ ಬಿಜೆಪಿ, ಅಸ್ಪೃಶ್ಯ ದಲಿತ ಸಮುದಾಯವನ್ನು ಗುರಿಯಾಗಿಸಿಕೊಂಡು ಸಂವಿಧಾನದಲ್ಲಿ ಅಪಾಯಕಾರಿ ಬದಲಾವಣೆ ತರಲು ಯತ್ನಿಸುತ್ತಿದೆ. ಇದನ್ನು ತಡೆಯಲು ಎಲ್ಲರೂ ಒಗ್ಗಟ್ಟಾಗುವುದು ಇಂದಿನ ಅಗತ್ಯ ಎಂದು ಎಚ್ಚರಿಸಿದರು. ಉಪನ್ಯಾಸಕ ವಸಂತ ನಾಸಿ, ಸಾಮಾಜಿಕ ಕಾರ್ಯಕರ್ತ ಪ್ರಬುದ್ಧ ಲಕ್ಷ್ಮಿಕಾಂತ ಹುಬ್ಳಿ, ಸ್ಥಳೀಯ ಬೌದ್ಧ ಸಮಾಜದ ಅಧ್ಯಕ್ಷ ಟೋಪಣ್ಣ ಕೋಮಟೆ ಮಾತನಾಡಿದರು. ಕಲಬುರಗಿ ಸಿದ್ಧಾರ್ಥ ವಿಹಾರನ ಪೂಜ್ಯ ಭಂತೆ ಚನ್ನ, ಸಾನಿದ್ಯ ವಹಿಸಿದ್ದರು. ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸೈಯದ್ ಮೆಹಮೂದ್ ಚಿಸ್ತಿ, ಮರಿಯಪ್ಪ ಬುಕ್ಕುಲಕರ, ಶರಣಬಸು ಸಿರೂರಕರ, ರವಿ ಸಿಂಗೆ, ಶ್ರಾವಣಕುಮಾರ ಮೋಸಲಗಿ, ಸಾಯಬಣ್ಣ ಬನ್ನಟ್ಟಿ, ಮಲ್ಲೇಶಿ ಚುಕ್ಕೇರ, ನಾಗೇಂದ್ರ ಜೈಗಂಗ, ಭಾಗಪ್ಪ ಯಾದಗಿರಿ, ಶರಣು ನಾಟೇಕರ, ಚಂದ್ರಸೇನ ಮೇನಗಾರ, ಉದಯ ಯಾದಗಿರಿ, ಅನೀಲ ಸಿಬನೂರ, ಮಲ್ಲು ತಳವಾರ, ಮಲ್ಲಣ್ಣ ಮಸ್ಕಿ, ಸುನೀಲ ಚವಣೂರ, ಅರುಣ ಬರ್ಮಾ, ಶಿವು ಬೆಳಗೇರಿ, ಅಂತರರಾಷ್ಟ್ರೀಯ ಬೌದ್ಧ ಯುವ ಸಂಘಟನೆಯ ರಾಜ್ಯ ಸಂಯೋಜಕರಾದ ಸಂದೀಪ ಕಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಚಂದ್ರು ಸಂಗನ ಸ್ವಾಗತಿಸಿಸರು. ರಾಜಕುಮಾರ ಸಂಕಾ ನಿರೂಪಿಸಿದರು.
ಚಳಿಗಾಲದಲ್ಲಿ ಚರ್ಮದ ರಕ್ಷಣೆ | ನೈಸರ್ಗಿಕ ವಿಟಮಿನ್ C ಪಡೆದುಕೊಳ್ಳುವುದು ಹೇಗೆ?
ನೈಸರ್ಗಿಕವಾದ ವಿಟಮಿನ್ C ಗಳು UV ಕಿರಣಗಳ ಹಾನಿಯನ್ನು ತಡೆದು ಸುರಕ್ಷಾ ಜಾಲವನ್ನು ಒದಗಿಸುತ್ತವೆ. ನಿಮ್ಮ SPF ಅಡಿಯಲ್ಲಿ ಹಚ್ಚುವುದರಿಂದ ಚಳಿಗಾಲದ ಸೂರ್ಯನಿಂದ ಉತ್ತಮ ರಕ್ಷಣೆ ಪಡೆಯಬಹುದು. ಚಳಿಗಾಲದಲ್ಲಿ ಚರ್ಮದ ರಕ್ಷಣೆ ಬಹಳ ಕಷ್ಟ. ಹೊರಗೆ ಗಾಳಿ ಒಣಗಿರುತ್ತದೆ; ಇದರಿಂದ ಮುಖದ ಚರ್ಮ ಸಿಪ್ಪೆ ಏಳಬಹುದು ಹಾಗೂ ಬಣ್ಣ ಮಸುಕಾಗಬಹುದು. ಇಂತಹ ಸಂದರ್ಭಗಳಲ್ಲಿ ಚರ್ಮದ ಹೊಳಪಿಗೆ ವಿಟಮಿನ್ C ಬಹಳ ಉಪಯುಕ್ತ. ಆದರೆ 2025ರಲ್ಲಿ ವಿಟಮಿನ್ C ಇರುವ ಸಿಂಥೆಟಿಕ್ ಸಿರಂಗಳ ಬಳಕೆಯಿಂದ ಹಿಡಿದು ಇಡೀ ವಿಟಮಿನ್ C ಸಸ್ಯವನ್ನೇ ಬಳಸುವವರೆಗೆ ಚರ್ಚೆಗಳು ನಡೆದಿವೆ. ವಿಟಮಿನ್ Cಯ ಸಹಜ ಮೂಲಗಳಾದ ಕಾಕಡು ಪ್ಲಮ್, ರೋಸ್ಹಿಪ್, ಸೀ ಬಕ್ಹಾರ್ನ್ (ಸಮುದ್ರ ಮುಳ್ಳುಗಿಡ) ಹಾಗೂ ನೆಲ್ಲಿಕಾಯಿ ಮೊದಲಾದವುಗಳ ಬಳಕೆಯ ಬಗ್ಗೆ ಗಮನ ಸೆಳೆಯಲಾಗಿದೆ. ಕಾಕಡು ಪ್ಲಮ್ ಆಸ್ಟ್ರೇಲಿಯ ಮೂಲದ ಹಣ್ಣಾಗಿದ್ದು, ಕಿತ್ತಳೆಗಿಂತ ನೂರು ಪಟ್ಟು ಹೆಚ್ಚು ವಿಟಮಿನ್ C ಹೊಂದಿದೆ. ರೋಸ್ಹಿಪ್ ಗುಲಾಬಿ ಹೂವಿನ ಕೆಳಗೆ ಬೆಳೆಯುವ ಹಣ್ಣಾಗಿರುತ್ತದೆ. ನಿಮ್ಮ ಚರ್ಮದಲ್ಲಿ ಸ್ಪಷ್ಟ ಬದಲಾವಣೆ ಬೇಕೆಂದರೆ ವಿಜ್ಞಾನಾಧಾರಿತ ಈ ಐದು ಲಾಭಗಳನ್ನು ಗಮನಿಸಬಹುದು. ►ವಿಟಮಿನ್ C ಅತಿ ಆಮ್ಲೀಯವಾಗಿರಬಾರದು ಚಳಿಗಾಲದಲ್ಲಿ ಚರ್ಮ ಈಗಾಗಲೇ ದುರ್ಬಲವಾಗಿರುತ್ತದೆ. ಅಧಿಕ ಶಕ್ತಿಯ ಸಿಂಥೆಟಿಕ್ ವಿಟಮಿನ್ C (ಎಲ್–ಅಸ್ಕಾರ್ಬಿಕ್ ಆಮ್ಲ) ಅತಿಯಾಗಿ ಆಮ್ಲೀಯವಾಗಿದ್ದು ಚರ್ಮಕ್ಕೆ ಉರಿಯಬಹುದು. ಚರ್ಮ ಕೆಂಪಾಗುವುದು ಹಾಗೂ ಸಿಪ್ಪೆ ಎದ್ದುಬರುವ ಸಾಧ್ಯತೆ ಇದೆ. ಒಣಗಿದ ಚರ್ಮಕ್ಕೆ ಇಂತಹ ತೀವ್ರ ಚಿಕಿತ್ಸೆ ಅಗತ್ಯವಿಲ್ಲ. ಸಹಜ ಮೂಲಗಳಾದ ರೋಸ್ಹಿಪ್ ಮತ್ತು ಸಮುದ್ರ ಮುಳ್ಳುಗಿಡ ಕೊಬ್ಬಿನ ಆಮ್ಲಗಳಲ್ಲಿ ಸಮೃದ್ಧವಾಗಿದ್ದು, ಜೈವಿಕ ಫ್ಲಾವನಾಯ್ಡ್ಗಳನ್ನು (ಸಸ್ಯ ಸಂಯುಕ್ತಗಳು) ಹೊಂದಿರುತ್ತವೆ. ಅವು ಚರ್ಮದಿಂದ ಸಹಜ ಎಣ್ಣೆಗಳನ್ನು ತೆಗೆದುಹಾಕದೇ ಹೊಳಪು ನೀಡುತ್ತವೆ. ಚರ್ಮದ ಮೇಲೆ ದಾಳಿ ಮಾಡದೇ ಸೌಮ್ಯವಾಗಿ ಕಾರ್ಯನಿರ್ವಹಿಸುತ್ತವೆ. ►ವಿಟಮಿನ್ C ತೇವಾಂಶವನ್ನು ಹೊರಗೆ ಸೂಸುತ್ತದೆ ಬಹುತೇಕ ಎಲ್ಲಾ ಹೊಳಪು ನೀಡುವ ಸಿರಂಗಳು ಚರ್ಮವನ್ನು ಒಣಗಿಸುತ್ತವೆ. ನೈಸರ್ಗಿಕ ವಿಟಮಿನ್ C ಕೇವಲ ವಿಟಮಿನ್ C ಮಾತ್ರವಾಗಿರುವುದಿಲ್ಲ. ಉದಾಹರಣೆಗೆ, ರೋಸ್ಹಿಪ್ ಎಣ್ಣೆಯಲ್ಲಿ ವಿಟಮಿನ್ ಇ ಮತ್ತು ಓಮೆಗಾ ಕೊಬ್ಬಿನ ಆಮ್ಲಗಳು ಇರುತ್ತವೆ. ಈ ಸಂಯೋಜನೆ ಕಪ್ಪು ಕಲೆಗಳನ್ನು ಕಡಿಮೆ ಮಾಡುವ ಜೊತೆಗೆ ಚರ್ಮದ ತೇವಾಂಶವನ್ನು ಉಳಿಸುತ್ತದೆ. ►ನೈಸರ್ಗಿಕ ವಿಟಮಿನ್ ಗಳು ಉತ್ತಮ ನಿಮ್ಮ ವಿಟಮಿನ್ C ಸಿರಂ ತಿಂಗಳುಗಳಾದ ಬಳಿಕ ಕಿತ್ತಳೆ ಬಣ್ಣಕ್ಕೆ ತಿರುಗಿ ವಾಸನೆ ಹೊಡೆಯುತ್ತದೆ. ಇದಕ್ಕೆ ಮುಖ್ಯ ಕಾರಣ ಆಕ್ಸಿಡೇಶನ್. ಸಿಂಥೆಟಿಕ್ ವಿಟಮಿನ್ ಅಸ್ಥಿರವಾಗಿದ್ದು, ಗಾಳಿಯ ಸಂಪರ್ಕಕ್ಕೆ ಬಂದಾಗ ತನ್ನ ಗುಣವನ್ನು ಕಳೆದುಕೊಳ್ಳುತ್ತದೆ. ಇಡೀ ಸಸ್ಯದಿಂದ ದೊರೆಯುವ ನೈಸರ್ಗಿಕ ವಿಟಮಿನ್ C ಸಸ್ಯದಲ್ಲಿರುವ ಆಂಟಿಆಕ್ಸಿಡೆಂಟ್ಗಳಿಂದ ಸ್ಥಿರವಾಗಿರುತ್ತದೆ. ಕಾಕಡು ಪ್ಲಮ್ ಅಥವಾ ಅಸೆರೊಲ ಚೆರ್ರಿಗಳು ಹೆಚ್ಚು ಕಾಲ ತಾಜವಾಗಿರುತ್ತವೆ, ಏಕೆಂದರೆ ಅವುಗಳಲ್ಲಿ ಫೈಟೊನ್ಯೂಟ್ರಿಯಂಟ್ಸ್ ಇರುತ್ತವೆ. ಅದರ ಪರಿಣಾಮವಾಗಿ ಜನವರಿಯಲ್ಲಿ ಹಚ್ಚಿದಾಗಲೂ ನವೆಂಬರ್ನಲ್ಲಿ ಹಚ್ಚಿದಂತೆಯೇ ಪರಿಮಳ ಉಳಿಯುತ್ತದೆ. ►ಸೂರ್ಯನಿಂದ ರಕ್ಷಣೆ ಒದಗಿಸುತ್ತದೆ ಚಳಿಗಾಲದಲ್ಲಿ ಸೂರ್ಯನ UVB (ಸುಡುವ) ಕಿರಣಗಳು ದುರ್ಬಲವಾಗಿದ್ದರೂ, UVA (ವಯಸ್ಸು ಹೆಚ್ಚಿಸುವ) ಕಿರಣಗಳು ತೀಕ್ಷ್ಣವಾಗಿರುತ್ತವೆ. ನೈಸರ್ಗಿಕ ವಿಟಮಿನ್ Cಯಲ್ಲಿ ಇರುವ ಆಂಟಿಆಕ್ಸಿಡೆಂಟ್ಗಳು ಸ್ವತಂತ್ರ ಕಣಗಳನ್ನು ತಟಸ್ಥೀಕರಿಸುತ್ತವೆ. UV ಕಿರಣಗಳಿಂದ ಉಂಟಾಗುವ ಅಸ್ಥಿರ ಅಣುಗಳು ಮತ್ತು ಮಾಲಿನ್ಯವು ಚರ್ಮದ ಕೊಲಾಜೆನ್ ಅನ್ನು ಹಾನಿಗೊಳಿಸುತ್ತವೆ. ನೈಸರ್ಗಿಕ ವಿಟಮಿನ್ Cಗಳು ಈ ಹಾನಿಯನ್ನು ತಡೆದು ಸುರಕ್ಷಾ ಜಾಲವನ್ನು ಒದಗಿಸುತ್ತವೆ. ನಿಮ್ಮ SPF ಅಡಿಯಲ್ಲಿ ಹಚ್ಚುವುದರಿಂದ ಚಳಿಗಾಲದ ಸೂರ್ಯನಿಂದ ಹೆಚ್ಚುವರಿ ರಕ್ಷಣೆ ಸಿಗುತ್ತದೆ. ►ಉತ್ತಮ ಹೀರುವಿಕೆ ಅಗತ್ಯ ಚರ್ಮವು ಸ್ವಾಭಾವಿಕವಾಗಿ ಜಲನಿರೋಧಕವಾಗಿದೆ. ಸಿಂಥೆಟಿಕ್ ಅಣುಗಳು ಚರ್ಮದ ಮೇಲೆಯೇ ಉಳಿದು, ಆಳವಾಗಿ ತೂರಿ ರಕ್ಷಣೆ ನೀಡುವುದಿಲ್ಲ. ನೈಸರ್ಗಿಕ ವಿಟಮಿನ್ಗಳಲ್ಲಿ ಜೈವಿಕ ಫ್ಲಾವನಾಯ್ಡ್ಗಳು (ಸಸ್ಯ ಸಂಯುಕ್ತಗಳು) ಇರುವುದರಿಂದ ದೇಹ ಅವನ್ನು ಬೇಗ ಗುರುತಿಸುತ್ತದೆ. ಅಂದರೆ ಚರ್ಮ ಅವನ್ನು ವೇಗವಾಗಿ ಹೀರಿಕೊಳ್ಳುತ್ತದೆ. ಒಮ್ಮೆ ಹೀರಿಕೊಂಡ ಬಳಿಕ ಕೊಲಾಜೆನ್ ಸಂಶ್ಲೇಷಣೆಯಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ನಿಮ್ಮ ಈಗಿನ ವಿಟಮಿನ್ C ಸಿರಂ ಚರ್ಮವನ್ನು ಒಣಗಿಸುತ್ತಿದ್ದರೆ, ಮೂಲದಲ್ಲೇ ಬದಲಾವಣೆ ಮಾಡಿಕೊಳ್ಳಿ. ಕಾಕಡು ಪ್ಲಮ್, ರೋಸ್ಹಿಪ್, ಸೀ ಬಕ್ಹಾರ್ನ್ ಅಥವಾ ನೆಲ್ಲಿಕಾಯಿ ಅಂಶಗಳಿರುವ ಉತ್ಪನ್ನಗಳನ್ನು ಆಯ್ಕೆ ಮಾಡಬಹುದು.
ಬಸವಕಲ್ಯಾಣ | ಆರೋಗ್ಯಕರ ಸಮಾಜಕ್ಕೆ ವಚನ ಸಾಹಿತ್ಯ ಅಧ್ಯಯನ ಅವಶ್ಯಕ : ನ್ಯಾ.ಶಿವಶಂಕರ ಅಮರಣ್ಣನವರ
ಬಸವಕಲ್ಯಾಣ : 12ನೇ ಶತಮಾನದ ಶರಣರು ಸಮಾಜಕ್ಕೆ ಸಾರಿದ ವಚನ ಸಾಹಿತ್ಯವನ್ನು ಕೇವಲ ಬೋಧನೆ ಮತ್ತು ಅಧ್ಯಯನಕ್ಕೆ ಮಾತ್ರ ಸೀಮಿತಗೊಳಿಸದೆ, ಅದರಲ್ಲಿ ಅಡಗಿರುವ ಮಾನವೀಯ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗಲೇ ನಮ್ಮ ಜೀವನ ಸಾರ್ಥಕವಾಗುತ್ತದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಶಿವಶಂಕರ ಅಮರಣ್ಣನವರ ಹೇಳಿದರು. ನಗರದ ಹರಳಯ್ಯ ಗವಿಯಲ್ಲಿ ಅಂತರರಾಷ್ಟ್ರೀಯ ಲಿಂಗಾಯತ ಧರ್ಮ ಕೇಂದ್ರ ಹಾಗೂ ಅಖಿಲ ಭಾರತ ಲಿಂಗವಂತ ಹರಳಯ್ಯ ಪೀಠದ ವತಿಯಿಂದ ಆಯೋಜಿಸಿದ್ದ ಶರಣು–ಶರಣಾರ್ಥಿ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮಾನವೀಯ ಮೌಲ್ಯಗಳನ್ನು ಒಳಗೊಂಡ ಬದುಕು ಅಗತ್ಯವಾಗಿದ್ದು, ಉತ್ತಮ ಆಡಳಿತಗಾರರಾಗಲು ಸಹ ವಚನ ಸಾಹಿತ್ಯದ ಅಧ್ಯಯನ ಮತ್ತು ಅದರ ಪಾಲನೆ ಇಂದಿನ ಅಗತ್ಯವಾಗಿದೆ ಎಂದು ಅವರು ಹೇಳಿದರು. ಲೋಕಾಯುಕ್ತ ನ್ಯಾಯವಾದಿ ಸಂತೋಷ ನಾಗರಾಳೆ ಮಾತನಾಡಿ, ಶರಣರು ಹಾಗೂ ಸಂತರ ಸಂಗದಿಂದ ತನ್ನ ತಾನರಿತು ದೇವನಾಗುವ ಮಾರ್ಗವನ್ನು ಕಂಡುಕೊಳ್ಳಬಹುದು. “ಶರಣರ ಸಂಗದಿಂದಲಾನು ಪರಮಸುಖಿ” ಎಂದು ಅಕ್ಕ ಮಹಾದೇವಿ ಹೇಳಿದ ಮಾತುಗಳಲ್ಲಿ ಶರಣರ ಸಂಗದ ಮಹಿಮೆ ಅಡಗಿದೆ ಎಂದು ಹೇಳಿದರು. ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಡಾ.ಗಂಗಾಂಬಿಕಾ ಅಕ್ಕ ಅವರು, ವಚನಗಳು ಜಗತ್ತಿನ ಶ್ರೇಷ್ಠ ಸಂಪತ್ತಾಗಿದ್ದು, ಅವುಗಳ ನಿರಂತರ ಅಧ್ಯಯನದಿಂದ ವ್ಯಕ್ತಿಯ ಮನಸ್ಸಿನ ಮೈಲಿಗೆ ತೊಳೆಯಬಹುದು. ವಚನಗಳ ವೈಭವವನ್ನು ಜಗತ್ತು ಅರಿಯಬೇಕು. ಶರಣ ಸಂಸ್ಕೃತಿ ಬದುಕಲು ಶಕ್ತಿ ನೀಡುತ್ತದೆ. ನಡೆ–ನುಡಿ ಒಂದಾಗಿರಬೇಕು. ಮಕ್ಕಳಲ್ಲಿ ವಚನಗಳ ಮೌಲ್ಯಗಳನ್ನು ಬಿತ್ತುವುದು ಅತ್ಯಂತ ಅಗತ್ಯ ಎಂದು ತಿಳಿಸಿದರು. ನಿವೃತ್ತ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ್ ನಾಗರಾಳೆ ಅವರು 2026ರ ದಿನದರ್ಶಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಬಿಡಿಪಿಸಿ ನಿರ್ದೇಶಕ ಅನಿಲಕುಮಾರ್ ರಗಟೆ ಅಧ್ಯಕ್ಷತೆ ವಹಿಸಿದ್ದರು. ಡಾ.ನಿವೇದಿತಾ ನಾಗರಾಳೆ, ಶಾಂತಯ್ಯ ಸ್ವಾಮಿ, ಡಾ.ಶೈಲೆಂದ್ರ ವಾಘ್ಮಾರೆ ಉಪಸ್ಥಿತರಿದ್ದರು. ಹರಳಯ್ಯ ಸಮಾಜದ ಅಧ್ಯಕ್ಷ ಶಿವಾಜಿ ಕಾಂಬಳೆ ಧ್ವಜಾರೋಹಣ ನೆರವೇರಿಸಿದರು. ರಂಜನಾ ಭೂಶೆಟ್ಟಿ ಹಾಗೂ ಮಂಜುನಾಥ ವಚನ ಸಂಗೀತ ಕಾರ್ಯಕ್ರಮ ನೀಡಿದರೆ, ಲಲಿತಾ ನಾಗರಾಳೆ ವಚನ ಗಾಯನ ಮಾಡಿದರು. ಕವಿತಾ ರಾಜೋಳೆ ಸ್ವಾಗತಿಸಿದರು, ಜಯಶ್ರೀ ಬಿರಾದಾರ ನಿರೂಪಿಸಿದರು. ಶಿಕ್ಷಕ ಶಾಲಿವಾನ ಕಾಕನಾಳೆ ಪ್ರಸಾದ ದಾಸೋಹ ನಡೆಸಿಕೊಟ್ಟರು.
ಬಳ್ಳಾರಿ ಗುಂಪು ಘರ್ಷಣೆ| ನಿಷ್ಪಕ್ಷಪಾತ ತನಿಖೆಗೆ ಸಿಟಿ ರವಿ ಆಗ್ರಹ
ಚಿಕ್ಕಮಗಳೂರು, ಜ.2: ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆ ಮತ್ತು ಫೈರಿಂಗ್ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ಹಾಗೂ ನ್ಯಾಯಯುತವಾದ ತನಿಖೆಯಾಗಲಿ ಎಂದು ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಆಗ್ರಹಿಸಿದರು. ಶುಕ್ರವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿ.ಟಿ.ರವಿ, ವಾಲ್ಮೀಕಿ ಜಯಂತಿ ಆಚರಿಸಲು ಪ್ರಾರಂಭಿಸಿದ್ದು ಬಿಜೆಪಿ ಸರಕಾರ, ಕಾಂಗ್ರೆಸ್ ರಾಮನ ಅಸ್ತಿತ್ವವನ್ನೇ ನಿರಾಕರಿಸಿ ಪರೋಕ್ಷವಾಗಿ ವಾಲ್ಮೀಕಿ ಅಸ್ತಿತ್ವವನ್ನು ನಿರಾಕರಿಸುವ ಕೆಲಸ ಮಾಡಿತ್ತು. ರಾಮಸೇತು ವೇಳೆ ಸುಪ್ರೀಂಕೋರ್ಟ್ಗೆ ರಾಮ ಇತಿಹಾಸವಲ್ಲ, ಕಥೆ ಎಂದು ಕಾಂಗ್ರೆಸ್ ಕಥೆ ಹೇಳಿತ್ತು. ಬಳ್ಳಾರಿಯಲ್ಲಿ ನಡೆದ ಘಟನೆ ಬಗ್ಗೆ ಸಮಗ್ರವಾಗಿ ತನಿಖೆಯಾಗಲಿ. ಪೂರ್ವಗ್ರಹ ಅಥವಾ ದ್ವೇಷ ತನಿಖೆಯಲ್ಲಿ ವ್ಯಕ್ತವಾಗಬಾರದು. ಯಾರು ಗುಂಡು ಹಾರಿಸಿದರು? ಕೊಲೆಗೆ ಯಾರು ಕಾರಣ ಎನ್ನುವುದರ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಹೇಳಿದರು. ದುರುದ್ದೇಶದಿಂದ ಪ್ರಕರಣ ದಾಖಲಿಸುವುದು, ಕ್ರಮ ಕೈಗೊಳ್ಳುವುದು ಸಮಂಜಸವಲ್ಲ. ಅನುಮತಿ ಪಡೆದು ಬ್ಯಾನರ್ ಹಾಕಿದರೂ, ಅನುಮತಿ ಪಡೆಯದೆ ಬ್ಯಾನರ್ ಹಾಕಿದರೂ ತೆರವುಗೊಳಿಸುವುದು ತಪ್ಪು. ಅನುಮತಿ ಪಡೆಯದೆ ಬ್ಯಾನರ್ ಹಾಕಿದ್ದರೆ ದೂರು ಕೊಡಬಹುದಿತ್ತು. ಬಲಾಬಲ ಪ್ರದರ್ಶನಕ್ಕೆ ಜನಾರ್ಧನ ರೆಡ್ಡಿ ಮನೆ ಬಳಿ ಹೋಗಿದ್ದನ್ನು ಸರಕಾರ ಹೇಗೆ ಸಮರ್ಥಿಸಿಕೊಳ್ಳುತ್ತದೆ. ಇದನ್ನೆಲ್ಲಾ ಗಮನಿಸಿದರೆ ಬ್ಯಾನರ್ ನೆಪವಷ್ಟೆ, ಹಿಂದೆ ಬೇರೆ ಏನೋ ಇರೋ ಸಾಧ್ಯತೆಗಳಿವೆ. ಪ್ರಕರಣದ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಬೀದರ್ | ಚಾಂಬೋಳ ಗ್ರಾಮದಲ್ಲಿ ಹಿರಿಯ ನಾಗರಿಕರಿಂದ ಹೊಸ ವರ್ಷಾಚರಣೆ, ಪರಿಸರ ಜಾಗೃತಿ ಅಭಿಯಾನ
ಬೀದರ್ : ಹಿರಿಯ ನಾಗರಿಕರು ಪಿಝಾ, ಬರ್ಗರ್, ಜಂಕ್ ಫುಡ್, ಬೇಕರಿ ತಿನಿಸುಗಳಂತಹ ಅನಾರೋಗ್ಯಕರ ಆಹಾರ ಸೇವನೆ ತ್ಯಜಿಸಿ, ಸಾತ್ವಿಕ ಹಾಗೂ ರಾಸಾಯನಿಕ ರಹಿತ ಆಹಾರ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು ಎಂದು ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕ ಪ್ರೊ. ಪ್ರಕಾಶ್ ಕುಲಕರ್ಣಿ ಅವರು ಸಲಹೆ ನೀಡಿದರು. ಜೈಹಿಂದ್ ಹಿರಿಯ ನಾಗರಿಕರ ಸಂಘದ ವತಿಯಿಂದ ಬೀದರ್ ಸಮೀಪದ ಚಾಂಬೋಳ ಗ್ರಾಮದಲ್ಲಿರುವ ಪ್ರೊ.ಕುಲಕರ್ಣಿ ಅವರ ಫಾರ್ಮ್ ಹೌಸ್ನಲ್ಲಿ ಆಯೋಜಿಸಿದ್ದ ನೂತನ ವರ್ಷಾಚರಣೆ ಹಾಗೂ ಪರಿಸರ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಾಯು, ಜಲ ಹಾಗೂ ಶಬ್ದ ಮಾಲಿನ್ಯದಿಂದ ದೂರವಿದ್ದು, ಶುದ್ಧ ಗಾಳಿ ಇರುವ ಹೊಲಗಳು, ಉದ್ಯಾನಗಳು ಹಾಗೂ ಅರಣ್ಯ ಪ್ರದೇಶಗಳಿಗೆ ಭೇಟಿ ನೀಡುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಸಂಘದ ಕಾರ್ಯದರ್ಶಿ ವೀರಭದ್ರಪ್ಪ ಉಪ್ಪಿನ್, 22 ಎಕರೆ ಬಂಜರು ಭೂಮಿಯನ್ನು ಸಾವಯವ ಕೃಷಿ ಪದ್ಧತಿಯಲ್ಲಿ ರೂಪಾಂತರಿಸಿ, 2 ಸಾವಿರ ಮಾವಿನ ಗಿಡಗಳು ಸೇರಿದಂತೆ ವಿವಿಧ ಹಣ್ಣು, ತರಕಾರಿ, ಕಬ್ಬು, ತೊಗರಿ ಹಾಗೂ ಬಟಾಣಿ ಬೆಳೆಸಿರುವ ಪ್ರೊ.ಕುಲಕರ್ಣಿ ಅವರ ಪರಿಶ್ರಮವನ್ನು ಶ್ಲಾಘಿಸಿದರು. ಇತ್ತೀಚೆಗೆ ಅನಾರೋಗ್ಯದಿಂದ ಚೇತರಿಸಿಕೊಂಡ ಸಂಘದ ಅಧ್ಯಕ್ಷ ರಾಮಕೃಷ್ಣ ಮುನಿಗ್ಯಾಲ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಪ್ರೊ.ವಿಜಯಕುಮಾರ್ ಸೂರ್ಯಾನ್, ಹಿರಿಯ ಕಲಾವಿದ ರಾಜೇಂದ್ರಸಿಂಗ್ ಪವಾರ್, ಕೋಶಾಧ್ಯಕ್ಷ ಗಂಗಪ್ಪ ಸಾವಳೆ ಸೇರಿದಂತೆ ಇತರ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ವಿಶ್ವಮಟ್ಟದ ಚೆಸ್ ಪಂದ್ಯಾವಳಿಗೆ ಆರಾಧ್ಯ ಶೆಟ್ಟಿ ಆಯ್ಕೆ
ಕುಂದಾಪುರ, ಜ.2: ಅಸ್ಸಾಂನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಶಾಲಾ ಚೆಸ್ ಚಾಂಪಿಯನ್ ಶಿಪ್ನಲ್ಲಿ ಬ್ರಹ್ಮಾವರ ಲಿಟಲ್ ರಾಕ್ ಶಾಲೆ 9ನೆ ತರಗತಿ ವಿದ್ಯಾರ್ಥಿನಿ ಆರಾಧ್ಯ ಎಸ್.ಶೆಟ್ಟಿ ಬೆಳ್ಳಿ ಪದಕ ಗೆದ್ದು ವಿಶ್ವಮಟ್ಟದ ಚೆಸ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ ಎಂದು ಕುಂದಾಪುರ ಕಶ್ವಿ ಚೆಸ್ ಸ್ಕೂಲ್ನ ನರೇಶ್ ತಿಳಿಸಿದ್ದಾರೆ. ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಳ್ವಾಡಿ ಗ್ರಾಮದ ಶ್ರೀಕಾಂತ್ ಶೆಟ್ಟಿ, ಉಷಾಲತಾ ಶೆಟ್ಟಿ ಅವರ ಪುತ್ರಿ ಆರಾಧ್ಯ 2019ರಲ್ಲಿ ಕಶ್ವಿ ಚೆಸ್ ಸ್ಕೂಲ್ ಮೂಲಕ ಮೊದಲ ಅಂತಾರಾಷ್ಟ್ರೀಯ ಮುಕ್ತ ಚೆಸ್ ಪಂದ್ಯಾವಳಿಯಲ್ಲಿ ಭಾಗವಹಿಸಿ, 2025 ನವಂಬರ್ನಲ್ಲಿ ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಶಾಲಾ ಚೆಸ್ ಚಾಂಪಿಯನ್ ಶಿಪ್ನ 17 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ ಮಟ್ಟಕ್ಕೆ ಆಯ್ಕೆಯಾಗಿದ್ದರು. ಅಸ್ಸಾಂನಲ್ಲಿ ನಡೆದ ರಾಷ್ಟ ಮಟ್ಟದ ಅಂಡರ್-17 ವಿಭಾಗದಲ್ಲಿ ನಡೆದ 9 ಸುತ್ತಿನ ಪಂದ್ಯಗಳಲ್ಲಿ 7 ಅಂಕಗಳನ್ನು ಗಳಿಸಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದ್ದಾರೆ. ಎಪ್ರಿಲ್ ತಿಂಗಳಿನಲ್ಲಿ ನಡೆಯಲಿ ರುವ ವಿಶ್ವಮಟ್ಟದ ಚೆಸ್ ಸ್ಕೂಲ್ ಚಾಂಪಿಯನ್ಶಿಪ್ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಶ್ರೀಕಾಂತ್ ಶೆಟ್ಟಿ ಉಪಸ್ಥಿತರಿದ್ದರು.
ಬೀದರ್ | ಎಸೆಸೆಲ್ಸಿಯಲ್ಲಿ ಜಿಲ್ಲೆಗೆ ಶೇ.95ರಷ್ಟು ಫಲಿತಾಂಶ ತರಲು ಪ್ರಯತ್ನಿಸಿ : ಸಿಇಒ ಡಾ.ಗಿರೀಶ್ ಬದೋಲೆ
ನಾಗರಿಕ ಸನ್ಮಾರ್ಗ ಸಮಿತಿಯಿಂದ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಎಸ್ಡಿಎಂಸಿ ಪ್ರತಿನಿಧಿಗಳಿಗೆ ಕಾರ್ಯಾಗಾರ
Blood Sugar ಪ್ರಮಾಣವನ್ನು ಏರಿಸದ 6 ಹಣ್ಣುಗಳು ಯಾವುವು ಗೊತ್ತೇ?
ಹಣ್ಣುಗಳು ಮಧುಮೇಹಿಗಳಿಗೆ ಶತ್ರುಗಳಲ್ಲ. ಕೆಲವು ಹಣ್ಣುಗಳನ್ನು ಜಾಣತನದಿಂದ ಮತ್ತು ಸಮತೋಲನದಲ್ಲಿ ಸೇವಿಸಿದರೆ, ಅವು ನಿತ್ಯ ಆಹಾರದ ಭಾಗವಾಗಿ ರಕ್ತದಲ್ಲಿನ ಸಕ್ಕರೆಯ ಆರೋಗ್ಯಕರ ಪ್ರಮಾಣವನ್ನು ಕಾಪಾಡಲು ನೆರವಾಗುತ್ತವೆ. ಎಲ್ಲಾ ಹಣ್ಣುಗಳೂ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಏರಿಸುತ್ತವೆ ಎಂದು ಭಾವಿಸುವವರು ಹೆಚ್ಚು. ಆದರೆ ಅದು ಸಂಪೂರ್ಣವಾಗಿ ನಿಜವಲ್ಲ. ಕೆಲವು ಹಣ್ಣುಗಳನ್ನು ಜಾಣತನದಿಂದ ಹಾಗೂ ಮಿತಿಯೊಳಗೆ ಸೇವಿಸಿದಲ್ಲಿ, ಅವು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಹೆಚ್ಚಿಸುವುದಿಲ್ಲ. ತಜ್ಞರ ಪ್ರಕಾರ, ಹಣ್ಣುಗಳು ನೈಸರ್ಗಿಕ ಸಕ್ಕರೆಗಳು, ಫೈಬರ್, ವಿಟಮಿನ್ಗಳು, ಖನಿಜಗಳು ಮತ್ತು anti ಆಕ್ಸಿಡೆಂಟ್ ಗಳ ಉತ್ತಮ ಮೂಲವಾಗಿವೆ. ಪೋಷಕಾಂಶಗಳಿಂದ ಸಮೃದ್ಧವಾಗಿರುವ ಕೆಲವು ಹಣ್ಣುಗಳು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸಲು ಸಹಾಯ ಮಾಡುತ್ತವೆ. ಆದರೆ ಸರಿಯಾದ ಹಣ್ಣುಗಳ ಆಯ್ಕೆ ಮತ್ತು ಸಮತೋಲಿತ ಪ್ರಮಾಣದಲ್ಲಿ ಸೇವಿಸುವುದು ಮುಖ್ಯ. ಹಾಗಾದರೆ ಜಾಣತನದಿಂದ ಸೇವಿಸಬೇಕಾದ ಹಣ್ಣುಗಳು ಯಾವುವು? ►ಸೇಬು : ಹೊರಪದರದ ಸಮೇತ ಸೇವಿಸಿದರೆ ಹೆಚ್ಚಿನ ಫೈಬರ್ ಸಿಗುತ್ತದೆ. ಜೀರ್ಣಕ್ರಿಯೆಯನ್ನು ನಿಧಾನಗೊಳಿಸುವ ಪಾಲಿಫಿನಾಲ್ಗಳು ಇವುಗಳಲ್ಲಿ ಇದ್ದು, ರಕ್ತದಲ್ಲಿನ ಸಕ್ಕರೆ ಪ್ರಮಾಣದ ಏರಿಕೆಯನ್ನು ನಿಧಾನಗೊಳಿಸುತ್ತವೆ. ►ಬೆಣ್ಣೆಹಣ್ಣು : ಆರೋಗ್ಯಕರ ಕೊಬ್ಬು ಮತ್ತು ಫೈಬರ್ ಹೊಂದಿರುವ ಹಣ್ಣು. ಹೀಗಾಗಿ ಗ್ಲುಕೋಸ್ ಮಟ್ಟವನ್ನು ಸ್ಥಿರಗೊಳಿಸಲು ನೆರವಾಗುತ್ತದೆ. ►ಬ್ಲೂಬೆರಿಗಳು : ಜೀವಕೋಶಗಳು ಇನ್ಸುಲಿನ್ಗೆ ಹೇಗೆ ಪ್ರತಿಕ್ರಿಯಿಸುತ್ತವೆ ಎಂಬುದನ್ನು ಸುಧಾರಿಸುವ ಆಂಟಿಆಕ್ಸಿಡೆಂಟ್ಗಳನ್ನು ಹೊಂದಿರುತ್ತವೆ. ►ಗ್ರೇಪ್ಫ್ರೂಟ್ : ಇದರಲ್ಲಿ ನಾರಿಂಜೆನಿನ್ (ಸಿಟ್ರಸ್ ಹಣ್ಣುಗಳಲ್ಲಿ ಕಂಡುಬರುವ ನೈಸರ್ಗಿಕ ಫ್ಲೇವನಾಯ್ಡ್) ಇರುತ್ತದೆ. ಇದು ಇನ್ಸುಲಿನ್ ಕ್ರಿಯೆಯನ್ನು ಸುಧಾರಿಸುವ ನೈಸರ್ಗಿಕ ಸಂಯುಕ್ತ. ►ಕಿತ್ತಳೆ ಹಣ್ಣು : ಫೈಬರ್ ಮತ್ತು ವಿಟಮಿನ್ ಸಿ ಹೊಂದಿದ್ದು, ಗ್ಲೈಸೆಮಿಕ್ ಸೂಚ್ಯಂಕ ಕಡಿಮೆ ಇರುತ್ತದೆ. ಆದರೆ ಕಿತ್ತಳೆ ಹಣ್ಣಿನ ರಸದಲ್ಲಿ ಈ ಲಾಭಗಳು ಇರುವುದಿಲ್ಲ. ►ಹಸಿರು ಸೇಬು : ಕಡಿಮೆ ಸಕ್ಕರೆ ಹೊಂದಿರುವ ಉತ್ತಮ ಆಯ್ಕೆ. ಸಕ್ಕರೆ ಪ್ರಮಾಣ ಹೆಚ್ಚಿಸದೆ ಹಸಿವನ್ನು ಕಡಿಮೆಗೊಳಿಸಲು ಸಹಾಯ ಮಾಡುತ್ತದೆ. ►ಹಾಗಾದರೆ ಈ ಹಣ್ಣುಗಳು ಮಧುಮೇಹಿಗಳಿಗೆ ಸಂಪೂರ್ಣವಾಗಿ ಉತ್ತಮವೇ? ಎಲ್ಲವೂ ಸಮತೋಲನದ ವಿಷಯ. ಮಧುಮೇಹಿಗಳು ಹಣ್ಣಿನ ರಸಗಳು ಮತ್ತು ಒಣ ಹಣ್ಣುಗಳನ್ನು ಹೆಚ್ಚಾಗಿ ಸೇವಿಸಬಾರದು. ಅವು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ತ್ವರಿತವಾಗಿ ಏರಿಸಬಹುದು. ಆದರೆ ತಾಜಾ ಹಣ್ಣುಗಳನ್ನು—ವಿಶೇಷವಾಗಿ ಹೆಚ್ಚಿನ ಫೈಬರ್ ಮತ್ತು ಕಡಿಮೆ ಗ್ಲೈಸೆಮಿಕ್ ಸೂಚ್ಯಂಕ ಹೊಂದಿರುವ ಹಣ್ಣುಗಳನ್ನು—ಸಾಧಾರಣ ಪ್ರಮಾಣದಲ್ಲಿ ಸೇವಿಸಬಹುದು. ಹಣ್ಣುಗಳನ್ನು ಪ್ರೋಟೀನ್ ಅಥವಾ ಕೊಬ್ಬಿನ ಅಂಶಗಳ ಜೊತೆಗೆ ಸೇರಿಸಿ ಸೇವಿಸಿದರೆ, ಗ್ಲುಕೋಸ್ ಏರಿಕೆಯನ್ನು ಮತ್ತಷ್ಟು ಕಡಿಮೆಗೊಳಿಸಬಹುದು. ಹೀಗಾಗಿ, ಹಣ್ಣುಗಳು ಶತ್ರುಗಳಲ್ಲ. ಕೆಲವು ಹಣ್ಣುಗಳನ್ನು ಜಾಣತನದಿಂದ ಹಾಗೂ ಸಮತೋಲನದಲ್ಲಿ ಸೇವಿಸಿದರೆ, ಅವು ನಿತ್ಯ ಆಹಾರದ ಭಾಗವಾಗಿ ರಕ್ತದಲ್ಲಿನ ಸಕ್ಕರೆಯ ಆರೋಗ್ಯಕರ ಪ್ರಮಾಣಕ್ಕೆ ಬೆಂಬಲ ನೀಡುತ್ತವೆ.
ಸಿದ್ದಾಪುರ ಏತ ನೀರಾವರಿ ಯೋಜನೆ ಮೂಲ ಡಿಪಿಆರ್ನಂತೆ ಮಾಡಲಿ: ರೋಹಿತ್ ಶೆಟ್ಟಿ
ಕುಂದಾಪುರ, ಜ.2: ಸಿದ್ದಾಪುರ ಏತ ನೀರಾವರಿ ಯೋಜನೆಯನ್ನು ಮೂಲ ಡಿಪಿಆರ್ ಪ್ರಕಾರ ಮಾಡಬೇಕು. ಮೂಲ ಯೋಜನೆಯನ್ನು ಕೈಬಿಟ್ಟು ಒಂದು ವೇಳೆ ರೈತರ ಹಿತಾಸಕ್ತಿಯನ್ನು ನಿರ್ಲಕ್ಷಿಸಿದರೆ ಮುಂದಿನ ದಿನಗಳಲ್ಲಿ ಪಕ್ಷಾ ತೀತವಾದ ಎಲ್ಲರನ್ನು ಒಗ್ಗೂಡಿಸಿಕೊಂಡು ಸತ್ಯಾಗ್ರಹ ರೀತಿಯಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಜಿಪಂ ಮಾಜಿ ಸದಸ್ಯ ರೋಹಿತ್ ಕುಮಾರ್ ಶೆಟ್ಟಿ ಹೇಳಿದ್ದಾರೆ. ಸುದ್ದಿಗೋಷ್ಟಿಯಲ್ಲಿಂದು ಮಾತನಾಡಿದ ಅವರು, ಯೋಜನೆಗೆ 2018ರಲ್ಲಿ ಸೌಕೂರು ಸಿದ್ದಾಪುರ ಏತ ನೀರಾವರಿ ಎಂದು ಆಗಿ ಬಳಿಕ ಸಿದ್ದಾಪುರ ಬಿಟ್ಟು ಹೋಗಿದೆ. 2019ರಲ್ಲಿ ಡಿಪಿಆರ್ ಆಗಿ 2021ರಲ್ಲಿ 165 ಕೋ.ರೂ. ಮಂಜೂರಾಗಿತ್ತು. ಮೊದಲ ಗುತ್ತಿಗೆದಾರರು ಕಾಮಗಾರಿ ಮಾಡದೇ ಇನ್ನೊಬ್ಬರು ಗುತ್ತಿಗೆ ವಹಿಸಿ 2 ತಿಂಗಳಿನಿಂದ ಕಾಮಗಾರಿ ಪ್ರಗತಿಯಲ್ಲಿದೆ. ಪೈಪ್ಲೈನ್ ಮಾಡಿ ಪಂಪ್ ಹೌಸ್ ಮಾಡುವಾಗ ಕೆಲಸಕ್ಕೆ ತಡೆ ನೀಡಲಾಯಿತು ಎಂದರು. ಮಾಜಿ ಶಾಸಕ ಗೋಪಾಲ ಪೂಜಾರಿ ಮುಖ್ಯಮಂತ್ರಿಗೆ ನೀಡಿದ ಪತ್ರವನ್ನು ತಡೆಗೆ ಕಾರಣವಾಗಿ ಕೊಡಲಾಯಿತು. ಪ್ರಸ್ತುತ ವಿನ್ಯಾಸವು ವಾರಾಹಿ ಮೂಲ ನದಿಯ ಅಸ್ತಿತ್ವಕ್ಕೇ ಕೊಡಲಿ ಪೆಟ್ಟು ನೀಡುವಂತಿದೆ. ಶಿವನ ಲಿಂಗಕ್ಕೆ ತೊಂದರೆ ಆಗುತ್ತದೆ. ಮೂಲ ನದಿಯಲ್ಲಿ ನೀರು ಬತ್ತಿಹೋದರೆ ಜಲಚರಗಳು ನಾಶವಾಗುತ್ತವೆ. ಅಲ್ಲದೆ, ನದಿ ಪಾತ್ರದ ಅಂತರ್ಜಲ ಮಟ್ಟ ಕುಸಿದು ಸುತ್ತಮುತ್ತಲಿನ ಸಾವಿರಾರು ಎಕರೆ ಕೃಷಿ ಭೂಮಿ ಬಂಜರಾಗುವ ಭೀತಿ ಇದೆ ಎನ್ನುವುದು ಸುಳ್ಳು ಆರೋಪ. ಇದಕ್ಕೆ ಆಧಾರಗಳು ಏನು ಎಂದು ಅವರು ಪ್ರಶ್ನಿಸಿದರು. 4 ಗೇಟ್ ತೆರೆದರೆ 4500 ಕ್ಯುಸೆಕ್ ನೀರು ಬರುತ್ತದೆ. 3 ಗೇಟ್ ತೆರೆದರೆ 3375 ಕ್ಯುಸೆಕ್ ನೀರು ಬರುತ್ತದೆ. ಈಗ 6 ಸಾವಿರ ಹೆಕ್ಟೇರು ಕೃಷಿ ಭೂಮಿಗೆ ನೀರು ಹೋಗುತ್ತದೆ. ಇದು ಮೂಲ ಯೋಜನೆಯಂತೆಯೇ 15 ಸಾವಿರ ಹೆಕ್ಟೇರಿಗೆ ಹೋಗಬೇಕು. 1 ದಿನಕ್ಕೆ 66 ಕ್ಯೂಸೆಕ್ ನೀರು ಮಾತ್ರ ಏತ ನೀರಾವರಿಗೆ ಬೇಕಾಗುವುದು. ಹೊಳೆ ಶಂಕರ ನಾರಾಯಣದ ಶಿವಲಿಂಗಕ್ಕೆ ಯಾವುದೇ ತೊಂದರೆ ಆಗುವುದಿಲ್ಲ. ಮೂಲ ಯೋಜನೆ ಪ್ರಕಾರ ಸರಕಾರದ ಅಣೆಕಟ್ಟಿನಿಂದಲೇ ಎಡದಂಡೆ, ಬಲದಂಡೆಗೆ ನೀರು ತೆಗೆಯಬೇಕು ಎಂದು ಅವರು ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಹರ್ಷ ಜಿ., ಭೋಜರಾಜ ಶೆಟ್ಟಿ, ಸಿದ್ದಾಪುರ ಪಂಚಾಯತ್ ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ, ಮಾಜಿ ಅಧ್ಯಕ್ಷ ಶೇಖರ ಕುಲಾಲ್, ಪ್ರಕಾಶ್ ಶೆಟ್ಟಿ, ಗೋಪಾಲ ಶೆಟ್ಟಿ ಉಪಸ್ಥಿತರಿದ್ದರು.
ಬಳ್ಳಾರಿ ಎಸ್ಪಿಗೆ ಬಿಗ್ ಶಾಕ್, ಅಧಿಕಾರ ಸ್ವೀಕರಿಸಿದ 24 ಗಂಟೆಗಳಲ್ಲಿಯೇ ಅಮಾನತುಗೊಳಿಸಿದ ಸರ್ಕಾರ!
ಬಳ್ಳಾರಿಯ ಎಸ್ಪಿ ವೃತ್ತದಲ್ಲಿ ವಾಲ್ಮೀಕಿ ಪ್ರತಿಮೆ ಅನಾವರಣದ ವೇಳೆ ನಡೆದ ಕಲ್ಲು ತೂರಾಟ ಹಾಗೂ ಗಲಭೆಯನ್ನು ನಿಯಂತ್ರಿಸಲು ವಿಫಲರಾದ ಹಿನ್ನೆಲೆಯಲ್ಲಿ, ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ಅಧಿಕಾರ ವಹಿಸಿಕೊಂಡು ಕೇವಲ 24 ಗಂಟೆ ಕಳೆಯುವಷ್ಟರಲ್ಲಿಯೇ, ಕರ್ತವ್ಯ ಲೋಪ ಹಾಗೂ ಹಿರಿಯ ಅಧಿಕಾರಿಗಳಿಗೆ ಸರಿಯಾದ ಮಾಹಿತಿ ನೀಡದ ಕಾರಣಕ್ಕಾಗಿ ಈ ಶಿಸ್ತು ಕ್ರಮ ಜರುಗಿಸಲಾಗಿದೆ. ಡಿಐಜಿಪಿ ಹಾಗೂ ಡಿಜಿ-ಐಜಿಪಿ ಅವರ ವರದಿಯ ಆಧಾರದ ಮೇಲೆ ಸರ್ಕಾರ ಈ ಆದೇಶ ಹೊರಡಿಸಿದೆ.
ಬಳ್ಳಾರಿ ಗುಂಪು ಘರ್ಷಣೆ | ಎಸ್ಪಿ ಪವನ್ ನೆಜ್ಜೂರ್ ಅಮಾನತು
ಬಳ್ಳಾರಿ: ಗುಂಪು ಘರ್ಷಣೆ ಹಿನ್ನೆಲೆ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅವರನ್ನು ಅಮಾನತು ಮಾಡಿ ಡಿಪಿ ಎಆರ್ ನ ಸರಕಾರದ ಅಧೀನ ಕಾರ್ಯದರ್ಶಿ ಆದೇಶವನ್ನು ಹೊರಡಿಸಿದ್ದಾರೆ. ಗುರುವಾರ ಬಳ್ಳಾರಿ ಜಿಲ್ಲೆಯ ನೂತನ ಎಸ್ಪಿ ಆಗಿ ಪವನ್ ನೆಜ್ಜೂರ್ ಅಧಿಕಾರ ವಹಿಸಿಕೊಂಡಿದ್ದರು. ಇದಾದ ಮೂರೇ ಗಂಟೆಯೊಳಗೆ ರೆಡ್ಡಿ ಬಣಗಳ ನಡುವೆ ಬ್ಯಾನರ್ ವಿಚಾರಕ್ಕೆ ಗಲಾಟೆ ತಾರಕಕ್ಕೇರಿ ರಾಜಶೇಖರ ಎಂಬಾತನ ಹತ್ಯೆಯಾಗಿತ್ತು. ಈ ಹಿನ್ನೆಲೆ ಡಿಪಿಎಆರ್ ನ ಸರಕಾರದ ಅಧೀನ ಕಾರ್ಯದರ್ಶಿ ಕೆ.ವಿ. ಅಶೋಕ್ ಅವರು ಪವನ್ ನೆಜ್ಜೂರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಗಿಗ್ ಕಾರ್ಮಿಕರಿಗೆ ವರ್ಷಕ್ಕೆ 90 ದಿನಗಳ ಕೆಲಸ ಕಡ್ಡಾಯ: ಕೇಂದ್ರ ಸರ್ಕಾರದ ಅಧಿಸೂಚನೆಯಲ್ಲೇನಿದೆ?
ಭಾರತದಲ್ಲಿ ಗಿಗ್ ಕಾರ್ಮಿಕರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಗಿಗ್ ಮತ್ತು ಪ್ಲಾಟ್ ಫಾರ್ಮ್ ಆರ್ಥಿಕತೆಯು ರೈಡ್ ಶೇರಿಂಗ್, ವಿತರಣಾ ಸೇವೆಗಳು, ಲಾಜಿಸ್ಟಿಕ್ಸ್ ಮತ್ತು ವೃತ್ತಿಪರ ಕೆಲಸದಂತಹ ಕ್ಷೇತ್ರಗಳಲ್ಲಿ ಹೊಸ ಅವಕಾಶಗಳನ್ನು ಸೃಷ್ಟಿಸುತ್ತಿದೆ. ನೀತಿ ಆಯೋಗದ ಪ್ರಕಾರ, ಈ ವಲಯದಲ್ಲಿ 2029–30ರ ವೇಳೆಗೆ ಕಾರ್ಮಿಕರ ಸಂಖ್ಯೆ 2.35 ಕೋಟಿಗೆ ತಲುಪುವ ನಿರೀಕ್ಷೆಯಿದೆ. ಕೇಂದ್ರ ಸರ್ಕಾರ ಸಾರ್ವಜನಿಕರ ಅಭಿಪ್ರಾಯಕ್ಕಾಗಿ ಬಿಡುಗಡೆ ಮಾಡಿದ ಕರಡು ನಿಯಮಗಳ ಪ್ರಕಾರ, ಸಾಮಾಜಿಕ ಭದ್ರತಾ ಪ್ರಯೋಜನಗಳಿಗೆ ಅರ್ಹರಾಗಲು ಗಿಗ್ ಮತ್ತು ಪ್ಲಾಟ್ ಫಾರ್ಮ್ ಕಾರ್ಮಿಕರು ಈಗ ಒಂದು ಆರ್ಥಿಕ ವರ್ಷದೊಳಗೆ ಕನಿಷ್ಠ 90 ದಿನಗಳವರೆಗೆ ಅಗ್ರಿಗೇಟರ್ ನೊಂದಿಗೆ ಅಥವಾ ಒಂದಕ್ಕಿಂತ ಹೆಚ್ಚು ಅಗ್ರಿಗೇಟರ್ ಗಳಾದರೆ ಕನಿಷ್ಠ 120 ದಿನಗಳವರೆಗೆ ತೊಡಗಿಸಿಕೊಂಡಿರಬೇಕು. 2025 ಡಿಸೆಂಬರ್ 30ರಂದು ಕೇಂದ್ರ ಸರ್ಕಾರ ಈ ಅಧಿಸೂಚನೆಯನ್ನು ಹೊರಡಿಸಿದೆ. ►ಗಿಗ್ ಕೆಲಸಗಾರರಿಗೆ ಸಾಮಾಜಿಕ ಭದ್ರತಾ ಪ್ರಯೋಜನಗಳು: ಕರಡು ನಿಯಮದಲ್ಲೇನಿದೆ? ಕರಡು ನಿಯಮಗಳ ಅಡಿಯಲ್ಲಿ, ಕೇಂದ್ರವು ಸ್ಥಾಪಿಸಿದ ಸಾಮಾಜಿಕ ಭದ್ರತಾ ಪ್ರಯೋಜನಗಳಿಗೆ ಅರ್ಹತೆ ಪಡೆಯಲು ಗಿಗ್ ಮತ್ತು ಪ್ಲಾಟ್ ಫಾರ್ಮ್ ಕೆಲಸಗಾರರು ಒಂದು ಹಣಕಾಸು ವರ್ಷದಲ್ಲಿ ಕನಿಷ್ಠ 90 ದಿನಗಳವರೆಗೆ ಅಗ್ರಿಗೇಟರ್ ನೊಂದಿಗೆ ಕೆಲಸ ಮಾಡಬೇಕು. ಒಂದಕ್ಕಿಂತ ಹೆಚ್ಚು ಅಗ್ರಿಗೇಟರ್ ಗಳೊಂದಿಗೆ ಕೆಲಸ ಮಾಡುವವರಾದರೆ 120 ದಿನ ಕೆಲಸ ಮಾಡಬೇಕು. ಎಷ್ಟೇ ಆದಾಯ ಗಳಿಸಿದರೂ, ನಿರ್ದಿಷ್ಟ ಕ್ಯಾಲೆಂಡರ್ ದಿನದಂದು ಅಗ್ರಿಗೇಟರ್ ಗಾಗಿ ನಿರ್ವಹಿಸಿದ ಕೆಲಸಕ್ಕೆ ಆದಾಯವನ್ನು ಗಳಿಸಿದ್ದರೆ, ಆತನನ್ನು ಕಾರ್ಮಿಕ ಎಂದು ಪರಿಗಣಿಸಲಾಗುತ್ತದೆ ಎಂದು ನಿಯಮಗಳು ವ್ಯಾಖ್ಯಾನಿಸುತ್ತವೆ. ಒಬ್ಬ ಗಿಗ್ ಕಾರ್ಮಿಕ ಅಥವಾ ಪ್ಲಾಟ್ ಫಾರ್ಮ್ ಕೆಲಸಗಾರನು ಬಹು ಅಗ್ರಿಗೇಟರ್ ಗಳಿಗೆ ಕೆಲಸ ಮಾಡಿದರೆ, ಎಲ್ಲಾ ಅಗ್ರಿಗೇಟರ್ ಗಳ ಜತೆ ಆತ ಮಾಡಿದ ಕೆಲಸವನ್ನು ಲೆಕ್ಕ ಹಾಕಲಾಗುತ್ತದೆ. ಒಬ್ಬ ಗಿಗ್ ಕಾರ್ಮಿಕ ಅಥವಾ ಪ್ಲಾಟ್ ಫಾರ್ಮ್ ಕೆಲಸಗಾರನು ಒಂದೇ ಕ್ಯಾಲೆಂಡರ್ ದಿನ ಮೂರು ಅಗ್ರಿಗೇಟರ್ ಗಳ ಜತೆ ಕೆಲಸಮಾಡಿದ್ದರೆ, ಅದನ್ನು ಮೂರು ದಿನಗಳ ಕೆಲಸ ಎಂದು ಎಣಿಸಲಾಗುತ್ತದೆ. ಅಗ್ರಿಗೇಟರ್ ಜತೆ ನೇರವಾಗಿ ಅಥವಾ ಅಸೋಸಿಯೇಟ್ ಕಂಪೆನಿ, ಹೋಲ್ಡಿಂಗ್ ಕಂಪೆನಿ, ಅಂಗಸಂಸ್ಥೆ ಕಂಪೆನಿ, ಸೀಮಿತ ಹೊಣೆಗಾರಿಕೆ ಪಾಲುದಾರಿಕೆ ಅಥವಾ ಮೂರನೇ ವ್ಯಕ್ತಿಯ ಮೂಲಕ ತೊಡಗಿಸಿಕೊಂಡಿದ್ದರೂ ಆತನನ್ನು ಗಿಗ್ ಅಥವಾ ಪ್ಲಾಟ್ ಫಾರ್ಮ್ ಕಾರ್ಮಿಕ ಎಂದು ಪರಿಗಣಿಸಲಾಗುತ್ತದೆ. ಆತನು ಈ ಸೌಲಭ್ಯಗಳಿಗೆ ಅರ್ಹನಾಗಿರುತ್ತಾನೆ. ►ಅಸಂಘಟಿತ ಕಾರ್ಮಿಕರಿಗೆ ನೋಂದಣಿ, ಡಿಜಿಟಲ್ ಐಡಿಗಳು ಕೇಂದ್ರದ ಗೊತ್ತುಪಡಿಸಿದ ಪೋರ್ಟಲ್ ನಲ್ಲಿ ಅಸಂಘಟಿತ ಕಾರ್ಮಿಕರ ನೋಂದಣಿಯನ್ನು ಕಡ್ಡಾಯಗೊಳಿಸುವಾಗ, ಪ್ರತಿಯೊಬ್ಬ ಅರ್ಹ ನೋಂದಾಯಿತ ಅಸಂಘಟಿತ ಕಾರ್ಮಿಕರಿಗೆ ಅವರ ಫೋಟೋ ಮತ್ತು ಕೇಂದ್ರ ಸರ್ಕಾರವು ನಿರ್ದಿಷ್ಟಪಡಿಸಿದ ಇತರ ವಿವರಗಳನ್ನು ಹೊಂದಿರುವ ಡಿಜಿಟಲ್ ಗುರುತಿನ ಚೀಟಿಯನ್ನು ನೀಡಲಾಗುತ್ತದೆ. ಕಾರ್ಮಿಕ ಸಚಿವಾಲಯವು ಈಗಾಗಲೇ ಇ-ಶ್ರಮ್ ಪೋರ್ಟಲ್ ನಲ್ಲಿ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಇದು ಅಸಂಘಟಿತ ಕಾರ್ಮಿಕರಿಗೆ ರಾಷ್ಟ್ರೀಯ ಡೇಟಾಬೇಸ್ ಆಗಿ ಕಾರ್ಯನಿರ್ವಹಿಸುತ್ತದೆ. ಈ ವೇದಿಕೆಯ ಮೂಲಕ, ನೋಂದಾಯಿತ ಕಾರ್ಮಿಕರು ಮಾನ್ಯತೆಯನ್ನು ಪಡೆಯಬಹುದು ಮತ್ತು ಸಾಮಾಜಿಕ ಭದ್ರತಾ ಪ್ರಯೋಜನಗಳನ್ನು ಪಡೆಯಬಹುದು. ಅರ್ಹ ಅಸಂಘಟಿತ ಕಾರ್ಮಿಕರು ವಿಳಾಸ, ಉದ್ಯೋಗ, ಮೊಬೈಲ್ ಸಂಖ್ಯೆ, ಕೌಶಲ್ಯ ಅಥವಾ ಯಾವುದೇ ಇತರ ಅಗತ್ಯ ಮಾಹಿತಿಯಂತಹ ವಿವರಗಳನ್ನು ನಿಯಮಿತವಾಗಿ ನವೀಕರಿಸಬೇಕಾಗುತ್ತದೆ. ಈ ವಿವರಗಳನ್ನು ನವೀಕರಿಸಲು ವಿಫಲವಾದರೆ, ಕಾರ್ಮಿಕರು ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅನರ್ಹರಾಗಬಹುದು ಎಂದು ಕರಡು ನಿಯಮಗಳು ಹೇಳುತ್ತವೆ. ಹೊಸ ಕಾರ್ಮಿಕ ಸಂಹಿತೆಯಡಿಯಲ್ಲಿ, ಅರ್ಹ ಗಿಗ್ ಕಾರ್ಮಿಕರು ಆರೋಗ್ಯ, ಜೀವ ಮತ್ತು ಅಪಘಾತ ವಿಮೆಗೆ ಅರ್ಹರಾಗಿರುತ್ತಾರೆ. ►ಅರ್ಹತೆಯನ್ನು ಕಾಪಾಡಿಕೊಳ್ಳಲು ನವೀಕರಣ ಕಡ್ಡಾಯ ನೋಂದಾಯಿತ ಕಾರ್ಮಿಕರು ಪೋರ್ಟಲ್ ನಲ್ಲಿ ವಿಳಾಸ, ಉದ್ಯೋಗ, ಮೊಬೈಲ್ ಸಂಖ್ಯೆ ಮತ್ತು ಕೌಶಲ್ಯಗಳಂತಹ ವೈಯಕ್ತಿಕ ಮತ್ತು ವೃತ್ತಿಪರ ವಿವರಗಳನ್ನು ನಿಯಮಿತವಾಗಿ ನವೀಕರಿಸಬೇಕಾಗುತ್ತದೆ. ಮಾಹಿತಿಯನ್ನು ನವೀಕರಿಸಲು ವಿಫಲವಾದರೆ, ಸಾಮಾಜಿಕ ಭದ್ರತಾ ಪ್ರಯೋಜನಗಳಿಗೆ ಅರ್ಹತೆ ಕಳೆದುಕೊಳ್ಳಬಹುದು ಎಂದು ನಿಯಮಗಳು ಎಚ್ಚರಿಸುತ್ತವೆ. ►ಅತಿ ಹೆಚ್ಚು ನೋಂದಣಿಗಳನ್ನು ವರದಿ ಮಾಡಿರುವ ಪ್ರಮುಖ ರಾಜ್ಯಗಳು ಉತ್ತರ ಪ್ರದೇಶ (8.39 ಕೋಟಿ), ಬಿಹಾರ (3.00 ಕೋಟಿ) ಮತ್ತು ಪಶ್ಚಿಮ ಬಂಗಾಳ (2.64 ಕೋಟಿ) ರಾಜ್ಯಗಳಿಂದ ಪೋರ್ಟಲ್ ಅತಿ ಹೆಚ್ಚು ನೋಂದಣಿಗಳನ್ನು ದಾಖಲಿಸಿದೆ. ಈ ಸಂಖ್ಯೆಗಳು ಈ ರಾಜ್ಯಗಳಲ್ಲಿನ ಅಸಂಘಟಿತ ಕಾರ್ಯಪಡೆ ಮತ್ತು ದೇಶಾದ್ಯಂತ ಕಾರ್ಮಿಕರನ್ನು ನೋಂದಾಯಿಸಲು ಮತ್ತು ಬೆಂಬಲಿಸಲು ಸರ್ಕಾರದ ಪ್ರಯತ್ನಗಳನ್ನು ಪ್ರತಿಬಿಂಬಿಸುತ್ತವೆ. ಈ ನೋಂದಣಿಗಳಲ್ಲಿ ಮಹಿಳೆಯರು ಗಮನಾರ್ಹ ಭಾಗವನ್ನು ಹೊಂದಿದ್ದಾರೆ. ಉತ್ತರ ಪ್ರದೇಶವು 4.41 ಕೋಟಿ ಮಹಿಳಾ ನೋಂದಣಿದಾರರೊಂದಿಗೆ ಮುಂಚೂಣಿಯಲ್ಲಿದ್ದು, ನಂತರ ಬಿಹಾರ (1.72 ಕೋಟಿ) ಮತ್ತು ಪಶ್ಚಿಮ ಬಂಗಾಳ (1.44 ಕೋಟಿ) ಸ್ಥಾನದಲ್ಲಿವೆ. ►ತಜ್ಞರು ಏನಂತಾರೆ? ಕೇಂದ್ರವು ಈ ಕರಡು ನಿಯಮಾವಳಿಯ ಕುರಿತು ಸಾರ್ವಜನಿಕರಿಂದ ಅಭಿಪ್ರಾಯ ಮತ್ತು ಸಲಹೆಗಳನ್ನು ಆಹ್ವಾನಿಸಿದ್ದು, ಇದು ಉದ್ಯಮದ ಪ್ರತಿಕ್ರಿಯೆಯ ಆಧಾರದ ಮೇಲೆ ಚೌಕಟ್ಟನ್ನು ಪರಿಷ್ಕರಿಸುವ ಉದ್ದೇಶವನ್ನು ಸೂಚಿಸುತ್ತದೆ. ಪ್ಲಾಟ್ ಫಾರ್ಮ್ ಕಂಪೆನಿಗಳು ಬಹು ಅಪ್ಲಿಕೇಶನ್ಗಳಲ್ಲಿ ಕೆಲಸದ ದಿನಗಳನ್ನು ಟ್ರ್ಯಾಕ್ ಮಾಡುವ ಸಂಬಂಧ ಕಾರ್ಯಾಚರಣೆಯ ಸವಾಲುಗಳನ್ನು ಎತ್ತುವ ನಿರೀಕ್ಷೆಯಿದೆ. ಆದರೆ ಕಾರ್ಮಿಕ ಸಂಘಗಳು ಕಡಿಮೆ ಅರ್ಹತಾ ಮಿತಿ ಮತ್ತು ವಿಶಾಲ ವ್ಯಾಪ್ತಿಗೆ ಒತ್ತಾಯಿಸುವ ಸಾಧ್ಯತೆಯಿದೆ. ಗಿಗ್ ಮತ್ತು ಪ್ಲಾಟ್ ಫಾರ್ಮ್ ಕಾರ್ಮಿಕರನ್ನು ಮೊದಲ ಬಾರಿಗೆ ಔಪಚಾರಿಕವಾಗಿ ಗುರುತಿಸಿದ ಸಾಮಾಜಿಕ ಭದ್ರತಾ ಸಂಹಿತೆಯ ಜಾರಿಗೆ ಬಂದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಆದರೆ ಅಧಿಸೂಚಿತ ನಿಯಮಗಳ ಅನುಪಸ್ಥಿತಿಯು ಪ್ರಯೋಜನಗಳ ಜಾರಿಯನ್ನು ವಿಳಂಬಗೊಳಿಸಿತ್ತು. ಕೇಂದ್ರ ಸರ್ಕಾರದ ಈ ನಿಯಮಾವಳಿ ಗಿಗ್ ಕೆಲಸಗಾರರಿಗೆ ಸಾಮಾಜಿಕ ಭದ್ರತೆಯನ್ನು ನೀಡಬಹುದು. ಆದರೆ ಅದರ ಪರಿಣಾಮ ಅಂತಿಮ ನಿಯಮಗಳ ಮೇಲೆ ಅವಲಂಬಿತವಾಗಿರುತ್ತದೆ. 90 ದಿನಗಳ ಮಾನದಂಡವು ಪೂರ್ಣಕಾಲಿಕ ಉದ್ಯೋಗಕ್ಕಿಂತ ಹೆಚ್ಚಾಗಿ ಪೂರಕ ಆದಾಯದ ಮೂಲವಾಗಿ ಗಿಗ್ ಪ್ಲಾಟ್ ಫಾರ್ಮ್ಗಳನ್ನು ಅವಲಂಬಿಸಿರುವ ಕಾರ್ಮಿಕರ ದೊಡ್ಡ ವರ್ಗವನ್ನು ಹೊರಗಿಡಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಸಮಾಲೋಚನೆ ಪ್ರಕ್ರಿಯೆ ಪೂರ್ಣಗೊಂಡ ನಂತರ, ಕೇಂದ್ರವು ಅಂತಿಮ ನಿಯಮಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ. ಇದು ರಾಜ್ಯಗಳು ಮತ್ತು ಡಿಜಿಟಲ್ ಕಾರ್ಮಿಕ ವೇದಿಕೆಗಳೊಂದಿಗೆ ಸಮನ್ವಯದೊಂದಿಗೆ ಅನುಷ್ಠಾನಕ್ಕೆ ದಾರಿ ಮಾಡಿಕೊಡುತ್ತದೆ. ಗಿಗ್ ಆರ್ಥಿಕತೆಯಲ್ಲಿ ನಿಯಂತ್ರಣದ ವಿಕಸನಗೊಳ್ಳುತ್ತಿರುವ ಸ್ವರೂಪವನ್ನು ಒತ್ತಿಹೇಳುವ ಮೂಲಕ ಅಂತಿಮ ಆವೃತ್ತಿಯನ್ನು ರೂಪಿಸುವಲ್ಲಿ ಪಾಲುದಾರರ ಪ್ರತಿಕ್ರಿಯೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಸರ್ಕಾರ ಸೂಚಿಸಿದೆ. ಗಿಗ್ ಕಾರ್ಮಿಕರು ಮತ್ತು ಪ್ಲಾಟ್ ಫಾರ್ಮ್ ಒಕ್ಕೂಟಗಳು ಡಿಸೆಂಬರ್ 31ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಿದ್ದವು. 22 ನಗರಗಳಿಂದ ಒಂದು ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಮುಷ್ಕರದಲ್ಲಿ ಭಾಗವಹಿಸಿದ್ದರು. ಇದರಲ್ಲಿ ದಿಲ್ಲಿ ಮತ್ತು ಮುಂಬೈನಂತಹ ಪ್ರಮುಖ ನಗರ ಕೇಂದ್ರಗಳಿಂದ ಸುಮಾರು 14,000 ಸದಸ್ಯರು ಸೇರಿದ್ದಾರೆ ಎಂದು ಗಿಗ್ & ಪ್ಲಾಟ್ ಫಾರ್ಮ್ ಸೇವಾ ಕಾರ್ಮಿಕರ ಸಂಘ (GIPSWU) ಹೇಳಿದೆ. ಆದರೆ ಆಹಾರ ವಿತರಣಾ ಪ್ಲಾಟ್ ಫಾರ್ಮ್ಗಳು ಕಾರ್ಮಿಕರ ಈ ಪ್ರತಿಭಟನೆಯು ತಮ್ಮ ಕಾರ್ಯಾಚರಣೆಗಳ ಮೇಲೆ ಕಡಿಮೆ ಪರಿಣಾಮ ಬೀರಿದೆ ಎಂದು ಹೇಳಿವೆ. ಸ್ವಿಗ್ಗಿ, ಝೊಮಾಟೊ ಮತ್ತು ಮ್ಯಾಜಿಕ್ಪಿನ್ ಹೊಸ ವರ್ಷದ ಮುನ್ನಾದಿನದಂದು ಹೆಚ್ಚಿನ ಆರ್ಡರ್ಗಳನ್ನು ಸ್ವೀಕರಿಸಿರುವುದಾಗಿ ವರದಿ ಮಾಡಿವೆ.
ಜ.4: ಉಡುಪಿಯಲ್ಲಿ ಊತ್ತುಕ್ಕಾಡು ವೆಂಕಟಕವಿ ಆರಾಧನೋತ್ಸವ
ಉಡುಪಿ, ಜ.2: ಉಡುಪಿಯ ರಂಜನಿ ಮೆಮೋರಿಯಲ್, ಸೈ ಆರ್ಟ್ ಸರ್ವಿಸಸ್ ಅಮೇರಿಕ, ಮಣಿ ಕೃಷ್ಣಸ್ವಾಮಿ ಅಕಾಡೆಮಿ, ರಾಗಧನ ಉಡುಪಿ, ಸರಿಗಮ ಭಾರತಿ ಸಂಗೀತ ಶಾಲೆ ಪರ್ಕಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಸಂಗೀತದ ಶ್ರೇಷ್ಠ ವಾಗ್ಗೇಯಕಾರರಾದ ಊತ್ತುಕ್ಕಾಡು ವೆಂಕಟ ಕವಿ ಅವರ ಆರಾಧನೋತ್ಸವನ್ನು ಇದೇ ಜ.4ರಂದು ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಆಯೋಜಿಸಿದೆ. ಜ.4ರ ರವಿವಾರ ಅಪರಾಹ್ನ 1:00ರಿಂದ ರಾತ್ರಿ 8:00ಗಂಟೆಯವೆರೆಗೆ ಊತ್ತುಕ್ಕಾಡು ವೆಂಕಟಕವಿ ಆರಾಧನೋತ್ಸವವನ್ನು ವೈಶಿಷ್ಟ್ಯ ಪೂರ್ಣವಾಗಿ ಆಚರಿಸಲಾಗುವುದು ಎಂದು ರಂಜನಿ ಮೆಮೋರಿಯಲ್ ಟ್ರಸ್ಟ್ನ ಅಧ್ಯಕ್ಷ ಪ್ರೊ.ವಿ.ಅರವಿಂದ ಹೆಬ್ಬಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಊತ್ತುಕ್ಕಾಡು ವೆಂಕಟ ಕವಿ ಅವರ ಕೃತಿಗಳನ್ನು ಜನಪ್ರಿಯಗೊಳಿಸುವ ಯೋಜನೆಯನ್ನು ಅವಿರತವಾಗಿ ನಾಡಿನ ವಿವಿದೆಡೆ ಆಯೋಜಿಸಿಕೊಂಡು ಬರುತ್ತಿರುವ ಸಂಗೀತ ಸಾಮ್ರಾಟ್ ಚಿತ್ರವೀಣಾ ಎನ್ ರವಿಕಿರಣ್ ಅವರ ಮಾರ್ಗದರ್ಶನದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮೊದಲಿಗೆ ಉಡುಪಿ -ದಕ್ಷಿಣ ಕನ್ನಡ ಜಿಲ್ಲೆಗಳ 21 ಯುವ ಕಲಾವಿದರು ಮತ್ತು ಅಮೆರಿಕದಲ್ಲಿ ನೆಲೆಸಿರುವ 8 ಮಂದಿ ಯುವ ಕಲಾವಿದರು ಉತ್ತುಕ್ಕಾಡು ವೆಂಕಟಕವಿ ಅವರ ಕೃತಿಗಳನ್ನು ಪ್ರಸ್ತುತ ಪಡಿಸುವರು ಎಂದರು. ಸಂಜೆ 4:30ರಿಂದ ಊತ್ತುಕ್ಕಾಡು ಅವರ ಸುಪ್ರಸಿದ್ದ ಸಪ್ತರತ್ನ ಕೃತಿಗಳ ಗೋಷ್ಠಿ ಗಾಯನ ನಡೆಯಲಿದೆ. ಬಳಿಕ ನಡೆಯಲಿರುವ ಸರಳ ಸಭಾ ಕಾರ್ಯಕ್ರಮದಲ್ಲಿ ಹಿರಿಯ ಚಿತ್ರವೀಣಾ ಕಲಾವಿದ ಎನ್. ರವಿಕಿರಣ್ ಅವರನ್ನು ಗೌರವಿಸಲಾಗುವುದು. ಕೊನೆಯಲ್ಲಿ ಚಿತ್ರವೀಣಾ ಎನ್ ರವಿಕಿರಣ್ ಅವರ ಸಂಗೀತ ಕಾರ್ಯಕ್ರಮ ನಡೆಯಲಿದೆ. ಎನ್.ರವಿಕಿರಣ್ ಅವರಿಗೆ ವಯಲಿನ್ನಲ್ಲಿ ಸಂಜಯ್ ಸುರೇಶ್ ಹಾಗೂ ಮೃದಂಗದಲ್ಲಿ ತುಮಕೂರು ಬಿ ರವಿಶಂಕರ್ ಸಹಕರಿಸಲಿರುವರು ಎಂದು ವಿ.ಅರವಿಂದ ಹೆಬ್ಬಾರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಣಿ ಕೃಷ್ಣಸ್ವಾಮಿ ಅಕಾಡೆಮಿಯ ಕಾರ್ಯದರ್ಶಿ ಪಿ ನಿತ್ಯಾನಂದ ರಾವ್, ಶ್ರೀವಿಭು ರಾವ್, ರಾಗಧನ ಸಂಸ್ಥೆಯ ಅಧ್ಯಕ್ಷ ಡಾ. ಕಿರಣ್ ಹೆಬ್ಬಾರ್, ಖಜಾಂಚಿ ಪ್ರೊ ಕೆ ಸದಾಶಿವ ರಾವ್, ಸರಿಗಮ ಭಾರತಿ ಸಂಸ್ಥೆಯ ಅಧ್ಯಕ್ಷೆ ಉಮಾಶಂಕರಿ ಉಪಸ್ಥಿತರಿದ್ದರು.
ಬೀದರ್ | ಯುವ ಕಾಂಗ್ರೆಸ್ನ ಸಾಮಾಜಿಕ ಮಾಧ್ಯಮ ವಿಭಾಗದ ರಾಜ್ಯ ಸಂಯೋಜಕರಾಗಿ ಪ್ರಥ್ವಿರಾಜ ನೇಮಕ
ಬೀದರ್ : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ನ ಸಾಮಾಜಿಕ, ಮಾಧ್ಯಮ ವಿಭಾಗದ ರಾಜ್ಯ ಸಂಯೋಜಕರಾಗಿ ಔರಾದ್ ತಾಲೂಕಿನ ತುಳಜಾಪೂರ್ ಗ್ರಾಮದ ಪ್ರಥ್ವಿರಾಜ ಮುಧೋಳಕರ ಅವರನ್ನು ನೇಮಕ ಮಾಡಲಾಗಿದೆ. ಯುವ ಕಾಂಗ್ರೆಸ್ನ ಕರ್ನಾಟಕ ಉಸ್ತುವಾರಿಗಳಾದ ನಿಗಮ್ ಭಂಡಾರಿ, ರಾಜ್ಯಾಧ್ಯಕ್ಷರ ಮಂಜುನಾಥ್ ಗೌಡ, ರಾಷ್ಟ್ರೀಯ ಸಂಯೋಜಕಿ ಹಾಗೂ ಸಾಮಾಜಿಕ ಮಾಧ್ಯಮ ವಿಭಾಗದ ಉಸ್ತುವಾರಿ ಶ್ವೇತಾ ಸೋನಿ ಮತ್ತು ಸಾಮಾಜಿಕ ಮಾಧ್ಯಮ ವಿಭಾಗದ ರಾಜ್ಯಾಧ್ಯಕ್ಷ ಸಿದ್ದು ಹಳೇಗೌಡ ಅವರ ನೇತೃತ್ವದಲ್ಲಿ ಈ ನೇಮಕಾತಿ ನಡೆದಿದೆ. ಕಾಂಗ್ರೆಸ್ ಪಕ್ಷದಲ್ಲಿ ನನ್ನ ಕೆಲಸವನ್ನು ಗುರುತಿಸಿ ರಾಜ್ಯ ಮಟ್ಟದ ಜವಾಬ್ದಾರಿ ನೀಡಿರುವುದು ಸಂತಸ ತಂದಿದೆ ಎಂದು ಪ್ರಥ್ವಿರಾಜ ಮುಧೋಳಕರ ಸಂತಸ ವ್ಯಕ್ತಪಡಿಸಿದ್ದಾರೆ.
ಔರಾದ್ | ಫೆ.4ರಂದು ಕಸಾಪ ವತಿಯಿಂದ ತಾಲೂಕು ಮಟ್ಟದ 7ನೇ ಕನ್ನಡ ಸಾಹಿತ್ಯ ಸಮ್ಮೇಳನ : ಬಿ.ಎಂ.ಅಮರವಾಡಿ
ಔರಾದ್ : ಫೆ.4ರಂದು ಕಸಾಪ ವತಿಯಿಂದ ತಾಲೂಕು ಮಟ್ಟದ ಏಳನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ತಾಲೂಕು ಕಸಾಪ ಅಧ್ಯಕ್ಷ ಬಿ.ಎಂ.ಅಮರವಾಡಿ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಔರಾದ್ ತಾಲೂಕು ಮಟ್ಟದ ಏಳನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಪಟ್ಟಣದ ಗುರುಪಾದಪ್ಪ ನಾಗಮಾರಪಳ್ಳಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಇತ್ತೀಚಿಗೆ ಕನ್ನಡ ಭವನದಲ್ಲಿ ತಾಲೂಕಿನ ವಿವಿಧ ಕನ್ನಡಪರ ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಅಧ್ಯಕ್ಷರು ಹಾಗೂ ಕಸಾಪ ಪದಾಧಿಕಾರಿಗಳ ಸಭೆಯಲ್ಲಿ ಸಮ್ಮೇಳನದ ಕುರಿತು ಚರ್ಚಿಸಲಾಗಿತ್ತು. ತಾಲೂಕಿನ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕನ್ನಡಪರ ಹೋರಾಟಗಾರರಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಗಡಿಯಲ್ಲಿ ಮತ್ತೊಮ್ಮೆ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣ ಹಾಗೂ ಅದ್ಧೂರಿಯಾಗಿ ಆಚರಿಸಲಾಗುವುದು. ಶೀಘ್ರದಲ್ಲೇ ಕಸಾಪ ಪದಾಧಿಕಾರಿಗಳ ಸಭೆ ಕರೆದು ಏಳನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರ ಹೆಸರು ಘೋಷಣೆ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
ಇಂದೋರ್ ಕಲುಷಿತ ನೀರು ಪ್ರಕರಣ: ಇಲ್ಲಿಯವರೆಗೆ ಏನೇನಾಯ್ತು?
ಮಧ್ಯಪ್ರದೇಶದ ಇಂದೋರ್ ನ ಭಾಗೀರಥಪುರ ಪ್ರದೇಶದಲ್ಲಿ ಕಲುಷಿತ ನೀರು ಸೇವಿಸಿ 10 ಮಂದಿ ಸಾವಿಗೀಡಾಗಿದ್ದು, 150 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. 2,456 ಜನರಲ್ಲಿ ವಾಂತಿ ಮತ್ತು ಅತಿಸಾರದಂತಹ ಲಕ್ಷಣಗಳು ಕಾಣಿಸಿಕೊಂಡಿವೆ. ಈ ಪ್ರಕರಣದ ಬಗ್ಗೆ ಪ್ರಾರಂಭಿಸಲಾದ ತನಿಖೆಯಲ್ಲಿ ಕುಡಿಯುವ ನೀರಿನಲ್ಲಿ “ಸಾಮಾನ್ಯವಾಗಿ ಒಳಚರಂಡಿ ನೀರಿನಲ್ಲಿ ಕಂಡುಬರುವ” ಬ್ಯಾಕ್ಟೀರಿಯಾಗಳಿರುವುದು ಕಂಡುಬಂದಿದೆ ಎಂದು ಈ ವಿಷಯದ ಬಗ್ಗೆ ತಿಳಿದಿರುವ ಅಧಿಕಾರಿಗಳು ತಿಳಿಸಿದ್ದಾರೆ. ಅಂದಹಾಗೆ, ಇಂದೋರ್ ಭಾರತದಲ್ಲಿನ ಅತ್ಯಂತ ಸ್ವಚ್ಛ ನಗರವೆಂಬ ಹೆಗ್ಗಳಿಕೆಯನ್ನು ಪಡೆದಿದೆ. ಭಾಗೀರಥಪುರ ಪ್ರದೇಶದಲ್ಲಿ ಪುರಸಭೆ ಪೂರೈಸುತ್ತಿರುವ ಕುಡಿಯುವ ನೀರಿನ ಗುಣಮಟ್ಟ ಕಳಪೆಯಾಗಿತ್ತು. ಇದನ್ನು ಕುಡಿದ ಸ್ಥಳೀಯ ನಿವಾಸಿಗಳಿಗೆ ವಾಂತಿ, ಅತಿಸಾರ, ನಿರ್ಜಲೀಕರಣ, ತೀವ್ರ ಜ್ವರ ಕಾಣಿಸಿಕೊಂಡಿದ್ದು, ಹಲವಾರು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಲ ಮಾಲಿನ್ಯವು ಜಾಗತಿಕ ಸಾರ್ವಜನಿಕ ಆರೋಗ್ಯ ಕಾಳಜಿಯಾಗಿದೆ. ಕಲುಷಿತ ನೀರನ್ನು ಸೇವಿಸುವುದರಿಂದ ಬ್ಯಾಕ್ಟೀರಿಯಾದ ಗ್ಯಾಸ್ಟ್ರೋಎಂಟರೈಟಿಸ್, ಕಾಲರಾ, ಟೈಫಾಯಿಡ್ ಮತ್ತು ಭೇದಿ ಮುಂತಾದ ಕಾಯಿಲೆಗಳಿಗೆ ಕಾರಣವಾಗಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಹೇಳಿದೆ. ಇದು ಜನರ ಅನಾರೋಗ್ಯ ಮತ್ತು ಸಾವಿಗೆ ಕಾರಣವಾಗುತ್ತದೆ. ಇಂದೋರ್ ನಲ್ಲಿ ಕುಡಿಯುವ ನೀರಿನೊಂದಿಗೆ ಕೊಳಚೆನೀರು ಸೇರಿಕೊಂಡಿದ್ದೇ ಜನರ ಸಾವಿಗೆ ಕಾರಣ ಎಂದು ಆರಂಭಿಕ ತನಿಖೆಗಳು ಸೂಚಿಸುತ್ತವೆ. ಇದು ಸುರಕ್ಷಿತ ನೀರು ಸರಬರಾಜು ವ್ಯವಸ್ಥೆಗಳು ಮತ್ತು ಜಾಗರೂಕ ಮೇಲ್ವಿಚಾರಣೆಯ ಮಹತ್ವವನ್ನು ಒತ್ತಿಹೇಳುತ್ತದೆ. ►ಇಂದೋರ್ ನಲ್ಲಿ ಏನೇನಾಯ್ತು? 2025 ಡಿಸೆಂಬರ್ ತಿಂಗಳ ಮಧ್ಯದಲ್ಲಿ, 15,000 ಜನರು ವಾಸಿಸುವ ಜನನಿಬಿಡ ಪ್ರದೇಶವಾದ ಭಾಗೀರಥಪುರದ ನಿವಾಸಿಗಳು ತಮಗೆ ಪೂರೈಕೆಯಾಗುತ್ತಿರುವ ನೀರು ಬಣ್ಣ ಕಳೆದುಕೊಂಡು ದುರ್ವಾಸನೆ ಬೀರುತ್ತಿರುವುದನ್ನು ಗಮನಿಸಿದ್ದಾರೆ. ಸ್ಥಳೀಯರು ನೀರಿನ ಗುಣಮಟ್ಟದ ಬಗ್ಗೆ ನಾಗರಿಕ ಅಧಿಕಾರಿಗಳಿಗೆ ಪದೇಪದೇ ದೂರು ನೀಡಿದರೂ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ. 2025 ಡಿಸೆಂಬರ್ 25ರಂದು ನೀರಿನ ವಿತರಣೆ ಮುಂದುವರಿದಿತ್ತು. ಅನೇಕ ಕುಟುಂಬಗಳು ನೀರು ಕಹಿ ರುಚಿ ಹಾಗೂ ದುರ್ವಾಸನೆಯಿಂದ ಕೂಡಿದೆ ಎಂದು ದೂರಿದ್ದವು. ಆದರೆ ಬೇರೆ ಮಾರ್ಗವಿಲ್ಲದೆ ಕುಡಿಯಲು ಮತ್ತು ಅಡುಗೆ ಮಾಡಲು ಅದೇ ನೀರನ್ನು ಬಳಸಿದ್ದವು. ಡಿಸೆಂಬರ್ 27–28ರಂದು ಹಲವರು ಅಸ್ವಸ್ಥರಾದರು. ನಲ್ಲಿ ನೀರನ್ನು ಸೇವಿಸಿದ ನಂತರ ಹಲವಾರು ಮಂದಿಗೆ ವಾಂತಿ, ತೀವ್ರ ಅತಿಸಾರ, ನಿರ್ಜಲೀಕರಣ ಕಾಣಿಸಿಕೊಂಡಿತು. ಇವರಿಗೆ ಸ್ಥಳೀಯ ಚಿಕಿತ್ಸಾಲಯಗಳಲ್ಲಿ ಚಿಕಿತ್ಸೆ ನೀಡಲಾಗಿದ್ದು, ನಂತರ ಆರೋಗ್ಯ ತಂಡಗಳು ರೋಗಿಗಳ ಸಮೀಕ್ಷೆಯನ್ನು ಪ್ರಾರಂಭಿಸಿವೆ. ಡಿಸೆಂಬರ್ 29ರಂದು ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾದ ರೋಗಿಗಳ ಸಂಖ್ಯೆಯಲ್ಲಿ ತೀವ್ರ ಏರಿಕೆ ಕಂಡುಬಂದಿತು. ಅತಿಸಾರದಿಂದ ಕನಿಷ್ಠ ಮೂರು ಸಾವುಗಳನ್ನು ಮೇಯರ್ ಪುಷ್ಯಮಿತ್ರ ಭಾರ್ಗವ ದೃಢಪಡಿಸಿದ್ದಾರೆ. 2025 ಡಿಸೆಂಬರ್ 30ರಂದು ಆಸ್ಪತ್ರೆಯಲ್ಲಿ ದಾಖಲಾದವರ ಸಂಖ್ಯೆ 100 ಕ್ಕಿಂತ ಹೆಚ್ಚಾಯಿತು. ವರದಿಗಳ ಪ್ರಕಾರ, ಈ ಪ್ರದೇಶದಲ್ಲಿ 1,100 ಕ್ಕೂ ಹೆಚ್ಚು ನಿವಾಸಿಗಳು ಅಸ್ವಸ್ಥರಾಗಿದ್ದಾರೆ. ಡಿಸೆಂಬರ್ 31, 2025: ಸಾವಿನ ಸಂಖ್ಯೆ ಏಳಕ್ಕೆ ಏರಿತು. ಆರು ತಿಂಗಳ ಮಗು ಕೂಡ ಸಾವಿಗೀಡಾಗಿರುವುದು ವರದಿಯಾಗಿದೆ. ಕಲುಷಿತ ನೀರು ಸೇವನೆಯಿಂದ ಸಾವಿಗೀಡಾದವರ ಕುಟುಂಬಗಳಿಗೆ ಸರ್ಕಾರದಿಂದ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಲಾಯಿತು. ವಲಯ ಅಧಿಕಾರಿ ಮತ್ತು ಸಹಾಯಕ ಎಂಜಿನಿಯರ್ ಸೇರಿದಂತೆ ನೀರು ಸರಬರಾಜು ಮೇಲ್ವಿಚಾರಣೆಯಲ್ಲಿನ ಲೋಪಕ್ಕಾಗಿ ಉಸ್ತುವಾರಿ ಉಪ ಎಂಜಿನಿಯರ್ ವಜಾಗೊಳಿಸಲ್ಪಟ್ಟರು. ►ಇಂದೋರ್ ಮೇಯರ್ ಪ್ರತಿಕ್ರಿಯೆ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಂದೋರ್ ಮೇಯರ್ ಪುಷ್ಯಮಿತ್ರ ಭಾರ್ಗವ ಅವರು, ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ ಭಾಗೀರಥಪುರದಲ್ಲಿ ಅತಿಸಾರದಿಂದ ನಾಲ್ಕು ಜನರು ಸಾವಿಗೀಡಾಗಿದ್ದಾರೆ ಎಂದರು. ಆದರೆ ಈ ಸಾಂಕ್ರಾಮಿಕ ರೋಗದಿಂದಾಗಿ 10 ಸಾವುಗಳ ಬಗ್ಗೆ ನನಗೆ ಮಾಹಿತಿ ಬಂದಿದೆ ಎಂದೂ ಹೇಳಿದರು. ಭಾಗೀರಥಪುರದಿಂದ ಸಂಗ್ರಹಿಸಲಾದ ಕುಡಿಯುವ ನೀರಿನ ಮಾದರಿಗಳ ಪ್ರಾಥಮಿಕ ಪರೀಕ್ಷಾ ವರದಿಗಳ ಆಧಾರದ ಮೇಲೆ ಪ್ರದೇಶದಲ್ಲಿ ಕಾಲರಾ ಹರಡಿರುವ ಶಂಕೆ ಬಗ್ಗೆ ಕೇಳಲಾದ ಪ್ರಶ್ನೆಗೆ, ಆರೋಗ್ಯ ಇಲಾಖೆ ಮಾತ್ರ ಈ ವಿಷಯದ ಬಗ್ಗೆ ಮಾಹಿತಿಯನ್ನು ನೀಡಬಹುದು ಎಂದು ಮೇಯರ್ ಉತ್ತರಿಸಿರುವುದಾಗಿ ಪಿಟಿಐ ವರದಿ ಮಾಡಿದೆ. ನಗರದ ವೈದ್ಯಕೀಯ ಕಾಲೇಜಿನ ಪ್ರಯೋಗಾಲಯ ಪರೀಕ್ಷಾ ವರದಿಗಳು ಪೈಪ್ಲೈನ್ ಸೋರಿಕೆಯಿಂದಾಗಿ ಪ್ರದೇಶದ ಕುಡಿಯುವ ನೀರು ಕಲುಷಿತವಾಗಿದೆ ಎಂದು ದೃಢಪಡಿಸಿವೆ ಎಂದು ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ (ಸಿಎಂಎಚ್ಒ) ಡಾ. ಮಾಧವ್ ಪ್ರಸಾದ್ ಹಸಾನಿ ಹೇಳಿದ್ದಾರೆ. ಆದರೆ ಸಿಎಂಎಚ್ಒ ವರದಿಯ ವಿವರವಾದ ಸಂಶೋಧನೆಗಳನ್ನು ಹಂಚಿಕೊಳ್ಳಲಿಲ್ಲ. ಆಡಳಿತಾಧಿಕಾರಿಗಳು ಸಹ ಈ ಕುರಿತು ಸ್ಪಷ್ಟ ಮಾಹಿತಿ ನೀಡಿಲ್ಲ. ಗುರುವಾರ ರಾತ್ರಿಯವರೆಗೆಗಿನ ಪರಿಸ್ಥಿತಿಯನ್ನು ಉಲ್ಲೇಖಿಸಿ ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು, ಈ ಪ್ರದೇಶದ ಆಸ್ಪತ್ರೆಗಳಿಗೆ 272 ರೋಗಿಗಳನ್ನು ದಾಖಲಿಸಲಾಗಿದ್ದು, ಅವರಲ್ಲಿ 71 ಜನರನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ಹೇಳಿದರು. ಪ್ರಸ್ತುತ ಆಸ್ಪತ್ರೆಗೆ ದಾಖಲಾಗಿರುವ 201 ರೋಗಿಗಳಲ್ಲಿ 32 ಮಂದಿ ತೀವ್ರ ನಿಗಾ ಘಟಕಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ►ಇಂದೋರ್ ನಲ್ಲಿ ನೀರಿನ ಗುಣಮಟ್ಟ ಕಳಪೆ 2025ರಲ್ಲಿ ಇಂದೋರ್ ನಗರಾದ್ಯಂತ ನೀರಿನ ಗುಣಮಟ್ಟ ಕಳಪೆಯಾಗಿದೆ ಎಂಬ ಸಂಬಂಧ 266 ದೂರುಗಳು ದಾಖಲಾಗಿವೆ. ಭಾಗೀರಥಪುರವನ್ನು ಒಳಗೊಂಡಿರುವ ವಲಯ–4ರಲ್ಲಿ 23 ಅಧಿಕೃತ ದೂರುಗಳು ದಾಖಲಾಗಿವೆ. ಇಂದೋರ್ ಮೇಯರ್ ಸಹಾಯವಾಣಿಯ ದಾಖಲೆಗಳ ಪ್ರಕಾರ, ಕಳೆದ ವರ್ಷದಲ್ಲಿ ಕಲುಷಿತ ನೀರಿನ ಕುರಿತು 16 ಪ್ರಕರಣಗಳನ್ನು ಸಹಾಯಕ ಎಂಜಿನಿಯರ್ ಯೋಗೇಶ್ ಜೋಶಿಗೆ ವಹಿಸಲಾಗಿದೆ. ಆ 16 ಪ್ರಕರಣಗಳಲ್ಲಿ ಐದು ಪ್ರಕರಣಗಳನ್ನು ಪರಿಹರಿಸಲಾಗಿದೆ. ಏಳು ಪ್ರಕರಣಗಳನ್ನು ಪೂರ್ಣಗೊಂಡಿವೆ ಎಂದು ಗುರುತಿಸಲಾಗಿದೆ. ಇದಲ್ಲದೆ, ಇಂದೋರ್ ಪುರಸಭೆಯ ಉನ್ನತ ಸ್ಥಾನದಲ್ಲಿರುವ ಮೂಲಗಳ ಪ್ರಕಾರ, ಒಂದು ವರ್ಷದ ಹಿಂದೆಯೇ ಹೊಸ ನರ್ಮದಾ ನೀರಿನ ಪೈಪ್ಲೈನ್ ಹಾಕಲು ಕಡತ ಸಿದ್ಧಪಡಿಸಲಾಗಿತ್ತು. ಹಿರಿಯ ನಿಗಮದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ನೀರಿನ ಪೈಪ್ಲೈನ್ಗಳನ್ನು ಸರಿಪಡಿಸುವ ಅಗತ್ಯವಿದೆ ಎಂದು ಕಂಡುಹಿಡಿದ ನಂತರ ಟೆಂಡರ್ ಕರೆಯಲಾಗಿತ್ತು. 2024 ನವೆಂಬರ್ 1ರಂದು ಕಡತ ಸಿದ್ಧವಾಗಿದ್ದು, 2025 ಜುಲೈ 30ರಂದು ಟೆಂಡರ್ ಕರೆಯಲಾಯಿತು. ಯೋಜನೆಯ ಅಂತಿಮ ಹಂತವನ್ನು ಕಾರ್ಯಗತಗೊಳಿಸಲು ಕೆಲಸದ ಆದೇಶವನ್ನು 2025 ಡಿಸೆಂಬರ್ 26ರಂದು ಅಂಗೀಕರಿಸಲಾಯಿತು. ಇದೇ ಹೊತ್ತಿನಲ್ಲಿ ಕಲುಷಿತ ನೀರು ಸೇವನೆಯಿಂದ ಜನರ ಸಾವಿನ ಪ್ರಕರಣ ಬೆಳಕಿಗೆ ಬಂತು. ಹೊಸ ನರ್ಮದಾ ನೀರಿನ ಪೈಪ್ಲೈನ್ ಹಾಕುವ ಬೇಡಿಕೆಯನ್ನು ಕಳೆದ ವರ್ಷ ಮುಂದಿಟ್ಟಿದ್ದು, ನಂತರ ಕಡತವನ್ನು ಸಿದ್ಧಪಡಿಸಲಾಗಿತ್ತು. ಆದರೆ ಈ ಕಡತವನ್ನು “ಸುಮಾರು ಏಳು ತಿಂಗಳಿನಿಂದ ಹಾಗೇ ಇಡಲಾಗಿತ್ತು” ಎಂದು ಭಾಗೀರಥಪುರದ ಕಾರ್ಪೊರೇಟರ್ ಕಮಲ್ ವಘೇಲಾ ಹೇಳಿದ್ದಾರೆ ಎಂದು Indian Express ವರದಿ ಮಾಡಿದೆ. ಡಿಸೆಂಬರ್ 31ರಂದು ಮುಖ್ಯಮಂತ್ರಿ ಮೋಹನ್ ಯಾದವ್ ಅವರಿಗೆ ವಘೇಲಾ ಪತ್ರ ಬರೆದಿದ್ದರು. ಅದರಲ್ಲಿ, ಹಲವು ಫಾಲೋಅಪ್ಗಳ ಹೊರತಾಗಿಯೂ ಅಧಿಕಾರಿಗಳು ಈ ವಿಷಯ “ಪ್ರಕ್ರಿಯೆಯಲ್ಲಿದೆ” ಎಂದು ಮಾತ್ರ ಪ್ರತಿಕ್ರಿಯಿಸುತ್ತಿದ್ದರು ಎಂದು ಉಲ್ಲೇಖಿಸಿದ್ದಾರೆ. ಮೇಯರ್ ಅವರನ್ನು ಸಂಪರ್ಕಿಸಿದ ನಂತರವೇ 2025 ಜುಲೈ 30ರಂದು ಟೆಂಡರ್ ನೀಡಲಾಯಿತು. ಆದರೂ ನಿಗದಿತ ಅವಧಿಯಲ್ಲಿ ಪ್ರಕ್ರಿಯೆ ಪೂರ್ಣಗೊಳ್ಳಲಿಲ್ಲ. ಈ ಘಟನೆ ಕೇವಲ ಆಡಳಿತಾತ್ಮಕ ಲೋಪವಲ್ಲ, ಸಾರ್ವಜನಿಕ ಆರೋಗ್ಯಕ್ಕೆ ಉದ್ದೇಶಪೂರ್ವಕವಾಗಿ ಅಪಾಯ ಉಂಟುಮಾಡಿದ ಗಂಭೀರ ಕ್ರಿಮಿನಲ್ ನಿರ್ಲಕ್ಷ್ಯದ ಪರಿಣಾಮವಾಗಿದೆ. ಮೇಲ್ನೋಟಕ್ಕೆ ಈ ಪ್ರಕರಣವು ಕರ್ತವ್ಯ ಲೋಪ, ಆದೇಶಗಳ ತಿರಸ್ಕಾರ ಮತ್ತು ಸಾರ್ವಜನಿಕ ಆರೋಗ್ಯ ಕಾನೂನುಗಳ ಉಲ್ಲಂಘನೆಯ ಅಡಿಯಲ್ಲಿ ಬರುತ್ತದೆ ಎಂದು ವಘೇಲಾ ಬರೆದಿದ್ದಾರೆ. ಜಲ ಮಾಲಿನ್ಯದ ದೂರುಗಳನ್ನು ಪರಿಹರಿಸದ ಕಾರಣ ಅಮಾನತುಗೊಂಡಿರುವ ವಲಯ–4ರ ಜವಾಬ್ದಾರಿಯುತ ಸಹಾಯಕ ಎಂಜಿನಿಯರ್ ಯೋಗೇಶ್ ಜೋಶಿ ಅವರನ್ನು ಸಂಪರ್ಕಿಸಿದಾಗ, “ನಾನು ಮೂರು ವಲಯಗಳನ್ನು ನಿರ್ವಹಿಸುತ್ತೇನೆ. ಇದನ್ನು ಒಬ್ಬಂಟಿಯಾಗಿ ನಿರ್ವಹಿಸುವುದು ಅಸಾಧ್ಯ. ಸ್ಥಳೀಯ ಸಿಬ್ಬಂದಿ ಈಗಾಗಲೇ ಈ ಪರಿಸ್ಥಿತಿಯ ಬಗ್ಗೆ ನನಗೆ ತಿಳಿಸಿದ್ದರು. ವಾಸ್ತವವಾಗಿ, ಈ ಪ್ರದೇಶದ ನೀರಿನ ಪೈಪ್ಲೈನ್ಗಳು ಕನಿಷ್ಠ ಒಂದು ವರ್ಷದ ಹಿಂದೆಯೇ ಹಾನಿಗೊಳಗಾಗಿವೆ ಎಂದು ಮುಖ್ಯ ಕಚೇರಿಗೆ ತಿಳಿದಿತ್ತು. ದುರಸ್ತಿಗಾಗಿ ಟೆಂಡರ್ ಕರೆಯಲಾಗಿದ್ದರೂ, ಕೆಲಸದ ಆದೇಶವನ್ನು ಕೇವಲ ಎರಡು ಅಥವಾ ಮೂರು ದಿನಗಳ ಹಿಂದೆ ನೀಡಲಾಗಿದೆ” ಎಂದು ಅವರು ಹೇಳಿದ್ದಾರೆ ಎಂದು Indian Express ವರದಿ ಉಲ್ಲೇಖಿಸಿದೆ. ►ಇದಕ್ಕೆ ಅಧಿಕಾರಿಗಳು ಏನಂತಾರೆ? ಟೆಂಡರ್ಗಳನ್ನು ಪರಿಶೀಲಿಸುವ ಜವಾಬ್ದಾರಿಯುತ ಅಧಿಕಾರಿ ಹೆಚ್ಚುವರಿ ಆಯುಕ್ತ ರೋಹಿತ್ ಸಿಸೋನಿಯಾ ಈ ಆರೋಪಗಳನ್ನು ತಿರಸ್ಕರಿಸಿದ್ದಾರೆ. ಒಟ್ಟು ಮೂರು ಲೈನ್ಗಳಿವೆ. ಮೊದಲನೆಯದು ಮುಖ್ಯ ಪೈಪ್ಲೈನ್, ಎರಡನೆಯದು ವಿತರಣಾ ಪೈಪ್ಲೈನ್, ಮೂರನೆಯದು ಮನೆಗಳಿಗೆ ನೀರು ಸರಬರಾಜು ಮಾಡುವ ಪೈಪ್ಲೈನ್. “ನೀರಿನ ಪೈಪ್ಲೈನ್ಗಳನ್ನು ದುರಸ್ತಿ ಮಾಡಲಾಗಿಲ್ಲ ಎಂದು ಹೇಳುವುದು ಸುಳ್ಳು. ದುರಸ್ತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿಲ್ಲ. ಟೆಂಡರ್ ಅನ್ನು ಹಲವು ತಿಂಗಳ ಹಿಂದೆಯೇ ಪ್ರಾರಂಭಿಸಲಾಗಿದೆ. AMRUT 2.0 ಯೋಜನೆಯಡಿಯಲ್ಲಿ ನಾವು ಈಗಾಗಲೇ ನಗರದಾದ್ಯಂತ ನೀರಿನ ಪೈಪ್ಲೈನ್ ಜೋಡಣೆಯ ಮೇಲೆ ಕೆಲಸ ಮಾಡುತ್ತಿದ್ದೇವೆ” ಎಂದು ಸಿಸೋನಿಯಾ ಹೇಳಿದ್ದಾರೆ. ಈ ನಿರ್ದಿಷ್ಟ ಪ್ರದೇಶದಲ್ಲಿ, ಎರಡು ಪ್ರಮುಖ ಪೈಪ್ಲೈನ್ಗಳಲ್ಲಿ ಸುಮಾರು 80 ಪ್ರತಿಶತ ಕೆಲಸ ಈಗಾಗಲೇ ಪೂರ್ಣಗೊಂಡಿದೆ. ಡಿಸೆಂಬರ್ 26ರಂದು ಮೂರನೇ ಪೈಪ್ಲೈನ್ ಕೆಲಸ ಪ್ರಾರಂಭಿಸಲಾಗಿದೆ. ಡಿಪಿಆರ್ ಮಂಜೂರಾಗಿದೆ, ಟೆಂಡರ್ ನೀಡಲಾಗಿದೆ ಮತ್ತು ಗುತ್ತಿಗೆದಾರರನ್ನು ಗುರುತಿಸಲಾಗಿದೆ. ನಾನು ಕೇವಲ ಎರಡು ತಿಂಗಳಿನಿಂದ ಉಸ್ತುವಾರಿ ವಹಿಸಿದ್ದೇನೆ. ಇದು ಸುಮಾರು 30 ವರ್ಷ ಹಳೆಯದಾದ ಮಾರ್ಗವಾಗಿದ್ದು, ಈಗಾಗಲೇ ಕೆಲಸ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ. ತನಿಖಾ ತಂಡಗಳು ಮಾಲಿನ್ಯದ ಮೂಲವನ್ನು ಗುರುತಿಸಿವೆ. ಮುಖ್ಯ ಪೈಪ್ಲೈನ್ ಮೇಲೆಯೇ ಸಣ್ಣ ಪೊಲೀಸ್ ಚೌಕಿಯನ್ನು ನಿರ್ಮಿಸಲಾಗಿತ್ತು. ಅಲ್ಲಿ ಸೆಪ್ಟಿಕ್ ಟ್ಯಾಂಕ್ ಇಲ್ಲದ ಶೌಚಾಲಯವಿದ್ದು, ಎಲ್ಲಾ ಕಲುಷಿತ ತ್ಯಾಜ್ಯವನ್ನು ಒಂದು ಗುಂಡಿಯಲ್ಲಿ ಸಂಗ್ರಹಿಸಲಾಗುತ್ತಿತ್ತು. ಆ ಗುಂಡಿಯ ಕೆಳಗಡೆಯೇ ಮುಖ್ಯ ಪೈಪ್ಲೈನ್ ಒಡೆದಿದ್ದು, ಅದರಿಂದ ಮಾಲಿನ್ಯ ಉಂಟಾಗಿದೆ. ಸ್ಥಳದಿಂದ ಸಂಗ್ರಹಿಸಿದ ಮಾದರಿಗಳು ಕಲುಷಿತವಾಗಿವೆ ಎಂದು ಪರೀಕ್ಷೆಗಳು ದೃಢಪಡಿಸಿವೆ. ಇದುವೇ ಅತಿಸಾರಕ್ಕೆ ಕಾರಣವಾಗಿರಬಹುದು ಎಂದು ಅವರು ತಿಳಿಸಿದ್ದಾರೆ. ಒಡೆದ ನೀರಿನ ಪೈಪ್ಲೈನ್ಗಳು ಮತ್ತು ಮಾಲಿನ್ಯದ ದೂರುಗಳನ್ನು ಪರಿಹರಿಸಲು ಪುರಸಭೆಯ ಅಧಿಕಾರಿಗಳು ಈಗ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದ್ದಾರೆ. ಈ ಘಟನೆ ಮತ್ತೆ ಪುನರಾವರ್ತನೆಯಾಗದಂತೆ ತಡೆಯಲು ಈ ಪ್ರಕರಣದಲ್ಲಿ ಕೆಲಸ ಮಾಡಲು ವಿಶೇಷ ತಂಡವನ್ನು ನಿಯೋಜಿಸಲಾಗಿದೆ ಎಂದು ಸಿಸೋನಿಯಾ ಹೇಳಿದ್ದಾರೆ.

17 C