SENSEX
NIFTY
GOLD
USD/INR

Weather

24    C
...

Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ

Prakash Raj: ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶಕ್ಕೆ ಅಧಿಕೃತ ಭೇಟಿ ನೀಡುವ ಸಂದರ್ಭದಲ್ಲಿ ಅಥವಾ ವಿದೇಶಿ ರಾಷ್ಟ್ರದ ಮುಖ್ಯಸ್ಥರು ಭಾರತಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಸಹಿ ಹಾಕುವ ಕೆಲವು ನಿರ್ದಿಷ್ಟ ಅಂತರರಾಷ್ಟ್ರೀಯ ದಾಖಲೆಗಳಿಗೆ ಇನ್ನು ಮುಂದೆ ಸಚಿವ ಸಂಪುಟದ ಪೂರ್ವ ಅನುಮೋದನೆ ಅಗತ್ಯವಿಲ್ಲ ಎಂದು ಟ್ರಿಬ್ಯೂನ್ ವರದಿ ಮಾಡಿದೆ. ಈ ವಿಚಾರವು ಇದೀಗ ತೀವ್ರ ಚರ್ಚೆಗೆ

ಒನ್ ಇ೦ಡಿಯ 10 Mar 2026 10:21 am

ಬಳ್ಳಾರಿ ಹಾಸ್ಟೆಲ್ ಹಲ್ಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಅಪ್ರಾಪ್ತ ಆರೋಪಿ ಪೊಲೀಸ್ ವಶಕ್ಕೆ

ಬಳ್ಳಾರಿ: ಬಳ್ಳಾರಿಯ ಗುರುಕುಲ ಇಂಟರ್‌ನ್ಯಾಷನಲ್ ಶಾಲೆಯ ಹಾಸ್ಟೆಲ್‌ನಲ್ಲಿ ಶನಿವಾರ ರಾತ್ರಿ ನಡೆದ ಗಲಾಟೆಯಲ್ಲಿ ಒಬ್ಬ ವಿದ್ಯಾರ್ಥಿ ಮೃತಪಟ್ಟು, ಏಳು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದರು. ಈ ಘಟನೆಗೆ ಕಾರಣ ಎನ್ನಲಾದ ಅಪ್ರಾಪ್ತ ವಿದ್ಯಾರ್ಥಿ ತಲೆಮರೆಸಿಕೊಂಡಿದ್ದನು. ಇದೀಗ 36 ಗಂಟೆಗಳ ನಿರಂತರ ಕಾರ್ಯಾಚರಣೆಯ ನಂತರ ಬಳ್ಳಾರಿ ಪೊಲೀಸರು ಆತನನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಸೋಮವಾರ ಬಳ್ಳಾರಿಯಲ್ಲಿ ಕರೆಯಲಾಗಿದ್ದ ಜಂಟಿ ಸುದ್ದಿಗೋಷ್ಠಿಯನ್ನು

ಒನ್ ಇ೦ಡಿಯ 10 Mar 2026 10:15 am

ಮಧ್ಯಪ್ರಾಚ್ಯ ಸಂಘರ್ಷ | ಇರಾನ್‌ನ ಶಾಲೆ, ವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದಿಂದ ಕ್ಷಿಪಣಿ ದಾಳಿ

ಟೆಹ್ರಾನ್ : ಇರಾನ್‌ನಲ್ಲಿ ಶಾಲೆ ಮತ್ತು ವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕ ಮತ್ತೆ ದಾಳಿ ಮಾಡಿರುವ ಬಗ್ಗೆ Aljazeera ವರದಿ ಮಾಡಿದೆ. ಇರಾನ್‌ನ ಖೊಮೇನ್ ನಗರದಲ್ಲಿರುವ ಡಾ. ಹಫೀಝ್ ಖೊಮೇನಿ ಶಾಲೆ ಮೇಲೆ ಅಮೆರಿಕ ಕ್ಷಿಪಣಿ ದಾಳಿ ನಡೆಸಿದೆ ಎಂದು ಇರಾನ್‌ನ Mehr news agency ವರದಿ ಮಾಡಿದೆ. ಶಾಲೆಯನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುತ್ತಮುತ್ತಲಿನ ಅನೇಕ ಮನೆಗಳಿಗೆ ಕೂಡ ಹಾನಿಯಾಗಿರುವುದಾಗಿ ವರದಿಯು ಉಲ್ಲೇಖಿಸಿದೆ. ದಾಳಿಯಲ್ಲಿ ಮೃತಪಟ್ಟವರ ಬಗ್ಗೆ ತಕ್ಷಣಕ್ಕೆ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ. ಈ ಮೊದಲು ದಕ್ಷಿಣ ಇರಾನ್‌ನ ಮಿನಾಬ್ ನಗರದಲ್ಲಿರುವ ಬಾಲಕಿಯರ ಶಾಲೆಯ ಮೇಲೆ ಅಮೆರಿಕ ನಡೆಸಿದ್ದ ಕ್ಷಿಪಣಿ ದಾಳಿಯಲ್ಲಿ ಕನಿಷ್ಠ 170 ಮಂದಿ ಮೃತಪಟ್ಟಿದ್ದರು. ಅವರಲ್ಲಿ ಹೆಚ್ಚಿನವರು ಮಕ್ಕಳಾಗಿದ್ದರು.

ವಾರ್ತಾ ಭಾರತಿ 10 Mar 2026 10:03 am

ಕಾಸರಗೋಡು : ಯುಪಿಎಸ್‌ಸಿ ಪರೀಕ್ಷೆಯಲ್ಲಿ 382ನೇ ರ‍್ಯಾಂಕ್ ; ಮೊಹಮ್ಮದ್ ಅಶ್ಮಿಲ್ ಶಾಹ್ ಹುದವಿಗೆ ಸನ್ಮಾನ

ಕಾಸರಗೋಡು: ತೆಕ್ಕಿಲ್ ಸಮೀಪದ ಕುನಿಯ ಸಮೂಹ ಶಿಕ್ಷಣ ಸಂಸ್ಥೆ ಮತ್ತು ಐಎಎಸ್ ಅಕಾಡೆಮಿಯಲ್ಲಿ ವ್ಯಾಸಂಗ ಮಾಡಿ ತರಬೇತಿ ಪಡೆದು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಪರೀಕ್ಷೆಯಲ್ಲಿ 382ನೇ ರ್ಯಾಂಕ್‌ ಗಳಿಸಿದ ಮೊಹಮ್ಮದ್ ಅಶ್ಮಿಲ್ ಶಾಹ್ ಹುದವಿ ಅವರನ್ನು ಸಂಸ್ಥೆಯ ವತಿಯಿಂದ ಕುನಿಯ ಕ್ಯಾಂಪಸ್‌ನಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಾಹಿದ್ ತೆಕ್ಕಿಲ್ ಅವರು ಶಾಲು ಹೊದಿಸಿ ಸ್ಮರಣಿಕೆ ನೀಡಿ ಅಶ್ಮಿಲ್ ಶಾಹ್ ಹುದವಿ ಅವರನ್ನು ಗೌರವಿಸಿದರು. ನಂತರ ಮಾತನಾಡಿದ ಶಾಹಿದ್ ತೆಕ್ಕಿಲ್ ಅವರು, ಅಶ್ಮಿಲ್ ಶಾಹ್ ಹುದವಿ ಈ ಮಟ್ಟಕ್ಕೆ ಬೆಳೆಯಲು ಚೆಮ್ಮಾಡಿನ ದಾರುಲ್ ಹುದಾ ಇಸ್ಲಾಮಿಕ್ ಅಕಾಡೆಮಿ ಹಾಗೂ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಕುನಿಯ ಸಮೂಹ ಶಿಕ್ಷಣ ಸಂಸ್ಥೆ ಮತ್ತು ಐಎಎಸ್ ಅಕಾಡೆಮಿಯು ಮಹತ್ವದ ಕೊಡುಗೆ ನೀಡಿವೆ ಎಂದು ಹೇಳಿದರು. ಕುನಿಯದಲ್ಲಿ ಐಎಎಸ್ ಅಕಾಡೆಮಿ ಹಾಗೂ ಬೃಹತ್ ಸಮೂಹ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿದ ಕುನಿಯ ಇಬ್ರಾಹಿಂ ಅಹ್ಮದ್ ಅಲಿ ಹಾಜಿ ಅವರನ್ನು ಶಾಹಿದ್ ತೆಕ್ಕಿಲ್ ಅಭಿನಂದಿಸಿದರು. ಸಮಾರಂಭದಲ್ಲಿ ಕಣ್ಣೂರು ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿ ಹಾಗೂ ಕುನಿಯ ಸಂಸ್ಥೆಯ ಸಲಹೆಗಾರ ಡಾ. ಖಾದರ್ ಮಾಂಙಾಡ್ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಸಿ.ಎಚ್. ಕುಂಞಂಬು, ಎ.ಕೆ.ಎಂ. ಅಶ್ರಫ್, ಬಿಹಾರದ ಮುಜಫರ್‌ಪುರ ನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಬುಲ್ಲಾ ಅನ್ಸಾರಿ (ಐಪಿಎಸ್), ಕಾಸರಗೋಡು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಶಿವಂ (ಐಪಿಎಸ್), ಕಾಸರಗೋಡು ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಾಬು ಅಬ್ರಹಾಂ, ಕಾಸರಗೋಡು ಬ್ಲಾಕ್ ಪಂಚಾಯತ್ ಅಧ್ಯಕ್ಷ ಅಬ್ದುಲ್ಲ ಕುಂಞಿ, ಪೆರಿಯ ಪಂಚಾಯತ್ ಅಧ್ಯಕ್ಷೆ ಡಾ. ಸಬಿತ, ಪಳ್ಳಿಕ್ಕೆರೆ ಪಂಚಾಯತ್ ಅಧ್ಯಕ್ಷೆ ಶೋಭನಾ, ಡಾ. ಸಂತೋಷ್, ಸುದೀಪ್ ಮತ್ತಿತರರು ಉಪಸ್ಥಿತರಿದ್ದರು. ಶಿಬಿಲಿ ಶಹಾದತಿ ಅವರು ಕುನಿಯ ಐಎಎಸ್ ಅಕಾಡೆಮಿ ಮತ್ತು ಶಿಕ್ಷಣ ಸಂಸ್ಥೆಗಳ ಬಗ್ಗೆ ವಿವರಿಸಿದರು. ಡಾ. ಲಕ್ಷ್ಮೀಭಾಯಿ ಸ್ವಾಗತಿಸಿ, ಅಜ್ಮಲ್ ವಂದಿಸಿದರು. ನಂತರ ಸಾಮೂಹಿಕ ಇಫ್ತಾರ್ ಕೂಟ ನಡೆಯಿತು.  

ವಾರ್ತಾ ಭಾರತಿ 10 Mar 2026 9:49 am

ಪ್ರವಾಸಿ ಕೂಟ ವಿಟ್ಲ (ರಿ) ಬಹರೈನ್ ಘಟಕದಿಂದ ತುರ್ತು ರಕ್ತದಾನ ಶಿಬಿರ

ಬಹರೈನ್ : ಪ್ರವಾಸಿ ಕೂಟ ವಿಟ್ಲ (ರಿ) ಬಹರೈನ್ ಘಟಕದ ವತಿಯಿಂದ ಮಾನವೀಯ ಸೇವೆಯ ಭಾಗವಾಗಿ ಬಹರೈನ್‌ನ ಸರ್ಕಾರಿ ಆಸ್ಪತ್ರೆಯಾದ ಸಲ್ಮಾನಿಯ ಮೆಡಿಕಲ್ ಕಾಂಪ್ಲೆಕ್ಸ್‌ನಲ್ಲಿ ಮಾ.9 ರಂದು ತುರ್ತು ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ಪ್ರವಾಸಿ ಕೂಟ ವಿಟ್ಲ (ರಿ) ಬಹರೈನ್ ಘಟಕದ ಅಧ್ಯಕ್ಷ ಶಾಫಿ ಕಂಬಳಬೆಟ್ಟು ಅವರ ನೇತೃತ್ವದಲ್ಲಿ ನಡೆದ ಈ ಶಿಬಿರದಲ್ಲಿ ಅನೇಕ ಸ್ವಯಂಸೇವಕರು ಹಾಗೂ 300 ಕ್ಕೂ ಹೆಚ್ಚು ರಕ್ತದಾನಿಗಳು ಉತ್ಸಾಹದಿಂದ ಭಾಗವಹಿಸಿ ರಕ್ತದಾನ ಮಾಡಿದರು. ಆಸ್ಪತ್ರೆಯಲ್ಲಿ ತುರ್ತು ಪರಿಸ್ಥಿತಿಯಲ್ಲಿ ರೋಗಿಗಳಿಗೆ ಅಗತ್ಯವಿರುವ ರಕ್ತದ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಈ ಶಿಬಿರವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪ್ರವಾಸಿ ಕೂಟ ವಿಟ್ಲ (ರಿ) ಸದಸ್ಯರೊಂದಿಗೆ ಇತರ ಸಂಘಟನೆಗಳ ಪ್ರತಿನಿಧಿಗಳೂ ಭಾಗವಹಿಸಿ ಸಹಕಾರ ನೀಡಿದರು. ಮುಂದಿನ ದಿನಗಳಲ್ಲಿಯೂ ಇಂತಹ ಸೇವಾ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುವ ಉದ್ದೇಶವಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಪ್ರವಾಸಿ ಕೂಟ ವಿಟ್ಲ (ರಿ) ಬಹರೈನ್ ಘಟಕವು ವಿವಿಧ ಸಮಾಜಸೇವಾ ಚಟುವಟಿಕೆಗಳ ಮೂಲಕ ಅನಿವಾಸಿ ಕನ್ನಡಿಗರ ನಡುವೆ ಮಾನವೀಯ ಮೌಲ್ಯಗಳನ್ನು ಬಲಪಡಿಸುವ ಕಾರ್ಯವನ್ನು ನಿರಂತರವಾಗಿ ನಡೆಸುತ್ತಿದೆ ಎಂದು ತಿಳಿಸಿದರು.

ವಾರ್ತಾ ಭಾರತಿ 10 Mar 2026 9:40 am

ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ

ಬೆಂಗಳೂರು: ಸಮವಸ್ತ್ರ, ಶೂ, ಬಿಸಿ ಊಟ ಸೇರಿದಂತೆ ಹಲವಾರು ಆಕರ್ಷಕ ಸೌಲಭ್ಯಗಳನ್ನು ಒದಗಿಸುತ್ತಿದ್ದರೂ, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ಕಡಿಮೆಯಾಗುತ್ತಿರುವುದು ರಾಜ್ಯ ಸರ್ಕಾರದ ಕಳವಳಕ್ಕೆ ಕಾರಣವಾಗಿದೆ. ಸೋಮವಾರ ನಡೆದ ವಿಧಾನ ಪರಿಷತ್ ಅಧಿವೇಶನದಲ್ಲಿ ಬಿಜೆಪಿ ಸದಸ್ಯ ನಿರಾಣಿ ಹನುಮಂತ್ ರುದ್ರಪ್ಪ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಾಥಮಿಕ ಹಾಗೂ ಪ್ರೌಢ

ಒನ್ ಇ೦ಡಿಯ 10 Mar 2026 9:36 am

LPG Cylinder Booking: ಎಲ್‌ಪಿಜಿ ಸಿಲಿಂಡರ್ ಬುಕಿಂಗ್‌ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ

ಅಡುಗೆ ಅನಿಲದ ಅಕ್ರಮ ದಾಸ್ತಾನು ತಡೆಯಲು ಮತ್ತು ಎಲ್ಲರಿಗೂ ಸಮಾನವಾಗಿ ಗ್ಯಾಸ್ ವಿತರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ದೇಶೀಯ ಎಲ್‌ಪಿಜಿ ಸಿಲಿಂಡರ್ (LPG Cylinder) ಮರು ಬುಕಿಂಗ್‌ ಅವಧಿಯನ್ನು ಹೆಚ್ಚಿಸಿದೆ. ಸಿಲಿಂಡರ್ ರಿಫಿಲ್ ಬುಕ್ಕಿಂಗ್ ಮಾಡಲು ಇರುವ ಕನಿಷ್ಠ ಕಾಯುವ ಅವಧಿಯನ್ನು 21ರಿಂದ 25 ದಿನಗಳಿಗೆ ಹೆಚ್ಚಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಈ ಕ್ರಮದಿಂದ ಸಿಲಿಂಡರ್‌ಗಳ

ಒನ್ ಇ೦ಡಿಯ 10 Mar 2026 9:05 am

ಒಂದೇ ದಿನ 1,407 ಮೈಸೂರು ಸಿಲ್ಕ್ ಸೀರೆ ಮಾರಾಟ: ದಾಖಲೆಯ 7.13 ಕೋಟಿ ರೂಪಾಯಿ ವಹಿವಾಟು

ಮೈಸೂರು ಸಿಲ್ಕ್ ಸೀರೆ ಅಂದ್ರೆ ಯಾರಿಗ್ತಾನೆ ಇಷ್ಟ ಇಲ್ಲ ಹೇಳಿ? ತೀರಾ ಸಾಫ್ಟ್ ಆಗಿರುವ ಮೈಸೂರು ಸಿಲ್ಕ್ ಸೀರೆ ಬಹುತೇಕರಿಗೆ ಅಚ್ಚುಮೆಚ್ಚು. ಅದರಲ್ಲೂ ಕೆಂಪು ಬಣ್ಣದ ಚಿನ್ನದ ಝರಿ ಇರುವ ಮೈಸೂರು ಸಿಲ್ಕ್ ಸೀರೆ ಖರೀದಿಸಲು ಮಹಿಳೆಯರು ಕ್ಯೂ ನಿಲ್ಲುತ್ತಾರೆ. ಇಂತಿಪ್ಪ ಮೈಸೂರು ಸಿಲ್ಕ್ ಸೀರೆಗಳು 'ಮಹಿಳಾ ದಿನಾಚರಣೆ'ಯಂದು ದಾಖಲೆಯ ವಹಿವಾಟು ನಡೆಸಿವೆ.

ವಿಜಯ ಕರ್ನಾಟಕ 10 Mar 2026 9:03 am

ಕುಕ್ಕುಟೋದ್ಯಮಕ್ಕೆ ಯುದ್ಧದ ಹೊಡೆತ; ಮೊಟ್ಟೆ ಬೆಲೆ ಇಳಿಕೆ

ಕುಕ್ಕುಟೋದ್ಯಮ ಒಂದೆಡೆ ಯುದ್ಧ ಹಾಗೂ ಇನ್ನೊಂದೆಡೆ ಸುಡು ಬಿಸಿಲಿನ ತಾಪಕ್ಕೆ ಸಿಲುಕಿ ತತ್ತರಿಸುತ್ತಿದೆ. ಕೋಳಿ ಮೊಟ್ಟೆ ಬೆಲೆ ಇಂದು 4.60 ರೂ.ಗೆ ಇಳಕೆಯಾಗಿದೆ. ಸುಮಾರು 70 ರಿಂದ 80 ಪೈಸೆ ಕಡಿಮೆ ಬೆಲೆಗೆ ಮಾರಾಟ ಮಾಡುವ ಸ್ಥಿತಿ ತಲುಪಿ ಫೌಲ್ಟ್ರಿ ಮಾಲೀಕರು ಗಣನೀಯ ಪ್ರಮಾಣದ ನಷ್ಟ ಅನುಭವಿಸುವಂತಾಗಿದೆ.

ವಿಜಯ ಕರ್ನಾಟಕ 10 Mar 2026 8:45 am

ಸುಳ್ಯ : ಜಯನಗರ ಜನ್ನತುಲ್ ಉಲೂಮ್ ಮಸ್ಜಿದ್–ಮದ್ರಸ ಆಶ್ರಯದಲ್ಲಿ ಸೌಹಾರ್ದ ಇಫ್ತಾರ್ ಸಂಗಮ

ಸುಳ್ಯದ ಜನತೆಯ ಪ್ರೀತಿಗೆ ನಾನು ಎಂದಿಗೂ ಚಿರಋಣಿ: ಹೆಚ್. ಎಂ. ನಂದಕುಮಾರ್

ವಾರ್ತಾ ಭಾರತಿ 10 Mar 2026 8:40 am

ರಾಜ್ಯ ಬಜೆಟ್‌ನಲ್ಲಿ ಭದ್ರಾಕ್ಕೆ ಹೆಚ್ಚೇನೂ ಇಲ್ಲ ; ಕಾಮಗಾರಿಗಳು ಪೂರ್ಣ ನಿಂತು ಹೋಗುವ ಭಯ

ಭದ್ರಾ ಮೇಲ್ದಂಡೆ ವಿಷಯದಲ್ಲಿ ಕಾಂಗ್ರೆಸ್‌ ಸರಕಾರ ಮೊದಲಿನಿಂದಲೂ ಕಡೆಗಣನೆಯ ದೃಷ್ಟಿಕೋನವನ್ನೇ ಹೊಂದಿದೆ. ಕಾಂಗ್ರೆಸ್‌ ಸರಕಾರ ಇದ್ದಾಗ ಬಿಡುಗಡೆ ಮಾಡಿದ ಅನುದಾನದ ಪ್ರಮಾಣಕ್ಕೂ, ಬಿಜೆಪಿ ಸರಕಾರ ಇದ್ದಾಗ ಮಾಡಿದ ಅನುದಾನದ ಪ್ರಮಾಣಕ್ಕೂ ಅಂಕಿ ಅಂಶಗಳನ್ನು ಹೋಲಿಕೆ ಮಾಡಿದಾಗ ಇದು ಕಣ್ಣಿಗೆ ರಾಚುತ್ತದೆ. ಇದನ್ನೇ ಮೊನ್ನೆ ಸಿರಿಗೆರೆ ಶ್ರೀಗಳ ಸಮ್ಮುಖದಲ್ಲಿ ನಡೆದ ರೈತ ಮುಖಂಡರ ಸಭೆಯಲ್ಲೂ ಸಂಸದ ಗೋವಿಂದ ಕಾರಜೋಳ ಸ್ಪಷ್ಟಪಡಿಸಿದ್ದಾರೆ.

ವಿಜಯ ಕರ್ನಾಟಕ 10 Mar 2026 8:17 am

ಬಳ್ಳಾರಿ: ಖಾಸಗಿ ವಸತಿ ಶಾಲೆಯಲ್ಲಿ ಸಹಪಾಠಿಗಳ ಮೇಲೆ ಹಲ್ಲೆ ಪ್ರಕರಣ; ಆರೋಪಿ ಬಾಲಕ ಪೊಲೀಸರ ವಶಕ್ಕೆ

ಬಳ್ಳಾರಿ: ಜಿಲ್ಲೆಯ ಗೋನಾಳ ಪ್ರದೇಶದ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ವಾರ್ಡನ್​ ಮೇಲೂ ಹಲ್ಲೆ ಮಾಡಿ ಓರ್ವ ವಿದ್ಯಾರ್ಥಿಯ ಹತ್ಯೆಗೆ ಕಾರಣವಾಗಿದ್ದ ಅಪ್ರಾಪ್ತ ಬಾಲಕನನ್ನು ನಗರದ ಶ್ರೀರಾಮಪುರ ಕಾಲೊನಿಯ ರೂಪನಗುಡಿಯಲ್ಲಿ ಸೋಮವಾರ  ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಗರದ ಹೊರವಲಯದ ತಾಳೂರು ರಸ್ತೆಯಲ್ಲಿರುವ 'ಗುರುಕುಲ ಕಾನ್ಸೆಪ್ಟ್ ಸ್ಕೂಲ್' ಎಂಬ ಸಿಬಿಎಸ್ ಇ ಶಾಲೆಯಲ್ಲಿ ಶನಿವಾರ ತಡರಾತ್ರಿ  ವಿದ್ಯಾರ್ಥಿಗಳ ಮಧ್ಯೆ ಕ್ಷುಲ್ಲಕ ವಿಚಾರವಾಗಿ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಈ ವೇಳೆ ಆಕ್ರೋಶಗೊಂಡ ಒಂಭತ್ತನೇ ತರಗತಿಯ ವಿದ್ಯಾರ್ಥಿಯೋರ್ವ, ಕಬ್ಬಿಣದ ರಾಡ್ ನಿಂದ ತನ್ನ ಸಹಪಾಠಿಗಳ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾನೆ. ದಾಳಿಯ ತೀವ್ರತೆಗೆ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಉಳಿದ ಏಳು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಲಾಟೆ ಬಿಡಿಸಲು ಬಂದ ಮಹಿಳಾ ವಾರ್ಡನ್ ಮೇಲೂ ಬಾಲಕ ದಾಳಿ ನಡೆಸಿದ್ದಾನೆ. ಬಾಲಕನು ಹತಾಶೆಯಿಂದ ಈ ಕೃತ್ಯವೆಸಗಿರುವುದು ಗೊತ್ತಾಗಿದೆ. ಹಾಸ್ಟೆಲ್‌ ವಾತಾವರಣ ತನಗೆ ಇಷ್ಟವಿರಲಿಲ್ಲ ಎಂದು ಬಾಲಕ ಪ್ರಾಥಮಿಕ ವಿಚಾರಣೆ ವೇಳೆ ಹೇಳಿಕೊಂಡಿದ್ದಾನೆ ಎಂದು ಪೊಲೀಸ್‌ ಮೂಲಗಳು ಮಾಹಿತಿ ನೀಡಿವೆ. ಬಾಲಕನ ವಿಚಾರಣೆಯನ್ನು ಅತ್ಯಂತ ಎಚ್ಚರಿಕೆಯಿಂದ ಮಾಡುತ್ತಿದ್ದೇವೆ. ಇದಕ್ಕಾಗಿ ವೈದ್ಯಕೀಯ ತಜ್ಞರು, ಅಧಿಕಾರಿಗಳ ತಂಡ ರಚನೆ ಮಾಡಿಕೊಳ್ಳುತ್ತಿದ್ದೇವೆ. ಇದರಲ್ಲಿ ಪೊಲೀಸರು, ಮಾನಸಿಕ ತಜ್ಞರು, ವೈದ್ಯರು, ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಇರಲಿದ್ದಾರೆ. ಈ ಬಗ್ಗೆ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ (ವಿಮ್ಸ್‌) ಜತೆಗೆ ಮಾತನಾಡಿದ್ದೇವೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್‌ ಡಿ.ಪಿ ತಿಳಿಸಿದರು. ‘ಘಟನೆಗೆ ಕಾರಣವೇನು ಎಂಬುದರ ತನಿಖೆ ನಡೆಯುತ್ತಿದೆ. ಶಾಲೆಯವರು ಹಾಸ್ಟೆಲ್‌ಗೆ ಅನುಮತಿ ಪಡೆದಿದ್ದರೇ ಎಂಬುದರ ಬಗ್ಗೆ ಪರಿಶೀಲಿಸಲು ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಪತ್ರ ಬರೆಯಲಾಗಿದೆ. ಶಾಲೆಯ ವೈಫಲ್ಯದ ಬಗ್ಗೆಯೂ ತನಿಖೆ ಮಾಡುತ್ತೇವೆ’ ಎಂದು ಹೇಳಿದರು. ಘಟನೆ ಬಳಿಕ ಬಾಲಕ ಬಳ್ಳಾರಿ ನಗರದಲ್ಲೇ ಇದ್ದ. ದೇವಸ್ಥಾನಗಳಲ್ಲಿ ನೀಡುವ ಪ್ರಸಾದ ಸೇವಿಸುತ್ತಾ ಎರಡು ದಿನ ಕಳೆದಿದ್ದ ಎನ್ನಲಾಗಿದೆ.   

ವಾರ್ತಾ ಭಾರತಿ 10 Mar 2026 7:59 am

ಬಹರೈನ್ ನಲ್ಲಿ ಸಿಲುಕಿದ ಭಾರತೀಯರ ರಕ್ಷಣೆಗೆ ಕ್ರಮ; ಸೌದಿ ಮೂಲಕ ಸ್ವದೇಶಕ್ಕೆ

ಹೊಸದಿಲ್ಲಿ: ಮಧ್ಯಪ್ರಾಚ್ಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಬಹರೈನ್ ವಿಮಾನ ನಿಲ್ದಾಣ ಫೆಬ್ರುವರಿ 28ರಿಂದಲೇ ಕಾರ್ಯಾಚರಣೆ ಸ್ಥಗಿತಗೊಳಿಸಿರುವುದರಿಂದ ಅತಂತ್ರರಾಗಿರುವ ಭಾರತೀಯರ ರಕ್ಷಣೆಗೆ ರಾಯಭಾರ ಕಚೇರಿ ಮುಂದಾಗಿದ್ದು, ಸೌದಿ ಅರೇಬಿಯಾ ಮೂಲಕ ಅವರನ್ನು ಸುರಕ್ಷಿತವಾಗಿ ಭಾರತಕ್ಕೆ ವಾಪಾಸು ಕರೆತರಲು ಕ್ರಮ ಕೈಗೊಂಡಿದೆ. ರಿಯಾದ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ, ಅತಂತ್ರರಾಗಿರುವ ಭಾರತೀಯರಿಗೆ ವೈಯಕ್ತಿಕ ಟ್ರಾನ್ಸಿಸ್ಟ್ ವೀಸಾ ಅನುಮೋದನೆಯನ್ನು ಸೌದಿ ಸರ್ಕಾರದಿಂದ ಪಡೆಯುತ್ತಿದೆ. ಬಹರೈನ್ ಭಾರತೀಯ ರಾಯಭಾರ ಕಚೇರಿಯಿಂದ ಬಂದ ಟ್ರಾನ್ಸಿಸ್ಟ್ ವೀಸಾ ಮನವಿಗಳನ್ನು ರಿಯಾದ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಕಳುಹಿಸಲಾಗುತ್ತಿದೆ. ಅತಂತ್ರರಾಗಿರುವ ಭಾರತೀಯರಿಗೆಅದರಲ್ಲೂ ಮುಖ್ಯವಾಗಿ ಪ್ರವಾಸಿ ವೀಸಾ ಮತ್ತು ಅಲ್ಪಾವಧಿ ವೀಸಾ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಬಹರೈನ್ ನಲ್ಲಿರುವ ಭಾರತೀಯ ರಾಯಭಾರಿ ವಿನೋದ್ ಕೆ.ಜಾಕೋಬ್ ಹೇಳಿದ್ದಾರೆ. ಬಹರೈನ್ ನಲ್ಲಿ ಅತಂತ್ರರಾಗಿರುವ ಭಾರತೀಯರಿಗೆ ಸದ್ಯಕ್ಕೆ ಉಳಿದಿರುವ ಏಕೈಕ ಕಾರ್ಯಸಾಧು ಮಾರ್ಗವೆಂದರೆ ಸೌದಿಯ ಮೂಲಕ ವಾಪಸ್ಸಾಗುವುದು. ಸೌದಿ ಟ್ರಾನ್ಸಿಸ್ಟ್ ವೀಸಾಗೆ ಮನವಿ ಮಾಡಿದವರು ಭಾರತ ಪ್ರಯಾಣಕ್ಕೆ ದೃಢೀಕೃತ ವಿಮಾನ ಟಿಕೆಟ್ ಹೊಂದಿರುವುದು ಹೀಗೆ ಕೆಲ ನಿರ್ದಿಷ್ಟ ಪೂರ್ವ ಷರತ್ತುಗಳನ್ನು ಪಾಲಿಸಬೇಕು. ಸೌದಿ ಟ್ರಾನ್ಸಿಸ್ಟ್ ವೀಸಾಗಳು 72-96 ಗಂಟೆಯ ಅವಧಿಯದ್ದಾಗಿದ್ದು, ಈ ಅವಧಿಯೊಳಗೆ ಪ್ರಯಾಣಿಕರು ದೇಶ ಬಿಡಬೇಕು ಎಂದು ಸ್ಪಷ್ಟಪಡಿಸಲಾಗಿದೆ. ನೆರೆಯ ಕತಾರ್ ಇನ್ನೊಂದೆಡೆ ಭಾರತ ಸೇರಿದಂತೆ ವಿವಿಧೆಡೆಗಳಿಗೆ ಹಲವು ವಿಮಾನಗಳನ್ನು ಆರಂಭಿಸಿದೆ. ಆದರೆ ಅಗತ್ಯಕ್ಕಿಂತ ಕಡಿಮೆ ಇರುವುದರಿಂದ ಸೌದಿಯ ಮೂಲಕ ಪ್ರಯಾಣಿಸುವುದು ಭಾರತೀಯರಿಗೆ ಪ್ಲಾನ್ ಬಿ ಆಯ್ಕೆಯಾಗಿದೆ. ಇದರಿಂದ ಟ್ರಾನ್ಸಿಸ್ಟ್ ವೀಸಾಗಳನ್ನು ಪಡೆಯುವ ಧಾವಂತ ಹೆಚ್ಚಿದೆ.

ವಾರ್ತಾ ಭಾರತಿ 10 Mar 2026 7:29 am

'ಯುದ್ಧ ಶೀಘ್ರ ಕೊನೆಗೊಳ್ಳುತ್ತದೆ' : ಚಾಲಾಕಿತನ ತೋರಿಸಿದ್ರೆ ಇರಾನ್ ಸರ್ವನಾಶ ಎಂದ ಡೊನಾಲ್ಡ್ ಟ್ರಂಪ್

ಅಮೆರಿಕ ದಾಳಿ ಮಾಡಿ, ಇರಾನ್‌ನ ನೌಕಾನೆಲೆ, ವಾಯುನೆಲೆ ಧ್ವಂಸಮಾಡಿ, ಸಂಪರ್ಕ ಕಡಿತಗೊಳಿಸಿದೆ, ಈಗ ಕೆಲವೇ ಅಸ್ತ್ರಗಳು ಇರಾನ್‌ ಬಳಿ ಉಳಿದಿವೆ, ಒಂದುವೇಳೆ ಅಮೆರಿಕ ಇದನ್ನು ಆರಂಬಿಸಿರದಿದ್ದರೆ, ಸ್ವತಃ ಇರಾನೇ ಅಮೆರಿಕ ಹಾಗೂ ಇಸ್ರೇಲ್ ಮೇಲೆ ದಾಳಿ ಮಾಡ್ತಿತ್ತು ಎಂದು ಟ್ರಂಪ್ ಹೇಳಿದ್ದಾರೆ.

ವಿಜಯ ಕರ್ನಾಟಕ 10 Mar 2026 7:27 am

Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ತಾಪ ಏರುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಬಿಸಿಲ ನಾಡು ಕಲಬುರಗಿಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಅಂದರೆ 39.4 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗುವ ಮೂಲಕ ಜನರಲ್ಲಿ ಆತಂಕ ಮೂಡಿಸಿದೆ. ಬೀದರ್‌ನಲ್ಲಿ ರಾಜ್ಯದ ಅತಿ ಕಡಿಮೆ

ಒನ್ ಇ೦ಡಿಯ 10 Mar 2026 7:08 am

ಕ್ರಿಮಿನಲ್ ಗಳಿಗೆ 'ಆಪರೇಷನ್ ಸುರಕ್ಷಾ' ದುಸ್ವಪ್ನ

ಡ್ರಗ್ಸ್‌ ಜಾಲದ ವಿರುದ್ಧ ಸಮರೋಪಾದಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹೀಗಾಗಿಯೇ ಕೆಲ ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ ವ್ಯಸನಿಗಳ ವಿರುದ್ಧದ ಕಾನೂನು ಕ್ರಮವನ್ನು ಪುನರಾರಂಭಿಸಲಾಗಿದೆ. ಸುರಕ್ಷಾ ಕಾರ್ಯಾಚರಣೆ ವೇಳೆಯೇ ಡ್ರಗ್ಸ್‌ ಮಾರಾಟದಲ್ಲಿ ತೊಡಗಿದ್ದ 28 ಕ್ಕೂ ಹೆಚ್ಚು ಪೆಡ್ಲರ್‌ಗಳು ಸಿಕ್ಕಿಬಿದ್ದಿದ್ದಾರೆ. ಕೇರಳ, ಒಡಿಶಾ ಸೇರಿದಂತೆ ಸ್ಥಳೀಯ ಪೆಡ್ಲರ್‌ಗಳು ಈ ಪಟ್ಟಿಯಲ್ಲಿದ್ದಾರೆ.

ವಿಜಯ ಕರ್ನಾಟಕ 10 Mar 2026 6:53 am

ಫೈನಲ್‌ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ

Abhishek Sharma: ಟಿ20 ವಿಶ್ವಕಪ್‌ 2026 ಫೈನಲ್ ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರು ಸಿಡಿಸಿದ ಸ್ಫೋಟಕ ಅರ್ಧಶತಕದ ಹಿಂದೆ ಒಂದು ಕುತೂಹಲಕಾರಿ ಕಥೆಯಿದೆ. ಸತತ ವೈಫಲ್ಯಗಳಿಂದ ಬಳಲುತ್ತಿದ್ದ ಅಭಿಷೇಕ್ ಶರ್ಮಾ, ಫೈನಲ್ ಪಂದ್ಯದಲ್ಲಿ ಲಯಕ್ಕೆ ಮರಳಲು ಶಿವಂ ದುಬೆಯ ಬ್ಯಾಟ್ ಅನ್ನು ಬಳಸಿದ್ದು ಇದೀಗ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ.

ಒನ್ ಇ೦ಡಿಯ 10 Mar 2026 6:30 am

\ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ\: ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ

T20 World Cup 2026: ಟಿ20 ವಿಶ್ವಕಪ್ 2026ರ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 96 ರನ್‌ಗಳ ಭರ್ಜರಿ ಜಯ ಸಾಧಿಸಿದ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ, ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್‌ಗಳಾದ ಅಭಿಷೇಕ್ ಶರ್ಮಾ ಮತ್ತು ಇಶಾನ್ ಕಿಶನ್ ಅವರ ನಡುವಿನ ಹಾಸ್ಯಮಯ ಕ್ಷಣಗಳು ಈಗ ಎಲ್ಲರ ಗಮನ ಸೆಳೆಯುತ್ತಿವೆ. ಈ ನಿರ್ಣಾಯಕ ಕದನದಲ್ಲಿ ಇವರಿಬ್ಬರೂ ಭಾರತದ

ಒನ್ ಇ೦ಡಿಯ 10 Mar 2026 6:05 am

ಮನುಕುಲದ ಘಾತಕ ಬಿಳಿ ರಂಜಕ ಬಾಂಬ್‌ ಆತಂಕ: ಇರಾನ್ ಮೇಲಿನ ಯುದ್ಧೋನ್ಮಾದದಲ್ಲಿ ಇಸ್ರೇಲ್ ಬ್ಲಂಡರ್

ಮಧ್ಯಪ್ರಾಚ್ಯದಲ್ಲಿ ಯುದ್ಧ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ, ಯುದ್ಧೋನ್ಮಾದ ಹೆಚ್ಚಾಗುತ್ತಿದ್ದಂತೆ, ಕಾನೂನುಗಳನ್ನೂ ಮೀರಿ ಮನುಕುಲಕ್ಕೆ ತೀವ್ರ ಅಪಾಯ ತಂದೊಡ್ಡಬಲ್ಲ , ಬಿಳಿ ರಂಜಕದ ಬಾಂಬ್ ಕೂಡಾ ಇಸ್ರೇಲ್ ಪ್ರಯೋಗಿಸುತ್ತಿದೆ ಎಂಬುದು ಆಘಾತಕಾರಿಯಾಗಿದೆ.

ವಿಜಯ ಕರ್ನಾಟಕ 10 Mar 2026 5:38 am

ನ್ಯಾಯಾಂಗದಲ್ಲಿ ಲಿಂಗ ಅಂತರ: ಸರ್ಕಾರಿ ವಕೀಲರಲ್ಲಿ ಕೇವಲ 21.5% ಮಹಿಳೆಯರು; ಹೈಕೋರ್ಟ್ ಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ಎಷ್ಟು?

ಭಾರತದ ಹೈಕೋರ್ಟ್ ಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ಇನ್ನೂ ಗಮನಾರ್ಹವಾಗಿ ಕಡಿಮೆಯಾಗಿದ್ದು, ದೇಶಾದ್ಯಂತದ ಒಟ್ಟಾರೆ ನ್ಯಾಯಾಂಗದ ಒಂದು ಸಣ್ಣ ಪ್ರಮಾಣವನ್ನು ಮಾತ್ರ ಹೊಂದಿದೆ. ಫೆಬ್ರವರಿ 6, 2026 ರಂದು ಕಾನೂನು ಮತ್ತು ನ್ಯಾಯ ಸಚಿವಾಲಯ ಬಿಡುಗಡೆ ಮಾಡಿದ ದತ್ತಾಂಶ ಪ್ರಕಾರ, ಹೈಕೋರ್ಟ್ ಗಳಾದ್ಯಂತ ಒಟ್ಟು 781 ನ್ಯಾಯಾಧೀಶರ ಪೈಕಿ 116 ಮಹಿಳಾ ನ್ಯಾಯಾಧೀಶರಿದ್ದಾರೆ. ಇದರರ್ಥ ಹೈಕೋರ್ಟ್ ಗಳಲ್ಲಿ ಮಹಿಳಾ ನ್ಯಾಯಾಧೀಶರ ಪ್ರಾತಿನಿಧ್ಯ ಕೇವಲ 14.85% ರಷ್ಟು. ಸುಪ್ರೀಂ ಕೋರ್ಟ್ ನಲ್ಲಿ ಪ್ರಸ್ತುತ 33 ನ್ಯಾಯಾಧೀಶರು ಕಾರ್ಯನಿರ್ವಹಿಸುತ್ತಿದ್ದು, ಮಹಿಳಾ ನ್ಯಾಯಾಧೀಶರಾಗಿ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಮಾತ್ರ ಇದ್ದಾರೆ. 2021ರ ಸೆಪ್ಟೆಂಬರ್ ನಲ್ಲಿ ಮೂವರು ಮಹಿಳಾ ನ್ಯಾಯಾಧೀಶರು (ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ, ಬೇಲಾ ತ್ರಿವೇದಿ ಮತ್ತು ಬಿ.ವಿ. ನಾಗರತ್ನ) ಒಟ್ಟಿಗೆ ಪದೋನ್ನತಿ ಪಡೆದ ನಂತರ, ಸುಪ್ರೀಂ ಕೋರ್ಟ್ಗೆ ಯಾವುದೇ ಮಹಿಳಾ ನ್ಯಾಯಾಧೀಶರನ್ನು ನೇಮಿಸಲಾಗಿಲ್ಲ. ಈ ಮೂವರಲ್ಲಿ ಇಬ್ಬರು ನಿವೃತ್ತರಾದ ಕಾರಣ, ನ್ಯಾಯಮೂರ್ತಿ ನಾಗರತ್ನ ಅವರು ಪ್ರಸ್ತುತ ಪೀಠದಲ್ಲಿ ಸೇವೆ ಸಲ್ಲಿಸುತ್ತಿರುವ ಏಕೈಕ ಮಹಿಳಾ ನ್ಯಾಯಾಧೀಶರಾಗಿ ಉಳಿದಿದ್ದಾರೆ. ಹಿಂದೆ, ಸುಪ್ರೀಂ ಕೋರ್ಟ್ ಒಂದೇ ಸಮಯದಲ್ಲಿ ನಾಲ್ಕಕ್ಕಿಂತ ಹೆಚ್ಚು ಮಹಿಳಾ ನ್ಯಾಯಾಧೀಶರನ್ನು ಹೊಂದಿರಲಿಲ್ಲ. ಇದೇ ನ್ಯಾಯಾಲಯದ ಇತಿಹಾಸದಲ್ಲಿ ಒಂದೇ ಸಮಯದಲ್ಲಿ ಇದ್ದ ಮಹಿಳಾ ನ್ಯಾಯಾಧೀಶರ ಅತ್ಯಧಿಕ ಸಂಖ್ಯೆಯಾಗಿತ್ತು. ಮಾರ್ಚ್ 8ರ ಅಂತಾರಾಷ್ಟ್ರೀಯ ಮಹಿಳಾ ದಿನದ ಸಂದರ್ಭದಲ್ಲಿ, ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಪೀಠದಲ್ಲಿ ಮಹಿಳೆಯರ ಪ್ರಾತಿನಿಧ್ಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ಉನ್ನತ ನ್ಯಾಯಾಲಯಗಳಲ್ಲಿ (ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಗಳಂತೆ) ಪರಿಸ್ಥಿತಿ ಉತ್ತಮವಾಗಿ ಕಾಣದಿದ್ದರೂ, ಜಿಲ್ಲಾ ಮತ್ತು ಸ್ಥಳೀಯ ನ್ಯಾಯಾಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರ ಸಂಖ್ಯೆ ವಾಸ್ತವವಾಗಿ ಸಾಕಷ್ಟು ಭರವಸೆ ನೀಡುತ್ತದೆ. ಜಿಲ್ಲಾ ನ್ಯಾಯಾಲಯಗಳಲ್ಲಿ ಮಹಿಳಾ ನ್ಯಾಯಾಧೀಶರ ಪ್ರಮಾಣ ಸುಮಾರು ಶೇ. 37ರಷ್ಟಿದೆ ಎಂದು ಸಿಜೆಐ ತಿಳಿಸಿದ್ದಾರೆ. ►ಹೈಕೋರ್ಟ್ ನಲ್ಲಿ ಎಷ್ಟಿದ್ದಾರೆ? ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಭಾರತದಲ್ಲಿ ಅತಿ ಹೆಚ್ಚು ಮಹಿಳಾ ನ್ಯಾಯಾಧೀಶರನ್ನು ಹೊಂದಿದೆ. ಇಲ್ಲಿ ಒಟ್ಟು 61 ನ್ಯಾಯಾಧೀಶರಲ್ಲಿ 18 ಮಹಿಳೆಯರು ಇದ್ದಾರೆ. ಇದರರ್ಥ ನ್ಯಾಯಾಲಯದಲ್ಲಿ 29.51% ಮಹಿಳಾ ಪ್ರಾತಿನಿಧ್ಯ ಇದೆ. ಇತರ ಪ್ರಮುಖ ನ್ಯಾಯಾಲಯಗಳು ಸಹ ಸರಾಸರಿಗಿಂತ ಉತ್ತಮ ಸಂಖ್ಯೆಯನ್ನು ತೋರಿಸುತ್ತವೆ. ದೆಹಲಿ ಹೈಕೋರ್ಟ್ ನಲ್ಲಿ 10 ಮಹಿಳಾ ನ್ಯಾಯಾಧೀಶರು (22.73%) ಮತ್ತು ಮದ್ರಾಸ್ ಹೈಕೋರ್ಟ್ ನಲ್ಲಿ 10 ಮಹಿಳಾ ನ್ಯಾಯಾಧೀಶರು (18.87%) ಇದ್ದಾರೆ. ಭಾರತದ ಇತರ ಹಲವಾರು ಪ್ರಮುಖ ನ್ಯಾಯಾಲಯಗಳು ಸಹ ಸುಧಾರಿತ ಲಿಂಗ ಸಮತೋಲನವನ್ನು ತೋರಿಸುತ್ತವೆ. ಬಾಂಬೆ ಹೈಕೋರ್ಟ್ ನಲ್ಲಿ 12 ಮಹಿಳಾ ನ್ಯಾಯಾಧೀಶರಿದ್ದಾರೆ (15%). ಕರ್ನಾಟಕ ಹೈಕೋರ್ಟ್ ನಲ್ಲಿ 9 ಮಹಿಳಾ ನ್ಯಾಯಾಧೀಶರು (ಶೇ. 19.57), ಕಲ್ಕತ್ತಾ ಹೈಕೋರ್ಟ್ ನಲ್ಲಿ 8 ಮಹಿಳಾ ನ್ಯಾಯಾಧೀಶರು (18.60%), ಗುಜರಾತ್ ನಲ್ಲಿ 7 (ಶೇ. 20) ಮತ್ತು ತೆಲಂಗಾಣದಲ್ಲಿ 7 ಮಹಿಳಾ ನ್ಯಾಯಾಧೀಶರಿದ್ದು (ಶೇ. 25) ತುಲನಾತ್ಮಕವಾಗಿ ಉತ್ತಮ ಲಿಂಗ ಪ್ರಾತಿನಿಧ್ಯವನ್ನು ತೋರಿಸುತ್ತವೆ. ಸಣ್ಣ ಹೈಕೋರ್ಟ್ ಗಳಲ್ಲಿ, ಸಿಕ್ಕಿಂ ಹೈಕೋರ್ಟ್ ನಲ್ಲಿ ಶೇ. 33.33 ಮಹಿಳಾ ಪ್ರಾತಿನಿಧ್ಯ ಇದೆ. ಇಲ್ಲಿ ಮೂವರು ನ್ಯಾಯಾಧೀಶರಲ್ಲಿ ಒಬ್ಬರು ಮಹಿಳೆಯರಾಗಿದ್ದಾರೆ. ಹಲವಾರು ಹೈಕೋರ್ಟ್ ಗಳಲ್ಲಿ ಮಹಿಳಾ ನ್ಯಾಯಾಧೀಶರ ಪ್ರಾತಿನಿಧ್ಯ ಇನ್ನೂ ತೀರಾ ಕಡಿಮೆಯಾಗಿದೆ. ಮಧ್ಯಪ್ರದೇಶ ಹೈಕೋರ್ಟ್ ನ 42 ನ್ಯಾಯಾಧೀಶರಲ್ಲಿ ಕೇವಲ ಒಬ್ಬರು ಮಹಿಳಾ ನ್ಯಾಯಾಧೀಶರಾಗಿದ್ದು, ಇದು ಶೇ. 2.38ರಷ್ಟಾಗಿದೆ. 110 ನ್ಯಾಯಾಧೀಶರನ್ನು ಹೊಂದಿರುವ ಅತಿದೊಡ್ಡ ಅಲಹಾಬಾದ್ ಹೈಕೋರ್ಟ್ ನಲ್ಲಿ ಕೇವಲ 7 ಮಹಿಳಾ ನ್ಯಾಯಾಧೀಶರು (ಶೇ. 6.36) ಇದ್ದಾರೆ. ಅದೇ ರೀತಿ, ಕೇರಳ (ಶೇ. 7.5), ಜಾರ್ಖಂಡ್ (ಶೇ. 7.14), ಛತ್ತೀಸ್ಗಢ (ಶೇ. 6.67), ಪಾಟ್ನಾ (ಶೇ. 5.26) ಮತ್ತು ಒರಿಸ್ಸಾ (ಶೇ. 5.26) ಹೈಕೋರ್ಟ್ ಗಳಲ್ಲಿ ಮಹಿಳಾ ನ್ಯಾಯಾಧೀಶರ ಪ್ರಾತಿನಿಧ್ಯ ಸೀಮಿತವಾಗಿದೆ. ಮಣಿಪುರ ಹೈಕೋರ್ಟ್, ತ್ರಿಪುರ ಹೈಕೋರ್ಟ್ ಮತ್ತು ಉತ್ತರಾಖಂಡ ಹೈಕೋರ್ಟ್ ಗಳಲ್ಲಿ ಪ್ರಸ್ತುತ ಮಹಿಳಾ ನ್ಯಾಯಾಧೀಶರೇ ಇಲ್ಲ. ►ಸರ್ಕಾರಿ ವಕೀಲರಲ್ಲಿ ಮಹಿಳೆಯರು ಎಷ್ಟು? ಕೇಂದ್ರ ಸರ್ಕಾರವು ನ್ಯಾಯಾಲಯಕ್ಕೆ ಹೋದಾಗ, ಅಲ್ಲಿ ವಾದಿಸುವವರು ಬಹುತೇಕ ಪುರುಷರೇ ಆಗಿರುತ್ತಾರೆ. 2025ರ ಸರ್ಕಾರಿ ವಕೀಲರ ಪಟ್ಟಿಗಳ ವಿಶ್ಲೇಷಣೆಯು ಭಾರತ ಒಕ್ಕೂಟವನ್ನು ಪ್ರತಿನಿಧಿಸುವ ಕಾನೂನು ತಂಡಗಳಲ್ಲಿ ಮಹಿಳೆಯರು ಕೇವಲ 20% (ಅಂದರೆ ಐದು ವಕೀಲರಲ್ಲಿ ಒಬ್ಬರು) ಇದ್ದಾರೆ ಎಂದು ತೋರಿಸುತ್ತದೆ. ಈ ಪ್ರವೃತ್ತಿ ಭಾರತೀಯ ಕಾನೂನು ವ್ಯವಸ್ಥೆಯ ಪ್ರತಿಯೊಂದು ಹಂತದಲ್ಲೂ ಇರುವ ಹೆಚ್ಚಿನ ಲಿಂಗತ್ವ ಅಂತರವನ್ನು ಪ್ರತಿಬಿಂಬಿಸುತ್ತದೆ. ಸ್ಥಾಯಿ ವಕೀಲ ಅಥವಾ ಸರ್ಕಾರಿ ವಕೀಲನಂತಹ ಬಿರುದುಗಳನ್ನು ಹೊಂದಿರುವ ಈ ವಕೀಲರನ್ನು ಅಧಿಕೃತವಾಗಿ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯದ ಭಾಗವಾಗಿರುವ ಕಾನೂನು ವ್ಯವಹಾರಗಳ ಇಲಾಖೆಯಿಂದ ಆಯ್ಕೆ ಮಾಡಿ ನೇಮಿಸಲಾಗುತ್ತದೆ. ►ಡೇಟಾ ಏನು ಹೇಳುತ್ತದೆ? The Print ನಡೆಸಿದ ವಿಶ್ಲೇಷಣೆಯು ವಿವಿಧ ನ್ಯಾಯಾಲಯಗಳ ದತ್ತಾಂಶವು ಎಲ್ಲೆಡೆ ಒಂದೇ ರೀತಿಯ ಸ್ಪಷ್ಟ ಮಾದರಿಯನ್ನು ತೋರಿಸುತ್ತದೆ ಎಂದು ಹೇಳಿದೆ. ಸುಪ್ರೀಂ ಕೋರ್ಟ್ ನಲ್ಲಿ ಪ್ರಸ್ತುತ ನೇಮಕಗೊಂಡಿರುವ 11 ಹೆಚ್ಚುವರಿ ಸಾಲಿಸಿಟರ್ ಜನರಲ್ ಗಳಲ್ಲಿ (ASGs) ಕೇವಲ ಇಬ್ಬರು ಮಹಿಳೆಯರಿದ್ದಾರೆ. ವಿವಿಧ ಸರ್ಕಾರಿ ಪ್ರಕರಣಗಳನ್ನು ನಿರ್ವಹಿಸಲು ನೇಮಕಗೊಂಡ ವಕೀಲರ ಸಂಖ್ಯೆಯನ್ನು ನೋಡಿದಾಗ, ನವೆಂಬರ್ 2025ರ ಇತ್ತೀಚಿನ ಪಟ್ಟಿಯಲ್ಲಿ 654 ವಕೀಲರಲ್ಲಿ 141 ಮಹಿಳೆಯರಿದ್ದಾರೆ. ಇದರರ್ಥ ಮಹಿಳೆಯರು ಆ ಗುಂಪಿನಲ್ಲಿ ಕೇವಲ ಶೇ. 21.5ರಷ್ಟಿದ್ದಾರೆ. 2025ರಲ್ಲಿ ಸರ್ಕಾರವು ವಿವಿಧ ಹೈಕೋರ್ಟ್ ಗಳಿಗೆ ವಕೀಲರ ಪಟ್ಟಿಯನ್ನು ನವೀಕರಿಸಿದಾಗ ಅಥವಾ ವಿಸ್ತರಿಸಿದಾಗ, ಈ ಎಲ್ಲಾ ನ್ಯಾಯಾಲಯಗಳಲ್ಲಿ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಲು ಆಯ್ಕೆಯಾದ ವಕೀಲರಲ್ಲಿ ಮಹಿಳೆಯರ ಸಂಖ್ಯೆ ಕಡಿಮೆಯೇ ಇತ್ತು. ದೆಹಲಿ ಹೈಕೋರ್ಟ್ ನಲ್ಲಿ ಸೆಪ್ಟೆಂಬರ್ 2025ರ ಅಧಿಸೂಚನೆಯ ಪ್ರಕಾರ 684 ವಕೀಲರಲ್ಲಿ 161 ಮಹಿಳೆಯರು ಇದ್ದರು. ಇದು ತಂಡದ ಸುಮಾರು ಶೇ. 21.8ರಷ್ಟಾಗಿದೆ. ಬಾಂಬೆ ಹೈಕೋರ್ಟ್ 2025ರ ಎರಡು ಪ್ರತ್ಯೇಕ ಅಧಿಸೂಚನೆಗಳಲ್ಲಿ ಇದೇ ರೀತಿಯ ಸಂಖ್ಯೆಯನ್ನು ತೋರಿಸಿದೆ. ಒಂದು ಪಟ್ಟಿಯಲ್ಲಿ 276 ವಕೀಲರಲ್ಲಿ 54 ಮಹಿಳೆಯರು (19.5%) ಇದ್ದರು, ಇನ್ನೊಂದು ಪಟ್ಟಿಯಲ್ಲಿ 17 ವಕೀಲರಲ್ಲಿ ಕೇವಲ 2 ಮಹಿಳೆಯರು (11.7%) ಇದ್ದರು. ಇವುಗಳನ್ನು ಸಂಯೋಜಿಸಿದಾಗ, ಬಾಂಬೆಯಲ್ಲಿನ ಸರ್ಕಾರಿ ಕಾನೂನು ತಂಡದಲ್ಲಿ ಸುಮಾರು ಶೇ. 19.11 ಮಹಿಳೆಯರು ಇದ್ದರು. ಅಂದರೆ ಪ್ರತಿ ಐದು ವಕೀಲರಲ್ಲಿ ಒಬ್ಬರು ಮಹಿಳೆ. ಜಬಲ್ಪುರ, ಇಂದೋರ್ ಮತ್ತು ಗ್ವಾಲಿಯರ್ ನ ಮೂರು ಪೀಠಗಳಲ್ಲಿ ಕಾರ್ಯನಿರ್ವಹಿಸುವ ಮಧ್ಯಪ್ರದೇಶ ಹೈಕೋರ್ಟ್ ನಲ್ಲಿ ಮಾರ್ಚ್ 2025ರ ಅಧಿಸೂಚನೆಯ ಪ್ರಕಾರ 105 ಸರ್ಕಾರಿ ವಕೀಲರಲ್ಲಿ 21 ಮಹಿಳೆಯರು ಇದ್ದರು. ಅಂದರೆ ಇಲ್ಲಿ ಶೇ. 20 ಮಹಿಳೆಯರು ಇದ್ದರು. ಕರ್ನಾಟಕ ಹೈಕೋರ್ಟ್ ನಲ್ಲಿ ನವೆಂಬರ್ 2025ರ ಅಧಿಸೂಚನೆಯ ಪ್ರಕಾರ ಇಲ್ಲಿಯೂ ಒಂದೇ ರೀತಿಯ ಪ್ರಾತಿನಿಧ್ಯ ಕಾಣಲು ಸಿಗುತ್ತದೆ. ಅಂದರೆ ಐದು ವಕೀಲರಲ್ಲಿ ಒಬ್ಬರು ಮಹಿಳೆಯರಾಗಿದ್ದರು. ಆದರೆ, ಇತರ ಪ್ರದೇಶಗಳಲ್ಲಿ ಈ ಸಂಖ್ಯೆಗಳು ತುಂಬಾ ಕಡಿಮೆ ಇದ್ದವು. ಪಾಟ್ನಾ ಹೈಕೋರ್ಟ್ ನಲ್ಲಿ ಮಹಿಳೆಯರ ಪಾಲು ಕಡಿಮೆಯಾಗಿದೆ. ಜೂನ್ 2025ರ ಅಧಿಸೂಚನೆಯ ಪ್ರಕಾರ 86 ವಕೀಲರಲ್ಲಿ ಕೇವಲ 8 ಮಹಿಳೆಯರು (ಶೇ. 9.3) ಇದ್ದರು. ಅದೇ ರೀತಿ, ಒಡಿಶಾ ಹೈಕೋರ್ಟ್ ನಲ್ಲಿ 53 ವಕೀಲರಲ್ಲಿ 8 ಮಹಿಳೆಯರು (ಶೇ. 15) ಮತ್ತು ಹಿಮಾಚಲ ಪ್ರದೇಶ ಹೈಕೋರ್ಟ್ ನಲ್ಲಿ 12 ವಕೀಲರಲ್ಲಿ ಕೇವಲ 2 ಮಹಿಳೆಯರು (ಶೇ. 16.6) ಇದ್ದರು. ಹಲವಾರು ಹೈಕೋರ್ಟ್ ಗಳಲ್ಲಿ ಪ್ರಾತಿನಿಧ್ಯವು ತುಲನಾತ್ಮಕವಾಗಿ ಉತ್ತಮವಾಗಿತ್ತು. 2025ರಲ್ಲಿ ಸರ್ಕಾರವು ಕೇರಳ ಹೈಕೋರ್ಟ್ ನ ವಕೀಲರ ಹಲವಾರು ವಿಭಿನ್ನ ಪಟ್ಟಿಗಳನ್ನು ಬಿಡುಗಡೆ ಮಾಡಿತು. ನಿರ್ದಿಷ್ಟ ಪಟ್ಟಿಯನ್ನು ಅವಲಂಬಿಸಿ ಮಹಿಳೆಯರ ಸಂಖ್ಯೆ ಬದಲಾಗುತ್ತಿತ್ತು. ಒಂದು ಪಟ್ಟಿಯಲ್ಲಿ ಶೇ. 15.3 ಇದ್ದರೆ, ಇನ್ನೊಂದರಲ್ಲಿ ಶೇ. 31.4 ರಷ್ಟು ಇದ್ದರು. ಈ ಎಲ್ಲಾ ಪಟ್ಟಿಗಳನ್ನು ಒಟ್ಟಿಗೆ ನೋಡಿದಾಗ, ಕೇರಳದಲ್ಲಿ ಸರ್ಕಾರದ ಕಾನೂನು ತಂಡದಲ್ಲಿ ಶೇ. 26 ಮಹಿಳೆಯರು ಇದ್ದರು. ಆಂಧ್ರಪ್ರದೇಶ ಹೈಕೋರ್ಟ್ ನಲ್ಲಿ ಡಿಸೆಂಬರ್ 2025ರ ಅಧಿಸೂಚನೆಯಲ್ಲಿ 47 ವಕೀಲರಲ್ಲಿ 13 ಮಹಿಳೆಯರು (ಶೇ. 27.6) ಇದ್ದರು. ತೆಲಂಗಾಣ ಹೈಕೋರ್ಟ್ಗೆ ಡಿಸೆಂಬರ್ 2025ರ ಅಧಿಸೂಚನೆಯಲ್ಲಿ ಈ ಸಂಖ್ಯೆ 110ರಲ್ಲಿ 31 (ಶೇ. 28) ಆಗಿತ್ತು. ಕಲ್ಕತ್ತಾ ಹೈಕೋರ್ಟ್ ನ 278 ವಕೀಲರಲ್ಲಿ 71 ಮಹಿಳೆಯರು ಅಥವಾ ಶೇ. 25.5 ರಷ್ಟಿದ್ದರು. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್, ಗುಜರಾತ್ ಹೈಕೋರ್ಟ್, ಛತ್ತೀಸ್ಗಢ ಹೈಕೋರ್ಟ್, ಅಲಹಾಬಾದ್ ಹೈಕೋರ್ಟ್, ಉತ್ತರಾಖಂಡ್ ಹೈಕೋರ್ಟ್ ಮತ್ತು ಗುವಾಹಟಿ ಹೈಕೋರ್ಟ್ ಗಳಲ್ಲಿ ಈ ಪಟ್ಟಿಗಳನ್ನು ವರ್ಷಗಳಿಂದ ನವೀಕರಿಸಲಾಗಿಲ್ಲ. ಬದಲಾಗಿ, ಸರ್ಕಾರವು ಈಗಾಗಲೇ ಅಲ್ಲಿದ್ದ ವಕೀಲರ ಒಪ್ಪಂದಗಳನ್ನು ವಿಸ್ತರಿಸಿದೆ. ಗುಜರಾತ್ ಹೈಕೋರ್ಟ್ ಇನ್ನೂ 2018ರ ಪಟ್ಟಿಯನ್ನು ಬಳಸುತ್ತಿದೆ. ಇದರಲ್ಲಿ 31 ವಕೀಲರಲ್ಲಿ ಕೇವಲ 4 ಮಹಿಳೆಯರು (ಶೇ. 12.9) ಇದ್ದಾರೆ. ಅದೇ ರೀತಿ, ಗುವಾಹಟಿ ಹೈಕೋರ್ಟ್ 2019ರ ಪಟ್ಟಿಯನ್ನು ಬಳಸುತ್ತಿದೆ. ಇದರಲ್ಲಿ 28 ವಕೀಲರಲ್ಲಿ 6 ಮಹಿಳೆಯರು (ಶೇ. 21.4) ಇದ್ದಾರೆ. ►ಸರ್ಕಾರ ಏನು ಹೇಳುತ್ತದೆ? ಸರ್ಕಾರದ ಸ್ವಂತ ದಾಖಲೆಗಳು ಈ ಲಿಂಗ ಅಂತರವನ್ನು ದೃಢಪಡಿಸುತ್ತವೆ. 2023ರಲ್ಲಿ ಕಾನೂನು ಮತ್ತು ನ್ಯಾಯ ಸಚಿವಾಲಯವು ಸಂಸತ್ತಿಗೆ ನೀಡಿದ ಮಾಹಿತಿಯ ಪ್ರಕಾರ, ಅವರ ಕಾನೂನು ತಂಡದಲ್ಲಿ 5,382 ಪುರುಷರು ಇದ್ದರು. ಆದರೆ ಅವರಲ್ಲಿ ಕೇವಲ 411 ಮಹಿಳೆಯರು ಮಾತ್ರ ಇದ್ದರು. ಪ್ರಸ್ತುತ ಹೆಚ್ಚಿನ ಮಹಿಳೆಯರನ್ನು ಸೇರಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಯಾವುದೇ ವಿಶೇಷ ನಿಯಮಗಳು ಅಥವಾ ಮೀಸಲು ವ್ಯವಸ್ಥೆ ಇಲ್ಲ. ಈ ಕಡಿಮೆ ಸಂಖ್ಯೆಯ ಕುರಿತು ಪ್ರತಿಕ್ರಿಯೆ ಕೇಳಿದಾಗ ಕಾನೂನು ಸಚಿವಾಲಯ ಇನ್ನೂ ಪ್ರತಿಕ್ರಿಯಿಸಿಲ್ಲ ಎಂದು ದಿ ಪ್ರಿಂಟ್ ವರದಿ ಉಲ್ಲೇಖಿಸಿದೆ. ಈ ವಕೀಲರನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ ಎಂಬುದರ ಬಗ್ಗೆ ಸಹ ಹೆಚ್ಚುತ್ತಿರುವ ಕಳವಳಗಳಿವೆ. ಪ್ರಸ್ತುತ ಸರ್ಕಾರಿ ವಕೀಲರನ್ನು ನೇಮಿಸಿಕೊಳ್ಳಲು ಸ್ಪಷ್ಟ ಮತ್ತು ಅಧಿಕೃತ ನಿಯಮಗಳಿಲ್ಲ. ಈ ಕಾರಣದಿಂದಾಗಿ ಪ್ರಕ್ರಿಯೆಯು ನ್ಯಾಯಯುತವಾಗಿದ್ದು ಅರ್ಹತೆಯ ಆಧಾರದ ಮೇಲೆ ನಡೆಯುತ್ತಿದೆಯೇ ಎಂಬುದನ್ನು ಖಚಿತಪಡಿಸಲು ದೆಹಲಿ ಹೈಕೋರ್ಟ್ ಇತ್ತೀಚೆಗೆ ಸರ್ಕಾರಕ್ಕೆ ಮೂರು ತಿಂಗಳೊಳಗೆ ಪಾರದರ್ಶಕ ಮಾರ್ಗಸೂಚಿಗಳನ್ನು ರಚಿಸುವಂತೆ ಆದೇಶಿಸಿದೆ. ಪ್ರಸ್ತುತ ಪಟ್ಟಿಯಲ್ಲಿರುವ ಕೆಲವು ವಕೀಲರು ಅಗತ್ಯವಿರುವ ಬಾರ್ ಪರೀಕ್ಷೆಯನ್ನೂ ಉತ್ತೀರ್ಣರಾಗಿಲ್ಲ ಎಂಬ ಕಾನೂನು ಸವಾಲಿನ ನಂತರ ಈ ಆದೇಶ ಬಂದಿದೆ. ನ್ಯಾಯಾಲಯವು ವಸ್ತುನಿಷ್ಠ ಮತ್ತು ಮುಕ್ತವಾದ ವ್ಯವಸ್ಥೆಯನ್ನು ಬಯಸುತ್ತದೆ. ಆದರೆ ಈ ನಿಯಮಗಳ ಕುರಿತು ಅಂತಿಮ ನಿರ್ಧಾರ ಇನ್ನೂ ಬಾಕಿಯಾಗಿದೆ.

ವಾರ್ತಾ ಭಾರತಿ 10 Mar 2026 5:22 am

ವೃಷಭಾವತಿ ವ್ಯಾಲಿಯ ಒಂದು ಹನಿ ನೀರೂ ಬೇಡ: ಬಜೆಟ್‌ನಲ್ಲಿ ದೊಡ್ಡಬಳ್ಳಾಪುರ, ನೆಲಮಂಗಲ ಕೆರೆಗಳಿಗೆ ಹರಿಸುವ ಘೋಷಣೆ ಬೆನ್ನಲ್ಲೇ ಭಾರಿ ವಿರೋಧ

ಬೆಂಗಳೂರಿನ ಕೊಳಚೆ ನೀರು, ಕೈಗಾರಿಕೆ ತ್ಯಾಜ್ಯ ನೀರು ಹರಿದು ವಿಷಯುಕ್ತವಾಘಿರುವ ವೃಷಭಾವತಿ ವ್ಯಾಲಿ ನೀರಿನಿಂದ ಈಗಾಗಲೇ ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಸಾಕಷ್ಟು ಸಮಸ್ಯೆಗಳಾಗಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ ಕೆರೆ ತುಂಬಿಸುವ ಯೋಜನೆಗೆ ಭಾರಿ ವಿರೋಧ ವ್ಯಕ್ತವಾಗಿದೆ. 3 ನೇ ಹಂತದಲ್ಲಿ ಸಂಸ್ಕರಣೆ ಆಗದಿದ್ದರೆ, ಇದರ ಒಂದು ಹನಿ ನೀರೂ ಬೇಡ ಎಂದು ವಿರೋಧ ವ್ಯಕ್ತವಾಗಿದೆ.

ವಿಜಯ ಕರ್ನಾಟಕ 10 Mar 2026 5:21 am

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಬೆದರಿಕೆ ಅಂತ್ಯಕ್ಕೆ ತಲುಪಿದೆ: ಟ್ರಂಪ್

“ಹಡಗಿನ ಮೇಲೆ ದಾಳಿ ಮಾಡಿದರೆ ಪರಿಣಾಮಗಳು ಗಂಭೀರವಾಗಿರುತ್ತವೆ”

ವಾರ್ತಾ ಭಾರತಿ 10 Mar 2026 5:03 am

Bahrain ಮೇಲೆ ಇರಾನ್‌ ನಿಂದ ಮುಂದುವರಿದ ದಾಳಿ; ಕನಿಷ್ಠ ಓರ್ವ ಮೃತ್ಯು

ಮನಾಮ: ಬಹ್ರೇನ್ ರಾಜಧಾನಿ ಮನಾಮದಲ್ಲಿನ ವಸತಿ ಕಟ್ಟಡವನ್ನು ಗುರಿಯಾಗಿಸಿಕೊಂಡು ಇರಾನ್ ನಡೆಸಿದ ದೊಡ್ಡ ಮಟ್ಟದ ದಾಳಿಯಲ್ಲಿ ಒಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಬಹ್ರೇನ್ ನ ಆಂತರಿಕ ಸಚಿವಾಲಯವು ತಿಳಿಸಿದೆ ಎಂದು Aljazeera ವರದಿ ಮಾಡಿದೆ. ಈ ಘಟನೆ ಕುರಿತು ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ ಎಂದು ಬಹ್ರೇನ್ ಅಧಿಕಾರಿಗಳು ತಿಳಿಸಿದ್ದಾರೆ.

ವಾರ್ತಾ ಭಾರತಿ 10 Mar 2026 4:40 am

ರಮಝಾನ್ ನಲ್ಲಿ ಸಾವಿರಾರು ಕೋಟಿ ಝಕಾತ್; ಬಡಕುಟುಂಬಗಳ ಬದುಕಿಗೆ ಆಶಾಕಿರಣ

ಹೊಸದಿಲ್ಲಿ: ಪವಿತ್ರ ರಮಝಾನ್ ತಿಂಗಳಲ್ಲಿ ಮುಸ್ಲಿಮರು ನೀಡುವ ಝಕಾತ್ ದೇಣಿಗೆಗಳು ಭಾರತದಲ್ಲಿ ಶಿಕ್ಷಣ, ಕಾನೂನು ನೆರವು ಮತ್ತು ಆರ್ಥಿಕವಾಗಿ ದುರ್ಬಲ ಕುಟುಂಬಗಳಿಗೆ ಬೆಂಬಲ ಒದಗಿಸುವ ಪ್ರಮುಖ ಸಾಮಾಜಿಕ ನೆರವಿನ ಮೂಲವಾಗುತ್ತಿವೆ. ಸಮುದಾಯ ಸಂಘಟನೆಗಳ ಅಂದಾಜಿನ ಪ್ರಕಾರ, ದೇಶದಲ್ಲಿ ಪ್ರತಿ ವರ್ಷ ಝಕಾತ್ ರೂಪದಲ್ಲಿ ಸುಮಾರು 10,000 ಕೋಟಿ ರೂ.ಯಿಂದ 40,000 ಕೋಟಿ ರೂ.ವರೆಗೆ ದೇಣಿಗೆ ಸಂಗ್ರಹವಾಗಬಹುದು. ರಮಝಾನ್ ತಿಂಗಳು ಮುಸ್ಲಿಮರಿಗೆ ಉಪವಾಸ, ಪ್ರಾರ್ಥನೆ ಮತ್ತು ದಾನಕ್ಕೆ ವಿಶೇಷ ಮಹತ್ವ ಹೊಂದಿದೆ. ಈ ಅವಧಿಯಲ್ಲಿ ಅನೇಕರು ತಮ್ಮ ಝಕಾತ್ ಕರ್ತವ್ಯವನ್ನು ನೆರವೇರಿಸುತ್ತಾರೆ. ಝಕಾತ್ ಇಸ್ಲಾಂ ಧರ್ಮದಲ್ಲಿ ಕಡ್ಡಾಯವಾದ ದಾನ ಪದ್ಧತಿಯಾಗಿದ್ದು, ಆರ್ಥಿಕವಾಗಿ ಸಮರ್ಥರಾದ ಮುಸ್ಲಿಮರು ತಮ್ಮ ಸಂಪತ್ತಿನ ಒಂದು ಭಾಗವನ್ನು ಅಗತ್ಯವಿರುವವರಿಗೆ ನೀಡಬೇಕೆಂಬ ನಿಯಮವನ್ನು ಒಳಗೊಂಡಿದೆ. ►ಝಕಾತ್ ಎಂದರೇನು? ಝಕಾತ್ ಇಸ್ಲಾಂ ಧರ್ಮದ ಐದು ಸ್ತಂಭಗಳಲ್ಲಿ ಒಂದಾಗಿದೆ. ಸಮಾಜದಲ್ಲಿ ಸಂಪತ್ತು ಸಮನಾಗಿ ಹರಿದಾಡಿ ದುರ್ಬಲ ವರ್ಗಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ಈ ವ್ಯವಸ್ಥೆ ರೂಪಿಸಲಾಗಿದೆ. ಸಾಮಾನ್ಯವಾಗಿ ವ್ಯಕ್ತಿಯ ಉಳಿತಾಯ, ಆಸ್ತಿ ಮತ್ತು ಸಂಗ್ರಹಿಸಿದ ಸಂಪತ್ತಿನ ಮೇಲೆ ಶೇಕಡಾ 2.5ರಷ್ಟು ಝಕಾತ್ ನೀಡಲಾಗುತ್ತದೆ. ಈ ದಾನ ನೀಡುವ ಹೊಣೆಗಾರಿಕೆ ‘ನಿಸಾಬ್’ ಎಂದು ಕರೆಯಲಾಗುವ ಕನಿಷ್ಠ ಸಂಪತ್ತಿನ ಮಿತಿಯನ್ನು ಮೀರಿದವರ ಮೇಲೆ ಅನ್ವಯಿಸುತ್ತದೆ. ನಿಸಾಬ್ ಮೌಲ್ಯವನ್ನು ಚಿನ್ನ ಅಥವಾ ಬೆಳ್ಳಿಯ ಬೆಲೆಯ ಆಧಾರದ ಮೇಲೆ ಲೆಕ್ಕ ಹಾಕಲಾಗುತ್ತದೆ. 87.5 ಗ್ರಾಂ ಚಿನ್ನ ಅಥವಾ 612.36 ಗ್ರಾಂ ಬೆಳ್ಳಿಯ ಮೌಲ್ಯಕ್ಕೆ ಸಮಾನವಾದ ಸಂಪತ್ತನ್ನು ಹೊಂದಿರುವವರು ಝಕಾತ್ ನೀಡಬೇಕಾಗುತ್ತದೆ. ಭಾರತದಲ್ಲಿ ಸುಮಾರು 17.18 ಕೋಟಿ ಮುಸ್ಲಿಮರು ಇದ್ದು, ಇದು ದೇಶದ ಒಟ್ಟು ಜನಸಂಖ್ಯೆಯ ಶೇಕಡಾ 14.2ರಷ್ಟಾಗಿದೆ. ಇವರು ನೀಡುವ ಝಕಾತ್ ಮೊತ್ತವು ಗಣನೀಯ ಪ್ರಮಾಣದಲ್ಲಿದೆ. ಆದರೆ ನಿಖರ ಅಂಕಿಅಂಶಗಳು ಲಭ್ಯವಿಲ್ಲ. 2005ರಲ್ಲಿ ‘ಝಕಾತ್ ಫೌಂಡೇಶನ್ ಆಫ್ ಇಂಡಿಯಾ’ ಆಯೋಜಿಸಿದ್ದ ಸಮ್ಮೇಳನದಲ್ಲಿ ಮಂಡಿಸಲಾದ ಅಧ್ಯಯನ ಪ್ರಬಂಧವು ವಿವಿಧ ಧಾರ್ಮಿಕ ಸಮುದಾಯಗಳ ಮನೆಮನೆ ಆದಾಯದ ದತ್ತಾಂಶವನ್ನು ಆಧರಿಸಿ ಝಕಾತ್ ಮೊತ್ತವನ್ನು ವರ್ಷಕ್ಕೆ ಸುಮಾರು 10,000 ಕೋಟಿ ರೂ. ಎಂದು ಅಂದಾಜಿಸಿತ್ತು. ಆದರೆ ಸಮುದಾಯ ಕಾರ್ಯಕರ್ತರ ಪ್ರಕಾರ, ಆದಾಯದ ಏರಿಕೆ ಮತ್ತು ಜನಸಂಖ್ಯೆಯ ಹೆಚ್ಚಳದ ಹಿನ್ನೆಲೆಯಲ್ಲಿ ಈ ಮೊತ್ತವು ಈಗ ಗಮನಾರ್ಹವಾಗಿ ಹೆಚ್ಚಿರಬಹುದು. ಪ್ರಸ್ತುತ ವರ್ಷಕ್ಕೆ 10,000 ಕೋಟಿ ರೂ.ವಿನಿಂದ 40,000 ಕೋಟಿ ರೂ.ವರೆಗೆ ಝಕಾತ್ ಸಂಗ್ರಹವಾಗುವ ಸಾಧ್ಯತೆ ಇದೆ. ವಿಶೇಷವಾಗಿ ರಮಝಾನ್ ಸಮಯದಲ್ಲಿ ಹೆಚ್ಚಿನವರು ತಮ್ಮ ಕರ್ತವ್ಯವನ್ನು ನೆರವೇರಿಸಲು ಮುಂದಾಗುತ್ತಾರೆ. ►ಸಂಘಟಿತ ಉಪಕ್ರಮಗಳತ್ತ ಒಲವು ಈ ದತ್ತಿ ನಿಧಿಗಳ ಹೆಚ್ಚಿನ ಭಾಗವನ್ನು ಸಾಮಾನ್ಯವಾಗಿ ಅನೌಪಚಾರಿಕವಾಗಿ ಅಥವಾ ಸಣ್ಣ ಪ್ರಮಾಣದಲ್ಲಿ ವಿತರಿಸಲಾಗುತ್ತದೆ. ಇದರಿಂದ ಅದರ ದೀರ್ಘಕಾಲೀನ ಪರಿಣಾಮ ಸೀಮಿತವಾಗುತ್ತದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಶಿಕ್ಷಣ, ಬಡತನ ನಿರ್ಮೂಲನೆ ಮತ್ತು ಕಾನೂನು ನೆರವು ಮುಂತಾದ ಸಮಸ್ಯೆಗಳನ್ನು ಪರಿಹರಿಸುವ ಗುರಿಯೊಂದಿಗೆ ಝಕಾತ್ ಅನ್ನು ಸಂಘಟಿತ ಉಪಕ್ರಮಗಳ ಮೂಲಕ ಬಳಸುವ ಪ್ರಯತ್ನಗಳು ಹೆಚ್ಚುತ್ತಿವೆ. ಮುಂಬೈ ಮೂಲದ ‘ಮುಸ್ಲಿಂ ವೃತ್ತಿಪರರ ಸಂಘ’ವು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು ನೀಡಲು ರಾಷ್ಟ್ರವ್ಯಾಪಿ ಅಭಿಯಾನವನ್ನು ಆರಂಭಿಸಿದೆ. ಈ ಯೋಜನೆಯಡಿ 10,000 ರೂ. ದೇಣಿಗೆಯ ಮೂಲಕ ಒಂದು ವಿದ್ಯಾರ್ಥಿಯ ಒಂದು ವರ್ಷದ ಶಿಕ್ಷಣವನ್ನು ಪ್ರಾಯೋಜಿಸಲು ದಾನಿಗಳನ್ನು ಪ್ರೋತ್ಸಾಹಿಸಲಾಗುತ್ತಿದೆ. ಭಾರತದ 200ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸುಮಾರು 10,000 ವಿದ್ಯಾರ್ಥಿಗಳಿಗೆ ನೆರವು ನೀಡುವುದು ಈ ಉಪಕ್ರಮದ ಗುರಿಯಾಗಿದೆ. ಪರಿಶೀಲನಾ ಪ್ರಕ್ರಿಯೆಯ ಮೂಲಕ ವಿದ್ಯಾರ್ಥಿಗಳನ್ನು ಗುರುತಿಸಲಾಗುತ್ತದೆ ಮತ್ತು ಹಣವನ್ನು ನೇರವಾಗಿ ಶಿಕ್ಷಣ ಸಂಸ್ಥೆಗಳಿಗೆ ವರ್ಗಾಯಿಸಲಾಗುತ್ತದೆ. ಇದರಿಂದ ಶಾಲಾ ಶುಲ್ಕ ಹಾಗೂ ಸಂಬಂಧಿತ ಶಿಕ್ಷಣ ವೆಚ್ಚಗಳಿಗೆ ನೆರವು ದೊರೆಯುತ್ತದೆ. “ಪ್ರತಿ ವರ್ಷ ಭಾರತದಲ್ಲಿ ದೊಡ್ಡ ಪ್ರಮಾಣದ ಹಣ ಝಕಾತ್ ರೂಪದಲ್ಲಿ ವಿತರಿಸಲಾಗುತ್ತದೆ. ಆದರೆ ಹಣ ಚದುರಿಹೋಗಿರುವುದರಿಂದ ಅದರ ಪರಿಣಾಮ ಸೀಮಿತವಾಗುತ್ತದೆ. ಸಮುದಾಯ ಸಂಸ್ಥೆಗಳು ಈ ಕೊಡುಗೆಗಳನ್ನು ಸಂಘಟಿತ ಕಾರ್ಯಕ್ರಮಗಳ ಮೂಲಕ ಬಳಸಿದಾಗ, ನೆರವು ಹೆಚ್ಚು ಅಗತ್ಯವಿರುವವರನ್ನು ತಲುಪುತ್ತದೆ ಮತ್ತು ದೀರ್ಘಕಾಲೀನ ಪರಿಣಾಮ ಉಂಟಾಗುತ್ತದೆ,” ಎಂದು ಮುಸ್ಲಿಂ ವೃತ್ತಿಪರರ ಸಂಘದ ಸ್ಥಾಪಕ ಅಧ್ಯಕ್ಷ ಆಮಿರ್ ಇದ್ರಿಸಿ ಹೇಳಿದ್ದಾರೆ. ►ಕಾನೂನು ನೆರವಿಗೂ ಝಕಾತ್ ಬಳಕೆ ಶಿಕ್ಷಣದ ಜೊತೆಗೆ ನ್ಯಾಯಕ್ಕೆ ಪ್ರವೇಶವನ್ನು ವಿಸ್ತರಿಸಲು ಝಕಾತ್ ನಿಧಿಗಳನ್ನು ಬಳಸುವ ಪ್ರಯತ್ನಗಳೂ ನಡೆಯುತ್ತಿವೆ. ಮುಂಬೈ ಮೂಲದ ‘ಗ್ಲೋಬಲ್ ಕೇರ್ ಫೌಂಡೇಶನ್’ ನಂತಹ ಸಂಸ್ಥೆಗಳು ಜಾಮೀನು ಅಥವಾ ಕಾನೂನು ನೆರವು ಪಡೆಯಲು ಸಾಧ್ಯವಾಗದ ವಿಚಾರಣಾಧೀನ ಕೈದಿಗಳೊಂದಿಗೆ ಕೆಲಸ ಮಾಡುತ್ತಿವೆ. ಸಂಸ್ಥೆಯ ಮಾಹಿತಿ ಪ್ರಕಾರ, 2025ರಲ್ಲಿ ಮುಂಬೈ, ಪುಣೆ ಮತ್ತು ನಾಸಿಕ್ ಜೈಲುಗಳಿಂದ 490ಕ್ಕೂ ಹೆಚ್ಚು ವಿಚಾರಣಾಧೀನ ಕೈದಿಗಳಿಗೆ ಕಾನೂನು ಹಾಗೂ ಆರ್ಥಿಕ ನೆರವು ನೀಡಿ ಬಿಡುಗಡೆಗೊಳ್ಳಲು ಸಹಾಯ ಮಾಡಲಾಗಿದೆ. ಮುಂಬೈ, ಗೋವಂಡಿ ಮತ್ತು ಮುಂಬ್ರಾದಲ್ಲಿ ಕಾನೂನು ನೆರವು ಕೇಂದ್ರಗಳನ್ನು ನಡೆಸುವ ಮೂಲಕ ಕುಟುಂಬಗಳಿಗೆ ಮಾರ್ಗದರ್ಶನ ನೀಡಲಾಗುತ್ತಿದೆ. ‘ಜಮಿಯತ್ ಉಲಮಾ ಇ ಹಿಂದ್’ ನಡೆಸುವ ಉಪಕ್ರಮಗಳ ಮೂಲಕವೂ ಕೈದಿಗಳಿಗೆ ಕಾನೂನು ಸಹಾಯ ಒದಗಿಸಲು ಝಕಾತ್ ಹಣವನ್ನು ಬಳಸಲಾಗುತ್ತಿದೆ. “ಇಸ್ಲಾಮಿಕ್ ಬೋಧನೆಗಳು ಝಕಾತ್ ಪಡೆಯಬಹುದಾದ ಹಲವು ವರ್ಗಗಳನ್ನು ಗುರುತಿಸುತ್ತವೆ. ಜೈಲಿನಲ್ಲಿರುವ ಅಥವಾ ಸಂಕಷ್ಟದಲ್ಲಿರುವವರೂ ಅದರಲ್ಲಿ ಸೇರಿದ್ದಾರೆ. ಅನೇಕ ವಿಚಾರಣಾಧೀನ ಕೈದಿಗಳು ಶಿಕ್ಷೆಗೆ ಒಳಗಾದ ಕಾರಣದಿಂದಲ್ಲ, ತಮ್ಮ ಪ್ರಕರಣಗಳನ್ನು ಮುಂದುವರಿಸಲು ಅಥವಾ ಕಾನೂನು ಪ್ರತಿನಿಧಿಯನ್ನು ಪಡೆಯಲು ಹಣದ ಕೊರತೆಯಿಂದ ಜೈಲಿನಲ್ಲಿ ಉಳಿಯುತ್ತಾರೆ. ಇಂತಹ ಸಂದರ್ಭಗಳಲ್ಲಿ ಝಕಾತ್ ನಿಧಿಗಳು ಅವರಿಗೆ ನ್ಯಾಯ ಪಡೆಯಲು ಮಹತ್ವದ ಪಾತ್ರ ವಹಿಸುತ್ತವೆ,” ಎಂದು ಜಮಿಯತ್ ಉಲಮಾ ಐ ಹಿಂದ್ನ ಕಾನೂನು ಸಲಹೆಗಾರ ವಕೀಲ ಶಾಹಿದ್ ನದೀಮ್ ಹೇಳಿದ್ದಾರೆ. ಸಂಸ್ಥೆಯ ಪ್ರಕಾರ, ಇಂತಹ ಬೆಂಬಲದ ಮೂಲಕ 500ಕ್ಕೂ ಹೆಚ್ಚು ಆರ್ಥಿಕವಾಗಿ ಹಿಂದುಳಿದ ಕೈದಿಗಳಿಗೆ ಕಾನೂನು ನೆರವು ಒದಗಿಸಲಾಗಿದ್ದು, ಅವರಲ್ಲಿ ಹಲವರು ನಂತರ ಜಾಮೀನು ಅಥವಾ ಖುಲಾಸೆಯಾಗಿದ್ದಾರೆ. ►ಸಮುದಾಯ ಬೆಂಬಲ ಮಹಾರಾಷ್ಟ್ರ ಸೇರಿದಂತೆ ದೇಶದ ಇತರ ಭಾಗಗಳಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೆರವಾಗಲು ಸಮುದಾಯ ಸಂಘಟನೆಗಳು ಝಕಾತ್ ಅನ್ನು ಹೆಚ್ಚು ಸಂಘಟಿತ ರೀತಿಯಲ್ಲಿ ಸಂಗ್ರಹಿಸಿ ವಿತರಿಸುವ ಉಪಕ್ರಮಗಳನ್ನು ಆರಂಭಿಸಿವೆ. ಕೆಲವು ಸಂದರ್ಭಗಳಲ್ಲಿ ಝಕಾತ್ ನೆರವು ಪಡೆದ ಫಲಾನುಭವಿಗಳು ತಮ್ಮ ಪರಿಸ್ಥಿತಿ ಸುಧಾರಿಸಿದ ಬಳಿಕ ಮತ್ತೆ ಸಮಾಜಕ್ಕೆ ಕೊಡುಗೆ ನೀಡಲು ಮುಂದಾಗುತ್ತಾರೆ. ಇದರಿಂದ ಸಮುದಾಯದೊಳಗೆ ಪರಸ್ಪರ ಬೆಂಬಲದ ಸರಪಳಿ ನಿರ್ಮಾಣವಾಗುತ್ತಿದೆ. “ಹಲವು ಸಂದರ್ಭಗಳಲ್ಲಿ ಝಕಾತ್ ನೆರವಿನಿಂದ ಶಿಕ್ಷಣ ಪಡೆದ ವಿದ್ಯಾರ್ಥಿಗಳು ನಂತರ ಆರ್ಥಿಕವಾಗಿ ಸ್ಥಿರರಾದ ಬಳಿಕ ಮತ್ತೆ ಕೊಡುಗೆ ನೀಡಲು ಮುಂದಾಗುತ್ತಾರೆ. ಹಲವಾರು ಫಲಾನುಭವಿಗಳು ತಮ್ಮ ಪರಿಸ್ಥಿತಿ ಸುಧಾರಿಸಿದ ನಂತರ ಇತರರಿಗೆ ಸಹಾಯ ಮಾಡಲು ಹಿಂತಿರುಗುತ್ತಿರುವುದನ್ನು ನಾವು ನೋಡಿದ್ದೇವೆ. ತಕ್ಷಣದ ಸಂಕಷ್ಟವನ್ನು ಪರಿಹರಿಸುವುದರ ಜೊತೆಗೆ, ಝಕಾತ್ ಜವಾಬ್ದಾರಿಯ ಭಾವನೆ ಬೆಳೆಸುತ್ತದೆ ಮತ್ತು ಸಮುದಾಯದಲ್ಲಿ ಪರಸ್ಪರ ಬೆಂಬಲದ ಸಂಸ್ಕೃತಿಯನ್ನು ಉತ್ತೇಜಿಸುತ್ತದೆ,” ಎಂದು ಅಗತ್ಯವಿರುವವರಿಗೆ ಝಕಾತ್ ಹಣವನ್ನು ಸಂಗ್ರಹಿಸಿ ವಿತರಿಸುವ ‘ಬೈತುಲ್ ಮಾಲ್’ ಸಂಘಟನೆಯ ಸದಸ್ಯ ಇಮ್ತಿಯಾಜ್ ಶೇಖ್ ತಿಳಿಸಿದ್ದಾರೆ. ಸೌಜನ್ಯ: indianexpress.com

ವಾರ್ತಾ ಭಾರತಿ 10 Mar 2026 4:24 am

ಇರಾನ್ ನ ನೂತನ ಸರ್ವೋಚ್ಚ ನಾಯಕರ ನೇಮಕ ನಿರಾಸೆ ತಂದಿದೆ: ಟ್ರಂಪ್

ಮುಂದಿನ ಟಾರ್ಗೆಟ್ ಆಗುವರೇ ಎಂಬ ಪ್ರಶ್ನೆಗೆ ಉತ್ತರಿಸಲು ನಿರಾಕರಣೆ

ವಾರ್ತಾ ಭಾರತಿ 10 Mar 2026 4:22 am

ಇರಾನ್ ಸಂಪೂರ್ಣವಾಗಿ ಸೋಲುವವರೆಗೆ ದಾಳಿ ಮುಂದುವರಿಕೆ: ಡೊನಾಲ್ಡ್ ಟ್ರಂಪ್ ಘೋಷಣೆ

‘ಆಪರೇಷನ್ ಮಿಡ್ನೈಟ್ ಹ್ಯಾಮರ್’ | ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಮೆರಿಕ ಅಧ್ಯಕ್ಷ

ವಾರ್ತಾ ಭಾರತಿ 10 Mar 2026 4:11 am

ಇರಾನ್ ನ ಪೂರ್ವ ಟೆಹ್ರಾನ್ ನಲ್ಲಿ ಭಾರೀ ದಾಳಿ; ಕನಿಷ್ಠ 40 ಮೃತ್ಯು

ಟೆಹ್ರಾನ್: ಇರಾನ್ ರಾಜಧಾನಿ ಟೆಹ್ರಾನ್ ನ ಪೂರ್ವ ಭಾಗದಲ್ಲಿರುವ ವಸತಿ ಕಟ್ಟಡಗಳನ್ನು ಗುರಿಯಾಗಿಸಿ ನಡೆದ ದಾಳಿಯಲ್ಲಿ ಕನಿಷ್ಠ 40 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು Aljazeera ವರದಿ ಮಾಡಿದೆ. ದಾಳಿಯ ಪರಿಣಾಮವಾಗಿ ರಾಜಧಾನಿಯಲ್ಲಿ ಭಾರೀ ಸ್ಫೋಟದ ಶಬ್ದಗಳು ಕೇಳಿಬಂದಿದ್ದು, ಕೆಲವೇ ನಿಮಿಷಗಳ ಅಂತರದಲ್ಲಿ ದೊಡ್ಡ ಸ್ಫೋಟ ಸಂಭವಿಸಿರುವುದಾಗಿ ಸ್ಥಳೀಯ ಮೂಲಗಳು ತಿಳಿಸಿವೆ. ಆದರೆ ಸ್ಫೋಟದ ನಿಖರ ಗುರಿ ಅಥವಾ ಅದರ ಪರಿಣಾಮದ ಕುರಿತು ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ನಗರದಲ್ಲಿ ದಿನವಿಡೀ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದ್ದು, ಪ್ರತಿ ಒಂದು ಅಥವಾ ಎರಡು ಗಂಟೆಗಳಿಗೊಮ್ಮೆ ಸ್ಫೋಟಗಳ ಶಬ್ದಗಳು ಕೇಳಿಬರುತ್ತಿವೆ ಎಂಬ ವರದಿಗಳು ತಿಳಿಸಿವೆ. ಇದರಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ. ಇದಷ್ಟೇ ಅಲ್ಲದೆ, ಇಸ್ಫಹಾನ್ ಸೇರಿದಂತೆ ಇರಾನ್ ನ ಇತರ ಪ್ರಮುಖ ನಗರಗಳನ್ನೂ ಗುರಿಯಾಗಿಸಲಾಗಿದೆ. ಪರಮಾಣು ಸೌಲಭ್ಯಗಳಿಗೆ ಸಮೀಪದಲ್ಲಿರುವುದರಿಂದ ಇಸ್ಫಹಾನ್ ಪ್ರದೇಶದಲ್ಲಿ ಕಳವಳ ಹೆಚ್ಚಾಗಿದೆ. ಅಲ್ಲಿನ ಗವರ್ನರ್ ಕಚೇರಿಯ ಮೇಲೆ ದಾಳಿ ಮಾಡಲಾಗಿದೆ ಎಂಬ ವರದಿಗಳೂ ಬಂದಿವೆ. ಯುನೆಸ್ಕೋ ವಿಶ್ವ ಪಾರಂಪರ್ಯ ತಾಣವಾಗಿ ನೋಂದಾಯಿಸಲ್ಪಟ್ಟಿರುವ ಪುರಾತನ ಅರಮನೆ ಮೇಲೂ ಬಾಂಬ್ ದಾಳಿ ನಡೆದಿದ್ದು, ಆ ಕಟ್ಟಡಕ್ಕೆ ತೀವ್ರ ಹಾನಿಯಾಗಿದೆ ಎಂದು ವರದಿಗಳು ತಿಳಿಸಿವೆ.

ವಾರ್ತಾ ಭಾರತಿ 10 Mar 2026 2:10 am

ಭ್ರಷ್ಟಾಚಾರ, ಅಸಮಾನತೆಯಿಂದ ಸಂವಿಧಾನದ ಆಶಯಗಳಿಗೆ ಧಕ್ಕೆ : ಸಂವಿಧಾನ ಸಂರಕ್ಷಣಾ ಸಮಾವೇಶದಲ್ಲಿ ಸಾಣೇಹಳ್ಳಿ ಶ್ರೀ

ಜಗಳೂರು : ಸಮಾಜದಲ್ಲಿನ ವ್ಯಾಪಕ ಭ್ರಷ್ಟಾಚಾರ, ಅಸಮಾನತೆಯಿಂದ ಸಂವಿಧಾನದ ಆಶಯಗಳಿಗೆ ಧಕ್ಕೆ ಉಂಟಾಗುತ್ತಿದೆ ಎಂದು ಸಾಣೇಹಳ್ಳಿ ತರಳಬಾಳು ಜಗದ್ಗುರು ಶಾಖಾಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದ್ದಾರೆ. ತಾಲೂಕಿನ ದೊಣೆಹಳ್ಳಿ ದಾಸೋಹ ಮಠದಲ್ಲಿ ದಾಸೋಹ ಸಂಸ್ಕೃತಿ ಉತ್ಸವದ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ‘ಸಂವಿಧಾನ ಸಂರಕ್ಷಣಾ ಸಮಾವೇಶ’ದಲ್ಲಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಅವರು ಮಾತನಾಡುತ್ತಿದ್ದರು. ದೇಶದಲ್ಲಿ ಆಡಳಿತ ವ್ಯವಸ್ಥೆಯಿಂದ ಬಡವರು ಶ್ರೀಮಂತರ ಮಧ್ಯೆ ಆರ್ಥಿಕ ಅಸಮಾನತೆಗೆ ಕಾರಣವಾಗಿದೆ. ಬಲ್ಲಿದನ ದಬ್ಬಾಳಿಕೆಯಿಂದ ದುಡಿಯುವ ವರ್ಗದವರು ಬಡವರಾಗಿಯೇ ಉಳಿಯುತ್ತಿದ್ದಾನೆ. ಸಂವಿಧಾನ ಬದ್ಧ ಸಮಾನತೆಯ ಹಕ್ಕುಗಳು ಅನ್ವಯವಾಗುತ್ತಿಲ್ಲ. ಪ್ರಜಾಪ್ರತಿನಿಧಿಗಳು ಅಧಿಕಾರ ದಾಹದಿಂದ ಕೋಟಿ ಕೋಟಿ ರೂ. ಲೂಟಿ ಹೊಡೆಯದೆ ಜನರ ಸುಖ ದುಖಃಗಳಿಗೆ ಭಾಗಿಯಾಗುವುದನ್ನು ಮೈಗೂಡಿಸಿಕೊಂಡು ಸಮಾಜದ ಋಣ ತೀರಿಸಬೇಕೆಂದು ಸಲಹೆ ನೀಡಿದರು. ನೈತಿಕ ನೆಲೆಗಟ್ಟಿನ ಮೇಲೆ, ಸಾರ್ವಜನಿಕ ಪ್ರಜ್ಞೆಗೆ ಮನ್ನಣೆ ನೀಡುವ ದಾಸೋಹ ಸಂಸ್ಕೃತಿ ಅಗತ್ಯವಿದೆ. ಸಮಾಜದಲ್ಲಿನ ಅನಾಚಾರ ಖಂಡಿಸದಿದ್ದರೆ ನಾವೂ ಅದರ ಪಾಲುದಾರರಾಗಬೇಕಾಗುತ್ತೇವೆ. ಸಮಾಜವನ್ನು ಸರಿದಾರಿಗೆ ಕೊಂಡೊಯ್ಯಬೇಕಿದೆ. ಕೇವಲ ವೇಷ ಭಾಷೆಯಿಂದ ಮಾತ್ರವಲ್ಲದೆ ಅರಿವು ಆಚಾರ ರೂಢಿಸಿಕೊಂಡರೆ ವ್ಯಕ್ತಿಯು ಸಮಾಜಕ್ಕೆ ಶಕ್ತಿಯಾಗುತ್ತಾನೆ ಅಭಿಪ್ರಾಯಿಸಿದರು. ಹೈಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಬಿಲ್ಲಪ್ಪ ಮಾತನಾಡಿ, ದೇಶದ ಸಾಂಪ್ರದಾಯಿಕ ಸಮಾಜ ಬದಲಾಗಿ ಕಾನೂನು ಸಮಾಜ ನಿರ್ಮಾಣವಾಗಬೇಕಿದೆ. ಸಂವಿಧಾನ ದೇಶದ ಪವಿತ್ರ ಗ್ರಂಥವಾಗಿದೆ. ಕಾನೂನನ್ನು ಗೌರವಿಸದಿದ್ದರೆ ಸಮಾಜದ ಅಭಿವೃದ್ಧಿ ಅಸಾಧ್ಯ.ಸಾರ್ವಜನಿಕರೇ ಕಾನೂನು ಅಸ್ತ್ರಗಳನ್ನು ಬಳಸುವ ಹೊಣೆಗಾರಿಕೆ ಹೊಂದಬೇಕು. ನಮ್ಮ ಪ್ರಗತಿಗೆ ವರ್ತಮಾನದ ಆಲೋಚನೆ ಅಗತ್ಯವಿದೆ. ಸಂವಿಧಾನ ಎಂದರೆ ಸಮಾನ ಅವಕಾಶವಾಗಬೇಕು. ಅಂಬೇಡ್ಕರ್ ಆಶಯದಂತೆ ಶಿಕ್ಷಣ, ಸಂಘಟನೆ, ಹೋರಾಟ ರೂಪಿಸಬೇಕು. ಎಲ್ಲಾ ವರ್ಗದವರಿಗೆ ಇಂದಿಗೂ ಸಾಮಾಜಿಕ ಸಮಾನತೆ, ನ್ಯಾಯ ಸಿಗುತ್ತಿಲ್ಲ. ನಮ್ಮ ಅನುಕೂಲಕ್ಕೆ ತಕ್ಕಂತೆ ಕಾನೂನನ್ನು ಮುರಿದುಹಾಕುತ್ತಿರುವುದು ಬೇಸರದ ಸಂಗತಿ ಎಂದರು. ಜಿ.ಬಿ.ವಿನಯ ಕುಮಾರ್ ಮಾತನಾಡಿದರು. ಇದೇ ವೇಳೆ ಭಾಷಣ ಹಾಗೂ ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಮಾವೇಶದಲ್ಲಿ ದೊಣೆಹಳ್ಳಿ ದಾಸೋಹ ಮಠದ ಸಂಚಾಲಕ ಗುರುಮೂರ್ತಿ, ಕಾನಾಮಡುಗು ಮಠದ ಐಮಡಿ ಶರಣಾರ್ಯರು, ಚಿತ್ರದುರ್ಗದ ಮಾಜಿ ಶಾಸಕ ಎಸ್.ಕೆ.ಬಸವರಾಜ್, ಕಾರ್ಮಿಕ ಸಂಘಟನೆ ಮುಖಂಡ ಶಿವಶಂಕರ್, ಪ್ರಗತಿಪರ ಚಿಂತಕ ಕೋಡಿಹಳ್ಳಿ ಭೀಮಣ್ಣ, ವಕೀಲರ ಸಂಘದ ಜಿಲ್ಲಾ ಕಾರ್ಯದರ್ಶಿ ಎಲ್.ಎಚ್.ಅರುಣ್ ಕುಮಾರ್, ಲಂಕೇಶ್ ಪತ್ರಿಕೆ ಹಿರಿಯ ವರದಿಗಾರ ಅರಕೆರೆ ಸಿದ್ದಪ್ಪ, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ವೇಣುಗೋಪಾಲ ರೆಡ್ಡಿ, ಪ್ರೋ.ಜಯಲಕ್ಷ್ಮೀ, ಸ್ಮಿತಾ, ಶರಣಬಸವೇಶ್ವರ ಡಿ.ಎಡ್ ಕಾಲೇಜು ಪ್ರಾಂಶುಪಾಲ ಎಲ್.ಪಿ.ಸುಭಾಷ್ ಚಂದ್ರ, ಉಪನ್ಯಾಸಕರಾದ ಭದ್ರಪ್ಪ, ಪ್ರಕಾಶ್, ಮನೋಜ್, ಶರತ್, ದಾದಾ ಖಲಂದರ್, ಮುಖಂಡರಾದ ಆವರೆಗರೆ ರುದ್ರಮುನಿ ಹಾಗೂ ಇತರರು ಉಪಸ್ಥಿತರಿದ್ದರು. ದೇಶದಲ್ಲಿ 4,600 ಜಾತಿಗಳಿವೆ, ಜಾತಿಗೊಂದು ಕಸುಬುಗಳಿವೆ. ಅಂತರ್ಜಾತಿ ವಿವಾಹಗಳಿಗೆ ಕಟ್ಟುಪಾಡುಗಳಿವೆ. ಒಂದೇ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರಕ್ಕೆ ಅವಕಾಶವಿಲ್ಲ. ಜಾತಿ ಮತ್ತು ಕಸುಬು ವಂಶಪರಂಪರೆಯಾಗಿ ಮಾಡಿದ್ದಾರೆ.ಜಾತಿ-ಜಾತಿ ನಡುವೆ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಅಸಮಾನತೆಗಳಿವೆ. ದೇಶದಲ್ಲಿನ ಜಾತಿಯ ಸಮಾನತೆಯನ್ನು ಅರ್ಥ ಮಾಡಿಕೊಂಡರೆ ಸಂವಿಧಾನ ಅರ್ಥವಾಗುತ್ತದೆ. ಸ್ವಾತಂತ್ರ್ಯ ಸಂದರ್ಭದಲ್ಲಿ ಶೇ.18ರಷ್ಟಿದ್ದ ಅಕ್ಷರಸ್ಥರ ಸಂಖ್ಯೆ ಇಂದು ಶೇ.81ರಷ್ಟಿದೆ. ಬಡತನ ರೇಖೆಗಿಂತ ಶೇ.20ರಷ್ಟಿದೆ. ಹೊರ ದೇಶಗಳಿಗೆ ಆಹಾರ ಪದಾರ್ಥಗಳನ್ನು ರಫ್ತು ಮಾಡುತ್ತೇವೆ. ಅಗತ್ಯ ಮೂಲ ಸೌಕರ್ಯ ಹೊಂದಿದ್ದೇವೆ. ಡಾ.ಎಚ್.ಎನ್.ನಾಗಮೋಹನ್ ದಾಸ್, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ

ವಾರ್ತಾ ಭಾರತಿ 10 Mar 2026 1:57 am

ಮನೆ ಹಂಚಿಕೆಯಲ್ಲಿ ಮುಸ್ಲಿಮರಿಗೆ ಅನ್ಯಾಯ : ಶಾಸಕ ಬಿ.ಎನ್.ರವಿಕುಮಾರ್

ಬೆಂಗಳೂರು : ವಸತಿ ಇಲಾಖೆಯಡಿ ಮನೆಗಳ ಹಂಚಿಕೆ ಪ್ರಕ್ರಿಯೆಯಲ್ಲಿ ಪದೇ ಪದೇ ಮುಸ್ಲಿಮರಿಗೆ ಅನ್ಯಾಯ ಆಗುತ್ತಿದೆ ಎಂದು ವಿಧಾನಸಭೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಕ್ಷೇತ್ರದ ಜೆಡಿಎಸ್ ಶಾಸಕ ಬಿ.ಎನ್.ರವಿಕುಮಾರ್ ಧ್ವನಿ ಎತ್ತಿದ ಪ್ರಸಂಗ ಜರುಗಿತು. ಸೋಮವಾರ ವಿಧಾನಸಭೆಯ ಪ್ರಶೋತ್ತರ ಕಲಾಪದಲ್ಲಿ ವಿಷಯ ಪ್ರಸ್ತಾಪ ಮಾಡಿದ ಬಿ.ಎನ್.ರವಿಕುಮಾರ್ ಅವರು, ವಸತಿ ಇಲಾಖೆಯ ವಿವಿಧ ನಿಗಮಗಳಿಂದ ಕ್ಷೇತ್ರದ ಮುಸ್ಲಿಮರಿಗೆ ಯಾವ ರೀತಿಯಲ್ಲಿ ಸಮಸ್ಯೆ ಆಗುತ್ತಿದೆ ಎಂದು ಸದನದ ಗಮನ ಸೆಳೆದರು. ವಸತಿ ಇಲಾಖೆಯ ನಿಗಮಗಳಿಂದ ವಿವಿಧ ಯೋಜನೆಗಳ ಅಡಿಯಲ್ಲಿ ವಸತಿ ರಹಿತರಿಗೆ ಮನೆಗಳನ್ನು ವಿತರಣೆ ಮಾಡಲಾಗುತ್ತಿದೆ. ಆದರೆ ಫಲಾನುಭವಿಗಳ ಆಯ್ಕೆ ಮಾಡುವಲ್ಲಿ ನಿಯಮಗಳನ್ನು ಪಾಲಿಸಿಲ್ಲ.ಅದರಲ್ಲೂ, ಶಿಡ್ಲಘಟ್ಟದಲ್ಲಿ ಮುಸ್ಲಿಮರಿಗೆ ಅನ್ಯಾಯವಾಗಿದೆ. 75 ಮನೆಗಳು ಬೇರೆಯವರಿಗೆ ಕೊಡಲಾಗಿದೆ. ಈ ಸಮಸ್ಯೆ ಬಗೆಹರಿಸಬೇಕು ಎಂದು ಸರಕಾರಕೆಕ ಮನವಿ ಮಾಡಿದರು. ಇದಕ್ಕೆ ಉತ್ತರ ನೀಡಿದ ವಸತಿ ಸಚಿವ ಝಮೀರ್ ಅಹ್ಮದ್ ಖಾನ್, ಕೇಂದ್ರ ಪುರಸ್ಕೃತ ಯೋಜನೆಗ ಅಡಿಯಲ್ಲಿ ಫಲಾನುಭವಿಗಳ ಆಯ್ಕೆಯು ಖಾಯಂ ನಿರೀಕ್ಷಣಾ ಪಟ್ಟಿ ಮೂಲಕ ಕ್ರಮಾಂಕವಾರು ಆಯ್ಕೆ ಮಾಡಲಾಗುತ್ತಿದೆ ಎಂದು ಉಲ್ಲೇಖಿಸಿದರು. ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರಕ್ಕೆ 500 ಮನೆಗಳನ್ನು ನೀಡಿದ್ದೇವೆ. 75 ಮನೆಗಳು ಶಾಸಕರ ವಿವೇಚನೆ ಇಂದ ನೀಡುವುದಾಗಿದೆ. ಈ ಸಂಬಂಧಿಸಿದಂತೆ ಚರ್ಚಿಸಲು ನಾಳೆ ಸಭೆ ಕರೆಯಲಾಗಿದೆ. ಸಭೆಗೆ ಶಾಸಕರೂ ಬರಬಹುದು. ಚರ್ಚೆ ನಡೆಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ವಾರ್ತಾ ಭಾರತಿ 10 Mar 2026 1:34 am

ಅಝೀಂ ಪ್ರೇಮ್‍ಜಿ ವಿವಿ ವಿದ್ಯಾರ್ಥಿಗಳ ಮೇಲಿನ ಪ್ರಕರಣ ಹಿಂಪಡೆಯಲು ಸಾಹಿತಿ, ಚಿಂತಕರು ಆಗ್ರಹ

ಬೆಂಗಳೂರು : ಅಝೀಂ ಪ್ರೇಮ್ ಜಿ ವಿಶ್ವ ವಿದ್ಯಾನಿಲಯದ ‘ಸ್ಪಾರ್ಕ್ ರೀಡಿಂಗ್ ಸರ್ಕಲ್’ ವಿದ್ಯಾರ್ಥಿಗಳ ಮೇಲೆ ವಿಶ್ವ ವಿದ್ಯಾನಿಲಯವು ದಾಖಲಿಸಿರುವ ಕ್ರಿಮಿನಲ್ ಪ್ರಕರಣವನ್ನು ತಕ್ಷಣವೇ ಕೈಬಿಡಬೇಕು ಎಂದು ಸಾಹಿತಿ, ಚಿಂತಕರು, ಕಲಾವಿದರು ಹಾಗೂ ಸಾಮಾಜಿಕ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಸೋಮವಾರ ಈ ಕುರಿತು ಅಝೀಂ ಪ್ರೇಮ್ ಜಿ ವಿಶ್ವ ವಿದ್ಯಾನಿಲಯದ ಕುಲಪತಿಗಳಿಗೆ ಪತ್ರ ಬರೆದಿರುವ ಹಿರಿಯ ಸಾಹಿತಿಗಳಾದ ಡಾ.ಜಿ.ರಾಮಕೃಷ್ಣ, ರಾಜೇಂದ್ರ ಚೆನ್ನಿ, ಡಾ.ಸಿದ್ದನಗೌಡ ಪಾಟೀಲ, ಡಾ.ಬಂಜಗೆರೆ ಜಯಪ್ರಕಾಶ್, ಡಾ.ದು.ಸರಸ್ವತಿ, ವಿಮಲಾ ಕೆ.ಎಸ್.ಅವರು, ಕರ್ನಾಟಕದ ಶೈಕ್ಷಣಿಕ, ಸಾಹಿತ್ಯ ಮತ್ತು ಸಾಂಸ್ಕೃತಿಕ ವಲಯದ ಪ್ರತಿನಿಧಿಗಳಾದ ನಾವು, ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ತನ್ನದೇ ವಿದ್ಯಾರ್ಥಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿರುವ ಕ್ರಮವನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ತಿಳಿಸಿದ್ದಾರೆ. ವಿಶ್ವ ವಿದ್ಯಾನಿಲಯವೊಂದು ತನ್ನದೇ ಆದ ಆಂತರಿಕ ಪ್ರಕ್ರಿಯೆಗಳನ್ನು ನಡೆಸುವಂತಹ ಹಕ್ಕನ್ನು ಹೊಂದಿದ್ದರೂ ವಿದ್ಯಾರ್ಥಿ-ಯುವಜನರು ಒಂದು ಚರ್ಚೆಯನ್ನು ಹಮ್ಮಿಕೊಂಡಿದ್ದ ಒಂದೇ ಕಾರಣಕ್ಕೆ ಅವರ ಮೇಲೆ ‘ಭಾರತೀಯ ನ್ಯಾಯ ಸಂಹಿತೆ' ಮತ್ತು ‘ಐಟಿ ಕಾಯ್ದೆ' ಅಡಿಯಲ್ಲಿ ಮೊಕದ್ದಮೆ ದಾಖಲಿಸುವುದು ಅತ್ಯಂತ ಅತಿರೇಕದ ಕ್ರಮವಾಗಿದೆ ಎಂದು ತಿಳಿಸಿದ್ದಾರೆ. ಶಿಕ್ಷಣ ಸಂಸ್ಥೆಗಳು, ಅದರಲ್ಲಿಯೂ ಮುಖ್ಯವಾಗಿ ವಿಶ್ವ ವಿದ್ಯಾನಿಲಯಗಳು ಚರ್ಚೆ ಮತ್ತು ಸಂವಾದಗಳ ಮೂಲಕ ವಿದ್ಯಾರ್ಥಿಗಳಲ್ಲಿ ಸಮಾಜದ ಮತ್ತು ಪ್ರಭುತ್ವದ ಧೋರಣೆಗಳನ್ನು ವಿಮರ್ಶಿಸುವಂತೆ ಹುರಿದುಂಬಿಸುವ ವಲಯಗಳಾಗಬೇಕು. ಹೀಗಿರುವಾಗ, ಗೂಂಡಾ ಪಡೆಗಳು ವಿಶ್ವವಿದ್ಯಾಲಯದೊಳಗೆ ನುಗ್ಗಿದ್ದೂ ಅಲ್ಲದೇ ದಾಂಧಲೆ ನಡೆಸಿ, ನಿಮ್ಮದೇ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವಂತಹ ಸಂದರ್ಭದಲ್ಲಿ ಅವರ ಮೇಲೆ ಕಾನೂನು ಕ್ರಮ ಜರುಗಿಸಿ, ವಿದ್ಯಾರ್ಥಿಗಳಲ್ಲಿ ಧೈರ್ಯ ತುಂಬಬೇಕಿದ್ದ ವಿಶ್ವವಿದ್ಯಾಲಯದ ಅಧಿಕಾರಿ ವರ್ಗ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಮೇಲೆಯೇ ಎಫ್‍ಐಆರ್ ದಾಖಲಿಸಿದೆ. ಈ ಮೂಲಕ ವಿಶ್ವವಿದ್ಯಾಲಯವು ತಾನು ಪಠ್ಯಕ್ರಮದಲ್ಲಿ ಪ್ರತಿಪಾದಿಸುವ ವಿಮರ್ಶಾತ್ಮಕ ಚಿಂತನೆ ಮತ್ತು ಸಾಮಾಜಿಕ ನ್ಯಾಯದ ಆಶಯಗಳನ್ನೇ ಹತ್ತಿಕ್ಕಲು ಮುಂದಾಗಿದೆ ಎಂದು ಹೇಳಿದ್ದಾರೆ. ವಿಶ್ವವಿದ್ಯಾಲಯವು ಗೂಂಡಾಗಳ ಬಗ್ಗೆ ಮೃದು ಧೋರಣೆ ತೋರುತ್ತಿದ್ದು, ವಿಶ್ವವಿದ್ಯಾಲಯದ ಆವರಣಕ್ಕೆ ಅಕ್ರಮವಾಗಿ ನುಗ್ಗಿ, ಆಸ್ತಿಪಾಸ್ತಿ ಹಾನಿ ಮಾಡಿ, ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಹೊರಗಿನ ವ್ಯಕ್ತಿಗಳ ಮೇಲೆ ಕೇವಲ ಜಾಮೀನು ಲಭ್ಯವಿರುವ ಪ್ರಕರಣಗಳನ್ನು ದಾಖಲಿಸಲಾಗಿದೆ. ಆದರೆ, ಈ ಹಿಂದೆ ನಡೆದ ಘಟನೆಗಳ ಬಗ್ಗೆ ಚರ್ಚೆ-ಸಂವಾದ ನಡೆಸಲು ಮುಂದಾದ ನಿಮ್ಮದೇ ವಿದ್ಯಾರ್ಥಿಗಳ ಮೇಲೆ ಜಾಮೀನು ರಹಿತ ಪ್ರಕರಣಗಳನ್ನು ದಾಖಲಿಸಿದ್ದೀರಿ. ಈ ನಿಲುವಿನಿಂದಾಗಿ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳ ನಡೆಯನ್ನು ಹೊರಗಿನಿಂದ ಬಂದ ಗೂಂಡಾಗಳಿಗೆ ಸಮೀಕರಿಸಿದಂತಾಗಿದೆ. ಹಾಗಾಗಿ, ಭಿನ್ನಾಭಿಪ್ರಾಯಗಳಿಗೆ ಮತ್ತು ಸಂವಾದಕ್ಕೆ ನಿಮ್ಮ ವಿಶ್ವ ವಿದ್ಯಾನಿಲಯದಲ್ಲಿ ಸ್ಥಾನವಿಲ್ಲ ಎಂಬ ಸಂದೇಶವನ್ನು ಕರ್ನಾಟಕದ ಜನತೆಗೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಕೂಡಲೇ ‘ಸ್ಪಾರ್ಕ್ ರೀಡಿಂಗ್ ಸರ್ಕಲ್'ನ ಭಾಗವಾಗಿರುವ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಮೇಲೆ ದಾಖಲಿಸಿರುವ ಪೊಲೀಸ್ ದೂರನ್ನು ತಕ್ಷಣವೇ ಹಿಂಪಡೆಯಬೇಕು. ಈ ಮೂಲಕ ವಿಶ್ವವಿದ್ಯಾಲಯವು ವಿದ್ಯಾರ್ಥಿ-ವಿದ್ಯಾರ್ಥಿನಿಯರ, ಪೋಷಕರ ವಿಶ್ವಾಸವನ್ನು ಮರಳಿ ಗಳಿಸುತ್ತದೆ ಮತ್ತು ಶೈಕ್ಷಣಿಕ ಸ್ವಾತಂತ್ರ್ಯದ ಬದ್ಧತೆಯನ್ನು ಎತ್ತಿಹಿಡಿಯುತ್ತದೆ ಎಂದು ನಾವು ನಂಬಿದ್ದೇವೆ ಎಂದು ತಿಳಿಸಿದ್ದಾರೆ.

ವಾರ್ತಾ ಭಾರತಿ 10 Mar 2026 1:29 am

ದೈವ ಪಾತ್ರದ ಅಪಹಾಸ್ಯ; ರಣವೀರ್ ಸಿಂಗ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಕೊನೇ ಅವಕಾಶ ನೀಡಿದ ಹೈಕೋರ್ಟ್

ಬೆಂಗಳೂರು : ಕಾಂತಾರ ಚಾಪ್ಟರ್‌-1 ಚಿತ್ರದ ದೈವಪಾತ್ರಗಳನ್ನು ಅಪಹಾಸ್ಯ ಮಾಡಿ, ಧಾರ್ಮಿಕ‌ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ರದ್ದು ಕೋರಿ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್‌ ಅಂತಿಮ ಅವಕಾಶ ನೀಡಿದೆ. ಪ್ರಕರಣ ಸಂಬಂಧ ನಗರದ ಮ್ಯಾಜಿಸ್ಟ್ರೇಟ್‌ ಕೋರ್ಟ್‌ನಲ್ಲಿ ದಾಖಲಾಗಿರುವ ಖಾಸಗಿ ದೂರು ಹಾಗೂ ಹೈಗ್ರೌಂಡ್ಸ್‌ ಠಾಣೆ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದು ಕೋರಿ ರಣವೀರ್ ಸಿಂಗ್ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ಪ್ರಕರಣದ ಖಾಸಗಿ ದೂರುದಾರರಾದ ಪ್ರಶಾಂತ್‌ ಮೆಥಲ್‌ ಪರ ವಕೀಲರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿರುವುದಾಗಿ ನ್ಯಾಯಪೀಠಕ್ಕೆ ತಿಳಿಸಿದರು. ಹೈಗ್ರೌಂಡ್ಸ್‌ ಠಾಣೆ ಪೊಲೀಸರ ಪರ ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್‌. ಜಗದೀಶ್‌ ಅವರು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಕೋರಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಕೆಗೆ ಇದೇ ಕೊನೆಯ ಅವಕಾಶ ನೀಡುತ್ತಿರುವುದಾಗಿ ತಿಳಿಸಿ ವಿಚಾರಣೆಯನ್ನು ಮಾರ್ಚ್ 17ಕ್ಕೆ ಮುಂದೂಡಿತು. ಜತೆಗೆ, ರಣವೀರ್‌ ಸಿಂಗ್ ವಿರುದ್ಧ ಬಲವಂತದ ಕ್ರಮಕೈಗೊಳ್ಳದಂತೆ ಪೊಲೀಸರಿಗೆ ಸೂಚಿಸಿ ಫೆಬ್ರವರಿ 24ರಂದು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಅರ್ಜಿಯ ಮುಂದಿನ ವಿಚಾರಣೆವರೆಗೆ ವಿಸ್ತರಿಸಿತು.

ವಾರ್ತಾ ಭಾರತಿ 10 Mar 2026 12:35 am

ಮಧ್ಯಪ್ರಾಚ್ಯದಲ್ಲಿ ಸಿಲುಕಿದ 230 ಕನ್ನಡಿಗರು : ಮುನೀಶ್ ಮೌದ್ಗಿಲ್

ಬೆಂಗಳೂರು : ಇತ್ತೀಚೆಗೆ ಮಧ್ಯಪ್ರಾಚ್ಯದ ವಿವಿಧ ದೇಶಗಳಿಂದ ಸುಮಾರು 278 ಜನರು ಸುರಕ್ಷಿತವಾಗಿ ಕರ್ನಾಟಕ ರಾಜ್ಯಕ್ಕೆ ಮರಳಿದ್ದು, ಸುಮಾರು 230 ಕನ್ನಡಿಗರು ಮಧ್ಯಪ್ರಾಚ್ಯದ ವಿವಿಧ ದೇಶಗಳಲ್ಲಿ ಸಿಲುಕಿದ್ದಾರೆ ಎಂದು ವಿಪತ್ತು ನಿರ್ವಹಣೆ, ಭೂಮಿ ಮತ್ತು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮುನೀಶ್ ಮೌದ್ಗಿಲ್ ಮಾಹಿತಿ ನೀಡಿದ್ದಾರೆ. ಸೋಮವಾರ ಸಂಬಂಧ ಪ್ರಕಟನೆ ಹೊರಡಿಸಿರುವ ಅವರು, ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿಗಳು ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತ ಕರೆ ತರುವ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ಹಾಗೆಯೇ ಆ ಪ್ರದೇಶದಲ್ಲಿ ಸಿಲುಕಿರುವ ಕನ್ನಡಿಗರ ಪಟ್ಟಿಯನ್ನು ಹಂಚಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸೌದಿ ಅರೇಬಿಯಾ ಸೇರಿ ಇತರ ವಿಮಾನ ನಿಲ್ದಾಣಗಳಲ್ಲಿ ವಿಮಾನ ಯಾನಗಳು ಭಾಗಶಃ ಪುನರಾರಂಭವಾಗುತ್ತಿವೆ. ಭಾರತೀಯ ಮತ್ತು ವಿದೇಶಿ ವಿಮಾನಯಾನ ಸಂಸ್ಥೆಗಳು ಕಾರ್ಯಾಚರಣೆಯನ್ನು ನಡೆಸುತ್ತಿದ್ದು, ಅಲ್ಲಿರುವ ಭಾರತೀಯ ಪ್ರಜೆಗಳು ಹಿಂತಿರುಗಿ ಬರಲು ಅನುಕೂಲವಾಗುವಂತೆ ವಿಮಾನ ಹಾರಾಟದ ಆವರ್ತನವನ್ನು ಹೆಚ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಆದರೆ ಕತಾರ್‍ನಲ್ಲಿ ವಿಮಾನ ಗಡಿಗಳನ್ನು ಸ್ಥಗಿತ ಮಾಡಿದ್ದಾರೆ. ಹೀಗಾಗಿ ಅಲ್ಲಿನ ಅನೇಕರು ಸೌದಿ ಅರೇಬಿಯಾದ ಮೂಲಕ ಭಾರತಕ್ಕೆ ಬರಲು ಪ್ರಯತ್ನಿಸುತ್ತಿದ್ದಾರೆ. ಆದುದರಿಂದ ದೋಹಾದಲ್ಲಿರುವ ಭಾರತದ ರಾಯಭಾರ ಕಚೇರಿಯು ಅಲ್ಲಿನ ಕನ್ನಡಗರಿಗೆ ಅರೇಬಿಯಾದ ಮೂಲಕ ಭಾರತಕ್ಕೆ ಬರಲು ಅನುಕೂಲವಾಗುವಂತೆ ವೀಸಾವನ್ನು ಒದಗಿಸಬೇಕು ಎಂದು ರಾಜ್ಯ ಸರಕಾರವು ಕೇಂದ್ರ ಸರಕಾರಕ್ಕೆ ಮನವಿ ಮಾಡಿದೆ ಎಂದು ಮುನೀಶ್ ಮೌದ್ಗಿಲ್ ಹೇಳಿದ್ದಾರೆ. ಇನ್ನು ರಾಜ್ಯಮಟ್ಟದಲ್ಲಿ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ಮತ್ತು ಎಲ್ಲ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರಗಳು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ದಿನದ 24ಗಂಟೆಗಳ ಕಾಲವೂ ಕಾರ್ಯನಿರ್ವಹಿಸುತ್ತಿವೆ. ಹಾಗೆಯೇ ಪೀಡಿತ ವ್ಯಕ್ತಿಗಳು ಮತ್ತು ಅವರ ಕುಟುಂಬಗಳಿಗೆ ನೆರವು ನೀಡಲು ಕೇಂದ್ರಗಳ ಶ್ರಮಿಸುತ್ತಿವೆ. ಹೀಗಾಗಿ ಕರ್ನಾಟಕದ ಜನರು ಮಧ್ಯಪ್ರಾಚ್ಯದ ಸ್ಥಳೀಯ ಸರಕಾರಗಳು ಹೊರಡಿಸಿದ ಮಾರ್ಗಸೂಚಿಗಳು ಮತ್ತು ಸಲಹೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು. ಭಾರತೀಯ ರಾಯಭಾರ ಕಚೇರಿಗಳ ಸಂಪರ್ಕದಲ್ಲಿ ಇರಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ವಾರ್ತಾ ಭಾರತಿ 10 Mar 2026 12:21 am

Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್‌ ಶರ್ಮಾ

Abhiskeh Sharma: ಭಾರತ ತಂಡ ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ, ಸ್ಟಾರ್ ಓಪನರ್ ಅಭಿಷೇಕ್ ಶರ್ಮಾ ಅವರು ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ ತೋರಿದ ಸರಳತೆ ಮತ್ತು ಪ್ರಾಮಾಣಿಕತೆ ಎಲ್ಲರ ಮನಗೆದ್ದಿದೆ. ಅವರ ಹೇಳಿಕೆ ಇದೀಗ ಸಾಮಾಜಿಕ ಜಾಲಯಾಣದಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಪಂದ್ಯದ ಬಳಿಕ ನಡೆದ ಮಾಧ್ಯಮ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಭಿಷೇಕ್ ಶರ್ಮಾ, ತುಂಬಾ ಸಮಯದ ನಂತರ

ಒನ್ ಇ೦ಡಿಯ 9 Mar 2026 11:56 pm

ಕೊಪ್ಪಳ | ಊಟದಲ್ಲಿ ಜಿರಳೆ ಪತ್ತೆ ಆರೋಪ: ಹಾಸ್ಟೆಲ್ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಕೊಪ್ಪಳ: ರಾತ್ರಿಯ ಊಟದಲ್ಲಿ ಜಿರಳೆ ಪತ್ತೆಯಾಗಿದೆ ಎಂದು ಆರೋಪಿಸಿ ಎಸ್‌ಸಿ–3 ಹಾಸ್ಟಲ್ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಈ ವೇಳೆ ಎಸ್‌ಸಿ–2 ಹಾಸ್ಟಲ್‌ನಲ್ಲಿನ ಅವ್ಯವಸ್ಥೆ ಹಾಗೂ ವಾರ್ಡನ್ ಮತ್ತು ಸಿಬ್ಬಂದಿಗಳ ಬೇಜವಾಬ್ದಾರಿ ವರ್ತನೆ ಕುರಿತು ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳಿಗೆ ಬಾಳೆಹಣ್ಣು ನೀಡದಿರುವುದು, ಕೊಳೆತ ತರಕಾರಿಯಿಂದ ಅಡುಗೆ ತಯಾರಿಸುವುದು, ಸರಿಯಾಗಿ ಬೇಯದ ಊಟ ಬಡಿಸುವುದು ಸೇರಿದಂತೆ ಹಲವು ಸಮಸ್ಯೆಗಳು ಇರುವುದಾಗಿ ಅವರು ಆರೋಪಿಸಿದರು. ಈ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಯಾರಾದರೂ ಸಮಸ್ಯೆಗಳ ಬಗ್ಗೆ ಮಾತನಾಡಿದರೆ “ನಿಮ್ಮ ಫೈಲ್ ತೆಗೆದುಕೊಂಡು ಬನ್ನಿ, ಹಾಸ್ಟಲ್‌ನಿಂದ ಅಮಾನತು ಮಾಡುತ್ತೇನೆ” ಎಂದು ಬೆದರಿಕೆ ಹಾಕಲಾಗುತ್ತಿದೆ ಎಂದು ವಿದ್ಯಾರ್ಥಿಗಳು ದೂರಿದರು. ಸ್ಥಳಕ್ಕೆ ಭೇಟಿ ನೀಡಿದ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಮಾತನಾಡಿ, ವಾರ್ಡನ್‌ಗಳ ಕೊರತೆ ಇರುವುದರಿಂದ ಸಮಸ್ಯೆಗಳು ಉಂಟಾಗಿವೆ. ಸಾಧ್ಯವಾದಷ್ಟು ಉತ್ತಮ ಅಡುಗೆ ವ್ಯವಸ್ಥೆ ಮಾಡಲು ಪ್ರಯತ್ನಿಸುತ್ತೇವೆ. ಸಾಧ್ಯವಾಗದಿದ್ದರೆ ನಿಮಗೆ ದೊರೆಯಬೇಕಾದ ಹಣವನ್ನು ನೀಡುತ್ತೇವೆ ಎಂದು ಹೇಳಿದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ವಾರ್ಡನ್ ಬಸವರಾಜ ಅವರನ್ನು ವರ್ಗಾವಣೆ ಮಾಡಬೇಕು ಹಾಗೂ ಹಾಸ್ಟಲ್‌ನಲ್ಲಿ ಮೂಲ ಸೌಕರ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಉಪ ನಿರ್ದೇಶಕರು “ತಮಗೆ ಬೇಕಾದ್ದು ಮಾಡಿಕೊಳ್ಳಿ” ಎಂದು ಹೇಳಿದರೆಂದು ಆರೋಪಿಸಿದ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿ ಧರಣಿಗೆ ಮುಂದಾದರು. ವಿದ್ಯಾರ್ಥಿಗಳ ಆಕ್ರೋಶ ಹೆಚ್ಚುತ್ತಿದ್ದಂತೆ ಉಪ ನಿರ್ದೇಶಕ ಅಜ್ಜಪ್ಪ ಸೋಲಗಾಡ ಅವರು ಸ್ಥಳದಿಂದ ತೆರಳಿದರು. ಆದರೂ ವಿದ್ಯಾರ್ಥಿಗಳು ಧರಣಿಯನ್ನು ಮುಂದುವರಿಸಿದರು.

ವಾರ್ತಾ ಭಾರತಿ 9 Mar 2026 11:44 pm

ಅಮೆರಿಕ ಷೇರು ಮಾರುಕಟ್ಟೆ ಮುಕ್ತಾಯದ ಬಳಿಕ ಟ್ರಂಪ್ ಸುದ್ದಿಗೋಷ್ಠಿ; ಮಹತ್ವ ಘೋಷಣೆ ಸಾಧ್ಯತೆ

ವಾಷಿಂಗ್ಟನ್, ಮಾ. 9: ಅಮೆರಿಕ ಷೇರು ಮಾರುಕಟ್ಟೆ ಮುಕ್ತಾಯದ ಬಳಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸುದ್ದಿಗೋಷ್ಠಿ ನಡೆಸುವುದಾಗಿ ಘೋಷಿಸಿದ್ದಾರೆ. ಸ್ಥಳೀಯ ಸಮಯದ ಪ್ರಕಾರ ಸಂಜೆ 5:30ಕ್ಕೆ ನಡೆಯಲಿರುವ ಈ ಸುದ್ದಿಗೋಷ್ಠಿ ಭಾರತೀಯ ಸಮಯದ ಪ್ರಕಾರ ಮಾರ್ಚ್ 10ರಂದು ಮುಂಜಾನೆ 3 ಗಂಟೆಗೆ ಆರಂಭವಾಗಲಿದೆ. “ಇಂದು ಅನೇಕ ಪ್ರಮುಖ ಸಭೆಗಳು ಮತ್ತು ದೂರವಾಣಿ ಕರೆಗಳು ನಡೆಯುತ್ತಿವೆ,” ಎಂದು ಟ್ರಂಪ್ ತಮ್ಮ ಟ್ರೂತ್ ಸೋಶಿಯಲ್ ನಲ್ಲಿ ತಿಳಿಸಿದ್ದಾರೆ. ರಿಪಬ್ಲಿಕನ್ ಪಕ್ಷದ ನಿಧಿ ಸಂಗ್ರಹಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಲಿದ್ದಾರೆ ಎಂದು ಹೇಳಿದ್ದಾರೆ. ಸುದ್ದಿಗೋಷ್ಠಿಯ ವಿಷಯವೇನು ಎಂಬುದನ್ನು ಅಧ್ಯಕ್ಷರು ಸ್ಪಷ್ಟಪಡಿಸಿಲ್ಲ. ಆದರೆ ಅಮೆರಿಕದ ಷೇರು ಮಾರುಕಟ್ಟೆ ಮುಕ್ತಾಯವಾದ ಬಳಿಕವೇ ಕಾರ್ಯಕ್ರಮವನ್ನು ನಿಗದಿಪಡಿಸಿರುವುದು ಗಮನಾರ್ಹವಾಗಿದೆ. ತೈಲ ಬೆಲೆಗಳು ಏರಿಕೆಯಾದ ಹಿನ್ನೆಲೆಯಲ್ಲಿ ಸೋಮವಾರ ಅಮೆರಿಕದ ಷೇರು ಮಾರುಕಟ್ಟೆಗಳು ಕುಸಿದಿವೆ. ಇದರ ನಡುವೆ ನಡೆಯುತ್ತಿರುವ ಯುದ್ಧವು ಜಾಗತಿಕ ಮಾರುಕಟ್ಟೆಗಳಿಗೆ ತೈಲ ಮತ್ತು ಅನಿಲದ ಪ್ರಮುಖ ಪೂರೈಕೆಯನ್ನು ಅಲ್ಲೋಲ ಕಲ್ಲೋಲ ಮಾಡಿದೆ. ಸಂಘರ್ಷದ ಪರಿಣಾಮವಾಗಿ ವಿದೇಶಿಯರು ವ್ಯಾಪಾರ ಕೇಂದ್ರಗಳಿಂದ ಪಲಾಯನ ಮಾಡುತ್ತಿರುವ ವರದಿಗಳು ಕೇಳಿಬಂದಿವೆ. ಮಿಲಿಟರಿ ನೆಲೆಗಳು, ಸರ್ಕಾರಿ ಕಟ್ಟಡಗಳು, ತೈಲ ಹಾಗೂ ನೀರಿನ ಆಗರಗಳು, ಹೋಟೆಲ್ ಗಳು ಮತ್ತು ಕನಿಷ್ಠ ಒಂದು ಶಾಲೆ ಸೇರಿದಂತೆ ಹಲವು ಸ್ಥಳಗಳಿಗೆ ಬಾಂಬ್ ದಾಳಿಗಳು ನಡೆದಿದ್ದು, ಲಕ್ಷಾಂತರ ಜನರು ಆಶ್ರಯ ಪಡೆಯುವಂತಾಗಿದೆ ಎಂದು Aljazeera ವರದಿ ಮಾಡಿದೆ.

ವಾರ್ತಾ ಭಾರತಿ 9 Mar 2026 11:36 pm

H-1B ವೀಸಾ ಹೆಚ್ಚಳದಿಂದ ಫೋರ್ಸಿತ್ ಕೌಂಟಿಯಲ್ಲಿ 35 ಸಾವಿರ ಭಾರತೀಯ ಮೂಲದ ಅಮೆರಿಕನ್ನರ ಪ್ರಾಬಲ್ಯ; MAGA ಬೆಂಬಲಿಗರ ಆಕ್ರೋಶ

ವಾಷಿಂಗ್ಟನ್, ಮಾ. 9: ಅಮೆರಿಕದ ಜಾರ್ಜಿಯಾ ರಾಜ್ಯದ ಫೋರ್ಸಿತ್ ಕೌಂಟಿಯಲ್ಲಿ ಭಾರತೀಯ ಮೂಲದ ಅಮೆರಿಕದ ಕುಟುಂಬಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿರುವುದನ್ನು ಟೀಕಿಸಿದ MAGA(Make America Great Again) ಬೆಂಬಲಿಗರೊಬ್ಬರ ಸಾಮಾಜಿಕ ಮಾಧ್ಯಮ ಪೋಸ್ಟ್ ಆನ್ ಲೈನ್ ನಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಸ್ಥಳೀಯ ಉದ್ಯೋಗಗಳು, ವಸತಿ ಮಾರುಕಟ್ಟೆಗಳು ಮತ್ತು ಶಾಲೆಗಳಲ್ಲಿ ಭಾರತೀಯರು ಪ್ರಾಬಲ್ಯ ಸಾಧಿಸುತ್ತಿದ್ದಾರೆ ಎಂದು ಆರೋಪಿಸಿರುವ ಅವರು, ಇದಕ್ಕೆ H-1B ವೀಸಾವೇ ಕಾರಣ ಎಂದು ಹೇಳಿದ್ದಾರೆ. ‘ಕೇಟ್’ ಎಂದು ಗುರುತಿಸಲಾದ ಬಳಕೆದಾರರು ಮಾಡಿದ ಪೋಸ್ಟ್ನಲ್ಲಿ, ಫೋರ್ಸಿತ್ ಕೌಂಟಿಯಲ್ಲಿ ಈಗ ಸುಮಾರು 35,000 ಭಾರತೀಯ ಮೂಲದ ಅಮೆರಿಕದ ಕುಟುಂಬಗಳು ವಾಸಿಸುತ್ತಿದ್ದು, ಇದು ಸ್ಥಳೀಯ ಜನಸಂಖ್ಯಾಯ ಸ್ವರೂಪವನ್ನೇ ಬದಲಾಯಿಸುತ್ತಿದೆ ಎಂದು ಹೇಳಲಾಗಿದೆ. ಕಂಪೆನಿಗಳು ಅಮೆರಿಕನ್ನರ ಬದಲಿಗೆ ವಿದೇಶಿ ಕಾರ್ಮಿಕರನ್ನು ನೇಮಿಸಿಕೊಳ್ಳುತ್ತಿವೆ ಎಂದು ಅವರು ಆರೋಪಿಸಿದ್ದು, ಅಮೆರಿಕದ ವಲಸೆ ವ್ಯವಸ್ಥೆ ಅಮೆರಿಕನ್ನರನ್ನು ಕಡೆಗಣಿಸಿ, ವಲಸಿಗರಿಗೆ ದೇಶದಲ್ಲೇ ಜೀವನ ಕಟ್ಟಿಕೊಳ್ಳಲು ಅವಕಾಶ ನೀಡುತ್ತಿದೆ ಎಂದು ಹೇಳಿದ್ದಾರೆ. “ಅಟ್ಲಾಂಟಾ ಮತ್ತು ಆಲ್ಫರೆಟ್ಟಾ ಮೂಲದ ಕಂಪೆನಿಗಳು ಪ್ರತ್ಯೇಕವಾಗಿ ವಿದೇಶಿ ಕಾರ್ಮಿಕರನ್ನು ನೇಮಿಸಿಕೊಳ್ಳುತ್ತಿವೆ. ಈಗ ದೇಶದ ಪ್ರತಿಯೊಂದು ಕೌಂಟಿಯೂ ಇದೇ ರೀತಿ ಮಾಡಲಿದೆ. ನಾವು ಅಮೆರಿಕವನ್ನು ಕಳೆದುಕೊಳ್ಳುವುದು ಹೀಗೆಯೇ,” ಎಂದು ಅವರು ತಮ್ಮ ಪೋಸ್ಟ್ ನಲ್ಲಿ ತಿಳಿಸಿದ್ದಾರೆ. ಈ ಪೋಸ್ಟ್ ಬಳಿಕ ಸಾಮಾಜಿಕ ಮಾಧ್ಯಮದಲ್ಲಿ ಹಲವರು ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ್ದು, ಕೆಲವರು ದೇಶದಲ್ಲಿ ಹೆಚ್ಚುತ್ತಿರುವ ಭಾರತೀಯ ಮೂಲದ ಅಮೆರಿಕನ್ನರ ಸಂಖ್ಯೆಯನ್ನು ಟೀಕಿಸುವುದರ ಜೊತೆಗೆ ಅವರನ್ನು ಗಡೀಪಾರು ಮಾಡಬೇಕೆಂದು ಕೂಡ ಕರೆ ನೀಡಿದ್ದಾರೆ. “ಈ ವಿಷಯದ ಬಗ್ಗೆ ಸಾಕಷ್ಟು ಮಾತನಾಡಲಾಗುವುದಿಲ್ಲ. ತೆರಿಗೆದಾರರು ತಮ್ಮ ಮಕ್ಕಳ ಶಿಕ್ಷಣಕ್ಕಾಗಿ ಹಣ ಪಾವತಿಸುತ್ತಿರುವಾಗಲೇ ಅವರ ಉದ್ಯೋಗಗಳು ಕಳೆದುಹೋಗುತ್ತಿವೆ. ಇಷ್ಟು ಜನರನ್ನು ದೇಶಕ್ಕೆ ಒಳಗೆ ಬಿಡಲು ನಾವು ಮತ ಚಲಾಯಿಸಿಲ್ಲ,ಅವರು ತಮ್ಮ ದೇಶಗಳಿಗೆ ಹಿಂದಿರುಗಬೇಕು,” ಎಂದು ಒಬ್ಬ ಬಳಕೆದಾರರು ಬರೆದಿದ್ದಾರೆ. “ನ್ಯೂಜೆರ್ಸಿಯಲ್ಲಿಯೂ ಇದೇ ಸಮಸ್ಯೆ ಇದೆ. ಅಮೆರಿಕನ್ನರನ್ನು ಇಲಾಖೆಗಳು, ಕಂಪೆನಿಗಳು ಮತ್ತು ಇಡೀ ಕೈಗಾರಿಕೆಗಳಿಂದ ಹೊರಗಿಡಲಾಗುತ್ತಿದೆ. ಅಮೆರಿಕನ್ನರ ವಿರುದ್ಧ ತಾರತಮ್ಯ ನಡೆಯುತ್ತಿದೆ. ಇದು ಆಕ್ರೋಶವನ್ನುಂಟುಮಾಡುತ್ತದೆ,” ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ. “ಭಾರತದ ಜನರು ಭಾರತದಲ್ಲೇ ಏಕೆ ಉಳಿಯಲು ಸಾಧ್ಯವಿಲ್ಲ?” ಎಂದು ಮತ್ತೊಬ್ಬ ಬಳಕೆದಾರರು ಪ್ರಶ್ನಿಸಿದ್ದಾರೆ. ►‘ಲಿಟಲ್ ಇಂಡಿಯಾ’ವಾಗಿ ರೂಪಾಂತರವಾಗುತ್ತಿರುವ ಫೋರ್ಸಿತ್ ಕೌಂಟಿ ಜಾರ್ಜಿಯಾ ರಾಜ್ಯದ ಈಶಾನ್ಯ ಭಾಗದಲ್ಲಿರುವ ಫೋರ್ಸಿತ್ ಕೌಂಟಿಯಲ್ಲಿ ಪ್ರೌಢಶಾಲೆಗಳಿಂದ ಹಿಡಿದು ಕಚೇರಿಗಳವರೆಗೆ ಹಲವಾರು ಸಾರ್ವಜನಿಕ ಸ್ಥಳಗಳ ಸಭಾಂಗಣಗಳು ಮತ್ತು ಕಾರ್ಯಸ್ಥಳಗಳಲ್ಲಿ ಭಾರತೀಯ ಮೂಲದ ಅಮೆರಿಕನ್ನರ ಉಪಸ್ಥಿತಿ ಗಮನಾರ್ಹವಾಗಿ ಹೆಚ್ಚಾಗಿದೆ. ಒಮ್ಮೆ ಬಹುಪಾಲು ಶ್ವೇತ ವರ್ಣೀಯ ಜನಸಂಖ್ಯೆ ಹೊಂದಿದ್ದ ಹಾಗೂ 1912ರಲ್ಲಿ ಆಫ್ರಿಕನ್-ಅಮೆರಿಕನ್ ಜನಸಂಖ್ಯೆಯನ್ನು ಹೊರಹಾಕಿದ ಇತಿಹಾಸಕ್ಕಾಗಿ ಪ್ರಸಿದ್ಧವಾಗಿದ್ದ ಈ ಕೌಂಟಿಯಲ್ಲಿ, 2010ರಿಂದ ವಲಸಿಗರ ಹೆಚ್ಚಿದ ಪ್ರವಾಹದೊಂದಿಗೆ ಜನಸಂಖ್ಯಾ ಸ್ವರೂಪದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಈ ಕೌಂಟಿ ಈಗ ಜಾರ್ಜಿಯಾ ರಾಜ್ಯದಲ್ಲಿ ಅತ್ಯಧಿಕ ಭಾರತೀಯ-ಅಮೆರಿಕನ್ ಜನಸಂಖ್ಯೆ ಹೊಂದಿರುವ ಪ್ರದೇಶಗಳಲ್ಲಿ ಒಂದಾಗಿರುವುದು ಅನೇಕ ಸ್ಥಳೀಯ ಅಮೆರಿಕನ್ನರಿಗೆ ಅಚ್ಚರಿಯುಂಟ ಮಾಡಿದೆ. usafacts.org ಮಾಹಿತಿಯ ಪ್ರಕಾರ, 2010ರಿಂದ 2022ರವರೆಗೆ ಕೌಂಟಿಯ ಏಷ್ಯನ್ ಜನಸಂಖ್ಯೆ ಮೂರು ಪಟ್ಟು ಹೆಚ್ಚಾಗಿದೆ. ಇತ್ತೀಚಿನ ಜನಗಣತಿ ಆಧಾರಿತ ಅಂದಾಜುಗಳ ಪ್ರಕಾರ, ಸುಮಾರು 35,000 ಭಾರತೀಯ-ಅಮೆರಿಕನ್ನರು ಫೋರ್ಸಿತ್ ಕೌಂಟಿಯಲ್ಲಿ ವಾಸಿಸುತ್ತಿದ್ದಾರೆ. ಜನಸಂಖ್ಯೆಯಷ್ಟೇ ಅಲ್ಲ, ಅವರ ಸಂಸ್ಕೃತಿಯೂ ಸ್ಥಳೀಯ ಶಾಲೆಗಳು ಮತ್ತು ಸಮುದಾಯ ಕಾರ್ಯಕ್ರಮಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ಗಾಳಿಪಟ ಹಾರಿಸುವಿಕೆ ಮತ್ತು ಗರ್ಬಾ ಹಬ್ಬಗಳನ್ನು ಸಹ ಅಧಿಕೃತವಾಗಿ ಸಂಭ್ರಮದಿಂದ ಇಲ್ಲಿ ಆಚರಿಸಲಾಗುತ್ತಿದೆ. ಸ್ಥಳೀಯರಿಗೆ ಇದು ಹೊಸ ಸಂಸ್ಕೃತಿಯನ್ನು ಅರಿಯುವ ಅವಕಾಶ ಒದಗಿಸುತ್ತಿದೆ. “ಕಳೆದ ವರ್ಷ ಲ್ಯಾಂಬರ್ಟ್ ಶಾಲೆಯಲ್ಲಿ ನಾವು ದೊಡ್ಡ ಗರ್ಬಾ ರಾತ್ರಿಯನ್ನು ಯೋಜಿಸಿದ್ದೆವು. ಅದು ನನ್ನ ಸ್ವಂತ ಸಂಸ್ಕೃತಿಯೊಂದಿಗೆ ಮನೆಯಲ್ಲಿರುವ ಅನುಭವ ನೀಡಿತು. ಜೊತೆಗೆ ಅದನ್ನು ಭಾರತೀಯರಲ್ಲದ ಮತ್ತು ವಿಭಿನ್ನ ಹಿನ್ನೆಲೆಯವರೊಂದಿಗೆ ಹಂಚಿಕೊಳ್ಳಲು ಸಾಧ್ಯವಾಯಿತು,” ಎಂದು ಲ್ಯಾಂಬರ್ಟ್ ಶಾಲೆಯ ವಿದ್ಯಾರ್ಥಿನಿ ಸ್ನೇಹಾ ರಾಮಿನೇನಿ NRI ಪಲ್ಸ್ ಗೆ ತಿಳಿಸಿದ್ದಾರೆ. “ನಾನು ಈ ಕಾರ್ಯಕ್ರಮಗಳಿಗೆ ನಿಜವಾಗಿಯೂ ಹೋಗುತ್ತೇನೆ,” ಎಂದು ಭಾರತೀಯರಲ್ಲದ ವಿದ್ಯಾರ್ಥಿನಿ ಕಾಸಿಯಾ ರೊಮಾಂಚಿಕ್ ಹೇಳಿದ್ದಾರೆ. “ನನಗೆ ಅದರ ಬಗ್ಗೆ ತಿಳಿದಿರುವ ಯಾರೊಂದಿಗಾದರೂ ಹೋಗುವುದು ಉತ್ತಮ. ಅವರು ಅದನ್ನು ನನಗೆ ಪರಿಚಯಿಸಬಹುದು,” ಎಂದು ಅವರು ಹೇಳಿದ್ದಾರೆ. ವಿದ್ಯಾರ್ಥಿಗಳು ಈ ಸಾಂಸ್ಕೃತಿಕ ವಿನಿಮಯವನ್ನು ಸ್ವೀಕರಿಸುತ್ತಿದ್ದರೂ, ದೇಶದಲ್ಲಿ ಕಾನೂನುಬದ್ಧವಾಗಿ ವಾಸಿಸುವ ಭಾರತೀಯ-ಅಮೆರಿಕನ್ನರ ಸಂಖ್ಯೆಯ ಬಗ್ಗೆ ಈಗಾಗಲೇ ಅಸಮಾಧಾನ ವ್ಯಕ್ತಪಡಿಸುತ್ತಿರುವ MAGA ಬೆಂಬಲಿಗರಿಗೆ ಫೋರ್ಸಿತ್ ಕೌಂಟಿ ಎಚ್ಚರಿಕೆಯ ಸಂಕೇತವಾಗಿ ಕಾಣುತ್ತಿದೆ. ವಿಪರ್ಯಾಸವೆಂದರೆ, ಇದೇ ಕೌಂಟಿಯಲ್ಲಿ 1987ರಲ್ಲಿ ನಾಗರಿಕ ಹಕ್ಕುಗಳ ಹೋರಾಟಗಾರ ಜೆಸ್ಸಿ ಜಾಕ್ಸನ್ ‘ಬ್ರದರ್ಹುಡ್ ಮಾರ್ಚ್’ ನಡೆಸಿದ್ದರು. ಆಗ ಕೌಂಟಿಯ ಜನಾಂಗೀಯ ತಾರತಮ್ಯ ಮತ್ತು ಹಿಂಸಾಚಾರದ ಇತಿಹಾಸವನ್ನು ಅವರು ಪ್ರತಿಭಟಿಸಿದ್ದರು. ಇಂದು ಇದೇ ಫೋರ್ಸಿತ್ ಕೌಂಟಿ ಜನಸಂಖ್ಯಾ ಸ್ವರೂಪದಲ್ಲಿ ಸಂಪೂರ್ಣ ವಿಭಿನ್ನ ಚಿತ್ರಣ ನೀಡುತ್ತಿದ್ದು, ಆಧುನಿಕ ಅಮೆರಿಕದ ಬದಲಾಗುತ್ತಿರುವ ಸಾಮಾಜಿಕ ಮುಖವನ್ನು ಪ್ರತಿಬಿಂಬಿಸುವ ಪ್ರದೇಶವಾಗಿ ಪರಿಣಮಿಸಿದೆ. ಸೌಜನ್ಯ: timesofindia

ವಾರ್ತಾ ಭಾರತಿ 9 Mar 2026 11:34 pm

LPG ಸಿಲಿಂಡರ್ ಪೂರೈಕೆ ಸ್ಥಗಿತ: ಬೆಂಗಳೂರಿನ ಹಲವು ಹೋಟೆಲ್‌ಗಳು ಮಂಗಳವಾರದಿಂದ ಬಂದ್‌! ಊಟ ತಿಂಡಿಗೆ ಸಮಸ್ಯೆ

ಇಸ್ರೇಲ್ ಇರಾನ್‌ ಯುದ್ಧ ಹಿನ್ನೆಲೆ ಹೋಟೆಲ್‌ಗಳಿಗೆ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆ ಸ್ಥಗಿತವಾಗಿದೆ. ಈ ಹಿನ್ನೆಲೆ ಬೆಂಗಳೂರಿನ ಹೋಟೆಲ್‌ಗಳನ್ನು ಬಂದ್‌ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಗ್ಯಾಸ್‌ ಇಲ್ಲದೆ ನಾವು ಅಡುಗೆ ಮಾಡುವುದು ಅಸಾಧ್ಯ ಎಂದು ಹೋಟೆಲ್‌ ಮಾಲೀಕರ ಸಂಘ ತಿಳಿಸಿದೆ. ಇದರಿಂದ ನಗರದ ಲಕ್ಷಾಂತರ ಮಂದಿಗೆ ಊಟ ತಿಂಡಿ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ.

ವಿಜಯ ಕರ್ನಾಟಕ 9 Mar 2026 11:25 pm

ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳಿಗೆ ಬೆಂಗಾವಲು ಕಾರ್ಯಾಚರಣೆ: ಫ್ರಾನ್ಸ್ ಯೋಜನೆ

ಅಮೆರಿಕ-ಇಸ್ರೇಲ್ ಹೊತ್ತಿಸಿದ ಬೆಂಕಿಯ ನಡುವೆ ಪರಿಸ್ಥಿತಿ ಗಂಭೀರ ಎಂದ ಇರಾನ್

ವಾರ್ತಾ ಭಾರತಿ 9 Mar 2026 11:16 pm

ಮಾಧ್ಯಮ ಒಂದು ಸರಕಾರವನ್ನು ತರುವ ಹಾಗೂ ಉರುಳಿಸುವಷ್ಟು ಶಕ್ತಿಶಾಲಿ : ಎಚ್.ವಿಶ್ವನಾಥ್

ಪತ್ರಕರ್ತ ಜಿ.ಮಹಾಂತೇಶ್ ಅವರು ಸಂಪಾದಿಸಿರುವ ‘ಭೂ ಕಬಳಿಕೆ ಸಿದ್ಧಾಂತ’ ಕೃತಿ ಲೋಕಾರ್ಪಣೆ ಕಾರ್ಯಕ್ರಮ

ವಾರ್ತಾ ಭಾರತಿ 9 Mar 2026 11:09 pm

ಮೈಸೂರಿನ ವೈದ್ಯಕೀಯ ಕಾಲೇಜು ಅಡಿಯಲ್ಲಿನ ಆಸ್ಪತ್ರೆಗಳಲ್ಲಿ ಐಸಿಯು ಹಾಸಿಗೆ ಸಾಮರ್ಥ್ಯ ಹೆಚ್ಚಿಸಲು ಕ್ರಮ : ಡಾ.ಶರಣಪ್ರಕಾಶ್ ಪಾಟೀಲ್

ಬೆಂಗಳೂರು : ಮೈಸೂರಿನ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಅಡಿಯಲ್ಲಿ ಬರುವ ಆಸ್ಪತ್ರೆಗಳಲ್ಲಿ ಐಸಿಯು ಹಾಸಿಗೆ ಸಾಮರ್ಥ್ಯ ವನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಸೋಮವಾರ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಶಿವಕುಮಾರ್ ಕೆ. ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ವ್ಯಾಪ್ತಿಯಲ್ಲಿ ಬರುವ ಆಸ್ಪತ್ರೆಗಳ ಮೂಲಸೌಕರ್ಯ ಬಲವರ್ಧನೆ, ಸಿಬ್ಬಂದಿ ನೇಮಕಾತಿ ಮತ್ತು ಹೊಸ ಕಟ್ಟಡ ನಿರ್ಮಾಣ ಕಾರ್ಯಗಳಿಗೆ ಸರಕಾರವು ಹೆಚ್ಚಿನ ಒತ್ತು ನೀಡಿದ್ದು, ಎಂಎಂಸಿಆರ್ ಅಡಿಯಲ್ಲಿ ಒಟ್ಟು 37 ವಿಭಾಗಗಳು ಕಾರ್ಯನಿರ್ವಹಿಸುತ್ತಿವೆ. ಎಂಎಂಸಿಆರ್‍ಐ ಕಾಲೇಜು 8, ಕೆ.ಆರ್. ಆಸ್ಪತ್ರೆ 10, ಚೆಲುವಾಂಬ ಆಸ್ಪತ್ರೆ 3, ಪಿಕೆಟಿಬಿ ಮತ್ತು ಸಿಡಿ ಆಸ್ಪತ್ರೆ 2 ವಿಭಾಗಗಳು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ 12 ವಿಭಾಗಗಳು, ಟ್ರಾ ಮಾ ಕೇರ್ ಸೆಂಟರ್ 2 ವಿಭಾಗಗಳು ಕಾರ್ಯನಿರ್ವಹಿಸುತ್ತಿವೆ ಎಂದರು. ಸಂಸ್ಥೆಯಲ್ಲಿ ಒಟ್ಟು 445 ಮಂಜೂರಾದ ಹುದ್ದೆಗಳಿದ್ದು, ಅದರಲ್ಲಿ 328 ಹುದ್ದೆ ಗಳು ಭರ್ತಿಯಾಗಿವೆ. ಖಾಯಂ ವೈದ್ಯರು- 229, ಗುತ್ತಿಗೆ ಆಧಾರಿತ ವೈದ್ಯರು- 84 ಮತ್ತು ಒಂದು ವರ್ಷದ ಕಡ್ಡಾಯ ಸೇವೆ- 15, ಖಾಲಿ ಹುದ್ದೆಗಳು 117 ಇವೆ ಎಂದು ಶರಣಪ್ರಕಾಶ್ ಪಾಟೀಲ್ ತಿಳಿಸಿದರು. ಸಂಸ್ಥೆಯ ವಿವಿಧ ಆಸ್ಪತ್ರೆಗಳಲ್ಲಿ ಒಟ್ಟು 2,150 ಹಾಸಿಗೆಗಳು ಲಭ್ಯವಿದ್ದು, ದೈನಂದಿನ ಒಳರೋಗಿ(ಐಪಿಡಿ) ಮತ್ತು ಹೊರರೋಗಿ(ಒಪಿಡಿ) ಸೇವೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲಾಗುತ್ತಿದೆ. ವೈದ್ಯರು ಮತ್ತು ಹಾಸಿಗೆಗಳ ಸಂಖ್ಯೆಯು ಸದ್ಯದ ರೋಗಿಗಳ ಸಂಖ್ಯೆಗೆ ಅನುಗುಣವಾಗಿ ಸಮರ್ಪಕವಾಗಿದೆ. ಮೈಸೂರು ವೈದ್ಯಕೀಯ ಕಾಲೇಜಿನ ಶತಮಾನೋತ್ಸವದ ನೆನಪಿಗಾಗಿ ಸರಕಾರವು ವಿಶೇಷ ಯೋಜನೆಗಳನ್ನು ಕೈಗೆತ್ತಿಕೊಂಡಿದ್ದು, ಕೆ.ಆರ್.ಆಸ್ಪತ್ರೆ ಆವರಣದಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿನಲ್ಲಿ ಸುಸಜ್ಜಿತ ಹೊಸ ಹೊರರೋಗಿ ಕಟ್ಟಡ ನಿರ್ಮಾಣಕ್ಕೆ 75 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಈ ಕಾಮಗಾರಿಗೆ 12.07.2024ರಂದು ಆಡಳಿತಾತ್ಮಕ ಅನುಮೋದನೆ ದೊರೆತಿದೆ ಎಂದು ಶರಣಪ್ರಕಾಶ್ ಪಾಟೀಲ್ ಹೇಳಿದರು. ಇದಕ್ಕೂ ಮೊದಲು ಮಾತನಾಡಿದ ಸದಸ್ಯ ಶಿವಕುಮಾರ್ ಕೆ, ಡಯಾಲಿಸಿಸ್ ಸೌಲಭ್ಯ ಸರಿಯಾಗಿ ಸಿಗುತ್ತಿಲ್ಲ. ಚಲುವಾಂಬ ಆಸ್ಪತ್ರೆಯಲ್ಲಿ ಒಂದು ಹಾಸಿಗೆಯಲ್ಲೇ ಎರಡ್ಮೂರು ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಶಿಶುಮರಣ ದರವು ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿಗೆ ಇದೆ. ವೈದ್ಯಕೀಯ ಸೌಲಭ್ಯಗಳನ್ನು ಉತ್ತಮಪಡಿಸಬೇಕು ಎಂದು ಆಗ್ರಹಿಸಿದರು.

ವಾರ್ತಾ ಭಾರತಿ 9 Mar 2026 11:05 pm

ಗೃಹಬಳಕೆಯ LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ; 25 ದಿನದ ಬಳಿಕವೇ ರೀಫಿಲ್‌ಗೆ ಅವಕಾಶ!

ಇರಾನ್‌ ಯುದ್ಧದ ಪರಿಣಾಮ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಮೇಲಾಗಿದೆ. ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆಯಾಗಿದ್ದು, ರೀಫಿಲ್‌ಗೆ 25 ದಿನ ಕಾಯಬೇಕಿದೆ. ಕಾಳಸಂತೆಯಲ್ಲಿ ಸಿಲಿಂಡರ್ ಹಾಗೂ ಅನಗತ್ಯ ಸಂಗ್ರಹ ತಡೆಗೆ ಸರ್ಕಾರ ಈ ಕ್ರಮಕೈಗೊಂಡಿದೆ. ಮೊದಲಿಗೆ 15 ದಿನಗಳ ಬಳಿಕ ರೀಫಿಲ್‌ಗೆ ಅವಕಾಶ ಇತ್ತು. ಆಬಳಿಕ 21, ಈಗ 25 ದಿನಕ್ಕೆ ಹೆಚ್ಚಿಸಲಾಗಿದೆ.

ವಿಜಯ ಕರ್ನಾಟಕ 9 Mar 2026 11:04 pm

ಯಾದಗಿರಿ | ಪೋಕ್ಸೋ ಪ್ರಕರಣ : ಮಲ್ಲಿಕಾರ್ಜುನ ಮುತ್ಯಾ ಜಾಮೀನು ಅರ್ಜಿ ವಜಾ

ಯಾದಗಿರಿ : ಪೋಕ್ಸೋ ಪ್ರಕರಣದ ಆರೋಪ ಎದುರಿಸುತ್ತಿರುವ ಶಹಾಪುರ ತಾಲೂಕಿನ ಮಹಲ್ ರೋಜಾದ ಮಲ್ಲಿಕಾರ್ಜನ ಮುತ್ಯಾ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಜಿಲ್ಲಾ ನ್ಯಾಯಾಲಯ ಸೋಮವಾರ ತಿರಸ್ಕರಿಸಿದೆ. ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ ಆರೋಪ ಎದುರಿಸುತ್ತಿರುವ ಮಲ್ಲಿಕಾರ್ಜುನ್ ಮುತ್ಯಾ ವಿರುದ್ಧ ಗೋಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಮುತ್ಯಾ ಅರ್ಜಿ ಸಲ್ಲಿಸಿದ್ದು,ಸೋಮವಾರ ಅದರ ವಿಚಾರಣೆ ನಡೆಸಿದ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮರುಳಸಿದ್ದರಾಧ್ಯ ಅವರು ಜಾಮೀನು ತಿರಸ್ಕರಿಸಿದ್ದಾರೆ. ಇದೀಗ ಮುತ್ಯಾಗೆ ಬಂಧನ ಭೀತಿ ಎದುರಾಗಿದೆ ಎನ್ನಲಾಗುತ್ತಿದೆ. ಜಾಮೀನು ಕೋರಿ ಮಂಗಳವಾರ ಹೈಕೋರ್ಟ್ ಮೆಟ್ಟಿಲು ಎರುವ ಸಾಧ್ಯಗಳಿವೆ ಎಂದು ತಿಳಿದುಬಂದಿದೆ.

ವಾರ್ತಾ ಭಾರತಿ 9 Mar 2026 10:59 pm

ಕೃಷಿ ಕಲ್ಪ ಪ್ರತಿಷ್ಠಾನದ ಜೊತೆಗಿನ ತಿಳಿವಳಿಕೆ (ಎಂಒಯು) ಪತ್ರಕ್ಕೆ ರಾಜ್ಯ ಸರಕಾರ ಅಂಕಿತ

ಬೆಂಗಳೂರು : ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಗ್ರಾಮೀಣ ನಾವೀನ್ಯತೆ ಮತ್ತು ಉದ್ಯಮಶೀಲತೆ ಬಲಪಡಿಸಲು ಕಲಬುರಗಿಯಲ್ಲಿ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳ ನಾವೀನ್ಯತೆಗೆ ಸಂಬಂಧಿಸಿದಂತೆ ಶ್ರೇಷ್ಠತೆಯ ಕೇಂದ್ರ (ಸಿಒಇ) ಸ್ಥಾಪಿಸಲು ರಾಜ್ಯ ಸರಕಾರವು ಕೃಷಿ ಕಲ್ಪ ಫೌಂಡೇಷನ್ ಜೊತೆಗೆ ತಿಳಿವಳಿಕೆ ಒಪ್ಪಂದ (ಎಂಒಯು) ಪತ್ರಕ್ಕೆ ಸಹಿ ಹಾಕಿದೆ. ರಾಜ್ಯ ಸರಕಾರದ ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು, ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ (ಕೆಐಟಿಎಸ್) ಮೂಲಕ ಈ ಒಪ್ಪಂದಕ್ಕೆ ಸೋಮವಾರ ನಗರದ ಕೆಐಟಿಎಸ್ ಕಚೇರಿಯಲ್ಲಿ ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಸಮ್ಮುಖದಲ್ಲಿ ಸಹಿ ಹಾಕಿದೆ. ರಾಜ್ಯ ಸರಕಾರದ ಪರವಾಗಿ ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ (ಕೆಐಟಿಎಸ್) ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಶರಣಪ್ಪ ಸಂಕನೂರ ಮತ್ತು ಈ ಉಪಕ್ರಮದ ಅನುಷ್ಠಾನ ಪಾಲುದಾರಿಕೆ ಸಂಸ್ಥೆಯಾಗಿ ಕಾರ್ಯನಿರ್ವಹಿಸಲಿರುವ ಕೃಷಿ ಕಲ್ಪ ಫೌಂಡೇಷನ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿ.ಎಂ.ಪಾಟೀಲ್ ಅವರು ಈ ಒಪ್ಪಂದಕ್ಕೆ ಸಹಿ ಹಾಕಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಕಲ್ಯಾಣ ಕರ್ನಾಟಕವು ಕೃಷಿ ಮತ್ತು ಗ್ರಾಮೀಣ ಉದ್ಯಮದಲ್ಲಿ ನಾವೀನ್ಯತೆ ಕೇಂದ್ರವಾಗಿ ಹೊರಹೊಮ್ಮಲು ಅಪಾರ ಸಾಮಥ್ರ್ಯ ಹೊಂದಿದೆ. ಸ್ಥಳೀಯ ಆರ್ಥಿಕತೆಯ ವೇಗವರ್ಧಕ ಕಾರ್ಯಕ್ರಮದಡಿ (ಎಲ್‍ಇಎಪಿ-ಲೀಪ್), ರಾಜ್ಯ ಸರಕಾರವು ಬೆಂಗಳೂರಿನಾಚೆಗೆ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ಉದ್ಯಮ ಅವಕಾಶಗಳನ್ನು ಸ್ಥಳೀಯ ಸಮುದಾಯಗಳಿಗೆ ಹತ್ತಿರ ತರಲು ಬದ್ಧವಾಗಿದೆ ಎಂದು ತಿಳಿಸಿದರು. ಕಲಬುರಗಿಯಲ್ಲಿ ಸ್ಥಾಪನೆಗೊಳ್ಳಲಿರುವ ಶ್ರೇಷ್ಠತಾ ಕೇಂದ್ರವು ರೈತರು, ನವೋದ್ಯಮಗಳು, ಸಂಶೋಧಕರು ಮತ್ತು ಯುವ ನಾವೀನ್ಯಕಾರರು ಅತ್ಯಾಧುನಿಕ ಕೃಷಿ-ತಂತ್ರಜ್ಞಾನ ಪರಿಹಾರಗಳ ಜೊತೆ ಕಾರ್ಯನಿರ್ವಹಿಸಲು, ಜೀವನೋಪಾಯ ಬಲಪಡಿಸಿಕೊಳ್ಳಲು ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆ ಉತ್ತೇಜಿಸಲು ಸದೃಢ ವೇದಿಕೆಯನ್ನು ನಿರ್ಮಾಣ ಮಾಡಲಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು. ಒಪ್ಪಂದದ ಮುಖ್ಯಾಂಶಗಳು: ಕೃಷಿ ಮತ್ತು ಸಂಬಂಧಿತ ವಲಯಗಳಿಗೆ ಗ್ರಾಮೀಣ ನಾವೀನ್ಯತೆ ಮತ್ತು ತಂತ್ರಜ್ಞಾನ-ನೇತೃತ್ವದ ಪರಿಹಾರಗಳ ಮೇಲೆ ಗಮನ ಕೇಂದ್ರೀಕರಿಸಿದ ಕೃಷಿ ಮತ್ತು ಸಂಬಂಧಿತ ನಾವೀನ್ಯತೆಯ ಶ್ರೇಷ್ಠತಾ ಕೇಂದ್ರದ ಸ್ಥಾಪನೆ. ಬೆಂಗಳೂರಿನ ಆಚೆಗೆ ಪ್ರಾದೇಶಿಕ ನಾವೀನ್ಯತೆ ವ್ಯವಸ್ಥೆ ಬಲಪಡಿಸಲು ಐದು ವರ್ಷಗಳಲ್ಲಿ 1,000 ಕೋಟಿ ರೂ. ವೆಚ್ಚದ ‘ಲೀಪ್’ ಕಾರ್ಯಕ್ರಮದ ಅಡಿಯಲ್ಲಿ ಅನುಷ್ಠಾನ. ಐದು ವರ್ಷಗಳಲ್ಲಿ 90 ಕೋಟಿ ರೂ. ವೆಚ್ಚದಲ್ಲಿ ರಾಜ್ಯದಾದ್ಯಂತ ಆರು ಶ್ರೇಷ್ಠತಾ ಕೇಂದ್ರಗಳನ್ನು ಸ್ಥಾಪಿಸುವುದು. ಕೃಷಿ ಕಲ್ಪ ಫೌಂಡೇಷನ್ ಅನುಷ್ಠಾನ ಪಾಲುದಾರರಾಗಿ ಕಾರ್ಯನಿರ್ವಹಣೆ. ಶ್ರೇಷ್ಠತಾ ಕೇಂದ್ರದಲ್ಲಿ ಸಂಶೋಧನೆ, ನಾವೀನ್ಯತೆ ಮತ್ತು ಉದ್ಯಮಶೀಲತಾ ಕಾರ್ಯಕ್ರಮಗಳನ್ನು ನಿರ್ವಹಿಸುವ ಜವಾಬ್ದಾರಿ ಹೊಂದಿದೆ. ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ (ಕೆಐಟಿಎಸ್) ಐದು ವರ್ಷಗಳ ಅವಧಿಯಲ್ಲಿ 16.5 ಕೋಟಿ ರೂ.ನೆರವಿನ ಮೂಲಕ ಈ ಉಪಕ್ರಮವನ್ನು ಬೆಂಬಲಿಸಲಿದೆ. ಇದರಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ (ಕೆಕೆಆರ್‍ಡಿಬಿ) ಮೂಲ ಸೌಕರ್ಯ ಅಭಿವೃದ್ಧಿಯ 4.5 ಕೋಟಿ ರೂ. ನೆರವು ಸೇರಿದೆ. ಅತ್ಯಾಧುನಿಕ ನಾವೀನ್ಯತಾ ಮೂಲಸೌಕರ್ಯಗಳ ಅಭಿವೃದ್ಧಿಯಡಿ ಅತ್ಯಾಧುನಿಕ ಕೃಷಿ ನಾವೀನ್ಯತೆ ಪ್ರಯೋಗಾಲಯಗಳು, 3ಡಿ ಮುದ್ರಣ ಮತ್ತು ಮೂಲಮಾದರಿ ಸೌಲಭ್ಯಗಳು, ತಯಾರಕರ ಪ್ರಯೋಗಾಲಯ, ಮಾಧ್ಯಮ ಮತ್ತು ವಿಷಯ ಪ್ರಯೋಗಾಲಯ ಸ್ಥಾಪನೆ. ಕೃಷಿ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ (ಎಐ) ನೆರವಿನ ಕೃಷಿ, ಕೃಷಿಗಾಗಿ ಐಒಟಿ, ರೋಬೊಟಿಕ್ಸ್, ಡಿಜಿಟಲ್ ಕೃಷಿ ವೇದಿಕೆಗಳು ಮತ್ತು ದತ್ತಾಂಶ-ಆಧಾರಿತ ಕೃಷಿ ತಂತ್ರಜ್ಞಾನಗಳು ಸೇರಿದಂತೆ ಕೃಷಿ ಮತ್ತು ಸಂಬಂಧಿತ ವಲಯಗಳಲ್ಲಿ ಸಂಶೋಧನೆ, ನಾವೀನ್ಯತೆ ಮತ್ತು ಕೌಶಲ್ಯ ಅಭಿವೃದ್ಧಿಯ ಮೇಲೆ ಗಮನ ಕೇಂದ್ರೀಕರಣ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ತಂತ್ರಜ್ಞಾನ ಅಳವಡಿಕೆ ಮತ್ತು ಉದ್ಯಮ ಅಭಿವೃದ್ಧಿ ಕಾರ್ಯಗತಗೊಳಿಸುವ ನವೋದ್ಯಮಗಳು, ರೈತ ಉತ್ಪಾದಕ ಸಂಸ್ಥೆಗಳು (ಎಫ್‍ಪಿಒ), ಸ್ವ-ಸಹಾಯ ಗುಂಪುಗಳು (ಎಸ್‍ಎಚ್‍ಜಿ) ಮತ್ತು ಗ್ರಾಮೀಣ ನಾವೀನ್ಯಕಾರರಿಗೆ ಬೆಂಬಲ. ಮಾರ್ಗದರ್ಶನ ಮತ್ತು ಅನುಷ್ಠಾನದ ಮೇಲ್ವಿಚಾರಣೆ ಮಾಡಲು ಆಡಳಿತ ಮಂಡಳಿ ಮತ್ತು ಮೇಲ್ವಿಚಾರಣಾ ಸಮಿತಿಯ ರಚನೆ, ಕಲ್ಯಾಣ ಕರ್ನಾಟಕ ಪ್ರದೇಶದಾದ್ಯಂತ ಉತ್ಪನ್ನ ಸ್ಟಾರ್ಟ್‍ಅಪ್‍ಗಳು, ನಾವೀನ್ಯಕಾರರು ಮತ್ತು ಗ್ರಾಮೀಣ ಉದ್ಯಮಿಗಳಿಗೆ ಈ ಶ್ರೇಷ್ಠತಾ ಕೇಂದ್ರವು ವೇಗವರ್ಧಕವಾಗಿ ಕಾರ್ಯನಿರ್ವಹಿಸಲಿದೆ. ಕೃಷಿ ಮೌಲ್ಯ ಸರಪಳಿಯಾದ್ಯಂತ ಸವಾಲುಗಳನ್ನು ಎದುರಿಸುವ ಪರಿಹಾರಗಳನ್ನು ಅಭಿವೃದ್ಧಿಪಡಿಸಲು ನೆರವಾಗಲಿದೆ. ಕೃಷಿ ಕಲ್ಪ ಪ್ರತಿμಷ್ಠಾನವು ಈ ಕೇಂದ್ರವನ್ನು ಕಾರ್ಯಗತಗೊಳಿಸಲಿದೆ. ಈ ಸಮಾರಂಭದಲ್ಲಿ ಸರಕಾರದ ಎಲೆಕ್ಟ್ರಾನಿಕ್ಸ್, ಐಟಿ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಡಾ.ಮಂಜುಳಾ ಎನ್., ಕೆಐಟಿಎಸ್‍ನ ಪ್ರಧಾನ ವ್ಯವಸ್ಥಾಪಕಿ ಅಪೂರ್ವ, ಕೃಷಿ ಕಲ್ಪ ಪ್ರತಿಷ್ಠಾನದ ಗ್ರಾಮೀಣ ಉದ್ಯಮಶೀಲತೆಯ ಉಪಾಧ್ಯಕ್ಷ ಈರಣ್ಣ, ಯುವ ಉದ್ಯಮಶೀಲತೆಯ ಮುಖ್ಯಸ್ಥ ಅಭಿನಂದನ್, ಕೆಐಟಿಎಸ್ ಮತ್ತು ಕೃಷಿ ಕಲ್ಪ ಪ್ರತಿಷ್ಠಾನದ ಅಧಿಕಾರಿಗಳು ಉಪಸ್ಥಿತರಿದ್ದರು.

ವಾರ್ತಾ ಭಾರತಿ 9 Mar 2026 10:59 pm

ಜಿಎಸ್‍ಟಿ ಪರಿಷ್ಕರಣೆ-ಕೇಂದ್ರದ ಅನುದಾನ ವಿಳಂಬದಿಂದ ವಿತ್ತೀಯ ಕೊರತೆ ಬಜೆಟ್ ಮಂಡನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಬರಬೇಕಿರುವ ಅನುದಾನ ಬಿಡುಗಡೆ ವಿಳಂಬ ಹಾಗೂ ಜಿಎಸ್‍ಟಿ ಪರಿಷ್ಕರಣೆಯಿಂದಾಗಿ ಈ ಬಾರಿ ವಿತ್ತೀಯ ಕೊರತೆ ಬಜೆಟ್ ಮಂಡನೆ ಮಾಡುವಂತಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸೋಮವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ರಾಜ್ಯ ವಿಧಾನಮಂಡಲದ ವತಿಯಿಂದ ಶಾಸಕರು ಹಾಗೂ ವಿಧಾನಪರಿಷತ್ತಿನ ಸದಸ್ಯರಿಗಾಗಿ ಆಯವ್ಯಯ ರಾಜಸ್ವಗಳ ಸಂಗ್ರಹಣೆ, ಅನುದಾನಗಳ ವರ್ಗೀಕರಣ ಮತ್ತು ಹಂಚಿಕೆ ಹಾಗೂ ಆಯವ್ಯಯ ಅನುದಾನಗಳ ಬಳಕೆ, ನಿರ್ವಹಣೆ ವಿಷಯದ ಕುರಿತು ಆಯೋಜಿಸಿದ್ದ ತರಬೇತಿ ಕಾರ್ಯಾಗಾರವನ್ನುದ್ದೇಶಿಸಿ ಅವರು ಮಾತನಾಡಿದರು. 2025-26ರಲ್ಲಿ 4,09,018 ಕೋಟಿ ರೂ.ಗಳಿದ್ದ ಬಜೆಟ್ ಗಾತ್ರ, 2026-27ರಲ್ಲಿ 4,48,004 ಕೋಟಿ ರೂ.ಗಳಿಗೆ ತಲುಪಿದೆ. ನಾವು 2025-26ರಲ್ಲಿ ಬಜೆಟ್ ಅಂದಾಜುಗಳನ್ನು ಸಂಪೂರ್ಣವಾಗಿ ಅನುಷ್ಠಾನ ಮಾಡಲು ಸಾಧ್ಯವಾಗಲಿಲ್ಲ. ಏಕೆಂದರೆ, ಕೇಂದ್ರ ಸರಕಾರದಿಂದ ಬರಬೇಕಾದ ಅನುದಾನ ಬರಲಿಲ್ಲ. ಆದುದರಿಂದ, ನಾವು ಬಜೆಟ್‍ನಲ್ಲಿ ಘೋಷಣೆ ಮಾಡಿದಂತಹ ಒಟ್ಟು ಖರ್ಚು ತಲುಪಲು ಸಾಧ್ಯವಿಲ್ಲ. ಆದುದರಿಂದ, ವಿತ್ತೀಯ ಕೊರತೆ ಬಜೆಟ್ ಮಂಡಿಸುವಂತಹ ಪರಿಸ್ಥಿತಿ ನಿರ್ಮಾಣವಾಯಿತು ಎಂದು ಮುಖ್ಯಮಂತ್ರಿ ಹೇಳಿದರು. ಜಿಎಸ್‍ಟಿ ಪರಿಷ್ಕರಣೆ ಮಾಡುವ ಮುನ್ನ ನಮಗೆ ಜಿಎಸ್‍ಟಿಯಿಂದ ಬರುತ್ತಿದ್ದ ತೆರಿಗೆ ಬೆಳವಣಿಗೆ ದರ ಶೇ.10ರಷ್ಟು ಇತ್ತು. ಪರಿಷ್ಕರಣೆ ಆದ ನಂತರ ಅದು ಶೇ.4ಕ್ಕೆ ಇಳಿಯಿತು. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲೂ ಇದರ ಪರಿಣಾಮ ಬೀರಿದೆ. ರಾಜ್ಯದ ಜಿಎಸ್‍ಡಿಪಿ 33,05,500 ರೂ.ಗಳು. ಈ ಮೊತ್ತದ ಶೇ.25ರಷ್ಟು ಸಾಲ ಇರಬೇಕೆಂದು ವಿತ್ತೀಯ ಹೊಣೆಗಾರಿಕೆ ಕಾಯ್ದೆ ತಿಳಿಸುತ್ತದೆ ಎಂದು ಅವರು ತಿಳಿಸಿದರು. ವಿಪಕ್ಷದವರು ಆರೋಪ ಮಾಡುತ್ತಿರುವಂತೆ ನಾವು ಆರ್ಥಿಕ ಶಿಸ್ತು ಉಲ್ಲಂಘನೆ ಮಾಡಿ ಸಾಲ ಮಾಡಿಲ್ಲ. ಇದು ನಾನು ಮಂಡಿಸಿದ 17ನೆ ಬಜೆಟ್. 2013-2018ರವರೆಗೆ ನಾನು ಮಂಡಿಸಿದ ಬಜೆಟ್ ಗಳಲ್ಲಿ ರಾಜಸ್ವ ಹೆಚ್ಚಳ ಇತ್ತು. ಎಂದಿಗೂ ವಿತ್ತೀಯ ಕೊರತೆ ಎದುರಾಗಿರಲಿಲ್ಲ. ಈಗ ವಿತ್ತೀಯ ಕೊರತೆ ಇದೆ. ಕಳೆದ ವರ್ಷ ವಿತ್ತೀಯ ಕೊರತೆ 19 ಸಾವಿರ ಕೋಟಿ ರೂ. ಇತ್ತು, ಮುಂದಿನ ವರ್ಷಕ್ಕೆ 22 ಸಾವಿರ ಕೋಟಿ ರೂ.ಗಳಾಗುತ್ತದೆ. ಕೇಂದ್ರದಿಂದ ಬರಬೇಕಾದ ಬಾಕಿ ಹಣ ಬಂದಿದ್ದರೆ, ವಿತ್ತೀಯ ಕೊರತೆಯನ್ನು ನಿವಾರಿಸಲು ಸಾಧ್ಯವಾಗುತ್ತಿತ್ತು ಎಂದು ಸಿದ್ದರಾಮಯ್ಯ ಹೇಳಿದರು. 2025-26ರಲ್ಲಿ ಜಿಎಸ್‍ಟಿಯನ್ನು ಪರಿಷ್ಕರಣೆ ಮಾಡಿದರು. 2017ರಲ್ಲಿ ಜಿಎಸ್‍ಟಿ ಜಾರಿಗೆ ಬಂತು. ಅದಕ್ಕಿಂತ ಮುಂಚೆ ನಮ್ಮ ಆರ್ಥಿಕ ಬೆಳವಣಿಗೆ ಶೇ.14ರಷ್ಟು ಇತ್ತು. 2022ರವರೆಗೆ ಕೇಂದ್ರ ಸರಕಾರ ಪರಿಹಾರ ನೀಡುತ್ತಿತ್ತು. ಆನಂತರ ಅದನ್ನು ನಿಲ್ಲಿಸಿದರು. ಇದು ಸಹ ವಿತ್ತೀಯ ಕೊರತೆಗೆ ಕಾರಣವಾಯಿತು ಎಂದು ಮುಖ್ಯಮಂತ್ರಿ ಉಲ್ಲೇಖಿಸಿದರು. ಜಲಜೀವನ್ ಮಿಷನ್ ಯೋಜನೆಯಡಿ ಕೇಂದ್ರ ಸರಕಾರ ನಮಗೆ 19 ಸಾವಿರ ಕೋಟಿ ರೂ.ಗಳನ್ನು ಕೊಡಬೇಕಿತ್ತು. ಆದರೆ, ಕೊಟ್ಟಿದ್ದು 11 ಸಾವಿರ ಕೋಟಿ ರೂ.ಮಾತ್ರ. ನಾವು ಈ ಯೋಜನೆಗೆ 27 ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡಿದ್ದೇವೆ. ರಾಜ್ಯದ ಜಿಎಸ್‍ಡಿಪಿ 2025-26ರಲ್ಲಿ ಶೇ.8.1ರಷ್ಟಿದೆ. ಇದು ರಾಷ್ಟ್ರೀಯ ಸರಾಸರಿ ಶೇ.7.4ಕ್ಕೆ ಹೆಚ್ಚಿದೆ ಎಂದು ಸಿದ್ದರಾಮಯ್ಯ ಹೇಳಿದರು. 2026-27ನೆ ಸಾಲಿನಲ್ಲಿ ವಾಣಿಜ್ಯ ತೆರಿಗೆಯಿಂದ 1.25 ಲಕ್ಷ ಕೋಟಿ ರೂ., ಮೋಟಾರು ವಾಹನ ತೆರಿಗೆ-15,500 ಕೋಟಿ ರೂ., ನೋಂದಣಿ ಮತ್ತು ಮುದ್ರಾಂಕ-29 ಸಾವಿರ ಕೋಟಿ ರೂ., ಅಬಕಾರಿ-45 ಸಾವಿರ ಕೋಟಿ ರೂ. ಹಾಗೂ ಇತರೆ-5500 ಕೋಟಿ ರೂ. ನಿರೀಕ್ಷಿಸಲಾಗಿದೆ ಎಂದು ಅವರು ತಿಳಿಸಿದರು. ಕೇಂದ್ರಕ್ಕೆ ನಮ್ಮ ರಾಜ್ಯದಿಂದ 4.50 ಲಕ್ಷ ಕೋಟಿ ರೂ.ಗಳನ್ನು ವಿವಿಧ ತೆರಿಗೆಗಳ ಮೂಲಕ ನೀಡುತ್ತೇವೆ. 2026-27ರಲ್ಲಿ ಕೇಂದ್ರದಿಂದ ನಮಗೆ 73 ಸಾವಿರ ಕೋಟಿ ರೂ.ತೆರಿಗೆ ಹಂಚಿಕೆ ಬರಲಿದೆ. 14ನೆ ಹಣಕಾಸು ಆಯೋಗದಲ್ಲಿ ಕೇಂದ್ರದಿಂದ ನಮಗೆ ತೆರಿಗೆ ಹಂಚಿಕೆ ಪ್ರಮಾಣ ಶೇ.4.7, 15ನೆ ಹಣಕಾಸು ಆಯೋಗದಲ್ಲಿ ಶೇ.3.6 ಹಾಗೂ 16ನೆ ಹಣಕಾಸು ಆಯೋಗದಲ್ಲಿ ಶೇ.4.131 ನಿಗದಿ ಮಾಡಿದ್ದಾರೆ ಎಂದು ಅವರು ಹೇಳಿದರು. ಬಜೆಟ್ ಯಾವ ರೀತಿ ಖರ್ಚು ಆಗುತ್ತಿದೆ ಎಂದು ನೋಡಬೇಕಾದದ್ದು ಶಾಸಕರ ಕರ್ತವ್ಯ. ರೆವಿನ್ಯೂ ಸರಪ್ಲಸ್, ರೆವಿನ್ಯೂ ಡಿಫಿಸಿಟ್, ಸಂಚಿತ ನಿಧಿ, ಭದ್ಧತಾ ವೆಚ್ಚ, ಪೂರಕ ಅಂದಾಜು, ಆರ್ಥಿಕ ವರದಿಗಳು, ಸಮೀಕ್ಷಾ ವರದಿಗಳ ಬಗ್ಗೆಯೂ ಶಾಸಕರು ಗಮನ ಹರಿಸಬೇಕು. ಅಧ್ಯಯನ ಮಾಡಬೇಕು ಎಂದು ಅವರು ಹೇಳಿದರು. ವೇದಿಕೆ ಮೇಲೆ ಸಚಿವರಾದ ಡಾ.ಜಿ.ಪರಮೇಶ್ವರ್, ಎಚ್.ಕೆ.ಪಾಟೀಲ್, ಎನ್.ಎಸ್.ಭೊಸರಾಜು ಉಪಸ್ಥಿತರಿದ್ದರು. ನಾವೆಲ್ಲರೂ ಶಾಸಕರಾಗಿ ಬಂದಿದ್ದೇವೆ. ಬಜೆಟ್ ಸಂದರ್ಭದಲ್ಲಿ ಇದರ ಸಂಪೂರ್ಣ ಅರಿವು ಇರುವುದಿಲ್ಲ. ಆರ್ಥಿಕ ವ್ಯವಸ್ಥೆ, ವಿತ್ತೀಯ ಕೊರತೆ, ಸರ್‍ಪ್ಲಸ್ ಬಜೆಟ್ ಇವುಗಳ ಕುರಿತು ತಿಳಿದುಕೊಳ್ಳಲು ಸಹಕಾರಿಯಾಗಲಿ ಎಂಬ ಉದ್ದೇಶದಿಂದ ಶಾಸಕರಿಗೆ ಈ ಕಾರ್ಯಾಗಾರವನ್ನು ಆಯೋಜಿಸಿದ್ದು, 17 ಬಾರಿ ಬಜೆಟ್ ಮಂಡಿಸಿ, ಅನುಭವವಿರುವ ಮುಖ್ಯಮಂತ್ರಿ ಅವರಿಂದ ಶಾಸಕರಿಗೆ ತರಬೇತಿ ನೀಡಲು ನಿರ್ಧರಿಸಲಾಯಿತು. ಯು.ಟಿ.ಖಾದರ್, ಸ್ಪೀಕರ್ ಪ್ರತಿ ಬಾರಿ ಬಜೆಟ್ ಮಂಡಿಸುತ್ತೇವೆ. ಎಲ್ಲರಿಗೂ ಸವಿಸ್ತಾರವಾಗಿ ಶಾಸಕರಿಗೆ ಬಜೆಟ್ ಬಗ್ಗೆ ತಿಳಿಸಲು, ಇದೇ ಮೊಟ್ಟಮೊದಲ ಬಾರಿಗೆ ಇಂತಹ ಕಾರ್ಯಕ್ರಮ ಮಾಡಿದ್ದೇವೆ. ಕರ್ನಾಟಕದಲ್ಲಿ ಅತ್ಯಂತ ಹೆಚ್ಚು ಬಾರಿ ಬಜೆಟ್ ಮಂಡನೆ ಮಾಡಿರುವ ಸಿದ್ದರಾಮಯ್ಯ, ಇಡೀ ದೇಶದಲ್ಲಿ ಎರಡನೆ ಸ್ಥಾನದಲ್ಲಿದ್ದಾರೆ. ಮೊದಲನೆ ಸ್ಥಾನಕ್ಕೆ ಬರಲಿ ಎಂದು ಹಾರೈಸುತ್ತೇನೆ. ಬಜೆಟ್ ಮೇಲೆ ಚರ್ಚೆ ಮಾಡುವಾಗ ಅಂಕಿ ಅಂಶಗಳನ್ನು ಕ್ರೋಢೀಕರಿಸಿ, ಸದನದಲ್ಲಿ ಚರ್ಚೆ ಮಾಡುವಾಗ ಪ್ರಸ್ತಾವ ಮಾಡಿ. ಬಸವರಾಜ ಹೊರಟ್ಟಿ, ಸಭಾಪತಿ

ವಾರ್ತಾ ಭಾರತಿ 9 Mar 2026 10:53 pm

ಮಧ್ಯಪ್ರಾಚ್ಯ ಸಂಘರ್ಷ | ವಿಶ್ವಾಸಾರ್ಹ ಪಾಲುದಾರರಿಗೆ ಇಂಧನ ಪೂರೈಕೆ ಮುಂದುವರಿಕೆ: ಪುಟಿನ್

ಮಾಸ್ಕೋ, ಮಾ. 9: ಯುದ್ಧದ ಪರಿಣಾಮವಾಗಿ ಜಾಗತಿಕ ತೈಲ ಹಾಗೂ ಇಂಧನ ಮಾರುಕಟ್ಟೆಗಳಲ್ಲಿ ಉಂಟಾಗಿರುವ ಅಸ್ಥಿರತೆಯ ನಡುವೆಯೇ ರಷ್ಯಾದ ಕಂಪೆನಿಗಳು ಪ್ರಸ್ತುತ ಪರಿಸ್ಥಿತಿಯ ಲಾಭ ಪಡೆದುಕೊಳ್ಳಬೇಕು ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. ಕ್ರೆಮ್ಲಿನ್ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನಡೆಯುತ್ತಿರುವ ಯುದ್ಧವು ವಿಶ್ವಾದ್ಯಂತ ಇಂಧನ ಬಿಕ್ಕಟ್ಟಿಗೆ ಕಾರಣವಾಗಿದೆ ಎಂದು ಎಚ್ಚರಿಸಿದರು. ಹಾರ್ಮುಜ್ ಜಲಸಂಧಿಯ ಮೂಲಕ ಸಾಗಣೆಯನ್ನು ಅವಲಂಬಿಸಿರುವ ತೈಲ ಉತ್ಪಾದನೆ ಶೀಘ್ರದಲ್ಲೇ ಸಂಪೂರ್ಣ ಸ್ಥಗಿತಗೊಳ್ಳುವ ಸಾಧ್ಯತೆಯೂ ಇದೆ ಎಂದು ಅವರು ತಿಳಿಸಿದರು. ಯುರೋಪಿನ ಖರೀದಿದಾರರು ‘ರಾಜಕೀಯವಿಲ್ಲದೆ ದೀರ್ಘಾವಧಿಯ ಸಹಕಾರ’ದಲ್ಲಿ ತೊಡಗಿಕೊಳ್ಳಲು ಸಿದ್ಧರಾಗಿದ್ದರೆ ರಷ್ಯಾ ಅವರೊಂದಿಗೆ ಕೆಲಸ ಮಾಡಲು ಸಿದ್ಧವಿದೆ ಎಂದು ಪುಟಿನ್ ಹೇಳಿದರು. ಜೊತೆಗೆ, ಮಾಸ್ಕೋ ತನ್ನ ‘ವಿಶ್ವಾಸಾರ್ಹ ಪಾಲುದಾರರಿಗೆ’ ಇಂಧನ ಸಂಪನ್ಮೂಲಗಳನ್ನು ಪೂರೈಸುವುದನ್ನು ಮುಂದುವರಿಸುತ್ತದೆ ಎಂದು ಅವರು ಸ್ಪಷ್ಟಪಡಿಸಿದರು. ರಷ್ಯಾ ವಿಶ್ವದ ಎರಡನೇ ಅತಿದೊಡ್ಡ ತೈಲ ರಫ್ತುದಾರ ರಾಷ್ಟ್ರವಾಗಿದ್ದು, ವಿಶ್ವದಲ್ಲೇ ಅತಿದೊಡ್ಡ ನೈಸರ್ಗಿಕ ಅನಿಲ ನಿಕ್ಷೇಪವನ್ನು ಹೊಂದಿದೆ.

ವಾರ್ತಾ ಭಾರತಿ 9 Mar 2026 10:45 pm

ಬಜ್ಪೆ| ಕಲುಷಿತಗೊಂಡಿರುವ ಮಳವೂರು ಪಲ್ಗುಣಿ ನದಿ; ನಾಗರಿಕರ ಹಿತರಕ್ಷಣಾ ವೇದಿಕೆ ಆಕ್ರೋಶ

ಬಜ್ಪೆ: ಬೃಹತ್ ಕಾರ್ಖಾನೆಗಳಿಂದ ಕಲುಷಿತಗೊಂಡಿರುವ ಮಳವೂರು ಪಲ್ಗುಣಿ ನದಿಯನ್ನು ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆ ನಿಯೋಗವು ಸೋಮವಾರ ವೀಕ್ಷಿಸಿ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಮಳವೂರು ಮೂಲಕ ಹರಿಯುವ ಪಲ್ಗುಣಿ ನದಿಯಲ್ಲಿ ಮೀನುಗಳು ಸಾಯುತ್ತಿದ್ದು, ನೀರಿನಲ್ಲಿ ನೊರೆಗಳು ಹರಡಿದೆ. ದುರ್ನಾಥ ವಿಪರೀತವಾಗಿ ಹರಡುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ ಆದರೂ ಜಿಲ್ಲಾಡಳಿ ಸ್ಥಳಕ್ಕೆ ಭೇಟಿ ನೀಡಿ ಯಾವುದೇ ಕ್ರಮಕ್ಕೆ ಮುಂದಾಗದಿರುವುದು ಜೀ ಭಾಗದ ಜನರ ದೌರ್ಭ್ಯಾಗ್ಯ ಎಂದು ನಿಯೋಗವು ಆಕ್ರೋಶ ವ್ಯಕ್ತಪಡಿಸಿದೆ. ಈ ನದಿಗೆ ಅಡ್ಡಲಾಗಿ ಆಣೆಕಟ್ಟು ಕಟ್ಟಿ ಬಹುಗ್ರಾಮ ಕುಡಿಯುವ ಯೋಜನೆಯನ್ನು ಅನುಷ್ಟಾನ ಗೊಳಿಸಲಾಗಿದ್ದು, ಈ ಯೋಜನೆಯಡಿ ಸುತ್ತಲಿನ 10 ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಿಗೆ ನೀರು ಒದಗಿಸಲಾಗುತ್ತಿದೆ. ಈ ನೀರು ಜನರ ಗೃಹೋಪಯೋಗಗಳಿಗೆ ಯೋಗ್ಯವೇ ಎನ್ನುವಷ್ಟು ಆತಂಕ ಜೊತೆಗೆ ಅನುಮಾನ ಹುಟ್ಟಿದೆ. ಡ್ಯಾಮ್ ಪಕ್ಕದವರೆಗೆ ಕಲುಷಿತ ನೀರು ಹರಡಿಕೊಂಡಿದ್ದು, ಡ್ಯಾಮ್ ನ ಒಳಗೆಯೂ ಕೊಳಕು ನೀರು ಸೇರಿರುವ ಆತಂಕವಿದೆ. ಹಾಗಾಗಿ ತಕ್ಷಣ ಜಿಲ್ಲಾಡಳಿಯ ಡ್ಯಾಮ್ ನ ನೀರನ್ನು ಪರೀಕ್ಷೆಗೆ ಒಳಪಡಿಸಬೇಕು. ಜೊತೆಗೆ ಕಲುಷಿತ ನೀರು ಜೀವ ನದಿಗೆ ಸೇರುದನ್ನು ತೆರಯಲು ಕ್ರಮ ವಹಿಸಬೇಕು ಎಂದು ಆಗ್ರಹಿಸಿರುವ ಬಜ್ಪೆ ನಾಗರಿಕರ ಹಿತ ರಕ್ಷಣಾ ವೇದಿಕೆಯು ಜಿಲ್ಲಾಡಳಿತ ತಕ್ಷಣ ಎಚ್ಚೆತ್ತುಕೊಂಡು ಜನ ಕಾರ್ಯಕ್ಕೆ ಮುಂದಾಗಬೇಕು.‌ ಇಲ್ಲವಾದಲ್ಲಿ ಹತ್ತೂ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರನ್ನು ಸೇರಿಸಿಕೊಂಡು ಬೃಹತ್ ಮಟ್ಟದ “ ಫಲ್ಗುಣಿ ನದಿ ಬಚಾವೊ” ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಬಜ್ಪೆ ನಾಗರೀಕ ಹೋರಾಟ ಸಮಿತಿಯ ಅಧ್ಯಕ್ಷ ಸಿರಾಕ್ ಬಜ್ಪೆ ಅವರಿ ಜಿಲ್ಲಾಡಳಿವನ್ನು ಎಚ್ಚರಿಸಿದ್ದಾರೆ. ನಿಯೋಗದಲ್ಲಿ ರಾಜ್ಯ ದಲಿತ ಸಂಘದ ಅಧ್ಯಕ್ಷ ಹಾಗೂ ವೇದಿಕೆಯ ಗೌರವಾಧ್ಯಕ್ಷರಾದ ದೇವದಾಸ್, ಹಾಜಿ‌ ಮೋನು, ಹಾಜಿ ಸಲೀಮ್,ಉಪಾಧ್ಯಕ್ಷರಾದ ಇಂಜಿನಿಯರ್ ಇಸ್ಮಾಯಿಲ್, ವಸಂತ್ , ಕಾರ್ಯದರ್ಶಿ ನಿಸಾರ್ ಕರಾವಳಿ, ದಲಿತ ಸಂಘದ ನಾಯಕರಾದ ಮಂಜಪ್ಪ ಪುತ್ರನ್ ಹಿರಿಯರಾದ ಖಾದರ್ ಜರಿ, ಅನ್ವರ್ ರಝಾಕ್ ಮತ್ತು ಕೆಪಿಸಿಸಿ ಸಾಮಾಜಿಕ ಜಾಲತಾಣದ ಹಫೀಝ್ ಕೊಳಂಬೆ ಇದ್ದರು. ಈ ವಿಷ ಮಿಶ್ರಿತ ಕೊಳಚೆ ನೀರನ್ನು ಯಾವ ಯಾವ ಕಾರ್ಖಾನೆಗಳಿಂದ ನದಿಗೆ ಬಿಡಲಾಗುತ್ತಿದೆ ಎನ್ನುವ ಕುರಿತು ಸಂಬಂಧಪಟ್ಟ ಇಲಾಖೆ ಕೂಡಲೇ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು. ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತ ಇಷ್ಟು ದೊಡ್ಡ ಅಕ್ರಮ ನಡೆಯುತ್ತಿದ್ದರೂ ಕಣ್ಣು ಮುಚ್ಚಿ ಕುಳಿತಿದೆ. ಜನರ ಜೀವದೊಂದಿಗೆ ಯಾತೂ ಚೆಲ್ಲಾಟವಾ ಡುವುದು ಬೇಡ. ಕಣ್ಣುಮುಚ್ಚಿ ಕುಳಿತಿರುವ ಜನಪ್ರಧಿನಿಧಿಗಳು ಜಿಲ್ಲಾಡಳಿತ ಕಣ್ಣು ತೆರೆಯದಿದ್ದಲ್ಲಿ ನಾಗರಿಕರು ಸೇರಿ ಕಣ್ಣು ತೆರೆಸುವ ಕೆಲಸ ಮಾಡುತ್ತೇವೆ. -ಸಿರಾಜ್ ಬಜ್ಪೆ, ಅಧ್ಯಕ್ಷರು, ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆ

ವಾರ್ತಾ ಭಾರತಿ 9 Mar 2026 10:40 pm

ಉಬಾರ್ ಸ್ಪೋರ್ಟಿಂಗ್ ಕ್ಲಬ್‍ ವತಿಯಿಂದ ಇಫ್ತಾರ್ ಕೂಟ

ಉಪ್ಪಿನಂಗಡಿ: ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉಬಾರ್ ಸ್ಪೋರ್ಟಿಂಗ್ ಕ್ಲಬ್ ಹಾಗೂ ಇದರ ಅಂಗ ಸಂಸ್ಥೆಯಾದ ಉಬಾರ್ ಡೋನಾರ್ಸ್‍ನ ವತಿಯಿಂದ ಉಪ್ಪಿನಂಗಡಿಯ ಎಚ್.ಎಂ. ಅಡಿಟೋರಿಯಂನಲ್ಲಿ ಬೃಹತ್ ಇಫ್ತಾರ್ ಕೂಟ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಹಿರಿಯ ವೈದ್ಯ ಡಾ. ಎಂ.ಆರ್. ಶೆಣೈ, ಉಪ್ಪಿನಂಗಡಿಯಲ್ಲಿ ಎಲ್ಲಾ ಜಾತಿ- ಧರ್ಮದವರು ಒಳ್ಳೆಯ ಬಾಂಧವ್ಯದಿಂದ ಇದ್ದೇವೆ. ಆದ್ದರಿಂದ ಇಲ್ಲಿ ಕೋಮು ಸೌಹಾರ್ದತೆಗೆ ಯಾವತ್ತೂ ಧಕ್ಕೆಯಾಗಿಲ್ಲ. ಇಫ್ತಾರ್ ಕೂಟದಂತಹ ಕಾರ್ಯಕ್ರಮಗಳಿಂದ ಈ ಸೌಹಾರ್ದತೆ ಇನ್ನಷ್ಟು ಮುಂದುವರಿಯಲಿ ಎಂದರು. ವೈದ್ಯ ಡಾ. ನಿರಂಜನ್ ರೈ ಮಾತನಾಡಿ, ಸಮಾಜದಲ್ಲಿರುವ ಸೌಹಾರ್ದತೆಯ ಒಗ್ಗಟ್ಟು ತೋರಿಸಲು ಇಫ್ತಾರ್ ಕೂಟ ಪ್ರೇರಣೆಯಾಗಲಿ. ಹೊಸ ತಲೆಮಾರಿನ ಯುವಕರಿಗೆ ಈ ಕಾರ್ಯಕ್ರಮ ಮಾದರಿಯಾಗಲಿ ಎಂದರು. ನಿವೃತ್ತ ಶಿಕ್ಷಕ ವಿನ್ಸೆಂಟ್ ಫೆರ್ನಾಂಡಿಸ್ ಮಾತನಾಡಿ, ಮುಸ್ಲಿಂ ಸಮುದಯಕ್ಕೆ ಈ ತಿಂಗಳು ಪುಣ್ಯ ಸಂಗ್ರಹಿಸುವ ಕಾಲ. ಯುವಕರ ಈ ಕಾರ್ಯಕ್ರಮದ ಮೂಲಕ ಇಲ್ಲಿನ ಸೌಹಾರ್ದತೆಯ ಕಿಚ್ಚು ಎಲ್ಲೆಡೆ ಹರಡಲಿ ಎಂದರು. ಉಮ್ರಾ ಯಾತ್ರೆ ಕೈಗೊಂಡಿರುವ ಉದ್ಯಮಿ ಸಿದ್ದೀಕ್ ಕೆಂಪಿಯವರನ್ನು ಈ ಸಂದರ್ಭ ಸನ್ಮಾನಿಸಲಾಯಿತು. ಸಮದ್ ಅನ್ಸಾರಿ ದುವಾಶೀರ್ವಚನ ನೀಡಿದರು. ದಂತ ವೈದ್ಯ ಡಾ. ರಾಜಾರಾಮ್ ಕೆ.ಬಿ. ಮಾತನಾಡಿದರು. ಕಾರ್ಯಕ್ರಮದಲ್ಲಿ ಉಬಾರ್ ಸ್ಪೋರ್ಟಿಂಗ್ ಕ್ಲಬ್‍ನ ಅಧ್ಯಕ್ಷ ಶಬೀರ್ ಕೆಂಪಿ, ಗೌರವ ಸಲಹೆಗಾರ ಯು.ಟಿ. ತೌಸೀಫ್, ಗೌರವಾಧ್ಯಕ್ಷ ರಫೀಕ್ ಮಾಸ್ಟರ್, ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಪ್ರಶಾಂತ್ ಡಿಕೋಸ್ತ, ಪ್ರಮುಖರಾದ ಶುಕೂರ್ ಹಾಜಿ ಶುಕ್ರಿಯಾ, ಮಹಮ್ಮದ್ ಹಾಜಿ ನೆಕ್ಕಿಲಾಡಿ, ಅಝೀಝ್ ಬಸ್ತಿಕ್ಕಾರ್, ಝಕರಿಯಾ ಕೊಡಿಪ್ಪಾಡಿ, ಮುಸ್ತಫಾ ಲತೀಫೀ, ನಝೀರ್ ಮಠ, ಅಬೂಬಕ್ಕರ್ ಪುತ್ತು, ಶುಕೂರ್ ಮೇದರಬೆಟ್ಟು, ಇಬ್ರಾಹಿಂ ದುಬಾಲ್, ಅಯ್ಯೂಬ್ ದೇಂತಾರ್, ಹಮೀದ್ ಕರಾವಳಿ, ರಹಿಮಾನ್ ಮಠ, ಮಹಮ್ಮದ್ ಕೆಂಪಿ, ಹನೀಫ್ ಕಡವಿನಬಾಗಿಲು, ದಾವೂದ್ ಚಾಯ್ ಡೇಸ್, ಶುಕೂರ್ ನೆಕ್ಕಿಲ್, ಶಫೀಕ್ ಅರಫಾ, ಇಸ್ಮಾಯಿಲ್ ತಂಙಳ್, ಶುಕೂರ್ ಮೇದರಬೆಟ್ಟು, ಈಸುಬು ಪೆದಮಲೆ, ಸಿದ್ದಿಕ್ ಮೇದರಬೆಟ್ಟು, ಮೋನು ಪಿಲಿಗೂಡು, ಬಶೀರ್ ಪೆರಿಯಡ್ಕ, ಇಬ್ರಾಹೀಂ ಆಚೀ ಕೆಂಪಿ, ಅಫ್ತಾಬ್ ಬಸ್ತಿಕ್ಕಾರ್, ನವಾಝ್ ಉಬಾರ್, ನವಾಝ್ ಎಲೈಟ್, ಶಾನಿಲ್ ಬಸ್ತಿಕ್ಕಾರ್, ಸಾದಿಕ್ ಅಗ್ನಾಡಿ, ಮಕ್ದೂಮ್ ರಾಝೀ, ಶೌಕತ್ ಬಸ್ತಿಕ್ಕಾರ್, ಇಕ್ಬಾಲ್ ಸಿಪಿಸಿ, ಹೌಷಾ ಕೆಂಪಿ, ಶಿಬ್ಲಿ ಶುಕ್ರಿಯಾ, ಅನಸ್ ದಿಲ್ದಾರ್, ರಾಝೀಕ್, ಅನೀಸ್ ಗಾಂಧಿಪಾರ್ಕ್, ಮುಝಾಫರ್, ಮನ್ಸೂರ್, ಶೌಕತ್ ಬಸ್ತಿಕ್ಕಾರ್, ರವೂಫ್, ಇಬ್ರಾಹಿಂ ಸಿಟಿ, ನಝೀರ್ ಹೊಸಮೊಗ್ರು, ಇಸಾಕ್ ಸಿಟಿ, ಸಾದಿಕ್ ಗಾಂಧಿ ಪಾರ್ಕ್, ವೆಂಕಟೇಶ್ ಕುಟ್ಟಿ, ಕೇಶವ ಲಕ್ಷ್ಮೀ ನಗರ, ಖಾದರ್ ಆದರ್ಶನಗರ, ಸಿಯಾಕ್ ಕೆಂಪಿ, ಶುಕೂರ್ ಕೆಂಪಿ, ಮೊಯಿನ್ ನೆಟ್ಟಿಬೈಲ್, ಸಿಯಾಬ್ ತಂಙಳ್, ಹಸನ್ ಶುಕ್ರಿಯಾ, ಫೌಝರ್ ಯು.ಟಿ., ಮುನೀರ್ ಎನ್ಮಾಡಿ, ರಿಯಾಝ್ ಕರಾಯ ಹಾಜರಿದ್ದರು. ಇರ್ಷಾದ್ ಯುಟಿ. ಕಾರ್ಯಕ್ರಮ ನಿರೂಪಿಸಿದರು. 

ವಾರ್ತಾ ಭಾರತಿ 9 Mar 2026 10:36 pm

ಎಂಸಿಸಿ ಬ್ಯಾಂಕ್ ಬೈಂದೂರು ಶಾಖೆ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಉಚಿತ ವೈದ್ಯಕೀಯ ಆರೋಗ್ಯ ಶಿಬಿರ

ಮಂಗಳೂರು: ಎಂಸಿಸಿ ಬ್ಯಾಂಕ್ - ಬೈಂದೂರು ಶಾಖೆಯು ಪ್ರಾರಂಭವಾದ ಕೇವಲ ಆರು ತಿಂಗಳೊಳಗೆ ರೂ.10 ಕೋಟಿ ವ್ಯವಹಾರ ವಹಿವಾಟು ದಾಟಿದ ಗಮನಾರ್ಹ ಸಾಧನೆಯ ಸ್ಮರಣಾರ್ಥವಾಗಿ, ಮಾರ್ಚ್ 8, 2026 ರಂದು ಬೈಂದೂರು ಶಾಖೆಯ ಆವರಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಉಚಿತ ವೈದ್ಯಕೀಯ ಆರೋಗ್ಯ ಶಿಬಿರದೊಂದಿಗೆ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕ್ ಅಧ್ಯಕ್ಷರಾದಅನಿಲ್ ಲೋಬೊ ತಮ್ಮ ಭಾಷಣದಲ್ಲಿ, ಬೈಂದೂರು ಶಾಖೆಯು ಆರು ತಿಂಗಳೊಳಗೆ ರೂ.10 ಕೋಟಿ ವ್ಯವಹಾರವನ್ನು ಸಾಧಿಸುವುದು ಎಂಸಿಸಿ ಬ್ಯಾಂಕಿನ ಐತಿಹಾಸಿಕ ಮೈಲಿಗಲ್ಲು ಎಂದು ಹೇಳಿದರು. ಬ್ಯಾಂಕ್ ಸಾಮಾನ್ಯವಾಗಿ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಪ್ರಧಾನ ಕಚೇರಿ ಯಲ್ಲಿ ಆಚರಿಸಲಾಗುತ್ತದೆ, ಆದರೆ ಈ ವರ್ಷ ಬೈಂದೂರು ಶಾಖೆ ಕಡಿಮೆ ಅವಧಿಯಲ್ಲಿ ಶಾಖೆಯು ರೂ. 10 ಕೋಟಿ ಮೈಲಿಗಲ್ಲು ತಲುಪಲು ಸಹಕಾರ ನೀಡಿದ ಬೈಂದೂರು ಶಾಖೆಯ ಎಲ್ಲಾ ಗ್ರಾಹಕರಿಗೆ ಅವರು ಧನ್ಯವಾದಗಳನ್ನು ಅರ್ಪಿಸಿದರು. ಈ ಸಾಧನೆಯು ಪ್ರಸ್ತುತ ಆಡಳಿತ ಮಂಡಳಿಯು ಅಧಿಕಾರ ವಹಿಸಿಕೊಂಡಾ ಗಿನಿಂದ ಬ್ಯಾಂಕ್ ರೂ.1500 ಕೋಟಿಗಳ ವಹಿವಾಟು ದಾಟಿದೆ, ಇದು ಆಡಳಿತ ಮಂಡಳಿಯ ಸದಸ್ಯರು, ಸಿಬ್ಬಂದಿ ಮತ್ತು ಗ್ರಾಹಕರ ಬೆಂಬಲ ದಿಂದಾಗಿ ಸಾಧ್ಯವಾಗಿದೆ ಎಂದು ಪುನರುಚ್ಚರಿಸಿದರು. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಲಭ್ಯವಿರುವಂತೆ ಸುಧಾರಿತ ಡಿಜಿಟಲ್ ಬ್ಯಾಂಕಿಂಗ್ ಸೇವೆಗಳು ಕರ್ನಾಟಕದಾದ್ಯಂತ ಬ್ಯಾಂಕಿನ ವಿಸ್ತರಣೆಗೆ ಗ್ರಾಹಕರ ನಿರಂತರ ಬೆಂಬಲವನ್ನು ಕೋರಿದರು.ಸಾರ್ವಜನಿಕರ ಅನುಕೂಲಕ್ಕಾಗಿ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸಿದ್ದಕ್ಕಾಗಿ ಅವರು ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯನ್ನು ಶ್ಲಾಘಿಸಿದರು ಮತ್ತು ತಮ್ಮ ಸೇವೆಗಳನ್ನು ಸಲ್ಲಿಸಿದ ವೈದ್ಯರು ಮತ್ತು ಸಿಬ್ಬಂದಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು. ಅಂತರರಾಷ್ಟ್ರೀಯ ಮಹಿಳಾ ದಿನದ ಸಂದರ್ಭದಲ್ಲಿ, ಅವರು ಹಾಜರಿದ್ದ ಎಲ್ಲಾ ಮಹಿಳೆಯರಿಗೆ ಶುಭಾಶಯಗಳನ್ನು ತಿಳಿಸಿ ಪ್ರತಿಯೊಂದು ಕ್ಷೇತ್ರದಲ್ಲೂ ಅವರ ಬೆಳೆಯುತ್ತಿರುವ ಪಾತ್ರ ಮತ್ತು ನಾಯಕತ್ವವನ್ನು ಕೊಂಡಾಡಿದರು. ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಮತ್ತು ಶಾಖೆಯು ರೂ. 10 ಕೋಟಿ ಮೈಲಿಗಲ್ಲು ಸಾಧಿಸಲು ಸಹಕರಿಸಿದ ಶಾಖಾ ನಿರ್ದೇಶಕರಾದ ಎಲ್ರಾಯ್ ಕೆ. ಕ್ರಾಸ್ಟೊ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದರು. ತಮ್ಮ ಭಾಷಣದಲ್ಲಿ, ವಂ. ಧರ್ಮಗುರು ವಿನ್ಸೆಂಟ್ ಕುವೆಲ್ಲೊ ಬೈಂದೂರು ಶಾಖೆಯು ಅಲ್ಪಾವಧಿಯಲ್ಲಿಯೇ ರೂ. 10 ಕೋಟಿ ವಹಿವಾಟು ಸಾಧಿಸಿದ್ದಕ್ಕಾಗಿ ಸಂತೋಷ ವ್ಯಕ್ತಪಡಿಸಿದರು. ಗ್ರಾಹಕರು ಮತ್ತು ಬೈಂದೂರು ಪ್ರದೇಶದ ಜನರ ನಂಬಿಕೆ ಮತ್ತು ಬೆಂಬಲ ಹಾಗೂ ಬ್ಯಾಂಕಿನ ನಿಯಮಗಳು ಬ್ಯಾಂಕಿನ ಸ್ಥಿರ ಬೆಳವಣಿಗೆ ಮತ್ತು ಪ್ರಗತಿಗೆ ಅಧ್ಯಕ್ಷರು ಮತ್ತು ಆಡಳಿತ ಮಂಡಳಿಯನ್ನು ಅವರು ಶ್ಲಾಘಿಸಿದರು. ಮುಖ್ಯ ಅತಿಥಿಗಳಾಗಿ ಬೈಂದೂರು ಹೋಲಿ ಕ್ರಾಸ್ ಚರ್ಚ್ನ ಧರ್ಮಗುರುಗಳಾದ ವಂ. ವಿನ್ಸೆಂಟ್ ಕುವೆಲ್ಲೊ; ರಂಗಭೂಮಿ ಕಲಾವಿದ ಗಣೇಶ್ ಕಾರಂತ್; ಸಮಾಜ ಸೇವಕ ಫಯಾಜ್ ಅಲಿ; ಮತ್ತು ಬೈಂದೂರು ಯೆಡ್ಥರೆ ಯಲ್ಲಿರುವ ಧರ್ಮಸ್ಥಳ ಸ್ವಸಹಾಯ ಗುಂಪಿನ ಅಧ್ಯಕ್ಷೆ ಶೈಲಾ ಭಾಗವಹಿಸಿದ್ದರು. ಫಾ| ಮುಲ್ಲರ್ ಮೆಡಿಕಲ್ ಕಾಲೇಜು ಅಸ್ಪತೆಯ ಡಾ| ಎಲ್‌ರೊಯ್ ಸಲ್ಡಾನ್ಹಾ, ಶಾಖಾ ನಿರ್ದೇಶಕರಾದ ಎಲ್ರಾಯ್ ಕೆ. ಕ್ರಾಸ್ಟೊ; ಜನರಲ್ ಮ್ಯಾನೇಜರ್ ಸುನಿಲ್ ಮಿನೇಜಸ್; ಮತ್ತು ಬೈಂದೂರ್ ಶಾಖೆಯ ಹಿರಿಯ ವ್ಯವಸ್ಥಾಪಕ ಸಂದೀಪ್ ಕ್ವಾಡ್ರಸ್ ವೇದಿಕೆಯಲ್ಲಿದ್ದರು. ಫಾ| ಮುಲ್ಲರ್ ಮೆಡಿಕಲ್ ಕಾಲೇಜು, ಮಂಗಳೂರು ಏರ್ಪಡಿಸಿದ ಉಚಿತ ವೈದ್ಯಕೀಯ ಆರೋಗ್ಯ ಶಿಬಿರವನ್ನು ವೇದಿಕೆಯ ಮೇಲಿದ್ದ ಗಣ್ಯರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ಆಚರಣೆಯ ಭಾಗವಾಗಿ, ಬೈಂದೂರು ಶಾಖೆಯ 10 ಸ್ಥಾಪಕ ಗ್ರಾಹಕರು, ಅಧ್ಯಕ್ಷರು, ಗೌರವಾನ್ವಿತ ಅತಿಥಿಗಳು, ಶಾಖಾ ವ್ಯವಸ್ಥಾಪಕರು ಮತ್ತು ಇತರ ಗಣ್ಯರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಸಂಭ್ರಮವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ, ಬೈಂದೂರು ಶಾಖೆಯ ಸ್ಥಾಪಕ ಗ್ರಾಹಕರನ್ನು ಅಧ್ಯಕ್ಷರಾದ ಅನಿಲ್ ಲೋಬೊ ಅವರು ಕಡಿಮೆ ಅವಧಿಯಲ್ಲಿ ರೂ. 10 ಕೋಟಿ ವ್ಯವಹಾರದ ಮೈಲಿಗಲ್ಲನ್ನು ಸಾಧಿಸಿದ ಶಾಖೆಯ ಎಲ್ಲಾ ಗ್ರಾಹಕರ ಪರವಾಗಿ ಸನ್ಮಾನಿಸಿದರು. ಎಂಸಿಸಿ ಬ್ಯಾಂಕ್ ಆಡಳಿತ ಮಂಡಳಿ ಮತ್ತು ಗ್ರಾಹಕರು ಇಬ್ಬರಿಗೂ ಸೇರಿದ್ದು, ರಾಷ್ಟ್ರೀಕೃತ ಬ್ಯಾಂಕುಗಳಂತೆಯೇ ಆಧುನಿಕ ಬ್ಯಾಂಕಿಂಗ್ ಸೌಲಭ್ಯಗಳನ್ನು ಒದಗಿಸುತ್ತದೆ ಮತ್ತು ಕರ್ನಾಟಕದಾದ್ಯಂತ 21 ಶಾಖೆಗಳು ಕಾರ್ಯನಿರ್ವಹಿ ಸುತ್ತಿವೆ ಎಂದು ಅವರು ಹೇಳಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ, ಅವರು ಎಲ್ಲಾ ಮಹಿಳೆಯರಿಗೆ ಶುಭಾಶಯಗಳನ್ನು ತಿಳಿಸಿದರು ಮತ್ತು ಸಮಾಜ ಮತ್ತು ಸ್ವಸಹಾಯ ಗುಂಪುಗಳಲ್ಲಿ ಮಹಿಳೆಯರ ಪ್ರಮುಖ ಪಾತ್ರವನ್ನು ವಿವರಿಸಿದರು. ಸಾರ್ವಜನಿಕರಿಗಾಗಿ ಆಯೋಜಿಸಲಾದ ಉಚಿತ ವೈದ್ಯಕೀಯ ಶಿಬಿರವನ್ನು ಅವರು ಶ್ಲಾಘಿಸಿ ಮುಂಬರುವ ಆರು ತಿಂಗಳುಗಳಲ್ಲಿ ಬೈಂದೂರು ಶಾಖೆಯು ಮತ್ತೊಂದು ರೂ.10 ಕೋಟಿ ಮೈಲಿಗಲ್ಲು ಸಾಧಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದರು. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ, ಬೈಂದೂರು ಶಾಖೆಯ ಮಹಿಳಾ ಗ್ರಾಹಕರಿಗೆ ಬ್ಯಾಂಕಿನೊಂದಿಗಿನ ಅವರ ಅಮೂಲ್ಯ ಸಂಬAಧ ಮತ್ತು ಶಾಖೆಯ ಬೆಳವಣಿಗೆಗೆ ನೀಡಿದ ಕೊಡುಗೆಯನ್ನು ಗುರುತಿಸಿ ಶಾಲು, ಉಡುಗೊರೆ ಮತ್ತು ಗುಲಾಬಿ ಹೊದಿಕೆಯನ್ನು ನೀಡಿ ಗೌರವಿಸಲಾಯಿತು. ಹಾಜರಿದ್ದ ಮಹಿಳಾ ಸಿಬ್ಬಂದಿಯನ್ನು ಈ ಸಂದರ್ಭದಲ್ಲಿ ಸನ್ಮಾಸಿಸಲಾಯಿತು. ಬೈಂದೂರು ಶಾಖೆಯ ಹಿರಿಯ ಪ್ರಬಂಧಕರು ಮತ್ತು ಸಿಬ್ಬಂದಿಗಳನ್ನು ಹಾಗೂ ಶಾಖಾ ನಿರ್ದೇಶಕರಾದ ಎಲ್‌ರೊಯ್ ಕೆ ಕ್ರಾಸ್ಟೊರವರನ್ನೂ ಸನ್ಮಾನಿಸಲಾಯಿತು. ಶಾಖಾ ನಿರ್ದೇಶಕ ಎಲ್‌ರೊಯ್ ಕೆ. ಕ್ರಾಸ್ಟೊ ಸ್ವಾಗತಿಸಿ, ಬ್ರಹ್ಮಾವರ ಶಾಖಾ ವ್ಯವಸ್ಥಾಪಕ ಒವಿನ್ ರೆಬೆಲ್ಲೊ ನಿರೂಪಿಸಿ ವಂದಿಸಿದರು. ಬೈಂದೂರು ಶಾಖೆಯು ರೂ. 10 ಕೋಟಿ ವ್ಯವಹಾರದ ಮೈಲಿಗಲ್ಲು ಸಾಧಿಸಿದ ಸಂದರ್ಭದಲ್ಲಿ ಗ್ರಾಹಕರು ಮತ್ತು ಸಾರ್ವಜನಿಕರಿಗಾಗಿ ಉಚಿತ ವೈದ್ಯಕೀಯ ಆರೋಗ್ಯ ಶಿಬಿರವನ್ನು ಫಾ| ಮುಲ್ಲರ್ ಮೆಡಿಕಲ್ ಕಾಲೇಜ್ ಅಸ್ಪತ್ರೆಯ ವತಿಯಿಂದ ಆಯೋಜಿಸಲಾಗಿತ್ತು. ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವೈದ್ಯರಾದ ಡಾ| ಎಲ್‌ರೊಯ್ ಸಲ್ಡಾನ್ಹಾರವರು ವೈದ್ಯಕೀಯ ಆರೋಗ್ಯ ಶಿಬಿರದ ಪರಿಚಯವನ್ನು ಮಾಡಿ, ಶಿಬಿರದ ಮೂಲಕ ಸಾರ್ವಜನಿಕರಿಗೆ ನೀಡಲಾಗುವ ಸೇವೆಗಳು ಮತ್ತು ಪ್ರಯೋಜನಗಳನ್ನು ವಿವರಿಸಿದರು.

ವಾರ್ತಾ ಭಾರತಿ 9 Mar 2026 10:34 pm

ಮಹಿಳೆಯರ ಆತ್ಮವಿಶ್ವಾಸ, ಧೈರ್ಯ ಕುಟುಂಬ ಹಾಗೂ ಸಮಾಜದ ಅಭಿವೃದ್ಧಿಗೆ ಪೂರಕ -ಮಮತಾ ಗಟ್ಟಿ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಮಹಿಳಾ ಸಾಧಕಿಯರಿಗೆ ಗೌರವ

ವಾರ್ತಾ ಭಾರತಿ 9 Mar 2026 10:29 pm

ಯೆನೆಪೋಯ ವಿವಿಯಲ್ಲಿ ಅಂತರ್‌ರಾಷ್ಟ್ರೀಯ ಮಹಿಳಾ ದಿನಾಚರಣೆ

ಮಂಗಳೂರು,ಮಾ.9: ದೇರಳಕಟ್ಟೆಯ ಯೆನೆಪೊಯ ( ಪರಿಗಣಿತ) ವಿಶ್ವವಿದ್ಯಾನಿಲಯದಲ್ಲಿ ಜೆಂಡರ್ ಸೆನ್ಸಿಟೈಸೇಶನ್ ಸೆಲ್ (ಲಿಂಗ ಸಂವೇದನಾ ಘಟಕ) ವತಿಯಿಂದ ಅಂತರ್‌ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸೋಮವಾರ ಯೆಂಡ್ಯೂರನ್ಸ್ ಸಭಾಂಗಣದಲ್ಲಿ ಆಚರಿಸಲಾಯಿತು. ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ. ಕೆ. ಎಸ್. ಗಂಗಾಧರ ಸೋಮಯಾಜಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಮಹಿಳೆಯರ ಸಬಲೀಕರಣ, ಸಮಾಜದಲ್ಲಿ ಮಹಿಳೆಯರ ಪಾತ್ರ ಹಾಗೂ ಪರಸ್ಪರ ಸಹಕಾರದ ಮಹತ್ವದ ಕುರಿತು ಮಾತನಾಡಿದರು. ಗೌರವ ಅತಿಥಿಯಾಗಿ ಉಪಸ್ಥಿತರಿದ್ದ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯೆ ಕಾರ್ಯದರ್ಶಿ ಜೈಬುನ್ನಿಸಾ ಅವರು ಮಹಿಳೆಯರ ಹಕ್ಕುಗಳು ಮತ್ತು ಕಾನೂನು ರಕ್ಷಣೆ ಕುರಿತು ವಿವರಿಸಿದರು. ಯೆನೆಪೋಯ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರು ಹಾಗೂ ಜೆಂಡರ್ ಸೆನ್ಸಿಟೈಸೇಶನ್ ಸೆಲ್ (ಲಿಂಗ ಸಂವೇದನಾ ಘಟಕ) ಸಂಯೋಜಕಿಯಾದ ಡಾ. ಲೀನಾ ಕೆ. ಸಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಘಟಕದ ಕಾರ್ಯದರ್ಶಿಯಾದ ಡಾ. ಗ್ಲಾಡಿಸ್ ಕೊಲಾಸೋ ಕಾರ್ಯಕ್ರಮದಲ್ಲಿಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಹಿಮಾ, ಸ್ವಾಗತಿಸಿ, ಫಾತಿಮಾ ವಂದಿಸಿದರು. ಈ ಸಂದರ್ಭದಲ್ಲಿ ವಿಶ್ವವಿದ್ಯಾನಿಲಯದ ಸಿಬ್ಬಂದಿ ಮಮತಾ ಜೆ ಶೆಟ್ಟಿ ಉತ್ತಮ ಉದ್ಯೋಗಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸುಮಾರು 300 ಮಂದಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. 

ವಾರ್ತಾ ಭಾರತಿ 9 Mar 2026 10:26 pm

ಇರಾನ್‍ನ ಮತ್ತೊಂದು ಯುದ್ದನೌಕೆಯನ್ನು ಮುಳುಗಿಸಿದ ಅಮೆರಿಕ: ವರದಿ

ವಾಷಿಂಗ್ಟನ್, ಮಾ.9: ಇರಾನ್‍ನ ಇಸ್ಲಾಮಿಕ್ ರೆವೊಲ್ಯುಷನರಿ ಗಾರ್ಡ್ ಕಾಪ್ರ್ಸ್ ನೇವಿ(ಐಆರ್‍ಜಿಸಿಎನ್) ನಿರ್ವಹಿಸುವ ಶಾಹಿದ್ ಸೊಲೈಮಾನಿ ವರ್ಗದ ಹಡಗು ನಿರೋಧಕ ಕ್ಷಿಪಣಿಗಳಿಂದ ಸಜ್ಜುಗೊಂಡ ಯುದ್ದನೌಕೆ ಅಮೆರಿಕದ ದಾಳಿಯಿಂದ ಮುಳುಗುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ಪರ್ಶಿಯನ್ ಕೊಲ್ಲಿಯ ಬಂದರ್ ಲೆಂಗೆಹ್ ಕರಾವಳಿಯಲ್ಲಿ ಅಮೆರಿಕದ ದಾಳಿಯ ಬಳಿಕ ಇರಾನ್ ನೌಕಾಪಡೆಯ ಹಡಗು ಸೋಮವಾರ ಸ್ಫೋಟಗೊಂಡಿದೆ ಎಂದು ಹೇಳಲಾದ ವೀಡಿಯೊ ವೈರಲ್ ಆಗಿದೆ.

ವಾರ್ತಾ ಭಾರತಿ 9 Mar 2026 10:22 pm

ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಮುಹಮ್ಮದ್ ಅಶ್ಮಿಲ್ ಶಾಹ್ ಹುದವಿಗೆ ಸನ್ಮಾನ

ಮಂಗಳೂರು: ಕೇಂದ್ರ ಲೋಕ ಸೇವಾ ಆಯೋಗದಲ್ಲಿ 382ನೇ ರ್ಯಾಂಕ್‌ನಲ್ಲಿ ತೇರ್ಗಡೆಯಾದ ಮುಹಮ್ಮದ್ ಅಶ್ಮಿಲ್ ಶಾಹ್ ಹುದವಿಗೆ  ಸಂಸ್ಥೆಯ ವತಿಯಿಂದ ಕುನಿಯ ಕ್ಯಾಂಪಸ್‌ನಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಸಮಾರಂಭವನ್ನು ಉದ್ಘಾಟಿಸಿ ಶಾಲು ಹೊದಿಸಿ ಸ್ಮರಣಿಕೆ ನೀಡಿ ಅಶ್ಮಿಲ್ ಶಾಹ್ ಹುದವಿ ಅವರನ್ನು ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಾಹಿದ್ ತೆಕ್ಕಿಲ್ ಗೌರವಿಸಿ ಸನ್ಮಾನಿಸಿದರು. ಈ ಸಂದರ್ಭ  ಮಾತನಾಡಿದ ಶಾಹಿದ್ ತೆಕ್ಕಿಲ್ ಅವರು ಅಶ್ಮಿಲ್ ಶಾಹ್ ಹುದವಿ ಈ ಮಟ್ಟಕ್ಕೆ ಬೆಳೆಯಲು ಚೆಮ್ಮಾಡ್ ದಾರುಲ್ ಹುದಾ ಇಸ್ಲಾಮಿಕ್ ಅಕಾಡೆಮಿ ಮತ್ತು ಯುಪಿ ಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಕುನಿಯ ಸಮೂಹ ಶಿಕ್ಷಣ ಸಂಸ್ಥೆ ಮತ್ತು ಐಎಎಸ್ ಅಕಾಡೆಮಿ ಅಪಾರ ಕೊಡುಗೆ ನೀಡಿದೆ ಕುನಿಯ ಇಬ್ರಾಹೀಂ ಅಹ್ಮದ್ ಅಲಿ ಹಾಜಿ ಅವರ ದೂರದೃಷ್ಟಿ ಕೇವಲ ಎರಡು ವರ್ಷದಲ್ಲಿ ಫಲ ನೀಡಿದೆ ಮುಂದೆ ಈ ಸಂಸ್ಥೆಯ ಮುಖಾಂತರ ಹಲವರು ಉನ್ನತ ಹುದ್ದೆಗೆ ಏರಲಿದ್ದು ಶಾಹ್ ಹುದವಿ ಯುವಕರಿಗೆ ಮತ್ತು ಸಮಾಜಕ್ಕೆ ಮಾದರಿ ಯಾಗಿದ್ದಾರೆ ಎಂದರು. ಸಮಾರಂಭದಲ್ಲಿ ಕಣ್ಣೂರು ವಿಶ್ವ ವಿದ್ಯಾನಿಲಯದ ವಿಶ್ರಾಂತ ಉಪ ಕುಲಪತಿ ಕುನಿಯ ಸಂಸ್ಥೆಯ ಸಲಹೆಗಾರ ಡಾ. ಖಾದರ್ ಮಾಂಘಾಡ್ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಸಿ ಎಚ್ ಕುಂಞಿಂಬು, ಎ ಕೆ ಎಂ ಅಶ್ರಫ್ , ಬಿಹಾರದ ಮುಜಾಪುರ ನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುಹಬುಲ್ಲಾ ಅನ್ಸಾರಿ,ಕಾಸರಗೋಡು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಶಿವಂ,ಕಾಸರಗೋಡು ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಾಬು ಅಬ್ರಹಾಂ,ಕಾಸರಗೋಡ್ ಬ್ಲಾಕ್ ಪಂಚಾಯತ್ ಅಧ್ಯಕ್ಷ ಅಬ್ದುಲ್ಲ ಕುಂಞ್ಞೆ, ಪೆರಿಯ ಪಂಚಾಯತ್ ಅಧ್ಯಕ್ಷೆ ಡಾ. ಸಬಿತ ,ಪಳ್ಳಿಕ್ಕೆರೆ ಪಂಚಾಯತ್ ಅಧ್ಯಕ್ಷೆ ಶೋಭನ ,ಡಾ. ಸಂತೋಷ್ ,ಸುದೀಪ್ ಮೊದಲಾದವರು ಉಪಸ್ಥಿತರಿದ್ದರು. ಶಿಬಿಲಿ ಶಹಾದತಿ ಅವರು ಕುನಿಯ ಐ ಎ ಎಸ್ ಅಕಾಡೆಮಿ ಮತ್ತು ಶಿಕ್ಷಣ ಸಂಸ್ಥೆಯ ಬಗ್ಗೆ ವಿವರಿಸಿದರು. ಡಾ. ಲಕ್ಷ್ಮೀ ಭಾಯಿ ಸ್ವಾಗತಿಸಿ ಅಜ್ಮಲ್ ವಂದಿಸಿದರು. ನಂತರ ಎರಡು ಸಾವಿರಷ್ಟು ವಿದ್ಯಾರ್ಥಿಗಳು ಸಾರ್ವಜನಿಕರು ಸಾಧಕರ ಜೊತೆ ಸಾಮೂಹಿಕ ಇಫ್ತಾರ್ ಕೂಟದಲ್ಲಿ ಭಾಗವಹಿಸಿದರು. 

ವಾರ್ತಾ ಭಾರತಿ 9 Mar 2026 10:22 pm

ಸೌದಿ ಅರೇಬಿಯಾ | ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟವರು ಭಾರತೀಯರಲ್ಲ: ರಾಯಭಾರಿ ಕಚೇರಿ ಸ್ಪಷ್ಟನೆ

ರಿಯಾದ್, ಮಾ.9: ಸೌದಿ ಅರೆಬಿಯಾದ ಸೆಂಟ್ರಲ್ ಅಲ್-ಖರ್ಜ್ ಗವರ್ನರೇಟ್‍ನಲ್ಲಿರುವ ವಸತಿ ಕಟ್ಟಡಕ್ಕೆ ರವಿವಾರ ನಡೆದ ದಾಳಿಯಲ್ಲಿ ಯಾವುದೇ ಭಾರತೀಯ ಮೃತಪಟ್ಟಿಲ್ಲ ಎಂದು ರಿಯಾದ್‍ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಸೋಮವಾರ ಹೇಳಿದೆ. ರವಿವಾರ ಸಂಜೆ ನಡೆದ ಕ್ಷಿಪಣಿ ದಾಳಿಯಲ್ಲಿ ಓರ್ವ ಭಾರತೀಯ ಮೃತಪಟ್ಟಿರುವುದಾಗಿ ಈ ಹಿಂದೆ ವರದಿಯಾಗಿತ್ತು. ವರದಿಯ ಬಗ್ಗೆ ಸ್ಪಷ್ಟನೆ ನೀಡಿರುವ ಭಾರತೀಯ ರಾಯಭಾರಿ ಕಚೇರಿ ` ದಾಳಿಯಲ್ಲಿ ಮೃತಪಟ್ಟ ಇಬ್ಬರೂ ಬಾಂಗ್ಲಾದೇಶದ ಪ್ರಜೆಗಳು. ದಾಳಿಯಲ್ಲಿ ಯಾವುದೇ ಭಾರತೀಯ ಮೃತಪಟ್ಟಿಲ್ಲ ಎಂಬ ವರದಿಯಿಂದ ನಿರಾಳವಾಗಿದೆ. ಓರ್ವ ಭಾರತೀಯ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾರತೀಯ ರಾಯಭಾರಿ ಕಚೇರಿ ಸೌದಿ ಅರೆಬಿಯಾದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ ಮತ್ತು ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದೆ. ಪಶ್ಚಿಮ ಏಶ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಸೌದಿ ಅರೆಬಿಯಾದಲ್ಲಿರುವ ಭಾರತೀಯ ಪ್ರಜೆಗಳಿಗೆ ಜಾಗರೂಕರಾಗಿರಲು ಮತ್ತು ಸ್ಥಳೀಯ ಅಧಿಕಾರಿಗಳು ನೀಡಿದ ಸುರಕ್ಷತಾ ಮಾರ್ಗಸೂಚಿಗಳನ್ನು ಅನುಸರಿಸಲು ಸಲಹೆ ನೀಡಲಾಗಿದೆ' ಎಂದು `ಎಕ್ಸ್'ನಲ್ಲಿ ಪೋಸ್ಟ್ ಮಾಡಿದೆ.

ವಾರ್ತಾ ಭಾರತಿ 9 Mar 2026 10:18 pm

ಮಧ್ಯಪ್ರಾಚ್ಯ ಸಂಘರ್ಷ ಜಾಗತಿಕ ಹಣದುಬ್ಬರವನ್ನು ಹೆಚ್ಚಿಸಬಹುದು: ಐಎಂಎಫ್ ಎಚ್ಚರಿಕೆ

ವಾಷಿಂಗ್ಟನ್, ಮಾ.9: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷವು ತೈಲ ಬೆಲೆಗಳನ್ನು ದೀರ್ಘಕಾಲದವರೆಗೆ ಹೆಚ್ಚಿಸಿದರೆ ಜಾಗತಿಕ ಹಣದುಬ್ಬರದ ಹೊಸ ಅಪಾಯಕ್ಕೆ ಕಾರಣವಾಗಬಹುದು ಎಂದು ಅಂತರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ಆಡಳಿತ ನಿರ್ದೇಶಕಿ ಕ್ರಿಸ್ತಲಿನಾ ಜಾರ್ಜಿವಾ ಸೋಮವಾರ ಎಚ್ಚರಿಸಿದ್ದಾರೆ. ಜಪಾನ್‍ನ ಹಣಕಾಸು ಸಚಿವಾಲಯವು ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ಮಾತನಾಡಿದ ಜಾರ್ಜಿವಾ, ಈ ಪ್ರದೇಶದಲ್ಲಿನ ಭೌಗೋಳಿಕ, ರಾಜಕೀಯ ಉದ್ವಿಗ್ನತೆಗಳು ಈಗಾಗಲೇ ಜಾಗತಿಕ ಆರ್ಥಿಕತೆಯ ಸ್ಥಿತಿಸ್ಥಾಪಕತ್ವವನ್ನು ಪರೀಕ್ಷಿಸುತ್ತಿವೆ. ಮಧ್ಯಪ್ರಾಚ್ಯದಲ್ಲಿನ ಹೊಸ ಸಂಘರ್ಷವು ಗಾಯದ ಮೇಲೆ ಉಪ್ಪು ಸವರಿದಂತಾಗಿದೆ. ಬಿಕ್ಕಟ್ಟು ತೈಲ ಮಾರುಕಟ್ಟೆಯಲ್ಲಿ ನಿರಂತರ ಅಡಚಣೆಗಳಿಗೆ ಕಾರಣವಾದರೆ ಇಂಧನ ಬೆಲೆಗಳು ಹಣದುಬ್ಬರದ ಮೇಲೆ ಗಮನಾರ್ಹ ಪರಿಣಾಮ ಬೀರಬಹುದು ಎಂದವರು ಹೇಳಿರುವುದಾಗಿ ರಾಯ್ಟರ್ಸ್ ವರದಿ ಮಾಡಿದೆ. ವರ್ಷದ ಬಹುಪಾಲು ಅವಧಿಯಲ್ಲಿ ತೈಲ ಬೆಲೆಯಲ್ಲಿ 10% ಹೆಚ್ಚಳವು ಜಾಗತಿಕ ಹಣದುಬ್ಬರವನ್ನು ಸುಮಾರು 40 ಮೂಲಬಿಂದುವಿನಷ್ಟು(ಬೇಸಿಸ್ ಪಾಯಿಂಟ್) ಹೆಚ್ಚಿಸಬಹುದು. ಈ ಹೊಸ ಪರಿಸರದಲ್ಲಿ ನೀತಿ ನಿರೂಪಕರಿಗೆ ನನ್ನ ಸಲಹೆ ಏನೆಂದರೆ ಊಹಿಸಲೂ ಸಾಧ್ಯವಿಲ್ಲದ ವಿಷಯಗಳ ಬಗ್ಗೆ ಯೋಚಿಸಿ ಮತ್ತು ಅದಕ್ಕೆ ಸಿದ್ದರಾಗಿ' ಎಂದವರು ಹೇಳಿದ್ದಾರೆ. ಇರಾನ್, ಅಮೆರಿಕ ಮತ್ತು ಇಸ್ರೇಲನ್ನು ಒಳಗೊಂಡ ಉದ್ವಿಗ್ನತೆಯು ಉಲ್ಬಣಗೊಂಡ ನಂತರ ಜಾಗತಿಕ ಇಂಧನ ಮಾರುಕಟ್ಟೆಯು ಅನಿಶ್ಚಿತತೆಯನ್ನು ಎದುರಿಸುವ ಸಂದರ್ಭ ಈ ಐಎಂಎಫ್ ಈ ಎಚ್ಚರಿಕೆ ನೀಡಿದೆ. ಭಾರತದ ಹಣಕಾಸು ಸಚಿವಾಲಯದ ವರದಿಯೂ ಮಧ್ಯಪ್ರಾಚ್ಯದಲ್ಲಿನ ದೀರ್ಘಕಾಲದ ಬಿಕ್ಕಟ್ಟು ವಿನಿಮಯ ದರದ ಮೇಲೆ ಒತ್ತಡಕ್ಕೆ ಮತ್ತು ಹಣದುಬ್ಬರ ಸೇರಿದಂತೆ ವ್ಯಾಪಕ ಆರ್ಥಿಕ ಪರಿಣಾಮಗಳನ್ನು ಉಂಟು ಮಾಡಬಹುದು. ಸಂಘರ್ಷವು ಈಗಾಗಲೇ ಹಾರ್ಮುಜ್ ಜಲಸಂಧಿಯ(ಇದು ಜಾಗತಿಕ ತೈಲ ಹರಿವಿನ ಸುಮಾರು 20%ವನ್ನು ನಿರ್ವಹಿಸುವ ವಿಶ್ವದ ಅತ್ಯಂತ ನಿರ್ಣಾಯಕ ಜಲಸಂಧಿಯಾಗಿದೆ) ಮೂಲಕ ಸಾಗಾಟವನ್ನು ಅಡ್ಡಿಪಡಿಸಿದೆ ಎಂದು ಎಚ್ಚರಿಸಿದೆ. ಇಸ್ರೇಲ್‍ನಿಂದ `ಬಿಳಿರಂಜಕ' ಗುಂಡು ಬಳಕೆ: ಆರೋಪ ದಕ್ಷಿಣ ಲೆಬನಾನ್‍ನ ಪಟ್ಟಣದ ಮೇಲೆ ಇಸ್ರೇಲ್ `ಬಿಳಿ ರಂಜಕ'ವನ್ನು ಒಳಗೊಂಡ ಮದ್ದುಗುಂಡುಗಳನ್ನು ಅಕ್ರಮವಾಗಿ ಬಳಸಿದೆ ಎಂದು ಮಾನವ ಹಕ್ಕುಗಳ ಸಂಸ್ಥೆಯು ಆರೋಪಿಸಿದೆ. ದಕ್ಷಿಣ ಲೆಬನಾನ್‍ನ ನಗರದ ಮೇಲೆ `ಬಿಳಿ ರಂಜಕ' ಹೊಂದಿದ ಶೆಲ್‍ಗಳನ್ನು ಇಸ್ರೇಲಿ ಮಿಲಿಟರಿ ಕಾನೂನುಬಾಹಿರವಾಗಿ ಪ್ರಯೋಗಿಸಿದೆ ಎಂದು ಮಾನವ ಹಕ್ಕುಗಳ ಗುಂಪು `ಹ್ಯೂಮನ್ ರೈಟ್ಸ್ ವಾಚ್' ಸೋಮವಾರ ಹೇಳಿದೆ.

ವಾರ್ತಾ ಭಾರತಿ 9 Mar 2026 10:14 pm

ಅಕ್ರಮ ದಾಸ್ತಾನಿಗೆ ತಡೆ; LPG ಸಿಲಿಂಡರ್ ಬುಕಿಂಗ್ ಅವಧಿ 25 ದಿನಗಳಿಗೆ ವಿಸ್ತರಿಸಿದ ಕೇಂದ್ರ

ಹೊಸದಿಲ್ಲಿ,ಮಾ.9: ಅಕ್ರಮ ದಾಸ್ತಾನು ಮತ್ತು ಕಾಳಸಂತೆಯನ್ನು ತಡೆಯಲು LPG ಸಿಲಿಂಡರ್ ಗಳ ಬುಕಿಂಗ್ ಅವಧಿಯನ್ನು 21 ದಿನಗಳಿಂದ 25 ದಿನಗಳಿಗೆ ಹೆಚ್ಚಿಸಲಾಗಿದೆ ಎಂದು ಸರಕಾರಿ ಮೂಲಗಳು ಸೋಮವಾರ ತಿಳಿಸಿವೆ. ಈ ಹಿಂದೆ 55 ದಿನಗಳಿಗೊಮ್ಮೆ LPG ಸಿಲಿಂಡರ್ ಗಳನ್ನು ಬುಕ್ ಮಾಡಿದವರೂ ಈಗ 15 ದಿನಗಳಲ್ಲಿ ಸಿಲಿಂಡರ್ ಗಳನ್ನು ಬುಕ್ ಮಾಡಲು ಆರಂಭಿಸಿರುವ ನಿದರ್ಶನಗಳು ಬೆಳಕಿಗೆ ಬಂದಿವೆ ಎಂದು ಅವು ಹೇಳಿವೆ. ಗೃಹಬಳಕೆ ಗ್ರಾಹಕರಿಗೆ ಯಾವಾಗಲೂ ಆದ್ಯತೆ ನೀಡಲಾಗುತ್ತದೆ ಎಂದು ದೃಢಪಡಿಸಿದ ಮೂಲಗಳು,ಭಾರತವು ಇನ್ನಷ್ಟು LPG ಪೂರೈಕೆದಾರರನ್ನು ಅನ್ವೇಷಿಸುತ್ತಿದ್ದು, ಅಲ್ಜೀರಿಯಾ, ಆಸ್ಟ್ರೇಲಿಯಾ, ಕೆನಡಾ ಮತ್ತು ನಾರ್ವೆಯಂತಹ ದೇಶಗಳು LPG ಮಾರಾಟಕ್ಕಾಗಿ ಭಾರತವನ್ನು ಸಂಪರ್ಕಿಸಿವೆ ಎಂದು ತಿಳಿಸಿದವು. ಭಾರತದ ಬಳಿ ಸಾಕಷ್ಟು ದಾಸ್ತಾನು ಇರುವುದರಿಂದ ಕಚ್ಚಾ ತೈಲ ಬೆಲೆಗಳು ಪ್ರತಿ ಬ್ಯಾರೆಲ್ ಗೆ 130 ಡಾಲರ್ ಗಳನ್ನು ದಾಟುವವರೆಗೆ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸಿಲ್ ಬೆಲೆಗಳು ಏರುವ ಸಾಧ್ಯತೆಯಿಲ್ಲ ಎಂದು ತಿಳಿಸಿದ ಸರಕಾರಿ ಮೂಲಗಳು,ಕಚ್ಚಾತೈಲ ಬೆಲೆಗಳು ಪ್ರತಿ ಡಾಲರ್ ಗೆ 100ರ ಆಸುಪಾಸಿನಲ್ಲಿರಲಿವೆ ಎಂದು ನಾವು ನಿರೀಕ್ಷಿಸಿದ್ದೇವೆ. ದೇಶದ ಯಾವುದೇ ಪೆಟ್ರೋಲ್ ಪಂಪ್ ನಲ್ಲಿ ಇಂಧನ ಕೊರತೆಯಿಲ್ಲ ಎಂದು ಹೇಳಿದವು. ಹಾರ್ಮುಝ್ ಜಲಸಂಧಿಯ ಬದಲು ಇತರ ಸಮುದ್ರಮಾರ್ಗಗಳ ಮೂಲಕ ಕಚ್ಚಾ ತೈಲ ಖರೀದಿಯನ್ನು ಹೆಚ್ಚಿಸಲಾಗುತ್ತಿದೆ ಎಂದ ಮೂಲಗಳು, ಭಾರತದಲ್ಲಿ ವಿಮಾನ ಇಂಧನ ಸಾಕಷ್ಟು ದಾಸ್ತಾನಿದೆ. ಭಾರತವು ಎಟಿಎಫ್ನ ಉತ್ಪಾದಕ ಮತ್ತು ರಫ್ತುದಾರನಾಗಿದೆ, ಹೀಗಾಗಿ ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ತಿಳಿಸಿದವು. ಇತರ ದೇಶಗಳಿಗೆ ಹೋಲಿಸಿದರೆ ಭಾರತವು ಅನುಕೂಲಕರ ಸ್ಥಿತಿಯಲ್ಲಿದೆ ಎಂದು ಅವು ಒತ್ತಿ ಹೇಳಿದವು.

ವಾರ್ತಾ ಭಾರತಿ 9 Mar 2026 9:46 pm

Gautam Gambhir: ಟೀಂ ಇಂಡಿಯಾ ಯಶಸ್ಸಿನ ರೂವಾರಿಗಳ ಬಗ್ಗೆ ಗೌತಮ್‌ ಗಂಭೀರ್‌ ಮಹತ್ವದ ಹೇಳಿಕೆ: ಮೆಚ್ಚುಗೆಗಳ ಸುರಿಮಳೆ

Gautam Gambhir: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧ 96 ರನ್‌ಗಳ ಅಂತರದಿಂದ ಜಯ ಸಾಧಿಸುವ ಮೂಲಕ ಭಾರತ ಮೂರನೇ ಬಾರಿಗೆ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ಈ ಐತಿಹಾಸಿಕ ಗೆಲುವಿನ ನಂತರ ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು ಮಹತ್ವದ ಹೇಳಿಕೆ ನೀಡಿ ಗಮನ ಸೆಳದಿದ್ದಾರೆ. ಇದು ಇದೀಗ ಎಲ್ಲೆಡೆ ವೈರಲ್‌ ಆಗುತ್ತಿದೆ.

ಒನ್ ಇ೦ಡಿಯ 9 Mar 2026 9:45 pm

ಕಾಂತಾವರ ಕನ್ನಡ ಸಂಘದ ವಾರ್ಷಿಕ ಪ್ರಶಸ್ತಿ ಘೋಷಣೆ

ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದಲ್ಲಿ ಗಮಕಿ ಸತೀಶ್ ಕುಮಾರ್ ಕೆಮ್ಮಣ್ಣು ಅವರು ಸ್ಥಾಪಿಸಿರುವ ದತ್ತಿನಿಧಿಯ ‘ಗಮಕಕಲಾ ಪ್ರವಚನ’ ಪ್ರಶಸ್ತಿಗೆ ಶ್ರೀ ಮುಳಿಯ ಶಂಕರ ಭಟ್ಟ ಅವರು, ಗಮಕಿ ಯಾಮಿನಿ ಭಟ್ ಉಡುಪಿ ಅವರ ದತ್ತಿನಿಧಿಯ ‘ಗಮಕಕಲಾ ವಾಚನ’ ಪ್ರಶಸ್ತಿಗೆ ಶ್ರೀ ಪದ್ಯಾಣ ಗಣಪತಿ ಭಟ್ ಅವರು, ಕಾರ್ಕಳದ ಶಿಲ್ಪಿ ದಿ . ಕೆ.ಶಾಮರಾಯ ಆಚಾರ್ಯ ಅವರ ದತ್ತಿನಿಧಿಯ ಶಿಲ್ಪಕಲಾ ಪ್ರಶಸ್ತಿಗೆ ಶ್ರೀ ಪಿ. ದಾಮೋದರ ಆಚಾರ್ಯ ಕಾರ್ಕಳ ಅವರು ಆಯ್ಕೆಯಾಗಿದ್ದಾರೆ. ಕನ್ನಡ ಸಂಘದ ಸುವರ್ಣ ಸಂಭ್ರಮದ ಸಂದರ್ಭದಲ್ಲಿ ಸಾಹಿತ್ಯ ಕ್ಷೇತ್ರದ ಜೀವಮಾನದ ಸಾಧನೆಗಾಗಿ ಕೊಡಮಾ ಡುತ್ತಿರುವ ವಾರ್ಷಿಕ ಗೌರವ ಪ್ರಶಸ್ತಿಗೆ ಶ್ರೀಮತಿ ಶಕುಂತಳಾ ಭಟ್ ಹಳೆಯಂಗಡಿ ಅವರನ್ನು ಆಯ್ಕೆ ಮಾಡಲಾಗಿದೆ. ಇದೇ ಮಾ. 15ರಂದು ಕಾಂತಾವರದ ‘ಕನ್ನಡ ಭವನ’ದಲ್ಲಿ ಈ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಲಿದ್ದು, ಜೊತೆಗೆ ಪ್ರೊ! ಡಿ.ಎ. ಶಂಕರ್, ಮೈಸೂರು ಅವರಿಗೆ ೨೦೨೫ರ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿ ನೀಡಲಾಗುವುದು. ಈ ಮೇಲಿನ ನಾಲ್ಕು ದತ್ತಿನಿಧಿಯ ಪ್ರಶಸ್ತಿಗಳು ರೂಪಾÊ ಹತ್ತು ಸಾವಿರದ ನಗದು, ತಾಮ್ರಪತ್ರ ಮತ್ತು ಸನ್ಮಾನ ವನ್ನು ಒಳಗೊಂಡಿದೆ. ವಾರ್ಷಿಕ ಗೌರವ ಪ್ರಶಸ್ತಿಯು ಐದು ಸಾವಿರ ನಗದು, ತಾಮ್ರಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದೆ. ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸುವ ಈ ಸಮಾರಂಭದ ಉದ್ಘಾಟನೆಯನ್ನು ಹಿರಿಯ ಕವಿ ಬೆಂಗಳೂರಿನ ಪ್ರೊ.ಟಿ.ಯಲ್ಲಪ್ಪ ಅವರು ಮಾಡುವರು. ಇದೇ ಸಂದರ್ಭದಲ್ಲಿ ‘ನಾಡಿಗೆ ನಮಸ್ಕಾರ’ ಗ್ರಂಥಮಾಲೆಯ ಒಂಬತ್ತು ಹೊಸ ಹೊತ್ತಗೆಗಳನ್ನು ಹಂಪಿ ವಿ.ವಿ.ಯ ನಿವೃತ್ತ ಪ್ರಾಧ್ಯಾಪಕ ಡಾ.ಎ.ಸುಬ್ಬಣ್ಣ ರೈ ಅವರು ಬಿಡುಗಡೆ ಮಾಡುತ್ತಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

ವಾರ್ತಾ ಭಾರತಿ 9 Mar 2026 9:44 pm

ಪಶ್ಚಿಮ ಏಷ್ಯಾ ಸಂಘರ್ಷದಿಂದ ಅನಿಲ ಪೂರೈಕೆಗೆ ಅಡ್ಡಿ : ಪುಣೆಯ ಅನಿಲ ಚಿತಾಗಾರ ಸ್ಥಗಿತ

ಮುಂಬೈ, ಮಾ. 9: ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದಿಂದ ಉಂಟಾದ ಇಂಧನ ಪೂರೈಕೆ ಬಿಕ್ಕಟ್ಟು ಪುಣೆಯ ಅತಿ ದೊಡ್ಡ ಚಿತಾಗಾರಗಳಲ್ಲಿ ಒಂದಾದ ವೈಕುಂಠ ಧಾಮದ ಮೇಲೂ ಪರಿಣಾಮ ಬೀರಿದೆ. ಇಂಧನ ಪೂರೈಕೆ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪುಣೆ ಮಹಾನಗರ ಪಾಲಿಕೆ ಅನಿಲ ಬಳಸಿ ಅಂತ್ಯಕ್ರಿಯೆ ನಡೆಸುವ ಸೌಲಭ್ಯಗಳಿಗೆ ಅನಿಲ ಸರಬರಾಜನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಇದು ಎಲ್‌ಪಿಜಿ ಆಧಾರಿತ ಚಿತಾಗಾರಗಳನ್ನು ಮುಚ್ಚಲು ಕಾರಣವಾಗಿದೆ. ಆದರೆ, ವಿದ್ಯುತ್ ಆಧಾರಿತ ಹಾಗೂ ಸಾಂಪ್ರದಾಯಿಕ ಕಟ್ಟಿಗೆಯ ಚಿತಾಗಾರಗಳು ಕಾರ್ಯ ನಿರ್ವಹಿಸುತ್ತಿವೆ. ಎಲ್‌ಪಿಜಿಯಲ್ಲಿರುವ ಪ್ರೊಪೇನ್ ಹಾಗೂ ಬ್ಯುಟೇನ್ ಅನ್ನು ದೇಶದಲ್ಲಿ ಮಿತವಾಗಿ ಬಳಸಲಾಗುತ್ತದೆ. ಪ್ರೊಪೇನ್ ಹಾಗೂ ಬ್ಯುಟೇನ್ ಅನ್ನು ದೇಶಾದ್ಯಂತ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಪೂರೈಕೆಗೆ ಆದ್ಯತೆ ಮೇರೆಗೆ ಬಳಸುವಂತೆ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವಾಯ ಆದೇಶ ಹೊರಡಿಸಿದೆ ಎಂದು ಪುಣೆ ಮಹಾನಗರ ಪಾಲಿಕೆ ತಿಳಿಸಿದೆ. ಪುಣೆಯ ನವಿ ಪೇಠ್ ಪ್ರದೇಶದಲ್ಲಿ ಸುಮಾರು 17 ಎಕರೆ ಪ್ರದೇಶದಲ್ಲಿ ವ್ಯಾಪಿಸಿಕೊಂಡಿರುವ ವೈಕುಂಠ ಧಾಮದಲ್ಲಿ ಪ್ರತಿದಿನ 20 ಶವಗಳ ಸಂಸ್ಕಾರ ಮಾಡಲಾಗುತ್ತದೆ. ಅಲ್ಲದೆ, ಇದು ನಗರದ ಅತಿದೊಡ್ಡ ಚಿತಾಗಾರಗಳಲ್ಲಿ ಒಂದು. ವಿದ್ಯುತ್ ಚಿತಾಗಾರ ಹಾಗೂ ಕಟ್ಟಿಗೆ ಆಧಾರಿತ ಚಿತಾಗಾರಗಳು ಯಾವುದೇ ತೊಂದರೆಗಳಿಲ್ಲದೆ ಕಾರ್ಯ ನಿರ್ವಹಿಸುತ್ತಿವೆ ಎಂದು ಪುಣೆ ಮಹಾನಗರ ಪಾಲಿಕೆ ತಿಳಿಸಿದೆ.

ವಾರ್ತಾ ಭಾರತಿ 9 Mar 2026 9:41 pm

Bengaluru | ವಾಣಿಜ್ಯ ಸಿಲಿಂಡರ್ ಪೂರೈಕೆ ವ್ಯತ್ಯಯ; ನಾಳೆಯಿಂದ ಹೊಟೇಲ್‍ಗಳು ಬಂದ್ ಸಾಧ್ಯತೆ : ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಹೊಳ್ಳ

ಬೆಂಗಳೂರು : ವಾಣಿಜ್ಯ ಬಳಕೆ ಸಿಲಿಂಡರ್ ಪೂರೈಕೆಯಲ್ಲಿನ ವ್ಯತ್ಯಯದಿಂದ ನಾಳೆ(ಮಾ.10)ಯಿಂದ ಬೆಂಗಳೂರು ನಗರದಲ್ಲಿನ ಹೊಟೇಲ್‍ಗಳನ್ನು ಬಂದ್ ಮಾಡುವ ಸಾಧ್ಯತೆಗಳಿವೆ ಎಂದು ಬೆಂಗಳೂರು ಹೊಟೇಲ್‍ಗಳ ಸಂಘ ಎಚ್ಚರಿಕೆ ನೀಡಿದೆ. ಇರಾನ್ ಹಾಗೂ ಅಮೆರಿಕಾ-ಇಸ್ರೇಲ್ ನಡುವಿನ ಯುದ್ಧದ ಹಿನ್ನೆಲೆಯಲ್ಲಿ ಅಡುಗೆ ಅನಿಲ ಹಾಗೂ ವಾಣಿಜ್ಯ ಬಳಕೆ ಅನಿಲ ಸಿಲಿಂಡರ್ ಬೆಲೆ ಕ್ರಮವಾಗಿ 60 ರೂ. ಹಾಗೂ 115 ರೂ.ಗಳಷ್ಟು ಹೆಚ್ಚಾಗಿದೆ. ಹೀಗಾಗಿ ಸಿಲಿಂಡರ್‍ಗಳ ಪೂರೈಕೆ ನಿಲ್ಲಿಸಲಾಗಿದೆ. ಸೋಮವಾರ ಈ ಕುರಿತು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಹೊಳ್ಳ ಎಸ್. ಅವರು, ಹೊಟೇಲು ಉದ್ಯಮ ಅಗತ್ಯ ಸೇವೆ ಅಡಿಯಲ್ಲಿ ಬುರುವುದರಿಂದ ಇದನ್ನೇ ಅವಲಂಬಿಸಿರುವ ಜನಸಾಮಾನ್ಯರು, ಹಿರಿಯ ನಾಗರಿಕರು ವಿದ್ಯಾರ್ಥಿಗಳು, ವೈದ್ಯಕೀಯ ಹಾಗೂ ಇನ್ನಿತರ ಸೇವೆಯಲ್ಲಿರುವ ಹೆಚ್ಚಿನ ಜನರಿಗೆ ತಮ್ಮ ದಿನನಿತ್ಯದ ತಿಂಡಿ-ತಿನಿಸುಗಳಿಗೆ ತೊಂದರೆಯಾಗಲಿದೆ ಎಂದರು. ಇದರ ಜೊತೆಗೆ ಅಡುಗೆ ಅನಿಲ ಸರಬರಾಜು ಮತ್ತೆ ಸಾಮಾನ್ಯ ಸ್ಥಿತಿಗೆ ಬರುವವರೆಗೆ ನಮ್ಮ ಹೊಟೇಲ್ ಉದ್ಯಮವೂ ಸಂಕಷ್ಟವನ್ನು ಎದುರಿಸಬೇಕಾಗುತ್ತದೆ. ತೈಲ ಕಂಪೆನಿಗಳು 70 ದಿನಗಳ ವರೆಗೆ ಗ್ಯಾಸ್ ಸರಬರಾಜಿನಲ್ಲಿ ಯಾವುದೇ ಅಡಚಣೆ ಉಂಟಾಗುವುದಿಲ್ಲವೆಂದು ತಿಳಿಸಿದ್ದವು. ಆದರೆ, ಇದೀಗ ಏಕಾಏಕಿ ಸರಬರಾಜು ನಿಲ್ಲಿಸಿರುವುದು ಹೊಟೇಲ್ ಉದ್ಯಮಕ್ಕೆ ದೊಡ್ಡ ಹೊಡೆತವಾಗಿದೆ ಎಂದು ಅವರು ಗಮನ ಸೆಳೆದರು. ಆದುದರಿಂದ ಸಂಬಂಧಪಟ್ಟ ಕೇಂದ್ರ ಸಚಿವರು ಈ ವಿಚಾರದಲ್ಲಿ ತಕ್ಷಣವೇ ಸೂಕ್ತ ಕ್ರಮ ಕೈಗೊಂಡು ವಾಣಿಜ್ಯ ಸಲಿಂಡರ್ ಸರಬರಾಜನ್ನು ಪುನರಾರಂಭ ಮಾಡಿ ಹೊಟೇಲ್ ಉದ್ಯಮಕ್ಕೆ ಅಗತ್ಯ ಸಹಕಾರ ನೀಡಬೇಕು. ಅನಿಲ ಸಿಲಿಂಡರ್ ಪೂರೈಕೆ ಆಗುವ ವರೆಗೆ ಹೊಟೇಲ್‍ಗಳನ್ನು ಬಂದ್ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು. ಸಿಲಿಂಡರ್ ದರ ಹೆಚ್ಚಳ ಸರಿಯಲ್ಲ : ‘ಕೇಂದ್ರ ಸರಕಾರ ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್‌ಗೆ 115 ರೂ.ಗಳನ್ನು ಹಾಗೂ ಮನೆ ಬಳಕೆಯ ಸಿಲಿಂಡರ್‌ ಗೆ 60ರೂ.ಹೆಚ್ಚಳ ಮಾಡಿದೆ. ಇದು ಬಹಳ ಹೆಚ್ಚಾಗಿದೆ ಎನ್ನುವುದು ಎಲ್ಲರ ಅಭಿಪ್ರಾಯ. ಕೇಂದ್ರ ಸರಕಾರ ಬೆಲೆ ಏರಿಕೆ ಮಾಡುತ್ತಿರುವುದು ಸರಿಯಲ್ಲ. ಸಿಲಿಂಡರ್ ಸರಬರಾಜಿನ ಕುರಿತು ಆತಂಕವಿರುವುದು ಬೇರೆ ವಿಷಯ. ಆದರೆ, ಎಲ್‍ಪಿಜಿ ದರ ಹೆಚ್ಚಳ ಎನ್ನುವುದು ಬೇರೆ ವಿಷಯ’ -ಸಿದ್ದರಾಮಯ್ಯ ಮುಖ್ಯಮಂತ್ರಿ

ವಾರ್ತಾ ಭಾರತಿ 9 Mar 2026 9:38 pm

ಪಂಚಗ್ಯಾರಂಟಿ ಯೋಜನೆಗಳು ಮಹಿಳೆಯರ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ : ಡಾ. ಮಧುಮಾಲ

ಮೂಡುಬಿದಿರೆ : ಆತ್ಮವಿಶ್ವಾಸವೇ ಮನುಷ್ಯನ ಸಬಲೀಕರಣದ ಮೊದಲ ಪ್ರತೀಕ. ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ಮಹಿಳೆಯರನ್ನು ಆಥಿ೯ಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವ ಮೂಲಕ ಗೌರವ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಿದೆ ಎಂದು ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥರಾದ ಡಾ.ಮಧುಮಾಲಾ ಕೆ. ಹೇಳಿದರು. ಅವರು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಸೋಮವಾರ ಗ್ಯಾರಂಟಿ ಯೋಜನಾ ಸಮಿತಿಯ ಕಚೇರಿಯಲ್ಲಿ ನಡೆದ ಸರಕಾರದ ಪಂಚಗ್ಯಾರಂಟಿ ಯೋಜನೆಗಳ ಕುರಿತು ಮಹಿಳೆಯರಿಗೆ ಅರಿವು ಮೂಡಿಸುವ ಸಲುವಾಗಿ ಆಯೋಜಿಸಿರುವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಹಿಳಾ ಸಬಲೀಕರಣದ ಕುರಿತು ಉಪನ್ಯಾಸ ನೀಡಿದರು. ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಅನ್ನಭಾಗ್ಯ, ಶಕ್ತಿ ಯೋಜನೆ ಹಾಗೂ ಯುವನಿಧಿ ಯೋಜನೆಯಿಂದ ಉಳಿತಾಯವಾಗುವ ಹಣವನ್ನು ಉಪಯೋಗ ಮಾಡಿಕೊಂಡು ಆಥಿ೯ಕವಾಗಿ ಸ್ವಾವಲಂಬಿಗಳಾಗುವ ಯೋಚನೆಗಳನ್ನು ಮಾಡಿಕೊಳ್ಳಬೇಕಾಗಿದೆ. ಮಹಿಳೆಯರು ದಾರಾವಾಹಿ, ಗೋಲ್ಡ್ ರೇಟ್, ಸೀರೆ ಬೆಲೆ, ಅಡುಗೆ ಕೋಣೆ ಮತ್ತು ಹೊಸ ರುಚಿಗಳ ಮಾತುಕತೆಗೆ ಮಾತ್ರ ಸೀಮಿತವಾಗದೆ ಪಂಚಾಯತ್ ಗಳಲ್ಲಿ ನಡೆಯುವ ಗ್ರಾಮಸಭೆಗಳಲ್ಲಿ ಭಾಗವಹಿಸಿ ತಮ್ಮ ಗ್ರಾಮಗಳಲ್ಲಿರುವ ಸಮಸ್ಯೆಗಳ ಬಗ್ಗೆ ಮಾತುಕತೆ ನಡೆಸುವುದಲ್ಲದೆ ಇತರ ಊರುಗಳಲ್ಲಿ ಏನೇನು ಸುದ್ಧಿಗಳಾಗಿವೆ ಎಂಬುವುದನ್ನು ನ್ಯೂಸ್ ಪೇಪರ್ ಗಳ ಮೂಲಕ ಓದಿ ತಿಳಿದುಕೊಂಡಾಗ ಜ್ಞಾನದ ಅಭಿವೃದ್ಧಿಯೂ ಉತ್ತಮಗೊಳ್ಳಲು ಸಾಧ್ಯವಾಗುತ್ತದೆ. ಲಿಂಗ ಸಮಾನತೆಯು ಬಹು ಮುಖ್ಯ ಅಂಶವಾಗಿದ್ದು ಮನೆಗಳಲ್ಲಿ ಗಂಡು-ಹೆಣ್ಣೆಂಬ ಬೇಧವನ್ನು ಮಾಡದೆ ಕೆಲಸ ಗಳನ್ನು ಹಂಚಿಕೊಂಡು ಮಾಡುವ ಮೂಲಕ ತಾವು ಎದುರಿಸುತ್ತಿರುವ ಸಮಸ್ಯೆಗಳನ್ನು ಮಕ್ಕಳಿಗೆ ಹೇಳಿಕೊಡಬೇಕು ಹಾಗೆ ಆದಾಗ ಮಹಿಳೆಗೆ ಸ್ವಲ್ಪ ಆರಾಮ ಸಿಗುತ್ತದೆ ಮತ್ತು ಮಾನಸಿಕ ಆರೋಗ್ಯವು ಸುಸ್ಥಿರವಾಗಿರಲು ಸಾಧ್ಯವಾ ಗುತ್ತದೆ ಎಂದು ಹೇಳಿದರು. ತಾಲೂಕು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ ಕೆ.ಕಾರಿಗಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಮನೆಯನ್ನು ಉತ್ತಮ ರೀತಿಯಲ್ಲಿ ನಡೆಸಿಕೊಂಡು ಹೋಗುವಂತಹ ಶಕ್ತಿಯನ್ನು ಹೆಣ್ಣು ಹುಟ್ಟಿದಾಗಿನಿಂದ ಪಡೆದುಕೊಂಡು ಬಂದಿದ್ದಾಳೆ ಇದಕ್ಕೆ ಯಾವುದೇ ಪದವಿಯ ಅಗತ್ಯವಿಲ್ಲ ಎಂದ ಅವರು ಮಹಿಳಾ ಸಬಲೀಕರಣದ ಬಗ್ಗೆ ಮಾಹಿತಿ ಪಡೆಯದೆ ಆಕೆ ಸಬಲೀಕರಣಗೊಳ್ಳುವ ದಿನಗಳು ಆದಷ್ಟು ಬೇಗ ಬರುವಂತ್ತಾ ಗಬೇಕೆಂದು ಆಶಿಸಿದರು. ಮೂಡುಬಿದಿರೆ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ ಬಿ ಅವರು ಸ್ವಾಗತಿಸಿ ಕಾಯ೯ಕ್ರಮ ನಿರೂಪಿಸಿದರು.

ವಾರ್ತಾ ಭಾರತಿ 9 Mar 2026 9:37 pm

ಮಧ್ಯಪ್ರಾಚ್ಯ ಸಂಘರ್ಷ | ಇಂಧನ ಪೂರೈಕೆಗೆ ಬೆಂಬಲಿಸಲು ಜಿ7 ಸಿದ್ಧ; ಸ್ಟಾಕ್‌ ಪೈಲ್ ಬಿಡುಗಡೆಗೂ ಸೂಚನೆ

ಹೊಸದಿಲ್ಲಿ, ಮಾ. 9: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಜಾಗತಿಕ ತೈಲ ಮತ್ತು ಅನಿಲ ಬೆಲೆಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಜಾಗತಿಕ ಇಂಧನ ಪೂರೈಕೆಯನ್ನು ಸ್ಥಿರವಾಗಿರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಜಿ7 ರಾಷ್ಟ್ರಗಳ ಹಣಕಾಸು ಸಚಿವರು ಸಿದ್ಧರಿರುವುದಾಗಿ ತಿಳಿಸಿದ್ದಾರೆ. ಅಗತ್ಯವಿದ್ದರೆ ತುರ್ತು ತೈಲ ನಿಕ್ಷೇಪಗಳನ್ನು (ಸ್ಟಾಕ್‌ ಪೈಲ್) ಬಿಡುಗಡೆ ಮಾಡುವುದೂ ಸೇರಿದಂತೆ ಕ್ರಮಗಳನ್ನು ಕೈಗೊಳ್ಳಲು ತಾವು ಸಿದ್ಧ ಎಂದು ಅವರು ಹೇಳಿದ್ದಾರೆ ಎಂದು Aljazeera ವರದಿ ಮಾಡಿದೆ. ಫ್ರಾನ್ಸ್ ಸೋಮವಾರ ಆಯೋಜಿಸಿದ್ದ ವೀಡಿಯೊ ಕಾನ್ಫರೆನ್ಸ್ ನ ಬಳಿಕ ಜಿ7 ರಾಷ್ಟ್ರಗಳ ಹಣಕಾಸು ಸಚಿವರು ಜಂಟಿ ಹೇಳಿಕೆ ಬಿಡುಗಡೆ ಮಾಡಿದರು. “ಸ್ಟಾಕ್‌ ಪೈಲ್ ಬಿಡುಗಡೆಯಂತಹ ಕ್ರಮಗಳನ್ನು ಒಳಗೊಂಡಂತೆ ಜಾಗತಿಕ ಇಂಧನ ಪೂರೈಕೆಯನ್ನು ಬೆಂಬಲಿಸುವ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ನಾವು ಸಿದ್ಧರಾಗಿದ್ದೇವೆ” ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಕಳೆದ 10 ದಿನಗಳಿಂದ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಅಸ್ಥಿರತೆ ಉಂಟಾಗಿದೆ. ಇದರ ಪರಿಣಾಮವಾಗಿ ಸೋಮವಾರ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು ಬ್ಯಾರೆಲ್ ಗೆ 119 ಡಾಲರ್ ಗಿಂತ ಹೆಚ್ಚಾಗಿವೆ. ಈ ಹಿನ್ನೆಲೆಯಲ್ಲಿ ಯುದ್ಧದ ಪರಿಣಾಮಗಳು ಮತ್ತು ಇಂಧನ ಮಾರುಕಟ್ಟೆಯ ಸ್ಥಿತಿಗತಿಗಳ ಕುರಿತು ಚರ್ಚಿಸಲು ಜಿ7 ರಾಷ್ಟ್ರಗಳ ಹಣಕಾಸು ಸಚಿವರು ಆನ್ ಲೈನ್ ಸಭೆ ನಡೆಸಿದರು. ಸಭೆಯ ನಂತರ ಜಪಾನ್ ನ ಹಣಕಾಸು ಸಚಿವ ಸತ್ಸುಕಿ ಕಟಯಾಮಾ ಮಾತನಾಡಿ, ಅಂತರರಾಷ್ಟ್ರೀಯ ಇಂಧನ ಸಂಸ್ಥೆ (IEA) ತುರ್ತು ತೈಲ ನಿಕ್ಷೇಪಗಳನ್ನು ಜಂಟಿಯಾಗಿ ಬಿಡುಗಡೆ ಮಾಡುವಂತೆ ಕರೆ ನೀಡಿದೆ ಎಂದು ತಿಳಿಸಿದರು. ‘ಪ್ರತಿಯೊಂದು ದೇಶವೂ ಸಂಘಟಿತ ರೀತಿಯಲ್ಲಿ ತೈಲ ನಿಕ್ಷೇಪಗಳನ್ನು ಬಿಡುಗಡೆ ಮಾಡಬೇಕೆಂದು IEA ಒತ್ತಾಯಿಸಿದೆ’ ಎಂದು ಕಟಯಾಮಾ ಹೇಳಿದರು. ಇರಾನ್ ನಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ತೈಲ ಮಾರುಕಟ್ಟೆಯಲ್ಲಿ ಉಂಟಾಗಿರುವ ಅಸ್ಥಿರತೆ ಮತ್ತು ಬೆಲೆ ಏರಿಕೆಯ ಕುರಿತು ಸಭೆಯಲ್ಲಿ ಸಚಿವರು ಚರ್ಚೆ ನಡೆಸಿದರು.

ವಾರ್ತಾ ಭಾರತಿ 9 Mar 2026 9:33 pm

ಇಸ್ರೇಲ್ ಜೊತೆ ‘ಸಂಪೂರ್ಣ ಕದನ ವಿರಾಮ’ಕ್ಕೆ ಲೆಬನಾನ್ ಅಧ್ಯಕ್ಷರ ಕರೆ

ಬೈರೂತ್, ಮಾ. 9: ಇಸ್ರೇಲ್ ಜೊತೆ ನಡೆಯುತ್ತಿರುವ ಉದ್ವಿಗ್ನತೆಯ ನಡುವೆಯೇ ‘ಸಂಪೂರ್ಣ ಕದನ ವಿರಾಮ’ ಘೋಷಣೆಗೆ ಲೆಬನಾನ್ ಅಧ್ಯಕ್ಷ ಜೋಸೆಫ್ ಔನ್ ಕರೆ ನೀಡಿದ್ದಾರೆ. ದೇಶವನ್ನು ಸ್ಥಿರಗೊಳಿಸುವ ಉದ್ದೇಶದಿಂದ ರೂಪಿಸಿದ ಹೊಸ ಯೋಜನೆಗೆ ಅಂತರರಾಷ್ಟ್ರೀಯ ಸಮುದಾಯ ಬೆಂಬಲ ನೀಡಬೇಕೆಂದು ಅವರು ಕೋರಿದ್ದಾರೆ ಎಂದು Aljazeera ವರದಿ ಮಾಡಿದೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, ಲೆಬನಾನ್ ಮೇಲಿನ ಇಸ್ರೇಲ್ ನ ಭೂಮಿ, ವಾಯು ಮತ್ತು ಸಮುದ್ರ ದಾಳಿಗಳನ್ನು ಸಂಪೂರ್ಣವಾಗಿ ನಿಲ್ಲಿಸುವ ಮೂಲಕ ಸಂಪೂರ್ಣ ಕದನ ವಿರಾಮವನ್ನು ಸ್ಥಾಪಿಸುವುದೇ ಈ ಪ್ರಸ್ತಾಪದ ಉದ್ದೇಶ ಎಂದು ಅವರು ತಿಳಿಸಿದ್ದಾರೆ. ಈ ಯೋಜನೆಯ ಭಾಗವಾಗಿ ಲೆಬನಾನ್ ಸಶಸ್ತ್ರ ಪಡೆಗಳು ಇತ್ತೀಚಿನ ಉದ್ವಿಗ್ನತೆ ಕಂಡುಬಂದ ಪ್ರದೇಶಗಳನ್ನು ತಕ್ಷಣವೇ ತಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಳಲಿವೆ. ಅಲ್ಲಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದರ ಜೊತೆಗೆ ಹೆಜ್ಬೊಲ್ಲಾ ಸಂಘಟನೆಯನ್ನು ನಿಶ್ಯಸ್ತ್ರಗೊಳಿಸಿ, ಅದರ ಶಸ್ತ್ರಾಸ್ತ್ರ ಡಿಪೋಗಳು ಮತ್ತು ಸಂಗ್ರಹಣಾ ಸೌಲಭ್ಯಗಳನ್ನು ಕೆಡವುವ ಕ್ರಮ ಕೈಗೊಳ್ಳಲಾಗುತ್ತದೆ. ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಲೆಬನಾನ್ ಸೇನೆಗೆ ಅಂತರರಾಷ್ಟ್ರೀಯ ಲಾಜಿಸ್ಟಿಕಲ್ ಬೆಂಬಲ ಅಗತ್ಯವಿದೆ ಎಂದು ಔನ್ ತಿಳಿಸಿದ್ದಾರೆ. ಕದನ ವಿರಾಮ ಕ್ರಮಗಳ ಅನುಷ್ಠಾನದ ಬಗ್ಗೆ ಒಪ್ಪಂದಕ್ಕೆ ಬರಲು ಲೆಬನಾನ್ ಮತ್ತು ಇಸ್ರೇಲ್ ದೇಶಗಳು ಅಂತರರಾಷ್ಟ್ರೀಯ ಆಶ್ರಯದಲ್ಲಿ ನೇರ ಮಾತುಕತೆಗಳನ್ನು ಪ್ರಾರಂಭಿಸಬೇಕು ಎಂದು ಅವರು ಹೇಳಿದ್ದಾರೆ.

ವಾರ್ತಾ ಭಾರತಿ 9 Mar 2026 9:26 pm

ಕಟಪಾಡಿ ಪಳ್ಳಿಗುಡ್ಡೆ ಮೈದಾನ ತೆರವಿಗೆ ಕ್ರಮ ಕೈಗೊಳ್ಳಲು ಆಗ್ರಹ

ಉಡುಪಿ, ಮಾ.9: ಕಾಪು ತಾಲೂಕು ಕೋಟೆ ಗ್ರಾಪಂ ವ್ಯಾಪ್ತಿಯಲ್ಲಿರುವ ಒಟ್ಟು ಸುಮಾರು 6.96ಎಕರೆ ಸರಕಾರಿ ಭೂಮಿಯನ್ನು ಖಾಸಗೀ ಶಿಕ್ಷಣ ಸಂಸ್ಥೆಯಾದ ಕಟಪಾಡಿ ಎಸ್‌ವಿಎಸ್ ಹೈಸ್ಕೂಲ್ ಹೆಸರಿನಲ್ಲಿ ಪಹಣಿ ಕಲಂ 11ರಲ್ಲಿ ಎಲಿನೇಶನ್ ಮಾಡಿದ್ದು, ಅದನ್ನು ಆ ಸಂಸ್ಥೆ ದುರುಪಯೋಗ ಪಡಿಸಿ ಕೊಳ್ಳುತ್ತಿದೆ. ಆದ್ದರಿಂದ ಅದನ್ನು ಸಾರ್ವಜನಿಕರ ಬಳಕೆಗೆ ತೆರವುಗೊಳಿಸಬೇಕು ಎಂದು ಗ್ರಾಮಸ್ಥ ಪ್ರಭಾಕರ ಕೋಟ್ಯಾನ್ ಒತ್ತಾಯಿಸಿದ್ದಾರೆ. ಇಂದಿಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಎಸ್‌ವಿಎಸ್ ಹೈಸ್ಕೂಲ್ ಕಟಪಾಡಿ ಎಂಬ ಖಾಸಗಿ ವಿದ್ಯಾಸಂಸ್ಥೆ ಸರಕಾರಿ ಜಾಗದಲ್ಲಿ ಆಟದ ಮೈದಾನವನ್ನು ಎಲಿನೇಶನ್ ಮೂಲಕ ಹೊಂದಿದ್ದು, ಇದೀಗ ಆಟದ ಮೈದಾನಕ್ಕೆ ಗೇಟು ಅಳವಡಿಸಿ, ಬೀಗ ಹಾಕಿದ್ದಾರೆ. ಅಲ್ಲದೇ ಇದಕ್ಕೆ ಎಸ್‌ವಿಎಸ್ ಕ್ರೀಡಾಂಗಣ ಎಂಬ ನಾಮಫಲಕವನ್ನೂ ಅಳವಡಿಸಿದ್ದಾರೆ ಎಂದು ದೂರಿದರು. ಹಲವು ದಶಕಗಳಿಂದ ಪಳ್ಳಿಗುಡ್ಡೆ ಮೈದಾನವೆಂದು ನಿತ್ಯ ಬಳಕೆಯಲ್ಲಿ, ನೆಹರೂ ಮೈದಾನವೆಂದು ಸಾರ್ವಜನಿಕ ವಾಗಿ ಕರೆಯಲ್ಪಡುತಿದ್ದ ಈ ಮೈದಾನ ಸಾರ್ವಜನಿಕರ ಬಳಕೆ, ಮಕ್ಕಳ ದೈನಂದಿನ ಆಟಕ್ಕೆ ಬಳಕೆಯಾಗುತ್ತಿತ್ತು. ಆದರೇ ಈಗ ಸಂಸ್ಥೆಯವರು ಮೈದಾನಕ್ಕೆ ಗೇಟು ಅಳವಡಿಸಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಆಟವಾ ಡಲು ಪ್ರತಿದಿನಕ್ಕೆ 3,000ರೂ.ಗಳನ್ನು ಅಕ್ರಮವಾಗಿ ವಸೂಲಿ ಮಾಡುತಿದ್ದಾರೆ. ಈ ದಂಧೆ ಕಳೆದ ಹಲವು ವರ್ಷಗಳಿಂದ ನಡೆಯುತ್ತಿದೆ ಎಂದವರು ಆರೋಪಿಸಿದರು. ಅಲ್ಲದೇ ಸರಕಾರಿ ಜಾಗದಲ್ಲಿ ಬೇರೆ ಬೇರೆ ಕಟ್ಟಡಗಳನ್ನು, ವೇದಿಕೆಯನ್ನು ನಿರ್ಮಿಸಲು ಮುಂದಾಗಿದ್ದು, ಗ್ರಾಮಪಂಚಾಯತ್ ಈಗಾಗಲೇ ಅದನ್ನು ತೆರವು ಗೊಳಿಸುವಂತೆ ನಿರ್ಣಯ ತೆಗೆದುಕೊಂಡು ನೋಟೀಸು ನೀಡಿದ್ದರೂ ಅದನ್ನು ನಿರ್ಲಕ್ಷಿಸಿದ್ದಾರೆ ಎಂದು ಪ್ರಭಾಕರ ಕೋಟ್ಯಾನ್ ತಿಳಿಸಿದರು. ಈ ಮೈದಾನವನ್ನು ಕಾಪು ತಾಲೂಕಿನ ‘ತಾಲೂಕು ಕ್ರೀಡಾಂಗಣ’ವಾಗಿ ಘೋಷಿಸಿ, ಈ ಬಗ್ಗೆ ಕ್ರಮ ಕೈಗೊಳ್ಳಬೇಕು. 10 ದಿನದೊಳಗೆ ಮೈದಾನಕ್ಕೆ ಹಾಕಿರುವ ಬೀಗವನ್ನು ತೆರವುಗೊಳಿಸದಿದ್ದರೆ, ಕ್ರೀಡಾಪಟುಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರೊಂದಿಗೆ ಸೇರಿ ಪ್ರತಿಭಟನೆ ಹಮ್ಮಿ ಕೊಳ್ಳಲಾಗುವುದು ಎಂದವರು ಎಚ್ಚರಿಸಿದ್ದಾರೆ. ಗ್ರಾಮಸ್ಥ ಶೈಲೇಶ್ ಉಪಸ್ಥಿತರಿದ್ದರು.

ವಾರ್ತಾ ಭಾರತಿ 9 Mar 2026 9:25 pm

ಗಂಗಾವತಿ | ಸಂವಿಧಾನ ಪೀಠಿಕೆ ಓದಿ ಮಗುವಿಗೆ ನಾಮಕರಣ

ಗಂಗಾವತಿ : ಸಾಮಾನ್ಯವಾಗಿ ಮಗುವಿನ ನಾಮಕರಣ ಸಂದರ್ಭದಲ್ಲಿ ಶುಭ ಘಳಿಗೆ, ಮಹೂರ್ತ, ದಿನಾಂಕ ಹಾಗೂ ರಾಶಿ–ನಕ್ಷತ್ರ ನಿಗದಿಪಡಿಸಿ ಪುರೋಹಿತರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಸುವುದು ವಾಡಿಕೆ. ಆದರೆ ಗಂಗಾವತಿ ತಾಲ್ಲೂಕಿನ ಒಂದು ಕುಟುಂಬ ಸಂವಿಧಾನದ ಪೀಠಿಕೆ ಓದಿ ಹಾಗೂ ಸಂವಿಧಾನ ಪಾಲಿಸುವ ಪ್ರತಿಜ್ಞೆ ಕೈಗೊಳ್ಳುವ ಮೂಲಕ ಮಗುವಿನ ನಾಮಕರಣ ಮಾಡಿ ಗಮನ ಸೆಳೆದಿದೆ. ಗಂಗಾವತಿ ವಿಧಾನಸಭಾ ಕ್ಷೇತ್ರದ ಯಲಮಗೇರಿ ಗ್ರಾಮದ ದಲಿತ ಸಮುದಾಯದ ಮುಖಂಡ ಹಾಗೂ ಗುತ್ತಿಗೆದಾರ ರಾಮಣ್ಣ ಚೌಡಿ–ಹನುಮಂತಮ್ಮ ದಂಪತಿ ತಮ್ಮ ಮೊಮ್ಮಗಳ ನಾಮಕರಣವನ್ನು ವಿಭಿನ್ನ ರೀತಿಯಲ್ಲಿ ನೆರವೇರಿಸಿದರು. ತಮ್ಮ ಪುತ್ರ ಮಂಜುನಾಥ ಹಾಗೂ ಸೊಸೆ ಯಲ್ಲಮ್ಮ ದಂಪತಿಗೆ ಜನಿಸಿದ ಮಗುವಿನ ನಾಮಕರಣ ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆ ಓದುವ ಮೂಲಕ ಆಚರಣೆ ನಡೆಸಿದರು. ಕೊಪ್ಪಳ ತಾಲ್ಲೂಕಿನ ಹಟ್ಟಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೊದಲು ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಬಳಿಕ ಮಗುವನ್ನು ತೊಟ್ಟಿಲಿಗೆ ಹಾಕಿ ಸಂವಿಧಾನದ ಪೀಠಿಕೆ ಓದಿ, ಸಂವಿಧಾನವನ್ನು ಪಾಲಿಸುವ ಪ್ರತಿಜ್ಞೆ ಕೈಗೊಳ್ಳಲಾಯಿತು. ನಂತರ ಮಗುವಿಗೆ ‘ಹಂಸ’ ಎಂದು ನಾಮಕರಣ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರಾಮಣ್ಣ ಚೌಡಿ, “ನಾನು ಮತ್ತು ನನ್ನ ಕುಟುಂಬ ಭಗವಂತನಿಗಿಂತಲೂ ಹೆಚ್ಚು ಸಂವಿಧಾನದ ಮೇಲೆ ನಂಬಿಕೆ ಇಟ್ಟಿದ್ದೇವೆ. ನಮಗೆ ಸಂವಿಧಾನವೇ ಭಗವಂತನಂತಿದ್ದು, ಅದರ ಸಮ್ಮುಖದಲ್ಲಿ ಮೊಮ್ಮಗಳ ನಾಮಕರಣ ಮಾಡಿದ್ದೇವೆ” ಎಂದು ಹೇಳಿದರು.

ವಾರ್ತಾ ಭಾರತಿ 9 Mar 2026 9:24 pm

ಮಲ್ಪೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಂಸದರಿಂದ ವೀಕ್ಷಣೆ

ಉಡುಪಿ, ಮಾ.9: ಉಡುಪಿಯ ಕರಾವಳಿ ಜಂಕ್ಷನ್‌ನಿಂದ ಮಲ್ಪೆ ಬಳಿಯ ಕಲ್ಮಾಡಿ ಸೇತುವೆವರೆಗಿನ ಇಕ್ಕೆಲಗಳಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ 169 ಎ ಕಾಮಗಾರಿಯನ್ನು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೆದ್ದಾರಿ ಇಲಾಖೆಯ ಅಧಿಕಾರಿಗಳೊಂದಿಗೆ ವೀಕ್ಷಣೆ ನಡೆಸಿದರು. ಕಾಮಗಾರಿ ವೇಗವಾಗಿ ನಡೆಯುತ್ತಿದ್ದರೂ ಭೂ ಮಾಲಕರಿಗೆ ಪರಿಹಾರ ನೀಡದಿರುವುದು, ಭಾಗಶಃ ಸ್ವಾಧೀನವಾದ ಭೂಮಿಗಳಿಗೆ ಪೋಡಿ ರಚನೆಯಲ್ಲಾದ ವಿಳಂಬದಿಂದ ಹಣ ಪಾವತಿಯ ಸಮಸ್ಯೆ, ವಿದ್ಯುತ್ ಕಂಬಗಳ ಸ್ಥಳಾಂತರದ ಸಮಸ್ಯೆಯಿಂದ ಮರಗಳ ತೆರವಿಗೆ ಅಡಚಣೆ ಮುಂತಾದ ತೊಂದರೆಗಳನ್ನು ಸಂಸದರು ಖುದ್ಧಾಗಿ ಪರಿಶೀಲಿಸಿದರು. ಭೂಮಾಲಕರ ಖಾತಾ ಸಮಸ್ಯೆಗಳಿದ್ದಲ್ಲಿ ಅಥವಾ ವ್ಯಾಜ್ಯ, ತಕರಾರು ಗಳಿದ್ದಲ್ಲಿ ಪರಿಹಾರದ ಹಣವನ್ನು ಅವರ ಹೆಸರಲ್ಲಿ ಠೇವಣಿ ಇರಿಸುವಂತೆ ಸೂಚಿಸಿದರಲ್ಲದೇ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮರಗಳ ತೆರವಿಗೆ ಅನುಮತಿ ನೀಡುವಂತೆ ಸ್ಥಳದಲ್ಲೇ ಸೂಚನೆ ನೀಡಿದರು. ವಿದ್ಯುತ್ ಕಂಬಗಳ ಸ್ಥಳಾಂತರಕ್ಕೆ ಕಾಯುತ್ತಿದ್ದೇವೆ ಮೆಸ್ಕಾಂ ಅಧಿಕಾರಿಗಳಿಗೆ ತಿಳಿಸಿ ಎಂದು ಸ್ಥಳೀಯರು ಒತ್ತಾಯಿಸಿ ದಾಗ, ಶಾಲಾ ಮಕ್ಕಳ ಪರೀಕ್ಷೆಯನ್ನು ಗಮನದಲ್ಲಿಟ್ಟುಕೊಂಡು ವಿದ್ಯುತ್ ಸ್ಥಗಿತಗೊಳಿಸಿ ಕಂಬಗಳ ತೆರವಿಗೆ ಅವಕಾಶ ಕಲ್ಪಿಸಲು ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸುಮಾರು 2 ಕಿ.ಮೀ ರಸ್ತೆಯಲ್ಲಿ ಸಂಚರಿಸಿದ ಸಂಸದ ಕೋಟ, ಸಮರ್ಪಕ ದಾಖಲೆ ನೀಡಿದವರಿಗೆ ಒಂದು ವಾರದಲ್ಲಿ ಹಣ ಪಾವತಿ ಮಾಡುವಂತೆ, 3ಡಿ ಅಪೂರ್ಣವಾದವರಿಗೆ 15 ದಿನಗಳ ಒಳಗೆ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರಲ್ಲದೇ, ಯಾವುದೇ ಕಾರಣಕ್ಕೂ ವಿಳಂಬ ವಿಲ್ಲದೆ ರಸ್ತೆ ಕೆಲಸ ಮಳೆಗಾಲದೊಳಗೆ ಪೂರ್ಣಗೊಳಿಸುವಂತೆ ತಾಕಿತು ಮಾಡಿದರು. ಸಂಸದರೊಂದಿಗೆ ಕುಂದಾಪುರದ ಸಹಾಯಕ ಕಮಿಷನರ್ ರಶ್ಮಿ, ಹೆಚ್ಚುವರಿ ಪೊಲೀಸ್ ಅಧಿಕ್ಷಕ ಸುಧಾಕರ್ ನಾಯಕ್, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಾದ ಲೋಕೇಶ್ ಶಶಿಧರ್ ನವೀನ್, ಗ್ರಾಮ ಆಡಳಿತ ಅಧಿಕಾರಿ ಕಾರ್ತಿಕೇಯ, ಮಾಜಿ ನಗರಸಭಾ ಸದಸ್ಯರಾದ ಸುಂದರ ಕಲ್ಮಾಡಿ, ಹರೀಶ್ ರಾಂ, ಮಲ್ಪೆ ಠಾಣಾಧಿಕಾರಿ ಈರಣ್ಣ ಶಿರಗುಪ್ಪಿ ಉಪಸ್ಥಿತರಿದ್ದರು.

ವಾರ್ತಾ ಭಾರತಿ 9 Mar 2026 9:24 pm

ಆಸ್ಪತ್ರೆಗಳಿಗೆ ಅಗತ್ಯ ಔಷಧಿಗಳ ಖರೀದಿಗೆ 880ಕೋಟಿ ರೂ.ಅನುಮೋದನೆ : ದಿನೇಶ್ ಗುಂಡೂರಾವ್

ಬೆಂಗಳೂರು : ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಮತ್ತು ಜಿಲ್ಲಾಸ್ಪತ್ರೆ ಹಾಗೂ ಇತರ ಸರಕಾರಿ ಆರೋಗ್ಯ ಸಂಸ್ಥೆಗಳಿಗೆ ಅಗತ್ಯವಿರುವ 890 ವಿಧಗಳ ಔಷಧಿಗಳನ್ನು 880.68 ಕೋಟಿ ರೂ. ಮೊತ್ತದಲ್ಲಿ ಖರೀದಿಸಲು ಅನುಮೋದನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಸೋಮವಾರ ಪರಿಷತ್ತಿನ ಪ್ರಶೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯರಾದ ಡಾ.ಧನಂಜಯ ಸರ್ಜಿ ಹಾಗೂ ಪ್ರತಾಪ ಸಿಂಹ ನಾಯಕ್ ಕೆ. ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಔಷಧಗಳನ್ನು ಖರೀದಿಸಲು ಕೆಎಸ್‍ಎಂಎಸ್‍ಸಿಎಲ್ ಸಂಸ್ಥೆಗೆ ಅನುಮೋದನೆ ನೀಡಲಾಗಿದೆ. ಔಷಧಿ ಖರೀದಿಯನ್ನು ಪಾರದರ್ಶಕವಾಗಿ ಟೆಂಡರ್ ಕರೆದು ಮಾಡಲಾಗುತ್ತಿದೆ. ಹೆಚ್ಚು ಗುತ್ತಿಗೆದಾರರು ಭಾಗವಹಿಸಲು ಅವಕಾಶವಾಗುವಂತೆ ಟೆಂಡರ್ ಷರತ್ತುಗಳನ್ನು ವಿಧಿಸಲಾಗಿದೆ ಎಂದರು. ಔಷಧ ಸರಬರಾಜು ಮಾಡುವ ಮುನ್ನವೇ ಗುಣಮಟ್ಟದ ಪರೀಕ್ಷೆ ಮಾಡಲಾಗುವುದು. ಕೊರತೆ ಇರುವ ಔಷಧಗಳನ್ನು ತಾತ್ಕಾಲಿಕವಾಗಿ ಖರೀದಿಸಲು ಕ್ರಮ ಕೈಗೊಳ್ಳಲಾಗಿದೆ. ವಾರ್ಷಿಕ ಔಷಧಿ ಖರೀದಿ ಬದಲು 3 ರಿಂದ 4 ತಿಂಗಳಿಗೊಮ್ಮೆ ಅಗತ್ಯವಿರುವ ಔಷಧಿ ಖರೀದಿ ಮಾಡಲಾಗುತ್ತಿದೆ. ಇದರಿಂದ ಅವಧಿ ಮುಗಿಯುವ ಔಷಧಿಗಳ ಸಂಖ್ಯೆ ತಪ್ಪಲಿದೆ. 232 ಕೋಟಿ ರೂ.ಗಳಷ್ಟು ಔಷಧಿಗಳನ್ನು ಒದಗಿಸಲಾಗಿದೆ. ಈ ತಿಂಗಳು, ಮುಂದಿನ ತಿಂಗಳು ಸರಬರಾಜು ಆಗಲಿದೆ ಎಂದು ದಿನೇಶ್ ಗುಂಡೂರಾವ್ ಮಾಹಿತಿ ನೀಡಿದರು. 2025-26ನೇ ಸಾಲಿನಲ್ಲಿ ಕೆಎಸ್‍ಎಂಎಸ್‍ಸಿಎಲ್ ಸಂಸ್ಥೆಯಿಂದ 534 ಔಷಧಿಗಳಲ್ಲಿ ಆದ್ಯತೆ ಮೇಲೆ 496 ಔಷಧಿಗಳ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದ್ದು, ಉಳಿದ 38 ಔಷಧಿಗಳ ಖರೀದಿಗೆ ಟೆಂಡರ್ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ದಿನೇಶ್ ಗುಂಡೂರಾವ್ ಮಾಹಿತಿ ನೀಡಿದರು. ರಾಜ್ಯದ ಎಲ್ಲ ಜಿಲ್ಲಾ  ಸರಕಾರಿ ಆಸ್ಪತ್ರೆಗಳಲ್ಲಿ ಎಬಿ-ಎಆರ್‍ಕೆ ಮೊದಲಾದ ಅನುದಾನಗಳನ್ನು ಜೀವ ರಕ್ಷಕ ಔಷಧಿ ಖರೀದಿಸಿ ರೋಗಿಗಳಿಗೆ ನೀಡಲು ನಿರ್ದೇಶನ ನೀಡಲಾಗಿದೆ. ಆರೋಗ್ಯ ಸಂಸ್ಥೆಗಳು ಅಗತ್ಯವಿರುವ ಔಷಧಿಗಳನ್ನು ಗವರ್ನಮೆಂಟ್-ಇ- ಮಾರ್ಕೆಟ್ ಪ್ಲೇಸ್ ಮೂಲಕ ನೇರ ಖರೀದಿಗೂ ಅವಕಾಶ ನೀಡಲಾಗಿದೆ ಎಂದು ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು. ಗುಣಮಟ್ಟ ಖಾತರಿ ಪ್ರಕ್ರಿಯೆಯಿಂದ ವಿಳಂಬ: ತಮಿಳುನಾಡು ರಾಜ್ಯ ಬಹಳ ಅಚ್ಚುಕಟ್ಟಾದ ಖರೀದಿ ಪ್ರಕ್ರಿಯೆ ನಡೆಸುತ್ತದೆ. ನಮ್ಮ ಟೆಂಡರ್‍ಗಳಲ್ಲಿ ಅನವಶ್ಯಕ ಷರತ್ತುಗಳಿಂದ ಹೆಚ್ಚು ಬಿಡ್‍ದಾರರು ಬರುತ್ತಿರಲಿಲ್ಲ. ಯಾವ ಔಷಧ ಎಷ್ಟು ಅಗತ್ಯ ಇದೆ ಎಂದು ಪರಿಶೀಲನೆ ಮಾಡಿ, ಪಾರದರ್ಶಕ ವ್ಯವಸ್ಥೆ ಮುಖಾಂತರ ಟೆಂಡರ್ ಪ್ರಕ್ರಿಯೆ ನಡೆಸುತ್ತಿದ್ದೇವೆ. ಖರೀದಿಸಿದ ಔಷಧಗಳನ್ನು ಉಗ್ರಾಣದಲ್ಲಿಯೂ ಮತ್ತೊಮ್ಮೆ ಪರೀಕ್ಷೆ ನಡೆಸಿ, ಗುಣಮಟ್ಟ ಖಾತರಿ ಪಡಿಸಿಕೊಳ್ಳುವ ಪ್ರಕ್ರಿಯೆ ನಡೆಸುತ್ತಿದ್ದೇ ವೆ. ಇದರಿಂದ ಸ್ವಲ್ಪ ವಿಳಂಬ ಆಗಿದೆ. ಎಬಿಆರ್‍ಕೆ ಅಡಿಯಲ್ಲಿ ಎಲ್ಲ ಜಿಲ್ಲೆ ಗಳಲ್ಲಿ ಸುಮಾರು 300 ಕೋಟಿ ರೂ. ಹಣ ಇದ್ದು, ಹೆಚ್ಚುವರಿಯಾಗಿ 30 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ, ಸ್ಥಳೀಯವಾಗಿಯೂ ಖರೀದಿಸಲು ಸೂಚನೆ ನೀಡಲಾಗಿದೆ ಎಂದು ದಿನೇಶ್ ಗುಂಡೂರಾವ್ ವಿವರಿಸಿದರು.

ವಾರ್ತಾ ಭಾರತಿ 9 Mar 2026 9:23 pm

T20 ವಿಶ್ವಕಪ್‌: ICC ಟೀಂ ಆಫ್‌ ದಿ ಟೂರ್ನಮೆಂಟ್‌ ಬಿಡುಗಡೆ; ಭಾರತದ ನಾಲ್ವರು ಆಯ್ಕೆ; ಸೂರ್ಯ ಕುಮಾರ್‌ಗಿಲ್ಲ ಸ್ಥಾನ!

ಟಿ20 ವಿಶ್ವಕಪ್‌ನ ಟೀಂ ಆಫ್‌ ದಿ ಟೂರ್ನಮೆಂಟ್‌ ಆಟಗಾರರ ಪಟ್ಟಿ ಬಿಡುಗಡೆ ಮಾಡಿ ಮಾಡಲಾಗಿದೆ. ಭಾರತ ತಂಡದ ನಾಲ್ಕು ಆಟಗಾರರು ಆಯ್ಕೆಯಾಗಿದ್ದಾರೆ. ಕ್ಯಾಪ್ಟನ್ ಸೂರ್ಯ ಕುಮಾರ್‌ಗೆ ಈ ಬಾರಿ ಅವಕಾಶ ನೀಡಿಲ್ಲ. ಇನ್ನು ಸರಣಿ ಶ್ರೇಷ್ಠನಾಗಿ ಹೊರಹೊಮ್ಮಿದ ಸಂಜು ಸ್ಯಾಮ್ಸನ್‌ಗೆ ಕೀಪರ್ ಆಗಿ ಸ್ಥಾನ ನೀಡಲಾಗಿದೆ. ಐಸಿಸಿ ಆಯ್ಕೆ ಮಾಡಿದ 12 ಆಟಗಾರರ ಪಟ್ಟಿ ಇಲ್ಲಿದೆ.

ವಿಜಯ ಕರ್ನಾಟಕ 9 Mar 2026 9:21 pm

ಉಪ್ಪಿನಂಗಡಿ: ಕಾರು ಢಿಕ್ಕಿ; ಅಟೋ ಚಾಲಕ ಸಹಿತ ಐವರು ಮಕ್ಕಳಿಗೆ ಗಾಯ

ಉಪ್ಪಿನಂಗಡಿ: ಅತೀ ವೇಗ ಮತ್ತು ಅಜಾಗರೂಕತೆಯಿಂದ ಬಂದ ಕಾರೊಂದು ಅಟೋ ರಿಕ್ಷಾಕ್ಕೆ ಡಿಕ್ಕಿಯಾದ ಪರಿಣಾಮ ಅಟೋ ರಿಕ್ಷಾದಲ್ಲಿದ್ದ ಒಂದೇ ಕುಟುಂಬದ ಐವರು ಮಕ್ಕಳು ಹಾಗೂ ಅಟೋ ಚಾಲಕರಾದ ಅವರ ತಂದೆ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿಯಲ್ಲಿ ಮಾ.9ರಂದು ಸಂಜೆ ನಡೆದಿದೆ. ಅಟೋ ರಿಕ್ಷಾ ಚಾಲಕ ಕಲಂದರ್ ಶಾಫಿ, ಅವರ ಮಕ್ಕಳಾದ ಮಹಮ್ಮದ್ ಜಾಝೀರ್ (13), ಮಹಮ್ಮದ್ ಇರ್ಷಾದ್ (11), ಮಹಮ್ಮದ್ ರಾಝೀಕ್ (9), ಮಹಮ್ಮದ್ ನೂರ್ (5), ಸಝ್ಮಾ (4) ಗಾಯಗೊಂಡವರು. ಇವರಲ್ಲಿ ಕಲಂದರ್ ಶಾಫಿ, ಸಝ್ಮಾ ಹಾಗೂ ಮಹಮ್ಮದ್ ಜಾಝೀರ್ ಅವರು ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ವಿವರ: ಅಟೋ ಚಾಲಕರಾಗಿರುವ ಕಲಂದರ್ ಶಾಫಿಯವರು ಉಪ್ಪಿನಂಗಡಿಯ ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ತನ್ನ ಮಕ್ಕಳನ್ನು ಇಂದು ಸಂಜೆ ಅಟೋ ರಿಕ್ಷಾದಲ್ಲಿ ಶಾಲೆಯಿಂದ 34 ನೆಕ್ಕಿಲಾಡಿಯ ತನ್ನ ಮನೆಗೆ ಕರೆದುಕೊಂಡು ಬರುತ್ತಿದ್ದ ಸಂದರ್ಭ ಮಂಗಳೂರಿನಿಂದ ಉಪ್ಪಿನಂಗಡಿ ಕಡೆ ಬರುತ್ತಿದ್ದ ಕಾರೊಂದು ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಿಂದ ಸರ್ವೀಸ್ ರಸ್ತೆಗೆ ಪ್ರವೇಶಿಸುವಲ್ಲಿ ಎದುರಿನಿಂದ ಬರುತ್ತಿದ್ದ ಅಟೋ ರಿಕ್ಷಾಕ್ಕೆ ಢಿಕ್ಕಿ ಹೊಡಿದಿದೆ. ಡಿಕ್ಕಿಯ ರಭಸಕ್ಕೆ ಅಟೋ ರಿಕ್ಷಾ ಮಗುಚಿ ಬಿದ್ದಿದ್ದು ಅದರಲ್ಲಿದ್ದ ಒಂದೇ ಮನೆಯ ಆರು ಮಂದಿಯೂ ಗಾಯಗೊಂಡಿದ್ದಾರೆ. ಕಾರು ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಈ ಬಗ್ಗೆ ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 9 Mar 2026 9:21 pm

ಇರಾನ್ ವಿರುದ್ಧ ಅಮೆರಿಕ–ಇಸ್ರೇಲ್ ಯುದ್ಧ ತೀವ್ರ | ಬ್ಯಾರೆಲ್ ಗೆ 115 ಡಾಲರ್ ದಾಟಿದ ತೈಲ ಬೆಲೆ; ಭಾರತದ ಮೇಲೆ ಇದರ ಪರಿಣಾಮವೇನು?

ಇರಾನ್ ವಿರುದ್ಧ ಅಮೆರಿಕ–ಇಸ್ರೇಲ್ ಯುದ್ಧದ ಪರಿಣಾಮ ತೈಲ ಬೆಲೆ ಬ್ಯಾರೆಲ್ ಗೆ 100 ಡಾಲರ್ ದಾಟಿದೆ. ರವಿವಾರ ಅಂತರರಾಷ್ಟ್ರೀಯ ಮಾನದಂಡವಾದ ಬ್ರೆಂಟ್ ಕಚ್ಚಾ ತೈಲವು ಶೇಕಡಾ 30 ಕ್ಕಿಂತ ಹೆಚ್ಚು ಏರಿಕೆಯಾಗಿ, ಒಂದು ಹಂತದಲ್ಲಿ ಬ್ಯಾರೆಲ್ ಗೆ 119 ಡಾಲರ್ಗೆ ತಲುಪಿತು. 2022ರಲ್ಲಿ ರಷ್ಯಾ ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ ಮೊದಲ ಬಾರಿಗೆ ತೈಲವು ಬ್ಯಾರೆಲ್ ಗೆ 100 ಡಾಲರ್ ಗಿಂತ ಹೆಚ್ಚಾಗಿದೆ. ಅಂತರರಾಷ್ಟ್ರೀಯ ಇಂಧನ ಸಂಸ್ಥೆಯ ಸಮನ್ವಯದೊಂದಿಗೆ ಏಳು ಹಣಕಾಸು ಮಂತ್ರಿಗಳ ಗುಂಪು ಪೆಟ್ರೋಲಿಯಂ ನಿಕ್ಷೇಪಗಳನ್ನು ಬಿಡುಗಡೆ ಮಾಡುವ ಬಗ್ಗೆ ಚರ್ಚಿಸಲಿದ್ದಾರೆ ಎಂದು financial times ವರದಿ ಮಾಡಿದ ನಂತರ ತೈಲ ಬೆಲೆಗಳು ಬ್ಯಾರೆಲ್ ಗೆ 110 ಡಾಲರ್ಗೆ ಇಳಿದವು. 2024ರ ಚುನಾವಣೆಗೆ ಮುನ್ನ ಜೀವನ ವೆಚ್ಚದ ಬಗ್ಗೆ ಭಾರೀ ಪ್ರಚಾರ ಮಾಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆಲೆ ಏರಿಕೆಯನ್ನು ತಳ್ಳಿಹಾಕಿದರು. ಇರಾನ್ ನ ಪರಮಾಣು ಕಾರ್ಯಕ್ರಮದ ಬೆದರಿಕೆ ನಾಶವಾದ ನಂತರ ತೈಲ ಬೆಲೆಗಳು ಶೀಘ್ರವಾಗಿ ಕುಸಿಯುತ್ತವೆ. ಅಮೆರಿಕ ಮತ್ತು ಜಗತ್ತನ್ನು ಸುರಕ್ಷಿತ ಮತ್ತು ಶಾಂತಿಯುತವಾಗಿಸಲು ಈಗ ತೈಲಕ್ಕಾಗಿ ಹೆಚ್ಚಿನ ಹಣವನ್ನು ಪಾವತಿಸುವುದು ಅತ್ಯಂತ ಸಣ್ಣ ಬೆಲೆ ಎಂದು ಅವರು ವಾದಿಸಿದ್ದು, ಮೂರ್ಖರು ಮಾತ್ರ ತಮ್ಮೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದಾರೆ ಎಂದು ಟ್ರಂಪ್ ಟ್ರೂತ್ ಸೋಷಿಯಲ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಅಮೆರಿಕದ ಇಂಧನ ಕಾರ್ಯದರ್ಶಿ ಕ್ರಿಸ್ ರೈಟ್ ಕೂಡ ಜನರು ಹೆಚ್ಚುತ್ತಿರುವ ಬೆಲೆ ಬಗ್ಗೆ ಹೆಚ್ಚು ಚಿಂತಿಸಬೇಡಿ ಎಂದು ಹೇಳಿದ್ದಾರೆ. ಸಿಬಿಎಸ್ ನ್ಯೂಸ್ನ ‘ಫೇಸ್ ದಿ ನೇಷನ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೆಟ್ರೋಲ್ ಪಂಪ್ ನಲ್ಲಿ ಬೆಲೆಗಳಲ್ಲಿ ಯಾವುದೇ ಹೆಚ್ಚಳ “ತಾತ್ಕಾಲಿಕ”. ಅದು ಹೆಚ್ಚು ಕಾಲ ಹಾಗೆಯೇ ಇರುವುದಿಲ್ಲ ಎಂದಿದ್ದಾರೆ. ಫೆ. 28ರಂದು ಅಮೆರಿಕ ಮತ್ತು ಇಸ್ರೇಲ್ ಇರಾನ್ ಮೇಲೆ ಜಂಟಿ ದಾಳಿ ನಡೆಸಿದ ನಂತರ ಕಚ್ಚಾ ತೈಲ ಬೆಲೆಗಳು ಸುಮಾರು 50 ಪ್ರತಿಶತದಷ್ಟು ಏರಿಕೆಯಾಗಿವೆ. ಪ್ರತೀಕಾರವಾಗಿ ಇರಾನ್ ಹಾರ್ಮುಜ್ ಜಲಸಂಧಿಯಲ್ಲಿ ಸಾಗಣೆಯನ್ನು ಪರಿಣಾಮಕಾರಿಯಾಗಿ ಸ್ಥಗಿತಗೊಳಿಸಿದೆ. ಇದು ಜಾಗತಿಕ ತೈಲ ಪೂರೈಕೆಯ ಐದನೇ ಒಂದು ಭಾಗದಷ್ಟು ಅಪಾಯವನ್ನುಂಟುಮಾಡಿದೆ. ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಸಂಘಟನೆಯ (OPEC) ಮೂರು ದೊಡ್ಡ ಉತ್ಪಾದಕ ರಾಷ್ಟ್ರಗಳಾದ ಇರಾಕ್, ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಕುವೈತ್, ಜಲಮಾರ್ಗದ ಪರಿಣಾಮಕಾರಿ ಮುಚ್ಚುವಿಕೆಯಿಂದಾಗಿ ಎಲ್ಲಿಯೂ ಹೋಗಲು ಸಾಧ್ಯವಾಗದ ಬ್ಯಾರೆಲ್ ಗಳ ಸಂಗ್ರಹದ ನಡುವೆ ಉತ್ಪಾದನೆಯನ್ನು ಕಡಿತಗೊಳಿಸಿವೆ. ಈ ಪ್ರದೇಶದಲ್ಲಿನ ಇಂಧನ ಉತ್ಪಾದನಾ ಸೌಲಭ್ಯಗಳ ಮೇಲಿನ ದಾಳಿಗಳು ಪೂರೈಕೆಗೆ ಮತ್ತಷ್ಟು ಬೆದರಿಕೆಯನ್ನುಂಟುಮಾಡಿವೆ. ಖತರ್, ಸೌದಿ ಅರೇಬಿಯಾ ಮತ್ತು ಕುವೈತ್ ಸೇರಿದಂತೆ ಕೊಲ್ಲಿಯಲ್ಲಿನ ಇಂಧನ ಸೌಲಭ್ಯಗಳ ಮೇಲಿನ ಅನೇಕ ದಾಳಿಗಳಿಗೆ ಇರಾನ್ ಕಾರಣ ಎಂದು ಆರೋಪಿಸಲಾಗಿದೆ. ಶನಿವಾರ, ಯುದ್ಧ ಪ್ರಾರಂಭವಾದ ನಂತರ ಮೊದಲ ಬಾರಿಗೆ ಇರಾನ್ ನ ತೈಲ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ವಾಯುದಾಳಿ ನಡೆಸಿತು. ಇರಾನ್ ನ ರಾಜ್ಯ ಮಾಧ್ಯಮದ ಪ್ರಕಾರ, ದಾಳಿಗಳು ಟೆಹ್ರಾನ್ ಮತ್ತು ಅಲ್ಬೋರ್ಜ್ ಪ್ರಾಂತ್ಯದಲ್ಲಿರುವ ನಾಲ್ಕು ತೈಲ ಸಂಗ್ರಹಾಗಾರ ಸೌಲಭ್ಯಗಳು ಮತ್ತು ತೈಲ ಉತ್ಪನ್ನಗಳ ವರ್ಗಾವಣೆ ಕೇಂದ್ರದ ಮೇಲೆ ಪರಿಣಾಮ ಬೀರಿವೆ. ಇರಾನ್ ನ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ರವಿವಾರ ಪ್ರತೀಕಾರವಾಗಿ ಈ ಪ್ರದೇಶದಾದ್ಯಂತ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದು, ಅಮೆರಿಕ ಮತ್ತು ಇಸ್ರೇಲ್ “ಈ ಆಟವನ್ನು ಮುಂದುವರಿಸಿದರೆ” ತೈಲವು ಬ್ಯಾರೆಲ್ ಗೆ 200 ಡಾಲರ್ ಆಗಿ ಏರಿಕೆಯಾಗಬಹುದು ಎಂದು ಎಚ್ಚರಿಸಿದೆ. ►ಷೇರು ಕುಸಿತ ಹೂಡಿಕೆದಾರರು ಇಂಧನ ಬೆಲೆಗಳ ಏರಿಕೆಯಿಂದ ಉಂಟಾಗುವ ಕುಸಿತಕ್ಕೆ ಸಿದ್ಧರಾಗಿದ್ದರಿಂದ ಸೋಮವಾರ ಏಷ್ಯಾದ ಷೇರುಗಳು ತೀವ್ರವಾಗಿ ಕುಸಿದವು. ಜಪಾನ್ ನ ನಿಕ್ಕಿ 225 ಆರಂಭಿಕ ವಹಿವಾಟಿನಲ್ಲಿ 7 ಪ್ರತಿಶತದಷ್ಟು ಕುಸಿದ ನಂತರ 5 ಪ್ರತಿಶತಕ್ಕಿಂತ ಹೆಚ್ಚು ಕುಸಿತ ಕಂಡಿತು. ದಕ್ಷಿಣ ಕೊರಿಯಾದ KOSPI 8 ಪ್ರತಿಶತದಷ್ಟು ಕುಸಿದ ನಂತರ 6 ಪ್ರತಿಶತದಷ್ಟು ಕುಸಿತ ಕಂಡಿತು. ಹಾಂಗ್ ಕಾಂಗ್ ನಲ್ಲಿ ಹ್ಯಾಂಗ್ ಸೆಂಗ್ ಸೂಚ್ಯಂಕವು 1.35 ಪ್ರತಿಶತದಷ್ಟು ಕುಸಿದಿದೆ. ಯುರೋಪಿಯನ್ ಷೇರುಗಳು ಕುಸಿತದೊಂದಿಗೆ ಪ್ರಾರಂಭವಾಗಿವೆ. ಲಂಡನ್ ನಲ್ಲಿ FTSE 100 ಮತ್ತು ಫ್ರಾಂಕ್ಫರ್ಟ್ನಲ್ಲಿನ DAX ಕ್ರಮವಾಗಿ ಸುಮಾರು 2 ಪ್ರತಿಶತ ಮತ್ತು 3 ಪ್ರತಿಶತದಷ್ಟು ಕುಸಿದವು. ಅಧಿಕೃತ ಷೇರು ಮಾರುಕಟ್ಟೆಗಳು ದಿನದ ಪ್ರಾರಂಭಕ್ಕೂ ಮುಂಚೆಯೇ ತೊಂದರೆಯ ಲಕ್ಷಣಗಳು ಕಂಡುಬಂದವು. ಆರಂಭಿಕ ವಹಿವಾಟಿನಲ್ಲಿ ಹೂಡಿಕೆದಾರರು ತಮ್ಮ ಷೇರುಗಳನ್ನು ಮಾರಾಟ ಮಾಡಲು ಪ್ರಾರಂಭಿಸಿದರು, ಇದರಿಂದಾಗಿ ಬೆಲೆಗಳು ಗಮನಾರ್ಹವಾಗಿ ಕುಸಿದವು. ಯುಎಸ್ ನ S&P 500 1.7% ರಷ್ಟು ಕುಸಿಯಿತು. ಆಪಲ್ ಮತ್ತು ಗೂಗಲ್ನಂತಹ ದೊಡ್ಡ ತಂತ್ರಜ್ಞಾನ ಕಂಪೆನಿಗಳಿಂದ ಕೂಡಿದ ನಾಸ್ಡಾಕ್ 1.9% ರಷ್ಟು ಕುಸಿಯಿತು. ಟ್ರಂಪ್ ಆಡಳಿತ ಅಧಿಕಾರಿಗಳು ವಾರಗಳಲ್ಲಿ ಯುದ್ಧವು ಕೊನೆಗೊಳ್ಳುತ್ತದೆ ಎಂದು ಹೇಳಿದ್ದರೂ, ಜಾಗತಿಕ ಇಂಧನ ಪೂರೈಕೆಗಳಿಗೆ ದೀರ್ಘಕಾಲದ ಅಡಚಣೆಯ ಸಾಧ್ಯತೆಯು ಹೆಚ್ಚಿನ ಹಣದುಬ್ಬರ ಮತ್ತು ಆರ್ಥಿಕ ಬೆಳವಣಿಗೆಯ ನಿಧಾನಗತಿಯ ಭಯವನ್ನು ಹುಟ್ಟುಹಾಕಿದೆ. ತೈಲ ಬೆಲೆಗಳಲ್ಲಿನ ಪ್ರತಿ ನಿರಂತರ 10 ಪ್ರತಿಶತ ಏರಿಕೆಯು ಹಣದುಬ್ಬರದಲ್ಲಿ 0.4 ಪ್ರತಿಶತ ಏರಿಕೆ ಮತ್ತು ಜಾಗತಿಕ ಆರ್ಥಿಕ ಬೆಳವಣಿಗೆಯಲ್ಲಿ 0.15 ಪ್ರತಿಶತದಷ್ಟು ಇಳಿಕೆಗೆ ಕಾರಣವಾಗುತ್ತದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ ಅಂದಾಜಿಸಿದೆ. ಅಂತರರಾಷ್ಟ್ರೀಯ ಹಣಕಾಸು ನಿಧಿ (IMF) ಪ್ರತಿ ಬಾರಿ ತೈಲ ಬೆಲೆಗಳು ಸಾಮಾನ್ಯಕ್ಕಿಂತ 10% ಹೆಚ್ಚಾದಾಗ ಸರಕು ಮತ್ತು ಸೇವೆಗಳ ಸಾಮಾನ್ಯ ಬೆಲೆಗಳು (ಹಣದುಬ್ಬರ) 0.4% ರಷ್ಟು ಹೆಚ್ಚಾಗುತ್ತವೆ ಎಂದು ಅಂದಾಜಿಸಿದೆ. ಅದೇ ಸಮಯದಲ್ಲಿ ಇದು ಜಾಗತಿಕ ಆರ್ಥಿಕ ಬೆಳವಣಿಗೆಯನ್ನು 0.15% ರಷ್ಟು ನಿಧಾನಗೊಳಿಸುತ್ತದೆ. “ಈ ಆಘಾತ ಅಲ್ಪಕಾಲಿಕವಾಗಿದ್ದರೆ ಜಾಗತಿಕ ಆರ್ಥಿಕತೆಯು ಬೇಗನೆ ಚೇತರಿಸಿಕೊಳ್ಳಬಹುದು” ಎಂದು ಜೋನ್ಸ್ ಟ್ರೇಡಿಂಗ್ ನ ಮುಖ್ಯ ಮಾರುಕಟ್ಟೆ ತಂತ್ರಜ್ಞ ಮೈಕ್ ಓ ರೂರ್ಕ್ ಹೇಳಿದ್ದಾರೆ ಎಂದು Aljazeera ವರದಿ ಮಾಡಿದೆ. “ತೈಲ ಬೆಲೆ ವಾರಗಳವರೆಗೆ ಈ ಮಟ್ಟದಲ್ಲಿ ಮುಂದುವರಿದರೆ ಅದು ಜಾಗತಿಕವಾಗಿ ಪ್ರಮುಖ ತಲೆನೋವಾಗಲಿದೆ. ಇಲ್ಲಿಯವರೆಗೆ ಮಾರುಕಟ್ಟೆಗಳು ಇರಾನ್ ನಲ್ಲಿನ ಸಂಘರ್ಷಕ್ಕೆ ಸಂಬಂಧಿಸಿದ ಅಪಾಯಗಳನ್ನು ಕಡಿಮೆ ಅಂದಾಜು ಮಾಡಿವೆ” ಎಂದು ಅವರು ಹೇಳಿದ್ದಾರೆ. ಶುಕ್ರವಾರ ಫೈನಾನ್ಷಿಯಲ್ ಟೈಮ್ಸ್ ಪ್ರಕಟಿಸಿದ ಸಂದರ್ಶನದಲ್ಲಿ ಖತರ್ ನ ಇಂಧನ ಸಚಿವ ಸಾದ್ ಅಲ್–ಕಾಬಿ ಈ ಪ್ರದೇಶದ ಎಲ್ಲಾ ಉತ್ಪಾದಕರು ಶೀಘ್ರದಲ್ಲೇ ಉತ್ಪಾದನೆಯನ್ನು ಸ್ಥಗಿತಗೊಳಿಸಲು ಒತ್ತಾಯಿಸಲ್ಪಡಬಹುದು ಎಂದು ಹೇಳಿದ್ದಾರೆ. ತೈಲ ಬೆಲೆಗಳು ಬ್ಯಾರೆಲ್ ಗೆ 150 ಡಾಲರ್ ತಲುಪಬಹುದು ಎಂದು ಎಚ್ಚರಿಸಿದ್ದಾರೆ. ►ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದೇನು? ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಜಾಗತಿಕ ಕಚ್ಚಾ ತೈಲ ಬೆಲೆಗಳು ತೀವ್ರವಾಗಿ ಏರಿವೆ. ಆದರೆ ಈ ಏರಿಕೆ ಹಣದುಬ್ಬರವನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ ಎಂದು ಭಾರತ ನಿರೀಕ್ಷಿಸುವುದಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಹೇಳಿದ್ದಾರೆ. ಸಂಸತ್ತಿನಲ್ಲಿ ಲಿಖಿತ ಉತ್ತರ ನೀಡಿದ ಅವರು ಹಣದುಬ್ಬರವು ಪ್ರಸ್ತುತ ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿಗದಿಪಡಿಸಿದ “ಸುರಕ್ಷತಾ ವಲಯ”ದ ಕೆಳಭಾಗದಲ್ಲಿದೆ. ಇದು ಹಣದುಬ್ಬರದ ಮೇಲೆ ಹೆಚ್ಚಿನ ಕಚ್ಚಾ ತೈಲ ಬೆಲೆಗಳ ಪರಿಣಾಮವನ್ನು ಮಿತಿಗೊಳಿಸಲು ಸಹಾಯ ಮಾಡುತ್ತದೆ ಎಂದಿದ್ದಾರೆ. ಪ್ರಸ್ತುತ ಬೆಲೆ ಏರಿಕೆಗಳು ತುಂಬಾ ಕಡಿಮೆ ಇರುವುದರಿಂದ ಭಾರತವು ಏರುತ್ತಿರುವ ತೈಲ ಬೆಲೆಯನ್ನು ನಿಭಾಯಿಸಲು ಉತ್ತಮ ಸ್ಥಿತಿಯಲ್ಲಿದೆ. ಜನವರಿಯಲ್ಲಿ ಚಿಲ್ಲರೆ ಹಣದುಬ್ಬರವು ಕೇವಲ 2.75% ಆಗಿತ್ತು. ಇದು ಭಾರತೀಯ ರಿಸರ್ವ್ ಬ್ಯಾಂಕ್ನ 2% ರಿಂದ 6% ರ “ಸುರಕ್ಷಿತ ವಲಯ”ದ ಒಳಗೆ ಇದೆ. ಭಾರತೀಯ ರಿಸರ್ವ್ ಬ್ಯಾಂಕ್ ನ ಅಕ್ಟೋಬರ್ 2025ರ ಹಣಕಾಸು ನೀತಿ ವರದಿಯನ್ನು ಉಲ್ಲೇಖಿಸಿದ ವಿತ್ತ ಸಚಿವೆ, ಕಚ್ಚಾ ತೈಲ ಬೆಲೆಗಳಲ್ಲಿ 10% ಹೆಚ್ಚಳವು ಸಂಪೂರ್ಣ ಹೆಚ್ಚಳವನ್ನು ದೇಶೀಯ ಇಂಧನ ಬೆಲೆಗಳಿಗೆ ವರ್ಗಾಯಿಸಿದರೆ ಹಣದುಬ್ಬರವನ್ನು ಸುಮಾರು 30 ಬೇಸಿಸ್ ಪಾಯಿಂಟ್ ಗಳಷ್ಟು ಹೆಚ್ಚಿಸಬಹುದು ಎಂದು ಹೇಳಿದ್ದಾರೆ. ಆದಾಗ್ಯೂ ಜಾಗತಿಕ ಕಚ್ಚಾ ತೈಲ ಬೆಲೆ ಏರಿಕೆಯಿಂದ ಹಣದುಬ್ಬರದ ಮೇಲೆ ಉಂಟಾಗುವ ಮಧ್ಯಮಾವಧಿಯ ಪರಿಣಾಮವು ವಿನಿಮಯ ದರದ ಚಲನೆಗಳು, ಜಾಗತಿಕ ಬೇಡಿಕೆ ಮತ್ತು ಪೂರೈಕೆ ಪರಿಸ್ಥಿತಿ, ಹಣಕಾಸು ನೀತಿ ಪ್ರಸರಣ ಹಾಗೂ ಸಾಮಾನ್ಯ ಹಣದುಬ್ಬರದ ಸ್ಥಿತಿ ಸೇರಿದಂತೆ ಹಲವಾರು ಅಂಶಗಳನ್ನು ಅವಲಂಬಿಸಿರುತ್ತದೆ ಎಂದು ಹೇಳಿದ್ದಾರೆ. ►ಕಚ್ಚಾ ತೈಲ ಬೆಲೆಯಲ್ಲಿನ ತೀವ್ರ ಏರಿಕೆಗೆ ವಿವಿಧ ದೇಶಗಳು ಯಾವ ರೀತಿ ಪ್ರತಿಕ್ರಿಯಿಸಿವೆ? 2022ರ ನಂತರದ ಅತ್ಯುನ್ನತ ಮಟ್ಟಕ್ಕೆ ತೈಲ ಬೆಲೆಗಳಲ್ಲಿ ತೀವ್ರ ಏರಿಕೆಯೊಂದಿಗೆ ಜಾಗತಿಕ ಮಾರುಕಟ್ಟೆಗಳು ಸೋಮವಾರ ಕುಸಿದಿದ್ದು, ಇದು ಏಷ್ಯಾದಾದ್ಯಂತ ಷೇರುಗಳಲ್ಲಿ ವ್ಯಾಪಕ ಮಾರಾಟಕ್ಕೆ ಕಾರಣವಾಯಿತು. ಭಾರತದಲ್ಲಿ ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದಾಗಿ ಕಚ್ಚಾ ತೈಲ ಬೆಲೆಗಳು ಸೋಮವಾರ ಆರಂಭದಲ್ಲಿ 30% ರಷ್ಟು ಏರಿಕೆಯಾಗಿ ಬ್ಯಾರೆಲ್ ಗೆ ಸುಮಾರು 120 ಡಾಲರ್ ತಲುಪಿದ್ದರಿಂದ ಸೆನ್ಸೆಕ್ಸ್ ಮತ್ತು ನಿಫ್ಟಿ ಶೇಕಡಾ 3 ಕ್ಕಿಂತ ಹೆಚ್ಚು ಕುಸಿದವು. ►ಫಿಲಿಪೈನ್ಸ್ ಫಿಲಿಪೈನ್ಸ್ ನಲ್ಲಿ ಖಾಸಗಿ ಕಂಪೆನಿಗಳನ್ನು ವಾರದಲ್ಲಿ ನಾಲ್ಕು ದಿನಗಳ ಕೆಲಸದ ಪದ್ಧತಿಯನ್ನು ಪ್ರಯತ್ನಿಸಲು ಪ್ರೋತ್ಸಾಹಿಸಲಾಗುತ್ತಿದೆ. ಅಧ್ಯಕ್ಷ ಫರ್ಡಿನ್ಯಾಂಡ್ ಆರ್ ಮಾರ್ಕೋಸ್ ಜೂನಿಯರ್ ಸೋಮವಾರ ಸರ್ಕಾರಿ ಕಚೇರಿಗಳಿಗೆ ಇದನ್ನು ಅನ್ವಯಿಸಿದ ನಂತರ ಫ್ರಾನ್ಸಿಸ್ ಎಸ್ಕುಡೆರೊ ಈ ನಿರ್ಧಾರವನ್ನು ಬೆಂಬಲಿಸಿದರು. ಈ ಕ್ರಮವು ಕಡಿಮೆ ಪ್ರಯಾಣ, ಕಡಿಮೆ ವೆಚ್ಚ ಮತ್ತು ಕಡಿಮೆ ಸಂಚಾರವನ್ನು ಗುರಿಯಾಗಿರಿಸಿಕೊಂಡಿದೆ. ಇದರಿಂದ ಇಂಧನ ಬಳಕೆ ಕಡಿಮೆಯಾಗುತ್ತದೆ. ►ಬಾಂಗ್ಲಾದೇಶ ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹೆಚ್ಚುತ್ತಿರುವ ಇಂಧನ ಬಿಕ್ಕಟ್ಟಿನ ನಡುವೆ ಬಾಂಗ್ಲಾದೇಶ ತನ್ನ ವಿಶ್ವವಿದ್ಯಾಲಯಗಳನ್ನು ಮುಚ್ಚಿದ್ದು, ಇಂಧನವನ್ನು ಪಡಿತರಗೊಳಿಸಲು ಪ್ರಾರಂಭಿಸಿದೆ. ವಿದ್ಯುತ್ ಮತ್ತು ಇಂಧನವನ್ನು ಸಂರಕ್ಷಿಸುವ ಸಲುವಾಗಿ ತುರ್ತು ಕ್ರಮಗಳ ಭಾಗವಾಗಿ ಈದ್ uಲ್-ಫಿತರ್ ರಜೆಯನ್ನು ಮುಂಚಿತವಾಗಿ ಆರಂಭಿಸಿರುವ ಅಧಿಕಾರಿಗಳು ಸೋಮವಾರದಿಂದ ದೇಶಾದ್ಯಂತ ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ವಿಶ್ವವಿದ್ಯಾಲಯಗಳನ್ನು ಮುಚ್ಚಿದ್ದಾರೆ. ►ದಕ್ಷಿಣ ಕೊರಿಯಾ 30 ವರ್ಷಗಳಲ್ಲಿ ಮೊದಲ ಬಾರಿಗೆ ಹಾರ್ಮುಜ್ ಜಲಸಂಧಿಯಲ್ಲಿನ ಉದ್ವಿಗ್ನತೆಯ ನಂತರ ದಕ್ಷಿಣ ಕೊರಿಯಾ ದೇಶೀಯ ಇಂಧನ ಬೆಲೆಗಳನ್ನು ಮಿತಿಗೊಳಿಸಲು ಮುಂದಾಗಿದೆ. ದಕ್ಷಿಣ ಕೊರಿಯಾದ ಅಧ್ಯಕ್ಷ ಲೀ ಜೇ-ಮ್ಯುಂಗ್ ದೇಶವು ಹಾರ್ಮುಜ್ ಜಲಸಂಧಿಯನ್ನು ಮೀರಿ ಪರ್ಯಾಯ ಇಂಧನ ಸಾಗಣೆಗಳನ್ನು ಹುಡುಕುತ್ತದೆ ಎಂದು ಹೇಳಿದ್ದಾರೆ. ಅಗತ್ಯವಿದ್ದರೆ 100 ಟ್ರಿಲಿಯನ್ ವಾನ್ ಮೌಲ್ಯದ ಮಾರುಕಟ್ಟೆ ಸ್ಥಿರೀಕರಣ ಕಾರ್ಯಕ್ರಮವನ್ನು ವಿಸ್ತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ►ಜಪಾನ್ ಸಂಭವನೀಯ ಕಚ್ಚಾ ತೈಲ ಬಿಡುಗಡೆಗೆ ಸಿದ್ಧರಾಗುವಂತೆ ಜಪಾನ್ ಸರ್ಕಾರವು ರಾಷ್ಟ್ರೀಯ ತೈಲ ನಿಕ್ಷೇಪಕ್ಕೆ ಸೂಚನೆ ನೀಡಿದೆ ಎಂದು ಅಕಿರಾ ನಾಗತ್ಸುಮಾ ತಿಳಿಸಿದ್ದಾರೆ. ಸಂಭಾವ್ಯ ಬಿಡುಗಡೆಯ ಬಗ್ಗೆ ವಿವರಗಳು ಇನ್ನೂ ಸ್ಪಷ್ಟವಾಗಿಲ್ಲ. ಅಕಿರಾ ನಾಗತ್ಸುಮಾ ಜಪಾನ್ ನ ವಿರೋಧ ಪಕ್ಷವಾದ ಸೆಂಟ್ರಿಸ್ಟ್ ರಿಫಾರ್ಮ್ ಅಲೈಯನ್ಸ್ ನ ಸದಸ್ಯರಾಗಿದ್ದಾರೆ. ►ಭಾರತದ ಮೇಲೆ ಪರಿಣಾಮ? ಭಾರತವು ವರ್ಷಕ್ಕೆ ಸುಮಾರು 1.8 ರಿಂದ 2 ಶತಕೋಟಿ ಬ್ಯಾರೆಲ್ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತದೆ. ಆದ್ದರಿಂದ ತೈಲ ಬೆಲೆಯಲ್ಲಿ ಪ್ರತಿ ಬ್ಯಾರೆಲ್ ಗೆ 1 ಡಾಲರ್ ಹೆಚ್ಚಳವಾದರೆ ದೇಶದ ತೈಲ ಆಮದು ಬಿಲ್ ವಾರ್ಷಿಕವಾಗಿ ಸುಮಾರು 2 ಶತಕೋಟಿ ಡಾಲರ್ ವರೆಗೆ ಹೆಚ್ಚಾಗುತ್ತದೆ. ಜಾಗತಿಕ ತೈಲ ಬೆಲೆಗಳು ಗಗನಕ್ಕೇರುತ್ತಿದ್ದರೂ ಸರ್ಕಾರವು ಪೆಟ್ರೋಲ್ ಅಥವಾ ಡೀಸೆಲ್ ಬೆಲೆಯನ್ನು ತಕ್ಷಣ ಹೆಚ್ಚಿಸಲು ಯೋಜಿಸುತ್ತಿಲ್ಲ. ಇದು ಕಳೆದ ಕೆಲವು ವರ್ಷಗಳಿಂದ ಭಾರತ ಅನುಸರಿಸುತ್ತಿರುವ ಅದೇ ನೀತಿಯನ್ನು ಮುಂದುವರಿಸುವಂತಾಗಿದೆ. ಶುಕ್ರವಾರ ಬಿಡುಗಡೆಯಾದ ಮಾಸಿಕ ವರದಿಯಲ್ಲಿ ತೈಲ ಬೆಲೆ ಬ್ಯಾರೆಲ್ ಗೆ 100 ಡಾಲರ್ ಗಿಂತ ಹೆಚ್ಚಾದರೆ ಅದು ದೇಶದ ಒಟ್ಟಾರೆ ಆರ್ಥಿಕತೆಯ ಮೇಲೆ ಭಾರೀ ಒತ್ತಡವನ್ನುಂಟುಮಾಡಬಹುದು ಎಂದು ಹಣಕಾಸು ಸಚಿವಾಲಯ ಎಚ್ಚರಿಸಿದೆ. ದುಬಾರಿ ಕಚ್ಚಾ ತೈಲವು ಅತ್ಯಂತ ಸ್ಪಷ್ಟವಾದ ಸಮಸ್ಯೆಯಾಗಿದ್ದರೂ, ಆರ್ಥಿಕತೆಯು ಸ್ಥಿರವಾಗಿರಲು ನೈಸರ್ಗಿಕ ಅನಿಲ ಮತ್ತು ಅಡುಗೆ ಅನಿಲದ ವೆಚ್ಚ ಹಾಗೂ ಪೂರೈಕೆಯೂ ಅಷ್ಟೇ ಮುಖ್ಯ ಎಂದು ವರದಿ ತಿಳಿಸಿದೆ. ಹೆಚ್ಚಿನ ತೈಲ ಬೆಲೆಗಳು ಭಾರತದ ಆರ್ಥಿಕತೆಗೆ ಖಂಡಿತವಾಗಿಯೂ ಸಮಸ್ಯೆಗಳನ್ನು ಉಂಟುಮಾಡಬಹುದಾದರೂ, ದೇಶದಲ್ಲಿ ಇಂಧನದ ಕೊರತೆಯನ್ನು ತಪ್ಪಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದೆ. ಸರ್ಕಾರಿ ಮೂಲಗಳ ಪ್ರಕಾರ ಭಾರತೀಯ ಸಂಸ್ಕರಣಾಗಾರಗಳು ಹಾರ್ಮುಜ್ ಜಲಸಂಧಿಯನ್ನು ಅವಲಂಬಿಸಿರದ ವಿಶ್ವದ ಭಾಗಗಳಿಂದ ಹೆಚ್ಚಿನ ತೈಲವನ್ನು ತ್ವರಿತವಾಗಿ ಖರೀದಿಸುತ್ತಿವೆ. ಈ ಇತರ ಪ್ರದೇಶಗಳು ಈಗಾಗಲೇ ಭಾರತದ ತೈಲದ ಸುಮಾರು 60% ಅನ್ನು ಒದಗಿಸುತ್ತವೆ. ಭಾರತವು ಕಚ್ಚಾ ತೈಲ, ಪೆಟ್ರೋಲ್ ಮತ್ತು ಡೀಸೆಲ್ ನ ಬ್ಯಾಕಪ್ ಸರಬರಾಜುಗಳನ್ನು ಸಹ ನಿರ್ಮಿಸುತ್ತಿದೆ. ಈಗಾಗಲೇ ಟ್ಯಾಂಕರ್ಗಳಲ್ಲಿರುವ ರಷ್ಯಾದ ಕಚ್ಚಾ ತೈಲ ಸೇರಿದಂತೆ ಇತರ ಪ್ರದೇಶಗಳಿಂದ ತೈಲ ಸರಕುಗಳು ಬರುತ್ತಿರುವುದರಿಂದ ಭಾರತದ ಕಚ್ಚಾ ತೈಲ ಮತ್ತು ಅದರಿಂದ ಪಡೆದ ಪ್ರಮುಖ ಇಂಧನಗಳಾದ ಡೀಸೆಲ್ ಮತ್ತು ಪೆಟ್ರೋಲ್ ನ ದಾಸ್ತಾನು ಹೆಚ್ಚುತ್ತಿದೆ ಎಂದು ಅವರು ತಿಳಿಸಿದ್ದಾರೆ. ಮಂಗಳವಾರ ದೇಶವು ಆರರಿಂದ ಎಂಟು ವಾರಗಳ ಕಚ್ಚಾ ತೈಲ ಮತ್ತು ಇಂಧನದ ದಾಸ್ತಾನುಗಳನ್ನು ಹೊಂದಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಇವುಗಳನ್ನು ಇತರ ಪ್ರದೇಶಗಳಿಂದ ಸರಬರಾಜುಗಳನ್ನು ಹೆಚ್ಚಿಸುವುದರೊಂದಿಗೆ ನಿರಂತರವಾಗಿ ಮರುಪೂರಣ ಮಾಡಲಾಗುತ್ತದೆ. ಸಂಸ್ಕರಣಾಗಾರಗಳು ಕಚ್ಚಾ ತೈಲವನ್ನು ಸಂಸ್ಕರಿಸುವುದನ್ನು, ಇಂಧನಗಳನ್ನು ಉತ್ಪಾದಿಸುವುದನ್ನು ಹಾಗೂ ಪಶ್ಚಿಮ ಏಷ್ಯಾವನ್ನು ಹೊರತುಪಡಿಸಿ ಇತರ ಪ್ರದೇಶಗಳಿಂದ ಹೆಚ್ಚಿನ ತೈಲವನ್ನು ಪಡೆಯುವುದನ್ನು ಮುಂದುವರಿಸುವುದರಿಂದ ಈ ದಾಸ್ತಾನುಗಳು ಬದಲಾಗುತ್ತಲೇ ಇರುತ್ತವೆ. ಲಕ್ಷಾಂತರ ಭಾರತೀಯ ಕುಟುಂಬಗಳಿಗೆ ಸಾಕಷ್ಟು ಅಡುಗೆ ಅನಿಲ ದೊರೆಯುವಂತೆ ಮಾಡಲು ಸರ್ಕಾರವು ಅಗತ್ಯ ಸರಕುಗಳ ಕಾಯ್ದೆ ಎಂಬ ವಿಶೇಷ “ತುರ್ತು ಕಾನೂನು”ವನ್ನು ಬಳಸಿದೆ. ಈ ಕಾನೂನಿನಡಿಯಲ್ಲಿ ತೈಲ ಕಂಪೆನಿಗಳಿಗೆ ಸಾಧ್ಯವಾದಷ್ಟು LPG ಉತ್ಪಾದಿಸಲು ಸರ್ಕಾರ ಆದೇಶಿಸಿದೆ. ಈ ಅನಿಲವು ಮನೆಗಳಲ್ಲಿ ಅಡುಗೆಗಾಗಿ ಮಾತ್ರ ಬಳಸಬೇಕು; ರಾಸಾಯನಿಕಗಳು ಅಥವಾ ಇತರ ಕೈಗಾರಿಕಾ ಉತ್ಪನ್ನಗಳನ್ನು ತಯಾರಿಸಲು ಬಳಸಬಾರದು ಎಂದು ಸರ್ಕಾರ ಹೇಳಿದೆ. ಭಾರತದ LPG ಆಮದುಗಳಲ್ಲಿ 80% ಕ್ಕಿಂತ ಹೆಚ್ಚು ಹಾರ್ಮುಜ್ ಜಲಸಂಧಿಯ ಮೂಲಕ ಬರುತ್ತವೆ. ಭಾರತದ ಎಲ್ಎನ್ಜಿ ಅರ್ಧಕ್ಕಿಂತ ಹೆಚ್ಚು ಹಾರ್ಮುಜ್ ಜಲಸಂಧಿಯ ಮೂಲಕ ಬರುತ್ತಿರುವುದರಿಂದ ಸರ್ಕಾರವು ಈಗಾಗಲೇ ಕೆಲವು ಕೈಗಾರಿಕೆಗಳಿಗೆ ಅನಿಲ ಸರಬರಾಜನ್ನು ಕಡಿತಗೊಳಿಸಲು ಪ್ರಾರಂಭಿಸಿದೆ. ಸಂಭವನೀಯ ಕೊರತೆಗೆ ಸಿದ್ಧರಾಗಲು ಇದು ಒಂದು ಕ್ರಮವಾಗಿದೆ. ಯುದ್ಧವು ಉಲ್ಬಣಗೊಂಡರೆ ಅನಿಲವನ್ನು ಪಡೆಯುವವರಿಗೆ “ಆದ್ಯತೆಯ ಪಟ್ಟಿಯನ್ನು” ಅನ್ವಯಿಸಲಾಗುತ್ತದೆ ಎಂದು ಸರ್ಕಾರಿ ಮೂಲಗಳು ಹೇಳಿವೆ. ಇದರಿಂದ ಅಗತ್ಯ ವಲಯಗಳಲ್ಲಿ ಇಂಧನದ ಕೊರತೆಯನ್ನು ತಪ್ಪಿಸಲು ಸಾಧ್ಯವಾಗುತ್ತದೆ. ಕೆಲವು ಕೈಗಾರಿಕೆಗಳಲ್ಲಿ ಅನಿಲದ ಬದಲಿಗೆ ಇತರ ರೀತಿಯ ಇಂಧನಗಳನ್ನು ಬಳಸಬೇಕಾಗಬಹುದು ಎಂದು ಹೇಳಲಾಗಿದೆ. ಪ್ರಸ್ತುತ ದೇಶೀಯ ನೈಸರ್ಗಿಕ ಅನಿಲವನ್ನು ಆದ್ಯತೆಯ ಪಟ್ಟಿಯ ಆಧಾರದ ಮೇಲೆ ನಗರ ಅನಿಲ ವಿತರಣೆ, ರಸಗೊಬ್ಬರ ಹಾಗೂ ವಿದ್ಯುತ್ ಉತ್ಪಾದನೆ ಸೇರಿದಂತೆ ವಿವಿಧ ವಲಯಗಳಿಗೆ ಹಂಚಲಾಗುತ್ತಿದೆ.

ವಾರ್ತಾ ಭಾರತಿ 9 Mar 2026 9:21 pm

ಕೊಪ್ಪಳ | ವಿದ್ಯಾರ್ಥಿಗಳಿಗೆ ಕರಾಟೆ ತರಬೇತಿ ಅಗತ್ಯ: ವಿಠ್ಠಲ್ ಜಾಬಗೌಡರ

ಕೊಪ್ಪಳ: ಇಂದಿನ ದಿನಗಳಲ್ಲಿ ಸ್ವಯಂರಕ್ಷಣೆಗಾಗಿ ಕರಾಟೆ ಅತೀ ಅಗತ್ಯವಾದ ಕ್ರೀಡೆಯಾಗಿದ್ದು, ಎಲ್ಲರೂ ಕಲಿಯಬೇಕಾದ ಕ್ರೀಡೆಯಾಗಿದೆ. ಕರಾಟೆಯನ್ನು ಎಲ್ಲ ಶಾಲೆ–ಕಾಲೇಜುಗಳಲ್ಲಿ ಕಡ್ಡಾಯವಾಗಿ ಕಲಿಸುವಂತಾಗಬೇಕು ಎಂದು ಕೊಪ್ಪಳ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿಠ್ಠಲ್ ಜಾಬಗೌಡರ ಹೇಳಿದರು. ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯತ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರಾಟೆ ಇಂಡಿಯಾ ಆರ್ಗನೈಜೇಷನ್ ಹಾಗೂ ನ್ಯಾಷನಲ್ ಸ್ಪಿರಿಟ್ ಕರಾಟೆ ಅಕಾಡಮಿ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ವಿದ್ಯಾರ್ಥಿನಿಯರ ಕರಾಟೆ ಪ್ರದರ್ಶನ ಹಾಗೂ ಬೆಲ್ಟ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿನಿಯರಿಗೆ ಡ್ರಾಗನ್ ಸ್ಟಿಕ್ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ದೈಹಿಕವಾಗಿ ಶಕ್ತಿವಂತರಾಗಲು ಹಾಗೂ ಆರೋಗ್ಯಕರ ಮನಸ್ಸು ಬೆಳೆಸಲು ಕ್ರೀಡೆಗಳು ಸಹಕಾರಿಯಾಗುತ್ತವೆ. ಕರಾಟೆ ತರಬೇತಿಯಿಂದ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹಾಗೂ ಏಕಾಗ್ರತೆ ಹೆಚ್ಚುತ್ತದೆ ಎಂದು ಹೇಳಿದರು. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಿರುವುದು ಅರ್ಥಪೂರ್ಣವಾಗಿದೆ. ವಿವಿಧ ಶಾಲೆಗಳ ವಿದ್ಯಾರ್ಥಿನಿಯರು ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಿ ಬೆಲ್ಟ್ ಪಡೆಯುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು. ಎಪಿಜೆ ಅಬ್ದುಲ್ ಕಲಾಂ ಸಿಬಿಎಸ್ಸಿ ಶಾಲೆ ಲಿಂಗದಳ್ಳಿ, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ತಳಕಲ್ ಹಾಗೂ ಹಿಟ್ನಾಳ ಶಾಲೆಯ ಸುಮಾರು 250 ವಿದ್ಯಾರ್ಥಿನಿಯರು 2025–26ನೇ ಸಾಲಿನಲ್ಲಿ ಪಡೆದ ಕರಾಟೆ ತರಬೇತಿಯ ಪ್ರದರ್ಶನ ನೀಡಿದರು. ಇದೇ ಸಂದರ್ಭದಲ್ಲಿ ಅವರಿಗೆ ಬೆಲ್ಟ್ ಹಾಗೂ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ಪ್ರಾಸ್ತಾವಿಕವಾಗಿ ನ್ಯಾಷನಲ್ ಸ್ಟೀರಿಟ್ ಕರಾಟೆ ಅಕಾಡಮಿ ಮುಖ್ಯಸ್ಥ ರಾಜಾಬಕ್ಷಿ ಎಚ್.ವಿ ನೆರವೇರಿಸಿದರು. ಅದ್ಯಕ್ಷತೆಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಅಜ್ಮೀರ್ ಅಲಿ ವಹಿಸಿದ್ದರು. ವೇದಿಕೆಯ ಮೇಲೆ ನ್ಯಾಷನಲ್ ಶುಟೋಕಾನ್ ಕರಾಟೆ ಅಸೋಶಿಯೇಷನ್ ಕರ್ನಾಟಕದ ಅಧ್ಯಕ್ಷರಾದ ಬಿ.ಬಾಷಾಸಾಹೇಬ, ಹಿರಿಯ ಹೋರಾಟಗಾರ ನಜೀರ್ ಮೂಲಿಮನಿ, ಮಾಜಿ ನಗರಸಭಾ ಸದಸ್ಯ ಮಾನ್ವಿ ಪಾಷಾ, ತರಬೇತುದಾರರಾದ ದೀಪಾ ಮತ್ತು ರೋಹಿಣಿ ಉಪಸ್ತಿತರಿದ್ದರು. ನಿರೂಪಣೆಯನ್ನು ದಾವಲಸಾಬ ಬೆಟಗೇರಿ ನಡೆಸಿಕೊಟ್ಟರು. ವಂದನಾರ್ಪಣೆಯನ್ನು ದೇವಪ್ಪ ಕಲ್ಲನ್ನವರ ಮಾಡಿದರು.

ವಾರ್ತಾ ಭಾರತಿ 9 Mar 2026 9:20 pm

ಯಾದಗಿರಿ | ಹೃದಯಾಘಾತದಿಂದ ಪೌರ ಕಾರ್ಮಿಕ ಮೃತ್ಯು

ಯಾದಗಿರಿ: ನಗರಸಭೆಯ ಪೌರ ಕಾರ್ಮಿಕನೊಬ್ಬ ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಎದೆನೋವಿನಿಂದ ಬಳಲಿ, ನಂತರ ಸ್ವಲ್ಪ ಸಮಯದಲ್ಲಿಯೇ ಹೃದಯಾಘಾತಕ್ಕೆ ಬಲಿಯಾದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ನಗರದ ಡಾ.ಬಿ.ಆರ್.ಅಂಬೇಡ್ಕರ್ ನಗರದ ನಿವಾಸಿ ಪಿಲ್ಲಪ್ಪ ಬೊಮ್ಮನ್ ಮೃತಪಟ್ಟ ಪೌರ ಕಾರ್ಮಿಕರಾಗಿದ್ದಾರೆ. ಸೋಮವಾರ ಬೆಳಗ್ಗೆ ಎಂದಿನಂತೆ ಕಸ ಎತ್ತುವ ಕೆಲಸಕ್ಕೆ ಬಂದಿದ್ದ ಪಿಲ್ಲಪ್ಪ ಅವರಿಗೆ ಅಚಾನಕ್ ಸುಸ್ತು ಕಾಣಿಸಿಕೊಂಡು ಎದೆನೋವು ಉಂಟಾಗಿದೆ. ಬಳಿಕ ಅವರ ತಮ್ಮ ಮನೆಗೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ನೀಡಿದರು. ಆದರೆ ಸ್ವಲ್ಪ ಸಮಯದಲ್ಲೇ ನೋವು ಹೆಚ್ಚಾದ ಕಾರಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ನಗರಸಭೆ ಪೌರಾಯುಕ್ತ ಉಮೇಶ ಚವ್ಹಾಣ ಹಾಗೂ ಸಿಬ್ಬಂದಿ ಭೇಟಿ ನೀಡಿ ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಮೃತ ಪಿಲ್ಲಪ್ಪ ಅವರಿಗೆ ತಾಯಿ, ಪತ್ನಿ ಹಾಗೂ ಮೂವರು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗ ಇದ್ದಾರೆ. ಮಾ.10ರಂದು ಅವರ ಅಂತ್ಯಕ್ರಿಯೆ ನಡೆಯಲಿದೆ.

ವಾರ್ತಾ ಭಾರತಿ 9 Mar 2026 9:14 pm

ಇರಾನ್‍ನಿಂದ ಕ್ಷಿಪಣಿ ದಾಳಿ : ಇಸ್ರೇಲ್‌ನಲ್ಲಿ ಒಬ್ಬ ಮೃತ್ಯು

ಟೆಹ್ರಾನ್, ಮಾ.9: ಇರಾನ್‍ನ ಕ್ಷಿಪಣಿ ದಾಳಿಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು ಯುದ್ದದಿಂದ ಇಸ್ರೇಲ್‍ನಲ್ಲಿ ಮೃತರ ಸಂಖ್ಯೆ 11ಕ್ಕೇರಿರುವುದಾಗಿ ಇಸ್ರೇಲ್ ಸೋಮವಾರ ಹೇಳಿದೆ. ಸೋಮವಾರ ಮಧ್ಯ ಇಸ್ರೇಲನ್ನು ಹಲವು ಸ್ಫೋಟಗಳು ನಡುಗಿಸಿದ್ದು ಕನಿಷ್ಠ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕ್ಷಿಪಣಿ ದಾಳಿಯಿಂದ ಹಲವು ಸ್ಥಳಗಳ ಮೇಲೆ ಪರಿಣಾಮ ಬೀರಿವೆ. ಶತ್ರುಗಳ ಬೆದರಿಕೆಯನ್ನು ತಡೆಯಲು ರಕ್ಷಣಾತ್ಮಕ ವ್ಯವಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ. ಈ ಮಧ್ಯೆ, ಆಯತುಲ್ಲಾ ಮೊಜ್ತಬಾ ಖಾಮಿನೈಯನ್ನು ಇರಾನ್‍ನ ನೂತನ ಸರ್ವೋಚ್ಛ ನಾಯಕನನ್ನಾಗಿ ನೇಮಕಗೊಳಿಸಿದ ಬಳಿಕ ಇರಾನ್ ಸೋಮವಾರ ಇಸ್ರೇಲ್‍ನತ್ತ ಪ್ರಥಮ ಕ್ಷಿಪಣಿ ದಾಳಿ ನಡೆಸಿರುವುದಾಗಿ ಸರಕಾರಿ ಸ್ವಾಮ್ಯದ ಐಆರ್‌ಐಬಿ ಟಿವಿ ವಾಹಿನಿ ವರದಿ ಮಾಡಿದೆ. ಈ ಮಧ್ಯೆ, ಯುದ್ದದ 10ನೇ ದಿನವಾದ ಸೋಮವಾರ ಬೆಳಿಗ್ಗೆ ಖತರ್‍ನಲ್ಲಿ ಸ್ಫೋಟ ಸಂಭವಿಸಿರುವುದಾಗಿ ಕುವೈಟ್‍ನ ರಕ್ಷಣಾ ಸಚಿವಾಲಯ ಹೇಳಿದೆ. ಸೌದಿಯ ವಾಯು ರಕ್ಷಣಾ ವ್ಯವಸ್ಥೆಯು ದೇಶದ ಗಡಿ ದಾಟಿ ಬಂದ ಕನಿಷ್ಠ ಮೂರು ಬ್ಯಾಲಿಸ್ಟಿಕ್ ಕ್ಷಿಪಣಿಗಳು ಮತ್ತು ನಾಲ್ಕು ಡ್ರೋನ್‍ಗಳನ್ನು ಹೊಡೆದುರುಳಿಸಿದೆ ಎಂದು ಸೌದಿಯ ರಕ್ಷಣಾ ಸಚಿವಾಲಯ ಹೇಳಿದೆ.

ವಾರ್ತಾ ಭಾರತಿ 9 Mar 2026 9:13 pm

ಇರಾನ್‍ನ ಮತ್ತೊಂದು ಬ್ಯಾಲಿಸ್ಟಿಕ್ ಕ್ಷಿಪಣಿ ಹೊಡೆದುರುಳಿಸಿದ ನೇಟೊ

ಅಂಕಾರ, ಮಾ.9: ಪೂರ್ವ ಮೆಡಿಟರೇನಿಯನ್‍ನಲ್ಲಿ ನೇಟೋದ ವಾಯು ರಕ್ಷಣಾ ವ್ಯವಸ್ಥೆಯು ಇರಾನ್‍ನಿಂದ ಪ್ರಯೋಗಿಸಲಾದ ಎರಡನೇ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಹೊಡೆದುರುಳಿಸಿದೆ. ಕ್ಷಿಪಣಿಯು ಟರ್ಕಿಯ ವಾಯುಪ್ರದೇಶದಲ್ಲಿದ್ದಾಗ ಹೊಡೆದುರುಳಿಸಲಾಗಿದ್ದು ಮುಲಾಜಿಲ್ಲದೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಟರ್ಕಿ ಸೋಮವಾರ ಎಚ್ಚರಿಸಿದೆ. ಆಗ್ನೇಯ ಗಾಜಿಯಾಂಟೆಪ್ ಪ್ರಾಂತದಲ್ಲಿ ಕ್ಷಿಪಣಿಯ ಅವಶೇಷ ಪತನಗೊಂಡಿದ್ದು ಅದೃಷ್ಟವಶಾತ್ ಯಾವುದೇ ಸಾವು- ನೋವು ವರದಿಯಾಗಿಲ್ಲ. ಇದಕ್ಕೆ ಸೂಕ್ತ ಪ್ರತಿಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದು ಟರ್ಕಿ ಎಚ್ಚರಿಕೆ ನೀಡಿದೆ. ಇರಾನ್‍ನಲ್ಲಿನ ಯುದ್ದಕ್ಕೆ ಸಂಬಂಧಿಸಿದ ಕೆಲವು ಪ್ರಮುಖ ಬೆಳವಣಿಗೆಗಳು: ಪ್ರಮುಖ ನೇಟೊ ನೆಲೆಯ ಸಮೀಪದ ಟರ್ಕಿಯ ನಗರ ಅದಾನದಲ್ಲಿರುವ ತನ್ನ ಕಾನ್ಸುಲೇಟ್ ಕಚೇರಿಯ ಎಲ್ಲಾ `ಅನಿವಾರ್ಯವಲ್ಲದ' ಸಿಬ್ಬಂದಿಗಳು ತಕ್ಷಣ ಕಾನ್ಸುಲೇಟ್‍ನಿಂದ ನಿರ್ಗಮಿಸುವಂತೆ ಅಮೆರಿಕ ಸಲಹೆ ನೀಡಿದೆ. ಜೊತೆಗೆ, ದಕ್ಷಿಣ ಟರ್ಕಿಯಲ್ಲಿರುವ ಎಲ್ಲಾ ಅಮೆರಿಕನ್ನರು ಅಲ್ಲಿಂದ ತೆರಳುವಂತೆ ಬಲವಾಗಿ ಸಲಹೆ ನೀಡುವುದಾಗಿ `ಎಕ್ಸ್'ನಲ್ಲಿ ಪೋಸ್ಟ್ ಮಾಡಿದೆ. ಯುಎಇಯ ಸಶಸ್ತ್ರ ಪಡೆಗಳ ಇಬ್ಬರು ಯೋಧರು ಸೋಮವಾರ ಹೆಲಿಕಾಪ್ಟರ್ ದುರಂತದಲ್ಲಿ ಸಾವು. ತಾಂತ್ರಿಕ ವೈಫಲ್ಯದಿಂದ ದುರಂತ ಸಂಭವಿಸಿರುವುದಾಗಿ ಯುಎಇ ಹೇಳಿಕೆ. ಸೋಮವಾರ ಇರಾನ್ ಪ್ರಯೋಗಿಸಿದ 15 ಬ್ಯಾಲಿಸ್ಟಿಕ್ ಕ್ಷಿಪಣಿಗಳಲ್ಲಿ 12 ಅನ್ನು ಹೊಡೆದುರುಳಿಸಿದ್ದು ಮೂರು ಕ್ಷಿಪಣಿಗಳು ಸಮುದ್ರಕ್ಕೆ ಪತನಗೊಂಡಿರುವುದಾಗಿ ಯುಎಇ ವಾಯು ರಕ್ಷಣಾ ವಿಭಾಗ ಹೇಳಿದೆ. ಯುದ್ದ ಪ್ರಾರಂಭಗೊಂಡಂದಿನಿಂದ 253 ಬ್ಯಾಲಿಸ್ಟಿಕ್ ಕ್ಷಿಪಣಿಗಳಲ್ಲಿ 233 ಅನ್ನು, 1440 ಡ್ರೋನ್‍ಗಳಲ್ಲಿ 1,359 ಅನ್ನು ಮತ್ತು 8 ಕ್ರೂಸ್ ಕ್ಷಿಪಣಿಗಳನ್ನು ಯುಎಇ ಹೊಡೆದುರುಳಿಸಲಾಗಿದೆ. ಇದರಲ್ಲಿ 4 ಮಂದಿ ಮೃತಪಟ್ಟಿದ್ದು, 117 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಇರಾನ್‍ನ ಯಾವುದೇ ನಾಯಕರನ್ನು ಗುರಿಯಾಗಿಸುವುದನ್ನು ವಿರೋಧಿಸುವುದಾಗಿ ಚೀನಾ ಹೇಳಿದೆ. ಇರಾನ್‍ನ ನೂತನ ಪರಮೋಚ್ಛ ನಾಯಕ ಮೊಜ್ತಾಬ ಖಮೈನಿಯನ್ನು ಗುರಿಯಾಗಿಸಿ ದಾಳಿ ನಡೆಸುವ ಇಸ್ರೇಲ್‍ನ ಬೆದರಿಕೆಗೆ ಪ್ರತಿಕ್ರಿಯಿಸಿದ ಚೀನಾ ` ಮೊಜ್ತಾಬ ಖಾಮಿನೈಯನ್ನು ನೇಮಕಗೊಳಿಸುವುದು ಇರಾನ್‍ನ ಆಂತರಿಕ ವಿಷಯ. ಯಾವುದೇ ನೆಪ ಹೇಳಿ ಇತರ ದೇಶಗಳ ಆಂತರಿಕ ವ್ಯವಹಾರದಲ್ಲಿ ಮಧ್ಯ ಪ್ರವೇಶಿಸುವುದನ್ನು ಚೀನಾ ಬಲವಾಗಿ ವಿರೋಧಿಸುತ್ತದೆ. ಇರಾನ್‍ನ ಸಾರ್ವಭೌಮತೆ, ಭದ್ರತೆ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಬೇಕು ಎಂದು ಚೀನಾದ ವಿದೇಶಾಂಗ ಇಲಾಖೆಯ ವಕ್ತಾರ ಗುವೊ ಜಿಯಾಕುನ್ ಹೇಳಿದ್ದಾರೆ.

ವಾರ್ತಾ ಭಾರತಿ 9 Mar 2026 9:10 pm

ಮಧ್ಯಪ್ರಾಚ್ಯ ಸಂಘರ್ಷ | ಭಾರತೀಯ ಶೇರು ಮಾರುಕಟ್ಟೆಯಲ್ಲಿ ರಕ್ತಪಾತ: 30 ಲಕ್ಷ ಕೋಟಿ.ರೂ.ಕಳೆದುಕೊಂಡ ಹೂಡಿಕೆದಾರರು

ಹೊಸದಿಲ್ಲಿ,ಮಾ.9: ಫೆ.28ರಂದು ಅಮೆರಿಕ,ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ಆರಂಭಗೊಂಡಾಗಿನಿಂದ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ದಿನೇ ದಿನೇ ಉಲ್ಬಣಗೊಳ್ಳುತ್ತಲೇ ಇದೆ. ಪರಿಣಾಮವಾಗಿ ಹೂಡಿಕೆದಾರರ 30 ಲಕ್ಷ ಕೋಟಿ.ರೂ.ಸಂಪತ್ತು ಕರಗಿ ಹೋಗಿದೆ. ಹೆಚ್ಚುತ್ತಿರುವ ಕಚ್ಚಾತೈಲ ಬೆಲೆಗಳು, ವಿದೇಶಿ ನಿಧಿಯ ಹೊರಹರಿವು ಮತ್ತು ವಿಶ್ವದ ಮೂರನೇ ಅತಿ ದೊಡ್ಡ ತೈಲ ಆಮದುದಾರ ಭಾರತದ ಪಾಲಿಗೆ ವ್ಯಾಪಕ ಆರ್ಥಿಕ ಕುಸಿತದ ಭೀತಿಯಿಂದ ಹೂಡಿಕೆದಾರರು ಕಂಗಾಲಾಗಿದ್ದಾರೆ. ಭಾರತೀಯ ಶೇರು ಮಾರುಕಟ್ಟೆಗಳ ಸೂಚ್ಯಂಕಗಳು ನಿರಂತರವಾಗಿ ಕುಸಿಯುತ್ತಲೇ ಇವೆ. ಸೋಮವಾರ ಒಂದೇ ದಿನ ಮಾರುಕಟ್ಟೆ ಬಂಡವಾಳೀಕರಣ 12.78 ಲಕ್ಷ.ಕೋಟಿ.ರೂ.ಗಳಷ್ಟು ಕರಗಿದೆ. ದಿನದ ವಹಿವಾಟಿನ ನಡುವೆ ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ 2000 ಕ್ಕೂ ಅಧಿಕ ಅಂಶಗಳ ಕುಸಿತವನ್ನು ದಾಖಲಿಸಿತ್ತು,ಆದಾಗ್ಯೂ ನಂತರ ಚೇತರಿಸಿಕೊಂಡು ದಿನದ ಅಂತ್ಯದಲ್ಲಿ 1352.74 ಅಂಶಗಳ (ಶೇ.1.71) ಕುಸಿತದೊಂದಿಗೆ 77,566.16ರಲ್ಲಿ ಮುಕ್ತಾಯಗೊಂಡಿದೆ. ಎನ್‌ಎಸ್‌ಇ ಸೂಚ್ಯಂಕ ನಿಫ್ಟಿ 50 ಮಧ್ಯಂತರದ ವಹಿವಾಟಿನಲ್ಲಿ 700ಕ್ಕೂ ಅಧಿಕ ಅಂಶಗಳಷ್ಟು ಕುಸಿದಿದ್ದು,ನಂತರ ಚೇತರಿಸಿಕೊಂಡು 422.40 ಅಂಶಗಳ (ಶೇ.1.73) ಕುಸಿತದೊಂದಿಗೆ 24,028.05ರಲ್ಲಿ ದಿನದಾಟವನ್ನು ಮುಗಿಸಿದೆ. ಇಂದಿನ ಕುಸಿತ ಶೇರು ಮಾರುಕಟ್ಟೆಯು ಈ ವರ್ಷ ಅನುಭವಿಸಿದ ಭಾರೀ ಹೊಡೆತಗಳಲ್ಲಿ ಒಂದಾಗಿದೆ. ಇತ್ತೀಚಿನ ಭೂರಾಜಕೀಯ ಉಲ್ಬಣತೆಯ ಬಳಿಕ ಲಿಸ್ಟ್ ಆಗಿರುವ ಎಲ್ಲ ಕಂಪೆನಿಗಳ ಸಂಯೋಜಿತ ಮಾರುಕಟ್ಟೆ ಬಂಡವಾಳೀಕರಣವು ತೀವ್ರವಾಗಿ ಕುಗ್ಗಿರುವುದನ್ನು ಬಾಂಬೆ ಶೇರು ವಿನಿಮಯ ಕೇಂದ್ರದ ದತ್ತಾಂಶಗಳು ತೋರಿಸಿವೆ.

ವಾರ್ತಾ ಭಾರತಿ 9 Mar 2026 9:07 pm

ದಿಲ್ಲಿಯಲ್ಲಿ ಯಾರನ್ನು ಭೇಟಿ ಮಾಡುತ್ತೇನೆ ಎಂದು ಹೇಳಲು ಆಗುವುದಿಲ್ಲ: ಡಿ.ಕೆ.ಶಿವಕುಮಾರ್

ದಿಲ್ಲಿ : ಹೊಸದಿಲ್ಲಿಯಲ್ಲಿ ನಾನು ಯಾರನ್ನು ಭೇಟಿ ಮಾಡುತ್ತೇನೆ ಎಂದು ಬಹಿರಂಗವಾಗಿ ಹೇಳಲು ಆಗುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸೋಮವಾರ ದಿಲ್ಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ದಿಲ್ಲಿಗೆ ಬಂದ ಮೇಲೆ ನಾನು ಎಲ್ಲರನ್ನು ಭೇಟಿ ಮಾಡುತ್ತೇನೆ. ನೀವುಗಳು(ಮಾಧ್ಯಮಗಳು), ಡಿ.ಕೆ ದಿಲ್ಲಿಗೆ ಹೋದರೂ ನಾಯಕರು ಸಮಯ ನೀಡಿಲ್ಲ, ಕಾಯುತ್ತಾ ಕೂತಿದ್ದಾರೆ ಎಂದು ವರದಿ ಮಾಡುತ್ತೀರಲ್ಲಾ, ಹಾಗೇ ಕಾಯುತ್ತಾ ಕೂತಿರುವೆ ಎಂದರು. ಪುಣೆಯಲ್ಲಿರುವ ನನ್ನ ಸ್ನೇಹಿತರ ಮನೆ ಮದುವೆ ಕಾರ್ಯಕ್ರಮವಿತ್ತು. ಹೀಗಾಗಿ ನಿನ್ನೆ ದಿಲ್ಲಿಗೆ ಬಂದಿದ್ದೆ. ಇಂದು ಅಸ್ಸಾಂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರನ್ನು ಭೇಟಿ ಮಾಡಿದ್ದೆ. ಇಂದು ಅನೇಕ ಸಭೆಗಳಿವೆ. ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮವಿದೆ ಎಂದು ಶಿವಕುಮಾರ್ ಹೇಳಿದರು. ನಾಳೆಗೆ ನೀವು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರ್ಣಗೊಳ್ಳುತ್ತಿದೆ ಎಂದು ಮಾಧ್ಯಮ ಪ್ರತಿನಿಧಿಗಳು ಗಮನ ಸೆಳೆದಾಗ, ಹೌದು, ನಾಳೆಗೆ ನಾನು ಕೆಪಿಸಿಸಿ ಅಧ್ಯಕ್ಷನಾಗಿ 6 ವರ್ಷ ಪೂರ್ಣಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರಿಗೆ ಭೋಜನಕೂಟ ಹಮ್ಮಿಕೊಂಡಿದ್ದೇನೆ. ಮತ್ತೊಂದು ದಿನ ನಮ್ಮ ಪರಾಜಿತ ಅಭ್ಯರ್ಥಿಗಳು ಮತ್ತು ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಭೋಜನಕೂಟ ಹಮ್ಮಿಕೊಳ್ಳಲಾಗುವುದು. ಈಗ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಾಸಕರಿಗೆ ಭೋಜನಕೂಟ ಇಟ್ಟುಕೊಂಡಿದ್ದೇನೆ ಎಂದು ತಿಳಿಸಿದರು. ಖಾಸಗಿ ಕಾರ್ಯಕ್ರಮ ಎಂದರೂ ಡಿ.ಕೆ.ಶಿವಕುಮಾರ್ ದಿಲ್ಲಿ ಭೇಟಿ ಎಂದರೆ ವಿಭಿನ್ನ ಚರ್ಚೆಗಳೆ ಸಾಗುತ್ತವೆ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಯಾವ ವಿಭಿನ್ನ ಚರ್ಚೆನೂ ಬೇಡ. ನಾಳೆ (ಮಂಗಳವಾರ) ಭೋಜನಕೂಟವಿದೆ, ನಾಡಿದ್ದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಇದೆ ಎಂದು ತಿಳಿಸಿದರು. ಅಸ್ಸಾಂ ಚುನಾವಣೆಗೆ 43 ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 43 ಅಭ್ಯರ್ಥಿಗಳ ಪಟ್ಟಿ ಈಗಾಗಲೆ ಬಿಡುಗಡೆಯಾಗಿದ್ದು, ಇಂದು ಮತ್ತೊಂದು ಸ್ಕ್ರೀನಿಂಗ್ ಸಮಿತಿ ಸಭೆ ಇದೆ. ಈ ಸಮಿತಿಯಲ್ಲಿ ನಾನು ಇಲ್ಲ ಎಂದು ತಿಳಿಸಿದರು.  

ವಾರ್ತಾ ಭಾರತಿ 9 Mar 2026 9:05 pm

ಕಲಬುರಗಿ | ನಾವೀನ್ಯ ಬೋಧನಾ ತಂತ್ರಗಳಿಂದ ವಿದ್ಯಾರ್ಥಿಗಳ ಭವಿಷ್ಯ ರೂಪಿಸಬೇಕು: ಪ್ರೊ. ಶುಭಾಂಗಿ

ಕಲಬುರಗಿ: ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ಕಾಲೇಜುಗಳ ಅಧ್ಯಾಪಕರು ನಾವೀನ್ಯ ಬೋಧನಾ ತಂತ್ರಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳ ಭವಿಷ್ಯ ರೂಪಿಸಬೇಕು. ವಿಷಯದ ಅರಿವು, ಆಸಕ್ತಿ, ಸಕ್ರಿಯ ಕಲಿಕೆ ಹಾಗೂ ತಂತ್ರಜ್ಞಾನ ಬಳಕೆಗೆ ಪ್ರೋತ್ಸಾಹ ನೀಡಬೇಕು ಎಂದು ಕಲಬುರಗಿ ವಿಟಿಯು ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕಿ ಪ್ರೊ. ಶುಭಾಂಗಿ ಡಿ.ಸಿ. ಸಲಹೆ ನೀಡಿದರು. ನಗರದ ಗುಲ್ಬರ್ಗಾ ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ರೂಸಾ/ಪಿಎಂ-ಉಷಾ, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿ, ಗುಲ್ಬರ್ಗಾ ವಿಶ್ವವಿದ್ಯಾಲಯ ಹಾಗೂ ರಿಲಯನ್ಸ್ ಫೌಂಡೇಶನ್ ಸ್ಕಿಲ್ಲಿಂಗ್ ಅಕಾಡೆಮಿ ಮತ್ತು ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್ ಸಹಯೋಗದಲ್ಲಿ ಆಯೋಜಿಸಿದ್ದ “ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಾವೀನ್ಯ ಬೋಧನಾ ತಂತ್ರಗಳು ಮತ್ತು ಪಠ್ಯಕ್ರಮ ಚೌಕಟ್ಟು” ಕುರಿತ ಫ್ಯಾಕಲ್ಟಿ ಡೆವಲಪ್‌ಮೆಂಟ್ ಪ್ರೋಗ್ರಾಂ (ಎಫ್‌ಡಿಪಿ) ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು. ಬದಲಾಗುತ್ತಿರುವ ಶೈಕ್ಷಣಿಕ ಕ್ಷೇತ್ರಕ್ಕೆ ಅನುಗುಣವಾಗಿ ಶಿಕ್ಷಣದ ಬೆಳವಣಿಗೆ, ಪಠ್ಯಕ್ರಮ ಚೌಕಟ್ಟು, ಬೋಧನಾ ವಿಧಾನ ಹಾಗೂ ತಂತ್ರಜ್ಞಾನ ಬಳಕೆಗೆ ಹೆಚ್ಚಿನ ಒತ್ತು ನೀಡಬೇಕು. ವಿಷಯದ ಗ್ರಹಿಕೆಗೆ ಜೊತೆಗೆ ಎಐ ಹಾಗೂ ರೋಬೋಟ್ ತಂತ್ರಜ್ಞಾನಗಳ ಅರಿವು ಮೂಡಿಸಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆ ಬೆಳೆಸಬೇಕು ಎಂದು ಹೇಳಿದರು. ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್‌ನ ತರಬೇತಿ ಅಧಿಕಾರಿ ಜೋಶುವಾ ಡೇನಿಯಲ್ ಮಾತನಾಡಿ, ವೃತ್ತಿಪರ ಸಂಸ್ಥೆಗಳ ಅಗತ್ಯ ಕೌಶಲ್ಯ ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳ ಕಲಿಕೆ ವಿಧಾನಗಳ ನಡುವಿನ ಅಂತರ ಕಡಿಮೆಗೊಳಿಸಲು ಶಿಕ್ಷಣದ ಜೊತೆಗೆ ವೃತ್ತಿ ಕೌಶಲ್ಯ, ವೃತ್ತಿ ಜ್ಞಾನ ಹಾಗೂ ಅನುಭವವನ್ನು ವಿದ್ಯಾರ್ಥಿಗಳಿಗೆ ನೀಡಬೇಕು ಎಂದರು. ಉದ್ಯಮ ಕ್ಷೇತ್ರಕ್ಕೆ ವಿದ್ಯಾರ್ಥಿಗಳು ಸಜ್ಜಾಗಲು ಅಧ್ಯಾಪಕರು ಹೊಸ ಜ್ಞಾನ ಮತ್ತು ತಂತ್ರಜ್ಞಾನ ಕಲಿಕೆಗೆ ಪ್ರೋತ್ಸಾಹಿಸಬೇಕು ಎಂದು ಹೇಳಿದರು. ಜೆಕಾರ್ತಿಕೇಯ ತರಬೇತಿ ಸಲಹಾ ಸಂಸ್ಥೆಯ ಸಿಇಓ ಡಾ. ಅಭಯ್ ಸರ್ದೇಶ್‌ಪಾಂಡೆ ಮಾತನಾಡಿ, ಇಂದಿನ ಗುಣಮಟ್ಟದ ಶಿಕ್ಷಣದೊಂದಿಗೆ ಮಾನವನ ನಡವಳಿಕೆಯಲ್ಲಿ ಬದಲಾವಣೆ ಅಗತ್ಯ. ಈ ತರಬೇತಿಯಿಂದ ಶಿಕ್ಷಕರು ಪ್ರಾಯೋಗಿಕ ಹಾಗೂ ಸಂವಾದಾತ್ಮಕ ಬೋಧನೆಗೆ ಒತ್ತು ನೀಡುವ ಮೂಲಕ ಶೈಕ್ಷಣಿಕ ಸುಧಾರಣೆಗೆ ಸಹಕಾರಿಯಾಗಲಿದೆ ಎಂದರು. ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಶಿಕಾಂತ್ ಎಸ್. ಉಡಿಕೇರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಆಧುನಿಕ ಶಿಕ್ಷಣ ವ್ಯವಸ್ಥೆಯಲ್ಲಿ ಮಾಹಿತಿ ತಂತ್ರಜ್ಞಾನ ಹಾಗೂ ಬೋಧನೆ ಶಿಕ್ಷಕರ ವೃತ್ತಿ ಜೀವನದ ಅವಿಭಾಜ್ಯ ಅಂಗವಾಗಿದೆ. ವಿಶ್ವವಿದ್ಯಾಲಯ ಮತ್ತು ಕಾಲೇಜುಗಳು ಮಾನ್ಯತೆ ಹಾಗೂ ಉನ್ನತ ಶಿಕ್ಷಣದಲ್ಲಿ ಉತ್ಕೃಷ್ಟತೆ ಸಾಧಿಸಲು ಫ್ಯಾಕಲ್ಟಿ ಡೆವಲಪ್‌ಮೆಂಟ್ ಕಾರ್ಯಕ್ರಮಗಳು ಮಹತ್ವದ್ದಾಗಿವೆ ಎಂದು ಹೇಳಿದರು. ವಿದ್ಯಾ ವಿಷಯಕ ಪರಿಷತ್ ಸದಸ್ಯ ಪ್ರೊ. ಹೂವಿನಭಾವಿ ಬಾಬಣ್ಣ, ಮೌಲ್ಯಮಾಪನ ಕುಲಸಚಿವ ಪ್ರೊ. ಎನ್.ಜಿ. ಕಣ್ಣೂರು, ಹಣಕಾಸು ಅಧಿಕಾರಿ ಜಯಾಂಬಿಕಾ ಉಪಸ್ಥಿತಿರಿದ್ದರು. ಅನ್ವಯಿಕ ವಿದ್ಯುನ್ಮಾನ ವಿಭಾಗದ ಹಿರಿಯ ಪ್ರಾಧ್ಯಾಪಕ ಹಾಗೂ ಕಾರ್ಯಕ್ರಮ ಸಂಯೋಜಕ ಪ್ರೊ. ಆರ್. ಎಲ್ ರಾಯಭಾಗಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಲಸಚಿವ ಪ್ರೊ. ರಮೇಶ್ ಲಂಡನ್ಕರ್ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಪ್ರೊ. ಮಲಶೆಟ್ಟಿ, ಡಾ. ಸುರೇಶ್ ಜಂಗೆ ಹಾಗೂ ಡಾ. ಟಿ. ನಿಂಗಣ್ಣ ಅತಿಥಿಗಳನ್ನು ಪರಿಚಯಿಸಿದರು. ಸಂಗೀತಾ ವಿಭಾಗದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಡಾ. ಎಂ. ಬಿ. ಕಟ್ಟಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ವಿವಿಧ ನಿಕಾಯಗಳ ಡೀನರು, ಸಿಂಡಿಕೇಟ್ ಸದಸ್ಯರು, ವಿದ್ಯಾ ವಿಷಯಕ ಪರಿಷತ್ ಸದಸ್ಯರು, ಸ್ನಾಕತೋತ್ತರ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಅತಿಥಿ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ, ಸಂಶೋಧನಾ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು, ಗುಲಬರ್ಗಾ ವಿಶ್ವವಿದ್ಯಾಲಯದ ಪದವಿ ಮಹಾವಿದ್ಯಾಲಯಗಳ ಅಧ್ಯಾಪಕರು ಹಾಗೂ ರಿಲಯನ್ಸ್ ಫೌಂಡೇಶನ್ ಸ್ಕಿಲ್ಲಿಂಗ್ ಅಕಾಡೆಮಿ ಸದಸ್ಯರಾದ ರೇಖಾ ಕುಮಾರಿ, ಜಾಬೆಜ್, ಪೌಜಿತ ಭಾಗವಹಿಸಿದ್ದರು.

ವಾರ್ತಾ ಭಾರತಿ 9 Mar 2026 9:04 pm

ಬೈಕ್ -ಸ್ಕೂಟರ್ ಮಧ್ಯೆ ಅಪಘಾತ: ಓರ್ವ ಮೃತ್ಯು, ಇಬ್ಬರಿಗೆ ಗಾಯ

ಕಾಪು: ಕಾಪು ಎ1 ಹೋಟೆಲ್ ಜಂಕ್ಷನ್ ಬಳಿ ಬೈಕ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಎಲ್ಲೂರು ಗ್ರಾಮದ ಅದಮಾರು ಕಾಲೇಜು ಬಳಿ ನಿವಾಸಿ ಜಯಂತ್ ಎಂಬವರ ಮಗ ಸೂರಜ್(23) ಎಂದು ಗುರುತಿಸಲಾಗಿದೆ. ಬೈಕ್‌ನ ಹಿಂಬದಿ ಸವಾರ ಆದೀಶ್ ಹಾಗೂ ಸ್ಕೂಟರ್ ಸವಾರ ಉಮೇಶ್ ಎಂಬವರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಡುಬಿದ್ರೆಯ ಸುಜಲಾನ್ ಕಂಪನಿಯಲ್ಲಿ ಸೂಪರ್ ವೈಸರ್ ಆಗಿ ಕೆಲಸ ಮಾಡಿಕೊಂಡಿದ್ದ ಸೂರಜ್, ಮಾ.8ರಂದು ರಾತ್ರಿ ಕೆಲಸ ಮುಹಿಸಿ ಕಟಪಾಡಿಗೆ ಹೋಗಿದ್ದು, ವಾಪಸ್ಸು ಬೈಕ್‌ನಲ್ಲಿ ಆದೀಶ್ ಎಂಬವರನ್ನು ಕೂರಿಸಿಕೊಂಡು ಬರುತ್ತಿದ್ದಾಗ ವಿರುದ್ಧ ದಿಕ್ಕಿನಲ್ಲಿ ಬಂದ ಸ್ಕೂಟರ್ ಢಿಕ್ಕಿ ಹೊಡೆಯತ್ತೆನ್ನಲಾಗಿದೆ. ಇದರಿಂದ ಮೂವರು ಸವಾರರು ರಸ್ತೆಗೆ ಬಿದ್ದು ಗಾಯಗೊಂಡರು. ಇದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸೂರಜ್ ಅವರ ಬ್ರೈನ್ ಡೆಡ್ ಆಗಿದ್ದು, ಮಾ.9ರಂದು ಬೆಳಗ್ಗೆ ಅವರು ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 9 Mar 2026 9:02 pm

ಭ್ರೂಣ ಹತ್ಯೆ ತಡೆಗೆ ಎಲ್ಲ ಜಿಲ್ಲೆಗಳಲ್ಲಿ ನೋಡಲ್ ಅಧಿಕಾರಿ ನೇಮಕ : ದಿನೇಶ್ ಗುಂಡೂರಾವ್

‘10ನೇ ವಾರದಲ್ಲೇ ಗರ್ಭಿಣಿಯರ ಕಡ್ಡಾಯ ನೋಂದಣಿ’

ವಾರ್ತಾ ಭಾರತಿ 9 Mar 2026 9:01 pm

ಅಕ್ರಮ ಅನ್ನಭಾಗ್ಯದ ಅಕ್ಕಿ ದಾಸ್ತಾನು: ಇಬ್ಬರು ಆರೋಪಿಗಳ ಬಂಧನ

ಬೈಂದೂರು, ಮಾ.9: ಬಿಜೂರು ಗ್ರಾಮದ ಹರಕೇರಿ ಎಂಬಲ್ಲಿ ಉಚಿತ ಅನ್ನ ಭಾಗ್ಯ ಯೋಜನಗೆ ಸಂಬಂಧಿಸಿದ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಇರಿಸಿರುವ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿಯಂತೆ ಬೈಂದೂರು ಆಹಾರ ನಿರೀಕ್ಷಕ ವಿನಯ ಕುಮಾರ್ ಎಂಬವರು ಪೊಲೀಸರೊಂದಿಗೆ ದಾಳಿ ನಡೆಸಿ, ಅಕ್ರಮವಾಗಿ ಅಕ್ಕಿ ದಾಸ್ತಾನು ಇರಿಸಿದ್ದ ಅಬ್ದುಲ್ ಮಜೀದ ಮತ್ತು ಐಶಾ ವಾಸೀಂ ಎಂಬವರು ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಉಚಿತ ಅನ್ನ ಭಾಗ್ಯ ಯೋಜನಗೆ ಸಂಬಂಧಿಸಿದ ಅಕ್ಕಿಯನ್ನು ದಾಸ್ತಾನು ಇರಿಸಿರುವುದು ಕಂಡುಬಂದಿದೆ. ಆರೋಪಿಗಳಿಂದ ಒಟ್ಟು 400 ಕೆಜಿ ತೂಕದ 9200ರೂ. ಮೌಲ್ಯದ 15 ಚೀಲ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 9 Mar 2026 8:59 pm

ಗೂಡ್ಸ್ ರಿಕ್ಷಾ ಢಿಕ್ಕಿ: ಸ್ಕೂಟರ್ ಸವಾರ ಮೃತ್ಯು

ಹಿರಿಯಡ್ಕ, ಮಾ.9: ಗೂಡ್ಸ್ ಅಟೋ ರಿಕ್ಷಾವೊಂದು ಸ್ಕೂಟಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಹಿರಿಯಡಕ ಕಾಮತ್ ನರ್ಸಿಂಗ್ ಹೋಂ ಬಳಿ ಮಾ.9ರಂದು ಬೆಳಗ್ಗೆ ನಡೆದಿದೆ. ಹಿರಿಯಡಕ ಕಡೆಯಿಂದ ಕೋಟ್ನಕಟ್ಟೆ ಕಡೆಗೆ ಹೋಗುತ್ತಿದ್ದ ಗೂಡ್ಸ್ ಅಟೋ ರಿಕ್ಷಾ, ಎದುರಿನಿಂದ ಬರುತ್ತಿದ್ದ ಸ್ಕೂಟರ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ರಮೇಶ್ ಕಲ್ಕೂರ ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 9 Mar 2026 8:56 pm

ಲಾಡ್ಜ್‌ನ ಮಹಡಿಯಿಂದ ಹಾರಿ ವ್ಯಕ್ತಿ ಆತ್ಮಹತ್ಯೆ

ಮಣಿಪಾಲ, ಮಾ.9: ಅನಾರೋಗ್ಯದಿಂದ ಹಬಳಲುತ್ತಿದ್ದ ಚಿತ್ರದುರ್ಗದ ವ್ಯಕ್ತಿಯೊಬ್ಬರು ಮಣಿಪಾಲದಲ್ಲಿ ತಂಗಿದ್ದ ಲಾಡ್ಜ್‌ನ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಮೃತರನ್ನು ಚಿತ್ರದುರ್ಗದ ಜಗದೀಶಪ್ಪ ಜೆ. ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು, ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಫೆ.20ರಂದು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಬಂದು ಮಣಿಪಾಲ ಈಶ್ವರ ನಗರ ಲಾಡ್ಜ್‌ನ 2ನೇ ಮಹಡಿಯ ರೂಮ್‌ನಲ್ಲಿ ತಂಗಿದ್ದರು. ಜೀವನದಲ್ಲಿ ಜಿಗುಪ್ಸೆಗೊಂಡ ಇವರು, 2ನೇ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ತೀವ್ರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರು, ಮಾ.8ರಂದು ರಾತ್ರಿ ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 9 Mar 2026 8:55 pm

ಮನೆಗೆ ನುಗ್ಗಿ 5.35 ಲಕ್ಷ ರೂ. ಮೌಲ್ಯದ ನಗನಗದು ಕಳವು: ಪ್ರಕರಣ ದಾಖಲು

ಕೋಟ, ಮಾ.9: ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗ ನಗದು ಕಳವು ಮಾಡಿರುವ ಘಟನೆ ಮಾ.8ರಂದು ರಾತ್ರಿ ವೇಳೆ ಬೇಳೂರು ಗ್ರಾಮದ ಗುಳ್ಳಾಡಿ ಎಂಬಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಸತೀಶ ಶೆಟ್ಟಿ ಎಂಬವರು ರಾವುತೇಶ್ವರ ದೇವಸ್ಥಾನದ ಗೆಂಡೋತ್ಸವ ಕಾರ್ಯಕ್ರಮಕ್ಕೆ ಹೆಂಡತಿ ಹಾಗೂ ಮಗಳೊಂದಿಗೆ ಮನೆಗೆ ಬೀಗ ಹಾಕಿ ಹೋಗಿದ್ದು ಪೂಜೆ ಮುಗಿಸಿ ಮನೆಗೆ ಬಂದು ನೋಡಿದಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಮನೆಯ ಮುಖ್ಯ ದ್ವಾರದ ಬೀಗವನ್ನು ಕತ್ತಿಯಿಂದ ಮುರಿದು, ಒಳನುಗ್ಗಿದ ಕಳ್ಳರು, ಕೋಣೆಯ ಕಾಪಾಟಿಲ್ಲಿದ್ದ 2,35,000 ರೂ. ನಗದು ಮತ್ತು ಚಿನ್ನದ ಬ್ರಾಸ್ ಲೈಟ್ ಹಾಗೂ ಕಿವಿಯ ಬೆಂಡೋಲೆಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ. ಇವುಗಳ ಒಟ್ಟು ಮೌಲ್ಯ 5,35,000ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 9 Mar 2026 8:54 pm

ರಾಯಚೂರು | ನರೇಗಾದಡಿ ಕೆಲಸ ನೀಡದ ಆರೋಪ : ಗ್ರಾಕೂಸ್ ಸಂಘಟನೆಯಿಂದ ಪ್ರತಿಭಟನೆ

ರಾಯಚೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ (ಎಂಎನ್‌ಆರ್‌ಇಜಿಎ) ಕೂಲಿ ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದ ಗ್ರಾಮೀಣ ಭಾಗದ ಕಾರ್ಮಿಕರಿಗೆ ಕೆಲಸ ನೀಡುತ್ತಿಲ್ಲ ಎಂದು ಆರೋಪಿಸಿ ಗ್ರಾಮೀಣ ಕೂಲಿಕಾರರ ಸಂಘಟನೆ (ಗ್ರಾಕೂಸ್) ವತಿಯಿಂದ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಕೂಲಿಕಾರರು ಧರಣಿ ನಡೆಸಿದರು. ಬೇಸಿಗೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಯಡಿ ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದ್ದರೂ, ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ಅರ್ಜಿಗಳನ್ನು ಸ್ವೀಕರಿಸುವುದೇ ಇಲ್ಲ ಎಂದು ಅವರು ಆರೋಪಿಸಿದರು. ಜೊತೆಗೆ 15 ದಿನಗಳಾದರೂ ಕಾರ್ಮಿಕರಿಗೆ ಸಮಯಕ್ಕೆ ಸರಿಯಾಗಿ ಕೆಲಸ ನೀಡಲಾಗುತ್ತಿಲ್ಲ ಎಂದು ದೂರಿದರು. ಜಿಲ್ಲಾ ಪಂಚಾಯಿತಿಯಿಂದ ಸೂಚನೆ ಬಂದಿದೆ ಎಂದು ಪಂಚಾಯಿತಿ ಅಧಿಕಾರಿಗಳು ಹೇಳುತ್ತಿದ್ದು, ಕೇಂದ್ರ ಸರ್ಕಾರ 10 ಕಾಮಗಾರಿಗಳು ಬಾಕಿ ಇದ್ದರೆ ಹೊಸ ಕಾಮಗಾರಿಗಳನ್ನು ಅನುಮೋದಿಸಲು ಸಾಧ್ಯವಿಲ್ಲ ಎಂಬ ಆದೇಶವನ್ನು ಹೊರಡಿಸಿದೆ ಎಂದು ಹೇಳಿ ಕಾರ್ಮಿಕರಿಗೆ ಕೆಲಸ ನೀಡದೇ ವಂಚಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಕೇಂದ್ರ ಸರ್ಕಾರ ಕಾರ್ಮಿಕರ ಖಾತೆಗೆ 7 ದಿನಗಳೊಳಗೆ ಕೂಲಿ ಹಣ ಪಾವತಿಸಲಾಗುವುದು ಎಂದು ಘೋಷಿಸಿದ್ದರೂ, ವಾಸ್ತವದಲ್ಲಿ ಅದು ಜಾರಿಯಾಗುತ್ತಿಲ್ಲ. ಇದರಿಂದ ಕಾರ್ಮಿಕರ ಜೀವನದ ಜೊತೆ ಚೆಲ್ಲಾಟವಾಡಲಾಗುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಕೆಲಸ ನೀಡದಿದ್ದಲ್ಲಿ ಕಾನೂನಿನ ಪ್ರಕಾರ ನಿರುದ್ಯೋಗ ಭತ್ಯೆ ನೀಡುವ ಅವಕಾಶವಿದ್ದರೂ ಪಂಚಾಯತ್ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಈ ವಿಷಯದಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು. ಜೊತೆಗೆ ಕೆಲಸ ಮಾಡದ ಕಾರ್ಮಿಕರ ಹೆಸರಿನಲ್ಲಿ ಹಣ ಪಾವತಿಸಿರುವ ಘಟನೆಗಳೂ ನಡೆದಿರುವುದು ವಿಷಾದನೀಯ ಎಂದು ಅವರು ಆತಂಕ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಪ್ರಮುಖರಾದ ಹುಚ್ಚಪ್ಪ, ಮಾರೆಮ್ಮ, ಆಂಜನೇಯ್ಯ, ಬಸವರಾಜ, ಹನುಮಂತಮ್ಮ, ಬಾಬು, ಪದ್ಮಮ್ಮ, ಈರಮ್ಮ, ಗುಂಡಪ್ಪ, ಬಸವರಾಜ, ಶರಣಮ್ಮ, ಯಲ್ಲಮ್ಮ, ಕೃಷ್ಣಮ್ಮ, ಇಂದ್ರಮ್ಮ, ಬಾಬಮ್ಮ ಸೇರಿ ಅನೇಕರಿದ್ದರು.

ವಾರ್ತಾ ಭಾರತಿ 9 Mar 2026 8:53 pm

ಮಣಿಪಾಲ: ಮಾ.11ರಿಂದ ಅಖಿಲ ಭಾರತ ಅಂತರ ವಿವಿ ಚೆಸ್

ಮಣಿಪಾಲ, ಮಾ.9: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ವತಿಯಿಂದ ಪುರುಷರ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಚೆಸ್ ಚಾಂಪಿಯನ್‌ಷಿಪ್ ಮಾ.11ರಿಂದ 13ರವರೆಗೆ ಕೆಎಂಸಿ ಮಣಿಪಾಲದ ಡಾ.ಟಿ.ಎಂ.ಎ.ಪೈ ಸಭಾಂಗಣದಲ್ಲಿ ನಡೆಯಲಿದೆ. ಭಾರತೀಯ ವಿವಿಗಳ ಸಂಘದ (ಎಐಯು) ಸಹಯೋಗದಲ್ಲಿ ಮಾಹೆ ನಾಲ್ಕು ದಿನಗಳ ಚಾಂಪಿಯನ್‌ಷಿಪ್‌ನ್ನು ಆಯೋಜಿಸುತ್ತಿದೆ. ಚಾಂಪಿಯನ್ ಷಿಪ್‌ನ ಉದ್ಘಾಟನಾ ಸಮಾರಂಭ ಮಾ.11ರ ಬುಧವಾರ ಬೆಳಗ್ಗೆ 9:30ಕ್ಕೆ ಡಾ.ಟಿಎಂಎ ಪೈ ಸಭಾಂಗಣದ ಮೂರನೇ ಮಹಡಿಯಲ್ಲಿ ನಡೆಯಲಿದೆ. ಹೊಸದಿಲ್ಲಿಯ ಎಐಯುನ ಹೆಚ್ಚುವರಿ ಕಾರ್ಯದರ್ಶಿ ಮಮತಾ ಆರ್. ಅಗರ್ವಾಲ್ ಅವರು ಸ್ಪರ್ಧೆಗೆ ಚಾಲನೆ ನೀಡಲಿದ್ದಾರೆ. ಮಾಹೆಯ ಪ್ರೊವೈಸ್ ಚಾನ್ಸಲರ್ (ಆರೋಗ್ಯ ವಿಜ್ಞಾನ)ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಾಹೆಯ ಪ್ರೊ ಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ದೇಶಾದ್ಯಂತದಿಂದ ಬರುವ ವಿವಿಧ ವಿಶ್ವವಿದ್ಯಾಲಯಗಳ ಚೆಸ್ ಆಟಗಾರರು ಈ ಚಾಂಪಿಯನ್‌ಷಿಪ್‌ನಲ್ಲಿ ಭಾಗವಹಿಸಲಿದ್ದಾರೆ. ದೇಶದ ಕೆಲವು ಪ್ರಮುಖ ಚೆಸ್ ಆಟಗಾರರು ಇದರಲ್ಲಿ ಸೇರಿದ್ದಾರೆ ಎಂದು ಮಾಹೆಯ ಪ್ರಕಟಣೆ ತಿಳಿಸಿದೆ.

ವಾರ್ತಾ ಭಾರತಿ 9 Mar 2026 8:51 pm

ನಮ್ಮ ಮೆಟ್ರೋ ಹಳದಿ ಮಾರ್ಗದ 3 ನಿಲ್ದಾಣದಿಂದ BMTC ಫೀಡರ್ ಬಸ್‌ಗಳ ಸೇವೆ ಆರಂಭ; ಬೆಳಂದೂರು ಸೇರಿ ಹಲವೆಡೆಗೆ ಸಂಪರ್ಕ

ಹಳದಿ ಮಾರ್ಗದ ನಮ್ಮ ಮೆಟ್ರೋ ಪ್ರಯಾಣಿಕರಿಗಾಗಿ ಬಿಎಂಟಿಸಿ ಫೀಡರ್‌ ಬಸ್‌ ಸೇವೆ ಆರಂಭಿಸಿದೆ. ಹೊಸ ರಸ್ತೆ, ಸಿಂಗಸಂದ್ರ ಹಾಗೂ ಕುಡ್ಲು ಗೇಟ್ ನಿಲ್ದಾಣಗಳಿಂದ ಬಸ್‌ಗಳು ಸುತ್ತಮುತ್ತಲ ಬಡಾವಣೆಗೆ ಸಂಪರ್ಕ ಕಲ್ಪಿಸಲಿವೆ. ಈ ಬಗ್ಗೆ ಬಿಎಂಆರ್‌ಸಿಎಲ್ ಮಾಹಿತಿ ಹಂಚಿಕೊಂಡಿದೆ. ಫೀಡರ್ ಬಸ್‌ ಮಾರ್ಗ ಏನು? ಎಲ್ಲಿಂದ ಎಲ್ಲಿಗೆ ಸಂಪರ್ಕ? ಯಾವೆಲ್ಲಾ ನಿಲ್ದಾಣಗಳು? ಸಂಪೂರ್ಣ ವಿವರ ಇಲ್ಲಿದೆ.

ವಿಜಯ ಕರ್ನಾಟಕ 9 Mar 2026 8:51 pm

ಕಲಬುರಗಿ | ವಿಶ್ವ ಮಹಿಳಾ ದಿನಾಚರಣೆ

ಕಲಬುರಗಿ: ಕರ್ನಾಟಕ ಯುವಶಕ್ತಿ ರೈತರ ಮಕ್ಕಳ ಮಹಾಶಕ್ತಿ ಸಂಘಟನೆಯಿಂದ ನಗರದ ಕನ್ನಡ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಘಟನೆಯ ವತಿಯಿಂದ 2ರಿಂದ 9 ವರ್ಷ ವಯಸ್ಸಿನ 1,000 ಹೆಣ್ಣುಮಕ್ಕಳನ್ನು ದತ್ತು ಪಡೆದು ಅವರ ಹೆಸರಿನಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಯಡಿ ಪೋಸ್ಟ್‌ಆಫೀಸ್ ಖಾತೆ ತೆರೆಯಿಸಿ 15 ವರ್ಷಗಳ ಕಾಲ ಪ್ರತಿ ತಿಂಗಳು 250 ರೂ. ಹಣ ಜಮಾ ಮಾಡುವುದಾಗಿ ಘೋಷಣೆ ಮಾಡಲಾಯಿತು. ಕಾರ್ಯಕ್ರಮವನ್ನು ನಿವೃತ್ತ ಪ್ರಾಂಶುಪಾಲರು, ಸಾಹಿತಿ ಹಾಗೂ ಹೇಮರೆಡ್ಡಿ ಮಲ್ಲಮ್ಮ ಮಹಿಳಾ ಅಭಿವೃದ್ಧಿ ಸಂಸ್ಥೆಯ ರಾಜ್ಯಾಧ್ಯಕ್ಷೆ ಡಾ. ವಿಶಾಲಾಕ್ಷಿ ವಿ. ಕರಡ್ಡಿ ಉದ್ಘಾಟಿಸಿ ಮಾತನಾಡಿದರು. ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಪರಮೇಶ್ವರ ದೇಸಾಯಿ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಧರ್ಮಣ್ಣ ಧನ್ನಿ ಮಾತನಾಡಿದರು. ಸಂಘಟನೆಯ ರಾಜ್ಯಾಧ್ಯಕ್ಷ ಅವ್ವಣಗೌಡ ಪಾಟೀಲ್ ಮಾತನಾಡಿ, ನಮ್ಮ ಸಂಘಟನೆ ಸದಾ ರೈತರ ಹಾಗೂ ವಿದ್ಯಾರ್ಥಿಗಳ ಮಕ್ಕಳ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದೆ. ಮುಂದೆಯೂ ಜನರ ವಿಶ್ವಾಸಕ್ಕೆ ತಕ್ಕಂತೆ ಸೇವಾ ಕಾರ್ಯಗಳನ್ನು ಮುಂದುವರಿಸುತ್ತೇವೆ ಎಂದು ಹೇಳಿದರು.

ವಾರ್ತಾ ಭಾರತಿ 9 Mar 2026 8:50 pm

ಕಳ್ತೂರು ಸಂತೆಕಟ್ಟೆ ಹಿಂದೂ ರುದ್ರಭೂಮಿ ಉದ್ಘಾಟನೆ

ಹೆಬ್ರಿ, ಮಾ.9: 38ನೇ ಕಳ್ತೂರು ಗ್ರಾಮ ಪಂಚಾಯತ್ ಮತ್ತು ಸ್ಮಶಾನ ಅಭಿವೃದ್ಧಿ ಸಮಿತಿಯ ವತಿಯಿಂದ ಸುಮಾರು 30 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡ ಆರ್ಬೆಟ್ಟು ದಿ.ವೆಂಕಟೇಶ ಕಾಮತ್ ಸಾರ್ವಜನಿಕ ಹಿಂದೂ ರುದ್ರಭೂಮಿ ರವಿವಾರ 38ನೇ ಕಳ್ತೂರಿನಲ್ಲಿ ಉದ್ಘಾಟನೆಗೊಂಡಿತು. ಊರಿಗೊಂದು ಸುಸಜ್ಜಿತ ಸ್ಮಶಾನ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿದಂತೆ ಊರಿನ ಅಭಿವೃದ್ಧಿಗೂ ಎಲ್ಲರೂ ಕೈಜೋಡಿಸಿದರೆ ಊರಿನ ಸಮಗ್ರ ಅಭಿವೃದ್ಧಿ ಸಾಧ್ಯವಿದೆ ಎಂದು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್ ಹೇಳಿದರು. ಸ್ಮಶಾನದಲ್ಲೂ ಮನಸ್ಸಿಗೆ ಶಾಂತಿ ದೊರೆಯಬೇಕು, ಅಷ್ಟು ಅಚ್ಚುಕಟ್ಟಾಗಿ ಕಳ್ತೂರಿನಲ್ಲಿ ಸಾರ್ವಜನಿಕ ರುದ್ರ ಭೂಮಿಯನ್ನು ನಿರ್ಮಿಸಲಾಗಿದೆ. ದಾನಿಗಳ ನೆರವಿನಿಂದ ಸಕಲ ಸುಸಜ್ಜಿತ ರುದ್ರಭೂಮಿ ನಿರ್ಮಾಣ ಮಾಡಿರುವುದು ಪುಣ್ಯದ ಕೆಲಸ ಎಂದು ಉಡುಪಿಯ ಮಾಜಿ ಶಾಸಕ ಕೆ.ರಘುಪತಿ ಭಟ್ ಹೇಳಿದರು. ತನ್ನ ತಂದೆಯ ಸ್ಮರಣಾರ್ಥ ರುದ್ರಭೂಮಿ ನಿರ್ಮಿಸಿ ಕೊಟ್ಟ ಉದ್ಯಮಿ ಎ. ಮಾಧವ ಕಾಮತ್ ಮಾತನಾಡಿ ರಾಜಕೀಯ ಬದಿಗೊತ್ತಿ ಎಲ್ಲರೂ ಸೇರಿ ಕೆಲಸ ಮಾಡಿದಾಗ ಊರಿನ ಅಭಿವೃದ್ಧಿ ಸಾದ್ಯವಾಗುತ್ತದೆ. ಸ್ಮಶಾನ ನಿರ್ಮಾಣದ ಮೂಲಕ ನಮ್ಮೂರಿನ ಬಹುಕಾಲದ ಕೊರತೆ ಈಡೇರಿದೆ ಎಂದರು. ಸ್ಮಶಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಬಿ.ಚಂದ್ರಶೇಖರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಸಾರ್ವಜನಿಕ ಹಿಂದೂ ರುದ್ರಭೂಮಿ ನಿರ್ಮಾಣಕ್ಕೆ ನೆರವು ನೀಡಿದ ದಾನಿಗಳನ್ನು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸವಿತಾ ಎ.ಸಿ, ಸಹಕಾರ ನೀಡಿದ ಹಲವರನ್ನು ಗೌರವಿಸಲಾಯಿತು. 38ನೇ ಕಳ್ತೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರಿಗೆ ರುದ್ರಭೂಮಿಯ ಕೀಯನ್ನು ಹಸ್ತಾಂತರಿಸಲಾಯಿತು. ಬ್ರಹ್ಮಾವರ ತಾಲೂಕು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಅಧ್ಯಕ್ಷೆ ಡಾ.ಸುನೀತಾ ಶೆಟ್ಟಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿಯ ಉದ್ಯಮಿ ಪ್ರಸಾದ್ ರಾಜ್ ಕಾಂಚನ್, ಕೊಕ್ಕರ್ಣೆ ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಮೈರ್ಮಾಡಿ ಅಶೋಕ ಕುಮಾರ್ ಶೆಟ್ಟಿ, ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯ ಹೆಬ್ರಿ ತಾಲೂಕಿನ ಯೋಜನಾಧಿಕಾರಿ ಲೀಲಾವತಿ, ದಾನಿಗಳಾದ ಉದ್ಯಮಿ ಎ. ಮಾಧವ ಕಾಮತ್, ನಾಗರಾಜ ಕಾಮತ್, ಮಹೇಶ ಶೆಟ್ಟಿ ಬ್ರಹ್ಮಾವರ, ನರಸಿಂಹ ಗಡಿಯಾರ್ ಭಾಗವಹಿಸಿದ್ದರು. ಕಂಬಳಗದ್ದೆ ಮನೆ ಚಂದ್ರಶೇಖರ ಶೆಟ್ಟಿ, ಜಯರಾಮ ನಾಯ್ಕ್, ಶಿವಪುರ ಶ್ರೀನಿವಾಸ ಹೆಬ್ಬಾರ್, ಸುಧಾಕರ ನಾಯ್ಕ್, ಸ್ಮಶಾನ ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಗಿರೀಶ ಕಾಮತ್, ರವಿ ಪೂಜಾರಿ ಸಂತೆಕಟ್ಟೆ, ಸ್ಮಶಾನ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು, ದಾನಿಗಳು ಉಪಸ್ಥಿತರಿದ್ದರು. ಗಿರೀಶ್ ಕಾಮತ್ ಸ್ವಾಗತಿಸಿ ಚಂದ್ರಶೇಖರ ಶೆಟ್ಟಿ ಪ್ರಸ್ತಾವಿಕವಾಗಿ ಮಾತನಾಡಿದರು. ದೀಕ್ಷಿತ್ ಶೆಟ್ಟಿ ಮತ್ತು ಗಣೇಶ್ ಅರಸಮ್ಮಕಾನು ಕಾರ್ಯಕ್ರಮ ನಿರೂಪಿಸಿದರು.

ವಾರ್ತಾ ಭಾರತಿ 9 Mar 2026 8:49 pm

ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಆರಂಭ : ಕೆ.ವೆಂಕಟೇಶ್

ಬೆಂಗಳೂರು : ಪಶು ಸಂಗೋಪನೆ ಇಲಾಖೆಯಲ್ಲಿ ಖಾಲಿ ಉಳಿದಿರುವ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಪಶುಸಂಗೋಪನೆ ಸಚಿವ ಕೆ. ವೆಂಕಟೇಶ್ ಹೇಳಿದ್ದಾರೆ. ಸೋಮವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಸಿಮೆಂಟ್ ಮಂಜು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, 400 ಪಶು ವೈದ್ಯಾಧಿಕಾರಿಗಳ ಖಾಯಂ ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು. ಸಕಲೇಶಪುರ ಕ್ಷೇತ್ರ ವ್ಯಾಪ್ತಿಯಲ್ಲಿ ಪಶುವೈದ್ಯರು ಮತ್ತು ಸಿಬ್ಬಂದಿ ವರ್ಗದ ಹುದ್ದೆಗಳ ಕೊರತೆ ಇರುವುದು ಸರಕಾರದ ಗಮನಕ್ಕೆ ಬಂದಿರುವುದರಿಂದಲೇ ಹೆಚ್ಚುವರಿಯಾಗಿ 400 ಪಶುವೈದ್ಯಾಧಿಕಾರಿ ಹುದ್ದೆಗಳನ್ನು ಹಾಗೂ 300 ಪಶುವೈದ್ಯಕೀಯ ಪರೀಕ್ಷಕರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಕಳುಹಿಸಲಾಗಿತ್ತು. ಪ್ರಸ್ತಾವನೆಯು ಆರ್ಥಿಕ ಇಲಾಖೆಯ ಪರಿಶೀಲನೆ ಹಂತದಲ್ಲಿ ಇರುವುದಾಗಿ ಅವರು ಉಲ್ಲೇಖಿಸಿದರು. ಹುದ್ದೆಗಳ ಕೊರತೆ ಇದ್ದರೂ ಪಶುವೈದ್ಯಕೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ ಲಭ್ಯವಿರುವ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಅಧಿಕ ಪ್ರಭಾರದಲ್ಲಿರಿಸಿ, ರೈತರ ಜಾನುವಾರುಗಳಿಗೆ ಸಂಚಾರಿ ಪಶುಚಿಕಿತ್ಸಾಲಯ ವಾಹನದ (1962 ಸಹಾಯವಾಣಿ) ಸೌಲಭ್ಯದೊಂದಿಗೆ ರೈತರ ಮನೆ ಬಾಗಿಲಿಗೆ ತೆರಳಿ ಜಾನುವಾರುಗಳಿಗೆ ವಿಳಂಬವಾಗದಂತೆ ಚಿಕಿತ್ಸೆ ಸೌಲಭ್ಯವನ್ನು ಒದಗಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ವಾರ್ತಾ ಭಾರತಿ 9 Mar 2026 8:46 pm

ಆಳಂದ | ಡಾ.ಅಂಬೇಡ್ಕರ್ 136ನೇ ಜಯಂತ್ಯೋತ್ಸವ ಸಮಿತಿ ರಚನೆ

ಆಳಂದ : ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆಯ ಅಂಗವಾಗಿ ಆಳಂದ ತಾಲೂಕು ಮಟ್ಟದಲ್ಲಿ ಉತ್ಸವ ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಪುರುಸಭೆ ನಿಕಟಪೂರ್ವ ಸದಸ್ಯ ಹಾಗೂ ಜಯಂತಿ ಪ್ರಚಾರ ಸಮಿತಿಯ ಅಧ್ಯಕ್ಷ ಶಿವುಪುತ್ರ ನಡಗೇರಿ ತಿಳಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಶ್ರೀರಾಮ ಮಾರುಕಟ್ಟೆಯಲ್ಲಿ ಅದ್ಭುತ ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಜಯಂತಿ ಉತ್ಸವವನ್ನು ಆಚರಿಸಲು ನಿರ್ಧರಿಸಲಾಗಿದೆ. ಹಿರಿಯರು ಮತ್ತು ಯುವಕರನ್ನು ಒಳಗೊಂಡ ಸಮಿತಿಯ ಮೂಲಕ ಅಂಬೇಡ್ಕರ್ ಅವರ ಆದರ್ಶಗಳನ್ನು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ವಿನೂತನ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಹೇಳಿದರು. ಪ್ರತಿವರ್ಷ ಆಳಂದ ಪಟ್ಟಣದ ಭೀಮನಗರದಲ್ಲಿ ನಡೆಯುತ್ತಿದ್ದ ಜಯಂತಿ ಆಚರಣೆಯನ್ನು ಈ ಬಾರಿ ತಾಲೂಕು ಮಟ್ಟದಲ್ಲಿ ಶ್ರೀರಾಮ ಮಾರುಕಟ್ಟೆಯಲ್ಲಿ ಅದ್ದೂರಿಯಾಗಿ ನಡೆಸಲು ನಿರ್ಧರಿಸಲಾಗಿದೆ. ಪಟ್ಟಣದ ಜೊತೆಗೆ ಗ್ರಾಮೀಣ ಭಾಗದ ಎಲ್ಲರೂ ಐಕ್ಯಬದ್ಧರಾಗಿ ಉತ್ಸವದ ಯಶಸ್ಸಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಉತ್ಸವ ಸಮಿತಿಯ ಅಧ್ಯಕ್ಷರಾಗಿ ಸೂರ್ಯಕಾಂತ್ ಸಾಲೆಗಾಂವ್, ಉಪಾಧ್ಯಕ್ಷರಾಗಿ ಗಂಗಾರಾಮ್ ಮುದ್ಗಾಲೆ, ಖಜಾಂಚಿಯಾಗಿ ಪಾಂಡುರಂಗ ಮೊದಲೆ, ಕಾರ್ಯದರ್ಶಿಯಾಗಿ ದಯಾನಂದ್ ಸಾಲೆಗಾಂವ್, ಸಹ ಕಾರ್ಯದರ್ಶಿಯಾಗಿ ಲಕ್ಷ್ಮಣ್ ಝಳಕಿಕರ್ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಚಂದ್ರಕಾಂತ್ ಜಂಗಲೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು. ಪ್ರಚಾರ ಸಮಿತಿಯ ಉಪಾಧ್ಯಕ್ಷ ಜೈ ಭೀಮ್ ಆರ್.ದೊಡ್ಡಿ ಮುತ್ತಣ್ಣಾ ಎಸ್.ಜಂಗಲೆ. ಪಿಂಟು ಎಸ್. ಸಾಲೆಗಾಂವ್, ಸಚಿನ್ ಎಸ್. ದೇವನೂರ್, ಪ್ರಶಾಂತ್ ಎಸ್. ವಗ್ಗೆ, ಅಜೆಯ್ ಸಿ. ಮಂಟಗಿಕರ್, ಕೆಂಚಣ್ಣ ಸಿ. ಝಳಕೆ, ವಿಕ್ರಮ ಎಸ್. ಅಷ್ಟಗಿ, ಸುಧಾಕರ್ ಸಿ. ಮೊದಲೆ, ಪ್ರವೀಣ್ ಪಿ. ಮೊದಲೆ, ಪ್ರಜ್ವಲ್ ಎಚ್. ಮಂಟಕಿರ್ ಇದ್ದರು.

ವಾರ್ತಾ ಭಾರತಿ 9 Mar 2026 8:46 pm

ಗಲ್ಫ್‌ನಲ್ಲಿರುವ ಕನ್ನಡಿಗರ ರಕ್ಷಣೆ; ವಿದೇಶಾಂಗ ಸಚಿವ ಜೈಶಂಕರ್‌ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ

ಉಡುಪಿ, ಮಾ.9: ಬಹರೈನ್, ಕತಾರ್, ಕುವೈಟ್, ದುಬೈ ಮುಂತಾದ ಕೊಲ್ಲಿ ರಾಷ್ಟ್ರಗಳಲ್ಲಿರುವ ಕನ್ನಡಿಗರ ಮನವಿಯಂತೆ, ಯುದ್ಧಪೀಡಿತ ಪ್ರದೇಶಗಳ ಭಾರತೀಯರನ್ನು ರಕ್ಷಿಸುವ ಕುರಿತಂತೆ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಇಂದು ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಅವರನ್ನು ಹೊಸದಿಲ್ಲಿಯ ಪಾರ್ಲಿಮೆಂಟ್ ಭವನದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿ ಮನವಿ ಸಲ್ಲಿಸಿದರು. ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ ಭಾರತೀಯರ ರಕ್ಷಣೆಯ ಬಗ್ಗೆ ವಿವರಿಸಿದ ಸಚಿವ ಜೈಶಂಕರ್, ಆ ಪ್ರದೇಶದ ವಿಮಾನ ನಿಲ್ದಾಣದ ಮೇಲೆ ದಾಳಿಯಾಗುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರಕಾರ ಪ್ರಯತ್ನ ಮಾಡುತ್ತಿದೆ.ಯಾವುದೇ ಆತಂಕ ಬೇಡ ಎಂದು ಭರವಸೆ ನೀಡಿದರು. ಈ ಮಧ್ಯೆ ಲೋಕಸಭಾ ಸದನದಲ್ಲಿ ಸರಕಾರದ ಪರವಾಗಿ ಸ್ವಯಂ ಪ್ರೇರಿತ ಹೇಳಿಕೆ ನೀಡಿದ ವಿದೇಶಾಂಗ ಸಚಿವರು, ಸೌದಿ ಅರೇಬಿಯಾ, ಓಮನ್, ಜೋರ್ಡನ್, ಬಹರೈನ್, ಕುವೈಟ್, ಕತಾರ್ ಸಹಿತ ಜಗತ್ತಿನಾದ್ಯಂತ ಇರುವ ಭಾರತೀಯರನ್ನು ರಕ್ಷಿಸುವ ಹೊಣೆ ಕೇಂದ್ರ ಸರಕಾರ ನಿರ್ವಹಿಸುತ್ತಿದ್ದು, ಈಗಾಗಲೇ 49 ವಿಮಾನಗಳು ಗಲ್ಫ್ ರಾಷ್ಟ್ರಗಳಿಂದ ಭಾರತಕ್ಕೆ ಬಂದಿವೆ ಎಂದರು. ವಿವಿಧ ಸೌಲಭ್ಯಗಳ ಮೂಲಕ ಈಗಾಗಲೇ 67 ಸಾವಿರ ಮಂದಿ ಭಾರತಕ್ಕೆ ಮರಳಿ ಬಂದಿದ್ದಾರೆ. ಇರಾನ್ ಸಂಪರ್ಕ ಸಿಗದಷ್ಟು ಕಠಿಣ ಪರಿಸ್ಥಿತಿ ಎದುರಿಸುತ್ತಿದೆ. ಯುದ್ಧ ತಪ್ಪಿಸಲು ಮಾತುಕತೆ ಒಂದೇ ಪರಿಹಾರ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಯುದ್ಧದಲ್ಲಿ ತೊಡಗಿಕೊಂಡ ದೇಶಗಳಿಗೆ ಮನವರಿಕೆ ಮಾಡುತ್ತಿದ್ದಾರೆ. ಒಟ್ಟು ಒಂದು ಕೋಟಿ ಭಾರತೀಯ ಪೌರರು ಗಲ್ಫ್ ರಾಷ್ಟ್ರದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ ಎಂದರು. ಯುದ್ಧದ ಮೂಲಕ ಇಂಧನದ ಸಮಸ್ಯೆ ಸೃಷ್ಟಿಯಾಗಿದೆ. ಭಾರತ ಜಗತ್ತಿನಲ್ಲಿ ಶಾಂತಿ ನೆಲೆಸಲು ಸರ್ವ ಯತ್ನ ಮಾಡುತ್ತಿದೆ. ವಿದೇಶದಲ್ಲಿರುವ ದೇಶದ ಜನರ ಭದ್ರತೆ ಮತ್ತು ಸುರಕ್ಷತೆಯ ಬಗ್ಗೆ ಕಾಳಜಿಯಿಂದ ಕೇಂದ್ರ ಕೆಲಸ ಮಾಡುತ್ತಿದೆ. ಸಂಕಷ್ಟದಲ್ಲಿರುವವರನ್ನು ಭಾರತಕ್ಕೆ ಕರೆ ತರುತ್ತೇವೆ ಎಂದು ಸದನದಲ್ಲಿ ಕೇಂದ್ರ ಸರಕಾರದ ಪರವಾಗಿ ಸಚಿವ ಜೈಶಂಕರ್ ಹೇಳಿಕೆ ನೀಡಿದ್ದಾರೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾರ್ತಾ ಭಾರತಿ 9 Mar 2026 8:46 pm