SENSEX
NIFTY
GOLD
USD/INR

Weather

24    C
...

ಕರ್ನಾಟಕ ಸರ್ಕಾರ: ಕಲೆ, ಸಾಹಿತ್ಯ ಗಣ್ಯರಿಗೆ ಗೌರವ, ಸಾಂಸ್ಕೃತಿಕ ಪ್ರಶಸ್ತಿಗಳ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೀಡಲಾಗುವ 2025 26 ನೇ ಸಾಲಿನ ವಿವಿಧ ಪ್ರಶಸ್ತಿಗಳಿಗೆ ಗಣ್ಯರನ್ನು ಆಯ್ಕೆ ಮಾಡಲಾಗಿದೆ. 'ಪಂಪ ಪ್ರಶಸ್ತಿ, ಡಾ ಗುಬ್ಬಿ ವೀರಣ್ಣ ಪ್ರಶಸ್ತಿ, ಬಿ ವಿ ಕಾರಂತ ಪ್ರಶಸ್ತಿ, ಸಾಹಿತ್ಯ ಪ್ರಶಸ್ತಿ, ಜಕಣಾಚಾರಿ ಪ್ರಶಸ್ತಿ, ಜಾನಪದ ಶ್ರೀ ಪ್ರಶಸ್ತಿಗಳು' ಸೇರಿದಂತೆ ಹಲವು ಪ್ರಶಸ್ತಿಗಳಿಗೆ ನಾಡಿನ ಸಾಧಕರನ್ನು ಪುರಸ್ಕರಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ

ಒನ್ ಇ೦ಡಿಯ 16 Apr 2026 6:10 am

CBSE Result: ಕರಾವಳಿಯಲ್ಲಿಉತ್ತಮ ಫಲಿತಾಂಶ, ಗಣಿತದಲ್ಲಿ ಬಹಳಷ್ಟು ವಿದ್ಯಾರ್ಥಿಗಳ ಅಂಕ ಇಳಿಕೆ , ಬಹುತೇಕ ಶಾಲೆಗಳು ಶೇ.100

ರಾಜ್ಯ ಪಠ್ಯದ ಫಲಿತಾಂಶದಂತೆಯೇ ಸಿಬಿಎಸ್‌ಇ ಬೋರ್ಡ್ ಪರೀಕ್ಷೆಯಲ್ಲೂ ಕರಾವಳಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ವಿಜಯ ಕರ್ನಾಟಕ 16 Apr 2026 5:55 am

ಬಿಸಿಲ ತಾಪ ಏರಿಕೆ: ಬೆಂಗಳೂರಲ್ಲಿ ಸಂಚಾರಿ ಕಾವೇರಿ ಟ್ಯಾಂಕರ್‌ಗೆ ಹೆಚ್ಚಿದ ಬೇಡಿಕೆ, ಜಲಮಂಡಳಿಗೆ ಭರ್ಜರಿ ಆದಾಯ

ಬೆಂಗಳೂರಿನ ನಾನಾ ಬಡಾವಣೆಗಳಲ್ಲಿ ನೀರಿನ ಹಾಹಾಕಾರ ಹೆಚ್ಚುತ್ತಿದ್ದು, ಸಂಚಾರಿ ಟ್ಯಾಂಕರ್‌ಗೆ ಬೇಡಿಕೆ ಹೆಚ್ಚಾಗಿದೆ. ಕೊಳವೆ ಬಾವಿಗಳು ಬತ್ತುತ್ತಿರುವ ಹಿನ್ನಲೆಯಲ್ಲಿ ಜಲಮಂಡಳಿಯ ಟ್ಯಾಂಕರ್ ಗೆ ಬೇಡಿಕೆ ಹೆಚ್ಚಾಗಿದೆ.

ವಿಜಯ ಕರ್ನಾಟಕ 16 Apr 2026 5:33 am

ಕಾಂಗ್ರೆಸ್‌ನಿಂದ ಅಬ್ದುಲ್ ಜಬ್ಬಾರ್ ಅಮಾನತು ವಿರೋಧಿಸಿ ಪ್ರತಿಭಟನೆ

ದಾವಣಗೆರೆ: ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿರುವುದನ್ನು ವಿರೋಧಿಸಿ ಅಭಿಮಾನಿಗಳು, ಅಲ್ಪಸಂಖ್ಯಾತ ಸಮಾಜ ಮುಖಂಡರು ಬುಧವಾರ ಪ್ರತಿಭಟನೆ ನಡೆಸಿದರು. ನಗರದ ಅಖ್ತರ್ ರಝಾ ಸರ್ಕಲ್ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಅಬ್ದುಲ್ ಜಬ್ಬಾರ್ ಅವರ ಭಾವಚಿತ್ರ ಹಿಡಿದುಕೊಂಡು ಪಕ್ಷ ತೆಗೆದುಕೊಂಡಿರುವ ನಿರ್ಧಾರದಿಂದ ಹಿಂದೆ ಸರಿಯಬೇಕೆಂದು ಒತ್ತಾಯಿಸಿದರು. ಅಬ್ದುಲ್ ಜಬ್ಬಾರ್ ಅವರು ಕಳೆದ 40 ವರ್ಷಗಳಿಂದ ಪಕ್ಷಕ್ಕಾಗಿ ಹಗಲು-ಇರಳು ದುಡಿದಿದ್ದಾರೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಟಿಕೆಟ್ ಕೇಳಿದ್ದೇ ತಪ್ಪಾಯಿತಾ? ಶಾಮನೂರು ಶಿವಶಂಕರಪ್ಪ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಗೆಲ್ಲಿಸಿ ಎಂದು ಹೇಳಿದಾಗ ಅವರ ವಿರುದ್ಧ ಪಕ್ಷ ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ. ಆದರೆ, ಉಪ ಚುನಾವಣೆಯಲ್ಲಿ ಟಿಕೆಟ್ ಕೇಳಿರುವುದಕ್ಕೆ ಜಬ್ಬಾರ್ ಅವರನ್ನು ಪಕ್ಷದ ಸದಸ್ಯತ್ವದಿಂದ ಅಮಾನತುಗೊಳಿಸುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು. ಅಲ್ಪಸಂಖ್ಯಾತರು ಹಿಂದಿನಿಂದಲೂ ಕಾಂಗ್ರೆಸ್ ಪಕ್ಷವನ್ನೇ ಬೆಂಬಲಿಸಿಕೊಂಡು ಬಂದಿದ್ದಾರೆ. ಪಕ್ಷಕ್ಕಾಗಿ ಹಗಲು-ಇರಳು ಅಲ್ಪಸಂಖ್ಯಾತ ನಾಯಕರು ಶ್ರಮಿಸಿದ್ದಾರೆ. ದಾವಣಗೆರೆ ದಕ್ಷಿನ ಉಪ ಚುನಾವಣೆಯಲ್ಲಿ ಟಿಕೆಟ್ ಕೇಳಿದರು ಎಂಬ ಒಂದೇ ಕಾರಣಕ್ಕೆ ಮುಸ್ಲಿಮ್ ಸಮಾಜದ ನಾಯಕರಾದ ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದ ಸದಸ್ಯತ್ವದಿಂದ ಅಮಾನತು, ನಸೀರ್ ಅಹ್ಮದ್ ಅವರನ್ನು ಮುಖ್ಯಮಂತ್ರಿ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆ ಮಾಡಿರುವುದು ಸರಿಯಲ್ಲ. ಕೂಡಲೇ ಪಕ್ಷದ ಹೈಕಮಾಂಡ್ ತೆಗೆದುಕೊಂಡಿರುವ ನಿರ್ಧಾರದಿಂದ ಹಿಂದೆ ಸರಿದು ಪುನಃ ಅವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಪ್ರಮುಖರಾದ ಮುಹಮ್ಮದ್ ಸಿರಾಜ್, ಘನಿ ತಾಹೀರ್, ಎಸ್.ಕೆ.ಅಮ್ಜದ್ ವುಲ್ಲಾ, ಹುಲಿಮನಿ ರಹಮತುಲ್ಲಾ, ಎ.ಜಬ್ಬಾರ್, ಖಾದರ್ ಬಾಷಾ, ವಾಸೀಮ್ ಹಾಗೂ ಮುಸ್ಲಿಮ್ ಮುಖಂಡರು ಭಾಗವಹಿಸಿದ್ದರು.

ವಾರ್ತಾ ಭಾರತಿ 16 Apr 2026 1:16 am

ಕಾಂಗ್ರೆಸ್ ಪಕ್ಷದಲ್ಲಿ ಶಿಸ್ತು ಕ್ರಮ ಜರುಗಿಸುವ ಸಂದರ್ಭದಲ್ಲಿ ದೊರೆ, ಸೇವಕ ಎಂಬಂತಾಗಿದೆ : ಕೆ.ಎನ್.ರಾಜಣ್ಣ

ತುಮಕೂರು : ʼಕಾಂಗ್ರೆಸ್ ಪಕ್ಷದಲ್ಲಿ ಶಿಸ್ತು ಕ್ರಮ ಜರುಗಿಸುವ ಸಂದರ್ಭದಲ್ಲಿ ದೊರೆ, ಸೇವಕ ಎಂಬಂತಾಗಿದೆʼ ಎಂದು ಎಂದು ಮಾಜಿ ಸಚಿವ ಹಾಗೂ ಮಧುಗಿರಿ ಶಾಸಕ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಮಧುಗಿರಿಯಲ್ಲಿ ನಡೆದ ಉದ್ಯೋಗ ಮೇಳದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼಈ ಹಿಂದೆ ಸದ್ಗುರು ಅವರು ಯಾರು ರಾಹುಲ್‍ಗಾಂಧಿ ಕೇಳಿದ್ದರು, ಆದರೆ ಕೆಲವರು ಅವರ ಜೊತೆಯಲ್ಲಿ ವೇದಿಕೆಯ ಮೇಲೆ ಕುಳಿತ ಕಾರ್ಯಕ್ರಮ ನಡೆಸಿದರು. ಇದು ಶಿಸ್ತು ಮೀರುವುದಿಲ್ಲವೇ ? ಎಂದು ಪ್ರಶ್ನಿಸಿದರು. ಮಹಿಳಾ ಮೀಸಲಾತಿ ಜಾರಿಗಾಗಿ ವಿಶೇಷ ಅಧಿವೇಶನ ಕರೆದಿರುವುದನ್ನು ನಾನು ಸ್ವಾಗತಿಸುತ್ತೇನೆ. 20 ವರ್ಷಗಳ ಹಿಂದೆಯೇ ಪ್ರಧಾನಿ ಮನಮೋಹನ್‍ಸಿಂಗ್ ಕಾಲದಲ್ಲಿಯೇ ಮಸೂದೆ ಮಂಡನೆಗೆ ಕಾಂಗ್ರೆಸ್ ಪಕ್ಷ ಮುಂದಾಗಿತ್ತು. ಆಗ ಜೆಡಿಯು ಮುಖಂಡರಾಗಿದ್ದ ಶರದ ಯಾದವ್, ಬಿಲ್ ಮಂಡನೆಯಾದರೆ ಗಂಡಸರೆಲ್ಲಾ ವಿಷ ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೋರಾಟ ಮಾಡಿದ್ದರು ಎಂದು ತಿಳಿಸಿದ್ದಾರೆ. ಲೋಕಸಭೆ ಮತ್ತು ವಿಧಾನ ಸಭಾ ಕ್ಷೇತ್ರಗಳ ಪುನರ್ ವಿಂಗಡನೆಯಲ್ಲಿ 2 ಲಕ್ಷ ಮತದಾರರಿಗೆ ಒಂದು ವಿಧಾನಸಭೆ, ಹಾಗೆಯೇ 10 ಲಕ್ಷ ಮತದಾರರಿಗೆ ಒಂದು ಲೋಕಸಭಾ ಕ್ಷೇತ್ರದ ರೀತಿ ವಿಂಗಡನೆಗೆ ಮುಂದಾಗಿದ್ದಾರೆ. ಅಲ್ಲದೆ , ಮಹಿಳಾ ಮೀಸಲಾತಿಯೂ ಚರ್ಚೆಗೆ ಬರಲಿದೆ. ಇದರಿಂದ ಎಸ್ಸಿ, ಎಸ್ಟಿ, ಓಬಿಸಿ ಸೇರಿದಂತೆ ಎಲ್ಲಾ ವರ್ಗದ ಮಹಿಳೆಯರಿಗೂ ಅನುಕೂಲವಾಗಲಿದೆ.ಹಾಗಾಗಿ ಇದನ್ನು ನಾನು ಸ್ವಾಗತಿಸುತ್ತೇನೆ ಎಂದು ಕೆ.ಎನ್.ರಾಜಣ್ಣ ನುಡಿದರು.

ವಾರ್ತಾ ಭಾರತಿ 16 Apr 2026 1:14 am

ನಾವು ಯಾಮಾರಿದರೆ ದೇಶ ಇಪ್ಪತ್ತನೇ ಶತಮಾನಕ್ಕೆ ಹೋಗುತ್ತೆ : ಪ್ರೊ.ಶಿವರಾಮಯ್ಯ

ಬೆಂಗಳೂರು : ನಾವು ಯಾಮಾರಿದರೆ ಇಡೀ ದೇಶ 20ನೇ ಶತಮಾನಕ್ಕೆ ಹೋಗುತ್ತದೆ. 100 ವರ್ಷದಿಂದ ಕಟ್ಟಿರುವ ಸಂಘ ಪರಿವಾರ ಒಂದೇ ಸಲ ಮನು ಧರ್ಮಶಾಸ್ತ್ರವನ್ನು ಜಾರಿಗೆ ತರುತ್ತದೆ ಎಂದು ಹಿರಿಯ ಸಾಹಿತಿ ಪ್ರೊ.ಶಿವರಾಮಯ್ಯ ಎಚ್ಚರಿಸಿದ್ದಾರೆ. ಬುಧವಾರ ನಗರದ ನಯನ ಸಭಾಂಗಣದಲ್ಲಿ ರಂಗಚಂದಿರದ ವತಿಯಿಂದ ಆಯೋಜಿಸಿದ್ದ ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರ ‘ಮಹಾಮನೆ’ ನಾಟಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಂದಲ್ಲ ಒಂದು ದಿನ ನಮ್ಮ ದೇಶದಲ್ಲಿ ಡಾ.ಅಂಬೇಡ್ಕರ್ ಅವರ ಸಂವಿಧಾನ ಮಾತ್ರ ನಮ್ಮ ದೇಶದಲ್ಲಿ ಉಳಿಯುತ್ತದೆ. ಸಂವಿಧಾನ ಇಲ್ಲದೇ ಇದ್ದರೆ, ನಾನು ಮಾತನಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಹೇಳಿದರು. ಕರ್ನಾಟಕ ಇತಿಹಾಸವನ್ನು ನೋಡಿದರೆ, ಚಾಲುಕ್ಯ ತೈಲಪನನ್ನು ಕೊಂದು ಕಲಚೂರಿ ಬಿಜ್ಜಳ ಚಕ್ರವರ್ತಿಯಾಗುತ್ತಾನೆ. ಆಗ ಬಸವಣ್ಣ ಅವರು ಮಂತ್ರಿಯಾಗುತ್ತಾರೆ. ಬಸವಣ್ಣ ಅವರು ಮಂತ್ರಿಯಾದಾಗ ವರ್ಗ ಮತ್ತು ವರ್ಣ ರಹಿತ ಸಮಾಜಕ್ಕಾಗಿ ಕೆಲಸ ಮಾಡುತ್ತಾರೆ. ಆ ಸಿದ್ಧಾಂತದ ಮೇಲೆ ಮಹಾಮನೆಯನ್ನು ಸಾಧಿಸುತ್ತಾರೆ ಎಂದು ಹೇಳಿದರು. ಬಸವಣ್ಣನವರ ಚಿಂತನೆಗಳಿಂದಾಗಿ ಕಲ್ಯಾಣದ ಜನರು ಎಚ್ಚೆತ್ತುಕೊಂಡು ದುಡಿದ ನಂತರ ಬಿಜ್ಜಳನ ಕಲ್ಯಾಣದ ಸಂಪತ್ತು ಹೆಚ್ಚಾಯಿತು. ಸಂಪತ್ತು ಹೆಚ್ಚಾದ ನಂತರ ಬೇರೆ ಬೇರೆ ಕಡೆಯಿಂದ ಜನರು ಬಂದು ಸೇರಿಕೊಂಡರು. ಆಗ ಸನಾತನವಾದಿಗಳಿಗೆ ಸಹಿಸಲು ಆಗಲಿಲ್ಲ. ಅಷ್ಟರಲ್ಲಿ ಕಲ್ಯಾಣದಲ್ಲಿ ಅಂತರ್ಜಾತಿ ವಿವಾಹ ನಡೆಯಿತು. ಆಗ ಕಲ್ಯಾಣ ಕ್ರಾಂತಿಯಾಯಿತು. ಇವತ್ತಿಗೂ ಅಂತರ್ಜಾತಿ ವಿವಾಹಕ್ಕೆ ಅನೇಕರು ಬಲಿಯಾಗುತ್ತಿದ್ದಾರೆ ಎಂದರು. ನಾಟಕಕಾರ ಡಾ.ಬೇಲೂರು ರಘುನಂದನ್ ಮಾತನಾಡಿರು. ಇದೇ ವೇಳೆ ಆದಿಮೂಲ ರಂಗ ತಂಡದಿಂದ ರಂಗ ಗೀತೆಗಳ ಗಾಯನ ನಡೆಯಿತು. ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಕರ್ನಾಟಕ ನಾಟಕ ಅಕಾಡಮಿಯ ಅಧ್ಯಕ್ಷ ಕೆ.ವಿ. ನಾಗರಾಜಮೂರ್ತಿ, ಬೆಂಗಳೂರು ನಗರ ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪ್ರಕಾಶ್‍ಮೂರ್ತಿ, ರಂಗಚಂದಿರದ ಗೌರವಾಧ್ಯಕ್ಷ ರಾಮಕೃಷ್ಣ ಹೆಗಡೆ, ಕಾರ್ಯದರ್ಶಿ ಜಿಪಿಒ ಚಂದ್ರು, ಪ್ರಕಾಶಕ ಬಿ.ಎಸ್.ವಿದ್ಯಾರಣ್ಯ ಮತ್ತಿತರರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 16 Apr 2026 12:39 am

ಬಂಜಾರ ಸಮುದಾಯಕ್ಕೆ ಸಚಿವ ಸ್ಥಾನ ಸಿಕ್ಕಿಲ್ಲ : ರುದ್ರಪ್ಪ ಲಮಾಣಿ

ಹಾವೇರಿ : ಇದುವರೆಗೆ ಅಡಳಿತ ನಡೆಸಿದ ಸರಕಾರಗಳಲ್ಲಿ ಬಂಜಾರ ಸಮುದಾಯಕ್ಕೆ ಸಚಿವ ಸ್ಥಾನ ನೀಡಲಾಗಿತ್ತು. ಆದರೆ, ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದಲ್ಲಿ ಆ ಸಮುದಾಯಕ್ಕೆ ಸಚಿವ ಸ್ಥಾನ ನೀಡಿಲ್ಲ ಎಂದು ವಿಧಾನಸಭೆಯ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದ್ದಾರೆ. ಬುಧವಾರ ಹಾವೇರಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಜಾರ ಸಮುದಾಯಕ್ಕೆ ಸಚಿವ ಸ್ಥಾನ ನೀಡಿಲ್ಲ ಎಂಬ ಕಪ್ಪು ಚುಕ್ಕೆ ಈ ಸರಕಾರಕ್ಕೆ ಬರುತ್ತೆ. ನಾಳೆ ನಾವು ಮತದಾನಕ್ಕೆ ಹೋದಾಗ ಬಂಜಾರ ಸಮುದಾಯದವರು ನಮ್ಮವರನ್ನ ಸಚಿವರನ್ನಾಗಿ ಮಾಡಿಲ್ಲವಲ್ಲ ಎಂದು ಪ್ರಶ್ನಿಸಿದರೆ ಉತ್ತರಿಸುವುದು ಕಷ್ಟ ಎಂದರು. ವಿಧಾನಸಭೆ ಉಪಸಭಾಪತಿ ಮಾಡುವ ವೇಳೆ ನಾನು ಸಚಿವ ಸ್ಥಾನದ ಬೇಡಿಕೆ ಇಟ್ಟಿದ್ದೆ. ಆಗ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಸದ್ಯಕ್ಕೆ ಉಪಸಭಾಪತಿಯಾಗುವಂತೆ ಹಾಗೂ ಮುಂದೆ ಸಂಪುಟ ವಿಸ್ತರಣೆಯಾದಾಗ ಸಚಿವ ಸ್ಥಾನ ಕೊಡುವುದಾಗಿ ಭರವಸೆ ನೀಡಿದ್ದರು. ಭರವಸೆ ಹಾಗೆಯೇ ಇದೆ ಎಂದು ಅವರು ಉಲ್ಲೇಖಿಸಿದರು.  

ವಾರ್ತಾ ಭಾರತಿ 16 Apr 2026 12:28 am

ಸಿಬಿಎಸ್ಸಿ ಫಲಿತಾಂಶ |ರಾಜ್ಯದ ವಿದ್ಯಾರ್ಥಿಗಳಿಬ್ಬರಿಗೆ 500ಕ್ಕೆ 499 ಅಂಕಗಳು

ಬೆಂಗಳೂರು : ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ಸಿ)ಯು ಹತ್ತನೆ ತರಗತಿಯ ಫಲಿತಾಂಶ ಪ್ರಕಟಿಸಿದ್ದು, ಕರ್ನಾಟಕದ ಶ್ರೀ ಚೈತನ್ಯ ಟೆಕ್ನೋ ಶಿಕ್ಷಣ ಸಂಸ್ಥೆಯ ಕಲ್ವಿ ಜಯಿತಾ ಮತ್ತು ಬಪಾತು ತಾರುಣ್ಯ ಅವರು 500ಕ್ಕೆ 499 ಅಂಕಗಳಿಗೆ ಗಳಿಸುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಬುಧವಾರ ಈ ಕುರಿತು ಪ್ರಕಟಣೆ ನೀಡಿರುವ ಸಂಸ್ಥೆಯ ನಿರ್ದೇಶಕಿ ಸೀಮಾ ಬೊಪ್ಪಣ, ‘ಪ್ರಕೃತಿ ಕೆ.ಎನ್., ಲೀಲಾ ಮಾನುಷ್‌ ಜಿ. ಮತ್ತು ಲಾಸ್ಯ ಮೇಕಲ ಅವರು 500ಕ್ಕೆ 498 ಅಂಕಗಳನ್ನು ಗಳಿಸಿದ್ದಾರೆ. ಸಂಸ್ಥೆಯ ಒಟ್ಟು 60 ಮಂದಿ ವಿದ್ಯಾರ್ಥಿಗಳು 490 ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸುವ ಮೂಲಕ ಶಿಕ್ಷಣ ಸಂಸ್ಥೆಗೆ ಕೀರ್ತಿ ತಂದಿದ್ದಾರೆ’ ಎಂದು ಹೇಳಿದ್ದಾರೆ.  

ವಾರ್ತಾ ಭಾರತಿ 16 Apr 2026 12:25 am

ನಾಳೆ ಹೊಸದಿಲ್ಲಿಯಲ್ಲಿ ಜಾಗತಿಕ ನಾವೀನ್ಯತಾ ಮೈತ್ರಿಕೂಟದ 2ನೇ ಆವೃತ್ತಿ ಅನಾವರಣ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಜ್ಯ ಸರಕಾರವು ಎ.17ರಂದು ಹೊಸದಿಲ್ಲಿಯಲ್ಲಿ ದೇಶದ ಅತಿದೊಡ್ಡ ರಾಜತಾಂತ್ರಿಕ ಸಂವಾದ ಸಮಾವೇಶವಾದ ‘ಬ್ರಿಡ್ಜ್ ಬೆಂಗಳೂರು-2026’ ಅನ್ನು ಆಯೋಜಿಸಿದ್ದು, ಸಮಾವೇಶದಲ್ಲಿ ಜಾಗತಿಕ ನಾವೀನ್ಯತಾ ಮೈತ್ರಿಕೂಟದ ಎರಡನೇ ಆವೃತ್ತಿಯನ್ನು(ಜಿಐಎ-2.0) ಅನಾವರಣ ಮಾಡಲಿದೆ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಬುಧವಾರ ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಲ್ಲದೇ ಕಿರಣ್ ಮಜುಂದಾರ್ ಷಾ ಭಾಗವಹಿಸಲಿದ್ದಾರೆ. ದಿಲ್ಲಿಯ ಈ ಸಮಾವೇಶವು ನ.17ರಿಂದ 19ರ ವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಬೆಂಗಳೂರು ಟೆಕ್ ಸಮ್ಮೀಟ್‍ಗೆ ಪೂರ್ವಭವಿಯಾಗಿ ನಡೆಯುತ್ತಿದೆ ಎಂದು ತಿಳಿಸಿದರು. ರಾಜ್ಯ ಸರಕಾರವು ಕೈಗೊಳ್ಳುತ್ತಿರುವ ಹಲವು ಕಾರ್ಯಕ್ರಮಗಳ ಫಲವಾಗಿ ರಾಜ್ಯಕ್ಕೆ ಸುಮಾರು 5,500 ಕೋಟಿ ರೂ. ಮೊತ್ತದ ಜಾಗತಿಕ ಬಂಡವಾಳವು ಬರಲಿದ್ದು, ಸುಮಾರು 7,200 ಉದ್ಯೋಗಗಳು ಸೃಷ್ಟಿಯಾಗಲಿವೆ. 6,350 ಕೋಟಿ ರೂ. ಬಂಡವಾಳವು ಡಾಟಾ ಕೇಂದ್ರಗಳ ಸ್ಥಾಪನೆಗೆ ಹೂಡಿಕೆಯಾಗಲಿವೆ ಎಂದು ಅವರು ಮಾಹಿತಿ ನೀಡಿದರು. ರಾಜ್ಯ ಸರಕಾರವು ಜಾಗತಿಕ ನಾವೀನ್ಯತಾ ಮೈತ್ರಿಕೂಟದಲ್ಲಿ 40ಕ್ಕೂ ಹೆಚ್ಚು ದೇಶಗಳು, 2 ಸಾವಿರಕ್ಕಿಂತ ಅಧಿಕ ನವೋದ್ಯಮಗಳ ಬೆಂಬಲ ಹಾಗೂ 60ಕ್ಕೂ ಅಧಿಕ ಜಾಗತಿಕ ಮಟ್ಟದ ಒಡಂಬಡಿಕೆಗಳು(ಎಂಒಯು) ಹಾಗೂ ಬೇರೆ ಬೇರೆ ಕಂಪನಿಗಳ ಜತೆಗಿನ ಸಹಕಾರದೊಂದಿಗೆ ತನ್ನದೇ ಛಾಪನ್ನು ಮೂಡಿಸುತ್ತಿದೆ ಎಂದು ಅವರು ತಿಳಿಸಿದರು. ಪ್ರಮುಖವಾಗಿ ಯುಎಇ, ಸಿಂಗಾಪುರ್, ಬೆಲ್ಜಿಯಂ, ಆಸ್ಟ್ರೇಲಿಯಾ, ಜರ್ಮನಿ, ಜಪಾನ್, ಸ್ವಿಟ್ಜಲೆರ್ಂಡ್, ದಕ್ಷಿಣ ಕೊರಿಯಾ ಮತ್ತು ಫ್ರಾನ್ಸ್‍ನಂತಹ ದೇಶಗಳು ಸಮಾವೇಶದಲ್ಲಿ ಭಾಗವಹಿಸುತ್ತಿವೆ. ಹೆಲ್ತ್‌ ಟೆಕ್, ಕ್ಲೀನ್ ಟೆಕ್, ಬಯೋಟೆಕ್ ಮತ್ತು ಟ್ರಾವೆಲ್ಟೆಕ್ ಕ್ಷೇತ್ರಗಳಲ್ಲಿ ಜಾಗತಿಕ ಹೂಡಿಕೆದಾರರು, ಕಾರ್ಪೊ ರೇಟ್ ಸಂಸ್ಥೆಗಳು ಮತ್ತು ನಿಯಂತ್ರಣಾ ಸಂಸ್ಥೆಗಳ ಜತೆ ಸಂಪರ್ಕ ಸಾಧಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಬಲ ಸಂಪರ್ಕ ಸೇತುವೆಯನ್ನು ಕಲ್ಪಿಸಲು ನೆರವಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದರು.  

ವಾರ್ತಾ ಭಾರತಿ 16 Apr 2026 12:20 am

ಎಸ್‌ಐಆರ್ ವಿರೋಧಿಸಿ ರಾಜ್ಯದ ವಿವಿಧೆಡೆ ಪ್ರತಿಭಟನೆ

ಬೆಂಗಳೂರು : ಅಕ್ರಮವಾಗಿ ಕೋಟ್ಯಂತರ ಭಾರತೀಯರ ಮತದಾನದ ಹಕ್ಕನ್ನು ನಾಶ ಮಾಡಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ(ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ‘ನನ್ನ ಮತ ನನ್ನ ಹಕ್ಕು’ ಒಕ್ಕೂಟ ಸೇರಿದಂತೆ ವಿವಿಧ ಸಂಘಟನೆಗಳ ವತಿಯಿಂದ ಬೆಂಗಳೂರು, ಕಲಬುರಗಿ, ದಕ್ಷಿಣ ಕನ್ನಡ, ಮೈಸೂರು ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ಪ್ರತಿಭಟನೆ ನಡೆಸಲಾಯಿತು. ಬುಧವಾರ ಬೆಂಗಳೂರಿನ ವಿಧಾನಸೌಧ ಮುಂಭಾಗ, ವಿನೋಭಾ ನಗರ, ಆನಂದಪುರಂ, ಜನತಾ ಕಾಲನಿ ಹಾಗೂ ಮೈಸೂರು, ಕೊಡಗು, ಸಿಂಧನೂರು, ವಿಜಯನಗರ, ಕೊಪ್ಪಳ, ತುಮಕೂರು, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ವಿವಿಧೆಡೆ ಪ್ರತಿಭಟನೆಗಳನ್ನು ನಡೆಸಿ, ಎಸ್‌ಐಆರ್ ಪ್ರಕ್ರಿಯೆಯನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ. ಎಸ್‌ಐಆರ್ ಪ್ರಕ್ರಿಯೆಯಿಂದಾಗಿ ಮತದಾರರ ಪಟ್ಟಿಯಿಂದ ದೊಡ್ಡ ಪ್ರಮಾಣದಲ್ಲಿ ಹೆಸರುಗಳನ್ನು ಅಳಿಸಲಾಗಿದ್ದು, ಪ್ರಜಾಪ್ರಭುತ್ವದ ಭಾಗವಹಿಸುವಿಕೆಯ ಅಡಿಪಾಯವನ್ನೇ ಹಾನಿಗೊಳಿಸಿದೆ. ಪಶ್ಚಿಮ ಬಂಗಾಳದಲ್ಲೇ, 2002ರ ಮತದಾರರ ಪಟ್ಟಿಗೆ ಮ್ಯಾಪಿಂಗ್ ಆಗಿದ್ದು, ಸಂಬಂಧಿಸಿದಂತೆ ದಾಖಲೆಗಳನ್ನು ಹೊಂದಿದ್ದ ಲಾಜಿಕಲ್ ಡಿಸ್ಕರೆಪೆನ್ಸಿ ಎಂಬ ಅಕ್ರಮ ಪ್ರಕ್ರಿಯೆ ಮೂಲಕ 27ಲಕ್ಷಕ್ಕೂ ಹೆಚ್ಚು ಮತದಾರರನ್ನು ಪ್ರಸ್ತುತ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರಕಾರ ಎಸ್‌ಐಆರ್ ವಿರುದ್ಧ ದೃಢ ನಿಲುವು ತೆಗೆದುಕೊಳ್ಳಬೇಕು. ಮತಹಕ್ಕನ್ನು ಕಾಪಾಡಲು ಮತ್ತು ಎಸ್‌ಐಆರ್‌ಅನ್ನು ವಿರೋಧಿಸಲು ರಾಜ್ಯದ ಜನತೆ ಮುಂದಾಗಬೇಕು. ಅಳಿಸಲ್ಪಟ್ಟವರಿಗೆ ಮತಹಕ್ಕು ಮರುಸ್ಥಾಪನೆ ಆಗುವಂತೆ ಸುಪ್ರೀಂ ಕೋರ್ಟ್ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ.  

ವಾರ್ತಾ ಭಾರತಿ 16 Apr 2026 12:17 am

ಕಾಂಗ್ರೆಸ್‌ನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ ಆಕ್ರೋಶ

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ನೈತಿಕ ಸೋಲಿನ ಹೊಣೆ ಹೊರಬೇಕಾಗಿರುವುದು ನಿಸ್ಸಂಶಯವಾಗಿ ಕಾಂಗ್ರೆಸ್‌ನ ಹೈಕಮಾಂಡ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್. ಈ ಸ್ಥಿತಿಗೆ ಕಾರಣವಾಗಿರುವ ಇವರು ಆತ್ಮಾವಲೋಕನ ಮಾಡಿಕೊಳ್ಳುವ ಬದಲು, ನೊಂದಿದ್ದ ಅಲ್ಪಸಂಖ್ಯಾತ ಸಮುದಾಯದ ಭಾವನೆಗಳ ಮೇಲೆ ಹಲ್ಲೆ ಮಾಡಲು ಮುಂದಾಗಿರುವುದು ಅಕ್ಷಮ್ಯ ಅಪರಾಧ ಎಂದು ಎದ್ದೇಳು ಕರ್ನಾಟಕ ಆಕ್ರೋಶ ವ್ಯಕ್ತಪಡಿಸಿದೆ. ಬುಧವಾರ ಎದ್ದೇಳು ಕರ್ನಾಟಕ ಸಂಘಟನೆ ಹೆಸರಲ್ಲಿ ತಾರಾರಾವ್, ಜೆ.ಎಂ.ವೀರಸಂಗಯ್ಯ, ಕೆ.ಎಲ್.ಅಶೋಕ್, ಎನ್.ವೆಂಕಟೇಶ್, ಬಸವರಾಜ್ ಕೌತಾಳ್, ಅರುಣ್ ಲೂಯಿಸ್, ವಿ.ಎಸ್.ಶ್ರೀಧರ, ಮುಹಮ್ಮದ್ ಕುಂಞ, ಕಿರಣ್ ಕಮಲ್ ಪ್ರಸಾದ್, ಅನುಪಮಾ ಹೆಗಡೆ ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಉಪಚುನಾವಣೆಗೆ ಟಿಕೆಟ್ ನೀಡುವ ವಿಚಾರದಲ್ಲಿ ಕಾಂಗ್ರೆಸ್ ನಡೆದುಕೊಂಡ ರೀತಿ ಜಿಗುಪ್ಸೆ ಮೂಡಿಸಿದರೆ, ಅದು ಈಗ ತನ್ನದೇ ಪಕ್ಷದ ಅಲ್ಪಸಂಖ್ಯಾತ ಮುಖಂಡರ ಮೇಲೆ ತೆಗೆದುಕೊಳ್ಳುತ್ತಿರುವ ಸೇಡಿನ ಕ್ರಮಗಳು ಆಕ್ರೋಶ ಹುಟ್ಟಿಸುತ್ತಿವೆ ಎಂದಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಮ್ ಸಮುದಾಯ ಹೆಚ್ಚಿನ ಜನಸಂಖ್ಯಾ ಬಾಹುಳ್ಯವಿದ್ದರೂ, ಶಾಮನೂರು ಶಿವಶಂಕರಪ್ಪ 30 ವರ್ಷಗಳಿಂದ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿ ಬಂದಿದ್ದಾರೆ. ಅವರ ನಿಧನದ ನಂತರ ಈ ಕ್ಷೇತ್ರವನ್ನು ಮುಸ್ಲಿಮ್ ಸಮುದಾಯಕ್ಕೆ ನೀಡಲಾಗುತ್ತದೆ ಎಂಬ ಭರವಸೆಯನ್ನು ಕಾಂಗ್ರೆಸ್ ನಾಯಕತ್ವ ನೀಡಿತ್ತು. ಆದರೆ ಕುಟುಂಬ, ಜಾತಿ, ಹಣದ ಬಲದ ಮುಂದೆ ಕಾಂಗ್ರೆಸ್‌ನ ಹೈಕಮಾಂಡ್, ರಾಜ್ಯ ನಾಯಕತ್ವ ಮಂಡಿಯೂರಿದ ಬಗೆ ಎಲ್ಲರಿಗೂ ಜಿಗುಪ್ಸೆ ಮೂಡಿಸಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ದಾವಣಗೆರೆ ವಿದ್ಯಮಾನ ಬರಲಿರುವ 2028ರ ಚುನಾವಣೆಗೆ ಮುನ್ನೆಚ್ಚರಿಕೆ ಗಂಟೆಯಾಗಿದೆ. ಅಲ್ಪಸಂಖ್ಯಾತರನ್ನು, ದಲಿತರನ್ನು, ಜಾತ್ಯಾತೀತ ಜನತೆಯನ್ನು, ಪ್ರಗತಿಪರ ಶಕ್ತಿಯನ್ನು ಟೇಕನ್ ಫಾರ್ ಗ್ರಾಂಟೆಡ್ ಮಾಡಿಕೊಳ್ಳಬೇಡಿ. ಕಾಂಗ್ರೆಸ್ ನಾಯಕತ್ವ ಈಗಲಾದರೂ ತನ್ನ ತಪ್ಪನ್ನು ನೋಡಿಕೊಂಡು ಆಗಿರುವ ಅನಾಹುತವನ್ನು ಸರಿಪಡಿಸುವ ದಿಕ್ಕಿನಲ್ಲಿ ಹೆಜ್ಜೆ ಇಡಬೇಕು ಎಂದು ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

ವಾರ್ತಾ ಭಾರತಿ 16 Apr 2026 12:13 am

ನಮ್ಮದು ಕುಟುಂಬ ರಾಜಕಾರಣ ಅಲ್ಲ : ಯತೀಂದ್ರ ಸಿದ್ದರಾಮಯ್ಯ

ಮೈಸೂರು : ನಾನು ವಿಧಾನಪರಿಷತ್ ಸದಸ್ಯನಾಗಿರುವುದು ಕುಟುಂಬ ರಾಜಕಾರಣದಿಂದಲ್ಲ. ತಂದೆಯ ರಾಜಕೀಯ ಜೀವನದ ಮುಂದುವರಿದ ಭಾಗವಾಗಿ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಟುಂಬ ರಾಜಕಾರಣ ಆರೋಪ ಮಾಡಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದರು. ನಾನು ಎಂಎಲ್ ಸಿ ಆಗಿರುವುದು ಕುಟುಂಬ ರಾಜಕಾರಣಕ್ಕಾಗಿ ಅಲ್ಲ. ತಂದೆಯ ರಾಜಕೀಯ ಜೀವನ ಮುಂದುವರಿಕೆ ಭಾಗವಾಗಿ. ನಮ್ಮ ಕ್ಷೇತ್ರದ ಜನರ ರಕ್ಷಣೆಗೆ ಎಂಎಲ್‌ಸಿ ಆಗಿದ್ದೇನೆ. ನಮ್ಮದು ಕುಟುಂಬ ರಾಜಕಾರಣ ಅಲ್ಲ. ನಮ್ಮ ತಂದೆ ಏನು ನನ್ನನ್ನು ಪಕ್ಷದ ಅಧ್ಯಕ್ಷ ಮಾಡಿದ್ದಾರಾ? ಮಕ್ಕಳನ್ನೇ ಪಕ್ಷದ ಅಧ್ಯಕ್ಷ ಮಾಡುವುದು, ಮಕ್ಕಳನ್ನೇ ಶಾಸಕ, ಸಂಸದ ಮಾಡುವುದು ಕುಟುಂಬ ರಾಜಕಾರಣ. ಆದರೆ ನಮ್ಮದು ಕುಟುಂಬ ರಾಜಕಾರಣ ಅಲ್ಲ. ನಮ್ಮ ಅಣ್ಣ ಇರದ ಕಾರಣ ನಾನು ರಾಜಕೀಯಕ್ಕೆ ಬಂದೆ ಎಂದರು.  

ವಾರ್ತಾ ಭಾರತಿ 16 Apr 2026 12:08 am

Belagavi | ಮರ್ಯಾದೆಗೇಡು ಹತ್ಯೆ ಪ್ರಕರಣ; ಮೂವರು ಆರೋಪಿಗಳ ಬಂಧನ

ಬೆಳಗಾವಿ : ಜಿಲ್ಲೆಯ ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚುರುಕಿನ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ. ರಾಮರಾಜನ್ ತಿಳಿಸಿದ್ದಾರೆ. ಮೃತಳ ಚಿಕ್ಕಪ್ಪ ಪ್ರಕಾಶ ಭೀಮಪ್ಪ ಹಳವರ (46), ಸಹೋದರ ಶಾನೂರ ಸದಾಶಿವ ಹಳವರ (35) ಹಾಗೂ ಭಾವ ಕಲ್ಲಪ್ಪ ಮಾಯಪ್ಪ ಹಳವಿ (40) ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಎಸ್‌ಪಿ ತಿಳಿಸಿದರು. ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದ ತನಿಖೆ ನಡೆಸಿದ ಯಮಕನಮರಡಿ ಪೊಲೀಸ್ ಇನ್‌ಸ್ಪೆೆಕ್ಟರ್ ಜಾವೀದ್‌ ಎಫ್. ಮುಷಾಪುರಿ ಅವರ ನೇತೃತ್ವದ ತಂಡ ಮೂವರು ಆರೋಪಿಗಳನ್ನು ಬಂಧಿಸಿದೆ. ರಾಯಬಾಗ ತಾಲೂಕಿನ ಹಣಬರಟ್ಟಿ ಗ್ರಾಮದ ಸತ್ಯವ್ವ ಸಂತೋಷ ಹಳವಿ (24) ಅವರನ್ನು ಕುಟುಂಬದವರೇ ವಿಷವಿಕ್ಕಿ ಕೊಲೆ ಮಾಡಿ, ಬಳಿಕ ಮೃತದೇಹವನ್ನು ಸುಟ್ಟು ಹಾಕಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿತ್ತು ಎಂದು ವಿವರಿಸಿದರು. ಈ ಕುರಿತು ಕೃಷ್ಣಾ ಸಹದೇವ ಪಾಟೀಲ ನೀಡಿದ ದೂರಿನ ಮೇರೆಗೆ ಯಮಕನಮರಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಮೃತರಾದ ಸತ್ಯವ್ವ ಹಾಗೂ ಕೃಷ್ಣಾ ಸಹದೇವ ಪಾಟೀಲ ಇಬ್ಬರೂ ಹುಕ್ಕೇರಿ ತಾಲೂಕಿನ ನದಿಗುಡಿ ಕ್ಷೇತ್ರದವರಾಗಿದ್ದು, ಪರಸ್ಪರ ಪ್ರೀತಿಸುತ್ತಿದ್ದರು. ಸತ್ಯವ್ವಗೆ ಸಂತೋಷ ಹಳವಿ ಎಂಬಾತನೊಂದಿಗೆ ಮದುವೆಯಾದರೂ, ಅವರ ಪ್ರೀತಿ ಮುಂದುವರಿದಿತ್ತು. ಈ ಹಿನ್ನೆಲೆಯಲ್ಲಿ ಫೆಬ್ರವರಿ 17ರಂದು ಆಕೆ ಪ್ರಿಯಕರನೊಂದಿಗೆ ಬೆಳವಡಿ ಗ್ರಾಮದಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು ಎಂದು ತಿಳಿದುಬಂದಿದೆ. ಈ ವಿಷಯ ತಿಳಿದುಕೊಂಡ ಕುಟುಂಬಸ್ಥರು ಆಕೆಯನ್ನು ಪತ್ತೆಹಚ್ಚಿ ಕರೆತಂದು ಬುದ್ಧಿವಾದ ಹೇಳಿದರೂ, ಆಕೆ ಅವರ ಮಾತು ಕೇಳದೆ ಪ್ರಿಯಕರನ ಬಳಿಗೆ ಹೋಗುವುದಾಗಿ ಹಠ ಹಿಡಿದಿದ್ದಾಳೆ. ಮಾರ್ಚ್ 21ರಂದು ಸಾಂಗ್ಲಿ ಜಿಲ್ಲೆಯ ಅರಗ ಗ್ರಾಮದಲ್ಲಿ ಈ ವಿಚಾರವಾಗಿ ವಾಗ್ವಾದ ನಡೆದಿದ್ದು, ಆಕ್ರೋಶಗೊಂಡ ಕುಟುಂಬಸ್ಥರು ಬಲವಂತವಾಗಿ ವಿಷ ಕುಡಿಸಿ ಹತ್ಯೆಗೈದಿದ್ದಾರೆ. ನಂತರ ಅದೇ ರಾತ್ರಿ ಅರಗ ಗ್ರಾಮದ ಸ್ಮಶಾನದಲ್ಲಿ ಮೃತದೇಹವನ್ನು ಸುಟ್ಟು ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾರ್ತಾ ಭಾರತಿ 16 Apr 2026 12:03 am

RCB: ಟೀಕಾಕಾರರ ಬಾಯಿ ಮುಚ್ಚಿಸಿದ ವಿರಾಟ್‌ ಕೊಹ್ಲಿ, ಆರ್‌ಸಿಬಿ ಗೆಲ್ಲಿಸಿದ ರಸಿಖ್ ದಾರ್ ಸಲಾಂ

RCB IPL 2026: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ (ಏಪ್ರಿಲ್ 15) ನಡೆದ ಐಪಿಎಲ್‌ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವು ಎಲ್‌ಎಸ್‌ಜಿ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ರಸಿಖ್ ದಾರ್ ಸಲಾಂ ಮಾಡಿದ ಮಾರಕ ಬೌಲಿಂಗ್ ದಾಳಿಯು ಆರ್‌ಸಿಬಿ ಗೆಲುವಿಗೆ ಪ್ರಮುಖ ಪಾತ್ರವಹಿಸಿತು. ವೇಗಿ ರಸಿಖ್ ಸಲಾಮ್ ದಾರ್ ಅವರು

ಒನ್ ಇ೦ಡಿಯ 15 Apr 2026 11:52 pm

2026ರ ಆವೃತ್ತಿಯ ಫಿಫಾ ಸೀರೀಸ್ ಟೂರ್ನಮೆಂಟ್: ಮಲಾವಿ ವಿರುದ್ಧ ಜಯ, ಭಾರತಕ್ಕೆ ಮೂರನೇ ಸ್ಥಾನ

ನೈರೋಬಿ, ಎ.15: ನಾಲ್ಕು ತಂಡಗಳು ಭಾಗವಹಿಸಿರುವ 2026ರ ಆವೃತ್ತಿಯ ಫಿಫಾ ಸೀರೀಸ್ ಟೂರ್ನಮೆಂಟ್‌ನಲ್ಲಿ ಮೂರನೇ ಸ್ಥಾನಕ್ಕಾಗಿ ನಡೆದ ಪ್ಲೇ ಆಫ್ ಪಂದ್ಯದಲ್ಲಿ ಮಲಾವಿ ತಂಡವನ್ನು 3-2 ಅಂತರದಿಂದ ಮಣಿಸಿರುವ ಭಾರತದ ಮಹಿಳಾ ಫುಟ್ಬಾಲ್ ತಂಡವು ಮೂರನೇ ಸ್ಥಾನ ಪಡೆದಿದೆ. ಬುಧವಾರ ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಬದಲಿ ಆಟಗಾರ್ತಿ ಪ್ರಿಯದರ್ಶಿನಿ 84ನೇ ನಿಮಿಷದಲ್ಲಿ ಗೋಲು ಗಳಿಸಿ ಭಾರತ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟರು. ಭಾರತ ತಂಡದ ಪರವಾಗಿ ಅವೇಕಾ ಸಿಂಗ್(45+1 ನಿಮಿಷ)ಹಾಗೂ ಅಸ್ಟಮ್ ಓರಾನ್ ತಲಾ ಒಂದು ಗೋಲು ಗಳಿಸಿದರು. ಫಿಫಾ ರ್ಯಾಂಕಿಂಗ್‌ನಲ್ಲಿ 153ನೇ ಸ್ಥಾನದಲ್ಲಿರುವ ಮಲಾವಿ ತಂಡದ ಪರ ಐರೀನ್ ಖುಮಾಲೊ ಹಾಗೂ ಡೆಬೊರಾ ಹೆನ್ರಿ ತಲಾ ಒಂದು ಗೋಲು ಗಳಿಸಿದರು. ಇದಕ್ಕೂ ಮೊದಲು ನಡೆದಿದ್ದ ಸೆಮಿ ಫೈನಲ್‌ನಲ್ಲಿ ಭಾರತ ತಂಡವು ಕೀನ್ಯ ತಂಡದ ವಿರುದ್ಧ 0-2 ಅಂತರದಿಂದ ಸೋಲುಂಡಿತ್ತು.

ವಾರ್ತಾ ಭಾರತಿ 15 Apr 2026 11:46 pm

ಫಿಡೆ ಕ್ಯಾಂಡಿಡೇಟ್ಸ್ ಮುಕ್ತ ವಿಭಾಗ: ಜಾವೊಖಿರ್ ಸಿಂದಾರೋವ್ ಚಾಂಪಿಯನ್

ಸೈಪ್ರಸ್, ಎ.15: ನೆದರ್ಲ್ಯಾಂಡ್ಸ್ ಆಟಗಾರ ಅನಿಶ್ ಗಿರಿ ವಿರುದ್ಧ 13ನೇ ಸುತ್ತಿನ ಪಂದ್ಯವನ್ನು ಡ್ರಾಗೊಳಿಸಿರುವ ಕಝಕ್ಸ್ತಾನದ ಯುವ ಚೆಸ್ ತಾರೆ ಜಾವೊಖಿರ್ ಸಿಂದಾರೋವ್ ಇನ್ನೊಂದು ಸುತ್ತು ಬಾಕಿ ಇರುವಾಗಲೇ ಫಿಡೆ ಕ್ಯಾಂಡಿಡೇಟ್ಸ್ನ ಮುಕ್ತ ವಿಭಾಗದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಈ ವರ್ಷಾಂತ್ಯದಲ್ಲಿ ನಡೆಯಲಿರುವ ಫಿಡೆ ವಿಶ್ವ ಚಾಂಪಿಯನ್ಶಿಪ್ ಪಂದ್ಯದಲ್ಲಿ ಭಾರತದ ಚೆಸ್ ತಾರೆ ಡಿ.ಗುಕೇಶ್ರನ್ನು ಎದುರಿಸಲಿದ್ದಾರೆ. ಸಿಂದಾರೋವ್ ಅವರು ಬುಧವಾರ ನಡೆದ 14ನೇ ಸುತ್ತಿನ ಪಂದ್ಯದಲ್ಲಿ ವೀ ಯೀ ವಿರುದ್ದ ಡ್ರಾ ಸಾಧಿಸುವ ಮೂಲಕ ಪಂದ್ಯಾವಳಿಯಲ್ಲಿ ಅಜೇಯವಾಗುಳಿದರು. ಅರ್ಹವಾಗಿಯೇ ಪ್ರತಿಷ್ಠಿತ ಕ್ಯಾಂಡಿಡೇಟ್ಸ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರು. ಮಂಗಳವಾರ ನಡೆದ 13ನೇ ಸುತ್ತಿನ ಪಂದ್ಯಕ್ಕಿಂತ ಮೊದಲು ಸಿಂದಾರೋವ್ ಎರಡು ಅಂಕದಿಂದ ಮುನ್ನಡೆಯಲ್ಲಿದ್ದರು. ಗಿರಿ ಅವರು ಸ್ಪರ್ಧೆಯನ್ನು ಅಂತಿಮ ದಿನಕ್ಕೆ ವಿಸ್ತರಿಸಲು ಈ ಪಂದ್ಯದಲ್ಲಿ ಗೆಲ್ಲುವ ಅಗತ್ಯವಿತ್ತು. ಆದರೆ, ಪಂದ್ಯವು ಡ್ರಾಗೊಂಡ ಕಾರಣ ಸಿಂದಾರೋವ್ ಪ್ರಶಸ್ತಿ ಗೆದ್ದುಕೊಂಡರು. ಮುಕ್ತ ವಿಭಾಗದ ಇತರ ಫಲಿತಾಂಶಗಳಲ್ಲಿ ಹಿಕಾರು ನಕಮುರಾ ಅವರು ಮಥಿಯಾಸ್ ಬ್ಲೂಬಾಮ್ ವಿರುದ್ಧ ಮತ್ತೊಂದು ಡ್ರಾ ಸಾಧಿಸಿದರು. ವೀ ಯೀ ಅವರು ಆಂಡ್ರೆ ಎಸಿಪೆಂಕೊರನ್ನು ಸೋಲಿಸಿದರು. ಆರ್. ಪ್ರಜ್ಞಾನಂದ ಅವರು ಫ್ಯಾಬಿಯಾನೊ ಕರುವಾನಾ ವಿರುದ್ಧ ಡ್ರಾ ಸಾಧಿಸಿದರು.

ವಾರ್ತಾ ಭಾರತಿ 15 Apr 2026 11:38 pm

2024ರ ನಂತರ ಮೊದಲ ಬಾರಿ ಸತತ ಎರಡು ಪಂದ್ಯ ಗೆದ್ದ ಸಿಎಸ್‌ಕೆ

ಹೊಸದಿಲ್ಲಿ, ಎ.15: ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್‌ಕೆ)ಸುಮಾರು ಎರಡು ವರ್ಷಗಳ ನಂತರ ಮೊದಲ ಬಾರಿ ಸತತ ಎರಡು ಪಂದ್ಯಗಳಲ್ಲಿ ಜಯ ಗಳಿಸಿ ನಾಲ್ಕು ಅಂಕಗಳನ್ನು ಗಳಿಸುವ ಮೂಲಕ ಇತರ ನಾಲ್ಕು ತಂಡಗಳನ್ನು ಸೇರಿಕೊಂಡಿದೆ. ಟಾಸ್ ಸೋತು, ತೀವ್ರ ಇಬ್ಬನಿಯಲ್ಲಿ ಬೌಲಿಂಗ್ ಮಾಡಿದ ಹೊರತಾಗಿಯೂ ಸಿಎಸ್ಕೆ ತಂಡವು ಕೋಲ್ಕತಾ ನೈಟ್ ರೈಡರ್ಸ್ ತಂಡದ ಮೇಲೆ ಸವಾರಿ ಮಾಡಿತು. ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ 32 ರನ್‌ಗಳಿಂದ ಸೋತಿರುವ ಕೆಕೆಆರ್ ಈ ವರ್ಷದ ಐಪಿಎಲ್‌ನಲ್ಲಿ ತನ್ನ ಸೋಲಿನ ಸರಪಳಿ ಮುಂದುವರಿಸಿತು. ಸಂಜು ಸ್ಯಾಮ್ಸನ್, ಡೆವಾಲ್ಡ್ ಬ್ರೆವಿಸ್ ಹಾಗೂ ಆಯುಷ್ ಮ್ಹಾತ್ರೆ ಸಂಘಟಿತ ಪ್ರದರ್ಶನ ನೀಡಿ ಸಿಎಸ್ಕೆ ತಂಡವು 192 ರನ್ ಗಳಿಸುವಲ್ಲಿ ನೆರವಾದರು. ಆ ನಂತರ ಅನ್ಶುಲ್ ಕಾಂಬೋಜ್ ಹಾಗೂ ಖಲೀಲ್ ಅಹ್ಮದ್ ಪವರ್ಪ್ಲೇನೊಳಗೆ ಫಿನ್ ಅಲೆನ್ ಹಾಗೂ ಸುನೀಲ್ ನರೇನ್ರಂತಹ ಪ್ರಮುಖ ವಿಕೆಟ್‌ಗಳನ್ನು ಉರುಳಿಸಿದರು. ಸಿಎಸ್‌ಕೆ ಸ್ಪಿನ್ನರ್‌ಗಳು 8 ಓವರ್‌ಗಳ ಬೌಲಿಂಗ್ ಮಾಡಿ 47 ರನ್ ನೀಡಿ ನಾಲ್ಕು ವಿಕೆಟ್‌ಗಳನ್ನು ಪಡೆದರು.

ವಾರ್ತಾ ಭಾರತಿ 15 Apr 2026 11:35 pm

ವಿಶ್ವಸಂಸ್ಥೆಯ ಅಧಿಕಾರವನ್ನು ಪುನಃಸ್ಥಾಪಿಸಲು ರಶ್ಯ, ಚೀನಾ ಒಟ್ಟಾಗಿ ಕೆಲಸ ಮಾಡಬೇಕು: ಕ್ಸಿ ಜಿಂಪಿಂಗ್ ಪ್ರತಿಪಾದನೆ

ಬೀಜಿಂಗ್, ಎ.15: ವಿಶ್ವಸಂಸ್ಥೆಯ ಅಧಿಕಾರವನ್ನು ಪುನಃಸ್ಥಾಪಿಸಲು ರಷ್ಯ ಮತ್ತು ಚೀನಾ ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ ಎಂದು ಚೀನಾದ ಅಧ್ಯಕ್ಷ ಕ್ಸಿ ಜಿಂಪಿಂಗ್ ಬುಧವಾರ ಹೇಳಿದ್ದಾರೆ. ರಷ್ಯದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೋವ್ ಅವರೊಂದಿಗೆ ಬೀಜಿಂಗ್‍ನಲ್ಲಿ ನಡೆಸಿದ ಮಾತುಕತೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕ್ಸಿ ಜಿಂಪಿಂಗ್ ` ನ್ಯಾಯಯುತ, ಸಮತೋಲಿತ ಅಂತರರಾಷ್ಟ್ರೀಯ ಕ್ರಮ ಮರುಸ್ಥಾಪಿಸಲು ರಶ್ಯ ಮತ್ತು ಚೀನಾ ವಿಶ್ವಸಂಸ್ಥೆಯೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಲಿದೆ. ಮತ್ತು ಅಂತರರಾಷ್ಟ್ರೀಯ ಕ್ರಮವನ್ನು ಹೆಚ್ಚು ನ್ಯಾಯಯುತ ಮತ್ತು ಸಮಂಜಸವಾದ ದಿಕ್ಕಿನಲ್ಲಿ ಮುನ್ನಡೆಸಲು `ಬ್ರಿಕ್ಸ್' `ಎಸ್‍ಸಿಒ' ವೇದಿಕೆಗಳಲ್ಲಿ ನಿಕಟವಾಗಿ ಸಹಕರಿಸಲಿವೆ ಎಂದರು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಕ್ರಮಣಕಾರಿ ಏಕಪಕ್ಷೀಯ ಕ್ರಮಗಳ ವಿರುದ್ಧ ಎರಡೂ ದೇಶಗಳು ಪ್ರಯತ್ನಗಳನ್ನು ಹೆಚ್ಚಿಸಬೇಕು. ಜಗತ್ತು ಮತ್ತೆ `ಜಂಗಲ್‍ರಾಜ್' (ಕಾಡಿನ ಕಾನೂನು) ಅವಧಿಗೆ ಮರಳಬಾರದು. ಬಹುರಾಷ್ಟ್ರೀಯ ವ್ಯವಸ್ಥೆ ಮತ್ತು ಅಂತರಾಷ್ಟ್ರೀಯ ಕಾನೂನನ್ನು ಮರುಸ್ಥಾಪಿಸಲು ರಶ್ಯ, ಚೀನಾ ಮತ್ತು ಇತರ ಮಿತ್ರರಾಷ್ಟ್ರಗಳ ನಡುವೆ ನಿಕಟ ಸಹಕಾರದ ಅಗತ್ಯವಿದೆ ಎಂದು ಜಿಂಪಿಂಗ್ ಆಗ್ರಹಿಸಿದ್ದಾರೆ. ಬದಲಾವಣೆ ಮತ್ತು ಅವ್ಯವಸ್ಥೆಯಿಂದ ಕೂಡಿರುವ ಅಂತರರಾಷ್ಟ್ರೀಯ ಸನ್ನಿವೇಶದಲ್ಲಿ ಚೀನಾ-ರಶ್ಯ ಸಂಬಂಧಗಳ ಸ್ಥಿರತೆ ಮತ್ತು ನಿಶ್ಚಿತತೆಯು ಅತ್ಯಮೂಲ್ಯವಾಗಿವೆ. `ಉಭಯ ದೇಶಗಳ ನಡುವಿನ ಸ್ನೇಹ ಸಂಬಂಧದ ಬಲವಾದ ಚೈತನ್ಯ ಮತ್ತು ಅನುಕರಣೀಯ ಮಹತ್ವವು ಇಂತಹ ಸನ್ನಿವೇಶದಲ್ಲಿ ಮಹತ್ವ ಪಡೆಯುತ್ತದೆ. ಕಾರ್ಯತಂತ್ರದ ಸಂವಹನ ಮತ್ತು ನಿಕಟ ರಾಜತಾಂತ್ರಿಕ ಸಮನ್ವಯತೆಯನ್ನು ಬಲಪಡಿಸಲು ಎರಡೂ ದೇಶಗಳ ವಿದೇಶಾಂಗ ಸಚಿವರು ಪ್ರಯತ್ನಗಳನ್ನು ಮುಂದುವರಿಸಬೇಕು. ಉಭಯ ದೇಶಗಳ ನಡುವೆ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಉತ್ತೇಜಿಸುವ ಕ್ರಮಗಳನ್ನು ಮುಂದುವರಿಸಬೇಕು ಎಂದು ಚೀನಾ ಅಧ್ಯಕ್ಷರು ಒತ್ತಾಯಿಸಿದ್ದಾರೆ.

ವಾರ್ತಾ ಭಾರತಿ 15 Apr 2026 11:32 pm

ಮೊಟ್ಟಮೊದಲ ಕ್ವಾಂಟಮ್ ಎಕೋ ಸಿಸ್ಟಮ್ ಮ್ಯಾಪ್ ಅನಾವರಣ

ಕ್ವಾಂಟಮ್ ಮಾರ್ಗಸೂಚಿಯ ಮೊದಲ ಹಂತಕ್ಕೆ ಚಾಲನೆ: ಸಚಿವ ಭೋಸರಾಜು

ವಾರ್ತಾ ಭಾರತಿ 15 Apr 2026 11:17 pm

CBSE 10ನೇ ತರಗತಿ ಫಲಿತಾಂಶ 2026: ದಕ್ಷಿಣ ಭಾರತದ ವಿದ್ಯಾರ್ಥಿಗಳದ್ದೇ ಮೇಲುಗೈ, ಶೇ. 98.91ರಷ್ಟು ಸಾಧನೆ ಮಾಡಿದ ಬೆಂಗಳೂರು

ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(CBSE) 2026ನೇ ಸಾಲಿನ ಬಹುನಿರೀಕ್ಷಿತ 10ನೇ ತರಗತಿ ಪರೀಕ್ಷೆಯ ಫಲಿತಾಂಶವನ್ನು ಬುಧವಾರ ಸಂಜೆ 4 ಗಂಟೆಗೆ ಅಧಿಕೃತವಾಗಿ ಪ್ರಕಟಿಸಿದೆ. ಈ ಬಾರಿಯ ಫಲಿತಾಂಶದಲ್ಲಿ ದಕ್ಷಿಣ ಭಾರತದ ವಲಯಗಳು ಎಂದಿನಂತೆ ತಮ್ಮ ಪಾರುಪತ್ಯ ಮೆರೆದಿದ್ದು, ಅತಿ ಹೆಚ್ಚು ಉತ್ತೀರ್ಣ ಪ್ರಮಾಣ ದಾಖಲಿಸುವ ಮೂಲಕ ರಾಷ್ಟ್ರಮಟ್ಟದಲ್ಲಿ ಅತ್ಯುತ್ತಮ ಹಾಗೂ ಗಮನಾರ್ಹ ಸಾಧನೆ ಮಾಡಿವೆ. ಮಂಡಳಿಯು

ಒನ್ ಇ೦ಡಿಯ 15 Apr 2026 11:11 pm

ಪ್ರಸಕ್ತ ಸಾಲಿನ SSLC ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕ; ರಾಜ್ಯ ಸರಕಾರಕ್ಕೆ ಹೈಕೋರ್ಟ್ ‌ನಿರ್ದೇಶನ

ಬೆಂಗಳೂರು : ಪ್ರಸಕ್ತ ಸಾಲಿನ (2025-2026) ಎಸೆಸೆಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್‌ ಬದಲಿಗೆ ಅಂಕಗಳನ್ನು ನೀಡುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ. ತೃತೀಯ ಭಾಷೆಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವ ನಿರ್ಧಾರ ಪ್ರಶ್ನಿಸಿ ವಿದ್ಯಾರ್ಥಿನಿಯರಾದ ಚಿಕ್ಕಮಗಳೂರಿನ ಸಹನಾ ಆರ್. ನಾಯ್ಕ್‌, ಉಡುಪಿಯ ಅನುಷಾ ಹಾಗೂ ಸುಧಿಕ್ಷಾ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್‌. ಇಂದಿರೇಶ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ಸರಕಾರಕ್ಕೆ ಈ ನಿರ್ದೇಶನ ನೀಡಿ ಅರ್ಜಿ ಇತ್ಯರ್ಥಪಡಿಸಿದೆ. ಇದಕ್ಕೂ ಮುನ್ನ ಅರ್ಜಿದಾರ ವಿದ್ಯಾರ್ಥಿಗಳ ಪರ ವಕೀಲ ಆರ್‌.ವಿ. ನಾಯ್ಕ್‌ ವಾದ ಮಂಡಿಸಿ, 2025-2026ನೇ ಸಾಲಿನಿಂದಲೇ ಎಸೆಸೆಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿ ತೃತೀಯ ಭಾಷೆ ವಿಷಯಗಳಿಗೆ ಅಂಕಗಳ ಬದಲಿಗೆ ಗ್ರೇಡ್‌ ನೀಡುವುದಾಗಿ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು 2026ರ ಮಾರ್ಚ್ 28ರಂದು ಹೇಳಿಕೆ ನೀಡಿದ್ದಾರೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ಮುಂದುವರಿದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ಮುಖ್ಯಸ್ಥರು 2024 ಅಕ್ಟೋಬರ್ 18 ಮತ್ತು 2025ರ ಅಕ್ಟೋಬರ್ 28ರಂದು ಮಾರ್ಗಸೂಚಿ ಹಾಗೂ ಸುತ್ತೋಲೆ ಹೊರಡಿಸಿದ್ದು, ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ 100 ಅಂಕ ನೀಡಬೇಕು. ಅದರಲ್ಲಿ ಲಿಖಿತ ಪರೀಕ್ಷೆಯ ಮೌಲ್ಯಮಾಪನದಲ್ಲಿ 80 ಅಂಕ, ಶಾಲಾ ಆಂತರಿಕ ಪರೀಕ್ಷೆಗೆ 20 ಅಂಕ ನೀಡಬೇಕು ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ. ಆದರೆ, ಕೊನೇ ಹಂತದಲ್ಲಿ ಅಂದರೆ ಎಸೆಸೆಲ್ಸಿ ಪರೀಕ್ಷೆ ನಡೆಯುತ್ತಿರುವ ಸಮಯದಲ್ಲಿ ಸರಕಾರ ಅಂಕಗಳ ಬದಲಿಗೆ ಗ್ರೇಡ್‌ ನೀಡುವ ತೀರ್ಮಾನ ಕೈಗೊಂಡಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಸೇರಿದಂತೆ ಕೇಂದ್ರ ಸರಕಾರ ಹಾಗೂ ಕೇಂದ್ರ ಸ್ವಾಮ್ಯ ಸಂಸ್ಥೆಗಳು ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಹಾಗೂ ಬ್ಯಾಂಕಿಂಗ್‌ ಪರೀಕ್ಷೆಗಳಲ್ಲಿ ಗ್ರೇಡಿಂಗ್ ಅನ್ನು ಪರಿಗಣಿಸುವುದಿಲ್ಲ. ಕೇವಲ ಅಂಕಗಳನ್ನಷ್ಟೇ ಪರಿಗಣಿಸಲಾಗುತ್ತದೆ. ರಾಜ್ಯ ಸರಕಾರ ಹಿಂದಿ ಹಾಗೂ ಇತರ ತೃತೀಯ ಭಾಷಾ ವಿಷಯಗಳ ಪರೀಕ್ಷೆಯಲ್ಲಿ ಅಂಕಗಳ ಬದಲಿಗೆ ಗ್ರೇಂಡಿಗ್‌ ನೀಡಿದರೆ, ರಾಜ್ಯದ ವಿದ್ಯಾರ್ಥಿಗಳ/ಉದ್ಯೋಗ ಆಕಾಂಕ್ಷಿಗಳ ಮೇಲೆ ಭವಿಷ್ಯದಲ್ಲಿ ಸಾಕಷ್ಟು ದುಷ್ಪರಿಣಾಮ ಬೀರುತ್ತದೆ. ಆದ್ದರಿಂದ, 2025-2026ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್‌ ಬದಲಿಗೆ ಅಂಕಗಳನ್ನೇ ನೀಡಲು ಸರಕಾರ ಹಾಗೂ ಕೆಎಸ್‌ಇಎಬಿಗೆ ನಿರ್ದೇಶಿಸಬೇಕು ಎಂದು ಕೋರಿದರು. ಆಗ ನ್ಯಾಯಪೀಠ, ತೃತೀಯ ಭಾಷೆ ವಿಷಯಗಳ ಪರೀಕ್ಷೆಯಲ್ಲಿ ಗ್ರೇಡಿಂಗ್‌ ನೀಡುವ ಬಗ್ಗೆ ರಾಜ್ಯ ಸರಕಾರ ಅಧಿಸೂಚನೆ/ಸುತ್ತೋಲೆ ಹೊರಡಿಸಿದೆಯೇ ಎಂದು ಸರಕಾರಿ ವಕೀಲರನ್ನು ಕೇಳಿತು. ಸರಕಾರದ ಪರ ವಕೀಲರು, ಸದ್ಯ ಕರಡು ಅಧಿಸೂಚನೆ ಹೊರಡಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು ಸರಕಾರದಿಂದ ಪಡೆದು ತಿಳಿಸಲಾಗುವುದು ಎಂದು ನ್ಯಾಯಪೀಠಕ್ಕೆ ತಿಳಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಚಾಲ್ತಿಯಲ್ಲಿರುವ ನಿಯಮಗಳು ಮತ್ತು ಮಾರ್ಗಸೂಚಿಗಳಂತೆ 2025-2026ನೇ ಸಾಲಿನ ಎಸೆಸೆಲ್ಸಿಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್‌ ಬದಲಿಗೆ ಅಂಕಗಳನ್ನು ನೀಡುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿತು.

ವಾರ್ತಾ ಭಾರತಿ 15 Apr 2026 11:09 pm

ತುರ್ಕಿಯೆ ಶಾಲೆಯಲ್ಲಿ ಗುಂಡಿನ ದಾಳಿ: ನಾಲ್ವರು ಮೃತ್ಯು; 20 ಮಂದಿಗೆ ಗಾಯ

ಅಂಕಾರ, ಎ.15: ತುರ್ಕಿಯೆ ಶಾಲೆಯೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಒಬ್ಬ ಶಿಕ್ಷಕ ಮತ್ತು ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಕಹ್ರಮನ್ಮರಸ್ ಪ್ರಾಂತದ ಶಾಲೆಯಲ್ಲಿ ಘಟನೆ ನಡೆದಿದ್ದು ವಿದ್ಯಾರ್ಥಿಯೊಬ್ಬ ಪಿಸ್ತೂಲಿನೊಂದಿಗೆ ಶಾಲೆಗೆ ಬಂದಿದ್ದು ತರಗತಿಗೆ ಪ್ರವೇಶಿಸಿ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಮಂಗಳವಾರ ಸಾನ್ಲಿಯುರ್ಫಾ ಪ್ರಾಂತದ ಸಿವೆರೆಕ್ ಜಿಲ್ಲೆಯ ಶಾಲೆಯಲ್ಲಿ ಹಳೆ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ 16 ಮಂದಿ ಗಾಯಗೊಂಡಿದ್ದರು. ಬಳಿಕ ಆರೋಪಿ ಸ್ವಯಂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ.

ವಾರ್ತಾ ಭಾರತಿ 15 Apr 2026 11:06 pm

ಕಾಳಗಿಯಲ್ಲಿ ನೀಲಕಂಠ ಕಾಳೇಶ್ವರ ಭವ್ಯ ರಥೋತ್ಸವ

ಕಾಳಗಿ : ದಕ್ಷಿಣಕಾಶಿ ಶ್ರೀ ನೀಲಕಂಠ ಕಾಳೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಬುಧವಾರ ರಾತ್ರಿ ಅಪಾರ ಭಕ್ತರ ಜೈ ಘೋಷಗಳ ಮಧ್ಯೆ ಸಂಭ್ರಮದಿಂದ ನೀಲಕಂಠ ಕಾಳೇಶ್ವರ ಭವ್ಯ ರಥೋತ್ಸವ ಜರುಗಿತು. ಬೆಳಗ್ಗೆ ಶ್ರೀ ನೀಲಕಂಠ ಕಾಳೇಶ್ವರ ಕತೃ ಗದ್ದುಗೆಗೆ ವಿಶೇಷ ಪೂಜೆ ಅಭಿಷೇಕ ಅರ್ಚನೆ ಅಲಂಕಾರ ಮಹಾಮಂಗಳಾರತಿ ಜರುಗಿತು. ಬಳಿಕ ಭಕ್ತರು ವೀರಭದ್ರೇಶ್ವರ ಅಗ್ನಿ ಪ್ರವೇಶ ಮಾಡಿ ಹರಕೆ ತೀರಿಸಿದರು. ಸಾಯಂಕಾಲ ಪಟ್ಟಣದ ಪ್ರಮುಖ ಮನೆತನಗಳಾದ ಜೈಶಂಕರ ಮಾಲಿಪಾಟೀಲ, ಶರಣಗೌಡ ಪೊಲೀಸ್ ಪಾಟೀಲ, ಶಿವಕುಮಾರ್ ಪಂಚಾಳ, ಪ್ರಭಾಕಾರ ಮಾಕಪನೋರ, ಗುರುಲಿಂಗಯ್ಯ ಮಠಪತ್ತಿ ಮನೆಗಳಿಂದ ಕುಂಭ, ಕಳಸ, ತನಾರತಿ, ನಂದಿಕೋಲುಗಳನ್ನು ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ತರಲಾಯಿತು. ಭರತನೂರ ಚಿಕ್ಕಗುರುನಂಜೇಶ್ವರ ಮಹಾಸ್ವಾಮಿಗಳು, ಸ್ಥಳೀಯ ಹಿರೇಮಠದ ನೀಲಕಂಠ ಮರಿದೇವರು, ಡೊಣ್ಣೂರ ವೀರಭಧ್ರಪ್ಪ ಅಜ್ಜನವರು, ರಥೋತ್ಸವಕ್ಕೆ ಚಾಲನೆ ನೀಡುತ್ತಿದ್ದಂತೆ ನೆರೆದಿದ್ದ ಸಾವಿರಾರು ಭಕ್ತರು ನೀಲಕಂಠ ಕಾಳೇಶ್ವರ ಮಹಾರಜಕೀ ಜೈ ಎಂದು ಜಯಘೋಷಗಳನ್ನು ಕೂಗುತ್ತಾ ರತೋತ್ಸವಕ್ಕೆ ಉತ್ತುತ್ತಿ, ಬಾಳೆಹಣ್ಣು, ನಾಣ್ಯ ಎಸೆದು ಭಕ್ತಿ ಸಮರ್ಪಿಸಿದರು. ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ, ಸಮಿತಿ ಅಧ್ಯಕ್ಷ ಶಿವಶರಣರಪ್ಪ ಕಮಲಾಪೂರ, ಜಿಪಂ ಮಾಜಿ ಸದಸ್ಯ ರಾಜೇಶ್ ಗುತ್ತೇದಾರ, ಪ್ರಮುಖರಾದ ಶರಣಗೌಡ ಪೊಲೀಸ್ ಪಾಟೀಲ್, ಮಲ್ಲಿಕಾರ್ಜುನ ಗಾಜರೆ, ನೀಲಕಂಠ ಗುತ್ತೇದಾರ, ವಿಶ್ವನಾಥ ವನಮಾಲಿ, ಪ್ರಶಾಂತ ಕದಮ, ಮಲ್ಲಿನಾಥ ಪಾಟೀಲ್, ಶಿವಶರಣಪ್ಪ ಹುಡಗಿ, ಶೇಖರ ಪಾಟೀಲ್, ಜಗಧೀಶ ಮಾಲಿಪಾಟೀಲ, ಶಿವಶರಣಪ್ಪ ಗುತ್ತೇದಾರ, ಸಂತೋಷ ಪತಂಗೆ, ಶಿವಕಿರಣ ಪ್ಯಾಟಿಮಠ, ಸಂತೋಷ ಕುಡ್ಡಳ್ಳಿ, ಶಿವರಾಜ್ ಕುಡ್ಡಳ್ಳಿ ಸೇರಿದಂತೆ ಅನೇಕರು ಇದ್ದರು.

ವಾರ್ತಾ ಭಾರತಿ 15 Apr 2026 11:02 pm

IPL-2026| ಕೆಕೆಆರ್ ನಾಯಕ ಅಜಿಂಕ್ಯ ರಹಾನೆಗೆ 12 ಲಕ್ಷ ರೂ. ದಂಡ

ಹೊಸದಿಲ್ಲಿ, ಎ.15: ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ಕೆ)ವಿರುದ್ಧ ಮಂಗಳವಾರ ಚೆನ್ನೈನ ಎಂ.ಎ.ಚಿದಂಬರಂ ಸ್ಟೇಡಿಯಂನಲ್ಲಿ ನಡೆದಿದ್ದ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಕಾಯ್ದುಕೊಂಡಿದ್ದಕ್ಕೆ ಕೋಲ್ಕತಾ ನೈಟ್ ರೈಡರ್ಸ್(ಕೆಕೆಆರ್)ತಂಡದ ನಾಯಕ ಅಜಿಂಕ್ಯ ರಹಾನೆಗೆ ಬುಧವಾರ ಪಂದ್ಯ ಶುಲ್ಕದಲ್ಲಿ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಐಪಿಎಲ್ ನೀತಿ ಸಂಹಿತೆ ಆರ್ಟಿಕಲ್ 2.22ರ ಪ್ರಕಾರ ಇದು ಕೆಕೆಆರ್ ತಂಡದ ಈ ವರ್ಷದ ಮೊದಲ ತಪ್ಪಾಗಿತ್ತು. ಹೀಗಾಗಿ ನಿಧಾನಗತಿಯ ಬೌಲಿಂಗ್ಗಾಗಿ ರಹಾನೆಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಈ ಪಂದ್ಯದಲ್ಲಿ 21 ರನ್‌ಗೆ ಮೂರು ವಿಕೆಟ್‌ಗಳನ್ನು ಉರುಳಿಸಿದ ನೂರ್ ಅಹ್ಮದ್ ಅವರು ಸಿಎಸ್‌ಕೆ ತಂಡವು ಕೋಲ್ಕತಾ ತಂಡವನ್ನು 32 ರನ್‌ಗಳಿಂದ ಮಣಿಸುವಲ್ಲಿ ನೆರವಾದರು. ಸಿಎಸ್‌ಕೆ ತಂಡವು ಸತತ ಎರಡನೇ ಗೆಲುವು ದಾಖಲಿಸಿತ್ತು. ಸಂಜು ಸ್ಯಾಮ್ಸನ್(48 ರನ್)ಹಾಗೂ ಡೆವಾಲ್ಡ್ ಬ್ರೆವಿಸ್(41 ರನ್)ಕೊಡುಗೆಯ ನೆರವಿನಿಂದ ಮೊದಲು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟಿದ್ದ ಸಿಎಸ್ಕೆ ತಂಡವು ಐದು ವಿಕೆಟ್‌ಗಳ ನಷ್ಟಕ್ಕೆ 192 ರನ್ ಗಳಿಸಿತ್ತು. ಎಡಗೈ ಸ್ಪಿನ್ನರ್ ನೂರ್ ಅಹ್ಮದ್ ಅವರು ಕೋಲ್ಕತಾ ತಂಡವನ್ನು 7 ವಿಕೆಟ್‌ಗಳ ನಷ್ಟಕ್ಕೆ 160 ರನ್‌ಗೆ ನಿಯಂತ್ರಿಸಲು ನೆರವಾದರು. ಕೆಕೆಆರ್ ತಂಡವು 2026ರ ಆವೃತ್ತಿಯ ಐಪಿಎಲ್‌ನಲ್ಲಿ ಐದು ಪಂದ್ಯಗಳನ್ನು ಆಡಿದ್ದರೂ ಒಂದೂ ಪಂದ್ಯವನ್ನು ಗೆದ್ದಿಲ್ಲ. ಮಳೆಗಾಹುತಿಯಾದ ಪಂದ್ಯದಲ್ಲಿ ಒಂದು ಅಂಕವನ್ನು ಗಳಿಸಿದ್ದ ಕೆಕೆಆರ್ ತಂಡವು ಸದ್ಯ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಸತತ ಮೂರು ಸೋಲಿನೊಂದಿಗೆ ಪ್ರಸಕ್ತ ಐಪಿಎಲ್ ಆರಂಭಿಸಿರುವ ಸಿಎಸ್‌ಕೆ ಇದೀಗ ಸತತ ಎರಡು ಪಂದ್ಯಗಳಲ್ಲಿ ಜಯ ಗಳಿಸಿದ್ದು, ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನಕ್ಕೇರಿದೆ. ಕಾಲುನೋವಿನಿಂದ ಚೇತರಿಸಿಕೊಳ್ಳುತ್ತಿರುವ ಎಂ.ಎಸ್.ಧೋನಿ ಮರಳಿಕೆಗಾಗಿ ಸಿಎಸ್‌ಕೆ ತಂಡವು ಈಗಲೂ ಕಾಯುತ್ತಿದೆ. ಅವರು ಈ ತನಕ ಒಂದೂ ಪಂದ್ಯವನ್ನು ಆಡಿಲ್ಲ.

ವಾರ್ತಾ ಭಾರತಿ 15 Apr 2026 11:00 pm

Aland | ಎ.17ರಿಂದ ಸಿಯುಕೆಯಲ್ಲಿ ರಾಷ್ಟ್ರೀಯ ಕಾರ್ಯಾಗಾರ

ಆಳಂದ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದ ವತಿಯಿಂದ ಎ.7 ಮತ್ತು 18ರಂದು “ಸಂಶೋಧನಾ ವಿಧಾನ ಮತ್ತು ಶೈಕ್ಷಣಿಕ ಬರವಣಿಗೆ” ಕುರಿತು ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರವನ್ನು ಸಿಯುಕೆಯ ತರಗತಿ ಸಂಕೀರ್ಣದ ಸೆಮಿನಾರ್ ಹಾಲ್‌ನಲ್ಲಿ ಆಯೋಜಿಸಲಾಗಿದೆ. ಕಾರ್ಯಾಗಾರದ ಕರಪತ್ರವನ್ನು ಬಿಡುಗಡೆಗೊಳಿಸಿದ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಮಾತನಾಡಿ, ಮಾನವಶಾಸ್ತ್ರ ಮತ್ತು ಭಾಷೆಗಳ ಸಂಶೋಧನೆ ಸಾಂಸ್ಕೃತಿಕ ತಿಳುವಳಿಕೆ, ವಿಮರ್ಶಾತ್ಮಕ ಚಿಂತನೆ ಹಾಗೂ ಮಾನವಿಕ ಜ್ಞಾನ ಉತ್ಪಾದನೆಗೆ ಬಲವಾದ ಬೌದ್ಧಿಕ ನೆಲೆ ಒದಗಿಸುತ್ತದೆ ಎಂದು ಹೇಳಿದರು. ವಿದ್ಯಾರ್ಥಿಗಳು ಹಾಗೂ ಸಂಶೋಧಕರು ತಮ್ಮ ವಿಷಯಗಳ ಜೊತೆಗೆ ಸಂಶೋಧನಾ ವಿಧಾನ ಮತ್ತು ಶೈಕ್ಷಣಿಕ ಬರವಣಿಗೆಯಲ್ಲಿಯೂ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು. ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಪ್ರೊ. ಬಸವರಾಜ ಡೋಣೂರ ಮಾತನಾಡಿ, ಮಾನವಶಾಸ್ತ್ರದಲ್ಲಿನ ಸಂಶೋಧನಾ ವಿಧಾನವು ಏಕಮುಖ ಶಿಸ್ತಲ್ಲ, ಬದಲಾಗಿ ವ್ಯಾಖ್ಯಾನಾತ್ಮಕ, ವಿಮರ್ಶಾತ್ಮಕ, ಪ್ರಾಯೋಗಿಕ ಹಾಗೂ ಮಿಶ್ರ ಚೌಕಟ್ಟುಗಳ ಮೇಲೆ ಆಧಾರಿತವಾಗಿದೆ ಎಂದು ವಿವರಿಸಿದರು. ಡೀನ್ ಪ್ರೊ. ವಿಕ್ರಮ್ ವಿಸಾಜಿ ಮಾತನಾಡಿ, ಶೈಕ್ಷಣಿಕ ಬರವಣಿಗೆಯಲ್ಲಿ ವಾದರಚನೆ, ಶಿಸ್ತಿನ ಸಂಪ್ರದಾಯಗಳು, ಉಲ್ಲೇಖ ವಿಧಾನಗಳು ಹಾಗೂ ಪ್ರಕಟಣಾ ಮಾನದಂಡಗಳ ಮೇಲೆ ಪಟ್ಟು ಸಾಧಿಸುವುದು ಅತ್ಯಗತ್ಯವಾಗಿದೆ ಎಂದು ಹೇಳಿದರು. ಈ ಕ್ಷೇತ್ರಗಳಲ್ಲಿ ಸಮರ್ಪಕ ತರಬೇತಿ ಕೊರತೆಯಿಂದ ಡಾಕ್ಟರೇಟ್ ಪ್ರಬಂಧಗಳ ಗುಣಮಟ್ಟ ಹಾಗೂ ಸಂಶೋಧನಾ ಪ್ರಕಟಣೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು. ಕರಪತ್ರ ಬಿಡುಗಡೆ ಸಮಾರಂಭದಲ್ಲಿ ಸಂಘಟನಾ ಕಾರ್ಯದರ್ಶಿ ಮಹೇಂದ್ರ ಎಂ., ಪ್ರೊ. ಪಾಂಡಾ, ಡಾ. ರೇಣುಕಾ, ಡಾ. ಪ್ರಕಾಶ ಹಾಗೂ ಡಾ. ಆಶಿಶ ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ಹೈದರಾಬಾದ್‌ನ ಇಇಐಯು ವಿಶ್ವವಿದ್ಯಾಲಯದಿಂದ ಆಹ್ವಾನಿಸಲ್ಪಟ್ಟ ಸಂಪನ್ಮೂಲ ವ್ಯಕ್ತಿಗಳಾದ ಪ್ರೊ. ತಾರಕೇಶ್ವರ್ ವಿ.ಬಿ. ಮತ್ತು ಪ್ರೊ. ನಿಖಿಲಾ ಎಚ್. ಅವರು ಸಂಶೋಧನಾ ವಿಧಾನ, ಪರಿಕಲ್ಪನೆಗಳು, ಸಂಶೋಧನಾ ವಿನ್ಯಾಸ, ಶೈಕ್ಷಣಿಕ ಬರವಣಿಗೆ, ಪ್ರಕಟಣೆ ನೀತಿಶಾಸ್ತ್ರ, ಕೃತಿಚೌರ್ಯ ಹಾಗೂ ಉಲ್ಲೇಖ ಶೈಲಿಗಳ ಕುರಿತು ಉಪನ್ಯಾಸ ನೀಡಲಿದ್ದಾರೆ.

ವಾರ್ತಾ ಭಾರತಿ 15 Apr 2026 11:00 pm

ಭುವನೇಶ್ವರ್ ಹೊಡೆತಕ್ಕೆ ನಡುಗಿದ ಲಖನೌ ಸೂಪರ್ ಜೈಂಟ್ಸ್; ಅಧಿಕಾರಯುತ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ RCB

ಇದು ಹಾಲಿ ಚಾಂಪಿಯನ್ಸ್ ಗೆ ತಕ್ಕುದಾದ ಆಟ! ಭುವನೇಶ್ವರ ಕುಮಾರ್, ರಸಿಕ್ ಸಲಾಂ, ಜೋಶ್ ಹ್ಯಾಜಲ್ ವುಡ್ ಅವರ ಮೊನಚಾದ ಬೌಲಿಂಗ್ ಮತ್ತು ವಿರಾಟ್ ಕೊಹ್ಲಿ ಅವರ ಸೊಗಸಾದ ಬ್ಯಾಟಿಂಗ್ ನೆರವಿನಿಂದ ತಂಡವು ಲಖನೌ ಸೂಪರ್ ಜೈಂಟ್ಸ್ ತಂಡವನ್ನು 5 ವಿಕೆಟ್ ಗಳಿಂದ ಸೋಲಿಸಿ ಅಧಿಕಾರಯುತ ಜಯ ಸಾಧಿಸಿದೆ. ಈ ಮೂಲಕ ಆಢಿದ 5 ಪಂದ್ಯಗಳಲ್ಲಿ 4 ಜಯ ಗಳಿಸಿರುವ ರಜತ ಪಾಟೀದಾರ್ ಬಳಗವು 8 ಅಂಕಗಳನ್ನು ಸಂಪಾದಿಸಿದೆ. ಜೊತಗೆ ಅತ್ಯುನ್ನತ ರನ್ ರೇಟ್(1.503) ಆಧಾರದಲ್ಲಿ ಯಲ್ಲಿ ಮೊದಲ ಸ್ಥಾನಕ್ಕೇರಿದೆ.ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಪ್ರಿಲ್ 15ರ ಬುಧವಾರದಂದು ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಖನೌ ಸೂಪರ್ ಜೈಂಟ್ಸ್ ನಿಗದಿತ 20 ಓವರ್ ಗಳಲ್ಲಿ 146 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಇದಕ್ಕುತ್ತರವಾಗಿ ರಾಯಲ್ ಚಾಲೆಂಜರ್ಸ್ ತಂಡವು ಇನ್ನೂ 29 ಎಸತೆತಗಳು ಬಾಕಿ ಉಳಿದಿರುವಂತೆ ಜಯಭೇರಿ ಬಾರಿಸಿತು. () ಸಂಕ್ಷಿಪ್ತ ಸ್ಕೋರ್ ಲಖನೌ ಸೂಪರ್ ಜೈಂಟ್ಸ್ 20 ಓವರ್ ಗಳಲ್ಲಿ 146ಕ್ಕೆ ಆಲೌಟ್, ಮಿಚೆಲ್ ಮಾರ್ಷ್ 40(32), ಆಯುಷ್ ಬದೋನಿ 38(24), ಮುಕುಲ್ ಚೌಧರಿ 38(28), ಭುವನೇಶ್ವರ್ ಕುಮಾರ್ 27ಕ್ಕೆ 3, ರಸಿಕ್ ಸಲಾಂ 34ಕ್ಕೆ 4,

ವಿಜಯ ಕರ್ನಾಟಕ 15 Apr 2026 10:54 pm

IPL 2026 | 'ಪಂತ' ಸೋತ ಲಕ್ನೋ; ಗೆದ್ದು ಬೀಗಿದ RCB

ಬೆಂಗಳೂರು: ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ರೋಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿ 5 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು. ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ RCB ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿತು. ಅದರೆ ರೋಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರಸಿಖ್ ಸಲಾಮ್, ಭುವನೇಶ್ವರ್ ಕುಮಾರ್, ಕೃನಾಲ್ ಪಾಂಡ್ಯ ಅವರ ಬೌಲಿಂಗ್ ದಾಳಿಗೆ ಲಕ್ನೋ ಹಳಿ ತಪ್ಪಿತು. 20 ಓವರುಗಳಲ್ಲಿ 146 ರನ್ ಗಳಿಸಿ ಆಲೌಟ್ ಆಯಿತು. ರಸಿಖ್ ಸಲಾಮ್ 4 ವಿಕೆಟ್ ಪಡೆದರೆ, ಭುವನೇಶ್ವರ್ ಕುಮಾರ್ 3 ವಿಕೆಟ್ ಪಡೆದರು. ಕೃನಾಲ್ ಪಾಂಡ್ಯ 2, ಹೇಝಲ್ ವುಡ್ ಒಂದು ವಿಕೆಟ್ ಪಡೆದರು. 147 ರನ್‌ಗಳ ಗರಿ ಪಡೆದ RCB 29 ಎಸೆತಗಳು ಬಾಕಿ ಇರುವಂತೆ ಪಂತ್ ಪಡೆಯನ್ನು 5 ವಿಕೆಟ್ ಗಳಿಂದ ಸೋಲಿಸಿ ಜಯಗಳಿಸಿತು.

ವಾರ್ತಾ ಭಾರತಿ 15 Apr 2026 10:49 pm

Kalaburagi | ಎನ್ನೆಸ್ಸೆಸ್‌ ಶಿಬಿರದಿಂದ ವ್ಯಕ್ತಿತ್ವ ಬೆಳವಣಿಗೆ : ಡಾ.ಇಂದಿರಾ ಶೇಟಕಾರ

ಕಲಬುರಗಿ: ಎನ್ನೆಸ್ಸೆಸ್‌ ಶಿಬಿರದಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳಲ್ಲಿ ಸಂಪೂರ್ಣ ವ್ಯಕ್ತಿತ್ವ ಬೆಳವಣಿಗೆ ಸಾಧ್ಯವಾಗುತ್ತದೆ ಎಂದು ಡಾ.ಇಂದಿರಾ ಶೇಟಕಾರ ಹೇಳಿದರು. ನಗರದ ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಬುಧವಾರ ನಡೆದ ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ಶಿಬಿರದ ಮೂಲಕ ವಿದ್ಯಾರ್ಥಿಗಳು ಸಮಾಜದ ಸಮಸ್ಯೆಗಳ ಅರಿವು ಪಡೆದು, ಅವುಗಳಿಗೆ ಪರಿಹಾರ ಕಂಡುಹಿಡಿಯುವ ಮನೋಭಾವ ಬೆಳೆಸಿಕೊಂಡಿದ್ದಾರೆ ಎಂದು ಹೇಳಿದರು. ಗ್ರಾಮ ಸ್ವಚ್ಛತೆ, ಆರೋಗ್ಯ ಜಾಗೃತಿ, ಶಿಕ್ಷಣ ಪ್ರಚಾರ ಮತ್ತು ಪರಿಸರ ಸಂರಕ್ಷಣೆ ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳ ತೊಡಗಿಸಿಕೊಳ್ಳುವಿಕೆ ಶ್ಲಾಘನೀಯವಾಗಿದೆ. “ಪುಸ್ತಕ ಜ್ಞಾನ ಮಾತ್ರ ಸಾಕಾಗುವುದಿಲ್ಲ, ಸಮಾಜಜ್ಞಾನವೂ ಅಗತ್ಯ” ಎಂದು ಅವರು ತಿಳಿಸಿದರು. ಈ ಶಿಬಿರವು ವಿದ್ಯಾರ್ಥಿಗಳಿಗೆ ನಾಯಕತ್ವ ಗುಣ, ಸಹಕಾರ ಮನೋಭಾವ, ಸಮಯಪಾಲನೆ ಹಾಗೂ ಶಿಸ್ತುಗಳನ್ನು ಕಲಿಸಿದ್ದು, ಇವುಗಳು ಅವರ ಭವಿಷ್ಯದ ಯಶಸ್ಸಿಗೆ ಬುನಾದಿಯಾಗುತ್ತವೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ದಶರಥ ಮೇತ್ರೆ ಮಾತನಾಡಿ, ಶಿಬಿರದಿಂದ ಗ್ರಾಮೀಣ ಜೀವನ ಮತ್ತು ಅಲ್ಲಿನ ಸಮಸ್ಯೆಗಳ ಅರಿವು ಮೂಡುತ್ತದೆ. ದೇಶದ ಅಭಿವೃದ್ಧಿಗೆ ಯುವಜನರ ಪಾತ್ರ ಮಹತ್ವದ್ದಾಗಿದ್ದು, ವಿದ್ಯಾರ್ಥಿಗಳು ಈ ಅನುಭವವನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಮಹಾವಿದ್ಯಾಲಯದ ಎನ್ನೆಸ್ಸೆಸ್‌ ಅಧಿಕಾರಿ ಪ್ರೊ.ದಯಾನಂದ ಹೊಡಲ್ ಪ್ರಾಸ್ತಾವಿಕ ಮಾತನಾಡಿದರು. ಕು.ಮನೋಜಕುಮಾರ ಸ್ವಾಗತಿಸಿದರು, ಕು. ರಕ್ಷಿತ್ ನಿರೂಪಿಸಿದರೆ, ಕು. ಹರೀಶ್ ವಂದಿಸಿದರು. ವಿದ್ಯಾರ್ಥಿಗಳು ಶಿಬಿರದ ಅಭಿಪ್ರಾಯ ತಿಳಿಸಿದರು.

ವಾರ್ತಾ ಭಾರತಿ 15 Apr 2026 10:49 pm

ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿ ನಿಷೇಧ ಕೋರಿದ ಪಿಐಎಲ್; ವಿವರವಾದ ಪ್ರಮಾಣಪತ್ರ ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಗೆ ನಿಷೇಧ ಹೇರಲು ನಿರಾಕರಿಸಿರುವ ಹೈಕೋರ್ಟ್, ಅರಣ್ಯದ ಯಾವ ವಲಯದಲ್ಲಿ ಸಫಾರಿಗೆ ಅವಕಾಶ ನೀಡಲಾಗಿದೆ ಎಂಬ ಕುರಿತು ವಿವರವಾದ ಪ್ರಮಾಣಪತ್ರ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ. ರಾಜ್ಯದ ಸೂಕ್ಷ್ಮ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಶಾಶ್ವತವಾಗಿ ನಿಷೇಧಿಸಲು‌ ನಿರ್ದೇಶನ ಕೋರಿ ಮೈಸೂರಿನ ವಿ. ರವಿಕುಮಾರ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ, ಶೇ.50 ರಷ್ಟು ಸಫಾರಿಗೆ ಅವಕಾಶ ನೀಡಿ ಅರಣ್ಯ ಇಲಾಖೆ 2026ರ ಫೆಬ್ರವರಿ 21 ರಂದು ಹೊರಡಿಸಿರುವ ಆದೇಶಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿತು. ಜತೆಗೆ, ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಪ್ರವಾಸೋದ್ಯಮ ವಲಯ, ಕೋರ್ ಹಾಗೂ ಬಫರ್ ವಲಯಗಳೆಂಬ ಮೂರು ವಲಯಗಳಿರುತ್ತವೆ. ಇವುಗಳ ಪೈಕಿ ಯಾವ ವಲಯದಲ್ಲಿ ಸಫಾರಿಗೆ ಅವಕಾಶ‌ ನೀಡಲಾಗುತ್ತದೆ ಎಂಬ ಬಗ್ಗೆ ನಿಖರವಾದ ಸ್ಥಳಗಳು ಮತ್ತು ಈ ವಲಯಗಳನ್ನು ಸೂಚಿಸುವ ನಕ್ಷೆಗಳನ್ನು ಸ್ಪಷ್ಟಪಡಿಸುವ ವಿವರವಾದ ಪ್ರಮಾಣಪತ್ರ ಸಲ್ಲಿಸಬೇಕು ಎಂದು ಸರಕಾರಕ್ಕೆ ನಿರ್ದೇಶಿಸಿ ಅರ್ಜಿ ವಿಚಾರಣೆ ಮುಂದೂಡಿತು. ಇದಕ್ಕೂ ಮುನ್ನ ವಿಚಾರಣೆ ಆರಂಭವಾಗುತ್ತಿದ್ದಂತೆ ಅರ್ಜಿದಾರರ ಪರ ವಕೀಲರು, ಸಫಾರಿ ನಿಷೇಧಿಸಲ್ಪಟ್ಟಿರುವ, ಹುಲಿಗಳು ನೆಲೆಸಿರುವ ಪ್ರಮುಖ ಸ್ಥಳಗಳಲ್ಲಿ ಸಫಾರಿ ನಡೆಸಲಾಗುತ್ತಿದೆ. ರಾಜಕೀಯ ಮತ್ತು ವಾಣಿಜ್ಯ ಹಿತಾಸಕ್ತಿ ಹೊಂದಿರುವವರ ಒತ್ತಡಕ್ಕೆ ಮಣಿದು ಸಫಾರಿ ಮತ್ತ ಆರಂಭಿಸಲಾಗಿದೆ. ಸಫಾರಿ ಚಟುವಟಿಕೆ ಮುಂದುವರಿಸುವುದರಿಂದ ಮಾನವ-ವನ್ಯಜೀವಿಗಳ ಸಂಘರ್ಷ ವ್ಯಾಪಕವಾಗಲಿದೆ ಎಂದರು. ಈ ಹಂತದಲ್ಲಿ ನ್ಯಾಯಪೀಠ, ನಿರ್ಣಾಯಕ ಹುಲಿ ಆವಾಸಸ್ಥಾನವು ಯಾವಾಗಲೂ ಕೋರ್ ವಲಯಕ್ಕೆ ಸಮಾನಾರ್ಥಕವಲ್ಲ ಮತ್ತು ಸರಿಯಾದ ವರ್ಗೀಕರಣವನ್ನು ಪರಿಶೀಲಿಸಬೇಕು. ಹುಲಿ ಸಂರಕ್ಷಿತ ಪ್ರದೇಶಗಳು ಸಾಮಾನ್ಯವಾಗಿ ಕೋರ್, ಬಫರ್ ಮತ್ತು ಪ್ರವಾಸೋದ್ಯಮ ವಲಯಗಳನ್ನು ಒಳಗೊಂಡಿರುತ್ತವೆ. ಸಫಾರಿಯನ್ನು ಸಾಮಾನ್ಯವಾಗಿ ಬಫರ್ ಅಥವಾ ಗೊತ್ತುಪಡಿಸಿದ ಪ್ರವಾಸೋದ್ಯಮ ವಲಯಗಳಲ್ಲಿ ಮಾತ್ರ ಅನುಮತಿಸಲಾಗುತ್ತದೆ, ಕಟ್ಟುನಿಟ್ಟಾಗಿ ಸಂರಕ್ಷಿತ ಕೋರ್ ಪ್ರದೇಶಗಳಲ್ಲಿ ಅಲ್ಲ ಎಂದು ಹೇಳಿತು. ಮುಂದುವರಿದು, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್‌ಟಿಸಿಎ) ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರ, ಬಫರ್ ವಲಯಗಳೊಳಗಿನ ಅರಣ್ಯೇತರ ಅಥವಾ ಅವನತಿ ಹೊಂದಿದ ಭೂಮಿಯಲ್ಲಿ ಸಫಾರಿಗಳನ್ನು ನಡೆಸಬೇಕು, ನಿರ್ಣಾಯಕ ಆವಾಸಸ್ಥಾನಗಳು ಮತ್ತು ಹುಲಿ ಕಾರಿಡಾರ್‌ಗಳನ್ನು ತಪ್ಪಿಸಬೇಕು ಎಂದು ನ್ಯಾಯಪೀಠ ಹೇಳಿತು. ಪ್ರಕರಣವೇನು? ಕಳೆದ ವರ್ಷದ ಅಕ್ಟೋಬರ್-ನವೆಂಬರ್​ನಲ್ಲಿ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷ ವ್ಯಾಪಕವಾಗಿ, ಹಲವು ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದರಿಂದ, ಸಾರ್ವಜನಿಕವಾಗಿ ವ್ಯಾಪಕ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ ಮೂರು ತಿಂಗಳಿಗೂ ಅಧಿಕ ಕಾಲ ಸಫಾರಿಗೆ ನಿಷೇಧ ಹೇರಿತ್ತು. ಆದರೆ, ಫೆಬ್ರವರಿಯಲ್ಲಿ ತಾಂತ್ರಿಕ ಸಮಿತಿಯ ಶಿಫಾರಸುಗಳು ಆಧಾರದ ಮೇಲೆ ಶೇ. 50ರಷ್ಟು ಸಫಾರಿಗೆ ಅನುಮತಿಸಿ ಅರಣ್ಯ ಇಲಾಖೆ ಫೆಬ್ರವರಿ 21ರಂದು ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿರುವ ಅರ್ಜಿದಾರರು, ಸಫಾರಿ ಚಟುವಟಿಕೆ ಸ್ಥಾಪಿತ ಸಂರಕ್ಷಣಾ ಮಾನದಂಡಗಳನ್ನು ಉಲ್ಲಂಘಿಸುವುದರಿಂದ ಪ್ರಮುಖ ಹುಲಿ ಆವಾಸ ಸ್ಥಾನಗಳಲ್ಲಿ ಹುಲಿ ಸಫಾರಿಗಳನ್ನು ಶಾಶ್ವತವಾಗಿ ನಿಷೇಧಿಸಬೇಕು. ಭಾರತದಲ್ಲಿ ಅರಣ್ಯ ರಕ್ಷಣೆ ಮತ್ತು ವನ್ಯಜೀವಿ ನಿರ್ವಹಣೆಗೆ ಸಂಬಂಧಿಸಿದ ಟಿ.ಎನ್. ಗೋದವರ್ಮನ್ ತಿರುಮುಲ್ಪಾಡ್ ಹಾಗೂ ಕೇಂದ್ರ ಸರ್ಕಾರದ ನಡುವಿನ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ ನೀಡಿರುವ ತೀರ್ಪನ್ನು ಪಾಲಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ವಾರ್ತಾ ಭಾರತಿ 15 Apr 2026 10:46 pm

ಡೆನ್ಮಾರ್ಕ್ ಬ್ಯಾಡ್ಮಿಂಟನ್ ದಂತಕತೆ ವಿಕ್ಟರ್ ಅಕ್ಸೆಲ್ಸೆನ್ ನಿವೃತ್ತಿ

ಚೆನ್ನೈ, ಎ.15: ಎರಡು ಬಾರಿಯ ಒಲಿಂಪಿಕ್ಸ್ ಹಾಗೂ ವಿಶ್ವ ಚಾಂಪಿಯನ್ ವಿಕ್ಟರ್ ಅಕ್ಸೆಲ್ಸೆನ್ ತನ್ನ 32ನೇ ವಯಸ್ಸಿನಲ್ಲಿ ವೃತ್ತಿಪರ ಬ್ಯಾಡ್ಮಿಂಟನ್‌ಗೆ ನಿವೃತ್ತಿ ಪ್ರಕಟಿಸಿದ್ದಾರೆ. ಬುಧವಾರದ ತನ್ನ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಡೆನ್ಮಾರ್ಕ್ ಆಟಗಾರ ವಿಕ್ಟರ್, ‘‘ಇಂದು ನನಗೆ ಕಷ್ಟದ ದಿನವಾಗಿದೆ. ನನ್ನ ಬೆನ್ನುನೋವಿನಿಂದಾಗಿ ದೀರ್ಘಕಾಲ ಉನ್ನತ ಮಟ್ಟದಲ್ಲಿ ನನಗೆ ಸ್ಪರ್ಧಿಸಲು ಹಾಗೂ ತರಬೇತಿ ನಡೆಸಲು ಸಾಧ್ಯವಾಗುತ್ತಿಲ್ಲ. ಈ ಪರಿಸ್ಥಿತಿಯನ್ನು ಸ್ವೀಕರಿಸುವುದು ತುಂಬಾ ಕಷ್ಟಕರ. ನನ್ನ ದೇಹವು ಕ್ರೀಡೆಯಲ್ಲಿ ಮುಂದುವರಿಯಲು ಅವಕಾಶ ನೀಡುತ್ತಿಲ್ಲ’’ ಎಂದರು. ವಿಕ್ಟರ್ ಅಕ್ಸೆಲ್ಸೆನ್ 2010ರಲ್ಲಿ ಜೂನಿಯರ್ ವಿಶ್ವ ಚಾಂಪಿಯನ್ ಆಗುವ ಮೂಲಕ ಬೆಳಕಿಗೆ ಬಂದಿದ್ದರು. ಟೋಕಿಯೊ(2021)ಹಾಗೂ ಪ್ಯಾರಿಸ್(2024)ನಲ್ಲಿ ನಡೆದಿದ್ದ ಒಲಿಂಪಿಕ್ ಗೇಮ್ಸ್‌ಗಳಲ್ಲಿ ಸತತ ಚಿನ್ನದ ಪದಕಗಳನ್ನು ಗೆದ್ದಿದ್ದರು. 2016ರಲ್ಲಿ ರಿಯೋ ಡಿ ಜನೈರೊದಲ್ಲಿ ನಡೆದಿದ್ದ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದರು. 2017 ಹಾಗೂ 2022ರಲ್ಲಿ ಎರಡು ವಿಶ್ವ ಚಾಂಪಿಯನ್ಶಿಪ್ ಪ್ರಶಸ್ತಿಗಳನ್ನು ಜಯಿಸಿದ್ದರು. 2021 ಹಾಗೂ 2023ರ ನಡುವೆ ಸತತ ಮೂರು ಬಾರಿ ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ ಫೈನಲ್ಸ್‌ನಲ್ಲಿ ವಿಜಯಿಯಾಗಿದ್ದರು. ಮೂರು ಬಾರಿಯ ಯುರೋಪಿಯನ್ ಚಾಂಪಿಯನ್ ಅಕ್ಸೆಲ್ಸೆನ್ 2016ರಲ್ಲಿ ಡೆನ್ಮಾರ್ಕ್ ತಂಡವು ತನ್ನ ಚೊಚ್ಚಲ ಥಾಮಸ್ ಕಪ್ ಪ್ರಶಸ್ತಿ ಗೆಲ್ಲುವಲ್ಲಿ ನೇತೃತ್ವವಹಿಸಿದ್ದರು. ಪುರುಷರ ಬಿಡಬ್ಲ್ಯುಎಫ್ ರ್ಯಾಂಕಿಂಗ್‌ನಲ್ಲಿ ಒಟ್ಟು 183 ವಾರಗಳ ಕಾಲ ನಂ.1 ಆಟಗಾರನಾಗಿದ್ದರು. ಮಲೇಶ್ಯದ ಲೀ ಚೊಂಗ್ ವೀ(398)ಹಾಗೂ ಚೀನಾದ ಲಿನ್ ಡಾನ್(211) ನಂತರ ದೀರ್ಘಕಾಲ ಅಗ್ರ ಸ್ಥಾನದಲ್ಲಿದ್ದ ಮೂರನೇ ಆಟಗಾರನಾಗಿದ್ದಾರೆ. ‘‘ನಾನು ರಾಕೆಟ್ ಹಿಡಿದ ದಿನದಿಂದಲೇ ವಿಶ್ವದ ಅತ್ಯುತ್ತಮ ಆಟಗಾರನಾಗುವುದು ನನ್ನ ಕನಸಾಗಿತ್ತು. ನಾನು ಈ ಕ್ರೀಡೆಗಾಗಿ ಎಲ್ಲವನ್ನೂ ನೀಡಿದ್ದೇನೆ. ಇದು ನನಗೆ ಕೇವಲ ವೃತ್ತಿಜೀವನವಾಗಿರಲಿಲ್ಲ. ಇದು ನನ್ನ ಜೀವನವಾಗಿತ್ತು. ನಾನು ಯಾವುದೇ ಅವಕಾಶ ಬಿಟ್ಟುಕೊಟ್ಟಿಲ್ಲ’’ ಎಂದು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಫ್ರೆಂಚ್ ಓಪನ್‌ನಿಂದ ಹೊರಗುಳಿದಿದ್ದ ಅಕ್ಸೆಲ್ಸೆನ್ ಹೇಳಿದ್ದಾರೆ.

ವಾರ್ತಾ ಭಾರತಿ 15 Apr 2026 10:46 pm

ನೋಯ್ಡಾ ಕಾರ್ಮಿಕರ ಪ್ರತಿಭಟನೆ| ಹೊರಗುತ್ತಿಗೆ ಸಂಸ್ಥೆ, ಕೈಗಾರಿಕಾ ಘಟಕದ ಗುತ್ತಿಗೆದಾರರೊಂದಿಗೆ ಜಿಲ್ಲಾಧಿಕಾರಿ ಸಭೆ

ಲಕ್ನೋ, ಎ. 15: ನೋಯ್ಡಾದಲ್ಲಿ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಗಾರ್ಮೆಂಟ್ಸ್ ಕಾರ್ಮಿಕರು ಹಿಂಸಾತ್ಮಕ ಪ್ರತಿಭಟನೆ ನಡೆಸಿದ ಒಂದು ದಿನದ ಬಳಿಕ, ಜಿಲ್ಲಾಧಿಕಾರಿ ಬುಧವಾರ ಹೊರಗುತ್ತಿಗೆ ಸಂಸ್ಥೆಗಳು ಹಾಗೂ ವಿವಿಧ ಕೈಗಾರಿಕಾ ಘಟಕಗಳ ಗುತ್ತಿಗೆದಾರರೊಂದಿಗೆ ಸಭೆ ನಡೆಸಿದರು. ಜಿಲ್ಲೆಯಲ್ಲಿ ಕೈಗಾರಿಕಾ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಸರಕಾರದ ಮಾರ್ಗಸೂಚಿಗಳನ್ನು ಸಂಪೂರ್ಣವಾಗಿ ಪಾಲಿಸುವ ಬಗ್ಗೆ ಸಭೆ ಗಮನ ಹರಿಸಿತು. ಸಭೆಯಲ್ಲಿ ನೋಯ್ಡಾದ ಜಿಲ್ಲಾಧಿಕಾರಿ ಮೇಧಾ ರೂಪಂ, ಜನರಿಗೆ ಉದ್ಯೋಗ ಒದಗಿಸುವ ಮೂಲಕ ಕೈಗಾರಿಕಾ ಘಟಕಗಳು ಕಾರ್ಯ ನಿರ್ವಹಿಸುವಲ್ಲಿ ಹೊರಗುತ್ತಿಗೆ ಸಂಸ್ಥೆಗಳು ಹಾಗೂ ಗುತ್ತಿಗೆದಾರರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು. ಆದ್ದರಿಂದ ಕಾನೂನು ಹಾಗೂ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ಜೊತೆಗೆ ಕೈಗಾರಿಕಾ ಘಟಕಗಳಲ್ಲಿ ಕೆಲಸಗಳು ನಡೆಯುವಂತೆ ನಿರಂತರ ಪ್ರಯತ್ನಿಸುವುದು ಎಲ್ಲಾ ಹೊರಗುತ್ತಿಗೆ ಸಂಸ್ಥೆಗಳು ಹಾಗೂ ಗುತ್ತಿಗೆದಾರರ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಯಾವುದೇ ಸಂಸ್ಥೆ, ಅದರ ಸಿಬ್ಬಂದಿ ಅಥವಾ ಕಾರ್ಮಿಕರು ತೊಂದರೆ ಉಂಟು ಮಾಡುವ ನಡವಳಿಕೆಯಲ್ಲಿ ಭಾಗಿಯಾಗಿರುವುದು ಕಂಡು ಬಂದರೆ, ಆ ಸಂಸ್ಥೆಯನ್ನು ಕೂಡ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು. ಅಂತಹ ಪ್ರಕರಣಗಳಲ್ಲಿ, ಹೊರಗುತ್ತಿಗೆ ಸಂಸ್ಥೆಗಳನ್ನು ಕಪ್ಪು ಪಟ್ಟಿಗೆ ಸೇರಿಸಬಹುದು ಹಾಗೂ ಅದರ ಪರವಾನಿಗೆಯನ್ನು ರದ್ದುಗೊಳಿಸಬಹುದು ಎಂದು ಅವರು ತಿಳಿಸಿದರು. ರಾಜ್ಯ ಸರಕಾರ ನಿಗದಿಪಡಿಸಿದ ಕನಿಷ್ಠ ವೇತನವನ್ನು ಉಲ್ಲೇಖಿಸಿದ ಜಿಲ್ಲಾಧಿಕಾರಿ, ಕೌಶಲ ರಹಿತ ಕಾರ್ಮಿಕರಿಗೆ ತಿಂಗಳಿಗೆ 13,690 ರೂ., ಅರೆ ಕೌಶಲಪೂರ್ಣ ಕಾರ್ಮಿಕರಿಗೆ ತಿಂಗಳಿಗೆ 15,059 ಹಾಗೂ ಕೌಶಲಪೂರ್ಣ ಕಾರ್ಮಿಕರಿಗೆ ತಿಂಗಳಿಗೆ 16,868 ವೇತನ ನಿಗದಿಪಡಿಸಲಾಗಿದೆ ಎಂದರು. ಎಲ್ಲಾ ಗುತ್ತಿಗೆದಾರರು ಈ ವೇತನ ಮಾನದಂಡವನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಹಾಗೂ ಪೂರ್ಣ ಪಾವತಿಯನ್ನು ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಅವರು ಸೂಚಿಸಿದ್ದಾರೆ. ಯಾವುದೇ ನಿಯಮಗಳ ಉಲ್ಲಂಘನೆ ಅಥವಾ ಕಾರ್ಮಿಕರ ಶೋಷಣೆ ಕಠಿಣ ಕ್ರಮಕ್ಕೆ ಕಾರಣವಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ವಾರ್ತಾ ಭಾರತಿ 15 Apr 2026 10:43 pm

Kalaburagi | ಸಾವಳಗಿ (ಬಿ) ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಶಿಬಿರ ಉದ್ಘಾಟನೆ

ಕಲಬುರಗಿ: ಶ್ರೀ ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯ ಹಾಗೂ ಗುಲ್ಬರ್ಗಾ ವಿಶ್ವವಿದ್ಯಾಲಯ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವಾರ್ಷಿಕ ವಿಶೇಷ ಶಿಬಿರ 2025-26ರ ಅಂಗವಾಗಿ ಸಾವಳಗಿ (ಬಿ) ಗ್ರಾಮದಲ್ಲಿ “ನನ್ನ ಭಾರತಕ್ಕಾಗಿ ಯುವಕರು” ಹಾಗೂ “ಡಿಜಿಟಲ್ ಸಾಕ್ಷರತೆಗಾಗಿ ಯುವಕರು” ಎಂಬ ಶೀರ್ಷಿಕೆಯಡಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಶಿಬಿರವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿದ ಗುರುನಾಥ ಮಹಾಸ್ವಾಮಿಗಳು, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ಸ್ವಚ್ಛತೆ, ಸೇವಾ ಮನೋಭಾವ ಹಾಗೂ ಸಾಮಾಜಿಕ-ಪರಿಸರ ಪ್ರಜ್ಞೆ ಬೆಳೆಸಿಕೊಳ್ಳುವುದು ಅಗತ್ಯ ಎಂದು ಹೇಳಿದರು. ಗ್ರಾಮೀಣ ಜೀವನಶೈಲಿ ಮತ್ತು ಸ್ವಚ್ಛತೆಯ ಕುರಿತು ಅರಿವು ಹೊಂದಿರುವುದು ಮುಖ್ಯವಾಗಿದ್ದು, ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು. ಇನ್ನೂ ದುಶ್ಚಟಗಳು ಗ್ರಾಮೀಣ ಜನರ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿವೆ. ಗ್ರಾಮಗಳನ್ನು ದುಶ್ಚಟಮುಕ್ತಗೊಳಿಸಲು ಜಾಗೃತಿ ಕಾರ್ಯಕ್ರಮಗಳು ಅಗತ್ಯವಾಗಿದ್ದು, ವಿದ್ಯಾರ್ಥಿಗಳ ಇಂತಹ ಪ್ರಯತ್ನ ಶ್ಲಾಘನೀಯ ಎಂದು ಅವರು ಅಭಿಪ್ರಾಯಪಟ್ಟರು. ಎನ್‌ಎಸ್‌ಎಸ್ ಗೌರವ ಸಲಹೆಗಾರರಾದ ಡಾ. ಲತಾದೇವಿ ಕರೆಕಲ್ ಮಾತನಾಡಿ, ಮಹಾತ್ಮ ಗಾಂಧೀಜಿ ಅವರ ಕನಸಿನಂತೆ ಹಳ್ಳಿಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿ ಎಂದು ಹೇಳಿದರು. ಯುವಕರು ಸೇವಾ ಮನೋಭಾವ ಬೆಳೆಸಿ, ವ್ಯಕ್ತಿತ್ವ ವಿಕಸನದ ಜೊತೆಗೆ ಸಮಾಜ ಪರಿವರ್ತನೆಗೆ ಕಾರಣರಾಗಬೇಕು ಎಂದು ತಿಳಿಸಿದರು. ಕಾರ್ಯಕ್ರಮಕ್ಕೆ ಅಧ್ಯಕ್ಷತೆ ವಹಿಸಿದ್ದ ಡಾ. ಓಂ ಪ್ರಕಾಶ್ ಕೂಡ ಮಾತನಾಡಿದರು. ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್ ಅಧಿಕಾರಿಗಳಾದ ಡಾ. ಬಸವರಾಜ್ ನರಬೋಳಿ ಪ್ರಾಸ್ತಾವಿಕ ಭಾಷಣ ಮಾಡಿದರು. ಡಾ. ರಮೇಶ್ ವಂದಿಸಿದರು. ವೇದಿಕೆಯಲ್ಲಿ ಪವನ ಹಾಗೂ ಡಾ. ಆನಂದ್ ಗುತ್ತೇದಾರ್ ಉಪಸ್ಥಿತರಿದ್ದರು. ಶಿಬಿರಾರ್ಥಿಗಳಾದ ಮಧುರಾ ಶೆಟ್ಟಿ ಅವರ ಪ್ರಾರ್ಥನೆ ಹಾಗೂ ಶಿಬಿರ ಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಶ್ರೀದೇವಿ ಕಾರ್ಯಕ್ರಮ ನಿರೂಪಿಸಿದರು. ಸ್ಫೂರ್ತಿ ಅತಿಥಿಗಳನ್ನು ಪರಿಚಯಿಸಿದರು.

ವಾರ್ತಾ ಭಾರತಿ 15 Apr 2026 10:40 pm

ಮಧ್ಯಪ್ರಾಚ್ಯ ಸಂಘರ್ಷ| ನೇರ ಮಾತುಕತೆಗೆ ಇಸ್ರೇಲ್, ಲೆಬನಾನ್ ಒಪ್ಪಿಗೆ

ವಾಶಿಂಗ್ಟನ್, ಎ.15: ಅಮೆರಿಕದ ವಾಶಿಂಗ್ಟನ್‍ನಲ್ಲಿ ಮಂಗಳವಾರ ನಡೆದ ಉತ್ಪಾದಕ ಮಾತುಕತೆಯ ಬಳಿಕ ಮಹತ್ವದ ಬೆಳವಣಿಗೆಯಲ್ಲಿ ಇಸ್ರೇಲ್ ಮತ್ತು ಲೆಬನಾನ್ ನೇರ ಮಾತುಕತೆ ನಡೆಸಲು ಒಪ್ಪಿಕೊಂಡಿವೆ ಎಂದು ಅಮೆರಿಕದ ವಿದೇಶಾಂಗ ಇಲಾಖೆ ವಕ್ತಾರ ಟಾಮಿ ಪಿಗೊಟ್ ಹೇಳಿದ್ದಾರೆ. ಮಂಗಳವಾರ ಅಮೆರಿಕದ ನೇತೃತ್ವದಲ್ಲಿ ನಡೆದ ತ್ರಿಪಕ್ಷೀಯ ಮಾತುಕತೆಯಲ್ಲಿ ಎರಡೂ ನಿಯೋಗಗಳು ಪರಸ್ಪರ ಒಪ್ಪಿದ ಸಮಯ ಮತ್ತು ಸ್ಥಳದಲ್ಲಿ ನೇರ ಮಾತುಕತೆ ನಡೆಸಲು ಸಮ್ಮತಿಸಿದ್ದು ಇದು ಗಡಿಯಲ್ಲಿ ಉದ್ವಿಗ್ನತೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಸಂಭಾವ್ಯ ಹೆಜ್ಜೆಯಾಗಿದೆ. ಇರಾನ್ ಬೆಂಬಲಿತ ಹಿಜ್ಬುಲ್ಲಾವನ್ನು ವಿರೋಧಿಸುವಲ್ಲಿ ಎರಡೂ ದೇಶಗಳು ಒಂದೇ ನಿಲುವು ಹೊಂದಿವೆ. ಇರಾನ್ ಬೆಂಬಲಿತ ಹಿಜ್ಬುಲ್ಲಾದ ಆಕ್ರಮಣದಿಂದ ಲೆಬನಾನ್ ಅನ್ನು ಸ್ವತಂತ್ರಗೊಳಿಸಲು ನಾವಿಬ್ಬರೂ ಒಗ್ಗೂಡುತ್ತೇವೆ' ಎಂದು ಇಸ್ರೇಲಿ ರಾಯಭಾರಿ ಯೆಚಿಲ್ ಲೀಟರ್ ಹೇಳಿದ್ದಾರೆ. ಮಾತುಕತೆ ರಚನಾತ್ಮಕವಾಗಿತ್ತು. ಇದೀಗ ಕದನ ವಿರಾಮ, ಸ್ಥಳಾಂತರಗೊಂಡ ನಾಗರಿಕರ ಮರಳುವಿಕೆ ಮತ್ತು ಲೆಬನಾನ್‍ಗೆ ತನ್ನ ಪ್ರದೇಶದ ಮೇಲೆ ಸಂಪೂರ್ಣ ಸಾರ್ವಭೌಮತ್ವದ ನಿಟ್ಟಿನಲ್ಲಿ ಕೆಲಸ ಮಾಡುವ ಅಗತ್ಯವಿದೆ ಎಂದು ಲೆಬನಾನ್ ರಾಯಭಾರಿ ನಡಾ ಹಮದೇಹ್ ಮೊವಾಡ್ ಸಭೆಯ ಬಳಿಕ ಹೇಳಿದ್ದಾರೆ.

ವಾರ್ತಾ ಭಾರತಿ 15 Apr 2026 10:34 pm

SSLC ಹಿಂದಿ ಪರೀಕ್ಷೆಗೆ ಗ್ರೇಡ್‌ ಬೇಡ, ಅಂಕ ನೀಡಲು ಹೈಕೋರ್ಟ್‌ ಆದೇಶ; ಕರ್ನಾಟಕ ಸರ್ಕಾರಕ್ಕೆ ತೀವ್ರ ಹಿನ್ನಡೆ

ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ 'ಗ್ರೇಡ್' ಬದಲಿಗೆ 'ಅಂಕ'ಗಳನ್ನೇ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡಿದೆ. ಯುಪಿಎಸ್‌ಸಿ ಹಾಗೂ ಬ್ಯಾಂಕಿಂಗ್‌ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಗ್ರೇಡಿಂಗ್ ಪರಿಗಣಿಸದ ಕಾರಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗಲಿದೆ ಎಂಬ ಅರ್ಜಿದಾರರ ವಾದವನ್ನು ನ್ಯಾಯಪೀಠ ಪುರಸ್ಕರಿಸಿದೆ. ಇದರಿಂದ ಗ್ರೇಡಿಂಗ್ ವ್ಯವಸ್ಥೆ ತರಲು ಮುಂದಾಗಿದ್ದ ಸರ್ಕಾರಕ್ಕೆ ಹಿನ್ನಡೆಯಾಗಿದೆ.

ವಿಜಯ ಕರ್ನಾಟಕ 15 Apr 2026 10:33 pm

ಲೆಬನಾನ್: ಇಸ್ರೇಲ್ ದಾಳಿಯಲ್ಲಿ ಮೂವರು ವೈದ್ಯಕೀಯ ಸಿಬ್ಬಂದಿ ಮೃತ್ಯು

ಬೈರೂತ್, ಎ.15: ದಕ್ಷಿಣ ಲೆಬನಾನ್‍ನಲ್ಲಿ ಬುಧವಾರ ಇಸ್ರೇಲ್‌ ಮಿಲಿಟರಿ ನಡೆಸಿದ ದಾಳಿಯಲ್ಲಿ ಕನಿಷ್ಠ ಮೂವರು ವೈದ್ಯಕೀಯ ಸಿಬ್ಬಂದಿ ಮೃತಪಟ್ಟಿರುವುದಾಗಿ ಲೆಬನಾನ್‍ನ ಆರೋಗ್ಯ ಇಲಾಖೆ ಹೇಳಿದೆ. ನಬಾತಿಯೆಹ್ ಜಿಲ್ಲೆಯ ಮೇಫಡೌನ್ ಪಟ್ಟಣದಲ್ಲಿ ವೈದ್ಯಕೀಯ ತಂಡವನ್ನು ಗುರಿಯಾಗಿಸಿ ಇಸ್ರೇಲ್ ಮಿಲಿಟರಿ ಸರಣಿ ದಾಳಿ ನಡೆಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎಎಫ್‍ಪಿ ವರದಿ ಮಾಡಿದೆ.

ವಾರ್ತಾ ಭಾರತಿ 15 Apr 2026 10:31 pm

ಗುಜರಾತ್| ತಿಂಗಳುಗಳಿಂದಲೂ ಮನರೇಗಾ ಕೂಲಿ ಬಾಕಿ; ಕಾರ್ಮಿಕರಿಂದ ತೀವ್ರ ಆಕ್ರೋಶ

ಅಹ್ಮದಾಬಾದ್: ಗುಜರಾತಿನಲ್ಲಿ ಮನರೇಗಾ ಯೋಜನೆಯಡಿ ಕಾರ್ಮಿಕರಿಗೆ ಕಳೆದ ಐದಾರು ತಿಂಗಳುಗಳಿಂದಲೂ ಕೂಲಿ ಪಾವತಿಯಾಗಿಲ್ಲ. ಇದು ರಾಜ್ಯಾದ್ಯಂತ ಆಕ್ರೋಶವನ್ನು ಸೃಷ್ಟಿಸಿದ್ದು,ಗ್ರಾಮೀಣ ಪ್ರದೇಶಗಳಲ್ಲಿ ತೀವ್ರ ಸಂಕಷ್ಟಕ್ಕೆ ಕಾರಣವಾಗಿದೆ. ಬಾಕಿಯನ್ನು ತಕ್ಷಣವೇ ಪಾವತಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆಯನ್ನು ನಡೆಸುವುದಾಗಿ ಕಾರ್ಮಿಕ ಸಂಘಟನೆಗಳು ಎಚ್ಚರಿಕೆ ನೀಡಿವೆ. ವೇತನ ವಿಳಂಬದ ದೂರುಗಳಿಂದ ಆರಂಭಗೊಂಡಿದ್ದ ಸಮಸ್ಯೆ ಈಗ ರಾಜ್ಯವ್ಯಾಪಿ ಬಿಕ್ಕಟ್ಟಾಗಿ ಮಾರ್ಪಟ್ಟಿದ್ದು, ಸೌರಾಷ್ಟ್ರದ ಉನಾ ಮತ್ತು ಗಿರಗಢಾದಂತಹ ಪ್ರದೇಶಗಳು ಅತ್ಯಂತ ಸಂಕಷ್ಟಕ್ಕೆ ತುತ್ತಾಗಿವೆ. ರಾಜ್ಯಾದ್ಯಂತ ಮನರೇಗಾ ಕಾರ್ಮಿಕರು ಮತ್ತು ಉದ್ಯೋಗಿಗಳು ನಿರಂತರವಾಗಿ ಕೆಲಸ ಮಾಡುತ್ತಿದ್ದರೂ ಐದಾರು ತಿಂಗಳುಗಳಿಂದಲೂ ಅವರಿಗೆ ವೇತನಗಳನ್ನು ಪಾವತಿಸಲಾಗಿಲ್ಲ. ಇದು ಕೇವಲ ವಿಳಂಬವಲ್ಲ,ಇದು ಆಡಳಿತಾತ್ಮಕ ಕಾರ್ಯ ವೈಖರಿ ಮತ್ತು ಹಣಕಾಸು ನಿರ್ವಹಣೆಯಲ್ಲಿ ಗಂಭೀರ ಲೋಪಗಳನ್ನು ತೋರಿಸುತ್ತಿದೆ. ಕಾರ್ಮಿಕರ ಕುಟುಂಬಗಳು ತೀವ್ರ ಹಣಕಾಸು ತೊಂದರೆಗೆ ಸಿಲುಕಿವೆ. ಮೂಲಭೂತ ಅಗತ್ಯಗಳಿಗೂ ಹಣವಿಲ್ಲದೆ ಜನರು ಸಾಲದ ಮೊರೆ ಹೋಗುತ್ತಿದ್ದಾರೆ ಎಂದು ಅಖಿಲ ಗುಜರಾತ್ ಮನರೇಗಾ ಉದ್ಯೋಗಿಗಳ ಯೂನಿಯನ್ ಅಧ್ಯಕ್ಷ ರಾಕೇಶ್‌ ಕುಮಾರ್‌ ಕಳವಳ ವ್ಯಕ್ತಪಡಿಸಿದರು.

ವಾರ್ತಾ ಭಾರತಿ 15 Apr 2026 10:25 pm

ಹೊಸಪೇಟೆ | 1,368 ಕೆಜಿ ಅಕ್ರಮ ಪಡಿತರ ಅಕ್ಕಿ ವಶ

ವಿಜಯನಗರ (ಹೊಸಪೇಟೆ): ನಗರದ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಪಡಿತರ ಅಕ್ಕಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಬೆಳಕಿಗೆ ಬಂದಿದೆ. ಸಂಡೂರು ರಸ್ತೆಯ ಎಲ್.ಎಫ್.ಎಸ್ ಶಾಲೆಯ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಂಗ್ರಹಿಸಿ ಸಾಗಾಣಿಕೆಗೆ ಸಿದ್ಧತೆ ನಡೆಸುತ್ತಿರುವ ಕುರಿತು ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ ತಾಲೂಕು ಕಚೇರಿಯ ಆಹಾರ ನಿರೀಕ್ಷಕರು ಎ.14ರಂದು ದೂರು ನೀಡಿದ್ದರು. ಈ ದೂರಿನ ಮೇರೆಗೆ ಬಡಾವಣೆ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ದಾಳಿ ನಡೆಸಿ, 4 ಚಕ್ರದ ಸರಕು ಸಾಗಣೆ ವಾಹನದಲ್ಲಿ ಇರಿಸಲಾಗಿದ್ದ 36 ಚೀಲಗಳಲ್ಲಿ ಒಟ್ಟು 1,368 ಕೆ.ಜಿ ಪಡಿತರ ಅಕ್ಕಿಯನ್ನು ಪತ್ತೆಹಚ್ಚಿದರು. ವಶಪಡಿಸಿಕೊಂಡ ಅಕ್ಕಿಯ ಅಂದಾಜು ಮೌಲ್ಯ 30,944 ರೂ. ಎಂದು ತಿಳಿದುಬಂದಿದೆ. ಅಕ್ಕಿ ಸಾಗಾಣಿಕೆಗೆ ಬಳಸಲಾಗುತ್ತಿದ್ದ ವಾಹನವನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದು, ಈ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂ. 41/26 ಅಡಿಯಲ್ಲಿ ಅಗತ್ಯ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಅಕ್ರಮ ಪಡಿತರ ವಸ್ತುಗಳ ಸಂಗ್ರಹ ಮತ್ತು ಸಾಗಾಣಿಕೆಯನ್ನು ತಡೆಯಲು ಕ್ರಮಗಳನ್ನು ಮತ್ತಷ್ಟು ಕಠಿಣಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾರ್ತಾ ಭಾರತಿ 15 Apr 2026 10:25 pm

ಹುಬ್ಬಳ್ಳಿ-ಧಾರವಾಡ ಪಾಲಿಕೆಯಲ್ಲಿ ವಾರ್ಡ್ ಸಮಿತಿ ರಚನೆಗೆ ಕೋರಿ ಪಿಐಎಲ್; ಸರಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯ ಎಲ್ಲ ವಾರ್ಡ್‌ಗಳಲ್ಲಿ ಸ್ಥಳೀಯ ವಾರ್ಡ್ ಸಮಿತಿಗಳು ಹಾಗೂ ಏರಿಯಾ ಸಭಾಗಳನ್ನು ರಚಿಸಲು ನಿರ್ದೇಶನ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಹುಬ್ಬಳ್ಳಿ-ಧಾರವಾಡ ವಾರ್ಡ್ ಸಮಿತಿ ಬಳಗ ಟ್ರಸ್ಟ್‌ನ ಸಂಚಾಲಕ ಲಿಂಗರಾಜ ಧಾರವಾಡ ಶೆಟ್ಟರ್ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ ಪ್ರತಿವಾದಿಗಳಾದ ನಗರಾಭಿವೃದ್ದಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಆಗಸ್ಟ್ 4ಕ್ಕೆ ಮುಂದೂಡಿತು. ಅರ್ಜಿದಾರರ ಮನವಿ ಏನು? ಸಂವಿಧಾನದ 73ನೇ ತಿದ್ದುಪಡಿಯಂತೆ 3 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಪಾಲಿಕೆಗಳಲ್ಲಿ ವಾರ್ಡ್ ಸಮಿತಿಗಳನ್ನು ರಚಿಸುವುದು ಕಡ್ಡಾಯವಾಗಿದೆ. ಅಲ್ಲದೇ ಕರ್ನಾಟಕ ಪೌರನಿಗಮಗಳ ಕಾಯ್ದೆ-1976ಕ್ಕೆ ರಾಜ್ಯ ಸರ್ಕಾರ 2011ರಲ್ಲಿ ತಂದಿರುವ ತಿದ್ದುಪಡಿಯಲ್ಲಿ ವಾರ್ಡ್ ಸಮಿತಿಗಳ ರಚನೆಯನ್ನು ಕಡ್ಡಾಯಗೊಳಿಸಲಾಗಿದೆ. ಈ ವಿಚಾರವಾಗಿ 2022ರಲ್ಲಿ ಪಾಲಿಕೆಯ ಮೇಯರ್, ವಿಶೇಷ ಸದನ ಸಮಿತಿಗೆ ಮನವಿ ಸಲ್ಲಿಸಲಾಗಿದೆ. 2023ರಲ್ಲಿ ಮುಖ್ಯಮಂತ್ರಿ, 2024ರಲ್ಲಿ ನಗರಾಭಿವೃದ್ದಿ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಇದಲ್ಲದೆ ಸ್ಥಳೀಯ ಶಾಸಕರು, ಲೋಕಸಭಾ ಸದಸ್ಯರಿಗೂ ಹಲವು ಬಾರಿ ಮನವಿಯನ್ನು ಮಾಡಲಾಗಿದೆ. 2025ರಲ್ಲಿ ಅರ್ಜಿದಾರ ಸಂಸ್ಥೆಯು ಪಾಲಿಕೆಗೆ ಲೀಗಲ್ ನೋಟಿಸ್ ಸಹ ಕೊಟ್ಟಿದೆ. ಹೀಗಿದ್ದರೂ, ಈವರೆಗೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆಕ್ಷೇಪಿಸಿರುವ ಅರ್ಜಿದಾರರು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ವಾರ್ಡ್ ಸಮಿತಿಗಳನ್ನು ರಚಿಸುವಂತೆ ನಿರ್ದೇಶನ ನೀಡಬೇಕು ಎಂದು ಕೋರಿದ್ದಾರೆ.

ವಾರ್ತಾ ಭಾರತಿ 15 Apr 2026 10:20 pm

ಹಾರ್ಮಝ್‌ ಜಲಸಂಧಿಯನ್ನು ದಾಟಿ ಗುಜರಾತ್ ತಲುಪಿದ ಎಲ್‌ಪಿಜಿ ಹೊತ್ತ ‘ಜಗ್ ವಿಕ್ರಮ್ʼ ಹಡಗು

ಅಹ್ಮದಾಬಾದ್, ಎ. 15: ಪಶ್ಚಿಮ ಏಶ್ಯಾ ಬಿಕ್ಕಟ್ಟಿನ ನಡುವೆ 20,400 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತ ಭಾರತದ ‘ಜಗ್ ವಿಕ್ರಮ್’ ಹಡಗು ಗುಜರಾತ್‌ನ ಕಾಂಡ್ಲಾ ಬಂದರಿಗೆ ಆಗಮಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಅಮೆರಿಕ ಹಾಗೂ ಇರಾನ್ ನಡುವೆ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮದ ಹಿನ್ನೆಲೆಯಲ್ಲಿ ಈ ಹಡಗು ಹಾರ್ಮುಝ್ ಜಲಸಂಧಿಯನ್ನು ದಾಟಿತ್ತು. ಅದು ಮಂಗಳವಾರ ರಾತ್ರಿ ಕಚ್ಛ್ ನ ಡಿಪಿಎ ಕಾಂಡ್ಲಾ ಬಂದರಿನ ತೈಲ ಜಟ್ಟಿ-1ರಲ್ಲಿ ಲಂಗರು ಹಾಕಿದೆ ಎಂದು ದೀನ್‌ ದಯಾಳ್‌ ಬಂದರು ಪ್ರಾಧಿಕಾರ ಹೇಳಿಕೆಯಲ್ಲಿ ತಿಳಿಸಿದೆ. ಮಾರ್ಚ್ ತಿಂಗಳ ಆರಂಭದಲ್ಲಿ ಪರ್ಶಿಯನ್ ಕೊಲ್ಲಿಯಿಂದ ನಿರ್ಗಮಿಸಿದ 9ನೇ ಹಡಗು ಇದಾಗಿದೆ. ಈಗ ಭಾರತದ ಇತರ 15 ಹಡಗುಗಳು ಈ ವಲಯದಲ್ಲಿದ್ದು, ಅನುಮತಿಗಾಗಿ ಕಾಯುತ್ತಿವೆ ಎಂದು ಸರಕಾರದ ಅಧಿಕಾರಿಗಳು ತಿಳಿಸಿದ್ದಾರೆ. ‘ಜಗ್ ವಿಕ್ರಮ್’ ಹಡಗು ಎಪ್ರಿಲ್ 11ರಂದು ಹಾರ್ಮುಝ್‌ ಜಲ ಸಂಧಿಯನ್ನು ದಾಟಿತ್ತು. ಇದರೊಂದಿಗೆ ಎರಡು ವಾರಗಳ ಕದನ ವಿರಾಮ ಘೋಷಿಸಿದ ಬಳಿಕ ಅಲ್ಲಿಂದ ಸಾಗಿ ಬಂದ ಮೊದಲ ಹಡಗು ಇದಾಗಿದೆ.

ವಾರ್ತಾ ಭಾರತಿ 15 Apr 2026 10:15 pm

ಮುಟ್ಟಿನ ರಜೆ ನೀತಿಯನ್ನು ಎಲ್ಲ ವಲಯಗಳಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲು ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು/ಧಾರವಾಡ : ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ನೀಡುವ ಸಂಬಂಧ ರೂಪಿಸಲಾಗಿರುವ ನೀತಿಯನ್ನು ಕಟ್ಟುನಿಟ್ಟಾಗಿ ಸಂಘಟಿತ ಮತ್ತು ಅಸಂಘಟಿತ ವಲಯಗಳಲ್ಲಿ ಜಾರಿಗೊಳಿಸಲು ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ. ಕರ್ನಾಟಕ ಗೆಜೆಟ್‌ನಲ್ಲಿ ಪ್ರಕಟಗೊಂಡಿರುವ ಹೊರತಾಗಿಯೂ ಋತುಚಕ್ರದ ರಜೆ ನೀತಿಯನ್ನು ಹೋಟೆಲ್‌ಗಳು ಮತ್ತಿತರ ಸಂಸ್ಥೆಗಳಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಲಾಗಿಲ್ಲ ಎಂದು ಆಕ್ಷೇಪಿಸಿ ಬೆಳಗಾವಿ ಜಿಲ್ಲೆಯ ಹೋಟೆಲ್ ಉದ್ಯೋಗಿ ಚಂದ್ರವ್ವ ಹಣಮಂತ ಗೋಕಾವಿ ಸಲ್ಲಿಸಿದ್ದ ರಿಟ್ ಅರ್ಜಿ ಕುರಿತು ಧಾರವಾಢದಲ್ಲಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಪ್ರಕಟಿಸಿತು‌. ಅರ್ಜಿ ಇತ್ಯರ್ಥಪಡಿಸಿರುವ ನ್ಯಾಯಪೀಠ, ಅಸಂಘಟಿತ ವಲಯ ಸೇರಿ ಎಲ್ಲ ವಲಯಗಳಲ್ಲೂ ಸರ್ಕಾರ ತನ್ನ ನೀತಿ ಜಾರಿಗೊಳಿಸುವುದನ್ನು ಖಾತ್ರಿಪಡಿಸಬೇಕು. ಸಂವಿಧಾನದಲ್ಲಿ ಅಡಕವಾಗಿರುವ ಜೀವಿಸುವ ಮತ್ತು ಸಮಾನತೆಯ ಹಕ್ಕನ್ನು ಮುಟ್ಟಿನ ರಜೆಯ ನೀತಿ ಮತ್ತು ಇದರ ಸಂಬಂಧ ವಿಧಾನಸಭೆಯಲ್ಲಿ ಮಂಡಿಸಲಾಗಿರುವ ಮಸೂದೆಯಲ್ಲಿ ವಿಸ್ತರಿಸಲಾಗಿದೆ ಎಂದು ಹೇಳಿದೆ. ಕಾನೂನಿನಲ್ಲಿ ಸಮಾನರಾದರೂ ಜೈವಿಕವಾಗಿ ಭಿನ್ನ: ಮಹಿಳೆ ಮತ್ತು ಪುರುಷ ಇಬ್ಬರೂ ಸಮಾನರು ಎಂದು ಕಾನೂನು ಹೇಳಿದರೂ ಜೈವಿಕ ಅನುಭವಗಳು ಅವರನ್ನು ಪ್ರತ್ಯೇಕಿಸುತ್ತವೆ. ಆದ್ದರಿಂದ, ಮುಟ್ಟಿನ ರಜೆಯ ಮನವಿಯು ವಿಶೇಷದ ವಿಚಾರವಲ್ಲ. ಬದಲಿಗೆ ಅದು ಘನತೆ, ನ್ಯಾಯಯುತ ಮತ್ತು ಮಹಿಳೆಯ ವಾಸ್ತವಿಕ ಬದುಕಿನ ಮಾನವೀಯ ಅರಿವು ಎಂದು ನ್ಯಾಯಾಲಯ ಆದೇಶದಲ್ಲಿ ಅಭಿಪ್ರಾಯಪಟ್ಟಿದೆ. ಕಾನೂನಿನ ದೃಷ್ಟಿಯಲ್ಲಿ ಪುರುಷರು ಮತ್ತು ಮಹಿಳೆಯರು ಸಮಾನರು; ಆದರೂ, ಅವರು ಜೈವಿಕವಾಗಿ ಭಿನ್ನರು. ಅಂತಹ ವ್ಯತ್ಯಾಸಗಳನ್ನು ಒಪ್ಪಿಕೊಳ್ಳುವುದು, ವಿಶೇಷವಾಗಿ ಆರೋಗ್ಯ, ಘನತೆ ಮತ್ತು ದೈಹಿಕ ಸ್ವಾಯತ್ತತೆಗೆ ಸಂಬಂಧಿಸಿದ ವಿಷಯಗಳಲ್ಲಿ, ಸಮಾನತೆಯ ಗ್ಯಾರಂಟಿಯನ್ನು ತುಳಿಯುವುದಕ್ಕೆ ಬದಲಾಗಿ ಗಣನೀಯ ಅರ್ಥವನ್ನು ನೀಡುವುದಾಗಿದೆ ಎಂದು ಹೈಕೋರ್ಟ್ ಹೇಳಿದೆ. ಪ್ರಕರಣವೇನು? ಬೆಳಗಾವಿಯ ಹೋಟೆಲ್ ಒಂದರಲ್ಲಿ ಅಡುಗೆ ಕೆಲಸಗಾರರಾಗಿರುವ ಚಂದ್ರವ್ವ ಹಣಮಂತ ಗೋಕಾವಿ ಮುಟ್ಟಿನ‌ ಸಂದರ್ಭದಲ್ಲಿ ರಜೆ ನೀಡುವಂತೆ ಕೋರಿದ್ದರು. ಆದರೆ, ರಜೆ ನೀಡಲು ಹೋಟೆಲ್ ಮಾಲೀಕರು ನಿರಾಕರಿಸಿದ್ದರು. ಇದರಿಂದ, ಕಾರ್ಮಿಕ ಇಲಾಖೆಗೆ ಮನವಿಪತ್ರ ಸಲ್ಲಿಸಿದ್ದ ಚಂದ್ರವ್ವ, ಮಹಿಳಾ ನೌಕರರಿಗೆ ಮುಟ್ಟಿನ ಸಂದರ್ಭದಲ್ಲಿ ಒಂದು ದಿನ ವೇತನಸಹಿತ ರಜೆ ನೀಡುವ ನೀತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು. ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಅಧಿನಿಯಮ ಹಾಗೂ ಕಾರ್ಖಾನೆಗಳ ಅಧಿನಿಯಮಕ್ಕೆ ಒಳಪಡುವ ಎಲ್ಲ ಸಂಸ್ಥೆಗಳಲ್ಲಿ ಸರಕಾರದ ನೀತಿಯ ಏಕರೂಪ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು. ರಜೆ ಪಡೆಯುವ ಮಹಿಳಾ ನೌಕರರಿಗೆ ವೇತನ ಕಡಿತ, ಬೆದರಿಕೆ ಅಥವಾ ಕೆಲಸದಿಂದ ದೂರವಿಡುವ ಕ್ರಮಗಳು ‌ನಡೆದರೆ ಅದನ್ನು ಕಾರ್ಮಿಕ ಕಾನೂನು ಉಲ್ಲಂಘನೆ ಎಂದು ಪರಿಗಣಿಸಿ ಕ್ರಮ ಜರುಗಿಸಬೇಕು. ತಳಮಟ್ಟದ ಮಹಿಳಾ ಕಾರ್ಮಿಕರಿಗೆ ಅವರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಕೋರಿದ್ದರು. ಆ ಮನವಿಗೆ ಯಾವುದೇ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಚಂದ್ರವ್ವ ಹೈಕೋರ್ಟ್‌‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿದಾರೆಯ ಪರವಾಗಿ ವಕೀಲೆ ದೀಕ್ಷಾ ಅಮೃತೇಶ್‌ ವಾದಿಸಿದ್ದರು. ಇನ್ನು ರಾಜ್ಯ ಸರ್ಕಾರದ ಋತುಚಕ್ರ ರಜೆ ನೀತಿ ಪ್ರಶ್ನಿಸಿ ಹಲವು ರಿಟ್ ಅರ್ಜಿಗಳು ಸಲ್ಲಿಕೆಯಾಗಿದ್ದು, ನ್ಯಾಯಮೂರ್ತಿ ಅನಂತ ರಾಮನಾಥ ಹೆಗ್ಡೆ ಅವರ ಏಕಸದಸ್ಯ ನ್ಯಾಯಪೀಠ ಈ ಎಲ್ಲ ಅರ್ಜಿಗಳ ವಿಚಾರಣೆ ನಡೆಸುತ್ತಿದೆ.

ವಾರ್ತಾ ಭಾರತಿ 15 Apr 2026 10:15 pm

ʼಜಾನಪದ ಶ್ರೀ ಪ್ರಶಸ್ತಿಗೆ ಬಿ.ಲಕ್ಷ್ಮಣ ಆಯ್ಕೆ

ಯಾದಗಿರಿ : ರಾಜ್ಯ ಸರಕಾರದ 2025-26ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ, ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರಶಸ್ತಿ , ಸಾಹಿತ್ಯ ಹಾಗೂ ನಾಟಕ ಪ್ರಶಸ್ತಿ, ಕಲಾ ಪ್ರಶಸ್ತಿ ಮತ್ತು ಸಂಗೀತ ನೃತ್ಯ ವಿಭಾಗದ ಪ್ರಶಸ್ತಿಗಳಿಗೆ ಹಲವು ಸಾಧಕರನ್ನು ಆಯ್ಕೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಬಿ. ಲಕ್ಷ್ಮಣ ಅವರು ಜಾನಪದ ಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ದುಂದುಮೆಯ ದುಂದುಭಿ ಎಂಬ ಜನಪದ ಹಾಡಿನ ಮೂಲಕ ಪರಿಚಿತರಾಗಿರುವ ಲಕ್ಷ್ಮಣ ಅವರು, ಜಾನಪದ ಕಲೆ ಉಳಿವಿಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಹಲವು ವರ್ಷಗಳಿಂದ ಗ್ರಾಮೀಣ ಭಾಗಗಳಲ್ಲಿ ಜನಪದ ಸಂಸ್ಕೃತಿಯನ್ನು ಜೀವಂತವಾಗಿರಿಸಲು ಅವರು ಶ್ರಮಿಸಿದ ಪ್ರಯುಕ್ತ ಸರ್ಕಾರ ಅವರನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ವಾರ್ತಾ ಭಾರತಿ 15 Apr 2026 10:14 pm

ದೇಶೀಯ ಗ್ರಾಹಕರಿಗೆ ಶೇ.100ರಷ್ಟು ಎಲ್‌ಪಿಜಿ, ಪಿಎನ್‌ಜಿ ಪೂರೈಕೆ: ಕೇಂದ್ರ ಸರಕಾರ ಭರವಸೆ

ಹೊಸದಿಲ್ಲಿ,ಎ.15: ಪಶ್ಚಿಮ ಏಶ್ಯಾ ಸಂಘರ್ಷದಿಂದ ಉಂಟಾಗಿರುವ ಇಂಧನ ವ್ಯತ್ಯಯಗಳ ನಡುವೆಯೂ ದೇಶದ ಗ್ರಾಹಕರ ಅಗತ್ಯಗಳಿಗೆ ಆದ್ಯತೆ ನೀಡುವ ಮೂಲಕ ಶೇ.100ರಷ್ಟು ಪೈಪ್ಡ್ ನೈಸರ್ಗಿಕ ಅನಿಲ (ಪಿಎನ್‌ಜಿ) ಮತ್ತು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಪೂರೈಕೆ ಮಾಡುವುದಾಗಿ ಕೇಂದ್ರ ಸರಕಾರವು ಭರವಸೆ ನೀಡಿದೆ. ಪಶ್ಚಿಮ ಏಶ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ(ಮಾರುಕಟ್ಟೆ ಮತ್ತು ತೈಲ ಸಂಸ್ಕರಣಾಗಾರ) ಸುಜಾತಾ ಶರ್ಮಾ ಅವರು, ಇಂಧನ ಪೂರೈಕೆಯನ್ನು ಸ್ಥಿರಗೊಳಿಸಲು ಮತ್ತು ಅಗತ್ಯ ಸೇವೆಗಳನ್ನು ನಿರ್ವಹಿಸಲು ಸರಕಾರವು ಹಲವಾರು ಪರಿಣಾಮಕಾರಿ ಕ್ರಮಗಳನ್ನು ಜಾರಿಗೊಳಿಸಿದೆ ಎಂದು ಹೇಳಿದರು. ನಿಮಗೆ ತಿಳಿದಿರುವಂತೆ ಪಶ್ಚಿಮ ಏಶ್ಯಾ ಬಿಕ್ಕಟ್ಟು ಭಾರತದ ಇಂಧನ ಪೂರೈಕೆಗಳ ಮೇಲೆಯೂ ವ್ಯತಿರಿಕ್ತ ಪರಿಣಾಮಗಳನ್ನು ಬೀರಿದೆ. ಆದರೆ ಭಾರತ ಸರಕಾರವು ಹಲವಾರು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ದೇಶಿಯ ಪಿಎನ್‌ಜಿ ಮತ್ತು ಎಲ್‌ಪಿಜಿ ಗ್ರಾಹಕರಿಗೆ ಆದ್ಯತೆ ನೀಡುವ ಮೂಲಕ ಶೇ.100ರಷ್ಟು ಪೂರೈಕೆಯನ್ನು ಖಚಿತಪಡಿಸಲಾಗಿದೆ. ಇದರ ಜೊತೆಗೆ ಸಿಎನ್‌ಜಿ ಸಾಗಾಣಿಕೆಯನ್ನು ಶೇ.100ರಷ್ಟು ಖಚಿತಪಡಿಸಿಕೊಳ್ಳಲಾಗಿದೆ ಎಂದು ಶರ್ಮಾ ತಿಳಿಸಿದರು. ಸರಕಾರದ ಪ್ರಯತ್ನಗಳನ್ನು ಬೆಂಬಲಿಸಲು ದೇಶೀಯ ಸಂಸ್ಕರಣಾಗಾರಗಳು ಎಲ್‌ಪಿಜಿ ಉತ್ಪಾದನೆಯನ್ನು ಹೆಚ್ಚಿಸಿವೆ. ಇದೇ ವೇಳೆ ಬೇಡಿಕೆಯನ್ನು ನಿಭಾಯಿಸಲು ಸರಕಾರವು ಬುಕಿಂಗ್ ಅವಧಿಯನ್ನು ನಗರ ಪ್ರದೇಶಗಳಲ್ಲಿ 25 ದಿನಗಳಿಗೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 45 ದಿನಗಳಿಗೆ ನಿಗದಿಗೊಳಿಸಿದೆ ಎಂದರು. ಈ ವ್ಯೆಹಾತ್ಮಕ ಕ್ರಮಗಳಿಂದಾಗಿ ವಾಣಿಜ್ಯ ಎಲ್‌ಪಿಜಿ ಪೂರೈಕೆಯನ್ನು ಶೇ.70ರಷ್ಟು ಹೆಚ್ಚಿಸಲು ಸಾಧ್ಯವಾಗಿದೆ. ಸರಕಾರವು ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಔಷಧಿಗಳು, ಉಕ್ಕು, ವಾಹನಗಳು ಮತ್ತು ಕೃಷಿಯಂತಹ ಕೈಗಾರಿಕೆಗಳು ಸೇರಿದಂತೆ ಪ್ರಮುಖ ವಲಯಗಳಿಗೂ ಆದ್ಯತೆಯನ್ನು ನೀಡಿದೆ. ಮಾ.14ರಿಂದ 1,34,000 ಟನ್‌ಗಳಷ್ಟು ವಾಣಿಜ್ಯ ಎಲ್‌ಪಿಜಿಯನ್ನು ಮಾರಾಟ ಮಾಡಲಾಗಿದೆ ಎಂದು ಶರ್ಮಾ ಹೇಳಿದರು. ದೇಶಿಯ ಎಲ್‌ಪಿಜಿ ಪೂರೈಕೆಯು ಸಹಜ ಸ್ಥಿತಿಯಲ್ಲಿದೆ. ಐದು ಕೆಜಿ ಸಿಲಿಂಡರ್‌ಗಳ ಸಂಖ್ಯೆಯನ್ನು ದ್ವಿಗುಣಗೊಳಿಸಲಾಗಿದೆ. ಮಾ.23ರಿಂದ ಐದು ಕೆ.ಜಿ.ಯ ಸುಮಾರು 14,60,000 ಸಿಲಿಂಡರ್‌ಗಳನ್ನು ಮಾರಾಟ ಮಾಡಲಾಗಿದೆ. ಸೀಮೆಎಣ್ಣೆ ಮತ್ತು ಕಲ್ಲಿದ್ದಲಿನಂತಹ ಪರ್ಯಾಯ ಇಂಧನ ಆಯ್ಕೆಗಳನ್ನೂ ಬಳಕೆದಾರರಿಗೆ ಲಭ್ಯವಾಗಿಸಲಾಗಿದೆ ಎಂದು ಅವರು ತಿಳಿಸಿದರು.

ವಾರ್ತಾ ಭಾರತಿ 15 Apr 2026 10:11 pm

Devadurga | ಮೊಸಳೆ ದಾಳಿಯಿಂದ ಕೈ ಕಳೆದುಕೊಂಡ ಕುರಿಗಾಹಿ

ದೇವದುರ್ಗ: ತಾಲೂಕಿನ ಶಾವಂತಗೇರ ಪಂಚಾಯತಿಯ ಹಿರೇರಾಯಕುಂಪಿ ಗ್ರಾಮದಲ್ಲಿ ಬುಧವಾರ ನಡೆದ ಭೀಕರ ಘಟನೆಯಲ್ಲಿ ಕುರಿಗಾಹಿ ಹೊನ್ನಗುಂಡಪ್ಪ (32) ಮೊಸಳೆ ದಾಳಿಗೆ ಒಳಗಾಗಿ ಕೈ ಕಳೆದುಕೊಂಡಿದ್ದಾರೆ. ಕುರಿ ಮೇಯಿಸಲು ಹೋಗಿದ್ದ ವೇಳೆ, ಕುರಿ ಮರಿಗಳಿಗೆ ನೀರು ತರಲು ಕೃಷ್ಣಾ ನದಿಗೆ ಇಳಿದಾಗ ನೀರಿನಲ್ಲಿ ಅಡಗಿದ್ದ ಮೊಸಳೆ ಅವರ ಕೈಗೆ ಕಚ್ಚಿಕೊಂಡಿದೆ. ಮೊಸಳೆ ಅವರನ್ನು ನದಿ ದಂಡೆಯಿಂದ ಸ್ವಲ್ಪ ದೂರ ಎಳೆದುಕೊಂಡು ಹೋಗಿದ್ದರೂ, ಬಿಡದ ಹಿನ್ನೆಲೆಯಲ್ಲಿ ಹೊನ್ನಗುಂಡಪ್ಪ ಜೋರಾಗಿ ಎಳೆದಾಗ ಕೈ ದೇಹದಿಂದ ಬೇರ್ಪಟ್ಟಿದೆ ಎಂದು ವಲಯ ಅರಣ್ಯಾಧಿಕಾರಿ ಅಲಿಮುದ್ದೀನ್ ತಿಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಹೊನ್ನಗುಂಡಪ್ಪ ಅವರನ್ನು ತಕ್ಷಣ ರಾಯಚೂರಿನ ಒಪೆಕ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಂದೆ ಬಸ್ಸಪ್ಪ ಬಚ್ಚಲ್ ತಿಳಿಸಿದ್ದಾರೆ.

ವಾರ್ತಾ ಭಾರತಿ 15 Apr 2026 10:08 pm

IPL 2026- ಸೋಲಿನ ಸುಳಿಯಿಂದ ಹೊರಬರಲು ಪ್ರಯತ್ನಿಸುತ್ತಿರುವ ಮುಂಬೈ ಇಂಡಿಯನ್ಸ್ ಗೆ ಪಂಜಾಬ್ ಕಿಂಗ್ಸ್ ಸವಾಲು

MI Vs PBKS Match Preview- ಸತತ ಸೋಲುಗಳಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್, ಗುರುವಾರ ವಾಂಖೆಡೆ ಕ್ರೀಡಾಂಗಣದಲ್ಲಿ ಬಲಿಷ್ಠ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಗಾಯಾಳು ರೋಹಿತ್ ಶರ್ಮಾ ಅವರ ಅನುಪಸ್ಥಿತಿ ಮತ್ತು ಬುಮ್ರಾ ಅವರ ವಿಕೆಟ್ ಬರ ಮುಂಬೈಗೆ ದೊಡ್ಡ ಆತಂಕ ತಂದಿದೆ. ಮತ್ತೊಂದೆಡೆ, ಶ್ರೇಯಸ್ ಅಯ್ಯರ್ ನೇತೃತ್ವದ ಪಂಜಾಬ್ ತಂಡ ಭರ್ಜರಿ ಫಾರ್ಮ್‌ನಲ್ಲಿದ್ದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಬ್ಯಾಟಿಂಗ್ ಸ್ವರ್ಗವೆನಿಸಿದ ವಾಂಖೆಡೆ ಪಿಚ್‌ನಲ್ಲಿ ಮತ್ತೊಂದು ಹೈ-ಸ್ಕೋರಿಂಗ್ ಪಂದ್ಯ ನಿರೀಕ್ಷಿಸಲಾಗಿದ್ದು, ಗೆಲುವಿನ ಹಾದಿಗೆ ಮರಳಲು ಹಾರ್ದಿಕ್ ಪಾಂಡ್ಯ ಪಡೆ ಸಂಘಟಿತ ಪ್ರದರ್ಶನ ನೀಡಬೇಕಾದ ಅನಿವಾರ್ಯತೆ ಇದೆ.

ವಿಜಯ ಕರ್ನಾಟಕ 15 Apr 2026 10:05 pm

ನೌಕಾ ದಿಗ್ಬಂಧನ ಮುಂದುವರಿದರೆ ಕೆಂಪು ಸಮುದ್ರದಲ್ಲಿ ತಡೆ: ಇರಾನ್ ಎಚ್ಚರಿಕೆ

ಟೆಹರಾನ್, ಎ.15: ಅಮೆರಿಕದ ನೌಕಾ ದಿಗ್ಬಂಧನ ಮುಂದುವರಿದರೆ ಗಲ್ಫ್ ಮತ್ತು ಒಮನ್ ಸಮುದ್ರದೊಂದಿಗೆ ಕೆಂಪು ಸಮುದ್ರದ ಮೂಲಕ ವ್ಯಾಪಾರವನ್ನು ನಿರ್ಬಂಧಿಸುವುದಾಗಿ ಇರಾನ್‍ನ ಮಿಲಿಟರಿ ಬುಧವಾರ ಎಚ್ಚರಿಕೆ ನೀಡಿದೆ. ಅಮೆರಿಕ ತನ್ನ ದಿಗ್ಬಂಧನವನ್ನು ಮುಂದುವರಿಸಿದರೆ ಮತ್ತು ಇರಾನ್‍ನ ವಾಣಿಜ್ಯ ಹಡಗುಗಳು ಮತ್ತು ತೈಲ ಟ್ಯಾಂಕರ್‌ಗ ಳಿಗೆ ಅಭದ್ರತೆ ಸೃಷ್ಟಿಸಿದರೆ ಅದನ್ನು ಕದನ ವಿರಾಮ ಉಲ್ಲಂಘನೆಗೆ ಮುನ್ನುಡಿ ಎಂದು ಪರಿಗಣಿಸಲಾಗುತ್ತದೆ. ಇರಾನ್‍ನ ಪ್ರಬಲ ಸಶಸ್ತ್ರ ಪಡೆಗಳು ಅರೆಬಿಯನ್ ಕೊಲ್ಲಿ, ಒಮನ್ ಸಮುದ್ರ ಮತ್ತು ಕೆಂಪು ಸಮುದ್ರದಲ್ಲಿ ಯಾವುದೇ ರಫ್ತು ಮತ್ತು ಆಮದು ಮುಂದುವರಿಸಲು ಅವಕಾಶ ನೀಡುವುದಿಲ್ಲ' ಎಂದು ಇರಾನ್ ಮಿಲಿಟರಿ ಹೇಳಿಕೆಯಲ್ಲಿ ತಿಳಿಸಿದೆ.

ವಾರ್ತಾ ಭಾರತಿ 15 Apr 2026 10:04 pm

ಮುಸ್ಲಿಮರು ಒಬ್ಬರನ್ನು ನೋಡಿ ಮತ ನೀಡುತ್ತಾರೆ ಅಂದುಕೊಂಡಿದ್ದರೆ ಅಂತವರು ಆ ಭ್ರಮೆಯಿಂದ ಹೊರ ಬರಲಿ: ಸಲೀಂ ಅಹ್ಮದ್

ಕೊಪ್ಪಳ: ಮುಸ್ಲಿಂ ಸಮುದಾಯದವರು ಯಾರನ್ನಾದರೂ ನೋಡಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುತ್ತಾರೆ ಎಂದು ಭಾವಿಸುವವರು ಭ್ರಮೆಯಲ್ಲಿ ಇದ್ದಾರೆ, ಅಂತಹವರು ತಮ್ಮ ಭ್ರಮೆಯಿಂದ ಹೊರಬರಬೇಕು ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು. ಕೊಪ್ಪಳದಲ್ಲಿ ಖಾಸಗಿ ಕಾರ್ಯಕ್ರಮದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಾವಣಗೆರೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡುವಂತೆ ತಾವು ಸೇರಿದಂತೆ ಹಲವು ಮುಸ್ಲಿಂ ಮುಖಂಡರು ಮನವಿ ಮಾಡಿದ್ದೇವು ಎಂದು ಹೇಳಿದರು. ಆದರೆ, ಕಾಂಗ್ರೆಸ್ ಪಕ್ಷದ ಸಂಪ್ರದಾಯದಂತೆ, ಪಕ್ಷದ ನಾಯಕರ ನಿಧನವಾದ ಸಂದರ್ಭಗಳಲ್ಲಿ ಅವರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡುವ ನಿರ್ಧಾರ ಕೈಗೊಳ್ಳಲಾಗಿದ್ದು, ಇದೇ ರೀತಿಯಲ್ಲಿ ಈ ಕ್ಷೇತ್ರದಲ್ಲೂ ಟಿಕೆಟ್ ಹಂಚಿಕೆ ನಡೆದಿದೆ ಎಂದು ತಿಳಿಸಿದರು. ಎಲ್ಲರೂ ಒಪ್ಪಿಗೆಯೊಂದಿಗೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಎರಡು ವರ್ಷಗಳ ಮಟ್ಟಿಗೆ ಮಾತ್ರ ಈ ನಿರ್ಧಾರವಾಗಿದ್ದು, ಮುಂದಿನ ಚುನಾವಣೆಯಲ್ಲಿ ಆ ಕ್ಷೇತ್ರವನ್ನು ಮುಕ್ತಗೊಳಿಸುವ ಭರವಸೆ ಪಕ್ಷದ ನಾಯಕರು ನೀಡಿದ್ದಾರೆ ಎಂದು ಹೇಳಿದರು. ಅಬ್ದುಲ್ ಜಬ್ಬಾರ್ ಅವರ ಅಮಾನತ್ತಿನ ವಿಚಾರಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆದು ಬಳಿಕ ಪ್ರತಿಕ್ರಿಯೆ ನೀಡುವುದಾಗಿ ತಿಳಿಸಿದರು. ಸಚಿವ ಸಂಪುಟ ಪುನರ್‌ರಚನೆ ಕುರಿತು ಮಾತನಾಡಿದ ಅವರು, ಸಂಪುಟ ರಚನೆಯಾಗಿ ಮೂರು ವರ್ಷವಾದರೂ ಇನ್ನೂ ಪುನರ್‌ರಚನೆ ಆಗಿಲ್ಲ. ಆದರೆ ಒಳ್ಳೆಯದು ಎಂದು ಹೇಳಿದರು.

ವಾರ್ತಾ ಭಾರತಿ 15 Apr 2026 10:03 pm

ವಿಶ್ವಾಸಾರ್ಹವಲ್ಲದ ಪಾಲುದಾರ: ಚೀನಾ ವಿರುದ್ಧ ಅಮೆರಿಕ ಟೀಕೆ

ವಾಶಿಂಗ್ಟನ್, ಎ.15: ಯುದ್ಧದ ಸಂದರ್ಭದಲ್ಲಿ ತೈಲವನ್ನು ದಾಸ್ತಾನಿರಿಸಿಕೊಳ್ಳುವ ಮೂಲಕ ಚೀನಾವು ವಿಶ್ವಾಸಾರ್ಹವಲ್ಲದ ಜಾಗತಿಕ ಪಾಲುದಾರ ಎಂಬುದನ್ನು ಕಳೆದ ಐದು ವರ್ಷಗಳಲ್ಲಿ ಮೂರನೇ ಬಾರಿಗೆ ಸಾಬೀತುಪಡಿಸಿದೆ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಟೀಕಿಸಿದ್ದಾರೆ. ಚೀನಾವು ಕೋವಿಡ್ ಸಾಂಕ್ರಾಮಿಕದ ಸಂದರ್ಭ ಔಷಧ ಉತ್ಪನ್ನಗಳನ್ನು ದಾಸ್ತಾನಿರಿಸಿಕೊಂಡು ಜಾಗತಿಕ ಪೂರೈಕೆಗೆ ಅಡ್ಡಿಯುಂಟು ಮಾಡಿತ್ತು. ನಂತರ ವಿರಳ ಖನಿಜಗಳ ರಫ್ತನ್ನು ಸೀಮಿತಗೊಳಿಸುವ ಮೂಲಕ ಜಾಗತಿಕ ವ್ಯವಸ್ಥೆಗೆ ಪೂರಕವಲ್ಲದ ಕ್ರಮ ಕೈಗೊಂಡಿತ್ತು. ಇದೀಗ ಯುದ್ಧದ ಸಂದರ್ಭ ತೈಲವನ್ನು ದಾಸ್ತಾನಿರಿಸಿಕೊಳ್ಳುತ್ತಿದೆ ಎಂದು ಬೆಸೆಂಟ್ ವಾಗ್ದಾಳಿ ನಡೆಸಿದ್ದಾರೆ. ಇರಾನ್ ಯುದ್ಧದ ಸಂದರ್ಭ ತೈಲ ಬೆಲೆ ಸುಮಾರು 50%ದಷ್ಟು ಹೆಚ್ಚಳವಾಗಿತ್ತು ಮತ್ತು ಸರಬರಾಜು ವ್ಯವಸ್ಥೆಗೆ ಅಡಚಣೆಯಾಗಿತ್ತು. ಆಗ ಚೀನಾವು ಅನಗತ್ಯವಾಗಿ ತೈಲವನ್ನು ದಾಸ್ತಾನಿರಿಸಿಕೊಂಡಿದ್ದರಿಂದ ಸಮಸ್ಯೆ ಬಿಗಡಾಯಿಸಿದೆ. ಅಂತರರಾಷ್ಟ್ರೀಯ ಇಂಧನ ಏಜೆನ್ಸಿಯ 32 ಸದಸ್ಯ ರಾಷ್ಟ್ರಗಳಲ್ಲಿ ಒಟ್ಟು ಇರುವ ದಾಸ್ತಾನಿನಷ್ಟೇ ಪ್ರಮಾಣದ ತೈಲ ದಾಸ್ತಾನನ್ನು ಚೀನಾ ಈಗಾಗಲೇ ಹೊಂದಿದೆ. ಆದರೂ ಅವರು ತೈಲ ಖರೀದಿಯನ್ನು ಮುಂದುವರಿಸುತ್ತಿದ್ದಾರೆ. ಈ ವಿಷಯದ ಬಗ್ಗೆ ಚೀನಾದ ಅಧಿಕಾರಿಗಳೊಂದಿಗೆ ಮಾತಾಡಿದ್ದೇವೆ' ಎಂದು ಬೆಸೆಂಟ್ ಹೇಳಿರುವುದಾಗಿ ವರದಿಯಾಗಿದೆ. ಸಂಘರ್ಷವನ್ನು ಕೊನೆಗೊಳಿಸಲು ಚೀನಾ ಸಕ್ರಿಯವಾಗಿ ಕೆಲಸ ಮಾಡುತ್ತಿದೆ ಮತ್ತು ರಚನಾತ್ಮಕ ಪಾತ್ರವನ್ನು ಮುಂದುವರಿಸುತ್ತದೆ ಎಂದವರು ಹೇಳಿದ್ದಾರೆ. ಇಂಧನ ಪೂರೈಕೆಗಳನ್ನು ದಾಸ್ತಾನಿರಿಸಿಕೊಳ್ಳಬಾರದು ಮತ್ತು ರಫ್ತು ನಿಯಂತ್ರಣ ವಿಧಿಸಬಾರದು ಎಂದು ಐಎಂಎಫ್ ಮತ್ತು ವಿಶ್ವಬ್ಯಾಂಕ್ ಸೋಮವಾರ ರಾಷ್ಟ್ರಗಳನ್ನು ಆಗ್ರಹಿಸಿದೆ. ಯುದ್ಧ ಸಮಸ್ಯೆಯ ಮೂಲ: ಚೀನಾ ತಿರುಗೇಟು ಸ್ಕಾಟ್ ಬೆಸೆಂಟ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅಮೆರಿಕದಲ್ಲಿನ ಚೀನಾ ರಾಯಭಾರ ಕಚೇರಿಯ ವಕ್ತಾರ ಲಿಯು ಪೆಂಗ್ಯು, ಜಾಗತಿಕ ಮಾರುಕಟ್ಟೆ ಎದುರಿಸುತ್ತಿರುವ ಕೊರತೆಗೆ ಮಧ್ಯಪ್ರಾಚ್ಯದಲ್ಲಿನ ಯುದ್ಧದಿಂದ ಉಂಟಾದ ಉದ್ವಿಗ್ನ ಪರಿಸ್ಥಿತಿ ಕಾರಣ. ಮಿಲಿಟರಿ ಕಾರ್ಯಾಚರಣೆಯನ್ನು ತಕ್ಷಣ ಕೊನೆಗೊಳಿಸುವುದು ಈಗ ಮುಖ್ಯ ಕೆಲಸವಾಗಿದೆ ಎಂದಿದ್ದಾರೆ.

ವಾರ್ತಾ ಭಾರತಿ 15 Apr 2026 9:55 pm

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಮತಪತ್ರ ಬಳಕೆ; ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

ಬೆಂಗಳೂರು : ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ ಮತಪತ್ರ ಬಳಸುವ ಉದ್ದೇಶಕ್ಕಾಗಿ ರಾಜ್ಯ ಸರಕಾರ ರೂಪಿಸಿದ್ದ ವಿದೇಯಕಕ್ಕೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ ಅವರು ಅಂಕಿತ ಹಾಕಿದ್ದಾರೆ. 2026ನೆ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್(ತಿದ್ದುಪಡಿ) ವಿಧೇಯಕಕ್ಕೆ ವಿಧಾನಮಂಡಲ ಅನುಮೋದನೆ ನೀಡಿತ್ತು. ರಾಜ್ಯಪಾಲರ ಅಂಕಿತದೊಂದಿಗೆ ಇದು ಕಾಯ್ದೆಯಾಗಲಿದ್ದು, ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆಗೆ ಅನುಕೂಲವಾಗಲಿದೆ.

ವಾರ್ತಾ ಭಾರತಿ 15 Apr 2026 9:41 pm

ಇಸ್ಲಾಂ ಧಾರ್ಮಿಕ ಸೌಹಾರ್ದತೆ, ಸಹಬಾಳ್ವೆಯನ್ನು ಬೋಧಿಸಿದೆ: ಜಿಫ್ರಿ ಮುತ್ತುಕೋಯ ತಂಙಳ್

ಮಂಗಳೂರು, ಎ. 15: ಧಾರ್ಮಿಕ ಸೌಹಾರ್ದತೆಯಿಂದ ಹಾಗೂ ಸರ್ವಧರ್ಮೀಯರೊಂದಿಗೆ ಸಹಬಾಳ್ವೆಯಿಂದ ವರ್ತಿಸಬೇಕು ಎಂದು ಸಮಸ್ತ ಕೇರಳ ಜಂಇಯ್ಯತುಲ್ ಉಲಮಾದ ಅಧ್ಯಕ್ಷ ಸಯ್ಯಿದುಲ್ ಉಲಮಾ ಜಿಫ್ರಿ ಮುತ್ತು ಕೋಯ ತಂಙಳ್‌ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ-ಕೇರಳ ಗಡಿ ಪ್ರದೇಶದಲ್ಲಿರುವ ಅಡ್ಕಸ್ಥಳದಲ್ಲಿ ಮಂಗಳವಾರ ರಾತ್ರಿ ಬಹು .ಮಶ್ಹೂರ್ ವಲಿಯುಲ್ಲಾಹಿ (ರ.ಅ) ದರ್ಗಾ ಶರೀಫ್‌ನ ನವೀಕೃತ ಕಟ್ಟಡದ ಲೋಕಾರ್ಪಣೆ ನೆರವೇರಿಸಿ ಮಾತನಾಡಿದರು. ಪ್ರವಾದಿಗಳು ಹಾಗೂ ಸಜ್ಜನರಾದ ಪೂರ್ವಿಕರ ಬದುಕು ಕೂಡಾ ಇಸ್ಲಾಂ ಧರ್ಮ ಬೋಧಿಸಿದಂತೆ ಇತ್ತು ಎಂದರು. ಮಹಾತ್ಮರನ್ನು ಗೌರವಿಸಬೇಕೆಂದು ಇಸ್ಲಾಮ್ ನಮಗೆ ಕಲಿಸಿ ಕೊಟ್ಟಿದೆ. ಮಹಾತ್ಮರ ಬದುಕು, ತ್ಯಾಗ ಮತ್ತು ಅವರ ಬದುಕಿನ ಸಂದೇಶಗಳನ್ನು ಎಲ್ಲರಿಗೂ ತಲುಪಿಸುವುದು ಅವರ ಹೆಸರಲ್ಲಿ ಉರೂಸ್ ಕಾರ್ಯಕ್ರಮದ ಆಯೋಜನೆ ಹಿಂದಿರುವ ಉದ್ದೇಶವಾಗಿದೆ ಎಂದು ನುಡಿದರು. ಉರೂಸ್ ಹಿನ್ನೆಲೆಯಲ್ಲಿ ಪ್ರವಚನ ಕಾರ್ಯಕ್ರಮಗಳನ್ನು ಆಯೋಜಿಸುವುದರ ಹಿಂದಿನ ಉದ್ದೇಶ ಜನರಿಗೆ ಸೌಹಾರ್ದದ ಸಂದೇಶ ಹಾಗೂ ಮಹಾತ್ಮರ ಬದುಕಿನ ಚರಿತ್ರೆಗಳನ್ನು ತಲುಪಿಸುವುದಾಗಿದೆ ಎಂದು ಹೇಳಿದರು. ಜಮಾಅತ್ ಕಮಿಟಿಯ ಗೌರವಾಧ್ಯಕ್ಷ ಮೀರ್ ಝಾಹಿದ್ ತಂಙಳ್ ಅಲ್ ಬುಖಾರಿ ಮಂಜೇಶ್ವರ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಅಸ್ಸಯ್ಯದ್ ಅಬ್ದುರ‌್ರಹ್ಮಾನ್ ಮಸೂದ್ ತಂಙಳ್ ಅಲ್ ಬುಖಾರಿ ಕೂರ, ಬೆದ್ರಂಪಳ್ಳ ನವಜೀವನ ವಿಶೇಷ ಶಾಲೆಯ ಅಸಿಸ್ಟೆಂಟ್ ಮ್ಯಾನೇಜರ್ ರೆ.ಫಾ.ಅಮಲ್ ಜೋಸ್, ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ ಶುಭ ಹಾರೈಸಿದರು. ಕಾಸರಗೋಡು ಜಿ.ಪಂ ಸದಸ್ಯ ಸೋಮಶೇಖರ್ ಜೆ.ಎಸ್, ಎಣ್ಮಕಜೆ ಗ್ರಾ.ಪಂ ಸದಸ್ಯ ಐತಪ್ಪ ಕುಲಾಲ್ , ಅಡ್ಯನಡ್ಕ ಖತೀಬ್ ಮುಹಮ್ಮದ್ ಹಾರಿಸ್ ರಹ್ಮಾನಿ , ಉಕ್ಕುಡ ಮುದರ್ರಿಸ್ ಹಾಫಿಳ್ ಅಹ್ಮದ್ ಶೆರೀಫ್ ಕಾಮಿಲ್ ಸಖಾಫಿ ಶಾಫಿ ಅನ್ವರ್ ಪಾಲೆಕ್ಕಾಡ್, ಮಾಜಿ ಗ್ರಾಪಂ ಸದಸ್ಯ ಬಿ.ಎಸ್. ಗಾಂಬೀರ್, ಡಾ.ಶ್ರೀಪತಿ ಭಟ್ ಕಜಂಪಾಡಿ , ಅಡ್ಕಸ್ಥಳ ಸದರ್ ಮುಅಲ್ಲಿಂ ಮುಹಮ್ಮದ್ ಮದನಿ, ಮುಹಝ್ಝಿನ್ ಮುಝಮ್ಮಿಲ್ ಸ ಅದಿ , ಜಮಾಅತ್ ಕಮಿಟಿ ಉಪಾಧ್ಯಕ್ಷ ಆಮು ಎ ವೇದಿಕೆಯಲ್ಲಿ ಉಪಸ್ಥಿತರಿದ್ದರು. 8 ದಿನಗಳ ಧಾರ್ವಿಕ ಪ್ರವಚನ ಕಾರ್ಯಕ್ರಮದಲ್ಲಿ ಮೊದಲ ದಿನ 8 ಹಾಮಿದ್ ಯಾಸೀನ್ ಜೌಹರಿ ಅಲ್ ಮದನಿ ಕೊಲ್ಲಂ ಪ್ರವಚನ ನೀಡಿದರು. ಅಡ್ಕಸ್ಥಳ ಬದ್ರಿಯಾ ಜುಮಾ ಮಸ್ಜಿದ್ ಜಮಾಅತ್ ಕಮಿಟಿಯ ಅಧ್ಯಕ್ಷ ಸಿಎ. ಅಬ್ದುಲ್ಲ ಮಾದುಮೂಲೆ ಸ್ವಾಗತಿಸಿದರು. ಅಡ್ಕಸ್ಥಳ ಖತೀಬ್ ಹಾಫಿಳ್ ರಾಝಿಮ್ ಯಮಾನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿಝಾಮ್ ಅನ್ಸಾರಿ ಕಾರ್ಯಕ್ರಮ ನಿರೂಪಿಸಿದರು.     

ವಾರ್ತಾ ಭಾರತಿ 15 Apr 2026 9:31 pm

CBSE Result-2026| ಕಣಚೂರು ಪಬ್ಲಿಕ್ ಸ್ಕೂಲ್‌ಗೆ ಶೇ.100 ಫಲಿತಾಂಶ

ಕೊಣಾಜೆ: ದೇರಳಕಟ್ಟೆಯ ಕಣಚೂರು ಪಬ್ಲಿಕ್ ಸ್ಕೂಲ್‌ 2025–26ನೇ ಸಾಲಿನ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶವನ್ನು ಸಾಧಿಸಿದೆ. ಒಟ್ಟು 70 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದಾರೆ. ಈ ಫಲಿತಾಂಶದಲ್ಲಿ 27 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ (ಪ್ರಥಮ ಶ್ರೇಣಿ ವಿಶಿಷ್ಟ), 31 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 12 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಶಾಲೆಯ ಟಾಪರ್‌ಗಳಾಗಿ ಫಾತಿಮತ್ ಶಾರ್ಮಿನ್ ಎಂ.ಟಿ (93.2%), ಶಿಯಾ ಫಾತಿಮತ್ (90%) ಹಾಗೂ ಲಿಯಾ ಶಕೀನಾ (90%) ಅವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ ಎಂದು ಪ್ರಕಟನೆ‌ ತಿಳಿಸಿದೆ. ಈ ಅತ್ಯುತ್ತಮ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಸಂಚಾಲಕರು, ಪ್ರಾಂಶುಪಾಲರು, ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ಸಂತಸ ವ್ಯಕ್ತಪಡಿಸಿ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. ವಿದ್ಯಾರ್ಥಿಗಳ ಶ್ರಮ, ಶಿಕ್ಷಕರ ಮಾರ್ಗದರ್ಶನ ಹಾಗೂ ಪೋಷಕರ ಸಹಕಾರವೇ ಈ ಸಾಧನೆಗೆ ಕಾರಣವೆಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ವಾರ್ತಾ ಭಾರತಿ 15 Apr 2026 9:26 pm

ಕರ್ನಾಟಕದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ EVM ರದ್ದು, ಬ್ಯಾಲೆಟ್ ಪೇಪರ್ ಮರುಜಾರಿ! ರಾಜ್ಯಪಾಲರು ಅಸ್ತು

ಗ್ರಾಮ ಪಂಚಾಯತಿ ಸೇರಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇವಿಎಂ ರದ್ದುಗೊಳಿಸಿ ಬ್ಯಾಲೆಟ್ ಪೇಪರ್ ಮರುಜಾರಿಗೆ ತರಲು ರಾಜ್ಯಪಾಲರು ಅಸ್ತು ಎಂದಿದ್ದಾರೆ. ‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕಕ್ಕೆ ಅಂಕಿತ ಹಾಕಿದ್ದಾರೆ. ಈ ಮೂಲಕ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ

ವಿಜಯ ಕರ್ನಾಟಕ 15 Apr 2026 9:25 pm

ಕರುಳು ಹಿಂಡುವ ವಿಡಿಯೋ: ಸತ್ತ ಮರಿಯಾನೆಯ ಜೊತೆ ತಾಯಿ ಆನೆಯ ರೋಧನೆ

ದುಃಖ, ನೋವು, ಸಾವು, ಪ್ರೀತಿ ಕೇವಲ ಮನುಷ್ಯರಿಗೆ ಮಾತ್ರ ಸೀಮಿತವಲ್ಲ. ಪ್ರಾಣಿಗಳಿಗೂ ಈ ಎಲ್ಲಾ ಭಾವನೆಗಳು ಇರುತ್ತವೆ. ಅವುಗಳು ಕೂಡ ತಮ್ಮವರನ್ನು ಕಳೆದುಕೊಂಡಾಗ ಮನುಷ್ಯರಂತೆಯೇ ಕಣ್ಣೀರು ಹಾಕುತ್ತವೆ ಎಂಬುದಕ್ಕೆ ಸಾಕ್ಷಿಯಾದ ಅತ್ಯಂತ ಹೃದಯವಿದ್ರಾವಕ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಸತ್ತ ತನ್ನ ಮರಿಯನ್ನು ಹೇಗಾದರೂ ಮಾಡಿ ಎಬ್ಬಿಸಲೇಬೇಕು ಎಂದು ತಾಯಿ ಆನೆಯೊಂದು ನಡೆಸುವ

ಒನ್ ಇ೦ಡಿಯ 15 Apr 2026 9:20 pm

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ರಾಷ್ಟ್ರೀಯ, ರಾಜ್ಯ ಪ್ರಶಸ್ತಿ ಪ್ರಕಟ

► ʼಬಸವ ಪುರಸ್ಕಾರʼಕ್ಕೆ ಸಿದ್ದರಾಮ ಶರಣರು ಬೆಲ್ದಾಳ, ʼಮಹಾವೀರ ಪ್ರಶಸ್ತಿʼಗೆ ಭಾನುಕೀರ್ತಿ ಭಟ್ಟಾರಕ ಸ್ವಾಮೀಜಿ ಆಯ್ಕೆ► ಸಾಮಾಜಿಕ, ಸಾಂಸ್ಕೃತಿಕ ವಿಭಾಗದ ಪ್ರಶಸ್ತಿಗೆ ಡಾ.ಸಿದ್ದನಗೌಡ ಪಾಟೀಲ್ ಭಾಜನ

ವಾರ್ತಾ ಭಾರತಿ 15 Apr 2026 9:19 pm

ನಾರಿ ಶಕ್ತಿ ವಂದನ್ ಮಸೂದೆ ಜಾರಿಗೆ ದ.ಕ. ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದಿಂದ ಸಹಿ ಸಂಗ್ರಹ

ಮಂಗಳೂರು, ಎ.15: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಐತಿಹಾಸಿಕ ‘ನಾರಿ ಶಕ್ತಿ ವಂದನ್ ಅಧಿನಿಯಮ’ವನ್ನು ಜಾರಿ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದ ಬ್ರಿಜೇಶ್ ಚೌಟ ಅವರ ಕಚೇರಿಯಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಯಿತು. ವಿವಿಧ ಕೆಲಸಗಳ ನಿಮಿತ್ತ ಸಂಸದ ಚೌಟ ಅವರನ್ನು ಭೇಟಿ ಮಾಡಲು ಬಂದಿದ್ದ ಮಹಿಳೆಯರು, ಕೇಂದ್ರ ಸರ್ಕಾರದ ಐತಿಹಾಸಿಕ ‘ನಾರಿ ಶಕ್ತಿ ವಂದನ್ ಅಧಿನಿಯಮ’ ಜಾರಿಯಾಗುತ್ತಿರುವ ಸಂದರ್ಭದಲ್ಲಿ ಮಹಿಳೆಯರು ಸ್ವಯಂ ಪ್ರೇರಿತರಾಗಿ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಿ, ಮಹಿಳೆಯರಿಗೆ ರಾಜಕೀಯದಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಕಳೆದ ದಶಕದಲ್ಲಿ ಭಾರತವು ಕೇವಲ ಮಹಿಳಾ ಕಲ್ಯಾಣದ ಹಂತದಿಂದ ಮಹಿಳಾ ನೇತೃತ್ವದ ಅಭಿವೃದ್ಧಿಯತ್ತ ದೃಢವಾದ ದಾಪುಗಾಲು ಹಾಕಿದ್ದು, ‘ನಾರಿ ಶಕ್ತಿ’ಯ ನವೋದಯಕ್ಕೆ ಸಾಕ್ಷಿಯಾಗಿದೆ ಎಂದು ಪಾಲ್ಗೊಂಡ ಮಹಿಳೆಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಂಸತ್ತಿನ ವಿಶೇಷ ಕಲಾಪದಲ್ಲಿ ಈ ಅಧಿನಿಯಮವು ಚರ್ಚೆಯಾಗುತ್ತಿರುವುದು ದೇಶದ ಇತಿಹಾಸದಲ್ಲಿ ಒಂದು ಸುವರ್ಣ ಅಧ್ಯಾಯವಾಗಲಿದೆ. ಮಹಿಳಾ ಸಬಲೀಕರಣದಿಂದ ಮಹಿಳೆಯರ ನೇತೃತ್ವದ ಅಭಿವೃದ್ಧಿ ಎಂಬ ಆಶಯ ದೊಂದಿಗೆ ಕೇಂದ್ರ ಸರ್ಕಾರವು ಕೈಗೊಂಡಿರುವ ಈ ಕ್ರಾಂತಿಕಾರಿ ಹೆಜ್ಜೆಗೆ ನಮ್ಮೆಲ್ಲರ ಬೆಂಬಲವಿದೆ ಎಂದು ಇದೇವೇಳೆ ಮಹಿಳೆಯರು ಹೇಳಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಬ್ರಿಜೇಶ್ ಚೌಟ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ‘ನಾರಿ ಶಕ್ತಿ ವಂದನ್ ಅಧಿನಿಯಮ’ ಎಂದು ಕರೆಯಲಾಗುವ ಮೀಸ ಲಾತಿ ಕಾನೂನಿನ ತಿದ್ದುಪಡಿಗಳನ್ನು ತರಲು ಮುಂದಾಗಿರುವುದು ಐತಿಹಾಸಿಕ ನಿರ್ಧಾರ. ಕಳೆದ ಒಂದು ದಶಕದಲ್ಲಿ ಭಾರತವು ಕೇವಲ ಮಹಿಳಾ ಕಲ್ಯಾಣದ ಹಂತದಿಂದ ಮಹಿಳಾ ನೇತೃತ್ವದ ಅಭಿವೃದ್ಧಿಯತ್ತ ದೃಢವಾದ ದಾಪುಗಾಲು ಹಾಕಿದೆ. ಇಂದು ಭಾರತೀಯ ಮಹಿಳೆಯರು ಕೇವಲ ಮನೆಗೆ ಸೀಮಿತವಾಗದೆ, ನಿರ್ಧಾರ ಕೈಗೊಳ್ಳುವ ಉನ್ನತ ಸ್ಥಾನಗಳಲ್ಲಿ ಕುಳಿತು ದೇಶದ ಬದಲಾವಣೆಗೆ ಮುನ್ನುಡಿ ಬರೆಯುತ್ತಿದ್ದಾರೆ. ಸಂಸತ್ತಿನಿಂದ ಹಿಡಿದು ಬಾಹ್ಯಾಕಾಶ ದವರೆಗೆ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚುತ್ತಿರುವುದು ’ನಾರಿ ಶಕ್ತಿ’ಯ ನವೋದಯಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ. ಸಂಸತ್ತಿನ ವಿಶೇಷ ಕಲಾಪದಲ್ಲಿ ಈ ಅಧಿನಿಯಮದ ಚರ್ಚೆಗೆ ಅವಕಾಶ ಕಲ್ಪಿಸಿರುವುದು ಮಹಿಳಾ ಸಬಲೀಕರಣದ ಇತಿಹಾಸದಲ್ಲಿ ಒಂದು ಸುವರ್ಣ ಅಧ್ಯಾಯವಾಗಲಿದೆ. ಮಹಿಳಾ ಸಬಲೀಕರಣದಿಂದ ಮಹಿಳೆಯರ ನೇತೃತ್ವದ ಅಭಿವೃದ್ಧಿ ಎಂಬ ಆಶಯದೊಂದಿಗೆ ಕೇಂದ್ರ ಸರ್ಕಾರವು ಕೈಗೊಂಡಿರುವ ಈ ಕ್ರಾಂತಿಕಾರಿ ಹೆಜ್ಜೆಗೆ ಪೂರ್ಣ ರೀತಿಯ ಬೆಂಬಲವಿದ್ದು, ಈ ಮಸೂದೆ ಕಾನೂನು ಆಗಿ ಜಾರಿಗೆ ಬರುವ ದಿನಗಳು ಕೂಡ ಹತ್ತಿರವಾಗಿರುವುದು ಬಹಳ ಸಂತೋಷದ ವಿಚಾರ ಎಂದು ಚೌಟ ಸಂತಸ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಮಹಿಳಾ ಮೋರ್ಚಾದ ಅಧ್ಯಕ್ಷ ಮಂಜುಳಾ ರಾವ್, ಜಿಲ್ಲಾ ವಕ್ತಾರ ಮಾಧವ್ ಮಾವೆ, ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಶ್ವೇತಾ ಪೂಜಾರಿ, ಕಾರ್ಯಕಾರಣಿ ಸದಸ್ಯೆ ಸುಲೋಚನಾ ಭಟ್, ಸಮಾಜ ಸೇವಕರಾದ ಹಿಲ್ಡಾ ರಾಯಪ್ಪನ್, ನಿಕಟ ಪೂರ್ವ ಮನಪಾ ಸದಸ್ಯರು, ಮುಖಂಡರು ಪಂಚಾಯತ್ ಸದಸ್ಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.     

ವಾರ್ತಾ ಭಾರತಿ 15 Apr 2026 9:19 pm

ಉಡುಪಿ: ಎ.16 ರಿಂದ ಮನೆಮನೆ ಜನಗಣತಿ

ಉಡುಪಿ, ಎ.15: ಭಾರತ ಜನಗಣತಿ-2027ಕ್ಕೆ ಸಂಬಂಧಿಸಿದಂತೆ ಸರಕಾರದ ಸುತ್ತೋಲೆಯಂತೆ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಎ.16 ರಿಂದ ಜನಗಣತಿ ಕಾರ್ಯ ಆರಂಭಗೊಳ್ಳಲಿದೆ. ಈ ಜನಗಣತಿ ಕಾರ್ಯದಲ್ಲಿ ಪಾಲ್ಗೊಳ್ಳುವ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಶಾಲಾ ಶಿಕ್ಷಕ ವೃಂದದವರು ಮನೆ ಮನೆ ಭೇಟಿ ನೀಡಿ, ಮನೆಪಟ್ಟಿಯನ್ನು ಮಾಡಲಿದ್ದು, ಸಾರ್ವಜನಿಕರು ಜನಗಣತಿ ಕಾರ್ಯಕ್ಕೆ ಸಂಪೂರ್ಣ ಸಹಕಾರ ನೀಡುವಂತೆ ನಗರಸಭೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.

ವಾರ್ತಾ ಭಾರತಿ 15 Apr 2026 9:13 pm

ದ್ವಿತೀಯ ಪಿಯುಸಿ ಪರೀಕ್ಷೆ-2: ನೋಂದಣಿಗೆ ಅವಕಾಶ

ಉಡುಪಿ, ಎ.15: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ನೋಂದಣಿಯನ್ನು ಈಗಾಗಲೇ ಪ್ರಾರಂಭಿಸಲಾಗಿದ್ದು, ಎ.17ರವರೆಗೆ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. 2026ರಲ್ಲಿ ರೆಗ್ಯೂಲರ್ ವಿದ್ಯಾರ್ಥಿಗಳಾಗಿ ನೋಂದಾಯಿಸಿಕೊಂಡು ಮತ್ತು ಮೊದಲನೇ ಪರೀಕ್ಷೆಯಲ್ಲಿ ಫಲಿತಾಂಶ ಪೂರ್ಣಗೊಳಿಸದ ವಿದ್ಯಾರ್ಥಿಗಳು ಯಾವುದೇ ಶುಲ್ಕ ಪಾವತಿಸದೇ ಆನ್‌ಲೈನ್ -http://tinyurl.com/mvp9k6es-ಲಿಂಕ್ ಮೂಲಕ ಅಥವಾ ಅಭ್ಯರ್ಥಿಗಳು ಸಂಬಂಧಿಸಿದ ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸಿ ಪಿಯು ಪರೀಕ್ಷಾ ಪೋರ್ಟಲ್‌ನಲ್ಲಿ ಪರೀಕ್ಷೆ-2ಕ್ಕೆ ನೋಂದಾಯಿಸಿಕೊಳ್ಳಬಹುದಾಗಿದೆ. ಜಿಲ್ಲೆಯ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಪರೀಕ್ಷೆ-2ಕ್ಕೆ ನೋಂದಾಯಿಸುವಂತೆ ನೋಡಿಕೊಳ್ಳಬೇಕು.ಪರೀಕ್ಷೆಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳಿಗೆ ಪ್ರವೇಶಪತ್ರಗಳು ನಿಗದಿತ ಸಮಯದಲ್ಲಿ ಸಂಬಂಧಿಸಿದ ಕಾಲೇಜಿನ ಪ್ರಾಂಶುಪಾಲರ ಲಾಗಿನ್‌ನಲ್ಲಿ ಲಭ್ಯವಿರಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ-2ರ ದಿನಾಂಕಗಳನ್ನು ಮರು ನಿಗದಿ ಪಡಿಸಲಾಗಿದೆ. ಪರೀಕ್ಷೆಗಳು ಎ.30ರಿಂದ ಪ್ರಾರಂಭವಾಗಲಿದ್ದು, ವಿದ್ಯಾರ್ಥಿ ಗಳು ಮಂಡಲಿಯ ಜಾಲತಾಣದ ಪಿಯುಸಿ ವಿದ್ಯಾರ್ಥಿ ಅಂಕಣದಲ್ಲಿ ಲಭ್ಯವಿರುವ ಮಾದರಿ ಪ್ರಶ್ನೆ ಪತ್ರಿಕೆಗಳ ಅನ್ವಯ ಪರೀಕ್ಷೆ-2ಕ್ಕೆ ಯಾವುದೇ ಆತಂಕಗಳಿಲ್ಲದೆ ಹಾಜರಾಗುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಪ್ರಕಟಣೆ ತಿಳಿಸಿದೆ.

ವಾರ್ತಾ ಭಾರತಿ 15 Apr 2026 9:11 pm

ಭಾರತೀಯರ ಹೃದಯಾಂತರಂಗದಲ್ಲಿ ಮೋದಿ ನೆಲೆಸಿರುವುದು ಏಕೆ : ಕಾರಣ ವಿವರಿಸಿದ ಕುಮಾರಸ್ವಾಮಿ

PM Modi Leadership : ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಭೈರವೈಕ್ಯ ಪರಮಪೂಜ್ಯ ಜಗದ್ಗುರುಗಳಾದ ಪದ್ಮಭೂಷಣ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಶ್ರೀ ಗುರು ಭೈರವೈಕ್ಯ ಮಂದಿರವನ್ನು ರಾಷ್ಟ್ರದ ಜನಪ್ರಿಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ಲೋಕಾರ್ಪಣೆ ಮಾಡಿದ ದಿವ್ಯಕ್ಷಣಕ್ಕೆ ಸಾಕ್ಷಿ ಆಗುವ ಭಾಗ್ಯ ನನ್ನದಾಯಿತು. ಮೋದಿಯವರ ಜನಪ್ರಿಯತೆಗೆ ಅವರ ಪರಿಶ್ರಮ, ಬದ್ದತೆ ಮೂಲ ಕಾರಣ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ವಿಜಯ ಕರ್ನಾಟಕ 15 Apr 2026 9:09 pm

ತುಳು ಸಂಸ್ಕೃತಿಯ ಉಳಿವಿಗೆ ತುಳುವರ ಆಚರಣೆ, ನಂಬಿಕೆ ಕಾರಣ: ಡಾ.ಮಾಧವ

ತುಳುಕೂಟ ಬಿಸು ಪರ್ಬ

ವಾರ್ತಾ ಭಾರತಿ 15 Apr 2026 9:01 pm

ಎಲ್‌ಎಸ್‌ಜಿ ವಿರುದ್ಧ ಆರ್‌ಸಿಬಿ ಪರ ಫೀಲ್ಡಿಂಗ್‌ಗೆ ಬಾರದ ವಿರಾಟ್‌.. ಕೊಹ್ಲಿ ಈ ಲಿಸ್ಟ್‌ಗೆ ಸೇರಿರುವುದು ಇದೇ ಮೊದಲ ಬಾರಿ

Virat Kohli: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ (ಏಪ್ರಿಲ್ 15) ನಡೆಯುತ್ತಿರುವ ಐಪಿಎಲ್‌ 2026ರ 23ನೇ ಪಂದ್ಯದಲ್ಲಿ ಆರ್‌ಸಿಬಿ ಮತ್ತು ಎಲ್‌ಎಸ್‌ಜಿ ಮುಖಾಮುಖಿಯಾಗಿವೆ. ಆದರೆ, ವಿರಾಟ್ ಕೊಹ್ಲಿ ಅವರು ಆರಂಭಿಕ ಪಂದ್ಯದ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿಲ್ಲ. ಬದಲಾಗಿ, ಅವರನ್ನು ಆರ್‌ಸಿಬಿ ತಂಡವು 'ಇಂಪ್ಯಾಕ್ಟ್ ಪ್ಲೇಯರ್' ಆಗಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಕೊಹ್ಲಿ ಅವರು ಇಂಪ್ಯಾಕ್ಟ್ ಪ್ಲೇಯರ್ ಆಗಿ

ಒನ್ ಇ೦ಡಿಯ 15 Apr 2026 9:01 pm

ʼರಾಷ್ಟ್ರೀಯ ಬಸವ ಪುರಸ್ಕಾರ'ಕ್ಕೆ ಡಾ.ಸಿದ್ಧರಾಮ ಬೆಲ್ದಾಳ್ ಶರಣರು ಆಯ್ಕೆ

ಬೀದರ್ : ರಾಜ್ಯ ಸರಕಾರದ 2025-26ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ, ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರಶಸ್ತಿ , ಸಾಹಿತ್ಯ ಹಾಗೂ ನಾಟಕ ಪ್ರಶಸ್ತಿ, ಕಲಾ ಪ್ರಶಸ್ತಿ ಮತ್ತು ಸಂಗೀತ ನೃತ್ಯ ವಿಭಾಗದ ಪ್ರಶಸ್ತಿಗಳಿಗೆ ಹಲವು ಸಾಧಕರನ್ನು ಆಯ್ಕೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಶರಣ ಡಾ.ಸಿದ್ದರಾಮ ಬೆಲ್ದಾಳ್ ಶರಣರು ಆಯ್ಕೆಯಾಗಿದ್ದಾರೆ. ಡಾ. ಬೆಲ್ದಾಳ ಶರಣರು ಬಸವಾದಿ ಶರಣರ ಹಲವಾರು ಪುಸ್ತಕಗಳು ಬರೆದಿದ್ದಾರೆ. ನಾಡಿನಲ್ಲಿ ಬಸವ ತತ್ವ ಸಿದ್ದಾಂತ ಅಧ್ಯಯನ ಮಾಡಿ ಸಾಹಿತ್ಯ ಬರೆದು ದೇಶದ ತುಂಬಾ ಪ್ರಚಾರ ಮಾಡುತ್ತಿರುವ ಬಸವ ಪ್ರೇಮಿಯಾಗಿದ್ದಾರೆ. ಕಳೆದ ವರ್ಷ ಅವರು ಬರೆದ 'ಸತ್ಯ ಶರಣರ ಸತ್ಯ ಶೋಧ' ಸುಮಾರು ಹದಿನೈದು ನೂರು ಪುಟದ ಪುಸ್ತಕವಾಗಿದೆ. ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳಿಂದ ದಿನಾಂಕ ಪಡೆದು ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಆಯೋಜನೆ ಮಾಡಲಾಗುವುದು ಎಂದು ಸಚಿವ ಶಿವರಾಜ ತಂಗಡಗಿ ಅವರು ಹೇಳಿದ್ದಾರೆ.

ವಾರ್ತಾ ಭಾರತಿ 15 Apr 2026 9:00 pm

ಸಜೀಪ| ಹಲ್ಲೆ ಪ್ರಕರಣ: ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು

ಮಂಗಳೂರು: ಬಂಟ್ವಾಳ ತಾಲೂಕಿನ ಸಜೀಪ ತಲೆಮಗುರು ಎಂಬಲ್ಲಿ ಮಸೀದಿ ವಿಚಾರದಲ್ಲಿ ಇತ್ತಂಡಗಳ ನಡುವೆ ಹೊಡೆದಾಟವಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಶೌಕತ್ ಅಲಿ, ಇಸಾಕ್, ಸಫೀಕ್, ಯಾಕುಬ್, ಮೊಹಮ್ಮದ್ ಮುಸ್ತಫಾ, ನಾಸಿರ್, ನಿಜಾಲ್ ಎಂಬವರ ವಿರುದ್ಧ ಕೊಲೆಯತ್ನ ಪ್ರಕರಣ ಹಾಗೂ ಯಾಕುಬ್, ಸಫೀಕ್, ಇಸಾಕ್, ಸಫ್ವಾನ್ ಹಾಗೂ ಅಶ್ರಫ್ ಸಾಹೇಬ್ ಎಂಬವರ ವಿರುದ್ಧ ಹಲ್ಲೆ ಪ್ರಕರಣ ದಾಖಲಾಗಿದೆ. ಇಂದು ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಎಲ್ಲಾ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಆರೋಪಿತರ ಪರವಾಗಿ ಮಂಗಳೂರಿನ ಯುವ ನ್ಯಾಯವಾದಿ ಅನ್ಸಾರ್ ಮೂಲರಪಟ್ಣ, ಅನಸ್ ದಿಲ್ದಾರ್ ಹಾಗೂ ಕವಿತಾ ಮುರುಗೇಶ್ ವಾದ ಮಂಡಿಸಿದ್ದರು.

ವಾರ್ತಾ ಭಾರತಿ 15 Apr 2026 8:59 pm

ಸಂತ್ರಸ್ತರ ಬದುಕಿನೊಂದಿಗೆ ಎಂಆರ್‌ಪಿಎಲ್ ಚೆಲ್ಲಾಟ : ಜೋಕಟ್ಟೆ ನಾಗರಿಕ ಹೋರಾಟ ಸಮಿತಿ ಆರೋಪ

► ಹಸಿರು ವಲಯಕ್ಕೆ ಭೂಸ್ವಾಧೀನಕ್ಕೆ ವಿಳಂಬ ಮಾಡಿದರೆ ಮೇ 1ರಿಂದ ಧರಣಿ ಸತ್ಯಾಗ್ರಹ

ವಾರ್ತಾ ಭಾರತಿ 15 Apr 2026 8:58 pm

ಅಬಕಾರಿ ನೀತಿ ಪ್ರಕರಣ| ಕೇಜ್ರಿವಾಲ್ ವಾದದ ವೀಡಿಯೊ ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕುವಂತೆ ದಿಲ್ಲಿ ಹೈಕೋರ್ಟ್ ಸೂಚನೆ

ಹೊಸದಿಲ್ಲಿ,ಎ.15: ಅಬಕಾರಿ ನೀತಿ ಪ್ರಕರಣದಲ್ಲಿ ದಿಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ನ್ಯಾ.ಸ್ವರಣಕಾಂತಾ ಶರ್ಮಾ ಅವರೆದುರು ವಾದಿಸುತ್ತಿರುವ ವೀಡಿಯೊ ರೆಕಾರ್ಡಿಂಗ್‌ಗಳನ್ನು ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕುವಂತೆ ದಿಲ್ಲಿ ಉಚ್ಚ ನ್ಯಾಯಾಲಯವು ಪೊಲೀಸರಿಗೆ ಸೂಚಿಸಿದೆ. ಈ ಬೆಳವಣಿಗೆಯನ್ನು ಸುದ್ದಿಸಂಸ್ಥೆಗೆ ದೃಢಪಡಿಸಿದ ಹೈಕೋರ್ಟ್ ಅಧಿಕಾರಿಯೋರ್ವರು, ನ್ಯಾಯಾಲಯ ಕಲಾಪಗಳ ಅನಧಿಕೃತ ರೆಕಾರ್ಡಿಂಗ್‌ನ್ನು ಅನುಮತಿಸಲಾಗುವುದಿಲ್ಲ ಎಂದು ತಿಳಿಸಿದರು. ಆನ್‌ಲೈನ್‌ ವಿಚಾರಣೆಗಳ ಕುರಿತು ದಿಲ್ಲಿ ಹೈಕೋರ್ಟ್‌ ನಿಯಮಗಳು ನ್ಯಾಯಾಲಯದ ಕಲಾಪಗಳ ಚಿತ್ರೀಕರಣ ಮತ್ತು ವೀಡಿಯೊಗಳ ಪ್ರಕಟಣೆಯನ್ನು ನಿಷೇಧಿಸಿವೆ. ಅಂತಹ ವೀಡಿಯೊಗಳನ್ನು ರೆಕಾರ್ಡ್ ಮಾಡಿ ಆನ್‌ಲೈನ್‌ನಲ್ಲಿ ಹರಿಬಿಟ್ಟಿರುವವರ ವಿರುದ್ಧ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಅಧಿಕಾರಿ ತಿಳಿಸಿದರು. ‘ಹೈಕೋರ್ಟ್ ಹಿಂದೆಯೂ ಇಂತಹ ಕ್ರಮಗಳನ್ನು ತೆಗೆದುಕೊಂಡಿದೆ ಮತ್ತು ಕೇಜ್ರಿವಾಲ್‌ ವೀಡಿಯೊ ಹೈಕೋರ್ಟ್ ಗಮನಕ್ಕೆ ತೆಗೆದುಕೊಂಡಿರುವ ವೀಡಿಯೊಗಳಲ್ಲಿ ಒಂದಾಗಿದೆ. ಇಂತಹ ಘಟನೆಗಳು ನಮ್ಮ ಗಮನಕ್ಕೆ ಬಂದಾಗ ಅವುಗಳನ್ನು ತೆಗೆದುಹಾಕುವಂತೆ ನಾವು ಕಾನೂನು ಜಾರಿ ಸಂಸ್ಥೆಗಳಿಗೆ ಲಿಖಿತ ಸೂಚನೆ ನೀಡುತ್ತೇವೆ ’ಎಂದರು. ಎ.13ರಂದು ದಿಲ್ಲಿಉಚ್ಚ ನ್ಯಾಯಾಲಯದಲ್ಲಿ ಖುದ್ದಾಗಿ ಹಾಜರಾಗಿದ್ದ ಕೇಜ್ರಿವಾಲ್ ದಿಲ್ಲಿ ಅಬಕಾರಿ ನೀತಿ ಪ್ರಕರಣದ ವಿಚಾರಣೆಯಿಂದ ನ್ಯಾ.ಶರ್ಮಾ ಅವರನ್ನು ಹಿಂದೆಗೆದುಕೊಳ್ಳುವಂತೆ ಕೋರಿ ತಾನು ಸಲ್ಲಿಸಿದ್ದ ಅರ್ಜಿಯ ಪರ ವಾದಿಸಿದ್ದರು. ಕೇಜ್ರಿವಾಲ್ ಒಂದೂ ಗಂಟೆಗೂ ಹೆಚ್ಚು ಸಮಯ ವಾದವನ್ನು ಮಂಡಿಸಿದ್ದರು. ವಿಚಾರಣೆ ಮುಗಿದ ಬೆನ್ನಿಗೇ ಅವರು ನ್ಯಾಯಾಲಯದಲ್ಲಿ ವಾದಿಸುತ್ತಿರುವ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದವು.

ವಾರ್ತಾ ಭಾರತಿ 15 Apr 2026 8:52 pm

ನಾಗರಮಠ ಸೀತಾನದಿಯಲ್ಲಿ ಅವೈಜ್ಞಾನಿಕ ಮರಳುಗಾರಿಕೆ| ಉಡುಪಿ ಡಿಸಿ ಕಚೇರಿ ಎದುರು ಎ.16ರಿಂದ ಸಂತ್ರಸ್ಥರಿಂದ ಧರಣಿ

ಉಡುಪಿ, ಎ.15: ಬ್ರಹ್ಮಾವರ ತಾಲೂಕು ಹೊಸಾಳ ಗ್ರಾಮ ನಾಗರಮಠದ ಸೀತಾನದಿಯಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಮರಳುಗಾರಿಕೆ ವಿರುದ್ಧ ಕಳೆದ ಮೂರು ದಿನಗಳಿಂದ ಮರಳುಗಾರಿಕೆ ಸ್ಥಳದಲ್ಲಿ ಪ್ರತಿಭಟನೆ ನಡೆಸುತಿದ್ದ ಸಂತ್ರಸ್ಥ ಕೃಷಿಕರು ಹಾಗೂ ಗ್ರಾಮಸ್ಥರು ನಾಳೆಯಿಂದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು ಉಗ್ರ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಕಳೆದ ಎರಡು ವಾರಗಳಿಂದ ಜನರ ಪ್ರತಿಭಟನೆ ನಡುವೆ ಬಲವಾದ ಪೊಲೀಸ್ ಪಹರೆಯೊಂದಿಗೆ ಮರಳುಗಾರಿಕೆ ನಡೆಯುತಿದ್ದು, ಸತತ ಮೂರು ದಿನಗಳಿಂದ ನೂರಾರು ಗ್ರಾಮಸ್ಥರು ನಡೆಸಿದ ಪ್ರತಿಭಟನೆ ಯಾವುದೇ ಫಲ ನೀಡದ ಹಿನ್ನೆಲಯಲ್ಲಿ ಇದೀಗ ನಾಳೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಲಾ ಗಿದೆ ಎಂದು ಪ್ರತಿಭಟನೆಯ ನೇತೃತ್ವ ವಹಿಸಿರುವ ಚಂದ್ರ ಕಾಂಚನ್ ತಿಳಿಸಿದ್ದಾರೆ. ಅವೈಜ್ಞಾನಿಕ ಹಾಗೂ ಅಕ್ರಮ ಮರಳುಗಾರಿಕೆಗಾಗಿ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾ ಕಾರರು ನಾಗರಮಠದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಮರಳುಗಾರಿಕೆ ಬಗ್ಗೆ ಜಿಲ್ಲಾಡಳಿತದ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಅಕ್ರಮ ಮರಳುಗಾರಿಕೆಯೊಂದಿಗೆ ಜಿಲ್ಲಾಡಳಿತ ಶಾಮೀಲಾಗಿರುವ ಶಂಕೆ ನಮಗಿದೆ ಎಂದು ಆರೋಪಿಸಿದರು. ಕೈಕೊಟ್ಟ ಶಾಸಕರು, ಸಂಸದರು:ಎ.13 ಮತ್ತು 14ರಂದು ಮರಳುಗಾರಿಕಾ ಸ್ಥಳದಲ್ಲಿ ಪ್ರತಿಭಟನೆ ನಡೆಸಿ 15ರಿಂದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು ಸಂತ್ರಸ್ಥ ಗ್ರಾಮಸ್ಥರೆಲ್ಲ ಸೇರಿ ಪ್ರತಿಭಟನೆ ನಡೆಸುವುದಾಗಿ ಈ ಮೊದಲೇ ಹೋರಾಟಗಾರರು ಘೋಷಿಸಿದ್ದರೂ, ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಅವರು ನಿನ್ನೆ ಪ್ರತಿಭಟನ ಕಾರರೊಂದಿಗೆ ಮಾತನಾಡಿ, ತಾವು ಜಿಲ್ಲಾಧಿಕಾರಿಗಳೊಂದಿಗೆ ಖುದ್ದಾಗಿ ಭೇಟಿಯಾಗಿ ವಿಷಯದ ಬಗ್ಗೆ ಮಾತನಾಡು ವುದಾಗಿ ತಿಳಿಸಿದ್ದಲ್ಲದೇ, ಅವರ ಪ್ರತಿಕ್ರಿಯೆ ನೋಡಿ ಮುಂದುವರಿಯೋಣ. ಅವರು ಒಪ್ಪದಿದ್ದರೆ ನಾನೂ ನಿಮ್ಮೊಂದಿಗೆ ಧರಣಿಗೆ ಬರುವುದಾಗಿ ತಿಳಿಸಿದ್ದರು ಎಂದು ಚಂದ್ರ ಕಾಂಚನ್ ವಿವರಿಸಿದರು. ಈ ಹಿನ್ನೆಲೆಯಲ್ಲಿ ಇಂದಿನ ತಮ್ಮ ಮಣಿಪಾಲ ಪ್ರತಿಭಟನೆಯನ್ನು ಮುಂದೂಡಿ ನಾಗರಮಠದಲ್ಲೇ ಧರಣಿ ಮುಂದುವ ರಿಸಿ ಶಾಸಕರಿಗಾಗಿ ಕಾದಿದ್ದಾಗಿ ತಿಳಿಸಿದ ಚಂದ್ರ ಕಾಂಚನ್, ಆದರೆ ಕೊಟ್ಟ ಮಾತಿನಂತೆ ದಿನವಿಡೀ ಸ್ಥಳಕ್ಕೆ ಬಾರದ ಶಾಸಕರು, ದೂರವಾಣಿ ಮೂಲಕ ಸಂಪರ್ಕಿಸಲು ಸತತ ಪ್ರಯತ್ನ ನಡೆಸಿದರೂ ಕರೆ ಸ್ವೀಕರಿಸಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಶಾಸಕರಂತೆ, ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರೂ ಪ್ರಯತ್ನಿಸುವ ಭರವಸೆ ನೀಡಿದ್ದರೂ ಅವರಿಂದಲೂ ಯಾವುದೇ ಉತ್ತರ ಬಂದಿಲ್ಲ. ಹೀಗಾಗಿ ನಾವು ನಾಳೆಯಿಂದ ನಮ್ಮ ಉಗ್ರ ಹೋರಾಟ ಮುಂದುವರಿಸಲು ನಿರ್ಧರಿ ಸಿದ್ದಾಗಿ ಹೇಳಿದರು. ಜಿಲ್ಲಾಧಿಕಾರಿಗಳು 10 ದಿನಗಳ ಹಿಂದೆ ಶಾಸಕರು ಹಾಗೂ ಸಂಸದರ ನೇತೃತ್ವದಲ್ಲಿ ಸ್ಥಳೀಯರು ನೀಡಿದ ಮನವಿಗೆ ಯಾವುದೇ ಸ್ಪಂದನೆ ನೀಡಿಲ್ಲ ಎಂದು ಚಂದ್ರ ಕಾಂಚನ್ ತಿಳಿಸಿದರು. ನಾಗರಮಠದಲ್ಲಿ ನಡೆದ ಧರಣಿಯನ್ನುದ್ದೇಶಿಸಿ ಮಾತನಾಡಿದ ಹೋರಾಟಗಾರರು, ಇಲ್ಲಿ ಒಂದೂವರೆ ಲಕ್ಷಕ್ಕೂ ಅಧಿಕ ಮೆಟ್ರಿಕ್ ಟನ್ ಮರಳು ತೆಗೆಯಲು ಜಿಲ್ಲಾಡಳಿತ ಅನುಮತಿ ನೀಡಿದೆ. ಇಲ್ಲಿ ಲಭ್ಯವಿರುವ ಗರಿಷ್ಠ ಮರಳು 10 ಸಾವಿರ ಮೆಟ್ರಿಕ್ ಟನ್ ಮಾತ್ರ ಎಂದು ತಜ್ಞರು ವರದಿ ನೀಡಿದ್ದಾರೆ. ಹೀಗಾಗಿ ಗ್ರಾಮಸ್ಥರು ಅವೈಜ್ಞಾನಿಕ ಮರಳು ಗಾರಿಕೆಗೆ ವಿರೋಧ ವ್ಯಕ್ತಪಡಿಸಿದರೆ, ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ಕೇಸು ದಾಖಲಿಸುತ್ತಾರೆ ಎಂದರು. ಅವೈಜ್ಞಾನಿಕ ಮರಳು ಗಣಿಗಾರಿಕೆಯಿಂದ ಕೃಷಿ ಭೂಮಿಗೆ ತೊಂದರೆ ಯಾಗುತ್ತಿದೆ. ಜಿಲ್ಲಾಧಿಕಾರಿಗೆ ದೂರು ನೀಡಿದರೂ ಪ್ರಯೋಜನವಾಗುತ್ತಿಲ್ಲ. ನೂರಾರು ದೋಣಿಗಳಿಂದ ಮರಳು ತೆಗೆಯಲಾಗುತ್ತಿದೆ. ಬಾವಿಯ ನೀರು ಕೂಡ ಉಪ್ಪಾಗುತ್ತಿದೆ’ ಎಂದು ಸಂತ್ರಸ್ಥೆ ಆಶಾ ದೂರಿದರು. ಮುಂದಿನ ದಿನಗಳಲ್ಲಿ ಜಿಲ್ಲಾಡಳಿತದ ಯಾವುದೇ ಬೆದರಿಕೆಗಳಿಗೂ ನಾವು ಬಗ್ಗದೇ ಕಾನೂನು ರೀತಿಯ ಹೋರಾಟ ಮಾಡುವುದಾಗಿ ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಚಂದ್ರ ಕಾಂಚನ್, ಕೃಷ್ಣ ಬಂಗೇರಾ, ಗಿರಿಜಾ ರಂಗ ಮರಕಾಲ, ಆಶಾ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.

ವಾರ್ತಾ ಭಾರತಿ 15 Apr 2026 8:50 pm

ಹೋರಾಟಗಾರ್ತಿ ಕೆ.ನೀಲಾಗೆ ಅಕ್ಕಮಹಾದೇವಿ, ಸಿದ್ಧರಾಮ ಶರಣರಿಗೆ ಬಸವ ರಾಷ್ಟ್ರೀಯ ಪ್ರಶಸ್ತಿ

ಕಲಬುರಗಿ: ರಾಜ್ಯ ಸರಕಾರದ 2025-26ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ, ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರಶಸ್ತಿ , ಸಾಹಿತ್ಯ ಹಾಗೂ ನಾಟಕ ಪ್ರಶಸ್ತಿ, ಕಲಾ ಪ್ರಶಸ್ತಿ ಮತ್ತು ಸಂಗೀತ ನೃತ್ಯ ವಿಭಾಗದ ಪ್ರಶಸ್ತಿಗಳಿಗೆ ಹಲವು ಸಾಧಕರನ್ನು ಆಯ್ಕೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಪೈಕಿ ಕಲಬುರಗಿ ಮೂಲದ ಹೋರಾಟಗಾರ್ತಿ ಕೆ.ನೀಲಾ ಅವರು ಅಕ್ಕಮಹಾದೇವಿ ಪ್ರಶಸ್ತಿಗೆ ಆಯ್ಕೆಯಾಗಿದ್ದರೆ, ಬೆಲ್ದಾಳದ ಸಿದ್ಧರಾಮ ಶರಣರು ಅವರು ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.  ಸಾಹಿತ್ಯ ಮತ್ತು ನಾಟಕ ವಿಭಾಗದಲ್ಲಿ ಬಳ್ಳಾರಿ ಜಿಲ್ಲೆಯ ಡಾ.ಸುಕನ್ಯಾ ಮಾರುತಿ ಅವರಿಗೆ ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ವಿಜಯಪುರದ ಅಲ್ಲಬಕ್ಷ್ ಮೀರಸಾಹೇಬ ಮಿರ್ಜಿ ಅವರಿಗೆ ಪ್ರೊ. ಕೆ.ಜಿ. ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ, ಯಾದಗಿರಿ ಜಿಲ್ಲೆಯ ಬಿ.ಲಕ್ಷಣ ಅವರಿಗೆ ಜಾನಪದ ಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ವಾರ್ತಾ ಭಾರತಿ 15 Apr 2026 8:50 pm

ಅಕ್ರಮ ಹಣ ವರ್ಗಾವಣೆ ಪ್ರಕರಣ: ರಾಬರ್ಟ್ ವಾದ್ರಾಗೆ ದಿಲ್ಲಿ ನ್ಯಾಯಾಲಯ ಸಮನ್ಸ್

ಹೊಸದಿಲ್ಲಿ, ಎ. 15: ಹರ್ಯಾಣದ ಶಿಖೋಹಪುರದಲ್ಲಿ ಭೂಮಿ ವ್ಯಾಪಾರಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಪತಿ, ಉದ್ಯಮಿ ರಾಬರ್ಟ್ ವಾದ್ರಾ ಹಾಗೂ ಇತರರಿಗೆ ದಿಲ್ಲಿ ನ್ಯಾಯಾಲಯ ಬುಧವಾರ ಸಮನ್ಸ್ ಜಾರಿ ಮಾಡಿದೆ. ಜಾರಿ ನಿರ್ದೇಶನಾಲಯ (ಈಡಿ) ಸಲ್ಲಿಸಿದ ಪ್ರಾಸಿಕ್ಯೂಷನ್ ದೂರನ್ನು (ಆರೋಪ ಪಟ್ಟಿಗೆ ಸಮಾನ) ಗಮನಕ್ಕೆ ತೆಗೆದುಕೊಂಡು ರೌಸ್ ಅವೆನ್ಯೂ ನ್ಯಾಯಾಲಯ ಈ ಸಮನ್ಸ್ ಜಾರಿ ಮಾಡಿದೆ. ವಾದ್ರಾ ಹಾಗೂ ಇತರ 8 ಮಂದಿ ಆರೋಪಿಗಳು ಮೇ 16ರಂದು ಹಾಜರಾಗುವಂತೆ ನ್ಯಾಯಾಲಯ ಆದೇಶಿಸಿದೆ. ನ್ಯಾಯಾಲಯದ ಕಲಾಪದ ಸಂದರ್ಭ ವಾದ್ರಾ ಅವರ ಪರ ನ್ಯಾಯವಾದಿ ಈ ವಿಷಯದಲ್ಲಿ ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ. ಆದ್ದರಿಂದ ಪ್ರಾಸಿಕ್ಯೂಷನ್ ದೂರನ್ನು ಗಮನಕ್ಕೆ ತೆಗೆದುಕೊಳ್ಳದಂತೆ ನ್ಯಾಯಾಲಯವನ್ನು ಆಗ್ರಹಿಸಿದರು. ವಾದ್ರಾ, ಆಗಿನ ಹರ್ಯಾಣ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ, ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ರಿಯಲ್ ಎಸ್ಟೇಟ್ ದೈತ್ಯ ಡಿಎಲ್ಎಫ್ ಹಾಗೂ ಆಸ್ತಿ ಮಾರಾಟಗಾರರ ವಿರುದ್ಧ 2018 ಸೆಪ್ಟಂಬರ್‌ನಲ್ಲಿ ದಾಖಲಾದ ಎಫ್ಐಆರ್ ಜಾರಿ ನಿರ್ದೇಶನಾಲಯದ ಈ ಪ್ರಕರಣಕ್ಕೆ ಮೂಲ.

ವಾರ್ತಾ ಭಾರತಿ 15 Apr 2026 8:50 pm

Vijayanagara | ಕಾರು ಮರಕ್ಕೆ ಢಿಕ್ಕಿ: ಸಿಪಿಐ ರಘುನಾಥ್ ಸ್ಥಳದಲ್ಲೇ ಮೃತ್ಯು

ವಿಜಯನಗರ/ಹೊಸಪೇಟೆ: ಕಾರು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಡಿಸಿಆರ್‌ಇ ಘಟಕದ ಸಿಪಿಐ ರಘುನಾಥ್ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (DCRE) ಘಟಕದಲ್ಲಿ ಸಿಪಿಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಘುನಾಥ್ ಅವರು, ಚಿತ್ರದುರ್ಗ ಜಿಲ್ಲೆಯ ತಮ್ಮ ಸ್ವಗ್ರಾಮದಿಂದ ಹೊಸಪೇಟೆ ಕಡೆಗೆ ಬರುತ್ತಿರುವ ವೇಳೆ ಅಪಘಾತಕ್ಕೊಳಗಾಗಿದ್ದಾರೆ. ವಿಜಯನಗರ–ದಾವಣಗೆರೆ ಗಡಿ ಭಾಗದ ಮುಸ್ಟೂರು ಮತ್ತು ಕಡಬನಕಟ್ಟೆ ಮಧ್ಯೆ ಅವರ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಬೇವಿನ ಮರಕ್ಕೆ ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಢಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ಜಜ್ಜಿಹೋಗಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಮನಾರ್ಹವಾಗಿ, ರಘುನಾಥ್ ಅವರಿಗೆ ಇತ್ತೀಚೆಗೆ ಬೆಂಗಳೂರಿನ ಕೇಂದ್ರ ಕಚೇರಿಗೆ ವರ್ಗಾವಣೆಯ ಆದೇಶವಾಗಿದ್ದು, ಇನ್ನೂ ಹೊಸ ಹುದ್ದೆಗೆ ವರದಿ ಮಾಡಿಕೊಂಡಿರಲಿಲ್ಲ ಎನ್ನಲಾಗಿದೆ.

ವಾರ್ತಾ ಭಾರತಿ 15 Apr 2026 8:48 pm

ದೇವನೂರು ಮಹಾದೇವ ಅವರಿಗೆ ʼಪಂಪ ಪ್ರಶಸ್ತಿʼ

ಎಸ್.ಜಿ.ಸಿದ್ದರಾಮಯ್ಯರಿಗೆ ʼಕಾಯಕಯೋಗಿ ಶ್ರೀ ಸಿದ್ಧರಾಮೇಶ್ವರ ಪ್ರಶಸ್ತಿʼ, ಕೆ.ನೀಲಾರಿಗೆ ʼಅಕ್ಕಮಹಾದೇವಿ ಪ್ರಶಸ್ತಿʼ

ವಾರ್ತಾ ಭಾರತಿ 15 Apr 2026 8:48 pm

ಜಮ್ಮು-ಕಾಶ್ಮೀರ| ಸ್ವಘೋಷಿತ ಗೋರಕ್ಷಕರಿಗೆ ಹೆದರಿ ಹೊಳೆಗೆ ಹಾರಿದ ಯುವಕ: ಮುಂದುವರಿದ ಶೋಧ ಕಾರ್ಯಾಚರಣೆ

ಶ್ರೀನಗರ, ಎ. 15: ಸ್ವಘೋಷಿತ ಗೋರಕ್ಷಕರು ರವಿವಾರ ಬೆನ್ನಟ್ಟಿ ಹಲ್ಲೆ ನಡೆಸಿದ ಬಳಿಕ ಜಮ್ಮು ಹಾಗೂ ಕಾಶ್ಮೀರದ ರಾಂಬನ್ ಜಿಲ್ಲೆಯ ರಾಮ್ಸೂ ಪ್ರದೇಶದ ಶ್ರೀನಗರ-ಜಮ್ಮು ಹೆದ್ದಾರಿಯಲ್ಲಿರುವ ಹೊಳೆಗೆ ಹಾರಿ ನಾಪತ್ತೆಯಾದ ಯುವಕನ ಮೃತದೇಹ ಪತ್ತೆ ಹಚ್ಚಲು ನಡೆಸುತ್ತಿರುವ ಶೋಧ ಕಾರ್ಯಾಚರಣೆ ಬುಧವಾರ ಕೂಡ ಮುಂದುವರಿದಿದೆ. ಈ ಯುವಕನನ್ನು 28 ವರ್ಷದ ತನ್ವೀರ್ ಅಹ್ಮದ್ ಚೋಪನ್ ಎಂದು ಗುರುತಿಸಲಾಗಿದೆ. ಈತ ರಾಂಬನ್ ಜಿಲ್ಲೆಯ ಪೋಗಲ್‌ನ ಮುಂಡಖಲ್ ಗ್ರಾಮದ ನಿವಾಸಿ. ಈತ ರವಿವಾರ ಜಮ್ಮುವಿನಿಂದ ತನ್ನ ಗ್ರಾಮಕ್ಕೆ ಒಂದು ಹಾಲು ಕೊಡುವ ಹಸು ಹಾಗೂ ಎರಡು ಕರುಗಳನ್ನು ಸಾಗಿಸುತ್ತಿದ್ದ. ಈ ಸಂದರ್ಭ ನಕಲಿ ಗೋರಕ್ಷಕರು ಆತನನ್ನು ಬೆನ್ನಟ್ಟಿ ಹಲ್ಲೆ ನಡೆಸಿದ್ದಾರೆ. ಅವರಿಂದ ತಪ್ಪಿಸಿಕೊಳ್ಳಲು ಆತ ರಾಮ್ಸೂ ಪ್ರದೇಶದಲ್ಲಿರುವ ಹೊಳೆಗೆ ಹಾರಿದ್ದಾನೆ ಎಂದು ಹೇಳಲಾಗಿದೆ. ರಾಮ್ಸೂವಿನ ಮಾಕರ್ಕೋಟೆಯ ಸಮೀಪ ಹೊಳೆಯಲ್ಲಿ ಆತನ ಮೃತದೇಹವನ್ನು ಪತ್ತೆ ಹಚ್ಚಲು ರವಿವಾರದಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಚೋಪನ್‌ನ ತಂದೆ ಜಮ್ಮು ಹಾಗೂ ಕಾಶ್ಮೀರ ಪೊಲೀಸ್‌ನಲ್ಲಿ ವಿಶೇಷ ಪೊಲೀಸ್ ಅಧಿಕಾರಿ (ಎಸ್ಪಿಒ) ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ತನ್ವೀರ್ ಮೃತದೇಹವನ್ನು ಪತ್ತೆ ಹಚ್ಚಲು ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌, ಯುಡಿಆರ್‌ಎಫ್‌, ಪೊಲೀಸ್, ಕ್ಯುಆರ್‌ಟಿ, ನಾಗರಿಕ ಆಡಳಿತದ ಸಿಬ್ಬಂದಿ ಹಾಗೂ ಸ್ಥಳೀಯ ಸ್ವಯಂಸೇವಕರು ಶೋಧ ಕಾರ್ಯಾಚರಣೆಯನ್ನು ನಾಲ್ಕನೆಯ ದಿನವಾದ ಬುಧವಾರ ಕೂಡ ಮುಂದುವರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬಲವಾದ ನೀರಿನ ಪ್ರವಾಹ ಹಾಗೂ ನೀರಿನ ಆಳ ರಕ್ಷಣಾ ಪ್ರಯತ್ನಕ್ಕೆ ಅಡ್ಡಿ ಉಂಟು ಮಾಡುತ್ತಿದೆ. ಆದ್ದರಿಂದ ಮೃತದೇಹ ಇದುವರೆಗೆ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತದೇಹ ಪತ್ತೆಯಾಗುವವರೆಗೆ ಶೋಧ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ರಾಂಬನ್ ಪೊಲೀಸ್ ಅಧೀಕ್ಷಕ ಅರುಣ್ ಗುಪ್ತಾ ತಿಳಿಸಿದ್ದಾರೆ.

ವಾರ್ತಾ ಭಾರತಿ 15 Apr 2026 8:47 pm

Basavanna: ದೇವರು - ದೇವಸ್ಥಾನಗಳ ಬಗ್ಗೆ ಬಸವಣ್ಣನವರಿಗೆ ನಂಬಿಕೆ ಇರಲಿಲ್ಲ: ಸಿದ್ದರಾಮಯ್ಯ

Basavanna: ದೇವರು - ದೇವಸ್ಥಾನಗಳ ಬಗ್ಗೆ ಬಸವಣ್ಣನವರಿಗೆ ನಂಬಿಕೆ ಇರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರವು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕರ್ನಾಟಕದ ಬಹುಮುಖ ಪರಂಪರೆಯನ್ನು ಪ್ರತಿನಿಧಿಸುವ ಕನ್ನಡ ಸಾಮರಸ್ಯ ನೆಲೆಗಳು ಕೃತಿಗಳನ್ನು ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ವಿಚಾರಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಒನ್ ಇ೦ಡಿಯ 15 Apr 2026 8:39 pm

ಲೆಬನಾನ್‌ ನಲ್ಲಿ ಶೀಘ್ರ ಕದನ ವಿರಾಮ ಸಾಧ್ಯತೆ: ಹಿಜ್ಬುಲ್ಲಾ ವಕ್ತಾರ

ಬೈರೂತ್, ಎ.15: ಲೆಬನಾನ್‌ ನಲ್ಲಿ ನಡೆಯುತ್ತಿರುವ ಸಂಘರ್ಷಕ್ಕೆ ಶೀಘ್ರದಲ್ಲೇ ಕದನ ವಿರಾಮ ಜಾರಿಯಾಗುವ ಸಾಧ್ಯತೆ ಇದೆ ಎಂದು ಹಿಜ್ಬುಲ್ಲಾ ಸಂಘಟನೆಯ ವಕ್ತಾರ ಹಾಗೂ ಸಂಸದ ಇಬ್ರಾಹಿಂ ಮೌಸಾವಿ ತಿಳಿಸಿದ್ದಾರೆ. ಇರಾನ್ ಹಾಗೂ ಪ್ರಾದೇಶಿಕ ಮಟ್ಟದಲ್ಲಿ ನಡೆಯುತ್ತಿರುವ ರಾಜತಾಂತ್ರಿಕ ಪ್ರಯತ್ನಗಳು ಈ ಪ್ರಕ್ರಿಯೆಗೆ ಕಾರಣವಾಗಬಹುದು ಎಂದು ಅವರು ಹೇಳಿದ್ದಾರೆ ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಲೆಬನಾನ್‌ ನಲ್ಲಿ ಕದನ ವಿರಾಮಕ್ಕಾಗಿ ತೆರೆಮರೆಯಲ್ಲಿ ಚರ್ಚೆಗಳು ಮತ್ತು ಪ್ರಯತ್ನಗಳು ನಡೆಯುತ್ತಿವೆ ಎಂದು ಹೆಸರು ಬಹಿರಂಗಪಡಿಸದ ಇಬ್ಬರು ಹಿರಿಯ ಲೆಬನಾನ್ ಅಧಿಕಾರಿಗಳು ರಾಯಿಟರ್ಸ್‌ಗೆ ತಿಳಿಸಿದ್ದಾರೆ. ಆದರೆ, ಕದನ ವಿರಾಮ ಯಾವಾಗ ಪ್ರಾರಂಭವಾಗುತ್ತದೆ ಅಥವಾ ಅದು ಎಷ್ಟು ಕಾಲ ಮುಂದುವರಿಯುತ್ತದೆ ಎಂಬುದರ ಕುರಿತು ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಿಲ್ಲವೆಂದು ಅವರು ಹೇಳಿದ್ದಾರೆ. ಇದಲ್ಲದೆ, ಲೆಬನಾನ್‌ ನಲ್ಲಿ ಜಾರಿಗೆ ಬರಬಹುದಾದ ಕದನ ವಿರಾಮದ ಅವಧಿ ಅಮೆರಿಕ–ಇರಾನ್ ನಡುವಿನ ಕದನ ವಿರಾಮದ ಅವಧಿಯೊಂದಿಗೆ ಸಂಬಂಧ ಹೊಂದಿರಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ವಾರ್ತಾ ಭಾರತಿ 15 Apr 2026 8:25 pm

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಇಬ್ಬರು ವಶಕ್ಕೆ

ಕಾರ್ಕಳ, ಎ.15: ಕುಕ್ಕುಂದೂರು ಗ್ರಾಮದ ಶಂಕರಬೆಟ್ಟು ಅರ್ಬಿಪಾದೆ ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲು ಗಣಿಗಾರಿಕೆಗೆ ಎ.15ರಂದು ಬೆಳಗ್ಗೆ ದಾಳಿ ನಡೆಸಿದ ಪೊಲೀಸರು, ಇಬ್ಬರನ್ನು ಬಂಧಿಸಿ, ಹಲವು ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿಯಂತೆ ದಾಳಿ ನಡೆಸಿದ ಪೊಲೀಸರು, ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಲಾರಿ ಚಾಲಕರಾದ ಮನೋಜ್ ಮತ್ತು ಶರಣ್ ಎಂಬವರನ್ನು ವಶಕ್ಕೆ ಪಡೆದುಕೊಂಡರು. ಅಲ್ಲದೆ ಸ್ಥಳದಲ್ಲಿದ್ದ ಟಿಪ್ಪರ್, ಲಾರಿ ಹಾಗೂ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 15 Apr 2026 8:24 pm

ಹೆಜಮಾಡಿಯ ವ್ಯಕ್ತಿಗೆ 4.86ಲಕ್ಷ ರೂ. ಆನ್‌ಲೈನ್ ವಂಚನೆ: ಪ್ರಕರಣ ದಾಖಲು

ಉಡುಪಿ, ಎ.15: ವಾಟ್ಸಾಪ್‌ನಲ್ಲಿ ಬಂದ ಎಪಿಕೆ ಫೈಲ್ ಡೌನ್‌ಲೋಡ್ ಮಾಡಿದ ಪರಿಣಾಮ ವ್ಯಕ್ತಿಯೊಬ್ಬರು ಲಕ್ಷಾಂತರ ರೂ. ಹಣ ಕಳೆದುಕೊಂಡು ಆನ್‌ಲೈನ್ ವಂಚನೆ ಒಳಗಾಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎ.12ರಂದು ಪಡುಬಿದ್ರಿ ಹೆಜಮಾಡಿಯ ಅಬ್ದುಲ್ ಹಮೀದ್ ಎಂಬವರ ಪರಿಚಯದ ಕುಮಾರಸ್ವಾಮಿ ಎಂಬವರ ಮೊಬೈಲ್ ನಂಬ್ರದಿಂದ ಎಪಿಕೆ ಫೈಲ್ ವಾಟ್ಸಾಪ್‌ನಲ್ಲಿ ಬಂದಿದ್ದು, ಅದನ್ನು ಡೌನಲೋಡ್ ಮಾಡಿದಾಗ ಅಬ್ದುಲ್ ಹಮೀದ್ ಅವರ ಬ್ಯಾಂಕ್ ಖಾತೆಯಿಂದ ಎ.13ರಂದು ಹಂತ ಹಂತವಾಗಿ ಒಟ್ಟು 4,86,13ರೂ. ಹಣ ಕಡಿತವಾಗಿರುವುದಾಗಿ ದೂರಲಾಗಿದೆ.

ವಾರ್ತಾ ಭಾರತಿ 15 Apr 2026 8:22 pm

ಕಾರು ಢಿಕ್ಕಿ: ಪಾದಚಾರಿ ಮಹಿಳೆ ಮೃತ್ಯು

ಕೊಲ್ಲೂರು, ಎ.15: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಯೊಬ್ಬರು ಮೃತಪಟ್ಟ ಘಟನೆ ಎ.14ರಂದು ಸಂಜೆ 7.15ರ ಸುಮಾರಿಗೆ ವಂಡ್ಸೆ ಗ್ರಾಮ ಪಂಚಾಯತ್ ಎದುರು ಕೊಲ್ಲೂರು-ಕುಂದಾಪುರ ಮುಖ್ಯ ರಸ್ತೆಯಲ್ಲಿ ನಡೆದಿದೆ. ಮೃತರನ್ನು ವಂಡ್ಸೆ ನಿವಾಸಿ ಶಶಿಕಲಾ(52) ಎಂದು ಗುರುತಿಸಲಾಗಿದೆ. ಇವರು ದಿನಸಿ ಅಂಗಡಿಯಿಂದ ಸಾಮಾನು ತರಲು ರಸ್ತೆ ಬದಿ ನಡೆದು ಕೊಂಡು ಹೋಗುತ್ತಿದ್ದಾಗ ಕೊಲ್ಲೂರು ಕಡೆಯಿಂದ ಕುಂದಾಪುರದ ಕಡೆಗೆ ಬರುತ್ತಿದ್ದ ಕಾರು, ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಶಶಿಕಲಾ ಅಲ್ಲೇ ಇದ್ದ ಚರಂಡಿಗೆ ಬಿದ್ದರು. ಅದೇ ರೀತಿ ಕಾರು ಕೂಡ ಸ್ವಲ್ಪ ಮುಂದೆ ಹೋಗಿ ಚರಂಡಿಗೆ ಬಿತ್ತೆನ್ನಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅವರು ಕುಂದಾಪುರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 15 Apr 2026 8:21 pm

ಮಲ್ಪೆ: 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಲ್ಪೆ, ಎ.15: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣಕ್ಕೆ ಸಂಬಂಧಿಸಿ ಕಳೆದ 23 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಶಿವನಗರ ನಿವಾಸಿ ಎಂ.ಬಾಬು (52) ಬಂಧಿತ ಆರೋಪಿ. ಮಲ್ಪೆ ಎಸ್ಸೈ ಅನೀಲ್ ಕುಮಾರ್ ಡಿ. ನೇತೃತ್ವದಲ್ಲಿ ಕಳೆದ 5 ತಿಂಗಳಿನಿಂದ ಪ್ರಯತ್ನಿಸಿ, ಮಾಹಿತಿ ಕಲೆ ಹಾಕಿ, ಖಚಿತ ಮಾಹಿತಿ ಮೇರೆಗೆ ಠಾಣಾ ಸಿಬ್ಬಂದಿ ಸುರೇಶ್ ಕುಮಾರ್ ಮತ್ತು ವಿಶ್ವನಾಥ್ ಎಚ್. ಎ.14ರಂದು ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದಾರೆ. ಆರೋಪಿಯನ್ನು ಎ.15ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಎ.28ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ವಾರ್ತಾ ಭಾರತಿ 15 Apr 2026 8:20 pm

ಅಪಘಾತದಲ್ಲಿ ಗಾಯಗೊಂಡಿದ್ದ ಸಾಮಾಜಿಕ ಕಾರ್ಯಕರ್ತ ಮೃತ್ಯು

ಮಂಗಳೂರು, ಎ.15: ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಕಳೆದ ಶನಿವಾರ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸಾಮಾಜಿಕ ಕಾರ್ಯಕರ್ತ ನಗರದ ಬಿಕರ್ನಕಟ್ಟೆಯ ನಿವಾಸಿ ಮುಹಮ್ಮದ್ ಇರ್ಶಾದ್ ಖಾನ್ (58) ಚಿಕಿತ್ಸೆ ಫಲಕಾರಿಯಾಗದೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ. ಮುಹಮ್ಮದ್ ಇರ್ಶಾದ್ ಖಾನ್ ಸವಾರಿ ಮಾಡುತ್ತಿದ್ದ ದ್ವಿಚಕ್ರ ವಾಹನಕ್ಕೆ ನಾಯಿ ಅಡ್ಡ ಬಂದಿತ್ತು ಎನ್ನಲಾಗಿದೆ. ದ್ವಿಚಕ್ರ ವಾಹನ ನಿಯಂತ್ರಣ ಕಳಕೊಂಡು ರಸ್ತೆಗೆ ಬಿದ್ದ ಪರಿಣಾಮ ಇರ್ಶಾದ್ ಖಾನ್ ಗಂಭೀರ ಗಾಯಗೊಂಡಿದ್ದರು. ತಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ರವಿವಾರ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ಪತ್ನಿ, ಇಬ್ಬರು ಪುತ್ರರು ಮತ್ತು ಒಬ್ಬರು ಪುತ್ರಿ ಹಾಗೂ ಅಪಾರ ಬಂಧುಬಳಗವನ್ನು ಮೃತರು ಅಗಲಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಇರ್ಶಾದ್ ಖಾನ್, ಸಾಮಾಜಿಕ ಕಾರ್ಯಕರ್ತರಾಗಿಯೂ ಗುರುತಿಸಿಕೊಂಡಿದ್ದರು.

ವಾರ್ತಾ ಭಾರತಿ 15 Apr 2026 8:17 pm

ನಾರಿ ಶಕ್ತಿ ವಂದನ ಕಾಯ್ದೆ ಜಾರಿ ಐತಿಹಾಸಿಕ ಕ್ರಮ: ಶಾಸಕಿ ಭಾಗೀರಥಿ ಮುರುಳ್ಯ

ಮಂಗಳೂರು, ಎ.15: ನಾರಿ ಶಕ್ತಿ ವಂದನ ಕಾಯ್ದೆಯು ಭಾರತದ ಪ್ರಜಾಪ್ರಭುತ್ವದ ಐತಿಹಾಸಿಕ ಕ್ರಮವಾಗಿದೆ. ಈ ಕಾಯ್ದೆಯ ಮೂಲಕ ದೇಶದ ಪ್ರಜಾಪ್ರಭುತ್ವದಲ್ಲಿ ಮಹಿಳೆಯರು ನೀತಿ ನಿರೂಪಣೆ ಮತ್ತು ನಿರ್ಧಾರ ಕೈಗೊಳ್ಳುವಲ್ಲಿ ಮಹತ್ವದ ಪಾತ್ರ ನಿರ್ವಹಿಸಲಿದ್ದಾರೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ದ.ಕ.ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಎ.16ರಿಂದ ಆರಂಭ ವಾಗುವ ಸಂಸತ್‌ನ ವಿಶೇಷ ಅಧಿವೇಶನದಲ್ಲಿ ನಾರಿ ಶಕ್ತಿ ವಂದನ ಕಾಯ್ದೆಗೆ ತಿದ್ದುಪಡಿ ಮೂಲಕ ಪ್ರಜಾಪ್ರಭುತ್ವದಲ್ಲಿ ಮಹಿಳೆಯರ ಸಕ್ರಿಯ ಪಾಲ್ಗೊಳ್ಳುವಿಕೆ ಆಗಲಿದೆ. ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಮೀಸಲಾತಿ ನೀಡುವ ಈ ನಿಬಂಧನೆಯು ಪ್ರಾತಿನಿಧ್ಯವನ್ನು ಹೆಚ್ಚಿಸುವುದಕ್ಕೆ ಮಾತ್ರ ಸೀಮಿತವಾಗಿಲ್ಲ ಎಂದರು. ಪ್ರಧಾನಿ ನರೇಂದ್ರ ಮೋದಿ ಮಹಿಳಾ ನೇತೃತ್ವದ ಅಭಿವೃದ್ಧಿ ಮಾತ್ರ ಭಾರತವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯ ಬಹುದು ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ನಾರಿ ಶಕ್ತಿ ವಂದನ ಕಾಯ್ದೆಯ ಅನುಷ್ಠಾನವು ಈ ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದರು. ಪ್ರಧಾನಿ ನೇತೃತ್ವದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಅಭಿಯಾನ, ಸುಕನ್ಯಾ ಸಮೃದ್ಧಿ ಯೋಜನೆ, ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ, ಪೋಷನ್ 2.0 ಯಶಸ್ವಿಯಾಗಿ ಅನುಷ್ಠಾನಗೊಂಡಿದೆ. ಪ್ರಧಾನ ಮಂತ್ರಿ ಜನ್ ಧನ್ ಯೋಜನೆಯಡಿ 322.9 ಮಿಲಿಯನ್ ಮಹಿಳೆಯರು ಬ್ಯಾಂಕಿಂಗ್ ವ್ಯವಸ್ಥೆಗೆ ಸಂಪರ್ಕ ಹೊಂದಿದ್ದಾರೆ. ಮಹಿಳೆಯರು ಮುದ್ರಾ ಯೋಜನಾ ಸಾಲಗಳಲ್ಲಿ ಶೇ. 68 ರಷ್ಟು ಪಡೆದಿದ್ದಾರೆ. ಲಖ್ ಪಟ್ಟಿ ದೀದಿ ಮತ್ತು ನಮೋ ಡೋನ್ ದೀದಿಯಂತಹ ಉಪಕ್ರಮಗಳಿಂದ ಮಹಿಳೆಯರು ತಮ್ಮ ಸಾಂಪ್ರದಾಯಿಕ ಪಾತ್ರಗಳನ್ನು ಮೀರಿ ತಂತ್ರ ಜ್ಞಾನ ಮತ್ತು ಉದ್ಯಮಶೀಲತೆಯ ಕ್ಷೇತ್ರಗಳಲ್ಲಿ ಸಬಲೀಕರಣಗೊಂಡಿದ್ದಾರೆ. ಉಜ್ವಲ ಯೋಜನೆಯು ಶುದ್ಧ ಇಂಧನ ವನ್ನು ಒದಗಿಸಿದೆ. ಸ್ವಚ್ಛ ಭಾರತ ಮಿಷನ್ ಮತ್ತು ಜಲ ಜೀವನ್ ಮಿಷನ್ ದೈನಂದಿನ ಜೀವನದ ಕಷ್ಟಗಳನ್ನು ಕಡಿಮೆ ಮಾಡಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಸುಲೋಚನಾ ಜಿ.ಕೆ. ಭಟ್, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ, ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಶ್ವೇತಾ ಪೂಜಾರಿ, ದ.ಕ. ಜಿಲ್ಲಾಧ್ಯಕ್ಷೆ ಮಂಜುಳಾ ರಾವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂಧ್ಯಾ ವೆಂಕಟೇಶ್, ಲಖಿತಾ ಶೆಟ್ಟಿ ಉಪಸ್ಥಿತರಿದ್ದರು.

ವಾರ್ತಾ ಭಾರತಿ 15 Apr 2026 8:15 pm

ಹಾವಂಜೆ ಬೋಧಿಸತ್ವ ಬುದ್ಧ ವಿಹಾರದಲ್ಲಿ ಭೀಮ್ ಜಯಂತೋತ್ಸವ

ಉಡುಪಿ, ಎ.15: ಬೋಧಿಸತ್ವ ಬುದ್ಧ ಫೌಂಡೇಶನ್ ಉಡುಪಿ ಜಿಲ್ಲೆ, ಬೋಧಿಸತ್ವ ಬುದ್ಧ ವಿಹಾರ ಹಾವಂಜೆ ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇರ್ಡ್ಕ ಮಾರ್ಗ) ಇವರ ಸಹಯೋಗದಲ್ಲಿ ಡಾ.ಬಿ.ಆರ್. ಅಂಬೇಡ್ಕರ್‌ ರವರ 135ನೇ ಜಯಂತಿ ಅಂಗವಾಗಿ ಭೀಮ್ ಜಯಂತೋತ್ಸವವನ್ನು ಹಾವಂಜೆಯ ಬೋಧಿಸತ್ವ ಬುದ್ಧ ವಿಹಾರದಲ್ಲಿ ಆಚರಿಸಲಾಯಿತು. ಬೆಂಗಳೂರಿನ ಮಹಾಬೋಧಿ ಲೋಕಶಾಂತಿ ಬುದ್ಧವಿಹಾರದ ಬಿಕ್ಕು ಪಣ್ಯಪಾಲ ಭಂತೇಜಿ, ಸದ್ಧಾರಖಿತ ಭಂತೇಜಿ, ಧಮ್ಮವರೋ ಭಂತೇಜಿ, ಸಂತಚಿತ್ತೋ ಭಂತೇಜಿ ಸಾನಿಧ್ಯದಲ್ಲಿ ಬುದ್ಧ ವಂದನೆ, ಧಮ್ಮ ವಂದನೆ ಹಾಗೂ ಸಂಘ ವಂದನೆ ನೆರವೇರಿಸಲಾಯಿತು. ಭಂತೇಜಿಗಳು ಭಗವಾನ್ ಬುದ್ಧರ ಧಮ್ಮದ ಪ್ರವಚನ ನೀಡಿ, ಅಂಬೇಡ್ಕರ್ ಅವರ ಸಮಾನತೆ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯದ ತತ್ವಗಳನ್ನು ವಿವರಿಸಿದರು. ಕಾರ್ಯಕ್ರಮವನ್ನು ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷ ಅಜಯ್ ಕುಮಾರ್ ಉದ್ಘಾಟಿಸಿ ದರು. ಅಧ್ಯಕ್ಷತೆಯನ್ನು ದಸಂಸ(ಅಂಬೇರ್ಡ್ಕ ಮಾರ್ಗ) ರಾಜ್ಯ ಸಂಘಟನಾ ಸಂಚಾಲಕ ರಾಜು ಎಂ.ತಳವಾರ ವಹಿಸಿದ್ದರು. ಪ್ರಮುಖ ಭಾಷಣಕಾರರಾಗಿ ಸಾಹಿತಿ, ಬರಹಗಾರರು, ಪತ್ರಕರ್ತ ಡಾ. ಕೆ.ಎ.ಓಬಳೇಶ್ ಮಾತನಾಡಿದರು. ಹೇರೂರು ರುಡ್‌ಸೆಟ್ ನಿರ್ದೇಶಕ ಡಾ.ಬೊಮ್ಮಯ್ಯ, ಸುದ್ಧಿ ಪಾರಿಜಾತ ಸಂಪಾದಕ ಅಶೋಕ್, ಆವರ್ಸೆ ಗ್ರಾಪಂ ಪಿಡಿಓ ದಿವ್ಯ ಶೇಖರ್, ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ, ಯುವ ಧಮ್ಮಾಚಾರಿ ಮುರಳಿ ಎಂ.ಮಾರ್ಪಳ್ಳಿ, ಹಾವಂಜೆ ಗ್ರಾಪಂ ಸಿಬಂದಿ ಸದಾಶಿವ ಹಾವಂಜೆ, ಹಿರಿಯ ಧಮ್ಮಾಚಾರಿ ಶಂಭು ಸುವರ್ಣ ಮುಖ್ಯ ಅತಿಥಿಗಳಾಗಿದ್ದರು. ಬೋಧಿಸತ್ವ ಬುದ್ಧ ಫೌಂಡೇಶನ್‌ನ ಅಧ್ಯಕ್ಷ ಶೇಖರ್ ಹಾವಂಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಬೌದ್ಧ ಉಪಾಸಕ ಪಕೀರಪ್ಪ ಎಂ. ಸ್ವಾಗತಿಸಿದರು. ವಕೀಲ ಶರತ್.ಎಸ್ ಹಾವಂಜೆ ಸಂವಿಧಾನದ ಪೀಠಿಕೆ ಪ್ರಸ್ತಾವನೆ, ವಾಚನವನ್ನು ನೆರವೇರಿಸಿದರು. ಜಯಶೀಲ ಕಾರ್ಯಕ್ರಮ ನಿರೂಪಿಸಿದರು. ಶರತ್ ಹಾವಂಜೆ ವಂದಿಸಿದರು.

ವಾರ್ತಾ ಭಾರತಿ 15 Apr 2026 8:13 pm

ವಿದ್ಯಾವಂತರಾದರೆ ಮಾತ್ರಕ್ಕೆ ಏಳಿಗೆ ಸಾಧ್ಯ: ಎಸ್ಸೈ ಅನೀಲ್ ಕುಮಾರ್

ಮಲ್ಪೆ : ಜಗತ್ತಿಗೆ ಬೆಳಕನ್ನು ನೀಡಿದ ಅಂಬೇಡ್ಕರ್ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ವಿದ್ಯಾವಂತರಾದ ಮಾತ್ರಕ್ಕೆ ನಮ್ಮ ಏಳಿಗೆ ಸಾಧ್ಯ ಎಂದು ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಅನೀಲ್ ಕುಮಾರ್ ಡಿ. ಹೇಳಿದ್ದಾರೆ. ಕೀರ್ತಿಶಾಲಿ ಕ್ರೀಡಾ ಹಾಗೂ ಸಾಂಸ್ಕೃತಿಕ ಕಲಾ ಸಂಘ ವಡಬಾಂಡೇಶ್ವರ ತೊಟ್ಟಂ ಇವರ ಆಶ್ರಯದಲ್ಲಿ ತೊಟ್ಟಂನ ಸಾರ್ವಜನಿಕ ಶ್ರೀಗಣೇಶ ವೇದಿಕೆಯಲ್ಲಿ ಮಂಗಳವಾರ ಆಯೋಜಿಸಲಾದ ಮಹಾಮಾನವತಾವಾದಿ, ಸಂವಿಧಾನ ಶಿಲ್ಪಿ ಡಾ.ಭೀಮ್ ರಾವ್ ಅಂಬೇಡ್ಕರ್ ಅವರ 135ನೇ ಜನ್ಮ ದಿನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು. ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ಯುವಕರು ಕಾನೂನು ಉಲ್ಲಂಘನೆ ಮಾಡಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದಾರೆ. ಇದರ ಪರಿಣಾಮ ಹೆತ್ತವರಿಗೆ ದಂಡ ಕಟ್ಟುವಂತಹ ಪರಿಸ್ಥಿತಿ ಬಂದಿದೆ. ಯಾರೂ ಕೂಡ ಕಾನೂನು ಉಲ್ಲಂಘನೆ ಮಾಡಬಾರದು ಎಂದರು. ಅಧ್ಯಕ್ಷತೆಯನ್ನು ಸಂಘದ ಗೌರವಾಧ್ಯಕ್ಷ ಎಂ.ನವೀನ್ ಚಂದ್ರ ಮಲ್ಪೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉದ್ಯಮಿ ಶಾನ್‌ರಾಜ್ ಎಸ್. ಕೋಟ್ಯಾನ್, ಸಮಾಜ ಸೇವಕ ಜಗದೀಶ್ ಆರ್.ಸಾಲ್ಯಾನ್, ತೊಟ್ಟಂ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ಅಧ್ಯಕ್ಷ ಪ್ರಶಾಂತ್ ಕೆ.ಸಾಲ್ಯಾನ್, ಶ್ರೀಮಂಜುನಾಥೇಶ್ವರ ಭಜನಾ ಮಂದಿರದ ಅಧ್ಯಕ್ಷ ಸುರೇಂದ್ರ ಕುಂದರ್, ಶ್ರೀಭಕ್ತಿ ಉದಯ ಪಂಡರೀನಾಥ ಭಜನಾ ಮಂದಿರದ ಅಧ್ಯಕ್ಷ ದಯೇಶ್ ಕಾಂಚನ್, ರಮ್ಯಾ ಬಂಗೇರ, ಶ್ರೀದೇವಿ ಮುಖ್ಯ ಪ್ರಾಣ ಭಜನಾ ಮಂದಿರ ಅಧ್ಯಕ್ಷ ಪ್ರದೀಪ್ ಕೋಟ್ಯಾನ್, ಅಂಬೇಡ್ಕರ್ ಯುವಸೇನೆ ಜಿಲ್ಲಾಧ್ಯಕ್ಷ ಗಣೇಶ್ ನೆರ್ಗಿ, ಅಜೇಯ ಕ್ರಿಕೆಟರ್ಸ್ ವ್ಯವಸ್ಥಾಪಕ ಮಹೇಶ್ ಮೆಂಡನ್ ಭಾಗವಹಿಸಿದ್ದರು. ಸಮಾಜ ಸೇವಕ ರಮೇಶ್ ಎಸ್.ತಿಂಗಳಾಯ, ಭಾರತೀಯ ಭೂಸೇನೆ ನಿವೃತ್ತ ಹವಾಲ್ದಾರ್ ಸಂತೋಷ್ ಶ್ರೀಯಾನ್ ಮತ್ತು ಪಿಎಚ್‌ಡಿ ಪದವಿ ಪಡೆದ ಡಾ.ನಿಶಾ ಎಸ್.ಅಮೀನ್ ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಸಂಘದ ಅಧ್ಯಕ್ಷ ವಿಜಯ ಸುವರ್ಣ, ಉಪಾಧ್ಯಕ್ಷೆ ಶಶಿಕಲಾ ಪಾಲನ್ ಉಪಸ್ಥಿತರಿದ್ದರು. ಶಂಕರ್ ದಾಸ್ ಚೆಂಡ್ಕಳ ಕಾರ್ಯಕ್ರಮ ನಿರೂಪಿಸಿದರು. ಪ್ರಶಾಂತ್ ತೊಟ್ಟಂ ವಂದಿಸಿದರು.

ವಾರ್ತಾ ಭಾರತಿ 15 Apr 2026 8:10 pm

ವೆಂಕಟೇಶ್ ಕೋಣಿ ಅನ್ಯಾಯದ ವಿರುದ್ಧ ಹೋರಾಟದ ಗಟ್ಟಿ ಧ್ವನಿ: ಸುರೇಶ್ ಕಲ್ಲಾಗರ್

ಬೈಂದೂರು, ಎ.15: ಅನ್ಯಾಯ ವಿರುದ್ಧ ಹೋರಾಟದ ಗಟ್ಟಿ ಧ್ವನಿಯ ಹೋರಾಟಗಾರರಾಗಿದ್ದ ವೆಂಕಟೇಶ್ ಕೋಣಿ, ಕೂಲಿಕಾರರಿಗೆ ಸರಕಾರಿ ಭೂಮಿ ಹಕ್ಕಿಗಾಗಿ, ಬಾಡಿಗೆ ಮನೆಯಲ್ಲಿರುವ ಕೂಲಿಕಾರರಿಗೆ ಸ್ವಂತ ಮನೆ ಒದಗಿಸ ಬೇಕೆಂದು ಹೋರಾಟಗಳನ್ನು ನಡೆಸಿದ ಅಪರೂಪದ ಹೋರಾಟ ಗಾರ ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹೇಳಿದ್ದಾರೆ. ಬೈಂದೂರಿನ ಸಿಐಟಿಯು ಕಚೇರಿಯಲ್ಲಿ ಬುಧವಾರ ನಡೆದ ವೆಂಕಟೇಶ್ ಕೋಣಿ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡುತಿದ್ದರು. ಜನರಿಗೆ ಕಾನೂನುಬದ್ಧವಾಗಿ ಸಿಗಬೇಕಾದ ಸರಕಾರಿ ಸೌಲಭ್ಯಗಳನ್ನು ತಲುಪಿಸುವ ಕಾರ್ಯದಲ್ಲಿ ಅವರು ಸದಾ ಮುಂಚೂಣಿಯಲ್ಲಿದ್ದರು. ಅವರ ಹೆಗಲ ಮೇಲಿದ್ದ ಚೀಲದಲ್ಲಿ ಜನರ ಅರ್ಜಿಗಳೇ ತುಂಬಿರು ತ್ತಿದವು. ಜನಪರ ಕಾರ್ಯಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಅವರು ಜಿಲ್ಲೆಯ ಅಪರೂಪದ ವ್ಯಕ್ತಿತ್ವವಾಗಿದ್ದರು ಎಂದರು. ಬೈಂದೂರು ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ರಾಜೀವ ಪಡುಕೋಣೆ ನುಡಿನಮನ ಸಲ್ಲಿಸಿ, ವೆಂಕಟೇಶ್ ಕೋಣಿ ಒಂದೇ ಕ್ಷೇತ್ರದ ಹೋರಾಟ ಗಾರರಲ್ಲ, ಬದಲಾಗಿ ಶೋಷಿತರ ಹಲವಾರು ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಕ್ರಿಯಾಶೀಲ ವ್ಯಕ್ತಿಯಾಗಿದ್ದರು. ಯಾವುದೇ ಕೆಲಸ ಕೈಗೊಂಡರೂ ಅದನ್ನು ಪರಿಪೂರ್ಣ ಗೊಳಿಸುತ್ತಿದ್ದವರು ಎಂದು ತಿಳಿಸಿದರು. ಅಂಗವಿಕಲ ಮತ್ತು ಪಾಲಕರ ಸಂಘದ ಮುಖಂಡ ಮಂಜುನಾಥ್ ಹೆಬ್ಬಾರ್ ಮಾತನಾಡಿ, ಕೇಂದ್ರ ಮಟ್ಟದಲ್ಲಿದ್ದ ಅಂಗವಿಕಲರ ಹಾಗೂ ಪಾಲಕರ ಸಂಘಟನೆಯನ್ನು ಜಿಲ್ಲೆಯಲ್ಲಿ ರೂಪಿಸಿ, ರಾಜ್ಯ ಮುಖಂಡರು ಮತ್ತು ಅಧಿಕಾರಿ ಗಳನ್ನು ಕರೆಸಿ ಸಮಸ್ಯೆಗಳ ಪರಿಹಾರಕ್ಕಾಗಿ ಶ್ರಮಿಸಿದವರು ವೆಂಕಟೇಶ್ ಕೋಣಿ ಎಂದು ಹೇಳಿದರು. ಅವರ ಮಾನವೀಯ ತುಡಿತ ಎಲ್ಲರಿಗೂ ಮಾದರಿಯಾಗಬೇಕು. ಅವರ ಹೋರಾಟಗಳನ್ನು ನಾವು ಮುಂದುವರಿಸಬೇಕು ಎಂದರು. ಕಟ್ಟಡ ಕಾರ್ಮಿಕರ ಸಂಘಟನೆಯ ಮುಖಂಡ ಗಣೇಶ್ ತೊಂಡೆಮಕ್ಕಿ ಮಾತನಾಡಿ, ಬೈಂದೂರಿನಲ್ಲಿ ಕಟ್ಟಡ ಕಾರ್ಮಿಕರ ಸಂಘಟನೆ ನಿರ್ಮಿಸಿ ಸಾವಿರಾರು ಕುಟುಂಬಗಳಿಗೆ ನೆರವಾದ ಮಹಾನ್ ನಾಯಕ ವೆಂಕಟೇಶ್ ಕೋಣಿ. ಅವರ ಒತ್ತಾಯದಿಂದಲೇ ನಾನು ಸಂಘಟನೆಯಲ್ಲಿ ಸೇರಿ ಮಾತನಾಡುವುದನ್ನೇ ಕಲಿತೆ. ಅವರ ತ್ಯಾಗ ಮತ್ತು ಕಾರ್ಯ ಅಪೂರ್ವ ವಾದದ್ದು ಎಂದು ನೆನಪಿಸಿಕೊಂಡರು. ವೇದಿಕೆಯಲ್ಲಿ ನಾಗರತ್ನ ನಾಡ, ಗೋಪಾಲಕೃಷ್ಣ ದೇವಾಡಿಗ, ಶೀಲಾವತಿ, ನಾಗರತ್ನ ಪಡುವರಿ ಮಾತನಾಡಿ ಶ್ರದ್ಧಾಂಜಲಿ ಅರ್ಪಿಸಿದರು. ಸಭೆಯಲ್ಲಿ ಶ್ರೀಧರ ಉಪ್ಪುಂದ, ಅಣ್ಣಪ್ಪ, ಅಮ್ಮಯ್ಯ, ಜ್ಯೋತಿ, ಶಾಂತಾ, ಶೋಭಾ ನಾಡ, ರಾಮ ಕಂಬದಕೋಣೆ, ಲಕ್ಷ್ಮಣ ದೇವಾಡಿಗ ಮೊದಲಾದವರಿದ್ದರು.

ವಾರ್ತಾ ಭಾರತಿ 15 Apr 2026 8:08 pm

ವಾಡಿ | ಸಂವಿಧಾನ ರಚಿಸಿ ದೇಶದ ಚಿತ್ರಣ ಬದಲಿಸಿದ ಮಹಾನ್ ದಾರ್ಶನಿಕ ಅಂಬೇಡ್ಕರ್: ಕಾಶೀನಾಥ್ ಹಿಂದಿನಕೇರಿ

ವಾಡಿ: ಸಾಮಾಜಿಕ ವ್ಯವಸ್ಥೆಯಲ್ಲಿ ನಲುಗುತ್ತಿದ್ದ ದೇಶಕ್ಕೆ ಸಂವಿಧಾನ ರಚಿಸಿ ಭಾರತದ ದಿಕ್ಕೇ ಬದಲಿಸಿದ ಮಹಾನ್ ನಾಯಕ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಾಧನೆ ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಸಾಹಿತಿ ಕಾಶೀನಾಥ್ ಹಿಂದಿನಕೇರಿ ಹೇಳಿದರು. ಪಟ್ಟಣ ಸಮೀಪದ ಇಂಗಳಗಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅಪಾರ ಜ್ಞಾನ ಹೊಂದಿದ್ದರೂ ವೈಯಕ್ತಿಕ ಸಂಪತ್ತಿಗೆ ಮೌಲ್ಯ ನೀಡದೆ, ತಮ್ಮ ಜ್ಞಾನವನ್ನು ಬಡವರ ಉನ್ನತಿಗೆ ಬಳಕೆ ಮಾಡಿದರು ಎಂದರು. ಜ್ಞಾನದಿಂದ ಇಡೀ ವಿಶ್ವವನ್ನು ಗೆಲ್ಲಬಹುದೆಂಬುದನ್ನು ತೋರಿಸಿದ ಮಹಾನ್ ದಾರ್ಶನಿಕ ಅಂಬೇಡ್ಕರ್ ಎಂದು ಅವರು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಮಾತನಾಡಿದ ಪಂಚಾಯಿತಿ ಪಿಡಿಒ, “ಓದಿಗೆ ಬಡತನ ಅಡ್ಡಿಯಾಗಬಾರದು, ಎಷ್ಟೇ ಕಷ್ಟ ಬಂದರೂ ಮಕ್ಕಳಿಗೆ ಶಿಕ್ಷಣ ನೀಡಬೇಕು” ಎಂಬ ಅಂಬೇಡ್ಕರ್ ಅವರ ಮಾತುಗಳು ತಮ್ಮ ಜೀವನವನ್ನು ಬದಲಿಸಿವೆ ಎಂದು ಹೇಳಿದರು. ಅಂಬೇಡ್ಕರ್ ಅವರ ಜೀವನ ಸುಲಭವಾಗಿರಲಿಲ್ಲ; ಕಷ್ಟಕರ ಪರಿಸ್ಥಿತಿಗಳ ನಡುವೆಯೇ ತಮ್ಮ ಪ್ರತಿಭೆ ಮತ್ತು ನಿರಂತರ ಅಧ್ಯಯನದಿಂದ ಅವರು ದೇಶದ ಅತ್ಯುನ್ನತ ಸಾಧನೆ ಮಾಡಿದ್ದಾರೆ. ಜಾತಿ ವ್ಯವಸ್ಥೆಯ ನಡುವೆ ಹುಟ್ಟಿ, ತಮ್ಮ ಶ್ರಮದಿಂದ ಮಹಾನ್ ವ್ಯಕ್ತಿಯಾಗಿರುವುದು ಎಲ್ಲರಿಗೂ ಪ್ರೇರಣೆಯಾಗುತ್ತದೆ ಎಂದು ಹೇಳಿದರು. ಪತ್ರಕರ್ತ ಡಾ.ಸಾಯಬಣ್ಣಾ ಗುಡುಬಾ ಮಾತನಾಡಿದರು. ಈ ವೇಳೆ ಪಂಚಾಯತ್‌ ಪಿಡಿಓ ಕಲ್ಯಾಣ ಕುಮಾರ, ಕಾರ್ಯದರ್ಶಿ ಸಂಗಮೇಶ ಹೀರೆಮಠ, ಬಿಲ್.ಕಲೆಕ್ಟರ್ ರವಿ ಅಳ್ಳೋಳಿ, ಗಣಕಯಂತ್ರ ಸಿಬ್ಬಂದಿ ರಾಜು ಸಂಕಾ, ಸಿದ್ಧರಾಮ ಭಂಕೂರ, ಕಾಯಕ ಮಿತ್ರ ಗಿಡ್ಡಮ್ಮ ಪವಾರ್, ಮುಖಂಡರಾದ ಜಗನ್ನಾಥ ಹಂದರಕಿ, ನಾಗರಾಜ ಕೇಲ್ಲೂರ್, ಮಹೇಶ್ ಹಿಂದಿನಕೇರಿ. ತಿಪ್ಪಣ್ಣ ಸಂಗನ್. ಚಂದ್ರಕಾಂತ ಸಂಕಾ. ಚಂದು ಸಂಗನ್. ಶರಣು ರಾವೂರಕರ್ ಇದ್ದರು.

ವಾರ್ತಾ ಭಾರತಿ 15 Apr 2026 8:04 pm

ಧಾರವಾಡ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: 1 ಲಕ್ಷ ಬಾಂಡ್‌ಗೆ ಆಗ್ರಹಿಸಿದ ಪೊಲೀಸರ ವಿರುದ್ಧ ಯತ್ನಾಳ್ ಗರಂ

ಧಾರವಾಡ: ನಗರದಲ್ಲಿ ನಿನ್ನೆ ನಡೆದ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ನ್ಯಾಯಯುತವಾಗಿ ಉದ್ಯೋಗ ಕೇಳಿ ಬೀದಿಗಿಳಿದಿದ್ದ ಪರೀಕ್ಷಾರ್ಥಿಗಳನ್ನು ಬಂಧಿಸಿರುವ ಪೊಲೀಸರು, ಅವರಿಂದ ಒಂದು ಲಕ್ಷ ರೂಪಾಯಿ ಬಾಂಡ್ ಹಾಗೂ ಮುಂದಿನ ಒಂದು ವರ್ಷದವರೆಗೆ ಯಾವುದೇ ಪ್ರತಿಭಟನೆ ಮಾಡುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಡುವಂತೆ ಒತ್ತಾಯಿಸಿದ್ದಾರೆ ಎಂಬ

ಒನ್ ಇ೦ಡಿಯ 15 Apr 2026 8:03 pm

RCB ಪ್ಲೇಯಿಂಗ್ ಇಲೆವೆನ್ ನಲ್ಲಿ ಕಾಣಿಸಿಕೊಳ್ಳದ ವಿರಾಟ್ ಕೊಹ್ಲಿ ಮೊದಲ ಬಾರಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕೆ!

ಐಪಿಎಲ್ ಪ್ರಾರಂಭವಾದಾಗಿನಿಂದಲೂ ರಾಯಲ್ ಚಾಲೆಂಜರ್ಸ್ ತಂಡದ ಅವಿಭಾಜ್ಯ ಅಂಗವಾಗಿರುವ ವಿರಾಟ್ ಕೊಹ್ಲಿ ಅವರು ಇದೀಗ ಲಖನೌ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಪ್ಲೇಯಿಂಗ್ ಇಲೆವೆನ್ ನಲ್ಲಿ ಕಾಣಿಸಿಕೊಂಡಿಲ್ಲ. ಕಳೆದ ಪಂದ್ಯದಲ್ಲಿ ಬ್ಯಾಟಿಂಗ್ ವೇಳೆ ಅವರು ಗಾಯಗೊಂಡಿದ್ದ ಅವರು ಫೀಲ್ಡಿಂಗ್ ಮಾಡಿರಲಿಲ್ಲ. ಹೀಗಾಗಿ ಅವರು ಈ ಪಂದ್ಯದಲ್ಲೂ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಯುವ ಸಾಧ್ಯತೆ ಇದೆ. ()ಏಪ್ರಿಲ್ 15 ಬುಧವಾರದಂದು ಚನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಸ್ ಗೆದ್ದ ಆರ್ ಸಿಬಿ ನಾಯಕ ರಜತ್ ಪಾಟೀದಾರ್ ಅವರು ಫೀಲ್ಡಿಂಗ್ ಆಯ್ದುಕೊಂಡರು. ಬಳಿಕ ಟಿವಿ ನಿರೂಪಕರು ತಂಡದ ಸಂಯೋಜನೆ ಬಗ್ಗೆ ಕೇಳಿದಾಗ ಮಧ್ಯಮ ವೇಗಿ ಜಾಕೋಬ್ ಡಫಿ ಅವರ ಬದಲಿಗೆ ಜೋಶ್ ಹೇಜಲ್ ವುಡ್ ಆಡುತ್ತಿದ್ದಾರೆಂದು ಹೇಳಿದ್ದರು. ವಿರಾಟ್ ಕೊಹ್ಲಿಯ ವಿಚಾರವಾಗಿ ಯಾವ ಸಂಗತಿಯನ್ನೂ ಹೇಳಿರಲಿಲ್ಲ. ಆದರೆ ವಿರಾಟ್ ಕೊಹ್ಲಿ ಅವರು ಮೈದಾನದಲ್ಲಿ ಕಾಣಿಸಿಲಿಲ್ಲ. ತಂಡದ ಪ್ಲೇಯಿಂಗ್ ಇಲೆವೆನ್ ಪಟ್ಟಿಯಲ್ಲೂ ಇರಲಿಲ್ಲ. ಬದಲಿಗೆ ತಂಡದಲ್ಲಿ ಮಧ್ಯಮ ವೇಗಿ ರಸಿಕ ದಾರ್ ಸ್ಥಾನ ಪಡೆದಿದ್ದರು. ಆರ್ ಸಿಬಿ ಪ್ಲೇಯಿಂಗ್ ಇಲೆವೆನ್ ರಜತ್ ಪಾಟೀದಾರ್ (ನಾಯಕ), ಫಿಲ್ ಸಾಲ್ಟ್, ದೇವದತ್ ಪಡಿಕ್ಕಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸುಯಾಶ್ ಶರ್ಮಾ, ರಸಿಕ್ ದಾರ್ , ಜೋಶ್ ಹೇಜಲ್ ವುಡ್ ಲಖನೌ ಸೂಪರ್ ಜೈಂಟ್ಸ್ ರಿಷಭ್ ಪಂತ್ (ನಾಯಕ ಮತ್ತು ವಿಕೆಟ್ ಕೀಪರ್), ಮಿಚೆಲ್ ಮಾರ್ಷ್, ಐಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ಅಬ್ದುಲ್ ಸಮದ್, ಮುಕುಲ್ ಚೌಧರಿ, ಮೊಹಮ್ಮದ್ ಶಮಿ, ಅವೇಶ್ ಖಾನ್, ದಿಗ್ವೆಶ್ ರಾಠಿ, ಪ್ರಿನ್ಸ್ ಯಾದವ್

ವಿಜಯ ಕರ್ನಾಟಕ 15 Apr 2026 8:02 pm

Tamil Nadu | ಕ್ಷೇತ್ರ ಪುನರ್ವಿಂಗಡಣೆ ವಿರೋಧಿಸಿ ಎ. 16ರಂದು ಕಪ್ಪು ಬಾವುಟ ಪ್ರದರ್ಶಿಸಲು CM ಸ್ಟಾಲಿನ್ ಕರೆ

‘ಬಿಜೆಪಿ ಬೆಂಕಿಯೊಂದಿಗೆ ಆಟವಾಡುತ್ತಿದೆ’; ಕೇಂದ್ರಕ್ಕೆ ಎಚ್ಚರಿಕೆ

ವಾರ್ತಾ ಭಾರತಿ 15 Apr 2026 8:00 pm

ಎ. 20: ಉಡುಪಿ ಧರ್ಮಪ್ರಾಂತದ ನೂತನ ಧರ್ಮಾಧ್ಯಕ್ಷರ ಪೀಠಾರೋಹಣ

30 ಬಿಷಪ್, 250 ಧರ್ಮಗುರುಗಳು, ಧರ್ಮಭಗಿನಿಯರು ಸೇರಿ 6 ಸಾವಿರ ಮಂದಿ ಉಪಸ್ಥಿತಿ

ವಾರ್ತಾ ಭಾರತಿ 15 Apr 2026 7:57 pm

Yadgiri | ಜೈಲು ಶಿಕ್ಷೆ ದಂಡನೆ ಮಾತ್ರವಲ್ಲ, ತಿದ್ದಿಕೊಳ್ಳುವ ಅವಕಾಶ: ನ್ಯಾ.ಮರಿಯಪ್ಪ

ಯಾದಗಿರಿ: ಜೈಲಿಗೆ ಬಂದ ಕೈದಿಗಳು ತಮ್ಮ ಹಳೆಯ ತಪ್ಪುಗಳನ್ನು ತಿದ್ದಿಕೊಂಡು ಬಿಡುಗಡೆಯಾದ ನಂತರ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ರೂಪಾಂತರಗೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶ ಮರಿಯಪ್ಪ ಹೇಳಿದರು. ನಗರದ ಜಿಲ್ಲಾ ಕಾರಾಗೃಹದಲ್ಲಿ ‘ಮಾದಕ ವಸ್ತು ಮುಕ್ತ ಭಾರತಕ್ಕಾಗಿ ಜಾಗೃತಿ ಮತ್ತು ಸ್ವಾಸ್ಥ್ಯ ಸಂಚರಣೆ ಯೋಜನೆ–2025’ ಅಡಿಯಲ್ಲಿ ನಡೆದ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜೈಲು ಶಿಕ್ಷೆ ಕೇವಲ ದಂಡನೆಯಲ್ಲ, ವ್ಯಕ್ತಿಯನ್ನು ತಿದ್ದಿಕೊಳ್ಳಲು ಸಿಗುವ ಒಂದು ಅವಕಾಶವಾಗಿದೆ. ಕೈದಿಗಳು ಮಾನಸಿಕವಾಗಿ ಬದಲಾಗಿ, ಸಮಾಜದ ಮುಖ್ಯವಾಹಿನಿಗೆ ಮರಳಲು ಸಿದ್ಧರಾಗಬೇಕು ಎಂದು ಹೇಳಿದರು. ಮಾದಕ ವಸ್ತುಗಳ ಬಳಕೆಯಿಂದ ಸಮಾಜದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದ್ದು, ದೇಶವನ್ನು ವ್ಯಸನಮುಕ್ತಗೊಳಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು. ವ್ಯಸನಮುಕ್ತ ಜೀವನವೇ ಆರೋಗ್ಯಕರ ಮತ್ತು ಸುಖೀ ಬದುಕಿಗೆ ದಾರಿ ಎಂದು ತಿಳಿಸಿದರು. ಅರಿವಿನ ಕೊರತೆಯಿಂದ ಯಾರೂ ನ್ಯಾಯದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಕಾನೂನು ಸೇವೆಗಳ ಪ್ರಾಧಿಕಾರ ಸದಾ ನೆರವಿಗೆ ಸಿದ್ಧವಾಗಿದೆ ಎಂದು ಹೇಳಿದರು. ತಪ್ಪು ಮಾಡುವುದು ಸಹಜವಾದರೂ, ಅದನ್ನೇ ಮೆಲುಕು ಹಾಕುತ್ತಾ ಕೂರದೆ ತಿದ್ದಿಕೊಂಡು ಹೊಸ ಜೀವನ ಆರಂಭಿಸುವುದು ಮುಖ್ಯ. ಪ್ರತಿಯೊಬ್ಬರೂ ಉತ್ತಮ ವ್ಯಕ್ತಿಯಾಗಿ ಸಮಾಜದಲ್ಲಿ ಬದುಕಲು ಪ್ರಯತ್ನಿಸಬೇಕು ಎಂದು ಅವರು ಕಿವಿಮಾತು ಹೇಳಿದರು. ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿ ಮನೋವೈದ್ಯರಾದ ಡಾ.ಅಮೀತಗ ಕುಮಾರ್, ಅರೆಕಾಲಿಕ ಸ್ವಯಂ ಸೇವಕರಾದ ರಾಘವೇಂದ್ರ, ಯಾದಗಿರಿ ಕಾರಾಗೃಹ ಅಧೀಕ್ಷಕರಾದ ಎಸ್ ಎಸ್ ಪಾಟೀಲ್ ಇದ್ದರು.

ವಾರ್ತಾ ಭಾರತಿ 15 Apr 2026 7:56 pm

ವಿಮರ್ಶೆ ಎಂಬುದು ಸಾಂಸ್ಕೃತಿಕ ಜವಾಬ್ದಾರಿ: ಡಾ.ಗೀತಾ ವಸಂತ

ಪ್ರೊ.ವಿ.ಎಂ.ಇನಾಂದಾರ್ ವಿಮರ್ಶಾ ಪ್ರಶಸ್ತಿ ಪ್ರದಾನ

ವಾರ್ತಾ ಭಾರತಿ 15 Apr 2026 7:53 pm

ರಾಘವ್‌ ಚಡ್ಡಾಗೆ ಪಂಜಾಬ್‌ ಸರ್ಕಾರ ಹಿಂಪಡೆದ Z ಭದ್ರತೆ ಕರುಣಿಸಿದ ಕೇಂದ್ರ ಸರ್ಕಾರ; ಪ್ರತಿಷ್ಠೆಯ ಕುಸ್ತಿ ಗೆಲ್ತಾರಾ ಯುವ ನಾಯಕ?

ರಾಜ್ಯಸಭಾ ಸಂಸದ ರಾಘವ್‌ ಚಡ್ಡಾ ಮತ್ತು ಅವರ ಆಮ್‌ ಆದ್ಮಿ ಪಕ್ಷ (ಆಪ್)‌ ನಡುವೆ ಪ್ರತಿಷ್ಠೆಯ ಕುಸ್ತಿ ಆರಂಭವಾಗಿದೆ. ಈ ಕುಸ್ತಿಯಲ್ಲಿ ಅಂತಿಮವಾಗಿ ಯಾರು ಗೆಲ್ತಾರೆ ಎಂಬ ಕುತೂಹಲ ಇದೀಗ ಮನೆ ಮಾಡಿದೆ ಕೇಂದ್ರ ಸರ್ಕಾರ ಸೈಲೆಂಟ್‌ ಆಗಿ ರಾಘವ್‌ ಚಡ್ಡಾ ಅವರಿಗೆ ಬೆಂಬಲ ನೀಡುತ್ತಿರುವುದನ್ನು ನೋಡಿದರೆ, ಈ ಫೈಟ್‌ ಭಾರೀ ಟಫ್‌ ಆಗಿರಲಿದೆ ಎಂಬುದು ಸ್ಪಷ್ಟವಾಗುತ್ತದೆ. ಸದ್ಯ ಪಂಜಾಬ್‌ ಸರ್ಕಾರ ರಾಘವ್‌ ಚಡ್ಡಾ ಅವರಿಗೆ ನೀಡಿದ್ದ Z+ ಶ್ರೇಣಿಯ ಭದ್ರತೆಯನ್ನು ಹಿಂಪಡೆದಿದ್ದು, ಕೇಂದ್ರ ಸರ್ಕಾರ ಅವರಿಗೆ Z ಶ್ರೇಣಿಯ ಭದ್ರತೆ ಮರಳಿಸಿದೆ.

ವಿಜಯ ಕರ್ನಾಟಕ 15 Apr 2026 7:51 pm

ಸುರಪುರ | ಅಂಚೆ ಕಚೇರಿ ಸ್ಥಳಾಂತರಕ್ಕೆ ವಿರೋಧ: ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

ಸುರಪುರ: ಪಟ್ಟಣದ ರಂಗಂಪೇಟೆಯಲ್ಲಿರುವ ಅಂಚೆ ಕಚೇರಿಯನ್ನು ತಿಮ್ಮಾಪುರಕ್ಕೆ ಸ್ಥಳಾಂತರಿಸುವ ಕ್ರಮವನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮುಖ್ಯ ಅಂಚೆ ಕಚೇರಿ ಮುಂಭಾಗದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು. ಸಂಘಟನೆಯ ತಾಲೂಕ ಅಧ್ಯಕ್ಷ ವೆಂಕಟೇಶ ನಾಯಕ ಬೈರಿಮರಡಿ ಮಾತನಾಡಿ, ಹಲವು ವರ್ಷಗಳಿಂದ ರಂಗಂಪೇಟೆಯಲ್ಲಿ ಅಂಚೆ ಕಚೇರಿ ಕಾರ್ಯನಿರ್ವಹಿಸುತ್ತಿದ್ದು, ನೂರಾರು ಜನರಿಗೆ ಇದರಿಂದ ಅನುಕೂಲವಾಗುತ್ತಿದೆ. ಆದರೆ ಯಾವುದೇ ಸ್ಪಷ್ಟ ಕಾರಣವಿಲ್ಲದೆ ತಿಮ್ಮಾಪುರಕ್ಕೆ ಸ್ಥಳಾಂತರಿಸಲು ಮುಂದಾಗಿರುವುದು ಸಾರ್ವಜನಿಕರಿಗೆ ತೊಂದರೆ ಉಂಟುಮಾಡಲಿದೆ ಎಂದು ಹೇಳಿದರು. ರಂಗಂಪೇಟೆಯ ಜನರು ತಿಮ್ಮಾಪುರಕ್ಕೆ ತೆರಳಿ ಅಂಚೆ ಸಂಬಂಧಿತ ಕಾರ್ಯಗಳನ್ನು ನಡೆಸುವುದು ಕಷ್ಟವಾಗುತ್ತದೆ. ಆದ್ದರಿಂದ ಈ ಸ್ಥಳಾಂತರವನ್ನು ತಕ್ಷಣವೇ ರದ್ದುಗೊಳಿಸಿ, ಅಂಚೆ ಕಚೇರಿಯನ್ನು ಇದೇ ಸ್ಥಳದಲ್ಲಿ ಮುಂದುವರಿಸಬೇಕು ಎಂದು ಆಗ್ರಹಿಸಿದರು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಸಂಘಟನೆ ಎಚ್ಚರಿಕೆ ನೀಡಿತು. ನಂತರ ವಿಭಾಗೀಯ ಅಂಚೆ ಕಚೇರಿ ಅಧೀಕ್ಷಕರಿಗೆ ಬರೆದ ಮನವಿ ಕಚೇರಿಯ ಮುಖ್ಯ ಪೋಸ್ಟ್ ಮಾಸ್ಟರ್ ಅವರ ಮೂಲಕ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಘಟನೆಯ ಉಪಾಧ್ಯಕ್ಷ ಮಲ್ಲು ವಿಷ್ಣುಸೇನಾ, ಅರವಿಂದ ಬಿಲ್ಲವ್, ನಿಂಗಣ್ಣ ಮಾಲಗತ್ತಿ, ರಘವೀರ ದೇಸಾಯಿ, ಬಲಭೀಮ ನಂಬಾ, ಬಲಭೀಮ ಬೊಮ್ಮನಹಳ್ಳಿ, ಭೀಮನಗೌಡ ರಂಗಂಪೇಟೆ, ಅವಿನಾಶ, ಮೌನೇಶ ಬಡಿಗೇರ ಇತರರು ಭಾಗವಹಿಸಿದ್ದರು.

ವಾರ್ತಾ ಭಾರತಿ 15 Apr 2026 7:50 pm

ಐದು ದಿನಗಳ ವರೆಗೆ ರಾಜ್ಯದ ಜಿಲ್ಲೆಗಳಿಗೆ ‘ಬಿಸಿ ಗಾಳಿಯ ಯೆಲ್ಲೋ ಅಲರ್ಟ್ ಘೋಷಣೆ’

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ತಾಪಮಾನ ಏರಿಕೆಯಾಗುತ್ತಿದ್ದು, ಹವಾಮಾನ ಇಲಾಖೆಯು ಎ.16ರಿಂದ ಐದು ದಿನಗಳ ಕಾಲ ರಾಜ್ಯದ ಕಾರವಳಿ ಜಿಲ್ಲೆಗಳು ಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳು ಸೇರಿ 16 ಜಿಲ್ಲೆಗಳಿಗೆ ಬಿಸಿ ಗಾಳಿಯ ಯೆಲ್ಲೋ ಅಲರ್ಟ್ ಅನ್ನು ಘೋಷಣೆ ಮಾಡಿದೆ. ಎ.16 ರಿಂದ ಎ.20ರ ವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ.  

ವಾರ್ತಾ ಭಾರತಿ 15 Apr 2026 7:47 pm