SENSEX
NIFTY
GOLD
USD/INR

Weather

17    C
... ...View News by News Source

PM Modi: ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಭೇಟಿ, ಉಡುಪಿ ಶ್ರೀಕೃಷ್ಣ ಮಠದಲ್ಲಿ ಮಹತ್ವದ ಕಾರ್ಯಕ್ರಮ

ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಮಹತ್ವದ ಭೇಟಿ ಕೊಡುತ್ತಿದ್ದಾರೆ. ಹೀಗಾಗಿ ಈ ಭೇಟಿ ಇಡೀ ದೇಶದ ಗಮನ ಸೆಳೆದಿದೆ. ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆಯುವ ಲಕ್ಷ ಕಂಠ ಗೀತಾ ಪಾರಾಯಣ ಧಾರ್ಮಿಕ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ. ಪ್ರಧಾನಿ ಮೋದಿ ಅವರ ಭೇಟಿ ಹಿನ್ನೆಲೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಹಲವು ಕಡೆ ರಸ್ತೆಗಳನ್ನ ಬಂದ್ ಮಾಡುವ ಆದೇಶ

ಒನ್ ಇ೦ಡಿಯ 28 Nov 2025 12:56 am

ಬೆಂಗಳೂರು ನೀರಿನ ಬಿಲ್ ಬಾಕಿ ಪಾವತಿಗೆ 100% ರಿಯಾಯಿತಿ - ನಿಮ್ಮ ಬಾಕಿ ಮೊತ್ತವನ್ನು ಈಗಲೇ ಪಾವತಿಸಿ!

ಬೆಂಗಳೂರು ಜಲಮಂಡಳಿ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ. ನೀರಿನ ಬಾಕಿ ಮೊತ್ತವನ್ನು ಒಂದೇ ಬಾರಿಗೆ ಪಾವತಿಸಿದರೆ ದಂಡ, ಬಡ್ಡಿ ಮತ್ತು ಇತರ ಶುಲ್ಕಗಳಲ್ಲಿ ಶೇ.100 ರಷ್ಟು ರಿಯಾಯಿತಿ ನೀಡಲು ಸಚಿವ ಸಂಪುಟ ನಿರ್ಧರಿಸಿದೆ. ಗೃಹ, ವಾಣಿಜ್ಯ, ಕೈಗಾರಿಕಾ ಗ್ರಾಹಕರು ಹಾಗೂ ಸರ್ಕಾರಿ ಇಲಾಖೆಗಳು ಈ ಯೋಜನೆಯ ಪ್ರಯೋಜನ ಪಡೆಯಬಹುದು. ಒಟ್ಟು 701 ಕೋಟಿ ರೂ. ಬಾಕಿ ವಸೂಲಿ ಸರ್ಕಾರದ ಉದ್ದೇಶವಾಗಿದೆ.

ವಿಜಯ ಕರ್ನಾಟಕ 28 Nov 2025 12:29 am

ಸುರತ್ಕಲ್: ನವೀಕರಿಸಲಾದ ಸಿ.ಎನ್. ಶೆಟ್ಟಿ ಕನ್ವೆನ್ಷನ್ ಸಭಾಂಗಣದ ಉದ್ಘಾಟನೆ

ಸುರತ್ಕಲ್: ಬೈಕಂಪಾಡಿಯ ಕೆನರಾ ಇಂಡಸ್ಟ್ರೀ ಅಸೋಸಿಯೇಶನ್‌ ನ ನವೀಕರಿಸಲಾದ ಸಿ.ಎನ್. ಶೆಟ್ಟಿ ಕನ್ವೆನ್ಷನ್ ಸಭಾಂಗಣದ ಉದ್ಘಾಟನೆ ಬುಧವಾರ ನೆರವೇರಿತು. ಸಭಾಂಗಣವನ್ನು ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ನೆರವೇರಿಸಿದರು‌. ಬಳಿಕ ಮಾತನಾಡಿದ ಅವರು, ಎಲ್ಲ ಉದ್ಯಮಿಗಳು ಸೇರಿಕೊಂಡು ಸಹಕರಿಸಿದರೆ ಊರು ಅಭಿವೃದ್ಧಿಯಾಗಲು ಸಾಧ್ಯ. ಅಧಿಕಾರಿಗಳು, ಉದ್ದಿಮೆಗಳು ಒಬ್ಬರನ್ನೊಬ್ಬರು ದೂರಿಕೊಂಡು ಇದ್ದರೆ ಯಾವ ಕೆಲಸವೂ ಆಗುವುದಿಲ್ಲ. ಹಾಗಾಗಿ ಎಲ್ಲರನ್ನು ಒಂದೆಡೆ ಸೇರಿಸಿ ಜಿಲ್ಲಾಧಿಕಾರಿಯವರ ನೇತೃತ್ಬದಲ್ಲಿ ಸಭೆ ನಡೆಸಿ ಶೀಘ್ರ ಕೈಗಾರಿಕಾ ವಲಯದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದರು. ಇದೇ ವೇಳೆ ಕೆನರಾ ಇಂಡಸ್ಟ್ರೀ ಅಸೋಸಿಯೇಶನ್‌ ಪದಾಧಿಕಾರಿಗಳು ಬೈಕಂಪಾಡಿ ಕೈಗಾರಿಕಾ ವಲಯದಲ್ಲಿನ ಸಮಸ್ಯೆಗಳನ್ನು ವಿವರಿಸಿದರು. ಬಳಿಕ‌ ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರನ್ನು ಕೆನರಾ ಇಂಡಸ್ಟ್ರೀ ಅಸೋಸಿಯೇಶನ್‌ ವತಿಯಿಂದ ಸನ್ಮಾನಿಸಲಾಯಿತು. ಕೆನರಾ ಇಂಡಸ್ಟ್ರೀ ಅಸೋಸಿಯೇಶನ್‌ ಅಧ್ಯಕ್ಷ ಎನ್. ಅರುಣ್ ಪಡಿಯಾರ್ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಅಸೋಸಿಯೇಶನ್‌ ಉಪಾಧ್ಯಕ್ಷರಾದ ಎಂ.ಡಿ. ಪೂಜಾರಿ, ಕಾರ್ಯದರ್ಶಿ ಬಿ.ಎ. ಇಕ್ಬಾಲ್, ಜೊತೆ ಕಾರ್ಯದರ್ಶಿ ರೋಶನ್ ಬಾಳಿಗಾ ಬಿ., ಖಜಾಂಚಿ ರಾಮಚಂದ್ರ, ಗೋಕುಲ್‌ ದಾಸ್ ಮೊದಲಾದವರು ಉಪಸ್ಥಿತರಿದ್ದರು. ಕೆನರಾ ಇಂಡಸ್ಟ್ರೀ ಅಸೋಸಿಯೇಶನ್‌ ಉಪಾಧ್ಯಕ್ಷರಾದ ಎಂ.ಡಿ. ಪೂಜಾರಿ ಅವರು ಸಂವಿಧಾನದ ಪೀಠಿಕೆ ಓದಿದರು. ಅಧ್ಯಕ್ಷ ಎನ್. ಅರುಣ್ ಪಡಿಯಾರ್ ಸ್ವಾಗತಿಸಿದರು. ಕಾರ್ಯದರ್ಶಿ ಬಿ.ಎ. ಇಕ್ಬಾಲ್ ಧನ್ಯವಾದ ಸಮರ್ಪಿಸಿದರು. ಸಮಾರಂಭಕ್ಕೂ ಮುನ್ನ ಕೆನರಾ ಇಂಡಸ್ಟ್ರೀ ಅಸೋಸಿಯೇಶನ್‌ ವತಿಯಿಂದ ಸುಮಾರು 40 ಬ್ಯಾರಿಕೆಡ್ ಗಳನ್ನು ಮಂಗಳೂರು ಸಂಚಾರ ವಿಭಾಗದ ಪೊಲೀಸ್ ಆಯುಕ್ತೆ ನಜ್ಮಾ ಫಾರೂಕಿ ಅವರ‌ ಮೂಲಕ ಮಂಗಳೂರು ಉತ್ತರ ಸಂಚಾರ ಪೊಲೀಸರಿಗೆ ಹಸ್ತಾಂತರಿಸಲಾಯಿತು.        

ವಾರ್ತಾ ಭಾರತಿ 28 Nov 2025 12:19 am

ಯುವಕರನ್ನು ಆಕರ್ಷಿಸುತ್ತಿರುವ 'ಮೈಸೂರು ಮಾವು', 'ಮೈಸೂರು ಕುಶ್'! ಏನಿವೆಲ್ಲಾ? ಕೇಳಿದ್ರೆ ನೀವು ಬೆಚ್ಚಿ ಬೀಳ್ತೀರಿ!

ಮೈಸೂರಿನಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚುತ್ತಿದೆ. ಯುವಕರು, ವಿದ್ಯಾರ್ಥಿಗಳು ಇದರ ದಾಸರಾಗುತ್ತಿದ್ದಾರೆ. 'ಮೈಸೂರು ಮಾವಿನ ಹಣ್ಣು', 'ಮೈಸೂರು ಕುಶ್' ಎಂಬ ಹೆಸರಿನ ಗಾಂಜಾ ಪ್ರಮುಖವಾಗಿದೆ. ಹೊರ ಜಿಲ್ಲೆಗಳಿಂದಲೂ ಯುವಕರು ಇಲ್ಲಿಗೆ ಬಂದು ಮಾದಕ ದ್ರವ್ಯ ಖರೀದಿಸುತ್ತಿದ್ದಾರೆ. ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದರೂ, ಸಮಸ್ಯೆ ನಿಯಂತ್ರಣಕ್ಕೆ ಬರುತ್ತಿಲ್ಲ. ಆನ್‌ಲೈನ್ ಮೂಲಕವೂ ಮಾರಾಟ ನಡೆಯುತ್ತಿದೆ.

ವಿಜಯ ಕರ್ನಾಟಕ 28 Nov 2025 12:17 am

ಪ್ರಧಾನಿಯಾಗಿ ಮೊದಲ ಬಾರಿ ಕೃಷ್ಣ ಮಠಕ್ಕೆ ಆಗಮಿಸುತ್ತಿರುವ ಮೋದಿ

ಎಸ್‌ಪಿಜಿ, ಪೊಲೀಸರ ಸರ್ಪಗಾವಲಿನಲ್ಲಿ ಉಡುಪಿ

ವಾರ್ತಾ ಭಾರತಿ 28 Nov 2025 12:05 am

ಉಡುಪಿ: ಯುಪಿಎಂಸಿ ಸಾಹಿತ್ಯ ಸಂಘ ಉದ್ಘಾಟನೆ

ಉಡುಪಿ: ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ಸಾಹಿತ್ಯ ಸಂಘದ ವತಿಯಿಂದ ಪರಿಣಾಮಕಾರಿ ಸಂವಹನ ಕಲೆಯ ಕುರಿತ ವಿಶೇಷ ತರಬೇತಿ ಕಾರ್ಯಕ್ರಮ ಕಾಲೇಜಿನ ಉಪೇಂದ್ರ ಮಂಟಪದಲ್ಲಿ ಇತ್ತೀಚೆಗೆ ಜರಗಿತು. ಮುಖ್ಯ ಅತಿಥಿಯಾಗಿ ವ್ಯಕ್ತಿತ್ವ ವಿಕಸನ ತರಬೇತಿದಾರ, ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು, 2025- 26ನೇ ಸಾಲಿನ ಸಾಹಿತ್ಯ ಸಂಘದ ಚಟುವಟಿಕೆಗಳನ್ನು ಉದ್ಘಾಟಿಸಿ, ಪರಿಣಾಮಕಾರಿ ಸಂವಹನ ಕಲೆಯ ಕುರಿತಾಗಿ ತರಬೇತಿ ಕಾರ್ಯಕ್ರಮ ನಡೆಸಿಕೊಟ್ಟರು. ವಿದ್ಯಾರ್ಥಿಗಳಿಗೆ ಮಾತಿನಲ್ಲಿ ಅಥವಾ ಬರವಣಿಗೆಯಲ್ಲಿ ನಿಖರತೆ, ಸ್ಪಷ್ಟತೆ, ವಸ್ತುನಿಷ್ಠತೆ ಇರಬೇಕು. ಇದು ಸಂವಹನ ಕೌಶಲ ಉತ್ತಮ ಪಡಿಸಿಕೊಳ್ಳಲು ಸಹಕಾರಿ, ಲವಲವಿಕೆಯಿಂದ ವಿವಿಧ ಕ್ಷೇತ್ರಗಳಲ್ಲಿ ಆಸಕ್ತಿಯಿಂದ ತೊಡಗಿದರೆ ವ್ಯಕ್ತಿ ಸಾಧಕನಾಗಬಲ್ಲ, ತಾಳ್ಮೆಯಿಂದ ಉತ್ತಮ ಕೇಳುಗನಾದರೆ ವ್ಯಕ್ತಿಯ ವ್ಯಕ್ತಿತ್ವ ಹಾಗೂ ಪ್ರತಿಭೆ ಅರಳುವುದರ ಜೊತೆಗೆ ಸೃಜನಶೀಲತೆ ಜಾಗೃತಗೊಳ್ಳಲು ಸಹಕಾರಿಯಾಗಲಿದೆ. ಹಾಗೆಯೇ ಲೇಖನ, ಕವನ ಬರೆಯಲು ಸಮಕಾಲೀನ ಪರಿಸ್ಥಿತಿಗಳನ್ನು ವಸ್ತುವಾಗಿಸಿ ಬರೆಯಲು ಸಾಧ್ಯವಿದೆ, ಎಲ್ಲವುದಕ್ಕೂ ಆಸಕ್ತಿ ಮುಖ್ಯ ಎಂದು ಅವರು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲೆ ಆಶಾ ಕುಮಾರಿ ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಸಂಘದ ಸಹ ಸಂಚಾಲಕ ಹಾಗೂ ಕನ್ನಡ ಉಪನ್ಯಾಸಕ ಶಶಿಕಾಂತ್ ಎಸ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿಂದಿ ಉಪನ್ಯಾಸಕಿ ಸುನಿತಾ ಕಾಮತ್ ಉಪಸ್ಥಿತರಿದ್ದರು. ಸಾಹಿತ್ಯ ಸಂಘದ ಸಂಚಾಲಕ ಹಾಗೂ ವಾಣಿಜ್ಯ ಉಪನ್ಯಾಸಕ ರಾಘವೇಂದ್ರ ಜಿ.ಜಿ. ಕಾರ್ಯಕ್ರಮ ಸಂಯೋಜಿಸಿದರು. ವಿದ್ಯಾರ್ಥಿನಿಯರಾದ ಅದೀಶ ಸ್ವಾಗತಿಸಿದರು, ಕೃತಿಕಾ ವಂದಿಸಿದರು, ಸನ್ನಿಧಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ವಾರ್ತಾ ಭಾರತಿ 28 Nov 2025 12:04 am

ಎಲ್‌ಎಲ್‌ಬಿ ಕೋರ್ಸ್ ಕನಿಷ್ಠ ಅರ್ಹತಾ ಅಂಕ ನಿಗದಿ; ಪಿಐಎಲ್ ಇತ್ಯರ್ಥಪಡಿಸಿದ ಹೈಕೋರ್ಟ್

ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (ಕೆಎಸ್‌ಎಲ್‌ಯು) 3 ವರ್ಷಗಳ ಎಲ್‌ಎಲ್‌ಬಿ ಕೋರ್ಸ್‌ಗೆ ಪ್ರವೇಶಕ್ಕಾಗಿ ಒಬಿಸಿ ಅಭ್ಯರ್ಥಿಗಳಿಗೆ ಗೆಜೆಟ್‌ ಅಧಿಸೂಚನೆಯಿಲ್ಲದೆ ಶೇ.42 ಕನಿಷ್ಠ ಅರ್ಹತಾ ಅಂಕ ನಿಗದಿಪಡಿಸುವುದನ್ನು ಕಾನೂನುಬಾಹಿರವೆಂದು ಘೋಷಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಇತ್ಯರ್ಥಪಡಿಸಿದೆ. ಯಂಕಪ್ಪ ಆರ್‌. ಸಕ್ರೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ ಅರ್ಜಿ ಪುರಸ್ಕರಿಸಲು ನಿರಾಕರಿಸಿತಲ್ಲದೆ, ಕೆಎಸ್‌ಎಲ್‌ಯು ಅಧಿಸೂಚನೆಯಲ್ಲಿ ದೋಷ ಹುಡುಕಲಾಗದು. ಆದ್ದರಿಂದ, ಅರ್ಜಿ ವಿಲೇವಾರಿ ಮಾಡಲಾಗುತ್ತಿದೆ ಎಂದು ಆದೇಶಿಸಿದೆ. ಹೈಕೋರ್ಟ್ ಹೇಳಿದ್ದೇನು? 2008ರ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಕಾನೂನು ಶಿಕ್ಷಣ ನಿಯಮಗಳ ನಿಯಮ 7 ಅನ್ನು ಉಲ್ಲೇಖಿಸಿರುವ ನ್ಯಾಯಾಲಯ, ಅದು ಎಲ್‌ಎಲ್‌ಬಿ ಕೋರ್ಸ್‌ಗಳ ಪ್ರವೇಶಕ್ಕಾಗಿ ಅರ್ಹತಾ ಪರೀಕ್ಷೆಗೆ ಕನಿಷ್ಠ ಶೇಕಡಾವಾರು ಅಂಕಗಳನ್ನು ನಿರ್ದಿಷ್ಟಪಡಿಸುತ್ತದೆ. ನಂತರ ಬಿಸಿಐ ಅರ್ಹತಾ ಪರೀಕ್ಷೆಯಲ್ಲಿ ಕನಿಷ್ಠ ಶೇಕಡಾವಾರು ಅಂಕಗಳನ್ನು ನಿಗದಿಪಡಿಸಬಹುದು. ಆದರೆ, ಅದರ ನಿಯಮಗಳಲ್ಲಿ ಒಬಿಸಿ ವಿದ್ಯಾರ್ಥಿಗಳಿಗೆ ಶೇ. 42ಕ್ಕಿಂತ ಕಡಿಮೆ ಮತ್ತು ಎಸ್‌ಸಿ/ಎಸ್‌ಟಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಶೇ. 40ಕ್ಕಿಂತ ಕಡಿಮೆ ಇರಬಾರದೆಂದು ಸ್ಪಷ್ಟವಾಗಿದೆ ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ. ಅರ್ಜಿದಾರರ ವಾದವೇನು? ವಿಚಾರಣೆ ವೇಳೆ ವಾದ ಮಂಡಿಸಿದ ಅರ್ಜಿದಾರರ ಪರ ವಕೀಲರು, ಒಬಿಸಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳ ಶೈಕ್ಷಣಿಕ ಮಾನದಂಡಗಳು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಕನಿಷ್ಠ ಅಂಕಗಳಿಗೆ ಸಮನಾಗಿರಬೇಕು. ಅದರಂತೆ ಎನ್‌ಎಲ್‌ಎಸ್‌ಐಯು ಎಸ್‌ಸಿ/ಎಸ್‌ಟಿ ಮತ್ತು ಒಬಿಸಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಶೇ. 40 ಕನಿಷ್ಠ ಅಂಕಗಳನ್ನು ನಿಗದಿಪಡಿಸಿದೆ. ಆದರೆ, ಕಾನೂನು ವಿವಿ ಆ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಆಕ್ಷೇಪಿಸಿದರು. ಪ್ರಕರಣವೇನು? ಕೆಎಸ್‌ಎಲ್‌ಯುಗೆ ಸಂಯೋಜಿತವಾಗಿರುವ ಕಾನೂನು ಕಾಲೇಜುಗಳ ಪ್ರವೇಶಕ್ಕಾಗಿ ಶಿಕ್ಷಣ ಮಾನದಂಡಗಳಿಗೆ ಸಂಬಂಧಿಸಿದ ಅರ್ಹತಾ ಷರತ್ತುಗಳನ್ನು ಅರ್ಜಿದಾರರು ಪ್ರಶ್ನಿಸಿದ್ದರು. 2025-26 ಶೈಕ್ಷಣಿಕ ವರ್ಷಕ್ಕೆ 3 ವರ್ಷಗಳ ಎಲ್‌ಎಲ್‌ಬಿ ಕೋರ್ಸ್‌ಗೆ ಪ್ರವೇಶಕ್ಕಾಗಿ ವಿಶ್ವವಿದ್ಯಾಲಯವು 2025ರ ಜುಲೈ 19ರಂದು ಪ್ರವೇಶ ಅಧಿಸೂಚನೆಯನ್ನು ಹೊರಡಿಸಿತ್ತು. ಈ ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಿದ ಅರ್ಹತಾ ಮಾನದಂಡಗಳ ಪ್ರಕಾರ, ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ಕನಿಷ್ಠ ಶೇ.42 ಅಂಕಗಳನ್ನು ಪಡೆದಿರಬೇಕು. ಈ ಮಾನದಂಡಗಳನ್ನು ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ ಒಟ್ಟು ಶೇ.40 ಅಂಕಗಳಿಗೆ ಸಡಿಲಿಸಲಾಗಿತ್ತು. ಇದನ್ನು ಆಕ್ಷೇಪಿಸಿ ಅರ್ಜಿದಾರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು

ವಾರ್ತಾ ಭಾರತಿ 27 Nov 2025 11:46 pm

ಬೀಡಿ ಕಾರ್ಮಿಕರ ಸಮಸ್ಯೆ: ಕಾರ್ಮಿಕ ಸಚಿವರೊಂದಿಗೆ ಸಂಘಟನೆಗಳ ಮುಖಂಡರ ಸಭೆ

ಮಂಗಳೂರು: ಬೀಡಿ ಕಾರ್ಮಿಕರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಜೊತೆ ಬೀಡಿ ಕಾರ್ಮಿಕ ಸಂಘಟನೆಗಳ ಮುಖಂಡರು ಗುರುವಾರ ವಿಕಾಸ ಸೌಧದಲ್ಲಿ ಸಭೆ ನಡೆಸಿದರು. 2018ರಿಂದ 2024ರವರೆಗಿನ ಬಾಕಿ ಉಳಿಸಿರುವ ವೇತನ ಮತ್ತು 1.4.2024ರಿಂದ ಜಾರಿಯಾಗಬೇಕಿದ್ದ ಸರಕಾರ ಆದೇಶಿರುವ ಕಾನೂನುಬದ್ದ ಕನಿಷ್ಟ ಕೂಲಿಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಸೌತ್ ಕೆನರಾ ಬೀಡಿ ವರ್ಕರ್ಸ್ ಫೆಡರೇಷನ್ (ಸಿಐಟಿಯು) ನೇತೃತ್ವದಲ್ಲಿ ಬೀಡಿ ಕಾರ್ಮಿಕರು ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟದ ಬಗ್ಗೆ ಮುಖಂಡರು ಸಚಿವರ ಗಮನ ಸೆಳೆದರು. ಆಹ್ವಾನದ ಹೊರತಾಗಿಯೂ ಮಾಲಕರ ಸಂಘದ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಲಿಲ್ಲ. ಬೀಡಿ ಮಾಲಕರು ಸರಕಾರದ ಆದೇಶ ಜಾರಿಗೊಳಿಸದೆ ಕಾರ್ಮಿಕರಿಗೆ ನಡೆಸಿರುವ ಬಾಕಿ ವೇತನ, ಕನಿಷ್ಟ ಕೂಲಿ ವಂಚನೆಯನ್ನು ಸಚಿವರಿಗೆ ವಿವರಿಸಿರುವುದಾಗಿ ಕಾರ್ಮಿಕರನ್ನು ಪ್ರತಿನಿಧಿಸಿದ್ದ ಸಿಐಟಿಯು ನಾಯಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ತಾವು ನೀಡಿದ ಅಂಕಿ ಅಂಶಗಳ ಮಾಹಿತಿಯನ್ನು ಪಡೆದ ಸಚಿವರು, ಅವುಗಳ ಆಧಾರದಲ್ಲಿ ಬೀಡಿ ಉದ್ಯಮದ ಸಮಗ್ರ ಮಾಹಿತಿಗಳನ್ನು ಕಲೆ ಹಾಕುವಂತೆ, ಮಾಲಕರಿಗೆ ಪತ್ರ ರವಾನಿಸುವಂತೆ, ಡಿಸೆಂಬರ್ ಮಧ್ಯ ಭಾಗದಲ್ಲಿ ಮತ್ತೊಂದು ಸುತ್ತಿನ ಉನ್ನತ ಮಟ್ಟದ ಸಭೆಗೆ ಸಮಯ ನಿಗದಿ ಮಾಡುವಂತೆ ಮತ್ತು ನ.29ರಂದು ಮಂಗಳೂರಿನಲ್ಲಿ ನಡೆಯುವ ಬೀಡಿ ಕಾರ್ಮಿಕರ ಪ್ರತಿಭಟನಾ ಸಭೆಗೆ ತೆರಳಿ ಕಾರ್ಮಿಕರೊಂದಿಗೆ ಮಾತಾಡುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಸಿಐಟಿಯು ರಾಜ್ಯ ಅಧ್ಯಕ್ಷ ಮೀನಾಕ್ಷಿ ಸುಂದರಂ, ಬೀಡಿ ಕಾರ್ಮಿಕರ ರಾಜ್ಯ ಫೆಡರೇಷನ್ ಅಧ್ಯಕ್ಷ ಜೆ. ಬಾಲಕೃಷ್ಣ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸೈಯ್ಯದ್ ಮುಜೀಬ್, ಜಿಲ್ಲಾ ಪ್ರಮುಖರಾದ ಸುಕುಮಾರ್ ತೊಕ್ಕೊಟ್ಟು, ಬಿ.ಎಂ.ಭಟ್, ಮುನೀರ್ ಕಾಟಿಪಳ್ಳ, ಕವಿರಾಜ್ ಕಾಂಚನ್ ಉಡುಪಿ, ಫಾರೂಕ್ ಮಡಂಜೋಡಿ, ಧನಂಜಯ ಪಟ್ರಮೆ ಪಾಲ್ಗೊಂಡಿದ್ದರು.

ವಾರ್ತಾ ಭಾರತಿ 27 Nov 2025 11:45 pm

ಬೇಲೂರು | ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ; ಇಬ್ಬರ ಮೃತ್ಯು

ಬೇಲೂರು : ರಸ್ತೆಯ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಮತ್ತುಗನ್ನೆ ಗ್ರಾಮದ ಸಮೀಪ ಸಂಭವಿಸಿರುವುದು ವರದಿಯಾಗಿದೆ. ತಾಲೂಕಿನ ಹೊಸಮನಹಳ್ಳಿ ಗ್ರಾಮದ ಲೋಕೇಶ್ (25) ಹಾಗೂ ಅವರ ಸಹೋದರ ಸಂಬಂಧಿ ಚಿಕ್ಕಮಗಳೂರಿನ ರಾಮೇನಹಳ್ಳಿಯ ಕಿರಣ್ (32) ಮೃತಪಟ್ಟವರೆಂದು ಗುರುತಿಸಲಾಗಿದೆ. ಲೊಕೇಶ್ ಮತ್ತು ಕಿರಣ್ ತನ್ನ ತಂಗಿಯ ಆರತಕ್ಷತೆ ಇದ್ದ ಹಿನ್ನೆಲೆಯಲ್ಲಿ ನಡುರಾತ್ರಿ ಬೈಕ್‌ನಲ್ಲಿ ಮದುವೆಗೆ ಮೊಸರು ತರಲು ಬೇಲೂರಿಗೆ ಆಗಮಿಸುತ್ತಿದ್ದರು. ಮತ್ತುಗನ್ನೆ ಗ್ರಾಮದ ಸಮೀಪ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಕ್ಕದ ಚರಂಡಿಗೆ ಬಿದ್ದು ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಚಿಕ್ಕಮಗಳೂರು ರಸ್ತೆಯ ಭಾಗದಲ್ಲಿ ಬೈಕ್ ಅನಾಥವಾಗಿ ಬಿದ್ದಿದ್ದನ್ನು ಸ್ಥಳೀಯರು ಗಮನಿಸಿದಾಗ ಸುಮಾರು 10 ಅಡಿ ದೂರದಲ್ಲಿ ಲೊಕೇಶ್ ಹಾಗೂ ಕಿರಣ್ ಅವರ ಮೃತದೇಹ ಬಿದ್ದಿದ್ದವು. ಕೂಡಲೇ ಸ್ಥಳೀಯರು ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪಿಐ ರೇವಣ್ಣ ಹಾಗೂ ಪಿಎಸ್‌ಐ ಎಸ್.ಜಿ ಪಾಟೀಲ್ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಾರ್ತಾ ಭಾರತಿ 27 Nov 2025 11:44 pm

ಗಾಜಾ ಮಕ್ಕಳಿಗೆ ಶಾಲೆಗಳು ಮತ್ತೆ ಆರಂಭ, ಅಗತ್ಯ ಪರಿಕರ ಪೂರೈಕೆಗೆ ಒತ್ತಾಯ

ಗಾಜಾ ಪಟ್ಟಿಯಲ್ಲಿ ಈಗ ನೂರಾರು ಸವಾಲು ಎದುರಾಗಿರುವ ಸಮಯದಲ್ಲೇ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಯುದ್ಧ ಶುರುವಾಗಿ ಸುಮಾರು 2 ವರ್ಷಗಳೇ ಉರುಳಿದ್ದು, ಜೀವ ಉಳಿಸಿಕೊಂಡು ಜೀವನ ನಡೆಸಲು ಸಾಮಾನ್ಯರು ಪರದಾಡುತ್ತಿದ್ದಾರೆ. ಇಂತಹ ಸಮಯದಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ಕೂಡ ಕೈತಪ್ಪಿ ಹೋಗಿತ್ತು. ಆದರೆ ಇದೀಗ ಶಾಲೆಗಳನ್ನ ರೀ ಓಪನ್ ಮಾಡುವ ಬಗ್ಗೆ ಭಾರಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಮಧ್ಯಪ್ರಾಚ್ಯದ

ಒನ್ ಇ೦ಡಿಯ 27 Nov 2025 11:41 pm

ಪ್ರೊ.ವನಮಾಲ ವಿಶ್ವನಾಥ್, ಜೆ.ವಿ.ಕಾರ್ಲೊ ಸೇರಿ ಐದು ಮಂದಿಗೆ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಗೌರವ ಪ್ರಶಸ್ತಿ

ಬೆಂಗಳೂರು : ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ 2025ನೇ ಸಾಲಿನ ‘ಗೌರವ ಪ್ರಶಸ್ತಿ'ಗೆ ಹಾಸನದ ಜೆ.ವಿ.ಕಾರ್ಲೊ, ಬೆಂಗಳೂರಿನ ವನಮಾಲ ವಿಶ್ವನಾಥ್, ಚಿತ್ರದುರ್ಗದ ಡಾ.ಸಂಧ್ಯಾ ರೆಡ್ಡಿ ಕೆ.ಆರ್, ಹೊಸಪೇಟೆಯ ವಿಠಲರಾವ್ ಟಿ. ಗಾಯಕ್ವಾಡ್, ಅಥಣಿಯ ಡಾ.ಜೆ.ಪಿ.ದೊಡಮನಿ ಅವರು ಆಯ್ಕೆಯಾಗಿದ್ದಾರೆ ಎಂದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ.ಚನ್ನಪ್ಪ ಕಟ್ಟಿ ತಿಳಿಸಿದ್ದಾರೆ. ಗುರುವಾರ ಈ ಕುರಿತು ಪ್ರಕಟನೆ ನೀಡಿರುವ ಅವರು, ಕನ್ನಡ ಹಾಗೂ ಇತರ ಭಾಷೆಗಳ ನಡುವೆ ಅನುವಾದಕ್ಕೆ ಸಂಬಂಧಿಸಿದಂತೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಗೌರವ ಪ್ರಶಸ್ತಿಯು 50 ಸಾವಿರ ರೂ. ನಗದು ಹಾಗೂ ಫಲಕವನ್ನು ಒಳಗೊಂಡಿದೆ ಎಂದು ಮಾಹಿತಿ ನೀಡಿದ್ದಾರೆ. 2024ನೇ ಸಾಲಿನ ಪುಸ್ತಕ ಬಹುಮಾನವೂ ಪ್ರಕಟಗೊಂಡಿದ್ದು, 5 ಅನುವಾದಿತ ಕೃತಿಗಳು ಆಯ್ಕೆಯಾಗಿವೆ. ಪುಸ್ತಕ ಬಹುಮಾನವು ತಲಾ 25 ಸಾವಿರ ರೂ. ನಗದು ಒಳಗೊಂಡಿದೆ ಎಂದು ತಿಳಿಸಿದ್ದಾರೆ. 2024ನೇ ಸಾಲಿನ ಪುಸ್ತಕ ಬಹುಮಾನ : ಆರ್.ಸದಾನಂದ ಅವರು ಕನ್ನಡದಿಂದ ಇಂಗ್ಲಿಷ್‍ಗೆ ಅನುವಾದಿಸಿರುವ ಏಕತಾರಿ, ನಟರಾಜ ಹೊನ್ನವಳ್ಳಿ ಅವರು ಇಂಗ್ಲಿಷ್‍ನಿಂದ ಕನ್ನಡಕ್ಕೆ ಅನುವಾದಿಸಿರುವ ಆಲಯ ಈ ಲಯ, ಮಲ್ಲೇಶಪ್ಪ ಸಿದಾಂಪುರ ಅವರು ಅನುವಾದಿಸಿರುವ ಬೌಮನಿಜಂ-ಆಧುನಿಕತೆಯಿಂದ ದ್ರವಾಧುನಿಕತೆಯವರೆಗೆ, ಕಾರ್ತಿಕ್.ಆರ್ ಅವರು ಹಿಂದಿಯಿಂದ ಕನ್ನಡಕ್ಕೆ ಅನುವಾದಿಸಿರುವ ಸತ್ತವರ ಸೊಲ್ಲು, ಡಾ.ಎನ್.ದೇವರಾಜ್ ಅವರು ಅನುವಾದಿಸಿರುವ ಹಾಥಿಪಾಲ್ನೆ ಜೋ ಚಲಿ ಕೃತಿಗಳು 2024ನೇ ಸಾಲಿನ ಪುಸ್ತಕ ಬಹುಮಾನಗಳಿಗೆ ಆಯ್ಕೆಯಾಗಿವೆ ಎಂದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ.ಚನ್ನಪ್ಪ ಕಟ್ಟಿ ತಿಳಿಸಿದ್ದಾರೆ.

ವಾರ್ತಾ ಭಾರತಿ 27 Nov 2025 11:41 pm

ಕಾರ್ಮಿಕರ ಹಕ್ಕು ಕಸಿಯುವ ಕೇಂದ್ರದ 4 ಸಂಹಿತೆಗಳನ್ನು ಹಿಂಪಡೆಯಿರಿ : ಕ್ಲಿಫ್ಟನ್.ಡಿ ರೊಝಾರಿಯೋ

ಬೆಂಗಳೂರು : ಕೇಂದ್ರ ಸರಕಾರ ಜಾರಿಗೆ ತಂದಿರುವ 4 ಕಾರ್ಮಿಕ ಸಂಹಿತೆಗಳು ದುಡಿಯುವ ವರ್ಗಗಳ ಶ್ರಮವನ್ನು ದೋಚಿ, ಅವರ ಹಕ್ಕುಗಳನ್ನು ಕಸಿದು, ಬಂಡವಾಳಶಾಹಿಗಳ ಸಂಪತ್ತನ್ನು ಹೆಚ್ಚಿಸುವ ನೀತಿಗಳಾಗಿವೆ. ಆದ್ದರಿಂದ 4 ಕಾರ್ಮಿಕ ಸಂಹಿತೆಗಳನ್ನು ಕೇಂದ್ರ ಸರಕಾರ ಕೂಡಲೇ ಹಿಂಪಡೆಯಬೇಕು ಎಂದು ಎಐಸಿಸಿಟಿಯು ರಾಷ್ಟ್ರೀಯ ಉಪಾಧ್ಯಕ್ಷ ಕ್ಲಿಫ್ಟನ್.ಡಿ ರೋಝಾರಿಯೋ ಆಗ್ರಹಿಸಿದ್ದಾರೆ. ಗುರುವಾರ ನಗರದ ಫ್ರೀಡಂ ಪಾರ್ಕ್‍ನಲ್ಲಿ ಎಐಸಿಸಿಟಿಯು ವತಿಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ಧರಣಿ ಸಮಾವೇಶದಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ನ.21ರಂದು ಯಾವುದೇ ಪೂರ್ವ ಸೂಚನೆ, ಸಾರ್ವಜನಿಕ ಚರ್ಚೆ ಅಥವಾ ಕಾರ್ಮಿಕ ಸಂಘಟನೆಗಳೊಂದಿಗೆ ಸಮಾಲೋಚನೆ ನಡೆಸದೇ, 4 ಕಾರ್ಮಿಕ ಸಂಹಿತೆಗಳಾದ ವೇತನ ಸಂಹಿತೆ-2019, ಸಾಮಾಜಿಕ ಭದ್ರತಾ ಸಂಹಿತೆ-2020, ಕೈಗಾರಿಕಾ ಸಂಬಂಧಗಳ ಸಂಹಿತೆ-2020, ವೃತ್ತಿಪರ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆ-2020 ಅನ್ನು ಏಕಾಏಕಿ ಜಾರಿಗೊಳಿಸುವ ಮೂಲಕ ಕಾರ್ಮಿಕರ ಮೇಲೆ ಗದಾಪ್ರಹಾರ ನಡೆಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹೊಸ ಕಾರ್ಮಿಕ ಸಂಹಿತೆಗಳು ಕಾರ್ಮಿಕ ಹಕ್ಕುಗಳ ನಿರ್ಮೂಲನೆಗೆ, ವೇತನ ಇಳಿಕೆಗೆ, ಸಾಮಾಜಿಕ ಭದ್ರತೆಯ ನಷ್ಟಕ್ಕೆ, ಸಂಘಟನೆ ಸ್ವಾತಂತ್ರ್ಯ ನಾಶಕ್ಕೆ ಹಾಗೂ ಉದ್ಯೋಗ ಅಸ್ಥಿರತೆಗೆ ಕಾರಣವಾಗುತ್ತವೆ ಎಂದು ಖಂಡಿಸಿದರು. ಎಐಸಿಸಿಟಿಯು ರಾಜ್ಯ ಪ್ರದಾನ ಕಾರ್ಯದರ್ಶಿ ಮೈತ್ರೇಯಿ ಕೃಷ್ಣನ್ ಮಾತನಾಡಿ, ಕೇಂದ್ರ ಸರಕಾರ 4 ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸಿದ್ದು, ಈ ಕಾಯ್ದೆಗಳು ಅನುಷ್ಠಾನಗೊಂಡಲ್ಲಿ ಕಾರ್ಮಿಕರ ಬದುಕು ಇನ್ನಷ್ಟು ಪ್ರಪಾತಕ್ಕೆ ಬೀಳಲಿದೆ. ಈಗಾಗಲೇ ಕನಿಷ್ಠ ಕೂಲಿ, ಉದ್ಯೋಗ ಭದ್ರತೆ, ಸಂವಿಧಾನಬದ್ಧ ಹಕ್ಕುಗಳನ್ನು ಕಳೆದುಕೊಂಡಿರುವ ಕಾರ್ಮಿಕರು ನಿರುದ್ಯೋಗ, ಹಸಿವು, ಬಡತನ ಹೀಗೆ ಹತ್ತು ಹಲವು ಸಮಸ್ಯೆಗಳಿಗೆ ಸಿಲುಕಲಿದ್ದಾರೆ. ಕಾರ್ಮಿಕರಿಗೆ ಇನ್ನಷ್ಟು ಬಲ ಒದಗಿಸಲಾಗಿದೆ ಎಂಬ ಸರಕಾರದ ಹೇಳಿಕೆ ವಾಸ್ತವಕ್ಕೆ ತದ್ವಿರುದ್ಧವಾಗಿದೆ. ಎಲ್ಲಾ ಕ್ಷೇತ್ರಗಳಲ್ಲಿ 14 ದಿನಗಳ ಮುಂಚಿತ ಮುಷ್ಕರ ನೋಟಿಸ್ ಕಡ್ಡಾಯ ಮಾಡುವ ಮೂಲಕ ಹೋರಾಟದ ಹಕ್ಕಿನ ಮೇಲೆ ನೇರ ದಾಳಿ ಮಾಡಲಾಗಿದೆ ಎಂದರು. ಪ್ರತಿಭಟನೆಯಲ್ಲಿ ಎಐಸಿಸಿಟಿಯು ರಾಜ್ಯ ಘಟಕದ ಅಧ್ಯಕ್ಷ ಪಿ.ಪಿ.ಅಪ್ಪಣ್ಣ, ಹೋರಾಟಗಾರರಾದ ನಿರ್ಮಲಾ, ನಾಗರಾಜ ಪೂಜಾರ್, ಪುಟ್ಟಿಗೌಡ, ಪ್ರತಿಭಾ, ವಿಜಯಕುಮಾರ್, ಸಂತೋಷ ಗುಳೆದಟ್ಟಿ, ಪರುಶುರಾಮ ಸಂದೇರ್, ವಿನಯ್, ಮಾಯಮ್ಮ, ಕೆ. ನಾಗಲಿಸ್ವಾಮಿ, ವಿಜಯ್ ದೊರೆರಾಜು ಮತ್ತಿತರರು ಹಾಜರಿದ್ದರು.

ವಾರ್ತಾ ಭಾರತಿ 27 Nov 2025 11:39 pm

ಮಂಗಳೂರು | ಮರಳು ಅಕ್ರಮ ಸಾಗಾಟ: ಪ್ರಕರಣ ದಾಖಲು

ಮಂಗಳೂರು: ಮರಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ಅಡ್ಯಾರ್ ಬಳಿ ವಶಕ್ಕೆ ಪಡೆದ ಕಂಕನಾಡಿ ನಗರದ ಠಾಣೆಯ ಪೊಲೀಸರು ಚಾಲಕ ಪುದು ಗ್ರಾಮದ ಅಮ್ಮೆಮ್ಮಾರ್ ಹೌಸ್ ನಿವಾಸಿ ಮುಹಮ್ಮದ್ ಇಕ್ಬಾಲ್ (48) ಮತ್ತಾತನಿಗೆ ಮರಳು ತರಲು ಸೂಚಿಸಿದ್ದ ಜಯಣ್ಣ ಯಾನೆ ಶೇಖರ್ ಅಡ್ಯಾರ್‌ರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬುಧವಾರ ಬೆಳಗ್ಗೆ 10ಕ್ಕೆ ಅಡ್ಯಾರ್ ಕಟ್ಟೆ ಕಡೆಯಿಂದ ಬರುತ್ತಿದ್ದ ಪಿಕಪ್ ವಾಹನವನ್ನು ಪೊಲೀಸರು ನಿಲ್ಲಿಸಲು ಸೂಚನೆ ನೀಡಿದರು. ಅದರಂತೆ ಚಾಲಕ ವಾಹನ ನಿಲ್ಲಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ. ಸುತ್ತುವರಿದ ಪೊಲೀಸರು ಆತನನ್ನು ಹಿಡಿದು ವಾಹನ ಪರಿಶೀಲಿಸಿದಾಗ ಮರಳು ಕಂಡು ಬಂದಿದೆ. ಪಿಕಪ್ ವಾಹನದ ಮೌಲ್ಯ 6,00,000 ರೂ. ಹಾಗೂ ಮರಳಿನ ಮೌಲ್ಯ 6,500 ರೂ. ಎಂದು ಅಂದಾಜಿಸಲಾಗಿದೆ. ಯಾವುದೇ ಪರವಾನಗಿ ಇಲ್ಲದೆ ರಾಜ್ಯ ಸರಕಾರಕ್ಕೆ ರಾಜಧನ ಪಾವತಿಸದೆ ಅಕ್ರಮವಾಗಿ ಮರಳನ್ನು ಕಳ್ಳತನ ಮಾಡಿ ಪಿಕಪ್‌ನಲ್ಲಿ ತುಂಬಿಸಿಕೊಂಡು ಹೋಗುತ್ತಿದ್ದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾರ್ತಾ ಭಾರತಿ 27 Nov 2025 11:36 pm

Davanagere| ಚಿನ್ನಾಭರಣ ಸುಲಿಗೆ ಪ್ರಕರಣ : ಪ್ರೊಬೆಷನರಿ ಪಿಎಸ್ಸೈ ವಜಾ, ಇನ್ನೋರ್ವ ಅಮಾನತು

ದಾವಣಗೆರೆ : ಚಿನ್ನದ ವ್ಯಾಪಾರಿಯನ್ನು ಬೆದರಿಸಿ 8 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಸುಲಿಗೆ ಮಾಡಿದ್ದ ಪ್ರಕರಣದ ಮೊದಲ ಆರೋಪಿ ಪ್ರೊಬೆಷನರಿ ಸಬ್ ಇನ್‌ಸ್ಪೆಕ್ಟರ್‌ನನ್ನು ಸೇವೆಯಿಂದ ವಜಾಗೊಳಿಸಿ ಮತ್ತೊಬ್ಬ ಆರೋಪಿಯನ್ನು ಅಮಾನತುಗೊಳಿಸಿ ಪೂರ್ವ ವಲಯ ಪೊಲೀಸ್ ನಿರೀಕ್ಷಕ ಡಾ.ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ. ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಯ ಪರೀಕ್ಷಾರ್ಥ ಅವಧಿಯಲ್ಲಿದ್ದ ಪ್ರಕರಣದ ಮೊದಲ ಆರೋಪಿ ಮಾಳಪ್ಪ ಯಲ್ಲಪ್ಪ ಚಿಪ್ಪಲಕಟ್ಟಿಯನ್ನು ಪೊಲೀಸ್ ಸೇವೆಯಿಂದಲೇ ವಜಾಗೊಳಿಸಲಾಗಿದ್ದು, ಎರಡನೇ ಆರೋಪಿ ಪ್ರವೀಣ್ ಕುಮಾರ್‌ರನ್ನು ನ.24ರಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಇಲಾಖಾ ವಿಚಾರಣೆಗೆ ಹಾಜರಾಗುವಂತೆ ಆದೇಶಿಸಿದ್ದಾರೆ. ಮಾಳಪ್ಪ ಚಿಪ್ಪಲಕಟ್ಟಿ ಹಾವೇರಿ ಜಿಲ್ಲೆಯ ಹಂಸಬಾವಿ ಪೊಲೀಸ್ ಠಾಣೆಯಲ್ಲಿ ಪ್ರೊಬೆಷನರಿ ಪಿಎಸ್ಸೈ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಪ್ರವೀಣ್‌ಕುಮಾರ್ ರಾಣೆಬೆನ್ನೂರು ಸಂಚಾರ ಠಾಣೆಯಿಂದ ಶಿವಮೊಗ್ಗ ಜಿಲ್ಲೆಯ ಸಾಗರ ಠಾಣೆಗೆ ವರ್ಗಾವಣೆಗೊಂಡಿದ್ದರು. ಸಾರ್ವಜನಿಕರಿಗೆ ರಕ್ಷಣೆ ನೀಡುವ ಹಾಗೂ ನೊಂದವರಿಗೆ ನ್ಯಾಯ ಕೊಡಿಸುವಂತಹ ಬಹುಮುಖ್ಯ, ಜವಾಬ್ದಾರಿಯುತ ಹುದ್ದೆಯಲ್ಲಿದ್ದುಕೊಂಡು ದರೋಡೆ ಕೃತ್ಯ ಎಸಗಿದ್ದು ಘೋರ ಅಪರಾಧ. ಈ ಹಿನ್ನೆಲೆಯಲ್ಲಿ ಮಾಳಪ್ಪ ಚಿಪ್ಪಲಕಟ್ಟಿ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದ್ದರೆ ಪ್ರವೀಣ್ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಐಜಿಪಿ ಆದೇಶದಲ್ಲಿ ತಿಳಿಸಿದ್ದಾರೆ. ನ.24ರಂದು ನಸುಕಿನಲ್ಲಿ ಕಾರವಾರದ ಆಭರಣ ತಯಾರಕ ವಿಶ್ವನಾಥ್ ಅರ್ಕಸಾಲಿ ಅವರಿಂದ 8 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ದರೋಡೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪಿಎಸ್ಸೈ ಸೇರಿ 7 ಆರೋಪಿಗಳನ್ನು ಕೆಟಿಜೆ ನಗರ ಠಾಣೆಯ ಪೊಲೀಸರು ನ.25ರಂದು ಬಂಧಿಸಿದ್ದರು.

ವಾರ್ತಾ ಭಾರತಿ 27 Nov 2025 11:31 pm

ಮಂಗಳೂರಿನಲ್ಲಿ ಜಿಐಎಸ್ ಆಧಾರಿತ ಒಳಚರಂಡಿ ಮ್ಯಾಪಿಂಗ್ ಯೋಜನೆ

ಮಂಗಳೂರು: ಮಂಗಳೂರಿನಲ್ಲಿ ಜಿಐಎಸ್ ಆಧಾರಿತ ಒಳಚರಂಡಿ ಮ್ಯಾಪಿಂಗ್ ಯೋಜನೆ ನಡೆಯುತ್ತಿದ್ದು, ವಾರ್ಡ್ 37, 38 ಮತ್ತು 40ರಲ್ಲಿ 933ಕ್ಕೂ ಹೆಚ್ಚು ಮ್ಯಾನ್ ಹೋಲ್‌ಗಳನ್ನು ಮ್ಯಾಪ್ ಮಾಡಲಾಗಿದೆ ಎಂದು ತಿಳಿದು ಬಂದಿದೆ. ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ಎಂಜಿನಿಯರಿಂಗ್ ಅಂತಿಮ ವರ್ಷದ ಶ್ರೇಷ್ಠಿ, ಅವ್ಯಯ ಶರ್ಮಾ ಪಿ, ಕಂಪ್ಯೂಟರ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ವಾಸವಿ ನಾಗರಾಜ್ ಜೋಶಿ ಹಾಗೂ ಮಂಗಳೂರಿನ ಕೆಲವು ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳು ಈ ಯೋಜನೆಗೆ ಸಾಥ್ ನೀಡಿದ್ದಾರೆ. ಮಂಗಳೂರಿನ ಅಂಡರ್‌ಗ್ರೌಂಡ್ ಒಳಚರಂಡಿ ಜಾಲದ ನಿರ್ವಹಣೆಯನ್ನು ಪರಿವರ್ತಿಸುವ ಗುರಿಯನ್ನು ಹೊಂದಿರುವ ಮಹತ್ವಾಕಾಂಕ್ಷೆಯ ಜಿಐಎಸ್ ಆಧಾರಿತ ಮ್ಯಾಪಿಂಗ್ ಉಪಕ್ರಮಕ್ಕೆ ವಿದ್ಯಾರ್ಥಿಗಳು ಕೊಡುಗೆ ನೀಡುತ್ತಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎಇಇ ಎಂ.ಎನ್.ಶಿವಲಿಂಗಪ್ಪ ಮತ್ತು ಯೋಜನಾ ವ್ಯವಸ್ಥಾಪಕಿ ಅನನ್ಯಾ ಎ.ಬಂಗೇರ ಅವರ ಮಾರ್ಗದರ್ಶನದಲ್ಲಿ ಡಿಜಿಟಲ್ ಕಾರ್ಟೊಗ್ರಫಿ (ಡಿಸಿ) ಯೋಜನೆ ನಡೆಯುತ್ತಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ವಾರ್ತಾ ಭಾರತಿ 27 Nov 2025 11:21 pm

ಬೀದರ್ | ಸಂವಿಧಾನ ಸರ್ಮಪಣಾ ದಿನದಂದು ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ದಲಿತ ಸಂಘರ್ಷ ಸಮಿತಿ ಮನವಿ

ಬೀದರ್ : ಹುಮನಾಬಾದ್‌ ತಾಲೂಕು ಆಡಳಿತದ ವತಿಯಿಂದ ಆಚರಿಸಲಾದ 76ನೇ ಸಂವಿಧಾನ ಸರ್ಮಪಣಾ ದಿನದಂದು ಉದ್ದೇಶಪೂರ್ವಕವಾಗಿ ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ತಕ್ಷಣವೇ ನೋಟಿಸ್ ಜಾರಿಗೊಳಿಸಿ, ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಮನವಿ ಮಾಡಿದೆ. ಹುಮನಾಬಾದ್‌ ತಹಶೀಲ್ದಾರ್ ಅವರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ಹುಮನಾಬಾದ್‌ ತಾಲೂಕು ಆಡಳಿತದ ವತಿಯಿಂದ ನ.26 ರಂದು 76ನೇ ಸಂವಿಧಾನ ಸಮರ್ಪಣಾ ದಿನವನ್ನು ಬಹಳ ವಿಜೃಬಣೆಯಿಂದ ಆಚಾರಣೆ ಮಾಡಲಾಗಿದೆ. ಆದರೆ ಈ ಕಾರ್ಯಕ್ರಮದಲ್ಲಿ ಗ್ರೇಡ್-2 ತಹಶೀಲ್ದಾರ್ ಗೀತಾ ಹೀರೆಮಠ್‌, ಶಿರಸ್ತೆದಾರ ವಿಜಯಕುಮಾರ ಸ್ವಾಮಿ ಇವರಿಬ್ಬರು ಉದ್ದೇಶಪೂರ್ವಕವಾಗಿ ಗೈರು ಹಾಜರಾಗಿ ನಿಷ್ಕಾಳಜಿತನ ತೋರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಹುಮನಾಬಾದ್‌ ತಾಲೂಕಿನಲ್ಲಿ ಸುಮಾರು 36 ರಿಂದ 40 ಜನ ತಾಲೂಕು ಮಟ್ಟದ ಅಧಿಕಾರಿಗಳು ಇದ್ದಾರೆ. ಆದರೆ 76ನೇ ಸಂವಿಧಾನ ಸಮರ್ಪಣಾ ಕಾರ್ಯಕ್ರಮಕ್ಕೆ ಕೇವಲ 3 ರಿಂದ 4 ಜನ ಅಧಿಕಾರಿಗಳು ಮಾತ್ರ ಬಂದಿರುತ್ತಾರೆ. ಆದ್ದರಿಂದ ಕಾರ್ಯಕ್ರಮದಲ್ಲಿ ಭಾಗವಹಿಸದ ಹಾಗೂ ನಿಷ್ಕಾಳಜಿನತ ತೋರಿಸಿದ ಅಧಿಕಾರಿಗಳಿಗೆ ತಕ್ಷಣ ನೋಟಿಸ್ ಜಾರಿ ಮಾಡಿ ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಲಾಗಿದೆ. ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕ ರಾಹುಲ್ ಉದ್ದಾ, ಕಿಶೋರ್ ಸೂರ್ಯವಂಶಿ, ಶಿವಾನಂದ ಕಟ್ಟಿಮನಿ, ಶಾಬೀರ್ ಶಾ ಹಾಗೂ ಅರುಣ್ ಕಲ್ಲೂರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 27 Nov 2025 11:20 pm

ಕಲಬುರಗಿ | ಸರಣಿ ಕಳ್ಳತನ ಪ್ರಕರಣ: ಆರೋಪಿಯ ಬಂಧನ, 8.50 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ

ಕಲಬುರಗಿ: ಅಶೋಕ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮೂರು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿ, ಆತನಿಂದ 8.50 ಮೌಲ್ಯದ ಚಿನ್ನಾಭರಣ ಮತ್ತು 10 ಸಾವಿರ ನಗದು ಹಣ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ತಿಳಿಸಿದ್ದಾರೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ.ಶರಣಪ್ಪ ಎಸ್.ಡಿ, ನಗರದ ಹೀರಾಪುರ ಪ್ರದೇಶದ ನಿವಾಸಿ ಚಾಂದಪಾಷಾ (25) ಬಂಧಿತ ಆರೋಪಿಯಾಗಿದ್ದಾನೆ. ಈತ ಜೂಜಾಟ ಹಾಗೂ ಕುಡಿತದ ಚಟಕ್ಕಾಗಿ ಹಗಲಲ್ಲೇ ಮನೆ ಕಳ್ಳತನಗಳನ್ನು ಮಾಡುತ್ತಿದ್ದ ಎಂದು ಹೇಳಿದರು. ಅಕ್ಟೋಬರ್‌ ಹಾಗೂ ನವೆಂಬರ್‌ ತಿಂಗಳಲ್ಲಿ ಅಶೋಕನಗರ ಠಾಣಾ ವ್ಯಾಪ್ತಿಯ ಮೂರು ಮನೆಗಳಲ್ಲಿ ಕಳ್ಳತನ ಪ್ರಕರಣಗಳು ದಾಖಲಾಗಿದ್ದವು. ಒಟ್ಟು 15 ಲಕ್ಷ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳು ಕಳ್ಳತನವಾಗಿದ್ದವು. ಆ ಪೈಕಿ ಬಂಧಿತ ಆರೋಪಿಯಿಂದ 8 ಲಕ್ಷ ಮೌಲ್ಯದ 83 ಗ್ರಾಂ ಚಿನ್ನಾಭರಣ, 50 ಸಾವಿರ ಮೌಲ್ಯದ 30 ಗ್ರಾಂ ಬೆಳ್ಳಿ ಆಭರಣ ಹಾಗೂ 10 ಸಾವಿರ ನಗದು ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ವಿವರಿಸಿದರು. ದಕ್ಷಿಣ ಉಪವಿಭಾಗದ ಎಸಿಪಿ ಶರಣಬಸಪ್ಪ ಸುಬೇದಾರ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್‌ ಅರುಣ್‌ ಕುಮಾರ್‌, ಎಎಸ್‌ಐ ಶೈಲಜಾ, ವೈಜಿನಾಥ, ಮಲ್ಲಿಕಾರ್ಜುನ, ಶಿವಪ್ರಕಾಶ, ನೀಲಕಂಠರಾಯ, ಚಂದ್ರಶೇಖರ, ಮುಜಾಹೀದ್‌ ಅವರಿದ್ದ ತಂಡವು  ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದರು.  ಸುದ್ದಿಗೋಷ್ಠಿಯಲ್ಲಿ ಎಸಿಪಿ ಶರಣಬಸಪ್ಪ ಸುಬೇದಾರ, ಪಿಐ ಅರುಣಕುಮಾರ್‌ ಉಪಸ್ಥಿತರಿದ್ದರು.  

ವಾರ್ತಾ ಭಾರತಿ 27 Nov 2025 11:15 pm

ಸೇಡಂ| ಅಕ್ರಮ ಮರಳು ಸಾಗಾಟ: ಪ್ರಕರಣ ದಾಖಲು

ಕಲಬುರಗಿ: ಕಮಲಾವತಿ ನದಿಯಿಂದ ಟ್ರ್ಯಾಕ್ಟರ್ ಮೂಲಕ ಅಕ್ರಮ ಮರಳು ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸೇಡಂ ಪೊಲೀಸರು, ಟ್ರ್ಯಾಕ್ಟರ್ ಅನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸೇಡಂ ತಾಲೂಕಿನ ಬಟಗೀರ (ಬಿ) ಗ್ರಾಮದ ಸಮೀಪವಿರುವ ಕಮಲಾವತಿ ನದಿಯಿಂದ ಟ್ರ್ಯಾಕ್ಟರ್ ಮೂಲಕ ಅಕ್ರಮ ಮರಳು ಸಾಗಾಟ ನಡೆಸಲಾಗುತ್ತಿದೆ ಎಂಬ ಮಾಹಿತಿ ದೊರೆತ ಹಿನ್ನೆಲೆ ಸಿಪಿಐ ಮಹಾದೇವ ದಿಡಿಮನಿ, ಸಿಬ್ಬಂದಿ ಮಾರುತಿ, ಬಾಲಕೃಷ್ಣ ರೆಡ್ಡಿ ಸೇರಿದಂತೆ ಇತರೆ ಸಿಬ್ಬಂದಿಗಳ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ದಾಳಿ ವೇಳೆ ಟ್ರ್ಯಾಕ್ಟರ್ ಅನ್ನು  ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.   ಈ ಕುರಿತು ಚಾಲಕ ಹಾಗೂ ವಾಹನ ಮಾಲಕನ ವಿರುದ್ಧ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ವಾರ್ತಾ ಭಾರತಿ 27 Nov 2025 11:07 pm

'ಗ್ರೇಟರ್ ಮೈಸೂರು ಸಿಟಿ ಕಾರ್ಪೊರೇಷನ್' ರಚನೆಗೆ ರಾಜ್ಯ ಸರ್ಕಾರ ಅಸ್ತು

ರಾಜ್ಯ ಸಂಪುಟವು ಹಲವು ಮಹತ್ವದ ನಿರ್ಣಯಗಳನ್ನು ಕೈಗೊಂಡಿದೆ. ಮೈಸೂರು ಮಹಾನಗರ ಪಾಲಿಕೆಯನ್ನು ಗ್ರೇಟರ್ ಮೈಸೂರು ಸಿಟಿ ಕಾರ್ಪೊರೇಷನ್ ಆಗಿ ವಿಸ್ತರಿಸಲಾಗಿದೆ. ಬೆಂಗಳೂರಿನಲ್ಲಿ ತ್ಯಾಜ್ಯ ನಿರ್ವಹಣೆ ಮತ್ತು ನೀರಿನ ಬಾಕಿ ಮನ್ನಾ ಯೋಜನೆಗಳಿಗೆ ಅನುಮೋದನೆ ದೊರೆತಿದೆ. ನ್ಯಾಯಾಂಗ ನೇಮಕಾತಿ, ಆರೋಗ್ಯ ಕೇಂದ್ರಗಳ ನಿರ್ಮಾಣ, ಚಾಲಕರ ನೇಮಕಾತಿ, ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳಿಗೂ ಒಪ್ಪಿಗೆ ನೀಡಲಾಗಿದೆ. ಮೆಕ್ಕೆಜೋಳ ಬೆಂಬಲ ಬೆಲೆಗೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ.

ವಿಜಯ ಕರ್ನಾಟಕ 27 Nov 2025 11:06 pm

ಯೆಲ್ಲೋ ಲೈನ್‌ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ಪ್ರತೀ ಸೋಮವಾರ 5ಗಂಟೆಗೆ ರೈಲು ಸೇವೆ

ನಮ್ಮ ಮೆಟ್ರೊ ಹಳದಿ ಮಾರ್ಗದಲ್ಲಿ ಕೆಲ ದಿನಗಳ ಹಿಂದೆ ಮೆಟ್ರೋ ತಡೆದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಆರ್‌ವಿ ರಸ್ತೆ-ಬೊಮ್ಮಸಂದ್ರ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರ ಒತ್ತಾಯಕ್ಕೆ ಮಣಿದಿರುವ ಬಿಎಂಆರ್‌ಸಿಎಲ್‌ ಇನ್ಮುಂದೆ ಸೋಮವಾರದಂದು ಬೆಳಿಗ್ಗೆ 6 ಗಂಟೆಯ ಬದಲಿಗೆ 5.05 ಕ್ಕೆ ರೈಲು ಸೇವೆ ಆರಂಭಿಸುವುದಾಗಿ ಪ್ರಕಟಣೆ ಹೊರಡಿಸಿದೆ. ಇದು ಪ್ರತಿಭಟನೆ ನಡೆದುದ್ದರ ಫಲವಾಗಿ ಕೈಗೊಂಡ ನಿರ್ಧಾರವಾಗಿದೆ ಎಂದು ಹೇಳಲಾಗುತ್ತಿದೆ.

ವಿಜಯ ಕರ್ನಾಟಕ 27 Nov 2025 10:54 pm

ಭಾರತದ ಬಾಹ್ಯಾಕಾಶ ಭವಿಷ್ಯಕ್ಕೆ Gen Z ಭರವಸೆ; ಅವಕಾಶ ಬಳಸಿಕೊಳ್ಳುವ ಚುರುಕುತನವಿದೆ ಎಂದು ಮೋದಿ ಗುಣಗಾನ

ಹೈದರಾಬಾದ್‌ನಲ್ಲಿ ಸ್ಕೈರೂಟ್ ಸಂಸ್ಥೆಯ 'ಇನ್ಫಿನಿಟಿ ಕ್ಯಾಂಪಸ್ ಉದ್ಘಾಟನೆ ನಡೆಸಿದ ನಂತರ ಮಾತನಾಡಿದ ಅವರು, ಬಾಹ್ಯಾಕಾಶ ಕ್ಷೇತ್ರವನ್ನು ಖಾಸಗಿ ವಲಯಕ್ಕೆ ಮುಕ್ತಗೊಳಿಸಿದ ನಂತರ ಭಾರತ ಯುವ ಪೀಳಿಗೆ ಅದರ ಸದುಪಯೋಗ ಪಡಿಸಿಕೊಳ್ಳುತ್ತಿದೆ.ಇಂದು ದೇಶದಲ್ಲಿ 300ಕ್ಕೂ ಹೆಚ್ಚು ಬಾಹ್ಯಾಕಾಶ ಸ್ಟಾರ್ಟಪ್‌ಗಳು ಕಾರ್ಯನಿರ್ವಹಿಸುತ್ತಿದೆ. ಇದು ಭಾರತದ ಬಾಹ್ಯಾಕಾಶ ಭವಿಷ್ಯಕ್ಕೆ ಹೊಸ ಭರವಸೆ. ಇದೇ ವೇಳೆ ಸ್ಕೈರೂಟ್ ಸಂಸ್ಥೆ ತನ್ನ 'ವಿಕ್ರಮ್-I' ರಾಕೆಟ್ ಅನ್ನು ಅನಾವರಣಗೊಳಿಸಿತು.

ವಿಜಯ ಕರ್ನಾಟಕ 27 Nov 2025 10:41 pm

2026ರ ಅಂತರ್‌ರಾಷ್ಟ್ರೀಯ ಉದ್ಯೋಗ ಮೇಳದಲ್ಲಿ ಭಾಗವಹಿಸಲು ದುಬೈ ಸಂಸ್ಥೆಗಳು ಆಸಕ್ತಿ : ಶರಣಪ್ರಕಾಶ್ ಪಾಟೀಲ್

ದುಬೈ : ಕರ್ನಾಟಕದಲ್ಲಿ ನಡೆಯಲಿರುವ ಬೆಂಗಳೂರು ಅಂತರ್‌ ರಾಷ್ಟ್ರೀಯ ಉದ್ಯೋಗ ಮೇಳದಲ್ಲಿ ಭಾಗವಹಿಸಲು ದುಬೈ ಸೇರಿದಂತೆ ಯುಎಇಯ ಹಲವಾರು ಕಂಪನಿಗಳು ಆಸಕ್ತಿ ತೋರಿವೆ ಎಂದು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. 2026ನೆ ಸಾಲಿನ ಜನವರಿ-ಫೆಬ್ರವರಿಯಲ್ಲಿ ಬೆಂಗಳೂರು ಅಂತರ್‌ ರಾಷ್ಟ್ರೀಯ ಉದ್ಯೋಗ ಮೇಳ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಚಿವರಾದ ಡಾ.ಶರಣ ಪ್ರಕಾಶ್ ಪಾಟೀಲ್ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ನೇತೃತ್ವದಲ್ಲಿ ಗುರುವಾರ ದುಬೈನಲ್ಲಿ ರೋಡ್ ಶೋ ನಡೆಯಿತು. ಸಾರಿಗೆ, ಮಾನವ ಸಂಪನ್ಮೂಲ ತಂತ್ರಜ್ಞಾನ, ಸಾಫ್ಟ್ ಸೇವೆಗಳು, ಮಾಧ್ಯಮ ತಂತ್ರಜ್ಞಾನ, ಗೇಮಿಂಗ್, ರಿಯಲ್ ಎಸ್ಟೇಟ್, ಇಂಧನ ಮತ್ತು ಸಂಬಂಧಿತ ಆರೋಗ್ಯ ವಿಜ್ಞಾನಗಳಂತಹ ಕ್ಷೇತ್ರಗಳ ಕಂಪನಿಗಳು ಆಸಕ್ತಿಯನ್ನು ತೋರಿಸಿದವು ಎಂದು ಮಾಹಿತಿ ನೀಡಿದ ಸಚಿವರು, ಶಿಕ್ಷಣ ಮತ್ತು ಕೌಶಲ್ಯತೆ ವಿಷಯದಲ್ಲಿ ಕರ್ನಾಟಕ ವಿಶೇಷ ಸಾಮರ್ಥ್ಯ ಹೊಂದಿದೆ. ರಾಜ್ಯದ ಯುವಕರನ್ನು ನೇಮಿಸಿಕೊಳ್ಳಲು ಕಂಪನಿಗಳು ಮುಂದಾಗಬೇಕು ಎಂದು ಮನವಿ ಮಾಡಿದರು. ನಮ್ಮ ರಾಜ್ಯದ ಕೌಶಲ್ಯ ಭರಿತ ಪದವೀಧರರು ಜಾಗತಿಕ ಮಟ್ಟದಲ್ಲಿ ಉದ್ಯೋಗ ಪಡೆಯಲು ಅರ್ಹರಾಗಿದ್ದಾರೆ. ನಮ್ಮ ರಾಜ್ಯ ಸರಕಾರ ವಿಶೇಷ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಇದರಲ್ಲಿ ಹಲವಾರು ವಿದ್ಯಾರ್ಥಿಗಳು ಪೂರ್ಣ ತರಬೇತಿ ಪಡೆದು ಸಜ್ಜಾಗಿದ್ದಾರೆ. ದುಬೈ ಮೂಲದ ಉದ್ಯೋಗದಾತರು ಕರ್ನಾಟಕದ ಈ ಪ್ರತಿಭಾವಂತರಿಗೆ ಉದ್ಯೋಗಾವಕಾಶ ಒದಗಿಸಬೇಕು ಎಂದು ಶರಣ ಪ್ರಕಾಶ್ ಪಾಟೀಲ್ ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಸಚಿವ ಡಾ.ಎಂ.ಸಿ.ಸುಧಾಕರ್, ತಾಂತ್ರಿಕ ಶಿಕ್ಷಣ ಮತ್ತು ಆಧುನಿಕ ಕೌಶಲ್ಯ ಅಭಿವೃದ್ಧಿಯಲ್ಲಿ ನಮ್ಮ ರಾಜ್ಯ ಪ್ರಗತಿಯತ್ತ ಸಾಗಿದೆ. ತಾಂತ್ರಿಕ ತರಬೇತಿಗೆ ಕರ್ನಾಟಕದ ವಿಧಾನವು ಭಾರತದಲ್ಲಿ ಅತ್ಯುತ್ತಮವಾಗಿದೆ. ನಮ್ಮ ರಾಜ್ಯದ ಪ್ರತಿಭಾವಂತರು ಜಾಗತಿಕ ಮಾನದಂಡ ಪೂರೈಸುವ ಐಟಿ ಮತ್ತು ಕೃತಕ ಬುದ್ಧಿಮತ್ತೆ ಕೌಶಲ್ಯ ಕ್ಷೇತ್ರದಲ್ಲಿ ತರಬೇತಿ ಪಡೆದು ಸಜ್ಜಾಗಿದ್ದಾರೆ ಎಂದು ಹೇಳಿದರು. ದುಬೈನಲ್ಲಿ ನಡೆದ ಕಾರ್ಯಕ್ರಮದ ವೇಳೆ ಹವಾಮಾನ, ನವೀಕರಿಸಬಹುದಾದ ಇಂಧನ ಮತ್ತು ಸುಸ್ಥಿರತೆ ಹಾಗೂ ಡಿಜಿಟಲೀಕರಣ ಮತ್ತು ಜಾಗತಿಕ ಕೌಶಲ್ಯ ವಿನಿಮಯದ ಕುರಿತು ಉಭಯ ಸಚಿವರು ವಿವಿಧ ಚರ್ಚೆಗಳಲ್ಲಿ ಪಾಲ್ಗೊಂಡರು. ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (ಕೆಎಸ್‍ಡಿಸಿ) ಅಧ್ಯಕ್ಷೆ ಶಿವಕಾಂತಮ್ಮ ನಾಯಕ್ ಮತ್ತು ಕೌಶಲ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಕೆಎಸ್‍ಡಿಸಿ ವ್ಯವಸ್ಥಾಪಕ ನಿರ್ದೇಶಕ ಎನ್.ಎಂ.ನಾಗರಾಜ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವಾರ್ತಾ ಭಾರತಿ 27 Nov 2025 10:35 pm

ರಾಜ್ಯದ ಮಹಿಳಾ ಕ್ರೀಡಾಪಟುಗಳನ್ನು ಸನ್ಮಾನಿಸಿ, ತಲಾ 5 ಲಕ್ಷ ರೂ ಬಹುಮಾನ ಘೋಷಿಸಿದ ಸಿಎಂ

ಬೆಂಗಳೂರು : ವಿಶ್ವಕಪ್ ಗೆದ್ದ ಭಾರತ ಮಹಿಳಾ ಕಬಡ್ಡಿ ತಂಡ ಹಾಗೂ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಬೆಳ್ಳಿ ಗೆದ್ದಿರುವ ರಾಜ್ಯದ ಇಬ್ಬರು ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ., ಬಹುಮಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮೀ ಹಾಗೂ ಚೈನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯ ರಾಜೇಶ್ ಅವರಿಗೆ ಗುರುವಾರ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಅಭಿನಂದನೆ ಸಲ್ಲಿಸಿ ತಲಾ 5 ಲಕ್ಷ ರೂ., ಬಹುಮಾನವನ್ನು ಮುಖ್ಯಮಂತ್ರಿ ಪ್ರಕಟಿಸಿದರು. ಈ ವೇಳೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಕ್ಕೆ ಮತ್ತು ದೇಶಕ್ಕೆ ಉತ್ತಮ ಹೆಸರು ತರುವ ನಿಟ್ಟಿನಲ್ಲಿ ಇನ್ನಷ್ಟು ಸಾಧನೆ ಮಾಡುವಂತೆ ಹಾರೈಸಿ ಇಬ್ಬರೂ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ,. ಚೆಕ್ ವಿತರಿಸುವಂತೆ ಸರಕಾರದ ಅಪರ ಮುಖ್ಯಕಾರ್ಯದರ್ಶಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಗೋಂವಿಂದರಾಜು, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಮನೋಜ್ ಕುಮಾರ್, ಸಂಚಾಲಕರಾದ ರವೀಂದ್ರ, ಕಾರ್ಯದರ್ಶಿ ರಾಜೇಶ್, ತರಬೇತುದಾರ ಬಿ.ಎನ್.ಸುಧಾಕರ್ ಸೇರಿದಂತೆ ಪ್ರಮುಖರಿದ್ದರು.

ವಾರ್ತಾ ಭಾರತಿ 27 Nov 2025 10:13 pm

ಆರ್ಥಿಕ ಸಾಕ್ಷರತೆ , ನಿವೃತ್ತಿ ಯೋಜನೆ ಉತ್ತೇಜನಕ್ಕೆ PFRDAನಿಂದ ಥೀಮ್ ಅಭಿಯಾನ

ಹೊಸದಿಲ್ಲಿ,ನ.26: ನಿವೃತ್ತಿ ಯೋಜನೆ, ಆರ್ಥಿಕ ಸ್ವಾವಲಂಬನೆಯ ಮಹತ್ವ ಹಾಗೂ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯ ಬಗ್ಗೆ ಜನತೆಯಲ್ಲಿ ಅದರಲ್ಲೂ ವಿಶೇಷವಾಗಿ ಈಶಾನ್ಯ ಭಾರತದಲ್ಲಿ ಅರಿವನ್ನು ಮೂಡಿಸಲು ಪಿಂಚಣಿ ನಿಧಿ ನಿಯಂತ್ರಕ ಹಾಗೂ ಅಭಿವೃದ್ಧಿ ಪ್ರಾಧಿಕಾರವು ‘NPS ಕ್ವೆಸ್ಟ್-ಚೇಸ್ ಯೂವರ್ ಫ್ಯೂಚರ್’ ಅಭಿಯಾನವನ್ನು ಹಮ್ಮಿಕೊಂಡಿದೆ. `#NPS ಝರೂರಿ ಹೈ’ ಥೀಮ್‌ ನಡಿ ರೀಲ್ಸ್, ಪೋಸ್ಟರ್‌ಗಳು, AI ವಿಡಿಯೋಗಳ ಮೂಲಕ ತಮ್ಮ ಸೃಜನಶೀಲತೆಯನ್ನು ಪ್ರದರ್ಶಿಸಲು ಈ ಉಪಕ್ರಮವು ನಾಗರಿಕರನ್ನು ಉತ್ತೇಜಿಸಲಿದೆ. ಥೀಮ್‌ಗಳು: 1.ಪ್ರತಿ ಉದ್ಯೋಗ, ಒಂದು ಪಿಂಚಣಿ 2.ಬೇಗನೇ ಆರಂಭಿಸಿ: ಸಂಯೋಜನೆಯ ಶಕ್ತಿ- ನಿಮ್ಮ ನಿವೃತ್ತಿಯನ್ನು ಸುಭದ್ರಗೊಳಿಸಿ. 3. ನಿವೃತ್ತಿ ಯೋಜನೆ, ಘನತೆ ಹಾಗೂ ಆರ್ಥಿಕ ಸ್ವಾವಲಂಬನೆ 4. ಆರ್ಥಿಕ ಸಾಕ್ಷರತೆ-NPS ವಾತ್ಸಲ್ಯ. ಎಲ್ಲಾ ಪ್ರವೇಶಗಳೂ ಅಧಿಕೃತ ಟ್ಯಾಗ್‌ಲೈನ್ ‘‘#NPS ಝರೂರಿ ಹೈ’’ಅನ್ನು ಮೂದಿಸಿರಬೇಕು ಹಾಗೂ ಹಣಕಾಸು ಯೋಜನೆಯ ಮಹತ್ವದ ಬಗ್ಗೆ ಬೆಳಕುಚೆಲ್ಲಬೇಕು. ಅತ್ಯುತ್ತಮ ಇನ್‌ಫ್ಲುಯೆನ್ಸರ್ ರೀಲ್, ಅತ್ಯುತ್ತಮ AIವೀಡಿಯೊ, ಅತ್ಯುತ್ತಮ ಸೃಜನಶೀಲ ಪೋಸ್ಟರ್, ಗ್ರಾಫಿಕ್ ಅಥವಾ ಆರ್ಟ್‌ವರ್ಕ್‌ಗೆ ಆಕರ್ಷಕ ನಗದು ಬಹುಮಾನಗಳನ್ನು ನೀಡಲಾಗುವುದು. ಎಲ್ಲಾ ಭಾರತೀಯ ಪೌರರು ಹಾಗೂ ಕಂಪೆನಿಗಳು ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಸ್ಪರ್ಧೆಯಲ್ಲಿ ಪಾಲ್ಗೊಳ್ಳುವವರು ಸಂಸ್ಥೆಯ ಅಧಿಕೃತ ಅಭಿಯಾನದ ಜಾಹೀರಾತುಗಳಲ್ಲಿ ಲಭ್ಯವಿರುವ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿ ಇಲ್ಲವೇ PFRDAದ ಅಧಿಕೃತ ವೆಬ್‌ಸೈಟ್ . ಇಲ್ಲಿ ಭೇಟಿ ನೀಡಿ ತಮ್ಮ ಪ್ರವೇಶಗಳನ್ನು ಸಲ್ಲಿಸಬಹುದಾಗಿದೆ

ವಾರ್ತಾ ಭಾರತಿ 27 Nov 2025 10:06 pm

ನಿರಾಶ್ರಿತನಾಗಿ ಬಂದು ರಕ್ತದ ಕೋಡಿ ಹರಿಸಿದ! ವೈಟ್ ಹೌಸ್ ಸೆಕ್ಯುರಿಟಿಯನ್ನು ಹತ್ಯೆಗೈದ ರಹಮತುಲ್ಲಾ ಲಕನ್ವಾಲ್ ಯಾರು?

ವಾಷಿಂಗ್ಟನ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿಂದೆ ರಹಮತುಲ್ಲಾ ಲಕನ್ವಾಲ್ ಎಂಬುವರ ಕಥೆ ಇದೆ. ಅಫ್ಘಾನಿಸ್ತಾನದಲ್ಲಿ ಅಮೆರಿಕಾದೊಂದಿಗೆ ಕೆಲಸ ಮಾಡಿದ್ದ ಇವರು, ಅಮೆರಿಕಾಗೆ ಬಂದ ನಂತರ ಅನ್ಯಾಯದ ಭಾವನೆ ಬೆಳೆಸಿಕೊಂಡಿದ್ದರು. ಇವರ ವೀಸಾ ಪ್ರಕ್ರಿಯೆಯಲ್ಲಿ ವಿಳಂಬವಾಗಿತ್ತು. ಇದೀಗ ಅಮೆರಿಕಾ ಅಫ್ಘಾನರ ಆಶ್ರಯ ಪ್ರಕ್ರಿಯೆಯನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಿದೆ.

ವಿಜಯ ಕರ್ನಾಟಕ 27 Nov 2025 10:05 pm

ಮಂಗಳೂರು ವಿವಿ ಅಂತರ ಕಾಲೇಜು ಪುರುಷರ, ಮಹಿಳೆಯರ ಅತ್ಲೆಟಿಕ್ಸ್; 472 ಅಂಕಗಳೊಂದಿಗೆ ಆಳ್ವಾಸ್ ಮೂಡಬಿದ್ರೆ ಸಮಗ್ರ ಚಾಂಪಿಯನ್

►ತೆಂಕನಿಡಿಯೂರು ಕಾಲೇಜಿನ ಧನುಷ್ ಶ್ರೇಷ್ಠ ಪುರುಷ ಅತ್ಲೀಟ್►ಆಳ್ವಾಸ್ ಕಾಲೇಜಿನ ದೀಕ್ಷಿತಾ ಶ್ರೇಷ್ಠ ಮಹಿಳಾ ಅತ್ಲೀಟ್

ವಾರ್ತಾ ಭಾರತಿ 27 Nov 2025 10:00 pm

ಕಲಬುರಗಿ | ಅತಿವೃಷ್ಟಿಯಿಂದ ಬೆಳೆ ಹಾನಿ: ಹೆಚ್ಚುವರಿ ಪರಿಹಾರಕ್ಕೆ ಬಿಜೆಪಿ ಮುಖಂಡರಿಂದ ಆಗ್ರಹ

ಕಲಬುರಗಿ: 2025-26ನೇ ಸಾಲಿನಲ್ಲಿ ಮುಂಗಾರು ಅತೀ ವೃಷ್ಟಿ ಮಳೆಯಿಂದಾಗಿ ನಷ್ಟಕ್ಕೊಳಗಾದ ರೈತರು ಬೆಳೆದ ಏಕದಳ, ದ್ವಿದಳ ಹಾಗೂ ತೋಟಗಾರಿಕಾ ಬೆಳೆಗಳಿಗೆ ಎಸ್‌ಡಿಆರ್‌ಆಫ್ ಅಥವಾ ಎನ್‌ಡಿಆರ್‌ಎಫ್ ನಿಯಮಕ್ಕೆ ಅನುಸಾರವಾಗಿ ಹಾಗೂ ರಾಜ್ಯ ಸರಕಾರದಿಂದ ಹೆಚ್ಚುವರಿಯಾಗಿ ಕೂಡಲೇ ಪರಿಹಾರ ಬಿಡುಗಡೆಗೊಳಿಸಬೇಕೆಂದು ಬಿಜೆಪಿ ಮುಖಂಡರು ಆಗ್ರಹಿಸಿದರು. ಗುರುವಾರ ಆಳಂದ ಪಟ್ಟಣದ ಬಸ್ ನಿಲ್ದಾಣದ ಎದುರುಗಡೆ ಆಳಂದ ಮಂಡಲ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ಮುಖಂಡರು, ಈಗ ಬಿಡುಗಡೆ ಮಾಡಿರುವ ಪರಿಹಾರವೂ ಯಾವುದಕ್ಕೂ ಸಾಲುವುದಿಲ್ಲ. ಇದು ಕೇವಲ ರೈತರ ಕಣ್ಣೊರೆಸುವ ತಂತ್ರವಾಗಿದೆ. ಕರ್ನಾಟಕ ರಾಜ್ಯದಲ್ಲಿ ರೈತರು ಬೆಳೆದ ಬೆಳೆಗಳಾದ ಮೆಕ್ಕೆಜೋಳ, ಭತ್ತ, ರಾಗಿ, ತೊಗರಿ, ಈರುಳ್ಳಿ ಸೇರಿದಂತೆ ಏಕದಳ ಹಾಗೂ ದ್ವಿದಳ ಧಾನ್ಯಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಪ್ರತಿ ಗ್ರಾಮ ಪಂಚಾಯತ್‌ಗೆ ಒಂದರಂತೆ ಅಥವಾ ಪ್ರತಿ ಸಹಕಾರಿ ಸಂಘಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲು ಒತ್ತಾಯಿಸಿದರು. ಮಾಜಿ ಶಾಸಕ ಸುಭಾಷ್ ಆರ್ ಗುತ್ತೇದಾರ ಮಾತನಾಡಿ, 2025-26ನೇ ಸಾಲಿನ ಬೆಂಬಲ ಬೆಲೆಯಲ್ಲಿ ರೈತರು ಬೆಳೆದಿರುವ ಬೆಳೆಗಳನ್ನು ರಾಜ್ಯ ಸರಕಾರ ಖರೀದಿ ಕೇಂದ್ರಗಳ ಮುಖಾಂತರ ಖರೀದಿಸಲು ಆಗ್ರಹಿಸಿದರು.  ಸೇಡಂ ಮಾಜಿ ಶಾಸಕ ರಾಜಕುಮಾರ್‌ ಪಾಟೀಲ್‌ ತೇಲ್ಕೂರ ಮಾತನಾಡಿ, ಕಲ್ಯಾಣ ಕರ್ನಾಟಕ ಜೀವನಾಡಿಯಾದ ತುಂಗಭದ್ರಾ ಆಣೆಕಟ್ಟಿನಲ್ಲಿ 2ನೇ ಬೆಳೆಗೆ ನೀರು ಬಿಡುವಷ್ಟು ನೀರಿನ ಸಂಗ್ರಹವಿದ್ದು, ಹೆಚ್ಚು ಮಳೆಯಿಂದಾಗಿ ಒಳಹರಿವು ಕೂಡ ನಿರಂತರವಾಗಿ ಹರಿಯುತ್ತಿದ್ದರೂ ರಾಜ್ಯ ಕಾಂಗ್ರೆಸ್ ಸರಕಾರ 2ನೇ ಬೆಳೆಗೆ ನೀರು ಬಿಡಲು ಸಾಧ್ಯವಿಲ್ಲವೆಂದು ತೀರ್ಮಾನಿಸಿರುತ್ತದೆ. ಕ್ರಸ್ಟ್ ಗೇಟ್‌ಗಳ ರಿಪೇರಿಗಾಗಿ ಎರಡನೇ ಬೆಳೆಗೆ ನೀರು ನಿಲ್ಲಿಸಿರುವ ಕಾಂಗ್ರೆಸ್ ಸರಕಾರ ನಷ್ಟಕ್ಕೊಳಗಾಗುವ ರೈತರಿಗೆ ಪ್ರತಿ ಎಕರೆ ಭೂಮಿಗೆ 25 ಸಾವಿರ ರೂಪಾಯಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.  ಬಿಜೆಪಿ ಜಿಲ್ಲಾಧ್ಯಕ್ಷ ಅಶೋಕ ಬಗಲಿ ಮಾತನಾಡಿ, ಕೃಷ್ಣಾ ಮೇಲ್ದಂಡೆ ಯೋಜನೆ, ಮಹಾದಾಯಿ ಯೋಜನೆ, ಕಳಸಾ ಬಂಡೂರಿ, ಅಪ್ಪಭದ್ರಾ ಮೇಲ್ದಂಡೆ ಯೋಜನೆ, ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಮುತ್ತು ಕಾಲುವೆ, ಟನಲ್‌ಗಳು ಹಾಗೂ ಅಶ್ವೇಡೆಟ್‌ಗಳ ರಿಪೇರಿ, ಮೇಕೆದಾಟು ಹಾಗೂ ಎತ್ತಿನಹೊಳೆ ಯೋಜನೆಗಳನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸಲು ಕಾಂಗ್ರೆಸ್ ಸರಕಾರ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಪ್ರತಿವರ್ಷ 30 ಸಾವಿರ ಕೋಟಿ ಹಣ ಬಿಡುಗಡೆಗೊಳಿಸಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಆಗ್ರಹಿಸಿದರು.  ಪ್ರತಿಭಟನೆ ನಂತರ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಂದಗೂಳೆ, ವೀರಣ್ಣಾ ಮಂಗಾಣೆ, ಅಣ್ಣಾರಾವ ಪಾಟೀಲ ಕವಲಗಾ, ಸಂತೋಷ ಹಾದಿಮನಿ, ಲಿಂಗರಾಜ ಬಿರಾದಾರ, ಬಸವರಾಜ ಬಿರಾದಾರ, ಚಂದ್ರಕಾoತ ಭೂಸನೂರ, ಮಲ್ಲಿಕಾರ್ಜುನ ತಡಕಲ, ಪಂಡಿತರಾವ್‌ ಪಾಟೀಲ, ಆದಿನಾಥ ಹೀರಾ, ನಾಗರಾಜ ಶೇಗಜಿ, ಫಯ್ಯಾಜ್ ಪಟೇಲ, ಶರಣು ಸರಸಂಬಿ, ಸಂದೀಪ ನಾಯಕ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

ವಾರ್ತಾ ಭಾರತಿ 27 Nov 2025 9:56 pm

ಜನಪರ ಸುದ್ದಿ ಪ್ರಚಾರದಲ್ಲಿ ವಾರ್ತಾ ಭಾರತಿ ಮುಂಚೂಣಿಯಲ್ಲಿದೆ : ವಿಶ್ವರಾಧ್ಯ ಸತ್ಯಂಪೇಟೆ

ಕಲ್ಯಾಣ ಕರ್ನಾಟಕ ಆವೃತ್ತಿ ಲೋಕಾರ್ಪಣೆ ಪ್ರಯುಕ್ತ ಶಹಾಪುರ ಪಟ್ಟಣದಲ್ಲಿ ಓದುಗರು, ಹಿತೈಷಿಗಳ ಸಭೆ

ವಾರ್ತಾ ಭಾರತಿ 27 Nov 2025 9:37 pm

Tamil Nadu | ಸೆಂಗೊಟ್ಟೈಯನ್ TVK ಸೇರ್ಪಡೆಯಾಗಿದ್ದರಿಂದ ವಿಜಯ್ ಪಕ್ಷಕ್ಕೇನು ಲಾಭ?

ಚೆನ್ನೈ: ಪಕ್ಷವಿರೋಧ ಚಟುವಟಿಕೆಗಳ ಆರೋಪದ ಮೇಲೆ AIADMK ಪಕ್ಷದಿಂದ ಉಚ್ಚಾಟನೆಗೊಂಡಿದ್ದ ಮಾಜಿ ಸಚಿವ ಸೆಂಗೊಟ್ಟೈಯನ್ ಗುರುವಾರ ನಟ ವಿಜಯ್ ನಾಯಕತ್ವದ ತಮಿಳಗ ವೆಟ್ರಿ ಕಳಗಂ ಪಕ್ಷ ಸೇರ್ಪಡೆಯಾಗಿದ್ದಾರೆ. ಅವರ ಸೇರ್ಪಡೆಯಿಂದ ತಮಿಳಗ ವೆಟ್ರಿ ಕಳಗಂ ಪಕ್ಷಕ್ಕೆ ಚುನಾವಣೆಗೂ ಮುನ್ನ ಭಾರಿ ಲಾಭವಾಗಿದೆ ಎಂಬ ವಿಶ್ಲೇಷಣೆಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ. 1972ರಲ್ಲಿ AIADMK ಸ್ಥಾಪನೆಗೊಂಡಾಗಿನಿಂದಲೂ ಅದರೊಂದಿಗೆ ಗುರುತಿಸಿಕೊಂಡು ಬಂದಿದ್ದ ಮಾಜಿ ಸಚಿವ ಕೆ.ಎ.ಸೆಂಗೊಟ್ಟೈಯನ್, ಫೆಬ್ರವರಿ ತಿಂಗಳಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ.ಪಳನಿಸ್ವಾಮಿ ವಿರುದ್ಧ ಬಂಡೆದ್ದಿದ್ದರು. ಇದು ಎಲ್ಲರನ್ನೂ ಚಕಿತಗೊಳಿಸಿತ್ತು. ಅದಕ್ಕೆ ಕಾರಣವೂ ಇತ್ತು. ಮೃದು ಭಾಷಿಯಾದ 77 ವರ್ಷದ ಹಿರಿಯ ನಾಯಕ ಸೆಂಗೊಟ್ಟೈಯನ್ ಮೂಲತಃ AIADMK ಹಾಗೂ ಅದರ ನಾಯಕತ್ವಕ್ಕೆ ತಮ್ಮ ಅಚಲ ನಿಷ್ಠೆ ಪ್ರದರ್ಶಿಸುವ ಮೂಲಕವೇ ಮನೆಮಾತಾದವರು. ಆದರೆ, AIADMK ಮತ್ತೆ NDA ತೆಕ್ಕೆಗೆ ಮರಳಲು ಹಾಗೂ ಪಕ್ಷದಿಂದ ಉಚ್ಚಾಟನೆಗೊಂಡಿದ್ದ ವಿ.ಕೆ.ಶಶಿಕಲಾ, ಟಿ.ಟಿ.ವಿ.ದನಿಕರನ್ ಹಾಗೂ ಒ ಪನೀರ್ ಸೆಲ್ವಂ ಮತ್ತೆ AIADMKಗೆ ಸೇರ್ಪಡೆಯಾಗುವಂತೆ ಪಳನಿಸ್ವಾಮಿ ಮೇಲೆ ಒತ್ತಡ ಹೇರಲು ಸೆಂಗೊಟ್ಟೈಯನ್ ಅವರನ್ನು ಬಿಜೆಪಿ ಬಳಸಿಕೊಂಡಿತ್ತು ಎಂಬ ಊಹಾಪೋಹಗಳು ರಾಜಕೀಯ ವಲಯದಲ್ಲಿ ಹರಿದಾಡಿದ್ದವು. ಹೀಗಿದ್ದೂ, ಒಂದು ಹಂತದಲ್ಲಿ AIADMK ನಾಯಕತ್ವದ ವಿರುದ್ಧವೇ ಬಂಡೆದ್ದ ಸೆಂಗೊಟ್ಟೈಯನ್ ರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಅವರನ್ನು ತನ್ನ ಅನುಕೂಲಕ್ಕೆ ಬಳಸಿಕೊಂಡಿದ್ದ ಬಿಜೆಪಿ ಕೂಡಾ, ಅವರನ್ನು ನಡುನೀರಿನಲ್ಲಿ ಕೈಬಿಟ್ಟಿತ್ತು. ಹೀಗಾಗಿ, ಅಂತಿಮವಾಗಿ ಅವರಿಂದು ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಸೇರ್ಪಡೆಯಾಗಿದ್ದಾರೆ. AIADMKಯ ಪ್ರಶ್ನಾತೀತ ನಾಯಕ, ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಜಿ.ರಾಮಚಂದ್ರನ್ ಅವರೊಂದಿಗೆ ನಿಕಟ ಬಾಂಧವ್ಯ ಹೊಂದಿದ್ದ, ಜಯಲಲಿತಾರಿಗೂ ಆಪ್ತರಾಗಿದ್ದ ಸೆಂಗೊಟ್ಟೈಯನ್, ತಮ್ಮ ಸಂಘಟನಾತ್ಮಕ ಕೌಶಲಗಳಿಗೆ ಹೆಸರಾಗಿದ್ದಾರೆ. ವಿಶೇಷವಾಗಿ ಜಯಲಲಿತಾರ ಚುನಾವಣಾ ಪ್ರಚಾರ ಯೋಜನೆಯ ರೂಪುರೇಷೆ ತಯಾರಿಸುವುದರಲ್ಲಿ ಅವರು ನಿಪುಣರಾಗಿದ್ದರು. ಮೇಲಾಗಿ, ಅವರು ಪಳನಿಸ್ವಾಮಿ ಅವರ ಪ್ರಭಾವಿ ಗೌಂಡರ್ ಸಮುದಾಯಕ್ಕೇ ಸೇರಿದವರಾಗಿದ್ದಾರೆ. ಇದೀಗ ಗೌಂಡರ್ ಸಮುದಾಯದ ಸೆಂಗೊಟ್ಟೈಯನ್ ತಮಿಳಗ ವೆಟ್ರಿ ಕಳಗಂ ಸೇರ್ಪಡೆಯಾಗಿರುವುದರಿಂದ, ಚುನಾವಣೆಗೂ ಮುನ್ನ ಅದರ ಬಲ ಗಮನಾರ್ಹವಾಗಿ ಹೆಚ್ಚಳವಾಗಿದೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿವೆ. ವಾಸ್ತವವಾಗಿ, ಭ್ರಷ್ಟಾಚಾರದ ಪ್ರಕರಣದಲ್ಲಿ ತಾನು ದೋಷಿ ಎಂದು ತೀರ್ಪು ಬಂದಾಗ, ಶಶಿಕಲಾ ಮುಖ್ಯಮಂತ್ರಿ ಹುದ್ದೆಯಿಂದ ಹಿಂದೆ ಸರಿದಿದ್ದರು. ಈ ವೇಳೆ ಪಕ್ಷದ ಹಿರಿಯ ನಾಯಕ ಕೆ.ಪಳನಿಸ್ವಾಮಿಯೊಂದಿಗೆ ಸೆಂಗೊಟ್ಟೈಯನ್ ಕೂಡಾ ಮುಖ್ಯಮಂತ್ರಿ ಹುದ್ದೆಗೆ ಮುಂಚೂಣಿ ಅಭ್ಯರ್ಥಿಯಾಗಿದ್ದರು. ಇಂತಹ ಸೆಂಗೊಟ್ಟೈಯನ್ ತಮಿಳಗ ವೆಟ್ರಿ ಕಳಗಂ ಪಕ್ಷ ಸೇರ್ಪಡೆಯಾಗಿರುವುದರಿಂದ, ಅದರ ಶಕ್ತಿ ಗಮನಾರ್ಹ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದೇ ರಾಜಕೀಯ ವಲಯದಲ್ಲಿ ವ್ಯಾಖ್ಯಾನಿಸಲಾಗುತ್ತಿದೆ.

ವಾರ್ತಾ ಭಾರತಿ 27 Nov 2025 9:34 pm

ಆಧಾರ ರಹಿತ ಆರೋಪ : ಛಲವಾದಿ ನಾರಾಯಣಸ್ವಾಮಿ ವಿರುದ್ಧ ಕಾಂಗ್ರೆಸ್ ದೂರು

ಬೆಂಗಳೂರು : ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಕಾಂಗ್ರೆಸ್ ಪಕ್ಷದಲ್ಲಿ ಕೋಟ್ಯಾಂತರ ರೂ. ಹಣದ ವ್ಯವಹಾರ ನಡೆಯುತ್ತಿದೆ ಹಾಗೂ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಆಧಾರ ರಹಿತ ಆರೋಪ ಮಾಡುತ್ತಿದ್ದು, ಆದ್ದರಿಂದ ಅವರ ಮೇಲೆ ಪ್ರಕರಣ ದಾಖಲಿಸುವಂತೆ ಹೈಗ್ರೌಂಡ್ ಪೊಲೀಸ್ ಠಾಣೆಗೆ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಎಸ್.ಮನೋಹರ್ ದೂರು ನೀಡಿದ್ದಾರೆ. ಛಲವಾದಿ ನಾರಾಯಣಸ್ವಾಮಿ ಅವರು ಕಾಂಗ್ರೆಸ್ ಸರಕಾರದ ಬಗ್ಗೆ ಪಕ್ಷದ ಶಾಸಕರ ಹೆಸರನ್ನು ಪ್ರಸ್ತಾಪಿಸಿ ಹಾಗೂ ವರಿಷ್ಠರ ಮೇಲೆ ಆಧಾರ ರಹಿತವಾದ ಸುಳ್ಳು ಹೇಳಿಕೆಯನ್ನು ನೀಡಿ ರಾಜ್ಯದ ಜನರಿಗೆ ತಪ್ಪು ಸಂದೇಶ ರವಾನಿಸುವ ಮೂಲಕ ಸುಳ್ಳು ಆರೋಪವನ್ನು ಮಾಡಿದ್ದಾರೆ. ಹಾಗೂ ಅದರ ಬಗ್ಗೆ ತನಿಖೆ ನಡೆಸಬೇಕು ಎಂದು ಅವರೇ ಒತ್ತಾಯಿಸಿದ್ದಾರೆ. ಆದ್ದರಿಂದ ಕೂಡಲೇ ಛಲವಾದಿ ನಾರಾಯಣಸ್ವಾಮಿ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಬೇಕು. ಅವರ ಬಳಿ ಇರುವ ಮಾಹಿತಿ ಹಾಗೂ ಸಂದೇಶಗಳನ್ನು ಪರಿಶೀಲಿಸಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿ ಅವರು ನೀಡಿರುವ ಅಂಕಿ ಅಂಶವನ್ನು ಅವರಿಂದ ಮಾಹಿತಿ ಪಡೆಯಲು ಕೂಡಲೇ ಅವರನ್ನು ಬಂಧಿಸಬೇಕು. ಅವರೇ ನನ್ನ ಬಳಿ ದಾಖಲೆ ಇದೆ ಎಂದು ಹೇಳಿದ್ದಾರೆ. ಭ್ರಷ್ಟಾಚಾರದ ದಾಖಲೆಯನ್ನು ಮರೆಮಾಚುವುದು ಭ್ರಷ್ಟಾಚಾರಕ್ಕೆ ಪರೋಕ್ಷವಾಗಿ ಬೆಂಬಲಿಸಿದಂತೆ ಅದರಲ್ಲೂ ಛಲವಾದಿ ನಾರಾಯಣಸ್ವಾಮಿ ವಿಧಾನ ಪರಿಷತ್‍ನ ವಿರೋಧ ಪಕ್ಷದ ನಾಯಕರ ಸ್ಥಾನದಲ್ಲಿ ಇರುವುದರಿಂದ ಇವರು ಅಧಾರ ರಹಿತವಾದಂತ ಆರೋಪ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಛಲವಾದಿ ನಾರಾಯಣಸ್ವಾಮಿ ಅವರಿಗೆ ಯಾರು ಮಾಹಿತಿ ನೀಡಿದ್ದಾರೆ. ಯಾವ ವ್ಯಕ್ತಿಯಿಂದ ಸಂದೇಶ ಬಂದಿದೆ ಎಂಬುದನ್ನು ಪತ್ತೆಹಚ್ಚಲು ಕೂಡಲೇ ಇವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಬೇಕು. ತಕ್ಷಣ ಇವರನ್ನು ಬಂಧಿಸಬೇಕು ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ.

ವಾರ್ತಾ ಭಾರತಿ 27 Nov 2025 9:30 pm

ಅಂತರಾಷ್ಟ್ರೀಯ `ಸ್ಟಡಿ ಪರ್ಮಿಟ್' ಕಡಿತಗೊಳಿಸಿದ ಕೆನಡಾ: ವರದಿ

ಒಟ್ಟಾವ, ನ.27: ಕೆನಡಾ ಸರಕಾರವು ಅಂತರಾಷ್ಟ್ರೀಯ ಅಧ್ಯಯನ ಪರ್ಮಿಟ್‌ ಗಳನ್ನು ಕಡಿತಗೊಳಿಸಿದ್ದು ಇದು ಭಾರತೀಯ ವಿದ್ಯಾರ್ಥಿಗಳ ಮೇಲೆ ದೊಡ್ಡ ಪರಿಣಾಮ ಬೀರಲಿದೆ. ಮುಂದಿನ ವರ್ಷ ಅಂತಾರಾಷ್ಟ್ರೀಯ `ಸ್ಟಡಿ ಪರ್ಮಿಟ್'ಗಳಲ್ಲಿ 7% ಕುಸಿತಗಳನ್ನು ಕೆನಡಾ ಸರಕಾರ ನಿರೀಕ್ಷಿಸುತ್ತಿದ್ದು 2026ರ ಪರ್ಮಿಟ್ ವಿತರಣೆಯನ್ನು 4,08,000ಕ್ಕೆ ಮಿತಿಗೊಳಿಸಲಿದೆ. ಇದರಲ್ಲಿ ಹೊಸ ಆಗಮನಕ್ಕಾಗಿ 1,55,000 ವೀಸಾಗಳು ಮತ್ತು ಪ್ರಸ್ತುತ ವಿದ್ಯಾರ್ಥಿಗಳಿಗಾಗಿ 2,53,000 ವೀಸಾ ವಿಸ್ತರಣೆಗಳು ಒಳಗೊಂಡಿದೆ. ಈ ಗುರಿಯು 2025ರ ವಿತರಣಾ ಗುರಿಗಿಂತ 7% ಕಡಿಮೆ ಮತ್ತು 2024ರ ವಿತರಣಾ ಗುರಿಗಿಂತ 16% ಕಡಿಮೆಯಾಗಿದೆ ಎಂದು ವಲಸೆ, ನಿರಾಶ್ರಿತರು ಮತ್ತು ಪೌರತ್ವ ಕೆನಡಾ(IRCC) ಇಲಾಖೆ ಹೇಳಿದೆ. ಟೆಂಪರರಿ ಫಾರಿನ್ ವರ್ಕರ್ ಪ್ರೋಗ್ರಾಂ(ಟಿಎಫ್‍ಡಬ್ಲ್ಯೂಪಿ) ಮತ್ತು ಇಂಟರ್ ನ್ಯಾಷನಲ್ ಮೊಬಿಲಿಟಿ ಪ್ರೋಗ್ರಾಂ(ಐಎಂಪಿ)ಗಳ ಅಡಿಯಲ್ಲಿ ಹೊಸ ಉದ್ಯೋಗ ಪರ್ಮಿಟ್‌ ಗಳು 2026ರಲ್ಲಿ 2,30,000ಕ್ಕೆ ತಲುಪಿ ಬಳಿಕ 2027 ಮತ್ತು 2028ರಲ್ಲಿ ಕಡಿಮೆಯಾಗಲಿದೆ. ಈ ಕ್ರಮವು ಭಾರತೀಯ ಪ್ರಜೆಗಳ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ವಾರ್ತಾ ಭಾರತಿ 27 Nov 2025 9:29 pm

ಜಿ20 ಶೃಂಗಸಭೆಗೆ ದಕ್ಷಿಣ ಆಫ್ರಿಕಾವನ್ನು ಆಹ್ವಾನಿಸುವುದಿಲ್ಲ: ಟ್ರಂಪ್

ವಾಷಿಂಗ್ಟನ್, ನ.27: ಅಮೆರಿಕಾದ ಅಧ್ಯಕ್ಷತೆಯಲ್ಲಿ 2026ರಲ್ಲಿ ಫ್ಲೋರಿಡಾದಲ್ಲಿ ನಡೆಯಲಿರುವ ಜಿ20 ಶೃಂಗಸಭೆಗೆ ದಕ್ಷಿಣ ಆಫ್ರಿಕಾ ಆಹ್ವಾನ ಪಡೆಯುವುದಿಲ್ಲ. ಆ ರಾಷ್ಟ್ರವು ಎಲ್ಲಿಯೂ ಸದಸ್ಯತ್ವಕ್ಕೆ ಯೋಗ್ಯವಲ್ಲ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ದಕ್ಷಿಣ ಆಫ್ರಿಕಾದಿಂದ ಜಿ20 ಅಧ್ಯಕ್ಷತೆಯನ್ನು ಪಡೆದಿರುವ ಅಮೆರಿಕಾ 2025ರ ಡಿಸೆಂಬರ್ 1ರಿಂದ 2026ರ ನವೆಂಬರ್ 30ರವರೆಗೆ ಅಧ್ಯಕ್ಷತೆ ವಹಿಸಲಿದೆ. `ಆಫ್ರಿಕಾದಲ್ಲಿ ಶ್ವೇತವರ್ಣೀಯರ ವಿರುದ್ಧದ ಭಯಾನಕ ಮಾನವ ಹಕ್ಕುಗಳ ಉಲ್ಲಂಘನೆಯ ಬಗ್ಗೆ ಕ್ರಮ ಕೈಗೊಳ್ಳಬೇಕೆಂಬ ನಮ್ಮ ಆಗ್ರಹವನ್ನು ಅಲ್ಲಿಯ ಸರಕಾರ ತಿರಸ್ಕರಿಸಿದೆ. ಆ ದೇಶವು ಎಲ್ಲಿಯೂ ಸದಸ್ಯತ್ವ ಪಡೆಯಲು ಯೋಗ್ಯವಾಗಿಲ್ಲ ಎಂಬುದನ್ನು ಅಲ್ಲಿಯ ಸರಕಾರ ಜಗತ್ತಿಗೆ ಜಾಹೀರುಪಡಿಸಿದೆ. ತಕ್ಷಣದಿಂದ ಅನ್ವಯಿಸುವಂತೆ ಅವರಿಗೆ ಎಲ್ಲಾ ಸಬ್ಸಿಡಿ ಹಾಗೂ ಪಾವತಿಗಳನ್ನು ಸ್ಥಗಿತಗೊಳಿಸಲಾಗುವುದು. ಜಿ20 ಶೃಂಗಸಭೆಯ ಅಂತ್ಯದಲ್ಲಿ ಅಮೆರಿಕಾದ ಉನ್ನತ ಪ್ರತಿನಿಧಿಗೆ ಅಧ್ಯಕ್ಷತೆ ಹಸ್ತಾಂತರಿಸಲು ಅವರು ನಿರಾಕರಿಸಿರುವುದರಿಂದ ಮುಂದಿನ ವರ್ಷ ಫ್ಲೋರಿಡಾದಲ್ಲಿ ನಡೆಯಲಿರುವ ಜಿ20 ಶೃಂಗಸಭೆಗೆ ಅವರಿಗೆ ಆಹ್ವಾನ ನೀಡುವುದಿಲ್ಲ' ಎಂದು ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಟ್ರಂಪ್ ಅವರ ವಿಷಾದನೀಯ ಹೇಳಿಕೆಯನ್ನು ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಮಫೋಸ ಗಮನಿಸಿದ್ದಾರೆ ಎಂದು ಅಧ್ಯಕ್ಷರ ಕಚೇರಿ ಹೇಳಿದೆ. `ಅಮೆರಿಕಾದ ಉನ್ನತ ಪ್ರತಿನಿಧಿಗಳು ಶೃಂಗಸಭೆಗೆ ಹಾಜರಾಗಿದ್ದರೆ ಸಭೆಯಲ್ಲೇ ಅಧಿಕಾರ ಹಸ್ತಾಂತರಿಸಬಹುದಿತ್ತು. ಆದರೆ ರಾಯಭಾರಿ ಕಚೇರಿಯ ಕಿರಿಯ ಸಿಬ್ಬಂದಿ ಸಮಾರೋಪದಲ್ಲಿ ಪಾಲ್ಗೊಂಡಿದ್ದರು. ಆದ್ದರಿಂದ ಶೃಂಗಸಭೆ ಮುಗಿದ ಬಳಿಕ ಅಧಿಕಾರಿಗಳ ಮಟ್ಟದಲ್ಲಿ ಅಧಿಕಾರ ಹಸ್ತಾಂತರಿಸಲಾಗಿದೆ. ಜಿ20ರ ಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿ ದಕ್ಷಿಣ ಆಫ್ರಿಕಾವು ಯಾವತ್ತೂ ಒಮ್ಮತ, ಸಹಯೋಗ ಮತ್ತು ಪಾಲುದಾರಿಕೆಯ ಮೌಲ್ಯವನ್ನು ಗೌರವಿಸಿದೆ. ದಕ್ಷಿಣ ಆಫ್ರಿಕಾ ಸ್ವಂತ ಹೆಸರಿನಲ್ಲಿ ಮತ್ತು ಹಕ್ಕಿನಲ್ಲಿ ಜಿ20 ಸದಸ್ಯತ್ವ ಪಡೆದಿದೆ ಮತ್ತು ಅದರ ಸದಸ್ಯತ್ವವು ಇತರ ದೇಶಗಳ ಅನುಮೋದನೆ ಪಡೆದಿದೆ. ದಕ್ಷಿಣ ಆಫ್ರಿಕಾವು ಸಾರ್ವಭೌಮ, ಸಾಂವಿಧಾನಿಕ ಪ್ರಜಾಸತ್ತಾತ್ಮಕ ರಾಷ್ಟ್ರವಾಗಿದೆ ಮತ್ತು ಅದರ ಸದಸ್ಯತ್ವ ಮತ್ತು ಜಾಗತಿಕ ವೇದಿಕೆಯಲ್ಲಿ ಪಾಲ್ಗೊಳ್ಳುವ `ಯೋಗ್ಯತೆ'ಯ ಬಗ್ಗೆ ಮತ್ತೊಂದು ದೇಶದ ಅವಮಾನವನ್ನು ಶ್ಲಾಘಿಸುವುದಿಲ್ಲ' ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ವಾರ್ತಾ ಭಾರತಿ 27 Nov 2025 9:26 pm

2022ರ SC, ST ಮೀಸಲಾತಿ ಮುಂದುವರಿಕೆಗೆ ಹೈಕೋರ್ಟ್ ಆದೇಶ - 3,644 ಹುದ್ದೆಗಳ ನೇಮಕಾತಿಗೆ ಇದ್ದ ಅಡ್ಡಿ ದೂರ

2022ರ 'ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಕಾಯ್ದೆಯಡಿ ಎಸ್ಸಿ ಎಸ್ಟಿ ಮೀಸಲಾತಿಯನ್ನು ಶೇ. 50ರಿಂದ 56ಕ್ಕೆ ಹೆಚ್ಚಿಸಿ, ಸರ್ಕಾರದ ನಾನಾ ಇಲಾಖೆಗಳಲ್ಲಿ ಖಾಲಿಯಿರುವ 3,644 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಮೀಸಲಾತಿ ಹೆಚ್ಚಳ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಕರ್ನಾಟಕ ಹೈಕೋರ್ಟ್, ಈ ಕುರಿತಂತೆ ಮಧ್ಯಂತರ ಆದೇಶ ನೀಡಿದೆ. ಸದ್ಯಕ್ಕೆ ಚಾಲ್ತಿಯಲ್ಲಿರುವ ನೇಮಕಾತಿ ಅಥವಾ ಬಡ್ತಿ ಪ್ರಕ್ರಿಯೆಗಳನ್ನು ಮಾತ್ರ ಮುಂದುವರಿಸಬೇಕು, ಮತ್ಯಾವುದೇ ಹೊಸ ನೇಮಕಾತಿ, ಬಡ್ತಿ ಮಾಡಕೂಡದು ಎಂದಿದೆ. ಅದರಿಂದಾಗಿ, 3,644 ಹುದ್ದೆಗಳ ನೇಮಕಾತಿಗೆ ಇದ್ದ ತಡೆ ನಿವಾರಣೆಯಾಗಿದೆ.

ವಿಜಯ ಕರ್ನಾಟಕ 27 Nov 2025 9:24 pm

ನಾಳೆ ಎಥೆನಾಲ್ ಉತ್ಪಾದಕರೊಂದಿಗೆ ಮುಖ್ಯಮಂತ್ರಿ ಸಭೆ : ಎಚ್.ಕೆ.ಪಾಟೀಲ್

ಬೆಂಗಳೂರು : ಮೆಕ್ಕೆ ಜೋಳದ ಬೆಲೆ ತೀವ್ರವಾಗಿ ಕುಸಿದಿರುವುದರ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಗಂಭೀರವಾಗಿ ಚರ್ಚೆ ನಡೆಸಲಾಗಿದ್ದು, ಮೆಕ್ಕೆ ಜೋಳದಿಂದ ಎಥೆನಾಲ್ ಉತ್ಪಾದಿಸುವವರೊಂದಿಗೆ ಶುಕ್ರವಾರ ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು. ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಥೆನಾಲ್ ಅನ್ನು ಮೊಲಸಿಸ್, ಅಕ್ಕಿ ಹಾಗೂ ಮೆಕ್ಕೆಜೋಳದಿಂದ ತಯಾರಿಸಲಾಗುತ್ತದೆ. ಕೇಂದ್ರ ಸರಕಾರವು ರಾಜ್ಯದ ಡಿಸ್ಟಲರಿಗಳಿಗೆ ಎಥೆನಾಲ್ ಉತ್ಪಾದನೆ ಸಾಮರ್ಥ್ಯ ಹೆಚ್ಚಿದ್ದರೂ, ಹಂಚಿಕೆಯನ್ನು ಕಡಿಮೆ ಮಾಡಲಾಗಿದೆ. ಅಲ್ಲದೆ, ಜೋಳ ಖರೀದಿ ಪ್ರಮಾಣವನ್ನು ಶೇ.30ರಷ್ಟು ಕಡಿತ ಮಾಡಿದ್ದಾರೆ. ಈ ಎಲ್ಲ ಸಮಸ್ಯೆಗಳ ಕುರಿತು ಈಗಾಗಲೆ ಮುಖ್ಯಮಂತ್ರಿ, ಪ್ರಧಾನಮಂತ್ರಿಗೆ ಪತ್ರ ಬರೆದು ಗಮನ ಸೆಳೆದಿದ್ದಾರೆ ಎಂದು ಹೇಳಿದರು. ಕೇಂದ್ರ ಸರಕಾರದ ನೀತಿಗಳಿಂದಾಗಿ ರೈತರಿಗೆ ಹೊಡೆತ ಬೀಳುತ್ತಿದೆ. ಕೇಂದ್ರ ಸರಕಾರವು ಕೂಡಲೆ ಗೋವಿನ ಜೋಳ ಖರೀದಿ ಮಾಡಲು ಮುಂದೆ ಬರಬೇಕು. ಅದೇ ರೀತಿ ಹೆಸರು ಕಾಳು ಬೆಲೆಯು ಕನಿಷ್ಠ ಬೆಂಬಲ ಬೆಲೆಗಿಂತ ತೀವ್ರ ಕುಸಿದಿರುವುದು ರೈತರಲ್ಲಿ ಆತಂಕ ಮನೆ ಮಾಡುವಂತಾಗಿದೆ. ಆದುದರಿಂದ, ಕೇಂದ್ರ ಸರಕಾರ ರೈತರ ನೆರವಿಗೆ ಧಾವಿಸಬೇಕು ಎಂದು ಎಚ್.ಕೆ.ಪಾಟೀಲ್ ಕೋರಿದರು. ನಾಯಕತ್ವ ಬದಲಾವಣೆ ಕುರಿತು ನಡೆಯುತ್ತಿರುವ ಬೆಳವಣಿಗೆಗಳಿಂದಾಗಿ ಸರಕಾರದ ಆಡಳಿತ ವ್ಯವಸ್ಥೆಯ ಮೇಲೆ ಪರಿಣಾಮ ಬೀರುವುದಿಲ್ಲವೇ? ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ನಮ್ಮ ಸರಕಾರದಲ್ಲಿ ಯಾವುದೆ ಗೊಂದಲಗಳಿಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಟಿ, ಸರಕಾರದ ವೇಗವನ್ನು ಕಡಿಮೆ ಮಾಡುವ ಪ್ರಯತ್ನ ಅಷ್ಟೇ ಎಂದರು.

ವಾರ್ತಾ ಭಾರತಿ 27 Nov 2025 9:23 pm

ಅಸ್ಸಾಂ | 1,400 ಗ್ರಾಮೀಣ ಶಾಲೆಗಳಲ್ಲಿ ಕುಡಿಯುವ ನೀರು, ಶೌಚಾಲಯ ಸೌಲಭ್ಯಗಳ ಕೊರತೆ

ಗುವಾಹಟಿ,ನ.27: ಅಸ್ಸಾಮಿನ ಸುಮಾರು 1,400 ಸರಕಾರಿ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳು ಕುಡಿಯುವ ನೀರು ಮತ್ತು ಶೌಚಾಲಯ ಸೌಲಭ್ಯಗಳ ಕೊರತೆಯನ್ನು ಎದುರಿಸುತ್ತಿವೆ ಎಂದು ರಾಜ್ಯ ಸರಕಾರವು ಗುರುವಾರ ವಿಧಾನಸಭೆಯಲ್ಲಿ ತಿಳಿಸಿದೆ. ಈ ಪ್ರದೇಶಗಳಲ್ಲಿಯ ಸರಕಾರಿ ಶಾಲೆಗಳಲ್ಲಿ ಸುಮಾರು 28,000 ಶಿಕ್ಷಕ ಹುದ್ದೆಗಳು ಖಾಲಿಯಿವೆ ಎಂದೂ ಅದು ಹೇಳಿದೆ. ಕಾಂಗ್ರೆಸ್ ಶಾಸಕ ವಾಜಿದ್ ಅಲಿ ಚೌಧುರಿ ಅವರ ಪ್ರಶ್ನೆಗೆ ಉತ್ತರಿಸಿದ ಅಸ್ಸಾಂ ಶಿಕ್ಷಣ ಸಚಿವ ರನೋಜ್ ಪೆಗು ಅವರು ಈ ವಿಷಯವನ್ನು ತಿಳಿಸಿದರು. 347 ಶಾಲೆಗಳಲ್ಲಿ ಕುಡಿಯುವ ನೀರಿನ ಮತ್ತು 809 ಶಾಲೆಗಳಲ್ಲಿ ಶೌಚಾಲಯ ಸೌಲಭ್ಯಗಳ ಸಂಪೂರ್ಣ ಕೊರತೆಯಿದೆ ಎಂದು ತಿಳಿಸಿದ ಅವರು, 134 ಶಾಲೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮತ್ತು 101 ಶಾಲೆಗಳಲ್ಲಿ ಶೌಚಾಲಯಗಳು ಪ್ರಸ್ತುತ ಕಾರ್ಯಾಚರಿಸುತ್ತಿಲ್ಲ ಎಂದರು. ಈ ಶಾಲೆಗಳಿಗೆ ಕುಡಿಯುವ ನೀರು ಮತ್ತು ಶೌಚಾಲಯ ಸೌಲಭ್ಯಗಳನ್ನು ಒದಗಿಸಲು ಸಂಬಂಧಿಸಿದ ಇಲಾಖೆಗಳು ಶ್ರಮಿಸುತ್ತಿವೆ ಎಂದು ತಿಳಿಸಿದ ಪೆಗೊ, ಈ ಪ್ರದೇಶಗಳಲ್ಲಿಯ ಶಾಲೆಗಳಲ್ಲಿ ಒಟ್ಟು 27,936 ಶಿಕ್ಷಕರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 4,500 ಪ್ರಾಥಮಿಕ ಶಾಲಾ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಪ್ರೌಢ ಶಿಕ್ಷಣ ನಿರ್ದೇಶನಾಲಯವೂ 9,717 ಶಿಕ್ಷಕರ ನೇಮಕಾತಿಗೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದರು.

ವಾರ್ತಾ ಭಾರತಿ 27 Nov 2025 9:21 pm

WPL Auction: ಆಲ್‌ರೌಂಡರ್ ದೀಪ್ತಿ ಶರ್ಮಾ ಹೊಸ ಇತಿಹಾಸ, 3,00,00,000 ರೂಪಾಯಿ ಭರ್ಜರಿ ಆಫರ್...

ಮಹಿಳಾ ಕ್ರಿಕೆಟ್ ಕೂಡ ದೊಡ್ಡ ಮಟ್ಟದಲ್ಲಿ ಬೆಳೆಯುತ್ತಿದ್ದು, ಕೋಟಿ ಕೋಟಿ ರೂಪಾಯಿ ಈಗ ನೀರಿನಂತೆ ಹರಿದು ಹೋಗುತ್ತಿದೆ. ಅದರಲ್ಲೂ ಭಾರತೀಯ ಕ್ರಿಕೆಟ್ ತಂಡ 2025 ಏಕದಿನ ವಿಶ್ವಕಪ್ ಗೆದ್ದ ನಂತರ, ಮಹಿಳಾ ಕ್ರಿಕೆಟ್ ತಂಡಕ್ಕೆ ಕೂಡ ಭಾರಿ ದೊಡ್ಡ ಪ್ರಮಾಣದಲ್ಲಿ ಫ್ಯಾನ್ಸ್ ಇದ್ದಾರೆ ಎಂಬುದು ಇಡೀ ಜಗತ್ತಿಗೆ ಮನವರಿಕೆ ಆಗಿದೆ. ಇದೇ ಸಂಭ್ರಮದಲ್ಲಿ ಮಹಿಳಾ ಪ್ರಿಮಿಯರ್ ಲೀಗ್

ಒನ್ ಇ೦ಡಿಯ 27 Nov 2025 9:19 pm

ಬಿಡದಿ GBIT ಯೋಜನೆಗೆ ರಾಜ್ಯದಲ್ಲೇ ಗರಿಷ್ಠ ಭೂ ಪರಿಹಾರ ದರ ನಿಗದಿ! 9 ಗ್ರಾಮಗಳಲ್ಲಿ ಭೂಸ್ವಾಧೀನ; ಎಕರೆಗೆ ಎಷ್ಟು ದರ?

ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ 9 ಗ್ರಾಮಗಳ 7,481 ಎಕರೆ ಭೂಮಿಯನ್ನು ಗ್ರೇಟರ್‌ ಬೆಂಗಳೂರು ಸಮಗ್ರ ಉಪ ನಗರ ಯೋಜನೆಗಾಗಿ ಸ್ವಾಧೀನಪಡಿಸಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಭೂಸ್ವಾಧೀನ ಪ್ರಕ್ರಿಯೆಯ ಭಾಗವಾಗಿ ಜಿಲ್ಲಾಧಿಕಾರಿ ಯಶವಂತ್‌ ವಿ.ಗುರುಕರ್‌ ಅವರು ಗರಿಷ್ಠ ಭೂ ಪರಿಹಾರ ದರವನ್ನು ನಿಗದಿ ಮಾಡಿದ್ದಾರೆ. ಇದು ರಾಜ್ಯದಲ್ಲಿ ನಿಗದಿಯಾದ ಗರಿಷ್ಠ ಭೂ ಪರಿಹಾರ ದರಗಳಲ್ಲಿ ಒಂದಾಗಿದೆ. ಭೂ ಮಾಲೀಕರ ಹಿತದೃಷ್ಟಿಯಿಂದ ಕಾನೂನಿನ ಚೌಕಟ್ಟಿನಲ್ಲಿ ಗರಿಷ್ಠ ದರ ನಿಗದಿ ಮಾಡಲಾಗಿದೆ.

ವಿಜಯ ಕರ್ನಾಟಕ 27 Nov 2025 9:18 pm

ಕಲ್ಲುಗಣಿಗಾರಿಕೆ ಘಟಕ | ಉತ್ತರಾಖಂಡ ಸರಕಾರಕ್ಕೆ 50,000 ರೂ.ದಂಡ ವಿಧಿಸಿದ ಎನ್‌ಜಿಟಿ

ಡೆಹ್ರಾಡೂನ್,ನ.27: ಪರಿಸರ ಸೂಕ್ಷ್ಮ ಶಿವಾಲಿಕ್ ಆನೆ ಅಭಯಾರಣ್ಯ ಮತ್ತು ಸಾಂಗ್ ನದಿಯ ಪ್ರವಾಹ ಪ್ರದೇಶದಲ್ಲಿ ಕಾನೂನುಬಾಹಿರ ಜಲ್ಲಿ ತಯಾರಿಕೆ ಘಟಕ ಕಾರ್ಯ ನಿರ್ವಹಿಸುತ್ತಿರುವುದನ್ನು ದೃಢಪಡಿಸಿಕೊಂಡ ಬಳಿಕ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣವು (ಎನ್‌ಜಿಟಿ) ಉತ್ತರಾಖಂಡ ಸರಕಾರಕ್ಕೆ 50,000 ರೂ.ಗಳ ದಂಡವನ್ನು ವಿಧಿಸಿದೆ. ಸಂರಕ್ಷಿತ ವಲಯದಲ್ಲಿ ಜಲ್ಲಿ ತಯಾರಿಕೆ ಘಟಕ ಕಾರ್ಯಾಚರಿಸುತ್ತಿರುವುದು ತೀವ್ರ ಪರಿಸರ ಉಲ್ಲಂಘನೆಯಾಗಿದೆ ಮತ್ತು ಸ್ಥಳೀಯ ವನ್ಯಜೀವಿಗಳಿಗೆ ಅಪಾಯವನ್ನುಂಟು ಮಾಡುತ್ತಿದೆ ಎಂದು ದೂರಿ ಡೆಹ್ರಾಡೂನ್ ನಿವಾಸಿಗಳ ಪರ ವಕೀಲ ಗೌರವ್ ಕುಮಾರ್ಬನ್ಸಾಲ್ ಅವರು ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ಎನ್‌ಜಿಟಿ ಈ ಆದೇಶವನ್ನು ಹೊರಡಿಸಿದೆ. ಎನ್‌ಜಿಟಿಯ ನಿರ್ಧಾರವು ಭಾರತೀಯ ವನ್ಯಜೀವಿ ಸಂಸ್ಥೆಯ (ಡಬ್ಲ್ಯುಐಐ) ವಿವರವಾದ ವರದಿಯನ್ನು ಆಧರಿಸಿದೆ. ಜಲ್ಲಿ ತಯಾರಿಕೆ ಘಟಕವು ಅಧಿಸೂಚಿತ ಆನೆ ಮೀಸಲು ಪ್ರದೇಶದೊಳಗೆ ಮತ್ತು ಗಂಗಾ ನದಿಯ ಪ್ರಮುಖ ಉಪನದಿಯಾಗಿರುವ ಸಾಂಗ್‌ ನ ಸಕ್ರಿಯ ಪ್ರವಾಹ ಪ್ರದೇಶದಲ್ಲಿದೆ ಎಂದು ವರದಿಯು ದೃಢಪಡಿಸಿದೆ. ಈ ಸ್ಥಳದಲ್ಲಿ ಕೈಗಾರಿಕಾ ಚಟುವಟಿಕೆಯು ವನ್ಯಜೀವಿಗಳ ಪ್ರಮುಖ ಆವಾಸಸ್ಥಾನಗಳಿಗೆ ಅಪಾಯವನ್ನುಂಟು ಮಾಡುತ್ತಿದೆ ಎಂದು ಎಚ್ಚರಿಕೆ ನೀಡಿರುವ ಡಬ್ಲ್ಯುಐಐ ವರದಿಯು, ನದಿ ಮತ್ತು ಸುತ್ತುಮುತ್ತಲಿನ ಪೊದೆಗಳ ಪ್ರದೇಶವು ಆನೆ, ಹುಲಿ, ಚಿರತೆ ಮತ್ತು ಇತರ ದೊಡ್ಡ ಸಸ್ತನಿಗಳ ಪ್ರಮುಖ ಸಂಚಲನ ಮಾರ್ಗವಾಗಿದೆ. ಕೈಗಾರಿಕಾ ಘಟಕದ ಉಪಸ್ಥಿತಿಯು ಈ ಪರಿಸರ ಮಾರ್ಗವನ್ನು ಕಿರಿದಾಗಿಸಿದೆ ಮತ್ತು ವನ್ಯಜೀವಿಗಳ ಚಲನವಲನಗಳಿಗೆ ತೀವ್ರ ಅಡ್ಡಿಯನ್ನುಂಟು ಮಾಡಿದೆ ಎಂದು ಹೇಳಿದೆ. ಎನ್‌ಜಿಟಿ ದಂಡ ವಿಧಿಸುವ ಜೊತೆಗೆ ಈ ಸ್ಥಳವು ವನ್ಯಜೀವಿ ಕಾರಿಡಾರ್ ಮತ್ತು ಸಕ್ರಿಯ ಪ್ರವಾಹ ಪ್ರದೇಶವಾಗಿದ್ದರೂ ಜಲ್ಲಿ ತಯಾರಿಕೆ ಘಟಕಕ್ಕೆ ಅನುಮತಿಯನ್ನು ನೀಡಿದ್ದು ಹೇಗೆ ಎನ್ನುವುದನ್ನು ವಿವರಿಸಿ ವೈಯಕ್ತಿಕವಾಗಿ ಅಫಿಡವಿಟ್ ಸಲ್ಲಿಸುವಂತೆ ಉತ್ತರಾಖಂಡ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿಗೆ ನಿರ್ದೇಶನವನ್ನೂ ನೀಡಿದೆ. ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ವಕೀಲ ಬನ್ಸಾಲ್, ಸರಕಾರದ ಈ ಲೋಪವು ಆನೆಗಳು ಮತ್ತು ಇತರ ವನ್ಯಜೀವಿಗಳ ಉಳಿವಿಗೆ ಬೆದರಿಕೆಯನ್ನೊಡ್ಡಿದೆ. ಪರಿಸರ ಸೂಕ್ಷ್ಮ ವಲಯದಲ್ಲಿ ಇಂತಹ ಕೈಗಾರಿಕಾ ಘಟಕಕ್ಕೆ ಅನುಮತಿ ನೀಡಿರುವುದು ಪರಿಸರ ಸಂರಕ್ಷಣೆಯಲ್ಲಿ ಸರಕಾರದ ಬದ್ಧತೆಯನ್ನು ಕಳಪೆಯಾಗಿ ಬಿಂಬಿಸುತ್ತದೆ ಎಂದು ಹೇಳಿದರು.

ವಾರ್ತಾ ಭಾರತಿ 27 Nov 2025 9:15 pm

ನಾಳೆ (ನ.28) ಬೆಳಗ್ಗೆ 7:00ರಿಂದ ಅಪರಾಹ್ನ 3ರವರೆಗೆ ಉಡುಪಿ ನಗರಕ್ಕೆ ವಾಹನಗಳ ಪ್ರವೇಶ ನಿರ್ಬಂಧ

ಉಡುಪಿ: ಶ್ರೀಕೃಷ್ಣ ಮಠದಲ್ಲಿ ನ.28ರಂದು ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತವನ್ನು ದೃಷ್ಟಿಯಲ್ಲಿಟ್ಟುಕೊಂಡು ಮುಂಜಾನೆ 7:00ಗಂಟೆಯಿಂದ ಕಾರ್ಯಕ್ರಮ ಮುಗಿಯುವವರೆಗೆ ನಗರದೊಳಗೆ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ. ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ನಿಯಮ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮವಳಿಗಳು 1989ರ ನಿಯಮ 221(ಎ)(2)(5) ರನ್ವಯ ನವೆಂಬರ್ 28ರಂದು ಬೆಳಗ್ಗೆ 6 ಗಂಟೆಯಿಂದ ಅಪರಾಹ್ನ 3 ಗಂಟೆಯವರೆಗೆ ಈ ಕೆಳಕಂಡಂತೆ ವಾಹನಗಳ ಸಂಚಾರ ನಿಷೇಧಿಸಿ ಮತ್ತು ಬದಲಿ ಮಾರ್ಗದಲ್ಲಿ ಸಂಚರಿಸುವ ಕುರಿತು ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ. ಕಾರ್ಯಕ್ರಮಕ್ಕೆ ಬರುವ ವಾಹನಗಳು: ಕುಂದಾಪುರದಿಂದ ಬರುವ ವಾಹನಗಳೆಲ್ಲವನ್ನೂ ನಿಟ್ಟೂರಿನ ಸಿಲಾಸ್ ಶಾಲೆಯ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕ್ ಮಾಡಬೇಕು.ಕುಂದಾಪುರದಿಂದ ಬರುವ ವಾಹನಗಳು ಗುಂಡಿಬೈಲು ಹತ್ತಿರ ಜನರನ್ನು ಇಳಿಸಿ ಯು ಟರ್ನ್ ಆಗಿ ಎಂಜಿಎಂ ಮೈದಾನಕ್ಕೆ ಹೋಗಬೇಕು. ಕಾರ್ಕಳ ಬೆಳ್ವೆ ಮಾರ್ಗವಾಗಿ ಉಡುಪಿಗೆ ಬರುವ ವಾಹನಗಳನ್ನು ಕ್ರಿಶ್ಚಿಯನ್ ಹೈಸ್ಕೂಲ್, ಪಿಯು ಕಾಲೇಜ್ ಮತ್ತು ಬೈಲೂರು ಮುದ್ದಣ ಎಸ್ಟೇಟ್‌ನಲ್ಲಿ ಪಾರ್ಕ್ ಮಾಡಿ ರೋಡ್ ಶೋಗೆ ತೆರಳಬೇಕು. ಮಂಗಳೂರು ಕಡೆಯಿಂದ ರೋಡ್ ಶೋಗೆ ಬರುವ ವಾಹನಗಳನ್ನು ಬೈಲೂರು ಮುದ್ದಣ್ಣ ಎಸ್ಟೇಟ್‌ನಲ್ಲಿ ಪಾರ್ಕ್ ಮಾಡಬೇಕು. ಮಲ್ಪೆ ಕಡೆಯಿಂದ ರೋಡ್ ಶೋಗೆ ಬರುವ ವಾಹನಗಳನ್ನು ಶ್ಯಾಮಿಲಿ ಎದುರು ಗ್ರೌಂಡ್‌ನಲ್ಲಿ ಪಾರ್ಕ್ ಮಾಡಬೇಕು. ಕಾರ್ಕಳ ಹೆಬ್ರಿ ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ವಾಹನಗಳು ಶಾರದಾ ಕಲ್ಯಾಣಮಂಟಪ ಮಾರ್ಗವಾಗಿ ಬೀಡಿನಗುಡ್ಡೆಯಲ್ಲಿ ಪಾರ್ಕ್ ಮಾಡಬೇಕು. ಮಲ್ಪೆ ಕಡೆಯಿಂದ ರೋಡ್ ಶೋಗೆ ಬರುವ ಜನರು ವಾಹನಗಳನ್ನು ವಿವೇಕಾನಂದ ಸ್ಕೂಲ್ ಪಾರ್ಕಿಂಗ್ ಪ್ರದೇಶದಲ್ಲಿ ಪಾರ್ಕ್ ಮಾಡಬೇಕು. ಬಸ್ಸುಗಳು ಮತ್ತು ಕಾರುಗಳು: ಕೆಎಸ್ಸಾರ್ಟಿಸಿ ಮತ್ತು ಖಾಸಗಿ ಬಸ್‌ಗಳು ಉಡುಪಿ ಬಸ್‌ನಿಲ್ದಾಣದ ಕಡೆಗೆ ಬರುವಂತಿಲ್ಲ. ಅವುಗಳು ನೇರವಾಗಿ ಅಂಬಾಗಿಲು ಮಾರ್ಗವಾಗಿ ಮಣಿಪಾಲ ಅಲೆವೂರು ಮಾರ್ಗವಾಗಿ ಕೊರಂಗ್ರಪಾಡಿ ಮಾರ್ಗವಾಗಿ ಬಲೈಪಾದೆಯಾಗಿ ಚಲಿಸಬೇಕು. ಮಲ್ಪೆಯಿಂದ ಮಂಗಳೂರು ಕಡೆಗೆ ಹೋಗುವ ವಾಹನಗಳು ಪಡುಕೆರೆ, ಪಿತ್ರೋಡಿ, ಉದ್ಯಾವರ ಮಾರ್ಗವಾಗಿ ಚಲಿಸಬೇಕು. ಮಲ್ಪೆಯಿಂದ ಕುಂದಾಪುರದತ್ತ ಹೋಗುವ ವಾಹನಗಳು ಸಂತೆಕಟ್ಟೆ ಮತ್ತು ನೇಜಾರು ಮೂಲಕ ಸಂಚರಿಸಬೇಕು. ಮಂಗಳೂರಿನಿಂದ ಕುಂದಾಪುರ ಕಡೆಗೆ: ಕಟಪಾಡಿಯಿಂದ- ಮಣಿಪುರ- ದೆಂದೂರಕಟ್ಟೆ ರಾಂಪುರ- ಅಲೆವೂರು, ಗುಡ್ಡೆ ಅಂಗಡಿ- ಮಣಿಪಾಲ- ಆರ್‌ಎಸ್‌ಬಿ ಸಭಾಭವನ- ಸಿಂಡಿಕೇಟ್ ಸರ್ಕಲ್, ಕಾಯಿನ್ ಸರ್ಕಲ್- ಪೆರಂಪಳ್ಳಿ- ಅಂಬಾಗಿಲು ಪೆರಂಪಳ್ಳಿ ಕ್ರಾಸ್- ಅಂಬಾಗಿಲು ಎನ್‌ಎಚ್ 66ರ ಮೂಲಕ ಚಲಿಸಬೇಕು. ಕಟಪಾಡಿ ಉದ್ಯಾವರ ಕಡೆಯಿಂದ ಬಂದ ವಾಹನಗಳು- ಬಲೈಪಾದೆ- ಗುಡ್ಡೆಅಂಗಡಿ- ಕೊರಂಗ್ರಪಾಡಿ ಕ್ರಾಸ್-ಕೊರಂಗ್ರಪಾಡಿ- ಕುಕ್ಕಿಕಟ್ಟೆ- ಜೋಡುರಸ್ತೆ ಅಲೆವೂರು- ಗುಡ್ಡೆಅಂಗಡಿ- ಮಣಿಪಾಲ-ಆರ್‌ಎಸ್‌ಬಿ ಸಭಾ ಭವನ- ಸಿಂಡಿಕೇಟ್ ಸರ್ಕಲ್- ಕಾಯಿನ್ ಸರ್ಕಲ್- ಪೆರಂಪಳ್ಳಿ- ಅಂಬಾಗಿಲು ಪೆರಂಪಳ್ಳಿ ಕ್ರಾಸ್-ಅಂಬಾಗಿಲು ಎನ್‌ಎಚ್‌66 ಮೂಲಕ ಸಂಚರಿಸಬೇಕು. ಕುಂದಾಪುರದಿಂದ-ಮಂಗಳೂರು ಕಡೆಗೆ: ಅಂಬಾಗಿಲು ಎನ್ ಹೆಚ್ 66- ಅಂಬಾಗಿಲು ಪೆರಂಪಳ್ಳಿ ಕ್ರಾಸ್- ಪೆರಂಪಳ್ಳಿ- ಕಾಯಿನ್ ಸರ್ಕಲ್- ಸಿಂಡಿಕೇಟ್ ಸರ್ಕಲ್-ಮಣಿಪಾಲ ಆರ್‌ಎಸ್‌ಬಿ ಸಭಾ ಭವನ- ಅಲೆವೂರು ಗುಡ್ಡೆಅಂಗಡಿ- ರಾಂಪುರ- ದೆಂದೂರ್‌ಕಟ್ಟೆ- ಮಣಿಪುರ- ಕಟಪಾಡಿ ಮೂಲಕ ಸಂಚರಿಸಬೇಕು. ಮಂಗಳೂರಿನಿಂದ ಮಲ್ಪೆ ಕಡೆಗೆ: ಎನ್‌ಎಚ್‌66ರ ಕಿಯಾ ಶೋ ರೂಂ- ಉದ್ಯಾವರ ಜಂಕ್ಷನ್-ಉದ್ಯಾವರ ಪೇಟೆ-ಪಿತ್ರೋಡಿ-ಸಂಪಿಗೆ ನಗರ ಕುತ್ಪಾಡಿ- ಕಡೆಕಾರು- ಕಿದಿಯೂರು-ಮಲ್ಪೆ ಮೂಲಕ ಸಂಚರಿಸಬೇಕು. ನ.28ರ ಶುಕ್ರವಾರ ಬೆಳಗ್ಗೆ 07:00 ಗಂಟೆಯಿಂದ ಅಪರಾಹ್ನ 3:00 ಗಂಟೆಯವರೆಗೆ ಯಾವುದೇ ವಾಹನಗಳು ಕರಾವಳಿ ಕಡೆಯಿಂದ ಉಡುಪಿ ಸಿಟಿ ಬಸ್ ನಿಲ್ದಾಣ ಮತ್ತು ಉಡುಪಿ ಸಿಟಿ ಕಡೆಗೆ ಬರುವಂತಿಲ್ಲ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ವಾರ್ತಾ ಭಾರತಿ 27 Nov 2025 9:13 pm

ಚೆಸ್ ವಿಶ್ವ ಕಪ್ ಜಯಿಸಿದ ಜಾವೊಖಿರ್ ಸಿಂಡರೊವ್; ಅತ್ಯಂತ ಕಿರಿಯ ಆಟಗಾರನಾಗಿ ದಾಖಲೆ

ಪಣಜಿ, ನ. 27: ಚೆಸ್ ವಿಶ್ವ ಕಪ್ ಜಯಿಸಿದ ಅತ್ಯಂತ ಕಿರಿಯ ಆಟಗಾರನಾಗಿ ಉಝ್ಬೆಕಿಸ್ತಾನದ ಹದಿಹರಯದ ಪ್ರತಿಭೆ ಜಾವೊಖಿರ್ ಸಿಂಡರೊವ್ ಇತಿಹಾಸ ಸೇರಿದ್ದಾರೆ. ಅವರು ಗೋವಾದಲ್ಲಿ ಬುಧವಾರ ರೋಮಾಂಚಕ ಟೈಬ್ರೇಕ್ ಫಿನಾಲೆಯಲ್ಲಿ ಚೀನಾದ ವೇ ಯಿ ಅವರನ್ನು ಸೋಲಿಸಿ ಪ್ರಶಸ್ತಿ ಗೆದ್ದರು. ಈ ಪಂದ್ಯಾವಳಿಯಲ್ಲಿ 19 ವರ್ಷದ ಸಿಂಡರೊವ್ 16ನೇ ಶ್ರೇಯಾಂಕಿತನಾಗಿ ತನ್ನ ಸ್ಪರ್ಧೆ ಆರಂಭಿಸಿದರು. ಇಲ್ಲಿ ಚೆಸ್ ಜಗತ್ತಿನ ಘಟಾನುಘಟಿಗಳು ಒಬ್ಬರ ನಂತರ ಒಬ್ಬರಂತೆ ಹೊರಬಿದ್ದರು. ತನ್ನದೇ ದೇಶದ ನೊಡಿರ್ಬೆಕ್ ಯಾಕೂಬೊವ್ ವಿರುದ್ಧದ ಜಿದ್ದಾಜಿದ್ದಿನ ಸೆಮಿಫೈನಲ್‌ನಲ್ಲಿ ಅವರು ಪಂದ್ಯವನ್ನು ಟೈಬ್ರೇಕ್‌ಗೆ ಒಯ್ದರು ಹಾಗೂ ಟೈಬ್ರೇಕ್‌ನಲ್ಲಿ ಜಯ ಗಳಿಸಿದರು. ವೇ ಯಿ ಮತ್ತು ಸಿಂಡರೊವ್ ಇಬ್ಬರೂ ಪ್ರಶಸ್ತಿ ಸುತ್ತಿಗೆ ಏರುವ ಮೂಲಕ 2026ರ ಕ್ಯಾಂಡಿಡೇಟ್ಸ್ ಟೂರ್ನಮೆಂಟ್‌ ಗೆ ಅರ್ಹತೆ ಪಡೆದಿದ್ದಾರೆ. ಫೈನಲ್‌ ನಲ್ಲಿ, ಎರಡನೇ 15’10’’ ರ್ಯಾಪಿಡ್ ಟೈಬ್ರೇಕ್‌ ನಲ್ಲಿ ಎದುರಾಳಿಯನ್ನು ಸೋಲಿಸಿದ ಬಳಿಕ, ಸಿಂಡರೊವ್ ವಿಶ್ವಕಪ್‌ ನ ಮಾಲೀಕರಾದರು. ಅವರ ವಿಜಯವು ಚೆಸ್ ಜಗತ್ತಿನಲ್ಲಿ ಆಗುತ್ತಿರುವ ಗಮನಾರ್ಹ ಬದಲಾವಣೆಯೊಂದನ್ನು ಸೂಚಿಸುತ್ತಿದೆ. ಚೆಸ್‌ನಲ್ಲಿ ಹದಿಹರಯದ ಆಟಗಾರರ ಪ್ರಾಬಲ್ಯಕ್ಕೆ ಜಗತ್ತು ಸಾಕ್ಷಿಯಾಗುತ್ತಿದೆ. ಮೊದಲು ಡಿ. ಗುಕೇಶ್ ವಿಶ್ವ ಚಾಂಪಿಯನ್‌ ಶಿಪ್ ಗೆದ್ದರು. ಬಳಿಕ ದಿವ್ಯಾ ದೇಶ್‌ಮುಖ್ ಮಹಿಳಾ ವಿಶ್ವಕಪ್ ಗೆದ್ದರು. ಈಗ ಪ್ರಮುಖ ಪ್ರಶಸ್ತಿಯನ್ನು ಗೆದ್ದ ಮೂರನೇ ಹದಿಹರಯದ ಆಟಗಾರನಾಗಿ ಸಿಂಡರೊವ್ ಹೊರಹೊಮ್ಮಿದ್ದಾರೆ. ಇದು ಒಂದು ವರ್ಷಕ್ಕಿಂತಲೂ ಕಡಿಮೆ ಅವಧಿಯಲ್ಲಿ ಸಂಭವಿಸಿದೆ.

ವಾರ್ತಾ ಭಾರತಿ 27 Nov 2025 9:12 pm

ದಕ್ಷಿಣ ಆಫ್ರಿಕ ವಿರುದ್ಧ ಸರಣಿ ಸೋಲು: ಅಭಿಮಾನಿಗಳ ಕ್ಷಮೆ ಕೋರಿದ ರಿಷಭ್ ಪಂತ್

ಮುಂಬೈ, ನ. 27: ಇತ್ತೀಚೆಗೆ ಮುಕ್ತಾಯಗೊಂಡ ದಕ್ಷಿಣ ಆಫ್ರಿಕ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತವು ಉತ್ತಮ ಕ್ರಿಕೆಟ್ ಆಡಲಿಲ್ಲ ಎನ್ನುವುದನ್ನು ತಂಡದ ವಿಕೆಟ್‌ ಕೀಪರ್ ಬ್ಯಾಟರ್ ರಿಶಭ್ ಪಂತ್ ಒಪ್ಪಿಕೊಂಡಿದ್ದಾರೆ ಹಾಗೂ ಅಭಿಮಾನಿಗಳ ನಿರೀಕ್ಷೆಯ ಮಟ್ಟಕ್ಕೆ ಆಡಲು ವಿಫಲವಾಗಿರುವುದಕ್ಕಾಗಿ ಅವರ ಕ್ಷಮೆ ಯಾಚಿಸಿದ್ದಾರೆ. ಕೋಲ್ಕತ ಮತ್ತು ಗುವಾಹಟಿಯಲ್ಲಿ ನಡೆದ ಎರಡು ಪಂದ್ಯಗಳ ಸರಣಿಯನ್ನು ಭಾರತವು 0-2 ಅಂತರದಿಂದ ಕಳೆದುಕೊಂಡಿದೆ. ಇದು ಭಾರತದಲ್ಲಿ ದಕ್ಷಿಣ ಆಫ್ರಿಕದ ಎರಡನೇ ಟೆಸ್ಟ್ ಸರಣಿ ವಿಜಯವಾಗಿದೆ. ಇದಕ್ಕೂ ಮೊದಲು, 2000 ಫೆಬ್ರವರಿ-ಮಾರ್ಚ್‌ನಲ್ಲಿ ಹ್ಯಾನ್ಸಿ ಕ್ರೋನಿಯೆ ನೇತೃತ್ವದ ತಂಡವು 2-0 ಅಂತರದಿಂದ ಟೆಸ್ಟ್ ಸರಣಿಯನ್ನು ಗೆದ್ದಿತ್ತು. ಬುಧವಾರದ ಸೋಲಿನ ಬಳಿಕ, ಪ್ರಧಾನ ಕೋಚ್ ಮತ್ತು ಆಟಗಾರರು ಅಭಿಮಾನಿಗಳು ಮತ್ತು ಕ್ರಿಕೆಟ್ ವಿಶ್ಲೇಷಕರಿಂದ ತೀವ್ರ ಟೀಕೆಗೆ ಒಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ, ಪಂತ್ ಇನ್‌ಸ್ಟಾಗ್ರಾಮ್‌ ನಲ್ಲಿ ಸಂದೇಶವೊಂದನ್ನು ಹಾಕಿ, ತಂಡದ ವಿಜಯದ ಬಗ್ಗೆ ಭರವಸೆಯನ್ನು ಹೊಂದಿದ್ದ ಪ್ರತಿಯೊಬ್ಬರಲ್ಲೂ ಕ್ಷಮೆ ಕೋರಿದ್ದಾರೆ. ಮುಂದೆ, ತಂಡವಾಗಿ ಮತ್ತು ವ್ಯಕ್ತಿಗಳಾಗಿ ಪ್ರಬಲ ಪ್ರತಿಹೋರಾಟವನ್ನು ನೀಡಲು ಕಠಿಣ ಪರಿಶ್ರಮ ಪಡುವುದಾಗಿ ಅವರು ಭರವಸೆ ನೀಡಿದ್ದಾರೆ. ‘‘ಕಳೆದ ಎರಡು ವಾರಗಳ ಅವಧಿಯಲ್ಲಿ ನಾವು ಉತ್ತಮ ಕ್ರಿಕೆಟ್ ಆಡಲಿಲ್ಲ ಎನ್ನುವುದರಲ್ಲಿ ಎರಡು ಮಾತಿಲ್ಲ. ತಂಡವಾಗಿ ಮತ್ತು ವ್ಯಕ್ತಿಗಳಾಗಿ ನಾವು ಯಾವತ್ತೂ ಅತ್ಯುನ್ನತ ಮಟ್ಟದ ನಿರ್ವಹಣೆ ನೀಡಲು ಮತ್ತು ಕೋಟಿಗಟ್ಟಳೆ ಭಾರತೀಯರ ಮುಖಗಳಿಗೆ ಮಂದಹಾಸವನ್ನು ತರಲು ಬಯಸುತ್ತೇವೆ. ಈ ಬಾರಿ ನಿಮ್ಮ ನಿರೀಕ್ಷೆಗಳ ಮಟ್ಟಕ್ಕೆ ಏರಲು ನಮಗೆ ಸಾಧ್ಯವಾಗಲಿಲ್ಲ, ಕ್ಷಮಿಸಿ. ಆದರೆ ಕಲಿಯಲು, ಹೊಂದಿಕೊಳ್ಳಲು ಮತ್ತು ಬೆಳೆಯಲು ಕ್ರೀಡೆಯು ನಮಗೆ ಕಲಿಸುತ್ತದೆ’’ ಎಂದು ಪಂತ್ ತನ್ನ ಸಂದೇಶದಲ್ಲಿ ಹೇಳಿದ್ದಾರೆ.

ವಾರ್ತಾ ಭಾರತಿ 27 Nov 2025 9:11 pm

ಗಂಭೀರ್‌ ರನ್ನು ತಕ್ಷಣಕ್ಕೆ ವಜಾಗೊಳಿಸುವ ಉದ್ದೇಶವಿಲ್ಲ: ಬಿಸಿಸಿಐ

ಮುಂಬೈ, ನ. 27: ದಕ್ಷಿಣ ಆಫ್ರಿಕ ವಿರುದ್ಧದ ಟೆಸ್ಟ್ ಸರಣಿಯನ್ನು 0-2 ಅಂತರದಿಂದ ಭಾರತ ಸೋತ ಹಿನ್ನೆಲೆಯಲ್ಲಿ, ತಂಡದ ಪ್ರಧಾನ ಕೋಚ್ ಗೌತಮ್ ಗಂಭೀರ್‌ ರನ್ನು ಹುದ್ದೆಯಿಂದ ತೆಗೆಯುವುದಿಲ್ಲ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ಮೂಲಗಳು ತಿಳಿಸಿರುವುದಾಗಿ NDTV ವರದಿ ಮಾಡಿದೆ. ಒಂದು ವರ್ಷದ ಅವಧಿಯಲ್ಲಿ ಭಾರತವು ತವರಿನಲ್ಲಿ ತನ್ನ ಎರಡನೇ ಟೆಸ್ಟ್ ಸರಣಿ ಸೋಲು ಅನುಭವಿಸಿದ ಬಳಿಕ, ಕೋಚ್ ಆಗಿ ಗಂಭೀರ್‌ ರ ಭವಿಷ್ಯದ ಬಗ್ಗೆ ಭಾರೀ ಊಹಾಪೋಹಗಳು ಎದ್ದಿದ್ದವು. ಭಾರತೀಯ ಟೆಸ್ಟ್ ತಂಡದ ಕೋಚ್ ಆಗಿ ಗಂಭೀರ್ ಸ್ಥಾನವನ್ನು ಮಾಜಿ ಕ್ರಿಕೆಟಿಗ ವಿ.ವಿ.ಎಸ್. ಲಕ್ಷ್ಮಣ್ ವಹಿಸಿಕೊಳ್ಳುವ ಸಾಧ್ಯತೆಯಿದೆ ಎಂಬ ಊಹಾಪೋಹಗಳೂ ಇದ್ದವು. ಆದರೆ, ಬಿಸಿಸಿಐ ಗಂಭೀರ್ ಮೇಲೆ ಇಟ್ಟಿರುವ ವಿಶ್ವಾಸ ಮುಂದುವರಿಯಲಿದೆ. ತಂಡವನ್ನು ಪುನರ್ನಿರ್ಮಿಸುವ ಕಾರ್ಯದಲ್ಲಿ ಗಂಭೀರ್‌ ಗೆ ಸಂಪೂರ್ಣ ಬೆಂಬಲವನ್ನು ನೀಡಲಾಗುವುದು ಎಂದು ಬಿಸಿಸಿಐ ಮೂಲಗಳು ಹೇಳಿವೆ. ದಕ್ಷಿಣ ಆಫ್ರಿಕ ವಿರುದ್ಧದ ಬಿಳಿ ಚೆಂಡಿನ ಸರಣಿಯ ಕೊನೆಯಲ್ಲಿ ತಂಡಾಡಳಿತ ಮತ್ತು ಆಯ್ಕೆಗಾರರ ನಡುವೆ ಒಂದು ಸಭೆ ನಡೆಯಲಿದೆ ಎಂಬುದಾಗಿಯೂ ಮೂಲಗಳು ತಿಳಿಸಿವೆ. ‘‘ಈ ಕ್ಷಣದಲ್ಲಿ ನಾವು ಗೌತಮ್ ಗಂಭೀರ್‌ ರನ್ನು ಬದಲಾಯಿಸಲು ಹೋಗುವುದಿಲ್ಲ. ಅವರು ತಂಡವನ್ನು ಮರುನಿರ್ಮಿಸುತ್ತಿದ್ದಾರೆ. ಅವರ ಗುತ್ತಿಗೆ 2027ರ ವಿಶ್ವಕಪ್‌ವರೆಗೆ ಚಾಲ್ತಿಯಲ್ಲಿರುತ್ತದೆ’’ ಎಂದು ಅವು ಹೇಳಿವೆ. ‘‘ದಕ್ಷಿಣ ಆಫ್ರಿಕ ಪ್ರವಾಸ ಕೊನೆಯಲ್ಲಿ ತಂಡಾಡಳಿತ ಮತ್ತು ಆಯ್ಕೆಗಾರರ ನಡುವೆ ಸಭೆ ನಡೆಯುತ್ತದೆ. ಟೆಸ್ಟ್ ತಂಡದ ನಿರ್ವಹಣೆ ಬಗ್ಗೆ ಗಂಭೀರ್‌ ರಲ್ಲಿ ವಿವರಣೆ ಕೇಳಲಾಗುವುದು’’ ಎಂದು ಮೂಲಗಳು ಹೇಳಿವೆ.

ವಾರ್ತಾ ಭಾರತಿ 27 Nov 2025 9:10 pm

ಗಾಝಾದಲ್ಲಿ ಜನಾಂಗೀಯ ಹತ್ಯೆ ಮುಗಿದಿಲ್ಲ: ಆ್ಯಮ್ನೆಸ್ಟಿ ಇಂಟರ್‌ ನ್ಯಾಷನಲ್ ಎಚ್ಚರಿಕೆ

ಲಂಡನ್, ನ.27: ಗಾಝಾದಲ್ಲಿ ಕದನ ವಿರಾಮದ ಹೊರತಾಗಿಯೂ ನಿರ್ಣಾಯಕ ನೆರವಿನ ಪೂರೈಕೆಗೆ ನಿರ್ಬಂಧ, ಹೊಸ ದಾಳಿಗಳನ್ನು ನಡೆಸುವ ಮೂಲಕ ಇಸ್ರೇಲ್ ಅಧಿಕಾರಿಗಳು ಈಗಲೂ ಜನಾಂಗೀಯ ಹತ್ಯೆಯನ್ನು ಮುಂದುವರಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪು `ಆ್ಯಮ್ನೆಸ್ಟಿ ಇಂಟರ್‌ ನ್ಯಾಷನಲ್' ಗುರುವಾರ ಎಚ್ಚರಿಕೆ ನೀಡಿದೆ. ಅಕ್ಟೋಬರ್ 10ರಂದು ಗಾಝಾದಲ್ಲಿ ಕದನ ವಿರಾಮ ಜಾರಿಗೆ ಬಂದಂದಿನಿಂದ ಇಸ್ರೇಲ್ ನಿರಂತರವಾಗಿ ಕದನ ವಿರಾಮ ಉಲ್ಲಂಘಿಸಿದ್ದು (7 ವಾರಗಳಲ್ಲಿ 500ಕ್ಕೂ ಹೆಚ್ಚು ಬಾರಿ) ಕನಿಷ್ಠ 347 ಫೆಲೆಸ್ತೀನೀಯರನ್ನು ಹತ್ಯೆ ಮಾಡಿದ್ದು 889 ಮಂದಿ ಗಾಯಗೊಂಡಿದ್ದಾರೆ. ಈ ಮಧ್ಯೆ, ಬುಧವಾರ ದಕ್ಷಿಣ ಮತ್ತು ಮಧ್ಯ ಗಾಝಾದಲ್ಲಿ ಇಸ್ರೇಲಿ ಪಡೆಗಳು ಸರಣಿ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. `ತನ್ನ ಅಪರಾಧಗಳ ಮಾರಣಾಂತಿಕ ಪರಿಣಾಮಗಳನ್ನು ಹಿಮ್ಮೆಟ್ಟಿಸಲು ಇದುವರೆಗೆ ಇಸ್ರೇಲ್ ಗಂಭೀರ ಕ್ರಮಗಳನ್ನು ಕೈಗೊಂಡಿರುವ ಸೂಚನೆಗಳಿಲ್ಲ ಮತ್ತು ಅದರ ಉದ್ದೇಶ ಬದಲಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ವಾಸ್ತವವಾಗಿ ಇಸ್ರೇಲಿ ಅಧಿಕಾರಿಗಳು ತಮ್ಮ ನಿರ್ದಯ ನೀತಿಗಳನ್ನು ಮುಂದುವರಿಸುತ್ತಿದ್ದಾರೆ. ಪ್ರಮುಖ ಮಾನವೀಯ ನೆರವು ಮತ್ತು ಅಗತ್ಯದ ಸೇವೆಗಳಿಗೆ ಪ್ರವೇಶಗಳನ್ನು ನಿರ್ಬಂಧಿಸುತ್ತಿದ್ದಾರೆ ಮತ್ತು ಗಾಝಾದಲ್ಲಿ ಫೆಲೆಸ್ತೀನೀಯರನ್ನು ಭೌತಿಕವಾಗಿ ನಾಶ ಮಾಡಲು ಉದ್ದೇಶಪೂರ್ವಕವಾಗಿ ಷರತ್ತುಗಳನ್ನು ವಿಧಿಸುತ್ತಿದ್ದಾರೆ' ಎಂದು ಆ್ಯಮ್ನೆಸ್ಟಿಯ ಪ್ರಧಾನ ಕಾರ್ಯದರ್ಶಿ ಆ್ಯಗ್ನೆಸ್ ಕ್ಯಾಲಮರ್ಡ್ ಹೇಳಿದ್ದಾರೆ. ಜಗತ್ತನ್ನು ಮೋಸಗೊಳಿಸಬಾರದು. ಇಸ್ರೇಲ್‍ ನ ನರಮೇಧ ಇನ್ನೂ ಮುಗಿದಿಲ್ಲ' ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಈ ಮಧ್ಯೆ, ಗುರುವಾರ ಬೆಳಿಗ್ಗೆ ಮಧ್ಯ ಗಾಝಾದ ಬುರೈಜ್ ಶಿಬಿರ ಮತ್ತು ಖಾನ್‍ಯೂನಿಸ್‍ನ ಪೂರ್ವ ಪ್ರದೇಶಗಳಲ್ಲಿ ಹಲವು ಕಟ್ಟಡಗಳನ್ನು ಗುರಿಯಾಗಿಸಿ ಇಸ್ರೇಲ್ ವೈಮಾನಿಕ ದಾಳಿ ನಡೆಸಿರುವುದಾಗಿ Aljazeera.com ವರದಿ ಮಾಡಿದೆ.

ವಾರ್ತಾ ಭಾರತಿ 27 Nov 2025 9:07 pm

ಬಂಗಾಳದ ಪ್ರಸ್ತುತ ಮತದಾರರ ಪಟ್ಟಿಗಳಲ್ಲಿಯ 26 ಲಕ್ಷ ಹೆಸರುಗಳು 2002ರ ಪಟ್ಟಿಗೆ ತಾಳೆಯಾಗಿಲ್ಲ: ಚುನಾವಣಾ ಆಯೋಗ

ಕೋಲ್ಕತಾ,ನ.27: ಪಶ್ಚಿಮ ಬಂಗಾಳದ ಪ್ರಸ್ತುತ ಮತದಾರರ ಪಟ್ಟಿಗಳಲ್ಲಿಯ ಸುಮಾರು 26 ಲಕ್ಷ ಮತದಾರರ ಹೆಸರುಗಳು ಹಿಂದಿನ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆದಿದ್ದ 2002ರ ಮತದಾರರ ಪಟ್ಟಿಗಳಿಗೆ ತಾಳೆಯಾಗಿಲ್ಲ ಎಂದು ಚುನಾವಣಾ ಆಯೋಗವು ವರದಿ ಮಾಡಿದೆ ಎಂದು ಅಧಿಕಾರಿಯೋರ್ವರು ತಿಳಿಸಿದ್ದಾರೆ. ಚುನಾವಣಾ ಆಯೋಗದ ಮೂಲಗಳ ಪ್ರಕಾರ ಪ.ಬಂಗಾಳದಲ್ಲಿ ಪ್ರಸ್ತುತ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯಡಿ ಬುಧವಾರದವರೆಗೆ ಆರು ಕೋಟಿಗೂ ಅಧಿಕ ಎಣಿಕೆ ಫಾರಂಗಳನ್ನು ಡಿಜಿಟಲೀಕರಿಸಲಾಗಿದೆ. ಒಮ್ಮೆ ಡಿಜಿಟಲೀಕರಿಸಿದ ಬಳಿಕ ಈ ಫಾರಂಗಳನ್ನು ಮ್ಯಾಪಿಂಗ್ ಕಾರ್ಯವಿಧಾನಕ್ಕೆ ಒಳಪಡಿಸಲಾಗುತ್ತದೆ. ಅಲ್ಲಿ ಅವುಗಳನ್ನು ಹಿಂದಿನ ಎಸ್‌ಐಆರ್ ದಾಖಲೆಗಳೊಂದಿಗೆ ತಾಳೆ ಹಾಕಲಾಗುತ್ತದೆ. ರಾಜ್ಯದಲ್ಲಿಯ ಸುಮಾರು 26 ಲಕ್ಷ ಮತದಾರರ ಹೆಸರುಗಳನ್ನು ಹಿಂದಿನ ಎಸ್‌ಐಆರ್ ದಾಖಲೆಗಳೊಂದಿಗೆ ತಾಳೆ ಹಾಕಲು ಸಾಧ್ಯವಾಗಿಲ್ಲ ಎಂದು ಅಧಿಕಾರಿ ಸುದ್ದಿಸಂಸ್ಥೆಗೆ ತಿಳಿಸಿದರು. ಡಿಜಿಟಲೀಕರಣ ಮುಂದುವರಿದಂತೆ ಈ ಸಂಖ್ಯೆ ಇನ್ನಷ್ಟು ಹೆಚ್ಚಬಹುದು ಎಂದರು. ಮ್ಯಾಪಿಂಗ್ ಹಿಂದಿನ ಎಸ್‌ಐಆರ್ ಮತದಾರರ ಪಟ್ಟಿಗಳೊಂದಿಗೆ ಇತ್ತೀಚಿನ ಮತದಾರರ ಪಟ್ಟಿಗಳ ಅಡ್ಡ-ಪರಿಶೀಲನೆಯನ್ನು ಸೂಚಿಸುತ್ತದೆ. ಈ ವರ್ಷ ಮ್ಯಾಪಿಂಗ್ ಪ್ರಕ್ರಿಯೆಯು ಇತರ ರಾಜ್ಯಗಳ ಮತದಾರರ ಪಟ್ಟಿಗಳನ್ನೂ ಒಳಗೊಂಡಿದೆ. ಇದು ಹೆಚ್ಚು ಸಮಗ್ರವಾದ ಮತ್ತು ನಿಖರ ಪರಿಶೀಲನೆ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ಮುಖ್ಯ ಚುನಾವಣಾಧಿಕಾರಿ ಕಚೇರಿಯು ತೆಗೆದುಕೊಂಡಿರುವ ಕ್ರಮವಾಗಿದೆ ಎಂದು ತಿಳಿಸಿದ ಅಧಿಕಾರಿ, ಆದಾಗ್ಯೂ ಮ್ಯಾಪಿಂಗ್‌ ನಲ್ಲಿ ತಾಳೆಯಾಗಿಲ್ಲ ಎಂದರೆ ಅಂತಿಮ ಮತದಾರರ ಪಟ್ಟಿಗಳಿಂದ ಮತದಾರರ ಹೆಸರುಗಳು ಸ್ವಯಂಚಾಲಿತವಾಗಿ ತೆಗೆದುಹಾಕಲ್ಪಡುತ್ತವೆ ಎಂದು ಅರ್ಥವಲ್ಲ ಎಂದು ಸ್ಪಷ್ಟಪಡಿಸಿದರು.

ವಾರ್ತಾ ಭಾರತಿ 27 Nov 2025 9:03 pm

ಅಂಗವಿಕಲರ ವಿರುದ್ಧ ಅವಹೇಳನಕಾರಿ ಹೇಳಿಕೆಗಳು: ಕಠಿಣ ಕಾನೂನು ತರಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ,ನ.27: ಅಂಗವಿಕಲ ವ್ಯಕ್ತಿಗಳ ಘನತೆಯನ್ನು ರಕ್ಷಿಸಲು ಕಠಿಣ ಕಾನೂನಿನ ಅಗತ್ಯವನ್ನು ಎತ್ತಿ ತೋರಿಸಿರುವ ಸರ್ವೋಚ್ಚ ನ್ಯಾಯಾಲಯವು, ಅಂಗವೈಕಲ್ಯ ಮತ್ತು ಅಪರೂಪದ ಆನುವಂಶಿಕ ಅಸ್ವಸ್ಥತೆಗಳನ್ನು ಹೊಂದಿರುವ ವ್ಯಕ್ತಿಗಳನ್ನು ಅಪಹಾಸ್ಯ ಮಾಡುವ ಅವಮಾನಕಾರಿ ಹೇಳಿಕೆಗಳನ್ನು ದಂಡನೀಯ ಅಪರಾಧವನ್ನಾಗಿಸಲು ಎಸ್‌ಸಿ-ಎಸ್‌ಟಿ ಕಾಯ್ದೆಯ ಮಾದರಿಯಲ್ಲಿ ಶಾಸನವೊಂದನ್ನು ರೂಪಿಸುವುದನ್ನು ಪರಿಗಣಿಸುವಂತೆ ಗುರುವಾರ ಕೇಂದ್ರಕ್ಕೆ ಸೂಚಿಸಿದೆ. ಎಸ್‌ಸಿ/ಎಸ್‌ಟಿ (ದೌರ್ಜನ್ಯ) ತಡೆ ಕಾಯ್ದೆಯು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ವರ್ಗಗಳಿಗೆ ಸೇರಿದ ವ್ಯಕ್ತಿಗಳ ವಿರುದ್ಧ ಜಾತಿ ನಿಂದನೆ,ತಾರತಮ್ಯ,ಅವಹೇಳನ ಮತ್ತು ಹಿಂಸಾಚಾರವನ್ನು ಅಪರಾಧೀಕರಿಸಿದೆ ಮತ್ತು ಇಂತಹ ಅಪರಾಧಗಳನ್ನು ಜಾಮೀನು ರಹಿತವಾಗಿಸಿದೆ. ಜಾತಿ ನಿಂದನೆಯನ್ನು ಅಪರಾಧೀಕರಿಸಿರುವ ಎಸ್‌ಸಿ/ಎಸ್‌ಟಿ ಕಾಯ್ದೆಯ ಮಾದರಿಯಲ್ಲಿ ಕಠಿಣ ಕಾನೂನನ್ನು ನೀವೇಕೆ ತರಬಾರದು ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ಮತ್ತು ನ್ಯಾ.ಜಾಯಮಾಲ್ಯಾ ಬಾಗ್ಚಿ ಅವರನ್ನೊಳಗೊಂಡ ಪೀಠವು ಕೇಂದ್ರವನ್ನು ಪ್ರಶ್ನಿಸಿತು. ಕೇಂದ್ರದ ಪರವಾಗಿ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ ಮೆಹ್ತಾ ಅವರು ಪೀಠದ ಅವಲೋಕನವನ್ನು ಶ್ಲಾಘಿಸಿದರು. ಹಾಸ್ಯವು ಯಾವುದೇ ವ್ಯಕ್ತಿಯ ಘನತೆಗೆ ಧಕ್ಕೆಯನ್ನುಂಟು ಮಾಡಬಾರದು ಎಂದು ಅವರು ಹೇಳಿದರು. ಆನ್‌ಲೈನ್ ವೇದಿಕೆಗಳಲ್ಲಿ ಅಶ್ಲೀಲ, ಅವಮಾನಕಾರಿ ಮತ್ತು ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು ‘ತಟಸ್ಥ,ಸ್ವತಂತ್ರ ಮತ್ತು ಸ್ವಾಯತ್ತ’ ಸಂಸ್ಥೆಯೊಂದರ ಅಗತ್ಯವಿದೆ ಎಂದೂ ಪೀಠವು ಹೇಳಿತು. ಅಂಗವಿಕಲ ವ್ಯಕ್ತಿಗಳ ವಿರುದ್ಧ ಅವಮಾನಕಾರಿ ಹೇಳಿಕೆಗಳು ಮತ್ತು ಅಪಹಾಸ್ಯವನ್ನು ತಡೆಯಲು ಮಾರ್ಗಸೂಚಿಗಳನ್ನು ರೂಪಿಸುವ ಅಥವಾ ಕಾರ್ಯವಿಧಾನವೊಂದನ್ನು ಜಾರಿಗೊಳಿಸುವ ವಿಷಯ ಕುರಿತಂತೆ ಪ್ರಸಾರ ಸಚಿವಾಲಯವು, ಇದಕ್ಕಾಗಿ ಕೆಲವು ಮಾರ್ಗಸೂಚಿಗಳನ್ನು ರೂಪಿಸಲಾಗುತ್ತಿದೆ ಎಂದು ಪೀಠಕ್ಕೆ ತಿಳಿಸಿತು. ಮಾರ್ಗಸೂಚಿಗಳನ್ನು ಸಾರ್ವಜನಿಕ ಚರ್ಚೆಗೆ ಮಂಡಿಸುವಂತೆ ಸಚಿವಾಲಯಕ್ಕೆ ಸೂಚಿಸಿದ ಪೀಠವು, ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿತು. ಅಪರೂಪದ ಸ್ಪೈನಲ್ ಮಸ್ಕ್ಯುಲರ್ ಅಟ್ರಾಫಿ (ಎಸ್‌ಎಂಎ) ಅಥವಾ ಬೆನ್ನುಮೂಳೆಯ ಸ್ನಾಯು ಕ್ಷೀಣತೆ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳಿಗಾಗಿ ಕೆಲಸ ಮಾಡುತ್ತಿರುವ ಎಸ್‌ಎಂಎ ಕ್ಯೂರ್ ಫೌಂಡೇಷನ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯವು ಕೈಗೆತ್ತಿಕೊಂಡಿತ್ತು. ‘ಇಂಡಿಯಾಸ್ ಗಾಟ್ ಲೇಟೆಂಟ್’ ಯುಟ್ಯೂಬ್ ಕಾರ್ಯಕ್ರಮದ ನಿರೂಪಕ ಸಮಯ ರೈನಾ ಹಾಗೂ ಇತರ ಸಾಮಾಜಿಕ ಮಾಧ್ಯಮ ಪ್ರಭಾವಿಗಳಾದ ವಿಪುನ್ ಗೋಯಲ್, ಬಲರಾಜ ಪರಮಜೀತ್ ಸಿಂಗ್ ಘಾಯ್,ಸೋನಾಲಿ ಠಕ್ಕರ್ ಮತ್ತು ನಿಶಾಂತ ತನ್ವರ್ ಅವರು ಅಂಗವಿಕಲ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಮಾಡಿದ್ದ ಜೋಕ್‌ಗಳನ್ನು ಅರ್ಜಿಯಲ್ಲಿ ಎತ್ತಿ ತೋರಿಸಲಾಗಿದೆ. ಅಂಗವಿಕಲರ ಕುರಿತು ಸಂವೇದನಾರಹಿತ ಹೇಳಿಕೆಗಳಿಗಾಗಿ ಅವರ ವಿರುದ್ಧ ಕ್ರಮಕ್ಕೆ ಅರ್ಜಿಯು ಆಗ್ರಹಿಸಿದೆ. ►ದಂಡನೀಯವಲ್ಲ,ಸಾಮಾಜಿಕ ಹೊರೆ ಪ್ರೇರಣಾದಾಯಕ ಯಶಸ್ಸು ಸಾಧಿಸಿರುವ ಅಂಗವಿಕಲ ವ್ಯಕ್ತಿಗಳನ್ನು ಒಳಗೊಂಡ ಕಾರ್ಯಕ್ರಮಗಳನ್ನು ತಮ್ಮ ವೇದಿಕೆಗಳಲ್ಲಿ ಆಯೋಜಿಸುವಂತೆ ಸರ್ವೋಚ್ಚ ನ್ಯಾಯಾಲಯವು ರೈನಾ ಮತ್ತು ಇತರರಿಗೆ ನಿರ್ದೇಶನ ನೀಡಿತು. ಅಂಗವಿಕಲರು, ವಿಶೇಷವಾಗಿ ಎಸ್‌ಎಂಎ ಪೀಡಿತರ ಸಕಾಲಿಕ ಮತ್ತು ಪರಿಣಾಮಕಾರಿ ಚಿಕಿತ್ಸೆಗಾಗಿ ಹಣವನ್ನು ಸಂಗ್ರಹಿಸಲು ಈ ಕಾರ್ಯಕ್ರಮಗಳನ್ನು ನಡೆಸಬೇಕು ಎಂದೂ ಅದು ತಿಳಿಸಿತು. ‘ನಾವು ಮುಂದಿನ ವಿಚಾರಣೆ ನಡೆಸುವ ಮುನ್ನ ಇಂತಹ ಕೆಲವು ಸ್ಮರಣೀಯ ಕಾರ್ಯಕ್ರಮಗಳು ನಡೆಯುತ್ತವೆ ಎಂದು ನಾವು ನಿರೀಕ್ಷಿಸಿದ್ದೇವೆ. ಇದು ನಾವು ನಿಮ್ಮ ಮೇಲೆ ಹೇರುತ್ತಿರುವ ಸಾಮಾಜಿಕ ಹೊರೆಯಾಗಿದೆ, ದಂಡನೀಯ ಹೊರೆಯಲ್ಲ. ನೀವು ಸಮಾಜದಲ್ಲಿ ಒಳ್ಳೆಯ ಸ್ಥಾನಗಳಲ್ಲಿರುವ ವ್ಯಕ್ತಿಗಳಾಗಿದ್ದೀರಿ. ನೀವು ಅಷ್ಟೊಂದು ಜನಪ್ರಿಯರಾಗಿದ್ದರೆ ಅದನ್ನು ಇತರರೊಂದಿಗೂ ಹಂಚಿಕೊಳ್ಳಿ’ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ಹೇಳಿದರು.

ವಾರ್ತಾ ಭಾರತಿ 27 Nov 2025 9:02 pm

ಬಂಗಾಳಕೊಲ್ಲಿಗೆ ದಿತ್ವಾ ಚಂಡಮಾರುತದ ಭೀತಿ; ತಮಿಳುನಾಡು, ಆಂಧ್ರದ ಕರಾವಳಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ

ಹೊಸದಿಲ್ಲಿ,ನ.27: ಸೆನ್ಯಾರ್ ಚಂಡಮಾರುತ ದುರ್ಬಲಗೊಳ್ಳುತ್ತಿರುವಂತೆಯೇ, ಬಂಗಾಳ ಕೊಲ್ಲಿಯಲ್ಲಿ ಹೊಸ ಚಂಡಮಾರುತವೊಂದು ರೂಪುಗೊಳ್ಳತೊಡಗಿದ್ದು, ಭಾರತೀಯ ಹವಾಮಾನ ಇಲಾಖೆಯು ಗುರುವಾರ ತಮಿಳುನಾಡು ಹಾಗೂ ಆಂಧ್ರಪ್ರದೇಶದ ಕರಾವಳಿ ಜಿಲ್ಲೆಗಳಲ್ಲಿ ಕಟ್ಟೆಚ್ಚರವನ್ನು ಘೋಷಿಸಿದೆ. ಆಗ್ನೇಯ ಬಂಗಾಳಕೊಲ್ಲಿ ಹಾಗೂ ಪಕ್ಕದ ಶ್ರೀಲಂಕಾ ಕರಾವಳಿಯ ಮೇಲೆ ವಾಯುಭಾರ ನಿಮ್ನತೆ ತೀವ್ರಗೊಂಡಿದೆ. ಮುಂದಿನ 12 ತಾಸುಗಳೊಳಗೆ ಅದು ಚಂಡಮಾರುತವಾಗಿ ತೀವ್ರತೆಯನ್ನು ಪಡೆಯುವ ಸಾಧ್ಯತೆ ಹೆಚ್ಚಾಗಿದೆ ಎಂದರು. ದಿತ್ವಾ ಎಂದು ಹೆಸರಿಡಲಾದ ಈ ಚಂಡಮಾರುತವು ಕರಾವಳಿ ತೀರಕ್ಕೆ ಅಪ್ಪಳಿಸುವ ಸಾಧ್ಯತೆ ಇನ್ನೂ ಅನಿಶ್ಚಿತವಾಗಿದೆ. ಆದರೆ ಈ ವಾರದ ಅಂತ್ಯದ ವೇಳೆಗೆ ತಮಿಳುನಾಡು, ಪುದುಚೇರಿ ಹಾಗೂ ದಕ್ಷಿಣ ಆಂಧ್ರಪ್ರದೇಶದ ಕರಾವಳಿಗಳಲ್ಲಿ ಕಡಲು ಪ್ರಕ್ಷುಬ್ಧವಾಗಲಿದ್ದು, ತಾಸಿಗೆ 80-90 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ ಎಂದು ಐಎಂಡಿ ಪ್ರಕಟಣೆ ತಿಳಿಸಿದೆ.

ವಾರ್ತಾ ಭಾರತಿ 27 Nov 2025 9:01 pm

‘ಹುತಾತ್ಮ ಅಗ್ನಿವೀರರ ಕುಟುಂಬಗಳಿಗೂ ಸಮಾನ ಸವಲತ್ತು ನೀಡಿ’: ಮೃತ ಯೋಧನ ತಾಯಿಯಿಂದ ಹೈಕೋರ್ಟ್‌ ಗೆ ಮನವಿ

ಹೊಸದಿಲ್ಲಿ,ನ.27: ಅಗ್ನಿಪಥ ಯೋಜನೆಯಡಿ ನೇಮಕಗೊಂಡ ಯೋಧರು ಕರ್ತವ್ಯದ ವೇಳೆ ಸಾವನ್ನಪ್ಪಿದಲ್ಲಿ ಅವರ ಕುಟುಂಬಗಳಿಗೆ ನೀಡಲಾಗುವ ಸವಲತ್ತುಗಳಲ್ಲಿ ನಿಯಮಿತ ಯೋಧರಷ್ಟೇ ಸಮಾನತೆಯಿರಬೇಕೆಂದು ಕೋರಿ ಸೇನಾ ಕಾರ್ಯಾಚರಣೆಯೊಂದರಲ್ಲಿ ಮಡಿದ ಅಗ್ನಿವೀರ ಯೋಧನೊಬ್ಬನ ತಾಯಿಯು ಬಾಂಬೆ ಹೈಕೋರ್ಟ್ ಮೆಟ್ಟಲೇರಿದ್ದಾರೆ. ದೀರ್ಘಾವಧಿಯ ಸೇವೆಗೆ ನೇಮಕಗೊಂಡ ಯೋಧರ ಕುಟುಂಬಗಳಿಗೆ ವಾಡಿಕೆಯಂತೆ ನೀಡಲಾಗುವ ದೀರ್ಘಾವಧಿಯ ಪಿಂಚಣಿ ಮತ್ತಿತರ ಕಲ್ಯಾಣ ಸೌಲಭ್ಯಗಳನ್ನು ಅಗ್ನಿವೀರ ಯೋಧರಿಗೆ ನಿರಾಕರಿಸುವುದು ತಾರತಮ್ಯದ್ದಾಗಿದೆ ಎಂದು ಜ್ಯೋತಿಬಾಯಿ ಶ್ರೀರಾಮ ನಾಯ್ಕ್ ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ. ಜ್ಯೋತಿಬಾಯಿ ಅವರ ಪುತ್ರ, 851 ಲಘು ಪದಾತಿದಳದ ಅಗ್ನಿವೀರ ಎಂ. ಮುರಳಿನಾಯ್ಕ್ ಅವರು ಈ ವರ್ಷದ ಮೇ 9ರಂದು ಜಮ್ಮುಕಾಶ್ಮೀರದ ಪೂಂಛ್‌ ನಲ್ಲಿ ಗಡಿಯಾಚೆಯಿಂದ ನಡೆದ ಶೆಲ್‌ದಾಳಿಯಲ್ಲಿ ಸಾವನ್ನಪ್ಪಿದ್ದರು., ಅಗ್ನಿವೀರ್ ಯೋಧನೊಬ್ಬ ಯುದ್ಧರಂಗದಲ್ಲಿ ಮಡಿದ ಮೊತ್ತಮೊದಲ ಪ್ರಕರಣ ಇದಾಗಿದೆ ಎಂದು ಜ್ಯೋತಿಬಾಯಿ ಅರ್ಜಿಯಲ್ಲಿ ತಿಳಿಸಿದ್ದಾರೆ. ಸಂವಿಧಾನದ 226ನೇ ಕಲಮಿನಡಿ ಸಲ್ಲಿಸಿದ ಈ ಅರ್ಜಿಯಲ್ಲಿ ಅಗ್ನಿಪಥ ಯೋಜನೆಯನ್ನು ರದ್ದುಪಡಿಸುವಂತೆ ಕೋರಲಾಗಿಲ್ಲ. ಆದರೆ ಸೇನಾ ಕಾರ್ಯಾಚರಣೆಗಳಲ್ಲಿ ಮಡಿದ ಅಗ್ನಿವೀರ ಯೋಧನ ಕುಟುಂಬಗಳನ್ನು ಜೀವನಪರ್ಯಂತ ಆರ್ಥಿಕ ಭದ್ರತೆಯನ್ನು ಒದಗಿಸುವುದರಿಂದ ಹೊರಗಿಟ್ಟಿರುವುದನ್ನು ಅದು ಪ್ರಶ್ನಿಸಿದೆ. ಮೃತ ಅಗ್ನಿವೀರರ ಕುಟುಂಬಗಳಿಗೆ ಸೌಲಭ್ಯಗಳನ್ನು ನಿರಾಕರಿಸುವುದು ಸಂವಿಧಾನದ 14 ಹಾಗೂ 21 ಕಲಮುಗಳ ಉಲ್ಲಂಘನೆಯಾಗಿದೆ ಎಂದವರು ಪ್ರತಿಪಾದಿಸಿದ್ದಾರೆ. ಸಮಾನವಾದ ಕರ್ತವ್ಯಗಳನ್ನು ನಿರ್ವಹಿಸುವ ಹಾಗೂ ಸಮಾನವಾದ ಅಪಾಯಗಳನ್ನು ಎದುರಿಸುವ ಎರಡು ಶ್ರೇಣಿಗಳ ಯೋಧರ ನಡುವೆ ಏಕಪಕ್ಷೀಯವಾಗಿ ಸೌಲಭ್ಯಗಳನ್ನು ನಿರಾಕರಿಸುವುದು ಸಂವಿಧಾನದ 14 ಹಾಗೂ 21ನೇ ಕಲಮಿನ ಉಲ್ಲಂಘನೆಯಾಗುತ್ತದೆ ಎಂದು ಅರ್ಜಿಯಲ್ಲಿ ಪ್ರತಿಪಾದಿಸಲಾಗಿದೆ. ನನ್ನ ಪುತ್ರನು ಒಂದೇ ರೀತಿಯ (ನಿಯಮಿತ ಯೋಧರಂತೆ) ಸಮವಸ್ತ್ರ ಧರಿಸಿದ್ದನು, ಒಂದೇ ರೀತಿಯ ಪ್ರಮಾಣವಚನ ಸ್ವೀಕರಿಸಿದ್ದನು ಹಾಗೂ ಯಾವುದೇ ನಿಯಮಿತ ಸೈನಿಕನು ಎದುರಿಸುವಂತಹ ಅಪಾಯಗಳನ್ನು ಕೂಡಾ ಎದುರಿಸಿದ್ದನು. ಹೀಗಿದ್ದರೂ ಅಗ್ನಿಪಥ ಯೋಜನೆಯ ನಿಬಂಧನೆಗಳಿಂದಾಗಿ, ಆತನ ಮಹೋನ್ನತ ಬಲಿದಾನಕ್ಕೆ ಓರ್ವ ಹುತಾತ್ಮ ಯೋಧನಿಗೆ ಸಿಗಬೇಕಾದ ಘನತೆ,ಗೌರವದ ಮನ್ನಣೆಯನ್ನು ನೀಡಲಾಗಿಲ್ಲ ಎಂದು ಜ್ಯೋತಿ ನಾಯ್ಕ್ ಅರ್ಜಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹುತಾತ್ಮರಾದ ಅಗ್ನಿವೀರ ಯೋಧರ ಕುಟುಂಬಗಳಿಗೆ ಕೌಟುಂಬಿಕ ಪಿಂಚಣಿ, ಸೇವಾಭತ್ತೆ, ಮಾಜಿ ಸೇನಾ ಯೋಧರ ಸ್ಥಾನಮಾನ, ಆರೋಗ್ಯಪಾಲನಾ ಸೌಲಭ್ಯಗಳು ಹಾಗೂ ಸಾಂಸ್ಥಿಕೆ ಮಾನ್ಯತೆಯನ್ನು ನೀಡುವ ಕುರಿತು ಸಂಬಂಧಿತ ಇಲಾಖೆಗಳಿಗೆ ನಿರ್ದೇಶನಗಳನ್ನುನೀಡುವಂತೆ ಅರ್ಜಿದಾರರು ಕೋರಿದ್ದಾರೆ.

ವಾರ್ತಾ ಭಾರತಿ 27 Nov 2025 9:00 pm

‘ರಾಜ್ಯ ಹಜ್ ಸಮಿತಿ’ ನಿಯಮಾವಳಿ-2025 ಜಾರಿಗೆ ತರಲು ಸಂಪುಟ ಒಪ್ಪಿಗೆ : ಎಚ್.ಕೆ.ಪಾಟೀಲ್

ಬೆಂಗಳೂರು : ರಾಜ್ಯ ಹಜ್ ಸಮಿತಿ ನಿಯಮಾವಳಿ-2025 ಅನ್ನು ಜಾರಿಗೆ ತರಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದರು. ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರತಿ ವರ್ಷ ಹಜ್ ಯಾತ್ರೆಯನ್ನು ಕೈಗೊಳ್ಳಲು ಸೌದಿ ಅರೇಬಿಯಾಗೆ ತೆರಳುವ ರಾಜ್ಯದ ಹಜ್ ಯಾತ್ರಿಕರಿಗೆ ಸೇವೆಯನ್ನು ಒದಗಿಸುವ ಉದ್ದೇಶದಿಂದ ಹಜ್ ಸಮಿತಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು. ಕರ್ನಾಟಕ ರಾಜ್ಯ ಹಜ್ ಸಮಿತಿಯ ಮೂಲಕ ಆಯ್ಕೆಯಾದ ಹಜ್ ಯಾತ್ರಿಕರು ಬೆಂಗಳೂರು, ಮಂಗಳೂರು, ಮುಂಬೈ ಮತ್ತು ಹೈದರಾಬಾದ್ ಅನ್ನು ಎಂಬಾರ್ಕೇಷನ್ ಪಾಯಿಂಟ್ ಗಳಿಂದ ನೇರವಾಗಿ ಹಜ್ ಯಾತ್ರೆಗೆ ಪ್ರಯಾಣಿಸುತ್ತಾರೆ. ಹಜ್ ಯಾತ್ರಿಕರ ಸೌಲಭ್ಯಕ್ಕಾಗಿ ಈ ಎಲ್ಲ ಕೇಂದ್ರಗಳಲ್ಲಿ ಪ್ರತಿ ವರ್ಷ ಹಜ್ ಶಿಬಿರಗಳನ್ನು ರಾಜ್ಯ ಹಜ್ ಸಮಿತಿ ವತಿಯಿಂದ ಆಯೋಜಿಸಲಾಗುತ್ತಿದೆ ಎಂದು ಅವರು ತಿಳಿಸಿದರು. ಆದರೆ, ಇದುವರೆವಿಗೂ ಹಜ್ ಸಮಿತಿಗೆ ಕಾರ್ಯವಿಧಾನವನ್ನು ನಿಗದಿಪಡಿಸುವ ಯಾವುದೆ ನಿಯಮಗಳು ಇರಲಿಲ್ಲ. ಪ್ರಸ್ತಾಪಿತ ನಿಯಮಾವಳಿ ಹಜ್ ಸಮಿತಿಯ ಚಟುವಟಿಕೆಗಳನ್ನು ಸುವ್ಯವಸ್ಥಿತಗೊಳಿಸುವುದರೊಂದಿಗೆ ಅದರ ಕಾರ್ಯನಿರ್ವಹಣೆಯಲ್ಲಿ ಹೆಚ್ಚಿನ ಪಾರದರ್ಶಕತೆಯನ್ನು ತರಲಿದೆ. ಕೇಂದ್ರ ಹಜ್ ಕಾಯ್ದೆ, 2002ರ ಕಲಂ 47ರ ಪ್ರಕಾರ ಕೇಂದ್ರದ ಕಾಯ್ದೆಯ ಉದ್ದೇಶಗಳನ್ನು ಜಾರಿಗೆ ತರುವ ಸಲುವಾಗಿ ರಾಜ್ಯ ಸರಕಾರವು ನಿಯಮಗಳನ್ನು ರೂಪಿಸಬೇಕಾಗಿದೆ ಎಂದು ಎಚ್.ಕೆ.ಪಾಟೀಲ್ ಹೇಳಿದರು.

ವಾರ್ತಾ ಭಾರತಿ 27 Nov 2025 8:58 pm

ರಾಜ್ಯದ 6 ಜಿಲ್ಲೆಯ 12 ಗ್ರಾಮ ಪಂಚಾಯತಿಗಳು ಪಟ್ಟಣ ಪಂಚಾಯತಿಗಳಾಗಿ ಮೇಲ್ದರ್ಜೆಗೆ - ಸಚಿವ ಸಂಪುಟ ನಿರ್ಣಯ; ಯಾವೆಲ್ಲಾ?

ಕರ್ನಾಟಕ ಸಚಿವ ಸಂಪುಟವು 6 ಜಿಲ್ಲೆಗಳ 12 ಗ್ರಾಮ ಪಂಚಾಯತಿಗಳನ್ನು ಪಟ್ಟಣ ಪಂಚಾಯತಿಗಳಾಗಿ ಮೇಲ್ದರ್ಜೆಗೇರಿಸಲು ಮಹತ್ವದ ನಿರ್ಧಾರ ಕೈಗೊಂಡಿದೆ. ಬೆಳಗಾವಿಯ ಒಂದು ಪುರಸಭೆಯನ್ನು ನಗರಸಭೆಯಾಗಿ ಉನ್ನತೀಕರಿಸಲಾಗಿದೆ. ಔಷಧ ಮತ್ತು ಸೌಂದರ್ಯ ವರ್ಧಕಗಳ ತಿದ್ದುಪಡಿ ವಿಧೇಯಕ, ಸಿನಿ ಕಾರ್ಯಕರ್ತರ ಕ್ಷೇಮಾಭಿವೃದ್ಧಿ ತಿದ್ದುಪಡಿ ವಿಧೇಯಕ ಸೇರಿದಂತೆ ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ವಿಜಯ ಕರ್ನಾಟಕ 27 Nov 2025 8:53 pm

ರಾಜ್ಯದ ಜನರಿಗೆ ಕೊಟ್ಟ ಮಾತೇ ನಮಗೆ ಜಗತ್ತು: ಸಿಎಂ ಸಿದ್ದರಾಮಯ್ಯ

“ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ” ಎಂದಿದ್ದ ಡಿಕೆಶಿ

ವಾರ್ತಾ ಭಾರತಿ 27 Nov 2025 8:36 pm

ರಾಯಚೂರು | ಮದ್ಯ ನಿಷೇಧ ಹೋರಾಟಕ್ಕೆ ಸಿ.ಎಂ ಸಿದ್ದರಾಮಯ್ಯ ಸ್ಪಂದನೆ : ಹೋರಾಟ ಸ್ಥಗಿತ

ರಾಯಚೂರು: ರಾಜ್ಯದಲ್ಲಿ ಮದ್ಯ ನಿಷೇಧ ಮಾಡಬೇಕು ಎಂದು ಒತ್ತಾಯಿಸಿ ನವೆಂಬರ್ 25ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮದ್ಯ ನಿಷೇಧ ಆಂದೋಲನ ಕರ್ನಾಟಕದಿಂದ ನಡೆಯುತ್ತಿದ್ದ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹಕ್ಕೆ ರಾಜ್ಯ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿರುವುದರಿಂದ ಹೋರಾಟ ಸ್ಥಗಿತಗೊಳಿಸಲಾಯಿತು. ಧರಣಿ ಸ್ಥಳಕ್ಕೆ ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪನವರು ಆಗಮಿಸಿದ್ದರು. ಪ್ರತಿಭಟನಾಕಾರರ ಬೇಡಿಕೆಗಳನ್ನು ಸರಕಾರದ ಜೊತೆ ಚರ್ಚಿಸಿ ತಿಳಿಸುವುದಾಗಿ ಹೇಳಿದರು. ಇದರಿಂದ ಹೋರಾಟ ಸ್ಥಗಿತಗೊಳಿಸಲಾಗಿದೆ ಎಂದು ಮದ್ಯ ನಿಷೇಧ ಹೋರಾಟ ಸಮಿತಿಯ ಸಂಚಾಲಕಿ ವಿದ್ಯಾ ಪಾಟೀಲ್ ತಿಳಿಸಿದರು.

ವಾರ್ತಾ ಭಾರತಿ 27 Nov 2025 8:35 pm

ಬಿಹಾರ | ಶಾಸಕನಲ್ಲದ ಉಪೇಂದ್ರ ಕುಶ್ವಾಹ ಮಗನಿಗೆ ಸಚಿವ ಸ್ಥಾನ ಕೊಡಿಸಿದ್ದಕ್ಕೆ ಬಿಜೆಪಿ ಮಿತ್ರಪಕ್ಷ RLM ನಲ್ಲಿ ಬಿಕ್ಕಟ್ಟು: ಕುಟುಂಬ ರಾಜಕಾರಣ ಆರೋಪಿಸಿ 7 ನಾಯಕರು ರಾಜೀನಾಮೆ

ಪಾಟ್ನಾ: ಶಾಸಕ ಅಥವಾ ಎಂಎಲ್‌ಸಿ ಅಲ್ಲದ ಮಗ ದೀಪಕ್ ಪ್ರಕಾಶ್ ಅವರಿಗೆ ಸಚಿವ ಸ್ಥಾನ ಕೊಡಿಸಿದ್ದಕ್ಕೆ ಉಪೇಂದ್ರ ಕುಶ್ವಾಹ ನೇತೃತ್ವದ ರಾಷ್ಟ್ರೀಯ ಲೋಕ ಮೋರ್ಚಾ (RLM) ಪಕ್ಷದ 7 ಪ್ರಮುಖ ನಾಯಕರು ಗುರುವಾರ ರಾಜೀನಾಮೆ ಸಲ್ಲಿಸಿ, ಕುಶ್ವಾಹ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜೀನಾಮೆ ನೀಡಿರುವವರಲ್ಲಿ ರಾಜ್ಯಾಧ್ಯಕ್ಷ ಮಹೇಂದ್ರ ಕುಶ್ವಾಹ, ರಾಜ್ಯ ಪ್ರಧಾನ ಕಾರ್ಯದರ್ಶಿಗಳು ರಾಹುಲ್ ಕುಮಾರ್, ರಾಜೇಶ್ ರಂಜನ್ ಸಿಂಗ್, ಬಿಪಿನ್ ಕುಮಾರ್ ಚೌರಾಸಿಯಾ, ಪ್ರಮೋದ್ ಯಾದವ್ ಹಾಗೂ ಶೇಖ್‌ಪುರ ಜಿಲ್ಲಾ ಅಧ್ಯಕ್ಷ ಪಪ್ಪು ಮಂಡಲ್ ಸೇರಿದ್ದಾರೆ. RLMನ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಜಿತೇಂದ್ರ ನಾಥ್, “9 ವರ್ಷಗಳಿಂದ ಕುಶ್ವಾಹ ಅವರ ಜೊತೆ ಇದ್ದಿದ್ದೇನೆ. ಅವರ ರಾಜಕೀಯವನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದೇನೆ. ಒಂದು ಕಾಲದಲ್ಲಿ ತಮ್ಮನ್ನು ನಿತೀಶ್ ಕುಮಾರ್ ಅವರ ಉತ್ತರಾಧಿಕಾರಿ ಎಂದು ಭಾವಿಸಿದ್ದ ವ್ಯಕ್ತಿ 2020 ರ ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ ನಂತರ ತಮ್ಮ ಪಕ್ಷದ (ಆಗ ರಾಷ್ಟ್ರೀಯ ಲೋಕ ಸಮತಾ ಪಕ್ಷ) ಭವಿಷ್ಯದ ಬಗ್ಗೆ ಖಚಿತವಿರಲಿಲ್ಲ. ಅವರು ಪಕ್ಷದ ಭವಿಷ್ಯಕ್ಕಿಂತ ಕುಟುಂಬದ ಭವಿಷ್ಯವನ್ನೇ ಪ್ರಮುಖವಾಗಿಸಿಕೊಂಡಿದ್ದಾರೆ. ಶಾಸಕರಲ್ಲದ ಅವರ ಮಗ ಸಚಿವವಾಗುವುದು ಅದಕ್ಕೆ ಸಾಕ್ಷಿ,” ಎಂದು ಅವರು ಆರೋಪಿಸಿದ್ದಾರೆ. ಪಕ್ಷದ ಎರಡನೇ ಪ್ರಮುಖ ನಾಯಕ ಎಂದೇ ಗುರತಿಸಿಕೊಂಡಿದ್ದ, ಶೇಖ್‌ಪುರ ಕ್ಷೇತ್ರದ ಟಿಕೆಟ್ ನಿರೀಕ್ಷಿಸಿದ್ದ ಜಿತೇಂದ್ರ ನಾಥ್, ಆ ಕ್ಷೇತ್ರವು ಜೆಡಿ (ಯು)ಗೆ ಹೋದಾಗಲೇ ಅಸಮಾಧಾನಗೊಂಡಿದ್ದರು. ರಾಜ್ಯಾಧ್ಯಕ್ಷ ಮಹೇಂದ್ರ ಕುಶ್ವಾಹ ಅವರು ಉಪೇಂದ್ರ ಕುಶ್ವಾಹ ಅವರನ್ನು “ಸಮಾಜವಾದಿ ರಾಜಕೀಯದ ಪತನಗೊಂಡ ಆಧಾರಸ್ತಂಭ” ಎಂದು ಉಲ್ಲೇಖಿಸಿ “ನೈತಿಕ ಮೌಲ್ಯಗಳ ಬಗ್ಗೆ ಮಾತನಾಡುತ್ತಿದ್ದವರು ಈಗ ಅದನ್ನೇ ಪಾಲಿಸದ ಸ್ಥಿತಿಗೆ ಬಂದಿದ್ದಾರೆ,” ಎಂದು ಕಟುವಾಗಿ ಟೀಕಿಸಿದ್ದಾರೆ. ಪಕ್ಷದಿಂದ ಹೊರನಡೆದ ಇನ್ನೋರ್ವ ನಾಯಕ ರಾಹುಲ್ ಕುಮಾರ್ , “ಇದು ಅಂತ್ಯಗೊಂಡ ಏಕಪಕ್ಷೀಯ ಸಂಬಂಧ. ಕುಟುಂಬ ರಾಜಕಾರಣ ನಡೆಸುವ ಇತರ ನಾಯಕರಿಗಿಂತ ಕುಶ್ವಾಹ ಈಗ ಭಿನ್ನರಲ್ಲ. ಸಾಮಾನ್ಯ ಕಾರ್ಯಕರ್ತನಿಗೆ ಪಕ್ಷದಲ್ಲಿ ಸ್ಥಳವಿಲ್ಲ,” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಪೇಂದ್ರ ಕುಶ್ವಾಹ ಕುಟುಂಬದ ಪ್ರಾಬಲ್ಯ ಈಗಾಗಲೇ ಪಕ್ಷದಲ್ಲಿ ಹೆಚ್ಚಾಗಿದೆ. ಅವರು ಈಗ ರಾಜ್ಯಸಭಾ ಸದಸ್ಯರಾಗಿದ್ದಾರೆ. ಅವರ ಪತ್ನಿ ಸ್ನೇಹಲತಾ ಕುಶ್ವಾಹ ಸಸಾರಾಮ್ ಕ್ಷೇತ್ರದ ಶಾಸಕಿಯಾಗಿದ್ದಾರೆ. ಇದೀಗ ಪುತ್ರ ದೀಪಕ್ ಪ್ರಕಾಶ್ ಕೂಡ ಸಚಿವರಾಗಿದ್ದಾರೆ. ಇತ್ತ, ಇತ್ತೀಚಿನ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಭಾಗವಾಗಿ ಆರು ಸ್ಥಾನಗಳಲ್ಲಿ ಸ್ಪರ್ಧಿಸಿ ನಾಲ್ಕರಲ್ಲಿ ಗೆದ್ದಿತ್ತು. ಸರ್ಕಾರ ರಚನೆಯ ನಂತರ RLMಗೆ ಒಂದೇ ಸಚಿವ ಸ್ಥಾನ ಸಿಕ್ಕಿತ್ತು. ಈಗ ಅದೇ ಸ್ಥಾನ ಪಕ್ಷದಲ್ಲಿ ಭಾರಿ ಬಿರುಕು ಮೂಡಿಸಿದೆ. ಪಕ್ಷದ ಕಾರ್ಯಕರ್ತರಿಗೆ ಮೌಲ್ಯಕೊಡದೆ, ಕುಟುಂಬಕ್ಕೆ ಮಾತ್ರ ಆದ್ಯತೆ ನೀಡುತ್ತಿದ್ದಾರೆ ಎಂದು ಆರೋಪಿಸಿ RLM ಪಕ್ಷದಲ್ಲಿ ಬಂಡಾಯದ ಅಲೆ ಬೀಸಿದೆ. ಸೌಜನ್ಯ: indianexpress.com

ವಾರ್ತಾ ಭಾರತಿ 27 Nov 2025 8:34 pm

Kalburagi Crimes ಅರ್ಧ ಗಂಟೆಯಲ್ಲಿ ಹಗಲು ದರೋಡೆ ಮಾಡ್ತಿದ್ದ ಖತರ್ನಾಕ್‌ ಕಳ್ಳ ಅರೆಸ್ಟ್

ಬೀಗ ಹಾಕಿರುವ ಮನೆಗಳನ್ನು ಟಾರ್ಗೆಟ್‌ ಮಾಡಿಕೊಂಡು ಅರ್ಧಗಂಟೆಯಲ್ಲಿ ಹಗಲು ದರೋಡೆ ಮಾಡುತ್ತಿದ್ದ ಕುಖ್ಯಾತ ಕಳ್ಳ ಚಾಂದಪಾಶಾ ಮಹೆಬೂಬ್‌ ಪಾಶಾ ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ತಿಂಗಳಲ್ಲಿ ಮೂರು ಮನೆ ಲೂಟಿ ಮಾಡಿದ್ದಾನೆ ಎನ್ನಲಾಗಿದೆ. ಆತನ ಬಂಧನದ ವೇಳೆ ಅವನ ಬಳಿ ಇದ್ದ 8.30 ಲಕ್ಷ ರೂ. ಮೌಲ್ಯದ ಆಭರಣಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ಕೊಟ್ಟಿದ್ದಾರೆ.

ವಿಜಯ ಕರ್ನಾಟಕ 27 Nov 2025 8:30 pm

ಕಲಬುರಗಿ | ಶರಣರು ವೈದಿಕಶಾಹಿ ತೆರಿಗೆ ಪದ್ಧತಿಯ ವಿರುದ್ಧ ಹೋರಾಡಿದವರು : ಡಾ. ಶಿವಗಂಗಾ ರುಮ್ಮಾ

ಕಲಬುರಗಿ : ಕಳಚೂರಿಗಳು ಕರ್ನಾಟಕದ ಚರಿತ್ರೆಯಲ್ಲಿ ಅಲ್ಪಾವಧಿಗೆ ಆಡಳಿತ ನಡೆಸಿದರೂ, ಬಸವಣ್ಣ ಪ್ರಣೀತ ವಚನ ಚಳುವಳಿಯೊಂದಿಗೆ ವೈದಿಕಶಾಹಿಯ ಮನುಷ್ಯ ವಿರೋಧಿ ನೀತಿಗಳನ್ನು ಎದುರಿಸಿದರೆಂದು ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಡಾ.ಶಿವಗಂಗಾ ರುಮ್ಮಾ ಅವರು ಅಭಿಪ್ರಾಯಪಟ್ಟರು. ಕಾಳಗಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕಲಬುರಗಿಯ ವಿಭಾಗಿಯ ಪತ್ರಾಗಾರ ಇಲಾಖೆ, ಹಾಗೂ ಸುಭಾಶ್ಚಂದ್ರ ಪಾಟೀಲ ಸ್ಮಾರಕ ಜನಕಲ್ಯಾಣ ಟ್ರಸ್ಟ್ ಪಾಳಾ ಇವರ ಜಂಟಿ ಸಹಭಾಗಿತ್ವದಲ್ಲಿ 'ಕಳಚೂರಿ ಮನೆತನ : ಚರಿತ್ರೆ ಮತ್ತು ಸಂಸ್ಕೃತಿ' ಎಂಬ ವಿಷಯದ ಕುರಿತ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನದಲ್ಲಿ ಎರಡನೆ ದಿನದ ಕಾರ್ಯಕ್ರಮದಲ್ಲಿ ಕಳಚೂರಿ ಕಾಲದ ತೆರಿಗೆ ಪದ್ಧತಿಯ ಕುರಿತು ಅವರು ಉಪನ್ಯಾಸ ನೀಡಿದರು. ಎರಡನೇ ದಿನದ ಮೊದಲ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಡಾ.ವಿಕ್ರಮ ವಿಸಾಜಿ, ಕನ್ನಡ ಕಾವ್ಯಗಳಲ್ಲಿ ಅಭಿವ್ಯಕ್ತಗೊಂಡಿರುವ ಚರಿತ್ರೆಯ ಎಳೆಗಳನ್ನು ಬಹಳ ಎಚ್ಚರಿಕೆಯಿಂದ ಚರಿತ್ರಾಕಾರರು ಬಳಸಿಕೊಳ್ಳಬೇಕಿದೆ. ಇಲ್ಲವಾದಲ್ಲಿ ಚರಿತ್ರೆ ಪುರಾಣವಾಗುವ ಅಪಾಯವನ್ನು ಎದುರಿಸುತ್ತದೆ ಎಂದು ಹೇಳಿದರು. ಶರಣ ಚಳುವಳಿ ನಡೆದ ನೂರಿನ್ನೂರು ವರ್ಷಗಳ ಅಂತರದಲ್ಲಿ ಹುಟ್ಟಿಕೊಂಡ ಪಾಲ್ಕುರಿಕೆ ಸೋಮನಾಥನ ಬಸವ ಪುರಾಣದಲ್ಲಿ ಆ ಕಾಲದ ಅನೇಕ ಚಾರಿತ್ರಿಕ ಎಳೆಗಳಿವೆ. ಅವುಗಳನ್ನು ವರ್ತಮಾನದ ಸಂಶೋಧಕರು, ಚರಿತ್ರೆ ಬರವಣಿಗೆಯಲ್ಲಿ ಬಳಸಿಕೊಳ್ಳುವಂತೆ ಕರೆ ನೀಡಿದರು. ಕಳಚೂರಿ ಕಾಲದ ಅಗ್ರಹಾರ ಮತ್ತು ಘಟಿಕಾಸ್ಥಾನಗಳು ಎಂಬ ವಿಷಯದ ಬಗ್ಗೆ ಜಮಖಂಡಿಯ ಡಾ. ಮಂಜುನಾಥ ಎಸ್‌ ಪಾಟೀಲ ಹಾಗೂ ಕಳಚೂರಿ ಬಿಜ್ಜಳ ಒಂದು ಅವಲೋಕನ ಎಂಬ ವಿಷಯದ ಮೇಲೆ ಡಾ. ವೀರಶೆಟ್ಟಿ ಯವರು ಉಪನ್ಯಾಸಗಳನ್ನು ನೀಡಿದರು. ಶರಣಗೌಡ ಪಾಟೀಲ ಪಾಳಾ, ಕಾಲೇಜಿನ ಪ್ರಾಂಶುಪಾಲರಾದ ಪಂಡಿತ ಸಿ. ಬಿಳಾಮಗೆ, ಸಮ್ಮೇಳನದ ಸಂಯೋಜಕರಾದ ಡಾ. ಗುರುಪ್ರಕಾಶ ಹೂಗಾರ, ಡಾ. ಶಿವಶರಣಪ್ಪ ಮೋತಕಪಲ್ಲಿ ಮುಂತಾದವರು ಉಪಸ್ಥಿತರಿದ್ದರು. ಡಾ. ಸವಿತಾ ತಿವಾರಿ, ಡಾ. ಜಗದೇವಪ್ಪ ಧರಣಿ, ಡಾ. ಶರಣಪ್ಪ ಮಾಳಗಿ, ಡಾ. ಶಿವಯ್ಮ ಹಿರೇಮಠ, ಡಾ. ಮಹಮ್ಮದ್‌ ಯೂನಸ್ ಇವರುಗಳು ಆಯಾ ಗೋಷ್ಠಿಗಳ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಡಾ. ಗಿರೀಶ್, ಡಾ. ಸಂಜೀವಕುಮಾರ್‌ ತಾಂದಳೆ, ಗುಲಾಮ್ ಮಹೆಬೂಬ್, ಖಾಜಾವಲಿ ಈಚನಾಳ, ಡಾ. ಪಂಡಿತ್ ಬಿ.ಕೆ, ಸಿದ್ರಾಮಪ್ಪ ಬಣಗಾರ, ಡಾ‌. ಮಲ್ಲಿಕಾರ್ಜುನಶೆಟ್ಟಿ, ಡಾ. ರವಿಚಂದ್ರ, ಡಾ.ಬಸವರಾಜ ಭಾಗಾ ಮುಂತಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ವಾರ್ತಾ ಭಾರತಿ 27 Nov 2025 8:28 pm

ಡಿ.ಕೆ.ಶಿವಕುಮಾರ್‌ಗೆ ಅನ್ಯಾಯವಾದರೆ ನಾವು ಸಹಿಸುವುದಿಲ್ಲ : ಒಕ್ಕಲಿಗರ ಸಂಘ

ಬೆಂಗಳೂರು : ‘ಕೆಪಿಸಿಸಿ ಅಧ್ಯಕ್ಷರಾಗಿ ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಮುಖ್ಯಮಂತ್ರಿಯಾಗಲು ಕಾಂಗ್ರೆಸ್ ಹೈಕಮಾಂಡ್ ಅವಕಾಶ ಮಾಡಿಕೊಡಬೇಕು. ಈ ವಿಚಾರದಲ್ಲಿ ಅನ್ಯಾಯವಾದರೆ ನಾವು ಸಹಿಸುವುದಿಲ್ಲ’ ಎಂದು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಎಲ್.ಶ್ರೀನಿವಾಸ್ ಎಚ್ಚರಿಕೆ ನೀಡಿದ್ದಾರೆ. ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಡಿ.ಕೆ.ಶಿವಕುಮಾರ್ ಅವರು ಶ್ರಮ ಸಾಕಷ್ಟಿದ್ದು, ಅದನ್ನು ಪಕ್ಷದ ವರಿಷ್ಟರು ಪರಿಗಣಿಸಬೇಕು. ಪಕ್ಷಕ್ಕಾಗಿ ಅವರು ಮಾಡಿರುವ ಕೆಲಸಕ್ಕೆ ಕೂಲಿ ಕೊಡಬೇಕು. ಒಂದು ವೇಳೆ ಶಿವಕುಮಾರ್‌ಗೆ ಸಿಎಂ ಸ್ಥಾನ ಸಿಗದಿದ್ದರೆ, ನಮ್ಮ ಸಮುದಾಯದ ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ಹೋರಾಟ ಮಾಡುತ್ತೇವೆ ಎಂದು ಹೇಳಿದರು. ಒಕ್ಕಲಿಗ ಸಮುದಾಯದಲ್ಲಿ ಸಿಎಂ ಪ್ರಬಲ ಆಕಾಂಕ್ಷಿಯಾಗಿ ಶಿವಕುಮಾರ್ ಮುಂಚೂಣಿಯಲ್ಲಿದ್ದಾರೆ. ಸಿದ್ದರಾಮಯ್ಯ ಈ ಹಿಂದೆ ಐದು ವರ್ಷ ಸಿಎಂ ಆಗಿದ್ದರು. ಇದೀಗ ಎರಡೂವರೆ ವರ್ಷ ಸಿಎಂ ಆಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಶಿವಕುಮಾರ್‌ಗೆ ಸಿಎಂ ಸ್ಥಾನ ಕೊಡುವ ವಿಚಾರದಲ್ಲಿ ಸಂಶಯ ಆರಂಭವಾಗಿರುವ ಹಿನ್ನೆಲೆಯಲ್ಲಿ ನಾವು ಒತ್ತಾಯ ಮಾಡುತ್ತಿದ್ದೇವೆ ಎಂದರು. ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಶಿವಕುಮಾರ್ ಅವರಿಗೆ ಸಿಎಂ ಆಗಲು ಒಮ್ಮೆ ಅವಕಾಶಕೊಡಬೇಕು. ನಮ್ಮ ಜನಾಂಗದ ನಾಯಕರಿಗೆ ಅನ್ಯಾಯವಾದರೆ ಕೈಕಟ್ಟಿ ಕೂರುವುದಿಲ್ಲ ಎಂದು ಅವರು ಹೇಳಿದರು. ಚುನಾವಣೆಯಲ್ಲಿ ಒಕ್ಕಲಿಗರ ಪ್ರಾಬಲ್ಯ ಇರುವ ಹಳೇ ಮೈಸೂರು ಭಾಗದಲ್ಲಿ ಶಿವಕುಮಾರ್ ಸಿಎಂ ಆಗುತ್ತಾರೆಂಬ ಕಾರಣಕ್ಕಾಗಿ ಕಾಂಗ್ರೆಸ್‍ಗೆ ಹೆಚ್ಚು ಸ್ಥಾನಗಳು ದೊರೆತಿವೆ. ನ್ಯಾಯೋಚಿತವಾಗಿ ಮೊದಲ ಅವಧಿಯಲ್ಲೇ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕಾಗಿತ್ತು. ಆದರೂ ನಮ್ಮ ಜನಾಂಗವು ಎರಡನೇ ಅವಧಿಯಲ್ಲಿ ಅವಕಾಶ ಸಿಗಬಹುದು ಎಂಬ ತಾಳ್ಮೆಯಿಂದ ಇತ್ತು. ನಾವು ಇನ್ನೊಬ್ಬರ ಅವಕಾಶ ಕೇಳುತ್ತಿಲ್ಲ. ಆದರೆ, ನಮ್ಮ ಜನಾಂಗಕ್ಕೆ ನ್ಯಾಯ ಸಿಗಬೇಕು ಎಂದು ಅವರು ಪ್ರತಿಪಾದಿಸಿದರು. ಅವಿರೋಧ ಆಯ್ಕೆ: ಒಕ್ಕಲಿಗರ ಸಂಘದ ಇತಿಹಾಸದಲ್ಲಿ ಮೊದಲ ಬಾರಿಗೆ ಪದಾಧಿಕಾರಿಗಳ ಆಯ್ಕೆ ಅವಿರೋಧವಾಗಿ ನಡೆದಿದೆ. ಸಂಘದ ಅಭಿವೃದ್ಧಿಗೆ 35 ಮಂದಿ ನಿರ್ದೇಶಕರು ಒಗ್ಗಟ್ಟಿನಿಂದ ಶ್ರಮಿಸುತ್ತೇವೆ. ಸರ್ವ ಸದಸ್ಯರ ಸಭೆ ನಡೆಸುವುದು, ಬೈಲಾ ತಿದ್ದುಪಡಿ ಮಾಡುವುದು, ಎಲ್ಲ ಜಿಲ್ಲೆಗಳಲ್ಲಿ ಹೆಣ್ಣು ಮಕ್ಕಳ ವಸತಿ ನಿಲಯ ಸ್ಥಾಪಿಸಲು ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಅವರು ತಿಳಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಜಿ.ಗಂಗಾಧರ್, ಟಿ.ಕೋನಪ ರೆಡ್ಡಿ, ಡಾ.ರೇಣುಕಾ ಪ್ರಸಾದ್, ಎಂ ಪುಟ್ಟಸ್ವಾಮಿ, ಡಾ.ಡಿ.ಕೆ.ರಮೇಶ್, ಖಜಾಂಚಿ ಕೆ.ವಿ.ಶ್ರೀಧರ್, ವೆಂಕಟರಾಮೇಗೌಡ, ಹನುಮಂತರಾಯಪ್ಪ, ಬಿ.ಪಿ.ಮಂಜೇಗೌಡ, ಜೆ.ರಾಜು, ಲೋಕೇಶ್, ಅಶೋಕ್ ಜಯರಾಮ್, ಎಲುವಳ್ಳಿ ರಮೇಶ್, ನಾಗರಾಜ್, ಆಡಿಟರ್ ನಾಗರಾಜ್ ಈ ವೇಳೆ ಉಪಸ್ಥಿತರಿದ್ದರು.

ವಾರ್ತಾ ಭಾರತಿ 27 Nov 2025 8:15 pm

ಮಲ್ಪೆ | ಮೀನುಗಾರರ ಬಲೆಗೆ ಬಿದ್ದ 350 ಕೆ.ಜಿ ತೂಕದ ಮಡಲು ಮೀನು!

ಮಲ್ಪೆ: ಗಿಲ್‌ನೆಟ್ ಮೀನುಗಾರರ ಬಲೆಗೆ ಸ್ಥಳೀಯವಾಗಿ ಕರೆಯುವ ಬೃಹತ್ ಗಾತ್ರದ ಮಡಲು ಮೀನು ದೊರೆತಿರುವ ಬಗ್ಗೆ ವರದಿಯಾಗಿದೆ. ಬೈಂದೂರು ತಾಲೂಕಿನ ಉಪ್ಪುಂದ ಎಂಬಲ್ಲಿ ಗಿಲ್‌ನೆಟ್ ಮೀನುಗಾರರ ಬಲೆಗೆ ಬಿದ್ದ ಈ ಮೀನನ್ನು ಮಲ್ಪೆ ಬಂದರಿಗೆ ತರಲಾಗಿದೆ. ಕೇರಳದಲ್ಲಿ ಕಟ್ಟಕಂಬ ಎಂದು ಕರೆಯಲ್ಪಡುವ ಈ ಮೀನು ಸುಮಾರು 13 ಅಡಿ ಉದ್ದದ ಈ ಮೀನು 350 ಕೆಜಿ ತೂಕವನ್ನು ಹೊಂದಿದೆ. ಈ ಮೀನು ಕೆ.ಜಿ.ಗೆ 70ರೂ.ನಂತೆ ಕೇರಳದ ಮೀನು ವ್ಯಾಪಾರಸ್ಥರಿಗೆ ಮಾರಾಟವಾಗಿದೆ. ಮಲೆನಾಡು ಮತ್ತು ಕೇರಳದಲ್ಲಿ ಇದಕ್ಕೆ ಹೆಚ್ಚು ಬೇಡಿಕೆ ಇದೆ ಎನ್ನುತ್ತಾರೆ ಎಸ್‌ಕೆಆರ್‌ಸಿಬಿ ಪಾರ್ಟಿಯ ಸುರೇಶ್.

ವಾರ್ತಾ ಭಾರತಿ 27 Nov 2025 8:11 pm

ಸಿದ್ದರಾಮಯ್ಯ VS ಡಿಕೆ ಶಿವಕುಮಾರ್: ಪೋಸ್ಟರ್‌ ವಾರ್‌! ನಮ್ಮ ಮಾತು ಕೇವಲ ಘೋಷಣೆಯಲ್ಲ, ಅದೇ ನಮಗೆ ಜಗತ್ತು ಎಂದ ಸಿಎಂ

ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ಪರೋಕ್ಷ ವಾಗ್ಯುದ್ಧ ನಡೆಯುತ್ತಿದೆ. ಕೊಟ್ಟ ಮಾತಿನ ಬಗ್ಗೆ ಇಬ್ಬರೂ ಟ್ವೀಟ್‌ಗಳ ಮೂಲಕ ಪರಸ್ಪರ ತಿರುಗೇಟು ನೀಡುತ್ತಿದ್ದು, ಇದು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ವಿಜಯ ಕರ್ನಾಟಕ 27 Nov 2025 8:09 pm

ಸತ್ಯ ಸುದ್ದಿ ಬಿತ್ತರಿಸುವ 'ವಾರ್ತಾ ಭಾರತಿ' ಪತ್ರಿಕೆಯ ಕಾರ್ಯ ಶ್ಲಾಘನೀಯ : ಕೋರಣೇಶ್ವರ ಸ್ವಾಮೀಜಿ

ಕಲ್ಯಾಣ ಕರ್ನಾಟಕ ಆವೃತ್ತಿ ಲೋಕಾರ್ಪಣೆ ಪ್ರಯುಕ್ತ ಕಲಬುರಗಿ ನಗರದಲ್ಲಿ ಓದುಗರು, ಹಿತೈಷಿಗಳ ಸಭೆ

ವಾರ್ತಾ ಭಾರತಿ 27 Nov 2025 8:07 pm

ವಡಗೇರಾ, ಶಹಾಪುರ ತಾಲೂಕಿನಲ್ಲಿ ಕೇವಲ ನೆಪಮಾತ್ರಕ್ಕೆ ಸಂವಿಧಾನ ದಿನಾಚರಣೆ: ದಲಿತ ಸೇನೆ ಆರೋಪ

ಯಾದಗಿರಿ: ವಡಗೇರಾ ಮತ್ತು ಶಹಾಪುರ ತಾಲೂಕುಗಳಲ್ಲಿ ಸಂವಿಧಾನ ದಿನಾಚರಣೆಯ ಸರಕಾರಿ ಕಾರ್ಯಕ್ರಮವನ್ನು ಗಂಭೀರವಾಗಿ ನಿರ್ಲಕ್ಷಿಸಿ, ಕೇವಲ ನೆಪಮಾತ್ರಕ್ಕಾಗಿ ಆಚರಿಸಿದ ಇಬ್ಬರು ತಹಶೀಲ್ದಾರರ ವಿರುದ್ಧ ತಕ್ಷಣ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ದಲಿತ ಸೇನೆ ಜಿಲ್ಲಾಧ್ಯಕ್ಷ ಅಶೋಕ್ ಹೊಸಮನಿ ಆಗ್ರಹಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಶೋಕ್ ಹೊಸಮನಿ, ಸಮಾಜ ಕಲ್ಯಾಣ ಇಲಾಖೆಯ ಆದೇಶದಂತೆ ತಾಲೂಕು ಮಟ್ಟದಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಬೇಕಿದ್ದರೂ, ವಡಗೇರಾ ತಹಶೀಲ್ದಾರ್ ಅವರು ಸಭಾ ಕಾರ್ಯಕ್ರಮಗಳನ್ನು ತುರ್ತು ಮತ್ತು ಅವ್ಯವಸ್ಥೆಯಿಂದ ಹಮ್ಮಿಕೊಂಡಿರುವುದು ಗಂಭೀರ ನಿರ್ಲಕ್ಷ್ಯವೆಂದು ಆರೋಪಿಸಿದ್ದಾರೆ. ಕಾರ್ಯಕ್ರಮದ ಜಾಥಾದಲ್ಲಿ ಶಾಲಾ ವಿದ್ಯಾರ್ಥಿಗಳು ಸಂವಿಧಾನ ಪುಸ್ತಕಗಳನ್ನು ಮತ್ತು ಡಾ. ಬಿ.ಆರ್. ಅಂಬೇಡ್ಕರ್ ರವರ ನುಡಿ ಮುತ್ತುಗಳನ್ನು ಪ್ರದರ್ಶಿಸುತ್ತಾ ಹಾಗೂ ಭಾರತದ ರಾಷ್ಟ್ರ ಧ್ವಜವನ್ನು ಹಿಡಿದು ಸಂವಿಧಾನ ಜಾಥಾ ಹಮ್ಮಿಕೊಳ್ಳುವಂತೆ ಸರಕಾರ ಆದೇಶಿಸಿದ್ದರೂ ತಹಶೀಲ್ದಾರ್ ಅವರು ಇದ್ಯಾವುದನ್ನು ಮಾಡದೇ ಕೇವಲ ಕಾಟಾಚಾರಕ್ಕಾಗಿ 50 ರಿಂದ 60 ಶಾಲಾ ಮಕ್ಕಳೊಂದಿಗೆ ಜಾಥಾ ಮಾಡಿದ್ದಾರೆ. ಕಾರ್ಯಕ್ರಮಕ್ಕೆ ಸರಕಾರದ ವತಿಯಿಂದ ಒಂದು ಲಕ್ಷ ರೂಪಾಯಿ ಅನುದಾನವನ್ನು ಒದಗಿಸಿದರೂ, ತಹಶೀಲ್ದಾರ್ ಅಚ್ಚುಕಟ್ಟಾಗಿ ಆಯೋಜಿಸುವಲ್ಲಿ ತಮ್ಮ ಬೇಜವಾಬ್ದಾರಿಯನ್ನು ತೋರಿಸಿದ್ದಾರೆ ಎಂದು ಆರೋಪಿಸಿದರು. ಸುರಪುರದಲ್ಲಿ ಸಂವಿಧಾನ ದಿನಾಚರಣೆಯ ವೇಳೆ ಹಿರಿಯ ದಲಿತ ಮುಖಂಡ ಮಾನಪ್ಪ ಕಟ್ಟಿಮನಿ ಅವರ ಮೇಲೆ ಶಾಸಕರ ಹಿಂಬಾಲಕರು ಹಲ್ಲೆ ಮಾಡಿರುವುದನ್ನು ದಲಿತ ಸೇನೆ ಖಂಡಿಸಿದೆ. ಆರೋಪಿಯನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿದೆ. ಸುದ್ದಿಗೋಷ್ಟಿಯಲ್ಲಿ ಶಾಂತಪ್ಪ ಸಾಲಿಮನಿ, ಅಯ್ಯಪ್ಪ ಗೊಂದೆನೂರು, ರವಿಕುಮಾರ್‌ ಕಟ್ಟಿಮನಿ, ಮನೋಜ ಕುರಕುಂದಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.  

ವಾರ್ತಾ ಭಾರತಿ 27 Nov 2025 8:03 pm

11 ಗ್ರಾ.ಪಂ.ಗಳು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ : ಸಂಪುಟ ನಿರ್ಧಾರ

ಬೆಂಗಳೂರು : ರಾಜ್ಯದ ವಿವಿಧ ಜಿಲ್ಲೆಗಳ 11 ಗ್ರಾಮ ಪಂಚಾಯಿತಿಗಳು, ಒಂದು ಪಟ್ಟಣ ಪಂಚಾಯಿತಿ ಹಾಗೂ ಒಂದು ಪುರಸಭೆಯನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಗ್ರಾ.ಪಂ.ಯಿಂದ ಪ.ಪಂ: ಬೀದರ್ ಜಿಲ್ಲೆಯ ಕಮಠಾಣಾ ಗ್ರಾಮ ಪಂಚಾಯಿತಿ, ಮನ್ನಾಎಖೇಳ್ಳಿ ಗ್ರಾ.ಪಂ., ಹುಲಸೂರು ಗ್ರಾ.ಪಂ., ಬೆಳಗಾವಿ ಜಿಲ್ಲೆಯ ಅಂಕಲಿ ಗ್ರಾ.ಪಂ., ಸುರೇಬಾನ ಮತ್ತು ಮನಿಹಾಳ ಗ್ರಾ.ಪಂ., ಕಟಕೋಳ ಗ್ರಾ.ಪಂ., ಮೈಸೂರು ಜಿಲ್ಲೆಯ ಸಾಲಿಗ್ರಾಮ ಗ್ರಾ.ಪಂ., ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತ್ಯಾಮಗೊಂಡ್ಲು ಗ್ರಾ.ಪಂ., ಯಾದಗಿರಿ ಜಿಲ್ಲೆಯ ಸಗರ (ಬಿ)ಗ್ರಾ.ಪಂ., ಉತ್ತರ ಕನ್ನಡ ಜಿಲ್ಲೆಯ ಮಾವಳ್ಳಿ-1 ಮತ್ತು ಮಾವಳ್ಳಿ-2 ಗ್ರಾ.ಪಂ. ಹಾಗೂ ಯಾದಗಿರಿ ಜಿಲ್ಲೆಯ ವಡಗೇರಾ ಗ್ರಾ.ಪಂ.ಗಳನ್ನು ಪಟ್ಟಣ ಪಂಚಾಯಿತಿಗಳನ್ನಾಗಿ ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ. ಅದೇ ರೀತಿ, ಬೆಳಗಾವಿ ಜಿಲ್ಲೆಯ ರಾಮದುರ್ಗ ಪುರಸಭೆಯನ್ನು ನಗರಸಭೆ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿ ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ. ಬೃಹತ್ ಮೈಸೂರು ಮಹಾನಗರ ಪಾಲಿಕೆ ರಚನೆ: ‘ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಕೆಲವು ನಗರ ಸ್ಥಳೀಯ ಸಂಸ್ಥೆಗಳನ್ನು ಮತ್ತು ಕೆಲವು ಗ್ರಾಮಗಳನ್ನು ಸೇರ್ಪಡೆಗೊಳಿಸಿ ‘ಬೃಹತ್ ಮೈಸೂರು ಮಹಾನಗರ ಪಾಲಿಕೆ’ ರಚನೆ ಮಾಡಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ’ -ಎಚ್.ಕೆ.ಪಾಟೀಲ್, ಕಾನೂನು ಸಚಿವ

ವಾರ್ತಾ ಭಾರತಿ 27 Nov 2025 7:58 pm

ಉಡುಪಿ ಶ್ರೀಕೃಷ್ಣ ಮಠದ ಕಾರ್ಯಕ್ರಮದಲ್ಲಿ ಭಾಗವಹಿಸುವುದು ನನಗೆ ಗೌರವದ ವಿಷಯ: ʼಎಕ್ಸ್ʼ ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಉಡುಪಿ ಶ್ರೀಕೃಷ್ಣ ಮಠಕ್ಕೆ ನ.28ರಂದು ಭೇಟಿ ನೀಡುವ ಕುರಿತು ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಕನ್ನಡದಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ಉಲ್ಲೇಖ ಮಾಡಿದ್ದಾರೆ.

ವಾರ್ತಾ ಭಾರತಿ 27 Nov 2025 7:56 pm

ಬೀದಿಗೆ ಬಂದ ಸಿಎಂ ಕುರ್ಚಿ ಕದನ: ಹೈಕಮಾಂಡ್‌ ನಾಯಕರ ಜೊತೆ ಮಹತ್ವದ ಸಭೆ: ಡಿ ಕೆ ಶಿವಕುಮಾರ್‌ ಹೇಳಿದ್ದೇನು?

ಬೆಂಗಳೂರು, ನವೆಂಬರ್‌ 27: ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಕದನ ತೀವ್ರಗೊಂಡಿದೆ. ಈ ಹೊತ್ತಿನಲ್ಲೇ ಸಿಎಂ ಸಿದ್ಧರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನುಡೆವ ನಡೆಯುತ್ತಿರುವ ಕುರ್ಚಿ ಕಿತ್ತಾಟ ಈಗ ಬೀದಿಗೆ ಬಂದಿದ್ದು, ಇದಕ್ಕೆ ಸಾಕ್ಷಿ ಎನ್ನುವಂತೆ ಡಿ ಕೆ ಶಿವಕುಮಾರ್‌ ಹಾಗೂ ಸಿಎಂ ಸಿದ್ಧರಾಮಯ್ಯ ನಡುವೆ ಪೋಸ್ಟ್ ವಾರ್‌ ಶುರುವಾಗಿದೆ. ಇನ್ನೂ ಸಿಎಂ ಪಟ್ಟದ ಜಟಾಪಟಿ

ಒನ್ ಇ೦ಡಿಯ 27 Nov 2025 7:54 pm

ರಾಜ್ಯಾದ್ಯಂತ 114 ಆಯುಷ್ಮಾನ್ ಆರೋಗ್ಯ ಮಂದಿರ ಕಟ್ಟಡ ನಿರ್ಮಾಣ : ಸಂಪುಟ ನಿರ್ಧಾರ

ಬೆಂಗಳೂರು : 2025-26ನೆ ಸಾಲಿನಲ್ಲಿ 15ನೆ ಹಣಕಾಸು ಆಯೋಗದ ಅನುದಾನದಡಿ ರಾಜ್ಯಾದ್ಯಂತ 114 ಆಯುಷ್ಮಾನ್ ಆರೋಗ್ಯ ಮಂದಿರಗಳ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು 74.10 ಕೋಟಿ ರೂ.ಗಳಲ್ಲಿ ಕೆ.ಟಿ.ಟಿ.ಪಿ ಕಾಯ್ದೆ ಹಾಗೂ ನಿಯಮಗಳುನುಸಾರ ಟೆಂಡರ್ ಆಹ್ವಾನಿಸಿ ಕೈಗೊಳ್ಳಲು ಸಚಿವ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು. ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಉಪಕ್ರಮವು ಆಯುಷ್ಮಾನ್ ಭಾರತದ ಪ್ರಮುಖ ಅಂಶವಾಗಿದ್ದು, ಸಾರ್ವತ್ರಿಕ ಆರೋಗ್ಯ ವ್ಯಾಪ್ತಿ ಮತ್ತು ಸುಧಾರಿತ ಆರೋಗ್ಯ ಫಲಿತಾಂಶಗಳನ್ನು ಗುರಿಯಾಗಿರಿಸಿಕೊಂಡಿದೆ ಎಂದು ಹೇಳಿದರು. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುರುಗೋಡು ಗ್ರಾಮದಲ್ಲಿ 5 ಎಕರೆ ಸರಕಾರಿ ಜಮೀನನ್ನು ಮೆ.ಮುರುಗೋಡು ಬಳೆ ತಯಾರಕರ ಫೌಂಡೇಶನ್‍ಗೆ ಬಳೆ ಕ್ಲಸ್ಟರ್ ಘಟಕಗಳಿಗಾಗಿ ಸಾಮಾನ್ಯ ಸೌಲಭ್ಯ ಕೇಂದ್ರವನ್ನು ಸ್ಥಾಪಿಸಲು 35 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಉಚಿತವಾಗಿ ಮಂಜೂರಲು ಮಾಡಲು ಹಾಗೂ ಯೋಜನೆ ವೆಚ್ಚ 9.95 ಕೋಟಿ ರೂ.ಗಳ ಪೈಕಿ ರಾಜ್ಯ ಸರಕಾರದ ಪಾಲು 1.49 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಅನುಮೋದನೆ ನೀಡಲಾಗಿದೆ ಎಂದು ಅವರು ಹೇಳಿದರು. ರಾಜ್ಯ ದತ್ತಾಂಶ ಕೇಂದ್ರ ಮತ್ತು ಹತ್ತಿರದ ವಿಪತ್ತು ಚೇತರಿಕಾ ಕೇಂದ್ರಗಳ ಕಾರ್ಯಾಚರಣೆ ಮತ್ತು ನಿರ್ವಹಣಾ ಸೇವೆಯನ್ನು 143.6 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಐದು ವರ್ಷಗಳ ಅವಧಿಗೆ ಒದಗಿಸಲು ಸೂಕ್ತ ನಿರ್ವಹಣಾ ಸಂಸ್ಥೆಯನ್ನು ಆಯ್ಕೆ ಮಾಡಲು ನಿರ್ಧರಿಸಲಾಗಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನಿರ್ಮಾಣ ಕಾಮಗಾರಿಗಳ 33.80 ಕೋಟಿ ರೂ.ಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಿ ಸೆ.3ರಂದು ಹೊರಡಿಸಿರುವ ಸರಕಾರಿ ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ ಎಂದು ಅವರು ಹೇಳಿದರು. ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳಲ್ಲಿ ಚೆಕ್-ಡ್ಯಾಂಗಳ ನಿರ್ಮಾಣ, ಕೆರೆ ಅಭಿವೃದ್ಧಿ ಕಾಮಗಾರಿಗಳನ್ನು 200 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು, ಬೆಳಗಾವಿ ತಾಲೂಕಿನ ಹಿಂಡಲಗ ಗ್ರಾಮದಲ್ಲಿ 20 ಗುಂಟೆ ಜಮೀನನ್ನು ಕಾಂಗ್ರೆಸ್ ಭವನ ನಿರ್ಮಾಣಕ್ಕಾಗಿ ‘ಕಾಂಗ್ರೆಸ್ ಭವನ ಟ್ರಸ್ಟ್, ಬೆಂಗಳೂರು’ ಇವರಿಗೆ ಮಂಜೂರು ಮಾಡಲು ನಿರ್ಧರಿಸಲಾಗಿದೆ. ಅಲ್ಲದೇ, ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನಲ್ಲಿ ತಾಲೂಕು ಆಡಳಿತ ಕೇಂದ್ರ ‘ಪ್ರಜಾಸೌಧ’ ನಿರ್ಮಾಣ ಕಾಮಗಾರಿಗಳ 12.49 ಕೋಟಿ ರೂ.ಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು. ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಕುದೂರು ಗ್ರಾಮದಲ್ಲಿ 3 ಎಕರೆ 12 ಗುಂಟೆ ಜಮೀನನ್ನು ಬಸ್ ನಿಲ್ದಾಣ ಮತ್ತು ಬಸ್ ಡಿಪೋ ನಿರ್ಮಾಣಕ್ಕಾಗಿ ಕೆಎಸ್ಸಾರ್ಟಿಸಿಗೆ ಉಚಿತವಾಗಿ ಮಂಜೂರು ಮಾಡಲು, ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಇಂಗಳಗಿ ಗ್ರಾಮ ಪಂಚಾಯಿತಿಗೆ ಸೇರಿದ ಝುಂಜರಕೊಪ್ಪ ಗ್ರಾಮದ 1077.17 ಚದರ ಮೀಟರ್ ವಿಸ್ತೀರ್ಣದ ಜಾಗವನ್ನು ಮುಧೋಳ ಬ್ಲಾಕ್ ಕಾಂಗ್ರೆಸ್ ಪಕ್ಷದ ಕಾರ್ಯಾಲಯ ನಿರ್ಮಾಣಕ್ಕಾಗಿ ‘ಕಾಂಗ್ರೆಸ್ ಭವನ ಟ್ರಸ್ಟ್, ಬೆಂಗಳೂರು’ ಇವರಿಗೆ ಗುತ್ತಿಗೆ ಆಧಾರದ ಮೇಲೆ ನೀಡಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಗ್ರಾಹಕರು ನೀರಿನ ಬಾಕಿ ಅಸಲು ಮೊತ್ತ(439 ಕೋಟಿ ರೂ.)ವನ್ನು ಏಕ ಕಾಲದಲ್ಲಿ ಪಾವತಿಸಿದರೆ ಬಡ್ಡಿ, ದಂಡ ಮತ್ತು ಇತರೆ ಶುಲ್ಕ(262 ಕೋಟಿ ರೂ.)ಗಳನ್ನು ಶೇ.100ರಷ್ಟು ಮನ್ನಾ ಮಾಡುವ ‘ಏಕಕಾಲಿಕ’ ತೀರುವಳಿ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ-ಭಟ್ಕಳ ವಿಧಾನಸಭಾ ಕ್ಷೇತ್ರದ ಮುಳ್ಕೋಡು ಗ್ರಾಮದ ಸಮೀಪ ಶರಾವತಿ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್(ಉಪ್ಪು ನೀರು ತಡೆ ಅಣೆಕಟ್ಟು)ಅನ್ನು 200 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಅವರು ಹೇಳಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿನ ಘನತ್ಯಾಜ್ಯ ಸಮರ್ಪಕ ನಿರ್ವಹಣೆಗಾಗಿ ಪ್ಯಾಕೇಜಿನ ಕಾಮಗಾರಿಗಳನ್ನು 100 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ ಮೂಲಕ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು. ತುಮಕೂರು ವಿಶ್ವವಿದ್ಯಾಲಯದಲ್ಲಿ ಪ್ರಧಾನಮಂತ್ರಿ ಉಚ್ಚತರ ಶಿಕ್ಷಾ ಅಭಿಯಾನ ಯೋಜನೆಯಡಿ 17.40 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕಟ್ಟಡ ಕಾಮಗಾರಿಗಳನ್ನು ಕೈಗೊಳ್ಳಲು ಹಾಗೂ 2.60 ಕೋಟಿ ರೂ.ಗಳ ಮೊತ್ತದಲ್ಲಿ ಉಪಕರಣಗಳನ್ನು ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಅವರು ಹೇಳಿದರು. ಸ್ಥಳೀಯ ಆರ್ಥಿಕ ವೇಗವರ್ಧಕ ಕಾರ್ಯಕ್ರಮದ ಅಡಿಯಲ್ಲಿ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಲ್ಲಿ ಉತ್ಕøಷ್ಟತಾ ಕೇಂದ್ರವನ್ನು ಗ್ರಾಮೀಣ ಕೇಂದ್ರಿತ ಹಸ್ತಕ್ಷೇಪಕ್ಕಾಗಿ 12 ಕೋಟಿ ರೂ.ಗಳ ಮೊತ್ತದಲ್ಲಿ ಕಲಬುರಗಿಯಲ್ಲಿ ಸ್ಥಾಪಿಸಲು ನ.19ರಂದು ಹೊರಡಿಸಿರುವ ಸರಕಾರಿ ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ ಎಂದು ಎಚ್.ಕೆ.ಪಾಟೀಲ್ ಹೇಳಿದರು. ರಾಜ್ಯದ ಕಿರು ಬಂದರುಗಳಿಂದ ಕಬ್ಬಿಣದ ಅದಿರು ರಫ್ತು ಮಾಡುವಾಗ ಅನುಸರಿಸಬೇಕಾದ ‘ಕರ್ನಾಟಕ ಕಿರು ಬಂದರುಗಳಲ್ಲಿ ಕಬ್ಬಿಣದ ಅದಿರು ನಿರ್ವಹಣಾ ನೀತಿ-2025’ ಎಂಬ ಪ್ರಮಾಣಿತ ಕಾರ್ಯನಿರ್ವಹಣಾ ವಿಧಾನವನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ. ಕರ್ನಾಟಕ ನ್ಯಾಯಾಂಗ ಸೇವೆ(ನೇಮಕಾತಿ)(ತಿದ್ದುಪಡಿ) ನಿಯಮಗಳು-2025ಕ್ಕೆ ಅನುಮೋದನೆ ನೀಡಲಾಗಿದೆ ಎಂದು ಅವರು ತಿಳಿಸಿದರು. ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಹೊರವಲಯದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ನೂತನ ಸ್ಯಾಟಲೈಟ್ ಬಸ್ ನಿಲ್ದಾಣವನ್ನು 17.50 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಈಗಾಗಲೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲು ಹೊರಡಿಸಿರುವ ಜಾಹೀರಾತು ಅನ್ವಯ 1 ಸಾವಿರ ಚಾಲಕರ ನೇಮಕಾತಿ ಪ್ರಕ್ರಿಯೆ ಮುಂದುವರೆಸಲು ಅನುಮೋದನೆ ನೀಡಲಾಗಿದೆ ಎಂದು ಎಚ್.ಕೆ.ಪಾಟೀಲ್ ಮಾಹಿತಿ ನೀಡಿದರು. ಕಬಿನಿ ಎಡದಂಡೆ ನಾಲೆಯ ಡೀಪ್‍ಕಟ್ ಭಾಗಕ್ಕೆ ಕಟ್ ಅಂಡ್ ಕವರ್ ಹಾಗೂ ಅಡ್ಡ ಮೋರಿಗಳ ನಿರ್ಮಾಣ ಕಾಮಗಾರಿ ಮತ್ತು ಕಬಿನಿ ಎಡದಂಡೆ ನಾಲೆಯ ವಿತರಣಾ ಕಾಲುವೆ-1 ರಿಂದ 19ರವರೆಗಿನ ಅಭಿವೃದ್ಧಿ ಕಾಮಗಾರಿಗಳನ್ನು 50 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಅವರು ನುಡಿದರು. ವಿಧೇಯಕಗಳು: ಕರ್ನಾಟಕ ರಾಜ್ಯ ಖಾಸಗಿ ವೈದ್ಯಕೀಯ ಸಂಸ್ಥೆಗಳ(ತಿದ್ದುಪಡಿ) ವಿಧೇಯಕ-2025, ಔಷಧಗಳು ಮತ್ತು ಸೌಂದರ್ಯವರ್ಧಕಗಳು(ಕರ್ನಾಟಕ ತಿದ್ದುಪಡಿ) ವಿಧೇಯಕ-2025, ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ(ಕ್ಷೇಮಾಭಿವೃದ್ಧಿ)(ತಿದ್ದುಪಡಿ)ವಿಧೇಯಕ-2025, ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳು (ತಿದ್ದುಪಡಿ) ವಿಧೇಯಕ-2025, ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳು (ಎರಡನೆ ತಿದ್ದುಪಡಿ) ವಿಧೇಯಕ-2025, ಚಂದ್ರಗುತ್ತಿ ಶ್ರೀ ರೇಣುಕಾಂಬ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ-2025ಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು, ಮುಂದಿನ ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸಲಾಗುವುದು’ -ಎಚ್.ಕೆ.ಪಾಟೀಲ್, ಕಾನೂನು ಸಚಿವ

ವಾರ್ತಾ ಭಾರತಿ 27 Nov 2025 7:50 pm

ಬೆಂಗಳೂರಿನಲ್ಲಿ ಅವೈಜ್ಞಾನಿಕ ರಸ್ತೆಯಿಂದ ಅಪಘಾತ; ʻದುರಸ್ತಿ ಮಾಡೋಕೆ ಆಗದಿದ್ರೆ ದ್ವಿಚಕ್ರ ವಾಹನ ಬ್ಯಾನ್‌ ಮಾಡಿʼ ಎಂದು ಯುವಕ ಕಿಡಿ

ಬೆಂಗಳೂರಿನ ಕಳಪೆ ಮತ್ತು ಅವೈಜ್ಞಾನಿಕ ರಸ್ತೆಯಿಂದಾಗಿ ಟು ವೀಲರ್‌ ಸವಾರನೊಬ್ಬ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿರುವ ಘಟನೆ ಬೆಳಕಿಗೆ ಬಂದಿದೆ. ಖ್ಯಾತಿ ಶ್ರೀ ಎನ್ನುವವರು ತಮ್ಮ ಇನ್‌ಸ್ಟಾಗ್ರಾಮ್‌ ಪೋಸ್ಟ್‌ನಲ್ಲಿ ತಮ್ಮ ಸ್ನೇಹಿತನಿಗಾದ ಅವಘಡದ ಬಗ್ಗೆ ಪ್ರಸ್ತಾಪಿಸಿದ್ದಾರೆ. ಹೆಲ್ಮೆಟ್‌ ಧರಿಸದಿದ್ದರೆ ದಂಡ ಹಾಕುತ್ತೀರ ಆದರೆ, ಅವೈಜ್ಞಾನಿಕ ರಸ್ತೆ ನಿರ್ಮಾಣ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳೋದಿಲ್ಲವೇ ಎಂದು ಸಿಎಂ ಡಿಸಿಎಂಗೆ ಟ್ಯಾಗ್‌ ಮಾಡಿ ಪ್ರಶ್ನಿಸಿದ್ದಾರೆ.

ವಿಜಯ ಕರ್ನಾಟಕ 27 Nov 2025 7:45 pm

ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತ ಅಹಿಂದ ನಾಯಕರು, ಕಿಂಗ್ ಆಗೋದು ಯಾರು?

ಸಿಎಂ ಪಟ್ಟಕ್ಕಾಗಿ ಕರ್ನಾಟಕ ರಾಜ್ಯದಲ್ಲಿ ಭಾರಿ ದೊಡ್ಡ ತಿಕ್ಕಾಟ ಶುರುವಾಗಿದ್ದು, ಮುಖ್ಯಮಂತ್ರಿ ಸ್ಥಾನ ಬೇಕೆ ಬೇಕು ಅಂತಾ ಒಂದು ಕಡೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪಟ್ಟು ಹಿಡಿದು ಕೂತಿದ್ದಾರೆ. ಇನ್ನೊಂದು ಕಡೆ ಸಿಎಂ ಪಟ್ಟ ಬಿಡಲ್ಲ ಅಂತಾ ಸಿದ್ದರಾಮಯ್ಯ ಬಣ ಕೂಡ ಪಟ್ಟು ಹಿಡಿದಿದೆ. ಕರ್ನಾಟಕದಲ್ಲಿ ಶುರುವಾಗಿರುವ ಈ ತಿಕ್ಕಾಟದ ಪರಿಣಾಮ ಕೇಂದ್ರ ಕಾಂಗ್ರೆಸ್ ನಾಯಕರು

ಒನ್ ಇ೦ಡಿಯ 27 Nov 2025 7:40 pm

ಬೆಂಗಳೂರು ವಿವಿ | ಸ್ಪೀಕರ್‌ ಯು‌‌.ಟಿ.ಖಾದರ್‌ ಅವರಿಗೆ ʼಗೌರವ ಡಾಕ್ಟರೇಟ್ʼ ಪ್ರದಾನ

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯ ವತಿಯಿಂದ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್‌ ಅವರು ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿ ಮಾತನಾಡಿದ ಸ್ಪೀಕರ್ ಯು.ಟಿ.ಖಾದರ್ ಅವರು ಪ್ರತಿಷ್ಠಿತ ಬೆಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಸ್ವೀಕರಿಸಿರುವುದು ಸಾಕಷ್ಟು ಹೆಮ್ಮೆ ಮತ್ತು ಸಂತಸದ ವಿಷಯವಾಗಿದೆ. ಬೆಂಗಳೂರು ವಿಶ್ವವಿದ್ಯಾಲಯದ ಡಾಕ್ಟರೇಟ್‌ ಪದವಿಯಿಂದ ಗೌರವದ ಜೊತೆಗೆ ಜವಾಬ್ದಾರಿ ಕೂಡ ಹೆಚ್ಚಾಗಿದೆ. ಭವಿಷ್ಯದಲ್ಲೂ ಬೆಂಗಳೂರು ವಿಶ್ವವಿದ್ಯಾಲಯದ ಮೌಲ್ಯವನ್ನು, ವಿಶ್ವಾಸವನ್ನು ಎತ್ತಿ ಹಿಡಿಯುವ ದಾರಿಯಲ್ಲಿ ಸಾಗುತ್ತೇನೆ ಎಂದು ತಿಳಿಸಿದರು. ಕಾಲೇಜು ದಿನಗಳಲ್ಲಿ ಡಾಕ್ಟರ್ ಆಗಬೇಕೆಂಬ ಕನಸಿತ್ತು. ಆದರೆ ವಿಜ್ಞಾನ ವಿಷಯದಲ್ಲಿ ಅಂಕಗಳು ಕಡಿಮೆ ಬರುತ್ತಿತ್ತು. ಹಾಗಾಗಿ ಇದು ಆಗದ ಕೆಲಸ ಎಂದು ಡಾಕ್ಟರ್ ಕನಸು ಬಿಟ್ಟು ಕಾನೂನು ವಿಷಯಕ್ಕೆ ಸೇರಿದೆ, ಆದರೆ ಮುಂದೆ ಆರೋಗ್ಯ ಸಚಿವನಾಗಿ ಕಾರ್ಯ ನಿರ್ವಹಿಸುವ ಅವಕಾಶ ಲಭಿಸಿತು. ಡಾಕ್ಟರ್ ಆಗದಿದ್ದರೂ ಇಂದು ಬೆಂಗಳೂರು ವಿಶ್ವವಿದ್ಯಾಲಯದ ವತಿಯಿಂದ ಡಾಕ್ಟರೇಟ್ ಲಭಿಸಿರುವುದು ಸಾಕಷ್ಟು ಖುಷಿಯ ವಿಷಯ. ಈ ಪ್ರೀತಿ, ಸಹಕಾರ ಸದಾ ನೆನಪಿನಲ್ಲಿಟ್ಟುಕೊಳ್ಳುತ್ತೇನೆ ಎಂದು ಸಂತಸ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳು ಡಾ.ಜಯಕರ ಎಸ್.ಎಂ, ಕುಲಸಚಿವ ಕೆ‌.ಟಿ.ಶಾಂತಲಾ, ಕುಲಸಚಿವ ಮೌಲ್ಯಮಾಪನ ಪ್ರೊ‌.ಸಿ.ಎಸ್.ಕರಿಗಾರ್ ಸೇರಿದಂತೆ ಹಿರಿಯ ಅಧಿಕಾರಿಗಳು, ಸಿಂಡಿಕೇಟ್ ಸದಸ್ಯರು, ವಿದ್ಯಾವಿಷಯಕ ಪರಿಷತ್ತಿನ ಸದಸ್ಯರು ಉಪಸ್ಥಿತರಿದ್ದರು.      

ವಾರ್ತಾ ಭಾರತಿ 27 Nov 2025 7:39 pm

ಮಂಗಳೂರು ಪೊಲೀಸ್ ಕಮಿಷನರ್ ಹೆಸರಿನಲ್ಲಿ ಮತ್ತೊಂದು ನಕಲಿ ಫೇಸ್‌ಬುಕ್ ಖಾತೆ; ಪ್ರಕರಣ ದಾಖಲು

ಮಂಗಳೂರು: ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿಯ ಹೆಸರಿನಲ್ಲಿ ಮತ್ತೊಂದು ನಕಲಿ ಫೇಸ್‌ಬುಕ್ ಖಾತೆ ತೆರೆದಿರುವುದು ಬೆಳಿಕೆ ಬಂದಿದೆ. ಈ ಕಂಕನಾಡಿ ನಗರದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಠಾಣೆಯ ಎಸ್ಸೈ ಶಿವಕುಮಾರ್ ಸಾಮಾಜಿಕ ಜಾಲತಾಣಗಳ ಪೋಸ್ಟ್‌ಗಳನ್ನು ಪರಿಶೀಲಿಸುತ್ತಿರುವ ವೇಳೆ ಫೇಸ್‌ಬುಕ್‌ನಲ್ಲಿ Mangaluru CityPolice ಎಂಬ ಹೆಸರಿನ ಫೇಸ್‌ಬುಕ್ ಖಾತೆ ಕಂಡು ಬಂದಿದೆ. ಅದರ ಪ್ರೊಫೈಲನ್ನು ಪರಿಶೀಲಿಸಿದಾಗ ಪೊಲೀಸ್ ಆಯುಕ್ತರ ಫೊಟೊ, ರಾಜ್ಯ ಸರಕಾರದ ಲೋಗೋ ಇತ್ತು. ಸಿಟಿ ಮತ್ತು ಪೊಲೀಸ್ ಮಧ್ಯೆ ಅಂತರ ಇಲ್ಲದಿದ್ದುದರಿಂದ ಈ ಖಾತೆಯ ಬಗ್ಗೆ ಸಂಶಯಗೊಂಡು ಪೊಲೀಸ್ ಆಯುಕ್ತರ ಕಚೇರಿಯ ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್‌ಗೆ ಮಾಹಿತಿ ಕಳುಹಿಸಿಕೊಟ್ಟು ವಿಚಾರಿಸಿದಾಗ https://www.facebook.co,/profile.php?id =100089579642315 ನಕಲಿ ಖಾತೆ ಎಂಬುದು ದೃಢಪಟ್ಟ ಬಳಿಕ ಪ್ರಕರಣ ದಾಖಲಿಸಲಾಗಿದೆ.

ವಾರ್ತಾ ಭಾರತಿ 27 Nov 2025 7:29 pm

ಡಿ ಕೆ ಶಿವಕುಮಾರ್‌ ಸಿಎಂ ಮಾಡಿದ್ರೆ ಬಿಜೆಪಿ ಬಾಹ್ಯ ಬೆಂಬಲ: ಬಿ ವೈ ವಿಜಯೇಂದ್ರ ಹೇಳಿದ್ದೇನು?

ಬೆಂಗಳೂರು, ನವೆಂಬರ್‌ 27: ಬಿಜೆಪಿ ನಿಲುವು ಸ್ಪಷ್ಟವಾಗಿದೆ. ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟದಲ್ಲಿ ನಮಗೆ ಆಸಕ್ತಿ ಇಲ್ಲ, ಸರಕಾರದಲ್ಲಿ ಡಿ.ಕೆ.ಶಿವಕುಮಾರ್ ಆಗಲೀ, ಮತ್ಯಾರಾದರೂ ಹೊರಗೆ ಬಂದರೆ ಅವರಿಗೆ ಬಾಹ್ಯ ಬೆಂಬಲ ಕೊಡುವುದಾಗಲೀ, ಅಥವಾ ಬೆಂಬಲ ಪಡೆಯುವುದಾಗಲೀ ಪ್ರಶ್ನೆ ಉದ್ಭವವಾಗುವುದಿಲ್ಲ. ಮತದಾರರು ನಮ್ಮನ್ನು ವಿಪಕ್ಷವಾಗಿ ಕೂರಿಸಿದ್ದಾರೆ. ವಿಪಕ್ಷವಾಗಿ ಜವಾಬ್ದಾರಿಯುತ ಕೆಲಸವನ್ನು ನಾವು ಮಾಡುತ್ತಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ

ಒನ್ ಇ೦ಡಿಯ 27 Nov 2025 7:21 pm

ಕಲಬುರಗಿ | ಸಂವಿಧಾನದಿಂದ ಪ್ರಬುದ್ಧ ಭಾರತ ನಿರ್ಮಾಣ : ಬಿ.ವೆಂಕಟ ಸಿಂಗ್

ಕಲಬುರಗಿ: ಹಲವು ಜಾತಿ ಧರ್ಮಗಳಿಂದ ಕೂಡಿದ ದೇಶದಲ್ಲಿ ಸಮಾನತೆ ಮೌಲ್ಯಗಳನ್ನು ಕೊಟ್ಟಿರುವ ಸಂವಿಧಾನದಿಂದ ಭಾರತ ಇಂದು ಪ್ರಬುದ್ಧ ರಾಷ್ಟ್ರವಾಗಿ ಬೆಳೆಯುತ್ತಿದೆ ಎಂದು ರಾಜ್ಯ ಮಾಹಿತಿ ಆಯುಕ್ತ ಬಿ. ವೆಂಕಟ ಸಿಂಗ್ ಹೇಳಿದರು. ಕರ್ನಾಟಕ ರಾಜ್ಯೋತ್ಸವ ಹಾಗೂ ಭಾರತೀಯ ಸಂವಿಧಾನ ಸಮರ್ಪಣಾ ದಿನ ಪ್ರಯುಕ್ತ ನಗರದ ಕನ್ನಡ ಭವನದ ಕಲಾ ಸೌಧದಲ್ಲಿ ಏರ್ಪಡಿಸಿದ ಮಕ್ಕಳ ಚಿತ್ರಕಲಾ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದ ಬಿ. ವೆಂಕಟ ಸಿಂಗ್, ರಾಷ್ಟ್ರದ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ , ಅಖಂಡತೆ, ಜಾತ್ಯತೀತ ಹಾಗೂ ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ಡಾ. ಬಿ.ಆರ್. ಅಂಬೇಡ್ಕರ್ ರವರು ಮಾದರಿ ಸಂವಿಧಾನವನ್ನು ಕೊಟ್ಟಿದ್ದಾರೆ. ನಮ್ಮ ಸಂವಿಧಾನ ದೂರದೃಷ್ಟಿ, ಸಮನ್ವಯತೆಯಿಂದ ಕೂಡಿದೆ. ಈ ನೆಲದಲ್ಲಿ ವಾಸಿಸುವವರಿಗೆ ಹಕ್ಕುಗಳನ್ನು ಕಲ್ಪಿಸಿದ್ದಾರೆ. ಇಂಥ ಸಂವಿಧಾನದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು. ಹಾಗೂ ಸಂವಿಧಾನದ ಆಶಯಗಳನ್ನು ಇಂದಿನ ಮಕ್ಕಳಿಗೆ ತಿಳಿಸಿ ಕೊಡುವ ನಿಟ್ಟಿನಲ್ಲಿ ಪರಿಷತ್ತು ಉತ್ತಮ ಕಾರ್ಯ ಮಾಡುತ್ತಿದೆ ಎಂದು ಹೇಳಿದರು.   ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ್‌ ಪಾಟೀಲ್‌ ತೇಗಲತಿಪ್ಪಿ ಮಾತನಾಡಿ, ಸಂವಿಧಾನದಡಿ ಪ್ರಾಚೀನ ಭಾಷೆ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರಕಿದೆ. ನಾಡಿನ ನೆಲ-ಜಲ, ಭಾಷೆ-ಸಂಸ್ಕೃತಿಗಳ ಉನ್ನತಿಯನ್ನು ಕಂಡಿದ್ದೇವೆ. ನಾಡಿನ ನೆಲದ ಇತಿಹಾಸ ಪರಂಪರೆ ಮತ್ತು ಸಮಗ್ರತೆಯನ್ನು ಸಂವಿಧಾನ ಎತ್ತಿ ಹಿಡಿದಿದೆ ಎಂದು ಹೇಳಿದರು.   ಈ ವೇಳೆ ಜಿಪಂ ಮಾಜಿ ಸದಸ್ಯೆ ಸುನಂದಾ ರವಿರಾಜ ಕೊರವಿ, ಯುವ ಮುಖಂಡ ಅಶ್ವಿನ ಸಂಕಾ, ವಿಶ್ವಖ್ಯಾತಿಯ ಚಿತ್ರಕಲಾವಿದ ಮಹಮ್ಮದ್‌ ಅಯಾಝೋದ್ದಿನ್ ಪಟೇಲ್, ಕಲಾ ಸೌಧ ಸಂಚಾಲಕ ಡಾ.ರೆಹಮಾನ್ ಪಟೇಲ್, ಕೇಂದ್ರ ಕಸಾಪ ಪ್ರತಿನಿಧಿ ಸೈಯ್ಯದ್ ನಝೀರುದ್ದಿನ್ ಮುತ್ತವಲ್ಲಿ, ಕಸಾಪ ಜಿಲ್ಲಾ ಕಾರ್ಯದರ್ಶಿ ಶಿವರಾಜ ಅಂಡಗಿ, ರಾಜೇಂದ್ರ ಮಾಡಬೂಳ, ಎಂ.ಎನ್. ಸುಗಂಧಿ, ಶಕುಂತಲಾ ಪಾಟೀಲ್‌, ಧರ್ಮರಾಜ ಜವಳಿ, ರವೀಂದ್ರಕುಮಾರ್‌ ಭಂಟನಳ್ಳಿ, ಚಂದ್ರಕಾoತ ಸೂರನ್, ಪ್ರಭವ ಪಟ್ಟಣಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 27 Nov 2025 7:20 pm

ಎಸ್‌ಸಿ-ಎಸ್‌ಟಿ ಮೀಸಲಾತಿ ಕಾಯ್ದೆ ಅನ್ವಯ ನೇಮಕಾತಿ ಮುಂದುವರಿಸಲು ಸರಕಾರಕ್ಕೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್

ಬೆಂಗಳೂರು : ರಾಜ್ಯದಲ್ಲಿ 'ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಕಾಯ್ದೆ-2022'ರ ಅನ್ವಯ ಈಗಾಗಲೇ ಆರಂಭಿಸಿರುವ ಸರಕಾರಿ ಹುದ್ದೆಗಳ ನೇಮಕಾತಿ‌ ಮತ್ತು ಬಡ್ತಿ ಪ್ರಕ್ರಿಯೆ ಮುಂದುವರಿಸಲು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ. ಇದರಿಂದ, ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಸಾವಿರಾರು ಹುದ್ದೆಗಳ ಪೈಕಿ 3,644 ಹುದ್ದೆಗಳ ನೇಮಕಾತಿ‌ಗಿದ್ದ ಅಡ್ಡಿ ಸದ್ಯಕ್ಕೆ ನಿವಾರಣೆಯಾದಂತಾಗಿದೆ. ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಸಿ, ಎಸ್‌ಟಿ) ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿ ಒಟ್ಟು ಮೀಸಲು ಪ್ರಮಾಣವನ್ನು ಶೇ. 50ರಿಂದ 56ಕ್ಕೆ ಹೆಚ್ಚಿಸಿರುವುದನ್ನು ಆಕ್ಷೇಪಿಸಿ ಡಾ. ಅಂಬೇಡ್ಕರ್ ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಮಹೇಂದ್ರ ಕುಮಾರ್ ಮಿತ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ಕೆಲ ಕಾಲ ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ, ಮೀಸಲಾತಿ ಹೆಚ್ಚಿಸಿರುವುದರ ಅನುಸಾರ ಹೊಸದಾಗಿ ಯಾವುದೇ ನೇಮಕಾತಿ ಅಥವಾ ಬಡ್ತಿ ನೀಡುವಂತಿಲ್ಲ. ಕಾಯ್ದೆಯ ಅನ್ವಯ ಈಗಾಗಲೇ ಆರಂಭಿಸಿರುವ ನೇಮಕಾತಿ ಪ್ರಕ್ರಿಯೆ ಮುಂದುವರಿಸಬಹುದು. ನೇಮಕಾತಿ ಅಥವಾ ಸೀಟುಗಳ ಹಂಚಿಕೆಯು ಹಾಲಿ ಅರ್ಜಿಗಳ ಅಂತಿಮ ನಿರ್ಧಾರಕ್ಕೆ ಒಳಪಟ್ಟಿರುತ್ತದೆ. ಇದನ್ನು ನೇಮಕಾತಿ ಅಥವಾ ಬಡ್ತಿ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಬೇಕು. ಈ ವಿಚಾರದಲ್ಲಿ ಅಭ್ಯರ್ಥಿಗಳಿಗೆ ಯಾವುದೇ ಹಕ್ಕು ದೊರೆಯುವುದಿಲ್ಲ. ಈ ಮಾರ್ಪಾಡು 2025ರ ನವೆಂಬರ್ 19ರ ಮಧ್ಯಂತರ ಆದೇಶಕ್ಕೆ ಮಾತ್ರ ಅನ್ವಯಿಸುತ್ತದೆ ಎಂದು ಆದೇಶಿಸಿತು. ಸರಕಾರದ ವಾದವೇನು? ವಿಚಾರಣೆ ವೇಳೆ ರಾಜ್ಯ ಸರಕಾರದ ಪರ ವಾದ ಮಂಡಿಸಿದ ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ ಅವರು, ಕಾಯ್ದೆ ಅನ್ವಯ ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ನೇಮಕಾತಿ ಆರಂಭಿಸಿದ್ದು, ಅಂತಿಮ ಹಂತದಲ್ಲಿದೆ. ಒಟ್ಟು 3,644 ಹುದ್ದೆಗಳನ್ನು ಭರ್ತಿ ಮಾಡಬೇಕಿದೆ. ಹೊಸದಾಗಿ ಯಾವುದೇ ಅಧಿಸೂಚನೆ ಹೊರಡಿಸುವುದಿಲ್ಲ. ಹೊಸ ಕಾಯ್ದೆ ಅಡಿ ಈಗಾಗಲೇ ನೇಮಕಾತಿ ಮಾಡಿರುವುದಕ್ಕೆ ಮಧ್ಯಂತರ ಆದೇಶ ಅನ್ವಯಿಸದೆಂದು ಆದೇಶಿಸಬೇಕು. ಅರ್ಜಿದಾರರು ಸರಕಾರದ ಅಧಿಸೂಚನೆಗಳನ್ನು ಪ್ರಶ್ನಿಸಿಲ್ಲ. ಆದ್ದರಿಂದ, ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಮತ್ತು ಬಡ್ತಿ ನೀಡಲು ಸರಕಾರಕ್ಕೆ ಅನುಮತಿಸಬೇಕು ಎಂದು ಕೋರಿದರು. ಅಭ್ಯರ್ಥಿ ಮಧು ಎಂಬುವರ ಪರ ಹಿರಿಯ ವಕೀಲ ಪಿ.ಎಸ್‌.ರಾಜಗೋಪಾಲ್‌ ವಾದ ಮಂಡಿಸಿ, ನೇಮಕಾತಿ ಪ್ರಕ್ರಿಯೆ ನಡೆಯಲಿ. ಆದರೆ, ಫಲಿತಾಂಶವನ್ನು ನ್ಯಾಯಾಲಯದ ಅನುಮತಿ ಇಲ್ಲದೇ ಪ್ರಕಟಿಸಬಾರದು. ಬಿಬಿಎಂಪಿ ಹೊರಡಿಸಿರುವ ನೇಮಕಾತಿ ಅಧಿಸೂಚನೆಯನ್ನು ಪ್ರಶ್ನಿಸಿದ್ದೇವೆ. ಆಯ್ಕೆಯಾದ ಮೇಲೆ ನೇಮಕಾತಿ ಆದೇಶ ನೀಡಲು ಮೂರು ತಿಂಗಳಾಗುತ್ತದೆ. ಜಾತಿ ಪ್ರಮಾಣಪತ್ರ ಮತ್ತಿತರ ದಾಖಲೆಗಳನ್ನು ಪರಿಶೀಲಿಸಬೇಕಾಗುತ್ತದೆ. ನಿವೃತ್ತ ನ್ಯಾ. ಎಚ್‌ ಎನ್‌ ನಾಗಮೋಹನ್‌ ದಾಸ್‌ ಸಮಿತಿಯ ವರದಿ ಅನುಸಾರ ಮೀಸಲಾತಿ ಹೆಚ್ಚಿಸಿರುವುದಾಗಿ ಸರ್ಕಾರ ಹೇಳುತ್ತಿದೆ. ಆದರೆ, ನ್ಯಾ. ನಾಗಮೋಹನ್‌ ದಾಸ್‌ ಸಮಿತಿಯು ಅಗತ್ಯ ಪ್ರಾತಿನಿಧ್ಯ ಪರೀಕ್ಷೆ ಅನ್ವಯಿಸುವಲ್ಲಿ ಮೂಲಭೂತವಾಗಿ ಎಡವಿದೆ. ಅದು ಅನುಪಾತನ ಪ್ರಾತಿನಿಧ್ಯ ಕಲ್ಪಿಸಿದೆ ಎಂದು ಆಕ್ಷೇಪಿಸಿದರು. ಅರ್ಜಿದಾರರ ಪರ ವಕೀಲರಾದ ನಚಿಕೇತ್‌ ಮತ್ತು ರಂಗನಾಥ್‌ ಜೋಯಿಷ್‌ ವಾದ ಮಂಡಿಸಿ, ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಅವಕಾಶ ನೀಡಬಾರದು. ಅರ್ಜಿಗಳನ್ನು ಅಂತಿಮವಾಗಿ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ವಾದಿಸಲು ಸಿದ್ಧರಾಗಿದ್ದು, ಅದಕ್ಕೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು. ಅಂತಿಮವಾಗಿ ನ್ಯಾಯಪೀಠ, ನೇಮಕಾತಿ ಪ್ರಕ್ರಿಯೆ ಮುಂದುವರಿಸಲಿ ಷರತ್ತುಬದ್ಧ ಅನುಮತಿ ನೀಡಿತಲ್ಲದೆ, ಆಕ್ಷೇಪಣೆ ಸಲ್ಲಿಸಲು ಸರಕಾರಕ್ಕೆ ಕಾಲಾವಕಾಶ ನೀಡಿ ವಿಚಾರಣೆಯನ್ನು 2026ರ ಜನವರಿ 28ಕ್ಕೆ ಮುಂದೂಡಿತು.

ವಾರ್ತಾ ಭಾರತಿ 27 Nov 2025 7:10 pm

ಕಲಬುರಗಿ | ಕೀಟ ಶಾಸ್ತ್ರಜ್ಞ ಚಾಮರಾಜ ದೊಡ್ಮನಿ ಅವರಿಗೆ 2025ರ ಕರ್ನಾಟಕ ಆರೋಗ್ಯ ಜ್ಯೋತಿ ಪ್ರಶಸ್ತಿ

ಕಲಬುರಗಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಹಲವು ವರ್ಷಗಳಿಂದ ಕಿಟಶಾಸ್ತ್ರಜ್ಞರಾಗಿ ಕಾರ್ಯ ನಿರ್ವಹಿಸುತ್ತಿರುವ ಚಾಮರಾಜ ದೊಡ್ಮನಿಯವರಿಗೆ ಅವರ ಅತ್ಯುನ್ನತ ಸೇವೆಯನ್ನು ಗುರುತಿಸಿ ಬೆಂಗಳೂರಿನ ರಾಘವಿ ಟ್ರಸ್ಟ್ ವತಿಯಿಂದ ಬೆಂಗಳೂರಿನ ಡಾ.ಅಂಬೇಡ್ಕರ್‌ ಭವನದಲ್ಲಿ 'ಆರೋಗ್ಯ ಜ್ಯೋತಿ ಅವಾರ್ಡ್‌ ಕರ್ನಾಟಕ-2025' ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಚಾಮರಾಜ್ ದೊಡ್ಮನಿ ಅವರು ಕಳೆದ 20 ವರ್ಷಗಳಿಂದ ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಅಪರೂಪದ ಸೇವೆ, ಸಮರ್ಪಣೆ ಮತ್ತು ನವೀನ ಕಾರ್ಯಪದ್ದತಿಗಳ ಮೂಲಕ ರಾಜ್ಯದ ಆರೋಗ್ಯ ವ್ಯವಸ್ಥೆಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ  ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ.   ಇವರು ಕಳೆದ ಎರಡು ದಶಕಗಳಲ್ಲಿ ಮಲೇರಿಯಾ, ಡೆಂಗ್ಯೂ, ಚಿಕೂನ್ ಗುನ್ಯಾ, ಫೈಲೇರಿಯಾ ಹಾಗೂ ಮಿದುಳು ಜ್ವರದಂತಹ ಅನೇಕ ಸಾಂಕ್ರಾಮಿಕ ಕಾಯಿಲೆಗಳ ನಿಯಂತ್ರಣ ಮತ್ತು ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವಲ್ಲಿ ರಾಜ್ಯ ಮಟ್ಟದಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ. ಆರೋಗ್ಯ ಕ್ಷೇತ್ರದಲ್ಲಿ ಇವರ  ತಜ್ಞತೆ, ಜಾಗೃತಿ ಮೂಡಿಸುವ ಕೌಶಲ್ಯಗಳ ಮೂಲಕ ಇವರು ಇಲಾಖೆಗೆ ದೊಡ್ಡಶಕ್ತಿಯಾಗಿದ್ದಾರೆ. ಹಾಗಾಗಿ ಅವರ ಅನುಪಮ ಸೇವೆ ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ರಾಘವಿ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.  

ವಾರ್ತಾ ಭಾರತಿ 27 Nov 2025 7:07 pm

ಪಾಕಿಸ್ತಾನ | ಇಮ್ರಾನ್ ಖಾನ್ ಎಲ್ಲಿದ್ದಾರೆ?: ಸಾವಿನ ವದಂತಿಗಳ ಕುರಿತು ಆಡಿಯಾಲ ಜೈಲಿನ ಅಧಿಕಾರಿಗಳು ಹೇಳಿದ್ದೇನು?

ಇಸ್ಲಾಮಾಬಾದ್: ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಆರೋಗ್ಯ ಸ್ಥಿತಿಯ ಕುರಿತು ಹಬ್ಬಿರುವ ವದಂತಿಗಳನ್ನು ಬುಧವಾರ ಅಲ್ಲಗಳೆದಿರುವ ಆಡಿಯಾಲ ಜೈಲಿನ ಅಧಿಕಾರಿಗಳು ಇಮ್ರಾನ್ ಖಾನ್ ರನ್ನು ಆಡಿಯಾಲ ಜೈಲಿನಿಂದ ಸ್ಥಳಾಂತರಿಸಲಾಗಿದೆ ಹಾಗೂ ಆವರು ಆರೋಗ್ಯಕರವಾಗಿದ್ದು, ಅವರ ಸಾವಿನ ಕುರಿತು ಹರಡಿರುವ ವದಂತಿಗಳು ನಿರಾಧಾರ ಎಂದು ಸ್ಪಷ್ಟನೆ ನೀಡಿದೆ. “ಅವರು ಸಂಪೂರ್ಣ ಆರೋಗ್ಯವಾಗಿದ್ದು, ಅವರು ಪೂರ್ಣಪ್ರಮಾಣದ ವೈದ್ಯಕೀಯ ಆರೈಕೆಯನ್ನು ಪಡೆಯುತ್ತಿದ್ದಾರೆ” ಎಂದು ಆಡಿಯಾಲ ಜೈಲು ಸಿಬ್ಬಂದಿಗಳು ತಿಳಿಸಿದ್ದಾರೆ. ಇಮ್ರಾನ್ ಖಾನ್ ಆರೋಗ್ಯ ಸ್ಥಿತಿಯ ಕುರಿತು ಹಬ್ಬಿರುವ ವದಂತಿಗಳ ಕುರಿತು ಸರಕಾರ ಅಧಿಕೃತ ಪ್ರತಿಕ್ರಿಯೆ ನೀಡಬೇಕು ಎಂದು ಆಗ್ರಹಿಸಿರುವ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರಿಕ್ ಇ-ಇನ್ಸಾಫ್ ಪಕ್ಷ, ಇಮ್ರಾನ್ ಖಾನ್ ಹಾಗೂ ಅವರ ಕುಟುಂಬದ ಸದಸ್ಯರ ನಡುವೆ ತಕ್ಷಣವೇ ಸಭೆಯೊಂದನ್ನು ಏರ್ಪಡಿಸಬೇಕು ಎಂದೂ ಒತ್ತಾಯಿಸಿದೆ ಎಂದು Dawn ಸುದ್ದಿ ಸಂಸ್ಥೆ ವರದಿ ಮಾಡಿದೆ. ಕಳೆದ ವಾರ ಆಡಿಯಾಲ ಜೈಲಿನ ಹೊರಗೆ ತಮ್ಮ ಮೇಲೆ ಹಾಗೂ ಇಮ್ರಾನ್ ಖಾನ್ ಬೆಂಬಲಿಗರ ಮೇಲೆ ಪೊಲೀಸರು ನಡೆಸಿದ ಅಮಾನುಷ ಹಲ್ಲೆಯ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಇಮ್ರಾನ್ ಖಾನ್ ಸಹೋದರಿಯರು ಆಗ್ರಹಿಸಿದಾಗಿನಿಂದ, ಇಮ್ರಾನ್ ಖಾನ್ ಆರೋಗ್ಯ ಸ್ಥಿತಿಯ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಊಹಾಪೋಹಗಳು ವೈರಲ್ ಆಗಿವೆ. ಈ ಹಿನ್ನೆಲೆಯಲ್ಲಿ ಆಡಿಯಾಲ ಜೈಲು ಆಡಳಿತದಿಂದ ಈ ಸ್ಪಷ್ಟನೆ ಹೊರ ಬಿದ್ದಿದೆ.

ವಾರ್ತಾ ಭಾರತಿ 27 Nov 2025 7:06 pm

Mangaluru | ಪ್ರಧಾನಿ ಆಗಮನ ಹಿನ್ನೆಲೆ: ಡ್ರೋನ್ ಹಾರಾಟ, ಬಳಕೆ ನಿಷೇಧ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನ.28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಮಠಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಸುರಕ್ಷತೆ ಮತ್ತು ಭದ್ರತೆಯ ಹಿತ ದೃಷ್ಟಿ, ಸಾರ್ವಜನಿಕ ಸುರಕ್ಷತೆಯ ನಿಟ್ಟಿನಲ್ಲಿ ನ.28ರ ಬೆಳಗ್ಗೆ 6ರಿಂದ ಸಂಜೆ 6ರ ತನಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಲಿನ 5 ಕಿ.ಮೀ. ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟ, ಬಳಕೆ ಮತ್ತು ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ನಿಷೇಧಿಸಿಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟನೆಯಲ್ಲಿ ತಿಳಿಸಿದೆ.

ವಾರ್ತಾ ಭಾರತಿ 27 Nov 2025 7:04 pm

ತಾರಕಕ್ಕೇರಿದ ಸಿಎಂ ಗದ್ದುಗೆ ಗುದ್ದಾಟ: ದಿನದ ಪ್ರಮುಖ 7 ಬೆಳವಣಿಗೆ ಏನೇನು?

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ತಾರಕಕ್ಕೇರಿದೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಬಣಗಳು ತೆರೆಮರೆಯಲ್ಲಿ ಕುರ್ಚಿಗಾಗಿ ಕಸರತ್ತು ನಡೆಸುತ್ತಿದ್ದಾರೆ. ಕಾಂಗ್ರೆಸ್ಸಿನ ಬಣ ರಾಜಕೀಯ ಈಗಾಗಲೇ ದೆಹಲಿ ಅಂಗಣಕ್ಕೂ ಕಾಲಿಟ್ಟಿದೆ. ಡಿಕೆಶಿ ಬಣ ಒಕ್ಕಲಿಗ ಬಣದ ಅಸ್ತ್ರ ಬಿಟ್ಟಿದ್ದರೆ, ಸಿದ್ದರಾಮಯ್ಯ ಬಣ ಅಹಿಂದ ಅಸ್ತ್ರ ಬಿಟ್ಟಿದೆ. ಈ ಎಲ್ಲಾ ಬೆಳವಣಿಗೆಗಳು ಸಾಕಷ್ಟು ಕುತೂಹಲವನ್ನು ಉಂಟು ಮಾಡಿದೆ. ನ. 27ರಂದು ಇದೇ ವಿಚಾರವಾಗಿ ನಡೆದ ಟಾಪ್ 10 ವಿದ್ಯಮಾನಗಳು ಇಲ್ಲಿವೆ.

ವಿಜಯ ಕರ್ನಾಟಕ 27 Nov 2025 7:03 pm

‘ಶಾಲೆಯ ಅಂಗಳದಲ್ಲಿ ತಾರಾಲಯ’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

‘ಗ್ರಾಮೀಣ ಮಕ್ಕಳಲ್ಲಿ ವಿಜ್ಞಾನ ಕೌತುಕ ಬಿತ್ತುವುದು ನಮ್ಮ ಗುರಿ’

ವಾರ್ತಾ ಭಾರತಿ 27 Nov 2025 7:03 pm

ಅಪಘಾತದ ಬಳಿಕ ಸುಟ್ಟು ಕರಕಲಾದ ಎಥೆನಾಲ್ ಸಾಗಿಸುತ್ತಿದ್ದ ಟ್ಯಾಂಕರ್‌: ಕಲಬುರಗಿ ಮೂಲದ ಚಾಲಕ ತೆಲಂಗಾಣದಲ್ಲಿ ಸಜೀವ ದಹನ

ಕಲಬುರಗಿ : ಚಿಂಚೋಳಿ ಪಟ್ಟಣದ ಹೊರವಲಯದಲ್ಲಿರುವ ಸಿದ್ಧಸಿರಿ ಎಥೆನಾಲ್ ಮತ್ತು ಪವರ್ ಘಟಕದ ಎಥೆನಾಲ್ ಸಾಗಿಸುತ್ತಿದ್ದ ಟ್ಯಾಂಕರ್‌ವೊಂದು ವಾಹನವೊಂದಕ್ಕೆ ಢಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿದ್ದು,  ಟ್ಯಾಂಕರ್ ಚಾಲಕ ಸಜೀವ ದಹನವಾಗಿದ್ದಾರೆ.   ತೆಲಂಗಾಣದ ಹನ್ನವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ಘಟನೆ ನಡೆದಿದೆ. ಚಿಂಚೋಳಿ ತಾಲೂಕಿನ ಹೂಡದಳ್ಳಿ ಗ್ರಾಮದ ನಿರಂಜನ ಜಮಾದಾರ (30) ಮೃತ ಚಾಲಕ ಎಂದು ಗುರುತಿಸಲಾಗಿದೆ. ಚಿಂಚೋಳಿಯಿಂದ ಎಥೆನಾಲ್ ತುಂಬಿಕೊಂಡು ಟ್ಯಾಂಕರ್‌ ತೆಲಂಗಾಣಕ್ಕೆ ಸಾಗುತ್ತಿದ್ದ ವೇಳೆ ಅಪಘಾತಕ್ಕಿಡಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತು ತೆಲಂಗಾಣದ ಹನ್ನವಾಡ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 27 Nov 2025 6:58 pm

Vande Bharat Sleeper: 2026ಕ್ಕೆ ಬರಲಿರುವ ವಂದೇ ಭಾರತ್ ಸ್ಲೀಪರ್, ಅಮೃತ್ ಭಾರತ್ ರೈಲುಗಳ ಅಪ್ಡೇಟ್ಸ್ ಇಲ್ಲಿದೆ

Vande Bharat Sleeper Train: ಭಾರತದಲ್ಲಿ 2026ರಿಂದ ರೈಲು ಪ್ರಯಾಣ ಮತ್ತಷ್ಟು ಅಹ್ಲಾದಕರ ಮತ್ತು ಸಾಹಸಮಯ ಅನುಭವ ನೀಡಲಿದೆ. ದೇಶದಲ್ಲಿ ನಿತ್ಯ ಲಕ್ಷಾಂತರ ಜನರು ರೈಲು ಸಾರಿಗೆ ಅವಲಂಬಿಸಿದ್ದಾರೆ. ಪ್ರಯಾಣಿಕರಿಗಾಗಿ ಹೊಸ ಹೊಸ ಯೋಜನೆ, ಉಪಕ್ರಮ ತರುವ ಭಾರತೀಯ ರೈಲ್ವೆ (Indian Railways) ಇದೀಗ ವಿಶೇಷ ಹಾಗೂ ಐಶಾರಾಮಿ ಅನುಭವ ನೀಡುವ ಹಲವು ರೈಲುಗಳನ್ನು ಪರಿಚಯಿಸಲಿದೆ. ಯಾವೆಲ್ಲ

ಒನ್ ಇ೦ಡಿಯ 27 Nov 2025 6:54 pm

WPL 2026- ದೀಪ್ತಿ ಶರ್ಮಾ ಮರು ಖರೀದಿಗಾಗಿ ಯುಪಿ ವಾರಿಯರ್ಸ್ ದುಂಬಾಲು! ಯಾರೆಲ್ಲಾ ಆರ್ ಸಿಬಿ ಪಾಲು?

WPL 2026 Auction- ಮಹಿಳಾ ಪ್ರೀಮಿಯರ್ ಲೀಗ್ 2026ರ ಮೆಗಾ ಹರಾಜು ಗುರುವಾರ ದಿಲ್ಲಿಯಲ್ಲಿ ಪ್ರಾರಂಭ ಆಯಿತು. ಆಟಗಾರ್ತಿಯರನ್ನು ತಮ್ಮ ತಂಡಕ್ಕೆ ಸೆಳೆಯಲು ಎಲ್ಲಾ ಫ್ರಾಂಚೈಸಿಗಳು ಭಾರ ಪೈಪೋಟಿ ನಡೆಸಿದವು. ಮಹಿಳಾ ವಿಶ್ವಕಪ್ ನ ಸರಣಿಶ್ರೇಷ್ಠ ಪ್ರಶಸ್ತಿ ಪಡೆದ ಭಾರತ ತಂಡದ ಆಲ್ರೌಂಡರ್ ದೀಪ್ತಿ ಶರ್ಮಾ ಅವರನ್ನು ಉತ್ತರ ಪ್ರದೇಶ ವಾರಿಯರ್ಸ್ ಫ್ರಾಂಚೈಸಿಯು 3.2 ಕೋಟಿ ರೂ.ಗೆ RTM ಬಳಸಿ ಉಳಿಸಿಕೊಂಡಿತು. ರಾಯಲ್ ಚಾಲೆಂಜರ್ಸ್ ಮಹಿಳಾ ತಂಡ ರಾಧಾ ಯಾದವ್, ಜಾರ್ಜಿಯಾ ವೊಲ್, ನಾಡಿನ್ ಡಿ ಕ್ಲಾರ್ಕ್, ಲಿನ್ಸಿ ಸ್ಮಿತ್ ಅವರನ್ನು ಖರೀದಿಸಿದೆ.

ವಿಜಯ ಕರ್ನಾಟಕ 27 Nov 2025 6:45 pm

WPL Auction: ಆರ್‌ಸಿಬಿ ಅಭಿಮಾನಿಗಳಿಗೆ ಭರ್ಜರಿ ಸುದ್ದಿ, ಜನವರಿ ತಿಂಗಳಲ್ಲೇ ಕ್ರಿಕೆಟ್ ಹಬ್ಬ ಶುರು!

ಭಾರತ ಕ್ರಿಕೆಟ್ ಪಾಲಿಗೆ ಸ್ವರ್ಗವಾಗಿದ್ದು, ಭಾರತೀಯರು ಕ್ರಿಕೆಟ್ ಆಟವಾಗಿ ಮಾತ್ರವಲ್ಲ ಒಂದು ಧರ್ಮವಾಗಿ ಕೂಡ ಸ್ವೀಕಾರ ಮಾಡಿದ್ದಾರೆ. ಕ್ರಿಕೆಟ್ ಆಟಕ್ಕೆ ಪ್ರಾಣ ಬೇಕಾದರೂ ಕೊಡಲು ಸಿದ್ಧ ಇರುವ ಅಭಿಮಾನಿಗಳು ಸಿಗುವುದು ಭಾರತದಲ್ಲಿ ಮಾತ್ರ. ಹೀಗೆ ಕ್ರಿಕೆಟ್ ಆಟ ಭಾರತವನ್ನ ಭಾರಿ ಗಟ್ಟಿಯಾಗಿ ಆಕ್ರಮಿಸಿಕೊಂಡ ಕಾರಣಕ್ಕೆ ಲಕ್ಷಾಂತರ ಕೋಟಿ ರೂಪಾಯಿ ಆದಾಯ ಕೂಡು ಬಿಸಿಸಿಐ ಪಾಲಿಗೆ ಹರಿದು ಬರುತ್ತಿದೆ.

ಒನ್ ಇ೦ಡಿಯ 27 Nov 2025 6:41 pm

ಹೊರಗುತ್ತಿಗೆ ನೌಕರನಿಂದ ಲಂಚ ಸ್ವೀಕರಿಸುತ್ತಿದ್ದ ಮೂವರು ವಶಕ್ಕೆ; ಮಂಗಳೂರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆ

ಮಂಗಳೂರು: ಹೊರಗುತ್ತಿಗೆ ನೌಕರನಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಮಂಗಳೂರು ಲೋಕಾಯುಕ್ತ ಪೊಲೀಸರು ಮೂವರನ್ನು ಗುರುವಾರ ವಶಕ್ಕೆ ಪಡೆದುಕೊಂಡಿದ್ದಾರೆ. ಉಳ್ಳಾಲ ತಾಲೂಕು ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಸರ್ವೆಯರ್ ಕೃಷ್ಣಮೂರ್ತಿ, ಮಂಗಳೂರು ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕ (ಎಡಿಎಲ್‌ಆರ್) ಬಿ.ಕೆ. ರಾಜು ಮತ್ತು ಸರ್ವೆ ಸುಪರ್‌ವೈಸರ್ ಎಸ್. ಧನಶೇಖರ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಅಧಿಕಾರಿಗಳಾಗಿದ್ದಾರೆ. ತನ್ನ ಬಾಕಿ ಇರುವ ಸಂಬಳದ ಬಿಲ್ ಮಾಡಿಕೊಡಲು ಮತ್ತು ತನ್ನನ್ನು ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯದಲ್ಲಿ ಮುಂದುವರಿಸಲು ನೇಮಕಾತಿ ಆದೇಶವನ್ನು ಮಾಡಿಸಿಕೊಡಲು ಕೃಷ್ಣಮೂರ್ತಿ 50,000 ರೂ, ಬಿ.ಕೆ.ರಾಜು 10,000 ರೂ., ಎಸ್.ಧನಶೇಖರ 10,000 ರೂ. ಎಂಬವರು ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಯುಪಿಒಆರ್‌ನಲ್ಲಿ ಹೊರಗುತ್ತಿಗೆ ನೌಕರರಾಗಿರುವ ವ್ಯಕ್ತಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಮಂಗಳೂರು ಲೋಕಾಯುಕ್ತ ಪೊಲೀಸರು ಕೃಷ್ಣಮೂರ್ತಿ 20,000 ರೂ., ಧನಶೇಖರ ಮತ್ತು ಬಿ.ಕೆ. ರಾಜು ತಲಾ 5,000 ರೂ. ಲಂಚ ಸ್ವೀಕರಿಸುವಾಗ ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಅವರ ಮಾರ್ಗದರ್ಶನದಂತೆ ಉಪಾಧೀಕ್ಷಕರಾದ ಡಾ. ಗಾನ ಪಿ. ಕುಮಾರ್, ಸುರೇಶ್ ಕುಮಾರ್ ಪಿ., ನಿರೀಕ್ಷಕರಾದ ಭಾರತಿ ಜಿ, ಚಂದ್ರಶೇಖರ್ ಕೆ.ಎನ್., ರವಿ ಪವಾರ್, ರಾಜೇಂದ್ರ ನಾಯ್ಡ್ ಎಂ.ಎನ್. ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ವಾರ್ತಾ ಭಾರತಿ 27 Nov 2025 6:41 pm

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ | ಕರಡು ಮತದಾರರ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಅವಕಾಶ

ವಿಜಯನಗರ(ಹೊಸಪೇಟೆ) : ಭಾರತೀಯ ಚುನಾವಣಾ ಆಯೋಗ ಸೆಪ್ಟಂಬರ್ 12ರ ವೇಳಾಪಟ್ಟಿಗೆ ಅನುಗುಣವಾಗಿ ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ ಎಂದು  ಜಿಲ್ಲಾ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಮತದಾರ ನೋಂದಾಣಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ. ಕರಡು ಮತದಾರರ ಪಟ್ಟಿಯ ಭೌತಿಕ ಪ್ರತಿಯು ಎಲ್ಲಾ ಸಹಾಯಕ ಮತದಾರರ ನೋಂದಣಾಧಿಕಾರಿಗಳಾದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ, ಮಹಾನಗರ ಪಾಲಿಕೆ ಆಯುಕ್ತರ ಕಚೇರಿಯಲ್ಲಿ ಹಾಗೂ ತಹಶೀಲ್ದಾರರ ಕಚೇರಿಯಲ್ಲಿ ಲಭ್ಯವಿದ್ದು ಮತದಾರರು ಪರಿಶೀಲಿಸಿಕೊಳ್ಳಬಹುದಾಗಿದೆ. ಸರಕಾರದ  ಅಧಿಕೃತ ಅಂರ್ತಜಾಲದಲ್ಲಿಯೂ ಕೂಡ ಮಾಹಿತಿ ಲಭ್ಯವಿದೆ.  ಕರಡು ಮತದಾರರ ಪಟ್ಟಿಯಲ್ಲಿ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಸಂಬಂಧಪಟ್ಟ ಮತದಾರರು ಲಿಖಿತವಾಗಿ ಆಯಾ ತಾಲೂಕು ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ಆಕ್ಷೇಪಣೆಯನ್ನು ಸಲ್ಲಿಸಬಹುದು ಎಂದು ಕವಿತಾ ಎಸ್.ಮನ್ನಿಕೇರಿ ಹೇಳಿದ್ದಾರೆ.   ಇದೊಂದು ನಿರಂತರ ನೋಂದಣಿ ಪ್ರಕ್ರಿಯೆಯಾಗಿರುವ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೂ ಅರ್ಹ ಮತದಾರರು ಅವಶ್ಯಕ ದಾಖಲೆಗಳೊಂದಿಗೆ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಲು ಅವಕಾಶವಿರುತ್ತದೆ ಎಂದು ಕವಿತಾ ಎಸ್.ಮನ್ನಿಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾರ್ತಾ ಭಾರತಿ 27 Nov 2025 6:32 pm

ಮಣಿಪಾಲ | ಗ್ಯಾಸ್ ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಹೊಟೇಲ್!

ಮಣಿಪಾಲ: ಮಣಿಪಾಲ ಆರ್‌ಎಸ್‌ಬಿ ಸಭಾಭವನದ ಸಮೀಪದ ಕಟ್ಟಡದಲ್ಲಿರುವ ಹೊಟೇಲೊಂದರಲ್ಲಿ ಇಂದು ಸಂಜೆ ವೇಳೆ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದ್ದು, ಇದರ ಪರಿಣಾಮ ಇಡೀ ಹೊಟೇಲ್ ಸುಟ್ಟು ಹೋಗಿರುವ ಬಗ್ಗೆ ವರದಿಯಾಗಿದೆ. ಡೆಲ್ಲಿ ಡಾಬಾ ಎಂಬ ಹೊಟೇಲಿನ ಒಂದು ಗ್ಯಾಸ್ ಸಿಲಿಂಡರ್ ಅಕಸ್ಮಿಕವಾಗಿ ಸ್ಪೋಟಗೊಂಡಿತ್ತೆನ್ನಲಾಗಿದೆ. ಇದರಿಂದ ಹೊಟೇಲ್‌ನಲ್ಲಿ ಬೆಂಕಿ ಕಾಣಿಸಿ ಕೊಂಡಿದ್ದು, ಕ್ಷಣ ಮಾತ್ರದಲ್ಲೇ ಬೆಂಕಿ ಕೆನ್ನಾಲಿಗೆ ಇಡೀ ಹೊಟೇಲ್ ವಿಸ್ತರಿಸಿತು. ಕೂಡಲೇ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಅಲ್ಲದೇ ಇನ್ನೆರೆಡು ಗ್ಯಾಸ್ ಸಿಲಿಂಡರ್‌ಗಳು ಸ್ಪೋಟಗೊಳ್ಳದಂತೆ ತಡೆದರು ಎಂದು ತಿಳಿದುಬಂದಿದೆ. ಇದರಿಂದ ಯಾವುದೇ ಜೀವ ಹಾನಿ ಆಗಿಲ್ಲ ಎಂದು ತಿಳಿದುಬಂದಿದೆ.          

ವಾರ್ತಾ ಭಾರತಿ 27 Nov 2025 6:26 pm

ರಾಜಕೀಯ ಅಖಾಡಕ್ಕಿಳಿದ ಧಾರ್ಮಿಕ ನಾಯಕರು: ಕರ್ನಾಟಕದ ಇತಿಹಾಸದಲ್ಲಿ ಹಾಸುಹೊಕ್ಕಾದ ಪರಂಪರೆ

ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಈ ಕುರಿತು ಲೇಖಕ ಗಿರೀಶ್ ಲಿಂಗಣ್ಣ ವಿಶ್ಲೇಷಣೆ ನಡೆಸಿದ್ದು, ಕರ್ನಾಟಕದಲ್ಲಿ ರಾಜಕಾರಣ ಮತ್ತು ಧಾರ್ಮಿಕ ಸಂಸ್ಥೆಗಳ ನಡುವಿನ ನಂಟು ಹೊಸದೇನಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಪ್ರಸ್ತುತ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಹಂಚಿಕೆಯ ಜಟಾಪಟಿ ನಡೆಯುತ್ತಿರುವಾಗ, ಒಕ್ಕಲಿಗರ ಪ್ರಭಾವಿ ಮಠದ ಶ್ರೀಗಳ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಇದು ರಾಜಕೀಯ ಪಕ್ಷಗಳು ಸಮುದಾಯದ ಬೆಂಬಲಕ್ಕಾಗಿ ಮಠಗಳನ್ನು ಆಶ್ರಯಿಸುವ ರಾಜ್ಯದ ರಾಜಕೀಯ ಸಂಸ್ಕೃತಿಯ ಮುಂದುವರಿದ ಭಾಗವಾಗಿದೆ . ಬಿಎಸ್‌ವೈ ಅವರಿಗೂ ಹಲವರು ಧಾರ್ಮಿಕ ಮುಖಂಡರು ಬೆಂಬಲಿಸಿದ್ದರು ಎಂದು ಲೇಖನದಲ್ಲಿ ವಿವರಿಸಲಾಗಿದೆ.

ವಿಜಯ ಕರ್ನಾಟಕ 27 Nov 2025 6:11 pm

ಸಿದ್ದರಾಮಯ್ಯರನ್ನು ಕೆಳಗಿಳಿಸಲು ಯಾವ ಕಾರಣವೂ ಇಲ್ಲ, ಅವರೇ ಐದು ವರ್ಷ ಸಿಎಂ : ಯತೀಂದ್ರ

ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷವೂ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ನಗರದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಅವರ ಮೇಲೆ ಯಾವ ಕಾರಣವೂ ಇಲ್ಲ. ಹಾಗಾಗಿ ಅಧಿಕಾರದಿಂದ ಕೆಳಗಿಳಿಸುವ ಪ್ರಶ್ನೆಯೇ ಬರುವುದಿಲ್ಲ. ಆದರೆ ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧ ಎಂದು ಹೇಳಿದರು. ಮುಖ್ಯಮಂತ್ರಿ ಬದಲಾವಣೆ ಮಾಡುತ್ತೇವೆ ಎಂದು ಹೈಕಮಾಂಡ್ ಒಮ್ಮೆಯೂ ಹೇಳಿಲ್ಲ, ಆದರೂ ಹೈಕಮಾಂಡ್ ತೀರ್ಮಾನವೇ ಅಂತಿಮ, ಉಳಿದ ಎರಡೂವರೆ ವರ್ಷವೂ ನಮ್ಮ ತಂದೆಯವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂಬ ವಿಶ್ವಾಸ ನನಗಿದೆ ಎಂದರು. ನನಗಿರುವ ಮಾಹಿತಿ ಪ್ರಕಾರ ಅಧಿಕಾರ ಹಂಚಿಕೆ ಸೂತ್ರವೇ ನಡೆದಿಲ್ಲ. ಆದರೂ ಕೆಲವರು ಸಿಎಂ ಬದಲಾಯಿಸಬೇಕು ಎಂದು ಹೇಳುತ್ತಿದ್ದಾರೆ.‌ ಈ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗದುಕೊಳ್ಳುತ್ತದೆ. ಹೈಕಮಾಂಡ್ ಹೇಳಿದಂತೆ ಸಿದ್ದರಾಮಯ್ಯ ಅವರು ಕೇಳುತ್ತಾರೆ, ಡಿ.ಕೆ.ಶಿವಕುಮಾರ್ ಅವರು ಕೇಳುತ್ತಾರೆ ಎಂದು ಹೇಳಿದರು. ಯಾರಿಗೆ ಎಷ್ಟು ಶಾಸಕರ ಬೆಂಬಲವಿದೆ ಎಂದು ಮಾಧ್ಯಮದ ಮುಂದೆ, ಬೀದಿಯಲ್ಲಿ ನಿಂತು ಹೇಳುವುದಲ್ಲ, ಅದು ನಮ್ಮ ಪಕ್ಷದ ಆಂತರಿಕ ವಿಚಾರ, ಎಲ್ಲಾ ಶಾಸಕರ ಬೆಂಬಲ ಸಿದ್ದರಾಮಯ್ಯ ಅವರಿಗಿದೆ ಎಂದು ಹೇಳಿದರು. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂದು ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮಿ ಹೇಳಿರುವ ಪ್ರಶ್ನೆಗ ಉತ್ತರಿಸಿದ ಡಾ.ಯತೀಂದ್ರ ಸಿದ್ದರಾಮಯ್ಯ, ಯಾರನ್ನು ಸಿಎಂ‌ ಮಾಡಬೇಕು, ಮಾಡಬಾರದು ಎಂಬುದು ನಮ್ಮ ಪಕ್ಷದ ಆಂತರಿಕ ವಿಚಾರ, ಅದು ನಮ್ಮ ಶಾಸಕರು ಮತ್ತು ಹೈ ಕಮಾಂಡ್ ಗೆ ಬಿಟ್ಟಿದ್ದು, ಬೇರೆಯವರ ಅಭಿಪ್ರಾಯ ಅನಗತ್ಯ ಎಂದು ಹೇಳಿದರು.

ವಾರ್ತಾ ಭಾರತಿ 27 Nov 2025 5:50 pm

ಕ್ಯಾಲಿಕಟ್ ವಿವಿಯ ಸೆಮಿಸ್ಟರ್‌ ಪರೀಕ್ಷೆಯಲ್ಲಿ ಕಳೆದ ವರ್ಷದ ಪ್ರಶ್ನೆ ಪತ್ರಿಕೆಯೇ ಪುನರಾವರ್ತನೆ!

ಕೋಝಿಕ್ಕೋಡ್ (ಕೇರಳ): ಕ್ಯಾಲಿಕಟ್ ವಿಶ್ವವಿದ್ಯಾಲಯದಲ್ಲಿ ನಡೆದ ಮಲ್ಟಿ ಡಿಸಿಪ್ಲಿನರಿ ಕೋರ್ಸ್ (ಎಂಡಿಸಿ) ಪದವಿಯ ಸೆಮಿಸ್ಟರ್‌ ಪರೀಕ್ಷೆಯಲ್ಲಿ ಹಿಂದಿನ ವರ್ಷದ ಪ್ರಶ್ನೆ ಪತ್ರಿಕೆಯೇ ಪುನರಾವರ್ತನೆಯಾದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯು ಪರೀಕ್ಷೆಯ ವಿಶ್ವಾಸಾರ್ಹತೆ ಕುರಿತು ವಿದ್ಯಾರ್ಥಿ–ಶಿಕ್ಷಕ ವಲಯದಲ್ಲಿ ತೀವ್ರ ಚರ್ಚೆಗೊಳಗಾಗಿದೆ. ನ.25ರಂದು ನಡೆದ ಎಂಡಿಸಿ ಸೈಕಾಲಜಿಯ ಮೊದಲ ಸೆಮಿಸ್ಟರ್ ನ ‘ಆರ್ಟ್ ಆಫ್ ಸ್ಟ್ರೆಸ್ ಮ್ಯಾನೇಜ್‌ಮೆಂಟ್’ ಪರೀಕ್ಷೆಯಲ್ಲಿ ಬಳಸಲಾದ ಪ್ರಶ್ನೆ ಪತ್ರಿಕೆ, ಕಳೆದ ವರ್ಷದ ಪ್ರಶ್ನೆಗಳನ್ನೇ ಮತ್ತೆ ನೀಡಿದ್ದಾಗಿ ಪರೀಕ್ಷಾ ನಿಯಂತ್ರಣ ಕಚೇರಿ ಗುರುವಾರ ದೃಢಪಡಿಸಿದೆ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪುನರಾವರ್ತನೆಯನ್ನು ಗಮನಕ್ಕೆ ತಂದ ನಂತರ ಈ ವಿಚಾರ ಅಧಿಕೃತವಾಗಿ ವಿಶ್ವವಿದ್ಯಾಲಯದ ಗಮನಕ್ಕೆ ಬಂದಿದೆ. ಹೊಸ ಪರೀಕ್ಷೆ ನಡೆಸಬೇಕೇ ಅಥವಾ ಯಾವ ಕ್ರಮ ಕೈಗೊಳ್ಳಬೇಕೆಂಬ ಬಗ್ಗೆ ಅಧ್ಯಯನ ಮಂಡಳಿ ನಿರ್ಧಾರ ಕೈಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಶ್ವವಿದ್ಯಾಲಯದ ಹೇಳಿಕೆಯ ಪ್ರಕಾರ, ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವ ವೇಳೆ ಶಿಕ್ಷಕರು ಸಾಮಾನ್ಯವಾಗಿ ಮೂರು ಸೆಟ್‌ಗಳನ್ನು ಸಲ್ಲಿಸುತ್ತಾರೆ. ಆದರೆ ಈ ಬಾರಿ ಸಲ್ಲಿಸಲಾದ ಸೆಟ್‌ಗಳಲ್ಲಿ ಒಂದು ಕಳೆದ ವರ್ಷದ ನಕಲು ಆಗಿದ್ದು, ಕ್ರಾಸ್-ಚೆಕಿಂಗ್ ಪ್ರಕ್ರಿಯೆಯಲ್ಲಿ ಇದು ಪತ್ತೆಯಾಗದೇ ಉಳಿದಿದೆ ಎಂದು ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ. ಈ ಪ್ರಕರಣದ ಕುರಿತು ಇಂದುವರೆಗೆ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.

ವಾರ್ತಾ ಭಾರತಿ 27 Nov 2025 5:49 pm

ಮಹಿಳಾ ಸಮೃದ್ಧಿ ಯೋಜನೆ: ಮಹಿಳೆಯರಿಗೆ ಸ್ವಯಂ ಉದ್ಯೋಗಕ್ಕಾಗಿ 1.40 ಲಕ್ಷ ರೂ.ವರೆಗೆ ಕಡಿಮೆ ಬಡ್ಡಿ ಸಾಲ; ಅರ್ಜಿ ಸಲ್ಲಿಕೆ ಹೇಗೆ?

ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳುವುದನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಹಿಳಾ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಿದೆ. ಮಹಿಳಾ ಸಮೃದ್ಧಿ ಯೋಜನೆಯು ಗ್ರಾಮೀಣ ಮತ್ತು ಹಿಂದುಳಿದ ಸಮುದಾಯಗಳ ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ್ಯವನ್ನು ಸಾಧಿಸಲು ಮತ್ತು ಸಮಾಜದ ಮುಖ್ಯವಾಹಿನಿಗೆ ಬರಲು ಒಂದು ಉತ್ತಮ ಅವಕಾಶವನ್ನು ಒದಗಿಸುತ್ತದೆ. ಈ ಯೋಜನೆಯು ಮಹಿಳೆಯರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲಗಳನ್ನು ಒದಗಿಸಿ, ಸ್ವಯಂ ಉದ್ಯೋಗ ಮತ್ತು ಆದಾಯ-ಉತ್ಪಾದಕ ಚಟುವಟಿಕೆಗಳನ್ನು ಕೈಗೊಳ್ಳಲು ಪ್ರೋತ್ಸಾಹಿಸುತ್ತದೆ. ಈ ಹಿನ್ನೆಲೆಯಲ್ಲಿ ಏನಿದು ಮಹಿಳಾ ಸಮೃದ್ಧಿ ಯೋಜನೆ? ಈ ಯೋಜನೆಯಡಿ ದೊರೆಯುವ ಸಹಾಯಧನ ಎಷ್ಟು? ಪ್ರಯೋಜನಗಳು ಏನೇನು ಎಂಬುದನ್ನು ತಿಳಿಯೋಣ.

ವಿಜಯ ಕರ್ನಾಟಕ 27 Nov 2025 5:39 pm

ಮಂಗಳೂರು | ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿ ಪುನರಾಯ್ಕೆ

ಮಂಗಳೂರು, ನ.27: ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ)ದ 29ನೇ ವಾರ್ಷಿಕ ಮಹಾಸಭೆಯು ಮಂಗಳವಾರ ನಗರದ ಬಂಟ್ಸ್ ಹಾಸ್ಟೆಲ್ ಬಳಿಯಿರುವ ಬಂಟರ ಯಾನೆ ನಾಡವರ ಮಾತೃ ಸಂಘದ ಶ್ರೀ ರಾಮಕೃಷ್ಣ ಕಾಲೇಜು ಮೈದಾನದಲ್ಲಿ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯ ಅಧ್ಯಕ್ಷತೆಯಲ್ಲಿ ನಡೆಯಿತು. ಚುನಾವಣಾಧಿಕಾರಿ ಪೃಥ್ವಿರಾಜ್ ರೈ ಪ್ರಕ್ರಿಯೆ ನಡೆಸಿಕೊಟ್ಟರು. ಅಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿ, ಉಪಾಧ್ಯಕ್ಷರಾಗಿ ಕರ್ನಿರೆ ವಿಶ್ವನಾಥ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಜಯಕರ್ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿಯಾಗಿ ಉಳ್ಳೂರು ಮೋಹನದಾಸ್ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ಚಂದ್ರಹಾಸ್ ಡಿ.ಶೆಟ್ಟಿ ರಂಗೋಲಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ ಉಮಾ ಕೃಷ್ಣ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷರಾಗಿ ಗಿರೀಶ್ ಶೆಟ್ಟಿ ತೆಳ್ಳಾರ್, ಸಂಚಾಲಕರಾಗಿ ಕೊಲ್ಲಾಡಿ ಬಾಲಕೃಷ್ಣ ರೈ ಆಯ್ಕೆಗೊಂಡರು. ಐಕಳ ಹರೀಶ್ ಶೆಟ್ಟಿ ಅವರನ್ನು ಗುರುದೇವಾನಂದ ಸ್ವಾಮೀಜಿ, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ರೈ ಮಾಲಾಡಿ, ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಸನ್ಮಾನಿಸಿದರು. ಈ ಸಂದರ್ಭ ಸ್ಪೀಕರ್ ಯು.ಟಿ.ಖಾದರ್, ದುಬೈ ಯುಎಇ ಅಧ್ಯಕ್ಷ ವಕ್ವಾಡಿ ಪ್ರವೀಣ್ ಶೆಟ್ಟಿ, ಬಂಟರ ಸಂಘ ಮುಂಬೈ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಅಶೋಕ್ ಶೆಟ್ಟಿ ಬಿಲ್ಲಾಡಿ, ಶಶಿಧರ್ ಶೆಟ್ಟಿ ಇನ್ನಂಜೆ, ಅಜಿತ್ ಶೆಟ್ಟಿ, ಮುನಿಯಾಲು ಉದಯ ಕುಮಾರ್ ಶೆಟ್ಟಿ, ಪೃಥ್ವಿರಾಜ್ ರೈ, ಎ.ಸಿ. ಭಂಡಾರಿ, ಸುಧಾಕರ್ ಎಸ್. ಪೂಂಜ, ಮಂಜು ಕೊಡ್ಲಾಡಿ, ಆನಂದ್ ಶೆಟ್ಟಿ, ನಾಗೇಶ್ ಶೆಟ್ಟಿ, ಅನಿಲ್ ಶೆಟ್ಟಿ, ರಾಜೀವ್ ಭಂಡಾರಿ, ಒಕ್ಕೂಟದ ಸಂಚಾಲಕ ಬಾಲಕೃಷ್ಣ ರೈ ಕೊಲ್ಲಾಡಿ ಮತ್ತಿತರರು ಉಪಸ್ಥಿತರಿದ್ದರು. ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ನಿತೇಶ್ ಶೆಟ್ಟಿ ಎಕ್ಕಾರ್, ಪ್ರಿಯಾ ಹರೀಶ್ ಶೆಟ್ಟಿ, ರಾಜೇಶ್ವರಿ ಡಿ.ಶೆಟ್ಟಿ ಸುರತ್ಕಲ್ ಕಾರ್ಯಕ್ರಮ ನಿರೂಪಿಸಿದರು.

ವಾರ್ತಾ ಭಾರತಿ 27 Nov 2025 5:35 pm

ಬೆಂಗಳೂರಿನಲ್ಲಿ ನೀರಿನ ಬಿಲ್ ಬಾಕಿ ಇಟ್ಟ ಗ್ರಾಹಕರಿಗೆ ಒನ್ ಟೈಂ ಪಾವತಿಗೆ ಅವಕಾಶ: ದಂಡ, ಇತರೆ ಶುಲ್ಕ 100% ಮನ್ನಾ

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಗ್ರಾಹಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಗುಡ್‌ನ್ಯೂಸ್‌ವೊಂದು ಸಿಕ್ಕಿದೆ. ಇನ್ನು ಮುಂದೆ ನೀರಿನ ಬಾಕಿ ಅಸಲು ಮೊತ್ತವನ್ನು ಒಂದೇ ಬಾರಿ ಪಾವತಿಸಿದರೆ ಬಡ್ಡಿ ಮತ್ತು ದಂಡವನ್ನು ಸಂಪೂರ್ಣವಾಗಿ ಮನ್ನಾ ಮಾಡುವ 'ಏಕಕಾಲಿಕ ತೀರುವಳಿ ಯೋಜನೆ'ಗೆ ಸಂಪುಟ ಒಪ್ಪಿಗೆ ಸೂಚಿಸಿದೆ.ಬೆಂಗಳೂರು ಘನತ್ಯಾಜ್ಯ ನಿರ್ವಹಣೆ, ಉತ್ತರ ಕನ್ನಡದಲ್ಲಿ ಶರಾವತಿ ನದಿಗೆ ಬ್ರಿಡ್ಜ್ ಕಂ ಬ್ಯಾರೇಜ್ ಸೇರಿದಂತೆ ಇನ್ಯಾವ ವಿಚಾರದ ಬಗ್ಗೆ ಚರ್ಚೆ ಮಾಡಿದರು ಎಂಬುದಕ್ಕೆ ಮಾಹಿತಿ ಈ ಲೇಖನದಲ್ಲಿ ಇದೆ

ವಿಜಯ ಕರ್ನಾಟಕ 27 Nov 2025 5:34 pm

WPL 2026- ಮಹಿಳಾ ಪ್ರೀಮಿಯರ್ ಲೀಗ್ ಸಂಪೂರ್ಣ ವೇಳಾಪಟ್ಟಿ ಬಿಡುಗಡೆ; ಎಲ್ಲೆಲ್ಲಿ ಪಂದ್ಯ? ಯಾವಾಗಿಂದ?

Womens Premier League 2026- ಮಹಿಳಾ ಪ್ರೀಮಿಯರ್ ಲೀಗ್ (WPL)ನ ಹರಾಜು ಪ್ರಕ್ರಿಯೆ ಭಾರೀ ಪೈಪೋಟಿಯಲ್ಲಿ ನಡೆಯುತ್ತಿರುವ ವೇಳೆಯಲ್ಲೇ 4ನೇ ಆವೃತ್ತಿಯ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ. 2026ರ ಜನವರಿ 9 ರಿಂದ ಫೆಬ್ರವರಿ 5ರವರೆಗೆ ನವಿ ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣ ಮತ್ತು ವಡೋದರಾಗಳಲ್ಲಿ ಅಷ್ಟೂ ಪಂದ್ಯಗಳು ನಡೆಯಲಿದೆ. ಈ ಬಾರಿ ಸಹ 'ಕ್ಯಾರವನ್ ಮಾದರಿ'ಯಲ್ಲಿ ಪಂದ್ಯಗಳು ನಡೆಯಲಿದ್ದು, ನವಿ ಮುಂಬೈನಲ್ಲಿ ಫೈನಲ್ ಪಂದ್ಯ ಆಯೋಜನೆಯಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯ ಕರ್ನಾಟಕ 27 Nov 2025 5:29 pm

ಮುಂಬೈನ ಶೇ.10.64ರಷ್ಟು ಮತದಾರರು ಒಂದಕ್ಕಿಂತ ಹೆಚ್ಚು ನೋಂದಣಿಗಳನ್ನು ಹೊಂದಿದ್ದಾರೆ : ಎಸ್‌ಇಸಿ ದತ್ತಾಂಶ

ಮುಂಬೈ,ನ.27: ಮಹಾರಾಷ್ಟ್ರ ರಾಜ್ಯ ಚುನಾವಣಾ ಆಯೋಗವು (ಎಸ್‌ಇಸಿ) ಹಂಚಿಕೊಂಡಿರುವ ದತ್ತಾಂಶಗಳ ಪ್ರಕಾರ ಮುಂಬೈನ 1.03 ಕೋಟಿ ಮತದಾರರ ಪೈಕಿ ಸುಮಾರು ಶೇ.10.64ರಷ್ಟು ಅಥವಾ 11 ಲಕ್ಷಕ್ಕೂ ಅಧಿಕ ಜನರು ಮತದಾರರ ಪಟ್ಟಿಗಳಲ್ಲಿ ಬಹು ನೋಂದಣಿಗಳನ್ನು ಹೊಂದಿದ್ದಾರೆ. ಇಂತಹ ಮತದಾರರು ಅಧಿಕ ಸಂಖ್ಯೆಯಲ್ಲಿರುವ ಹೆಚ್ಚಿನ ವಾರ್ಡ್‌ಗಳನ್ನು ಈ ಹಿಂದೆ ವಿರೋಧ ಪಕ್ಷಗಳ ಕಾರ್ಪೊರೇಟರ್‌ ಗಳು ಪ್ರತಿನಿಧಿಸಿದ್ದರು ಎಂದು ದತ್ತಾಂಶಗಳು ತೋರಿಸಿವೆ. ಎಸ್‌ಇಸಿ ಬುಧವಾರ ಆಕ್ಷೇಪಣೆಗಳನ್ನು ಸಲ್ಲಿಸಲು ಗಡುವನ್ನು ನ.27ರಿಂದ ಡಿ.3ರವರೆಗೆ ವಿಸ್ತರಿಸಿದೆ. ಅಂತಿಮ ಮತದಾರರ ಪಟ್ಟಿಗಳನ್ನು ಡಿ.10ರಂದು ಪ್ರಕಟಿಸಲಾಗುವುದು ಎಂದು ಅದು ತಿಳಿಸಿದೆ. ಕಳೆದ ವಾರ ಪ್ರಕಟಗೊಂಡ ಕರಡು ಮತದಾರರ ಪಟ್ಟಿಗಳಲ್ಲಿ 4.33 ಲಕ್ಷ ಮತದಾರರು ಒಂದಕ್ಕಿಂತ ಹೆಚ್ಚು ಸಲ ಕಾಣಿಸಿಕೊಂಡಿದ್ದಾರೆ. ಈ ಮತದಾರರು ಎರಡರಿಂದ 103 ಸಲದವರೆಗೆ ನೋಂದಣಿಗಳನ್ನು ಹೊಂದಿರುವುದು ಕಂಡು ಬಂದಿದೆ. ಇಂತಹ ಬಹು ನೋಂದಣಿಗಳ ಸಂಖ್ಯೆ 11,01,505ರಷ್ಟಿದೆ. ಮುದ್ರಣ ದೋಷಗಳು, ಮತದಾರರ ಸ್ಥಳಾಂತರ ಮತ್ತು ಮೃತ ವ್ಯಕ್ತಿಗಳ ಹೆಸರುಗಳನ್ನು ತೆಗೆದುಹಾಕುವಲ್ಲಿ ವೈಫಲ್ಯದಂತಹ ಅಂಶಗಳು ಮತದಾರರ ಹೆಸರುಗಳ ಪುನರಾವರ್ತನೆಗೆ ಕಾರಣವಾಗಿವೆ ಎಂದು ಎಸ್‌ಇಸಿ ಹೇಳಿದೆ. ಬೂತ್ ಮಟ್ಟದ ಕಾರ್ಯಕರ್ತರು ಈಗ ಕ್ಷೇತ್ರಗಳಿಗೆ ಭೇಟಿ ನೀಡಿ ಫಾರಂಗಳನ್ನು ಭರ್ತಿ ಮಾಡುತ್ತಿದ್ದಾರೆ ಹಾಗೂ ಪ್ರತಿ ಮತದಾರರು ಒಂದೇ ಬಾರಿ ನೋಂದಣಿ ಮಾಡಲ್ಪಟ್ಟಿದ್ದಾರೆ ಎನ್ನುವುದನ್ನು ಖಚಿತಪಡಿಸಿಕೊಳ್ಳಲು ಸೂಕ್ತ ಪರಿಶೀಲನೆಗಳನ್ನು ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು. ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಜ.31, 2026ರೊಳಗೆ ಮುಗಿಯಬೇಕಿರುವ ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಗಳು ಕೊಂಚ ವಿಳಂಬಗೊಳ್ಳಬಹುದು ಎಂದು ಎಸ್‌ಇಸಿ ಅಧಿಕಾರಿಯೋರ್ವರು ಸುಳಿವು ನೀಡಿದರು. ಹೆಚ್ಚಿನ ಸಂಖ್ಯೆಯ ಬಹುನೋಂದಣಿ ಮತದಾರರನ್ನು ಹೊಂದಿರುವ ಐದು ವಾರ್ಡ್‌ಗಳ ಪೈಕಿ ನಾಲ್ಕನ್ನು ಈ ಹಿಂದೆ ಶಿವಸೇನೆ(ಯುಬಿಟಿ) ಮತ್ತು ಎನ್‌ಸಿಪಿ (ಎಸ್‌ಪಿ)ಯಂತಹ ಪ್ರತಿಪಕ್ಷಗಳ ಕಾರ್ಪೊರೇಟರ್‌ಗಳು ಪ್ರತಿನಿಧಿಸಿದ್ದರು. ಈ ಪೈಕಿ ಎರಡು ವಾರ್ಡ್‌ಗಳು ಶಿವಸೇನೆ(ಯುಬಿಟಿ) ಶಾಸಕ ಆದಿತ್ಯ ಠಾಕ್ರೆ ಪ್ರತಿನಿಧಿಸುತ್ತಿರುವ ವರ್ಲಿ ವಿಧಾನಸಭಾ ವ್ಯಾಪ್ತಿಯಲ್ಲಿವೆ ಎನ್ನುವುದನ್ನು ಎಸ್‌ಇಸಿ ದತ್ತಾಂಶಗಳು ತೋರಿಸಿವೆ. ಈ ನಡುವೆ, ಪ್ರಸ್ತುತ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಪ್ರತಿಪಕ್ಷದ ನಾಯಕರು ಆರೋಪಿಸಿದ್ದಾರೆ.

ವಾರ್ತಾ ಭಾರತಿ 27 Nov 2025 5:14 pm