SENSEX
NIFTY
GOLD
USD/INR

Weather

15    C
... ...View News by News Source

Karnataka Cold Wave: ರಾಜ್ಯದಲ್ಲಿ ಮುಂದಿನ 05 ದಿನ ಭಾರೀ ಚಳಿ ನಿರೀಕ್ಷೆ, ಶೀತ ಅಲೆ ಎಚ್ಚರಿಕೆ..IMD

Karnataka Weather Alert: ಕರ್ನಾಟಕ ರಾಜ್ಯದಲ್ಲಿ ಮಳೆ ಸಂಪೂರ್ಣವಾಗಿ ತಗ್ಗಿದೆ. ಮಳೆ ಸುರಿಸುವ ಹಿಂಗಾರು ಮಾರುತಗಳು ದುರ್ಬಲವಾಗಿದೆ. ಸಮುದ್ರ ಮೇಲ್ಮೈನಲ್ಲಿ ಒಂದಷ್ಟು ಬದಲಾವಣೆ ಆಗಿದೆ. ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಿದೆ. ಇದರಿಂದ ಕೆಲವೆಡೆ ಸೋನೆ ಮಳೆ ಆಗಬಹುದು. ಉಳಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದ ಪ್ರಮಾಣ ಕುಸಿಯಲಿದ್ದು, ಮೈಕೊರೆವ ಚಳಿ ವಾತಾವರಣ ಸೃಷ್ಟಿಯಾಗಲಿದೆ. ಈ ಸಂಬಂಧ

ಒನ್ ಇ೦ಡಿಯ 9 Dec 2025 6:57 am

ಮರು ನಾಮಕರಣದ ವ್ಯರ್ಥ ಕಸರತ್ತು

ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರ ಅಸ್ತಿತ್ವಕ್ಕೆ ಬಂದು ಹನ್ನೊಂದು ವರ್ಷಗಳಾದವು. ಈ ಒಂದು ದಶಕದಲ್ಲಿ ಜನರಿಗೆ ನೀಡಿರುವ ಯಾವ ಭರವಸೆಯನ್ನೂ ಈಡೇರಿಸಲು ಆಗಲಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಯಾಗಲಿಲ್ಲ. ಭಾರತೀಯರೆಲ್ಲರ ಬ್ಯಾಂಕ್ ಖಾತೆಗಳಿಗೆ 15 ಲಕ್ಷ ರೂ. ಬರಲಿಲ್ಲ. ಬದಲಾಗಿ ನೋಟು ಅಮಾನ್ಯ ಮಾಡಿ ಜನರನ್ನು ಮತ್ತಷ್ಟು ತೊಂದರೆಗೆ ಸಿಲುಕಿಸಲಾಯಿತು. ಹೊಸದಾಗಿ ಏನನ್ನು ಮಾಡಲಾಗದಿದ್ದರೂ ಹಾಲಿ ಇರುವ ಯೋಜನೆಗಳ ಹಾಗೂ ನಗರಗಳ, ಊರುಗಳ, ರಸ್ತೆಗಳ ಹೆಸರುಗಳನ್ನು ಬದಲಿಸುತ್ತಿರುವುದೇ ಈ ಸರಕಾರದ ಬಹುದೊಡ್ಡ ಸಾಧನೆಯಾಗಿದೆ. ಹೆಸರುಗಳ ಬದಲಾವಣೆಯ ಚಾಳಿಗೆ ಈಗ ರಾಜ್ಯಪಾಲರುಗಳ ಅಧಿಕೃತ ನಿವಾಸಗಳೂ ಸೇರ್ಪಡೆಗೊಂಡಿವೆ. ಸ್ವಾತಂತ್ರ್ಯಾನಂತರ ಈವರೆಗೆ ಇದ್ದ ‘ರಾಜ ಭವನ’ ಎಂಬ ಹೆಸರನ್ನು ‘ಲೋಕ ಭವನ’ ಎಂದು ದಿಢೀರನೇ ಘೋಷಿಸಲಾಗಿದೆ. ಅಷ್ಟೇ ಅಲ್ಲ, ಇದನ್ನು ತಕ್ಷಣ ಜಾರಿಗೆ ತರಲಾಗಿದೆ. ಈ ಹೆಸರು ಬದಲಾವಣೆಯ ಬಗ್ಗೆ ರಾಜ್ಯ ಸರಕಾರದ ಜೊತೆಗೆ ಸಮಾಲೋಚಿಸಿಲ್ಲ, ಇದಕ್ಕೆ ನಮ್ಮ ಸರಕಾರದ ಒಪ್ಪಿಗೆಯಿಲ್ಲ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲರು ಹೇಳಿದ್ದಾರೆ. ರಾಜ್ಯಗಳ ಚುನಾಯಿತ ಸರಕಾರಗಳ ಜೊತೆಗೆ ಸಮಾಲೋಚನೆ ಮಾಡದೆ ಈ ರೀತಿ ಏಕಾಏಕಿ ಬದಲಿಸಲು ಹೊರಟಿದ್ದು ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲದ ನಿರಂಕುಶ ಸರ್ವಾಧಿಕಾರಿಗಳಿಂದ ಮಾತ್ರ ಸಾಧ್ಯ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರಿಂದ ಚುನಾಯಿತವಾದ ಸರಕಾರಕ್ಕೆ ಶೋಭೆ ತರುವುದಿಲ್ಲ. ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲ ಎಂಬಂತೆ ಈಗ ಎಲ್ಲ ರಾಜ್ಯಗಳಲ್ಲೂ ಹೆಸರು ಬದಲಿಸುವ ಹುಚ್ಚು ವ್ಯಾಪಿಸುತ್ತಿದೆ. ಮಾಡಲು ಕೆಲಸವಿಲ್ಲದ ರಾಜಕಾರಣಿಗಳು ತಮ್ಮ ಆಡಳಿತ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಊರುಗಳ, ರಸ್ತೆಗಳ, ಬಸ್ ಮತ್ತು ರೈಲು ನಿಲ್ದಾಣಗಳ ಹೆಸರುಗಳನ್ನು ಬದಲಿಸಲು ಮುಂದಾಗಿದ್ದಾರೆ. ಎಲ್ಲ ಜಾತಿ, ಮತಗಳನ್ನು ಮೀರಿ ನಿಂತ ಮಹಾಪುರುಷರನ್ನು ಒಂದೊಂದು ಜಾತಿ, ಮತಕ್ಕೆ ಸೀಮಿತಗೊಳಿಸಿ ಅವರ ಹೆಸರುಗಳನ್ನು ಮನ ಬಂದಂತೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಜನರು ಇವರನ್ನು ಚುನಾಯಿಸಿದ್ದು ಊರುಗಳ ಹೆಸರುಗಳನ್ನು ಬದಲಿಸಲು, ಮೂರ್ತಿ ಸ್ಥಾಪನೆಯನ್ನು ಮಾಡಲು ಅಲ್ಲ. ತಾವು ಚುನಾಯಿಸಿದ ಪ್ರತಿನಿಧಿಗಳು ತಮ್ಮ ಬದುಕಿನ, ಊರಿನ, ನಗರದ ಸಮಸ್ಯೆಗಳನ್ನು ಬಗೆ ಹರಿಸುತ್ತಾರೆ ಎಂಬ ನಂಬಿಕೆಯಿಂದ. ಆದರೆ ಅವರು ಮಾಡುತ್ತಿರುವುದು ನಿಷ್ಪ್ರಯೋಜಕ ಕೆಲಸಗಳನ್ನು. ಈ ಚಾಳಿ ಮೊದಲು ಆರಂಭವಾಗಿದ್ದು ನಾಗಪುರದ ಸಂವಿಧಾನೇತರ ಶಕ್ತಿ ಕೇಂದ್ರದಲ್ಲಿ ತಯಾರಾದ ರಾಜಕೀಯ ನಾಯಕರಿಂದ. ಅದೇ ಗರಡಿಯಿಂದ ಬಂದ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಎಷ್ಟೇ ಒತ್ತಡವಿದ್ದರೂ ಹೆಸರು ಬದಲಿಸುವ ವ್ಯರ್ಥ ಕಸರತ್ತಿಗೆ ಕೈ ಹಾಕಲಿಲ್ಲ. ಆದರೆ ಈಗ ಸ್ವಯಂ ಘೋಷಿತ ‘ವಿಶ್ವಗುರು’ ಗಳ ಕಾಲ. ಅವರ ಏಕೈಕ ಕಾರ್ಯಕ್ರಮವೆಂದರೆ ಹಳೆಯ ಹೆಸರು ಬದಲಿಸಿ ಹೊಸ ಹೆಸರನ್ನು ಇಡುವುದು. ಹೊಸದೇನನ್ನೂ ಮಾಡಲಾಗದವರು ಇಂಥ ಪ್ರಹಸನಕ್ಕೆ ಕೈ ಹಾಕುತ್ತಾರೆ. ಈಗಾಗಲೇ ಇರುವ ಹಿಂದಿನ ಸರಕಾರಗಳ ಹಲವಾರು ಯೋಜನೆಗಳಿಗೆ, ರೈಲುಗಳಿಗೆ, ರೈಲು ನಿಲ್ದಾಣಗಳಿಗೆ, ಬಸ್ ನಿಲ್ದಾಣಗಳಿಗೆ, ರಸ್ತೆಗಳಿಗೆ, ಶಾಲೆಗಳಿಗೆ ಇವರು ತಮ್ಮ ಸಂಘ ಪರಿವಾರದ ನಾಯಕರಾಗಿದ್ದ ದೀನ ದಯಾಳ್ ಉಪಾಧ್ಯಾಯ, ವಿನಾಯಕ ದಾಮೋದರ ಸಾವರ್ಕರ್ ಮೊದಲಾದವರ ಹೆಸರುಗಳನ್ನು ಇಟ್ಟಿದ್ದಾರೆ, ಇಡುತ್ತಿದ್ದಾರೆ. ದಿಲ್ಲಿಯ ಔರಂಗಜೇಬ್ ಮಾರ್ಗದ ಹೆಸರನ್ನು ಬದಲಿಸಿದರು. ಯೋಜನಾ ಆಯೋಗದ ಹೆಸರನ್ನು ‘ನೀತಿ ಆಯೋಗ’ ಎಂದು ಬದಲಿಸಿದರು. ವಿಶ್ವವಿದ್ಯಾನಿಲಯಗಳ ಧನ ಸಹಾಯ ಆಯೋಗದ ಹೆಸರನ್ನು ಬದಲಿಸಿದರು. ಈಗ ರಾಜ ಭವನಗಳ ಹೆಸರನ್ನು ಬದಲಿಸಲು ಹೊರಟಿದ್ದಾರೆ. ಹೆಸರು ಬದಲಿಸುವ ಈ ಚಾಳಿಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉಳಿದವರಿಗಿಂತ ಮುಂದಿದ್ದಾರೆ. ಹೀಗೆ ಮಾಡುವ ಮುನ್ನ ಜನರ ಅಭಿಪ್ರಾಯವನ್ನು ಕೇಳುವ ಸೌಜನ್ಯವೂ ಇವರಿಗಿಲ್ಲ. ಇವರು ಹೆಸರು ಬದಲಿಸಿದ ಮಾತ್ರಕ್ಕೆ ಜನರು ಅದನ್ನು ಒಪ್ಪುತ್ತಾರೆಂದಲ್ಲ, ಅವರು ರೂಢಿಯಂತೆ ಹಿಂದಿನ ಹೆಸರಿನಿಂದಲೇ ಕರೆಯುತ್ತಾರೆ. ಜಾತಿ ಮತದ ಆಧಾರದಲ್ಲಿ ಮಹಾಪುರುಷರನ್ನು ವಿಂಗಡಿಸುವುದು ಸಣ್ಣತನವಲ್ಲದೆ ಬೇರೇನೂ ಅಲ್ಲ. ಹೆಸರು ಬದಲಿಸಿದ ಮಾತ್ರಕ್ಕೆ ಜನರ ಬದುಕು ಹಸನಾಗುವುದಿಲ್ಲ. ಒಂದೊಂದು ಹೆಸರಿನ ಹಿಂದೆ ಅದರದೇ ಆದ ಇತಿಹಾಸವಿರುತ್ತದೆ. ‘‘ಇತಿಹಾಸದ ಅರಿವಿಲ್ಲದವರು ಮಾತ್ರ ಹೆಸರು ಬದಲಿಸುವ ಕೃತ್ಯಕ್ಕೆ ಕೈ ಹಾಕುತ್ತಾರೆ’’ ಎಂದು ಹಿರಿಯ ಪತ್ರಕರ್ತರಾಗಿದ್ದ ಪಾಟೀಲ ಪುಟ್ಟಪ್ಪನವರು ಹೇಳುತ್ತಿದ್ದರು. ಇತಿಹಾಸವನ್ನು ಅಳಿಸಿ ಹಾಕಲು ಹೊರಡುವುದು ಅವಿವೇಕತನದ ಪರಮಾವಧಿಯಾಗಿದೆ. ಬೆಂಗಳೂರು ಮಹಾನಗರ ಪಾಲಿಕೆ ಕೆಲವು ವರ್ಷಗಳ ಹಿಂದೆ ಪಾಲಿಕೆಯ ಕಚೇರಿ ಹತ್ತಿರವಿರುವ ಹಡ್ಸನ್ ಸರ್ಕಲ್ ಹೆಸರನ್ನು ಬದಲಿಸಿ ಕಿತ್ತೂರು ರಾಣಿ ಚೆನ್ನಮ್ಮರ ಹೆಸರನ್ನು ಇಡಲಾಯಿತು. ಕಿತ್ತೂರು ರಾಣಿಯ ಹೋರಾಟದ ಕೆಚ್ಚಿನ ಬಗ್ಗೆ ಯಾರಲ್ಲೂ ಭಿನ್ನಾಭಿಪ್ರಾಯ ಇರಲು ಸಾಧ್ಯವಿಲ್ಲ. ಅವರ ಹೆಸರಿನ ಭವ್ಯ ಸ್ಮಾರಕವನ್ನು ನಿರ್ಮಿಸಲಿ, ಅಭ್ಯಂತರವಿಲ್ಲ. ಈಗಾಗಲೇ ಅವರ ಪ್ರತಿಮೆ ಟೌನ್‌ಹಾಲ್ ಪಕ್ಕದಲ್ಲಿ ಇದೆ. ಆದರೆ ಹಡ್ಸನ್ ಹೆಸರನ್ನು ತೆಗೆದು ಹಾಕಿ ಮರು ನಾಮಕರಣ ಮಾಡಬಾರದಿತ್ತು. ಕರ್ನಾಟಕಕ್ಕೆ ಅದರಲ್ಲೂ ಬೆಂಗಳೂರಿಗೆ ಬ್ರಿಟಿಷ್ ಅಧಿಕಾರಿ ಹಡ್ಸನ್ ನೀಡಿರುವ ಕೊಡುಗೆ ಅಪಾರವಾಗಿದೆ ಎಂಬುದನ್ನು ಮರೆಯಬಾರದು. ಉತ್ತರ ಕರ್ನಾಟಕದಲ್ಲಿ ಕನ್ನಡಕ್ಕಾಗಿ ಡೆಪ್ಯುಟಿ ಚೆನ್ನಬಸಪ್ಪನವರು ಮಾಡಿರುವ ಮಹತ್ಕಾರ್ಯವನ್ನು ಮೈಸೂರು ಸಂಸ್ಥಾನದಲ್ಲಿ ಹಡ್ಸನ್ ಮಾಡಿದರು. ಇಂಗ್ಲೆಂಡ್‌ನಿಂದ ಬೆಂಗಳೂರಿಗೆ ಬಂದಾಗ ಹಡ್ಸನ್‌ಗೆ ಒಂದೇ ಒಂದು ಕನ್ನಡ ಅಕ್ಷರವೂ ಗೊತ್ತಿರಲಿಲ್ಲ. ಆತ ಮೂವತ್ತು ದಿನಗಳಲ್ಲಿ ಕನ್ನಡ ಭಾಷೆಯನ್ನು ಕಲಿತು ದಾಖಲೆಯನ್ನು ನಿರ್ಮಿಸಿದರು. ರಾಜ್ಯದಲ್ಲಿ ಒಂದೇ ಒಂದು ಕನ್ನಡ ಶಾಲೆ ಇಲ್ಲದಿದ್ದಾಗ ತನ್ನ ಸಂಬಳದ ಹಣವನ್ನು ಉಳಿತಾಯ ಮಾಡಿ 73 ಕನ್ನಡ ಶಾಲೆಗಳನ್ನು ಆರಂಭಿಸಿದರು. ಇಂಥವರ ನೆನಪನ್ನು ಅಳಿಸಿ ಹಾಕಿರುವುದು ಸರಿಯಲ್ಲ. ಇದೇ ರೀತಿ ಕಬ್ಬನ್ ಪಾರ್ಕ್ ಹೆಸರನ್ನು ಬದಲಿಸುವ ಯತ್ನವೂ ನಡೆಯಿತು. ಇದು ಅವಿವೇಕವಲ್ಲದೆ ಬೇರೇನೂ ಅಲ್ಲ. ನಾವು ಚುನಾಯಿಸಿದ ಸರಕಾರಗಳಿಗೆ ಮಾಡಲು ಸಾಕಷ್ಟು ಕೆಲಸಗಳಿವೆ.ಜನಸಾಮಾನ್ಯರನ್ನು ಬಾಧಿಸುತ್ತಿರುವ ಜ್ವಲಂತ ಸಮಸ್ಯೆಗಳ ನಿವಾರಣೆಗೆ ಯೋಜನೆಗಳನ್ನು ರೂಪಿಸಿದರೆ ಜನ ಇವರನ್ನು ಎಂದೂ ಮರೆಯುವುದಿಲ್ಲ. ಈ ನೆಲದ ಜನರ ಭಾಷೆಯಾದ ಕನ್ನಡದ ಶಾಲೆಗಳು ಮುಚ್ಚಿ ಹೋಗುತ್ತಿವೆ, ಅವುಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಲಿ. ನಮ್ಮ ಸಂಸದರು ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಅನುದಾನವನ್ನು ತರಲು ಪ್ರಯತ್ನಿಸಲಿ. ಅದನ್ನು ಬಿಟ್ಟು ಇರುವ ಹೆಸರುಗಳನ್ನು ಬದಲಿಸಿ ಬೇರೆ ಹೆಸರು ಇಡುವ ಚಾಳಿಯನ್ನು ಕೈ ಬಿಡಲಿ. ರೈಲು ನಿಲ್ದಾಣಗಳಿಗೂ ಆಯಾ ಊರಿನ ಹೆಸರು ಇರಲಿ.ಉದಾಹರಣೆಗೆ ಮಂಗಳೂರು ರೈಲು ನಿಲ್ದಾಣಕ್ಕೆ ಮಂಗಳೂರು ರೈಲು ನಿಲ್ದಾಣ ಅಂದರೆ ಸಾಕು.ಅದೇ ರೀತಿ ಇತರ ನಗರಗಳಲ್ಲಿ ಜನರು ಕರೆಯುತ್ತ ಬಂದ ಊರಿನ ನಗರದ ಹೆಸರು ಸಾಕು. ನೀವು ಹೊಸದೇನನ್ನಾದರೂ ಮಾಡಿದರೆ ನಿಮಗೆ ಬೇಕಾದ ಹೆಸರನ್ನು ಇಡಬಹುದು.

ವಾರ್ತಾ ಭಾರತಿ 9 Dec 2025 6:56 am

Year Ender 2025: ಪ್ರಾಪರ್ಟಿ ವಿಷಯದಲ್ಲಿ 2025ನೇ ಸಾಲಿನಲ್ಲಿ ಆಗಿರುವ 6 ಪ್ರಮುಖ ಬದಲಾವಣೆಗಳು!

Year Ender 2025: ಕರ್ನಾಟಕ ಸರ್ಕಾರವು 2025ನೇ ಸಾಲಿನಲ್ಲಿ ಪ್ರಾಪರ್ಟಿಗೆ ಸಂಬಂಧಿಸಿದಂತೆ ಕೆಲವೊಂದು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ. ಈ ನಿರ್ಧಾರಗಳಿಂದ ಪ್ರಾಪರ್ಟಿ ಹೊಂದಿರುವವರಿಗೆ ಹಾಗೂ ಪ್ರಾಪರ್ಟಿ ಖರೀದಿ ಮಾಡಬೇಕು ಎಂದು ಕಾಯುತ್ತಿರುವ ಲಕ್ಷಾಂತರ ಜನ ಕನ್ನಡಿಗರಿಗೆ ಅನುಕೂಲವಾಗಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಅನ್ವಯವಾಗುವಂತೆ ಪ್ರಾಪರ್ಟಿಗೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ಕರ್ನಾಟಕ ಕಾಂಗ್ರೆಸ್ ಸರ್ಕಾರ ತೆಗೆದುಕೊಂಡಿದೆ. ಅದೇನು ಎನ್ನುವ

ಒನ್ ಇ೦ಡಿಯ 9 Dec 2025 6:45 am

ನೆಹರು ತಪ್ಪುಗಳನ್ನು ಚರ್ಚಿಸಲು ವಿಶೇಷ ಅಧಿವೇಶನ ಕರೆಯುವಂತೆ ನರೇಂದ್ರ ಮೋದಿ ಅವರಿಗೆ ಪ್ರಿಯಾಂಕಾ ಗಾಂಧಿ ಸಲಹೆ

ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಮುಖ ಪಾತ್ರನಿರ್ವಹಿಸಿದ ವಂದೇ ಮಾತರಂ ಗೀತೆ ರಚನೆಯಾಗಿ ಬರೋಬ್ಬರಿ 150 ವರ್ಷಗಳು ಸಂದಿವೆ. ಈ ಕುರಿತು ಲೋಕಸಭೆಯಲ್ಲಿ ನಿನ್ನೆ (ಡಿ.8-ಸೋಮವಾರ) ವಿಶೇಷ ಚರ್ಚೆ ನಡೆದಿದ್ದು, ಇದು ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ವಾಕ್ಸಮರಕ್ಕೂ ಕಾರಣವಾಗಿದೆ. ತಮ್ಮ ಭಾಷಣದಲ್ಲಿ ಪದೇ ಪದೇ ಜವಾಹಲಾಲ್‌ ನೆಹರು ಹೆಸರು ಉಲ್ಲೇಖಿಸಿದ ಪ್ರಧಾನಿ ಮೋದಿ ಅವರಿಗೆ ತಿರುಗೇಟು ನೀಡಿದ ಕಾಂಗ್ರೆಸ್‌ ಸಂಸದೆ ಪ್ರಿಯಾಂಕಾ ಗಾಂಧಿ, ನೆಹರು ಸಮಯದಲ್ಲಾದ ತಪ್ಪುಗಳ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯುವಂತೆ ಸಲಹೆ ನೀಡಿದ್ದಾರೆ.

ವಿಜಯ ಕರ್ನಾಟಕ 9 Dec 2025 6:19 am

ರೈತರ ವಿರುದ್ಧ ಸೇಡಿಗೆ ಮುಂದಾದ ಸರ್ಕಾರ; ಕೆಐಎಡಿಬಿಗೆ ನೀಡದ ಭೂಮಿಗೆ ಶಾಶ್ವತ ಕೃಷಿ ವಲಯದ ಸಂಕೋಲೆ

ದೇವನಹಳ್ಳಿ, ಚನ್ನರಾಯಪಟ್ಟಣದ ರೈತರ ಸಾವಿರ ದಿನಗಳ ಭೂ ಸ್ವಾಧೀನ ವಿರೋಧಿ ಹೋರಾಟಕ್ಕೆ ಪ್ರತಿಕಾರವಾಗಿ, ಸರ್ಕಾರ ರೈತರ ಭೂ ಮಾರಾಟದ ಸ್ವಾಯತ್ತತೆಯನ್ನು ಕಿತ್ತುಕೊಂಡಿದೆ. 1,777 ಎಕರೆ ಭೂಮಿಯನ್ನು ಶಾಶ್ವತ ಕೃಷಿ ವಲಯ ಎಂದು ಘೋಷಿಸಿ, 3 ತಿಂಗಳೊಳಗೆ ಸರ್ಕಾರಕ್ಕೆ ನೀಡದಿದ್ದರೆ ಯಾರಿಗೂ ಮಾರುವಂತಿಲ್ಲ ಎಂದು ಬೆದರಿಕೆ ಹಾಕಿದೆ. ಸರ್ಕಾರದ ಈ ನಿರ್ಧಾರದ ವಿರುದ್ಧ ಮತ್ತೆ ತೊಡೆತಟ್ಟಿರುವ ರೈತಪರ ಸಂಘಟನೆಗಳು, ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾಗಿದ್ದಾರೆ. ಈ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ.

ವಿಜಯ ಕರ್ನಾಟಕ 9 Dec 2025 5:11 am

ಬೈಕಂಪಾಡಿ | ಯುವಕನ ಕೊಲೆ : ಆರೋಪಿಯ ಬಂಧನ

ಪಣಂಬೂರು: ಮದ್ಯ ಸೇವನೆಗೆ ಹಣ ನೀಡಿಲ್ಲ ಎಂದು ಜಗಳವಾಡಿರುವುದಕ್ಕೆ ಯುವಕನೋರ್ವನನ್ನು ಚೂರಿಯಿಂದ ಇರಿದು ಕೊಲೆಗೈದ ಘಟನೆ ರವಿವಾರ ತಡರಾತ್ರಿ ಬೈಕಂಪಾಡಿಯಲ್ಲಿ ನಡೆದಿದೆ. ಕೊಲೆಯಾದವರನ್ನು ಉತ್ತರ ಪ್ರದೇಶ ಮೂಲದ ನಿವಾಸಿ, ಸದ್ಯ ಬೈಕಂಪಾಡಿಯಲ್ಲಿ ವಾಸವಿರುವ ಸಚಿನ್ ಕುಮಾರ್ ಎಂದು ಗುರುತಿಸಲಾಗಿದೆ. ಮೂಲತಃ ಬೆಳಗಾವಿ ಜಿಲ್ಲೆ, ಪ್ರಸಕ್ತ ಬೈಕಂಪಾಡಿಯ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಪ್ರವೀಣ್ ಶಿವಶಂಕರಪ್ಪ ಕೊಲೆ ಆರೋಪಿ ಎಂದು ತಿಳಿದು ಬಂದಿದೆ. ಸಚಿನ್ ಕುಮಾರ್ ಮತ್ತು ಪ್ರವೀಣ್ ಶಿವಶಂಕರಪ್ಪ ನೆರೆಹೊರೆಯ ಮನೆಗಳಲ್ಲಿ ವಾಸವಾಗಿದ್ದರು. ರವಿವಾರ ಸಚಿನ್ ಮದ್ಯ ಖರೀದಿಸಲೆಂದು ಶಿವ ಶಂಕರಪ್ಪನಲ್ಲಿ ಹಣ ಕೇಳಿದ್ದರು. ಆತ ಹಣ ನೀಡದೆ ಹಿಂದೆ ಕಳುಹಿಸಿದ್ದನೆನ್ನಲಾಗಿದೆ. ಸಚಿನ್ ಕುಮಾರ್ ತಡರಾತ್ರಿ ಮದ್ಯ ಸೇವಿಸಿ ಶಿವ ಶಂಕರಪ್ಪನ ಮನೆ ಬಳಿ ಬಂದು ಆತನ ತಂದೆ , ತಾಯಿಗೆ ಬೈದಿದ್ದಾನೆ ಎನ್ನಲಾಗಿದೆ. ಈ ವೇಳೆ ಆಕ್ರೋಶಗೊಂಡ ಶಿವಶಂಕರ್ ಸಚಿನ್‌ರ ಕುತ್ತಿಗೆಗೆ ಚೂರಿಯಿಂದ ಇರಿದು ಕೊಲೆಗೈದಿದ್ದಾನೆ ಎನ್ನಲಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪಣಂಬೂರು ಪೊಲೀಸ್ ನಿರೀಕ್ಷಕ ಸಲೀಮ್ ಅಬ್ಬಾಸ್ ಅವರ ನೇತೃತ್ವದ ತಂಡ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿತ್ತು. ಕೊಲೆ ನಡೆದ ಗಂಟೆಯೊಳಗಾಗಿ ಆರೋಪಿಯ ಬಂಧನ: ಮದ್ಯ ಸೇವನೆಗೆ ಹಣ ನೀಡಿಲ್ಲ ಎಂದು ಜಗಳವಾಡಿರುವುದಕ್ಕೆ ಚೂರಿಯಿಂದ ಇರಿದು ಯವಕನೋರ್ವನನ್ನು ಕೊಲೆಗೈದ ಪ್ರಕರಣದ ಆರೋಪಿಯನ್ನು ಪಣಂಬೂರು ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಘಟನೆ ತಡರಾತ್ರಿ 11:45ರ ಸುಮಾರಿಗೆ ನಡೆದಿದ್ದು, 12ರ ವೇಳೆಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಈ ಸಂಬಂಧ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸ್ ನಿರೀಕ್ಷಕ ಸಲೀಮ್ ಅಬ್ಬಾಸ್ ನೇತೃತ್ವದ ಪಣಂಬೂರು ಪೊಲೀಸರ ತಂಡ, ತಲೆಮರೆಸಿಕೊಳ್ಳುವ ಸಲುವಾಗಿ ಮಂಗಳೂರು ರೈಲು ನಿಲ್ದಾಣಕ್ಕೆ ತೆರಳಿರುವ ಆರೋಪಿಯ ಬಗ್ಗೆ ಮಾಹಿತಿ ಕಲೆಹಾಕಿಕೊಂಡ ಪೊಲೀಸರು ಘಟನೆ ನಡೆದ ಗಂಟೆಯ ಒಳಗಾಗಿ ಬಂಧಿಸುವಲ್ಲಿ ಯಶಸ್ವಿಯಾದರು.

ವಾರ್ತಾ ಭಾರತಿ 9 Dec 2025 12:19 am

ಭಟ್ಕಳ: ಇಬ್ಬರು ವಿದ್ಯಾರ್ಥಿನಿಯರಿಗೆ ದುಖ್ತರ್-ಎ-ಅಂಜುಮನ್ ಪ್ರಶಸ್ತಿ

ಭಟ್ಕಳ: ನವಾಯತ್ ಕಾಲನಿಯ ಅಂಜುಮನ್ ಬಾಲಕಿಯರ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿನಿಯರು ದುಖ್ತರ್-ಎ-ಅಂಜುಮನ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಝೈನಬ್ ಸಫಾ ಗವಾಯಿ ಹಾಗೂ ಶಿಝಾ ಶಾಬಂದ್ರಿ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ರವಿವಾರ ಶಾಲೆಯ ಸಭಾಂಗಣದಲ್ಲಿ ನಡೆದ ಶಾಲೆಯ ವಾರ್ಷಿಕ ಸಭೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರನ್ನು ಆಯ್ಕೆ ಮಾಡಲಾಗಿದೆ. ಡಿ.೧೪ರಂದು ನಡೆಯುವ ವಿಶೇಷ ಅಂಜುಮನ್ ದಿನಾಚರಣೆಯಲ್ಲಿ ಚಿನ್ನದ ಪದಕವನ್ನು ಔಪಚಾರಿಕವಾಗಿ ಪ್ರದಾನ ಮಾಡಲಾಗುವುದು ಎಂದು ಸಂಸ್ಥೆಯ ಮುಖ್ಯಾಧ್ಯಾಪಕಿ ಸಬಾ ದಮ್ಡಾ ಮಾಹಿತಿ ನೀಡಿದ್ದಾರೆ. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಡಾ. ನಯ್ಯರಿನ್ ಮಾತನಾಡಿ, ಇಂದಿನ ಹುಡುಗಿಯರು ಕಷ್ಟಪಟ್ಟು ಕೆಲಸ ಮಾಡುವುದು, ತಮ್ಮ ಸಾಮರ್ಥ್ಯಗಳನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕೆಂದು ಕರೆ ನೀಡಿದರು. ವಿನುತಾ ಎಚ್. ಗೌರವ ಅತಿಥಿಯಾಗಿ ಆಗಮಿಸಿದ್ದರು. ಸೀಮಾ ಕಾಶಿಮ್ಜಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯ ನಂತರ, ವಿದ್ಯಾರ್ಥಿಗಳು ನಾಟಕ, ಕವನ ವಾಚನ, ದೇಶಭಕ್ತಿ ಗೀತೆ, ಸಾಂಪ್ರದಾಯಿಕ ನೃತ್ಯ ಹಾಗೂ ಸೃಜನಶೀಲ ಪ್ರದರ್ಶನಗಳ ಮೂಲಕ ಪ್ರತಿಭೆಯನ್ನು ಪ್ರದರ್ಶಿಸಿದರು.

ವಾರ್ತಾ ಭಾರತಿ 9 Dec 2025 12:09 am

ಉಡುಪಿ | ಆನ್‌ಲೈನ್ ಟಾಸ್ಕ್ ಹೆಸರಿನಲ್ಲಿ ಮಹಿಳೆಗೆ 31 ಲಕ್ಷ ರೂ. ವಂಚನೆ

ಉಡುಪಿ: ಆನ್‌ಲೈನ್ ಟಾಸ್ಕ್ ಹೆಸರಿನಲ್ಲಿ ಮಹಿಳೆಯೊಬ್ಬರು ಹೂಡಿಕೆ ಮಾಡಿದ್ದ ಲಕ್ಷಾಂತರ ರೂ. ಹಣವನ್ನು ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉದ್ಯಾವರದ ವಿಜಯಲಕ್ಷ್ಮೀ (55) ಎಂಬವರು ನ.29ರಂದು ಫೇಸ್‌ಬುಕ್ ನಲ್ಲಿ ವರ್ಕ್‌ಫ್ರಮ್ ಹೋಮ್ ಕುರಿತ ಜಾಹೀರಾತಿಗೆ ಕ್ಲಿಕ್ ಮಾಡಿದ್ದು, ಆಗ ವಿಜಯಲಕ್ಷ್ಮೀ ಅವರ ವಾಟ್ಸಾಪ್‌ಗೆ ಸಂದೇಶ ಬಂದಿತ್ತು. ತಾನು ಕಂಪೆನಿಯೊಂದರ ಎಚ್‌ಆರ್ ಎಂಬುದಾಗಿ ಪರಿಚಯಿಸಿಕೊಂಡು ವ್ಯಕ್ತಿ, ಪಾರ್ಟ್ ಟೈಮ್ ಕೆಲಸ ಮಾಡಲು ಆಸಕ್ತಿ ಇದ್ದರೆ ಫಾರ್ಮ್ ಪಿಲ್ ಮಾಡಿ ಕಳುಹಿಸಿ ಎಂಬುದಾಗಿ ಸಂದೇಶ ಕಳುಹಿಸಿದ್ದನು. ಅದರ ನಂತರ ವಿವಿಧ ಲಿಂಕ್‌ಗಳನ್ನು ಕಳುಹಿಸಿದ್ದು, ಅದರಲ್ಲಿ ವಿವಿಧ ಟಾಸ್ಕ್‌ಗಳನ್ನು ನೀಡಲಾಗಿತ್ತು. ಟಾಸ್ಕ್ ಮಾಡಿರುವುದಕ್ಕೆ ಹಣವನ್ನು ಕೂಡ ಹಾಕಲಾಗಿತ್ತು. ಡಿ.1ರಂದು ಇನ್ನೊಂದು ಲಿಂಕ್ ಕಳುಹಿಸಿದ್ದು, ಅದನ್ನು ಒತ್ತಿದಾಗ ಟೆಲಿಗಾಮ್ ಖಾತೆ ಓಪನ್ ಆಗಿತ್ತು. ಅದರಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ತಿಳಿಸಲಾಗಿತ್ತು. ಅದನ್ನು ನಂಬಿದ ವಿಜಯಲಕ್ಷ್ಮೀ, ಆರೋಪಿತರು ತಿಳಿಸಿದಂತೆ ಡಿ.1ರಿಂದ ಡಿ.4ರವರೆಗೆ ಒಟ್ಟು 31,00,067ರೂ. ಹಣವನ್ನು ಪಾವತಿ ಮಾಡಿದ್ದರು. ಆದರೆ ಈವರೆಗೆ ಹೂಡಿಕೆ ಮಾಡಿದ ಹಣವನ್ನಾಗಲೀ ಅಥವಾ ಅದರ ಲಾಭಾಂಶವನ್ನಾಗಲೀ ನೀಡದೆ ವಂಚಿಸಲಾಗಿದೆ.

ವಾರ್ತಾ ಭಾರತಿ 9 Dec 2025 12:03 am

ಮಣಿಪಾಲ | ಕೋಳಿ ಅಂಕಕ್ಕೆ ದಾಳಿ: ಎಂಟು ಮಂದಿ ವಶಕ್ಕೆ

ಮಣಿಪಾಲ: ಮಣಿಪಾಲ ಸಮೀಪದ ಮಂಚಿ ಎಂಬಲ್ಲಿ ಡಿ.7ರಂದು ಮಧ್ಯಾಹ್ನ ಕೋಳಿ ಅಂಕ ನಡೆಸುತ್ತಿದ್ದ ಎಂಟು ಮಂದಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಜಯ ದೇವಾಡಿಗ, ದಯಾನಂದ ಪೂಜಾರಿ, ಪ್ರಜ್ವಲ್, ಅಚ್ಚಣ್ಣ ಮೂಲ್ಯ, ಸಚಿನ್, ಪ್ರದೀಪ್, ಅಮೀರ್, ಫಾರೂಕ್ ಅಹಮ್ಮದ್ ಬಂಧಿತ ಆರೋಪಿಗಳು. ಇವರಿಂದ 6500ರೂ. ಮೌಲ್ಯದ 4 ಕೋಳಿಗಳು, 15 ವಾಹನಗಳು ಹಾಗೂ 22100ರೂ. ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 8 Dec 2025 11:59 pm

ಮ್ಯಾನ್ಮಾರ್‌ ನಿರಾಶ್ರಿತನ ಮೇಲೆ ಪುನೀತ್‌ ಕೆರೆಹಳ್ಳಿಯ ದುಂಡಾವರ್ತಿ, ಪ್ರಕರಣ ದಾಖಲು

ಮ್ಯಾನ್ಮಾರ್‌ ನಿರಾಶ್ರಿತನ ಮೇಲೆ ಹಲ್ಲೆ ನಡೆಸಿದ ಸಂಬಂಧ ಪುನೀತ್‌ ಕೆರೆಹಳ್ಳಿ ಹಾಗೂ ಸಹಚರರ ವಿರುದ್ಧ ಸಿಕೆ ಅಚ್ಚುಕಟ್ಟು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಪತ್ನಿ ಮತ್ತು ಮಕ್ಕಳೊಂದಿಗೆ ಹಲವು ವರ್ಷಗಳಿಂದ ನಗರದ ಕಗ್ಗಲಿಪುರದಲ್ಲಿ ವಾಸವಾಗಿರುವ ಜಹಂಗೀರ್‌ ಆಲಂ ಎಂಬುವರು ದೂರು ಕೊಟ್ಟಿದ್ದಾರೆ. ಮ್ಯಾನ್ಮಾರ್‌ ಮೂಲದ ಜಹಂಗೀರ್‌ ಆಲಂ ವಿಶ್ವಸಂಸ್ಥೆಯ ನಿರಾಶ್ರಿತರ ಏಜೆನ್ಸಿಯು ನಿರಾಶ್ರಿತರ ಗುರುತಿನ ಚೀಟಿ ನೀಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯ ಕರ್ನಾಟಕ 8 Dec 2025 11:50 pm

ಎಂಡಿಎಂಎ ಪೂರೈಕೆ ಮಾಡುತ್ತಿದ್ದ ಆರೋಪಿಗಳಿಗೆ ಕಠಿಣ ಸಜೆ: ಸಮರ್ಥ ವಾದ ಮಂಡಿಸಿದ ಅಭಿಯೋಜಕರಿಗೆ ಪೊಲೀಸ್ ಆಯುಕ್ತರಿಂದ ಸನ್ಮಾನ

ಮಂಗಳೂರು: ಮಂಗಳೂರು ನಗರಕ್ಕೆ ನಿಷೇಧಿತ ಮಾದಕದ್ರವ್ಯವಾದ ಎಂಡಿಎಂಎ ಪೂರೈಕೆ ಮಾಡುತ್ತಿದ್ದ ಐವರು ಆರೋಪಿಗಳಿಗೆ 12 ರಿಂದ 14 ವರ್ಷಗಳ ಕಠಿಣ ಸಜೆ ಮತ್ತು ದಂಡ ವಿಧಿಸಲು ದ.ಕ. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿ, ಸಾಕ್ಷ್ಯಾಧಾರಗಳನ್ನು ನ್ಯಾಯಾಲಯದ ಮುಂದೆ ಸಾಬೀತುಪಡಿಸುವಲ್ಲಿ ಮಹತ್ತರ ಪಾತ್ರ ವಹಿಸಿದ ಸರಕಾರಿ ಅಭಿಯೋಜಕರಾದ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಾಸ್ತಾ ಅವರನ್ನು ನಗರ ಪೊಲೀಸ್ ಆಯುಕ್ತರ ಕಚೇರಿ ವತಿಯಿಂದ ಸೋಮವಾರ ಸನ್ಮಾನಿಸಲಾಯಿತು. ಸರಕಾರಿ ಅಭಿಯೋಜಕಿ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಾಸ್ತಾ ರನ್ನು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಡಿಸಿಪಿ ಮಿಥುನ್ , ಸೆನ್ ಪೊಲೀಸ್ ಠಾಣೆ ಎಸಿಪಿ ರವೀಶ್ ನಾಯಕ್, ಉಪಸ್ಥಿತರಿದ್ದರು. 2022, ಜೂನ್ 14ರಂದು ಮಂಗಳೂರು ಸಿಸಿಬಿ ಘಟಕದ ಅಧಿಕಾರಿ, ಸಿಬ್ಬಂದಿ ಪತ್ತೆ ಮಾಡಿ ಮಾದಕವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಆರೋಪಿಗಳನ್ನು ದಸ್ತಗಿರಿ ಮಾಡಿದ್ದರು. ಈ ಬಗ್ಗೆ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಡಿ.6ರಂದು ಸುಡಾನ್ ದೇಶದ ಓರ್ವ ಪ್ರಜೆ ಸಹಿತ 5 ಆರೋಪಿಗಳಿಗೆ 12 ರಿಂದ 14 ವರ್ಷದ ತನಕ ಕಠಿಣ ಸಜೆ ಮತ್ತು ದಂಡ ಶಿಕ್ಷೆ ವಿಧಿಸಿ ನ್ಯಾಯಾಲಯವು ತೀರ್ಪು ನೀಡಿತ್ತು.

ವಾರ್ತಾ ಭಾರತಿ 8 Dec 2025 11:47 pm

\ನಮ್ಮ ರಕ್ತದಲ್ಲಿ ಕನ್ನಡವಿದೆ\ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವ ಬಗ್ಗೆ ರಾಜ್ಯ ಸರ್ಕಾರ ಹೇಳಿದ್ದೇನು ?

ಕರ್ನಾಟಕ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಕನ್ನಡ ಮಾಧ್ಯಮದ ಶಾಲೆಗಳನ್ನು ಮುಚ್ಚುತ್ತಿದೆ. ಕನ್ನಡ ಶಾಲೆಗಳ ವಿಲೀನ ಮಾಡುತ್ತಿದೆ ಎನ್ನುವ ವರದಿಗಳ ನಡುವೆಯೇ ಈ ವಿಚಾರದ ಬಗ್ಗೆ ರಾಜ್ಯ ಕಾಂಗ್ರೆಸ್ ಸರ್ಕಾರವು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದೆ. ನಮ್ಮ ರಕ್ತದಲ್ಲಿ ಕನ್ನಡವಿದೆ. ಕನ್ನಡ ಮಾಧ್ಯಮದ ಯಾವುದೇ ಶಾಲೆಗಳನ್ನು ಮುಚ್ಚುವುದಿಲ್ಲ. 2025 - 26ನೇ ಸಾಲಿನಲ್ಲಿ 900 ಸರ್ಕಾರಿ ಶಾಲೆಗಳನ್ನು ಕೆಪಿಎಸ್‌ ಶಾಲೆಗಳನ್ನಾಗಿ

ಒನ್ ಇ೦ಡಿಯ 8 Dec 2025 11:43 pm

ಅಂಬೇಡ್ಕರ್ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕಲ್ಪಿಸಿಕೊಟ್ಟರು: ಕೋಟ

ಬ್ರಹ್ಮಾವರ: ಈ ದೇಶದಲ್ಲಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಂವಿಧಾನದ ಮೂಲಕ ಸಾಮಾಜಿಕ ನ್ಯಾಯದ ಬದುಕು ಕಲ್ಪಿಸಿಕೊಟ್ಟ, ಪ್ರಪಂಚದಲ್ಲೇ ಅತ್ಯುನ್ನತ ಸಂವಿಧಾನ ನೀಡಿದ ಮಹಾನ್ ಚೇತನ ಬಾಬಾಸಾಹೇಬ್ ಅಂಬೇಡ್ಕರ್ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಬ್ರಹ್ಮಾವರ ತಾಲೂಕು ಶಾಖೆ ವತಿಯಿಂದ ಬ್ರಹ್ಮಾವರದ ಬಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾದ ಬಾಬಾಸಾಹೇಬ್ ಅಂಬೇಡ್ಕರ್ ರವರ 70ನೇ ಪರಿನಿಬ್ಬಾಣ ದಿನದ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರಕ್ಕೆ ಗೌರವದ ಪುಷ್ಫ ನಮನ ಸಲ್ಲಿಸಿ ಅವರು ಮಾತನಾಡುತ್ತಿದ್ದರು. ಮುಖ್ಯ ಅತಿಥಿಯಾಗಿ ಉಡುಪಿ ಜಿಪಂ ಮಾಜಿ ಅಧ್ಯಕ್ಷ ಬಿ.ಭುಜಂಗ ಶೆಟ್ಟಿ ಮಾತನಾಡಿ, ಎಲ್ಲಾ ವರ್ಗ, ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ನೆಮ್ಮದಿಯಾಗಿ ಬಾಳಲಿಕ್ಕೆ ಬೇಕಾದ ಅವಕಾಶಗಳನ್ನು ಕಲ್ಪಿಸಿಕೊಟ್ಟ ಮಹಾ ಮೇಧಾವಿ ಬಾಬಾಸಾಹೇಬ್ ಅಂಬೇಡ್ಕರ್. ಅವರನ್ನು ಪ್ರತೀ ದಿನವೂ ನಾವು ಸ್ಮರಣೆ ಮಾಡಬೇಕು. ಅದರಲ್ಲೂ ಶಾಲಾ ಮಕ್ಕಳಿಗೆ ಅತೀ ಅಗತ್ಯವಾಗಿ ಅಂಬೇಡ್ಕರ್ ಮಹತ್ವದ ಬಗ್ಗೆ ತಿಳಿಸುವ ಕೆಲಸ ನಾವು ಮಾಡಬೇಕಾಗಿದೆ ಎಂದರು. ಬ್ರಹ್ಮಾವರ ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ ಬಿರ್ತಿ ರಾಜೇಶ್ ಶೆಟ್ಟಿ ಮಾತನಾಡಿ, ಅಂಬೇಡ್ಕರ್ ಒಂದು ಜಾತಿ, ಒಂದು ಧರ್ಮದ ನಾಯಕರಲ್ಲ. ಅವರು ಈ ದೇಶದ ಸಂವಿಧಾನದ ಮೂಲಕ ಎಲ್ಲರಿಗೂ ಸಮಾನ ಅವಕಾಶ ನೀಡಿದ ಮಹಾನ್ ನೇತಾರ. ಅಸ್ಪೃಶ್ಯತೆ, ಜೀತ ಪಧ್ಧತಿ ಯನ್ನು ಹೋಗಲಾಡಿಸಿದ ಮಾಹಾನ್ ಕ್ರಾಂತಿಕಾರಿ. ಸ್ವತಃ ತಾವು ಮೇಲ್ವರ್ಗದವರಿಂದ ಅನುಭವಿಸಿದ ಅವಮಾನ ಅಸ್ಪೃಶ್ಯತೆಗಳನ್ನು ಸಹಿಸಿ ಕೊಂಡು ನಮ್ಮ ಮುಂದಿನ ಪೀಳಿಗೆ ಸುಖ, ಸಂತೋಷ , ನೆಮ್ಮದಿಯ ಜೀವನ ನಡೆಸಬೇಕೆಂಬ ದೂರದೃಷ್ಟಿಯನ್ನು ನಮ್ಮ ದೇಶಕ್ಕೆ ಎಲ್ಲರಿಗೂ ಸಮಾನ ಅವಕಾಶ ಇರುವ ಸಂವಿಧಾನವನ್ನು ರಚಿಸಿಕೊಟ್ಟರು. ಅದನ್ನು ಸದಾ ನಾವು ನೆನಪಿನಲ್ಲಿ ಇಟ್ಟಕೊಳ್ಳಬೇಕು ಎಂದರು. ವಾರಂಬಳ್ಳಿ ಗ್ರಾಪಂ ಅಧ್ಯಕ್ಷ ನಿತ್ಯಾನಂದ ರಾವ್ ಬಿ.ಆರ್., ಮಾಜಿ ಅಧ್ಯಕ್ಷ ನವೀನ್ ನಾಯಕ್, ಪಂಚಾಯತ್ ಸದಸ್ಯ ದೇವಾನಂದ ನಾಯಕ್, ನಗರಸಭೆ ಸದಸ್ಯ ವಿಜಯ ಕುಮಾರ್ ಕೊಡವುರು, ಬ್ರಹ್ಮಾವರ ವ್ಯವಸಾಯ ಸಹಕಾರ ಸಂಘದ ನಿರ್ದೇಶಕ ಎಸ್.ನಾರಾಯಣ, ದ.ಸಂ.ಸ. ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ, ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ ಗಿಳಿಯಾರು, ಬ್ರಹ್ಮಾವರ ತಾಲೂಕು ಪ್ರಧಾನ ಸಂಚಾಲಕ ಶ್ಯಾಮಸುಂದರ ತೆಕ್ಕಟ್ಟೆ, ದಸಂಸ ಪದಾಧಿಕಾರಿಗಳಾದ ಕುಮಾರ್ ಕೋಟ, ಮಂಜುನಾಥ್ ಬಾಳ್ಕುದ್ರು, ಹರೀಶ್ಚಂದ್ರ ಕೆ.ಡಿ., ಸುಧಾಕರ ಮಾಸ್ಟರ್ ಗುಜ್ಜರಬೆಟ್ಟು, ಬಿರ್ತಿ ಸುರೇಶ, ಶಿವಾನಂದ ಬಿರ್ತಿ, ವಿಜಯ ಗಿಳಿಯಾರು, ಶ್ರೀನಿವಾಸ್ ವಡ್ಡರ್ಸೆ, ಪ್ರಕಾಶ್ ಹೇರೂರು, ಅನಿಲ ಬಿರ್ತಿ, ಚೈತನ್ಯ ಬಿರ್ತಿ, ಪ್ರಶಾಂತ್ ಬಿರ್ತಿ, ಶರತ್ ಆರೂರು, ಇದ್ರಿಸ್ ಹೂಡೆ ಉಪಸ್ಥಿತರಿದ್ದರು.

ವಾರ್ತಾ ಭಾರತಿ 8 Dec 2025 11:41 pm

ಸಂಘ ಸಂಸ್ಥೆಗಳ ಉತ್ತಮ ಕಾರ್ಯಗಳಿಂದ ಸಮಾಜ ಉನ್ನತಿ: ಅದಮಾರು ಶ್ರೀ

ಉಡುಪಿ: ಸಂಘ ಸಂಸ್ಥೆಗಳಿಂದ ಉತ್ತಮ ಕಾರ್ಯಗಳು ನಡೆದರೆ ಅದು ಸಮಾಜದ ಉನ್ನತಿ ಕಾರಣ ಆಗುತ್ತದೆ ಎಂದು ಅದಮಾರು ಅದಮಾರು ಮಠಾಧೀಶ ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಮೂಡುಪೆರಂಪಳ್ಳಿಯ ವಿಶ್ವಪ್ರಿಯ ಬಯಲು ರಂಗಮಂಟಪದಲ್ಲಿ ಶುಕ್ರವಾರ ನಡೆದ ನವ ಚೈತನ್ಯ ಯುವಕ ಮಂಡಲದ 40ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಮಾಜಿ ಶಾಸಕ ರಘುಪತಿ ಭಟ್ ಮಾತನಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ವಜ್ರ ಚೈತನ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜಿಲ್ಲೆಯಲ್ಲಿ ಜನಪ್ರಿಯವಾಗಿರುವ ಯಕ್ಷಗಾನ ತರಬೇತಿ ಯೋಜನೆ ಮಕ್ಕಳಿಗೆ ಇಷ್ಟೊಂದು ವ್ಯಾಪಕವಾಗಲು ಕಾರಣ ಯಕ್ಷ ಶಿಕ್ಷಣ. ಹಾಗೆಯೇ ಯಕ್ಷಗಾನದ ಇನ್ನೊಂದು ಪ್ರಕಾರವಾದ ಮೂಡಲಪಾಯ ಯಕ್ಷಗಾನಕ್ಕೂ ಹೆಚ್ಚಿನ ಪ್ರೋತ್ಸಾಹ ಸಿಗ ಬೇಕಿದೆ ಎಂದು ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದರು. ನವಚೈತನ್ಯ ಯುವಕ ಮಂಡಲದ ಅಧ್ಯಕ್ಷರಾದ ಜಿತೇಶ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ಸಂಗೀತ ಕ್ಷೇತ್ರದಲ್ಲಿ ಸಾಧನೆಗೆ ಲಿಯೋನ ಒಲಿವೆರ ಅವರನ್ನು ಗೌರವಿಸಲಾಯಿತು. ಸಂಸ್ಥೆಯ ಹಿರಿಯ ಸದಸ್ಯರಾದ ಸುರೇಂದ್ರ ಪೂಜಾರಿ ಮತ್ತು ರವೀಂದ್ರ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಆರ್ಥಿಕವಾಗಿ ಹಿಂದುಳಿದ ಇಬ್ಬರು ವಿದ್ಯಾರ್ಥಿಗಳಿಗೆ ಹಾಗೂ ಈಶ್ವರ್ ಮಲ್ಪೆ ಅವರಿಗೆ ವಾಕಿಟಾಕಿ ಖರೀದಿಸಲು ಸಂಘದ ವತಿಯಿಂದ ಸಹಾಯಧನ ವಿತರಿಸಲಾಯಿತು. ಉದ್ಯಮಿ ಪ್ರಸಾದ್‌ರಾಜ್ ಕಾಂಚನ್, ಗಿರಿಜಾ ಶಿವರಾಮ ಶೆಟ್ಟಿ, ಮಾಜಿ ನಗರಸಭಾ ಸದಸ್ಯೆ ಅನಿತಾ ಬೆಳಿಂಡ, ಸಂಸ್ಥೆಯ ಉಪಾಧ್ಯಕ್ಷ ವಿಪಿನ್, ಕಾರ್ಯದರ್ಶಿ ವಿಶಾಲ್, ಕೋಶಾಧಿಕಾರಿ ಶಂರ್ಕ ಕುಲಾಲ್ ಪೆರಂಪಳ್ಳಿ ಉಪಸ್ಥಿತರಿದ್ದರು.

ವಾರ್ತಾ ಭಾರತಿ 8 Dec 2025 11:37 pm

ಕ್ರಿಕೆಟ್ ನೇರಪ್ರಸಾರ ಮಾಡೊಲ್ಲ ಎಂದ ಜಿಯೋಸ್ಟಾರ್! ಹೊಸ ಪ್ರಸಾರಕರ ಹುಡುಕಲು ಐಸಿಸಿ ಪರದಾಟ; ಇಷ್ಟಕ್ಕೆಲ್ಲ ಏನು ಕಾರಣ?

Jiostar Vs ICC- ಅನಿರೀಕ್ಷಿತ ಬೆಳವಣಿಗೆಯಲ್ಲಿ ಜಿಯೋಸ್ಟಾರ್ ಕಂಪನಿಯು ಕ್ರಿಕಟ್ ನೇರಪ್ರಸಾರದ ಒಪ್ಪಂದವನ್ನು ಮುರಿಯಲು ಮುಂದಾಗಿರುವುದು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ICC)ಯನ್ನು ಇಕ್ಕಟ್ಟಿನಲ್ಲಿ ಸಿಲುಕಿಸಿದೆ. 2026ರ ಟಿ20 ವಿಶ್ವಕಪ್‌ ಗೂ ಮುನ್ನ ಐಸಿಸಿಯು ಹೊಸ ಪ್ರಸಾರಕರನ್ನು ಹುಡುಕಲೇ ಬೇಕಾದ ಅನಿವಾರ್ಯತೆಗೆ ಸಿಲುಕಿದ್ದು ಯಾವ ಕಂಪನಿಯೂ ಒಪ್ಪಂದ ಮಾಡಿಕೊಳ್ಳಲು ಮುಂದೆ ಬರುತ್ತಿಲ್ಲ ಎಂದು ತಿಳಿದು ಬಂದಿದೆ. ಕೇಂದ್ರ ಸರ್ಕಾರ ಜಾರಿಗೆ ತಂದ ಆನ್‌ಲೈನ್ ಗೇಮಿಂಗ್ ಕಾಯ್ದೆಯಿಂದಾಗಿ ಜಿಯೋಸ್ಟಾರ್‌ಗೆ ಭಾರೀ ನಷ್ಟವಾಗಿರುವುದೇ ಒಪ್ಪಂದ ಮುರಿಯಲು ಕಾರಣ ಎಂದು ಹೇಳಲಾಗುತ್ತಿದೆ.

ವಿಜಯ ಕರ್ನಾಟಕ 8 Dec 2025 11:25 pm

ಕೊಂಕಣಿ ಅಕಾಡಮಿ: ʼಕಾವ್ಯಾಂ ವ್ಹಾಳೊ-9ʼ ಶೀರ್ಷಿಕೆಯಡಿ ಕವಿಗೋಷ್ಠಿ

ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿಯ ವತಿಯಿಂದ ಅಕಾಡಮಿಯ ಸಭಾಂಗಣದಲ್ಲಿ ʼಕಾವ್ಯಾಂ ವ್ಹಾಳೊ-9ʼ ಶೀರ್ಷಿಕೆಯಡಿ ಕವಿಗೋಷ್ಠಿ ಶನಿವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಕಾಡಮಿಯ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ಅಕಾಡೆಮಿಯು ಹೊಸ ಹೊಸ ಕವಿಗಳನ್ನು ಗುರುತಿಸಿ ವೇದಿಕೆಯನ್ನು ನೀಡುತ್ತಿವೆ ಎಂದರು. ಮುಖ್ಯ ಅತಿಥಿಯಾಗಿ ಇನ್ಫೆಂಟ್ ಜೀಸಸ್ ಶ್ರೈನ್‌ನ ನಿರ್ದೇಶಕ ಫಾ. ಸ್ಟೀವನ್ ಆಲ್ವಿನ್ ಪಿರೇರಾ ಭಾಗವಹಿಸಿದ್ದರು. ಕವಿಗಳಾದ ಆ್ಯಂಡ್ರು ಎಲ್. ಡಿಕುನ್ಹಾ ಏಂಜಲ್ ಕುಟಿನ್ಹಾ, ರಿಷೊನ್ ನಜ್ರೆತ್, ಆನ್ಯ ದಾಂತಿ ಕವನ ವಾಚಿಸಿದರು. ವಿನ್ಸೆಂಟ್ ಪಿಂಟೊ ಆಂಜೆಲೊರ್, ಕೃತಿಕಾ ಕಾಮತ್, ರೇಮಂಡ್ ಡಿಕುನ್ಹಾ, ಎಲ್ಸನ್ ಡಿಕೋಸ್ತ ಹಿರ್ಗಾನ್, ಸೋನಿಯಾ ಡಿಕೋಸ್ತ, ಲವೀನ ದಾಂತಿ ಕವಿತೆಗಳನ್ನು ವಾಚಿಸಿದರು. ಅಕಾಡಮಿ ಸದಸ್ಯರಾದ ನವೀನ್ ಲೋಬೊ, ಸಮರ್ಥ್ ಭಟ್ ಉಪಸ್ಥಿತರಿದ್ದರು. ಸಪ್ನಾ ಮೇ ಕ್ರಾಸ್ತಾ ಕಾರ್ಯಕ್ರಮ ನಿರೂಪಿಸಿದರು.

ವಾರ್ತಾ ಭಾರತಿ 8 Dec 2025 11:14 pm

ಮಂಗಳೂರು: ಯುವಕ ನಾಪತ್ತೆ

ಮಂಗಳೂರು: ಸಂಬಂಧಿಕರು ಹಾಗೂ ಸ್ನೇಹಿತರಿಗೆ ಮದುವೆಯ ಆಮಂತ್ರಣ ಪತ್ರ ನೀಡಿ ಬರುತ್ತೇನೆಂದು ಹೇಳಿ ಮನೆಯಿಂದ ತನ್ನ ತಾಯಿಯ ಕಾರಿನಲ್ಲಿ ಹೊರಟು ಬಂದಿದ್ದ ರಕ್ಷಣ್ ಜೆ.ಕೆ. (32) ಎಂಬವರು ಡಿ.6ರಿಂದ ಕಾಣೆಯಾದ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕಾರು ಅಂದು ರಾತ್ರಿ 10:30ಕ್ಕೆ ನಗರದ ಟೌನ್‌ಹಾಲ್ ಬಳಿ ಪತ್ತೆಯಾಗಿದೆ. ಸುಮಾರು 5.8 ಅಡಿ ಎತ್ತರದ, ಸಧೃಡ ಶರೀರದ, ಗೋಧಿ ಮೈ ಬಣ್ಣದ ರಕ್ಷಣ್ ಕಾಣೆಯಾದ ದಿನ ನೀಲಿ ಬಣ್ಣದ ಉದ್ದ ತೋಳಿನ ಶರ್ಟ್ ಹಾಗೂ ಕಪ್ಪುಬಣ್ಣದ ಪ್ಯಾಂಟ್ ಧರಿಸಿದ್ದರು. ತುಳು ಕನ್ನಡ, ಇಂಗ್ಲಿಷ್ ಭಾಷೆ ಮಾತನಾಡುತ್ತಾರೆ ಎಂದು ಪ್ರಕರಣ ದಾಖಲಿಸಿದ ಪೊಲೀಸರು ತಿಳಿಸಿದ್ದಾರೆ.

ವಾರ್ತಾ ಭಾರತಿ 8 Dec 2025 11:10 pm

Mangaluru | ಎಂಡಿಎಂಎ ಮಾರಾಟಕ್ಕೆ ಯತ್ನ : ಆರೋಪಿ ಸೆರೆ

ಮಂಗಳೂರು: ನಗರದ ಕೆಪಿಟಿ ಬಳಿಯ ಆರ್‌ಟಿಒ ಫಿಟ್ನೆಸ್ ಪರಿಶೀಲನ ಮೈದಾನಕ್ಕೆ ತೆರಳುವ ರಸ್ತೆ ಬದಿ ಸಾರ್ವಜನಿಕರಿಗೆ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದಡಿ ಸುರತ್ಕಲ್ ಕೃಷ್ಣಾಪುರ ಮುಹಮ್ಮದ್ ಆರೀಫ್ ಫೈಝಲ್ (26)ಎಂಬಾತನನ್ನು ಕದ್ರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 2.05 ಗ್ರಾಂ ತೂಕದ 10,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ 80 ಸಾವಿರ ರೂ. ಮೌಲ್ಯದ ದ್ವಿಚಕ್ರ ವಾಹನ ಮತ್ತು 2 ಸಾವಿರ ರೂ. ನಗದು ಮತ್ತಿಷಿಕ್ಷಿೂಕ್ಷಿ ಸೊತ್ತುಗಳನ್ನು ಜಪ್ತಿ ಮಾಡಲಾಗಿದೆ.

ವಾರ್ತಾ ಭಾರತಿ 8 Dec 2025 11:05 pm

ಅಡ್ಯಾರ್: ಮೊಟ್ಟೆ ಸಾಗಾಟದ ವಾಹನಕ್ಕೆ ಲಾರಿ ಢಿಕ್ಕಿ

ಮಂಗಳೂರು: ರಾ.ಹೆ.75ರ ಅಡ್ಯಾರ್ ಬಳಿ ಮೊಟ್ಟೆ ಸಾಗಾಟದ ವಾಹನಕ್ಕೆ ಹಿಂದಿನಿಂದ ಲಾರಿಯೊಂದು ಢಿಕ್ಕಿ ಹೊಡೆದ ಘಟನೆ ಸೋಮವಾರ ನಡೆದಿದೆ. ಇದರಿಂದ ವಾಹನ ರಸ್ತೆಗೆ ಮಗುಚಿ ಬಿದ್ದಿದ್ದು, ಮೊಟ್ಟೆಗಳು ಒಡೆದು ಸಾವಿರಾರು ರೂ. ನಷ್ಟವಾಗಿದೆ. ಸೋಮವಾರ ಬೆಳಗ್ಗೆ 10ಕ್ಕೆ ಫರಂಗಿಪೇಟೆ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ವಾಹನಕ್ಕೆ ಅಡ್ಯಾರ್ ಸಹ್ಯಾದ್ರಿ ಕಾಲೇಜು ಬಳಿ ಹಿಂದಿನಿಂದ ಲಾರಿ ಢಿಕ್ಕಿಯಾಗಿದೆ. ಇದರಿಂದ ಡಿವೈಡರ್ ಮೇಲೆ ಹತ್ತಿದ್ದ ಮೊಟ್ಟೆ ಸಾಗಾಟದ ವಾಹನ ಮಗುಚಿ ಬಿದ್ದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಆಗಿಲ್ಲ. ಆದರೆ ರಸ್ತೆಯಲ್ಲಿ ಮೊಟ್ಟೆ ಒಡೆದು ಚೆಲ್ಲಿದ್ದು, ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ವಾರ್ತಾ ಭಾರತಿ 8 Dec 2025 11:02 pm

ಮಂಗಳೂರು: ಆನ್‌ಲೈನ್ ಹೂಡಿಕೆ ಮಾಡಿ ಲಕ್ಷಾಂತರ ರೂ. ಹಣ ಕಳೆದುಕೊಂಡ ವಿದ್ಯಾರ್ಥಿ

ಮಂಗಳೂರು: ಹೋಮಿಯೋಪತಿ ಶಿಕ್ಷಣದ ಜತೆ ಪೌರೋಹಿತ್ಯ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಯುವಕನಿಗೆ ಆನ್‌ಲೈನ್ ಮೂಲಕ 31.99 ಲಕ್ಷ ರೂ. ವಂಚಿಸಿದ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಟ್ಸ್‌ಆ್ಯಪ್‌ನಲ್ಲಿ ಬಂದ ಸಂದೇಶವನ್ನು ಗಮನಿಸಿದ ತಾನು ಹಣ ಹೂಡಿಕೆ ಮಾಡಿ ಹೆಚ್ಚು ಲಾಭ ಗಳಿಸಬಹುದು ಎಂಬ ಆಸೆಯಿಂದ ಆರೋಪಿಗಳು ನೀಡಿದ ಬೇರೆ ಬೇರೆ ಖಾತೆಗಳಿಗೆ ನ.5ರಿಂದ 26ರ ವರೆಗೆ ತನ್ನಲ್ಲಿದ್ದ ಹಣ ಹಾಗೂ ಮನೆಯಲ್ಲಿದ್ದ ಬಂಗಾರನ್ನು ಅಡವಿಟ್ಟು ಹಂತ ಹಂತವಾಗಿ 31,99,800 ರೂ. ವರ್ಗಾಯಿಸಿದ್ದೆ. ಬಳಿಕ ಹೂಡಿಕೆ ಮಾಡಿದ ಹಣವನ್ನು ವಾಪಸ್ ನೀಡುವಂತೆ ಕೇಳಿಕೊಂಡಾಗ ಮತ್ತಷ್ಟು ಹಣ ಹೂಡಿಕೆ ಮಾಡುವಂತೆ ಹೇಳಿದ್ದಲ್ಲದೆ ತೆರಿಗೆ ಮತ್ತಿತರ ಶುಲ್ಕಗಳನ್ನು ಪಾವತಿಸಬೇಕು. ಇಲ್ಲದಿದ್ದಲ್ಲಿ ಯಾವುದೇ ಹಣ ಹಿಂಪಡೆಯಲು ಸಾಧ್ಯವಿಲ್ಲ ಎಂದಿದ್ದಾರೆ. ಬಳಿಕ ಮನೆಯವರು ಹಾಗೂ ಸ್ನೇಹಿತರಲ್ಲಿ ಈ ವಿಷಯ ಹೇಳಿದಾಗ ತಾನು ಮೋಸ ಹೋಗಿರುವುದು ಗಮನಕ್ಕೆ ಬಂತು ಎಂದು ಹಣ ಕಳಕೊಂಡ ವಿದ್ಯಾರ್ಥಿ ದೂರಿನಲ್ಲಿ ತಿಳಿಸಿದ್ದಾರೆ.

ವಾರ್ತಾ ಭಾರತಿ 8 Dec 2025 10:57 pm

ಎಸ್‌ಐಆರ್ ಪ್ರಕ್ರಿಯೆ ತಕ್ಷಣವೇ ಸ್ಥಗಿತಗೊಳಿಸಿ : ಬಿ.ಟಿ.ವೆಂಕಟೇಶ್

ಶಿವಮೊಗ್ಗ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ದೇಶಾದ್ಯಂತ ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘಟನೆ(ಎಪಿಸಿಆರ್) ಯ ರಾಜ್ಯ ಕಾರ್ಯಕಾರಿ ಸದಸ್ಯ ಹಾಗೂ ಹೈಕೋರ್ಟ್ ವಕೀಲ ಬಿ.ಟಿ.ವೆಂಕಟೇಶ್ ಹೇಳಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ಎಸ್‌ಐಆರ್ ಪ್ರಕ್ರಿಯೆಯನ್ನು ಮಾಡುತ್ತಿದೆ. ಈ ಪ್ರಕ್ರಿಯೆಯಲ್ಲಿಯೇ ಪಾರದರ್ಶಕದ ಕೊರತೆ, ಅಸ್ಪಷ್ಟತೆ ಇದೆ. ಅತ್ಯಲ್ಪ ಸಮಯಾವಕಾಶವಿದೆ. ಅಲ್ಲದೆ ಮತದಾನ ಮಾಡಲು ಹುಟ್ಟಿದ ದಿನಾಂಕದ ಪ್ರಮಾಣಪತ್ರವನ್ನು ನೀಡಬೇಕು ಎನ್ನುವುದು ಎಷ್ಟರಮಟ್ಟಿಗೆ ಸರಿ. ಅಲೆಮಾರಿಗಳು, ಓದೇ ಗೊತ್ತಿಲ್ಲದವರು, ಬಡವರು, ಹುಟ್ಟಿದ ದಿನಾಂಕ ಗೊತ್ತಿಲ್ಲದವರು ಏನು ಮಾಡಬೇಕು? ಅವರು ಎಲ್ಲಿಂದ ಜನನ ಪ್ರಮಾಣಪತ್ರ ತರಬೇಕು?. ಅಲ್ಲದೆ ಭಾರತ ಸರಕಾರವೇ ನೀಡಿದ ಆಧಾರ್ ಕಾರ್ಡನ್ನು ಗುರುತಿನ ಚೀಟಿ ಎಂದು ಏಕೆ ಕರೆಯಬಾರದು?. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಮತ್ತು ಮತದಾನ ಮಾಡಲು ಸರಕಾರವೇ ನೀಡಿದ ಪಡಿತರ ಕಾರ್ಡ್ ಮತ್ತು ಈಗಾಗಲೇ ಚುನಾವಣಾ ಆಯೋಗ ನೀಡಿದ ಗುರುತಿನ ಚೀಟಿ ಸಾಕಲ್ಲವೇ?. ಹೀಗಿದ್ದೂ ಹುಟ್ಟಿದ ದಿನಾಂಕದ ಪ್ರಮಾಣಪತ್ರ ಏಕೆ ಎಂದು ಪ್ರಶ್ನಿಸಿದರು. ಎಪಿಸಿಆರ್‌ನ ರಾಜ್ಯ ಸಮಿತಿ ಉಪಾಧ್ಯಕ್ಷ ಅಖೀಲ ವಿದ್ಯಾಸಂದ್ರ ಮಾತನಾಡಿ, ನಮ್ಮ ಸಂಘಟನೆಯು ಮಾನವ ಹಕ್ಕುಗಳ ರಕ್ಷಣೆಗಾಗಿ ಹೋರಾಡುತ್ತಾ ಬಂದಿದೆ. ಮಹಿಳೆಯರ ಮೇಲೆ, ಅಲ್ಪಸಂಖ್ಯಾತರ ಮೇಲೆ, ದಲಿತರ ಮೇಲೆ ನಡೆಯುವ ಶೋಷಣೆ, ದೌರ್ಜನ್ಯ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆಯ ವಿರುದ್ಧ 25 ವರ್ಷಗಳಿಂದ ಅಸೋಷಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ ಹೆಸರಿನಲ್ಲಿ ಈ ಸಂಸ್ಥೆ ಜನ್ಮತಾಳಿ, 18 ರಾಜ್ಯಗಳಲ್ಲಿ ಕೆಲಸ ಮಾಡುತ್ತಿದೆ. ಇದೀಗ ಶಿವಮೊಗ್ಗ ಜಿಲ್ಲಾ ಘಟಕ ಅಸ್ಥಿತ್ವಕ್ಕೆ ಬಂದಿದೆ. ಶಿವಮೊಗ್ಗದಲ್ಲಿಯೂ ಮಾನವ ಹಕ್ಕುಗಳ ರಕ್ಷಣೆಯ ಬಗ್ಗೆ ನಮ್ಮ ಸಂಘಟನೆ ನಿರಂತರವಾಗಿ ಹೋರಾಡುತ್ತಾ ಬರುತ್ತದೆ ಎಂದರು. ಜಿಲ್ಲಾ ಸಮಿತಿ ಅಧ್ಯಕ್ಷೆ ಸರೋಜಾ ಪಿ. ಚಂಗೊಳ್ಳಿ ಮಾತನಾಡಿ, ಇದು ರಾಷ್ಟ್ರಮಟ್ಟದ ಸಂಘಟನೆ. ಈಗ ಕಳೆದ ಕೆಲವು ತಿಂಗಳಿನಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಅಸ್ಥಿತ್ವಕ್ಕೆ ಬಂದಿದೆ. ಈಗಾಗಲೇ ಪದಾಧಿಕಾರಿಗಳ ನೇಮಕವೂ ಆಗಿದೆ. ಈ ವರ್ಷ ಸುಮಾರು 50 ಕಾರ್ಯಕ್ರಮಗಳನ್ನು ಆಯೋಜಿಸುವ ಗುರಿ ಹೊಂದಲಾಗಿದೆ. ಈಗಾಗಲೇ 15 ಕಾರ್ಯಕ್ರಮಗಳನ್ನು ನಾವು ಪೂರೈಸಿದ್ದೇವೆ. ಶಾಲಾ-ಕಾಲೇಜುಗಳಲ್ಲಿ ಕಾನೂನುಗಳ ಅರಿವು ಉಚಿತ ಕಾನೂನು ಸಹಾಯ, ಕೈದಿಗಳ ಬಿಡುಗಡೆಗಾಗಿ ಹೋರಾಟ, ಗಾಂಜಾ ವಿರುದ್ಧ ಹೋರಾಟ, ಪೊಕ್ಸೊ ಕಾಯ್ದೆಯ ಬಗ್ಗೆ ಅರಿವು ಮೂಡಿಸುವುದು, ಮೌಲ್ಯಗಳ ಮನವರಿಕೆ ಮಾಡುವುದು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ರೂಪಿಸಲಾಗುವುದು ಎಂದು ತಿಳಿಸಿದರು. ನೂತನ ಸಮಿತಿ ಅಸ್ತಿತ್ವಕ್ಕೆ : ಎಪಿಸಿಆರ್‌ನ ಜಿಲ್ಲಾ ಘಟಕದ ಗೌರವ ಅಧ್ಯಕ್ಷರಾಗಿ ಆರ್.ಟಿ. ನಟರಾಜ್, ಜಿಲ್ಲಾಧ್ಯಕ್ಷರಾಗಿ ಸರೋಜಾ ಪಿ. ಚಂಗೊಳ್ಳಿ, ಉಪಾಧ್ಯಕ್ಷರಾಗಿ ಹಾಲೇಶಪ್ಪ, ರಾಜಮ್ಮ, ಸೈಯದ್ ಲಿಯಾಖತ್, ಅಬ್ದುಲ್ ವಹ್ಹಾಬ್, ಮುಹಮ್ಮದ್ ಅಯ್ಯೂಬ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ರಫಿ, ಜಂಟಿ ಕಾರ್ಯದರ್ಶಿಗಳಾಗಿ ರಮ್ಯಾ, ದೇವೇಂದ್ರಪ್ಪ, ಹಬೀಬುಲ್ಲಾ, ಖಜಾಂಚಿಯಾಗಿ ಸುಕನ್ಯಾ, ಸಂಘಟನಾ ಕಾರ್ಯದರ್ಶಿಯಾಗಿ ಚನ್ನವೀರಪ್ಪ ಗಾಮನಗಟ್ಟಿ ಅವರನ್ನು ನೇಮಕ ಮಾಡಲಾಯಿತು. ಸುದ್ದಿಗೋಷ್ಠಿಯಲ್ಲಿ ಎಪಿಸಿಆರ್‌ನ ರಾಜ್ಯ ಕಾರ್ಯಕಾರಿ ಸದಸ್ಯ ಮುಹಮ್ಮದ್ ಕುಂಞಿ, ಕಚೇರಿ ಕಾರ್ಯದರ್ಶಿ ನೌಫಲ್ ಮರ್ಝೂಕಿ ಇದ್ದರು. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಬಡವರು, ಗ್ರಾಮೀಣ ಮಹಿಳೆಯರು, ವಯೋವೃದ್ಧರು, ಆದಿವಾಸಿಗಳು, ದಲಿತರು ಹಾಗೂ ಅಲ್ಪಸಂಖ್ಯಾತರ ಮೇಲೆ ಗಂಭೀರ ಪರಿಣಾಮಗಳು ಬೀಳುತ್ತವೆ. ಇದು ಸಂವಿಧಾನದ 14, 15, 21ನೇ ವಿಧಿಗಳಿಗೆ ವಿರುದ್ಧವಾಗಿದೆ. ಲಕ್ಷಾಂತರ ನಾಗರಿಕರನ್ನು ಅನಾಗರಿಕ ಎಂಬ ಗುರಿಯಿಂದ ಹೊರಗಿಟ್ಟು ಅವರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ಸಾರ್ವಜನಿಕ ಸಮಾಲೋಚನೆ ಮತ್ತು ನಾಗರೀಕ ಸ್ನೇಹಿ ಚೌಕಟ್ಟು ರೂಪಿಸುವವರಿಗೆ ಈ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು. ಟಿ.ವೆಂಕಟೇಶ್, ಎಪಿಸಿಆರ್ ರಾಜ್ಯ ಕಾರ್ಯಕಾರಿ ಸದಸ್ಯ, ಹೈಕೋರ್ಟ್ ವಕೀಲ

ವಾರ್ತಾ ಭಾರತಿ 8 Dec 2025 10:46 pm

ಸುಳ್ಯ: ನೇಣು ಬಿಗಿದ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

ಸುಳ್ಯ: ಆತ್ಮಹತ್ಯೆಗೆ ಪ್ರಯತ್ನಿಸಿ ನೇಣು ಬಿಗಿದು ಜಿಗಿದ ವೇಳೆ ಹಗ್ಗ ತುಂಡಾಗಿ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಕಲ್ಲುಗುಂಡಿಯಲ್ಲಿ ನಡೆದಿದೆ. ಕಲ್ಲುಗುಂಡಿ ಕೂಲಿಶೆಡ್ ಬಳಿ ಕಳೆದ ಹಲವು ವರ್ಷಗಳಿಂದ ಹೋಟೆಲ್ ಕಾರ್ಮಿಕರಾಗಿ ದುಡಿಯುತ್ತಿದ್ದ ಐವರ್ನಾಡು ಗ್ರಾಮದ ಮಾಧವ (60)ಎಂಬವರು ಅವರ ಬಾಡಿಗೆ ರೂಮಿನಲ್ಲಿ ಡಿ. 5ರಂದು ಆತ್ಮಹತ್ಯೆ ಮಾಡಿಕೊಳ್ಳಲು ನೇಣು ಬಿಗಿದು ಕೆಳಕ್ಕೆ ಜಿಗಿದ ಸಂದರ್ಭ ಕೇಬಲ್ ತುಂಡಾಗಿ ನೆಲಕ್ಕೆ ಬಿದ್ದು ತಲೆಗೆ ಗಾಯವಾಗಿತ್ತು. ಅವರು ಸುಳ್ಯ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಮೃತಪಟ್ಟರು. ಸುಳ್ಯ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

ವಾರ್ತಾ ಭಾರತಿ 8 Dec 2025 10:43 pm

ಮಂಗಳೂರು ವಿಮಾನ ನಿಲ್ದಾಣ: 8 ಇಂಡಿಗೊ ವಿಮಾನಗಳ ಯಾನ ರದ್ದು

ಮಂಗಳೂರು: ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ ಇಂಡಿಗೊದ 8 ವಿಮಾನಗಳ ಸಂಚಾರ ಸೋಮವಾರ ರದ್ದಾಗಿತ್ತು. ಮಂಗಳೂರಿಗೆ ಇಂಡಿಗೊದ ಬೆಂಗಳೂರು -ಮಂಗಳೂರು ( 6ಇ 6858)ಬೆಳಗ್ಗೆ 7:10, ಮುಂಬೈ -ಮಂಗಳೂರು(6ಇ 6674) ಬೆಳಗ್ಗೆ 8:40, ಬೆಂಗಳೂರು -ಮಂಗಳೂರು (6ಇ109) ಸಂಜೆ 5:20 ಮತ್ತು ಬೆಂಗಳೂರು -ಮಂಗಳೂರು (6ಇ6119) ರಾತ್ರಿ 10:15ಕ್ಕೆ ಆಗಮಿಸುವ ವಿಮಾನಗಳ ಸಂಚಾರ ಸೇವೆ ರದ್ದುಗೊಂಡಿವೆ. ಮಂಗಳೂರು ವಿಮಾನ ನಿಲ್ದಾಣದಿಂದ ಬೆಳಗ್ಗೆ 7:40ಕ್ಕೆ ಹೊರಡುವ ಮಂಗಳೂರು -ಬೆಂಗಳೂರು (6ಇ 306), ಬೆಳಗ್ಗೆ 9:10 ಮಂಗಳೂರು-ಮುಂಬೈ (6ಇ6205) , ಸಂಜೆ 5:50ರ ಮಂಗಳೂರು-ಬೆಂಗಳೂರು (6ಇ388), ರಾತ್ರಿ 10:45ಕ್ಕೆ ನಿರ್ಗಮಿಸುವ ಮಂಗಳೂರು-ಬೆಂಗಳೂರು (6ಇ6120) ವಿಮಾನಗಳ ಯಾನ ರದ್ದಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿದೆ. ಐದು ವಿಮಾನಗಳು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದೆ ಹಾಗೂ ವಿಮಾನಗಳು ನಿಗದಿತ ಸ್ಥಳಕ್ಕೆ ನಿರ್ಗಮಿಸಿದೆ. ಐದು ವಿಮಾನಗಳು ಆಗಮಿಸಿಲ್ಲ. ಐದು ವಿಮಾನಗಳು ನಿಗದಿತ ತಾಣಕ್ಕೆ ಹೊರಟಿಲ್ಲ. 1 ವಿಮಾನ 30 ನಿಮಿಷಗಳಿಗಿಂತ ಹೆಚ್ಚು ವಿಳಂಬವಾಗಿ ಆಗಮಿಸಿದೆ ಹಾಗೂ 2 ವಿಮಾನಗಳು ಅರ್ಧ ಗಂಟೆ ವಿಳಂಬವಾಗಿ ಹೊರಟಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ವಾರ್ತಾ ಭಾರತಿ 8 Dec 2025 10:24 pm

`ಕೆಎಲ್ ರಾಹುಲ್ ಮಾಡಿದ್ದನ್ನೇ ನಾನುೂ ಮಾಡ್ತೇನೆ': ಟಾಸ್ ಗೆಲ್ಲಲು ಸೂರ್ಯಕುಮಾರ್ ಯಾದವ್ ಮಾಸ್ಟರ್ ಪ್ಲಾನ್!

India Vs South Africa 1st T20i Match- ಸತತ ಟಾಸ್ ಸೋಲುವ ಮೂಲಕ ಅನ್ ಲಕ್ಕಿ ತಂಡ ಎಂದೇ ಅಪಖ್ಯಾತಿಗೊಳಗಾಗಿದ್ದ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ವಿಶಾಖಪಟ್ಟಣದಲ್ಲಿ ನಡೆದ 3ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿದ್ದೇ ದೊಡ್ಡ ಸಂಗತಿಯಾಗಿಬಿಟ್ಟಿದೆ. ತಾನು ಕಂಡುಕೊಂಡ ಹೊಸ ಮಾರ್ಗದಿಂದಾಗಿಯೇ ಟಾಸ್ ಗೆಲುವು ಸಾಧ್ಯವಾಗಿದೆ ಎಂದು ಏಕದಿನ ತಂಡದ ನಾಯಕ ಕೆಎಲ್ ರಾಹುಲ್ ಅವರು ತಿಳಿಸಿರುವುದು ಈ ಬಗ್ಗೆ ಮತ್ತಷ್ಟು ಕುತೂಹಲಕ್ಕೆ ಕಾರಣಾಗಿದೆ. ಇದೀಗ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಕೂಡ ಕೆಎಲ್ ರಾಹುಲ್ ಅವರು ಬಳಸಿದ್ದ ತಂತ್ರವನ್ನೇ ಬಳಸಲು ನಿರ್ಧರಿಸಿದ್ದಾರೆ.

ವಿಜಯ ಕರ್ನಾಟಕ 8 Dec 2025 10:24 pm

ಚಿತ್ತಾಪುರದಲ್ಲಿ ಚುನಾವಣೆ ಅಕ್ರಮ ಆರೋಪ: ಸಚಿವ ಪ್ರಿಯಾಂಕ್‌ ಖರ್ಗೆಗೆ ಸುಪ್ರೀಂ ಕೋರ್ಟ್‌ನಿಂದ ನೋಟಿಸ್‌!

ಸುಪ್ರೀಂ ಕೋರ್ಟ್‌ ಚಿತ್ತಾಪುರ ಶಾಸಕ ಪ್ರಿಯಾಂಕ್‌ ಖರ್ಗೆ ಅವರಿಗೆ ನೋಟಿಸ್‌ ನೀಡಿದೆ. ಕಳೆದ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ. ಸುಳ್ಳು ಜಾತಿ ಪ್ರಮಾಣಪತ್ರ ಮತ್ತು ಶೈಕ್ಷಣಿಕ ದಾಖಲೆ ಸಲ್ಲಿಸಿ ಗೆದ್ದಿದ್ದಾರೆ ಎನ್ನಲಾಗಿದೆ. ಉಚಿತ ಗ್ಯಾರಂಟಿಗಳ ಮೂಲಕ ಮತದಾರರಿಗೆ ಆಮಿಷವೊಡ್ಡಲಾಗಿದೆ. ಪ್ರಿಯಾಂಕ್‌ ಖರ್ಗೆ ಅವರ ಆಯ್ಕೆಯನ್ನು ಅಸಿಂಧುಗೊಳಿಸಲು ಕೋರಲಾಗಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸುತ್ತಿದೆ.

ವಿಜಯ ಕರ್ನಾಟಕ 8 Dec 2025 10:23 pm

ವಲಸಿಗರು ತಮ್ಮ ಹಕ್ಕನ್ನು ಅರಿತುಕೊಳ್ಳಬೇಕು: ನ್ಯೂಯಾರ್ಕ್ ಮೇಯರ್ ಮಮ್ದಾನಿ

ನ್ಯೂಯಾರ್ಕ್, ಡಿ.8: ನ್ಯೂಯಾರ್ಕ್‍ನಲ್ಲಿರುವ ವಲಸೆ ನಿವಾಸಿಗಳು ಅಮೆರಿಕದ ವಲಸೆ ಮತ್ತು ಕಸ್ಟಮ್ಸ್ ಜಾರಿ (ಐಸಿಇ) ಏಜೆಂಟರೊಂದಿಗೆ ಮಾತನಾಡದಿರಲು ಅಥವಾ ಅನುಸರಿಸದಿರುವ ಕಾನೂನು ಬದ್ಧ ಹಕ್ಕನ್ನು ಹೊಂದಿದ್ದಾರೆ ಎಂದು ನ್ಯೂಯಾರ್ಕ್ ನಗರದ ಚುನಾಯಿತ ಮೇಯರ್ ಝೊಹ್ರಾನ್ ಮಮ್ದಾನಿ ಹೇಳಿದ್ದಾರೆ. ಮ್ಯಾನ್‍ಹಟನ್‌ ನಲ್ಲಿ ಐಸಿಇ ದಾಳಿಯ ವೀಡಿಯೊವನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ತನ್ನ ಆಡಳಿತವು ನಗರದ ದೊಡ್ಡ ವಲಸಿಗ ಜನಸಂಖ್ಯೆಯನ್ನು ರಕ್ಷಿಸಲು ಕೆಲಸ ಮಾಡುತ್ತದೆ. ನಿಮ್ಮ ಹಕ್ಕುಗಳನ್ನು ನೀವು ತಿಳಿದಿದ್ದರೆ ಐಸಿಇ ವಿರುದ್ಧ ನಿಮ್ಮನ್ನು ರಕ್ಷಿಸಿಕೊಳ್ಳಬಹುದು. ಅಮೆರಿಕದಲ್ಲಿನ ಜನರು ವಲಸೆ ಏಜೆಂಟರ ಪ್ರಶ್ನೆಗಳಿಗೆ ಉತ್ತರಿಸಲು ಕಾನೂನುಬದ್ಧವಾಗಿ ನಿರಾಕರಿಸಬಹುದು. ಖಾಸಗಿ ಪ್ರದೇಶಗಳಿಗೆ ಪ್ರವೇಶಿಸಲು ಐಸಿಇ ಅಧಿಕಾರಿಗಳ ಕೋರಿಕೆಯನ್ನು ನಿರಾಕರಿಸಬಹುದು. ನ್ಯಾಯಾಧೀಶರು ಸಹಿ ಹಾಕಿದ ನ್ಯಾಯಾಂಗ ವಾರಂಟ್ ಇಲ್ಲದೆ ಐಸಿಇ ಅಧಿಕಾರಿಗಳು ಮನೆಯನ್ನು, ಶಾಲೆ ಅಥವಾ ಖಾಸಗಿ ಕೆಲಸದ ಸ್ಥಳಗಳನ್ನು ಪ್ರವೇಶಿಸುವಂತಿಲ್ಲ. ನಿಮಗೆ ಸುಳ್ಳು ಹೇಳಲು ಐಸಿಇಗೆ ಕಾನೂನುಬದ್ಧವಾಗಿ ಅನುಮತಿಸಲಾಗಿದೆ. ಆದರೆ ನಿಮಗೆ ಮೌನವಾಗಿರುವ ಹಕ್ಕು ಇದೆ' ಎಂದು ಮಮ್ದಾನಿ ಹೇಳಿದ್ದಾರೆ.

ವಾರ್ತಾ ಭಾರತಿ 8 Dec 2025 10:21 pm

ಯುರೋಪಿಯನ್ ಯೂನಿಯನ್ ರದ್ದುಗೊಳಿಸಬೇಕು: ಎಲಾನ್ ಮಸ್ಕ್ ಆಗ್ರಹ

ವಾಷಿಂಗ್ಟನ್, ಡಿ.8: ಯುರೋಪಿಯನ್ ಯೂನಿಯನ್ ಅನ್ನು ರದ್ದುಗೊಳಿಸಿ ಸಾರ್ವಭೌಮತ್ವವನ್ನು ಪ್ರತ್ಯೇಕ ದೇಶಗಳಿಗೆ ಹಿಂದಿರುಗಿಸಬೇಕು. ಇದು ಸರಕಾರಕ್ಕೆ ತನ್ನ ಜನರನ್ನು ಉತ್ತಮವಾಗಿ ಪ್ರತಿನಿಧಿಸಲು ಅವಕಾಶ ಮಾಡಿಕೊಡುತ್ತದೆ ಎಂದು ಟೆಸ್ಲಾ ಸಿಇಒ ಎಲಾನ್ ಮಸ್ಕ್ ಆಗ್ರಹಿಸಿದ್ದಾರೆ. ಯುರೋಪಿಯನ್ ಯೂನಿಯನ್(EU)ನ ಡಿಜಿಟಲ್ ನಿಯಮಾವಳಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ತನ್ನ ಸಾಮಾಜಿಕ ವೇದಿಕೆ `ಎಕ್ಸ್' ಮೇಲೆ 14 ಕೋಟಿ ಡಾಲರ್ ದಂಡ ವಿಧಿಸಿರುವುದಕ್ಕೆ ಅಸಮಾಧಾನ ಸೂಚಿಸಿದ ಮಸ್ಕ್, EU ನಿಷೇಧಿಸಬೇಕೆಂದು ಗಂಭೀರವಾಗಿ ಹೇಳುತ್ತಿದ್ದೇನೆ, ತಮಾಷೆ ಮಾಡುತ್ತಿಲ್ಲ ಎಂದು `ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.

ವಾರ್ತಾ ಭಾರತಿ 8 Dec 2025 10:18 pm

ದಂಗೆ ಪ್ರಯತ್ನ ವಿಫಲ; ಪರಿಸ್ಥಿತಿ ನಿಯಂತ್ರಣದಲ್ಲಿ: ಬೆನಿನ್ ಅಧ್ಯಕ್ಷ ತಲೋನ್

ಪೋರ್ಟೊ-ನೊವೊ, ಡಿ.8: ಪಶ್ಚಿಮ ಆಫ್ರಿಕಾದ ಬೆನಿನ್ ರಾಷ್ಟ್ರದಲ್ಲಿ ರವಿವಾರ ಯೋಧರ ಗುಂಪೊಂದು ನಡೆಸಿದ ದಂಗೆಯ ಪ್ರಯತ್ನವನ್ನು ದೇಶನಿಷ್ಠ ಸೈನಿಕರ ಬೆಂಬಲದಿಂದ ವಿಫಲಗೊಳಿಸಲಾಗಿದ್ದು ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಎಂದು ಅಧ್ಯಕ್ಷ ಪ್ಯಾಟ್ರಿಸ್ ತಲೊನ್ ಹೇಳಿದ್ದಾರೆ. ಈ ಮಧ್ಯೆ, ಬೆನಿನ್‍ಗೆ ನೆರೆದೇಶ ನೈಜೀರಿಯಾ ಮಿಲಿಟರಿ ಸಹಾಯ ಘೋಷಿಸಿದ್ದು ರವಿವಾರ ಸಂಜೆ ನೈಜೀರಿಯಾದ ವಿಮಾನಗಳು ಬೆನಿನ್‌ ನಲ್ಲಿ ಬಹಿರಂಗಪಡಿಸದ ಗುರಿಗಳ ಮೇಲೆ ದಾಳಿ ನಡೆಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎಎಫ್‍ಪಿ ಸುದ್ದಿಸಂಸ್ಥೆ ವರದಿ ಮಾಡಿದೆ. ಸರಕಾರಕ್ಕೆ ನೆರವಾಗಲು ಘಾನಾ, ಐವರಿ ಕೋಸ್ಟ್, ನೈಜೀರಿಯಾ ಮತ್ತು ಸಿಯೆಲಾ ಲಿಯೊನ್ ದೇಶಗಳ ಪಡೆಗಳನ್ನು ನಿಯೋಜಿಸಲಾಗುತ್ತದೆ ಎಂದು ಪಶ್ಚಿಮ ಆಫ್ರಿಕಾದ ಪ್ರಾದೇಶಿಕ ಗುಂಪು `ಇಕೊವಾಸ್' ಹೇಳಿದೆ. ದಂಗೆಯ ಸೂತ್ರಧಾರರು ಸೇರಿದಂತೆ ಸುಮಾರು 15 ಯೋಧರನ್ನು ಬಂಧಿಸಲಾಗಿದೆ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಸೇನಾಪಡೆಯ ಮೂಲಗಳೂ ಘೋಷಿಸಿವೆ.

ವಾರ್ತಾ ಭಾರತಿ 8 Dec 2025 10:14 pm

ಕರ್ನಾಟಕ - ಕೇರಳ ನಡುವೆ ವಿಶೇಷ ರೈಲು: ಶಬರಿಮಲೆಗೆ ತೆರಳುವ ಭಕ್ತರಿಗೆ ಅನುಕೂಲ; ವೇಳಾಪಟ್ಟಿ ಏನು?

ಅಯ್ಯಪ್ಪ ಭಕ್ತರ ಅನುಕೂಲಕ್ಕಾಗಿ ಬೆಂಗಳೂರು-ಹುಬ್ಬಳ್ಳಿ - ಕೊಲ್ಲಂ ನಡುವೆ ಡಿಸೆಂಬರ್ ಅಂತ್ಯಕ್ಕೆ ವಿಶೇಷ ರೈಲು ಓಡಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಕ್ರಿಸ್‌ಮಸ್‌ ಹಾಗೂ ಹೊಸ ವರ್ಷದ ಪ್ರಯಾಣಿಕರ ದಟ್ಟಣೆ ನಿಭಾಯಿಸಲು ಈ ರೈಲು ಸಂಚರಿಸಲಿದೆ. ಬೆಂಗಳೂರಿನಿಂದ ಡಿಸೆಂಬರ್ 27 ರಂದು ಹೊರಡುವ ರೈಲು ಕೊಲ್ಲಂ ತಲುಪಲಿದೆ. ಡಿಸೆಂಬರ್ 28 ರಂದು ಕೊಲ್ಲಂನಿಂದ ಹೊರಡುವ ರೈಲು ಹುಬ್ಬಳ್ಳಿ ತಲುಪಲಿದೆ. ಈ ರೈಲುಗಳು ಹಲವು ಪ್ರಮುಖ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿವೆ.

ವಿಜಯ ಕರ್ನಾಟಕ 8 Dec 2025 10:14 pm

ʼಸಿಎಂ ಹುದ್ದೆಗೆ 500 ಕೋಟಿ ರೂ. ಸೂಟ್‌ ಕೇಸ್ʼ ಹೇಳಿಕೆ; ನವಜೋತ್ ಕೌರ್ ಸಿಧು ಕಾಂಗ್ರೆಸ್‌ ನಿಂದ ಅಮಾನತು

ಚಂಡೀಗಡ,ಡಿ.8: ವಿವಾದಾತ್ಮಕ ‘ 500 ಕೋಟಿ ರೂ.ಗಳ ಸೂಟ್‌ಕೇಸ್’ ಹೇಳಿಕೆಗಾಗಿ ಮಾಜಿ ಕ್ರಿಕೆಟಿಗ ಹಾಗೂ ರಾಜಕಾರಣಿ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಅವರನ್ನು ಕಾಂಗ್ರೆಸ್ ಪಕ್ಷವು ಸೋಮವಾರ ಅಮಾನತುಗೊಳಿಸಿದೆ. ನವಜೋತ್ ಕೌರ್ ಅವರು ‘ 500 ಕೋಟಿ ರೂ.ಗಳಿರುವ ಸೂಟ್‌ ಕೇಸ್ ನೀಡಿದ ವ್ಯಕ್ತಿಯು ಮುಖ್ಯಮಂತ್ರಿಯಾಗುತ್ತಾನೆ’’ಎಂದು ಸುದ್ದಿಗಾರರ ಮುಂದೆ ಹೇಳಿಕೆ ನೀಡಿದ್ದುದು ಪಕ್ಷದಲ್ಲಿ ಭಾರೀ ಕೋಲಾಹಲವನ್ನು ಸೃಷ್ಟಿಸಿತ್ತು. ಅವರ ಈ ಹೇಳಿಕೆ ಕಾಂಗ್ರೆಸ್‌ ಗೆ ಮುಜುಗರವನ್ನು ತಂದರೆ, ಬಿಜೆಪಿ ಹಾಗೂ ಪಂಜಾಬ್‌ನ ಆಡಳಿತಾರೂಢ ಆಮ್ ಆದ್ಮಿ ಪಕ್ಷಗಳಿಗೆ ಬತ್ತಳಿಕೆಯನ್ನು ನೀಡಿದ್ದವು. ಮಾಜಿ ಶಾಸಕಿಯೂ ಆದ ನವಜೋತ್ ಕೌರ್ ಅವರು ಇತ್ತೀಚೆಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಕಟಿಸಿದ ಪೋಸ್ಟ್ ಒಂದರಲ್ಲಿ ತನ್ನ ವಿವಾದಾತ್ಮಕ ಹೇಳಿಕೆಯ ಬಗ್ಗೆ ಸ್ಪಷ್ಟೀಕರಣವನ್ನು ನೀಡಲು ಯತ್ನಿಸಿದ್ದಾರೆ. ‘‘ ನಾನು ನೇರವಾಗಿ ನೀಡಿದ ಅನಿಸಿಕೆಗೆ,ಹೊಸ ತಿರುವನ್ನು ನೀಡಿರುವುದನ್ನು ಕಂಡು ನನಗೆ ಆಘಾತವಾಗಿದೆ. ನಮ್ಮಿಂದ ಕಾಂಗ್ರೆಸ್ ಪಕ್ಷ ಈವರೆಗೆ ಏನನ್ನೂ ಆಗ್ರಹಿಸಿಲ್ಲ. ನವಜೋತ್ ಸಿಂಗ್ ಅವರು ಯಾವುದೇ ಪಕ್ಷದಿಂದ ಮುಖ್ಯಮಂತ್ರಿಯಾಗಬಲ್ಲರೇ ಎಂಬ ಪ್ರಶ್ನೆಗೆ ನಾನು,ಮುಖ್ಯಮಂತ್ರಿ ಹುದ್ದೆಯನ್ನು ಪಡೆಯಲು ನಮ್ಮ ಬಳಿ ಹಣವಿಲ್ಲ ಎಂದು ನಾನು ಹೇಳಿದ್ದೆ. ನನ್ನ ಹೇಳಿಕೆಯನ್ನು ಗಮನವಿಟ್ಟು ಕೇಳಿ’’ ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ. ನವಜೋತ್ ಕೌರ್ ಅವರು ಡಿಸೆಂಬರ್ 6ರಂದು ಪಂಜಾಬ್ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ ಅವರನ್ನು ಭೇಟಿಯಾದ ಬಳಿಕ ಈ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ನವಜೋತ್ ಸಿಂಗ್ ಸಿಧು ಅವರು ಸಕ್ರಿಯ ರಾಜಕಾರಣಕ್ಕೆ ಯಾಕೆ ಮರಳಿಲ್ಲವೆಂಬ ಸುದ್ದಿಗಾರರ ಪ್ರಶ್ನೆಗೆ ಅವರು, 2027ರ ವಿಧಾನಸಭಾ ಚುನಾವಣೆಯಲ್ಲಿ ತನ್ನ ಪತಿಯನ್ನು ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಅಧಿಕೃತವಾಗಿ ಘೋಷಿಸಿದಲ್ಲಿ ಮಾತ್ರವೇ ಅವರು ವಾಪಾಸಾಗಲಿದ್ದಾರೆಂದು ಹೇಳಿದ್ದರು. ಮುಖ್ಯಮಂತ್ರಿ ಹುದ್ದೆಯನ್ನು ಖರೀದಿಸಲು ನಮ್ಮಲ್ಲಿ 500 ಕೋಟಿ ರೂ. ಇಲ್ಲವೆಂದೂ ಆಕೆ ಹೇಳಿದ್ದರು. ಅವರ ಈ ಹೇಳಿಕೆಯನ್ನು ಅಸ್ತ್ರವಾಗಿ ಮಾಡಿಕೊಂಡ ಬಿಜೆಪಿ ಹಾಗೂ ಆಮ್ ಆದ್ಮಿ ಪಕ್ಷಗಳು, ಕಾಂಗ್ರೆಸ್‌ನಲ್ಲಿ ಹಣದ ಚೀಲದ ರಾಜಕಾರಣ ಅಸ್ತಿತ್ವದಲ್ಲಿದೆಯೆಂದು ವಾಗ್ದಾಳಿ ನಡೆಸಿದ್ದವು. ಈ ಮಧ್ಯೆ ಸಿಧು ದಂಪತಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆಂದು ಕಾಂಗ್ರೆಸ್ ಪಕ್ಷದ ನಾಯಕ ಸುಖಜಿಂದರ್ ರಾಂಧಾವಾ ಆಪಾದಿಸಿದ್ದಾರೆ.

ವಾರ್ತಾ ಭಾರತಿ 8 Dec 2025 10:09 pm

2014ರಿಂದ ED 6,444 ಕೇಸ್ ದಾಖಲಿಸಿ 2,416 ಚಾರ್ಜ್ ಶೀಟ್ ಸಲ್ಲಿಸಿದೆ: ಕೇಂದ್ರ ಸರಕಾರ

“11 ವರ್ಷಗಳಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ 121 ಜನರಿಗೆ ಶಿಕ್ಷೆ”

ವಾರ್ತಾ ಭಾರತಿ 8 Dec 2025 10:07 pm

ರಾಜ್ಯದಲ್ಲಿ ಬಿಯರ್ ಮಾರಾಟದಲ್ಲಿ ಕುಸಿತ : ಸಚಿವ ಆರ್.ಬಿ.ತಿಮ್ಮಾಪುರ

ಬೆಳಗಾವಿ : ರಾಜ್ಯದಲ್ಲಿ ಪ್ರಸಕ್ತ ಆರ್ಥಿಕ ಸಾಲಿನಲ್ಲಿ ಸೆಪ್ಟೆಂಬರ್ 2025 ಅಂತ್ಯದ ವರೆಗೆ 195.27 ಲಕ್ಷ ಪೆಟ್ಟಿಗೆ ಬಿಯರ್ ಮಾರಾಟ ಮಾಡಲಾಗಿದ್ದು, ಇದು ಕಳೆದ ಇದೇ ಅವಧಿಗೆ ಹೋಲಿಸಿದಲ್ಲಿ 47.46 ಲಕ್ಷ ಪೆಟ್ಟಿಗೆಗಳು ಕಡಿಮೆ ಮಾರಾಟವಾಗಿ ಶೇ.19.55 ಋಣತ್ಮಾಕ ಬೆಳವಣಿಗೆಯಾಗಿರುತ್ತದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ತಿಳಿಸಿದ್ದಾರೆ. ಸೋಮವಾರ ಪರಿಷತ್ ನಲ್ಲಿ, ರಾಜ್ಯದಲ್ಲಿ ಮದ್ಯಪಾನ ಸೇವನೆ ಮಾಡುತ್ತಿರುವವರು ಲಿವರ್ ಸಿರೋಸಿಸ್/ಜಾಂಡೀಸ್ ಎಂಬ ಪಿತ್ತಕೋಶ ಖಾಯಿಲೆಯಿಂದ ಬಳಲುತ್ತಿದ್ದು, ಅವರುಗಳ ಉತ್ತಮ ಚಿಕಿತ್ಸೆಗಾಗಿ ಅಬಕಾರಿ ಇಲಾಖೆಯ ಆದಾಯದ ಕನಿಷ್ಠ ಶೇ.20ರಷ್ಟು ಮೊತ್ತವನ್ನು ವಿನಿಯೋಗಿಸುವ ಕುರಿತ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಮತ್ತು ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ನಿಯಮ 330ರ ವಿಷಯಕ್ಕೆ ನೀಡಿದ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಪ್ರಸ್ತುತ ಸಾಲಿನಲ್ಲಿ ಬಿಯರ್ ಮಾರಾಟವು ಕಡಿಮೆ ಮಾರಾಟವಾಗುತ್ತಿದ್ದು, ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಆಗಿದ್ದು, ಅಲ್ಲದೇ ಶೀತ ವಾತಾವರಣ ಇರುವುದರಿಂದ ಬಿಯರ್ ಮಾರಾಟದಲ್ಲಿ ಕುಸಿತ ಉಂಟಾಗಿರುವುದಕ್ಕೆ ಪ್ರಮುಖ ಕಾರಣವಾಗಿರುತ್ತದೆ. ಅಬಕಾರಿ ಇಲಾಖೆಯಿಂದ ಸಂಗ್ರಹವಾಗುವ ಅಬಕಾರಿ ಆದಾಯವನ್ನು ರಾಜ್ಯದ ಸಂಚಿತ ನಿಧಿಗೆ ಜಮೆಗೊಳಿಸಿ ಆಯವ್ಯದಲ್ಲಿ ಅನುಮೋದಿಸಿಲ್ಪಟಿರುವ ಕಾರ್ಯಕ್ರಮಗಳಿಗೆ ವೆಚ್ಚಗೊಳಿಸುತ್ತಿದೆ. ಯಾವುದಾದರೂ ಒಂದು ಇಲಾಖೆಯಿಂದ ಸಂಚಿತ ನಿಧಿಗೆ ಜಮೆಯಾಗಿರುವ ಅನುದಾನವನ್ನು ಯಾವುದೇ ಒಂದು ಉದ್ದೇಶಕ್ಕಾಗಿ ವೆಚ್ಚಗೊಳಿಸುವ ಪದ್ದತಿಯನ್ನು ಜಾರಿಯಲ್ಲಿರುವುದಿಲ್ಲ ಎಂದು ತಿಳಿಸಿದ್ದಾರೆ. ರಾಜ್ಯದ ಜನರ ಸರ್ವಾಂಗೀಣ ಆರೋಗ್ಯ ಮತ್ತು ಚಿಕಿತ್ಸೆಗಾಗಿ ರಾಜ್ಯ ಸrkaರದಿಂದ ಹಲವಾರು ಉಪ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸrkaರಗಳ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಮತ್ತು ನ್ಯಾಷನಲ್ ಹೆಲ್ತ್ ಮಿಷನ್ ಮುಂತಾದ ಯೋಜನೆಗಳಡಿ ರಾಜ್ಯದ ಸಾರ್ವಜನಿಕರಿಗೆ ಸಾರ್ವಜನಿಕ ಆರೋಗ್ಯ ಕೇಂದ್ರಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಮೂಲಕ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಇದಕ್ಕಾಗಿ ಆಯವ್ಯಯದಲ್ಲಿ ಅಗತ್ಯ ಅನುದಾನವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳ ಬೇಡಿಕೆಯಡಿ ಒದಗಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಈ ವಿಚಾರಕ್ಕೆ ಆಕ್ಷೇಪಿಸಿ ಮಾತನಾಡಿದ ಎನ್.ರವಿಕುಮಾರ್ ಸಹಿತ ವಿಪಕ್ಷ ಸದಸ್ಯರು, ರಾಜ್ಯದಲ್ಲಿ ಕಳಪೆ ಮದ್ಯ ಮಾರಾಟ ಹಾಗೂ ಹೊಸ ಮದ್ಯದಂಗಡಿ ತೆರೆಯಲು ಅವಕಾಶ ನೀಡಬಾರದು, ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು, ಪ್ರತಿ ಜಿಲ್ಲೆಯಲ್ಲಿ ಗ್ಯಾಸ್ಟ್ರೋ ಎಂಟರೋಲೋಜಿಸ್ಟ್ ವೈದ್ಯರನ್ನು ನೇಮಿಸಬೇಕೆಂದು ಆಗ್ರಹಿಸಿದರು.

ವಾರ್ತಾ ಭಾರತಿ 8 Dec 2025 10:03 pm

Mangaluru | ಎಂಡಿಎಂಎ ಮಾರಾಟ ಆರೋಪ: ಮೂವರನ್ನು ಬಂಧಿಸಿದ ಉಳ್ಳಾಲ ಪೊಲೀಸರು

ಉಳ್ಳಾಲ: ಇಲ್ಲಿನ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಚಣಿ ಎಂಬಲ್ಲಿ ನಿಷೇದಿತ ಮಾಧಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಳ್ಳಾಲ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅಬ್ದುಲ್ ರವೂಫ್  (30), ಶರೀಫ್ ಯಾನೆ ಅಮಿನ್ (34), ನಿಯಾಝ್ ( 23) ಬಂಧಿತರು. ಬಂಧಿತರಿಂದ 42 ಗ್ರಾಂ ತೂಕದ ಎಂಡಿಎಂಎ, ಟೊಯೋಟಾ ಕಾರು, ಮೂರು ಮೊಬೈಲ್, 2500 ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಪೈಕಿ ನಿಯಾಝ್ ಎಂಡಿಎಂಎ ಖರೀದಿ ಮಾಡಲು ಬಂದಿದ್ದ ಎಂದು ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ದಾಳಿ ಸಂದರ್ಭದಲ್ಲಿ ಆರೋಪಿ ಸಲಾಮ್ ಎಂಬಾತ ಪರಾರಿ ಆಗಿದ್ದಾನೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 8 Dec 2025 9:56 pm

ಉ.ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಒಮ್ಮತದಿಂದ ತೀರ್ಮಾನ

ಬೆಳಗಾವಿ(ಸುವರ್ಣ ವಿಧಾನಸೌಧ) : ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರದಿಂದ (ಡಿ.9) ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಒಮ್ಮತದಿಂದ ತೀರ್ಮಾನಿಸಲಾಗಿದೆ. ಸೋಮವಾರ ಸುವರ್ಣ ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಲಾಪ ಸಲಹಾ ಸಮಿತಿಯ ಸಭೆಯಲ್ಲಿ ಒಮ್ಮತದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ‌ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಸೇರಿದಂತೆ ಇನ್ನಿತರ ಹಿರಿಯ ಸಚಿವರು ಭಾಗವಹಿಸಿದ್ದರು.

ವಾರ್ತಾ ಭಾರತಿ 8 Dec 2025 9:54 pm

ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ : 3 ವರ್ಷದಿಂದ 5 ವರ್ಷಕ್ಕೆ ಹೆಚ್ಚಿಸುವ ಭರವಸೆ ನೀಡಿದ ಬೈರತಿ ಸುರೇಶ್

ಬೆಳಗಾವಿ(ಸುವರ್ಣವಿಧಾನಸೌಧ) : ಸರಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ ಹೆಚ್ಚಿಸುವ ಬಗ್ಗೆ ಗಂಭೀರ ಪ್ರಯತ್ನ ಮಾಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಭರವಸೆ ನೀಡಿದ್ದಾರೆ. ಸೋಮವಾರ ವಿಧಾನ ಪರಿಷತ್ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಡಿ.ಎಸ್.ಅರುಣ್ ಮತ್ತು ಇತರರ ಗಮನ ಸೆಳೆಯುವ ಸೂಚನೆಗೆ ಸಚಿವರು ಉತ್ತರಿಸಿದರು. ನಗರಾಭಿವೃದ್ಧಿ ಪ್ರಾಧಿಕಾರಗಳು ನೀಡಿರುವ ಸಿಎ ನಿವೇಶನಗಳನ್ನು 30 ವರ್ಷಗಳ ನಂತರ ಗುತ್ತಿಗೆ ಅವಧಿಯನ್ನು ನವೀಕರಣ ಮಾಡುವಾಗ 30 ವರ್ಷಗಳ ಹಿಂದಿನ ದರವನ್ನೇ ನಿಗದಿಪಡಿಸಲು ಸಾಧ್ಯವಿಲ್ಲ ಎಂದರು. ಆದರೆ, ಎಸ್ಆರ್ ದರವನ್ನು ಕಡಿಮೆ ಮಾಡುವ ಬಗ್ಗೆ ಪರಿಶೀಲಿಸಲಾಗುವುದು. ಸಿಎ ನಿವೇಶನ ಪಡೆದು ಮೂರು ವರ್ಷಗಳ ಒಳಗೆ ಉದ್ದೇಶಿತ ಕಾರ್ಯಕ್ಕಾಗಿ ಕಟ್ಟಡ ನಿರ್ಮಾಣ ಆರಂಭಿಸಬೇಕೆಂಬ ನಿಯಮವನ್ನು ಸಡಿಲಿಸಬೇಕೆಂಬ ಒತ್ತಾಯವಿದೆ. ಈ ಹಿನ್ನೆಲೆಯಲ್ಲಿ ನಿಯಮವನ್ನು ಸಡಿಲಿಸಿ ಐದು ವರ್ಷಗಳಿಗೆ ಹೆಚ್ಚಿಸುವ ಬಗ್ಗೆ ಗಂಭೀರ ಪ್ರಯತ್ನ ನಡೆಸಲಾಗುತ್ತದೆ ಎಂದು ಬೈರತಿ ಸುರೇಶ್ ಭರವಸೆ ನೀಡಿದರು. ಆದರೆ, ಯಾವುದೇ ಕಾರಣಕ್ಕೂ ನಿವೇಶನಕ್ಕೆ ಶುದ್ಧ ಕ್ರಯಪತ್ರ ನೀಡಲು ಸಾಧ್ಯವಿಲ್ಲ ಮತ್ತು ಎಸ್ ಸಿ ಮತ್ತು ಎಸ್ ಟಿ ಸಮುದಾಯಕ್ಕೆ ನೀಡಲಾಗುತ್ತಿರುವ ಮೀಸಲಾತಿಯನ್ನು ಕಡಿಮೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಬೈರತಿ ಸುರೇಶ್ ಸ್ಪಷ್ಟಪಡಿಸಿದರು.

ವಾರ್ತಾ ಭಾರತಿ 8 Dec 2025 9:52 pm

ಎಎಸ್‌ಐಗಳಿಗೆ ಮುಂಬಡ್ತಿ ಸಮಸ್ಯೆ, ಪೊಲೀಸ್‌ ಇಲಾಖೆಯಲ್ಲಿಯೂ 50:50 ಅನುಪಾತ ಜಾರಿಗೆ ಒತ್ತಾಯ

ರಾಜ್ಯದ 500ಕ್ಕೂ ಹೆಚ್ಚು ಸಹಾಯಕ ಸಬ್‌ ಇನ್ಸ್‌ಪೆಕ್ಟರ್‌ಗಳು (ಎಎಸ್‌ಐ) ಪಿಎಸ್‌ಐ ಹುದ್ದೆಗಳಿಗೆ ಶೇಕಡಾ 50:50 ಅನುಪಾತದಲ್ಲಿ ಮುಂಬಡ್ತಿ ನೀಡುವಂತೆ ಒತ್ತಾಯಿಸಿದ್ದಾರೆ. ಪ್ರಸ್ತುತ 70:30 ಅನುಪಾತದಲ್ಲಿ ನೇರ ನೇಮಕಾತಿ ನಡೆಯುತ್ತಿದ್ದು, ಇದರಿಂದ ಎಎಸ್‌ಐಗಳಿಗೆ ಮುಂಬಡ್ತಿ ವಿಳಂಬವಾಗುತ್ತಿದೆ. ಹೆಚ್ಚುವರಿ ಪಿಎಸ್‌ಐ ಹುದ್ದೆ ಸೃಷ್ಟಿಸಿ ಮುಂಬಡ್ತಿ ನೀಡಬೇಕೆಂದು ಇವರು ಮನವಿ ಮಾಡಿದ್ದಾರೆ.

ವಿಜಯ ಕರ್ನಾಟಕ 8 Dec 2025 9:50 pm

ಶ್ರಮಿಕ ವಸತಿ ಸಹಿತ ಶಾಲೆಗಳ ಟೆಂಡರ್ ನಲ್ಲಿ ಅಕ್ರಮ ನಡೆದಿಲ್ಲ: ಸಚಿವ ಸಂತೋಷ್ ಲಾಡ್

ಬೆಳಗಾವಿ(ಸುವರ್ಣವಿಧಾನಸೌಧ) : ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ರಾಜ್ಯದ 32 ಕಡೆಗಳಲ್ಲಿ ಸುಮಾರು 784 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಶ್ರಮಿಕ ವಸತಿ ಸಹಿತ ಶಾಲೆಗಳ ಟೆಂಡರ್ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಸೋಮವಾರ ವಿಧಾನ ಪರಿಷತ್ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಗೋವಿಂದರಾಜು ಅವರ ಗಮನ ಸೆಳೆಯುವ ಸೂಚನೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಅವರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ವಸತಿ ಶಾಲೆಗಳನ್ನು ನಿರ್ಮಾಣ ಮಾಡಲು ಸರಕಾರ ಆಡಳಿತಾತ್ಮಕ ಅನುಮೋದನೆಯನ್ವಯ ಟೆಂಡ‌ರ್ ಕರೆಯಲಾಗಿದ್ದು, ಪ್ರಸ್ತುತ ವಿವಿಧ ಬಿಡ್‌ದಾರರ ಬಿಡ್‌ಗಳ ಮೌಲ್ಯಮಾಪನ ಕಾರ್ಯವನ್ನು ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಕೆಟಿಪಿಪಿ ಕಾಯ್ದೆ ಮತ್ತು ನಿಯಮಗಳನ್ವಯ ಇ-ಪ್ರೊಕ್ಯೂರ್‌ಮೆಂಟ್ ಪೋರ್ಟಲ್‌ನಲ್ಲಿ ಮುಕ್ತ ಟೆಂಡರ್ ಕರೆಯಲಾಗಿದ್ದು, ಅರ್ಹತಾ ಮಾನದಂಡಗಳನ್ನು ಪೂರೈಸುವ ಯಾವುದೇ ಬಿಡ್‌ದಾರರು ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶವನ್ನು ನೀಡಲಾಗಿದೆ. ಈ ಕಾಮಗಾರಿಯ ಸಮರ್ಪಕ ನಿರ್ವಹಣೆ ಅನುಷ್ಠಾನ ಹಾಗೂ ಮೇಲುಸ್ತುವಾರಿಗೆ ಅನುಕೂಲವಾಗುವಂತೆ ರಾಜ್ಯದ ಕಂದಾಯ ವಿಭಾಗವಾರು ಟೆಂಡ‌ರ್ ಕರೆಯಲಾಗಿರುತ್ತದೆ. ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯವು ಹೊರಡಿಸಿರುವ ಸುತ್ತೋಲೆಯನ್ವಯ ಮಂಡಳಿಯ ವತಿಯಿಂದ ವಸತಿ ಶಾಲೆಯನ್ನು ನಿರ್ಮಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಸಂತೋಷ್ ಲಾಡ್ ಹೇಳಿದ್ದಾರೆ. ಮಂಡಳಿಯಿಂದ ಸ್ಥಾಪಿಸಲು ಉದ್ದೇಶಿಸಿರುವ ಶಾಲೆಗಳು ವಸತಿ ಶಾಲೆಗಳಾಗಿದ್ದು ಸರಕಾರ ಶಾಲೆಗಳು ವಸತಿ ಶಾಲೆಗಳಾಗಿರುವುದಿಲ್ಲ. ಆದುದರಿಂದ, ಈ ಯೋಜನೆಯ ಪ್ರಸ್ತಾವನೆಯ ಹಂತದಲ್ಲಿ ವಸತಿ ಶಾಲೆಗಳನ್ನು ನಿರ್ಮಿಸಿ ನಿರ್ವಹಿಸುತ್ತಿರುವ ಸಮಾಜ ಕಲ್ಯಾಣ ಇಲಾಖೆಯ ಅಧೀನದ ಸರಕಾರದ ಸಂಸ್ಥೆಯಾದ ಕ್ರೈಸ್ ನಿಂದ ಅಗತ್ಯ ಮಾಹಿತಿಯನ್ನು ಪಡೆಯಲಾಗಿದೆ ಎಂದು ಸಂತೋಷ್ ಲಾಡ್ ತಿಳಿಸಿದ್ದಾರೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ (ಉದ್ಯೋಗದ ಕ್ರಮೀಕರಣ ಮತ್ತು ಸೇವಾ ಷರತ್ತುಗಳು) ಕಾಯ್ದೆ, 1996 ಮತ್ತು ಕರ್ನಾಟಕ ನಿಯಮಗಳು 2006 ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಮತ್ತು ಅವರ ಅವಲಂಬಿತರ ಕಲ್ಯಾಣ ಮತ್ತು ಸಾಮಾಜಿಕ ಸುರಕ್ಷತೆಗಾಗಿ ಇರುವ ಶಾಸನವಾಗಿದ್ದು, ಈ ಕಾಯ್ದೆಯಡಿ ಸಂಗ್ರಹವಾದ ಸುಂಕ ಮೊತ್ತವನ್ನು ಸರಕಾರದ ಯಾವುದೇ ಯೋಜನೆಗಳಿಗೆ ವಿನಿಯೋಗಿಸಲು ಅವಕಾಶವಿರುವುದಿಲ್ಲ ಎಂದು ಸಂತೋಷ್ ಲಾಡ್ ಹೇಳಿದ್ದಾರೆ. ಎಲ್ಲಾ ನೀತಿ ನಿಯಮಗಳನ್ನು ಪಾಲಿಸಿ ಮುಕ್ತ ಟೆಂಡ‌ರ್ ಕರೆದು ಯೋಜನೆಯನ್ನು ಅನುಷ್ಠಾನ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಯಾವುದೇ ಅಕ್ರಮಕ್ಕೆ ಅವಕಾಶವಿರುವುದಿಲ್ಲ ಎಂದು ಸಂತೋಷ್ ಲಾಡ್ ತಿಳಿಸಿದ್ದಾರೆ.

ವಾರ್ತಾ ಭಾರತಿ 8 Dec 2025 9:49 pm

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಖಾಸಗೀಕರಣ ಇಲ್ಲ : ಸಚಿವ ಶರಣಪ್ರಕಾಶ್ ಪಾಟೀಲ್

ಬೆಳಗಾವಿ(ಸುವರ್ಣ ವಿಧಾನಸೌಧ) : ಯಾವುದೇ ಕಾರಣಕ್ಕೂ ಸರಕಾರಿ ಒಡೆತನದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಖಾಸಗಿಕರಣ ಮಾಡುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದರು. ಸೋಮವಾರ ವಿಧಾನಪರಿಷತ್‌ನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ನಾಗರಾಜ್ ಯಾದವ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ಸರಕಾರ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸಿಕೊಟ್ಟಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮೇಲ್ದರ್ಜೆಗೇರಿಸಲಾಗುವುದು. ಯಾವುದೇ ಕಾರಣಕ್ಕೂ ಇವುಗಳನ್ನು ಖಾಸಗಿಯವರಿಗೆ ಒಪ್ಪಿಸುವ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಚರಿಸಿದರು. ಬೆಳಗಾವಿಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಿರ್ಲಕ್ಷ್ಯದಿಂದ ರೋಗಿಯ ಹೊಟ್ಟೆಯ ಗಡ್ಡೆಯ ಬದಲು ಕರಳು ತೆಗೆದು ಹಾಕಲಾಗಿದೆ ಎಂಬ ವದಂತಿ ಹರಡಿದೆ. ಇದು ಸರಕಾರದ ಗಮನಕ್ಕೆ ಬಂದಿದೆ. ಈತ ಮದ್ಯವ್ಯಸನಿಯಾಗಿದ್ದು, ಕರುಳಿನಲ್ಲಿ ರಂಧ್ರವಿರುವ ಬಗ್ಗೆ ತಾಲೂಕಿನ ಆಸ್ಪತ್ರೆಯಲ್ಲಿ ಸ್ಪಷ್ಟವಾಗಿ ನಮೂದಿಸಲಾಗಿದೆ. ರೋಗಿಗೆ ಅಪೆಂಡಿಸೆಕ್ಟಮಿ ಮಾಡಲಾಗಿದೆ. ಶಸ್ತ್ರಚಿಕಿತ್ಸೆಯ ವೇಳೆ ವೈದ್ಯರು ಕರಳನ್ನು ತೆಗೆದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಖಾಸಗಿ ಆಸ್ಪತ್ರೆಯಲ್ಲಿ ತಪ್ಪು ಮಾಹಿತಿ: ಚಿಕಿತ್ಸೆ ಬಳಿಕ ರೋಗಿಯು 2 ದಿನ ವಿಶ್ರಾಂತಿ ಪಡೆದಿದ್ದಾರೆ. ನಂತರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಕರುಳು ತೆಗೆಯಲಾಗಿದೆ ಎಂದು ತಪ್ಪು ಮಾಹಿತಿ ನೀಡಿದ್ದಾನೆ. ಈ ನಿಟ್ಟಿನಲ್ಲಿ ಇಲಾಖೆ ವತಿಯಿಂದ ಸಮಿತಿ ರಚನೆ ಮಾಡಲಾಗಿತ್ತು. ಇದರಲ್ಲಿ ಬಿಮ್ಸ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವಾಗಿಲ್ಲ ಎಂದು ವರದಿ ನೀಡಲಾಗಿದೆ. ಇದರಲ್ಲಿ ವೈದ್ಯರ ನಿರ್ಲಕ್ಷ್ಯ ಇಲ್ಲ ಎಂಬುದನ್ನು ಸ್ಪಷ್ಟಪಡಿಸಲಾಗಿದೆ ಎಂದು ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದರು.

ವಾರ್ತಾ ಭಾರತಿ 8 Dec 2025 9:45 pm

ಹೈದರಾಬಾದ್‌, ಬೆಂಗಳೂರು ಪರಸ್ಪರ ಸ್ಪರ್ಧಿಗಳಲ್ಲ; ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡ ನಗರಗಳು : ಡಿ.ಕೆ.ಶಿವಕುಮಾರ್

ಹೈದರಾಬಾದ್ : ಅಭಿವೃದ್ಧಿ ಎಂಬುದು ಮ್ಯಾಜಿಕ್ ಮೂಲಕ ಸಾಧಿಸುವುದಲ್ಲ, ಸುಸ್ಥಿರ ಯೋಜನೆ, ಪರಿಶ್ರಮ, ಪ್ರಾಮಾಣಿಕತೆಯಿಂದ ಸಾಧಿಸುವುದಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸೋಮವಾರ ಹೈದರಾಬಾದ್ ನಲ್ಲಿ ನಡೆದ ತೆಲಂಗಾಣ ರೈಸಿಂಗ್ ಜಾಗತಿಕ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತೆಲಂಗಾಣವು ಬೆಂಗಳೂರು ಹಾಗೂ ಕರ್ನಾಟಕದ ಜೊತೆ ಸ್ಪರ್ಧಿಸುತ್ತಿದೆಯೇನೋ ಅಂತ ಅಂದುಕೊಂಡಿದ್ದೆ. ಆದರೆ ಜಾಗತಿಕ ಮಟ್ಟದಲ್ಲಿ ತೆಲಂಗಾಣ ಗುರುತಿಸಿಕೊಳ್ಳುತ್ತಿದೆ. ತೆಲಂಗಾಣ ಸರಕಾರ ಎರಡು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವುದು ಸಂತಸದ ವಿಚಾರ. ಈ ಸಂದರ್ಭದಲ್ಲಿ ಇಂತಹ ಪ್ರಯತ್ನಕ್ಕೆ ಮುಂದಾಗಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ನಾನು ಇಂದು ನನ್ನ ಸ್ನೇಹಿತ ರೇವಂತ್ ರೆಡ್ಡಿ ಅವರಿಗಾಗಿ ಬಂದಿದ್ದೇನೆ ಎಂದರು. ಹೈದರಾಬಾದ್ ದೊಡ್ಡನಗರ, 2047ರ ವೇಳೆಗೆ ಇದು ಯಾವ ಮಟ್ಟಕ್ಕೆ ಬೆಳೆಯಲಿದೆ ಎಂಬುದರ ಚಿತ್ರಣ ಕೊಡುತ್ತಿದೆ. ಜೊತೆಗೂಡುವುದು ಆರಂಭ, ಜೊತೆಗೂಡಿ ಚರ್ಚಿಸುವುದು ಪ್ರಗತಿ, ಜೊತೆಗೂಡಿ ಕೆಲಸ ಮಾಡುವುದು ಯಶಸ್ಸು. ಮುಂದಿನ ಪೀಳಿಗೆಗೆ ನೀವು ರೂಪಿಸುತ್ತಿರುವ ಯೋಜನೆ ಉತ್ತಮವಾಗಿದೆ ಎಂದು ಅವರು ತಿಳಿಸಿದರು. ಈ ಸಮ್ಮೇಳನವು ಇವತ್ತಿನ ಬಗ್ಗೆ ಆಲೋಚನೆಮಾಡುತ್ತಿಲ್ಲ. ಭವಿಷ್ಯದ ಬಗ್ಗೆ ಚಿಂತನೆ ನಡೆಸಿದೆ. 10 ವರ್ಷಗಳ ನಂತರ ತೆಲಂಗಾಣದಲ್ಲಿ ಕಾಂಗ್ರೆಸ್ ಸರಕಾರವನ್ನು ಆಯ್ಕೆ ಮಾಡಿ, ಈ ಸರಕಾರಕ್ಕೆ ವಿಶ್ವಾಸ ತುಂಬಿದ ಜನರಿಗೆ ಅಭಿನಂದನೆಗಳು. ಸಿಎಂ ರೇವಂತ್ ರೆಡ್ಡಿ ಹಾಗೂ ಅವರ ಸಂಪುಟ ಸಚಿವರು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತಿದ್ದಾರೆ. ಎಲ್ಲರೂ ಒಟ್ಟಿಗೆ ಸೇರಿ ಭವಿಷ್ಯದತ್ತ ಹೆಜ್ಜೆ ಹಾಕೋಣ ಎಂದರು. ನಮ್ಮ ರಾಜ್ಯದಲ್ಲಿ ಇಂದಿನಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಿದ್ದರೂ ಇಲ್ಲಿಗೆ ಬಂದಿದ್ದೇನೆ. ಇಡೀ ದಕ್ಷಿಣ ಭಾರತ ತೆಲಂಗಾಣ ರಾಜ್ಯದ ಬೆನ್ನಿಗೆ ನಿಲ್ಲುವ ಮೂಲಕ ದೇಶದ ಪ್ರಗತಿಗೆ ಶ್ರಮಿಸಲಿದೆ. ನಾನು ಇಲ್ಲಿ ಕರ್ನಾಟಕದ ಡಿಸಿಎಂ ಆಗಿ ಮಾತ್ರ ಬಂದಿಲ್ಲ. ದಕ್ಷಿಣ ಭಾರತದ ಧ್ವನಿಯಾಗಿ ಬಂದಿದ್ದೇನೆ. ದೇಶದ ಪ್ರಗತಿಯಲ್ಲಿ ದಕ್ಷಿಣ ಭಾರತದ ಕೊಡುಗೆ ಅಪಾರ ಎಂದು ಅವರು ತಿಳಿಸಿದರು. ತೆಲಂಗಾಣ ರಾಜ್ಯದ ಜಾಗತಿಕ ದೃಷ್ಟಿಕೋನವನ್ನು ಗಮನಿಸಿದೆ. ತೆಲಂಗಾಣ ಚಿಕ್ಕ ರಾಜ್ಯ. ದೇಶದ ಐಟಿ ರಫ್ತಿನಲ್ಲಿ ಬೆಂಗಳೂರು ಶೇ.43ರಷ್ಟು ಪಾಲು ಹೊಂದಿದೆ. ತೆಲಂಗಾಣ ಈ ವಿಚಾರದಲ್ಲಿ ಕಡಿಮೆ ಇದ್ದರೂ ಈ ರಾಜ್ಯದ ದೂರದೃಷ್ಟಿ, ಆಲೋಚನೆ ದೊಡ್ಡದಾಗಿದೆ. ನಿಮಗೆ ಬೆಂಬಲ ನೀಡಲು ನಾನು ಈ ಕಾರ್ಯಕ್ರಮಕ್ಕೆ ಬಂದಿರುವೆ. ದೇಶದ ಪ್ರಗತಿಯ ಬಗ್ಗೆ ಚರ್ಚೆ ಮಾಡುವಾಗ ಬೆಂಗಳೂರು ಹಾಗೂ ಹೈದರಾಬಾದ್ ಕೊಡುಗೆ ಸ್ಮರಿಸದೆ ಚರ್ಚೆ ಪೂರ್ಣವಾಗುವುದಿಲ್ಲ ಎಂದರು. ಕೆಲವರು, ಬೆಂಗಳೂರಿಗೆ ಹೈದರಾಬಾದ್ ಪ್ರತಿಸ್ಪರ್ಧಿ ಎಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಸತ್ಯ ಬೇರೆಯದೆ ಇದೆ. ನಾವು ಸ್ಪರ್ಧಿಗಳಲ್ಲ. ಪರಸ್ಪರ ಸಹಕಾರ ನೀಡಿ, ಜೊತೆಯಾಗಿ ಪ್ರಗತಿ ಸಾಧಿಸುವ ಮೂಲಕ ಭವಿಷ್ಯ ಭಾರತ ನಿರ್ಮಾಣಕ್ಕೆ ಕೊಡುಗೆಯಾಗೋಣ. ನಾನು ರತನ್ ಟಾಟಾ ಅವರನ್ನು ಭೇಟಿಯಾದಾಗ ಅವರು ನನಗೆ ಒಂದು ಮಾತು ಹೇಳಿದರು. ನೀವು ವೇಗವಾಗಿ ಸಾಗಬೇಕಾದರೆ ಒಬ್ಬರೇ ಸಾಗಿ, ನೀವು ಬಹುದೂರ ಸಾಗಬೇಕಾದರೆ ಒಟ್ಟಿಗೆ ಸಾಗಿ ಎಂದು ಸಲಹೆ ನೀಡಿದ್ದರು. ಅದರಂತೆ ನಾವು ಒಟ್ಟಾಗಿ ಸಾಗೋಣ. ಈ ಎರಡು ನಗರಗಳ ಪ್ರಗತಿಗೆ ಸಹಕರಿಸೋಣ ಎಂದರು. ದಕ್ಷಿಣ ಭಾರತವು ದೇಶದ ಜಿಡಿಪಿಯಲ್ಲಿ ಶೇ.31ರಷ್ಟು ಕೊಡುಗೆ ನೀಡಿದೆ. ಮುಂದೆ ಇದು ಶೇ.43ರಷ್ಟು ಏರಿಕೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನ ಬಗ್ಗೆ ನಾನು ಹೆಚ್ಚು ಮಾತನಾಡಿದರೆ ನಿಮಗೆ ಸ್ಪರ್ಧೆ ನೀಡುತ್ತಿರುವಂತೆ ಭಾಸವಾಗುತ್ತದೆ. ಹೀಗಾಗಿ ಬೆಂಗಳೂರಿನ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಕ್ಯಾಲಿಫೋರ್ನಿಯಾದಲ್ಲಿ 13 ಲಕ್ಷ ಇಂಜಿನಿಯರ್ ವೃತ್ತಿಪರರು ಇದ್ದರೆ, ಬೆಂಗಳೂರಿನಲ್ಲಿ 25 ಲಕ್ಷ ಇಂಜಿನಿಯರ್ ಗಳು ಕೆಲಸ ಮಾಡುತ್ತಿದ್ದಾರೆ. ಹೈದರಾಬಾದ್ ಕೂಡ ಉತ್ತಮ ಸಾಮರ್ಥ್ಯ ಹೊಂದಿದೆ. ನಾವು ಒಟ್ಟಾಗಿ ಶ್ರಮಿಸೋಣ ಎಂದು ಕರೆ ನೀಡಿದರು. ಇಲ್ಲಿ ಪಾರದರ್ಶಕವಾದ ಮಾದರಿ ಪರಿಚಯಿಸಲಾಗುತ್ತಿದ್ದು, ಈ ನಗರ ಆರೋಗ್ಯ, ತಂತ್ರಜ್ಞಾನ, ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಕ್ಷಮತೆ ಹೊಂದಿದೆ. ದಕ್ಷಿಣ ಭಾರತದಲ್ಲಿರುವ ಮಾನವ ಸಂಪನ್ಮೂಲ ಬೇರೆ ಯಾವುದೇ ರಾಜ್ಯ ಅಥವಾ ದೇಶದಲ್ಲಿಲ್ಲ. ಈ ಕಾರ್ಯಕ್ರಮಕ್ಕೆ ಜಗತ್ತಿನ ಪ್ರಮುಖ ಕೈಗಾರಿಕೋದ್ಯಮಿಗಳು ಬಂದಿದ್ದು, ತೆಲಂಗಾಣ ರಾಜ್ಯ ಕಾಂಗ್ರೆಸ್ ಸರಕಾರದ ನೇತೃತ್ವದಲ್ಲಿ ಉತ್ತಮ ದೂರದೃಷ್ಟಿ ಹೊಂದಿದೆ ಎಂದು ತಿಳಿಸಿದರು. ರೇವಂತ್ ರೆಡ್ಡಿ ನಾಯಕತ್ವದಲ್ಲಿ ಸಚಿವರು, ಅಧಿಕಾರಿಗಳು ಒಟ್ಟಿಗೆ ಶ್ರಮಿಸಿ, ತೆಲಂಗಾಣ ರಾಜ್ಯವನ್ನು ಜಾಗತಿಕ ಮಟ್ಟಕ್ಕೆ ಮುನ್ನಡೆಸಲಿದ್ದಾರೆ. ಇವರ ಬೆಂಬಲವಾಗಿ ಕರ್ನಾಟಕ ಸರಕಾರ ನಿಲ್ಲಲಿದೆ. ಇಲ್ಲಿಗೆ ಆಗಮಿಸಿರುವ ಹೂಡಿಕೆದಾರರು ನಮ್ಮ ಮೇಲೆ ವಿಶ್ವಾಸವಿಡಿ. ನಿಮ್ಮ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇವೆ ಎಂದರು.

ವಾರ್ತಾ ಭಾರತಿ 8 Dec 2025 9:34 pm

ಆತ್ಮನಿರ್ಭರ, ಸಮೃದ್ಧ ಭಾರತ ನಿರ್ಮಾಣಕ್ಕೆ ‘ವಂದೇ ಮಾತರಂ’ ಸ್ಪೂರ್ತಿ: ಪ್ರಧಾನಿ

‘ವಂದೇ ಮಾತರಂ’ ನ 150ನೇ ವರ್ಷಾಚರಣೆ | ರಾಷ್ಟ್ರಗೀತೆ ಕುರಿತು ಚರ್ಚೆ

ವಾರ್ತಾ ಭಾರತಿ 8 Dec 2025 9:31 pm

ಕನಕಗಿರಿ | ಪೋತಿ‌ ವಿರಾಸತ್ ಪಹಣಿ ಸದುಪಯೋಗಕ್ಕೆ ತಹಶೀಲ್ದಾರ್ ವಿಶ್ವನಾಥ ಮುರುಡಿ ಸಲಹೆ

ಕನಕಗಿರಿ: ತಾಲ್ಲೂಕಿನಲ್ಲಿ ಇ ಪೋತಿ ಆಂದೋಲನ ನಡೆಸುವ ಮೂಲಕ ಪೋತಿ ವಿರಾಸತ್ ಅರ್ಜಿಗಳನ್ನು ಸ್ವೀಕರಿಸಿ ನಿಜವಾದ ವಾರಸುದಾರರ ಹೆಸರಿನಲ್ಲಿ ಪಹಣಿ ಮಾಡಿಸಲಾಗುವುದು‌ ಎಂದು ತಹಶೀಲ್ದಾರ್ ವಿಶ್ವನಾಥ ಮುರುಡಿ‌ ತಿಳಿಸಿದರು. ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿ‌ ನಡೆಸಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಪಹಣಿ ಹೊಂದಿದ ಒಟ್ಟು 3,000 ಜನರು ಮೃತಪಟ್ಟಿದ್ದಾರೆ,‌ ವಾರಸುದಾರರು ತಮ್ಮ‌ ಹೆಸರಿನಲ್ಲಿ ಮಾಡಿಸಿಕೊಳ್ಳಲು‌ ಮುಂದೆ ಬರಬೇಕು. ಗ್ರಾಮ‌ ಆಡಳಿತ ಅಧಿಕಾರಿಗಳು ಹಾಗೂ ಗ್ರಾಮ‌ ಸಹಾಯಕರು ಗ್ರಾಮಗಳಿಗೆ ಭೇಟಿ‌ ನೀಡಿ‌ ಪೋತಿ ವಿರಾಸತ್ ಬಗ್ಗೆ ಪ್ರಚಾರ ನಡೆಸಿ‌ ಜಾಗೃತಿ‌ ಮೂಡಿಸಬೇಕೆಂದು ಹೇಳಿದರು. ದಿನದಲ್ಲಿ ಮೂರು ಗಂಟೆಯ ಸಮಯವನ್ನು ಪೋತಿ ವಿರಾಸತ್ ಆಂದೋಲ‌ನದ ಕೆಲಸದ ಬಗ್ಗೆ ಮೀಸಲಿಡುವಂತೆ ಆಯಾ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಂದಾಯ‌ ನಿರೀಕ್ಷಕರು ಹಾಗೂ ಉಪ ತಹಶೀಲ್ದಾರ್ ಅವರು ಮೇಲ್ವಿಚಾರಣೆ ನಡೆಸಬೇಕೆಂದು ತಿಳಿಸಿದರು. ಪ್ರತಿಯೊಬ್ಬ ಗ್ರಾಮ ಆಡಳಿತಾಧಿಕಾರಿಗಳು ತಿಂಗಳಿಗೆ‌ ತಲಾ 100 ವಾರಸುದಾರರ‌ ಹೆಸರಿನಲ್ಲಿ ಪಹಣಿ ಖಾತಾ ಬದಲಾಯಿಸುವ ಕೆಲಸ ಮಾಡಬೇಕೆಂದು‌ ಹೇಳಿದರು. ಈ ಕಾರ್ಯಕ್ರಮವು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಕಂದಾಯ ಸಚಿವರು ಹಾಗೂ‌ ಜಿಲ್ಲಾಧಿಕಾರಿಗಳ ಆದೇಶದಂತೆ ಯಾರು ಸಹ ನಿರ್ಲಕ್ಷ್ಯ ವಹಿಸುವಂತಿಲ್ಲ,‌ ಕಾನೂನು ಪ್ರಕಾರ ಅಗತ್ಯ ದಾಖಲೆಗಳನ್ನು ಪಡೆದು‌ ಪೋತಿಯಾದ ವಾರಸುದಾರರ ಹೆಸರಿನಲ್ಲಿ ಖಾತೆ‌ ಬದಲಾವಣೆ ಮಾಡಬೇಕೆಂದು ತಿಳಿಸಿದರು. ಶಿರಸ್ತೇದಾರರಾದ ಅನಿತಾ ಇಂಡಿ,‌ ಶರಣಪ್ಪ, ಭೂಮಿ ಗ್ರಾಮ ಆಡಳಿತ ಅಧಿಕಾರಿ ಶರಣು‌ ಚಳಗೇರಿ ಇದ್ದರು.

ವಾರ್ತಾ ಭಾರತಿ 8 Dec 2025 9:30 pm

ಬ್ರಹ್ಮಾವರ: ಬ್ರಿಟನ್‌ನ BATH ವಿವಿಯಿಂದ ಪಿಎಚ್‌ಡಿ ಪಡೆದ ಹರೀಶ್ ಶೆಟ್ಟಿ

ಬ್ರಹ್ಮಾವರ: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮದ ಹೊನ್ನಾಳ ನಿವಾಸಿ ಹರೀಶ್ ಶೆಟ್ಟಿ ಬಂಡ್ಸಾಲೆ ಇವರು ಇಂಗ್ಲೆಂಡ್‌ನ ಪ್ರತಿಷ್ಠಿತ ಬಾತ್ ಯೂನಿವರ್ಸಿಟಿಯಿಂದ ಪಿಹೆಚ್‌ಡಿ ಪದವಿ ಪಡೆದಿದ್ದಾರೆ. ಕಟ್ಟಡ ಕಾರ್ಮಿಕರ ಕುರಿತಂತೆ ಇವರು ಮಂಡಿಸಿದ ಸಂಶೋಧನಾ ಪ್ರಬಂಧ ಮೊದಲ ಹಂತದಲ್ಲೇ ಸ್ವೀಕೃತಗೊಂಡಿದ್ದು, ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಡಾ.ಹರೀಶ್ ಶೆಟ್ಟಿ ಬಂಡ್ಸಾಲೆ ಹಾರಾಡಿ ಗ್ರಾಮದ ಕೆಳಬಣಸಾಲೆ ಮನೆ ರತ್ನಾವತಿ ಶೆಟ್ಟಿ ಹಾಗೂ ಹಳುವಳ್ಳಿ- ಕೋಂಟಿಬೈಲು ಲಕ್ಷಣ ಶೆಟ್ಟಿ ಅವರ ಮಗನಾಗಿದ್ದು, ಪ್ರಾಥಮಿಕ ಶಿಕ್ಷಣವನ್ನು ಹೊನ್ನಾಳ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ, ವಿದ್ಯಾಮಂದಿರ ಹಿರಿಯ ಪ್ರಾಥಮಿಕ ಶಾಲೆ ಹಾರಾಡಿ ಯಲ್ಲಿ ಪಡೆದು ಪ್ರೌಢ ಹಾಗೂ ಪದವಿ ಪೂರ್ವ ಶಿಕ್ಷಣವನ್ನು ಬ್ರಹ್ಮಾವರದ ಎಸ್‌ಎಂಎಸ್ ಶಿಕ್ಷಣ ಸಂಸ್ಥೆಯಲ್ಲಿ ಪಡೆದಿದ್ದರು. ಹಾರಾಡಿಯ ಡಾ.ಎ.ವಿ ಬಾಳಿಗಾ ಕಾಲೇಜಿನಲ್ಲಿ ಬಿಎಸ್‌ಡಬ್ಲ್ಯೂ ಮುಗಿಸಿ ಮಂಗಳೂರಿನ ಡಾ. ಎಂ.ವಿ ಶೆಟ್ಟಿ ಕಾಲೇಜಿನಲ್ಲಿ ಎಂ.ಎಸ್.ಡಬ್ಲ್ಯೂ ಪದವಿ ಪಡೆದಿದ್ದರು. ಅಹಮ್ಮದಾಬಾದ್‌ನ ಐಐಎಂನಲ್ಲಿ ಪಿಎಚ್‌ಡಿಯನ್ನು ಪ್ರಾರಂಬಿಸಿ ಅಲ್ಲಿಂದ ಇಂಗ್ಲೆಂಡ್‌ನ ಪ್ರತಿಷ್ಠಿತ ಯೂನಿವರ್ಸಿಟಿ ಆಫ್ ಬಾತ್‌ನಿಂದ ಸ್ಕಾಲರ್‌ಶಿಪ್ ಪಡೆದು ಕಟ್ಟಡ ಕಾರ್ಮಿಕರ ಬಗ್ಗೆ ಆಳವಾದ ಅಧ್ಯಯನ ಮಾಡಿ ತಮ್ಮ ಪ್ರಬಂಧವನ್ನು ಮಂಡಿಸಿ, ಯಾವುದೇ ತಿದ್ದುಪಡಿ ಇಲ್ಲದೆ ಮೊದಲ ಹಂತದಲ್ಲೇ ಉತ್ತೀರ್ಣರಾಗಿ ಡಾಕ್ಟರೇಟ್ ಪದವಿ ಪಡೆದಿದ್ದಾರೆ.

ವಾರ್ತಾ ಭಾರತಿ 8 Dec 2025 9:27 pm

Vande Mataram Explained: 150 ವರ್ಷದ ನಂತರ ಈಗ ಯಾಕೆ ವಂದೇ ಮಾತರಂ ಗೀತೆ ಚರ್ಚೆ: ಮೋದಿ ಆರೋಪ; ಪ್ರಿಯಾಂಕಾ ಗಾಂಧಿ ವಿರೋಧ!

Vande Mataram Explained: ದೇಶದಲ್ಲಿ ವಂದೇ ಮಾತರಂ ಗೀತೆ ಭಾರೀ ಚರ್ಚೆಗೆ ಕಾರಣವಾಗಿದೆ. ನೂರ ಐವತ್ತು ವರ್ಷಗಳ ಹಿಂದಿನ ಗೀತೆ ವಿಚಾರವು ಇದೀಗ ಕಾಂಗ್ರೆಸ್ ಮತ್ತು ಬಿಜೆಪಿಯ ನಡುವೆ ಆರೋಪ ಮತ್ತು ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಈ ವಿಚಾರವಾಗಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ವಂದೇ ಮಾತರಂ ಗೀತೆಯನ್ನು ತುಂಡಾಗಿಸಿ ಒಡೆದು ಹಾಕಿದ್ದಲ್ಲದೇ ಈಗಲೂ ಅದೇ ಓಲೈಕೆಯ

ಒನ್ ಇ೦ಡಿಯ 8 Dec 2025 9:26 pm

ಯೋಗೀಶ ಗೌಡ ಕೊಲೆ ಪ್ರಕರಣ; ಶಾಸಕ ವಿನಯ್‌ ಕುಲಕರ್ಣಿಗಿಲ್ಲ ಜಾಮೀನು

ಬೆಂಗಳೂರು : ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ ಗೌಡ ಕೊಲೆ ಪ್ರಕರಣದ ಆರೋಪಿಯಾದ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಪ್ರಕರಣದ 15ನೇ ಆರೋಪಿ ವಿನಯ್‌ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಅವರು ಸೋಮವಾರ ಪ್ರಕಟಿಸಿದರು. ಇದೇ ವೇಳೆ, ಪ್ರಕರಣದ 16ನೇ ಆರೋಪಿ ಚಂದ್ರಶೇಖರ್‌ ಇಂಡಿ ಅಲಿಯಾಸ್ ಚಂದು ಮಾಮ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ. ಪ್ರಕರಣದ ಹಿನ್ನೆಲೆ: ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್‌ 15ರಂದು ಯೋಗೀಶ ಗೌಡ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ. ಪ್ರಕರಣದ ಪ್ರಮುಖ ಆರೋಪಿ ವಿನಯ್‌ ಕುಲಕರ್ಣಿ ಅವರು 2025ರ ಜೂನ್‌ 13ರಿಂದ ನ್ಯಾಯಾಂಗ ಬಂಧನದಲ್ಲಿದ್ದು ಪ್ರಕರಣದ ವಿಚಾರಣೆ ಎದುರಿಸುತ್ತಿದ್ದಾರೆ. ಪ್ರಕರಣದಲ್ಲಿ 2021ರ ಆಗಸ್ಟ್‌ 11ರಂದು ಸುಪ್ರೀಂಕೋರ್ಟ್‌ ವಿನಯ್‌ ಕುಲಕರ್ಣಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. 2025ರ ಜೂನ್‌ 7ರಂದು ಸುಪ್ರೀಂಕೋರ್ಟ್‌, ವಿಚಾರಣೆ ನಡೆಯುತ್ತಿರುವಾಗ ವಿನಯ್‌ ಕುಲಕರ್ಣಿ ಅವರು ಸಾಕ್ಷಿಗಳನ್ನು ಸಂಪರ್ಕಿಸಲು ಅಥವಾ ಪ್ರಭಾವ ಬೀರಲು ಪ್ರಯತ್ನಿಸಿದ್ದಾರೆ ಎಂಬುದಕ್ಕೆ ವಿಶ್ವಾಸಾರ್ಹ ಪುರಾವೆಗಳಿವೆ ಎಂದು ಹೇಳಿ, ಜಾಮೀನು ರದ್ದುಗೊಳಿಸಿತ್ತು.

ವಾರ್ತಾ ಭಾರತಿ 8 Dec 2025 9:24 pm

ಕೊಪ್ಪಳ | ಮುಸ್ಲಿಮರ ಪ್ರಾಮಾಣಿಕತೆಯಿಂದ ಸರಕಾರದ ಹಣ ಸದುಪಯೋಗ : ಶಾಸಕ ಬಸವರಾಜ ರಾಯರೆಡ್ಡಿ

ಕೊಪ್ಪಳ / ಕುಕನೂರ, ಡಿ.8: ತಾಲೂಕಿನ ಮುಸ್ಲಿಮರ ಪ್ರಾಮಾಣಿಕತೆಯಿಂದ ಸರಕಾರದ ಹಣ ಸದುಪಯೋಗ ಆಗುತ್ತಿದೆ ಎಂದು ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಹಾಗೂ ಶಾಸಕ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ನಗರದ ಜಾಮಿಯಾ ಮಸೀದಿಯಲ್ಲಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರಿಗೆ ಮುಸ್ಲಿಮ್ ಸಮಾಜದವರಿಂದ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿ ನಂತರ ಮಾತನಾಡಿದ ಅವರು, ನಾನು ಶಾದಿ ಮಹಲ್ ಕಟ್ಟಡಕ್ಕೆ 50 ಲಕ್ಷ ರೂ. ಹಾಗೂ ಎರಡನೇ ಬಾರಿಗೆ 25 ಲಕ್ಷ ರೂ. ಸರಕಾರದಿಂದ ಮಂಜೂರು ಮಾಡಿಸಿದ್ದೆ. ಆದರೆ ಈಗ ಮಸೀದಿ ಕಟ್ಟಡಕ್ಕೆ ನಾನು ಕೊಟ್ಟ ಅನುದಾನಕ್ಕಿಂತಲೂ ನಾಲ್ಕೈದು ಪಟ್ಟು ಹೆಚ್ಚು ಕೆಲಸವಾಗಿದೆ, ಸ್ವತಃ ದುಡ್ಡು ಖರ್ಚು ಮಾಡಿ ಶ್ರದ್ಧೆಯಿಂದ ಕೆಲಸ ಮಾಡಿದ ನಿಮ್ಮ ನಿಸ್ವಾರ್ಥ ಕಾರ್ಯಕ್ಕೆ ಅಲ್ಲಾಹ್‌ ಮೆಚ್ಚುತ್ತಾನೆ ಎಂದು ಹೇಳಿದರು. ಕುಕನೂರು ಶಾದಿ ಮಹಲ್ ಕಟ್ಟಡಕ್ಕೆ ಹಣ ಮಂಜೂರು : ತಳಕಲ್ ಶಾದಿ ಮಹಲ್ ಕಟ್ಟಡಕ್ಕೆ 1 ಕೋಟಿ ರೂ., ಸಂಕನೂರ ಶಾದಿ ಮಹಲ್ ಕಟ್ಟಡಕ್ಕೆ 1 ಕೋಟಿ ರೂ,, ಮುಧೋಳ ಶಾದಿ ಮಹಲ್ ಕಟ್ಟಡಕ್ಕೆ 50 ಲಕ್ಷ ರೂ, ನೀಡಿ ಈಗಾಗಲೇ ಕಟ್ಟಡವಾಗಿದೆ. ಇನ್ನೂ ಕುದರಿಮೋತಿ ಶಾದಿ ಮಹಲ್ ಕಟ್ಟಡಕ್ಕೆ ಹಣ ಮಂಜೂರು ಮಾಡಬೇಕಿದೆ. ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆಗೆ 4 ಸಾವಿರ ಕೋಟಿ ರೂ, ಮೀಸಲಿಡಲಾಗಿದೆ. ಕುಕನೂರು ಮದೀನಾ ಮಸೀದಿ ಗೆ 30 ಲಕ್ಷ ರೂ. ಮಂಜೂರು ಮಾಡಿಸಲಾಗುವುದು ಎಂದರು. ಕಾರ್ಯಕ್ರಮದಲ್ಲಿ ಮುಖಂಡರಾದ ಕಾಸೀಮಸಾಬ ತಳಕಲ್, ಅಬ್ದುಲ್ ರಹಮಾನ್ ಸಾಬ ತಳಕಲ್, ಸತ್ಯನಾರಾಯಣ ಹರಪನಹಳ್ಳಿ, ಮಂಜುನಾಥ ಕಡೇಮನಿ, ಚಂದ್ರಶೇಖರಯ್ಯ ಹಿರೇಮಠ, ದಸ್ತಗೀರಸಾಬ ಗದ್ವಾಲ್, ಗೂಡುಸಾಬ ಮಕಾನದಾರ, ದಸ್ತಗೀರಸಾಬ ರಾಜೂರ, ಸಿದ್ದಯ್ಯ ಕಳ್ಳಿಮಠ, ಪಟ್ಟಣ ಪಂಚಾಯಿತಿ ಸದಸ್ಯ ರಹಮಾನ್ ಸಾಬ ಮಕ್ಕಪ್ಪನವರ್, ಶರಣಪ್ಪ ಗಾಂಜಿ, ಶಫೀಸಾಬ ಗುಂಡಿಹಿಂದಲ್, ಜಾಮಿಯಾ ಮಸೀದಿಯ ಸದರ್ ಸಾಬ ರಷೀದ್ ಅಹ್ಮದ್ ಉಮಚಗಿ ಮುಂತಾದವರು ಉಪಸ್ಥಿತರಿದ್ದರು. ಹಾಫೀಜ್ ಸಾಬ್ ಖುರಾನ್ ಶರೀಫ್ ಕುರ್‌ಆನ್ ಪಠಿಸಿದರು. ಅದರ ಭಾವಾರ್ಥವನ್ನು ಅಲ್ಲಾವುದ್ದೀನ್‌ ಯಮ್ಮಿ ಓದಿ ತಿಳಿಸಿದರು. ಪಟ್ಟಣ ಪಂಚಾಯತ್ ಸದಸ್ಯ ರಫೀಸಾಬ ಹಿರೆಹಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಮೆಹಬೂಬ ಸಾಬ ಗುಂಡಿಹಿಂದಲ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಪ್ರಾಮಾಣಿಕತೆಗೆ ಇನ್ನೊಂದು ಹೆಸರೇ ಮುಸ್ಲಿಮ್ ಬಾಂಧವರು. ಎಲ್ಲ ಜಾತಿ ಧರ್ಮದ ಜನರಲ್ಲೂ ಕೆಟ್ಟವರೂ ಇರುತ್ತಾರೆ, ಒಳ್ಳೆಯವರೂ ಇರುತ್ತಾರೆ. ಹಾಗಂತ ಎಲ್ಲ ಜಾತಿ ಧರ್ಮ ಕೆಟ್ಟದ್ದು ಅಂತ ಹೇಳುವುದಕ್ಕಾಗುವುದಿಲ್ಲ. ನಮ್ಮಲ್ಲಿ ಹಿಂದೂ ಮುಸ್ಲಿಮ್‌ ಎನ್ನುವ ಯಾವುದೇ ಬೇಧ ಭಾವವಿಲ್ಲ, ನಾವೆಲ್ಲರೂ ಒಂದೇ ಎನ್ನುವ ಭಾವೈಕ್ಯತೆಯ ಸಂಕೇತವಾಗಿದೆ, ಕರ್ನಾಟಕ ಸರ್ಕಾರ ವಕ್ಫ್ ಮಂಡಳಿಗೆ ಹಣ ಕೊಡುತ್ತದೆ, ಅದನ್ನೇ ಜನಪ್ರತಿನಿಧಿಗಳಾದ ನಾವು ಮಸೀದಿ, ಶಾದಿ ಮಹಲ್ ನಂತಹ ಜನೋಪಯೋಗಿ ಕಾರ್ಯಕ್ರಮಕ್ಕೆ ಮಂಜೂರು ಮಾಡುತ್ತೇವೆ. - ಬಸವರಾಜ ರಾಯರೆಡ್ಡಿ, ಸಿಎಂ ಆರ್ಥಿಕ ಸಲಹೆಗಾರರು

ವಾರ್ತಾ ಭಾರತಿ 8 Dec 2025 9:17 pm

ಸಹ ಕೈದಿಗಳಿಗೆ ಒದ್ದು ದರ್ಶನ್‌ ದರ್ಪ, ಬೇರೆ ಬ್ಯಾರಕ್‌ಗೆ ಸ್ಥಳಾಂತರಿಸುವಂತೆ ಇತರ ಆರೋಪಿಗಳಿಂದ ದುಂಬಾಲು

ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಹ ಕೈದಿಗಳೊಂದಿಗೆ ಜಗಳವಾಡಿ ಹಲ್ಲೆ ನಡೆಸುತ್ತಿದ್ದಾರೆ. ಇದರಿಂದ ಬೇಸತ್ತ ಕೆಲ ಕೈದಿಗಳು ಬೇರೆ ಬ್ಯಾರಕ್‌ಗೆ ಸ್ಥಳಾಂತರಿಸುವಂತೆ ಮನವಿ ಮಾಡಿದ್ದಾರೆ. ಕಾರಾಗೃಹದ ಮೂಲಗಳ ಪ್ರಕಾರ ದರ್ಶನ್‌ ಜತೆ ಒಂದೇ ಬ್ಯಾರಕ್‌ನಲ್ಲಿ ಇರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ಇತರೆ ಆರೋಪಿಗಳಾದ ಅನುಕುಮಾರ್‌, ಜಗದೀಶ್‌, ಪ್ರದೋಷ್‌ ಹಾಗೂ ಲಕ್ಷ್ಮಣ್‌ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ವಿಜಯ ಕರ್ನಾಟಕ 8 Dec 2025 9:12 pm

ಪಾಸಿಟಿವ್ ಸುದ್ದಿಗಳು ಬರುತ್ತಿವೆ - ಯತ್ನಾಳ್ ಸ್ಪೋಟಕ ಹೇಳಿಕೆ : ದೆಹಲಿ ಬಿಜೆಪಿ ಅಂಗಣದಲ್ಲಿ ಏನಾಗುತ್ತಿದೆ?

Karnataka BJP President Change : ಕರ್ನಾಟಕದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳದ್ದು ಒಂದೊಂದು ಸಮಸ್ಯೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ವಿಜಯೇಂದ್ರ ಮುಂದುವರಿಯಬಾರದು ಎನ್ನುವ ಒತ್ತಡ ಒಂದು ಕಡೆ ಹೆಚ್ಚಾಗುತ್ತಿದೆ. ನಮಗೆ ದೆಹಲಿಯಿಂದ ಸಕಾರಾತ್ಮಕ ಸುದ್ದಿಗಳು ಬರುತ್ತಿವೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ವಿಜಯ ಕರ್ನಾಟಕ 8 Dec 2025 9:10 pm

ಹೈದರಾಬಾದ್‌ ಗೆ ಬರುತ್ತಿದ್ದ ಮೂರು ವಿಮಾನಗಳಿಗೆ ಬಾಂಬ್ ಬೆದರಿಕೆ

ಹೈದರಾಬಾದ್,ಡಿ.8: ಎರಡು ಅಂತರರಾಷ್ಟ್ರೀಯ ಯಾನಗಳು ಸೇರಿದಂತೆ ವಿವಿಧ ನಗರಗಳಿಂದ ಬರುತ್ತಿದ್ದ ಮೂರು ವಿಮಾನ ಯಾನಗಳಿಗೆ ಬಾಂಬ್ ಬೆದರಿಕೆಗಳನ್ನು ಇಲ್ಲಿಯ ರಾಜೀವ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು (ಆರ್‌ಜಿಐಎ) ಸ್ವೀಕರಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿಸಂಸ್ಥೆಯು ವರದಿ ಮಾಡಿದೆ. ರವಿವಾರ ತಡರಾತ್ರಿ ಹೀಥ್ರೋದಿಂದ ಬರುತ್ತಿದ್ದ ಬ್ರಿಟಿಷ್ ಏರ್‌ವೇಸ್,ಫ್ರಾಂಕ್‌ಫರ್ಟ್‌ನಿಂದ ಬರುತ್ತಿದ್ದ ಲುಫ್ತಾನ್ಸಾ ಮತ್ತು ಕಣ್ಣೂರಿನಿಂದ ಬರುತ್ತಿದ್ದ ಇಂಡಿಗೋ ವಿಮಾನಗಳನ್ನು ಗುರಿಯಾಗಿಸಿಕೊಂಡು ಬೆದರಿಕೆ ಇಮೇಲ್‌ಗಳು ಬಂದಿದ್ದವು. ಎಲ್ಲ ವಿಮಾನಗಳು ಸುರಕ್ಷಿತವಾಗಿ ಇಳಿದಿವೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿದವು. ಎರಡು ಅಂತರರಾಷ್ಟ್ರೀಯ ವಿಮಾನಗಳು ಸೋಮವಾರ ಬೆಳಗಿನ ಜಾವ ಇಲ್ಲಿಗೆ ಬಂದಿಳಿದವು. ಎಲ್ಲ ವಿಮಾನಗಳನ್ನು ಸುರಕ್ಷತಾ ತಪಾಸಣೆಗಳಿಗೆ ಒಳಪಡಿಸಲಾಗಿದ್ದು, ಯಾವುದೇ ಶಂಕಾಸ್ಪದ ವಸ್ತು ಪತ್ತೆಯಾಗಿಲ್ಲ. ಕಳೆದ ವಾರ ದುಬೈ-ಹೈದರಾಬಾದ್ ಎಮಿರೇಟ್ಸ್ ಮತ್ತು ಇಂಡಿಗೊದ ಮದೀನಾ-ಹೈದರಾಬಾದ್ ಹಾಗೂ ಶಾರ್ಜಾ-ಹೈದರಾಬಾದ್ ವಿಮಾನಗಳನ್ನು ಗುರಿಯಾಗಿಸಿಕೊಂಡು ಮೂರು ಪ್ರತ್ಯೇಕ ಬೆದರಿಕೆ ಇಮೇಲ್‌ಗಳು ಆರ್‌ಜಿಐಎಗೆ ಬಂದಿದ್ದವು. ಮದೀನಾ-ಹೈದರಾಬಾದ್ ವಿಮಾನವನ್ನು ಅಹ್ಮದಾಬಾದ್‌ ಗೆ ತಿರುಗಿಸಲಾಗಿತ್ತು.

ವಾರ್ತಾ ಭಾರತಿ 8 Dec 2025 9:08 pm

Breaking ಜಪಾನ್‌ನಲ್ಲಿ 7.6 ತೀವ್ರತೆಯ ಪ್ರಬಲ ಭೂಕಂಪ; ಸುನಾಮಿ ಎಚ್ಚರಿಕೆ

ಜಪಾನ್‌ನ ಕರಾವಳಿ ಪ್ರದೇಶದಲ್ಲಿ 7.6 ಮತ್ತು 5.5 ತೀವ್ರತೆಯ ಎರಡು ಪ್ರಬಲ ಭೂಕಂಪಗಳು ಸಂಭವಿಸಿವೆ. ಇದರ ಪರಿಣಾಮವಾಗಿ ಕರಾವಳಿ ತೀರಗಳಿಗೆ ಸುನಾಮಿ ಅಪ್ಪಳಿಸುವ ಎಚ್ಚರಿಕೆ ನೀಡಲಾಗಿದೆ. 3 ಮೀಟರ್‌ವರೆಗೆ ಎತ್ತರದ ಅಲೆಗಳು ಏಳುವ ಸಾಧ್ಯತೆಯಿದೆ ಎಂದು ಯುಎಸ್‌ಜಿಎಸ್‌ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯ ಕರ್ನಾಟಕ 8 Dec 2025 9:03 pm

2026ರಲ್ಲಿ ಚಿನ್ನದ ಬೆಲೆ ಶೇ 15%ರಿಂದ ಇಷ್ಟು ಪ್ರಮಾಣ ಹೆಚ್ಚಳ: ಡಬ್ಲ್ಯುಜಿಸಿ ವರದಿ! Gold Rate

2026 Gold Rate Forecast: ಚಿನ್ನದ ಬೆಲೆಯು ಇತ್ತೀಚಿನ ದಿನಗಳಲ್ಲಿ ನಿರಂತರವಾಗಿ ಹೆಚ್ಚಳವಾಗುತ್ತಿದೆ. ಅದರಲ್ಲೂ 2025ನೇ ಸಾಲಿನಲ್ಲಿ ಚಿನ್ನದ ಬೆಲೆಯು ಹಲವು ಪಟ್ಟು ಹೆಚ್ಚಳವಾಗಿದೆ. ಈ ವರ್ಷ ಪ್ರಾರಂಭದಲ್ಲಿದ್ದ ಚಿನ್ನದ ಬೆಲೆಗೂ ಇಂದಿನ ಚಿನ್ನದ ಬೆಲೆಗೂ ಸಾಕಷ್ಟು ವ್ಯತ್ಯಾಸವಿದೆ. ಇನ್ನು ಅಪರೂಪ ಎನ್ನುವಂತೆ ಈ ವರ್ಷ ಬೆಳ್ಳಿ ಬೆಲೆಯೂ ಸಹ ನಿರಂತರವಾಗಿ ಹೆಚ್ಚಳವಾಗಿದೆ. ಆದರೆ 2026ನೇ ವರ್ಷದಲ್ಲಿ

ಒನ್ ಇ೦ಡಿಯ 8 Dec 2025 8:58 pm

Ind Vs SA- ಕಟಕ್ ಪಿಚ್ ನಲ್ಲೂ ಟಾಸ್ ಗೆಲುವು ನಿರ್ಣಾಯಕ; ಆದ್ರೂ ಇದ್ದೇ ಇದೆ ಬೊಂಬಾಟ್ ಅವಕಾಶ!

Cuttak T20i Match- ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಡಿಸೆಂಬರ್ 9 ರಂದು ಕಟಕ್‌ನಲ್ಲಿ ಆರಂಭವಾಗಲಿದೆ. ಟಿ20 ವಿಶ್ವಕಪ್‌ಗೆ ಸಿದ್ಧತೆ ನಡೆಸುತ್ತಿರುವ ಉಭಯ ತಂಡಗಗೂ ಈ ಸರಣಿ ಬಹಳ ಮಹತ್ವದ್ದಾಹಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡ ಬಲಿಷ್ಠವಾಗಿದ್ದರೂ ದಕ್ಷಿಣ ಆಫ್ರಿಕಾ ತಂಡವನ್ನು ಯಾವುದೇ ಕಾರಣಕ್ಕೂ ಕಡೆಗಣಿಸುವಂತಿಲ್ಲ. ಕಟಕ್‌ನ ಬಾರಾಬತಿ ಕ್ರೀಡಾಂಗಣದಲ್ಲಿ ಪಿಚ್ ಬ್ಯಾಟಿಂಗ್‌ಗೆ ಉತ್ತಮವಾಗಿದ್ದು, ದೊಡ್ಡ ಮೊತ್ತದ ಪಂದ್ಯ ನಿರೀಕ್ಷಿಸಲಾಗಿದೆ. ಟಾಸ್ ಗೆದ್ದ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ.

ವಿಜಯ ಕರ್ನಾಟಕ 8 Dec 2025 8:56 pm

2026 Government Holidays: ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿದ 2026ರ ರಜೆಗಳ ಸಂಪೂರ್ಣ ಪಟ್ಟಿ

ಕರ್ನಾಟಕ ಸರ್ಕಾರವು 2026 ನೇ ಸಾಲಿನ ಅಧಿಕೃತ ರಜೆಗಳ ಅಧಿಸೂಚನೆಗಳನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಸಾರ್ವಜನಿಕ ರಜೆಗಳು (General Holidays), ಆಯ್ಕೈಚ್ಛಿಕ ರಜೆಗಳು (Restricted Holidays) ಮತ್ತು ನಿಗೋಶಿಯಬಲ್ ಇನ್ಸ್‌ಟ್ರುಮೆಂಟ್ಸ್ ಅಕ್ಟ್, 1881 (1881ರ ಅಧಿನಿಯಮ ಸಂಖ್ಯೆ 26) ರ 25ನೇ ಸೆಕ್ಷನ್ ನಲ್ಲಿರುವ ವಿತರಣೆಯಂತೆ 2026ನೇ ವರ್ಷದ ರಜೆಗಳ ಸಂಪೂರ್ಣ ವಿವರಗಳನ್ನು ನೀಡಲಾಗಿದೆ. ರಾಜ್ಯ ಸರ್ಕಾರಿ ಕಚೇರಿಗಳು, ಶಾಲೆಗಳು, ಕಾಲೇಜುಗಳು ಮತ್ತು ಬ್ಯಾಂಕ್‌ಗಳು ತಮ್ಮ ವಾರ್ಷಿಕ ಯೋಜನೆಗಳನ್ನು ರೂಪಿಸಲು ಈ ಪಟ್ಟಿ ಅತ್ಯಂತ ಉಪಯುಕ್ತವಾಗಿದೆ. 2026ರ ... Read more The post 2026 Government Holidays: ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿದ 2026ರ ರಜೆಗಳ ಸಂಪೂರ್ಣ ಪಟ್ಟಿ appeared first on Karnataka Times .

ಕರ್ನಾಟಕ ಟೈಮ್ಸ್ 8 Dec 2025 8:52 pm

ʻಸಿಎಂ ಸ್ಥಾನಕ್ಕೆ 500 ಕೋಟಿ ಕೊಡ್ಬೇಕುʼ ಎಂದ ನವಜೋತ್ ಕೌರ್ ಸಿಧು; ಕಾಂಗ್ರೆಸ್‌ನಿಂದ ಅಮಾನತು

ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನಕ್ಕೇರಲು ಬಯಸಿದ ಸೂಟ್‌ಕೇಸ್‌ನಲ್ಲಿ 500 ಕೋಟಿ ರೂ. ಕೊಡಬೇಕು ಎಂದು ನವಜೋತ್ ಕೌರ್ ಸಿಧು ನೀಡಿದ ಹೇಳಿಕೆ ರಾಜಕೀಯವಾಗಿ ಭಾರೀ ಸಂಚಲನ ಮೂಡಿಸಿದೆ. ಈ ಹೇಳಿಕೆ ವೈರಲ್‌ ಆಗುತ್ತಿದ್ದಂತೆ ಅವರನ್ನು ಪಂಜಾಬ್ ಕಾಂಗ್ರೆಸ್ ಘಟಕವು ಅವರನ್ನು ಪಕ್ಷದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಪ್ರಕಟಣೆಯಲ್ಲಿ ಯಾವುದೇ ನಿಖರ ಕಾರಣವನ್ನು ವ್ಯಕ್ತಪಡಿಸಿಲ್ಲ. ಈ ಬಗ್ಗೆ ಕೌರ್‌ ಮಾತನಾಡಿದ್ದು, ನಾನು ನಮ್ಮ ಪಕ್ಷದ ಬಗ್ಗೆ ಮಾತನಾಡಿಲ್ಲ ಎಂದಿದ್ದಾರೆ

ವಿಜಯ ಕರ್ನಾಟಕ 8 Dec 2025 8:48 pm

ಕಪಿಲ್‌ ದೇವ್ ನಿರ್ಮಿಸಿದ್ದ ಅನಪೇಕ್ಷಿತ ವಿಶ್ವ ದಾಖಲೆ ಮುರಿದ ಜೋ ರೂಟ್

ಬ್ರಿಸ್ಬೇನ್, ಡಿ.8: ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ ಗಾಬಾ ಸ್ಟೇಡಿಯಂನಲ್ಲಿ ಇತ್ತೀಚೆಗೆ ಕೊನೆಗೊಂಡಿರುವ ಆಸ್ಟ್ರೇಲಿಯ ತಂಡ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತದ ಕ್ರಿಕೆಟ್ ದಂತಕತೆ ಕಪಿಲ್ ದೇವ್ ಹೆಸರಲ್ಲಿದ್ದ ಅನಪೇಕ್ಷಿತ ವಿಶ್ವ ದಾಖಲೆಯೊಂದನ್ನು ಮುರಿದರು. ಎರಡನೇ ಟೆಸ್ಟ್ ಪಂದ್ಯವನ್ನು ಎಂಟು ವಿಕೆರ್‌ ಗಳಿಂದ ಸೋತಿರುವ ಇಂಗ್ಲೆಂಡ್ ತಂಡವು ಆ್ಯಶಸ್ ಸರಣಿಯಲ್ಲಿ 0-2ರಿಂದ ಹಿನ್ನಡೆ ಕಂಡಿದೆ. ಆಸ್ಟ್ರೇಲಿಯದ ನೆಲದಲ್ಲಿ ತನ್ನ ಚೊಚ್ಚಲ ಶತಕವನ್ನು ಸಿಡಿಸಿದ್ದ ರೂಟ್ ವೈಯಕ್ತಿಕವಾಗಿ ಮಹತ್ವದ ಮೈಲಿಗಲ್ಲು ತಲುಪಿದ್ದರು. 206 ಎಸೆತಗಳಲ್ಲಿ ಔಟಾಗದೆ 138 ರನ್ ಗಳಿಸಿದ್ದ ರೂಟ್ ಅವರು ಇಂಗ್ಲೆಂಡ್ ತಂಡ ಮೊದಲ ಇನಿಂಗ್ಸ್‌ ನಲ್ಲಿ 334 ರನ್ ಕಲೆ ಹಾಕುವಲ್ಲಿ ನೆರವಾಗಿದ್ದರು. ಆಸ್ಟ್ರೇಲಿಯದಲ್ಲಿ ನಡೆದಿದ್ದ ಹಗಲು-ರಾತ್ರಿ ಟೆಸ್ಟ್ ಪಂದ್ಯದಲ್ಲಿ ಗರಿಷ್ಠ ಸ್ಕೋರ್ ಗಳಿಸಿದ ಪ್ರವಾಸಿ ತಂಡದ ಆಟಗಾರ ಎನಿಸಿಕೊಂಡಿದ್ದರು. ರೂಟ್ ಅವರ ಸಂಭ್ರಮ ಹೆಚ್ಚು ಹೊತ್ತು ಉಳಿಯಲಿಲ್ಲ. ಆಸ್ಟ್ರೇಲಿಯ ತಂಡವು ತನ್ನ ಮೊದಲ ಇನಿಂಗ್ಸ್‌ ನಲ್ಲಿ 511 ರನ್ ಕಲೆ ಹಾಕಿ 177 ರನ್ ಇನಿಂಗ್ಸ್ ಮುನ್ನಡೆ ಸಾಧಿಸಿತ್ತು. ಇಂಗ್ಲೆಂಡ್ ತಂಡ ಎರಡನೇ ಇನಿಂಗ್ಸ್‌ ನಲ್ಲಿ ಕೇವಲ 241 ರನ್ ಗಳಿಸಿತ್ತು. ರೂಟ್ ಕೇವಲ 15 ರನ್ ಕೊಡುಗೆ ನೀಡಿದ್ದರು. ಆಸ್ಟ್ರೇಲಿಯ ತಂಡವು 65 ರನ್ ಗುರಿಯನ್ನು ಸುಲಭವಾಗಿ ಚೇಸ್ ಮಾಡಿತು. ರೂಟ್ ಆಸ್ಟ್ರೇಲಿಯದಲ್ಲಿ ಆಡಿದ 16ನೇ ಪಂದ್ಯದಲ್ಲೂ ಗೆಲುವು ಕಾಣಲಿಲ್ಲ. ವಿದೇಶಿ ನೆಲದಲ್ಲಿ ಗರಿಷ್ಠ ಪಂದ್ಯಗಳನ್ನಾಡಿದ್ದರೂ ಗೆಲುವಿನ ಮುಖ ಕಾಣದೆ ಹೊಸ ದಾಖಲೆ ನಿರ್ಮಿಸಿದರು. ಇದರೊಂದಿಗೆ ಕಪಿಲ್ ದೇವ್ ಅವರ ದಾಖಲೆಯನ್ನು ಮುರಿದರು. ಕಪಿಲ್ ದೇವ್ ಪಾಕಿಸ್ತಾನದಲ್ಲಿ 15 ಪಂದ್ಯಗಳನ್ನು ಆಡಿದ್ದರೂ ಗೆಲುವು ಕಂಡಿರಲಿಲ್ಲ. 15ರಲ್ಲಿ 10 ಪಂದ್ಯಗಳು ಡ್ರಾ ಆಗಿದ್ದರೆ, 5 ಪಂದ್ಯಗಳಲ್ಲಿ ಸೋತಿದ್ದರು. ಆಸ್ಟ್ರೇಲಿಯದಲ್ಲಿ ಆಡಿರುವ 12 ಪಂದ್ಯಗಳಲ್ಲಿ ಗೆಲುವನ್ನೇ ಕಾಣದ ನ್ಯೂಝಿಲ್ಯಾಂಡ್‌ನ ಡೇನಿಯಲ್ ವೆಟೋರಿ 2ನೇ ಸ್ಥಾನದಲ್ಲಿದ್ದಾರೆ. ಬೆನ್ ಸ್ಟೋಕ್ಸ್(11 ಪಂದ್ಯಗಳು)ಹಾಗೂ ಡೇವಿಡ್ ಮಲನ್(10 ಪಂದ್ಯಗಳು)ಆ ನಂತರದ ಸ್ಥಾನದಲ್ಲಿದ್ದಾರೆ. ರೂಟ್ ಅವರು ಆಸ್ಟ್ರೇಲಿಯದಲ್ಲಿ ಈ ತನಕ ಆಡಿರುವ 16 ಪಂದ್ಯಗಳ ಪೈಕಿ 14 ಬಾರಿ ಸೋಲುಂಡಿದ್ದಾರೆ. ಜೇಮ್ಸ್ ಆ್ಯಂಡರ್ಸನ್ ಹಾಗೂ ಅಲಸ್ಟೈರ್ ಕುಕ್ ಅವರು ಆಸ್ಟ್ರೇಲಿಯದಲ್ಲಿ ತಲಾ 15 ಬಾರಿ ಸೋಲುಂಡಿದ್ದಾರೆ. ಜಾಕ್ ಹಾಬ್ಸ್ ಹಾಗೂ ಸಚಿನ್ ತೆಂಡುಲ್ಕರ್ ಇಬ್ಬರೂ ಆಸ್ಟ್ರೇಲಿಯದಲ್ಲಿ 14 ಪಂದ್ಯಗಳಲ್ಲಿ ಸೋತಿದ್ದರು. ರೂಟ್ ಅವರು ಆಸ್ಟ್ರೇಲಿಯದಲ್ಲಿ ಆಡಿರುವ ತನ್ನ 30ನೇ ಇನಿಂಗ್ಸ್‌ ನಲ್ಲಿ ಕೊನೆಗೂ ಶತಕ ಗಳಿಸಿದರು. ಗೋರ್ಡನ್ ಗ್ರೀನಿಜ್ ಆಸ್ಟ್ರೇಲಿಯದಲ್ಲಿ 32ನೇ ಇನಿಂಗ್ಸ್‌ ನಲ್ಲಿ ಶತಕ ಗಳಿಸಿದ್ದರು. ರೂಟ್ ಅವರು 2013ರಿಂದ ನಿರಂತರವಾಗಿ ಆ್ಯಶಸ್ ಪ್ರವಾಸದಲ್ಲಿ ಇಂಗ್ಲೆಂಡ್ ತಂಡದಲ್ಲಿ ಸ್ಥಾನ ಪಡೆದ್ದಾರೆ. 17 ಪಂದ್ಯಗಳಲ್ಲಿ 16ರಲ್ಲಿ ಭಾಗವಹಿಸಿದ್ದರು. ಇಂಗ್ಲೆಂಡ್ ತಂಡವು 2011ರಲ್ಲಿ ಸಿಡ್ನಿ ಟೆಸ್ಟ್ ಪಂದ್ಯದ ವೇಳೆ ಆಸ್ಟ್ರೇಲಿಯ ತಂಡದ ವಿರುದ್ದ ಕೊನೆಯ ಬಾರಿ ಗೆಲುವು ದಾಖಲಿಸಿತ್ತು.

ವಾರ್ತಾ ಭಾರತಿ 8 Dec 2025 8:37 pm

ಡಿ.9ರಿಂದ ಐದು ಪಂದ್ಯಗಳ T20 ಸರಣಿ ಆರಂಭ; ಕಟಕ್‌ ನಲ್ಲಿ Ind Vs SA ಮೊದಲ ಮುಖಾಮುಖಿ

ಭುವನೇಶ್ವರ, ಡಿ.8: ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಿಂದ ರೋಚಕವಾಗಿ ಗೆದ್ದುಕೊಂಡಿರುವ ಟೀಮ್ ಇಂಡಿಯಾವು ಕಟಕ್‌ ನ ಬಾರಬತಿ ಸ್ಟೇಡಿಯಂನಲ್ಲಿ ಮಂಗಳವಾರ ನಡೆಯಲಿರುವ ಬಹುನಿರೀಕ್ಷಿತ ಐದು ಪಂದ್ಯಗಳ T20 ಸರಣಿಯ ಮೊದಲ ಪಂದ್ಯವನ್ನಾಡಲು ಸಜ್ಜಾಗಿದೆ. ಗೆಲುವಿನ ಲಯವನ್ನು ಕಾಯ್ದುಕೊಳ್ಳುವ ವಿಶ್ವಾಸದಲ್ಲಿದೆ. ಭಾರತೀಯ ಹಾಗೂ ದಕ್ಷಿಣ ಆಫ್ರಿಕಾದ ಪುರುಷರ ಕ್ರಿಕೆಟ್ ತಂಡಗಳು ರವಿವಾರ ಭುವನೇಶ್ವರಕ್ಕೆ ಆಗಮಿಸಿವೆ. ಇದೀಗ ಉಭಯ ತಂಡಗಳು 50 ಓವರ್‌ ಗಳ ಪಂದ್ಯದಿಂದ T20 ಮಾದರಿಯ ಕ್ರಿಕೆಟ್‌ನತ್ತ ತಮ್ಮ ಮೂಡ್ ಬದಲಿಸಬೇಕಾಗಿದೆ. ಮುಂದಿನ ವರ್ಷ ಭಾರತದ ಆತಿಥ್ಯದಲ್ಲಿ ನಡೆಯಲಿರುವ T20 ವಿಶ್ವಕಪ್‌ಗೆ ಮೊದಲು ನಡೆಯುತ್ತಿರುವ ಈ ಪ್ರಮುಖ ಸರಣಿಗೆ ಸೂರ್ಯಕುಮಾರ್ ಯಾದವ್ ನಾಯಕನಾಗಿ ಮುಂದುವರಿಯಲಿದ್ದಾರೆ. ಏಡೆನ್ ಮರ್ಕ್ರಮ್ ದಕ್ಷಿಣ ಆಫ್ರಿಕಾದ ನಾಯಕತ್ವವಹಿಸಿದ್ದು, T20 ಸ್ಪೆಷಲಿಸ್ಟ್‌ ಗಳಾದ ಡೇವಿಡ್ ಮಿಲ್ಲರ್ ಹಾಗೂ ರೀಝಾ ಹೆಂಡ್ರಿಕ್ಸ್ T20 ಕ್ರಿಕೆಟ್ ತಂಡಕ್ಕೆ ವಾಪಸಾಗಿದ್ದಾರೆ. ಟೆಸ್ಟ್ ಹಾಗೂ ಏಕದಿನ ಸರಣಿಗಳಿಂದ ವಂಚಿತರಾಗಿದ್ದ ಉಪ ನಾಯಕ ಶುಭಮನ್ ಗಿಲ್ ಹಾಗೂ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ T20 ಸರಣಿಯ ಆರಂಭಿಕ ಪಂದ್ಯಕ್ಕೆ ಲಭ್ಯವಿರಲಿದ್ದಾರೆ. ಕೋಲ್ಕತಾದ ಈಡನ್‌ ಗಾರ್ಡನ್ಸ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕುತ್ತಿಗೆ ನೋವಿಗೆ ಒಳಗಾಗಿದ್ದ ಗಿಲ್ ಸುಮಾರು ಒಂದು ತಿಂಗಳಿನಿಂದ ಕ್ರಿಕೆಟ್‌ನಿಂದ ದೂರ ಉಳಿದಿದ್ದರು. ಪಾಂಡ್ಯ ಸೆಪ್ಟಂಬರ್‌ನಲ್ಲಿ ನಡೆದಿದ್ದ ಏಶ್ಯ ಕಪ್ ಪಂದ್ಯದ ವೇಳೆ ಗಾಯಗೊಂಡಿದ್ದು, ಎರಡು ತಿಂಗಳುಗಳಿಂದ ಸಕ್ರಿಯ ಕ್ರಿಕೆಟ್‌ನಿಂದ ದೂರವಾಗಿದ್ದರು. ‘‘ಗಿಲ್ ಹಾಗೂ ಪಾಂಡ್ಯ ಸಂಪೂರ್ಣ ಆರೋಗ್ಯವಂತರಾಗಿ, ಫಿಟ್ ಇದ್ದಂತೆ ಕಾಣುತ್ತಿದ್ದಾರೆ. ಸಂಜು ಸ್ಯಾಮ್ಸನ್ ಬದಲಿಗೆ ಗಿಲ್ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯಲಿದ್ದಾರೆ’’ಎಂದು ಸೂರ್ಯಕುಮಾರ್ ಖಚಿತಪಡಿಸಿದರು. ಕೇರಳದ ಬ್ಯಾಟರ್ ಸ್ಯಾಮ್ಸನ್ ಮಧ್ಯಮ ಸರದಿಯಲ್ಲಿ ಸ್ಥಾನವನ್ನು ಪಡೆಯಲು ಜಿತೇಶ್ ಶರ್ಮಾರಿಂದ ಸ್ಪರ್ಧೆಯನ್ನು ಎದುರಿಸುತ್ತಿದ್ದಾರೆ. ‘‘ನಾವು ಆಡಿರುವ ಹಿಂದಿನ 5-6 ಸರಣಿಗಳಲ್ಲಿ ಆಡುವ ಬಳಗದಲ್ಲಿ ಹೆಚ್ಚಿನ ಬದಲಾವಣೆ ಮಾಡಿರಲಿಲ್ಲ. ಒಂದೇ ಕಾಂಬಿನೇಶನ್‌ ನೊಂದಿಗೆ ಆಡಿದ್ದೆವು. ಎಲ್ಲವೂ ಅಂದುಕೊಂಡಂತೆ ನಡೆದಿದೆ. ನಾವು ಆ ಹಾದಿಯಲ್ಲೇ ಮುಂದುವರಿಯುತ್ತೇವೆ’’ಎಂದು ಸೂರ್ಯಕುಮಾರ್ ಹೇಳಿದ್ದಾರೆ. ಗಿಲ್ ಗಾಯದಿಂದ ಚೇತರಿಸಿಕೊಂಡ ನಂತರ ಯಾವುದೇ ಪಂದ್ಯ ಆಡಿಲ್ಲ. ಹಾರ್ದಿಕ್ ಪಾಂಡ್ಯ ಅವರು ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯಲ್ಲಿ ಬರೋಡ ತಂಡದ ಪರ ಆಡಿದ್ದರು. ಎರಡು ಪಂದ್ಯಗಳಲ್ಲಿ ನಾಲ್ಕು ಓವರ್ ಬೌಲಿಂಗ್ ಮಾಡಿದ್ದ ಪಾಂಡ್ಯ ತಲಾ ಒಂದು ವಿಕೆಟ್ ಪಡೆದಿದ್ದರು. ಪಂಜಾಬ್ ವಿರುದ್ಧದ ಪಂದ್ಯದಲ್ಲಿ 42 ಎಸೆತಗಳಲ್ಲಿ ಔಟಾಗದೆ 77 ರನ್ ಗಳಿಸಿ ಬರೋಡ ತಂಡವು 223 ರನ್ ಚೇಸ್ ಮಾಡಲು ನೆರವಾಗಿದ್ದರು. ಕಟಕ್‌ಗೆ ಬೇಗನೆ ಆಗಮಿಸಿರುವ ಪಾಂಡ್ಯ ಅವರು ಬಾರಬತಿ ಸ್ಟೇಡಿಯಂನಲ್ಲಿ ಒಬ್ಬರೇ ತರಬೇತಿ ನಡೆಸಿದ್ದಾರೆ. ಹಾಲಿ T20 ಚಾಂಪಿಯನ್ ಭಾರತ ತಂಡವು 2026ರ ಫೆಬ್ರವರಿಯಲ್ಲಿ ಸ್ವದೇಶದಲ್ಲಿ ನಡೆಯಲಿರುವ T20 ವಿಶ್ವಕಪ್‌ ಗಿಂತ ಮೊದಲು ಪ್ರಸಕ್ತ ಐದು ಪಂದ್ಯಗಳ ಸರಣಿ ಸೇರಿದಂತೆ 10 ಪಂದ್ಯಗಳನ್ನಾಡಲಿದೆ. ‘‘ನಾವು 2024ರಲ್ಲಿ T20 ವಿಶ್ವಕಪ್ ಗೆದ್ದ ಬೆನ್ನಿಗೇ 2026ರ ಟಿ20 ವಿಶ್ವಕಪ್‌ಗೆ ಸಿದ್ಧತೆ ಆರಂಭಿಸಿದ್ದೇವೆ. 2024ರ ವಿಶ್ವಕಪ್ ನಂತರ ನಾವು ಹೊಸತನವನ್ನು ಪ್ರಯತ್ನಿಸಿದ್ದು, ಎಲ್ಲದರಲ್ಲೂ ಯಶಸ್ಸು ಕಂಡಿದ್ದೇವೆ’’ಎಂದು ಸೂರ್ಯಕುಮಾರ್ ಹೇಳಿದ್ದಾರೆ. ►T20 ಕ್ರಿಕೆಟ್‌ನಲ್ಲಿ ಭಾರತ-ದಕ್ಷಿಣ ಆಫ್ರಿಕಾ ಹೆಡ್-ಟು-ಹೆಡ್ ಭಾರತ-ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡಗಳು T20 ಅಂತರ್‌ರಾಷ್ಟ್ರೀಯ ಪಂದ್ಯಗಳಲ್ಲಿ ಒಟ್ಟು 31 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ 18 ಪಂದ್ಯಗಳನ್ನು ಭಾರತ ತಂಡ ಗೆದ್ದುಕೊಂಡು ಮೇಲುಗೈ ಸಾಧಿಸಿದೆ. ದಕ್ಷಿಣ ಆಫ್ರಿಕಾ ತಂಡವು 12 ಬಾರಿ ಗೆಲುವು ದಾಖಲಿಸಿದೆ. ಒಂದು ಪಂದ್ಯದಲ್ಲಿ ಫಲಿತಾಂಶ ಬಂದಿರಲಿಲ್ಲ. ಹಿಂದಿನ ಐದು ಮುಖಾಮುಖಿಗಳಲ್ಲಿ ಭಾರತ ತಂಡವು ನಾಲ್ಕರಲ್ಲಿ ಜಯ ಸಾಧಿಸಿದ್ದು, ಹರಿಣ ಪಡೆಯು ಕಳೆದ ವರ್ಷದ ನವೆಂಬರ್‌ ನಲ್ಲಿ ಸ್ವದೇಶದಲ್ಲಿ ಏಕೈಕ ಪಂದ್ಯ ಗೆದ್ದುಕೊಂಡಿತ್ತು. *ಟಾಪ್ ಸ್ಕೋರರ್‌ ಗಳು: ಎಡಗೈ ಬ್ಯಾಟರ್ ಡೇವಿಡ್ ಮಿಲ್ಲರ್ ಭಾರತ-ದಕ್ಷಿಣ ಆಫ್ರಿಕಾ ನಡುವಿನ T20 ಹಣಾಹಣಿಯಲ್ಲಿ 25 ಪಂದ್ಯಗಳಲ್ಲಿ 34.93ರ ಸರಾಸರಿಯಲ್ಲಿ 147.19ರ ಸ್ಟ್ರೈಕ್‌ರೇಟ್‌ನಲ್ಲಿ ಒಟ್ಟು 524 ರನ್ ಗಳಿಸಿದ್ದಾರೆ. ನಿವೃತ್ತಿಯಾಗಿರುವ ರೋಹಿತ್ ಶರ್ಮಾ(18 ಪಂದ್ಯಗಳಲ್ಲಿ 429 ರನ್)ಹಾಗೂ ವಿರಾಟ್ ಕೊಹ್ಲಿ(13 ಪಂದ್ಯಗಳಲ್ಲಿ 394 ರನ್)ಆ ನಂತರದ ಸ್ಥಾನದಲ್ಲಿದ್ದಾರೆ. ಈಗಿನ ಭಾರತೀಯ ಆಟಗಾರರ ಪೈಕಿ ನಾಯಕ ಸೂರ್ಯಕುಮಾರ್ 11 ಪಂದ್ಯಗಳಲ್ಲಿ 41.33ರ ಸರಾಸರಿಯಲ್ಲಿ ಒಟ್ಟು 372 ರನ್ ಗಳಿಸಿದ್ದಾರೆ. ► ಗರಿಷ್ಠ ವಿಕೆಟ್ ಸರದಾರರು : ಎಡಗೈ ವೇಗದ ಬೌಲರ್ ಅರ್ಷದೀಪ್ ಸಿಂಗ್ 10 ಪಂದ್ಯಗಳಲ್ಲಿ 17ರ ಸರಾಸರಿಯಲ್ಲಿ 18 ವಿಕೆರ್‌ ಗಳನ್ನು ಪಡೆದು ಮೊದಲ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ಎಡಗೈ ಸ್ಪಿನ್ನರ್ ಕೇಶವ ಮಹಾರಾಜ್ 15 ಪಂದ್ಯಗಳಲ್ಲಿ 27.66ರ ಸರಾಸರಿಯಲ್ಲಿ ಒಟ್ಟು 15 ವಿಕೆರ್‌ ಗಳನ್ನು ಉರುಳಿಸಿದ್ದಾರೆ. ತಂಡಗಳು ಭಾರತ : ಸೂರ್ಯಕುಮಾರ್ ಯಾದವ್(ನಾಯಕ),ಶುಭಮನ್ ಗಿಲ್, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ(ವಿಕೆಟ್‌ ಕೀಪರ್), ಸಂಜು ಸ್ಯಾಮ್ಸನ್(ವಿಕೆಟ್‌ ಕೀಪರ್), ಜಸ್‌ಪ್ರಿತ್ ಬುಮ್ರಾ, ವರುಣ್ ಚಕ್ರವರ್ತಿ, ಅರ್ಷದೀಪ ಸಿಂಗ್, ಕುಲದೀಪ ಯಾದವ್, ಹರ್ಷಿತ್ ರಾಣಾ, ವಾಶಿಂಗ್ಟನ್ ಸುಂದರ್. ದಕ್ಷಿಣ ಆಫ್ರಿಕಾ : ಏಡೆನ್ ಮರ್ಕ್ರಮ್(ನಾಯಕ), ಡೆವಾಲ್ಡ್ ಬ್ರೆವಿಸ್, ಟೋನಿ ಡಿ ರೆರ್ಝಿ, ರೀಝಾ ಹೆಂಡ್ರಿಕ್ಸ್, ಡೇವಿಡ್ ಮಿಲ್ಲರ್. ಜಾರ್ಜ್ ಲಿಂಡ್, ಕಾರ್ಬಿನ್ ಬಾಷ್, ಮಾರ್ಕೊ ಜಾನ್ಸನ್, ಕ್ವಿಂಟನ್ ಡಿ ಕಾಕ್(ವಿಕೆಟ್‌ ಕೀಪರ್), ಡೊನೊವನ್ ಫೆರೇರ(ವಿಕೆಟ್‌ ಕೀಪರ್), ಟ್ರಿಸ್ಟನ್ ಸ್ಟಬ್ಸ್, ಒಟ್ನೀಲ್ ಬಾರ್ಟ್‌ಮನ್, ಕೇಶವ ಮಹಾರಾಜ್, ಕ್ವೆನಾ ಮಫಾಕಾ, ಲುಂಗಿ ಗಿಡಿ, ಅನ್ರಿಚ್ ನೋಟ್ಜೆ. ► ಪಂದ್ಯ ಆರಂಭದ ಸಮಯ: ರಾತ್ರಿ 7:00 ► ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್‌ ವರ್ಕ್ ►ಭಾರತ-ದಕ್ಷಿಣ ಆಫ್ರಿಕಾ T20 ವೇಳಾಪಟ್ಟಿ ಪಂದ್ಯ ದಿನಾಂಕ ದಿನ ಸಮಯ ಸ್ಥಳ 1ನೇ T20 ಡಿ.9 ಮಂಗಳವಾರ ರಾತ್ರಿ 7:00 ಕಟಕ್ 2ನೇ T20 ಡಿ.11 ಗುರುವಾರ ರಾತ್ರಿ 7:00 ನ್ಯೂ ಚಂಡಿಗಡ 3ನೇ ಟಿ20 ಡಿ.14 ರವಿವಾರ ರಾತ್ರಿ 7:00 ಧರ್ಮಶಾಲಾ 4ನೇ ಟಿ20 ಡಿ.17 ಬುಧವಾರ ರಾತ್ರಿ 7:00 ಲಕ್ನೊ 5ನೇ ಟಿ20 ಡಿ.19 ಶುಕ್ರವಾರ ರಾತ್ರಿ 7:00 ಅಹ್ಮದಾಬಾದ್

ವಾರ್ತಾ ಭಾರತಿ 8 Dec 2025 8:33 pm

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜಾಮೀನಿಲ್ಲ! ಅರ್ಜಿ ವಜಾಗೊಳಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ

ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ಗೌಡ ಗೌಡರ ಕೊಲೆ ಪ್ರಕರಣದಲ್ಲಿ ಆರೋಪಿ ಶಾಸಕ ವಿನಯ್‌ ಕುಲಕರ್ಣಿ ಅವರಿಗೆ ಜಾಮೀನು ಸಿಗಲಿಲ್ಲ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ೨೦೧೬ರಲ್ಲಿ ನಡೆದಿದ್ದ ಈ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ. ಸುಪ್ರೀಂಕೋರ್ಟ್ ಜಾಮೀನು ರದ್ದುಪಡಿಸಿದ ಬಳಿಕ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದಾರೆ.

ವಿಜಯ ಕರ್ನಾಟಕ 8 Dec 2025 8:33 pm

ಬೀಡಿ ಕಾರ್ಮಿಕರಿಗೆ ತಿಂಗಳೊಳಗೆ ಕನಿಷ್ಠ ವೇತನ ನಿಗದಿ: ಸಂತೋಷ್‌ ಲಾಡ್‌ ಭರವಸೆ; ನಿಗದಿಯಾಗಿರುವ ಕೂಲಿ ಎಷ್ಟು?

ಬೀಡಿ ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿಪಡಿಸುವ ಭರವಸೆಯನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ನೀಡಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಲಕ್ಷಾಂತರ ಕಾರ್ಮಿಕರು ಈ ಬೀಡಿ ಕೆಲಸವನ್ನೇ ಅವಲಂಬಿಸಿದ್ದಾರೆ. ಮಾಲೀಕರು ನಿಗದಿಗಿಂತ ಕಡಿಮೆ ವೇತನ ನೀಡುತ್ತಿದ್ದು, ಈ ಸಮಸ್ಯೆಯನ್ನು ಒಂದು ತಿಂಗಳೊಳಗೆ ಬಗೆಹರಿಸುವುದಾಗಿ ಸಚಿವರು ತಿಳಿಸಿದ್ದಾರೆ.

ವಿಜಯ ಕರ್ನಾಟಕ 8 Dec 2025 8:28 pm

ದಕ್ಷಿಣ ಆಫ್ರಿಕಾ ವಿರುದ್ಧ ದ್ವಿತೀಯ ODIನಲ್ಲಿ ನಿಧಾನಗತಿಯ ಬೌಲಿಂಗ್: Team Indiaಕ್ಕೆ ದಂಡ

ದುಬೈ, ಡಿ.8: ರಾಯ್ಪುರದಲ್ಲಿ ನಡೆದಿದ್ದ ದ್ವಿತೀಯ ಏಕದಿನ ಪಂದ್ಯದ ವೇಳೆ ನಿಧಾನಗತಿಯ ಬೌಲಿಂಗ್ ಮಾಡಿದ್ದಕ್ಕಾಗಿ ಸೋಮವಾರ ಟೀಮ್ ಇಂಡಿಯಾಕ್ಕೆ ಅದರ ಪಂದ್ಯಶುಲ್ಕದ ಶೇ.10ರಷ್ಟು ದಂಡ ವಿಧಿಸಲಾಗಿದೆ. ಎರಡನೇ ಏಕದಿನ ಪಂದ್ಯವನ್ನು ಭಾರತ ತಂಡವು ಸೋತಿತ್ತು. ಆ ಪಂದ್ಯವನ್ನು ಗೆದ್ದಿದ್ದ ದಕ್ಷಿಣ ಆಫ್ರಿಕಾ ತಂಡವು ಸರಣಿಯನ್ನು 1-1ರಿಂದ ಸಮಬಲಗೊಳಿಸಿತ್ತು. ವಿಶಾಖಪಟ್ಟಣದಲ್ಲಿ ನಡೆದಿದ್ದ ಮೂರನೇ ಏಕದಿನ ಪಂದ್ಯವನ್ನು ಜಯಿಸಿದ್ದ ಭಾರತ ತಂಡ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿತ್ತು. ಕೆ.ಎಲ್.ರಾಹುಲ್ ನಾಯಕತ್ವದ ಭಾರತ ತಂಡವು ನಿಗದಿತ ಗುರಿಗಿಂತ ಎರಡು ಓವರ್ ಕಡಿಮೆ ಎಸೆದಿರುವುದು ಕಂಡಬಂದ ನಂತರ ಎಲೈಟ್ ಪ್ಯಾನೆಲ್ ಮ್ಯಾಚ್ ರೆಫರಿ ರಿಚಿ ರಿಚರ್ಡ್‌ಸನ್ ದಂಡ ವಿಧಿಸಿದ್ದಾರೆ.

ವಾರ್ತಾ ಭಾರತಿ 8 Dec 2025 8:28 pm

ಗ್ರಾಪಂ ಸಿಬ್ಬಂದಿಗೆ ಪಿಎಫ್- ಇಎಸ್‌ಐ ಸೌಲಭ್ಯ: ಉಡುಪಿ ಜಿಲ್ಲೆಯಲ್ಲಿ ರಾಜ್ಯಕ್ಕೆ ಮಾದರಿ ಅನುಷ್ಠಾನ

ಉಡುಪಿ: ಸ್ವಚ್ಛ ಭಾರತ್, ತೆರಿಗೆ ವಸೂಲಾತಿ ಹಾಗೂ ಹೊಸತನದ ಕಾರ್ಯ ಚಟುವಟಿಕೆಗಳ ಅನುಷ್ಠಾನದಲ್ಲಿ ಮುಂಚೂಣಿಯಲ್ಲಿರುವ ಉಡುಪಿ ಜಿಲ್ಲೆಯು ಇದೀಗ ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಇ ಪಿಎಫ್ ಹಾಗೂ ಇಎಸ್‌ಐ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡು, ಪ್ರಪ್ರಥಮ ಅನುಷ್ಠಾನದೊಂದಿಗೆ ರಾಜ್ಯದ ಮಾದರಿ ಜಿಲ್ಲೆಯಾಗಿ ಹೊರ ಹೊಮ್ಮಿದೆ. ಗ್ರಾಮ ಪಂಚಾಯತ್ ನೌಕರರ ಬಹುದಿನಗಳ ಬೇಡಿಕೆಯಾದ ಭವಿಷ್ಯ ನಿಧಿ(ಪಿಎಫ್) ಹಾಗೂ ಆರೋಗ್ಯ ವಿಮಾ ಯೋಜನೆ(ಇಎಸ್‌ಐ)ಸೌಲಭ್ಯ ಒದಗಿಸಲು ಆರಂಭಿಕ ಹಂತದಲ್ಲಿ ಉಡುಪಿ, ಧಾರವಾಡ, ಬೆಂಗಳೂರು ಗ್ರಾಮಾಂತರ ಹಾಗೂ ದಕ್ಷಿಣ ಕನ್ನಡದಲ್ಲಿ ಪ್ರಕ್ರಿಯೆಗಳಿಗೆ ಚಾಲನೆ ನೀಡಲಾಗಿತ್ತು. ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ (ಗ್ರಾಮ ಪಂಚಾಯತಿ ಸಿಬ್ಬಂದಿ ಸ್ವರೂಪ, ವೇತನ ಶ್ರೇಣಿ, ನೇಮಕಾತಿ ವಿಧಾನ ಹಾಗೂ ಇತರ ಸೇವಾ ಷರತ್ತುಗಳು) ನಿಯಮಗಳು 2022ರಲ್ಲಿನ ತಿದ್ದುಪಡಿ ಪ್ರಕಾರ ಜಿಲ್ಲೆಯ ಪ್ರತೀ ತಾಲೂಕು ಪಂಚಾಯತ್ ವ್ಯಾಪ್ತಿಯನ್ನು ಅನುಷ್ಠಾನ ಘಟಕವಾಗಿ ಪರಿಗಣಿಸಿ, ಗ್ರಾಪಂಗಳ ಅನುಮೋದಿತ ಸಿಬ್ಬಂದಿಗೆ ಭವಿಷ್ಯ ನಿಧಿ ಹಾಗೂ ಇಎಸ್‌ಐ ಸೌಲಭ್ಯ ಜಾರಿಗೆ ತರಲು ಉಲ್ಲೇಖಿಸಲಾಗಿತ್ತು. ಧಾರವಾಡ, ಬೆಂಗಳೂರು ಗ್ರಾಮಾಂತರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾಗಶಃ ಅನುಷ್ಠಾನವಾಗಿದ್ದು, ಈ ಪೈಕಿ ವ್ಯವಸ್ಥಿತ ಪೂರ್ವಸಿದ್ಧತೆ ಹಾಗೂ ಸಮನ್ವಯದೊಂದಿಗೆ ಉಡುಪಿ ಜಿಲ್ಲೆ ಅನುಷ್ಠಾನ ಮಾಡುವುದರೊಂದಿಗೆ ಮಾದರಿಯಾಗಿ ಗುರುತಿಸಿಕೊಂಡಿದೆ. ಪಾವತಿ ವಿಧಾನ: ಈ ಸೌಲಭ್ಯಕ್ಕಾಗಿ ನೌಕರರು ತಮ್ಮ ಮೂಲವೇತನ ಹಾಗೂ ತುಟ್ಟಿ ಭತ್ಯೆಯ ಶೇ.12ರಷ್ಟನ್ನು ಪಾವತಿಸಿದರೆ ಸಂಬಂಧಿಸಿದ ಗ್ರಾಮ ಪಂಚಾಯತ್ ತನ್ನ ಪಾಲನ್ನು ನೌಕರರ ಪಿಎಫ್ ವಂತಿಗೆ ಸಮನಾಗಿ ಪಾವತಿ ಮಾಡಲಿದೆ. ಇಎಸ್‌ಐಗೆ ನೌಕರರು ಶೇ.0.75ರಷ್ಟು ಹಾಗೂ ಗ್ರಾಮ ಪಂಚಾಯತ್ ತನ್ನ ಪಾಲಿನ ಶೇ.3.25ರಷ್ಟು ಪಾವತಿಸಲಿದೆ. ಆರ್ಥಿಕ ಭದ್ರತೆ, ಉಳಿತಾಯ, ಪಿಂಚಣಿ ಸೇರಿದಂತೆ ವೈದ್ಯಕೀಯ ಆರೈಕೆ, ಅನಾರೋಗ್ಯ ನಿರ್ವಹಣೆ, ಹಾಗೂ ನಗದು ಸೌಲಭ್ಯಗಳು ಈ ವ್ಯಾಪ್ತಿಯಲ್ಲಿ ಅನ್ವಯವಾಗುವುದರಿಂದ ಗ್ರಾಮ ಪಂಚಾಯತ್ ನೌಕರರಿಗೆ ಉಪಯುಕ್ತವಾಗಲಿದೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಈ ಕುರಿತು ಆದ್ಯತೆಯೊಂದಿಗೆ ಗಮನಹರಿಸಿರುವುದರಿಂದ, ಈಗಾಗಲೇ ತಾಲೂಕು ಪಂಚಾಯತ್‌ಗಳಲ್ಲಿ ನಿಗದಿತ ಖಾತೆಯನ್ನು ತಾಪಂ ಇ.ಓ ಹಾಗೂ ಲೆಕ್ಕಾಧಿಕಾರಿಗಳ ಪದನಾಮದಲ್ಲಿ ತೆರೆಯಲಾಗಿದ್ದು, ಪ್ರಕ್ರಿಯೆಗಳನ್ನು ನಿರ್ವಹಿಸಲು ಮೇಲ್ವಿಚಾರಕರನ್ನೂ ನೇಮಕ ಮಾಡಿಕೊಳ್ಳಲಾಗಿದೆ. ಇಎಸ್‌ಐ ಹಾಗೂ ಇಪಿಎಫ್ ಅಡಿಯಲ್ಲಿ ದೊರೆಯುವ ಸೌಲಭ್ಯಗಳ ಕುರಿತಂತೆ ಜಿಲ್ಲಾಮಟ್ಟದಲ್ಲಿ ಇಲಾಖೆಗಳ ಸಮನ್ವಯದೊಂದಿಗೆ ಎಲ್ಲಾ ಗ್ರಾಮ ಪಂಚಾಯತ್‌ನ ಸಿಬ್ಬಂದಿಗಳು ಹಾಗೂ ಗ್ರಂಥಾಲಯ ಮೇಲ್ವಿಚಾರಕರಿಗೆ ಕಾರ್ಯಾಗಾರದ ಮೂಲಕ ಪೂರ್ಣ ಮಾಹಿತಿಯನ್ನೂ ನೀಡಲಾಗಿದೆ. 803 ಸಿಬ್ಬಂದಿಗಳಿಗೆ ಸೌಲಭ್ಯ: ಉಡುಪಿ ಜಿಲ್ಲೆಯ 155 ಗ್ರಾಮ ಪಂಚಾಯತ್‌ಗಳ ಪೈಕಿ 654 ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ 149 ಗ್ರಂಥಾಲಯ ಮೇಲ್ವಿಚಾರಕರು ಈ ಸೌಲಭ್ಯ ಪಡೆಯಲಿದ್ದಾರೆ. 2008ರಿಂದಲೂ ಈ ಕುರಿತು ಹೋರಾಟ ನಡೆಸುತ್ತಿದ್ದ ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಸೇವಾಭದ್ರತೆ ಹಾಗೂ ಆರೋಗ್ಯ ಸೌಲಭ್ಯದ ನಿಟ್ಟಿನಲ್ಲಿ ಇದು ಮಹತ್ತರವಾದ ಕೊಡುಗೆಯಾಗಿದೆ. ‘ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ತಾಲೂಕು ಮಟ್ಟದ ಘಟಕವಾಗಿ ಗ್ರಾಪಂ ನೌಕರರಿಗೆ ಭವಿಷ್ಯ ನಿಧಿ ಮತ್ತು ಇಎಸ್‌ಐ ಸೌಲಭ್ಯವನ್ನು ಒದಗಿಸಲು ಕ್ರಮ ಕೈಗೊಂಡ ಉಡುಪಿ ಜಿಲ್ಲಾ ಪಂಚಾಯತ್ ಸಿಇಓ ಪ್ರತೀಕ್ ಬಾಯಲ್ ಅವರ ಕಾರ್ಯ ಅಭಿನಂದನೆಯ. ಇದು ರಾಜ್ಯದಲ್ಲಿಯೇ ಮಾದರಿಯಾದ ಪ್ರಯತ್ನವಾಗಿದ್ದು ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ. -ಪದ್ಮನಾಭ ಆರ್.ಕುಲಾಲ್, ರಾಜ್ಯ ಪ್ರಧಾನ ಕಾರ್ಯದರ್ಶಿ, ಕ.ರಾ.ಗ್ರಾ.ಪಂ.ನೌ.ಶ್ರೇ.ಸಂಘ ‘ಗ್ರಾಮ ಪಂಚಾಯತ್‌ಗಳ ಯೋಜನೆ ಹಾಗೂ ಸೌಲಭ್ಯಗಳನ್ನು ನಾಗರಿಕರಿಗೆ ತಲುಪಿಸಲು ಸಿಬ್ಬಂದಿಗಳ ಶ್ರಮ ಬಹುಮುಖ್ಯವಾದುದು. ಇಪಿಎಫ್ ಹಾಗೂ ಇಎಸ್‌ಐ ಸೌಲಭ್ಯಗಳ ಅನುಷ್ಠಾನಕ್ಕೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳ ಅಧ್ಯಕ್ಷರು- ಸದಸ್ಯರು, ಪಿಡಿಓ ಹಾಗೂ ಜಿ.ಪಂ. ತಾ.ಪಂ ಹಂತದ ಅಧಿಕಾರಿಗಳ ಸಹಕಾರ ಹಾಗೂ ಸಮನ್ವಯಕ್ಕಾಗಿ ಕೃತಜ್ಞತೆ ಗಳು’ -ಪ್ರತೀಕ್ ಬಾಯಲ್, ಸಿಇಒ, ಜಿಪಂ ಉಡುಪಿ

ವಾರ್ತಾ ಭಾರತಿ 8 Dec 2025 8:26 pm

T20 ವಿಶ್ವ ದಾಖಲೆ ಸರಿಗಟ್ಟಿದ ಬರೋಡದ ಅಮಿತ್ ಪಾಸ್ಸಿ

ಹೈದರಾಬಾದ್, ಡಿ.8: ಬರೋಡ ಕ್ರಿಕೆಟ್ ತಂಡದ ವಿಕೆಟ್‌ ಕೀಪರ್-ಬ್ಯಾಟರ್ ಅಮಿತ್ ಪಾಸ್ಸಿ ಅವರು ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯಲ್ಲಿ ಸೋಮವಾರ ನಡೆದ ಗ್ರೂಪ್ ಹಂತದ T20 ಪಂದ್ಯದಲ್ಲಿ ಸರ್ವಿಸಸ್ ತಂಡದ ವಿರುದ್ಧ ಆಡಿದ ತನ್ನ ಚೊಚ್ಚಲ ಪಂದ್ಯದಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್ ಗಳಿಸುವ ಮೂಲಕ ವಿಶ್ವ ದಾಖಲೆಯೊಂದನ್ನು ಸರಿಗಟ್ಟಿದರು. ಅಮಿತ್ 55 ಎಸೆತಗಳಲ್ಲಿ 10 ಬೌಂಡರಿ ಹಾಗೂ 9 ಸಿಕ್ಸರ್‌ ಗಳ ಸಹಿತ 114 ರನ್ ಗಳಿಸಿದರು. ಇದರೊಂದಿಗೆ 2015ರಲ್ಲಿ ಪಾಕಿಸ್ತಾನ T20 ಲೀಗ್ ಪಂದ್ಯದಲ್ಲಿ ಸಿಯಾಲ್‌ಕೋಟ್ ಸ್ಟಾಲಿಯನ್ಸ್ ಪರ ಬಿಲಾಲ್ ಆಸಿಫ್ ನಿರ್ಮಿಸಿದ್ದ ದಾಖಲೆಯನ್ನು ಸರಿಗಟ್ಟಿದರು. ರಾಷ್ಟ್ರೀಯ ತಂಡದಲ್ಲಿರುವ ಜಿತೇಶ್ ಶರ್ಮಾ ಬದಲಿಗೆ ಆಡಿದ 26ರ ವಯಸ್ಸಿನ ಅಮಿತ್ ಕೇವಲ 44 ಎಸೆತಗಳಲ್ಲಿ ತನ್ನ ಚೊಚ್ಚಲ T20 ಶತಕ ಗಳಿಸುವ ಮೊದಲು 24 ಎಸೆತಗಳಲ್ಲಿ ಅರ್ಧಶತಕ ತಲುಪಿದರು. ಅಮಿತ್ ಚೊಚ್ಚಲ T20 ಪಂದ್ಯದಲ್ಲಿ ಶತಕ ಗಳಿಸಿದ ಭಾರತದ ಮೂರನೇ ಆಟಗಾರನಾಗಿದ್ದಾರೆ. ಅಕ್ಷತ್ ರೆಡ್ಡಿ(2010ರಲ್ಲಿ ಮುಂಬೈ ವಿರುದ್ಧ ಹೈದರಾಬಾದ್ ಪರ)ಹಾಗೂ ಶಿವಂ ಭಾಂಬ್ರಿ(2019ರಲ್ಲಿ ಹಿಮಾಚಲಪ್ರದೇಶದ ವಿರುದ್ದ ಚಂಡಿಗಡ ಪರ)ಈ ಹಿಂದೆ ಶತಕ ಗಳಿಸಿದ್ದರು. ಅಮಿತ್ ಅವರು ಇದೀಗ T20 ಕ್ರಿಕೆಟಿನ ಚೊಚ್ಚಲ ಪಂದ್ಯದಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್ ಗಳಿಸಿದ ಭಾರತೀಯ ಬ್ಯಾಟರ್ ಎಂಬ ಹಿರಿಮೆಗೂ ಪಾತ್ರರಾಗಿದ್ದಾರೆ. ಬರೋಡ ತಂಡವು ನಿಗದಿತ 20 ಓವರ್‌ ಗಳಲ್ಲಿ 5 ವಿಕೆಟ್‌ ಗಳ ನಷ್ಟಕ್ಕೆ 220 ರನ್ ಗಳಿಸಿದ್ದು, ಸರ್ವಿಸಸ್ ತಂಡಕ್ಕೆ 13 ರನ್‌ ಗಳಿಂದ ಸೋಲುಣಿಸಿದೆ. ಅಮಿತ್ ಈ ವರ್ಷದ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಶತಕ ಗಳಿಸಿದ 15ನೇ ಆಟಗಾರನಾಗಿದ್ದಾರೆ. ಇದು ಪಂದ್ಯಾವಳಿಯಲ್ಲಿ ದಾಖಲೆಯಾಗಿದೆ. 2018-19ರಲ್ಲಿ ಹಾಗೂ 2023-24ರಲ್ಲಿ ತಲಾ 13 ಶತಕಗಳು, 2024-25ರಲ್ಲಿ 14 ಶತಕ ದಾಖಲಾಗಿದ್ದವು. ►ಚೊಚ್ಚಲ T20 ಪಂದ್ಯದಲ್ಲಿ ಗರಿಷ್ಠ ಸ್ಕೋರ್ ಗಳಿಸಿದ ಆಟಗಾರರು 114 ರನ್-ಅಮಿತ್ ಪಾಸ್ಸಿ(ಬರೋಡ)-2025 114 ರನ್-ಬಿಲಾಲ್ ಆಸಿಫ್(ಸಿಯಾಲ್‌ಕೋಟ್ ಸ್ಟಾಲಿಯನ್ಸ್)-2015 112-ಮೊಯೀನ್ ಖಾನ್ (ಕರಾಚಿ ಡಾಲ್ಫಿನ್ಸ್)-2005 108-ಎಂ. ಸ್ಪೂರ್ಸ್(ಕೆನಡ)-2022 106-ಶಿವಂ ಭಾಂಬ್ರಿ(ಚಂಡಿಗಡ)-2019

ವಾರ್ತಾ ಭಾರತಿ 8 Dec 2025 8:25 pm

ವಿಕಲಚೇತನರ ಸೌಲಭ್ಯವನ್ನು ತಲುಪಿಸಿ : ನ್ಯಾ. ಜೈಬುನ್ನಿಸಾ

ಮಂಗಳೂರು:ವಿಕಲಚೇತನರಿಗಾಗಿ ಉಚಿತವಾಗಿ ಕಾನೂನು ನೆರವಿನ ಸೌಲಭ್ಯ ಒದಗಿಸಲಾಗಿದೆ. ಈ ಪ್ರಯೋಜನವನ್ನು ವಿಕಲಚೇತನರಿಗೆ ತಲುಪಿಸುವ ನಿಟ್ಟಿನಲ್ಲಿ ನಾಗರಿಕರು ಸ್ಪಂದಿಸಬೇಕು ಎಂದು ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಜೈಬುನ್ನಿಸಾ ಹೇಳಿದರು. ನಗರದ ಕುಲಶೇಖರ ಕಲ್ಪನೆಯಲ್ಲಿ ಐಕ್ಯಂ ವಿಕಲಚೇತನರ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾದ ವಿಕಲಚೇತನರ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿಕಲಚೇತನರಿಗೆ ಅನೇಕ ರೀತಿಯ ಸೌಲಭ್ಯಗಳನ್ನು ಸರಕಾರದಿಂದ ಒದಗಿಸಲಾಗುತ್ತಿದೆ. ಆ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳು ಶ್ರಮಿಸಬೇಕು ಎಂದು ಜೈಬುನ್ನಿಸಾ ಹೇಳಿದರು. ಜಯಶ್ರೀ ಆಸ್ಪತ್ರೆಯ ಪುನರ್ವಸತಿ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ. ಹರೀಶ್ ಎಸ್. ಕೃಷ್ಣ, ಮಂಗಳ ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲ ಡಾ. ಭರತ್ ಕೆ.ಎಚ್., ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯೆ ಚಂದ್ರಕಲಾ ಡಿ.ರಾವ್, ಡಾ. ಶೈಲಜಾ ಮಾತನಾಡಿದರು. ಸಂಸ್ಥೆಯ ಗೌರವಾಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಪ್ರಸ್ತಾವಿಕವಾಗಿ ಮಾತನಾಡಿದರು. ಸಂಸ್ಥೆಯ ಸ್ಥಾಪಕ ಅಧ್ಯಕ್ಷೆ ಕಮಲಾಕ್ಷಿ ಕುಂದರ್ ಸ್ವಾಗತಿಸಿದರು. ಟ್ರಸ್ಟಿ ಸಂತೋಷ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

ವಾರ್ತಾ ಭಾರತಿ 8 Dec 2025 8:19 pm

Bengaluru | ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಂಗಳೂರು : ನಗರದಲ್ಲಿ ಕೋರಮಂಗಲದ ತಾವರೆಕೆರೆ ಬಳಿಯ ಎಸ್.ಜಿ.ಪಾಳ್ಯದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿರುವುದು ವರದಿಯಾಗಿದೆ. ಮಗ ಮೌನೀಶ್(14), ತಾಯಿ ಸುಧಾ, ಅಜ್ಜಿ ಮುದ್ದಮ್ಮ ಮೃತರಾಗಿದ್ದು, ಸಾಲ ಹೆಚ್ಚಾಗಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮೃತರು ಮೂಲತಃ ತಮಿಳುನಾಡಿನವರಾಗಿದ್ದು, ಇತ್ತೀಚೆಗೆ ಧರ್ಮಪುರಿಯ ಒಂದು ದೇವಾಲಯಕ್ಕೆ ಹೋಗಿ ಬಂದಿದ್ದರು. ಬಾಲಕ ಮೌನೀಶ್ ಕ್ರೈಸ್ಟ್ ಶಾಲೆಯಲ್ಲಿ ಏಳನೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಸುಧಾ ಮತ್ತು ಮುದ್ದಮ್ಮ ಅವರು ಮೊದಲು ಸಣ್ಣ ಹೋಟೆಲ್‍ನಲ್ಲಿ ಬಿರಿಯಾನಿ ಮಾರಾಟ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಆದರೆ ಲಾಸ್ ಆದ ಬಳಿಕ ಚಿಪ್ಸ್ ಹಾಗೂ ಹಾಲು ಮಾರುತ್ತಿದ್ದರು. ಕೊನೆಗೆ ಮನೆ ಕೆಲಸಕ್ಕೂ ಹೋಗುತ್ತಿದ್ದರು. ಸಾಲ ಹೆಚ್ಚಾಗಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸುಧಾ ಅವರು ಕೆಲ ವರ್ಷಗಳ ಹಿಂದೆ ಪತಿಯಿಂದ ಬೇರೆಯಾಗಿದ್ದರು. ತಾಯಿ ಮುದ್ದಮ್ಮ ಜೊತೆಗೆ ಸುಧಾ ಮತ್ತು ಮೌನೀಶ್ ವಾಸಿಸುತ್ತಿದ್ದರು. ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಪೊಲೀಸರು ಮೂವರ ಮೃತದೇಹವನ್ನು ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

ವಾರ್ತಾ ಭಾರತಿ 8 Dec 2025 8:13 pm

7ನೇ ದಿನವೂ ಮುಂದುವರಿದ ಇಂಡಿಗೊ ಬಿಕ್ಕಟ್ಟು | ಸರಕಾರ ಕಠಿಣ ಕ್ರಮ ತೆಗೆದುಕೊಳ್ಳಲಿದೆ: ಕೇಂದ್ರ ವಾಯುಯಾನ ಸಚಿವ ನಾಯ್ಡು

ಹೊಸದಿಲ್ಲಿ, ಡಿ.8: ಇಂಡಿಗೊ ಬಿಕ್ಕಟ್ಟು ಏಳನೇ ದಿನವಾದ ಸೋಮವಾರವೂ ಮುಂದುವರಿದಿದ್ದು, ವಿವಿಧ ವಿಮಾನ ನಿಲ್ದಾಣಗಳಿಂದ ಸುಮಾರು 500 ಇಂಡಿಗೊ ಯಾನಗಳನ್ನು ರದ್ದುಗೊಳಿಸಲಾಗಿದೆ. ವಿಮಾನಗಳ ಕಾರ್ಯಾಚರಣೆಯಲ್ಲಿ ಬಿಕ್ಕಟ್ಟಿಗೆ ಸಂಸ್ಥೆಯ ಸಿಬ್ಬಂದಿ ನಿಯೋಜನೆ ಮತ್ತು ಆಂತರಿಕ ಯೋಜನೆಯಲ್ಲಿನ ಸಮಸ್ಯೆ ಕಾರಣವಾಗಿದೆ ಎಂದು ಸೋಮವಾರ ಹೇಳಿದ ಕೇಂದ್ರ ನಾಗರಿಕ ವಾಯುಯಾನ ಸಚಿವ ಕೆ.ರಾಮಮೋಹನ್ ನಾಯ್ಡು ಅವರು,ಯಾವುದೇ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಮತ್ತು ಸರಕಾರವು ಕಠಿಣ ಕ್ರಮವನ್ನು ಕೈಗೊಳ್ಳುತ್ತದೆ ಎಂದು ತಿಳಿಸಿದರು. ರಾಜ್ಯಸಭೆಯಲ್ಲಿ ಹಾರಾಟ ಕರ್ತವ್ಯ ಸಮಯ ಮಿತಿಗಳ (ಎಫ್‌ಡಿಟಿಎಲ್) ಮಾರ್ಗಸೂಚಿಗಳ ಕುರಿತು ಪೂರಕ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದ ನಾಯ್ಡು,‘ಇಂಡಿಗೊ ಬಿಕ್ಕಟ್ಟು ಅದರ ಸಿಬ್ಬಂದಿ ನಿಯೋಜನೆ ಮತ್ತು ಆಂತರಿಕ ಯೋಜನಾ ವ್ಯವಸ್ಥೆಗಳಲ್ಲಿನ ಸಮಸ್ಯೆಯಿಂದಾಗಿ ಉದ್ಭವಿಸಿದೆ. ಇಂಡಿಗೊ ತನ್ನ ದೈನಂದಿನ ಕಾರ್ಯಾಚರಣೆಗಳ ಮೂಲಕ ಸಿಬ್ಬಂದಿ ನಿಯೋಜನೆಯನ್ನು ನಿರ್ವಹಿಸಬೇಕಿತ್ತು. ಎಫ್‌ಡಿಟಿಎಲ್ ಸಮರ್ಪಕವಾಗಿ ಜಾರಿಗೊಳ್ಳುವುದನ್ನು ನಾವು ಖಚಿತಪಡಿಸಿಕೊಳ್ಳುತ್ತಿದ್ದೇವೆ ಮತ್ತು ಆ ವಿಷಯದಲ್ಲಿ ಯಾವುದೇ ರಾಜಿಯಿಲ್ಲ’ ಎಂದು ಹೇಳಿದರು. ಇಂಡಿಗೊ ತನ್ನ ಕಾರ್ಯಾಚರಣೆ ಬಿಕ್ಕಟ್ಟಿಗೆ ಪ್ರಮುಖ ಕಾರಣವೆಂದು ಹೇಳಿಕೊಂಡಿರುವ ನವಂಬರ್‌ನಲ್ಲಿ ಜಾರಿಗೆ ಬಂದಿದ್ದ ಎಫ್‌ಡಿಟಿಎಲ್ ನಿಯಮಗಳನ್ನು ಸಮರ್ಥಿಸಿಕೊಂಡ ನಾಯ್ಡು,ಪೈಲಟ್‌ಗಳ ಸುರಕ್ಷತೆ ಮತ್ತು ವಿಶ್ರಾಂತಿಯನ್ನು ಖಚಿತಪಡಿಸಿಕೊಳ್ಳಲು ಈ ನಿಯಮಗಳನ್ನು ತರಲಾಗಿದೆ ಎಂದು ಒತ್ತಿ ಹೇಳಿದರು. ಡಿ.1ರಂದು ಎಫ್‌ಡಿಟಿಎಲ್ ಕುರಿತು ಇಂಡಿಗೊ ಜೊತೆ ಸಭೆಯನ್ನು ನಡೆಸಲಾಗಿತ್ತು. ಅದೇ ಸಭೆಯಲ್ಲಿ ಸ್ಪಷ್ಟೀಕರಣಗಳನ್ನು ನೀಡಲಾಗಿತ್ತು,ಆದರೆ ಇಂಡಿಗೊ ಆಗ ಯಾವುದೇ ಸಮಸ್ಯೆಗಳನ್ನು ಬೆಟ್ಟು ಮಾಡಿರಲಿಲ್ಲ ಎಂದ ನಾಯ್ಡು,‘ಡಿ.3ರಂದು ಈ ಸಮಸ್ಯೆಗಳನ್ನು ನಾವು ಗಮನಿಸಿದ್ದೆವು ಮತ್ತು ಸಚಿವಾಲಯವು ತಕ್ಷಣ ಮಧ್ಯ ಪ್ರವೇಶಿಸಿತ್ತು’ ಎಂದರು. ‘ನಾವು ವಿಮಾನ ನಿಲ್ದಾಣಗಳಲ್ಲಿನ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದೇವೆ ಮತ್ತು ಸಂಬಂಧಿಸಿದ ಎಲ್ಲರೊಂದಿಗೆ ಸಮಾಲೋಚಿಸಿದ್ದೇವೆ. ಆ ಎರಡು ದಿನಗಳಲ್ಲಿ ಹೇಗೆ ಸಮಸ್ಯೆಗಳು ತೆರೆದುಕೊಂಡಿದ್ದವು ಎನ್ನುವುದನ್ನು ನೀವು ನೋಡಿದ್ದೀರಿ. ಪ್ರಯಾಣಿಕರು ಬಹಳಷ್ಟು ತೊಂದರೆಗಳನ್ನು ಎದುರಿಸಿದರು. ನಾವು ಈ ಸ್ಥಿತಿಯನ್ನು ಲಘುವಾಗಿ ಪರಿಗಣಿಸುವುದಿಲ್ಲ. ವಿಚಾರಣೆ ನಡೆಯುತ್ತಿದೆ. ಈ ಪ್ರಕರಣಕ್ಕೆ ಮಾತ್ರವಲ್ಲ,ಎಲ್ಲ ವಿಮಾನಯಾನ ಸಂಸ್ಥೆಗಳಿಗೆ ಎಚ್ಚರಿಕೆಯ ಪಾಠವಾಗುವಂತೆ ನಾವು ಅತ್ಯಂತ ಕಠಿಣ ಕ್ರಮವನ್ನು ತೆಗೆದುಕೊಳ್ಳುತ್ತೇವೆ’ ಎಂದು ಸಚಿವರು ಹೇಳಿದರು. ಸುಮಾರು 500 ಯಾನಗಳು ರದ್ದು ಇಂಡಿಗೋ ಸೋಮವಾರ 138 ನಗರಗಳ ಪೈಕಿ 137 ನಗರಗಳಿಗೆ ತನ್ನ 2,300 ದೈನಂದಿನ ಯಾನಗಳ ಪೈಕಿ 1,802 ಯಾನಗಳನ್ನು ನಿರ್ವಹಿಸಲಿದ್ದು,ಇಂದಿನ ಮಟ್ಟಿಗೆ ಸುಮಾರು 500 ಯಾನಗಳನ್ನು ಅದು ರದ್ದುಗೊಳಿಸಿದೆ ಎಂದು ನಾಗರಿಕ ವಾಯುಯಾನ ಸಚಿವಾಲಯವು ತಿಳಿಸಿದೆ. ಇಂಡಿಗೊ ಸುಮಾರು 9,000 ಬ್ಯಾಗ್‌ಗಳ ಪೈಕಿ 4,500ನ್ನು ಪ್ರಯಾಣಿಕರಿಗೆ ತಲುಪಿಸಿದೆ ಮತ್ತು ಉಳಿದ ಬ್ಯಾಗ್‌ಗಳನ್ನು ಮುಂದಿನ 36 ಗಂಟೆಗಳಲ್ಲಿ ಅವರಿಗೆ ಹಸ್ತಾಂತರಿಸಲಿದೆ ಎಂದು ಸಚಿವಾಲಯವು ಹೇಳಿಕೆಯಲ್ಲಿ ತಿಳಿಸಿದೆ. ಸಂಸ್ಥೆಯು ಡಿ.1ರಿಂದ ಡಿ.7ರವರೆಗಿನ 5,86,705 ಟಿಕೆಟ್‌ಗಳನ್ನು ರದ್ದುಗೊಳಿಸಿದ್ದು,ಒಟ್ಟು 569.65 ಕೋ.ರೂ.ಗಳನ್ನು ಮರುಪಾವತಿಸಿದೆ. ನ.21ರಿಂದ ಡಿ.7ರ ಅವಧಿಗೆ ಒಟ್ಟು 9,55,591 ಟಿಕೆಟ್‌ಗಳನ್ನು ರದ್ದುಗೊಳಿಸಿದ್ದು, 827 ಕೋ.ರೂ.ಗಳನ್ನು ಮರುಪಾವತಿಸಿದೆ ಎಂದೂ ಸಚಿವಾಲಯವು ತಿಳಿಸಿದೆ. ಸರಕಾರದಿಂದ ಹೇಳಿಕೆಗೆ ಪ್ರತಿಪಕ್ಷಗಳ ಆಗ್ರಹ ಇಂಡಿಗೊ ವಿಮಾನಯಾನಗಳಲ್ಲಿ ಉಂಟಾಗಿರುವ ಅಡಚಣೆಗಳು ಮತ್ತು ದೇಶಾದ್ಯಂತ ವಿವಿಧ ವಿಮಾನ ನಿಲ್ದಾಣಗಳಲ್ಲಿ ಜನರು ಎದುರಿಸುತ್ತಿರುವ ಅನಾನುಕೂಲಗಳ ಹಿನ್ನೆಲೆಯಲ್ಲಿ ತಾನು ಏನು ಮಾಡುತ್ತಿದ್ದೇನೆ ಎನ್ನುವುದನ್ನು ಸರಕಾರವು ದೇಶಕ್ಕೆ ತಿಳಿಸಬೇಕು ಎಂದು ಪ್ರತಿಪಕ್ಷಗಳು ಸೋಮವಾರ ಲೋಕಸಭೆಯಲ್ಲಿ ಆಗ್ರಹಿಸಿದವು. ನಾಗರಿಕ ವಾಯುಯಾನ ಸಚಿವ ಕೆ.ರಾಮಮೋಹನ್ ನಾಯ್ಡು ಅವರು ಇಂದು ಅಥವಾ ನಾಳೆ ರಾಜ್ಯಸಭೆಯಲ್ಲಿ ಈ ವಿಷಯ ಕುರಿತು ವಿವರವಾದ ಹೇಳಿಕೆಯನ್ನು ನೀಡಲಿದ್ದಾರೆ ಎಂದು ಸ್ಪೀಕರ್ ಓಂ ಬಿರ್ಲಾ ತಿಳಿಸಿದರು. ಪ್ರಶ್ನೆವೇಳೆಯ ಬಳಿಕ ಮಾತನಾಡಿದ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಉಪನಾಯಕ ಗೌರವ್ ಗೊಗೊಯಿ ಅವರು, ಕಳೆದ ಹಲವಾರು ದಿನಗಳಿಂದ ದೇಶದ ವಿಮಾನ ನಿಲ್ದಾಣಗಳಲ್ಲಿ ಜನರು ತೊಂದರೆಗಳನ್ನೇಕೆ ಎದುರಿಸುತ್ತಿದ್ದಾರೆ ಎನ್ನುವುದನ್ನು ಈ ಸದನಕ್ಕೆ ಸರಕಾರವು ತಿಳಿಸಬೇಕು. ಅವರಲ್ಲಿ ಡಯಾಲಿಸಿಸ್ ರೋಗಿಗಳಿದ್ದಾರೆ,ತಮ್ಮ ಮನೆಗಳಲ್ಲಿ ಮದುವೆ ಕಾರ್ಯಕ್ರಮಗಳಿರುವವರು ಇದ್ದಾರೆ, ತಮ್ಮ ಹಿರಿಯರನ್ನು ಕಾಣುವ ತವಕದಲ್ಲಿರುವ ಜನರು ಇದ್ದಾರೆ. ವಿಮಾನ ನಿಲ್ದಾಣಗಳಲ್ಲಿ ಅವ್ಯವಸ್ಥೆ ಸೃಷ್ಟಿಯಾಗಿದೆ ಎಂದು ಹೇಳಿದರು. ಹವಾಯಿ ಚಪ್ಪಲಿಗಳನ್ನು ಧರಿಸಿದವರು ಕೂಡ ವಿಮಾನಗಳಲ್ಲಿ ಪ್ರಯಾಣಿಸುತ್ತಾರೆ ಎಂದು ನಮಗೆ ತಿಳಿಸಲಾಗಿತ್ತು. ಆದರೆ ಪ್ರಯಾಣ ಶುಲ್ಕಗಳು 20,000 ರೂ.ಗೆ ಏರಿಕೆಯಾಗಿವೆ. ವಿಮಾನ ನಿಲ್ದಾಣಗಳಲ್ಲಿ ಕಾಫಿಯನ್ನು 250 ರೂ.ಗಳಿಗೆ ಮಾರಾಟ ಮಾಡಲಾಗುತ್ತಿದೆ ಮತ್ತು ವಿಮಾನಗಳು ವಿಳಂಬಗೊಂಡಿವೆ. ಹೀಗಾಗಿ ತಾನೇನು ಮಾಡುತ್ತಿದ್ದೇನೆ ಎನ್ನುವುದನ್ನು ಸರಕಾರವು ನಮಗೆ ತಿಳಿಸಬೇಕು’ ಎಂದರು. ಇಂಡಿಗೊ ಅವ್ಯವಸ್ಥೆ ಕುರಿತು ಸರಕಾರದ ವಿರುದ್ಧ ದಾಳಿ ನಡೆಸುತ್ತಿರುವ ಪ್ರತಿಪಕ್ಷಗಳು, ಈ ಅಭೂತಪೂರ್ವ ಬಿಕ್ಕಟ್ಟಿಗೆ ಅದನ್ನು ದೂಷಿಸುತ್ತಿವೆ. ಈ ನಡುವೆ ಇಂಡಿಗೊ ಬಿಕ್ಕಟ್ಟು ಸದ್ಯಕ್ಕೆ ಅಂತ್ಯಗೊಳ್ಳುವ ಲಕ್ಷಣಗಳು ಕಂಡು ಬರುತ್ತಿಲ್ಲ. ಸೋಮವಾರ ಒಂದೇ ದಿನ ದಿಲ್ಲಿ ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳಿಂದ 250ಕ್ಕೂ ಅಧಿಕ ಇಂಡಿಗೊ ಯಾನಗಳನ್ನು ರದ್ದುಗೊಳಿಸಲಾಗಿತ್ತು.

ವಾರ್ತಾ ಭಾರತಿ 8 Dec 2025 8:11 pm

ಏಳು ಮಂದಿ ಐಎಎಸ್ ಅಧಿಕಾರಿಗಳಿಗೆ ಬಡ್ತಿ

ಬೆಂಗಳೂರು : ರಾಜ್ಯ ಸರಕಾರವು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕರೀಗೌಡ, ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಡಾ. ಶಿವಶಂಕರ ಎನ್ ಸೇರಿ 7 ಮಂದಿ ಐಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ಆದೇಶ ಹೊರಡಿಸಿದೆ. ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತ ಬಸವರಾಜೇಂದ್ರ ಎಚ್, ಕಾರ್ಮಿಕ ಇಲಾಖೆ ಆಯುಕ್ತ ಡಾ. ಎಚ್.ಎನ್. ಗೋಪಾಲ ಕೃಷ್ಣ, ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಡಾ. ಶಿವಶಂಕರ ಎನ್., ಕೃಷಿ ಇಲಾಖೆಯ ವಸಂತ್ ಕುಮಾರ್ ಪಿ. ಅವರಿಗೆ ಬಡ್ತಿ ನೀಡಲಾಗಿದೆ. ರಾಜ್ಯ ಸರಕಾರವು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕರೀಗೌಡ, ಕೃಷಿ ಮಾರುಕಟ್ಟೆ ಇಲಾಖೆಯ ನಿರ್ದೇಶಕ ಶಿವಾನಂದ ಕಾಪಶಿ, ವಿಜಯನಗರದ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರಿಗೆ ಬಡ್ತಿ ನೀಡಲಾಗಿದೆ.

ವಾರ್ತಾ ಭಾರತಿ 8 Dec 2025 8:07 pm

ಸಾಲಿಗ್ರಾಮ ಪ.ಪಂ: ಬೀದಿನಾಯಿಗಳ ಉಪಟಳ ತಡೆಯಲು ಕ್ರಮ

ಉಡುಪಿ: ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿರುವ ಖಾಸಗಿ ಹಾಗೂ ಸರಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್‌ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ತಮ್ಮ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿನಾಯಿ ವಾಸವಿದ್ದಲ್ಲಿ ಪರಿಶೀಲಿಸಿ, ಕೂಡಲೇ ಅದರ ಸಂಖ್ಯೆ ಯನ್ನು ಸಾಲಿಗ್ರಾಮ ಪಟ್ಟಣ ಪಂಚಾಯತ್‌ನ ಮುಖ್ಯಾಧಿಕಾರಿಗೆ ನೀಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ತಮ್ಮ ಸಂಸ್ಥೆಯ ಅವರಣದಲ್ಲಿ ಬೀದಿನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರದೇಶ ನಿಯಂತ್ರಿಸಲು ಕ್ರಮ ವಹಿಸಬೇಕು. ನಗರ ಸ್ಥಳೀಯ ಸಂಸ್ಥೆಯಿಂದ ಬೀದಿ ನಾಯಿಯನ್ನು ಸ್ಥಳಾಂತರಿಸಲು ಸಹಕರಿಸಲು ಹಾಗೂ ಅವುಗಳ ಪ್ರವೇಶ ನಿರ್ಬಂಧಿಸುವುದರ ಮೇಲ್ವಿಚಾರಣೆ ನಡೆಸಲು ಒಬ್ಬ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಬೇಕು. ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ತಮ್ಮ ಸಂಸ್ಥೆಯ ವ್ಯಾಪ್ತಿ ಯಲ್ಲಿ ಪುನಹ ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟಲ್ಲಿ ಅವನ್ನು ಸ್ಥಳಾಂತರಿಸುವ ವೆಚ್ಚವನ್ನು ತಮ್ಮ ಸಂಸ್ಥೆಯಿಂದ ವಸೂಲಿ ಮಾಡಲಾಗುವುದು. ಈ ಆದೇಶವನ್ನು ಉಲ್ಲಂಘನೆ ಮಾಡಿದ್ದಲ್ಲಿ ನ್ಯಾಯಾಲಯದ ಆದೇಶದಂತೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಪ್ರಕಟಣೆ ತಿಳಿಸಿದೆ.

ವಾರ್ತಾ ಭಾರತಿ 8 Dec 2025 8:02 pm

ಕಲಬುರಗಿ | ಬಿಜೆಪಿ ಶಾಸಕ ಡಾ.ಅವಿನಾಶ್ ಜಾಧವ್ ಅವರು ಸತ್ಯ ಅರಿತು ಮಾತನಾಡಲಿ : ರಾಘವೇಂದ್ರ ಗುತ್ತೇದಾರ

ಕಲಬುರಗಿ: ಚಿಂಚೋಳಿ ಮತಕ್ಷೇತ್ರದ ಬಿಜೆಪಿ ಶಾಸಕ ಡಾ.ಅವಿನಾಶ ಜಾಧವ್ ಅವರು ಯಾವುದೇ ಹೇಳಿಕೆ ನೀಡುವ ಮೊದಲು ಸತ್ಯ ಅರಿತು ವಿವೇಚನೆಯಿಂದ ಹೇಳಿಕೆ ನೀಡುವುದನ್ನು ಕಲಿಯಲಿ, ಕಾಳಗಿ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಲಿ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಕಾಳಗಿ ತಾಲೂಕಾಧ್ಯಕ್ಷ ರಾಘವೇಂದ್ರ ಗುತ್ತೇದಾರ ತಿಳಿಸಿದ್ದಾರೆ. ಕಾಳಗಿ ಪಟ್ಟಣದ ಪ್ರವಾಸಿ ಮುದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಂಚೋಳಿ ಶಾಸಕ ಡಾ.ಅವಿನಾಶ ಜಾಧವ್ ಅವರು ಕಾಳಗಿ ಪಟ್ಟಣದಲ್ಲಿ ಪ್ರಜಾ ಸೌಧ ಕಟ್ಟಡ ಕಾಮಗಾರಿ ಸ್ಥಗಿತ ಆಗಿದೆ ಎಂಬ ಹೇಳಿಕೆ ಸತ್ಯಕ್ಕೆ ದೂರವಾಗಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕರು ಇಂತಹ ಹೇಳಿಕೆ ನೀಡಿ ಜನರ ದಿಕ್ಕು ತಪ್ಪಿಸುವ ಮೊದಲು ಅದರ ಬಗ್ಗೆ ತಿಳಿದು ಮಾತನಾಡಬೇಕು ಎಂದರು. ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಅವರು ಮುತುವರ್ಜಿ ವಹಿಸಿ ಕಲಬುರಗಿ ಉಸ್ತುವಾರಿ ಸಚಿವ ಹಾಗೂ ಕಂದಾಯ ಸಚಿವರಿಗೆ ಮನವರಿಕೆ ಮಾಡಿ ಪ್ರಜಾಸೌಧ ಕಟ್ಟಡಕ್ಕೆ ಅನುಮೋದನೆ ಪಡೆದಿರುತ್ತಾರೆ. ಅದ್ದರಿಂದ ಉಸ್ತುವಾರಿ ಸಚಿವರಿಂದ ಅಡಿಗಲ್ಲು ಮಾಡಿಸಬೇಕೆಂಬ ಇಚ್ಛೆಯಿಂದ ಸಚಿವರ ದಿನಾಂಕ ನಿಗದಿಯಾಗದ ಕಾರಣ ಕೆಲಸ ಮುಂದೂಡಲಾಗಿದೆ. ಇದರ ಅರಿವಿಲ್ಲದೆ ಶಾಸಕ ಡಾ.ಅವಿನಾಶ ಜಾಧವ್ ಅವರು ಪ್ರಜಾಸೌಧ ಸ್ಥಗಿತವಾಗಿದೆ ಎಂದು ಹೇಳಿರುವುದು ಸರಿಯಲ್ಲ ಎಂದು ಹೇಳಿದರು. ಕಾಳಗಿ ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ವೇದಪ್ರಕಾಶ ಮೋಟಗಿ, ಮುಖಂಡ ಸಂತೋಷ ಪತಂಗೆ ಮಾತನಾಡಿದರು. ಯುವ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ ಡೊಣ್ಣೂರು, ಜಿಯಾವೋದ್ದಿನ ಸೌದಾಗರ್, ಪಪಂ ಸದಸ್ಯರಾದ ಶರಣಪ್ಪ ಬೇಲೂರು, ಬಸವರಾಜ ಮಡಿವಾಳ, ದತ್ತು ಗುತ್ತೇದಾರ, ಸಿದ್ರಾಮಪ್ಪ ಕಮಲಾಪೂರ, ಮೆಹಬೂಬ್ ಬೇಗ ಬಿಜಾಪೂರ, ಮುಖಂಡರಾದ ರವಿದಾಸ ಪತಂಗೆ, ಅಸ್ಲಾಂ ಬೇಗಂ ಬಿಜಾಪೂರ, ಸಂತೋಷ ಕಡಬೂರ, ತಾಯಪ್ಪ ದಂಡಗೋಳಕರ್, ರೇವಣಸಿದ್ದ ಕಲಶೆಟ್ಟಿ, ಬಸವರಾಜ ಕಲಶೆಟ್ಟಿ, ಸಂಗಮೇಶ ಬಡಿಗೇರ್, ವೀರಯ್ಯಸ್ವಾಮಿ ಮಠಪತ್ತಿ, ಸಿದ್ಧಲಿಂಗ ಗುತ್ತೇದಾರ, ಹೈದ‌ರ್ ಹರಸೂರ, ಅಮೃತರಾವ್ ಪಾಟೀಲ್, ರಾಜಕುಮಾರ ಗುತ್ತೇದಾರ, ಅವಿನಾಶ ಗುತ್ತೇದಾರ ಇತರರು ಇದ್ದರು.

ವಾರ್ತಾ ಭಾರತಿ 8 Dec 2025 8:01 pm

ಸಿಸೆರಿಯನ್ ಹೆರಿಗೆ ಹೆಚ್ಚಳಕ್ಕೆ ಕಾರಣವೇನು : ಆರೋಗ್ಯ ಸಚಿವರು ಕೊಟ್ಟ ಸ್ಪಷ್ಟನೆ

Health Minister Update on caesarean: ಇತ್ತೀಚೆಗೆ ಹೆಚ್ಚುತ್ತಿರುವ ಸಿಸೆರಿಯನ್ ಡೆಲಿವರಿ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ತಿನಲ್ಲಿ ಸ್ಪಷ್ಟನೆಯನ್ನು ನೀಡಿದ್ದಾರೆ. ವಿಧಾನಮಂಡಲದ ಚಳಿಗಾಲದ ಅಧಿವೇಶನ ಇಂದು (ಡಿ. 8) ಬೆಳಗಾವಿಯಲ್ಲಿ ಆರಂಭಗೊಂಡಿದೆ. ಕೆಲವು ಬಾರಿ ಸಿಸೆರಿಯನ್ ಮಾಡಲೇಬೇಕಾದ ಅನಿವಾರ್ಯತೆ ಇರುತ್ತದೆ ಎಂದು ಸಚಿವರು ಹೇಳಿದ್ದಾರೆ.

ವಿಜಯ ಕರ್ನಾಟಕ 8 Dec 2025 7:58 pm

Mangaluru | ವಿದೇಶದಲ್ಲಿದ್ದಾಗ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪ: ಮುಂಬೈ ವಿಮಾನ ನಿಲ್ದಾಣದಲ್ಲಿ ಆರೋಪಿಯ ಬಂಧನ

ಮಂಗಳೂರು: ವಿದೇಶದಲ್ಲಿದ್ದಾಗ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಭಾವ ಉಂಟಾಗುವ ಪೋಸ್ಟ್ ಹಾಕಿದ ಆರೋಪಿ ಫೆಲಿಕ್ಸ್ ಎಡ್ವರ್ಡ್ ಮಥಾಯಿಸ್ (56) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 2024ರ ಫೆಬ್ರವರಿಯಲ್ಲಿ ಭಗವದ್ಗೀತೆ ಮತ್ತು ಮಹಿಳೆಯರ ಬಗ್ಗೆ ಫೆಲಿಕ್ಸ್ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹರಿಯಬಿಟ್ಟಿದ್ದ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯು ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದಾಗ ಪೋಸ್ಟ್ ಹಾಕಿದ್ದ. ಮೂಲತಃ ಮುಂಬೈಯ ಚಾರ್ಕೋಪ್ ನಿವಾಸಿಯಾಗಿದ್ದ ಈತನ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ಲುಕ್‌ಔಟ್ ನೋಟಿಸ್ ಜಾರಿಗೊಳಿಸಿದ್ದರು. ಈತ ಮುಂಬೈ ಸಹರಾ ವಿಮಾನ ನಿಲ್ದಾಣಕ್ಕೆ ಬಂದಿದ್ದನ್ನು ಇಮಿಗ್ರೇಶನ್ ಅಧಿಕಾರಿಗಳು ಮಾಹಿತಿ ನೀಡಿದ್ದರು. ಅದರಂತೆ ಡಿ.5ರಂದು ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಿ ಮಂಗಳೂರಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈತನ ಪಾಸ್‌ಪೋರ್ಟ್ ಮುಟ್ಟುಗೋಲು ಹಾಕಿಕೊಳ್ಳಲು ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿದೆ. ಈ ಪ್ರಕರಣದಲ್ಲಿ ಇನ್ನೋರ್ವ ಆರೋಪಿ ಎವಿಜಿನ್ ಜಾನ್ ಡಿಸೋಜ (57) ಎಂಬಾತನನ್ನು 2024ರ ಆ.11ರಂದು ಬಂಧಿಸಲಾಗಿತ್ತು ಎಂದು ಪೊಲೀಸ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ವಾರ್ತಾ ಭಾರತಿ 8 Dec 2025 7:56 pm

ಗ್ರಾಮ ಪಂಚಾಯಿತಿ ʼಬಿ ಖಾತಾʼ ರದ್ದು

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ 2025ರ ನಿಯಮಗಳ ಪ್ರಕಾರ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಇನ್ನು ಮುಂದೆ ʼಬಿ ಖಾತಾʼ ಸೃಷ್ಟಿಸಲು ಅವಕಾಶ ಇರುವುದಿಲ್ಲ. ಗ್ರಾಮೀಣ ಪ್ರದೇಶದ ಗ್ರಾಮ ಪಂಚಾಯಿತಿಗಳಲ್ಲಿ ಪ್ರಸ್ತುತ ಕಟ್ಟಿಕೊಂಡಿರುವ ಲಕ್ಷಾಂತರ ಮನೆಗಳಿಗೆ ಮುಂದಿನ ವರ್ಷದಿಂದ ಮನೆ ತೆರಿಗೆ ಕೂಡ ಅವಕಾಶ ಇರುವುದಿಲ್ಲ. 11B ಆಸ್ತಿಗಳಿಗೆ ಜನ ಈಗ ಕಂದಾಯ ಕಟ್ಟುತ್ತಿದ್ದರು ಅದರಿಂದ ಪ್ರಯೋಜನ ಇರಲಿಲ್ಲ. ಆದರೆ ಗ್ರಾಮ ಮಲೆನಾಡಿನ ಬಹುತೇಕ ಗ್ರಾಮ ಪಂಚಾಯತಿಗಳಿಗೆ ತೆರಿಗೆ ಸಂಗ್ರಹ ಆಗುತ್ತಿರುವುದು ಬಿ ಖಾತಾ ತೆರಿಗೆಯಿಂದ. ಬಿ ಖಾತಾ ತೆರಿಗೆ ರದ್ದಾಗಿರುವುದರಿಂದ ಗ್ರಾಮ ಪಂಚಾಯತಿಗಳಿಗೆ ಲಕ್ಷಾಂತರ ತೆರಿಗೆ ನಷ್ಟವಾಗಲಿದೆ. ಉದಾಹರಣೆಗೆ ಕೊಪ್ಪ ತಾಲ್ಲೂಕು ಜಯಪುರ ಗ್ರಾಮ ಪಂಚಾಯತ್‌ ಪ್ರಸಕ್ತ ವರ್ಷದಲ್ಲಿ ಕಟ್ಟಡಗಳ ತೆರಿಗೆಯಿಂದ ಅಂದಾಜು 32 ಲಕ್ಷ ಆದಾಯ ನಿರೀಕ್ಷೆ ಮಾಡಿದೆ. ಪಂಚಾಯತ್‌ ವ್ಯಾಪ್ತಿಯಲ್ಲಿ ಇರುವ 2165 ಕಟ್ಟಡಗಳಲ್ಲಿ ಕೇವಲ 40 ಶೇಕಡಾ ಕಟ್ಟಡಗಳಿಗೆ ಮಾತ್ರ ಇ ಸ್ವತ್ತು ಆಗಿದೆ ಉಳಿದ 60 ಶೇಕಡಾ ಮನೆಗಳು ಬಿ ಖಾತಾ ಆಗಿ ಉಳಿದುಕೊಂಡಿದೆ. ಇದರಿಂದ ಜಯಪುರ ಗ್ರಾಮ ಪಂಚಾಯತ್‌ ತನ್ನ ಸ್ವಂತ ಕಟ್ಟಡಗಳ ತೆರಿಗೆಯಿಂದ ಸುಮಾರು 18 ಲಕ್ಷ ಆದಾಯ ಕಳೆದುಕೊಳ್ಳಲಿದೆ. ಪಂಚಾಯತ್ ರಾಜ್ 17-10-2025 ಅಧಿಸೂಚನೆ ಹೊರಡಿಸಿದ ನಿಯಮದಂತೆ ಬಿ ಖಾತಾ ಎಂಬುದು ಅಸ್ತಿತ್ವದಲ್ಲಿ ಇರುವುದಿಲ್ಲ. ಇದರಿಂದ ಅನೇಕ ಪಂಚಾಯಿತಿಗಳ ಅಭಿವೃದ್ಧಿಗೆ ಭಾರೀ ಹಿನ್ನಡೆ ಆಗಲಿದೆ. ಗ್ರಾಮ ಪಂಚಾಯತಿಗಳು ಇನ್ನೂ ಮುಂದೆ ಸರಕಾರಿ ಭೂಮಿ, ಅರಣ್ಯ ಭೂಮಿ, ಸರಕಾರದ ಒಡೆತನದಲ್ಲಿರುವ ಅಥವಾ ನಿಯಂತ್ರಣದಲ್ಲಿರುವ ಯಾವುದೇ ಸ್ಥಳ, ಯಾವುದೇ ಶಾಸನ ಬದ್ಧ ಸ್ಥಳ ಅಥವಾ ಸಂಸ್ಥೆಗೆ ಸೇರಿರುವ ಆಸ್ತಿಯಾಗಿದ್ದರೆ ಅಂತಹ ಆಸ್ತಿಗಳನ್ನು ತಂತ್ರಾಂಶದಿಂದ ಕೈಬಿಡುವುದು ಮತ್ತು ಅಂತಹ ಆಸ್ತಿಗಳಿಂದ ತೆರಿಗೆಯನ್ನು ಪಡೆಯತಕ್ಕದ್ದಲ್ಲ ಎಂದು ನಿಯಮ ಜಾರಿಗೆ ತಂದಿದೆ. ಈ ನಿಯಮಗಳ ಅನುಸಾರ ಕೊಪ್ಪ ತಾಲ್ಲೂಕಿನ 22 ಗ್ರಾಮ ಪಂಚಾಯಿತಿಗಳಲ್ಲಿ 30 ಸಾವಿರ ಕಟ್ಟಡಗಳಲ್ಲಿ ಕೇವಲ 10 ಸಾವಿರ ಕಟ್ಟಡಗಳಿಗೆ ಇ ಸ್ವತ್ತು ಸೃಷ್ಟಿಯಾಗಿದೆ. ನರಸಿಂಹರಾಜಪುರ ತಾಲ್ಲೂಕಿನ 25 ಸಾವಿರ ಕಟ್ಟಡಗಳಲ್ಲಿ 8 ಸಾವಿರ ಕಟ್ಟಡಗಳಿಗೆ ಇ ಸ್ವತ್ತು ರಚಿಸಲಾಗಿದೆ. ಶೃಂಗೇರಿ ತಾಲ್ಲೂಕಿನ 9 ಸಾವಿರ ಮನೆಗಳಲ್ಲಿ ಶೇಕಡಾ 30 ರಿಂದ 35 ಕಟ್ಟಡಗಳಿಗೆ ಮಾತ್ರ ಇ ಸ್ವತ್ತು ನಿಗದಿಯಾಗಿದೆ. ಕೊಪ್ಪ ತಾಲ್ಲೂಕಿನ 22 ಪಂಚಾಯಿತಿಗಳಿಂದ ಕಟ್ಟಡಗಳ ತೆರಿಗೆ ನಿರೀಕ್ಷೆ 3 ಕೋಟಿ. ಹೊಸ ನಿಯಮದಂತೆ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳು ಸುಮಾರು 2 ಕೋಟಿ ರೂಪಾಯಿ ತೆರಿಗೆ ಕಳೆದುಕೊಳ್ಳಲಿದೆ. ನರಸಿಂಹರಾಜಪುರ ತಾಲ್ಲೂಕಿನ 14 ಗ್ರಾಮ ಪಂಚಾಯಿತಿಗಳಲ್ಲಿ ಪ್ರಸಕ್ತ ವರ್ಷದ ಕಟ್ಟಡಗಳ ತೆರಿಗೆ ನಿರೀಕ್ಷೆ ಸುಮಾರು 2.75 ಕೋಟಿ. ಹೊಸ ನಿಯಮದಂತೆ ಸುಮಾರು 1.50 ಕೋಟಿ ರೂಪಾಯಿ ಆದಾಯ ನಷ್ಟವಾಗಲಿದೆ. ಸರಕಾರ ಈ ನಷ್ಟವನ್ನು ಭರಿಸಲು ಗ್ರಾಮ ಪಂಚಾಯಿತಿಗಳಿಗೆ ಯಾವುದೇ ಪರ್ಯಾಯ ಆರ್ಥಿಕ ಮೂಲ ಕಂಡು ಕೊಂಡಿಲ್ಲ. ಅರಣ್ಯ ಕಾಯ್ದೆ ಕಗ್ಗಟ್ಟಿನಿಂದ ಹೊಸದಾಗಿ ಗ್ರಾಮ ಠಾಣ ಅಥವಾ ಹೊಸ ಕಂದಾಯ ಗ್ರಾಮಗಳನ್ನು ಸೃಷ್ಟಿಸಲು ಅಸಾಧ್ಯವಾಗಿದೆ. ಅರಣ್ಯ ಇಲಾಖೆಯ ಕಾಯ್ದೆಗಳನ್ನು ಕೇಂದ್ರ ಮತ್ತು ರಾಜ್ಯ ಸರಕಾರ ಸಡಿಲಗೊಳಿಸಿದರೆ ಗ್ರಾಮೀಣ ಪ್ರದೇಶದ ಬಹುತೇಕ ಆಸ್ತಿಗಳಿಗೆ ದಾಖಲೆ ನೀಡಲು ಗ್ರಾಮ ಪಂಚಾಯತಿಗಳಿಗೆ ಅವಕಾಶ ದೊರಕಲಿದೆ. ಜನರಿಗೆ ದಾಖಲೆ ಮತ್ತು ಪಂಚಾಯತಿಗಳಿಗೆ ತೆರಿಗೆ ಎರಡೂ ಲಭ್ಯವಾಗಲಿದೆ. ಸಮಸ್ಯೆ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಶಾಸಕರು ಮತ್ತು ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಿ ಹೋಗಿರುವ ಸದಸ್ಯರು ಪರಿಷತ್ತಿನಲ್ಲಿ ಧ್ವನಿ ಎತ್ತಿ ರಾಜ್ಯದ ಗ್ರಾಮ ಪಂಚಾಯತಿಗಳಿಗೆ ನ್ಯಾಯ ಒದಗಿಸಬೇಕು. ಎಂ.ಯೂಸುಫ್ ಪಟೇಲ್

ವಾರ್ತಾ ಭಾರತಿ 8 Dec 2025 7:52 pm

ಸದನ ಹೈಲೈಟ್ಸ್: ಬೆಳಗಾವಿಯಲ್ಲಿ ರಮೇಶ್ ಜಾರಕಿಹೊಳಿಯನ್ನು ಕಂಡ ವಿಜಯೇಂದ್ರ ರಿಯಾಕ್ಷನ್ ಹೇಗಿತ್ತು?

ಬೆಳಗಾವಿ ಅಧಿವೇಶನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ರೆಬೆಲ್ ತಂಡದ ರಮೇಶ್ ಜಾರಕಿಹೊಳಿ ಭೇಟಿಯಾಗಿದ್ದಾರೆ. ಇಬ್ಬರು ನಾಯಕರು ಕೆಲಹೊತ್ತು ಮಾತುಕತೆ ನಡೆಸಿದ್ದಾರೆ. ಬಿಜೆಪಿ ಬಣ ರಾಜಕೀಯ ನಡುವೆ ಈ ಭೇಟಿ ಮಹತ್ವ ಪಡೆದಿದೆ. ರೆಬೆಲ್ಸ್ ತಂಡ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆಗೆ ಒತ್ತಾಯಿಸುತ್ತಿದ್ದು, ಹಲವಾರು ಭಾರಿ ದೆಹಲಿಗೂ ಭೇಟಿ ಕೊಟ್ಟಿದೆ. ಸದ್ಯ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಮೇಲಿನ ಚರ್ಚೆಗೆ ಬಿಜೆಪಿ ಬಿಗಿ ಪಟ್ಟು ಹಿಡಿದಿದೆ. ಶಾಲೆಗಳ ದುಸ್ಥಿತಿಯ ಬಗ್ಗೆಯೂ ಮಾತನಾಡುವ ಸಾಧ್ಯತೆ ಇದೆ.

ವಿಜಯ ಕರ್ನಾಟಕ 8 Dec 2025 7:43 pm

ಕೊರಗರ ಸಾಂಪ್ರದಾಯಿಕ ಕಲ್ಲು ಗಣಿಗಾರಿಕೆ ಕಸಿಯುವ ಯತ್ನ ಆರೋಪ: ಬ್ರಹ್ಮಾವರ ತಾಲೂಕು ಕಚೇರಿ ಎದುರು ಕೊರಗರಿಂದ ಪ್ರತಿಭಟನೆ

ಬ್ರಹ್ಮಾವರ: ಸ್ಥಳೀಯ ಕೊರಗ ಕುಟುಂಬಗಳು ಹಲವು ದಶಕದಿಂದ ಹೊಟ್ಟೆಪಾಡಿಗಾಗಿ ನಡೆಸಿಕೊಂಡು ಬಂದಿರುವ ಸಾಂಪ್ರದಾಯಿಕ ಕಲ್ಲು ಗಣಿಗಾರಿಕೆಯನ್ನು ಅನ್ಯರು ಕಬಳಿಸಲು ಪ್ರಯತ್ನಿಸಿ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ- ಕೇರಳ ನೇತೃತ್ವದಲ್ಲಿ ಗರಿಕೆಮಠ, ಅಚ್ಲಾಡಿಯ ಕೊರಗ ಕುಟುಂಬಗಳು ಸೋಮವಾರ ಬ್ರಹ್ಮಾವರ ತಾಲೂಕು ಆಡಳಿತ ಕೇಂದ್ರದ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಅಧ್ಯಕ್ಷೆ ಸುಶೀಲಾ ನಾಡ, ಉಡುಪಿ ಜಿಲ್ಲೆಯ ಯಡ್ತಾಡಿ ಗ್ರಾಮದ ಸರ್ವೆ ನಂರ್ಬ 145ರಲ್ಲಿ 1.84 ಎಕ್ರೆ ಜಾಗದಲ್ಲಿ ಪರಿಶಿಷ್ಠ ಪಂಗಡದ ರಮಣಿ, ನರ್ಸಿ, ಐತ, ಚಂದ್ರ, ಭಾಸ್ಕರ್ ಪಾರಂಪರಿಕವಾಗಿ ಕಟ್ಟಡ ಕಲ್ಲು ಗಣಿಗಾರಿಕೆ ಮಾಡಿಕೊಂಡು ಬಂದಿದ್ದಾರೆ. ಅಲ್ಲದೆ ಪೂರ್ವಿಕರ ಕಾಲದಿಂದಲೂ ಈ ಇಲ್ಲಿ ಮನೆಯನ್ನು ಕಟ್ಟಿಕೊಂಡು ವಾಸವಿದ್ದಾರೆ. ಆದರೆ ಇದೀಗ ಈ ಜಾಗದಲ್ಲಿ ಕಟ್ಟಡಕಲ್ಲು ಎತ್ತೆಚ್ಚವಾಗಿ ಸಿಗುವುದ್ದರಿಂದ ಸ್ಥಳೀಯ ಒಂದಷ್ಟು ಮಂದಿ ರಾಜಕೀಯ ಪ್ರಭಾವ ಬಳಸಿ ಆ ಜಾಗವನ್ನು ತಮ್ಮದಾಗಿಸಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ದೂರಿದರು. ಅದಕ್ಕಾಗಿ ಕಲ್ಲು ಕೋರೆಯ ಪರವಾನಿಗೆ ಅರ್ಜಿಯನ್ನು ಇಲಾಖೆಗೆ ಸಲ್ಲಿಸ ಲಾಗಿದೆ. ಅವರಿಗೆ ಈ ಜಾಗದಲ್ಲಿ ಕಲ್ಲು ಗಣಿಗಾರಿಕೆ ಮಾಡಲು ಅವಕಾಶ ಮಾಡಿಕೊಟ್ಟರೆ ಮೂಲ ನಿವಾಸಿಗಳಾದ ಕೊರಗ ಸಮುದಾಯದ ಮುಗ್ದ ಜನರಿಗೆ ಅನ್ಯಾಯವಾಗುತ್ತದೆ. ಜಿಲ್ಲಾಧಿಕಾರಿ ಯಾವುದೇ ಕಾರಣಕ್ಕೂ ಅವರಿಗೆ ಕಲ್ಲು ಗಣಿಗಾರಿಕೆ ಮಾಡಲು ಅವಕಾಶ ನೀಡಬಾರದು ಎಂದು ಅವರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಕೊರಗ ಸಮಾಜದ ಮುಖಂಡರಾದ ಬೊಗ್ರ ಕೊಕ್ಕರ್ಣೆ, ಕೆ.ಪುತ್ರನ್ ಕೊರಗ, ಶೀನ ಕೊರಗ, ದಿವಾಕರ ಕಳ್ತೂರು, ವೆಂಕಟೇಶ ಮಧುವನ, ಪ್ರೇಮಾ, ಸಂತ್ರಸ್ತ ಹಕ್ಕುದಾರರಾದ ರಮಣಿ, ಮಂಜುಳಾ, ಸುಜಾತಾ, ಚಂದ್ರ, ನರ್ಸಿ ಮತ್ತಿತ್ತರು ಉಪಸ್ಥಿತರಿದ್ದರು. ಗಣಿ ಇಲಾಖೆ ಅಧಿಕಾರಿ ಭೇಟಿ: ಧರಣಿ ಅಂತ್ಯ ಪ್ರತಿಭಟನಾ ಸ್ಥಳಕ್ಕೆ ಉಡುಪಿ ಗಣಿ ಇಲಾಖೆಯ ಅಧಿಕಾರಿ ಹಾಜೀರ ಭೇಟಿ ನೀಡಿ ಧರಣಿನಿರತರಿಂದ ಮಾತುಕತೆ ನಡೆಸಿದರು. ಕೊರಗ ಸಮುದಾಯದಿಂದ ನೀಡಿರುವ ಆಕ್ಷೇಪಣೆ ಕುರಿತು ಈಗಾಗಲೇ ತಹಶಿಲ್ದಾರ್ ಮೂಲಕ ವರದಿ ಪಡೆದಿದ್ದು ನಿಮ್ಮ ಹೇಳಿಕೆ ದಾಖಲಿಸಲಾಗಿದೆ ಹಾಗೂ ವಸ್ತುಸ್ಥಿತಿ ಬಗ್ಗೆ ಕೂಡ ಉಲ್ಲೇಖಿಸಲಾಗಿದ್ದು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ನಡೆಯುವ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹಾಜೀರ ತಿಳಿಸಿದರು. ಕಾನೂನಿನನ್ವಯ ಅರ್ಜಿ ಹಾಕಿ ಪರವಾನಿಗೆ ಪಡೆದು ಗಣಿಗಾರಿಕೆ ನಡೆಸಬೇಕು. ಕೊರಗ ಕುಟುಂಬಗಳು ಕೂಡ ಅರ್ಜಿ ಸಲ್ಲಿಸಲು ಅವಕಾಶವಿದೆ. ಆದುದರಿಂದ ಈ ಪ್ರತಿಭಟನೆ ಕೈಬಿಡಬೇಕು ಎಂದು ಮನವಿ ಮಾಡಿದರು. ಅದರಂತೆ ಕೊರಗರು ತಮ್ಮ ಪ್ರತಿಭಟನೆಯನ್ನು ಕೈಬಿಟ್ಟರು. ‘ಕೊರಗ ಸಮಾಜದ ಮೇಲೆ ಬಲಾಢ್ಯರು, ರಾಜಕೀಯ ಪ್ರಾಬಲ್ಯರಿಂದ ನಿರಂತರ ದಾಳಿ, ದೌರ್ಜನ್ಯ ನಡೆಯುತ್ತಿದೆ. ಅದರ ಮುಂದುವರಿದ ಭಾಗ ಎನ್ನುವಂತೆ ಇದೀಗ ಸಾಂಪ್ರದಾಯಿಕ ಕಲ್ಲುಗಣಿಗಾರಿಕೆ ಮಾಡುವ ಆದಿವಾಸಿ ಸಮುದಾಯದವರನ್ನು ಒಕ್ಕಲೆಬ್ಬಿಸುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ. ಅಧಿಕಾರಿಗಳು ತಿಳಿಸಿದಂತೆ ಕಾನೂನುಬದ್ಧವಾಗಿ ಅರ್ಜಿ ಸಲ್ಲಿಸಲಾಗುತ್ತದೆ. ಜೀವನ ನಿರ್ವಹಣೆಗಾಗಿ ಆದಿವಾಸಿ ಸಮುದಾಯಕ್ಕೆ ನ್ಯಾಯಯುತವಾಗಿ ಪರವಾನಿಗೆ ನೀಡಬೇಕು. ಪ್ರಭಾವಗಳಿಗೆ ಮಣಿದು ಕೊರಗ ಕುಟುಂಬ ಹೊರತುಪಡಿಸಿ ಇತರರಿಗೆ ಪರವಾನಿಗೆ ನೀಡಿದಲ್ಲಿ ಅಮರಣಾಂತ ಉಪವಾಸ ನಡೆಸಲಾಗುತ್ತದೆ’ - ಸುಶೀಲಾ ನಾಡ, ಅಧ್ಯಕ್ಷರು, ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ‘ರಮಣಿ ಹಾಗೂ ಕುಟುಂಬ ಹಲವಾರು ವರ್ಷಗಳಿಂದ ಕ್ವಾರಿ ಕೆಲಸ ಮಾಡುತ್ತಿದ್ದು ಅವರ ಜೀವನಕ್ಕೆ ಇದೇ ಆಧಾರವಾಗಿದೆ. ಪಾರಂಪರಿಕವಾಗಿ ಮಾಡುವ ಕಲ್ಲು ಗಣಿ ಕಾರ್ಯವನ್ನು ಮುಂದುವರೆಸಲು ಅಗತ್ಯ ಕ್ರಮವಹಿಸಿ ಮೂಲನಿವಾಸಿಗಳು ಬದುಕಲು ಅವಕಾಶ ಕಲ್ಪಿಸಬೇಕು’ -ಬೊಗ್ರ ಕೊರಗ, ಕೊರಗ ಸಮುದಾಯದ ಹಿರಿಯ ಮುಖಂಡರು

ವಾರ್ತಾ ಭಾರತಿ 8 Dec 2025 7:36 pm

ದಿನಕ್ಕೆ 1 ಲಕ್ಷ ಡಾಲರ್ ಫೀಸ್ ಆದರೂ ಸೈ, ನಮಗೆ ಭಾರತೀಯ ಟೆಕ್ಕಿಗಳೇ ಬೇಕು: ಅಮೆರಿಕ ಕಂಪನಿ ಸಿಟಿಒ!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಠಿಣ ವೀಸಾ ನೀತಿಗಳು ಮತ್ತು ಪ್ರಸ್ತಾಪಿತ 1 ಲಕ್ಷ ಡಾಲರ್ ವೀಸಾ ಶುಲ್ಕದ ನಿಯಮಕ್ಕೆ ತಂತ್ರಜ್ಞಾನ ಕಂಪನಿಯೊಂದರ ಸಹ-ಸಂಸ್ಥಾಪಕರು ಸೆಡ್ಡು ಹೊಡೆದಿದ್ದಾರೆ. ಎಚ್-1ಬಿ ವೀಸಾಕ್ಕೆ ವಾರ್ಷಿಕ 1 ಲಕ್ಷ ಡಾಲರ್ ಶುಲ್ಕ ವಿಧಿಸಿದರೂ, ಅಷ್ಟೇ ಏಕೆ ದಿನಕ್ಕೆ 1 ಲಕ್ಷ ಡಾಲರ್ ಕಟ್ಟಬೇಕಾಗಿ ಬಂದರೂ ನಾವು ಭಾರತೀಯ ಉದ್ಯೋಗಿಗಳನ್ನು ನೇಮಿಸಿಕೊಳ್ಳುವುದನ್ನು ನಿಲ್ಲಿಸುವುದಿಲ್ಲ ಎಂದು 'ಮೆಟಾವ್ಯೂ ಎಐ' ಕಂಪನಿಯ ಸಿಟಿಒ ಶಹರಿಯಾರ್ ತಾಜ್‌ಬಕ್ಷ್ ಹೇಳಿಕೆ ನೀಡಿದ್ದಾರೆ. ಕೌಶಲ್ಯಯುತ ಉದ್ಯೋಗಿಗಳೇ ಕಂಪನಿಯ ಆಸ್ತಿ ಎಂದು ಅವರು ಪ್ರತಿಪಾದಿಸಿದ್ದಾರೆ.

ವಿಜಯ ಕರ್ನಾಟಕ 8 Dec 2025 7:36 pm

ಮದುವೆ ರದ್ದು ಘೋಷಣೆ ಮಾಡಿದ ಮರುದಿನವೇ ಮೈದಾನದಲ್ಲಿ ಸಿದ್ಧತೆ; ಸ್ಮೃತಿ ಮಂದಾನ ಬದ್ಧತೆಗೆ ಬಹುಪರಾಕ್

India W Vs Sri Lanka W T20 Series- ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂದಾನ ಅವರು ದೇಶಕ್ಕಾಗಿ ಕ್ರಿಕೆಟ್ ಆಡುವುದಕ್ಕೆ ಮೊದಲ ಆದ್ಯತೆ ನೀಡಿದ್ದಾರೆ. ತಮ್ಮ ವಿವಾಹ ರದ್ದಾದ ಪ್ರಕಟಣೆ ಮಾಡಿದ ಮರುದಿನವೇ ನೆಟ್ಸ್ ಗಿಳಿದು ಕ್ರಿಕೆಟ್ ಅಭ್ಯಾಸವನ್ನು ಪುನರಾರಂಭಿಸಿದ್ದಾರೆ. ವೈಯಕ್ತಿಕ ಜೀವನದ ನೋವಿನ ನಡುವೆಯೂ ದೇಶಕ್ಕಾಗಿ ಆಡಲು ಸಿದ್ಧವಾಗುತ್ತಿರುವ ಅವರ ಬದ್ಧತೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು ತಮ್ಮ ಗಮನ ಸಂಪೂರ್ಣವಾಗಿ ಕ್ರಿಕೆಟ್ ಮೇಲೆಯೇ ಇದೆ ಎಂದು ತಿಳಿಸಿದ್ದಾರೆ.

ವಿಜಯ ಕರ್ನಾಟಕ 8 Dec 2025 7:28 pm

ʼಜನತೆಯ ನಡಿಗೆ ಉತ್ತಮ ಬದುಕಿನ ಕಡೆಗೆʼ: ದ.ಕ.ಜಿಲ್ಲೆಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಸಿಪಿಎಂ ರ‍್ಯಾಲಿ

ಮಂಗಳೂರು: ಶಿಕ್ಷಣ, ಆರೋಗ್ಯ, ಉದ್ಯೋಗ, ವಸತಿ ಸಹಿತ ದ.ಕ. ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಬೇಕು, ಅಭಿವೃದ್ದಿಯ ಫಲ ಜನಸಾಮಾನ್ಯರಿಗೂ ತಲುಪುವಂತೆ ಯೋಜನೆಗಳನ್ನು ರೂಪಿಸಬೇಕು ಇತ್ಯಾದಿ ಬೇಡಿಕೆಗಳನ್ನು ಮುಂದಿಟ್ಟು ಸಿಪಿಎಂ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ಱಜನ ಸಮಾನ್ಯರ ನಡಿಗೆ ಉತ್ತಮ ಬದುಕಿನ ಕಡೆಗೆ ಘೋಷಣೆಯಡಿ ನಗರದ ಅಂಬೇಡ್ಕರ್ ವೃತ್ತದಿಂದ ಮಿನಿ ವಿಧಾನ ಸೌಧದವರಗೆ ರ‍್ಯಾಲಿ ಮತ್ತು ಬಹಿರಂಗ ಸಭೆ ಸೋಮವಾರ ನಡೆಯಿತು. ಬಹಿರಂಗ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ದ.ಕ. ಜಿಲ್ಲೆಯಲ್ಲಿ ಅಭಿವೃದ್ದಿಯಲ್ಲಿ ಜನ ಸಾಮಾನ್ಯರು, ಕಾರ್ಮಿಕರು, ದಲಿತರು, ಆದಿವಾಸಿಗಳನ್ನು ಹೊರಗಿಡಲಾಗಿದೆ. ಖಾಸಗಿ ಮೆಡಿಕಲ್ ಕಾಲೇಜುಗಳು, ಕಾರ್ಪೊರೇಟ್ ಆಸ್ಪತ್ರೆಗಳು, ಖಾಸಗಿ ಶಿಕ್ಷಣ ಸಂಸ್ಥೆಗಳು, ರಿಯಲ್ ಎಸ್ಟೇಟ್ ಲಾಬಿಗಳು ಜಿಲ್ಲೆಯ ರಾಜಕಾರಣದ ಮೇಲೆ ಪೂರ್ತಿ ಹಿಡಿತ ಸಾಧಿಸಿವೆ. ಜಿಲ್ಲೆಯ ಜನಪ್ರತಿನಿಧಿಗಳು ಲಾಬಿಗಳ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ ಎಂದು ಆರೋಪಿಸಿದರು. ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಪೂರ್ಣ ಪ್ರಮಾಣದ ಖಾಸಗೀಕರಣದಿಂದ ಜನ ಸಾಮಾನ್ಯರು ಆರೋಗ್ಯ, ಶಿಕ್ಷಣ ಸೇವೆಯಿಂದ ವಂಚಿತರಾಗುವ ಸ್ಥಿತಿ ಉಂಟಾಗಿದೆ. ಸರಕಾರಿ ಕ್ಯಾನ್ಸರ್, ಹೃದಯದ ಆಸ್ಪತ್ರೆಗಳಾದ ಕಿದ್ವಾಯಿ, ಜಯದೇವ ಆಸ್ಪತ್ರೆಯ ಘಟಕಗಳು ಮಂಗಳೂರಿಗೆ ಮರೀಚಿಕೆಯಾಗಿದೆ. ವೆನ್ಲಾಕ್ ಸಹಿತ ಸರಕಾರಿ ಆಸ್ಪತ್ರೆಗಳು ಖಾಸಗಿ ಮೆಡಿಕಲ್ ಕಾಲೇಜುಗಳ ಪಾಲಾಗುತ್ತಿವೆ ಎಂದು ವಿಷಾದಿಸಿದರು. ಉದ್ಯೋಗ ವಂಚಿತ ವಿದ್ಯಾವಂತ ಯುವಜನತೆ ಬೇರೆ ದಾರಿಕಾಣದೆ ಪ್ರತಿ ಮನೆಯಿಂದಲೂ ಬೆಂಗಳೂರು, ಮುಂಬೈ, ಗಲ್ಫ್ ರಾಷ್ಟ್ರಗಳತ್ತ ವಲಸೆ ಹೋಗುತ್ತಲೇ ಅಲ್ಲಿ ಅತಂತ್ರ ಬದುಕು ಕಾಣುತ್ತಿದ್ದಾರೆ. ಅಂತಹವರ ಕುರಿತು ಜಿಲ್ಲೆಯ ರಾಜಕಾರಣಿಗಳು ಸೊಲ್ಲೆತ್ತುತ್ತಿಲ್ಲ. ಇಂತಹ ಗಂಭೀರ ಸಮಸ್ಯೆಗಳನ್ನು ಬಗೆಹರಿಸುವ ಕುರಿತು ಚಿಂತಿಸಬೇಕಾದ ಶಾಸಕರು ಕಂಬಳ, ಹುಲಿ ಕುಣಿತ, ದೋಸೆ ಹಬ್ಬ, ಆಹಾರ ಮೇಳ ಎಂದು ಆಡಂಬರದ ಉತ್ಸವಗಳಲ್ಲಿ ಕಾಲಹರಣ ಮಾಡುತ್ತಿದ್ದಾರೆ. ಪರಾಜಿತ ಅಭ್ಯರ್ಥಿಗಳು ಶಾಸಕರ ವೈಫಲ್ಯಗಳ ವಿರುದ್ಧ ಜನತೆಗೆ ಧ್ವನಿಯಾಗುವ ಬದಲಿಗೆ ಕಂಬಳ, ಹುಲಿಕುಣಿತಗಳನ್ನು ಆಯೋಜಿಸುವುದರಲ್ಲಿ ಬಿಜೆಪಿಯೊಂದಿಗೆ ಸ್ಪರ್ಧೆಗೆ ಬಿದ್ದಿದ್ದಾರೆ ಎಂದು ಆರೋಪಿಸಿದರು. ಸಿಪಿಎಂ ದ.ಕ. ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಸುನಿಲ್ ಕುಮಾರ್ ಬಜಾಲ್ ಮಾತನಾಡಿ ಜಿಲ್ಲೆಯಲ್ಲಿ ವಸತಿ ರಹಿತರಿಗೆ ಮನೆ ನಿವೇಶನ ನೀಡದೆ ಎರಡು ದಶಕ ದಾಟಿದೆ. ನಗರ ಪಾಲಿಕೆಯಲ್ಲಿ ಮನೆ ರಹಿತ ಬಡವರಿಗೆ ಹಕ್ಕು ಪತ್ರ ನೀಡಿ ಎಂಟು ವರ್ಷಗಳಾದರೂ ವಸತಿ ಯೋಜನೆಗೆ ಅಡಿಗಲ್ಲು ಹಾಕುವ ಕಾರ್ಯವೂ ನಡೆದಿಲ್ಲ, ಮಂಗಳೂರು ಎನ್ನುವುದು ರಿಯಲ್ ಎಸ್ಟೇಟ್, ಟಿಡಿಆರ್ ದಂಧೆಕೋರರ ಪಾಲಿಗೆ ಸ್ವರ್ಗವಾಗಿ ಮಾರ್ಪಟ್ಟಿದೆ. ಕರಾವಳಿ ಜಿಲ್ಲೆಯ ಆರ್ಥಿಕತೆಗೆ ದೊಡ್ಡ ಕೊಡುಗೆ ನೀಡುತ್ತಿರುವ ಮಂಗಳೂರಿನ ಮೀನುಗಾರಿಕಾ ಧಕ್ಕೆ ಗಬ್ಬೆದ್ದು ನಾರುತ್ತಿದೆ. ಇಲ್ಲಿ ಮೀನುಗಾರರು, ವ್ಯಾಪಾರಿಗಳು, ಕಾರ್ಮಿಕರನ್ನು ಆಳುವ ಸರಕಾರಗಳು ನಿಕೃಷ್ಟವಾಗಿ ಕಾಣುತ್ತಿದೆ. ಮೀನುಗಾರ ಸಮಸ್ಯೆಗಳನ್ನು ಇಲ್ಲಿ ಕೇಳುವವರೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾರ್ಯದರ್ಶಿ ಮಂಡಳಿ ಸದಸ್ಯ ಡಾ. ಕೃಷ್ಣಪ್ಪಕೊಂಚಾಡಿ ಮಾತನಾಡಿ ಜಿಲ್ಲೆಯ ಜನಸಂಖ್ಯೆಯಲ್ಲಿ ಹದಿನಾರು ಪ್ರತಿಶತ ಇರುವ ಆದಿವಾಸಿಗಳು, ಅರಣ್ಯವಾಸಿಗಳು, ದಲಿತರು, ಅಲೆಮಾರಿ ಸಮುದಾಯಗಳನ್ನು ಜಿಲ್ಲಾಡಳಿತ, ಜನಪ್ರತಿನಿಧಿಗಳು ಪೂರ್ತಿ ಕಡೆಗಣಿಸಿದೆ. ಯಾವುದೇ ಅಭಿವೃದ್ದಿ ಕಾರ್ಯಗಳು, ಯೋಜನೆಗಳಲ್ಲಿ ಈ ಸಮುದಾಯಗಳನ್ನು ಒಳಗೊಳಿಸುವುದಿಲ್ಲ ಎಂದು ಹೇಳಿದರು. ಸಿಪಿಎಂ ಜಿಲ್ಲಾ ಮುಖಂಡರಾದ ಬಿ.ಎಂ.ಭಟ್, ವಸಂತ ಆಚಾರಿ, ಜಯಂತಿ ಶೆಟ್ಟಿ, ಸುಕುಮಾರ್, ಸದಾಶಿವ ದಾಸ್ ಮಾತನಾಡಿದರು. ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕೆ. ಯಾದವ ಶೆಟ್ಟಿ ಬಹಿರಂಗ ಸಭೆಯ ಅಧ್ಯಕ್ಷತೆ ವಹಿಸಿದ್ದರು. ನಗರ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು ಕಾರ್ಯಕ್ರಮ ನಿರೂಪಿಸಿದರು.      

ವಾರ್ತಾ ಭಾರತಿ 8 Dec 2025 7:28 pm

ಕಲಬುರಗಿ | ಗುಲ್ಬರ್ಗಾ ವಿವಿಯ ಕನ್ನಡ ಅಧ್ಯಯನ ಕೇಂದ್ರಕ್ಕೆ ಬೂಕರ್ ವಿಜೇತೆ ದೀಪಾ ಬಸ್ತಿ ಭೇಟಿ

ಕಲಬುರಗಿ: ಅಂತರರಾಷ್ಟ್ರೀಯ ಖ್ಯಾತಿ ಪಡೆದ ಬರಹಗಾರ್ತಿ, ಅನುವಾದಕಿ, ಬೂಕರ್ ಪ್ರಶಸ್ತಿ ಪುರಸ್ಕೃತರಾದ ದೀಪಾ ಬಸ್ತಿ ಅವರು ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಗೆ ಭೇಟಿ ನೀಡಿ, ಸಂಸ್ಥೆಯಲ್ಲಿ ಕಲ್ಯಾಣ ಕರ್ನಾಟಕದ ಬರಹಗಾರರ ಗ್ಯಾಲರಿಯನ್ನು ವೀಕ್ಷಿಸಿ ಸಂತಸ ವ್ಯಕ್ತಪಡಿಸಿ, ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ನಂತರ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರು ಮತ್ತು ಕನ್ನಡ ಸ್ನಾತಕ ಅಧ್ಯಯನ ಮಂಡಳಿಯ ಅಧ್ಯಕ್ಷರಾದ ಪ್ರೊ.ಎಚ್.ಟಿ. ಪೋತೆಯವರು ದೀಪಾ ಬಸ್ತಿ ಯವರನ್ನು ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭದಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಪ್ರೊ.ವಿಕ್ರಮ್ ವಿಸಾಜಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಗುವಿವಿಯ ಕಲಾ ನಿಕಾಯದ ನೂತನ ಡೀನ್ ರಾಗಿ ಆಯ್ಕೆಯಾದ ಪ್ರೊ.ಎಚ್.ಟಿ.ಪೋತೆ ಅವರನ್ನು ಕನ್ನಡ ಸ್ನಾತಕ ಅಧ್ಯಯನ ಮಂಡಳಿಯ ವತಿಯಿಂದ ಸತ್ಕರಿಸಲಾಯಿತು. ಗುಲ್ಬರ್ಗಾ ವಿಶ್ವವಿದ್ಯಾಲಯದ ಪದವಿ ಕಾಲೇಜುಗಳ ಕನ್ನಡ ಅಧ್ಯಾಪಕರ ಸಂಘದ ಅಧ್ಯಕ್ಷ, ಕನ್ನಡ ಸ್ನಾತಕ ಅಧ್ಯಯನ ಮಂಡಳಿಯ ಸದಸ್ಯ ಡಾ.ಖಾಜಾವಲಿ ಈಚನಾಳ, ಅಧ್ಯಾಪಕರ ಸಂಘದ ಉಪಾಧ್ಯಕ್ಷ, ಕನ್ನಡ ಸ್ನಾತಕ ಅಧ್ಯಯನ ಮಂಡಳಿ ಸದಸ್ಯ ಡಾ. ಪಂಡಿತ್ ಬಿ.ಕೆ, ಗುವಿವಿಯ ಉರ್ದು ವಿಭಾಗದ ಮುಖ್ಯಸ್ಥರಾದ ಪ್ರೊ.ಅಬ್ದುಲ ರಬ್ ಉಸ್ತಾದ್, ಕನ್ನಡ ಸ್ನಾತಕ ಅಧ್ಯಯನ ಮಂಡಳಿಯ ಸದಸ್ಯರಾದ ಪ್ರೊ. ಶ್ರೀಶೈಲ್ ನಾಗರಾಳ, ಪ್ರೊ. ಸೂರ್ಯಕಾಂತ ಸುಜಾತ, ಪ್ರೊ. ಅಮೃತ ಕಟಕೆ, ಡಾ. ಸುಜಾತಾ ಚೆಲುವಾದಿ, ಕನ್ನಡ ಅಧ್ಯಯನ ಸಂಸ್ಥೆಯ ಆಧ್ಯಾಪಕರು ಹಾಗೂ ಇತರೆ ಭಾಷಾ ವಿಭಾಗಗಳ ಅತಿಥಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅಧ್ಯಾಪಕರಾದ ಡಾ.ಎಂ.ಬಿ ಕಟ್ಟಿ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

ವಾರ್ತಾ ಭಾರತಿ 8 Dec 2025 7:26 pm

ಕಲಬುರಗಿ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸ್ಕಾಂ ಕಚೇರಿ ಎದುರು ರೈತರ ಪ್ರತಿಭಟನೆ

ಕಲಬುರಗಿ: ಸುಟ್ಟ ವಿದ್ಯುತ್‌ ಪರಿವರ್ತಕಗಳನ್ನು(ಟಿ.ಸಿ) ನಿಗದಿತ ಕಾಲಮಿತಿಯಲ್ಲಿ ಬದಲಾಯಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಘಟಕದ ವತಿಯಿಂದ ನಗರದ ಜೆಸ್ಕಾಂ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ರಾತ್ರಿ ಸಮಯದಲ್ಲಿ ತ್ರಿಫೇಸ್‌ ವಿದ್ಯುತ್‌ ಪೂರೈಸುವ ಬದಲು ಹಗಲು ಹೊತ್ತಿನಲ್ಲಿ 12 ಗಂಟೆ ವಿದ್ಯುತ್‌ ಕೊಡಬೇಕು, ಸುಟ್ಟ ವಿದ್ಯುತ್‌ ಟಿ.ಸಿ.ಗಳನ್ನು 24 ಗಂಟೆಗಳಲ್ಲಿ ಬದಲಾಯಿಸಬೇಕು ಎಂದು ಆಗ್ರಹಿಸಿದರು. ವಿದ್ಯುತ್ ಲೋಡ್ ಹೆಚ್ಚಳದಿಂದ ಪದೇ ಪದೇ ಟಿಸಿಗಳು ಸುಡುವುದನ್ನು ತಪ್ಪಿಸಲು ಹೆಚ್ಚುವರಿ ಟಿಸಿಗಳನ್ನು ಅಳವಡಿಸಬೇಕು, ಕೃಷಿ ಪಂಪ್‌ ಸೆಟ್ ಗಳಿಗೆ ಸ್ಮಾರ್ಟ್ ಮೀಟ‌ರ್ ಅಳವಡಿಸುವ ನಿರ್ಧಾರದಿಂದ ಹಿಂದೆ ಸರಿಯಬೇಕು, ವಿದ್ಯುತ್ ಖಾಸಗೀಕರಣ ಮಸೂದೆ ಹಿಂಪಡೆಯಬೇಕು, ರೈತರ ಹೊಲಗಳಲ್ಲಿ ಜೋತು ಬಿದ್ದ ತಂತಿ ಬಿಗಿಯಬೇಕು, ಬಾಗಿದ ಹಾಗೂ ಶಿಥಿಲಗೊಂಡ ಕಂಬಗಳ ದುರಸ್ತಿಗೆ ಕ್ರಮವಹಿಸಬೇಕು, ಬೆಳೆಗಳಲಿದ್ದ ಟಿ.ಸಿ.ಗಳ ಸ್ಥಳಾಂತರ ಮಾಡಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯ ಸ್ಥಳಕ್ಕೆ ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ್ ಹರವಾಳ ಹಾಗೂ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಬಾಜಪೇಯಿ ಬಂದು ರೈತರ ಮನವಿಯನ್ನು ಸ್ವೀಕರಿಸಿದರು. ಬಳಿಕ ಮಾತನಾಡಿದ ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ್, ಟಿಸಿಗಳ ಸ್ಥಳಾಂತರ ಸೇರಿದಂತೆ ವಿವಿಧ ಬೇಡಿಕೆಗಳನ್ನು ವ್ಯವಸ್ಥಾಪಕರ ಜೊತೆ ಮಾತನಾಡಿ ಕ್ರಮ ವಹಿಸಲಾಗುವುದು ಎಂದು ರೈತರಿಗೆ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಿದ್ದಪ್ಪ ಕಲಶೆಟ್ಟಿ, ದಿಲೀಪ್‌ ನಾಗೂರೆ, ಬಾಬು ಮೇಳಕುಂದಿ, ಸಾಯಬಣ್ಣ ಕೊರಬಾ ಸೇರಿದಂತೆ ಇತರ ರೈತರು ಹಾಜರಿದ್ದರು.

ವಾರ್ತಾ ಭಾರತಿ 8 Dec 2025 7:23 pm

ಯಾದಗಿರಿ | ವಕ್ಫ್ ಬೋರ್ಡ್‌ ಅಧಿಕಾರಿಗಳ ಕಾರ್ಯ ಇತರರಿಗೆ ಮಾದರಿ: ಪಂಪನಗೌಡ

ಯಾದಗಿರಿ: ಸತತ ಶ್ರಮ ಹಾಕಿ ವಕ್ಫ್ ಆಸ್ತಿಗಳನ್ನು ಉಮ್ಮಿದ್ ಪೋರ್ಟಲ್ ನಲ್ಲಿ ಅಪ್ಲೋಡ್ ಮಾಡುವ ಮೂಲಕ ದೇಶದಲ್ಲಿಯೇ ಕರ್ನಾಟಕ ರಾಜ್ಯ ಮೊದಲ ಸ್ಥಾನದಲ್ಲಿ ಇದೆ. ಈ ಕೆಲಸದಲ್ಲಿ ಗಿರಿಜಿಲ್ಲೆಯಲ್ಲಿ ಅತಿ ಹೆಚ್ಚು ಆಸ್ತಿಗಳನ್ನು ಅಪ್ಲೋಡ್ ಮಾಡಿದ ಅಧಿಕಾರಿಗಳ ಕಾರ್ಯ ಇತರರಿಗೆ ಮಾದರಿ ಎಂದು ಯುವ ಕಾಂಗ್ರೆಸ್ ನಾಯಕ ಪಂಪನಗೌಡ ಪಾಟೀಲ್ ತುನ್ನೂರು ಹೇಳಿದರು. ಸೋಮವಾರ ಇಲ್ಲಿನ ವಕ್ಫ್ ಬೋರ್ಡ್ ಕಚೇರಿಗೆ ಭೇಟಿ ನೀಡಿ ಇಲಾಖೆ ಜಿಲ್ಲಾಮಟ್ಟದ ಅಧಿಕಾರಿ ಝರಿನಾ ಬೇಗಂ, ಎಫ್ ಡಿಎ ಶಾಜಿಯಾ ಅಂಜು ಹಾಗೂ ಸರ್ವೆ ಅಧಿಕಾರಿ ಸಲಿಂ ಪಾಷಾ, ಎಸ್‌ಡಿಎ ಮುಹಮ್ಮದ್ ಶಾನವಾಜ್, ಡಿಇಓ ಮಹಮ್ಮದ್ ಹನೀಫ್, ಸಾಧಿಕ್ ಶೇಕ್ ಹಾಗೂ ಕಮರ್ ಶೇಕ್ ಹಾಗೂ ಅಟೆಂಡರ್ ಸೈಯದ್ ಮೀರ್ ಅವರಿಗೆ ಸನ್ಮಾನ ಮಾಡಿ ಮಾತನಾಡಿದರು. ಈ ವೇಳೆ ಮಹಮ್ಮದ್ ಯಾಕುಬ್ ಸಿರವಾಳ, ಮುಸ್ತಾಕ್ ಅಲಿ ಯಡ್ಡಳ್ಳಿ ಹಾಗೂ ಶಫಿ ಇಂಡಿಕರ್ ಹಾಗೂ ಇತರರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 8 Dec 2025 7:10 pm

Mangaluru | ಬೈಕಂಪಾಡಿ ರಿಕ್ಷಾ ನಿಲ್ದಾಣದ ಬಳಿ 2 ವರ್ಷದ ಮಗು ಪತ್ತೆ

ಮಂಗಳೂರು: ನಗರದ ಬೈಕಂಪಾಡಿ ರಿಕ್ಷಾ ನಿಲ್ದಾಣದ ಬಳಿ ಅಂದಾಜು 2 ವರ್ಷದ ಗಂಡು ಮಗು ಪತ್ತೆಯಾಗಿದೆ. ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ನಗರದ ಬೋಂದೆಲ್ ಕೃಷ್ಣ ನಗರ ಸರ್ಕಾರಿ ವಿಶೇಷ ದತ್ತು ಸಂಸ್ಥೆಯಲ್ಲಿ ದಾಖಲಿಸಲಾಗಿದೆ. ಈ ಮಗುವಿನ ವಾರಸುದಾರರು ಇದ್ದಲ್ಲಿ 60 ದಿನದೊಳಗೆ ಸೂಕ್ತ ದಾಖಲೆಗಳೊಂದಿಗೆ ಪಡೀಲ್ ಪ್ರಜಾಸೌಧ ಕಟ್ಟಡದಲ್ಲಿರುವ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ (ದೂ.ಸಂ: 0824-2440004) ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

ವಾರ್ತಾ ಭಾರತಿ 8 Dec 2025 7:09 pm

ʻನೆಹರುರನ್ನು ಟೀಕೆ ಮಾಡಿದ್ದು ಸಾಕು, ನಿರುದ್ಯೋಗ-ಬೆಲೆ ಏರಿಕೆ ಬಗ್ಗೆ ಮಾತಾಡಿʼ: ಕೇಂದ್ರಕ್ಕೆ ಪ್ರಿಯಾಂಕಾ ಚಾಟಿ

ನೆಹರು ಅವರು ದೇಶಕ್ಕಾಗಿ ಜೈಲಿನಲ್ಲಿ ಇದ್ದರು. ದೇಶಕ್ಕಾಗಿ ಸೇವೆ ಸಲ್ಲಿಸಿದರು. ದೇಶಕ್ಕಾಗಿ ಮಡಿದರು. ಅವರ ಮೇಲೆ ಇನ್ನು ಎಷ್ಟು ಟೀಕೆ, ಅವಮಾನ ಮಾಡಬೇಕು ಎಂದು ತೀರ್ಮಾನಿಸಿದ್ದೀರೋ ಅದನ್ನೆಲ್ಲ ಪಟ್ಟಿ ಮಾಡಿ ಒಂದು ದಿನ ಚರ್ಚೆ ಮಾಡಿಬಿಡೋಣ. ಇಲ್ಲಿಗೆ ಸಾಕು. ನಿರುದ್ಯೋಗ, ರಾಷ್ಟ್ರದಲ್ಲಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಮಾತನಾಡೋಣ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಅವರು ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ವಿಜಯ ಕರ್ನಾಟಕ 8 Dec 2025 7:04 pm

ಕಸಾಪ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದ 14 ಆರೋಪಗಳ ವಿಚಾರಣೆ ಪೂರ್ಣ : ಹೈಕೋರ್ಟ್‌ಗೆ ರಾಜ್ಯ ಸರಕಾರದ ಮಾಹಿತಿ

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದ 17 ಆರೋಪಗಳಲ್ಲಿ 14 ಆರೋಪಗಳ ವಿಚಾರಣೆ ಪೂರ್ಣಗೊಂಡಿದ್ದು, ಉಳಿದ 3 ಆರೋಪಗಳ ಕುರಿತ ವಿಚಾರಣೆಯನ್ನು 10 ದಿನಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ರಾಜ್ಯ ಸರಕಾರ ಹೈಕೋರ್ಟ್‌ಗೆ ತಿಳಿಸಿದೆ. ಕಸಾಪ ಪದಾಧಿಕಾರಿಗಳ ಕಾರ್ಯವೈಖರಿ, ಅನುದಾನ ಮತ್ತು ಖರ್ಚು-ವೆಚ್ಚಗಳ ಕುರಿತು ವಿಚಾರಣೆ ನಡೆಸಲು ತನಿಖಾಧಿಕಾರಿ ನೇಮಕ ಮಾಡಿ 2025ರ ಜೂನ್ 26 ಹಾಗೂ 30ರಂದು ಸಹಕಾರ ಸಂಘಗಳ ನೋಂದಣಾಧಿಕಾರಿ ಹೊರಡಿಸಿದ್ದ ಆದೇಶಕ್ಕೆ ತಡೆ ಕೋರಿ ಕಸಾಪ ಅಧ್ಯಕ್ಷ ಮಹೇಶ್‌ ಜೋಶಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ರಾಜ್ಯ ಸರಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ 14 ಆರೋಪಗಳ ಕುರಿತು ವಿಚಾರಣೆ ಪೂರ್ಣಗೊಳಿಸಲಾಗಿದ್ದು, ಬಾಕಿ 3 ಆರೋಪಗಳ ವಿಚಾರಣೆ ಪೂರ್ಣಗೊಳಿಸಲು 1 ವಾರ ಅಥವಾ 10 ದಿನ ಕಾಲಾವಕಾಶ ಬೇಕಾಗಲಿದೆ ಎಂದು ತಿಳಿಸಿದರಲ್ಲದೆ, ಈ ಸಂಬಂಧ ಡಿಸೆಂಬರ್ 5 ರಂದು ವಿಚಾರಣಾಧಿಕಾರಿ ಕಳುಹಿಸಿದ್ದ ಪತ್ರವನ್ನೊಳಗೊಂಡ ಮೆಮೊ ಅನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ಆಗ ನ್ಯಾಯಮೂರ್ತಿಗಳು, 1 ವಾರ ಬೇಕೇ ಅಥವಾ 10 ದಿನ ಬೇಕೇ ಎಂಬುದನ್ನು ಸ್ಪಷ್ಟವಾಗಿ ತಿಳಿಸಿ, 10 ದಿನ ಎಂದಾದರೆ ಚಳಿಗಾಲದ ರಜೆಯ ನಂತರ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲಾಗುವುದು ಎಂದರು. ಅದಕ್ಕೆ ಅಡ್ವೊಕೇಟ್ ಜನರಲ್ 10 ದಿನಗಳ ಒಳಗೆ ವಿಚಾರಣೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ವಿಚಾರಣೆಯನ್ನು ಜನವರಿ 13ಕ್ಕೆ ಮುಂದೂಡಿತು. ಕೋರ್ಟ್ ಅಭಿಪ್ರಾಯ ತೆಗೆದುಹಾಕಲು ಮನವಿ: ವಿಚಾರಣೆ ವೇಳೆ ಮಹೇಶ್ ಜೋಶಿ ಪರ ಹಿರಿಯ ವಕೀಲ ಜಯಕುಮಾರ್ ಪಾಟೀಲ್ ಅವರು, ನವೆಂಬರ್ 6ರಂದು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಕೆಲ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ. ಅವುಗಳನ್ನು ಆದೇಶದಿಂದ ತೆಗೆದುಹಾಕುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಆ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸುವುದಾಗಿ ನ್ಯಾಯಪೀಠ ಹೇಳಿತು.

ವಾರ್ತಾ ಭಾರತಿ 8 Dec 2025 7:04 pm

ಮಂಗಳೂರು: ಬಾಡಿಗೆ ಮಾಡುತ್ತಿದ್ದ ಖಾಸಗಿ ಕಾರುಗಳನ್ನು ತಡೆಹಿಡಿದ ಅಸೋಶಿಯೇಶನ್

ಮಂಗಳೂರು: ಬಾಡಿಗೆ ಮಾಡುತ್ತಿದ್ದ ಎರಡು ಖಾಸಗಿ ಕಾರುಗಳನ್ನು ಸೋಮವಾರ ಕಂಕನಾಡಿ ರೈಲ್ವೆ ನಿಲ್ದಾಣದಲ್ಲಿ ಪತ್ತೆ ಮಾಡಿದ ದ.ಕ. ಟ್ಯಾಕ್ಸಿಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್ ಪದಾಧಿಕಾರಿಗಳು ಪೊಲೀಸರ ಮೂಲಕ ಆರ್‌ಟಿಒ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ರೂಮ್ ಕಾರ್ ಆನ್‌ಲೈನ್ ಮುಖಾಂತರ ಬೆಂಗಳೂರಿನಿಂದ ಬುಕಿಂಗ್ ಆಗಿ ಪ್ರವಾಸಿಗರನ್ನು ಕಂಕನಾಡಿ ರೈಲ್ವೆ ಸ್ಟೇಷನ್‌ನಿಂದ ಪಿಕಪ್ ಮಾಡಲು ಎರಡು ಕಾರುಗಳು ಬಂದಿತ್ತು. ಈ ಬಗ್ಗೆ ಮಾಹಿತಿ ಪಡೆದ ಸಂಘದ ಸದಸ್ಯರು ವಿಚಾರಣೆ ನಡೆಸಿದಾಗ ಕಾನೂನಿಗೆ ವಿರುದ್ಧವಾಗಿ ನಡೆಸುವಂತಹ ಬಾಡಿಗೆ ಎಂಬುದು ತಿಳಿದು ಬಂತು. ತಕ್ಷಣ ಪೊಲೀಸ್ ಮತ್ತು ಸಾರಿಗೆ ಇಲಾಖೆಗೆ ಮಾಹಿತಿ ನೀಡಿ ಕ್ರಮಕ್ಕೆ ಆಗ್ರಹಿಸಿದರು. ಬಾಡಿಗೆ ಮಾಡುವಂತಹ ಖಾಸಗಿ ಕಾರುಗಳ ವಿರುದ್ಧ ಹೋರಾಟ ಮುಂದುವರಿಯಲಿದೆ. ಪ್ರತಿ ಬಾರಿಯೂ ಈ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಮನವಿ ನೀಡುತ್ತಲಿದ್ದೇವೆ. ಆದರೆ ಅಧಿಕಾರಿಗಳು ಅಥವಾ ಸಂಬಂಧಪಟ್ಟ ಇಲಾಖೆಗಳು ಈ ಬಗ್ಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂದು ಕಾರ್ಯಾಚರಣೆಯಲ್ಲಿ ಸಂಘದ ಗೌರವಾಧ್ಯಕ್ಷ ದಿನೇಶ್ ಕುಂಪಲ,ಉಪಾಧ್ಯಕ್ಷರಾದ ಹರೀಶ್ ಶೆಟ್ಟಿ ಕುತ್ತಾರು, ಹರಿಶ್ಚಂದ್ರ ಮತ್ತಿತರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಾರ್ತಾ ಭಾರತಿ 8 Dec 2025 6:55 pm

ವಂದೇಮಾತರಂ ಗೀತೆ ಮುಸ್ಲಿಮರನ್ನು ಪ್ರಚೋದಿಸಬಹುದು ಎಂದು ನೆಹರೂ ಹೇಳಿದ್ದರು: ಆರೋಪಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ: ವಂದೇಮಾತರಂ ಗೀತೆ ಕುರಿತು ಲೊಕಸಭೆಯಲ್ಲಿ ನಡೆದ ಚರ್ಚೆಯೊಂದರಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮತ್ತು ಜವಾಹರ್ ಲಾಲ್ ನೆಹರೂ ವಿರುದ್ಧ ವಾಗ್ದಾಳಿ ನಡೆಸಿದರು. ರಾಷ್ಟ್ರೀಯ ಹಾಡು ವಂದೇಮಾತರಂ ಅನ್ನು ಕಾಂಗ್ರೆಸ್ ತುಂಡು ತುಂಡು ಮಾಡಿತು. ವಂದೇಮಾತರಂ ಗೀತೆ ಮುಸ್ಲಿಮರನ್ನು ಪ್ರಚೋದಿಸಬಹುದು ಎಂದು ಜವಾಹರ್ ಲಾಲ್ ನೆಹರೂ ಹೇಳಿದ್ದರು ಎಂದು ಆರೋಪಿಸಿದರು. ಇದಕ್ಕೂ ಮುನ್ನ, 1937ರಲ್ಲಿ ಕಾಂಗ್ರೆಸ್ ವಂದೇಮಾತರಂ ಗೀತೆಯ ಪ್ರಮುಖ ಸಾಲುಗಳನ್ನು ಕಿತ್ತು ಹಾಕಿತು. ಅದರಿಂದಾಗಿ ವಿಭಜನೆಯ ಬೀಜ ಬಿತ್ತನೆಯಾಯಿತು ಎಂದು ತಾವು ನೀಡಿದ್ದ ಹೇಳಿಕೆಯನ್ನೇ ಪ್ರಧಾನಿ ನರೇಂದ್ರ ಮೋದಿ ಪುನರುಚ್ಚರಿಸಿದರು. ಈ ಹೇಳಿಕೆಯ ಬೆನ್ನಿಗೇ, ಲೋಕಸಭೆಯಲ್ಲಿ 'ನಾಚಿಕೆಗೇಡು', 'ನಾಚಿಕೆಗೇಡು' ಎಂಬ ಘೋಷಣೆಗಳು ಕೇಳಿ ಬಂದವು‌. ಕಳೆದ ಶತಮಾನದಲ್ಲಿ ಕೆಲವು ಶಕ್ತಿಗಳು ರಾಷ್ಟ್ರೀಯ ಹಾಡಿಗೆ ವಿಶ್ವಾಸ ಘಾತುಕತನ ಮಾಡಿದವು ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು. ವಂದೇ ಮಾತರಂ ಗೀತೆಯ ವಿರುದ್ಧ 1937ರಲ್ಲಿ ಮುಹಮ್ಮದ್ ಜಿನ್ನಾ ನೇತೃತ್ವದ ಸ್ವಾತಂತ್ರ್ಯಪೂರ್ವ ಮುಸ್ಲಿಂ ಲೀಗ್ ಅಭಿಯಾನ ಪ್ರಾರಂಭಿಸಿತು ಎಂದು ಮುಂದಿನ ತಲೆಮಾರಿಗೆ ತಿಳಿಸಬೇಕಿರುವುದು ನಮ್ಮ ಕರ್ತವ್ಯವಾಗಿದೆ.‌ ಆದರೆ, ಇದನ್ನು ವಿರೋಧಿಸುವ ಬದಲು, ವಂದೇ ಮಾತರಂ ಗೀತೆಯ ಬಗ್ಗೆ ತನಿಖೆ ನಡೆಸಲು ಕಾಂಗ್ರೆಸ್ ಮತ್ತು ಜವಾಹರ್ ಲಾಲ್ ನೆಹರೂ ಮುಂದಾದರು ಎಂದೂ ಅವರು ಆಪಾದಿಸಿದರು.

ವಾರ್ತಾ ಭಾರತಿ 8 Dec 2025 6:51 pm

ಕರ್ನಾಟಕ - ಆಂಧ್ರಪ್ರದೇಶದ ಬಗ್ಗೆ ಮಹತ್ವದ ಸಂದೇಶ ಹಂಚಿಕೊಂಡ ನಟ, ಡಿಸಿಎಂ ಪವನ್ ಕಲ್ಯಾಣ್

ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ನಟ ಪವನ್‌ ಕಲ್ಯಾಣ್ ಅವರು ಮಾಡಿರುವ ಟ್ವೀಟ್ ಸೋಷಿಯಲ್ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆಗೆ ಕಾರಣವಾಗಿದೆ. ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಅವರು ಕರ್ನಾಟಕ ಸರ್ಕಾರದ ಬಗ್ಗೆ ಮೆಚ್ಚುಗೆ ಸೂಚಿಸಿ ಟ್ವೀಟ್ ಮಾಡಿದ್ದಾರೆ. ಕರ್ನಾಟಕ ಸರ್ಕಾರ ಮತ್ತು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮಾನ್ಯ ಉಪಮುಖ್ಯಮಂತ್ರಿ ಡಿ.ಕೆ

ಒನ್ ಇ೦ಡಿಯ 8 Dec 2025 6:42 pm

ಶೋಷಿತರ ನೋವಿಗೆ ಸ್ಪಂದಿಸುವುದೇ ಅಂಬೇಡ್ಕರ್‌ಗೆ ಸಲ್ಲಿಸುವ ಗೌರವ: ಸುಂದರ್ ಮಾಸ್ತರ್

ಉಡುಪಿ: ಕಾಲಹರಣ ಮಾಡಿ ಮಾತನಾಡುವುದು ಬಿಟ್ಟು ಹಳ್ಳಿ ಹಳ್ಳಿಗೆ ಹೋಗಿ ಶೋಷಿತರ, ಬಡವರ ನೋವಿಗೆ, ಕಷ್ಟಗಳಿಗೆ ಸ್ಪಂಧಿಸುವುದೇ ನಾವು ಅಂಬೇಡ್ಕರ್ ಅವರಿಗೆ ಸಲ್ಲಿಸುವ ಅತೀ ದೊಡ್ಡ ಗೌರವ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ)ಯ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್ ಹೇಳಿದ್ದಾರೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಆದಿಉಡುಪಿ ಅಂಬೇಡ್ಕರ್ ಭವನದಲ್ಲಿ ನಡೆದ ಬಾಬಾಸಾಹೇಬ್ ಅಂಬೇಡ್ಕರ್ ಅವರ 69ನೇ ಪರಿನಿಬ್ಬಾಣ ದಿನದ ಕಾರ್ಯಕ್ರಮದಲ್ಲಿ ಗೌರವ ಸಲ್ಲಿಸಿ ಅವರು ಮಾತನಾಡುತಿದ್ದರು. ಸಂಘಟನೆ ಕಟ್ಟಿ ಪ್ರಾಮಾಣಿಕ ಕೆಲಸ ಮಾಡಿ ಜನರ ವಿಶ್ವಾಸ ಗಳಿಸುವುದು ಮುಖ್ಯ. ಅದನ್ನು ನಾವು ಮಾಡಬೇಕು. ಶೋಷಿತರ ಕಷ್ಟಗಳಿಗೆ ಕೂಡಲೇ ಸ್ಪಂದಿಸಿದಾಗ ಜನರು ನಮ್ಮ ಮೇಲೇ ವಿಶ್ವಾಸ ಇಟ್ಟು ದಲಿತ ಚಳುವಳಿಗೆ ಕೈ ಜೋಡಿಸುತ್ತಾರೆ. ಇದರಿಂದ ಹಿಂದುತ್ವದ ಪ್ರಯೋಗ ಶಾಲೆಯಾದ ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಪೂರ್ಣಪ್ರಮಾಣದ ದಸಂಸ ಅಂಬೇಡ್ಕರ್ ವಾದ ಶಾಖೆಯನ್ನು ತೆರೆಯಲು ಸಾಧ್ಯವಾಗಿದೆ ಎಂದರು. ದೇಶದಾದ್ಯಂತ ಪ್ರಗತಿಪರರು, ಜಾತ್ಯಾತೀತ ನಾಯಕರು, ದೇಶದ ಈ ಸ್ಥಿತಿಗೆ ಮತ್ತು ಸಂವಿಧಾನದ ಅಭದ್ರತೆಗೆ ಪ್ರತಿಕ್ರಿಯಿಸುತ್ತಿದ್ದಾರೆ.ಕರ್ನಾಟಕದಲ್ಲೂ ದಲಿತರು, ಶೋಷಿತರು ಆತಂಕಗೊಂಡಿದ್ದಾರೆ. ದೇಶವನ್ನು ಈ ದೀವಾಳಿ ಸ್ಥಿತಿಗೆ, ಸರ್ವಾಧಿಕಾರಿ ಧೋರಣೆಗೆ, ಬಹುತ್ವ ವಿರೋಧಿ ನೀತಿಗೆ ಎಳೆದುತಂದು ನಿಲ್ಲಿಸಿರುವ ಆರ್‌ಎಸ್‌ಎಸ್ ಮತ್ತು ಬಿಜೆಪಿಯ ನೀತಿಯನ್ನು ವಿರೋಧಿಸುವುದನ್ನು ಬಿಟ್ಟು ಕೆಲವೊಂದು ಸ್ವಯಂಘೋಷಿತ ದಲಿತ ನಾಯಕರು ದಲಿತ ವಿರೋಧಿಗಳೊಂದಿಗೆ, ಸಂಘ ಪರಿವಾರದವರೊಂದಿಗೆ ಶಾಮೀಲಾಗಿರುವಂತೆ ವರ್ತಿಸುತ್ತಿದ್ದಾರೆ ಎಂದು ಅವರು ದೂರಿದರು. ಕಾರ್ಯಕ್ರಮದಲ್ಲಿ ದಸಂಸ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ, ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ ಗಿಳಿಯಾರು, ಜಿಲ್ಲಾ ಸಂಘಟನಾ ಸಂಚಾಲಕ ಮಂಜುನಾಥ ನಾಗೂರು, ಬ್ರಹ್ಮಾವರ ತಾಲೂಕು ಸಂಚಾಲಕ ಶ್ಯಾಮಸುಂದರ ತೆಕ್ಕಟ್ಟೆ, ಬೈಂದೂರು ತಾಲೂಕು ಸಂಚಾಲಕ ಶಿವರಾಜ್ ಬೈಂದೂರು, ಸಂಘಟನೆಯ ವಿವಿಧ ಪದಾಧಿಕಾರಿಗಳಾದ ಕುಮಾರ್ ಕೋಟ, ವಿಜಯ ಗಿಳಿಯಾರು, ಶ್ರೀನಿವಾಸ್ ವಡ್ಡರ್ಸೆ, ಹರೀಶ್ಚಂದ್ರ ಕೆ.ಡಿ., ಬಿರ್ತಿ ಸುರೇಶ, ಸುರೇಶ ಬಾರ್ಕೂರು, ಕೃಷ್ಣ ಎಲ್‌ಐಸಿ, ಪ್ರಕಾಶ್ ಹೇರೂರು, ದಿನೇಶ ಬಿರ್ತಿ, ಸುಧಾಮ ಹಂಗಾರಕಟ್ಟೆ, ಭಾಸ್ಕರ ಕೆರ್ಗಾಲ್, ಬುದ್ದಿಸ್ಟ್ ಸೊಸೈಟಿ ಆಫ್ ಇಂಡಿಯಾದ ರಾಘವೇಂದ್ರ ಸಾಸ್ತಾನ, ಗೋಪಾಲಕೃಷ್ಣ ಕುಂದಾಪುರ, ವಿಠಲ ಸಾಲೀಕೇರಿ ಮೊದಲಾದವರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 8 Dec 2025 6:29 pm

Mangaluru | ಅಡ್ಯಾರ್‌ನಲ್ಲಿ ತಖ್ವಾ ಹಿಫ್ಝುಲ್ ಕುರ್‌ಆನ್ ಅಕಾಡೆಮಿ, ತಖ್ವಾ ಪಬ್ಲಿಕ್ ಸ್ಕೂಲ್ ಹಾಸ್ಟೆಲ್ ಕಟ್ಟಡಕ್ಕೆ ಶಿಲಾನ್ಯಾಸ

ಮಂಗಳೂರು: ಪಂಪ್‌ವೆಲ್‌ನ ಇಸ್ಲಾಮಿಕ್ ಕಲ್ಚರಲ್ ಸೆಂಟರ್‌ನ ನಗರದ ಹೊರವಲಯದ ಅಡ್ಯಾರ್‌ನಲ್ಲಿ 6 ಕೋಟಿ ರೂ . ವೆಚ್ಚದಲ್ಲಿ ನಿರ್ಮಿಸಲುದ್ದೇಶಿಸಿರುವ ತಖ್ವಾ ಹಿಫ್ಝುಲ್ ಕುರ್‌ಆನ್ ಅಕಾಡೆಮಿ , ತಖ್ವಾ ಪಬ್ಲಿಕ್ ಸ್ಕೂಲ್ ಮತ್ತು ಹಾಸ್ಟೆಲ್ ಕಟ್ಟಡಕ್ಕೆ ಕುಂಬೋಳ್ ಅಸ್ಸೈಯದ್ ಕೆ.ಎಸ್. ಆಟಕ್ಕೋಯ ತಂಙಳ್ ಅವರು ಸೋಮವಾರ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮುಸ್ಲಿಂ ಸಮುದಾಯ ಶಿಕ್ಷಣದಲ್ಲಿ ಹಿಂದುಳಿದವರು ಎಂಬ ಅಪವಾದ ಇದೀಗ ನಿವಾರಣೆಯಾಗುತ್ತಿದ್ದು, ಕೇರಳದಲ್ಲಿ ಮುಸ್ಲಿಮರು ಶಿಕ್ಷಣದಲ್ಲಿ ಹೆಚ್ಚು ಮುಂದುವರಿದಿದ್ದಾರೆ. ಕೇರಳದಲ್ಲಿ ಎಪಿ ಉಸ್ತಾದ್ ನೇತೃತ್ವದಲ್ಲಿ ಧಾರ್ಮಿಕ ಹಾಗೂ ಲೌಕಿಕ ಶಿಕ್ಷಣದಲ್ಲಿ ಕ್ರಾಂತಿ ನಡೆಯುತ್ತಿದೆ. ಕರ್ನಾಟಕದಲ್ಲೂ ಅದೇ ರೀತಿ ಮುಸ್ಲಿಮರು ಶಿಕ್ಷಣದಲ್ಲಿ ಮುಂದುವರಿಯಬೇಕಾಗಿದೆ ಎಂದರು. ಮುಂದಿನ ಪೀಳಿಗೆ ಶಿಕ್ಷಣದಿಂದ ವಂಚಿತರಾಗಬಾರದು. ಅವರಿಗೆ ಅಗತ್ಯದ ಧಾರ್ಮಿಕ ಮತ್ತು ಲೌಕಿಕ ಶಿಕ್ಷಣ ಒಂದೇ ಕಡೆ ಸಿಗಬೇಕು. ಅಂತಹ ಸಂಸ್ಥೆಗಳನ್ನು ಕಟ್ಟುವ ನಿಟ್ಟಿನಲ್ಲಿ ಧಾರ್ಮಿಕ ವಿದ್ವಾಂಸರ ಮಾರ್ಗದರ್ಶನದೊಂದಿಗೆ ಸಮುದಾಯದ ಧುರೀಣರು ಕಾರ್ಯಪ್ರವೃತ್ತರಾಗಬೇಕು ಎಂದು ಕರೆ ನೀಡಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಖ್ಯಾತ ಇಸ್ಲಾಮಿಕ್ ವಿದ್ವಾಂಸರು, ಕ್ಯಾಲಿಕಟ್‌ನ ಮರ್ಕಝ್ ನಾಲೆಜ್ ಸಿಟಿಯ ಆಡಳಿತ ನಿರ್ದೇಶಕ ಡಾ.ಅಬ್ದುಲ್ ಹಕೀಮ್ ಅಝ್ಹರಿ ಅವರು ಜ್ಞಾನವೇ ಮಾನವ ಬದುಕಿನ ದೊಡ್ಡ ಶಕ್ತಿ ಎಂಬ ಮಾತಿದೆ. ಆದರೆ ಇಸ್ಲಾಮ್ ಪ್ರಕಾರ ಜ್ಞಾನವೇ ಜೀವನ, ಜ್ಞಾನವೇ ಆತ್ಮ. ಜ್ಞಾನವು ಎಲ್ಲವೂ ಆಗಿದೆ. ಜ್ಞಾನವಿಲ್ಲದೆ ಜೀವನವೇ ಇಲ್ಲ ಎಂದು ನುಡಿದರು. ಮುಸ್ಲಿಂರಿಗೆ ಧಾರ್ಮಿಕ ಜ್ಞಾನವೇ ಮೂಲಭೂತ ಜ್ಞಾನವಾಗಿದೆ. ಕುರ್‌ಆನ್ ಮತ್ತು ಹದೀಸ್ ಇಸ್ಲಾಮಿಕ್ ಜ್ಞಾನದ ತಳಹದಿಯಾಗಿದೆ ಎಂದು ಹೇಳಿದರು. ಅಡ್ಯಾರ್‌ನಲ್ಲಿ ಶಿಕ್ಷಣ ಸಂಸ್ಥೆಯಲ್ಲಿ ಧಾರ್ಮಿಕ ಮತ್ತು ಆಧುನಿಕ ಶಿಕ್ಷಣ ದೊರೆಯಲಿದೆ. ಏಕೀಕೃತ ಶಿಕ್ಷಣ ವ್ಯವಸ್ಥೆಯಲ್ಲಿ ಅಂತರರಾಷ್ಟ್ರೀಯ ಪಠ್ಯಕ್ರಮವನ್ನು ಅಳವಡಿಸಲಾಗುವುದು ಎಂದು ಹೇಳಿದರು. ತಖ್ವಾ ಅಕಾಡೆಮಿಯ ಅಧ್ಯಕ್ಷ ಡಾ. ಯೆನೆಪೋಯ ಅಬ್ದುಲ್ ಕುಂಞಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಅಲೈಡ್ ಆ್ಯಂಡ್ ಹೆಲ್ತ್ ಕೇರ್ ಕೌನ್ಸಿಲ್ ಅಧ್ಯಕ್ಷ ಡಾ. ಯು.ಟಿ ಇಫ್ತಿಕಾರ್ ಮುಖ್ಯ ಅತಿಥಿಯಾಗಿದ್ದರು. ಉಳ್ಳಾಲ ದರ್ಗಾ ಸಮಿತಿ ಅಧ್ಯಕ್ಷ ಬಿ.ಜಿ. ಹನೀಫ್ ಹಾಜಿ, ಮಾಜಿ ಮೇಯರ್ ಕೆ .ಆಶ್ರಫ್ , ಮುಸ್ಲಿಂ ಸೆಂಟ್ರಲ್ ಕಮಿಟಿಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಹಾಜಿ ಬಂದರ್, ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿ ಮಾಜಿ ಅಧ್ಯಕ್ಷ ಬಿ ಎ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ಮೀಫ್ ಅಧ್ಯಕ್ಷ ಮೂಸಬ್ಬ ಪಿ ಬ್ಯಾರಿ, ಪ್ರಮುಖರಾದ ಡಾ. ಹಬೀಬ್ ರಹ್ಮಾನ್ , ಬಿ ಎ ಸಲಾಂ ತುಂಬೆ, ಅಬ್ದುಲ್ ರಹಿಮಾನ್ ಕಣಚೂರು, ಆಸಿಫ್ ಹೋಂ ಪ್ಲಸ್, ಅಝಾದ್ ಮನ್ಸೂರ್ ಹಾಜಿ, ಅಬ್ದುಲ್ ಜಲೀಲ್ ಬ್ರೈಟ್ , ಅಬ್ದುಲ್ ಮಜೀದ್ ಹಾಜಿ , ಕೆ ಮುನೀರ್ , ಕೆಎಚ್ ಕರೀಮ್ ಹಾಜಿ, ಎಚ್ ಎಚ್ ಅಮೀನ್ ಹಾಜಿ , ಹೈದರ್ ಪರ್ತಿಪ್ಪಾಡಿ, ಐಟಮ್ ಸಾಕಿರ್ ಹಾಜಿ, ಹಾರಿಸ್ ಮೆರೈನ್, ಬಿ ಎಂ ಶೌಕತ್ ಅಲಿ, ಪಂಪ್‌ವೆಲ್ ತಖ್ವಾ ಮಸೀದಿ ಖತೀಬ್ ಮುಹಮ್ಮದ್ ಸಖಾಫಿ ಅಲ್ ಹಿಕಮಿ, ಮಾಜಿ ಖತೀಬ್ ಅಬ್ದುಲ್ ರ‌್ರಹ್ಮಾನ್ ಸಖಾಫಿ, ಕೆ ಮುಹಮ್ಮದ್ ಅರಬಿ, ಅಶ್ರಫ್ ಕಿನಾರ ಅಬೂಬಕರ್, ರೈಸ್ಕೊ ಕೆಪಿಎಫ್, ಬಿ ಎ ನಝೀರ್, ಅಹಮ್ಮದ್ ಬಾವಾ, ಕಣ್ಣೂರು ಕೇಂದ್ರ ಜುಮಾ ಮಸೀದಿ ಖತೀಬ್ ಅನ್ಸಾರ್ ಫೈಝಿ ಕಣ್ಣೂರು, ಕರ್ನಾಟಕ ಸಂಯುಕ್ತ ಜಮಾಅತ್ ಕಾರ್ಯದರ್ಶಿ ಅಶ್ರಫ್ ಸಅದಿ ಮಲ್ಲೂರು ಮತ್ತಿತರರು ಉಪಸ್ಥಿತರಿದ್ದರು. ತಖ್ವಾ ಅಕಾಡೆಮಿಯ ಸಂಚಾಲಕರಾದ ಎಸ್‌ಎಂ ರಶೀದ್ ಹಾಜಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಶೀದ್ ಸಖಾಪಿ ಝೈನಿ ಕಾಮಿಲ್ ವಂದಿಸಿದರು.            

ವಾರ್ತಾ ಭಾರತಿ 8 Dec 2025 6:21 pm

Government Employees: ಸಿಎಂ ಸಿದ್ದರಾಮಯ್ಯಗೆ ವಿಶೇಷ ಮನವಿ ಮಾಡಿದ ಸಿ ಎಸ್‌ ಷಡಕ್ಷರಿ: ಏನದು?

ಬೆಂಗಳೂರು, ಜನವರಿ 08: ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಸದಸ್ಯರು, ವೈದ್ಯಕೀಯ ಹಾಜರಾತಿ ನಿಯಮಗಳು 1963 ರನ್ವಯ ಕೆಲವೊಂದು ಇಲಾಖೆ ಮತ್ತು ಗುಂಪುಗಳನ್ನು ಹೊರತುಪಡಿಸಿ ಎಲ್ಲಾ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಸದಸ್ಯರು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಅರ್ಹರಾಗಿರುತ್ತಾರೆ. ಸರ್ಕಾರಿ ನೌಕರರಿಗೆ ನಗದು ರಹಿತ ಚಿಕಿತ್ಸೆ ಒದಗಿಸಲು ರಾಜ್ಯ ಸರ್ಕಾರದಿಂದ

ಒನ್ ಇ೦ಡಿಯ 8 Dec 2025 6:18 pm

ರಾಜ್ಯದ ಸಮಸ್ಯೆಗಳ ಬಗ್ಗೆ ಬಿಜೆಪಿ ಸಂಸದರು ಧ್ವನಿ ಎತ್ತುತ್ತಿಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು : ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಾಗಿರುವುದು ಕೇಂದ್ರ ಸರಕಾರ. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ನಾನು ಹಾಗೂ ಸಿಎಂ ಸಿದ್ದರಾಮಯ್ಯ ಅವರು ಸೇರಿ ರಾಜ್ಯ ಸರಕಾರಕ್ಕೆ ದುಬಾರಿಯಾಗುವ ತೀರ್ಮಾನ ಕೈಗೊಂಡಿದ್ದೇವೆ. ಬಿಜೆಪಿಯ ಸಂಸದರು ರಾಜ್ಯದ ಯಾವುದೇ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸೋಮವಾರ ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳದ ವಿಚಾರವಾಗಿ ಕೇಂದ್ರ ಸರಕಾರ ಈವರೆಗೂ ಬಾಯಿ ಬಿಟ್ಟಿಲ್ಲ. ಬಿಜೆಪಿಯ ಸಂಸದರು ರಾಜ್ಯದ ಯಾವುದೇ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿಲ್ಲ. ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರಕಾರ ಖರೀದಿ ಮಾಡಬೇಕು ಎಂದು ಹೇಳುತ್ತಿದ್ದಾರೆ. ಹಾಗಿದ್ದರೆ ಕೇಂದ್ರ ಸರಕಾರದ ಪಾಲೇನು ಎಂದು ಪ್ರಶ್ನಿಸಿದರು. ಪ್ರತಿಯೊಂದಕ್ಕೂ ಬೆಲೆ ನಿಗದಿ ಮಾಡುವುದು ಕೇಂದ್ರ ಸರಕಾರ. ಆದರೂ ಈವರೆಗೆ ಈ ವಿಚಾರಗಳಲ್ಲಿ ಕೇಂದ್ರ ಸರಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಪರಿಹಾರ ನೀಡಲೆಂದೇ ನಾವಿದ್ದೇವೆ. ಇದರಲ್ಲಿ ಕೇಂದ್ರ ಸರಕಾರದ ಜವಾಬ್ದಾರಿ ಇದೆಯಲ್ಲವೇ? ಇಲ್ಲಿಯವರೆಗೂ ಬಸವರಾಜ ಬೊಮ್ಮಾಯಿ ಅವರು ಯಾಕೆ ಸಂಸತ್‍ನಲ್ಲಿ ಧ್ವನಿ ಎತ್ತಿಲ್ಲ? ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿ ಚರ್ಚೆ ಮಾಡಿಲ್ಲ? ಎಂದು ಪ್ರಶ್ನಿಸಿದರು. ನೀರಾವರಿ ಸಮಸ್ಯೆ ಹಾಗೂ ಯೋಜನೆ ಅನುಷ್ಠಾನವಾಗದಿರುವ ಬಗ್ಗೆ ಕೇಳಿದಾಗ, ನನ್ನ ಅವಧಿಯಲ್ಲಿ ನೀರಾವರಿ ಯೋಜನೆಗಳಿಗೆ ಮಾಡಿದಷ್ಟು ಯೋಜನೆ ಇಲಾಖೆಯ ಇತಿಹಾಸದಲ್ಲಿ ಯಾರೂ ಮಾಡಿಲ್ಲ. ಈ ವಿಚಾರವಾಗಿ ನಾನು ಮಾಧ್ಯಮಗಳ ಮುಂದೆ ಮಾತನಾಡುವುದಿಲ್ಲ, ವಿರೋಧ ಪಕ್ಷಗಳು ಅಧಿವೇಶನದಲ್ಲಿ ಈ ವಿಚಾರ ಪ್ರಸ್ತಾಪಿಸಲಿ, ಅಲ್ಲಿ ಉತ್ತರಿಸುತ್ತೇನೆ ಎಂದು ತಿಳಿಸಿದರು. ಕಾಂಗ್ರೆಸ್‍ನಲ್ಲಿ ಸಚಿವರಾಗಬೇಕಾದರೆ 500 ಕೋಟಿ ರೂ. ನೀಡಬೇಕು ಎಂಬ ನವಜೋತ್ ಸಿಂಗ್ ಸಿಧು ಅವರ ಪತ್ನಿ ಹೇಳಿಕೆಗೆ ಉತ್ತರಿಸಿದ ಅವರು, ಈ ರೀತಿ ಹೇಳಿದವರನ್ನು ಆಸ್ಪತ್ರೆಗೆ ಸೇರಿಸೋಣ. ಒಳ್ಳೆಯ ಮೆಂಟಲ್ ಆಸ್ಪತ್ರೆಗೆ ಸೇರಿಸೋಣ ಎಂದರು. ಹೈದರಾಬಾದ್‍ನಲ್ಲಿ ಜಾಗತಿಕ ಸಮ್ಮೇಳನ ಮಾಡುತ್ತಿದ್ದಾರೆ. ನಮ್ಮ ನೆರೆ ರಾಜ್ಯದವರು ನಮಗೆ ಆಹ್ವಾನ ನೀಡಿದ್ದು, ಅದಕ್ಕೆ ನಾನು ಹಾಗೂ ಕೆಲವು ಅಧಿಕಾರಿಗಳು ತೆರಳುತ್ತಿದ್ದೇವೆ. ಮಿಕ್ಕ ವಿಚಾರವನ್ನು ಮುಂದೆ ಮಾತನಾಡೋಣ ಎಂದರು.

ವಾರ್ತಾ ಭಾರತಿ 8 Dec 2025 6:16 pm

ಆಸೀಸ್ ನಲ್ಲಿ ಶತಕ ಹೊಡೆದರೂ ಸಿಗದ ಗೆಲುವು; ಕಪಿಲ್ ದೇವ್ ಹೆಸರಲ್ಲಿದ್ದ ಕೆಟ್ಟ ದಾಖಲೆ ಇದೀಗ ಜೋ ರೂಟ್ ತಲೆಗೆ!

Joe Root Unwanted World Record- ಜೋ ರೂಟ್ ಅವರು ಆಸ್ಟ್ರಲಿಯಾ ನೆಲದಲ್ಲಿ ಶತಕ ಹೊಡೆದರೂ ಆಂಗ್ಲರ ಪಾಳಯದಲ್ಲಿ ಖುಷಿಯಿಲ್ಲ. ಕಾರಣ ಆಸ್ಟ್ರೇಲಿಯಾದಲ್ಲಿ ಶತಕ ಬಾರಿಸಿದರೂ ಇಂಗ್ಲೆಂಡ್ ತಂಡ ಸೋಲು ಕಂಡಿದೆ. ಈ ಸೋಲಿನೊಂದಿಗೆ ಆಸ್ಟ್ರೇಲಿಯಾ ನೆಲದಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಆಡಿದರೂ ಗೆಲುವು ಕಾಣದ ಆಟಗಾರ ಎಂಬ ಕೆಟ್ಟ ದಾಖಲೆ ಜೋ ರೂಟ್ ಅವರ ಹೆಸರಿಗಂಟಿಕೊಂಡಿದೆ. ಈ ಹಿಂದೆ ಈ ದಾಖಲೆ ಪಾಕಿಸ್ತಾನದಲ್ಲಿ 15 ಪಂದ್ಯಗಳನ್ನು ಸೋತ ಕಪಿಲ್ ದೇವ್ ಅವರ ಹೆಸರಿನಲ್ಲಿತ್ತು.

ವಿಜಯ ಕರ್ನಾಟಕ 8 Dec 2025 6:15 pm