SENSEX
NIFTY
GOLD
USD/INR

Weather

20    C
... ...View News by News Source

ನ.18ರಂದು ಎಸ್‌ಜೆಎಂ ರಾಜ್ಯ ಮಟ್ಟದ ಮುಅಲ್ಲಿಂ ಮೆಹರ್ಜಾನ್

ಮಂಗಳೂರು : ಮದ್ರಸ ಅಧ್ಯಾಪಕರುಗಳಲ್ಲಿ ಅಡಗಿರುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಎಸ್ ಜೆ ಎಂ ಕರ್ನಾಟಕ ರಾಜ್ಯ ಹಮ್ಮಿಕೊಂಡ ಮುಅಲ್ಲಿಂ ಮೆಹರ್ಜಾನ್ ಇದರ ರಾಜ್ಯ ಮಟ್ಟದ ಸಮಾರಂಭ ಚಿಕ್ಕಮಗಳೂರು ಜಿಲ್ಲೆಯ ಉಪ್ಪಳ್ಳಿಯ ಶಾದ್ಸುಲೀ ಜುಮಾ ಮಸ್ಜಿದ್ ವಠಾರದಲ್ಲಿ ನ.18 ರಂದು ನಡೆಯಲಿದೆ. ಸ್ವಾಗತ ಸಮಿತಿ ಚೇರ್ಮಾನ್ ಉಸ್ಮಾನ್ ಹಾಜಿ ಹಂಡುಗುಳಿ ಧ್ವಜಾರೋಹಣಗೈಯಲಿರುವರು. ಉದ್ಘಾಟನಾ ಸಮಾರಂಭವು ಬೆಳಿಗ್ಗೆ 07 - 30 ಕ್ಕೆ ನಡೆಯಲಿದ್ದು, ಎಸ್ ಜೆ ಯು ಚಿಕ್ಕಮಗಳೂರು ಜಿಲ್ಲೆ ಅಧ್ಯಕ್ಷರಾದ ಅಸ್ಸಯ್ಯಿದ್ ಎಪಿಎಸ್ ತಂಙಳ್ ಉಪ್ಪಳ್ಳಿ ದುಆ ನೆರವೇರಿಸಲಿರುವರು. ಎಸ್ ಜೆ ಎಂ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಬ್ದುಲ್ ರಹ್ಮಾನ್ ಮದನಿ ಜೆಪ್ಪು ಅಧ್ಯಕ್ಷತೆ ವಹಿಸಲಿರುವರು. ಎಸ್ ಎಂ ಎ ರಾಜ್ಯಾಧ್ಯಕ್ಷರಾದ ಅಸ್ಸಯ್ಯಿದ್ ಇಸ್ಮಾಯಿಲ್ ತಂಙಳ್ ಉಜಿರೆ ಉದ್ಘಾಟಿಸಲಿರುವರು. ರಾಜ್ಯ ಮಟ್ಟದ ಮುಅಲ್ಲಿಂ ಮೆಹರ್ಜಾನ್ ಸ್ಪರ್ಧೆಗಳಲ್ಲಿ ಒಟ್ಟು ಹತ್ತು ಜಿಲ್ಲೆಗಳ 240ಕ್ಕೂ ಹೆಚ್ಚು ಸ್ಪರ್ಧಾರ್ಥಿಗಳು ಭಾಗವಹಿಸಲಿದ್ದು, ಮೂರು ವೇದಿಕೆಗಳಲ್ಲಿ ಹೈಝೋನ್ ಮತ್ತು ಗ್ರೌಂಡ್ ಝೋನ್ ವಿಭಾಗದಲ್ಲಿ 39 ಸ್ಪರ್ಧೆಗಳು ನಡೆಯಲಿವೆ. ಅಸ್ಸಯ್ಯಿದ್ ಸ್ವಾಲಿಹ್ ತಂಙಳ್ ಉಪ್ಪಳ್ಳಿ ಟ್ರೋಫಿ ವಿತರಣೆ ನಡೆಸಲಿರುವರು.

ವಾರ್ತಾ ಭಾರತಿ 16 Nov 2025 8:37 am

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಸೋಲು; ಕಾಂಗ್ರೆಸ್ ನಾಯಕತ್ವಕ್ಕೆ ಸ್ಟಾಲಿನ್ ಸಂದೇಶ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಸೋಲಿನ ನಂತರ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕಾಂಗ್ರೆಸ್ ನಾಯಕತ್ವಕ್ಕೆ ಮಹತ್ವದ ಸಂದೇಶ ರವಾನಿಸಿದ್ದಾರೆ. ಗೆಲುವಿಗೆ ಸ್ಪಷ್ಟ ರಾಜಕೀಯ ನಿಲುವು, ಮೈತ್ರಿ ಶಿಸ್ತು ಮತ್ತು ಕಲ್ಯಾಣ ಕಾರ್ಯಕ್ರಮಗಳ ಮೇಲೆ ಜನರ ವಿಶ್ವಾಸ ಮುಖ್ಯ ಎಂದು ಅವರು ಹೇಳಿದ್ದಾರೆ. ಚುನಾವಣಾ ಆಯೋಗದ ಕಾರ್ಯವೈಖರಿಯನ್ನೂ ಅವರು ಪ್ರಶ್ನಿಸಿದ್ದಾರೆ. ಇದು ಕಾಂಗ್ರೆಸ್ ಪಕ್ಷಕ್ಕೆ ಎಚ್ಚರಿಕೆಯ ಗಂಟೆಯಾಗಿದೆ.

ವಿಜಯ ಕರ್ನಾಟಕ 16 Nov 2025 8:26 am

ಐಪಿಎಲ್ 2026: ಆರ್‌ಸಿಬಿ ಉಳಿಸಿಕೊಂಡಿರುವ ಆಟಗಾರರ ಪಟ್ಟಿ

IPL 2026 RCB: ಐಪಿಎಲ್ 2025 ಫೈನಲ್‌ ಪಂದ್ಯದಲ್ಲಿ ಆರ್‌ಸಿಬಿ ಪಂಜಾಬ್ ಕಿಂಗ್ಸ್‌ ವಿರುದ್ಧ ಗೆದ್ದು ಚೊಚ್ಚಲ ಟ್ರೋಫಿ ಗೆದ್ದುಕೊಂಡಿತು. ಇದೀಗ ಎಲ್ಲರ ಕಣ್ಣು 2026ರ ಸೀಸನ್‌ನತ್ತ ನೆಟ್ಟಿದ್ದು, ಮಿನಿ ಹರಾಜಿಗೂ ಮುನ್ನ ಬೆಂಗಳೂರು ರಿಟೈನ್‌ ಆಟಗಾರರ ಪಟ್ಟಿಯನ್ನು ಪ್ರಟಕ ಮಾಡಿದೆ. ಹಾಗಾದ್ರೆ, ಯಾವೆಲ್ಲಾ ಆಟಗಾರರನ್ನು ಉಳಿಸಿಕೊಂಡಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಹಾಲಿ

ಒನ್ ಇ೦ಡಿಯ 16 Nov 2025 8:09 am

ಮೊಮೊ ಮಾರಾಟದಿಂದ ದಿನಕ್ಕೆ ಲಕ್ಷ ರೂಪಾಯಿ ಗಳಿಕೆ : ಇನ್‍ಸ್ಟಾಗ್ರಾಂನಲ್ಲಿ ವಿಡಿಯೊ ವೈರಲ್

ಹೊಸದಿಲ್ಲಿ: ಮೊಮೊ ಮಾರಾಟಗಾರನೊಬ್ಬ ಬಿಕಾಂ ಪದವೀಧರನಿಗಿಂತ ಹೆಚ್ಚು ಆದಾಯ ಗಳಿಸಲು ಸಾಧ್ಯವೇ? ಎಂಬ ಪ್ರಶ್ನೆಯೊಂದಿಗೆ ಇನ್‍ಸ್ಟಾಗ್ರಾಂನಲ್ಲಿ ಕಿರು ವಿಡಿಯೊ ಪೋಸ್ಟ್ ಮಾಡಿದ ಕಂಟೆಂಟ್ ಕ್ರಿಯೆಟರ್ ಕ್ಯಾಸಿ ಪೆರೇರಾ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ನಾಂದಿ ಹಾಡಿದ್ದಾರೆ. ರಸ್ತೆ ಬದಿಯ ಮೊಮೊ ಸ್ಟಾಲ್‍ ನಲ್ಲಿ ಒಂದು ದಿನ ಕೆಲಸ ಮಾಡುವ ದೃಶ್ಯಾವಳಿಯನ್ನು ಈ ತುಣುಕಿನಲ್ಲಿ ಪೆರೇರಾ ದಾಖಲಿಸಿದ್ದಾರೆ. ಗ್ರಾಹಕರಿಗೆ ನೀಡುವುದು ಹೇಗೆ ಹಾಗೂ ಒಂದು ಪ್ಲೇಟ್‍ನಲ್ಲಿ ಎಷ್ಟು ಮೊಮೋಗಳು ಇರುತ್ತವೆ ಎನ್ನುವ ಮೂಲ ಅಂಶಗಳನ್ನು ಕಲಿತುಕೊಳ್ಳುವಲ್ಲಿಂದ ಅವರು ದಿನವನ್ನು ಆರಂಭಿಸಿದರು. ಮೊದಲು ಅಧೀರರಾದಂತೆ ಕಂಡುಬಂದರೂ, ಗ್ರಾಹಕರು ಲಗ್ಗೆ ಇಡುತ್ತಿದ್ದಂತೇ ಆರಾಮವಾಗಿ ಕಾರ್ಯ ನಿಭಾಯಿಸಿದರು. ಈ ಅಂಗಡಿ ಎಷ್ಟರಮಟ್ಟಿಗೆ ಪ್ರಖ್ಯಾತವಾಗಿದೆ ಎಂದು ಅವರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಮೊದಲ ಒಂದು ಗಂಟೆಯಲ್ಲಿ 118 ಪ್ಲೇಟ್ ಮೊಮೋ ಮಾರಿದ ಪೆರೇರಾ ಆ ಬಳಿಕ ಮೊಮೋಸ್ ಕರಿಯುವುದು, ನೀಡಲು ಸಿದ್ಧತೆ ಮಾಡಿಕೊಳ್ಳುವುದು, ನೀರು ಮರು ಭರ್ತಿ, ಬಿಸಿ ಸೂಪ್ ಕುದಿಸುವುದು ಮುಂತಾದ ಕಾರ್ಯಗಳಿಗಾಗಿ ಅಲ್ಪಕಾಲ ವಿರಾಮ ನೀಡಿದರು. ಸಂಜೆ 5 ರಿಂದ ರಾತ್ರಿ 10ರವರೆಗೆ 950 ಪ್ಲೇಟ್ ಮೊಮೋವನ್ನು ಪ್ಲೇಟ್‍ಗೆ 110 ರೂಪಾಯಿ ದರದಲ್ಲಿ ಮಾರಾಟ ಮಾಡಿದ್ದಾಗಿ ಪೆರೇರಾ ಹೇಳಿದ್ದಾರೆ. ದಿನದ ಆದಾಯ 1,04,500 ರೂಪಾಯಿ. ಇದೇ ವ್ಯಾಪಾರ ಮುಂದುವರಿದರೆ ತಿಂಗಳ ಆದಾಯ 31.35 ಲಕ್ಷ ರೂಪಾಯಿ ಎಂಬ ಲೆಕ್ಕಾಚಾರ ಅವರದ್ದು. ಔಪಚಾರಿಕ ಪದವಿಯಲ್ಲದೇ ಆದಾಯ ಗಳಿಕೆ ಅವಕಾಶಗಳ ಬಗೆಗಿನ ಚರ್ಚೆಗೆ ಇದು ಗ್ರಾಸವಾಗಿದೆ. ಬಿಕಾಂ ಪದವೀಧರ ಸ್ನೇಹಿತರೊಂದಿಗೆ ಹಾಸ್ಯಮಯವಾಗಿ ಈ ವಿಡಿಯೊವನ್ನು ಹಲವರು ಹಂಚಿಕೊಂಡಿದ್ದಾರೆ. ಈ ವೈರಲ್ ವಿಡಿಯೊ ಈಗಾಗಲೇ 18 ದಶಲಕ್ಷ ವೀಕ್ಷಣೆಗಳನ್ನು ಕಂಡಿದೆ. ವಿಡಿಯೊ ನೋಡಿ ಅಚ್ಚರಿಯಿಂದ ಹಲವು ವೀಕ್ಷಕರು ಉದ್ಗರಿಸಿದ್ದಾರೆ. ಒಬ್ಬರು ತಪ್ಪನ್ನು ತಿದ್ದಿ ಇದು 'ಮೊಮೊ' ಮೊಮೋಸ್ ಅಲ್ಲ ಎಂದು ಸ್ಪಷ್ಟಪಡಿಸಿದ್ದರೆ, ಮತ್ತೊಬ್ಬರು ಹಾಸ್ಯಮಯವಾಗಿ ಇಷ್ಟು ನಾನು ಇಡೀ ವರ್ಷದಲ್ಲೂ ಗಳಿಸುವುದಿಲ್ಲ ಎಂದು ಹೇಳಿದ್ದಾರೆ. ಹಲವರು ಕೆಲಸ ಖಾಲಿ ಇದೆಯೇ ಎಂದ ಹಾಸ್ಯಮಯವಾಗಿ ಪ್ರಶ್ನಿಸಿ ಭೈಯ್ಯಾ ಕಾಮ್ ಪೇ ಲಗಾ ಲೋ ಪ್ಲೀಸ್ ಎಂದು ಹೇಳಿದ್ದಾರೆ. ಪ್ರತಿಯೊಬ್ಬರ ಗಳಿಕೆಯೂ ಬಿಕಾಂ ಪದವೀಧರರಿಗಿಂತ ಹೆಚ್ಚು ಎಂದು ಮತ್ತೊಬ್ಬರು ವಿಶ್ಲೇಷಿಸಿದ್ದಾರೆ. https://www.instagram.com/reel/DQmKBUeEga4/?igsh=MWJrcHRkMGJ4MDB3YQ==

ವಾರ್ತಾ ಭಾರತಿ 16 Nov 2025 8:07 am

ತಿಹಾರ್ ಜೈಲಿನಲ್ಲಿ ಜೀವಕ್ಕೆ ಅಪಾಯವಿದೆ ಎಂದ ಅತ್ಯಾಚಾರ ಆರೋಪಿ ಚೈತನ್ಯಾನಂದ ಸ್ವಾಮಿ; ವರದಿ ಕೇಳಿದ ದಿಲ್ಲಿ ನ್ಯಾಯಾಲಯ

ಹೊಸದಿಲ್ಲಿ: ತಿಹಾರ್ ಜೈಲಿನಲ್ಲಿ ತನ್ನ ಜೀವಕ್ಕೆ ಅಪಾಯವಿದೆ ಎಂದು ಸ್ವಯಂಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಸರಸ್ವತಿ ಹೇಳಿಕೆ ನೀಡಿದ ಬಳಿಕ ಈ ಬಗ್ಗೆ ಯಥಾಸ್ಥಿತಿ ವರದಿ ಸಲ್ಲಿಸುವಂತೆ ದೆಹಲಿ ನ್ಯಾಯಾಲಯ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಿದೆ. ಪ್ರಥಮ ದರ್ಜೆ ಜ್ಯುಡೀಶಿಯಲ್ ಮ್ಯಾಜಿಸ್ಟ್ರೇಟ್ ಅನಿಮೇಶ್ ತ್ರಿಪಾಠಿ ಅವರೆದುರು ವಿಚಾರಣೆ ವೇಳೆ ಚೈತನ್ಯಾನಂದ ಸರಸ್ವತಿ ಈ ಹೇಳಿಕೆ ನೀಡಿ, ತಿಹಾರ್ ಜೈಲಿನ ಒಳಗೆ ತನ್ನ ಜೀವಕ್ಕೆ ಅಪಾಯವಿದ್ದು, ಕೋರ್ಟ್ ಸೂಚನೆಯ ಹೊರತಾಗಿಯೂ ಕೇಸರಿ ರಮಾಲು ಧರಿಸಲು ಮತ್ತು ಪಥ್ಯಾಹಾರ ಸೇವನೆಗೆ ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿದರು. ಜೈಲಿನಲ್ಲಿ ಜೀವಕ್ಕೆ ಅಪಾಯವಿದೆ ಎಂದು ಆರೋಪಿ ಹೇಳಿಕೆ ಸಲ್ಲಿಸಿದ್ದು, ಜೈಲು ಅಧೀಕ್ಷಕರಿಗೆ ಮೂರು ಬಾರಿ ಮನವಿಗಳನ್ನು ಸಲ್ಲಿಸಿದರೂ ಕೇಸರಿ ವಸ್ತ್ರಧರಿಸಲು ಅವಕಾಶ ನೀಡುತ್ತಿಲ್ಲ ಎನ್ನಲಾಗಿದೆ ಎಂದು ನ್ಯಾಯಾಧೀಶರು ಹೇಳಿದರು. ಈ ಹಿನ್ನೆಲೆಯಲ್ಲಿ ವಿವರವಾದ ಯಥಾಸ್ಥಿತಿ ವರದಿಯನ್ನು ಜೈಲು ಅಧಿಕಾರಿಗಳು ಮುಂದಿನ ವಿಚಾರಣೆ ನಡೆಯುವ ನ.18ರ ಒಳಗಾಗಿ ಸಲ್ಲಿಸುವಂತೆ ನ್ಯಾಯಾಧೀಶರು ಸೂಚಿಸಿದರು. ಕಳೆದ ವಾರ ಆರೋಪಿ ಪಾಟಿಯಾಲಾ ಹೌಸ್ ಕೋರ್ಟ್‍ನಲ್ಲಿ ಜಾಮೀನು ಅರ್ಜಿಯನ್ನು ಹಿಂದಕ್ಕೆ ಪಡೆದು, ದಿಲ್ಲಿ ಪೊಲೀಸರು ಆರೋಪಪಟ್ಟಿ ಸಲ್ಲಿಸುವವರೆಗೆ ಕಾಯುವುದಾಗಿ ಆರೋಪಿ ಪರ ವಕೀಲರು ಹೇಳಿದ್ದರು.

ವಾರ್ತಾ ಭಾರತಿ 16 Nov 2025 7:58 am

ಹೊಂಡಗಳೇ ತುಂಬಿದ ಕೌಠಾ-ವಡಗಾಂವ್ ಮುಖ್ಯರಸ್ತೆ

ಪ್ರಯಾಣಿಕರ ಪರದಾಟ

ವಾರ್ತಾ ಭಾರತಿ 16 Nov 2025 7:42 am

ಕತ್ತು ನೋವು : ಸ್ಟ್ರೆಚರ್ ಮೂಲಕ ಆ್ಯಂಬುಲೆನ್ಸ್ ನಲ್ಲಿ ತೆರಳಿದ ಗಿಲ್

ಕೊಲ್ಕತ್ತಾ: ಶನಿವಾರ ಸಂಜೆ ಮೈದಾನದಲ್ಲಿ ತೀವ್ರ ಕುತ್ತಿಗೆ ನೋವಿನಿಂದ ಬಳಲಿದ ಶುಭಮನ್ ಗಿಲ್ ಅವರನ್ನು ಸ್ಟ್ರೆಚರ್ ಮೂಲಕ ಆ್ಯಂಬುಲೆನ್ಸ್ ನಲ್ಲಿ ಕರೆದೊಯ್ದ ಹಿನ್ನೆಲೆಯಲ್ಲಿ ಈಡನ್ ಗಾರ್ಡನ್ಸ್ ನಲ್ಲಿ ನಡೆಯುತ್ತಿರುವ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದ ಉಳಿಕೆ ಅವಧಿಯಲ್ಲಿ ಭಾರತ ತಂಡದ ನಾಯಕ ಆಡುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಇದಕ್ಕೂ ಮುನ್ನ ಗಿಲ್ ನಾಲ್ಕು ಮಂದಿಯ ಸಹಾಯದಿಂದ ಮೈದಾನದಿಂದ ಹೊರ ನಡೆದಿದ್ದರು. ಸೈಮನ್ ಹರ್ಮರ್ ಅವರ ಎಸೆತವನ್ನು ಬೌಂಡರಿಗೆ ಅಟ್ಟುವ ಸಂದರ್ಭದಲ್ಲಿ ಗಿಲ್ ಅವರಿಗೆ ತೀವ್ರ ಕತ್ತಿನ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ತಂಡದ ವೈದ್ಯರು ಧಾವಿಸಿದರು. ಕೇವಲ ಮೂರು ಎಸೆತಗಳಲ್ಲಿ ನಾಲ್ಕು ರನ್‍ಗಳಾಗಿದ್ದಾಗ ಗಾಯಗೊಂಡು ನಿವೃತ್ತಿಯಾದರು. ಭಾರತ ತಂಡದ ನಾಯಕನನ್ನು ವುಡ್‍ಲ್ಯಾಂಡ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶನಿವಾರ ರಾತ್ರಿ ವೈದ್ಯರು ನಿಗಾ ವಹಿಸಿದ್ದಾರೆ. ಗಿಲ್ ಅವರನ್ನು ಕೊರಳುಪಟ್ಟಿ ಹಾಕಿ ಆಸ್ಪತ್ರೆಗೆ ಕರೆದೊಯ್ದಿರುವುದನ್ನು ನೋಡಿದರೆ, ಅವರ ಗಾಯದ ತೀವ್ರತೆ ಬಗ್ಗೆ ಮತ್ತಷ್ಟು ಆತಂಕ ವ್ಯಕ್ತವಾಗಿದೆ. ದಕ್ಷಿಣ ಆಫ್ರಿಕಾದ ಸಹಾಯಕ ಕೋಚ್ ಮೋರ್ನ್ ಮೊರ್ಕೇಲ್ ಅವರು ರಾತ್ರಿಯ ನಿದ್ದೆ ಸರಿಯಾಗದೇ ಇರುವುದು ಇದಕ್ಕೆ ಕಾರಣ ಎಂದು ಹೇಳಿದ್ದಾರೆ. ಅವರಿಗೆ ಹೇಗೆ ಕುತ್ತಿಗೆಯ ಸೆಳೆತ ಕಾಣಿಸಿಕೊಂಡಿತು ಎಂದು ಮೊದಲು ನಿರ್ಧರಿಸಬೇಕಾಗಿದೆ. ರಾತ್ರಿ ಸರಿಯಾಗಿ ನಿದ್ದೆಯಾಗದಿರುವುದು ಬಹುಶಃ ಕಾರಣವಿರಬಹುದು. ಕಾರ್ಯಭಾರದ ಒತ್ತಡದಿಂದ ಎಂದು ನನಗೆ ಅನಿಸುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ವಾರ್ತಾ ಭಾರತಿ 16 Nov 2025 7:32 am

RCB: ಐಪಿಎಲ್‌ 2026 ಮಿನಿ ಹರಾಜಿಗೂ ಮುನ್ನ ಕನ್ನಡಿದ ಮಯಾಂಕ್‌ ಅಗರ್ವಾಲ್‌ ಸೇರಿ 8 ಆಟಗಾರರನ್ನ ಕೈಬಿಟ್ಟ ಆರ್‌ಸಿಬಿ

IPL 2026 RCB Team: ಆರ್‌ಸಿಬಿ ಐಪಿಎಲ್ 2025 ಫೈನಲ್‌ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್‌ ವಿರುದ್ಧ ಗೆದ್ದು ಚಾಂಪಿಯನ್‌ ಆಯಿತು. ಇದೀಗ ಎಲ್ಲರ ಕಣ್ಣು 2026ರ ಸೀಸನ್‌ನತ್ತ ನೆಟ್ಟಿದೆ. ಮುಂದಿನ ಆವೃತ್ತಿ ಮಿನಿ ಹರಾಜಿಗೂ ಮುನ್ನ ಬೆಂಗಳೂರು ರಿಟೈನ್‌ ಪಟ್ಟಿಯನ್ನು ಪ್ರಟಕ ಮಾಡಿದೆ. ಈ ವೇಳೆ ಕನ್ನಡಿಗ ಮಯಾಂಕ್‌ ಅಗರ್ವಾಲ್ ಸೇರಿ 8 ಆಟಗಾರರನ್ನು ಬಿಡುಗಡೆ ಮಾಡಿದೆ.

ಒನ್ ಇ೦ಡಿಯ 16 Nov 2025 7:28 am

ನಿತೀಶ್ ಕುಮಾರ್ ನಿವಾಸಕ್ಕೆ ಸಚಿವರ ದಂಡು; ಪಾಟ್ನಾ-ದಿಲ್ಲಿಯಲ್ಲಿ ಸರಕಾರ ರಚನೆ ಮಾತುಕತೆ

ಪಾಟ್ನಾ: ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಮರಳಿರುವ ಆಡಳಿತಾರೂಢ ಎನ್‍ಡಿಎ ಕೂಟ ಬಿಹಾರದಲ್ಲಿ ನೂತನ ಸರಕಾರ ರಚನೆಗೆ ಮಾತುಕತೆ ಆರಂಭಿಸಿದೆ. ಹೊಸ ಸರಕಾರ ರಚನೆಗೆ ಅನುವು ಮಾಡಿಕೊಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಸೋಮವಾರ ರಾಜೀನಾಮೆ ನೀಡಲಿದ್ದಾರೆ ಎಂದು ಹಿರಿಯ ಜೆಡಿಯು ಮುಖಂಡರೊಬ್ಬರು ಹೇಳಿದ್ದಾರೆ. ನಿರ್ಗಮನ ಸರ್ಕಾರದ ಕೊನೆಯ ಸಚಿವ ಸಂಪುಟ ಸಭೆ ನಡೆಸಿದ ಬಳಿಕ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸುತ್ತಾರೆ ಎಂದು ಹೇಳಲಾಗಿದೆ. ವಾಪಸ್ಸಾದ ಬಳಿಕ ಅವರು ಹೊಸದಾಗಿ ಆಯ್ಕೆಯಾದ 85 ಮಂದಿ ಜೆಡಿಯು ಶಾಸಕರ ಸಭೆ ನಡೆಸುವರು. ಆ ಬಳಿಕ ಎನ್‍ಡಿಎ ಶಾಸಕರ ಪ್ರತ್ಯೇಕ ಸಭೆ ನಡೆಯಲಿದ್ದು, ಇದಕ್ಕೆ ಸ್ಥಳ ನಿಗದಿಯಾಗಬೇಕಿದೆ. 89 ಶಾಸಕರನ್ನು ಹೊಂದಿರುವ ಬಿಜೆಪಿ ಅತಿದೊಡ್ಡ ಪಕ್ಷವಾಗಿದ್ದು, ಸರಕಾರ ರಚನೆ ಬಗ್ಗೆ ಭಾನುವಾರ ಅಥವಾ ಸೋಮವಾರ ಅಧಿಕೃತ ಹೇಳಿಕೆ ಬಿಡುಗಡೆ ಮಾಡಲಿದೆ. ಬಿಜೆಪಿಯ ಅಧಿಕೃತ ಘೋಷಣೆ ಬಳಿಕ ಎನ್‍ಡಿಎ ಶಾಸಕರು ನಿತೀಶ್ ಕುಮಾರ್ ಅವರನ್ನು ನೂತನ ನಾಯಕನಾಗಿ ಆಯ್ಕೆ ಮಾಡಲಿದ್ದಾರೆ ಎಂದು ಮೂಲಗಳು ಹೇಳಿವೆ. ಬುಧವಾರ ಅಥವಾ ಗುರುವಾರ ಹೊಸ ಸರಕಾರ ರಚನೆಯಾಗಲಿದೆ ಎಂದು ಹಿರಿಯ ಜೆಡಿಯು ಮುಖಂಡರು ವಿವರಿಸಿದ್ದಾರೆ. ಭಾನುವಾರ ಮುಂಜಾನೆಯಿಂದಲೇ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು, ನಿತೀಶ್ ಕುಮಾರ್ ನಿವಾಸ ಮುಖಂಡರಿಂದ ತುಂಬಿ ತುಳುಕುತ್ತಿದೆ. ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರು ನಿತೀಶ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಹಲವು ಮಂದಿ ಎನ್‍ಡಿಎ ನಾಯಕರು, ಕೇಂದ್ರ ಸಚಿವರಾದ ಲಲನ್ ಸಿಂಗ್ ಕೂಡಾ ನಿತೀಶ್ ನಿವಾಸಕ್ಕೆ ಭೇಟಿ ನೀಡಿದ್ದರು. ಎನ್‍ಡಿಎ ಕೂಟದ ಎಲ್ಲ ಪಕ್ಷಗಳಾದ ಬಿಜೆಪಿ, ಜೆಡಿಯು, ಎಲ್‍ಜೆಪಿ (ಆರ್‍ವಿ), ಎಚ್‍ಎಎಂ(ಎಸ್) ಮತ್ತು ಆರ್‌ ಎಲ್‍ ಎಂ ಹೊಸ ಸರಕಾರ ರಚನೆ ಮಾತುಕತೆಯನ್ನು ಶನಿವಾರವೇ ಆರಂಭಿಸಿದು, ದೆಹಲಿ ಹಾಗೂ ಪಾಟ್ನಾದಲ್ಲಿ ಪ್ರತ್ಯೇಕ ಸಭೆಗಳು ನಡೆಯುತ್ತಿವೆ.

ವಾರ್ತಾ ಭಾರತಿ 16 Nov 2025 7:03 am

Gold Price on November 16: ಬಂಗಾರ, ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ನವೆಂಬರ್ 16ರ ಚಿನ್ನದ ದರಪಟ್ಟಿ

Gold Price on November 16: ಬಂಗಾರ ದರದಲ್ಲಿ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದ್ರೆ, ಇಂದು (ನವೆಂಬರ್ 16) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಬಂಗಾರ ದರಗಳ ವಿವರ: ನಿನ್ನೆ (ನವೆಂಬರ್

ಒನ್ ಇ೦ಡಿಯ 16 Nov 2025 6:26 am

ಮಲ್ನಾಡ್‌ ಮೇಲ್‌ ಮಂಜು: ಸಕಲೇಶಪುರದಲ್ಲಿ ಕೊರೆವ ಚಳಿ, ತಂಪು ವಾತಾವರಣಕ್ಕೆ ಮನಸೋತ ಪ್ರವಾಸಿಗರು

ನವೆಂಬರ್‌ನಲ್ಲೇ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಮಂಜು ಮತ್ತು ಚಳಿ ಆವರಿಸಿದ್ದು, ಪ್ರವಾಸಿಗರ ದಂಡು ಹರಿದುಬರುತ್ತಿದೆ. ಪಶ್ಚಿಮಘಟ್ಟದ ಹಸಿರು ಸೌಂದರ್ಯ, ಆಹ್ಲಾದಕರ ವಾತಾವರಣ ಪ್ರವಾಸಿಗರನ್ನು ಸೆಳೆಯುತ್ತಿದೆ. ಪ್ರಿ-ವೆಡ್ಡಿಂಗ್‌ ಶೂಟ್‌ಗೂ ಇದು ಹಾಟ್‌ಸ್ಪಾಟ್‌ ಆಗಿದ್ದು, ಹೋಂಸ್ಟೇ, ರೆಸಾರ್ಟ್‌ಗಳಿಗೆ ಬೇಡಿಕೆ ಹೆಚ್ಚಿದೆ. ಚಳಿಯಲ್ಲಿ ಬಿಸಿಬಿಸಿ ಜೋಳ, ಚುರುಮುರಿ ವ್ಯಾಪಾರ ಜೋರಾಗಿದೆ.

ವಿಜಯ ಕರ್ನಾಟಕ 16 Nov 2025 6:19 am

KEA PGAYUSH–2025: ಮೊದಲ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟ

ಬೆಂಗಳೂರು, ನವೆಂಬರ್ 16: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪಿಜಿ ಆಯುರ್ವೇದ, ಯುನಾನಿ, ಹೋಮಿಯೋಪಥಿ, ನ್ಯಾಚುರೋಪತಿ ಮತ್ತು ಯೋಗ ಕೋರ್ಸ್‌ಗಳ PG AYUSH-2025ಮೊದಲ ಹಂತದ ಸೀಟು ಹಂಚಿಕೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅಭ್ಯರ್ಥಿಗಳು ನವೆಂಬರ್ 16ರಂದು ಮಧ್ಯಾಹ್ನ 3 ಗಂಟೆಯೊಳಗೆ ತಮ್ಮ ಇಚ್ಛೆ/ಆಯ್ಕೆಗಳನ್ನು ನೋಂದಾಯಿಸಿಕೊಳ್ಳಬೇಕು. ನವೆಂಬರ್ 16ರಂದು ಸಂಜೆ 6 ಗಂಟೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅಣಕು

ಒನ್ ಇ೦ಡಿಯ 16 Nov 2025 6:00 am

ಚಿತ್ತಾಪುರದಲ್ಲಿಆರೆಸ್ಸೆಸ್‌ ಪಥಸಂಚಲನ ಭಾನುವಾರ (ನ.16) ಸಂಜೆ ನಿಗದಿ: 350 ಜನ ಗಣವೇಷಧಾರಿಗಳು, 1200ಕ್ಕೂ ಹೆಚ್ಚು ಪೊಲೀಸರು

ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಥ ಸಂಚಲನ ವಿವಾದವಾಗಿ, 1 ತಿಂಗಳ ಮುಂದೂಡಿಕೆ ನಂತರ ಇಂದು ನಿಗದಿಯಾಗಿದೆ. ಕ್ಷೇತ್ರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ತಾಲೂಕಾಡಳಿತದ ಅನುಮತಿಯಂತೆ ಹಲವು ಷರತ್ತುಗಳೊಂದಿಗೆ ಪಥ ಸಂಚಲನ ಇಂದು ನೆರವೇರಲಿದೆ.

ವಿಜಯ ಕರ್ನಾಟಕ 16 Nov 2025 5:48 am

2026ರ ಐಪಿಎಲ್ ಗಾಗಿ ಫ್ರಾಂಚೈಸಿಗಳಿಂದ ಆಟಗಾರರ ರಿಲೀಸ್- ರಿಟೆನ್ಷನ್ ಪಟ್ಟಿ ಬಿಡುಗಡೆ; ಯಾರು ಯಾವ ತಂಡದಲ್ಲಿದ್ದಾರೆ?

2026ರ ಐಪಿಎಲ್ ಟೂರ್ನಿ ಸಮೀಪಿಸುತ್ತಿದ್ದಂತೆಯೇ ಟೂರ್ನಿಯ ಫ್ರಾಂಚೈಸಿಗಳು ತಮ್ಮ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಬಾರಿ ಕೆಲವು ತಂಡಗಳು ತಮ್ಮಲ್ಲಿದ್ದ ಕೆಲವು ಆಟಗಾರರನ್ನು ರಿಲೀಸ್ ಮಾಡಿವೆ, ಕೆಲವು ಆಟಗಾರರನ್ನು ಉಳಿಸಿಕೊಂಡಿವೆ. ಕೆಲವು ತಂಡಗಳು ಆಟಗಾರನ್ನು ಟ್ರೇಡಿಂಗ್ ನಲ್ಲಿ ಪಡೆದುಕೊಂಡಿವೆ. ಆ ಪಟ್ಟಿಯ ನಂತರ ಯಾವ ಆಟಗಾರರು ಯಾವ ತಂಡದಲ್ಲಿದ್ದಾರೆ? ಇಲ್ಲಿದೆ ನೋಡಿ.

ವಿಜಯ ಕರ್ನಾಟಕ 16 Nov 2025 1:03 am

ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ

ಬೀದರ್ : ಪ್ರತಿ ಟನ್ ಕಬ್ಬಿಗೆ 3,200 ರೂ. ಬೆಲೆ ನಿಗದಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನಡೆದ ಧರಣಿಯಲ್ಲಿ ರೈತರೊಬ್ಬರು ಉರುಳು ಸೇವೆ ಮೂಲಕ ಗಮನಸೆಳೆದಿದ್ದಾರೆ. ಶನಿವಾರ ನಗರದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ರೈತರು ಭಾಗವಹಿಸಿ ಸರಕಾರದ ವಿರುದ್ಧ ಘೋಷಣೆಗಳು ಕೂಗಿದರು. ನಂತರದಲ್ಲಿ ಹುಡಗಿ ಗ್ರಾಮದ ರೈತ ಕರಬಸಪ್ಪ ಮಲಶೆಟ್ಟಿ ಅವರು ಅಂಬೇಡ್ಕರ್ ವೃತ್ತದಿಂದ ಉಸ್ತುವಾರಿ ಸಚಿವರ ಕಾರ್ಯಾಲಯದವರೆಗೆ ರಸ್ತೆ ಮೇಲೆಯೇ ಉರುಳು ಸೇವೆ ಮಾಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಮಲ್ಲಿಕಾರ್ಜುನ ಸ್ವಾಮಿ, ಮೌಲಾ ಮುಲ್ಲಾ, ಆದಿನಾಥ್, ಖಾಸೀಮ್ ಅಲಿ, ಶಂಕರೆಪ್ಪಾ ಮರ್ಕಲ್, ಕೊಂಡಿಬಾ ಪಾಂಡ್ರೆ, ಶಿವರಾಜ್ ಪಾಟೀಲ್, ಬಾಬುರಾವ್ ಹೊನ್ನಾ, ಶಿವರಾಯ್ ಮುದಾಳೆ, ಖಾಶೆಪ್ಪಾ, ಧುಳಪ್ಪಾ, ರುದ್ರಸ್ವಾಮಿ, ಸಂತೋಷ ಗುದಗೆ, ಮಲ್ಲಿಕಾರ್ಜುನ ಸಂಗಮ್, ನಝೀರ್ ಅಹ್ಮದ್, ಪ್ರಕಾಶ್, ಶಾಂತಮ್ಮ, ಶಿವಲೀಲಾ, ವಿಜಯಕುಮಾರ್, ವೀರಾರೆಡ್ಡಿ, ವಿಠಲರಾವ್, ನಾಗಶೆಟ್ಟಿ, ಭೀಮರಾವ್, ಖಮರ್ ಪಟೇಲ್, ವಿಜಯ್ ರೆಡ್ಡಿ, ನಾಗಶೆಟ್ಟಿ, ಮುಖೀಮುದ್ದೀನ್, ಖಾನಸಾಬ್, ಸಂಜು ಪಾಟೀಲ್, ಬಾಬುರಾವ ಪಾಟೀಲ್, ಸುರೇಶ್ ಪಾಟೀಲ್, ಬಸವರಾಜ್, ಸೋಮನಾಥ್ ಇತರರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 16 Nov 2025 12:21 am

ಸಂಘಟಿತ ಅಪರಾಧ ಪ್ರಕರಣಗಳು ಬಾಕಿ ಇಲ್ಲದಿದ್ದರೂ ಕೊಕಾ ಅನ್ವಯ : ಬೈರತಿ ಬಸವರಾಜ್ ವಕೀಲರ ಆಕ್ಷೇಪ

ಬೆಂಗಳೂರು : ಸಂಘಟಿತ ಅಪರಾಧದ ಅಡಿ ಕೊಕಾ ಕಾಯ್ದೆ ಅನ್ವಯಿಸಲು ಕ್ರಿಮಿನಲ್‌ ಹಿನ್ನೆಲೆ ಇರಬೇಕು. ಆದರೆ, ಅಂತಹ ಪ್ರಕರಣಗಳ ಅನುಪಸ್ಥಿತಿಯಲ್ಲಿ ಕೊಕಾ ಕಾಯ್ದೆ ವಿಧಿಸುವುದು ಕಾನೂನುಬಾಹಿರ ಎಂದು ಶಾಸಕ ಬೈರತಿ ಬಸವರಾಜು ಪರ ಹಿರಿಯ ವಕೀಲರು ಹೈಕೋರ್ಟ್‌‌ನಲ್ಲಿ ವಾದ ಮಂಡಿಸಿದರು. ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಕೊಕಾ ಕಾಯ್ದೆ ಅನ್ವಯಿಸಿರುವುದನ್ನು ಪ್ರಶ್ನಿಸಿ ಮತ್ತು ಕೊಲೆ ಆರೋಪದ ಸಂಬಂಧ ದಾಖಲಾಗಿರುವ ಎಫ್‌ಐಆರ್‌ ರದ್ದತಿ ಕೋರಿ ಹಾಗೂ ಇದೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬೈರತಿ ಬಸವರಾಜು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್‌. ಸುನೀಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ನಡೆಸಿತು. ಬೈರತಿ ಬಸವರಾಜು ಪರ ವಾದ ಮಂಡಿಸಿದ ಹಿರಿಯ ವಕೀಲ ಸಂದೇಶ್ ಚೌಟ ಅವರು, ಕೊಕಾ ಕಾಯ್ದೆ ಸೆಕ್ಷನ್‌ 22(3)ರ ಅಡಿ ವಿಚಾರಣಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಲು ನಿರ್ಬಂಧವಿದೆ. ಆದ್ದರಿಂದ, ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಕೊಕಾ ಕಾಯ್ದೆ ಅನ್ವಯಿಸಿರುವುದು ಸರಿಯೋ, ತಪ್ಪೋ ಎನ್ನುವ ಪ್ರಶ್ನೆಯೂ ಇದೆ. ರಿಟ್‌ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದರೂ ನಿರೀಕ್ಷಣಾ ಜಾಮೀನು ಮಂಜೂರು ಮಾಡುವ ಮೂಲಕ ರಕ್ಷಣೆ ಒದಗಿಸಬಹುದು. ವಿಚಾರಣಾ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಪೂರ್ಣಗೊಳ್ಳುವವರೆಗೂ ಅದು ಜಾರಿಯಲ್ಲಿರಲಿದೆ ಎಂದರು. ತನಿಖೆಗೆ ಸಹಕರಿಸುತ್ತಿಲ್ಲ ಅಥವಾ ಪ್ರಾಸಿಕ್ಯೂಷನ್‌ಗೆ ಪೂರಕವಾಗಿ ಹೇಳಿಕೆ ನೀಡುತ್ತಿಲ್ಲ ಎಂದು ಜಾಮೀನು ಅಥವಾ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಲಾಗದು. ಕೊಕಾ ಕಾಯ್ದೆ ಅನ್ವಯಿಸಿರುವ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿದರೆ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಬಹುದು ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಕೊಕಾ ಅನ್ವಯಿಸಿರುವುದಕ್ಕೆ ಬಾಕಿ 6 ಎಫ್‌ಐಆರ್‌ಗಳಿವೆ ಎಂದು ಹೇಳಿರುವ ಪ್ರಾಸಿಕ್ಯೂಷನ್‌, ಈ ಪೈಕಿ ಮೂರು ಆಸ್ತಿ ವಿವಾದಕ್ಕೆ ಸಂಬಂಧಿಸಿವೆ ಎಂದು ಹೇಳಿದೆ. ಆದರೆ, ಯಾವುದೇ ಎಫ್‌ಐಆರ್‌ ಆಸ್ತಿ ವಿವಾದಕ್ಕೆ ಸಂಬಂಧಿಸಿಲ್ಲ. ಸಂಘಟಿತ ಅಪರಾಧ ಸಿಂಡಿಕೇಟ್‌ ಆರೋಪದ ಅಡಿ 3 ವರ್ಷ ಶಿಕ್ಷೆ ವಿಧಿಸಬಹುದಾದ ಎರಡು ಪ್ರಕರಣಗಳು ಬಾಕಿ ಇದ್ದಾಗ ಕೊಕಾ ಅನ್ವಯಿಸಬಹುದು. ಈ ಪ್ರಕರಣದಲ್ಲಿ ಒಂದೇ ಒಂದು ಪ್ರಕರಣ ಇರುವುದರಿಂದ ಕೊಕಾ ಅನ್ವಯಿಸಿರುವ ಆದೇಶ ರದ್ದುಪಡಿಸಬೇಕು ಎಂದು ಕೋರಿದರು. ಸಿಐಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್‌. ಜಗದೀಶ್‌ ಅವರು, ಬೈರತಿ ಬಸವರಾಜು ಅವರು 2025ರ ಸೆಪ್ಟೆಂಬರ್ 9ರಂದು ಮ್ಯಾಜಿಸ್ಟ್ರೇಟ್‌ ಮುಂದೆ ದಾಖಲಿಸಿರುವ ಹೇಳಿಕೆಯನ್ನು ಪರಿಶೀಲಿಸಬಹುದು. ಬೈರತಿ ಬಸವರಾಜು ಅವರ ಉದ್ಯಮ ಪಾಲುದಾರರ ಹೇಳಿಕೆಯನ್ನು ದಾಖಲಿಸಲಾಗಿದೆ. ಇದೆಲ್ಲವನ್ನೂ ನ್ಯಾಯಾಲಯ ನೋಡಬಹುದು ಎಂದರು. ಬೈರತಿ ಬಸವರಾಜು ಅವರು ಉತ್ತರ ಪ್ರದೇಶದಲ್ಲಿ ನಡೆದಿದ್ದ ಕುಂಭಮೇಳಕ್ಕೆ ತೆರಳಿದ್ದರು. ಅವರ ಜತೆ ಇತರ ಆರೋಪಿಗಳೂ ಹೋಗಿದ್ದರು. ಇದಕ್ಕೆ ಪೂರಕವಾದ ವಿಮಾನ ಪ್ರಯಾಣದ ಟಿಕೆಟ್‌ ಇವೆ. ಒಟ್ಟಿಗೆ ಜನ್ಮದಿನ ಆಚರಿಸಿರುವ ಚಿತ್ರಗಳಿವೆ. ಆದರೆ, ಅವರಾರೂ ನನಗೆ ಗೊತ್ತಿಲ್ಲ ಎಂದು ಬಸವರಾಜು ತಿಳಿಸಿದ್ದಾರೆ. ಬಿಕ್ಲು ಶಿವ ಕೊಲೆ ಪ್ರಕರಣದ ಮೊದಲನೇ ಆರೋಪಿ ವಿದೇಶಕ್ಕೆ ಹೋಗಿದ್ದು, ಮೊಬೈಲ್‌ ನಾಶಪಡಿಸಿದ್ದಾರೆ. ಬ್ಲೂ ಕಾರ್ನರ್‌ ನೋಟಿಸ್‌ ಜಾರಿ ಮಾಡಿ, ಆತನನ್ನು ಶ್ರೀಲಂಕಾದಲ್ಲಿ ಬಂಧಿಸಲಾಗಿದೆ. ಆತನ ಜತೆ ಹೋಗಿದ್ದ ಇನ್ನೊಬ್ಬ ವ್ಯಕ್ತಿಯನ್ನು ಇದುವರೆಗೆ ಪತ್ತೆ ಮಾಡಲಾಗಿಲ್ಲ ಎಂದರು. ಬೈರತಿ ಬಸವರಾಜು ಅವರು ಇಡೀ ತನಿಖೆಯನ್ನು ಹಾದಿ ತಪ್ಪಿಸಿದ್ದಾರೆ. ಅವರನ್ನು ಕಸ್ಟಡಿಗೆ ಪಡೆಯದೇ ತನಿಖೆ ಮುಂದುವರಿಸಲಾಗದು. ಬಸವರಾಜು ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ಅಥವಾ ಹೈಕೋರ್ಟ್ ಪರಿಗಣಿಸಲು ಅವಕಾಶವಿಲ್ಲ. ಬೈರತಿ ಬಸವರಾಜು ಅವರು ತನಿಖೆಗೆ ಹಿಂದೆಯೂ ಸಹಕರಿಸಿಲ್ಲ. ಆದ್ದರಿಂದ, ಬೈರತಿ ಬಸವರಾಜು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ಮತ್ತು ಎಫ್‌ಐಆರ್‌ ಪ್ರಶ್ನಿಸಿರುವ ಅರ್ಜಿಗಳನ್ನು ವಜಾಗೊಳಿಸಬೇಕು ಎಂದು ಮನವಿ ಮಾಡಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿತು.

ವಾರ್ತಾ ಭಾರತಿ 16 Nov 2025 12:15 am

ಮರಗಳನ್ನೇ ಮಕ್ಕಳಾಗಿಸಿಕೊಂಡ ತಿಮ್ಮಕ್ಕ ಬದುಕೆ ಸ್ಪೂರ್ತಿ: ನರೇಂದ್ರ ಕುಮಾರ್

ಕೋಟದಲ್ಲಿ ಸಾಲುಮರದ ತಿಮ್ಮಕ್ಕಗೆ ನುಡಿನಮನ

ವಾರ್ತಾ ಭಾರತಿ 16 Nov 2025 12:11 am

ಕೋಮುವಾದ, ಜಾತಿವಾದ, ಸ್ತ್ರೀ ಶೋಷಣೆ ನಮ್ಮ ಕಾಲದ ಅನಿಷ್ಟಗಳು : ಡಾ.ಕೆ.ಮರುಳಸಿದ್ದಪ್ಪ

ಬೆಂಗಳೂರು : ಹಿಂದೆ ಇದ್ದ ಉದಾರವಾದಿ ಸಮಾಜ ಇಂದು ಇಲ್ಲ. ಕೋಮುವಾದ, ಜಾತಿವಾದ, ಸ್ತ್ರೀ ಶೋಷಣೆ ಇವು ಮೂರು ನಮ್ಮ ಕಾಲದ ಮಹಾ ಅನಿಷ್ಟಗಳು ಎಂದು ಹಿರಿಯ ಸಾಹಿತಿ ಡಾ.ಕೆ. ಮರುಳಸಿದ್ದಪ್ಪ ತಿಳಿಸಿದ್ದಾರೆ. ಶನಿವಾರ ನಗರದ ನಯನ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಯೋಜಿಸಿದ್ದ ‘ಮನೆಯಂಗಳದಲ್ಲಿ ಮಾತುಕತೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮನುಷ್ಯ ಸುಖದ ಬೆನ್ನತ್ತಿ ನೈತಿಕವಾಗಿ ಅಧಃಪತನ ಹೊಂದುತಿದ್ದಾನೆ. ದೇಶ ಮತ್ತು ಸಮಾಜದಲ್ಲಿ ಹಿಂಸೆ ತಾಂಡವವಾಡುತ್ತಿದೆ. ಇಂತಹ ಸಮಾಜಕ್ಕೆ ಭವಿಷ್ಯ ಇದೆಯೇ ಎಂದು ಕೆಲವೊಮ್ಮೆ ಬೇಸರವಾಗುತ್ತದೆ ಎಂದು ಹೇಳಿದರು. ಕೃತಕ ಬುದ್ಧಿಮತ್ತೆಯ ಕಾರಣದಿಂದ ಯಂತ್ರ ಮನುಷ್ಯರೇ, ಮನುಷ್ಯರನ್ನು ನಿಯಂತ್ರಿಸುವ ಕಾಲ ಬರಬಹುದು. ಮನುಷ್ಯರು ಹೊಂದುತ್ತಿರುವ ಅದಃಪತನವನ್ನು ನೋಡಿದರೆ ಅದಾಗುವುದು ಒಳ್ಳೆಯದು. ಯಂತ್ರಗಳಿಗೆ ಮನುಷ್ಯರಿಗಿಂತ ಸ್ವಲ್ಪ ವಿವೇಕ ಹೆಚ್ಚು ಇರಬಹುದು. ಕೋಮುವಾದ, ಜಾತಿವಾದ, ಸ್ತ್ರೀ ಶೋಷಣೆಯ ವಾತಾವರಣ ಕೊನೆಯಾಗಿ ಒಂದು ಬೆಳಕು ಮೂಡಲಿ ಎಂದು ಅಭಿಪ್ರಾಯಪಟ್ಟರು. ನನಗೆ ಹಣೆಬರಹದಲ್ಲಿ ನಂಬಿಕೆಯಿಲ್ಲ. ದೇವರ ಅಸ್ತಿತ್ವದ ಬಗ್ಗೆಯೂ ಒಂದು ಬಗೆಯಲ್ಲಿ ತಟಸ್ಥ ಮನೋಭಾವ. ಆದರೆ, ಕೆಲವು ಆಕಸ್ಮಿಕಗಳು ನಮ್ಮ ಬದುಕನ್ನು ಬದಲಿಸುತ್ತವೆ ಎನ್ನುವುದಕ್ಕೆ ನನ್ನ ಬದುಕಿನಲ್ಲೇ ಅನೇಕ ಉದಾಹರಣೆಗಳು ಸಿಕ್ಕಿವೆ. ನನ್ನ ಬದುಕಿನಲ್ಲಿ ಮಹತ್ವದ ಘಟ್ಟ ಎಂದರೆ ಸೆಂಟ್ರಲ್ ಕಾಲೇಜಿನ ಅಧ್ಯಾಪಕನಾಗಿ ಕೆಲಸಕ್ಕೆ ಸೇರಿದ್ದು ಎಂದು ಅವರು ನೆನಪು ಮಾಡಿಕೊಂಡರು. ಹಳ್ಳಿಯ ಊಳಿಗಮಾನ್ಯ ಕುಟುಂಬದಲ್ಲಿ ಇದ್ದ ನಾನು. ಇಲ್ಲಿನ ಸೆಂಟ್ರಲ್ ಕಾಲೇಜಿನಲ್ಲಿ ಸಿಕ್ಕ ಸ್ನೇಹಿತರು, ವಾತಾವರಣ, ಸಾಂಸ್ಕೃತಿಕ ಒಡನಾಟ ಇವೆಲ್ಲವೂ ಆಳವಾಗಿ ಪ್ರಭಾವಿಸಿದರು. ಸಾಂಸ್ಕೃತಿಕ ಸಂಘಟನೆ, ಸಾಮಾಜಿಕ ಚಳವಳಿಗಳಲ್ಲಿ ಭಾಗಿಯಾಗಲು ಪತ್ರಕರ್ತ ಪಿ.ಲಂಕೇಶ್ ಅವರೇ ಕಾರಣರು ಎಂದು ಅವರು ಸ್ಮರಿಸಿದರು. ಕಾಲೇಜಿನ ಅಧ್ಯಾಪಕ ಆದ ಮೇಲೆ ನನ್ನ ಬಂಧು ಬಳಗವನ್ನು ಸಂಪೂರ್ಣವಾಗಿ ಮರೆತು, ನನ್ನ ವಿದ್ಯಾರ್ಥಿಗಳೇ ಬಂಧು ಬಳಗವಾದರು. ವಿದ್ಯಾರ್ಥಿಗಳಿಂದ ನನಗೆ ಅಪಾರ ಪ್ರೀತಿ ಸಿಕ್ಕಿದೆ. ನನ್ನ ಜಾತ್ಯಾತೀತ ಮನೋಭಾವ. ನನ್ನ ವಿದ್ಯಾರ್ಥಿಗಳ ಜೊತೆ ಜಾತ್ಯಾತೀತವಾಗಿ ನಡೆದೆ, ಅವರನ್ನು ಸಮಾನರಂತೆ ನಡೆಸಿಕೊಂಡೆ ಇದರಿಂದ ವಿದ್ಯಾರ್ಥಿಗಳು ಆಪ್ತರಾದರು ಎಂದು ಅವರು ಹೇಳಿದರು. ಸುಮಾರು 60 ವರ್ಷಗಳಿಂದ ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದೇನೆ. ಬೆಂಗಳೂರು ವಿವಿ, ಸೆಂಟ್ರಲ್ ಕಾಲೇಜುಗಳೇ ಬೆಂಗಳೂರಿನ ಸಾಂಸ್ಕೃತಿಕ ಕೇಂದ್ರಗಳಾಗಿದ್ದವು. 70ರ ದಶಕ ಕನ್ನಡ ಸಾಹಿತ್ಯ, ಸಾಂಸ್ಕೃತಿಕ ಸಂದರ್ಭದಲ್ಲಿ ವಿಶೇಷವಾಗಿದೆ. ಚರಿತ್ರೆಯನ್ನೇ ಪ್ರಭಾವಿಸುವಂತಹ ಚಳವಳಿಗಳು 70ರ ದಶಕದಲ್ಲಿ ನಡೆದವು. ನೇರವಾಗಿ ನಾವು ಹೋರಾಟಗಳಲ್ಲಿ ಭಾಗವಹಿಸದಿರಬಹುದು. ಆದರೆ ಚಳವಳಿಗಳು ನಮ್ಮ ವಿಚಾರಧಾರೆಗೆ ನಿರ್ಧಿಷ್ಟ ದಿಕ್ಕು ಕೊಟ್ಟವು. ಸ್ವತಂತ್ರ ಮನೋಭಾವವನ್ನು ಹುಟ್ಟು ಹಾಕಿದವು ಎಂದು ತಿಳಿಸಿದರು. ಶಾಲಾ ದಿನಗಳಿಂದಲೇ ಪತ್ರಿಕೆಗಳನ್ನು ಓದುವ ಹವ್ಯಾಸವಿದೆ. ಅದು ಸಾಮಾಜಿಕ ರಾಜಕೀಯ ನಿಲುವನ್ನು ರೂಪಿಸಿದೆ. ಬಹುತೇಕ ಎಲ್ಲ ಪ್ರಧಾನಿಗಳನ್ನು ಅರಿತಿದ್ದೇನೆ. ಜವಾಹರ್ ಲಾಲ್ ನೆಹರೂ ಅವರನ್ನು ಇಂದು ಚಿಲ್ಲರೇ ರಾಜಕಾರಣಿಗಳು ಸಹ ಬಹಳ ತುಚ್ಚವಾಗಿ ಮಾತನಾಡುತ್ತಾರೆ. ಆದರೆ ನೆಹರೂ ಕಾಲದಲ್ಲಿ ಅಣೆಕಟ್ಟೆ, ಕಾರ್ಖಾನೆಗಳು ನಿರ್ಮಾಣವಾದವು. ಅದರ ಜೊತೆಗೆ ನೀತಿಯುಕ್ತವಾದ ರಾಜಕಾರಣ ಮಾಡಿದ್ದರು. ಅದಕ್ಕೆ ಹೋಲಿಸುವ ಮತ್ತೊಬ್ಬ ಪ್ರಧಾನಿ ಬೇರೆ ಇಲ್ಲ ಎಂದರು. ನೆಹರೂ ಬಿಟ್ಟರೆ ಡಾ.ಮನಮೋಹನ್‍ಸಿಂಗ್ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಮುಖ ಪ್ರಧಾನಿಗಳು. ವಾಜಪೇಯಿ ಅವರ ಪಕ್ಷವನ್ನು ನಾನು ಮೆಚ್ಚುವುದಿಲ್ಲ. ಅವರು ನಂಬಿದ್ದ ಆರೆಸ್ಸೆಸ್‍ನ್ನು ನಾನು ಧ್ವೇಷಿಸುತ್ತೇನೆ. ಆದರೆ ವ್ಯಕ್ತಿಯಾಗಿ ವಾಜಪೇಯಿ ಇಷ್ಟ. ಅವರು ಸಜ್ಜನ ರಾಜಕಾರಣಿ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆ.ಎಂ.ಗಾಯತ್ರಿ, ಜಂಟಿ ನಿರ್ದೇಶಕ ಬಲವಂತರಾವ್ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 16 Nov 2025 12:06 am

ಬಂಟಕಲ್: ‘ಆವಿಷ್ಕಾರ್ 2ಕೆ25’- ವಿಜ್ಞಾನ ಉತ್ಸವ ಉದ್ಘಾಟನೆ

ಉಡುಪಿ: ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಜ್ಞಾನ ಮತ್ತು ತಂತ್ರಜ್ಞಾನದ ಮಹತ್ವ ಅತೀ ಅಗತ್ಯ. ಯುವ ವೈಜ್ಞಾನಿಕ ಮನಸ್ಸುಗಳನ್ನು ಪೋತ್ಸಾಹಿಸುವ ಕಾರ್ಯ ಎಲ್ಲಡೆ ಆಗಬೇಕು ಎಂದು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ತಿಳಿಸಿದ್ದಾರೆ. ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಪದವಿಪೂರ್ವ ಮತ್ತು ಫ್ರೌಡಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಆವಿಷ್ಕಾರ್ 2ಕೆ25 ವಿಜ್ಞಾನ ಉತ್ಸವವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು. ಕೋಟ ವಿವೇಕ ಪದಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಜಗದೀಶ್ ನಾವಡ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳಲು ವಿದ್ಯಾಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು. ಉಡುಪಿ ಜಿಲ್ಲಾ ಪಂಚಾಯತ್‌ನ ಮುಖ್ಯ ಯೋಜನಾ ಅಧಿಕಾರಿ ಡಾ.ಉದಯ ಶೆಟ್ಟಿ ಮತ್ತು ಯೋಜನಾ ನಿರ್ದೇಶಕ ಜಯ್ ಕುಮಾರ್ ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ರತ್ನಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಶೈಕ್ಷಣಿಕ ಡೀನ್ ಡಾ.ನಾಗರಾಜ ಭಟ್ ಸ್ವಾಗತಿಸಿದರು. ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ ಕಾರ್ಯಕ್ರಮದ ಸಂಯೋಜಕಿ ಡಾ.ಸುಬ್ಬುಲಕ್ಷ್ಮಿ ಎನ್.ಕಾರಂತ್ ವಂದಿಸಿದರು. ದೀಪಾ ಡಿ.ಪ್ರಭು ಮತ್ತು ಚಿರಶ್ರೀ ಕಾರ್ಯಕ್ರಮ ನಿರೂಪಿಸಿದರು. ವಿಜ್ಞಾನ ಮಾದರಿ ಪ್ರದರ್ಶನ, ಜ್ಞಾನ ರಸಪ್ರಶ್ನೆ ಮತ್ತು ಕಿರು ವೀಡಿಯೋ ತಯಾರಿಕೆ ಸ್ಪರ್ಧೆ ಮೊದಲಾದ ಹಲವು ಸ್ಪರ್ಧೆಗಳು ನಡೆದವು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 500ಕ್ಕೂ ಹೆಚ್ಚು ಪದಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವಾರ್ತಾ ಭಾರತಿ 16 Nov 2025 12:04 am

ಕುಂದಾಪುರ: ‘ಖಾಕಿ ಕಾರ್ಟೂನು ಹಬ್ಬ’ಕ್ಕೆ ಚಾಲನೆ ನೀಡಿದ ಪೊಲೀಸ್ ಮಹಾನಿರ್ದೇಶಕ ದಯಾನಂದ್

‘ಕಾರ್ಟೂನಿಸ್ಟ್‌ಗಳಿಂದ ವಿಭಿನ್ನ ದೃಷ್ಟಿಕೋನದಲ್ಲಿ ಸಮಾಜ ತಿದ್ದುವ ಕೆಲಸ’

ವಾರ್ತಾ ಭಾರತಿ 16 Nov 2025 12:01 am

ಬೆಂಗಳೂರು | ಮತಗಳ್ಳತನ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು : ಪ್ರಜಾಪ್ರಭುತ್ವ ವ್ಯವಸ್ಥೆಯನ್ನೆ ನಾಶ ಪಡಿಸಲು ವ್ಯವಸ್ಥಿತವಾಗಿ ಮತಗಳ್ಳತನ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಶನಿವಾರ ಇಲ್ಲಿನ ಫ್ರೀಡಂ ಪಾರ್ಕಿನ ಮೈದಾನದಲ್ಲಿ ಯುವ ಕಾಂಗ್ರೆಸ್ ಕರ್ನಾಟಕ ನೇತೃತ್ವದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು, ಕೇಂದ್ರ ಸರಕಾರ ಹಾಗೂ ಬಿಜೆಪಿ ವಿರುದ್ಧ ಘೋಷಣೆಗಳನ್ನು ಮೊಳಗಿಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, ಈ ಪ್ರತಿಭಟನೆ ಬಿಹಾರ ರಾಜ್ಯದಲ್ಲಿ ಚುನಾವಣೆ ಸೋತಿದ್ದಕ್ಕಲ್ಲ, ಆದರೆ, ಸೋಲಿಗೆ ಕಾರಣವೇನು ಎನ್ನುವುದು ಇಲ್ಲಿ ತೋರಿಸುವ ಪ್ರಯತ್ನ ಆಗಿದೆ. ದೊಡ್ಡ ಪ್ರಮಾಣದಲ್ಲಿ ಮತದಾರರ ಪಟ್ಟಿ ಬದಲಾವಣೆ ಆಗಿದೆ ಎಂದು ಆರೋಪಿಸಿದರು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಈಗಾಗಲೇ ಮತ ಕಳ್ಳತನ ಕುರಿತು ರಾಹುಲ್ ದೇಶದ ಗಮನ ಸೆಳೆದಿದ್ದರು. ಆದರೆ, ಇತ್ತೀಚಿಗೆ ಚುನಾವಣಾ ಆಯೋಗ ಆಯುಕ್ತ ಜ್ಞಾನೇಶ್ ಕುಮಾರ್ ಬಿಹಾರ, ಮಹಾರಾಷ್ಟ್ರ, ಹರಿಯಾಣದಲ್ಲಿ ಮತಪಟ್ಟಿ ಬದಲಾವಣೆ ಮಾಡಿದರು. ಹೀಗೆ, ಹಲವು ಬದಲಾವಣೆ ಕುರಿತು ನಾವು ದೇಶದ ಜನರಿಗೆ ಮಾಹಿತಿ ಕೊಡುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ಉಲ್ಲೇಖಿಸಿದರು. ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹ್ಮದ್ ಮಾತನಾಡಿ, ಮತಗಳ್ಳತನ ವಿರುದ್ಧ ರಾಹುಲ್ ಗಾಂಧಿ ಪ್ರತಿಭಟಿಸಿದ್ದರು. ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲೂ ಮತ ಕಳ್ಳತನ ಬಗ್ಗೆ ಹೇಳಿದ್ದರು. ಅದು ಇವತ್ತು ಸತ್ಯವಾಗಿದ್ದು, ನಿನ್ನೆ ಬಿಹಾರ ಫಲಿತಾಂಶ ಹೊರಬಿದ್ದಿದೆ ಎಂದು ತಿಳಿಸಿದರು. ರಾಜ್ಯಸಭೆ ಸದಸ್ಯ ಜಿ.ಸಿ.ಚಂದ್ರಶೇಖರ್ ಮಾತನಾಡಿ, ಎರಡು ತಿಂಗಳ ಹಿಂದೆ ಇದೇ ಜಾಗದಲ್ಲಿ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಮತಕಳ್ಳತನ ವಿರುದ್ಧ ಪ್ರತಿಭಟನೆ ಮಾಡಿದೆವು. ಆ ಪ್ರತಿಭಟನೆಯಲ್ಲಿ 1 ಲಕ್ಷ ಜನ ಭಾಗವಹಿಸಿದ್ದರು. ಅಂದು ಹಚ್ಚಿದ ಪ್ರತಿಭಟನಾ ಕಿಚ್ಚು ದೇಶದಾದ್ಯಂತ ಹಬ್ಬಿದೆ. ಬಿಹಾರ ಚುನಾವಣಾ ಫಲಿತಾಂಶ ಬೇರೆ ರಾಜ್ಯಗಳ ಮೇಲೆ ಪರಿಣಾಮ ಬೀರಲಿದೆಯೇ ಎಂದು ಮಾಧ್ಯಮಗಳು ಚರ್ಚೆ ಮಾಡುತ್ತಿವೆ. ಈ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರುವುದಿಲ್ಲ ಎಂದರು. ಪ್ರತಿಭಟನೆಯಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನು ಚಿಬ್, ರಾಜ್ಯ ಘಟಕದ ಅಧ್ಯಕ್ಷ ಮಂಜುನಾಥ್ ಸೇರಿದಂತೆ ಪ್ರಮುಖರಿದ್ದರು.

ವಾರ್ತಾ ಭಾರತಿ 15 Nov 2025 11:56 pm

ಶಂಕರನಾರಾಯಣ: ತಾಯಿ ಮರಣದ ಚಿಂತೆಯಲ್ಲಿ ಮಗಳು ಆತ್ಮಹತ್ಯೆ

ಶಂಕರನಾರಾಯಣ: ತಾಯಿ ಮರಣದ ವಿಚಾರದಲ್ಲಿ ಮನನೊಂದ ಮಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.14ರಂದು ಬೆಳಗ್ಗೆ ಅಲ್ಬಾಡಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಅಲ್ಬಾಡಿ ಗ್ರಾಮದ ಚಂದ್ರ ಎಂಬವರ ಪತ್ನಿ ರತ್ನಾ(38) ಎಂದು ಗುರುತಿಸಲಾಗಿದೆ. ಸುಮಾರು 3 ತಿಂಗಳುಗಳ ಹಿಂದೆ ರತ್ನಾ ಅವರ ತಾಯಿ ಮೃತಪಟ್ಟಿದ್ದು, ಇದೇ ಚಿಂತೆಯಲ್ಲಿ ರತ್ನಾ ಮಾನಸಿಕವಾಗಿ ನೊಂದುಮನೆ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 15 Nov 2025 11:56 pm

ಸಾಂಸ್ಕೃತಿಕ ಜಗತ್ತಿನ ನಿರ್ಮಾಣಕ್ಕೆ ಒತ್ತು ನೀಡಬೇಕು : ವೀರಪ್ಪ ಮೊಯ್ಲಿ

ಬೆಂಗಳೂರು : ಪರಸ್ಪರ ದ್ವೇಷ ಕಾರುವ ಈ ದಿನಗಳಲ್ಲಿ ಹೃದಯ ಬೆಸೆಯುವ ಸಾಂಸ್ಕೃತಿಕ ಜಗತ್ತಿನ ನಿರ್ಮಾಣಕ್ಕೆ ಒತ್ತು ನೀಡಬೇಕಿದೆ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಅಭಿಪ್ರಾಯಪಟ್ಟಿದ್ದಾರೆ. ಶನಿವಾರ ನಗರದ ಭಾರತೀಯ ವಿದ್ಯಾಭವನದಲ್ಲಿ ಹಮ್ಮಿಕೊಂಡಿದ್ದ 6ನೆ ದಿನದ ಸಂತವಾಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬದುಕಿನ ಹಾಗೂ ಸಾಮಾಜಿಕ ಪೋಷಣೆಯ ಚಿಂತನೆಗಳು ಆಗಬೇಕು. ಈ ಮೂಲಕ ಎಲ್ಲ ಬಗೆಯ ಚಿಂತನೆಗಳನ್ನು ಆಹ್ವಾನಿಸುವ ಮನಸ್ಥಿತಿಯನ್ನು ರೂಢಿಸಿಕೊಳ್ಳಬೇಕು. ಪ್ರಸ್ತುತ ದಿನಗಳಲ್ಲಿ ಹೃದಯ ಬೆಸೆಯುವ ಸಂಸ್ಕೃತಿ ಕ್ಷೀಣಿಸುತ್ತಿದೆ. ಒಬ್ಬರ ಮೇಲೊಬ್ಬರು ದ್ವೇಷ ಸಾಧಿಸುವುದು, ದೇಶ-ದೇಶಗಳ ನಡುವೆ ದ್ವೇಷ ಹರಡುವಿಕೆ ನಡೆಯುತ್ತಿದೆ ಎಂದರು. ಆತ್ಮೀಯತೆ, ಸರಳತೆ ಹಾಗೂ ಪ್ರಾಮಾಣಿಕತೆ ದಾರಿಯಲ್ಲಿ ಸಾಗುವ ಮೂಲಕ ಸಾಂಸ್ಕೃತಿಕ ಜಗತ್ತನ್ನು ಸ್ಥಾಪಿಸಬೇಕಿದೆ. ವಿಶ್ವ ಸಂಸ್ಕೃತಿಯಲ್ಲಿ ದ್ವೇಷವೇ ಇಲ್ಲ. ಈ ಪರಿಕಲ್ಪನೆಯಲ್ಲಿಯೇ ನಾನು ʼವಿಶ್ವ ಸಂಸ್ಕೃತಿ ಮಹಾಯನʼ ಎಂಬ ಮಹಾ ಕಾವ್ಯವನ್ನು ಬರೆದಿರುವುದು. ಮೃದುತ್ವಕ್ಕೆ ಮಹಾನ್ ಶಕ್ತಿಯನ್ನೂ ಗೆಲ್ಲುವ ಶಕ್ತಿಯಿದೆ. ಆದುದರಿಂದ ಎಲ್ಲರೂ ಮೃದುತ್ವವನ್ನು ಬೆಳೆಸಿಕೊಳ್ಳಬೇಕು. ಧನಗಳಿಸುವ ದಾಹದ ಹಿಂದೆ ಬಿದ್ದ ಜನರು ಎಷ್ಟೇ ಸಂಪಾದನೆ ಮಾಡಿದರೂ, ಅತೃಪ್ತ ಜೀವನ ನಡೆಸುತ್ತಿದ್ದಾರೆ. ಇದರಿಂದ ಹೊರಬಂದು ತೃಪ್ತಿ ಜೀವನ ನಡೆಸಬೇಕು. ಚಿಂತನೆಗಳಲ್ಲಿ ಪ್ರಾಮಾಣಿಕತೆ ಹೊಂದಬೇಕು ಮತ್ತು ಸದ್ಗುಣಿಗಳಾಗಬೇಕು ಎಂದು ವೀರಪ್ಪ ಮೊಯ್ಲಿ ತಿಳಿಸಿದರು. ಕಾರ್ಯಕ್ರಮದಲ್ಲಿ ಚಿಂತಿಕ ಡಾ.ಆರ್.ಗಣೇಶ್, ಯುನೆಸ್ಕೋದ ಮಾಜಿ ರಾಯಭಾರಿ ಡಾ.ಚಿರಂಜೀವ್ ಸಿಂಗ್, ಭಾರತೀಯ ವಿದ್ಯಾಭವನದ ಅಧ್ಯಕ್ಷ ಕೆ.ಜಿ.ರಾಘವನ್, ನಿರ್ದೇಶಕ ಎಚ್.ಎನ್.ಸುರೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 15 Nov 2025 11:46 pm

ಧರ್ಮಸ್ಥಳ ಪ್ರಕರಣ: ಎಸ್ಐಟಿ ಅಧಿಕಾರಿಗಳ ವಿರುದ್ಧವೇ ಪೊಲೀಸರಿಗೆ ಹೋರಾಟಗಾರ ಟಿ.ಜಯಂತ್ ದೂರು

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳ ವಿರುದ್ಧವೇ ಬೆಳ್ತಂಗಡಿ ಠಾಣೆಗೆ ಜಯಂತ್ ಟಿ ಅವರು ದೂರು ನೀಡಿದ್ದಾರೆ. ಎಸ್‌ಐಟಿ ಅಧಿಕಾರಿಗಳಾದ ಜಿತೇಂದ್ರ ದಯಾಮ, ಎಸ್.ಪಿ. ಸೈಮನ್, ಡಿವೈಎಸ್ಪಿ ಆರ್ ಜಿ. ಮಂಜುನಾಥ, ಇನ್ಸೆಕ್ಟ‌ರ್ ಮಂಜುನಾಥ ಗೌಡ, ಸಬ್ ಇನ್‌ಸ್ಪೆಕ್ಟ‌ರ್ ಗುಣಪಾಲ್ ವಿರುದ್ಧ ಸೌಜನ್ಯ ಪರ ಹೋರಾಟಗಾರ ಟಿ ಜಯಂತ್ ದೂರು ನೀಡಿದ್ಧಾರೆ. ವಿಚಾರಣೆ ಸಂದರ್ಭದಲ್ಲಿ ದೈಹಿಕ ಹಲ್ಲೆ, ಪ್ರಾಣ ಬೆದರಿಕೆ, ಅಪರಾಧಿಕ ಪಿತೂರಿ, ಸುಳ್ಳು ಸಾಕ್ಷಿ ಹೇಳುವಂತೆ ಒತ್ತಾಯ ಹೇರಲಾಗಿದೆ. ಅಲ್ಲದೆ ಕಾನೂನು ಬಾಹಿರ ಕೃತ್ಯಗಳು, ಸರಕಾರಿ ಆದೇಶ ಪಾಲನೆ ಮಾಡದೆ ಕರ್ತವ್ಯ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಪೊಲೀಸರು ಈ ಬಗ್ಗೆ ಕಾನೂನು ಸಲಹೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಎಸ್‌ಐಟಿ ಅಧಿಕಾರಿಗಳು ತನ್ನನ್ನು ವಿಚಾರಣೆಗೆಂದು ಕರೆದು ತನ್ನ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಬೆದರಿಕೆ ಹಾಕಿರುವುದಾಗಿ ರಾಜ್ಯಪಾಲ ಹಾಗೂ ಪೊಲೀಸ್ ಮಹಾ ನಿರ್ದೇಶಕರಿಗೂ ಜಯಂತ್ ದೂರು ನೀಡಿದ್ದರು.

ವಾರ್ತಾ ಭಾರತಿ 15 Nov 2025 11:38 pm

ಹುಲಿ ದಾಳಿ ತಡೆಗೆ ಮೈಸೂರು ರೈತರ ರಕ್ಷಣೆಗಾಗಿ ‘ಮುಖವಾಡ’ – ಅರಣ್ಯ ಇಲಾಖೆಯ ಹೊಸ ಚಿಂತನೆ

ಮೈಸೂರು ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ ದಾಳಿಗಳಿಂದ ರೈತರನ್ನು ರಕ್ಷಿಸಲು ಅರಣ್ಯ ಇಲಾಖೆ ಹೊಸ ತಂತ್ರಗಾರಿಕೆ ಅಳವಡಿಸಿಕೊಳ್ಳಲು ಮುಂದೆ ಬಂದಿದೆ. ರೈತರಿಗೆ ಮನುಷ್ಯರ ಮುಖವನ್ನು ಹೋಲುವ ಫೇಸ್ ಮಾಸ್ಕ್ ಗಳನ್ನು ನೀಡಲು ನಿರ್ಧರಿಸಲಾಗಿದೆ. ಇದು ಪಶ್ಚಿಮ ಬಂಗಾಳದ ಸುಂದರ್ ಬನ್ ದ್ವೀಪದಲ್ಲಿ ಹಿಂದೆ ನಡೆಯುತ್ತಿದ್ದ ಹುಲಿಗಳ ದಾಳಿಗಳನ್ನು ನಿಯಂತ್ರಿಸಲು ಅಲ್ಲಿನ ಅರಣ್ಯ ಇಲಾಖೆ ಮಾಡಿದ್ದ ಉಪಾಯ. ಅದನ್ನೇ ಇಲ್ಲೂ ಅಳವಡಿಸಲು ಮುಂದಾಗಿದೆ ಅರಣ್ಯ ಇಲಾಖೆ.

ವಿಜಯ ಕರ್ನಾಟಕ 15 Nov 2025 11:35 pm

ಗದಗದಲ್ಲಿ ರೈತರಿಂದ ಅಹೋರಾತ್ರಿ ಧರಣಿ; ಗೋವಿನ ಜೋಳ ಖರೀದಿ ಕೇಂದ್ರ ಆರಂಭಿಸಲು ಒತ್ತಾಯ

ಗದಗ : ಗೋವಿನ ಜೋಳ ಖರೀದಿ ಕೇಂದ್ರ ಆರಂಭಿಸಲು ಒತ್ತಾಯಿಸಿ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಲಕ್ಷ್ಮೀಶ್ವರ ಪಟ್ಟಣದಲ್ಲಿ ರೈತ ಸಂಘಟನೆ ಹಾಗೂ ಪ್ರಗತಿಪರ ರೈತರು ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭ ಮಾಡಿದ್ದಾರೆ. ನಗರದ ಸೋಮನಾಥ ದೇವಸ್ಥಾನದಿಂದ ಪಾದಯಾತ್ರೆ ಮುಖಾಂತರ ಅಹೋರಾತ್ರಿ ಹೋರಾಟಕ್ಕೆ ಚಾಲನೆ ನೀಡಿದ ರೈತರು, ಭಜಾರ ಲೈನ್ ಮುಖಾಂತರ ಲಕ್ಷ್ಮೀಶ್ವರ ಪಟ್ಟಣದ ಶಿಗ್ಲಿ ಕ್ರಾಸ್ ಬಳಿ ಸಾಂಕೇತಿಕವಾಗಿ ಗದಗ-ಲಕ್ಷ್ಮೀಶ್ವರ ರಸ್ತೆ ತಡೆ ನಡೆಸಿ ಅಹೋರಾತ್ರಿ ಧರಣಿಗೆ ಮುಂದಾದರು. ಈ ಭಾಗದ ರೈತರ ಗೋವಿನ ಜೋಳದ ಫಸಲು ಆರಂಭವಾಗಿ ಎರಡು ತಿಂಗಳು ಕಳೆದರೂ ಇನ್ನು ಖರೀದಿ ಕೇಂದ್ರ ಪ್ರಾರಂಭವಾಗಿಲ್ಲ. ಇದರಿಂದ ಈ ಭಾಗದ ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ರೈತ ಮುಖಂಡ ಟಾಕಪ್ಪ ಸಾತಪತಿ ಮಾತನಾಡಿ, ಶಿರಹಟ್ಟಿ ಭಾಗವು ಅತಿ ಹೆಚ್ಚು ಗೋವಿನ ಜೋಳ ಬೆಳೆಯನ್ನು ಬೆಳೆದಿದ್ದು ಖರೀದಿ ಕೇಂದ್ರ ಪ್ರಾರಂಭದ ನಿರೀಕ್ಷೆಯಲ್ಲಿದ್ದೇವೆ. ಮನೆಯಲ್ಲಿ ಸಂಗ್ರಹಿಸಿ ಇಟ್ಟ ಗೋವಿನ ಜೋಳಕ್ಕೆ ಕೀಟ ಕಾಟ ಪ್ರಾರಂಭವಾಗುವ ಮೊದಲು ಸರಕಾರ ಎಚ್ಚೆತ್ತುಕೊಂಡು ಖರೀದಿ ಕೇಂದ್ರ ಪ್ರಾರಂಭ ಮಾಡಬೇಕು, ರೈತರ ಆರ್ಥಿಕ ಸಂಕಷ್ಟಗಳನ್ನು ಬಂಡವಾಳ ಮಾಡಿಕೊಂಡ ಖಾಸಗಿ ವರ್ತಕರು ಹಾಗೂ ದಲ್ಲಾಳಿಗಳು ಗೋವಿನಜೋಳವನ್ನು 1,500ರೂ. ಗಳಿಂದ 1,600 ರೂ. ಗಳವರೆಗೆ ಬೆಲೆ ನಿಗದಿ ಮಾಡಿ ರೈತರಿಗೆ ಮೋಸ ಮಾಡುತ್ತಿದ್ದಾರೆ. ಸರಕಾರ ಈ ಕೂಡಲೇ ಖರೀದಿ ಕೇಂದ್ರ ಪ್ರಾರಂಭಮಾಡುವವರೆಗೂ ನಾವು ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದರು. ಇನ್ನು ಧರಣಿ ಸ್ಥಳಕ್ಕೆ ಶಿರಹಟ್ಟಿ-ಲಕ್ಷ್ಮೀಶ್ವರ ತಹಶೀಲ್ದಾರರು ಆಗಮಿಸಿ ರೈತರ ಮನವೊಲಿಸಲು ಪ್ರಯತ್ನ ಮಾಡಿದರು. ಆದರೆ ರೈತರು ಸರಕಾರದಿಂದ ಬೆಂಬಲ ಬೆಲೆಯಡಿ ಖರೀದಿ ಕೇಂದ್ರ ಪ್ರಾರಂಭವಾದ ನಂತರ ನಾವು ಮನೆಗೆ ಹೋಗುತ್ತೇವೆ, ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದರು. ಧರಣಿಯಲ್ಲಿ ರೈತ ಮುಖಂಡರಾದ ಮಂಜುನಾಥ ಮಾಗಡಿ, ರವಿಕಾಂತ ಅಂಗಡಿ, ನಾಗಪ್ಪ ಚಂಚಲಿ,ಚನ್ನಪ್ಪ ಸಣ್ಣಕ್ಕಿ, ಬಸಪ್ಪ ಬೆಂಡಿಗೇರಿ, ಹೊನಪ್ಪ ಒಡ್ಡರ ಹಾಗೂ ರೈತರು ಭಾಗಿಯಾಗಿದ್ದರು.

ವಾರ್ತಾ ಭಾರತಿ 15 Nov 2025 11:28 pm

ಉಳ್ಳಾಲ: ವ್ಯಕ್ತಿಯ ಮೇಲೆ ದಾಳಿ ನಡೆಸಿ ಅವರ ಸಾವಿಗೆ ಕಾರಣವಾದ ಬೀದಿನಾಯಿ ಸಾವು

ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಪಲ ಬೈಪಾಸ್ ಬಳಿ ದಯಾನಂದ ಗಟ್ಟಿ ಎಂಬವರ ಮೇಲೆ ದಾಳಿ ನಡೆಸಿ, ಆತನ ಸಾವಿಗೆ ಕಾರಣವಾದ ನಾಯಿ ಶನಿವಾರ ಸಾವಿಗೀಡಾಗಿದೆ. ಕುಂಪಲ ಮೂರುಕಟ್ಟೆ ನಿವಾಸಿ ದಯಾನಂದ ಗಟ್ಟಿ ಅವರು ಶುಕ್ರವಾರ ಬೆಳಗ್ಗಿನ ಜಾವ ನಡೆದುಕೊಂಡು ಹೋಗುತ್ತಿದ್ದಾಗ ಅವರ ಮೇಲೆ ನಾಯಿ ದಾಳಿ ನಡೆಸಿತ್ತು ಎನ್ನಲಾಗಿದೆ. ದಯಾನಂದ ಅವರ ಮೃತದೇಹ ವ್ಯಕ್ತಿಯೊಬ್ಬರ ಕುಂಪಲ ಬೈಪಾಸ್‌ನ ಮನೆಯ ಅಂಗಳದಲ್ಲಿ ಪತ್ತೆಯಾಗಿತ್ತು. ದಯಾನಂದ ಅವರ ಸಾವಿಗೆ ನಾಯಿ ದಾಳಿ ಕಾರಣ ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅನಂತರ ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಸ್ಥಳಕ್ಕೆ ಭೇಟಿ ನೀಡಿ ದಯಾನಂದ ಅವರ ಸಾವು ಪ್ರಾಣಿ ದಾಳಿಯಿಂದ ಆಗಿದೆ ಎಂದು ದೃಢಪಡಿಸಿದ್ದರು. ದಯಾನಂದ ಅವರ ಮೇಲೆ ದಾಳಿ ನಡೆಸಿದೆ ಎನ್ನಲಾದ ನಾಯಿಯನ್ನು ಶಕ್ತಿನಗರದ ಅನಿಮಲ್ ಕೇರ್ ಟ್ರಸ್ಟ್ ಸಹಾಯದಿಂದ ಹಿಡಿಯಲಾಗಿತ್ತು.

ವಾರ್ತಾ ಭಾರತಿ 15 Nov 2025 11:18 pm

ಮತದಾರನ ಮತ ಕಿತ್ತುಹಾಕುವುದು ಕೊಲೆಗೆ ಸಮಾನ : ನಟ ಕಿಶೋರ್‌ ಕುಮಾರ್‌

ಬೆಂಗಳೂರು : ʼಮತದಾರರ ಪಟ್ಟಿಯಿಂದ ಕಿತ್ತು ಹಾಕಲ್ಪಟ್ಟ ಪ್ರತಿಯೊಬ್ಬ ಮತದಾರನ ಮತವೂ ಪ್ರಜಾಪ್ರಭುತ್ವದ ಮಟ್ಟಿಗೆ ಒಬ್ಬ ನಾಗರಿಕನ ಕೊಲೆಗೆ ಸಮಾನʼ ಎಂದು ಬಹುಭಾಷಾ ನಟ ಕಿಶೋರ್‌ ಕುಮಾರ್‌ ಹೇಳಿದ್ದಾರೆ. ಈ ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವ ಅವರು, ʼಹುಟ್ಟಿನಿಂದಲೇ ಭ್ರಷ್ಟಾಚಾರದ ಬೀಜ ಹೊತ್ತು ಬಂದ ಚುನಾವಣಾ ಆಯುಕ್ತನ ಪದವಿಯಿಂದ ಬೇರಿನ್ನೇನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ.(ಆ ಪದವಿಯ ಆಯ್ಕೆ ಸಮಿತಿಯಿಂದ ಚೀಫ್ ಜಸ್ಟೀಸ್‌ರನ್ನು ಹೊಸ ಕಾಯ್ದೆ ತಂದು ಹೊರಗಿಟ್ಟಿದ್ದು). ಈ ದೇಶದಲ್ಲಿ ಪ್ರಜಾಪ್ರಭುತ್ವ ಒಂದು ಜೋಕ್. ಇಂತಹ ಭ್ರಷ್ಟಬೀಜಾಸುರ ಜೋಕರ್‌ಗಳು, ಮತದಾನ ಎಂಬ ಪ್ರಜಾಪ್ರಭುತ್ವದ ಅತ್ಯಂತ ಶಕ್ತಿಶಾಲಿ ಪ್ರಕ್ರಿಯೆಯ ಅತ್ಯುನ್ನತ ಸ್ಥಾನದಲ್ಲಿದ್ದಾಗ, ಈ ವ್ಯಕ್ತಿ ಸಂಪೂರ್ಣವಾಗಿ ಭ್ರಷ್ಟ ಎಂದು ಸಾಬೀತುಪಡಿಸಲು ಮೇಲಿನ ಈ ಒಂದು ಹೇಳಿಕೆ ಸಾಕು ಎಂದು ಉಲ್ಲೇಖಿಸಿದ್ದಾರೆ. ಈ ವ್ಯಕ್ತಿಯ ಕಾರಣದಿಂದಾಗಿ, ಸರಕಾರಿ ಹಣವನ್ನು ಬಳಸಿಕೊಂಡು ಜನರಿಗೆ ಲಂಚ ನೀಡಿ ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಗಾಗಿ ಚುನಾವಣೆಯಿಂದಲೇ ನಿಷೇಧಿಸಲ್ಪಡಬೇಕಾಗಿದ್ದ ಒಕ್ಕೂಟವೊಂದು ಮತ್ತೆ ಅಧಿಕಾರಕ್ಕೆ ಬಂದಿದೆ. ʼಮಹಾಮಾನವ್ ಹೈ ತೋ ಸಬ್ ಕುಚ್ ಮುಮ್ಕಿನ್ ಹೈʼ ಎಂದು ವ್ಯಂಗ್ಯವಾಡಿದ್ದಾರೆ.

ವಾರ್ತಾ ಭಾರತಿ 15 Nov 2025 11:13 pm

Cabinet reshuffle: ದೆಹಲಿಯಲ್ಲಿ ರಾಹುಲ್‌ ಗಾಂಧಿ ಭೇಟಿ ಬಳಿಕ ಸಿದ್ದರಾಮಯ್ಯ ಹೇಳಿದ್ದೇನು?

ರಾಜ್ಯ ಕಾಂಗ್ರೆಸ್‌ನಲ್ಲಿ ನವೆಂಬರ್‌ ಕ್ರಾಂತಿ, ಸಿಎಂ ಬದಲಾವಣೆ ಚರ್ಚೆಗಳು ಜೋರಾಗಿರುವ ಹೊತ್ತಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ದಿಢೀರ್‌ ದೆಹಲಿಗೆ ಹಾರಿದ್ದಾರೆ. ಬಿಹಾರ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಮಹತ್ವದ ಬದಲಾವಣೆ ಆಗಲಿವೆ ಎಂದೂ ಹೇಳಲಾಗಿತ್ತು. ನಿನ್ನೆಯಷ್ಟೇ ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಹೊರಬಿದ್ದಿದೆ. ಇದರ ನಡುವೆ ಸಿದ್ದರಾಮಯ್ಯ ಅವರು ದೆಹಲಿ ತಲುಪಿರುವುದು ಮಹತ್ವ ಪಡೆದುಕೊಂಡಿದೆ. ದೆಹಲಿಯಲ್ಲಿ ರಾಹುಲ್‌

ಒನ್ ಇ೦ಡಿಯ 15 Nov 2025 11:02 pm

ಸಚಿವ ಸಂಪುಟ ವಿಸ್ತರಣೆ, ನಾಯಕತ್ವ ಬದಲಾವಣೆ ಬಗ್ಗೆ ಕೇಳಿದಾಗ ಡಿಸಿಎಂ ಏನಂದ್ರು ಕೇಳಿ

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟ ಪುನರ್ರಚನೆ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದರು. ಮುಖ್ಯಮಂತ್ರಿಗಳು ಹೈಕಮಾಂಡ್ ನಾಯಕರನ್ನು ಭೇಟಿಯಾಗುವ ಬಗ್ಗೆ ಕೇಳಿದಾಗ, ಭೇಟಿಯಾಗುವುದು ತಪ್ಪಲ್ಲ ಎಂದರು. ಪಕ್ಷದ ಸೂಚನೆ ಪಾಲಿಸುವುದಾಗಿ ತಿಳಿಸಿದರು. ಸಂಪುಟ ಪುನರ್ರಚನೆ ಬಗ್ಗೆ ಹೈಕಮಾಂಡ್ ಕೇಳಿದರೆ ಮಾತ್ರ ಮಾತನಾಡುವುದಾಗಿ ಹೇಳಿದರು.

ವಿಜಯ ಕರ್ನಾಟಕ 15 Nov 2025 10:56 pm

ಪಣಂಬೂರು ಸರಣಿ ಅಪಘಾತ: ಮೂವರನ್ನು ಕಳೆದುಕೊಂಡ ಮೊಂಟೆಪದವಿನಲ್ಲಿ ನೀರವ ಮೌನ

ಕೊಣಾಜೆ: ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್‌ನಲ್ಲಿ ಸರತಿಯಲ್ಲಿ ನಿಂತಿದ್ದ ವೇಳೆ ಎರಡು ಟ್ಯಾಂಕರ್‌ಗಳು, ಆಟೊ ರಿಕ್ಷಾ ಮತ್ತು ಕಾರು ಸರಣಿ ಅಪಘಾತಕ್ಕೀಡಾಗಿ ಮೃತಪಟ್ಟ ಮೂವರು ಉಳ್ಳಾಲ ತಾಲೂಕಿನ ಮೊಂಟೆಪದವು ಪರಿಸರದವರಾಗಿದ್ದಾರೆ. ಮೂವರನ್ನು ಕಳೆದುಕೊಂಡ ಮೊಂಟೆಪದವು ಪರಿಸರದಲ್ಲೀಗ ನೀರವ ಮೌನ ಆವರಿಸಿದೆ. ಮೃತಪಟ್ಟ ಮೂವರ ಪೈಕಿ ಇಬ್ಬರು ಬೀಡಿ ಗುತ್ತಿಗೆದಾರರಾಗಿದ್ದು, ಮತ್ತೊಬ್ಬರು ರಿಕ್ಷಾ ಚಾಲಕರಾಗಿದ್ದಾರೆ. ಮೂವರು ಕೂಡಾ ಸಮಾಜಮುಖಿಯಾಗಿದ್ದುಕೊಂಡು ಎಲ್ಲರೊಂದಿಗೆ ಬೆರೆತುಕೊಳ್ಳುವ, ಮತ್ತೊಬ್ಬರ ಸಂಕಷ್ಟದಲ್ಲಿ ಭಾಗಿಯಾಗುವ ಮನೋಭಾವದ ವ್ಯಕ್ತಿಗಳಾಗಿದ್ದರು. ಮೊಯ್ದಿನ್ ಕುಂಞಿ ಯಾನೆ ಮನ್ಸೂರ್: ಅಪಘಾತದಲ್ಲಿ ಮೃತಪಟ್ಟ ಆಟೊ ರಿಕ್ಷಾ ಚಾಲಕ ಮೊಯ್ದಿನ್ ಕುಂಞಿ ಯಾನೆ ಮನ್ಸೂರ್ (25) ಉಳ್ಳಾಲ ತಾಲೂಕಿನ ನರಿಂಗಾನ ಗ್ರಾಮದ ಮರಿಕ್ಕಳ ನಿವಾಸಿಯಾಗಿದ್ದಾರೆ. ವ್ಯಾಪಾರಿ ಇಬ್ರಾಹೀಂ ಹಾಗೂ ಜಮೀಲ ದಂಪತಿಯ ಪುತ್ರ. ಇಬ್ರಾಹೀಂ ಅವರಿಗೆ ಮೂವರು ಪುತ್ರರು ಹಾಗೂ ಒಬ್ಬ ಪುತ್ರಿಯರಿದ್ದು, ಮನ್ಸೂರ್ ಕೊನೆಯ ಪುತ್ರರಾಗಿ ಎಲ್ಲರಿಗೂ ಪ್ರೀತಿಪಾತ್ರರಾಗಿದ್ದರು. ಅಬೂಬಕರ್: ಮೊಂಟೆಪದವಿನ ಅಬೂಬಕರ್ (65) ಕಳೆದ ಹಲವು ದಶಕಗಳಿಂದ ಮೊಂಟೆಪದವಿನಲ್ಲಿ ಪ್ರಕಾಶ್ ಬೀಡಿ ಗುತ್ತಿಗೆದಾರರಾಗಿದ್ದುಕೊಂಡು ಗ್ರಾಮದ ಅನೇಕರಿಗೆ ಬೀಡಿ ಉದ್ಯಮಕ್ಕೆ ಬೆಂಬಲ ಸಹಕಾರ ನೀಡುತ್ತಾ ಬಂದವರು. ಪರಿಸರದಲ್ಲಿ ನಡೆಯುವ ಅನೇಕ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಮೊಂಟೆಪದವು ಹಯಾತ್ ನಗರ ಮಸೀದಿಯ ಕಮಿಟಿ ಸದಸ್ಯರಾಗಿದ್ದರು. ಇವರಿಗೆ ಪತ್ನಿ, ಇಬ್ಬರು ಪುತ್ರ ಹಾಗೂ ನಾಲ್ಕು ಪುತ್ರಿಯರು ಇದ್ದಾರೆ. ಇಬ್ರಾಹೀಂ ಬಟ್ಯಡ್ಕ: ಮೂಲತ ವರ್ಕಾಡಿ-ನರಿಂಗಾನ ಕಲಿಮಿಂಜ ಬಟ್ಯಡ್ಕ ನಿವಾಸಿ ಇಬ್ರಾಹೀಂ ಬಟ್ಯಡ್ಕ (68) ಅವರು ಕೂಡಾ ಹಲವು ದಶಕಗಳಿಂದ ಬೀಡಿ ಗುತ್ತಿಗೆರರಾಗಿದ್ದು, ದೋಸೆಮನೆ ಹಾಗೂ ಮೊಂಟೆಪದವಿನಲ್ಲಿ ಬೀಡಿ ಕಟ್ಟಿಸುವ ಗುತ್ತಿಗೆದಾರರಾಗಿದ್ದರು. ಸ್ನೇಹ ಜೀವಿಯಾಗಿದ್ದ ಇವರು ಪ್ರತಿಯೊಬ್ಬರಲ್ಲೂ ಉತ್ತಮ ಒಡನಾಟ ಇಟ್ಟುಕೊಂಡಿದ್ದ ವ್ಯಕ್ತಿಯಾಗಿದ್ದರು. ಇವರಿಗೆ ಪತ್ನಿ, ಏಳು ಪುತ್ರರು ಹಾಗೂ ಒಬ್ಬಳು ಪುತ್ರಿ ಇದ್ದಾರೆ.

ವಾರ್ತಾ ಭಾರತಿ 15 Nov 2025 10:29 pm

ರೈತರಿಗೆ ಎಕರೆಗೆ ₹25,000 ಪರಿಹಾರ: ಬೃಹತ್‌ ಹೋರಾಟಕ್ಕೆ ಬಿಜೆಪಿ ನಿರ್ಧಾರ

ರಾಜ್ಯ ಬಿಜೆಪಿ ನಾಯಕರು ತುಂಗಭದ್ರಾ ಜಲಾನಯನ ಪ್ರದೇಶದ ನಾಲ್ಕು ಜಿಲ್ಲೆಗಳ ರೈತರ ಬೆನ್ನಿಗೆ ನಿಂತಿದ್ದಾರೆ. ತುಂಗಭದ್ರಾ ರೈತರ ಎರಡನೇ ಬೆಳೆಗೆ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಬೃಹತ್‌ ಹೋರಾಟಕ್ಕೆ ನಿರ್ಧರಿಸಿದ್ದಾರೆ. ತುಂಗಭದ್ರಾ ಜಲಾನಯನ ಪ್ರದೇಶದ ನಾಲ್ಕು ಜಿಲ್ಲೆಗಳ ರೈತರಿಗೆ ಎರಡನೇ ಬೆಳೆಗೆ ನೀರು ಒದಗಿಸುವಲ್ಲಿ ರಾಜ್ಯ ಸರ್ಕಾರದ ವೈಫಲ್ಯವನ್ನು ಚರ್ಚಿಸಲು ಇಂದು ಬಿಜೆಪಿ ಪಕ್ಷದ

ಒನ್ ಇ೦ಡಿಯ 15 Nov 2025 10:24 pm

Adani Energy: ಅಸ್ಸಾಂನಲ್ಲಿ 63,000 ಕೋಟಿ ರೂಪಾಯಿ ಹೂಡಿಕೆ ಮಾಡಲಿರುವ ಅದಾನಿ ಸಂಸ್ಥೆ

ಅದಾನಿ ಸಂಸ್ಥೆ ಇದೀಗ ಮಹತ್ವದ ಯೋಜನೆ ಒಂದಕ್ಕೆ ಕೈಹಾಕಿದ್ದು, ಅಂದಹಾಗೆ ಅಸ್ಸಾಂನಲ್ಲಿ 63,000 ಕೋಟಿ ರೂಪಾಯಿ ಹೂಡಿಕೆ ಮಾಡಲಿದೆ. 3,200 ಮೆಗಾವ್ಯಾಟ್ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಅದಾನಿ ಪವರ್ ಭರ್ಜರಿ 48,000 ಕೋಟಿ ರೂಪಾಯಿ ಹೂಡಿಕೆ ಮಾಡಲಿದೆ. ಇನ್ನು 2,700 ಮೆಗಾವ್ಯಾಟ್ ಸಾಮರ್ಥ್ಯದ 2 ಪಿಎಸ್‌ಪಿ ಯೋಜನೆಗಳಲ್ಲಿ ಅದಾನಿ ಗ್ರೀನ್ ಎನರ್ಜಿ 15,000 ಕೋಟಿ ರೂಪಾಯಿ ಹೂಡಿಕೆ

ಒನ್ ಇ೦ಡಿಯ 15 Nov 2025 9:53 pm

ಶುರುವಾಯ್ತು ಹೊಸ ಜಗಳ, ಜಪಾನ್‌ ಪ್ರವಾಸ ಕೈಗೊಳ್ಳದಂತೆ ಚೀನಾ ಸೂಚನೆ; ರಾದ್ಧಾಂತಕ್ಕೆ ಕಾರಣವಾದ ತೈವಾನ್‌ ಪ್ರಸ್ತಾಪ!

ಸಾಂಪ್ರದಾಯಿಕ ಎದುರಾಳಿಗಳಾದ ಚೀನಾ ಮತ್ತು ಜಪಾನ್‌ ಮತ್ತೊಮ್ಮೆ ಪರಸ್ಪರ ಮುಖಾಮುಖಿಯಾಗಿವೆ. ತೈವಾನ್‌ ಬಿಕ್ಕಟ್ಟಿನ ಬಗ್ಗೆ ಜಪಾನ್‌ ಪ್ರಧಾನಿ ಸಾನೆ ತಕೈಚಿ ನೀಡಿದ ಹೇಳಿಕೆಯೊಂದು, ಚೀನಾವನ್ನು ಕೆರಳಿ ಕೆಂಡವಾಗಿಸಿದೆ. ಜಪಾನ್‌ ಪ್ರಧಾನಿಯ ಹೇಳಿಕೆಯನ್ನು ವಿರೋಧಿಸಿರುವ ಚೀನಾ, ಈ ಕುರಿತು ಸ್ಪಷ್ಟನೆ ನೀಡುವಂತೆ ಆದೇಶಿಸಿ ಜಪಾನ್‌ ರಾಯಭಾರಿಗೆ ಸಮನ್ಸ್‌ ಜಾರಿ ಮಾಡಿದೆ. ಇಷ್ಟೇ ಅಲ್ಲದೇ ಜಪಾನ್‌ನಲ್ಲಿರುವ ಚೀನಾ ರಾಯಭಾರ ಕಚೇರಿಯು, ಚೀನಿ ಪ್ರಜೆಗಳಿಗೆ ಜಪಾನ್‌ ಪ್ರಯಾಣ ಮಾಡದಂತೆ ಸಲಹೆ ನೀಡಿದೆ. ಈ ಬಗ್ಗೆ ಇಲ್ಲಿದೆ ಮಾಹಿತಿ.

ವಿಜಯ ಕರ್ನಾಟಕ 15 Nov 2025 9:52 pm

ರಾಜಮೌಳಿ - ಮಹೇಶ್ ಬಾಬು ಕಾಂಬಿನೇಷನ್ ಚಿತ್ರದ ಟೈಟಲ್ ಕಡೆಗೂ ರಿವೀಲ್! ಏನು ಹೆಸರು ಗೊತ್ತಾ?

ಖ್ಯಾತ ನಿರ್ದೇಶಕ ರಾಜಮೌಳಿ ಮತ್ತು ಮಹೇಶ್ ಬಾಬು ಕಾಂಬಿನೇಷನ್‌ನ ಬಹುನಿರೀಕ್ಷಿತ ಚಿತ್ರಕ್ಕೆ 'ವಾರಾಣಸಿ' ಎಂದು ಅಧಿಕೃತ ಹೆಸರಿಡಲಾಗಿದೆ. ಹೈದರಾಬಾದ್‌ನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ, ಸುಕುಮಾರನ್, ರಾಜಮೌಳಿ, ಎಂಎಂ ಕೀರವಾಣಿ ಸೇರಿದಂತೆ ಗಣ್ಯರ ಸಮ್ಮುಖದಲ್ಲಿ ಈ ಹೆಸರನ್ನು ಅನಾವರಣಗೊಳಿಸಲಾಯಿತು. ಈ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿದೆ.

ವಿಜಯ ಕರ್ನಾಟಕ 15 Nov 2025 9:50 pm

RCB ತಂಡದಲ್ಲಿ ಭಾರಿ ಮಹತ್ವದ ಬದಲಾವಣೆ, ಯಾರೆಲ್ಲಾ ತಂಡದಿಂದ ಉಡೀಸ್?

ಆರ್‌ಸಿಬಿ ತಂಡವು 18 ವರ್ಷಗಳ ನಂತರ ಭರ್ಜರಿಯಾಗಿ ಕಪ್ ಗೆದ್ದ ಖುಷಿಯಲ್ಲಿ ಪ್ರಮುಖವಾದ ಬದಲಾವಣೆಗಳನ್ನು ತಂಡದಲ್ಲಿ ತರಲು ಮುಂದಾಗಿದೆ. ಆರ್‌ಸಿಬಿ ಬೆಂಗಳೂರು ತಂಡದ ಫ್ಯಾನ್ಸ್ ಈ ಮೂಲಕ ಮತ್ತೊಮ್ಮೆ ಭರ್ಜರಿ ಗಿಫ್ಟ್ ಪಡೆಯುವ ನಿರೀಕ್ಷೆಯಲ್ಲಿ ಇದ್ದಾರೆ. 2025 ಐಪಿಎಲ್ ಕಪ್ ಗೆದ್ದಿರುವ ಆರ್‌ಸಿಬಿ ತಂಡ 2026 ಐಪಿಎಲ್ ಕಪ್ ಕೂಡ ಗೆಲ್ಲುವ ಪ್ಲಾನ್ ಮಾಡುತ್ತಿದೆ. ಈ ಎಲ್ಲಾ

ಒನ್ ಇ೦ಡಿಯ 15 Nov 2025 9:48 pm

ಕೇರಳ | ಲೈಂಗಿಕ ದೌರ್ಜನ್ಯ; ಪೊಕ್ಸೊ ಪ್ರಕರಣದಲ್ಲಿ ಬಿಜೆಪಿ ನಾಯಕ ಕೆ‌.ಪದ್ಮರಾಜನ್‌ಗೆ ಜೀವನಪರ್ಯಂತ ಶಿಕ್ಷೆ

ತಿರುವನಂತಪುರಂ : ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ದಾಖಲಾಗಿದ್ದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಿಜೆಪಿ ನಾಯಕ ಹಾಗೂ ಶಾಲಾ ಶಿಕ್ಷಕ ಕೆ‌.ಪದ್ಮರಾಜನ್ ಎಂಬಾತನನ್ನು ದೋಷಿ ಎಂದು ಘೋಷಿಸಿರುವ ತಲಸ್ಸೇರಿ ಪೊಕ್ಸೊ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಎಂ.ಟಿ.ಜಲಜಾರಾಣಿ, ಆತನಿಗೆ ನೈಸರ್ಗಿಕವಾಗಿ ಸಾಯುವವರೆಗೂ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಪಪ್ಪನ್ ಮಾಸ್ಟರ್ ಎಂದೂ ಹೆಸರಾಗಿರುವ ಕೆ.ಪದ್ಮರಾಜನ್ ವಿರುದ್ಧ 2020ರಲ್ಲಿ ದಾಖಲಾಗಿದ್ದ ಪೊಕ್ಸೊ ಪ್ರಕರಣದಲ್ಲಿ ಆತನನ್ನು ದೋಷಿ ಎಂದು ಘೋಷಿಸಿರುವ ನ್ಯಾಯಾಧೀಶೆ ಜಲಜಾರಾಣಿ, ಆತನಿಗೆ ಒಂದು ಲಕ್ಷ ರೂ. ದಂಡವನ್ನೂ ವಿಧಿಸಿದ್ದಾರೆ. ಒಂದು ವೇಳೆ ಈ ದಂಡವನ್ನು ನಿಗದಿತ ಅವಧಿಯಲ್ಲಿ ಪಾವತಿಸದಿದ್ದರೆ, ಒಂದು ವರ್ಷ ಹೆಚ್ಚುವರಿ ಶಿಕ್ಷೆಯನ್ನೂ ಅನುಭವಿಸಬೇಕು ಎಂದೂ ಆದೇಶಿಸಿದ್ದಾರೆ. ಈ ಶಿಕ್ಷೆಯೊಂದಿಗೆ, ಎರಡು ಪ್ರತ್ಯೇಕ ಪೊಕ್ಸೊ ಪ್ರಕರಣಗಳಲ್ಲಿ ಆತ 40 ವರ್ಷ ಜೈಲು ಶಿಕ್ಷೆಯನ್ನು ಅನುಭವಿಸಬೇಕಿದೆ ಹಾಗೂ ಒಂದು ಲಕ್ಷ ರೂ. ದಂಡವನ್ನೂ ಪಾವತಿಸಬೇಕಿದೆ. ಇದರಿಂದ ಒಟ್ಟು ದಂಡದ ಮೊತ್ತ ಎರಡು ಲಕ್ಷ ರೂ. ಆಗಲಿದೆ. 49 ವರ್ಷದ ಅಪರಾಧಿ ಕೆ‌.ಪದ್ಮರಾಜನ್ ತಿಪ್ಪನ್‌ಗೊಟ್ಟೂರ್ ಪಂಚಾಯತಿಯ ಮಾಜಿ ಬಿಜೆಪಿ ಅಧ್ಯಕ್ಷನಾಗಿದ್ದು, ಆತ ಸಂಘ ಪರಿವಾರ ಶಿಕ್ಷಕರ ಸಂಘಟನೆಯ ಅಧ್ಯಕ್ಷನೂ ಆಗಿದ್ದ. ಅಪರಾಧಿ ಕೆ‌.ಪದ್ಮರಾಜನ್ ಉದ್ಯೋಗ ಮಾಡುತ್ತಿದ್ದ ಶಾಲೆಯಲ್ಲೇ 10 ವರ್ಷದ ಸಂತ್ರಸ್ತ ಬಾಲಕಿಯೂ ವ್ಯಾಸಂಗ ಮಾಡುತ್ತಿದ್ದಳು. ಅಪರಾಧಿ ಕೆ.ಪದ್ಮರಾಜನ್ ತಮ್ಮ ಪುತ್ರಿಯ ಮೇಲೆ ಶಾಲಾ ಶೌಚಾಲಯದಲ್ಲಿ ಸೇರಿದಂತೆ ಹಲವೆಡೆ ಹಲವು ಬಾರಿ ಲೈಂಗಿಕ ದೌರ್ಜನ್ಯವೆಸಗಿದ್ದ ಎಂದು ದೂರುದಾರರು ಆರೋಪಿಸಿದ್ದರು.

ವಾರ್ತಾ ಭಾರತಿ 15 Nov 2025 9:40 pm

ಮುಂಬೈ ತಂಡದಲ್ಲಿ ಉಳಿದುಕೊಂಡ ಹಾರ್ದಿಕ್ ಪಾಂಡ್ಯ, ಅರ್ಜುನ್ ತೆಂಡುಲ್ಕರ್ ಔಟ್

ಹೊಸದಿಲ್ಲಿ, ನ.15: ಮುಂಬೈ ಇಂಡಿಯನ್ಸ್ ಮ್ಯಾನೇಜ್‌ಮೆಂಟ್ 2026ರ ಆವೃತ್ತಿಯ ಐಪಿಎಲ್ ಮಿನಿ ಹರಾಜಿಗಿಂತ ಮೊದಲು ಉಳಿದುಕೊಂಡಿರುವ ಹಾಗೂ ಬಿಡುಗಡೆಗೊಳಿಸಿರುವ ಆಟಗಾರರ ಪಟ್ಟಿಯನ್ನು ಅಂತಿಮಗೊಳಿಸಿದೆ. ► ಬಿಡುಗಡೆಗೊಂಡಿರುವ ಆಟಗಾರರ ಪಟ್ಟಿ : ಅರ್ಜುನ್ ತೆಂಡುಲ್ಕರ್, ಬೆವನ್ ಜೇಕಬ್ಸ್, ಕರ್ಣ್ ಶರ್ಮಾ, ಲಿಝಾಡ್ ವಿಲಿಯಮ್ಸ್, ಮುಜೀಬ್‌ವುರ್ರಹ್ಮಾನ್, ರೀಸ್ ಟೋಪ್ಲೆ, ಕೃಷ್ಣ ಶ್ರೀಜಿತ್, ಸತ್ಯನಾರಾಯಣ ರಾಜು, ವಿಘ್ನೇಶ್ ಪುಥೂರ್. ► ಉಳಿದುಕೊಂಡಿರುವವರ ಪಟ್ಟಿ : ಹಾರ್ದಿಕ್ ಪಾಂಡ್ಯ, ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ರಯಾನ್ ರಿಕೆಲ್ಟನ್, ರಾಬಿನ್ ಮಿಂಝ್, ಮಿಚೆಲ್ ಸ್ಯಾಂಟ್ನರ್, ಕಾರ್ಬಿನ್ ಬಾಶ್, ನಮನ್ ಧೀರ್, ಜಸ್‌ಪ್ರಿತ್ ಬುಮ್ರಾ, ಟ್ರೆಂಟ್ ಬೌಲ್ಟ್, ಅಶ್ವನಿ ಕುಮಾರ್, ದೀಪಕ್ ಚಹಾರ್, ವಿಲ್ ಜಾಕ್ಸ್, ಶೆರ್ಫಾನ್ ರುದರ್‌ಫೋರ್ಡ್, ಮಯಾಂಕ್ ಮರ್ಕಂಡೆ, ಶಾರ್ದುಲ್ ಠಾಕೂರ್.

ವಾರ್ತಾ ಭಾರತಿ 15 Nov 2025 9:35 pm

ಸಾಫ್ಟ್‌ವೇರ್ ಕಂಪೆನಿ ಹೆಸರಿನಲ್ಲಿ ಅಮೆರಿಕಾ ಪ್ರಜೆಗಳಿಗೆ ವಂಚನೆ ಆರೋಪ: ಬೆಂಗಳೂರಿನಲ್ಲಿ 21 ಮಂದಿ ವಶಕ್ಕೆ, ವಿಚಾರಣೆ

ಬೆಂಗಳೂರು : ನಕಲಿ ಸಾಫ್ಟ್‌ವೇರ್ ಕಂಪೆನಿಯೊಂದು ಮೈಕ್ರೋಸಾಫ್ಟ್ ಟೆಕ್ನಿಕಲ್ ಸಪೋರ್ಟ್ ಹೆಸರಲ್ಲಿ ಅಮೆರಿಕ ಪ್ರಜೆಗಳನ್ನು ವಂಚನೆ ಮಾಡುತ್ತಿದ್ದ ಆರೋಪ ಪ್ರಕರಣ ಸಂಬಂಧ ನಗರದ ಸೈಬರ್ ಕ್ರೈಂ ಪೊಲೀಸರು ಹಾಗೂ ಸೈಬರ್ ಕಮಾಂಡ್ ಯೂನಿಟ್ ಅಧಿಕಾರಿಗಳು 21 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಶನಿವಾರ ಇಲ್ಲಿನ ವರ್ತೂರು ರಸ್ತೆಯಲ್ಲಿರುವ ಮೈಕ್ರೋಸಾಫ್ಟ್ ಟೆಕ್ನಿಕಲ್ ಸಪೋರ್ಟ್ ಹೆಸರಿನಲ್ಲಿ ನಡೆಯುತ್ತಿದ್ದ ಕಚೇರಿ ಮೇಲೆ ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ. ವಂಚನೆ ಸಂಬಂಧ ಸದ್ಯ ವೈಟ್‍ಫೀಲ್ಡ್ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಸ್ಕ್ ಕಮ್ಯುನಿಕೇಷನ್ಸ್ ಹೆಸರಿನಲ್ಲಿ ನಕಲಿ ಐಟಿ ಕಂಪೆನಿ ತೆರೆಲಾಗಿತ್ತು. ಟೆಕ್ನಿಕಲ್ ಸಪೋರ್ಟ್ ಹೆಸರಲ್ಲಿ ವಿದೇಶಿ ಪ್ರಜೆಗಳಿಗೆ ವಂಚನೆ ಆರೋಪ ಕೇಳಿಬಂದಿದೆ. ಈ ಬಗ್ಗೆ ಸೈಬರ್ ಕಮಾಂಡ್ ಯೂನಿಟ್‍ಗೆ ಮಾಹಿತಿ ಹಿನ್ನೆಲೆ ಸೈಬರ್ ಕಮಾಂಡ್ ಯೂನಿಟ್ ಡಿಜಿಪಿ ಡಾ.ಪ್ರಣಬ್ ಮೊಹಾಂತಿ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಎರಡು ದಿನ ಸತತ ದಾಳಿ ಮಾಡಿ ಪರಿಶೀಲನೆ ಮಾಡಲಾಗಿದೆ.ಈ ವೇಳೆ ಈ ಕಂಪೆನಿಯಲ್ಲಿ 21 ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಸದ್ಯ ಎಲ್ಲರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ಮುಂದುವರೆಸಲಾಗಿದೆ. ಜತೆಗೆ, ಮಹಜರು ನಡೆಸಿ ಕಂಪ್ಯೂಟರ್, ಡಿಜಿಟಲ್ ಡಿವೈಸ್, ಮೊಬೈಲ್‍ಗಳನ್ನು ಜಪ್ತಿ ಮಾಡಿದ್ದಾರೆ. ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಲಾಗಿದೆ ಎಂದು ಸೈಬರ್ ಕಮಾಂಡ್ ಯೂನಿಟ್ ತಿಳಿಸಿದೆ.

ವಾರ್ತಾ ಭಾರತಿ 15 Nov 2025 9:30 pm

ತಮಿಳುನಾಡಿನಲ್ಲಿ SIR - ಮತದಾನದ ಹಕ್ಕನ್ನು ಕಳೆದುಕೊಳ್ಳಲಿದ್ದಾರೆ ಚೆನ್ನೈನ 26 ಸಾವಿರ ನಿವಾಸಿಗಳು!

ಚೆನ್ನೈನ ಪೆರುಂಬಾಕ್ಕಂ ಪುನರ್ವಸತಿ ಕಾಲೋನಿಯ ಸುಮಾರು 26,000 ಮತದಾರರು ವಿಧಾನಸಭಾ ಚುನಾವಣೆಯಲ್ಲಿ ಮತದಾನದ ಹಕ್ಕು ಕಳೆದುಕೊಳ್ಳುವ ಸಾಧ್ಯತೆಯಿದೆ. ಮತದಾರರ ಗುರುತಿನ ಚೀಟಿಗಳಲ್ಲಿ ನಿಖರವಾದ ಮನೆ ಸಂಖ್ಯೆ, ರಸ್ತೆ ವಿವರಗಳಿಲ್ಲದ ಕಾರಣ ಚುನಾವಣಾಧಿಕಾರಿಗಳಿಗೆ ಅವರನ್ನು ಪತ್ತೆಹಚ್ಚಲು ಕಷ್ಟವಾಗುತ್ತಿದೆ. ಕೇವಲ 3,000 ಮಂದಿಗೆ ಮಾತ್ರ ನಿಖರ ವಿಳಾಸವಿದ್ದು, ಉಳಿದವರಿಗೆ ಮತದಾನದ ಹಕ್ಕು ಅಮಾನತುಗೊಳಿಸುವ ಸಾಧ್ಯತೆ ಇದೆ.

ವಿಜಯ ಕರ್ನಾಟಕ 15 Nov 2025 9:29 pm

ಬಿಹಾರ ಚುನಾವಣೆ | 1990ರ ನಂತರ ನೂತನ ವಿಧಾನಸಭೆಯಲ್ಲಿ ಅತ್ಯಂತ ಕಡಿಮೆ ಮುಸ್ಲಿಮ್ ಶಾಸಕರು

ಪಾಟ್ನಾ,ನ.15: ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕೇವಲ 10 ಮುಸ್ಲಿಮ್ ಶಾಸಕರು ಬಿಹಾರ ವಿಧಾನಸಭೆಗೆ ಆಯ್ಕೆಯಾಗಿದ್ದು,ಇದು 1990ರ ನಂತರ ಕನಿಷ್ಠ ಸಂಖ್ಯೆಯಾಗಿದೆ. 2022-23ರ ರಾಜ್ಯ ಜಾತಿ ಗಣತಿಯ ಪ್ರಕಾರ ಬಿಹಾರದ 13.07 ಕೋಟಿ ಜನಸಂಖ್ಯೆಯಲ್ಲಿ ಮುಸ್ಲಿಮ್ ಸಮುದಾಯವು ಶೇ,17.7ರಷ್ಟು ಪಾಲನ್ನು ಹೊಂದಿದೆ. 2020ಕ್ಕೆ ಹೋಲಿಸಿದರೆ ಈ ಬಾರಿ ಆಡಳಿತಾರೂಢ ಎನ್‌ಡಿಎ ಮತ್ತು ಪ್ರತಿಪಕ್ಷ ಮೈತ್ರಿಕೂಟ ಮಹಾಘಟಬಂಧನ ಕಡಿಮೆ ಸಂಖ್ಯೆಯಲ್ಲಿ ಮುಸ್ಲಿಮ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದವು. ಶುಕ್ರವಾರ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ವಿಧಾನಸಭೆಯ ಒಟ್ಟು 243 ಸ್ಥಾನಗಳ ಪೈಕಿ 202ನ್ನು ಎನ್‌ಡಿಎ,35ನ್ನು ಮಹಾಘಟಬಂಧನ ಮತ್ತು ಎಐಎಂಐಎಂ ಐದು ಸ್ಥಾನಗಳನ್ನು ಗೆದ್ದಿವೆ. 2025ರ ಚುನಾವಣೆಯಲ್ಲಿ ಜೆಡಿಯು ನಾಲ್ವರು ಮುಸ್ಲಿಮ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು, ಆದರೆ ನಿತೀಶ್ ಸರಕಾರದಲ್ಲಿ ಸಚಿವರಾಗಿರುವ ಮಹಮ್ಮದ್ ಝಮಾ ಖಾನ್ ಅವರು ಮಾತ್ರ ಕೈಮುರ್ ಜಿಲ್ಲೆಯ ಚೈನ್‌ ಪುರ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ಎಲ್‌ಜೆಪಿ(ಆರ್‌ವಿ) ಕಿಶನಗಂಜ್ ಜಿಲ್ಲೆಯ ಬಹಾದುರ್‌ಗಂಜ್‌ನಲ್ಲಿ ತನ್ನ ಏಕೈಕ ಮುಸ್ಲಿಮ್ ಅಭ್ಯರ್ಥಿ ಮುಹಮ್ಮದ್ ಕಲಿಮುದ್ದೀನ್ ಅವರನ್ನು ಕಣಕ್ಕಿಳಿಸಿದ್ದು, ಅಲ್ಲಿ ಎಐಎಂಐಎಂ ಅಭ್ಯರ್ಥಿ ಮುಹಮ್ಮದ್ ತೌಸೀಫ್ ಆಲಂ 28,726 ಮತಗಳ ಅಂತರದಿಂದ ಗೆದ್ದಿದ್ದಾರೆ. ಆರ್‌ಜೆಡಿ ಅಭ್ಯರ್ಥಿಗಳಾದ ಆಸಿಫ್ ಅಹ್ಮದ್ ಬಿಸ್ಫಿಯಿಂದ ಮತ್ತು ದಿವಂಗತ ಗ್ಯಾಂಗಸ್ಟರ್-ರಾಜಕಾರಣಿ ಮುಹಮ್ಮದ್ ಶಹಾಬುದ್ದೀನ್ ಪುತ್ರ ಒಸಾಮಾ ಸಾಹೇಬ್ ರಘುನಾಥಪುರದಿಂದ ಗೆದ್ದಿದ್ದಾರೆ. ಸೀಮಾಂಚಲ ಪ್ರದೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಮುಹಮ್ಮದ್ ಕಮರುಲ್ ಹೋಡಾ ಕಿಶನಗಂಜ್‌ ನಲ್ಲಿ ಮತ್ತು ಅಬಿದುರ್ ರೆಹಮಾನ್ ಅರಾರಿಯಾದಲ್ಲಿ ವಿಜಯಿಯಾಗಿದ್ದಾರೆ. 2010ರಲ್ಲಿ ರಾಜ್ಯ ವಿಧಾನಸಭೆಯಲ್ಲಿ 19 (ಶೇ.7.81) ಮುಸ್ಲಿಮ್ ಶಾಸಕರಿದ್ದರೆ 2015ರಲ್ಲಿ ಅವರ ಸಂಖ್ಯೆ 24ಕ್ಕೆ (ಶೇ.9.87)ಕ್ಕೆ ಏರಿಕೆಯಾಗಿತ್ತು. 2020ರಲ್ಲಿ ವಿಧಾನಸಭೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಶಾಸಕರ ಸಂಖ್ಯೆ 19ಕ್ಕೆ ಇಳಿದಿತ್ತು. ಈ ಪೈಕಿ ಎಂಟು ಜನರು ಆರ್‌ಜೆಡಿ, ಐವರು ಎಐಎಐಎಂ ಮತ್ತು ನಾಲ್ವರು ಕಾಂಗ್ರೆಸ್‌ ಗೆ ಸೇರಿದ್ದರು. ಬಿಎಸ್‌ಪಿ ಮತ್ತು ಸಿಪಿಐ (ಎಂಎಲ್) ಲಿಬರೇಷನ್ ತಲಾ ಓರ್ವ ಶಾಸಕರನ್ನು ಹೊಂದಿದ್ದವು.

ವಾರ್ತಾ ಭಾರತಿ 15 Nov 2025 9:26 pm

ಬಾಗಲಕೋಟೆಯಲ್ಲಿ ದಲಿತ ಮಹಿಳೆಯ ಮೇಲೆ ದೌರ್ಜನ್ಯ: ಮಹಿಳಾ ಆಯೋಗ ಖಂಡನೆ

ಬೆಂಗಳೂರು : ಬಾಗಲಕೋಟೆ ಜಿಲ್ಲೆಯ ಛಬ್ಬಿ ಗ್ರಾಮದಲ್ಲಿ ದಲಿತ ಮಹಿಳೆಯ ಮೇಲೆ ಪುರುಷರು, ಕ್ಷುಲ್ಲಕ ಕಾರಣಕ್ಕೆ ದೌರ್ಜನ್ಯವೆಸಗಿರುವ ಅಮಾನುಷ ಕೃತ್ಯವು ತಡವಾಗಿ ಬೆಳಕಿಗೆ ಬಂದಿರುವ ಬಗ್ಗೆ ವರದಿಯಾಗಿರುತ್ತದೆ. ಮಹಿಳೆಯ ಮೇಲೆ ನಡೆದಿರುವ ಈ ಅಮಾನುಷ ಕೃತ್ಯವನ್ನು ಕರ್ನಾಟಕ ರಾಜ್ಯ ಮಹಿಳಾ ಆಯೋಗ ಖಂಡಿಸಿದೆ. ಈ ಕುರಿತು ಮಹಿಳಾ ಆಯೋಗದ ಕಾರ್ಯದರ್ಶಿ ಬಾಗಲಕೋಟೆ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆದಿದ್ದು, ಸದರಿ ಪ್ರಕರಣದ ಬಗ್ಗೆ ನಿಯಮಾನುಸಾರ ಪರಿಶೀಲಿಸಿ, ಮಹಿಳೆ ಹಾಗೂ ಆಕೆಯ ಕುಟುಂಬಕ್ಕೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ತಿಳಿಸಿದೆ. ಮಹಿಳೆಯ ಮೇಲೆ ದೌರ್ಜನ್ಯವೆಸಗಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಠಾಣಾಧಿಕಾರಿಯವರಿಗೆ ಸೂಕ್ತ ನಿರ್ದೇಶನ ನೀಡಲು ಕ್ರಮ ಕೈಗೊಂಡು, ವರದಿಯನ್ನು ತಕ್ಷಣವೇ ಆಯೋಗಕ್ಕೆ ಕಳುಹಿಸಿಕೊಡುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಪತ್ರದಲ್ಲಿ ತಿಳಿಸಿದೆ.

ವಾರ್ತಾ ಭಾರತಿ 15 Nov 2025 9:26 pm

ಹಾವು, ನಾಯಿ ಕಡಿತ ಪ್ರಕರಣ | ಖಾಸಗಿ ಆಸ್ಪತ್ರೆಗಳು ಮುಂಗಡ ಪಾವತಿಗೆ ಒತ್ತಾಯಿಸದೆ ಚಿಕಿತ್ಸೆ ನೀಡಲು ಆದೇಶ

ಬೆಂಗಳೂರು : ಖಾಸಗಿ ಆಸ್ಪತ್ರೆಗಳು ಹಾವು ಕಡಿತ, ನಾಯಿ ಸೇರಿ ಪ್ರಾಣಿ ಕಡಿತದ ತುರ್ತು ಸಂದರ್ಭಗಳಲ್ಲಿ ಯಾವುದೇ ಮುಂಗಡ ಪಾವತಿಗೆ ಒತ್ತಾಯಿಸದೆ ಸಂತ್ರಸ್ಥರಿಗೆ ಚಿಕಿತ್ಸೆಯನ್ನು ನೀಡಬೇಕು ಎಂದು ರಾಜ್ಯ ಸರಕಾರವು ಶನಿವಾರದಂದು ಆದೇಶ ಹೊರಡಿಸಿದೆ. ಇಂತಹ ತುರ್ತು ಪರಿಸ್ಥಿತಿಯಲ್ಲಿ, ಖಾಸಗಿ ವೈದ್ಯಕೀಯ ಸಂಸ್ಥೆಯು ಅಗತ್ಯ ಪ್ರಥಮ ಚಿಕಿತ್ಸೆಯನ್ನು ನೀಡಿ, ಜೀವ ಉಳಿಸಬೇಕು. ತುರ್ತು ಸಂದರ್ಭಗಳಲ್ಲಿ, ಮುಂಗಡ ಪಾವತಿಗೆ ಒತ್ತಾಯಿಸದೆ ಚಿಕಿತ್ಸೆ ನೀಡಿದ್ದಲ್ಲಿ, ಚಿಕಿತ್ಸೆ ವೆಚ್ಚವನ್ನು ರಾಜ್ಯ ಸರಕಾರವು ಜಿಲ್ಲಾ ನೋಂದಣಿ ಮತ್ತು ಕುಂದುಕೊರತೆ ಪ್ರಾಧಿಕಾರದ ಮೂಲಕ ಪಾವತಿಸಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಹಾವು ಕಡಿತ, ನಾಯಿ ಸೇರಿ ಪ್ರಾಣಿ ಕಡಿತದ ತುರ್ತು ಸಂದರ್ಭಗಳಲ್ಲಿ ಚಿಕಿತ್ಸೆ ನೀಡಲು ನಿರಾಕರಿಸಿದ ಆಸ್ಪತ್ರೆಗಳ ವಿರುದ್ದ ವೈದ್ಯಕೀಯ ನಿರ್ಲಕ್ಷ್ಯದ ಪ್ರಕರಣವನ್ನು ದಾಖಲಿಸಲಾಗುತ್ತದೆ. ಹಾಗೆಯೇ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 106ರ ಪ್ರಕಾರ ಕಿಮಿನಲ್ ಮೊಕದ್ದಮೆಯನ್ನು ದಾಖಲಿಸಿಕೊಂಡು, ಎರಡು ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ಜೊತೆಗೆ ಆಸ್ಪತ್ರೆಯ ಪರವಾನಗಿಯನ್ನು ರದ್ದುಗೊಳಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಿದೆ.

ವಾರ್ತಾ ಭಾರತಿ 15 Nov 2025 9:23 pm

‘ಸಾಹಿತ್ಯ’ ಸಾಮಾಜಿಕ ಸಮಸ್ಯೆಗಳ ಪರಿಣಾಮಗಳಿಗೆ ಕನ್ನಡಿಯಾಗಲಿ: ಸಾಹಿತಿ ಫಕೀರ್ ಮಹಮ್ಮದ್ ಕಟ್ಪಾಡಿ

ಹೆಜಮಾಡಿ: ಕಾಪು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಾರ್ತಾ ಭಾರತಿ 15 Nov 2025 9:22 pm

ಅಮಾನತುಗೊಂಡ ಮಾಜಿ ಸಚಿವ ಆರ್.ಕೆ. ಸಿಂಗ್ ಬಿಜೆಪಿಗೆ ರಾಜೀನಾಮೆ

ಹೊಸದಿಲ್ಲಿ, ನ. 15: ಪಕ್ಷ ವಿರೋಧಿ ಚಟುವಟಿಕೆಗಳನ್ನು ಆರೋಪಿಸಿ ಕೇಂದ್ರದ ಮಾಜಿ ಇಂಧನ ಸಚಿವ ಹಾಗೂ ಅರಾದ ಮಾಜಿ ಸಂಸದ ಆರ್.ಕೆ. ಸಿಂಗ್ ಅವರನ್ನು ಬಿಜೆಪಿ ಶನಿವಾರ ಅಮಾನತುಗೊಳಿಸಿದೆ. ಪತ್ರ ಸ್ವೀಕರಿಸಿದ ಬಳಿಕ ಸಿಂಗ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಸಿಂಗ್ ಅವರಿಗೆ ನೀಡಿದ ಶೋಕಾಸ್ ನೋಟಿಸಿನಲ್ಲಿ ಬಿಜೆಪಿ, ‘‘ನೀವು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದೀರಿ. ಇದು ಶಿಸ್ತು ನಿಯಮಗಳ ಅಡಿಯಲ್ಲಿ ಬರುತ್ತದೆ. ಪಕ್ಷ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಇದು ಪಕ್ಷಕ್ಕೆ ಹಾನಿ ಉಂಟು ಮಾಡಿದೆ. ಆದುದರಿಂದ ಆದೇಶದಂತೆ ನಿಮ್ಮನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಆದುದರಿಂದ ಈ ಪತ್ರ ಸ್ವೀಕರಿಸಿದ ಒಂದು ವಾರದ ಒಳಗೆ ನಿಮ್ಮ ನಿಲುವು ತಿಳಿಸಿ’’ ಎಂದು ಹೇಳಿದೆ. ಸಿಂಗ್ ಅವರು ಪ್ರಮುಖ ಸರಕಾರಿ ಯೋಜನೆಗಳ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ ಎಂದು ವರದಿಯಾಗಿದೆ. ಬಿಹಾರದ ಸೌರ ವಿದ್ಯುತ್ ಯೋಜನೆ 62,000 ಕೋ.ರೂ. ಹಗರಣ. ಬಿಹಾರದಲ್ಲಿ ಅದಾನಿಗೆ ಈ ಯೋಜನೆಯನ್ನು ಹಸ್ತಾಂತರಿಸುವ ಮೂಲಕ ಈ ಹಗರಣ ನಡೆದಿದೆ ಎಂದು ಅವರು ಹೇಳಿದ್ದಾರೆ. ಇದಲ್ಲದೆ, ಮುಕ್ತವಾಗಿ ಮಾತನಾಡುವುದಕ್ಕೆ ಜನಪ್ರಿಯರಾಗಿರುವ ಸಿಂಗ್ ಎನ್‌ಡಿಎ ಕಣಕ್ಕಿಳಿಸಿದ ಅಭ್ಯರ್ಥಿ ಸೇರಿದಂತೆ ಕ್ರಿಮಿನಲ್ ಹಿನ್ನಲೆ ಇರುವ ಅಭ್ಯರ್ಥಿಗಳನ್ನು ತಿರಸ್ಕರಿಸುವಂತೆ ಮತದಾರರನ್ನು ಆಗ್ರಹಿಸಿದ್ದರು. ಗಂಭೀರ ಆರೋಪಗಳನ್ನು ಎದುರಿಸುತ್ತಿರುವವರಲ್ಲಿ ಉಪ ಮುಖ್ಯಮಂತ್ರಿ ಸ್ರಾಟ್ ಚೌಧರಿ ಹಾಗೂ ಜೆಡಿ(ಯು) ಅಭ್ಯರ್ಥಿ ಅನಂತ್ ಸಿಂಗ್ ಅವರನ್ನು ಕೂಡ ಸೇರಿಸಿದ್ದರು. ಅವರು ನಿಮ್ಮ ಜಾತಿಯಾಗಿದ್ದರು ಕೂಡ ಅವರನ್ನು ಬೆಂಬಲಿಸಬೇಡಿ ಎಂದು ಸಿಂಗ್ ಹೇಳಿದ್ದರು. ಸ್ಪರ್ಧಿಸಿದ ಎಲ್ಲರೂ ಕಳಂಕಿತರು ಎಂದು ಕಂಡು ಬಂದರೆ, ನೋಟಾಕ್ಕೆ ಮತ ಚಲಾಯಿಸಿ ಎಂದು ಸಿಂಗ್ ತಿಳಿಸಿದ್ದರು. ಅಲ್ಲದೆ, ಸಿಂಗ್ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುವಂತೆ ಚುನಾವಣಾ ಆಯೋಗವನ್ನು ಆಗ್ರಹಿಸಿದ್ದರು. ಸಿಂಗ್ ಅವರ ಜೊತೆಗೆ ಪಕ್ಷದ ಎಂಎಲ್‌ಸಿ ಅಶೋಕ್ ಕುಮಾರ್ ಅಗರ್ವಾಲ್ ಹಾಗೂ ಕಟಿಹಾರ್ ಮೇಯರ್ ಉಷಾ ಅಗರ್ವಾಲ್ ಅವರನ್ನು ಕೂಡ ಪಕ್ಷ ವಿರೋಧಿ ಚಟುವಟಿಕೆಯ ಆರೋಪದಲ್ಲಿ ಬಿಜೆಪಿ ಅಮಾನತುಗೊಳಿಸಿದೆ.

ವಾರ್ತಾ ಭಾರತಿ 15 Nov 2025 9:13 pm

ಉಡುಪಿ: ಪೋಷಕ-ಶಿಕ್ಷಕರ ಮಹಾಸಭೆ, ಮಕ್ಕಳ ದಿನಾಚರಣೆ

ಉಡುಪಿ: ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಸಂಯುಕ್ತ ಪ್ರೌಢಶಾಲೆ ರಾಜೀವನಗರ ಇವರ ಸಂಯುಕ್ತ ಆಶ್ರಯದಲ್ಲಿ ಪೋಷಕರ - ಶಿಕ್ಷಕರ ಮಹಾಸಭೆ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮ ಶುಕ್ರವಾರ ಮಣಿಪಾಲದ ರಾಜೀವನಗರ ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ದಿನೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು. ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಉಪೇಂದ್ರ ನಾಯಕ್ ಈ ಸಂದರ್ಭದಲ್ಲಿ ಮಾತನಾಡಿ, ಸರಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರ ಮಹತ್ವದ್ದಾಗಿದೆ. ಎಲ್ಲಾ ಪೋಷಕರು ಶಾಲೆಯ ಸರ್ವಾಂಗೀಣ ಪ್ರಗತಿಗೆ ಕೈಜೋಡಿಸುವುದರೊಂದಿಗೆ ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸುವಂತೆ ಕರೆ ನೀಡಿದರು. ಸರಕಾರದ ನಿರ್ದೇಶನದಂತೆ ದಾಖಲಾತಿ ಆಂದೋಲನ, ವಿದ್ಯಾರ್ಥಿಗಳ ಕಲಿಕೆ ಪ್ರಗತಿ, ಮಕ್ಕಳ ಸುರಕ್ಷತೆ ಮತ್ತು ಸರಕಾರದ ಪ್ರೋತ್ಸಾಹದಾಯಕ ಯೋಜನೆಗಳ ಬಗ್ಗೆ ಶಾಲಾ ಮುಖ್ಯ ಶಿಕ್ಷಕರು ಪೋಷಕರಿಗೆ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಸಂವಿಧಾನ ಪೀಠಿಕೆ ಬೋಧಿಸಲಾಯಿತು. ಮಕ್ಕಳ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಆಯೋಜಿಸಿದ ವಿವಿಧ ಸ್ಪರ್ಧಾ ಚಟುವಟಿಕೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಭೆಯಲ್ಲಿ 80 ಬಡಗಬೆಟ್ಟು ಗ್ರಾಪಂ ಸದಸ್ಯೆ ಪ್ಲೋಸಿ ಫೆನಾರ್ಂಡಿಸ್, ಪ್ರೌಢಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಸುಮಿತ್ರ, ಮಾಜಿ ಅಧ್ಯಕ್ಷ ರವಿ, ತಾಲೂಕು ಕಾರ್ಯದರ್ಶಿ ಮಮತಾ ಹಾಗೂ ಇತರರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕರು ಸ್ವಾಗತಿಸಿ, ಕನ್ನಡ ಶಿಕ್ಷಕ ಸಂಜೀವ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕಿ ವಿನೋದ ವಂದಿಸಿದರು.

ವಾರ್ತಾ ಭಾರತಿ 15 Nov 2025 9:13 pm

ವೀರೇಂದ್ರ ಸೆಹ್ವಾಗ್ ದಾಖಲೆ ಮುರಿದ ರಿಷಭ್ ಪಂತ್

ಕೋಲ್ಕತಾ. ನ.15: ಟೀಮ್ ಇಂಡಿಯಾದ ಬ್ಯಾಟರ್ ರಿಷಭ್ ಪಂತ್ ತಮ್ಮ ಯಶಸ್ವಿ ಟೆಸ್ಟ್ ವೃತ್ತಿಬದುಕಿನಲ್ಲಿ ಮತ್ತೊಂದು ಮೈಲಿಗಲ್ಲು ತಲುಪಿದ್ದಾರೆ. ಲೆಜೆಂಡರಿ ವೀರೇಂದ್ರ ಸೆಹ್ವಾಗ್ ದಾಖಲೆ ಮುರಿದಿರುವ ಪಂತ್ ಟೆಸ್ಟ್ ಕ್ರಿಕೆಟ್‌ ನಲ್ಲಿ ಭಾರತದ ಪರ ಗರಿಷ್ಠ ಸಿಕ್ಸರ್ ಸಿಡಿಸಿದ ಆಟಗಾರನಾಗಿ ಹೊರಹೊಮ್ಮಿದ್ದಾರೆ. ಸ್ಪಿನ್ನರ್ ಕೇಶವ ಮಹಾರಾಜ್ ಬೌಲಿಂಗ್‌ ನಲ್ಲಿ ಮುನ್ನುಗ್ಗಿ ಆಡಿದ ಪಂತ್ ಅವರು 90 ಸಿಕ್ಸರ್‌ ಗಳನ್ನು ಸಿಡಿಸಿರುವ ಭಾರತದ ಮಾಜಿ ಆರಂಭಿಕ ಬ್ಯಾಟರ್ ಸೆಹ್ವಾಗ್ ದಾಖಲೆಯನ್ನು ಮುರಿದಿದ್ದಾರೆ. ಪಂತ್ ಒಟ್ಟು 91 ಸಿಕ್ಸರ್‌ ಗಳನ್ನು ಸಿಡಿಸಿದ್ದು, ಭಾರತೀಯ ಟೆಸ್ಟ್ ಕ್ರಿಕೆಟ್‌ ನಲ್ಲಿ ಗರಿಷ್ಠ ಸಿಕ್ಸರ್ ಸಿಡಿಸಿದ ಮೊದಲ ಬ್ಯಾಟರ್ ಆಗಿದ್ದಾರೆ. ಸೆಹ್ವಾಗ್(90 ಸಿಕ್ಸರ್), ರೋಹಿತ್ ಶರ್ಮಾ(88), ರವೀಂದ್ರ ಜಡೇಜ(80) ಹಾಗೂ ಎಂ.ಎಸ್. ಧೋನಿ(78)ಗಿಂತ ಮುಂದಿದ್ದಾರೆ.

ವಾರ್ತಾ ಭಾರತಿ 15 Nov 2025 9:09 pm

ಉಡುಪಿ: ಭಗವಾನ್ ಬಿರ್ಸಾ ಮುಂಡ ಜಯಂತಿ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ ಇವರ ಸಹಯೋಗದೊಂದಿಗೆ ಭಗವಾನ್ ಬಿರ್ಸಾ ಮುಂಡ ಅವರ 150ನೇ ಜನ್ಮ ದಿನಾಚರಣೆ ಪ್ರಯುಕ್ತ ಜನಜಾತಿಯ ಗೌರವ್ ದಿವಸ್ ಕಾರ್ಯಕ್ರಮ ಇಂದು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಮಾತನಾಡಿ, ಬುಡಕಟ್ಟು ಸಮುದಾಯದವರು ಸಮಾಜದ ಮುಖ್ಯವಾಹಿನಿಗೆ ಬರಲು ವಿವಿಧ ಕಾರ್ಯಕ್ರಮಗಳ ಜೊತೆಗೆ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎಸ್.ಎಸ್. ಕಾದ್ರೋಳಿ, ಐ.ಟಿ.ಡಿ.ಪಿ ಯೋಜನಾ ಸಮನ್ವಯಾಧಿಕಾರಿ ನಾರಾಯಣಸ್ವಾಮಿ ಎಂ, ಕೊರಗ ಮತ್ತು ಮಲೆಕುಡಿ ಸಮುದಾಯದ ಮುಖಂಡರು ಹಾಜರಿದ್ದರು. ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ ಅಧೀಕ್ಷಕ ವಿಶ್ವನಾಥ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ವಾರ್ತಾ ಭಾರತಿ 15 Nov 2025 9:06 pm

ಟೆಸ್ಟ್ ಕ್ರಿಕೆಟ್‌ ನಲ್ಲಿ 4,000 ರನ್, 300 ವಿಕೆಟ್; ರವೀಂದ್ರ ಜಡೇಜ ಐತಿಹಾಸಿಕ ಸಾಧನೆ

ಕೋಲ್ಕತಾ, ನ.15: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ವೇಳೆ ಟೆಸ್ಟ್ ಕ್ರಿಕೆಟ್‌ ನಲ್ಲಿ 4,000ಕ್ಕೂ ಅಧಿಕ ರನ್ ಗಳಿಸಿರುವ ಭಾರತದ ಆಲ್‌ರೌಂಡರ್ ರವೀಂದ್ರ ಜಡೇಜ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 4,000 ರನ್ ಹಾಗೂ 300 ವಿಕೆಟ್‌ ಗಳನ್ನು ಕಬಳಿಸಿ ಅವಳಿ ಸಾಧನೆ ಮಾಡಿದ ನಾಲ್ಕನೇ ಕ್ರಿಕೆಟಿಗ ಎನಿಸಿಕೊಂಡಿರುವ ಜಡೇಜ ಅವರು ಇಯಾನ್ ಬೋಥಂ, ಕಪಿಲ್ ದೇವ್ ಹಾಗೂ ಡೇನಿಯಲ್ ವೆಟೋರಿ ಅವರನ್ನೊಳಗೊಂಡ ಎಲೈಟ್ ಕಂಪೆನಿಗೆ ಸೇರಿದ್ದಾರೆ. ಮೊದಲ ಟೆಸ್ಟ್‌ನ 2ನೇ ದಿನವಾದ ಶನಿವಾರ ಭಾರತದ ಮೊದಲ ಇನಿಂಗ್ಸ್‌ ನ 44ನೇ ಓವರ್ ನಲ್ಲಿ 10 ರನ್ ಗಳಿಸಿದ ಜಡೇಜ ಈ ಮಹತ್ವದ ಮೈಲಿಗಲ್ಲು ತಲುಪಿದರು. ಜಡೇಜ 87 ಟೆಸ್ಟ್ ಪಂದ್ಯಗಳಲ್ಲಿ ಈ ಸಾಧನೆ ಮಾಡಿದರು. ಇಯಾನ್ ಬೋಥಂ(72 ಟೆಸ್ಟ್)ನಂತರ ವೇಗವಾಗಿ ಈ ಸಾಧನೆ ಮಾಡಿದ ಎರಡನೇ ಕ್ರಿಕೆಟಿಗನೆಂಬ ಹಿರಿಮೆಗೆ ಪಾತ್ರರಾದರು. ಎಲೈಟ್ ಗುಂಪಿನಲ್ಲಿರುವ ಇತರ ಮೂವರು ಕ್ರಿಕೆಟಿಗರ ಅಂಕಿ-ಅಂಶವು ಪರಿಣಾಮಕಾರಿಯಾಗಿದೆ. ಬೋಥಮ್ 5,200 ರನ್ ಹಾಗೂ 383 ವಿಕೆಟ್‌ ಗಳೊಂದಿಗೆ ತಮ್ಮ ವೃತ್ತಿಜೀವನ ಕೊನೆಗೊಳಿಸಿದರು. ಕಪಿಲ್ ದೇವ್ 131 ಪಂದ್ಯಗಳಲ್ಲಿ ಒಟ್ಟು 5,248 ರನ್ ಹಾಗೂ 434 ವಿಕೆಟ್‌ ಗಳನ್ನು ಕಬಳಿಸಿದರು. ವೆಟೋರಿ 113 ಪಂದ್ಯಗಳಲ್ಲಿ 4,531 ರನ್ ಹಾಗೂ 362 ವಿಕೆಟ್‌ ಗಳೊಂದಿಗೆ ತಮ್ಮ ಟೆಸ್ಟ್ ವೃತ್ತಿಜೀವನವನ್ನು ಅಂತ್ಯಗೊಳಿಸಿದ್ದರು. ಜಡೇಜ ಟೆಸ್ಟ್ ವೃತ್ತಿಜೀವನದ ಬ್ಯಾಟಿಂಗ್ ವಿಭಾಗದಲ್ಲಿ 88 ಪಂದ್ಯಗಳಲ್ಲಿ ಆರು ಶತಕಗಳು ಹಾಗೂ 27 ಅರ್ಧಶತಕಗಳ ಸಹಿತ ಒಟ್ಟು 4,017 ರನ್ ಗಳಿಸಿದ್ದಾರೆ. ಬೌಲಿಂಗ್‌ನಲ್ಲಿ 25.25ರ ಸರಾಸರಿಯಲ್ಲಿ 15 ಐದು ವಿಕೆಟ್ ಗೊಂಚಲುಗಳ ಸಹಿತ ಒಟ್ಟು 342 ವಿಕೆಟ್‌ ಗಳನ್ನು ಪಡೆದಿದ್ದಾರೆ. ಇದೇ ಪಂದ್ಯದಲ್ಲಿ ಕೆ.ಎಲ್.ರಾಹುಲ್ ಕೂಡ ಟೆಸ್ಟ್ ಕ್ರಿಕೆಟ್‌ ನಲ್ಲಿ 4,000 ರನ್ ಪೂರೈಸಿದರು. ಈ ಮೈಲಿಗಲ್ಲು ತಲುಪಿದ ಭಾರತದ 18ನೇ ಬ್ಯಾಟರ್ ಎನಿಸಿಕೊಂಡರು. ರಾಹುಲ್ ತನ್ನ ಚೊಚ್ಚಲ ಪಂದ್ಯ ಆಡಿದ 3,977 ದಿನಗಳ ನಂತರ ಈ ಸಾಧನೆ ಮಾಡಿದರು. ಮೊಹಿಂದರ್ ಅಮರನಾಥ್(6,214 ದಿನಗಳು)ನಂತರ ನಿಧಾನಗತಿಯಲ್ಲಿ ನಾಲ್ಕು ಸಾವಿರ ರನ್ ಪೂರೈಸಿದ ಭಾರತದ 2ನೇ ಬ್ಯಾಟರ್ ಆಗಿದ್ದಾರೆ. ರಾಹುಲ್ 40ನೇ ಓವರ್ ನಲ್ಲಿ 119 ಎಸೆತಗಳಲ್ಲಿ 39 ರನ್ ಗಳಿಸಿ ಔಟಾದರು. 

ವಾರ್ತಾ ಭಾರತಿ 15 Nov 2025 9:05 pm

ಕಾಪು| ಕೌನ್ಸಿಲಿಂಗ್ ಸೆಂಟರ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಆಪ್ತ ಸಮಾಲೋಚಕನ ಬಂಧನ

ಕಾಪು: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಆಪ್ತ ಸಮಾಲೋಚಕನನ್ನು ಕಾಪು ಪೊಲೀಸರು ನ.15ರಂದು ಸಂಜೆ ವೇಳೆ ಬಂಧಿಸಿದ್ದಾರೆ. ಮಲ್ಲಾರು ಗ್ರಾಮದ ನಿರಂಜನ ಶೇಖರ ಶೆಟ್ಟಿ(52) ಬಂಧಿತ ಆರೋಪಿ. ಮಹಿಳೆಯೊಬ್ಬರು ದಾಂಪತ್ಯ ಸಮಸ್ಯೆಯ ಕಾರಣದಿಂದ ಕೌನ್ಸಿಲಿಂಗ್ ಬಗ್ಗೆ ಕಾಪು ತಾಲೂಕಿನ ಮೂಳೂರು ಗ್ರಾಮದ ಕಂಕಣಗುತ್ತು ಕಂಪೌಂಡ್‌ನಲ್ಲಿರುವ ಸುನಂದಾ ವೆಲ್ನೆಸ್ ಸೆಂಟರ್‌ಗೆ ಹೋಗಿದ್ದರು. ಅಲ್ಲಿ ನಿರಂಜನ ಶೇಖರ ಶೆಟ್ಟಿ ಸಂತ್ರಸ್ಥೆಯನ್ನು ಕೌನ್ಸಿಲಿಂಗ್ ಮಾಡುವಾಗ ದೈಹಿಕ ಸ್ಪರ್ಶ ಮಾಡಿ ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರಿದ್ದಾರೆ. ಈ ಬಗ್ಗೆ ಸಂತ್ರಸ್ಥೆಯು ಕಾಪು ಪೊಲೀಸ್ ಠಾಣೆಗೆ ಬಂದು ಲಿಖಿತ ದೂರು ನೀಡಿದ್ದು, ಅದರಂತೆ ಪ್ರಕರಣ ದಾಖಲಾಗಿತ್ತು. ಕಾರ್ಕಳ ಸಹಾಯಕ ಪೊಲೀಸ್ ಅಧೀಕ್ಷಕಿ ಡಾ.ಹರ್ಷ ಪ್ರಿಯಂವದಾ ಹಾಗೂ ಕಾಪು ಪೊಲೀಸ್ ವೃತ್ತ ನಿರೀಕ್ಷಕ ಅಜ್ಮತ್ ಅಲಿ ಮಾರ್ಗದರ್ಶನದಲ್ಲಿ ಕಾಪು ಪೊಲೀಸ್ ಠಾಣಾ ಎಸ್ಸೈ ಶುಭಕರ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ವಾರ್ತಾ ಭಾರತಿ 15 Nov 2025 8:58 pm

ಡಿಕೆ ಶಿವಕುಮಾರ್‌ ಸಿಎಂ ಆಗಲ್ಲ, ಕರ್ನಾಟಕ ಎರಡು ಭಾಗ ಆಗುತ್ತೆ: ಖ್ಯಾತ ಜ್ಯೋತಿಷಿ ಸ್ಫೋಟಕ ಭವಿಷ್ಯ

ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆಯ ಚರ್ಚೆಗಳು ಜೋರಾಗಿವೆ. ಇದೇ ವರ್ಷದಲ್ಲಿ ಸಿಎಂ ಬದಲಾಗುತ್ತಾರೆ. ಡಿ.ಕೆ.ಶಿವಕುಮಾರ್‌ ಅವರು ಹೊಸ ಸಿಎಂ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದೆಲ್ಲ ಹೇಳಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ದೆಹಲಿಗೆ ಹಾರಿದ್ದಾರೆ. ಇದರ ನಡುವೆ ಖ್ಯಾತ ಜ್ಯೋತಿಷಿಯೊಬ್ಬರು ಸಿಎಂ ಬದಲಾವಣೆ ವಿಚಾರವಾಗಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಸಿಎಂ ಕನಸು ಕಂಡಿರುವ ಡಿ.ಕೆ.ಶಿವಕುಮಾರ್‌ ಅವರಿಗೆ ಆಘಾತ ನೀಡುವ

ಒನ್ ಇ೦ಡಿಯ 15 Nov 2025 8:56 pm

SIR ಅಂತಿಮ ಪಟ್ಟಿಗೆ 3 ಲಕ್ಷ ಹೆಚ್ಚುವರಿ ಮತದಾರರನ್ನು ಸೇರ್ಪಡೆ; ಕಾಂಗ್ರೆಸ್ ಆರೋಪಕ್ಕೆ ಚುನಾವಣಾ ಆಯೋಗ ಹೇಳಿದ್ದೇನು?

ಹೊಸದಿಲ್ಲಿ: ಬಿಹಾರದಲ್ಲಿ ಕೈಗೊಂಡ ತೀವ್ರ ಮತಪಟ್ಟಿ ಪರಿಷ್ಕರಣೆಯ ನಂತರ ಪ್ರಕಟಿಸಲಾದ ಅಂತಿಮ ಪಟ್ಟಿಗೆ ಮೂರು ಲಕ್ಷ ಹೆಚ್ಚುವರಿ ಮತದಾರರನ್ನು ಸೇರ್ಪಡೆ ಮಾಡಲಾಗಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಶನಿವಾರ ಪ್ರತಿಕ್ರಿಯಿಸಿರುವ ಭಾರತೀಯ ಚುನಾವಣಾ ಆಯೋಗ, ತೀವ್ರ ಮತಪಟ್ಟಿ ಪರಿಷ್ಕರಣೆಯ ಅಂತಿಮ ಪಟ್ಟಿ ಪ್ರಕಟನೆಯ ನಂತರ ಮೂರು ಲಕ್ಷ ಮತದಾರರನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದೆ. ಬಿಹಾರ ವಿಧಾನಸಭಾ ಚುನಾವಣೆ ಪ್ರಕಟವಾಗುವುದಕ್ಕೂ ಮುನ್ನ 7.42 ಕೋಟಿಯಷ್ಟಿದ್ದ ಬಿಹಾರ ಮತದಾರರ ಸಂಖ್ಯೆ, ಅದರ ಬೆನ್ನಿಗೇ 7.45 ಕೋಟಿಗೆ ಏರಿಕೆಯಾಗಿದೆ ಎಂದು ಸಾಮಾಜಿಕ ಮಾಧ್ಯಮ ಪೋಸ್ಟ್ ಒಂದರಲ್ಲಿ ಕಾಂಗ್ರೆಸ್ ಆರೋಪ ಮಾಡಿತ್ತು. बिहार चुनाव के बीच कैसे बढ़े 3 लाख वोट? pic.twitter.com/9l0HjLccbc — Congress (@INCIndia) November 15, 2025 ಈ ಕುರಿತು ಶನಿವಾರ ಪ್ರಕಟನೆ ಬಿಡುಗಡೆ ಮಾಡಿರುವ ಭಾರತೀಯ ಚುನಾವಣಾ ಆಯೋಗ, ಅಕ್ಟೋಬರ್ 6ರಂದು ಪ್ರಕಟಿಸಲಾಗಿದ್ದ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಯ ಅಂತಿಮ ಪಟ್ಟಿಯಲ್ಲಿದ್ದ 7.42 ಲಕ್ಷ ಮತದಾರರ ಸಂಖ್ಯೆ, ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಯ ನಂತರ ಸೆಪ್ಟೆಂಬರ್ 30ರಂದು ಪ್ರಕಟಿಸಲಾಗಿದ್ದ ಅಂತಿಮ ಮತಪಟ್ಟಿಯನ್ನು ಆಧರಿಸಿತ್ತು ಎಂದು ಹೇಳಿದೆ. ಚುನಾವಣೆ ಘೋಷಣೆಯಾದ ನಂತರ, ಪ್ರತಿ ಹಂತದ ಚುನಾವಣೆಯ ನಾಮಪತ್ರ ಸಲ್ಲಿಕೆಯ ಕೊನೆಯ ದಿನಾಂಕಕ್ಕಿಂತ ಹತ್ತು ದಿನಗಳ ಮುನ್ನ ಯಾವುದೇ ಅರ್ಹ ಮತದಾರರು ತಮ್ಮ ಹೆಸರನ್ನು ಮತಪಟ್ಟಿಯಲ್ಲಿ ಸೇರ್ಪಡೆ ಮಾಡುವಂತೆ ಅರ್ಜಿ ಸಲ್ಲಿಸಬಹುದು ಎಂಬ ಚುನಾವಣಾ ನಿಯಮಗಳನ್ನು ತನ್ನ ಪ್ರಕಟನೆಯಲ್ಲಿ ಚುನಾವಣಾ ಆಯೋಗ ಉಲ್ಲೇಖಿಸಿದೆ. Ye Hai VOTE CHORI Ka Saboot pic.twitter.com/sM8HljRxFM — Congress (@INCIndia) November 15, 2025 ಹೀಗಾಗಿ, ಅಕ್ಟೋಬರ್ 1ರಿಂದ ಪ್ರತಿ ಹಂತದ ಚುನಾವಣೆಯ ನಾಮಪತ್ರ ಸಲ್ಲಿಕೆಯ ಕೊನೆಯ ದಿನಾಂಕಕ್ಕಿಂತ ಹತ್ತು ದಿನಗಳ ಮುನ್ನ ತಮ್ಮ ಹೆಸರನ್ನು ಮತಪಟ್ಟಿಗೆ ಸೇರ್ಪಡೆ ಮಾಡಬೇಕು ಎಂದು ಅರ್ಜಿ ಸಲ್ಲಿಸಿದ ಯಾವುದೇ ಅರ್ಹ ಅರ್ಜಿದಾರರ ಅರ್ಜಿಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ನಂತರ, ಯಾವುದೇ ಅರ್ಹ ಅರ್ಜಿದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಅರ್ಹ ಅರ್ಜಿದಾರರ ಹೆಸರುಗಳನ್ನು ನಿಯಮಾನುಸಾರ ಮತಪಟ್ಟಿಗೆ ಸೇರ್ಪಡೆ ಮಾಡಲಾಗಿದೆ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಅಕ್ಟೋಬರ್ 1ರಿಂದ ಪ್ರತಿ ಹಂತದ ನಾಮಪತ್ರ ಸಲ್ಲಿಕೆಯ ಕೊನೆಯ ದಿನಕ್ಕಿಂತ ಹತ್ತು ದಿನಗಳ ಮುಂಚೆ ಸ್ವೀಕರಿಸಿದ್ದ ಅರ್ಜಿಗಳಿಂದ ಬಿಹಾರದಲ್ಲಿನ ಒಟ್ಟು ಮತದಾರರ ಸಂಖ್ಯೆ ಮೂರು ಲಕ್ಷದಷ್ಟು ಏರಿಕೆಯಾಗಿದೆ. ಈ ಪರಿಷ್ಕೃತ ಸಂಖ್ಯೆಯನ್ನು ಮತದಾನದ ಬಳಿಕ ಚುನಾವಣಾ ಆಯೋಗ ನೀಡಿದ್ದ ಪತ್ರಿಕಾ ಪ್ರಕಟನೆಯಲ್ಲಿ ಉಲ್ಲೇಖಿಸಲಾಗಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಿಹಾರದ ಮೊದಲ ಮತ್ತು ಅಂತಿಮ ಹಂತದ ಚುನಾವಣೆಯ ನಾಮಪತ್ರ ಸಲ್ಲಿಕೆಯ ಕೊನೆಯ ದಿನಾಂಕವನ್ನು ಕ್ರಮವಾಗಿ ಅಕ್ಟೋಬರ್ 17 ಹಾಗೂ ಅಕ್ಟೋಬರ್ 20ಕ್ಕೆ ನಿಗದಿಗೊಳಿಸಲಾಗಿತ್ತು.

ವಾರ್ತಾ ಭಾರತಿ 15 Nov 2025 8:55 pm

ಕಾಂಗ್ರೆಸ್ ಅಪಪ್ರಚಾರದ ನಡುವೆಯೂ ಬಿಹಾರದಲ್ಲಿ ಎನ್‍ಡಿಎ ಐತಿಹಾಸಿಕ ಗೆಲುವು ದಾಖಲಿಸಿದೆ : ವಿಜಯೇಂದ್ರ

ಬೆಂಗಳೂರು : ‘ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ‘ಮತಗಳ್ಳತನ’ದ ಕುರಿತು ಬಿಹಾರ ವಿಧಾನಸಭೆ ಚುನಾವಣೆ ಮುಗಿಯುವವರೆಗೂ ಅಪಪ್ರಚಾರ ಮಾಡಿದ್ದರು. ಆ ಮೂಲಕ ಅರಾಜಕತೆ ಸೃಷ್ಟಿಸುವ ಷಡ್ಯಂತ್ರ, ಕುತಂತ್ರವನ್ನು ಅಲ್ಲಿನ ಮತದಾರರು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿಳಿಸಿದ್ದಾರೆ. ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಅಪಪ್ರಚಾರದ ನಡುವೆಯೂ ಬಿಹಾರ ರಾಜ್ಯದಲ್ಲಿ ಎನ್‍ಡಿಎ ಐತಿಹಾಸಿಕ ಗೆಲುವು ದಾಖಲಿಸಿದೆ. ನರೇಂದ್ರ ಮೋದಿ ಜನಪ್ರಿಯತೆ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‍ರ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಬಿಹಾರ ಮತದಾರರು ಮತ್ತೊಮ್ಮೆ ಎನ್‍ಡಿಎ ಕೂಟಕ್ಕೆ ಆಶೀರ್ವಾದ ಮಾಡಿದ್ದಾರೆ ಎಂದರು. ಚುನಾವಣಾ ಚಾಣಕ್ಯ ಅಮಿತ್ ಶಾ ಅವರ ಕಾರ್ಯತಂತ್ರ, ರಾಷ್ಟ್ರೀಯಾಧ್ಯಕ್ಷ ನಡ್ಡಾ ಅವರ ನೇತೃತ್ವ, ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಪ್ರಯತ್ನ, ಎರಡೂ ಪಕ್ಷಗಳ ಕಾರ್ಯಕರ್ತರ ಪರಿಶ್ರಮ- ಇದೆಲ್ಲದರ ಪರಿಣಾಮವಾಗಿ ಒಂದು ಐತಿಹಾಸಿಕ ಗೆಲುವು ದಾಖಲಾಗಿದೆ ಎಂದು ವಿಜಯೇಂದ್ರ ವಿವರಿಸಿದರು. ನೀರು ಕೊಡದಿದ್ದರೆ ಪರಿಹಾರ ಕೊಡಿ: ತುಂಗಭದ್ರಾ ಜಲಾಶಯದ ವ್ಯಾಪ್ತಿಯ ನಾಲ್ಕು ಜಿಲ್ಲೆಗಳ ರೈತರನ್ನು ಸೇರಿಸಿಕೊಂಡು ಸ್ಥಳೀಯವಾಗಿ ಹೋರಾಟ ರೂಪಿಸಲಿದ್ದೇವೆ. ಎರಡನೇ ಬೆಳೆಗೂ ಸರಕಾರ ನೀರನ್ನು ಕೊಡಬೇಕು. ಒಂದು ವೇಳೆ ನೀರು ಬಿಡುಗಡೆ ಮಾಡಲು ಸಾಧ್ಯವಾಗದಿದ್ದರೆ ಆ ಭಾಗದ ರೈತರಿಗೆ ಎಕರೆಗೆ 25 ಸಾವಿರ ರೂ.ಪರಿಹಾರವನ್ನು ನೀಡಬೇಕೆಂದು ಆಗ್ರಹಿಸಿದರು.

ವಾರ್ತಾ ಭಾರತಿ 15 Nov 2025 8:55 pm

ಮಕ್ಕಳು ದುಶ್ಚಟಗಳಿಗೆ ಬಲಿಯಾಗದಂತೆ ಹೆತ್ತವರ ಕಾಳಜಿ ಅಗತ್ಯ: ಸ್ಪೀಕರ್ ಯು.ಟಿ. ಖಾದರ್

ʼಡ್ರಗ್ಸ್ ವಿರುದ್ಧ ಜಾಗೃತಿ ಮಹಾ ಸಂಗಮ’ ಕಾರ್ಯಕ್ರಮ

ವಾರ್ತಾ ಭಾರತಿ 15 Nov 2025 8:42 pm

ಜನರಿಗೆ ನಿಷ್ಪಕ್ಷಪಾತ ಚುನಾವಣಾ ಆಯೋಗ ಬೇಕಿದೆ: ಬಿಹಾರ ಫಲಿತಾಂಶ ಕುರಿತು ಸ್ಟಾಲಿನ್

ಚೆನ್ನೈ,ನ.15: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಜಯಕ್ಕಾಗಿ ಶನಿವಾರ ಜೆಡಿಯು ನಾಯಕ ನಿತೀಶ್‌ ಕುಮಾರ್‌ ಅವರನ್ನು ಅಭಿನಂದಿಸಿದ್ದಾರೆ. ಇದೇ ವೇಳೆ ಅವರು ಚುನಾವಣಾ ಆಯೋಗವನ್ನು ಕಟುವಾಗಿ ಟೀಕಿಸಿದ್ದಾರೆ. ಬಿಹಾರ ಚುನಾವಣಾ ಫಲಿತಾಂಶವು ಚುನಾವಣಾ ಆಯೋಗದ ದುಷ್ಕೃತ್ಯಗಳು ಮತ್ತು ಭಂಡಧೈರ್ಯವನ್ನು ಮರೆ ಮಾಡಿಲ್ಲ ಎಂದು ಎಕ್ಸ್ ಪೋಸ್ಟ್‌ನಲ್ಲಿ ಹೇಳಿರುವ ಸ್ಟಾಲಿನ್,ಚುನಾವಣಾ ಆಯೋಗದ ಖ್ಯಾತಿ ಈಗ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಈ ದೇಶದ ನಾಗರಿಕರು ಬಲವಾದ ಮತ್ತು ಹೆಚ್ಚು ನಿಷ್ಪಕ್ಷಪಾತ ಚುನಾವಣಾ ಆಯೋಗಕ್ಕೆ ಅರ್ಹರಾಗಿದ್ದಾರೆ. ಆಯೋಗದ ಚುನಾವಣಾ ಕಾರ್ಯವೈಖರಿಯು ಸೋತವರಲ್ಲಿಯೂ ವಿಶ್ವಾಸವನ್ನು ಪ್ರೇರೇಪಿಸುವಂತಿರಬೇಕು ಎಂದು ಬರೆದಿದ್ದಾರೆ. ಬಿಹಾರದಲ್ಲಿ ಇಂಡಿಯಾ ಮೈತ್ರಿಕೂಟ ಸೋತಿದ್ದರೂ ಸ್ಟಾಲಿನ್ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಮತ್ತು ಮೈತ್ರಿಕೂಟದ ದಣಿವರಿಯದ ಪ್ರಚಾರಕ್ಕಾಗಿ ಅವರನ್ನು ಹೊಗಳಿದರು. ಚುನಾವಣಾ ಫಲಿತಾಂಶಗಳು ಜನರಿಗೆ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳ ತಲುಪುವಿಕೆ, ಸಾಮಾಜಿಕ ಮತ್ತು ಸೈದ್ಧಾಂತಿಕ ಒಕ್ಕೂಟಗಳು,ಸ್ಪಷ್ಟ ರಾಜಕೀಯ ಸಂದೇಶಗಳು ಮತ್ತು ಮತದಾನದ ಅಂತ್ಯದವರೆಗೂ ಸಮರ್ಪಿತ ನಿರ್ವಹಣೆಯನ್ನು ಪ್ರತಿಬಿಂಬಿಸುತ್ತವೆ. ಇಂಡಿಯಾ ಮೈತ್ರಿಕೂಟದ ನಾಯಕರು ಅನುಭವಿ ರಾಜಕಾರಣಿಗಳಾಗಿದ್ದು ಸವಾಲುಗಳನ್ನು ಎದುರಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದು ಸ್ಟಾಲಿನ್ ಹೇಳಿದ್ದಾರೆ.

ವಾರ್ತಾ ಭಾರತಿ 15 Nov 2025 8:30 pm

ತಿರುಮಲ ಪರಕಾಮಣಿ ಕಳವು ಪ್ರಕರಣ | ಟಿಟಿಡಿಯ ಮಾಜಿ ಭದ್ರತಾ ಅಧಿಕಾರಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಅನಂತಪುರ (ಆಂಧ್ರಪ್ರದೇಶ),ನ.15: ತಿರುಮಲದ ಶ್ರೀ ವೆಂಕಟೇಶ್ವರ ದೇವಸ್ಥಾನದ ಪರಕಾಮಣಿಯಿಂದ (ಹುಂಡಿಯಲ್ಲಿನ ನೋಟು ಮತ್ತು ನಾಣ್ಯಗಳ ಎಣಿಕೆ ಕೇಂದ್ರ) ವಿದೇಶಿ ಕರೆನ್ಸಿ ಕಳ್ಳತನವನ್ನು ವರದಿ ಮಾಡಿದ್ದ ತಿರುಮಲ ತಿರುಪತಿ ದೇವಸ್ಥಾನಮ್ಸ್‌ ನ (ಟಿಟಿಡಿ) ಮಾಜಿ ಸಹಾಯಕ ಜಾಗ್ರತ ಮತ್ತು ಭದ್ರತಾ ಅಧಿಕಾರಿ ವೈ.ಸತೀಶ್‌ ಕುಮಾರ್‌ ಅವರು ಶುಕ್ರವಾರ ಅನಂತಪುರ ಜಿಲ್ಲೆಯ ತಾಡಪತ್ರಿ-ಗೂಟಿ ಮುಖ್ಯ ರೈಲು ಮಾರ್ಗದಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕರ್ನೂಲು ಜಿಲ್ಲೆಯ ಪತ್ತಿಕೊಂಡ ನಿವಾಸಿಯಾಗಿದ್ದ ಸತೀಶ್‌ ಕುಮಾರ್ ಗೂಟಿ ಸರಕಾರಿ ರೈಲ್ವೆ ಪೋಲಿಸ್ ನಲ್ಲಿ ಸಬ್-ಇನ್ಸ್‌ಪೆಕ್ಟರ್ ಆಗಿದ್ದರು. ಕೋಮಲಿ ಮತ್ತು ಜುತೂರು ನಿಲ್ದಾಣಗಳ ನಡುವೆ ಎರಡು ಹಳಿಗಳ ಮಧ್ಯೆ ಅವರ ಮೃತದೇಹ ಪತ್ತೆಯಾಗಿದೆ. ಸತೀಶ್‌ ಕುಮಾರ್‌ ಗುರುವಾರ ರಾತ್ರಿ ಗುಂತಕಲ್‌ ನಲ್ಲಿ ಕಾಯ್ದರಿಸಿದ ಟಿಕೆಟ್‌ ನೊಂದಿಗೆ ರಾಯಲ್‌ಸೀಮಾ ಎಕ್ಸ್‌ಪ್ರೆಸ್ ಹತ್ತಿದ್ದರು. ಶುಕ್ರವಾರ ನಸುಕಿನ ಎರಡು ಗಂಟೆಯ ಸುಮಾರಿಗೆ ಅವರು ಹವಾ ನಿಯಂತ್ರಿತ ಬೋಗಿಯಿಂದ ಕೆಳಕ್ಕೆ ಬಿದ್ದಿದ್ದಾರೆ ಅಥವಾ ತಳ್ಳಲ್ಪಟ್ಟಿದ್ದಾರೆ ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಮೃತದೇಹದಲ್ಲಿ ಆಳವಾದ ಗಾಯದ ಗುರುತುಗಳಿದ್ದು, ಕುಟುಂಬ ಸದಸ್ಯರು ಮತ್ತು ಸ್ನೇಹಿತರು ಇದು ಆತ್ನಹತ್ಯೆಯಲ್ಲ, ಕೊಲೆ ಎಂದು ಶಂಕಿಸಿದ್ದಾರೆ. ಸತೀಶ್‌ ಕುಮಾರ್‌ ಹತ್ಯೆಯಲ್ಲಿ ಹಿರಿಯ ಅಧಿಕಾರಿಗಳು ಮತ್ತು ಟಿಟಿಡಿ ಮಂಡಳಿಯ ಪಾತ್ರವಿದೆ ಎಂದು ಕುಟುಂಬವು ಆರೋಪಿಸಿದೆ.

ವಾರ್ತಾ ಭಾರತಿ 15 Nov 2025 8:30 pm

ದಿಲ್ಲಿ ಸ್ಫೋಟ | ಮೂವರು ವೈದ್ಯರು, ಇಬ್ಬರು ರಸಗೊಬ್ಬರ ವ್ಯಾಪಾರಿಗಳ ಬಂಧನ

ಚಂಡಿಗಡ.ನ.15: ದಿಲ್ಲಿಯ ಕೆಂಪುಕೋಟೆ ಸಮೀಪ ಸಂಭವಿಸಿದ್ದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಅಲ್-ಫಲಾಹ್ ವಿವಿಯಲ್ಲಿ ಕೆಲಸ ಮಾಡಿದ್ದ ಸರ್ಜನ್ ಓರ್ವರನ್ನು ಪಂಜಾಬಿನ ಪಠಾಣಕೋಟ್‌ ನಲ್ಲಿ ಬಂಧಿಸಲಾಗಿದೆ. ಇದರ ಜೊತೆ ನುಹ್‌ ನಲ್ಲಿ ಓರ್ವ ವೈದ್ಯಮತ್ತು ಹರ್ಯಾಣದ ಸೊಹ್ನಾದಲ್ಲಿ ಇಬ್ಬರು ರಸಗೊಬ್ಬರ ಮತ್ತು ಬೀಜಗಳ ವ್ಯಾಪಾರಿಗಳನ್ನೂ ಬಂಧಿಸಲಾಗಿದೆ. ಹಲವು ಕೇಂದ್ರ ಮತ್ತು ರಾಜ್ಯ ಭದ್ರತಾ ಏಜೆನ್ಸಿಗಳು ಫರೀದಾಬಾದ್‌ನ ಅಲ್-ಫಲಾಹ್ ವಿವಿಯ ಮೇಲೆ ನಿಗಾ ಮುಂದುವರಿಸಿದ್ದು, ಕಂದಾಯ ಅಧಿಕಾರಿಗಳು ವಿವಿಯ ಭೂದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಈ ನಡುವೆ ರಾಷ್ಟ್ರೀಯ ವೈದ್ಯಕೀಯ ಆಯೋಗವು ನ.10ರಂದು ಸಂಭವಿಸಿದ್ದ ಸ್ಫೋಟದ ಹಿಂದಿನ ಭಯೋತ್ಪಾದಕ ಜಾಲದಲ್ಲಿ ಭಾಗಿಯಾಗಿದ್ದ ನಾಲ್ವರು ವೈದ್ಯರ ನೋಂದಣಿಗಳನ್ನು ರದ್ದುಗೊಳಿಸಿದೆ. ಪಠಾಣಕೋಟ್‌ ನ ವೈಟ್ ಮೆಡಿಕಲ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿರುವ ಡಾ.ರಯೀಸ್ ಅಹ್ಮದ್ ಭಟ್(45) ರನ್ನು ಬಂಧಿಸಿರುವ ಕೇಂದ್ರ ಏಜೆನ್ಸಿಗಳು ಅವರ ವಿಚಾರಣೆ ನಡೆಸುತ್ತಿವೆ. ಭಟ್ ದಿಲ್ಲಿ ಸ್ಫೋಟದ ಮಾಸ್ಟರ್ ಮೈಂಡ್ ಡಾ.ಉಮರ್ ನಬಿ ಜೊತೆ ಸಂಪರ್ಕದಲ್ಲಿದ್ದರು ಎನ್ನುವುದನ್ನು ತನಿಖಾಧಿಕಾರಿಗಳು ಕಂಡುಕೊಂಡಿದ್ದಾರೆ. 2020ರಿಂದ 2021ರವರೆಗೆ ಅಲ್-ಫಲಾಹ್ ವಿವಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಭಟ್ ವಿವಿಯ ಸಿಬ್ಬಂದಿಗಳೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿದ್ದರು ಎನ್ನುವುದನ್ನೂ ತನಿಖಾಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಭಟ್ ಜೈಷೆ ಮುಹಮ್ಮದ್ ಮತ್ತು ಅನ್ಸಾರ್ ಗಝ್ವತುಲ್ ಹಿಂದ್ ಬೆಂಬಲಿತ ‘ವೈಟ್ ಕಾಲರ್’ ಭಯೋತ್ಪಾದಕ ಜಾಲದ ಭಾಗವಾಗಿದ್ದರೇ ಎನ್ನುವುದನ್ನು ಖಚಿತಪಡಿಸಿಕೊಳ್ಳಲು ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಆರೋಪಿಗಳ ಪೈಕಿ ಓರ್ವ ಭಟ್‌ ಗೆ ದೂರವಾಣಿ ಕರೆ ಮಾಡಿದ್ದ ಎಂದು ಅಧಿಕಾರಿಯೋರ್ವರು ತಿಳಿಸಿದರು. ►ವೈದ್ಯಕೀಯ ವಿದ್ಯಾರ್ಥಿ ಬಂಧನ ದಿಲ್ಲಿ ಸ್ಫೋಟಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಪಶ್ಚಿಮ ಬಂಗಾಳ ಪೋಲಿಸರೊಂದಿಗೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಅಲ್-ಫಲಾಹ್ ವಿವಿಯ ಎಂಬಿಬಿಎಸ್ ವಿದ್ಯಾರ್ಥಿ ನಿಸಾರ್ ಆಲಂ ಎಂಬಾತನನ್ನು ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ ಪುರ ಜಿಲ್ಲೆಯ ದಲ್ಖೋಲಾದಲ್ಲಿ ಬಂಧಿಸಿದ್ದಾರೆ. ಆಲಂ ಮತ್ತು ಆತನ ಕುಟುಂಬ ಕೆಲವು ಸಮಯದಿಂದ ಪಂಜಾಬಿನ ಲೂಧಿಯಾನದಲ್ಲಿ ವಾಸವಾಗಿದ್ದರೂ ಅವರ ಪೂರ್ವಜರ ಮನೆ ಈಗಲೂ ದಲ್ಖೋಲಾದ ಕೋನಾಲ ಗ್ರಾಮದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದರು. ಆಲಂ ಕುಟುಂಬದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತನ್ನ ತಾಯಿ ಮತ್ತು ಸೋದರಿ ಜೊತೆಗೆ ದಲ್ಖೋಲಾಕ್ಕೆ ಬಂದಿದ್ದ. ಮೊಬೈಲ್ ಟವರ್ ಆಧರಿಸಿ ಆತನ ಚಲನವಲನಗಳನ್ನು ಪತ್ತೆ ಹಚ್ಚಿದ ಎನ್‌ಐಎ ಅಧಿಕಾರಿಗಳು ಶುಕ್ರವಾರ ಅಲ್ಲಿಗೆ ತೆರಳಿ ಆತನನ್ನು ಬಂಧಿಸಿದ್ದಾರೆ. ಆತನನ್ನು ದಿಲ್ಲಿಗೆ ಕರೆತರಲಾಗುತ್ತಿದೆ ಎಂದು ಲಭ್ಯ ಮಾಹಿತಿಗಳು ತಿಳಿಸಿವೆ. ‘ಆಲಂ ಮತ್ತು ಆತನ ಕುಟುಂಬದ ಇತರ ಸದಸ್ಯರು ತಮ್ಮ ಬಂಧುಗಳನ್ನು ಭೇಟಿಯಾಗಲು ಆಗಾಗ್ಗೆ ಕೋನಾಲಿಗೆ ಬರುತ್ತಿದ್ದರು. ಆತ ಸಭ್ಯ ಮತ್ತು ಮೃದು ಮಾತಿನ ಯುವಕನಾಗಿದ್ದು,ಆತ ಬಂಡಾಯ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡಿದ್ದ ಎಂದು ನಾವೆಂದಿಗೂ ಊಹಿಸಿರಲಿಲ್ಲ’ ಎಂದು ಶನಿವಾರ ಬೆಳಿಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕೋನಾಲ ನಿವಾಸಿಯೋರ್ವರು ಹೇಳಿದರು.

ವಾರ್ತಾ ಭಾರತಿ 15 Nov 2025 8:29 pm

ಎರಡು ರಾಜ್ಯಗಳಲ್ಲಿ ಮತ ಚಲಾಯಿಸಿ ಫೋಟೊಗಳನ್ನು ಪೋಸ್ಟ್ ಮಾಡಿದ ಮೂವರು ಬಿಜೆಪಿ ಕಾರ್ಯಕರ್ತರು: ದೃಢಪಡಿಸಿದ ಆಲ್ಟ್ ನ್ಯೂಸ್ ತನಿಖಾ ವರದಿ

  ಹೊಸದಿಲ್ಲಿ,ನ.15: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನದ ಬಳಿಕ ಸುದ್ದಿ ಜಾಲತಾಣ ಆಲ್ಟ್ ನ್ಯೂಸ್ ನಡೆಸಿದ ತನಿಖೆಯು ಕನಿಷ್ಠ ಮೂವರು ವ್ಯಕ್ತಿಗಳು ಅನೇಕ ಸ್ಥಳಗಳಲ್ಲಿಯ ಮತದಾರರ ಪಟ್ಟಿಗಳಲ್ಲಿ ತಮ್ಮ ಹೆಸರುಗಳನ್ನು ಹೊಂದಿದ್ದಾರೆ ಮತ್ತು ಎರಡು ವಿಭಿನ್ನ ಸ್ಥಳಗಳಿಂದ ಮತದಾನ ಮಾಡಿದ್ದಾರೆ ಎನ್ನುವುದನ್ನು ದೃಢಪಡಿಸಿದೆ. ಅವರು ಎರಡು ವಿಭಿನ್ನ ರಾಜ್ಯಗಳಲ್ಲಿ ಮತದಾನ ಮಾಡಿದ ನಂತರ ತಮ್ಮ ಫೋಟೊಗಳನ್ನು ಹಂಚಿಕೊಂಡಿರುವ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಇದನ್ನು ಬಹಿರಂಗಗೊಳಿಸಿವೆ. ಗಮನಾರ್ಹವಾಗಿ ಈ ಮೂವರೂ ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದಾರೆ. ►ಪ್ರಕರಣ 1:ಪ್ರಭಾತ್‌ ಕುಮಾರ್‌ ಬಿಜೆಪಿ ಉತ್ತರಾಖಂಡ ಕಿಸಾನ್ ಮೋರ್ಚಾದ ಸಾಮಾಜಿಕ ಮಾಧ್ಯಮ ಸಂಯೋಜಕರಾಗಿರುವ ಪ್ರಭಾತ್‌ ಕುಮಾರ್‌ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಿದ ಬಳಿಕ ತನ್ನ ಫೋಟೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಆಶ್ಚರ್ಯಕರವೆಂದರೆ, ಅವರು ಈ ಹಿಂದೆ ಉತ್ತರಾಖಂಡದಲ್ಲಿ ಮಹಾನಗರ ಪಾಲಿಕೆ ಚುನಾವಣೆಗಳು, ವಿಧಾನಸಭಾ ಚುನಾವಣೆಗಳು ಮತ್ತು ಲೋಕಸಭಾ ಚುನಾವಣೆಗಳಲ್ಲಿ ತಾನು ಮತ ಚಲಾಯಿಸಿದ ಹಲವಾರು ಫೋಟೊಗಳನ್ನು ಪೋಸ್ಟ್ ಮಾಡಿದ್ದರು. ಪ್ರಭಾತ್‌ ಕುಮಾರ್‌ ಬಿಹಾರದ ಸಮಸ್ಟಿಪುರ ಜಿಲ್ಲೆಯ ಸರಾಯ್‌ರಂಜನ ವಿಧಾನಸಭಾ ಕ್ಷೇತ್ರ ಮತ್ತು ಉತ್ತರಾಖಂಡದ ಧರ್ಮಪುರ ವಿಧಾನಸಭಾ ಕ್ಷೇತ್ರ, ಹೀಗೆ ಎರಡೂ ಕಡೆಗಳಲ್ಲಿ ಮತದಾರರ ಪಟ್ಟಿಯಲ್ಲಿ ತನ್ನ ಹೆಸರು ಹೊಂದಿರುವುದನ್ನು ಆಲ್ಟ್ ನ್ಯೂಸ್ ತನಿಖೆಯು ದೃಢಪಡಿಸಿದೆ.           ►ಪ್ರಕರಣ 2: ಸಂತೋಷ್‌ ಓಝಾ ದಿಲ್ಲಿ ಬಿಜೆಪಿಯ ಪೂರ್ವಾಂಚಲ ಮೋರ್ಚಾ ಅಧ್ಯಕ್ಷ ಸಂತೋಷ್‌ ಓಝಾ ಅವರು ನ.6ರಂದು ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ ಮತ ಚಲಾಯಿಸಿದ ಬಳಿಕ ತನ್ನ ಫೋಟೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಅದಕ್ಕೂ ಹಿಂದೆ 2025,ಫೆ.5ರಂದು ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿಯೂ ಮತದಾನ ಮಾಡಿದ್ದು,ಅದರ ಫೋಟೊಗಳನ್ನೂ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದರು. ಅವರು ಬಿಹಾರದ ಬಕ್ಸರ್ ವಿಧಾನಸಭಾ ಕೇತ್ರ ಮತ್ತು ದಿಲ್ಲಿಯ ಗ್ರೇಟರ್ ಕೈಲಾಷ್ ವಿಧಾನಸಭಾ ಕ್ಷೇತ್ರ ಎರಡರಲ್ಲೂ ಮತದಾರರ ಪಟ್ಟಿಗಳಲ್ಲಿ ತನ್ನ ಹೆಸರು ಹೊಂದಿರುವುದನ್ನು ಆಲ್ಟ್ ನ್ಯೂಸ್ ತನಿಖೆಯು ದೃಢಪಡಿಸಿದೆ.       ►ಪ್ರಕರಣ 3: ನಾಗೇಂದ್ರ ಪಾಂಡೆ ದಿಲ್ಲಿಯ ಬಿಜೆಪಿ ಕಾರ್ಯಕರ್ತ ನಾಗೇಂದ್ರ ಪಾಂಡೆ ಅಲಿಯಾಸ್ ನಾಗೇಂದ್ರ ಕುಮಾರ್‌ ಅವರು ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ನ.6ರಂದು ಮತ ಚಲಾಯಿಸಿದ ಬಳಿಕ ತನ್ನ ಫೋಟೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಫೆ.25ರಂದು ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿಯೂ ಅವರು ಮತ ಚಲಾಸಿದ್ದು ಅದರ ಫೋಟೊಗಳನ್ನೂ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದರು. ಅವರು ಬಿಹಾರದ ಸಿವಾನ್ ಜಿಲ್ಲೆಯ ದರೌಲಿ ಮತ್ತು ದಿಲ್ಲಿಯ ದ್ವಾರಕಾ ವಿಧಾನಸಭಾ ಕ್ಷೇತ್ರ ಎರಡಲ್ಲಿಯೂ ಮತದಾರರ ಪಟ್ಟಿಗಳಲ್ಲಿ ಹೆಸರು ಹೊಂದಿರುವುದನ್ನು ಆಲ್ಟ್ ನ್ಯೂಸ್ ಪತ್ತೆ ಹಚ್ಚಿದೆ. ಬಿಹಾರದಲ್ಲಿ ನಾಗೇಂದ್ರ ಪಾಂಡೆ ಹೆಸರಿನಲ್ಲಿ ಮತ್ತು ದಿಲ್ಲಿಯಲ್ಲಿ ನಾಗೇಂದ್ರ ಕುಮಾರ್‌ ಹೆಸರಿನಲ್ಲಿ ಅವರು ಮತ ಚಲಾಯಿಸಿದ್ದು,ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಫೋಟೊಗಳು ಅವರದೇ ಆಗಿವೆ.        

ವಾರ್ತಾ ಭಾರತಿ 15 Nov 2025 8:28 pm

ಕಲಾಗ್ರಾಮದಲ್ಲಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ

ಬೆಂಗಳೂರು : ಇಲ್ಲಿನ ಜ್ಞಾನಭಾರತಿಯ ಕಲಾಗ್ರಾಮದ ಆವರಣದಲ್ಲಿರುವ ಕವಿ ಡಾ.ಸಿದ್ದಲಿಂಗಯ್ಯ ಅವರ ಸಮಾಧಿ ಪಕ್ಕದಲ್ಲೇ ವೃಕ್ಷಮಾತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಶನಿವಾರ ನೆರವೇರಿಸಲಾಯಿತು. ರಾಜ್ಯ ಸರಕಾರದ ಆದೇಶದಂತೆ ಪೊಲೀಸ್ ಇಲಾಖೆಯಿಂದ ಮೂರು ಸುತ್ತಿನ ಕುಶಲತೋಪು ಸಿಡಿಸಿ, ಸಕಲ ಗೌರವದೊಂದಿಗೆ ಸಾಲುಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆ ನಡೆಸಲಾಯಿತು. ಅವರ ದತ್ತುಪುತ್ರ ಉಮೇಶ್ ಅವರಿಂದ ಅಂತಿಮ ವಿಧಿ-ವಿಧಾನಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸಾಲುಮರದ ತಿಮ್ಮಕ್ಕ ಶುಕ್ರವಾರದಂದು ಇಲ್ಲಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾದರು. ಶನಿವಾರ ಬೆಳಗ್ಗೆ ಇಲ್ಲಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿತ್ತು. ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ವಿ.ಸೋಮಣ್ಣ, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಅರಣ್ಯ ಸಚಿವ ಈಶ್ವರ್ ಖಂಡ್ರೆ, ವಿಪಕ್ಷ ನಾಯಕ ಆರ್. ಅಶೋಕ್, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರ ಸ್ವಾಮಿ ಸೇರಿದಂತೆ ಹಲವರು ತಿಮ್ಮಕ್ಕ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕಂಬನಿ ಮಿಡಿದರು. ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ನಾಡಿಗೆ ಹೊಸ ಆದರ್ಶವನ್ನು ರೂಪಿಸಿದ ಎಲ್ಲರ ಅಚ್ಚುಮೆಚ್ಚಿನ ತಾಯಿ ಪದ್ಮಶ್ರೀ ಸಾಲುಮರದ ತಿಮ್ಮಕ್ಕನವರು ನಮ್ಮನ್ನು ಅಗಲಿರುವುದು ನೋವಾಗಿದೆ. ಅವರು ನನಗೆ ಹಾಗೂ ನಮ್ಮ ಕುಟುಂಬಕ್ಕೆ ಬಹಳ ಹತ್ತಿರವಾಗಿದ್ದವರು. ಯಾರು ನಡೆಯದ ದಾರಿಯನ್ನು ಅವರು ಸೃಷ್ಟಿ ಮಾಡಿ, ಪರಿಸರ ಸಂರಕ್ಷಣೆಯ ಮಾತನ್ನು ಕೃತಿಯಲ್ಲಿ ಮಾಡಿ ತೋರಿಸಿದ್ದಾರೆ ಎಂದು ಹೇಳಿದರು. ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾತನಾಡಿ, ‘ಮರಗಳನ್ನೇ ಮಕ್ಕಳಂತೆ ಮಮಕಾರದಿಂದ ಬೆಳೆಸಿ ವಿಶ್ವಕ್ಕೇ ವೃಕ್ಷಗಳ ಮಹತ್ವ ಸಾರಿದ ಸಾಲುಮರದ ತಿಮ್ಮಕ್ಕ ಅವರ ಹೆಸರಲ್ಲಿ ಸಸಿ ನೆಡುವ ಮೂಲಕ ಅರಣ್ಯ ಇಲಾಖೆ ಗೌರವ ಸಲ್ಲಿಸಲಿದೆ. 114 ವರ್ಷ ಜೀವಿಸಿದ್ದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಗೌರವಾರ್ಥ ರಾಜ್ಯದ 114 ಸ್ಥಳಗಳಲ್ಲಿ 13 ಸಾವಿರ ಸಸಿಗಳನ್ನು ನೆಟ್ಟು ಪೋಷಿಸಲಾಗುವುದು’ ಎಂದರು.

ವಾರ್ತಾ ಭಾರತಿ 15 Nov 2025 8:26 pm

ಟೆಸ್ಟ್ ಕ್ರಿಕೆಟ್ ನಲ್ಲಿ ಸೆಹ್ವಾಗ್ ದಾಖಲೆ ಮುರಿದ ರಿಷಬ್ ಪಂತ್

ಟೆಸ್ಟ್ ಕ್ರಿಕೆಟ್ ನಲ್ಲಿ ರಿಷಬ್ ಪಂತ್ ಅವರು ಹೊಸ ದಾಖಲೆ ಬರೆದಿದ್ದಾರೆ. ಟೆಸ್ಟ್ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ಸಿಕ್ಸರ್ ಗಳಿಸಿದ ಹೆಗ್ಗಳಿಕೆಗೆ ಪಾತ್ರವಾಗಿರುವ ಅವರು, ಆ ಮೂಲಕ ಈವರೆಗೆ ಇದೇ ದಾಖಲೆ ಮಾಡಿದ್ದ ಸೆಹ್ವಾಗ್ ಅವರ ದಾಖಲೆಯನ್ನು ಅವರು ಹಿಂದಿಕ್ಕಿದ್ದಾರೆ. ಕೋಲ್ಕತಾದಲ್ಲಿ ನಡೆಯುತ್ತಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಪಂತ್ ಅವರು ಈ ದಾಖಲೆ ಮಾಡಿದ್ದಾರೆ.

ವಿಜಯ ಕರ್ನಾಟಕ 15 Nov 2025 8:24 pm

ಬಿಹಾರ ಫಲಿತಾಂಶದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಗರಿಗೆದರಿದ ಚಟುವಟಿಕೆಗಳು; ಸಚಿವ ಸಂಪುಟ ಪುನರ್ ರಚನೆಗೆ ಹೈಕಮಾಂಡ್ ಸೂಚನೆ

ಬೆಂಗಳೂರು : ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಬೆನ್ನಲ್ಲೇ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಚಟುವಟಿಕೆಗಳು ಗರಿಗೆದರಿವೆ. ‘ಬಿಹಾರ ಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ನವೆಂಬರ್ ಕಾಂತ್ರಿ ಸಂಭವಿಸಲಿದೆ’ ಎಂದು ಹೇಳಲಾಗುತ್ತಿತ್ತು. ಆದರೆ, ‘ನಾಯಕತ್ವ ಬದಲಾವಣೆ’ ಬದಲಿಗೆ ಸಚಿವ ಸಂಪುಟ ಪುನರ್ ರಚನೆಗೆ ಹೈಕಮಾಂಡ್ ಹಸಿರು ನಿಶಾನೆ ತೋರಿಸಿದೆ. ಬಿಹಾರ ಚುನಾವಣೆ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೊಸದಿಲ್ಲಿಗೆ ದೌಡಾಯಿಸಿದ್ದು, ಲೋಕಸಭೆ ವಿಪಕ್ಷ ನಾಯಕ ಹಾಗೂ ಎಐಸಿಸಿ ಮುಖಂಡ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. ಈ ವೇಳೆ ಸಚಿವ ಸಂಪುಟ ಪುನರ್ ರಚನೆಗೆ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ ಎಂದು ಗೊತ್ತಾಗಿದೆ. ಸಂಪುಟದ 15ರಿಂದ 18 ಮಂದಿಯನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ‘ಪಟ್ಟಿಯನ್ನು ಸಿದ್ದಪಡಿಸಿಕೊಂಡು ಬನ್ನಿ’ ಎಂದು ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯನವರಿಗೆ ಸೂಚಿಸಿದ್ದಾರೆ. ಅಲ್ಲದೆ, ಈ ವಿಚಾರದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾಗಿ ಚರ್ಚಿಸಿ ಸಲಹೆ ನೀಡಿದ್ದಾರೆ ಎಂದು ಹೇಳಲಾಗಿದೆ. ಆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರವಿವಾರ ಬೆಳಗಿನ ಜಾವ ಬೆಂಗಳೂರು ನಗರಕ್ಕೆ ಹಿಂದಿರುಗಲಿದ್ದು, ನ.17ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರನ್ನು ಖುದ್ದು ಭೇಟಿಯಾಗಿ ಸಂಪುಟ ಪುನರ್ ರಚನೆ ಸಂಬಂಧ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯದಲ್ಲಿ 15 ರಿಂದ 18 ಮಂದಿ ಸಚಿವರನ್ನು ಕೈಬಿಟ್ಟು, ಹೊಸಬರಿಗೆ ಅವಕಾಶ ಕಲ್ಪಿಸುವ ಸಾಧ್ಯತೆಗಳಿವೆ. ಆ ಹಿನ್ನೆಲೆಯಲ್ಲಿ ಸಚಿವ ಸ್ಥಾನದಿಂದ ಯಾರನ್ನು ಕೈಬಿಡಲಿದ್ದಾರೆ ಮತ್ತು ಸಂಪುಟಕ್ಕೆ ಹೊಸದಾಗಿ ಯಾರನ್ನು ಸೇರಿಸಿಕೊಳ್ಳಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಈ ಮಧ್ಯೆ ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿಯೂ ದೊಡ್ಡದಿದ್ದು, ಹೊಸದಿಲ್ಲಿ ಮಟ್ಟದಲ್ಲಿ ಈಗಾಗಲೇ ಲಾಬಿಯೂ ಆರಂಭವಾಗಿದೆ. ಹಿರಿಯ ಶಾಸಕರಾದ ಬಿ.ಕೆ.ಹರಿಪ್ರಸಾದ್, ಶಿವಲಿಂಗೇಗೌಡ, ಪಿ.ಎಂ.ನರೇಂದ್ರ ಸ್ವಾಮಿ, ಎಂ.ಕೃಷ್ಣಪ್ಪ, ಎನ್.ಎ. ಹಾರಿಸ್, ಸಲೀಂ ಅಹಮದ್, ಬಿ.ನಾಗೇಂದ್ರ, ಬಿ.ಕೆ.ಸಂಗಮೇಶ್, ಮಾಗಡಿ ಬಾಲಕೃಷ್ಣ, ಲಕ್ಷ್ಮಣ್ ಸವದಿ, ಎ.ಎಸ್.ಪೊನ್ನಣ್ಣ, ಶರತ್ ಬಚ್ಚೆಗೌಡ, ರಿಝ್ವಾನ್ ಅರ್ಶದ್, ರೂಪಕಲಾ ಶಶಿಧರ್, ನಂಜೇಗೌಡ, ನಾರಾಯಣಸ್ವಾಮಿ, ಬೇಳೂರು ಗೋಪಾಲಕೃಷ್ಣ ಸಹಿತ ಇನ್ನಿತರರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಸಂಪುಟ ಪುನರ್ ರಚನೆ ವೇಳೆ ಯಾರನ್ನು ಕೈಬಿಡಲಿದ್ದಾರೆ ಹಾಗೂ ಯಾರಿಗೆಲ್ಲ ಅವಕಾಶ ನೀಡಲಿದ್ದಾರೆ ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. 

ವಾರ್ತಾ ಭಾರತಿ 15 Nov 2025 8:17 pm

ದುಬೈನಲ್ಲಿ 4,000 ಕೋಟಿ ರೂ.ಮೌಲ್ಯದ ‘ಕೈಗೆಟಕುವ’ ಆಸ್ತಿಯನ್ನು ಪ್ರಕಟಿಸಿದ ಶಾರುಕ್ ಖಾನ್

ಮುಂಬೈ,ನ.15: ಬಾಲಿವುಡ್ ನಟ ಶಾರುಕ್ ಖಾನ್ ಅವರು ಅಧಿಕೃತವಾಗಿ ಬಿಲಿಯಾಧೀಶನಾದ ಬಳಿಕ ಈಗ ದುಬೈನ ಮರಳಿನಲ್ಲಿ ತನ್ನ ಗುರುತನ್ನು ಸ್ಥಾಪಿಸಲು ಸಜ್ಜಾಗಿದ್ದಾರೆ. ದುಬೈನ ರಿಯಲ್ ಎಸ್ಟೇಟ್ ಕಂಪನಿ ಡ್ಯಾನುಬ್ ಪ್ರಾಪರ್ಟಿಸ್ ಶಾರುಕ್ ಹೆಸರಿನ ಗಗನಚುಂಬಿ ಕಟ್ಟಡವೊಂದನ್ನು ನಿರ್ಮಿಸಲು ತಾನು ಯೋಜಿಸಿರುವುದಾಗಿ ಇತ್ತೀಚಿಗೆ ಪ್ರಕಟಿಸಿದೆ. ‘ಶಾರುಕ್ಝ’ ಎಂದು ಕರೆಯಲ್ಪಡುವ ಈ ಆಸ್ತಿಯು ತನ್ನ ಮುಂಭಾಗದಲ್ಲಿ ಶಾರುಕ್ ಅವರ ಪ್ರತಿಮೆಯನ್ನೂ ಹೊಂದಿರಲಿದೆ. ಮುಂಬೈನಲ್ಲಿ ಕಾರ್ಯಕ್ರವೊಂದರಲ್ಲಿ ಈ ವಿಷಯವನ್ನು ಪ್ರಕಟಿಸಿದ ಶಾರುಕ್,‘ನನ್ನ ತಾಯಿ ಬದುಕಿದ್ದರೆ ಇದನ್ನು ನೋಡಿ ಹೆಮ್ಮೆ ಪಡುತ್ತಿದ್ದರು’ ಎಂದು ಹೇಳಿದರು.‘ಇದು ಬಹು ದೊಡ್ಡ ಗೌರವ ಎಂದು ನಾನು ಭಾವಿಸಿದ್ದೇನೆ. ಈಗ ನಾನು ನನ್ನ ಮಕ್ಕಳೊಂದಿಗೆ ದುಬೈಗೆ ಭೇಟಿ ನೀಡಿದರೆ ಕಟ್ಟಡದತ್ತ ಬೆಟ್ಟು ಮಾಡಿ ‘ದೇಖೋ ಪಾಪಾ ಕಿ ಬಿಲ್ಡಿಂಗ್ ಹೈ(ನೋಡಿ ನಿಮ್ಮ ತಂದೆಯ ಕಟ್ಟಡ)’ ಎಂದು ಹೇಳುತ್ತೇನೆ. ಇದು ಅದ್ಭುತವಾಗಿದೆ ಎಂದು ನಾನು ಭಾವಿಸಿದ್ದು,ಕಳೆದೆರಡು ತಿಂಗಳುಗಳಿಂದಲೂ ಯೋಜನೆಯ ವಿವರಗಳನ್ನು ನೋಡುತ್ತಿದ್ದೇನೆ. ಎಲ್ಲವೂ ತುಂಬ ಸುಂದರವಾಗಿದೆ ಮತ್ತು ಅತ್ಯಾಧುನಿಕವಾಗಿದೆ’ ಎಂದರು. ಡ್ಯಾನುಬ್‌ ನ ಈ ಆಸ್ತಿಯು ವಿಶೇಷವಾಗಿ ದುಬೈನಲ್ಲಿ ಹೊಸದಾಗಿ ತಮ್ಮ ಜೀವನವನ್ನು ಆರಂಭಿಸುವವರಿಗೆ ಅತ್ಯಂತ ಕೈಗೆಟಕುವ ಬೆಲೆಯಲ್ಲಿದೆ. ಇದು ಅವರಿಗೆ ಬಹು ದೊಡ್ಡ ವರದಾನವಾಗಲಿದೆ ಮತ್ತು ಸ್ಫೂರ್ತಿಯಾಗಲಿದೆ ಎಂದು ತಾನು ಆಶಿಸಿದ್ದೇನೆ ಎಂದು ಹೇಳಿದ ಅವರು, ಗಗನಚುಂಬಿ ಕಟ್ಟಡದ ಸಂಪೂರ್ಣ ಮೌಲ್ಯ ಸುಮಾರು 4,000 ಕೋಟಿ ರೂ.ಗಳಷ್ಟಿರಲಿದೆ ಎಂದು ತಿಳಿಸಿದರು. ಕಟ್ಟಡಕ್ಕೆ ತನ್ನ ಹೆಸರನ್ನಿರಿಸಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ಶಾರುಕ್, ಇಂತಹ ಆಸ್ತಿಯೊಂದು ತನ್ನ ಹೆಸರನ್ನು ಹೊಂದಿರುವುದು ಇದೇ ಮೊದಲ ಸಲವಾಗಿದೆ ಎಂದು ಹೇಳಿದರು. 2029ರ ವೇಳೆಗೆ ಪೂರ್ಣಗೊಳ್ಳಲಿರುವ ಕಟ್ಟಡವು 10 ಲಕ್ಷ ಚದರಡಿ ವಿಸ್ತೀರ್ಣದಲ್ಲಿ ನಿರ್ಮಾಣಗೊಳ್ಳಲಿದೆ. ಇದು ನಿವಾಸಿಗಳಿಗಾಗಿ ಉಚಿತ ಕ್ಲಬ್‌ಗಳು, ಹೊರಾಂಗಣ ಲಾಂಜ್‌ ಗಳು,ಜಿಮ್‌ ಗಳು ಮತ್ತು ಹೆಲಿಪ್ಯಾಡ್‌ನಂತಹ 40ಕ್ಕೂ ಅಧಿಕ ಸೌಲಭ್ಯಗಳನ್ನು ಹೊಂದಿರಲಿದೆ. ಒಂದು ಲಕ್ಷ ಚದರಡಿಗಳ ಬಿಲ್ಟ್-ಅಪ್ ಏರಿಯಾ 56 ಅಂತಸ್ತುಗಳಲ್ಲಿ ಹರಡಿಕೊಳ್ಳಲಿದೆ. ಇಲ್ಲಿಯ ಫ್ಲ್ಯಾಟ್‌ಗಳ ಬೆಲೆ 4.2 ಕೋಟಿ ರೂ.ಗಳಿಂದ ಆರಂಭಗೊಳ್ಳಲಿದೆ ಎನ್ನಲಾಗಿದೆ.

ವಾರ್ತಾ ಭಾರತಿ 15 Nov 2025 8:16 pm

ʼಸಹಯೋಗ' ಪೋರ್ಟಲ್ ಆರಂಭಿಸಿದ್ದ ಕೇಂದ್ರದ ಕ್ರಮ ಎತ್ತಿಹಿಡಿದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಎಕ್ಸ್ ಕಾರ್ಪ್‌ನಿಂದ ಮೇಲ್ಮನವಿ

ಬೆಂಗಳೂರು : ಕಾನೂನುಬಾಹಿರ ಆನ್‌ಲೈನ್ ಮಾಹಿತಿಗಳನ್ನು ನಿರ್ಬಂಧಿಸುವ ಸಂಬಂಧ ಸಾಮಾಜಿಕ ಜಾಲತಾಣ ಸಂಸ್ಥೆಗಳಿಗೆ ಆದೇಶಿಸಲು 'ಸಹಯೋಗ' ಪೋರ್ಟಲ್‌ ಆರಂಭಿಸಿರುವ ಕೇಂದ್ರ ಸರಕಾರದ ಕ್ರಮ ಎತ್ತಿಹಿಡಿದಿದ್ದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ ಎಕ್ಸ್‌ ಕಾರ್ಪ್‌ (ಟ್ವಿಟರ್) ಸಂಸ್ಥೆ ವಿಭಾಗೀಯ ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 79(3)(ಬಿ) ವ್ಯಾಪ್ತಿಯನ್ನು ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿ ಸೆಪ್ಟೆಂಬರ್ 24ರಂದು ಏಕಸದಸ್ಯ ನ್ಯಾಯಪೀಠ ನೀಡಿದ್ದ ತೀರ್ಪು ರದ್ದುಕೋರಿ ಎಕ್ಸ್ ಕಾರ್ಪ್ ಮೇಲ್ಮನವಿ ಸಲ್ಲಿಸಿದೆ. ಅರ್ಜಿಯಲ್ಲಿ ಕಾನೂನು ಮತ್ತು ನ್ಯಾಯ ಸಚಿವಾಲಯ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ, ಗೃಹ ವ್ಯವಹಾರಗಳ ಸಚಿವಾಲಯ, ಹಣಕಾಸು ಸಚಿವಾಲಯ, ರಕ್ಷಣಾ ಸಚಿವಾಲಯ, ರೈಲ್ವೇ ಸಚಿವಾಲಯ, ಭಾರಿ ಕೈಗಾರಿಕಾ ಸಚಿವಾಲಯ, ಗ್ರಾಮೀಣಾಭಿವೃದ್ಧಿ ಸಚಿವಾಲಯಗಳ ಕಾರ್ಯದರ್ಶಿಗಳನ್ನು ಪ್ರತಿವಾದಿಯನ್ನಾಗಿಸಲಾಗಿದ್ದು, ಮೇಲ್ಮನವಿಯು ಇನ್ನಷ್ಟೇ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಬೇಕಿದೆ. ಏಕಸದಸ್ಯ ನ್ಯಾಯಪೀಠದ ಆದೇಶವೇನು? ಸಾಮಾಜಿಕ ಮಾಧ್ಯಮದ ನಿಯಂತ್ರಣ ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಎಕ್ಸ್ ಕಾರ್ಪ್ ಸಲ್ಲಿಸಿದ್ದ ರಿಟ್ ಅರ್ಜಿ ವಜಾಗೊಳಿಸಿತ್ತು. ಭಾರತೀಯ ನಾಗರಿಕನಲ್ಲದ ಅರ್ಜಿದಾರ ಎಕ್ಸ್‌ ಕಾರ್ಪ್‌ ಸಂಸ್ಥೆಯು ಸಂವಿಧಾನದ 19ನೇ ವಿಧಿ ಅಡಿಯಲ್ಲಿ ಆಶ್ರಯ ಪಡೆಯಲು ಸಾಧ್ಯವಿಲ್ಲ ಎಂದು ಹೇಳಿತ್ತು. ಅರ್ಜಿದಾರ ಸಂಸ್ಥೆಯು ತನ್ನ ಮೂಲಸ್ಥಾನವಾದ ಅಮೆರಿಕದಲ್ಲಿ ನಿಯಂತ್ರಣ ವ್ಯವಸ್ಥೆಗೆ ಒಳಪಟ್ಟಿದೆ. ಅಲ್ಲಿನ ವ್ಯಾಪ್ತಿಯಲ್ಲಿರುವ ಟ್ವೀಟ್‌ ತೆಗೆಯುವ ಕಾನೂನಿನ ಅಡಿ ಉಲ್ಲಂಘನೆಯನ್ನು ಕ್ರಿಮಿನಲ್‌ ಚಟುವಟಿಕೆ ಎಂದು ನಿರ್ಧರಿಸಲಾಗುತ್ತದೆ ಎಂದು ಅಲ್ಲಿ ಆದೇಶ ಪಾಲಿಸುತ್ತಿದೆ. ಆದರೆ, ಭಾರತದಲ್ಲಿ ಆ ದೇಶವನ್ನು ಪಾಲಿಸಲು ಎಕ್ಸ್‌ ಕಾರ್ಪ್‌ ನಿರಾಕರಿಸುತ್ತಿದೆ. ಇದು ಮುಖಗೇಡಿತನ (Sans Countenance) ಎಂದು ಅಭಿಪ್ರಾಯಪಟ್ಟಿತ್ತು. ನಮ್ಮ ರಾಷ್ಟ್ರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲು ಬಯಸುವ ಪ್ರತಿಯೊಂದು ವೇದಿಕೆಯೂ ಸ್ವಾತಂತ್ರ್ಯವನ್ನು ಜವಾಬ್ದಾರಿಯೊಂದಿಗೆ ತೆಗೆದುಕೊಳ್ಳಬೇಕು ಮತ್ತು ಪ್ರವೇಶದ ಸವಲತ್ತು ಅದರೊಂದಿಗೆ ಹೊಣೆಗಾರಿಕೆಯ ಗಂಭೀರ ಕರ್ತವ್ಯವನ್ನು ಹೊಂದಿದೆ ಎಂಬುದನ್ನು ಒಪ್ಪಿಕೊಳ್ಳಬೇಕು. ಆಧುನಿಕ ವಿಚಾರಗಳ ದುಂಡುಕಲೆಮನೆಯಾಗಿರುವ (Amphitheatre) ಸಾಮಾಜಿಕ ಮಾಧ್ಯಮವನ್ನು ಅರಾಜಕ ಸ್ವಾತಂತ್ರ್ಯದ ಸ್ಥಿತಿಯಲ್ಲಿ ಬಿಡಲಾಗುವುದಿಲ್ಲ. ವಿಷಯದ ನಿಯಂತ್ರಣವು ಘನತೆಯನ್ನು ರಕ್ಷಿಸಲು ಮತ್ತು ಮಹಿಳೆಯರ ವಿರುದ್ಧದ ಅಪರಾಧ ನಿರ್ಬಂಧಿಸಲು ಅಗತ್ಯವಾಗಿದೆ. ಅನಾದಿ ಕಾಲದಿಂದಲೂ ಮಾಹಿತಿ ಮತ್ತು ಸಂಹವನವು ನಿಯಂತ್ರಣಕ್ಕೆ ಒಳಪಟ್ಟಿದ್ದು, ಮಾಹಿತಿದಾರರಿಂದ ಅಂಚೆ ಕಾಲದವರಿಗೆ, ಈಗ ವಾಟ್ಸಾಪ್‌, ಇನ್‌ಸ್ಟಾಗ್ರಾಂ ಮತ್ತು ಸ್ನ್ಯಾಪ್‌ಚಾಟ್‌ ಎಲ್ಲವೂ ಸ್ಥಳೀಯ ಮತ್ತು ಜಾಗತಿಕವಾಗಿ ನಿಯಂತ್ರಣಕ್ಕೆ ಒಳಪಟ್ಟಿವೆ ಎಂದು ಹೈಕೋರ್ಟ್ ಆದೇಶದಲ್ಲಿ ಹೇಳಿತ್ತು. ಎಕ್ಸ್ ಕಾರ್ಪ್ ಆಕ್ಷೇಪವೇನು? ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಪೊಲೀಸರನ್ನೂ ಒಳಗೊಂಡಂತೆ ಕೇಂದ್ರ ಮತ್ತು ರಾಜ್ಯ ಸರಕಾರಿ ಸಂಸ್ಥೆಗಳಿಗೆ ಸೆಕ್ಷನ್‌ 69ಎ ಮೀರಿ ಸೆಕ್ಷನ್‌ 79(3)(ಬಿ) ಅಡಿ ಮಾಹಿತಿ ನಿರ್ಬಂಧಿಸಲು ನಿರ್ದೇಶಿಸಿದೆ ಎಂದು ಆರೋಪಿಸಿದ್ದ ಎಕ್ಸ್‌ ಕಾರ್ಪ್, ನಿರ್ಬಂಧ ಆದೇಶ ಮಾಡಲು ಸಿದ್ಧ ಮಾದರಿಯನ್ನೂ ನೀಡಿದೆ. ಇದು ಸುಪ್ರೀಂಕೋರ್ಟ್‌ ಆದೇಶ ಉಲ್ಲಂಘನೆಯಾಗಿದೆ. ಸೆಕ್ಷನ್‌ 79(3)(ಬಿ) ಅಡಿ ಕೇಂದ್ರ ಮತ್ತು ರಾಜ್ಯ ಸರಕಾರದ ಸಂಸ್ಥೆಗಳು ನಿರ್ಬಂಧ ಆದೇಶ ಮಾಡಲು ಅನುಮತಿಸುವ ಕೇಂದ್ರ ಗೃಹ ಇಲಾಖೆ ರೂಪಿಸಿರುವ ಸಹಯೋಗ್‌ ಪೋರ್ಟಲ್‌ ಅನ್ನೂ ಎಕ್ಸ್‌ ಪ್ರಶ್ನಿಸಿತ್ತು. ಸೆಕ್ಷನ್‌ 69ಎಗೆ ಪರ್ಯಾಯವಾಗಿ ಸಹಯೋಗ್‌ ಪೋರ್ಟಲ್‌ ವ್ಯವಸ್ಥೆ ರೂಪಿಸುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ರಿಟ್ ಅರ್ಜಿಯಲ್ಲಿ ಆಕ್ಷೇಪಿಸಿತ್ತು.

ವಾರ್ತಾ ಭಾರತಿ 15 Nov 2025 8:01 pm

ಜಪಾನ್ 600 ಕೋಟಿ ರೂ.ಹೂಡಿಕೆ | ನೈಡೆಕ್ ಕಂಪೆನಿಯ ಆರ್ಚರ್ಡ್ ಹಬ್‍ಗೆ ಚಾಲನೆ ನೀಡಿದ ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು : ಧಾರವಾಡದ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಜಪಾನ್ ಮೂಲದ ನೈಡೆಕ್ ಕಂಪೆನಿಯು ಸುಮಾರು 600 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಥಾಪಿಸಿರುವ ಆರ್ಚರ್ಡ್ ಹಬ್‍ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಪಾಟೀಲ್, ನೈಡೆಕ್ ಕಂಪೆನಿಯ ಈ ಸಂಸ್ಥೆಯ ಸ್ಥಾಪನೆಗೆ ಐದು ತಿಂಗಳ ಹಿಂದೆ ನಾನೇ ಭೂಮಿ ಪೂಜೆ ನೆರವೇರಿಸಿದ್ದೆ. ಕಂಪೆನಿಯು ಕೇಳಿದ್ದ ಸವಲತ್ತುಗಳನ್ನೆಲ್ಲ ರಾಜ್ಯ ಸರಕಾರವು ತ್ವರಿತವಾಗಿ ಪೂರೈಸಿದೆ. ಇದಕ್ಕೆ ತಕ್ಕಂತೆ ಕಂಪೆನಿಯು ಕ್ಷಿಪ್ರಗತಿಯಲ್ಲಿ ಅಗಾಧ ಬಂಡವಾಳ ಹೂಡಿ, ಈ ಆಧುನಿಕ ಕೇಂದ್ರವನ್ನು ಸ್ಥಾಪಿಸಿರುವುದು ಮಾದರಿಯಾಗಿದೆ ಎಂದು ಹೇಳಿದರು. ನೈಡೆಕ್ ಕಂಪೆನಿಯ ಆರ್ಚರ್ಡ್ ಹಬ್ ನಾವೀನ್ಯತೆ ಮತ್ತು ತಂತ್ರಜ್ಞಾನ ಆಧಾರಿತ ಉದ್ಯಮ ಕೇಂದ್ರವಾಗಿದೆ. ಇಲ್ಲಿ ಹೊಸಹೊಸ ಔದ್ಯಮಿಕ ಕಲ್ಪನೆಗಳು ಮತ್ತು ಸಂಶೋಧನೆ ಜೊತೆಗೂಡಲಿವೆ. ಅಂತಿಮವಾಗಿ ಇದು ಕೈಗಾರಿಕಾ ಅಭಿವೃದ್ಧಿಯ ಹೆದ್ದಾರಿಯನ್ನು ಸೃಷ್ಟಿಸಲಿವೆ ಎಂದು ಪಾಟೀಲ್ ಅವರು ಬಣ್ಣಿಸಿದರು. ಉತ್ತರ ಕರ್ನಾಟಕ ಭಾಗದಲ್ಲಿ ಜಪಾನಿನ ಕಂಪೆನಿಯೊಂದು ಬೃಹತ್ ಮೊತ್ತದ ಬಂಡವಾಳ ಹೂಡಿಕೆ ಯೋಜನೆ ಇದಾಗಿದೆ. ಇದರಿಂದ ಇಲ್ಲಿ ಉದ್ಯೋಗ ಸೃಷ್ಟಿಯೂ ಆಗಲಿದ್ದು, ಪರೋಕ್ಷವಾಗಿ ಸ್ಥಳೀಯರಿಗೆ ಲಾಭವಾಗಲಿದೆ. ರಾಜ್ಯ ಸರಕಾರವು ತನ್ನ ಹೊಸ ಕೈಗಾರಿಕಾ ನೀತಿಯಲ್ಲಿ ಬೆಂಗಳೂರನ್ನು ಹೊರತುಪಡಿಸಿ ಬೇರೆ-ಬೇರೆ ಭಾಗಗಳಲ್ಲಿ ಉದ್ಯಮ ಸ್ಥಾಪಿಸುವಂತೆ ಹಲವು ರಚನಾತ್ಮಕ ಕ್ರಮಗಳನ್ನು ಅಳವಡಿಸಲಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ನೈಡೆಕ್ ಕಂಪೆನಿ ಸೇರಿದಂತೆ ಜಪಾನಿನ ಹತ್ತಾರು ಕಂಪೆನಿಗಳು ಕರ್ನಾಟಕ ರಾಜ್ಯದಲ್ಲಿ ನೆಲೆಯೂರಿದ್ದು, ನಮ್ಮಲ್ಲಿ ಜಪಾನಿ ಕೈಗಾರಿಕಾ ಟೌನ್‍ಶಿಪ್ ಕೂಡ ಇದೆ. ತಾವು ಇತ್ತೀಚಿಗೆ ಜಪಾನಿಗೆ ಭೇಟಿ ನೀಡಿದಾಗ ರಾಜ್ಯಕ್ಕೆ 4,500ಕೋಟಿ ರೂ.ಗಳ ಬಂಡವಾಳ ಹೂಡಿಕೆ ಖಾತ್ರಿ ಸಿಕ್ಕಿದೆ. ನಮ್ಮ ಹಿಂದಿನ ಬಾರಿಯ ಜಪಾನ್ ಮತ್ತು ದಕ್ಷಿಣ ಕೊರಿಯಾ ಭೇಟಿಯಲ್ಲಿಯೂ 6ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆ ಬಂದಿತು ಎಂದು ಪಾಟೀಲ್ ಸ್ಮರಿಸಿದರು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕ ಅರವಿಂದ ಬೆಲ್ಲದ್, ನೈಡೆಕ್ ಕಾರ್ಪೊರೇಷನ್ ಅಧ್ಯಕ್ಷ ಹಿರೋಶಿ ಕೋಬೆ, ಕಂಪೆನಿಯ ಮೋಷನ್ ಮತ್ತು ಎನರ್ಜಿ ವಿಭಾಗದ ಮುಖ್ಯಸ್ಥ ಮೈಕೆಲ್ ಬ್ರಿಗ್ಸ್, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 15 Nov 2025 7:49 pm

ಮುಸ್ಲಿಮರ ರಾಜ್ಯ ಮಟ್ಟದ ಒಕ್ಕೂಟದ ಮೂಲಕ ಬೇಡಿಕೆಗಳ ಈಡೇರಿಕೆಗೆ ಸಂಘಟಿತ ಪ್ರಯತ್ನ

ಉಡುಪಿಯಲ್ಲಿ ನಡೆದ ರಾಜ್ಯದ ಮುಸ್ಲಿಂ ಸಂಘಟನೆಗಳ ಪ್ರತಿನಿಧಿಗಳ ಸಭೆಯಲ್ಲಿ ನಿರ್ಧಾರ

ವಾರ್ತಾ ಭಾರತಿ 15 Nov 2025 7:49 pm

ಜೆಡಿಯು 25 ಸೀಟು ಗೆದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದಿದ್ದ ಪ್ರಶಾಂತ್‌ ಕಿಶೋರ್‌; ಈಗೇನು ಮಾಡ್ತಾರೆ ಚುನಾವಣಾ ತಂತ್ರಜ್ಞ?

2014ರ ಲೋಕಸಭೆ ಚುನಾವಣೆ ಬಳಿಕ ದೇಶಾದ್ಯಂತ ಮನೆಮಾತಾದ ಚುನಾವಣಾ ನೀತಿ ನಿರೂಪಕ ಪ್ರಶಾಂತ್‌ ಕಿಶೋರ್‌, 2025ರಲ್ಲಿ ಬಿಹಾರದಲ್ಲಿ ತಮ್ಮದೇ ಆದ ರಾಜಕೀಯ ಪಕ್ಷ ಸ್ಥಾಪಿಸಿ ಕೈ ಸುಟ್ಟುಕೊಂಡಿದ್ದಾರೆ. ಇನ್ನೂ ವಿಶೇಷವೆಂದರೆ ಬಿಹಾರ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ, ಪ್ರಶಾಂತ್‌ ಕಿಶೋರ್‌ ನುಡಿದಿದ್ದ ಭವಿಷ್ಯವೆಲ್ಲವೂ ಸುಳ್ಳಾಗಿದೆ. ಅದರಲ್ಲೂ ಈ ಬಾರಿ ಜೆಡಿಯು 25ಕ್ಕಿಂತ ಹೆಚ್ಚಿನ ಸ್ಥಾನದಲ್ಲಿ ಜಯಗಳಿಸಿದರೆ, ರಾಜಕೀಯ ನಿವೃತ್ತಿ ಪಡೆಯುವುದಾಗಿ ಪ್ರಶಾಂತ್‌ ಕಿಶೋರ್‌ ಘೋಷಿಸಿದ್ದರು. ಜೆಡಿಯು 85 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ್ದು, ಪ್ರಶಾಂತ್‌ ಕಿಶೋರ್‌ ರಾಜಕೀಯ ಬಿಡ್ತಾರಾ ಎಂಬ ಪ್ರಶ್ನೆ ಇದೀಗ ಎದುರಾಗಿದೆ.

ವಿಜಯ ಕರ್ನಾಟಕ 15 Nov 2025 7:28 pm

ಬಿಹಾರದಲ್ಲಿ ಆರ್‌ಜೆಡಿ ದಯನೀಯ ಸೋಲು | ರಾಜಕೀಯ ತೊರೆಯುತ್ತಿದ್ದೇನೆ: ಲಾಲೂ ಪುತ್ರಿ ರೋಹಿಣಿ

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಜನತಾ ದಳ ಪರಾಭವಗೊಂಡಿರುವ ಬೆನ್ನಿಗೇ, ನಾನು ನನ್ನ ಕುಟುಂಬದೊಂದಿಗೆ ಕಾಲ ಕಳೆಯಬೇಕಿರುವುದರಿಂದ, ನಾನು ರಾಜಕೀಯ ತೊರೆಯುತ್ತಿದ್ದೇನೆ ಎಂದು ಆರ್‌ಜೆಡಿ ವರಿಷ್ಠ ಲಾಲೂ ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ಪ್ರಕಟಿಸಿದ್ದಾರೆ. ಶುಕ್ರವಾರ ಪ್ರಕಟಗೊಂಡ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟವಾದ ಮಹಾಘಟಬಂಧನ್ 243 ವಿಧಾನಸಭಾ ಸ್ಥಾನಗಳ ಪೈಕಿ ಕೇವಲ 35 ಸ್ಥಾನಗಳಲ್ಲಷ್ಟೇ ಗೆಲುವು ಸಾಧಿಸುವ ಮೂಲಕ ಹೀನಾಯವಾಗಿ ಪರಾಭವಗೊಂಡಿತ್ತು. ಇದರ ಬೆನ್ನಿಗೇ ತಮ್ಮ ರಾಜಕೀಯ ನಿವೃತ್ತಿಯ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರೋಹಿಣಿ ಆಚಾರ್ಯ, ನಾನು ರಾಜಕೀಯ ತೊರೆಯುತ್ತಿದ್ದು, ನಾನು ಕುಟುಂಬದ ಸೇವೆಗೆ ತೆರಳುತ್ತಿದ್ದೇನೆ. ಇದನ್ನೇ ಸಂಜಯ್ ಹಾಗೂ ರಮೀಝ್ ನನಗೆ ಹೇಳಿದ್ದು. ಎಲ್ಲ ತಪ್ಪುಗಳಿಗೂ ನಾನೇ ಹೊಣೆ ಹೊರುತ್ತೇನೆ ಎಂದು ಕ್ಷಮೆ ಯಾಚಿಸಿದ್ದಾರೆ. ಸಂಜಯ್ ಯಾದವ್ ಆರ್‌ಜೆಡಿ ರಾಜ್ಯಸಭಾ ಸಂಸದರಾಗಿದ್ದು, ಲಾಲೂ ಪ್ರಸಾದ್ ಯಾದವ್ ಅವರ ಪುತ್ರ ಹಾಗೂ ಭವಿಷ್ಯದ ವಾರಸುದಾರ ತೇಜಸ್ವಿ ಯಾದವ್ ಅವರ ನಿಕಟವರ್ತಿಯಾಗಿದ್ದಾರೆ. ಇನ್ನು ನೆರೆಯ ಉತ್ತರ ಪ್ರದೇಶದ ರಾಜಕೀಯ ಕುಟುಂಬಕ್ಕೆ ಸೇರಿದ ರಮೀಝ್, ತೇಜಸ್ವಿ ಯಾದವ್‌ ರ ಹಳೆಯ ಸ್ನೇಹಿತನೆಂದು ಹೇಳಲಾಗಿದೆ. ಕಳೆದ ತಿಂಗಳು ಲಾಲೂ ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ತಮ್ಮ ತಂದೆ ಲಾಲೂ ಪ್ರಸಾದ್ ಯಾದವ್ ಹಾಗೂ ಸಹೋದರ ತೇಜಸ್ವಿ ಯಾದವ್ ಅವರನ್ನು ಎಕ್ಸ್‌ನಲ್ಲಿ ಅನ್ ಫಾಲೊ ಮಾಡಿದಾಗ, ಲಾಲೂ ಪ್ರಸಾದ್ ಯಾದವ್ ಕುಟುಂಬದಲ್ಲಿನ ಭಿನ್ನಾಭಿಪ್ರಾಯ ಬೀದಿಗೆ ಬಂದಿತ್ತು. ತೇಜಸ್ವಿ ಯಾದವ್ ಅವರ ನಿಕಟವರ್ತಿ ಸಂಜಯ್ ಯಾದವ್ ಪಕ್ಷದೊಳಗಿನ ಎಲ್ಲ ಅಧಿಕಾರವನ್ನು ತಮ್ಮ ಹಿಡಿತದಲ್ಲಿಟ್ಟುಕೊಂಡಿದ್ದಾರೆ ಎಂದು ಎಕ್ಸ್‌ನಲ್ಲಿ ರೋಹಿಣಿ ಆಚಾರ್ಯ ಆರೋಪಿಸಿದ ಬಳಿಕ ಈ ಭಿನ್ನಾಭಿಪ್ರಾಯ ಸಾರ್ವಜನಿಕಗೊಂಡಿತ್ತು. ರೋಹಿಣಿ ಆಚಾರ್ಯ ಅವರು ಲಾಲೂ ಪ್ರಸಾದ್ ಯಾದವ್‌ರ ಪ್ರಥಮ ಪತ್ನಿಯ ಪುತ್ರಿಯಾಗಿದ್ದು, ವೈದ್ಯಕೀಯ ಪದವೀಧರೆಯಾಗಿದ್ದಾರೆ. ಗೃಹಿಣಿಯಾಗಲು ನಿರ್ಧರಿಸಿದ ಅವರು ಸಿಂಗಪುರ ಮೂಲದ ತಮ್ಮ ಪತ್ನಿಯೊಂದಿಗೆ ನೆಲೆಸಿದ್ದರು. ತಮ್ಮ ಹಿರಿಯ ಸಹೋದರ ತೇಜ್ ಪ್ರತಾಪ್ ಯಾದವ್‌ರನ್ನು ಪಕ್ಷದಿಂದ ಉಚ್ಚಾಟಿಸಿದ್ದಕ್ಕೆ ರೋಹಿಣಿ ಆಚಾರ್ಯ ಅಸಮಾಧಾನಗೊಂಡಿದ್ದಾರೆ ಎಂಬ ಊಹಾಪೋಹಗಳು ಹರಡಿದ್ದವು. ಆದರೆ, ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮಹಾಘಟಬಂಧನ್ ಮೈತ್ರಿಕೂಟದ ಮುಖ್ಯಮಂತ್ರಿಯಾಗಿದ್ದ ತಮ್ಮ ಕಿರಿಯ ಸಹೋದರ ತೇಜಸ್ವಿ ಯಾದವ್ ಪರವಾಗಿ ಅವರು ಪ್ರಚಾರ ಮಾಡಿದ್ದು ಕಂಡು ಬಂದಿತ್ತು. I’m quitting politics and I’m disowning my family … This is what Sanjay Yadav and Rameez had asked me to do …nd I’m taking all the blame’s — Rohini Acharya (@RohiniAcharya2) November 15, 2025

ವಾರ್ತಾ ಭಾರತಿ 15 Nov 2025 7:27 pm

ಅತಿವೃಷ್ಟಿ ಹಾನಿ | ಕಲಬುರಗಿ ಜಿಲ್ಲೆಗೆ 250.97 ಕೋಟಿ ರೂ. ಪರಿಹಾರ ಮಂಜೂರು : ಡಿಸಿ ಫೌಝಿಯಾ ತರನ್ನುಮ್

ಕಲಬುರಗಿ : ಪ್ರಸಕ್ತ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭಾರೀ ಮಳೆ ಹಾಗೂ ಪ್ರವಾಹದಿಂದ ಹಾನಿಯಾದ ಬೆಳೆಗಳಿಗೆ ರಾಜ್ಯ ಸರಕಾರ ಎಸ್.ಡಿ.ಆರ್.ಎಫ್/ ಎನ್.ಡಿ.ಆರ್.ಎಫ್ ಮಾರ್ಗಸೂಚಿಯನ್ವಯ ಜಿಲ್ಲೆಯ 3.26 ಲಕ್ಷ‌ ರೈತರಿಗೆ 250.97 ಕೋಟಿ ರೂ. ಪರಿಹಾರ ಮಂಜೂರಾತಿ ನೀಡಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ ಕಳೆದ ಆಗಸ್ಟ್ ಮತ್ತು ಸೆಪ್ಟೆಂಬರ್ ಮಾಹೆಯಲ್ಲಿ ಅಪಾರ‌ ಪ್ರಮಾಣದ‌ಲ್ಲಿ ಬಿದ್ದ ಮಳೆಯಿಂದ 3.24 ಲಕ್ಷ ಹೆಕ್ಟೇರ್ ಪ್ರದೇಶ ಕೃಷಿ,‌ ತೋಟಗಾರಿಕೆ ಪ್ರದೇಶ ಹಾನಿಯಾಗಿದ್ದಕ್ಕೆ ಪರಿಹಾರ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದೀಗ ಸರಕಾರ ಪರಿಹಾರ ತಂತ್ರಾಂಶದಲ್ಲಿ ಅರ್ಹ ರೈತರ ಹಾಗೂ ಹಾನಿ ಪ್ರದೇಶದ ದತ್ತಾಂಶದನ್ವಯ ಮೊದಲನೆ ಹಂತದಲ್ಲಿ SDRF/NDRF ಮಾರ್ಗಸೂಚಿಯನ್ವಯ ಜಿಲ್ಲೆಯ 3,26,183 ಫಲಾನುಭವಿ ರೈತರಿಗೆ ಒಟ್ಟು 250.97 ಕೋಟಿ ರೂ. ಹಣ ಮಂಜೂರಾತಿ ನೀಡಲಾಗಿದ್ದು, ಇನ್ ಪುಟ್ ಸಬ್ಸಿಡಿ ನೇರವಾಗಿ ಆಧಾರ ಸಂಖ್ಯೆಗೆ ಜೋಡಣೆ ಹೊಂದಿರುವ ಸಂಬಂದಪಟ್ಟ ರೈತರ ಬ್ಯಾಂಕ್ ಖಾತೆಗಳಿಗೆ ಮುಂದಿನ 3-4 ದಿನಗಳಲ್ಲಿ ಪರಿಹಾರ ಹಣ ಜಮೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ವಾರ್ತಾ ಭಾರತಿ 15 Nov 2025 7:07 pm

ವ್ಯವಸ್ಥೆ, ಲೋಪಗಳ ಅಧ್ಯಯನ | ಪರಪ್ಪನ ಅಗ್ರಹಾರಕ್ಕೆ ಉನ್ನತಾಧಿಕಾರ ಸಮಿತಿ ಭೇಟಿ ಪರಿಶೀಲನೆ

ಬೆಂಗಳೂರು : ಕಾರಾಗೃಹಗಳಲ್ಲಿ ವ್ಯವಸ್ಥೆಗಳು ಹಾಗೂ ಲೋಪಗಳ ಅಧ್ಯಯನಕ್ಕಾಗಿ ರಚಿಸಲಾಗಿರುವ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್.ಹಿತೇಂದ್ರ ಅವರನ್ನೊಳಗೊಂಡ ಉನ್ನತಾಧಿಕಾರ ಸಮಿತಿ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಶನಿವಾರ ನಗರದ ಪರಪ್ಪನ ಅಗ್ರಹಾರ ಕಾರಗೃಹಕ್ಕೆ ಭೇಟಿ ನೀಡಿದ ಅಧಿಕಾರಿಗಳ ತಂಡ, ಬಂಧಿಖಾನೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿತು. ಬಳಿಕ ಜೈಲಿನ ಒಳಗೆ ಹಾಗೂ ಬ್ಯಾರಕ್‍ಗಳ ಖುದ್ದು ಪರಿಶೀಲನೆ ನಡೆಸಿದರು. ಜೈಲಿನಲ್ಲಿ ಕೈದಿಗಳನ್ನು ಭೇಟಿ ಮಾಡಲು ಸಾರ್ವಜನಿಕರಿಗೆ ಇರುವ ವ್ಯವಸ್ಥೆಗಳು, ಸಿಸಿಟಿವಿ, ಜಾಮರ್ ಸೇರಿದಂತೆ ಇತರ ಸಲಕರಣೆಗಳ ಕಾರ್ಯಕ್ಷಮತೆ, ಅಧಿಕಾರಿ ಮತ್ತು ಸಿಬ್ಬಂದಿಗಳ ಹೊಣೆಗಾರಿಕೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಪರಪ್ಪನ ಅಗ್ರಹಾರ ಸೇರಿದಂತೆ ರಾಜ್ಯದಲ್ಲಿರುವ ಜೈಲುಗಳ ವ್ಯವಸ್ಥೆಗಳ ಪರಿಶೀಲನೆ ನಡೆಸಿ ವರದಿ ನೀಡಲು ಸಮಿತಿಗೆ ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸಮಿತಿ ಅಧಿಕಾರಿಗಳು ಜೈಲುಗಳ ಭೇಟಿಗೆ ಮುಂದಾಗಿದ್ದಾರೆ. ಜೈಲುಗಳಲ್ಲಿ ವಿಚಾರಣಾಧೀನ ಹಾಗೂ ಶಿಕ್ಷಾಬಂಧಿ ಖೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪಗಳು ವ್ಯಾಪಕವಾಗಿದ್ದವು. ಅದಕ್ಕೆ ಪೂರಕವಾಗಿ ಇತ್ತೀಚಿಗೆ ಕೆಲವು ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಬ್ಯಾರಕ್ ನಂ-7ರ 8ನೆ ಕೊಠಡಿಯಲ್ಲಿ ಕೆಲವು ವಿಚಾರಣಾಧೀನ ಕೈದಿಗಳು ಮದ್ಯ ಸೇವಿಸಿ ಸಾಮೂಹಿಕ ನೃತ್ಯ ಮಾಡುತ್ತಿರುವುದು ಹಾಗೂ ವಿಕೃತಕಾಮಿ ಉಮೇಶ್‍ರೆಡ್ಡಿ ಮೊಬೈಲ್‍ನಲ್ಲಿ ಮಾತನಾಡುತ್ತಿರುವುದು, ಭಯೋತ್ಪಾದನೆ ಆರೋಪದ ಮೇಲೆ ಬಂಧಿತನಾಗಿರುವ ವ್ಯಕ್ತಿಯ ಕೈಯಲ್ಲೂ ಮೊಬೈಲ್ ಇರುವುದು ವೈರಲ್ ಆದ ವಿಡಿಯೊಗಳಲ್ಲಿ ಕಂಡು ಬಂದಿತ್ತು. ಇದು ವ್ಯಾಪಕ ಚರ್ಚೆ ಹುಟ್ಟು ಹಾಕಿದ್ದಲ್ಲದೇ, ಗಂಭೀರ ಸ್ವರೂಪದ ಭದ್ರತಾ ಲೋಪಗಳನ್ನು ಎತ್ತಿ ತೋರಿಸಿತ್ತು. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬಂಧಿಖಾನೆ ಹಾಗೂ ಸುಧಾರಣಾ ಸೇವೆಗಳ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಪ್ರತ್ಯೇಕ ಸಭೆ ನಡೆಸಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್.ಹಿತೇಂದ್ರ ನೇತೃತ್ವದಲ್ಲಿ ನಾಲ್ಕು ಮಂದಿ ಐಪಿಎಸ್ ಅಧಿಕಾರಿಗಳ ಉನ್ನತಾಧಿಕಾರ ಸಮಿತಿ ರಚಿಸಿದ್ದರು.

ವಾರ್ತಾ ಭಾರತಿ 15 Nov 2025 6:48 pm

ಕೆ-ಸೆಟ್-25 : ತಾತ್ಕಾಲಿಕ ಫಲಿತಾಂಶ ಪ್ರಕಟ

ಬೆಂಗಳೂರು : ನವೆಂಬರ್ 2ರಂದು ನಡೆದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ(ಕೆ-ಸೆಟ್) ಅಂತಿಮ ಕೀ ಉತ್ತರಗಳ ಜತೆಗೆ ತಾತ್ಕಾಲಿಕ ಫಲಿತಾಂಶವನ್ನೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ಪ್ರಕಟಿಸಿದೆ. ಪರೀಕ್ಷೆ ನಡೆದು ದಾಖಲೆಯ ಕೇವಲ 13 ದಿನಗಳಲ್ಲಿ ಕೀ ಉತ್ತರಗಳ ಜತೆಗೆ ಫಲಿತಾಂಶ ಪ್ರಕಟಿಸಲಾಗಿದೆ. ಫಲಿತಾಂಶ ಸಂಬಂಧ ಆಕ್ಷೇಪಣೆಗಳು ಇದ್ದಲ್ಲಿ ನ.17ರಂದು ಮಧ್ಯಾಹ್ನ 12ಗಂಟೆಯೊಳಗೆ ಪೂರಕ ದಾಖಲೆಗಳೊಂದಿಗೆ ಸಲ್ಲಿಸಬೇಕು. ಕೀ ಉತ್ತರಗಳಿಗೆ ಸಂಬಂಧಿಸಿದ ಅಥವಾ ಪೂರಕ ದಾಖಲೆಗಳಿಲ್ಲದೆ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ವಾರ್ತಾ ಭಾರತಿ 15 Nov 2025 6:44 pm

Bengaluru | ಬರೋಬ್ಬರಿ 8,136 ಲೀಟರ್ ನಕಲಿ ನಂದಿನಿ ತುಪ್ಪ ವಶಕ್ಕೆ

ಬೆಂಗಳೂರು : ಕರ್ನಾಟಕ ರಾಜ್ಯದ ಹೆಮ್ಮೆಯ ನಂದಿನಿ ತುಪ್ಪವನ್ನು ನಕಲಿ ಮಾಡುತ್ತಿದ್ದ ಜಾಲವೊಂದನ್ನು ಬೇಧಿಸಿರುವ ಸಿಸಿಬಿ ಪೊಲೀಸರು, ನಾಲ್ವರನ್ನು ಬಂಧಿಸಿ 8,136 ಲೀಟರ್ ನಂದಿನಿ ಬ್ರಾಂಡ್‍ನ ಕಲಬೆರೆಕೆ ತುಪ್ಪ ಹಾಗೂ ಸರಬರಾಜು ಮಾಡುತ್ತಿದ್ದ 4 ವಾಹನಗಳನ್ನು ವಶ ಪಡಿಸಿಕೊಂಡಿದ್ದಾರೆ. ಬಂಧಿತ ನಾಲ್ವರು ಆರೋಪಿಗಳನ್ನು ದೀಪಕ್, ಮುನಿರಾಜು, ಅಭಿ ಅರಸು, ಮಹೇಂದ್ರ ಎಂದು ಗುರುತಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹೇಳಿದ್ದಾರೆ. ಹೊರ ರಾಜ್ಯದಲ್ಲಿ ಕಲಬೆರೆಕೆ ತುಪ್ಪವನ್ನು ತಯಾರಿಸಿ ನಂದಿನಿ ಮಾದರಿಯಲ್ಲಿಯೇ ರೂಪ ನೀಡಿ ಪ್ಲಾಸ್ಟಿಕ್ ಬಾಟಲಿಗಳಲ್ಲಿ ತುಂಬಿ ಬೆಂಗಳೂರು ನಗರದಾದ್ಯಂತ ಮಾರಾಟ ಮಾಡುತ್ತಿದ್ದರು. ಅದರಲ್ಲೂ, ಕೆಎಂಎಫ್ ಕಡೆಯಿಂದ ಅಧಿಕೃತ ಪರವಾನಗಿಯನ್ನು ಪಡೆದಂತಹ ಬೆಂಗಳೂರಿನ ವ್ಯಾಪಾರಿಗಳಿಗೆ ಸರಬರಾಜು ಮಾಡುತ್ತಿದ್ದರು ಎನ್ನುವ ಮಾಹಿತಿ ವಿಚಾರಣೆಯಲ್ಲಿ ಗೊತ್ತಾಗಿದೆ. ಆರೋಪಿಗಳು ಕಲಬೆರೆಕೆ ನಂದಿನಿ ತುಪ್ಪದ ಬಾಟಲಿಗಳನ್ನು ಅಸಲಿಯೆಂದು ಬಿಂಬಿಸಿ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಸಿಸಿಬಿ ವಿಶೇಷ ವಿಚಾರಣಾ ದಳ ಮತ್ತು ಕೆಎಂಎಫ್ ಜಾಗೃತ ದಳದ ಅಧಿಕಾರಿಗಳು ಗುಪ್ತವಾಗಿ ಮಾಹಿತಿ ಸಂಗ್ರಹಿಸಿ ಜಂಟಿ ಕಾರ್ಯಾಚರಣೆ ನಡೆಸಿ ಬೆಂಗಳೂರಿನ ಚಾಮರಾಜಪೇಟೆಯ ನಂಜಾಂಬ ಅಗ್ರಹಾರದ ಕೃಷ್ಣ ಎಂಟರ್ ಪ್ರೈ. ಮಾಲಕ ಹಾಗೂ ಅವರ ಕುಟುಂಬದ ಸದಸ್ಯರಿಗೆ ಸಂಬಂಧಿಸಿದ ಗೋದಾಮುಗಳ ಮೇಲೆ ದಾಳಿ ನಡೆಸಿದ್ದರು. ದಾಳಿಯ ವೇಳೆ ತಮಿಳುನಾಡಿನಲ್ಲಿ ಕಲಬೆರಕೆ ತುಪ್ಪವನ್ನು ತಯಾರಿಸಿ, ನಂದಿನಿ ಬ್ರಾಂಡ್‍ನ ಸ್ಯಾಚೆಟ್‍ಗಳಿಗೆ ಮತ್ತು ಪ್ಲಾಸ್ಟಿಕ್ ಬಾಟಲಿಗಳಿಗೆ ತುಂಬಿ ಬೆಂಗಳೂರಿನ ಅಂಗಡಿಗಳಿಗೆ ಸಾಗಿಸುತ್ತಿದ್ದ ವಾಹನ ಚಾಲಕ ಮತ್ತು ಆತನು ಉಪಯೋಗಿಸುತ್ತಿದ್ದ ಸರಕು ಸಾಗಾಣಿಕೆ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸುತ್ತಿದ್ದ 5 ಮೊಬೈಲ್‍ಗಳು, 60 ಲಕ್ಷ ರೂ. ಮಾಲ್ಯದ 4 ವಾಹನಗಳು, ಕೃತ್ಯದಿಂದ ಸಂಪಾದಿಸಿದ 1,19,640 ರೂ., ನಗದು, 56,95,200 ರೂ. ಬೆಲೆ ಬಾಳುವ 8,136 ಲೀಟರ್ ಕಲಬೆರಕೆಯ ತುಪ್ಪ ತುಂಬಿದ ವಿವಿಧ ನಮೂನೆಯ ನಕಲಿ ನಂದಿನಿ ಬ್ರಾಂಡ್‍ನ ಬಾಟಲಿಗಳು, ತೆಂಗು ಮತ್ತು ಪಾಮ್ ಎಣ್ಣೆ ತುಂಬಿದ ಕ್ಯಾನುಗಳನ್ನು ವಶಪಡಿಸಿಕೊಂಡು ತನಿಖೆ ಮುಂದುವರೆಸಲಾಗಿದೆ ಎಂದು ಆಯುಕ್ತರು ವಿವರಿಸಿದ್ದಾರೆ.

ವಾರ್ತಾ ಭಾರತಿ 15 Nov 2025 6:38 pm

ಅತಿಯಾದ ಕುಡಿತ, 120,00,00,000 ರೂಪಾಯಿ ಆಸ್ತಿ ಇದ್ದರೂ ಆರ್‌ಸಿಬಿ ಮಾಜಿ ಆಟಗಾರ ದಿಢೀರ್... Glenn Maxwell

ಕನ್ನಡಿಗರ ಬೆಂಗಳೂರು ತಂಡ ಆರ್‌ಸಿಬಿ ಕೊನೆಗೂ ಕಪ್ ಗೆದ್ದು ಬೀಗಿತ್ತು, ಹೀಗೆ ಬರೋಬ್ಬರಿ 18 ವರ್ಷಗಳ ನಂತರ ಕಪ್ ಗೆದ್ದು ಬೀಗಿತ್ತು. ಅದರಲ್ಲೂ ಆರ್‌ಸಿಬಿ ತಂಡ ಕಪ್ ಗೆದ್ದ ನಂತರ ಸಾಲು ಸಾಲು ದುರಂತಗಳು ನಡೆದು 11 ಜನರು ಕಾಲ್ತುಳಿತ ಘಟನೆಯಲ್ಲಿ ಜೀವ ಬಿಟ್ಟಿದ್ದರು. ಈ ಘಟನೆ ನಂತರ ಆರ್‌ಸಿಬಿ ತಂಡವನ್ನು ಬ್ಯಾನ್ ಮಾಡಿಸಲು ಶತ್ರುಗಳು ಪ್ರಯತ್ನ

ಒನ್ ಇ೦ಡಿಯ 15 Nov 2025 6:18 pm

Explained: ಆನೆ ನಡೆದಿದ್ದೇ ದಾರಿ: ರಷ್ಯಾ ಕಚ್ಚಾತೈಲ ಬಿಡಲೊಲ್ಲದ ಭಾರತ; ಅಕ್ಟೋಬರ್‌ ತಿಂಗಳ ಬ್ಯುಸಿನೆಸ್‌ ಎಷ್ಟು?

ಭಾರತ-ರಷ್ಯಾ ಕಚ್ಚಾತೈಲ ಸಂಬಂಧ ದಿನದಿಂದ ದಿನಕ್ಕೆ ಗಟ್ಟಿಯಾಗುತ್ತಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಸತತ ಪ್ರಯತ್ನದ ಹೊರತಾಗಿಯೂ, ಭಾರತ-ರಷ್ಯಾ ಕಚ್ಚಾತೈಲ ಸಂಬಂಧದಲ್ಲಿ ಯಾವುದೇ ಬಿರುಕು ಮೂಡಿಲ್ಲ. ಇದಕ್ಕೆ ಪುಷ್ಠಿ ಎಂಬಂತೆ ಕಳೆದ ಅಕ್ಟೋಬರ್‌ನಲ್ಲಿ ಭಾರತ ಮತ್ತು ರಷ್ಯಾ ನಡುವೆ ಬರೋಬ್ಬರಿ 2.5 ಬಿಲಿಯನ್‌ ಡಾಲರ್‌ ಮೌಲ್ಯದ ಕಚ್ಚಾತೈಲ ವ್ಯಾಪಾರ ನಡೆದಿದೆ. ಭಾರತವು ರಷ್ಯಾ ಕಚ್ಚಾತೈಲದ ಎರಡನೇ ಅತಿದೊಡ್ಡ ಆಮದುದಾರ ರಾಷ್ಟ್ರ ಎಂಬ ಹೆಗ್ಗಳಿಕೆಯನ್ನು ಕಾಯ್ದುಕೊಂಡಿದೆ. ಇಲ್ಲಿದೆ ಹೆಚ್ಚಿನ ಮಾಹಿತಿ.

ವಿಜಯ ಕರ್ನಾಟಕ 15 Nov 2025 6:16 pm

ಮುಂದಿನವಾರವೇ ಸಿದ್ದರಾಮಯ್ಯ ಸಂಪುಟ ಪುನಾರಚನೆ - 10ರಿಂದ 12 ಸಚಿವರಿಗೆ ಕೊಕ್ ಸಾಧ್ಯತೆ

ಕರ್ನಾಟಕ ಸಚಿವ ಸಂಪುಟ ಪುನಾರಚನೆಗೆ ರಾಹುಲ್ ಗಾಂಧಿ ಹಸಿರು ನಿಶಾನೆ ತೋರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ರಾಹುಲ್ ಗಾಂಧಿ ಮತ್ತು ಹೈಕಮಾಂಡ್ ನಾಯಕರನ್ನು ಭೇಟಿಯಾದಾಗ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಂಪುಟ ರಚನೆಗೂ ಮುನ್ನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚಿಸಲು ಸಿದ್ದರಾಮಯ್ಯನವರಿಗೆ ಸೂಚಿಸಲಾಗಿದೆ.

ವಿಜಯ ಕರ್ನಾಟಕ 15 Nov 2025 6:14 pm

ಬೆಂಗಳೂರು | ನಟಿಗೆ ಲೈಂಗಿಕ ಕಿರುಕುಳ ಆರೋಪ; ಸಿನೆಮಾ ನಿರ್ಮಾಪಕ ಸೆರೆ

ಬೆಂಗಳೂರು : ಚಲನಚಿತ್ರ ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಚಿತ್ರ ನಿರ್ಮಾಪಕನನ್ನು ಇಲ್ಲಿನ ಗೋವಿಂದರಾಜ ನಗರ ಠಾಣೆ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಎವಿಆರ್ ಗ್ರೂಪ್ ಮಾಲಕನೂ ಆದ ಚಲನಚಿತ್ರ ನಿರ್ಮಾಪಕ ಅರವಿಂದ ವೆಂಕಟರೆಡ್ಡಿ(43) ಬಂಧಿತ ಆರೋಪಿ ಎಂದು ಪೊಲೀಸರು ಹೇಳಿದ್ದಾರೆ. 2021ರಲ್ಲಿ ಪರಿಚಯವಾದ ನಟಿಯನ್ನು ಅರವಿಂದ ವೆಂಕಟ ರೆಡ್ಡಿ ಮದುವೆಯಾಗುವುದಾಗಿ ನಂಬಿಸಿದ್ದ. ಬಳಿಕ ಆ ನಟಿಗೆ ಲೈಂಗಿಕ ಕಿರುಕುಳ ನೀಡಲಾರಂಭಿಸಿದ್ದಾನೆ. ಇತ್ತೀಚಿಗೆ ಶ್ರೀಲಂಕಾದಲ್ಲಿ ನಡೆದ ಲಾರ್ಸ್ ಕ್ರಿಕೆಟ್‍ಕಪ್ ಉದ್ಘಾಟನೆಗೆ ನಟಿಯನ್ನು ಆತ ಕರೆದೊಯ್ದಿದ್ದ. ಅಲ್ಲಿಯೂ ಸಹ ಆಕೆಗೆ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಆತನ ವರ್ತನೆಯಿಂದ ನೊಂದಿದ್ದ ನಟಿ ಆರ್‌ಆರ್‌ ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದರೂ ಸಹ ಆ ಪೊಲೀಸರು ಯಾವುದೇ ಕ್ರಮಕೈಗೊಂಡಿರಲಿಲ್ಲ. ಹಾಗಾಗಿ ನಟಿ ನಗರ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ವಿಷಯ ತಿಳಿಸಿದ್ದಾರೆ. ಆಯುಕ್ತರು ಈ ಬಗ್ಗೆ ಕ್ರಮಕೈಗೊಳ್ಳುವಂತೆ ಗೋವಿಂದರಾಜನಗರ ಪೊಲೀಸ್ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿದ್ದಾರೆ ಎಂದು ತಿಳಿದು ಬಂದಿದೆ. ಎಸಿಪಿ ಚಂದನ್ ಅವರ ನೇತೃತ್ವದ ತಂಡ ತನಿಖೆ ಕೈಗೊಂಡಿತ್ತು. ಚಿತ್ರನಿರ್ಮಾಪಕ ಅರವಿಂದ್ ವೆಂಕಟರೆಡ್ಡಿ ಶ್ರೀಲಂಕಾದಿಂದ ನಗರಕ್ಕೆ ಬರುತ್ತಿರುವ ಮಾಹಿತಿ ತಿಳಿದು ವಿಮಾನ ನಿಲ್ದಾಣಕ್ಕೆ ತೆರಳಿ ಆತನನ್ನು ವಶಕ್ಕೆ ಪಡೆದು ಮುಂದಿನ ಕ್ರಮಕೈಗೊಂಡಿದ್ದಾರೆ.

ವಾರ್ತಾ ಭಾರತಿ 15 Nov 2025 6:11 pm

Karnataka Industry: ರಾಜ್ಯದ ಈ ಜಿಲ್ಲೆಯಲ್ಲಿ ತಂತ್ರಜ್ಞಾನ ಆಧಾರಿತ ಉದ್ಯಮ ಕೇಂದ್ರ ಆರಂಭ

ಬೆಂಗಳೂರು, ನವೆಂಬರ್ 15: ಕರ್ನಾಟಕದಲ್ಲಿ ಅದರಲ್ಲೂ ಉತ್ತರ ಕರ್ನಾಟಕಕ್ಕೆ ಒಂದಷ್ಟು ಬಂಡವಾಳ ಹೂಡಿಕೆ ಹರಿದು ಬರುತ್ತಿದೆ. ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ವಿಜಯಪುರದಲ್ಲಿ ವಿದೇಶಿ ಕಂಪನಿಗಳು ಹೂಡಿಕೆಗೆ ಮುಂದಾಗಿವೆ. ಈ ಪೈಕಿ ಜಪಾನ್ ಮೂಲದ ನೈಡೆಕ್ ಕಂಪನಿಯು ಧಾರವಾಡದ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪಿಸಿರುವ 'ಆರ್ಚರ್ಡ್ ಹಬ್' ಕಾರ್ಯಾಚರಣೆ ಆರಂಭಿಸಿದೆ. ಶನಿವಾರ ಈ ಆರ್ಚರ್ಡ್ ಹಬ್'ಗೆ ಬೃಹತ್ ಮತ್ತು ಮಧ್ಯಮ

ಒನ್ ಇ೦ಡಿಯ 15 Nov 2025 6:02 pm

Free LPG Cylinder: ಉಚಿತ ಎಲ್‌ಪಿಜಿ ಸಿಲಿಂಡರ್‌ ಬಗ್ಗೆ ಬಿಗ್‌ ಅಪ್‌ಡೇಟ್‌

ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ದೇಶದ ಎಲ್ಲ ಮಹಿಳೆಯರಿಗೆ ಎಲ್‌ಪಿಜಿ ಸಿಲಿಂಡರ್‌ ಸಂಪರ್ಕ ನೀಡುವ ಮೂಲಕ ಕ್ರಾಂತಿ ಮಾಡುತ್ತಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಉಚಿತ ಸಿಲಿಂಡರ್‌ಗಳನ್ನು ನೀಡಲಾಗುತ್ತಿದೆ. ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ಬಡತನ ರೇಖೆಗಿಂತ ಕೆಳಗಿರುವ ಮಹಿಳೆಯರಿಗೆ ಉಚಿತವಾಗಿ ಅಡುಗೆ ಅನಿಲವನ್ನು ಪೂರೈಕೆ ಮಾಡುವ ಗುರಿ ಹೊಂದಿದೆ. ಇದು ಯಾವ ಮಹಿಳೆಯರಿಗೆ

ಒನ್ ಇ೦ಡಿಯ 15 Nov 2025 5:57 pm

ಬೆಳಗಾವಿಯಲ್ಲಿ 19 ಜಿಂಕೆ ಸಾವು ಪ್ರಕರಣ: ತನಿಖೆಗೆ ಈಶ್ವರ್‌ ಖಂಡ್ರೆ ಆದೇಶ

ಬೆಂಗಳೂರು : ಬೆಳಗಾವಿ ಭೂತರಾಮನಹಟ್ಟಿಯ ಕಿತ್ತೂರುರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 19 ಜಿಂಕೆಗಳು ಅಸಹಜವಾಗಿ ಮೃತಪಟ್ಟಿರುವ ಪ್ರಕರಣ ಸಂಬಂಧ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತನಿಖೆಗೆ ಆದೇಶ ನೀಡಿದ್ದಾರೆ. ಪ್ರಾಥಮಿಕ ವರದಿಗಳ ಅನ್ವಯ ಈ ಜಿಂಕೆಗಳು ಸಾಂಕ್ರಾಮಿಕ ಕಾಯಿಲೆಯಿಂದ ಮೃತಪಟ್ಟಿರುವುದಾಗಿ ವರದಿಯಾಗಿದ್ದು, ಮೃಗಾಲಯದ ಬೇರೆ ಯಾವುದೇ ಪ್ರಾಣಿಗೆ ಸೋಂಕು ತಗುಲದಂತೆ ಎಲ್ಲ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಈ ಜಿಂಕೆಗಳು ಕಲುಷಿತ ನೀರು, ಆಹಾರ ಸೇವಿಸಿ ಕಾಯಿಲೆಗೆ ತುತ್ತಾಗಿ ಮೃತಪಟ್ಟಿವೆಯೇ ಅಥವಾ ಬೆಕ್ಕು ಇತ್ಯಾದಿ ಸಾಕು ಪ್ರಾಣಿಗಳಿಂದ ಈ ಕಾಯಿಲೆ ಹರಡಿದೆಯೇ ಎಂಬ ಬಗ್ಗೆ ಒಂದು ತಜ್ಞರ ಸಮಿತಿ ರಚಿಸಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚನೆ ನೀಡಿದ್ದಾರೆ. ಮೃಗಾಲಯದಲ್ಲಿರುವ ಪ್ರಾಣಿಗಳು ಈ ರೀತಿ ಸಾವಿಗೀಡಾಗುವುದು ಆತಂಕದ ವಿಚಾರವಾಗಿದ್ದು, ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಮತ್ತು ಸಿಬ್ಬಂದಿಯ ನಿರ್ಲಕ್ಷ್ಯವಿದ್ದಲ್ಲಿ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಈಶ್ವರ್‌ ಖಂಡ್ರೆ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ವಾರ್ತಾ ಭಾರತಿ 15 Nov 2025 5:56 pm

ಬಿಹಾರ ಸೋಲು ಕರ್ನಾಟಕದಲ್ಲಿ ಭಿನ್ನ ಎಫೆಕ್ಟ್: ಸಿದ್ದು ಬಣದಲ್ಲಿ ಮತ್ತಷ್ಟು ವಿಶ್ವಾಸ, ದೆಹಲಿಯಲ್ಲಿ ಏನಾಗುತ್ತೆ?

ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹೀನಾಯ ಸೋಲಾಗಿದೆ. ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿತ್ತು. ಆದರೆ ಕಾಂಗ್ರೆಸ್ ನಿರೀಕ್ಷೆ ಎಲ್ಲವೂ ಹುಸಿಯಾಗಿದೆ. ಈ ನಡುವೆ ಬಿಹಾರದ ಸೋಲು ಕರ್ನಾಟಕದ ಮೇಲೆ ಏನು ಪರಿಣಾಮ ಬೀರಲಿದೆ ಎಂಬ ಚರ್ಚೆಗಳು ನಡೆಯುತ್ತಿದ್ದವು. ಬಿಹಾರದ ಸೋಲು ಸಿದ್ದರಾಮಯ್ಯ ಅವರಿಗೆ ರಾಜಕೀಯ ಬಲ ತಂದುಕೊಟ್ಟಿದೆ ಎಂಬ ಚರ್ಚೆಗಳು ನಡೆಯುತ್ತಿದೆ. ಈ ನಡುವೆ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳುತ್ತಿದ್ದಾರೆ. ದೆಹಲಿಯಲ್ಲಿ ಅವರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಬಹುಷಃ ಸಂಪುಟ ಪುನಾರಚನೆಗೂ ಒಪ್ಪಿಗೆ ಸಿಗುವ ಸಾಧ್ಯತೆ ಇದೆ.

ವಿಜಯ ಕರ್ನಾಟಕ 15 Nov 2025 5:54 pm

ಸಂಪುಟ ಪುನಾರಚನೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್? ಮಹತ್ವ ಪಡೆದುಕೊಂಡ ಸಿದ್ದರಾಮಯ್ಯ ದೆಹಲಿ ಪ್ರವಾಸ

ಸಿಎಂ ಸಿದ್ದರಾಮಯ್ಯ ಅವರು ದೆಹಲಿ ಪ್ರವಾಸ ಕೈಗೊಂಡ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಕುರಿತಾದ ಬೆಳವಣಿಗೆಗಳು ನಡೆಯುತ್ತಿವೆ. ಸಂಪುಟ ಪುನಾರಚನೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗುತ್ತಿದೆ. ಈ ಕುರಿತಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಜೊತೆಗೆ ಚರ್ಚೆ ನಡೆಸಲು ರಾಹುಲ್ ಸೂಚನೆ ನೀಡಿದ್ದಾರೆ ಎಂದು ತಿಳಿದಿಬಂದಿದೆ. ಈ ಹಿನ್ನೆಲೆಯಲ್ಲಿ ಸಂಪುಟಕ್ಕೆ ಸೇರ್ಪಡೆಗೆ ಪ್ರಯತ್ನ ನಡೆಸುತ್ತಿರುವ ಆಕಾಂಕ್ಷಿಗಳಲ್ಲಿ ನಿರೀಕ್ಷೆ ಹುಟ್ಟಿದೆ.

ವಿಜಯ ಕರ್ನಾಟಕ 15 Nov 2025 5:53 pm

Government Job: ಸರ್ಕಾರಿ ಹುದ್ದೆಗಳಲ್ಲಿ ಮೀಸಲಾತಿ ಕುರಿತು ಹೈಕೋರ್ಟ್‌ ಮಹತ್ವದ ಆದೇಶ

Government Job: ಹೈಕೋರ್ಟ್‌ ಮಹತ್ವದ ಆದೇಶಗಳನ್ನು ಹೊರಡಿಸುತ್ತಲಿರುತ್ತದೆ. ಹಾಗೆಯೇ ಇದೀಗ ಸರ್ಕಾರಿ ಉದ್ಯೋಗಗಳಲ್ಲಿ ತೃತೀಯ ಲಿಂಗಿಗಳಿಗೆ ಮೀಸಲಾತಿ ನೀಡುವ ಕುರಿತು ಆದೇಶವನ್ನು ಹೊರಡಿಸಿದೆ. ಹಾಗಾದ್ರೆ ಇದರಲ್ಲಿ ಏನಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಸರ್ಕಾರಿ ಉದ್ಯೋಗಗಳಲ್ಲಿ ತೃತೀಯ ಲಿಂಗಿಗಳಿಗೆ 6 ತಿಂಗಳೊಳಗೆ ಮೀಸಲಾತಿ ನೀಡುವಂತೆ ಸರ್ಕಾರಕ್ಕೆ ಆಂಧ್ರಪ್ರದೇಶ ಹೈಕೋರ್ಟ್‌ ಆದೇಶ ಹೊರಡಿಸಿದೆ. ಪ್ರಸ್ತುತ ಪ್ರಕರಣದಲ್ಲಿ,

ಒನ್ ಇ೦ಡಿಯ 15 Nov 2025 5:32 pm

ಮಂಗಳೂರಿನಲ್ಲಿ ಒಂದೇ ದಿನ ಎರಡು ಪ್ರತ್ಯೇಕ ಅಪಘಾತ - 6 ಮಂದಿ ಸಾವು

ಬೆಂಗಳೂರಿನಿಂದ ಉಡುಪಿಗೆ ಹೊರಟಿದ್ದ ಇನ್ನೋವಾ ಕಾರು ಬಿ.ಸಿ.ರೋಡ್ ಬಳಿ ಹೆದ್ದಾರಿ ಸರ್ಕಲ್ ಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ ಬೆಂಗಳೂರಿನ ಪೀಣ್ಯ ನಿವಾಸಿಗಳಾದ ರವಿ, ರಮ್ಯಾ ಹಾಗೂ ನಂಜಮ್ಮ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇತರರು ಗಾಯಗೊಂಡಿದ್ದಾರೆ. ಅಪಘಾತಕ್ಕೆ ಅವೈಜ್ಞಾನಿಕ ಸರ್ಕಲ್ ಕಾರಣ ಎಂದು ಹೇಳಲಾಗುತ್ತಿದೆ. ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯ ಕರ್ನಾಟಕ 15 Nov 2025 5:18 pm

ಬಿಹಾರದಲ್ಲಿ ಕಾಂಗ್ರೆಸ್ ಸೋಲು : ಮತ್ತೊಮ್ಮೆ ಕಾಂಗ್ರೆಸ್ ಕಿವಿಹಿಂಡಿದ ಇಂಡಿಯಾ ಮೈತ್ರಿಕೂಟದ ಒಮರ್ ಅಬ್ದುಲ್ಲಾ

Omar Abdullah surprise statement on Bihar result : ಬಿಹಾರದ ಚುನಾವಣಾ ಫಲಿತಾಂಶದ ಬಗ್ಗೆ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹೇಳಿಕೆಯನ್ನು ನೀಡಿದ್ದಾರೆ. ಗಮನಿಸಬೇಕಾದ ಅಂಶವೇನಂದರೆ, ಮಹಾಘಟಬಂಧನ್ ಮೈತ್ರಿಕೂಟದ ಸೋಲಿಗೆ ಎಲ್ಲೂ ಅವರು ವೋಟ್ ಚೋರಿ ವಿಚಾರವನ್ನು ಪ್ರಸ್ತಾವಿಸಲಿಲ್ಲ.

ವಿಜಯ ಕರ್ನಾಟಕ 15 Nov 2025 5:04 pm

ಹೊರ ಬಿದ್ದ ಐಪಿಎಲ್ 2026 ʼರಿಟೈನ್ʼ ಪಟ್ಟಿ: ತಂಡಗಳನ್ನು ಬಲಪಡಿಸಿಕೊಂಡ ದಿಲ್ಲಿ, ಚೆನ್ನೈ, ಮುಂಬೈ

ಅಚ್ಚರಿ ಮೂಡಿಸಿದ ಶಮಿ, ರಾಣಾ, ಮಾರ್ಕಂಡೆ ಹರಾಜು ಮೊತ್ತ

ವಾರ್ತಾ ಭಾರತಿ 15 Nov 2025 4:57 pm

ಬಿಜೆಪಿ ಮನೆಯೊಂದು ಐದು ಬಾಗಿಲು: ಬಿಹಾರದ ಚುನಾವಣಾ ಫಲಿತಾಂಶದಿಂದ ಕಲಿಯಬೇಕಾದ ಪಾಠ ಏನು?

ಆಡಳಿತ ಪಕ್ಷದ ಹುಳುಕುಗಳನ್ನು ಎತ್ತಿ ತೋರಿಸುವ ಜವಾಬ್ದಾರಿ ವಿಪಕ್ಷಗಳಿವೆ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ದ ರಚನಾತ್ಮಕ ಹೋರಾಟ ನಡೆಸುವಲ್ಲಿ ಬಿಜೆಪಿ ವಿಫಲವಾಗಿದೆ ಎಂಬ ಆರೋಪ ಇದೆ. ಕೆಲವೊಂದು ಹೋರಾಟಗಳನ್ನು ನಡೆಸಿದರೂ ದೊಡ್ಡ ಮಟ್ಟದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವಲ್ಲಿ ಬಿಜೆಪಿ ಸಫಲವಾಗಿಲ್ಲ. ಇನ್ನು ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಂಡರೂ ಒಗ್ಗಟ್ಟಿನ ಹೋರಾಟ ಕಾಣಿಸುತ್ತಿಲ್ಲ. ಹಾಗಾದರೆ ವಿಪಕ್ಷಗಳು ಎಲ್ಲಿ ಎಡವುತ್ತಿವೆ ವಿಪಕ್ಷಗಳ ಮುಂದಿನ ಕಾರ್ಯತಂತ್ರಗಳೇನು ? ಈ ನಡುವೆ ಬಿಹಾರದ ಚುನಾವಣಾ ಫಲಿತಾಂಶದಿಂದ ಬಿಜೆಪಿ ಏನು ಪಾಠ ಕಲಿಯಬೇಕಾಗಿದೆ ಎಂಬ ಬಗ್ಗೆಯೂ ಚರ್ಚೆ ಶುರುವಾಗಿದೆ.

ವಿಜಯ ಕರ್ನಾಟಕ 15 Nov 2025 4:47 pm

ಉತ್ತರ ಪ್ರದೇಶ: 'ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ' ಎಂದ ದಿಯೋಬಂದ್ ಇನ್ಸ್‌ಪೆಕ್ಟರ್‌ ಹುದ್ದೆಯಿಂದ ಔಟ್ ಹಾಗೂ ಶಿಸ್ತು ಕ್ರಮ

ಸಹರಾನ್ಪುರ : 'ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ'ಎಂಬ ಹೇಳಿಕೆಯ ವೀಡಿಯೊ ವೈರಲ್ ಬಳಿಕ ಸಹರಾನ್‌ಪುರದ ದಿಯೋಬಂದ್ ಪ್ರದೇಶದ ಪೊಲೀಸ್ ಇನ್ಸ್‌ ಪೆಕ್ಟರ್‌ ಅನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ ಎಂದು news18.com ವರದಿ ಮಾಡಿದೆ. ದಿಲ್ಲಿ ಸ್ಫೋಟದ ನಂತರ ವದಂತಿಗಳು ಹರಿದಾಡುತ್ತಿದ್ದ ಹಿನ್ನೆಲೆ ಇನ್ಸ್‌ ಪೆಕ್ಟರ್‌ ನರೇಂದ್ರ ಕುಮಾರ್ ಶರ್ಮಾ ಮಂಗಳವಾರ ದಿಯೋಬಂದ್ ಪೊಲೀಸ್ ಠಾಣೆಯಲ್ಲಿ ಸಭೆ ಕರೆದಿದ್ದರು. ಸಭೆಯಲ್ಲಿ ಮಾತನಾಡಿದ ಇನ್ಸ್‌ ಪೆಕ್ಟರ್‌ ನರೇಂದ್ರ ಕುಮಾರ್ ಶರ್ಮಾ, ಜನರು ಸಾಮರಸ್ಯವನ್ನು ಕಾಪಾಡಿಕೊಳ್ಳಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ತಪ್ಪುದಾರಿಗೆಳೆಯುವ ಸಂದೇಶಗಳನ್ನು ಜನರು ನಂಬಬಾರದು. ಭಯೋತ್ಪಾದನೆ ಮತ್ತು ಭಯೋತ್ಪಾದಕರಿಗೆ ಯಾವುದೇ ಧರ್ಮವಿಲ್ಲ. ಮುಸ್ಲಿಮರು ಮಾತ್ರ ಭಯೋತ್ಪಾದಕರು ಎಂದು ಭಾವಿಸುವುದು ತಪ್ಪು. ಎಲ್ಲಾ ಧರ್ಮಗಳಲ್ಲಿಯೂ ಅಂತಹವರು ಕಂಡು ಬರುತ್ತಾರೆ ಎಂದು ಹೇಳಿದರು. ಅವರ ಹೇಳಿಕೆಯ ವೀಡಿಯೊವನ್ನು ರೆಕಾರ್ಡ್ ಮಾಡಿ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದರು. UP Inspector Narendra Kumar Sharma, posted in Saharanpur, said: “Terrorism has no religion. Naxalites were Hindus, and even some Hindu extremists have been arrested from the Navy and Army. Linking terrorism to Muslims is incorrect — a terrorist belongs to no faith.” pic.twitter.com/HK10I3zJV7 — Брат (@1vinci6le) November 13, 2025 ಈ ಕುರ್ಚಿ ನನ್ನ ತಾಯಿಯಂತೆ, ತಪ್ಪು ಮಾಡುವವರಿಗೆ ಯಾವುದೇ ಧರ್ಮವಿಲ್ಲ. ನಕ್ಸಲರು ಹಿಂದೂ ಸಮುದಾಯದಲ್ಲೂ ಇದ್ದಾರೆ. ನೌಕಾಪಡೆಯಲ್ಲಿ ಅನೇಕ ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ. ಸೈನ್ಯದಲ್ಲೂ ಹಲವರನ್ನು ಬಂಧಿಸಲಾಗಿದೆ. ಹಲವು ಹಿಂದೂ ಭಯೋತ್ಪಾದಕರನ್ನು ಪಂಜಾಬ್‌ನಲ್ಲಿ ಬಂಧಿಸಲಾಗಿದೆ. ಕೇವಲ ಮುಸ್ಲಿಮರು ಮಾತ್ರ ಭಯೋತ್ಪಾದಕರು ಎಂದು ಹೇಳುವುದು ತಪ್ಪು. ಯಾವುದೇ ಧರ್ಮಗ್ರಂಥವು ಇತರರಿಗೆ ಹಾನಿ ಮಾಡುವುದನ್ನು ಪ್ರೋತ್ಸಾಹಿಸುವುದಿಲ್ಲ. 34 ವರ್ಷಗಳ ಕಾಲ ತಾರತಮ್ಯವಿಲ್ಲದೆ ಕೆಲಸ ಮಾಡಿದ್ದೇನೆ” ಎಂದು ನರೇಂದ್ರ ಕುಮಾರ್ ಹೇಳಿದ್ದರು. ನನ್ನ 34 ವರ್ಷಗಳ ಸೇವೆಯಲ್ಲಿ, ಒಬ್ಬ ಮುಸ್ಲಿಂ ಕೂಡ ನಾನು ಧರ್ಮದ ಆಧಾರದ ಮೇಲೆ ಪಕ್ಷಪಾತದಿಂದ ನಡೆದುಕೊಂಡಿದ್ದೇನೆ ಎಂದು ಹೇಳಿದರೆ ನಾನು ರಾಜೀನಾಮೆ ನೀಡಿ ನನ್ನ ಕೆಲಸದಿಂದ ಹೊರನಡೆಯುತ್ತೇನೆ. ಹಣಕ್ಕಾಗಿ ಅಲ್ಲ, ಬದಲಾಗಿ ವಿದ್ಯಾರ್ಥಿಯಾಗಿದ್ದಾಗ ಕಂಡ ವ್ಯವಸ್ಥೆಯನ್ನು ಸುಧಾರಿಸಲು ಬಯಸಿದ್ದರಿಂದ ಪೊಲೀಸ್ ಇಲಾಖೆಗೆ ಸೇರಿದೆ. ಠಾಣೆಯೊಳಗೆ ಬಡವರು ಮತ್ತು ಮಧ್ಯವರ್ತಿಗಳ ಶೋಷಣೆ ನಡೆಯುತ್ತಿರುವುದನ್ನು ನೆನಪಿಸಿಕೊಂಡ ಅವರು, ಇದು ಇಲಾಖೆಯಲ್ಲಿ ಸೇವೆ ಮಾಡುವಂತೆ ನನ್ನನ್ನು ಪ್ರೇರೇಪಿಸಿತು ಎಂದು ಹೇಳಿದರು

ವಾರ್ತಾ ಭಾರತಿ 15 Nov 2025 4:41 pm

IPL 2026: 'ಕ್ರಿಕೆಟ್‌ ದೇವರ' ಮಗ ಸೇರಿ 10 ಸ್ಟಾರ್ ಆಟಗಾರರು ರಿಟೈನ್‌ಗೂ ಮುನ್ನ ಟ್ರೇಡ್‌.. ತಂಡ ಹಾಗೂ ಮೊತ್ತವೆಷ್ಟು?

IPL 2026 Trade: ಈಗಾಗಲೇ 2025ರ ಐಪಿಎಲ್‌ ಆವೃತ್ತಿ ಮುಕ್ತಾಯವಾಗಿದ್ದು, ಇದೀಗ ಎಲ್ಲರ ಚಿತ್ತ 19ನೇ ಆವೃತ್ತಿಯತ್ತ ನೆಟ್ಟಿದೆ. ಮುಂದಿನ ಸೀಸನ್‌ ರಿಟೈನ್‌ ಇಂದು (ನವೆಂಬರ್ 15) ನಡೆಯಲಿದೆ. ಇದಕ್ಕೂ ಮುನ್ನ ಕ್ರಿಕೆಟ್‌ ದೇವರ ಪುತ್ರ ಸೇರಿದಂತೆ 10 ಸ್ಟಾರ್ ಆಟಗಾರರು ಟ್ರೇಡ್‌ ಆಗಿದ್ದಾರೆ. ಹಾಗಾದ್ರೆ ಅವರು ಯಾರು? ಯಾವ ಟೀಂ ಹಾಗೂ ಎಷ್ಟು ಮೊತ್ತಕ್ಕೆ ಎನ್ನುವ

ಒನ್ ಇ೦ಡಿಯ 15 Nov 2025 4:41 pm

ತಂದೆ ಆಶೀರ್ವಾದ ಪಡೆದು ಮನೆಬಿಟ್ಟ ಪುತ್ರಿ ರೋಹಿಣಿ ಆಚಾರ್ಯ; ಲಾಲೂ ಕುಟುಂಬದಲ್ಲಿ ಬಿರುಗಾಳಿ ಎಬ್ಬಿಸಿದ ಬಿಹಾರ ಸೋಲು!

ಈ ಬಾರಿಯ ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ, ಮಹಾಘಟಬಂಧನ್‌ ಮೈತ್ರಿಕೂಟದ ಹಿರಿಯ ಪಾಲುದಾರ ಪಕ್ಷ ಆರ್‌ಜೆಡಿಗೆ ರಾಜಕೀಯ ಮರ್ಮಾಘಾತ ನೀಡಿದೆ. ತೇಜಸ್ವಿ ಯಾದವ್‌ ನೇತೃತ್ವದಲ್ಲಿ ನಡೆಸಿದ ಚುನಾವಣಾ ಹೋರಾಟದಲ್ಲಿ, ಆರ್‌ಜೆಡಿ ಕೇವಲ 25 ಸ್ಥಾನಗಳಲ್ಲಿ ಜಯಗಳಿಸಿದೆ. ಈ ಸೋಲಿನ ಹಿನ್ನೆಲೆಯಲ್ಲಿ ಬಿಹಾರ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್‌ ಯಾದವ್‌ ಅವರ ಪುತ್ರಿ ರೋಹಿಣಿ ಆಚಾರ್ಯ ಅವರು ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದಾರೆ. ಅಲ್ಲದೇ ತಮ್ಮ ಕುಟುಂಬದೊಂದಿಗೂ ಸಂಬಂಧ ಕಡಿದುಕೊಂಡಿದ್ದಾರೆ. ಇಲ್ಲಿದೆ ಮಾಹಿತಿ.

ವಿಜಯ ಕರ್ನಾಟಕ 15 Nov 2025 4:38 pm

School Holiday: ನವೆಂಬರ್ 17 ಸೋಮವಾರ ಶಾಲಾ &ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...

ಶಾಲಾ &ಕಾಲೇಜುಗಳಿಗೆ ರಜೆ ಘೋಷಣೆ... ಇಂತಹ ಸುದ್ದಿ ಮತ್ತೆ ಮತ್ತೆ ಹಬ್ಬುತ್ತಿದ್ದು, ಶಾಲಾ &ಕಾಲೇಜುಗಳಿಗೆ ರಜೆ ಘೋಷಣೆ ಆಗಾಗ ಆಗುತ್ತಲೇ ಇದೆ. ಈ ವರ್ಷ ಬೇಡ ಬೇಡ ಅನ್ನುವಷ್ಟು ರಜೆಗಳು ಸಿಕ್ಕೇ ಬಿಟ್ಟಿವೆ. ದಸರಾ &ದೀಪಾವಳಿ ಹಬ್ಬಕ್ಕೆ ತಿಂಗಳು ಲೆಕ್ಕದಲ್ಲಿ ರಜೆ ಸಿಕ್ಕಿದ್ದು, ಹೀಗೆ ಸಾಲು ಸಾಲು ರಜೆಗಳನ್ನು ಮುಗಿಸಿಕೊಂಡು ಶಾಲಾ &

ಒನ್ ಇ೦ಡಿಯ 15 Nov 2025 4:31 pm