ಇಸ್ಲಾಮಾಬಾದ್ ಮಸೀದಿ ಸ್ಪೋಟ ಖಂಡಿಸಿದ ಭಾರತ; ಪಾತ್ರದ ಆರೋಪ ಹೊರಿಸಿದರೆ ಹುಷಾರ್ ಎಂದು ಪಾಕಿಸ್ತಾನಕ್ಕೆ ತಾಕೀತು!
ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನ ಮಸೀದಿಯಲ್ಲಿ ಸಂಭವಿಸಿದ ಭೀಕರ ಬಾಂಬ್ ಸ್ಪೋಟವನ್ನು ಭಾರತ ಅತ್ಯುಗ್ರವಾಗಿ ಖಂಡಿಸಿದೆ. ಆದರೆ ಇದೇ ವೇಳೆ ಈ ಬಾಂಬ್ ದಾಳಿಯಲ್ಲಿ ತನ್ನ ಪಾತ್ರವಿದೆ ಎಂದು ಆರೋಪಿಸಿರುವ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆಯನ್ನೂ ನೀಡಿದೆ. ಬಾಂಬ್ ದಾಳಿಯಲ್ಲಿ ಮುಗ್ಧ ನಾಗರಿಕರು ಬಲಿಯಾಗಿರುವುದು ನಿಜಕ್ಕೂ ನೋವಿನ ಸಂಗತಿ, ಆದರೆ ದಾಳಿಯಲ್ಲಿ ಯಾವುದೇ ಸಾಕ್ಷ್ಯ ನೀಡದೆ ನಮ್ಮ ಪಾತ್ರವಿದೆ ಎಂದು ಆರೋಪಿಸುವುದನ್ನು ಸಹಿಸುವುದಿಲ್ಲ ಎಂದು ಭಾರತ ತನ್ನ ಅಧಿಕೃತ ಪ್ರಕಟಣೆಯಲ್ಲಿ ಎಚ್ಚರಿಸಿದೆ. ಇಲ್ಲಿದೆ ಮಾಹಿತಿ.
T20 World Cup- ಗಾಯಾಳು ಹರ್ಷಿತ್ ರಾಣಾ ಟೂರ್ನಿಯಿಂದಲೇ ಔಟ್: ಮೊಹಮ್ಮದ್ ಸಿರಾಜ್ ಗೆ ಹಠಾತ್ ಒಲಿದ ಅದೃಷ್ಟ!
ಐಸಿಸಿ ಟಿ10 ವಿಶ್ವಕಪ್ 2026ರ ಅಭಿಯಾನದ ಹೊಸ್ತಿಲಲ್ಲೇ ಹಾಲಿ ಚಾಂಪಿಯನ್ ಟೀಂ ಇಂಡಿಯಾಗೆ ಆಘಾತ ಎದುರಾಗಿದೆ. ಮಧ್ಯಮ ವೇಗದ ಬೌಲರ್ ಹರ್ಷಿತ್ ರಾಣಾ ಅವರು ಗಾಯಗೊಂಡಿರುವ ಕಾರಣ ತಂಡದಿಂದ ಹೊರಗಿಡಲಾಗಿದೆ. ಅವರ ಬದಲಿಗೆ ಅನುಭವಿ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸಲಾಗಿದೆ. ಫೆಬ್ರವರಿ 4ರಂದು ನವಿಮುಂಬೈನಲ್ಲಿ ನಡೆದ ಅಭ್ಯಾಸ ಪುಂದ್ಯದ ವೇಳೆ ಹರ್ಷಿತ್ ರಾಣಾ ಅವರ ಮೊಣಕಾಲಿಗೆ ಗಾಯವಾಗಿತ್ತು.ಈ ಬಗ್ಗೆ ಶುಕ್ರವಾರದಂದು ಬಿಸಿಸಿಐ ಅಧಿಕೃತ ಪ್ರಕಟಣೆ ನೀಡಿದ್ದು ಹರ್ಷಿತ್ ರಾಣಾ ಅವರು ಟೂರ್ನಿಯಲ್ಲಿ ಮುಂದುವರಿಯವುದು ಸೂಕ್ತ ಅಲ್ಲ ಎಂದು ಬಿಸಿಸಿಐ ವೈದ್ಯಕೀಯ ತಂಡ ತಿಳಿಸಿರುವುದರಿಂದ ಮೊಹಮ್ಮದ್ ಸಿರಾಜ್ ಅವರನ್ನು ಆಯ್ಕೆ ಮಾಡಲಾಗಿದೆ.ಹರ್ಷಿತ್ ರಾಣಾ ಅವರು ಬುಧವಾರ ದಕ್ಷಿಣ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಕೇವಲ ಒಂದು ಓವರ್ ಅನ್ನೇ ಎಸೆದಿದ್ದರು. ಎರಡು ಬಾರಿ ರನ್ ಅಪ್ ತೆಗೆದುಕೊಂಡವರು ಓಡಲಾಗದೆ ಮೊಣಕಾಲನ್ನು ಹಿಡಿದುಕೊಂಡಿದ್ದರು. ಬಳಿಕ ಮೈದಾನ ತೊರೆದಿದ್ದರು. ಹಾಕಿದ ಒಂದು ಓವರ್ ನಲ್ಲೂ 16 ರನ್ ಬಿಟ್ಟುಕೊಟ್ಟಿದ್ದರು.ಶುಕ್ರವಾರ ಬೆಳಗ್ಗೆ ನಾಯಕ ಸೂರ್ಯಕುಮಾರ್ ಯಾದವ್ ಅವರು ಸೂರ್ಯಕುಮಾರ್ ಯಾದವ್ ಅವರನ್ನು ಅನಾರೋಗ್ಯ ಕಾಡುತ್ತಿದೆ ಎಂದು ಸಣ್ಣ ಸುಳಿವು ನೀಡಿದ್ದರು. ಸಂಜೆ ವೇಳೆ ಅವರು ವಿಶ್ವಕಪ್ ತಂಡದಿಂದ ಹೊರಬಿದ್ದಿರುವ ಬಗ್ಗೆ ಬಿಸಿಸಿಐ ಅಧಿಕೃತವಾಗಿ ಪ್ರಕಟಣೆ ನೀಡಿದೆ.ಈಗಾಗಲೇ ಭಾರತ ತಂಡದಲ್ಲಿ ಅನೇಕ ಮಂದಿಗೆ ಒಂದಿಲ್ಲೊಂದು ರೀತಿಯಲ್ಲಿ ಗಾಯದ ಸಮಸ್ಯೆ ಕಾಡುತ್ತಿದೆ. ತಂಡದ ಸ್ಪಿನ್ ಬೌಲಿಂಗ್ ಆಲ್ರೌಂಡರ್ ಆಗಿರುವ ವಾಶಿಂಗ್ಟನ್ ಸುಂದರ್ ಅವರು ಗಾಯದ ಕಾರಣಕ್ಕಾಗಿ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದರು. ಅವರು ಪಂದ್ಯಾವಳಿ ಪ್ರಾರಂಭವಾಗುವ ವೇಳೆಗೆ ಸಂಪೂರ್ಣ ಗುಣಮುಖರಾಗುತ್ತಾರೆಂಬ ನಂಬಿಕೆಯಿಂದ ಅವರನ್ನು ತಂಡದೊಳಗ ಸೇರಿಸಿಕೊಳ್ಳಲಾಗಿದೆ. ಇನ್ನು ಟಿ20 ಸ್ಪೆಷಲಿಸ್ಟ್ ಬ್ಯಾಟರ್ ಆಗಿರುವ ತಿಲಕ್ ವರ್ಮಾ ಅವರು ಸಹ ಗಾಯದಿಂದ ಚೇತರಿಸಿಕೊಂಡು ಇದೀಗ ತಂಡವನ್ನು ಸೇರಿಕೊಂಡಿದ್ದಾರೆ. ಪರಿಷ್ಕೃತ ಭಾರತ ತಂಡ ಸೂರ್ಯಕುಮಾರ್ ಯಾದವ್(ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) ಇಶಾನ್ ಕಿಶನ್(ವಿಕೆಟ್ ಕೀಪರ್), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್ (ಉಪನಾಯಕ), ರಿಂಕು ಸಿಂಗ್, ಜಸ್ಪ್ರೀತ್ ಬುಮ್ರಾ, ಅರ್ಶದೀಪ್ ಸಿಂಗ್, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ, ವಾಶಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್
ಹಿಂದೂ ಸಮ್ಮೇಳನಕ್ಕೆ ಸೂಲಿಬೆಲೆ, ಹಾರಿಕಾ ನಿರ್ಬಂಧಿಸಿದ್ದ ಬೆಳಗಾವಿ ಪೊಲೀಸರ ನೋಟಿಸ್ ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು/ಧಾರವಾಡ : ಬೆಳಗಾವಿಯ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಫೆಬ್ರವರಿ 6 ಮತ್ತು 8ರಂದು ನಡೆಯಲಿರುವ ಹಿಂದೂ ಸಮ್ಮೇಳನದಲ್ಲಿ ಭಾಗವಹಿಸಲು ಚಕ್ರವರ್ತಿ ಸೂಲಿಬೆಲೆ ಮತ್ತು ಹಾರಿಕಾ ಮಂಜುನಾಥ್ ಅವರನ್ನು ನಿರ್ಬಂಧಿಸಿ ಹೊರಡಿಸಲಾಗಿದ್ದ ಪೊಲೀಸ್ ನೋಟಿಸ್ಗಳನ್ನು ಹೈಕೋರ್ಟ್ ಧಾರವಾಡ ಪೀಠ ರದ್ದುಪಡಿಸಿದೆ. ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಅನುಮತಿ ನಿರಾಕರಿಸಿ 2026ರ ಜನವರಿ 22ರಂದು ಬೆಳಗಾವಿ ಪೊಲೀಸರು ಹೊರಡಿಸಿದ್ದ ನೋಟಿಸ್ಗಳನ್ನು ಪ್ರಶ್ನಿಸಿ ಹಿಂದೂ ಸಮ್ಮೇಳನ ಸಮಿತಿ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳನ್ನು ಗುರುವಾರ (ಫೆಬ್ರವರಿ 5) ವಿಚಾರಣೆ ನಡೆಸಿದ ನ್ಯಾಯಮೂರ್ತಿ ಲಲಿತಾ ಕನ್ನೆಗಂಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ. ಹೈಕೋರ್ಟ್ ಆದೇಶವೇನು? ಚಕ್ರವರ್ತಿ ಸೂಲಿಬೆಲೆ ಹಾಗೂ ಹಾರಿಕಾ ಅವರು ಉಂಟು ಮಾಡಬಹುದಾದ ಸಮಸ್ಯೆಗೆ ಸಂಬಂಧಿಸಿದಂತೆ ಪುರಾವೆಗಳಿಲ್ಲದೆಯೇ, ಅವರ ವಿರುದ್ಧ ಕೆಲ ಪ್ರಕರಣಗಳು ದಾಖಲಾಗಿವೆ ಎಂಬ ಕಾರಣಕ್ಕೆ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡುವುದನ್ನು ನಿಷೇಧಿಸಲು ಸಾಧ್ಯವಿಲ್ಲ. ಆಕ್ಷೇಪಾರ್ಹ ನೋಟಿಸ್ಗಳು ಕಾರಣರಹಿತ ಮತ್ತು ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ನಿಜವಾದ ಅಥವಾ ತಕ್ಷಣದ ಅಪಾಯ ಎದುರಾಗಿದೆ ಎಂಬುದನ್ನು ತೋರಿಸಲು ವಿಫಲವಾಗಿವೆ ಎಂದು ನ್ಯಾಯಾಲಯ ಆದೇಶದಲ್ಲಿ ಅಭಿಪ್ರಾಯಪಟ್ಟಿದೆ. ಪೊಲೀಸರು ಮಾಡಿರುವ ಆದೇಶವು ಸಕಾರಣಗಳನ್ನು ಹೊಂದಿಲ್ಲ. ಈ ರೀತಿಯಲ್ಲಿ ಜನರ ಮೂಲಭೂತ ಹಕ್ಕುಗಳನ್ನು ಪೊಲೀಸರು ಕಸಿಯಲಾಗದು. ಭಾಷಣಕಾರರ (ಸೂಲಿಬೆಲೆ, ಹಾರಿಕಾ) ವಿರುದ್ಧ ಪ್ರಕರಣಗಳು ದಾಖಲಾಗಿವೆ ಎಂದ ಮಾತ್ರಕ್ಕೆ ಪೊಲೀಸರು ಸಮ್ಮೇಳದಲ್ಲಿ ಅರ್ಜಿದಾರರು ಭಾಗವಹಿಸದಂತೆ ನಿರ್ಬಂಧಿಸಲಾಗದು ಎಂದು ತಿಳಿಸಿರುವ ನ್ಯಾಯಪೀಠ, ಪೊಲೀಸ್ ನೋಟಿಸ್ಗಳನ್ನು ರದ್ದುಪಡಿಸಿ ಆದೇಶಿಸಿದೆ. ಇದೇ ವೇಳೆ, ಅನುಮತಿ ಕೋರಿ ಅರ್ಜಿದಾರರು ಸಲ್ಲಿಸಿರುವ ಮನವಿಗಳನ್ನು ಕರ್ನಾಟಕ ಪೊಲೀಸ್ ಕಾಯ್ದೆಯ ಅನುಸಾರ ಪರಿಗಣಿಸಿ, ಸೂಕ್ತ ಆದೇಶ ಮಾಡಬೇಕು ಎಂದು ಪ್ರತಿವಾದಿ ಪೊಲೀಸರಿಗೆ ನ್ಯಾಯಾಲಯ ನಿರ್ದೇಶಿಸಿದೆ. ಅರ್ಜಿದಾರರ ವಾದವೇನು? ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಎಂ. ಅರುಣ್ ಶ್ಯಾಮ್ ವಾದ ಮಂಡಿಸಿ, ಕಾರ್ಯಕ್ರಮದ ಭಾಷಣಕಾರರಾದ ಚಕ್ರವರ್ತಿ ಸೂಲಿಬೆಲೆ ಹಾಗೂ ಹಾರಿಕಾ ಮಂಜುನಾಥ್ ಅವರು ಈ ಹಿಂದೆ ಇಂಥ ಐದು ಸಮ್ಮೇಳನಗಳಲ್ಲಿ ಭಾಗವಹಿಸಿದ್ದು, ಎಲ್ಲಿಯೂ ಯಾವುದೇ ರೀತಿಯ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳಾಗಿಲ್ಲ. ಅರ್ಜಿದಾರರಿಗೆ ಪ್ರತಿಕ್ರಿಯಿಸಲು ಅವಕಾಶ ನೀಡದೇ ಪೊಲೀಸರು ಆಕ್ಷೇಪಾರ್ಹ ಆದೇಶಗಳನ್ನು ಹೊರಡಿಸಿದ್ದು, ಅವುಗಳನ್ನು ರದ್ದುಪಡಿಸಬೇಕು ಎಂದು ಕೋರಿದ್ದರು. ಸರ್ಕಾರದ ಪರ ವಾದ ಮಂಡಿಸಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಜೆ.ಎಂ. ಗಂಗಾಧರ್ ಅವರು, ಈ ಇಬ್ಬರೂ ಭಾಷಣಕಾರರು ಈ ಹಿಂದೆ ಭಾಗವಹಿಸಿರುವ ಕಾರ್ಯಕ್ರಮಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಗಳಾಗಿವೆ. ಈಗ ಅರ್ಜಿದಾರರು ತಮ್ಮ ಪ್ರತಿಕ್ರಿಯೆ ಸಲ್ಲಿಸಿದ್ದು, ಅವುಗಳನ್ನು ಪರಿಗಣಿಸಿ ಸೂಕ್ತ ಆದೇಶ ಮಾಡಲಾಗುವುದು. ಸಮಸ್ಯೆಗಳು ಉದ್ಭವಿಸುವುದನ್ನು ತಡೆಯಲು ಈ ಕ್ರಮಕೈಗೊಳ್ಳಲಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದ್ದರು.
ರಿಪೇರಿ ಮಾಡಲು ಕಂಪನಿ ನಕಾರ: 2.5 ಲಕ್ಷ ರೂ. ಮೌಲ್ಯದ ಇ-ರಿಕ್ಷಾಗೆ ಬೆಂಕಿ ಹಚ್ಚಿದ ಮಹಿಳೆ!
ಭೋಪಾಲ್: ಪದೇ ಪದೇ ಕೆಡುತ್ತಿದ್ದ ತನ್ನ 2.5 ಲಕ್ಷ ರೂ. ಮೌಲ್ಯದ ಇ-ರಿಕ್ಷಾವನ್ನು ರಿಪೇರಿ ಮಾಡಲು ತಯಾರಿಕಾ ಕಂಪನಿ ಹಾಗೂ ಶೋರೂಮ್ ತಿಂಗಳುಗಟ್ಟಲೆ ನಿರಾಕರಿಸಿ, ತನಗೆ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಯುವತಿಯೊಬ್ಬಳು, ತಾನು ಇ-ರಿಕ್ಷಾ ಖರೀದಿಸಿದ ಏಜೆನ್ಸಿಯ ಎದುರೇ ಅದಕ್ಕೆ ಬೆಂಕಿ ಹಚ್ಚಿರುವ ಘಟನೆ ಮಧ್ಯಪ್ರದೇಶದ ಶಿವಪುರಿಯಲ್ಲಿ ನಡೆದಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ರಸ್ತೆ ಬದಿಯಲ್ಲಿ ನಿಲುಗಡೆ ಮಾಡಿದ್ದ ರಿಕ್ಷಾಗೆ ಪೆಟ್ರೋಲ್ ಸುರಿದ ಯುವತಿಯು, ಅದಕ್ಕೆ ಎಲ್ಲರ ಕಣ್ಣೆದುರೇ ಬೆಂಕಿ ಹಚ್ಚಿದ್ದಾರೆ. ಇದರಿಂದ ಜನನಿಬಿಡ ಮಾರುಕಟ್ಟೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಯುವತಿಯನ್ನು ಗುಡಿಯಾ ಮಹೌರ್ ಎಂದು ಗುರುತಿಸಲಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಗುಡಿಯಾ ಮಹೌರ್, “ದಿನಗೂಲಿಗಳಾದ ನಾನು ಹಾಗೂ ನನ್ನ ಪತಿ ನಾರಾಯಣ್ ಮಹೌರ್ ಇಬ್ಬರೂ ಸುಮಾರು ಆರು ತಿಂಗಳ ಹಿಂದೆ, ಅಂದಾಜು 2.30-2.50 ಲಕ್ಷ ರೂ. ತೆತ್ತು ಫೈನಾನ್ಸ್ ಸಂಸ್ಥೆಯ ಮೂಲಕ ಇ-ರಿಕ್ಷಾವನ್ನು ಖರೀದಿಸಿದ್ದೆವು. ನಮಗೆ ಮೂವರು ಮೂವರು ಮಕ್ಕಳಿದ್ದು, ಜೀವನ ಸಾಗಿಸಲು ಈ ವಾಹನವನ್ನು ಖರೀದಿಸಿದ್ದೆವು” ಎಂದು ಹೇಳಿದ್ದಾರೆ. ಗುಡಿಯಾ ಪ್ರಕಾರ, ಇ-ರಿಕ್ಷಾ ಖರೀದಿಸಿದ ನಂತರ, ಕೇವಲ ಎರಡು ತಿಂಗಳು ಮಾತ್ರ ಸಮರ್ಪಕವಾಗಿ ಓಡಿದೆ. ಕಳೆದ ನಾಲ್ಕು ತಿಂಗಳಿಂದ ನಾನು ರಿಕ್ಷಾ ಏಜೆನ್ಸಿಗೆ ಪದೇ ಪದೇ ಹೋಗುತ್ತಿದ್ದೇನೆ. ಅದನ್ನು ರಿಪೇರಿ ಮಾಡುವ ಬದಲು ಸಮಸ್ಯೆಯನ್ನು ಪರಿಹರಿಸುವಂತೆ ನಾನು ಅವರನ್ನು ಬೇಡಿಕೊಂಡಿದ್ದೇನೆ. ಆದರೆ, ಅವರು ನನ್ನನ್ನು ವಾಪಸು ಕಳಿಸಲು ಪ್ರಾರಂಭಿಸಿದರು” ಎಂದು ಆರೋಪಿಸಿದ್ದಾರೆ. ಇ-ರಿಕ್ಷಾ ನಿಷ್ಕ್ರಿಯವಾಗಿ ಮನೆಯ ಮೂಲೆಯಲ್ಲಿ ನಿಂತಿದ್ದರಿಂದ, ಅನಿವಾರ್ಯವಾಗಿ ದಿನಗೂಲಿಗೆ ಮರಳಿದ್ದಾಗಿ ಅವರು ಹೇಳಿದ್ದಾರೆ. ಇ-ರಿಕ್ಷಾದ ರಿಪೇರಿ ಮಾಡಲಾಗುವುದಿಲ್ಲ ಎಂದು ಏಜೆನ್ಸಿ ಸಾರಾಸಗಟಾಗಿ ನಿರಾಕರಿಸಿತು. ಏನೂ ಮಾಡಲು ಸಾಧ್ಯವಿಲ್ಲ ಎಂದು ಅವರು ನನಗೆ ಹೇಳಿದರು ಎನ್ನುತ್ತಾರೆ ಗುಡಿಯಾ. ಈ ಆರೋಪದ ಕುರಿತು ಸ್ಪಷ್ಟೀಕರಣ ನೀಡಿರುವ ಶೋರೂಮ್ ಉಸ್ತುವಾರಿ ಶುಭಂ ಶರ್ಮ, ತಮ್ಮಿಂದ ಯಾವುದೇ ತಪ್ಪಾಗಿರುವುದನ್ನು ಅಲ್ಲಗಳೆದಿದ್ದಾರೆ. “ಇ-ರಿಕ್ಷಾದಲ್ಲಿ ಬ್ಯಾಟರಿ ಹೊರತುಪಡಿಸಿ ಯಾವುದೇ ತಯಾರಿಕಾ ದೋಷವಿರಲಿಲ್ಲ. ಬ್ಯಾಟರಿ ಸ್ಫೋಟಗೊಂಡಿತ್ತು. ಬ್ಯಾಟರಿಗೆ ಕಂಪನಿಯು ಯಾವುದೇ ಬದಲಿ ಬ್ಯಾಟರಿ ನೀಡುವುದಿಲ್ಲ. ಅದನ್ನು ಬದಲಾಯಿಸಲು ಯಾವುದೇ ಅವಕಾಶವಿಲ್ಲ” ಎಂದು ಹೇಳಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಪೊಲೀಸರು, “ನಾವು ಸುದ್ದಿ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಧಾವಿಸಿದೆವು ಹಾಗೂ ಬೆಂಕಿ ಬೇರೆಡೆಗೆ ಹಬ್ಬದಂತೆ ತಡೆದೆವು. ವಾಸ್ತವಗಳನ್ನು ಪತ್ತೆ ಹಚ್ಚಲು ಎರಡೂ ಕಡೆಯವರಿಂದ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ” ಎಂದು ಹೇಳಿದ್ದಾರೆ.
ಪಾಕಿಸ್ತಾನದ ಘಟನೆಗೆ ಸಂತಾಪ ಸೂಚಿಸಿದ ಭಾರತ, ಪಾಕ್ ಆರೋಪಕ್ಕೆ ಖಡಕ್ ತಿರುಗೇಟು | Islamabad Incident
ಭಾರತ ಮತ್ತು ಪಾಕಿಸ್ತಾನ ನಡುವೆ ಕಳೆದ ವರ್ಷ ಯುದ್ಧ ನಡೆದಿತ್ತು, ಹಾಗೇ ಪಾಕಿಸ್ತಾನ ಮಾಡುವ ಎಲ್ಲಾ ಕುತಂತ್ರಗಳಿಗೆ ಭಾರತ ಸರಿಯಾದ ಉತ್ತರ ಕೊಡುತ್ತಲೇ ಬಂದಿದೆ. ಮತ್ತೊಂದು ಕಡೆ ಪಾಕ್ನ ನಿಜ ಬಣ್ಣ ಬಯಲು ಮಾಡುತ್ತಲೇ ಇರುತ್ತದೆ ಭಾರತ, ಹೀಗಿದ್ದರೂ ಭಾರತದ ವಿಚಾರದಲ್ಲಿ ಪಾಕ್ನ ಸರ್ಕಾರ &ರಾಜಕೀಯ ನಾಯಕರು ಪದೇ ಪದೇ ನಂಜು ತುಂಬಿದ ಮನಸ್ಸಿನಿಂದ ಮಾತನಾಡುತ್ತಾರೆ.
WPL 2026: ಆರ್ಸಿಬಿ ಡಬ್ಲ್ಯೂಪಿಎಲ್ 2026 ಟ್ರೋಫಿ ಗೆಲುವಿಗೆ ಪ್ರಮುಖ ಕಾರಣಗಳು
RCB Won WPL 2026 Trophy: ಡಬ್ಲ್ಯೂಪಿಎಲ್ 2026 ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಗೆಲುವು ಸಾಧಿಸಿ ಚಾಂಪಿಯನ್ ಆಯಿತು. ಹಾಗಾದ್ರೆ, ಆರ್ಸಿಬಿ ಟ್ರೋಫಿ ಗೆಲ್ಲಲು ಪ್ರಮುಖ ಕಾರಣಕರ್ತೆಯರಾದ ಆಟಗಾರ್ತಿಯರು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಫಬ್ರವರಿ 5ರಂದು ವಡೋದರಾದಲ್ಲಿ ನಾಲ್ಕನೇ ಆವೃತ್ತಿಯ ಡಬ್ಲ್ಯೂಪಿಎಲ್ ಫೈನಲ್
ಬೆಂಗಳೂರಿನಲ್ಲಿ ಬಳಕೆಯಲ್ಲಿಲ್ಲದ 194 ಜಾಗಗಳಿಗೆ ಮರುಜೀವ; 'ಬಯಸಿದಂತೆ ಬಯಲು' ವಿಶ್ರಾಂತಿ ತಾಣ ನಿರ್ಮಾಣ: ಏನಿದು ಯೋಜನೆ?
Open Air Ralaxation Spots In Bengaluru- ಬೆಂಗಳೂರು ಮಹಾನಗರದಲ್ಲಿ ಸಾರ್ವಜನಿಕರು ವಿಶ್ರಾಂತಿ ಪಡೆಯುವ ಸಲುವಾಗಿ ವಿವಿಧೆಡೆ ಬಯಸಿದಂತೆ ಬಯಲು ಉಪಕ್ರಮದಡಿ ವಿಶ್ರಾಂತಿ ತಾಣಗಳನ್ನು ನಿರ್ಮಿಸಲಾಗುವುದು ಎಂದು ಮುಖ್ಯ ಆಯುಕ್ತ ಮಹೇಶ್ವರ ರಾವ್ ಅವರು ತಿಳಿಸಿದ್ದಾರೆ. ಇದಕ್ಕಾಗಿ ನಗರದಲ್ಲಿ ಬಳಕೆಯಲ್ಲಿ ಇಲ್ಲದ 194 ಸ್ಥಳಗಳನ್ನು ಗುರುಸಿತಲಾಗಿದೆ. ಬೆಂಗಳೂರು ಕೇಂದ್ರದಲ್ಲಿ 43, ಉತ್ತರದಲ್ಲಿ 49, ಪೂರ್ವದಲ್ಲಿ 21, ಪಶ್ಚಿಮದಲ್ಲಿ 31 ಮತ್ತು ದಕ್ಷಿಣದಲ್ಲಿ 50 ಜಾಗಗಳನ್ನು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಉಳ್ತೂರು: ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ ಕಾರ್ಯಕ್ರಮ
ಬೆಳ್ತಂಗಡಿ; ಉಳ್ತೂರು ಮುಹಿಯುದ್ದೀನ್ ಜುಮಾ ಮಸ್ಜಿದ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಮುರ್ಶಿದುಲ್ ಅನಾಂ ದರ್ಸ್ ಉಳ್ತೂರು ಇದರ ದರ್ಸ್ ವಾರ್ಷಿಕ, ಉನ್ನತ ವಿದ್ಯಾಭ್ಯಾಸಕ್ಕಾಗಿ ಯೂನಿವರ್ಸಿಟಿಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಬೀಳ್ಕೊಡಿಗೆ ಹಾಗೂ ಮರ್ಹೂಂ ಮುಹಮ್ಮದ್ ಫಾಳಿಲಿ ಅನುಸ್ಮರಣೆಯು ಜಮಾಅತ್ ಅಧ್ಯಕ್ಷರಾದ ಕೆ.ಎಚ್ ಅಝೀಝುದ್ದೀನ್ ರವರ ಅಧ್ಯಕ್ಷತೆಯಲ್ಲಿ ಮಸ್ಜಿದ್ ವಠಾರದಲ್ಲಿ ನಡೆಯಿತು. ಸಯ್ಯಿದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ಬಾಅಲವಿ ರವರು ಅನುಸ್ಮರಣೆಗೆ ನೇತೃತ್ವ ನೀಡಿ ದುಆಶೀರ್ವಚನ ನೀಡಿದರು. ಪಾಂಡಿಯಾಳ್ ಮುದರ್ರಿಸ್ ಉಸ್ತಾದ್ ಐ.ಎಂ.ಉಮರ್ ಅಹ್ಸನಿ ಇನೋಳಿ ಸಭೆಯನ್ನು ಉದ್ಘಾಟಿಸಿ ದರು. ಉಳ್ತೂರು ಮುದರ್ರಿಸ್ ಮುಹಮ್ಮದ್ ತೌಸೀಫ್ ಸಅದಿ ಹರೇಕಳ ರವರು ದಿಕ್ಸೂಚಿ ಭಾಷಣ ಮಾಡಿದರು. ಖ್ಯಾತ ವಾಗ್ಮಿ ಹಂಝ ಮಿಸ್ಬಾಹಿ ಓಟ್ಟಪಡವು ಮುಖ್ಯ ಭಾಷಣ ಮಾಡಿದರು. ಬಶೀರ್ ಲತೀಫಿ ಮದ್ದಡ್ಕ, ನೆಲ್ವಿಸ್ಟರ್ ಪಿಂಟೋ, ಚಂದ್ರಶೇಖರ್ ಭಟ್ ಮಾತನಾಡಿದರು. ಈ ಸಂದರ್ಭದಲ್ಲಿ ಉನ್ನತ ವಿದ್ಯಾಭ್ಯಾಸಕ್ಕಾಗಿ ಯೂನಿವರ್ಸಿಟಿ ಗಳಿಗೆ ತೆರಳುವ ವಿದ್ಯಾರ್ಥಿಗಳಾದ ಸಾಬಿತ್ ಎಮ್ಮೆಮ್ಮಾಡು, ಝೈನುಲ್ ಆಬಿದ್ ಕನಕಮಜಲು, ಹಾಶಿರ್ ಕೊಯ್ಯೂರು ರವರಿಗೆ ಬೀಳ್ಕೊಡಿಗೆ ನೀಡಲಾಯಿತು. ಸಯ್ಯಿದ್ ಮುಸ್ತಫ ತಂಙಳ್ ಉಳ್ತೂರು, ಸಯ್ಯಿದ್ ಶರಪುದ್ದೀನ್ ತಂಙಳ್ ವೇಣೂರು, ನವಾಝ್ ಸಅದಿ ಕಕ್ಕೆ ಪದವು, ನಈಮುದ್ದೀನ್ ಅಝ್ಹರಿ ಪಿಲ್ಯ, ಪಿ.ಎ ಮುಹಮ್ಮದ್ ಮುಸ್ಲಿಯಾರ್ ಉಳ್ತೂರು, ತಾಜುದ್ದೀನ್ ಸಖಾಫಿ ಪುಲಾಬೆ, ಮನ್ಸೂರ್ ಸಖಾಫಿ ಕಬಕ ಗೋಳಿಯಂಗಡಿ, ಯು. ಅಬ್ಬಾಸ್ ಹಾಜಿ, ಯು.ಎಂ ಅಬ್ದುರಹ್ಮಾನ್, ಯು.ಎಂ ಸಯ್ಯದ್ ಹಸನ್, ಯು.ಎಚ್ ಇಬ್ರಾಹಿಂ, ಪಿ.ಇಸ್ಮಾಈಲ್ ಶಾಂತಿನಗರ, ಬಿ.ಮುಹಮ್ಮದ್, ರಶೀದ್ ಮಡಂತ್ಯಾರ್, ಸಯ್ಯಿದ್ ಸಲೀತ್ ತಂಙಳ್, ತೌಫೀಕ್ ವೇಣೂರು ಮುಂತಾದವರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಅಬೂಬಕರ್ ಸಿದ್ದೀಕ್ ಮುಈನಿ ಸ್ವಾಗತಿಸಿ, ಕೆ.ಎಚ್ ಸಿರಾಜುದ್ದೀನ್ ಝುಹ್ರಿ ಕಾರ್ಯಕ್ರಮ ನಿರೂಪಿಸಿದರು.
ಭಾರತ, ಬಾಂಗ್ಲಾ ಗಡಿಯ ಪ್ರಕೃತಿ ರಮಣೀಯ ತಾಣ ಶ್ನೊಂಗ್ ಪೆಡೆಂಗ್
ಸ್ವಚ್ಛ, ಪಾರದರ್ಶಕ ನೀರಿಗೆ ಖ್ಯಾತಿ ಇಲ್ಲಿನ ಉಗಂತ್ ನದಿ
ಮಹಾರಾಷ್ಟ್ರ | 17ನೇ ಮಹಡಿಯಿಂದ ಜಿಗಿದು ಉದ್ಯಮಿ ಆತ್ಮಹತ್ಯೆ; ಕಾರಣ ನಿಗೂಢ
ಸೊಲ್ಲಾಪುರ: ನಗರದ ಪ್ರಸಿದ್ಧ ‘ಮುಲ್ತಾನಿ ಬೇಕರಿ’ಯ ಮಾಲಕ ಹಾಗೂ ಹೆಸರಾಂತ ಉದ್ಯಮಿ ಸುನೀಲ್ ಮೋತಿಲಾಲ್ ಸದರಂಗಾನಿ (59) ಗುರುವಾರ ಮಧ್ಯಾಹ್ನ ವಿಜಾಪುರ ರಸ್ತೆಯ ಬಹುಮಹಡಿಯ ಕಟ್ಟಡವೊಂದರಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಿಜಾಪುರ ರಸ್ತೆಯ ಪನಾಸ್ ಅಪಾರ್ಟ್ ಮೆಂಟ್ ನ 17ನೇ ಮಹಡಿಯ ಮೇಲೆ ಸದರಂಗಾನಿ ಅವರು ಅನುಮಾನಾಸ್ಪದವಾಗಿ ಅತ್ತಿಂದಿತ್ತ ಓಡಾಡುತ್ತಿದ್ದರು. ಇದನ್ನು ಗಮನಿಸಿದ ಸ್ಥಳೀಯ ನಿವಾಸಿಗಳು ಅದನ್ನು ವಿಡಿಯೊ ಚಿತ್ರೀಕರಣ ಮಾಡಿರುವುದಲ್ಲದೆ, ಕಟ್ಟಡದ ಭದ್ರತಾ ಸಿಬ್ಬಂದಿಗೂ ತಕ್ಷಣವೇ ಮಾಹಿತಿ ನೀಡಿದ್ದಾರೆ. ತಕ್ಷಣವೇ 17ನೇ ಮಹಡಿಗೆ ಧಾವಿಸಿರುವ ಭದ್ರತಾ ಸಿಬ್ಬಂದಿ ಹಾಗೂ ಕಚೇರಿಯ ಸಿಬ್ಬಂದಿಯೊಬ್ಬರು ಸದರಂಗಾನಿಯ ಮನವೊಲಿಸಲು ಪ್ರಯತ್ನಿಸಿದ್ದಾರೆ. ಇದಾದ ಬಳಿಕ, ಸದರಂಗಾನಿಯನ್ನು 10ನೇ ಮಹಡಿಯವರೆಗೂ ಕೆಳಕ್ಕೆ ಕರೆತರಲಾಗಿತ್ತು. ಆದರೆ, ಈ ವೇಳೆ, “ನನ್ನ ಕಾರಿನ ಕೀ ಮೇಲೆ ಇದೆ” ಎಂದು ಹೇಳಿದ ಸದರಂಗಾನಿ, ಅವರ ಹಿಡಿತದಿಂದ ತಪ್ಪಿಸಿಕೊಂಡು ಮತ್ತೆ ಮಹಡಿಯ ಮೇಲೆ ಓಡಿದರು. ಇತರರು ಅವರನ್ನು ತಡೆಯಲು ಪ್ರಯತ್ನಿಸುವಷ್ಟರಲ್ಲೇ ಅವರು ಕಟ್ಟಡದಿಂದ ಕೆಳಕ್ಕೆ ಜಿಗಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಸದರಂಗಾನಿಯನ್ನು ತಕ್ಷಣವೇ ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಸದರಂಗಾನಿಯ ವಾಹನದ ಸಂಖ್ಯಾಫಲಕದ ಆಧಾರದಲ್ಲಿ ಅವರ ಗುರುತು ಪತ್ತೆ ಹಚ್ಚಲಾಗಿದೆ. ಪುಣೆಯಿಂದ ಸೊಲ್ಲಾಪುರಕ್ಕೆ ಬಂದಿದ್ದ ಸುನೀಲ್, ತೀವ್ರ ಮಾನಸಿಕ ಒತ್ತಡದಲ್ಲಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆದರೆ, ಅವರು ಪುಣೆಯಿಂದ ಸೊಲ್ಲಾಪುರಕ್ಕೆ ಬರಲು ಹಾಗೂ ಆತ್ಮಹತ್ಯೆ ಮಾಡಿಕೊಳ್ಳಲು ಏನು ಕಾರಣ ಎಂಬ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಎಲ್ಲಾ ಪ್ರಾಣಿಗಳ ಮೇಲೂ ದಯಾಭಾವ ಇರಲಿ: ಸಚಿವ ಎನ್.ಎಸ್. ಬೋಸರಾಜು
ಸಚಿವರು, ಸಂಸದರು, ಶಾಸಕರಿಂದ ಶ್ವಾನಗಳ ವೀಕ್ಷಣೆ
ಒಮಾನ್ ಮಧ್ಯಸ್ಥಿಕೆಯಲ್ಲಿ ಅಮೆರಿಕಾ- ಇರಾನ್ ಮಾತುಕತೆ
ಯುದ್ದ ತಡೆಗಟ್ಟುವ ಉದ್ದೇಶದ ಪರೋಕ್ಷ ಮಾತುಕತೆಗೆ ಚಾಲನೆ
ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ: ಗ್ರಾಮೀಣ ಕ್ರೀಡೆಗಳಿ ವೈಭವ
ರಾಯಚೂರು : ರಾಯಚೂರು ಜಿಲ್ಲಾ ಉತ್ಸವವು ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡುತ್ತಿದ್ದು, ವಿವಿಧ ಸ್ಪರ್ಧೆಗಳನ್ನು ವೀಕ್ಷಿಸಲು ಸಾರ್ವಜನಿಕರು ಅತ್ಯಂತ ಉತ್ಸಾಹದಿಂದ ಭಾಗವಹಿಸಿದರು. ರಾಯಚೂರು ಜಿಲ್ಲಾ ಉತ್ಸವ-2026ರ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿತ್ತು. ಜ. 16ರಿಂದಲೇ ವಿವಿಧ ಸ್ಪರ್ಧೆಗಳು ಪ್ರಾರಂಭಗೊಂಡು ಸೈಕ್ಲಿಂಗ್ ಮ್ಯಾರಥಾನ್ ಹಾಗೂ ಮ್ಯಾರಥಾನ್ ಓಟ, ಬಾಡಿ ಬಿಲ್ಡಿಂಗ್ ಸೇರಿದಂತೆ ವಿವಿಧ ಸ್ಪರ್ಧೆಗಳು ಈಗಾಗಲೇ ಯಶಸ್ವಿಯಾಗಿ ಜರುಗಿವೆ. ಫೆ. 6ರಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಸಂಗ್ರಾಣಿ ಕಲ್ಲು, ಉಸುಕಿನ ಮೂಟೆ ಎತ್ತುವ ಮತ್ತು ಕುಸ್ತಿ ಸೇರಿದಂತೆ ವಿವಿಧ ಗ್ರಾಮೀಣ ಕ್ರೀಡೆಗಳು ಜನರ ಮೆಚ್ಚುಗೆ ಪಡೆದುಕೊಂಡವು. ಶುಕ್ರವಾರ ನಡೆದ ಗ್ರಾಮೀಣ ಕ್ರೀಡಾ ಸ್ಪರ್ಧೆಗಳಿಗೆ ರಾಯಚೂರು ಮಹಾನಗರ ಪಾಲಿಕೆಯ ಉಪ ಆಯುಕ್ತೆ ಸಂತೋಷ ರಾಣಿ ಹಾಗೂ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವೀರೇಶ್ ನಾಯಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೆ.ಡಿ ಬಡಿಗೇರ, ಆಹಾರ ಇಲಾಖೆಯ ಉಪನಿರ್ದೇಶಕ ನಾಸಿರ ಅಹ್ಮದ್, ಶಿಕ್ಷಣ ಇಲಾಖೆಯ ರಂಗಸ್ವಾಮಿ, ಪಾಲಿಕೆ ಎಇ ಮಹೇಶ, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ದೈಹಿಕ ಶಿಕ್ಷಣ ಶಿಕ್ಷಕರು ಉಪಸ್ಥಿತರಿದ್ದರು. ಅತ್ಯಂತ ರೋಚಕತೆಯಿಂದ ಕೂಡಿದ್ದ ಸಂಗ್ರಾಣಿ ಕಲ್ಲು, ಉಸುಕಿನ ಮೂಟೆ ಎತ್ತುವ ಮತ್ತು ಕುಸ್ತಿ ಸ್ಪರ್ಧೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಕ್ರೀಡಾಪಟುಗಳು ಭಾಗವಹಿಸಿದ್ದರು. ಸಾರ್ವಜನಿಕರು ಬಿಸಿಲಿನ ತಾಪವನ್ನು ಲೆಕ್ಕಿಸದೆ ಕುತೂಹಲದಿಂದ ಸ್ಪರ್ಧೆಗಳನ್ನು ವೀಕ್ಷಿಸಿದರು. ಚಪ್ಪಾಳೆ ಹಾಗೂ ಶಿಳ್ಳೆ ಹಾಕುವ ಮೂಲಕ ಸ್ಪರ್ಧಾಳುಗಳನ್ನು ಹುರಿದುಂಬಿಸುತ್ತಿರುವುದು ಕಂಡುಬಂತು. ಸಂಗ್ರಾಣಿ ಕಲ್ಲು ಎತ್ತುವ ಸ್ಪರ್ಧೆ ವಿಜೇತರು : ಸಂಗ್ರಾಣಿ ಕಲ್ಲು ಎತ್ತುವ ಸ್ಪರ್ಧೆಯಲ್ಲಿ ಸುಮಾರು 100 ಕ್ಕೂ ಅಧಿಕ ಸಂಖ್ಯೆಯಲ್ಲಿ ಸ್ಪರ್ಧಾಳುಗಳು ಭಾಗವಹಿಸಿದ್ದು, ಇದರಲ್ಲಿ ರಾಮು ತೆಲಂಗಾಣ ಅವರು ಪ್ರಥಮ ಸ್ಥಾನ ಪಡೆದುಕೊಂಡರು. ಅದೇ ರೀತಿ ಪ್ರತಾಪ್ ನಾಯಕ ನಾಗನದೊಡ್ಡಿ ದ್ವಿತೀಯ ಮತ್ತು ಪ್ರಕಾಶ ಯಾದವ್ ಅವರು ತೃತೀಯ ಸ್ಥಾನವನ್ನು ಪಡೆದುಕೊಂಡರು. ಉಸುಕಿನ ಮೂಟೆ ಎತ್ತುವ ಸ್ಪರ್ಧೆ : ಉಸುಕಿನ ಮೂಟೆ ಎತ್ತುವ ಸ್ಪರ್ಧೆಯಲ್ಲಿ ಸುಮಾರು 30 ಕ್ಕೂ ಹೆಚ್ಚು ಸ್ಪರ್ಧಾಳುಗಳು ಭಾಗವಹಿಸಿದ್ದು, ಇದರಲ್ಲಿ ಮರಿಯಪ್ಪ ಅವರು 230 ಕೆಜಿ ಉಸುಕಿನ ಮೂಟೆ ಎತ್ತುವ ಮೂಲಕ ಪ್ರಥಮ ಸ್ಥಾನ ಪಡೆದರು. ಅದೇ ರಿತಿ ಸಕ್ರಪ್ಪ ನಾಯಕ ಅವರು 210 ಕೆಜಿ ಎತ್ತುವುದರೊಂದಿಗೆ ದ್ವಿತೀಯ ಸ್ಥಾನ ಪಡೆದರೆ, ಶಿವಕುಮಾರ ಅವರು 200 ಕೆಜಿ ತೃತೀಯ ಸ್ಥಾನವನ್ನು ಪಡೆದುಕೊಂಡರು. ಕುಸ್ತಿ ಸ್ಪರ್ಧೆಯ ವಿಜೇತರು : ಕುಸ್ತಿ ಸ್ಪರ್ಧೆಯಲ್ಲಿ 56 ಕುಸ್ತಿಪಟುಗಳು ಭಾಗವಹಿಸಿದ್ದು, ಪುರುಷರ ಕುಸ್ತಿ ಸ್ಪರ್ಧೆಯಲ್ಲಿ ಬಸವರಾಜ ಪಾಟೀಲ್ ಅವರು ‘ಎಡೆದೊರೆ ಕಂಠೀರವ’, ಹನುಮಂತ ಮರಮ್ಮನಹಳ್ಳಿ ‘ಎಡೆದೊರೆ ಕೇಸರಿ’, ಯೋಗೇಶ ‘ಎಡೆದೊರೆ ಕಿಶೋರ’ ಹಾಗೂ ಮಾರುತಿ ಅವರು ‘ಎಡೆದೊರೆ ಕುಮಾರ’ ಕುಸ್ತಿ ಗದೆ ಗೆದ್ದರು. ಮಹಿಳೆಯರ ಕುಸ್ತಿ ಸ್ಪರ್ಧೆಯಲ್ಲಿ ಜಲಜಾಕ್ಷಿ ಎಸ್ ಅವರು ಎಡೆದೊರೆ ಕಿಶೋರಿ ಮತ್ತು ಸತ್ಯಶ್ರೀ ಅವರು ‘ಎಡೆದೊರೆ ಕುಮಾರಿ’ ಕುಸ್ತಿ ಗಧೆ ಪಡೆದುಕೊಂಡರು. ಗಮನ ಸೆಳೆದ ಕುಸ್ತಿ, ಸಂಗ್ರಾಣಿ ಕಲ್ಲು, ಉಸುಕಿನ ಮೂಟೆ ಎತ್ತುವ ಸ್ಪರ್ಧೆಗಳು : ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ 2026ರ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಫೆ.6ರಂದು ಸಂಗ್ರಾಣಿ ಕಲ್ಲು, ಉಸುಕಿನ ಮೂಟೆ ಎತ್ತುವ ಮತ್ತು ಕುಸ್ತಿ ಕ್ರೀಡಾ ಸ್ಪರ್ಧೆಗಳಿಗೆ ರಾಯಚೂರು ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್ ಚಾಲನೆ ನೀಡಿದರು. ನಗರದ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದ ಆವರಣದಲ್ಲಿ ನಡೆದ ಈ ಸ್ಪರ್ಧೆಗಳಲ್ಲಿ ರಾಯಚೂರು ಸೇರಿದಂತೆ ಬಳ್ಳಾರಿ, ಗುಲ್ಬರ್ಗ, ಯಾದಗಿರಿ ಹಾಗೂ ಬೇರೆ ಬೇರೆ ಭಾಗಗಳಿಂದ 80ಕ್ಕೂ ಹೆಚ್ಚು ಸ್ಪರ್ಧಾಳುಗಳು ಆಗಮಿಸಿ ತಮ್ಮ ಶಕ್ತಿ ಪ್ರದರ್ಶನ ಮಾಡಿದರು. ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಈರಣ್ಣ ಬಿರಾದಾರ್, ಸರಕಾರಿ ನೌಕರರ ಸಂಘದ ಅಧ್ಯಕ್ಷ ಕೃಷ್ಣ ಶಾವಂತಗೇರಾ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಶರಣಬಸವರಾಜ, ಮುಖ್ಯ ಲೆಕ್ಕಾಧಿಕಾರಿ ವಿಜಯ ಶಂಕರ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವೀರೇಶ ನಾಯಕ, ಶಾಲಾ ಶಿಕ್ಷಣ ಇಲಾಖೆಯ ಕೆ.ಡಿ ಬಡಿಗೇರ, ರಂಗಸ್ವಾಮಿ ಬೇರೆ ಬೇರೆ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರು ಇನ್ನಿತರರು ಉಪಸ್ಥಿತರಿದ್ದರು.
ಅಮೆರಿಕ ಜೊತೆ ಇರಾನ್ ಸಭೆ ಬಹುತೇಕ ಸಕ್ಸಸ್, ಮಧ್ಯಪ್ರಾಚ್ಯ ಶಾಂತಿಗಾಗಿ ಭಾರಿ ಪ್ರಯತ್ನ | Iran Foreign Minister
ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಮೂಡಿಸುವ ಪ್ರಯತ್ನ ಮೊದಲ ಹಂತದಲ್ಲೇ ಭರ್ಜರಿಯಾಗಿ ಸಕ್ಸಸ್ ಆಗುತ್ತಿದೆ. ಎರಡೂ ದೇಶಗಳ ನಡುವೆ ಇನ್ನೇನು ಪರಮಾಣು ಯುದ್ಧ ನಡೆಯುವ ಆತಂಕವು ಆವರಿಸಿತ್ತು, ಅಲ್ಲದೆ ಅಮೆರಿಕ ತನ್ನ ಸೇನೆಯ ದೊಡ್ಡ ಯುದ್ಧ ನೌಕೆ ಹಾಗೂ ಯುದ್ಧ ವಿಮಾನಗಳನ್ನ ಇರಾನ್ ಸಮೀಪಕ್ಕೆ ನುಗ್ಗಿಸಿತ್ತು. ಎಲ್ಲವನ್ನೂ ಕಂಡು ಇಡೀ ಪ್ರಪಂಚ ಮತ್ತೊಂದು ಮಹಾಯುದ್ಧ ಫಿಕ್ಸ್
ಭಾರತ-ಬಾಂಗ್ಲಾದೇಶ ನಂಟು ತೃತೀಯ ದೇಶಗಳೊಂದಿಗೆ ಸಂಬಂಧಗಳಿಂದ ಸ್ವತಂತ್ರವಾಗಿದೆ:ಕೇಂದ್ರ ಸರಕಾರ
ಹೊಸದಿಲ್ಲಿ: ಬಾಂಗ್ಲಾದೇಶದೊಂದಿಗೆ ಭಾರತದ ಬಾಂಧವ್ಯವು ತೃತೀಯ ದೇಶಗಳೊಂದಿಗೆ ಅದರ ಸಂಬಂಧಗಳಿಂದ ಸ್ವತಂತ್ರವಾಗಿದೆ ಮತ್ತು ಭಾರತದ ರಾಷ್ಟ್ರೀಯ ಹಿತಾಸಕ್ತಿಗಳ ಮೇಲೆ ಪರಿಣಾಮ ಬೀರುವ ಬೆಳವಣಿಗೆಗಳನ್ನು ಸರಕಾರವು ನಿರಂತರವಾಗಿ ಗಮನಿಸುತ್ತಿದ್ದು, ಅವುಗಳನ್ನು ರಕ್ಷಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಕೇಂದ್ರವು ಶುಕ್ರವಾರ ಸಂಸತ್ತಿನಲ್ಲಿ ತಿಳಿಸಿದೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ನೀಡಿದ ಲಿಖಿತ ಉತ್ತರದಲ್ಲಿ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿವರ್ಧನ ಸಿಂಗ್ ಅವರು,ಪ್ರಜಾಸತ್ತಾತ್ಮಕ,ಸ್ಥಿರ,ಶಾಂತಿಪೂರ್ಣ,ಪ್ರಗತಿಶೀಲ ಮತ್ತು ಎಲ್ಲರನ್ನೂ ಒಳಗೊಂಡ ಬಾಂಗ್ಲಾದೇಶಕ್ಕೆ ಭಾರತದ ಬೆಂಬಲವನ್ನು ಸಂಬಂಧಿತ ಎಲ್ಲ ಸಂವಹನಗಳಲ್ಲಿ ಅಲ್ಲಿಯ ಮಧ್ಯಂತರ ಸರಕಾರಕ್ಕೆ ತಿಳಿಸಲಾಗಿದೆ ಎಂದು ಹೇಳಿದರು. ಇನ್ನೊಂದು ಪ್ರಶ್ನೆಗೆ ನೀಡಿದ ಉತ್ತರದಲ್ಲಿ ಸಿಂಗ್,ಸರಕಾರವು ನೆರೆಯ ದೇಶಗಳಲ್ಲಿ,ವಿಶೇಷವಾಗಿ ಭಾರತದ ಭದ್ರತೆ ಮತ್ತು ರಾಷ್ಟ್ರೀಯ ಹಿತಾಸಕ್ತಿಗಳ ಮೇಲೆ ಪರಿಣಾಮವನ್ನು ಬೀರಬಲ್ಲ ಬೆಳವಣಿಗೆಗಳ ಮೇಲೆ ನಿರಂತರ ನಿಗಾಯಿರಿಸಿದೆ. ಭಾರತವು ತನ್ನ ನೆರೆ ರಾಷ್ಟ್ರಗಳೊಂದಿಗೆ ಹೊಂದಿರುವ ಸಂಬಂಧಗಳಿಗೆ ಅತ್ಯಂತ ಹೆಚ್ಚು ಆದ್ಯತೆಯನ್ನು ನೀಡುತ್ತದೆ. ಈ ಸಂಬಂಧಗಳು ಬಹು ಆಯಾಮಗಳನ್ನು ಹೊಂದಿವೆ ಮತ್ತು ಪರಸ್ಪರ ಹಿತಾಸಕ್ತಿಗಳು,ಸಂವೇದನೆಗಳು ಮತ್ತು ಅಸ್ತಿತ್ವದಲ್ಲಿರುವ ದ್ವಿಪಕ್ಷೀಯ,ಪ್ರಾದೇಶಿಕ ಮತ್ತು ಜಾಗತಿಕ ಪರಿಸ್ಥಿತಿಗಳಿಗೆ ಅನುಗುಣವಾಗಿ ವಿಕಸನಗೊಳ್ಳುತ್ತವೆ ಎಂದು ಹೇಳಿದರು. ಭಾರತ ಮತ್ತು ಬಾಂಗ್ಲಾದೇಶ ನಡುವಿನ ದ್ವಿಪಕ್ಷೀಯ ಸಂಬಂಧಗಳು ಪ್ರಸ್ತುತ ಸೂಕ್ಷ್ಮ ಹಂತದಲ್ಲಿವೆಯೇ ಮತ್ತು ಪಾಕಿಸ್ತಾನವು ಈ ಪರಿಸ್ಥಿತಿಯನ್ನು ತನ್ನ ಲಾಭಕ್ಕೆ ಬಳಸಿಕೊಳ್ಳಲು ಪ್ರಯತ್ನಿಸುತ್ತಿದೆಯೇ ಎಂದು ಸಚಿವಾಲಯವನ್ನು ಪ್ರಶ್ನಿಸಲಾಗಿತ್ತು. ನೆರೆಯ ದೇಶಗಳಾಗಿ ಭಾರತ ಮತ್ತು ಬಾಂಗ್ಲಾದೇಶ ಗಾಢವಾದ ಐತಿಹಾಸಿಕ,ಭೌಗೋಳಿಕ,ಸಾಂಸ್ಕೃತಿಕ,ಭಾಷಾತ್ಮಕ ಮತ್ತು ಸಾಮಾಜಿಕ ಸಂಬಂಧಗಳನ್ನು ಹಂಚಿಕೊಂಡಿವೆ. ನಮ್ಮ ದ್ವಿಪಕ್ಷೀಯ ಸಂಬಂಧಗಳು ಜನ ಕೇಂದ್ರಿತ ಅಭಿವೃದ್ಧಿಯತ್ತ ಗಮನ ಹರಿಸಿವೆ. ಸಾಂಸ್ಥಿಕ ದ್ವಿಪಕ್ಷೀಯ ವ್ಯವಸ್ಥೆಗಳಡಿ ಎರಡೂ ದೇಶಗಳ ನಡುವೆ ಹಲವಾರು ವಿನಿಮಯಗಳು ಮತ್ತು ಸಭೆಗಳು ಮುಂದುವರಿದಿವೆ ಎಂದು ಸಿಂಗ್ ತಿಳಿಸಿದರು. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ,ವಿಶೇಷವಾಗಿ ಹಿಂದೂಗಳ ಬಹಿರಂಗ ಹತ್ಯೆಗಳ ಕುರಿತು ಪ್ರಶ್ನೆಗೆ ಉತ್ತರಿಸಿದ ಸಿಂಗ್, ಬಾಂಗ್ಲಾದೇಶದಲ್ಲಿನ ಅಲ್ಪಸಂಖ್ಯಾತರ ಸುರಕ್ಷತೆ ಮತ್ತು ಭದ್ರತೆಯ ವಿಷಯವನ್ನು ಭಾರತವು ಎಲ್ಲ ಸಂಬಂಧಿತ ಸಂದರ್ಭಗಳಲ್ಲಿ ಅಲ್ಲಿನ ಅಧಿಕಾರಿಗಳೊಂದಿಗೆ ಮತ್ತು ಅತ್ಯುನ್ನತ ಮಟ್ಟದಲ್ಲಿಯೂ ನಿರಂತರವಾಗಿ ಪ್ರಸ್ತಾವಿಸಿದೆ. ಪ್ರಧಾನಿಯವರು ಬಾಂಗ್ಲಾದೇಶದೊಂದಿಗೆ ಈ ವಿಷಯವನ್ನು ಎತ್ತಿದ್ದಾರೆ. ಫೆ.16,2025ರಂದು ಬಾಂಗ್ಲಾದೇಶದ ವಿದೇಶಾಂಗ ಸಲಹೆಗಾರ ತೌಹಿದ್ ಹುಸೇನ್ ಅವರೊಂದಿಗೆ ಮಾತುಕತೆ ಸಂದರ್ಭದಲ್ಲಿ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರೂ ಈ ವಿಷಯವನ್ನು ಪ್ರಸ್ತಾವಿಸಿದ್ದಾರೆ ಎಂದು ತಿಳಿಸಿದರು.
ಕಾಂಬೋಡಿಯಾ, ಮ್ಯಾನ್ಮಾರ್, ಲಾವೋಸ್ನ ಸೈಬರ್ ಅಪರಾಧ ಕೇಂದ್ರಗಳಿಂದ 6,998 ಭಾರತೀಯರ ರಕ್ಷಣೆ: ಕೇಂದ್ರ ಸರಕಾರ
ಹೊಸದಿಲ್ಲಿ: 2022 ಮತ್ತು 2025ರ ನಡುವೆ ಕಾಂಬೋಡಿಯಾ, ಮ್ಯಾನ್ಮಾರ್ ಮತ್ತು ಲಾವೋಸ್ನ ಸೈಬರ್ ಅಪರಾಧ ಕೇಂದ್ರಗಳಿಂದ ಒಟ್ಟು 6,998 ಭಾರತೀಯ ಪ್ರಜೆಗಳನ್ನು ರಕ್ಷಿಸಲಾಗಿದೆ ಎಂದು ಕೇಂದ್ರ ಸರಕಾರವು ಸಂಸತ್ತಿನಲ್ಲಿ ತಿಳಿಸಿದೆ. ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿವರ್ಧನ ಸಿಂಗ್ ಅವರು ಆಗ್ನೇಯ ಏಶ್ಯಾದಲ್ಲಿಯ ಸೈಬರ್ ಅಪರಾಧ ಕೇಂದ್ರಗಳಿಗೆ ಭಾರತೀಯರನ್ನು ಕಳ್ಳಸಾಗಣೆ ಮಾಡಲಾಗುತ್ತಿರುವ ಅಥವಾ ಅಲ್ಲಿ ಅವರನ್ನು ಸಿಲುಕಿಸಲಾಗುತ್ತಿರುವ ಕುರಿತು ಟಿಎಂಸಿ ಸಂಸದ ಸಾಕೇತ್ ಗೋಖಲೆಯವರ ಪ್ರಶ್ನೆಗೆ ಗುರುವಾರ ಲೋಕಸಭೆಯಲ್ಲಿ ನೀಡಿದ ಲಿಖಿತ ಉತ್ತರದಲ್ಲಿ ಈ ಮಾಹಿತಿಯನ್ನು ಒದಗಿಸಿದರು. ಕಾಂಬೋಡಿಯಾ,ಮ್ಯಾನ್ಮಾರ್ ಮತ್ತು ಲಾವೋಸ್ನಲ್ಲಿ ನಕಲಿ ಉದ್ಯೋಗದ ಆಫರ್ಗಳನ್ನು ನೀಡಿ ಆಮಿಷವೊಡ್ಡುವ ಮೂಲಕ ಭಾರತೀಯ ಪ್ರಜೆಗಳನ್ನು ಅಲ್ಲಿ ಸೈಬರ್ ಅಪರಾಧಗಳು ಮತ್ತು ಇತರ ವಂಚಕ ಚಟುವಟಿಕೆಗಳಲ್ಲಿ ತೊಡಗಿಸುವ ‘ಸಂದೇಹಾಸ್ಪದ ಕಂಪನಿಗಳ’ ಬಗ್ಗೆ ಭಾರತ ಸರಕಾರಕ್ಕೆ ಮಾಹಿತಿ ಲಭಿಸಿದೆ ಎಂದು ಸಿಂಗ್ ತಿಳಿಸಿದರು. ಅಕ್ರಮ ಹಾಗೂ ವಂಚಕ ನೇಮಕಾತಿ ಏಜೆಂಟ್ಗಳು/ಸಂಸ್ಥೆಗಳ ಮೂಲಕ ಮತ್ತು ಅಕ್ರಮ ಮಾರ್ಗಗಳ ಮೂಲಕ ಭಾರತೀಯರು ತಮ್ಮ ಸ್ವಂತ ಇಚ್ಛೆಯಿಂದ ಈ ಸೈಬರ್ ಅಪರಾಧ ಕೇಂದ್ರಗಳನ್ನು ತಲುಪುತ್ತಿರುವುದರಿಂದ ಈ ದೇಶಗಳಲ್ಲಿ ಸಿಕ್ಕಿಹಾಕಿಕೊಂಡಿರುವ ಭಾರತೀಯ ಪ್ರಜೆಗಳ ನಿಖರ ಸಂಖ್ಯೆ ತಿಳಿದಿಲ್ಲ ಎಂದು ಅವರು ಹೇಳಿದರು. ಭಾರತ ಸರಕಾರವು 2022 ಮತ್ತು 2025ರ ನಡುವೆ ಕಾಂಬೋಡಿಯಾದ ಸೈಬರ್ ಅಪರಾಧ ಕೇಂದ್ರಗಳಿಂದ 2,533,ಮ್ಯಾನ್ಮಾರ್ನಿಂದ 2,168 ಮತ್ತು ಲಾವೋಸ್ನಿಂದ 2,297 ಭಾರತೀಯರನ್ನು ರಕ್ಷಿಸಿದೆ ಎಂದೂ ಸಿಂಗ್ ತಿಳಿಸಿದರು. ಈ ದೇಶಗಳಲ್ಲಿಯ ಸೈಬರ್ ಅಪರಾಧ ಕೇಂದ್ರಗಳಲ್ಲಿ ಭಾರತೀಯರನ್ನು ಬಲವಂತದಿಂದ ದುಡಿಸುತ್ತಿರುವ ವಿಷಯವನ್ನು ಕೇಂದ್ರ ಸರಕಾರವು ಅಲ್ಲಿಯ ಸರಕಾರಗಳ ಬಳಿ ಪ್ರಸ್ತಾವಿಸಿದೆ ಎಂದು ಸಿಂಗ್ ತಿಳಿಸಿದರು. ಕಾಂಬೋಡಿಯಾ ಮತ್ತು ಲಾವೋಸ್ಗಳಲ್ಲಿ ನಕಲಿ ಉದ್ಯೋಗಾವಕಾಶಗಳ ವಿರುದ್ಧ ನಾಗರಿಕರಿಗೆ ಎಚ್ಚರಿಕೆ ನೀಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯವು,ಸರಕಾರದಿಂದ ಅನುಮೋದನೆ ಹೊಂದಿರುವ ಅಧಿಕೃತ ಏಜೆಂಟ್ಗಳ ಮೂಲಕ ಮಾತ್ರ ಉದ್ಯೋಗಕ್ಕಾಗಿ ಪ್ರಯತ್ನಿಸುವಂತೆ ಆಗ್ರಹಿಸಿದೆ.
Uttar Pradesh | ಯೋಧನ ಗುಂಡಿಕ್ಕಿ ಹತ್ಯೆ
ಹಾಥರಸ್: ಯೋಧನೋರ್ವನನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದ ಘಟನೆ ಇಲ್ಲಿ ಗುರುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಯಾದ ಯೋಧನನ್ನು ಅಖಿಲೇಶ್ ಚತುರ್ವೇದಿ (28) ಎಂದು ಗುರುತಿಸಲಾಗಿದೆ. ಸಮದ್ಪುರ ಗ್ರಾಮದ ನಿವಾಸಿಯಾಗಿರುವ ಅಖಿಲೇಶ್ ಚತುರ್ವೇದಿಯನ್ನು ಆಗ್ರಾದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು ಎಂದು ಅವರು ಹೇಳಿದ್ದಾರೆ. ಅಖಿಲೇಶ್ ಚೌಧರಿ ಅವರು ಹಾಥರಸ್ನತ್ತ ವಾಹನದಲ್ಲಿ ಹೋಗುತ್ತಿರುವಾಗ ಅಲಿಗಢ-ಆಗ್ರಾ ರಸ್ತೆಯಲ್ಲಿರುವ ಕೋಲ್ಡ್ ಸ್ಟೋರೇಜ್ ಸಮೀಪ ಕಾರು ಹಾಗೂ ಬೈಕ್ನಲ್ಲಿ ಆಗಮಿಸಿದ ದುಷ್ಕರ್ಮಿಗಳು ಅವರನ್ನು ಸುತ್ತುವರಿದು ಮನಬಂದಂತೆ ಗುಂಡು ಹಾರಿಸಿದರು. ಅಖಿಲೇಶ್ ಚೌಧರಿ ಅವರು ತನ್ನ ವಾಹನದಿಂದ ಇಳಿದು ಓಡಲು ಪ್ರಯತ್ನಿಸಿದರು. ಆದರೆ, ಗುಂಡಿನ ದಾಳಿಯಿಂದ ಗಂಭೀರ ಗಾಯಗೊಂಡು ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ಬಳ್ಳಾರಿ | ಜಿಲ್ಲಾ ಕೇಂದ್ರದಲ್ಲಿ ಮಹನೀಯರ ಜಯಂತಿ ಶಿಷ್ಟಾಚಾರದನ್ವಯ ಅಚ್ಚುಕಟ್ಟಾಗಿ ಆಚರಣೆ
ಬಳ್ಳಾರಿ : ಜಿಲ್ಲಾ ಕೇಂದ್ರದಲ್ಲಿ ವಿವಿಧ ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಶಿಷ್ಟಾಚಾರದನ್ವಯ ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಯೋಜಿಸುವ ನಿರ್ಧಾರ ಕೈಗೊಳ್ಳಲಾಗಿದೆ. ವಿವಿಧ ಮಹನೀಯರ ಜಯಂತಿ ಆಚರಣೆಗೆ ಸಂಬಂಧಿಸಿದಂತೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರೊಂದಿಗೆ ಏರ್ಪಡಿಸಿದ್ದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ ಅವರು, ಜಿಲ್ಲಾಡಳಿತದಿಂದ ಫೆ.15 ರಂದು ಸಂತ ಸೇವಾಲಾಲ್ ಜಯಂತಿ, ಫೆ.19 ರಂದು ಛತ್ರಪತಿ ಶಿವಾಜಿ ಜಯಂತಿ ಹಾಗೂ ಫೆ.20 ರಂದು ಸಂತ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮಗಳನ್ನು ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಅಚ್ಚುಕಟ್ಟಾಗಿ ಆಯೋಜಿಸಲು ಅಗತ್ಯ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು. ಜಿಲ್ಲೆಯಲ್ಲಿ ಬ್ಯಾನರ್ ಅಳವಡಿಕೆಗೆ ಕಟ್ಟುನಿಟ್ಟಿನ ನಿಯಮಗಳಿದ್ದು, ಮಹಾನಗರ ಪಾಲಿಕೆಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ. ಡಿಜೆ ಧ್ವನಿವರ್ಧಕ ಬಳಕೆ ಹಾಗೂ ಬೈಕ್ ರ್ಯಾಲಿಗೆ ಅವಕಾಶವಿಲ್ಲ. ಶಾಂತಿ–ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಭಕ್ತಿ–ಭಾವದಿಂದ ಮಹನೀಯರ ಜಯಂತಿಗಳನ್ನು ಆಚರಿಸಬೇಕು ಎಂದು ಅವರು ಹೇಳಿದರು. ಶಿಷ್ಟಾಚಾರದನ್ವಯ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ಗಣ್ಯರು, ಸಂಘ–ಸಂಸ್ಥೆಗಳಿಗೆ ವಿತರಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ಮಹನೀಯರ ಆಚಾರ–ವಿಚಾರಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಪರಿಣಿತರನ್ನು ಸಂಪನ್ಮೂಲ ವ್ಯಕ್ತಿಗಳಾಗಿ ನಿಯೋಜಿಸಿ ವಿಶೇಷ ಉಪನ್ಯಾಸಗಳನ್ನು ಆಯೋಜಿಸಬೇಕು ಎಂದು ತಿಳಿಸಿದರು. ಜಯಂತಿ ಕಾರ್ಯಕ್ರಮದ ಅಂಗವಾಗಿ ಮೆರವಣಿಗೆ ನಡೆಯಲಿದ್ದು, ಯಾವುದೇ ಅಡಚಣೆ ಉಂಟಾಗದಂತೆ ಸೂಕ್ತ ವ್ಯವಸ್ಥೆ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳನ್ನು ನಿಯೋಜಿಸಲಾಗುವುದು ಎಂದರು. ವೇದಿಕೆ ಕಾರ್ಯಕ್ರಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಸ್ವಚ್ಛತೆ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಜಯಂತಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಮಾಜದ ಮುಖಂಡರು ತಮ್ಮ ಸಲಹೆ–ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ, ಮಹಾನಗರ ಪಾಲಿಕೆ, ಪೊಲೀಸ್ ಇಲಾಖೆ, ಡಿಡಿಪಿಐ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.
T20 World Cup 2026: ಫೆಬ್ರವರಿ 7ರಿಂದ ಟಿ20 ವಿಶ್ವಕಪ್ 2026 ಶುರು: ಇಲ್ಲಿದೆ ಭಾರತದ ಪಂದ್ಯಗಳ ವೇಳಾಪಟ್ಟಿ
T20 World Cup 2026: ಫೆಬ್ರವರಿ 7ರ ಶನಿವಾರದಿಂದ ಆರಂಭ ಆಗಲಿರುವ ಟಿ20 ವಿಶ್ವಕಪ್ 2026ಕ್ಕೆ ಟೀಮ್ ಇಂಡಿಯಾ ಭರ್ಜರಿ ಸಿದ್ಧತೆ ನಡೆಸಿದೆ. ಭಾರತ ಮತ್ತು ಶ್ರೀಲಂಕಾ ಸಹ-ಆತಿಥ್ಯ ವಹಿಸಿಕೊಂಡಿರುವ ಈ ಮಹತ್ವದ ಟೂರ್ನಿ ಒಂದು ತಿಂಗಳ ಕಾಲ ನಡೆಯಲಿದೆ. ಹಾಗಾದ್ರೆ ಭಾರತದ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ವಿಶ್ವಕಪ್ಗೆ ಮುನ್ನ ನಡೆದ ಅಭ್ಯಾಸ
ಬಳ್ಳಾರಿ | ಬಿ.ಇಡಿ ಫಲಿತಾಂಶ; ಒಂದೇ ದಿನದಲ್ಲಿ ಪ್ರಕಟಣೆ : ಶ್ರೀಕೃಷ್ಣದೇವರಾಯ ವಿವಿಯ ಸಾಧನೆ
ಬಳ್ಳಾರಿ : ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು ಬಿ.ಇಡಿ ಪದವಿಯ ಮೌಲ್ಯಮಾಪನ ಮುಗಿದ ಒಂದೇ ದಿನದಲ್ಲಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. ಕಳೆದ ತಿಂಗಳು ಮುಕ್ತಾಯಗೊಂಡಿದ್ದ ಎರಡನೇ ಹಾಗೂ ನಾಲ್ಕನೇ ಸೆಮಿಸ್ಟರ್ಗಳ ಬಿ.ಇಡಿ ಪರೀಕ್ಷೆಗಳ ಮೌಲ್ಯಮಾಪನ ಪ್ರಕ್ರಿಯೆಯನ್ನು ಸತತ 10 ದಿನಗಳಲ್ಲಿ ಪೂರ್ಣಗೊಳಿಸಿ, ಫಲಿತಾಂಶವನ್ನು ಯುಯುಸಿಎಂಎಸ್ ಪೋರ್ಟಲ್ನಲ್ಲಿ ಗುರುವಾರ ಪ್ರಕಟಿಸಲಾಗಿದೆ. ವಿಶ್ವವಿದ್ಯಾಲಯದ ಅಧೀನದಲ್ಲಿರುವ 14 ಕಾಲೇಜುಗಳ ಸುಮಾರು 2,500 ವಿದ್ಯಾರ್ಥಿಗಳು ಈ ಪರೀಕ್ಷೆಗಳಲ್ಲಿ ಭಾಗವಹಿಸಿದ್ದರು. ಅವರು ಬರೆದಿದ್ದ ಸುಮಾರು 15,000 ಉತ್ತರಪತ್ರಿಕೆಗಳನ್ನು ಬಿ.ಇಡಿ ಕೋರ್ಸ್ನ 42 ಮೌಲ್ಯಮಾಪಕರು ನಿರಂತರವಾಗಿ ಮೌಲ್ಯಮಾಪನ ನಡೆಸಿದ್ದಾರೆ. ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಮುನಿರಾಜು ಅವರು ಮಾತನಾಡಿ, ಇದು ವಿಶ್ವವಿದ್ಯಾಲಯದ ಇತಿಹಾಸದಲ್ಲೇ ಒಂದು ಮಹತ್ವದ ಮೈಲಿಗಲ್ಲಾಗಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತ್ವರಿತವಾಗಿ ಫಲಿತಾಂಶ ಪ್ರಕಟಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಪರೀಕ್ಷಾಂಗ ಕುಲಸಚಿವ ಪ್ರೊ. ಎನ್.ಎಂ. ಸಾಲಿ ಅವರು, ಫಲಿತಾಂಶ ಪ್ರಕಟಣೆಗೆ ಮಾರ್ಗದರ್ಶನ ನೀಡಿದ ಕುಲಪತಿಗಳಿಗೆ, ಮೌಲ್ಯಮಾಪನ ಮೇಲ್ವಿಚಾರಕರು, ಮೌಲ್ಯಮಾಪಕರು ಹಾಗೂ ಕಚೇರಿ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಬಿ.ಇಡಿ ಪರೀಕ್ಷಾ ಫಲಿತಾಂಶಗಳನ್ನು ತುರ್ತಾಗಿ ಪ್ರಕಟಿಸಲು ಮುತುವರ್ಜಿ ವಹಿಸಿ ಕಾರ್ಯನಿರ್ವಹಿಸಿದ ವಿಶ್ವವಿದ್ಯಾಲಯದ ಕುಲಪತಿ ಹಾಗೂ ಪರೀಕ್ಷಾಂಗ ಕುಲಸಚಿವರಿಗೆ ಆಡಳಿತಾಧಿಕಾರಿ ಪ್ರೊ. ತಿಪ್ಪೇರುದ್ರಪ್ಪ ಜೆ., ವಿತ್ತಾಧಿಕಾರಿ ನಾಗರಾಜ, ವಿವಿಧ ನಿಕಾಯಗಳ ಡೀನರು, ವಿಭಾಗಗಳ ಮುಖ್ಯಸ್ಥರು ಹಾಗೂ ಬೋಧಕ–ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಬಿಎಲ್ಒ ಸಾವು: ಎಸ್ಐಆರ್ ಕೆಲಸದ ಒತ್ತಡ ಕಾರಣ ಎಂದು ಆರೋಪಿಸಿದ ಕುಟುಂಬ
ಕೋಲ್ಕತಾ: ಪಶ್ಚಿಮಬಂಗಾಳದ ಮುರ್ಶಿದಾಬಾದ್ ಜಿಲ್ಲೆಯಲ್ಲಿ ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ)ಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)ಯ ಕೆಲಸದ ಒತ್ತಡದಿಂದ ಸಾವು ಸಂಭವಿಸಿದೆ ಎಂದು ಅವರ ಕುಟುಂಬ ಆರೋಪಿಸಿದೆ. ಮೃತಪಟ್ಟ ಬೂತ್ ಮಟ್ಟದ ಅಧಿಕಾರಿಯನ್ನು ಮಾಯಾ ಮುಖೋಪಾಧ್ಯಾಯ (58) ಎಂದು ಗುರುತಿಸಲಾಗಿದೆ. ಇವರು ಹರಿಹರ್ಪರ ಬ್ಲಾಕ್ ವ್ಯಾಪ್ತಿಯ ಶ್ರೀಪುರ ನಮುಪಾಡ ಶಿಶು ಶಿಕ್ಷಾ ಕೇಂದ್ರದಲ್ಲಿ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮತದಾರರ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಡೆಯುತ್ತಿರುವ ನಡುವೆ ಅವರನ್ನು ಇತ್ತೀಚೆಗೆ ಬೂತ್ ನಂ. 251ರಲ್ಲಿ ಬಿಎಲ್ಒ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಅವರು ಗುರುವಾರ ರಾತ್ರಿ ಮನೆಯಲ್ಲಿ ಕುಸಿದು ಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದರು ಎಂದು ಅವರ ಕುಟುಂಬದ ಸದಸ್ಯರು ಹೇಳಿದ್ದಾರೆ. ಬಿಎಲ್ಒ ಜವಾಬ್ದಾರಿ ನೀಡಿದ ಬಳಿಕ ಮಖೋಪಾಧ್ಯಾಯ ಅವರು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು. ವಿಶೇಷ ತೀವ್ರ ಪರಿಷ್ಕರಣೆಯ ಸಂದರ್ಭ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿದರೆ, ಗ್ರಾಮಸ್ಥರಿಂದ ತೀವ್ರ ವಿರೋಧ ವ್ಯಕ್ತವಾಗುವ ಭೀತಿ ಅವರಿಗಿತ್ತು ಎಂದು ಅವರ ಕುಟುಂಬ ಆರೋಪಿಸಿದೆ. ‘‘ಬಿಎಲ್ಒ ಆಗಿ ನಿಯೋಜಿತರಾದ ಬಳಿಕ ನನ್ನ ತಾಯಿಗೆ ಒತ್ತಡವನ್ನು ನಿಭಾಯಿಸಲು ಸಾಧ್ಯವಾಗಲಿಲ್ಲ. ಈ ಒತ್ತಡದಿಂದಾಗಿ ಅವರ ಆರೋಗ್ಯ ಹದಗೆಟ್ಟಿತು. ಅನಂತರ ಅವರನ್ನು ಮುರ್ಶಿದಾಬಾದ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಯಿತು’’ ಎಂದು ಅವರ ಕಿರಿಯ ಪುತ್ರ ರೂಬೆಲ್ ಮಂಡಲ್ ತಿಳಿಸಿದ್ದಾರೆ. ಅವರ ಮೇಲ್ವಿಚಾರಣೆಯಲ್ಲಿ ಇರುವ ಮತಗಟ್ಟೆಯಲ್ಲಿ ಸುಮಾರು 830 ಮತದಾರರಿದ್ದರು. ಎಸ್ಐಆರ್ ಪ್ರಕ್ರಿಯೆಯ ಭಾಗವಾಗಿ ಸುಮಾರು 320 ಮತದಾರರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸು ನೀಡಲಾಗಿತ್ತು ಎಂದು ಅವರು ಪ್ರತಿಪಾದಿಸಿದ್ದರು. ‘‘ಹೆಸರುಗಳನ್ನು ಅಳಿಸಿದರೆ, ಗ್ರಾಮಸ್ಥರು ನಮ್ಮ ಮನೆ ಮೇಲೆ ದಾಳಿ ಮಾಡಬಹುದು ಎಂದು ಅವರು ಆಗಾಗ ಹೇಳುತ್ತಿದ್ದರು. ಅವರು ನಿರಂತರ ಭೀತಿಯಲ್ಲಿ ಜೀವಿಸುತ್ತಿದ್ದರು’’ ಎಂದು ಮಂಡಲ್ ಹೇಳಿದ್ದಾರೆ. ಮುಖೋಪಾಧ್ಯಾಯ ಅವರಿಗೆ ವಯೋಸಹಜ ಕಾಯಿಲೆಗಳಿದ್ದುವು. ಬಿಎಲ್ಒ ಕರ್ತವ್ಯವನ್ನು ನಿರ್ವಹಿಸಲು ಅವರಿಗೆ ಇಷ್ಟ ಇರಲಿಲ್ಲ. ಆದರೆ, ಆಡಳಿತಾತ್ಮಕ ಆದೇಶಗಳನ್ನು ಪಾಲಿಸುವುದನ್ನು ಬಿಟ್ಟರೆ ಅವರಿಗೆ ಬೇರೆ ದಾರಿ ಇರಲಿಲ್ಲ ಎಂದು ಅವರ ಕುಟುಂಬದ ಸದಸ್ಯರು ಹೇಳಿದ್ದಾರೆ.
Bihar | ಧರ್ಮಶಾಲಾದಲ್ಲಿ ಬೆಂಗಳೂರಿನ ನಾಲ್ವರು ಪ್ರವಾಸಿಗಳ ಮೃತದೇಹ ಪತ್ತೆ
ಪಾಟ್ನಾ: ಬಿಹಾರದ ನಲಂದಾ ಜಿಲ್ಲೆಯ ರಾಜಗಿರ್ನ ದಿಗಂಬರ ಜೈನ ಧರ್ಮಶಾಲಾದ ಕೊಠಡಿಯಲ್ಲಿ ಬೆಂಗಳೂರಿನ ನಾಲ್ವರು ಪ್ರವಾಸಿಗರ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ. ಕೊಠಡಿಯ ಬಾಗಿಲಿನ ಚಿಲಕವನ್ನು ಒಳಗಿನಿಂದ ಹಾಕಲಾಗಿತ್ತು. ಈ ಸಾವಿನ ಹಿಂದಿನ ಕಾರಣ ಇದುವರೆಗೆ ತಿಳಿದು ಬಂದಿಲ್ಲ ಎಂದು ಮೂಲಗಳು ತಿಳಿಸಿವೆ. ಧರ್ಮಶಾಲಾದ ನೋಂದಣಿ ಪ್ರಕಾರ ಇಬ್ಬರು ಮಹಿಳೆಯರು ಸೇರಿದಂತೆ ಬೆಂಗಳೂರಿನ ನಾಲ್ವರು ಜನವರಿ 31ರಂದು ಕೊಠಡಿ ಕಾಯ್ದಿರಿಸಿದ್ದರು. ಅವರು ನೇಪಾಳಕ್ಕೆ ಭೇಟಿ ನೀಡಿದ ಬಳಿಕ ರಾಜಗಿರ್ಗೆ ಆಗಮಿಸಿದ್ದರು. ಅಲ್ಲಿಂದ ನಲಂದಾ ಜಿಲ್ಲೆಯ ಪಾವಾಪುರಿಗೆ ತೆರಳಲು ಯೋಜಿಸಿದ್ದರು ಎಂದು ಅವು ತಿಳಿಸಿವೆ. ಧರ್ಮಶಾಲಾದ ಸಿಬ್ಬಂದಿ ಮಾಹಿತಿ ನೀಡಿದ ಕೂಡಲೇ ಪೊಲೀಸರು ಹಾಗೂ ಆಡಳಿತಾಧಿಕಾರಿಗಳು ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ಪಾಟ್ನಾದಿಂದ ವಿಧಿ ವಿಜ್ಞಾನ ತಂಡ ಕೂಡ ಆಗಮಿಸಿ ಪರಿಶೀಲನೆ ನಡೆಸಿದೆ. ರಾಜಗಿರ್ ಠಾಣಾಧಿಕಾರಿ ರಮಣ್ ಕುಮಾರ್ ಘಟನೆಯನ್ನು ದೃಢಪಡಿಸಿದ್ದು, ಸುತ್ತಮುತ್ತ ವಾಸಿಸುವ ಜನರು ಕೊಠಡಿಯಿದ ದುರ್ವಾಸನೆ ಬರುತ್ತಿರುವ ಬಗ್ಗೆ ಮಾಹಿತಿ ನೀಡಿದ ಬಳಿಕ ಪೊಲೀಸರು ಕ್ರಮ ಕೈಗೊಂಡರು ಎಂದು ಹೇಳಿದ್ದಾರೆ. ಎರಡು ದಿನಗಳ ಹಿಂದೆ ಈ ಪ್ರವಾಸಿಗರು ಮಾರುಕಟ್ಟೆ ಪ್ರದೇಶದಲ್ಲಿ ತಿರುಗಾಡುತ್ತಿರುವುದನ್ನು ಸ್ಥಳೀಯರು ನೋಡಿದ್ದಾರೆ ಎಂದು ಕೂಡ ಅವರು ತಿಳಿಸಿದ್ದಾರೆ. ರಾಜಗೀರ್ ಪ್ರಮುಖ ಜೈನ ಯಾತ್ರಾ ಕೇಂದ್ರವಾಗಿದೆ.
ಭಲೇ ವೈಭವ್ ಸೂರ್ಯವಂಶಿ! ನಿರ್ಭೀತ ಬಾಲಕನನ್ನು ಟೀಂ ಇಂಡಿಯಾದಲ್ಲಿ ಆಡಿಸಲು ಇದು ಸೂಕ್ತ ಸಮಯವೇ?
Vaibhav Suryavanshi Success- ಅಸಲಿ ಈ ಬಾರಿ ಸಮಸ್ತ ಭಾರತವೇ ಅಂಡರ್ 19 ವಿಶ್ವಕಪ್ ಅನ್ನು ಕಣ್ಣರಳಿಸಿ ನೋಡಿದ್ದು ವೈಭವ್ ಸೂರ್ಯವಂಶಿಗಾಗಿಯೇ! ದೇಶ ತನ್ನ ಮೇಲಿಟ್ಟಿರುವ ಅಪಾರ ನಿರೀಕ್ಷೆಯನ್ನು 14ರ ಹರೆಯದ ಬಾಲಕ ಹುಸಿ ಮಾಡಲಿಲ್ಲ. ಸೆಮಿ ಫೈನಲ್ ನಲ್ಲಿ ಅಫ್ಘಾನಿಸ್ತಾನದ ವಿರುದ್ಧ ಬಿರುಸಿನ ಅರ್ಧಶತಕ ಹೊಡೆದಿದ್ದ ವೈಭವ್ ಫೈನಲ್ ನಲ್ಲಿ ರನ್ ಹೊಳೆಯನ್ನೇ ಹರಿಸಿದರು. ಆ ರನ್ ಹೊಳೆಯಲ್ಲಿ ಇಂಗ್ಲೆಂಡ್ ತಂಡ ಕೊಚ್ಚಿಹೋಯಿತು.ಇನ್ನೂ ರಾಷ್ಟ್ರೀಯ ತಂಡಕ್ಕೆ ಅವರನ್ನು ಸೇರಿಸಿಕೊಳ್ಳಲು ತಡಮಾಡುವುದು ಸರಿಯೇ? ಬಿಸಿಸಿಐ ಆಯ್ಕೆ ಸಮಿತಿ ಅವರ ಬಗ್ಗೆ ಗಂಭೀರ ಚಿಂತನೆ ನಡೆಸಲು ಸಕಾಲ.
ಕಂಪ್ಲಿ–ಕುರುಗೋಡು ಉತ್ಸವ ಯಶಸ್ಸಿಗೆ ಅಧಿಕಾರಿಗಳ ಒಗ್ಗಟ್ಟು ಅಗತ್ಯ : ಡಿಸಿ ನಾಗೇಂದ್ರ ಪ್ರಸಾದ್
ಬಳ್ಳಾರಿ : ಜಿಲ್ಲೆಯಲ್ಲಿ ಕಂಪ್ಲಿ ಹಾಗೂ ಕುರುಗೋಡು ಉತ್ಸವಗಳನ್ನು ಆಯೋಜಿಸಲಾಗಿದ್ದು, ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುವ ಮೂಲಕ ಉತ್ಸವಗಳನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಸೂಚಿಸಿದರು. ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ಕಂಪ್ಲಿ ಮತ್ತು ಕುರುಗೋಡು ಉತ್ಸವಗಳ ರೂಪುರೇಷೆ ಸಿದ್ಧಪಡಿಸುವ ಸಂಬಂಧ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಎನ್. ಗಣೇಶ್ ಅವರ ಆಶಯದಂತೆ ಫೆಬ್ರವರಿ 11 ಮತ್ತು 12ರಂದು ಕಂಪ್ಲಿ ಉತ್ಸವ ಆಯೋಜಿಸಲು ನಿರ್ಧರಿಸಲಾಗಿದ್ದು, ಈಗಾಗಲೇ ಸಿದ್ಧತಾ ಕಾರ್ಯಗಳು ಆರಂಭಗೊಂಡಿವೆ. ಅಧಿಕಾರಿಗಳು ತಮಗೆ ವಹಿಸಲಾದ ಕರ್ತವ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಫೆ. 11ರಂದು ಸಂಜೆ ಕಂಪ್ಲಿ ಕೋಟೆಯ ಪಂಪಾಪತಿ ದೇವಸ್ಥಾನದಿಂದ ವಿವಿಧ ಸಾಂಸ್ಕೃತಿಕ ಕಲಾತಂಡಗಳ ಭವ್ಯ ಮೆರವಣಿಗೆ ನಡೆಯಲಿದ್ದು, ಮೆರವಣಿಗೆ ಸೋಮಪ್ಪ ಕೆರೆ ಆವರಣ ತಲುಪಿದ ಬಳಿಕ ವಾರಣಾಸಿ ಅರ್ಚಕರಿಂದ ‘ತುಂಗಾರತಿ’ ನಡೆಯಲಿದೆ. ನಂತರ ಪಟ್ಟಣದ ಸುಂದರಿ ಸಕ್ಕರೆ ಕಾರ್ಖಾನೆಯ ಮೈದಾನದಲ್ಲಿ ಸ್ಥಳೀಯ ಕಲಾವಿದರಿಂದ ಸಂಗೀತ ಗಾಯನ, ಬಯಲಾಟ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಫೆ. 12ರಂದು ಸಂಜೆ ಕಂಪ್ಲಿ ಉತ್ಸವದ ಅಧಿಕೃತ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಬಳಿಕ ಖ್ಯಾತ ಗಾಯಕ ಚಂದನ್ ಶೆಟ್ಟಿ ಅವರ ತಂಡದಿಂದ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿದೆ. ಕಲಾವಿದರಿಗೆ ವಸತಿ ವ್ಯವಸ್ಥೆ, ವೇದಿಕೆ ನಿರ್ಮಾಣ, ಸ್ವಚ್ಛತೆ, ವಿದ್ಯುತ್ ಅಲಂಕಾರ ಸೇರಿದಂತೆ ಎಲ್ಲಾ ಸಿದ್ಧತೆಗಳನ್ನು ಸಮರ್ಪಕವಾಗಿ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಉತ್ಸವದ ವೇಳೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ, ಪೊಲೀಸ್ ಬಂದೋಬಸ್ತ್, ಹೆಚ್ಚುವರಿ ಸಾರಿಗೆ ವ್ಯವಸ್ಥೆ, ಅಗ್ನಿಶಾಮಕ ದಳ ಹಾಗೂ ಅಂಬುಲೆನ್ಸ್ ವ್ಯವಸ್ಥೆ ಕಡ್ಡಾಯವಾಗಿ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು. ಉತ್ಸವದ ಎರಡು ದಿನಗಳಲ್ಲಿ ಚಿತ್ರಕಲೆ, ರಂಗೋಲಿ, ಮೆಹೆಂದಿ, ಅಡುಗೆ ಸ್ಪರ್ಧೆಗಳು, ಆಹಾರ ಮೇಳ, ಫಲಪುಷ್ಪ ಪ್ರದರ್ಶನ, ಸಿಂಗಾರಿತ ಎತ್ತಿನಗಾಡಿಗಳ ಜಾಥಾ, ಗ್ರಾಮೀಣ ಕ್ರೀಡೆಗಳು ಹಾಗೂ ವಿವಿಧ ಇಲಾಖೆಗಳ ಮಾಹಿತಿ ಮಳಿಗೆಗಳು ಇರಲಿದ್ದು, ಸಂಬಂಧಪಟ್ಟ ಇಲಾಖೆಗಳು ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಶಿಷ್ಟಾಚಾರದನ್ವಯ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು. ಉತ್ಸವಗಳು ಜನೋತ್ಸವವಾಗಲು ಸಾರ್ವಜನಿಕರ ಭಾಗವಹಿಸುವಿಕೆ ಹೆಚ್ಚುವಂತೆ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದರು. ಅದೇ ರೀತಿಯಲ್ಲಿ ಫೆ.15 ಮತ್ತು 16ರಂದು ಕುರುಗೋಡು ಉತ್ಸವವನ್ನು ಆಯೋಜಿಸಲಾಗುತ್ತದೆ. ಫೆ. 15ರಂದು ಸಂಜೆ ಜಾನಪದ ಕಲಾತಂಡಗಳಿಂದ ಭವ್ಯ ಮೆರವಣಿಗೆ ಹಾಗೂ ತುಂಗಾರತಿ ನಡೆಯಲಿದೆ. ಫೆ. 16ರಂದು ಉತ್ಸವದ ಉದ್ಘಾಟನಾ ಕಾರ್ಯಕ್ರಮ ಜರುಗಲಿದೆ. ಇಲ್ಲಿಯೂ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ, ಕಂಪ್ಲಿ ತಹಶೀಲ್ದಾರ ಜೂಗಲ ಮಂಜುನಾಯಕ, ಕುರುಗೋಡು ತಹಶೀಲ್ದಾರ ನರಸಪ್ಪ, ತೋರಣಗಲ್ಲು ಡಿವೈಎಸ್ಪಿ ಪ್ರಸಾದ್ ಗೋಖಲೆ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಪುರಸಭೆ ಹಾಗೂ ತಾಲೂಕು ಪಂಚಾಯಿತಿ ಅಧಿಕಾರಿಗಳು ಉಪಸ್ಥಿತರಿದ್ದರು.
ಬಳ್ಳಾರಿ | ನಕಲಿ ಜನನ ಪ್ರಮಾಣ ಪತ್ರ ಸೃಷ್ಟಿಸಿ ಸರಕಾರಿ ಸೌಲಭ್ಯಕ್ಕೆ ಯತ್ನ: ಮಹಿಳೆ ವಿರುದ್ಧ ಪ್ರಕರಣ ದಾಖಲು
ಬಳ್ಳಾರಿ : ಸರ್ಕಾರಿ ಸೌಲಭ್ಯ ಪಡೆಯುವ ಉದ್ದೇಶದಿಂದ ನಕಲಿ ಜನನ ಪ್ರಮಾಣ ಪತ್ರ ಸೃಷ್ಟಿಸಿ ಸಲ್ಲಿಸಿದ ಆರೋಪದ ಮೇಲೆ ಮಹಿಳೆಯೊಬ್ಬರ ವಿರುದ್ಧ ಬ್ರೂಸ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಹಿನ್ನೆಲೆ : ಸಹಾಯಕ ಆಯುಕ್ತರ ನ್ಯಾಯಾಲಯದಲ್ಲಿ ವಂಶವೃಕ್ಷ ಪ್ರಮಾಣ ಪತ್ರ ಕೋರಿ ರಾಧಾ ಎಂಬುವವರು ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಗೆ ಸಂಬಂಧಿಸಿದಂತೆ ಪ್ರಕರಣದ ವಿಚಾರಣೆ ನಡೆಯುವ ವೇಳೆ, ಪ್ರತಿವಾದಿಯಾದ ಹಸೀನಾ ಅಲಿಯಾಸ್ ಅಶ್ವಿನಿ ಎಂಬುವವರು ಸಲ್ಲಿಸಿದ್ದ ಜನನ ಪ್ರಮಾಣ ಪತ್ರವನ್ನು ಪರಿಶೀಲನೆಗೆ ಒಳಪಡಿಸಲಾಯಿತು. ಪರಿಶೀಲನೆಯ ವೇಳೆ ಸಲ್ಲಿಸಿದ ಜನನ ಪ್ರಮಾಣ ಪತ್ರ ನಕಲಿ ಎಂಬುದು ಬೆಳಕಿಗೆ ಬಂದಿದೆ. ದಾಖಲೆ ತಿದ್ದುಪಡಿ ಆರೋಪ : ಮುಹಮ್ಮದ್ ಅಯಾನ್ (ತಂದೆ: ಚಾಂದ್ ಬಾಷಾ) ಎಂಬುವವರ ಹೆಸರಿನಲ್ಲಿದ್ದ ಅಸಲಿ ಜನನ ಪ್ರಮಾಣ ಪತ್ರವನ್ನು ಅಕ್ರಮವಾಗಿ ತಿದ್ದುಪಡಿ ಮಾಡಿ, ಶ್ರಾವಣಿ (ತಂದೆ: ಮೊದಲ ಚೆಂಚಯ್ಯ, ತಾಯಿ: ಅಶ್ವಿನಿ) ಎಂಬ ಹೆಸರಿಗೆ ನಿಯಮಬಾಹಿರವಾಗಿ ಬದಲಾವಣೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ವಂಚನೆಯನ್ನು ಗಂಭೀರವಾಗಿ ಪರಿಗಣಿಸಿರುವ ಬ್ರೂಸ್ಪೇಟೆ ಪೊಲೀಸ್ ಠಾಣೆಯ ಪೊಲೀಸರು, ಹಸೀನಾ ಅಲಿಯಾಸ್ ಅಶ್ವಿನಿ ವಿರುದ್ಧ ಬಿ.ಎನ್.ಎಸ್ ಕಾಯ್ದೆಯ ಕಲಂ 138(4) ಹಾಗೂ 3(5) ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಸಾರ್ವಜನಿಕರು ಯಾವುದೇ ಸರ್ಕಾರಿ ಸೌಲಭ್ಯ ಪಡೆಯಲು ದಾಖಲೆಗಳನ್ನು ಸಲ್ಲಿಸುವ ಮುನ್ನ ಅವುಗಳ ನೈಜತೆಯನ್ನು ಸ್ವತಃ ಪರಿಶೀಲಿಸಬೇಕು. ಮಧ್ಯವರ್ತಿಗಳ ಮಾತನ್ನು ನಂಬಿ ನಕಲಿ ದಾಖಲೆಗಳನ್ನು ಸಲ್ಲಿಸಿದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
6,900ಕ್ಕೂ ಅಧಿಕ ಇಂಡಿಗೋ ಯಾನಗಳ ರದ್ದತಿಯಿಂದ 10 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರಿಗೆ ತೊಂದರೆ: ಕೇಂದ್ರ ಸರಕಾರ
ಹೊಸದಿಲ್ಲಿ: ಕಳೆದ ಮೂರು ತಿಂಗಳುಗಳಲ್ಲಿ ಇಂಡಿಗೋ ತನ್ನ 6,936 ವಿಮಾನ ಯಾನಗಳನ್ನು ರದ್ದುಪಡಿಸಿದ್ದರಿಂದ 10,81,680 ಪ್ರಯಾಣಿಕರು ತೊಂದರೆಗೀಡಾಗಿದ್ದರು ಎಂದು ನಾಗರಿಕ ವಾಯುಯಾನ ರಾಜ್ಯಸಚಿವ ಮುರಳೀಧರ ಮೊಹೋಲ್ ಅವರು ತಿಳಿಸಿದ್ದಾರೆ. ಗುರುವಾರ ಲೋಕಸಭೆಯಲ್ಲಿ ಎರಡು ಪ್ರತ್ಯೇಕ ಪ್ರಶ್ನೆಗಳಿಗೆ ನೀಡಿದ ಲಿಖಿತ ಉತ್ತರಗಳಲ್ಲಿ ಸಚಿವರು ಈ ಮಾಹಿತಿಯನ್ನು ಒದಗಿಸಿದರು. ಡಿಸೆಂಬರ್ನಲ್ಲಿ ಭಾರೀ ಪ್ರಮಾಣದಲ್ಲಿ ಇಂಡಿಗೋ ಯಾನಗಳ ರದ್ದತಿಗೆ ಕಾರಣವಾಗಿದ್ದ ಅಡಚಣೆಗಳ ಕುರಿತಂತೆ ಸಚಿವರು,ನಿಯಂತ್ರಣಾತ್ಮಕ ಸಿದ್ಧತೆಯ ಕೊರತೆ, ಸಾಫ್ಟ್ವೇರ್ ಸಿಸ್ಟಮ್ ದೋಷಗಳು ಮತ್ತು ಕಾರ್ಯಾಚರಣೆ ನಿಯಂತ್ರಣದಲ್ಲಿಯ ಲೋಪಗಳು ಪ್ರಮುಖ ಕಾರಣಗಳಾಗಿದ್ದವು ಎಂದು ತಿಳಿಸಿದರು. ಪ್ರತಿಕೂಲ ಹವಾಮಾನ ಪರಿಸ್ಥಿತಿಗಳೂ ಯಾನಗಳ ರದ್ದತಿಗೆ ಕೊಡುಗೆಯನ್ನು ನೀಡಿದ್ದವು ಎಂದರು. ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ),ನಾಗರಿಕ ವಾಯುಯಾನ ಮಹಾನಿರ್ದೇಶನಾಲಯ (ಡಿಜಿಸಿಎ),ನಾಗರಿಕ ವಾಯುಯಾನ ಭದ್ರತಾ ಘಟಕ (ಬಿಸಿಎಎಸ್) ಮತ್ತು ಭಾರತೀಯ ವಿಮಾನ ನಿಲ್ದಾಣ ಆರ್ಥಿಕ ನಿಯಂತ್ರಣ ಪ್ರಾಧಿಕಾರ(ಎಇಆರ್ಎ) ಸೇರಿದಂತೆ ಪ್ರಮುಖ ವೈಮಾನಿಕ ಸಂಸ್ಥೆಗಳಲ್ಲಿ 2,645ಕ್ಕೂ ಹುದ್ದೆಗಳು ಖಾಲಿಯಿದ್ದು, ಇವುಗಳನ್ನು ಭರ್ತಿ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮೊಹೋಲ್ ತಿಳಿಸಿದರು.
ಅಮೆರಿಕಾದ ʼಪರಮ ನೀಚ' ಅಪರಾಧಿಗಳ ಪಟ್ಟಿಯಲ್ಲಿ 89 ಭಾರತೀಯರು!
ವಾಷಿಂಗ್ಟನ್: ಅಮೆರಿಕಾದ ʼಅತ್ಯಂತ ಕೆಟ್ಟ' ಅಪರಾಧಿಗಳ ಪಟ್ಟಿಯಲ್ಲಿ 89 ಭಾರತೀಯ ಮೂಲದವರು ಸ್ಥಾನ ಪಡೆದಿರುವುದಾಗಿ ವರದಿಯಾಗಿದೆ. ಅಮೆರಿಕಾದ ಆಂತರಿಕ ಭದ್ರತಾ ಇಲಾಖೆ(ಡಿಎಚ್ಎಸ್) ಸಿದ್ಧಪಡಿಸಿರುವ `ಅಕ್ರಮ ವಿದೇಶೀ ಕ್ರಿಮಿನಲ್ಗಳ' ವೆಬ್ಸೈಟ್ನಲ್ಲಿ ಕೊಲೆಗಾರರು, ಲೈಂಗಿಕ ಅಪರಾಧಿಗಳು ಮತ್ತು ಮಾದಕ ವಸ್ತು ಕಳ್ಳಸಾಗಣೆದಾರರು ಸೇರಿದಂತೆ, ಅಮೆರಿಕಾದ ವಲಸೆ ಅಧಿಕಾರಿಗಳಿಂದ ಬಂಧಿಸಲ್ಪಟ್ಟು ಶಿಕ್ಷೆಗೆ ಒಳಗಾದ ಸುಮಾರು 25,000 ಕ್ರಿಮಿನಲ್ಗಳನ್ನು ಪಟ್ಟಿ ಮಾಡಲಾಗಿದೆ. `ನಾವು ಬಂಧಿಸುವ ಕ್ರಿಮಿನಲ್ ವ್ಯಕ್ತಿಗಳ ಬಗ್ಗೆ ಅಮೆರಿಕನ್ನರಿಗೆ ಅರಿವು ಮೂಡಿಸಲು ಈ ವೆಬ್ಸೈಟ್ ಆರಂಭಿಸಲಾಗಿದೆ' ಎಂದು ಡಿಎಚ್ಎಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದೆ.
ಸಿಐಡಿ ಸೈಬರ್ ಅಧಿಕಾರಿಗಳ ಕಾರ್ಯಾಚರಣೆ | ಮ್ಯೂಲ್ ಬ್ಯಾಂಕ್ ಅಕೌಂಟ್ಗೆ ನೆರವು; 13 ಮಂದಿಯ ಬಂಧನ
ಬೆಂಗಳೂರು : ಹಣದ ಆಮಿಷವೊಡ್ಡಿ ಮುಗ್ಧರ ಬ್ಯಾಂಕ್ ಖಾತೆಗಳ ವಿವರ ಪಡೆದು ಸೈಬರ್ ಕಿಂಗ್ ಪಿನ್ಗಳಿಗೆ ಕೊಡುತ್ತಿದ್ದವರ ಮೇಲೆ ಸಿಐಡಿಯ ಸೈಬರ್ ವಿಭಾಗದ ಪೊಲೀಸರು ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲಾ ಸಿಇಎನ್ ಪೊಲೀಸ್ ಠಾಣೆಗಳಲ್ಲಿ 14 ಪ್ರಕರಣಗಳನ್ನು ದಾಖಲಿಸಿ, 13 ಮಂದಿ ಆರೋಪಿಗಳನ್ನು ಬಂಧಿಸಿರುವುದು ವರದಿಯಾಗಿದೆ. ಸೈಬರ್ ವಂಚಕರು ಸಾರ್ವಜನಿಕರಿಂದ ಕಬಳಿಸುವ ಹಣವನ್ನು ಮ್ಯೂಲ್ ಅಕೌಂಟ್ಗಳ ಮೂಲಕ ವರ್ಗಾವಣೆ ಮಾಡುವ ಪ್ರಮಾಣ ಹೆಚ್ಚಾಗುತ್ತಿದೆ. ಮ್ಯೂಲ್ ಅಕೌಂಟ್ಗಳನ್ನು ಪತ್ತೆ ಹಚ್ಚಲು ಸೈಬರ್ ಪೊಲೀಸರು ಅಭಿಯಾನ ಕೈಗೊಂಡಿದ್ದಾರೆ. ಅದರಂತೆ ಗುರುವಾರ ನಡೆಸಿದ ಕಾರ್ಯಾಚರಣೆಯಲ್ಲಿ 13 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ಯುದ್ಧ ಒಂದು ಕ್ಷಣ ಇಡೀ ಜಗತ್ತನ್ನೇ ನಲುಗಿಸಿತ್ತು. ಯಾಕಂದ್ರೆ ಎರಡು ಪರಮಾಣು ಅಸ್ತ್ರ ಇರುವ ದೇಶಗಳ ನಡುವೆ ಗಲಾಟೆ ಶುರುವಾದರೆ, ಅದು ಮಹಾನ್ ವಿನಾಶದ ಕಡೆಗೆ ಜಗತ್ತನ್ನು ತೆಗೆದುಕೊಂಡು ಹೋಗುತ್ತದೆ. ಈ ಭಯ ಕಾಡುವಾಗಲೇ ಭಾರತ ಮತ್ತು ಪಾಕಿಸ್ತಾನ ಯುದ್ಧ ದೊಡ್ಡ ಮಟ್ಟಕ್ಕೆ ಹೋಗುವ ಮುನ್ಸೂಚನೆ ಸಿಕ್ಕಿತ್ತು, ಕೊನೆಗೆ ಹಂಗೋ &ಹಿಂಗೋ
ಬಳ್ಳಾರಿ | ದಡಾರ–ರುಬೆಲ್ಲಾ ಲಸಿಕೆ ಮಕ್ಕಳಿಗೆ ಕಡ್ಡಾಯ : ಡಾ.ಯಲ್ಲಾ ರಮೇಶ್ ಬಾಬು
ಬಳ್ಳಾರಿ :ಪೋಷಕರು ತಮ್ಮ ಮಕ್ಕಳಿಗೆ ತಪ್ಪದೇ ದಡಾರ–ರುಬೆಲ್ಲಾ (MR) ಲಸಿಕೆ ಹಾಕಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಲ್ಲಾ ರಮೇಶ್ ಬಾಬು ಅವರು ಮನವಿ ಮಾಡಿದ್ದಾರೆ. ಬೇಸಿಗೆ ಕಾಲ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳಲ್ಲಿ ದಡಾರ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ, 12 ಮಾರಕ ಕಾಯಿಲೆಗಳ ವಿರುದ್ಧ ರಕ್ಷಣೆಯನ್ನು ಒದಗಿಸುವ ನಿಯಮಿತ ಲಸಿಕೆಗಳ ಜೊತೆಗೆ ದಡಾರ–ರುಬೆಲ್ಲಾ ಲಸಿಕೆ ಕಡ್ಡಾಯವಾಗಿ ನೀಡಬೇಕು ಎಂದು ಅವರು ತಿಳಿಸಿದ್ದಾರೆ. ದಡಾರ ರೋಗದಲ್ಲಿ ತೀವ್ರ ಜ್ವರ, ಮೂಗು ಸೋರುವಿಕೆ, ಕೆಮ್ಮು, ಕಣ್ಣು ಕೆಂಪಾಗುವುದು ಹಾಗೂ ಮುಖದಿಂದ ಆರಂಭವಾಗಿ ದೇಹದಾದ್ಯಂತ ಹರಡುವ ಕೆಂಪು ದದ್ದುಗಳು ಕಾಣಿಸುತ್ತವೆ. ರುಬೆಲ್ಲಾ ರೋಗದಲ್ಲಿ ಸೌಮ್ಯ ಜ್ವರ, ದದ್ದುಗಳು, ತಲೆನೋವು ಮತ್ತು ಕಣ್ಣಿನ ಉರಿ ಮೊದಲಾದ ಲಕ್ಷಣಗಳು ಕಂಡುಬರುತ್ತವೆ. ದಡಾರ–ರುಬೆಲ್ಲಾ ಲಸಿಕೆ ಮಕ್ಕಳನ್ನು ದಡಾರ ಮತ್ತು ರುಬೆಲ್ಲಾ ಕಾಯಿಲೆಗಳಿಂದ ರಕ್ಷಿಸುವ ಅತ್ಯಂತ ಪರಿಣಾಮಕಾರಿ ಲಸಿಕೆಯಾಗಿದೆ. ಇದು ಮಕ್ಕಳಲ್ಲಿ ಜ್ವರ, ದದ್ದು, ನ್ಯುಮೋನಿಯಾ ಹಾಗೂ ಮೆದುಳಿನ ಸೋಂಕುಗಳನ್ನು ತಡೆಯುತ್ತದೆ. ಗರ್ಭಾವಸ್ಥೆಯಲ್ಲಿ ತಾಯಿಗೆ ರುಬೆಲ್ಲಾ ಸೋಂಕು ತಗುಲಿದರೆ ಮಗುವಿಗೆ ಉಂಟಾಗುವ ಜನ್ಮಜಾತ ದೋಷಗಳನ್ನು ತಡೆಯುವಲ್ಲಿಯೂ ಈ ಲಸಿಕೆ ಮಹತ್ವದ ಪಾತ್ರ ವಹಿಸುತ್ತದೆ. ಇದು ಲೈವ್ ಅಟೆನ್ಯೂಯೇಟೆಡ್ ಲಸಿಕೆಯಾಗಿದ್ದು, ಇಂಜೆಕ್ಷನ್ ಮೂಲಕ ಸಾಮಾನ್ಯವಾಗಿ ಮೇಲಿನ ತೋಳಿನಲ್ಲಿ ನೀಡಲಾಗುತ್ತದೆ. ಮೊದಲ ಡೋಸ್ 9ರಿಂದ 12 ತಿಂಗಳೊಳಗಿನ ಮಕ್ಕಳಿಗೆ ಹಾಗೂ ಎರಡನೇ ಡೋಸ್ 16ರಿಂದ 24 ತಿಂಗಳೊಳಗಿನ ಮಕ್ಕಳಿಗೆ ನೀಡಲಾಗುತ್ತದೆ. ಎರಡು ಡೋಸ್ ಪಡೆದ ಬಳಿಕ ಈ ಲಸಿಕೆ ದಡಾರ ಮತ್ತು ರುಬೆಲ್ಲಾ ವಿರುದ್ಧ ಶೇ.97 ಕ್ಕಿಂತ ಹೆಚ್ಚು ಪರಿಣಾಮಕಾರಿಯಾಗಿದೆ. ಕೆಲವೊಮ್ಮೆ ಲಸಿಕೆ ಹಾಕಿದ ಸ್ಥಳದಲ್ಲಿ ನೋವು, ಸೌಮ್ಯ ಜ್ವರ ಅಥವಾ ದದ್ದುಗಳು ಕಾಣಿಸಿಕೊಳ್ಳಬಹುದು. ಇವು ಕೆಲವೇ ದಿನಗಳಲ್ಲಿ ಸ್ವಯಂ ಕಡಿಮೆಯಾಗುತ್ತವೆ. ದಡಾರ ಲಸಿಕೆ ತೀವ್ರ ಜ್ವರ, ಕೆಮ್ಮು, ದದ್ದು, ನ್ಯುಮೋನಿಯಾ ಹಾಗೂ ಮೆದುಳಿನ ಸೋಂಕುಗಳನ್ನು ತಡೆಯುತ್ತದೆ. ರುಬೆಲ್ಲಾ ಲಸಿಕೆಯು ಗರ್ಭಿಣಿಯರಿಗೆ ಸೋಂಕು ತಗುಲಿದಾಗ ಹುಟ್ಟುವ ಮಗುವಿನಲ್ಲಿ ಉಂಟಾಗುವ ಜನ್ಮಜಾತ ರುಬೆಲ್ಲಾ ಸಿಂಡ್ರೋಮ್ ತಡೆಯಲು ಸಹಕಾರಿಯಾಗಿದೆ. ರಾಷ್ಟ್ರೀಯ ಲಸಿಕೆ ಕಾರ್ಯಕ್ರಮದಡಿ ಈ ಲಸಿಕೆ ಅತ್ಯಂತ ಸುರಕ್ಷಿತವಾಗಿದ್ದು, ಮಕ್ಕಳ ಆರೋಗ್ಯ ಹಾಗೂ ಸಮುದಾಯದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಅತ್ಯಗತ್ಯವಾಗಿದೆ ಎಂದು ಡಾ. ಯಲ್ಲಾ ರಮೇಶ್ ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸದಿಲ್ಲಿ: ತನ್ನ ಪರಿಷ್ಕೃತ ಮಾರ್ಗಸೂಚಿಗಳಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲ ಅಭ್ಯರ್ಥಿಗಳಿಗೆ ಮುಖ ದೃಢೀಕರಣವನ್ನು ಕಡ್ಡಾಯಗೊಳಿಸಿರುವ ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್ಸಿ),ಕೆಲವು ಸೇವೆಗಳಲ್ಲಿ ಈಗಾಗಲೇ ನೇಮಕಗೊಂಡ ಅಭ್ಯರ್ಥಿಗಳಿಗೆ ಕಠಿಣ ಅರ್ಹತಾ ನಿಬಂಧನೆಗಳನ್ನು ವಿಧಿಸಿದೆ. ಗುರುವಾರ ಪ್ರಕಟಗೊಂಡ ನಾಗರಿಕ ಸೇವಾ ಪರೀಕ್ಷೆಗಳು (ಸಿಎಸ್ಇ) 2026ರ ಅಧಿಕೃತ ಅಧಿಸೂಚನೆಯಲ್ಲಿ ಈ ಬದಲಾವಣೆಗಳನ್ನು ಪ್ರಕಟಿಸಲಾಗಿದೆ. ಆಯೋಗವು ಈ ವರ್ಷದ ನೇಮಕಾತಿಗಾಗಿ 933 ಹುದ್ದೆಗಳನ್ನು ಪ್ರಕಟಿಸಿದ್ದು, ಈ ಪೈಕಿ 33 ಹುದ್ದೆಗಳು ಮಾನದಂಡ ಅಂಗವೈಕಲ್ಯ ಹೊಂದಿರುವ ಅಭ್ಯರ್ಥಿಗಳಿಗೆ ಮೀಸಲಾಗಿವೆ. ಸ್ಪರ್ಧಾತ್ಮಕ ಪರೀಕ್ಷೆಯ ಪ್ರಿಲಿಮಿನರಿ ಪರೀಕ್ಷೆಯನ್ನು ಮೇ 24ರಂದು ನಡೆಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಐಎಎಸ್,ಐಎಫ್ಎಸ್ ಮತ್ತು ಐಪಿಎಸ್ ಸೇರಿದಂತೆ ವಿವಿಧ ಸೇವೆಗಳಿಗೆ ಅಧಿಕಾರಿಗಳನ್ನು ಆಯ್ಕೆ ಮಾಡಲು ಯುಪಿಎಸ್ಸಿ ಪ್ರತಿ ವರ್ಷ ಈ ಪ್ರತಿಷ್ಠಿತ ಪರೀಕ್ಷೆಯನ್ನು ಪ್ರಿಲಿಮಿನರಿ,ಮೇನ್ ಮತ್ತು ಸಂದರ್ಶನ,ಹೀಗೆ ಮೂರು ಹಂತಗಳಲ್ಲಿ ನಡೆಸುತ್ತದೆ. ಸುಗಮ ಮತ್ತು ಸುಲಭ ಪರಿಶೀಲನೆಗಾಗಿ ಹಾಗೂ ಐಡಿ ಮತ್ತು ಇತರ ವಿವರಗಳ ದೃಢೀಕರಣಕ್ಕಾಗಿ ಅಭ್ಯರ್ಥಿಗಳು ಗುರುತಿನ ದಾಖಲೆಯಾಗಿ ತಮ್ಮ ಆಧಾರ್ ಕಾರ್ಡ್ಗಳನ್ನು ಬಳಸುವಂತೆ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಧಿಸೂಚನೆಯಲ್ಲಿ ಹಿಂದಿನ ಪರೀಕ್ಷೆಗಳ ಮೂಲಕ ಈಗಾಗಲೇ ನೇಮಕಗೊಂಡಿರುವ ಅಭ್ಯರ್ಥಿಗಳನ್ನು ಗುರಿಯಾಗಿಸಿಕೊಂಡು ಹೊಸ ನಿರ್ಬಂಧಗಳನ್ನು ಪರಿಚಯಿಸಲಾಗಿದೆ. ಅದರಂತೆ ಪ್ರಸ್ತುತ ಐಎಎಸ್ ಅಥವಾ ಐಎಫ್ಎಸ್ನಲ್ಲಿ ಸೇವೆ ಸಲ್ಲಿಸುತ್ತಿರುವ ಅಭ್ಯರ್ಥಿಗಳು 2026ರ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುವುದಿಲ್ಲ. ಈಗಾಗಲೇ ಐಪಿಎಸ್ ಹುದ್ದೆಗಳಲ್ಲಿರುವವರು 2026ರ ಪರೀಕ್ಷೆಯ ಮೂಲಕ ಮತ್ತೆ ಅದೇ ಸೇವೆಯನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶವಿರುವುದಿಲ್ಲ.
ನಿರ್ಮಾಣ ಹಂತದಲ್ಲಿರುವ ಗಂಜಿಮಠ- ಸೂರಲ್ಪಾಡಿ ಟೋಲ್ ಪ್ಲಾಝಾಕ್ಕೆ ವಿವಿಧ ಸಂಘಟನೆಗಳ ಪ್ರಮುಖರ ಭೇಟಿ
ಬಜ್ಪೆ: ನಿರ್ಮಾಣ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿರುವ ಗಂಜಿಮಠ- ಸೂರಲ್ಪಾಡಿ ಟೋಲ್ ಪ್ಲಾಝಾಕ್ಕೆ ವಿವಿಧ ಸಂಘಟನೆಗಳ ಪ್ರಮುಖರನ್ನು ಒಳಗೊಂಡ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ನಿಯೋಗ ಶುಕ್ರವಾರ ಭೇಟಿ ನೀಡಿ ನಿಯಮಗಳ ಪಾಲನೆಯ ಕುರಿತಾಗಿ ಪರಿಶೀಲನೆ ನಡೆಸಿತು. ಸೂರಲ್ಪಾಡಿ ಟೋಲ್ ಪ್ಲಾಝಾ ನಿರ್ಮಾಣ ನಿಯಮ ಬಾಹಿರ. ಅಂತರದ ನಿಯಮಗಳನ್ನು ಉಲ್ಲಂಘಿಸಿ ಜಿಲ್ಲೆಯಲ್ಲಿ ಸಾಲಾಗಿ ಟೋಲ್ ಗೇಟ್ ಗಳನ್ನು ನಿರ್ಮಿಸಲಾಗುತ್ತಿದೆ. ಟೋಲ್ ಗೇಟ್ ಗಳ ನಡುವಿನ ಅಂತರ ಕನಿಷ್ಟ 60 ಕಿ. ಮೀ ಇರಬೇಕು ಎಂಬ ನಿಯಮವನ್ನು ಗಾಳಿಗೆ ತೂರಿ ಟೋಲ್ ಪ್ಲಾಝಾ ನಿರ್ಮಾಣ ಮಾಡುತ್ತಿರುವುದನ್ನು ಸಮಿತಿಯು ಖಂಡಿಸಿತು. ಬ್ರಹ್ಮರಕೂಟ್ಲು ಟೋಲ್ ಗೇಟ್ ಹಾಗೂ ತಲಪಾಡಿ ಟೋಲ್ ಗೇಟ್ ನಿಂದ ಗಂಜಿಮಠ ಟೋಲ್ ಪ್ಲಾಝಾ 33 ಕಿ. ಮೀ. ಹಾಗೂ 34 ಕಿ. ಮೀ ಅಂತರವನ್ನು ಮಾತ್ರ ಹೊಂದಿದೆ. ಹೆಜಮಾಡಿ ಟೋಲ್ ಗೇಟ್ ನಿಂದ 44 ಕಿ.ಮೀ. ದೂರದಲ್ಲಿದೆ. ಈ ರೀತಿ ಕಡಿಮೆ ಅಂತರದಲ್ಲಿ ಟೋಲ್ ಸಂಗ್ರಹ ಕೇಂದ್ರಗಳನ್ನು ರಚಿಸಲು ಹೆದ್ದಾರಿ ಪ್ರಾಧಿಕಾರ ರೂಪಿಸಿರುವ ನಿಮಯಗಳ ಪ್ರಕಾರ ಅವಕಾಶ ಇರುವುದಿಲ್ಲ. ಗಂಜಿಮಠ-ಸೂರಲ್ಪಾಡಿಯಲ್ಲಿ ಟೋಲ್ ಗೇಟ್ ನಿರ್ಮಾಣ ನಿಯಮಗಳ ನಿರ್ಲಜ್ಜ ಉಲ್ಲಂಘನೆಯಾಗುತ್ತಿದೆ, ಪ್ರಯಾಣಿಕರ ಸುಲಿಗೆಗೆ ಅವಕಾಶ ಕೊಡುತ್ತದೆ. ಸಾರ್ವಜನಿಕರಿಗೆ ಯಾವುದೆ ಮಾಹಿತಿ ಕೊಡದೆ, ಅಹವಾಲು ಸಭೆ ನಡೆಸದೆ ಟೋಲ್ ಪ್ಲಾಝಾ ತೆರೆಯುವ ಪ್ರಯತ್ನ ವನ್ನು ಯಾವುದೆ ಕಾರಣಕ್ಕೆ ಒಪ್ಪಲಾಗದು ಎಂದು ಹೋರಾಟ ಸಮಿತಿಯ ನಿಯೋಗ ತಿಳಿಸಿದೆ. ಹಾಗೆಯೆ, ಗಂಜಿಮಠ- ಸೂರಲ್ಪಾಡಿ ಸೇರಿದಂತೆ ಉಪ್ಪಿನಂಗಡಿಯ ವಳಾಲು, ಬೆಳ್ತಂಗಡಿ ರಸ್ತೆಯ ಪಣಪಿಲ ಬಳಿ ಟೋಲ್ ಪ್ಲಾಜ಼ಾಗಳು ನಿರ್ಮಾಣ ಹಂತದಲ್ಲಿದೆ. ಈ ಮೂಲಕ ಜಿಲ್ಲೆಯಲ್ಲಿ ಆರು ಟೋಲ್ ಗೇಟ್ ಗಳು ಸುಂಕ ವಸೂಲಿಗೆ ತೊಡಗಲಿದೆ. ಇದು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರ ಮಟ್ಟಿಗೆ ಭಯಾನಕ ಸ್ಥಿತಿಯನ್ನು ಉಂಟು ಮಾಡಲಿದೆ ಎಂದು ಹೋರಾಟ ಸಮಿತಿ ಆತಂಕ ವ್ಯಕ್ತಪಡಿಸಿದೆ. ವಳಾಲು ಹಾಗೂ ಪಣಪಿಲ ಟೋಲ್ ಪ್ಲಾಝಾಗಳೂ ಸಹ ಅಂತರದ ನಿಯಮಗಳನ್ನು ಉಲ್ಲಂಘಿಸಿ ನಿರ್ಮಾಣ ಗೊಳ್ಳುತ್ತಿದೆ. ವಳಾಲು ಟೋಲ್ ಪ್ಲಾಝಾ ಬ್ರಹ್ಮರಕೂಟ್ಲು ಟೋಲ್ ಗೇಟ್ ನಿಂದ 35 ಕಿ ಮೀ ಅಂತರ ಹೊಂದಿದ್ದರೆ, ಮಡಂತ್ಯಾರು ಬಳಿಯ ಪಣಪಿಲ ಟೋಲ್ ಪ್ಲಾಜ಼ಾ ಬ್ರಹ್ಮರಕೂಟ್ಲು ವಿನಿಂದ ಕೇಲವ 27 ಕಿ. ಮೀ ಅಂತರ ಮಾತ್ರ ಹೊಂದಿದೆ. ಈ ಯಾವ ಟೋಲ್ ಗೇಟ್ ಗಳೂ ಅಂತರ ನಿಯಮವಾದ 60 ಕಿ ಮೀ ಯ ಹತ್ತಿರಕ್ಕೂ ಸುಳಿಯುತ್ತಿಲ್ಲ ಎಂಬ ಅಂಶವನ್ನು ಹೋರಾಟ ಸಮಿತಿಯ ನಿಯೋಗ ಬೊಟ್ಟು ಮಾಡಿ ತೋರಿಸಿದೆ. ಈ ಟೋಲ್ ಗೇಟ್ ಗಳು ಕಾರ್ಯಾಚರಣೆ ಆರಂಭಿಸಿದರೆ ಜಿಲ್ಲೆಯ ಹೆದ್ದಾರಿಗಳನ್ನು ದಾಟುವುದು ವಾಹನ ಸವಾರರ ಪಾಲಿಗೆ ಚಕ್ರವ್ಯೂಹವನ್ನು ಬೇಧಿಸಿದಷ್ಟು ಸವಾಲಿನ ಕೆಲಸವಾಗಲಿದೆ. ಜನತೆ ಹೆದ್ದಾರಿಯಲ್ಲಿ ಪ್ರಯಾಣಿಸಲೆ ಭಯ ಪಡುವ ಸ್ಥಿತಿ ನಿರ್ಮಾಣಗೊಳ್ಳಲಿದೆ. ಇದು ಜಿಲ್ಲೆಯ ವ್ಯಾಪಾರ, ಉದ್ಯಮ ಕ್ಷೇತ್ರದ ಮೇಲೂ ದುಷ್ಪರಿಣಾಮ ಬೀರಲಿದೆ ಎಂದು ಸಮಿತಿ ಆತಂಕ ವ್ಯಕ್ತಪಡಿಸಿದೆ. ಇಷ್ಟೆಲ್ಲಾ ಗಂಭೀರ ಸ್ಥಿತಿ ಇದ್ದರೂ ಜಿಲ್ಲೆಯ ಸಂಸದರು, ಶಾಸಕರುಗಳು ಈ ಕುರಿತು ತಲೆ ಕೆಡಿಸಿಕೊಳ್ಳದಿರುವುದು ಅಚ್ಚರಿಯ ಸಂಗತಿ ಎಂದು ಹೇಳಿರುವ ಸಮಿತಿ, ಅಕ್ರಮ ಟೋಲ್ ಗೇಟ್ ಗಳ ನಿರ್ಮಾಣಕ್ಕೆ ಜನಪ್ರತಿನಿಧಿಗಳು ಮೌನ ಸಮ್ಮತಿ ತೋರುತ್ತಿದ್ದಾರೆ ಎಂದು ದೂರಿದೆ. ಈ ಕುರಿತಾಗಿ ಜಿಲ್ಲೆಯ ಸಂಸದರು, ಶಾಸಕರುಗಳ ಉಪಸ್ಥಿತಿಯಲ್ಲಿ ನಾಗರಿಕರನ್ನು ಒಳಗೊಂಡು ಜಿಲ್ಲಾಡಳಿತ ಹೆದ್ದಾರಿ ಪ್ರಾಧಿಕಾರದ ಆಲಿಕೆ ಸಭೆ ನಡೆಸಬೇಕು, ಟೋಲ್ ಗೇಟ್ ಗಳ ಸ್ಥಾಪನೆಗಳಲ್ಲಿ ಅಂತರದ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳಬೇಕು, ನಿಯಮಗಳ ಪಾಲನೆಯನ್ನು ಖಾತರಿ ಪಡಿಸಬೇಕು ಎಂದು ಸಮಿತಿ ಆಗ್ರಹಿಸಿದೆ. ಈ ಕುರಿತು ನಿರಾಸಕ್ತಿ ತೋರಿದರೆ ಮಾರ್ಚ್ ತಿಂಗಳಲ್ಲಿ ಜಿಲ್ಲೆಯ ಎಲ್ಲಾ ಟೋಲ್ ಗೇಟ್ ಗಳಿಂದ ಸ್ಥಳೀಯ ಹೋರಾಟ ಸಮಿತಿಗಳನ್ನು ರಚಿಸಿ ಹೆದ್ದಾರಿ ಪ್ರಾಧಿಕಾರ ಕಚೇರಿಗೆ ಏಕಕಾಲದಲ್ಲಿ ಪಾದಯಾತ್ರೆ ಗಳನ್ನು ಸಂಘಟಿಸುವುದಾಗಿ ಸಮಿತಿಯ ನಿಯೋಗ ಎಚ್ಚರಿಸಿದೆ. ನಿಯೋಗದಲ್ಲಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, ಪ್ರಾಂತ ರೈತ ಸಂಘದ ಪ್ರಮುಖರಾದ ಕೆ ಯಾದವ ಶೆಟ್ಟಿ, ಸಿಪಿಐಎಂ ಗುರುಪುರ ವಲಯ ಕಾರ್ಯದರ್ಶಿ ಸದಾಶಿವ ದಾಸ್, ಕಾರ್ಮಿಕ ಮುಖಂಡರಾದ ನೋಣಯ್ಯ ಗೌಡ ಎಡಪದವು, ಹೊನ್ನಯ್ಯ ಅಮೀನ್ ತಿರುವೈಲು, ಡಿವೈಎಫ್ಐ ಮುಖಂಡರಾದ ನ್ಯಾಯವಾದಿ ಮನೋಜ್ ವಾಮಂಜೂರು, ರೈತ ಸಂಘದ ಆಲ್ವಿನ್ ಮಿನೇಜಸ್ ಮೂಡಬಿದ್ರೆ, ಭಾರತೀಯ ರೖತ ಸೇನೆ ಮೂಡಬಿದ್ರೆ ಘಟಕಾಧ್ಯಕ್ಷ ಹರಿಪ್ರಸಾದ್, ಸಾಮಾಜಿಕ ಕಾರ್ಯಕರ್ತರಾದ ಆನಂದ ಬಂಗೇರ, ಮಹಾಲಿಂಗ ನಾಯ್ಕ್ ಮಾಸ್ಟರ್, ಅಬ್ದುಲ್ ಮಜೀದ್ ಅಮ್ಮುಂಜೆ, ಕಾಂಗ್ರೆಸ್ ಮುಖಂಡರುಗಳಾದ ಇಕ್ಬಾಲ್ ಅಲಿಯಾರ್, ಅನ್ವರ್ ಕುಪ್ಪೆಪದವು, ಪತ್ರಕರ್ತರಾದ ಬಾವ ಪದರಂಗಿ, ಸಾಮಾಜಿಕ ಮುಖಂಡರಾದ ಖಾದರ್ ಇಡ್ಮ,ಅಬ್ದುಲ್ ಖಾದರ್ ಸೂರಲ್ಪಾಡಿ, ಬಾಬು ಸಾಲ್ಯಾನ್, ಹಮೀದ್ ಸಾಗರ್, ನಾಸಿರ್ ಅದ್ಯಪಾಡಿ, ಹನೀಫ್ ಪದರಂಗಿ ಮತ್ತಿತರರು ಉಪಸ್ಥಿತರಿದ್ದರು.
ಯಾದಗಿರಿ | ಫೆ.8ರಂದು ಜಿಲ್ಲಾ ಮಟ್ಟದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ
ಯಾದಗಿರಿ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ಮಟ್ಟದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟವನ್ನು ಫೆಬ್ರವರಿ 8ರಂದು ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9.30ಕ್ಕೆ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಗುವುದು. ಕಾರ್ಯಕ್ರಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಅವರು ಚಾಲನೆ ನೀಡಲಿದ್ದಾರೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ವಹಿಸಲಿದ್ದು, ಅತಿಥಿಗಳಾಗಿ ಸಂಘದ ಪ್ರಧಾನ ಕಾರ್ಯದರ್ಶಿ ಸಿದ್ದಪ್ಪ ಲಿಂಗೇರಿ ಹಾಗೂ ರಾಜ್ಯ ಪರಿಷತ್ತು ಸದಸ್ಯ ಸಾಗರ್ ದೇಸಾಯಿ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಅದೇ ದಿನ ಸಂಜೆ 5 ಗಂಟೆಗೆ ನಡೆಯುವ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪೂರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಕಾಡ್ಲೂರ ಹಾಗೂ ಜೆಡಿಎಸ್ ಯಾದಗಿರಿ ನಗರ ಘಟಕದ ಅಧ್ಯಕ್ಷ ಬಂದಪ್ಪ ಅರಳಿ ಅವರು ವಿವಿಧ ಸ್ಪರ್ಧೆಗಳ ವಿಜೇತರಿಗೆ ನಗದು ಬಹುಮಾನ ಹಾಗೂ ಟ್ರೋಫಿಗಳನ್ನು ವಿತರಿಸಲಿದ್ದಾರೆ ಎಂದರು. ಕ್ರೀಡೆಗಳ ವಿವರ : ಕಬಡ್ಡಿ, ವಾಲಿಬಾಲ್ ಮತ್ತು ಕ್ರಿಕೆಟ್ ನಲ್ಲಿ ವಿಜೇತ ತಂಡಗಳಿಗೆ ತಲಾ 5 ಸಾವಿರ ರೂಪಾಯಿ ನಗದು ಬಹುಮಾನ ಮತ್ತು ಟ್ರೋಫಿ ವಿತರಿಸಲಾಗುವುದು. ರನ್ನರ್ ಅಪ್ ತಂಡಗಳಿಗೆ ಮೆಡಲ್ ನೀಡಲಾಗುವುದು ಎಂದರು. ಗುಂಡು ಎಸೆತ ಮತ್ತು ನೂರು ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ನಗದು ಬಹುಮಾನ ತಲಾ 1,000 ರೂಪಾಯಿ ಹಾಗೂ ಟ್ರೋಫಿ ನೀಡಲಾಗುವುದು. ಕೇರಂ ಮತ್ತು ಬ್ಯಾಡ್ಮಿಂಟನ್ ಸಿಂಗಲ್ ವಿಭಾಗ ಹಾಗೂ ಚೆಸ್ ನಲ್ಲಿ ವಿಜೇತರಿಗೆ ತಲಾ 500 ರೂಪಾಯಿ ನಗದು ಬಹುಮಾನ ಮತ್ತು ಟ್ರೋಫಿ ನೀಡಲಾಗುವುದು ಎಂದರು. ಕೇರಂ ಮತ್ತು ಬ್ಯಾಡ್ಮಿಂಟನ್ ಡಬಲ್ ವಿಭಾಗದಲ್ಲಿ ವಿಜೇತ ತಂಡಕ್ಕೆ ತಲಾ 1,000 ರೂಪಾಯಿ ನಗದು ಬಹುಮಾನ ಮತ್ತು ಟ್ರೋಫಿ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.
ಸಂಪಾದಕೀಯ | ಡಿಜಿಟಲ್ ವಂಚನೆ: ನಾಗರಿಕರು ಹೊಣೆಗಾರಿಕೆ ಮರೆಯಬಾರದು
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
Ola, Uber, Rapido Drivers strike: ಭಾರತದಲ್ಲಿ ಆ್ಯಪ್ ಆಧಾರಿತ ಸಾರಿಗೆ ವಲಯದಲ್ಲಿ ಕೆಲಸ ಮಾಡುವ ಚಾಲಕರ ಸಂಘಟನೆಗಳು ಫೆಬ್ರವರಿ 7ರ ಶನಿವಾರ ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ. ಓಲಾ, ಉಬರ್ ಹಾಗೂ ರ್ಯಾಪಿಡೋ ಕಂಪನಿಗಳಲ್ಲಿ ಕೆಲಸ ಮಾಡುವ ಗಿಗ್ ಕಾರ್ಮಿಕರು ಈ ಹೋರಾಟದಲ್ಲಿ ಭಾಗವಹಿಸುವ ಸಾಧ್ಯತೆಯಿದ್ದು, ಕರ್ನಾಟಕ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಕ್ಯಾಬ್,
ದೇಶಿ ಆಟಗಳು ದೈಹಿಕ–ಮಾನಸಿಕ ಆರೋಗ್ಯಕ್ಕೆ ಔಷಧಿಯಂತೆ: ಶಾಸಕ ಚೆನ್ನಾರೆಡ್ಡಿ ಪಾಟೀಲ್
ಯಾದಗಿರಿ : ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ವಿವಿಧ ಕ್ರೀಡೆಗಳು ಔಷಧಿಯಂತೆ ಕಾರ್ಯನಿರ್ವಹಿಸುತ್ತವೆ. ಅದರಲ್ಲೂ ದೇಶಿ ಆಟಗಳು ಮನುಷ್ಯನನ್ನು ದೈಹಿಕವಾಗಿ ಹಾಗೂ ಮಾನಸಿಕವಾಗಿ ಗಟ್ಟಿಗೊಳಿಸುತ್ತವೆ ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆಯ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡಾ ಕ್ಷೇತ್ರ ಇಂದು ವ್ಯಾಪಕವಾಗಿ ಬೆಳೆಯುತ್ತಿದ್ದು, ಆಟಗಾರರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಸಾಕಷ್ಟು ಅವಕಾಶಗಳಿವೆ. ಜಿಲ್ಲೆಯ ಸರ್ಕಾರಿ ನೌಕರರು ಸಹ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲಿ ಎಂದು ಅವರು ಆಶಿಸಿದರು. ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಯಪ್ಪಗೌಡ ಹುಡೇದ ಮಾತನಾಡಿ, ಸದಾ ಕೆಲಸದ ಒತ್ತಡದಲ್ಲಿರುವ ಸರ್ಕಾರಿ ನೌಕರರಿಗೆ ದೈಹಿಕ ಹಾಗೂ ಮಾನಸಿಕ ಉಲ್ಲಾಸ ನೀಡಲು ಈ ಕ್ರೀಡಾಕೂಟ ಸಹಕಾರಿಯಾಗಲಿದೆ ಎಂದರು. ಕಾರ್ಯಕ್ರಮವನ್ನು ಮಲ್ಲಿಕಾರ್ಜುನ ನಿರೂಪಿಸಿದರು. ಈ ಸಂದರ್ಭದಲ್ಲಿ ಯುಡಾ ಅಧ್ಯಕ್ಷ ಬಾಬುರಾವ್ ಕಾಡ್ಲೂರು, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ವಿಜಯಕುಮಾರ ಮಡ್ಡೆ, ಯೋಜನಾಧಿಕಾರಿ ಕುಂಬಳಯ್ಯ, ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ರಾಜು ಬಾವಿಹಳ್ಳಿ, ಸಂಘದ ಜಿಲ್ಲಾ ಉಪಾಧ್ಯಕ್ಷ ಅಶೋಕಕುಮಾರ ಕಲಾಲ್, ಗೌರವಾಧ್ಯಕ್ಷ ಯಾಮರೆಡ್ಡಿ ಮುಂಡಾಸ್, ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಬಂಗಾರಪ್ಪ, ಪದಾಧಿಕಾರಿಗಳಾದ ರಂಗನಾಥ ನಾಯಕ, ಸಾಯಪ್ಪ ಚಂಡ್ರಕಿ, ಬಸನಗೌಡ ಪಾಟೀಲ್, ಬಿಇಒ ವೀರಪ್ಪ ಸೇರಿದಂತೆ ತಾಲೂಕು ಅಧ್ಯಕ್ಷರು ಹಾಗೂ ಹಲವಾರು ಪದಾಧಿಕಾರಿಗಳು ಉಪಸ್ಥಿತರಿದ್ದರು. ದೇಶಿ ಆಟಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಗಿರಿಜಿಲ್ಲೆ ಬಿಲ್ಲು–ಬಾಣದಂತಹ ಪಾರಂಪರಿಕ ಕ್ರೀಡೆಗಳನ್ನು ಹೊಂದಿದೆ. ಕಬ್ಬಡಿ, ಖೋ–ಖೋ ಆಟಗಳಿಗೆ ಉತ್ತೇಜನ ನೀಡಬೇಕು. ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ನೌಕರರು ನಿತ್ಯ ವಾಕಿಂಗ್, ರನ್ನಿಂಗ್, ಯೋಗ ಹಾಗೂ ಧ್ಯಾನವನ್ನು ಅಳವಡಿಸಿಕೊಳ್ಳಬೇಕು. -ಚೆನ್ನಾರೆಡ್ಡಿ ಪಾಟೀಲ್, ಶಾಸಕ, ಯಾದಗಿರಿ ಈ ಕ್ರೀಡಾಕೂಟದಲ್ಲಿ ಮಹಿಳೆ–ಪುರುಷರು ಸೇರಿ 800ಕ್ಕೂ ಹೆಚ್ಚು ಸರ್ಕಾರಿ ನೌಕರರು ಭಾಗವಹಿಸಿದ್ದಾರೆ. ಕ್ರಿಕೆಟ್, ವಾಲಿಬಾಲ್, ರನ್ನಿಂಗ್, ಕ್ಯಾರಂ, ಈಜು ಸೇರಿದಂತೆ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ಬಾಂಗ್ಲಾದ ಮಾಜಿ ಸಂಸದ ಸಹಿತ 6 ಮಂದಿಗೆ ಮರಣದಂಡನೆ ಶಿಕ್ಷೆ
ಢಾಕಾ: ಬಾಂಗ್ಲಾದೇಶದಲ್ಲಿ 2024ರ ಆಗಸ್ಟ್ ನಲ್ಲಿ ನಡೆದಿದ್ದ ಪ್ರತಿಭಟನೆಯ ಸಂದರ್ಭ ಢಾಕಾದ ಅಷುಲಿಯಾ ನಗರದಲ್ಲಿ 6 ಮಂದಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಬಳಿಕ ಮೃತದೇಹವನ್ನು ಸುಟ್ಟುಹಾಕಿದ್ದ ಪ್ರಕರಣದಲ್ಲಿ ಅವಾಮಿ ಲೀಗ್ ಪಕ್ಷದ ಮಾಜಿ ಸಂಸದ ಮುಹಮ್ಮದ್ ಸೈಫುಲ್ ಇಸ್ಲಾಂ ಸೇರಿದಂತೆ 6 ಮಂದಿಗೆ ಇಂಟರ್ನ್ಯಾಷನಲ್ ಕ್ರೈಮ್ಸ್ ಟ್ರಿಬ್ಯೂನಲ್(ಐಸಿಟಿ) ಮರಣದಂಡನೆ ಶಿಕ್ಷೆ ವಿಧಿಸಿ ತೀರ್ಪು ನೀಡಿರುವುದಾಗಿ `ದಿ ಡೈಲಿ ಸ್ಟಾರ್' ವರದಿ ಮಾಡಿದೆ. 2024ರ ಆಗಸ್ಟ್ 5ರಂದು ಅಷುಲಿಯಾದಲ್ಲಿ ಪೊಲೀಸರು 6 ಯುವಕರನ್ನು ಗುಂಡಿಕ್ಕಿ ಹತ್ಯೆ ನಡೆಸಿದ ಬಳಿಕ ಪೊಲೀಸ್ ವ್ಯಾನ್ನಲ್ಲಿ ಅವರ ದೇಹವನ್ನು ಸುಟ್ಟು ಹಾಕಿದ್ದರು ಎಂದು ಪ್ರಕರಣ ದಾಖಲಿಸಲಾಗಿತ್ತು. ಈ ಭಯಾನಕ ದೃಶ್ಯದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗಿದ್ದು ಮೃತರ ಗುರುತು ಪತ್ತೆಗೆ ನೆರವಾಗಿತ್ತು.
ಸಂಸ್ಕೃತಿಗೆ ಶಕ್ತಿ ತುಂಬುವ ಕೆಲಸವಾಗಲಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಉಪ್ಪಿನಂಗಡಿ: ಹಲವಾರು ಸಂಸ್ಕೃತಿಗಳು ಸೇರಿದ ದೇಶ ನಮ್ಮದಾಗಿದ್ದು, ಸಂಸ್ಕೃತಿಯು ಈ ದೇಶದ ಆಸ್ತಿಯಾಗಿದೆ. ಅದಕ್ಕೆ ಶಕ್ತಿ ತುಂಬುವ ಕೆಲಸವನ್ನು ನಾವು ಮಾಡಬೇಕು ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಕಾಂಚನದಲ್ಲಿ ನಿರ್ಮಾಣವಾದ ನೂತನ ಸಂಗೀತ ಶಾಲೆ, ಸಭಾಭವನವನ್ನು ಫೆ.6ರಂದು ಸಂಜೆ ಲೋಕಾರ್ಪಣೆ ಗೊಳಿಸಿ ಮಾತನಾಡಿದ ಅವರು, ಸಾಹಿತ್ಯ, ಸಂಗೀತ ಧರ್ಮದ ಭಾಗವಾಗಿದೆ. ಕಾಂಚನ ಸಂಗೀತದ ಮೂಲಕ ದೇಶದಾದ್ಯಂತ ಹೆಸರು ಗಳಿಸಿದೆ, ಇಲ್ಲಿನ ಸಂಗೀತ ಪಾವಿತ್ರತೆಯನ್ನು ಉಳಿಸಿಕೊಂಡಿದೆ, ದೇಶದಾದ್ಯಂತ ಇರುವ ಸಂಗೀತ ಕ್ಷೇತ್ರದ ಬಹಳಷ್ಟು ವಿದ್ವಾಂಸರು ಈ ಕಾಂಚನದಿಂದ ಅರ್ಪಣೆಯಾದವರು, ಹೀಗಿರುವಾಗ ಕಾಂಚನದ ಮಹಿಮೆಯನ್ನು ಉಳಿಸಿಕೊಂಡು ಸಂಗೀತ ಲೋಕಕ್ಕೆ ಶಕ್ತಿ ಕೊಡಬೇಕಾಗಿದೆ. ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಆದರೆ ಅವಕಾಶವನ್ನು ಕೊಡುತ್ತಾನೆ. ಅದನ್ನು ಉತ್ತಮವಾಗಿ ಉಪಯೋಗಿಸಿಕೊಳ್ಳುವ ಮೂಲಕ ಸ್ವಸ್ಥ್ಯ ಸಮಾಜದ ನಿರ್ಮಾಣಕ್ಕೆ ನಾವೆಲ್ಲಾ ಮುಂದಾಗಬೇಕು ಎಂದರು. ಆಶೀರ್ವಚನ ನೀಡಿದ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಸ್ವಾಮೀಜಿ, ಕಾಂಚನ ಎಂಬ ಈ ಊರು ಜಗತ್ ಪ್ರಸಿದ್ಧವಾಗಿದೆ. ಇಲ್ಲಿನ ಮಣ್ಣು, ನೀರು, ಗಾಳಿ, ಎಲ್ಲೆಲ್ಲೂ ಸಂಗೀತ ಇದೆ. ಇದೊಂದು ಮಾದರಿ ಗುರುಕುಲ ಪರಿಸರವಾಗಿದ್ದು, ಕಾಂಚನ ಸಂಗೀತ ಶಾಲೆಗೆ ಪರಂಪರೆ ಇದೆ. ಸಂಗೀತ ಮೋಕ್ಷ ವಿದ್ಯೆ ಯಾಗಿದ್ದು, ಕಾಂಚನ ಕುಟುಂಬದ ಉಸಿರಾಟ, ಊಟ ಎಲ್ಲವೂ ಸಂಗೀತವೇ ಆಗಿದೆ. ಬದುಕಿನಲ್ಲಿರುವ ನೋವು ದೂರ ಮಾಡಲು ಹಲವು ಕಲೆಗಳು ಇದ್ದರೂ, ಹತ್ತಿರದಲ್ಲಿ ಮತ್ತು ಸುಲಭದಲ್ಲಿ ಆಸ್ವಾದಿಸಲು ಸಾಧ್ಯವಾಗುವುದು ಸಂಗೀತದ ಮೂಲಕ ಎಂದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಾರಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಕಾಂಚನ ಇದೊಂದು ವಿಶೇಷವಾದ ಗುಡಿ. ಹಲವಾರು ಸಂಗೀತ ದಿಗ್ಗಜರನ್ನು ನೀಡಿದ ಕಾಂಚನ ದಕ್ಷಿಣ ಭಾರತದ ತಿರುವಯ್ಯೂರು ಎನ್ನುವುದರಲ್ಲಿ ತಪ್ಪಿಲ್ಲ. ಸಂಗೀತ ಕ್ಷೇತ್ರ ಬಹಳ ಖುಷಿ ಕೊಡುವ ಮತ್ತು ಬಹಳ ಕಷ್ಟದ ಕೆಲಸ. ಆದರೆ ಇವರ ಕುಟುಂಬ ಇದನ್ನು ಉಳಿಸಿಕೊಂಡು ಬಂದಿದೆ, ಈ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮೆಲ್ಲರ ಕರ್ತವ್ಯವೂ ಆಗಿದೆ ಎಂದರು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ವಕೀಲ ರಾಜಶೇಖರ್ ಹಿಲ್ಯಾರು ಮಾತನಾಡಿದರು. ನಾಗರತ್ನ ವಿಷ್ಣುಪ್ರಸಾದ್ ಹೆಬ್ಬಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಡಿ. ಹಷೇಂದ್ರ ಕುಮಾರ್, ಮೆಸ್ಕಾಂ ನಿಗಮದ ಹರೀಶ್ ಕುಮಾರ್, ಮುಖಂಡರಾದ ವಿನಯಕುಮಾರ್ ಸೊರಕೆ, ಪದ್ಮರಾಜ್ ಆರ್. ಪೂಜಾರಿ, ಇನಾಯತ್ ಆಲಿ, ಎಂ.ಎಸ್. ಮಹಮ್ಮದ್, ಮುರಳೀಧರ ರೈ, ಜಿ. ಕೃಷ್ಣಪ್ಪ ರಾಮಕುಂಜ, ಪಂಜಿಗುಡ್ಡೆ ಈಶ್ವರ ಭಟ್, ಧನ್ಯಕುಮಾರ್ ರೈ, ಕಾಂಚನ ಸಹೋದರಿಯರಾದ ಕಾಂಚನ ಶ್ರೀರಂಜಿನಿ, ಕಾಂಚನ ಶ್ರುತಿರಂಜಿನಿ, ಕಾಂಚನ ಸುಮನಸರಂಜಿನಿ, ಶ್ರೀಧರ ಗೌಡ ನಡ್ಪ, ಮುಕುಂದ ಗೌಡ ಮೊದಲಾದವರು ಇದ್ದರು. ಕಾಂಚನ ಲಕ್ಷ್ಮೀನಾರಾಯಣ ಮ್ಯೂಸಿಕ್ ಅಕಾಡೆಮಿ ಟ್ರಸ್ಟ್ ಕಾರ್ಯದರ್ಶಿ ಕೆ. ರೋಹಿಣಿ ಸುಬ್ಬರತ್ನಂ ಸ್ವಾಗತಿಸಿ ದರು. ಕೆ.ಯು. ಜಯಚಂದ್ರ ರಾವ್ ವಂದಿಸಿದರು. ಮೋಹನಚಂದ್ರ ಕಾಂಚನ, ಮಹೇಶ್ ಕಜೆ, ಗಣರಾಜ್ ಕುಂಬ್ಳೆ ಕಾರ್ಯಕ್ರಮ ನಿರೂಪಿಸಿದರು.
ಸೌದಿಯನ್ನು ಹಿಂದಿಕ್ಕಿ UAE ಈಗ ಭಾರತೀಯ ಕೈಗಾರಿಕಾ ಕಾರ್ಮಿಕರ ಆದ್ಯತೆಯ ದೇಶ
ಹೊಸದಿಲ್ಲಿ: ವಲಸೆ ಪ್ರವೃತ್ತಿಗಳ ಕುರಿತು ಸರಕಾರದ ಇತ್ತೀಚಿನ ದತ್ತಾಂಶಗಳ ಪ್ರಕಾರ, ಸಂಯುಕ್ತ ಅರಬ್ ಗಣರಾಜ್ಯವು (ಯುಎಇ) 2025ರಲ್ಲಿ ಸೌದಿ ಅರೇಬಿಯಾವನ್ನು ಹಿಂದಿಕ್ಕಿ ಭಾರತೀಯ ಕೈಗಾರಿಕಾ ಕಾರ್ಮಿಕರ ಅತಿ ದೊಡ್ಡ ವಿದೇಶಿ ಗಮ್ಯಸ್ಥಾನವಾಗಿದೆ ಎಂದು ವರದಿಯಾಗಿದೆ. 2025ರಲ್ಲಿ 2,00,686 ಭಾರತೀಯ ಕೈಗಾರಿಕಾ ಕಾರ್ಮಿಕರು ಉದ್ಯೋಗಕ್ಕಾಗಿ ಯುಎಇಗೆ ತೆರಳಿದ್ದರೆ, ಸೌದಿ ಅರೇಬಿಯಾಕ್ಕೆ ಪ್ರಯಾಣಿಸಿದ್ದವರ ಸಂಖ್ಯೆ 1,36,812 ಆಗಿತ್ತು. ಹಿಂದಿನ ವರ್ಷ ಸೌದಿಗೆ 1,67,598 ಮತ್ತು ಯುಎಇಗೆ 1,11,308 ಭಾರತೀಯ ಕೈಗಾರಿಕಾ ಕಾರ್ಮಿಕರು ತೆರಳಿದ್ದರು. 2025ರಲ್ಲಿ ಒಟ್ಟು 4,49,110 ಕಾರ್ಮಿಕರು ಉದ್ಯೋಗವನ್ನರಸಿ 11 ಪ್ರಮುಖ ಕಾರ್ಮಿಕ ಆಮದು ದೇಶಗಳಿಗೆ ವಲಸೆ ಹೋಗಿದ್ದಾರೆ. 2024 ಮತ್ತು 2023ರಲ್ಲಿ ಈ ಸಂಖ್ಯೆ ಅನುಕ್ರಮವಾಗಿ 3,87,067 ಮತ್ತು 3,98,316 ಆಗಿತ್ತು. ಖತರ್ನಲ್ಲಿ ಕಳೆದ ಮೂರು ವರ್ಷಗಳಲ್ಲಿ ಭಾರತೀಯ ಕೈಗಾರಿಕಾ ಕಾರ್ಮಿಕರಿಗೆ ಬೇಡಿಕೆ ಕ್ರಮೇಣ ಇಳಿಕೆಯಾಗಿದ್ದರೆ, ಒಮಾನ್ನಲ್ಲಿ ನಿರಂತರವಾಗಿ ಹೆಚ್ಚುತ್ತಿದೆ. ಭಾರೀ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳು, ನಿರ್ಮಾಣ, ಲಾಜಿಸ್ಟಿಕ್ಸ್ ಮತ್ತು ತಯಾರಿಕೆ ಕ್ಷೇತ್ರದಲ್ಲಿ ಹೆಚ್ಚಿನ ಬೇಡಿಕೆ, ಇತರ ದೇಶಗಳಿಗೆ ಹೋಲಿಸಿದರೆ ಶೇ.15ರಿಂದ ಶೇ.30ರಷ್ಟು ಹೆಚ್ಚಿನ ವೇತನ, ತೆರಿಗೆ ರಹಿತ ಆದಾಯ, ಗಳಿಕೆಯ ಸಂಪೂರ್ಣ ಹಣವನ್ನು ಭಾರತಕ್ಕೆ ಕಳುಹಿಸಲು ಅವಕಾಶ, ಭಾರತಕ್ಕೆ ಸಮೀಪತೆ, ಸುರಕ್ಷತೆ ಮತ್ತು ಕಡಿಮೆ ಪ್ರಯಾಣ ಅವಧಿ ಇವು ಯುಎಇ ಭಾರತೀಯ ಕೈಗಾರಿಕಾ ಕಾರ್ಮಿಕರ ನೆಚ್ಚಿನ ತಾಣವಾಗಿರುವುದಕ್ಕೆ ಪ್ರಮುಖ ಕಾರಣಗಳಾಗಿವೆ ಎಂದು ವರದಿಯಾಗಿದೆ.
ಮುಲ್ಕಿ| ಶಾಫಿ ಜುಮಾ ಮಸೀದಿಯ ಅಧೀನಕ್ಕೊಳಪಟ್ಟ ನವೀಕೃತ ಮಸ್ಜಿದುನ್ನೂರ್ ಉದ್ಘಾಟನೆ
ಸರ್ವಧರ್ಮೀಯರ ಮಸೀದಿ ಸಂದರ್ಶನ ಕಾರ್ಯಕ್ರಮ
ಒಬಾಮಾರನ್ನು ಕೋತಿಗಳಂತೆ ಬಿಂಬಿಸುವ ವೀಡಿಯೊ ಪೋಸ್ಟ್ ಮಾಡಿದ ಟ್ರಂಪ್; ವ್ಯಾಪಕ ಖಂಡನೆ
ವಾಷಿಂಗ್ಟನ್: ಮಾಜಿ ಅಧ್ಯಕ್ಷ ಬರಾಕಾ ಒಬಾಮಾ ಮತ್ತು ಅವರ ಪತ್ನಿ ಮಿಷೆಲ್ ಒಬಾಮಾ ಅವರನ್ನು ಏಪ್ಸ್( ಬಾಲವಿಲ್ಲದ ದೊಡ್ಡ ಕೋತಿ)ಗಳಂತೆ ಬಿಂಬಿಸುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಶೇರ್ ಮಾಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡೆಗೆ ವ್ಯಾಪಕ ಖಂಡನೆ, ಟೀಕೆ ವ್ಯಕ್ತವಾಗಿದೆ. ಟ್ರುಥ್ ಸೋಷಿಯಲ್ ಅಕೌಂಟ್ನಲ್ಲಿ ಟ್ರಂಪ್ ಗುರುವಾರ ಪೋಸ್ಟ್ ಮಾಡಿರುವ 1 ನಿಮಿಷದ ವೀಡಿಯೊ, ತನ್ನ ವಿರುದ್ದ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ವಂಚನೆ ಎಸಗಲು ಮತ ಎಣಿಕೆ ಸಂಸ್ಥೆ ಡೊಮಿನಿಯನ್ ವೋಟಿಂಗ್ ಸಿಸ್ಟಮ್ಸ್ ಸಹಾಯ ಮಾಡಿದೆ ಎಂಬ ಸುಳ್ಳು ಆರೋಪಗಳನ್ನು ಪುನರಾವರ್ತಿಸಿದೆ. ವೀಡಿಯೊದ ಕೊನೆಯಲ್ಲಿ ಒಬಾಮಾ ಮತ್ತವರ ಪತ್ನಿ, `ದಿ ಲಯನ್ಸ್ ಸ್ಲೀಪ್ಟ್ ಟುನೈಟ್' ಹಾಡಿನೊಂದಿಗೆ ತಮ್ಮ ಮುಖಗಳನ್ನು ಕೋತಿಗಳ ದೇಹದಲ್ಲಿ ಇರಿಸಿಕೊಂಡು ಸಂಕ್ಷಿಪ್ತವಾಗಿ ಕಾಣಿಸಿಕೊಳ್ಳುತ್ತಾರೆ. ಶುಕ್ರವಾರದ ಬೆಳಗ್ಗಿನವರೆಗೆ 2,500ಕ್ಕೂ ಹೆಚ್ಚು `ಲೈಕ್ಸ್' ಪಡೆದಿರುವ ಈ ವೀಡಿಯೊ ಬಗ್ಗೆ ಡೆಮಾಕ್ರಟಿಕ್ ನಾಯಕರಿಂದ ಬಲವಾದ ಖಂಡನೆ, ಟೀಕೆ ವ್ಯಕ್ತವಾಗಿದೆ.
ಬೀದರ್ ನ ಕೆಕೆಆರ್ಟಿಸಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ : ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ಬೀದರ್ : ಜಿಲ್ಲೆಯ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ (ಕೆಕೆಆರ್ಟಿಸಿ) ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಶುಕ್ರವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಬೀದರ್ ವಿಭಾಗದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕಚೇರಿ ಎದುರು ಸಮಿತಿ ಅಧ್ಯಕ್ಷ ಸೂರ್ಯಕಾಂತ್ ಟೈಗರ್ ಅವರ ನೇತೃತ್ವದಲ್ಲಿ ನೌಕರರು ಧರಣಿ ನಡೆಸಿದರು. ಈ ವೇಳೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಮನವಿ ಪತ್ರದಲ್ಲಿ, ಬೀದರ್ ವಿಭಾಗದ ಕೆಕೆಆರ್ಟಿಸಿಯಲ್ಲಿ ಅಧಿಕಾರಿಗಳು ಹಾಗೂ ಮೇಲ್ವಿಚಾರಕರು ದೀರ್ಘಕಾಲ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವುದರಿಂದ ನಿಗಮದ ಸುತ್ತೋಲೆಗಳು ಹಾಗೂ ಸ್ಥಾಯಿ ಸಮಿತಿ ಆದೇಶಗಳನ್ನು ಉಲ್ಲಂಘಿಸಿ ಲಕ್ಷಾಂತರ ರೂಪಾಯಿ ಅವ್ಯವಹಾರ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಗೈರು ಹಾಜರಿದ್ದ ಸಿಬ್ಬಂದಿಗೆ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ವೇತನ ಪಾವತಿ ಮಾಡಲಾಗಿದೆ. ಆಡಳಿತ ಸಿಬ್ಬಂದಿಗೆ ಸಡಿಲ ನೀತಿ ಅನುಸರಿಸಿ, ತಾಂತ್ರಿಕ ಸಿಬ್ಬಂದಿಗೆ ಮಾತ್ರ ಕಠಿಣ ಶಿಕ್ಷೆ ಜಾರಿಗೊಳಿಸಲಾಗುತ್ತಿದೆ. ಸ್ಥಾಯಿ ಸಮಿತಿ ಆದೇಶಗಳನ್ನು ಪಾಲಿಸದೆ ಅರ್ಹ ಸಿಬ್ಬಂದಿಯನ್ನು ವರ್ಗಾವಣೆ ಸೌಲಭ್ಯದಿಂದ ವಂಚಿಸಲಾಗಿದೆ. ಶಿಸ್ತು ಕ್ರಮಗಳನ್ನು ವಿಳಂಬಗೊಳಿಸುವ ಮೂಲಕ ನೌಕರರಿಗೆ ಆರ್ಥಿಕ ನಷ್ಟ ಉಂಟು ಮಾಡಲಾಗಿದೆ ಎಂದು ದೂರಲಾಗಿದೆ. ಇದಲ್ಲದೆ, ಒಬ್ಬ ಬಿಡ್ದಾರರಿಗೆ ಎರಡು-ಮೂರು ಮಳಿಗೆಗಳನ್ನು ನೀಡಿರುವುದರಿಂದ ನಿಗಮಕ್ಕೆ ಆದಾಯ ನಷ್ಟ ಉಂಟಾಗಿದೆ. ಅಪಘಾತ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್ ಪ್ರಕರಣ ದಾಖಲಿಸದೇ ನಿರ್ಲಕ್ಷ ವಹಿಸಲಾಗಿದೆ. ಕೆಲವು ಸಿಬ್ಬಂದಿಗಳ ವಿರುದ್ಧ ಆಧಾರರಹಿತ ಆರೋಪಗಳನ್ನು ಹೊರಿಸಲಾಗಿದೆ ಎಂದು ಸಂಘ ಅಸಮಾಧಾನ ವ್ಯಕ್ತಪಡಿಸಿದೆ. ಈ ಎಲ್ಲ ಅಕ್ರಮಗಳಲ್ಲಿ ಭಾಗಿಯಾಗಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ತಕ್ಷಣ ಅಮಾನತು ಮಾಡಿ, ಬೇರೆ ವಿಭಾಗಗಳಿಗೆ ವರ್ಗಾವಣೆ ಮಾಡಬೇಕು. ನೌಕರರ ಹಿತಾಸಕ್ತಿಗೆ ಧಕ್ಕೆ ತರುವ ಆಡಳಿತಾತ್ಮಕ ನಿರ್ಧಾರಗಳನ್ನು ಹಿಂಪಡೆಯಬೇಕು ಎಂದು ಸಂಘ ಒತ್ತಾಯಿಸಿದೆ. ಪ್ರತಿಭಟನೆಯಲ್ಲಿ ಭಾಗವಹಿಸಿದ ನೌಕರರ ಮೇಲೆ ಯಾವುದೇ ರೀತಿಯ ಕಿರುಕುಳ ಅಥವಾ ಶಿಸ್ತು ಕ್ರಮ ಕೈಗೊಂಡರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಪ್ರತಿಭಟನೆಯಲ್ಲಿ ಡಿಎಸ್ಎಸ್ ಜಿಲ್ಲಾಧ್ಯಕ್ಷ ಧನರಾಜ್ ಮುಸ್ತಪುರೆ, ಪರಮೇಶ್ವರ್ ವಾಘಮಾರೆ, ಪ್ರಕಾಶ್ ಸುಲೇಪೇಟಕರ್, ಯುವರಾಜ್ ಕೆ, ಗಣಪತಿ ಸಕ್ರಪನೂರ್, ಜಾನಸನ್ ಜನವಾಡಕ್, ರಾಮ್ ವಾಲಿಕರ್, ಅನಿಲ್ ಕುಮಾರ್ ಸಾಗರ್, ರಾಜಪ್ಪಾ ಬೋರಗಿ, ಪಂಡಿತ್ ಜನವಾಡ, ಚಂದ್ರಕಾಂತ್ ಉತ್ತಮ್, ಕುಪೇಂದ್ರ ಭಾಗ್ಯಕರ್, ಅಂಕುಶ್ ಕನಕಟ, ಅಬ್ರಾಮ್, ಜೀವನ್ ಧನ್ನೂರ್, ಮಲ್ಲಿಕಾರ್ಜುನ್ ಪಾಟೀಲ್, ವಿದ್ಯಾಧರ್ ಮೂಡಬಿ, ಕಾಶೀನಾಥ್ ಹಾಗೂ ರಾಜಕುಮಾರ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಮುಂಬೈ: ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಆಕ್ಷೇಪಾರ್ಹ ವಿಷಯವನ್ನು ತ್ವರಿತವಾಗಿ ನಿರ್ಬಂಧಿಸಲು, ತಕ್ಷಣವೇ ನಿಷ್ಕ್ರಿಯಗೊಳಿಸಲು ರಚಿಸಲಾದ ‘ಸಹಯೋಗ್ ಪೋರ್ಟಲ್’ ಅನ್ನು ರದ್ದುಗೊಳಿಸುವಂತೆ ಕೋರಿ ಸ್ಟ್ಯಾಂಡ್–ಅಪ್ ಕಾಮಿಡಿಯನ್ ಕುನಾಲ್ ಕಾಮ್ರಾ ಮತ್ತು ಹಿರಿಯ ವಕೀಲ ಹರೇಶ್ ಜಗ್ತಿಯಾನಿ ಬಾಂಬೆ ಹೈಕೋರ್ಟ್ಗೆ ರಿಟ್ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಮಾಹಿತಿ ತಂತ್ರಜ್ಞಾನ ನಿಯಮಗಳು, 2021 ರ ನಿಯಮ 3(1)(d) ಗೆ ಮಾಡಲಾದ ತಿದ್ದುಪಡಿಯನ್ನು ಕೂಡ ಅವರು ಪ್ರಶ್ನಿಸಿದ್ದಾರೆ. ನವೆಂಬರ್ 15, 2025 ರಿಂದ ಜಾರಿಗೆ ಬಂದ ನಿಯಮ 3(1)(d) ತಿದ್ದುಪಡಿಗಳ ಮೂಲಕ ಮಧ್ಯವರ್ತಿಗಳು ಕಾನೂನುಬಾಹಿರ ವಿಷಯವನ್ನು ತೆಗೆದುಹಾಕುವ ಪ್ರಕ್ರಿಯೆಯನ್ನು ಪಾರದರ್ಶಕ ರೀತಿಯಲ್ಲಿ ನಡೆಸುವುದನ್ನು ಖಚಿತಪಡಿಸಲು ಹೆಚ್ಚುವರಿ ಸುರಕ್ಷತಾ ಕ್ರಮಗಳನ್ನು ಪರಿಚಯಿಸಲಾಗಿದೆ ಎಂದು ಸರಕಾರ ತಿಳಿಸಿದೆ. ಆದರೆ ಅರ್ಜಿದಾರರು ಈ ತಿದ್ದುಪಡಿಗಳು ವಾಕ್ ಸ್ವಾತಂತ್ರ್ಯದ ಮೇಲೆ ಅಸಂವಿಧಾನಿಕ ಹಾಗೂ ಅಸಮಂಜಸ ನಿರ್ಬಂಧ ಹೇರುತ್ತವೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೈಕೋರ್ಟ್ ಮಾರ್ಚ್ 16 ರಂದು ಈ ಅರ್ಜಿಗಳ ವಿಚಾರಣೆ ನಡೆಸುವ ಸಾಧ್ಯತೆಯಿದೆ. ಫೆ. 4 ರಂದು ವಕೀಲ ಮೀನಾಜ್ ಕಾಕಾಲಿಯಾ ಮೂಲಕ ಸಲ್ಲಿಸಲಾದ ಅರ್ಜಿಗಳಲ್ಲಿ, “ಸಹಯೋಗ್ ಪೋರ್ಟಲ್ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾವಿರಾರು ಅಧಿಕಾರಿಗಳಿಗೆ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯಲ್ಲಿ ಕಡ್ಡಾಯಗೊಳಿಸಲಾದ ಕಾರ್ಯವಿಧಾನವನ್ನು ಅನುಸರಿಸದೇ, ಕಾನೂನುಬಾಹಿರವಾಗಿ ತೆಗೆದುಹಾಕುವ ಅಧಿಕಾರವನ್ನು ಕಾನೂನುಬಾಹಿರವಾಗಿ ನೀಡಲಾಗಿದೆ” ಎಂದು ಆರೋಪಿಸಲಾಗಿದೆ. ತಿದ್ದುಪಡಿ ಮಾಡಿದ ನಿಯಮ 3(1)(d) ಹಾಗೂ ಸಹಯೋಗ್ ಪೋರ್ಟಲ್ ಅಸಂವಿಧಾನಿಕವಾಗಿದ್ದು, ಇಂಟರ್ನೆಟ್ ಪ್ಲಾಟ್ಫಾರ್ಮ್ಗಳಲ್ಲಿನ ಮಾಹಿತಿಯನ್ನು ಸಂಪೂರ್ಣವಾಗಿ ಅಸ್ಪಷ್ಟ ಆಧಾರದ ಮೇಲೆ ನಿರ್ಬಂಧಿಸಲು ಅಥವಾ ತೆಗೆದುಹಾಕಲು ಅವಕಾಶ ಮಾಡಿಕೊಡುತ್ತದೆ ಎಂದು ಅರ್ಜಿದಾರರು ವಾದಿಸಿದ್ದಾರೆ. “ಇಂತಹ ಅಧಿಕಾರಗಳು ಸಂವಿಧಾನದ ವಿಧಿ 19(2) ಅಡಿಯಲ್ಲಿ ಸಮಗ್ರವಾಗಿ ಪಟ್ಟಿ ಮಾಡಲಾದ ಸಾಂವಿಧಾನಿಕವಾಗಿ ಅನುಮತಿಸಲಾದ ಆಧಾರಗಳನ್ನು ಮೀರಿದ ವಾಕ್ ಸ್ವಾತಂತ್ರ್ಯದ ಮೇಲೆ ಅಸಂವಿಧಾನಿಕ ನಿರ್ಬಂಧಕ್ಕೆ ಸಮನಾಗುತ್ತದೆ” ಎಂದು ಕುನಾಲ್ ಕಮ್ರಾ ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ. ಅರ್ಜಿದಾರರ ಪ್ರಕಾರ, ತಿದ್ದುಪಡಿ ನಿಯಮ ಮತ್ತು ಪೋರ್ಟಲ್, ಸಂವಿಧಾನದ ವಿಧಿ 19(1)(a), 19(1)(g) ಹಾಗೂ ವಿಧಿ 14 ಅಡಿಯಲ್ಲಿ ದೊರೆಯುವ ತಮ್ಮ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದ್ದು, ಇವು ಮಾಹಿತಿ ತಂತ್ರಜ್ಞಾನ ಕಾಯ್ದೆ, 2000 ರ ವ್ಯಾಪ್ತಿಯನ್ನು ಮೀರಿವೆ. ಆದ್ದರಿಂದ ಇವುಗಳನ್ನು “ಕಾನೂನುಬಾಹಿರ, ಅಸಂವಿಧಾನಿಕ ಮತ್ತು ಅನೂರ್ಜಿತ” ಎಂದು ಘೋಷಿಸಿ ರದ್ದುಗೊಳಿಸಬೇಕೆಂದು ಅವರು ಮನವಿ ಮಾಡಿದ್ದಾರೆ. “ಸಹಯೋಗ್ ಪೋರ್ಟಲ್ ಮೂಲಕ ನೋಟಿಸ್ ನೀಡುವುದು, ಸೇರಿದಂತೆ ಕಡ್ಡಾಯ ಕಾನೂನು ಕ್ರಮಗಳನ್ನು ಪಾಲಿಸದೇ ಇಂಟರ್ನೆಟ್ನಲ್ಲಿ ವಿಷಯವನ್ನು ಏಕಪಕ್ಷೀಯವಾಗಿ ನಿರ್ಬಂಧಿಸಲು ಅಥವಾ ತೆಗೆದುಹಾಕಲು ಸಾಧ್ಯವಾಗುತ್ತದೆ” ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಅರ್ಜಿಯಲ್ಲಿ ಸಹಯೋಗ್ ಪೋರ್ಟಲ್ “ಅಂತರ್ಜಾಲದಲ್ಲಿನ ಎಲ್ಲಾ ಮಾಹಿತಿಯನ್ನು ಅನಿಯಂತ್ರಿತ ತೆಗೆದುಹಾಕುವಿಕೆಗೆ ಗುರಿಪಡಿಸುತ್ತದೆ. ಇಂತಹ ಕ್ರಮದ ವಿರುದ್ಧ ಯಾವುದೇ ಪರಿಹಾರವನ್ನು ಒದಗಿಸುವುದಿಲ್ಲ. ಕೇಂದ್ರ ಹಾಗೂ ರಾಜ್ಯ ಮಟ್ಟದಲ್ಲಿ ಸಾವಿರಾರು ಸರ್ಕಾರಿ ಅಧಿಕಾರಿಗಳಿಗೆ ಇಂಟರ್ನೆಟ್ನಲ್ಲಿನ ಮಾಹಿತಿ ಹರಿವಿನ ಮೇಲೆ ಅನಿಯಂತ್ರಿತ ಅಧಿಕಾರವನ್ನು ಪರಿಣಾಮಕಾರಿಯಾಗಿ ನೀಡುತ್ತದೆ. ಇದು ಪ್ರಜಾಪ್ರಭುತ್ವ ಮತ್ತು ನಾಗರಿಕರ ಮಾಹಿತಿ ಹಕ್ಕಿನ ಮೇಲೆ ದಾಳಿ” ಎಂದು ಆಕ್ಷೇಪ ವ್ಯಕ್ತಪಡಿಸಲಾಗಿದೆ. ಅಕ್ಟೋಬರ್ 31, 2023 ರಂದು ಸಹಯೋಗ್ ಪೋರ್ಟಲ್ ರಚನೆಗೆ ಕಾರಣವಾದ ಮನವಿಯನ್ನು ರದ್ದುಗೊಳಿಸಲು ಹಾಗೂ ಅರ್ಜಿಯ ವಿಚಾರಣೆ ಮತ್ತು ಅಂತಿಮ ತೀರ್ಪು ಬಾಕಿ ಇರುವವರೆಗೆ ಪೋರ್ಟಲ್ ಅನ್ನು ಅಮಾನತುಗೊಳಿಸುವಂತೆ ಅರ್ಜಿದಾರರು ಕೋರಿದ್ದಾರೆ. ನಿಯಮ 3(1)(d) ತಿದ್ದುಪಡಿ ಮತ್ತು ಸೆಕ್ಷನ್ 69A ಅಡಿಯಲ್ಲಿ ಅಗತ್ಯವಿರುವ ಕಾರ್ಯವಿಧಾನವಿಲ್ಲದೆ ಯಾವುದೇ ಮಾಹಿತಿಯನ್ನು ನಿರ್ಬಂಧಿಸುವ ಅಥವಾ ತೆಗೆದುಹಾಕುವ ಕುರಿತು ಯಾವುದೇ ಅಧಿಕಾರಿಯಿಂದ ಯಾವುದೇ ಆದೇಶಗಳನ್ನು ಹೊರಡಿಸಬಾರದು ಎಂದು ಮಧ್ಯಂತರ ನಿರ್ದೇಶನ ನೀಡುವಂತೆ ಕೂಡ ಮನವಿ ಮಾಡಿದ್ದಾರೆ. ಈ ಹಿಂದೆ, ಸೆಪ್ಟೆಂಬರ್ 2024 ರಲ್ಲಿ, ಕುನಾಲ್ ಕಾಮ್ರಾ ಮತ್ತು ಇತರರು ಸಲ್ಲಿಸಿದ ಮನವಿಯ ಮೇರೆಗೆ ಬಾಂಬೆ ಹೈಕೋರ್ಟ್ 2:1 ಬಹುಮತದ ತೀರ್ಪಿನ ಮೂಲಕ, ಸಾಮಾಜಿಕ ಮಾಧ್ಯಮದಲ್ಲಿ “ಸುಳ್ಳು ಸುದ್ದಿ” ಗುರುತಿಸಲು ಸತ್ಯ ಪರಿಶೀಲನಾ ಘಟಕವನ್ನು ಸ್ಥಾಪಿಸಲು ಸರ್ಕಾರಕ್ಕೆ ಅವಕಾಶ ನೀಡಿದ್ದ ತಿದ್ದುಪಡಿ ಐಟಿ ನಿಯಮಗಳನ್ನು ರದ್ದುಗೊಳಿಸಿತ್ತು.
ಕಲಬುರಗಿ ಜಿಲ್ಲಾ ಪಂಚಾಯತ್ ನೂತನ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ
49.65 ಕೋಟಿ ರೂ. ವೆಚ್ಚದಲ್ಲಿ ತಲೆ ಎತ್ತಲಿದೆ ಭವ್ಯ ಕಟ್ಟಡ
ಕಲಬುರಗಿ | ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು ಅತೀ ಹೆಚ್ಚಿನ ನಿಗಾವಹಿಸಬೇಕೆಂದು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು ಶುಕ್ರವಾರದಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ, ಮಕ್ಕಳ ಸಹಾಯವಾಣಿ -1098, ಸಲಹಾ ಮಂಡಳಿ, ಮುಖ್ಯಮಂತ್ರಿ ಬಾಲಸೇವಾ ಯೋಜನೆ ಮತ್ತು ಪಿ.ಎಮ್.ಕೇರ್, ಹೆಣ್ಣು ಮಕ್ಕಳ ಅನುಪಾಲನಾ ಗೃಹ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 2023 ರಲ್ಲಿ ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ಬಾಲ್ಯವಿವಾಹ ಪ್ರಕರಣಗಳಲ್ಲಿ ನ್ಯಾಯಾಲಯವು ಕುಟುಂಬದ 4 ಜನ ಸದಸ್ಯರಿಗೆ ಶಿಕ್ಷೆಯನ್ನು ವಿಧಿಸಿರುತ್ತದೆ. ಇಂತಹ ಇತ್ಯರ್ಥಗೊಂಡ ನ್ಯಾಯಾಲಯಗಳ ಪ್ರಕರಣಗಳನ್ನು ಎಲ್ಲಾ ಜಿಲ್ಲೆಯ ಅಧಿಕಾರಿಗಳಿಗೆ ಜನರಿಗೆ ಅರಿವು ನೀಡಬೇಕೆಂದು ಸೂಚನೆ ನೀಡಿದರು. ಬಾಲಗರ್ಭಿಣಿ ಪ್ರಕರಣಗಳಲ್ಲಿ ಆರೋಗ್ಯ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಕಡ್ಡಾಯವಾಗಿ ಪ್ರಥಮ ವರ್ತಮಾನ ವರದಿಯನ್ನು ಮಾಡಬೇಕು. ಕೇವಲ ಹೇಳಿಕೆಗಳನ್ನು ನೀಡದೆ ಸಂಬಂಧಪಟ್ಟ ಠಾಣೆಗೆ ತೆರಳಿ ವರದಿ ಮಾಡುವಂತೆ ಸೂಚಿಸಿದರು. ಇದೇ ಸಂದರ್ಭದಲ್ಲಿ ಕೋವಿಡ್ನಲ್ಲಿ ಪಾಲಕರನ್ನು ಕಳೆದುಕೊಂಡಿರುವ ಪಿ.ಎಂ.ಕೇರ್ ಯೋಜನೆ ಅಡಿ ದಾಖಲಾಗಿರುವ ಮಕ್ಕಳಿಗೆ ಜಿಲ್ಲಾಧಿಕಾರಿಗಳು ಸ್ನೇಹ ಪತ್ರವನ್ನು ವಿತರಿಸಿದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾಮಕ್ಕಳ ರಕ್ಷಣಾಧಿಕಾರಿ ವಿ.ಮಂಜುಳಾ ಪಾಟೀಲ್ ಅವರು ಪಿ.ಪಿ.ಟಿ. ಮೂಲಕ ಪ್ರತಿಯೊಂದು ಇಲಾಖೆಯ ಮಾಹಿತಿ ನೀಡಿದರು. ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ, ಮಹಾನಗರ ಪಾಲಿಕೆ ಆಯುಕ್ತರಾದ ಅವಿನಾಶ ಶಿಂಧೆ, ಹೆಚ್ಚುವರಿ ಎಸ್.ಪಿ. ಮಹೇಶ ಮೇಘಣ್ಣನವರ್, ಸಮಾಜ ಕಲ್ಯಾಣಾಧಿಕಾರಿ ಪ್ರೀತಿ ದೊಡ್ಡಮನಿ, ಡಿ.ಹೆಚ್.ಓ. ಡಾ.ಶರಣಬಸಪ್ಪ ಕ್ಯಾತನಾಳ, ಶಿಕ್ಷಣ ಇಲಾಖೆ ಉಪನಿರ್ದೇಶಕಿ ಶಂಕ್ರಮ್ಮ ಡವಳಗಿ, ಪೊಲೀಸ್ ಅಧಿಕಾರಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ತಾಲೂಕು ಮಟ್ಟದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಆಪ್ತ ಸಮಾಲೋಚಕರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ಜನಾರ್ದನ ಪೂಜಾರಿ ನಿವಾಸಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭೇಟಿ
ಬಂಟ್ವಾಳ : ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರ ಮಾಜಿ ಸಚಿವ ಬಿ ಜನಾರ್ದನ ಪೂಜಾರಿ ಅವರ ಬಂಟ್ವಾಳದ ನಿವಾಸಕ್ಕೆ ರಾಜ್ಯದ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಶುಕ್ರವಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಶುಕ್ರವಾರ ಪುತ್ತೂರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಡಿಸಿಎಂ ಅವರು ಈ ಮಧ್ಯೆ ಪೂಜಾರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ರಾಜಕಾರಣದಲ್ಲಿ ಅಪಾರ ಅನುಭವ ಹೊಂದಿರುವ ಜನಾರ್ದನ ಪೂಜಾರಿ ಅವರು ಸದಾ ಜನಪರ ಚಿಂತನೆಗ ಳೊಂದಿಗೆ ಕಾರ್ಯನಿರ್ವಹಿಸಿದವರು. ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದದ್ದು ಸಂತಸವನ್ನುಂಟು ಮಾಡಿತು ಎಂದು ಡಿಕೆಶಿ ಹೇಳಿದ್ದಾರೆ. ಈ ಸಂದರ್ಭ ಮಾಜಿ ಸಚಿವ ಬಿ ರಮಾನಾಥ ರೈ, ಪಕ್ಷ ಪ್ರಮುಖರಾದ ಇನಾಯತ್ ಅಲಿ, ಬೇಬಿ ಕುಂದರ್, ಹರೀಶ್ ಕುಮಾರ್, ಪದ್ಮರಾಜ್ ಆರ್ ಪೂಜಾರಿ ಮೊದಲಾದವರು ಜೊತೆಗಿದ್ದರು.
ಕಲಬುರಗಿ ನಗರದಲ್ಲಿ ಜಿಲ್ಲಾಧಿಕಾರಿಗಳಿಂದ ರಸ್ತೆ ದುರಸ್ತಿ, ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ
ಕಲಬುರಗಿ : ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಅವರು ಶುಕ್ರವಾರ ಕಲಬುರಗಿ ನಗರದಲ್ಲಿ ಸಂಚರಿಸಿ, ಮಹಾನಗರ ಪಾಲಿಕೆಯಿಂದ ನಗರಾದ್ಯಂತ ನಡೆಯುತ್ತಿರುವ ರಸ್ತೆ ಸುಧಾರಣೆ, ದುರಸ್ತಿ, ಒಳಚರಂಡಿ ನಿರ್ಮಾಣ ಹಾಗೂ ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗಳನ್ನು ಪರಿಶೀಲಿಸಿದರು. ನಗರದ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ಕೆಕೆಆರ್ಡಿಬಿ ವತಿಯಿಂದ 2 ಕೋಟಿ ರೂ. ಅನುದಾನದಲ್ಲಿ ನಡೆಯುತ್ತಿರುವ ಕಲ್ವರ್ಟ್ ಕಾಮಗಾರಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ, ಈ ಪ್ರದೇಶದಲ್ಲಿ ಜನಸಂದಣಿ ಹೆಚ್ಚಿರುವುದರಿಂದ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು. ಜೊತೆಗೆ ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ನಂತರ ಹಳೇ ಜೇವರ್ಗಿ ರಸ್ತೆಯ ಮೋಹನ ಲಾಡ್ಜ್ನಿಂದ ರಾಮ ಮಂದಿರ ಸರ್ಕಲ್ ವರೆಗೆ ಎನ್ಸಿಎಪಿ ಯೋಜನೆಯಡಿ 1.20 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿರುವ ರಸ್ತೆ ಅಭಿವೃದ್ಧಿ ಹಾಗೂ ಮೂರು ವರ್ಷಗಳ ನಿರ್ವಹಣಾ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು. ಇದೇ ವೇಳೆ ಸುಮಾರು 87 ಲಕ್ಷ ರೂ. ವೆಚ್ಚದಲ್ಲಿ ಖರೀದಿಸಲಾದ ಪಾಟ್ಹೋಲ್ ಫಿಲ್ಲಿಂಗ್ ಯಂತ್ರಗಳ ಮೂಲಕ ನಡೆಯುತ್ತಿರುವ ರಸ್ತೆ ಗುಂಡಿ ಮುಚ್ಚುವ ಕಾರ್ಯವನ್ನೂ ವೀಕ್ಷಿಸಿದರು. ಇದಲ್ಲದೆ, ನ್ಯಾಷನಲ್ ಗ್ರೀನ್ ಟ್ರಿಬುನಲ್ (ಎನ್ಜಿಟಿ) ಯೋಜನೆಯಡಿ 40 ಕೋಟಿ ರೂ. ವೆಚ್ಚದಲ್ಲಿ ಖರ್ಗೆ ಪೆಟ್ರೋಲ್ ಪಂಪ್ನಿಂದ ಅನ್ನಪೂರ್ಣ ಕ್ರಾಸ್ ರಸ್ತೆಯ ಸ್ವದೇಶಿ ಭವನವರೆಗೆ ನಡೆಯುತ್ತಿರುವ ಒಳಚರಂಡಿ ಕಾಮಗಾರಿಯನ್ನು ಜಿಲ್ಲಾಧಿಕಾರಿ ಮತ್ತು ಪಾಲಿಕೆ ಆಯುಕ್ತರು ಜಂಟಿಯಾಗಿ ಪರಿಶೀಲಿಸಿದರು. ಖರ್ಗೆ ಪೆಟ್ರೋಲ್ ಪಂಪ್ ಹಾಗೂ ರಾಮ ಮಂದಿರ ಸರ್ಕಲ್ನಲ್ಲಿನ ಸಂಚಾರಿ ಸಿಗ್ನಲ್ಗಳನ್ನು ಒಂದು ವಾರದೊಳಗೆ ದುರಸ್ತಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನಗರಾಭಿವೃದ್ಧಿ ಪ್ರಾಧಿಕಾರದ ನಾಲ್ಕು ಸರ್ಕಲ್ ಸೌಂದರ್ಯೀಕರಣ : ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರವು ತನ್ನ ಅನುದಾನದಲ್ಲಿ ರಾಮ ಮಂದಿರ ಸರ್ಕಲ್, ಅಫಜಲಪೂರ ಸರ್ಕಲ್, ಆಳಂದ ರಸ್ತೆ ಸರ್ಕಲ್ ಹಾಗೂ ಹುಮನಾಬಾದ್ ರಸ್ತೆ ಸರ್ಕಲ್ಗಳಲ್ಲಿ ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ಸೌಂದರ್ಯೀಕರಣ ಹಾಗೂ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಅವರು ರಾಮ ಮಂದಿರ ಸರ್ಕಲ್ಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಪ್ರಾಧಿಕಾರದ ಪ್ರಭಾರಿ ಆಯುಕ್ತ ಶಿವಕುಮಾರ ಪಾಟೀಲ ಹಾಗೂ ಎಇಇ ಸುಭಾಷ ನಾಯಕ್ ಅವರು ಯೋಜನೆಗಳ ಕುರಿತು ಜಿಲ್ಲಾಧಿಕಾರಿಗೆ ವಿವರ ನೀಡಿದರು. ಇದೇ ವೇಳೆ ಮಹಾನಗರ ಪಾಲಿಕೆಯಿಂದ ಅಭಿವೃದ್ಧಿಪಡಿಸಲಾಗುತ್ತಿರುವ ಖರ್ಗೆ ಪೆಟ್ರೋಲ್ ಪಂಪ್ ಸರ್ಕಲ್ನನ್ನೂ ಪರಿಶೀಲಿಸಲಾಯಿತು. ಪರಿಶೀಲನೆ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಅಧೀಕ್ಷಕ ಅಭಿಯಂತರ ದತ್ತಾತ್ರೇಯ, ಕಾರ್ಯನಿರ್ವಾಹಕ ಅಭಿಯಂತರ ಪುರುಷೋತ್ತಮ, ಕಲಬುರಗಿ ನಗರ ಸಂಚಾರ ವಿಭಾಗದ ಡಿಎಸ್ಪಿ ಸುಧಾ ಆದಿ, ಸಿಪಿಐ ಶಕೀಲ ಅಂಗಡಿ ಸೇರಿದಂತೆ ಪಾಲಿಕೆ, ಪ್ರಾಧಿಕಾರ ಹಾಗೂ ಸಂಚಾರಿ ಪೊಲೀಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ
ಬಂಟ್ವಾಳ : ಯುವಕನೋರ್ವನ ಮೃತದೇಹ ಬಿ ಮೂಡ ಗ್ರಾಮದ ಗೂಡಿನಬಳಿ ಕಂಚಿಕಾರ ಸೇತುವೆ ಬಳಿ ನೇತ್ರಾವತಿ ನದಿಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಗುರುವಾರ ಸಂಜೆ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ವೀರಕಂಭ ಗ್ರಾಮದ ಬಾಯಿಲ ನಿವಾಸಿ ಪ್ರಕಾಶ್ ಪೂಜಾರಿ (34) ಎಂದು ಹೆಸರಿಸಲಾಗಿದೆ. ಈತ ಕೂಲಿ ಕಾರ್ಮಿಕನಾಗಿದ್ದು, ವಿಪರೀತ ಮದ್ಯ ಸೇವನೆಯ ಚಟ ಹೊಂದಿದ್ದ ಎನ್ನಲಾಗಿದೆ. ಫೆ.4 ರಂದು ರಾತ್ರಿ 10 ಗಂಟೆಗೆ ಅಮ್ಮನಿಗೆ ಫೋನ್ ಮಾಡಿ ಮಾತನಾಡಿದ್ದು, ಬಳಿಕ ಫೆ 5 ರಂದು ಸಂಜೆ 6 ಗಂಟೆ ವೇಳೆಗೆ ಈತನ ಮೃತದೇಹ ಗೂಡಿನಬಳಿ ನೇತ್ರಾವತಿ ನದಿಯಲ್ಲಿ ತೇಲುತ್ತಿರುವುದು ಪತ್ತೆಯಾಗಿದೆ. ಬಳಿಕ ಸ್ಥಳೀಯ ಈಜುಗಾರ ಯುವಕರ ತಂಡ ನದಿಯಿಂದ ಮೇಲಕ್ಕೆತ್ತಿದ್ದಾರೆ. ಬಂಟ್ವಾಳ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಮೃತರ ಸಹೋದರಿ ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಮಾಜಕ್ಕೆ ಆದ ನೋವನ್ನು ಸಿನಿಮಾಗಳು ದಾಖಲಿಸಬೇಕು : ಪ್ರಕಾಶ್ ರಾಜ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಪ್ರಶಸ್ತಿ ಪ್ರದಾನ-ಸಮಾರೋಪ ಸಮಾರಂಭ
Kalaburagi | ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ
ಕಲಬುರಗಿ : ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಅವರು ಶುಕ್ರವಾರ ಭೇಟಿ ನೀಡಿ ಸ್ಥಳ ವೀಕ್ಷಣೆ ನಡೆಸಿದರು. ಕಂದಾಯ ಇಲಾಖೆಯಿಂದ ಗುತ್ತಿಗೆ ಅವಧಿ ವಿಸ್ತರಣೆಯ ಹಿನ್ನೆಲೆಯಲ್ಲಿ ವಿಧಿಸಲಾದ 2 ಕೋಟಿ 3.7 ಲಕ್ಷ ರೂ. ಗುತ್ತಿಗೆ ಶುಲ್ಕವನ್ನು ಭರಿಸಲು ಆದೇಶಿಸಲಾಗಿದೆ. ಆದರೆ ಸರ್ಕಾರಿ ನೌಕರರ ಸಂಘಕ್ಕೆ ಯಾವುದೇ ಆದಾಯ ಮೂಲಗಳಿಲ್ಲ. ಹೀಗಾಗಿ ವಿಧಿಸಲಾದ ಗುತ್ತಿಗೆ ಶುಲ್ಕವನ್ನು ಸಂಪೂರ್ಣವಾಗಿ ವಿನಾಯಿತಿಗೊಳಿಸಬೇಕೆಂದು ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳುಂಡಗಿ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಅವರು, ಜಿಲ್ಲಾ ಸರ್ಕಾರಿ ನೌಕರರ ಭವನದ ನಿವೇಶನಕ್ಕೆ ವಿಧಿಸಲಾದ ಗುತ್ತಿಗೆ ಶುಲ್ಕವನ್ನು ವಿನಾಯಿತಿಗೊಳಿಸುವ ಕುರಿತು ಸರ್ಕಾರಕ್ಕೆ ತಕ್ಷಣವೇ ಪ್ರಸ್ತಾವನೆ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಧರ್ಮರಾಯ ಜವಳಿ, ಚಂದ್ರಕಾಂತ ಏರಿ, ಎಂ.ಬಿ. ಪಾಟೀಲ, ಕೃಷ್ಣಚಾರಿ ಜೋಶಿ, ರಾಜೇಶ ನೀಲಳ್ಳಿ, ಸಂತೋಷ ಸಲಗರ, ಅಣ್ಣಾರಾಯ ಹಾಬಾಳಕರ, ಪೀರಪ್ಪ, ರಾಜಶೇಖರ ಕುರಿಕೊಟಾ, ಆನಂದ, ಹುಸೇನ್ ಪಾಶಾ ಸೇರಿದಂತೆ ಇತರರು ಉಪಸ್ಥಿತರಿದ್ದರು.
Kalaburagi | ಶಿಕ್ಷಣದ ಜ್ಯೋತಿ ಹೊತ್ತಿಸಿದವರು ಮಹಾದೇವಪ್ಪ ರಾಂಪುರೆ : ಡಾ.ಮಹೇಶ್ ಗಂವ್ಹಾರ
ಕಲಬುರಗಿ : ಅಂದಿನ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿ ಸಮಾಜಕ್ಕೆ ದಾರಿ ತೋರಿದ ಮಹಾನ್ ವ್ಯಕ್ತಿ ಮಹಾದೇವಪ್ಪ ರಾಂಪುರೆ ಅವರಾಗಿದ್ದಾರೆ ಎಂದು ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ಮಹೇಶ್ ಗಂವ್ಹಾರ ಹೇಳಿದರು. ಸ್ವಾತಂತ್ರ್ಯ ಹೋರಾಟಗಾರ ಹಾಗೂ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಸ್ಥಾಪಕರಾದ ಲಿಂಗೈಕ್ಯ ಮಹಾದೇವಪ್ಪ ರಾಂಪುರೆ ಅವರ 53ನೇ ಪುಣ್ಯತಿಥಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಂಪುರೆ ಅವರು ತಮ್ಮ ಬದುಕನ್ನು ಮಾತ್ರವಲ್ಲದೆ ಈ ಭಾಗದ ಜನರ ಬದುಕನ್ನೂ ರೂಪಿಸಲು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಇಡೀ ಪ್ರದೇಶದ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ಸ್ಮರಿಸಿದರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಬೋಧಕರಾದ ಆನಂದ ಪಾಟೀಲ, ಸವಿತಾ ಪಾಟೀಲ, ಜಾನಕಿ ಪಾಟೀಲ, ಸರಸ್ವತಿ ರಾಜಶ್ರೀ, ಝೈಬಾ ಅಖ್ತರ್, ಬೋಧಕೇತರ ಸಿಬ್ಬಂದಿ ಅನಸುಯಾ ಗಾದಾ, ಪ್ರೀತಿ ಸೊರಡೆ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಮಂಗಳೂರು ವಿಮಾನ ನಿಲ್ದಾಣ: ಜನವರಿಯಲ್ಲಿ 2,45,708 ಪ್ರಯಾಣಿಕರ ನಿರ್ವಹಣೆ
ಮಂಗಳೂರು: ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಜನವರಿಯಲ್ಲಿ ಒಟ್ಟು 2,45,708 ನಿರ್ವಹಿಸಲಾಗಿದೆ. ಈ ಪೈಕಿ ದೇಶೀಯ 1,63,966 ಅಂತರ್ರಾಷ್ಟ್ರೀಯ 81742 ಆಗಿರುತ್ತದೆ. 2020 ಅಕ್ಟೋಬರ್ 2020ರ ಬಳಿಕ ಗರಿಷ್ಠ ಪ್ರಯಾಣಿಕರ ನಿರ್ವಹಣೆ ಆಗಿದೆ. ಜನವರಿಯಲ್ಲಿ ಒಟ್ಟು ವಿಮಾನಗಳ ಹಾರಾಟ 1,624 , ದೇಶೀಯ 1,141, ಅಂತರ್ರಾಷ್ಟ್ರೀಯ 425, ಸಾಮಾನ್ಯ ವಿಮಾನಯಾನ 58. ಅಂತರ್ರಾಷ್ಟ್ರೀಯ ಮಟ್ಟದಲ್ಲಿ 425 ವಿಮಾನಗಳ ಹಾರಾಟ ಡಿಸೆಂಬರ್ 2025 ಬಳಿಕ ಗರಿಷ್ಠ ಆಗಿದೆ ಎಂ ಪ್ರಕಟನೆ ತಿಳಿಸಿದೆ.
ಕಲಬುರಗಿ | ಇಎಸ್ಐಸಿ ಆಸ್ಪತ್ರೆಯ ಸಿಬ್ಬಂದಿಗೆ 6.56 ಲಕ್ಷ ರೂ. ವಂಚನೆ : ಪ್ರಕರಣ ದಾಖಲು
ಕಲಬುರಗಿ : ಸ್ಟಾಕ್ ಮಾರ್ಕೆಟ್ನಲ್ಲಿ ಹಣ ಹೂಡಿಕೆ ಮಾಡಿ ಹೆಚ್ಚಿನ ಲಾಭ ಪಡೆಯುವಂತೆ ನಂಬಿಸಿ, ಸೈಬರ್ ವಂಚಕರು ಇಲ್ಲಿನ ಇಎಸ್ಐಸಿ ಆಸ್ಪತ್ರೆಯ ಸಿಬ್ಬಂದಿಯೊಬ್ಬರಿಗೆ 6.56 ಲಕ್ಷ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ವಂಚನೆಗೆ ಒಳಗಾದವರು ಆಂಧ್ರಪ್ರದೇಶದ ಕನೂರ್ಲ್ ಜಿಲ್ಲೆಯ ಆದೋನಿ ಪಟ್ಟಣದ ಪಿಂಜಾರವಾಡಿ ಮೂಲದ ನಿವಾಸಿಯಾಗಿರುವ ಹಾಗೂ ಕಲಬುರಗಿಯ ಇಎಸ್ಐಸಿ ಆಸ್ಪತ್ರೆಯಲ್ಲಿ ಸಹಾಯಕ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಕ್ರೆ ಕೋರಿ ಉಶಾ ಕುಮಾರ ಎಂದು ತಿಳಿದು ಬಂದಿದೆ. ಮುಂಬೈ ಮೂಲದ ಪ್ರೀತಿಕಾ ಆನಂದ ಹಾಗೂ ನೋಯಿಡಾದ ಈಶಿರಾ ಶರ್ಮಾ ಎಂಬವರು ಸ್ಟಾಕ್ ಮಾರ್ಕೆಟ್ ಹೂಡಿಕೆ ಮೂಲಕ ಹೆಚ್ಚಿನ ಲಾಭ ದೊರೆಯುತ್ತದೆ ಎಂದು ನಂಬಿಸಿ ಹಣ ವರ್ಗಾವಣೆ ಮಾಡಿಸಿಕೊಂಡು ವಂಚಿಸಿದ್ದಾರೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ಕಲಬುರಗಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದಂತ ವೈದ್ಯಕೀಯ ಕಾಲೇಜುಗಳಲ್ಲಿ ಸೀಟು ಉಳಿಕೆ ಪ್ರಮಾಣ ಇಳಿಕೆ: ಸಚಿವ ಡಾ. ಸುಧಾಕರ್
76ನೇ ಭಾರತೀಯ ದಂತ ವೈದ್ಯಕೀಯ ಸಮ್ಮೇಳನಕ್ಕೆ ಚಾಲನೆ
ಆರ್ಬಿಐನ ದ್ವೈಮಾಸಿಕ ಹಣಕಾಸು ನೀತಿ ಪ್ರಕಟ: ರೆಪೊ ದರದಲ್ಲಿ ಯಥಾಸ್ಥಿತಿ ಮುಂದುವರಿಕೆ
ಮುಂಬೈ: ಆರ್ಬಿಐ ತನ್ನ ದ್ವೈಮಾಸಿಕ ಹಣಕಾಸು ನೀತಿಯನ್ನು ಶುಕ್ರವಾರ ಪ್ರಕಟಿಸಿದ್ದು, ರೆಪೊ ದರದಲ್ಲಿ ಶೇ.5.25ರ ಯಥಾಸ್ಥಿತಿಯನ್ನು ಕಾಯ್ದುಕೊಂಡಿದೆ. ಹಣಕಾಸು ನೀತಿ ಸಮಿತಿಯ (ಎಂಪಿಸಿ) ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್ಬಿಐ ಗವರ್ನರ್ ಸಂಜಯ ಮಲ್ಹೋತ್ರಾ ಅವರು,ವಿಕಸನಗೊಳ್ಳುತ್ತಿರುವ ಸ್ಥೂಲ ಆರ್ಥಿಕ ಪರಿಸ್ಥಿತಿಗಳು ಮತ್ತು ಒಟ್ಟಾರೆ ಆರ್ಥಿಕ ದೃಷ್ಟಿಕೋನದ ವಿವರವಾದ ಮೌಲ್ಯಮಾಪನದ ಬಳಿಕ ಎಂಪಿಸಿ ತಟಸ್ಥ ನಿಲುವನ್ನು ಕಾಯ್ದುಕೊಳ್ಳಲು ನಿರ್ಧರಿಸಿದೆ ಎಂದು ತಿಳಿಸಿದರು. ಇದು ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ರ ಬಜೆಟ್ ಮಂಡಿಸಿದ ನಂತರದ ಮೊದಲ ಹಣಕಾಸು ನೀತಿ ಪುನರ್ಪರಿಶೀಲನೆಯಾಗಿದೆ. ಹಿಂದಿನ ಎಂಪಿಸಿ ಸಭೆಯ ಬಳಿಕ ಬಾಹ್ಯ ಅಡೆತಡೆಗಳು ತೀವ್ರಗೊಂಡಿವೆಯಾದರೂ ಇತ್ತೀಚಿನ ವ್ಯಾಪಾರ ಒಪ್ಪಂದಗಳು ಯಶಸ್ವಿಯಾಗಿ ಪೂರ್ಣಗೊಂಡಿರುವುದು ಆರ್ಥಿಕ ಮುನ್ನೋಟಕ್ಕೆ ಪೂರಕವಾಗಿದೆ ಎಂದು ಮಲ್ಹೋತ್ರಾ ತಿಳಿಸಿದರು. ದೇಶೀಯ ಹಣದುಬ್ಬರ ಮತ್ತು ಬೆಳವಣಿಗೆ ಮುನ್ನೋಟ ಧನಾತ್ಮಕವಾಗಿ ಉಳಿದುಕೊಂಡಿವೆ ಎಂದ ಅವರು,ಭಾರತೀಯ ಆರ್ಥಿಕತೆಯು ಸ್ಥಿತಿ ಸ್ಥಾಪಕತ್ವವನ್ನು ಕಾಯ್ದುಕೊಂಡಿದೆ ಎಂದು ಹೇಳಿದರು. ಮುಂದಿನ ಎರಡು ತಿಂಗಳುಗಳಿಗೆ ನೈಜ ಜಿಡಿಪಿ ಬೆಳವಣಿಗೆಯನ್ನು ಮೇಲ್ಮುಖವಾಗಿ ಪರಿಷ್ಕರಿಸಲಾಗಿದೆ. 2025-26ನೇ ಸಾಲಿಗೆ ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಹಣದುಬ್ಬರವು ಶೇ.2.1 ಆಗಿರಲಿದೆ ಎಂದು ಅಂದಾಜಿಸಲಾಗಿದೆ ಎಂದು ಮಲ್ಹೋತ್ರಾ ತಿಳಿಸಿದರು. ಡಿ.5, 2025ರಂದು ನಡೆದಿದ್ದ ಹಿಂದಿನ ಎಂಪಿಸಿ ಸಭೆಯು ನೀತಿ ರೆಪೊ ದರವನ್ನು ಶೇ.0.25ರಷ್ಟು ತಗ್ಗಿಸಿ ಶೇ.5.25ಕ್ಕೆ ನಿಗದಿಗೊಳಿಸಿತ್ತು. ಲೀಡ್ ಬ್ಯಾಂಕ್ ದತ್ತಾಂಶಗಳ ಉತ್ತಮ ನಿರ್ವಹಣೆಗಾಗಿ ಏಕೀಕೃತ ಪೋರ್ಟಲ್ ಸ್ಥಾಪನೆ,ಎನ್ಬಿಎಫ್ಸಿಗಳು ಹೊಸ ಶಾಖೆಗಳನ್ನು ಆರಂಭಿಸಲು ಮಾನದಂಡಗಳಲ್ಲಿ ಸಡಿಲಿಕೆ ಸೇರಿದಂತೆ ಹಲವು ಪ್ರಸ್ತಾವಗಳನ್ನು ಆರ್ಬಿಐ ಗವರ್ನರ್ ಶುಕ್ರವಾರ ಪ್ರಕಟಿಸಿದರು. ಕೆಲವು ಸುರಕ್ಷತಾ ಕ್ರಮಗಳೊಂದಿಗೆ ಬ್ಯಾಂಕುಗಳು ರಿಯಲ್ ಎಸ್ಟೇಟ್ ಹೂಡಿಕೆ ಟ್ರಸ್ಟ್ಗಳಿಗೆ ಸಾಲ ನೀಡಲು ಆರ್ಬಿಐ ಅನುಮತಿ ನೀಡಲಿದೆ ಎಂದು ಮಲ್ಹೋತ್ರಾತಿಳಿಸಿದರು. ಆರ್ಥಿಕತೆಯ ಉತ್ಪಾದಕ ಅಗತ್ಯಗಳನ್ನು ಪೂರೈಸಲು ಆರ್ಬಿಐ ನಗದು ಲಭ್ಯತೆ ನಿರ್ವಹಣೆಯಲ್ಲಿ ಸಕ್ರಿಯ ಪಾತ್ರವನ್ನು ಹೊಂದಿರಲಿದೆ ಎಂದರು.
ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ
ಉಡುಪಿ, ಫೆ.6: ಕರ್ನಾಟಕ ಬಾಲವಿಕಾಸ ಅಕಾಡೆಮಿ, ಧಾರವಾಡ ಇವರ ವತಿಯಿಂದ 2024ರ ಜನವರಿಯಿಂದ ಡಿಸೆಂಬರ್ ತಿಂಗಳವರೆಗೆ ಹಾಗೂ 2025ರ ಜನವರಿಯಿಂದ ಡಿಸೆಂಬರ್ ತಿಂಗಳವರೆಗಿನ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಪುಸ್ತಕಗಳನ್ನು ಆಹ್ವಾನಿಸಲಾಗಿದೆ. ಇದಕ್ಕಾಗಿ 2024 ಹಾಗೂ 2025ನೇ ಸಾಲಿನ ಅವಧಿಯಲ್ಲಿ ಅಂದರೆ ಜನವರಿ ತಿಂಗಳಿನಿಂದ ಡಿಸೆಂಬರ್ ತಿಂಗಳ ಅಂತ್ಯದವರೆಗೆ ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ, (ಪಠ್ಯಾಧಾರಿತ ಬಿಟ್ಟು) ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ (ಯಾವುದೇ ಪ್ರಕಾರದ ಮಕ್ಕಳ ಸಾಹಿತ್ಯ) ಮಕ್ಕಳ ಸಾಹಿತ್ಯ ವಿಮರ್ಶಾ ಕೃತಿ ಹೀಗೆ ಏಳು ಪ್ರಕಾರದ ಮಕ್ಕಳ ಸಾಹಿತ್ಯದ ಕೃತಿಗಳನ್ನು ಪ್ರಶಸ್ತಿಗಾಗಿ ಆಹ್ವಾನಿಸಲಾಗಿದೆ. ಪ್ರಶಸ್ತಿಗಾಗಿ ಪರಿಗಣಿಸಲು ಪ್ರತಿಯೊಂದು ಕೃತಿಯ 4 ಪ್ರತಿಗಳನ್ನು ಹಾಗೂ ಸ್ವವಿವರಗಳನ್ನೊಳಗೊಂಡ ಮನವಿಯೊಂದಿಗೆ ಫೆಬ್ರವರಿ 20ರ ಒಳಗೆ ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇ-ಔಟ್ ಹಿಂಭಾಗ, ಕೆ.ಹೆಚ್.ಬಿ ಕಾಲೋನಿ, ಲಕಮನಹಳ್ಳಿ, ಧಾರವಾಡ- 580004 ಈ ವಿಳಾಸಕ್ಕೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ:0836-2465490ನ್ನು ಸಂಪರ್ಕಿಸ ಬಹುದು ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.
ರಾಯಚೂರು | ಆಡಳಿತದ ನಾಲ್ಕನೇ ಅಂಗವಾಗಿ ಪತ್ರಿಕೋದ್ಯಮ ಪ್ರಮುಖ ಪಾತ್ರ ವಹಿಸಿದೆ: ಆಯುಕ್ತ ಜುಬಿನ್ ಮೊಹಪಾತ್ರ
ರಾಯಚೂರು : ಆಡಳಿತದ ಲೋಪದೋಷಗಳನ್ನು ಯಾವುದೇ ಮುಲಾಜಿಲ್ಲದೆ ಬಯಲಿಗೆಳೆಯುವ ಮೂಲಕ ಆಡಳಿತ ವ್ಯವಸ್ಥೆಯ ನಾಲ್ಕನೇ ಅಂಗವಾಗಿ ಪತ್ರಿಕೋದ್ಯಮ ಹೊರಹೊಮ್ಮಿದೆ ಎಂದು ರಾಯಚೂರು ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಪಾತ್ರ ಅವರು ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿರುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ–2026ರ ಅಂಗವಾಗಿ ನಗರದ ಮಹಿಳಾ ಸಮಾಜ ಸಭಾಂಗಣದಲ್ಲಿ ಆಯೋಜಿಸಿದ್ದ ಮಾಧ್ಯಮಗೋಷ್ಠಿಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಜ್ಞಾನಪ್ರವಾಹ ಮತ್ತು ಪತ್ರಿಕೋದ್ಯಮದ ಮಹತ್ವವನ್ನು ವಿವರಿಸಿದರು. ಮುದ್ರಣ ಯಂತ್ರದ ಆವಿಷ್ಕಾರದ ನಂತರ ವಿದ್ಯೆಯ ಪ್ರಸಾರ ವೇಗ ಪಡೆದಿದೆ. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಪತ್ರಿಕೆಗಳು ವಹಿಸಿದ ಪಾತ್ರ ಶ್ಲಾಘನೀಯವಾಗಿದೆ. ಬ್ರಿಟಿಷ್ ಆಡಳಿತದ ವಿರುದ್ಧ ಧ್ವನಿ ಎತ್ತಿದ ಅನೇಕ ಪತ್ರಕರ್ತರು ಹಿಂಸೆಗೆ ಒಳಗಾದ ಘಟನೆಯನ್ನು ಸ್ಮರಿಸಿದ ಅವರು, ಇಂದಿನ ದಿನಗಳಲ್ಲಿ ಹೆಚ್ಚುತ್ತಿರುವ ಫೇಕ್ ನ್ಯೂಸ್ ಹಿನ್ನೆಲೆಯಲ್ಲಿ ಪತ್ರಕರ್ತರು, ವಿಶೇಷವಾಗಿ ಮುದ್ರಣ ಮಾಧ್ಯಮದವರು ಹೆಚ್ಚಿನ ಎಚ್ಚರಿಕೆ ವಹಿಸಿ, ಸುದ್ದಿಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಿ ಪ್ರಕಟಿಸಬೇಕು ಎಂದು ಮನವಿ ಮಾಡಿದರು. ರಾಯಚೂರು ಜಿಲ್ಲಾ ಉತ್ಸವ ಯಶಸ್ವಿಯಾಗಿ ನಡೆಯಲು ಹಾಗೂ ಜನಪ್ರಿಯವಾಗಲು ಮಾಧ್ಯಮದ ಪಾತ್ರ ಮಹತ್ವದ್ದಾಗಿದೆ. ಅದೇ ರೀತಿ ನಗರ ಸ್ವಚ್ಛತೆಯ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ಕೈಗೊಂಡಿರುವ ದಿಟ್ಟ ಕ್ರಮಗಳಿಗೆ ಪತ್ರಿಕಾ ಮಾಧ್ಯಮಗಳು ಬೆನ್ನೆಲುಬಾಗಿ ನಿಲ್ಲಬೇಕು ಎಂದು ಅವರು ಕೋರಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಾಯಚೂರು ವಾಣಿ ಸಂಪಾದಕ ಅರವಿಂದ ಕುಲಕರ್ಣಿ ಅವರು, ಉತ್ತಮ ಅಧಿಕಾರಿಗಳು ಬಂದಾಗ ಉತ್ತಮ ಕಾರ್ಯಗಳು ನಡೆಯುತ್ತವೆ ಮತ್ತು ಅವು ಚಿರಕಾಲ ಉಳಿಯುತ್ತವೆ ಎಂದು ಹೇಳಿದರು. ಕಂಪಿಲವಾಣಿ ಸಂಪಾದಕ ಭೀಮರಾಯ ಹದ್ದಿನಾಳ ಅವರು ಪತ್ರಕರ್ತರು ಮತ್ತು ಮಾಧ್ಯಮಗಳ ನಡುವಿನ ಸೂಕ್ಷ್ಮ ವ್ಯತ್ಯಾಸವನ್ನು ವಿವರಿಸಿ, ಎದುರಾಗಿರುವ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಗುರುನಾಥ ಅವರು ವಹಿಸಿದ್ದರು. ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ರಂಗಣ್ಣ ಪಾಟೀಲ್ ಅಳ್ಳುಂಡಿ, ರಿಪೋರ್ಟರ್ಸ್ ಗಿಲ್ಡ್ ಅಧ್ಯಕ್ಷ ವಿಜಯ ಜಾಗಟಕಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಿದ್ದಯ್ಯಸ್ವಾಮಿ ನಿರೂಪಣೆ ಮಾಡಿದರು. ವಾರ್ತಾಧಿಕಾರಿ ಗವಿಸಿದ್ದಪ್ಪ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ರಾಯಚೂರು ಜಿಲ್ಲಾ ಉತ್ಸವದಲ್ಲಿ ಐತಿಹಾಸಿಕ ಚಿತ್ರಕಲೆ: ಕಲಾವಿದರಿಗೆ ಜನರಿಂದ ಪ್ರಶಂಸೆ
ರಾಯಚೂರು : ಜಿಲ್ಲಾ ಉತ್ಸವದ ಅಂಗವಾಗಿ ತಾಲ್ಲೂಕಿನ ಪ್ರಸಿದ್ಧ ಐತಿಹಾಸಿಕ ಸ್ಥಳಗಳ ಚಿತ್ರಗಳನ್ನು ಬಿಡಿಸುತ್ತಿದ್ದ ಕಲಾವಿದರನ್ನು ನೋಡಿ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು. ತಾಲ್ಲೂಕಿನ ಕೋಟೆ, ಐತಿಹಾಸಿಕ ಸ್ಮಾರಕಗಳ ಚಿತ್ರಗಳ ಜೊತೆಗೆ ಡಾ. ಬಿ.ಆರ್. ಅಂಬೇಡ್ಕರ್, ಭಗತ್ ಸಿಂಗ್, ಡಾ. ರಾಜಕುಮಾರ ಸೇರಿದಂತೆ ಅನೇಕ ಮಹನೀಯರ ಭಾವಚಿತ್ರಗಳನ್ನು ಕಲಾವಿದರು ಚಿತ್ರಿಸಿದ್ದರು. ನಿಸರ್ಗದ ಸೌಂದರ್ಯ, ಐತಿಹಾಸಿಕ ಹಿನ್ನೆಲೆ ಒಳಗೊಂಡ ವಿವಿಧ ಚಿತ್ರಕಲೆ ಪ್ರದರ್ಶನಗಳು ಜನಮನ ಸೆಳೆದವು. ಜಿಲ್ಲೆಯ 25ಕ್ಕೂ ಹೆಚ್ಚು ಕಲಾವಿದರಿಂದ ರಚಿಸಲಾದ ಐತಿಹಾಸಿಕ ಚಿತ್ರಗಳನ್ನು ರಾಯಚೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರದರ್ಶನಕ್ಕೆ ಅಳವಡಿಸುವ ಬಗ್ಗೆ ಜಿಲ್ಲಾಧಿಕಾರಿಗಳು ಮುಂದಾಗಿದ್ದಾರೆ, ಇದು ಕಲಾವಿದರಿಗೆ ಮತ್ತಷ್ಟು ಉತ್ತೇಜನ ನೀಡಿದೆ. ಈ ಚಿತ್ರಕಲಾ ಪ್ರದರ್ಶನದಲ್ಲಿ ಜೋಷಿ (ರಾಯಚೂರು), ಈರಣ್ಣ ಸರೋದೆ, ವೆಂಕಟೇಶ್, ರವಿಕುಮಾರ್, ಪ್ರಸನ್ನ ಮತ್ತಿತರ ಕಲಾವಿದರು ಭಾಗವಹಿಸಿದ್ದರು.
2025ರ ಡಿಸೆಂಬರ್ ನಲ್ಲಿ ಭಾರತಕ್ಕೆ ರಷ್ಯಾದಿಂದ ತೈಲ ಆಮದುಗಳು 38 ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿತ
ಹೊಸದಿಲ್ಲಿ: 2025ರ ಡಿಸೆಂಬರ್ ಭಾರತಕ್ಕೆ ರಷ್ಯಾದ ಕಚ್ಚಾ ತೈಲ ಆಮದುಗಳ ಮೌಲ್ಯವು 2.7 ಶತಕೋಟಿ ಡಾ.ಗಳಿಗೆ ಕುಸಿದಿದ್ದು,ಇದು 38 ತಿಂಗಳುಗಳಲ್ಲಿ ಕನಿಷ್ಠ ಮಟ್ಟವಾಗಿದೆ. ರಷ್ಯಾದ ತೈಲವು ಭಾರತದ ಆಮದುಗಳ ಕಾಲು ಭಾಗಕ್ಕಿಂತ ಕಡಿಮೆಯಿದ್ದು, ಕೇವಲ ಒಂದು ತಿಂಗಳ ಹಿಂದೆ ಅದು ಶೇ.34ರಷ್ಟಿತ್ತು ಎನ್ನುವುದನ್ನು ಇತ್ತೀಚಿನ ದತ್ತಾಶಗಳ ವಿಶ್ಲೇಷಣೆಯು ತೋರಿಸಿದೆ. ಇದೇ ವೇಳೆ ಡಿಸೆಂಬರ್ 2024ಕ್ಕೆ ಹೋಲಿಸಿದರೆ ಅಮೆರಿಕದಿಂದ ಕಚ್ಚಾ ತೈಲ ಆಮದು ಶೇ.31ರಷ್ಟು ಹೆಚ್ಚಾಗಿದೆ. ಅಮೆರಿಕವು ಭಾರತೀಯ ಆಮದುಗಳ ಮೇಲಿನ ಸುಂಕವನ್ನು ಶೇ.50ರಿಂದ ಶೇ.18ಕ್ಕೆ ಇಳಿಸಲಿದೆ ಮತ್ತು ಇದಕ್ಕೆ ಪ್ರತಿಯಾಗಿ ಭಾರತವು ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅವರ ಅಧಿಕಾರಿಗಳು ಕಳೆದ ವಾರ ಪದೇ ಪದೇ ಹೇಳಿಕೊಂಡಿರುವ ಸಮಯದಲ್ಲಿ ಇತ್ತೀಚಿನ ದತ್ತಾಂಶಗಳು ಹೊರಬಿದ್ದಿವೆ. ಆದಾಗ್ಯೂ, ಭಾರತವು ಈ ನಿರ್ದಿಷ್ಟ ಹೇಳಿಕೆಯನ್ನು ದೃಢೀಕರಿಸಿಲ್ಲ ಅಥವಾ ನಿರಾಕರಿಸಿಯೂ ಇಲ್ಲ. ಬದಲಾಗಿ ವಾಸ್ತವಿಕ ಮಾರುಕಟ್ಟೆ ಪರಿಸ್ಥಿತಿಗಳು ಮತ್ತು ವಿಕಸನಗೊಳ್ಳುತ್ತಿರುವ ಜಾಗತಿಕ ಪ್ರವೃತ್ತಿಗಳಿಗೆ ಅನುಗುಣವಾಗಿ ತಾನು ಇಂಧನವನ್ನು ವಿವಿಧ ದೇಶಗಳಿಂದ ಖರೀದಿಸುವುದಾಗಿ ಅದು ಸ್ಪಷ್ಟಪಡಿಸಿದೆ. ಡಿ.2024ಕ್ಕೆ ಹೋಲಿಸಿದರೆ ಡಿ.2025ರಲ್ಲಿ ರಷ್ಯಾದಿಂದ ತೈಲ ಆಮದುಗಳಲ್ಲಿ ಶೇ.15ರಷ್ಟು ಇಳಿಕೆಯಾಗಿದ್ದು,2.7 ಶತಕೋಟಿ ಡಾಲರ್ ಗೆ ಕುಸಿದಿದೆ. ನವಂಬರ್ 2025ರಲ್ಲಿ ಆಮದು ಮಾಡಿಕೊಂಡಿದ್ದ 3.7 ಶತಕೋಟಿ ಡಾಲರ್ ಮೌಲ್ಯದ ತೈಲಕ್ಕೆ ಹೋಲಿಸಿದರೆ ಇದು ಶೇ.27.1ರಷ್ಟು ಕಡಿಮೆಯಾಗಿದೆ. ಪರಿಣಾಮವಾಗಿ ಡಿಸೆಂಬರ್ 2025ರಲ್ಲಿ ಭಾರತದ ಒಟ್ಟಾರೆ ತೈಲ ಆಮದುಗಳಲ್ಲಿ ರಷ್ಯಾದ ಪಾಲು ಶೇ.24.9ಕ್ಕೆ ಕುಸಿದಿದ್ದು,ಇದು ಮೂರು ವರ್ಷಗಳಲ್ಲಿ ಕನಿಷ್ಠ ಮಟ್ಟವಾಗಿದೆ. ಡಿಸೆಂಬರ್ನಲ್ಲಿ ಭಾರತವು 5.8 ಮಿ.ಟನ್ಗಳಷ್ಟು ರಷ್ಯನ್ ತೈಲವನ್ನು ಆಮದು ಮಾಡಿಕೊಂಡಿದ್ದು,ಇದು ಫೆ.2025ರಿಂದೀಚಿಗೆ ಕನಿಷ್ಠವಾಗಿದೆ. ಭಾರತವು ಡಿ.2025ರಲ್ಲಿ ಅಮೆರಿಕದಿಂದ 569.3 ಮಿ.ಡಾಲರ್ ಮೌಲ್ಯದ ತೈಲವನ್ನು ಆಮದು ಮಾಡಿಕೊಂಡಿದ್ದು,ಇದು ನ.2025ರಲ್ಲಿ ಮಾಡಿಕೊಂಡಿದ್ದ ಆಮದಿಗಿಂತ ಶೇ.60.5ರಷ್ಟು ಕಡಿಮೆಯಿದೆ. ನವಂಬರ್ನಲ್ಲಿ ಅಮೆರಿಕದಿಂದ ತೈಲ ಆಮದು ಏಳು ತಿಂಗಳ ಗರಿಷ್ಠ ಮಟ್ಟವನ್ನು ತಲುಪಿತ್ತು. ಡಿ.2025ರಲ್ಲಿ ಭಾರತವು ಅಮೆರಿಕದಿಂದ 1.1 ಮಿ.ಟನ್ ತೈಲವನ್ನು ಆಮದು ಮಾಡಿಕೊಂಡಿದ್ದು,ಹಿಂದಿನ ವರ್ಷದ ಡಿಸೆಂಬರ್ಗೆ ಹೋಲಿಸಿದರೆ ಶೇ.58ರಷ್ಟು ಏರಿಕೆಯನ್ನು ದಾಖಲಿಸಿತ್ತು. ಡಿ.2025ರಲ್ಲಿ ಭಾರತವು 19 ದೇಶಗಳಿಂದ ಕಚ್ಚಾ ತೈಲವನ್ನು ಆಮದು ಮಾಡಿಕೊಂಡಿದೆ. ಡಿ.2024ರಲ್ಲಿ ಇಂತಹ ದೇಶಗಳ ಸಂಖ್ಯೆ 16 ಆಗಿತ್ತು. ಈ ಪೈಕಿ 10 ದೇಶಗಳು ಭಾರತದ ಕಚ್ಚಾ ತೈಲ ಆಮದುಗಳಲ್ಲಿ ತಮ್ಮ ಪಾಲು ಹೆಚ್ಚಿಸಿಕೊಂಡರೆ ಒಂಭತ್ತು ದೇಶಗಳ ಪಾಲು ಕುಸಿದಿದೆ.
ಗುಜರಾತ್ | ದಲಿತ ವಿದ್ಯಾರ್ಥಿಗೆ ಥಳಿತ: ನಾಲ್ವರ ವಿರುದ್ಧ ಪ್ರಕರಣ ದಾಖಲು
ಅಹ್ಮದಾಬಾದ್, ಫೆ. 6: ಗುಜರಾತ್ನ ಮೆಹ್ಸಾನದಲ್ಲಿರುವ ಕಾಲೇಜು ಹಾಸ್ಟೆಲ್ ಸಮೀಪ ಕ್ಷುಲ್ಲಕ ಜೋಕ್ಗಾಗಿ ದಲಿತ ವಿದ್ಯಾರ್ಥಿಯೊಬ್ಬನನ್ನು ನಾಲ್ವರು ಯುವಕರು ಬೆಲ್ಟ್ ಹಾಗೂ ದೊಣ್ಣೆಯಿಂದ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಗೆ ಸಂಬಂಧಿಸಿ ಕಾಲೇಜು ಓರ್ವ ವಿದ್ಯಾರ್ಥಿಯನ್ನು ಹಾಸ್ಟೆಲ್ನಿಂದ ಅಮಾನತುಗೊಳಿಸಿದೆ. ಮೆಹ್ಸಾನದ ಬಿಬಿಎ/ಬಿಸಿಎ ಕಾಲೇಜು ಹಾಸ್ಟೆಲ್ನಲ್ಲಿ ಪ್ರಸ್ತುತ ವಾಸಿಸುತ್ತಿರುವ ಪೋರ್ಬಂದರ್ನ ದಲಿತ ವಿದ್ಯಾರ್ಥಿಗೆ ನಾಲ್ವರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಅವಮಾನ ಮಾಡಿದ್ದಾರೆ ಹಾಗೂ ಜಾತಿ ನಿಂದನೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಈ ಘಟನೆಯ ಹಿನ್ನೆಲೆಯಲ್ಲಿ ಮೆಹ್ಸಾನ ಎ ವಿಭಾಗೀಯ ಪೊಲೀಸ್ ಠಾಣೆಯಲ್ಲಿ ಮಿತೇಶ್ ಹಾಗೂ ಆತನ ಇತರ ಮೂವರು ಸಹವರ್ತಿಗಳ ವಿರುದ್ಧ ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Pakistan | ಆತ್ಮಹತ್ಯಾ ದಾಳಿ : ಮೃತರ ಸಂಖ್ಯೆ 31ಕ್ಕೆ ಏರಿಕೆ; 169ಕ್ಕೂ ಅಧಿಕ ಮಂದಿಗೆ ಗಾಯ
ಇಸ್ಲಾಮಾಬಾದ್: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನ ಶಿಯಾ ಪ್ರಾರ್ಥನಾಮಂದಿರವೊಂದರಲ್ಲಿ ಶುಕ್ರವಾರ ನಡೆದ ಭೀಕರ ಆತ್ಮಹತ್ಯಾ ದಾಳಿಯಲ್ಲಿ ಕನಿಷ್ಠ 31 ಮಂದಿ ಸಾವನ್ನಪ್ಪಿದ್ದಾರೆ ಹಾಗೂ 169ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ನಗರ ತರ್ಲಿ ಇಮಾಮ್ ಬರಗಾಹ್ನಲ್ಲಿರುವ ಶಿಯಾ ಪ್ರಾರ್ಥನಾ ಮಂದಿರದ ಮುಖ್ಯ ದ್ವಾರದಲ್ಲಿ ಭಯೋತ್ಪಾದಕನೊಬ್ಬ ತನ್ನನ್ನು ತಾನೇ ಸ್ಪೋಟಿಸಿಕೊಂಡಿದ್ದಾನೆಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ. ಪ್ರಾರ್ಥನಾ ಮಂದಿರದ ಕಾವಲುಗಾರರು ಪ್ರವೇಶದ್ವಾರದಲ್ಲಿಯೇ ನೂರಾರು ಜನರು ಪ್ರಾರ್ಥನೆಗಾಗಿ ಸೇರಿದ್ದ ಮುಖ್ಯಹಾಲ್ ಪ್ರವೇಶಿಸದಂತೆ ದಾಳಿಕೋರನನ್ನು ತಡೆದಿದ್ದರು. ಆಗ ಆತ ತನ್ನನ್ನು ತಾನೇ ಸ್ಫೋಟಿಸಿಕೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಆದಾಗ್ಯೂ ಸ್ಫೋಟದ ತೀವ್ರತೆಯಿಂದಾಗಿ ಮಸೀದಿಯ ಪ್ರವೇಶದ್ವಾರಕ್ಕೆ ಭಾರೀ ಹಾನಿಯಾಗಿದ್ದು, ಆಸುಪಾಸಿನ ಕಟ್ಟಡಗಳ ಕಿಟಕಿಗಾಜುಗಳು ಚೂರುಚೂರಾಗಿದ್ದು, ಅವುಗಳ ಅವಶೇಷಗಳು ಪ್ರದೇಶದಲ್ಲಿ ಹರಡಿಬಿದ್ದಿವೆ. ಸ್ಫೋಟದಲ್ಲಿ ಸಾವನ್ನಪ್ಪಿದವರ ಮೃತದೇಹಗಳು, ಛಿದ್ರವಿಛಿದ್ರವಾದ ಅಂಗಾಂಗಗಳು ಚದುರಿಬಿದ್ದಿರುವ ಘೋರ ದೃಶ್ಯಗಳ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಗಾಯಾಳುಗಳನ್ನು ಪಾಕಿಸ್ತಾನದ ವೈದ್ಯಕೀಯ ವಿಜ್ಞಾನಗಳ ಸಂಶೋಧನಾ ಸಂಸ್ಥೆ (ಪಿಐಎಂಎಸ್) ಹಾಗೂ ಪಾಲಿಕ್ಲಿನಿಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವಾರು ಮಂದಿಯ ಪರಿಸ್ಥಿತಿ ಗಂಭೀರವಾಗಿದೆಯೆಂದು ತಿಳಿದುಬಂದಿದೆ.
ಲೋಕಸಭೆಯಲ್ಲಿ ಮುಂದುವರಿದ ವಿಪಕ್ಷಗಳ ಪ್ರತಿಭಟನೆಗೆ ಕಲಾಪ ಬಲಿ
ಹೊಸದಿಲ್ಲಿ: ಎಸ್ಐಆರ್, ನರವಣೆ ಆತ್ಮಕಥೆ ವಿವಾದ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿ ಪ್ರತಿಪಕ್ಷ ಸದಸ್ಯರು ಸದನದಲ್ಲಿ ಗದ್ದಲ, ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಶುಕ್ರವಾರವೂ ಲೋಕಸಭಾ ಕಲಾಪವನ್ನು ಒಂದು ದಿನದ ಮಟ್ಟಿಗೆ ಮುಂದೂಡಲಾಗಿದೆ. ಫೆಬ್ರವರಿ 1ರಂದು ಮಂಡನೆಯಾದ ಕೇಂದ್ರ ಬಜೆಟ್ ಕುರಿತ ಚರ್ಚೆಯನ್ನು ಗುರುವಾರವೇ ಕೈಗೆತ್ತಿಕೊಳ್ಳಬೇಕಿತ್ತಾದರೂ, ಶುಕ್ರವಾರವೂ ಅದನ್ನು ಸದನದಲ್ಲಿ ಕೈಗೆತ್ತಿಕೊಳ್ಳಲಾಗಲಿಲ್ಲ. ಇಂದು ಬೆಳಗ್ಗೆ ಸದನ ಕಲಾಪ ಆರಂಭಗೊಳ್ಳುತ್ತಿದ್ದಂತೆಯೇ ಪ್ರತಿಪಕ್ಷ ಸದಸ್ಯರು ವಿವಿಧ ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗತೊಡಗಿದರು. ಗದ್ದಲದ ನಡುವೆ ಕಲಾಪವನ್ನು ನಡೆಸುವುದು ಅಸಾಧ್ಯವೆನಿಸಿದಾಗ ಸ್ಪೀಕರ್ ಸದನನ್ನು ಮಧ್ಯಾಹ್ನದವರೆಗೆ ಮುಂದೂಡಿದರು. 12 ಗಂಟೆಗೆ ಸದನ ಮತ್ತೆ ಸೇರಿದಾಗ ಪ್ರತಿಭಟನೆಗಳನ್ನು ಮುಂದುವರಿಸಿದ ಪ್ರತಿಪಕ್ಷ ಸದಸ್ಯರು ಸದನದ ಬಾವಿಗೆ ಧಾವಿಸಿದರು. ಸದನದ ಕಲಾಪಗಳ ಅಧ್ಯಕ್ಷತೆ ವಹಿಸಿದ್ದ ಕೃಷ್ಣ ಪ್ರಸಾದ್ ತೆನ್ನೆಟ್ಟಿ ಅವರು ಸಂಸದರಿಗೆ ಅವರವರ ಸ್ಥಾನಗಳಲ್ಲಿ ಆಸೀನರಾಗುವಂತೆ ಹಾಗೂ ಘೋಷಣಾಫಲಕಗಳನ್ನು ಕೆಳಗಿರಿಸುವಂತೆ ಸೂಚಿಸಿದರು. ಆದರೆ ವಿಪಕ್ಷ ಸದಸ್ಯರು ಒಪ್ಪದೆ ಇದ್ದಾಗ, ಸದನವನ್ನು ಸೋಮವಾರದವರೆಗೆ ಮುಂದೂಡಿದರು. ಹಾಲಿ ಬಜೆಟ್ ಅಧಿವೇಶನದಲ್ಲಿ ಕಲಾಪಗಳಿಗೆ ಸದಸ್ಯರು ಅಡ್ಡಿಪಡಿಸಿದ್ದರಿಂದ ಈವರೆಗೆ 19 ತಾಸು ಹಾಗೂ 13 ನಿಮಿಷಗಳು ವ್ಯರ್ಥವಾಗಿವೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕೇಳಿರುವ ಪ್ರಶ್ನೆ ಕೂಡಾ ಪಟ್ಟಿಯಲ್ಲಿದ್ದು, ಕಲಾಪಗಳು ಮುಂದುವರಿಯುವುದಕ್ಕೆ ಪ್ರತಿಭಟನಾ ಸದಸ್ಯರು ಅವಕಾಶ ನೀಡಬೇಕೆಂದು ಆಗ್ರಹಿಸಿದರು. ಮಾಜಿ ಸೇನಾ ವರಿಷ್ಠ ಎಂ.ಎಂ. ನರವಣೆ ಅವರು ತಮ್ಮ ಅಪ್ರಕಟಿತ ಆತ್ಮಕಥೆಯಲ್ಲಿ 2020ರ ಭಾರತ-ಚೀನಾ ಸಂಘರ್ಷಾವಸ್ಥೆಗೆ ಸಂಬಂಧಿಸಿ ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಕುರಿತು ನೀಡಿರುವ ಕೆಲವು ವಿವಾದಾತ್ಮಕ ಹೇಳಿಕೆಗಳ ಬಗ್ಗೆ ಸದನದಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಮಾತನಾಡಲು ಅವಕಾಶ ನೀಡದೆ ಇರುವುದನ್ನು ಖಂಡಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಪಕ್ಷಗಳು ಸದನದ ಹೊರಗೆ ಹಾಗೂ ಒಳಗೆ ಪ್ರತಿಭಟನೆಗನ್ನು ನಡೆಸುತ್ತಿವೆ. ಅಪರೂಪದ ಬೆಳವಣಿಗೆಯೊಂದರಲ್ಲಿ ಗುರುವಾರ ಪ್ರತಿಪಕ್ಷ ಗದ್ದಲದ ಹಿನ್ನೆಲೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಕುರಿತ ವಂದನಾ ನಿರ್ಣಯವನ್ನು ಪ್ರಧಾನಿಯವರ ಸಾಂಪ್ರಾದಾಯಿಕ ಉತ್ತರವಿಲ್ಲದೆ ಅಂಗೀಕರಿಸಲಾಗಿತ್ತು. ಸದನಕ್ಕೆ ಅಗೌರವ: ಓಂ ಬಿರ್ಲಾ ಅಸಮಾಧಾನ ಕೋಲಾಹಲ, ಪ್ರತಿಭಟನೆಗಳಿಗೆ ಲೋಕಸಭಾ ಕಲಾಪಗಳು ಸತತವಾಗಿ ಬಲಿಯಾಗುತ್ತಿರುವ ಬಗ್ಗೆ ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ ಕಳವಳ ವ್ಯಕ್ತಪಡಿಸಿದ್ದಾರೆ. ಚರ್ಚೆ ಹಾಗೂ ಸಂವಾದಗಳ ಮೂಲಕ ಸಂಸತ್ ಕಾರ್ಯನಿರ್ವಹಿಸಬೇಕೇ ಹೊರತು, ಘೋಷಣೆಗಳನ್ನು ಕೂಗುವುದರಿಂದಲ್ಲ. ರಚನಾತ್ಮಕವಾದ ರೀತಿಯಲ್ಲಿ ಚರ್ಚೆಗಳನ್ನು ನಡೆಸುವುದಕ್ಕಾಗಿ ಸಂಸದರರನ್ನು ಜನರು ಆಯ್ಕೆ ಮಾಡಿದ್ದಾರೆಂದು ಅವರು ಹೇಳಿದರು. ನಿರಂತರವಾಗಿ ಸದನದ ಕಲಾಪಗಳಿಗೆ ಅಡ್ಡಿಪಡಿಸುವುದು ಸದನಕ್ಕೆ ಅಗೌರವ ತೋರಿದಂತಾಗುತ್ತದೆ ಎಂದವರು ಎಚ್ಚರಿಕೆ ನೀಡಿದರು.
ಉಲಮಾಗಳು ಪ್ರೀತಿಯ ದೂತರು: ಸ್ಪೀಕರ್ ಯುಟಿ ಖಾದರ್
► ಸಮಸ್ತ ಸಮ್ಮೇಳನ ► ಜನರಲ್ ಕ್ಯಾಂಪ್ ಉದ್ಘಾಟನಾ ಸಮಾರಂಭ
ನಾಗರಭಾವಿಯಲ್ಲಿ ಮೆಟ್ರೋ ಮಾರ್ಗದ ರೀ-ಅಲೈನ್ಮೆಂಟ್ ಪ್ರಶ್ನಿಸಿದ್ದ ಪಿಐಎಲ್ ಇತ್ಯರ್ಥಪಡಿಸಿದ ಹೈಕೋರ್ಟ್
ಬೆಂಗಳೂರು : ನಾಗರಭಾವಿ ಸಮೀಪ ನಮ್ಮ ಮೆಟ್ರೋ ಆರೆಂಜ್ ಲೈನ್ನ ಮಾರ್ಗ ಬದಲಾವಣೆ (ರೀ-ಅಲೈನ್ಮೆಂಟ್) ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ. ಈ ಸಂಬಂಧ 'ನಾಗರಭಾವಿ ಆಸ್ತಿ ಮಾಲೀಕರು ಮತ್ತು ವಾಣಿಜ್ಯ ಸಂಸ್ಥೆಗಳ ಕಲ್ಯಾಣ ಸಂಘ' ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಮೆಟ್ರೊ ಮಾರ್ಗದ ಅಲೈನ್ಮೆಂಟ್ ಪರಿಶೀಲಿಸಲು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಪರಿಗಣಿಸುವುದು ಸೂಕ್ತವಲ್ಲ. ಅದನ್ನು ನಿರ್ಧರಿಸುವುದು ಸಂಬಂಧಪಟ್ಟ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಮೆಟ್ರೊ ಮಾರ್ಗದ ಅಲೈನ್ಮೆಂಟ್ ಅನ್ನು ನಿರ್ಧರಿಸಲು ಸೇವೆ ಪಡೆಯಲಿರುವ ಪ್ರಯಾಣಿಕರ ಸಂಖ್ಯೆ ಹಾಗೂ ಇತರ ಅಂಶಗಳನ್ನು ಪರಿಗಣಿಸಬೇಕಾಗುತ್ತದೆ ಎಂದು ಹೇಳಿದೆ. ಅದಾಗ್ಯೂ, ನಾಗರಭಾವಿಯಲ್ಲಿ ಮೆಟ್ರೊ ಮಾರ್ಗದ ರೀ-ಅಲೈನ್ಮೆಂಟ್ನಿಂದ ಪರಿಸರದ ಮೇಲೆ ಉಂಟಾಗುವ ಪರಿಣಾಮಗಳ ಕುರಿತ ವರದಿ ಲಗತ್ತಿಸಿ ಅರ್ಜಿದಾರರು ಸಲ್ಲಿಸಿರುವ ಮನವಿ ಪರಿಗಣಿಸುವಂತೆ ರಾಜ್ಯ ಸರ್ಕಾರ ಮತ್ತು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತಕ್ಕೆ (ಬಿಎಂಆರ್ಸಿಎಲ್) ನಿರ್ದೇಶಿಸಿ, ಅರ್ಜಿ ವಿಲೇವಾರಿ ಮಾಡಿದೆ. ಮನವಿ ಏನು? ನಾಗರಭಾವಿ ವೃತ್ತದಿಂದ ವಿನಾಯಕ ಲೇಔಟ್, ಪಾಪಿರೆಡ್ಡಿ ಪಾಳ್ಯ ಮತ್ತು ಬಿಡಿಎ ಕಾಂಪ್ಲೆಕ್ಸ್ ಮೂಲಕ ನಾಗರಭಾವಿಗೆ ಹೋಗುವಂತೆ ಮಾರ್ಗ ಬದಲಾವಣೆ ಮಾಡಲಾಗಿದೆ. ಇದರಿಂದ, ನಾಗರಭಾವಿಯಲ್ಲಿ ಹಸಿರು ಹೊದಿಕೆಯ ಮೇಲೆ ಗಂಭೀರ ಪರಿಣಾಮ ಬೀರಲಿದ್ದು, 600ಕ್ಕೂ ಅಧಿಕ ಮರಗಳನ್ನು ಕತ್ತರಿಸಬೇಕಾಗುತ್ತದೆ. ಜತೆಗೆ, 600ಕ್ಕೂ ಅಧಿಕ ಮನೆಗಳನ್ನು ತೆರವುಗೊಳಿಸಬೇಕಾಗುತ್ತದೆ. ಅದರ ಬದಲು, ಮೂಲ ಯೋಜನೆಯಂತೆ ದ್ವಾರಕಾನಗರ ನಿಲ್ದಾಣದಿಂದ ಚೌಡೇಶ್ವರಿ ನಗರ ನಿಲ್ದಾಣದವರೆಗೆ ಹೊರ ವರ್ತುಲ ರಸ್ತೆಯಲ್ಲಿ ಮೆಟ್ರೊ ಮಾರ್ಗ ನಿರ್ಮಿಸಲು ರಾಜ್ಯ ಸರ್ಕಾರ ಮತ್ತು ಬಿಎಂಆರ್ಸಿಎಲ್ಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು.
ಮುಡಿಪು: ಕಾರಿನಲ್ಲಿ ಗಾಂಜಾ ಸಾಗಾಟ ಪ್ರಕರಣ: ಸೊತ್ತು ಸಹಿತ ಆರೋಪಿಗಳ ಬಂಧನ
ಕೊಣಾಜೆ: ಕಾರಿನಲ್ಲಿ ಗಾಂಜಾ ತುಂಬಿಸಿಕೊಂಡು ಮಾರಾಟ ಮಾಡಲು ತೆರಳುತ್ತಿದ್ದ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸರು ಮುಡಿಪು ಬಳಿ ಬಂಧಿಸಿ ಅಪಾರ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ನೌಶಾದ್ ಮತ್ತು ಇಬ್ರಾಹಿಂ ಎಂದು ಗುರುತಿಸಲಾಗಿದೆ. ಆರೋಪಿಗಳು ಮೇಲ್ಕಾರ್ - ಸಜೀಪ -ಬೋಳಿಯಾರು ಮಾರ್ಗವಾಗಿ ಗಾಂಜಾದ ಕಟ್ಟುಗಳನ್ನು ತೆಗೆದುಕೊಂಡು ಮುಡಿಪು ಮತ್ತು ಕೇರಳ ರಾಜ್ಯಕ್ಕೆ ಮಾರಾಟ ಮಾಡಲು ತರುತ್ತಿದ್ದಾರೆಂದು ಮಾಹಿತಿ ಬಂದ ಹಿನ್ನೆಲೆಯಲ್ಲಿ ಕೊಣಾಜೆ ಪೊಲೀಸರು ಕುರ್ನಾಡು ಗ್ರಾಮದ ಮಿತ್ತಕೋಡಿ ಎಂಬಲ್ಲಿ ವಾಹನವನ್ನು ತಡೆದು ನಿಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಆರೋಪಿಗಳು ಪರಾರಿಗೆ ಯತ್ನಿಸಿದಾಗ ಅವರನ್ನು ವಶಕ್ಕೆ ಪಡೆದ ಪೊಲೀಸರು ಅವರ ಬಳಿ ಇದ್ದ ಸುಮಾರು 80 ಕೆಜಿ ಗಾಂಜಾ ಹಾಗೂ ಆರೋಪಿಗಳು ಕೃತ್ಯಕ್ಕೆ ಬಳಸಿದ ಕಾರು, 3 ಮೊಬೈಲ್ ಫೋನ್ ಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಪ್ರಸಕ್ತ ವರ್ಷ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯತಿಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ಈ ಎಲ್ಲಾ ಚುನಾವಣೆಗೆ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಸಲು ನಿರ್ಧಾರ ಮಾಡಿದ್ದು, ಇದಕ್ಕೆ ಅಗತ್ಯವಿರುವ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ರಾಜ್ ತಿದ್ದುಪಡಿ ವಿಧೇಯಕಕ್ಕೆ ಸರ್ಕಾರ ಅನುಮೋದನೆ ನೀಡಿದೆ. ಈ ಬಗ್ಗೆ ವಿವರ ಇಲ್ಲಿದೆ.
ಕೆ.ರಾಘವೇಂದ್ರ ಸೇರಿ 10 ಮಂದಿಗೆ ಶಿಲ್ಪಕಲಾ ಅಕಾಡಮಿಯ ʼಗೌರವ ಪ್ರಶಸ್ತಿ ʼ
ಹತ್ತು ಮಂದಿ ಕಲಾವಿದರಿಗೆ ʼಶಿಲ್ಪಶ್ರೀ ಪ್ರಶಸ್ತಿʼ
ಮರ್ಕಝುಲ್ ಹುದಾ ಸಲಾಲ ಘಟಕ: ನೂತನ ಪದಾಧಿಕಾರಿಗಳ ಆಯ್ಕೆ
ಪುತ್ತೂರು, ಫೆ.6: ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ನೂತನ ಘಟಕವನ್ನು ಒಮಾನಿನ ಸಲಾಲದ ಖಾಸಗಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಸಮಿತಿಯ ಕಾರ್ಯಾಧ್ಯಕ್ಷ ಡಾ. ಎಮ್ಮೆಸ್ಸೆಂ ಝೈನಿ ಕಾಮಿಲ್ ಅವರ ನೇತೃತ್ವದಲ್ಲಿ ರಚಿಸಲಾಯಿತು. ಮರ್ಕಝುಲ್ ಹುದಾ ಒಮಾನ್ ರಾಷ್ಟೀಯ ಸಮಿತಿಯ ಉಪಾಧ್ಯಕ್ಷ ನಾಸಿರ್ ನಂದಾವರ ಅಧ್ಯಕ್ಷತೆ ವಹಿಸಿದ್ದರು. ಕೆಸಿಎಫ್ ಸಲಾಲ ಝೋನ್ ದಾಇ ಅಶ್ರಫ್ ಅಮ್ಜದಿ ಪಕ್ಷಿಕೆರೆ ಉದ್ಘಾಟಿಸಿದರು. ನೂತನ ಸಮಿತಿಗೆ ಮುಹಮ್ಮದ್ ಅಶ್ರಫ್ ಅಮ್ಜದಿ ಪಕ್ಷಿಕೆರೆ (ಸಲಹೆಗಾರ), ನಾಸಿರುದ್ದೀನ್ ನಂದಾವರ (ಗೌರವಾಧ್ಯಕ್ಷ), ಅಬ್ದುಲ್ ಖಾದರ್ ಮಣ್ಣಾಪು (ಅಧ್ಯಕ್ಷ), ಸದಖತುಲ್ಲಾಹ್ ಸಂಸೆ (ಉಪಾಧ್ಯಕ್ಷ), ಅಬ್ದುಲ್ಲತೀಫ್ ಸುಳ್ಯ (ಪ್ರಧಾನ ಕಾರ್ಯದರ್ಶಿ), ಮುಹಮ್ಮದ್ ಶರೀಫ್ ಕುತ್ತಾರ್ (ಕಾರ್ಯದರ್ಶಿ), ಅಬ್ದುಲ್ ಕಮಾಲ್ ಸುಳ್ಯ (ಕೋಶಾಧಿಕಾರಿ) ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸದಸ್ಯರಾಗಿ ಆದಿಲ್ ಮಾಚಾರ್, ಅಬ್ದುಲ್ ಖಾದರ್ ಪರ್ಪುಂಜ, ಫಾರೂಕ್ ಸುರಿಬೈಲ್ ತುಂರೀತ್, ಶರೀಫ್ ಕುಂಜತ್ಬೈಲ್, ಶಫೀಕ್ ಇನ್ನಾ ರು ಅವರನ್ನು ಆಯ್ಕೆ ಮಾಡಲಾಯಿತು.
23 ಜಿಲ್ಲೆಗಳಲ್ಲಿ ನಡೆದಿರುವ ಕಾರ್ಯಾಗಾರ
ನಂತೂರು ಅಪಘಾತ: ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲು
ಮಂಗಳೂರು,ಫೆ.6: ನಗರದ ನಂತೂರು ಬಳಿ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪ್ತಿಯ ಮೃತದೇಹವನ್ನು ಖಾಸಗಿ ಆಸ್ಪತ್ರೆಯಿಂದ ಕದ್ರಿ ಪೊಲೀಸ್ ಠಾಣೆಯ ಬಳಿ ತಂದು ಪ್ರತಿಭಟನೆ ನಡೆಸಿದ ಆರೋಪದಡಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ. ಬಲ್ಲಾಳ್ಬಾಗ್ ಸಮೀಪದ ವಿವೇಕನಗರದ ಅಮೀತ್, ಕೀರ್ತನ್, ನವೀತ್, ಭರತ್ರಾಜ್, ಪವನ್, ಲೋಕೇಶ್ ಮಂಗಳಾದೇವಿ, ಮನ್ವೀತ್ ಬಲ್ಲಾಳ್ಬಾಗ್, ಅನಿಲ್ ಕುಮಾರ್ ಕಂಕನಾಡಿ, ಪ್ರೇಮನಾಥ ಬಲ್ಲಾಳ್ಬಾಗ್ ಹಾಗೂ ಇತರ ಸುಮಾರು 50 ಮಂದಿ ದ್ವಿಚಕ್ರ ವಾಹನ ಮತ್ತು ಕಾರಿನಲ್ಲಿ ಆಂಬುಲೆನ್ಸ್ನೊಂದಿಗೆ ಬಂದು ಕದ್ರಿ ಪೊಲೀಸ್ ಠಾಣೆಯ ಬಳಿ ಅಕ್ರಮಕೂಟ ಸೇರಿ ಪ್ರತಿಭಟನೆ ನಡೆಸಿದ್ದಾರೆ. ಈ ರೀತಿ ಪ್ರತಿಭಟನೆ ಮಾಡುವುದು ಸರಿಯಲ್ಲವೆಂದು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರತಿಭಟನಾಕಾರರಿಗೆ ಮನವರಿಕೆ ಮಾಡಿದರೂ ಕೇಳದೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಸಾರ್ವಜನಿಕ ವಾಹನ ಸಂಚಾರಕ್ಕೂ ಇದರಿಂದ ಅಡಚಣೆಯಾಗಿದೆ ಎಂದು ಆರೋಪಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೋಗಿಲು ಬಡಾವಣೆಯಲ್ಲಿ ಮನೆಗಳ ತೆರವು; ವಿಸ್ತೃತ ವರದಿ ಸಲ್ಲಿಸಲು ಅಮೈಕಸ್ ಕ್ಯೂರಿಗೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು : ಯಲಹಂಕ ಬಳಿಯ ಕೋಗಿಲು ಬಡಾವಣೆಯಲ್ಲಿನ ವಾಸಿಂ ಮತ್ತು ಫಕೀರ್ ಕಾಲನಿಗಳಲ್ಲಿನ ಮನೆಗಳ ತೆರವು ಕಾರ್ಯಾಚರಣೆಯಲ್ಲಿ ಎಷ್ಟು ಮಂದಿ ನಿರ್ಗತಿಕರಾಗಿದ್ದಾರೆ ಹಾಗೂ ಸಂತ್ರಸ್ತರಿಗೆ ಕಲ್ಪಿಸಲಾಗಿರುವ ಪುನರ್ವಸತಿ ವ್ಯವಸ್ಥೆ ಕುರಿತ ಮಾಹಿತಿ ಒಳಗೊಂಡ ವಿವರವಾದ ವರದಿ ಸಲ್ಲಿಸುವಂತೆ ಪ್ರಕರಣದ ಅಮೈಕಸ್ ಕ್ಯೂರಿಗೆ ಹೈಕೋರ್ಟ್ ನಿರ್ದೇಶಿಸಿದೆ. ಅಕ್ರಮವಾಗಿ ಮನೆಗಳ ತೆರವು ಕಾರ್ಯಾಚರಣೆ ನಡೆಸಲಾಗಿದ್ದು, ಅದನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಕೋಗಿಲು ಬಡಾವಣೆ ನಿವಾಸಿಗಳಾದ ಜೈಬಾ ತಬಸ್ಸುಮ್, ರೆಹಾನಾ ಹಾಗೂ ಆರೀಫ್ ಬೇಗಂ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. ವಿಚಾರಣೆ ಆರಂಭವಾಗುತ್ತಿದ್ದಂತೆ ನ್ಯಾಯಪೀಠ, ಅಮೈಕಸ್ ಕ್ಯೂರಿ ಬಿ.ವಿ. ವಿದ್ಯುಲ್ಲತಾ ಅವರನ್ನು ಕುರಿತು, ಮನೆಗಳ ತೆರವು ಕಾರ್ಯಾಚರಣೆಯಿಂದ ಎಷ್ಟು ಮಂದಿ ನಿರ್ಗತಿಕರಾಗಿದ್ದಾರೆ. ಎಷ್ಟು ಜನರ ಮನೆ ತೆರವು ಮಾಡಲಾಗಿದೆ. ಎಷ್ಟು ಗುಡಿಸಲುಗಳನ್ನು ನಾಶಪಡಿಸಲಾಗಿದೆ. ಎಷ್ಟು ಕುಟುಂಬಗಳು ನಿರ್ಗತಿಕವಾಗಿವೆ. ಪುನರ್ವಸತಿಯ ವ್ಯವಸ್ಥೆ ಹೇಗಿದೆ ಎಂಬ ಅಂಶಗಳನ್ನೊಳಗೊಂಡ ವಿವರವಾದ ವರದಿ ಸಲ್ಲಿಸಬೇಕು ಎಂದು ಸೂಚಿಸಿತಲ್ಲದೆ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು (ಕೆಎಸ್ಎಲ್ಎಸ್ಎ) ಅಮೈಕಸ್ ಕ್ಯೂರಿ ಅವರಿಗೆ ಸಂಪೂರ್ಣ ನೆರವು ನೀಡಬೇಕು ಎಂದು ಆದೇಶಿಸಿತು. ಮತ್ತೊಂದು ಅರ್ಜಿಯಲ್ಲಿ ಸರ್ಕಾರಕ್ಕೆ ನೋಟಿಸ್: ಫಕೀರ್ ಕಾಲನಿಯಲ್ಲಿ 1990ರಿಂದ ನೆಲೆಸಿರುವ 15 ಮಂದಿಯ ನಿವಾಸಗಳನ್ನು ತೆರವು ಮಾಡಲಾಗಿರುವುದನ್ನು ಆಕ್ಷೇಪಿಸಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಪ್ರತ್ಯೇಕ ನೋಟಿಸ್ ಜಾರಿಗೊಳಿಸಿದೆ. ಕೋಗಿಲು ಬಡಾವಣೆಯ ರಬಿಯಾ, ಮೊಹಮ್ಮದ್ ರಫೀಕ್ ಸೇರಿದಂತೆ 15 ಮಂದಿ ಸಲ್ಲಿಸಿರುವ ಕುರಿತು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಕೀಲ ಕ್ಲಿಫ್ಟನ್ ರೊಜಾರಿಯೊ ವಾದ ಮಂಡಿಸಿ, ಅರ್ಜಿದಾರರು ಫಕೀರ್ ಕಾಲನಿಯಲ್ಲಿ 1990ರಿಂದ ನೆಲೆಸಿದ್ದಾರೆ. ಎಲ್ಲರಿಗೂ ಕರ್ನಾಟಕ ಭೂ ಕಂದಾಯ ಕಾಯ್ದೆ ಸೆಕ್ಷನ್ 94ಸಿಸಿ ಅನುಸಾರ ಹಕ್ಕು ಪತ್ರ ನೀಡಲಾಗಿದೆ. ಇದಕ್ಕೆ ಪೂರಕವಾಗಿ ಗೂಗಲ್ ಅರ್ಥ್ ದಾಖಲೆ ಇದೆ. ಸರ್ಕಾರದ ದಾಖಲೆಯೇ ಇದೆ. ಅದಾಗ್ಯೂ, ಮನೆಗಳನ್ನು ತೆರವು ಮಾಡಲಾಗಿದೆ ಎಂದು ಆಕ್ಷೇಪಿಸಿದರು. ವಾದ ಆಲಿಸಿದ ನ್ಯಾಯಪೀಠ, ಅರ್ಜಿ ಸಂಬಂಧ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ, ಆಕ್ಷೇಪಣೆ ಸಲ್ಲಿಸಲು ನಿರ್ದೇಶಿಸಿತು. ಜತೆಗೆ, ಈ ಪ್ರಕರಣದಲ್ಲೂ ನೆರವು ನೀಡುವಂತೆ ಅಮೈಕಸ್ ಕ್ಯೂರಿಗೆ ಸೂಚಿಸಿ, ಅರ್ಜಿ ವಿಚಾರಣೆಯನ್ನು ಮಾರ್ಚ್ 12ಕ್ಕೆ ಮುಂದೂಡಿತು.
ಉಡುಪಿ, ಫೆ.6: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಫೆ.5ರಂದು ರಾತ್ರಿ ವೇಳೆ ಕೊರಂಗ್ರಪಾಡಿ ಗ್ರಾಮದ ಮಾರ್ಪಳ್ಳಿ ಶ್ರೀಬಬ್ಬುಸ್ವಾಮಿ ದೈವಸ್ಥಾನದ ಬಳಿ ನಡೆದಿದೆ. ಮೃತರನ್ನು ಸೆಲ್ವ ಕುಮಾರ್ ಎಂದು ಗುರುತಿಸಲಾಗಿದೆ. ಕೊರಂಗ್ರಪಾಡಿ ಕಡೆಯಿಂದ ಮಾರ್ಪಳ್ಳಿ ಕಡೆಗೆ ಹೋಗುತ್ತಿದ್ದ ಬೈಕ್, ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಬಿತ್ತೆನ್ನಲಾಗಿದೆ. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ಸೆಲ್ವ ಕುಮಾರ್, ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
U19 ವಿಶ್ವಕಪ್ | ಇಂಗ್ಲೆಂಡನ್ನು ಸೋಲಿಸಿ 6ನೇ ಬಾರಿ ಚಾಂಪಿಯನ್ ಆದ ಭಾರತ
ಹರಾರೆ: ಐಸಿಸಿ ಅಂಡರ್–19 ವಿಶ್ವಕಪ್ ಫೈನಲ್ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ಧ 100 ರನ್ಗಳ ಅಂತರದ ಭರ್ಜರಿ ಜಯ ಸಾಧಿಸಿ ಆರನೇ ಬಾರಿ ವಿಶ್ವಕಪ್ ಕಿರೀಟವನ್ನು ತನ್ನದಾಗಿಸಿಕೊಂಡಿತು. ನಾಯಕ ಆಯುಷ್ ಮಾತ್ರೆ ಅವರ ನೇತೃತ್ವದಲ್ಲಿ ಭಾರತ ತಂಡ ಎಲ್ಲ ವಿಭಾಗಗಳಲ್ಲೂ ಅತ್ಯುತ್ತಮ ಆಟವಾಡಿತು. ಹರಾರೆ ಸ್ಪೋರ್ಟ್ಸ್ ಕ್ಲಬ್ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆರಂಭದಿಂದಲೇ ದಿಟ್ಟ ಬ್ಯಾಟಿಂಗ್ ಪ್ರದರ್ಶಿಸಿದ ಭಾರತ ತಂಡ 50 ಓವರ್ಗಳಲ್ಲಿ 9 ವಿಕೆಟ್ಗೆ 411 ರನ್ಗಳ ಭಾರೀ ಮೊತ್ತ ಕಲೆಹಾಕಿತು. ಭಾರತದ ಪರ ವೈಭವ್ ಸೂರ್ಯವಂಶಿ ಕೇವಲ 80 ಎಸೆತಗಳಲ್ಲಿ 175 ರನ್ಗಳ ಸ್ಫೋಟಕ ಇನ್ನಿಂಗ್ಸ್ ಆಡಿ ಇಂಗ್ಲೆಂಡ್ ಬೌಲರ್ಗಳಿಗೆ ತಲೆನೋವಾಗಿ ಪರಿಣಮಿಸಿದರು. ಅವರ ವೇಗದ ಶತಕ ಪಂದ್ಯದ ತಿರುವಾಗಿತ್ತು. ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡದ ಮೇಲೆ ಭಾರತೀಯ ಬೌಲರ್ಗಳು ಆರಂಭದಲ್ಲೇ ಒತ್ತಡ ಹೇರುತ್ತಾ ಬಂದರು. ಆರ್ಎಸ್ ಅಂಬ್ರೀಶ್ 3 ವಿಕೆಟ್ ಪಡೆದು ಎದುರಾಳಿಗಳ ಬ್ಯಾಟಿಂಗ್ ಕ್ರಮಾಂಕ ಮುರಿದರು. ನಿರಂತರ ವಿಕೆಟ್ ಕಳೆದುಕೊಂಡ ಇಂಗ್ಲೆಂಡ್ ತಂಡ ಗುರಿ ತಲುಪಲು ವಿಫಲವಾಗಿ 100 ರನ್ಗಳ ಅಂತರದಲ್ಲಿ ಸೋಲು ಒಪ್ಪಿಕೊಳ್ಳಬೇಕಾಯಿತು. ಈ ಜಯದೊಂದಿಗೆ ಭಾರತ ಅಂಡರ್–19 ವಿಶ್ವಕಪ್ನಲ್ಲಿ ತನ್ನ ಪ್ರಾಬಲ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿ ಆರನೇ ಬಾರಿ ಕಿರೀಟವನ್ನು ಕೈಸೇರಿಸಿಕೊಂಡಿತು.
ಬಣ್ಣದೊಡೆಯನ ಸಂಸ್ಮರಣೆ: ದಿಗ್ಗಜ ಕಲಾವಿದರಿಗೆ ಗೌರವಾರ್ಪಣೆ
ಕುಂದಾಪುರ, ಫೆ.6: ಸಕ್ಕಟ್ಟು ಶ್ರೀಲಕ್ಷ್ಮೀನಾರಾಯಣಯ್ಯ ಜನ್ಮ ಶತಮಾನೋತ್ಸವ ಸಮಿತಿಯ ವತಿಯಿಂದ ’ಯಕ್ಷ ಲೋಕದ ಮಾಸದ ಬಣ್ಣ-100’ ಕಾರ್ಯಕ್ರಮವು ಇತ್ತೀಚೆಗೆ ಶ್ರೀಕ್ಷೇತ್ರ ಕೂಡ್ಲು ಬಡಾಬೆಟ್ಟು ಕನ್ಯಾನದ ಪೆರ್ಡೂರು ರಂಗವೇದಿಕೆಯಲ್ಲಿ ಜರಗಿತು. ಈ ಸಂದರ್ಭದಲ್ಲಿ ಭಾಗವತರಾದ ಜನ್ಸಾಲೆ ರಾಘವೇಂದ್ರ ಆಚಾರ್ಯ ರಿಗೆ ಮತ್ತು ಹಾಸ್ಯ ಕಲಾವಿದ ರವೀಂದ್ರ ದೇವಾ =ಡಿಗರಿಗೆ ’ಸಂಸ್ಮರಣಾ ಪ್ರಶಸ್ತಿ’ ನೀಡಿ ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ಕುಂದಾಪುರದ ವಕೀಲರಾದ ಟಿ.ಬಿ.ಶೆಟ್ಟಿ, ದೇವಳದ ಆಡಳಿತ ಧರ್ಮದರ್ಶಿಗಳಾದ ಜಯರಾಮ ಸ್ವಾಮಿ ಉಪಸ್ಥಿತರಿದ್ದರು. ಕುಂದಾಪುರದ ವಕೀಲ ಶರತ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಕ್ಕಟ್ಟು ಕುಟುಂಬದ ಪರವಾಗಿ ಸಕ್ಕಟ್ಟು ಮಂಜುನಾಥಯ್ಯ ಮಾತನಾಡಿದರು. ಗೋಪಾಲಕೃಷ್ಣ ದೇವಾಡಿಗ ಬಡಾಬೆಟ್ಟು ಕಾರ್ಯಕ್ರಮ ನಿರೂಪಿಸಿದರು.
ಆಯುಷ್ ಮ್ಹಾತ್ರೆ ಅವರ ಅಮೋಘ ಶತಕದ ನೆರವಿನಿಂದ ರನ್ ಪರ್ವತವನ್ನೇ ಏರಿ ನಿಂತ ಭಾರತ ತಂಡ ಇಂಗ್ಲೆಂಡ್ ಅನ್ನು ಭರ್ತಿ 100 ರನ್ ಗಳಿಂದ ಸೋಲಿಸುವ ಮೂಲಕ 6ನೇ ಬಾರಿ ಐಸಿಸಿ ಅಂಡರ್ 19 ವಿಶ್ವಕಪ್ ಅನ್ನು ಎತ್ತಿ ಹಿಡಿದಿದೆ. ಆಯುಷ್ ಮ್ಹಾತ್ರೆ ನೇತೃತ್ವದ ಭಾರತ ತಂಡ ಈ ಟೂರ್ನಿಯುದ್ದಕ್ಕೂ ಒಂದೇ ಒಂದು ಪಂದ್ಯವನ್ನೂ ಸೋಲದೆ ಅಜೇಯವಾಗಿ ಕಪ್ ಗೆದ್ದಿರುವುದು ಬಹು ದೊಡ್ಡ ಸಾಧನೆಯಾಗಿದ್ದು ಇಡೀ ದೇಶವೇ ಇದೀಗ ಎಳೆಯರ ಸಾಧನೆಯನ್ನು ಕೊಂಡಾಡುತ್ತಿದೆ. ಅದರಲ್ಲೂ 14ರ ಹರೆಯದ ವೈಭವ್ ಸೂರ್ಯವಂಶಿ ಅವರ ಬ್ಯಾಟಿಂಗ್ ವೈಭವ ಇಡೀ ದಿನದ ಹೈಲೈಟ್ ಆಯಿತು. ಹರಾರೆಯಲ್ಲಿ ಶುಕ್ರವಾರ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗದಿತ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 411 ರನ್ ಗಳ ಬೃಹತ್ ಮೊತ್ತ ಪೇರಿಸಿತು. ಕಠಿಣ ಗುರಿ ಪಡೆದ ಇಂಗ್ಲೆಂಡ್ ತಂಡ 40.1 ಓವರ್ ಗಳಲ್ಲಿ 311 ರನ್ ಗಳಿಗೆ ಆಲೌಟ್ ಆಯಿತು. ಭಾರತ U19 ವಿಶ್ವಕಪ್ ವಿಕ್ರಮಗಳು ಕ್ರಮ ಸಂಖ್ಯೆ ವರ್ಷ ನಾಯಕತ್ವ ಎದುರಾಳಿ ತಂಡ 1 2000 ಮೊಹಮ್ಮದ್ ಕೈಫ್ ಶ್ರೀಲಂಕಾ 2 2008 ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ 3 2012 ಉನ್ಮುಕ್ತ್ ಚಾಂದ್ ಆಸ್ಟ್ರೇಲಿಯಾ 4 2018 ಪೃಥ್ವಿ ಶಾ ಆಸ್ಟ್ರೇಲಿಯಾ 5 2022 ಯಶ್ ಧುಲ್ ಇಂಗ್ಲೆಂಡ್ 6 2026 ಆಯುಷ್ ಮ್ಹಾತ್ರೆ ಇಂಗ್ಲೆಂಡ್ ಸಂಕ್ಷಿಪ್ತ ಸ್ಕೋರ್ ಭಾರತ 50 ಓವರ್ ಗಳಲ್ಲಿ 9 ವಿಕೆಟ್ ಗೆ 411, ವೈಭವ್ ಸೂರ್ಯವಂಶಿ 175(80), ಆಯುಷ್ ಮ್ಹಾತ್ರೆ 53(51), ಅಭಿಜ್ಞಾನ್ ಕುಂಡು 40(31), ಕಾನಿಷ್ಕ್ ಚೌಹಾನ್ ನಾಟೌಟ್ 37(20), ಜೇಮ್ಸ್ ಮಿಂಟೋ 63ಕ್ಕೆ 3, ಸೆಬಾಸ್ಟಿಯನ್ ಮಾರ್ಗನ್ 74ಕ್ಕೆ2, ಎಲೆಕ್ಸ್ ಗ್ರೀನ್ 49ಕ್ಕೆ 2. ಇಂಗ್ಲೆಂಡ್ 40.1 ಓವರ್ ಗಳಲ್ಲಿ 311ಕ್ಕೆ ಆಲೌಟ್, ಕ್ಯಾಲೆಬ್ ಫಾಕ್ನರ್ 115(67), ಬೆನ್ ಡ್ವಾಕಿನ್ಸ್ 66(56), ಬೆನ್ ಮೇಯ್ಸ್ 45(28), ಅಂಬರೀಶ್ 56ಕ್ಕೆ 3, ದೀಪೇಶ್ ದೇವೇಂದ್ರನ್ 64ಕ್ಕೆ 2, ಕಾನಿಷ್ಕ್ ಚೌಹಾನ್ 63ಕ್ಕೆ 2.
ಮಂದರ್ತಿಯಲ್ಲಿ ಹೊಸ ಸರಕಾರಿ ಶಾಲೆ ಪ್ರಾರಂಭಿಸಲು ಶಿಕ್ಷಣ ಸಚಿವರಿಗೆ ಮನವಿ
ಕುಂದಾಪುರ, ಫೆ.6: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಗ್ಗುಂಜೆ ಗ್ರಾಮದ ಮಂದರ್ತಿಯಲ್ಲಿ ಹೊಸದಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪ್ರಾರಂಭಿಸಲು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುರ್ಮಾ ಕೊಡ್ಗಿ, ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಹೆಗ್ಗುಂಜೆ ಗ್ರಾಮದ ಮಂದರ್ತಿ ಶ್ರೀದುರ್ಗಪರಮೇಶ್ವರಿ ದೇವಸ್ಥಾನದ ವತಿಯಿಂದ ಈಗಾಗಲೇ ಅನುದಾನಿತ ಪ್ರೌಢ ಶಾಲೆ ಮತ್ತು ಅನುದಾನ ಸಹಿತ ಪದವಿ ಪೂರ್ವ ಕಾಲೇಜು ನಡೆಯುತ್ತಿದ್ದು ಸರಕಾರಿ ಪ್ರಾಥಮಿಕ ಶಾಲೆ ಪ್ರಾರಂಭಿಸಿ ದ್ದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲ ವಾಗಲಿದೆ. ಅಲ್ಲಿಯೇ ಸಮೀಪದಲ್ಲಿರುವ ಮಂದರ್ತಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 153 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಶಿಕ್ಷಕರ ಕೊರತೆ ಯಿಂದ ಶಾಲೆ ಮುಚ್ಚುವುದಾಗಿ ಆಡಳಿತ ಮಂಡಳಿಯು ತಿಳಿಸಿರುವುದರಿಂದ ವಿದ್ಯಾರ್ಥಿಗಳ ಪ್ರಾಥಮಿಕ ಶಿಕ್ಷಣಕ್ಕೆ ವಿದ್ಯಾರ್ಥಿಗಳು ಪರದಾಡುವಂತಾಗುತ್ತದೆ. ಆದ್ದರಿಂದ ಈ ವ್ಯಾಪ್ತಿಯಲ್ಲಿ ಸರಕಾರದಿಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಆಟದ ಮೈದಾನಕ್ಕೆ ಸರ್ವೆ ನಂರ್ಬ 167/71ಬಿ ರಲ್ಲಿ ಹಂಚಿಕೆಯಾಗಿರುವ 0.88ಸೆಂಟ್ಸ್ ಜಾಗದಲ್ಲಿ ಸರಕಾರಿ ಶಾಲೆ ಪ್ರಾರಂಭಿಸಲು ಅನುಮತಿ ನೀಡಿದ್ದಲ್ಲಿ ಶಾಲೆಗೆ ಬೇಕಾದ ಮೂಲಭೂತ ಸೌಲಭ್ಯಗಳನ್ನು ದೇವಸ್ಥಾನದ ವತಿಯಿಂದ ನೀಡುವುದಾಗಿ ಆಡಳಿತ ಮಂಡಳಿಯು ಲಿಖಿತವಾಗಿ ನೀಡಿದೆ. ಆದುದರಿಂದ ಹೆಗ್ಗುಂಜಿ ಗ್ರಾಮದ ಸರ್ವೆ ನಂ.1671ಬಿ ನಲ್ಲಿ 2026-27ನೇ ಸಾಲಿನಿಂದ ಸರಕಾರಿ ಶಾಲೆಯನ್ನು ಪ್ರಾರಂಭಿಸಲು ತಮ್ಮ ಅನುಮತಿ ನೀಡುವಂತೆ ಶಾಸಕರು ಸಚಿವರಲ್ಲಿ ಮನವಿ ಮಾಡಿದರು.
Bidar | ಬಾಲ್ಯ ವಿವಾಹ : ಆರು ಜನರ ವಿರುದ್ಧ ಪ್ರಕರಣ ದಾಖಲು
ಬೀದರ್ : ಜನವಾಡ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ 17 ವರ್ಷದ ಅಪ್ರಾಪ್ತ ಬಾಲಕಿಗೆ ವಿವಾಹ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ವರ ಹಾಗೂ ಪೋಷಕರು ಸೇರಿ ಮದುವೆಗೆ ಸಹಕರಿಸಿದ ಆರು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಗ್ರಾಮದ ಚರ್ಚ್ನಲ್ಲಿ ಫೆ.2ರಂದು ಅಪ್ರಾಪ್ತ ಬಾಲಕಿಗೆ ಮದುವೆ ನಡೆದಿದೆ ಎಂಬ ಖಚಿತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆಯಲ್ಲಿ ಬಾಲಕಿ ಅಪ್ರಾಪ್ತೆಯಾಗಿದ್ದು, ಮದುವೆ ನಡೆದಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರೇ ಜನವಾಡ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಪ್ರಕರಣ ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೇವಲ ಪ್ರಶ್ನಿಸುವುದಕ್ಕಾಗಿ ವ್ಯಕ್ತಿಯನ್ನು ಬಂಧಿಸುವಂತಿಲ್ಲ: ಸುಪ್ರೀಂಕೋರ್ಟ್
ಹೊಸದಿಲ್ಲಿ,ಜ.6: ಕೇವಲ ಪ್ರಶ್ನಿಸುವುದಕ್ಕಾಗಿ ವ್ಯಕ್ತಿಯನ್ನು ಬಂಧಿಸುವಂತಿಲ್ಲವೆಂದು ಸುಪ್ರೀಂಕೋರ್ಟ್ ಶುಕ್ರವಾರ ಪ್ರತಿಪಾದಿಸಿದೆ. ಪ್ರಕರಣದ ತನಿಖೆಗೆ ಅತ್ಯವಶ್ಯಕವಾಗಿದ್ದರೆ ಮಾತ್ರವೇ ಆತನನ್ನು ಬಂಧಿಸಬಹುದೆಂದು ಅದು ಹೇಳಿದೆ. ಕನಿಷ್ಠ 7 ವರ್ಷಗಳವರೆಗೆ ಜೈಲುಶಿಕ್ಷೆ ವಿಧಿಸಬಹುದಾದಂತಹ ದಂಡನೀಯ ಅಪರಾಧ ಪ್ರಕರಣಗಳ ತನಿಖೆಯಲ್ಲಿ ಆರೋಪಿಯನ್ನು ಕಸ್ಟಡಿಗೆ ತೆಗೆದುಕೊಳ್ಳದೆ ತನಿಖೆ ನಡೆಸಲು ಸಾಧ್ಯವಿಲ್ಲವೆಂದು ಪೊಲೀಸ್ ಅಧಿಕಾರಿಯು ಖಚಿತಪಡಿಸಿಕೊಂಡ ಬಳಿಕವಷ್ಟೇ ಆತ ವ್ಯಕ್ತಿಯನ್ನು ಬಂಧಿಸಬಹುದಾಗಿದೆಯೇ ಹೊರತು ಕೇವಲ ಪ್ರಶ್ನಿಸುವುದಕ್ಕಾಗಿ ಆತನನ್ನು ಬಂಧಿಸುವಂತಿಲ್ಲ. ಎಂದು ನ್ಯಾಯಮೂರ್ತಿಗಳಾದ ಎಂ.ಎಂ.ಸುಂದರೇಶ್ ಹಾಗೂ ಎನ್.ಕೆ.ಸಿಂಗ್ಅವರನ್ನೊಳಗೊಂಡ ನ್ಯಾಯಪೀಠ ತಿಳಿಸಿದೆ. ಇದಕ್ಕೆ ವ್ಯತಿರಿಕ್ತವಾಗಿ ಪೊಲೀಸ್ ಅಧಿಕಾರಿಯು ವರ್ತಿಸಿದಲ್ಲಿ, ಅದು ಭಾರತೀಯ ದಂಡಸಂಹಿತೆಯ 35(1)(ಬಿ) ಹಾಗೂ ಸೆಕ್ಷನ್ಗಳಾದ 35(3) ರಿಂದ 35(6) ಸೆಕ್ಷನ್ಗಳ ಉದ್ದೇಶ ಹಾಗೂ ಶಾಸನಾತ್ಮಕ ಆಶಯವನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ಅದು ಹೇಳಿದೆ. ಅಲಹಾಬಾದ್ ಹೈಕೋರ್ಟ್ನ ಆದೇಶದ ವಿರುದ್ಧ ಸಲ್ಲಿಸಲಾದ ಮೇಲ್ಮನವಿಯ ವಿಚಾರಣೆ ಸಂದರ್ಭ ಸುಪ್ರೀಂಕೋರ್ಟ್ ಆ ಆದೇಶವನ್ನು ಹೊರಡಿಸಿದೆ. ಏಳು ವರ್ಷಗಳವರೆಗೆ ಜೈಲುಶಿಕ್ಷೆ ವಿಧಿಸಬಹುದಾದ ಅಪರಾಧಗಳಿಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳಲ್ಲಿ ಆರೋಪಿಗೆ ಭಾರತೀ ದಂಡಸಂಹಿತೆಯ ಸೆಕ್ಷನ್ 35 (3)ರ ಅನ್ವಯ ಬಂಧನ ನೋಟಿಸ್ ಜಾರಿಗೊಳಿಸಬಹುದೇ ಎಂದು ಅರ್ಜಿಯಲ್ಲಿ ಪ್ರಶ್ನಿಸಲಾಗಿತ್ತು.
ಉಪ್ಪೂರು ಬೀದಿನಾಯಿ ಶೆಲ್ಟರ್ ನಿರ್ಮಾಣಕ್ಕೆ ವಿರೋಧ: ಗ್ರಾಮಸ್ಥರಿಂದ ಪ್ರತಿಭಟನೆ
ಉಡುಪಿ, ಫೆ.6: ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಬೀದಿ ನಾಯಿ ಶೆಲ್ಟರ್ಗೆ ವಿರೋಧ ವ್ಯಕ್ತಪಡಿಸಿ ಉಪ್ಪೂರು, ಹಾವಂಜೆ ಹಾಗೂ ಆರೂರು ಗ್ರಾಪಂ ವ್ಯಾಪ್ತಿಯ ಗ್ರಾಮಸ್ಥರು ಶುಕ್ರವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ನಗರಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾಡಳಿತವು ಉಪ್ಪೂರು ಗ್ರಾಮದ 9.9 ಎಕರೆ ಪ್ರದೇಶದಲ್ಲಿ ಬೀದಿನಾಯಿಗಳ ಶೆಲ್ಟರ್ ನಿರ್ಮಾಣ ಮಾಡಲು ಮುಂದಾಗಿದ್ದು, ಇದಕ್ಕೆ ಮೂರು ಗ್ರಾಮಗಳ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿ, ಕೂಡಲೇ ಈ ಶೆಲ್ಟರ್ನ್ನು ಕೈಬಿಟ್ಟು ಬೇರೆ ನಿರ್ಜನ ಪ್ರದೇಶಕ್ಕೆ ವರ್ಗಾಯಿಸಬೇಕೆಂದು ಆಗ್ರಹಿಸಿದರು. ‘ಉಡುಪಿ ಜಿಲ್ಲೆಯ ಸುಮಾರು 18ಸಾವಿರ ಬೀದಿ ನಾಯಿಗಳನ್ನು ಉಪ್ಪೂರಿನ ಚುಕ್ಕುಲಿಕಟ್ಟೆ ಹತ್ತಿರ 9.9 ಎಕರೆ ಜಾಗದಲ್ಲಿ ಆಶ್ರಯ ತಾಣ ನಿರ್ಮಿಸಲು ಸರ್ವೆ ಕಾರ್ಯ ನಡೆದಿದ್ದು, ಮುಂದಿನ ದಿನಗಳಲ್ಲಿ ಈ ಬೀದಿ ನಾಯಿಗಳ ಶೆಲ್ಟರ್ ನಿರ್ಮಾಣವಾದರೆ ಸುತ್ತಮುತ್ತಲಿನ ಗ್ರಾಮದ ಜನರಿಗೆ ಸಾಕಷ್ಟು ಸಮಸ್ಯೆ ತಲೆದೋರಲಿದೆ ಎಂದು ಸ್ಥಳೀಯರಾದ ಅಜಿತ್ ಶೆಟ್ಟಿ ಆರೋಪಿಸಿದರು. ‘ಬೀದಿ ನಾಯಿ ಶೆಲ್ಟರ್ ನಿರ್ಮಿಸಲು ಗುರುತಿಸಿರುವ ಜಾಗದಲ್ಲಿ ಸಾಕಷ್ಟು ಅಭಿವೃದ್ಧಿ ಯೋಜನೆಯನ್ನು ತರಬಹು ದಾಗಿದೆ. ಈ ಜಾಗದ ಸುತ್ತಮುತ್ತ ಸುಮಾರು 200 ಮನೆಗಳಿವೆ. ನಾಯಿಗಳ ಮಲಮೂತ್ರ ವಿಸರ್ಜನೆಯ ನೀರು ಸಮೀಪದ ಬೆಳ್ಮಾರಿನ ತೋಡಿನಲ್ಲಿ ಹರಿದು ಹೊಳೆಗೆ ಸೇರುತ್ತದೆ. ಇದರಿಂದ ಬೆಳ್ಮಾರಿನ ಜನರಿಗೆ ಅನಾರೋಗ್ಯ ಕಾಡಲಿದೆ. ಅಲ್ಲದೆ ಬಾವಿಯ ನೀರು ಕೂಡ ಕಲುಷಿತವಾಗಲಿದೆ. ಚರ್ಮರೋಗದ ಭೀತಿ ಕೂಡ ಇಲ್ಲಿನ ಜನರಿಗೆ ಎದುರಾಗಲಿದೆ. ಅದೇ ರೀತಿ ಕಾಡು ಪ್ರಾಣಿಗಳ ಹಾವಳಿ ಕೂಡ ಹೆಚ್ಚಾಗಲಿದೆ’ ಎಂದು ಪ್ರತಿಭಟನಕಾರರು ದೂರಿದರು. ‘9.9. ಎಕರೆ ಜಾಗದಲ್ಲಿ ಬೀದಿ ನಾಯಿ ಶೆಲ್ಟರ್ ನಿರ್ಮಿಸಿದರೆ ಸುತ್ತಮುತ್ತಲಿನ ಉಳಿದ 90 ಎಕರೆ ಜಾಗದಲ್ಲಿ ಯಾವುದೇ ಉತ್ತಮ ಯೋಜನೆಗಳನ್ನು ಜಾರಿಗೆ ತರಲು ಸಾಧ್ಯವಿಲ್ಲ. ಈ ಜಾಗವು 2016ನೇ ಇಸವಿಯಿಂದ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಸೂಚನೆಯಂತೆ ಪ್ರಾಧಿಕಾರದ ವ್ಯಾಪ್ತಿಗೆ ಬರುತ್ತದೆ. ಮುಂದಿನ ದಿನಗಳಲ್ಲಿ ನಗರಸಭೆ ವ್ಯಾಪ್ತಿಗೂ ಈ ಜಾಗ ಬರಲಿದೆ. ಆದುದರಿಂದ ಇಲ್ಲಿ ಬೀದಿನಾಯಿ ಶೆಲ್ಟರ್ ನಿರ್ಮಿಸುವುದು ಸಮಂಜಸವಲ್ಲ’ ಎಂದು ಹೋರಾಟಗಾರ ಅಶ್ವಿನ್ರೋಚ್ ತಿಳಿಸಿದರು. ಬಳಿಕ ಸ್ಥಳಕ್ಕೆ ಆಗಮಿಸಿದ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಕಾಂಗ್ರೆಸ್ ಮುಖಂಡ ಪ್ರಸಾದ್ರಾಜ್ ಕಾಂಚನ್, ಉಪ್ಪೂರು ಗ್ರಾಪಂ ಅಧ್ಯಕ್ಷೆ ಗಾಯತ್ರಿ, ಆರೂರು ಗ್ರಾಪಂ ಅಧ್ಯಕ್ಷ ಗುರುರಾಜ್ ಭಟ್, ಹಾವಂಜೆ ಗ್ರಾಪಂ ಅಧ್ಯಕ್ಷೆ ಆಶಾ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ತಾಪಂ ಮಾಜಿ ಅಧ್ಯಕ್ಷರಾದ ನಳಿನಿ ಪ್ರದೀಪ್, ವರೋನಿಕಾ ಕರ್ನೆಲಿಯೋ, ಧರ್ಮಗುರು ಫಾ.ಲಾರೆನ್ಸ್ ಡಿಸೋಜ, ಪ್ರಮುಖರಾದ ಅಶ್ವಿನ್ರಾಜ್, ಭಾಸ್ಕರ ಶೆಟ್ಟಿ ಅಮ್ಮುಂಜೆ, ಸತೀಶ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ‘ಜಿಲ್ಲಾಡಳಿತ ಗ್ರಾಮಸ್ಥರಿಗೆ ಯಾವುದೇ ಮಾಹಿತಿ ನೀಡದೆ ಏಕಾಏಕಿಯಾಗಿ ಈ ಶೆಲ್ಟರ್ ನಿರ್ಮಿಸಲು ಮುಂದಾಗಿದೆ. ಈ ಜಾಗದಲ್ಲಿ ವಿಶ್ವವಿದ್ಯಾನಿಲಯ, ವಿಮಾನ ನಿಲ್ದಾಣದಂತಹ ಬೃಹತ್ ಯೋಜನೆಗಳನ್ನು ಅನುಷ್ಠಾನಗೊಳಿಸಲು ಈ ಹಿಂದೆ ಚರ್ಚೆಗಳು ನಡೆದಿತ್ತು. ಮುಂದೆ ಈ ಶೆಲ್ಟರ್ ನಿರ್ಮಾಣವಾಗು ವುದರಿಂದ ಈ ಎಲ್ಲ ಅಭಿವೃದ್ಧಿ ಯೋಜನೆಗಳು ಕೈತಪ್ಪಿ ಹೋಗುವ ಸಾಧ್ಯತೆ ಇದೆ. ಆದುದರಿಂದ ಇಲ್ಲಿಂದ ಈ ಯೋಜನೆಯನ್ನು ಬೇರೆ ಕಡೆ ವರ್ಗಾಯಿಸ ಬೇಕು’ -ಸತೀಶ್ ಪೂಜಾರಿ, ಸಾಮಾಜಿಕ ಕಾರ್ಯಕರ್ತರು ‘ಜನವಸತಿ ಪ್ರದೇಶದಲ್ಲಿ ಬೀದಿನಾಯಿಗಳ ಶೆಲ್ಟರ್ ನಿರ್ಮಿಸುವುದು ಸರಿಯಲ್ಲ. ನೀರು ಇಂಗುವ ಈ ಜಾಗದಲ್ಲಿ ನಾಯಿಗಳನ್ನು ಸಾಕಿದರೆ ಮುಂದೆ ಸುತ್ತಮುತ್ತಲಿನ ಬಾವಿ ನೀರು ಕೂಡ ಮಲೀನವಾಗಬಹುದು. ಜಿಲ್ಲಾಡಳಿತ ಈ ವಿಚಾರದಲ್ಲಿ ದೊಡ್ಡ ತಪ್ಪು ಮಾಡಿದೆ. ಜನರಿಗೆ ಸಮಸ್ಯೆಯಾಗುವ ಯೋಜನೆಗಳ ವಿರುದ್ಧ ಜನಪ್ರತಿನಿಧಿಗಳು ಧೈರ್ಯ ಹಾಗೂ ಗಟ್ಟಿ ಧ್ವನಿಯಲ್ಲಿ ಮಾತನಾಡಬೇಕು. ಆಗ ಮಾತ್ರ ಇದಕ್ಕೆ ನ್ಯಾಯ ಸಿಗಲು ಸಾಧ್ಯ’ -ವರೋನಿಕಾ ಕರ್ನೆಲಿಯೋ, ಮಾಜಿ ತಾಪಂ ಅಧ್ಯಕ್ಷರು
ಮುಂದಿನ ವಾರ ಪಂಚ ಗ್ಯಾರಂಟಿ ಅದಾಲತ್: ರಮೇಶ್ ಕಾಂಚನ್
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ
ಇದೇ ಅವಧಿಯಲ್ಲೇ ಡಿಕೆಶಿ ಸಿಎಂ ಆಗುತ್ತಾರೆ : ಯತೀಂದ್ರಗೆ ಶಾಸಕ ಇಕ್ಬಾಲ್ ಹುಸೇನ್ ಟಕ್ಕರ್
ಸಿಎಂ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಿರುತ್ತಾರೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದಿರುವ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ತಿರುಗೇಟು ನೀಡಿದ್ದಾರೆ. ಡಿಕೆ ಶಿವಕುಮಾರ್ ಸಿಎಂ ಆಗಬೇಕು. ಆಗೆಯೇ ಆಗುತ್ತಾರೆ. ಇದೇ ಅವಧಿಯಲ್ಲಿ ಅವರು ಸಿಎಂ ಆಗುತ್ತಾರೆ ಎಂದಿದ್ದಾರೆ.
ಆಳಂದ | ನವಕಲ್ಯಾಣ ಜಿಡಗಾ ಮಠದಲ್ಲಿ ಫೆ.7ರಂದು ರಥೋತ್ಸವ
ಶಿವಯೋಗಿ ಸಿದ್ದರಾಮೇಶ್ವರರ 22ನೇ ಪುಣ್ಯಸ್ಮರಣೋತ್ಸವ
ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ನ್ಯಾ.ಮನು ಪಟೇಲ್
ಉಡುಪಿ, ಫೆ.6: ಮಕ್ಕಳ ಹಕ್ಕುಗಳ ರಕ್ಷಣಾ ಕಾನೂನುಗಳಿಗೆ ಸಂಬಂಧ ಪಟ್ಟಂತೆ ಮೊದಲನೇ ಹಂತದಲ್ಲಿ ತಳಮಟ್ಟದ ಕಾರ್ಯಕರ್ತರು ಮಕ್ಕಳ ಜೊತೆ ವ್ಯವಹರಿಸಿದರೆ, ಎರಡನೇ ಹಂತದಲ್ಲಿ ಪೊಲೀಸರು ಮಕ್ಕಳ ಜೊತೆ ವ್ಯವಹರಿಸ ಬೇಕಾಗುತ್ತದೆ. ಇಂತಹ ಸಂದರ್ಭದಲ್ಲಿ ಪೊಲೀಸರಿಗೆ ಬಾಲನ್ಯಾಯ ಕಾಯ್ದೆಯ ಸ್ಪಷ್ಟ ಅರಿವು ಇರಬೇಕಾಗುತ್ತದೆ. ಮಕ್ಕಳ ಜೊತೆ ಸಂವೇದನೆಯಿಂದ ವ್ಯವಹರಿಸಬೇಕಾಗುವುದರಿಂದ ಪೊಲೀಸರಿಗೆ ಇಂಥ ತರಬೇತಿ ಕಾರ್ಯಾಗಾರ ಗಳನ್ನು ಆಯೋಜಿಸಲಾಗುತ್ತಿದೆ ಎಂದು ಉಡುಪಿಯ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನು ಪಟೇಲ್ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಕಾಯ್ದೆಗಳ ಕುರಿತು ಠಾಣೆಯ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿ ಮತ್ತು ಸಹಾಯಕ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು. ಅಪಾಯದಲ್ಲಿ ಸಿಲುಕಿದ ಮಕ್ಕಳನ್ನು ರಕ್ಷಣೆ ಮಾಡುವಾಗ ಅಥವಾ ಅಪರಾಧಿ ಚಟುವಟಿಕೆಗಳಲ್ಲಿ ನಿರತರಾದ ಮಕ್ಕಳನ್ನು ಕಾನೂನಿನ ಸುಪರ್ದಿಗೆ ತೆಗೆದುಕೊಳ್ಳುವ ಸಮಯದಲ್ಲಿ ಬಾಲನ್ಯಾಯ ಕಾಯ್ದೆಯ ನಿಯಮಗಳನ್ನು ಸರಿಯಾಗಿ ಪಾಲಿಸುವ ಮೂಲಕ ಎಲ್ಲಾ ಪ್ರಕ್ರಿಯೆಗಳನ್ನು ಕೈಗೊಳ್ಳಬೇಕಾ ಗುತ್ತದೆ ಎಂದವರು ಹೇಳಿದರು. ಸಮವಸ್ತ್ರದಲ್ಲಿರುವ ಪೊಲೀಸರನ್ನು ಕಂಡು ಮಕ್ಕಳು ಬೆದರುವ ಸಾಧ್ಯತೆಗಳು ಹೆಚ್ಚಿರುತ್ತವೆ. ಮಕ್ಕಳಿಗೆ ಸಂಬಂಧಪಟ್ಟ ಪ್ರಕರಣಗಳನ್ನು ದೊಡ್ಡವರ ಪ್ರಕರಣ ಗಳಂತೆ ನೋಡಲಾಗುವುದಿಲ್ಲ. ಮಕ್ಕಳ ಹಕ್ಕುಗಳ ರಕ್ಷಣೆಯ ಪ್ರಕ್ರಿಯೆಗಳನ್ನು ನಿಭಾಯಿಸಲು ತರಬೇತಿ ಹೊಂದಿದ ಸಿಬ್ಬಂದಿಗಳನ್ನು ತಯಾರಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಾಗಾರಗಳು ಸಹಕಾರಿಯಾಗಿವೆ. ಕಾರ್ಯಾಗಾರದಲ್ಲಿ ಪಡೆದ ಜ್ಞಾನವನ್ನು ತಳಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದವರು ನುಡಿದರು. ಬಾಲನ್ಯಾಯ ಮಂಡಳಿಯ ಅಧ್ಯಕ್ಷ, ಎಸಿಜೆಎಂ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಸಂತೋಷ್ ಶ್ರೀವತ್ಸ ಮಾತನಾಡಿ, ನ್ಯಾಯಾಲಯ ಮತ್ತು ಪೊಲೀಸ್ ಇಲಾಖೆಗಳು ಕಾನೂನಿನ ರಕ್ಷಕರು. ಇಲಾಖೆಯಲ್ಲಿ ಮಕ್ಕಳ ಜೊತೆ ನೇರವಾಗಿ ವ್ಯವಹರಿಸುವ ಸಿಬ್ಬಂದಿಗಳಿಗೆ ಬಾಲ ನ್ಯಾಯ ಕಾನೂನಿನ ಮಾಹಿತಿ ಇರುವುದು ಅತಿ ಮುಖ್ಯ. ಮಕ್ಕಳಿಗೆ ಸಂಬಂಧಿಸಿದ ದೂರುಗಳು ಬಂದಾಗ ಅದನ್ನು ನಿರ್ಲಕ್ಷ್ಯ ಮಾಡದೆ ತ್ವರಿತವಾಗಿ ಸ್ಪಂದಿಸಿದಾಗ ಹಲವಾರು ಮುಗ್ದ ಜೀವಗಳನ್ನು ಸಮಯೋಚಿತವಾಗಿ ರಕ್ಷಿಸಬಹುದು ಎಂದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ್ ಮಾತನಾಡಿ. ಮಕ್ಕಳ ಹಕ್ಕುಗಳ ರಕ್ಷಣೆ ಸಂದರ್ಭದಲ್ಲಿ ಮಾಹಿತಿ ಕೊರತೆಯಿಂದ ಸಣ್ಣಪುಟ್ಟ ತಪ್ಪುಗಳಾಗುತ್ತವೆ. ಕಾರ್ಯಾಗಾರಗಳಿಂದ ಕಾನೂನಿನ ಬಗ್ಗೆ ತಿಳುವಳಿಕೆ ಹೆಚ್ಚಾಗುತ್ತದೆ ಹಾಗೂ ಮುಂದಿನ ದಿನಗಳಲ್ಲಿ ಸಮರ್ಪಕ ಸೇವೆ ನೀಡಲು ಅನುಕೂಲವಾಗುತ್ತದೆ ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಯುನಿಸೆಫ್ ಪ್ರಾದೇಶಿಕ ಸಂಯೋಜಕ ಡಾ. ಕೊಣಿಲ ರಾಘವೇಂದ್ರ ಭಟ್ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳಿಗೆ ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಜೂಹಿ ದಾಮೋದರ್ ಉಪಸ್ಥಿತರಿದ್ದರು. ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ನಾಗರತ್ನ ನಾಯಕ್ ಸ್ವಾಗತಿಸಿ, ಮಹೇಶ್ ದೇವಾಡಿಗ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
Ranji Trophy- ಕರ್ನಾಟಕದ ಬಿಗುದಾಳಿಗೆ ಮುಂಬೈ ತತ್ತರ; ನಿರಾಸೆಗೊಳಿಸಿದ ಕೆಎಲ್ ರಾಹುಲ್, ಮಿಂಚಿದ ಮಾಯಾಂಕ್ ಆಗರ್ವಾಲ್
Karnataka Vs Mumbai- ಬೌಲರ್ ಗಳ ಬಿಗು ದಾಳಿ ಮತ್ತು ಬ್ಯಾಟರ್ ಗಳ ಎಚ್ಚರಿಕೆಯ ಆಟದ ಪರಿಣಾಮ ಕರ್ನಾಟಕ ತಂಡ ರಣಜಿ ಕ್ನಾರ್ಟರ್ ಫೈನಲ್ ಪಂದ್ಯದಲ್ಲಿ ಹಿಡಿತ ಸಾಧಿಸಿದೆ. ಪಂದ್ಯದ ಮೊದಲ ದಿನ ಪ್ರಸಿದ್ಧ ಕೃಷ್ಣ, ಶ್ರೀಯಸ್ ಗೋಪಾಲ್ ಮತ್ತು ವಿದ್ವತ್ ಕಾವೇರಪ್ಪ ದಾಳಿಗೆ ನಲುಗಿದ ಮುಂಬೈ 120 ರನ್ ಗಳಿಗೆ ಆಲೌಟ್ ಆಯಿತು. ಇದಕ್ಕುತ್ತರವಾಗಿ ಕರ್ನಾಟಕ ತಂಡ ಮಾಯಾಂಕ್ ಆಗರ್ವಾಲ್ ಅರ್ಧಶತಕದ ನೆರವಿನಿಂದ ದಿನಾಂತ್ಯಕ್ಕೆ 2 ವಿಕೆಟ್ ನಷ್ಟಕ್ಕೆ 110 ರನ್ ಗಳಿಸಿದೆ.
ಉಡುಪಿ: ಪ್ರವಾಸಿಗರ ಸುರಕ್ಷತೆಗೆ ಮೊದಲ ಆದ್ಯತೆ ನೀಡಿ; ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.
ಉಡುಪಿ, ಫೆ.6: ಜಿಲ್ಲೆಗೆ ಈಗ ಅಧಿಕ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಪ್ರವಾಸಿಗರಿಗೆ ಅಗತ್ಯವಿರುವ ಎಲ್ಲಾ ಮೂಲ ಭೂತ ಸೌಕರ್ಯಗಳನ್ನು ಒದಗಿಸುವ ಜೊತೆಗೆ ಅವರ ಸುರಕ್ಷತೆಗೆ ಮೊದಲ ಆದ್ಯತೆ ನೀಡುವಂತೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ. ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಮಲ್ಪೆ ಬೀಚ್ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಕುರಿತು ನಿರ್ಮಿತಿ ಕೇಂದ್ರವು ಈಗಾಗಲೇ ಯೋಜನಾ ಕಾಮಗಾರಿ ಗಳ ನೀಲನಕ್ಷೆ ಹಾಗೂ ಅಂದಾಜು ಪಟ್ಟಿಯನ್ನು ತಯಾರಿಸಿ ಮಂಡಿಸಿದೆ. ಮಲ್ಪೆಯಲ್ಲಿ ಹಾಲಿ ಇರುವ ಬೀಚ್ ಹಾಗೂ ಬೀಚ್ನ ಉತ್ತರ ಭಾಗದಲ್ಲಿರುವ ಜಾಗವನ್ನು ಸ್ವಾಧೀನ ಪಡಿಸಿಕೊಂಡು ವಲಯವಾರು ಅಭಿವೃದ್ಧಿ ಪಡಿಸಲು ಇದರಲ್ಲಿ ಒತ್ತು ನೀಡಲಾಗಿದೆ. ಅಲ್ಲದೇ ಸೈಂಟ್ ಮೇರೀಸ್ ದ್ವೀಪವನ್ನೂ ಅಭಿವೃದ್ಧಿ ಪಡಿಸಲು ಇದರಲ್ಲಿ ಅವಕಾಶ ಕಲ್ಪಿಸಲಾ ಗಿದೆ. ಮುಂಬರುವ ದಿನಗಳಲ್ಲಿ ಅನುದಾನದ ಲಭ್ಯತೆಯನ್ನು ಆಧರಿಸಿ ಇಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗುವುದು ಎಂದರು. ಲೈಫ್ ಜಾಕೆಟ್ ಕಡ್ಡಾಯ: ಪ್ರವಾಸಿಗರು ಬೋಟ್ಗಳಲ್ಲಿ ಸಂಚರಿಸುವಾಗ ಲೈಫ್ಜಾಕೆಟ್ನ್ನು ತಪ್ಪದೆ ಧರಿಸಿ ಪ್ರಯಾಣಿಸಬೇಕು. ತಪ್ಪಿದ್ದಲ್ಲಿ ಅಂತಹವರ ಮೇಲೆ ದಂಡ ವಿಧಿಸುವಂತೆ ಸೂಚಿಸಿದ ಅವರು, ಲೈಫ್ ಜಾಕೆಟ್ ಧರಿಸಿದರೆ ಮಾತ್ರ ಬೋಟ್ ಮಾಲಕರು ಬೋಟ್ ಚಲಾಯಿಸಬೇಕು. ಈ ಬಗ್ಗೆ ಕರಾವಳಿ ಕಾವಲು ಪಡೆ ಆಗಾಗ ಪರಿಶೀಲಿಸುತ್ತಿರಬೇಕು ಎಂದು ಸ್ವರೂಪಾ ತಿಳಿಸಿದರು. ಜಿಲ್ಲೆಯ ಪ್ರಮುಖ ಕಡಲ ತೀರಗಳಾದ ಮಲ್ಪೆ ಬೀಚ್, ಸೈಂಟ್ ಮೇರಿಸ್ ದ್ವೀಪ ಪ್ರದೇಶದಲ್ಲಿ ಪ್ರವಾಸಿಗರ ರಕ್ಷಣೆಯ ಉದ್ದೇಶಕ್ಕಾಗಿ ವಾಚ್ ಟವರ್ ನಿರ್ಮಾಣ, ಹೊರ್ಡಿಂಗ್ ಬೋರ್ಡ್ ಅಳವಡಿಕೆ, ಮಾಹಿತಿ ಫಲಕ, ಸಾರ್ವಜನಿಕ ಸೂಚನಾ ಫಲಕ, ಎಚ್ಚರಿಕೆ ಫಲಕ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳುವಂತೆ ಅವರು ನಿರ್ದೇಶನ ನೀಡಿದರು. ಜಲ ಸಾಹಸ: ಉಡುಪಿ ತಾಲೂಕಿನ ಕದಿಕೆ ಗ್ರಾಮದ ಕಡಲ ತೀರದ ನಿರ್ವಹಣೆ, ಸಮಗ್ರ ಅಭಿವೃದ್ಧಿ, ಜಲ ಸಾಹಸ ಚಟುವಟಿಕೆಗಳು ಹಾಗೂ ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರಯಾಣಿಕರ ದೋಣಿ ಸೇವೆಗೆ ಟೆಂಡರ್ ಕರೆದು, ಶೇಕಡಾ ವಾರು ಹಂಚಿಕೆ ಆಧಾರದಲ್ಲಿ ನೀಡುವಂತೆ ತಿಳಿಸಿದ ಅವರು, ಮಲ್ಪೆ ಬೀಚ್ ಹಾಗೂ ಸೀವಾಕ್ ಪ್ರದೇಶಗಳ ಅಂಗಡಿ ಗಳನ್ನು ಹಾಗೂ ಸ್ವಚ್ಛತೆ ಮತ್ತು ನಿರ್ವಹಣೆಯನ್ನು ಟೆಂಡರ್ ಪ್ರಕ್ರಿಯೆ ಮೂಲಕವೇ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಉಡುಪಿ ಶಾಸಕ ಯಶ್ಪಾಲ್ ಎ ಸುವರ್ಣ ಮಾತನಾಡಿ, ಮಲ್ಪೆ ಬೀಚ್ನ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳು ವಾಗ ಸ್ಥಳೀಯ ಸಂಪ್ರದಾಯಿಕ ಮೀನುಗಾರರೊಂದಿಗೆ ಸಮಾಲೋಚಿಸುವಂತೆ ಮನವಿ ಮಾಡಿದರು. ಸ್ಥಳೀಯರಿಗೆ ಮೀನುಗಾರಿಕೆ ಚಟುವಟಿಕೆ ಕೈಗೊಳ್ಳಲು ತೊಂದರೆಯಾಗದಂತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಬೇಕು ಎಂದವರು ಸಭೆಗೆ ತಿಳಿಸಿದರು. ಜಿಲ್ಲೆಯ ಪ್ರವಾಸಿ ತಾಣಗಳನ್ನು ಸವಿಯಲು ಆಗಮಿಸುವ ಪ್ರವಾಸಿಗರಿಗೆ ಕಡಲ ತೀರದ ಮಾಹಿತಿಯ ಕೊರತೆ ಯಿಂದಾಗಿ ಕೆಲವು ಅವಘಡಗಳು ಉಂಟಾಗುತ್ತಿವೆ. ಮುಂದೆ ಹೀಗಾಗದಂತೆ ಎಚ್ಚರಿಕೆಯ ಫಲಕಗಳನ್ನು ಅಳವಡಿಸುವ ಜೊತೆಗೆ ವಿವಿಧ ಕ್ರಮಗಳನ್ನು ಕೈಗೊಳ್ಳಬೇಕೆಂದರು. ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಕುಂದಾಪುರದ ಕೋಡಿ ಕಡಲ ಕಿನಾರೆಯಲ್ಲಿರುವ ಸೀ ವಾಕ್ನಲ್ಲಿ ಪ್ರವಾಸಿಗರಿಗೆ ಅನುಕೂಲ ವಾಗುವಂತೆ ಉದ್ಯಾನವನ ನಿರ್ಮಾಣ, ಸಮುದ್ರ ವೀಕ್ಷಣೆಗೆ ಕುಳಿತುಕೊಳ್ಳಲು ಬೆಂಚ್ ಸೇರಿದಂತೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸು ವಂತೆ ತಿಳಿಸಿದರು. ಬೀಚ್ ಹಾಗೂ ದ್ವೀಪಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣ ಪ್ರಮಾಣದಲ್ಲಿ ಸರಕಾರದ ವತಿಯಿಂದ ಕೈಗೊಳ್ಳಲು ಸಾಧ್ಯವಾಗದೆ ಇದ್ದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲು ಆಲೋಚಿಸುವುದು ಸೂಕ್ತ ಎಂದು ಕಿರಣ್ ಕೊಡ್ಗಿ ಸಲಹೆ ನೀಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ನಗರಸಭೆ ಆಯುಕ್ತ ಮಹಾಂತೇಶ್ ಹಂಗರಗಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ವಿಂದ್ಯಾ ಎನ್.ಎಂ., ಟೂರಿಸಂ ಅಸೋಸಿಯೇಷನ್ನ ಮನೋಹರ್ ಶೆಟ್ಟಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು. ಜಲಕ್ರೀಡೆಗೆ ವರದಿ ನೀಡಲು ಸೂಚನೆ ಬೀಚ್ಗಳಲ್ಲಿ ಜಲ ಕ್ರೀಡೆಗಳು ಸೇರಿದಂತೆ ವಿವಿಧ ಜಲ ಸಾಹಸ ಕ್ರೀಡೆ ಗಳನ್ನು ಯೋಜಿಸಲು ಜಿಲ್ಲೆಯ ಯಾವ ಬೀಚ್ಗಳು ಸೂಕ್ತ ಎಂಬ ಬಗ್ಗೆ ವರದಿಯೊಂದನ್ನು ನೀಡುವಂತೆ ಕಳೆದ ವರ್ಷವೇ ನೇಶನಲ್ ಇನ್ಸ್ಟಿಟ್ಟೂಟ್ ಆಫ್ ವಾಟರ್ ಸ್ಪೋರ್ಟ್ಸ್ಗೆ ಸೂಚಿಸಲಾಗಿತ್ತು. ಆದರೆ ಈವರೆಗೆ ಈ ಸಂಸ್ಥೆ ವರದಿ ನೀಡಿರುವುದಿಲ್ಲ. ಕೂಡಲೇ ವರದಿ ಯನ್ನು ಅವರಿಂದ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಪ್ರವಾಸಿಗರ ಜೀವರಕ್ಷಣೆಗೆ ಅಗತ್ಯವಿರುವ ಜೆಟ್ ಸೀ ಬೈಕ್ ಅನ್ನು ಸರಬ ರಾಜು ಮಾಡಲು ಕೆಆರ್ಡಿಎಲ್ ಮುಖಾಂತರ ಟೆಂಡರ್ ಕರೆಯಲಾಗಿತ್ತು. ಈ ಬಗ್ಗೆಯೂ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.
ಚಿಂಚೋಳಿ | ನಾಗರಿಕರು ವಿಮೆಯ ಮಹತ್ವ ಅರಿತುಕೊಳ್ಳಬೇಕು : ಭಂವರ್ ಸಿಂಗ್ ಮೀನಾ
ಚಿಂಚೋಳಿ: ಪ್ರತಿಯೊಬ್ಬ ನಾಗರಿಕರು ವಿಮೆಯ ಮಹತ್ವವನ್ನು ಅರಿತುಕೊಳ್ಳಬೇಕು ಮತ್ತು ಸಂಕಷ್ಟದ ಸಮಯದಲ್ಲಿ ಆರ್ಥಿಕ ಭದ್ರತೆ ನೀಡುವಂತಹ ಯೋಜನೆಗಳ ಪ್ರಯೋಜನ ಪಡೆಯಬೇಕು ಎಂದು ಜಿ.ಪಂ ಸಿ.ಇ.ಓ ಭಂವರ್ ಸಿಂಗ್ ಮೀನಾ ಹೇಳಿದರು. ಪಟ್ಟಣದ ತಾ.ಪಂ ಆವರಣದಲ್ಲಿ ಜಿ.ಪಂ, ತಾ ಪಂ ಹಾಗೂ ಲೀಡ್ ಬ್ಯಾಂಕ್ ಕಲಬುರಗಿ ಸಂಯುಕ್ತಾಶ್ರಯದಲ್ಲಿ ಪಿಎಂಜೆಜೆವೈ ಹಾಗೂ ಪಿಎಂಎಸ್ ಬಿವೈ ವಿಮೆಯ ನೊಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪಿಎಂಜೆಜೆಬಿವೈ, ಪಿಎಂಎಸ್ ಬಿವೈ, ಎಪಿವೈ ವಿಮೆಯ ಯೋಜನೆಗಳನ್ನು ಪ್ರತಿಯೊಬ್ಬರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಸರ್ಕಾರದ ಸಾಮಾಜಿಕ ಭದ್ರತಾ ವಿಮಾ ಯೋಜನೆಗಳು ನೌಕರರು ತಮ್ಮ ಜೀವನದ ಅನಿಶ್ಚಿತತೆಗಳನ್ನು ಮತ್ತು ಆರ್ಥಿಕ ತೊಂದರೆಗಳನ್ನು ಎದುರಿಸಲು ಆರ್ಥಿಕ ಭದ್ರತೆಯನ್ನು ನೀಡುತ್ತದೆ. ಪ್ರಧಾನ ಮಂತ್ರಿ ಜನ ಸುರಕ್ಷಾ ಯೋಜನೆಗಳಾದ “ಪ್ರಧಾನ ಮಂತ್ರಿ ಜೀವನ ಜ್ಯೋತಿ ಭಿಮಾ ಯೋಜನೆಯು ಅವಧಿ ವಿಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ ಅಪಘಾತ ವಿಮೆ ಯೋಜನೆಯಾಗಿದ್ದು, ಅತೀ ಕಡಿಮೆ ಪ್ರೀಮಿಯಂನಲ್ಲಿ 1 ಲಕ್ಷ ರೂ. ವಿಮಾ ಸೌಲಭ್ಯ ಸಿಗುತ್ತದೆ ಎಂದು ವಿವರಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ, ಮುಖ್ಯ ಹಣಕಾಸು ಅಧಿಕಾರಿ ವಿಕ್ರಮ ಸಜ್ಜನ, ಎಸ್ ಬಿ ಐ ವ್ಯವಸ್ಥಾಪಕ ನಾಗೇಂದ್ರಪ್ಪ ಬಾಪುಗೌಡ, ಪವನಕುಮಾರ, ತಾ.ಪಂ. ಇಒ ಸಂತೋಷ ಚವ್ಹಾಣ, ಎಡಿ ನಾಗೇಂದ್ರಪ್ಪ ಬೇಡಗಪಳ್ಳಿ, ಇತರರು ಇದ್ದರು.
Kalaburagi | ಮದೀನಾ ಕಾಲೋನಿಯ ಪಿಎಂ ಶ್ರೀ ಸರಕಾರಿ ಶಾಲೆಯಲ್ಲಿ ‘ಸ್ಪೆಲ್–ಬಿ’ ಸ್ಪರ್ಧೆ
ಕಲಬುರಗಿ : ನಗರದ ಮದೀನಾ ಕಾಲೋನಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಿ.ಎಂ. ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದ್ವಿಭಾಷಾ ಹಾಗೂ ಉರ್ದು ವಿಭಾಗದ ವಿದ್ಯಾರ್ಥಿಗಳಿಗಾಗಿ ಶುಕ್ರವಾರ ಇಂಗ್ಲಿಷ್ ಭಾಷೆಯ ‘ಸ್ಪೆಲ್–ಬಿ’ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಶಾಲೆಯ ಅನೇಕ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಆಂಗ್ಲ ಭಾಷಾ ಜ್ಞಾನ ಹಾಗೂ ಶಬ್ದರಚನಾ ಕೌಶಲ್ಯವನ್ನು ಪ್ರದರ್ಶಿಸಿದರು. ಸ್ಪರ್ಧೆಯಲ್ಲಿ ಗಝಾಲ ಅಂಜುಮ್ ಪ್ರಥಮ ಸ್ಥಾನ, ಇಕ್ರಾ ತಬಸ್ಸುಮ್ ದ್ವಿತೀಯ ಸ್ಥಾನ ಪಡೆದರು. ಫಿಜಾ ಮೆಹವೀಶ್, ಜೀನತ್ ಫರೀನ್ ಹಾಗೂ ಅಬ್ದುಲ್ ನುಮಾನ್ ಅವರು ತೃತೀಯ ಸ್ಥಾನವನ್ನು ಹಂಚಿಕೊಂಡರು. ಓಮರ್ ಫೈಜ್, ಸುಮಯ್ಯ ಹಾಗೂ ಬಿಬಿ ಫಾತಿಮಾ ಅವರು ಸಮಾಧಾನಕರ ಬಹುಮಾನಗಳನ್ನು ಪಡೆದರು. ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ ಹಾಗೂ ಇಂಗ್ಲಿಷ್ ಭಾಷೆಯ ಮೇಲಿನ ಆಸಕ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ ಆಂಗ್ಲ ಭಾಷಾ ಶಿಕ್ಷಕರಾದ ಪ್ರಭಾಕರ್ ಶೀಲವಂತ ಅವರು ಈ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರುಗಳಾದ ಅಮ್ಜದ್ ಹುಸೇನ್ ಹಾಗೂ ಎಸ್ಡಿಎಂಸಿ ಉಪಾಧ್ಯಕ್ಷೆ ಸಮ್ರಿನ್ ಮಾತನಾಡಿ, ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಬೆಳೆಸಲು ಇಂತಹ ಸ್ಪರ್ಧೆಗಳು ಸಹಾಯಕವಾಗಿದ್ದು, ಬಹುಮಾನಗಳ ಮೂಲಕ ಮಕ್ಕಳನ್ನು ನಿರಂತರವಾಗಿ ಪ್ರೋತ್ಸಾಹಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ಮಹೇಶ್ ಕುಮಾರ್, ಮಕ್ಕಳ ಪಾಲಕ-ಪೋಷಕರು ಹಾಗೂ ಶಾಲೆಯ ಬೋಧಕ ಸಿಬ್ಬಂದಿ ಉಪಸ್ಥಿತರಿದ್ದರು.
ಮುಗಿಯುತ್ತಲೇ ಇಲ್ಲ ಚಳಿಗಾಲ ; ಮುಂದಿನ ನಾಲ್ಕು ದಿನ ಕನಿಷ್ಠ ತಾಪಮಾನ 14, 15 ಡಿಗ್ರಿ
ಶಿವರಾತ್ರಿ ಸಮೀಪಿಸುತ್ತಿದ್ದರೂ ಚಳಿಗಾಲ ಮುಗಿಯುತ್ತಿಲ್ಲ. ರಾತ್ರಿಯಾಗುತ್ತಿದ್ದಂತೆ ಚಳಿ ಕೊರೆಯುತ್ತಿದೆ. ತಾಪಮಾನದಲ್ಲಿ ತೀರಾ ಬದಲಾವಣೆ ಆಗಿಲ್ಲ. ಮುಂದಿನ ನಾಲ್ಕು ದಿನ ಕೂಡ ಜಿಲ್ಲೆಯಲ್ಲಿ ಹೀಗೆ ಚಳಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ನಾಲ್ಕು ದಿನ 14 ಮತ್ತು 15 ಡಿಗ್ರಿ ಕನಿಷ್ಠ ತಾಪಮಾನವಿರಲಿದೆ.
ಪ್ರಗ್ಯಾನ್ 22ನೇ ಆವೃತ್ತಿ| ಫೆ.20ರಿಂದ ’ಅನಾಕ್ರೋನಿಯಾ’ ಥೀಮ್ನಡಿ ಸಂಭ್ರಮಾಚರಣೆ
ಮಂಗಳೂರು: ತಮಿಳ್ನಾಡಿನ ತಿರುಚಿನಾಪಳ್ಳಿಯ ಎನ್ಐಟಿಕೆ ವತಿಯಿಂದ ’ಅನಾಕ್ರೋನಿಯಾ’ ಥೀಮ್ನಡಿ ಫೆ.20ರಿಂದ 23ರವರೆಗೆ ಪ್ರಗ್ಯಾನ್ 22ನೇ ಆವೃತ್ತಿ ನಡೆಯಲಿದೆ. NIT Trichy- ವಿದ್ಯಾರ್ಥಿಗಳಿಗೆ ಸ್ಫೂರ್ತಿ ನೀಡುವ, ಮಿತಿಗಳನ್ನು ಸವಾಲು ಮಾಡುವ ಮತ್ತು ನಾವೀNIT Trichyಯನ್ನು ಆಚರಿಸುವ ಹಬ್ಬವಾಗಿದೆ. ಪ್ರಗ್ಯಾನ್ ಯ ವಾರ್ಷಿಕ ಅಂತರಾಷ್ಟ್ರೀಯ ತಾಂತ್ರಿಕ-ನಿರ್ವಹಣಾ ಮಹೋತ್ಸವವಾಗಿISO (Anachronia). ಇದು 9001 ಮತ್ತು 20121 ಪ್ರಮಾಣೀಕೃತವಾಗಿದೆ. ಇದೀಗ ಅನಾಕ್ರೋನಿಯಾ ಎಂಬ ಶೀರ್ಷಿಕೆಯೊಂದಿಗೆ 22ನೇ ಆವೃತ್ತಿಯ ವೇದಿಕೆ ಸಿದ್ಧವಾಗಿದೆ. *ಪ್ರದರ್ಶನಗಳು: ಸಂಗಮ್ ಮತ್ತು ಇಂಜಿನಿಯಮ್ ವಿದ್ಯಾರ್ಥಿಗಳ ನಾವೀನ್ಯತೆಯನ್ನು ಗುರುತಿಸಲು ಪ್ರಗ್ಯಾನ್ ಪ್ರತಿ ವರ್ಷ ’ಓಪನ್ ಹೌಸ್’ ಎಂಬ ಎರಡು ದಿನಗಳ ಕಾರ್ಯಕ್ರಮವನ್ನು ಆಯೋಜಿಸುತ್ತದೆ. ವಿವಿಧ ವಿಭಾಗಗಳು ಮತ್ತು ತಾಂತ್ರಿಕ ಕ್ಲಬ್ಗಳ ಯೋಜನೆಗಳನ್ನು ಒಟ್ಟುಗೂಡಿಸಿ, ವಿದ್ಯಾರ್ಥಿಗಳು ತಮ್ಮ ಕೆಲಸವನ್ನು ಪ್ರದರ್ಶಿಸಲು ಮತ್ತು ಹೂಡಿಕೆದಾರರಿಗೆ ತಮ್ಮ ಪರಿಹಾರಗಳನ್ನು ವಿವರಿಸಲು ವೇದಿಕೆ ನೀಡುತ್ತದೆ. *(Ingenium): ಇಂಜಿನಿಯಮ್ ಇದು ರಾಷ್ಟ್ರಮಟ್ಟದ ತಾಂತ್ರಿಕ ಸ್ಪರ್ಧೆಯಾಗಿದ್ದು, ದೇಶದಾದ್ಯಂತ ಇರುವ ಪ್ರತಿಭಾವಂತ ಯುವ ಮನಸ್ಸುಗಳನ್ನು ಆಕರ್ಷಿಸುತ್ತದೆ. (Sangam)NIT Trichy ಸಂಗಮ್ : ಇದು ಪ್ರಗ್ಯಾನ್ನ ಪ್ರಮುಖ ಹಾರ್ಡ್ವೇರ್ ಹ್ಯಾಕಥಾನ್ ಆಗಿದ್ದು, ವಿದ್ಯಾರ್ಥಿಗಳಿಗೆ ನೈಜ ಪ್ರಪಂಚದ ಸವಾಲುಗಳಿಗೆ ಪ್ರಾಯೋಗಿಕ ಪರಿಹಾರಗಳನ್ನು ರೂಪಿಸಲು ಅವಕಾಶ ನೀಡುತ್ತದೆ. ಪ್ರಗ್ಯಾನ್ ಏಳು ವಿಭಾಗಗಳಡಿ ಮ್ಯಾನೇಜ್ಮೆಂಟ್, ಕೋಡಿಂಗ್, ಹಾರ್ಡ್ವೇರ್, ರೋಬೋಟಿಕ್ಸ್ ಸಹಿತ ವಿವಿಧ ಕ್ಷೇತ್ರಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುತ್ತದೆ. (Linux)(Samsung), (Mercedes) ಲಿನಕ್ಸ್ , ಸ್ಯಾಮ್ಸಂಗ್ ಮರ್ಸಿಡಿಸ್ ನಂತಹ ಪ್ರಸಿದ್ಧ ಕಂಪನಿಗಳ ಸಹಯೋಗದೊಂದಿಗೆ ಕಾರ್ಯಾಗಾರಗಳನ್ನು ನಡೆಸಲಾಗುತ್ತದೆ. ಇದು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕೌಶಲ ಗಳನ್ನು ಕಲಿಯಲು ಸಹಾಯ ಮಾಡುತ್ತದೆ. (Crossfire)ಕ್ರಾಸ್ಫೈರ್ : ಇದು ಪ್ರಗ್ಯಾನ್ನ ಪ್ರಮುಖ ಚರ್ಚಾಕೂಟವಾಗಿದ್ದು, ಭಾರತದಾದ್ಯಂತದ ರಾಜಕೀಯ ಗಣ್ಯರು ಸಾಮಾಜಿಕ ಮತ್ತು ಆರ್ಥಿಕ ವಿಷಯಗಳ ಬಗ್ಗೆ ಚರ್ಚಿಸಲು ಇಲ್ಲಿ ಒಂದಾಗುತ್ತಾರೆ. (PSR) (Techids) ಪ್ರಗ್ಯಾನ್ ಬ್ಲಾಗ್ ಮತ್ತು ಪಾಡ್ಕಾಸ್ಟ್ ಮೂಲಕ ವಿದ್ಯಾರ್ಥಿ ಸಮುದಾಯದೊಂದಿಗೆ ಸಂವಹನ ನಡೆಸುತ್ತದೆ. ಪ್ರಗ್ಯಾನ್ ಸಾಮಾಜಿಕ ಜವಾಬ್ದಾರಿ ತಂಡವು ವರ್ಷವಿಡೀ ಪ್ರಭಾವಶಾಲಿ ಉಪಕ್ರಮಗಳನ್ನು ನಡೆಸು ತ್ತದೆ. ಇದರಲ್ಲಿ ’ಟೆಕಿಡ್ಸ್’ ಪ್ರಮುಖವಾಗಿದ್ದು, ಇದು ಶಾಲಾ ಮಕ್ಕಳಿಗೆ ತಾಂತ್ರಿಕ ಜಗತ್ತಿನ ಪ್ರಾಥಮಿಕ ಅರಿವು ಮೂಡಿಸುತ್ತದೆ. ಇನ್ಫೋಟೈನ್ಮೆಂಟ್ (Infotainment): ಇದು ವಿದ್ಯಾರ್ಥಿಗಳ ಮನರಂಜನೆಗಾಗಿ ಮೀಸಲಾದ ವಿಭಾಗವಾಗಿದೆ. ಬೆಂಕಿಯ ಪ್ರದರ್ಶನಗಳು, ಬೆಳಕಿನ ಆಟಗಳು ಮತ್ತು ವೈಮಾನಿಕ ಸಾಹಸಗಳಿಂದ ಹಿಡಿದು ಅದ್ಧೂರಿ ’(Pro shows) ಪ್ರೊ ಶೋ’ ವರೆಗೆ, ಇನ್ಫೋಟೈನ್ಮೆಂಟ್ ಹಬ್ಬದ ಉತ್ಸಾಹವನ್ನು ಹೆಚ್ಚಿಸುತ್ತದೆ. ಪ್ರಗ್ಯಾನ್ ಕೇವಲ ಒಂದು ಹಬ್ಬವಲ್ಲ. NIT Trichy ಇದು ವಿದ್ಯಾರ್ಥಿ ಸಮುದಾಯದ ಶಕ್ತಿ ಮತ್ತು ಸಂಸ್ಥೆಯ ಬದ್ಧತೆಯ ಪ್ರತಿಬಿಂಬವಾಗಿದೆ ಎಂದು ಪ್ರಕಟನೆ ತಿಳಿಸಿದೆ.
ಯಡ್ರಾಮಿ ಬಸ್ ನಿಲ್ದಾಣದಲ್ಲಿ ಸಿ.ಸಿ ಕ್ಯಾಮೆರಾ ಅಳವಡಿಕೆಗೆ ಆಗ್ರಹ
ಯಡ್ರಾಮಿ: ಪಟ್ಟಣದ ಬಸ್ ನಿಲ್ದಾಣದಲ್ಲಿ ಅಪರಾಧಗಳನ್ನು ತಡೆಗಟ್ಟಲು ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಒತ್ತಾಯಿಸಿ ಕರವೇ (ಪ್ರವೀಣ್ ಶೆಟ್ಟಿ ಬಣ) ಉತ್ತರ ಕರ್ನಾಟಕ ಘಟಕದ ಪದಾಧಿಕಾರಿಗಳು ತಾಲೂಕು ದಂಡಾಧಿಕಾರಿ ಹಾಗೂ ಬಸ್ ಸಾರಿಗೆ ಇಲಾಖೆಯ ಘಟಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು. ಬಸ್ ಹತ್ತುವಾಗ ಹಾಗೂ ಇಳಿಯುವಾಗ ಕಳ್ಳರು ಮಹಿಳೆಯರ ಆಭರಣಗಳನ್ನು ದೋಚಿಕೊಂಡು ಹೋದ ಉದಾಹರಣೆಗಳಿವೆ. ಇದರಿಂದ ಜನರಿಗೆ ಸುರಕ್ಷತೆ ಇಲ್ಲದಂತಾಗಿದೆ. ಬಸ್ ನಿಲ್ದಾಣದಲ್ಲಿ ಗುಣಮಟ್ಟದ ಸಿ.ಸಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಈ ಮೂಲಕ ಜನರಿಗೆ ಅನುಕೂಲ ಮಾಡಿಕೊಡಬೇಕು ಅವರು ಎಂದು ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಯಡ್ರಾಮಿ ತಾಲೂಕು ಗೌರವ ಅಧ್ಯಕ್ಷರು ಹಾಗೂ ಜೇವರ್ಗಿ ತಾಲೂಕಿನ ಪಿ.ಎಲ್.ಡಿ ಬ್ಯಾಂಕ್ ಉಪಾಧ್ಯಕ್ಷರಾದ ಸಾಂಭಶಿವ ಎಂ. ಹಿರೇಮಠ, ಮುಖಂಡರಾದ ಗುರಣ್ಣ ದೊಡ್ಡಮನಿ, ಸಾಹೇಬಗೌಡ ಬಿ. ದೇಸಾಯಿ, ಕರವೇ ಯಡ್ರಾಮಿ ತಾಲೂಕು ಉಸ್ತುವಾರಿ ಅಧ್ಯಕ್ಷರಾದ ದೇವೇಂದ್ರ ನಾಯ್ಕೋಡಿ, ಮಲ್ಲಿಕಾರ್ಜುನ ಬಿರಾದಾರ, ಹನುಮಂತ ಕೂಡ್ಲಿ, ರಾಚೋಟಯ್ಯ ಹಿರೇಮಠ, ಯಲ್ಲಾಲಿಂಗ ಡಿ. ಹರನಾಳ, ನವ ಕರ್ನಾಟಕ ನಿರ್ಮಾಣ ಸೇನೆ ತಾಲೂಕು ಅಧ್ಯಕ್ಷರಾದ ರೇವಣಸಿದ್ದ ಮಕಾಶಿ, ಬಸಯ್ಯ ಹಿರೇಮಠ ಮಾಣಶುಣಗಿ ಸೇರಿದಂತೆ ಇತರಿದ್ದರು.

15 C