ಏಷ್ಯಾ ಕಪ್ ನಲ್ಲಿ ನಿಯಮ ಬಾಹಿರ ವರ್ತನೆ - ಪಾಕ್ ವೇಗಿ ಹ್ಯಾರಿಸ್ ಗೆ ಎರಡು ಪಂದ್ಯಗಳ ನಿಷೇಧ, ಸೂರ್ಯಕುಮಾರ್ ಗೆ ದಂಡ
ಏಷ್ಯಾ ಕಪ್ನಲ್ಲಿ ಭಾರತ ಮತ್ತು ಪಾಕಿಸ್ತಾನದ ಆಟಗಾರರ ವರ್ತನೆಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ (ಐಸಿಸಿ) ಕ್ರಮ ಕೈಗೊಂಡಿದೆ. ಹಾರಿಸ್ ರೌಫ್ಗೆ ದಂಡ ಮತ್ತು ನಿಷೇಧ ವಿಧಿಸಲಾಗಿದೆ. ಸೂರ್ಯಕುಮಾರ್ ಯಾದವ್ಗೂ ದಂಡ ಮತ್ತು ಡಿಮೆರಿಟ್ ಅಂಕ ನೀಡಲಾಗಿದೆ. ಸಾಹಿಬ್ಜಾದಾ ಫರ್ಹಾನ್ಗೆ ಎಚ್ಚರಿಕೆ ನೀಡಲಾಗಿದೆ. ಬುಮ್ರಾ ಒಂದು ಡಿಮೆರಿಟ್ ಅಂಕ ಒಪ್ಪಿಕೊಂಡಿದ್ದಾರೆ. ಇತರೆ ಪಂದ್ಯಗಳಲ್ಲಿ ಅನುಚಿತ ವರ್ತನೆ ತೋರಿದ್ದಕ್ಕಾಗಿ ತನಿಖೆಗೊಳಪಟ್ಟಿದ್ದ ಬುಮ್ರಾಗೆ ಒಂದು ಡಿಮೆರಿಟ್ ಅಂಕ.
'ಬಿಗ್ ಬಾಸ್' ಮನೆಯ ಅತಿ ಚಿಕ್ಕ ಸ್ಪರ್ಧಿ ಎನಿಸಿಕೊಂಡಿರುವ ರಕ್ಷಿತಾ ಶೆಟ್ಟಿ ಹಲವು ವಿಚಾರಗಳಿಗೆ ಸದ್ದು ಮಾಡಿದ್ದಾರೆ. ತನ್ನ ಮುಗ್ಧತೆಯಿಂದ ವೀಕ್ಷಕರನ್ನು ಸೆಳೆದಿದ್ದಾರೆ ರಕ್ಷಿತಾ. ಆದರೆ ಈ ಮಧ್ಯೆ ಧ್ರುವಂತ್ ಅವರು ರಕ್ಷಿತಾ ಬಗ್ಗೆ ಒಂದಷ್ಟು ವಿಚಾರಗಳನ್ನು ಹೊರಹಾಕಿದ್ದಾರೆ.
ನ.11ಕ್ಕೆ ಆರೆಸ್ಸೆಸ್ ವಿರುದ್ಧ ‘ದಸಂಸ ಪ್ರತಿರೋಧ ಸಮಾವೇಶ’
ಬೆಂಗಳೂರು : ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದ ವತಿಯಿಂದ ನ.11ರ ಬೆಳಗ್ಗೆ 11ಗಂಟೆಗೆ ನಗರದ ಗಾಂಧಿ ಭವನದಲ್ಲಿ ಆರೆಸ್ಸೆಸ್ ವಿರುದ್ಧ ‘ದಸಂಸ ಪ್ರತಿರೋಧ ಸಮಾವೇಶ’ವನ್ನು ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕಟನೆ ಹೊರಡಿಸಿದ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ, ಶತಮಾನೋತ್ಸವದ ಉನ್ಮಾದದ ಅಮಲಿನಲ್ಲಿ ತೇಲುತ್ತಿರುವ ಸನಾತನಿಗಳು ಸಂವಿಧಾನ-ಪ್ರಜಾಪ್ರಭುತ್ವ ಹಾಗೂ ಅಂಬೇಡ್ಕರ್ ರವರ ವ್ಯಕ್ತಿ-ವ್ಯಕ್ತಿತ್ವದ ಮೇಲೆ ಒಮ್ಮೆಲೆ ತೀವ್ರ ದಾಳಿಗೆ ಮುಂದಾಗಿದ್ದಾರೆ. ಮುಸ್ಲಿಮರು, ದಲಿತರು, ಕ್ರೈಸ್ತರು ನಂತರದಲ್ಲಿ ಹಿಂದುಳಿದ ಶೂದ್ರ ಸಮುದಾಯಗಳು ಇವರ ಮುಂದಿನ ಗುರಿಯಾಗಿವೆ. ಒಟ್ಟಾರೆ, ಆರೆಸ್ಸೆಸ್-ಬಿಜೆಪಿಗಳಿಗೆ ಮತ್ತೆ ‘ಮನುಸ್ಮೃತಿ’ ಜಾರಿಗೆ ಬರಬೇಕಿದೆ. ಚಾತುರ್ವರ್ಣ ಪದ್ಧತಿಯಂತೆ ಎಸ್ಸಿ, ಎಸ್ಟಿ, ಒಬಿಸಿ ಸಮುದಾಯಗಳು ಇವರ ಜೀತದಾಳುಗಳಾಗಬೇಕಿದೆ. ಈ ಕಾರಣಕ್ಕಾಗಿಯೇ, ಆರೆಸ್ಸೆಸ್ ಹೇಳಿದಂತೆ ಕೇಳುವ ರಾಜಕಾರಣಿಗಳು ಇವರಿಗೆ ಬೇಕು. ಭಾರತದ ಸಂವಿಧಾನದ ಮೇಲೆ ಯುದ್ಧ ಸಾರಿರುವ ಆರೆಸ್ಸೆಸ್, ಬಿಜೆಪಿಯವರ ಆಟ ಅತಿಯಾಗಿದೆ. ಇಂತಹ ದೇಶದ್ರೋಹಿಗಳ ಕುತಂತ್ರಗಳನ್ನು ಬಯಲುಗೊಳಿಸಿ ತಕ್ಕ ಪಾಠ ಕಲಿಸದೇ ಇದ್ದರೆ ಭಾಗ್ಯವಿಧಾತ ಭಾರತವನ್ನು ಬಲಿ ಭಾರತವನ್ನಾಗಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಬಿಹಾರದ ಬದಲಾವಣೆಗಾಗಿ ತೇಜಸ್ವಿ ಯಾದವ್ ಸಿಎಂ ಆಗಬೇಕು : ಡಿ.ಕೆ.ಶಿವಕುಮಾರ್
ಬೆಂಗಳೂರು : ಬಿಹಾರ ರಾಜ್ಯದಲ್ಲಿ ಬದಲಾವಣೆ ತರಲು ಮಹಾಘಟಬಂಧನ್ಗೆ ಮತ ಹಾಕಿ, ತೇಜಸ್ವಿ ಯಾದವ್ ಮುಖ್ಯಮಂತ್ರಿಯಾಗಬೇಕು ಎಂದು ಮತದಾರರಿಗೆ ಮನವಿ ಮಾಡಿದ್ದೇನೆ ಎಂದು ಉಪಮಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಮಂಗಳವಾರ ಇಲ್ಲಿನ ಖಾಸಗಿ ಹೊಟೇಲ್ನಲ್ಲಿ ಬೆಂಗಳೂರು ಕೌಶಲ್ಯ ಶೃಂಗಸಭೆ ಉದ್ಘಾಟನಾ ಸಮಾರಂಭದ ಬಳಿಕ ಮಾತನಾಡಿದ ಶಿವಕುಮಾರ್, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮೊದಲ ಹಕ್ಕು. ನಮ್ಮ ಮತ ನಮ್ಮ ಹಕ್ಕು. ಹೀಗಾಗಿ ನಮ್ಮ ದೇಶದಲ್ಲಿ ನಮ್ಮ ಜನ ಮತದಾನ ಮಾಡಿ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗಿಯಾಗಬೇಕು. ಕೆಪಿಸಿಸಿ ಅಧ್ಯಕ್ಷನಾಗಿ ಎಲ್ಲ ಸಂಸ್ಥೆಗಳು ಬಿಹಾರದ ಮತದಾರರಿಗೆ ವೇತನ ಸಹಿತ ರಜೆ ನೀಡಬೇಕು ಎಂದು ಮನವಿ ಮಾಡಿದ್ದೇನೆ ಎಂದರು. ಜನ ಬದಲಾವಣೆ ಬಯಸಿದ್ದಾರೆ: ಬಿಹಾರದ ಜನತೆ ಬದಲಾವಣೆ ಬಯಸಿದ್ದಾರೆ. ಹೀಗಾಗಿ ನಾವು ಆತ್ಮವಿಶ್ವಾಸದಲ್ಲಿದ್ದೇವೆ. ಇದೇ ದೇಶದ ಒತ್ತಾಸೆಯಾಗಿದೆ. ಬಿಹಾರ ಮತದಾರರಿಗಾಗಿ ವಿಶೇಷ ರೈಲು ವ್ಯವಸ್ಥೆ ವಿಚಾರವಾಗಿ ಪ್ರತಿಕ್ರಿಯೆ ನೀಡುವುದಿಲ್ಲ. ಇಲ್ಲಿನ ಬಿಹಾರ ರಾಜ್ಯದ ಕಾರ್ಮಿಕರಿಗೆ ವೇತನ ಸಹಿತ ರಜೆ ಸಿಕ್ಕರೆ ಸಾಕು. ಅವರು ಹೋಗಿ ಮತದಾನ ಮಾಡಿ ಬರುತ್ತಾರೆ ಎಂದರು. ನಾನು ಕೇಂದ್ರ ಸರಕಾರದ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಎಲ್ಲರಿಗೂ ಸಹಾಯ ಮಾಡುವುದು ಕೇಂದ್ರ ಸರಕಾರದ ಜವಾಬ್ದಾರಿ. ಬಿಹಾರದ ಜನ ಇಲ್ಲಿಗೆ ಬಂದು ಕಟ್ಟಡ ನಿರ್ಮಾಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಆ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ಭಾಗಿಯಾಗಿದ್ದಾರೆ. ಅವರು ಶ್ರಮಪಟ್ಟು ಕೆಲಸ ಮಾಡುತ್ತಿದ್ದು, ಅವರ ಬಗ್ಗೆ ಹೆಮ್ಮೆ ಇದೆ ಎಂದರು. ಬಿಹಾರ ರಾಜ್ಯದವರು ತಮ್ಮದೇ ಸಂಘ ಸ್ಥಾಪಿಸಲು ಅವಕಾಶ ನೀಡುವುದಾಗಿ ಭರವಸೆ ನೀಡಿದ್ದೇನೆ. ಕೆಲವು ಅಸ್ಸಾಂ ಸೇರಿದಂತೆ ಕೆಲವು ರಾಜ್ಯಗಳ ಜನರು ಸಂಘ ಸ್ಥಾಪಿಸಲು ಅರ್ಜಿ ನೀಡಲಾಗುವುದು. ಅವರು ಆಗಾಗ್ಗೆ ಭೇಟಿಯಾಗಿ ತಮ್ಮ ಅಭಿಪ್ರಾಯ ಹಂಚಿಕೊಳ್ಳಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಶಿವಕುಮಾರ್ ತಿಳಿಸಿದರು.
ಅಶ್ಲೀಲ ವೆಬ್ಸೈಟ್ ನಿಷೇಧಕ್ಕೆ ಮನವಿ; ಸುಪ್ರೀಂನಲ್ಲಿ ಅರ್ಜಿ ಬಾಕಿ ಹಿನ್ನೆಲೆ ಪಿಐಎಲ್ ವಿಲೇವಾರಿ ಮಾಡಿದ ಹೈಕೋರ್ಟ್
ಬೆಂಗಳೂರು: ನಗ್ನತೆ ಹಾಗೂ ಅಶ್ಲೀಲ ಚಿತ್ರಗಳನ್ನು ಪ್ರದರ್ಶಿಸುವ (Pornography) ಕೆಲ ಅಪ್ಲಿಕೇಷನ್ಗಳು (ಆ್ಯಪ್) ಹಾಗೂ ವೆಬ್ಸೈಟ್ಗಳನ್ನು ನಿಷೇಧಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಲು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ. 'ಲೀಗಲ್ ಅಟಾರ್ನೀಸ್ ಮತ್ತು ಬ್ಯಾರಿಸ್ಟರ್ಸ್ ಲಾ ಫರ್ಮ್' ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ಕೆಲ ಕಾಲ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ, ಇದೇ ವಿಚಾರಕ್ಕೆ ಸಂಬಂಧಿಸಿದ ವಿಚಾರಣೆ ಸುಪ್ರೀಂಕೋರ್ಟ್ನಲ್ಲಿ ಬಾಕಿ ಇರುವ ಹಿನ್ನೆಲೆಯಲ್ಲಿ ಈ ವಿಚಾರದಲ್ಲಿ ಹೈಕೋರ್ಟ್ ಯಾವುದೇ ಆದೇಶಗಳನ್ನು ಹೊರಡಿಸಲಾಗದು. ಆದ್ದರಿಂದ, ಅರ್ಜಿ ವಿಲೇವಾರಿ ಮಾಡುತ್ತಿರುವುದಾಗಿ ಆದೇಶಿಸಿತು. ಇದಕ್ಕೂ ಮುನ್ನ ಕೇಂದ್ರ ಸರ್ಕಾರದ ಪರ ಹಾಜರಾದ ಡೆಪ್ಯೂಟಿ ಸಾಲಿಸಿಟರ್ ಜನರಲ್ ಎಚ್. ಶಾಂತಿಭೂಷಣ್, ಇದೇ ವಿಚಾರ ಕುರಿತ ಹಲವು ಅರ್ಜಿಗಳು ಸುಪ್ರೀಂಕೋರ್ಟ್ನಲ್ಲಿ ವಿಚಾರಣೆಗೆ ಬಾಕಿ ಇವೆ. ಒಂದು ಅರ್ಜಿಯಲ್ಲಿ 18 ವರ್ಷದೊಳಗಿನವರಿಗೆ ಪೋರ್ನೋಗ್ರಫಿ ನಿಷೇಧಿಸಬೇಕೆಂಬ ಮನವಿಯೂ ಇದೆ ಎಂದರು. ಇದನ್ನು ಪರಿಗಣಿಸಿದ ನ್ಯಾಯಾಲಯ, ಸುಪ್ರೀಂಕೋರ್ಟ್ನಲ್ಲಿ ಪ್ರಕರಣ ಬಾಕಿ ಇರುವ ಕಾರಣ, ಇಲ್ಲಿ ಯಾವುದೇ ಆದೇಶ ನೀಡಲಾಗದು ಎಂದು ತಿಳಿಸಿ, ಪಿಐಎಲ್ ವಿಲೇವಾರಿ ಮಾಡಿತು. ಅರ್ಜಿದಾರರ ಮನವಿ ಏನು? ಅಶ್ಲೀಲ ಹಾಗೂ ನಗ್ನ ಚಿತ್ರಗಳನ್ನು ಪ್ರದರ್ಶಿಸುವ ಕೆಲ ಆ್ಯಪ್ ಮತ್ತು ವೆಬ್ಸೈಟ್ಗಳನ್ನು ನಿಷೇಧಿಸಬೇಕು. ಅಂತಹ ವೆಬ್ಸೈಟ್ ಮತ್ತು ಆ್ಯಪ್ಗಳು ನಿಯಮಗಳನ್ನು ಉಲ್ಲಂಘಿಸುತ್ತಿರುವುದರಿಂದ ಅವುಗಳ ವಿರುದ್ಧ ದಂಡನಾ ಕ್ರಮ ಜರುಗಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಅರ್ಜಿದಾರರು ಕೋರಿದ್ದರು. ಸುಪ್ರೀಂನಲ್ಲಿ ವಿಚಾರಣೆ ಬಾಕಿ: ಅಶ್ಲೀಲ ವೆಬ್ಸೈಟ್ಗಳ ನಿಷೇಧಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಸೋಮವಾರ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ವಿಚಾರ ಅತ್ಯಂತ ಗಂಭೀರವಾಗಿದೆ. ಜತೆಗೆ, ಇದು ಸರ್ಕಾರದ ನೀತಿ ಆಯಾಮದ ವ್ಯಾಪ್ತಿಗೆ ಒಳಪಡಲಿದ್ದು, ಸುದೀರ್ಘ ವಿಚಾರಣೆ ಅಗತ್ಯವಿದೆ ಎಂದು ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿ, ಅರ್ಜಿಗಳ ವಿಚಾರಣೆ ಮುಂದೂಡಿತ್ತು
ಸಂಡೂರಿನಲ್ಲಿ ನೂತನ ಕೌಶಲ್ಯ ವಿವಿ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
‘ಬೆಂಗಳೂರು ಕೌಶಲ್ಯ ಶೃಂಗಸಭೆ’
ಕಾರ್ಖಾನೆಗಳು ಹೆಚ್ಚಿನ ಲಾಭ ಗಳಿಸಿದ್ದರೆ ರೈತರಿಗೆ ಹೆಚ್ಚು ದರ ನೀಡಲು ಸರಕಾರ ಬದ್ಧ : ಶಿವಾನಂದ ಪಾಟೀಲ್
ವಿಜಯಪುರ : ಸಕ್ಕರೆ ಕಾರ್ಖಾನೆಗಳು ನಡೆಸುವ ಸಮಗ್ರ ಲಾಭಾಂಶದ ವಿವರ ಹೊಂದಿದ ಬ್ಯಾಲೆನ್ಸ್ ಶೀಟ್ ಸರಕಾರದ ಕೈ ಸೇರಬೇಕು. ಆ ವೇಳೆ ಕಾರ್ಖಾನೆಗಳು ಉಪ ಉತ್ಪನ್ನಗಳಿಂದ ಲಾಭವನ್ನು ಹೆಚ್ಚಿನ ಪ್ರಮಾಣದಲ್ಲಿ ಗಳಿಸಿದರೆ ಅದರ ಅಂಶವನ್ನು ರೈತರಿಗೆ ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನಿಸುವೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪ ಉತ್ಪನ್ನಗಳಲ್ಲಿ ಕಾರ್ಖಾನೆಗಳು ಹೆಚ್ಚಿನ ಲಾಭ ಗಳಿಸಿದ್ದರೆ ರೈತರಿಗೆ ಇನ್ನಷ್ಟು ಹೆಚ್ಚು ದರವನ್ನು ದೊರಕಿಸುವ ನಿಟ್ಟಿನಲ್ಲಿ ಸರಕಾರ ಬದ್ಧವಾಗಿದೆ. ಬೆಲೆ ನಿರ್ಧಾರ ಎನ್ನುವುದು ನಾಲ್ಕು ಗೋಡೆಗಳ ಮಧ್ಯೆ ನಡೆಯುವ ಪ್ರಕ್ರಿಯೆ, ರಸ್ತೆಯಲ್ಲಿ ಇದರ ಬಗ್ಗೆ ಚರ್ಚೆ ಬೇಡ, ಸರಕಾರ ಕಬ್ಬು ಬೆಳೆಗಾರರ ಪರವಾಗಿಯೇ ಇದೆ ಎಂದರು. ಈ ಹಿಂದೆ 700 ರೂ. ಪ್ರತಿ ಟನ್ ಬೆಲೆ ಇತ್ತು, ಕಾರ್ಖಾನೆಗಳು ಹೆಚ್ಚಾದ ಪರಿಣಾಮ ಕಬ್ಬಿನ ಬೆಲೆಯೂ ಉತ್ತಮವಾಗಿದೆ, ಬೆಂಬಲ ಬೆಲೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ, ಈ ಹಿಂದೆ ಈ ಪ್ರಯತ್ನ ನಡೆದಾಗ ಯಶಸ್ವಿಯಾಗಲಿಲ್ಲ, ಆದರೆ ಕೇಂದ್ರ ಸರಕಾರ ನಿಗದಿಗೊಳಿಸಿದ ದರವನ್ನು ಶೇ.100ಕ್ಕೆ 100ರಷ್ಟು ಕೊಟ್ಟೇ ಕೊಡಿಸುವೆ. ಕಬ್ಬಿನ ದರ ನಿಗದಿ ಮಾಡುವುದು ಕೇಂದ್ರ ಸರಕಾರದ ನಿರ್ಣಯ, ಬೆಲೆ ನೀಡುವಲ್ಲಿ ಸಕ್ಕರೆ ಕಾರ್ಖಾನೆ ಹಾಗೂ ರೈತರ ಇಬ್ಬರ ಸಮನ್ವಯ ಅಗತ್ಯ ಎಂದು ಹೇಳಿದರು. ನಿರಾಣಿ ಪತ್ರ ಉಲ್ಲೇಖಿಸಿದ ಸಚಿವ ಸಕ್ಕರೆ ಕಾರ್ಖಾನೆಗಳಿಗೂ ಅನೇಕ ತೊಂದರೆಗಳಿವೆ. ಸಾಲ ಮುಂತಾದವುಗಳನ್ನು ಮಾಡಿಯೇ ಅವರು ಕಾರ್ಖಾನೆ ಸ್ಥಾಪಿಸಿದ್ದಾರೆ. ಅವರು ಎದುರಿಸುತ್ತಿರುವ ತೊಂದರೆಗಳು ಹಾಗೂ ಕೇಂದ್ರ ಸರಕಾರದ ನೀತಿ ನಿಯಮಾವಳಿಗಳು ಯಾವ ರೀತಿ ಪರಿಷ್ಕರಣೆಯಾಗಬೇಕು ಎಂಬುದರ ಕುರಿತು ಮಾಜಿ ಸಚಿವ ಮುರುಗೇಶ ನಿರಾಣಿ ಅವರೇ ಕೇಂದ್ರ ಸರಕಾರಕ್ಕೆ ಸುದೀರ್ಘ ಪತ್ರ ಬರೆದಿದ್ದಾರೆ. ಸಕ್ಕರೆ ರಫ್ತು ನಿಂತು ಹೋಗಿದೆ, ಇಥೆನಾಲ್ ಉತ್ಪಾದನೆ ಕಡಿತಗೊಳಿಸಿರುವುದು ಸೇರಿದಂತೆ ಅನೇಕ ಅಂಶಗಳನ್ನು ನಿರಾಣಿ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಸರಕಾರ ಸಕ್ಕರೆ ಕಾರ್ಖಾನೆಗಳ ಲಾಭಾಂಶದ ಬಗ್ಗೆ ಯೋಚಿಸದೇ ರೈತರ ಬಗ್ಗೆಯೇ ಯೋಚಿಸುತ್ತಿದೆ ಎಂದರು.
ಮೈಸೂರು | ಅಂಕಪಟ್ಟಿಗಾಗಿ ರಸ್ತೆಯಲ್ಲಿ ಮಲಗಿ ವಿದ್ಯಾರ್ಥಿನಿ ಧರಣಿ
ಮೈಸೂರು : ಅಂಕಪಟ್ಟಿ ನೀಡುವಂತೆ ಒತ್ತಾಯಿಸಿದ ವಿದ್ಯಾರ್ಥಿನಿಯೊಬ್ಬರು ಮೈಸೂರು ವಿವಿ (ಕಾಫ್ರರ್ಟ್ ಭವನದ) ಆಡಳಿತ ಸೌಧದ ಎದುರಿನ ರಸ್ತೆಯಲ್ಲಿ ಮಲಗಿ ಧರಣಿ ನಡೆಸಿದ್ದಾರೆ. ಮಂಗಳವಾರ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ವಿದ್ಯಾರ್ಥಿ ಪ್ರಭಾ ಡಿ.ಸಿ. ಎಂಬವರು ಧರಣಿ ನಡೆಸಿದರು. ಬಿ.ಇಡಿ ಪ್ರವೇಶಕ್ಕೆ ಎಸೆಸ್ಸೆಲ್ಸಿ ಮತ್ತು ಪದವಿ ಅಂಕಪಟ್ಟಿಗಳನ್ನು ನೀಡುವಂತೆ ಕುಲಸಚಿವರಿಗೆ ಪತ್ರ ಬರೆದಿದ್ದಾರೆ. ಆರ್ಥಿಕ ಸಮಸ್ಯೆ ಇರುವುದರಿಂದ ನಕಲಿ ಅಂಕ ಪಟ್ಟಿ ಪಡೆಯಲು ಸಾಧ್ಯವಾಗುತ್ತಿಲ್ಲ. ಪ್ರವೇಶಾತಿ ಪಡೆದ ಬಳಿಕ ಮತ್ತೆ ಅಂಕ ಪಟ್ಟಿಗಳನ್ನು ಮರಳಿ ನೀಡುವುದಾಗಿ ಅವರು ಕೋರಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ವಿದ್ಯಾರ್ಥಿನಿಯು ಅಂಕ ಪಟ್ಟಿ ಕೊಡಬೇಕಾದರೆ ಲಂಚ ಕೊಡುವಂತೆ ಕೇಳುತ್ತಿರುವುದಾಗಿ ಅಪಾದಿಸಿದ್ದಾರೆ. ರಸ್ತೆಯಲ್ಲಿ ಮಲಗಿ ಧರಣಿ ನಡೆಸಿದ್ದರಿಂದ ಸಂಚಾರಕ್ಕೆ ಅಡಚಣೆಯಾಗಿತ್ತು.
ಕಾಸರಗೋಡು| ತೆಂಗಿನ ಮರಕ್ಕೆ ಹತ್ತಿ, ಯಂತ್ರ ದೋಷದಿಂದ ಮರದಲ್ಲಿ ಸಿಲುಕಿದ ವ್ಯಕ್ತಿ
ಅಗ್ನಿಶಾಮಕ ದಳ ಸಿಬ್ಬಂದಿಯಿಂದ ರಕ್ಷಣೆ
ತನಿಖೆಯಲ್ಲಿ ಲೋಪವಾಗದಂತೆ ಕರ್ತವ್ಯ ನಿರ್ವಹಿಸಿ : ಪೊಲೀಸರಿಗೆ ಡಿಜಿ-ಐಜಿಪಿ ಡಾ.ಸಲೀಂ ಸೂಚನೆ
ಶಿವಮೊಗ್ಗ : ‘ನೊಂದವರಿಗೆ ನೆರವು ಹಾಗೂ ಅಪರಾಧಿಗೆ ಶಿಕ್ಷೆ’ ಎಂಬ ತತ್ವದ ಆಧಾರದ ಮೇಲೆ ಕಾರ್ಯ ನಿರ್ವಹಿಸಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ (ಡಿಜಿ-ಐಜಿಪಿ) ಡಾ. ಎಂ.ಎ. ಸಲೀಂ ಸೂಚನೆ ನೀಡಿದ್ದಾರೆ. ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ವಿಮರ್ಶನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗುಣಮಟ್ಟದ ತನಿಖೆ ಕೈಗೊಂಡು ಆರೋಪಿಗಳಿಗೆ ಶಿಕ್ಷೆಯಾಗುವಂತೆ ಮಾಡುವಲ್ಲಿ ಪೊಲೀಸರ ಪಾತ್ರ ಬಹಳ ಮುಖ್ಯ. ಆದ್ದರಿಂದ ತನಿಖೆಯಲ್ಲಿ ಲೋಪವಾಗದಂತೆ ಕರ್ತವ್ಯ ನಿರ್ವಹಿಸಬೇಕೆಂದು ನಿರ್ದೇಶನ ನೀಡಿದರು. ಕರ್ತವ್ಯದ ಬಗ್ಗೆ ಶ್ರದ್ಧೆಯಿರಲಿ. ಗುಣಮಟ್ಟದ ತನಿಖೆಯಿಂದ ಮಾತ್ರ ಶಿಕ್ಷೆಯ ಪ್ರಮಾಣ ಹಾಗೂ ಕಾನೂನುಬಾಹಿರ ಕೃತ್ಯ ಎಸಗುವ ಗುಂಪುಗಳು, ರೌಡಿಗಳಿಗೆ ಶಿಕ್ಷೆ ಸಾಧ್ಯತೆ ಹೆಚ್ಚಾಗುತ್ತದೆ. ಇದರಿಂದ ಸಾರ್ವಜನಿಕರಿಗೆ ಉಪಟಳ ನೀಡುವವರ ವಿರುದ್ಧ ಕ್ರಮ ಕೈಗೊಂಡಂತೆಯೂ ಆಗುತ್ತದೆ ಎಂದು ಹೇಳಿದರು. ಪೊಲೀಸ್ ಇಲಾಖೆಯ ಪ್ರಾಥಮಿಕ ಮತ್ತು ನಿಜವಾದ ಕೆಲಸವೆಂದರೆ ಕಾನೂನು-ಸುವ್ಯವಸ್ಥೆ ಕಾಪಾಡುವುದಾಗಿದೆ. ಜೊತೆಗೆ ನೊಂದವರಿಗೆ ನೆರವು, ಸಾರ್ವಜನಿಕರ ಸೇವೆಗೆ ಸದಾ ಲಭ್ಯವಿರುವುದು, ಸಮುದಾಯದತ್ತ ಇಲಾಖೆಯನ್ನು ಕೊಂಡೊಯ್ಯುವುದು, ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವುದು ಹಾಗೂ ತಡೆಯುವುದು ಎಂದು ತಿಳಿಸಿದರು. ಗಾಂಜಾ ಮಟ್ಟ ಹಾಕಿ: ಮಾದಕ ದ್ರವ್ಯದ ಕುರಿತು ತಳಮಟ್ಟದ ಮಾಹಿತಿಯನ್ನು ಸಂಗ್ರಹಿಸಿ. ಗಾಂಜಾ ಬೆಳೆಯುವವರು, ಸೇವನೆ ಮಾಡುವವರು, ಮಾರಾಟ ಮಾಡುವವರು, ಸಂಗ್ರಹಣೆ ಮಾಡುವವರು ಮತ್ತು ಸಾಗಾಟ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ರೀತಿಯ ನಿರ್ದ್ಯಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಡಾ.ಸಲೀಂ ಸೂಚಿಸಿದರು. ಪೊಲೀಸ್ ಇಲಾಖೆಯ ಮೇಲೆ ಸಾರ್ವಜನಿಕರು ಇಟ್ಟಿರುವಂತಹ ನಂಬಿಕೆಯ ಮೇಲೆ, ಇಲಾಖೆಯ ಯಶಸ್ಸು ನಿಂತಿರುತ್ತದೆ. ಆದ್ದರಿಂದ ನೀವು ಕೆಲಸದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ಕಾನೂನು ವ್ಯಾಪ್ತಿಗೆ ಒಳಪಟ್ಟು ಕರ್ತವ್ಯ ನಿರ್ವಹಿಸಬೇಕೆಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಪೂರ್ವ ವಲಯ ಐಜಿಪಿ ಬಿ.ಆರ್.ರವಿಕಾಂತೇ ಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಜಿ.ಕೆ., ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎ.ಜಿ.ಕಾರಿಯಪ್ಪ, ರಮೇಶ್ ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು. ಪ್ರಕರಣಗಳ ಮಹಜರು ನಡೆಸುವಾಗ ಮತ್ತು ಸಾಕ್ಷಿದಾರರನ್ನು ಆಯ್ದುಕೊಳ್ಳುವಾಗ, ಸಾಧ್ಯವಾದಷ್ಟು ಮಟ್ಟಿಗೆ ಸರಕಾರಿ ಪಂಚರನ್ನು ಮತ್ತು ಸರಕಾರಿ ಸಾಕ್ಷಿದಾರರನ್ನು ಆಯ್ದುಕೊಳ್ಳಬೇಕು. ಇಂತಹ ನಡೆಯಿಂದ ಪ್ರಕರಣಗಳಲ್ಲಿ ಶಿಕ್ಷೆಯಾಗುವ ಪ್ರಮಾಣವು ಹೆಚ್ಚಾಗುತ್ತದೆ. ಯಾವುದೇ ತನಿಖೆ ಹಾಗೂ ಇತರ ಇಲಾಖೆಗಳೊಂದಿಗೆ ವ್ಯವಹರಿಸುವಾಗ ದಾಖಲಾತಿಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಿ. ಆಗ ಮಾತ್ರ ನೀವು ಮಾಡಿದಂತಹ ಕೆಲಸಕ್ಕೆ ಸೂಕ್ತ ನ್ಯಾಯ ದೊರಕಿಸಿದಂತಾಗುತ್ತದೆ. ಡಾ. ಎಂ.ಎ.ಸಲೀಂ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಶಿವಮೊಗ್ಗ ಪೊಲೀಸ್ ಇಲಾಖೆ ಬಗ್ಗೆ ಮೆಚ್ಚುಗೆ : ಶಿವಮೊಗ್ಗ ಜಿಲ್ಲೆ ಒಂದು ಸೂಕ್ಷ್ಮ ಜಿಲ್ಲೆಯಾಗಿದೆ. ಪೊಲೀಸರ ಕಾರ್ಯ ವೈಖರಿಯಿಂದ ಜಿಲ್ಲೆಯಲ್ಲಿ ಕಾನೂನು-ಸುವ್ಯವಸ್ಥೆ ಉತ್ತಮವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ನ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸುತ್ತೇನೆ. ಜಿಲ್ಲೆಯು ಭೌಗೋಳಿಕವಾಗಿ ಮಾತ್ರವಲ್ಲದೆ, ಪ್ರಕರಣಗಳ ವರದಿಯಲ್ಲೂ ದೊಡ್ಡ ಜಿಲ್ಲೆಯಾಗಿದೆ. ಯಾವುದೇ ಒಂದು ಪ್ರದೇಶದಲ್ಲಿ ಜರುಗುವ ಅಪರಾಧ ಕೃತ್ಯಗಳು, ಇತರ ಕೃತ್ಯಗಳಿಗೆ ದಾರಿ ಮಾಡಿಕೊಡುತ್ತವೆ. ಆದ್ದರಿಂದ ಅಪರಾಧ ಕೃತ್ಯಗಳನ್ನು ಪತ್ತೆ ಹಚ್ಚುವಲ್ಲಿ ಮತ್ತು ಮಟ್ಟ ಹಾಕುವಲ್ಲಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುವಂತೆ ಜಿಲ್ಲೆಯ ಪೊಲೀಸರಿಗೆ ಡಾ.ಎಂ.ಎಂ.ಸಲೀಂ ಸಲಹೆ ನೀಡಿದರು.
ಪಣಂಬೂರು: ಮಗುವಿನೊಂದಿಗೆ ಆತ್ಮಹತ್ಯೆಗೆ ಮುಂದಾಗಿದ್ದ ತಂದೆಯನ್ನು ರಕ್ಷಿಸಿದ ಪೊಲೀಸರು
ಸುಳಿವು ನೀಡಿದ ವೈರಲ್ ವೀಡಿಯೊ
‘ಹೊನ್ನಾವರ ಬಂದರು ಯೋಜನೆ’ ಕೈ ಬಿಡುವಂತೆ ಸರಕಾರಕ್ಕೆ ಮೇಧಾ ಪಾಟ್ಕರ್ ಒತ್ತಾಯ
‘ಸತ್ಯಶೋಧನಾ ವರದಿ ಬಿಡುಗಡೆ’
2028ರ ಲಾಸ್ ಏಂಜಲಿಸ್ ಒಲಿಂಪಿಕ್ಸ್ : 53 ಕೆಜಿ ವಿಭಾಗದಲ್ಲಿ ಮೀರಾಬಾಯಿ ಚಾನು ಸ್ಪರ್ಧೆ?
ಕೋಲ್ಕತಾ, ನ.4: ವಿಶ್ವ ಹಾಗೂ ಒಲಿಂಪಿಕ್ಸ್ ಪದಕ ವಿಜೇತ ವೇಟ್ಲಿಫ್ಟರ್ ಮೀರಾಬಾಯಿ ಚಾನು 2026ರ ಏಶ್ಯನ್ ಗೇಮ್ಸ್ ನಂತರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ. ಅಂತರ್ರಾಷ್ಟ್ರೀಯ ವೇಟ್ಲಿಫ್ಟಿಂಗ್ ಫೆಡರೇಶನ್(ಐಡಬ್ಲ್ಯುಎಫ್)ತೂಕ ದರ್ಜೆಗಳಲ್ಲಿ ಬದಲಾವಣೆ ಮಾಡಿದ ನಂತರ ಮೀರಾಬಾಯಿ ಚಾನು 2020ರ ಟೋಕಿಯೊ ಒಲಿಂಪಿಕ್ಸ್ನಲ್ಲಿ ಬೆಳ್ಳಿ ಪದಕ ಜಯಿಸಿದ್ದು, 2024ರ ಪ್ಯಾರಿಸ್ ಗೇಮ್ಸ್ನಲ್ಲಿ 49 ಕೆಜಿ ವಿಭಾಗದಲ್ಲಿ 4ನೇ ಸ್ಥಾನ ಪಡೆದಿದ್ದರು. ಈ ವರ್ಷ 48 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿರುವ ಚಾನು ಅಹ್ಮದಾಬಾದ್ನಲ್ಲಿ ನಡೆದಿದ್ದ ಕಾಮನ್ವೆಲ್ತ್ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕ ಜಯಿಸಿದ್ದರು. ನಾರ್ವೆಯ ಫೋರ್ಡ್ನಲ್ಲಿ ನಡೆದಿದ್ದ ವಿಶ್ವ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿದ್ದರು. ಅಂತರ್ರಾಷ್ಟ್ರೀಯ ವೇಟ್ಲಿಫ್ಟಿಂಗ್ ಫೆಡರೇಶನ್ ಸೋಮವಾರ 49 ಕೆಜಿ ವಿಭಾಗವನ್ನು ತೆಗೆದುಹಾಕಿದ್ದು, 2025ರ ಲಾಸ್ ಏಂಜಲೀಸ್ ಗೇಮ್ಸ್ನಲ್ಲಿ ಮಹಿಳಾ ಕ್ರೀಡಾಪಟುಗಳಿಗೆ 53 ಕೆಜಿ ವಿಭಾಗವನ್ನು ಕನಿಷ್ಠ ತೂಕ ವಿಭಾಗವನ್ನಾಗಿ ಪರಿಗಣಿಸಿದೆ. ಪುರುಷರಿಗೆ ಕನಿಷ್ಠ ತೂಕ ವಿಭಾಗ 65 ಕೆಜಿ ಆಗಿದೆ. ಮುಂದಿನ ವರ್ಷ ನಡೆಯಲಿರುವ ಏಶ್ಯನ್ ಗೇಮ್ಸ್ನಲ್ಲಿ 48 ಕೆಜಿ ವಿಭಾಗದಲ್ಲಿ ಪದಕ ಗೆಲ್ಲಲು ಬಯಸಿರುವ ಮೀರಾಬಾಯಿ, 2028ರ ಒಲಿಂಪಿಕ್ಸ್ಗೆ ಅರ್ಹತೆ ಪಡೆಯಲು ಬಯಸಿದರೆ, 53 ಕೆಜಿಗೆ ಭಡ್ತಿ ಪಡೆಯಲಿದ್ದಾರೆ. 2022ರಲ್ಲಿ ಕಾಮನ್ವೆಲ್ತ್ ಗೇಮ್ಸ್ಗಿಂತ ಮೊದಲು ತನ್ನ ಸ್ನ್ಯಾಚ್ ಟೆಕ್ನಿಕ್ ಅನ್ನು ಪರೀಕ್ಷಿಸಲು ಸಿಂಗಾಪುರ ಇಂಟರ್ನ್ಯಾಶನಲ್ ಕ್ರೀಡಾಕೂಟದಲ್ಲಿ 55 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿದ್ದರು. ಚಾನು ಇದೀಗ 48 ಕೆಜಿ ವಿಭಾಗದಲ್ಲಿ ಸ್ಪರ್ಧಿಸುವತ್ತ ಚಿತ್ತಹರಿಸಿದ್ದು, ಕಾಮನ್ವೆಲ್ತ್ ಗೇಮ್ಸ್ನಲ್ಲಿ ಹ್ಯಾಟ್ರಿಕ್ ಚಿನ್ನ ಹಾಗೂ 2026ರ ಏಶ್ಯನ್ ಗೇಮ್ಸ್ನಲ್ಲಿ ತನ್ನ ಮೊದಲ ಪದಕ ಗೆಲ್ಲುವ ವಿಶ್ವಾಸದಲ್ಲಿದ್ದಾರೆ.
ಬಿಗ್ ಬ್ಯಾಶ್ ಲೀಗ್ನಿಂದ ಹೊರಗುಳಿದ ಆರ್.ಅಶ್ವಿನ್
ಹೊಸದಿಲ್ಲಿ, ನ.4: ಚೆನ್ನೈನಲ್ಲಿ ನಡೆದ ತರಬೇತಿಯ ವೇಳೆ ಮೊಣಕಾಲಿನ ನೋವಿಗೆ ಒಳಗಾಗಿರುವ ಭಾರತದ ಮಾಜಿ ಆಲ್ರೌಂಡರ್ ಆರ.ಅಶ್ವಿನ್ ಮುಂಬರುವ ಆಸ್ಟ್ರೇಲಿಯದ ಬಿಗ್ ಬ್ಯಾಶ್ ಲೀಗ್(ಬಿಬಿಎಲ್)ನಿಂದ ಹೊರಗುಳಿದಿದ್ದಾರೆ. ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ಅಶ್ವಿನ್ ಅವರು ತನ್ನ ಗಾಯದ ಬಗ್ಗೆ ಮಾಹಿತಿ ನೀಡಿದರು. ‘‘ಮುಂಬರುವ ಋತುವಿಗೆ ತಯಾರಿ ನಡೆಸಲು ಚೆನ್ನೈನಲ್ಲಿ ತರಬೇತಿ ಪಡೆಯುತ್ತಿದ್ದಾಗ ನನ್ನ ಮೊಣಕಾಲಿಗೆ ನೋವುಂಟಾಯಿತು. ನನಗೆ ಚಿಕಿತ್ಸೆ ನೀಡಲಾಗಿದು, 15ನೇ ಆವೃತ್ತಿಯ ಬಿಬಿಎಲ್ನಿಂದ ವಂಚಿತನಾಗಲಿದ್ದೇನೆ. ಅದನ್ನು ಹೇಳುವುದು ಕಷ್ಟವಾಗುತ್ತದೆ. ಬಿಬಿಎಲ್ ಭಾಗವಾಗಲು, ನಿಮ್ಮೆಲ್ಲರ ಮುಂದೆ ಆಡಲು ನಾನು ನಿಜವಾಗಿಯೂ ಉತ್ಸುಕನಾಗಿದ್ದೆ’’ ಎಂದು ಅಶ್ವಿನ್ ಬರೆದಿದ್ದಾರೆ. ಸಿಡ್ನಿ ಥಂಡರ್ ಫ್ರಾಂಚೈಸಿಯೊಂದಿಗೆ ಸಹಿ ಹಾಕಿದ ನಂತರ ಅಶ್ವಿನ್ ಅವರು ಬಿಬಿಎಲ್ ಕ್ಲಬ್ಗೆ ಸೇರ್ಪಡೆಯಾಗಿ ಭಾರತವನ್ನು ಪ್ರತಿನಿಧಿಸಿದ ಮೊದಲ ಪುರುಷ ಆಟಗಾರನಾಗಲು ಸಜ್ಜಾಗಿದ್ದರು. ‘‘ಪಂದ್ಯಾವಳಿಯ ವೇಳೆ ನಾನು ಸಿಡ್ನಿ ಥಂಡರ್ ತಂಡವನ್ನು ಬೆಂಬಲಿಸುವೆ. ಈ ವರ್ಷಾಂತ್ಯದಲ್ಲಿ ತಂಡವನ್ನು ಉತ್ತೇಜಿಸಲು ಆಸ್ಟ್ರೇಲಿಯಕ್ಕೆ ಪ್ರಯಾಣಿಸಲು ಪ್ರಯತ್ನಿಸುವೆ’’ಎಂದು 39ರ ವಯಸ್ಸಿನ ಅಶ್ವಿನ್ ಹೇಳಿದರು.
ಮಂಗಳೂರು| ಮಾದಕ ವಸ್ತು ಸೇವಿಸಿದ ಆರೋಪ; 8 ಮಂದಿ ಬಂಧನ
ಮಂಗಳೂರು: ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳೂರು ನಗರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ ಆರೋಪದಲ್ಲಿ 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಅಬ್ದುಲ್ ಸತ್ತಾರ್ (35) , ಮುಹಮ್ಮದ್ ರಫೀಕ್ (42) , ರಜತ್, ( 29 ) ಎಂಬವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಸಿರಾಜ್ (46) ಎಂಬಾತನನ್ನು ಕೊಣಾಜೆ ಪೊಲೀಸರು, ಮರವೂರು ಪೇಟೆಯಲ್ಲಿ ಮಾದಕ ವಸ್ತು ಸೇವಿಸಿದ ಆರೋಪದಲ್ಲಿ ಸಾಹೂದ್ (27 ) ಎಂಬಾತನನ್ನು ಬಜ್ಪೆ ಠಾಣಾ ಪೊಲೀಸರು, ಲಾಲ್ ಬಾಗ್ ಬಳಿ ಸೋಮವಾರಪೇಟೆಯ ವಿಷ್ಣು ಜಿ.ಕೆ (22 )ಎಂಬಾತನನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಉರ್ವಾ ಪೊಲೀಸರು ಕೋಡಿಕಲ್ ಶಾಲೆಯ ಬಳಿ ಪ್ರಜ್ವಲ್ ಸಿ.ಯಾನೆ ಪಜ್ಜು (26) ಎಂಬಾತನನ್ನು ಮತ್ತು ಕಾರ್ನಾಡ್ ಗ್ರಾಮದ ಲಿಂಗಪ್ಪಯ್ಯ ಕಾಡು ಬಳಿ ಮಾದಕ ವಸ್ತು ಸೇವಿಸಿದ ಆರೋಪದಲ್ಲಿ ಧರ್ಮಲಿಂಗ ಎಂಬಾತನನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ.
ಭಾರತೀಯರ ತಾತ್ಕಾಲಿಕ ವೀಸಾಗಳ ಸಾಮೂಹಿಕ ರದ್ದತಿ ಕುರಿತು ಕೆನಡಾ ಪರಿಶೀಲನೆ
ಟೊರೊಂಟೊ,ನ.5: ಪ್ರಸಕ್ತ ನೆನೆಗುದಿಯಲ್ಲಿರುವ ಮಸೂದೆಯ ಮೂಲಕ ಭಾರತದಿಂದ ಸಲ್ಲಿಕೆಯಾಗುವ ತಾತ್ಕಾಲಿಕ ವೀಸಾ ಅರ್ಜಿಗಳನ್ನು ಸಾಮೂಹಿಕವಾಗಿ ರದ್ದುಪಡಿಸುವ ಅಧಿಕಾರವನ್ನು ಹೊಂದಲು ಕೆನಡಾ ಸರಕಾರ ಬಯಸಿದೆ ಎಂದು ಮಾಧ್ಯಮ ವರದಿಯೊಂದು ತಿಳಿಸಿದೆ. ವೀಸಾ ಅರ್ಜಿ ಸಲ್ಲಿಕೆಯಲ್ಲಿ ವಂಚನೆಗಳು ನಡೆಯುವುದನ್ನು ತಡೆಗಟ್ಟುವ ಉದ್ದೇಶದಿಂದ ಕೆನಡಾ ಸರಕಾರ ಹೆಜ್ಜೆಯಿಟ್ಟಿದೆ ಎಂದು ವರದಿ ಹೇಳಿದೆ. ಕೆನಡಾದ ವಲಸೆ, ನಿರಾಶ್ರಿತರು ಹಾಗೂ ಪೌರತ್ವ (ಐಆರ್ಸಿಸಿ), ಕೆನಡಿಯನ್ ಗಡಿ ಸೇವೆಗಳ ಏಜೆನ್ಸಿ (ಸಿಬಿಎಸ್ಎ) ಹಾಗೂ ಅಮೆರಿಕದ ಕೆಲವು ಇಲಾಖೆಗಳ ಹೇಳಿಕೆಗಳನ್ನು ಉಲ್ಲೇಖಿಸಿ ಸಿಬಿಸಿ ನ್ಯೂಸ್ ಮಾಧ್ಯಮ ಸಂಸ್ಥೆಯು ಈ ವರದಿಯನ್ನು ಪ್ರಕಟಿಸಿದೆ. ಭಾರತದಿಂದ ಸಲ್ಲಿಸಲಾಗುವ ತಾತ್ಕಾಲಿಕ ವೀಸಾ ಅರ್ಜಿ ವ್ಯವಸ್ಥೆಯಲ್ಲಿರುವ ವಂಚನೆಗಳನ್ನು ಹಿಮ್ಮೆಟ್ಟಿಸಲು ಮಸೂದೆಯೊಂದರಲ್ಲಿರುವ ಪ್ರಸ್ತಾವಿತ ಸಾಮೂಹಿಕ ವೀಸಾ ರದ್ದತಿ ಕಾನೂನನ್ನು ಬಳಸಲು ಕೆನಡಾ ಸರಕಾರ ಬಯಸಿದೆ. ವೀಸಾ ವಂಚನೆಯ ಸವಾಲುಗಳಿರುವ ದೇಶಗಳೆಂದು ಭಾರತ ಹಾಗೂ ಬಾಂಗ್ಲಾಗಳನ್ನು ಮಾತ್ರವೇ ಹೇಳಿಕೆಯಲ್ಲಿ ನಿರ್ದಿಷ್ಟವಾಗಿ ಹೆಸರಿಸಲಾಗಿದೆ ಎಂದು ವರದಿ ಹೇಳಿದೆ. ಸಾಂಕ್ರಾಮಿಕ ರೋಗ ಅಥವಾ ಯುದ್ಧದ ಸಂದರ್ಭದಲ್ಲಿ ವೀಸಾಗಳನ್ನು ಸಾಮೂಹಿಕವಾಗಿ ರದ್ದುಪಡಿಸಬಹುದೆಂದು ಮಸೂದೆಯು ಪ್ರಸ್ತಾವಿಸಿದೆ. ಆದರೆ ವರದಿಯ ಪ್ರಕಾರ, ಭಾರತ, ಬಾಂಗ್ಲಾದಂತಹ ನಿರ್ದಿಷ್ಟ ದೇಶಗಳ ಕೆನಡಿಯನ್ ವೀಸಾ ಹೊಂದಿರುವವರನ್ನು ಗುರಿಯಿರಿಸಲು ಕೆನಡಿಯನ್ ಅಧಿಕಾರಿಗಳು ಆಸಕ್ತಿ ಹೊಂದಿದ್ದಾರೆನ್ನಲಾಗಿದೆ. ಕಾರ್ಮಿಕರು, ಅಂತಾರಾಷ್ಟ್ರೀಯ ವಿದ್ಯಾರ್ಥಿಗಳು ಹಾಗೂ ಸಂದರ್ಶಕರನ್ನು ತಾತ್ಕಾಲಿಕ ನಿವಾಸಿಗಳೆಂದು ಪರಿಗಣಿಸಲಾಗುತ್ತದೆ. ಕೆನಡದ ಗಡಿಗಳನ್ನು ಬಲಪಡಿಸುವ ಉದ್ದೇಶದ ಭಾಗವಾಗಿ ಈ ಕಾನೂನನ್ನು ಜಾರಿಗೆ ತರಲಾಗಿದೆ ಎಂದು ವಲಸೆ ವ್ಯಾಜ್ಯಗಳ ಕುರಿತಾದ ನ್ಯಾಯವಾದಿ ಸುಮಿತ್ ಸೇನ್ ಅವರು ಹಿಂದೂಸ್ತಾನ್ ಟೈಮ್ಸ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಒಂದು ವೇಳೆ ಕೆನಡಾದ ಲಿಬರಲ್ ಸರಕಾರವು ಬಲಿಷ್ಠ ಗಡಿಗಳ ಮಸೂದೆಯನ್ನು ಅಂಗೀಕರಿಸಿದಲ್ಲಿ ಸಂಬಂಧಪಟ್ಟ ಇಲಾಖೆಯ ಸಚಿವರಿಗೆ ವ್ಯಾಪಕ ಅಧಿಕಾರ ದೊರೆಯಲಿದ್ದು, ಕೆನಡಾವು ಭಾರತೀಯ ವೀಸಾ ಅರ್ಜಿಗಳನ್ನು ಸಾಮೂಹಿಕವಾಗಿ ರದ್ದುಪಡಿಸಬಹುದೆಂಬ ಭೀತಿ ಮೂಡಿದೆ ಎಂದು ಅವರು ಹೇಳಿದ್ದಾರೆ. ದೇಶದಲ್ಲಿ ವಲಸಿಗರ ಪ್ರಮಾಣವನ್ನು ಕಡಿಮೆಗೊಳಿಸಲು ಕೆನಡಾ ಸರಕಾರವು ಪರಿಶೀಲಿಸುತ್ತಿರುವ ನಡುವೆಯೇ ಈ ಪ್ರಸ್ತಾವಿತ ಕ್ರಮಗಳ ಬಗ್ಗೆ ಘೋಷಣೆ ಹೊರಬಿದ್ದಿದೆ.
ಪತ್ರಕರ್ತೆ ರಾಣಾ ಅಯ್ಯೂಬ್ ಅವರಿಗೆ ಜೀವಬೆದರಿಕೆ ಕರೆ : ಭದ್ರತೆ ನೀಡುವಂತೆ ಸರಕಾರಕ್ಕೆ ಸಿಪಿಜೆ ಆಗ್ರಹ
ಹೊಸದಿಲ್ಲಿ,ನ.4: ಅಜ್ಞಾತ ಅಂತಾರಾಷ್ಟ್ರೀಯ ದೂರವಾಣಿ ಸಂಖ್ಯೆಯೊಂದರಿಂದ ತಮಗೆ ಜೀವಬೆದರಿಕೆ ಕರೆಗಳು ಬಂದಿರುವುದಾಗಿ ಭಾರತೀಯ ಪತ್ರಕರ್ತೆ ಹಾಗೂ ವಾಶಿಂಗ್ಟನ್ ಪೋಸ್ಟ್ನ ಅಂಕಣಗಾರ್ತಿ ರಾಣಾ ಅಯ್ಯೂಬ್ ಹಾಗೂ ಅವರ ಕುಟುಂಬಿಕರ ಸುರಕ್ಷತೆಯನ್ನು ಖಾತರಿಪಡಿಸುವಂತೆ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಭಾರತೀಯ ಅಧಿಕಾರಿಗಳನ್ನು ಆಗ್ರಹಿಸಿದೆ. ದೂರವಾಣಿ ಕರೆ ಮಾಡಿದ ವ್ಯಕ್ತಿಯು, ರಾಣಾ ಅಯ್ಯೂಬ್ ಅವರ ಮನೆ ವಿಳಾಸವನ್ನು ಉಲ್ಲೇಖಿಸಿದ್ದಾನೆ ಹಾಗೂ ಆಕೆಗೆ ಮತ್ತು ಆಕೆಯ ತಂದೆಗೆ ಜೀವಬೆದರಿಕೆಯೊಡ್ಡಿದ್ದಾನೆಂದು ಆರೋಪಿಸಿದೆ. ಈ ಬಗ್ಗೆ ಸಿಪಿಜೆಯ ಭಾರತೀಯ ಪ್ರತಿನಿಧಿ ಕುನಾಲ್ ಮಜುಂದಾರ್ ಅವರು ಹೇಳಿಕೆಯೊಂದನ್ನು ನೀಡಿ, ‘‘ಅಂತಾರಾಷ್ಟ್ರೀಯ ಅಜ್ಞಾತ ದೂರವಾಣಿ ಸಂಖ್ಯೆಯಿಂದ ರಾಣಾ ಅಯ್ಯೂಬ್ ಹಾಗೂ ಅವರ ತಂದೆಗೆ ಜೀವಬೆದರಿಕೆಯೊಡ್ಡಿರುವುದು ಅತ್ಯಂತ ಕಳವಳಕಾರಿಯಾಗಿದೆ. ಆ ವ್ಯಕ್ತಿಯನ್ನು ಪತ್ತೆಹಚ್ಚಲು ಅಧಿಕಾರಿಗಳು ಕ್ಷಿಪ್ರವಾಗಿ ಕಾರ್ಯಾಚರಿಸಬೇಕು ಹಾಗೂ ಭಾರತದಲ್ಲಿ ಎಲ್ಲಾ ಪತ್ರಕರ್ತರ ಸುರಕ್ಷತೆಯನ್ನು ಖಾತರಿಪಡಿಸಬೇಕು ’’ಎಂದು ಸಿಪಿಜೆಯ ಭಾರತ ಪ್ರತಿನಿಧಿ ಕುನಾಲ್ ಮಜುಂದಾರ್ ತಿಳಿಸಿದ್ದಾರೆ. ನವೆಂಬರ್ 2ರಂದು ತನ್ನ ಮೊಬೈಲ್ಫೋನ್ಗೆ ಅಜ್ಞಾತ ವ್ಯಕ್ತಿಯೊಬ್ಬ ವಾಟ್ಸ್ಅಪ್ ಕರೆ ಹಾಗೂ ಮೆಸೇಜ್ಗಳನ್ನು ಮಾಡಿದ್ದನು. ತಾನು 1984ರ ಸಿಖ್ಖ್ ವಿರೋಧಿ ಗಲಭೆಗಳ ಬಗ್ಗೆ ಅಂಕಣವೊಂದನ್ನು ಬರೆಯಬೇಕೆಂದು ಆತ ಆಗ್ರಹಿಸಿದ್ದನು. ಇಲ್ಲದೆ ಹೋದಲ್ಲಿ ತನಗೆ ಹಾಗೂ ತನ್ನ ತಂದೆಯ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದನೆಂದು ರಾಣಾ ಅಯ್ಯೂಬ್ ನವೆಂಬರ್ 3ರಂದು ನವಿಮುಂಬೈನ ಕೋಪಾರ್ ಖೈರಾನೆ ಪೊಲೀಸ್ ಠಾಣೆಗೆ ನೀಡಿದ ದೂರಿಲ್ಲಿ ತಿಳಿಸಿದ್ದಾರೆ. ಬೆದರಿಕೆ ಕರೆ ಮಾಡಿದ ವ್ಯಕ್ತಿಯ ವಾಟ್ಯಾಪ್ ಪ್ರೊಫೈಲ್ನಲ್ಲಿ ಪ್ರಸಕ್ತ ಗುಜರಾತ್ನಲ್ಲಿ ಬಂಧನದಲ್ಲಿರುವ ಕುಖ್ಯಾತ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿಯ ಭಾವಚಿತ್ರವಿದ್ದುದಾಗಿ ಅಯ್ಯೂಬ್ ತಿಳಿಸಿದ್ದಾರೆ. ಕರೆ ಮಾಡಿದ ವ್ಯಕ್ತಿಗೆ ತನ್ನ ನಿವಾಸದ ವಿಳಾಸ ತಿಳಿದಿರುವುದಾಗಿಯೂ ಅಯ್ಯೂಬ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಜೀವಬೆದರಿಕೆ ಕರೆ ಬಂದಿರುವ ಹಿನ್ನೆಲೆಯಲ್ಲಿ ಭದ್ರತೆಗಾಗಿ ಅಯ್ಯೂಬ್ ಅವರ ನಿವಾಸದಲ್ಲಿ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಕಬ್ಬು MRP ದರ ನಿಗದಿ ಮಾಡುವುದು ಕೇಂದ್ರ ಸರ್ಕಾರ ನಾವಲ್ಲ: ಸಿದ್ದರಾಮಯ್ಯ
ರಾಜ್ಯದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟದ ಕುರಿತು ಕೋಲಾರ ಜಿಲ್ಲೆಯ ಬಂಗಾರಪೇಟೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಕಬ್ಬಿನ ದರ ನಿಗದಿ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಸೇರಿದ್ದು, ರಾಜ್ಯ ಸರ್ಕಾರಕ್ಕಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೋಲಾರ ಜಿಲ್ಲೆಗೆ ಎರಡು ವರ್ಷಗಳಲ್ಲಿ ಎತ್ತಿನಹೊಳೆ ನೀರು, ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಮತ್ತು ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸುವ ಬಗ್ಗೆ ಚಿಂತನೆ ನಡೆಸುವುದಾಗಿ ಭರವಸೆ ನೀಡಿದರು. ಇದೇ ವೇಳೆ, ಕೇಂದ್ರದ ತೆರಿಗೆ ಹಂಚಿಕೆ ತಾರತಮ್ಯದ ವಿರುದ್ಧವೂ ಅವರು ತೀವ್ರ ವಾಗ್ದಾಳಿ ನಡೆಸಿದರು.
ಪೋಕ್ಸೊ ಕಾಯ್ದೆಯ ದುರ್ಬಳಕೆಗೆ ಸುಪ್ರೀಂಕೋರ್ಟ್ ಕಳವಳ
ಹೊಸದಿಲ್ಲಿ,ನ.4: ವೈವಾಹಿಕ ವೈಮನಸ್ಸು ಹಾಗೂ ಹದಿಹರೆಯದವರ ನಡುವಿನ ಸಮ್ಮತಿಯ ಲೈಂಗಿಕ ಸಂಬಂಧಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಪೋಕ್ಸೊ ಕಾಯ್ದೆಯನ್ನು ದುರುಪಯೋಗಪಡಿಸಲಾಗುತ್ತಿದೆ ಎಂದು ಸುಪ್ರೀಂಕೋರ್ಟ್ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿದೆ. ಪೋಕ್ಸೊ ಕಾಯ್ದೆಯ ಕಾನೂನಾತ್ಮಕ ನಿಯಮಗಳ ಕುರಿತು ಬಾಲಕರು ಹಾಗೂ ಪುರುಷರಲ್ಲಿ ಜಾಗೃತಿಯನ್ನು ಮೂಡಿಸಬೇಕಾದ ಅಗತ್ಯವಿದೆಯೆಂದು ಅದು ಹೇಳಿದೆ. ಅತ್ಯಾಚಾರದ ಕೃತ್ಯಕ್ಕೆ ವಿಧಿಸಲಾಗುವ ದಂಡನೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಬಗ್ಗೆ ನಿರ್ದೇಶನವನ್ನು ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ಆಲಿಕೆಯನ್ನು ನಡೆಸಿ ಸಂದರ್ಭ ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಹಾಗೂ ಆರ್.ಮಹಾದೇವನ್ ಅವರನ್ನೊಳಗೊಂಡ ನ್ಯಾಯಪೀಠವು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ‘‘ವೈವಾಹಿಕ ಬಿಕ್ಕಟ್ಟು ಹಾಗೂ ಹದಿಹರೆಯದವರ ನಡುವಿನ ಸಮ್ಮತಿಯ ಸಂಬಂಧದ ಪ್ರಕರಣಗಳಲ್ಲಿ ಪೋಕ್ಸೊ ಕಾಯ್ದೆಯನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಬಾಲಕರು ಹಾಗೂ ಪುರುಷರಲ್ಲಿ ಕಾನೂನಾತ್ಮಕ ನಿಯಮಗಳ ಬಗ್ಗೆ ಜಾಗೃತಿಯನ್ನು ನಾವು ಹರಡಬೇಕಾಗಿದೆ ಎಂದು ನ್ಯಾಯಪೀಠವು ಮೌಖಿಕವಾಗಿ ತಿಳಿಸಿದೆ. ಈ ವಿಷಯವಾಗಿ ತಾನು ನೀಡಿದ್ದ ನೋಟಿಸ್ಗೆ ಕೆಲವು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಉತ್ತರಿಸಿಲ್ಲವೆಂಬ ಬಗ್ಗೆ ಗಮನಸೆಳೆದ ಸರ್ವೋಚ್ಚ ನ್ಯಾಯಾಲಯವು ಮುಂದಿನ ಆಲಿಕೆಯನ್ನು ಡಿಸೆಂಬರ್ 2ಕ್ಕೆ ಮುಂದೂಡಿತು. ಹಿರಿಯ ನ್ಯಾಯವಾದಿ ಆಬಾದ್ ಹರ್ಷದ್ ಪೊಂಡಾ ಅವರು ಸಲ್ಲಿಸಿದ ಅರ್ಜಿಗೆ ಸಂಬಂಧಿಸಿ ಸರ್ವೋಚ್ಚ ನ್ಯಾಯಾಲಯವು, ಈ ಮೊದಲು ಕೇಂದ್ರ ಸರಕಾರ, ಮಾಹಿತಿ ತಂತ್ರಜ್ಞಾನ ಹಾಗೂ ಪ್ರಸಾರ ಸಚಿವಾಲಯ ಹಾಗೂ ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್ಸಿ)ಗೆ ನೋಟಿಸ್ ಜಾರಿಗೊಳಿಸಿತ್ತು. ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದ ಕಾನೂನುಗಳ ಕುರಿತು ಜನರಿಗೆ ಮಾಹಿತಿ ನೀಡುವ ಅಗತ್ಯವಿದೆ ಹಾಗೂ ನಿರ್ಭಯಾ ಪ್ರಕರಣದ ಬಳಿಕ ಇಂತಹ ಕಾನೂನುಗಳಲ್ಲಿ ಬದಲಾವಣೆ ಮಾಡಬೇಕಾದ ಅಗತ್ಯವಿದೆ ಎಂದು ಪೊಂಡಾ ತಿಳಿಸಿದ್ದಾರೆ. ಮಹಿಳೆಯರು ಹಾಗೂ ಮಕ್ಕಳ ಕುರಿತಾದ ಅಪರಾಧಗಳಿಗೆ ಇರುವ ದಂಡನಾತ್ಮಕ ಕಾನೂನುಗಳ ಕುರಿತಾಗಿ 14 ವರ್ಷದವರೆಗಿನ ಮಕ್ಕಳಿಗೆ ಉಚಿತ ಹಾಗೂ ಕಡ್ಡಾಯ ಶಿಕ್ಷಣವನ್ನು ಒದಗಿಸುವಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ನಿರ್ದೇಶನ ನೀಡುವುದು ಸೇರಿದಂತೆ ಹಲವಾರು ಕ್ರಮಗಳನ್ನು ಕೈಗೊಳ್ಳಬೇಕೆಂದು ಅರ್ಜಿಯಲ್ಲಿ ಕೋರಲಾಗಿತ್ತು.
ದೇಶದಲ್ಲಿ ಶೇ. 10ರಷ್ಟು ಜನಸಂಖ್ಯೆ ಇರುವವರಿಂದ ಸೇನೆಯ ನಿಯಂತ್ರಣ - ಬಿಹಾರದಲ್ಲಿ ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರು ಬಿಹಾರದಲ್ಲಿ ಚುನಾವಣಾ ರ್ಯಾಲಿಯಲ್ಲಿ ಭಾರತೀಯ ಸೇನೆ ಮತ್ತು ದೇಶದ ಉನ್ನತ ಹುದ್ದೆಗಳು ಕೇವಲ ಶೇ. 10 ರಷ್ಟು ಜನರಿಂದ ನಿಯಂತ್ರಿಸಲ್ಪಡುತ್ತಿವೆ ಎಂದು ಹೇಳಿಕೆ ನೀಡಿದ್ದಾರೆ. ಇದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಇದನ್ನು ದೇಶ ವಿಭಜಿಸುವ ಹೇಳಿಕೆ ಎಂದು ಖಂಡಿಸಿದೆ. ಈ ಹಿಂದೆ ಕೂಡ ರಾಹುಲ್ ಗಾಂಧಿಯವರ ಸೇನೆಗೆ ಸಂಬಂಧಿಸಿದ ಹೇಳಿಕೆಗಳು ಟೀಕೆಗೆ ಗುರಿಯಾಗಿದ್ದವು.
ಪಶ್ಚಿಮ ಬಂಗಾಳ | ಎಸ್ಐಆರ್ ವಿರುದ್ಧ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ
ಎಸ್ಐಆರ್ ಭೀತಿಯಿಂದ 7 ಮಂದಿ ಮೃತ್ಯು : ಅಭಿಷೇಕ್ ಬ್ಯಾನರ್ಜಿ ಆರೋಪ
ಕುತ್ಲೂರು| ಅನುಮಾನಾಸ್ಪದ ವ್ಯಕ್ತಿ ಚಾಕು ಹಿಡಿದು ಓಡಾಟ!
ಸಾರ್ವಜನಿಕರಲ್ಲಿ ಆತಂಕ
ಅಮೆರಿಕಾದ ಮಾಜಿ ಉಪಾಧ್ಯಕ್ಷ ಡಿಕ್ ಚೆನಿ ನಿಧನ
ವಾಷಿಂಗ್ಟನ್, ನ.4: ಅಮೆರಿಕಾದ ಇತಿಹಾಸದಲ್ಲಿ ಅತ್ಯಂತ ಪ್ರಭಾವೀ ಉಪಾಧ್ಯಕ್ಷರಲ್ಲಿ ಒಬ್ಬರಾಗಿದ್ದ ಡಿಕ್ ಚೆನಿ (84 ವರ್ಷ) ನ್ಯುಮೋನಿಯಾ ಮತ್ತು ಹೃದಯ ಕಾಯಿಲೆಗಳ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ನಿಧನರಾಗಿರುವುದಾಗಿ ಮಾಧ್ಯಮಗಳು ಮಂಗಳವಾರ ವರದಿ ಮಾಡಿವೆ. ಡಿಕ್ ಚೆನಿ ಮಾಜಿ ಅಧ್ಯಕ್ಷ ಜಾರ್ಜ್ ಡಬ್ಲ್ಯೂ ಬುಷ್ ಅವರ ಎರಡು ಅವಧಿಯ ಅಧಿಕಾರಾವಧಿಯಲ್ಲಿ, 2001ರ ಜನವರಿಯಿಂದ 2009ರ ಜನವರಿಯವರೆಗೆ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.
31 ಮಂದಿ ಡಿವೈಎಸ್ಪಿ(ಸಿವಿಲ್)ಗಳ ವರ್ಗಾವಣೆ
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದ್ದು, 31 ಮಂದಿ ಡಿವೈಎಸ್ಪಿ(ಸಿವಿಲ್)ಗಳನ್ನು ವರ್ಗಾವಣೆ ಮಾಡಿ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮಂಗಳವಾರ ಆದೇಶ ಹೊರಡಿಸಿದ್ದಾರೆ. ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಸ್ಥಳಗಳ ನಿಯುಕ್ತಿಗೊಳಿಸಿ ಆದೇಶದಲ್ಲಿ ತಿಳಿಸಲಾಗಿದ್ದು, ವರ್ಗಾವಣೆಗೊಂಡ 31 ಮಂದಿ ಡಿವೈಎಸ್ಪಿ(ಸಿವಿಲ್)ಗಳ ಪೈಕಿ ಕೆಲವು ಅಧಿಕಾರಿಗಳನ್ನು ಲೋಕಾಯುಕ್ತ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಲು ಸ್ಥಳ ನಿಯುಕ್ತಿಗೊಳಿಸಲಾಗಿದೆ.
ಬೆಂಗಳೂರು | ಚಾಕುವಿನಿಂದ ಇರಿದು ವ್ಯಕ್ತಿಯ ಹತ್ಯೆ: ಆರೋಪಿ ಪರಾರಿ
ಬೆಂಗಳೂರು : ಹಾಡಹಾಗಲೇ ಮನೆಗೆ ನುಗ್ಗಿ ವ್ಯಕ್ತಿಗೆ ಚಾಕುವಿನಿಂದ ಇರಿದು ಹತ್ಯೆಗೈದ ಆರೋಪಿ ಪರಾರಿಯಾಗಿರುವ ಘಟನೆ ಇಲ್ಲಿನ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ಹೆಬ್ಬಗೋಡಿಯ ಕಾಚನಾಯಕನಹಳ್ಳಿಯ ಮನೆಯೊಂದರಲ್ಲಿ ಮಾದೇಶ(40) ಎಂಬವರ ಹತ್ಯೆಯಾಗಿದೆ. ಕುಟುಂಬಸ್ಥರು ನೀಡಿದ ದೂರು ಆಧರಿಸಿ ಆರೋಪಿಯ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಯ ಪತ್ತೆಗೆ ಡಿವೈಎಸ್ಪಿ ಸತೀಶ್ ನೇತೃತ್ವದಲ್ಲಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಡಿಸಿಪಿ ನಾರಾಯಣ್ ತಿಳಿಸಿದ್ದಾರೆ. ಕೊಲೆಯಾದ ಮಾದೇಶ್ ಮೂಲತಃ ತಮಿಳುನಾಡಿನ ಡೆಂಕಣಿಕೋಟೆಯ ಬಾರಂದೂರು ನಿವಾಸಿಯಾಗಿದ್ದು, ಹಿಂದಿನ 15 ವರ್ಷಗಳಿಂದ ನಗರದ ಕಾಚನಾಯಕಹಳ್ಳಿಯಲ್ಲಿ ವಾಸವಾಗಿದ್ದರು. ಪ್ರಾವಿಷನ್ ಸ್ಟೋರ್ ನಡೆಸುವುದರ ಜೊತೆಗೆ ಕಂಪೆನಿಯೊಂದರ ಸಿಗರೇಟ್ ವಿತರಕರಾಗಿ ಕೆಲಸ ಮಾಡುತ್ತಿದ್ದರು ಎಂದು ಡಿಸಿಪಿ ನಾರಾಯಣ್ ಹೇಳಿದ್ದಾರೆ. ಊರಿನಲ್ಲಿರುವ ಜಮೀನು ಮಾರಾಟ ಮಾಡಿದ್ದ ಮಾದೇಶ್, ನಗರದಲ್ಲಿ ಹೊಸ ಮನೆ ಕಟ್ಟುತ್ತಿದ್ದರು. ಇತ್ತೀಚೆಗೆ ಅವರಿಗೆ ಗ್ಯಾಂಗ್ರೀನ್ ಖಾಯಿಲೆ ಬಂದಿದ್ದರಿಂದ ಹೆಚ್ಚು ಓಡಾಡುತ್ತಿರಲಿಲ್ಲ. ಮಂಗಳವಾರ ಮಧ್ಯಾಹ್ನ ಮಾದೇಶ್ ಮನೆಯಲ್ಲಿರುವಾಗ ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿ ಮನೆಗೆ ನುಗ್ಗಿ ಚಾಕುವಿನಿಂದ ಕುತ್ತಿಗೆ ಸೀಳಿ ಹತ್ಯೆ ಮಾಡಿದ್ದಾನೆ. ಪಕ್ಕದ ಮನೆ ವ್ಯಕ್ತಿಯೊಬ್ಬ ಈ ಕೃತ್ಯವನ್ನು ಕಂಡು ಆರೋಪಿಯನ್ನು ಹಿಡಿಯಲು ಹೋದಾಗ ಅವರ ಮೇಲೆಯೂ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ ಎಂದು ಡಿಸಿಪಿ ನಾರಾಯಣ್ ಹೇಳಿದ್ದಾರೆ. ಘಟನಾ ಸ್ಥಳದಲ್ಲಿ ಏರ್ ಪಿಸ್ತೂಲ್, ಮೆಟಲ್ ಡಿಟೆಕ್ಟರ್, ಟಾರ್ಚ್ ಸೇರಿದಂತೆ ಇನ್ನಿತರ ವಸ್ತುಗಳು ಪತ್ತೆಯಾಗಿವೆ. ಮನೆಯಲ್ಲಿ ಎರಡು ಲಕ್ಷ ಹಣವಿದ್ದರೂ ಆರೋಪಿ ತೆಗೆದುಕೊಂಡು ಹೋಗಿಲ್ಲ. ಈ ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪರಿಚಿತರೇ ಕೊಲೆ ಮಾಡಿದ್ದಾರಾ? ಅಥವಾ ಯಾವ ಉದ್ದೇಶಕ್ಕಾಗಿ ಹತ್ಯೆ ಮಾಡಿದ್ದಾರೆ ಎಂಬುದರ ಬಗ್ಗೆ ತನಿಖೆ ಚುರುಕುಗೊಳಿಸಲಾಗಿದೆ ಎಂದು ಡಿಸಿಪಿ ನಾರಾಯಣ್ ಮಾಹಿತಿ ನೀಡಿದ್ದಾರೆ.
ಬೆಂಗಳೂರು : ಕರ್ನಾಟಕ ರಾಜ್ಯಾದ್ಯಂತ ಮಹಿಳಾ ನೇತೃತ್ವದ ಸ್ವಸಹಾಯ ಗುಂಪುಗಳಿಗೆ ಇದೀಗ ಜಾಗತಿಕ ಮಾರುಕಟ್ಟೆಯಲ್ಲಿಯೂ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸುವ ಮತ್ತು ಮಾರಾಟ ಮಾಡುವ ಅವಕಾಶ ದೊರೆತಿದೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ರಾಷ್ಟ್ರೀಯ ಜೀವನೋಪಾಯ ಮಿಷನ್ ಈಗ ಸ್ವಸಹಾಯ ಗುಂಪುಗಳ ಡಿಜಿಟಲ್ ಸಾಮಥ್ರ್ಯ ಹೆಚ್ಚಿಸಲು ಅಂತಾರಾಷ್ಟ್ರೀಯ ಖ್ಯಾತಿಯ ‘ವಾಲ್ಮಾರ್ಟ್’ ಜೊತೆ ಮಹತ್ವದ ಒಪ್ಪಂದವನ್ನು ಮಾಡಿಕೊಂಡಿದೆ. ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್ ಆರ್.ಪಾಟೀಲ್ ಮತ್ತು ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಮಂಗಳವಾರ ‘ವಾಲ್ಮಾರ್ಟ್ ವೃದ್ಧಿ’ ಒಪ್ಪಂದಕ್ಕೆ ಸಹಿ ಹಾಕಿದರು. ಎನ್ಎಲ್ಎಂ ನಿರ್ದೇಶಕಿ ಆರ್.ಸ್ನೇಹಲ್ ಮತ್ತು ಐ2ಐ ಫೌಂಡೇಶನ್ನ ಟ್ರಸ್ಟಿ ಪಾರುಲ್ ಸೋನಿ ಸಹಿ ಹಾಕಿದರು. ಈ ಒಪ್ಪಂದದ ಅವಧಿ ಮೂರು ವರ್ಷಗಳಾಗಿರುತ್ತದೆ. ವಾಲ್ ಮಾರ್ಟ್ ವೃದ್ಧಿಯ ಅನುಷ್ಠಾ ನ ಪಾಲುದಾರರಾದ ‘ಐಡಿಯಾಸ್ ಟು ಇಂಪ್ಯಾಕ್ಟ್’ ಫೌಂಡೇಶನ್ ಮೂಲಕ ಸ್ವಸಹಾಯ ಗುಂಪುಗಳಿಗೆ ಉಚಿತ ಡಿಜಿಟಲ್ ಕಲಿಕೆ ತರಬೇತಿ, ವ್ಯಾಪಾರ ಪರಿಕರ ಮತ್ತು ಮಾರ್ಗದರ್ಶನ ದೊರೆಯಲಿದೆ. ಫ್ಲಿಪ್ಕಾರ್ಟ್ ಮತ್ತು ವಾಲ್ಮಾರ್ಟ್ ಸಂಸ್ಥೆಯ ಮಾರುಕಟ್ಟೆ ಜೊತೆ ಇ-ಕಾಮರ್ಸ್ ಸಂಪರ್ಕವನ್ನು ಸಾಧಿಸಲು ಈ ಒಪ್ಪಂದ ಅವಕಾಶ ಕಲ್ಪಿಸುತ್ತಿದೆ. ಸ್ವಸಹಾಯ ಗುಂಪುಗಳಿಗೆ ಡಿಜಿಟಲ್ ವ್ಯವಸ್ಥೆ, ಇ-ಕಾಮರ್ಸ್ ಮತ್ತು ಮಾರ್ಕೆಟಿಂಗ್ ಮತ್ತು ಇತರ ಸಾಮಥ್ರ್ಯಗಳಲ್ಲಿ ವಿಶೇಷ ತರಬೇತಿ ದೊರೆಯಲಿದೆ. ‘ಈ ಒಪ್ಪಂದದಿಂದ ಸ್ವಸಹಾಯ ಗುಂಪುಗಳಿಗೆ ಅನುಕೂಲವಾಗಲಿದೆ. ಹೊಸ ಮಾರುಕಟ್ಟೆಗಳಿಗೆ ಅವಕಾಶ ದೊರೆಯಲಿದೆ. ಸಾವಿರಾರು ಮಹಿಳೆಯರಿಗೆ ಉತ್ತಮ ಆದಾಯ ದೊರೆಯಲಿದೆ. ಈ ಹಿಂದೆ, ಸ್ವಸಹಾಯ ಗುಂಪುಗಳಿಗೆ ಡಿಜಿಟಲ್ ಮಾರ್ಕೆಟಿಂಗ್ ಕೊರತೆಯಿತ್ತು. ವಾಲ್ಮಾರ್ಟ್ ವೃದ್ಧಿಯ ಬೆಂಬಲದೊಂದಿಗೆ, ಅವರ ಉತ್ಪನ್ನಗಳನ್ನು ಜಾಗತಿಕ ಮಟ್ಟದಲ್ಲಿಯೂ ಪ್ರದರ್ಶಿಸಬಹುದು ಎಂದು ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದರು. ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಮಾತನಾಡಿ, ‘ಈ ಒಪ್ಪಂದವು ನಮ್ಮ ಕರ್ನಾಟಕದ ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಹೆಚ್ಚು ನೆರವಾಗಲಿದೆ. ಇಲ್ಲಿಯ ವರೆಗೆ, ಅವರ ಉತ್ಪನ್ನಗಳನ್ನು ಇಲಾಖಾ ಕಾರ್ಯಕ್ರಮಗಳಲ್ಲಿ ಮಾತ್ರ ಮಾರಾಟ ಮಾಡಲಾಗುತ್ತಿತ್ತು. ಈಗ ಇದರ ವಿಸ್ತಾರ ಹೆಚ್ಚಾಗಿದೆ. ವರ್ಷವಿಡೀ ಮಾರಾಟಕ್ಕೆ ಅವಕಾಶ ದೊರೆಯುತ್ತದೆ ಎಂದರು. ವಾಲ್ಮಾರ್ಟ್ನ ಹಿರಿಯ ಉಪಾಧ್ಯಕ್ಷ ಜೇಸನ್ ಫ್ರೆಮ್ಸ್ಟಾಡ್ ಮಾತನಾಡಿ, ಸ್ವಸಹಾಯ ಗುಂಪುಗಳ ಉತ್ಪನ್ನಗಳನ್ನು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶಿಸಲು ಅವಕಾಶ ದೊರೆಯಲಿದೆ ಎಂದರು.
ಫೆಲೆಸ್ತೀನಿಯರ ಮೇಲಿನ ದೌರ್ಜನ್ಯದ ವೀಡಿಯೊ ಸೋರಿಕೆ : ಇಸ್ರೇಲ್ನ ಮಾಜಿ ಮಿಲಿಟರಿ ಪ್ರಾಸಿಕ್ಯೂಟರ್ ಬಂಧನ
ಟೆಲ್ಅವೀವ್, ನ.4: ಬಂಧನದಲ್ಲಿರುವ ಫೆಲೆಸ್ತೀನಿಯನ್ ಕೈದಿಗಳ ಮೇಲೆ ಇಸ್ರೇಲ್ ಯೋಧರು ಚಿತ್ರಹಿಂಸೆ ನೀಡಿ ದೌರ್ಜನ್ಯ ಎಸಗುವುದನ್ನು ತೋರಿಸುವ ವೀಡಿಯೊ ಸೋರಿಕೆಯಾದ ಬೆನ್ನಲ್ಲೇ ಇಸ್ರೇಲ್ ಪೊಲೀಸರು ಮಿಲಿಟರಿಯ ಮಾಜಿ ಪ್ರಾಸಿಕ್ಯೂಟರ್ ಮೇಜರ್ ಜನರಲ್ ಯಿಫಾತ್ ತೊಮರ್-ಯೆರುಷಲ್ಮಿಯನ್ನು ಸೋಮವಾರ ತಡರಾತ್ರಿ ಬಂಧಿಸಿರುವುದಾಗಿ ವರದಿಯಾಗಿದೆ. ದಕ್ಷಿಣ ಇಸ್ರೇಲ್ನ ಎಸ್ಡೆ ತೈಮಾನ್ ಸೇನಾ ನೆಲೆಯಲ್ಲಿ ಬಂಧನದಲ್ಲಿರುವ ಫೆಲೆಸ್ತೀನಿಯನ್ ಕೈದಿಗಳಿಗೆ ನಿಂದನೆ, ಚಿತ್ರಹಿಂಸೆ ಸೇರಿದಂತೆ ದೌರ್ಜನ್ಯ ಎಸಗುತ್ತಿರುವುದು ಜೈಲಿನಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ ಅಸ್ಪಷ್ಟವಾಗಿ ಸೆರೆಯಾಗಿತ್ತು. ಈ ವೀಡಿಯೊವನ್ನು ಯಿಫಾತ್ ಯೆರುಷಲ್ಮಿ ಸೋರಿಕೆ ಮಾಡಿದ್ದರು ಎಂದು ಆರೋಪಿಸಲಾಗಿದ್ದು ಇದರ ವೀಡಿಯೊವನ್ನು ಇಸ್ರೇಲ್ನ ಚಾನೆಲ್ 12 ಪ್ರಸಾರ ಮಾಡಿತ್ತು.ಬಳಿಕ ಹಲವು ಮಾಧ್ಯಮಗಳೂ ಮರುಪ್ರಸಾರ ಮಾಡಿದ್ದು ಅಂತರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ವೀಡಿಯೊ ಸೋರಿಕೆ ಮಾಡಿದ ಆರೋಪದಲ್ಲಿ ಯಿಫಾತ್ ವಿರುದ್ಧ ಮತ್ತು ದೌರ್ಜನ್ಯ ಎಸಗಿದ ಆರೋಪದಲ್ಲಿ ಐವರು ಯೋಧರ ವಿರುದ್ಧ ಪ್ರಕರಣ ದಾಖಲಿಸಿ 2024ರ ಆಗಸ್ಟ್ನಲ್ಲಿ ವಿಚಾರಣೆ ಆರಂಭಗೊಂಡಿತ್ತು. ವೀಡಿಯೊ ತಮ್ಮ ಕಚೇರಿಯಿಂದಲೇ ಸೋರಿಕೆಯಾಗಿರುವುದನ್ನು ಒಪ್ಪಿಕೊಂಡ ಯಿಫಾತ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆಂದು ಅಕ್ಟೋಬರ್ 30ರಂದು ಇಸ್ರೇಲ್ ಮಿಲಿಟರಿ ಘೋಷಿಸಿದ ಬಳಿಕ ಯಿಫಾತ್ ನಾಪತ್ತೆಯಾಗಿದ್ದರು. ರವಿವಾರ ನಡೆದ ಕ್ಯಾಬಿನೆಟ್ ಸಭೆಯ ಬಳಿಕ ಮಾತನಾಡಿದ್ದ ಇಸ್ರೇಲ್ ಪ್ರಧಾನಿ ನೆತನ್ಯಾಹು `ಇದು ಇಸ್ರೇಲ್ನ ಇತಿಹಾಸದಲ್ಲೇ ಬಹುಶಃ ಅತ್ಯಂತ ತೀವ್ರವಾದ ಸಾರ್ವಜನಿಕ ಸಂಪರ್ಕ ದಾಳಿ'ಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಸೋಮವಾರ ತಡರಾತ್ರಿ ಯಿಫಾತ್ರನ್ನು ಬಂಧಿಸಲಾಗಿದ್ದು ಬುಧವಾರದವರೆಗೆ ಕಸ್ಟಡಿ ವಿಧಿಸಲಾಗಿದೆ ಎಂದು ವರದಿಯಾಗಿದೆ.
ಕಲಬುರಗಿ | ನವೆಂಬರ್ ತಿಂಗಳದಾದ್ಯಂತ 'ಮಕ್ಕಳ ಮಾಸವಾಗಿ' ಆಚರಣೆಗೆ ನಿರ್ಧಾರ : ಮಂಜುಳಾ ಪಾಟೀಲ್
ಕಲಬುರಗಿ: ರಾಷ್ಟ್ರೀಯ ದತ್ತು ಮಾಸಾಚರಣೆ ಅಭಿಯಾನದ ಅಂಗವಾಗಿ ಮಕ್ಕಳ ಮೇಲಿನ ದೌರ್ಜನ್ಯ, ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳ ಗರ್ಭಧಾರಣೆ, ಪೋಕ್ಸೋ ಪ್ರಕರಣಗಳು ಹೆಚ್ಚಲವಾಗುತ್ತಿರುವ ಹಿನ್ನೆಲೆ ಇದನ್ನು ತಡೆಗಟ್ಟಲು ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಗೆ ವಿಶೇಷ ಆದ್ಯತೆ ನೀಡಲು ನವೆಂಬರ್ ತಿಂಗಳನ್ನು “ಮಕ್ಕಳ ಮಾಸವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾಧಿಕಾರಿ ಮಂಜುಳಾ ಪಾಟೀಲ್ ಹೇಳಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ. ತಿಪ್ಪೇಸ್ವಾಮಿ ಅವರ ಸಲಹೆ ಮತ್ತು ಮಕ್ಕಳ ರಕ್ಷಣಾ ನಿರ್ದೇಶನಾಲಯದ ಸೂಚನೆಯಂತೆ ಸ್ವಯಂಸೇವಾ ಸಂಸ್ಥೆಗಳ ಸಹಯೋಗದದೊಂದಿಗೆ ಇಡೀ ನವೆಂಬರ್ ತಿಂಗಳು ಕಲಬುರಗಿ ಜಿಲ್ಲೆಯಾದ್ಯಂತ ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಕ್ರಿಯಾ ಯೋಜನೆ ರೂಪಿಸಿಕೊಂಡು ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲಾಗುತ್ತಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಭಾಗವಾಗಿ ಮಕ್ಕಳ ಹಕ್ಕುಗಳ ಗ್ರಾಮ ಸಭೆಗಳು, ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ್ ಅಭಿಯಾನ, ಬಾಲಕಾರ್ಮಿಕರು ಹಾಗೂ ಶಾಲೆ ಬಿಟ್ಟ ಮಕ್ಕಳ ಗುರುತಿಸುವಿಕೆ ಮತ್ತು ರಕ್ಷಣೆ, ಮಕ್ಕಳ ರಕ್ಷಣಾ ಬಲವರ್ಧನೆ, ಶೈಕ್ಷಣಿಕ ಸಂಸ್ಥೆಗಳಲ್ಲಿ ಮಕ್ಕಳ ರಕ್ಷಣಾ ನೀತಿ-2016, ತೆರೆದ ಮನೆ ಕಾರ್ಯಕ್ರಮದ ಅನುಷ್ಠಾನ, ಅನಾಥ ಹಾಗೂ ಸಂಕಷ್ಟದಲ್ಲಿನ ಮಕ್ಕಳ ಗುರುತಿಸುವಿಕೆ, ಮಕ್ಕಳ ಸಹಾಯವಾಣಿ ಹಾಗೂ ದತ್ತು ಕಾರ್ಯಕ್ರಮದ ಪ್ರಚಾರ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಈಗಾಗಲೇ ಕೆಲ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಮಂಜುಳಾ ರೆಡ್ಡಿ, ಈಶ್ವರ್, ಆನಂದ, ಬಸವರಾಜ್ ತೆಂಗಳಿ, ಭರತೇಶ, ಆನಂದ, ಬಸವರಾಜ್ ಕರಡ್ಕಲ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ರಾಯಚೂರು | ಮದ್ಯ ಸೇವಿಸಿ ಶಾಲೆಗೆ ಬರುವ ಮುಖ್ಯೋಪಾಧ್ಯಾಯರ ವಿರುದ್ಧ ಕ್ರಮಕ್ಕೆ ಗ್ರಾಮಸ್ಥರ ಮನವಿ
ರಾಯಚೂರು: ಮಾನ್ವಿ ತಾಲ್ಲೂಕಿನ ಜಾನೇಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಮದ್ಯ ಸೇವಿಸಿ ಶಾಲೆಗೆ ಬಂದು ಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆಂದು ಆರೋಪಿಸಿ, ಗ್ರಾಮಸ್ಥರು ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಸ್ಥಳೀಯರ ಮಾಹಿತಿ ಪ್ರಕಾರ, ಶಾಲೆಯ ಮುಖ್ಯೋಪಾಧ್ಯಾಯ ಕಂಪಳಪ್ಪ ಅವರು ಶಾಲಾ ಸಮಯದಲ್ಲೇ ಮದ್ಯಪಾನದ ಅಮಲಿನಲ್ಲಿ ವಿದ್ಯಾರ್ಥಿಗಳೊಂದಿಗೆ ಅಸಭ್ಯವಾಗಿ ಮಾತನಾಡಿ, ಶಿಸ್ತಿನ ಉಲ್ಲಂಘನೆ ಮಾಡುತ್ತಿದ್ದಾರೆ. ಬೆಳಿಗ್ಗೆ ಹಾಜರಾತಿ ಹಾಕಿಕೊಂಡ ನಂತರ ಶಾಲೆಯಲ್ಲೇ ಉಳಿಯದೆ ಹೊರ ಹೋಗುವ ಅಭ್ಯಾಸವೂ ಇದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಗ್ರಾಮಸ್ಥರು ಈ ವಿಚಾರದಲ್ಲಿ ಅನೇಕ ಬಾರಿ ಎಚ್ಚರಿಕೆ ನೀಡಿದ್ದರೂ ವರ್ತನೆಯಲ್ಲಿ ಸುಧಾರಣೆ ಆಗಿಲ್ಲವೆಂದು ವಿಷಾದ ವ್ಯಕ್ತಪಡಿಸಿದ್ದಾರೆ. ಶಾಲೆಯ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಹಿತಕ್ಕಾಗಿ ಕೈಗೊಳ್ಳುತ್ತಿರುವ ಗ್ರಾಮಸ್ಥರ ಪ್ರಯತ್ನಗಳಿಗೆ ಸಹಕಾರ ನೀಡದೆ ತಿರಸ್ಕರಿಸುವ ಮನಸ್ಥಿತಿ ತೋರಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಮನವಿ ಸಲ್ಲಿಕೆಯಲ್ಲಿ ಗ್ರಾಮಸ್ಥರಾದ ಕೊಂಡಯ್ಯ, ಬಸವರಾಜ, ವೀರೇಶ್, ಗೋಪಾಲ ಸೇರಿದಂತೆ ಅನೇಕರು ಹಾಜರಿದ್ದರು.
ನವೆಂಬರ್ ಕ್ರಾಂತಿ ನಾಟಕ ಬಿಟ್ಟು ರಸ್ತೆ ಗುಂಡಿ ಮುಚ್ಚಿ : ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು : ‘ಸಚಿವ ಸಂಪುಟ ಪುನರ್ ರಚನೆ, ಅಧಿಕಾರ ಹಸ್ತಾಂತರ, ನವೆಂಬರ್ ಕ್ರಾಂತಿ’ ನಾಟಕಗಳನ್ನು ಬಿಟ್ಟು, ರಸ್ತೆ ಗುಂಡಿಗಳನ್ನು ಮುಚ್ಚಲು ಕೂಡಲೇ ಕ್ರಮ ಕೈಗೊಳ್ಳಬೇಕು’ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. ಮಂಗಳವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬಹುಮತವಿದ್ದರೂ, ಬೀದಿನಾಟಕ ಮಾಡುತ್ತಿರುವುದೇಕೆ?. ಬಹುಮತ ಇದ್ದಾಗ ರಾಜ್ಯದ ಜನರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಪರಿಹಾರಕ್ಕೆ ಉತ್ತಮ ಅವಕಾಶ. ಆದರೆ, ಕೆಲಸ ಮಾಡದೆ ಮನಸೋ ಇಚ್ಛೆ ಚರ್ಚೆಯಲ್ಲಿ ತೊಡಗಿದ್ದಾರೆ’ ಎಂದು ದೂರಿದರು. ಮುಖ್ಯಮಂತ್ರಿ ಬದಲಾವಣೆ ಸೇರಿದಂತೆ ಏನಾದರೂ ಮಾಡಿಕೊಳ್ಳಿ. ಅದನ್ನು ನಾವು ಅದನ್ನು ಕೇಳುತ್ತಿಲ್ಲ, ಸಂಪುಟ ಪುನರ್ ರಚನೆ ಹಬ್ಬದಂತೆ ಮಾಡದಿರಿ. ಅದು ಜನರಿಗೆ ಬೇಕಾಗಿಲ್ಲ. ನಮಗೆ ಬೇಕಾಗಿರುವುದು ಜನರ ಸಮಸ್ಯೆಗೆ ಪರಿಹಾರ. ಗುಂಡಿ ಮುಚ್ಚಲಾಗದೇ ಇವರು ಈ ಹಿಂದೆ ಆಡಳಿತದಲ್ಲಿ ಬಿಜೆಪಿ ಸರಕಾರವನ್ನು ದೂರುವುದು ಸರಿಯಲ್ಲ ಎಂದು ಅವರು ಆಕ್ಷೇಪಿಸಿದರು. ಬಿಜೆಪಿ ಮೊದಲಿನಿಂದಲೂ ರೈತಪರ ನಿಲುವನ್ನು ತೆಗೆದುಕೊಂಡಿದೆ. ಕಾಂಗ್ರೆಸ್ಸಿನ ರೈತ ವಿರೋಧಿ ನೀತಿಯನ್ನು ಖಂಡಿಸುವುದಲ್ಲದೇ ವಿರೋಧಿಸುತ್ತೇವೆ. ಅತಿವೃಷ್ಟಿ ಆದಾಗ ಎಲ್ಲರಿಗಿಂತ ಮೊದಲು ನಾವೇ ಹೋಗಿದ್ದೇವೆ. ವಿಜಯೇಂದ್ರ, ನಾನು ಮತ್ತು ಆರ್.ಅಶೋಕ್ ಅವರು ತೆರಳಿದ್ದೇವೆ. ನಾವು ಹೋಗುವ ವರೆಗೆ ಸರಕಾರ ಎಚ್ಚತ್ತುಕೊಂಡಿರಲಿಲ್ಲ ಎಂದು ಅವರು ಟೀಕಿಸಿದರು.
ಪುತ್ರಿಯ ಅಂತ್ಯಸಂಸ್ಕಾರಕ್ಕೆ ಅಡಿಗಡಿಗೂ ಲಂಚ ಪಡೆದ ಕೇಸ್: ಬೆಳ್ಳಂದೂರು ಇನ್ಸ್ಪೆಕ್ಟರ್ ಸಸ್ಪೆಂಡ್
ಮಿದುಳು ನಿಷ್ಕ್ರಿಯತೆಯಿಂದ ಮೃತಪಟ್ಟ ಯುವತಿಯ ಪ್ರಕರಣದಲ್ಲಿ ಲಂಚ ಪಡೆದ ಆರೋಪದ ಮೇಲೆ ಬೆಳ್ಳಂದೂರು ಠಾಣೆ ಇನ್ಸ್ಪೆಕ್ಟರ್ ರಮೇಶ್ ರೊಟ್ಟಿ ಅವರನ್ನು ಅಮಾನತುಗೊಳಿಸಲಾಗಿದೆ. ಮರಣೋತ್ತರ ಪರೀಕ್ಷೆ ಮತ್ತು ಇತರ ಕಾನೂನು ಪ್ರಕ್ರಿಯೆಗಳಿಗೆ ಲಂಚ ಪಡೆದಿದ್ದಾಗಿ ಯುವತಿಯ ತಂದೆ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿ ಈ ಕ್ರಮ ಕೈಗೊಳ್ಳಲಾಗಿದೆ.
ಬಾಂಗ್ಲಾದೇಶದ ಶಾಲೆಗಳಲ್ಲಿ ಸಂಗೀತ, ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ ರದ್ದು
ಢಾಕಾ, ನ.4: ಸರಕಾರಿ ಸ್ವಾಮ್ಯದ ಪ್ರಾಥಮಿಕ ಶಾಲೆಗಳಲ್ಲಿ ಸಂಗೀತ ಮತ್ತು ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನು ಬಾಂಗ್ಲಾದೇಶದ ಮಧ್ಯಂತರ ಸರಕಾರ ರದ್ದುಗೊಳಿಸಿರುವುದಾಗಿ ವರದಿಯಾಗಿದೆ. ಹೊಸ ನೇಮಕಾತಿ ನಿಯಮಗಳ ಪ್ರಕಾರ ಸಂಗೀತ ಮತ್ತು ದೈಹಿಕ ಶಿಕ್ಷಣಕ್ಕಾಗಿ ಶಿಕ್ಷಕರನ್ನು ನೇಮಕ ಮಾಡುವ ಅಗತ್ಯವಿರುವುದಿಲ್ಲ ಎಂದು ಪ್ರಾಥಮಿಕ ಮತ್ತು ಸಾಮಾನ್ಯ ಶಿಕ್ಷಣ ಇಲಾಖೆ ಘೋಷಿಸಿದೆ. ಕಳೆದ ಆಗಸ್ಟ್ನಲ್ಲಿ ಇಲಾಖೆ ಹೊರಡಿಸಿದ ನೇಮಕಾತಿ ಅಧಿಸೂಚನೆಯಲ್ಲಿ ಸಂಗೀತ ಮತ್ತು ದೈಹಿಕ ಶಿಕ್ಷಕರ ನೇಮಕಾತಿಯೂ ಸೇರಿತ್ತು. ಇದನ್ನು ವಿರೋಧಿಸಿ ಧಾರ್ಮಿಕ ಗುಂಪುಗಳು ಪ್ರತಿಭಟನೆ ನಡೆಸಿದ್ದವು. ಇದೀಗ ತಿದ್ದುಪಡಿ ಮಾಡಿದ ಹೊಸ ನಿಯಮಗಳಲ್ಲಿ ಇದು ಸೇರಿಲ್ಲ ಎಂದು ಇಲಾಖೆಯ ಸಚಿವ ಮಸೂದ್ ಅಖ್ತರ್ಖಾನ್ ಹೇಳಿದ್ದಾರೆ.
ಕಲಬುರಗಿ | ವಿದ್ಯುತ್ ದರ ಪರಿಷ್ಕರಣೆ : ಕೆಇಆರ್ಸಿಯಿಂದ ನ.12ರಂದು ಸಾರ್ವಜನಿಕ ಅಭಿಪ್ರಾಯ ಸಭೆ
ಕಲಬುರಗಿ: ಜೆಸ್ಕಾಂ ಸಂಸ್ಥೆಯಿಂದ ವಿದ್ಯುತ್ ದರ ಪರಿಷ್ಕರಣೆಗೆ ಪ್ರಸ್ತಾವನೆ ಸಲ್ಲಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಇದೇ ನ. 12 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಆಯೋಗದ ನ್ಯಾಯಾಲಯದ ಸಭಾಂಗಣದಲ್ಲಿ ಭೌತಿಕ ಮತ್ತು ಆನ್ಲೈನ್ ಎರಡು ವಿಧಾನದ ಮೂಲಕ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಣಾ ಸಭೆ ನಡೆಯಲಿದೆ. ನೀರಾವರಿ ಪಂಪ್ ಸೆಟ್ಗಳು, ವಾಣಿಜ್ಯ ಮತ್ತು ಕೈಗಾರಿಕಾ ಗ್ರಾಹಕ ವರ್ಗಗಳಿಗೆ ಸಂಬಂಧಿಸಿದಂತೆ (ಜಕಾತಿ ಆದೇಶ-2025)ರ ಜಕಾತಿ ದರಗಳಲ್ಲಿ ಮಾರ್ಪಾಡು ಕೋರಿ ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಂಗಳು) ಸಲ್ಲಿಸಿದ ಪರಿಶೀಲನಾ ಅರ್ಜಿ (RP-08 of 2025) ಗೆ ಸಂಬಂಧಿಸಿದಂತೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು ಸಾರ್ವಜನಿಕ ವಿಚಾರಣೆಯನ್ನು ನಡೆಸಲಿದೆ. ಆನ್ಲೈನ್ ಮೂಲಕ ಅಹವಾಲು ಸಭೆಯಲ್ಲಿ ಭಾಗವಹಿಸಲು ಇಚ್ಛಿಸುವರು ತಮ್ಮ ಹೆಸರು, ಇಮೇಲ್ ಐಡಿ ಮತ್ತು ದೂರವಾಣಿ ಸಂಖ್ಯೆಗಳನ್ನು ಆಯೋಗದ ಇ-ಮೇಲ್ ಐಡಿ asst.secykerc@gmail.com ಗೆ ಇದೇ ನ.10 ರಂದು ಅಥವಾ ಅದಕ್ಕೂ ಮೊದಲು ಬೆಳಿಗ್ಗೆ 11 ರಿಂದ ಸಂಜೆ 5 ಗಂಟೆಯ ಒಳಗಡೆ ಕಳುಹಿಸುವ ಮೂಲಕ ಹೆಸರು ನೊಂದಾಯಿಸಬೇಕು. ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಗು.ವಿ.ಸ.ಕಂ.ನಿ) ವ್ಯಾಪ್ತಿಗೆ ಬರುವ ಆಸಕ್ತ ಪಾಲುದಾರರು/ ಸಾರ್ವಜನಿಕರು ವಿಚಾರಣೆಗೆ ಖುದ್ದಾಗಿ ಭಾಗವಹಿಸಲು ಇಚ್ಛಿಸುವರು ಕಲಬುರಗಿಯ ಜೆಸ್ಕಾಂ ನಿಗಮ ಕಚೇರಿಯ ನೆಲ ಮಹಡಿಯಲ್ಲಿ ವರ್ಚುವಲ್ ಸಭೆಯಲ್ಲಿ ಭಗಾವಹಿಸಲು ಅವಕಾಶ ಕಲ್ಪಿಸಿದ್ದು, ಇಲ್ಲಿ ಸಾರ್ವಜನಿಕ ವಿಚಾರಣೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ಜೆಸ್ಕಾಂ ಕಾರ್ಯಚರಣೆ ವಿಭಾಗದ ಮುಖ್ಯ ಅಭಿಯಂತರರು (ವಿದ್ಯುತ್) ತಿಳಿಸಿದ್ದಾರೆ.
ರಾಯಚೂರು | 2023ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಜಿಲ್ಲಾಧಿಕಾರಿ ಖಾತೆಗೆ ಹಣ ಬಿಡುಗಡೆ
ರಾಯಚೂರು : ಅತ್ಯುನ್ನತ ಸೇವೆ, ಸಾಧನೆಗೈದ ರಾಜ್ಯ ಸರ್ಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ನೀಡಲು ಸರ್ಕಾರವು ತೀರ್ಮಾನಿಸಿದ್ದು, ಇಲಾಖೆ ಮತ್ತು ಜಿಲ್ಲಾ ಮಟ್ಟದ ಪ್ರಶಸ್ತಿಗಳನ್ನು ನೀಡಲು ತೀರ್ಮಾನಿಸಿ ಸರ್ಕಾರದಿಂದ ಆದೇಶಿಸಲಾಗಿತ್ತು. ರಾಜ್ಯ ಸರ್ಕಾರದ ರಾಜ್ಯ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಸಂಬಂಧಿಸಿದಂತೆ, ಹಲವಾರು ಮಾರ್ಪಾಡು ಮಾಡಿ ಹೊಸ ಮಾರ್ಗಸೂಚಿಗಳನ್ನು ಒಳಗೊಂಡ ಆದೇಶಗಳನ್ನು ಹೊರಡಿಸಲಾಗಿದೆ. 2022ನೇ ಸಾಲಿನಿಂದ ಅನ್ವಯಿಸುವಂತೆ ಜಿಲ್ಲಾ ಮಟ್ಟದ ಸೇವಾ ಪ್ರಶಸ್ತಿಯ ಮೊತ್ತವನ್ನು ಪ್ರತಿ ಪ್ರಶಸ್ತಿಗೆ 25,000 ರೂ.ಗಳ ಮೊತ್ತವನ್ನು ನೀಡಲು ತೀರ್ಮಾನಿಸಲಾಗಿದೆ. 2023ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನಾಗಿ ಎ.21ರಂದು ಆಚರಿಸುವ ಕಾರ್ಯಕ್ರಮವನ್ನು ಜಿಲ್ಲಾಡಳಿತವು ಆಯೋಜಿಸಲು, ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಅನುದಾನವನ್ನು ಬಿಡುಗಡೆ ಮಾಡಿ ಆದೇಶಿಸಲಾಗಿದೆ. 2023ನೇ ಸಾಲಿಗೆ ಸಂಬಂಧಿಸಿದ ಸರ್ವೋತ್ತಮ ಸೇವಾ ಪ್ರಶಸ್ತಿ ಮೊತ್ತವನ್ನು ಲಭ್ಯವಿರುವ ಮೊತ್ತದಿಂದ ಭರಿಸುವುದು ಹಾಗೂ ಆಯ್ಕೆ ಸಮಿತಿಯ ನಡವಳಿಯೊಂದಿಗೆ ಇತರೆ ವಿವರಗಳನ್ನು ಸರ್ಕಾರಕ್ಕೆ ಸಲ್ಲಿಸಿದಲ್ಲಿ ಮೊತ್ತವನ್ನು ನಂತರ ಸರ್ಕಾರದಿಂದ ಬರಿಸಲಾಗುವುದು ಎಂದು ಆದೇಶಿಸಿದ್ದಾರೆ. 2023ನೇ ಸಾಲಿಗೆ ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡುವ ಸಂಬಂಧ 22 ಜಿಲ್ಲೆಗಳು ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ನಡೆವಳಿಯನ್ನು ಕಳುಹಿಸಿ ಪ್ರಸ್ತಾವನೆಯಲ್ಲಿ ವಿವರಿಸಲಾಗಿದೆ. ಜಿಲ್ಲೆಯಲ್ಲಿ ಅತ್ಯುತ್ತಮ ಸರ್ವೋತ್ತಮ ಸೇವಾ ಪ್ರಶಸ್ತಿಗೆ 10 ಜನರಿಗೆ ತಲಾ 25 ಸಾವಿರದಂತೆ ಒಟ್ಟು 2.50 ಲಕ್ಷ ರೂ, ಮೊತ್ತ ಒಳಗೊಂಡಿದೆ. ಎಂದು ಆಡಳಿತ ಸುಧಾರಣೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಕಲ್ಪನಾ ತಿಳಿಸಿದ್ದಾರೆ.
ಕಲಬುರಗಿ | ತಳವಾರ, ಪರಿವಾರ ಸಮಾಜಕ್ಕೆ ಎಸ್ಟಿ ಪ್ರಮಾಣ ಪತ್ರ ನೀಡಿ : ಚಂದ್ರಕಾಂತ ತಳವಾರ ಆಗ್ರಹ
ಕಲಬುರಗಿ : ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ತಳವಾರ ಹಾಗೂ ಪರಿವಾರ ಸಮುದಾಯದವರಿಗೆ ಕಳೆದ ಏಳು ತಿಂಗಳಿಂದ ಎಸ್ಟಿ ಪ್ರಮಾಣ ಪತ್ರ ಕೊಡುತ್ತಿಲ್ಲ, ಇದರಿಂದ ಸಾವಿರಾರು ಮಂದಿ ಇಕ್ಕಟ್ಟಿಗೆ ಸಿಲುಕಿಸಿದಂತಾಗಿದೆ. ಕೂಡಲೇ ಎಸ್ಟಿ ಪ್ರಮಾಣ ಪತ್ರ ನೀಡಬೇಕೆಂದು ಕರ್ನಾಟಕ ರಾಜ್ಯ ತಳವಾರ ಮಹಾಸಭಾ ಜಿಲ್ಲಾಧ್ಯಕ್ಷ ಚಂದ್ರಕಾಂತ ತಳವಾರ ಆಗ್ರಹಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರವು ತಳವಾರ, ಪರಿವಾರ ಹಾಗೂ ಸಿದ್ಧಿ ಸಮುದಾಯಗಳಿಗೆ ಮೀಸಲಾತಿ ನೀಡುವಂತೆ ಈಗಾಗಲೇ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದೆ. ಅದರಂತೆಯೇ 2020ರಿಂದ ತಳವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣ ಪತ್ರ ನೀಡಲಾಗಿದೆ. ಆದರೆ ಕಳೆದ 7 ತಿಂಗಳಿಂದ ಜಿಲ್ಲೆಯಲ್ಲಿ ಪ್ರಮಾಣ ಪತ್ರ ವಿತರಿಸುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಜಾತಿ ಪ್ರಮಾಣ ಪತ್ರ ಕೊಡದೆ ಇರುವುದರಿಂದ ವಿದ್ಯಾರ್ಥಿಗಳು ಶಾಲೆಗೆ ದಾಖಲಾಗಲು ತೊಂದರೆಯಾಗುತ್ತಿದೆ. ನೌಕರರಿಗಾಗಿ ಪ್ರಮಾಣ ಪತ್ರ ಸಲ್ಲಿಸಲು ಸಾಧ್ಯವಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮಹಾಸಭಾದ ಜಿಲ್ಲಾ ಕಾರ್ಯದರ್ಶಿ ರಾಜೇಂದ್ರ ರಾಜವಾಳ ಮಾತನಾಡಿ, ಅಧಿಕಾರಿಗಳು ಎಸ್ಟಿ ಪ್ರಮಾಣ ಪತ್ರ ನೀಡದಿರುವ ಬಗ್ಗೆ ಅನೇಕ ಸಲ ಉಸ್ತುವಾರಿ ಸಚಿವರನ್ನು ಭೇಟಿಗಾಗಿ ಸಮಯ ಕೇಳಿದ್ದೇವೆ, ಅವರು ಈವರೆಗೆ ನಮಗೆ ಅವಕಾಶ ಕೊಟ್ಟಿಲ್ಲ. ತಳವಾರರಿಗೆ ನೀಡುವ ಪ್ರಮಾಣ ಪತ್ರ ಹಾಗೂ ಕೋಲಿ ಕಬ್ಬಲಿಗ ಜಾತಿಗಳನ್ನು ಒಂದೇ ವೇದಿಕೆಯಲ್ಲಿ ಸೇರಿಸಿ ಗೊಂದಲ ಸೃಷ್ಟಿ ಮಾಡುತ್ತಿರುವುದು ಕಾಣುತ್ತಿದೆ, ಇದನ್ನ ಮಾಡಲು ಯತ್ನಿಸಬಾರದು ಎಂದು ಅವರು ಹೇಳಿದ್ದಾರೆ. ಕೂಡಲೇ ತಳವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣ ಪತ್ರ ನೀಡದೆ ಹೋದಲ್ಲಿ ಶೀಘ್ರದಲ್ಲೇ ಹೋರಾಟ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ರಾಜು ತಳವಾರ, ಶರಣು, ಗಿರೀಶ ತುಂಬಗಿ, ಗುರುನಾಥ ಹಾವನೂರು, ಚಂದ್ರಕಾಂತ ನಡಗಟ್ಟಿ, ಬೆಳ್ಳೆಪ್ಪ ಇಂಗನಕಲ್ಲ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ರಣಜಿ| ಕೇರಳ ವಿರುದ್ಧ ಕರ್ನಾಟಕ ತಂಡಕ್ಕೆ ಭರ್ಜರಿ ಜಯ
ತಿರುವನಂತಪುರ, ನ.4: ಆತಿಥೇಯ ಕೇರಳ ಕ್ರಿಕೆಟ್ ತಂಡವನ್ನು ಇನಿಂಗ್ಸ್ ಹಾಗೂ 164 ರನ್ಗಳ ಅಂತರದಿಂದ ಮಣಿಸಿರುವ ಕರ್ನಾಟಕ ತಂಡವು ಈ ವರ್ಷ ರಣಜಿ ಟ್ರೋಫಿ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆದಿದೆ. ಮೊದಲೆರಡು ಸುತ್ತಿನ ಪಂದ್ಯದಲ್ಲಿ ಕರ್ನಾಟಕ ತಂಡವು ಸೌರಾಷ್ಟ್ರ ಹಾಗೂ ಗೋವಾ ತಂಡಗಳ ವಿರುದ್ಧ ಡ್ರಾ ಸಾಧಿಸಿತ್ತು. ರಣಜಿ ಟೂರ್ನಿಯ ‘ಬಿ’ ಗುಂಪಿನ 3ನೇ ಸುತ್ತಿನ ಪಂದ್ಯದ 4ನೇ ಹಾಗೂ ಕೊನೆಯ ದಿನವಾದ ಮಂಗಳವಾರ ಬಲಗೈ ಆಫ್-ಸ್ಪಿನ್ನರ್ ಮುಹ್ಸಿನ್ ಖಾನ್ ಚೊಚ್ಚಲ ಐದು ವಿಕೆಟ್ ಗೊಂಚಲು(6-29)ಕಬಳಿಸಿ ಕರ್ನಾಟಕದ ಭರ್ಜರಿ ಗೆಲುವಿಗೆ ಮಹತ್ವದ ಕೊಡುಗೆ ನೀಡಿದರು. ವೇಗದ ಬೌಲರ್ ವಿದ್ವತ್ ಕಾವೇರಪ್ಪ (2-28)ಬೆಳಗ್ಗಿನ ಅವಧಿಯಲ್ಲಿ ಹೊಸ ಚೆಂಡಿನಲ್ಲಿ ಅತ್ಯುತ್ತಮ ಬೌಲಿಂಗ್ ಮಾಡಿ ಕೇರಳ ತಂಡವನ್ನು ಕಾಡಿದರು. ಬೌನ್ಸ್ ಆಗುತ್ತಿದ್ದ ಪಿಚ್ನಲ್ಲಿ ಮುಹ್ಸಿನ್ ಅವರ ನಿಖರ ಬೌಲಿಂಗ್ಗೆ ಕೇರಳದ ಬ್ಯಾಟರ್ಗಳು ನಿರುತ್ತರವಾದರು. ಬೆರಳು ನೋವಿನೊಂದಿಗೆ ಆಡಿದ ಕೊನೆಯ ಆಟಗಾರ ಏಡೆನ್ ಟಾಮ್(ಔಟಾಗದೆ 39 ರನ್, 68 ಎಸೆತಗಳು)ಹಾಗೂ ಚೊಚ್ಚಲ ಪಂದ್ಯವನ್ನಾಡಿದ ಎಂ.ಯು. ಹರಿಕೃಷ್ಣನ್(6ರನ್, 94 ಎಸೆತಗಳು)10ನೇ ವಿಕೆಟ್ ಜೊತೆಯಾಟದಲ್ಲಿ ಸುಮಾರು 23 ಓವರ್ಗಳಲ್ಲಿ 44 ರನ್ ಸೇರಿಸಿ ಕರ್ನಾಟಕ ತಂಡದ ಗೆಲುವನ್ನು ವಿಳಂಬಗೊಳಿಸಿದರು. ವಿದ್ವತ್ ಕಾವೇರಪ್ಪ ತನ್ನ ಮೊದಲ ಓವರ್ನಲ್ಲಿ ಎರಡು ವಿಕೆಟ್ಗಳನ್ನು ಉರುಳಿಸಿ ತಂಡದ ಗೆಲುವಿಗೆ ನಾಂದಿ ಹಾಡಿದರು. ಬದಲಿ ಆರಂಭಿಕ ಆಟಗಾರ ಎಂ.ಡಿ. ನಿದೀಶ್(9 ರನ್)ಕರುಣ್ ನಾಯರ್ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಅಕ್ಷಯ್ ಚಂದ್ರನ್ ಶೂನ್ಯಕ್ಕೆ ಕ್ಲೀನ್ಬೌಲ್ಡಾದರು. ಆಗ ಕೇರಳ ತಂಡ 19 ರನ್ಗೆ 2 ವಿಕೆಟ್ಗಳನ್ನು ಕಳೆದುಕೊಂಡಿತು. ಕೇರಳದ ನಾಯಕ ಮುಹಮ್ಮದ್ ಅಝರುದ್ದೀನ್(15 ರನ್)ಸಕಾರಾತ್ಮಕ ಆರಂಭ ಪಡೆದರು. ಆದರೆ, ಶಿಖರ್ ಶೆಟ್ಟಿ ಎಸೆತವನ್ನು ಎದುರಿಸುವ ಭರದಲ್ಲಿ ವಿಕೆಟ್ಕೀಪರ್ ಕೆ.ಶ್ರೀಜಿತ್ಗೆ ವಿಕೆಟ್ ಒಪ್ಪಿಸಿದರು. ಆರಂಭಿಕ ಆಟಗಾರ ಕೃಷ್ಣ ಪ್ರಸಾದ್ ಹಾಗೂ ಅಹ್ಮದ್ ಇಮ್ರಾನ್ 4ನೇ ವಿಕೆಟ್ಗೆ 57 ರನ್ ಜೊತೆಯಾಟ ನಡೆಸಿ ಒಂದಷ್ಟು ಪ್ರತಿರೋಧ ಒಡ್ಡಿದರು. ಮುಹ್ಸಿನ್ ಖಾನ್ ಅವರು ಪ್ರಸಾದ್(33ರನ್)ಹಾಗೂ ಇಮ್ರಾನ್(23 ರನ್)ವಿಕೆಟ್ಗಳನ್ನು ಬೆನ್ನುಬೆನ್ನಿಗೆ ಉರುಳಿಸಿ ಕೇರಳ ತಂಡವು 106 ರನ್ಗೆ 5ನೇ ವಿಕೆಟ್ ಕಳೆದುಕೊಳ್ಳುವಂತೆ ಮಾಡಿದರು. ಬಿ.ಅಪರಾಜಿತ್(19 ರನ್) ಹಾಗೂ ಸಚಿನ್ ಬೇಬಿ ಸ್ಪಿನ್ನರ್ಗಳ ವಿರುದ್ಧ ಎಚ್ಚರಿಕೆಯಿಂದ ಆಡಿದರು. ಆದರೆ ಬೇಬಿ(12 ರನ್) ವಿಕೆಟನ್ನು ಪಡೆದ ಮುಹ್ಸಿನ್ ಈ ಇಬ್ಬರ ಜೊತೆಯಾಟವನ್ನು ಮುರಿದರು. ಮತ್ತೊಂದು ಕ್ಷಿಪ್ರ ಎಸೆತದ ಮೂಲಕ ಶಾನ್ ರೋಜರ್(0) ವಿಕೆಟನ್ನು ಮುಹ್ಸಿನ್ ಉರುಳಿಸಿದರು. ಆದರೆ ಬಾಲಂಗೋಚಿಗಳಾದ ಏಡೆನ್ ಟಾಮ್ ಹಾಗೂ ಹರಿಕೃಷ್ಣನ್ ಭೋಜನ ವಿರಾಮದ ಬಳಿಕವೂ ಬ್ಯಾಟಿಂಗ್ ಮುಂದುವರಿಸಿ ಕೇರಳದ ಸೋಲಿನ ಅಂತರವನ್ನು ಸ್ವಲ್ಪಮಟ್ಟಿಗೆ ಕಡಿಮೆಗೊಳಿಸಿದರು. ಕರ್ನಾಟಕದ ಮೊದಲ ಇನಿಂಗ್ಸ್ನಲ್ಲಿ 233 ರನ್ ಗಳಿಸಿದ್ದ ಕರುಣ್ ನಾಯರ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಸಂಕ್ಷಿಪ್ತ ಸ್ಕೋರ್ ಕರ್ನಾಟಕ ಮೊದಲ ಇನಿಂಗ್ಸ್: 586/5 ಡಿಕ್ಲೇರ್ ಕೇರಳ ಮೊದಲ ಇನಿಂಗ್ಸ್: 238 ರನ್ಗೆ ಆಲೌಟ್ ಕೇರಳ ಎರಡನೇ ಇನಿಂಗ್ಸ್: 79.3 ಓವರ್ಗಳಲ್ಲಿ 184 ರನ್ಗೆ ಆಲೌಟ್ (ಕೃಷ್ಣ ಪ್ರಸಾದ್ 33, ಏಡೆನ್ ಟಾಮ್ ಔಟಾಗದೆ 39, ಅಹ್ಮದ್ ಇಮ್ರಾನ್ 23, ಅಪರಾಜಿತ್ 19, ಮುಹ್ಸಿನ್ ಖಾನ್ 6-29, ವಿದ್ವತ್ ಕಾವೇರಪ್ಪ 2-28) ಪಂದ್ಯಶ್ರೇಷ್ಠ: ಕರುಣ್ ನಾಯರ್.
ಬೀದರ್: ಭಾರತ ದೇಶ ಅಷ್ಟೇ ಅಲ್ಲದೆ ವಿದೇಶದಲ್ಲಿಯೂ ಸಹ ಶಿಕ್ಷಣ ಸಂಸ್ಥೆಯನ್ನು ಕಟ್ಟಿ, ಅದನ್ನ ಬೆಳೆಸುವಂತಹ ಶಕ್ತಿ ಇರುವ ಉತ್ತರ ಕರ್ನಾಟಕ ಭಾಗದ ಏಕೈಕ ವ್ಯಕ್ತಿ ಎಂದರೆ ಅದು ಡಾ.ಅಬ್ದುಲ್ ಖದೀರ್ ಅವರು ಮಾತ್ರ ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದೇವರು ತಿಳಿಸಿದರು. ಇಂದು ನಗರದ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ನಡೆದ ಶಾಹೀನ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಡಾ.ಅಬ್ದುಲ್ ಖದೀರ್ ಅವರಿಗೆ ಅಲಿಘಡ್ ಮುಸ್ಲಿಂ ವಿಶ್ವವಿದ್ಯಾಲಯದಿಂದ ಪ್ರತಿಷ್ಠಿತ ರಾಷ್ಟ್ರೀಯ ಶ್ರೇಷ್ಠ ಪ್ರಶಸ್ತಿ ಬಂದ ಹಿನ್ನೆಲೆ ಅಭಿನಂದನಾ ಸಮಾರಂಭ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು. ಅಬ್ದುಲ್ ಖದೀರ್ ಅವರ ನೇತೃತ್ವದಲ್ಲಿ ಶಾಹೀನ್ ಸಂಸ್ಥೆಯು ಬಸವಣ್ಣನ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಂಡು ಬಡವರಿಗೆ, ಹಿಂದುಳಿದವರಿಗೆ, ಶೋಷಿತ ಸಮುದಾಯಗಳ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿದೆ ಎಂದು ನುಡಿದರು. ಖದೀರ್ ಅವರು ಹಿಂದೂ ಮುಸ್ಲಿಂ ಸಮುದಾಯಗಳ ನಡುವೆ ಸೇತುವೆಯಂತೆ ಕೆಲಸ ಮಾಡುತ್ತಿದ್ದಾರೆ. ಗುಟ್ಕಾ, ಸಿಗರೇಟ್ ಸೇರಿದಂತೆ ಮಾದಕ ವಸ್ತುಗಳು ನಿಷೇಧವಾಗಬೇಕು. ಆಡಂಬರದ ಮದುವೆ ಹಾಗೂ ಕಾರ್ಯಕ್ರಮಗಳು ನಿಲ್ಲಬೇಕು ಎಂಬ ನಿಟ್ಟಿನಲ್ಲಿ ಅವರು ಮಾಡುತ್ತಿರುವ ಕಾರ್ಯ ನಿಜಕ್ಕೂ ಶ್ಲಾಘನೀಯವಾಗಿದೆ. ಅವರ ಈ ಕಾರ್ಯದಲ್ಲಿ ನಾವು ಸಹ ಕೈ ಜೋಡಿಸೋಣ. ಖದೀರ್ ಅವರ ಸೇವಾ ಕಾರ್ಯ ಹೀಗೆ ಮುಂದುವರೆಯಲಿ, ಇನ್ನು ಉನ್ನತ ಮಟ್ಟದ ಪ್ರಶಸ್ತಿಗಳು ಅವರಿಗೆ ದೊರಕಲಿ ಎಂದು ಆಶಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಾಜಿ ಸಚಿವ ರಾಜಶೇಖರ್ ಪಾಟೀಲ್ ಅವರು ಮಾತನಾಡಿ, ಕೇವಲ 17 ವಿದ್ಯಾರ್ಥಿಗಳಿಂದ 1989ರಲ್ಲಿ ಪ್ರಾರಂಭವಾದ ಶಾಹೀನ್ ಶಿಕ್ಷಣ ಸಂಸ್ಥೆ ಇವತ್ತು ದೇಶದಲ್ಲೆಡೆ 140ಕ್ಕೂ ಅಧಿಕ ಶಿಕ್ಷಣ ಸಂಸ್ಥೆಗಳಲ್ಲಿ 45 ಸಾವಿರ ವಿದ್ಯಾರ್ಥಿಗಳನ್ನು ಒಳಗೊಂಡಿದೆ. ಇದು ಇಡೀ ಬೀದರ್ ಜಿಲ್ಲೆ ಹೆಮ್ಮೆಪಡುವ ವಿಚಾರವಾಗಿದೆ. ಈ ಹಿಂದೆ ಎಸೆಸೆಲ್ಸಿ ಮತ್ತು ಪಿಯುಸಿ ಫಲಿತಾಂಶ ಪ್ರಕಟವಾದ ಸಮಯದಲ್ಲಿ ನಮ್ಮ ಬೀದರ್ ಜಿಲ್ಲೆ 30, 32ನೇ ಸ್ಥಾನದಲ್ಲಿರುವುದನ್ನು ನಾವು ನೋಡುತ್ತಿದ್ದೆವು. ಆದರೆ ಇವತ್ತು ನೀಟ್ ಫಲಿತಾಂಶದಲ್ಲಿ ಬೀದರ್ ಜಿಲ್ಲೆ ಮೂರನೇ ಸ್ಥಾನ ಪಡೆದಿದೆ ಎಂದು ಹೇಳಲು ನಿಜಕ್ಕೂ ಖುಷಿಯಾಗುತ್ತಿದೆ ಎಂದರು. ಹಣವಂತರ ಮಕ್ಕಳಿಗೆ ಮಾತ್ರ ಮೆಡಿಕಲ್ ಸೀಟ್ ದೊರೆಯುತ್ತದೆ ಎಂಬ ಕಾಲಘಟ್ಟದಲ್ಲಿ, ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಮಕ್ಕಳಿಗೂ ಉಚಿತವಾಗಿ ಹಾಗೂ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಬಡವರ ಮಕ್ಕಳಿಗೂ ಎಂಬಿಬಿಎಸ್ ಸೀಟ್ ದೊರೆಯುವಂತೆ ಮಾಡಿದ ಅಬ್ದುಲ್ ಖದೀರ್ ಅವರ ಕಾರ್ಯ ಇಡೀ ಸಮಾಜಕ್ಕೆ ಆದರ್ಶವಾಗಿದೆ ಎಂದು ಶ್ಲಾಘೀಸಿದರು. ಅಭಿನಂದನೆ ಸ್ವೀಕರಿಸಿ ಡಾ.ಅಬ್ದುಲ್ ಖದೀರ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಅಲಿಘಡ್ ಮುಸ್ಲಿಂ ವಿಶ್ವವಿದ್ಯಾಲಯದಿಂದ ಪ್ರಶಸ್ತಿ ಬಂದ ಹಿನ್ನೆಲೆ ಬೀದರ್ ಮಹಾನಗರದ ಜನತೆ ಇಂದು ನನ್ನನ್ನು ಸನ್ಮಾನಿಸಿ ಅಭಿನಂದಿಸಿದ್ದಾರೆ. ಅಲಿಘಡ್ ವಿಶ್ವವಿದ್ಯಾಲಯ ನೀಡಿರುವ ಈ ಪ್ರಶಸ್ತಿ ಇದು ಕೇವಲ ನನಗೆ ದೊರೆತದ್ದಲ್ಲ. ಬೀದರ್ ಜಿಲ್ಲೆಯ ಜನತೆಗೆ ಹಾಗೂ ಇಡೀ ಶಾಹೀನ್ ಸಂಸ್ಥೆಗೆ ದೊರೆತದ್ದು. ಬೀದರ್ ಜನತೆಯ ಸಹಕಾರದೊಂದಿಗೆ ಜಿಲ್ಲೆಯ ಹೆಸರನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯೋಣ. ಜಿಲ್ಲೆಯ ಪ್ರತಿಯೊಬ್ಬ ವಿದ್ಯಾರ್ಥಿಗೂ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಕೆಲಸ ಮಾಡೋಣ ಎಂದು ನುಡಿದರು. ಈ ಸಂದರ್ಭದಲ್ಲಿ ಬಸವ ಯೋಗಾಶ್ರಮದ ಡಾ.ಸಿದ್ದರಾಮ ಬೆಲ್ದಾಳ ಶರಣರು, ಬಸವ ಸೇವಾ ಪ್ರತಿಷ್ಠಾನದ ಡಾ.ಗಂಗಾಂಬಿಕ ಅಕ್ಕ, ಆಣದೂರಿನ ಜ್ಞಾನಸಾಗರ್ ಭಂತೆಜಿ, ಸೇಂಟ್ ಜೋಸೆಫ್ ಶಿಕ್ಷಣ ಸಂಸ್ಥೆಯ ಫಾದರ್ ವಿಲ್ಸನ್, ಶಾಸಕ ಶೈಲೇಂದ್ರ ಬೆಲ್ದಾಳೆ, ಅಭಿನಂದನಾ ಸಮಿತಿಯ ಅಧ್ಯಕ್ಷ ಬಸವರಾಜ್ ಜಾಬಶೆಟ್ಟಿ, ಪ್ರೊ.ಸಿದ್ದರಾಮಪ್ಪ ಮಾಸಿಮಾಡೆ, ಡಾ. ಬಲಬೀರ್ ಸಿಂಗ್, ಡಾ.ರಜನೀಶ್ ವಾಲಿ, ಸೋಮಶೇಖರ್ ಬಿರಾದರ್ ಚಿದ್ರಿ, ಅಭಿನಂದನ ಸಮಿತಿಯ ಕಾರ್ಯದರ್ಶಿ ಸುರೇಶ್ ಚನ್ನಶೆಟ್ಟಿ ಹಾಗೂ ಕೋಶಾಧ್ಯಕ್ಷ ಶಿವಶಂಕರ್ ಟೋಕರೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಅಮೆರಿಕ | 43 ವರ್ಷ ತಪ್ಪಾಗಿ ಜೈಲಿನಲ್ಲಿದ್ದ ಭಾರತೀಯ ಮೂಲದ ವ್ಯಕ್ತಿಯ ಗಡೀಪಾರಿಗೆ ತಡೆ
ನ್ಯೂಯಾರ್ಕ್, ನ.4: ಕೊಲೆ ಪ್ರಕರಣದಲ್ಲಿ 43 ವರ್ಷ ಜೈಲಿನಲ್ಲಿದ್ದ ಭಾರತೀಯ ಮೂಲದ ವ್ಯಕ್ತಿಯ ಮೇಲಿದ್ದ ದೋಷಾರೋಪವನ್ನು ನ್ಯಾಯಾಲಯ ರದ್ದುಗೊಳಿಸಿದ ಬಳಿಕ ಅವರನ್ನು ಗಡೀಪಾರು ಮಾಡುವುದಕ್ಕೆ ಅಮೆರಿಕದ ಎರಡು ನ್ಯಾಯಾಲಯಗಳು ತಡೆಯಾಜ್ಞೆ ನೀಡಿವೆ. 1980ರಲ್ಲಿ ಭಾರತೀಯ ಮೂಲದ ಸುಬ್ರಮಣ್ಯಮ್ ಅವರನ್ನು(64 ವರ್ಷ) ಸ್ನೇಹಿತನನ್ನು ಕೊಲೆ ಮಾಡಿದ ಆಪಾದನೆಯಲ್ಲಿ ಜೀವಾವಧಿ ಶಿಕ್ಷೆಗೆ ಗುರಿಪಡಿಸಲಾಗಿತ್ತು. ಆದರೆ 43 ವರ್ಷಗಳ ಬಳಿಕ, ಈ ವರ್ಷದ ಆರಂಭದಲ್ಲಿ ದೋಷಾರೋಪವನ್ನು ರದ್ದುಗೊಳಿಸಿ ಜೈಲಿನಿಂದ ಬಿಡುಗಡೆಗೊಂಡರೂ ಅಕ್ಟೋಬರ್ 3ರಂದು ವಲಸೆ ಮತ್ತು ಕಸ್ಟಮ್ಸ್ ಅನುಷ್ಠಾನ ಬ್ಯೂರೋ ನೇರವಾಗಿ ಕಸ್ಟಡಿಗೆ ಪಡೆದಿತ್ತು. ಸುಬ್ರಮಣ್ಯಮ್ 20 ವರ್ಷದವರಿದ್ದಾಗ ಅವರ ವಿರುದ್ಧ ದಾಖಲಾಗಿದ್ದ ಮಾದಕ ದ್ರವ್ಯ ಪೂರೈಕೆ ಆರೋಪದಡಿ ಅವರನ್ನು ಗಡೀಪಾರು ಮಾಡಲು ವಲಸೆ ಏಜೆನ್ಸಿ ಬಯಸಿತ್ತು. ಅದನ್ನು ಪ್ರಶ್ನಿಸಿ ಸುಬ್ರಮಣ್ಯಮ್ ಮೇಲ್ಮನವಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅರ್ಜಿಯ ವಿಚಾರಣೆ ಮುಗಿಯುವರೆಗೆ ಗಡೀಪಾರು ಮಾಡದಂತೆ ನ್ಯಾಯಾಲಯ ತಡೆಯಾಜ್ಞೆ ನೀಡಿರುವುದಾಗಿ ವರದಿಯಾಗಿದೆ.
ಇಸ್ರೇಲ್ ದಾಳಿಯಲ್ಲಿ ಹಿಜ್ಬುಲ್ಲಾ ಕಮಾಂಡರ್ ಮೃತ್ಯು : ವರದಿ
ಜೆರುಸಲೇಂ, ನ.4: ದಕ್ಷಿಣ ಲೆಬನಾನ್ ಮೇಲೆ ಸೋಮವಾರ ನಡೆಸಿದ ದಾಳಿಯಲ್ಲಿ ಹಿಜ್ಬುಲ್ಲಾದ `ರದ್ವಾನ್ ಪಡೆ'ಯ ಕಮಾಂಡರ್ ಮುಹಮ್ಮದ್ ಅಲಿ ಹದೀದ್ ಸೇರಿದಂತೆ ಹಿಜ್ಬುಲ್ಲಾದ ಇಬ್ಬರು ಪ್ರಮುಖರು ಮೃತಪಟ್ಟಿರುವುದಾಗಿ ಇಸ್ರೇಲ್ ಸೇನೆ ಹೇಳಿದೆ. `ದಕ್ಷಿಣ ಲೆಬನಾನ್ನ ನಬಾತಿಯೆಹ್ ಪ್ರದೇಶದಲ್ಲಿ ನಡೆಸಿದ ದಾಳಿಯಲ್ಲಿ ರದ್ವಾನ್ ಪಡೆಯ ಕಮಾಂಡರ್ ಹದೀದ್ನನ್ನು ಹತ್ಯೆ ಮಾಡಲಾಗಿದೆ. ಹದೀದ್ ಇಸ್ರೇಲ್ ವಿರುದ್ಧ ಹಲವಾರು ದಾಳಿಗಳನ್ನು ಮುನ್ನಡೆಸಿದ್ದ ಮತ್ತು ಹಿಜ್ಬುಲ್ಲಾ ಭಯೋತ್ಪಾದಕ ಮೂಲಸೌಕರ್ಯವನ್ನು ಮರುಸ್ಥಾಪಿಸಲು ಕೆಲಸ ಮಾಡಿದ್ದ. ಅಯ್ತಾ ಅಶ್ಶಾಬ್ ಪ್ರದೇಶದಲ್ಲಿ ನಡೆಸಿದ ಮತ್ತೊಂದು ದಾಳಿಯಲ್ಲಿ ಮತ್ತೊಬ್ಬ ಹಿಜ್ಬುಲ್ಲಾ ಸದಸ್ಯ ಹತನಾಗಿದ್ದು ಈತ ಇಸ್ರೇಲ್ ರಕ್ಷಣಾ ಪಡೆಗಳ ಕುರಿತ ಮಾಹಿತಿ ಸಂಗ್ರಹಿಸಲು ಪ್ರಯತ್ನಿಸುತ್ತಿದ್ದ ' ಎಂದು ಇಸ್ರೇಲ್ ರಕ್ಷಣಾ ಇಲಾಖೆ `ಎಕ್ಸ್'ನಲ್ಲಿ ಪೋಸ್ಟ್ ಮಾಡಿದೆ.
ನೇಪಾಳದ ಡೆಪ್ಯುಟಿ ರಾಯಭಾರಿ ಫಾ.ಆ್ಯಂಡ್ರಿಯಾ ಫಾನ್ರಿಯಾ ಕುದ್ರೋಳಿ ಕ್ಷೇತ್ರಕ್ಕೆ ಭೇಟಿ
ಮಂಗಳೂರು: ನೇಪಾಳದ ಡೆಪ್ಯುಟಿ ರಾಯಭಾರಿ ಫಾ.ಆ್ಯಂಡ್ರಿಯಾ ಫಾನ್ರಿಯಾ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದರು. ಕ್ಷೇತ್ರದ ಇತಿಹಾಸದ ಬಗ್ಗೆ ಮಾಹಿತಿ ಪಡೆದ ಅವರು ಹರ್ಷ ವ್ಯಕ್ತಪಡಿಸಿದರು. ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪ್ರಧಾನ ಧರ್ಮಗುರು ಫಾ.ಜೋಸೆಫ್, ಬಿಜು ಎಂ. ಜೋಸೆಫ್ ಮಂಗಳೂರು, ಮನೋಜ್ ಜತೆಗಿದ್ದರು. ಅವರನ್ನು ಕ್ಷೇತ್ರದ ವತಿಯಿಂದ ಗೌರವಿಸಲಾಯಿತು. ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಮಾಜಿ ಕಾರ್ಪೋರೆಟರ್ ಪ್ರವೀಣ್ಚಂದ್ರ ಆಳ್ವ, ದಿನೇಶ್ ಅಂಚನ್ ಸ್ವಾಗತಿಸಿದರು.
ಪಾಕ್ ಸುಪ್ರೀಂಕೋರ್ಟ್ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ : 12 ಮಂದಿಗೆ ಗಾಯ
ಇಸ್ಲಮಾಬಾದ್, ನ.4: ಪಾಕಿಸ್ತಾನ ಸುಪ್ರೀಂಕೋರ್ಟ್ನ ತಳ ಅಂತಸ್ತಿನಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 12 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಸುಪ್ರೀಂಕೋರ್ಟ್ನ ತಳ ಅಂತಸ್ತಿನಲ್ಲಿರುವ ಕ್ಯಾಂಟೀನ್ನಲ್ಲಿ ಏರ್ ಕಂಡಿಷನರ್ ವ್ಯವಸ್ಥೆಯನ್ನು ದುರಸ್ತಿಗೊಳಿಸುತ್ತಿರುವ ಸಂದರ್ಭ ಸ್ಫೋಟ ಸಂಭವಿಸಿದ್ದು ಕನಿಷ್ಠ 12 ಮಂದಿ ಗಾಯಗೊಂಡಿದ್ದಾರೆ. ಇಬ್ಬರು ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು ಸ್ಫೋಟದ ಸದ್ದಿನಿಂದ ಗಾಭರಿಗೊಂಡ ನ್ಯಾಯವಾದಿಗಳು, ನ್ಯಾಯಾಲಯದ ಸಿಬ್ಬಂದಿಗಳು ನ್ಯಾಯಾಲಯದಿಂದ ಹೊರಗೆ ಧಾವಿಸಿದರು ಎಂದು ಮೂಲಗಳನ್ನು ಉಲ್ಲೇಖಿಸಿ `ಎಕ್ಸ್ಪ್ರೆಸ್ ಟ್ರಿಬ್ಯೂನಲ್' ವರದಿ ಮಾಡಿದೆ.
ಶತಕ ಸಿಡಿಸಿ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಜೈಸ್ವಾಲ್ ಸಜ್ಜು
ಜೈಪುರ, ನ.4: ರಾಜಸ್ಥಾನ ತಂಡದ ವಿರುದ್ಧ ರಣಜಿ ಟ್ರೋಫಿಯ 3ನೇ ಸುತ್ತಿನ ಪಂದ್ಯದಲ್ಲಿ ಮುಂಬೈ ತಂಡದ ಪರ 67 ಹಾಗೂ 156 ರನ್ ಗಳಿಸಿದ ಯಶಸ್ವಿ ಜೈಸ್ವಾಲ್ ಮುಂಬರುವ ಸ್ವದೇಶದಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿಗೆ ಪೂರ್ವ ತಯಾರಿ ನಡೆಸಿದ್ದಾರೆ. ಎಂದಿನಂತೆಯೇ ಸುಮಾರು 90ರ ಸ್ಟ್ರೈಕ್ರೇಟ್ನಲ್ಲಿ ಬ್ಯಾಟ್ ಬೀಸಿದ ಜೈಸ್ವಾಲ್ ಅವರು ಡಬ್ಲ್ಯುಟಿಸಿ ಚಾಂಪಿಯನ್ಸ್ ದಕ್ಷಿಣ ಆಫ್ರಿಕಾ ವಿರುದ್ಧ್ದದ ಟೆಸ್ಟ್ ಸರಣಿಗೆ ತನ್ನ ಬ್ಯಾಟಿಂಗ್ ಅಸ್ತ್ರವನ್ನು ಹರಿತಗೊಳಿಸಿದರು. ಮಂಗಳವಾರ ರಾಜಸ್ಥಾನದ ವಿರುದ್ಧದ 2ನೇ ಇನಿಂಗ್ಸ್ನಲ್ಲಿ ಜೈಸ್ವಾಲ್ 156 ರನ್(174 ಎಸೆತ, 18 ಬೌಂಡರಿ, 1 ಸಿಕ್ಸರ್)ಗಳಿಸಿ ‘ಡಿ’ ಗುಂಪಿನಲ್ಲಿ ಮುಂಬೈ ತಂಡವು ಒಂದಂಕ ಗಳಿಸುವಲ್ಲಿ ನೆರವಾದರು. ಜೈಸ್ವಾಲ್ ಹಾಗೂ ಮುಶೀರ್ ಖಾನ್(63 ರನ್, 115 ಎಸೆತ, 9 ಬೌಂಡರಿ)ಅವರು ಮೊದಲ ವಿಕೆಟ್ಗೆ 149 ರನ್ ಜೊತೆಯಾಟ ನಡೆಸಿದರು. ಮುಂಬೈ ತಂಡವು 3 ವಿಕೆಟ್ಗಳ ನಷ್ಟಕ್ಕೆ 269 ರನ್ ಗಳಿಸಿದ್ದು, ಉಭಯ ತಂಡಗಳು ಪಂದ್ಯವನ್ನು ಡ್ರಾಗೊಳಿಸಲು ಒಪ್ಪಿಕೊಂಡವು. ದೀಪಕ್ ಹೂಡಾ(248 ರನ್)ಅವರ ಭರ್ಜರಿ ಬ್ಯಾಟಿಂಗ್ನಿಂದಾಗಿ ಮೊದಲ ಇನಿಂಗ್ಸ್ನಲ್ಲಿ ಮುನ್ನಡೆ ಪಡೆದಿರುವ ರಾಜಸ್ಥಾನ ತಂಡವು ಮೂರಂಕವನ್ನು ಗಳಿಸಿತು.
ಸಂಡೂರಿನಲ್ಲಿ ಕೌಶಲ್ಯ ವಿಶ್ವವಿದ್ಯಾಲಯ ಸ್ಥಾಪನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ
ಇಂದಿನ ಯುವಜನರಲ್ಲಿ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮ ಶೀಲತೆಯನ್ನು ಬೆಳೆಸುವ ಸಲುವಾಗಿ ಸಂಡೂರಿನಲ್ಲಿ ಕೌಶಲ್ಯ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ನಿರ್ಧರಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ನ. 4ರಂದು ಉದ್ಘಾಟನೆಗೊಂಡ ಬೆಂಗಳೂರು ಕೌಶಲ್ಯ ಶೃಂಗಸಭೆಯನ್ನು ಉದ್ಘಾಟಿಸಿ ಸಿದ್ದರಾಮಯ್ಯ ಮಾತನಾಡಿದರು. ದೇಶದ ಉದ್ಯಾನನಗರಿಯಾಗಿ ಹೆಸರು ಮಾಡಿರುವ ಬೆಂಗಳೂರು ಈಗ ಸ್ಟಾರ್ಟ್ ಅಪ್ ನಗರಿಯೆಂದೂ, ಇತ್ತೀಚೆಗೆ ಕೌಶಲ್ಯ ನಗರಿಯೆಂದೂ ಹೆಸರು ಮಾಡಿರುವುದು ಸ್ವಾಗತಾರ್ಹ ಎಂದರು.
ರೇಣುಕಾಸ್ವಾಮಿ ಕೊಲೆ ಕೇಸ್: ಪವಿತ್ರಾ ಗೌಡ ಮತ್ತೆ ಸುಪ್ರೀಂ ಕೋರ್ಟ್ ಮೊರೆ! ಹೊಸ ತಿರುವು ಸಿಗುವ ನಿರೀಕ್ಷೆ
ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ, ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಮತ್ತೆ ಸುಪ್ರೀಂ ಮೆಟ್ಟಿಲೇರಿದ್ದಾರೆ. ಸೆಷನ್ಸ್ ಕೋರ್ಟ್ನಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ ಬಳಿಕ ಈ ಅರ್ಜಿ ಸಲ್ಲಿಸಲಾಗಿದೆ. ಗುರುವಾರ ವಿಚಾರಣೆ ನಡೆಯಲಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಗುವ ನಿರೀಕ್ಷೆಯಿದೆ.
ರಾಯಚೂರು | ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಠಿಸಿದ ವಂಚಕರು
ರಾಯಚೂರು: ಸಾಮಾನ್ಯ ಜನರ ಸಾಮಾಜಿಕ ಜಾಲತಾಣ ಖಾತೆಗಳನ್ನು ನಕಲಿ ಮಾಡಿ ವಂಚನೆ ಮಾಡುವ ಸೈಬರ್ ವಂಚಕರು ಈಗ ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ. ಅವರ ಹೆಸರಿನಲ್ಲಿಯೇ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ ವಂಚನೆಗೆ ಮುಂದಾಗಿದ್ದಾರೆ.. ಜಿಲ್ಲಾಧಿಕಾರಿ ನಿತೀಶ್ ಅವರ ಹೆಸರಿನಲ್ಲಿ ತೆರೆದಿದ್ದ ನಕಲಿ ಫೇಸ್ಬುಕ್ ಖಾತೆಯನ್ನು ಈಗಾಗಲೇ ಸ್ಥಗಿತಗೊಳಿಸಲಾಗಿದೆ. ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಈ ಹಿಂದೆಯೂ ಇದೇ ರೀತಿಯಲ್ಲಿ ಡಿಸಿ ಹೆಸರಿನ ಖಾತೆಗಳನ್ನು ನಕಲಿ ಮಾಡಿ ಜನರನ್ನು ವಂಚಿಸಿದ ಪ್ರಕರಣಗಳು ನಡೆದಿದ್ದು, ಆ ಸಂಬಂಧ ತನಿಖೆಯೂ ನಡೆದಿತ್ತು. ಇದೀಗ ಮತ್ತೊಮ್ಮೆ ಇದೇ ರೀತಿಯ ನಕಲಿ ಖಾತೆ ಸೃಷ್ಟಿಸಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೀಶ್ ಕೆ ಅವರು ತಿಳಿಸಿದ್ದಾರೆ. ಜಿಲ್ಲಾಧಿಕಾರಿ ನಿತೀಶ್ ಅವರ ಹೆಸರಿನಲ್ಲಿಯೇ ನಕಲಿ ಖಾತೆ ಸೃಷ್ಠಿಸಿರುವ ಬಗ್ಗೆ ದೂರು ಬಂದಿದ್ದು, ಈ ಬಗ್ಗೆ ಆರೋಪಿ ಪತ್ತೆಗೆ ಅಗತ್ಯ ಕ್ರಮಗಳನ್ನು ಸೈಬರ್ ವಿಭಾಗವು ತೆಗೆದುಕೊಳ್ಳಲಿದೆ. ಸಾರ್ವಜನಿಕರ ಖಾತೆಗಳನ್ನು ನಕಲಿ ಮಾಡುತ್ತಿದ್ದ ವಂಚಕರ ಜಾಲಕ್ಕೆ ಬಲಿಯಾಗದಂತೆ ಜಾಗೃತವಹಿಸಬೇಕು ಎಂದು ಸೈಬರ್ ಅಪರಾಧ ವಿಭಾಗದ ಡಿವೈಎಸ್ಪಿ ವೆಂಕಟೇಶ ಊಗಿಬಂಡಿ ಅವರು ತಿಳಿಸಿದ್ದಾರೆ.
ಇ-ಸ್ವತ್ತು ಯೋಜನೆಯ ಸಮರ್ಪಕವಾಗಿ ಜಾರಿಗೊಳಿಸಿ: ಸಿಇಒಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ
ಬೆಂಗಳೂರು : ಗ್ರಾಮೀಣ ಪ್ರದೇಶಗಳ ಸುಮಾರು ಒಂದು ಕೋಟಿ ಆಸ್ತಿಗಳನ್ನು ‘ಇ-ಸ್ವತ್ತು’ ತೆಕ್ಕೆಗೆ ತರುವ ಮೂಲಕ ಮನೆ ಹಾಗೂ ನಿವೇಶನಗಳನ್ನು ಸಕ್ರಮಗೊಳಿಸುವ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ(ಸಿಇಒ) ಗ್ರಾಮೀಣಾಭಿವೃದ್ಧಿ ಮತ್ತ ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ. ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ‘ಇ-ಸ್ವತ್ತು’ ಅನುಷ್ಠಾನ ಮತ್ತು ಇತರ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಈ ಕುರಿತ ನಿಯಮಗಳನ್ನು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಮನನ ಮಾಡಿಸಲು ಜಿಲ್ಲಾ ಮಟ್ಟದಲ್ಲಿ ವಿಶೇಷ ತರಬೇತಿ ಆಯೋಜಿಸಬೇಕು ಎಂದು ಸಲಹೆ ನೀಡಿದರು. ರಾಜ್ಯದ ಲಕ್ಷಾಂತರ ಜನರು ಈ ಯೋಜನೆಯ ಲಾಭ ಪಡೆಯಲು ಕಾಯುತ್ತಿದ್ದಾರೆ. ಸಾರ್ವಜನಿಕರಿಗೆ ಸುಲಲಿತವಾಗಿ ಹಾಗೂ ಪಾರದರ್ಶಕವಾಗಿ ಇ-ಸ್ವತ್ತು ಪ್ರಯೋಜನ ದೊರೆಯುವಂತೆ ಸಿಬ್ಬಂದಿಯನ್ನು ಸಜ್ಜು ಮಾಡಬೇಕು. ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರ ನೆರವು ಪಡೆದು ಈ ಆಂದೋಲನವನ್ನು ಯಶಸ್ವಿಗೊಳಿಸಬೇಕು ಎಂದು ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದರು. ಕೆಲವು ಜಿಲ್ಲೆಗಳಲ್ಲಿ ಆಸ್ತಿ ತೆರಿಗೆ ಸಂಗ್ರಹ ಕುಂಠಿತವಾಗಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಪ್ರಿಯಾಂಕ್, ತೆರಿಗೆ ವಸೂಲಾತಿಗೆ ಆದ್ಯತೆ ನೀಡಲು ಗ್ರಾಮ ಪಂಚಾಯತಿ ಸಿಬ್ಬಂದಿಗೆ ಸೂಚನೆ ನೀಡಲು ಹಾಗೂ ಸಭೆ, ವಿಮರ್ಶೆ, ಸ್ಥಳ ಪರೀಕ್ಷೆ ಮೂಲಕ ಗಮನಹರಿಸಲು ತಾಲೂಕು ಪಂಚಾಯತಿ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು. ಸಾರ್ವಜನಿಕರ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ, ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳಬೇಕು. ಕೆಳ ಹಂತದ ಅಧಿಕಾರಿಗಳಿಗೆ ಕಳುಹಿಸಿದ ದೂರುಗಳ ಸ್ಥಿತಿಗತಿಗಳ ವಿವರಗಳನ್ನು ಪಡೆದು, ಸಮಸ್ಯೆ ಬಗೆಹರಿದ ನಂತರ ದೂರುದಾರರಿಗೆ ಉತ್ತರ ನೀಡಬೇಕು ಎಂದು ಪ್ರಿಯಾಂಕ್ ಖರ್ಗೆ ಸಲಹೆ ನೀಡಿದರು. ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಸಮೀರ್ ಶುಕ್ಲಾ, ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್ ಮತ್ತು ಅಧಿಕಾರಿಗಳು ಇದ್ದರು.
ಅಕಾಸಾ ಏರ್ ವಿಮಾನದ ತುರ್ತು ನಿರ್ಗಮನ ದ್ವಾರ ತೆರೆಯಲು ಪ್ರಯತ್ನ : ಪ್ರಯಾಣಿಕ ವಶಕ್ಕೆ
ವಾರಣಾಸಿ, ನ. 4: ವಾರಣಾಸಿಯಿಂದ ಮುಂಬೈಗೆ ಹೊರಟಿದ್ದ ಅಕಾಸಾ ಏರ್ನ ವಿಮಾನ ಟೇಕ್ ಆಫ್ ಆಗುವ ಮುನ್ನ ತುರ್ತು ನಿರ್ಗಮನ ದ್ವಾರವನ್ನು ತೆರೆಯಲು ಯತ್ನಿಸಿದ ಆರೋಪದಲ್ಲಿ ಪ್ರಯಾಣಿಕರೋರ್ವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮುಂಬೈಗೆ ಸೋಮವಾರ ಸಂಜೆ 6.45ಕ್ಕೆ ಹೊರಟಿದ್ದ ವಿಮಾನ ಕ್ಯುಪಿ 1497ರಲ್ಲಿ ಈ ಘಟನೆ ಸಂಭವಿಸಿದೆ. ವಿಮಾನ ರನ್ವೇಯತ್ತ ಚಲಿಸುತ್ತಿದ್ದ ಸಂದರ್ಭ ಪ್ರಯಾಣಿಕ, ಜೌನ್ಪುರ ಜಿಲ್ಲೆಯ ಗೌರಾ ಬಾದಶಹಪುರದ ನಿವಾಸಿ ಸುಜಿತ್ ಸಿಂಗ್ ತುರ್ತು ದ್ವಾರವನ್ನು ತೆರೆಯಲು ಪ್ರಯತ್ನಿಸಿದ ಎಂದು ಪೊಲೀಸರು ತಿಳಿಸಿದ್ದಾರೆ. ಕ್ಯಾಬಿನ್ ಸಿಬ್ಬಂದಿ ಎಚ್ಚರಿಸಿದ ಹಿನ್ನೆಲೆಯಲ್ಲಿ ಪೈಲಟ್ ವಿಮಾನ ಸಂಚಾರ ನಿಯಂತ್ರಣ (ಎಟಿಸಿ)ಕ್ಕೆ ಮಾಹಿತಿ ನೀಡಿದರು ಹಾಗೂ ವಿಮಾನವನ್ನು ನಿಲುಗಡೆಗೊಳಿಸುವ ಸ್ಥಳಕ್ಕೆ ಹಿಂದೆ ತಂದರು. ಕೂಡಲೇ ಭದ್ರತಾ ಸಿಬ್ಬಂದಿ ಎಲ್ಲಾ ಪ್ರಯಾಣಿಕರಿಗೆ ರಕ್ಷಣೆ ನೀಡಿದರು ಹಾಗೂ ವಿಚಾರಣೆಗೆ ಸುಜಿತ್ ಸಿಂಗ್ನನ್ನು ವಶಕ್ಕೆ ತೆಗೆದುಕೊಂಡರು ಎಂದು ಪೊಲೀಸರು ತಿಳಿಸಿದ್ದಾರೆ. ಕೂತೂಹಲದ ಕಾರಣಕ್ಕೆ ತುರ್ತು ನಿರ್ಗಮನ ದ್ವಾರವನ್ನು ತೆರೆಯಲು ಪ್ರಯತ್ನಿಸಿದೆ ಎಂದು ಸುಜಿತ್ ಸಿಂಗ್ ತನಿಖಾಧಿಕಾರಿಗಳಲ್ಲಿ ತಿಳಿಸಿದ್ದಾನೆ ಎಂದು ಫೂಲ್ಪುರ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿ (ಎಸ್ಎಚ್ಒ) ಪ್ರವೀಣ್ ಕುಮಾರ್ ಸಿಂಗ್ ಹೇಳಿದ್ದಾರೆ. ಸುಜಿತ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಭದ್ರತಾ ಪರಿಶೀಲನೆಯ ಬಳಿಕ ವಿಮಾನ ಮುಂಬೈಯಿಂದ ಸಂಜೆ 7.45ಕ್ಕೆ ಹೊರಟಿತು ಎಂದು ಮೂಲಗಳು ತಿಳಿಸಿವೆ.
ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಮೆಳಿಯಪುಟ್ಟಿ ಮಂಡಲದ ಬಂಡಪಲ್ಲಿ ಬಾಲಕಿಯರ ಬುಡಕಟ್ಟು ಆಶ್ರಮ ಶಾಲೆಯಲ್ಲಿ, ಶಿಕ್ಷಕಿಯೊಬ್ಬರು ಕುರ್ಚಿಯ ಮೇಲೆ ಕುಳಿತು ಫೋನ್ನಲ್ಲಿ ಮಾತನಾಡುತ್ತಾ ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಳ್ಳುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಮೊಣಕಾಲು ನೋವಿತ್ತು ಹೀಗಾಗಿ ವಿದ್ಯಾರ್ಥಿನಿಯರು ಸಹಾಯ ಮಾಡುತ್ತಿದ್ದರು ಎಂದು ಶಿಕ್ಷಕಿ ಸಮರ್ಥಿಸಿಕೊಂಡಿದ್ದರು ಮುಖ್ಯೋಪಾಧ್ಯಾಯಿನಿ ಸ್ಥಾನದಿಂದ ಅವರನ್ನು ಅಮಾನತುಗೊಳಿಸಲಾಗಿದೆ.
ಯುವಜನರು ರೀಲ್ಸ್ಗಳನ್ನು ಮಾಡುವುದರಲ್ಲಿ ನಿರತರಾಗಬೇಕೆಂಬುದು ಪ್ರಧಾನಿ ಮೋದಿಯ ಬಯಕೆ : ರಾಹುಲ್ ಗಾಂಧಿ ಆಕ್ರೋಶ
ಹೈದರಾಬಾದ್, ನ. 4: ಯುವಜನರು ಸಾಮಾಜಿಕ ಮಾಧ್ಯಮಗಳಲ್ಲಿ ರೀಲ್ಸ್ಗಳನ್ನು ಮಾಡುವುದರಲ್ಲಿ ನಿರತರಾಗಬೇಕೆಂದು ಪ್ರಧಾನಿ ನರೇಂದ್ರ ಮೋದಿ ಬಯಸುತ್ತಾರೆ. ಇದರಿಂದ ಯುವಜನರು ಶಿಕ್ಷಣ ಮತ್ತು ಉದ್ಯೋಗದಂತಹ ಪ್ರಮುಖ ವಿಷಯಗಳ ಕುರಿತು ಪ್ರಶ್ನೆಗಳನ್ನು ಎತ್ತುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಆರೋಪಿಸಿದ್ದಾರೆ. ಬಿಹಾರದ ಔರಂಗಾಬಾದ್ನಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಸಾಮಾಜಿಕ ಮಾಧ್ಯಮದ ವ್ಯಸನವನ್ನು ಪ್ರೋತ್ಸಾಹಿಸುತ್ತಿರುವುದಕ್ಕೆ ಪ್ರಧಾನಿ ಅವರನ್ನು ತರಾಟೆಗೆ ತೆಗೆದುಕೊಂಡರು. ‘‘ನೀವು ಫೇಸ್ಬುಕ್, ಇನ್ಸ್ಟಾಗ್ರಾಂ ಹಾಗೂ ರೀಲ್ಸ್ನ ವ್ಯಸನಿಯಾಗಬೇಕು ಎಂದು ಮೋದಿ ಬಯಸುತ್ತಾರೆ. ಇದು 21ನೇ ಶತಮಾನದ ವ್ಯಸನವಾಗಿದೆ. ಅವರು ಈ ಸನ್ನಿವೇಶವನ್ನು ಬಯಸುತ್ತಾರೆ. ಯಾಕೆಂದರೆ, ಇದರಿಂದ ನೀವು ಶಿಕ್ಷಣ, ಆರೋಗ್ಯ ಹಾಗೂ ಉದ್ಯೋಗ ಕ್ಷೇತ್ರಗಳ ಸಮಸ್ಯೆಗಳಿಗೆ ಸರಕಾರವನ್ನು ಹೊಣೆಗಾರರನ್ನಾಗಿ ಮಾಡುವುದಿಲ್ಲ’’ ಎಂದು ಅವರು ಹೇಳಿದರು. ಬಿಹಾರ ವಿಧಾನ ಸಭೆ ಚುನಾವಣೆಯಲ್ಲಿ ಎನ್ಡಿಎ ಜಯ ಗಳಿಸುವುದಿಲ್ಲ ಎಂದು ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿದಿದೆ. ಆದುದರಿಂದ ಅವರು ಮತಗಳ್ಳತನದಲ್ಲಿ ತೊಡಗಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದರು. ಬಿಹಾರದಲ್ಲಿ ‘ಇಂಡಿಯಾ’ ಮೈತ್ರಿಕೂಟ ಜಯ ಗಳಿಸಿ ಸರಕಾರ ರಚನೆಯಾದರೆ, ಅದು ಹಿಂದುಳಿದವರ, ಸಾಮಾಜಿಕವಾಗಿ ಅಂಚಿಗೆ ತಳ್ಳಲ್ಪಟ್ಟವರ ಹಾಗೂ ದಲಿತರ ಸರಕಾರವಾಗಲಿದೆ ಎಂದು ಅವರು ಹೇಳಿದರು. ರಾಜ್ಯದಲ್ಲಿರುವ ಎನ್ಡಿಎ ಸರಕಾರವನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯದ ಯುವ ಜನರನ್ನು ಕಾರ್ಮಿಕರನ್ನಾಗಿ ಪರಿವರ್ತಿಸುತ್ತಿದ್ದಾರೆ ಎಂದರು.
ಹೊಸದಿಲ್ಲಿ, ನ. 4: ಅಹ್ಮದಾಬಾದ್ನಲ್ಲಿ ಜೂನ್ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದ ಬಗ್ಗೆ ತನಿಖೆ ಮಾಡಲು ನ್ಯಾಯಾಂಗದ ಉಸ್ತುವಾರಿಯಲ್ಲಿ ಸಮಿತಿಯೊಂದನ್ನು ರಚಿಸಬೇಕು ಎಂಬುದಾಗಿ ಕೋರಿ ಪುಷ್ಕರಾಜ್ ಸಭರ್ವಾಲ್ ಮತ್ತು ಭಾರತೀಯ ಪೈಲಟ್ಗಳ ಒಕ್ಕೂಟ ಸಲ್ಲಿಸಿರುವ ರಿಟ್ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ನ ಇಬ್ಬರು ನ್ಯಾಯಾಧೀಶರ ನ್ಯಾಯಪೀಠವು ನವೆಂಬರ್ 7ರಂದು ನಡೆಸಲಿದೆ. ಪುಷ್ಕರಾಜ್ ಸಭರ್ವಾಲ್ರ ಪುತ್ರ ಹಾಗೂ ನತದೃಷ್ಟ ವಿಮಾನದ ಮುಖ್ಯ ಪೈಲಟ್ ಕ್ಯಾಪ್ಟನ್ ಸುಮೀತ್ ಸಭರ್ವಾಲ್ ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಇಬ್ಬರು ನ್ಯಾಯಾಧೀಶರ ನ್ಯಾಯಪೀಠವು ಪುಷ್ಕರಾಜ್ ಮತ್ತು ಭಾರತೀಯ ಪೈಲಟ್ಗಳ ಒಕ್ಕೂಟ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನಡೆಸಲಿದೆ. ಕೇಂದ್ರ ಸರಕಾರ, ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಮತ್ತು ವಿಮಾನ ಅಪಘಾತ ತನಿಖಾ ಬ್ಯೂರೋ ಮಹಾನಿರ್ದೇಶಕ (ಎಎಐಬಿ)ರನ್ನು ಪ್ರತಿವಾದಿಯಾಗಿಸಿ 267 ಪುಟಗಳ ರಿಟ್ ಅರ್ಜಿಯನ್ನು ಅಕ್ಟೋಬರ್ 10ರಂದು ಸುಪ್ರೀಂ ಕೋರ್ಟ್ನಲ್ಲಿ ಸಲಿಸಲಾಗಿತ್ತು. ತನಿಖೆಯು ನ್ಯಾಯೋಚಿತ, ಪಾರದರ್ಶಕ ಮತ್ತು ತಾಂತ್ರಿಕವಾಗಿ ಸಮರ್ಥವಾಗಿರುವಂತೆ ನೋಡಿಕೊಳ್ಳುವುದಕ್ಕಾಗಿ ವಾಯುಯಾನ ಕ್ಷೇತ್ರದ ಸ್ವತಂತ್ರ ಪರಿಣತರನ್ನು ಒಳಗೊಂಡ ಸಮಿತಿಯೊಂದನ್ನು ರಚಿಸಬೇಕು ಮತ್ತು ಸಮಿತಿಯ ನೇತೃತ್ವವನ್ನು ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಾಧೀಶರಿಗೆ ವಹಿಸಬೇಕು ಎಂಬುದಾಗಿ ಅರ್ಜಿಯಲ್ಲಿ ಕೋರಲಾಗಿದೆ. ಜೂನ್ 12ರಂದು ಬೋಯಿಂಗ್ 787-8 ವಿಮಾನವು ಅಹ್ಮದಾಬಾದ್ ವಿಮಾನ ನಿಲ್ದಾಣದಿಂದ ಹಾರಾಟ ಆರಂಭಿಸಿದ ಕೆಲವೇ ಸೆಕೆಂಡ್ಗಳಲ್ಲಿ ನಿಲ್ದಾಣದ ಹೊರಭಾಗದಲ್ಲಿರುವ ವೈದ್ಯಕೀಯ ಕಾಲೇಜೊಂದರ ಹಾಸ್ಟೆಲ್ಗೆ ಅಪ್ಪಳಿಸಿತ್ತು. ದುರಂತದಲ್ಲಿ ಒಟ್ಟು 260 ಮಂದಿ ಮೃತಪಟ್ಟಿದ್ದಾರೆ.
ಬೆಂಗಳೂರು ಜಿಕೆವಿಕೆಯಲ್ಲಿ 4 ದಿನಗಳ ಕೃಷಿ ಮೇಳಕ್ಕೆ ಸಿದ್ಧತೆ; ಯಾವಾಗ? ಈ ಬಾರಿ ವಿಶೇಷತೆ ಏನು? 5 ಹೊಸ ತಳಿ ಅಭಿವೃದ್ಧಿ
ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ನವೆಂಬರ್ 13 ರಿಂದ 16 ರವರೆಗೆ ನಡೆಯಲಿರುವ ಕೃಷಿ ಮೇಳಕ್ಕೆ ಭರದ ಸಿದ್ಧತೆ ನಡೆದಿದೆ. 'ಸಮೃದ್ಧ ಕೃಷಿ ವಿಕಸಿತ ಭಾರತ' ಘೋಷವಾಕ್ಯದಡಿ ನಡೆಯುವ ಈ ಮೇಳದಲ್ಲಿ ಐದು ಹೊಸ ಬೆಳೆ ತಳಿಗಳು, ಆಧುನಿಕ ಕೃಷಿ ಪದ್ಧತಿಗಳು, ಯಂತ್ರೋಪಕರಣಗಳು, ಮತ್ತು ಪಶುಸಂಗೋಪನೆ ಮಾಹಿತಿ ಲಭ್ಯವಿರಲಿದೆ.
ಕುಂದಾಪುರ: ಕಾರಿನ ಕಿಟಕಿ ಗಾಜು ಒಡೆದು 2 ಲಕ್ಷ ರೂ. ನಗದು ಕಳವು
ಕುಂದಾಪುರ: ಕಾರಿನ ಕಿಟಕಿ ಗಾಜು ಒಡೆದು ಒಳಗಿದ್ದ ಲಕ್ಷಾಂತರ ರೂ. ನಗದು ಹಣ ದೋಚಿ ಪರಾರಿಯಾದ ಘಟನೆ ಮಂಗಳವಾರ ಸಂಜೆ ತಲ್ಲೂರು ಎಂಬಲ್ಲಿ ನಡೆದಿದೆ. ಕೆಂಚನೂರು ನಿವಾಸಿ ಗುತ್ತಿಗೆದಾರರಾಗಿರುವ ಗುಂಡು ಶೆಟ್ಟಿ ಎಂಬವರು ತಲ್ಲೂರಿನ ಬ್ಯಾಂಕಿನಲ್ಲಿ 2ಲಕ್ಷ ರೂ. ಹಣವನ್ನು ಪಡೆದು, ಕಾರಿನೊಳಗೆ ಇಟ್ಟಿದ್ದರು. ಬಳಿಕ ಅವರು ಕಾರನ್ನು ತಲ್ಲೂರು ಪೇಟೆ ಸಮೀಪದ ವಸತಿ ಸಂಕೀರ್ಣವೊಂದರ ಎದುರು ನಿಲ್ಲಿಸಿ ಬಾಡಿಗೆ ಮನೆಗೆ ತೆರಳಿದ್ದರು. 10-15 ನಿಮಿಷ ಕಳೆದು ವಾಪಾಸ್ಸು ಬಂದು ನೋಡಿದಾಗ ಈ ಕಳವು ಪ್ರಕರಣ ಬೆಳಕಿಗೆ ಬಂತು. ಕಳ್ಳರು, ಕಾರಿನ ಬಲಗಡೆಯ ಕಿಟಕಿ ಗಾಜು ಒಡೆದಿದ್ದು ಡ್ಯಾಶ್ ಬೋರ್ಡ್ನಲ್ಲಿ ಇಟ್ಟಿದ್ದ ನಗದನ್ನು ಕಳವು ಮಾಡಿಕೊಂಡು ಹೋಗಿದ್ದಾರೆ ಎಂದು ದೂರಲಾಗಿದೆ. ತಲ್ಲೂರು ಜಂಕ್ಷನ್ ಸಮೀಪದ ಜನನಿಬೀಡ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು ಎದುರುಗಡೆ ವಸತಿ ಸಮುಚ್ಚಯ, ಪಕ್ಕದಲ್ಲಿ ವಾಣಿಜ್ಯ ಸಂಕೀರ್ಣ, ಬಸ್, ಆಟೋ ನಿಲ್ದಾಣವಿದೆ. ಹಾಡುಹಗಲೇ ನಡೆದ ಈ ಕೃತ್ಯವು ಸಾರ್ವಜನಿಕರನ್ನು ಆತಂಕಕ್ಕೀಡು ಮಾಡಿದೆ. ಬ್ಯಾಂಕಿನಿಂದ ಹಣ ಡ್ರಾ ಮಾಡಿದ್ದು ಖಚಿತಪಡಿಸಿಕೊಂಡಿರುವ ಕಳ್ಳರು ಗುಂಡು ಶೆಟ್ಟಿಯವರ ಕಾರನ್ನು ಹಿಂಬಾಲಿಸಿ ಬಂದು ಕೃತ್ಯವೆಸಗಿದ್ದಾರೆ ಎಂಬ ಶಂಕೆಯೂ ವ್ಯಕ್ತವಾಗಿದೆ. ಕುಂದಾಪುರ ಎಸ್ಸೈ ನಂಜಾ ನಾಯ್ಕ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದು ತನಿಖೆ ಮುಂದುವರೆಸಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಧ್ಯಪ್ರದೇಶ | ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಮೃತಪಟ್ಟ ಪ್ರಕರಣ : ಆರೋಪಿ ವೈದ್ಯನ ಪತ್ನಿಯ ಬಂಧನ
ಛಿಂದ್ವಾರ, ನ. 4: ಕೆಮ್ಮು ಸಿರಪ್ ಸೇವಿಸಿ ಮಕ್ಕಳು ಮೃತಪಟ್ಟಿರುವ ದುರಂತದ ಬಗ್ಗೆ ತನಿಖೆ ನಡೆಸುತ್ತಿರುವ ಮಧ್ಯಪ್ರದೇಶದ ವಿಶೇಷ ತನಿಖಾ ತಂಡ(ಸಿಟ್)ವು ಆರೋಪಿಗಳ ಪೈಕಿ ಒಬ್ಬನಾಗಿರುವ ಡಾ.ಪ್ರವೀಣ್ ಸೋನಿಯ ಪತ್ನಿಯನ್ನು ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಮಧ್ಯಪ್ರದೇಶದಲ್ಲಿ ಕೆಮ್ಮು ಸಿರಪ್ ಸೇವಿಸಿ 24 ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಛಿಂದ್ವಾರದಲ್ಲಿ ಕೆಲಸ ಮಾಡುತ್ತಿರುವ ಡಾ.ಸೋನಿ ವಿಷಯುಕ್ತ ಕೆಮ್ಮು ಸಿರಪ್ ಕೋಲ್ಡ್ರಿಫ್ನ್ನು ಹಲವಾರು ಮಕ್ಕಳಿಗೆ ನೀಡಿದ್ದರು. ಆ ಮಕ್ಕಳು ಬಳಿಕ ಮೂತ್ರಪಿಂಡ ವೈಫಲ್ಯದಿಂದ ಮೃತಪಟ್ಟಿದ್ದಾರೆ. ನಿರ್ಲಕ್ಷ್ಯಕ್ಕಾಗಿ ಕಳೆದ ತಿಂಗಳು ಈ ವೈದ್ಯನನ್ನು ಬಂಧಿಸಲಾಗಿತ್ತು. ಅವನ ಪತ್ನಿ ಹಾಗೂ ಈ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯಾಗಿರುವ ಜ್ಯೋತಿ ಸೋನಿಯನ್ನು ಸೋಮವಾರ ರಾತ್ರಿ ಛಿಂದ್ವಾರ ಜಿಲ್ಲೆಯ ಪರೇಸಿಯ ಪಟ್ಟಣದಲ್ಲಿರುವ ಆಕೆಯ ನಿವಾಸದಿಂದ ಬಂಧಿಸಲಾಗಿದೆ ಎಂದು ಸಿಟ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆ ಮಹಿಳೆಯು, ಕೋಲ್ಡ್ರಿಫ್ ಕೆಮ್ಮು ಸಿರಪ್ ಮಾರಾಟ ಮಾಡಿದ ಔಷಧ ಅಂಗಡಿಯ ಮಾಲೀಕಳಾಗಿದ್ದಳು. ಈ ದುರಂತಕ್ಕೆ ಸಂಬಂಧಿಸಿ ಈವರೆಗೆ ಏಳು ಮಂದಿಯನ್ನು ಬಂಧಿಸಲಾಗಿದೆ.
ಕಲಬುರಗಿ | ಆಳಂದ ಪುರಸಭೆ ಅಧ್ಯಕ್ಷರ ಸದಸ್ಯತ್ವ ರದ್ದು; ಆದೇಶ ತಡೆ ಕೋರಿ ಅರ್ಜಿ
ಕಲಬುರಗಿ: ಆಳಂದ ಪುರಸಭೆ ಅಧ್ಯಕ್ಷ ಫಿರ್ದೋಸ್ ಅರೀಫ್ ಅನ್ಸಾರಿ ಅವರ ಸದಸ್ಯತ್ವ ರದ್ದುಪಡಿಸಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಅವರು ಆದೇಶ ಹೊರಡಿಸಿದ್ದಾರೆ. ಅ.31 ರಂದು ಆದೇಶ ಪ್ರಕಟಿಸಿರುವ ಜಿಲ್ಲಾಧಿಕಾರಿಯವರು, ಪುರಸಭೆ ಸಭೆಗಳಿಗೆ ಸತತವಾಗಿ ಗೈರು ಹಾಜರಾಗಿ ಕರ್ನಾಟಕ ಪೌರಸಭೆಗಳ ಅಧಿನಿಯಮ 1964ರ ಪ್ರಕರಣ 16(2)(ಸಿ) ಉಲ್ಲಂಘನೆ ಮಾಡಿರುವುದರಿಂದ ಸದಸ್ಯ ಸ್ಥಾನವು ಸಾಮಾನ್ಯ ಅನರ್ಹತೆಯಿಂದ ಖಾಲಿಯಾಗಿರುತ್ತದೆ ಎಂದು ಆದೇಶಿಸಿದ್ದಾರೆ. ಜಿಲ್ಲಾಧಿಕಾರಿಗಳಿಂದ ಯಾವುದೇ ನೋಟಿಸ್ ಸಮನ್ಸ್ ನೀಡದೇ ಸದಸ್ಯತ್ವ ರದ್ದುಪಡಿಸಿದ್ದನ್ನು ಪ್ರಶ್ನಿಸಿ ಆದೇಶ ತಡೆ ಕೋರಿ ಫಿರ್ದೋಸ್ ಅನ್ಸಾರಿ ಹೈಕೋರ್ಟ್ ಮೊರೆ ಹೋಗಿದ್ದಾರೆ ಎಂದು ತಿಳಿದುಬಂದಿದೆ.
ನ.11ಕ್ಕೆ ಮಾಲೂರು ಕ್ಷೇತ್ರದ ‘ಮರು ಮತ ಎಣಿಕೆ’
ಬೆಂಗಳೂರು : ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಕರ್ನಾಟಕ ಚುನಾವಣಾ ಆಯೋಗವು ಮಾಲೂರು ವಿಧಾನಸಭೆ ಕ್ಷೇತ್ರದ ಮರು ಮತಎಣಿಕೆಗೆ ನಿಗದಿ ಮಾಡಿದ್ದು, ನ.11ರಂದು ಮರು ಮತಎಣಿಕೆ ಮಾಡಬೇಕು ಎಂದು ಕೋಲಾರ ಜಿಲ್ಲಾಧಿಕಾರಿಗೆ ಸೂಚನೆ ನೀಡಿದೆ. ಮಂಗಳವಾರದಂದು ಸಹಾಯಕ ಮುಖ್ಯ ಚುನಾವಣಾ ಅಧಿಕಾರಿ ರಾಘವನ್ ಆರ್.ವಿ. ಅವರು ಕೋಲಾರ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದು, ಸುಪ್ರೀಂ ಕೋರ್ಟ್ ಅ.14ರಂದು ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆ ಮಾಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನವನ್ನು ನೀಡಿತ್ತು. ಇದೀಗ ಆಯೋಗವು ಮತಗಳ ಮರು ಎಣಿಕೆಗೆ ದಿನಾಂಕವನ್ನು ನಿಗಧಿಪಡಿಸಿದ್ದು, ಅಗತ್ಯ ಸೂಚನೆಗಳನ್ನು ಪಾಲಿಸಬೇಕು ಎಂದಿದೆ. ಪ್ರಕರಣದ ಹಿನ್ನೆಲೆ : 2023ರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ನಂಜೇಗೌಡ ಅವರು ಕಾಂಗ್ರೆಸ್ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರೆ, ಮತ ಎಣಿಕೆ ಸರಿಯಾಗಿ ಆಗಿಲ್ಲ. ಹೀಗಾಗಿ ಕೆ.ವೈ.ನಂಜೇಗೌಡ ಅವರ ಶಾಸಕ ಸ್ಥಾನ ಅಸಿಂಧುಗೊಳಿಸುರವಂತೆ ಪರಾಜಿತ ಅಭ್ಯರ್ಥಿ ಮಂಜುನಾಥ್ ಗೌಡ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ನಂಜೇಗೌಡ ಆಯ್ಕೆ ಅಸಿಂಧುಗೊಳಿಸಿ ಆದೇಶ ಹೊರಡಿಸಿತ್ತು. ಅಲ್ಲದೇ ಮತಗಳ ಮರು ಎಣಿಕೆಗೆ ಆದೇಶಿಸಿತ್ತು. ಆದರೆ ಇದನ್ನು ಪ್ರಶ್ನಿಸಿ ನಂಜೇಗೌಡ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಶಾಸಕ ಸ್ಥಾನ ಅಸಿಂಧು ಆದೇಶಕ್ಕೆ ತಡೆ ನೀಡಿದೆ. ಆದರೆ ಮತಗಳ ಮರು ಎಣಿಕೆಗೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ಶೀರೂರು ಮಠ ಪರ್ಯಾಯ: ಜಿಲ್ಲೆಯ ಮನೆಮನೆಗೂ ಅಹ್ವಾನ ಪತ್ರಿಕೆ ಹಂಚಿಕೆ
ಉಡುಪಿ: 2026ರ ಜನವರಿ 18ರಂದು ನಡೆಯುವ ಶೀರೂರು ಮಠದ ಪರ್ಯಾಯ ಮಹೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆಯು ಪರ್ಯಾಯ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಅಧ್ಯಕ್ಷತೆಯಲ್ಲಿ ಇದೇ ನ. 7ರಂದು ಸಂಜೆ 4:30ಕ್ಕೆ ಉಡುಪಿಯ ಸೋದೆ ಮಠದ ಬಳಿಯ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ ಎಂದು ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದ್ದಾರೆ. ಉಡುಪಿ ಶೀರೂರು ಮಠದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಭೆಯಲ್ಲಿ ಪರ್ಯಾಯ ಪೂರ್ವಭಾವಿ ತಯಾರಿ ಬಗ್ಗೆ ಪ್ರಮುಖರೊಂದಿಗೆ ಚರ್ಚೆ ನಡೆಯಲಿದೆ. ಈ ಬಾರಿಯ ಪರ್ಯಾಯವು ‘ಶೀರೂರು ಪರ್ಯಾಯ ನಮ್ಮ ಪರ್ಯಾಯ’ ಎಂಬ ಧ್ಯೇಯವಾಕ್ಯ ದೊಂದಿಗೆ ನಡೆಯಲಿದ್ದು, ಉಡುಪಿ ಜಿಲ್ಲೆಯ ಪ್ರತಿ ಮನೆಗೂ ಆಮಂತ್ರಣ ಪತ್ರಿಕೆಗಳನ್ನು ತಲುಪಿಸಲಾಗುವುದು. ಅಲ್ಲದೆ, ಜಿಲ್ಲೆಯ ಪ್ರತಿಯೊಂದು ಮನೆಯವರು ಕೂಡಾ ಈ ಮಹೋತ್ಸವದಲ್ಲಿ ಪಾಲ್ಗೊಳ್ಳುವಂತೆ ವ್ಯವಸ್ಥೆಯನ್ನು ಮಾಡಲಾಗುವುದು ಎಂದರು. ಈ ಬಾರಿ ವಿಶೇಷವಾಗಿ ಹೊರಕಾಣಿಕೆಯನ್ನು ಸಂಗ್ರಹಿಸುವ ಗುರಿಯನ್ನು ಹೊಂದಲಾಗಿದ್ದು, ಇದಕ್ಕಾಗಿ ಜಿಲ್ಲೆಯನ್ನು ಎಂಟು ವಲಯಗಳನ್ನಾಗಿ ಮಾಡಿ ಪ್ರತೀ ಮನೆಯಿಂದಲೂ ಹೊರಕಾಣಿಕೆಯನ್ನು ಸಂಗ್ರಹಿಸಲು ತೀರ್ಮಾನಿ ಸಲಾಗಿದೆ. ಅದೇ ರೀತಿ ಧರ್ಮಸ್ಥಳ, ಕಟೀಲು, ಮಂಗಳೂರು, ಪುತ್ತೂರು ವಲಯಗಳಿಂದ ದೊಡ್ಡ ಪ್ರಮಾಣದ ಹೊರಕಾಣಿಕೆಯನ್ನು ನಿರೀಕ್ಷಿಸಲಾ ಗುತ್ತಿದೆ ಎಂದು ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಟ್ಟಾರು ರತ್ನಾಕರ ಹೆಗ್ಡೆ ತಿಳಿಸಿದರು. ಪ್ರಥಮ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡಲಿರುವ ಶ್ರೀವೇದವರ್ಧನ ತೀರ್ಥ ಶ್ರೀಪಾದರು, ದೇಶ ಪರ್ಯಟನದ ಬಳಿಕ ಜನವರಿ 9ರಂದು ಕಡಿಯಾಳಿ ಮೂಲಕ ಪುರಪ್ರವೇಶ ಮಾಡಲಿದ್ದು, ಅಂದು ಸಂಜೆ 3:30ಕ್ಕೆ ಉಡುಪಿಯ ಕಡಿಯಾಳಿಯಲ್ಲಿ ಶೀರೂರುಶ್ರೀಗಳನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಿ, ಸಮಾಜದ ಪ್ರಮುಖರು, ಧಾರ್ಮಿಕ ಮುಖಂಡರನ್ನು ಒಳಗೊಂಡಂತೆ ಭವ್ಯ ಮೆರವಣಿಗೆಯಲ್ಲಿ ಕರೆತರಲಾ ಗುವುದು. ಬಳಿಕ ಉಡುಪಿ ನಗರಸಭೆ ವತಿಯಿಂದ ಭಾವೀ ಪರ್ಯಾಯ ಶ್ರೀಗಳಿಗೆ ರಥಬೀದಿಯಲ್ಲಿ ಪೌರ ಸಮ್ಮಾನ ನಡೆಯಲಿದೆ ಎಂದರು. ಜನವರಿ10ರಿಂದ 17ರವರೆಗೆ ಪ್ರತಿದಿನ ಅದ್ದೂರಿಯ ಹೊರೆ ಕಾಣಿಕೆಯ ಮೆರವಣಿಗೆ ನಡೆಯಲಿದೆ. ಹೊರಕಾಣಿಕೆಯಲ್ಲಿ ಬಂದ ಎಲ್ಲಾ ಪರಿಕರಗಳನ್ನು ಶ್ರೀಮಠದ ವಾಹನ ನಿಲುಗಡೆ ಸಮೀಪ (ರಾಜಾಂಗಣ ಪಾರ್ಕಿಂಗ್) ಅಚ್ಚುಕಟ್ಟಾಗಿ ಜೋಡಿಸಿ ಅಲ್ಲಿ ವಸ್ತು ಪ್ರದರ್ಶನ ಏರ್ಪಡಿಸಲು ಯೋಜಿಸಲಾಗಿದೆ ಎಂದು ಮಟ್ಟಾರು ಹೇಳಿದರು. ಜನವರಿ 18ರ ಮುಂಜಾನೆ ಶೀರೂರುಶ್ರೀಗಳು ಪರ್ಯಾಯ ಪೀಠಾರೋಹಣ ಮಾಡಲಿದ್ದು, ಬಳಿಕ ರಾಜಾಂಗಣದಲ್ಲಿ ಅಷ್ಟ ಮಠಾಧೀಶರ ಉಪಸ್ಥಿತಿಯಲ್ಲಿ ಬೃಹತ್ ದರ್ಬಾರ್ ನಡೆಯಲಿದ್ದು, ಇದರಲ್ಲಿ ಸಮಾಜದ ಗಣ್ಯರಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಬಳಿಕ ನಿರಂತರ 10 ದಿನಗಳ ಕಾಲ ದೇಶ-ವಿದೇಶಗಳ ಪ್ರಸಿದ್ಧ ಕಲಾವಿದರಿಂದ ವಿಶೇಷ ಸಾಂಸ್ಕೃತಿಕ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮಗಳು ನಡೆಯಲಿವೆ. ಪರ್ಯಾಯವನ್ನು ಸುವ್ಯವಸ್ಥಿತವಾಗಿ ನಡೆಸಲು ಡಾ.ಡಿ.ವೀರೇಂದ್ರ ಹೆಗ್ಗಡೆ ಗೌರವಾಧ್ಯಕ್ಷತೆಯಲ್ಲಿ ಸ್ವಾಗತ ಸಮಿತಿಯನ್ನು ರಚಿಸಲಾಗಿದ್ದು, ಸಮಿತಿಯಲ್ಲಿ ಡಾ.ರಂಜನ್ ಪೈ, ಸಂಸದ ತೇಜಸ್ವಿ ಸೂರ್ಯ, ಡಾ.ಎಚ್.ಎಸ್.ಬಲ್ಲಾಳ್, ಡಾ.ಮೋಹನ ಆಳ್ವ, ಡಾ.ಜಿ.ಶಂಕರ್, ಬಂಜಾರ ಪ್ರಕಾಶ್ ಶೆಟ್ಟಿ, ಎಂ.ಎನ್.ರಾಜೇಂದ್ರಕುಮಾರ್ ಮುಂತಾದವರು ಇದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಮಠದ ದಿವಾನರಾದ ಡಾ.ಉದಯಕುಮಾರ್ ಸರಳತ್ತಾಯ, ಕಾರ್ಯದರ್ಶಿ ಮೋಹನ್ ಭಟ್, ಹೊರೆಕಾಣಿಕೆ ಸಂಚಾಲಕ ಸುಪ್ರಸಾದ ಶೆಟ್ಟಿ, ಕಿರಣ್ ಕುಮಾರ್ ಉಪಸ್ಥಿತರಿದ್ದರು.
ವಿದ್ಯಾರ್ಥಿಗೆ ಅಯ್ಯಪ್ಪ ಮಾಲೆ ಧರಿಸಿದ್ದಕ್ಕಾಗಿ ತರಗತಿ ಪ್ರವೇಶ ನಿರಾಕರಣೆ : ಪ್ರತಿಭಟನೆಯ ಬಳಿಕ ಶಾಲೆಯಿಂದ ಕ್ಷಮಾಪಣೆ
ವಿಜಯವಾಡ : ಎನ್ಟಿಆರ್ ಜಿಲ್ಲೆಯ ಗೊಲ್ಲಪುಡಿಯ ಖಾಸಗಿ ಶಾಲೆಯೊಂದರಲ್ಲಿ ಅಯ್ಯಪ್ಪ ಮಾಲೆ ಧರಿಸಿದ್ದಕ್ಕಾಗಿ ಐದನೇ ತರಗತಿಯ ವಿದ್ಯಾರ್ಥಿಗೆ ತರಗತಿಗೆ ಪ್ರವೇಶ ನಿರಾಕರಿಸಿದ ಘಟನೆ ವಿವಾದಕ್ಕೆ ಕಾರಣವಾಯಿತು. ಶುಕ್ರವಾರ ಬೆಳಿಗ್ಗೆ ಅಯ್ಯಪ್ಪ ದೀಕ್ಷೆಯ ಭಾಗವಾಗಿ ಪವಿತ್ರ ಮಾಲೆ ಧರಿಸಿ ಶಾಲೆಗೆ ಬಂದ ವಿದ್ಯಾರ್ಥಿಯನ್ನು ತರಗತಿಗೆ ಬಿಡದೆ ವಾಪಸ್ ಮನೆಗೆ ಕಳುಹಿಸಿದ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಈ ಘಟನೆಯ ಸುದ್ದಿ ಹರಡುತ್ತಿದ್ದಂತೆಯೇ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ), ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್) ಸದಸ್ಯರು ಹಾಗೂ ಸ್ಥಳೀಯರು ಶಾಲೆಯ ಎದುರು ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಯ ಧಾರ್ಮಿಕ ಹಕ್ಕು ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಶಾಲೆಯ ಆಡಳಿತ ಮಂಡಳಿ ಕ್ಷಮೆಯಾಚಿಸಬೇಕು ಹಾಗೂ ವಿದ್ಯಾರ್ಥಿಗೆ ತರಗತಿಗೆ ಅವಕಾಶ ನೀಡಬೇಕೆಂದು ಆಗ್ರಹಿಸಿದರು. ಸ್ಥಳಕ್ಕೆ ಭವಾನಿಪುರಂ ಪೊಲೀಸರು ಧಾವಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದರು. ನಂತರ ಜಿಲ್ಲಾ ಶಿಕ್ಷಣಾಧಿಕಾರಿ (ಡಿಇಒ) ಯು.ವಿ. ಸುಬ್ಬಾ ರಾವ್ ಮಧ್ಯಸ್ಥಿಕೆ ವಹಿಸಿ, ಶಾಲಾ ಆಡಳಿತ ಮಂಡಳಿಯೊಂದಿಗೆ ಚರ್ಚೆ ನಡೆಸಿದರು. ಈ ನಂತರ ಶಾಲೆಯು ಕ್ಷಮೆಯಾಚಿಸಿ, ವಿದ್ಯಾರ್ಥಿಗೆ ಅಯ್ಯಪ್ಪ ಮಾಲೆ ಹಾಗೂ ದೀಕ್ಷಾ ವಸ್ತ್ರ ಧರಿಸಿ ತರಗತಿಗೆ ಹಾಜರಾಗಲು ಅನುಮತಿ ನೀಡಲು ಒಪ್ಪಿಕೊಂಡಿತು. ಡಿಇಒ ಅವರು ಶಾಲೆಗೆ ನೋಟಿಸ್ ಜಾರಿ ಮಾಡಿ, ಎರಡು ದಿನಗಳಲ್ಲಿ ಸ್ಪಷ್ಟೀಕರಣ ನೀಡುವಂತೆ ನಿರ್ದೇಶಿಸಿದ್ದಾರೆ. ಯಾವುದೇ ಖಾಸಗಿ ಅಥವಾ ಅನುದಾನಿತ ಶಾಲೆಗಳು ವಿದ್ಯಾರ್ಥಿಗಳನ್ನು ಅವರ ಧಾರ್ಮಿಕ ಚಿಹ್ನೆಗಳ ಆಧಾರದ ಮೇಲೆ ತರಗತಿಗಳಿಗೆ ಪ್ರವೇಶ ನಿರಾಕರಿಸಬಾರದು ಎಂದು ಎಚ್ಚರಿಸಿದ್ದಾರೆ. “ನಿಯಮ ಉಲ್ಲಂಘಿಸಿದರೆ, ಶಾಲೆಯ ಮಾನ್ಯತೆ ರದ್ದುಗೊಳಿಸುವುದು ಸೇರಿದಂತೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ,” ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ವಿದ್ಯಾಧರಪುರಂ ಪ್ರದೇಶದಲ್ಲಿಯೂ ಇದೇ ರೀತಿಯ ಘಟನೆ ನಡೆದಿತ್ತು.
ಬೆಂಗಳೂರು : ಯುನೈಟೆಡ್ ಬ್ರಿವರೀಸ್ ಹೋಲ್ಡಿಂಗ್ ಲಿಮಿಟೆಡ್ (ಯುಬಿಎಚ್ಎಲ್) ಒಡೆತನದಲ್ಲಿದ್ದ ಕಿಂಗ್ಫಿಷರ್ ಏರ್ಲೈನ್ಸ್ನಲ್ಲಿ ತಾವು ಹಾಗೂ ತಮ್ಮ ಕಂಪನಿ ಉಳಿಸಿಕೊಂಡಿರುವ ಸಾಲವನ್ನು ಸಂಪೂರ್ಣವಾಗಿ ತೀರಿಸಿದ್ದರೂ ಸಹ ಬ್ಯಾಂಕ್ಗಳು ಮರುಪಾವತಿ ಮಾಡಿರುವ ಸಾಲದ ಮೊತ್ತಕ್ಕೂ ಬಡ್ಡಿ ವಿಧಿಸುತ್ತಿರುವುದನ್ನು ಕೂಡಲೇ ಸ್ಥಗಿತಗೊಳಿಸಲು ಆದೇಶಿಬೇಕೆಂದು ವಿಜಯ್ ಮಲ್ಯ ಪರ ವಕೀಲರು ಹೈಕೋರ್ಟ್ನಲ್ಲಿ ವಾದ ಮಂಡಿಸಿದರು. ಬ್ಯಾಂಕ್ಗಳಿಂದ ಬಾಕಿ ಸಾಲದ ಮಾಹಿತಿ ಕೋರಿ ವಿಜಯ್ ಮಲ್ಯ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಲಲಿತಾ ಕನ್ನೆಗಂಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ, ಕಂಪನಿ ಕೋರ್ಟ್ಗೆ ಅರ್ಜಿ ಏಕೆ ಸಲ್ಲಿಸಿಲ್ಲ ಎಂಬ ನ್ಯಾಯಪೀಠದ ಪ್ರಶ್ನೆಗೆ ಉತ್ತರಿಸಿದ ಮಲ್ಯ ಪರ ಹಿರಿಯ ವಕೀಲ ಸಜನ್ ಪೂವಯ್ಯ, ಸಾಲ ವಸೂಲಿ ಪ್ರಾಧಿಕಾರ ಹೈಕೋರ್ಟ್ ಅಧೀನದಲ್ಲಿ ಬರುತ್ತದೆ. ಬ್ಯಾಂಕ್ನವರು ಒಂದು ಹೇಳುತ್ತಾರೆ, ಅಧಿಕೃತ ಬರ್ಖಾಸ್ತುದಾರರು (ಅಫಿಷಿಯಲ್ ಲಿಕ್ವಿಡೇಟರ್) ಮತ್ತೊಂದು ಹೇಳುತ್ತಾರೆ. ಒಂದು ಕಾಲದಲ್ಲಿ ಯುಬಿಎಚ್ಎಲ್ ಕಂಪನಿ ವಿಶ್ವದಲ್ಲಿ ಪ್ರಸಿದ್ಧ ಕಂಪನಿಯಾಗಿತ್ತು. ಡಾ. ವಿಜಯ್ ಮಲ್ಯ ನಿರ್ದೇಶಕರಾಗಿದ್ದರು. ಹೈಕೋರ್ಟ್ಗೆ ಅರ್ಜಿ ಸಲ್ಲಿಸುವುದು ಅವರ ಸಾಂವಿಧಾನಿಕ ಹಕ್ಕು ಎಂದರು. ಆಗ ನ್ಯಾಯಪೀಠ, ಸುಪ್ರೀಂಕೋರ್ಟ್ನ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಮಲ್ಯ ಹಾಜರಾಗಿಲ್ಲ. ದೇಶದ ವಿವಿಧೆಡೆ ನಡೆದಿರುವ ಕೋರ್ಟ್ ವಿಚಾರಣೆಗೆ ಮಲ್ಯ ಹಾಜರಾಗಿಲ್ಲ. ಹೀಗಿರುವಾಗ, ನೀವು ರಿಟ್ ಸಲ್ಲಿಸುವ ಹಕ್ಕನ್ನು ಹೇಗೆ ಮಂಡಿಸುತ್ತೀರಿ ಎಂದು ಪ್ರಶ್ನಿಸಿತು. ಅದಕ್ಕೆ ಪ್ರತಿಕ್ರಿಯಿಸಿದ ಪೂವಯ್ಯ, ವಿಜಯ್ ಮಲ್ಯ ಲಂಡನ್ ಕೋರ್ಟ್ನ ಕಾನೂನು ಪ್ರಕ್ರಿಯೆಗೆ ಒಳಪಟ್ಟಿದ್ದಾರೆ. ಮಲ್ಯ 6,200 ಕೋಟಿ ಸಾಲ ಪಾವತಿಸಬೇಕಿತ್ತು. 14,000 ಕೋಟಿ ವಸೂಲಿ ಆಗಿದೆ ಎಂದು ಹಣಕಾಸು ಸಚಿವೆ ಲೋಕಸಭೆಗೆ ತಿಳಿಸಿದ್ದಾರೆ. ಸಾಲ ವಸೂಲಾತಿ ಅಧಿಕಾರಿ 10,200 ಕೋಟಿ ವಸೂಲಾಗಿದೆ ಎಂದಿದ್ದಾರೆ. ಸಂಪೂರ್ಣ ಸಾಲ ತೀರಿದ್ದರೂ ಈಗಲೂ ಪ್ರಕ್ರಿಯೆ ಮುಂದುವರಿಸಲಾಗುತ್ತಿದೆ. ಆದ್ದರಿಂದಲೇ, ಸಾಲ ವಸೂಲಿಯಾದ ಲೆಕ್ಕಪತ್ರ ಕೋರಿ ಅರ್ಜಿ ಸಲ್ಲಿಸಲಾಗಿದೆ ಎಂದರು. ಬೇಕಾದಾಗಷ್ಟೇ ಕೋರ್ಟ್ಗೆ ಬರುತ್ತಾರೆ: ಬ್ಯಾಂಕ್ಗಳ ಪರ ವಾದ ಮಂಡಿಸಿದ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ, ಮಲ್ಯ ದೇಶ ತೊರೆದು ದೇಶಭ್ರಷ್ಟರಾಗಿದ್ದಾರೆ. ಅವರು ಮುಗ್ಧರಾದರೆ ಭಾರತಕ್ಕೆ ಮರಳಿ ನ್ಯಾಯಾಂಗದ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕಿತ್ತು. ತಮಗೆ ಬೇಕಾದಾಗ ಮಾತ್ರ ಕೋರ್ಟ್ ಮುಂದೆ ಬರುತ್ತಾರೆ. ಕಳೆದ 10-15 ವರ್ಷಗಳಲ್ಲಿ ನಡೆದಿರುವುದನ್ನು ನೋಡಿದರೆ ಅರ್ಜಿದಾರರು ಹೇಳುವಂತೆ ಯಾವುದೂ ಅಷ್ಟು ಸರಳವಾಗಿಲ್ಲ. ಬ್ಯಾಂಕ್ಗಳು ಶಾಸನಕ್ಕೆ ಬದ್ಧವಾಗಿವೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ಅಧಿಕೃತ ಬರ್ಖಾಸ್ತುದಾರರ ಪರ ವಾದ ಮಂಡಿಸಿದ ವಕೀಲೆ ಕೃತಿಕಾ ರಾಘವನ್, ಮಲ್ಯ ಕೇವಲ ಸಾಲದ ಮಾಹಿತಿ ಬಹಿರಂಗಪಡಿಸಬೇಕೆಂದು ಬಯಸಿದರೆ, ಅದನ್ನು ಕಂಪನಿ ನ್ಯಾಯಾಲಯದ ಮುಂದೆ ಕೋರಬೇಕು. ಲಿಕ್ವಿಡೇಟರ್ಗೆ ಯಾವುದೇ ಮಾಹಿತಿ ನೀಡಿಲ್ಲ ಹಾಗೂ ಕಂಪನಿ ಪುನರುಜ್ಜೀವನಗೊಳಿಸಲು ಯಾವುದೇ ಪ್ರಯತ್ನ ಮಾಡಲಾಗಿಲ್ಲ. ಇದೀಗ ಏಕಾಏಕಿ ಮಾಹಿತಿ ಕೋರಿ ಅರ್ಜಿ ಸಲ್ಲಿಸಲಾಗಿದೆ. ಕಂಪನಿ ನಿರ್ದೇಶಕರ ವಿರುದ್ಧ ಬಾಕಿ ಇರುವ ಎಲ್ಲ ಪ್ರಕ್ರಿಯೆಗಳ ವಿವರಗಳನ್ನೊಳಗೊಂಡ ಆಕ್ಷೇಪಣೆ ಸಲ್ಲಿಸಲಾಗುವುದು ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಅಂತಿಮವಾಗಿ, ನವೆಂಬರ್ 10ರೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಿ, ಅದರ ಪ್ರತಿಯನ್ನು ಅರ್ಜಿದಾರರ ಪರ ವಕೀಲರಿಗೂ ಒದಗಿಸುವಂತೆ ಅಧಿಕೃತ ಲಿಕ್ವಿಡೇಟರ್ ಪರ ವಕೀಲರಿಗೆ ಸೂಚಿಸಿದ ನ್ಯಾಯಪೀಠ, ಅರ್ಜಿ ವಿಚಾರಣೆಯನ್ನು ನವೆಂಬರ್ 12ಕ್ಕೆ ಮುಂದೂಡಿತು.
ಕುದ್ರೋಳಿ ಶ್ರೀ ಕ್ಷೇತ್ರಕ್ಕೆ ಬಿಸಿಸಿಐ ಕೋಶಾಧಿಕಾರಿ ರಘುರಾಮ್ ಭಟ್ ಭೇಟಿ
ಮಂಗಳೂರು: ಮಾಜಿ ಕ್ರಿಕೆಟ್ ಆಟಗಾರರು, ಬಿಸಿಸಿಐ ಕೋಶಾಧಿಕಾರಿ ರಘುರಾಮ್ ಭಟ್ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ ಗೌರವಿಸಿದರು. ಬಿರುವೆರ್ ಕುಡ್ಲ ಸಂಸ್ಥಾಪಕರಾದ ಉದಯ್ ಪೂಜಾರಿ ಬಳ್ಳಾಲ್ಬಾಗ್ ಮೊದಲಾದವರಿದ್ದರು.
Kantara: A Legend Chapter 1 OTT Release: ರಿಷಬ್ ಶೆಟ್ಟಿ ಅಭಿನಯದ 'ಕಾಂತಾರ: ಚಾಪ್ಟರ್ 1' ಸಿನಿಮಾವು ಬಾಕ್ಸ್ ಆಫೀಸ್ನಲ್ಲಿ ಉತ್ತಮ ಕಮಾಯಿ ಮಾಡಿ, ಈಗ ಒಟಿಟಿಗೂ ಎಂಟ್ರಿ ಕೊಟ್ಟಿದೆ. ಇನ್ನೇನೂ ಈ ಸಿನಿಮಾವನ್ನು ಎಲ್ಲರೂ ಮನೆಯಲ್ಲಿ ಕುಳಿತು ಆರಾಮಾಗಿ ನೋಡ್ತಾರೆ, ಚಿತ್ರಮಂದಿರಗಳಿಗೆ ಯಾರು ಹೋಗ್ತಾರೆ ಎಂದುಕೊಂಡವರಿಗೆ ಇಲ್ಲಿದೆ ಅಚ್ಚರಿಯ ಅಪ್ಡೇಟ್!
ಕೋಲಾರದ ಮಾಲೂರು ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆ ದಿನಾಂಕ ಫಿಕ್ಸ್; ಎಲ್ಲಿ? ಯಾವಾಗ? MLA ಕೆವೈ ನಂಜೇಗೌಡ ಏನಂದ್ರು?
ಮಾಲೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಮರು ಮತ ಎಣಿಕೆಯನ್ನು ನವೆಂಬರ್ 11 ರಂದು ನಡೆಸುವಂತೆ ರಾಜ್ಯ ಚುನಾವಣಾ ಆಯೋಗ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ಈ ಕ್ರಮ ಕೈಗೊಳ್ಳಲಾಗಿದ್ದು, ತೋಟಗಾರಿಕಾ ಮಹಾವಿದ್ಯಾಲಯದಲ್ಲಿ ಮತ ಎಣಿಕೆ ನಡೆಯಲಿದೆ. ರಾಜಕೀಯ ಪಕ್ಷಗಳು ಸಿದ್ಧತೆ ನಡೆಸುತ್ತಿದ್ದು, ಫಲಿತಾಂಶದ ಬಗ್ಗೆ ಕುತೂಹಲ ಮೂಡಿದೆ.
ಆನ್ಲೈನ್ ಗೇಮಿಂಗ್ ನಿಷೇಧ ಪ್ರಶ್ನಿಸುವ ಅರ್ಜಿ : ಕೇಂದ್ರ ಸರಕಾರದಿಂದ ಪ್ರತಿಕ್ರಿಯೆ ಕೋರಿದ ಸುಪ್ರೀಂ ಕೋರ್ಟ್
ಹೊಸದಿಲ್ಲಿ, ನ. 4: ಹಣವಿಟ್ಟು ಆಡುವ ಆನ್ಲೈನ್ ಗೇಮ್ಸ್ಗಳನ್ನು ನಿಷೇಧಿಸುವ ಕಾನೂನನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳಿಗೆ ಸಮಗ್ರ ಉತ್ತರ ನೀಡುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರ ಸರಕಾರಕ್ಕೆ ಸೂಚಿಸಿದೆ. ಅರ್ಜಿಗಳಲ್ಲಿ ಕೋರಲಾಗಿರುವ ಮಧ್ಯಂತರ ಪರಿಹಾರದ ಬಗ್ಗೆ ಕೇಂದ್ರ ಸರಕಾರವು ತನ್ನ ಉತ್ತರವನ್ನು ಸಲ್ಲಿಸಿದೆ ಎಂಬುದಾಗಿ ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯಪೀಠಕ್ಕೆ ತಿಳಿಸಲಾಯಿತು. ‘‘ಕೇಂದ್ರ ಸರಕಾರದ ಪರವಾಗಿ ಹಾಜರಾಗಿರುವ ಹೆಚ್ಚುವರಿ ಸಾಲಿಸಿಟರ್ ಜನರಲ್, ಮುಖ್ಯ ಅರ್ಜಿಗೆ ಸಮಗ್ರ ಉತ್ತರವನ್ನು ನೀಡಬೇಕೆಂದು ನಾವು ಬಯಸುತ್ತೇವೆ’’ ಎಂದು ನ್ಯಾಯಪೀಠ ಹೇಳಿತು. ಉತ್ತರದ ಪ್ರತಿಗಳನ್ನು ಅರ್ಜಿದಾರರ ಪರವಾಗಿ ಹಾಜರಾಗಿರುವ ವಕೀಲರಿಗೆ ಮುಂಚಿತವಾಗಿ ನೀಡಬೇಕು ಎಂದು ಹೇಳಿದ ನ್ಯಾಯಾಲಯ, ಅವರು ಅದಕ್ಕೆ ಪ್ರತಿಕ್ರಿಯೆ ನೀಡಲು ಬಯಸಿದರೆ ಸಾಧ್ಯವಾದಷ್ಟು ಬೇಗ ನೀಡಬೇಕು ಎಂದು ನ್ಯಾಯಾಲಯ ಹೇಳಿತು. ಅರ್ಜಿಯ ಮುಂದಿನ ವಿಚಾರಣೆಯನ್ನು ನ್ಯಾಯಾಲಯವು ನವೆಂಬರ್ 26ಕ್ಕೆ ಮುಂದೂಡಿತು. ಆನ್ಲೈನ್ ಗೇಮಿಂಗ್ ಉತ್ತೇಜನ ಮತ್ತು ನಿಯಂತ್ರಣ ಕಾಯ್ದೆ, 2025ನ್ನು ಆಗಸ್ಟ್ 20ರಂದು ಲೋಕಸಭೆಯಲ್ಲಿ ಮಂಡಿಸಲಾಗಿತ್ತು. ಸಂಸತ್ನ ಉಭಯ ಸದನಗಳು ಅದನ್ನು ಧ್ವನಿ ಮತದಿಂದ ಅಂಗೀಕರಿಸಿದವು ಮತ್ತು ಆಗಸ್ಟ್ 22ರಂದು ರಾಷ್ಟ್ರಪತಿ ಅದಕ್ಕೆ ಅಂಕಿತವನ್ನು ಹಾಕಿದರು. ಫ್ಯಾಂಟಸಿ ಸ್ಪೋರ್ಟ್ಸ್ ಮತ್ತು ಇ-ಸ್ಪೋರ್ಟ್ಸ್ ಸೇರಿದಂತೆ ಹಣವಿಟ್ಟು ಆಡುವ ಆನ್ಲೈನ್ ಗೇಮ್ಗಳನ್ನು ಈ ಕಾನೂನು ನಿಷೇಧಿಸುತ್ತದೆ.
ಮಣಿಪುರ |ಭದ್ರತಾ ಪಡೆಗಳಿಂದ ನಾಲ್ವರು ಬಂಡುಕೋರರ ಹತ್ಯೆ
ಇಂಫಾಲ್,ನ. 4: ಮಣಿಪುರದ ಚುರಚಾಂದ್ಪುರ ಜಿಲ್ಲೆಯಲ್ಲಿ ಮಂಗಳವಾರ ಯುನೈಟೆಡ್ ಕುಕಿ ನ್ಯಾಶನಲ್ ಆರ್ಮಿ (ಯುಕೆಎನ್ಎ) ಮತ್ತು ಭದ್ರತಾ ಸಿಬ್ಬಂದಿ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಿಷೇಧಿತ ಭೂಗತ ಕುಕಿ ಸಂಘಟನೆಯ ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ ಮತ್ತು ಒಬ್ಬನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚುರಚಾಂದ್ಪುರ ಪಟ್ಟಣದಿಂದ ಸುಮಾರು 80 ಕಿಲೋಮೀಟರ್ ದೂರದಲ್ಲಿರುವ ಖಾನ್ಪಿ ಗ್ರಾಮದಲ್ಲಿ ಬೇಹುಗಾರಿಕಾ ಮಾಹಿತಿಯ ಆಧಾರದಲ್ಲಿ 21 ಪ್ಯಾರಾ ಸ್ಪೆಶಲ್ ಫೋರ್ಸಸ್ ಮತ್ತು 36 ಅಸ್ಸಾಮ್ ರೈಫಲ್ಸ್ನ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ, ಮಂಗಳವಾರ ಬೆಳಗ್ಗೆ ಸುಮಾರು 6 ಗಂಟೆಗೆ ಯುಕೆಎನ್ಎ ಸದಸ್ಯರೊಂದಿಗೆ ಗುಂಡಿನ ಕಾಳಗ ನಡೆಯಿತು ಎಂದು ಅಸ್ಸಾಮ್ ರೈಫಲ್ಸ್ನ ಸಾರ್ವಜನಿಕ ಸಂಪರ್ಕಾಧಿಕಾರಿ ಬಿಡುಗಡೆಗೊಳಿಸಿದ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ. ‘‘ಕಾರ್ಯಾಚರಣೆಯ ವೇಳೆ, ತೀವ್ರವಾದಿ ಗುಂಪು ಭದ್ರತಾ ಪಡೆಗಳ ಮೇಲೆ ಅಪ್ರಚೋದಿತವಾಗಿ ಗುಂಡು ಹಾರಿಸಿತು. ಬಳಿಕ ನಡೆದ ಗುಂಡಿನ ಕಾಳಗದಲ್ಲಿ ತೀವ್ರವಾದಿ ಸಂಘಟನೆಯ ನಾಲ್ವರು ಹತರಾದರು.’’ ಎಂದು ಹೇಳಿಕೆ ತಿಳಿಸಿದೆ. ‘‘ಈ ಭಯೋತ್ಪಾದಕರನ್ನು ಯಶಸ್ವಿಯಾಗಿ ನಿರ್ಮೂಲಗೊಳಿಸಿರುವುದು ಅಮಾಯಕ ನಾಗರಿಕರನ್ನು ರಕ್ಷಿಸುವ, ಬೆದರಿಕೆಗಳನ್ನು ತಗ್ಗಿಸುವ ಹಾಗೂ ಮಣಿಪುರದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಮರುಸ್ಥಾಪಿಸುವ ಭಾರತೀಯ ಸೇನೆ ಮತ್ತು ಅಸ್ಸಾಮ್ ರೈಫಲ್ಸ್ನ ಬದ್ಧತೆಯನ್ನು ತೋರಿಸುತ್ತದೆ’’ ಎಂದು ಪತ್ರಿಕಾ ಹೇಳಿಕೆ ತಿಳಿಸಿದೆ. 2023 ಮೇ 3ರಂದು ಮಣಿಪುರದಲ್ಲಿ ಸ್ಫೋಟಗೊಂಡಿರುವ ಜನಾಂಗೀಯ ಹಿಂಸಾಚಾರ ಈಗಲೂ ಎಗ್ಗಿಲ್ಲದೆ ಮುಂದುವರಿದಿದೆ. ಮೆತೈ ಮತ್ತು ಕುಕಿ ಸಮುದಾಯಗಳ ನಡುವೆ ನಡೆಯುತ್ತಿರುವ ಸಶಸ್ತ್ರ ಸಂಘರ್ಷದಲ್ಲಿ ಕನಿಷ್ಠ 260 ಮಂದಿ ಮೃತಪಟ್ಟಿದ್ದಾರೆ ಮತ್ತು 60,000ಕ್ಕೂ ಅಧಿಕ ಜನರು ನಿರ್ವಸಿತರಾಗಿದ್ದಾರೆ.
ಮಂಗಳೂರು ಕಾರು , ಆಟೋರಿಕ್ಷಾ ಸಹಕಾರಿ ಸಂಘದ ಸುವರ್ಣ ಮಹೋತ್ಸವ ಉದ್ಘಾಟನೆ
ಮಂಗಳೂರು: ಸಹಕಾರಿ ಸಂಸ್ಥೆಗಳ ಮೂಲಕ ರೈತರ ಮತ್ತು ಸಾಮಾನ್ಯ ವರ್ಗಗಳ ಜನರ ಜೀವನವನ್ನು ಬದಲಾವಣೆಯಾಗಿದೆ. ಗ್ರಾಮ ಮಟ್ಟದಲ್ಲಿ ಸುಧಾರಣೆ ಸಹಕಾರಿ ಕ್ಷೇತ್ರದ ಮೂಲಕ ಆಗಿದೆ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಹೇಳಿದ್ದಾರೆ. ನಗರದ ಪುರಭವನದಲ್ಲಿ ಸೋಮವಾರ ಮಂಗಳೂರು ಕಾರು ಮತ್ತು ಆಟೋರಿಕ್ಷಾ ಸಹಕಾರಿ ಸಂಘದ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರು ಮತ್ತು ಆಟೋರಿಕ್ಷಾ ಚಾಲಕರಿಗಾಗಿಯೇ ಈ ಸಂಸ್ಥೆ ಪ್ರಾರಂಭಗೊಂಡು ಐವತ್ತು ವರ್ಷಗಳನ್ನು ಕಳೆದುದುದು ಇದೊಂದು ರಾಜ್ಯದಲ್ಲಿಯೇ ಪ್ರಥಮ ಹೆಜ್ಜೆ ಎಂದು ಡಾ ಎಂ.ಎನ್ ರಾಜೇಂದ್ರ ಕುಮಾರ್ ಶ್ಲಾಘಿಸಿದರು. ಆಶೀರ್ವಚನ ನೀಡಿದ ಮಂಗಳೂರು ಬಿಷಪ್ ವಂ.ಡಾ.ಪೀಟರ್ ಪೌಲ್ ಸಲ್ದಾನ ಮಾತನಾಡಿ ‘ಸಮಾಜದ ಸ್ವಂತ ಉದ್ಯೋಗಕ್ಕಾಗಿ ತಮ್ಮ ದುಡಿಮೆಗಾಗಿ ರಿಕ್ಷಾ ಮತ್ತು ಕಾರು ಚಾಲಕರು ಶ್ರಮಿಸುತ್ತಿದ್ದಾರೆ ಎಂದರು. ವಿಧಾನ ಪರಿಷತ್ ಸದಸ್ಯ ಹಾಗೂ ಮಂಗಳೂರು ಕಾರು ಮತ್ತು ಆಟೋರಿಕ್ಷಾ ಸಹಕಾರಿ ಸಂಘದ ಐವನ್ ಡಿ ಸೋಜ ಅಧ್ಯಕ್ಷತೆ ವಹಿಸಿದ್ದರು. ಸಹಕಾರಿ ಸಂಘಗಳ ಉಪನಿಬಂಧಕ ಎಚ್.ಎನ್. ರಮೇಶ್ ,ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೋ ,ರೋಹನ್ ಕಾರ್ಪೊರೇಶನ್ನ ಅಧ್ಯಕ್ಷ ರೋಹನ್ ಮೊಂತೆರೊ, ಎಚ್ಪಿಸಿಎಲ್ ಡಿಜಿಎಂ ನವೀನ್ ಕುಮಾರ್ ಎಂ.ಜಿ., ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಮುಖ್ಯ ಅತಿಥಿಯಾಗಿದ್ದರು. ಸಂಘದ ಉಪಾಧ್ಯಕ್ಷ ಸಿರಿಲ್ ಡಿ ಸೋಜ, ಕಾರ್ಯದರ್ಶಿ ಪ್ರಮೋದ್ ವಾಸ್ ಉಪಸ್ಥಿತರಿದ್ದರು.
ಧರ್ಮಸ್ಥಳ | ಅತ್ಯಾಚಾರ, ಕೊಲೆ ಪ್ರಕರಣಗಳ ಜತೆಗೆ ಅನುಮಾನಾಸ್ಪದ ಸಾವುಗಳ ತನಿಖೆ ಕೋರಿ ಎಸ್ಐಟಿಗೆ ‘ಮಹಿಳಾ ಆಯೋಗ ಪತ್ರ’
ಬೆಂಗಳೂರು : ಧರ್ಮಸ್ಥಳ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಅತ್ಯಾಚಾರ, ಕೊಲೆ ಪ್ರಕರಣಗಳ ಜತೆಗೆ ಅಸಹಜ ಮತ್ತು ಅನುಮಾನಾಸ್ಪದ ಸಾವು ಪ್ರಕರಣಗಳ ಬಗ್ಗೆಯೂ ಸಮಗ್ರವಾಗಿ ತನಿಖೆಯನ್ನು ನಡೆಸಬೇಕೆಂದು ಕೋರಿ ರಾಜ್ಯ ಮಹಿಳಾ ಆಯೋಗವು ಎಸ್ಐಟಿ ಮುಖ್ಯಸ್ಥರಿಗೆ ಪತ್ರ ಬರೆದಿದೆ. ಕೇವಲ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆ ಸಂಖ್ಯೆ:39/2025, ಕಲಂ 211(ಎ), ಬಿಎನ್ಎಸ್ ಪ್ರಕರಣದ ತನಿಖೆಗೆ ಸೀಮಿತವಾಗಿರದೆ, ಮಹಿಳೆಯರಿಗೆ ಸಂಬಂಧಿಸಿದ ಪ್ರಕರಣಗಳ ಸಮಗ್ರ ತನಿಖೆಯನ್ನು ಎಸ್ಐಟಿ ಮಾಡಬೇಕೆಂಬುದನ್ನು ಸರಕಾರದ ಆದೇಶವು ಸೂಚಿಸುತ್ತದೆ. ಹೀಗಿದ್ದರೂ, ಈವರೆಗೆ ಎಸ್ಐಟಿ ಅಂತಹ ಪ್ರಕರಣಗಳನ್ನು ತನಿಖೆ ಮಾಡುತ್ತಿರುವ ಬಗ್ಗೆ ಯಾವುದೇ ಮಾಹಿತಿ ಕಂಡು ಬರುತ್ತಿಲ್ಲ ಎಂದು ಪತ್ರದಲ್ಲಿ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಉಲ್ಲೇಖಿಸಿದ್ದಾರೆ. ಮಾಧ್ಯಮಗಳ ವರದಿಯನ್ನು ಗಮನಿಸಿದಾಗ ಎಸ್ಐಟಿ ರಚನೆಯಾದಾಗಿನಿಂದ ಕೇವಲ ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ ‘ಚಿನ್ನಯ್ಯ’ ಎಂಬ ವ್ಯಕ್ತಿಯ ಹೇಳಿಕೆಯನ್ನು ಆಧರಿಸಿ ಮಾನವ ಕಳೇಬರಹಗಳ ಉತ್ಖನನಕ್ಕೆ ಸೀಮಿತವಾಗಿ ಆತನ ಹೇಳಿಕೆಯ ಮಿತಿಯೊಳಗೆ ತನಿಖೆ ನಡೆದಿರುವುದು ಕಂಡುಬಂದಿದೆ. ಉತ್ಖನನದ ಸಂದರ್ಭದಲ್ಲಿ ದೊರೆತ ಅಸ್ಥಿಪಂಜರಗಳ ಅವಶೇಷಗಳ ಬಗ್ಗೆ ಸಾವು ಸಂಭವಿಸಿದ ಕಾರಣದ ಬಗ್ಗೆ ಅವುಗಳಲ್ಲಿ ಮಹಿಳೆಯರ ಅಸ್ಥಿಪಂಜರಗಳನ್ನು ಗುರುತಿಸುವ ಬಗ್ಗೆ ಕಾಡಿನ ಪ್ರದೇಶದಲ್ಲಿ ಅಸ್ಥಿಪಂಜರ ದೊರೆಯಲು ಕಾರಣಗಳ ಬಗ್ಗೆ ಮಾಹಿತಿ ಪತ್ತೆ ಹಚ್ಚುವ ಜೊತೆಗೆ, ಎಸ್ಐಟಿ ರಚನೆಯ, ಆಯೋಗದ ಕೋರಿಕೆ ಮತ್ತು ನಂತರದ ಸರಕಾರದ ಆದೇಶಕ್ಕೆ ಅನುಗುಣವಾಗಿ ಎಸ್ಐಟಿಯು ಕೂಡಲೇ ಮಹಿಳೆಯರು ಮತ್ತು ಯುವತಿಯರ ನಾಪತ್ತೆ, ಅವರ ಅತ್ಯಾಚಾರ, ಕೊಲೆ ಪ್ರಕರಣಗಳನ್ನೂ ಸೇರಿದಂತೆ ಅಸಹಜ ಮತ್ತು ಅನುಮಾನಾಸ್ಪದ ಸಾವುಗಳು ಮತ್ತಿತರ ಪ್ರಕರಣಗಳ ಸಮಗ್ರ ತನಿಖೆಯನ್ನು ಕೈಗೊಳ್ಳುವಂತೆ ಅಥವಾ ಕೈಗೊಂಡಿದ್ದರೆ ಈ ಬಗ್ಗೆ ಮಾಹಿತಿಯನ್ನು ಆಯೋಗಕ್ಕೆ ನೀಡಿ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಇನ್ನು, ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹತ್ತಾರು ವರ್ಷಗಳಿಂದ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ, ‘ಕೊಂದವರು’ ಯಾರು? ಎಂಬ ಸತ್ಯವನ್ನು ಸರಕಾರ ಪತ್ತೆಹಚ್ಚಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಮಹಿಳಾ ಸಂಘಟನೆಗಳು, ಹೋರಾಟಗಾರರು ಒಟ್ಟುಗೂಡಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ದಿನದಂದು ಬೆಂಗಳೂರು ನಗರದ ಫ್ರೀಡಂ ಪಾರ್ಕ್ನಲ್ಲಿ ಮಹಿಳೆಯರ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದ್ದರು.
ಝೊಹ್ರಾನ್ ಮಮ್ದಾನಿ ಗೆದ್ದರೆ ನ್ಯೂಯಾರ್ಕ್ ಆರ್ಥಿಕ ವಿಪತ್ತಿಗೆ ಸಿಲುಕಲಿದೆ : ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್, ನ.4: ನ್ಯೂಯಾರ್ಕ್ ನಗರದ ಮೇಯರ್ ಹುದ್ದೆಯ ಅಭ್ಯರ್ಥಿ ಝೊಹ್ರಾನ್ ಮಮ್ದಾನಿ `ಕಮ್ಯುನಿಸ್ಟ್' ಆಗಿದ್ದು ಒಂದು ವೇಳೆ ಅವರು ಮೇಯರ್ ಆಗಿ ಆಯ್ಕೆಗೊಂಡರೆ ನ್ಯೂಯಾರ್ಕ್ಗೆ ಫೆಡರಲ್ ಅನುದಾನ ಸ್ಥಗಿತಗೊಳಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. `ಒಂದು ವೇಳೆ ಕಮ್ಯುನಿಸ್ಟ್ ಅಭ್ಯರ್ಥಿ ಝೊಹ್ರಾನ್ ಮಮ್ದಾನಿ ನ್ಯೂಯಾರ್ಕ್ ನಗರದ ಮೇಯರ್ ಚುನಾವಣೆಯಲ್ಲಿ ಗೆದ್ದರೆ ನನ್ನ ಅಚ್ಚುಮೆಚ್ಚಿನ ನಗರ ನ್ಯೂಯಾರ್ಕ್ಗೆ ಫೆಡರಲ್ ಅನುದಾನ ದೊರಕುವುದಿಲ್ಲ. ಮಮ್ದಾನಿಯ ನಾಯಕತ್ವದಡಿ ನ್ಯೂಯಾರ್ಕ್ ನಗರವು ಯಶಸ್ಸಿನ ಅಥವಾ ಬದುಕುಳಿಯುವ ಶೂನ್ಯ ಅವಕಾಶವನ್ನು ಹೊಂದಿದೆ. ಕಮ್ಯುನಿಸ್ಟ್ ಚುಕ್ಕಾಣಿ ಹಿಡಿದಾಗ ಇದು ಮತ್ತಷ್ಟು ಹದಗೆಡಬಹುದು. ಅಮೂಲ್ಯ ಹಣವನ್ನು ಕೆಟ್ಟ ವಿಷಯಕ್ಕೆ ರವಾನಿಸಲು ನನಗೆ ಇಷ್ಟವಿಲ್ಲ. ರಾಷ್ಟ್ರವನ್ನು ನಡೆಸುವುದು ನನ್ನ ಬಾಧ್ಯತೆಯಾಗಿದೆ ಮತ್ತು ಮಮ್ದಾನಿ ಗೆದ್ದರೆ ನ್ಯೂಯಾರ್ಕ್ ನಗರವು ಸಂಪೂರ್ಣ ಸಾಮಾಜಿಕ ಮತ್ತು ಆರ್ಥಿಕ ವಿಪತ್ತಿಗೆ ಸಿಲುಕಲಿದೆ ಎಂಬುದು ನನ್ನ ಬಲವಾದ ನಂಬಿಕೆಯಾಗಿದೆ' ಎಂದು ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.
ಯೆನೆಪೋಯ ಸಿಬಿಎಸ್ಇ ಸ್ಕೂಲ್ ಗೆ ಪ್ರಶಸ್ತಿ
ಮಂಗಳೂರು: ಶೈಕ್ಷಣಿಕ ಶ್ರೇಷ್ಠತೆಗಾಗಿ ಯೆನೆಪೋಯ ಶಾಲೆ ಅತ್ಯುತ್ತಮ ಸಿಬಿಎಸ್ಇ ಸ್ಕೂಲ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ನಗರದ ಟಿ.ಎಂ.ಎ.ಪೈ ಸಭಾಂಗಣದಲ್ಲಿ ನಡೆದ ಈಟಿ ನೌವ್ ಬ್ಯುಸಿನೆಸ್ ಕಾನ್ಕ್ಲೇವ್ ಪ್ರಶಸ್ತಿ-2025 ಪ್ರದಾನ ಸಮಾರಂಭದಲ್ಲಿ ಯೆನಪೋಯ ಶಿಕ್ಷಣ ಸಂಸ್ಥೆಗೆ ಪ್ರತಿಷ್ಠಿತ ಪ್ರಶಸ್ತಿ ನೀಡಲಾಗಿದೆ. ವಿಧಾನ ಸಭಾ ಸ್ಪೀಕರ್ ಯು.ಟಿ. ಖಾದರ್ ಪ್ರಶಸ್ತಿ ವಿತರಿಸಿದರು.ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಮತ್ತಿತರರು ಉಪಸ್ಥಿತರಿದ್ದರು. ಪ್ರಶಸ್ತಿಯು ಅತ್ಯುತ್ತಮ ಶೈಕ್ಷಣಿಕ ಕಾರ್ಯಕ್ಷಮತೆ, ನವೀನ ಶಿಕ್ಷಣಶಾಸ್ತ್ರ ಮತ್ತು ಸಮಗ್ರ ವಿದ್ಯಾರ್ಥಿ ಅಭಿವೃದ್ಧಿಗೆ ಬದ್ಧತೆಯನ್ನು ಪ್ರದರ್ಶಿಸುವ ಸಂಸ್ಥೆಗಳಿಗೆ ನೀಡಲಾಗುತ್ತದೆ. ಯೆನೆಪೋಯ ಶಾಲೆಯು ಸ್ಥಿರವಾದ ಮಂಡಳಿಯ ಫಲಿತಾಂಶಗಳು, ಮುಂದಾಲೋಚನೆಯ ಪಠ್ಯಕ್ರಮ ಮತ್ತು ಪೋಷಿಸುವ ಕಲಿಕಾ ವಾತಾವರಣದ ಮೂಲಕ ಗುರುತಿಸಿಕೊಂಡಿದೆ. ಶಾಲೆಯ ಕಾರ್ಯಾಚರಣೆ ಮತ್ತು ಶೈಕ್ಷಣಿಕ ನಿರ್ದೇಶಕಿ ಮಿಸ್ರಿಯಾ ಜಾವೀದ್ ಈ ಸಂದರ್ಭದಲ್ಲಿ ಮಾತನಾಡಿ ‘‘25ನೇ ವರ್ಷಕ್ಕೆ ಕಾಲಿಡುತ್ತಿರುವ ಯೆನೆಪೋಯ ಸಿಬಿಎಸ್ಇ ಸ್ಕೂಲ್ನ್ನು ಗುರುತಿಸಿ ಪ್ರಶಸ್ತಿ ನೀಡಿದಕ್ಕಾಗಿ ನಮಗೆ ಸಂತೋಷವಾಗಿದೆ. ಈ ಪ್ರಶಸ್ತಿಯು ಪ್ರತಿ ಮಗುವಿನಲ್ಲೂ ಶ್ರೇಷ್ಠತೆಯನ್ನು ಬೆಳೆಸುವುದನ್ನು ಮುಂದುವರಿಸಲು ನಮಗೆ ಸ್ಫೂರ್ತಿ ನೀಡಲಿದೆ. ಈ ಗೌರವವು ನಮ್ಮ ಇಡೀ ಶಾಲಾ ಸಮುದಾಯಕ್ಕೆ - ನಮ್ಮ ಸಮರ್ಪಿತ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಬೆಂಬಲ ನೀಡುವ ಅವರ ಹೆತ್ತವರಿಗೆ ಸೇರಿದೆ ’’ ಎಂದು ಹೇಳಿದ್ದಾರೆ.
ರಫಾದಲ್ಲಿರುವ 200 ಹಮಾಸ್ ಸದಸ್ಯರಿಗೆ ಸುರಕ್ಷಿತ ಮಾರ್ಗ ನೀಡಲಾಗದು : ಇಸ್ರೇಲ್
ಟೆಲ್ ಅವೀವ್, ನ.4: ಗಾಝಾದಲ್ಲಿ ಇಸ್ರೇಲ್ ನಿಯಂತ್ರಣದಲ್ಲಿರುವ ರಫಾ ಪ್ರದೇಶದಲ್ಲಿರುವ ಸುಮಾರು 200 ಹಮಾಸ್ ಸದಸ್ಯರಿಗೆ ಯಾವುದೇ ಸುರಕ್ಷಿತ ಮಾರ್ಗವನ್ನು ನೀಡಲಾಗುವುದಿಲ್ಲ ಎಂದು ಇಸ್ರೇಲ್ ಪ್ರಧಾನಿಯವರ ಕಚೇರಿ ಹೇಳಿದೆ. ರಫಾದಲ್ಲಿ ಹಮಾಸ್ ಸದಸ್ಯರು ಶಸ್ತ್ರಾಸ್ತ್ರ ಒಪ್ಪಿಸಲು ಸಮ್ಮತಿಸಿದರೆ ಅವರಿಗೆ ಸುರಕ್ಷಿತವಾಗಿ ಹೊರತೆರಳುವ ಮಾರ್ಗವನ್ನು ಇಸ್ರೇಲ್ ಅನುಮೋದಿಸಬಹುದು. ನಿರ್ದಿಷ್ಟ ಕಾರಿಡಾರ್ ಮೂಲಕ ರೆಡ್ಕ್ರಾಸ್ ವಾಹನಗಳಲ್ಲಿ ಹೋರಾಟಗಾರರನ್ನು ಸ್ಥಳಾಂತರಿಸುವ ಸಾಧ್ಯತೆಯನ್ನು ಸಂಧಾನ ಮಾತುಕತೆಯ ಮಧ್ಯವರ್ತಿಗಳು ಚರ್ಚಿಸಿದ್ದಾರೆ ಎಂದು ಅಲ್ಜಝೀರಾ ವರದಿ ಮಾಡಿತ್ತು. ಈ ರೀತಿಯ ಕ್ರಮವನ್ನು ಪರಿಶೀಲಿಸಲಾಗುತ್ತಿದೆ ಎಂಬ ವರದಿಯಲ್ಲಿ ಹುರುಳಿಲ್ಲ. ಹಮಾಸ್ ನಿಶಸ್ತ್ರೀಕರಣ ಮತ್ತು ಗಾಝಾ ಪಟ್ಟಿಯನ್ನು ಶಸ್ತ್ರಾಸ್ತ್ರ ರಹಿತ ವಲಯವನ್ನಾಗಿಸುವ ದೃಢ ನಿಲುವನ್ನು ಪ್ರಧಾನಿ ಬೆಂಜಮಿನ್ ನೆತನ್ಯಾಹು ಮುಂದುವರಿಸಿದ್ದಾರೆ ಎಂದು ಹೇಳಿಕೆ ತಿಳಿಸಿದೆ. ಈ ವರದಿಯ ಬಗ್ಗೆ ಸರಕಾರವನ್ನು ಕೆಲವು ಸಚಿವರೇ ತರಾಟೆಗೆತ್ತಿಕೊಂಡಿದ್ದಾರೆ. `ಪ್ರಧಾನಿಯವರೇ, ಇದು ಸಂಪೂರ್ಣ ಹುಚ್ಚುತನ, ಇದನ್ನು ನಿಲ್ಲಿಸಿ' ಎಂದು ವಿತ್ತ ಸಚಿವ ಬೆಝಲೆಲ್ ಸ್ಮೊಟ್ರಿಚ್ `ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ. `ಇದು ಅವರನ್ನು ನಾಶಗೊಳಿಸುವ ಅಥವಾ ಬಂಧಿಸುವ ಅವಕಾಶವಾಗಿದ್ದು ವ್ಯರ್ಥಗೊಳಿಸಬಾರದು' ಎಂದು ರಾಷ್ಟ್ರೀಯ ಭದ್ರತಾ ಸಚಿವ ಇಟಮರ್ ಬೆನ್ಗ್ವಿರ್ ಆಗ್ರಹಿಸಿದ್ದಾರೆ.
ಅಂಕಾರ, ನ.4: ಗಾಝಾದ ಅಧಿಕಾರವನ್ನು ಫೆಲೆಸ್ತೀನಿಯನ್ ಸಮಿತಿಯೊಂದಕ್ಕೆ ಹಸ್ತಾಂತರಿಸಲು ಹಮಾಸ್ ಸಿದ್ಧವಿದೆ ಎಂದು ತುರ್ಕಿಯೆ ವಿದೇಶಾಂಗ ಸಚಿವ ಹಕನ್ ಫಿದಾನ್ ಹೇಳಿದ್ದಾರೆ. ಕದನ ವಿರಾಮವನ್ನು ಮುಂದುವರಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ನಡೆದ ಅರಬ್ ಮತ್ತು ಮುಸ್ಲಿಮ್ ರಾಷ್ಟ್ರಗಳ ಸಭೆಯ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಫಿದಾನ್ ` ಒಪ್ಪಂದವು ಫೆಲೆಸ್ತೀನ್ ಜನರ ಹಕ್ಕುಗಳನ್ನು ರಕ್ಷಿಸುತ್ತದೆ ಎಂಬ ವಿಶ್ವಾಸದಲ್ಲಿ ಗಾಝಾದ ಆಡಳಿತವನ್ನು ಫೆಲೆಸ್ತೀನೀಯರನ್ನು ಒಳಗೊಂಡ ಸಮಿತಿಗೆ ವಹಿಸಲು ಹಮಾಸ್ ಸಿದ್ಧವಾಗಿದೆ. ಫೆಲೆಸ್ತೀನ್ನ ಆಡಳಿತವನ್ನು ಫೆಲೆಸ್ತೀನೀಯರೇ ನಿರ್ವಹಿಸಬೇಕು ಮತ್ತು ತಮ್ಮ ಭದ್ರತೆಯನ್ನು ತಾವೇ ಖಚಿತಪಡಿಸಿಕೊಳ್ಳಬೇಕು ಎಂಬ ತತ್ವಕ್ಕೆ ತುರ್ಕಿಯೆ ಬೆಂಬಲವಿದೆ' ಎಂದು ಹೇಳಿದ್ದಾರೆ. ಯುಎಇ, ಇಂಡೋನೇಶ್ಯಾ, ಖತರ್, ಪಾಕಿಸ್ತಾನ, ಸೌದಿ ಅರೆಬಿಯಾ ಮತ್ತು ಜೋರ್ಡಾನ್ನ ಉನ್ನತ ನಿಯೋಗಗಳು ಸಭೆಯಲ್ಲಿ ಪಾಲ್ಗೊಂಡಿದ್ದವು. ಗಾಝಾದ ಭವಿಷ್ಯದ ಭದ್ರತೆಗೆ ಬೆಂಬಲವನ್ನು ಒದಗಿಸಲು ಅಂತರಾಷ್ಟ್ರೀಯ ಸ್ಥಿರೀಕರಣ ಪಡೆಯ ಸ್ವರೂಪದ ಬಗ್ಗೆ ಚರ್ಚೆ ಮುಂದುವರಿಯುತ್ತಿದೆ. ಅಂತಾರಾಷ್ಟ್ರೀಯ ಪಡೆಯಲ್ಲಿ ಪಾಲ್ಗೊಳ್ಳುವ ದೇಶಗಳು ಪಡೆಯ ಕೆಲಸ ಮತ್ತು ಜವಾಬ್ದಾರಿಯನ್ನು ವಿವರಿಸುವ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ನಿರ್ಣಯವನ್ನು ಬಯಸುತ್ತಿವೆ. ಈ ನಿರ್ಣಯವನ್ನು ಆಧರಿಸಿ ಅಂತಾರಾಷ್ಟ್ರೀಯ ಪಡೆಯಲ್ಲಿ ಯಾವ ರೀತಿಯಲ್ಲಿ ಪಾಲ್ಗೊಳ್ಳಬಹುದು ಎಂದು ರಾಷ್ಟ್ರಗಳು ನಿರ್ಧರಿಸುತ್ತವೆ. ನಾವು ಎಲ್ಲಾ ರೀತಿಯ ತ್ಯಾಗಕ್ಕೂ ಸಿದ್ಧವಿದ್ದೇವೆ. ಆದರೆ ಭದ್ರತಾ ಮಂಡಳಿಯ ನಿರ್ಣಯವು ನಮ್ಮ ಸಹಾಯದ ಸ್ವರೂಪವನ್ನು ನಿರ್ಧರಿಸುತ್ತದೆ. ಫೆಲೆಸ್ತೀನ್ ವಿಷಯಕ್ಕೆ ಸಂಬಂಧಿಸಿದ ಭದ್ರತಾ ಮಂಡಳಿಯ ನಿರ್ಣಯವು ಹಾಲಿ ಸಮಸ್ಯೆಯನ್ನು ಬಗೆಹರಿಸುವ ಜೊತೆಗೆ ಭವಿಷ್ಯದಲ್ಲಿ ಯಾವುದೇ ಸಮಸ್ಯೆಗಳಿಗೆ ರಚನಾತ್ಮಕ ಆಧಾರಗಳನ್ನು ರಚಿಸಬಾರದು' ಎಂದು ಹಕಾನ್ ಫಿದಾನ್ ಹೇಳಿರುವುದಾಗಿ ವರದಿಯಾಗಿದೆ. ತುರ್ಕಿಯೆ ಮತ್ತು ಖತರ್ ಇತ್ತೀಚಿನ ವಾರಗಳಲ್ಲಿ ಹಮಾಸ್ ಜೊತೆ ನಿಕಟ ಸಂಪರ್ಕದಲ್ಲಿದ್ದು ಅಧಿಕಾರ ಹಸ್ತಾಂತರಿಸುವ ಅಗತ್ಯದ ಬಗ್ಗೆ ಹಮಾಸ್ಗೆ ಮನವರಿಕೆ ಮಾಡುವಲ್ಲಿ ಯಶಸ್ವಿಯಾಗಿದೆ ಎಂದು ಮೂಲಗಳು ಹೇಳಿವೆ. ಇಸ್ರೇಲ್ ದಾಳಿಯಲ್ಲಿ ಇಬ್ಬರ ಮೃತ್ಯು ಉತ್ತರ ಗಾಝಾದ ಜಬಾಲಿಯಾದಲ್ಲಿ ಇಸ್ರೇಲ್ ಸೇನೆಯ ಗುಂಡಿನ ದಾಳಿಯಲ್ಲಿ ಓರ್ವ ಮೃತಪಟ್ಟಿದ್ದರೆ, ಗಾಝಾ ನಗರದ ಹೊರವಲಯದಲ್ಲಿ ನಡೆದ ಪ್ರತ್ಯೇಕ ಗುಂಡಿನ ದಾಳಿಯಲ್ಲಿ ಮತ್ತೊಬ್ಬ ಮೃತಪಟ್ಟು ಒಬ್ಬರು ಗಂಭೀರವಾಗಿ ಗಾಯಗೊಂಡಿರುವುದಾಗಿ ಮೂಲಗಳನ್ನು ಉಲ್ಲೇಖಿಸಿ ಅಲ್-ಜಝೀರಾ ವರದಿ ಮಾಡಿದೆ.
ಸುರಂಗ ರಸ್ತೆ ನಿರ್ಮಾಣ ರಾಜ್ಯ ಸರಕಾರದ ಯೋಜನೆ ಅಲ್ಲ : ಎಂ.ಲಕ್ಷ್ಮಣ್
ಬೆಂಗಳೂರು : ವಿಪಕ್ಷ ನಾಯಕ ಆರ್.ಅಶೋಕ್ ಸುಳ್ಳು ಹೇಳುವುದರಲ್ಲಿ ನಾಲ್ಕು ಪಿಎಚ್ಡಿ ಮಾಡಿದ್ದಾರೆ. ಲಾಲ್ಬಾಗ್ ಸುರಂಗ ರಸ್ತೆ ಯೋಜನೆ ರಾಜ್ಯ ಸರಕಾರದ್ದಲ್ಲ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರೂಪಿಸಿದ ಯೋಜನೆ ಅಲ್ಲ. ಆ ಯೋಜನೆ ಕೇಂದ್ರ ಸರಕಾರದ್ದು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ತಿಳಿಸಿದ್ದಾರೆ. ಮಂಗಳವಾರ ನಗರದ ಖಾಸಗಿ ಹೊಟೇಲ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸುರಂಗ ರಸ್ತೆ ನಿರ್ಮಾಣ ಮಾಡಲು ಕೇಂದ್ರ ಸರಕಾರವೇ ಪ್ರಸ್ತಾವನೆ ನೀಡಿದೆ. ಅದನ್ನು ರಾಜ್ಯ ಸರಕಾರ ಸ್ವೀಕಾರ ಮಾಡಿದೆ. 6 ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಸುರಂಗ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಹೊಸೂರು, ಧರ್ಮಪುರಿ, ಕೃಷ್ಣಗಿರಿಗೆ ಹೋಗುವವರು ನೆಲಮಂಗಲದಲ್ಲಿ ವಾಹನ ಪ್ರವೇಶವಾಗಿ ಬೆಂಗಳೂರಿ ನಗರಕ್ಕೆ ಬರದೇ ಟನಲ್ ಮೂಲಕ ಹೋಗಬಹುದು. ಬಿಜೆಪಿ ನಾಯಕರಿಗೆ ಸುಳ್ಳು ಹೇಳುವುದರಲ್ಲಿ ಮಿತಿ ಇರಬೇಕು. ಒಂದು ಮೆಟ್ರೋ ಟನಲ್ಗೆ 500 ಕೋಟಿ ರೂ. ವೆಚ್ಚವಾಗುತ್ತದೆ. ಬೆಂಗಳೂರಿನಲ್ಲಿ ನಿರ್ಮಾಣ ಮಾಡಲು ಯೋಜಿಸಿರುವ ಟನಲ್ಗೆ ಒಂದು ಕಿ.ಮೀಗೆ 446.83 ಕೋಟಿ ರೂ.ವೆಚ್ಚವಾಗುತ್ತದೆ. ಆದರೆ ವಿಪಕ್ಷ ನಾಯಕ ಆರ್.ಅಶೋಕ್ ಅವರು ಕಿ.ಮೀಗೆ 1,285ಕೋಟಿ ರೂ. ವೆಚ್ಚವಾಗುತ್ತದೆ ಎಂದು ಹೇಳುತ್ತಾರೆ. ಅವರಿಗೆ ಮಾನ ಮರ್ಯಾದೆ ಇಲ್ಲವಾ? ಎಂದು ಪ್ರಶ್ನಿಸಿದರು. ಆರ್.ಅಶೋಕ್ ಅವರು ದಾಖಲೆ ಇಟ್ಟುಕೊಂಡು ಮಾತನಾಡಬೇಕು. ಸುರಂಗ ರಸ್ತೆ ನಿರ್ಮಾಣಕ್ಕೆ 120 ಇಲಾಖೆಯಿಂದ ಅನುಮತಿ ಪಡೆಯಬೇಕು ಎಂದು ಕೂಡ ಹೇಳಿದ್ದರು. ಆದರೆ ರಾಜ್ಯದಲ್ಲಿ ಇರುವುದೇ 38 ಇಲಾಖೆಗಳು. 120 ಇಲಾಖೆಗಳು ಎಲ್ಲಿ ಬರುತ್ತವೆ ಎಂದು ಅವರು ಖಾರವಾಗಿ ಪ್ರಶ್ನಿಸಿದರು. ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್, ಕಾಂಗ್ರೆಸ್ ಮುಖಂಡರಾದ ಎ.ಆನಂದ್, ಸುಧಾಕರ್ ರಾವ್, ಪ್ರಕಾಶ್, ಕುಶಾಲ್ ಹರುವೇಗೌಡ, ಚಂದ್ರಶೇಖರ, ಸುಂಕದಕಟ್ಟೆ ನವೀನ್, ಉಮೇಶ್, ಪುಟ್ಟರಾಜು ಮತ್ತಿತರರು ಹಾಜರಿದ್ದರು.
Adani Enterprises: H1 FY26 ಫಲಿತಾಂಶ ಪ್ರಕಟಿಸಿದ ಅದಾನಿ ಎಂಟರ್ಪ್ರೈಸಸ್ ಲಿಮಿಟೆಡ್
Adani Enterprises: ಅದಾನಿ ಎಂಟರ್ಪ್ರೈಸಸ್ ಲಿಮಿಟೆಡ್ FY26 ವರ್ಷದಲ್ಲಿ ಬಲವಾದ ಆರ್ಥಿಕ ಫಲಿತಾಂಶಗಳನ್ನು ಪ್ರಕಟಿಸಿದೆ. ಇದು ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು AI ಡೇಟಾ ಸೆಂಟರ್ ಪಾಲುದಾರಿಕೆಗಳು ಸೇರಿದಂತೆ ಮೂಲಸೌಕರ್ಯ ಯೋಜನೆಗಳಲ್ಲಿ ಗಮನಾರ್ಹ ಆದಾಯ ಬೆಳವಣಿಗೆ ಮತ್ತು ಕಾರ್ಯತಂತ್ರದ ಹೂಡಿಕೆಗಳಲ್ಲಿನ ಪ್ರಗತಿಯನ್ನು ತೋರಿಸುತ್ತದೆ. 44,281 ಕೋಟಿ ರೂಪಾಯಿ ಆದಾಯ 7,688 ಕೋಟಿ ರೂಪಾಯಿ EBITDA
ಬೋಸ್ಟನ್ನಲ್ಲಿ ನಡೆದ ಸಮಾರಂಭದಲ್ಲಿ ಪ್ರತಿಷ್ಠಿತ '2025 ರ ವರ್ಲ್ಡ್ ಲೀಡರ್ ಫಾರ್ ಪೀಸ್ ಆಂಡ್ ಸೆಕ್ಯೂರಿಟಿ' ಪ್ರಶಸ್ತಿಯನ್ನು ಗುರುದೇವ್ ಶ್ರೀ ಶ್ರೀ ರವಿ ಶಂಕರ್ ಅವರಿಗೆ ಪ್ರದಾನ ಮಾಡಲಾಯಿತು. ಜಾಗತಿಕ ಶಾಂತಿ, ಸಂಘರ್ಷ ನಿವಾರಣೆ ಮತ್ತು ಮಾನವೀಯ ಸೇವೆಗೆ ನೀಡಿದ ಅಸಾಧಾರಣ ಕೊಡುಗೆ ಹಾಗೂ ಡಿಜಿಟಲ್ ಯುಗದಲ್ಲಿ ನೈತಿಕ ಮಾರ್ಗದರ್ಶನ ನೀಡಿದ್ದಕ್ಕಾಗಿ ಈ ಗೌರವವನ್ನು ನೀಡಲಾಗಿದೆ.
'ಬಿಗ್ ಬಾಸ್' ಮನೆಯಲ್ಲಿ ನಡೆದ ಮಸಿ ಬಳಿಯುವ ಟಾಸ್ಕ್ನಲ್ಲಿ ವೈಲ್ಡ್ ಕಾರ್ಡ್ ಸ್ಪರ್ಧಿ ರಿಷಾ ಗೌಡ ಮೇಲೆ ಮನೆಯ ಬಹುತೇಕ ಸದಸ್ಯರು ತಿರುಗಿಬಿದ್ದ ಪ್ರಸಂಗ ನಡೆದಿದೆ. ರಿಷಾ ಗೌಡ ಮುಖಕ್ಕೆ ಮಸಿ ಬಳಿದು ಸಾಕಷ್ಟು ಟೀಕೆಗಳನ್ನು ಇತರೆ ಸ್ಪರ್ಧಿಗಳು ಮಾಡಿದ್ದಾರೆ. ಹಾಗಾದರೆ ರಿಷಾಗೆ ಯಾರ್ ಯಾರು ಏನೇನು ಹೇಳಿದರು? ಮುಂದೆ ಓದಿ.
ಕಿರ್ಲೋಸ್ಕರ್ನಿಂದ ರಾಜ್ಯದಲ್ಲಿ 3 ಸಾವಿರ ಕೋಟಿ ರೂ.ಹೂಡಿಕೆ : ಎಂ.ಬಿ.ಪಾಟೀಲ್
ಪುಣೆ : ಕಿರ್ಲೋಸ್ಕರ್ ಫೆರೋಸ್ ಇಂಡಸ್ಟ್ರೀಸ್ ಕರ್ನಾಟಕದಲ್ಲಿ ಮುಂದಿನ ಮೂರು ವರ್ಷಗಳಲ್ಲಿ 3ಸಾವಿರ ಕೋಟಿ ರೂ.ಬಂಡವಾಳ ಹೂಡಲಿದೆ. ಇದರ ಜೊತೆಗೆ ವಿಪ್ರೋ ಪ್ಯಾರಿ, ಅಟ್ಲಾಸ್ ಕಾಪ್ಕೋ, ಬೆಲ್-ರೈಸ್ ಇಂಡಸ್ಟ್ರೀಸ್, ಫಿನೋಲೆಕ್ಸ್ ಮತ್ತು ಫ್ಲೂಯಿಡ್ ಕಂಟ್ರೋಲ್ಸ್ ಲಿ.ಉದ್ಯಮಗಳು ರಾಜ್ಯದಲ್ಲಿ ಹೂಡಿಕೆಗೆ ಆಸಕ್ತಿ ತೋರಿಸಿವೆ. ಬಂಡವಾಳ ತೊಡಗಿಸಲು ಮುಂದಾಗಿರುವ ಈ ಕಂಪೆನಿಗಳಿಗೆ ಭೂಮಿ, ಮೂಲಸೌಕರ್ಯ ಮುಂತಾದ ಅನುಕೂಲಗಳ ಜೊತೆಗೆ ಹೆಚ್ಚಿನ ಸಹಕಾರ ನೀಡಲಾಗುವುದು ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಮಂಗಳವಾರ ರಾಜ್ಯದ ಕೈಗಾರಿಕೆ ಮತ್ತು ವಾಣಿಜ್ಯ ಉನ್ನತ ಮಟ್ಟದ ನಿಯೋಗದೊಂದಿಗೆ ಇಲ್ಲಿ ರೋಡ್ ಶೋ ನಡೆಸಿದ ಅವರು, ಹೂಡಿಕೆ ಕುರಿತು ಹತ್ತಕ್ಕೂ ಹೆಚ್ಚು ಗಣ್ಯ ಉದ್ಯಮಿಗಳನ್ನು ಭೇಟಿಯಾಗಿ, ಮಾತುಕತೆ ನಡೆಸಿದ ಅವರು, `ಕಿರ್ಲೋಸ್ಕರ್ ಫೆರೋಸ್ ಈಗಾಗಲೇ ಹಿರಿಯೂರಿನಲ್ಲಿ ತನ್ನ ಘಟಕ ಹೊಂದಿದ್ದು, ಅದನ್ನು ಮೇಲ್ದರ್ಜೆಗೇರಿಸಲು ಮುಂದಾಗಿದ್ದು, ಇಲ್ಲಿ ಸ್ಪಾಂಜ್ ಪೈಪ್ ಉತ್ಪಾದನೆ ಆರಂಭಿಸಲಿದೆ. ಜೊತೆಗೆ ತನ್ನ ಉಕ್ಕು ಉತ್ಪಾದನೆ ಘಟಕದ ಸಾಮರ್ಥ್ಯ ಹೆಚ್ಚಳ, ಕಬ್ಬಿಣದ ಅದಿರು ಸಂಸ್ಕರಣೆ ಹೆಚ್ಚಳ, ಫೌಂಡ್ರಿ ಘಟಕದ ಅಭಿವೃದ್ಧಿ ಮುಂತಾದ ಯೋಜನೆಗಳನ್ನು ಕೈಗೆತ್ತಿಕೊಳ್ಳಲಿದೆ’ ಎಂದು ಹೇಳಿದರು. ಈ ಕಂಪೆನಿಯ ಉದ್ಯೋಗಿಗಳಲ್ಲಿ ಶೇ.99ರಷ್ಟು ಕನ್ನಡಿಗರೇ ಇದ್ದಾರೆ. ಇದರಿಂದ ಪ್ರಾದೇಶಿಕ ಆರ್ಥಿಕ ಅಭಿವೃದ್ಧಿ ಮತ್ತು ಎಲ್ಲರನ್ನೂ ಒಳಗೊಂಡ ಪ್ರಗತಿ ಸಾಧ್ಯವಾಗಲಿದೆ. ಕಿರ್ಲೋಸ್ಕರ್ ಕಂಪೆನಿಯು 20 ವರ್ಷಗಳಿಂದಲೂ ತನ್ನ ಆದಾಯದಲ್ಲಿ ಶೇ.2ರಷ್ಟು ಲಾಭಾಂಶವನ್ನು ಸಿಎಸ್ಆರ್ ನಿಧಿಗೆ ಕೊಡುತ್ತಿದೆ. ಇದರಿಂದ ಗ್ರಾಮೀಣ ಭಾಗದಲ್ಲಿ ಆರೋಗ್ಯ ಸೇವೆಗಳನ್ನು ಒದಗಿಸುವ ಗುರಿ ಇದೆ ಎಂದು ಅವರು ತಿಳಿಸಿದರು. ವಿಪ್ರೋ ಪ್ಯಾರಿ ಕಂಪೆನಿಯು ರಾಜ್ಯದಲ್ಲಿ ಎಲೆಕ್ಟ್ರಾನಿಕ್ಸ್ ಕಾಪರ್ ಲ್ಯಾಮಿನೇಟ್ ಉತ್ಪಾದನಾ ಘಟಕವನ್ನು ಆರಂಭಿಸಿದೆ. ದೊಡ್ಡಬಳ್ಳಾಪುರದ ಸಮೀಪ ಇರುವ ಆದಿನಾರಾಯಣ ಹೊಸಹಳ್ಳಿಯಲ್ಲಿರುವ ಕೆಐಎಡಿಬಿ ನಿವೇಶನದಲ್ಲಿ ಎರಡು ದಿನಗಳ ಹಿಂದೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಇಲ್ಲಿ ಕಂಪೆನಿಯು ಸ್ಮಾರ್ಟ್ ರೋಬೊಟಿಕ್ಸ್ ಪ್ರಯೋಗಾಲಯ ಸ್ಥಾಪಿಸಲಿದೆ ಎಂದು ಅವರು ವಿವರಿಸಿದರು. ಸುಸ್ಥಿರ ಮಾದರಿಯ ಕೈಗಾರಿಕಾ ಉತ್ಪಾದನೆಗೆ ಹೆಸರಾಗಿರುವ, ಸ್ವೀಡನ್ ಮೂಲದ ಅಟ್ಲಾಸ್ ಕಾಪ್ಕೋ, ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಎಚ್.ಎಚ್.ವಿ. ಪಂಪ್ಸ್ ಕಂಪನಿಯನ್ನು 2021ರಲ್ಲೇ ಸ್ವಾಧೀನ ಪಡಿಸಿಕೊಂಡಿದೆ. ಈಗ ಕಂಪೆನಿಯು ರಾಜ್ಯದಲ್ಲಿ ತನ್ನ ಉತ್ಪಾದನಾ ಚಟುವಟಿಕೆಯನ್ನು ವಿಸ್ತರಿಸಿಕೊಳ್ಳಲು ಬಯಸಿದೆ. ಹೀಗಾಗಿ ಕಂಪೆನಿಯ ಉನ್ನತಾಧಿಕಾರಿಗಳಿಗೆ ರಾಜ್ಯದ ಕೈಗಾರಿಕಾ ಕಾರ್ಯಪರಿಸರ, ನೀತಿ ನಿಯಮಗಳನ್ನು ಮನದಟ್ಟು ಮಾಡಿಕೊಡಲಾಗಿದೆ ಎಂದು ಅವರು ನುಡಿದರು. ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೆಸರು ಮಾಡಿರುವ ಬೆಲ್-ರೈಸ್ ಇಂಡಸ್ಟ್ರೀಸ್, ಈಗಾಗಲೇ ಕೋಲಾರದ ನರಸಾಪುರ ಮತ್ತು ಧಾರವಾಡದ ಬೇಲೂರು ಕೈಗಾರಿಕಾ ಪ್ರದೇಶಗಳಲ್ಲಿ ಘಟಕಗಳನ್ನು ಹೊಂದಿದೆ. ಇತ್ತೀಚೆಗೆ ಇದು ಎಚ್-ಒನ್ ಪ್ರೈವೇಟ್ ಲಿ. ಕಂಪೆನಿಯನ್ನು ಸ್ವಾಧೀನಕ್ಕೆ ತೆಗೆದುಕೊಂಡಿದ್ದು, ರಾಜ್ಯದಲ್ಲಿ ತನ್ನ ಕಾರ್ಯ ಚಟುವಟಿಕೆಯನ್ನು ಹೆಚ್ಚಿಸಿಕೊಳ್ಳಲು ತೀರ್ಮಾನಿಸಿದ್ದು ಮೈಸೂರಿನಲ್ಲಿ 25 ಎಕರೆ ಭೂಮಿ ಕೇಳಿದೆ. ಇದನ್ನು ಪರಿಶೀಲಿಸಲಾಗುವುದು ಎಂದು ಪಾಟೀಲ್ ಹೇಳಿದರು. ಫಿನೋಲೆಕ್ಸ್ ಕಂಪೆನಿಯು ಪಿವಿಸಿ ಪೈಪ್, ಬಿಡಿಭಾಗಗಳ ಉತ್ಪಾದನೆಗೆ ಹೆಸರಾಗಿದೆ. ಇದು ರಾಜ್ಯದಲ್ಲಿ ತನ್ನದೊಂದು ಘಟಕ ಸ್ಥಾಪಿಸಬೇಕು ಎನ್ನುವುದು ರಾಜ್ಯ ಸರಕಾರದ ನಿರೀಕ್ಷೆಯಾಗಿದೆ. ಹಾಗೆಯೇ, ಫ್ಲೂಯಿಡ್ ಕಂಟ್ರೋಲ್ಸ್ ಲಿ. 90ಕೋಟಿ ರೂ. ಹೂಡಿಕೆಗೆ ಮುಂದಾಗಿದ್ದು, 5 ಎಕರೆ ಭೂಮಿ ಬೇಕೆಂದು ಕೇಳಿದೆ. ಇದನ್ನು ಕ್ಷಿಪ್ರವಾಗಿ ಈಡೇರಿಸಲಾಗುವುದು ಎಂದು ಅವರು ವಿವರಿಸಿದರು. ವಿಪ್ರೋ ಪ್ಯಾರಿ ಕಂಪೆನಿಯ ಸಿಇಒ ವಿಪುಲ್ ಟಂಡನ್, ಸಿಎಫ್ಒ ಶ್ರೀಪಾದ್ ರಾಮನಾಥನ್, ಬೆಲ್-ರೈಸ್ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಶ್ರೀಕಾಂತ್ ಬಾಡ್ವೆ, ಫ್ಲೂಯಿಡ್ ಕಂಟ್ರೋಲ್ಸ್ ಲಿ.ನ ಸಿಇಒ ಡಾ. ತಾನಸೇನ್ ಚೌಧರಿ, ಫಿನೋಲೆಕ್ಸ್ ಇಂಡಸ್ಟ್ರೀಸ್ ವ್ಯವಸ್ಥಾಪಕ ನಿರ್ದೇಶಕ ಉದೀಪ್ತ್ ಅಗರವಾಲ್ ಅವರೊಂದಿಗೆ ಸಚಿವರು ಮಾತುಕತೆ ನಡೆಸಿದ್ದಾರೆ. ಸರಕಾರದ ನಿಯೋಗದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ ಹಾಜರಿದ್ದರು. ಹಿರಿಯೂರು ಸ್ಥಾವರ ಅಭಿವೃದ್ಧಿಗೆ ರೂ. 3,000 ಕೋಟಿ ಹೂಡಿಕೆ ಪ್ರಕಟಿಸಿದ ಕಿರ್ಲೋಸ್ಕರ್ ಫೆರಸ್! ಶೇ. 99 ಕನ್ನಡಿಗರಿಗೆ ಉದ್ಯೋಗ ಮೀಸಲು! ಹೂಡಿಕೆ ಆಕರ್ಷಣೆ, ಉದ್ಯಮ ವಿಸ್ತರಣೆಯ ಗುರಿ ಇರಿಸಿಕೊಂಡು ಕೈಗಾರಿಕಾ ಇಲಾಖೆಯ ಉನ್ನತಮಟ್ಟದ ನಿಯೋಗದೊಂದಿಗೆ ಈ ದಿನ ಪುಣೆಯಲ್ಲಿ ರೋಡ್ ಶೋ ಹಮ್ಮಿಕೊಳ್ಳಲಾಗಿದೆ. ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರಿಸ್… pic.twitter.com/InwD5Tiu8O — M B Patil (@MBPatil) November 4, 2025
ಮಂಗಳೂರು: ಚಿಲ್ಲರೆ ಸಿಗರೇಟ್ ಮಾರುವ ಅಂಗಡಿಗಳನ್ನು ಬಂದ್ ಮಾಡಲು ಸೂಚನೆ
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳನ್ನು ಸೇವಿಸಲು ಅವಕಾಶ ನೀಡುವ ಹಾಗೂ ಸಿಗರೇಟ್ಗಳನ್ನು ಚಿಲ್ಲರೆಯಾಗಿ ಮಾರಾಟ ಮಾಡುವ ಅಂಗಡಿ ಹೋಟೆಲ್ಗಳ ವಿರುದ್ಧ ಕಾರ್ಯಾಚರಣೆ ನಡೆಸಿ ಅವುಗಳನ್ನು ಮುಚ್ಚಲು ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ರಾಜು. ಕೆ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವನೆ ಹಾಗೂ ಪಾನ್ ಮತ್ತಿತರ ತಂಬಾಕುಗಳನ್ನು ಮಾರಾಟ ಮಾಡಲು ಅವಕಾಶವಿಲ್ಲ. ಸಿಗರೇಟ್ಗಳನ್ನು ಇಡೀ ಪ್ಯಾಕ್ನಲ್ಲಿ ಮಾರಾಟ ಮಾಡಬೇಕೇ ಹೊರತು ಸಿಂಗಲ್ ಆಗಿ ಚಿಲ್ಲರೆ ಸಿಗರೇಟ್ಗಳನ್ನು ಮಾರಾಟ ಮಾಡಲು ಅವಕಾಶವಿಲ್ಲ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ಗಳು ಆಗ್ಗಿಂದಾಗೆ ಅಂಗಡಿ, ಹೋಟೆಲ್ ತಪಾಸಣೆ ನಡೆಸಬೇಕು. ಯಾವುದೇ ಅನಧಿಕೃತ ಮಾರಾಟ ಕಂಡು ಬಂದಲ್ಲಿ ಅಂತಹ ಅಂಗಡಿಗಳನ್ನು ಮುಚ್ಚಿಸಿ ಜಪ್ತಿ ಮಾಡುವಂತೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಈ ಬಗ್ಗೆ ಮುಂದಿನ ಸಭೆಯೊಳಗೆ ಎಷ್ಟು ಅಂಗಡಿಗಳಿಗೆ ಭೇಟಿ ನೀಡಲಾಗಿದೆ, ಎಷ್ಟು ಉಲ್ಲಂಘನೆ ಕಂಡು ಬಂದಿದೆ, ದಂಡ ವಿಧಿಸಿರುವ ಹಾಗೂ ಅಂಗಡಿಗಳನ್ನು ಸೀಝ್ ಮಾಡಿರುವ ಬಗ್ಗೆ ಎಲ್ಲಾ ಅಧಿಕಾರಿಗಳು ವರದಿ ನೀಡಬೇಕು ಎಂದು ಆದೇಶಿಸಿದರು. ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಪ್ರಕರಣಗಳು ಅಧಿಕಗೊಂಡಿದ್ದು, ಧೂಮಪಾನ ತಂಬಾಕು ಸೇವನೆಯೇ ಕಾರಣವಾಗಿದೆ. ಜನರ ಜೀವನ ಮತ್ತು ಆರೋಗ್ಯ ತುಂಬಾ ಮುಖ್ಯವಾಗಿದೆ. ಆರೋಗ್ಯದ ವಿರುದ್ಧ ಚೆಲ್ಲಾಟವಾಡುವವರನ್ನು ಯಾವುದೇ ಕಾರಣಕ್ಕೂ ಸಹಿಸಲಾಗದು ಎಂದು ಅವರು ತಿಳಿಸಿದರು. ಶಾಲಾ ಕಾಲೇಜುಗಳ ಬಳಿ ಸಂಪೂರ್ಣ ನಿಷೆೇಧ ಶಾಲಾ-ಕಾಲೇಜುಗಳ 100 ಮೀಟರ್ ಅಂತರದಲ್ಲಿ ಇರುವ ಅಂಗಡಿಗಳಲ್ಲಿ ಯಾವುದೇ ಕಾರಣಕ್ಕೂ ಬೀಡಿ, ಸಿಗರೇಟು, ಪಾನ್ ಮಸಾಲ ಹಾಗೂ ಇತರ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಅವಕಾಶವಿಲ್ಲ. ಈ ನಿಟ್ಟಿನಲ್ಲಿ ಆಯಾ ಶಾಲಾ ಕಾಲೇಜುಗಳ ಪ್ರಾಂಶುಪಾಲರು ಆಗಾಗ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಸಿಗರೇಟು ತಂಬಾಕು ಉತ್ಪನ್ನ ಮಾರಾಟ ಕಂಡು ಬಂದಲ್ಲಿ ಅಂತಹ ಅಂಗಡಿಗಳನ್ನು ತೆರವುಗೊಳಿಸಲು ಸ್ಥಳೀಯ ಸಂಸ್ಥೆಗೆ ವರದಿ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು. ಈ ಬಗ್ಗೆ ಎಲ್ಲಾ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಮುಂದಿನ ಒಂದು ವಾರದೊಳಗೆ ವರದಿ ನೀಡಬೇಕು. ಹಾಗೂ ಮುಂದಿನ ಸಭೆಯೊಳಗೆ ಎಷ್ಟು ಅಂಗಡಿಗಳನ್ನು ಮುಚ್ಚಿಸಲಾಗಿದೆ ಎಂಬುವುದರ ಬಗ್ಗೆ ವರದಿ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ನಿರ್ದೇಶಿಸಿದರು. ಚಾ ಕೆಫೆಗಳಲ್ಲಿ ಸಿಗರೇಟ್ ಸೇದುವ ವಿರುದ್ಧ ಕ್ರಮ ಇತ್ತೀಚಿನ ದಿನಗಳಲ್ಲಿ ನಗರದಲ್ಲಿರುವ ಕೆಲವು ಚಾ-ಕಾಫೀ ಕೆಫೆಗಳಲ್ಲಿ ಮತ್ತು ಹೋಟೆಲ್ಗಳಲ್ಲಿ ಸಿಗರೇಟ್ ಮಾರಾಟ ಹಾಗೂ ಬಹಿರಂಗವಾಗಿ ಧೂಮಪಾನ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿದೆ. ಈ ನಿಟ್ಟಿನಲ್ಲಿ ಅಂತಹ ಸಂಸ್ಥೆಗಳ ಮೇಲೆ ದಾಳಿ ನಡೆಸಿ ಮುಚ್ಚಿಸಲು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಗಳ ಆವರಣದಲ್ಲಿ ಧೂಮಪಾನ ಮತ್ತು ತಂಬಾಕು ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಲು ಕ್ರಮಕೈಗೊಳ್ಳಲು ಅಪರ ಜಿಲ್ಲಾಧಿಕಾರಿಗಳು ಸೂಚಿಸಿದರು. 1,488 ಪ್ರಕರಣ ದಾಖಲು: ಸಭೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮ ಅಧಿಕಾರಿ ಡಾ. ನವೀನ್ ಚಂದ್ರ ಮಾತನಾಡಿ, 2025ರ ಎಪ್ರಿಲ್ನಿಂದ ಅಕ್ಟೋಬರ್ವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮತ್ತು ತಂಬಾಕು ಉತ್ಪನ್ನ ಸೇವಿಸುವ ಬಗ್ಗೆ ಕಾರ್ಯಾಚರಣೆ ನಡೆಸಿ 1,488 ಕೇಸುಗಳನ್ನು ದಾಖಲಿಸಲಾಗಿದ್ದು, 1.89 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ ಎಂದು ತಿಳಿಸಿದರು. ಸಹಾಯಕ ಪೊಲೀಸ್ ಆಯುಕ್ತೆ ವಿಜಯ ಕ್ರಾಂತಿ ಮಾತನಾಡಿ, ಪೊಲೀಸ್ ಇಲಾಖೆ ವತಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮತ್ತು ತಂಬಾಕು ಸೇವನೆ ಮಾಡುವವರ ವಿರುದ್ಧ 1,756 ಪ್ರಕರಣ ದಾಖಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ, ವೆನ್ಲಾಕ್ ಅಧೀಕ್ಷಕ ಡಾ.ಶಿವಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.
TIME Climate Most Powerful Leader : ಭಾರತದ ರಾಜಕಾರಣಿಯೊಬ್ಬರು ಇದೇ ಮೊದಲ ಬಾರಿಗೆ ಪಟ್ಟಿಯಲ್ಲಿ!
Most Influential Leaders : 2014ರಲ್ಲಿ ಕೇವಲ 81 ಗಿಗಾವ್ಯಾಟ್ ಇದ್ದ ಭಾರತದ ನವೀಕರಿಸಬಹುದಾದ ಇಂಧನ ಸಾಮರ್ಥ್ಯ ಇಂದು 257 ಗಿಗಾವ್ಯಾಟ್ಗೆ ಏರಿದೆ. ಇನ್ನು ಸೋಲಾರ್ ಸಾಮರ್ಥ್ಯ ಸಹ ಅತ್ಯದ್ಭುತ ಎನ್ನುವಂತೆ 2.8 ಗಿಗಾವ್ಯಾಟ್ನಿಂದ 128 ಗಿಗಾವ್ಯಾಟ್ ಉತ್ಪಾದನಾ ಸಾಮರ್ಥ್ಯಕ್ಕೆ ಹೆಚ್ಚಿಸುವಲ್ಲಿ ಪ್ರಲ್ಹಾದ ಜೋಶಿಯವರ ಕಾರ್ಯವೈಖರಿ ಅನುಕರಣೀಯ. ಪ್ರಲ್ಹಾದ ಜೋಶಿ, ಟೈಮ್ 100 ಕ್ಲೈಮೇಟ್ ಪ್ರಭಾವೀ ನಾಯಕರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಐಐಎಸ್ಸಿ ನೀಡಿದ್ದ ಇನ್ನರ್ ರಿಂಗ್ ಮೆಟ್ರೋ ಯೋಜನೆಗೆ ಸರ್ಕಾರ ಆದ್ಯತೆ ನೀಡಿಲ್ಲ. ಬದಲಾಗಿ ಉಪನಗರಗಳಿಗೆ ಮೆಟ್ರೋ ವಿಸ್ತರಿಸಲು ಉತ್ಸುಕವಾಗಿದೆ. ಈ ನಿರ್ಧಾರ ತಜ್ಞರ ಅಸಮಾಧಾನಕ್ಕೆ ಕಾರಣವಾಗಿದೆ. ಐಐಎಸ್ಸಿ ವರದಿ ಪ್ರಕಾರ, ಈ ಯೋಜನೆ 2030ರ ವೇಳೆಗೆ 77% ಪ್ರಯಾಣಿಕರ ಹೆಚ್ಚಳಕ್ಕೆ ಕಾರಣವಾಗುತ್ತಿತ್ತು. ಸುರಂಗ ರಸ್ತೆ ಯೋಜನೆಗೆ ಒತ್ತು ನೀಡಲಾಗಿದೆ.
ಕೆ-ಸೆಟ್ ಪರೀಕ್ಷೆ : ಕೀ ಉತ್ತರ ಪ್ರಕಟ
ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ-ಸೆಟ್) ನ.2ರಂದು ನಡೆದಿದ್ದು, ಪರೀಕ್ಷೆಯ ಕೀ ಉತ್ತರಗಳನ್ನು ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಮಂಗಳವಾರ ಪ್ರಕಟನೆ ಹೊರಡಿಸಿರುವ ಅವರು, ಈ ಉತ್ತರಗಳಿಗೆ ಏನೇ ಆಕ್ಷೇಪಣೆಗಳು ಇದ್ದಲ್ಲಿ ನ.6ರಂದು ಮಧ್ಯಾಹ್ನ 3 ಗಂಟೆ ಒಳಗೆ ವೆಬ್ ಸೈಟ್ ನಲ್ಲಿ ಕೊಟ್ಟಿರುವ ಲಿಂಕ್ ಮೂಲಕ ಅಪ್ ಲೋಡ್ ಮಾಡಬಹುದು ಎಂದು ತಿಳಿಸಿದ್ದಾರೆ. ಎಲ್ಲ 33 ವಿಷಯ ಹಾಗೂ ಒಂದು ಸಾಮಾನ್ಯ ಅಧ್ಯಯನದ ಪತ್ರಿಕೆಗಳ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ. ಪ್ರತಿಯೊಂದು ಆಕ್ಷೇಪಣೆಗೂ 50 ರೂ. ಪಾವತಿಸಬೇಕು. ವಿವರಗಳಿಗೆ ವೆಬ್ ಸೈಟ್ ನೋಡಿ ಎಂದು ಅವರು ಸಲಹೆ ನೀಡಿದ್ದಾರೆ.
2005ರ ವಿಶ್ವಕಪ್ನಲ್ಲಿ ಪ್ರತೀ ಪಂದ್ಯಕ್ಕೆ 1,000 ರೂ. ಸ್ವೀಕರಿಸಿದ್ದೆವು : ಮಿಥಾಲಿ ರಾಜ್
ಹೊಸದಿಲ್ಲಿ, ನ.4: ಸುಮಾರು 2 ದಶಕಗಳ ಹಿಂದೆ ಭಾರತದ ಮಹಿಳಾ ಕ್ರಿಕೆಟ್ ತಂಡವನ್ನು ಮೊದಲ ಬಾರಿ ಏಕದಿನ ವಿಶ್ವಕಪ್ ಫೈನಲ್ನಲ್ಲಿ ಮುನ್ನಡೆಸಿದ್ದ ಮಾಜಿ ನಾಯಕಿ ಮಿಥಾಲಿ ರಾಜ್, ಒಂದು ಕಾಲದಲ್ಲಿ ಮಹಿಳಾ ಕ್ರಿಕೆಟ್ ತಂಡ ಎದುರಿಸುತ್ತಿದ್ದ ಸಮಸ್ಯೆಯನ್ನು ತೆರೆದಿಟ್ಟಿದ್ದು, ಆಗ ನಮಗೆ ಹಣಕ್ಕಿಂತ ಬದ್ಧತೆ ಮುಖ್ಯವಾಗಿತ್ತು ಎಂದಿದ್ದಾರೆ. ಭಾರತದ ಮಹಿಳಾ ತಂಡವು 2025ರ ವಿಶ್ವಕಪ್ ಟ್ರೋಫಿಯನ್ನು ಜಯಿಸಿದ ನಂತರ ಮಿಥಾಲಿ ರಾಜ್ ಅವರು ‘ದ ಲಲನ್ಟಾಪ್’ಗೆ ನೀಡಿರುವ ಹಳೆಯ ಸಂದರ್ಶನದ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ‘‘2005ರ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ನಾವು ರನ್ನರ್ಸ್ ಅಪ್ ಆಗಿದ್ದಾಗ ಪ್ರತಿಯೊಬ್ಬರೂ ಪ್ರತೀ ಪಂದ್ಯಕ್ಕೆ ತಲಾ 1,000ರೂ. ಸ್ವೀಕರಿಸಿದ್ದೆವು. ಆ ಪಂದ್ಯಾವಳಿಯಲ್ಲಿ ನಾವು 8 ಪಂದ್ಯಗಳನ್ನು ಆಡಿದ್ದೆವು. ಹೀಗಾಗಿ ಒಟ್ಟು 8,000 ರನ್ ಸ್ವೀಕರಿಸಿದ್ದೆವು. ಆಗ ನಮಗೆ ವಾರ್ಷಿಕ ಒಪ್ಪಂದವಾಗಲಿ ಅಥವಾ ಪಂದ್ಯ ಶುಲ್ಕವಾಗಲಿ ಸರಿಯಾಗಿ ಇರಲಿಲ್ಲ’’ ಎಂದು ಮಿಥಾಲಿ ಹೇಳಿದ್ದಾರೆ. 2005ರಲ್ಲಿ ಭಾರತದಲ್ಲಿ ಮಹಿಳೆಯರ ಕ್ರಿಕೆಟ್ನ್ನು ಭಾರತದ ಮಹಿಳೆಯರ ಕ್ರಿಕೆಟ್ ಅಸೋಸಿಯೇಶನ್(ಡಬ್ಲ್ಯುಸಿಎಐ)ನಿರ್ವಹಿಸುತ್ತಿತ್ತು. ಯಾವುದೇ ಪ್ರಮುಖ ಪ್ರಾಯೋಜಕರಿಲ್ಲದೆ ಅಥವಾ ಉತ್ತಮ ಆರ್ಥಿಕ ಬೆಂಬಲವಿಲ್ಲದೆ ಕಾರ್ಯನಿರ್ವಹಿಸುತ್ತಿತ್ತು. ಆಟಗಾರ್ತಿಯರು ರೈಲಿನ ಸಾಮಾನ್ಯ ಬೋಗಿಗಳಲ್ಲಿ ಪ್ರಯಾಣಿಸುತ್ತಿದ್ದರು. ಸಾಧಾರಣ ಹೋಟೇಲ್ಗಳಲ್ಲಿ ತಂಗುತ್ತಿದ್ದರು. ‘‘ಕ್ರಿಕೆಟ್ ಅಸೋಸಿಯೇಶನ್ನಲ್ಲೇ ನಿಧಿ ಇರಲಿಲ್ಲ. ಹೀಗಾಗಿ ಸಾಕಷ್ಟು ಹಣವೂ ಇರಲಿಲ್ಲ. ನಮಗೆ ಸಾಕಷ್ಟು ವೇತನ ಲಭಿಸುತ್ತಿರಲಿಲ್ಲ. ಆದರೆ, ಕ್ರಿಕೆಟ್ ಮೇಲಿನ ಪ್ರೀತಿಯಿಂದ ನಾವು ಉತ್ಸಾಹದಿಂದ ಆಡುತ್ತಿದ್ದೆವು’’ ಎಂದು ಮಿಥಾಲಿ ಹೇಳಿದ್ದಾರೆ. 2006ರಲ್ಲಿ ಮಹಿಳೆಯರ ಕ್ರಿಕೆಟ್ ಅನ್ನು ಬಿಸಿಸಿಐ ತನ್ನ ತೆಕ್ಕೆಗೆ ಸೇರಿಸಿಕೊಂಡ ನಂತರ ಬದಲಾವಣೆ ಆರಂಭವಾಯಿತು. ಬಲಿಷ್ಠ ಹಣಕಾಸು ಬೆಂಬಲ ಹಾಗೂ ಉತ್ತಮ ಮೂಲಭೂತ ಸೌಕರ್ಯದಿಂದಾಗಿ ಆಟಗಾರ್ತಿಯರು ಪ್ರತೀ ಸರಣಿಗೆ ಹಾಗೂ ಪ್ರತೀ ಪಂದ್ಯಕ್ಕೂ ವೇತನ ಪಡೆಯಲಾರಂಭಿಸಿದರು. 2022ರಲ್ಲಿ ದೊಡ್ಡ ಬದಲಾವಣೆಯಾಗಿದ್ದು, ಪುರುಷರು ಹಾಗೂ ಮಹಿಳಾ ಕ್ರಿಕೆಟಿಗರಿಗೆ ಸಮಾನ ಪಂದ್ಯ ಶುಲ್ಕಗಳನ್ನು ಬಿಸಿಸಿಐ ಪ್ರಕಟಿಸಿತು. ಇದೀಗ ಮಹಿಳಾ ಕ್ರಿಕೆಟಿಗರು ಟೆಸ್ಟ್ ಪಂದ್ಯಕ್ಕೆ ತಲಾ 15 ಲಕ್ಷ ರೂ., ಏಕದಿನ ಪಂದ್ಯಕ್ಕೆ 6 ಲಕ್ಷ ರೂ. ಹಾಗೂ ಟಿ-20 ಪಂದ್ಯಕ್ಕೆ 3 ಲಕ್ಷ ರೂ. ಗಳಿಸುತ್ತಿದ್ದಾರೆ. 2017ರ ವಿಶ್ವಕಪ್ನಲ್ಲೂ ಭಾರತದ ಮಹಿಳಾ ತಂಡವನ್ನು ಫೈನಲ್ನಲ್ಲಿ ಮುನ್ನಡೆಸಿದ್ದ ಮಿಥಾಲಿ ಅವರ ಕ್ರಿಕೆಟ್ ಪಯಣವು ಸಂಪೂರ್ಣ ಒಂದು ವೃತ್ತ ಪೂರೈಸಿದೆ. ಪ್ರತೀ ಪಂದ್ಯಕ್ಕೆ 1,000ರೂ. ಸ್ವೀಕರಿಸುವುದರಿಂದ ಆರಂಭಿಸಿ ಭಾರತದ ಮಹಿಳಾ ತಂಡ ಪರಿಪೂರ್ಣ ವೃತ್ತಿಪರತೆಯೊಂದಿಗೆ ವಿಶ್ವ ದರ್ಜೆಯ ವ್ಯವಸ್ಥೆಗಳು ಹಾಗೂ ಸಮಾನ ವೇತನದೊಂದಿಗೆ ವಿಶ್ವಕಪ್ ಎತ್ತಿ ಹಿಡಿದಿರುವುದನ್ನು ನೋಡಿದ್ದಾರೆ.
ವಿಜಯನಗರ | ನ.11ರಂದು ಒನಕೆ ಓಬವ್ವ ಜಯಂತ್ಯೋತ್ಸವ ಕಾರ್ಯಕ್ರಮ
ವಿಜಯನಗರ(ಹೊಸಪೇಟೆ) : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ನ.11 ರಂದು ಬೆಳಿಗ್ಗೆ 10ಕ್ಕೆ ಛಲುವಾದಿಕೇರಿಯಲ್ಲಿ ವೀರವನಿತೆ ಒನಕೆ ಓಬವ್ವ ಜಯಂತ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಝಮೀರ್ ಅಹ್ಮದ್ಖಾನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಹೊಸಪೇಟೆ ಶಾಸಕ ಹೆಚ್.ಆರ್.ಗವಿಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬಳ್ಳಾರಿ ಮತ್ತು ವಿಜಯನಗರ ಸಂಸದ ಈ.ತುಕಾರಾಮ್, ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ಹಗರಿಬೊಮ್ಮನಹಳ್ಳಿ ಶಾಸಕ ಕೆ.ನೇಮಿರಾಜ ನಾಯ್ಕ, ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್, ಹೂವಿನಹಡಗಲಿ ಶಾಸಕ ಎಲ್.ಕೃಷ್ಣನಾಯಕ, ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಬಿ.ಪಾಟೀಲ್, ಶಶೀಲ್ ನಮೋಶಿ, ವೈ.ಎಂ.ಸತೀಶ್, ನಗರಸಭೆ ಅಧ್ಯಕ್ಷ ಎನ್.ರೂಪೇಶ್ ಕುಮಾರ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಹೆಚ್.ಎನ್.ಎಫ್.ಇಮಾಮ್ ನಿಯಾಜಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಕೆ.ಶಿವಮೂರ್ತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಎನ್.ಚಿನ್ನಸ್ವಾಮಿ ಸೊಸಲೆ ಉಪನ್ಯಾಸ ನೀಡಲಿದ್ದಾರೆ. ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮುಹಮ್ಮದ್ ಅಲಿ ಅಕ್ರಮ್ ಶಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ಧಲಿಂಗೇಶ್ ರಂಗಣ್ಣನವರ್ ಸ್ವಾಗತಿಸಿದ್ದಾರೆ. ವೇದಿಕೆ ಕಾರ್ಯಕ್ರಮದ ನಂತರ ಬೆಳಿಗ್ಗೆ 11 ಗಂಟೆಗೆ ವೀರವನಿತೆ ಒನಕೆ ಓಬವ್ವ ಭಾವಚಿತ್ರ ಮೆರವಣಿಗೆಯನ್ನು ನಗರದ ಛಲವಾದಿಕೇರಿಯಿಂದ ಮದಕರಿ ನಾಯಕ ವೃತ್ತ, ಮುಖ್ಯ ಬಜಾರ್, ಗಾಂಧಿ ಚೌಕ್, ನಗರಸಭೆ ರಸ್ತೆ ಡಾ.ಪುನೀತ್ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ಛಲವಾದಿಕೇರಿಯವರಗೆ ಭವ್ಯ ಮರೆವಣಿಗೆ ನಡೆಯಲಿದೆ.
ಮಂಗಳೂರು: ಭ್ರಷ್ಟಾಚಾರ ಜಾಗೃತಿ ಸಪ್ತಾಹಕ್ಕೆ ‘ಮರಳು ಶಿಲ್ಪ’
ಉಡುಪಿ: ಜಾಗೃತಿ ಅರಿವು ಸಪ್ತಾಹದ ಅಂಗವಾಗಿ ನವಮಂಗಳೂರು ಬಂದರು ಪ್ರಾಧಿಕಾರ ಮಂಗಳೂರು ಇವರು ನಡೆಸುತ್ತಿರುವ ಭ್ರಷ್ಟಾಚಾರದ ವಿರುದ್ಧ ಹೋರಾಡಲು ಸಾರ್ವಜನಿಕರಲ್ಲಿ ಪ್ರಾಮಾಣಿಕತೆ ಹಾಗೂ ಪಾರದರ್ಶಕತೆಯ ಕುರಿತು ಜಾಗೃತಿ ಮೂಡಿಸಲು ಮಣಿಪಾಲ್ ಸ್ಯಾಂಡ್ಹಾರ್ಟ್ನ ಕಲಾವಿದರಾದ ಶ್ರೀನಾಥ್ ಮಣಿಪಾಲ್, ರವಿ, ಪುರಂದರ್ ಇವರು ಪಣಂಬೂರು ಸಮುದ್ರ ಕಿನಾರೆಯಲ್ಲಿ ಬೃಹತ್ ‘ಮರಳು ಶಿಲ್ಪ’ ರಚಿಸಿದರು.
ರೈಸಿಂಗ್ ಸ್ಟಾರ್ಸ್ ಏಶ್ಯಕಪ್ : ಭಾರತ ‘ಎ’ ತಂಡದಲ್ಲಿ ಸ್ಥಾನ ಪಡೆದ ಸೂರ್ಯವಂಶಿ
ಹೊಸದಿಲ್ಲಿ, ನ.4: ಈ ತಿಂಗಳಾಂತ್ಯದಲ್ಲಿ ದೋಹಾದಲ್ಲಿ ನಡೆಯಲಿರುವ ರೈಸಿಂಗ್ ಸ್ಟಾರ್ಸ್ ಏಶ್ಯ ಕಪ್ ಟೂರ್ನಿಗೆ ಜಿತೇಶ್ ಶರ್ಮಾ ನೇತೃತ್ವದ ಭಾರತ ‘ಎ’ ತಂಡವನ್ನು ಪ್ರಕಟಿಸಲಾಗಿದ್ದು, ಬ್ಯಾಟಿಂಗ್ನ ಬಾಲ ಪ್ರತಿಭೆ ವೈಭವ್ ಸೂರ್ಯವಂಶಿ ಹಾಗೂ ಐಪಿಎಲ್ ಪ್ರತಿಭೆ ಪ್ರಿಯಾಂಶ್ ಆರ್ಯ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. 17ರ ವಯಸ್ಸಿನ ವೈಭವ್ ಸೂರ್ಯವಂಶಿ ಮಂಗಳವಾರ ಮೇಘಾಲಯ ವಿರುದ್ಧ ರಣಜಿ ಟ್ರೋಫಿ ಪಂದ್ಯದಲ್ಲಿ ಬಿಹಾರದ ಪರ ಕೇವಲ 67 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ 9 ಬೌಂಡರಿಗಳ ಸಹಿತ 93ರನ್ ಗಳಿಸಿದ್ದಾರೆ. 17ರ ವಯಸ್ಸಿನ ವೈಭವ್ ಕೇವಲ 7ರನ್ನಿಂದ ಅರ್ಹ ಶತಕದಿಂದ ವಂಚಿತರಾದರು. ಇದಕ್ಕೂಮೊದಲು ಮೇಘಾಲಯ ತಂಡವು ತನ್ನ ಮೊದಲ ಇನಿಂಗ್ಸ್ನಲ್ಲಿ 7 ವಿಕೆಟ್ಗಳ ನಷ್ಟಕ್ಕೆ 408 ರನ್ ಗಳಿಸಿತ್ತು. ಭಾರತ ‘ಎ’ ತಂಡವು ‘ಬಿ’ ಗುಂಪಿನಲ್ಲಿ ಒಮಾನ್, ಯುಎಇ ಹಾಗೂ ಪಾಕಿಸ್ತಾನ ‘ಎ’ ತಂಡದೊಂದಿಗೆ ಸ್ಥಾನ ಪಡೆದಿದೆ. ‘ಎ’ ಗುಂಪಿನಲ್ಲಿ ಬಾಂಗ್ಲಾದೇಶ ‘ಎ’, ಹಾಂಕಾಂಗ್, ಅಫ್ಘಾನಿಸ್ತಾನ ‘ಎ’ ಹಾಗೂ ಶ್ರೀಲಂಕಾ ‘ಎ’ ತಂಡಗಳಿವೆ. ಪಂದ್ಯಾವಳಿಯು ನವೆಂಬರ್ 14ರಿಂದ 23ರ ತನಕ ನಡೆಯಲಿದ್ದು, ಭಾರತ ‘ಎ’ ತಂಡವು ನ.14ರಂದು ಯುಎಇ ವಿರುದ್ಧ ಆಡುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ. ಆನಂತರ ನ.16ರಂದು ಪಾಕಿಸ್ತಾನ ‘ಎ’ ಎ ತಂಡದ ವಿರುದ್ಧ ಹೈ-ವೋಲ್ಟೇಜ್ ಪಂದ್ಯವನ್ನು ಆಡಲಿದೆ. ಈ ವರ್ಷದ ಐಪಿಎಲ್ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ಪರ 101ರನ್ ಗಳಿಸಿ ಪುರುಷರ ಟಿ20 ಕ್ರಿಕೆಟ್ನಲ್ಲಿ ಶತಕ ಗಳಿಸಿದ ಕಿರಿಯ ಆಟಗಾರ ಎನಿಸಿಕೊಂಡು ಇತಿಹಾಸ ನಿರ್ಮಿಸಿರುವ ಸೂರ್ಯವಂಶಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಬಿಹಾರದ ಬಾಲಕ ವೈಭವ್ ಕಳೆದ ತಿಂಗಳು ಬ್ರಿಸ್ಬೇನ್ನಲ್ಲಿ ನಡೆದ ಆಸ್ಟ್ರೇಲಿಯ ‘ಎ’ ವಿರುದ್ಧ ಭಾರತದ ಅಂಡರ್-19 ತಂಡದ ಪರ ಶತಕ ಗಳಿಸಿದ್ದರು. ರೈಸಿಂಗ್ ಸ್ಟಾರ್ಸ್ ಏಶ್ಯ ಕಪ್ಗೆ ಭಾರತ ‘ಎ’ ತಂಡ: ಪ್ರಿಯಾಂಶ್ ಆರ್ಯ, ವೈಭವ್ ಸೂರ್ಯವಂಶಿ, ನೇಹಾಲ್ ವಧೇರ, ನಮನ್ ಧೀರ್(ಉಪ ನಾಯಕ), ಸೂರ್ಯಾಂಶ್ ಶೆಡ್ಗೆ, ಜಿತೇಶ್ ಶರ್ಮಾ(ನಾಯಕ, ವಿಕೆಟ್ಕೀಪರ್), ರಮನ್ದೀಪ್ ಸಿಂಗ್, ಹರ್ಷ ದುಬೆ, ಅಶುತೋಶ್ ಶರ್ಮಾ, ಯಶ್ ಠಾಕೂರ್, ಗುರ್ಜಪ್ನೀತ್ ಸಿಂಗ್, ವಿಜಯಕುಮಾರ್ ವೈಶಾಕ್, ಯುದ್ದ್ವೀರ್ ಸಿಂಗ್ ಚರಕ್, ಅಭಿಷೇಕ್ ಪೊರೆಲ್(ವಿಕೆಟ್ಕೀಪರ್), ಸುಯಶ್ ಶರ್ಮಾ. *ಮೀಸಲು ಆಟಗಾರರು: ಗುರ್ನೂರ್ ಸಿಂಗ್ ಬ್ರಾರ್, ಕುಮಾರ ಕುಶಾಗ್ರ, ತನುಷ್ ಕೋಟ್ಯಾನ್, ಸಮೀರ್ ರಿಝ್ವಿ, ಶೇಕ್ ರಶೀದ್.
ಉಡುಪಿ ವಕೀಲರ ಸಂಘದ ಚುನಾವಣೆಗೆ ತಡೆ ಕೋರಿದ ಅರ್ಜಿ ಹೈಕೋರ್ಟ್ನಲ್ಲಿ ವಜಾ
ಉಡುಪಿ: ನವೆಂಬರ್ 21ರಂದು ನಡೆಯಬೇಕಾಗಿದ್ದ ಉಡುಪಿ ವಕೀಲರ ಸಂಘದ ಚುನಾವಣೆಯನ್ನು ಮುಂದೂಡಲು ಎದುರಾಳಿ ಬಣ ನಡೆಸಿದ ಪ್ರಯತ್ನಕ್ಕೆ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಹಿನ್ನಡೆಯುಂಟಾಗಿದ್ದು, ಚುನಾವಣೆಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ ಎಂದು ಉಡುಪಿ ವಕೀಲರ ಸಂಘದ ಹಾಲಿ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ತಿಳಿಸಿದ್ದಾರೆ. ನೇರವಾಗಿ ಹಾಗೂ ನ್ಯಾಯಯುತವಾಗಿ ಚುನಾವಣೆಯನ್ನು ಎದುರಿಸ ಲಾಗದೇ, ಸೋಲಿನ ಭಯದಿಂದ ಹತಾಶರಾಗಿ ನಿಯಮಾವಳಿಯಂತೆ ಹಾಗೂ ಪಾರದರ್ಶಕವಾಗಿ ನಡೆಸಲಾಗುತ್ತಿರುವ ಚುನಾವಣೆಗೆ ಕ್ಷುಲ್ಲಕ ಕಾರಣಗಳನ್ನು ಒಡ್ಡಿ ಮುಂದೂಡುವಂತೆ ಎಚ್.ರತ್ನಾಕರ್ ಶೆಟ್ಟಿ, ಸಂಜಯ್ ಕೆ.ನೀಲಾವರ ಹಾಗೂ ವಾಣಿ ವಿ. ರಾವ್ ಮೂಲಕ ಸಲ್ಲಿಸಲಾದ ರಿಟ್ ಅರ್ಜಿಯ ವಿಚಾರಣೆಯನ್ನು ಇಂದು ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ನೇತೃತ್ವದ ಪೀಠವು, ರಿಟ್ ಅರ್ಜಿಯಲ್ಲಿ ಯಾವುದೇ ಹುರುಳಿಲ್ಲವೆಂದು ವಜಾಗೊಳಿಸಿ ಆದೇಶ ಹೊರಡಿಸಿದೆ ಎಂದವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಉಡುಪಿಯ ಬೆರಳೆಣಿಕೆಯ ಕೆಲವು ಸಮಯಸಾಧಕ ವಕೀಲರು ತಮ್ಮ ಸ್ವಾರ್ಥ ಸಾಧನೆಗಾಗಿ ವಕೀಲರ ಸಂಘವನ್ನು ಇಬ್ಭಾಗಗೊಳಿಸಲು ಸಂಘಕ್ಕೆ ಸಮಾನಾಂತರವಾಗಿ ಸಂಸ್ಥೆಯೊಂದನ್ನು ಹುಟ್ಟುಹಾಕಿದ್ದರು. ಇದೀಗ ಇಂದಿನ ಬೆಳವಣಿಗೆಯಿಂದ ಈ ಸಮಯಸಾಧಕ ತಂಡಕ್ಕೆ ತೀವ್ರ ಮುಖಭಂಗವಾಗಿದೆ. ಮುಂಬರುವ ಚುನಾವಣೆಯಲ್ಲಿ ಸದಸ್ಯರು ಇವರಿಗೆ ತಕ್ಕ ಪಾಠ ಕಲಿಸಿ ಸಂಘದ ಘನತೆ ಹಾಗೂ ಪ್ರತಿಷ್ಠೆಯಲ್ಲಿ ಎತ್ತಿಹಿಡಿಯುಂತೆ ರೆನೋಲ್ಡ್ ಪ್ರವೀಣ್ ಕುಮಾರ್ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.
ಕಲಬುರಗಿ | ನ.5ರಿಂದ ಅಂತರ್ ಕಾಲೇಜು ಮಹಿಳಾ ಅಥ್ಲೇಟಿಕ್ ಮೀಟ್ : ಡಾ.ಗೀತಾ ಆರ್.ಎಂ.
ಕಲಬುರಗಿ : ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 19ನೇ ಅಂತರ್ ಕಾಲೇಜು ಅಥ್ಲೇಟಿಕ್ ಮೀಟ್ ಅನ್ನು ಶ್ರೀ ಶರಣೇಶ್ವರಿ ರೇಷ್ಮೀ ಮಹಿಳಾ ಬಿ.ಇಡಿ ಕಾಲೇಜಿನ ಸಹಯೋಗದಲ್ಲಿ ನ.5ರಿಂದ ಮೂರು ದಿನಗಳ ಕಾಲ ಗುಲ್ಬರ್ಗಾ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಶ್ರೀ ಶರಣೇಶ್ವರಿ ರೇಷ್ಮೀ ಮಹಿಳಾ ಬಿ.ಇಡಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಗೀತಾ ಆರ್.ಎಂ. ಹೇಳಿದ್ದಾರೆ. ನಗರದ ಕುಸನೂರ ರಸ್ತೆಯಲ್ಲಿರುವ ರೇಷ್ಮೀ ಶಿಕ್ಷಣ ಸಂಸ್ಥೆಯಲ್ಲಿ ಕರೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಾಳೆ(ನ.5) ಮಧ್ಯಾಹ್ನ 3ಗಂಟೆಗೆ ಗುವಿವಿ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭವನ್ನು ಅಂತರರಾಷ್ಟ್ರೀಯ ಕ್ರೀಡಾಪಟು ಶ್ಯದಿಯಾ ರಾಮನಗೌಡ ಅವರು ಉದ್ಘಾಟಿಸುವರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿಗಳಾದ ಫೌಝಿಯಾ ತರನ್ನುಮ್ ಅವರು ಭಾಗವಹಿಸವರು. ಗೌರವ ಅತಿಥಿಗಳಾಗಿ ಕ.ರಾ.ಅ.ಮ.ವಿ., ವಿಜಯಪುರ ಕುಲಪತಿ ಪ್ರೊ.ವಿಜಯಾ ಬಿ ಕೋರಿಶೆಟ್ಟಿ, ಗುವಿವಿ ಕುಲಪತಿಗಳಾದ ಪ್ರೊ.ಶಶಿಕಾಂತ ಎಸ್. ಉಡಿಕೇರಿ, ಕುಲಸಚಿವರು (ಆಡಳಿತ) ಗುಲ್ಬರ್ಗಾ ವಿಶ್ವವಿದ್ಯಾಲಂಯದ ಪ್ರೊ.ರಮೇಶ ಲಂಡನ್ಕರ್, ರೇಷ್ಮೆ ಎಜುಕೇಷನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ (ರಿ.). ಅಧ್ಯಕ್ಷರಾದ ಡಾ.ಭಾರತಿ ಎನ್.ರೇಷ್ಮೆ, ಕೆ.ಎ.ಎಸ್ ಶಂಕರಗೌಡ ಎಸ್. ಸೋಮನಾಳ, ಪ್ರೊ.ಬಿ.ಎಲ್.ಲಕ್ಕಣ್ಣವರ್ ಕುಲಸಚಿವರು, ಗುಲ್ಬರ್ಗ ವಿವಿ ಮೌಲ್ಯಮಾಪನ ಕುಲಸಚಿವರಾದ ಪ್ರೊ.ಎನ್.ಜಿ.ಕಣ್ಣೂರ, ಶ್ರೀಪಾದ ಚೌಡಾಪೂರಕರ್, ರಾಘವೇಂದ್ರ ಎಂ., ಭೈರಪ್ಪ, ಶಿವಯೋಗಿ ಎಲಿ, ಪ್ರೊ.ಹನುಮಂತಯ್ಯ ಪೂಜಾರಿ ಅವರು ಪಾಲ್ಗೊಳ್ಳಲಿದ್ದಾರೆಂದು ಮಾಹಿತಿ ನೀಡಿದರು. ಕ್ರೀಡಾಕೂಟದಲ್ಲಿ ಸುಮಾರು 45ಕ್ಕೂ ಹೆಚ್ಚು ಕಾಲೇಜಿನಿಂದ ಸುಮಾರು 500ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ನೊಂದಾಯಿಸಿಕೊಂಡಿದ್ದಾರೆಂದು ತಿಳಿಸಿದ ಅವರು, ಕ್ರೀಡಾಕೂಟದಲ್ಲಿ ಪ್ರಥಮ ದ್ವಿತೀಯ ಮತ್ತು ತೃತೀಯ ಬಹುಮಾನಗಳನ್ನು ಆಯ್ಕೆ ಮಾಡಲಾಗುವುದೆಂದು ತಿಳಿಸಿದರು. ಮೂರು ದಿನಗಳ ಕಾಲ ನಡೆಯಲಿರುವ ಕ್ರೀಡಾಕೂಟದಲ್ಲಿ ಭಾಗವಹಿಸುವ ಸುಮಾರು 1 ಸಾವಿರಕ್ಕೂ ಹೆಚ್ಚು ವಿದ್ಯರ್ಥಿಗಳು ಮತ್ತು ಕೋಚ್ಗಳಿಗೆ ರೇಷ್ಮೀ ಶಿಕ್ಷಣ ಸಂಸ್ಥೆಯಿಂದ ವಸತಿ ಮತ್ತು ಊಟದ ವ್ಯವಸ್ಥೆ ಮಾಡಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಶರದ್ ರೇಷ್ಮಿ, ಟ್ರಸ್ಟಿ ಶಶೀರ ಎನ್.ರೇಷ್ಮಿ, ಡಾ.ವಿಶ್ವನಾಥ ನಡಕಟ್ಟಿ, ಸಂಗಣ್ಣ ಕೆ, ಅಶೋಕ ದೈಹಿಕ ಶಿಕ್ಷಕರು ಇದ್ದರು.
ಹೆನ್ರಿಕ್ ಕ್ಲಾಸೆನ್ರನ್ನು ಕೈಬಿಟ್ಟ ಸನ್ರೈಸರ್ಸ್ ಹೈದರಾಬಾದ್
ಹೊಸದಿಲ್ಲಿ, ನ.4: ಕಳೆದ ವರ್ಷ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ಗಿಂತ ಮೊದಲು 23 ಕೋ.ರೂ. ನೀಡಿ ಸ್ಫೋಟಕ ಶೈಲಿಯ ಬ್ಯಾಟರ್ ಹೆನ್ರಿಕ್ ಕ್ಲಾಸೆನ್ರನ್ನು ತನ್ನಲ್ಲೇ ಉಳಿಸಿಕೊಂಡಿದ್ದ ಸನ್ರೈಸರ್ಸ್ ಹೈದರಾಬಾದ್ ತಂಡ ಮುಂದಿನ ತಿಂಗಳು ನಡೆಯಲಿರುವ ಮಿನಿ ಹರಾಜಿಗಿಂತ ಮೊದಲು ಕ್ಲಾಸೆನ್ರನ್ನು ಕೈಬಿಟ್ಟಿದೆ. ಸನ್ರೈಸರ್ಸ್ ತಂಡವು ದಕ್ಷಿಣ ಆಫ್ರಿಕಾದ ಮಾಜಿ ಅಂತರ್ರಾಷ್ಟ್ರೀಯ ಆಟಗಾರನ ಬಗ್ಗೆ ದಿವ್ಯ ಮೌನವಹಿಸಿದ್ದು, ಹಲವು ಐಪಿಎಲ್ ಫ್ರಾಂಚೈಸಿಗಳು ಕ್ಲಾಸೆನ್ರನ್ನು ತಮ್ಮ ತೆಕ್ಕೆಗೆ ಸೇರಿಸಿಕೊಳ್ಳಲು ಗಂಭೀರ ಚರ್ಚೆ ನಡೆಸುತ್ತಿವೆ. 34ರ ವಯಸ್ಸಿನ ಕ್ಲಾಸೆನ್ ಕಳೆದ ವರ್ಷ ಅಂತರ್ರಾಷ್ಟ್ರೀಯ ಕ್ರಿಕೆಟ್ನಿಂದ ದಿಢೀರನೆ ನಿವೃತ್ತಿ ಪ್ರಕಟಿಸಿದ್ದರು. 2025ರ ಆವೃತ್ತಿಯ ಅತ್ಯಂತ ಶ್ರೀಮಂತ ಲೀಗ್ ಐಪಿಎಲ್ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಆಡಿರುವ ತನ್ನ ಕೊನೆಯ ಪಂದ್ಯದಲ್ಲಿ 39 ಎಸೆತಗಳಲ್ಲಿ 105 ರನ್ ಗಳಿಸಿದ್ದರು. ನಾಯಕ ಪ್ಯಾಟ್ ಕಮಿನ್ಸ್(18 ಕೋ.ರೂ.)ಗಿಂತ ಹೆಚ್ಚು ಮೊತ್ತಕ್ಕೆ ಕ್ಲಾಸೆನ್ರನ್ನು ತನ್ನಲ್ಲೇ ಉಳಿಸಿಕೊಂಡಿದ್ದ ಸನ್ರೈಸರ್ಸ್ ತಂಡವು ಈ ಬಾರಿ ಅವರನ್ನು ಹಣಕಾಸಿನ ದೃಷ್ಟಿಯಿಂದ ಬಿಡುಗಡೆಗೊಳಿಸಲು ನಿರ್ಧರಿಸಿದೆ. 2024ರಲ್ಲಿ ರನ್ನರ್ಸ್ ಅಪ್ ಆಗಿದ್ದ ಸನ್ರೈಸರ್ಸ್ ತಂಡವು 2025ರ ಆವೃತ್ತಿಯ ಐಪಿಎಲ್ನಲ್ಲಿ 6ನೇ ಸ್ಥಾನ ಪಡೆದಿತ್ತು. ಅತ್ಯಂತ ಹೆಚ್ಚು ಮೊತ್ತಕ್ಕೆ ಸನ್ರೈಸರ್ಸ್ ತಂಡವನ್ನು ಸೇರಿದ್ದ ಮುಹಮ್ಮದ್ ಶಮಿ(10 ಕೋ.ರೂ.) ಹಾಗೂ ಹರ್ಷಲ್ ಪಟೇಲ್(8 ಕೋ.ರೂ.) 2025ರಲ್ಲಿ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಶಮಿ ಫಿಟ್ನೆಸ್ ಸಮಸ್ಯೆಯನ್ನು ಎದುರಿಸಿದರೆ, ಪಟೇಲ್ 13 ಪಂದ್ಯದಲ್ಲಿ 16 ವಿಕೆಟ್ಗಳನ್ನು ಉರುಳಿಸಿದ್ದರೂ ಪ್ರತೀ ಓವರ್ಗೆ 10 ರನ್ ನೀಡಿದ್ದರು. ಶಮಿ ಇತ್ತೀಚೆಗೆ ದೇಶೀಯ ಕ್ರಿಕೆಟ್ನಲ್ಲಿ ಮಿಂಚುವ ಮೂಲಕ ಗಮನ ಸೆಳೆಯುತ್ತಿದ್ದಾರೆ.
ಕಲಬುರಗಿ | ಕೆಕೆಆರ್ಟಿಸಿಯಲ್ಲಿ ಖಾಲಿ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ವಿಸ್ತರಣೆ
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ 300 ನಿರ್ವಾಹಕ (240 ಸ್ಥಳೀಯ ವೃಂದ ಮತ್ತು 60 ಮಿಕ್ಕುಳಿದ ವೃಂದ) ಮತ್ತು 16 ಸಹಾಯಕ ಲೆಕ್ಕಿಗ (13 ಸ್ಥಳೀಯ ವೃಂದ ಮತ್ತು 03 ಮಿಕ್ಕುಳಿದ ವೃಂದ) ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2025ರ ನ.14 ರವರೆಗೆ ವಿಸ್ತರಿಸಿದೆ. ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಪ್ರಾಧಿಕಾರದ ಅಧಿಕೃತ https://cetonline.karnataka.gov.in/kea ವೆಬ್ಸೈಟ್ಗೆ ಸಂಪರ್ಕಿಸಬೇಕೆಂದು ಕಲಬುರಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ತಿಳಿಸಿದ್ದಾರೆ.
\ಡಿಕೆ ಶಿವಕುಮಾರ್ಗೆ ರಾಜಲಕ್ಷ್ಮಿ ಯೋಗ; ನ.26ರ ಬಳಿಕ ಸಿಎಂ ಪಟ್ಟ, ಸಿಎಂ ಆದ್ರೂ ಒಂದೂವರೆ ವರ್ಷ ಅಷ್ಟೇ\
ಚಿಕ್ಕಮಗಳೂರು, ನವೆಂಬರ್ 04: ರಾಜ್ಯ ಕಾಂಗ್ರೆಸ್ನಲ್ಲಿ ನವೆಂಬರ್ ಕ್ರಾಂತಿ ಬಿರುಗಾಳಿ ಜೋರಾಗ್ತಿದೆ. ರಾಜ್ಯ ಕೈ ಪಾಳಯದಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಕುರಿತು ಜಟಾಪಟಿ ಹೆಚ್ಚಾಗಿದ್ದು, ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿ ಡಿ ಕೆ ಶಿವಕುಮಾರ್ ಅವರು ಸಿಎಂ ಪಟ್ಟಕ್ಕಾಗಿ ಪಟ್ಟು ಹಿಡಿದಿದ್ದು, ಬಿಹಾರ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್ನಲ್ಲಿ ಬದಲಾವಣೆಯ ಕ್ರಾಂತಿಯಾಗಲಿದೆ ಎಂದು ರಾಜ್ಯ ರಾಜಕೀಯದಲ್ಲಿ
ಕಲಬುರಗಿ | ನ.5 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
ಕಲಬುರಗಿ: ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದಲ್ಲಿ ಬರುವ 11ಕೆ.ವಿ. ಹೌಸಿಂಗ್ ಬೋರ್ಡ್ ಹಾಗೂ ದರ್ಗಾ ಫೀಡರ್ ಗಳ ವ್ಯಾಪ್ತಿಯಲ್ಲಿ ನಿರ್ವಹಣಾ ಕಾರ್ಯಕೈಗೊಳ್ಳುವ ಪ್ರಯುಕ್ತ ನ.5ರಂದು ಬುಧವಾರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಜೆಸ್ಕಾಂನೊಂದಿಗೆ ಸಹಕರಿಸುವಂತೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರರು(ವಿ) ಪ್ರಕಟಣೆಯಲ್ಲಿ ಕೋರಿದ್ದಾರೆ. ಹೌಸಿಂಗ್ ಬೋರ್ಡ ಫೀಡರ್ : ಗಂಜ್ ಬ್ಯಾಂಕ್ ಕಾಲೋನಿ, ಗಂಜ ಬಸ್ಸ್ಟ್ಯಾಂಡ ಎದುರುಗಡೆ, ಭವಾನಿ ಗುಡಿ, ಈಶ್ವರಗುಡಿ, ರಾಮ ಮಂದಿರ, ಬಿಯಾನಿ, ಜಿ.ಓ.ಎಸ್ ಪ್ರದೇಶ, ಲಾಹೊಟಿ ಕಲ್ಯಾಣ ಮಂಟಪ ಹಿಂಭಾಗ ಪ್ರದೇಶ, ಆದರ್ಶ ಸ್ಕೂಲ್ ಪ್ರದೇಶ ಕೆ.ಎಚ್.ಬಿ ಕಾಲೋನಿ, ನಗರೇಶ್ವರ ಶಾಲೆ ಎದುರುಗಡೆ ಪ್ರದೇಶ, ಕಲಂತ್ರಿ ಬಿಲ್ಡಂಗ್ ಪ್ರದೇಶ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು. ದರ್ಗಾ ಫೀಡರ್ : ಬಹುಮನಿ ಚೌಕ್, ಹೋಲಿ ಕಟ್ಟಾ, ಸರಾಫ್ ಬಜಾರ್, ಗಣೇಶ ಮಂದಿರ, ಚಪ್ಪಲ್ ಬಜಾರ್, ಕ್ಲಾಥ್ ಬಜಾರ್, ಸಜ್ಜನ್ ಕಾಂಪ್ಲೇಕ್ಸ್, ಫೂಲ್ ಮಾರ್ಕೆಟ್, ಮಕ್ತಾಮ್ಪುರ, ಜವಾಹರ್ ಹಿಂದ್ ಶಾಲೆ, ಬಕರಿಕಮೇಳಾ, ಮೋತಿ ವೈನ್ ಶಾಪ್, ನಯಾ ಮೊಹಲ್ಲಾ, ಸಂತ್ರಾಸವಾಡಿ ಲೊವರ್ ಲೇನ್, ಜಾಜಿ ಬ್ಲಾಕ್, ನ್ಯಾಷನಲ್ ಚೌಕ್, ಹಳೇ ಡಂಕಾ, ಓಲ್ಡ್ ಡಂಕಾ, ನೂರ್ ಬಾಗ್, ಡೆಕ್ಕನ್ ಪೇಪರ್, ಹಫ್ತ್ ಗುಂಬಜ್, ಜಲೀಮ್ ಕಂಪೌಂಡ್, ಮಕ್ಬರಾ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳು.
ದ್ವೇಷ ಭಾಷಣ ಪ್ರಕರಣ: ಕಲ್ಲಡ್ಕ ಪ್ರಭಾಕರ ಭಟ್ ಜಾಮೀನು ಅರ್ಜಿ ಮುಂದೂಡಿಕೆ
ಮಂಗಳೂರು : 'ಮುಸ್ಲಿಂ ಮಹಿಳೆಯರು ನಾಯಿ ಮರಿ ಹಾಕಿದಂತೆ ಹೆರುತ್ತಾರೆ' ಎಂದು ಹೇಳಿಕೆ ನೀಡಿ ಕೋಮುಸೌಹಾರ್ದತೆ ಮತ್ತು ಮಹಿಳೆಯ ಘನತೆಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಜಾಮೀನು ಅರ್ಜಿ ಇಂದೂ ಇತ್ಯರ್ಥವಾಗದೆ ಮುಂದೂಡಲ್ಪಟ್ಟಿತು. ಬಿಎನ್ಎಸ್ಎಸ್ ಸೆಕ್ಷನ್ 338, 339 ಪ್ರಕಾರ ಜನವಾದಿ ಮಹಿಳಾ ಸಂಘಟನೆಯ ನಾಯಕಿ ಈಶ್ವರಿ ಪದ್ಮುಂಜ ಪರ ಹಿರಿಯ ವಕೀಲ ಸತೀಶನ್ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ವಾದ ಮಂಡಿಸಲು ಸಮಾಯಾವಕಾಶ ಕೇಳಿದರು. ಪೊಲೀಸರ ಪರ ಸರ್ಕಾರಿ ವಕೀಲರು ಜಾಮೀನು ಅರ್ಜಿಗೆ ಆರು ಪುಟಗಳ ತಕರಾರು ಅರ್ಜಿ ಸಲ್ಲಿಸಿದ್ದು, ನ್ಯಾಯಾಲವು ವಿಚಾರಣೆಯನ್ನು ನವೆಂಬರ್ 10ಕ್ಕೆ ಮುಂದೂಡಿದೆ. ಸರ್ಕಾರದ 6 ಪುಟಗಳ ತಕರಾರು ಅರ್ಜಿಯಲ್ಲಿ ಏನಿದೆ ? : 1. ಆರೋಪಿತನಾದ ಪ್ರಭಾಕರ ಭಟ್ ದ್ವೇಷ ಭಾಷಣ ಮಾಡುವ ಹವ್ಯಾಸಿ ಉಳ್ಳವರಾಗಿದ್ದು ಇವರ ಮೇಲೆ ಈಗಾಗಲೇ ಬೇರೆ ಬೇರೆ ಠಾಣೆಗಳಲ್ಲಿ, ಇದೇ ರೀತಿಯ ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದು, ಆರೋಪಿತನಿಗೆ ಕಾನೂನಿನ ಮೇಲೆ ಅಥವಾ ನ್ಯಾಯಾಲಯದ ಮೇಲೆ ಯಾವುದೇ ರೀತಿಯ ಗೌರವ ಇಲ್ಲದೆ ಇದ್ದು, ಇಂತಹ ಪ್ರಕರಣಗಳಲ್ಲಿ, ಪುನರಾವರ್ತಿತ ಕೃತ್ಯಗಳನ್ನು ಮಾಡುವವರಾಗಿರುತ್ತಾರೆ. ಆರೋಪಿತನ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ 08/2012 U/s 153(A), 295(A) IPC, ವಿಟ್ಲ ಠಾಣೆಯಲ್ಲಿ ಕ್ರೈನಂ 25/2014 153(A), 295(A) IPC, ಬಂಟ್ವಾಳ ನಗರ ಠಾಣೆಯಲ್ಲಿ 101/2014 153(A)IPC, ಬೆಳ್ತಂಗಡಿ ಠಾಣೆ 105/2014 153(A)IPC, ಪುತ್ತೂರು ನಗರ ಠಾಣೆಯಲ್ಲಿ 113/2014 506,306 IPC, ಬಂಟ್ವಾಳ ನಗರ 07/2015 153(A), 505(2) IPC, ಬಂಟ್ವಾಳ ನಗರ ಠಾಣೆಯಲ್ಲಿ 177/2017 142,143,188 r/w 149 IPC, ಬಜ್ಪೆ ಪೊಲೀಸ್ ಠಾಣೆಯಲ್ಲಿ 157/2018 125 of Representation of People Act, ಕೊಣಾಜೆ ಠಾಣೆಯಲ್ಲಿ 58/2018, 153 (A), IPC, 125 of Representation of people act, ಬಂಟ್ವಾಳ ನಗರ ಠಾಣೆಯಲ್ಲಿ 130/2019 295,298 IPC, ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ 263/2023 IPC 354,294,509,506,153(A), 295(A),295,298, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ 60/2025, 353(2)BNS-2023 ದಾಖಲಾಗಿದೆ. 2. ಆರೋಪಿ ಪ್ರಭಾಕರ ಭಟ್ ಪ್ರಭಾವಿ ರಾಜಕೀಯ ವ್ಯಕ್ತಿ ಮತ್ತು ಆರ್ಥಿಕವಾಗಿ ಬಲಿಷ್ಠವಾಗಿದ್ದು, ಪದೇ ಪದೇ ಕಾನೂನನ್ನು ಉಲಂಘನೆ ಮಾಡುತ್ತಿದ್ದು, ಕಾನೂನಿಗೆ ಗೌರವ ನೀಡದೇ ಇಂತಹ ಕೃತ್ಯಗಳಲ್ಲಿ ಭಾಗಿಯಾಗಿರುತ್ತಾರೆ. 3. ಸದ್ರಿ ಪ್ರಕರಣದಲ್ಲಿ, ಆರೋಪಿಯ ಧ್ವನಿಮುದ್ರಣ ಸಂಗ್ರಹಿಸಲು ವೀಡಿಯೋಗ್ರಾಫಿ ಮಾಡಿದವರಿಂದ ವೀಡಿಯೋವನ್ನು ವಶಪಡಿಸಿಕೊಳ್ಳಲು ಬಾಕಿ ಇರುತ್ತದೆ. 4. ಆರೋಪಿಯು ಮಹಿಳೆಯರನ್ನು ಅವಹೇಳನ ಮಾಡಿ, ಮಹಿಳೆಯರ ಗೌರವಕ್ಕೆ ಧಕ್ಕೆ ತರುವ, ಅವಮಾನಕಾರಿ ಮತ್ತು ಸಾರ್ವಜನಿಕ ಅಶ್ಲೀಲ ಹೇಳಿಕೆಗಳನ್ನು ನೀಡಿದಂತಹ ಕೃತ್ಯವನ್ನು ಎಸಗಿರುವುದಾಗಿದೆ. 5. ದಕ್ಷಿಣ ಕನ್ನಡ ಜಿಲೆಯಲ್ಲಿ ಕಳೆದ 5 ತಿಂಗಳಲ್ಲಿ ಕೋಮುವಿಚಾರಕ್ಕೆ ಸಂಬಂದಿಸಿದಂತೆ ಮೂರು ಕೊಲೆಗಳಾಗಿದ್ದು, ಧರ್ಮ ಧರ್ಮಗಳ ನಡುವೆ ದ್ವೇಷವನ್ನು, ಕೆಟ್ಟಭಾವನೆಯನ್ನು ಉಂಟುಮಾಡುವ ಉದ್ದೇಶದಿಂದ ಪದೇ ಪದೇ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಭಂಗ ತರುವಂತಹ ಕೃತ್ಯಗಳಲ್ಲಿ ಭಾಗಿಯಾಗಿ ಸಮಾಜದಲ್ಲಿ ಸಾರ್ವಜನಿಕರಲ್ಲಿ, ಕೋಮು ಭಾವನೆಯನ್ನು ಮೂಡಿಸಿ ಇಂತಹ ಕೃತ್ಯಗಳನ್ನು ಮಾಡಲು ಪ್ರಚೋದನೆ ಮಾಡುವವರಾಗಿರುತ್ತಾರೆ. 6. ಆರೋಪಿತನಿಗೆ ದಿನಾಂಕ 30.10.2025 ರಂದು ವಿಚಾರಣೆಗೆ ಹಾಜರಾಗಬೇಕೆಂದು ಕಲಂ:35(3) ಬಿ.ಎನ್.ಎಸ್. ಎಸ್.-2023 ರಂತೆ ನೋಟೀಸು ನೀಡಿದ್ದು, ಅದರಂತೆ ಆರೋಪಿತನು ವಿಚಾರಣೆಗೆ ಹಾಜರಾಗಿರುವುದಿಲ್ಲ. ಇದರಿಂದ ತನಿಖೆಯ ಪ್ರಗತಿಗೆ ಅನಾನುಕೂಲ ಉಂಟಾಗಿದ್ದು, ಆರೋಪಿತನು ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದಾನೆ ಎಂದು ತಿಳಿದು ಬರುತ್ತದೆ. 8. ಆರೋಪಿತನು ಈ ಹಿಂದೆ ಭಾಗಿಯಾದ ಪ್ರಕರಣಗಳನ್ನು ಗಮನಿಸಿದರೆ ಆರೋಪಿತನು ಇದೇ ತರಹದ ದ್ವೇಷ ಭಾಷಣಗಳಂತಹ ಅಪರಾಧದಲ್ಲಿ, ಪದೇ ಪದೇ ಭಾಗಿಯಾಗಿರುವುದಾಗಿ ಕಂಡುಬರುತ್ತದೆ. ಆರೋಪಿತನು ಕೆಲವು ಪ್ರಕರಣಗಳಲ್ಲಿ, ನ್ಯಾಯಾಲಯಗಳಿಂದ ಜಾಮೀನು ಪಡೆದುಕೊಂಡಿದ್ದು, ಆ ವೇಳೆ ಮುಂದಿನ ದಿನಗಳಲ್ಲಿ ಇದೇ ತರಹದ ಪ್ರಕರಣಗಳಲ್ಲಿ ಭಾಗಿಯಾಗಬಾರದು ಎಂಬಂತಹ ಒಂದು ಸಾಮಾನ್ಯ ಷರತ್ತು ಹಾಕಲಾಗಿತ್ತು. ಅಂತಹ ಷರತ್ತನ್ನು ಆರೋಪಿಯು ಮುರಿದಿದ್ದಾರೆ. ಹಾಗಾಗಿ ಆರೋಪಿಗೆ ಜಾಮೀನು ನೀಡಬಾರದು. 9. ಆರೋಪಿಯು ಆರ್ಥಿಕ ಮತ್ತು ರಾಜಕೀಯ ವಾಗಿ ಬಲಾಡ್ಯರಾಗಿದ್ದು, ಜಾಮೀನು ನೀಡಿದರೆ ದೂರುದಾರರಿಗೆ ಮತ್ತು ಸಾಕ್ಷಿಗಳಿಗೆ ಬೆದರಿಕೆ ಒಡ್ಡುವ ಸಾಧ್ಯತೆ ಇರುತ್ತದೆ. 10. ಆರೋಪಿತನಿಗೆ ಜಾಮೀನು ನೀಡಿದರೆ ಪದೇ ಪದೇ ಇದೇ ರೀತಿಯ ಕೃತ್ಯಗಳನ್ನು ಮಾಡುವ ಸಾಧ್ಯತೆ ಇದೆ. 11. ಪ್ರಕರಣವು ತನಿಖಾ ಹಂತದಲ್ಲಿದ್ದು, ಆರೋಪಿತನಿಗೆ ಜಾಮೀನು ನೀಡಿದ್ದಲ್ಲಿ ಪ್ರಕರಣಕ್ಕೆ ಸಹಕರಿಸದೇ ತಲೆಮರೆಸಿಕೊಳ್ಳುವ ಮತ್ತು ತನಿಖೆಯ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುತ್ತದೆ. 12. ಆರೋಪಿತನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ನ್ಯಾಯಾಲಯದಲ್ಲಿ ವಿಚಾರಣೆ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. 13. ದೇಶದಲ್ಲಿ, ದ್ವೇಷ ಭಾಷಣ (Hate Speech) ವನ್ನು ನಿಗ್ರಹಿಸುವಂತೆ ಸರ್ವೋಚ್ಚ ನ್ಯಾಯಾಲಯವು ಆದೇಶಗಳನ್ನು ಮಾಡಿದ್ದು, ಇಂತಹ ಆರೋಪಿತರಿಗೆ ಜಾಮೀನು ನೀಡುವುದು ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡಲು ಅನಾನುಕೂಲವಾಗುತ್ತದೆ. ಹಾಗಾಗಿ ಆರೋಪಿತನಿಗೆ ಈ ಮೇಲಿನ ಕಾರಣಗಳಿಗೆ ಜಾಮೀನನ್ನು ಯಾವುದೇ ಕಾರಣಕ್ಕೂ ಮಂಜೂರಾತಿ ಮಾಡಬಾರದು ಎಂದು ಸರ್ಕಾರಿ ವಕೀಲರು ಆಕ್ಷೇಪಣೆ ಸಲ್ಲಿಸಿದ್ದಾರೆ. ಪ್ರಭಾಕರ ಭಟ್ ತಾನು ಮಾಡಿದ ಭಾಷಣದ ವಿರುದ್ದ ದಾಖಲಾಗಿರುವ ಎಫ್ಐಆರ್ ಗೆ ನಿರೀಕ್ಷಣಾ ಜಾಮೀನು ಕೋರಿ ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಅಕ್ಟೋಬರ್ 27 ರಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು 'ಬಲವಂತದ ಕ್ರಮ ತೆಗೆದುಕೊಳ್ಳದಂತೆ ಮಧ್ಯಂತರ ಆದೇಶ' ನೀಡಿ ಪೂರ್ಣ ಪ್ರಮಾಣದ ವಿಚಾರಣೆ ಮತ್ತು ನಿರೀಕ್ಷಣಾ ಜಾಮೀನು ಸಂಬಂಧ ಅದೇಶವನ್ನು ಅಕ್ಟೋಬರ್ 29 ಕ್ಕೆ ಮುಂದೂಡಿತ್ತು. ಅಕ್ಟೋಬರ್ 29 ರಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವ ದೂರುದಾರರಾಗಿರುವ ಈಶ್ವರಿ ಪದ್ಮುಂಜ ಪರ ಹಿರಿಯ ವಕೀಲ ಸತೀಶನ್ ಅವರು ಬಿಎನ್ಎಸ್ಎಸ್ ಸೆಕ್ಷನ್ 338, 339 ಪ್ರಕಾರ ದೂರುದಾರ ಮಹಿಳಾ ಹೋರಾಟಗಾರ್ತಿ ಈಶ್ವರಿ ಪರ ಅರ್ಜಿ ಸಲ್ಲಿಸಿದ್ದರು. ಸಹಜವಾಗಿ ಆರೋಪಿ ವಿರುದ್ಧ ಸರ್ಕಾರಿ ವಕೀಲರಿಗೆ ಮಾತ್ರ ವಾದಿಸುವ ಮತ್ತು ತಕರಾರು ಅರ್ಜಿ ಸಲ್ಲಿಸುವ ಅವಕಾಶ ಇರುತ್ತದೆ. ದೂರುದಾರರ ಪರ ವಕೀಲರು ತಕರಾರು ಅರ್ಜಿ ಅಥವಾ ವಾದ ಮಂಡಿಸಬೇಕಾದರೆ ಬಿಎನ್ಎಸ್ಎಸ್ ಸೆಕ್ಷನ್ 338 ಮತ್ತು 339 ರಂತೆ ಅರ್ಜಿ ಸಲ್ಲಿಸಿ ನ್ಯಾಯಾಲಯದ ಅನುಮತಿ ಕೋರಬೇಕಿರುತ್ತದೆ. ಅಕ್ಟೋಬರ್ 27 ರಂದು ವಕೀಲ ಸತೀಶನ್ ಅರ್ಜಿಯನ್ನು ಪಡೆದುಕೊಂಡ ನ್ಯಾಯಾಲಯವು, ಪ್ರಭಾಕರ ಭಟ್ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಸಲು ನವೆಂಬರ್ 04 ಕ್ಕೆ ಪ್ರಕರಣವನ್ನು ಮುಂದೂಡಿತ್ತು. ನವೆಂಬರ್ 04 ರಂದು ಅರ್ಜಿ ವಿಚಾರಣೆಗೆ ಬಂದಾಗ ಈಶ್ವರಿ ಪದ್ಮುಂಜ ಪರ ವಕೀಲ ಸತೀಶನ್ ಅವರ ಬಿಎನ್ಎಸ್ಎಸ್ ಸೆಕ್ಷನ್ 338, 339 ಅರ್ಜಿಗೆ ಪ್ರಭಾಕರ ಭಟ್ ಪರ ವಕೀಲರು ಆಕ್ಷೇಪಣೆ ಸಲ್ಲಿಸಿಲ್ಲ. ಅರ್ಜಿ ಸಂಬಂಧ ವಿಸ್ತೃತ ವಾದ ಮಂಡಿಸಲು ವಕೀಲ ಸತೀಶನ್ ಅವರು ಸಮಯಾವಕಾಶ ಕೇಳಿದ್ದು ಅರ್ಜಿ ವಿಚಾರಣೆಯನ್ನು ನವೆಂಬರ್ 10 ಕ್ಕೆ ಮುಂದೂಡಲಾಗಿದೆ.
ಕಲಬುರಗಿ | ಕಾನೂನು ಬದ್ಧ ದತ್ತು ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟನೆ
ಕಲಬುರಗಿ: ಅಂತರರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಕಾನೂನು ಬದ್ಧ ದತ್ತು ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಯಿತು. ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ದಾಕ್ಷಾಯಣಿ ಅವ್ವ ಅವರು ಕಾನೂನು ಬದ್ಧ ದತ್ತು ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕಾನೂನು ಬದ್ಧ ದತ್ತು ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಕಾರ್ಯಕ್ರಮದಲ್ಲಿ ಕಾನೂನು ಬದ್ಧ ದತ್ತು ಕುರಿತು ಪೋಸ್ಟರ್ ಬಿಡುಗಡೆ ಮಾಡಲಾಯಿತು. ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುಳಾ ವಿ.ಪಾಟೀಲ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು, ಸರ್ಕಾರಿ ಬಾಲಕರ ಬಾಲಮಂದಿರ, ಸರ್ಕಾರಿ ಬಾಲಕಿಯರ ಬಾಲಮಂದಿರ, ಸರ್ಕಾರಿ ಬುದ್ಧಿಮಾಂದ್ಯ ಬಾಲಕಿಯರ ಬಾಲಮಂದಿರ, ಸರ್ಕಾರಿ ವೀಕ್ಷಣಾಲಯ, ಸರ್ಕಾರಿ ಅಮೂಲ್ಯ ಶಿಶುಗೃಹ, ನಾಲ್ಕು ಚಕ್ರ ಸಂಸ್ಥೆ, ಮಾರ್ಗದರ್ಶಿ ಸಂಸ್ಥೆ, ಡಾನ್ ಬಾಸ್ಕೋ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿಗಳು, ಡಾ.ಕಿರಣ ದೇಶಮುಖ, ವಿಶ್ವರಾಧ್ಯ ಕೆ.ಇಜೇರಿ, ಶ್ರೀದೇವಿ ಕಟ್ಟಿಮನಿ, ಶಿವನಂದವ್ವ, ಯಲ್ಲುಬಾಯಿ, ಜ್ಯೋತಿ, ಮಾಲಾ ಕಣ್ಣಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಮಕ್ಕಳ ಸಹಾಯವಾಣಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

21 C