ರಾಯಚೂರು | ಅನಾರೋಗ್ಯದಿಂದ ಮನನೊಂದು ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ
ರಾಯಚೂರು: ಅನಾರೋಗ್ಯದಿಂದ ಮನನೊಂದು ನಗರದ ಮಾವಿನ ಕೆರೆಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಮಡ್ಡಿಪೇಟೆ ನಿವಾಸಿ ರೇಣುಕಾ (55) ಮೃತ ಮಹಿಳೆ. ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಮಾನಸಿಕವಾಗಿ ಕುಗ್ಗಿದ್ದರೆಂದು ತಿಳಿದುಬಂದಿದೆ. ಈ ಹಿಂದೆಯೂ ಮಾವಿನ ಕೆರೆಯ ಬಳಿ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಶುಕ್ರವಾರ ಬೆಳಗ್ಗೆ ಸುಮಾರು 8 ಗಂಟೆಯಿಂದ ರೇಣುಕಾ ಮನೆದಿಂದ ಕಾಣೆಯಾಗಿದ್ದು, 11 ಗಂಟೆ ಸುಮಾರಿಗೆ ಮಾವಿನ ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಕೆರೆಯ ದಡದಲ್ಲಿ ಮೃತದೇಹ ತೇಲುತ್ತಿರುವುದನ್ನು ಕಂಡ ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸದರ್ ಬಜಾರ್ ಠಾಣೆ ಪೊಲೀಸರು ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ರಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಕುರಿತು ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.
ಜ.25ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ
ಉಡುಪಿ, ಜ.23: ವಿಜಯಾ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಶ್ರೀವೆಂಕಟರಮಣ ದೇವಸ್ಥಾನ ಆಡಳಿತ ಮಂಡಳಿ ಕರಂಬಳ್ಳಿ, ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿ, ಉಡುಪಿ ಜಿಲ್ಲಾ ಕೃಷಿಕ ಸಂಘ, ಪತಾಂಜಲಿ ಯೋಗ ಸಮಿತಿ ಉಡುಪಿ ಮತ್ತು ಕೆಎಂಸಿ ಆಸ್ಪತ್ರೆ ಮಣಿಪಾಲ ಇವುಗಳ ಸಹಯೋಗದೊಂದಿಗೆ ಸಾರ್ವಜನಿಕರಿಗಾಗಿ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಜ.25ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1 ಗಂಟೆ ತನಕ ಕರಂಬಳ್ಳಿ ಶ್ರೀವೆಂಕಟರಮಣ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಮಾಜಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಕೆಎಂಸಿ ಸಮುದಾಯ ವೈದ್ಯಕೀಯ ವಿಭಾಗ ಮುಖ್ಯಸ್ಥ ಡಾ.ಅಶ್ವಿನಿ ಕುಮಾರ್ ಎಂ.ಡಿ. ಉದ್ಘಾಟಿಸಲಿದ್ದಾರೆ. ಸಾಮಾನ್ಯ ಆರೋಗ್ಯ ತಪಾಸಣೆ, ಚರ್ಮವ್ಯಾಧಿ ತಪಾಸಣೆ, ನೇತ್ರ ತಪಾಸಣೆ ಮತುತಿ ಕಣ್ಣಿನ ಪೊರೆ ಚಿಕಿತ್ಸೆ, ಸ್ತ್ರೀರೋಗ ತಪಾಸಣೆ, ಇಸಿಜಿ, ರಕತಿದೊತ್ತಡ ಮತ್ತು ರಕ್ತ ಪರೀಕ್ಷೆಗಳನ್ನು ಈ ತಪಾಸಣಾ ಶಿಬಿರದಲ್ಲಿ ನಡೆಸಲಾಗುವುದು ಎಂದು ಕೃಷಿಕ ಸಂಘದ ಕಾರ್ಯದರ್ಶಿ ರವೀಂದ್ರ ಗುಜ್ಜರಬೆಟ್ಟು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮ ನಾಡ ಒಕ್ಕೂಟ ಕಾರ್ಕಳ ಅಧ್ಯಕ್ಷರಾಗಿ ಮುಸ್ತಫಾ ಆಯ್ಕೆ
ಕಾರ್ಕಳ, ಜ.23: ನಮ್ಮ ನಾಡ ಒಕ್ಕೂಟ ಕಾರ್ಕಳ ತಾಲೂಕು ಸಮಿತಿಯ ಸರ್ವಸದಸ್ಯರ ವಾರ್ಷಿಕ ಮಹಾಸಭೆ ಕಾರ್ಕಳದ ಎನ್.ಎಸ್. ಅಕಾಡೆಮಿಯಲ್ಲಿ ಇತ್ತೀಚೆಗೆ ನಡೆಯಿತು. ಅಧ್ಯಕ್ಷತೆಯನ್ನು ಕಾರ್ಕಳ ತಾಲೂಕು ಸಮಿತಿಯ ಅಧ್ಯಕ್ಷ ಶಾಕಿರ್ ಶೀಶ್ ವಹಿಸಿದ್ದರು. ನೂತನ 2026- 27ನೇ ಸಾಲಿನ ಅಧ್ಯಕ್ಷರಾಗಿ ಮುಸ್ತಫಾ ಕಾರ್ಕಳ, ಉಪಾಧ್ಯಕ್ಷರಾಗಿ ರಹೀಮ್ ಭಕ್ಷ, ಅನೀಸ್ ಬೈಲೂರು, ಪ್ರಧಾನ ಕಾರ್ಯದರ್ಶಿಯಾಗಿ ಮೊಹಮ್ಮದ್ ಸಲೀಂ, ಜೊತೆ ಕಾರ್ಯದರ್ಶಿಯಾಗಿ ಮಫ್ರೋಜ್, ಕೋಶಾಧಿಕಾರಿಯಾಗಿ ಮೊಹಮ್ಮೆ ಹನೀಫ್, ಕ್ರೀಡಾ ಕಾರ್ಯದರ್ಶಿಯಾಗಿ ಅಬ್ದುಲ್ ರವೂಫ್, ಯುವ ಸಂಘಟಕರಾಗಿ ಅಬ್ದುಲ್ ಮನ್ನನ್, ಸಂಘಟನಾ ಕಾರ್ಯದರ್ಶಿಯಾಗಿ ಶಬ್ಬೀರ್ ಆಯ್ಕೆಯಾದರು. ಒಕ್ಕೂಟದ ಜಿಲ್ಲಾಧ್ಯಕ್ಷ ನಕ್ವ ಯಹ್ಯ, ಮಾಜಿ ಜಿಲ್ಲಾಧ್ಯಕ್ಷ ಮುಸ್ತಾಕ್ ಅಹಮದ್ ಬೆಳ್ವೆ, ಚುನಾವಣಾ ಅಧಿಕಾರಿಗಳಾಗಿ ಮುನವಾರ್ ಅಜೆಕಾರು ಹಾಗೂ ನಜೀರ್ ನೇಜಾರು ನೇತೃತ್ವದಲ್ಲಿ ಚುನಾವಣೆ ನಡೆಯಿತು. ಶಬ್ಬೀರ್ ಅಹ್ಮದ ಕಾರ್ಯಕ್ರಮ ನಿರೂಪಿಸಿದರು. ಮುಹಮ್ಮದ್ ರಫೀಕ್ ಸ್ವಾಗತಿಸಿ ವಂದಿಸಿದರು.
ದ್ವೇಷ ತುಂಬಿದ ಇಂದಿನ ಸಮಾಜದಲ್ಲಿ ಪ್ರೀತಿ ಅಗತ್ಯ: ವಂ.ಕುಮಾರ್ ಸಾಲಿನ್ಸ್
ಮಲ್ಪೆ, ಜ.23: ದ್ವೇಷ, ಕತ್ತಲು ತುಂಬಿದ ಸಮಾಜದಲ್ಲಿ ಪ್ರೀತಿ, ಸಹಬಾಳ್ವೆ ಎಂಬ ಹಣತೆಗಳನ್ನು ಹಚ್ಚುವ ಮೂಲಕ ಪ್ರತಿಯೊಬ್ಬರ ಬಾಳಿನಲ್ಲಿ ಬೆಳಕನ್ನು ಕಾಣುವ ಕೆಲಸ ಇಂದಿನ ಪ್ರಮುಖ ಆದ್ಯತೆಯಾಗಬೇಕು ಎಂದು ಮಲ್ಪೆ ಯುಬಿಎಂ ಚರ್ಚಿನ ವಂ.ಕುಮಾರ್ ಸಾಲಿನ್ಸ್ ಹೇಳಿದ್ದಾರೆ. ಮಲ್ಪೆ ಸಿಎಸ್ಐ ಎಬನೇಜರ್ ಚರ್ಚ್ನಲ್ಲಿ ಗುರುವಾರ ಜರಗಿದ ಕಲ್ಯಾಣಪುರ ವಲಯ ಹಂತದ ಕ್ರೈಸ್ತ ಐಕ್ಯತಾ ಪ್ರಾರ್ಥನಾ ಸಭೆಯಲ್ಲಿ ಪ್ರಬೋಧನೆ ನೀಡಿ ಅವರು ಮಾತನಾಡುತಿದ್ದರು. ಬೆಳಕು ನಮ್ಮ ಸುತ್ತಲಿನ ಕತ್ತಲನ್ನು ಕರಗಿಸುತ್ತದೆ. ಯೇಸು ಸ್ವಾಮಿಯು ಮರಣವನ್ನು ಜಯಿಸಿ ಪುನರುತ್ಥಾನದ ಬೆಳಕನ್ನು ನಮಗೆ ನೀಡಿದ್ದಾರೆ. ಅಂತೆಯೇ ನಾವು ಕೂಡ ಕತ್ತಲನ್ನು ತುಂಬಿದ ದುರ್ಬಲರ ಬದುಕಿನಲ್ಲಿ ಹಣತೆ ಹಚ್ಚುವ ಕೆಲಸ ಮಾಡಿದಾಗ ನಮ್ಮ ಜೀವನ ಸಾರ್ಥಕತೆಯನ್ನು ಕಾಣುತ್ತದೆ ಎಂದರು. ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ನ ಸಹಾಯಕ ಧರ್ಮಗುರು ವಂ.ಪ್ರದೀಪ್ ಕಾರ್ಡೊಜ ತಮ್ಮ ಪ್ರಬೋಧನೆ ಯಲ್ಲಿ, ಪರರನ್ನು ಪ್ರೀತಿಸದ ಮಾನವ ಹೃದಯ ಸ್ಮಶಾನಕ್ಕೆ ಸಮ ಎಂಬಂತೆ ನಾವು ವಸ್ತುಗಳನ್ನು ಪ್ರೀತಿಸುವ ಬದಲು ಮಾನವರನ್ನು ಪ್ರೀತಸುವುದರ ಮೂಲಕ ಪ್ರತಿಯೊಬ್ಬರೂ ಶಾಂತಿಯ ದೂತರಾಗಿ ಜಗತ್ತಿಗೆ ದಾರಿದೀಪವಾ ಗುವ ಕೆಲಸವನ್ನು ಮಾಡಬೇಕಾಗಿದೆ. ಪರರ ಕಷ್ಟ ಸಂಕಷ್ಟಗಳಿಗೆ ನಾವು ಸ್ಪಂದಿಸುವುದರ ಮೂಲಕ ಐಕ್ಯತಾ ಮನೋಭಾವವನ್ನು ವೃದ್ಧಿಗೊಳಿಸಬೇಕು. ಪರರ ನೋವಿಗೆ ದನಿಯಾದಾಗ ಅವರಲ್ಲಿ ಪರಮಾತ್ಮನನ್ನು ಕಾಣಲು ಸಾಧ್ಯವಿದೆ. ಸಮಾಜದಲ್ಲಿ ನಿರ್ಗತಕರನ್ನು ಅನಾಥರನ್ನು ಪ್ರೀತಿಸುವ ಮೂಲಕ ಯೇಸು ಸ್ವಾಮಿ ತೋರಿಸಿದ ದಾರಿಯಲ್ಲಿ ಸಾಗಬೇಕು ಎಂದರು. ಪ್ರಾರ್ಥನಾ ಕೂಟದ ನೇತೃತ್ವವನ್ನು ಉಡುಪಿ ಧರ್ಮಪ್ರಾಂತ್ಯದ ಶ್ರೇಷ್ಠ ಗುರು ಹಾಗೂ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಪ್ರಧಾನ ಧರ್ಮಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ವಹಿಸಿದ್ದರು. ಪ್ರಾರ್ಥನಾ ಕೂಟ ದಲ್ಲಿ ವಂ.ಡಾ.ರೋಕ್ ಡಿಸೋಜ, ವಂ.ಜೋನ್ ಫೆರ್ನಾಂಡಿಸ್, ವಂ.ವಿಲ್ಸನ್ ಡಿಸೋಜ, ವಂ.ಅಶ್ವಿನ್ ಆರಾನ್ಹಾ, ವಂ.ಜೋಕಿಮ್ ಡಿಸೋಜ, ಸಿಎಸ್ಐ ಸಭೆಯ ಉಡುಪಿ ವಲಯ ಮುಖ್ಯಸ್ಥ ವಂ.ಕಿಶೋರ್, ವಂ.ಎಡ್ವಿನ್ ಸೋನ್ಸ್, ತೊಟ್ಟಂ ಚರ್ಚಿನ ಪಾಲನಾ ಸಮಿತಿಯ ಲೆಸ್ಲಿ ಆರೋಜ, ಸಿಸ್ಟರ್ ಸುಶ್ಮಾ, ರೋಮನ್ ಕ್ಯಾಥೊಲಿಕ್, ಸಿಎಸ್ಐ ಸಹಿತ ವಿವಿಧ ಕ್ರೈಸ್ತ ಸಭೆಗಳ ಪ್ರತಿನಿಧಿಗಳು ಪ್ರಾರ್ಥನಾ ವಿಧಿಯಲ್ಲಿ ಪಾಲ್ಗೊಂಡಿದ್ದರು. ಸಿಎಸ್ಐ ಎಬನೇಜರ್ ಚರ್ಚ್ ಮಲ್ಪೆ ಪಾಸ್ಟರ್ ವಂ.ವಿನಯ್ ಸಂದೇಶ್ ಸ್ವಾಗತಿಸಿದರು. ಲೂವಿಸ್ ಫೆರ್ನಾಂಡಿಸ್ ವಂದಿಸಿದರು. ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಧರ್ಮಗುರು ವಂ.ಡೆನಿಸ್ ಡೆಸಾ ಕಾರ್ಯಕ್ರಮ ನಿರೂಪಿಸಿದರು
ಗಿಣಿಗೇರಾ-ರಾಯಚೂರು ರೈಲು ಮಾರ್ಗ ಶೀಘ್ರ ಪೂರ್ಣಗೊಳಿಸಲು ಸಂಸದ ಜಿ.ಕುಮಾರ ನಾಯಕರಿಂದ ಮನವಿ
ರಾಯಚೂರು: ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಮುಕುಲ್ ಸರನ್ ಮಾಥುರ್ ಅವರನ್ನು ಹುಬ್ಬಳ್ಳಿಯಲ್ಲಿ ಭೇಟಿಯಾದ ರಾಯಚೂರು–ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದ ಜಿ.ಕುಮಾರ ನಾಯಕರವರು, ಗಿಣಿಗೇರಾ–ರಾಯಚೂರು ರೈಲು ಮಾರ್ಗವನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸುವ ಕುರಿತು ವಿವರವಾಗಿ ಚರ್ಚಿಸಿದರು. ಈ ಸಂದರ್ಭದಲ್ಲಿ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮವನ್ನು ಕ್ರಾಸಿಂಗ್ ಸ್ಟೇಷನ್ ಆಗಿ ಅಭಿವೃದ್ಧಿಪಡಿಸುವುದು ಹಾಗೂ ರಾಯಚೂರು ತಾಲೂಕಿನ ಮಮದಾಪುರವನ್ನು ‘ಗ್ರೇಟರ್ ರಾಯಚೂರು’ ರೈಲು ನಿಲ್ದಾಣವಾಗಿ ರೂಪಿಸುವ ಕುರಿತು ಸಂಸದರು ಪ್ರಸ್ತಾಪಿಸಿದರು. ಜೊತೆಗೆ ಗೂಡ್ಸ್ ಸೈಡಿಂಗ್ ವ್ಯವಸ್ಥೆ ಹಾಗೂ ಜಂಕ್ಷನ್ ಮೂಲಕ ರಾಯಚೂರು ರೈಲ್ವೇ ಬೈಪಾಸ್ ನಿರ್ಮಾಣದ ಅಗತ್ಯತೆಯ ಬಗ್ಗೆ ವಿಸ್ತಾರವಾಗಿ ಚರ್ಚೆ ನಡೆಸಿದರು. ಇದಕ್ಕೆ ಸ್ಪಂದಿಸಿದ ಪ್ರಧಾನ ವ್ಯವಸ್ಥಾಪಕ ಶ್ರೀ ಮುಕುಲ್ ಸರನ್ ಮಾಥುರ್ ಅವರು, ಗಿಣಿಗೇರಾ–ರಾಯಚೂರು ರೈಲು ಮಾರ್ಗದ ಕಾರ್ಯಗತಗೊಳಿಸುವಿಕೆಗೆ ಶೀಘ್ರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಅಲ್ಲದೆ ಕುರ್ಡಿ ಮತ್ತು ಮಮದಾಪುರ ಸಂಬಂಧಿಸಿದ ಪ್ರಸ್ತಾವನೆಗಳನ್ನು ತಮ್ಮ ತಂಡದೊಂದಿಗೆ ಪರಿಶೀಲಿಸಿ ಶೀಘ್ರದಲ್ಲೇ ಮಾಹಿತಿ ನೀಡುವುದಾಗಿ ತಿಳಿಸಿದರು. ಈ ಸಭೆಯಲ್ಲಿ ನೈರುತ್ಯ ರೈಲ್ವೆಯ ಪ್ರಿನ್ಸಿಪಲ್ ಚೀಫ್ ಕಮರ್ಶಿಯಲ್ ಮ್ಯಾನೇಜರ್ ಶ್ರೀ ಸತ್ಯ ಪ್ರಕಾಶ್ ಶಾಸ್ತ್ರಿ, ಪ್ರಿನ್ಸಿಪಲ್ ಚೀಫ್ ಆಪರೇಟಿಂಗ್ ಮ್ಯಾನೇಜರ್ ಶ್ರೀ ಬಿ. ಪ್ರಶಾಂತ್ ಕುಮಾರ್ ಹಾಗೂ ಚೀಫ್ ಎಂಜಿನಿಯರ್ (ಕನ್ಸ್ಟ್ರಕ್ಷನ್) ಶ್ರೀ ವೆಂಕಟೇಶ್ವರ ರಾವ್ ಅವರು ಉಪಸ್ಥಿತರಿದ್ದರು.
Sabarimala Gold Theft: ಶಬರಿಮಲೆ ಚಿನ್ನ ಕಳವು ಆರೋಪ, ತಪ್ಪು ಮಾಡಿದವರಿಗೆ ಶಿಕ್ಷೆ ಗ್ಯಾರಂಟಿ ಎಂದರು ಪ್ರಧಾನಿ ಮೋದಿ
ಕೇರಳ ರಾಜ್ಯ ಇಡೀ ದೇಶದಲ್ಲೇ ಅತಿಹೆಚ್ಚು ಹೆಸರು ಮಾಡಿರುವುದು ಪುಣ್ಯಕ್ಷೇತ್ರ ಶಬರಿಮಲೆ ದೇಗುಲದ ವಿಚಾರಕ್ಕೆ. ಪ್ರತಿವರ್ಷ ಶಬರಿಮಲೆ ದೇಗುಲಕ್ಕೆ ಹತ್ತಾರು ಲಕ್ಷ ಭಕ್ತರ ಭೇಟಿ ನಿಡುತ್ತಾರೆ, ಹಾಗೇ ಕೋಟಿ ಕೋಟಿ ಭಕ್ತರು ಅಯ್ಯಪ್ಪ ಸ್ವಾಮಿಯಲ್ಲಿ ಪ್ರಾರ್ಥಿಸುತ್ತಾರೆ. ಹೀಗಿದ್ದಾಗ ಇಂತಹ ಪುಣ್ಯಕ್ಷೇತ್ರ ಶಬರಿಮಲೆ ದೇವಸ್ಥಾನದಲ್ಲೇ ಚಿನ್ನ ಕಳವು ಆಗಿರುವ ಆರೋಪ ಕೇಳಿಬಂದಿತ್ತು. ಇದೇ ವಿಚಾರ ದೇಶದ ಮೂಲೆ, ಮೂಲೆಯಲ್ಲೂ
ಜೈಲಲ್ಲಿ ತಟ್ಟೆ, ಲೋಟ, ಚಮಚಾಗಳನ್ನು ಬಿಟ್ಟು ಬೇರೆ ಜಗತ್ತು ನೋಡದ ಜನಾರ್ದನ ರೆಡ್ಡಿ: ಬಿ ಕೆ ಹರಿಪ್ರಸಾದ್ ವಾಗ್ದಾಳಿ
ಬೆಂಗಳೂರು: ಜೈಲಲ್ಲಿ ತಟ್ಟೆ, ಲೋಟ, ಚಮಚಾಗಳನ್ನು ಬಿಟ್ಟು ಬೇರೆ ಜಗತ್ತು ನೋಡದ ಜನಾರ್ದನ ರೆಡ್ಡಿಗೆ ರಾಜಕೀಯ ಜೀವನದಲ್ಲಿ ಚಮಚಾಗಿರಿ ಹೊರತುಪಡಿಸಿ ಬೇರೆ ಲೋಕದ ಪರಿಜ್ಞಾನವೇ ಗೊತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿ ಪ್ರಸಾದ್ ವಾಗ್ದಾಳಿ ನಡೆಸಿದರು. ಗುರುವಾರ ಸಾಮಾಜಿಕ ಜಾಲತಾಣ 'ಎಕ್'ನಲ್ಲಿ ಜನಾರ್ಧನಾ ರೆಡ್ಡಿಗೂ ನಮಗೂ ಸಂಬಂಧವಿಲ್ಲ ಎಂಬ ಅಮಿತ್ ಶಾ ಅವರ
ರಾಜ್ಯಪಾಲರು ರಾಜ್ಯದ ಜನತೆಯ ಬಳಿ ಕ್ಷಮೆ ಕೇಳಬೇಕು: ಸಚಿವ ಎಚ್.ಕೆ. ಪಾಟೀಲ್
ಬೆಂಗಳೂರು: ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಿದ ಭಾಷಣವನ್ನು ಪೂರ್ತಿಯಾಗಿ ಓದದೆ ಸದನಕ್ಕೆ ಅಪಮಾನ ಮಾಡಿದ್ದು, ರಾಜ್ಯದ ಜನತೆಯ ಕ್ಷಮೆ ಕೇಳಬೇಕಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಒತ್ತಾಯಿಸಿದ್ದಾರೆ. ಶುಕ್ರವಾರ ವಿಧಾನಸಭೆ ಕಲಾಪದಲ್ಲಿ ಜಂಟಿ ಅಧಿವೇಶನ ಸಂದರ್ಭದಲ್ಲಿ ರಾಜ್ಯಪಾಲರು ಭಾಷಣ ಕುರಿತು ನಡೆದ ಚರ್ಚೆಗೆ ಉತ್ತರ ನೀಡಿದ ಅವರು, ‘ಈ ಹಿಂದೆ ಬಿಜೆಪಿ ಶಾಸಕರು ವಿಧಾನಸಭೆಯಲ್ಲಿ ಗದ್ದಲ ಮಾಡಿ ಕಾಗದ ಪತ್ರಗಳನ್ನು ಹರಿದು ಸ್ಪೀಕರ್ ಮುಖಕ್ಕೆ ತೂರಿ, ಪೀಠದ ಬಳಿಗೆ ಹೋಗಿ ಭುಜಕ್ಕೆ ಭುಜಕೊಟ್ಟು ನಿಂತಿದ್ದರು. ಆ ಮಹಾಪರಾಧಕ್ಕಾಗಿ 18 ಜನರನ್ನು ಅಮಾನತುಗೊಳಿಸಲಾಗಿತ್ತು. ಅಂದಿನ ಘಟನೆಯನ್ನು ನಿನ್ನೆ ಜಂಟಿ ಅಧಿವೇಶನದ ಬಳಿಕ ನಡೆದ ಬೆಳವಣಿಗೆಗಳಿಗೆ ಹೋಲಿಕೆ ಮಾಡಿ ಸಮರ್ಥಿಸಿಕೊಳ್ಳುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು. ರಾಜ್ಯ ಸರಕಾರ ತನ್ನ ನೀತಿ ನಿಲುವುಗಳನ್ನು ರಾಜ್ಯಪಾಲರ ಮೂಲಕ ಭಾಷಣ ಮಾಡಿಸಿ ಕೇಂದ್ರ ಸರಕಾರಕ್ಕೆ ಮನವರಿಕೆ ಮಾಡಿಕೊಡುವುದು ಪ್ರಜಾಪ್ರಭುತ್ವದ ಹಾದಿಯಾಗಿದೆ. ರಾಜ್ಯಪಾಲರು ಖುಷಿಯಾಗಲಿ ಎಂದು ಸರಕಾರ ಭಾಷಣವನ್ನು ಸಿದ್ದಪಡಿಸುವುದಿಲ್ಲ. ಒಟ್ಟು 122 ಪ್ಯಾರಾಗಳ ಭಾಷಣದಲ್ಲಿ ಯಾರನ್ನೂ ವೈಯಕ್ತಿಕವಾಗಿ ನಿಂದಿಸಿರಲಿಲ್ಲ ಎಂದು ಅವರು ಸ್ಪಷ್ಟಣೆ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಸದಸ್ಯ ಸುರೇಶ್ಕುಮಾರ್ ಮಾತನಾಡಿ, ‘ಈ ಹಿಂದೆ ರಾಜ್ಯಪಾಲರಾಗಿದ್ದ ಹಂಸರಾಜ್ ಭಾರದ್ವಾಜ್ ಅವರಿಗೆ ಆಗಿನ ಕೇಂದ್ರ ಸರಕಾರ ಯಾವ ರೀತಿ ಕರೆ ಮಾಡುತ್ತಿತ್ತು ಎಂಬುದನ್ನು ಹೇಳಬೇಕಾಗುತ್ತದೆ’ ಎಂದರು. ಇದಕ್ಕೆ ಎಚ್.ಕೆ.ಪಾಟೀಲ್ ಅವರು, ‘ಸತ್ಯ ಹೇಳಿದರೆ ನೋವುಂಟಾಗುವುದು ಸಹಜ. ಆದರೆ ರಾಜ್ಯಪಾಲರ ಜವಾಬ್ದಾರಿಯ ಬಗ್ಗೆ ಸಂವಿಧಾನದಲ್ಲಿ ಸ್ಪಷ್ಟ ಉಲ್ಲೇಖವಿದೆ. ಸುಪ್ರೀಂ ಮತ್ತು ಹೈಕೋರ್ಟ್ನಲ್ಲೂ ಸಾಕಷ್ಟು ನಿರ್ಣಯಗಳಿವೆ. ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವರು ನೀಡಿರುವ ಹೇಳಿಕೆ ಹಾಗೂ ಸಂಸತ್ನಲ್ಲಿ ರಾಷ್ಟ್ರಪತಿಯವರ ಭಾಷಣದ ಸಂಪ್ರದಾಯ ಎಲ್ಲವನ್ನೂ ಪರಿಗಣಿಸಿ ಎಲ್ಲವನ್ನೂ ಸೇರಿಸಿ ಹೇಳುವುದಾದರೆ, ನಿನ್ನೆಯ ಘಟನೆಯಲ್ಲಿ ರಾಜ್ಯಪಾಲರು ಸಂವಿಧಾನ ಉಲ್ಲಂಘಿಸಿದ್ದಾರೆ’ ಎಂದು ಹೇಳಿದರು. ವಿಷಯ ಪ್ರಸ್ತಾಪಿಸಿರುವ ವಿರೋಧ ಪಕ್ಷದ ನಾಯಕರು ಮತ್ತು ಸದಸ್ಯರುಗಳು ರಾಜ್ಯಪಾಲರಿಗೆ ಯಾರಿಂದ ಅವಮಾನವಾಗಿದೆ ಎಂದು ಹೆಸರನ್ನು ಉಲ್ಲೇಖಿಸಿಲ್ಲ. ಪರಿಷತ್ನ ಸದಸ್ಯ ಬಿ.ಕೆ.ಹರಿಪ್ರಸಾದ್ ಹೆಸರು ಹೇಳಿದ್ದಾರೆ. ಅವರು ಈ ಮನೆಯ ಸದಸ್ಯರಲ್ಲದ ಕಾರಣ ಚರ್ಚೆ ಮಾಡಲು ಅಥವಾ ಕ್ರಮ ತೆಗೆದುಕೊಳ್ಳಲು ಅವಕಾಶ ಇಲ್ಲ. ಇನ್ನೂ, ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು ಸೇರಿದಂತೆ ಸಂಪುಟದ ಸಚಿವರು ರಾಜ್ಯಪಾಲರಿಗೆ ಹಸ್ತಲಾಘವ ನೀಡಿ ಕಾರಿನಲ್ಲಿ ಕೂರಿಸಿ ಗೌರವಯುತವಾಗಿ ಬೀಳ್ಕೊಟ್ಟಿದ್ದೇವೆ. ಎಲ್ಲಿಯೂ ಅವರಿಗೆ ಅಪಮಾನ ಮಾಡಿಲ್ಲ ಎಂದು ಸಮರ್ಥಿಸಿಕೊಂಡರು. ‘ರಾಜ್ಯಪಾಲರು ಅಧಿವೇಶನದಿಂದ ಓಡಿಹೋಗಿದ್ದಾರೆಂಬ ಮಾತಿಗೆ ನಾನು ಈಗಲೂ ಬದ್ಧನಾಗಿದ್ದೇನೆ. ಇನ್ನೊಂದೆಡೆ, ರಾಜ್ಯಪಾಲರನ್ನು ಕರೆಯಲು ಹೋಗಿದ್ದರು ಎಂದು ವಿಪಕ್ಷದವರು ಆಪಾದಿಸಿದ್ದಾರೆ. ರಾಜ್ಯಪಾಲರು ನಿರ್ಗಮಿಸುವಾಗ ಅವರನ್ನು ಹಿಂಬಾಲಿಸುವಂತೆ ಮುಖ್ಯಮಂತ್ರಿಯವರು ಸನ್ನೆ ಮಾಡಿದರು. ಅದರಂತೆ ನಾನು ವೇಗವಾಗಿ ಹೆಜ್ಜೆ ಹಾಕಿದ್ದೆ. ಬಹುಶಃ ಅದನ್ನು ಪ್ರತಿಪಕ್ಷದ ಸದಸ್ಯರು ತಪ್ಪಾಗಿ ಭಾವಿಸಿದಂತಿದೆ’ ಎಂದು ಎಚ್.ಕೆ.ಪಾಟೀಲ್ ವಿವರಣೆ ನೀಡಿದರು.
ಸುಂಕ ಸಮರ ಸೇರಿದಂತೆ ಹಲವು ವರ್ಷಗಳ ವೈಮನಸ್ಸಿನ ಬಳಿಕ ಸದ್ಯ ಚೀನಾ ಅಮೆರಿಕಾ ನಡುವಿನ ಸಂಬಂಧ ಸುಧಾರಣೆ ಕಾಣುತ್ತಿದ್ದು,ಈ ಬೆನ್ನಲ್ಲೇ, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ವರ್ಷ ಏಪ್ರಿಲ್ನಲ್ಲಿ ಚೀನಾಕ್ಕೆ ಭೇಟಿ ನೀಡಲಿದ್ದೇನೆ ಎಂದು ಘೋಷಿಸಿದ್ದಾರೆ.ಅಲ್ಲದೆ, ಕೋವಿಡ್ ಸಮಯದಲ್ಲಿ ಉದ್ಭವಿಸಿದ್ದ ವೈಮನಸ್ಸು ಈಗ ಕಡಿಮೆಯಾಗಿದ್ದು, ಉಭಯ ದೇಶಗಳ ನಡುವೆ ವ್ಯಾಪಾರ ಸಂಬಂಧ ಸುಧಾರಿಸಿದೆ ಎಂದಿದ್ದು ಚೀನಾ ಅಮೆರಿಕಾದ ಕೃಷಿ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುತ್ತಿರುವುದು ಇದಕ್ಕೆ ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ. ಟ್ರಂಪ್ 2.0 ಆಡಳಿತವಾಧಿಯಲ್ಲಿ ಮೊದಲ ಬಾರಿಗೆ ಟ್ರಂಪ್ ನ ಈ ಭೇಟಿ ದ್ವಿಪಕ್ಷೀಯ ಸಂಬಂಧದಲ್ಲಿ ಹೊಸ ಅಧ್ಯಾಯ ಬರೆಯುವ ನಿರೀಕ್ಷೆಯಿದೆ.
ಪರಿಷತ್ ಸದಸ್ಯ ಹರಿಪ್ರಸಾದ್ರ ಅಂಗಿ ಹರಿದದ್ದು ಯಾರು?: ಆರ್. ಅಶೋಕ್ ಪ್ರಶ್ನೆ
ಬೆಂಗಳೂರು: ‘ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಲು ಬಂದ ರಾಜ್ಯಪಾಲರನ್ನು ಅಗೌರವದಿಂದ ಸರಕಾರ ಬೀಳ್ಕೊಟ್ಟಿದೆ. ರಾಜ್ಯಪಾಲರ ವಿರುದ್ಧ ನಿನ್ನೆ ನಡೆದ ಘಟನೆಯಲ್ಲಿ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ತಮ್ಮ ಬಟ್ಟೆಯನ್ನು ಬಿಜೆಪಿಗರು ಹರಿದಿದ್ದಾರೆಂದು ಆರೋಪಿಸಿದ್ದಾರೆ. ಹರಿಪ್ರಸಾದ್ರ ಅಂಗಿ(ಜುಬ್ಬ) ಹರಿದಿದ್ದು ಯಾರು?’ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಇಂದಿಲ್ಲಿ ಪ್ರಶ್ನಿಸಿದರು. ಶುಕ್ರವಾರ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ‘ರಾಜ್ಯಪಾಲರಿಗೆ ಅಡ್ಡ ನಿಂತವರು ಕಾಂಗ್ರೆಸ್ನ ಸದಸ್ಯರೇ, ಅವರ ಹಿಂದೆ ಸುತ್ತಮುತ್ತ ಇದ್ದವರೂ ಕಾಂಗ್ರೆಸ್ನವರೇ. ಮಾರ್ಷಲ್ಗಳೊಂದಿಗೆ ಜಗ್ಗಾಡಿದವರು ಅವರೇ, ಆರೋಪ ಮಾತ್ರ ಬಿಜೆಪಿ ಮೇಲೆ. ವಿಡಿಯೋ ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು. ಆಡಳಿತ ಪಕ್ಷದ ಸದಸ್ಯರು ‘ರಾಜ್ಯಪಾಲರು ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆ’ ಎಂದು ಆರೋಪಿಸುತ್ತಿದ್ದಾರೆ. ಆದರೆ, ರಾಷ್ಟ್ರಗೀತೆ ಹಾಡಿಸಬೇಕಾದವರು ಸರಕಾರವೇ ಹೊರತು ರಾಜ್ಯಪಾಲರಲ್ಲ. ಅವರು ತಮ್ಮ ಭಾಷಣ ಮುಗಿಸಿ ‘ಜೈ ಹಿಂದ್’ ಎಂದು ನಿರ್ಗಮಿಸಿದ್ದಾರೆ. ರಾಜ್ಯಪಾಲರನ್ನು ಅಬಲೆಯಂತೆ ಮಾಡಿದ್ದು, ಅವರು ಏಕಾಂಗಿಯಾಗಿ ಹೊರಹೋದರು. ಅವರ ಜೊತೆ ಯಾರು ಇರಲಿಲ್ಲ ಎಂದು ಅಶೋಕ್ ದೂರಿದರು. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಚ್.ಕೆ.ಪಾಟೀಲ್ ಅವರೇ ‘ರಾಜ್ಯಪಾಲರು ಓಡಿಹೋಗಿದ್ದಾರೆ’ ಎಂದು ಹೇಳಿರುವುದು ಸರಿಯಲ್ಲ. ಸರಕಾರ ಇರಬಹುದು, ಹೋಗಬಹುದು. ಆದರೆ, ಸಂಪ್ರದಾಯ ಮತ್ತು ನಿಯಮಗಳ ಉಲ್ಲಂಘನೆಯಾಗಬಾರದು. ಈ ಹಿಂದೆ ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿದಂತೆ ನಿನ್ನೆ ರಾಜ್ಯಪಾಲರಿಗೆ ಅಗೌರವ ತೋರಿದ ಆಡಳಿತ ಪಕ್ಷದ ಸದಸ್ಯರ ವಿರುದ್ದವೂ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಬಿಜೆಪಿಯ ಡಾ.ಅಶ್ವತ್ಥನಾರಾಯಣ ಮಾತನಾಡಿ, ‘ಸ್ಪೀಕರ್ ಸದನದ ಘನತೆ, ಗೌರವವನ್ನು ಎತ್ತಿಹಿಡಿಯಬೇಕು. ಕಲಾಪಗಳ ನಿಯಮಾವಳಿ 27ರ ಅನುಸಾರ ರಾಜ್ಯಪಾಲರ ಭಾಷಣಕ್ಕೆ ಅಡ್ಡಿಪಡಿಸಿದವರ ವಿರುದ್ಧ ಮುಂದಿನ ಸದನ ಸಮಾವೇಶದಲ್ಲಿ ಕ್ರಮ ಕೈಗೊಳ್ಳಬೇಕೆಂದು ಸ್ಪಷ್ಟ ಉಲ್ಲೇಖವಿದೆ. ಹೀಗಾಗಿ ರಾಜ್ಯಪಾಲರಿಗೆ ಅಡಚಣೆ ಮಾಡಿದವರ ವಿರುದ್ಧ ಕ್ರಮ ಆಗಬೇಕು. ಗಲಾಟೆ ಪ್ರಕರಣ ಖಂಡಿಸುವ ನಿರ್ಣಯ ಕೈಗೊಳ್ಳಬೇಕು. ಜತೆಗೆ ರಾಜ್ಯಪಾಲರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಆಡಳಿತ ಪಕ್ಷದ ಸದಸ್ಯ ಕೆ.ಎಂ.ಶಿವಲಿಂಗೇಗೌಡ ಮಾತನಾಡಿ, ‘ರಾಜ್ಯಪಾಲರನ್ನು ಗೌರವ ಪೂರ್ವಕವಾಗಿ ಸರಕಾರ ಸ್ವಾಗತಿಸಿದೆ. ಭಾಷಣ ಮುಗಿಸಿ ಹೋಗುವ ವೇಳೆ ರಾಷ್ಟ್ರಗೀತೆಗೆ ಅಗೌರವ ತೋರಿಸಿದ್ದು, ಇದನ್ನು ಸಹಿಸಲು ಸಾಧ್ಯವಿಲ್ಲ. ರಾಜ್ಯಪಾಲರು ಹೊರಗೆ ಹೋಗುವಾಗ ಕೆಲವರು ಅಡ್ಡಪಡಿಸಿರಬಹುದು. ಅದೇನೂ ದೊಡ್ಡ ಅಪರಾಧವಲ್ಲ’ ಎಂದರು. ಬಳಿಕ ಮಾತನಾಡಿದ ಸ್ಪೀಕರ್ ಯು.ಟಿ.ಖಾದರ್, ಆಡಳಿತ ಪಕ್ಷದ ಕಡೆಯಿಂದ ‘ರಾಜ್ಯಪಾಲರು ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆ’ ಎಂಬ ಆಕ್ಷೇಪ ಸಲ್ಲಿಕೆಯಾಗಿದೆ. ವಿಪಕ್ಷದ ಸದಸ್ಯರು ‘ರಾಜ್ಯಪಾಲರಿಗೆ ಅಗೌರವ ತೋರಲಾಗಿದೆ’ ಎಂದು ಲಿಖಿತ ದೂರು ನೀಡಿದ್ದಾರೆ. ನಾವಿಲ್ಲಿ ಉದ್ದೇಶಕ್ಕಾಗಿ ಚರ್ಚೆ ನಡೆಸಬೇಕೇ ಹೊರತು ವೈಯಕ್ತಿಕವಾಗಿ ಹಗೆತನಕ್ಕಾಗಿ ಜಗಳವಾಡಬಾರದು. ಹೀಗಾಗಿ ಈ ವಿಷಯದ ಬಗ್ಗೆ ಪರಿಶೀಲಿಸಿ ರೂಲಿಂಗ್ ನೀಡುತ್ತೇನೆ ಎಂದು ತಿಳಿಸಿದರು.
ಪದವೀಧರರಿಗೆ ಉದ್ಯೋಗ ಖಾತರಿಯ ತಿಳುವಳಿಕಾ ಒಪ್ಪಂದಕ್ಕೆ ಟಿಎಂಎಐಎಚ್ ಅಂಕಿತ
ಅಜ್ಮಾನ್: ಶಿಕ್ಷಣ ಹಾಗೂ ಉದ್ಯೋಗಾವಕಾಶದ ನಡುವಿನ ಅಂತರವನ್ನು ನಿವಾರಿಸುವ ನಿರ್ಣಾಯಕ ನಡೆಯೆಂಬಂತೆ, ಗಲ್ಫ್ ಮೆಡಿಕಲ್ ಯೂನಿವರ್ಸಿಟಿ ಅಧೀನದ ತುಂಬೆ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಆ್ಯಂಡ್ ಎಐ ಇನ್ ಹೆಲ್ತ್ಕೇರ್ (the Thumbay College of Management and AI in Healthcare) ಸಂಸ್ಥೆಯು ತುಂಬೆ ಹೆಲ್ತ್ಕೇರ್ ಡಿವಿಜನ್ ಜೊತೆ ಆಯಕಟ್ಟಿನ ತಿಳುವಳಿಕಾ ಒಡಂಬಡಿಕೆಗೆ ಸಹಿ ಹಾಕಿದೆ. ಈ ಒಪ್ಪಂದದ ಮೂಲಕ ಪದವೀಧರರಿಗೆ ಸಂರಚನಾತ್ಮಕ ಇಂಟರ್ನ್ಶಿಪ್ಗಳು,ಕೆಲಸದ ಸ್ಥಳದ ಅನುಭವ ಪಡೆಯಲಿದ್ದಾರೆ. ಈ ಪಾಲುದಾರಿಕೆಯಿಂದಾಗಿ ವಿದ್ಯಾರ್ಥಿಗಳಿಗೆ ಕಲಿಯುತ್ತಿರುವಾಗಲೇ ನೈಜವಾದ ಆಸ್ಪತ್ರೆ ಹಾಗೂ ಆರೋಗ್ಯಪಾಲನಾ ಉದ್ಯಮಿದ ಅನುಭವವನ್ನು ಪಡೆಯಲು ಸಾಧ್ಯವಾಗಲಿದೆ. ಈ ಒಪ್ಪಂದದ ಮೂಲಕ ತುಂಬೆ ಹೆಲ್ತ್ಕೇರ್, ಟಿಎಂಎಎಚ್ನ ಕನಿಷ್ಠ ಶೇ.20ರಷ್ಟು ಅರ್ಹ ಪದವೀಧರರಿಗೆ ಉದ್ಯೋಗಾವಕಾಶಗಳನ್ನು ನೀಡಲಿದೆ. ಈ ಸಂದರ್ಭ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಗಲ್ಫ್ ಮೆಡಿಕಲ್ ಯೂನಿವರ್ಸಿಟಿಯ ಕುಲಪತಿ ಪ್ರೊ. ಮಾಂಡ ವೆಂಕಟರಮಣ ಮಾತನಾಡಿ ‘‘ ವಿದ್ಯಾರ್ಥಿಗಳು ಕೇವಲ ಪದವಿಗಳನ್ನು ಗಳಿಸುವುದು ಮಾತ್ರಲ್ಲದೆ, ತಮ್ಮ ವೃತ್ತಿ ಬದುಕನ್ನು ಕೂಡಾ ಕಟ್ಟಿಕೊಳ್ಳಬೇಕೆಂದು ಕರೆ ನೀಡಿದರು. ಈ ತಿಳುವಳಿಕಾ ಒಪ್ಪಂದವು ಭವಿಷ್ಯದಲ್ಲಿ ಶಿಕ್ಷಣವನ್ನು ಉದ್ಯೋಗಾವಕಾಶವಾಗಿ ಹಾಗೂ ತರಗತಿಯ ಕೊಠಡಿಗಳನ್ನು ಆರೋಗ್ಯಪಾಲನಾ ಕೈಗಾರಿಕಾ ಕ್ಷೇತ್ರಕ್ಕೆ ಪ್ರವೇಶದ್ವಾರಗಳಾಗಿ ಪರಿವರ್ತಿಸಲಿದೆ’’ ಎಂದು ಟಿಎಂಎಐಎಚ್ನ ಡೀನ್ ಪ್ರೊ. ಆಮೀರ್ ಝೈದ್ ಹೇಳಿದರು. ತುಂಬೆಗ್ರೂಪ್ ಹೆಲ್ತ್ಕೇರ್ನ ಉಪಾಧ್ಯಕ್ಷ ಅಕ್ಬರ್ ಮೊಯ್ದೀನ್ ತುಂಬೆ ಮಾತನಾಡಿ ಈ ತಿಳುವಳಿಕಾ ಒಪ್ಪಂದದ ಮೂಲಕ ತುಂಬೆ ಹೆಲ್ತ್ಕೇರ್ ಸಂಸ್ಥೆಯು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಹಾಗೂ ಉದ್ಯೋಗಾವಕಾಶಗಳನ್ನು ತೆರೆದಿಡಲಿದೆ ಎಂದು ಹೇಳಿದರು. ಈ ತಿಳುವಳಿಕಾ ಒಪ್ಪಂದವು ಒಂದೇ ಪರಿಸರ ವ್ಯವಸ್ಥೆಯಡಿ ಶಿಕ್ಷಣ, ಆರೋಗ್ಯಪಾಲನೆ ಹಾಗೂ ಸಂಶೋಧನೆಯನ್ನು ಏಕೀಕರಣಗೊಳಿಸುವ ತುಂಬೆ ಗ್ರೂಪ್ನ ಸುದೀರ್ಘ ಬದ್ಧತೆಯನ್ನು ಬಲಪಡಿಸಲಿದೆ. ಕೋರ್ಸ್ಗಳಿಗೆ ಪ್ರವೇಶಗಳು ಆರಂಭಗೊಂಡಿದ್ದು, ಆಕಾಂಕ್ಷಿ ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ gmu.ac.ae ಗೆ ಸಂದರ್ಶಿಸಬಹುದು. ಶೈಕ್ಷಣಿಕ ಅರ್ಹತೆ, ಸ್ಕಾಲರ್ಶಿಪ್ ಹಾಗೂ ಅರ್ಜಿ ಸಲ್ಲಿಕೆಗೆ ಅಂತಿಮ ದಿನಾಂಕಗಳ ಬಗ್ಗೆ ಅರಿತುಕೊಳ್ಳಬಹುದು. ಆರೋಗ್ಯಪಾಲನೆ ಹಾಗೂ ಇಕಾನಾಮಿಕ್ಸ್ನಲ್ಲಿ ಬಿಎಸ್ಸಿ, ಹೆಲ್ತ್ಕೇರ್ನಲ್ಲಿ ಅನ್ವಯಿಕ ಎಐ, ಹೆಲ್ತ್ಕೇರ್ ಮ್ಯಾನೇಜ್ಮೆಂಟ್ನಲ್ಲಿ ಸ್ನಾತಕೋತ್ತರ ಪದವಿ, ಎಐ ಹಾಗೂ ಹೆಲ್ತ್ ಇನ್ಫಾರ್ಮಾಟಿಕ್ಸ್ನಲ್ಲಿ ಸ್ನಾತಕೋತ್ತರ ಪದವಿಕೋರ್ಸ್ಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
Cabinet Meeting: 247 ಕೋಟಿ ವೆಚ್ಚದಲ್ಲಿ 650 ಬಸ್ ಖರೀದಿಗೆ ಸರ್ಕಾರ ಅಸ್ತು: ಸಂಪೂರ್ಣ ಮಾಹಿತಿ ಇಲ್ಲಿದೆ
ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ ₹247 ಕೋಟಿ ವೆಚ್ಚದಲ್ಲಿ ಒಟ್ಟು 650 ಬಿಎಸ್-6 ಬಸ್ಗಳನ್ನು ಖರೀದಿಸಲು ಕರ್ನಾಟಕ ಸಚಿವ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 500 ಮತ್ತು ವಾಯವ್ಯ ರಸ್ತೆ ಸಾರಿಗೆ ನಿಗಮಕ್ಕೆ 150 ಬಸ್ಗಳು ಎಂದು ಮೂಲಗಳು ತಿಳಿಸಿವೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ
‘ಏಳು ತಿಂಗಳಿಗೆ ಹುಟ್ಟಿದರೆ ಹೀಗೇನೇ?’ : ಸಚಿವ ಬೈರತಿ ಸುರೇಶ್ ವಿರುದ್ಧ ಬಿಜೆಪಿಯ ಸುರೇಶ್ ಕುಮಾರ್ ಆಕ್ಷೇಪಾರ್ಹ ಮಾತು
ಬೆಂಗಳೂರು : ‘ಏಳು ತಿಂಗಳಿಗೆ ಹುಟ್ಟಿದರೆ ಹೀಗೇನೇ..ಒಂಬತ್ತು ತಿಂಗಳಿಗೆ ಹುಟ್ಟಿದರೆ ಸರಿಯಾಗುತ್ತಿತ್ತು’ ಎಂದು ಬಿಜೆಪಿಯ ಹಿರಿಯ ಸದಸ್ಯ ಎಸ್.ಸುರೇಶ್ ಕುಮಾರ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ಕುರಿತು ಆಡಿದ ಮಾತು ವಿಧಾನಸಭೆಯಲ್ಲಿ ಕೆಲಕಾಲ ಗದ್ಧಲ-ಕೋಲಾಹಲಕ್ಕೆ ಕಾರಣವಾಯಿತು. ಶುಕ್ರವಾರ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ವಿವಾದದ ಕುರಿತು ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ಸದಸ್ಯರುಗಳ ನಡುವೇ ಆರೋಪ-ಪ್ರತ್ಯಾರೋಪದ ಸಂದರ್ಭದಲ್ಲಿ ಸುರೇಶ್ ಕುಮಾರ್ ಮಾತನಾಡುತ್ತಿದ್ದರು. ಇದಕ್ಕೆ ಆಕ್ಷೇಪಿಸಿ ಸಚಿವ ಬೈರತಿ ಸುರೇಶ್ ಮಧ್ಯಪ್ರವೇಶ ಮಾಡಿದರು. ಇದರಿಂದ ಕೆರಳಿದ ಎಸ್.ಸುರೇಶ್ ಕುಮಾರ್ ಮಾತಿನ ಭರದಲ್ಲಿ ‘ಒಂಭತ್ತು ತಿಂಗಳಿಗೆ ಹುಟ್ಟಿದ್ದರೇ ಸರಿಯಾಗಿರುತ್ತಿತ್ತು, ಏಳು ತಿಂಗಳಿಗೆ ಹುಟ್ಟಿದರೇ ಹೀಗೇನೇ’ ಎಂದು ಲೇವಡಿ ಮಾಡಿದರು. ಇದರಿಂದ ಆಕ್ರೋಶಿತರಾದ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಬೈರತಿ ಸುರೇಶ್, ಎಚ್.ಸಿ.ಬಾಲಕೃಷ್ಣ, ಶಿವಲಿಂಗೇಗೌಡ ಸೇರಿದಂತೆ ಕಾಂಗ್ರೆಸ್ ಸದಸ್ಯರು, ಬಿಜೆಪಿಯ ಎಸ್.ಸುರೇಶ್ ಕುಮಾರ್ ವಿರುದ್ಧ ಮುಗಿಬಿದ್ದರು. ಅಲ್ಲದೆ, ಆ ಪದವನ್ನು ಕಡತದಿಂದ ತೆಗೆದುಹಾಕಬೇಕು. ಕ್ಷಮೆ ಕೋರಬೇಕು ಎಂದು ಪಟ್ಟುಹಿಡಿದರು. ರಾಜ್ಯಪಾಲರ ಭಾಷಣ ವಿವಾದದ ಬಗ್ಗೆ ಮಾತನಾಡುತ್ತಾ ಸುರೇಶ್ ಕುಮಾರ್, ‘ದುರದೃಷ್ಟವಶಾತ್ ರಾಜ್ಯಪಾಲರು ಸದನಕ್ಕೆ ಬಂದು ಸಮರ್ಥನೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ಅವರ ವಿರುದ್ಧದ ಆರೋಪ ಮಾಡುವುದು ಸರಿಯಲ್ಲ. ರಾಜ್ಯಪಾಲರು ತಮ್ಮ ಭಾಷಣವನ್ನು ಮಂಡನೆ ಮಾಡಿದ್ದು, ಪೂರ್ತಿ ಭಾಷಣ ಓದಿದ ರೀತಿ ಆಗಿದೆ ಎಂದು ಈಗಾಗಲೆ ಸ್ಪೀಕರ್ ಅವರೇ ಹೇಳಿದ್ದಾರೆ’ ಎಂದು ಉಲ್ಲೇಖಿಸಿದರು. ಇದಕ್ಕೆ ಆಕ್ಷೇಪಿಸಿ ಸಚಿವ ಭೈರತಿ ಸುರೇಶ್ ಮಧ್ಯಪ್ರವೇಶ ಮಾಡಿದರು. ಆಗ ಸುರೇಶ್ ಕುಮಾರ್, ‘ಒಂಭತ್ತು ತಿಂಗಳಿಗೆ ಹುಟ್ಟಿದ್ದರೆ ಸರಿಯಾಗುತ್ತಿತ್ತು, ಏಳು ತಿಂಗಳಿಗೆ ಹುಟ್ಟಿದ್ದೀರಾ? ಎಂದು ವ್ಯಂಗ್ಯವಾಗಿ ತಿವಿದರು. ಇದರಿಂದ ಕೆರಳಿದ ಕಾಂಗ್ರೆಸ್ ಸದಸ್ಯರು, ಹಿರಿಯ ಸದಸ್ಯ ಸುರೇಶ್ ಕುಮಾರ್, ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವರಿಗೆ ಹೀಗೆ ಮಾತನಾಡುವುದು ಸಲ್ಲ. ಕೂಡಲೇ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು. ಕಡತದಿಂದ ತೆಗೆಯಲು ಸೂಚನೆ : ಈ ವೇಳೆ ಮಧ್ಯಪ್ರವೇಶಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ರಾಜ್ಯಪಾಲರ ಭಾಷಣದ ಕುರಿತು ಬಿಜೆಪಿಯ ಸದಸ್ಯ ಸುರೇಶ್ ಕುಮಾರ್ ಮಾತಿಗೆ ನಮ್ಮದೇನು ತಕರಾರು ಇಲ್ಲ. ಆದರೆ, ಬೈರತಿ ಸುರೇಶ್ ಕುರಿತು ‘ಏಳು ತಿಂಗಳಿಗೆ ಹುಟ್ಟಿದ್ದಾರೆ’ ಎಂದು ಹೇಳಿದ್ದು, ಸರಿಯಲ್ಲ. ಆ ಪದವನ್ನು ಕಡತದಿಂದ ತೆಗೆದು ಹಾಕಬೇಕು. ಚರ್ಚೆ ಇನ್ನೂ ಮುಂದುವರಿಸುವುದು ಬೇಡ’ ಎಂದು ಸಲಹೆ ನೀಡಿದರು. ಬಳಿಕ ಸ್ಪೀಕರ್ ಖಾದರ್ ಅವರು, ‘ಈ ಪದವನ್ನು ಕಡತದಿಂದ ತೆಗೆದು ಹಾಕಲಾಗುವುದು ಎಂದು ರೂಲಿಂಗ್ ನೀಡಿದ್ದರಿಂದ ಚರ್ಚೆಗೆ ತೆರೆಬಿತ್ತು.
ವಿಜಯನಗರ | ಗಾದಿಗನೂರು ಬಳಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ: ತಪ್ಪಿದ ಅನಾಹುತ
ವಿಜಯನಗರ : ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದ ಹೊರವಲಯದಲ್ಲಿ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾದ ಘಟನೆ ನಡೆದಿದ್ದು, ಭಾರಿ ಅನಾಹುತವೊಂದು ತಪ್ಪಿದೆ. ಹೊಸಪೇಟೆಯಿಂದ ಬಳ್ಳಾರಿ ಕಡೆಗೆ ತೆರಳುತ್ತಿದ್ದ ಪೆಟ್ರೋಲ್ ಟ್ಯಾಂಕರ್ಗೆ ಹಿಂದಿನಿಂದ ಬಂದ ಲಘು ವಾಹನ ಢಿಕ್ಕಿ ಹೊಡೆದ ಪರಿಣಾಮ ಟ್ಯಾಂಕರ್ ಪಲ್ಟಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಬೆಳ್ತಂಗಡಿ| ಬೈಕ್ ಕಳ್ಳತನಕ್ಕೆ ಯತ್ನ ಆರೋಪ; ಇಬ್ಬರನ್ನು ಥಳಿಸಿ ಮರಕ್ಕೆ ಕಟ್ಟಿದ ಹಾಕಿದ ಸಾರ್ವಜನಿಕರು
ಬೆಳ್ತಂಗಡಿ : ಬೈಕ್ ಕಳ್ಳತನ ಮಾಡಿ ಪರಾರಿಯಾಗುತ್ತಿರುವ ಆರೋಪದ ಮೇರೆಗೆ ಸಾರ್ವಜನಿಕರು ಸೇರಿ ಇಬ್ಬರು ಆರೋಪಿಗಳನ್ನು ಹಿಡಿದು ಥಳಿಸಿ, ಮರಕ್ಕೆ ಕಟ್ಟಿ ಹಾಕಿ ಬಳಿಕ ವೇಣೂರು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಈ ಬಗ್ಗೆ ಇಬ್ಬರು ಬೈಕ್ ಕಳ್ಳತನಕ್ಕೆ ಯತ್ನಿಸಿದ ಬಗ್ಗೆ ಪ್ರಕರಣ ದಾಖಲಿಸಲಾಗಿದೆ. ಇದೆ ಘಟನೆಗೆ ಸಂಬಂಧಿಸಿದಂತೆ ಹಲ್ಲೆಗೆ ಒಳಗಾದವರು ನೀಡಿದ ದೂರಿನಂತೆ 8 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಎರಡೂ ಪ್ರಕರಣಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ವರದಿ: ಬೆಳ್ತಂಗಡಿಯ ಮರೋಡಿ ಗ್ರಾಮದ ಪಳಾರಗೋಳಿ ಎಂಬಲ್ಲಿ ಜ.20ರಂದು ತಡರಾತ್ರಿ 2.30ರ ಸುಮಾರಿಗೆ ಕುಳೂರು ನಿವಾಸಿಗಳಾದ ಮೊಯ್ದಿನ್ ನಾಸೀರ್ ಹಾಗೂ ಅಬ್ದುಲ್ ಸಮದ್ ಎಂಬವರು ಅನುಮಾನಾಸ್ಪದವಾಗಿ ಇವರ ಬಗ್ಗೆ ಜಯ ಪೂಜಾರಿ ಎಂಬವರ ಪತ್ನಿ ಫೋನ್ ಮಾಡಿ ತಿಳಿಸಿದಾಗ ನೇಮೋತ್ಸವ ಕಾರ್ಯಕ್ರಮದಲ್ಲಿದ್ದ ದೇವಿಪ್ರಸಾದ್ ಮತ್ತು ಇತರರು ಮನೆಯ ಬಳಿ ಬಂದಾಗ ಆರೋಪಿಗಳು ದೇವಿಪ್ರಸಾದ್ ಅವರ ಬೈಕ್ ಕಳವು ಮಾಡಿಕೊಂಡು ಹೋಗುವುದನ್ನು ಕಂಡು ಬೆನ್ನಟ್ಟಿ ತಡೆದು ನಿಲ್ಲಿಸಿದ್ದು, ಈ ವೇಳೆ ಬೈಕ್ ನೊಂದಿಗೆ ಓಡಲು ಯತ್ನಿಸಿದ ಆರೋಪದಲ್ಲಿ ಸುಮಾರು 25-30 ಜನರ ಗುಂಪು ಆರೋಪಿಗಳನ್ನು ಹಿಡಿದು ಥಳಿಸಿ, ಮರಕ್ಕೆ ಕಟ್ಟಿ ಹಾಕಿದ್ದರು. ಕೂಳೂರು ನಿವಾಸಿಗಳಾದ ಅಬ್ದುಲ್ ಸಮದ್ ಹಾಗು ಮೊಯ್ದಿನ್ ನಾಸಿರ್ ಮರೋಡಿಯಲ್ಲಿರುವ ನಾಸಿರ್ ನ ಸಂಬಂಧಿಕರ ಮನೆಗೆ ಬಂದಿದ್ದು, ತಡರಾತ್ರಿ 2.30ರ ಸುಮಾರಿಗೆ ಸಂಬಂಧಿಕರ ಮನೆ ಹುಡುಕುತ್ತಾ ಹೋಗಿದ್ದು, ನಂತರ ದಾರಿ ತಪ್ಪಿ ಪಳಾರಗೋಳಿ ಎಂಬಲ್ಲಿ ಮನೆಯ ಬಳಿ ನಿಲ್ಲಿಸಿದ್ದ ಬೈಕ್ ಅನ್ನು ತೆಗೆದುಕೊಂಡು ಹೋಗುವ ವೇಳೆ ಸುಮಾರು 25 ರಿಂದ 30 ಮಂದಿಯ ತಂಡ ತಡೆದು ಹಲ್ಲೆ ಮಾಡಿ ಮರಕ್ಕೆ ಕಟ್ಟಿಹಾಕಿದ್ದಾರೆ ಎಂದು ಪ್ರತಿದೂರು ನೀಡಿದ್ದಾರೆ. ಈ ಬಗ್ಗೆ ಬಾಚು, ನಿತಿನ್, ನರೇಶ್ ಅಂಚನ್, ರತ್ನಾಕರ, ಸಾತ್ವಿಕ್, ದೇವಿಪ್ರಸಾದ್, ಸುಧೀರ್, ಚಂದಪ್ಪ ಹಾಗು ಇತರರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಂಗವೈಕಲ್ಯ ಕೋಟಾದಡಿ ವೈದ್ಯಕೀಯ ಸೀಟಿಗಾಗಿ ತನ್ನ ಕಾಲನ್ನೇ ಕತ್ತರಿಸಿಕೊಂಡ ಭೂಪ; ಪೊಲೀಸರನ್ನೇ ಬೆಚ್ಚಿ ಬೀಳಿಸಿದ ಘಟನೆ
ಉತ್ತರ ಪ್ರದೇಶದ ಜೌನ್ಪುರದಲ್ಲಿ ವೈದ್ಯಕೀಯ ಸೀಟು ಗಿಟ್ಟಿಸಿಕೊಳ್ಳಲು 20 ವರ್ಷದ ಸೂರಜ್ ಭಾಸ್ಕರ್ ಎಂಬ ಯುವಕ ತನ್ನ ಎಡಗಾಲನ್ನು ಕತ್ತರಿಸಿಕೊಂಡಿದ್ದಾನೆ. ನೀಟ್ ಪರೀಕ್ಷೆಯಲ್ಲಿ ಪದೇ ಪದೇ ವಿಫಲನಾಗಿದ್ದು, ಅಂಗವೈಕಲ್ಯ ಪ್ರಮಾಣಪತ್ರಕ್ಕೆ ಮೊದಲೇ ಅರ್ಜಿ ಸಲ್ಲಿಸಿದ್ದರೂ ತಿರಸ್ಕೃತಗೊಂಡಿತ್ತು. ಈ ಕಾರಣದಿಂದ ಭೂಪ ತನ್ನ ಜೀವಕ್ಕೆ ಸಂಚಕಾರವಾಗುವ ಕರಾಳ ನಿರ್ಧಾರಕ್ಕೆ ಬಂದಿದ್ದಾನೆ. ಪೊಲೀಸರ ತನಿಖೆಯಿಂದ ಈ ಪ್ರಕರಣ ಬಯಲಾಗಿದೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಮಂಡ್ಯ: ರಾಜ್ಯ ಕಾಂಗ್ರೆಸ್ನಲ್ಲಿ ಕುರ್ಚಿ ಕದನ ಹೊತ್ತಿಕೊಂಡಿರುವ ಈ ಹೊತ್ತಲ್ಲಿ ಹೆಚ್ ಡಿ ಕುಮಾರಸ್ವಾಮಿ ಆಡಿದ ಮಾತು ಭಾರೀ ಸಂಚಲನ ಮೂಡಿಸಿದೆ. ಕರ್ನಾಟಕ ರಾಜಕಾರಣದ ಇತಿಹಾಸದಲ್ಲಿ ಎಚ್.ಡಿ. ಕುಮಾರಸ್ವಾಮಿ ಅಂದ್ರೆ ಅದೊಂದು ಸಂಚಲನ. ಸದ್ಯ ದೆಹಲಿ ರಾಜಕಾರಣದಲ್ಲಿ ಸಕ್ರಿಯರಾಗಿದ್ದೇ ರಾಜ್ಯ ರಾಜಕಾರಣದ ಬಗ್ಗೆಯೂ ಕಣ್ಣಾಡಿಸುತ್ತಾ ಇರ್ತಾರೆ. ಈ ನಡುವೆ ಮತ್ತೆ ರಾಜ್ಯ ರಾಜಕಾರಣಕ್ಕೆ ರೀ-ಎಂಟ್ರಿ ಆಗುವ ಬಗ್ಗೆ
ಕುಕನೂರು | ಕಲಿಕಾ ಹಬ್ಬ ಕಾರ್ಯಕ್ರಮದ ಸದ್ಬಳಕೆಗೆ ಸಹಕರಿಸಿ : ಮಹೇಶ್ ಸಬರದ
ಕುಕನೂರು : ಸರ್ಕಾರ ಹಮ್ಮಿಕೊಂಡಿರುವ ಕಲಿಕಾ ಹಬ್ಬ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಂಡು ಶೈಕ್ಷಣಿಕ ಅಭಿವೃದ್ಧಿಗೆ ಸಹಕರಿಸಬೇಕೆಂದು ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ನೌಕರರ ಸಂಘದ ತಾಲೂಕು ಅಧ್ಯಕ್ಷ ಮಹೇಶ್ ಸಬರದ ಹೇಳಿದರು. ಪಟ್ಟಣದ ವಿನೋಬನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ 2025–26ನೇ ಸಾಲಿನ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಶಿಕ್ಷಣ ಇಲಾಖೆ ಹಾಗೂ ಸಮನ್ವಯಾಧಿಕಾರಿಗಳ ಸಹಯೋಗದಲ್ಲಿ ನಡೆದ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಷ್ಟ್ರದ ಅಭಿವೃದ್ಧಿಗೆ ಶೈಕ್ಷಣಿಕ ಅಭಿವೃದ್ಧಿ ಪೂರಕವಾಗಿದ್ದು, ಆ ನಿಟ್ಟಿನಲ್ಲಿ ಸರ್ಕಾರ ಮಕ್ಕಳ ಶಿಕ್ಷಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳಲ್ಲಿ ಕಲಿಕಾ ಹಬ್ಬ ಅತ್ಯಂತ ಪ್ರೇರಣಾದಾಯಕ ಕಾರ್ಯಕ್ರಮವಾಗಿದ್ದು, ಶಿಕ್ಷಕರು ಹಾಗೂ ಪಾಲಕರು ಇದರ ಸದ್ಬಳಕೆಗೆ ಶ್ರಮಿಸಬೇಕಿದೆ ಎಂದರು. ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲೆಗಳ ನೌಕರ ಸಂಘದ ತಾಲೂಕು ಅಧ್ಯಕ್ಷ ಮಾರುತೇಶ್ ತಳವಾರ ಮಾತನಾಡಿ, ಕಲಿಕಾ ಹಬ್ಬದಲ್ಲಿ ಕನ್ನಡ ಮತ್ತು ಗಣಿತ ವಿಷಯಗಳಿಗೆ ಒತ್ತು ನೀಡಲಾಗಿದ್ದು, 17 ಕಲಿಕಾ ಫಲಗಳನ್ನು ಒಳಗೊಂಡಿದೆ. ಹಿಂದುಳಿದ ಮಕ್ಕಳನ್ನು ಪ್ರೇರೇಪಿಸುವುದು. ಈ ಕಾರ್ಯಕ್ರಮದ ಉದ್ದೇಶವಾಗಿದ್ದು, ಶಿಕ್ಷಕರು ಹಾಗೂ ಪಾಲಕರು ಮಕ್ಕಳೊಂದಿಗೆ ರಸಮಂಜರಿ ಮತ್ತು ಚಟುವಟಿಕೆಗಳ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಜಿಲ್ಲಾ ಚುಸಾಪ ಅಧ್ಯಕ್ಷ ರುದ್ರಪ್ಪ ಬಂಡಾರಿ, ಸಿಆರ್ಪಿ ಪಿರಸಾಬ್ ದಫೇದಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಪಂ ಅಧ್ಯಕ್ಷೆ ಲಲಿತಮ್ಮ ಯಡಿಯಾಪುರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್ಡಿಎಂಸಿ ಅಧ್ಯಕ್ಷ ಮರ್ಧಾನ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಪಾರ್ವತಿ ಅನಸಿ, ಸಹಶಿಕ್ಷಕಿಯರಾದ ಶಾಂತಾ ಹಿರೇಮಠ, ಗಿರಿಜಾ, ಮೆಹಬೂಬ್ ಗುಡಿಹಿಂದಲ, ಮುಖ್ಯಶಿಕ್ಷಕ ಶರಣಪ್ಪ ರಾವಣಕಿ ಸೇರಿದಂತೆ ಇತರರು ವೇದಿಕೆಯಲ್ಲಿದ್ದರು. ಈ ವೇಳೆ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಕೊಪ್ಪಳ | ಜ.29 ರಿಂದ ವೀರಶೈವ ಲಿಂಗಾಯತ ಜಾಗತಿಕ ಉದ್ಯಮ ಸಮ್ಮೇಳನ : ಶರಣು ಪಾಟೀಲ್
ಕೊಪ್ಪಳ : ಅಂತರರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ (iLYF) ವತಿಯಿಂದ ವೀರಶೈವ ಲಿಂಗಾಯತ ಜಾಗತಿಕ ಉದ್ಯಮ ಸಮ್ಮೇಳನ–2026ನ್ನು ಜ.29ರಿಂದ ಫೆ.1ರ, 2026ರವರೆಗೆ ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್ಸ್ನ ವೈಟ್ ಪೆಟಲ್ಸ್ನಲ್ಲಿ ಆಯೋಜಿಸಲಾಗುತ್ತಿದೆ ಎಂದು ಐಎಲ್ ವೈಎಫ್ ಹುಬ್ಬಳ್ಳಿ ಚಾಪ್ಟರ್ ಕಾರ್ಯದರ್ಶಿ ಶರಣು ಪಾಟೀಲ್ ತಿಳಿಸಿದರು. ಶುಕ್ರವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿಂದಿನ ಆವೃತ್ತಿಗಳ ಭಾರೀ ಯಶಸ್ಸಿನ ಹಿನ್ನೆಲೆಯಲ್ಲಿ ಈ ಬಾರಿ 75 ಸಾವಿರಕ್ಕೂ ಅಧಿಕ ಜನರು ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಇದು ಪ್ರದೇಶದ ಅತಿದೊಡ್ಡ ಸಮುದಾಯಾಧಾರಿತ ಉದ್ಯಮ ಸಮ್ಮೇಳನಗಳಲ್ಲಿ ಒಂದಾಗಲಿದೆ ಎಂದರು. ಜನವರಿ 29ರಂದು ಸಂಜೆ 4:30ಕ್ಕೆ ನಡೆಯಲಿರುವ ಉದ್ಘಾಟನಾ ಸಮಾರಂಭವನ್ನು ಸಿದ್ದಗಂಗಾ ಮಠದ ಪರಮಪೂಜ್ಯ ಶ್ರೀ ಶ್ರೀ ಸಿದ್ದಲಿಂಗಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಸಚಿವರಾದ ಎಂ.ಬಿ. ಪಾಟೀಲ್, ಈಶ್ವರ ಖಂಡ್ರೆ, ಶರಣಬಸಪ್ಪ ದರ್ಶನಾಪುರ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಭಾಗವಹಿಸಲಿದ್ದಾರೆ. ಇದಲ್ಲದೆ, ವಿಆರ್ಎಲ್ ಗುಂಪಿನ ಸಿಎಂಡಿ ವಿಜಯ ಸಂಕೇಶ್ವರ, ಆದರ್ಶ ಡೆವಲಪರ್ಸ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಬಿ.ಎಂ. ಜಯಶಂಕರ, ಸ್ಪರ್ಶ್ ಆಸ್ಪತ್ರೆಗಳ ಗುಂಪಿನ ಅಧ್ಯಕ್ಷ ಡಾ. ಶರಣ್ ಪಾಟೀಲ್, FII–TMA ಅಧ್ಯಕ್ಷ ಭಾಲಚಂದ್ರ ಸಿಂಗ್ ರಾವ್ ರಾಣೆ, CII ಪ್ರತಿನಿಧಿ ರಬೀಂದ್ರನಾಥ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ. ಫೆ.1, 2026ರಂದು ಸಂಜೆ 4:30ಕ್ಕೆ ನಡೆಯುವ ಸಮಾರೋಪ ಸಮಾರಂಭವು ಚಿಕ್ಕಮಗಳೂರಿನ ಬಸವತತ್ವ ಪೀಠದ ಪರಮಪೂಜ್ಯ ಡಾ. ಶ್ರೀ ಬಸವ ಮಾರುಳಸಿದ್ದ ಸ್ವಾಮೀಜಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್, ಕೆವಿಎಲ್ಡಿಸಿಎಲ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್, ವೀರಶೈವ ಲಿಂಗಾಯತ ಮಹಾಸಭೆಯ ರಾಜ್ಯಾಧ್ಯಕ್ಷ ನಿವೃತ್ತ ಅಧಿಕಾರಿ ಶಂಕರ ಬಿದರಿ, ಮುರಗೇಶ್ ನಿರಾಣಿ, ಬಸವೇಶ್ವರ ಹೌಸಿಂಗ್ LLP ನ ನವೀನ್, ರಾಣಿ ಸತೀಶ್, iLYF ಸಂಸ್ಥಾಪಕ ಟ್ರಸ್ಟಿ ಹಾಗೂ ವಿಧಾನಪರಿಷತ್ ಸದಸ್ಯ ನವೀನ್ ಕೆ.ಎಸ್. ಉಪಸ್ಥಿತರಿರುತ್ತಾರೆ ಎಂದು ತಿಳಿಸಿದರು. ಈ ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಶರಣು ಪಾಟೀಲ್ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಐಎಲ್ ವೈಎಫ್ ಹುಬ್ಬಳ್ಳಿ ಚಾಪ್ಟರ್ ಸದಸ್ಯರಾದ ಚಿದಾನಂದ ಮುದ್ದುಕವಿ, ಅಭಿಷೇಕ್ ಅಗಡಿ, ಗುರುರಾಜ ಹಲಗೇರಿ ಉಪಸ್ಥಿತರಿದ್ದರು.
ರಾಯಚೂರು | ಯದ್ಲಾಪುರ ಗ್ರಾಮದಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಕಾರ್ಯಕ್ರಮ
ರಾಯಚೂರು: ಶಿಶು ಅಭಿವೃದ್ಧಿ ಯೋಜನೆ ಗಿಲ್ಲೇಸೂಗೂರು ವ್ಯಾಪ್ತಿಯಲ್ಲಿ ಬರುವ ಯದ್ಲಾಪುರ್ ಮೂರನೇ ಕೇಂದ್ರದಲ್ಲಿ ಇಂದು ಬೇಟಿ ಬಚಾವೋ ಬೇಟಿ ಪಡಾವೋ ಜಾಗೃತಿ ಕಾರ್ಯಕ್ರಮ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನವೀನ್ ಕುಮಾರ್ ಮತ್ತು ಶಿಶು ಅಭಿವೃದ್ಧಿ ಅಧಿಕಾರಿ ಮನ್ಸೂರ್ ಅಹ್ಮದ್ ಅಂಗನವಾಡಿ ಮಕ್ಕಳಿಗೆ ಉಚಿತವಾಗಿ ಸಮವಸ್ತ್ರ ನೀಡಿದರು. ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರಾದ ಅಮರಮ್ಮ ಬಿ.ಪಾಟೀಲ್, ಮಕ್ಕಳು, ಕಿಶೋರಿಯರು, ಗರ್ಭಿಣಿ, ಬಾಣಂತಿಯರು, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.
ಕೇವಲ ತರಚು ಗಾಯದ ಚಿಕಿತ್ಸೆಗೆ ಐದು ಲಕ್ಷ ರೂ. ವ್ಯಯ - ಅಮೆರಿಕದ ಕರಾಳತೆ ಬಿಚ್ಚಿಟ್ಟ ಎನ್.ಆರ್.ಐ
ಅಮೆರಿಕದಲ್ಲಿ ವಾಸಿಸುವ ಪಾರ್ಥ ವಿಜಯವರ್ಗಿಯಾ ಎಂಬ ಭಾರತೀಯ ವ್ಯಕ್ತಿಗೆ ನ್ಯೂಯಾರ್ಕ್ನಲ್ಲಿ ಮೊಣಕಾಲಿಗೆ ಆದ ಸಣ್ಣ ಗಾಯಕ್ಕೆ ಸುಮಾರು 6300 ಡಾಲರ್ ವೈದ್ಯಕೀಯ ಬಿಲ್ ಬಂದಿದೆ. ತುರ್ತು ಚಿಕಿತ್ಸಾ ಕೊಠಡಿಗೆ ಭೇಟಿ, ಎಕ್ಸ್ರೇ ಮತ್ತು ಬ್ಯಾಂಡೇಜ್ಗೆ ಈ ಮೊತ್ತ ವಿಧಿಸಲಾಗಿದೆ. ಅಮೆರಿಕದ ಆರೋಗ್ಯ ಸೇವೆಗಳ ಅತಿರೇಕದ ವೆಚ್ಚವನ್ನು ಈ ಘಟನೆ ಎತ್ತಿ ತೋರಿಸಿದೆ. ಭಾರತದ ಕೈಗೆಟುಕುವ ವೈದ್ಯಕೀಯ ವ್ಯವಸ್ಥೆಯನ್ನು ಹಲವರು ಪ್ರಶಂಸಿಸಿದ್ದಾರೆ.
IMD Weather Forecast: ಶೀತಗಾಳಿ ನಡುವೆ ಭಾರತದ ಹಲವೆಡೆ ಎರಡು ದಿನ ಮಳೆ, ಹಿಮಪಾತದ ಮುನ್ಸೂಚನೆ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಬೆಳಗ್ಗೆ ಹಾಗೂ ಸಂಜೆ ವೇಳೆ ದಟ್ಟ ಮಂಜು, ಶೀತಗಾಳಿ ವಾತಾವತಣ ನಿರ್ಮಾಣವಾಗುತ್ತಿದೆ. ಈ ನಡುವೆಯೇ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ ಎರಡು ದಿನ ಈ ಭಾಗಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ಶೀತಗಾಳಿ ನಡುವೆ ಮಳೆ:
ಕೇರಳ ಸಾಹಿತ್ಯೋತ್ಸವ | ಈ ಆಡಳಿತವು ಭಿನ್ನಾಭಿಪ್ರಾಯದ ಶಬ್ದಕ್ಕೆ ಹೆದರುತ್ತದೆ: ಪ್ರಕಾಶ್ ರಾಜ್
ಕೋಝಿಕ್ಕೋಡ್: ಕೇರಳ ಸಾಹಿತ್ಯೋತ್ಸವದಲ್ಲಿ ರಾಜಕೀಯ ಭಿನ್ನಾಭಿಪ್ರಾಯದ ಕುರಿತು ಗುರುವಾರ ನಡೆದ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಖ್ಯಾತ ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಪ್ರಶ್ನೆಗಳನ್ನು ಕೇಳುವವರ ಧ್ವನಿಗಳನ್ನು ವ್ಯವಸ್ಥಿತವಾಗಿ ಮೌನಗೊಳಿಸುವ ಆಡಳಿತ ಎಂದು ಅವರು ಬಣ್ಣಿಸಿದರು. ‘ಭಿನ್ನಾಭಿಪ್ರಾಯದ ಅಪರಾಧೀಕರಣ! ಧ್ವನಿಯೆತ್ತಿದ್ದಕ್ಕಾಗಿ ಯಾರು ಬಂಧನಕ್ಕೊಳಗಾಗುತ್ತಾರೆ?’ ಎಂಬ ಶೀರ್ಷಿಕೆಯ ಉದ್ಘಾಟನಾ ಅಧಿವೇಶನದಲ್ಲಿ ತನಿಖಾ ಪತ್ರಕರ್ತ ಜೋಸಿ ಜೋಸೆಫ್ ಅವರೊಂದಿಗೆ ಸಂವಾದದಲ್ಲಿ ಪ್ರಕಾಶ್ ರಾಜ್, ಸಾಮಾಜಿಕ ಕಾರ್ಯಕರ್ತರಾದ ಸೋನಂ ವಾಂಗ್ಚುಕ್ ಮತ್ತು ಉಮರ್ ಖಾಲಿದ್, ಮುಖ್ಯವಾಹಿನಿ ಮಾಧ್ಯಮಗಳ ಶರಣಾಗತಿ ಹಾಗೂ ನ್ಯಾಯಾಂಗದ ಸ್ವಾತಂತ್ರ್ಯ ಕುಸಿಯುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು. ತನ್ನ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿರುವ ಕುರಿತು ಜೋಸೆಫ್ ಅವರ ಆರಂಭಿಕ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪ್ರಕಾಶ್ ರಾಜ್, ‘ನನ್ನನ್ನು ದೇಶವಿರೋಧಿ, ಪೆರಿಯಾರ್ವಾದಿ ಮತ್ತು ಹಿಂದೂ ವಿರೋಧಿ ಎಂದು ಕರೆಯಲಾಗಿದೆ. ನನ್ನನ್ನು ಮಾನಸಿಕವಾಗಿ ಕುಗ್ಗಿಸಲು ಮತ್ತು ನನ್ನ ಸಮಯವನ್ನು ವ್ಯರ್ಥ ಮಾಡುವ ಉದ್ದೇಶದಿಂದ ಈ ಪ್ರಕರಣಗಳನ್ನು ದಾಖಲಿಸಲಾಗಿದೆ. ಆದರೆ ನಾವು ವಿಭಿನ್ನ ಸತ್ವದಿಂದ ತಯಾರಾದವರು ಎನ್ನುವುದು ಅವರಿಗೆ ತಿಳಿದಿಲ್ಲ’ ಎಂದು ಉತ್ತರಿಸಿದರು. ಲಡಾಖ್ ನ ಶಿಕ್ಷಣ ತಜ್ಞ ಹಾಗೂ ಪರಿಸರವಾದಿ ಸೋನಂ ವಾಂಗ್ಚುಕ್ ಮತ್ತು ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕುರಿತೂ ಮಾತನಾಡಿದ ಅವರು, ಹಿಮಾಲಯದ ಸೂಕ್ಷ್ಮ ಪರಿಸರದಲ್ಲಿ ಕಾರ್ಪೊರೇಟ್ ಹಿತಾಸಕ್ತಿಗಳ ವಿರುದ್ಧ ವಾಂಗ್ಚುಕ್ ಅವರ ಪ್ರತಿಭಟನೆಯನ್ನು ಬೆಂಬಲಿಸಲು ಲಡಾಖ್ ಗೆ ತಾನು ಕೈಗೊಂಡ ಪಯಣವನ್ನು ಮೆಲುಕು ಹಾಕಿದರು. ವಾಂಗ್ಚುಕ್ ಅವರನ್ನು ಅವರ ತವರು ಲಡಾಖ್ ನಿಂದ ಬಹುದೂರದ ರಾಜಸ್ಥಾನದಲ್ಲಿ ಮೂರು ಪದರಗಳ ಗೋಡೆಯ ಹಿಂದೆ ಬಂಧನದಲ್ಲಿ ಇರಿಸಲಾಗಿದೆ. ಅವರ ಪತ್ನಿಗೂ ಅವರನ್ನು ಭೇಟಿಯಾಗಲು ಸಾಧ್ಯವಾಗಿಲ್ಲ ಎಂದು ಹೇಳಿದರು. ಖಾಲಿದ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ (ಯುಎಪಿಎ) ಬಳಕೆಯನ್ನು ಪ್ರಶ್ನಿಸಿದ ಪ್ರಕಾಶ್ ರಾಜ್, ‘ಸಿಎಎ ಪ್ರತಿಭಟನೆ ಸಂದರ್ಭದಲ್ಲಿ ರಸ್ತೆ ತಡೆ ಯಾವಾಗಿನಿಂದ ಭಯೋತ್ಪಾದಕ ಕೃತ್ಯವಾಯಿತು?’ ಎಂದು ಪ್ರಶ್ನಿಸಿದರು. ಅಧಿಕಾರದಲ್ಲಿ ಕುಳಿತಿರುವ ಈ ‘ಮಹಾಪ್ರಭು’ (ಪ್ರಧಾನಿ ನರೇಂದ್ರ ಮೋದಿಯವರನ್ನು ಉಲ್ಲೇಖಿಸಿ) ಭಿನ್ನಾಭಿಪ್ರಾಯದ ಧ್ವನಿಯನ್ನು ಇಷ್ಟಪಡುವುದಿಲ್ಲ ಎಂದು ಅವರು ಹೇಳಿದರು. ಸಾಂವಿಧಾನಿಕ ಸಂಸ್ಥೆಗಳ ಸ್ಥಿತಿಯ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ ಪ್ರಕಾಶ್ ರಾಜ್, ಹಿಂದಿನ ಸರ್ಕಾರಗಳು ಪೊಲೀಸರನ್ನು ದುರುಪಯೋಗ ಮಾಡಿಕೊಂಡಿದ್ದವು ಎಂದು ಒಪ್ಪಿಕೊಂಡರೂ, ಒಂದು ಕಾಲದಲ್ಲಿ ‘ಅಂತಿಮ ಭರವಸೆ’ಯಾಗಿದ್ದ ನ್ಯಾಯಾಂಗವನ್ನು ಈಗ ಅನೇಕರು ‘ತಮಾಷೆ’ಯಾಗಿ ನೋಡುತ್ತಿದ್ದಾರೆ ಎಂದು ವಿಷಾದಿಸಿದರು. ವಿಚಾರಣೆಯು ಅಪರಾಧಿಗಳ ಬಗ್ಗೆ ಮಾತ್ರವಲ್ಲ, ನ್ಯಾಯಾಧೀಶರ ಆತ್ಮಸಾಕ್ಷಿಯ ಬಗ್ಗೆಯೂ ನಡೆಯಬೇಕು ಎಂದು ಅವರು ಹೇಳಿದರು. ಚುನಾವಣಾ ಪ್ರಜಾಪ್ರಭುತ್ವದ ಪಂದ್ಯದಲ್ಲಿ ‘ಕಾಲ್ಚೆಂಡು’ಗಳಾಗುವುದನ್ನು ನಿಲ್ಲಿಸುವಂತೆ ಸಾರ್ವಜನಿಕರನ್ನು ಆಗ್ರಹಿಸಿದ ಅವರು, ರಾಜಕೀಯವಾಗಿ ಸಕ್ರಿಯರಾಗುವಂತೆ ಕರೆ ನೀಡಿದರು. ‘ಶಿಕ್ಷಣವೆಂದರೆ ಪದವಿ ಅಲ್ಲ; ಅದು ಅರಿವು ಮತ್ತು ವಿಮೋಚನೆ. ಸಣ್ಣ ಗುಂಪುಗಳಲ್ಲಿ ಮಾತನಾಡಲು ನಾವು ತುಂಬ ಸಂತೋಷ ಪಟ್ಟುಕೊಳ್ಳುತ್ತೇವೆ. ಆದರೆ ಈ ಅರಿವನ್ನು ನಮ್ಮ ನೆರೆಹೊರೆಗಳಿಗೂ ತಲುಪಿಸಬೇಕು. ದೋಣಿಯಲ್ಲಿ ಒಂದು ರಂಧ್ರವಿದ್ದರೆ, ನಾವೆಲ್ಲ ಸೇರಿ ಅದನ್ನು ಸರಿಪಡಿಸಬೇಕು. ಇಲ್ಲದಿದ್ದರೆ ಸಿದ್ಧಾಂತ ಏನೇ ಆಗಿದ್ದರೂ ನಾವೆಲ್ಲ ಮುಳುಗುತ್ತೇವೆ,’ ಎಂದು ಪ್ರಕಾಶ್ ರಾಜ್ ಹೇಳಿದರು.
ಖರ್ಚು ಮಾಡಿದ ನಂತರ ವೆಚ್ಚ ನೋಡುವ Gen Z
ಇದು ಬಿಲ್ ಕಟ್ಟಿದ ನಂತರ ಕಾಡುವ ಭಾವನೆ!
ಭಾರತಕ್ಕೆ ಮಾತ್ರ ವಿಶೇಷ ಸೌಲಭ್ಯ ಯಾಕೆ ಬಾಂಗ್ಲಾ ಪ್ರಶ್ನೆ: ಟಿ20 ವಿಶ್ವಕಪ್ನಿಂದ ಬಾಂಗ್ಲಾದೇಶ ಬಹುತೇಕ ಔಟ್
ಟಿ20 ವಿಶ್ವಕಪ್ನಿಂದ ಬಾಂಗ್ಲಾದೇಶ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಬಂಧ ಹಳಸಿದೆ. ಭಾರತ ಮತ್ತು ಪಾಕಿಸ್ತಾನದ ಯುದ್ಧ ಸಂದರ್ಭದಲ್ಲೂ ಬಾಂಗ್ಲಾದೇಶ ಮೂಗು ತೂರಿಸಿತ್ತು. ಇದೀಗ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ನೀಡಿದ್ದ 24 ಗಂಟೆಗಳ ಗಡುವು ಮುಗಿದಿದ್ದು, ಟಿ20 ವಿಶ್ವಕಪ್ನಿಂದ ಬಾಂಗ್ಲಾದೇಶವು ಹೊರಗೆ ಉಳಿಯುವುದು ಬಹುತೇಕ ಫಿಕ್ಸ್ ಎನ್ನುವಂತೆ
ಗೋವಾ ನೈಟ್ಕ್ಲಬ್ ಅಗ್ನಿ ದುರಂತ| ಲೂಥ್ರಾ ಸೋದರರ ನಿವಾಸದ ಮೇಲೆ ಈ.ಡಿ.ದಾಳಿ
ಹೊಸದಿಲ್ಲಿ,ಜ.23: ಜಾರಿ ನಿರ್ದೇಶನಾಲಯವು (ಈ.ಡಿ.) ಶುಕ್ರವಾರ ಬೆಳಿಗ್ಗೆಯಿಂದ ಗೋವಾದ ಆರ್ಪೋರಾದಲ್ಲಿಯ ಬಿರ್ಚ್ ಬೈ ರೋಮಿಯೊ ಲೇನ್ನ ಮಾಲಿಕರಾದ ಲೂಥ್ರಾ ಸೋದರರು ಮತ್ತು ಅಜಯ ಗುಪ್ತಾ ಅವರ ನಿವಾಸಗಳು ಮತ್ತು ಕಚೇರಿಗಳಲ್ಲಿ ಶೋಧ ಕಾರ್ಯಾಚರಣೆಗಳನ್ನು ನಡೆಸುತ್ತಿದೆ. 2025ರ ಡಿ.6ರಂದು ಪಾರ್ಟಿಯೊಂದರಲ್ಲಿ ಸಂಭವಿಸಿದ್ದ ಬೆಂಕಿ ಅವಘಢದಲ್ಲಿ 25 ಜನರು ಮೃತಪಟ್ಟು, 50 ಜನರು ಗಾಯಗೊಂಡಿದ್ದ ಹಿನ್ನೆಲೆಯಲ್ಲಿ ಕ್ಲಬ್ನ ಅಕ್ರಮ ಕಾರ್ಯಾಚರಣೆ ಮತ್ತು ಪ್ರವರ್ತಕರ ವಿರುದ್ಧ ದಾಖಲಿಸಿಕೊಳ್ಳಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ.ಡಿ.ತನಿಖೆ ನಡೆಸುತ್ತಿದೆ. ಗೋವಾ ಮತ್ತು ದಿಲ್ಲಿಯಾದ್ಯಂತ ಒಂಭತ್ತು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆಗಳು ನಡೆಯುತ್ತಿವೆ. ಇವುಗಳಲ್ಲಿ ದಿಲ್ಲಿಯ ಕಿಂಗ್ಸ್ವೇ ಕ್ಯಾಂಪ್,ಗುರುಗ್ರಾಮದ ತತ್ವಂ ವಿಲ್ಲಾಸ್,ಗೋವಾದಲ್ಲಿಯ ಹಿಂದಿನ ಆರ್ಪೋರಾ ಸರಪಂಚ ರೋಶನ ರೇಡ್ಕರ್ ಮತ್ತು ಪಂಚಾಯತ್ ಕಾರ್ಯದರ್ಶಿ ರಘುವೀರ ಬಾಗಕರ್ ಅವರ ನಿವಾಸಗಳು ಸೇರಿವೆ. ರೇಡ್ಕರ್ ಮತ್ತು ಬಾಗಕರ್ ನೈಟ್ಕ್ಲಬ್ಗೆ ಅಕ್ರಮವಾಗಿ ವ್ಯವಹಾರ ಪರವಾನಿಗೆಗಳು ಮತ್ತು ನಿರಾಕ್ಷೇಪಣಾ ಪ್ರಮಾಣಪತ್ರಗಳನ್ನು ನೀಡಿದ್ದರು ಎಂದು ಆರೋಪಿಸಿಲಾಗಿದೆ. ಬಿರ್ಚ್ ಬೈ ರೋಮಿಯೊ ಲೇನ್ ಇರುವ ಖಝಾನ್ ಭೂಮಿಯ ಅಕ್ರಮ ಪರಿವರ್ತನೆಯಿಂದಾಗಿ ಉದ್ಭವಿಸಿರುವ ಅಕ್ರಮ ಹಣ ವರ್ಗಾವಣೆ ಕುರಿತು ಪರಿಶೀಲಿಸಲು ಈ.ಡಿ.ತಂಡಗಳು ಕ್ಲಬ್ನ ಮಾಲಿಕರಲ್ಲಿ ಒಬ್ಬರೆನ್ನಲಾದ ಬ್ರಿಟಿಷ್ ಪ್ರಜೆ ಸುರಿಂದರ್ ಕುಮಾರ್ ಖೋಸ್ಲಾ ಅವರ ನಿವಾಸದಲ್ಲಿಯೂ ಶೋಧ ಕಾರ್ಯಾಚರಣೆ ನಡೆಸುತ್ತಿವೆ.
Stock Market: 6,00,000 ಕೋಟಿ ರೂಪಾಯಿ ಕಳೆದುಕೊಂಡ ಹೂಡಿಕೆದಾರರು, ಷೇರು ಪೇಟೆಯಲ್ಲಿ ಭಾರಿ ತಲ್ಲಣ...
ಭಾರತೀಯ ಷೇರು ಮಾರುಕಟ್ಟೆ ಇಂದು ಭಾರಿ ದೊಡ್ಡ ಹಿನ್ನಡೆ ಅನುಭವಿಸಿದ್ದು, ಪ್ರಮುಖ ಸೂಚ್ಯಂಕ ಸೆನ್ಸೆಕ್ಸ್ ಹಾಗೂ ನಿಫ್ಟಿ ಭಾರಿ ದೊಡ್ಡ ಕುಸಿತ ಕಂಡಿವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ದೊಡ್ಡ ಬದಲಾವಣೆಗಳು ಸಂಭವಿಸುತ್ತಿದ್ದು, ಯುದ್ಧ ಹಾಗೂ ಮಧ್ಯಪ್ರಾಚ್ಯ ದೇಶಗಳ ಸೂಕ್ಷ್ಮ ಪರಿಸ್ಥಿತಿ ಮಧ್ಯೆ ಈಗ ಷೇರುಪೇಟೆ ನಷ್ಟದ ಹಾದಿ ಹಿಡಿದಿದೆ. ಒಂದಲ್ಲ ಎರಡಲ್ಲ ಬರೋಬ್ಬರಿ 600000 ಕೋಟಿ ರೂಪಾಯಿ
ಗಣರಾಜ್ಯೋತ್ಸವ ಪರೇಡ್ನಲ್ಲಿಲ್ಲ ಕರ್ನಾಟಕದ ಸ್ತಬ್ಧಚಿತ್ರ; ಕೆಂಪುಕೋಟೆಯ 'ಭಾರತ್ ಪರ್ವ್'ಗೆ ಸೀಮಿತ
ಬೆಂಗಳೂರು: ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ ಬಾರಿ ನವದೆಹಲಿಯ ಕರ್ತವ್ಯ ಪಥದಲ್ಲಿ ನಡೆಯಲಿರುವ ಅಧಿಕೃತ ಪಥಸಂಚಲನದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ ಲಭ್ಯವಾಗಿಲ್ಲ. ರಾಜ್ಯ ಸರ್ಕಾರವು ಅತೀ ಉತ್ಸಾಹದಿಂದ ಸಿದ್ಧಪಡಿಸಿದ್ದ 'ಮಿಲೆಟ್ಸ್ ಟು ಮೈಕ್ರೋಚಿಪ್' (ಸಿರಿಧಾನ್ಯದಿಂದ ಮೈಕ್ರೋಚಿಪ್ವರೆಗೆ) ಎಂಬ ಪರಿಕಲ್ಪನೆಯ ಸ್ತಬ್ಧಚಿತ್ರವು ಪರೇಡ್ನ ಭಾಗವಾಗಿರುವುದಿಲ್ಲ. ಬದಲಿಗೆ, ಪ್ರವಾಸೋದ್ಯಮ ಸಚಿವಾಲಯವು ಕೆಂಪು ಕೋಟೆಯಲ್ಲಿ ಆಯೋಜಿಸುವ
ಅಮೆರಿಕಾ ಅಧ್ಯಕ್ಷ ಟ್ರಂಪ್, ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಅವರ ಟೀಕೆಗೆ ಪ್ರತಿಕ್ರಿಯೆಯಾಗಿ ಕೆನಡಾವನ್ನು 'ಬೋರ್ಡ್ ಆಫ್ ಪೀಸ್' ಶಾಂತಿ ಮಂಡಳಿಯಿಂದ ಕೈಬಿಟ್ಟಿದ್ದಾರೆ. ದಾವೋಸ್ನಲ್ಲಿ ಕಾರ್ನಿ ಅವರು ಅಂತರಾಷ್ಟ್ರೀಯ ವ್ಯವಸ್ಥೆಯಲ್ಲಿನ 'ಒಡಕು' ಮತ್ತು ಸುಂಕಗಳ ಬಳಕೆಯ ಬಗ್ಗೆ ಅಮೆರಿಕಾವನ್ನು ಪರೋಕ್ಷವಾಗಿ ಟೀಕಿಸಿದ್ದರು. ಇದಕ್ಕೆ ಕೆರಳಿದ ಟ್ರಂಪ್, ಕೆನಡಾ ಅಮೆರಿಕಾದಿಂದಲೇ ಬದುಕಿದೆ ಎಂದು ಹೇಳಿದ್ದರು,ಇದಕ್ಕೆ ಪ್ರತಿಕ್ರಿಯೆಯಾಗಿ ಕಾರ್ನಿ ಕೆನಡಾ ಬದುಕಿರುವುದು ನಿಮ್ಮಿಂದಲ್ಲ, ಕೆನಡಿಗನ್ನರಿಂದ ಎಂದು ಹೇಳಿದ ಬೆನ್ನಲ್ಲೇ, ಟ್ರಂಪ್ ಈ ನಿರ್ಧಾರ ಕೈಗೊಂಡಿದ್ದು, ಉಭಯ ದೇಶಗಳ ಸಂಬಂಧದಲ್ಲಿ ಬಿರುಕು ಮೂಡಿದೆ.
ಅಸಂಘಟಿತ ವಲಯದ ಕಾರ್ಮಿಕರಿಗೆ ಪಿಂಚಣಿ; ಅಟಲ್ ಯೋಜನೆಯನ್ನು ವಿಸ್ತರಿಸಿದ ಕೇಂದ್ರ
ಯೋಜನೆಗೆ ಸೇರಲು ಇಚ್ಚಿಸುವ ಅಭ್ಯರ್ಥಿಗಳ ವಯಸ್ಸು 18 ರಿಂದ 40 ವರ್ಷಗಳ ನಡುವೆ ಇರಬೇಕು.ಅರ್ಜಿದಾರರು ಯಾವುದೇ ಮಾನ್ಯತೆ ಪಡೆದ ಬ್ಯಾಂಕ್ ಅಥವಾ ಅಂಚೆ ಕಚೇರಿಯಲ್ಲಿ ಕಡ್ಡಾಯವಾಗಿ ಉಳಿತಾಯ ಖಾತೆಯನ್ನು ಹೊಂದಿರಬೇಕು. ಅಸಂಘಟಿತ ವಲಯದ ಕಾರ್ಮಿಕರಿಗೆ ವೃದ್ಧಾಪ್ಯದಲ್ಲಿ ಆರ್ಥಿಕ ಭದ್ರತೆ ನೀಡುವ ಮಹತ್ವದ ಯೋಜನೆಯನ್ನು ಕೇಂದ್ರ ಸರ್ಕಾರ 2030-31ರವರೆಗೆ ವಿಸ್ತರಿಸಿದೆ. ಈ ಯೋಜನೆ 18ರಿಂದ 40 ವರ್ಷ ವಯಸ್ಸಿನವರಿಗೆ ಲಭ್ಯವಿದೆ. ಈ ಯೋಜನೆಯಲ್ಲಿ 60 ವರ್ಷದ ನಂತರ ತಿಂಗಳಿಗೆ 1000 ರೂ ದಿಂದ 5000 ರೂ.ವರೆಗೆ ಪಿಂಚಣಿ ಖಚಿತ. ಈ ಯೋಜನೆಯಡಿ 8.99 ಕೋಟಿಗೂ ಹೆಚ್ಚು ಜನ ನೋಂದಾಯಿಸಿಕೊಂಡಿದ್ದಾರೆ. ಈ ಯೋಜನೆಯಡಿ ಕುಟುಂಬಕ್ಕೂ ಆರ್ಥಿಕ ಭದ್ರತೆ ಸಿಗುತ್ತದೆ. ಯಾರು ಅರ್ಜಿ ಸಲ್ಲಿಸಬಹುದು? ಯೋಜನೆಗೆ ಸೇರಲು ಇಚ್ಚಿಸುವ ಅಭ್ಯರ್ಥಿಗಳ ವಯಸ್ಸು 18 ರಿಂದ 40 ವರ್ಷಗಳ ನಡುವೆ ಇರಬೇಕು.ಅರ್ಜಿದಾರರು ಯಾವುದೇ ಮಾನ್ಯತೆ ಪಡೆದ ಬ್ಯಾಂಕ್ ಅಥವಾ ಅಂಚೆ ಕಚೇರಿಯಲ್ಲಿ ಕಡ್ಡಾಯವಾಗಿ ಉಳಿತಾಯ ಖಾತೆಯನ್ನು ಹೊಂದಿರಬೇಕು. 2022 ಅಕ್ಟೋಬರ್ 1ರಿಂದ ಜಾರಿಗೆ ಬಂದ ಹೊಸ ನಿಯಮದ ಪ್ರಕಾರ, ಆದಾಯ ತೆರಿಗೆ ಪಾವತಿಸುವ ಭಾರತೀಯ ನಾಗರಿಕರು ಈ ಯೋಜನೆಗೆ ಹೊಸದಾಗಿ ಸೇರಲು ಅರ್ಹರಾಗಿರುವುದಿಲ್ಲ. ಒಂದು ವೇಳೆ ಆದಾಯ ತೆರಿಗೆ ಪಾವತಿದಾರರು ಈ ಯೋಜನೆಗೆ 2022 ಅಕ್ಟೋಬರ್ 1 ರ ನಂತರ ಸೇರಿದ್ದು ಕಂಡುಬಂದಲ್ಲಿ, ಅವರ ಖಾತೆಯನ್ನು ಮುಚ್ಚಿ ಅಲ್ಲಿಯವರೆಗೆ ಸಂಗ್ರಹವಾದ ಮೊತ್ತವನ್ನು ಮರುಪಾವತಿಸಲಾಗುತ್ತದೆ. ಕುಟುಂಬಕ್ಕೆ ಆರ್ಥಿಕ ಭದ್ರತೆ ಈ ಯೋಜನೆಯ ಅಡಿಯಲ್ಲಿ ಚಂದಾದಾರರು ಮರಣ ಹೊಂದಿದ ಪಕ್ಷದಲ್ಲಿ, ಅವರ ಪತಿ ಅಥವಾ ಪತ್ನಿ (ಸಂಗಾತಿ) ಜೀವಿತಾವಧಿಯವರೆಗೆ ಅದೇ ಮೊತ್ತದ ಪಿಂಚಣಿಯನ್ನು ಪಡೆಯಲು ಅರ್ಹರಿರುತ್ತಾರೆ. ಒಂದು ವೇಳೆ ಚಂದಾದಾರ ಮತ್ತು ಅವರ ಸಂಗಾತಿ ಇಬ್ಬರೂ ಮರಣ ಹೊಂದಿದರೆ, ಯೋಜನೆಯಲ್ಲಿ ಸಂಗ್ರಹವಾದ ಸಂಪೂರ್ಣ ಮೊತ್ತವನ್ನು ಅವರ ವಾರಸುದಾರರಿಗೆ ಅಥವಾ ನಾಮನಿರ್ದೇಶಿತರಿಗೆ ಹಿಂತಿರುಗಿಸಲಾಗುತ್ತದೆ. ಈ ವ್ಯವಸ್ಥೆಯು ಚಂದಾದಾರರ ನಿವೃತ್ತಿಯ ನಂತರ ಕೇವಲ ಅವರಿಗೆ ಮಾತ್ರವಲ್ಲದೆ, ಅವರ ಅನುಪಸ್ಥಿತಿಯಲ್ಲಿ ಕುಟುಂಬಕ್ಕೂ ಸುಸ್ಥಿರವಾದ ಆರ್ಥಿಕ ರಕ್ಷಣೆಯನ್ನು ಖಾತರಿಪಡಿಸುತ್ತದೆ. ಹೂಡಿಕೆ ಮತ್ತು ಪಿಂಚಣಿಯ ಮೊತ್ತ ಎಷ್ಟು? ಒಬ್ಬ ವ್ಯಕ್ತಿಯು ತನ್ನ 18ನೇ ವಯಸ್ಸಿನಲ್ಲಿ ಈ ಯೋಜನೆಗೆ ಸೇರಿ ಪ್ರತಿ ತಿಂಗಳು 210 ರೂ. ಪಾವತಿಸುತ್ತಾ ಬಂದರೆ, ಅವರು 60 ವರ್ಷ ತುಂಬಿದ ನಂತರ ಪ್ರತಿ ತಿಂಗಳು 5,000 ರೂ. ಪಿಂಚಣಿ ಪಡೆಯಬಹುದು. ಈ ಹೂಡಿಕೆಯ ಮೂಲಕ ಸುಮಾರು 8.5 ಲಕ್ಷ ರೂ.ದಷ್ಟು ದೊಡ್ಡ ಮೊತ್ತದ ನಿಧಿಯನ್ನು ವೃದ್ಧಾಪ್ಯದ ಭದ್ರತೆಗಾಗಿ ಸೃಷ್ಟಿಸಲು ಸಾಧ್ಯವಿದೆ. ಒಂದು ವೇಳೆ ಚಂದಾದಾರರು ಪ್ರತಿ ತಿಂಗಳು 1,000 ರೂ. ಪಿಂಚಣಿ ಯೋಜನೆಯನ್ನು ಆರಿಸಿಕೊಂಡರೆ, ಅವರ ಮರಣದ ನಂತರ ಸಂಗಾತಿಗೆ 1,000 ರೂ. ಪಿಂಚಣಿ ಸಿಗುತ್ತದೆ ಮತ್ತು ಇಬ್ಬರ ಮರಣದ ನಂತರ ನಾಮನಿರ್ದೇಶಿತರಿಗೆ ಸುಮಾರು 1.7 ರೂ. ಲಕ್ಷ ಮೊತ್ತ ಹಿಂತಿರುಗಿಸಲಾಗುತ್ತದೆ. ಅದೇ ರೀತಿ, 5,000 ರೂ. ಪಿಂಚಣಿ ಯೋಜನೆಯಲ್ಲಿ ಚಂದಾದಾರರ ಮರಣದ ನಂತರ ಸಂಗಾತಿಗೆ 5,000 ರೂ. ಪಿಂಚಣಿ ಲಭ್ಯವಿದ್ದು, ಅಂತಿಮವಾಗಿ ನಾಮನಿರ್ದೇಶಿತರಿಗೆ ಅಂದಾಜು 8.5 ಲಕ್ಷ ರೂ.ದಷ್ಟು ದೊಡ್ಡ ಮೊತ್ತ ಸಿಗುತ್ತದೆ. ಈ ಯೋಜನೆಯು ಚಂದಾದಾರರು ಆಯ್ಕೆ ಮಾಡುವ ಪಿಂಚಣಿ ಮೊತ್ತಕ್ಕೆ ಅನುಗುಣವಾಗಿ ಅವರ ಕುಟುಂಬಕ್ಕೆ ಮತ್ತು ನಾಮನಿರ್ದೇಶಿತರಿಗೆ ಭರವಸೆಯ ಆರ್ಥಿಕ ನೆರವನ್ನು ಖಚಿತಪಡಿಸುತ್ತದೆ. ಯೋಜನೆಗೆ ಸೇರುವುದು ಹೇಗೆ? ಅಟಲ್ ಪಿಂಚಣಿ ಯೋಜನೆಗೆ ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಸುಲಭವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI), HDFC, ICICI ನಂತಹ ಪ್ರಮುಖ ಬ್ಯಾಂಕುಗಳ ಇಂಟರ್ನೆಟ್ ಬ್ಯಾಂಕಿಂಗ್ ಅಥವಾ ಮೊಬೈಲ್ ಆಪ್ಗಳ ಮೂಲಕ ನೀವು ನೇರವಾಗಿ ಈ ಯೋಜನೆಗೆ ನೋಂದಾಯಿಸಿಕೊಳ್ಳಬಹುದು. ಮೊದಲು ನಿಮ್ಮ ಬ್ಯಾಂಕಿನ ಇಂಟರ್ನೆಟ್ ಬ್ಯಾಂಕಿಂಗ್ ಪೋರ್ಟಲ್ಗೆ ಲಾಗಿನ್ ಆಗಿ, ಅಲ್ಲಿರುವ Social Security Schemes ಅಥವಾ Services ವಿಭಾಗದಲ್ಲಿ 'Atal Pension Yojana' ಎಂಬ ಆಯ್ಕೆಯನ್ನು ಹುಡುಕಿ. ನಂತರ, ಯೋಜನೆಗೆ ಲಿಂಕ್ ಮಾಡಬೇಕಾದ ನಿಮ್ಮ ಉಳಿತಾಯ ಖಾತೆಯನ್ನು ಆರಿಸಿ ಮತ್ತು ನಿಮಗೆ ಬೇಕಾದ ಪಿಂಚಣಿ ಮೊತ್ತವನ್ನು ( 1,000 ರಿಂದ ರೂ. 5,000 ರೂ.) ಹಾಗೂ ವಂತಿಗೆ ಪಾವತಿಸುವ ಅವಧಿಯನ್ನು (ಮಾಸಿಕ, ತ್ರೈಮಾಸಿಕ ಅಥವಾ ಅರ್ಧವಾರ್ಷಿಕ) ಆಯ್ಕೆ ಮಾಡಿ. ಅರ್ಜಿಯಲ್ಲಿ ನಿಮ್ಮ ನಾಮನಿರ್ದೇಶಿತರ (ವಾರಸುದಾರರ) ವಿವರಗಳನ್ನು ಭರ್ತಿ ಮಾಡಿ; ಸಾಮಾನ್ಯವಾಗಿ ಸಂಗಾತಿಯು ಮೊದಲ ನಾಮನಿರ್ದೇಶಿತರಾಗಿರುತ್ತಾರೆ. ಅಂತಿಮವಾಗಿ, ನಿಮ್ಮ ಆಧಾರ್ ಕಾರ್ಡ್ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಗೆ ಬರುವ OTP ಯನ್ನು ನಮೂದಿಸುವ ಮೂಲಕ ಅರ್ಜಿಯನ್ನು ಸಲ್ಲಿಸಿ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ. ಅಟಲ್ ಪಿಂಚಣಿ ಯೋಜನೆಯ ವಿಸ್ತರಣೆಯ ಪ್ರಮುಖ ಅಂಶಗಳು ಕೇಂದ್ರ ಸರ್ಕಾರವು ಈ ಯೋಜನೆಯನ್ನು ಮುಂದಿನ 5 ವರ್ಷಗಳ ಕಾಲ, ಅಂದರೆ ಆರ್ಥಿಕ ವರ್ಷ 2030-31ರವರೆಗೆ ಮುಂದುವರಿಸಲು ನಿರ್ಧರಿಸಿದೆ. ಯೋಜನೆಯ ವಿಸ್ತರಣೆಯ ಜೊತೆಗೆ, ಆಡಳಿತಾತ್ಮಕ ವೆಚ್ಚಗಳು, ಜಾಗೃತಿ ಅಭಿಯಾನಗಳು ಮತ್ತು ಕಾರ್ಯಾಚರಣೆಯ ವೆಚ್ಚಗಳನ್ನು ಭರಿಸಲು ಸರ್ಕಾರ ಹಣಕಾಸಿನ ನೆರವನ್ನು ನೀಡಲಿದೆ. ಇದು ಹಳ್ಳಿಗಳಲ್ಲಿ ಮತ್ತು ಸಣ್ಣ ಪಟ್ಟಣಗಳಲ್ಲಿ ಯೋಜನೆಯನ್ನು ಹೆಚ್ಚು ಜನಪ್ರಿಯಗೊಳಿಸಲು ಸಹಕಾರಿಯಾಗಲಿದೆ. ಯೋಜನೆಯ ಅಡಿಯಲ್ಲಿ ಚಂದಾದಾರರು ತಮ್ಮ 60 ವರ್ಷ ವಯಸ್ಸಿನ ನಂತರ ಪ್ರತಿ ತಿಂಗಳು 1,000 ರೂ. ರಿಂದ 5,000 ರೂ. ವರೆಗೆ ಗ್ಯಾರಂಟಿ ಪಿಂಚಣಿಯನ್ನು ಪಡೆಯುತ್ತಾರೆ. ಇದು ಚಂದಾದಾರರು ಆಯ್ದುಕೊಳ್ಳುವ ಪಿಂಚಣಿ ಸ್ಲ್ಯಾಬ್ ಮತ್ತು ಅವರು ನೀಡುವ ಕೊಡುಗೆಯ ಮೇಲೆ ಅವಲಂಬಿತವಾಗಿರುತ್ತದೆ. ಅಟಲ್ ಪಿಂಚಣಿಗೆ 8.66 ಕೋಟಿ ಚಂದಾದಾರರ ಸೇರ್ಪಡೆ ಅಟಲ್ ಪಿಂಚಣಿ ಯೋಜನೆಯು ಕಳೆದ ಕೆಲವು ವರ್ಷಗಳಲ್ಲಿ ಅಪಾರ ಜನಪ್ರಿಯತೆ ಮತ್ತು ಯಶಸ್ಸನ್ನು ಗಳಿಸಿದ್ದು, ಅಧಿಕೃತ ಅಂಕಿಅಂಶಗಳ ಪ್ರಕಾರ 2026ರ ಜನವರಿ 19ರ ವೇಳೆಗೆ ದೇಶಾದ್ಯಂತ ಸುಮಾರು 8.66 ಕೋಟಿಗೂ ಹೆಚ್ಚು ಚಂದಾದಾರರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ.
ಹಾಸನ : ಬೀದಿ ಬದಿ ವ್ಯಾಪಾರಿಗಳಿಗೆ ಜೆಡಿಎಸ್ ಕಾರ್ಯಕರ್ತನಿಂದ ಬೆದರಿಕೆ
► ಪ್ರಮೋದ್ ವಿರುದ್ಧ ಕಾನೂನು ಕ್ರಮ ಯಾಕೆ ಆಗಿಲ್ಲ ಎಂದು ಜಿಲ್ಲಾಡಳಿತವನ್ನು ಪ್ರಶ್ನಿಸಿದ ಜನರು ► ವಿದೇಶಿಗರನ್ನು ಪತ್ತೆ ಹಚ್ಚುವುದು ಪೊಲೀಸರ ಕೆಲಸ ಎಂದ ಪಕ್ಷ
ಈಗ 'ವಿಕಸಿತ ಕೇರಳಂ' ಕಡೆಗೆ ಗಮನ ಹರಿಸುವ ಸಮಯ ಬಂದಿದೆ - ಪ್ರಧಾನಿ ನರೇಂದ್ರ ಮೋದಿ ಘೋಷಣೆ
ಪ್ರಧಾನಿ ನರೇಂದ್ರ ಮೋದಿ ಅವರು ಕೇರಳದಲ್ಲಿ ಎಡಪಕ್ಷ ಮತ್ತು ಕಾಂಗ್ರೆಸ್ ಪಕ್ಷಗಳ ಭ್ರಷ್ಟಾಚಾರವನ್ನು ತೀವ್ರವಾಗಿ ಟೀಕಿಸಿದರು. ಸಹಕಾರಿ ಬ್ಯಾಂಕ್ ಹಗರಣ ಮತ್ತು ശബരിമല ಚಿನ್ನ ಕಳ್ಳತನದ ಆರೋಪಗಳನ್ನು ಪ್ರಸ್ತಾಪಿಸಿ, ಬಿಜೆಪಿ ಅಧಿಕಾರಕ್ಕೆ ಬಂದರೆ ತಪ್ಪಿತಸ್ಥರಿಗೆ ಶಿಕ್ಷೆ ನೀಡುವುದಾಗಿ ಭರವಸೆ ನೀಡಿದರು. ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಅವರು, ಕೇರಳದಲ್ಲಿ ಎನ್ಡಿಎ ಸರ್ಕಾರದ ಮೂಲಕ ಅಭಿವೃದ್ಧಿಯ ಹೊಸ ಶಕೆ ಆರಂಭವಾಗಲಿದೆ ಎಂದರು. ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಗೆಲುವನ್ನು ಸ್ವಾಗತಿಸಿದರು.
ಹೊಸದಿಲ್ಲಿ: ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಅಶಾಂತಿ ಸೃಷ್ಟಿಸಲಾಗುವುದು ಎಂದು ಬೆದರಿಕೆ ಒಡ್ಡಿರುವ ಹಾಗೂ ಸಿಖ್ಸ್ ಫಾರ್ ಜಸ್ಟೀಸ್ ಸಂಘಟನೆಯ ಗುರುಪತ್ವಂತ್ ಸಿಂಗ್ ಪನ್ನೂನ್ ವಿರುದ್ಧ ದಿಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ಶುಕ್ರವಾರ ಅಧಿಕಾರಿಗಳು ತಿಳಿಸಿದ್ದಾರೆ. ಗುರುಪತ್ವಂತ್ ಸಿಂಗ್ ಪನ್ನೂನ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳಡಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದರು. ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಸಂಭ್ರಮಾಚರಣೆಗೆ ಮುನ್ನ ದಿಲ್ಲಿಯಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಯನ್ನು ಭಂಗಗೊಳಿಸಲಾಗುವುದು ಎಂದು ಪನ್ನೂನ್ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಬಿಡುಗಡೆಗೊಳಿಸಿದ ಬಳಿಕ ಆತನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಿಲ್ಲಿಯಲ್ಲಿ ದೊಡ್ಡ ಮಟ್ಟದ ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ಸ್ಲೀಪರ್ ಸೆಲ್ಗಳು ವಾಯುವ್ಯ ದಿಲ್ಲಿಯ ರೋಹಿಣಿ ಹಾಗೂ ನೈರುತ್ಯ ದಿಲ್ಲಿಯ ದಾಬ್ರಿ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಖಲಿಸ್ತಾನ ಪರ ಭಿತ್ತಿ ಚಿತ್ರಗಳನ್ನು ಅಂಟಿಸಿದ್ದಾರೆ ಎಂದು ಆ ವೀಡಿಯೊದಲ್ಲಿ ಪನ್ನೂನ್ ಹೇಳಿಕೊಂಡಿದ್ದಾನೆ.
ಡೇಟಿಂಗ್ಗಾಗಿ ಕರೆಸಿಕೊಂಡಿದ್ದ ಹುಡುಗನನ್ನು ಹಣಕ್ಕಾಗಿ ಮಾಡೆಲ್ ಪ್ರಿಯಾ ಕೊಲೆ ಮಾಡಿದ್ದರು. ಯುವತಿಗಾಗಿ ಆಕೆಯ ಗಂಡ, ಮಕ್ಕಳು ಹಾಗೂ ಸೋದರಳಿಯನನ್ನು ಕೊಂದ ಹಂತಕರು ರಾಜಸ್ಥಾನದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದರು. ಈ ಮಧ್ಯೆ ಇಬ್ಬರಿಗೂ ಪ್ರೀತಿ ಹುಟ್ಟಿದೆ. ಪ್ರೀತಿ ಹೆಚ್ಚಾಗಿ ಮುಂದಿನ ಸಂಬಂಧಕ್ಕೆ ಕಾಲಿಡಲು ಮದುವೆಗೆ ನಿರ್ಧರಿಸಿದ ಹಂತಕರು ಈಗ ಜೈಲಿನಿಂದ ಹೊರಬಂದು ಹಸೆಮಣೆ ಏರಲು ತಯಾರಾಗುತ್ತಿದ್ದಾರೆ. ಈ ಬಗ್ಗೆ ಹಲವರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.
ಟೆಕ್ಕಿಗಳಿಗೆ ಇನ್ಫೋಸಿಸ್ನಿಂದ ಬಂಪರ್ ಸುದ್ದಿ, ಮುಂದಿನ ಆರ್ಥಿಕ ವರ್ಷದಲ್ಲಿ 20,000 ಫ್ರೆಷರ್ಸ್ ನೇಮಕ ಘೋಷಣೆ
ದಾವೋಸ್ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯಲ್ಲಿ ಇನ್ಫೋಸಿಸ್ ಸಿಇಒ ಸಲೀಲ್ ಪಾರೇಖ್ ಅವರು 2027ನೇ ಆರ್ಥಿಕ ವರ್ಷದಲ್ಲಿ 20,000 ಪದವೀಧರರನ್ನು ನೇಮಿಸಿಕೊಳ್ಳುವುದಾಗಿ ಘೋಷಿಸಿದ್ದಾರೆ. ಎಐ ತಂತ್ರಜ್ಞಾನದ ಅಳವಡಿಕೆ ಹೆಚ್ಚಾಗುತ್ತಿದ್ದು, ಸಾಫ್ಟ್ವೇರ್ ಅಭಿವೃದ್ಧಿ ಮತ್ತು ಗ್ರಾಹಕ ಸೇವೆಗಳಲ್ಲಿ ಹೊಸ ಅವಕಾಶಗಳು ಸೃಷ್ಟಿಯಾಗುತ್ತಿವೆ. ಪ್ರಸಕ್ತ ವರ್ಷದಲ್ಲೂ ಕಂಪನಿ 20,000 ನೇಮಕಾತಿ ಗುರಿ ಹೊಂದಿದ್ದು, ಈಗಾಗಲೇ ಬಹುತೇಕ ಟಾರ್ಗೆಟ್ ಪೂರೈಸಿರುವುದಾಗಿ ತಿಳಿಸಿದ್ದಾರೆ.
ಕಾರ್ಕಳ | ಮಿಯಾರು ಬಳಿ ಭೀಕರ ಅಪಘಾತ: ತೂಫನ್ ವಾಹನದಲ್ಲಿದ್ದ ಮೂವರು ಮೃತ್ಯು, ಆರು ಮಂದಿಗೆ ಗಾಯ
ಕಾರ್ಕಳ, ಜ.23: ಖಾಸಗಿ ಬಸ್ಸೊಂದು ತುಫಾನ್ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು ಆರು ಮಂದಿ ಗಾಯಗೊಂಡ ಭೀಕರ ಘಟನೆ ಮಿಯಾರು ಕಂಬಳಕ್ರಾಸ್ ಬಳಿ ಶುಕ್ರವಾರ ಮಧ್ಯಾಹ್ನ ವೇಳೆ ನಡೆದಿದೆ. ಧರ್ಮಸ್ಥಳದಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಖಾಸಗಿ ಬಸ್, ಕ್ರಾಸ್ನಲ್ಲಿ ಅತೀ ವೇಗದಿಂದ ಚಲಾಯಿಸಿಕೊಂಡು ಬಂದು, ರಸ್ತೆಯ ಇನ್ನೊಂದು ಬದಿಯಲ್ಲಿ ಹೋಗುತ್ತಿದ್ದ ತೂಫನ್ ವಾಹನಕ್ಕೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ತುಫಾನ್ ಕಾರ್ಕಳ ಕಡೆಯಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿತ್ತು. ಇದರಿಂದ ತುಫಾನ್ ವಾಹನ ಸಂಪೂರ್ಣ ಜಖಂಗೊಂಡಿದ್ದು, ಅದರಲ್ಲಿದ್ದವರು ತೀವ್ರವಾಗಿ ಗಾಯಗೊಂಡರೆನ್ನಲಾಗಿದೆ. ಇವರ ಪೈಕಿ ಮೂವರು ಮೃತಪಟ್ಟು, ಆರು ಮಂದಿ ಗಾಯಗೊಂಡರೆಂದು ತಿಳಿದು ಬಂದಿದೆ. ಸ್ಥಳಕ್ಕೆ ಕಾರ್ಕಳ ನಗರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (ಸಿಬಿಐ) 350 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (ಸಿಬಿಐ) ಸ್ಪೆಷಲಿಸ್ಟ್ ಆಫೀಸರ್ SO ಹುದ್ದೆಯ ನೇಮಕಾತಿಗೆ ಅಧಿಕೃತ ವೆಬ್ಸೈಟ್ನಲ್ಲಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. 350 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಸಿಬಿಐ ನೇಮಕಾತಿಗೆ ಅರ್ಜಿ ಸಲ್ಲಿಕೆ 2026 ಜನವರಿ 20ರಂದು ಪ್ರಾರಂಭವಾಗಿದೆ ಮತ್ತು ಅಭ್ಯರ್ಥಿಗಳು 2026 ಫೆಬ್ರವರಿ 03ರವರೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 2026 ಜನವರಿ 1ರಂತೆ ಕನಿಷ್ಠ ವಯಸ್ಸು 22 ವರ್ಷಗಳು ಮತ್ತು ಗರಿಷ್ಠ ವಯಸ್ಸು 30-35 ವರ್ಷಗಳು (ಹುದ್ದೆವಾರು). ಸೆಂಟ್ರಲ್ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ನೇಮಕಾತಿ 2026ಕ್ಕೆ ಸಂಬಂಧಿಸಿದ ಹೆಚ್ಚುವರಿ ವಿವರವನ್ನು ಪಡೆಯಲು ಮತ್ತು ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಗಮನಿಸಬಹುದು: https://ibpsreg.ibps.in/cbidec25/ ಪ್ರಮುಖ ದಿನಾಂಕಗಳು * ಆನ್ಲೈನ್ ಅರ್ಜಿ ಆರಂಭ: 20 ಜನವರಿ 2026 * ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03 ಫೆಬ್ರವರಿ 2026 * ಶುಲ್ಕ ಪಾವತಿಗೆ ಕೊನೆಯ ದಿನಾಂಕ: 03 ಫೆಬ್ರವರಿ 2026 * ಪರೀಕ್ಷೆ ದಿನಾಂಕ: 2026 ಫೆಬ್ರವರಿ- ಮಾರ್ಚ್ ನಡುವೆ * ಭರ್ತಿ ಕಾರ್ಡ್: ಪರೀಕ್ಷೆಗೆ ಮೊದಲು * ಫಲಿತಾಂಶ ದಿನಾಂಕ: ಶೀಘ್ರವೇ ಅಪ್ಡೇಟ್ ಮಾಡಲಾಗುವುದು. * ವಿವರಗಳಿಗೆ ಅಭ್ಯರ್ಥಿಗಳು ಸಿಬಿಐ ಅಧಿಕೃತ ವೆಬ್ತಾಣವನ್ನು ಪರೀಕ್ಷಿಸಿ ದೃಢಪಡಿಸಬಹುದು. ಅರ್ಜಿ ಶುಲ್ಕ * ಜನರಲ್/ಒಬಿಸಿ/ಇಡಬ್ಲ್ಯುಎಸ್: 850 ರೂ. * ಎಸ್ಸಿ/ಎಸ್ಟಿ/ ಪಿಡಬ್ಲ್ಯುಡಿ: 175 ರೂ. * ಮಹಿಳೆಯರಿಗೆ: 175 ರೂ. * ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್, ಐಎಂಪಿಎಸ್, ಕ್ಯಾಶ್ ಕಾರ್ಡ್/ ಮೊಬೈಲ್ ವಾಲೆಟ್ ಮೂಲಕ ಪಾವತಿಸುವ ಅವಕಾಶವಿದೆ. ವಯೋಮಿತಿ ಕನಿಷ್ಢ ವರ್ಷ: 22 ವರ್ಷಗಳು ಗರಿಷ್ಠ ವರ್ಷ: 30 ವರ್ಷಗಳು (ಮಾರ್ಕೆಟಿಂಗ್ ಅಧಿಕಾರಿ (ಸ್ಕೇಲ್-1) ಗರಿಷ್ಠ ವರ್ಷ: 25-25 ವರ್ಷಗಳು (ವಿದೇಶಿ ವಿನಿಮಯ ಅಧಿಕಾರಿ) ಸೆಂಟ್ರಲ್ ಬ್ಯಾಂಕ್ ನೇಮಕಾತಿ ಹುದ್ದೆಗೆ ಅವರ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ನೀಡುತ್ತದೆ. ಒಟ್ಟು ಹುದ್ದೆಗಳು 350 ಹುದ್ದೆಗಳು ಹುದ್ದೆಯ ಹೆಸರು ಒಟ್ಟು ಹುದ್ದೆಗಳು ವಿದೇಶಿ ವಿನಿಮಯ ಅಧಿಕಾರಿ 50 ಹುದ್ದೆಗಳು ಮಾರ್ಕೆಟಿಂಗ್ ಅಧಿಕಾರಿ 300 ಹುದ್ದೆಗಳು ವರ್ಗವಾರು ನೇಮಕಾತಿ ಹುದ್ದೆಯ ಹೆಸರು ಜನರಲ್| ಒಬಿಸಿ| ಇಡಬ್ಲ್ಯುಎಸ್| ಎಸ್ಸಿ| ಎಸ್ಟಿ ವಿದೇಶಿ ವಿನಿಮಯ ಅಧಿಕಾರಿ 22| 13| 05| 07| 03 ಮಾರ್ಕೆಟಿಂಗ್ ಅಧಿಕಾರಿ 122| 81| 30| 45| 22 ಅರ್ಹತೆಗಳು ವಿದೇಶಿ ವಿನಿಮಯ ಅಧಿಕಾರಿ: ಅಭ್ಯರ್ಥಿಗಳು ಪದವಿ ಜೊತೆಗೆ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ & ಫೈನಾನ್ಸ್ನಿಂದ ವಿದೇಶಿ ವಿನಿಮಯ ಕಾರ್ಯನಿರ್ವಹಣೆಗಳಲ್ಲಿ ಪ್ರಮಾಣಪತ್ರವನ್ನು ಹೊಂದಿರಬೇಕು. ಅವರಿಗೆ ಕನಿಷ್ಠ 5 ವರ್ಷ ಸಂಬಂಧಿತ ಕ್ಷೇತ್ರದಲ್ಲಿ ಅನುಭವ ಇರಬೇಕು. ಮಾರ್ಕೆಟಿಂಗ್ ಅಧಿಕಾರಿ ಅಭ್ಯರ್ಥಿಗಳು ಪದವಿ ಜೊತೆಗೆ MBA / PGDM / PGDBM / PGPM ಅರ್ಹತೆಯನ್ನು ಹೊಂದಿರಬೇಕು. ಅವರು ಕನಿಷ್ಠ 02 ವರ್ಷಗಳ ಸಂಬಂಧಿತ ಕೆಲಸದ ಅನುಭವ ಹೊಂದಿರಬೇಕು. ಆಯ್ಕೆ ಪ್ರಕ್ರಿಯೆ * ಲಿಖಿತ ಪರೀಕ್ಷೆ * ಸಂದರ್ಶನ * ದಾಖಲೆ ಪರಿಶೀಲನೆ
ರಾಹುಲ್ ಗಾಂಧಿಯವರಿಂದ ನಿರ್ಲಕ್ಷ್ಯ ಆರೋಪ: ಕೇರಳ ಕಾಂಗ್ರೆಸ್ ಕಾರ್ಯತಂತ್ರ ಸಭೆಗೆ ಶಶಿ ತರೂರ್ ಗೈರು
ಹೊಸದಿಲ್ಲಿ: ಇತ್ತೀಚೆಗೆ ನಡೆದ ಪಕ್ಷದ ಸಮಾರಂಭವೊಂದರಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತಮ್ಮನ್ನು ಗುರುತಿಸದೆ ನಿರ್ಲಕ್ಷಿಸಿದ್ದಾರೆ ಎಂಬ ಅಸಮಾಧಾನದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಹಿರಿಯ ಸಂಸದ ಶಶಿ ತರೂರ್ ಅವರು ಕೇರಳ ವಿಧಾನಸಭಾ ಚುನಾವಣೆಯ ಕಾರ್ಯತಂತ್ರ ಚರ್ಚೆಗೆ ಪಕ್ಷದ ಕೇಂದ್ರ ನಾಯಕತ್ವ ಕರೆದಿದ್ದ ಸಭೆಗೆ ಗೈರುಹಾಜರಾಗಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರೆದಿದ್ದ ಈ ಸಭೆಗೆ ಕೇರಳ ಕಾಂಗ್ರೆಸ್ನ ಹಿರಿಯ ನಾಯಕರನ್ನು ಆಹ್ವಾನಿಸಲಾಗಿತ್ತು. ರಾಜ್ಯ ಘಟಕದ ಅಧ್ಯಕ್ಷ ಸನ್ನಿ ಜೋಸೆಫ್, ವಿಧಾನಸಭಾ ಪಕ್ಷದ ನಾಯಕ ವಿ.ಡಿ. ಸತೀಶನ್, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ರಮೇಶ್ ಚೆನ್ನಿತ್ತಲ ಸೇರಿದಂತೆ ಶಶಿ ತರೂರ್ ಅವರನ್ನೂ ಆಹ್ವಾನಿಸಲಾಗಿತ್ತು. ಆದರೆ, ತರೂರ್ ಅವರು ಸಭೆಗೆ ಗೈರುಹಾಜರಾಗಲು ನಿರ್ಧರಿಸಿದ್ದು, ಇತ್ತೀಚೆಗೆ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ತಮಗೆ ಸೂಕ್ತ ಗೌರವ ದೊರಕಲಿಲ್ಲ ಎಂಬ ಅಸಮಾಧಾನವೇ ಇದಕ್ಕೆ ಹಿನ್ನೆಲೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಜನವರಿ 19ರಂದು ಕೊಚ್ಚಿಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜಯ ಸಾಧಿಸಿದವರನ್ನು ಅಭಿನಂದಿಸಲು ನಡೆದ ‘ಮಹಾ ಪಂಚಾಯತ್’ ಕಾರ್ಯಕ್ರಮದಲ್ಲಿ, ರಾಹುಲ್ ಗಾಂಧಿ ಹಲವು ನಾಯಕರನ್ನು ಹೆಸರಿನೊಂದಿಗೆ ಉಲ್ಲೇಖಿಸಿದರೂ, ನಾಲ್ಕು ಬಾರಿ ಸಂಸದರಾಗಿರುವ ತಿರುವನಂತಪುರಂ ಸಂಸದ ಶಶಿ ತರೂರ್ ಅವರ ಹೆಸರನ್ನು ಪ್ರಸ್ತಾಪಿಸಿರಲಿಲ್ಲ. ಈ ಘಟನೆಯೇ ತರೂರ್ ಅವರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಮೂಲಗಳು ಹೇಳಿವೆ. ಈ ಘಟನೆಯ ದೃಶ್ಯಾವಳಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಇದೇ ಕಾರಣದಿಂದ ತರೂರ್ ಅವರು ಶುಕ್ರವಾರ ನಡೆಯಬೇಕಿದ್ದ ಸಭೆಗೆ ಗೈರು ಹಾಜರಾಗಿದ್ದಾರೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ. ಇದರ ನಡುವೆ, ತರೂರ್ ಅವರು ಶುಕ್ರವಾರ ಹಾಗೂ ಶನಿವಾರ ನಡೆಯುತ್ತಿರುವ ಕೇರಳ ಸಾಹಿತ್ಯ ಉತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಶುಕ್ರವಾರ ಅವರು ಖ್ಯಾತ ಲೇಖಕ ಸಲ್ಮಾನ್ ರಶ್ದಿ ಮತ್ತು ಮಾನಸಿ ಸುಬ್ರಮಣಿಯಂ ಅವರೊಂದಿಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದಾರೆ. ಶನಿವಾರ ಅವರು ಎರಡು ಸಂವಾದ ನಡೆಸಲಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ, ಕಾಂಗ್ರೆಸ್ ಲೋಕಸಭಾ ಮುಖ್ಯ ಸಚೇತಕ ಕೊಡಿಕ್ಕುನ್ನಿಲ್ ಸುರೇಶ್, ತರೂರ್ ಅವರಿಗೆ ತಿರುವನಂತಪುರಂನಲ್ಲಿ ಪೂರ್ವನಿಯೋಜಿತ ಕಾರ್ಯಕ್ರಮಗಳಿದ್ದು, ಅವುಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಅಲಭ್ಯತೆಯ ಬಗ್ಗೆ ತರೂರ್ ಅವರು ಪಕ್ಷದ ನಾಯಕರಿಗೆ ಮುಂಚಿತವಾಗಿಯೇ ಮಾಹಿತಿ ನೀಡಿದ್ದರು ಎಂದು ಅವರು ಹೇಳಿದರು. ಕಾಂಗ್ರೆಸ್ ಕೇರಳ ಘಟಕದ ಅಧ್ಯಕ್ಷ ಸನ್ನಿ ಜೋಸೆಫ್ ಕೂಡ ತರೂರ್ ಅವರಿಗೆ ಪೂರ್ವ ನಿಗದಿತ ಕಾರ್ಯಕ್ರಮಗಳಿವೆ ಎಂದು ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ವಯನಾಡಿನಲ್ಲಿ ನಡೆದ ಕಾಂಗ್ರೆಸ್ ನಾಯಕರ ಸಮಾವೇಶದಲ್ಲಿ, ಕೇರಳದ ನಾಯಕರು ಒಗ್ಗಟ್ಟಿನಿಂದ ಮುಂದಿನ ಚುನಾವಣೆಯನ್ನು ಎದುರಿಸುವ ನಿರ್ಧಾರ ಕೈಗೊಂಡಿದ್ದಾರೆ ಎಂಬ ಸಂದೇಶ ಹೊರಬಂದಿತ್ತು. ಆ ಸಮಾವೇಶದಲ್ಲಿ ಹಿರಿಯ ನಾಯಕರು ತರೂರ್ ಅವರೊಂದಿಗೆ ಚರ್ಚೆ ನಡೆಸಿದ್ದರು. ಮುಖ್ಯಮಂತ್ರಿ ಅಭ್ಯರ್ಥಿಯಾಗುವ ಮಹತ್ವಾಕಾಂಕ್ಷೆ ಇದ್ದರೂ, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ದೇಶ ಇಲ್ಲ ಎಂದು ತರೂರ್ ಅವರು ತಿಳಿಸಿದ್ದರು. ಕಳೆದ ಕೆಲವು ತಿಂಗಳಿಂದ ಶಶಿ ತರೂರ್ ಮತ್ತು ಕಾಂಗ್ರೆಸ್ ನಾಯಕತ್ವದ ನಡುವೆ ಭಿನ್ನಾಭಿಪ್ರಾಯಗಳು ಸ್ಪಷ್ಟವಾಗುತ್ತಿವೆ. ವಿವಿಧ ರಾಷ್ಟ್ರೀಯ ವಿಚಾರಗಳಲ್ಲಿ ಅವರು ವ್ಯಕ್ತಪಡಿಸಿದ ನಿಲುವುಗಳು ಪಕ್ಷದ ಅಧಿಕೃತ ರೇಖೆಗೆ ವಿರುದ್ಧವಾಗಿವೆ ಎಂಬ ಟೀಕೆಗಳು ಕೇಳಿಬಂದಿದ್ದವು. ಕಳೆದ ಮೇ ತಿಂಗಳಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿ ಹಾಗೂ ‘ಆಪರೇಷನ್ ಸಿಂಧೂರ್’ ಕುರಿತು ಮೋದಿ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದರಿಂದ ಪಕ್ಷದ ಅಸಮಾಧಾನ ಮತ್ತಷ್ಟು ತೀವ್ರಗೊಂಡಿತ್ತು. ಇದಲ್ಲದೆ, ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅವರ ರಾಜಕೀಯ ಪರಂಪರೆಯನ್ನು ಸಮರ್ಥಿಸಿಕೊಂಡು ‘ರಾಜವಂಶೀಯ ರಾಜಕೀಯ’ ಕುರಿತು ಪ್ರಶ್ನೆ ಎತ್ತಿದ ತರೂರ್ ಹೇಳಿಕೆಗಳು ಕಾಂಗ್ರೆಸ್ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದ್ದವು. ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿಯವರೊಂದಿಗೆ ಅಡ್ವಾಣಿಯವರನ್ನು ಸಮಾನಾಂತರವಾಗಿಡುವ ಪ್ರಯತ್ನದ ಭಾಗವಾಗಿ, ಅವರ ದೀರ್ಘಕಾಲದ ಸಾರ್ವಜನಿಕ ಸೇವೆಯನ್ನು ‘ಒಂದು ಕಂತಿಗೆ ಇಳಿಸಿ ಅಳಿಯುವುದು ಅನ್ಯಾಯ’ ಎಂದು ತರೂರ್ ಹೇಳಿದ್ದರು. ಇದಕ್ಕೂ ಮೊದಲು, ತೀವ್ರ ಶೀತ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದರೂ ಪ್ರಧಾನಿ ಮೋದಿ ಭಾಷಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದಿನದ ಮುಂದಿನ ದಿನವೇ, 12 ರಾಜ್ಯಗಳಲ್ಲಿ ನಡೆದ ವಿವಾದಾತ್ಮಕ ವಿಶೇಷ ತೀವ್ರ ಪರಿಷ್ಕರಣಾ ಪ್ರಕ್ರಿಯೆ ಪರಿಶೀಲನೆಗಾಗಿ ಕಾಂಗ್ರೆಸ್ ನಾಯಕತ್ವ ಕರೆದಿದ್ದ ಮತ್ತೊಂದು ಸಭೆಯನ್ನೂ ತರೂರ್ ಅವರು ತಪ್ಪಿಸಿಕೊಂಡಿದ್ದರು.
ಬಿ.ಕೆ.ಹರಿಪ್ರಸಾದ್ ಅಮಾನತಿಗೆ ಬಿಜೆಪಿ ಪಟ್ಟು : ವಿಧಾನಪರಿಷತ್ನಲ್ಲಿ ಗದ್ದಲ
ಬೆಂಗಳೂರು : ಕಾಂಗ್ರೆಸ್ ಸದಸ್ಯರು ರಾಜ್ಯಪಾಲರನ್ನು ಅಡ್ಡಗಟ್ಟಿದ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಅಮಾನತು ಮಾಡಬೇಕು ಎಂದು ಬಿಜೆಪಿ ಸದಸ್ಯರು ಒತ್ತಾಯಿಸಿದ ಹಿನ್ನೆಲೆಯಲ್ಲಿ ವಿಧಾನಪರಿಷತ್ನಲ್ಲಿ ಭಾರೀ ಗದ್ದಲ ಉಂಟಾಯಿತು. ರಾಜ್ಯಪಾಲರು ಆಗಮಿಸಿದ ವೇಳೆ ಕಾಂಗ್ರೆಸ್ (‘ಕೈ’) ಸದಸ್ಯರು ತೋರಿದ ಗೂಂಡಾ ವರ್ತನೆ ಸರಿಯಲ್ಲ ಎಂದು ಆರೋಪಿಸಿದ ಬಿಜೆಪಿ ಸದಸ್ಯರು,ಬಿ.ಕೆ. ಹರಿಪ್ರಸಾದ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಮುಂಚಿತ ನೋಟಿಸ್ ನೀಡಲಾಗಿಲ್ಲ. ಹೀಗಾಗಿ ಚರ್ಚೆಗೆ ಅವಕಾಶ ನೀಡಲಾಗುವುದಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ಸ್ಪಷ್ಟಪಡಿಸಿದರು. ಇದರಿಂದ ಅಸಮಾಧಾನಗೊಂಡ ಬಿಜೆಪಿ ಸದಸ್ಯರು ಕಾಂಗ್ರೆಸ್ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದರು. ಇದರಿಂದ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆಯಿತು. ಪರಿಸ್ಥಿತಿ ನಿಯಂತ್ರಣ ತಪ್ಪುವ ಹಂತಕ್ಕೆ ತಲುಪಿದ್ದರಿಂದ ಸಭಾಪತಿ ಬಸವರಾಜ ಹೊರಟ್ಟಿ ವಿಧಾನಪರಿಷತ್ ಕಲಾಪವನ್ನು ಕೆಲಕಾಲ ಮುಂದೂಡಿದರು.
ಕೇರಳ| ನಾಲ್ಕು ಹೊಸ ರೈಲುಗಳಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ: ಸ್ವನಿಧಿ ಕ್ರೆಡಿಟ್ ಕಾರ್ಡ್ ಲೋಕಾರ್ಪಣೆ
ತಿರುವನಂತಪುರಂ: ಶುಕ್ರವಾರ ಕೇರಳಕ್ಕೆ ಮಂಜೂರಾಗಿರುವ ಮೂರು ಅಮೃತ್ ಭಾರತ್ ರೈಲು ಹಾಗೂ ಒಂದು ಪ್ರಯಾಣಿಕರ ರೈಲು ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಿಸಿದರು. ರಾಜ್ಯ ರಾಜಧಾನಿ ತಿರುವನಂತಪುರಂನಲ್ಲಿರುವ ಪುತ್ತರಿಕಂದಮ್ ಮೈದಾನದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಬೆಳಗ್ಗೆ 11 ಗಂಟೆಗೆ ಅವರು ಈ ನೂತನ ಸೇವೆಗಳಿಗೆ ಚಾಲನೆ ನೀಡಿದರು. ತಿರುವನಂತಪುರಂ ಕೇಂದ್ರ ನಿಲ್ದಾಣದಿಂದ ತಂಬರಂ ಮಾರ್ಗದ ಅಮೃತ್ ರೈಲು, ತಿರುವನಂತಪುರಂ ಕೇಂದ್ರ ನಿಲ್ದಾಣದಿಂದ ನಾಗರ್ ಕೋಯಿಲ್-ಮಂಗಳೂರು ಮಾರ್ಗದ ಅಮೃತ್ ಭಾರತ್ ರೈಲು, ತಿರುವನಂತಪುರಂ ಉತ್ತರ ನಿಲ್ದಾಣದಿಂದ ತಿರುವನಂತಪುರಂ-ಚರ್ಲಾಪಲ್ಲಿ ಮಾರ್ಗದ ಅಮೃತ್ ಭಾರತ್ ಎಕ್ಸ್ ಪ್ರೆಸ್ ರೈಲು ಹಾಗೂ ತ್ರಿಶೂರ್ ನಿಲ್ದಾಣದಿಂದ ಗುರುವಾಯೂರ್ ಮಾರ್ಗದ ರೈಲು ಈ ಕಾರ್ಯಕ್ರಮದ ಬಳಿಕ ಸಂಚಾರ ಪ್ರಾರಂಭಿಸಿದವು. ಇದೇ ವೇಳೆ ನಗರ ಜೀವನದ ಬಲವರ್ಧನೆಗಾಗಿ ಬೀದಿ ಬದಿ ವ್ಯಾಪಾರಿಗಳಿಗೆ ಕಿರು ಸಾಲ ಸೌಲಭ್ಯ ಒದಗಿಸುವ ಗುರಿ ಹೊಂದಿರುವ ಪಿಎಂ ಸ್ವನಿಧಿ ಕ್ರೆಡಿಟ್ ಕಾರ್ಡ್ ಯೋಜನೆಗೂ ಚಾಲನೆ ನೀಡಿದರು. ಯುಪಿಐ ಸಂಪರ್ಕ ಹೊಂದಿರುವ ಈ ಕ್ರೆಡಿಟ್ ಕಾರ್ಡ್ ಶೂನ್ಯ ಬಡ್ಡಿ ಸೌಲಭ್ಯದೊಂದಿಗೆ ಕ್ಷಿಪ್ರ ನಗದು ಸಾಲ ಒದಗಿಸುತ್ತದೆ. ಶುಕ್ರವಾರ ಬೆಳಿಗ್ಗೆ ಸುಮಾರು 10.24ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ಕೇರಳ ರಾಜ್ಯಪಾಲ ರಾಜೇಂದ್ರ ಅರ್ಲೇಕರ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಸ್ವಾಗತಿಸಿದ್ದರು. ತಿರುವನಂತಪುರಂ ಉತ್ತರ ರೈಲು ನಿಲ್ದಾಣ ಹಾಗೂ ತ್ರಿಶೂರ್ ರೈಲು ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹಾಗೂ ಕೇಂದ್ರ ಪ್ರವಾಸೋದ್ಯಮ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ ಮತ್ತಿತರರು ಹಾಜರಿದ್ದರು.
7 ತಿಂಗಳಿಗೆ ಹುಟ್ಟಿದ್ದಕ್ಕೆ ಹೀಗೆ...! ಸದನದಲ್ಲಿ ಕಿಚ್ಚು ಹಚ್ಚಿದ ಸುರೇಶ್ ಕುಮಾರ್ ಮಾತು
ವಿಧಾನಸಭೆಯಲ್ಲಿ ಗುರುವಾರ ರಾಜ್ಯಪಾಲರು ಭಾಷಣ ಓದದೆ ಹೊರನಡೆದ ಬಗ್ಗೆ, ಸದನದಲ್ಲಿ ಇಂದು ಸಹ ಆ ಕುರಿತು ಚರ್ಚೆ ನಡೆಯಿತು ಈ ವೇಳೆ, ಬಿಜೆಪಿ ಸದಸ್ಯ ಸುರೇಶ್ ಕುಮಾರ್ ಅವರು ಸಚಿವ ಬೈರತಿ ಸುರೇಶ್ ಅವರ ಬಗ್ಗೆ 'ಏಳು ತಿಂಗಳಿಗೆ ಹುಟ್ಟಿದ್ದೀರಾ' ಎಂದು ಹೇಳಿಕೆ ನೀಡಿದ್ದು, ಕೋಲಾಹಲಕ್ಕೆ ಕಾರಣವಾಯಿತು. ಈ ಹೇಳಿಕೆಯನ್ನು ಕಡತದಿಂದ ತೆಗೆದುಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಮಡಿಕೇರಿ | ಗೋಣಿಕೊಪ್ಪ, ತಿತಿಮತಿ ಭಾಗದಲ್ಲಿ ಹುಲಿ ಸಂಚಾರ : ಗ್ರಾಮಸ್ಥರಲ್ಲಿ ಆತಂಕ
ಮಡಿಕೇರಿ, ಜ.23: ದಕ್ಷಿಣ ಕೊಡಗಿನ ವಿವಿಧೆಡೆ ಹುಲಿ ಉಪಟಳ ತೀವ್ರಗೊಂಡಿದ್ದು, ಗೋಣಿಕೊಪ್ಪ ಮತ್ತು ತಿತಿಮತಿ ಭಾಗದ ಹೆದ್ದಾರಿಯಲ್ಲಿ ಹುಲಿ ಸಂಚರಿಸುತ್ತಿರುವ ದೃಶ್ಯ ಸೆರೆಯಾಗಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ರಸ್ತೆ ಮೂಲಕ ಸಂಚರಿಸುವ ವಾಹನ ಚಾಲಕರು ಹಾಗೂ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಹುಲಿ ಸಂಚಾರದ ಮಾಹಿತಿ ಪಡೆದಿರುವ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ತಕ್ಷಣವೇ ಕೂಂಬಿಂಗ್ ಕಾರ್ಯಾಚರಣೆ ಕೈಗೊಂಡು ಹುಲಿಯನ್ನು ಸೆರೆ ಹಿಡಿಯಲು ಕ್ರಮ ವಹಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಾರ್ವಜನಿಕರು ಎಚ್ಚರಿಕೆಯಿಂದ ಸಂಚರಿಸುವಂತೆ ಮನವಿ ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕೊಡಗಿನ ಗ್ರಾಮೀಣ ಪ್ರದೇಶಗಳಲ್ಲಿ ನಿರಂತರವಾಗಿ ಹುಲಿ ದಾಳಿಗಳು ನಡೆಯುತ್ತಿದ್ದು, ಹಲವು ಹಸುಗಳು ಬಲಿಯಾಗಿವೆ. ಇದೇ ವೇಳೆ ಕಾಡಾನೆಗಳ ಉಪಟಳವೂ ಹೆಚ್ಚಾಗಿರುವುದರಿಂದ ಗ್ರಾಮಸ್ಥರು ಭಯ ಹಾಗೂ ಆತಂಕದ ನಡುವೆಯೇ ದಿನ ಕಳೆಯುವಂತಾಗಿದೆ. ವನ್ಯಜೀವಿ ಉಪಟಳದ ಸಮಸ್ಯೆಯನ್ನು ಸರ್ಕಾರ ಮತ್ತು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಒತ್ತಾಯಿಸಿವೆ.
VB-G RAM-G ಕಾಯ್ದೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ ಎಂ.ಕೆ.ಸ್ಟಾಲಿನ್
ಚೆನ್ನೈ: ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಜಾರಿಗೆ ತಂದಿರುವ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಾದ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ಹಿಂಪಡೆಯಬೇಕು ಹಾಗೂ ಈ ಹಿಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಜಾರಿಗೆ ತಂದಿದ್ದ ಮನರೇಗಾ ಯೋಜನೆಯನ್ನು ಮರುಜಾರಿಗೊಳಿಸಬೇಕು ಎಂದು ಆಗ್ರಹಿಸಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಶುಕ್ರವಾರ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ನಿರ್ಣಯವನ್ನು ಸದನದಲ್ಲಿ ಓದಿದ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಈ ಯೋಜನೆಯ ಹಣಕಾಸು ಸ್ವರೂಪವನ್ನು ಮರಳಿ ವಾಪಸ್ ತರಬೇಕು ಎಂದು ಆಗ್ರಹಿಸಿದರು. ಮುಖ್ಯವಾಗಿ ಈ ಯೋಜನೆಯ ಸ್ವರೂಪವು ಹೂಡಿಕೆಯ ರಚನೆಯಡಿ ಕಾರ್ಯನಿರ್ವಹಿಸಬೇಕಾದ ಅಗತ್ಯವಿದ್ದು, ಬಹುತೇಕ ರಾಜ್ಯಗಳು ಶೇ. 40ರಷ್ಟು ವೇತನವನ್ನು ಪಾವತಿಸಬೇಕಾಗುತ್ತದೆ ಎಂದು ಗಮನ ಸೆಳೆದರು. ಈ ಬದಲಾವಣೆಯಿಂದಾಗಿ ರಾಜ್ಯಗಳ ಹಣಕಾಸು ಸಂಪನ್ಮೂಲಗಳು ಅಂದಾಜು 56 ಕೋಟಿ ರೂ. ಅನ್ನು ಭರಿಸಬೇಕಾಗುತ್ತದೆ ಎಂದು ವಿಪಕ್ಷಗಳ ಆಡಳಿತವಿರುವ ರಾಜ್ಯಗಳು ಆಕ್ಷೇಪ ವ್ಯಕ್ತಪಡಿಸಿವೆ. ಇಂದು ತಮಿಳುನಾಡಿನಲ್ಲಿ ಬಿಜೆಪಿಯ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹೊತ್ತಿನಲ್ಲೇ ತಮಿಳುನಾಡು ವಿಧಾನಸಭೆಯಲ್ಲಿ ಈ ನಿರ್ಣಯ ಮಂಡನೆಯಾಗಿರುವುದು ಗಮನಾರ್ಹವಾಗಿದೆ. ಬಿಜೆಪಿಯು ಡಿಎಂಕೆಯ ಬದ್ಧ ವೈರಿ ಎಐಎಡಿಎಂಕೆಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಎಪ್ರಿಲ್ ನಲ್ಲಿ ತಮಿಳುನಾಡು ವಿಧಾನಸಭಾ ಚುನಾವಣೆ ನಡೆಯಲಿದೆ. ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ವಿರೋಧಿಸಿ ನಿರ್ಣಯ ಅಂಗೀಕರಿಸಿರುವ ಮೂರನೆಯ ವಿಪಕ್ಷಗಳ ಆಡಳಿತವಿರುವ ರಾಜ್ಯವಾಗಿ ತಮಿಳುನಾಡು ಹೊರ ಹೊಮ್ಮಿದೆ. ಇದಕ್ಕೂ ಮುನ್ನ, ಡಿಸೆಂಬರ್ 30ರಂದು ಪಂಜಾಬ್ ಸರಕಾರ, ಜನವರಿ 2ರಂದು ತೆಲಂಗಾಣ ಸರಕಾರ ಈ ಕಾಯ್ದೆಯ ವಿರುದ್ಧ ನಿರ್ಣಯವನ್ನು ಅಂಗೀಕರಿಸಿದ್ದವು. ಈ ವಾರ ಕರ್ನಾಟಕ ಸರಕಾರ ಕೂಡಾ ಇದೇ ಬಗೆಯ ನಿರ್ಣಯ ಅಂಗೀಕರಿಸಲಿದೆ ಎಂದು ನಿರೀಕ್ಷಿಸಲಾಗಿದೆ.
ಅಂಕೋಲಾ | ಡಬಲ್ ಬ್ಯಾರಲ್ ಗನ್ನಿಂದ ಶೂಟ್ ಮಾಡಿಕೊಂಡು ನರ್ಸಿಂಗ್ ಹೋಂ ನೌಕರ ಆತ್ಮಹತ್ಯೆ
ಕಾರವಾರ: ಇಲ್ಲಿನ ಪಿಕಳೆ ನರ್ಸಿಂಗ್ ಹೋಂನಲ್ಲಿ ದೀರ್ಘಕಾಲ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದ ರಾಜು ಪಿಕಳೆ ಅವರು ಡಬಲ್ ಬ್ಯಾರಲ್ ಗನ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಸುಮಾರು 15 ದಿನಗಳ ಹಿಂದೆ ಪಿಕಳೆ ನರ್ಸಿಂಗ್ ಹೋಂನಲ್ಲಿ ರೋಗಿಯೊಬ್ಬರಿಗೆ ಅವಧಿ ಮೀರಿದ ಮಾತ್ರೆ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ರೋಗಿಯ ಸಂಬಂಧಿಕರೊಬ್ಬರು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ಅದು ಜಿಲ್ಲಾದ್ಯಂತ ವ್ಯಾಪಕವಾಗಿ ವೈರಲ್ ಆಗಿತ್ತು. ಈ ಘಟನೆಯಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ರಾಜು ಪಿಕಳೆ ಅವರು, ವಿಡಿಯೋ ವೈರಲ್ ಆದ ಬಳಿಕ ಇದು ಕಣ್ತಪ್ಪಿನಿಂದ ನಡೆದ ಪ್ರಮಾದ ಎಂದು ಒಪ್ಪಿಕೊಂಡು ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದರು. ಆದರೂ ಸಾಮಾಜಿಕ ಜಾಲತಾಣಗಳಲ್ಲಿ ಮುಂದುವರಿದ ಟೀಕೆಗಳು ಹಾಗೂ ಅವಮಾನದಿಂದ ತೀವ್ರ ಮಾನಸಿಕ ಖಿನ್ನತೆಗೆ ಒಳಗಾದ ಅವರು, ಇಂದು ಬೆಳಿಗ್ಗೆ ತಮ್ಮ ನಿವಾಸದಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Raichur | ʼನಮ್ಮ ಶಾಸಕರು ಕಾಣೆಯಾಗಿದ್ದಾರೆ’ : ಹಟ್ಟಿ ಪಟ್ಟಣದಲ್ಲಿ ಬ್ಯಾನರ್ ಹಾಕುವ ಮೂಲಕ ಆಕ್ರೋಶ
ರಾಯಚೂರು: ಜಿಲ್ಲೆಯ ಲಿಂಗಸುಗೂರು ಶಾಸಕ ಮಾನಪ್ಪ ವಜ್ಜಲ್ ಅವರು ಕ್ಷೇತ್ರಕ್ಕೆ ಬರುತ್ತಿಲ್ಲ ಹಾಗೂ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಆರೋಪಿಸಿ, ಹಟ್ಟಿ ಚಿನ್ನದ ಗಣಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್ಗಳನ್ನು ಹಾಕುವ ಮೂಲಕ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗುರುವಾರ ರಾತ್ರಿ ಹಟ್ಟಿ ಪಟ್ಟಣದ ಬಸ್ ನಿಲ್ದಾಣ ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ “ನಮ್ಮ ಶಾಸಕರು ಕಾಣೆಯಾಗಿದ್ದಾರೆ, ಹುಡುಕಿಕೊಡಿ”, “ಹಟ್ಟಿಗೆ ಇವರ ಕೊಡುಗೆ ಶೂನ್ಯ” ಎಂಬ ಬರಹಗಳಿರುವ ಬ್ಯಾನರ್ಗಳು ಕಾಣಿಸಿಕೊಂಡಿವೆ. ಈ ಬ್ಯಾನರ್ಗಳನ್ನು ಯಾರು ಅಳವಡಿಸಿದ್ದಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಈ ಬ್ಯಾನರ್ಗಳ ಚಿತ್ರಗಳು ವ್ಯಾಪಕವಾಗಿ ಹರಿದಾಡುತ್ತಿದ್ದು, ಅನೇಕರು ಶೇರ್ ಮಾಡುವ ಮೂಲಕ ಶಾಸಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಬೆಂಬಲ ಸೂಚಿಸುತ್ತಿದ್ದಾರೆ. ಈ ಕುರಿತು ಮಾತನಾಡಿದ ಸ್ಥಳೀಯ ಹೋರಾಟಗಾರರಾದ ರಮೇಶ್ ವೀರಾಪುರ ಹಾಗೂ ಲಿಂಗರಾಜ ಅವರು, ಲಿಂಗಸುಗೂರು ಕ್ಷೇತ್ರದ ಶಾಸಕರಾಗಿರುವ ಮಾನಪ್ಪ ವಜ್ಜಲ್ ಅವರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರೂ, ಹಟ್ಟಿ ಪಟ್ಟಣ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿಯೇ ಉಳಿದಿದೆ ಎಂದು ಆರೋಪಿಸಿದರು. ಹಟ್ಟಿ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ, ಹದಗೆಟ್ಟ ರಸ್ತೆಗಳು, ಪದವಿ ಕಾಲೇಜಿನ ಕೊರತೆ, ಸಮರ್ಪಕ ಆಸ್ಪತ್ರೆ ಸೌಲಭ್ಯಗಳ ಅಭಾವ ಹಾಗೂ ಸ್ವಚ್ಛತೆಯ ಕೊರತೆ ಸೇರಿದಂತೆ ಅನೇಕ ಸಮಸ್ಯೆಗಳು ಇಂದಿಗೂ ಪರಿಹಾರ ಕಂಡಿಲ್ಲ. ಹಲವು ವರ್ಷಗಳಿಂದ ಶಾಸಕರು ಹಟ್ಟಿ ಪಟ್ಟಣಕ್ಕೆ ಭೇಟಿ ನೀಡಿಲ್ಲ, ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸುತ್ತಿಲ್ಲ. ಅವರು ಬೆಂಗಳೂರು ಹಾಗೂ ತಮ್ಮ ನಿವಾಸದಲ್ಲಿ ಮಾತ್ರ ಸೀಮಿತರಾಗಿದ್ದು, ಜನರಿಂದ ದೂರವಾಗಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
E-Swathu: ಇ-ಸ್ವತ್ತು ತಾಂತ್ರಿಕ ಸಮಸ್ಯೆಗೆ ಕ್ರಮ: ಅಪ್ಡೇಟ್ ಕೊಟ್ಟ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಇ-ಸ್ವತ್ತು 2.0 ತಂತ್ರಾಂಶದಡಿ ಸಾರ್ವಜನಿಕರಿಂದ ಇದುವರೆಗೆ ಒಟ್ಟು 27,138 ಅರ್ಜಿಗಳು ಸ್ವೀಕೃತವಾಗಿದ್ದು, ಇದರಲ್ಲಿ ಹೊಸ ತಂತ್ರಾಂಶದ ಮೂಲಕ 16,572 ಹಾಗೂ ಹಳೆ ತಂತ್ರಾಂಶದ ಮೂಲಕ 10,566 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.ಸ್ವೀಕೃತಗೊಂಡ ಅರ್ಜಿಗಳಲ್ಲಿ 4,608 ಅರ್ಜಿಗಳು ಗ್ರಾಮ ಪಂಚಾಯತಿ ಕಾರ್ಯದರ್ಶಿಗಳ
ಕಲಬುರಗಿ: ಪ್ರೀತಿಸಿ ಮದುವೆಯಾದ ಎರಡೇ ತಿಂಗಳಲ್ಲಿ ನವವಿವಾಹಿತೆ ಆತ್ಮಹತ್ಯೆ
ಕಲಬುರಗಿ: ಪ್ರೀತಿಸಿ ಮದುವೆಯಾದ ಕೇವಲ ಎರಡು ತಿಂಗಳಲ್ಲೇ ನವವಿವಾಹಿತೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸಿದ್ದೇಶ್ವರ ಕಾಲೋನಿಯಲ್ಲಿ ಶುಕ್ರವಾರ ನಡೆದಿದೆ. ಅನಸೂಯಾ ಅವಿನಾಶ್ ಆಕಡೆ (26) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ತನ್ನ ಅತ್ತೆ ಮಗ ಅವಿನಾಶ್ ನನ್ನು ಪ್ರೀತಿಸಿ ಮದುವೆಯಾಗಿದ್ದ ಅನಸೂಯಾಳ ವಿವಾಹ ಎರಡು ತಿಂಗಳ ಹಿಂದಷ್ಟೇ ಎರಡೂ ಕುಟುಂಬಸ್ಥರ ಸಮ್ಮುಖದಲ್ಲಿ ನೆರವೇರಿತ್ತು. ಮದುವೆಯ ಬಳಿಕ ಗಂಡನೊಂದಿಗೆ ಹಳ್ಳಿಯಲ್ಲಿ ವಾಸಿಸುವುದಕ್ಕೆ ಅನಸೂಯಾ ಬೇಸರಗೊಂಡಿದ್ದಳು ಎನ್ನಲಾಗಿದ್ದು, ಇದೇ ಕಾರಣದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಕಲಬುರಗಿ ನಗರದ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ರಾಜ್ಯಪಾಲರು ಕರ್ನಾಟಕದ ಜನತೆಯ ಕ್ಷಮೆ ಕೇಳಬೇಕು: ಎಚ್ ಕೆ ಪಾಟೀಲ್ ಆಗ್ರಹ
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೆ, ರಾಷ್ಟ್ರಗೀತೆಗೂ ಕಾಯದೆ ನಿರ್ಗಮಿಸಿದ ಘಟನೆ ವಿಧಾನಸಭೆಯಲ್ಲಿ ಕೋಲಾಹಲ ಸೃಷ್ಟಿಸಿದೆ.ರಾಜ್ಯಪಾಲರು ಸಂವಿಧಾನದ ಸೆಕ್ಷನ್ 51 ಉಲ್ಲಂಘನೆ ಮಾಡಿದ್ದಾರೆ ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದು, ರಾಜ್ಯಪಾಲರ ನಡೆ ಸಂವಿಧಾನ ವಿರೋಧಿ ಎಂದು ಸಚಿವರು ಹೇಳಿದ್ದು ರಾಜ್ಯಪಾಲರು ಸದನದ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ತಿರುವನಂತಪುರದಲ್ಲಿ ಬೃಹತ್ ರ್ಯಾಲಿ ನಡೆಸಿ ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದಿದ್ದಾರೆ. ಎಡಪಕ್ಷ ಮತ್ತು ಯುಡಿಎಫ್ಗಳನ್ನು ಟೀಕಿಸಿದ ಅವರು, ಭ್ರಷ್ಟಾಚಾರ ಮತ್ತು ದುರಾಡಳಿತಕ್ಕೆ ಬಿಜೆಪಿ ಕೊನೆ ಹಾಡಲಿದೆ ಎಂದರು. ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಸಂಕೇತವಾಗಿ ಬಿಜೆಪಿಯನ್ನು ಜನತೆ ನೋಡಲಿದ್ದಾರೆ. ಕೇರಳದಲ್ಲಿ ಬದಲಾವಣೆ ಅನಿವಾರ್ಯ ಎಂದು ಪ್ರತಿಪಾದಿಸಿದರು. ಡಬಲ್ ಇಂಜಿನ್ ಸರ್ಕಾರದಿಂದ ರಾಜ್ಯಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು.
1997ರ ಮಂಗಳೂರು ಜೋಡಿ ಕೊಲೆ ಪ್ರಕರಣದಲ್ಲಿ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ದಂಡುಪಾಳ್ಯ ಗ್ಯಾಂಗ್ನ ಸದಸ್ಯ ಚಿಕ್ಕ ಹನುಮ ಯಾನೆ ಚಿಕ್ಕ ಹನುಮಂತಪ್ಪನನ್ನು ಆಂಧ್ರಪ್ರದೇಶದಲ್ಲಿ ಉರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಈತನ ವಿರುದ್ಧ ಕರ್ನಾಟಕದಲ್ಲಿ ಸುಮಾರು 13 ಕೊಲೆ, ದರೋಡೆ ಪ್ರಕರಣಗಳು ದಾಖಲಾಗಿವೆ.
Gold Price: ಚಿನ್ನದ ಬೆಲೆ 1.59 ಲಕ್ಷ ರೂಪಾಯಿ, ಬೆಳ್ಳಿ ಬೆಲೆ ಮತ್ತಷ್ಟು ಏರಿಕೆ... ಯುದ್ಧ ಭೀತಿಯಲ್ಲಿ ಖರೀದಿ ಜೋರು!
ಚಿನ್ನದ ಬೆಲೆ ಹಾಗೂ ಬೆಳ್ಳಿ ಬೆಲೆ ಮುಗಿಲು ಮುಟ್ಟುತ್ತಿದೆ, ನೋಡ ನೋಡುತ್ತಿದ್ದಂತೆ ಚಿನ್ನ 1.59 ಲಕ್ಷ ರೂಪಾಯಿ ಪ್ರತಿ 10 ಗ್ರಾಂಗೆ ತಲುಪಿದೆ. ಇಂದು ಕೂಡ ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆ ಕಂಡುಬಂದ ಕಾರಣಕ್ಕೆ ಆಭರಣ ಪ್ರಿಯರು ಚಿಂತೆ ಮಾಡುತ್ತಿದ್ದು, ಇನ್ನೇನು ಮದುವೆ ಹಾಗೂ ಶುಭಕಾರ್ಯ ಶುರು ಆಗುವ ಸಮಯದಲ್ಲೇ ಆತಂಕ ಮೂಡಿದೆ. ಅದರಲ್ಲೂ ಅಂತಾರಾಷ್ಟ್ರೀಯ ಮಟ್ಟದಲ್ಲಿ
Ind Vs Nz 2nd T20- ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ! ಅಕ್ಷರ್ ಪಟೇಲ್ ಬದಲು ಹರ್ಷಿತ್ ರಾಣಾ! ಏನು ಕಾರಣ?
India Vs New Zealand T20i Series- ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಎರಡನೇ ಟಿ20 ಪಂದ್ಯ ಶುಕ್ರವಾರ ರಾಯಪುರದಲ್ಲಿ ನಡೆಯಲಿದೆ. ಐದು ಪಂದ್ಯಗಳ ಸರಣಿಯಲ್ಲಿ ಮೊದಲ ಪಂದ್ಯ ಗೆದ್ದಿರುವ ಭಾರತ ತಂಡ ಉತ್ಸಾಹದಿಂದ ಬೀಗುತ್ತಿದ್ದರೆ, ಕಿವೀಸ್ ಬಳಕ ತಿರುಗೇಟು ನೀಡುವ ತವಕದಲ್ಲಿದೆ. ಮೊದಲ ಪಂದ್ಯದಲ್ಲಿ ರನ್ ಗಳಿಸಲು ವಿಫಲರಾಗಿದ್ದ ಸಂಜು ಸ್ಯಾಮ್ಸನ್ ಮತ್ತು ಇಶಾನ್ ಕಿಶನ್ ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಬೇಕಿದೆ. ಪಂದ್ಯದ ಪಿಚ್ ಮತ್ತು ಹವಾಮಾನ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಇಲ್ಲಿ ಟಾಸ್ ಗೆಲುವು ಮಹತ್ವದ್ದಾಗಿದೆ.
Gold, Silver Price: ಮತ್ತೆ ಆಡಿದ್ದೇ ಆಟ ಎಂಬಂತೆ ಬಂಗಾರ, ಬೆಳ್ಳಿ ಬೆಲೆಯಲ್ಲಿ ದಾಖಲೆಯ ಏರಿಕೆ
Gold, Silver Price: ಬಂಗಾರ, ಬೆಳ್ಳಿ ದರದಲ್ಲಿ ಇದೀಗ ಮತ್ತೆ ಅದೇ ಆಡಿದ್ದೇ ಆಟ ಎಂಬಂತೆ ದಾಖಲೆಯ ಏರಿಕೆಯಾಗಿದೆ. ಹಾಗಾದ್ರೆ ಇಂದು (ಜನವರಿ 23) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬೆಲೆ ಎಷ್ಟಿದೆ ಎನ್ನುವ ಸಂಪೂರ್ಣ ವಿವರವನ್ನು ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಬಂಗಾರ ದರಗಳ ವಿವರ: ನಿನ್ನೆ (ಜನವರಿ
ಬೆಂಗಳೂರು ವಿಶ್ವದ ಎರಡನೇ ಅತಿ ಹೆಚ್ಚು ಸಂಚಾರ ದಟ್ಟಣೆ ಇರುವ ನಗರವಾಗಿದೆ. ಪ್ರತಿದಿನ 1500 ಹೊಸ ವಾಹನಗಳು ರಸ್ತೆಗಿಳಿಯುತ್ತಿವೆ. 2015 ರಿಂದ ರಸ್ತೆ ಜಾಲ 13,000 ಕಿಲೋಮೀಟರ್ಗೆ ಸೀಮಿತವಾಗಿದೆ. ವಾಹನಗಳ ಸಂಖ್ಯೆ ದುಪ್ಪಟ್ಟಾಗಿದ್ದರೂ, ರಸ್ತೆಗಳು ಮತ್ತು ಸಾರ್ವಜನಿಕ ಸಾರಿಗೆ ವ್ಯವಸ್ಥೆ ಸುಧಾರಿಸಿಲ್ಲ. ಇದು ನಾಗರಿಕರ ಸಂಕಷ್ಟಕ್ಕೆ ಕಾರಣವಾಗಿದೆ.
ಮಂಗಳೂರು ಅಮೃತ್ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ; ವೇಳಾಪಟ್ಟಿ ಪ್ರಕಟ; 20 ನಿಲ್ದಾಣಗಳು ಎಲ್ಲೆಲ್ಲಿ?
ಪ್ರಧಾನಿ ನರೇಂದ್ರ ಮೋದಿ ಅವರು ತಿರುವನಂತಪುರದಲ್ಲಿ ಮೂರು ಹೊಸ ಅಮೃತ್ ಭಾರತ್ ರೈಲುಗಳಿಗೆ ಚಾಲನೆ ನೀಡಿದರು. ಇದರಲ್ಲಿ ಮಂಗಳೂರು - ನಾಗರಕೋಯಿಲ್ ಅಮೃತ್ ಭಾರತ್ ಎಕ್ಸ್ಪ್ರೆಸ್ ರೈಲು ಕರ್ನಾಟಕ, ಕೇರಳ ಮತ್ತು ತಮಿಳುನಾಡನ್ನು ಸಂಪರ್ಕಿಸುತ್ತದೆ. ಈ ರೈಲು 20 ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದ್ದು, ಪ್ರಯಾಣಿಕರಿಗೆ ಸುಧಾರಿತ ಸೌಲಭ್ಯಗಳನ್ನು ಒದಗಿಸಲಿದೆ.
ಕಲಬುರಗಿ | ತೊಗರಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ 2ನೇ ದಿನಕ್ಕೆ ಕಾಲಿಟ್ಟ ರೈತರ ಧರಣಿ
ಪ್ರತಿ ಕ್ವಿಂಟಲ್ ತೊಗರಿಗೆ 12,500 ರೂ. ನೀಡುವಂತೆ ಆಗ್ರಹ
ʼರಾಯಚೂರು ಉತ್ಸವ-2026ʼ : ವಿಶೇಷ ವೆಬ್ಸೈಟ್ ಲೋಕಾರ್ಪಣೆ
ರಾಯಚೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 5ರಿಂದ 7ರವರೆಗೆ ನಡೆಯಲಿರುವ ʼಎಡೆದೊರೆ ನಾಡು –ರಾಯಚೂರು ಜಿಲ್ಲಾ ಉತ್ಸವ–2026ʼರ ಪ್ರಚಾರಾರ್ಥ ಸಿದ್ಧಪಡಿಸಿದ ವಿಶೇಷ ವೆಬ್ತಾಣವನ್ನು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಬೋಸರಾಜು ಅವರು ಜ.21ರಂದು ಲೋಕಾರ್ಪಣೆ ಮಾಡಿದರು. ಉತ್ಸವದ ಪ್ರಚಾರ ಸಮಿತಿಯು ಸಿದ್ಧಪಡಿಸಿರುವ ಈ ವೆಬ್ತಾಣದಲ್ಲಿ ಉತ್ಸವದ ಎಲ್ಲ ಕಾರ್ಯಕ್ರಮಗಳ ಸಂಕ್ಷಿಪ್ತ ಮಾಹಿತಿ, ಛಾಯಾಚಿತ್ರಗಳು, ಪೋಸ್ಟರ್ಗಳು, ವಿಶೇಷ ವಿಡಿಯೋಗಳು ಹಾಗೂ ಪ್ರತಿ ದಿನ ನಡೆಯುವ ವಿವಿಧ ಚಟುವಟಿಕೆಗಳ ಸಂಪೂರ್ಣ ವಿವರಗಳು ಲಭ್ಯವಿವೆ. ಸಾರ್ವಜನಿಕರು www.raichurutsava.com ಲಿಂಕ್ ಮೂಲಕ ವೆಬ್ತಾಣಕ್ಕೆ ಭೇಟಿ ನೀಡಿ ಉತ್ಸವದ ಮಾಹಿತಿಯನ್ನು ಪಡೆದುಕೊಳ್ಳಬಹುದು. ನಮ್ಮ ಜಿಲ್ಲೆಯಷ್ಟೇ ಅಲ್ಲದೆ, ರಾಜ್ಯದ ವಿವಿಧ ಭಾಗಗಳು ಹಾಗೂ ವಿಶ್ವದ ಯಾವುದೇ ಮೂಲೆಯಲ್ಲಿರುವ ಜನರು ಈ ವೆಬ್ತಾಣದ ಮೂಲಕ ಉತ್ಸವದ ಮಾಹಿತಿ ಪಡೆದು ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ವೆಬ್ಸೈಟ್ ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೀಶ್ ಕೆ ಅವರು ಸಚಿವರಿಗೆ ಮಾಹಿತಿ ನೀಡಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ್ ಕಾಂದೂ, ಅಪರ ಜಿಲ್ಲಾಧಿಕಾರಿ ಶಿವಾನಂದ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪವನ್ ಕೀಶೋರ್ ಪಾಟೀಲ, ಸಹಾಯಕ ಆಯುಕ್ತ ಡಾ. ಹಂಪಣ್ಣ ಸಜ್ಜನ್, ರೈತ ಸಂಘದ ಅಧ್ಯಕ್ಷ ಚಾಮರಸ ಪಾಟೀಲ, ರಾಜ್ಯ ನೀತಿ ಆಯೋಗದ ಸದಸ್ಯ ಡಾ. ರಝಾಕ್ ಉಸ್ತಾದ್, ಮಹಾನಗರ ಪಾಲಿಕೆ ಸಮಿತಿಯ ಕಾರ್ಯದರ್ಶಿ ಹಾಗೂ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಕೃಷ್ಣ ಶಾವಂತಗೇರಿ, ಮಹಾನಗರ ಪಾಲಿಕೆ ಉಪ ಆಯುಕ್ತ ಸಂತೋಷ ರಾಣಿ, ವಾರ್ತಾ ಇಲಾಖೆ ಅಧಿಕಾರಿ ಗವಿಸಿದ್ದಪ್ಪ ಹೊಸಮನಿ, ತಹಸೀಲ್ದಾರ್ ಸುರೇಶ್ ವರ್ಮಾ, ಅಮರೇಶ್ ಬಿರಾದಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಷ್ಟದಲ್ಲೂ ಶ್ರೀಹರಿಯ ನೆನೆಯಬೇಕೆಂಬ ಕನಕದಾಸರ ಸಾಹಿತ್ಯ : ಹಾಡು ಹಳತು ಭಾವ ನವೀನ 122
ಹದಿನಾರನೇ ಶತಮಾನದಲ್ಲಿ ಸಾಮಂತ ರಾಜನಾಗಿದ್ದರೂ ವೈರಾಗ್ಯದಿಂದ ಭಕ್ತಿಯ ಹಾದಿ ಹಿಡಿದು ದಾಸಶ್ರೇಷ್ಠರಲ್ಲಿ ಒಬ್ಬರೆನಿಸಿಕೊಂಡಿದ್ದು ಮಾತ್ರವಲ್ಲ, ದಾರ್ಶನಿಕನಾಗಿ, ಸಮಾಜದ ಅಂಕುಡೊಂಕುಗಳನ್ನು ತಮ್ಮ ಹರಿತವಾದ ಸಾಹಿತ್ಯದ ಮೂಲಕ ತಿದ್ದುವ ಪ್ರಯತ್ನ ಮಾಡಿದವರು. ಕರ್ನಾಟಕ ಸಂಗೀತದ ಪಿತಾಮಹ ಪುರಂದರದಾಸರ ಸಮಕಾಲೀನರಾಗಿದ್ದ ಭಕ್ತ ಕನಕದಾಸರ 'ಕಾಯೋ ಕರುಣಾಕರನೆ... ಕಡು ಪಾಪಿ ನಾನೂ' ಎಂಬ ಸಾಹಿತ್ಯವನ್ನು ಶ್ರೀನಾಥ್ ಭಲ್ಲೆ ಅವರು ವಿಶ್ಲೇಷಿಸಿದ್ದಾರೆ. ಕನಕದಾಸರ ಸರಳತೆಯೇ ನಮಗೆ ಜೀವನಪಾಠ.
ಭಾರತದಲ್ಲಿ 2026ರ ಟಿ20 ವಿಶ್ವಕಪ್ ಆಯೋಜನೆಯ ಕುರಿತು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಆತಂಕ ವ್ಯಕ್ತಪಡಿಸಿದೆ. ಭದ್ರತಾ ಕಾರಣಗಳನ್ನು ಉಲ್ಲೇಖಿಸಿ, ಭಾರತಕ್ಕೆ ಪ್ರಯಾಣಿಸಲು ನಿರಾಕರಿಸಿದೆ. ಐಸಿಸಿ ಈ ಮನವಿಯನ್ನು ತಿರಸ್ಕರಿಸಿದ್ದು, ಬಾಂಗ್ಲಾದೇಶದ ಬದಲಿಗೆ ಸ್ಕಾಟ್ಲೆಂಡ್ಗೆ ಅವಕಾಶ ದೊರಕುವ ಸಾಧ್ಯತೆ ಇದೆ. ಈ ಬೆಳವಣಿಗೆಯು ಬಾಂಗ್ಲಾದೇಶಕ್ಕೆ ಆರ್ಥಿಕವಾಗಿ ಹಿನ್ನಡೆಯಾಗಲಿದೆ.
ದಾವೋಸ್ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆ ಸಮ್ಮೇಳನದಲ್ಲಿ ಕರ್ನಾಟಕದ ಪರವಾಗಿ ಭಾಗವಹಿಸಿರುವ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹಾಗೂ ತಂಡದಿಂದ ಈಗಾಗಲೇ ಹಲವು ಜಾಗತಿಕ ಕಂಪನಿಗಳೊಂದಿಗೆ ಸಭೆ ನಡೆಸಿದೆ. ಈ ಸಮ್ಮೇಳನದಲ್ಲಿ ಸದ್ಯ, ದೂರಸಂಪರ್ಕ ತಂತ್ರಜ್ಞಾನ ಕ್ಷೇತ್ರದಲ್ಲಿ ಜಾಗತಿಕವಾಗಿ ಹೆಸರುವಾಸಿಯಾಗಿರುವ ದೈತ್ಯ ಕಂಪನಿಗಳಾದ ನೋಕಿಯಾ, ಅಮೆರಿಕದ ವಾಸ್ಟ್ ಸ್ಪೇಸ್ ಕಂಪನಿ, ಯುಎಇಯ ಕ್ರೆಸೆಂಟ್ ಎಂಟರ್ಪ್ರೈಸಿಸ್, ವೊಯೆಜರ್ ಟೆಕ್ನಾಲಜೀಸ್ ಸೇರಿದಂತೆ ಹಲವು ಹೂಡಿಕೆದಾರರೊಂದಿಗೆ ಸಮಾವೇಶ ನಡೆಸಿದ್ದು, ಕಾರ್ನಾಟಕದಲ್ಲಿ ಹೂಡಿಕೆಗೆ ಒಲವು ತೋರಿಸಿವೆ. ಈ ಕುರಿತ ವರದಿ ಇಲ್ಲಿದೆ ನೋಡಿ..
ನೊಯ್ಡಾ, ಅಹ್ಮದಾಬಾದ್ನಲ್ಲಿ ಶಾಲೆಗಳಿಗೆ ಬಾಂಬ್ ಬೆದರಿಕೆ: ಪೊಲೀಸರಿಂದ ಪರಿಶೀಲನೆ
ಹೊಸದಿಲ್ಲಿ: ಗಣರಾಜ್ಯೋತ್ಸವಕ್ಕೆ ಇನ್ನು ಮೂರು ದಿನಗಳು ಮಾತ್ರ ಬಾಕಿ ಇರುವಾಗ, ನೊಯ್ಡಾದಲ್ಲಿನ ಶಿವ ನಾಡಾರ್ ಶಾಲೆ ಮತ್ತು ಫಾದರ್ ಏಂಜೆಲ್ ಶಾಲೆ ಹಾಗೂ ಅಹ್ಮದಾಬಾದ್ನ ಹಲವು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಗಳು ರವಾನೆಯಾಗಿವೆ. ಸುದ್ದಿ ತಿಳಿಯುತ್ತಿದ್ದಂತೆ ಕ್ಷಿಪ್ರ ಕ್ರಮ ಕೈಗೊಂಡಿರುವ ಪೊಲೀಸರು, ಮುನ್ನೆಚ್ಚರಿಕೆಯ ಕ್ರಮವಾಗಿ ವಿದ್ಯಾರ್ಥಿಗಳನ್ನು ತರಗತಿಗಳಿಂದ ತೆರವುಗೊಳಿಸಿದ್ದಾರೆ. ಬಾಂಬ್ ಬೆದರಿಕೆ ಹಿನ್ನೆಲೆ ನೊಯ್ಡಾದಲ್ಲಿನ ಎರಡು ಶಾಲೆಗಳ ಆವರಣದಲ್ಲಿ ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳದ ಮೂಲಕ ಪರಿಶೀಲನೆ ನಡೆಯುತ್ತಿದೆ. ಈ ಬೆಳವಣಿಗೆಯ ಕುರಿತು ಪ್ರತಿಕ್ರಿಯಿಸಿರುವ ನೊಯ್ಡಾ ಪೊಲೀಸರು, ಸ್ಥಳವನ್ನು ಪರಿಶೀಲನೆ ನಡೆಸಲಾಗುತ್ತಿದೆ. ಇಮೇಲ್ ಗಳ ಕುರಿತು ಸೈಬರ್ ಅಪರಾಧ ತಂಡವೊಂದು ತಾಂತ್ರಿಕ ತನಿಖೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ. ಅಹ್ಮದಾಬಾದ್ ನಲ್ಲೂ ಕೂಡಾ ಹಲವಾರು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ರವಾನೆಯಾಗಿದ್ದು, ಈ ಕುರಿತು ಶಾಲಾ ಆಡಳಿತ ಮಂಡಳಿಗಳು ಪೊಲೀಸರಿಗೆ ಮಾಹಿತಿ ನೀಡಿವೆ. ಸ್ಥಳದಲ್ಲಿ ತನಿಖೆ ನಡೆಸಲು ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಅಗ್ನಿಶಾಮಕ ದಳಗಳು ಆಗಮಿಸಿವೆ.
ಹುಬ್ಬಳ್ಳಿ | ಶಾರ್ಟ್ ಸರ್ಕ್ಯೂಟ್ನಿಂದ ಹೊತ್ತಿ ಉರಿದ ಮೆಟ್ರೋ ಕಾಂಪ್ಲೆಕ್ಸ್; ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ನಾಶ
ಹುಬ್ಬಳ್ಳಿ: ಶಾರ್ಟ್ ಸರ್ಕ್ಯೂಟ್ನಿಂದ ಉಂಟಾದ ಅಗ್ನಿ ಅವಘಡದಲ್ಲಿ ಇಡೀ ಕಾಂಪ್ಲೆಕ್ಸ್ ಹೊತ್ತಿ ಉರಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಹುಬ್ಬಳ್ಳಿಯ ಮರಾಠಗಲ್ಲಿಯಲ್ಲಿ ತಡರಾತ್ರಿ ನಡೆದಿದೆ. ಮರಾಠಗಲ್ಲಿಯಲ್ಲಿರುವ ಮೆಟ್ರೋ ಕಾಂಪ್ಲೆಕ್ಸ್ನಲ್ಲಿ ಏಕಾಏಕಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿ ಇಡೀ ಕಾಂಪ್ಲೆಕ್ಸ್ಗೆ ವ್ಯಾಪಿಸಿದ್ದು, ಸ್ಥಳೀಯರು ಗಾಬರಿಗೊಂಡು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಹರಸಾಹಸ ಪಟ್ಟರು. ಆದಾಗ್ಯೂ, ಕಾಂಪ್ಲೆಕ್ಸ್ನೊಳಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸಂಪೂರ್ಣವಾಗಿ ನಾಶವಾಗಿವೆ ಎಂದು ತಿಳಿದು ಬಂದಿದೆ. ಘಟನೆ ಹುಬ್ಬಳ್ಳಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿ ಅವಘಡದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.
Bike Taxi: ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಗ್ರೀನ್ ಸಿಗ್ನಲ್ ನೀಡಿದ ಹೈಕೋರ್ಟ್
ಬೆಂಗಳೂರು: ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಸಂಬಂಧಿಸಿದಂತೆ ಕೊನೆಗೂ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನೀಡುವುದನ್ನು ರಾಜ್ಯ ಸರ್ಕಾರ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ರಾಜ್ಯದಲ್ಲಿ ಬೈಕ್ಗಳನ್ನು ಟ್ಯಾಕ್ಸಿಗಳನ್ನಾಗಿ ಬಳಸಲು ಹೈಕೋರ್ಟ್ ಅನುಮತಿ ನೀಡಿದ್ದು, ಆ ಮೂಲಕ ಈ ಹಿಂದೆ ರಾಜ್ಯ ಸರ್ಕಾರ ವಿಧಿಸಿದ್ದ ನಿಷೇಧಕ್ಕೆ ತಡೆ ನೀಡಿದಂತಾಗಿದೆ. ಕೊನೆಗೂ ಬೈಕ್
ಬೆಂಗಳೂರಿನಲ್ಲಿ ಒರಿಜಿನಲ್ ’ಮೈಸೂರು ಮೈಲಾರಿ’ ಹೋಟೆಲ್ ಘಮಘಮ : ಎಲ್ಲಿ, ಆರಂಭ ಯಾವತ್ತಿಂದ?
Mysuru Mylari Hotel : ಮೈಸೂರಿನ ಪ್ರಸಿದ್ದ ಮೈಲಾರಿ ಹೋಟೆಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಿದ್ದಾರೆ. ಮೈಸೂರು ಹೋದಾಗ, ತಪ್ಪದೇ ಮೈಲಾರಿ ಹೋಟೆಲಿಗೆ ಹೋಗುವ ಸಿಎಂ, ಬೆಂಗಳೂರಿನಲ್ಲಿ ಇದರ ಶಾಖೆಗೆ ಚಾಲನೆಯನ್ನು ನೀಡಿದ್ದಾರೆ. ಸುಮಾರು, 87ವರ್ಷಗಳ ಇತಿಹಾಸವಿರುವ ಮೈಸೂರು ಮೈಲಾರಿ ಹೋಟೆಲ್ ಮಾಲೀಕರಿಗೆ ಶುಭವನ್ನು ಕೋರಿದ್ದಾರೆ.
ತ್ವರಿತ ನ್ಯಾಯದ ಕಲ್ಪನೆ-ಅಂತಿಮ ನ್ಯಾಯದ ಕನಸು
ವಿಕಾಸದತ್ತ ಸಾಗುತ್ತಿರುವ ಆಧುನಿಕ ಡಿಜಿಟಲ್ ಭಾರತದಲ್ಲಿ ಜಿಡಿಪಿ, ಶೇರು ಮಾರುಕಟ್ಟೆಯ ಸೂಚ್ಯಂಕಗಳು ಏರುತ್ತಿರುವ ಹಾಗೆಯೇ ಸಾಮಾಜಿಕ ಅನ್ಯಾಯಗಳೂ, ಮಹಿಳಾ-ಜಾತಿ ದೌರ್ಜನ್ಯಗಳೂ, ಅಪರಾಧಗಳೂ ಸಹ ಹೆಚ್ಚಾಗುತ್ತಿವೆ. ಸಂಸತ್ತನ್ನು ಪ್ರತಿನಿಧಿಸುವ ಜನಪ್ರತಿನಿಧಿಗಳಿಂದ ತಳಮಟ್ಟದ ಪೊಲೀಸ್ ಅಧಿಕಾರಿಗಳವರೆಗೂ ವ್ಯಾಪಿಸಿರುವ ಲೈಂಗಿಕ ದೌರ್ಜನ್ಯದ ಪ್ರಕರಣಗಳು, ನಾಗರಿಕ ಸಮಾಜವನ್ನು ತಲೆತಗ್ಗಿಸುವಂತೆ ಮಾಡುತ್ತಿವೆ. ಭಾರತೀಯ ನ್ಯಾಯಾಂಗದ ಕ್ರಿಯಾಶೀಲ ಹಸ್ತಕ್ಷೇಪ ಮತ್ತು ಸಲಹೆಗಳು ಇಲ್ಲದೆ ಹೋಗಿದ್ದರೆ, ಈ ವೇಳೆಗೆ ನಮ್ಮ ಸಮಾಜ ಲೈಂಗಿಕ ದೌರ್ಜನ್ಯಗಳ ಬೃಹತ್ ಬಯಲಿನ ಹಾಗೆ ಕಾಣುತ್ತಿತ್ತು ಎನಿಸುತ್ತಿದೆ. ಆಧುನಿಕ ನಾಗರಿಕತೆಯನ್ನು ಪ್ರತಿನಿಧಿಸುವ 21ನೇ ಶತಮಾನದ ಡಿಜಿಟಲ್ ಭಾರತ, ಈ ನಿಟ್ಟಿನಲ್ಲಿ ಅನ್ಯ ಸಮಾಜಗಳಿಗೆ ಒಂದು ನೈತಿಕ-ಮಾನವೀಯ ಮಾದರಿಯನ್ನು ಸೃಷ್ಟಿಸಬೇಕಿತ್ತು. ಆದರೆ ದಿನದಿಂದ ದಿನಕ್ಕೆ ಅತ್ಯಾಚಾರ, ಲೈಂಗಿಕ ದೌರ್ಜನ್ಯಗಳು ಸಮಾಜದ ಎಲ್ಲ ವಲಯಗಳಲ್ಲೂ, ಎಲ್ಲ ಸ್ತರಗಳಲ್ಲೂ ಹೆಚ್ಚಾಗುತ್ತಿವೆ. ಅಪರಾಧಿಕ ಜಗತ್ತು ಹಿಗ್ಗುತ್ತಲೇ ಇದೆ. ಪಶ್ಚಾತ್ತಾಪ ಅಥವಾ ಪ್ರಾಯಶ್ಚಿತ್ತದ ಪರಿವೆಯೇ ಇಲ್ಲದ ಮುಂದುವರಿದ ಸಮಾಜವೊಂದು ‘ಇಷ್ಟು ದೊಡ್ಡ ದೇಶದಲ್ಲಿ ಇವೆಲ್ಲವೂ ಸಹಜ’ ಎಂದು ಭಾವಿಸುವ ವಿಕೃತ ನಿಲುವಿಗೆ ಅಂಟಿಕೊಂಡಿದೆ. ಮಹಿಳಾ ಸಂಕುಲದ ಸ್ಥಿತಿಗತಿ ಅಮೆರಿಕದ ಜಾರ್ಜ್ಟೌನ್ ಇನ್ಸ್ಟಿಟ್ಯೂಟ್ ಫಾರ್ ವುಮೆನ್ ಪೀಸ್ ಆಂಡ್ ಸೆಕ್ಯುರಿಟಿ (GIWPS) ಮತ್ತು ನಾರ್ವೆಯ ಪೀಸ್ ರಿಸರ್ಚ್ ಇನ್ಸ್ಟಿಟ್ಯೂಟ್ ಓಸ್ಲೋ (PRIO) ಪ್ರತಿವರ್ಷ ನಡೆಸುವ ಸಮೀಕ್ಷೆಯಲ್ಲಿ ಮಹಿಳೆಯರು, ಶಾಂತಿ ಮತ್ತು ಭದ್ರತೆಯ ಸೂಚ್ಯಂಕವನ್ನು ಪ್ರಕಟಿಸಲಾಗುತ್ತದೆ. 181 ದೇಶಗಳನ್ನು ಸಮೀಕ್ಷೆ ನಡೆಸಲಾಗುತ್ತದೆ. ಈ ಸೂಚ್ಯಂಕದಲ್ಲಿ ಕಳೆದ ವರ್ಷ 128ನೇ ಸ್ಥಾನದಲ್ಲಿದ್ದ ಭಾರತ ಈಗ 131ನೇ ಸ್ಥಾನಕ್ಕೆ ಕುಸಿದಿದೆ. ಈ ಕುಸಿತಕ್ಕೆ ಗುರುತಿಸಲಾಗಿರುವ ಕಾರಣಗಳೆಂದರೆ ಲಿಂಗ ಅಸಮಾನತೆ, ಸ್ತ್ರೀ ಪುರುಷರ ನಡುವಿನ ತಾರತಮ್ಯ, ಮಹಿಳೆಯರಿಗೆ ಸೀಮಿತ ಅವಕಾಶಗಳು ಮತ್ತು ಸುರಕ್ಷಿತ ವಾತಾವರಣದ ಅಭಾವ. ಈ ಸಮೀಕ್ಷೆಯನ್ನು ದೇಶವಿರೋಧಿ ಎಂದು ಅಲ್ಲಗಳೆಯುವ ಬದಲು, ನೆಲದ ವಾಸ್ತವಗಳ ಕಡೆಗೆ ಗಮನಹರಿಸುವುದು ವಿವೇಕಯುತ ಕ್ರಮ. ಏಕೆಂದರೆ ಈ ಸಮೀಕ್ಷೆಯಲ್ಲಿ ನೀಡಿರುವ ಕಾರಣಗಳು ಅಸಂಬದ್ಧವೇನಲ್ಲ ಅಥವಾ ಭಾರತದಲ್ಲಿ ಮಹಿಳಾ ಸಮೂಹ ಎದುರಿಸುತ್ತಿರುವ ಜಟಿಲ ಸಮಸ್ಯೆಗಳಿಂದ ಭಿನ್ನವೂ ಅಲ್ಲ. ಈ ಸಂಕೀರ್ಣ ಪರಿಸ್ಥಿತಿಯಲ್ಲಿ ಆಧುನಿಕ ಸಮಾಜ ಗಮನಿಸಬೇಕಿರುವುದು ದೇಶಾದ್ಯಂತ ಪೊಕ್ಸೊ (Protection of Children from Sexual Offences) ಪ್ರಕರಣಗಳ ಹೆಚ್ಚಳ. ಅಪ್ರಾಪ್ತ ವಯಸ್ಕ ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯಗಳಿಗೆ ಪರಿಹಾರ ಒದಗಿಸುವ ಮತ್ತು ಸಂತ್ರಸ್ತರಿಗೆ ನ್ಯಾಯ ದೊರಕಿಸುವ ಈ ಕಾಯ್ದೆಯ ಅಡಿ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆಯನ್ನು ಗಮನಿಸಿದಾಗ, ಮೇಲಿನ ವರದಿಯನ್ನು ಉತ್ಪ್ರೇಕ್ಷೆ ಎಂದಾಗಲಿ, ದುರುದ್ದೇಶಪೂರಿತ ಎಂದಾಗಲಿ ತಳ್ಳಿಹಾಕಲಾಗುವುದಿಲ್ಲ. ಪೊಕ್ಸೊ ಕಾಯ್ದೆಯಡಿ ಆರೋಪಿಗಳ ಪಟ್ಟಿಯಲ್ಲಿ ರಾಜಕೀಯ ನಾಯಕರೂ, ಆಧ್ಯಾತ್ಮಿಕ ನೇತಾರರೂ, ಶಿಕ್ಷಕರೂ, ಮಠಾಧೀಶರೂ ಇರುವುದು, ಲೈಂಗಿಕ ದೌರ್ಜನ್ಯದ ವಿಸ್ತಾರ ಮತ್ತು ವ್ಯಾಪ್ತಿಯನ್ನು ಸೂಚಿಸುತ್ತದೆ. ಪೊಕ್ಸೊ ವಿಲೇವಾರಿ ಮತ್ತು ಅಂತಿಮ ನ್ಯಾಯ 2025ರಲ್ಲಿ ದೇಶಾದ್ಯಂತ ತ್ವರಿತಗತಿಯ ವಿಶೇಷ ನ್ಯಾಯಾಲಯಗಳ ಮೂಲಕ 87,754 ಪೊಕ್ಸೊ ಮೊಕದ್ದಮೆಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ವರದಿಯಾಗಿದೆ. ಇದು ನಿಜಕ್ಕೂ ಪ್ರಶಂಸಾರ್ಹ ವಿಚಾರ. ಆದರೆ ಇದೇ ವರ್ಷದಲ್ಲಿ ದಾಖಲಾಗಿರುವ ಹೊಸ ಪ್ರಕರಣಗಳ ಸಂಖ್ಯೆ 80,320. ಇದು ಏನನ್ನು ಸೂಚಿಸುತ್ತದೆ? ಹೆಣ್ಣು-ಗಂಡು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳು (ಹೆಣ್ಣು ಮಕ್ಕಳ ಪ್ರಮಾಣವೇ ಹೆಚ್ಚಾಗಿರುವುದು ವಾಸ್ತವ) ಅವ್ಯಾಹತವಾಗಿ, ನಿರ್ಭಿಡೆಯಿಂದ ನಡೆಯುತ್ತಿವೆ ಎಂದಲ್ಲವೇ? ಸರಾಸರಿ ದಿನಕ್ಕೆ 220 ಮಕ್ಕಳು ದೌರ್ಜನ್ಯಕ್ಕೊಳಗಾಗುತ್ತಿರುವುದು, ನಾಗರಿಕತೆಯನ್ನೇ ತಲೆತಗ್ಗಿಸುವಂತೆ ಮಾಡುವ ವಿದ್ಯಮಾನ ಅಲ್ಲವೇ? ಹೆಚ್ಚಿನ ಪ್ರಕರಣಗಳನ್ನು ವಿಲೇವಾರಿ ಮಾಡುವುದು ನ್ಯಾಯಾಂಗದ ದಕ್ಷತೆ ಮತ್ತು ಕಾರ್ಯಕ್ಷಮತೆಯ ದ್ಯೋತಕವೇನೋ ಹೌದು. ಆದರೆ ಅಷ್ಟೇ ಪ್ರಮಾಣದ ದೌರ್ಜನ್ಯ ಪ್ರಕರಣಗಳು ದಾಖಲಾಗುತ್ತಿರುವುದು ಏನನ್ನು ಸೂಚಿಸುತ್ತದೆ? ಸಮಾಜದ ನೈತಿಕ ಪಾತಾಳ ಕುಸಿತವನ್ನಲ್ಲವೇ? ಸಮಾಧಾನಕರ ಅಂಶ ಎಂದರೆ ಕೊನೆಗೂ ಭಾರತದ ನ್ಯಾಯಾಲಯಗಳು ಬಾಕಿ ಉಳಿದಿದ್ದ ಪೊಕ್ಸೊ ಮೊಕದ್ದಮೆಗಳನ್ನು ವಿಲೇವಾರಿ ಮಾಡಿವೆ. ಇದು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವಿರುದ್ಧ ಸಮರದಲ್ಲಿ ಸಣ್ಣ ಗೆಲುವು ಎಂದೇ ವ್ಯಾಖ್ಯಾನಿಸಲಾಗುತ್ತಿದೆ. ಈ ಗೆಲುವಿನ ಸಂಭ್ರಮವನ್ನು ಬದಿಗಿಟ್ಟು, ಸ್ವವಿಮರ್ಶಾತ್ಮಕವಾಗಿ ನೋಡಿದಾಗ, ಹೆಚ್ಚಿನ ಸಂಖ್ಯೆಯ ಮಕ್ಕಳು (ಹೆಣ್ಣು ಮಕ್ಕಳು) ದೌರ್ಜನ್ಯಕ್ಕೊಳಗಾಗುತ್ತಿರುವುದು ಅನೇಕ ಕಾರ್ಯಕ್ಷೇತ್ರ ಆಧಾರಿತ ವರದಿಗಳಿಂದ ದಾಖಲಾಗಿವೆ. ಇನ್ನೂ ಆಘಾತಕಾರಿ ಅಂಶವೆಂದರೆ, ಪೊಕ್ಸೊ ಪ್ರಕರಣಗಳ ವಿಲೇವಾರಿ ದೌರ್ಜನ್ಯಕ್ಕೊಳಗಾದ ಮಕ್ಕಳ ದೃಷ್ಟಿಯಲ್ಲಿ ಅಂತಿಮ ನ್ಯಾಯ ಆಗುವುದಿಲ್ಲ. ದೌರ್ಜನ್ಯ ಎಸಗಿದವರಿಗೆ ಶಿಕ್ಷೆಯಾಗುವುದು ನಿರ್ಣಾಯಕವಾಗುತ್ತದೆ. ದುರದೃಷ್ಟವಶಾತ್, ಪೊಕ್ಸೊ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಸತತವಾಗಿ ಕುಸಿಯುತ್ತಲೇ ಇದೆ. ಕುಸಿಯುತ್ತಿರುವ ಶಿಕ್ಷೆಯ ಪ್ರಮಾಣ ರಾಷ್ಟ್ರೀಯ ಅಪರಾಧ ದಾಖಲೆಗಳ ಮಂಡಳಿ (NCRB) ಮಾಹಿತಿಯ ಅನುಸಾರ 2019ರಲ್ಲಿ ಪೊಕ್ಸೊ ಪ್ರಕರಣಗಳ ಶಿಕ್ಷೆಯ ಪ್ರಮಾಣ ಶೇ. 34.9ರಷ್ಟಿದ್ದುದು 2024ರಲ್ಲಿ ಶೇ. 19ಕ್ಕೆ ಇಳಿದಿದೆ. ಅಂದರೆ ಶೇ. 81ರಷ್ಟು ಪ್ರಕರಣಗಳಲ್ಲಿ ಆರೋಪಿಗಳು ಬಿಡುಗಡೆಯಾಗಿದ್ದಾರೆ. 2012ರಲ್ಲಿ ಪೊಕ್ಸೊ ಕಾಯ್ದೆ ಜಾರಿಯಾದ ನಂತರ ಈ ಶಿಕ್ಷೆಯ ಪ್ರಮಾಣ ಹೆಚ್ಚಾಗಿರುವುದು ಕಾಣುವುದೇ ಇಲ್ಲ. 2012ಕ್ಕೂ ಮುನ್ನ ಜಾರಿಯಲ್ಲಿದ್ದ ಭಾರತೀಯ ದಂಡ ಸಂಹಿತೆಯ ನಿಯಮಗಳಲ್ಲಿ, ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳದ ಅಪರಾಧಗಳನ್ನು ಗಂಭೀರವಾಗಿ ಪರಿಗಣಿಸುತ್ತಿರಲಿಲ್ಲ. ಈ ದೃಷ್ಟಿಯಿಂದಲೇ ಜಾರಿಯಾದ ಪೊಕ್ಸೊ ಕಾಯ್ದೆ ನಿಗದಿತ ಅವಧಿಯಲ್ಲಿ ವಿಚಾರಣೆ ನಡೆಸುವ, ದೌರ್ಜನ್ಯಕ್ಕೊಳಗಾದ ಮಕ್ಕಳ ಮಾತುಗಳಿಗೆ ಕಿವಿಗೊಡುವ ಸ್ನೇಹಪರ ವಾತಾವರಣವನ್ನು ಸೃಷ್ಟಿಸಿತ್ತು. ಭಾರತದಲ್ಲಿ ಇಂದು 770 ತ್ವರಿತ ಗತಿ ನ್ಯಾಯಾಲಯಗಳಿವೆ. (Fast Track Courts) ಅವುಗಳ ಪೈಕಿ 440 ನ್ಯಾಯಾಲಯಗಳು ಪೊಕ್ಸೊ ಪ್ರಕರಣಗಳಿಗೆ ಸೀಮಿತಿವಾಗಿವೆ. 2019ರಲ್ಲಿ ಸುಪ್ರೀಂಕೋರ್ಟ್ ಆದೇಶದ ಮೇರೆಗೆ ನಿರ್ಭಯಾ ನಿಧಿಯಿಂದ 1,952 ಕೋಟಿ ರೂ.ಗಳನ್ನು ಹೂಡುವ ಮೂಲಕ ಸ್ಥಾಪಿಸಲಾದ ಈ ನ್ಯಾಯಾಲಯಗಳು 2025ರ ವೇಳೆಗೆ 3,50,685 ಪ್ರಕರಣಗಳನ್ನು ವಿಲೇವಾರಿ ಮಾಡಿವೆ. ಸರಾಸರಿ ತಿಂಗಳಿಗೆ ಹತ್ತು ಪ್ರಕರಣಗಳನ್ನು ಈ ನ್ಯಾಯಾಲಯಗಳು ನಿರ್ವಹಿಸುತ್ತವೆ. ಈ ಸಾಧನೆಯ ಹೊರತಾಗಿಯೂ ಶಿಕ್ಷೆಯ ಪ್ರಮಾಣದಲ್ಲಿ ಹೆಚ್ಚಳ ಕಾಣುವುದಿಲ್ಲ. ಮತ್ತೊಂದು ನಿರ್ಣಾಯಕ ಸಂಗತಿ ಎಂದರೆ, ಹೆಚ್ಚಿನ ಪ್ರಕರಣಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡುವುದೆಂದರೆ, ಅಷ್ಟೇ ಪ್ರಮಾಣದ ಲೈಂಗಿಕ ದೌರ್ಜನ್ಯಗಳು ಮಕ್ಕಳ ಮೇಲೆ ನಡೆಯುತ್ತಿವೆ ಎಂದೂ ಅರ್ಥ ಅಲ್ಲವೇ? ಒಂದು ನಾಗರಿಕತೆಯನ್ನು ಕಾಡಬೇಕಾದ ಪ್ರಶ್ನೆ ಇದು. ನ್ಯಾಯ ವಿತರಣೆ, ಮೊಕದ್ದಮೆಗಳ ವಿಲೇವಾರಿ ಮತ್ತು ಅಂತಿಮ ನ್ಯಾಯ ಈ ಮೂರು ಅಂಶಗಳ ನಡುವಿನ ಸೂಕ್ಷ್ಮ ವ್ಯತ್ಯಾಸವನ್ನು ಗುರುತಿಸಬೇಕಿದೆ. ವಿಲೇವಾರಿ ಪ್ರಮಾಣ ಹೆಚ್ಚಾಗಿದೆ ಎಂದ ಮಾತ್ರಕ್ಕೆ ಎಲ್ಲಾ ಸಂತ್ರಸ್ತ ಮಕ್ಕಳಿಗೂ ಅಂತಿಮ ನ್ಯಾಯ ದೊರೆತಿದೆ ಎಂದರ್ಥವಲ್ಲ. ಅಪರಾಧ ಎಸಗಿ ನಿರಪರಾಧಿಗಳಾಗಿ ಹೊರಬಂದು, ಶಾಸನ ಸಭೆಗಳನ್ನು ಅಲಂಕರಿಸಿರುವ ಅನೇಕ ನಾಯಕರನ್ನು ಸಮಾಜ ಸಹಿಸಿಕೊಳ್ಳುತ್ತಲೇ ಇದೆ. ನ್ಯಾಯಾಂಗದ ದೃಷ್ಟಿಯ ‘ನಿರಪರಾಧಿತ್ವ’ ಸಂತ್ರಸ್ತರ ದೃಷ್ಟಿಯಲ್ಲಿ ಅನ್ಯಾಯದಂತೆ ಕಾಣುತ್ತದೆ. ಏಕೆಂದರೆ ನ್ಯಾಯ ವಿತರಣೆಯಲ್ಲಿ ಸಾಕ್ಷ್ಯಾಧಾರಗಳು ಮುಖ್ಯವಾಗುತ್ತವೆ. ದೌರ್ಜನ್ಯಕ್ಕೊಳಗಾಗಿರುವ, ಅತ್ಯಾಚಾರಕ್ಕೆ ಈಡಾಗಿರುವ ಹೆಣ್ಣು ಮಕ್ಕಳ ನೋವು, ಯಾತನೆ, ಅಪಮಾನ ಮತ್ತು ಕಳಂಕ ಇದಾವುದೂ ಸಾಕ್ಷಿ ಎನಿಸಿಕೊಳ್ಳುವುದಿಲ್ಲ. ಸಾಕ್ಷ್ಯಾಧಾರಗಳನ್ನು ನಾಶಪಡಿಸುವ ಶಕ್ತಿ ಸಾಮರ್ಥ್ಯ ಹೊಂದಿರುವ ಪ್ರಬಲ ಸಮಾಜ ಅಮಾಯಕ ಮಕ್ಕಳನ್ನು ವಂಚಿಸುವುದು ಕಷ್ಟವೇನಲ್ಲ. NCRB ದತ್ತಾಂಶಗಳನ್ನೇ ಗಮನಿಸಿದಾಗ ಅರ್ಥವಾಗುವ ವಾಸ್ತವ ಎಂದರೆ ಪ್ರಕರಣಗಳು ಶೀಘ್ರ ವಿಲೇವಾರಿ ಆಗುತ್ತಿವೆ ಎಂದರೆ ಶಿಕ್ಷೆಯ ಪ್ರಮಾಣ ಕಡಿಮೆಯಾಗಿರುತ್ತದೆ. ಹೆಚ್ಚಿನ ಸಂಖ್ಯೆಯ ಆರೋಪಿಗಳು ಮುಕ್ತವಾಗಿ ತಲೆ ಎತ್ತಿ ಓಡಾಡುತ್ತಿರುತ್ತಾರೆ, ಕೆಲವರು ಮಾತ್ರ ಶಿಕ್ಷೆಗೊಳಗಾಗಿರುತ್ತಾರೆ. ಪೊಕ್ಸೊ ಪ್ರಕರಣಗಳಲ್ಲಿ ಸಾಕ್ಷಿ ಹೇಳಬೇಕಾದ ಮಕ್ಕಳಿಗೆ ಅವಶ್ಯವಾದ ಕೆಲವು ಸೌಕರ್ಯಗಳನ್ನು ಒದಗಿಸುವುದು, ವಿಲೇವಾರಿಯ ಪ್ರಮಾಣಕ್ಕಿಂತಲೂ ಮುಖ್ಯವಾದದ್ದು. ತರಬೇತಿ ಹೊಂದಿದ ಬೆಂಬಲ ವ್ಯಕ್ತಿಗಳು, ಸೂಕ್ಷ್ಮ ಸಂವೇದನೆಯ ಪೊಲೀಸ್ ಮತ್ತು ವಕೀಲರು, ವಿಚಾರಣೆ ನಡೆಯುತ್ತಿರುವ ಸಮಯದಲ್ಲಿ ಮಕ್ಕಳ ಕಾಳಜಿ ವಹಿಸುವ ಮತ್ತು ಪರಿಹಾರ ಒದಗಿಸುವ ಮಕ್ಕಳ ಕಲ್ಯಾಣ ಸಮಿತಿಗಳು ಇವೆಲ್ಲವೂ ಮುಖ್ಯವಾಗುತ್ತವೆ. ಈ ರಕ್ಷಾ ಕವಚಗಳು ಕಾರ್ಯಗತವಾಗದೆ ಇದ್ದರೆ ಶಿಕ್ಷೆಯ ಪ್ರಮಾಣ ಸಹಜವಾಗಿ ಕಡಿಮೆಯಾಗುತ್ತದೆ. ಸಂತ್ರಸ್ತ ಮಕ್ಕಳು ಅನಾಥರಾದಾಗ 2021ರಲ್ಲಿ ಸುಪ್ರೀಂಕೋರ್ಟ್ ಸೂಚಿಸಿರುವಂತೆ ಪೊಕ್ಸೊ ಕಾಯ್ದೆಯ ಸೆಕ್ಷನ್ 39ರ ಅನ್ವಯ, ವಿಚಾರಣೆಗೊಳಗಾಗಿರುವ ಮಕ್ಕಳಿಗೆ ನೆರವಾಗಲು ಬೆಂಬಲ ವ್ಯಕ್ತಿಗಳನ್ನು ನೇಮಿಸುವುದು ರಾಜ್ಯ ಸರಕಾರಗಳ ಬಾಧ್ಯತೆ. ಮಕ್ಕಳ ಹಕ್ಕುಗಳ ರಾಷ್ಟ್ರೀಯ ಆಯೋಗ 2024ರಲ್ಲೂ ಈ ನಿಯಮಗಳನ್ನು ವಿವರಿಸಲಾಗಿದೆ. ಈ ಬೆಂಬಲ ವ್ಯಕ್ತಿಗಳು ವಿಚಾರಣೆಯ ಸಂದರ್ಭದಲ್ಲಿ ಸಂತ್ರಸ್ತ ಮಕ್ಕಳಿಗೆ ಸಲಹೆ, ಮಾರ್ಗದರ್ಶನ ನೀಡಬೇಕಾಗುತ್ತದೆ. ಆದರೆ ಅನೇಕ ರಾಜ್ಯಗಳಲ್ಲಿ ಈ ಬೆಂಬಲ ವ್ಯಕ್ತಿಗಳ ನೇಮಕಾತಿಯಲ್ಲೇ ಕೊರತೆ ಕಂಡುಬರುತ್ತದೆ. ಈ ಕೊರತೆಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರಗಳ ನಿರ್ಲಕ್ಷ್ಯ, ಪೊಕ್ಸೊ ಸಂತ್ರಸ್ತ ಮಕ್ಕಳಿಗೆ ನ್ಯಾಯ ದೊರಕಿಸುವಲ್ಲಿ ಬಹುದೊಡ್ಡ ಅಡ್ಡಿಯಾಗುತ್ತಿದೆ. ಪೊಕ್ಸೊ ಪ್ರಕರಣಗಳನ್ನು ಸಮರ್ಪಕವಾಗಿ ನಿರ್ವಹಿಸುವ ದೃಷ್ಟಿಯಿಂದ ಸುಪ್ರೀಂಕೋರ್ಟ್ 2025ರ ಆದೇಶವೊಂದರ ಮೂಲಕ, ಪ್ರತಿಯೊಂದು ಪೊಲೀಸ್ ಠಾಣೆಯಲ್ಲೂ ಕಾನೂನೇತರ ಸ್ವಯಂ ಸೇವಕರನ್ನು (Para legal volunteers) ನೇಮಿಸಲು ಸೂಚಿಸಿತ್ತು. ಆದರೆ ಯಾವ ರಾಜ್ಯದಲ್ಲೂ ಇದು ಪರಿಪೂರ್ಣವಾಗಿ ಜಾರಿಯಾಗಿಲ್ಲ. ಆಂಧ್ರ ಪ್ರದೇಶ 919 ಠಾಣೆಗಳ ಪೈಕಿ 42ರಲ್ಲಿ ಮಾತ್ರ ಸ್ವಯಂ ಸೇವಕರ ನೇಮಕವಾಗಿದೆ. ತಮಿಳುನಾಡಿನ 1,577 ಠಾಣೆಗಳ ಪೈಕಿ ಒಂದರಲ್ಲೂ ನೇಮಕ ಮಾಡಲಾಗಿಲ್ಲ. ಸ್ವಯಂ ಸೇವಕರು ಇಲ್ಲದಿರುವುದರಿಂದ ಸಂತ್ರಸ್ತರ ಕುಟುಂಬದ ಸದಸ್ಯರು ಭೀತಿಯಿಂದಲೇ ಪೊಲೀಸ್ ಠಾಣೆಗೆ ಹೋಗುತ್ತಾರೆ, ನಿರ್ಲಕ್ಷಿಸಲ್ಪಡುತ್ತಾರೆ ಅಥವಾ ಒತ್ತಡಕ್ಕೆ ಒಳಪಡುತ್ತಾರೆ. ಉನ್ನಾವೊ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರು ಮೊಕದ್ದಮೆ ದಾಖಲಿಸುವುದಕ್ಕೇ ಸಾಕಷ್ಟು ವಿಳಂಬ ಮಾಡಿದ್ದರು, ಎಫ್ಐಆರ್ ದಾಖಲಿಸಿದ ನಂತರವೂ ಹಲವು ದಿನಗಳ ಕಾಲ ಮೊಕದ್ದಮೆ ದಾಖಲಿಸಿರಲಿಲ್ಲ. ಬದಲಾಗಿ ಸಂತ್ರಸ್ತ ಕುಟುಂಬಕ್ಕೆ ಬೆದರಿಕೆ ಹಾಕಿರುವುದು ವರದಿಯಾಗಿದೆ. 2022ರಲ್ಲಿ ಉತ್ತರಪ್ರದೇಶದ ಲಲಿತ್ಪುರದಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ 13 ವರ್ಷದ ಬಾಲಕಿಯ ಮೇಲೆ ಪೊಲೀಸ್ ಠಾಣೆಯಲ್ಲೇ ಹಲ್ಲೆ ನಡೆಸಲಾಗಿದ್ದು, ಕೆಲವು ಎನ್ಜಿಒಗಳ ಪ್ರವೇಶದ ನಂತರವೇ ಎಫ್ಐಆರ್ ದಾಖಲಿಸಲಾಗಿದೆ. ಈ ಠಾಣೆಗಳಲ್ಲಿ ಸ್ವಯಂ ಸೇವಕರು ಇದ್ದಿದ್ದಲ್ಲಿ, ಇಂತಹ ಅನ್ಯಾಯಗಳನ್ನು ತಡೆಗಟ್ಟಬಹುದಿತ್ತು. ನ್ಯಾಯಾಲಯಗಳು ಇಂತಹ ಸಂತ್ರಸ್ತ ಮಕ್ಕಳಿಗೆ ಶಿಕ್ಷಣ ಮತ್ತು ಆರೋಗ್ಯದ ವೆಚ್ಚಗಳನ್ನು ಸರಿದೂಗಿಸಲು ಮಧ್ಯಂತರ ಪರಿಹಾರವನ್ನೂ ಸೂಚಿಸಬಹುದು. ಆದರೆ ಬಹುತೇಕ ಪ್ರಕರಣಗಳಲ್ಲಿ ಅಂತಿಮ ತೀರ್ಪಿನವರೆಗೂ ಕಾಯಲಾಗುತ್ತದೆ. ಇಂತಹ ಪ್ರಕರಣಗಳಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳೇ ಹೆಚ್ಚಿನ ಪ್ರಮಾಣದಲ್ಲಿ ದೌರ್ಜನ್ಯಗಳಿಗೆ ಒಳಗಾಗುವುದರಿಂದ, ಈ ಕುಟುಂಬಗಳು ತಮಗೆ ನ್ಯಾಯಾಲಯ ನೀಡುವ ಪರಿಹಾರದ ಮೊತ್ತಕ್ಕಿಂತಲೂ ಹೆಚ್ಚಿನ ಹಣವನ್ನು ವಕೀಲರಿಗೆ, ಸಾರಿಗೆ ಖರ್ಚುಗಳಿಗೆ ಒದಗಿಸಬೇಕಾಗುತ್ತದೆ. ಬಡ ಕುಟುಂಬಗಳು, ಆರ್ಥಿಕವಾಗಿ ಅಂಚಿನಲ್ಲಿರುವ ಕುಟುಂಬಗಳು ಮತ್ತು ದಿನಗೂಲಿ ನೌಕರಿ ಮಾಡುವವರು ತಮ್ಮ ನೌಕರಿಯನ್ನೇ ತೊರೆದು, ಕೋರ್ಟ್ಗೆ ಅಲೆಯುವ ಸನ್ನಿವೇಶಗಳೂ ಸಾಕಷ್ಟಿವೆ. ಹಾಗಾಗಿ ಸಂತ್ರಸ್ತ ಮಕ್ಕಳಿಗೆ ಮತ್ತು ಕುಟುಂಬಗಳಿಗೆ ಸೂಕ್ತ ಬೆಂಬಲ ನೀಡದೆ ಇದ್ದಲ್ಲಿ, ಮೊಕದ್ದಮೆ ಎಷ್ಟೇ ತ್ವರಿತಗತಿಯಲ್ಲಿ ನಡೆದರೂ ಅದು ಮಕ್ಕಳ ಪಾಲಿಗೆ ನ್ಯಾಯ ವಂಚನೆಯೇ ಆಗುತ್ತದೆ. ಭಾರತ ವಿಕಾಸದ ಹಾದಿಯಲ್ಲಿ ಸಾಗುತ್ತಿದೆ. ಆದರೆ ಸಾಮಾಜಿಕ ನೆಲೆಯಲ್ಲಿ, ನೈತಿಕತೆಯ ನೆಲೆಯಲ್ಲಿ ಭಾರತೀಯ ಸಮಾಜ ಕಮರಿ ಹೋಗುತ್ತಿದೆ. ವಿದೇಶಿ ಸಂಸ್ಥೆಗಳ ಸಮೀಕ್ಷಾ ವರದಿ, ಸೂಚ್ಯಂಕಗಳನ್ನು ಕೇಂದ್ರ ಸರಕಾರ ಎಷ್ಟೇ ಅಲ್ಲಗಳೆದರೂ, ನೆಲಮಟ್ಟದ ವಾಸ್ತವಗಳು ಭಯಾನಕವಾಗಿರುವುದನ್ನು ಅಲ್ಲಗಳೆಯಲಾಗುವುದಿಲ್ಲ. ಈ ಪರಿಸ್ಥಿತಿಗೆ ಕಾರಣ ನಮ್ಮ ಸಮಾಜದಲ್ಲಿ ಅಂತರ್ಗತವಾಗಿರುವ ಅಸೂಕ್ಷ್ಮತೆ ಮತ್ತು ರೂಢಿಗತವಾಗಿರುವ ವ್ಯಕ್ತಿ ಆರಾಧನೆ. ಹಾಗಾಗಿಯೇ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಧಾರ್ಮಿಕ, ಆಧ್ಯಾತ್ಮಿಕ ನೇತಾರರನ್ನೂ ಬೆಂಬಲಿಸಿ ನಿಲ್ಲುವ ಒಂದು ಸಮಾಜ ನಮ್ಮ ನಡುವೆ ಸೃಷ್ಟಿಯಾಗಿದೆ. ಈ ನಿರ್ಲಿಪ್ತ ಸಮಾಜ ತನ್ನ ಸಂಕುಚಿತ ದೃಷ್ಟಿಯ ಪೊರೆಯನ್ನು ಕಳಚಿಕೊಂಡು, ತೆರೆದ ಕಣ್ಣಿಂದ, ತೆರೆದ ಹೃದಯದಿಂದ, ನೋವುಂಡ ಜೀವಗಳೆಡೆಗೆ ನೋಡುವಂತಾದರೆ, ನಾವೂ ಸಹ ‘ನಾಗರಿಕರು’ ಎಂದು ಬೆನ್ನು ತಟ್ಟಿಕೊಳ್ಳಬಹುದು. (ಈ ಲೇಖನದ ಮಾಹಿತಿ ದತ್ತಾಂಶಗಳಿಗೆ ಆಧಾರ: 12 ಜನವರಿ 2026 ರಂದು ಪ್ರಕಟವಾದ ‘ದ ಹಿಂದೂ’ನ ರಾಹುಲ್ ವರ್ಮಾ ಲೇಖನ)
ಶಿವಮೊಗ್ಗ | ಶಿಮುಲ್ ಡೇರಿ ಬಳಿ ಮತ್ತೆ ಭೂಕುಸಿತ; ವಾಹನ ಸಂಚಾರ ಅಸ್ತವ್ಯಸ್ತ
ಚತುಷ್ಪಥ ಕಾಮಗಾರಿ ವಿಳಂಬ ಆರೋಪ; ಸಾರ್ವಜನಿಕರ ಆಕ್ರೋಶ
14 ಸಾವಿರ ಹುದ್ದೆಗಳನ್ನು ಕಡಿತಗೊಳಿಸಲು ಮುಂದಾದ Amazon
ವೆಚ್ಚ ಕಡಿತವಲ್ಲ, ಸಂಸ್ಕೃತಿ ಪರಿಷ್ಕರಣೆ ಎಂದ ಇ-ಕಾಮರ್ಸ್ ದೈತ್ಯ
ಸದನದಲ್ಲಿ ಸದ್ದಾಗಲಿದೆ ಅಬಕಾರಿ ಹಗರಣ: ಚರ್ಚೆಗೆ ಅವಕಾಶ ಕೋರಿದ ಬಿಜೆಪಿ, ಸಚಿವರ ರಾಜೀನಾಮೆಗೆ ಪಟ್ಟು ಹಿಡಿಯಲು ಪ್ಲ್ಯಾನ್
ಅಬಕಾರಿ ಇಲಾಖೆಯಲ್ಲಿ 2.30 ಕೋಟಿ ರೂ. ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸದನದಲ್ಲಿ ಗದ್ದಲ ಎಬ್ಬಿಸಲು ಸಜ್ಜಾಗಿದೆ. ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಲು ಬಿಜೆಪಿ ನಿರ್ಧರಿಸಿದ್ದು, ಈ ಹಗರಣ ಸದನದಲ್ಲಿ ಭಾರೀ ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ. ಸಚಿವರು ತಮ್ಮ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದ್ದು, ನಾನೇಕೆ ರಾಜೀನಾಮೆ ನೀಡಲಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
16 ಸಾವಿರ ಗಡಿ ಸಮೀಪಿಸಿದ ಚಿನ್ನದ ಬೆಲೆ: ಇಂದಿನ ದರವೆಷ್ಟು?
ಹೊಸದಿಲ್ಲಿ: ಗುರುವಾರ ಹಠಾತ್ ಕುಸಿದಿದ್ದ ಚಿನ್ನದ ದರ ಶುಕ್ರವಾರ ಮಾರುಕಟ್ಟೆ ಆರಂಭವಾಗುತ್ತಲೇ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಅಂತಾರಾಷ್ಟ್ರೀಯ ಮಟ್ಟದ ವ್ಯವಹಾರಗಳು ಮತ್ತು ಡಾಲರ್ ಮುಂದೆ ದುರ್ಬಲವಾಗಿರುವ ರೂಪಾಯಿ ಮೌಲ್ಯವು ಚಿನ್ನದ ಬೆಲೆ ಏರಿಕೆಗೆ ಕಾರಣವಾಗುತ್ತಿದೆ. ಒಂದು ವರದಿಯ ಪ್ರಕಾರ ಅಮೆರಿಕದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಧಿಕಾರ ವಹಿಸಿದಂದಿನಿಂದ ಚಿನ್ನದ ಬೆಲೆ ಶೇ 70ರಷ್ಟು ಏರಿಕೆ ಕಂಡಿದೆ. ಅಂತಾರಾಷ್ಟ್ರೀಯ ವ್ಯವಹಾರಗಳಲ್ಲಿ ಟ್ರಂಪ್ ನೀತಿ ನಿರೂಪಣೆಯ ವಿಧಾನ, ಅವರ ಅಸಾಂಪ್ರದಾಯಿಕ ರಾಜಕೀಯ ವಿಧಾನವು ಮತ್ತು ಕಡಿಮೆ ಬಡ್ಡಿದರಗಳು ಚಿನ್ನ ಮತ್ತು ಬೆಳ್ಳಿಯ ಮೌಲ್ಯ ಏರಿಕೆಗೆ ಕಾರಣವಾಗಿದೆ. ಮಾರುಕಟ್ಟೆ ತಜ್ಞರು ಹೇಳುವ ಪ್ರಕಾರ ಡಾಲರ್ ದುರ್ಬಲಗೊಳ್ಳುತ್ತಿದ್ದಂತೆ ಚಿನ್ನಕ್ಕೆ ಬೆಂಬಲ ಸಿಕ್ಕಿದೆ. ಡಾಲರ್ ಒಂದು ವಾರದಲ್ಲಿ ಅದರ ಕನಿಷ್ಠ ಮಟ್ಟಕ್ಕೆ ಹಿಂದೆ ಸರಿದಿದೆ. ಭೌಗೋಳಿಕ- ರಾಜಕೀಯದ ಚಂಚಲತೆ ಚಿನ್ನದ ದರದ ಮೇಲೆ ಪರಿಣಾಮ ಬೀರುತ್ತಿದೆ. ಶುದ್ಧ ಚಿನ್ನದ ದರ ಶುಕ್ರವಾರ ಹತ್ತು ಗ್ರಾಂಗೆ 5,400 ರೂ. ಏರಿಕೆ ಕಂಡಿದೆ. ಇದು ಸಾರ್ವಕಾಲಿಕ ಗರಿಷ್ಠ ಏರಿಕೆಯಾಗಿದೆ. ಆಭರಣ ಚಿನ್ನದ ದರವೂ ಹತ್ತು ಗ್ರಾಂಗೆ 4,950 ರಷ್ಟು ಏರಿಕೆ ಕಂಡಿದೆ. ಮಂಗಳೂರಿನಲ್ಲಿ ಇಂದಿನ ಚಿನ್ನದ ದರವೆಷ್ಟು? ಶುಕ್ರವಾರ ಜನವರಿ 23ರಂದು ಬೆಳಗಿನ 11 ಗಂಟೆಯ ವಹಿವಾಟಿನಲ್ಲಿ ಮಂಗಳೂರಿನಲ್ಲಿ ಚಿನ್ನದ ಬೆಲೆ ಮತ್ತೆ ದಿಢೀರ್ ಏರಿಕೆ ಕಂಡಿದೆ. ಬೆಳಗಿನ ವಹಿವಾಟಿನಲ್ಲಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ದರ 15,971 (+540) ರೂ. ಗೆ ಏರಿಕೆ ಕಂಡಿದೆ. ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ದರ 14,640 (+495) ರೂ. ಮತ್ತು ಒಂದು ಗ್ರಾಂ 18 ಕ್ಯಾರೆಟ್ ಚಿನ್ನದ ದರ 11,978 (+405) ರೂ. ಬೆಲೆಗೆ ತಲುಪಿದೆ. ಭಾರತದಲ್ಲಿ ಇಂದು ಚಿನ್ನದ ದರ 24 ಕ್ಯಾರೆಟ್ ಚಿನ್ನದ 1 ಗ್ರಾಂ ಬೆಲೆ ಇಂದು 15,971 ರೂ. ಆಗಿದ್ದು, ನಿನ್ನೆ 15,431 ರೂ. ಇತ್ತು. ಗುರುವಾರಕ್ಕೆ ಹೋಲಿಸಿದರೆ ಇಂದು ಪ್ರತೀ ಗ್ರಾಂನಲ್ಲಿ 540 ರೂ. ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ 1 ಗ್ರಾಂ ಬೆಲೆ ಇಂದು 14,640 ರೂ. ಆಗಿದ್ದು, ಗುರುವಾರ 14,145 ರೂ. ಇತ್ತು. ನಿನ್ನೆಗೆ ಹೋಲಿಸಿದರೆ ಇಂದು 495 ರೂ. ಏರಿಕೆಯಾಗಿದೆ. ಸಾಮಾನ್ಯವಾಗಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನಕ್ಕೆ ಹೋಲಿಸಿದರೆ 18 ಕ್ಯಾರೆಟ್ ಚಿನ್ನ ಕಡಿಮೆ ಇರುತ್ತದೆ. ಇಂದು 18 ಕ್ಯಾರೆಟ್ ಚಿನ್ನದ 1 ಗ್ರಾಂ ಚಿನ್ನದ ಬೆಲೆ 11,978 ರೂ. ಆಗಿದ್ದು, ಗುರುವಾರ 11,573 ರೂ. ಇತ್ತು. ನಿನ್ನೆಗೆ ಹೋಲಿಸಿದರೆ ಇಂದು 405 ರೂ. ಏರಿಕೆಯಾಗಿದೆ.
ಕರ್ನಾಟಕ ಹೈಕೋರ್ಟ್ ಬೈಕ್ಗಳನ್ನು ಟ್ಯಾಕ್ಸಿಗಳಾಗಿ ಬಳಸಲು ಮಹತ್ವದ ಆದೇಶ ನೀಡಿದೆ. ಬೈಕ್ ಟ್ಯಾಕ್ಸಿ ನಿಷೇಧಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ರದ್ದುಗೊಳಿಸಿ, ಏಕಸದಸ್ಯ ಪೀಠದ ಆದೇಶವನ್ನು ವಜಾಗೊಳಿಸಲಾಗಿದೆ. ಇದರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಹಸಿರು ನಿಶಾನೆ ದೊರೆತಿದೆ. ಬೈಕ್ ಮಾಲೀಕರು ಹಾಗೂ ಅಗ್ರಿಗೇಟರ್ಗಳು ಪರವಾನಗಿ ಕೋರಿ ಅರ್ಜಿ ಸಲ್ಲಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.
ಒಂದೇ ದಿನದಲ್ಲಿ ಮತ್ತೆ ಏರಿಕೆ ಹಾದಿಗೆ ಮರಳಿದ ಚಿನ್ನ-ಬೆಳ್ಳಿ, 10%ವರೆಗೆ ಭರ್ಜರಿ ಜಿಗಿತ ಕಂಡ ಇಟಿಎಫ್ಗಳು!
ನಿನ್ನೆ ಭಾರಿ ಕುಸಿತ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆ ಶುಕ್ರವಾರದಂದು ಬಲವಾದ ಚೇತರಿಕೆ ಕಂಡಿದೆ. ಚಿನ್ನದ ಬೆಲೆ ಎಂಸಿಎಕ್ಸ್ನಲ್ಲಿ 10 ಗ್ರಾಂಗೆ 1.59 ಲಕ್ಷ ರೂ. ಮತ್ತು ಬೆಳ್ಳಿ ಕೆಜಿಗೆ 3.39 ಲಕ್ಷ ರೂ.ಗಳ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿವೆ. ಅಮೆರಿಕ ಮತ್ತು ಯುರೋಪ್ ನಡುವಿನ ರಾಜಕೀಯ ಉದ್ವಿಗ್ನತೆ ಹಾಗೂ ಡಾಲರ್ ಮೌಲ್ಯದ ಕುಸಿತ ಈ ಏರಿಕೆಗೆ ಕಾರಣವಾಗಿದೆ. ಇದರ ಪರಿಣಾಮವಾಗಿ ಸಿಲ್ವರ್ ಮತ್ತು ಗೋಲ್ಡ್ ಇಟಿಎಫ್ಗಳು ಶೇ. 10ರವರೆಗೆ ಲಾಭ ದಾಖಲಿಸಿವೆ.
ಕೆನಡಾ ಮತ್ತು ಅಮೆರಿಕ ನಡುವೆ ಮತ್ತಷ್ಟು ಬಿರುಕು, ಕೆನಡಾ ಪ್ರಧಾನಿಗೆ ನೀಡಿದ್ದ ಆಹ್ವಾನ ಹಿಂಪಡೆದ ಟ್ರಂಪ್!
ಅಮೆರಿಕ ಮತ್ತು ಕೆನಡಾ ನಡುವೆ ಎಲ್ಲಾ ಸರಿಯಾಗಿಲ್ಲ ಅನ್ನೋದು ಇನ್ನೊಮ್ಮೆ ಇಡೀ ಜಗತ್ತಿಗೆ ಈಗ ಗೊತ್ತಾಗಿದೆ. ಒಂದು ಕಡೆ ಕೆನಡಾ ಭೂಮಿಯನ್ನು ಅಮೆರಿಕದ ನಕ್ಷೆಗೆ ಸೇರಿಸಿ ಫೋಟೋ ಅಪ್ಲೋಡ್ ಮಾಡಿದ್ದ ಟ್ರಂಪ್ ಅವರ ವಿರುದ್ಧ ಕೆನಡಾ ಅಸಮಾಧಾನ ಹೊಂದಿದೆ. ಈಗಿನ ಪರಿಸ್ಥಿತಿಯಲ್ಲಿ ಭಾರಿ ದೊಡ್ಡ ತಿಕ್ಕಾಟಗಳು ನಡೆಯುತ್ತಿದ್ದು, ಜಾಗತಿಕವಾಗಿ ಟ್ರಂಪ್ ಅವರ ನಿರ್ಧಾರಗಳ ವಿರುದ್ಧ ಆಕ್ರೋಶ ಕೂಡ
ಬೆಂಗಳೂರಿನಲ್ಲಿ ಶುರುವಾಯ್ತು ಮೈಸೂರಿನ 'ಮೈಲಾರಿ' ಘಮ; ಹೋಟೆಲ್ ಉದ್ಘಾಟಿಸಿ, ದೋಸೆ ಆರ್ಡರ್ ಮಾಡಿದ ಸಿದ್ದರಾಮಯ್ಯ
ಬೆಂಗಳೂರು: ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ 'ಒರಿಜಿನಲ್ ವಿನಾಯಕ ಮೈಲಾರಿ-1938' (Old Original Vinayaka Mylari) ಹೋಟೆಲ್ನ ಬೆಂಗಳೂರು ಶಾಖೆಗೆ ಇಂದು(ಶುಕ್ರವಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಇಂದಿರಾನಗರದ 80 ಅಡಿ ರಸ್ತೆಯಲ್ಲಿ ನಡೆದ ಸಮಾರಂಭದಲ್ಲಿ ಹೋಟೆಲ್ ಉದ್ಘಾಟಿಸಿದ ಬಳಿಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖುದ್ದಾಗಿ ಕುಳಿತು ಪ್ರಸಿದ್ಧ ಬೆಣ್ಣೆ ಖಾಲಿ ದೋಸೆ
ಚಾಮರಾಜನಗರ | ಕೌಟುಂಬಿಕ ಕಲಹ: ಪೊಲೀಸರ ಎದುರೇ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ ಪತಿ
ಚಾಮರಾಜನಗರ: ಗಂಡನ ಕುಡಿತದ ಚಟ ಹಾಗೂ ಕೌಟುಂಬಿಕ ಕಲಹದಿಂದ ಬೇಸತ್ತು ಪತ್ನಿ ತವರು ಮನೆಗೆ ಸೇರಿದ ಹಿನ್ನೆಲೆಯಲ್ಲಿ, ಆಕೆಯನ್ನು ಮರಳಿ ಕರೆತರುವಂತೆ ಗಲಾಟೆ ನಡೆಸಿದ ಪತಿ ಪೊಲೀಸರ ಎದುರೇ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಕಾಮಗೆರೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮಧುವನಹಳ್ಳಿ ಗ್ರಾಮದ ಲೋಕೇಶ್ (45) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಕುಡಿತ ಹಾಗೂ ನಿರಂತರ ಜಗಳದಿಂದ ಬೇಸತ್ತ ಪತ್ನಿ ಕಾಮಗೆರೆಯಲ್ಲಿರುವ ತವರು ಮನೆಗೆ ತೆರಳಿದ್ದಳು. ಅಲ್ಲಿಗೂ ಬಂದ ಲೋಕೇಶ್ ಪತ್ನಿಯನ್ನು ಮನೆಗೆ ಬರುವಂತೆ ಒತ್ತಾಯಿಸಿ ಗಲಾಟೆ ನಡೆಸಿದ್ದಾನೆ ಎನ್ನಲಾಗಿದೆ. ಪತ್ನಿ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಕೊಳ್ಳೇಗಾಲ ಪೊಲೀಸರು ಲೋಕೇಶ್ಗೆ ಬುದ್ಧಿ ಹೇಳಿ ವಾಪಸ್ಸು ಹೋಗುವಂತೆ ಸೂಚಿಸಿದ್ದಾರೆ. ಈ ವೇಳೆ ಪೊಲೀಸರ ಎದುರೇ ಬ್ಲೇಡ್ನಿಂದ ತನ್ನ ಕತ್ತನ್ನು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ. ಗಾಯಗೊಂಡ ಲೋಕೇಶ್ನನ್ನು ಮೊದಲು ಕೊಳ್ಳೇಗಾಲ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಷೇಧ ತೆರವು | ಅಗತ್ಯ ಷರತ್ತುಗಳನ್ನು ವಿಧಿಸಿ ಸರಕಾರ ಅನುಮತಿ ನೀಡಬಹುದು : ಹೈಕೋರ್ಟ್
ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ನಿಷೇಧಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿದ್ದ ಏಕಸದಸ್ಯ ನ್ಯಾಯಪೀಠದ ಆದೇಶ ರದ್ದುಪಡಿಸಿರುವ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಬೈಕ್ಗಳನ್ನು ಸಾರಿಗೆ ವಾಹನಗಳಾಗಿ (ಟ್ಯಾಕ್ಸಿ) ಬಳಸಲು ಅಗತ್ಯ ಷರತ್ತುಗಳನ್ನು ವಿಧಿಸಿ ಸರ್ಕಾರ ಅನುಮತಿ ನೀಡಬಹುದು ಎಂದು ಆದೇಶಿಸಿದೆ. ರಾಜ್ಯ ಸರ್ಕಾರ ಮೋಟಾರು ವಾಹನ ಕಾಯ್ದೆಯಡಿ ಸೂಕ್ತ ಮಾರ್ಗಸೂಚಿ ಮತ್ತು ನಿಯಮಗಳನ್ನು ರೂಪಿಸುವವರೆಗೆ ಬೈಕ್ ಟ್ಯಾಕ್ಸಿಗಳು ಕಾರ್ಯಾಚರಣೆ ನಡೆಸುವಂತಿಲ್ಲ ಎಂಬ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಅಗ್ರಿಗೇಟರ್ ಸಂಸ್ಥೆಗಳಾದ ಓಲಾ, ಉಬರ್, ರ್ಯಾಪಿಡೊ ಮತ್ತಿತರರು ಸಲ್ಲಿಸಿದ್ದ ಮೇಲ್ಮನವಿಗಳನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ಪುರಸ್ಕರಿಸಿದೆ. ಹೈಕೋರ್ಟ್ ಆದೇಶವೇನು? : ದ್ವಿಚಕ್ರ ವಾಹನ ಮಾಲಕರು ತಮ್ಮ ವಾಹನಗಳನ್ನು ಸಾರಿಗೆ ವಾಹನ (Transport Vehicle) ಎಂದು ನೋಂದಾಯಿಸಲು ಅರ್ಜಿ ಸಲ್ಲಿಸಲು ಮುಕ್ತರಾಗಿದ್ದಾರೆ. ಇಂತಹ ಅರ್ಜಿಗಳನ್ನು ಕಾನೂನು ಪ್ರಕಾರ ಪರಿಗಣಿಸಿ, ವಾಹನ ಮಾಲಕರಿಗೆ ಸಾರಿಗೆ ವಾಹನವಾಗಿ ನೋಂದಣಿ ನೀಡಲು ಮತ್ತು ಕಾಂಟ್ರಾಕ್ಟ್ ಕ್ಯಾರೇಜ್ ಆಗಿ ಕಾರ್ಯನಿರ್ವಹಿಸಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಪ್ರಸ್ತುತ ನಿಯಮಾವಳಿಗಳನ್ನು ಪರಿಶೀಲಿಸಬಹುದಾದರೂ, ದ್ವಿಚಕ್ರ ವಾಹನಗಳನ್ನು ಸಾರಿಗೆ ವಾಹನ ಅಥವಾ ಕಾಂಟ್ರಾಕ್ಟ್ ಕ್ಯಾರೇಜ್ ಆಗಿ ಬಳಸಲು ಸಾಧ್ಯವಿಲ್ಲ ಎಂಬ ಕಾರಣ ನೀಡಿ ಅನುಮತಿ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶದಲ್ಲಿ ಹೇಳಿದೆ. ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 74(2)ರ ಪ್ರಕಾರ ಅಗತ್ಯವೆಂದು ಕಂಡುಬರುವ ಷರತ್ತುಗಳನ್ನು ವಿಧಿಸಬಹುದು. ಅಗ್ರಿಗೇಟರ್ಗಳು ಸಹ ಹೊಸದಾಗಿ ಅರ್ಜಿ ಸಲ್ಲಿಸಲು ಸ್ವತಂತ್ರರಾಗಿದ್ದು, ಅಂತಹ ಅರ್ಜಿಗಳನ್ನು ಈ ಆದೇಶದಲ್ಲಿ ನ್ಯಾಯಾಲಯದ ಅವಲೋಕನಗಳು ಹಾಗೂ ಕಾನೂನಿನ ಚೌಕಟ್ಟಿನಡಿಯಲ್ಲಿ ಪರಿಗಣಿಸಬೇಕು ಎಂದು ತಿಳಿಸಿರುವ ಹೈಕೋರ್ಟ್, ಏಕಸದಸ್ಯ ನ್ಯಾಯಪೀಠದ ಆದೇಶ ರದ್ದುಪಡಿಸಿ, ಮೇಲ್ಮನವಿಗಳನ್ನು ಮಾನ್ಯ ಮಾಡಿದೆ. ವಿಸ್ತೃತ ತೀರ್ಪು ಲಭ್ಯವಾಗಬೇಕಿದೆ.
Government Vs Karnataka Governor : ಕರ್ನಾಟಕದ ಇತಿಹಾಸದಲ್ಲಿ ತೀರಾ ಅಪರೂಪ ಎನ್ನುವಂತೆ, ವಿಧಾನಮಂಡಲದ ಅಧಿವೇಶನದಲ್ಲಿ ನಡೆದ ವಿದ್ಯಮಾನ ಸಾಂವಿಧಾನಿಕ ಬಿಕ್ಕಟ್ಟಿಗೆ ಕಾರಣವಾಗಿದೆ. ಸರ್ಕಾರದ ಭಾಷಣವನ್ನು ಓದಲು ಒಪ್ಪದ ರಾಜ್ಯಪಾಲರು, ನಾಲ್ಕು ಸಾಲನ್ನು ಒಂದೇ ನಿಮಿಷದಲ್ಲಿ ಓದಿ ಪೂರ್ಣಗೊಳಿಸಿದರು. ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಈ ವಿದ್ಯಮಾನಕ್ಕೆ ತಮ್ಮ ಮೂಗಿನ ನೇರಕ್ಕೆ ಪ್ರತಿಕ್ರಿಯೆಯನ್ನು ನೀಡಿದ್ದಾರೆ.
ಇಂದೋರ್ನಲ್ಲಿ ಕಲುಷಿತ ನೀರಿನಿಂದ ತಪ್ಪದ ಕಂಟಕ; 22 ಮಂದಿ ಅಸ್ವಸ್ಥ, ಹೈಕೋರ್ಟ್ ಮೆಟ್ಟಿಲೇರಿದ ಕೇಸ್
ಇಂದೋರ್ನಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟವರ ಘಟನೆ ಹೊಸವರ್ಷದ ಆರಂಭದಲ್ಲಿ ದಾಖಲಾಗಿತ್ತು. ಸದ್ಯ ಸಮಸ್ಯೆ ಮತ್ತೆ ಮರುಕಳಿಸಿದೆ. ಗುರುವಾರ ರಾತ್ರಿ ಇಪ್ಪತ್ತೆರಕ್ಕೂ ಹೆಚ್ಚು ಮಂದಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಈ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಡಳಿತ ಹೇಳಿದೆ. ಗ್ರಾಮಗಳಲ್ಲಿ ವೈದ್ಯಕೀಯ ತಂಡ ಬೀಡುಬಿಟ್ಟಿದ್ದು, ತಪಾಸಣೆ ನಡೆಸುತ್ತಿದೆ
ಬಹುಕಾಲದಿಂದ ನಡೆಯುತ್ತಿರುವ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ಕೊನೆಗೊಳಿಸಲು ಮಹತ್ವದ ಹೆಜ್ಜೆ ಇಡಲಾಗಿದ್ದು, ಯುದ್ದಕಾಲ ಸಮಾಪ್ತಿಯಾಗುವ ಸಮಯ ಹತ್ತಿರವಾಗಿದೆ.ಅಧಿಕಾರಕ್ಕೆ ಬಂದಾಗಿನಿಂದಲೂ ಅಮೆರಿಕಾ ಅಧ್ಯಕ್ಷ ಟ್ರಂಪ್ ಯದ್ದನಿಲ್ಲಿಸಲು ಪ್ರಯತ್ನ ನಡೆಸುತ್ತಿದ್ದು, ಸದ್ಯ ಯುಎಇಯಲ್ಲಿ ರಷ್ಯಾ, ಅಮೆರಿಕಾ ಮತ್ತು ಉಕ್ರೇನ್ ನಡುವೆ ಮೊದಲ ತ್ರಿಪಕ್ಷೀಯ ಸಭೆ ನಡೆಯಲಿದೆ ಎಂದು ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಘೋಷಿಸಿದ್ದು,ಈ ಸಭೆಯು ಯುದ್ಧವನ್ನು ಕೊನೆಗೊಳಿಸುವ ಭರವಸೆ ಮೂಡಿಸಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಯುದ್ದ ಆರಂಭದಿಂದ ಇಲ್ಲಿತನಕ ಉಕ್ರೇನ್ ಬೆಂಬಲಕ್ಕೆ ನಿಂತಿದ್ದ ನ್ಯಾಟೋ ವಿರುದ್ದ ತಿರುಗಿಬಿದ್ದಿದ್ದು, ಯುರೋಪ್ ರಾಷ್ಟ್ರಗಳ ವಿರುದ್ದ ಟೀಕಾಪ್ರಹಾರ ನಡೆಸಿದ್ದು, ಯುರೋಪ್ ದೇಶಗಳು ಅಮೆರಿಕಾದ ಮೇಲೆ ತಮ್ಮ ಅವಲಂಬನೆಯನ್ನು ಬಿಟ್ಟು, ತಮ್ಮನ್ನು ರಕ್ಷಿಸುವ ಸಾಮರ್ಥ್ಯವುಳ್ಳ ತಮ್ಮದೇ ಸ್ವಂತ ರಕ್ಷಣ ಪಡೆಗಳನ್ನು ಸಿದ್ದಪಡಿಸಿಕೊಂಡರೆ ಉತ್ತಮ ಎಂದಿದ್ದಾರೆ.
Madhya Pradesh| ಇಂದೋರ್ನಲ್ಲಿ ಕಲುಷಿತ ನೀರು ಕುಡಿದು ಮತ್ತೆ 22 ಮಂದಿ ಅಸ್ವಸ್ಥ
ಇಂದೋರ್ : ದೇಶದ ಅತ್ಯಂತ ಸ್ವಚ್ಛ ನಗರಿ ಎಂಬ ಹಿರಿಮೆಗೆ ಪಾತ್ರವಾಗಿರುವ ಇಂದೋರ್ ನಲ್ಲಿ ಕಲುಷಿತ ನೀರು ಕುಡಿದು ಕನಿಷ್ಠ 23 ಮಂದಿ ಮೃತಪಟ್ಟು, ಹಲವರು ಆಸ್ಪತ್ರೆಗೆ ದಾಖಲಾದ ಘಟನೆಯ ಬೆನ್ನಿಗೇ, ಮತ್ತೊಂದು ಕಲುಷಿತ ನೀರು ಸೇವನೆ ಪ್ರಕರಣದಲ್ಲಿ 22 ಮಂದಿ ಅಸ್ವಸ್ಥಗೊಂಡಿದ್ದಾರೆ ಎಂದು indiatoday.in ವರದಿ ಮಾಡಿದೆ. ಇತ್ತೀಚಿನ ಪ್ರಕರಣಗಳು ಮುಖ್ಯವಾಗಿ ಮಹೋವ್ ಪ್ರದೇಶದಿಂದ ವರದಿಯಾಗಿದ್ದು, ಕಲುಷಿತ ನೀರು ಸೇವಿಸಿ 22 ಮಂದಿ ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗಿದೆ. ಈ ಪೈಕಿ, 9 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರಿಗೆ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಅಕ್ಕಪಕ್ಕದ ಪ್ರದೇಶಗಳಿಂದಲೂ ಇಂತಹುದೇ ಪ್ರಕರಣಗಳು ವರದಿಯಾಗುತ್ತಿರುವುದರಿಂದ, ಅಸ್ವಸ್ಥಗೊಂಡವರ ಸಂಖ್ಯೆ 25 ಅನ್ನು ಮೀರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತೊಂದರೆಗೊಳಗಾದ ಪ್ರದೇಶಗಳಿಂದ ಈ ಸಂಬಂಧ ದೂರುಗಳು ಕೇಳಿ ಬರುತ್ತಿದ್ದಂತೆಯೇ, ಜಿಲ್ಲಾಡಳಿತವು ಗುರುವಾರ ಮಧ್ಯರಾತ್ರಿ ಕಾರ್ಯಪ್ರವೃತ್ತವಾಗಿದೆ. ರೋಗಿಗಳನ್ನು ಭೇಟಿಯಾಗಲು ಹಾಗೂ ಪರಿಹಾರ ಕಾರ್ಯಾಚರಣೆಯ ಮೇಲುಸ್ತುವಾರಿ ವಹಿಸಲು ಜಿಲ್ಲಾಧಿಕಾರಿ ಶಿವಂ ವರ್ಮ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ತೊಂದರೆಗೀಡಾಗಿರುವ ಸ್ಥಳಗಳಲ್ಲಿ ಆರೋಗ್ಯ ತಂಡಗಳನ್ನೂ ನಿಯೋಜಿಸಲಾಗಿದೆ. ಶನಿವಾರ ಬೆಳಿಗ್ಗೆಯಿಂದ ತೊಂದರೆಗೊಳಗಾಗಿರುವ ಸ್ಥಳದಲ್ಲಿ ಬೀಡು ಬಿಟ್ಟಿರುವ ಆರೋಗ್ಯ ಇಲಾಖೆಯ ತಂಡ, ತಕ್ಷಣದ ವೈದ್ಯಕೀಯ ನೆರವನ್ನು ಒದಗಿಸುತ್ತಿದೆ. ಕಲುಷಿತ ನೀರು ಸೇವನೆಯಿಂದ ತೊಂದರೆಗೀಡಾಗಿರುವ ಅಕ್ಕಪಕ್ಕದ ಸ್ಥಳಗಳಲ್ಲಿನ ಪರಿಸ್ಥಿತಿಯ ಮೇಲೆ ಈ ತಂಡ ನಿಗಾ ವಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಾಮರಾಜನಗರ | ಲಾರಿ-ಬೈಕ್ ಢಿಕ್ಕಿ : ಸವಾರ ಸ್ಥಳದಲ್ಲಿ ಮೃತ್ಯು
ಚಾಮರಾಜನಗರ : ಲಾರಿ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಸವಾರರೊಬ್ಬರು ಸ್ಥಳದಲ್ಲಿ ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ಸಮೀಪದ ಆರ್.ಎಸ್ ದೊಡ್ಡಿ ಬಳಿಯ ಅಗ್ನಿಶಾಮಕ ಠಾಣೆಯ ಬಳಿ ನಡೆದಿದೆ. ಮೃತರನ್ನು ಬೆಂಗಳೂರಿನ ಲಗ್ಗೆರೆ ನಿವಾಸಿ ಗಣೇಶ (30) ಎಂದು ಗುರುತಿಸಲಾಗಿದೆ. ಗಣೇಶ ಅವರು ಸ್ನೇಹಿತ ನಾಗರಾಜು ಅವರೊಂದಿಗೆ ಬೈಕ್ನಲ್ಲಿ ರಾತ್ರಿ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ವೇಳೆ, ಅಗ್ನಿಶಾಮಕ ಠಾಣೆ ಸಮೀಪ ಎದುರು ದಿಕ್ಕಿನಿಂದ ಬಂದ ಲಾರಿ ಬೈಕ್ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಗಣೇಶ ಸ್ಥಳದಲ್ಲೇ ಮೃತಪಟ್ಟಿದ್ದು, ನಾಗರಾಜು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳು ನಾಗರಾಜು ಅವರನ್ನು ಕೊಳ್ಳೇಗಾಲ ಸರ್ಕಾರಿ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
ಹೊಸದಿಲ್ಲಿ: ಭಾರತ ಸರಕಾರ ಸಮನ್ಸ್ ಜಾರಿ ಮಾಡುವ ಅಮೆರಿಕದ ಅಧಿಕಾರವನ್ನು ಪ್ರಶ್ನಿಸಿದ ಹಿನ್ನೆಲೆಯಲ್ಲಿ, ಯುಎಸ್ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಕಮಿಷನ್ (ಎಸ್ಇಸಿ) ರಾಜತಾಂತ್ರಿಕ ಮಾರ್ಗಗಳನ್ನು ಬದಿಗೊತ್ತಿ, ಉದ್ಯಮಿ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ಅವರಿಗೆ ಅಮೆರಿಕ ಮೂಲದ ವಕೀಲರು ಮತ್ತು ಇಮೇಲ್ ಮೂಲಕ ಸಮನ್ಸ್ ಜಾರಿ ಮಾಡಲು ಅನುಮತಿ ನೀಡುವಂತೆ ಫೆಡರಲ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ. ನ್ಯೂಯಾರ್ಕ್ನ ಪೂರ್ವ ಜಿಲ್ಲೆಯ ಯುಎಸ್ ಜಿಲ್ಲಾ ನ್ಯಾಯಾಲಯಕ್ಕೆ ಬುಧವಾರ (ಜನವರಿ 21) ಸಲ್ಲಿಸಿದ ಅರ್ಜಿಯಲ್ಲಿ, ‘ಹೇಗ್ ಕನ್ವೆನ್ಷನ್ ಮೂಲಕ ಸಮನ್ಸ್ ಸೇವೆ ಪೂರ್ಣಗೊಳ್ಳಲಿದೆ ಎಂದು ನಿರೀಕ್ಷಿಸುವುದಿಲ್ಲ’ ಎಂದು ಎಸ್ಇಸಿ ಸ್ಪಷ್ಟಪಡಿಸಿದೆ. ಇದರೊಂದಿಗೆ, ಫೆಬ್ರವರಿ 2025ರಿಂದ ಅನುಸರಿಸಲಾಗುತ್ತಿದ್ದ ಒಪ್ಪಂದ ಆಧಾರಿತ ರಾಜತಾಂತ್ರಿಕ ಮಾರ್ಗವನ್ನು ಆಯೋಗ ಅಧಿಕೃತವಾಗಿ ಕೈಬಿಟ್ಟಿದೆ. ಯುಎಸ್ ಹೂಡಿಕೆದಾರರಿಂದ ಸುಮಾರು 175 ಮಿಲಿಯನ್ ಡಾಲರ್ ಸಂಗ್ರಹಿಸಿದ, 750 ಮಿಲಿಯನ್ ಡಾಲರ್ ಬಾಂಡ್ ಕೊಡುಗೆಗೆ ಸಂಬಂಧಿಸಿದ ಆರೋಪಗಳ ಕುರಿತು ಅದಾನಿಗಳಿಗೆ ಔಪಚಾರಿಕವಾಗಿ ತಿಳಿಸಲು ಎಸ್ಇಸಿ ಕಳೆದ 14 ತಿಂಗಳುಗಳಿಂದ ನಡೆಸುತ್ತಿದ್ದ ಪ್ರಯತ್ನದಲ್ಲಿ ಈ ಕ್ರಮ ಮಹತ್ವದ ತಿರುವಾಗಿ ಪರಿಗಣಿಸಲಾಗಿದೆ. ಈ ಅವಧಿಯಲ್ಲಿ ಭಾರತದ ಕಾನೂನು ಮತ್ತು ನ್ಯಾಯ ಸಚಿವಾಲಯದೊಂದಿಗೆ ನಡೆದ ಪತ್ರ ವ್ಯವಹಾರಗಳು ಯಾವುದೇ ಫಲಿತಾಂಶ ನೀಡಿಲ್ಲ ಎಂದು ಆಯೋಗ ತಿಳಿಸಿದೆ. ಹೇಗ್ ಕನ್ವೆನ್ಷನ್ ಮೂಲಕ ಸೇವೆ ಅಸಾಧ್ಯ ‘ಸಚಿವಾಲಯದ ನಿಲುವು ಹಾಗೂ ಹೇಗ್ ಕನ್ವೆನ್ಷನ್ ಅಡಿಯಲ್ಲಿ ಸೇವೆ ಸಲ್ಲಿಸಲು ಈಗಾಗಲೇ ಕಳೆದ ಸಮಯವನ್ನು ಪರಿಗಣಿಸಿದರೆ, ಆ ಮಾರ್ಗದ ಮೂಲಕ ಸಮನ್ಸ್ ಸೇವೆ ಪೂರ್ಣಗೊಳ್ಳಲಿದೆ ಎಂಬ ನಿರೀಕ್ಷೆ ಇಲ್ಲ,’ ಎಂದು ಎಸ್ಇಸಿ ನ್ಯಾಯಾಲಯಕ್ಕೆ ತಿಳಿಸಿದೆ. ಭಾರತೀಯ ಅಥವಾ ಅಂತರರಾಷ್ಟ್ರೀಯ ಕಾನೂನಿನಡಿ ಸಮನ್ಸ್ ಜಾರಿಗೊಳಿಸಲು ಬೇರೆ ಯಾವುದೇ ಪರಿಣಾಮಕಾರಿ ಪರ್ಯಾಯ ವಿಧಾನಗಳು ತಿಳಿದಿಲ್ಲವೆಂದೂ ಹೇಳಿದೆ. ನವೆಂಬರ್ 4ರಂದು ಭಾರತೀಯ ಕಾನೂನು ಮತ್ತು ನ್ಯಾಯ ಸಚಿವಾಲಯದಿಂದ ಬಂದ ಹೊಸ ಹಾಗೂ ಅನಿರೀಕ್ಷಿತ ಆಕ್ಷೇಪಣೆಯನ್ನು ಉಲ್ಲೇಖಿಸುವ ಪತ್ರಗಳನ್ನು ಎಸ್ಇಸಿ ಸ್ವೀಕರಿಸಿತ್ತು. ಈ ಪತ್ರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯ ಜೊತೆ ಲಗತ್ತಿಸಲಾಗಿದೆ. ಪತ್ರಗಳಲ್ಲಿ, ಎಸ್ಇಸಿ ಜಾರಿ ಕ್ರಮಗಳನ್ನು ಹೇಗೆ ಆರಂಭಿಸಬೇಕು ಎಂಬುದನ್ನು ನಿಯಂತ್ರಿಸುವ ನಿಯಮ 5(b) ಅನ್ನು ಉಲ್ಲೇಖಿಸಲಾಗಿದ್ದು, ಸಂಬಂಧಿತ ಸಮನ್ಸ್ಗಳು ಆ ನಿಯಮದ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ಸಚಿವಾಲಯ ಹೇಳಿದೆ. ‘ಆಕ್ಷೇಪಣೆ ಆಧಾರರಹಿತ’ – ಎಸ್ಇಸಿ ಜನವರಿ 21ರಂದು ಸಲ್ಲಿಸಿದ ದಾಖಲೆಗಳಲ್ಲಿ ಎಸ್ಇಸಿ ಈ ಆಕ್ಷೇಪಣೆಯನ್ನು ಆಧಾರರಹಿತ ಎಂದು ಕರೆದಿದೆ. ‘ಈ ಆಕ್ಷೇಪಣೆ ಸೇವಾ ಕಾರ್ಯವಿಧಾನಗಳನ್ನು ನಿಯಂತ್ರಿಸುವ ಸಮಾವೇಶಕ್ಕೆ ಸಂಬಂಧಪಟ್ಟದ್ದೇ ಅಲ್ಲ. ಇದು ಎಸ್ಇಸಿಗೆ ಜಾರಿ ಕ್ರಮ ಕೈಗೊಳ್ಳುವ ಅಧಿಕಾರದ ಪ್ರಶ್ನೆಯೂ ಅಲ್ಲ,’ ಎಂದು ಆಯೋಗ ಸ್ಪಷ್ಟಪಡಿಸಿದೆ. ಹೇಗ್ ಕನ್ವೆನ್ಷನ್ ಪ್ರಕ್ರಿಯೆಗೆ ಯಾವುದೇ ನೇರ ಪರಿಣಾಮವಿಲ್ಲದಿದ್ದರೂ, ಸಚಿವಾಲಯವು ‘ಎಸ್ಇಸಿಗೆ ಸಮನ್ಸ್ ಜಾರಿಗೊಳಿಸಲು ಅಧಿಕಾರವಿಲ್ಲ’ ಎಂಬ ಸೂಚನೆ ನೀಡಿದಂತೆ ಕಾಣುತ್ತಿದೆ ಎಂದು ಆಯೋಗ ತನ್ನ ಅರ್ಜಿಯಲ್ಲಿ ಹೇಳಿದೆ. ಭಾರತದ ಕಾನೂನು ಮತ್ತು ನ್ಯಾಯ ಸಚಿವಾಲಯವು ದಾಖಲೆಗಳನ್ನು ನೀಡಲು ನಿರಾಕರಿಸಿರುವುದು ಇದು ಎರಡನೇ ಬಾರಿ. ಮೊದಲು ಏಪ್ರಿಲ್ 2025ರಲ್ಲಿ ನಿರಾಕರಿಸಲಾಗಿತ್ತು. ಅಗತ್ಯವಿಲ್ಲ ಎಂದು ಎಸ್ಇಸಿ ಹೇಳಿದ್ದ ಮುದ್ರೆ ಹಾಗೂ ಸಹಿಗಳ ಕೊರತೆಯನ್ನು ಕಾರಣವಾಗಿ ಉಲ್ಲೇಖಿಸಲಾಗಿತ್ತು. ಇಮೇಲ್ ಹಾಗೂ ವಕೀಲರ ಮೂಲಕ ಸೇವೆಗೆ ಬೇಡಿಕೆ ಈ ಹಿನ್ನೆಲೆಯಲ್ಲಿ, ಫೆಡರಲ್ ಸಿವಿಲ್ ಪ್ರೊಸೀಜರ್ ನಿಯಮಗಳ ನಿಯಮ 4(f)(3) ಅಡಿಯಲ್ಲಿ, ಸಮನ್ಸ್ ಮತ್ತು ದೂರನ್ನು ಅದಾನಿಗಳಿಗೆ ಅವರ ಅಮೆರಿಕ ಮೂಲದ ವಕೀಲರ ಮೂಲಕ ಹಾಗೂ ಅವರ ವ್ಯವಹಾರ ಇಮೇಲ್ ವಿಳಾಸಗಳಿಗೆ ಕಳುಹಿಸಲು ಅನುಮತಿ ನೀಡುವಂತೆ ಎಸ್ಇಸಿ ನ್ಯಾಯಾಲಯವನ್ನು ಕೋರಿದೆ. ಇದರಿಂದ ‘ಪ್ರಕರಣದ ಬಗ್ಗೆ ಈಗಾಗಲೇ ತಿಳಿದಿರುವ ಪ್ರತಿವಾದಿಗಳಿಗೆ ಪರಿಣಾಮಕಾರಿ ನೋಟಿಸ್ ಸಿಗುತ್ತದೆ’ ಎಂದು ಆಯೋಗ ವಾದಿಸಿದೆ. ಲಂಚ ಮತ್ತು ವಂಚನೆ ಆರೋಪ ನವೆಂಬರ್ 20, 2024ರಂದು, ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್ನ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರಾದ ಸಾಗರ್ ಅದಾನಿ ವಿರುದ್ಧ ಎಸ್ಇಸಿ ಸಿವಿಲ್ ದೂರು ದಾಖಲಿಸಿತ್ತು. ಭಾರತೀಯ ಸರಕಾರಿ ಅಧಿಕಾರಿಗಳಿಗೆ ನೂರಾರು ಮಿಲಿಯನ್ ಡಾಲರ್ ಮೌಲ್ಯದ ಲಂಚ ಪಾವತಿಗಳು ಅಥವಾ ಭರವಸೆಗಳನ್ನು ಒಳಗೊಂಡ ಯೋಜನೆಯನ್ನು ರೂಪಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಈ ಆರೋಪಗಳು ಸೆಪ್ಟೆಂಬರ್ 2021ರ ಅದಾನಿ ಗ್ರೀನ್ ಬಾಂಡ್ ಕೊಡುಗೆಯಿಂದ ಉದ್ಭವವಾಗಿದ್ದು, ಅದರಲ್ಲಿ ಯುಎಸ್ ಹೂಡಿಕೆದಾರರಿಂದ 175 ಮಿಲಿಯನ್ ಡಾಲರ್ ಗಿಂತ ಹೆಚ್ಚು ಸಂಗ್ರಹಿಸಲಾಗಿತ್ತು. ಆಫರಿಂಗ್ ದಾಖಲೆಗಳಲ್ಲಿ ಭ್ರಷ್ಟಾಚಾರ ಮತ್ತು ಲಂಚ ವಿರೋಧಿ ಕ್ರಮಗಳ ಬಗ್ಗೆ ನೀಡಿದ ಹೇಳಿಕೆಗಳು ‘ಮೂಲಭೂತವಾಗಿ ಸುಳ್ಳು ಅಥವಾ ದಾರಿತಪ್ಪಿಸುವಂತಿದ್ದವು’ ಎಂದು ಎಸ್ಇಸಿ ಆರೋಪಿಸಿದೆ. ಅದೇ ದಿನ, ನ್ಯೂಯಾರ್ಕ್ನ ಪೂರ್ವ ಜಿಲ್ಲೆಯ ಯುಎಸ್ ಅಟಾರ್ನಿ ಕಚೇರಿಯು ಸಮಾನಾಂತರ ಕ್ರಿಮಿನಲ್ ಮೊಕದ್ದಮೆ ಹೂಡಿ, ಸೆಕ್ಯುರಿಟೀಸ್ ವಂಚನೆ, ವೈರ್ ವಂಚನೆ ಮತ್ತು ಪಿತೂರಿ ಆರೋಪಗಳನ್ನು ಹೊರಿಸಿದೆ. ನವೆಂಬರ್ 21, 2024ರಂದು ಅದಾನಿ ಗ್ರೂಪ್ ಆರೋಪಗಳನ್ನು ‘ಆಧಾರರಹಿತ’ ಎಂದು ಹೇಳಿ, ‘ಸಾಧ್ಯವಿರುವ ಎಲ್ಲಾ ಕಾನೂನು ಮಾರ್ಗಗಳನ್ನು’ ಅನುಸರಿಸುವುದಾಗಿ ಹೇಳಿಕೆ ನೀಡಿತ್ತು. ಸೀಲ್ ವಿವಾದ, ಮುಂದುವರಿದ ಮೌನ ಎಸ್ಇಸಿ ಫೆಬ್ರವರಿ 17, 2025ರಂದು ಸಿವಿಲ್ ಅಥವಾ ವಾಣಿಜ್ಯ ವಿಷಯಗಳಲ್ಲಿ ನ್ಯಾಯಾಂಗ ಮತ್ತು ಕಾನೂನುಬಾಹಿರ ದಾಖಲೆಗಳ ವಿದೇಶಿ ಸೇವೆ ಕುರಿತ ಹೇಗ್ ಸಮಾವೇಶದ ಅನ್ವಯ ಭಾರತದ ಕೇಂದ್ರ ಪ್ರಾಧಿಕಾರವಾದ ಕಾನೂನು ಮತ್ತು ನ್ಯಾಯ ಸಚಿವಾಲಯಕ್ಕೆ ಸಮನ್ಸ್ ಸೇವಾ ವಿನಂತಿಗಳನ್ನು ಸಲ್ಲಿಸಿತ್ತು. ಅವುಗಳನ್ನು ಅಹಮದಾಬಾದ್ನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ರವಾನಿಸಲಾಗಿತ್ತು. ಆದರೆ ಏಪ್ರಿಲ್ 16, 2025ರಂದು, ‘ಸೀಲ್ ಮತ್ತು ಸಹಿಗಳ ಕೊರತೆ’ ಉಲ್ಲೇಖಿಸಿ ಸಚಿವಾಲಯವು ವಿನಂತಿಗಳನ್ನು ಕಾರ್ಯಗತಗೊಳಿಸಲು ನಿರಾಕರಿಸಿತು. ಮೇ 27ರಂದು ಮರುಸಲ್ಲಿಕೆ ಮಾಡಿದ ಬಳಿಕವೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಏಪ್ರಿಲ್ ಹಾಗೂ ಸೆಪ್ಟೆಂಬರ್ 2025ರಲ್ಲಿ ಕಳುಹಿಸಲಾದ ಅನುಸರಣೆ ಪತ್ರಗಳಿಗೂ ಉತ್ತರ ಸಿಕ್ಕಿಲ್ಲ. ವಕೀಲರು ಮತ್ತು ಇಮೇಲ್ ವಿಳಾಸಗಳು ಈ ಹಿನ್ನೆಲೆಯಲ್ಲಿ, ಎಸ್ಇಸಿ ನ್ಯಾಯಾಧೀಶ ನಿಕೋಲಸ್ ಜಿ. ಗರಾಫಿಸ್ ಅವರನ್ನು, ಅದಾನಿಯವರ ಅಮೆರಿಕದ ಕಾನೂನು ಸಂಸ್ಥೆಗಳು ಹಾಗೂ ಅವರ ವ್ಯವಹಾರ ಇಮೇಲ್ ವಿಳಾಸಗಳ ಮೂಲಕ ಸಮನ್ಸ್ ಸೇವೆಗೆ ಅನುಮತಿ ನೀಡುವಂತೆ ಮನವಿ ಮಾಡಿದೆ. ಸಾಗರ್ ಅದಾನಿ ಡಿಸೆಂಬರ್ 4, 2024ರಂದು ಹೆಕರ್ ಫಿಂಕ್ LLP ವಕೀಲರನ್ನು ನೇಮಿಸಿದ್ದರೆ, ಗೌತಮ್ ಅದಾನಿ ಕಿರ್ಕ್ಲ್ಯಾಂಡ್ ಮತ್ತು ಎಲ್ಲಿಸ್ LLP ಹಾಗೂ ಕ್ವಿನ್ ಇಮ್ಯಾನುಯೆಲ್ ಉರ್ಕ್ಹಾರ್ಟ್ ಮತ್ತು ಸುಲ್ಲಿವನ್ LLP ಸಂಸ್ಥೆಗಳನ್ನು ಉಳಿಸಿಕೊಂಡಿದ್ದಾರೆ. ವ್ಯವಹಾರಕ್ಕೆ ಬಳಸಲಾದ ಇಮೇಲ್ ವಿಳಾಸಗಳು ಸಕ್ರಿಯವಾಗಿದ್ದು ನಿರಂತರ ಮೇಲ್ವಿಚಾರಣೆಯಲ್ಲಿವೆ ಎಂಬುದಕ್ಕೆ ದಾಖಲೆಗಳಿವೆ ಎಂದು ಎಸ್ಇಸಿ ತಿಳಿಸಿದೆ. ಸಾರ್ವಜನಿಕ ಹೇಳಿಕೆಗಳು, ನಿಯಂತ್ರಕ ದಾವೆಗಳು ಹಾಗೂ ಅಮೆರಿಕದ ವಕೀಲರನ್ನು ಉಳಿಸಿಕೊಂಡಿರುವುದರಿಂದ ಪ್ರತಿವಾದಿಗಳು ಪ್ರಕರಣದ ಬಗ್ಗೆ ಸಂಪೂರ್ಣ ಅರಿವು ಹೊಂದಿದ್ದಾರೆ ಎಂದೂ ಆಯೋಗ ಹೇಳಿದೆ. ಸೌಜನ್ಯ:thewire.in
2018ರ ರೆಮೋ ಡಿಸೋಝಾ ದಂಪತಿಗೆ ಬೆದರಿಕೆ ಪ್ರಕರಣ: ಗ್ಯಾಂಗ್ ಸ್ಟರ್ ರವಿ ಪೂಜಾರಿಯ ಬಂಧನ
ಮುಂಬೈ: 2018ರಲ್ಲಿ ಬಾಲಿವುಡ್ ನೃತ್ಯ ನಿರ್ದೇಶಕ ರೆಮೋ ಡಿಸೋಝಾ ಹಾಗೂ ಅವರ ಪತ್ನಿ ಲಿಝಿಲ್ಲೆ ಡಿಸೋಝಾಗೆ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್ ಸ್ಟರ್ ರವಿ ಪೂಜಾರಿಯನ್ನು ಬಂಧಿಸಲಾಗಿದೆ. ಸೆನೆಗಲ್ ನಿಂದ ಗಡೀಪಾರಾದಾಗಿನಿಂದ ರವಿ ಪೂಜಾರಿ ಜೈಲಿನಲ್ಲಿದ್ದಾನೆ. ಆದರೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನನ್ನು ಇಲ್ಲಿಯವರೆಗೆ ಬಂಧಿಸಿರಲಿಲ್ಲ. ಗುರುವಾರ ಮುಂಬೈ ಪೊಲೀಸ್ ಇಲಾಖೆಯ ಅಪರಾಧ ವಿಭಾಗದ ಪೊಲೀಸರು ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಬಳಿಕ, ಜನವರಿ 27ವರೆಗೆ ನ್ಯಾಯಾಲಯ ಆತನನ್ನು ಪೊಲೀಸರ ವಶಕ್ಕೆ ಒಪ್ಪಿಸಿದೆ. ಸತ್ಯೇಂದ್ರ ತ್ಯಾಗಿಯ ಪರವಾಗಿ 50 ಲಕ್ಷ ರೂ. ನೀಡುವಂತೆ ಡಿಸೋಝಾ ದಂಪತಿಗಳಿಗೆ ಬೆದರಿಕೆ ಒಡ್ಡಿದ್ದ ರವಿ ಪೂಜಾರಿಯ ಹೆಸರನ್ನು ಈಗಾಗಲೇ ಈ ಪ್ರಕರಣದಲ್ಲಿ ಓರ್ವ ಆರೋಪಿಯನ್ನಾಗಿ ಸೇರ್ಪಡೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅಕ್ಟೋಬರ್ 2016ರಿಂದ ಫೆಬ್ರವರಿ 2018ರವರೆಗೆ ಪದೇ ಪದೇ ಕರೆ ಮಾಡಿದ್ದ ರವಿ ಪೂಜಾರಿ, ಡಿಸೋಝಾ ದಂಪತಿ ಹಾಗೂ ಅವರ ವ್ಯವಸ್ಥಾಪಕನಿಗೆ ಬೆದರಿಕೆ ಒಡ್ಡಿದ್ದ. ‘ಡೆತ್ ಆಫ್ ಅಮರ್’ ಚಿತ್ರವನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ಒತ್ತಡ ಹೇರಿದ್ದ ಆತ, ಈ ವಿಷಯವನ್ನು ಇತ್ಯರ್ಥ ಪಡಿಸಲು 50 ಲಕ್ಷ ರೂ. ನೀಡಬೇಕು ಎಂದು ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ. ಇದಕ್ಕೂ ಮುನ್ನ, 2018ರಲ್ಲಿ ರೆಮೊ ಡಿಸೋಝಾ ಹಾಗೂ ಸತ್ಯೇಂದ್ರ ತ್ಯಾಗಿ ‘ಅಮರ್ ಮಸ್ಟ್ ಡೈ’ ಚಿತ್ರದ ಕುರಿತು ಪರಸ್ಪರ ಒಡಂಬಡಿಕೆ ಮಾಡಿಕೊಂಡಿದ್ದರು. ಬಳಿಕ ಅವರಿಬ್ಬರ ನಡುವೆ ಹಣಕಾಸು ಹಾಗೂ ಚಿತ್ರದ ಹಕ್ಕುಸ್ವಾಮ್ಯದ ಕುರಿತು ವ್ಯಾಜ್ಯ ಉದ್ಭವವಾಗಿತ್ತು. ನಾನು ಈ ಚಿತ್ರದಲ್ಲಿ ಹೂಡಿಕೆ ಮಾಡಿದ್ದೇನೆ ಎಂದು ಹೇಳಿದ್ದ ತ್ಯಾಗಿ, ರೆಮೋ ಡಿಸೋಝಾ ನನಗೆ ನೀಡುವುದಾಗಿ ಹೇಳಿದ್ದ 5 ಕೋಟಿ ರೂ. ಅನ್ನು ನೀಡಿಲ್ಲ ಎಂದು ಆರೋಪಿಸಿದ್ದರು. ಬಳಿಕ, ತ್ಯಾಗಿ ಹಣವನ್ನು ಮರಳಿ ಪಡೆಯಲು ರವಿ ಪೂಜಾರಿಯ ಮೊರೆ ಹೋಗಿದ್ದರು ಎನ್ನಲಾಗಿದೆ. ಇದರ ಬೆನ್ನಿಗೆ ಡಿಸೋಝಾ ದಂಪತಿ ಹಾಗೂ ಅವರ ವ್ಯವಸ್ಥಾಪಕನಿಗೆ ಬೆದರಿಕೆ ಒಡ್ಡಲು ಪ್ರಾರಂಭಿಸಿದ್ದ ರವಿ ಪೂಜಾರಿ, ವಿಷಯವನ್ನು ಇತ್ಯರ್ಥ ಪಡಿಸಲು ನನಗೆ 50 ಲಕ್ಷ ರೂ. ಸುಲಿಗೆ ಮೊತ್ತ ನೀಡಬೇಕು ಎಂದು ಆಗ್ರಹಿಸಿದ್ದ ಎಂದು ಆರೋಪಿಸಲಾಗಿದೆ.
ಜನವರಿ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ
Petrol, Diesel Price: ಪೆಟ್ರೋಲ್, ಡೀಸೆಲ್ ದರದಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದರೂ, ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಜನವರಿ 23) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ.
ಎಸ್ಐಆರ್: ಯಾರ ಹಕ್ಕನ್ನು ಕಸಿಯುವ ಕಸರತ್ತು?
ಎಸ್ಐಆರ್ ಎಂಬುದು ಕೋಟ್ಯಂತರ ಭಾರತೀಯರ ಮತವನ್ನು ಅಪಾಯಕ್ಕೆ ತಳ್ಳಿರುವ ಹಾಗಿದೆ. ಸೈದ್ಧಾಂತಿಕವಾಗಿ, ಈ ಎಸ್ಐಆರ್ ಮತದಾನದ ಹಕ್ಕನ್ನು ಮತ್ತಷ್ಟು ಖಚಿತಪಡಿಸಬೇಕು. ಇದರಲ್ಲಿ ಮತದಾರರ ಪಟ್ಟಿಯನ್ನು ಸ್ವಚ್ಛಗೊಳಿಸಲಾಗುತ್ತದೆ ಮತ್ತು ಸರಿಪಡಿಸಲಾಗುತ್ತದೆ. ಆದರೆ ಚುನಾವಣಾ ಆಯೋಗ ತನ್ನ ಆತುರ ಮತ್ತು ಒತ್ತಡದಲ್ಲಿ ಈ ಹಕ್ಕನ್ನೇ ಅನೇಕರಿಂದ ಕಸಿಯುತ್ತಿರುವ ಹಾಗಿದೆ. ಇದು ದಶಕಗಳಲ್ಲಿ ಕೈಗೊಳ್ಳಲಾಗುತ್ತಿರುವ ಮತದಾರರ ಪಟ್ಟಿಗಳ ಅತಿದೊಡ್ಡ ಪ್ರಮಾಣದ ಪರಿಷ್ಕರಣೆಯಾಗಿದೆ. ಮತದಾರರ ಪಟ್ಟಿಯನ್ನು ಶುದ್ಧೀಕರಿಸಲಾಗುತ್ತಿದೆ ಎಂದು ಅಧಿಕೃತವಾಗಿ ಹೇಳಲಾಗುತ್ತಿದೆ. ಆಯೋಗದ ಪ್ರಕಾರ, ತಪ್ಪು ಹೆಸರುಗಳನ್ನು ಅಳಿಸಲಾಗುತ್ತಿದೆ. ಮತದಾರರ ನಕಲು ತಡೆಯಲಾಗುತ್ತಿದೆ. ಹೊಸ ಹೆಸರುಗಳನ್ನು ಸೇರಿಸಲಾಗುತ್ತಿದೆ. ಆದರೆ ನಿಜವಾಗಿಯೂ ಅಷ್ಟು ಮಾತ್ರವೇ ನಡೆಯುತ್ತಿದೆಯೇ? ವಿರೋಧ ಪಕ್ಷಗಳು ಮತ್ತು ತಜ್ಞರು ಇದು ಕೇವಲ ಮತದಾರರ ಪಟ್ಟಿ ಪರಿಷ್ಕರಣೆಯಲ್ಲ ಎಂದು ಹೇಳುತ್ತಿದ್ದಾರೆ. ಇದು ಅಲ್ಪಸಂಖ್ಯಾತರ ಮತದಾನದ ಹಕ್ಕುಗಳನ್ನು ಕಸಿಯುವ, ಅವರನ್ನು ಹೊರಗಿಡುವ ಕಸರತ್ತು ಎನ್ನಲಾಗುತ್ತಿದೆ. ಚುನಾವಣೆಗಳು ನಡೆಯಲಿರುವ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈಗ ಈ ಎಸ್ಐಆರ್ ಪ್ರಕ್ರಿಯೆ ನಡೆಯುತ್ತಿದೆ. ಇತ್ತೀಚಿನ ಕರಡು ಪಟ್ಟಿಯ ನಂತರ, ಈ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 6.5 ಕೋಟಿ ಮತದಾರರ ಹೆಸರುಗಳನ್ನು, ಅಂದರೆ ಒಟ್ಟು ನೋಂದಾಯಿತ ಮತದಾರರಲ್ಲಿ ಸುಮಾರು ಶೇ. 13ರಷ್ಟು ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಅಂದರೆ, ಪ್ರತೀ 8 ಮತದಾರರಲ್ಲಿ ಒಬ್ಬರನ್ನು ಅಳಿಸಲಾಗಿದೆ. ಎಂಥ ಸ್ಥಿತಿ ಬಂದಿದೆಯೆಂದರೆ, ಪ್ರಸಿದ್ಧ ನಟರು, ನೊಬೆಲ್ ಪ್ರಶಸ್ತಿ ವಿಜೇತರು, ಕ್ರೀಡಾಪಟುಗಳು, ಸೈನಿಕರು, ಕವಿಗಳೆಲ್ಲ ತಮ್ಮ ಗುರುತು ಮತ್ತು ಪೌರತ್ವವನ್ನು ಮತ್ತೆ ಸಾಬೀತುಪಡಿಸಬೇಕಾಗಿದೆ. ಮುಸ್ಲಿಮ್ ಸಮುದಾಯವನ್ನು ಬಹಿರಂಗವಾಗಿ ಗುರಿಯಾಗಿಸಲಾಗುತ್ತಿದೆ ಎಂಬ ಸ್ಪಷ್ಟ ಚಿತ್ರಗಳೂ ಇವೆ. ಈ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸುತ್ತಿರುವ ಚುನಾವಣಾ ಕಾರ್ಯಕರ್ತರು, ಬೂತ್ ಮಟ್ಟದ ಅಧಿಕಾರಿಗಳು ತುಂಬಾ ಒತ್ತಡದಲ್ಲಿದ್ದಾರೆ. ಕಳೆದ ಕೆಲವು ತಿಂಗಳುಗಳಲ್ಲಿ ಹಲವರು ಈ ಕೆಲಸದ ಒತ್ತಡದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದರೆ, ಮತ್ತೆ ಕೆಲವರು ಹೃದಯಾಘಾತಕ್ಕೆ ಒಳಗಾಗಿದ್ದಾರೆ. ದೊಡ್ಡ ಪ್ರಮಾಣದ ದುರುಪಯೋಗ ಮತ್ತು ನಿಯಮಗಳ ಉಲ್ಲಂಘನೆಯ ವರದಿಗಳೂ ಇವೆ. ಇದರಲ್ಲಿ ಚುನಾವಣಾ ಆಯೋಗದ ಎಐ ಸಾಫ್ಟ್ವೇರ್ ಕೋಟ್ಯಂತರ ಜನರನ್ನು ಅನುಮಾನದ ಕಣ್ಣಿಂದ ನೋಡಿದೆ. ಅವರು ಮತ್ತೆ ತಮ್ಮ ಪೌರತ್ವವನ್ನು ಸಾಬೀತುಪಡಿಸಬೇಕಾಗಿದೆ. ಕೋಟ್ಯಂತರ ಭಾರತೀಯರ ಮತದಾನದ ಹಕ್ಕುಗಳು ಸುರಕ್ಷಿತವಾಗಿಲ್ಲದಿದ್ದರೆ ಪ್ರಜಾಪ್ರಭುತ್ವ ಹೆಸರಿಗೆ ಮಾತ್ರವೇ ಎಂಬ ಪ್ರಶ್ನೆಯೂ ಎದ್ದಿದೆ. ನ್ಯಾಯಾಲಯ ಇದನ್ನೆಲ್ಲಾ ನೋಡುತ್ತಿದ್ದರೂ ಮತ್ತು ಬಹಳಷ್ಟು ದುಷ್ಕೃತ್ಯಗಳು ನಡೆಯುತ್ತಿವೆ ಎಂದು ತಿಳಿದಿದ್ದರೂ, ಎಸ್ಐಆರ್ ಅನ್ನು ಏಕೆ ನಿಲ್ಲಿಸಲಿಲ್ಲ? ಜನವರಿಯಲ್ಲಿ ಪ್ರಕಟವಾದ ಕರಡು ಪಟ್ಟಿ ಪ್ರಕಾರ, 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸುಮಾರು 6.5 ಕೋಟಿ ಮತದಾರರ ಹೆಸರುಗಳನ್ನು ತೆಗೆದುಹಾಕಲಾಗಿದೆ. ಉತ್ತರ ಪ್ರದೇಶದಲ್ಲಿ ಸುಮಾರು 3 ಕೋಟಿ ಮತದಾರರ ಹೆಸರುಗಳನ್ನು ಅಳಿಸಲಾಗಿದೆ. ಈ ಹಿಂದೆ ಅಲ್ಲಿ ಸುಮಾರು 15 ಕೋಟಿ ಮತದಾರರಿದ್ದರು. ಗುಜರಾತ್ನಲ್ಲಿ 70 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಅಳಿಸಲಾಗಿದೆ.ಬಂಗಾಳದಲ್ಲಿ 58 ಲಕ್ಷ ಮತದಾರರ ಹೆಸರುಗಳನ್ನು ಅಳಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಅಳಿಸಲಾಗಿರುವುದು ಅಕ್ರಮ ಬಾಂಗ್ಲಾದೇಶಿ ಮತದಾರರ ಹೆಸರುಗಳು ಎಂದು ಬಿಜೆಪಿ ಕಥೆ ಹೇಳುತ್ತಿದೆ. ಇವುಗಳಲ್ಲಿ ಹೆಚ್ಚಿನವು ಮುಸ್ಲಿಮರ ಹೆಸರುಗಳು ಎಂದು ಸ್ಪಷ್ಟವಾಗಿ ಹೇಳಲಾಗುತ್ತದೆ. ಎಸ್ಐಆರ್ ಕೆಲಸ ಪೌರತ್ವ ಗುರುತಿಸುವುದು ಮತ್ತು ಜನರನ್ನು ಹೊರಹಾಕುವುದಲ್ಲ ಎಂಬುದು ಬೇರೆ ವಿಷಯ. ಆದರೂ, ಈ ಡೇಟಾ ಬೇರೆ ಏನನ್ನೋ ತೋರಿಸುತ್ತದೆ ಮತ್ತು ಹೇಳುತ್ತದೆ. ಉತ್ತರ ಪ್ರದೇಶ ಸೇರಿದಂತೆ ಬಹುತೇಕ ಎಲ್ಲಾ ರಾಜ್ಯಗಳಲ್ಲಿ ಎಸ್ಐಆರ್ ಸಮಯದಲ್ಲಿ ಬೃಹತ್ ದುರುಪಯೋಗ, ತಪ್ಪುಗಳು ಮತ್ತು ಕುಶಲತೆಯ ಆಟ ನಡೆದಿರುವುದಾಗಿ ಹೇಳಲಾಗುತ್ತಿದೆ. ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ಹಿಂದೂ ಮತದಾರರನ್ನು ಮುಸ್ಲಿಮ್ ಕುಟುಂಬಗಳ ವಿಳಾಸಗಳಿಗೆ ಲಿಂಕ್ ಮಾಡಲಾಗಿದೆ ಎಂಬುದು ಬಹಿರಂಗವಾದಾಗ ತನಿಖೆಗೆ ಆದೇಶಿಸಲಾಗಿದೆ. ರಾಜಸ್ಥಾನದ ಬಿಎಲ್ಒ ಒಬ್ಬರ ವೀಡಿಯೊ ವೈರಲ್ ಆಗುತ್ತಿದ್ದು, ಅದರಲ್ಲಿ ಅವರು ಮುಸ್ಲಿಮ್ ಮತಗಳನ್ನು ಅಳಿಸಲು ಹೇಗೆ ಒತ್ತಡ ಹೇರಲಾಗುತ್ತಿದೆ ಎಂಬುದರ ಕುರಿತು ಹೇಳಿದ್ದಾರೆ. ಜೈಪುರದ ಹವಾ ಮಹಲ್ ವಿಧಾನಸಭಾ ಕ್ಷೇತ್ರದ ಬೂತ್ ಮಟ್ಟದ ಅಧಿಕಾರಿ ಕೀರ್ತಿ ಕುಮಾರ್, ಕರಡು ಮತದಾರರ ಪಟ್ಟಿಯಿಂದ 470 ಮತದಾರರ ಹೆಸರುಗಳನ್ನು ತೆಗೆದುಹಾಕಲು ಬಿಜೆಪಿ ತನ್ನ ಮೇಲೆ ಒತ್ತಡ ಹೇರುತ್ತಿದೆ ಎಂದಿದ್ದಾರೆ. ಇದು ಅವರ ಬೂತ್ನ ಮತದಾರರ ಸಂಖ್ಯೆಯ ಸುಮಾರು ಶೇ. 40ರಷ್ಟಾಗಿದೆ. ನಿರ್ದಿಷ್ಟವಾಗಿ ಮುಸ್ಲಿಮ್ ಮತದಾರರನ್ನು ಟಾರ್ಗೆಟ್ ಮಾಡಲಾಗಿದೆ ಎಂಬುದು ಕುಮಾರ್ ಅವರ ಆರೋಪ. ರಾಜಸ್ಥಾನದಲ್ಲಿ ಮತದಾರರ ಹೆಸರುಗಳನ್ನು ಅಳಿಸಲು ಬಿಜೆಪಿ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದೆ. ಕಾಂಗ್ರೆಸ್ ಕಡಿಮೆ ಅಂತರದಿಂದ ಗೆದ್ದ ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿರುವ ಬಗ್ಗೆ ಅದು ಆರೋಪಿಸುತ್ತಿದೆ. ಕಾಂಗ್ರೆಸ್ ಮತ ಬ್ಯಾಂಕ್ ತುಂಬಾ ಪ್ರಬಲವಾಗಿರುವ ಅಥವಾ ದಲಿತ, ಬುಡಕಟ್ಟು ಮತ್ತು ಅಲ್ಪಸಂಖ್ಯಾತ ಮತದಾರರ ಸಂಖ್ಯೆ ಹೆಚ್ಚಿರುವ ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಸುಮಾರು 1 ಕೋಟಿ ಮತದಾರರನ್ನು ಗುರುತಿಸಲಾಗಿದೆ ಅಥವಾ ವಿಚಾರಣೆಗೆ ಒಳಪಡಿಸಲಾಗಿದೆ. ಇದರಿಂದಾಗಿ ಜನರಲ್ಲಿ ಭಯ ಮತ್ತು ಕೋಪವಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಸ್ಐಆರ್ ದುರುಪಯೋಗದ ಬಗ್ಗೆ ಪದೇ ಪದೇ ಪ್ರಶ್ನೆಗಳನ್ನು ಎತ್ತಿದ್ದಾರೆ ಮತ್ತು ಆಯೋಗಕ್ಕೆ ಪತ್ರಗಳನ್ನು ಬರೆದಿದ್ದಾರೆ. ಜನವರಿ 12ರಂದು ಅವರು ಮುಖ್ಯ ಚುನಾವಣಾ ಆಯುಕ್ತರಿಗೆ ಐದನೇ ಪತ್ರ ಕಳುಹಿಸಿದ್ದಾರೆ. ಎಸ್ಐಆರ್ ಮೂಲತಃ ದೋಷಪೂರಿತವಾಗಿದೆ ಎಂದು ಅವರು ಆಕ್ಷೇಪಿಸಿದ್ದಾರೆ. ಎಐ ಸಾಫ್ಟ್ವೇರ್ ಮೂಲಕ ಮತದಾರರ ಪಟ್ಟಿ ಡಿಜಿಟಲೀಕರಣದ ನಂತರ ಬಹಳ ತಪ್ಪುಗಳಾಗಿರುವ ಬಗ್ಗೆ ಅವರು ಹೇಳುತ್ತಿದ್ದಾರೆ. ಯಾರನ್ನೂ ಕೇಳದೆ ಮತ್ತು ಸರಿಯಾದ ಪರೀಕ್ಷೆಯಿಲ್ಲದೆ ಬಂಗಾಳದಲ್ಲಿ ಎಸ್ಐಆರ್ಗಾಗಿ ಆಯೋಗ ಎಐ ಅನ್ನು ಬಳಸಿತು. ಕಾರಣವಿಲ್ಲದೆ ಜನರಿಗೆ ಸಮನ್ಸ್ ಕಳುಹಿಸುವುದು ನಡೆಯಿತು. ಇದು ಜನರನ್ನು ತುಂಬಾ ಆತಂಕಕ್ಕೀಡು ಮಾಡಿತು. ಕಿರುಕುಳ ಅನುಭವಿಸುವಂತಾಯಿತು. ಮಮತಾ ಬ್ಯಾನರ್ಜಿ ಅವರು ಭಾರತದ ಚುನಾವಣಾ ಆಯೋಗಕ್ಕೆ ದೋಷಗಳನ್ನು ತಕ್ಷಣವೇ ಸರಿಪಡಿಸಿ, ಇಲ್ಲವೆ ಎಸ್ಐಆರ್ ಅನ್ನೇ ನಿಲ್ಲಿಸಿ ಎಂದು ಒತ್ತಾಯಿಸಿದ್ದಾರೆ. ಪ್ರಸಿದ್ಧ ವ್ಯಕ್ತಿಗಳ ಹೆಸರುಗಳು ಸಹ ಮತದಾರರ ಪಟ್ಟಿಯಿಂದ ಕಣ್ಮರೆಯಾಗುತ್ತಿವೆ. ಪ್ರಸಿದ್ಧ ಬಂಗಾಳಿ ನಟ ಮತ್ತು ಟಿಎಂಸಿ ಸಂಸದ ದೇವ್, ಕ್ರಿಕೆಟಿಗ ಮುಹಮ್ಮದ್ ಶಮಿ, ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್ ಅವರಿಗೂ ವಿಚಾರಣೆಗಾಗಿ ನೋಟಿಸ್ ನೀಡಲಾಯಿತು. ಕಳೆದ ಹಲವು ವರ್ಷಗಳಿಂದ ಎಲ್ಲದಕ್ಕೂ ಆಧಾರ್ ಲಿಂಕ್ ಮಾಡಲಾಗಿದೆ. ಆದರೆ ಇದರ ನಂತರವೂ ಪುರಾವೆಗಳನ್ನು ಒದಗಿಸಬೇಕಾಗಿದೆ. ಇಂಥ ಸ್ಥಿತಿಯಲ್ಲಿ, ಯಾವುದೇ ದಾಖಲೆಗಳನ್ನು ಹೊಂದಿರದ ಸಾಮಾನ್ಯ ನಾಗರಿಕರ ಕಥೆ ಏನು? ರಿಪೋರ್ಟರ್ಸ್ ಕಲೆಕ್ಟಿವ್ ವರದಿಯ ಪ್ರಕಾರ, ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿ ವಾಟ್ಸ್ಆ್ಯಪ್ ಮೂಲಕ ರಾಜ್ಯದ ಅಧಿಕಾರಿಗಳಿಗೆ ಸಂದೇಶ ಕಳಿಸಿದ್ದರು ಮತ್ತು ಆ ಸೂಚನೆಗಳು ಚುನಾವಣಾ ಆಯೋಗದ ಲಿಖಿತ ಆದೇಶ ಮತ್ತು ಲಿಖಿತ ಸಂಹಿತೆಗಳಿಗೆ ವಿರುದ್ಧವಾಗಿದ್ದವು ಎಂಬುದು ಖಚಿತವಾಗಿದೆ. ಮೊದಲು ಇದರ ಬಗ್ಗೆ ಆರೋಪಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದವರು ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್. ನಂತರ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿತು. ಇನ್ನೊಂದೆಡೆ, ಚುನಾವಣಾ ಆಯೋಗದ ಸಾಫ್ಟ್ವೇರ್ ಎಸ್ಐಆರ್ ಸಮಯದಲ್ಲಿ ಅಸಮರ್ಪಕವಾಗಿ ಕಾರ್ಯನಿರ್ವಹಿಸಿದೆ. ಇದರಿಂದಾಗಿ, ಆರಂಭದಲ್ಲಿಯೇ ಕೇವಲ ಎರಡೇ ರಾಜ್ಯಗಳಲ್ಲಿ 3.66 ಕೋಟಿಗೂ ಹೆಚ್ಚು ಮತದಾರರನ್ನು ಅನುಮಾನಾಸ್ಪದ ಎಂದು ಟ್ಯಾಗ್ ಮಾಡಲಾಯಿತು. ಅವರು ಎಲ್ಲಾ ದಾಖಲೆಗಳನ್ನು ಮತ್ತೆ ಪಡೆಯುವ ಮೂಲಕ ತಮ್ಮ ಪೌರತ್ವ ಮತ್ತು ಮತದಾನದ ಹಕ್ಕುಗಳನ್ನು ಸಾಬೀತುಪಡಿಸಬೇಕಾಗುತ್ತದೆ. ಸಾಫ್ಟ್ವೇರ್ ಅನ್ನು ಸಕ್ರಿಯಗೊಳಿಸುವ 2 ವಾರಗಳ ಮೊದಲು ಚುನಾವಣಾ ಆಯೋಗ ಸುಪ್ರೀಂ ಕೋರ್ಟ್ಗೆ ಅದು ದೋಷಪೂರಿತವಾಗಿದೆ ಎಂದು ಹೇಳಿತ್ತು. ಅಷ್ಟಾಗಿಯೂ ಅದನ್ನು ಬಳಸಲಾಯಿತು. ಯಾವುದೇ ಸ್ಥಿರ ಪ್ರೋಟೋಕಾಲ್ ಇಲ್ಲವಾಗಿದೆ. ಇಷ್ಟು ಕಡಿಮೆ ಸಮಯದಲ್ಲಿ ಕೋಟ್ಯಂತರ ನಾಗರಿಕರನ್ನು ತನಿಖೆ ಮಾಡುವ ಕೆಲಸಕ್ಕೆ ಇಳಿಯಲಾಗಿದೆ. ಬಿಜೆಪಿ ಎಸ್ಐಆರ್ ಅನ್ನು ಪೌರತ್ವ ಸಮೀಕ್ಷೆಯಾಗಿ ಬಳಸುತ್ತಿದೆ ಎಂದು ವಿರೋಧ ಪಕ್ಷದ ನಾಯಕರು ಹೇಳುತ್ತಾರೆ. ಡಿಸೆಂಬರ್ನಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಎಸ್ಐಆರ್ ಮತಗಳನ್ನು ಕದಿಯುವ ಗುರಿ ಹೊಂದಿರುವ ಬಿಜೆಪಿಯ ದೊಡ್ಡ ಯೋಜನೆಯ ಭಾಗ ಎಂದು ಸಂಸತ್ತಿನಲ್ಲಿ ಆರೋಪಿಸಿದರು. ಎಸ್ಐಆರ್ ಬಿಹಾರದಲ್ಲಿ ಹಲವಾರು ಕಾನೂನು ಸವಾಲುಗಳನ್ನು ಎದುರಿಸಿತು. 13 ಕೋಟಿ ಜನಸಂಖ್ಯೆ ಹೊಂದಿರುವ ಈ ರಾಜ್ಯದಲ್ಲಿ, ಎಸ್ಐಆರ್ ನಂತರ 65 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಚುನಾವಣಾ ಆಯೋಗ ಈ ಜನರು ನಿಧನರಾದರು ಅಥವಾ ಬೇರೆಡೆಗೆ ಸ್ಥಳಾಂತರಗೊಂಡಿದ್ದಾರೆ ಎಂದು ಹೇಳಿತು. ಆದರೆ ನಂತರ ಅನೇಕ ಜನರು ಜೀವಂತವಾಗಿರುವುದು ಕಂಡುಬಂದಿದೆ. ಅನೇಕ ದೂರುಗಳು ದಾಖಲಾಗಿವೆ. ಎಸ್ಐಆರ್ ರಾಜಕೀಯ ಪ್ರೇರಿತ ಎಂದು ಟಿಎಂಸಿ ಆರೋಪಿಸುತ್ತದೆ. ಇದು ಪಶ್ಚಿಮ ಬಂಗಾಳವನ್ನು ಜಾಣತನದಿಂದ ವಶಪಡಿಸಿಕೊಳ್ಳುವ ಪ್ರಯತ್ನ ಎಂದು ಅದು ಆರೋಪಿಸಿದೆ. ತಮಿಳುನಾಡು ಮತ್ತು ಕೇರಳದಂತಹ ದಕ್ಷಿಣ ರಾಜ್ಯಗಳಲ್ಲಿಯೂ ಎಸ್ಐಆರ್ ವಿರುದ್ಧ ಸಾಕಷ್ಟು ಕೋಪ ಮತ್ತು ಅಸಮಾಧಾನವಿದೆ. ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ ಈ ಪ್ರಕ್ರಿಯೆಯನ್ನು ವಿರೋಧಿಸಿದೆ. ಕೇರಳ ಸರಕಾರ ಎಸ್ಐಆರ್ ವಿರುದ್ಧ ನಿರ್ಣಯ ಅಂಗೀಕರಿಸಿದೆ ಮತ್ತು ಇದು ಹಿಂಬಾಗಿಲ ಮೂಲಕ ನಡೆಸಿದ ಪೌರತ್ವ ಸಮೀಕ್ಷೆ ಎಂದಿದೆ. ಇನ್ನೊಂದು ವಿಶೇಷವೇನೆಂದರೆ, ಅಸ್ಸಾಮಿಲ್ಲಿ, ಮನೆ ಮನೆಗೆ ಹೋಗಿ ಭೌತಿಕ ಪರಿಶೀಲನೆ ಮಾಡುವ ಮೂಲಕ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಸರಳ ರೀತಿಯಲ್ಲಿ ಮಾಡಲಾಯಿತು. ಯಾವುದೇ ಎಣಿಕೆ ನಮೂನೆ ಇರಲಿಲ್ಲ ಅಥವಾ ಯಾರನ್ನೂ ಪೌರತ್ವ ಪುರಾವೆಗಾಗಿ ಕೇಳಲಾಗಿಲ್ಲ. ಇದು ವಿಚಿತ್ರವಾಗಿದೆ. ಈ ಅವಧಿಯಲ್ಲಿ ಸುಮಾರು 10.5 ಲಕ್ಷ ಹೆಸರುಗಳನ್ನು ಅಳಿಸಲಾಗಿದೆ ಮತ್ತು ಸುಮಾರು ಅಷ್ಟೇ ಹೆಸರುಗಳನ್ನು ಸೇರಿಸಲಾಗಿದೆ. ಇತ್ತೀಚೆಗೆ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು ಮತದಾರರ ಸಂಖ್ಯೆ 2.52 ಕೋಟಿಯೇ ಉಳಿದಿದೆ. ಈಗ ಅಸ್ಸಾಂ ಯಾರನ್ನೂ ಹೊರಗಿಡದ ಏಕೈಕ ರಾಜ್ಯವಾಗಿದೆ. ಎಸ್ಐಆರ್ ನಿಜವಾಗಿಯೂ ಮತದಾರರ ಪಟ್ಟಿಯನ್ನು ಸುಧಾರಿಸುತ್ತಿದೆಯೇ ಅಥವಾ ಇದು ರಾಜಕೀಯ ಪ್ರಯೋಗವೇ? ಇದರ ಫಲಿತಾಂಶ ಚುನಾವಣೆಯ ನಂತರವೇ ಸ್ಪಷ್ಟವಾಗಿ ಅರ್ಥವಾಗುತ್ತದೆ. ಇದರಿಂದ ಕೇವಲ ಒಂದು ನಿರ್ದಿಷ್ಟ ಪಕ್ಷ ಮಾತ್ರ ಲಾಭ ಪಡೆಯಲಿದೆಯೇ? ಸತ್ಯ ನಿಧಾನವಾಗಿ ಹೊರಬರುತ್ತಿದೆ.
₹100 ಕೋಟಿ ಠೇವಣಿ ಇಡಿ, ಟ್ರೇಡಿಂಗ್ ಗುರು ಅವಧೂತ್ ಸಾಠೆಗೆ SAT ಬಿಗ್ ಶಾಕ್; ಏನಿದು ಪ್ರಕರಣ?
ಅನಧಿಕೃತ ಹೂಡಿಕೆ ಸಲಹೆ ನೀಡಿದ ಆರೋಪ ಎದುರಿಸುತ್ತಿರುವ ಟ್ರೇಡಿಂಗ್ ಗುರು ಅವಧೂತ್ ಸಾಠೆ ಅವರಿಗೆ ಸೆಕ್ಯುರಿಟೀಸ್ ಮೇಲ್ಮನವಿ ನ್ಯಾಯಮಂಡಳಿ (ಎಸ್ಎಟಿ) ಭಾಗಶಃ ರಿಲೀಫ್ ನೀಡಿದೆ. ಸೆಬಿ ವಿಧಿಸಿದ್ದ 546 ಕೋಟಿ ರೂ.ಗಳ ಜಪ್ತಿ ಆದೇಶಕ್ಕೆ ಬದಲಾಗಿ, 100 ಕೋಟಿ ರೂ.ಗಳನ್ನು ಬ್ಯಾಂಕ್ನಲ್ಲಿ ಠೇವಣಿ ಇಡುವಂತೆ ಎಸ್ಎಟಿ ಸೂಚಿಸಿದೆ. ಹಣ ಜಮೆ ಮಾಡಿದ ನಂತರ ಅವರ ಬ್ಯಾಂಕ್ ಖಾತೆಗಳು ಮತ್ತು ಟ್ರೇಡಿಂಗ್ ಮೇಲಿನ ನಿರ್ಬಂಧ ತೆರವುಗೊಳ್ಳಲಿದೆ. ಆದರೆ, ಸುಮಾರು 100 ಕೋಟಿ ರೂಪಾಯಿ ಮೌಲ್ಯದ ಅವರ ಸ್ಥಿರಾಸ್ತಿಗಳನ್ನು ಮಾರಾಟ ಮಾಡದಂತೆ ತಡೆ ಒಡ್ಡಲಾಗಿದೆ.
Karnataka Weather: ಕರ್ನಾಟಕದ ದಕ್ಷಿಣ, ಉತ್ತರ ಒಳನಾಡು ಹಾಗೂ ಕರವಾಳಿ ಜಿಲ್ಲೆಗಳ ಹಲವೆಡೆ ಭಾರೀ ಶೀತಗಾಳಿ ಮುನ್ಸೂಚನೆ
Karnataka Weather: ರಾಜ್ಯದ ಬಹುತೇಕ ಭಾಗಗಳಲ್ಲಿ ಶೀತಗಾಳಿ ಜೊತೆಗೆ ಒಣಹವೆ ಮುಂದುವರೆದಿದೆ. ಹಾಗೆಯೇ ಮುಂದಿನ ಹಲವು ದಿನಗಳವರೆಗೂ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರವಾಳಿ ಜಿಲ್ಲೆಗಳಲ್ಲಿ ಭಾರೀ ಚಳಿ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ಬೆಂಗಳೂರಿನಲ್ಲಿ ಇಂದು (ಜನವರಿ 23) ಬೆಳ್ಳಂಬೆಳಗ್ಗೆ ದಟ್ಟ ಮಂಜಿನ ಜೊತೆ
ಒಂದು ವರ್ಷದಲ್ಲಿ 5 ಬಾರಿ ಸಂಚಾರ ನಿಯಮ ಉಲ್ಲಂಘಿಸಿದರೆ ಡಿಎಲ್ ಅಮಾನತು: ಜಾರಿಯಾಯ್ತು ಕಠಿಣ ನಿಯಮ
ದೇಶದಾದ್ಯಂತ ವಾಹನ ಸವಾರರೇ ಎಚ್ಚರ! ಕೇಂದ್ರ ಸರ್ಕಾರವು ಮೋಟಾರು ವಾಹನ ನಿಯಮಗಳಲ್ಲಿ ಮಹತ್ವದ ತಿದ್ದುಪಡಿಗಳನ್ನು ತಂದಿದ್ದು, ಇನ್ಮುಂದೆ ಪದೇ ಪದೇ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ಚಾಲಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಬುಧವಾರ (ಜ 22) ಪ್ರಕಟವಾದ ಹೊಸ ಅಧಿಸೂಚನೆಯ ಪ್ರಕಾರ, ಒಂದೇ ವರ್ಷದಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಬಾರಿ ಸಂಚಾರ ನಿಯಮ ಉಲ್ಲಂಘಿಸಿದರೆ ಚಾಲನಾ
ಉಡುಪಿ | ಟ್ರಕ್ಕಿನ ಚಕ್ರದಡಿ ಸಿಲುಕಿ ಬೈಕ್ ಸವಾರ ಮೃತ್ಯು
ಉಡುಪಿ : ಟ್ರಕ್ಕಿನ ಚಕ್ರದಡಿ ಸಿಲುಕಿ ಬೈಕ್ ಸವಾರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ಉಪ್ಪೂರು ಕೆ.ಜಿ ರೋಡ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಚಕ್ರದಡಿ ಸಿಲುಕಿದ ಬೈಕ್ ಸವಾರನ ದೇಹವು ಛಿದ್ರಗೊಂಡಿದ್ದು, ದೇಹದಿಂದ ರುಂಡ ಬೆರ್ಪಟ್ಟು ಚಕ್ರದಡಿ ಸಿಲುಕಿಕೊಂಡಿದೆ ಎಂದು ತಿಳಿದು ಬಂದಿದೆ. ಮೃತ ಸವಾರ ಬ್ರಹ್ಮವಾರ ಮಟಪಾಡಿಯ ನಿವಾಸಿ ಎಂದು ತಿಳಿದುಬಂದಿದೆ. ಘಟನಾ ಸ್ಥಳದಲ್ಲಿ ಬ್ರಹ್ಮಾವರ ಆರಕ್ಷಕ ಠಾಣೆಯ ಮುಖ್ಯ ಆರಕ್ಷಕ ಮಹಾಲಿಂಗ ಮಹಜರು ಪ್ರಕ್ರಿಯೆ ನಡೆಸಿದರು. ಶವತೆರವು ಹಾಗೂ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು, ಮತ್ತು ಬ್ರಹ್ಮಾವರದ ಅಂಬುಲೆನ್ಸ್ ಚಾಲಕ ನೆರವಾದರು.
ಬೆಂಗಳೂರು : ಜೈಲಲ್ಲಿ ತಟ್ಟೆ, ಲೋಟ, ಚಮಚಾಗಳನ್ನು ಬಿಟ್ಟು ಬೇರೆ ಜಗತ್ತು ನೋಡದ ಜನಾರ್ಧನ ರೆಡ್ಡಿಗೆ ರಾಜಕೀಯ ಜೀವನದಲ್ಲಿ ಚಮಚಾಗಿರಿ ಹೊರತುಪಡಿಸಿ ಬೇರೆ ಲೋಕದ ಪರಿಜ್ಞಾನವೇ ಗೊತ್ತಿಲ್ಲ ಎಂದು ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಟೀಕಿಸಿದ್ದಾರೆ. ಗುರುವಾರ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಜನಾರ್ಧನಾ ರೆಡ್ಡಿಗೂ ನಮಗೂ ಸಂಬಂಧವಿಲ್ಲ ಎಂಬ ಅಮಿತ್ ಶಾ ಅವರ ಹೇಳಿಕೆ ಕುರಿತ ಸುದ್ದಿಯನ್ನು ಹಂಚಿಕೊಂಡ ಬಿ.ಕೆ.ಹರಿಪ್ರಸಾದ್, ತಲೆ ಮೇಲೆ ಕೈ ಇರಿಸಿಕೊಂಡಿದ್ದು ಸಾಲದೆಂಬಂತೆ ಕೇಂದ್ರದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅವರ ಪಾದ ಪೂಜೆ ಮಾಡಿ ನೀರು ಕುಡಿದು ರಾಜಕೀಯ ಲಾಭ ಗಿಟ್ಟಿಸಿಕೊಂಡ ರೆಡ್ಡಿಗೆ ಪಾದ ಪೂಜೆಯ ನೀರು ನೆತ್ತಿಗೇರಿರಬೇಕು. ಅಮಿತ್ ಶಾ ತಲೆ ಮೇಲೆ ಕುಟ್ಟಿ ಬಿಜೆಪಿಗೂ ರೆಡ್ಡಿಗೂ ಸಂಬಂಧ ಇಲ್ಲ ಎಂದು ಬಹಿರಂಗವಾಗಿ ಹೇಳಿದ್ದನ್ನು ಮರೆತಂತಿದೆ ಎಂದು ಹೇಳಿದ್ದಾರೆ. ಒಮ್ಮೆ ಜೀವದ ಗೆಳೆಯ ಎಂದು ಹೇಳಿಕೊಂಡು, ಮತ್ತೊಮ್ಮೆ ಶ್ರೀರಾಮುಲು ವಿರುದ್ಧವೇ ರಾಜಕೀಯ ಮಸಲತ್ತು ನಡೆಸುವ ಜನಾರ್ಧನ ರೆಡ್ಡಿಯ ರಾಜಕೀಯ ಆಟವನ್ನು ರಾಜ್ಯದ ಜನ ಮರೆತಿಲ್ಲ. ಸಹೋದರರನ್ನೇ ರಾಜಕೀಯವಾಗಿ ಮುಗಿಸಲು ಯತ್ನಿಸಿದ ರೆಡ್ಡಿಯ ತಂತ್ರಗಾರಿಕೆಗೆ ಯಾವುದೇ ಕಿಮ್ಮತ್ತು ಇಲ್ಲ. ಈ ಕುರಿತು ಶ್ರೀರಾಮುಲು ನೀಡಿರುವ ಹೇಳಿಕೆಗಳೇ ಸಾಕ್ಷಿಯಾಗಿವೆ ಎಂದು ಹೇಳಿದರು. ರೆಡ್ಡಿಗಾರು ನಾನು ವಾರ್ಡ್ ಚುನಾವಣೆ ಗೆದ್ದಿಲ್ಲ ನಿಜಾ ಆದರೆ, ಹಿಂಬಾಗಿಲೋ ಮುಂಬಾಗಿಲೋ ನಾನಂತೂ ರಾಜಾರೋಷವಾಗಿ ರಾಜಕೀಯಕ್ಕೆ ಬಂದಿದ್ದೇನೆ. ಚುನಾವಣೆಯ ಎರಡು ದಿನದ ಹಿಂದಿನ ಕತ್ತಲೆ ರಾತ್ರಿಯ ರಹಸ್ಯವಾಗಿಯಂತೂ ಬಂದಿಲ್ಲ ಬರುವುದೂ ಇಲ್ಲ. ಆದರೆ, 224 ವಿಧಾನಸಭಾ ಕ್ಷೇತ್ರಗಳಲ್ಲಿ ಜಾತಿ, ಹಣದ ಆಧಾರವಿಲ್ಲದೆ ಚುನಾವಣೆ ಎದುರಿಸಲು ನಾವು ಸಿದ್ಧ. ಧೈರ್ಯ ಇದ್ದರೆ ಪ್ರಾಮಾಣಿಕ ಚುನಾವಣೆಗೆ ಮುಂದೆ ಬರಲಿ” ಎಂದು ಸವಾಲು ಹಾಕಿದರು. ನಮ್ಮ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಿರುದ್ಧ ಸುಳ್ಳು ಕೇಸ್ ಹಾಕಿರೋದಕ್ಕೆ ಹೈಕೋರ್ಟ್ ಕ್ಯಾಕರಿಸಿ ಮುಖಕ್ಕೆ ಉಗ್ದಿದ್ದು ಸಾಕಾಗಿಲ್ವಾ. ನ್ಯಾಯಾಧೀಶರನ್ನೇ ಹತ್ತು ಕೋಟಿ ಡೀಲ್ ಮಾಡಿ ಬೇಲ್ ತೆಗೆದುಕೊಂಡ ಹಾಗೇ ಅನ್ಕೊಂಡ್ರಾ? ಸುಳ್ಳು ಪ್ರಕರಣಗಳಲ್ಲಿ ನ್ಯಾಯಾಲಯದ ಮುಂದೆ ಹೋರಾಡುತ್ತಿರುವ ನಮ್ಮ ನಾಯಕರು, ಕೊಲೆ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಆದೇಶದಿಂದ ಗಡಿಪಾರಾಗಿಲ್ಲ ಎಂದು ಟೀಕಿಸಿದರು. ಅವರಿವರ ಕೈ ಕಾಲು ಹಿಡಿದು ಬಿಜೆಪಿ ಸೇರಿ ನೆಲೆ ಇಲ್ಲದೆ ಬಿಲ ಹುಡುಕಾಡುವ ದಯನೀಯ ಸ್ಥಿತಿ ಜನಾರ್ಧನ ರೆಡ್ಡಿಗೆ ಬಂದಿದ್ರು, ಶೇಷ-ಅವಶೇಷಗಳ ಬಗ್ಗೆ ಮಾತಾಡೋದು ಹಾಸ್ಯಸ್ಪದ. ಈಗಾಗಲೇ ಜೈಲು, ಡೀಲು, ಬೇಲುಗಳ ಬಗ್ಗೆ ಮಾತ್ರ ಮಾತನಾಡಿದ್ದೇನೆ, ಮುಂದಿನ ದಿನಗಳಲ್ಲಿ ಇನ್ನೂ ವಿವರವಾಗಿ ಎಲ್ಲವನ್ನೂ ಬಹಿರಂಗಪಡಿಸಲು ಸಿದ್ಧನಿದ್ದೇನೆ ಎಂದು ಎಚ್ಚರಿಕೆ ನೀಡಿದರು.
ಸದನದಲ್ಲಿ 2ನೇ ದಿನವೂ ಗವರ್ನರ್ ಗದ್ದಲ ಫಿಕ್ಸ್: ಆಡಳಿತ ವಿಪಕ್ಷಗಳ ನಡುವೆ ʻನಿಯಮಾವಳಿʼ ಯುದ್ಧ!
ವಿಧಾನಸಭೆಯ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿ ತೆರಳಿದ್ದು, ಸದ್ಯ ರಾಜಕೀಯ ವಲಯದಲ್ಲಿ ಚರ್ಚೆಯನ್ನುಟ್ಟು ಹಾಕಿದೆ. ಜೊತೆಗೆ ಕಾಂಗ್ರೆಸ್ ಸದಸ್ಯರಿಂದ ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ. ಇದರಿಂದ ಸದನದಲ್ಲಿ ಗದ್ದಲ ಉಂಟಾಗಿದೆ. ಈ ವಿಷಯದ ಬಗ್ಗೆ ಎರಡನೇ ದಿನವೂ ಚರ್ಚೆ ನಡೆಯುವ ಸಾಧ್ಯತೆ ಇದೆ. ಸಂಪುಟ ಸಭೆಯಲ್ಲೂ ಈ ಬಗ್ಗೆ ಚರ್ಚೆ ನಡೆದಿದ್ದು, ಸಭಾಧ್ಯಕ್ಷರ ರೂಲಿಂಗ್ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.

23 C