SENSEX
NIFTY
GOLD
USD/INR

Weather

19    C
... ...View News by News Source

ಅಂದರ್‌-ಬಾಹರ್ ಆಡುವುದು ಅಪರಾಧ; ಹೈಕೋರ್ಟ್ ಮೌಖಿಕ ಅಭಿಪ್ರಾಯ

ಬೆಂಗಳೂರು : ಇಸ್ಪೀಟ್‌ನಲ್ಲಿ ರಮ್ಮಿ ಕೌಶಲದ ಆಟ (ಸ್ಕಿಲ್ ಗೇಮ್) ಆಗಿದ್ದು, ಅಂದರ್‌-ಬಾಹರ್‌ ಮಾತ್ರ ಅಪರಾಧವಾಗುತ್ತದೆ ಎಂದು ಹೈಕೋರ್ಟ್‌ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದೆ. ಅಂದರ್‌-ಬಾಹರ್‌ ಆಟವಾಡುತ್ತಿದ್ದ ಹಿನ್ನೆಲೆಯಲ್ಲಿ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಬಿದರೆಯ ಹಿರಿಯ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ನಡೆಸುತ್ತಿರುವ ವಿಚಾರಣೆ ರದ್ದು ಕೋರಿ ಪ್ರಕರಣದ 5 ಮತ್ತು 7ನೇ ಆರೋಪಿಗಳಾದ ಸಂತೋಷ್‌ ಮತ್ತು ಜಯರಾಜ್‌ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತು. ಅರ್ಜಿ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಂ.ಆರ್‌. ಬಾಲಕೃಷ್ಣ ವಾದ ಮಂಡಿಸಿ, ಅಂದರ್‌-ಬಾಹರ್ ಆಟವಾಡುತ್ತಿದ್ದ ಹಿನ್ನೆಲೆಯಲ್ಲಿ ಅರ್ಜಿದಾರರ ವಿರುದ್ಧ ದೂರು ದಾಖಲಾಗಿದೆ. ಆದರೆ, ಅಂದರ್‌-ಬಾಹರ್‌ ಕೂಡ ರಮ್ಮಿಯಂತೆಯೇ ಕೌಶಲದ ಆಟವಾಡಿದೆ. ಇದರಿಂದ, ಕರ್ನಾಟಕ ಪೊಲೀಸ್‌ ಕಾಯ್ದೆ-1963 ಅಡಿ ಸೆಕ್ಷನ್‌ 79 ಮತ್ತು 80 ಅಡಿಯಲ್ಲಿ ಅರ್ಜಿದಾರರ ವಿರುದ್ಧ ಕ್ರಮ ಜರುಗಿಸಲು ಅವಕಾಶವಿಲ್ಲ. ಆದ್ದರಿಂದ, ಅರ್ಜಿದಾರರ ವಿರುದ್ಧದ ಪ್ರಕರಣ ಮತ್ತು ವಿಚಾರಣಾ ನ್ಯಾಯಾಲಯದ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ರಮ್ಮಿ ಕೌಶಲದ ಆಟವಾಗಿದೆ. ರಮ್ಮಿ ಆಡಿದರೆ ಅದು ಅಪರಾಧವಾಗುತ್ತಿಲ್ಲ. ಅಂದರ್‌-ಬಾಹರ್‌ ಆಯ್ಕೆಯ ಆಟವಾಗಿದೆ. ಅಂದರ್‌-ಬಾಹರ್‌ ಆಡಿದರೆ ಅದು ಅಪರಾಧವಾಗುತ್ತದೆ ಎಂದು ಮೌಖಿಕವಾಗಿ ಹೇಳಿದರು. ಅದಕ್ಕೆ ಅರ್ಜಿದಾರರ ಪರ ವಕೀಲರು, ಅಂದರ್‌-ಬಾಹರ್‌ ಸಹ ಕೌಶಲದ ಆಟವಾಗಿದೆ. ಈ ಕುರಿತು ಹೈಕೋರ್ಟ್‌ ಸಮನ್ವಯ ಪೀಠ ಈ ಹಿಂದೆಯೇ ಆದೇಶ ಮಾಡಿದೆ. ಈ ವಿಚಾರವನ್ನು ಪೊಲೀಸರಿಗೆ ತಿಳಿಸಿದರೂ; ಅವರು ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿಸಿದರು. ವಾದ ಆಲಿಸಿದ ನ್ಯಾಯಪೀಠ, ಅರ್ಜಿದಾರರ ವಿರುದ್ಧದ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ತಡೆಯಾಜ್ಞೆ ನೀಡಿತು. ಜತೆಗೆ, ಪ್ರತಿವಾದಿಗಳಾದ ಮುಲ್ಕಿ ಠಾಣೆ ಪೊಲೀಸರು ಮತ್ತು ಪ್ರಕರಣದ ದೂರುದಾರರಾದ ಸಿಸಿಬಿ ಸಬ್‌ ಇನ್‌ಸ್ಪೆಕ್ಟರ್ ಕಬಲ್‌ ರಾಜ್‌ಗೆ ನೋಟಿಸ್‌ ಜಾರಿಗೊಳಿಸಿ, ಅರ್ಜಿ ವಿಚಾರಣೆ ಮುಂದೂಡಿತು. ಪ್ರಕರಣದ ಹಿನ್ನೆಲೆ: 2020ರ ಆಗಸ್ಟ್ 16ರಂದು ಅರ್ಜಿದಾರರು ಮತ್ತು ಇತರ ಆರೋಪಿಗಳು ಮಂಗಳೂರಿನ ಮುಲ್ಕಿ ಪಕ್ಷಿಕೆರೆ ಚರ್ಚ್‌ ಬಳಿಯ ಮೌಂಟ್‌ ವಿಲ್ಲಾ ಮನೆಯಲ್ಲಿ ಅಂದರ್‌-ಬಾಹರ್‌ ಆಟವಾಡುತ್ತಿದ್ದರು. ಈ ಆರೋಪಿಗಳನ್ನು ವಶಕ್ಕೆ ಪಡೆದಿದ್ದ ಪೊಲೀಸರು, ಹಣ, ಮೊಬೈಲ್‌ ಮತ್ತು ಇಸ್ಪೀಟ್‌ ಎಲೆಗಳನ್ನು ಜಪ್ತಿ ಮಾಡಿದ್ದರು. ನಂತರ ಸಿಸಿಬಿ ಸಬ್‌ ಇನ್‌ಸ್ಪೆಕ್ಟರ್‌ ಕಬಲ್‌ ರಾಜ್‌ ಅವರು ನೀಡಿದ್ದ ದೂರು ಆಧರಿಸಿ ಅರ್ಜಿದಾರರೂ ಸೇರಿದಂತೆ ಒಟ್ಟು 14 ಆರೋಪಿಗಳ ವಿರುದ್ಧ ಕರ್ನಾಟಕ ಪೊಲೀಸ್‌ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದರು. ಸದ್ಯ ಪ್ರಕರಣವನ್ನು ಮೂಡಬಿದರೆಯ ಹಿರಿಯ ಸಿವಿಲ್‌ ಮತ್ತು ಜೆಎಂಎಫ್‌ಸಿ ಕೋರ್ಟ್‌ ವಿಚಾರಣೆ ನಡೆಸುತ್ತಿದ್ದು, ಈ ವಿಚಾರಣಾ ಪ್ರಕ್ರಿಯೆ ರದ್ದು ಕೋರಿ ಅರ್ಜಿದಾರರು ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ವಾರ್ತಾ ಭಾರತಿ 31 Dec 2025 1:24 am

ಕಲ್ಯಾಣ ಕರ್ನಾಟಕ ವೃಂದದ ವಿವಿಧ ಹುದ್ದೆಗಳ ನೇಮಕಾತಿ; ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ

ಬೆಂಗಳೂರು : ಕಲ್ಯಾಣ ಕರ್ನಾಟಕ ವೃಂದದ ವಿವಿಧ ಹುದ್ದೆಗಳ ನೇಮಕಾತಿ ಸಂಬಂಧ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಗಳ ಅಂತಿಮ ಕೀ ಉತ್ತರ ಹಾಗೂ ತಾತ್ಕಾಲಿಕ ಅಂಕ ಪಟ್ಟಿಗೆ ಜ.1ರ ಮಧ್ಯಾಹ್ನ 12ಗಂಟೆಯೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕಲ್ಯಾಣ ಕರ್ನಾಟಕ ವೃಂದದ ವಿವಿಧ ಹುದ್ದೆಗಳ ನೇಮಕಾತಿ ಸಂಬಂಧ ಜೂ.22ರಿಂದ ಡಿ.24 ರವರೆಗೆ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳನ್ನು ದಿನಾಂಕ ಡಿ.23ರಂದು ಪ್ರಕಟಿಸಿ ಡಿ.25ರ ಸಂಜೆ 5ಗಂಟೆಯೊಳಗೆ ಆಕ್ಷೇಪಣೆ ಸಲ್ಲಿಸಲು ತಿಳಿಸಲಾಗಿತ್ತು. ಅದರಂತೆ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿ, ವಿಷಯ ತಜ್ಞರ ಸಮಿತಿಯ ಶಿಫಾರಸ್ಸಿನಂತೆ ಡಿ.29ರಂದು ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ. ಅಂತಿಮ ಕೀ ಉತ್ತರಗಳನ್ನು ಹಾಗೂ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ತಾತ್ಕಾಲಿಕ ಅಂಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದ್ದು, ತಾತ್ಕಾಲಿಕ ಅಂಕ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಜ.1ರ ಮಧ್ಯಾಹ್ನ 12ಗಂಟೆಯೊಳಗೆ https://cetonline.karnataka.gov.in/kea/   ವೆಬ್‍ಸೈಟ್ ಮೂಲಕ ಆಕ್ಷೇಪಣೆ ಸಲ್ಲಿಸಬಹುದು. ಪೂರಕ ದಾಖಲೆಗಳಿಲ್ಲದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟನೆ ತಿಳಿಸಿದೆ.

ವಾರ್ತಾ ಭಾರತಿ 31 Dec 2025 1:20 am

ಇನಾಂ ವೀರಾಪೂರದಲ್ಲಿ ಮರ್ಯಾದೆಗೇಡು ಹತ್ಯೆ ಪ್ರಕರಣ | ಗ್ರಾಮದಲ್ಲಿ ಶಾಂತಿ ಕಾಪಾಡಿ; ಇಂತಹ ದುರ್ಘಟನೆಗಳು ಜರುಗದಂತೆ ಮುನ್ನಚ್ಚರಿಕೆ ವಹಿಸಿ : ಆರ್.ಬಿ.ತಿಮ್ಮಾಪುರ

ಧಾರವಾಡ : ಮರ್ಯಾದೆಗೇಡು ಹತ್ಯೆ ನಡೆದಂತಹ ಇನಾಂ ವೀರಾಪೂರ ಗ್ರಾಮದಲ್ಲಿ ಶಾಂತಿ, ಸೌಹಾರ್ದತೆ ನೆಲೆಸುವಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ದೌರ್ಜನ್ಯಕ್ಕೆ ಒಳಗಾದ ಕುಟುಂಬಕ್ಕೆ ನಿಯಮಾನುಸಾರ ಪರಿಹಾರ, ರಕ್ಷಣೆ ನೀಡಬೇಕೆಂದು ಅಬಕಾರಿ ಇಲಾಖೆ ಸಚಿವ ಆರ್.ಬಿ.ತಿಮ್ಮಾಪುರ್ ಅವರು ಪೊಲೀಸ್ ಮತ್ತು ಜಿಲ್ಲಾಡಳಿತಕ್ಕೆ ಸೂಚಿಸಿದರು. ಮಂಗಳವಾರ ನಗರದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತದೊಂದಿಗೆ ಸಭೆ ಜರುಗಿಸಿ, ಇನಾಂ ವೀರಾಪೂರ ಗ್ರಾಮದಲ್ಲಿನ ದೌರ್ಜನ್ಯ, ಕೊಲೆ ಪ್ರಕರಣದ ಮಾಹಿತಿ ಪಡೆದು ಮಾತನಾಡಿದ ಅವರು, ಇದೊಂದು ಅಮಾನವೀಯ ಘಟನೆ. ಇಂತಹ ಮನಸ್ಥಿತಿಗಳಿಂದ ಸಾಮಾಜಿಕ ವ್ಯವಸ್ಥೆ ಹಾಳಾಗುತ್ತಿದೆ. ಈ ಘಟನೆಯಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು. ಸರಕಾರಿ ಅಭಿಯೋಜಕರಿಗೆ ಅಗತ್ಯ ಸಹಕಾರ ನೀಡಬೇಕು ಎಂದರು. ಈಗಾಗಲೇ ದಾಖಲಿಸಿರುವ ಎಫ್.ಐ.ಆರ್. ಪ್ರಕಾರ ಎಲ್ಲರ ಬಂಧನವಾಗಬೇಕು. ಗ್ರಾಮದ ಸಾಮರಸ್ಯಕ್ಕೆ, ಸೌಹಾರ್ದತೆಗೆ ಧಕ್ಕೆ ಆಗದಂತೆ ಅಧಿಕಾರಿಗಳು ಕ್ರಮವಹಿಸಬೇಕು. ಘಟನೆಯಲ್ಲಿ ಕಂದಾಯ, ಸಮಾಜ ಕಲ್ಯಾಣ ಇಲಾಖೆಗಳು ತಮ್ಮ ಕರ್ತವ್ಯ ನಿರ್ವಹಿಸಿವೆ. ಆದರೂ ಇನ್ನಷ್ಟು ತ್ವರೀತವಾಗಿ ಸ್ಪಂದಿಸಬೇಕಿತ್ತು ಎಂದು ಅವರು ಹೇಳಿದರು. ಗುಪ್ತವಾರ್ತೆಯ ವಿಭಾಗದ ಸಕಾಲಿಕ ಮಾಹಿತಿ ಕೊರತೆಯಿಂದ ದುರ್ಘಟನೆ ತಡೆಗಟ್ಟಲು ಸಾಧ್ಯವಾಗಿಲ್ಲ. ಘಟನೆ ನಂತರ ವಿವಿಧ ಇಲಾಖೆಗಳು ನಿರ್ವಹಿಸಿದ ಕಾರ್ಯಗಳ ಕುರಿತು, ನಿಯಮ ಪಾಲನೆ ಕುರಿತು ತನಿಖೆ ಮಾಡಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಪಾರದರ್ಶಕವಾಗಿ ತನಿಖೆ ಮಾಡಿ, ವರದಿ ನೀಡಬೇಕು ಎಂದು ಸಚಿವರು ಹೇಳಿದರು. ಜಿಲ್ಲಾಧಿಕಾರಿ ದಿವ್ಯಾ ಪ್ರಭು ಮಾತನಾಡಿ, ವಿವೇಕಾನಂದ ದೊಡ್ಡಮನಿ ಕುಟುಂಬದ ಬೇಡಿಕೆಗಳನ್ನು ಜಿಲ್ಲಾಡಳಿತ ಹಂತದಲ್ಲಿ ಈಡೇರಿಸಲಾಗಿದೆ. ಅವರ ಕೆಲವು ಬೇಡಿಕೆಗಳ ಕುರಿತು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಈಗಾಗಲೇ ಗ್ರಾಮದಲ್ಲಿ ಶಾಂತಿ ಸಭೆ ಮಾಡಿ, ದೊಡ್ಡಮನಿ ಕುಟುಂಬವನ್ನು ಅವರ ಮನೆಗೆ ಸೇರಿಸಲಾಗಿದೆ ಎಂದು ತಿಳಿಸಿದರು. ಶಾಂತಿ, ಸೌಹಾರ್ದತೆಯಿಂದ ಎಲ್ಲರೂ ಇರುವುದಾಗಿ ಗ್ರಾಮಸ್ಥರು ಭರವಸೆ ನೀಡಿದ್ದಾರೆ. ಗ್ರಾಮದಲ್ಲಿ ಪೊಲೀಸ್ ಬಂದೊಬಸ್ತ್, ಕುಟುಂಬದವರಿಗೆ ಅಗತ್ಯ ಚಿಕಿತ್ಸೆ, ಕೌನ್ಸಿಲಿಂಗ್ ವ್ಯವಸ್ಥೆ ಮಾಡಲಾಗಿದೆ. ಈಗಾಗಲೆ 5 ಲಕ್ಷ ರೂ.ಪರಿಹಾರ ನೀಡಲಾಗಿದೆ. ಗ್ರಾಮ ಹಾಗೂ ಕುಟುಂಬಗಳ ಮೇಲೆ ಮುನ್ನೆಚರಿಕೆಯಾಗಿ ನಿಗಾವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು, ಘಟನೆಯ ಕುರಿತು ಮತ್ತು ಆರೋಪಿತರ ಮೇಲೆ ಕೈಗೊಂಡ ಕ್ರಮಗಳ ಕುರಿತು ಸಚಿವರಿಗೆ ವಿವರಿಸಿದರು. ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಶುಭಾ ಪಿ., ಅವರು ಸ್ವಾಗತಿಸಿ, ಘಟನೆ ಕುರಿತು ಇಲಾಖೆ ಕೈಗೊಂಡ ಕ್ರಮಗಳನ್ನು ವಿವರಿಸಿದರು. ಸಭೆಯಲ್ಲಿ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ್, ತಹಶೀಲ್ದಾರ್ ಜೆ.ಬಿ.ಮಜ್ಜಗಿ, ಇನ್‍ಸ್ಪೆಕ್ಟರ್ ಮುರಗೇಶ ಚನ್ನಣ್ಣವರ, ಸಹಾಯಕ ನಿರ್ದೇಶಕಿ ಪ್ರಿಯದರ್ಶಿನಿ ಹಿರೇಮಠ, ಡಿಸಿಆರ್‌ಇ ವಿಜಯಪುರ ಡಿವೈಎಸ್ಪಿ ಹಾಗೂ ಇನಾಂ ವೀರಾಪುರ ಗ್ರಾಮ ಪ್ರಕರಣದ ತನಿಖಾಧಿಕಾರಿ ಸಂದೀಪ್‍ಸಿಂಗ್ ಮುರಗೋಡ, ಸಹಾಯಕ ಪೊಲೀಸ್ ಆಯುಕ್ತ ಪ್ರಶಾಂತ ಸಿದ್ದನಗೌಡರ, ಇನ್‍ಸ್ಪೆಕ್ಟರ್ ವೀರಭದ್ರಪ್ಪ ಕಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 31 Dec 2025 12:54 am

ಕಲಾವಿದೆ ಪ್ರೊ.ಎಂ.ಜೆ.ಕಮಲಾಕ್ಷಿ ನಿಧನ

ಬೆಂಗಳೂರು : ಕರ್ನಾಟಕ ಲಲಿತಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷೆ ಹಾಗೂ ಕಲಾವಿದೆ ಪ್ರೊ. ಎಂ.ಜೆ. ಕಮಲಾಕ್ಷಿ ಮಂಗಳವಾರ ಮಧ್ಯಾಹ್ನ 1.30 ಗಂಟೆಗೆ ನಿಧನರಾಗಿದ್ದಾರೆ. ಬೆಂಗಳೂರಿನಲ್ಲಿ ಬಿ.ಎಸ್ಸಿ ಪದವಿ ಪೂರ್ಣಗೊಳಿಸಿದ ಅವರು, ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ.(ಇತಿಹಾಸ) ಮತ್ತು ಬರೋಡಾ ವಿಶ್ವವಿದ್ಯಾಲಯದಲ್ಲಿ ಮ್ಯೂರಲ್ ಕಲೆಯಲ್ಲಿ ವಿಶೇಷ ಅಧ್ಯಯನ ನಡೆಸಿದ್ದರು. ಚಿತ್ರಕಲಾ ಕ್ಷೇತ್ರದಲ್ಲಿ ದಶಕಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ್ದ ಪ್ರೊ. ಕಮಲಾಕ್ಷಿ ಅವರು, ತಮ್ಮ ವಿಶಿಷ್ಟ ಶೈಲಿಯ ಚಿತ್ರಕಲೆಯ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದ್ದರು. ಲಲಿತಕಲಾ ಅಕಾಡೆಮಿಯ ಅಧ್ಯಕ್ಷರಾಗಿ ಅವರು ಕೈಗೊಂಡ ಕಲಾ ಉತ್ತೇಜನಾ ಕಾರ್ಯಕ್ರಮಗಳು ಇಂದಿಗೂ ಸ್ಮರಣೀಯವಾಗಿವೆ. ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ(2015), ಲಲಿತಕಲಾ ಅಕಾಡೆಮಿ ಪ್ರಶಸ್ತಿ ಮತ್ತು ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ವಾರ್ತಾ ಭಾರತಿ 31 Dec 2025 12:28 am

ಎಫ್‌ಐಆರ್ ರದ್ದು ಕೋರಿದ ಅರ್ಜಿಗಳಲ್ಲಿ ಮಧ್ಯಂತರ ಜಾಮೀನಿಗೆ ಮನವಿ ಸರಿಯಲ್ಲ : ಹೈಕೋರ್ಟ್

ಬೆಂಗಳೂರು : ಕ್ರಿಮಿನಲ್‌ ಪ್ರಕರಣಗಳಲ್ಲಿ ಜಾಮೀನು ಪಡೆಯಲು ಅವಕಾಶವಿದ್ದರೂ, ಆರೋಪಿಗಳು ನೇರವಾಗಿ ಹೈಕೋರ್ಟ್‌ಗೆ ಎಫ್‌ಐಆರ್‌ ರದ್ದು ಕೋರಿ ಅರ್ಜಿ ಸಲ್ಲಿಸಿ, ಮಧ್ಯಂತರ ಜಾಮೀನು ಕೋರುವುದು ಸರಿಯಲ್ಲ ಎಂದು ಹೈಕೋರ್ಟ್‌ ಮೌಖಿಕವಾಗಿ ಹೇಳಿದೆ. ಹಲವು ಕ್ರಿಮಿನಲ್‌ ಪ್ರಕರಣಗಳಲ್ಲಿ ಆರೋಪಿಗಳ ಪರ ವಕೀಲರು ಎಫ್‌ಐಆರ್‌ ರದ್ದತಿಗೆ ಕೋರಿ ಸಲ್ಲಿಸಿದ ಅರ್ಜಿಗಳಲ್ಲಿ ಆರೋಪಿಗಳಿಗೆ ಮಧ್ಯಂತರ ಜಾಮೀನು ಮಂಜೂರಾತಿಗೆ ಮನವಿ ಮಾಡುವುದನ್ನು ಗಮನಿಸಿದ ನ್ಯಾಯಮೂರ್ತಿ ಅನಂತ ರಾಮನಾಥ್ ಹೆಗಡೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತು. ಅತಿಕ್ರಮ ಪ್ರವೇಶ ಸೇರಿ ಇನ್ನಿತರ ಜಾಮೀನು ಸಿಗಬಹುದಾದ ಪ್ರಕರಣಗಳಲ್ಲಿ ಆರೋಪಿಗಳು ಮೊದಲಿಗೆ ಹೈಕೋರ್ಟ್‌ಗೆ ಎಫ್‌ಐಆರ್‌ ರದ್ದು ಕೋರಿ ಅರ್ಜಿ ಸಲ್ಲಿಸುತ್ತಾರೆ. ಆ ಅರ್ಜಿ ವಿಚಾರಣೆ ವೇಳೆ ಮಧ್ಯಂತರ ಜಾಮೀನು ಕೋರಿ ಆರೋಪಿಗಳ ಪರ ವಕೀಲರು ಮನವಿ ಮಾಡುತ್ತಾರೆ. ಇದು ಸರಿಯಾದ ಕ್ರಮವಲ್ಲ. ಜಾಮೀನು ಕೋರಿಕೆಗೆ ನಿರ್ದಿಷ್ಟ ಕಾರ್ಯ ವಿಧಾನ/ನಿಯಮಗಳ ಮತ್ತು ಪ್ರಕ್ರಿಯೆ ಇರುತ್ತದೆ. ಬಂಧನದ ಆತಂಕವಿದ್ದರೆ, ಮೊದಲಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿ, ವಿಚಾರಣಾ ನ್ಯಾಯಾಲಯದಿಂದಲೇ ಜಾಮೀನು ಪಡೆಯಬಹುದು ಎಂದು ಹೇಳಿತು. ಆನಂತರ ಹೈಕೋರ್ಟ್‌ನಲ್ಲಿ ಎಫ್‌ಐಆರ್‌ ರದ್ದತಿಗೆ ಕೋರುವ ಅವಕಾಶವಿರುತ್ತದೆ. ಜಾಮೀನು ಪಡೆಯಲು ಅವಕಾಶವಿದ್ದರೂ, ಎಫ್‌ಐಆರ್‌ ರದ್ದತಿ ಕೋರಿದ ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿಗಳಲ್ಲಿ ಮಧ್ಯಂತರ ಜಾಮೀನು ಕೋರಲಾಗುತ್ತದೆ. ಆರೋಪಿಗಳಿಗೆ ವಕೀಲರು ನೀಡುವ ಭರವಸೆಯಿಂದ ಇಂತಹ ಬೆಳವಣಿಗೆಗಳು ನಡೆಯುತ್ತವೆ ಎಂದು ನ್ಯಾಯಾಲಯ ಮೌಖಿಕವಾಗಿ ನುಡಿಯಿತು. ಅಂತಿಮವಾಗಿ ಎಫ್‌ಐಆರ್‌ ರದ್ದು ಕೋರಿದ ಹಲವು ಅರ್ಜಿಗಳಲ್ಲಿ ಆರೋಪಿಗಳಿಗೆ ಮಧ್ಯಂತರ ಜಾಮೀನು ಮಂಜೂರಾತಿಗೆ ವಕೀಲರು ಮಾಡಿದ ಮನವಿಗೆ ಒಪ್ಪದ ನ್ಯಾಯಪೀಠ, ಅರ್ಜಿಯಲ್ಲಿರುವ ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿ, ಆಕ್ಷೇಪಣೆ ಸಲ್ಲಿಕೆಗೆ ಸೂಚಿಸಿ ವಿಚಾರಣೆ ಮುಂದೂಡಿತು.

ವಾರ್ತಾ ಭಾರತಿ 31 Dec 2025 12:04 am

ಕಿಮ್ ಜಾಂಗ್ ಉನ್ ಮತ್ತೊಂದು ಅಸ್ತ್ರ, ಸುಸ್ತಾಗಿ ಹೋಯ್ತಾ ದೊಡ್ಡಣ್ಣ ಅಮೆರಿಕ?

ಅಮೆರಿಕ ಇರಲಿ ಯುರೋಪ್ ಇರಲಿ, ಜಗತ್ತಿನ ಯಾವುದೇ ಶಕ್ತಿಶಾಲಿ ಎನಿಸಿಕೊಂಡ ದೇಶಕ್ಕೂ ಈ ಕಿಮ್ ಜಾಂಗ್ ಉನ್ ಹೆಸರು ಕೇಳಿದರೆ ಭಯ ಆಗದೆ ಇರಲಾರದು. ಇದಕ್ಕೆ ಕಾರಣ ಕಿಮ್ ಜಾಂಗ್ ಉನ್ ಇಟ್ಟಿರುವ ಹವಾ. ತನ್ನ ಬಳಿ ನ್ಯೂಕ್ಲಿಯರ್ ಅಸ್ತ್ರಗಳು ಇವೆ ಎಂದು ಹೇಳುತ್ತಲೇ ಜಗತ್ತಿನ ದೊಡ್ಡ ದೊಡ್ಡ ದೇಶಗಳನ್ನು ಭಯಪಡಿಸಿ, ತನ್ನ ಬೇಳೆ ಬೇಯಿಸಿಕೊಳ್ಳಲು ಕಿಮ್

ಒನ್ ಇ೦ಡಿಯ 30 Dec 2025 11:58 pm

ವಿಜಯನಗರ | ಸಿರಿಧಾನ್ಯ, ಮರೆತು ಹೋದ ಖಾದ್ಯಗಳನ್ನು ನಿತ್ಯದ ಆಹಾರದಲ್ಲಿ ಬಳಸಿ : ಡಿಸಿ ಕವಿತಾ ಎಸ್.ಮನ್ನಿಕೇರಿ

ವಿಜಯನಗರ (ಹೊಸಪೇಟೆ), :ಸಾರ್ವಜನಿಕರು ಸಿರಿಧಾನ್ಯಗಳು ಹಾಗೂ ಮರೆತು ಹೋದ ಪರಂಪರೆಯ ಖಾದ್ಯಗಳನ್ನು ನಿತ್ಯದ ಆಹಾರದಲ್ಲಿ ಅಳವಡಿಸಿಕೊಳ್ಳಲು ಇಂತಹ ಸ್ಪರ್ಧೆಗಳು ಸಹಕಾರಿಯಾಗಿವೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು. ನಗರದ ಸಮಗ್ರ ಕೃಷಿ ಪದ್ಧತಿಯ ಉತ್ಕೃಷ್ಟ ಕೇಂದ್ರದ ಸಭಾಂಗಣದಲ್ಲಿ ಕೃಷಿ ಇಲಾಖೆ ಹಾಗೂ ಕೃಷಿ ತಂತ್ರಜ್ಞರ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಂಗಳವಾರ ಮಾತನಾಡಿದರು. ಸಿರಿಧಾನ್ಯ ಹಾಗೂ ಪರಂಪರೆಯ ಖಾದ್ಯಗಳನ್ನು ದಿನನಿತ್ಯದ ಆಹಾರ ಪದ್ಧತಿಯಲ್ಲಿ ಹೆಚ್ಚಾಗಿ ಬಳಸುವುದರಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ. ಇವುಗಳಲ್ಲಿ ಶಕ್ತಿಶಾಲಿ ಆ್ಯಂಟಿ ಆಕ್ಸಿಡೆಂಟ್‌ಗಳು ಹಾಗೂ ರೋಗ ನಿರೋಧಕ ಶಕ್ತಿ ಹೆಚ್ಚಿರುವುದರಿಂದ ಸಕ್ಕರೆ ಕಾಯಿಲೆ, ರಕ್ತದೊತ್ತಡ ಸೇರಿದಂತೆ ಹಲವು ದೀರ್ಘಕಾಲದ ಕಾಯಿಲೆಗಳನ್ನು ತಡೆಗಟ್ಟಲು ಸಹಕಾರಿ ಆಗುತ್ತವೆ ಎಂದರು. ಸ್ಪರ್ಧೆಯಲ್ಲಿ ಭಾಗವಹಿಸಿದವರು ತಯಾರಿಸಿದ ವಿಭಿನ್ನ ಹಾಗೂ ರುಚಿಕರ ಆಹಾರಗಳನ್ನು ಪ್ರತಿ ಟೇಬಲ್‌ಗೆ ಭೇಟಿ ನೀಡಿ ರುಚಿ ನೋಡುವ ಅವಕಾಶ ದೊರೆತಿದ್ದು, ಅದು ನನಗೆ ಸಿಕ್ಕ ಭಾಗ್ಯ ಎಂದು ಹೇಳಿದರು. ಸ್ಪರ್ಧೆಯಲ್ಲಿ ತಯಾರಿಸಿದ ಆಹಾರಗಳ ಫೋಟೋಗಳನ್ನು ಸೇರಿಸಿ, ತಯಾರಿಕಾ ವಿಧಾನ ಹಾಗೂ ಬಳಸಿದ ಸಾಮಗ್ರಿಗಳ ವಿವರಣೆಯೊಂದಿಗೆ ಪುಸ್ತಕ ರೂಪದಲ್ಲಿ ಪ್ರಕಟಿಸಿದರೆ ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತವಾಗುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕರಿಗೆ ಸಲಹೆ ನೀಡಿದರು. ಅಲ್ಲದೆ, ಆಹಾರ ತಯಾರಿಕಾ ವಿಡಿಯೋಗಳನ್ನು ಯೂಟ್ಯೂಬ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದರಿಂದ ಜನರಿಗೆ ಮಾಹಿತಿ ಸಿಗುವುದರ ಜೊತೆಗೆ ಸ್ಪರ್ಧಾರ್ಥಿಗಳ ಪ್ರತಿಭೆಗೂ ವೇದಿಕೆ ದೊರೆಯಲಿದೆ ಎಂದರು. ಜಂಟಿ ಕೃಷಿ ನಿರ್ದೇಶಕ ಡಿ.ಟಿ. ಮಂಜುನಾಥ ಮಾತನಾಡಿ, ಜಿಲ್ಲೆಯಲ್ಲಿ ಸುಮಾರು 2 ಲಕ್ಷ 45 ಸಾವಿರ ಎಕರೆ ಪ್ರದೇಶದಲ್ಲಿ ಸಿರಿಧಾನ್ಯ ಬೆಳೆ ಬೆಳೆಯಲಾಗುತ್ತಿದ್ದು, ಅದರಲ್ಲಿ 2 ಲಕ್ಷ 21 ಸಾವಿರ ಎಕರೆ ಮುಸುಕಿನ ಜೋಳ, ಜೊತೆಗೆ ನವಣೆ, ಸಜ್ಜೆ ಮತ್ತು ರಾಗಿಯನ್ನು ಎಲ್ಲ ಋತುವಿನಲ್ಲಿಯೂ ಬೆಳೆಯಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿರಿಧಾನ್ಯಗಳ ಮಹತ್ವವನ್ನು ಜನರಿಗೆ ತಿಳಿಸಲು ಸ್ಪರ್ಧೆ ಆಯೋಜಿಸಲಾಗಿದೆ ಎಂದರು. ಜಿಲ್ಲೆಯ ಹೊಸಪೇಟೆ (15), ಕೂಡ್ಲಿಗಿ (06), ಹಡಗಲಿ (09), ಹಗರಿಬೊಮ್ಮನಹಳ್ಳಿ (04) ಮತ್ತು ಹರಪನಹಳ್ಳಿ (04) ತಾಲೂಕುಗಳಿಂದ ಒಟ್ಟು 38 ಸ್ಪರ್ಧಾರ್ಥಿಗಳು ಭಾಗವಹಿಸಿದ್ದರು. ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಕೃಷಿ ಇಲಾಖೆ ಕಚೇರಿ ಆವರಣದಲ್ಲಿ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆ ಉಪ ನಿರ್ದೇಶಕ ನಯೀಮ್ ಪಾಷಾ, ಎಇಇಯು ಸುನೀತಾ, ಎಡಿಎ ನಾಜ್‌ನೀನ್ ನದಾಫ್, ಎಡಿಎ ವಿದ್ಯಾವತಿ, ಸ್ಪರ್ಧಾರ್ಥಿಗಳು ಹಾಗೂ ಕೃಷಿ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.  

ವಾರ್ತಾ ಭಾರತಿ 30 Dec 2025 11:44 pm

ಚಕ್ರವರ್ತಿ ಸೂಲಿಬೆಲೆಗೆ ಆಹ್ವಾನ ವಿರೋಧಿಸಿ ಪ್ರತಿಭಟನೆ; ಧಾರವಾಡ ಕೃಷಿ ವಿವಿ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ರದ್ದು

ಧಾರವಾಡ : ನಗರದ ಕೃಷಿ ವಿಶ್ವ ವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮಕ್ಕೆ ಚಕ್ರವರ್ತಿ ಸೂಲಿಬೆಲೆಗೆ ಆಹ್ವಾನ ನೀಡಿರುವುದನ್ನು ವಿರೋಧಿಸಿ ದಲಿತ ಸಂಘಟನೆ ಹಾಗೂ ಕೃಷಿ ವಿವಿ ಬೋರ್ಡ್ ಸದಸ್ಯರು ವಿವಿ ಗೇಟ್ ಎದುರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದುಗೊಂಡ ಘಟನೆ ಮಂಗಳವಾರ ನಡೆದಿದೆ. ಕೃಷಿ ವಿವಿ ಕುಲಪತಿ ಪಿ.ಎಲ್.ಪಾಟೀಲ್ ಅಧ್ಯಕ್ಷತೆಯಲ್ಲಿ ವಿವಿಯ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಸಚಿವರು, ಶಾಸಕರನ್ನು ಕರೆಯದೆ ಚಕ್ರವರ್ತಿ ಸೂಲಿಬೆಲೆಯನ್ನು ಕರೆದಿದ್ದು ಯಾಕೆ?. ಅವರೇನು ವಿಜ್ಞಾನಿನಾ ಎಂದು ಪ್ರಶ್ನಿಸಿದರು. ಇದೇ ವೇಳೆ ಮನವಿ ಸ್ವೀಕರಿಸಲು ಬಂದಿದ್ದ ಡೀನ್ ರನ್ನೂ ತರಾಟೆಗೆ ಪಡೆದ ಪ್ರತಿಭಟನಾಕಾರರು, ಕುಲಪತಿಯವರೇ ಬಂದು ನಮ್ಮ ಮನವಿ ಸ್ವೀಕರಿಸಬೇಕೆಂದು ಒತ್ತಾಯಿಸಿದರು. ಇದೇ ವೇಳೆ ಹಲವರು ವಿವಿ ಗೇಟ್ ಏರಿ ಪ್ರತಿಭಟನೆ ನಡೆಸಿದರು. ‘ಸಮಾಜದಲ್ಲಿ ಕೋಮು ಗಲಭೆಗೆ ಕಾರಣ ವಾಗುವಂತವರನ್ನು ಕರೆದು ವಿವಿಗಳಲ್ಲಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡಿಸಬಾರದು. ಅದರ ಬದಲು, ಕೃಷಿ ಸಾಧಕರನ್ನೋ, ವಿಜ್ಞಾನಿಗಳನ್ನೋ ಕರೆಸಬಹುದಿತ್ತು. ಸಿಂಡಿಕೇಟ್ ಸದಸ್ಯರಿಗೂ ತಿಳಿಸದೆ ಕುಲಪತಿಯವರು ಕಾರ್ಯಕ್ರಮ ಮಾಡಲು ಹೊರಟಿದ್ದಾರೆ’ ಎಂದು ದಲಿತ ಸಂಘಟನೆ ಮುಖಂಡರು ಆರೋಪಿಸಿದ್ದಾರೆ. ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ ದಲಿತ ಸಂಘಟನೆ ಹಾಗೂ ಕೃಷಿ ವಿವಿ ಬೋರ್ಡ್ ಸದಸ್ಯರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮವನ್ನು ಕೃಷಿ ವಿವಿ ರದ್ದು ಗೊಳಿಸಿತ್ತು. ಆದರೂ, ಪ್ರತಿಭಟನೆ ಮುಂದುವರಿಸಿದ್ದರಿಂದ ಉಪನಗರ ಠಾಣೆಯ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.

ವಾರ್ತಾ ಭಾರತಿ 30 Dec 2025 11:41 pm

ವಿಜಯನಗರ | ಹಂಪಿ ಉತ್ಸವದ ಲೋಗೋ ರಚಿಸಿ, ಬಹುಮಾನ ಗೆಲ್ಲಿ : ಡಿಸಿ ಕವಿತಾ ಎಸ್.ಮನ್ನಿಕೇರಿ

ವಿಜಯನಗರ (ಹೊಸಪೇಟೆ) : ವಿಶ್ವವಿಖ್ಯಾತ 2026ರ ಹಂಪಿ ಉತ್ಸವಕ್ಕೆ ನೂತನ ಲೋಗೋ ರಚಿಸುವ ಕಲಾವಿದರಿಗೆ ಜಿಲ್ಲಾಡಳಿತದಿಂದ ಸೂಕ್ತ ಬಹುಮಾನ ನೀಡಲಾಗುವುದು ಎಂದು ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮುಖ್ಯಮಂತ್ರಿ ಅವರ ಸಮ್ಮತಿ ಪಡೆದು 2025–26ನೇ ಸಾಲಿನ ಹಂಪಿ ಉತ್ಸವವನ್ನು ಫೆ.13, 14 ಮತ್ತು 15, 2026 ರಂದು ಅದ್ದೂರಿಯಾಗಿ ಆಚರಿಸಲು ಪೂರ್ವಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಉತ್ಸವಕ್ಕೆ ಹೊಸ ಲೋಗೋ ವಿನ್ಯಾಸಗೊಳಿಸುವುದು ಅಗತ್ಯವಾಗಿದ್ದು, ಆಸಕ್ತ ಕಲಾವಿದರಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ. ಲೋಗೋ ವಿನ್ಯಾಸ ಮಾಡಲು ಆಸಕ್ತ ಕಲಾವಿದರು ತಮ್ಮ ಪ್ರಸ್ತಾವನೆಗಳನ್ನು ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಿಜಯನಗರ ಜಿಲ್ಲಾ ಕಚೇರಿಗೆ ಜ.8ರೊಳಗೆ ಸಲ್ಲಿಸಬೇಕು. ನಿಗದಿತ ಅವಧಿ ನಂತರ ಬಂದ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ವಾರ್ತಾ ಭಾರತಿ 30 Dec 2025 11:35 pm

ಕೊಪ್ಪಳ | ರಾಜ್ಯದಲ್ಲಿ ಡ್ರಗ್ಸ್ ಜಾಲ ವಿಸ್ತರಿಸಿದ್ದು, ಸರಕಾರ ಕಣ್ಮುಚ್ಚಿ ಕುಳಿತಿದೆ: ಹೇಮಲತಾ ನಾಯಕ ಆರೋಪ

ಕೊಪ್ಪಳ: ರಾಜ್ಯದಲ್ಲಿ ಡ್ರಗ್ಸ್ ಜಾಲ ವಿಸ್ತರಿಸಿದ್ದು, ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿ ದಾಳಿ ನಡೆಸಿ ಅಮಲಿನ ಜಾಲ ಭೇದಿಸಿದ್ದು, ರಾಜ್ಯ ಪೊಲೀಸರಿಗೆ ಮಾಹಿತಿ ಇಲ್ಲದಿರುವುದು ನಾಚಿಕಗೇಡಿನ ಸಂಗತಿ ಎಂದು ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಆರೋಪಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ಮಂಗಳವಾರದಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಕಾರ್ಖಾನೆ ಪತ್ತೆಯಾಗಿವೆ. 56 ಕೋಟಿ ರೂ. ಮೌಲ್ಯದ ಕಚ್ಛಾ ವಸ್ತು ದೊರೆತಿವೆ. ಮೂವರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ ಎಂದು ಹೇಳಿದರು. ರಾಜಧಾನಿಯಲ್ಲಿ ಇಷ್ಟೆಲ್ಲ ನಡೆಯುತ್ತಿದ್ದರೂ ಸರ್ಕಾರದ ಗಮನಕ್ಕಿಲ್ಲವಾ ಅಥವಾ ಇವರೇ ಬೆಂಬಲ ನೀಡುತ್ತಿದ್ದಾರಾ ಎಂಬುದನ್ನು ಸ್ಪಷ್ಟಪಡಿಸಬೇಕು. ಶಾಲಾ ಮಕ್ಕಳ ಕೈಗೂ ಸುಲಭವಾಗಿ ಡ್ರಗ್ಸ್ ದೊರೆಯುತ್ತಿದೆ. ಮದ್ಯ ಮಾರಾಟ ಮಿತಿ ಮೀರಿದೆ. ಇದಕ್ಕೆ ಕಡಿವಾಣ ಹಾಕುವ ಬದಲು ಕುಡಿದು ಬಿದ್ದವರನ್ನು ಮನೆಗೆ ತಲುಪಿಸಲಾಗುವುದೆಂದು ಗೃಹ ಸಚಿವರು ಹೇಳಿರುವುದು ಲಜ್ಜೆಗೇಡಿತನ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೊಪ್ಪಳದಲ್ಲಿ ಶಿಲ್ಪಾ ಗ್ರಾಂಡ್ ಹೋಟೆಲ್ ಹಿಂಭಾಗ, ಹಿಟ್ನಾಳ, ಮುನಿರಾಬಾದ್ ಹೀಗೆ ಎಲ್ಲ ಕಡೆಗಳಲ್ಲಿ ಇಸ್ಪೀಟ್ ದಂಧೆ ನಡೆಯುತ್ತಿದೆ. ನಮ್ಮ ಜಿಲ್ಲೆಯಲ್ಲಿ ಕಳೆದ 5 ವರ್ಷದಲ್ಲಿ ಪತ್ತೆಯಾದ ಡ್ರಗ್ಸ್ ಪ್ರಕರಣಗಳು, ವಶಪಡಿಸಿಕೊಂಡ ಗಾಂಜಾ ಮಾಹಿತಿಯನ್ನೂ ಸರಿಯಾಗಿ ನೀಡಿಲ್ಲ. ಅಧಿಕಾರಿಗಳು ನೀಡಿದ ಮಾಹಿತಿಯನ್ನು ಪರಾಮರ್ಶಿಸದೇ ಸಚಿವರು ಉತ್ತರ ಕೊಡುವ ಭಂಡತನ ಪ್ರದರ್ಶಿಸುತ್ತಿದ್ದಾರೆ. ಸಿಎಂ ತವರು ಜಿಲ್ಲೆ ಮೈಸೂರಿನಲ್ಲೂ ಡ್ರಗ್ಸ್ ಜಾಲ ಹಬ್ಬಿದೆ. ಹಲವು ಜಿಲ್ಲೆಗಳಲ್ಲೂ ಪೆಡ್ಲಿಂಗ್ ನಡೆಯುತ್ತಿದೆ. ಇದಕ್ಕೆಲ್ಲ ಕಡಿವಾಣ ಬೀಳುತ್ತಿಲ್ಲ ಎಂದು ಹೇಳಿದರು. ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಡಾ.ಬಸವರಾಜ ಕ್ಯಾವಟರ್, ಪ್ರಮುಖರಾದ ನೀಲಕಂಠಯ್ಯ ಹಿರೇಮಠ, ಮಹೇಶ ಅಂಗಡಿ, ಪ್ರಸಾದ ಗಾಳಿ ಇದ್ದರು.

ವಾರ್ತಾ ಭಾರತಿ 30 Dec 2025 11:29 pm

ಶಹಾಬಾದ್‌ | ಗಿರಿಸಿರಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಶಹಾಬಾದ್: ಕಟ್ಟೆಯ ಮೇಲೆ ಅನಾವಶ್ಯಕವಾಗಿ ಕಾಲ ಕಳೆಯುವ ಯುವಕರ ನಡುವೆ ಸಮಾಜಕ್ಕೆ ಶಿಕ್ಷಣ ಹಾಗೂ ಸಾಹಿತ್ಯವನ್ನು ಪಸರಿಸುವ ನಿಟ್ಟಿನಲ್ಲಿ ಗಿರಿಸಿರಿ ಸಾಂಸ್ಕೃತಿಕ ಕಲಾ ಸಂಸ್ಥೆ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವುದು ಅತ್ಯಂತ ಸಂತೋಷದಾಯಕ ಸಂಗತಿ ಎಂದು ಬರಹಗಾರ ಕೆ.ಎಂ. ವಿಶ್ವನಾಥ ಮರತೂರು ಹೇಳಿದರು. ನಗರದ ಜಗದಂಬಾ ದೇವಸ್ಥಾನದ ಸಭಾಂಗಣದಲ್ಲಿ ಗಿರಿಸಿರಿ ಸಾಂಸ್ಕೃತಿಕ ಕಲಾ ಸಂಸ್ಥೆ, ಯಾದಗಿರಿ ವತಿಯಿಂದ ಆಯೋಜಿಸಿದ್ದ 70ನೇ ಕನ್ನಡ ರಾಜ್ಯೋತ್ಸವ, 2025ನೇ ಸಾಲಿನ ಗಿರಿಸಿರಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಹಾಗೂ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಮಾತನಾಡಿದ ಅವರು, ಈ ಸಂಸ್ಥೆ ಪ್ರತಿ ವರ್ಷ ಎಲೆಯ ಮರೆಯ ಕಾಯಿಯಂತೆ ಇರುವ ಸಾಧಕರನ್ನು ಗುರುತಿಸಿ ಗೌರವಿಸುತ್ತಿರುವುದು ಅಭಿನಂದನಾರ್ಹ ಕಾರ್ಯವಾಗಿದೆ ಎಂದರು. ವಿಭಿನ್ನ ಹಾಗೂ ವಿನೂತನ ಕಾರ್ಯಕ್ರಮಗಳ ಮೂಲಕ ಜನಮಾನಸದಲ್ಲಿ ಉತ್ತಮ ಮೌಲ್ಯಗಳನ್ನು ಬೆಳೆಸುವ ಕಾರ್ಯವನ್ನು ಮುಂದುವರೆಸಲಿ ಎಂದು ಆಶಿಸಿದರು. ದಸಂಸ ರಾಜ್ಯ ಸಂಘಟನಾ ಸಂಚಾಲಕ ಮರಿಯಪ್ಪ ಹಳ್ಳಿ ಮಾತನಾಡಿ, ಕಲ್ಲಿನ ನಾಡಿನಲ್ಲಿ ಶಿಕ್ಷಣ ಹಾಗೂ ಉದ್ಯೋಗ ಗಗನಕುಸುಮವಾಗಿರುವ ಸಂದರ್ಭದಲ್ಲಿ ಸಾಹಿತ್ಯದ ಚಿಲುಮೆಯನ್ನು ಹರಿಯುವಂತೆ ಮಾಡುವ ಕಾರ್ಯ ಗಿರಿಸಿರಿ ಸಂಸ್ಥೆಯಿಂದ ನಡೆಯುತ್ತಿದೆ. ನಾಡಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸತ್ಕಾರ ಮಾಡುವ ಕಾರ್ಯ ಶ್ಲಾಘನೀಯ ಎಂದು ಹೇಳಿದರು. ದಸಂಸ ಮುಖಂಡರಾದ ಸುರೇಶ ಮೆಂಗನ್ ಹಾಗೂ ಆರಕ್ಷಕ ನಿರೀಕ್ಷಕ ನಟರಾಜ ಲಾಡೆ ಮಾತನಾಡಿ, ಸಂಸ್ಥೆ ಇನ್ನಷ್ಟು ಬೆಳವಣಿಗೆ ಹೊಂದಿ ಸಮಾಜಮುಖಿ ಚಟುವಟಿಕೆಗಳನ್ನು ಮುಂದುವರೆಸಲಿ ಎಂದು ಶುಭ ಹಾರೈಸಿದರು. ಗಿರಿಸಿರಿ ಸಂಸ್ಥೆಯ ಅಧ್ಯಕ್ಷ ಮರಲಿಂಗ ಯಾದಗಿರಿ ಮಾತನಾಡಿದರು. ಹಲಕರ್ಟಿಯ ರಾಜಶೇಖರ್ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪತ್ರಕರ್ತ ಲೋಹಿತ್ ಕಟ್ಟಿ ವಹಿಸಿದ್ದರು. ವೇದಿಕೆಯಲ್ಲಿ ಸಂಸ್ಥೆಯ ಗೌರವ ಅಧ್ಯಕ್ಷ ಅಶೋಕ ಯಾದಗಿರಿ, ಬಿಜೆಪಿ ಅಧ್ಯಕ್ಷ ನಿಂಗಣ್ಣ ಹುಳಗೋಳಕರ್, ಬಾಲರಾಜ ಮಾಚನೂರ, ಪತ್ರಕರ್ತ ರಮೇಶ ಭಟ್ಟ, ಕಸಾಪ ತಾಲೂಕಾಧ್ಯಕ್ಷ ಶರಣಬಸಪ್ಪ ಕೋಬಾಳ, ಶರಣು ಪಗಲಾಪೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ 2025ನೇ ಸಾಲಿನ ಗಿರಿಸಿರಿ ರಾಜ್ಯೋತ್ಸವ ಪ್ರಶಸ್ತಿಗಳನ್ನು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಪ್ರದಾನ ಮಾಡಲಾಯಿತು. ಕವಿಗೋಷ್ಠಿಯನ್ನೂ ಆಯೋಜಿಸಲಾಗಿತ್ತು. ಶಿಕ್ಷಕ ಗಿರಿಮಲ್ಲಪ್ಪ ವಳಸಂಗ ಕಾರ್ಯಕ್ರಮ ನಿರೂಪಿಸಿದರು. ದುರ್ಗಷ್ಟ ಪೂಜಾರಿ ಸ್ವಾಗತಿಸಿ, ಅನಿಲಕುಮಾರ ಮೈನಾಳಕರ್ ವಂದಿಸಿದರು. ಕಾರ್ಯಕ್ರಮದಲ್ಲಿ ಯಲ್ಲಾಲಿಂಗ ಹೈಯ್ಯಾಳಕರ್, ಬಸವರಾಜ ಮಯೂರ, ಪರಶುರಾಮ ಛಲವಾದಿ, ಭರತ್ ಧನ್ನಾ, ಶಂಕರ ಜಾನಾ, ಭಿಮಯ್ಯ ಗುತ್ತೇದಾರ್, ಲಕ್ಷ್ಮೀಕಾಂತ ಕಂದಗೂಳ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 30 Dec 2025 11:26 pm

ಬೆಂಗಳೂರು | ಆರನೆ ಮಹಡಿಯಿಂದ ಕೆಳಗೆ ಬಿದ್ದು ಬಯೋಕಾನ್ ಕಂಪೆನಿಯ ಉದ್ಯೋಗಿ ಸಾವು

ಬೆಂಗಳೂರು : ನಗರದ ಎಲೆಕ್ಟ್ರಾನಿಕ್ ಸಿಟಿಯ 2ನೆ ಹಂತದಲ್ಲಿರುವ ಬಯೋಕಾನ್ ಕಂಪೆನಿಯ ಉದ್ಯೋಗಿ ಆರನೆ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 26 ವರ್ಷದ ಸಾಫ್ಟ್‌ ವೇರ್ ಇಂಜಿನಿಯರ್ ಅನಂತಕುಮಾರ್ ಮೃತಪಟ್ಟಿದ್ದು, ಅವರು ಗೆಳತಿಯೊಂದಿಗೆ ಮಾತನಾಡುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಅನಂತಕುಮಾರ್ ಬಯೋಕಾನ್ ಕಂಪನಿಯಲ್ಲಿ ಟೆಕ್ಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮಂಗಳವಾರ ಮಧ್ಯಾಹ್ನದ ವೇಳೆಗೆ ಕಂಪೆನಿಯ ಕೆಫೆಟೇರಿಯಾ ಭಾಗದ ಬಾಲ್ಕನಿಯಲ್ಲಿ ನಿಂತು ತಮ್ಮ ಗೆಳತಿಯೊಂದಿಗೆ ಮಾತನಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಆರನೆ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾರೆ. ತೀವ್ರ ರಕ್ತಸ್ರಾವದಿಂದಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ವಾರ್ತಾ ಭಾರತಿ 30 Dec 2025 11:26 pm

ಕುಸಿದ ಭಾರತಕ್ಕೆ ಆಸರೆಯಾದ ನಾಯಕಿ ಹರ್ಮನ್ ಪ್ರೀತ್ ಕೌರ್; ಶ್ರೀಲಂಕಾ ವಿರುದ್ಧ ಟಿ20 ಸರಣಿ ಕ್ಲೀನ್ ಸ್ವೀಪ್

India W Vs Sri Lanka W- ಭಾರತ ಮಹಿಳಾ ತಂಡವು ಶ್ರೀಲಂಕಾ ತಂಡವನ್ನು 5ನೇ ಟಿ20 ಪಂದ್ಯದಲ್ಲೂ ಸೋಲಿಸುವ ಮೂಲಕ ಸರಣಿಯನ್ನು ಕ್ಲೀನ್ ಸ್ಲೀಪ್ ಮಾಡಿಕೊಂಡಿದೆ. ತಿರುವನಂತಪುರದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಉಪನಾಯಕಿ ಸ್ಮೃತಿ ಮಂದಾನ ಮತ್ತು ಜೆಮಿಮಾ ರೋಡ್ರಿಗಸ್ ಗೆ ವಿಶ್ರಾಂತಿ ನೀಡಲಾಗಿತ್ತು. ಈ ಹಂತದಲ್ಲಿ ನಾಯಕಿ ಹರ್ಮನ್ ಪ್ರೀತ್ ಕೌರ್ ಅವರು ತಂಡಕ್ಕೆ ಆಸರೆಯಾದರು. ಅವರ ಸಮಯೋಚಿತ 68 ರನ್‌ಗಳ ಅರ್ಧಶತಕ ಮತ್ತು ಅರುಂಧತಿ ರೆಡ್ಡಿ ಅವರ ಆಲ್ರೌಂಡ್ ಆಟ ತಂಡದ ಗೆಲುವಿಗೆ ಕಾರಣವಾಯಿತು.

ವಿಜಯ ಕರ್ನಾಟಕ 30 Dec 2025 11:23 pm

ಸಂಶೋಧನೆಗಳು ವಿಮರ್ಶಾತ್ಮಕವಾಗಿದ್ದರೆ ಉತ್ತಮ : ಪ್ರೊ.ವೀಣಾದೇವಿ

ಡಾ.ಮನೋಹನ್ ಸಿಂಗ್ ವಿಶ್ವವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ

ವಾರ್ತಾ ಭಾರತಿ 30 Dec 2025 11:22 pm

ಶಹಾಬಾದ್‌ | ಈ ನಾಡಿನ ಸಾಂಸ್ಕೃತಿಕ ರಾಯಭಾರಿ ಕುವೆಂಪು : ಮಲ್ಲಿನಾಥ ಪಾಟೀಲ

ಶಹಾಬಾದ್: ನಾಡಿನ ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ ಮಹಾನ್ ಸಾಹಿತಿ ಹಾಗೂ ನಾಡಿನ ಸಾಂಸ್ಕೃತಿಕ ರಾಯಭಾರಿಯಾಗಿ ಕುವೆಂಪು ಅವರನ್ನು ಕನ್ನಡ ಜನತೆ ಗುರುತಿಸಿದೆ ಎಂದು ಎಸ್.ಜಿ. ವರ್ಮಾ ಹಿಂದಿ ಶಾಲೆಯ ಮುಖ್ಯಗುರು ಮಲ್ಲಿನಾಥ ಪಾಟೀಲ ಹೇಳಿದರು. ಸೋಮವಾರ ನಗರದ ಎಸ್.ಜಿ. ವರ್ಮಾ ಹಿಂದಿ ಶಾಲೆಯಲ್ಲಿ ಆಯೋಜಿಸಿದ್ದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡ ಸಾಹಿತ್ಯದ ಶಾಶ್ವತ ನಾಯಕ ಕುವೆಂಪು ಎಂಬುದನ್ನು ಕನ್ನಡ ಮನಸ್ಸುಗಳು ಹೃದಯಪೂರ್ವಕವಾಗಿ ಅಂಗೀಕರಿಸಿದ್ದೇವೆ ಎಂದು ತಿಳಿಸಿದರು. ಕುವೆಂಪು ಅವರಿಗೆ ಬೇರೆ ಯಾವುದೇ ಸಾಹಿತಿಗೆ ಸಿಗದಂತಹ ಗೌರವ ಶ್ರೀಸಾಮಾನ್ಯರಿಂದ ದೊರೆತಿದ್ದು, ಅದು ಅವರು ಕರ್ನಾಟಕ ರತ್ನ, ರಾಷ್ಟ್ರಕವಿ ಸೇರಿದಂತೆ ಅನೇಕ ಬಿರುದುಗಳನ್ನು ಪಡೆದಿದ್ದಕ್ಕಾಗಿ ಮಾತ್ರವಲ್ಲ. ತಮ್ಮ ಸಾಹಿತ್ಯದಲ್ಲಿ ಹೃದಯವಂತಿಕೆ, ವಿಶಾಲ ಮನೋಭಾವ ಹಾಗೂ ಮಾನವೀಯ ಮೌಲ್ಯಗಳನ್ನು ಅಳವಡಿಸಿದ ಕಾರಣಕ್ಕಾಗಿ ಈ ಗೌರವ ಲಭಿಸಿದೆ ಎಂದು ಹೇಳಿದರು. ಕನ್ನಡ ಸಾಹಿತ್ಯಕ್ಕೆ ಜ್ಞಾನಪೀಠ ಪ್ರಶಸ್ತಿಯನ್ನು ತಂದುಕೊಟ್ಟ ಮೊದಲ ಸಾಹಿತಿಯಾಗಿರುವ ಕುವೆಂಪು ಅವರು, ಮೂಢನಂಬಿಕೆ ವಿರೋಧಿ ಸಾಹಿತ್ಯ ಕೃಷಿಯ ಮೂಲಕ ಇಡೀ ಜಗತ್ತಿಗೆ ಅಮೂಲ್ಯ ಕೊಡುಗೆ ನೀಡಿದ್ದಾರೆ. 20ನೇ ಶತಮಾನದ ಶ್ರೇಷ್ಠ ಸಾಹಿತಿಯಾಗಿರುವ ಅವರು ಮಹಾನ್ ದಾರ್ಶನಿಕ ಹಾಗೂ ವೈಚಾರಿಕ ಕವಿಯಾಗಿದ್ದಾರೆ ಎಂದು ಮಲ್ಲಿನಾಥ ಪಾಟೀಲ ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಉಪನ್ಯಾಸಕ ಸಾಬಣ್ಣ ಗುಡುಬಾ ಹಾಗೂ ದೈಹಿಕ ಶಿಕ್ಷಕ ಚನ್ನಬಸಪ್ಪ ಕೊಲ್ಲೂರ್ ಮಾತನಾಡಿದರು. ಈ ಸಂದರ್ಭದಲ್ಲಿ ಶಿಕ್ಷಕರಾದ ರಮೇಶ ಜೋಗದನಕರ್, ಚಂದುಲಾಲ ಬಸೂದೆ, ಗೀತಾ ಸಿಪ್ಪಿ, ರಂಜಿತಾ ಹಿರೇಮಠ, ಭಾರತಿ ಚವ್ಹಾಣ, ಸುರೇಖಾ ಜಾಯಿ, ಶೋಭಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 30 Dec 2025 11:22 pm

ಜ.3 ರಂದು ಐಎಂಎ - ಎಎಂಸಿ ಕ್ರಿಕೆಟ್: ಜಾವಗಲ್ ಶ್ರೀನಾಥ್ ಉದ್ಘಾಟನೆ

ಮಂಗಳೂರು ಡಿ. 30: ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ಹಾಗೂ ವೈದ್ಯಕೀಯ ತಜ್ಞರ ಸಂಘ ಮಂಗಳೂರು ಶಾಖೆಯ ಇವುಗಳ ಸಂಯುಕ್ತ ಆಶ್ರಯದಲ್ಲಿ ‘ಐಎಂಎ - ಎಎಂಸಿ ಪ್ರೀಮಿಯರ್ ಲೀಗ್- 2026 ವಾರ್ಷಿಕ ಕ್ರಿಕೆಟ್ ಟೂರ್ನಮೆಂಟ್ ಜ.3ರಂದು ನಗರದ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ನಡೆಯಲಿದೆ. ನಗರದ ವೆನ್‌ಲಾಕ್ ಆಸ್ಪತ್ರೆಯ ತಜ್ಞರಾದ ದಿ. ಡಾ. ಎಂ. ವಿ. ಶೆಟ್ಟಿ , ದಿ. ಡಾ. ಚೌಡಯ್ಯ ಕ್ರಿಕೆಟ್ ಬಗ್ಗೆ ಅತಿಯಾದ ಆಸಕ್ತಿ ಹೊಂದಿದ್ದು, ಇವರ ಸ್ಮರಣಾರ್ಥ ಈ ಕ್ರಿಕೆಟ್ ಟೂರ್ನಮೆಂಟ್‌ನ್ನು ಆಯೋಜಿಸಲಾಗುತ್ತದೆ. ಭಾರತ ಕ್ರಿಕೆಟ್ ತಂಡ ಮಾಜಿ ಬೌಲರ್ ಜಾವಗಲ್ ಶ್ರೀನಾಥ್ ಅವರು ಟೂರ್ನಮೆಂಟ್‌ನ್ನು ಅಂದು ಸಂಜೆ 4 ಗಂಟೆಗೆ ಉದ್ಘಾಟಿಸಲಿದ್ದಾರೆ. ನಿಟ್ಟೆ ವಿಶ್ವವಿದ್ಯಾನಿಲಯದ ಪ್ರೊ ಚಾನ್ಸಲರ್ ಹಾಗೂ ತೇಜಸ್ವಿನಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಎಂ. ಶಾಂತಾರಾಮ ಶೆಟ್ಟಿ, ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಶಾಖೆಯ ಅಧ್ಯಕ್ಷ ಡಾ. ಟಿ. ಎ. ವೀರಭದ್ರಯ್ಯ, ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ್ ಭಂಡಾರಿ ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆಯ ಅಧ್ಯಕ್ಷ ಡಾ. ಸದಾನಂದ ಪೂಜಾರಿ, ಕಾರ್ಯದರ್ಶಿ ಡಾ. ಪ್ರಕಾಶ್ ಹರಿಶ್ಚಂದ್ರ, ಕೋಶಾಧಿಕಾರಿ ಡಾ. ಜ್ಯೂಲಿಯನ್ ಸಲ್ಡಾನ ಹಾಗೂ ವೈದ್ಯಕೀಯ ತಜ್ಞರ ಸಂಘದ ಮಂಗಳೂರು ಶಾಖೆ ಅಧ್ಯಕ್ಷ ಡಾ. ಆನಂದ ಬಂಗೇರ, ಕಾರ್ಯದರ್ಶಿ ಡಾ. ಉಲ್ಲಾಸ ಶೆಟ್ಟಿ, ಕೋಶಾಧಿಕಾರಿ ಡಾ. ಗೋವಿಂದರಾಜ್ ಭಟ್ ಉಪಸ್ಥಿತರಿರುವರು. ಕ್ರಿಕೆಟ್ ಸಂದರ್ಭದಲ್ಲಿ ಮನರಂಜನಾ ಕಾರ್ಯಕ್ರಮದ ಅಂಗವಾಗಿ ಸಂಗೀತ, ಗಾಯನ ಮತ್ತು ಹುಲಿವೇಶ ಕುಣಿತವನ್ನು ಆಯೋಜಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

ವಾರ್ತಾ ಭಾರತಿ 30 Dec 2025 11:18 pm

ಕರ್ನಾಟಕದಲ್ಲಿ ಯುವ ಆಯೋಗದ ಸ್ಥಾಪನೆಗೆ ಸೋಲಿಡಾರಿಟಿ ಯೂತ್ ಮೂವ್‌ಮೆಂಟ್‌ ಆಗ್ರಹ

ಬೆಂಗಳೂರು : ರಾಜ್ಯದಲ್ಲಿ ಯುವ ಆಯೋಗವನ್ನು ಸ್ಥಾಪಿಸುವಂತೆ ಸೋಲಿಡಾರಿಟಿ ಯೂತ್ ಮೂವ್‌ಮೆಂಟ್‌ ಕರ್ನಾಟಕದ ರಾಜ್ಯಾಧ್ಯಕ್ಷರಾದ ಡಾ.ನಸೀಮ್ ಅಹ್ಮದ್ ಅವರು ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಈ ಸಂಬಂಧ ಪ್ರಕಟನೆ ನೀಡಿರುವ ಅವರು, ಇದರಿಂದ ಯುವಕರಿಗೆ ಎದುರಾಗುತ್ತಿರುವ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ, ಮಾನಸಿಕ ಆರೋಗ್ಯ ಮತ್ತು ಉದ್ಯೋಗ ಸಂಬಂಧಿತ ಸಮಸ್ಯೆಗಳಿಗೆ ಪರಿಣಾಮಕಾರಿ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದ್ದಾರೆ. ದೇಶದ ಹಲವು ರಾಜ್ಯಗಳಲ್ಲಿ ಈಗಾಗಲೇ ಯುವ ಆಯೋಗಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ. ಕೇರಳ, ಅಸ್ಸಾಂ, ಮಿಜೋರಾಂ ಮತ್ತು ಬಿಹಾರ ರಾಜ್ಯಗಳ ಅನುಭವಗಳು, ಯುವ ಆಯೋಗಗಳು ಯುವಕರ ಹಕ್ಕುಗಳ ರಕ್ಷಣೆ, ನೀತಿ ರೂಪಣೆ, ಕೌಶಲ್ಯ ಅಭಿವೃದ್ಧಿ, ಉದ್ಯೋಗ, ಮಾದಕ ವ್ಯಸನ ವಿರೋಧಿ ಕ್ರಮಗಳು ಮತ್ತು ಮಾನಸಿಕ ಆರೋಗ್ಯದಂತಹ ಪ್ರಮುಖ ಕ್ಷೇತ್ರಗಳಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂಬುದನ್ನು ಸ್ಪಷ್ಟಪಡಿಸುತ್ತೇವೆ. ಇಂತಹ ಪರಿಸ್ಥಿತಿಯಲ್ಲಿ ಕರ್ನಾಟಕದಲ್ಲಿ ಇನ್ನೂ ಯುವ ಆಯೋಗ ಸ್ಥಾಪನೆಯಾಗದೆ ಇರುವುದು ಅತ್ಯಂತ ವಿಷಾದಕರ ಹಾಗೂ ಯುವಕರ ಮೇಲಿನ ಅನ್ಯಾಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಪ್ರಸ್ತುತ ಸರಕಾರವು 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರಾಜ್ಯದಲ್ಲಿ ಯುವ ಆಯೋಗ ಸ್ಥಾಪಿಸುವುದಾಗಿ ಘೋಷಣೆ ಮಾಡಿತ್ತು. ಸೋಲಿಡಾರಿಟಿ ಯೂತ್ ಮೂವ್‌ಮೆಂಟ್‌ ಸಂಘಟನೆಯ ಬೇಡಿಕೆಯೇನೆಂದರೆ, ಸರಕಾರವು ತನ್ನ ಚುನಾವಣಾ ಭರವಸೆಯನ್ನು ಕಾರ್ಯರೂಪಕ್ಕೆ ತಂದು ತಕ್ಷಣ ಯುವ ಆಯೋಗ ಸ್ಥಾಪನೆಯ ಅಧಿಸೂಚನೆಯನ್ನು ಹೊರಡಿಸಬೇಕು ಎಂದು ಆಗ್ರಹಿಸಿದ್ದಾರೆ. ಕರ್ನಾಟಕದಲ್ಲಿ ಎರಡು ಕೋಟಿಗೂ ಅಧಿಕ ಯುವ ಜನಸಂಖ್ಯೆ ಇದೆ. ಇಂದು ಯುವಕರು ನಿರುದ್ಯೋಗ, ಶಿಕ್ಷಣದಲ್ಲಿನ ಅಸಮಾನತೆ, ಮಾದಕ ವಸ್ತುಗಳ ಹೆಚ್ಚುತ್ತಿರುವ ಬಳಕೆ, ಮಾನಸಿಕ ಒತ್ತಡ, ಆತ್ಮಹತ್ಯೆಗಳ ಆತಂಕಕಾರಿ ಪ್ರಕರಣಗಳು ಮತ್ತು ರಾಜಕೀಯ ಹಾಗೂ ಸಾಮಾಜಿಕ ಪ್ರತಿನಿಧಿತ್ವದ ಕೊರತೆ ಮುಂತಾದ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಯುವಜನಸಂಖ್ಯೆಯ ಪ್ರಮಾಣ ಮತ್ತು ಹೆಚ್ಚುತ್ತಿರುವ ಮಾನಸಿಕ ಆರೋಗ್ಯ ಸಂಕಷ್ಟವನ್ನು ಗಮನಿಸಿದರೆ, ಇನ್ನಷ್ಟು ವಿಳಂಬ ಅಸ್ವೀಕಾರಾರ್ಹ. ಈ ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕಾಗಿ ಸಬಲ, ಸ್ವಾಯತ್ತ ಹಾಗೂ ಜವಾಬ್ದಾರಿಯುತ ಯುವ ಆಯೋಗ ಅನಿವಾರ್ಯವಾಗಿದೆ. ಇದು ರಾಜ್ಯದ ಯುವ ನೀತಿಯ ಉದ್ದೇಶಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದ್ದಾರೆ. ಯುವಕರ ಹಕ್ಕುಗಳ ರಕ್ಷಣೆ ಹಾಗೂ ಉಲ್ಲಂಘನೆಗಳ ತನಿಖೆ, ಶಿಕ್ಷಣ, ಉದ್ಯೋಗ, ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಕುರಿತು ಶಿಫಾರಸುಗಳು, ಮಾನಸಿಕ ಆರೋಗ್ಯ, ವ್ಯಸನ ವಿರೋಧಿ ಕ್ರಮಗಳು ಮತ್ತು ಸಾಮಾಜಿಕ ಅನಿಷ್ಟಗಳ ವಿರುದ್ಧ ಪರಿಣಾಮಕಾರಿ ಕಾರ್ಯತಂತ್ರ, ಯುವಕರ ದೂರುಗಳ ಪರಿಹಾರಕ್ಕೆ ವ್ಯವಸ್ಥಿತ ಮತ್ತು ಪಾರದರ್ಶಕ ವ್ಯವಸ್ಥೆ, ಯುವಕರ ರಾಜಕೀಯ ಮತ್ತು ಸಾಮಾಜಿಕ ನಾಯಕತ್ವವನ್ನು ಉತ್ತೇಜಿಸುವ ಕ್ರಮಗಳು, ರಾಜ್ಯಮಟ್ಟದ ಆಯ್ಕೆಯಾದ ಸಂಸ್ಥೆಗಳು (ವಿಧಾನಸಭೆ/ವಿಧಾನಪರಿಷತ್) ಹಾಗೂ ವಿವಿಧ ನಾಮನಿರ್ದೇಶಿತ ಸಂಸ್ಥೆಗಳಲ್ಲಿ ಯುವಕರ ಪ್ರತಿನಿಧಿತ್ವವನ್ನು ಖಚಿತಪಡಿಸುವುದು, ಜೊತೆಗೆ ಕಾರ್ಪೋರೇಷನ್‌ಗಳು, ಬೋರ್ಡ್‌ಗಳು, ಸಮಿತಿಗಳು ಮತ್ತು ಇತರೆ ಸರ್ಕಾರಿ ಸಂಸ್ಥೆಗಳಲ್ಲಿ ಸಮರ್ಪಕ ಯುವ ಪ್ರತಿನಿಧಿತ್ವಕ್ಕಾಗಿ ಸ್ಪಷ್ಟ ಶಿಫಾರಸುಗಳು ಮತ್ತು ಕಾರ್ಯವಿಧಾನ ರೂಪಿಸುವುದು ಸೇರಿದಂತೆ ಪ್ರಸ್ತಾವಿತ ಯುವ ಆಯೋಗಕ್ಕೆ ಈ ಅಧಿಕಾರಗಳು ಮತ್ತು ಜವಾಬ್ದಾರಿಗಳನ್ನು ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ, ಸಚಿವ ಸಂಪುಟದ ಸದಸ್ಯರು ಮತ್ತು ಶಾಸಕರು ಯುವಕರ ಭವಿಷ್ಯವನ್ನು ಸುರಕ್ಷಿತಗೊಳಿಸಿ ರಾಜ್ಯದ ಸಮಗ್ರ ಅಭಿವೃದ್ಧಿಯನ್ನು ಖಚಿತಪಡಿಸಲು ಯುವ ಆಯೋಗ ಸ್ಥಾಪನೆಯ ತುರ್ತು ಘೋಷಣೆ ಮಾಡಬೇಕು ಎಂದು ಮನವಿ ಮಾಡಿದರು. 

ವಾರ್ತಾ ಭಾರತಿ 30 Dec 2025 11:10 pm

ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ಎಲ್ಲೆಲ್ಲಿ ಸಂಚಾರ ನಿರ್ಬಂಧ, ಪಾರ್ಕಿಂಗ್‌ ವ್ಯವಸ್ಥೆ ಎಲ್ಲೆಲ್ಲಿ ಇರಲಿದೆ?

ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಈಗಾಗಲೇ ಅದ್ದೂರಿಯಾಗಿ ಸಿದ್ಧತೆ ನಡೆಸಲಾಗುತ್ತಿದೆ. ಎಂ.ಜಿ. ರಸ್ತೆ, ಬ್ರಿಗೇಡ್‌ ರಸ್ತೆ, ಕೋರಮಂಗಲದ ರಸ್ತೆಗಳು ವಿದ್ಯುತ್‌ ಅಲಂಕಾರಗಳಿಂದ ಕಂಗೊಳಿಸುತ್ತಿವೆ. ಯುವ ಸಮೂಹ ಸೇರುವ ಸ್ಥಳಗಳಲ್ಲಿ ವಿಶೇಷ ಆಫರ್‌ಗಳು, ಡಿಜೆ ಪಾರ್ಟಿಗಳು ಆಯೋಜನೆಗೊಂಡಿವೆ. ಹೊಸವರ್ಷದ ದಿನ ಯಾವುದೇ ರೀತಿಯ ಅವಘಡ ಸಂಭವಿಸಿದಂತೆ ತಡೆಯಲು ಪೊಲೀಸರು ಹದ್ದಿನ ಕಣ್ಣು ಇರಿಸಿದ್ದಾರೆ. ಯಾವ್ಯಾವ ರಸ್ತೆಗಳಿಗೆ ಸಂಚಾರ ನಿರ್ಬಂಧ, ಎಲ್ಲೆಲ್ಲಿ ವಾಹನಗಳು ನಿಲ್ಲಿಸಬಾರದು ಎನ್ನುವ ಬಗ್ಗೆ ಮಾಹಿತಿ ಈ ಲೇಖನದಲ್ಲಿ ಇದೆ.

ವಿಜಯ ಕರ್ನಾಟಕ 30 Dec 2025 11:02 pm

ಚಿಂಚೋಳಿ | ಜೆಡಿಎಸ್ ಪಕ್ಷಕ್ಕೆ ಸಂಜೀವನ ಯಾಕಾಪೂರ್ ರಾಜೀನಾಮೆ

ಚಿಂಚೋಳಿ: ನನ್ನ ವೈಯಕ್ತಿಕ ಕಾರಣಗಳಿಂದ ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಚಿಂಚೋಳಿ ಮತಕ್ಷೇತ್ರದ ಹಿರಿಯ ಮುಖಂಡ ಸಂಜೀವನ ರಮೇಶ ಯಾಕಾಪೂರ ಹೇಳಿದ್ದಾರೆ. ಚಂದಾಪೂರ ಪಟ್ಟಣದ ಟಿಎಪಿಎಂಎಸ್ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ನಾನು ಜೆಡಿಎಸ್ ನಲ್ಲಿದ್ದಾಗ ಪಕ್ಷ ಸಂಘಟನೆಗೆ ಶ್ರಮಿಸಿದ್ದೇನೆ. ಹಲವು ಜನಪರ ಹೋರಾಟಗಳಲ್ಲಿ ಭಾಗವಹಿಸಿದ್ದೇನೆ, ಜನ ಪರಧ್ವನಿ ಎತ್ತಿದ್ದೇನೆ. ಕಳೆದ ಎರಡ್ಮೂರು ವರ್ಷಗಳಿಂದ ಚಿಂಚೋಳಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜೆಡಿಎಸ್ ಪಕ್ಷ ಕಟ್ಟಿ ಬೆಳೆಸಿದ್ದೇನೆ, ಈಗ ನನ್ನಿಂದ ಸಾದ್ಯವಾಗದ ಕಾರಣದಿಂದ ಪಕ್ಷಕ್ಕೆ ನನ್ನಿಂದ ಯಾವುದೆ ಮುಜಗರ ಅಡ್ಡಿ ಆಗಬಾರದೆಂದು ಮನಗಂಡು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದೇವೆ. ಈಗಾಗಲೇ ನನ್ನ ರಾಜಿನಾಮೆ ಪತ್ರವನ್ನು ಕರ್ನಾಟಕ ಪ್ರದೇಶ ಜನತಾ ದಳ ರಾಜ್ಯ ಅಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ರವಾನಿಸಲಾಗಿದೆ ಎಂದರು. ಕಳೆದ 2023 ವಿಧಾನ ಸಭೆ ಚುನಾವಣೆಯಲ್ಲಿ ಚಿಂಚೋಳಿ ಮಿಸಲು ಕ್ಷೇತ್ರದಿಂದ ಜೆ.ಡಿ.ಎಸ್ ಪಕ್ಷದಿಂದ ಟಿಕೇಟ್ ನೀಡಿ ಅವಕಾಶ ಮಾಡಿಕೊಟ್ಟ ಜೆ.ಡಿ.ಎಸ್ ಪಕ್ಷದ ವರಿಷ್ಠರಾದ ಹೆಚ್.ಡಿ ದೇವೆಗೌಡರಿಗೆ ಹಾಗೂ ರಾಜ್ಯ ಅಧ್ಯಕ್ಷರಾದ ಹೆಚ್ ಡಿ ಕುಮಾರಸ್ವಾಮಿ ರವರಿಗೆ ಹಾಗೂ ಪಕ್ಷದ ರಾಜ್ಯ ಮತ್ತು ಜಿಲ್ಲಾ ಮುಖಂಡರಿಗೆ ಹಾಗೂ ತಾಲೂಕಿನ ಎಲ್ಲಾ ಮುಖಂಡರು ಕಾರ್ಯಕರ್ತರಿಗೆ ನಾನು ನನ್ನ ಧನ್ಯವಾದಗಳನ್ನು ಹೇಳುತ್ತೇನೆ, ಮುಂದಿನ ನಿರ್ಣಯವನ್ನು ನನ್ನ ಬೆಂಬಲಿಗರು ನನ್ನ ಹಿತೈಷಿಗಳನ್ನು ಹಾಗೂ ಮುಖಂಡರ ಸಭೆ ಮಾಡಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. ಈ ವೇಳೆ ವಿಷ್ಟಣುಕಾಂತ ಮೂಲಗೆ, ಗೌರಿಶಂಕರ ಸೂರವಾರ, ರಾಹುಲ ಯಾಕಾಪೂರ, ರಘವೀರ ದೇಸಾಯಿ, ಮಲ್ಲಿಕಾರ್ಜುರ್ನ ದೇಸಾಯಿ, ಮಲ್ಲಿಕಾರ್ಜುನ ಪೂಜಾರಿ, ಹಣಮಂತ ಕಟ್ಟಿ, ರೇವಣಸಿದ್ದಪ್ಪ ಬುಬುಲಿ, ಯಶವಂತ, ಚಂದ್ರಕಾಂತ ಧರಿ, ನಾಗೇಂದ್ರಪ್ಪ, ಬಸವರಾಜ, ಸೈಯದ್, ನಿಯಾಜ್ ಅಲಿ, ವೀರಾರೆಡ್ಡಿ, ಅಹ್ಮದ್ ಸೇರಿದಂತೆ ಇತರ ಮುಖಂಡರು ಸಾಮೂಹಿಕ ರಾಜಿನಾಮೆ ನೀಡಿದರು.

ವಾರ್ತಾ ಭಾರತಿ 30 Dec 2025 11:01 pm

ಕೊಪ್ಪಳ | ಮುಳ್ಳುಕಂಟಿಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಪ್ಪಳ: ತಾಲೂಕಿನ ಹುಲಿಗಿಯ ಹುಲಿಗೆಮ್ಮ ದೇವಿ ದೇವಸ್ಥಾನದ ಪ್ರಸಾದ ನಿಲಯದ ಸಮೀಪದ ಮುಳ್ಳುಕಂಟಿಯಲ್ಲಿ ಮಂಗಳವಾರ ನವಜಾತ ಹೆಣ್ಣು ಶಿಶು ಪತ್ತೆಯಾಗಿದ್ದು, ಸಾರ್ವಜನಿಕರ ಸಮಯಪ್ರಜ್ಞೆ ಹಾಗೂ ಕಾಳಜಿಯಿಂದ ಶಿಶುವಿನ ಪ್ರಾಣ ಉಳಿದಿದೆ. ಮುಳ್ಳುಕಂಟಿಯಿಂದ ಶಿಶು ಅಳುವ ಸದ್ದು ಕೇಳಿಬಂದಾಗ ಅಲ್ಲಿದ್ದ ಸಾರ್ವಜನಿಕರು ಹೋಂಗಾರ್ಡ್ ಸಿಬ್ಬಂದಿಯ ಗಮನಕ್ಕೆ ತಂದಿದ್ದಾರೆ. ತಕ್ಷಣವೇ ಮಕ್ಕಳ ಸಹಾಯವಾಣಿ (ಚೈಲ್ಡ್‌ಲೈನ್)ಗೆ ಮಾಹಿತಿ ನೀಡಲಾಗಿದ್ದು, ಶಿಶುವನ್ನು ಸುರಕ್ಷಿತವಾಗಿ ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಶಿಶುವನ್ನು ಜಿಲ್ಲಾಕೇಂದ್ರದಲ್ಲಿರುವ ತಾಯಿ ಮತ್ತು ಮಗುವಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಹುಲಿಗಿಯ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಪ್ರತಿ ಮಂಗಳವಾರ ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ, ಇಷ್ಟೊಂದು ಜನಸಂದಣಿಯ ನಡುವೆಯೂ ಪೋಷಕರು ಶಿಶುವನ್ನು ಮುಳ್ಳುಕಂಟಿಯಲ್ಲಿ ಬಿಟ್ಟು ಪರಾರಿಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಶಿಶುವಿಗೆ ಜನಿಸಿದ ಕೆಲವೇ ಗಂಟೆಗಳಾಗಿದ್ದು, ಕರಳುಬಳ್ಳಿ ಸಹ ಶಿಶುವಿನೊಂದಿಗೆ ಇದ್ದುದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳೀಯರು ಶಿಶುವನ್ನು ಎತ್ತಿಕೊಂಡು ಸಮಾಧಾನಪಡಿಸಲು ಪ್ರಯತ್ನಿಸಿದ್ದು, ಅಮ್ಮನ ಎದೆಹಾಲು ಇಲ್ಲದೆ ಹಸಿವಿನಿಂದ ಮಗು ಒದ್ದಾಡುತ್ತಿರುವುದು ಕಂಡುಬಂದಿದೆ. ಶಿಶುವಿನ ತೂಕ ಸುಮಾರು 2.4 ಕಿಲೋಗ್ರಾಂ ಇದೆ ಎಂದು ವೈದ್ಯರು ತಿಳಿಸಿದ್ದಾರೆ. ಹೋಂಗಾರ್ಡ್ ಸಿಬ್ಬಂದಿಗಳಾದ ಶಿವಕುಮಾರ್ ಹಾಗೂ ಮಾರುತಿ ಅವರ ಸಮಯಪ್ರಜ್ಞೆಯಿಂದ ಶಿಶುವಿನ ಪ್ರಾಣ ಉಳಿದಿದೆ. ಮುಳ್ಳುಕಂಟಿಯಲ್ಲಿ ಬಿದ್ದಿದ್ದರಿಂದ ಶಿಶುವಿಗೆ ಹುಳುಗಳು ಕಚ್ಚಿ ನಂಜಾಗಿರುವ ಸಾಧ್ಯತೆ ಇದ್ದು, ತಜ್ಞ ವೈದ್ಯರು ಶಿಶುವಿನ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ವಾರ್ತಾ ಭಾರತಿ 30 Dec 2025 10:57 pm

ಯಾದಗಿರಿ | ಮೂಢನಂಬಿಕೆ ಅಳಿಸಿ ವೈಜ್ಞಾನಿಕ ಮನೋಭಾವ ಬೆಳೆಸೋಣ : ಡಾ.ದಾಕ್ಷಾಯಣಿ ಎಸ್.ಅಪ್ಪ

ರಾಜ್ಯಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನ ಸಮಾರೋಪ

ವಾರ್ತಾ ಭಾರತಿ 30 Dec 2025 10:53 pm

ಹೊಸ ವರ್ಷಾಚರಣೆ: ಮಾರ್ಗಸೂಚಿಗಳ ಕಡ್ಡಾಯವಾಗಿ ಪಾಲಿಸಲು ಪೊಲೀಸ್ ಆಯುಕ್ತರ ಆದೇಶ

ಮಂಗಳೂರು, ಡಿ.30: ಹೊಸ ವರ್ಷಾಚರಣೆ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆಯು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಇವುಗಳನ್ನು ಎಲ್ಲ ಕಾರ್ಯಕ್ರಮಗಳ ಆಯೋಜಕರು, ಸಾರ್ವಜನಿಕರು ಕಡ್ಡಾಯವಾಗಿಪಾಲಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಆದೇಶ ನೀಡಿದ್ದಾರೆ. ಮಾರ್ಗಸೂಚಿಗಳ ವಿವರ ಇಂತಿವೆ. *ಅನುಮತಿ ಪಡೆಯದೇ ಸಾರ್ವಜನಿಕವಾಗಿ ಯಾವುದೇ ಆಚರಣೆಗಳನ್ನು ಮಾಡಲು ಅವಕಾಶ ಇರುವುದಿಲ್ಲ. *ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಗಳು,ಕಿರುಕುಳವಾಗದಂತೆ ಜವಾಬ್ದಾರಿಯುತವಾಗಿ ಸಂಭ್ರಮಾಚರಣೆ ನಡೆಸುವಂತೆ ಸೂಚಿಸಲಾಗಿದೆ. *ಸಂಭ್ರಮಾಚರಣೆ ಹೆಸರಿನಲ್ಲಿ ಅತೀವೇಗದ ಚಾಲನೆ, ವೀಲಿಂಗ್‌ನ ನಡೆಸುವುದು, ಅಸಭ್ಯವರ್ತನೆ, ಸಾರ್ವಜನಿಕ ಕಿರುಕುಳದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. *ನಗರದಾದ್ಯಂತ ಬಂದೋಬಸ್ತ್ ಕರ್ತವ್ಯ ಬಗ್ಗೆ ಪಿಸಿಆರ್ ವಾಹನಗಳು, ಹೈವೇಪೆಟ್ರೋಲ್ ವಾಹನಗಳು, ಪಿಕೆಟಿಂಗ್ ಪಾಯಿಂಟ್, ಚೆಕ್ ಪೋಸ್ಟ್ ಮತ್ತು ರೌಂಡ್ಸ್ ಕರ್ತವ್ಯಕ್ಕೆ ಅಧಿಕಾರಿ, ಸಿಬ್ಬಂದಿಯನ್ನು ನಿಯೋಜಿಸಲಾ ಗಿದ್ದು, ಹೆಚ್ಚುವರಿಯಾಗಿ ಸೂಕ್ಷ್ಮ ಸ್ಥಳಗಳಲ್ಲಿ ಕೆಎಸ್‌ಆರ್‌ಪಿ, ಎಸ್‌ಎಎಫ್ ಹಾಗೂ ಸಿಎಆರ್‌ಪಿ ತುಕಡಿಗಳನ್ನುನಿಯೋಜಿಸಲಾಗಿದೆ. ಸಾರ್ವಜನಿಕರು ಯಾವುದೇ ದೂರುಗಳಿಗೆ 112 ಸಂಖ್ಯೆ ಕರೆ ಮಾಡಬಹುದು. 112ಸಂಖ್ಯೆಯು ಕರೆಗೆ ಲಭ್ಯವಾ ಗದೇ ಇದ್ದಲ್ಲಿ ಮಂಗಳೂರು ನಗರ ಪೊಲೀಸ್ ನಿಯಂತ್ರಣ ಕೊಠಡಿ ಸಂಖ್ಯೆ 0824-2220800 ಅಥವಾ 9480802321 ಗೆ ಕರೆಮಾಡ ಬಹುದಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರ ಪ್ರಕಟನೆ ತಿಳಿಸಿದೆ.

ವಾರ್ತಾ ಭಾರತಿ 30 Dec 2025 10:49 pm

ಬಳ್ಳಾರಿ | ಶಿಕ್ಷಕರ ಕ್ಷೇತ್ರದ ಚುನಾವಣೆಯ ಅಂತಿಮ ಮತದಾರರ ಪಟ್ಟಿ ಪ್ರಕಟ : ಡಿಸಿ ನಾಗೇಂದ್ರ ಪ್ರಸಾದ್ ಕೆ.

ಬಳ್ಳಾರಿ,ಡಿ.30: ಚುನಾವಣಾ ಆಯೋಗದ ವೇಳಾಪಟ್ಟಿಗನುಗುಣವಾಗಿ ಮಂಗಳವಾರ ವಿಧಾನಪರಿಷತ್‌ನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ತಿಳಿಸಿದ್ದಾರೆ. ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 3,302 ಮತದಾರರು ನೋಂದಣಿಯಾಗಿದ್ದಾರೆ. ಬಳ್ಳಾರಿ, ಬಳ್ಳಾರಿ ನಗರ, ಕಂಪ್ಲಿ, ಕುರುಗೋಡು, ಸಂಡೂರು, ಸಿರುಗುಪ್ಪ ಸೇರಿ ಬಳ್ಳಾರಿ ಜಿಲ್ಲೆಯಲ್ಲಿ ಗಂಡು-1,775, ಹೆಣ್ಣು-1,527 ಸೇರಿ ಒಟ್ಟು 3,302 ಮತದಾರರು ನೋಂದಾಯಿಸಿಕೊಂಡಿದ್ದಾರೆ. ಅಂತಿಮ ಮತದಾರರ ಪಟ್ಟಿಯ ನಿರಂತರ ನೋಂದಣಿ ಪ್ರಕ್ರಿಯೆಯಾಗಿದ್ದು, ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೂ ಅರ್ಹರು ಅವಶ್ಯಕ ದಾಖಲೆಗಳೊಂದಿಗೆ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಈಶಾನ್ಯ ಶಿಕ್ಷಕರ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿ ತಿಳಿಸಿದ್ದಾರೆ.

ವಾರ್ತಾ ಭಾರತಿ 30 Dec 2025 10:36 pm

ಕೊರಗ ಸಮುದಾಯಕ್ಕೆ ಜಿಲ್ಲಾಡಳಿತ, ತಾಲೂಕು ಕಚೇರಿ, ಮನಪಾದಿಂದ ಮೋಸ: ಮುಖಂಡರ ಆರೋಪ

ಸುರತ್ಕಲ್ : ಇಲ್ಲಿನ ಗ್ರಾಮದ ಸರ್ವೆ ನಂಬರ್ 211-ಬಿ ಯಲ್ಲಿನ ಬಡ ಕೊರಗ ಕುಟುಂಬಗಳಿಗೆ ಎರಡೆರಡು ಬಾರಿ ಭೂಮಂಜೂರಾತಿ ಮಾಡುವ ಮೂಲಕ ಜಿಲ್ಲಾಡಳಿತ, ತಾಲೂಕು ಕಚೇರಿ ಮತ್ತು ಮಂಗಳೂರು ಮಹಾನಗರ ಪಾಲಿಕೆ ಮೋಸ ಮಾಡಿದೆ ಎಂದು ಆರೋಪಿಸಿ ಕೊರಗ ಸಮುದಾಯದ ಮುಖಂಡರು ಆಕ್ರೋಶ‌ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಸುರತ್ಕಲ್ ವಲಯದ ವತಿಯಿಂದ ಸರ್ವೆ ನಂಬರ್ 211-ಬಿಯಲ್ಲಿನ ಬಡ ಕೊರಗ ಕುಟುಂಬಗಳಿಗೆ ಎರಡೆರಡು ಬಾರಿ ಭೂಮಂಜೂರಾತಿ ಮಾಡುವ ಮೂಲಕ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಇಂದು ಸುರತ್ಕಲ್ ನಾಡಕಚೇರಿ ಎದುರು ಪ್ರತಿಭಟನೆ ನಡೆಸಿದರು. 1981ರಲ್ಲಿ ಸುರತ್ಕಲ್ ಗ್ರಾಮ ಪಂಚಾಯತ್ ಆಗಿದ್ದ ಸಂದರ್ಭ ಸರ್ವೇ ನಂಬರ್ 211 ಬಿ ಮಧ್ಯ ಎಂಬಲ್ಲಿ ಕೊರಗ ಸಮುದಾಯದ ಸುನಾರು 31ಮಂದಿಗೆ 5ಸೆಂಟ್ಸ್ ನಂತೆ ನವೇಶನ‌ ಮಂಜೂರಾತಿ ಮಾಡಲಾಗಿತ್ತು. ಅದರಂತೆ ಕೆಲವರು ಸರಕಾರದ ಸಹಾಯ ಧನ ಪಡೆದುಕೊಂಡು ಮನೆಗಳನ್ನು ನಿರ್ಮಿಸಿದ್ದರು. ಬಳಿಕ 2003ರಲ್ಲಿ ಮಹಾ ನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿದ ಬಳಿಕ ಅದೇ 5ಸೆಂಟ್ಸ್ ನಿವೇಶದ ಬದಲಿಗೆ ಪ್ರತೀ ಕುಟುಂಬಕ್ಕೆ 1.25ಸೆಂಟ್ಸ್ ನಿವೇಶನ ಮಂಜೂರು ಮಾಡಿ ಹಕ್ಕುಪತ್ರ ನೀಡಿದ್ದಾರೆ‌. ಇದೇ ವಿಚಾರವಾಗಿ ಕೊರಗ ಸಮುದಾಯದ ಮುಖಂಡರು ಹಲವು ಬಾರಿ ಸಂಬಂಧ ಪಟ್ಟ ಅಧಿಕಾರಿಗಳನ್ನು ಭೇಟಿ ಯಾಗಿ ಮನವಿಗಳನ್ನು ಸಲ್ಲಿಸಿದ್ದರು. ಅಲ್ಲದೆ, 2025ರ ಏಪ್ರಿಲ್ 15ರಂದು ತಹಶೀಲ್ದಾರ್ ಮತ್ತು ಮಹಾ ನಗರ ಪಾಲಿಕೆಯ ಆಯುಕ್ತರಿಗೆ ಮನವಿ ಸಲ್ಲಿಸಿದ್ದು ಈ ವರೆಗೆ ಯಾವುದೇ ಪ್ರಯೋಜನವಾಗಿಲ್ಲ‌ ಎಂದು ದೂರಿದ್ದಾರೆ. ಮನಪಾದ ನಿರ್ಲಕ್ಯ ಮತ್ತು ತಪ್ಪುಗಳಿಂದಾಗಿ ನಮ್ಮ ಮನೆಗಳನ್ನು ಸರಿಪಡಿಸುವುದಾಗಲೀ, ಹೊಸ ಮನೆಗಳ ನಿರ್ಮಾಣ ಮಾಡುವುದಾಗಲೀ ಸಾಧ್ಯವಾಗುತ್ತಿಲ್ಲ. ಹೀಗಾಗಿ ತಕ್ಷಣ ನಮ್ಮ ಮನವಿಯನ್ನು ಪುರಸ್ಕರಿಸಿ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಕೊರಗ ಸಮುದಾಯದ ಮುಖಂಡರು ಪ್ರತಿಭಟನೆ ನಡೆಸಿ ಆಗ್ರಹಿಸಿದರು. ಈ ವೇಳೆ ಮಾತನಾಡಿದ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಮಿತಿ ಸದಸ್ಯರಾದ ಶೇಖರ ವಾಮಂಜೂರು ಅವರು, ನಮ್ಮ ಸಮುದಾಯಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ತಪ್ಪುಗಳಿಂದಾಗಿ ನಮಗೆ ತೊಂದರೆಗಳಾಗುತ್ತಿದೆ. ನಮಗೆ ಕೈಗೆ ಬೆನ್ನೆ ಸವರಿ ಮುಂಗೈನೆಕ್ಕಿಸುವ ಕೆಲಸ ಅಧಿಕಾರಿಗಳು ಮಾಡುತ್ತಿದ್ದಾರೆ. ನಮ್ಮ‌ ಸಮಸ್ಯೆಗಳನ್ನು ಅಧಿಕಾರಿಗಳ ಮುಂದೆ ಕೊಂಡುಹೋದರೆ ಅವರು ಬೇರೆ ಬೇರೆ ಕಾರಣಗಳನ್ನು ನೀಡಿ ನಮ್ಮನ್ನು ಅಲೆದಾಡಿಸುತ್ತಿದ್ದಾರೆ. ನಮ್ಮ ಬೇಡಿಕೆಗಳನ್ನು ಶೀಘ್ರ ನೆರವೇರಿಸಬೇಕು ಎಂದು ಆಗ್ರಹಿಸಿದರು. ಬಳಿಕ ಪ್ರತಿಭಟನಾಕಾರರು ಸುರತ್ಕಲ್ ವಲಯದ ಉಪ ತಹಶೀಲ್ದಾರ್ ನವೀನ್ ಅವರಿಗೆ ಮನವಿಪತ್ರ ನೀಡಿ ತಮ್ಮ ಬೇಡಿಕೆಗಳನ್ನು ಅವರ‌ ಮುಂದಿಟ್ಟರು. ಮನವಿ ಸ್ವೀಕರಿಸಿ‌ ಮಾತನಾಡಿದ ಉಪತಹಶೀಲ್ದಾರ್ ಅವರು, ಕೊರಗ ಸಮುದಾಯದ ಸಮಸ್ಯೆಗಳನ್ನು ಕೂಲಂಕಷವಾಗಿ ವಿವರಿಸಿ ತಕ್ಷಣವೇ ಮನವಿಯನ್ನು ತಹಶೀಲ್ದಾರ್, ಜಿಲ್ಲಾಧಿಕಾರಿ ಗಳಿಗೆ ತಲುಪಿಸಲಾಗುವುದು. ಶೀಘ್ರವೇ ಮಧ್ಯ ಸಮುದಾಯದ ಕಾಲನಿಗೆ ಭೇಟಿ ನೀಡಿ ಪರಿಹಾರ ಯೋಜನೆಗಳನ್ನು ರೂಪಿಸಲಾಗುವುದು ಎಂದು ಭರವಸೆ ನೀಡಿದರು. ನಾವು 5ಸೆಂಟ್ಸ್ ನಿವೇಶನ ಹೊಂದಿದ್ದರೂ ಮನಪಾ ನಮಗೆ 1.25 ಸೆಂಟ್ಸ್ ನ ಹಕ್ಕುಪತ್ರ ನೀಡಿದೆ. ಇದು ಸುಳ್ಳಾದ ಹಕ್ಕು ಪತ್ರ. ಈ ಹಕ್ಕು ಪತ್ರದಿಂದ ನಮಗೆ ಹೊಸ ಮನೆ‌ ನಿರ್ಮಾಣಕ್ಕೆ ತೊಂದರೆಯಾಗಿದೆ. ಅಧಿಕಾರಿಗಳು ನಮ್ಮ ಬೇಡಿಕೆಗಳನ್ನು ಈಡೇರಿಸಲು 2ತಿಂಗಳ ಕಾಲಾವಕಾಶ ನೀಡುತ್ತಿದ್ದೇವೆ. ಆಬಳಿಕವೂ ನಮ್ಮ ಸಮಸ್ಯೆ ಪರಿಹಾರವಾಗದಿದ್ದಲ್ಲಿ ಸಮುದಾಯದ ಎಲ್ಲರೂ ಮಕ್ಕಳು ಮರಿಗಳೊಂದಿಗೆ ಮನಾಪ ಕಚೇರಿಯಲ್ಲೆ ಬಂದು ಕುಳಿತುಕೊಳ್ಳುತ್ತೇವೆ. - ಕರಿಯ ಕೆ‌.,  ಅಧ್ಯಕ್ಷ, ವಾಮಂಜೂರು ವಲಯ 1981ರಲ್ಲಿ ನೀಡಿದ್ದ 5ಸೆಂಟ್ಸ್ ನಿವೇಶನ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿದ ಬಳಿಕ ಯಾಕೆ 1.25 ಸೆಂಟ್ಸ್ ಆಯಿತು. ಅಧಿಕಾರಿಗಳು ಕಣ್ಣುಮುಚ್ಚಿ ಕೆಲಸ ಮಾಡುತ್ತಿದ್ದಾರಾ?. ಅಧಿಕಾರಿಗಳು ಕೊರಗ ಸಮುದಾಯ ವನ್ನು ಅವರ ಸಂವಿಧಾನ ಬದ್ಧ ಹಕ್ಕುಗಳನ್ನು ಪಡೆದು ಕೊಳ್ಳಲು ಅಲೆದಾಡಿಸುತ್ತಿದ್ದಾರೆ. ಅಧಿಕಾರಿಗಳು ಅವರನ್ನೂ ಮನುಷ್ಯರೆಂದು ಪರಿಗಣಿಸಿದಂತೆ ಇಲ್ಲ. ಹಾಗಾಗಿ ಅವರನ್ನು ಮನುಷ್ಯರಾಗಿ ಪರಿಗಣಿಸಿ ಅವರಜೊತೆ ನಿಂತು ಅವರ ಅಭಿವೃದ್ಧಿಗೆ ಶ್ರಮಿಸಬೇಕು. - ಶ್ರೀನಾಥ್ ಕುಲಾಲ್ ಕಾಟಿಪಳ್ಳ ಗೌರವ ಸಲಹೆಗಾರರು, ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ

ವಾರ್ತಾ ಭಾರತಿ 30 Dec 2025 10:33 pm

ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಮೃತ್ಯು ಆರೋಪ: ಸರ್ಜನ್ ವರದಿಯಂತೆ ಪ್ರಕರಣ ದಾಖಲು

ಕಾರ್ಕಳ, ಡಿ.30: ವೈದ್ಯರ ನಿರ್ಲಕ್ಷ್ಯದ ಕುರಿತು ಉಡುಪಿ ಜಿಲ್ಲಾ ಸರ್ಜನ್ ನೀಡಿದ ವರದಿಯ ಆಧಾರದಂತೆ ಕಾರ್ಕಳ ಸ್ಪಂದನಾ ಆಸ್ಪತ್ರೆಯ ಮೂವರು ವೈದ್ಯರ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಪರೀತ ಹೊಟ್ಟೆ ನೋವು ಕಾಣಿಸಿಕೊಂಡ ಕಾರಣಕ್ಕೆ ಝಬೇದ್(52) ಎಂಬವರು ಮೇ 10ರಂದು ಕಾರ್ಕಳ ಸ್ಪಂದನಾ ಆಸ್ಪತ್ರೆಗೆ ಹೋಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಡ್ರಿಪ್ಸ್ ಹಾಕಿದರು. ಈ ವೇಳೆ ವೈದ್ಯರು ಬಂದು ಪರಿಶೀಲಿಸುವಂತೆ ಝುಬೇದ ಅವರ ಮಗಳು ಮುಬೀನಾ ಕೇಳಿಕೊಂಡರು, ವೈದ್ಯರು ಬಂದಿರುವುದಿಲ್ಲ, ನಂತರ ಬಂದ ಡಾ.ನಾಗರತ್ನ ಕೂಡಲೇ ಆಪರೇಷನ್ ಮಾಡಬೇಕು, ಝುಬೇದ ಅವರ ಜೀವಕ್ಕೆ ಅಪಾಯ ಇದೆ ಎಂದು ಹೇಳಿದರು. ನಂತರ ಅವರನ್ನು ಆಸ್ಪತ್ರೆಯ ಥಿಯೇಟರ್‌ಗೆ ಕರೆದುಕೊಂಡು ಹೋಗಿದ್ದು, ನಂತರ ಡಾ.ನಾಗರತ್ನ ಡಾ.ರೆಹಮತ್ತುಲ್ಲಾ ಹಾಗೂ ಡಾ.ತುಷಾರ ಆಪರೇಷನ್ ಥಿಯೇಟರ್ ಒಳಗಡೆ ಹೋಗಿದ್ದು, ನಂತರ ಹೊರಗಡೆ ಬಂದ ಡಾ.ರೆಹಮತ್ತುಲ್ಲಾ, ಝುಬೇದ ಮೃತಪಟ್ಟಿರುವುದಾಗಿ ತಿಳಿಸಿದರು. ಝಬೇದ್ ಅವರಿಗೆ ವೈದ್ಯಾಧಿಕಾರಿಯವರು ಸಮಯಕ್ಕೆ ಸರಿಯಾದ ಚಿಕಿತ್ಸೆ ನೀಡದೇ ಹಾಗೂ ಸರಿಯಾಗಿ ಪರೀಕ್ಷೆ ಮಾಡದೇ ನಿರ್ಲಕ್ಷತನದಿಂದ ಆಪರೇಷನ್ ಮಾಡಿರುವುದು ಎಂದು ಆರೋಪಿಸಿ ಮುಬೀನಾ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಮೃತ ಝಬೇದ್ ಅವರ ಮರಣದ ಬಗ್ಗೆ ಹಾಗೂ ವೈಧ್ಯಾಧಿಕಾರಿಯವರ ನಿರ್ಲಕ್ಷತೆಯ ಬಗ್ಗೆ ವಿಚಾರಣೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಅವರಿಗೆ ಕೋರಿಕೆ ಪತ್ರ ನೀಡಿದ್ದು ಈ ಬಗ್ಗೆ ಉಡುಪಿ ಜಿಲ್ಲಾಸ್ಪತ್ರೆಯ ಸರ್ಜನ್ ಡಾ.ಎಚ್.ಅಶೋಕ ಪರಿಶೀಲನೆ ನಡೆಸಿ ವರದಿ ನೀಡಿದ್ದರು. ಈ ವರದಿಯಲ್ಲಿ ಆರೋಪಿ ವೈಧ್ಯಾಧಿಕಾರಿಗಳಾದ ಡಾ.ನಾಗರತ್ನ ಡಾ.ರೆಹಮತ್ತುಲ್ಲಾ ಹಾಗೂ ಡಾ.ತುಷಾರ ಎಂಬವರು ಆಪರೇಶನ್ ಮಾಡುವ ಮೊದಲು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ ಇರುವುದು ಮತ್ತು ಸಾಕಷ್ಟು ಕಾಲಾವಕಾಶ ಇದ್ದರೂ ರೋಗಿಯ ಸ್ಥಿತಿಗತಿಯ ಬಗ್ಗೆ ರೋಗಿಗೆ ಸಂಬಂಧ ಪಟ್ಟವರಿಗೆ ಮಾಹಿತಿ ನೀಡದೇ ಇರುವುದು ಕಂಡು ಬಂದಿದೆ. ಅದೇ ರೀತಿ ರೋಗಿ ಆಪರೇಷನ್ ಆಗುವಾಗಲೇ ಮೃತಪಟ್ಟಿ ರುವುದು ವೈದ್ಯಾಧಿಕಾರಿಗಳ ಲಿಖಿತ ಹೇಳಿಕೆಯಿಂದ ದೃಡಪಟ್ಟಿದೆ. ಅದರಂತೆ ಶಸ್ತ್ರ ಚಿಕಿತ್ಸೆ ನೀಡಿದ ವೈದ್ಯರ ನಿರ್ಲಕ್ಷತನ ಮೇಲ್ಮೊಟಕ್ಕೆ ಕಂಡು ಬಂದಿರುವುದು ಈ ವರದಿ ಅಭಿಪ್ರಾಯ ಪಟ್ಟಿದೆ. ಅದರಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಮೂವರು ವೈದ್ಯರ ವಿರುದ್ಧ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 30 Dec 2025 10:27 pm

ಬೆಂಗಳೂರಿನಲ್ಲಿ ಜ.4ರಂದು 23ನೇ ಚಿತ್ರಸಂತೆ;ಎಲ್ಲಿಂದ ಎಲ್ಲಿಗೆ ಮೆಟ್ರೋ ಫೀಡರ್‌ ಬಸ್‌ ಸೇವೆ, ಏನೆಲ್ಲ ವ್ಯವಸ್ಥೆ ಇರಲಿದೆ?

ಬೆಂಗಳೂರಿನಲ್ಲಿ ಜ.4ರಂದು 23ನೇ ಚಿತ್ರಸಂತೆ ಕುಮಾರಕೃಪಾ ರಸ್ತೆಯಲ್ಲಿ ನಡೆಯಲಿದೆ. 'ಪ್ರಕೃತಿ' ವಿಷಯಾಧಾರಿತವಾಗಿ 22 ರಾಜ್ಯಗಳು, 4 ಕೇಂದ್ರಾಡಳಿತ ಪ್ರದೇಶಗಳ 1500ಕ್ಕೂ ಹೆಚ್ಚು ಕಲಾವಿದರು ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಕಲಾ ಪ್ರದರ್ಶನ ಉದ್ಘಾಟಿಸಲಿದ್ದಾರೆ. ಸುಮಾರು 4-5 ಲಕ್ಷ ಮಂದಿ ಭೇಟಿ ನೀಡಿ, 3 ಕೋಟಿ ರೂ. ವಹಿವಾಟು ನಡೆಸುವ ನಿರೀಕ್ಷೆ ಇದೆ.

ವಿಜಯ ಕರ್ನಾಟಕ 30 Dec 2025 10:26 pm

ವಿಜಯನಗರ | ಗ್ರಾಹಕರ ಹಕ್ಕುಗಳ ಅರಿವು ಪ್ರತಿಯೊಬ್ಬರಿಗೂ ಅಗತ್ಯ: ಎನ್. ಸುಬ್ರಹ್ಮಣ್ಯ

ವಿಜಯನಗರ (ಹೊಸಪೇಟೆ), :ಭಾರತದಲ್ಲಿ ಗ್ರಾಹಕರ ಹಿತಾಸಕ್ತಿ ಕಾಪಾಡಲು ಮತ್ತು ವಂಚನೆಗಳನ್ನು ತಡೆಯಲು ಪರಿಣಾಮಕಾರಿ ಕಾನೂನು ವ್ಯವಸ್ಥೆ ಜಾರಿಯಲ್ಲಿದ್ದು, ಗ್ರಾಹಕರ ಹಕ್ಕುಗಳ ಕುರಿತು ಪ್ರತಿಯೊಬ್ಬ ನಾಗರಿಕರೂ ತಿಳಿದುಕೊಳ್ಳುವುದು ಅತ್ಯಾವಶ್ಯಕವಾಗಿದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಹೊಸಪೇಟೆ ಕಾನೂನು ಸೇವಾ ಸಮಿತಿಯ ಅಧ್ಯಕ್ಷ ಎನ್.ಸುಬ್ರಹ್ಮಣ್ಯ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಆಹಾರ–ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನಶಾಸ್ತ್ರ ಇಲಾಖೆ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಮತ್ತು ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಹಾಗೂ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಹಕರ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ 1986ರಲ್ಲಿ ಗ್ರಾಹಕ ಸಂರಕ್ಷಣಾ ಕಾಯ್ದೆ ಜಾರಿಗೆ ತರಲಾಗಿದ್ದು, ಇದರಲ್ಲಿ ಮೂರು ಹಂತದ ನ್ಯಾಯಾಂಗ ವ್ಯವಸ್ಥೆ ಅಸ್ತಿತ್ವದಲ್ಲಿದೆ. ಒಂದು ಕೋಟಿ ರೂಪಾಯಿ ವರೆಗೆ ಜಿಲ್ಲಾ ಗ್ರಾಹಕ ವೇದಿಕೆ, 1 ರಿಂದ 10 ಕೋಟಿ ರೂಪಾಯಿ ವರೆಗೆ ರಾಜ್ಯ ಗ್ರಾಹಕ ವೇದಿಕೆ ಹಾಗೂ 10 ಕೋಟಿಗೂ ಅಧಿಕ ಮೌಲ್ಯದ ಸರಕು–ಸೇವೆಗಳ ವಂಚನೆ ಪ್ರಕರಣಗಳಲ್ಲಿ ರಾಷ್ಟ್ರೀಯ ಗ್ರಾಹಕ ವೇದಿಕೆಗೆ ದೂರು ಸಲ್ಲಿಸಬಹುದು ಎಂದು ವಿವರಿಸಿದರು. ಈ ಕಾಯ್ದೆಯಡಿ ಗ್ರಾಹಕರಿಗೆ ಸುರಕ್ಷತೆಯ ಹಕ್ಕು, ಮಾಹಿತಿ ಪಡೆಯುವ ಹಕ್ಕು, ಆಯ್ಕೆ ಮಾಡುವ ಹಕ್ಕು, ದೂರು ಸಲ್ಲಿಸುವ ಹಕ್ಕು, ಪರಿಹಾರ ಪಡೆಯುವ ಹಕ್ಕು ಹಾಗೂ ಗ್ರಾಹಕರ ಶಿಕ್ಷಣ ಸೇರಿದಂತೆ ಆರು ಮೂಲಭೂತ ಹಕ್ಕುಗಳನ್ನು ಒದಗಿಸಲಾಗಿದೆ. 2025ರ ವೇಳೆಗೆ 2019ರ ಹೊಸ ಗ್ರಾಹಕ ಸಂರಕ್ಷಣಾ ಕಾಯ್ದೆ ಜಾರಿಯಲ್ಲಿದ್ದು, ಆನ್‌ಲೈನ್ ವ್ಯವಹಾರಗಳಲ್ಲಿ ವಂಚನೆಯಾದಲ್ಲಿ ಈ ಕಾಯ್ದೆಯಡಿ ದೂರು ಸಲ್ಲಿಸಬಹುದಾಗಿದೆ. ರೈತರು ಕೂಡ ಬಿತ್ತನೆ ಬೀಜ, ರಸಗೊಬ್ಬರ ಸೇರಿದಂತೆ ಇತರೆ ಸರಕುಗಳಲ್ಲಿ ವಂಚನೆಯಾದರೆ ಗ್ರಾಹಕ ವೇದಿಕೆಯನ್ನು ಸಂಪರ್ಕಿಸಬಹುದು ಎಂದು ಹೇಳಿದರು. ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಶಾಂತ್ ನಾಗಲಾಪುರ್ ಮಾತನಾಡಿ, ಎರಡನೇ ಮಹಾಯುದ್ಧದ ನಂತರ ಮಾನವ ಹಕ್ಕುಗಳ ರಕ್ಷಣೆಗೆ ಮಾನವ ಹಕ್ಕುಗಳ ಆಯೋಗ ಸ್ಥಾಪನೆಯಾಯಿತು. ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದ್ದು, ಹುಟ್ಟಿನಿಂದಲೇ ಪ್ರತಿಯೊಬ್ಬ ವ್ಯಕ್ತಿಗೂ ಮಾನವ ಹಕ್ಕುಗಳು ಲಭಿಸುತ್ತವೆ. ಉಲ್ಲಂಘನೆಯಾದಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ಮಾನವ ಹಕ್ಕುಗಳ ಆಯೋಗಗಳಿಗೆ ದೂರು ಸಲ್ಲಿಸಬಹುದು ಎಂದು ತಿಳಿಸಿದರು. ವ್ಯಾಪಾರವನ್ನು ಕಾನೂನುಬದ್ಧವಾಗಿ ನಡೆಸಬೇಕು ಎಂದರು. ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಪ್ಪ ಮಾತನಾಡಿದರು. ಈ ಸಂದರ್ಭದಲ್ಲಿ ಮಾನವ ಹಕ್ಕುಗಳ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. ಕಾರ್ಯಕ್ರಮದಲ್ಲಿ ಹಿರಿಯ ವಕೀಲರಾದ ಜಂಬಣ್ಣ ಹಾಗೂ ಎ.ಕರುಣನಿಧಿ ಉಪನ್ಯಾಸ ನೀಡಿದರು. ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪಿ. ಶ್ರೀನಿವಾಸಮೂರ್ತಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ, ಆಹಾರ–ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ರಿಯಾಜ್ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಮನೋಜ್ ಕುಮಾರ್ ಉಪಸ್ಥಿತರಿದ್ದರು.

ವಾರ್ತಾ ಭಾರತಿ 30 Dec 2025 10:24 pm

ಹರಪನಹಳ್ಳಿ | ವಿಬಿ–ಜಿ ರಾಮ್‌ಜಿ’ ಮಸೂದೆ ವಾಪಸ್‌ ಪಡೆಯಲು ಸಿಪಿಐನಿಂದ ಪ್ರತಿಭಟನೆ

ಹರಪನಹಳ್ಳಿ: ‘ವಿಬಿ–ಜಿ ರಾಮ್‌ಜಿ’ ಮಸೂದೆಯನ್ನು ತಕ್ಷಣವೇ ವಾಪಸ್‌ ಪಡೆಯುವಂತೆ ರಾಷ್ಟ್ರಪತಿಗಳು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿ, ಸಿಪಿಐ ಪಕ್ಷದ ಕಾರ್ಯಕರ್ತರು ಕಪ್ಪುಬಟ್ಟೆ ಧರಿಸಿ ಮಂಗಳವಾರ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಮಾತನಾಡಿದ ನಾಯಕರು, ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ)ಯ ಹೆಸರನ್ನು ಬದಲಾಯಿಸಿರುವುದನ್ನು ತೀವ್ರವಾಗಿ ಖಂಡಿಸಿದರು. ಈ ಯೋಜನೆಯ ಮೂಲಕ ದೇಶದ ಸುಮಾರು 12 ಕೋಟಿ ಕಾರ್ಮಿಕರು ಜೀವನ ಸಾಗಿಸುತ್ತಿದ್ದು, ಯೋಜನೆಯ ಸ್ವರೂಪವನ್ನು ಡಿ.18ರಂದು ಮಂಡಿಸಿ, ಡಿ.21ರಂದು ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು. ನರೇಗಾ ಯೋಜನೆಯನ್ನು ಬದಲಾಯಿಸುವ ಮೂಲಕ ಗ್ರಾಮೀಣ ಕೂಲಿ ಕಾರ್ಮಿಕರ ಉದ್ಯೋಗಕ್ಕೆ ಕುತ್ತು ತರಲಾಗುತ್ತಿದೆ. ಈಗಾಗಲೇ ಮಂಡಿಸಿರುವ ‘ವಿಬಿ–ಜಿ ರಾಮ್‌ಜಿ’ ಮಸೂದೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಸಿಪಿಐ (ಎಂಎಲ್) ಆಗ್ರಹಿಸಿದೆ. ಗ್ರಾಮೀಣ ಪ್ರದೇಶವನ್ನು ಕೇಂದ್ರ ಸರ್ಕಾರ ನೋಟಿಫೈ ಮಾಡದಿದ್ದಲ್ಲಿ, ಆ ಪ್ರದೇಶದ ಜನರಿಗೆ ಉದ್ಯೋಗದ ಹಕ್ಕು ಇರುವುದಿಲ್ಲ. ಇಡೀ ದೇಶಕ್ಕೆ ಸಿಕ್ಕಿದ್ದ ಹಕ್ಕು ಆಧಾರಿತ ಯೋಜನೆ ಈಗ ಕೆಲವೇ ಆಯ್ದ ಪ್ರದೇಶಗಳ ಜನರಿಗೆ ಮಾತ್ರ ಸೀಮಿತವಾಗಲಿದೆ. ಖಾತ್ರಿ ಯೋಜನೆಯಡಿ ಅರ್ಜಿ ಸಲ್ಲಿಸಿದ 15 ದಿನಗಳೊಳಗೆ ಉದ್ಯೋಗ ಒದಗಿಸಬೇಕೆಂಬ ನಿಯಮವಿದ್ದು, ವಿಫಲವಾದರೆ ನಿರುದ್ಯೋಗ ಭತ್ಯೆ ನೀಡಬೇಕಾಗುತ್ತದೆ. ಆದರೆ ಹೊಸ ಮಸೂದೆಯ ಪ್ರಕಾರ, ಪ್ರತಿ ಹಣಕಾಸು ವರ್ಷದಲ್ಲಿ ಆಯಾ ರಾಜ್ಯಕ್ಕೆ ಎಷ್ಟು ಅನುದಾನ ನೀಡಬೇಕು ಎಂಬುದನ್ನು ಕೇಂದ್ರ ಸರ್ಕಾರವೇ ನಿರ್ಧರಿಸುವ ಅಧಿಕಾರ ಪಡೆದುಕೊಳ್ಳುತ್ತದೆ. ಇದು ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ಸಾಕ್ಷಿಯಾಗಿದೆ ಎಂದು ಅವರು ಆರೋಪಿಸಿದರು. ಆದ್ದರಿಂದ ‘ವಿಬಿ–ಜಿ ರಾಮ್‌ಜಿ’ ಮಸೂದೆಯನ್ನು ತಕ್ಷಣವೇ ವಾಪಸ್‌ ಪಡೆಯಬೇಕು. ಮಹಾತ್ಮ ಗಾಂಧಿಯವರ ಹೆಸರನ್ನು ಯೋಜನೆಯಲ್ಲಿ ಮುಂದುವರಿಸಬೇಕು. ಜೊತೆಗೆ ಕೇಂದ್ರ ಬಜೆಟ್‌ನಲ್ಲಿ ನರೇಗಾ ಯೋಜನೆಗೆ ಕನಿಷ್ಠ 2 ಲಕ್ಷ ಕೋಟಿ ರೂ. ಅನುದಾನ ನಿಗದಿಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ಸಂದರ್ಭದಲ್ಲಿ ಅಖಿಲ ಭಾರತ ಕೃಷಿ ಹಾಗೂ ಗ್ರಾಮೀಣ ಕಾರ್ಮಿಕರ ಸಂಘದ ಜಿಲ್ಲಾ ಅಧ್ಯಕ್ಷ ಹುಲಿಕಟ್ಟಿ ಮೈಲಪ್ಪ, ಸಂದೇರ್ ಪರಶುರಾಮ್, ಸಂತೋಷ ಗುಳೇದಟ್ಟಿ, ಹೊಸಳ್ಳಿ ಮಲ್ಲೇಶ್, ಮಹಮ್ಮದ್ ರಫಿ, ಇಬ್ರಾಹಿಂ ಸಬ್, ಬಾಗಳಿ ರೇಣುಕಮ್ಮ, ಕಲೀಮ್, ರಾಮಣ್ಣ, ಮಂಜು, ಜೋಗಿನ ನಾಗರಾಜ್, ಮೋಹನ್ ಕುಮಾರ್, ವಿನಯ್, ಪ್ರಕಾಶ್, ಕೃಷ್ಣಕುಮಾರ್, ಅಂಜಿನಿ, ರಾಘವೇಂದ್ರ, ಬಾಬು, ಫಕೀರಪ್ಪ, ಅನ್ವರ್ ಭಾಷಾ, ಕೊಟ್ರೇಶ್, ಹನುಮಂತಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು.

ವಾರ್ತಾ ಭಾರತಿ 30 Dec 2025 10:20 pm

ಕಂಪ್ಲಿ | ಸುಪ್ತ ಪ್ರತಿಭೆಗಳನ್ನು ಹೊರ ಹಾಕುವುದು ಪ್ರತಿಭಾ ಕಾರಂಜಿ ಉದ್ದೇಶ : ಇಸಿಒ ರೇವಣ್ಣ

ಕಂಪ್ಲಿ: ಮಕ್ಕಳಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿನ ಸುಪ್ತ ಪ್ರತಿಭೆಗಳನ್ನು ಹೊರತರುವುದೇ ಪ್ರತಿಭಾ ಕಾರಂಜಿಯ ಮುಖ್ಯ ಉದ್ದೇಶವಾಗಿದೆ. ಸ್ಪರ್ಧೆಗಳ ನಿರ್ಣಾಯಕರು ಯಾವುದೇ ತಾರತಮ್ಯವಿಲ್ಲದೆ ಎಚ್ಚರಿಕೆಯಿಂದ ನೈಜ ಪ್ರತಿಭೆಯನ್ನು ಆಯ್ಕೆ ಮಾಡಬೇಕು ಎಂದು ಇಸಿಒ ರೇವಣ್ಣ ಹೇಳಿದರು. ತಾಲೂಕಿನ ಮೆಟ್ರಿ ಗ್ರಾಮದ ಮಹಾದೇವ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ ಮೆಟ್ರಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ಸೋಲು–ಗೆಲುವಿನ ಬಗ್ಗೆ ಯೋಚಿಸದೇ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸಬೇಕು. ಕೀಳರಿಮೆಯಿಂದ ಅನೇಕ ಮಕ್ಕಳು ತಮ್ಮ ಪ್ರತಿಭೆಯನ್ನು ವ್ಯಕ್ತಪಡಿಸಲಾಗದೇ ಎಲೆಮರೆಯ ಕಾಯಿಯಂತೆ ಉಳಿದು ಬಿಡುತ್ತಾರೆ. ಆದ್ದರಿಂದ ಇಂತಹ ಪ್ರತಿಭೆಗಳನ್ನು ಗುರುತಿಸಿ ಬೆಳೆಸುವುದು ಶಿಕ್ಷಕರ ಪ್ರಮುಖ ಕರ್ತವ್ಯವಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಪ್ರಾಸ್ತಾವಿಕ ಭಾಷಣದಲ್ಲಿ ಸಿಆರ್‌ಪಿ ಭೂಮೇಶ್ವರ ಮಾತನಾಡಿದರು. ನಂತರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಹಾಗೂ ಕಲಾತ್ಮಕ ಸ್ಪರ್ಧೆಗಳು ನಡೆದವು. ಕಾರ್ಯಕ್ರಮದಲ್ಲಿ ವಿಜೇತರಾದ ಎಲ್ಲ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹನುಮಂತಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ದೊಡ್ಡಬಸಪ್ಪ, ನಿರ್ದೇಶಕ ಎಚ್.ಪಿ. ಸೋಮಶೇಖರ, ಜಿಪಿಟಿ ಸಂಘದ ಕಾರ್ಯದರ್ಶಿ ನಿಂಗರಾಜ, ಮುಖ್ಯಗುರುಗಳಾದ ಡಿ. ಜಗದೀಶ, ದೊಡಬಸವ, ವಿರೇಶಮ್ಮ, ಸುಮಿತ್ರ, ನಿರ್ಮಲ, ಮಾಲಿಕ್, ಮಲ್ಲಿಕಾರ್ಜುನ ಸೇರಿದಂತೆ ಸಹ ಶಿಕ್ಷಕರು ರಾಜನಾಯ್ಕ, ಉಷಾರಾಣಿ, ಧನಲಕ್ಷ್ಮಿ, ಸರ್ವಮಂಗಳ, ಮಡಿವಾಳ, ಪಂಪನಗೌಡ, ನಾಗರಾಜ ಸೇರಿದಂತೆ ಅನೇಕ ಶಿಕ್ಷಕರು, ಸ್ಥಳೀಯ ಮುಖಂಡರು ಹಾಗೂ 13 ಶಾಲೆಗಳ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಾರ್ತಾ ಭಾರತಿ 30 Dec 2025 10:15 pm

ಕಂಪ್ಲಿ | ಮಕ್ಕಳಿಗೆ ಶಿಕ್ಷಣದ ಜೊತೆಗೆ ಜೀವನ ಮೌಲ್ಯಗಳು ಅಗತ್ಯ: ಸುಗ್ಗೆನಹಳ್ಳಿ ರಮೇಶ

ಕಂಪ್ಲಿ: ತಾಲೂಕಿನ ರಾಮಸಾಗರ ಕಾರ್ಯಕ್ಷೇತ್ರದ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ.ಸಿ. ಟ್ರಸ್ಟ್ ವತಿಯಿಂದ ತುಂಗಭದ್ರ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ಮಕ್ಕಳಿಗೆ ಶಿಕ್ಷಣ ಹಾಗೂ ಜೀವನ ಮೌಲ್ಯಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಸುಗ್ಗೆನಹಳ್ಳಿ ರಮೇಶ ಅವರು, ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಜೀವನದ ಮೌಲ್ಯಗಳ ಕುರಿತು ಮಾಹಿತಿ ನೀಡಿದರು. ಇತ್ತೀಚಿನ ದಿನಮಾನಗಳಲ್ಲಿ ಶಿಕ್ಷಣದ ಜೊತೆಗೆ ಜೀವನ ಮೌಲ್ಯಗಳು ಕುಗ್ಗುತ್ತಿರುವುದು ಮಕ್ಕಳ ಭವಿಷ್ಯಕ್ಕೆ ಅಪಾಯಕಾರಿಯಾಗಿದೆ. ಇಂತಹ ಜಾಗೃತಿ ಕಾರ್ಯಕ್ರಮಗಳು ಮಕ್ಕಳಲ್ಲಿ ಮೌಲ್ಯಗಳು, ಸಂಸ್ಕೃತಿ ಹಾಗೂ ಸಂಸ್ಕಾರಗಳನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದು ಹೇಳಿದರು. ಮಕ್ಕಳು ಗುರು–ಹಿರಿಯರಿಗೆ ಗೌರವ ನೀಡುವ ಗುಣ ಬೆಳೆಸಬೇಕು. ವಾಟ್ಸಾಪ್, ಫೇಸ್‌ಬುಕ್ ಸೇರಿದಂತೆ ಮೊಬೈಲ್ ಬಳಕೆಯನ್ನು ಮಕ್ಕಳಲ್ಲಿ ನಿಯಂತ್ರಿಸಬೇಕು. ಅದರಿಂದ ಅವರು ಅಧ್ಯಯನದ ಕಡೆ ಹೆಚ್ಚು ಗಮನಹರಿಸಬಹುದು ಎಂದು ಸಲಹೆ ನೀಡಿದರು. ನಂತರ ಸಮನ್ವಯಾಧಿಕಾರಿ ರೇಖಾ ಎಂ.ಬಿ. ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರಭಾರಿ ಮುಖ್ಯಗುರು ರಾಮಮೋಹನ್ ಎಸ್., ಎಸ್‌ಡಿಎಂಸಿ ಅಧ್ಯಕ್ಷ ಪ್ರಶಾಂತ, ಶಿಕ್ಷಕರು, ವಲಯದ ಮೇಲ್ವಿಚಾರಕಿ ಜಯಲಕ್ಷ್ಮಿ, ಸೇವಾ ಪ್ರತಿನಿಧಿ ಶೈಲಜಾ ರಮೇಶ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಾರ್ತಾ ಭಾರತಿ 30 Dec 2025 10:11 pm

ಕಣ್ಣೂರು ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘Knowledge Expo’ ವಿಜ್ಞಾನ ವಸ್ತು ಪ್ರದರ್ಶನ

ಮಂಗಳೂರು: ಅಡ್ಯಾರ್ ಕಣ್ಣೂರಿನ ಕಣ್ಣೂರು ಆಂಗ್ಲ ಮಾಧ್ಯಮ ಶಾಲೆ ಹಾಗೂ ಮಹಿಳಾ ಪಿಯು ಕಾಲೇಜ್ ಆಶ್ರಯದಲ್ಲಿ ಪ್ರೌಢಶಾಲೆ ಮತ್ತು ಪಿಯುಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ‘Knowledge Expo’ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವು ಡಿಸೆಂಬರ್ 25 ಮತ್ತು 26ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಎಸ್. ಮೊಹಮ್ಮದ್ ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಡಿಡಿಪಿಐ ಎಸ್. ಶಶಿಧರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿಜ್ಞಾನ ಶಿಕ್ಷಣವು ವಿದ್ಯಾರ್ಥಿಗಳಲ್ಲಿ ತಾರ್ಕಿಕ ಚಿಂತನೆ, ಸೃಜನಶೀಲತೆ ಮತ್ತು ಸಂಶೋಧನಾ ಮನೋಭಾವವನ್ನು ಬೆಳೆಸಲು ಸಹಕಾರಿಯಾಗಿದೆ ಎಂದು ಅವರು ಹೇಳಿದರು. ಯಾಸಿರ್ ಕಲ್ಲಡ್ಕ ಮುಖ್ಯ ಅತಿಥಿಯಾಗಿ ಪಾಲ್ಗೊಂಡು, ವಿದ್ಯಾರ್ಥಿಗಳು ತಾವೇ ತಯಾರಿಸಿದ ವೈಜ್ಞಾನಿಕ ಮಾದರಿಗಳ ಪ್ರದರ್ಶನ ಶ್ಲಾಘನೀಯವಾಗಿದೆ ಎಂದು ಅಭಿಪ್ರಾಯಪಟ್ಟರು. ಸಂಸ್ಥೆಯ ಸಂಚಾಲಕ ರಿಯಾಝ್ ಅಹಮದ್ ಕಣ್ಣೂರು ಪ್ರಾಸ್ತಾವಿಕ ಭಾಷಣ ಮಾಡಿದರು. ವಿಜ್ಞಾನ ವಸ್ತು ಪ್ರದರ್ಶನಕ್ಕೆ ರಫೀಕ್ ಮಾಸ್ಟರ್ ಹಾಗೂ ಇಬ್ರಾಹಿಂ ಕಲೀಲ್ ಅವರು ತೀರ್ಪುಗಾರರಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಎಸ್. ಉಮರಬ್ಬ ಹಾಗೂ ಟ್ರಸ್ಟೀ ಬಿ. ಮೊಹಮ್ಮದ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳನ್ನು Sciencia, Brain Freeze, Fairyland, Pathfinder ಮತ್ತು Transcend ಎಂಬ ಐದು ತಂಡಗಳಾಗಿ ವಿಭಜಿಸಿ, ತಾವೇ ತಯಾರಿಸಿದ ವಿವಿಧ ವೈಜ್ಞಾನಿಕ ಮಾದರಿಗಳನ್ನು ಪ್ರದರ್ಶಿಸಿದರು. ಪ್ರದರ್ಶನದಲ್ಲಿ Sciencia ತಂಡ ಪ್ರಥಮ ಸ್ಥಾನ ಪಡೆದುಕೊಂಡರೆ, Brain Freeze ತಂಡ ದ್ವಿತೀಯ ಸ್ಥಾನ ಗಳಿಸಿತು. ಕಾರ್ಯಕ್ರಮದ ಆರಂಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಸಿತಾರ್ ಅಬ್ದುಲ್ ಮಜೀದ್ ಸ್ವಾಗತ ಭಾಷಣ ಮಾಡಿದರು. ವಿದ್ಯಾರ್ಥಿನಿ ನುಹೈಮ ಕಿರಾಅತ್ ಪಠಿಸಿದರು. ಮುಖ್ಯ ಅಧ್ಯಾಪಕಿ ಸಂಶಾದ್ ವಂದನಾರ್ಪಣೆ ಸಲ್ಲಿಸಿದರು. ಶಿಕ್ಷಕಿ ಜಯಲತಾ ಕಾರ್ಯಕ್ರಮವನ್ನು ನಿರೂಪಿಸಿದರು.      

ವಾರ್ತಾ ಭಾರತಿ 30 Dec 2025 10:03 pm

ಮಾನ್ವಿ | ರಸ್ತೆ ಅಪಘಾತದಲ್ಲಿ ನಿವೃತ್ತ ಉಪತಹಶಿಲ್ದಾರ್ ಸಿದ್ದಲಿಂಗಪ್ಪ ಮೃತ್ಯು

ಮಾನ್ವಿ : ಪಟ್ಟಣದ ಮಾನ್ವಿ–ಸಿಂಧನೂರು ರಸ್ತೆಯಲ್ಲಿ ಸೋಮವಾರ ರಾತ್ರಿ ದ್ವಿಚಕ್ರವಾಹನ ಪಾದಚಾರಿಗೆ ಡಿಕ್ಕಿ ಹೊಡೆದಿದ್ದು, ಪಾದಚಾರಿ ಮೃತಪಟ್ಟಿರುವ ಘಟನೆ ನಡೆದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಜಯನಗರ ನಿವಾಸಿ, ನಿವೃತ್ತ ಉಪತಹಶೀಲ್ದಾರ್ ಸಿದ್ದಲಿಂಗಪ್ಪ (75) ಅವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ಬಳಿಕ ಗಂಭೀರ ಗಾಯಗೊಂಡಿದ್ದ ಸಿದ್ದಲಿಂಗಪ್ಪ ಅವರನ್ನು ತಕ್ಷಣವೇ ರಾಯಚೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ದ್ವಿಚಕ್ರವಾಹನ ಸವಾರ ಯಾಸಿನ್ ಎಂಬವರ ವಿರುದ್ಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ತನಿಖೆಯನ್ನು ಎ.ಎಸ್.ಐ. ಶಿವಲಿಂಗಪ್ಪ ಅವರು ಕೈಗೊಂಡಿದ್ದಾರೆ.

ವಾರ್ತಾ ಭಾರತಿ 30 Dec 2025 10:03 pm

ಪಶ್ಚಿಮ ಬಂಗಾಳ| ಎಸ್‌ಐಆರ್‌ಗೆ ಸಂಬಂಧಿಸಿದ ವಿಚಾರಣೆ ಆತಂಕ: 82 ವರ್ಷದ ವೃದ್ಧ ಆತ್ಮಹತ್ಯೆ

ಕೋಲ್ಕತಾ, ಡಿ. 30: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಗೆ ಸಂಬಂಧಿಸಿದ ವಿಚಾರಣೆ ಬಗ್ಗೆ ಆತಂಕಗೊಂಡ 82 ವರ್ಷದ ವೃದ್ಧನೋರ್ವ ಚಲಿಸುತ್ತಿರುವ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡು ಘಟನೆ ಪಶ್ಚಿಮಬಂಗಾಳದ ಪುರುಲಿಯಾ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಡಿಸೆಂಬರ್ 16ರಂದು ಪ್ರಕಟವಾದ ಕರಡು ಮತದಾರರ ಪಟ್ಟಿಯಲ್ಲಿ 82 ವರ್ಷ ವಯಸ್ಸಿನ ದುರ್ಜನ್ ಮಾಝಿ ಅವರ ಹೆಸರು ಇರಲಿಲ್ಲ. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಅವರು ನೋಟಿಸು ಸ್ವೀಕರಿಸಿದ್ದರು. ಪಾರಾ ಬ್ಲಾಕ್ ಅಭಿವೃದ್ಧಿ ಅಧಿಕಾರಿ (ಬಿಡಿಒ) ಕಚೇರಿಯಲ್ಲಿ ಹಾಜರಾಗುವಂತೆ ಅವರಿಗೆ ಸೂಚಿಸಲಾಗಿತ್ತು ಎಂದು ಅವರ ಪುತ್ರ ಕನಲ್ ತಿಳಿಸಿದ್ದಾರೆ. ‘‘ನನ್ನ ತಂದೆಯ ಹೆಸರು 2002ರ ಮತದಾರರ ಪಟ್ಟಿಯಲ್ಲಿ ಇತ್ತು. ಆದರೆ, ಕರಡು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆ’’ ಎಂದು ದಿನಗೂಲಿ ನೌಕರನಾಗಿರುವ ಕನಲ್ ಹೇಳಿದ್ದಾರೆ. ‘‘ನನ್ನ ತಂದೆ ಎಸ್‌ಐಆರ್ ಎಣಿಕೆ ನಮೂನೆಯನ್ನು ಸಲ್ಲಿಸಿದ್ದರು. ಆದರೆ, ಅವರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಇರಲಿಲ್ಲ. ಅವರ ಹೆಸರು 2002ರ ಮತದಾರರ ಪಟ್ಟಿಯಲ್ಲಿ ಇತ್ತು. ಅವರು ಡಿಸೆಂಬರ್ 26ರಂದು ನೋಟಿಸ್ ಸ್ವೀಕರಿಸಿದ್ದರು. ಅನಂತರ ಅವರು ಆಂತಕಿತರಾಗಿದ್ದರು’’ ಎಂದು ಕನಲ್ ತಿಳಿಸಿದ್ದಾರೆ.

ವಾರ್ತಾ ಭಾರತಿ 30 Dec 2025 10:00 pm

ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕರ ವಿರುದ್ಧ ತಾರತಮ್ಯ: ಪ್ರಧಾನಿಯ ಗಮನಸೆಳೆದ ಕಾಂಗ್ರೆಸ್ ಸಂಸದ ಅಧೀರ್‌ ರಂಜನ್ ಚೌಧರಿ

ಹೊಸದಿಲ್ಲಿ,ಡಿ.30: ಮಾಜಿ ಕಾಂಗ್ರೆಸ್ ಸಂಸದ ಅಧೀರ ರಂಜನ್ ಚೌಧರಿಯವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಭಾರತದ ಹಲವು ಭಾಗಗಳಲ್ಲಿ ಬಂಗಾಳಿ ಭಾಷಿಕ ವಲಸೆ ಕಾರ್ಮಿಕರ ವಿರುದ್ಧ ತಾರತಮ್ಯ ಮತ್ತು ಹಿಂಸಾಚಾರವನ್ನು ಪ್ರಸ್ತಾವಿಸಿದರು. ಇಂತಹ ಘಟನೆಗಳನ್ನು ತಡೆಯುವಂತೆ ದೇಶದ ಎಲ್ಲ ಸರಕಾರಗಳಿಗೆ ಸೂಚಿಸುವಂತೆ ಪ್ರಧಾನಿಯವರನ್ನು ಆಗ್ರಹಿಸಿದ ಚೌಧರಿ,ಇಂತಹ ಹೆಚ್ಚಿನ ಘಟನೆಗಳು ಬಿಜಿಪಿ ಆಡಳಿತದ ರಾಜ್ಯಗಳಲ್ಲಿಯೇ ನಡೆಯುತ್ತಿವೆ ಎಂದು ಬೆಟ್ಟು ಮಾಡಿದರು. ‘ಡಿ.24ರಂದು ಒಡಿಶಾದ ಸಂಬಲ್ಪುರದಲ್ಲಿ ಭೀಕರ ಘಟನೆಯೊಂದು ನಡೆದಿದ್ದು,ನನ್ನ ಜಿಲ್ಲೆ ಮುರ್ಷಿದಾಬಾದ್‌ನ ಜುಯೆಲ್ ರಾಣಾ ಎಂಬ ಯುವಕನನ್ನು ಬಾಂಗ್ಲಾದೇಶಿ ನುಸುಳುಕೋರ ಎಂದು ಆರೋಪಿಸಿ ಹತ್ಯೆ ಮಾಡಲಾಗಿದೆ. ಆತನ ಜೊತೆಯಲ್ಲಿದ್ದ ಇತರ ಇಬ್ಬರು ವಲಸೆ ಕಾರ್ಮಿಕರು ಪಾರಾಗಿ ಜೀವವುಳಿಸಿಕೊಂಡಿದ್ದಾರೆ ’ಎಂದು ಚೌಧುರಿ ಮೋದಿಯವರಿಗೆ ಸಲ್ಲಿಸಿರುವ ಪತ್ರದಲ್ಲಿ ತಿಳಿಸಿದ್ದಾರೆ. ದೇಶದಲ್ಲಿ ವ್ಯಾಪಕ ತಾರತಮ್ಯವನ್ನು ಆರೋಪಿಸಿರುವ ಅವರು, ದೇಶದ ಉದ್ದಗಲಕ್ಕೂ ಹರಡಿರುವ ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕರು ವಿವಿಧ ರಾಜ್ಯಗಳಲ್ಲಿ,ನಿರ್ದಿಷ್ಟವಾಗಿ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ತೀವ್ರ ತಾರತಮ್ಯವನ್ನು ಎದುರಿಸುತ್ತಿದ್ದಾರೆ. ಬಂಗಾಳಿ ಕಾರ್ಮಿಕರ ಭಾಷೆಯಿಂದಾಗಿ ಅವರನ್ನು ಬಾಂಗ್ಲಾದೇಶಿಗಳೆಂದು ತಪ್ಪಾಗಿ ಗ್ರಹಿಸಿ ಗುರಿಯಾಗಿಸಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. ವಲಸೆ ಕಾರ್ಮಿಕರು ದೇಶದ ಯಾವುದೇ ಭಾಗದಲ್ಲಿ ವಾಸವಿರುವ,ಕೆಲಸ ಮಾಡುವ,ಭೇಟಿ ನೀಡುವ ಹಕ್ಕು ಹೊಂದಿದ್ದಾರೆ ಎಂದು ಒತ್ತಿ ಹೇಳಿರುವ ಚೌಧುರಿ,ಕೇಂದ್ರವು ಅವರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ವಾರ್ತಾ ಭಾರತಿ 30 Dec 2025 10:00 pm

ಅಶ್ಲೀಲ, ಕಾನೂನುಬಾಹಿರ ವಿಷಯಗಳ ಪ್ರಸಾರದ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲವೇ ಪರಿಣಾಮ ಎದುರಿಸಿ: ಆನ್‌ಲೈನ್ ವೇದಿಕೆಗಳಿಗೆ ಕೇಂದ್ರದ ಎಚ್ಚರಿಕೆ

ಹೊಸದಿಲ್ಲಿ,ಡಿ.30: ಅಶ್ಲೀಲ, ಅಸಭ್ಯ, ಲೈಂಗಿಕ ದೃಶ್ಯಗಳು ಮತ್ತಿತರ ಕಾನೂನುಬಾಹಿರ ಕಂಟೆಂಟ್‌ಗಳ ವಿರುದ್ಧ ಕಾರ್ಯಾಚರಿಸಲು ವಿಫಲವಾದಲ್ಲಿ ಕಾನೂನು ಪರಿಣಾಮಗಳನ್ನು ಎದುರಿಸಬೇಕಾದೀತು ಎಂದು ಕೇಂದ್ರ ಸರಕಾರವು ಸಾಮಾಜಿಕ ಜಾಲತಾಣಗಳು ಸೇರಿದಂತೆ ಆನ್‌ಲೈನ್ ಪ್ಲಾಟ್‌ಫಾರ್ಮ್(ವೇದಿಕೆ)ಗಳಿಗೆ ಮಂಗಳವಾರ ಎಚ್ಚರಿಕೆಯನ್ನು ನೀಡಿದೆ. 2025ರ ಡಿಸೆಂಬರ್ 29ರಂದು ಇಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವಾಲಯವು ಈ ಬಗ್ಗೆ ಸೂಚನಾ ಪತ್ರವೊಂದನ್ನು ಬಿಡುಗಡೆಗೊಳಿಸಿದ್ದು, ಅನುಸರಣಾ ಕಾರ್ಯಚೌಕಟ್ಟನ್ನು ತಕ್ಷಣವೇ ಪರಿಶೀಲಿಸುವಂತೆ ಸಾಮಾಜಿಕ ಮಾಧ್ಯಮಸಂಸ್ಥೆಗಳನ್ನು ಕೇಳಿಕೊಂಡಿದೆ. ಒಂದು ವೇಳೆ ವಿಫಲವಾದಲ್ಲಿ ಕಾನೂನು ಕ್ರಮ ಎದುರಿಸಬೇಕಾದೀತೆಂದು ಎಚ್ಚರಿಕೆ ನೀಡಿದೆ. ಆನ್‌ಲೈನ್ ಸಾಮಾಜಿಕ ಮಾಧ್ಯಮಸಂಸ್ಥೆಗಳು ಸ್ಥಳೀಯ ಅಧಿಕಾರಿಗಳನ್ನು ನೇಮಿಸಿ, ದೂರು ಬಂದ 72 ಗಂಟೆಗಳಲ್ಲಿ ವಿವಾದಾತ್ಮಕ ಅಶ್ಲೀಲ ಕಂಟೆಟ್ ಅನ್ನು ತೆಗೆದುಹಾಕಬೇಕೆಂದು ಸೂಚಿಸಿದೆ. 2021ರ ಐಟಿ ನಿಯಮಗಳ ಅಡಿಯಲ್ಲಿ ಮಧ್ಯವರ್ತಿಗಳು ತಮ್ಮ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಅಸಭ್ಯ, ಹಾಗೂ ಮಕ್ಕಳಿಗೆ ಅಪಾಯಕಾರಿಯಾದ ಯಾವುದೇ ಮಾಹಿತಿ ಮತ್ತಿತರ ಕಾನೂನುಬಾಹಿರ ವಿಷಯಗಳನ್ನು ಪ್ರಸಾರವಾಗದಂತೆ ತಡೆಯುವುದು ಅವುಗಳ ಕಾನೂನುಬದ್ಧ ಜವಾಬ್ದಾರಿಯಾಗಿದೆ ಎಂದು ಸೂಚನಾಪತ್ರ ತಿಳಿಸಿದೆ. ‘‘ಒಂದು ವೇಳೆ ಐಟಿ ಕಾಯ್ದೆ ಅಥವಾ ಐಟಿ ನಿಯಮಗಳ ಕಾನೂನುಗಳನ್ನು ಅನುಸರಿಸದೆ ಇದ್ದಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ, ಬಿಎನ್‌ಎಸ್ ಮತ್ತಿತರ ಅನ್ವಯಿಕ ಕ್ರಿಮಿನಲ್ ಕಾನೂನುಗಳಡಿ, ಸಂಬಂಧಪಟ್ಟ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳು, ಸ್ಥಳೀಯ ಅಧಿಕಾರಿಗಳು ಹಾಗೂ ಅವುಗಳ ಬಳಕೆದಾರರ ವಿರುದ್ಧ ಕ್ರಮಗಳನ್ನು ಕೈಗೊಳ್ಳಲಾಗುವುದು’’ ಎಂದು ಸೂಚನಾ ಪತ್ರವು ತಿಳಿಸಿದೆ.

ವಾರ್ತಾ ಭಾರತಿ 30 Dec 2025 10:00 pm

ಬಳ್ಳಾರಿ | ಊರು ಹಬ್ಬ, ಜಾತ್ರೆ-ಉತ್ಸವಗಳಲ್ಲಿ ಆರೋಗ್ಯದ ಕಾಳಜಿ ವಹಿಸಿ : ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬು

ಬಳ್ಳಾರಿ,ಡಿ.30: ಸಾರ್ವಜನಿಕರು ಊರು ಹಬ್ಬ, ಜಾತ್ರೆ-ಉತ್ಸವ ಮುಂತಾದ ಧಾರ್ಮಿಕ ಆಚರಣೆಗಳ ಸಂದರ್ಭದಲ್ಲಿ ಜನತೆಯು ಕುಡಿಯಲು ಶುದ್ಧ ನೀರು ಬಳಸಬೇಕು. ಸೇವಿಸುವ ಆಹಾರ ಸಂಪೂರ್ಣವಾಗಿ ಬೇಯಿಸಿ ಸೇವಿಸುವ ಮೂಲಕ ಸಂಭಾವ್ಯ ವಾಂತಿ ಬೇಧಿ ಪ್ರಕರಣಗಳು ಸಂಭವಿಸದಂತೆ ಆರೋಗ್ಯ ಇಲಾಖೆಯ ಜೊತೆಗೆ ಕೈ ಜೋಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ತಿಳಿಸಿದ್ದಾರೆ. ಗ್ರಾಮ-ಪಟ್ಟಣಗಳಲ್ಲಿ ನಡೆಯುವ ಎಲ್ಲಾ ಜಾತ್ರೆಗಳು, ಉತ್ಸವಗಳು ಮತ್ತು ಉರುಸುಗಳಲ್ಲಿನ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿ ನ್ಯೂನ್ಯತೆಗಳನ್ನು ಸರಿಪಡಿಸಿಕೊಳ್ಳಬೇಕು ಹಾಗೂ ಆರೋಗ್ಯ ಇಲಾಖೆಯ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು ಎಂದು ಅವರು ಹೇಳಿದ್ದಾರೆ. ಜಾತ್ರೆಗಳು, ಉತ್ಸವಗಳು ಮತ್ತು ಉರುಸುಗಳು ನಡೆಯುವ ಪ್ರದೇಶದಲ್ಲಿ ಆರೋಗ್ಯ ಇಲಾಖೆಯಿಂದ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ಸ್ಥಾಪಿಸಲಾಗುವುದು. ಅಗತ್ಯ ಔಷಧಿ ದಾಸ್ತಾನುಗಳೊಂದಿಗೆ ಕರ್ತವ್ಯ ನಿರ್ವಹಿಸಲು ವೈದ್ಯರು ಹಾಗೂ ಸಿಬ್ಬಂದಿಗಳನ್ನು ನೇಮಿಸಲಾಗುವುದು. ದೊಡ್ಡ ಜಾತ್ರೆಗಳಲ್ಲಿ ತಾತ್ಕಾಲಿಕ ಆಸ್ಪತ್ರೆ ಪ್ರಾರಂಭಿಸಲಾಗುವುದು. ಕ್ಲೋರೋಸ್ಕೋಪ್ ಮೂಲಕ ಕುಡಿಯುವ ನೀರನ್ನು ಪರೀಕ್ಷೆ ಮಾಡಿ ನೀರು ಕುಡಿಯಲು ಯೋಗ್ಯವಿದೆ ಎಂದು ಖಾತರಿ ಪಡಿಸಿದ ನಂತರ ಕುಡಿಯಲು ಸರಬರಾಜು ಮಾಡಲು ತಿಳಿಸಲಾಗುವುದು ಎಂದಿದ್ದಾರೆ. ಜಾತ್ರೆಗೆ ಬರುವ ಭಕ್ತಾಧಿಗಳಿಗೆ ಸ್ವಚ್ಚ ಹಾಗೂ ಶುದ್ಧ ಕ್ಲೋರಿನೇಷನ್ ಮಾಡಿದ ನೀರನ್ನು ನಿಗದಿತ ಸ್ಥಳಗಳಲ್ಲಿ ಟ್ಯಾಂಕರ್‌ಗಳ ಮೂಲಕ ಸರಬರಾಜು ಮಾಡಲು ತಿಳಿಸಲಾಗುವುದು. ದೇವಸ್ಥಾನದ ಸುತ್ತ ಮುತ್ತಲಿನ ಆವರಣ ಪರಿಶೀಲನೆ ಮಾಡಿ ಕಸದ ವಿಲೇವಾರಿಗಾಗಿ ಕಸದ ಬುಟ್ಟಿಗಳ ವ್ಯವಸ್ಥೆ ಮಾಡುವ ಮೂಲಕ ನೈರ್ಮಲ್ಯ ಕಾಪಾಡಿಕೊಳ್ಳುವುದರ ಕುರಿತು ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್‌ ಅಧಿಕಾರಿಗಳು/ಸಿಬ್ಬಂದಿಗಳು ಕ್ರಮ ವಹಿಸುವರು ಎಂದಿದ್ದಾರೆ. ಜಾತ್ರೆಯಲ್ಲಿ ತೆರೆದಿಟ್ಟ ಸಿಹಿ ಪದಾರ್ಥ, ಕತ್ತರಿಸಿ ತೆರೆದಿಟ್ಟ ಹಣ್ಣುಗಳನ್ನು ಮುಚ್ಚಿಟ್ಟು ಮಾರಾಟ ಮಾಡದಂತೆ ಕ್ರಮ ವಹಿಸಲಾಗಿದೆ. ಜಾತ್ರೆ-ಹಬ್ಬದ ಬಳಿಕ ತ್ಯಾಜ್ಯವನ್ನು ವಿಲೇವಾರಿ ಮಾಡಲು ನಿರ್ದೇಶಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ತಿಳಿಸಿದ್ದಾರೆ.

ವಾರ್ತಾ ಭಾರತಿ 30 Dec 2025 9:58 pm

ಭೀಮಾ ಕೋರೇಗಾಂವ್ ವಿಜಯೋತ್ಸವ: ಉಡುಪಿಯಲ್ಲಿ ಜ.1ರಂದು ಪಂಜಿನ ಮೆರವಣಿಗೆ

ಉಡುಪಿ, ಡಿ.30: ದಲಿತರ ಸ್ವಾಭಿಮಾನದ ಪ್ರತೀಕ, ದಲಿತರ ಅಸ್ಮಿತೆಯ ಸಂಕೇತವಾಗಿರುವ ಭೀಮಾ ಕೋರೇಗಾಂವ್ ವಿಜಯೋತ್ಸವವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿ ವತಿಯಿಂದ ಜ.1ರಂದು ಸಂಜೆ 6ಗಂಟೆಗೆ ಉಡುಪಿಯಲ್ಲಿ ಆಚರಿಸಲಾಗುವುದು. ಉಡುಪಿಯ ಕೆಥೋಲಿಕ್ ಸೆಂಟರ್‌ನಿಂದ ಸರ್ವಿಸ್ ಬಸ್ ನಿಲ್ದಾಣದ ವರೆಗೆ ಪಂಜಿನ ಮೆರವಣಿಗೆ ನಡೆಸಿ ಭೀಮಾ ಕೋರೇಗಾಂವ್ ವಿಜಯೋತ್ಸವವನ್ನು ಆಚರಿಸಲಾಗುವುದು. ಎಲ್ಲಾ ಸ್ವಾಭಿಮಾನಿ ಚಳುವಳಿ ಗಾರರೂ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್, ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ, ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ ಗಿಳಿಯಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾರ್ತಾ ಭಾರತಿ 30 Dec 2025 9:57 pm

ವಿಶ್ವದ ನಂಬರ್ 1 ಮ್ಯಾಗ್ನಸ್ ಕಾರ್ಲ್‌ಸನ್ ವಿಚಿತ್ರ ಎಡವಟ್ಟು! ಇಂಥದ್ದೊಂದು ಬ್ಲಂಡರ್ ಮಾಡಿದ ಬಳಿಕ ಗೆಲ್ಲೋದುಂಟಾ?

Magnus Carlsen Blunder- ಭಾರತದ ಅರ್ಜುನ್ ಎರಿಗೈಸಿ ಎದುರಿನ ಪಂದ್ಯದಲ್ಲಿ ಮೇಜು ಕುಟ್ಟಿ ಸುದ್ದಿ ಮಾಡಿದ್ದ ಮ್ಯಾಗ್ನಸ್ ಕಾರ್ಲ್‌ಸನ್ ಇದೀಗ ಮತ್ತೊಂದು ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. FIDE ವಿಶ್ವ ಬ್ಲಿಟ್ಜ್ ಚಾಂಪಿಯನ್‌ಶಿಪ್ 2025ರಲ್ಲಿ ಹೈಕ್ ಮಾರ್ಟಿರೋಸ್ಯಾನ್ ವಿರುದ್ಧದ ಪಂದ್ಯದಲ್ಲಿ ಗಡಿಯಾರದಲ್ಲಿ ಕೇವಲ ಎರಡು ಸೆಕೆಂಡು ಬಾಕಿ ಇರುವಾಗ ಆಕಸ್ಮಿಕವಾಗಿ ನಾಲ್ಕು ಕಾಯಿಗಳನ್ನು ಕೆಡವಿ ಹಾಕಿದ್ದರಿಂದ ಅವರು ಫೋರ್ಫೀಟ್ ನಿಯಮದಂತೆ ಪರಾಜಿತ ಎಂದು ಘೋಷಿಸಲಾಯಿತು. ಈ ಸೋಲು ಕಾರ್ಲ್‌ಸೆನ್ ಅವರ 14ನೇ ಸುತ್ತಿನ ಸ್ಪರ್ಧೆಯಲ್ಲಿ ಉಳಿಯುವ ಅವಕಾಶವನ್ನು ಕಡಿಮೆ ಮಾಡಿದೆ.

ವಿಜಯ ಕರ್ನಾಟಕ 30 Dec 2025 9:54 pm

ಭಾಲ್ಕಿ | ಜನವರಿಯಲ್ಲಿ ಚನ್ನಬಸವೇಶ್ವರ ಗುರುಕುಲದಲ್ಲಿ 5 ದಿನ ಗೋಲ್ಡನ್ ಸ್ಕಾಲರ್‌ಶಿಪ್ ಪ್ರವೇಶ ಪರೀಕ್ಷೆ : ಡಾ.ಬಸವಲಿಂಗ ಪಟ್ಟದೇವರು

ಭಾಲ್ಕಿ, ಡಿ.30: ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ವತಿಯಿಂದ ಗೋಲ್ಡನ್ ಸ್ಕಾಲರ್‌ಶಿಪ್ ಪ್ರವೇಶ ಪರೀಕ್ಷೆ ಯೋಜನೆ ಮುಂದುವರಿಸಿದ್ದು, ಜನವರಿ ತಿಂಗಳಲ್ಲಿ ಐದು ದಿವಸ ಪ್ರವೇಶ ಪರೀಕ್ಷೆ ನಡೆಯಲಿವೆ ಎಂದು ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ನ ಅಧ್ಯಕ್ಷ, ನಾಡೋಜ ಡಾ.ಬಸವಲಿಂಗ ಪಟ್ಟದೇವರು ಹೇಳಿದರು. ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಿಕ್ಷಣ ಸಂಸ್ಥೆಯ 25ನೇ ವರ್ಷಾಚರಣೆ ಹಿನ್ನಲೆಯಲ್ಲಿ ಕಳೆದ 10 ವರ್ಷಗಳ ಹಿಂದೆ ಗುರುಕುಲ ಗೊಲ್ಡನ್ ಸ್ಕಾಲರ್‌ಶಿಪ್ ಯೋಜನೆ ಪರಿಚಯಿಸಲಾಗಿತ್ತು. ಈ ಯೋಜನೆಗೆ ಮಕ್ಕಳು, ಪಾಲಕರು ಹೆಚ್ಚಿನ ಆಸಕ್ತಿ ತೋರುತ್ತಿರುವುದರಿಂದ ಗೊಲ್ಡನ್ ಸ್ಕಾಲರ್‌ಶಿಪ್ ಯೋಜನೆ ಹಾಗೆಯೇ ಮುಂದುವರಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದರು. ಈ ಯೋಜನೆ ಬಡವರು, ರೈತರು, ಕೂಲಿ ಕಾರ್ಮಿಕರ ಮಕ್ಕಳಿಗೆ ವರದಾನವಾಗಿದೆ. ಪ್ರತಿ ವರ್ಷ ನೂರು ಮಕ್ಕಳು ಉಚಿತ ಶಿಕ್ಷಣದ ಸೌಲಭ್ಯ ಪಡೆದು ನೀಟ್ ಹಾಗೂ ಐಐಟಿಯಲ್ಲಿ ಉತ್ತಮ ಸಾಧನೆ ತೋರುತ್ತಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು. ಪೀಠಾಧಿಪತಿ ಗುರುಬಸವ ಪಟ್ಟದೇವರು ಮಾತನಾಡಿ, ಗಡಿಭಾಗದ ಬಡ ಪ್ರತಿಭಾವಂತ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ನಾಡೋಜ ಡಾ.ಬಸವಲಿಂಗ ಪಟ್ಟದೇವರ ಮಾರ್ಗದರ್ಶನದಲ್ಲಿ ಗುರುಕುಲ ಸ್ಕಾಲರ್‌ಶಿಪ್ ಯೋಜನೆ ಜಾರಿಗೆ ತಂದಿದ್ದೇವೆ. ಈ ಬಾರಿಯು ಚನ್ನಬಸವೇಶ್ವರ ಗುರುಕುಲದಲ್ಲಿ 2026-27ನೇ ಸಾಲಿನ ಪ್ರವೇಶಕ್ಕಾಗಿ ಜ.4, 10, 11, 18 ಮತ್ತು 25ರಂದು ಪ್ರವೇಶ ಪರೀಕ್ಷೆ ಏರ್ಪಡಿಸಿದ್ದೇವೆ. ಪ್ರಸ್ತುತ ಎಸೆಸೆಲ್ಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕನ್ನಡ, ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದಾಗಿದೆ ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಮಹಾಲಿಂಗ ಸ್ವಾಮೀಜಿ, ಪ್ರಾಚಾರ್ಯ ಬಸವರಾಜ್ ಮೊಳಕೀರೆ, ಆಡಳಿತಾಧಿಕಾರಿ ಮೋಹನ್ ರೆಡ್ಡಿ ಉಪಸ್ಥಿತರಿದ್ದರು.

ವಾರ್ತಾ ಭಾರತಿ 30 Dec 2025 9:53 pm

ಮುಂದುವರೆದ ಕೊರಗರ ಧರಣಿ: ಗ್ಯಾರಂಟಿ ಸಮಿತಿ ಭೇಟಿ

ಉಡುಪಿ, ಡಿ.30: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ(ಕರ್ನಾಟಕ- ಕೇರಳ)ದ ವತಿಯಿಂದ ಕೊರಗ ಸಮುದಾಯದ ಯುವಜನರಿಗೆ ಉದ್ಯೋಗ ಭದ್ರತೆ, ನೇರ ನೇಮಕಾತಿಗೆ ಆಗ್ರಹಿಸಿ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ 16ನೆ ದಿನವಾದ ಮಂಗಳವಾರವೂ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಧರಣಿ ಸ್ಥಳಕ್ಕೆ ಭೇಟಿ ನೀಡಿ, ಧರಣಿನಿರತರ ಅಹವಾಲು ಆಲಿಸಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ತಾಲೂಕು ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ಉಡುಪಿ ತಾಲೂಕು ಸಮಿತಿ ಅಧ್ಯಕ್ಷೆ ಸುನೀತಾ ಶೆಟ್ಟಿ ಬ್ರಹ್ಮಾವರ, ಪ್ರಮುಖರಾದ ಪ್ರಶಾಂತ್ ಜತ್ತನ್, ಜಿಲ್ಲಾ ಗ್ಯಾರಂಟಿ ಅನುಷ್ಟಾನ ಸಮಿತಿ ಉಪಾಧ್ಯಕ್ಷ ಸತೀಶ್ ಜಪ್ತಿ, ಜಿಲ್ಲಾ ಸದಸ್ಯ ಮಂಜುನಾಥ ಕುಲಾಲ್, ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಸುಶೀಲಾ ನಾಡ ಮೊದಲಾದವರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 30 Dec 2025 9:51 pm

ವಾರಾಹಿ ಏತ ನೀರಾವರಿ ಯೋಜನೆ ಬಗ್ಗೆ ಸಿಎಂ, ಡಿಸಿಎಂ ಭೇಟಿ

ಕುಂದಾಪುರ, ಡಿ.30: ಸಿದ್ದಾಪುರ ಏತ ನೀರಾವರಿ ಯೋಜನೆಯ ಪ್ರಸ್ತುತ ಗೊಂದಲ ಬಗೆಹರಿಸಲು ಒತ್ತಾಯಿಸಿ ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಂಗಳವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿ, ಮನವಿ ಸಲ್ಲಿಸಿದ್ದಾರೆ. ಪ್ರಸ್ತುತ ನಡೆಸಲು ಉದ್ದೇಶಿಸಿರುವ ಸ್ಥಳದಲ್ಲಿ ಕಾಮಗಾರಿ ಮುಂದು ವರೆಸುವುದರಿಂದ ಭವಿಷ್ಯದಲ್ಲಿ ಉಂಟಾಗುವ ಸಮಸ್ಯೆಗಳ ಕುರಿತು ಮನವರಿಕೆ ಮಾಡಿಕೊಟ್ಟ ಅವರು, ತಾಂತ್ರಿಕ ತಜ್ಞರ ಅಭಿಪ್ರಾಯ ಪಡೆದುಕೊಂಡು ಈಗಾಗಲೇ ಸೂಚಿತವಾಗಿರುವ ಪ್ರದೇಶಗಳಿಗೆ ನಿರೂಣಿಸಲು, ಆದ್ಯತೆಯ ನೆಲೆಯಲ್ಲಿ ಏತ ನೀರಾವರಿ ಯೋಜನೆಯನ್ನು ಪರಿಗಣಿಸುವಂತೆ ಮನವಿ ಮಾಡಿದರು. ಮಾಜಿ ಶಾಸಕರ ಮನವಿಗೆ ಸಿಎಂ ಹಾಗೂ ಡಿಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಶೀಘ್ರದಲ್ಲೇ ವಾರಾಹಿ ನೀರಾವರಿ ಯೋಜನಾ ಪ್ರದೇಶಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಸಂದರ್ಭದಲ್ಲಿ ಕರ್ನಾಟಕ ನೀರಾವರಿ ನಿಗಮದ ಆಡಳಿತ ನಿರ್ದೇಶಕ ರಾಜೇಶ್ ಅಮ್ಮಿನಭಾವಿ, ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿ ಅಧ್ಯಕ್ಷ ಹರೀಶ್ ತೋಳಾರ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ವಾರ್ತಾ ಭಾರತಿ 30 Dec 2025 9:49 pm

ನಾಲ್ಕು ತಿಂಗಳ ಬಳಿಕ ಶಾಸಕ ವೀರೇಂದ್ರ ಪಪ್ಪಿಗೆ ಬಿಡುಗಡೆ ಭಾಗ್ಯ; ಜೈಲಿನ ಬಳಿಯೇ ಹಾರ ಹಾಕಿ ಸ್ವಾಗತಿಸಿದ ಬೆಂಬಲಿಗರು

ಆನ್‌ಲೈನ್‌ ಬೆಟ್ಟಿಂಗ್‌ ಮೂಲಕ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರಿಗೆ ನಾಲ್ಕು ತಿಂಗಳ ಬಳಿಕ ಬಿಡುಗಡೆ ಭಾಗ್ಯ ಸಿಕ್ಕಿದೆ. ಸದ್ಯ ಅವರಿಗೆ ಜಾಮೀನು ಮಂಜೂರಾಗಿದೆ. ಕಳೆದ ನಾಲ್ಕು ತಿಂಗಳಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಅವರು, ಇಂದು ಅಧಿಕೃತವಾಗಿ ಬಿಡುಗಡೆಯಾಗಿದ್ದಾರೆ. ಅವರ ಬೆಂಬಲಿಗರು ಹೂ ಹಾರಹಾಕಿ ಅವರಿಗೆ ಸ್ವಾಗತ ಕೋರಿದ್ದಾರೆ.

ವಿಜಯ ಕರ್ನಾಟಕ 30 Dec 2025 9:40 pm

ಜ.3: ಸಾಧಕ ದೃಶಾ ಕೊಡಗುಗೆ ಸಾರ್ವಜನಿಕ ಅಭಿನಂದನೆ

ಉಡುಪಿ, ಡಿ.30:ಜೇಸಿಐ ಉಡುಪಿ ಸಿಟಿ, ವನಸುಮ ಟ್ರಸ್ಟ್ ಹಾಗೂ ವನಸುಮ ವೇದಿಕೆಗಳ ಸಹಯೋಗದಲ್ಲಿ ಇದೇ ಜ.3ರಂದು ಸಂಜೆ 5:30ಕ್ಕೆ ನಗರದ ಹೊಟೇಲ್ ಶಾರದಾ ಇಂಟರ್‌ನೇಷನಲ್ ಸಭಾಂಗಣದಲ್ಲಿ ಸಾಧಕ ದೃಶಾ ಕೊಡಗು ಇವರಿಗೆ ‘ರಿವಾರ್ಡ್ ಟು ಅವಾರ್ಡ್’ ಸಾರ್ವಜನಿಕ ಅಭಿನಂದನಾ ಸಮಾರಂಭ ನಡೆಯಲಿದೆ ಎಂದು ಕಾರ್ಯಕ್ರಮ ಸಂಯೋಜಕ ಬಾಸುಮ ಕೊಡಗು ತಿಳಿಸಿದ್ದಾರೆ. ಇಂದಿಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೃಶಾ ಕೊಡಗು ಅವರು ಉಜ್ವಲ್ ಕಾಮತ್ ಅವರೊಂದಿಗೆ ‘ಹಿಂಸೆ ನಿಲ್ಲಿಸಿ’ ಎಂಬ ಘೋಷವಾಖ್ಯದೊಂದಿಗೆ ಮೂರು ರಾಜ್ಯಗಳಲ್ಲಿ ಮೂರು ಸಾವಿರ ಕಿ.ಮೀ. ಜಾಗೃತಿ ಬೈಕ್ ರ್ಯಾಲಿ ನಡೆಸಿದ್ದರು. ಅವರ ಈ ಸಾಧನೆಗಾಗಿ ಇತ್ತೀಚೆಗೆ ಇಂಡಿಯಾ ಬುಕ್ ಆಫ್ ರೆಕಾಡ್ಸ್ ಮತ್ತು ಏಸ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಜಾಗತಿಕ ದಾಖಲೆಯನ್ನು ಬರೆದರು. ಈ ಸಾಧನೆಗಾಗಿ ಅವರನ್ನು ಜ.3ರಂದುಇ ಸಾರ್ವಜನಿಕವಾಗಿ ಅಭಿನಂದಿಸ ಲಾಗುವುದು. ಅವರೊಂದಿಗೆ ಉಜ್ವಲ್‌ರನ್ನೂ ಸನ್ಮಾನಿಸಲಾಗುತ್ತಿದೆ ಎಂದು ಬಾಸುಮ ಕೊಡಗು ತಿಳಿಸಿದರು. ಕಾರ್ಯಕ್ರಮವನ್ನು ಲಯನ್ಸ್ ಜಿಲ್ಲೆ 317ಸಿಯ ರಂಜನ್ ಕಲ್ಕೂರ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿಶಾಸಕ ಲಾಲಾಜಿ ಮೆಂಡನ್, ಉದ್ಯಮಿ ಲಂಚುಲಾಲ್ ಕೆ.ಎಸ್., ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಸ್ವರೂಪ ಅಧ್ಯಯನ ಕೇಂದ್ರದ ಗೋಪಾಡ್ಕರ್ ಹಾಗೂ ನಗರಾಭಿವೃದ್ಧಿ ಪ್ರಾದಿಕಾರದ ದಿನಕರ್ ಹೇರೂರು ಉಪಸ್ಥಿತರಿರುವರು ಎಂದರು. ಇವರೊಂದಿಗೆ 9 ವಿಶ್ವದಾಖಲೆ ಮಾಡಿದ ಮಂಗಳೂರಿನ ಆದಿಸ್ವರೂಪ ಅವರನ್ನೂ ಸನ್ಮಾನಿಸಲಾಗುತ್ತದೆ. ಸಭೆಯಲ್ಲಿ ಕಟ್ಟೆಮಾರ್ ಚಿತ್ರತಂಡ ಸಹ ಉಪಸ್ಥಿತವಿರುತ್ತದೆ ಎಂದು ಅವರು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಜೇಸಿಐ ಉಡುಪಿ ಸಿಟಿ ಘಟಕಾಧ್ಯಕ್ಷೆ ಪಲ್ಲವಿ ಕೊಡಗು, ವೇದಿಕೆ ಅಧ್ಯಕ್ಷ ವಿನಯ ಆಚಾರ್ಯ ಮುಂಡ್ಕೂರು, ಸೋನಿ ಪ್ರಭುದನ್, ಸಂದೀಪ್ ಮಂಜಾ ಉಪಸ್ಥಿತರಿದ್ದರು.

ವಾರ್ತಾ ಭಾರತಿ 30 Dec 2025 9:35 pm

ಪುಟಿನ್‌ ನಿವಾಸದ ಮೇಲೆ ಡ್ರೋನ್ ದಾಳಿ| ಸಂಧಾನ ಪ್ರಕ್ರಿಯೆಯ ಹಳಿತಪ್ಪಿಸಲು ಉಕ್ರೇನ್‌ನಿಂದ ತಂತ್ರ: ರಶ್ಯ ಆರೋಪ

ಮಾಸ್ಕೋ, ಡಿ.30: ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ನಿವಾಸವನ್ನು ಗುರಿಯಾಗಿಸಿಕೊಂಡು ಉಕ್ರೇನ್‍ನ ಡ್ರೋನ್ ದಾಳಿಯ ಪ್ರಯತ್ನದ ಹೊರತಾಗಿಯೂ ರಶ್ಯವು ಶಾಂತಿ ಮಾತುಕತೆಯಿಂದ ಹಿಂದೆ ಸರಿಯುವುದಿಲ್ಲ ಎಂದು ರಶ್ಯ ಅಧ್ಯಕ್ಷರ ವಕ್ತಾರ ಡಿಮಿಟ್ರಿ ಪೆಸ್ಕೋವ್ ಹೇಳಿದ್ದಾರೆ. ರಶ್ಯದ ನೊವ್ಗೊರೊಡ್ ಪ್ರಾಂತದಲ್ಲಿರುವ ಪುಟಿನ್ ಅವರ ಸರಕಾರಿ ನಿವಾಸದ ಮೇಲೆ ಡಿಸೆಂಬರ್ 28ರ ಮಧ್ಯರಾತ್ರಿಯಿಂದ 29ರ ಬೆಳಿಗ್ಗಿನ ಅವಧಿಯಲ್ಲಿ ಡ್ರೋನ್ ದಾಳಿ ನಡೆಸಲು ಉಕ್ರೇನ್ ಪ್ರಯತ್ನಿಸಿದೆ ಎಂದು ರಶ್ಯ ಆರೋಪಿಸಿತ್ತು. ವರದಿಯಾದ ಡ್ರೋನ್ ದಾಳಿಯು ಉಕ್ರೇನ್ ಯುದ್ದವನ್ನು ಕೊನೆಗೊಳಿಸುವ ಗುರಿಯನ್ನು ಹೊಂದಿರುವ ಯಾವುದೇ ಸಂಭಾವ್ಯ ಶಾಂತಿ ಮಾತುಕತೆಗಳಲ್ಲಿ ರಶ್ಯದ ನಿಲುವನ್ನು ಬಲಪಡಿಸುತ್ತದೆ ಎಂದು ಪೆಸ್ಕೋವ್ ಹೇಳಿದ್ದಾರೆ. ಡ್ರೋನ್ ದಾಳಿಯನ್ನು ಪುಟಿನ್ ವಿರುದ್ಧ ಮಾತ್ರವಲ್ಲ, ಶಾಂತಿ ಮಾತುಕತೆಯಲ್ಲಿ ಮಧ್ಯಸ್ಥಿಕೆ ವಹಿಸಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪ್ರಯತ್ನಗಳ ವಿರುದ್ಧವೂ ನಿರ್ದೇಶಿಸಲಾಗಿದೆ. ಈ ಭಯೋತ್ಪಾದಕ ಕೃತ್ಯವು ಸಂಧಾನ ಪ್ರಕ್ರಿಯೆಯನ್ನು ಬುಡಮೇಲುಗೊಳಿಸುವ ಉದ್ದೇಶವನ್ನೂ ಹೊಂದಿತ್ತು. ಆದರೆ ರಶ್ಯವು ಸಂಧಾನ ಪ್ರಕ್ರಿಯೆಯಿಂದ ಹಿಂದಕ್ಕೆ ಸರಿಯುವುದಿಲ್ಲ. ನಾವು ಪ್ರಾಥಮಿಕವಾಗಿ ಅಮೆರಿಕಾದೊಂದಿಗೆ ಮಾತುಕತೆಗಳನ್ನು ಮುಂದುವರಿಸುತ್ತೇವೆ. ವರದಿಯಾದ ಡ್ರೋನ್ ದಾಳಿಯ ರಾಜತಾಂತ್ರಿಕ ಪರಿಣಾಮವು ಮಾತುಕತೆಯಲ್ಲಿ ರಶ್ಯದ ನಿಲುವನ್ನು ಗಟ್ಟಿಗೊಳಿಸುತ್ತದೆ ಎಂದು ಹೇಳಿದ್ದಾರೆ. ವರದಿಯಾದ ದಾಳಿಯು ಸಂಧಾನ ಮಾತುಕತೆಯನ್ನು ಹಳಿತಪ್ಪಿಸುವ ಉದ್ದೇಶ ಹೊಂದಿದೆ. ದಾಳಿಯು ಸಂಧಾನ ಮಾತುಕತೆಯಲ್ಲಿ ರಶ್ಯದ ನಿಲುವನ್ನು ಬದಲಾಯಿಸಬಹುದು. ರಶ್ಯದ ಸಶಸ್ತ್ರ ಪಡೆಗಳಿಂದ ಪ್ರತೀಕಾರ ದಾಳಿಗೆ ಗುರಿಗಳನ್ನು ಈಗಾಗಲೇ ಗುರುತಿಸಲಾಗಿದೆ ಎಂದು ರಶ್ಯದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೋವ್ ಸೋಮವಾರ ಎಚ್ಚರಿಕೆ ನೀಡಿದ್ದರು. ಡ್ರೋನ್ ದಾಳಿ ನಡೆದಿದ್ದರೆ ಪುರಾವೆ ನೀಡಿ: ಉಕ್ರೇನ್ ಆಗ್ರಹ ರಶ್ಯ ಅಧ್ಯಕ್ಷರ ಒಂದು ನಿವಾಸದ ಮೇಲೆ ಸೋಮವಾರ ಉಕ್ರೇನ್‍ನಿಂದ ಡ್ರೋನ್ ದಾಳಿ ನಡೆದಿದೆ ಎಂಬ ರಶ್ಯದ ಪ್ರತಿಪಾದನೆಯನ್ನು ಉಕ್ರೇನ್ ಮಂಗಳವಾರ ಮತ್ತೊಮ್ಮೆ ತಿರಸ್ಕರಿಸಿದ್ದು ಇಂತಹ ಘಟನೆಯ ಬಗ್ಗೆ ಯಾವುದೇ ವಿಶ್ವಾಸಾರ್ಹ ಪುರಾವೆಗಳಿಲ್ಲ. ಶಾಂತಿ ಪ್ರಕ್ರಿಯೆಯನ್ನು ಬುಡಮೇಲುಗೊಳಿಸಲು ರಶ್ಯ ಸುಳ್ಳು ಆರೋಪ ಮಾಡುತ್ತಿದೆ ಎಂದು ಹೇಳಿದೆ. ಬಹುತೇಕ ಒಂದು ದಿನ ಕಳೆದರೂ ಪುಟಿನ್ ನಿವಾಸದ ಮೇಲಿನ ಆಪಾದಿತ ದಾಳಿಯ ಆರೋಪಗಳ ಬಗ್ಗೆ ರಶ್ಯವು ಯಾವುದೇ ವಿಶ್ವಾಸಾರ್ಹ ಪುರಾವೆ ಒದಗಿಸಿಲ್ಲ. ಒದಗಿಸುವುದೂ ಇಲ್ಲ, ಯಾಕೆಂದರೆ ಇಂತಹ ದಾಳಿಯೇ ನಡೆದಿಲ್ಲ ಎಂದು ಉಕ್ರೇನ್‍ನ ವಿದೇಶಾಂಗ ಸಚಿವ ಆಂಡ್ರಿಯ್ ಸಿಬಿಗಾ `ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ. ತಪ್ಪು ಮಾಹಿತಿ ಪ್ರಸಾರ ಮಾಡುವುದು ರಶ್ಯದ ವಿಶಿಷ್ಟ ತಂತ್ರಗಾರಿಕೆಯಾಗಿದೆ ಎಂದಿರುವ ಸಿಬಿಗಾ, ಭಾರತ, ಪಾಕಿಸ್ತಾನ, ಯುಎಇ ಸೇರಿದಂತೆ ಕೆಲವು ರಾಷ್ಟ್ರಗಳು ಆಪಾದಿತ ದಾಳಿಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸೆಪ್ಟಂಬರ್‌ನಲ್ಲಿ ರಶ್ಯದ ಕ್ಷಿಪಣಿಯು ಉಕ್ರೇನ್‍ನ ಸರಕಾರಿ ಕಟ್ಟಡಕ್ಕೆ ಅಪ್ಪಳಿಸಿದಾಗ ಯಾವುದೇ ರಾಷ್ಟ್ರಗಳು ಧ್ವನಿ ಎತ್ತಿರಲಿಲ್ಲ ಎಂದು ಟೀಕಿಸಿದ್ದಾರೆ. ಅಂತಾರಾಷ್ಟ್ರೀಯ ಸಮುದಾಯವು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಮತ್ತು ಪರಿಶೀಲಿಸದ, ಆಧಾರರಹಿತ ಆರೋಪಗಳಿಗೆ ಪ್ರತಿಕ್ರಿಯಿಸುವುದನ್ನು ತಡೆಯಬೇಕು ಎಂದು ಆಂಡ್ರಿಯ್ ಸಿಬಿಗಾ ಆಗ್ರಹಿಸಿದ್ದಾರೆ.

ವಾರ್ತಾ ಭಾರತಿ 30 Dec 2025 9:33 pm

ಬಾಳಿಗಾ ಆಸ್ಪತ್ರೆಯಲ್ಲಿ 35ನೇ ಮದ್ಯವ್ಯಸನ ವಿಮುಕ್ತಿ ಶಿಬಿರ

ಉಡುಪಿ, ಡಿ.30: ದೊಡ್ಡಣಗುಡ್ಡೆ ಡಾ.ಎ.ವಿ.ಬಾಳಿಗಾ ಸಮೂಹ ಸಂಸ್ಥೆಗಳ ನಿರ್ದೇಶಕ ಡಾ.ಪಿ.ವಿ.ಭಂಡಾರಿ ನೇತೃತ್ವದಲ್ಲಿ 2026ರ ಜನವರಿ 1ರಿಂದ 10ರವರೆಗೆ 35ನೇ ಮದ್ಯವ್ಯಸನ ವಿಮುಕ್ತಿ ವಸತಿ ಶಿಬಿರ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ನಡೆಯಲಿದೆ ಎಂದು ಆಸ್ಪತ್ರೆಯ ಮನೋವೈದ್ಯ ಡಾ.ವಿರೂಪಾಕ್ಷ ದೇವರಮನೆ ತಿಳಿಸಿದ್ದಾರೆ. ಮುಂಬಯಿಯ ಮಕಲ್ ಎ.ಬಾಳಿಗಾ ಚಾರಿಟೇಬಲ್ ಟ್ರಸ್ಟ್, ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿ ಹಾಗೂ ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಈ ಬಾರಿಯ ಮದ್ಯವ್ಯಸನ ಶಿಬಿರ ನಡೆಯಲಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಜ.1ರಂದು ಬೆಳಗ್ಗೆ 10:30ಕ್ಕೆ ಶಿಬಿರವನ್ನು ಸಮಾಜಸೇವಕ ವಿಶು ಶೆಟ್ಟಿ ಉದ್ಘಾಟಿಸಲಿದ್ದಾರೆ. ಶಿಬಿರದ ಸಮಾರೋಪ ಸಮಾರಂಭ ಜ.10ರಂದು ಬೆಳಿಗ್ಗೆ 10:30ಕ್ಕೆ ನಡೆಯಲಿದೆ ಎಂದವರು ಹೇಳಿದರು. ಶಿಬಿರಕ್ಕೆ ಶಿಬಿರಾರ್ಥಿಗಳಿಗೆ ತಗಲುವ ಊಟ, ವಸತಿ, ಚಿಕಿತ್ಸೆಯ ವೆಚ್ಚವನ್ನು ಕಮಲ್ ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಭರಿಸುತ್ತಿದೆ. ಶಿಬಿರಾರ್ಥಿಗಳಲ್ಲಿ ಕಂಡುಬರುವ ದೈಹಿಕ ಸಮಸ್ಯೆಗಳನ್ನು ಗುರುತಿಸಿ ಅದಕ್ಕೆ ಅನುಗುಣವಾದ ಚಿಕಿತ್ಸೆಯನ್ನು ನೀಡಲಾಗುತ್ತದೆ. ಪ್ರತಿದಿನ ಶಿಬಿರಾರ್ಥಿಗಳಿಗೆ ಮದ್ಯ ಹಾಗೂ ಮಾದಕ ದ್ರವ್ಯಗಳಿಂದಾಗುವ ದುಷ್ಪರಿಣಾಮಗಳು ಮತ್ತು ಜೀವನ ಶೈಲಿ ಬದಲಾವಣೆ ಕುರಿತು ನುರಿತ ತಜ್ಞರಿಂದ ಮಾಹಿತಿ ಕಾರ್ಯಕ್ರಮ ನಡೆಯಲಿದೆ. ಸಂಜೆ ವಿವಿಧ ಮನೋರಂಜನೆ ಕಾರ್ಯಕ್ರಮಗಳು ಸಹ ನಡೆಯಲಿವೆ ಎಂದು ವಿವರಿಸಿದರು. ಚಿಕಿತ್ಸೆಯಲ್ಲಿ ಪ್ರತಿದಿನ ಅನಾಮಿಕ ಅಮಲಿಗಳ ಸದಸ್ಯರಿಂದ ಒಂದು ಗಂಟೆಯ ಚರ್ಚೆ ಮತ್ತು ಮದ್ಯ ವಿಮುಕ್ತ ಜೀವನ ನಡೆಸುವ ಬಗ್ಗೆ ಮಾಹಿತಿ ನೀಡಿ ಅನುಭವಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ. ರಾತ್ರಿ 7ರ ನಂತರ ಪ್ರತಿದಿನ ಭಜನೆ ಮತ್ತು ಧಾರ್ಮಿಕ ವಿಚಾರಗಳ ಕುರಿತು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಶಿಬಿರ ಮುಗಿಸಿ ತೆರಳಿದ ಬಳಿಕವೂ ಶಿಬಿರಾರ್ಥಿಗಳ ಪ್ರಗತಿಯನ್ನು ನಮ್ಮ ಸಮುದಾಯ ಕಾರ್ಯಕರ್ತರು ಮನೆ ಭೇಟಿ, ದೂರವಾಣಿ ಕರೆ ಮತ್ತು ಪತ್ರಗಳನ್ನು ಬರೆಯುವ ಮೂಲಕ ಅವರ ಮದ್ಯಮುಕ್ತ ಜೀವನವನ್ನು ನಿರಂತರವಾಗಿ ಪರಿಶೀಲಿಸುತ್ತಾರೆ. ಇದರೊಂದಿಗೆ ಒಂದು ವರ್ಷದ ಅವಧಿಯವರೆಗೆ ಮರು ಭೇಟಿ ದಿನಾಂಕವನ್ನು ನಿರ್ಧರಿಸಿ ಪ್ರತಿ ತಿಂಗಳು ಶಿಬಿರಾರ್ಥಿಗಳನ್ನು ಪರೀಕ್ಷಿಸಲಾಗುವುದು. ಜ.1ರ ಉದ್ಘಾಟನೆ ಸಮಾರಂಭದಲ್ಲಿ ಮದ್ಯವ್ಯಸನದಿಂದ ಮುಕ್ತರಾದ ಐವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಿಬಿರಕ್ಕೆ ಪುರುಷರಿಗೆ ಮಾತ್ರವಲ್ಲ, ಮಹಿಳೆಯರಿಗೂ ಅವಕಾಶವಿದೆ. ಮಹಿಳೆಯರಿಗಾಗಿ ಪ್ರತ್ಯೇಕ ವಾರ್ಡ್‌ನ್ನು ಪ್ರಾರಂಭಿಸಲಾಗಿದೆ ಎಂದವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಬಾಳಿಗಾ ಆಸ್ಪತ್ರೆಯ ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ, ನಾಗರಾಜ ಮೂರ್ತಿ, ಡಾ. ಮಾನಸ್, ಡಾ.ದೀಪಕ್ ಮಲ್ಯ ಮತ್ತು ಪದ್ಮ ನಾಗರಾಜ್ ಉಪಸ್ಥಿತರಿದ್ದರು.

ವಾರ್ತಾ ಭಾರತಿ 30 Dec 2025 9:33 pm

ಕುವೆಂಪು ‘ವಿಶ್ವ ಪ್ರಜ್ಞೆ’ ಕೇವಲ ಬರಹವಲ್ಲ; ನಮ್ಮ ಭಾವ ಮತ್ತು ಬದುಕು: ಡಾ.ಯೋಗೀಶ್ ಕೈರೋಡಿ

ಉಡುಪಿ, ಡಿ.30: ಕುವೆಂಪು ನಿಸರ್ಗದಲ್ಲಿ ದೇವರನ್ನೂ, ಸ್ವರ್ಗವನ್ನು ಕಂಡವರು. ಲೌಕಿಕ ಬದುಕಿನ ಅನುಭವದೊಳಗೆ ಅಧ್ಯಾತ್ಮವನ್ನು ಕಂಡವರು. ಜಾತೀಯತೆ, ಧಾರ್ಮಿಕ ಆಂಧಶ್ರದ್ದೆ, ಜಾಗತಿಕ ಬದುಕಿನ ಮಹಾಯುದ್ಧದ ಕಾಲಘಟ್ಟ ದಲ್ಲಿ ಬದುಕಿದ ರಸಋಷಿ ಪ್ರಸ್ತುತ ಕಾಲಕ್ಕೆ ಅನ್ವಯಿಸುವ ವಿಶ್ವ ಮಾನವ ಸಂದೇಶವನ್ನು ಜಾಗತಿಕವಾಗಿ ಬಿತ್ತರಿಸಿ ದವರು ಎಂದು ಮೂಡಬಿದರೆ ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಯೋಗೀಶ್ ಕೈರೋಡಿ ಅಭಿಪ್ರಾಯ ಪಟ್ಟಿದ್ದಾರೆ. ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ವಿಭಾಗದ ಆಶ್ರಯದಲ್ಲಿ, ಐಕ್ಯೂಎಸಿ ಘಟಕದ ಸಹಯೋಗದಲ್ಲಿ ರಸಋಷಿ ಕುವೆಂಪು ಜನ್ಮದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡುತಿದ್ದರು. ಜಗತ್ತು ಒಂದೇ ಎನ್ನವುದು ಆರ್ಥಿಕತೆಯ, ಅನ್ನದ ಪರಿಭಾಷೆಯಾದರೆ, ಕುವೆಂಪು ಕಟ್ಟಿದ ವಿಶ್ವಮಾನವ ಪರಿಕಲ್ಪನೆ ಭಾವನಾತ್ಮಕವಾಗಿದ್ದು, ಸರ್ವಕಾಲಕ್ಕೂ ಪ್ರಸ್ತುತವೆನಿಸಿದೆ. ಕುವೆಂಪು ಅವರ ಸಾಹಿತ್ಯವನ್ನು ಕೇವಲ ಓದಿದರೆ ಮಾತ್ರ ಸಾಲದ. ಅದು ನಮ್ಮ ಭಾವ ಮತ್ತು ಬದುಕಿನಲ್ಲಿ ಸ್ಥಿರವಾಗಿ ನಿಲ್ಲಬೇಕು ಎಂದು ಡಾ.ಯೋಗೀಶ್ ಕೈರೋಡಿ ತಿಳಿಸಿದರು. ಕುವೆಂಪು ಅವರ ಕುರಿತಂತೆ ಕನ್ನಡ ವಿಭಾಗದ ವಿದ್ಯಾರ್ಥಿಗಳಾದ ಸುಶ್ಮಿತಾ ಶೆಟ್ಟಿ , ಶ್ರೀಕೃಷ್ಣ ಜಿ.ಜಿ. ಹಾಗೂ ಪ್ರವೀಣ ಮಾತನಾಡಿದರು.ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಕೆಸೆಟ್ ಪರೀಕ್ಷೆಯಲ್ಲಿ ಅರ್ಹತೆ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಿಲಾಯಿತು. ಕಾರ್ಯಕ್ರಮದಲ್ಲಿ ಶೈಕ್ಷಣಿಕ ಸಲಹೆಗಾರರಾದ ಡಾ. ಶ್ರೀಧರ್ ಭಟ್, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಸಂದೇಶ್ ಎಂ.ವಿ, ದತ್ತ ಕುಮಾರ್, ಉಪನ್ಯಾಸಕರಾದ ಅರ್ಚನಾ, ಭವ್ಯ, ಶಾಲಿನಿ, ರಾಜೇಂದ್ರ, ಡಾ.ಮಹೇಶ್ ಕುಮಾರ್ ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ವಿ ಗಾಂವಕರ್ ವಹಿಸಿದ್ದರು. ಕನ್ನಡ ವಿಭಾಗದ ಮುಖ್ಯಸ್ಥ ರಾದ ರತ್ನಮಾಲಾ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸುಶ್ಮಿತಾಶೆಟ್ಟಿ ವಂದಿಸಿದರು. ಭಾರತಿ ಕಾರ್ಯಕ್ರಮ ನಿರೂಪಿಸಿದರು.

ವಾರ್ತಾ ಭಾರತಿ 30 Dec 2025 9:31 pm

ಮಹಿಳೆಯರ ಟಿ-20 ರ‍್ಯಾಂಕಿಂಗ್ | ಶೆಫಾಲಿ ವರ್ಮಾಗೆ ಭಡ್ತಿ, ದೀಪ್ತಿ ಶರ್ಮಾ ನಂ.1 ಸ್ಥಾನ ಭದ್ರ

ಹೊಸದಿಲ್ಲಿ, ಡಿ.30: ಭಾರತದ ಆರಂಭಿಕ ಆಟಗಾರ್ತಿ ಶೆಫಾಲಿ ವರ್ಮಾ ಶ್ರೀಲಂಕಾ ವಿರುದ್ಧ ಉತ್ತಮ ಪ್ರದರ್ಶನ ನೀಡುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಬಿಡುಗಡೆಯಾಗಿರುವ ಮಹಿಳೆಯರ ಟಿ-20 ಬ್ಯಾಟಿಂಗ್ ರ‍್ಯಾಂಕಿಂಗ್‌ ನಲ್ಲಿ ಆರನೇ ಸ್ಥಾನಕ್ಕೆ ಭಡ್ತಿ ಪಡೆದಿದ್ದಾರೆ. ಈ ಹಿಂದೆ ಟಿ-20 ಕ್ರಿಕೆಟ್‌ ನ ನಂ.1 ಬ್ಯಾಟರ್ ಆಗಿದ್ದ 21ರ ವಯಸ್ಸಿನ ಶೆಫಾಲಿ ಈಗ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಐದು ಪಂದ್ಯಗಳ ಟಿ-20 ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡಿದ ಪರಿಣಾಮ ನಾಲ್ಕು ಸ್ಥಾನಗಳಲ್ಲಿ ಭಡ್ತಿ ಪಡೆದಿದ್ದಾರೆ. ಶೆಫಾಲಿ ಎರಡನೇ ಟಿ-20 ಪಂದ್ಯದಲ್ಲಿ ಕೇವಲ 34 ಎಸೆತಗಳಲ್ಲಿ ಔಟಾಗದೆ 69 ರನ್ ಗಳಿಸಿದ್ದರು. ಆನಂತರ ತಿರುವನಂತಪುರದಲ್ಲಿ ನಡೆದಿದ್ದ ಮೂರನೇ ಹಾಗೂ ನಾಲ್ಕನೇ ಪಂದ್ಯಗಳಲ್ಲಿ ಅರ್ಧಶತಕಗಳನ್ನು ಗಳಿಸಿದ್ದಾರೆ. ಅಗ್ರ ಸರದಿಯಲ್ಲಿ ಬಿರುಸಿನ ಬ್ಯಾಟಿಂಗ್‌ನ ಮೂಲಕ ಶೆಫಾಲಿ ಭಾರತ ತಂಡಕ್ಕೆ ಉತ್ತಮ ಆರಂಭ ಒದಗಿಸುತ್ತಿದ್ದಾರೆ. ಇನಿಂಗ್ಸ್‌ನ ಆರಂಭದಲ್ಲೇ ಶ್ರೀಲಂಕಾದ ಬೌಲರ್‌ ಗಳಿಗೆ ಒತ್ತಡ ಹೇರುತ್ತಿದ್ದಾರೆ. ಭಾರತ ತಂಡದ ಉಪ ನಾಯಕಿ ಸ್ಮತಿ ಮಂಧಾನ ಸರಣಿಯ ಆರಂಭದಲ್ಲಿ ರನ್‌ ಗಾಗಿ ಪರದಾಟ ನಡೆಸಿದ್ದರೂ ನಾಲ್ಕನೇ ಟಿ-20 ಪಂದ್ಯದಲ್ಲಿ 80 ರನ್ ಗಳಿಸಿದ್ದರು. ಮಂಧಾನ ಐಸಿಸಿ ರ‍್ಯಾಂಕಿಂಗ್‌ ನಲ್ಲಿ ತನ್ನ ಮೂರನೇ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದೇ ವೇಳೆ, ಮಧ್ಯಮ ಸರದಿಯ ಬ್ಯಾಟರ್ ಜೆಮಿಮಾ ರೊಡ್ರಿಗಸ್ ಒಂದು ಸ್ಥಾನ ಕೆಳ ಜಾರಿ 10ನೇ ರ‍್ಯಾಂಕಿಗೆ ತಲುಪಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಅನುಭವಿ ಆಲ್‌ರೌಂಡರ್ ದೀಪ್ತಿ ಶರ್ಮಾ ಅವರು ಅಗ್ರ ಸ್ಥಾನದಲ್ಲಿ ಮುಂದುವರಿದಿದ್ದಾರೆ. ದೀಪ್ತಿ ವಿಶ್ವದ ನಂ.1 ಟಿ-20 ಬೌಲರ್ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಭಾರತದ ಇನ್ನೋರ್ವ ವೇಗದ ಬೌಲರ್ ರೇಣುಕಾ ಸಿಂಗ್ ಠಾಕೂರ್ ಎಂಟು ಸ್ಥಾನ ಮೇಲಕ್ಕೇರಿ ಆರನೇ ಸ್ಥಾನ ಹಂಚಿಕೊಂಡಿದ್ದಾರೆ. ರೇಣುಕಾ 3ನೇ ಟಿ-20 ಪಂದ್ಯದಲ್ಲಿ 21 ರನ್‌ಗೆ 4 ವಿಕೆಟ್‌ಗಳನ್ನು ಉರುಳಿಸಿ ಭಾರತ 8 ವಿಕೆಟ್‌ ಗಳಿಂದ ಜಯ ಸಾಧಿಸುವಲ್ಲಿ ನೆರವಾಗಿದ್ದಾರೆ. ಭಾರತದ ಯುವ ಎಡಗೈ ಸ್ಪಿನ್ನರ್‌ ಗಳು ಪರಿಣಾಮಕಾರಿ ಪ್ರದರ್ಶನ ನೀಡಿದ್ದಾರೆ. ಶ್ರೀಚರಣಿ 17 ಸ್ಥಾನಗಳಲ್ಲಿ ಭಡ್ತಿ ಪಡೆದು 52ನೇ ಸ್ಥಾನ ತಲುಪಿದರು. ವೈಷ್ಣವಿ ಶರ್ಮಾ 390 ಸ್ಥಾನಗಳಲ್ಲಿ ಭಡ್ತಿ ಪಡೆದು 124ನೇ ರ‍್ಯಾಂಕಿಗೆ ತಲುಪಿದ್ದಾರೆ. ವೈಷ್ಣವಿಗೆ ಇದು ಮೊದಲ ಅಂತರ್‌ರಾಷ್ಟ್ರೀಯ ಸರಣಿಯಾಗಿದೆ. 2026ರಲ್ಲಿ ಇಂಗ್ಲೆಂಡ್ ಹಾಗೂ ವೇಲ್ಸ್‌ನಲ್ಲಿ ನಡೆಯಲಿರುವ 2026ರ ಮಹಿಳೆಯರ ಟಿ-20 ವಿಶ್ವಕಪ್‌ಗೆ ತಯಾರಿ ನಡೆಸುತ್ತಿರುವ ಭಾರತ ತಂಡಕ್ಕೆ ವೈಷ್ಣವಿ ಪ್ರದರ್ಶನವು ಸಕಾರಾತ್ಮಕ ಅಂಶವಾಗಿದೆ. ಶ್ರೀಲಂಕಾದ ಆಟಗಾರ್ತಿಯರು ಸ್ವಲ್ಪ ಮಟ್ಟಿನ ಪ್ರಗತಿ ಸಾಧಿಸುತ್ತಿದ್ದು, ಆರಂಭಿಕ ಆಟಗಾರ್ತಿ ಹಸಿನಿ ಪೆರೇರ 22, 25 ಹಾಗೂ 33 ರನ್ ಗಳಿಸಿದ ನಂತರ 114 ಸ್ಥಾನಗಳಲ್ಲಿ ಮೇಲೇರಿ 71ನೇ ರ‍್ಯಾಂಕಿಗೆ ತಲುಪಿದ್ದಾರೆ. ಬ್ಯಾಟಿಂಗ್ ರ‍್ಯಾಂಕಿಂಗ್‌ನಲ್ಲಿ ಆಲ್‌ರೌಂಡರ್ ಕವಿಶಾ ದಿಲ್ಹರಿ ಮೂರು ಸ್ಥಾನ ಮೇಲಕ್ಕೇರಿ 79ನೇ ರ‍್ಯಾಂಕಿಗೆ ತಲುಪಿದ್ದಾರೆ.

ವಾರ್ತಾ ಭಾರತಿ 30 Dec 2025 9:26 pm

ನ್ಯೂಝಿಲ್ಯಾಂಡ್ ODI ಸರಣಿ | ಜಸ್‌ಪ್ರಿತ್ ಬುಮ್ರಾ, ಹಾರ್ದಿಕ್ ಪಾಂಡ್ಯ ವಿಶ್ರಾಂತಿ ಪಡೆಯುವ ಸಾಧ್ಯತೆ

ಮುಂಬೈ, ಡಿ.30: ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ಟೂರ್ನಿಗೆ ಮಾನಸಿಕವಾಗಿ ಸಜ್ಜಾಗಲು ನ್ಯೂಝಿಲ್ಯಾಂಡ್ ವಿರುದ್ಧ ಸ್ವದೇಶದಲ್ಲಿ ನಡೆಯಲಿರುವ ಏಕದಿನ ಸರಣಿಯಿಂದ ವೇಗದ ಬೌಲರ್ ಜಸ್‌ಪ್ರಿತ್ ಬುಮ್ರಾ ಹಾಗೂ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ. ಈ ಇಬ್ಬರು ಆಟಗಾರರು ಕಿವೀಸ್ ವಿರುದ್ಧ ನಡೆಯಲಿರುವ ಐದು ಪಂದ್ಯಗಳ ಟಿ-20 ಸರಣಿಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ‘‘ಬುಮ್ರಾ ಹಾಗೂ ಹಾರ್ದಿಕ್ ಏಕದಿನ ಸರಣಿಯಿಂದ ವಿಶ್ರಾಂತಿ ಪಡೆಯಲಿದ್ದಾರೆ. ಜನವರಿ 11ರಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ಟಿ-20 ಸರಣಿಗಾಗಿ ಜನವರಿ 3 ಅಥವಾ 4ರಂದು ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಾಗುವುದು’’ ಎಂದು ಮೂಲಗಳು ತಿಳಿಸಿವೆ. ವಿಕೆಟ್‌ ಕೀಪರ್-ಬ್ಯಾಟರ್ ರಿಷಭ್ ಪಂತ್‌ ರನ್ನು ಏಕದಿನ ಸರಣಿಯ ತಂಡದಿಂದ ಹೊರಗಿಡುವ ಸಾಧ್ಯತೆಯಿದೆ. ಒಂದು ವೇಳೆ ಪಂತ್‌ರನ್ನು ಕೈಬಿಟ್ಟರೆ, ಇಶಾನ್ ಕಿಶನ್ ಎರಡು ವರ್ಷಗಳಿಗೂ ಅಧಿಕ ಸಮಯದ ನಂತರ ಏಕದಿನ ಕ್ರಿಕೆಟ್ ತಂಡಕ್ಕೆ ವಾಪಸಾಗಲಿದ್ದಾರೆ ಎಂದು ವರದಿಯಾಗಿದೆ.

ವಾರ್ತಾ ಭಾರತಿ 30 Dec 2025 9:23 pm

U19 ವಿಶ್ವಕಪ್‌ ನಲ್ಲಿ ಮಿಂಚಲು ನವಿ ಮುಂಬೈ ಆಟಗಾರ ಅಭಿಜ್ಞಾನ್ ಸಜ್ಜು

ಮುಂಬೈ, ಡಿ.30: ಮುಂಬೈ ಸೀನಿಯರ್ ಕ್ರಿಕೆಟ್ ತಂಡದಲ್ಲಿ ಇನ್ನಷ್ಟೇ ಆಡಬೇಕಾಗಿರುವ 17ರ ವಯಸ್ಸಿನ ನವಿ ಮುಂಬೈ ಆಟಗಾರ ಅಭಿಜ್ಞಾನ್ ಕುಂಡು ಭಾರತದ ಅಂಡರ್-19 ತಂಡದಲ್ಲಿ ಮಿಂಚುತ್ತಿದ್ದಾರೆ. ಮುಂದಿನ ವರ್ಷ ಐಸಿಸಿ ಅಂಡರ್-19 ವಿಶ್ವಕಪ್ ಟೂರ್ನಿಯಲ್ಲಿ ಮಿಂಚುವ ಭರವಸೆ ಮೂಡಿಸಿದ್ದಾರೆ. ಇಂಗ್ಲೆಂಡ್ ಪ್ರವಾಸ ಕೈಗೊಂಡಿರುವ ಭಾರತದ ಅಂಡರ್-19 ತಂಡದ ಉಪ ನಾಯಕನಾಗಿ ಮೇನಲ್ಲಿ ನೇಮಕಗೊಂಡಿದ್ದ ವಿಕೆಟ್‌ ಕೀಪರ್-ಬ್ಯಾಟರ್ ಅಭಿಜ್ಞಾನ್ 34 ಎಸೆತಗಳಲ್ಲಿ ಔಟಾಗದೆ 45 ರನ್ ಗಳಿಸಿ ಮೊದಲ ಯೂತ್ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಆರು ವಿಕೆಟ್‌ಗಳಿಂದ ಮಣಿಸುವಲ್ಲಿ ನೆರವಾಗಿದ್ದರು.ಆ ನಂತರ ಇಂಗ್ಲೆಂಡ್ ವಿರುದ್ಧದ ಮೊದಲ ಯೂತ್ ಟೆಸ್ಟ್ ಪಂದ್ಯದಲ್ಲಿ 95 ಎಸೆತಗಳಲ್ಲಿ 90 ರನ್ ಗಳಿಸಿದ್ದರು. ಎರಡನೇ ಟೆಸ್ಟ್‌ನಲ್ಲಿ ಕೇವಲ 46 ಎಸೆತಗಳಲ್ಲಿ 65 ರನ್ ಗಳಿಸಿ ಭಾರತ ತಂಡ ಡ್ರಾ ಸಾಧಿಸುವಲ್ಲಿ ನೆರವಾಗಿದ್ದರು. ಸೆಪ್ಟಂಬರ್‌ನಲ್ಲಿ ಬ್ರಿಸ್ಬೇನ್‌ನಲ್ಲಿ ನಡೆದಿದ್ದ ಯೂತ್ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯ ತಂಡದ ವಿರುದ್ಧ ಭಾರತ 3-0 ಅಂತರದಿಂದ ಜಯಶಾಲಿಯಾಗಲು ನೆರವಾಗಿದ್ದರು. 2 ಪಂದ್ಯಗಳಲ್ಲಿ 158ರ ಸರಾಸರಿಯಲ್ಲಿ 158 ರನ್ ಗಳಿಸಿದ್ದರು. ಲಕ್ನೊದಲ್ಲಿ ನಡೆದಿದ್ದ ಅಂಡರ್-19 ಚಾಲೆಂಜರ್ಸ್ ಟ್ರೋಫಿಯಲ್ಲಿ ಅವಳಿ ಶತಕಗಳನ್ನು ಗಳಿಸಿದ್ದ ಅಭಿಜ್ಞಾನ್ ‘ಸರಣಿಶ್ರೇಷ್ಠ’ ಪ್ರಶಸ್ತಿ ಪಡೆದಿದ್ದರು. ಇತ್ತೀಚೆಗೆ ದುಬೈನಲ್ಲಿ ನಡೆದಿದ್ದ ಅಂಡರ್-19 ಏಶ್ಯಕಪ್‌ನಲ್ಲಿ ಮಲೇಶ್ಯ ತಂಡದ ವಿರುದ್ಧ ದಾಖಲೆಯ ದ್ವಿಶತಕ(ಔಟಾಗದೆ 209 , 125 ಎಸೆತ, 9 ಸಿಕ್ಸರ್, 17 ಬೌಂಡರಿ)ಗಳಿಸಿದ್ದ ಅಭಿಜ್ಞಾನ್ ಕುಂಡು ಯೂತ್ ಏಕದಿನದಲ್ಲಿ ದ್ವಿಶತಕ ಗಳಿಸಿದ ಭಾರತದ ಮೊದಲ ಹಾಗೂ ವಿಶ್ವದ ಎರಡನೇ ಆಟಗಾರ ಎನಿಸಿಕೊಂಡಿದ್ದರು. ಅಭಿಜ್ಞಾನ್ ಕುಂಡು 2026ರಲ್ಲಿ ಝಿಂಬಾಬ್ವೆ ಹಾಗೂ ನಮೀಬಿಯಾದ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಅಂಡರ್-19 ವಿಶ್ವಕಪ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನದ ನಿರೀಕ್ಷೆಯಲ್ಲಿದ್ದಾರೆ. ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡಲು ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡ ನಂತರ ಭಾರತ ತಂಡವು ಜನವರಿ 15ರಂದು ಹರಾರೆಯಲ್ಲಿ ಅಮೆರಿಕದ ವಿರುದ್ಧ ಆಡುವ ಮೂಲಕ ತನ್ನ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

ವಾರ್ತಾ ಭಾರತಿ 30 Dec 2025 9:18 pm

ಸಿಎಂ ಕುರ್ಚಿ ಕದನ: 'ಕರ್ನಾಟಕ ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು'

ಬೆಂಗಳೂರು: ರಾಜ್ಯಕ್ಕೆ ಒಬ್ಬರೇ ಮುಖ್ಯಮಂತ್ರಿ ಅದು ಸಿದ್ದರಾಮಯ್ಯನವರು ಅಂತ ಭಾವಿಸಿದ್ದೆವು. ಕರ್ನಾಟಕ ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು ಒಬ್ಬರು ದೆಹಲಿಯಲ್ಲಿ ಇದ್ದಾರೆ ಕೆ.ಸಿ.ವೇಣುಗೋಪಾಲ್ ಅವರು ಸಿದ್ದರಾಮಯ್ಯನವರು ಅವರ ಆದೇಶವನ್ನು ಪಾಲಿಸಲಿಕ್ಕೆ ಕರ್ನಾಟಕದಲ್ಲಿ ಸಿಎಂ ಸ್ಥಾನದಲ್ಲಿದ್ದಾರೆ ಎಂಬುದು ಈ ಮೂರು ದಿನದೊಳಗೆ ನಮಗೆ ಗೊತ್ತಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಅವರು ತಿಳಿಸಿದ್ದಾರೆ. ಇಂದು

ಒನ್ ಇ೦ಡಿಯ 30 Dec 2025 9:08 pm

ಕೋಗಿಲು ಪ್ರಕರಣ: ಅಧಿಕಾರಿಗಳಿಂದ ದಾಖಲೆಗಳ ಸಂಗ್ರಹ

ಬೆಂಗಳೂರು : ಬ್ಯಾಟರಾಯನಪುರ ಕ್ಷೇತ್ರದ ಕೋಗಿಲು ಬಡಾವಣೆಯಲ್ಲಿ ಮನೆ ಕಳೆದುಕೊಂಡಿರುವ ಸಂತ್ರಸ್ತರಿಗೆ ಬೈಯ್ಯಪ್ಪನಹಳ್ಳಿಯ ರಾಜೀವ್ ಗಾಂಧಿ ನಿಗಮಗದ ವಸತಿ ಸಮುಚ್ಛಯದಲ್ಲಿ ನಿರ್ಮಿಸುತ್ತಿರುವ ಮನೆಗಳನ್ನು ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ ಬೆನ್ನಲ್ಲೆ ಅಧಿಕಾರಿಗಳು ದಾಖಲೆಗಳ ಸಂಗ್ರಹದಲ್ಲಿ ತೊಡಗಿದ್ದಾರೆ. ಮಂಗಳವಾರ ಮನೆ ನೀಡುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೋಗಿಲು ಬಡಾವಣೆ ಸಂತ್ರಸ್ತರಿಂದ ಜಿಲ್ಲಾಡಳಿತ, ಜಿಬಿಎ ಮತ್ತು ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗಳು ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ಪ್ರತಿ ಮನೆಯಿಂದ ಐದು ದಾಖಲೆಗಳನ್ನು ಸಂಗ್ರಹಿಸಲಾಗುತ್ತಿದೆ. ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ವಿದ್ಯುತ್ ಬಿಲ್, ತಾತ್ಕಾಲಿಕ ಆದೇಶ ಪ್ರತಿ, ಪಡಿತರ ಚೀಟಿಯನ್ನು ಜಿಬಿಎ ಅಧಿಕಾರಿಗಳ ತಂಡ ಸಂಗ್ರಹಿಸುತ್ತಿದೆ. ಸಂಗ್ರಹಿಸಿದ ದಾಖಲೆಗಳನ್ನು ಕೋಗಿಲು ಸರಕಾರಿ ಶಾಲೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಜಿಲ್ಲಾಡಳಿತ ಅಧಿಕಾರಿಗಳು ಸಹ ಸ್ಥಳ ಪರಿಶೀಲನೆ ನಡೆಸಿ, ಸಂತ್ರಸ್ತರಿಂದ ಮಾಹಿತಿ ಪಡೆದುಕೊಂಡರು. ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗಳು ಸರ್ವೆ ಕಾರ್ಯ ಆರಂಭಿಸಿದ್ದಾರೆ. ಯಲಹಂಕ ತಹಶೀಲ್ದಾರ್ ಜಿ.ಎಸ್.ಶ್ರೇಯಸ್, ರಾಜೀವ್ ಗಾಂಧಿ ವಸತಿ ನಿಗಮದ ನಿರ್ದೇಶಕ ಪರಶುರಾಮ್, ಜಿಲ್ಲಾಧಿಕಾರಿ ಜಗದೀಶ್ ಸಹ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ‘185 ಮನೆಗಳಲ್ಲಿ 20 ಮನೆಯವರು ಬೇರೆಯವರು ಇದ್ದಾರೆ. ಅವರು ಕರ್ನಾಟಕದ ರಾಯಚೂರು, ಕಲಬುರಗಿ ಮೂಲದವರು. ಅವರೆಲ್ಲರೂ ಸ್ಥಳಿಯರಾ? ಮನೆ ಇದೆಯೇ? ಎಂಬುದನ್ನು ಪರಿಶೀಲಿಸಲಾಗುವುದು. ಆಶಾ ಕಾರ್ಯಕರ್ತೆಯರ ಬಳಿ ಇರುವ ದಾಖಲೆಗಳ ಮಾಹಿತಿ ಕಲೆ ಹಾಕಲಾಗುವುದು’ ಎಂದು ಜಿಬಿಎ ಅಧಿಕಾರಿಗಳು ತಿಳಿಸಿದ್ದಾರೆ. ‘ಎಷ್ಟು ವರ್ಷದಿಂದ ವಾಸ ಮಾಡುತ್ತಿದ್ದೀರಾ? ಉದ್ಯೋಗ ಏನು ಮಾಡುತ್ತಿದ್ದೀರಾ? ಮಕ್ಕಳು ಯಾವ ಶಾಲೆಗೆ ಹೋಗುತ್ತಿದ್ದಾರೆ? ಎಂಬ ಪ್ರಶ್ನೆಗಳನ್ನು ಅಧಿಕಾರಿಗಳು ಕೇಳಿದರು. ಅಲ್ಲದೇ ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ ಹಾಗೂ ವಾಸ ದೃಢೀಕರಣ ಪತ್ರಗಳನ್ನು ಪರಿಶೀಲಿಸಿದರು. ಆಧಾರ್ ಕಾರ್ಡ್, ಗುರುತಿನ ಚೀಟಿ, ವಿದ್ಯುತ್ ಬಿಲ್ ಕೇಳಿ ಪಡೆದುಕೊಂಡರು ಎಂದು ಸಂತ್ರಸ್ತರು ತಿಳಿಸಿದರು. ‘ಕೋಗಿಲು ಪ್ರಕರಣಕ್ಕೆ ಸಂಬಂಧಿಸಿದಂತೆ, ಕೋಗಿಲು ಬಡಾವಣೆಯಲ್ಲಿ ಕಂದಾಯ ಇಲಾಖೆ, ಜಿಬಿಎ ಮತ್ತು ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಜಂಟಿ ಸರ್ವೆ ಮಾಡಲಾಗಿದೆ. ಮೂರು ತಂಡಗಳು ಮಾಡಿರುವ ಸರ್ವೆ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗುವುದು. ಮಾಹಿತಿಯನ್ನು ಕ್ರೂಢಿಕರಿಸಿ ಸರಕಾರಕ್ಕೆ ಸಲ್ಲಿಸಲಾಗುತ್ತದೆ’ -ಶ್ರೇಯಸ್, ತಹಶೀಲ್ದಾರ್ ಯಲಹಂಕ

ವಾರ್ತಾ ಭಾರತಿ 30 Dec 2025 9:06 pm

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಜನವರಿ 14ರಿಂದ ಟಿಕೆಟ್ ಬುಕ್ಕಿಂಗ್ ರಿಯಾಯಿತಿ ಜಾರಿ

ನವದೆಹಲಿ: ರೈಲು ಪ್ರಯಾಣ ದರ ಹೆಚ್ಚಿಸಿ ಶಾಕ್ ನೀಡಿದ್ದ ಭಾರತೀಯ ರೈಲ್ವೆ ಇಲಾಖೆಯು ಇದೀಗ ಟಿಕೆಟ್ ಬುಕ್ಕಿಂಗ್‌ನಲ್ಲಿ ರಿಯಾಯಿತಿ ಘೋಷಿಸುವ ಮೂಲಕ ಪ್ರಯಾಣಿಕರಿಗೆ ಗುಡ್‌ನ್ಯೂಸ್ ನೀಡಿದೆ. ಜನವರಿ 14ರಿಂದ ಟಿಕೆಟ್ ಬುಕ್ಕಿಂಗ್ ರಿಯಾಯಿತಿ ಜಾರಿ ಮಾಡುವುದಾಗಿ ತಿಳಿಸಿದೆ. ಯಾರಿಗೆಲ್ಲ ಇದು ಅನ್ವಯಿಸುತ್ತದೆ? ಟಿಕೆಟ್ ಖರೀದಿ ಮೇಲೆ ಎಷ್ಟು ಡಿಸ್ಕೌಂಟ್ ಸಿಗಲಿದೆ ಎಂಬ ವಿವರ ಇಲ್ಲಿದೆ. ರೈಲಿನ ಸೀಟುಗಳನ್ನು

ಒನ್ ಇ೦ಡಿಯ 30 Dec 2025 9:06 pm

ವಿಟ್ಲ ಪ.ಪಂ. ವ್ಯಾಪ್ತಿಯಲ್ಲಿ ಮನೆ ಕಟ್ಟಲು 2.75 ಸೆಂಟ್ಸ್ ಜಾಗವನ್ನು ರಾಜ್ಯ ಸರಕಾರ ಮಂಜೂರು ಮಾಡಲಿದೆ: ಶಾಸಕ ಅಶೋಕ್ ರೈ

ವಿಟ್ಲ: ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಮನೆ ಕಟ್ಟಲು ಜಾಗಕ್ಕೆ ಅರ್ಜಿ ಸಲ್ಲಿಸಿದವರಿಗೆ 2.75 ಸೆಂಟ್ಸ್ ಜಾಗವನ್ನು ರಾಜ್ಯ ಸರಕಾರ ಮಂಜೂರು ಮಾಡಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದರು‌. ವಿಟ್ಲ ನಿರೀಕ್ಷಣಾ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಹಿಂದೆ ಅರ್ಜಿ ಸಲ್ಲಿಸಿದವರಿಗೆ ಅಂದಿನ ರಾಜ್ಯ ಸರಕಾರ 1.38 ಸೆಂಟ್ಸ್ ಸ್ಥಳವನ್ನು ಮಂಜೂರು ಮಾಡಿತ್ತು. ಆದರೆ ಅದರಲ್ಲಿ ಮನೆ ಕಟ್ಟಲು ಅಸಾಧ್ಯ ವಾದ ಕಾರಣ ಮತ್ತು ಬ್ಯಾಂಕ್ ಸಾಲ ಆ ಜಾಗಗಳಿಗೆ ಮಂಜೂರಾಗದ ಕಾರಣ ಅರ್ಜಿದಾರರು ಅದನ್ನು ಬಿಟ್ಟಿದ್ದರು. ಈ ಬಗ್ಗೆ ಹಿಂದೆಯೂ ಧ್ವನಿ ಎತ್ತಿದ್ದೆ. ಶಾಸಕನಾದ ಬಳಿಕ ನಿರಂತರ ಕಂದಾಯ ಸಚಿವರ ಮೇಲೆ ಒತ್ತಡ ಹೇರಿ 94 ಸಿ ಮತ್ತು 94 ಸಿ ಸಿ ಅಡಿ 2.75 ಸೆಂಟ್ಸ್ ಸ್ಥಳ ಮಂಜೂರು ಮಾಡಿಸುವಲ್ಲಿ ಯಶಸ್ವಿ ಆಗಿದ್ದೇನೆ ಎಂದು ಹೇಳಿದರು. ಈ ಹಿಂದೆ ಇಕಾಖೆಯಿಂದ ತಿರಸ್ಕೃತ, 4,800 ರಷ್ಟು ಅರ್ಜಿಯ ಮರುಶೀಲನೆಗೆ ಒತ್ತಾಯಿಸಿದ್ದೇನೆ ಎಂದು ಶಾಸಕರು ಹೇಳಿದರು. 2015ರ ಮೊದಲು ಅಕ್ರಮ ಸಕ್ರಮಕ್ಕೆ ಅರ್ಜಿ ಸಲ್ಲಿಸಿದ ಮೂವರಿಗೆ ಸಕ್ರಮವಾಗದ ಹಿನ್ನೆಲೆಯಲ್ಲಿ ನ್ಯಾಯಾಲಯದ ಮೆಟ್ಟಲೇರಿದ್ದರು. ಇದೀಗ ನ್ಯಾಯಾಲಯದಲ್ಲಿ ಅವರಿಗೆ ಗೆಲುವು ದೊರಕಿದೆ. ಅವರಿಗೆ ಮತ್ತು ಅರ್ಜಿ ಸಲ್ಲಿಸಿದ ಸಲ್ಲಿಸುವ ಎಲ್ಲರಿಗೂ ಜಾಗ ಸಕ್ರಮ ಆಗಲಿದೆ. ಶಾಸಕನಿಗೆ ಅವರಿಗೆ ಸಹಕಾರ ನೀಡುವೆ ಎಂದು ಅವರು ಹೇಳಿದರು ಕಬಕ- ವಿಟ್ಲ ಚತುಷ್ಪಥ ರಸ್ತೆಗೆ ಮೊದಲ ಹಂತದಲ್ಲಿ ಹತ್ತು ಕೋಟಿ ರೂ. ಅನುದಾನ ಮಂಜೂರು ಆಗಿದೆ. ಶೀಘ್ರವಾಗಿ ಕಾರ್ಯ ಆರಂಭ ಆಗಲಿದೆ. ಹೆದ್ದಾರಿ ಇಲಾಖೆ ಅದರ ನಿರ್ವಹಣೆ ಮಾಡುವಂತೆ ಮನವಿ ಮಾಡಲಾಗಿದೆ ಎಂದು ಶಾಸಕರು ಹೇಳಿದರು. ವಿಟ್ಲ ಸಮುದಾಯ ಆಸ್ಪತ್ರೆ ಹಿಂಬಡ್ತಿ ಹೊಂದುವ ಸಾಧ್ಯತೆಯನ್ನು ಸ್ಪಷ್ಟವಾಗಿ ನಿರಾಕರಿಸಿದ ಅವರು ಆಸ್ಪತ್ರೆಯ ಸಿಬ್ಬಂದಿ ಮತ್ತು ಮೂಲ ಸೌಕರ್ಯ ಹೆಚ್ಚಿಸಲಾಗುವುದು. ಡಯಾಲಿಸೀಸ್ ಕೇಂದ್ರ ವಿಟ್ಲದಲ್ಲಿ‌ ಆರಂಭ ಆಗಲಿದೆ ಎಂದು ಅವರು ಹೇಳಿದರು. ವಿಟ್ಲಕ್ಕೆ ಅಗ್ನಿಶಾಮಕ ವಾಹನ ಮಂಜೂರು ಆಗಿದೆ. ಸ್ಥಳ ಗುರುತಿಸುವಿಕೆ ನಡೆದ ತಕ್ಷಣ ವಿಟ್ಲದಲ್ಲಿ‌ ಅಗ್ನಿಶಾಮಕ ವಾಹನ ಕಾರ್ಯ ಆರಂಭ ಮಾಡಲಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಅಳಿಕೆ ಗ್ರಾಮ ಪಂಚಾಯತಿ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು, ಅಕ್ರಮ ಸಕ್ರಮ ಸಮಿತಿಯ ಸದಸ್ಯರಾದ ರಾಮಣ್ಣ ಪಿಲಿಂಜ, ರೂಪಲೇಖಾ ಆಳ್ವ, ಪುತ್ತೂರು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ರೈ ಪೆರ್ನೆ, ವಿಟ್ಲ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ರಮಾನಾಥ ವಿಟ್ಲ ಮತ್ತಿತರರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 30 Dec 2025 9:04 pm

Bengaluru | ಪಿಜಿಯಲ್ಲಿ ಸಿಲಿಂಡರ್ ಸ್ಫೋಟ; ವ್ಯಕ್ತಿ ಮೃತ್ಯು

ಬೆಂಗಳೂರು : ನಗರದಲ್ಲಿರುವ ಕುಂದಲಹಳ್ಳಿ ಕಾಲನಿಯ ಅತಿಥಿ ಗೃಹವೊಂದರ(ಪಿಜಿ) ಅಡುಗೆ ಕೋಣೆಯಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಬಳ್ಳಾರಿ ಮೂಲದ ಅರವಿಂದ್(23) ಮೃತಪಟ್ಟಿದ್ದು, ಅವರು ಸಾಫ್ಟ್‌ ವೇರ್ ಸಂಸ್ಥೆಯಲ್ಲಿ ಸೀನಿಯರ್ ಅನಾಲಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಇನ್ನು ಪಿಜಿಯಲ್ಲಿದ್ದ ವೆಂಕಟೇಶ್, ವಿಶಾಲ್ ವರ್ಮಾ, ಸಿ.ವಿ. ಗೋಯಲ್ ಎಂಬುವರು ಗಾಯಗೊಂಡಿದ್ದಾರೆ.

ವಾರ್ತಾ ಭಾರತಿ 30 Dec 2025 9:01 pm

ಒಡಿಶಾ| ಇಬ್ಬರು ಬಾಂಗ್ಲಾ ಪ್ರಜೆಗಳಿಗೆ ವಿಮಾನನಿಲ್ದಾಣದಲ್ಲಿ ಕಿರುಕುಳ: ಭುವನೇಶ್ವರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನಿರಾಕರಣೆ: ವರದಿ

ಭುವನೇಶ್ವರ,ಡಿ.30: ವೈದ್ಯಕೀಯ ಚಿಕಿತ್ಸೆಗಾಗಿ ಭುವನೇಶ್ವರಕ್ಕೆ ಪ್ರಯಾಣಿಸುತ್ತಿದ್ದ ಬಾಂಗ್ಲಾದೇಶದ ಇಬ್ಬರು ಪ್ರಜೆಗಳ ಗುರುತಿನ ಬಗ್ಗೆ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ ಕಾರಣ ಅವರನ್ನು ನಗರದ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಪೊಲೀಸ್ ದೃಢೀಕರಣಕ್ಕೊಳಪಡಿಸಿದ ಘಟನೆ ವರದಿಯಾಗಿದೆ. ಅಷ್ಟೇ ಅಲ್ಲದೆ, ಅವರಲ್ಲೊಬ್ಬರಿಗೆ ಚಿಕಿತ್ಸೆ ನೀಡಲಿದ್ದ ಆಸ್ಪತ್ರೆಯ ಆಡಳಿತ ಕೂಡ ತೊಂದರೆಗೆ ಸಿಲುಕಬಹುದೆಂಬ ಭೀತಿಯಿಂದ ರೋಗಿಯನ್ನು ದಾಖಲಿಸಿಕೊಳ್ಳಲು ನಿರಾಕರಿಸಿದೆ. ಮುಂಬೈನಿಂದ ವಿಮಾನದಲ್ಲಿ ಆಗಮಿಸಿದ್ದ ಇಬ್ಬರೂ ಆನಂತರ ಬಂದ ದಾರಿಯಲ್ಲೇ ವಾಪಸಾಗಬೇಕಾಯಿತು. ಇವರಿಬ್ಬರೂ ಸಹೋದರರಾಗಿದ್ದು, ಅವರಲ್ಲೊಬ್ಬರು ಚಾಲಕ ಹಾಗೂ ಇನ್ನೊಬ್ಬರು ಕಾರ್ಮಿಕ. ಇವರ ಪೈಕಿ ಹಿರಿಯ ಸಹೋದರ ಹೃದಯದ ತೊಂದರೆಯಿಂದ ಬಳಲುತ್ತಿದ್ದು, ಆತನ ಚಿಕಿತ್ಸೆಗಾಗಿ ಭುವನೇಶ್ವರದ ಖಾಸಗಿ ಆಸ್ಪತ್ರೆಗೆ ಆಗಮಿಸುವವರಿದ್ದರು. ಭುವನೇಶ್ವರದ ಬಿಜು ಪಟ್ನಾಯಕ್ ಅಂತಾರಾಷ್ಟ್ರೀಯ ವಿಮಾನನಿಲ್ದಾಣ (ಬಿಜೆಐಎ)ದಲ್ಲಿ ಬಂದಿಳಿದ ಅವರನ್ನು ಕರೆತರಲು ಆ್ಯಂಬುಲೆನ್ಸನ್ನು ಕೂಡಾ ಆಸ್ಪತ್ರೆಯ ಆಡಳಿತ ಏರ್ಪಾಡು ಮಾಡಿತ್ತು. ಆದರೆ, ಸಂವಹನದ ಕೊರತೆಯಿಂದಾಗಿ ಅದು ತಲುಪಲಿಲ್ಲ. ಆ್ಯಂಬುಲೆನ್ಸ್ ಬಾರದ ಕಾರಣ ಸಹೋದರರು ಆಸ್ಪತ್ರೆಗೆ ತೆರಳಲು ಟ್ಯಾಕ್ಸಿಯೊಂದನ್ನು ಗೊತ್ತುಪಡಿಸಿದರು. ಟ್ಯಾಕ್ಸಿಯ ಚಾಲಕ,ಇವರಿಬ್ಬರ ರಾಷ್ಟ್ರೀಯತೆಯನ್ನು ಕೇಳಿದಾಗ ಅವರು ಬಾಂಗ್ಲಾದ ಪ್ರಜೆಗಳೆಂದು ತಿಳಿದುಬಂದಿತು. ಆತ ವಿಮಾನನಿಲ್ದಾಣದಲ್ಲಿದ್ದ ಇತರರನ್ನು ಎಚ್ಚರಿಸಿದ. ಸ್ಥಳೀಯರು ಜಮಾವಣೆಗೊಂಡು, ಪೊಲೀಸರಿಗೆ ಮಾಹಿತಿ ನೀಡಿದರು. ಇಬ್ಬರನ್ನೂ ಅಕ್ರಮ ವಲಸಿಗರೆಂಬ ಶಂಕೆಯಲ್ಲಿ ವಿಮಾನನಿಲ್ದಾಣದ ಪೊಲೀಸ್‌ಠಾಣೆಗೆ ಕೊಂಡೊಯ್ದು ವಿಚಾರಣೆಗೊಳಪಡಿಸಲಾಯಿತು ಪಾಸ್‌ಪೋರ್ಟ್, ವೀಸಾ ಸೇರಿದಂತೆ ಅವರ ಪ್ರಯಾಣ ದಾಖಲೆಗಳನ್ನು ಪರಿಶೀಲಿಸಿದಾಗ ಅವು ಅಧಿಕೃತವೆಂದು ದೃಢಪಟ್ಟಿತು. ಕೂಲಂಕಷ ಪರಿಶೀಲನೆಯ ಬಳಿಕ ಅವರನ್ನು ಬಿಡಲಾಯಿತು ಎಂದು ಪೊಲೀಸ್‌ಠಾಣೆಯ ಉಸ್ತುವಾರಿ ನಿರೀಕ್ಷಕ ರಬೀಂದ್ರನಾಥ್ ಮೆಹರ್ ತಿಳಿಸಿದ್ದಾರೆ. ಆದಾಗ್ಯೂ, ಬಾಂಗ್ಲಾದೇಶದಲ್ಲಿ ಇತ್ತೀಚಿನ ಹಿಂಸಾಚಾರದ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಜನಾಕ್ರೋಶವುಂಟಾಗಿರುವುದರಿಂದ ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ದಾಖಲಿಸಿಕೊಳ್ಳಲು ಆಸ್ಪತ್ರೆಯ ಆಡಳಿತವು ನಿರಾಕರಿಸಿತು. ಬೇರೆ ದಾರಿಯಿಲ್ಲದೆ, ಈ ಸೋದರರು ಮುಂಬೈಗೆ ವಾಪಸಾಗಿದ್ದಾರೆಂದು ವರದಿಗಳು ತಿಳಿಸಿವೆ. ಡಿಸೆಂಬರ್ 24ರಂದು ಸಂಬಾಲ್‌ಪುರದಲ್ಲಿ ಅಕ್ರಮ ಬಾಂಗ್ಲಾ ವಲಸಿಗನೆಂಬ ಶಂಕೆಯಲ್ಲಿ ದುಷ್ಕರ್ಮಿಗಳ ಗುಂಪೊಂದು ಪಶ್ಚಿಮಬಂಗಾಳದ ವಲಸೆ ಕಾರ್ಮಿಕನೊಬ್ಬನನ್ನು ಹತ್ಯೆಗೈದ ಕೆಲವು ದಿನಗಳ ಬಳಿಕ ಈ ಘಟನೆ ನಡೆದಿದೆ. ಸಂಭಾಲ್‌ಪುರದ ವಲಸೆ ಕಾರ್ಮಿಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದರು. ಆದರೆ ಆಸ್ತಿ ವಿವಾದಕ್ಕೆ ಸಂಬಂಧಿಸಿ ಆ ವ್ಯಕ್ತಿಯ ಮೇಲೆ ದಾಳಿ ನಡೆದಿದೆಯೇ ಹೊರತು,ಬಾಂಗ್ಲಾದ ಪ್ರಜೆಯೆಂಬ ಶಂಕೆಯಲ್ಲಿ ಅಲ್ಲವೆಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ವಾರ್ತಾ ಭಾರತಿ 30 Dec 2025 8:53 pm

ಮಾಜಿ ಉಪರಾಷ್ಟ್ರಪತಿ ಧನಕರ್‌ಗೆ ಇನ್ನೂ ಸಿಗದ ಸರಕಾರಿ ಬಂಗಲೆ!

ಹೊಸದಿಲ್ಲಿ,ಡಿ.30: ಉಪರಾಷ್ಟ್ರಪತಿ ಹುದ್ದೆಗೆ ಜುಲೈನಲ್ಲಿ ರಾಜೀನಾಮೆ ನೀಡಿದ್ದ ಜಗದೀಪ್ ಧನಕರ್ ಅವರಿಗೆ, ಈತನಕ ಅಧಿಕೃತ ನಿವಾಸ ನೀಡಲಾಗಿಲ್ಲವೆಂದು ಅವರ ನಿಕಟವರ್ತಿಗಳು ಮಂಗಳವಾರ ತಿಳಿಸಿದ್ದಾರೆ. ಜಗದೀಪ್ ಧನಕರ್‌ ಅವರು ಆರೋಗ್ಯದ ಕಾರಣಗಳನ್ನು ನೀಡಿ, ಸಂಸತ್‌ನ ಮುಂಗಾರು ಅಧಿವೇಶನದ ಮೊದಲ ದಿನವಾದ ಜುಲೈ 21ರಂದು ಉಪರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ವಾರಗಳ ತರುವಾಯ, ಸೆಪ್ಟೆಂಬರ್‌ನಲ್ಲಿ ಅವರು ಅಧಿಕೃತ ನಿವಾಸವಾದ ಉಪರಾಷ್ಟ್ರಪತಿ ಭವನವನ್ನು ತೆರವುಗೊಳಿಸಿದ್ದರು. ಆನಂತರ ಅವರು ದಕ್ಷಿಣ ದಿಲ್ಲಿಯ ಛತ್ತರ್‌ಪುರ ಪ್ರದೇಶದಲ್ಲಿರುವ ಖಾಸಗಿ ಫಾರ್ಮ್ ಹೌಸ್ ಒಂದರಲ್ಲಿ ನೆಲೆಸಿದ್ದರು. ಛತ್ತರ್‌ಪುರದ ಗಡಾಯ್‌ಪುರ ಪ್ರದೇಶದಲ್ಲಿರುವ ಈ ಫಾಮ್‌ಹೌಸ್ ಐಎನ್‌ಎಲ್‌ಡಿ ನಾಯಕ ಅಭಯ್ ಚೌಟಾಲಾ ಅವರಿಗೆ ಸೇರಿದ್ದಾಗಿದೆ. ಆಗಸ್ಟ್ 22ರಂದು ಧನಕರ್ ಅವರು ಗೃಹ ಹಾಗೂ ನಗರ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿಯವರಿಗೆ ಪತ್ರ ಬರೆದು ಮಾಜಿ ಉಪರಾಷ್ಟ್ರಪತಿಯವರಿಗೆ ದೊರೆಯಬೇಕಾದ ಅಧಿಕೃತ ನಿವಾಸವನ್ನು ತನಗೆ ನೀಡುವಂತೆ ಕೋರಿದ್ದರು. ಆದಾಗ್ಯೂ, ಅವರಿಗೆ ದೊರೆಯಬೇಕಾದ ನಿವಾಸವನ್ನು ಈವರೆಗೆ ಒದಗಿಸಲಾಗಿಲ್ಲವೆಂದು ಎಂದು ಅವರ ಆಪ್ತರೊಬ್ಬರು ತಿಳಿಸಿದ್ದಾರೆ. ಮಾಜಿ ಉಪರಾಷ್ಟ್ರಪತಿಯಾಗಿ ಧನಕರ್ ಅವರು 2 ಲಕ್ಷ ರೂ. ಮಾಸಿಕ ಪಿಂಚಣಿ, ಟೈಪ್ 8 ಬಂಗಲೆ, ಓರ್ವ ಖಾಸಗಿ ಕಾರ್ಯದರ್ಶಿ, ಓರ್ವ ಹೆಚ್ಚುವರಿ ಆಪ್ತ ಕಾರ್ಯದರ್ಶಿ, ಓರ್ವ ಖಾಸಗಿ ಸಹಾಯಕ, ಓರ್ವ ವೈದ್ಯ, ಓರ್ವ ನರ್ಸಿಂಗ್ ಅಧಿಕಾರಿ ಹಾಗೂ ನಾಲ್ವರು ಖಾಸಗಿ ಪರಿಚಾರಕರನ್ನು ಪಡೆಯುವ ಹಕ್ಕನ್ನು ಹೊಂದಿದ್ದಾರೆ.

ವಾರ್ತಾ ಭಾರತಿ 30 Dec 2025 8:50 pm

ರಂಗಭೂಮಿ ರಂಗಶಿಕ್ಷಣ ಮಕ್ಕಳ ನಾಟಕೋತ್ಸವ ಸಮಾರೋಪ

ಉಡುಪಿ, ಡಿ.30: ರಂಗಶಿಕ್ಷಣ ಮಕ್ಕಳ ಜೀವನ ಪರಿವರ್ತನೆಗೆ ನಾಂದಿ ಯಾಗಲಿದೆ. ಮಕ್ಕಳಲ್ಲಿ ಹುದುಗಿರುವ ಪ್ರತಿಭಾಶಕ್ತಿಯನ್ನು ಹೊರ ತರುವುದೇ ಈ ರಂಗಶಿಕ್ಷಣದ ಉದ್ದೇಶವಾಗಿದೆ. ನಮ್ಮ ಕನಸು ನನಸಾಗುತ್ತಿದೆ. 11 ಶಿಕ್ಷಣ ಸಂಸ್ಥೆಗಳ 250ಕ್ಕೂ ಅಧಿಕ ಮಕ್ಕಳು ರಂಗಶಿಕ್ಷಣ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ರಂಗಶಿಕ್ಷಣವನ್ನು ಇನ್ನಷ್ಟು ಶಾಲೆಗಳಿಗೆ ವಿಸ್ತರಿಸುವ ಚಿಂತನೆ ನಡೆದಿದೆ ಎಂದು ರಂಗಭೂಮಿ ಉಡುಪಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದ್ದಾರೆ. ರಂಗಭೂಮಿ ಉಡುಪಿ ವತಿಯಿಂದ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಮಂಗಳವಾರ ನಡೆದ ರಂಗಭೂಮಿ ರಂಗ ಶಿಕ್ಷಣ ಅಭಿಯಾನದ ಮಕ್ಕಳ ನಾಟಕೋತ್ಸವದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಎಲ್ಲಾ ಕ್ಷೇತ್ರಗಳಲ್ಲಿಯೂ ನಿವೃತ್ತಿ ಎಂಬುದಿದೆ. ಆದರೆ ಕಲಾವಿದರಿಗೆ ನಿವೃತ್ತಿಯಿಲ್ಲ. ಮಕ್ಕಳಿಗೆ ರಂಗ ಶಿಕ್ಷಣ ನೀಡಿ ಅವರನ್ನು ನಾಡಿನ ಉತ್ತಮ ನಾಗರಿಕರನ್ನಾಗಿಸುವ ರಂಗಭೂಮಿಯ ಈ ಅಭಿಯಾನದಲ್ಲಿ ಸಂಘಸಂಸ್ಥೆಗಳು ಕೈ ಜೋಡಿಸುವ ಅಗತ್ಯವಿದೆ ಎಂದು ಅವರು ತಿಳಿಸಿದರು. ಮುಖ್ಯ ಅತಿಥಿ ಅದಾನಿ ಪವರ್‌ನ ಎಜಿಎಂ ರವಿ ಜರೆ ಮಾತನಾಡಿ, ಕಳೆದ 6 ದಶಕಗಳಿಂದ ರಂಗಭೂಮಿಯ ಕಂಪನ್ನು ನಾಡಿನ ಉದ್ದಗಲಕ್ಕೂ ಪಸರಿಸಿದ ರಂಗಭೂಮಿ ಉಡುಪಿ ಸಂಸ್ಥೆ ಇದೀಗ ಮಕ್ಕಳನ್ನು ನಾಟಕದತ್ತ ಸೆಳೆಯಲು ರಂಗ ಶಿಕ್ಷಣವನ್ನು ಹಮ್ಮಿಕೊಂಡಿರುವುದು ಅಭಿನಂದನಾರ್ಹ. ಮಕ್ಕಳ ವ್ಯಕ್ತಿತ್ವ ವಿಕಸನದ ಜೊತೆಗೆ ಭವಿಷ್ಯದ ರಂಗಭೂಮಿ ಕಲಾವಿದರನ್ನು ಕೊಡುವ ಈ ರಂಗಶಿಕ್ಷಣ ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆಯಾಗಿದೆ ಎಂದರು. ಉದ್ಯಮಿ ಶ್ರೀಶ ನಾಯಕ್ ಪೆರಣಂಕಿಲ ಮಾತನಾಡಿ, ಇಂದಿನ ಮೊಬೈಲ್ ಯುಗದಲ್ಲಿ ಮಕ್ಕಳನ್ನು ನಾಟಕದತ್ತ ಸೆಳೆಯುವ ರಂಗಭೂಮಿ ಉಡುಪಿಯ ಪ್ರಯತ್ನ ಶ್ಲಾಘನೀಯ. ನಾಟಕದ ಮೂಲಕ ರಂಗಭೂಮಿ ಸಮಾಜವನ್ನು ಎಚ್ಚರಿಸುವ ಕಾರ್ಯ ನಡೆಸುತ್ತಿದೆ ಎಂದರು. ರಟಗಶಿಕ್ಷಣ ಯೋಜನೆಯ ಸಂಚಾಲಕ ವಿದ್ಯಾವಂತ ಆಚಾರ್ಯ ಸಮಾರೋಪ ಭಾಷಣ ಮಾಡಿದರು. ಅಲಯನ್ಸ್ ಜಿಲ್ಲಾ ಗವರ್ನರ್ ಸುನೀಲ್ ಸಾಲ್ಯಾನ್ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ರಂಗ ಶಿಕ್ಷಣ ಪಡೆದ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಹಾಗೂ ರಂಗಶಿಕ್ಷಣದ ಗುರುಗಳಿಗೆ ಗೌರವಾರ್ಪಣೆ ನಡೆಯಿತು. ಉದ್ಯಮಿ ಜಮಾಲುದ್ದೀನ್ ಅಬ್ಬಾಸ್, ಎಂಜಿಎಂ ಕಾಲೇಜಿನ ಪ್ರಾಂಶುಪಾಲೆ ಪ್ರೊ.ವನಿತಾ ಮಯ್ಯ, ಆರ್‌ಆರ್‌ಸಿ ನಿರ್ದೇಶಕ ಡಾ.ಜಗದೀಶ್ ಶೆಟ್ಟಿ, ರಂಗಭೂಮಿ ಉಡುಪಿಯ ಉಪಾಧ್ಯಕ್ಷರುಗಳಾದ ರಾಜಗೋಪಾಲ್ ಬಲ್ಲಾಳ್ ಹಾಗೂ ಭಾಸ್ಕರ್ ರಾವ್ ಕಿದಿಯೂರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಪ್ರದೀಪಚಂದ್ರ ಕುತ್ಪಾಡಿ ಸ್ವಾಗತಿಸಿದರು. ರವಿರಾಜ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಅಮಿತಾಂಜಲಿ ಕಿರಣ್ ವಂದಿಸಿದರು. ಈ ಸಂದರ್ಭದಲ್ಲಿ ಉಡುಪಿ ಬೈಲಕೆರೆ ಶ್ರೀಅನಂತೇಶ್ವರ ಪ್ರೌಢಶಾಲೆಯ ಮಕ್ಕಳಿಂದ ’ಒಮ್ಮೆ ಸಿಕ್ಕರೆ’ ನಾಟಕ, ನಿಟ್ಟೂರು ಪ್ರೌಢಶಾಲಾ ಮಕ್ಕಳಿಂದ ’ಕತ್ತಲೆ ನಗರ ತಲೆಕೆಟ್ಟ ರಾಜ’, ಕುಂಜಿಬೆಟ್ಟು ಟಿಎ ಪೈ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳಿಂದ ’ತಾರೆ’, ಸೈಂಟ್ ಸಿಸಿಲೀಸ್ ಪ್ರೌಢಶಾಲೆಯ ಮಕ್ಕಳಿಂದ ’ಅಳಿಲು ರಾಮಾಯಣ ’ ಹಾಗೂ ಇಂದ್ರಾಳಿ ಆಂಗ್ಲ ಮಾಧ್ಯಮ ಶಾಲಾ ಮಕ್ಕಳಿಂದ ’ಎಂಡ್ ಇಲ್ಲದ ಬಂಡ್ ಅವತಾರ’ ನಾಟಕಗಳು ಪ್ರದರ್ಶನಗೊಂಡವು. ಡಿ.29 ಹಾಗೂ 30ರಂದು ಎರಡು ದಿನಗಳ ಕಾಲ ನಡೆದ ಈ ನಾಟಕೋತ್ಸವದಲ್ಲಿ 11 ಶಿಕ್ಷಣ ಸಂಸ್ಥೆಗಳ 250ಕ್ಕೂ ಅಧಿಕ ಮಕ್ಕಳು ಭಾಗವಹಿಸಿ 11 ನಾಟಕಗಳನ್ನು ಪ್ರದರ್ಶಿಸಿದರು.

ವಾರ್ತಾ ಭಾರತಿ 30 Dec 2025 8:49 pm

ನೂರು ದಿನ ಪೂರೈಸಿದ ಬೈಂದೂರು ರೈತರ ಧರಣಿ: ಜ.2ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆಗೆ ಸಜ್ಜು

ಬೈಂದೂರು, ಡಿ.30: ಪಟ್ಟಣ ಪ್ರದೇಶದ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈಬಿಡುವಂತೆ ಬೈಂದೂರು ತಾಲೂಕು ರೈತ ಸಂಘದ ವತಿಯಿಂದ ಬೈಂದೂರು ತಾಲೂಕು ಆಡಳಿತ ಸೌಧದ ಎದುರು ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ನೂರು ದಿನ ಪೂರೈಸಿದ್ದು, ಈವರೆಗೆ ಬೇಡಿಕೆಗಳು ಈಡೇರದ ಕಾರಣ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ಸಂಘ ನಿರ್ಧರಿಸಿದೆ. ಮಂಗಳವಾರ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬೈಂದೂರು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ, ಈಗಾಗಲೇ ನಾಲ್ಕು ತಿಂಗಳಿಂದ ಸಾವಿರಾರು ರೈತರು ನ್ಯಾಯಕ್ಕಾಗಿ ಆಗ್ರಹಿಸಿ ಹೋರಾಟ ನಡೆಸುತ್ತಿದ್ದಾರೆ. ಅಧಿವೇಶನದಲ್ಲೂ ಕೂಡ ಜನನಾಯಕರು ಈ ಬಗ್ಗೆ ಧ್ವನಿ ಎತ್ತಿದ್ದಾರೆ. ಪಕ್ಷಾತೀತವಾಗಿ ನಡೆಯುತ್ತಿ ರುವ ಈ ಹೋರಾಟಕ್ಕೆ ಜಿಲ್ಲೆಯ ಎಲ್ಲಾ ರಾಜಕೀಯ ಮುಖಂಡರು, ಸಂಘ ಸಂಸ್ಥೆಗಳು ಬೆಂಬಲ ನೀಡಿದ್ದಾರೆ. ಈಗಾಗಲೇ ಎಲ್ಲಾ ವಿವರಗಳ ಪ್ರಸ್ತಾವನೆ ಸರಕಾರದ ಮುಂದಿದ್ದು ಅಧಿಕಾರಿಗಳ ಅನಗತ್ಯ ವಿಳಂಬದಿಂದಾಗಿ ರೈತರಿಗೆ ಅನ್ಯಾಯವಾಗುತ್ತಿದೆ. ರೈತರ ಬೇಡಿಕೆಯ ಬಗ್ಗೆ ನಿರ್ಲಕ್ಷ ಸರಿಯಲ್ಲ. ಮುಂದಾಗುವ ಎಲ್ಲಾ ಸಮಸ್ಯೆಗಳಿಗೂ ಅಧಿಕಾರಿಗಳೆ ಕಾರಣ ಎಂದು ಆಕ್ರೋಷ ವ್ಯಕ್ತಪಡಿಸಿದರು. ಈಗಾಗಲೇ ಹಲವು ಬಾರಿ ಪ್ರತಿಭಟನೆ ನಡೆಸಿರುವ ಜೊತೆಗೆ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಗೆ ಮುತ್ತಿಗೆ ಹಾಕಲಾಗಿತ್ತು. ಬೆಳಗಾವಿ ಅಧಿವೇಶನ ಸೇರಿದಂತೆ ಬೆಂಗಳೂರಿನಲ್ಲೂ ಕೂಡ ವಿವಿಧ ಸಚಿವರು, ಅಧಿಕಾರಿಗಳನ್ನು ಭೇಟಿಯಾಗಿ ವಾಸ್ತವತೆ ತಿಳಿಸಲಾಗಿತ್ತು. ಸರಕಾರದ ಮಟ್ಟದಲ್ಲಿ ಅನಗತ್ಯ ವಿಳಂಬವಾಗಿರುವುದು ಸ್ಪಷ್ಟವಾಗಿದೆ. ಹೀಗಾಗಿ ಜ.2ರಂದು ಬೈಂದೂರಿನಲ್ಲಿ ಪ್ರತಿಭಟನೆ ಜಾಥಾ ನಡೆಯಲಿದೆ ಎಂದರು. ಈ ಸಂದರ್ಭದಲ್ಲಿ ಹೋರಾಟದಲ್ಲಿರುವ ಪ್ರಮುಖರಾದ ಅರುಣ್ ಕುಮಾರ್ ಶಿರೂರು, ಸಮಾಜ ಸೇವಕ ಸುಬ್ರಹ್ಮಣ್ಯ ಬಿಜೂರು, ಮಹಾದೇವ ಪೂಜಾರಿ ಕಿಸ್ಮತ್ತಿ, ಕೇಶವ ಪೂಜಾರಿ, ಮಹಾದೇವ ಗೊಂಡ ಕಡ್ಕೆ, ಚಂದು ಮರಾಠಿ, ಮಂಜು ಗೊಂಡ, ನಾಗರಾಜ ಪೂಜಾರಿ ವಸ್ರೆ, ರಾಜು ಪೂಜಾರಿ ವಸ್ರೆ ಮೊದಲಾದವರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 30 Dec 2025 8:48 pm

Uttar Pradesh| SIRಗೆ ಕಾಲಾವಕಾಶ ವಿಸ್ತರಣೆ; ಮಾರ್ಚ್ 6ಕ್ಕೆ ಅಂತಿಮ ಪಟ್ಟಿ

ಲಕ್ನೋ: ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಮತ್ತೆ ವಿಸ್ತರಿಸಲಾಗಿದ್ದು, ಕರಡು ಮತದಾರರ ಪಟ್ಟಿಯನ್ನು 2026ರ ಜನವರಿ 6ರಂದು ಹಾಗೂ ಅಂತಿಮ ಪಟ್ಟಿಯನ್ನು ಮಾರ್ಚ್ 6ರಂದು ಪ್ರಕಟಿಸಲಾಗುವುದು ಎಂದು ಭಾರತೀಯ ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ. ಈ ಹಿಂದೆ ಮೊದಲ ಮರುಹೊಂದಾಣಿಕೆಯ ಬಳಿಕ ಕರಡು ಪಟ್ಟಿಯನ್ನು ಡಿಸೆಂಬರ್ 31, 2025ರಂದು ಪ್ರಕಟಿಸುವುದಾಗಿ ಆಯೋಗ ಘೋಷಿಸಿತ್ತು. ಆದರೆ ಪರಿಷ್ಕೃತ ವೇಳಾಪಟ್ಟಿಯಂತೆ ದಿನಾಂಕವನ್ನು ಮುಂದೂಡಲಾಗಿದೆ. ರಾಜ್ಯದ ಮುಖ್ಯ ಚುನಾವಣಾಧಿಕಾರಿ ನವದೀಪ್ ರಿನ್ವಾ ಹೇಳಿಕೆಯಲ್ಲಿ, ಜನವರಿ 6ರಿಂದ ಫೆಬ್ರವರಿ 6ರವರೆಗೆ ಮತದಾರರಿಂದ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದು ಎಂದು ತಿಳಿಸಿದ್ದಾರೆ. ಇದೇ ಅವಧಿಯಲ್ಲಿ ನೋಟಿಸ್ ಹಂತ, ಆಕ್ಷೇಪಣೆಗಳ ವಿಲೇವಾರಿ ಹಾಗೂ ಎಣಿಕೆ ನಮೂನೆಗಳ ಮೇಲಿನ ನಿರ್ಧಾರ ಪ್ರಕ್ರಿಯೆಗಳು ನಡೆಯಲಿದ್ದು, ಮಾರ್ಚ್ 6ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಅವರು ಹೇಳಿದ್ದಾರೆ. ಮೊದಲು ಕರಡು ಪಟ್ಟಿಯ ಪ್ರಕಟಣೆಗೆ ಚುನಾವಣಾ ಆಯೋಗವು ಗಡುವು ಡಿಸೆಂಬರ್ 26 ಎಂದು ನಿಗದಿಪಡಿಸಿತ್ತು. ಈ ದಿನಾಂಕವನ್ನು ತಮಿಳುನಾಡು, ಗುಜರಾತ್, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ರಾಜ್ಯಗಳಿಗೂ, ಅಂಡಮಾನ್–ನಿಕೋಬಾರ್ ದ್ವೀಪಗಳ ಕೇಂದ್ರಾಡಳಿತ ಪ್ರದೇಶಕ್ಕೂ ಅನ್ವಯಿಸಲಾಗಿತ್ತು. ಚುನಾವಣಾ ಆಯೋಗ ನವೆಂಬರ್ 4, 2025ರಂದು ಉತ್ತರ ಪ್ರದೇಶ ಸೇರಿದಂತೆ ಒಟ್ಟು 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಆರಂಭಿಸಿತ್ತು.

ವಾರ್ತಾ ಭಾರತಿ 30 Dec 2025 8:47 pm

ಹೊಸ ವರ್ಷಾಚರಣೆಯ ಶಾಂತಿಯುತ ವಾತಾವರಣ ನಿರ್ಮಾಣಕ್ಕೆ ಸಹಬಾಳ್ವೆ ಆಗ್ರಹ

ಡಿ.25ರಂದು ಕ್ರಿಸ್ತ ಜಯಂತಿಯ ಆಚರಣೆ ಸಮಾಪ್ತವಾಗಿ ಜನವರಿ 1ರ ಹೊಸ ವರ್ಷಾಚರಣೆಗೆ ನಾಡಿನ ಕ್ರೈಸ್ತ ಭಾಂದವರು ಸಜ್ಜುಗೊಳ್ಳುತ್ತಿದ್ದಾರೆ. ಆದರೆ ಅನಂದ ಉಲ್ಲಾಸಗಳಿಂದ ಹಬ್ಬವನ್ನು ಆಚರಿಸುವ ಸ್ಥಿತಿ ದೇಶದಲ್ಲಿ ಇರದಂತಹ ವಾತಾವರಣವನ್ನು ಸಂಘಪರಿವಾರದ ಸಂಘಟನೆಗಳು ನಿರ್ಮಾಣ ಮಾಡಿವೆ ಎಂದು ಸಹಬಾಳ್ವೆ ಉಡುಪಿ ಜಿಲ್ಲೆ ಟೀಕಿಸಿದೆ. ಕೇರಳ, ದೆಹಲಿ, ಅಸ್ಸಾಮ್, ಒಡಿಸ್ಸಾ, ಉತ್ತರ ಪ್ರದೇಶ, ಛತ್ತೀಸ್ಗಡ ರಾಜ್ಯಗಳಲ್ಲಿ ಕ್ರಿಸ್ತ ಜಯಂತಿಯ ಆಚರಣೆಗಳ ಮೇಲೆ ಬಲಪಂಥೀಯ ಸಂಘಟನೆಗಳು ಪುಡಾಂಟಿಕೆ ನಡೆಸಿ, ಹಬ್ಬವನ್ನು ಆಚರಿಸುತ್ತಿದ್ದ ಕ್ರೈಸ್ತ ಭಾಂದವರ ಮೇಲೆ ಹಲ್ಲೆ ನಡೆಸಿದ್ದಾರೆ. ಒಂದು ಕಡೆ ದೇಶದ ಪ್ರಧಾನ ಮಂತ್ರಿಗಳು ಹಬ್ಬಾಚರಣೆಯಲ್ಲಿ ಭಾಗಿಯಾಗಿ ಶಾಂತಿ ಸಂದೇಶ ಸಾರಿದರೆ ಮತ್ತೊಂದು ಕಡೆ ಅವರ ಬಹುವಾಗಿ ಮೆಚ್ಚುವ ಸಂಘಪರಿವಾರಕ್ಕೆ ಸೇರಿದ ಸಂಘಟನೆಗಳು ಕಾನೂನು ಬಾಹೀರ ಧಾಂದಲೆಗಳನ್ನು ನಡೆಸಿವೆ. ಹಲ್ಲೆಕೋರರ ಮೇಲೆ ಗಂಭೀರ ಕಾನೂನು ಕ್ರಮಗಳನ್ನು ಕೈಗೊಳ್ಳಲು ಕಾನೂನು ಪಾಲಕರು ಮೀನಾಮೇಷ ಮಾಡುತ್ತಿದ್ದಾರೆ. ಈ ವಿದ್ಯಮಾನಗಳು, ಪ್ರಭುತ್ವವು ದೇಶದ ವೈವಿಧ್ಯಮಯ ಮತಾಚರಣೆಯ ಹಕ್ಕುಗಳನ್ನು ಗೌರವಿಸಿ ರಕ್ಷಿಸುವಲ್ಲಿ ಆಸಕ್ತಿ ಹೊಂದಿಲ್ಲ ಎಂಬುದನ್ನು ಸೂಚಿಸುತ್ತದೆ. ಸಮಾಜದಲ್ಲಿ ಶಾಂತಿ ಸೌಹಾರ್ದ ಮನೋಭಾವ ರೂಢಿಸುವುದಕ್ಕಾಗಿ ದುಡಿಯುವ ಆಶಯವುಳ್ಳ ನಮ್ಮ ವೇದಿಕೆಯು, ಈ ಮತೀಯವಾದಿ ಹಲ್ಲೆಗಳನ್ನು ತೀವ್ರವಾಗಿ ಖಂಡಿಸುತ್ತದೆ. ಸರಕಾರಗಳು ತೋರಿಕೆಯ ಸಂದೇಶವನ್ನು ಮೀರಿ, ಎಲ್ಲರೂ ನಿರಾಂತಕದಿಂದ ಹೊಸವರ್ಷ ಆಚರಿಸುವಂತಹ ಕ್ರಮಗಳನ್ನು ಕೈಗೊಂಡು ತಮ್ಮ ಸಂವಿಧಾನಿಕ ಉತ್ತರದಾಯಿತ್ವವನ್ನು ನಿಭಾಯಿಸಬೇಕು ಎಂದು ಸಹಬಾಳ್ವೆ ಪ್ರಧಾನ ಸಂಚಾಲಕ ಕೆ.ಫಣಿರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾರ್ತಾ ಭಾರತಿ 30 Dec 2025 8:45 pm

Bengaluru | ಸುತ್ತಿಗೆಯಿಂದ ಹೊಡೆದು ಗಾರೆ ಕೆಲಸಗಾರನ ಭೀಕರ ಕೊಲೆ

ಬೆಂಗಳೂರು : ಸೋಮವಾರ ರಾತ್ರಿ ಇಲ್ಲಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ಷುಲಕ ಕಾರಣಕ್ಕೆ ಪಾನಮತ್ತ ಇಬ್ಬರು ಗಾರೆ ಕೆಲಸಗಾರರು ಮಾಡಿಕೊಂಡ ಜಗಳ ವಿಕೋಪಕ್ಕೆ ತಿರುಗಿ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ದೀಪು ಮಂಡಲ್ ಎಂಬಾತ ದೀಪು ಸರ್ಕರ್(30) ಎಂಬುವವರನ್ನು ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ. ಜೆಪಿ ನಗರದ 8ನೆ ಹಂತದ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಗಾರೆ ಕೆಲಸಮಾಡಿಕೊಂಡು ಅಲ್ಲಿಯೇ ವಾಸಿಸುತ್ತಿದ್ದ ಇವರಿಬ್ಬರು ರಾತ್ರಿ-ಮದ್ಯ ಸೇವಿಸಿ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಜಗಳ ವಿಕೋಪಕ್ಕೆ ತಿರುಗಿದಾಗ ದೀಪು ಮಂಡಲ್ ಆಕ್ರೋಶಗೊಂಡು ದೀಪು ಸರ್ಕರ್‌ ಗೆ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಲೆಗೈದು ಪರಾರಿಯಾಗಿದ್ದಾನೆ. ಬೆಳಿಗ್ಗೆ ಕೆಲಸ ಮಾಡಲು ಇತರ ಕೆಲಸಗಾರರು ಬಂದು ನೋಡಿದಾಗ ಕೊಲೆ ಬೆಳಕಿಗೆ ಬಂದಿದ್ದು, ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಕೋಣನಕುಂಟೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಬಂಧನಕ್ಕೆ ಆರೋಪಿಯನ್ನು ಕಾರ್ಯಾಚರಣೆ ಕೈಗೊಂಡಿದ್ದಾರೆ.

ವಾರ್ತಾ ಭಾರತಿ 30 Dec 2025 8:45 pm

ಬಿಎಂಸಿ ಚುನಾವಣೆ ಸೀಟು ಹಂಚಿಕೆ ಕಸರತ್ತು: ಬಿಜೆಪಿ 137, ಶಿವಸೇನಾ 90 ಸ್ಥಾನಗಳಿಗೆ ಸ್ಪರ್ಧೆ

ಮುಂಬೈ,ಡಿ.30 : ಸಮಾಲೋಚನೆ ಹಾಗೂ ಮಾತುಕತೆಗಳ ಬಳಿಕ ಬಿಜೆಪಿಯು ಬೃಹನ್ಮುಂಬಯಿ ಮಹಾನಗರಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಸ್ಪರ್ಧಿಸಲು ಏಕನಾಥ ಶಿಂಧೆ ನೇತೃತ್ವದ ಶಿವಸೇನಾಗೆ 90 ಸ್ಥಾನಗಳನ್ನು ನೀಡಲು ಒಪ್ಪಿಕೊಂಡಿದೆ. ಚುನಾವಣೆಯಲ್ಲಿ 150 ಸ್ಥಾನಗಳಲ್ಲಿ ಸ್ಪರ್ಧಿಸುವ ಯೋಜನೆಯನ್ನು ಹೊಂದಿದ್ದ ಬಿಜೆಪಿ ಈಗ 137 ಸ್ಥಾನಗಳಲ್ಲಿ ಕಣಕ್ಕಿಳಿಯಲು ನಿರ್ಧರಿಸಿದೆ. ಮಹಾಯುತಿ ಮೈತ್ರಿಕೂಟದ ಒಡಂಬಡಿಕೆಯಂತೆ ಬಿಜೆಪಿ ಹಾಗೂ ಶಿವಸೇನಾ ಪಕ್ಷಗಳು, ತಮ್ಮ ಪಾಲಿಗೆ ದೊರೆತಿರುವ ಸೀಟುಗಳ ಪೈಕಿ ಕೆಲವನ್ನು ಮಹಾಯುತಿ ಮೈತ್ರಿಕೂಟದ ಅಂಗಪಕ್ಷಗಳಿಗೆ ಬಿಟ್ಟುಕೊಡಲಿವೆ ಎಂದು ಬಿಜೆಪಿಯ ಮುಂಬೈ ಘಟಕದ ಅಧ್ಯಕ್ಷ ಅಮಿತ್ ಸತಾಮ್ ತಿಳಿಸಿದ್ದಾರೆ. ‘‘ಬಿಎಂಸಿ ಚುನಾವಣೆಯಲ್ಲಿ ಉಭಯ ಪಕ್ಷಗಳೂ ಜಂಟಿಯಾಗಿ ಪ್ರಚಾರವನ್ನು ನಡೆಸಲಿವೆ.ಮುಂಬೈನ ಬಣ್ಣ ಬದಲಾಗುವುದಕ್ಕೆ ಬಿಡಲಾರೆವು. ಮುಂಬೈನ ಭದ್ರತೆ ಹಾಗೂ ಸುರಕ್ಷತೆಯೇ ನಮ್ಮ ಧ್ಯೇಯವಾಗಿದೆ. ಈಗಾಗಲೇ 200ಕ್ಕೂ ಅಧಿಕ ಸೀಟುಗಳಿಗೆ ಸಂಬಂಧಿಸಿ ನಮ್ಮ ನಡುವೆ ಒಪ್ಪಂದವೇರ್ಪಟ್ಟಿದೆ. ಇನ್ನು ಕೇವಲ 27 ಸೀಟುಗಳಷ್ಟೇ ಬಾಕಿಯುಳಿದಿದ್ದು, ಅವುಗಳನ್ನು ಸೌಹಾರ್ದಯುತವಾಗಿ ವಿತರಿಸಲಾಗುವುದು ಎಂದರು. ಮಂಗಳವಾರದೊಳಗೆ ನಾಮಪತ್ರವನ್ನು ಸಲ್ಲಿಸುವಂತೆ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ ’’ ಎಂದು ಸತಾಮ್ ತಿಳಿಸಿದರು. ಬಿಜೆಪಿ- ಶಿವಸೇನಾ ಸೀಟು ಹಂಚಿಕೆಯ ಒಪ್ಪಂದ ಘೋಷಣೆಯಾದ ಬೆನ್ನಲ್ಲೇ ಮಹಾಯುತಿ ಮೈತ್ರಿಕೂಟದ ಅಂಗಪಕ್ಷವಾದ ಆರ್‌ಪಿಐ (ಎ)ನ ಅಧ್ಯಕ್ಷ, ಕೇಂದ್ರ ಸಚಿವ ರಾಮದಾಸ್ ಅಠವಳೆ ಹೇಳಿಕೆಯೊಂದನ್ನು ನೀಡಿ ಬಿಜೆಪಿ ತಮ್ಮನ್ನು ವಂಚಿಸಿದೆಯೆಂದು ಆಪಾದಿಸಿದ್ದಾರೆ. ಸೀಟು ಹಂಚಿಕೆ ಕುರಿತ ಮಾತುಕತೆಗಾಗಿ ಸಂಜೆ 4 ಗಂಟೆಗೆ ಪಕ್ಷದ ಸದಸ್ಯರನ್ನುಕರೆಯಲಾಗಿತ್ತು. ಆದರೆ ಅವರೊಂದಿಗೆ ಯಾರೂ ಮಾತುಕತೆ ನಡೆಸಲಿಲ್ಲ. ಇದರಿಂದ ಪಕ್ಷದ ಕಾರ್ಯಕರ್ತರು ಅಸಂತೃಪ್ತಿಗೊಂಡಿದ್ದು, ಅವರು ಚುನಾವಣೆಯಲ್ಲಿ ವಿಭಿನ್ನವಾದ ನಿಲುವನ್ನು ಕೈಗೊಳ್ಳಲಿದ್ದಾರೆ ಮತ್ತು ಅವರ ನಿರ್ಧಾರವನ್ನು ತಾನು ಕೂಡಾ ಒಪ್ಪಿಕೊಳ್ಳುವುದಾಗಿ ಅಠವಳೆ ಹೇಳಿದ್ದಾರೆ. 110 ಸೀಟುಗಳನ್ನು ತನ್ನ ಪಕ್ಷಕ್ಕೆ ಬಿಟ್ಟುಕೊಡಬೇಕೆಂಬ ಏಕಕನಾಥ ಶಿಂಧೆ ಅವರ ಬೇಡಿಕೆಗೆ ವಿರುದ್ಧವಾಗಿ ಬಿಜೆಪಿ 50 ಸೀಟು ನೀಡಲು ಹೊರಟಿತ್ತು. ಆದರೆ ಶಿಂಧೆ, ಪಟ್ಟು ಸಡಿಲಿಸದ ಕಾರಣ, ಬಿಜೆಪಿ ತನ್ನ ಪಾಲಿನ ಕೋಟಾದ 13 ಸೀಟುಗಳು ಸೇರಿದಂತೆ ಒಟ್ಟು 90 ಸೀಟುಗಳನ್ನು ಶಿವಸೇನಾಗೆ ಬಿಟ್ಟುಕೊಡಬೇಕಾಯಿತು. ಅಲ್ಲದೆ, ತನ್ನ ಪಾಲಿನ ಕೋಟಾದಿಂದ ಉಳಿದ ಮಿತ್ರಪಕ್ಷಗಳಿಗೆ ಅದು ನೀಡಬೇಕಾಗಿದೆ’’ ಎಂದವರು ಹೇಳಿದರು.

ವಾರ್ತಾ ಭಾರತಿ 30 Dec 2025 8:44 pm

ಕುಕ್ಕುಂದೂರು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ

ಕಾರ್ಕಳ: ಹೈನುಗಾರಿಕೆಯನ್ನು ಪ್ರೊತ್ಸಾಹಿಸುವ ನಿಟ್ಟಿನಲ್ಲಿ ಎರಡು ಪಶುಗಳನ್ನು ಹೊಂದಿ ಹೈನುಗಾರಿಕೆ ಮಾಡುವ ಮಹಿಳೆಯರಿಗೆ ಸರಕಾರದಿಂದ ತಿಂಗಳಿಗೆ ೫ ಸಾವಿರ ಪ್ರೋತ್ಸಾಹ ಧನ ದೊರೆಯುವಂತಾಗಬೇಕು, ಆ ಮೂಲಕ ಹೈನುಗಾರಿಕೆಯೂ ಬೆಳೆಯುತ್ತದೆ. ಇದರೊಂದಿಗೆ ಆದಾಯವು ಹೆಚ್ಚಗುತ್ತದೆ ಈ ನಿಟ್ಟಿನಲ್ಲಿ ಅಧಿವೇಶನ ಸಂದರ್ಭದಲ್ಲಿ ಸರಕಾರಕ್ಕೆ ಮನವರಿಕೆ ಮಾಡಲಾಗಿದ್ದು ಈ ಬಗ್ಗೆ ಸರಕಾರ ಚಿಂತನೆ ಮಾಡಬೇಕಾಗಿದೆ ಮುಂದಿನ ದಿನಗಳಲ್ಲಿ ನಮ್ಮ ಸರಕಾರ ಬಂದರೆ ಈ ರೀತಿಯಲ್ಲಿ ಚಿಂತನೆ ಮಾಡಲಾಗುವುದು ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೇಳಿದರು. ಕುಕ್ಕುಂದೂರು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಗೋಕುಲ ಇದರ ಉದ್ಘಾಟನಾ ಸಮಾರಂಭದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು ಸಹಕಾರಿ ಸಂಘಗಳು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಣೆ ಮಾಡಲು ಸ್ವಂತ ಕಟ್ಟಡ ಇದ್ದಾಗ ಮಾತ್ರ ಸಾಧ್ಯ. ತನ್ನ ಶಾಸಕ ನಿಧಿಯಿಂದ ೫ ಲಕ್ಷ, ಒಕ್ಕೂಟದಿಂದ ಹಾಗೂ ದಾನಿಗಳ ಸಹಕಾರವನ್ನು ಬಳಸಿಕೊಂಡು ಇಂದು ಸ್ವಂತ ಕಟ್ಟಡ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ಸಂಘವು ೫೦೦ ಲೀ ಹಾಲು ಸಂಗ್ರಹಿಸುವ ಗುರಿ ಇರಿಸಿಕೊಂಡಿರು ವುದು ಅಭಿವೃದ್ಧಿಯ ಸಂಕೇತವಾಗಿದೆ. ಇತ್ತೀಚಿನ ದಿನಗಳಲ್ಲಿ ಹೈನುಗಾರಿಕೆಗೆ ಹತ್ತಾರು ಸವಾಲುಗಳಿವೆ, ಇದರ ನಡುವೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸುವ ಕೆಲಸ ಸರಕಾರ ಮಾಡುತ್ತಿದೆ, ಮಂಗಳೂರು ಒಕ್ಕೂಟವು ಎಲ್ಲಾ ಸಂಘಗಳಿಗೆ ಬೆನ್ನೆಲುಬಾಗಿ ನಿಂತುಕೊಂಡು ಸಹಕರಿಸುತ್ತಿರುವುದರಿಂದ ರಾಜ್ಯದಲ್ಲಿ ಮಾದರಿ ಒಕ್ಕೂಟವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು. ಹೈನುಗಾರಿಕೆಯನ್ನು ಪ್ರೋತ್ಸಾಹಿಸುವ ಬಳಗವೂ ದೊಡ್ಡದಾಗಬೇಕು ಹೈನುಗಾರಿಕೆ ಯಿಂದ ವಿಮುಖರಾಗುತ್ತಿದ್ದೇವೆ ಎನ್ನುವ ಮಾತುಗಳು ಕೇಳಿಬರುತ್ತಿರುವ ಇಂದಿನ ದಿನಗಳಲ್ಲಿ ಪ್ರತಿಯೊಬ್ಬರು ಮನೆಯಲ್ಲಿ ಗೋವನ್ನು ಸಾಕುವ ಪದ್ಧತಿ ಬೆಳೆಸಬೇಕು ಎಂದರು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ರಾಮರಾಯ ನಾಯಕ್ ವಹಿಸಿ ಮಾತನಾಡಿ ಮುಂದಿನ ದಿನಗಳಲ್ಲಿ ಸಂಘವು 500 ಲೀ ಹಾಲು ಸಂಗ್ರಹಿಸುವ ಗುರಿ ಇರಿಸಿಕೊಂಡಿದೆ ಇದಕ್ಕಾಗಿ ಹೈನುಗಾರರು ಸಹಕರಿಸುವಂತೆ ತಿಳಿಸಿದರು. ಕಟ್ಟಡಕ್ಕೆ ದೇಣಿಗೆ ನೀಡಿದ ಸರ್ವರಿಗೂ ಕೃತಜ್ಙತೆ ಸಲ್ಲಿಸಿದರು. ದ.ಕ. ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷರಾದ ರವಿರಾಜ್ ಹೆಗ್ಡೆ ಕೊಡವೂರು ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ ಒಂದು ಹಂತದಲ್ಲಿ ಒಕ್ಕೂಟವು ಹಾಲಿನ ಸಂಗ್ರಹಣೆಯಲ್ಲಿ ಸುಮಾರು ೩.೪೦ಲಕ್ಷ ಲೀ ಸರಸರಿ ಕುಸಿತ ಕಂಡಿತ್ತು ಆದರೆ ಇತ್ತಿಚೇಗೆ ಸುಮಾರು ೪.೩೦ ಲಕ್ಷ ಲೀ ಸಂಗ್ರಹಣೆಯಲ್ಲಿ ಏರಿಕೆಯಾಗಿದೆ ಎಂದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಹೈನುಗಾರಿಕೆಗೆ ಹಾಗೂ ಸಹಕಾರಿ ಸಂಘಗಳ ಕಟ್ಟಡಕ್ಕೆ ಹೆಚ್ಚಿನ ಅನುದಾನಮ ನೀಡಿ ಪ್ರೊತ್ಸಾಹಿಸುತ್ತ ಬರುತ್ತಿರುವುದು ಅಭಿನಂದನೀಯವೆಂದರು. ದ. ಕ. ಹಾಲು ಉತ್ಪಾದಕರ ಒಕ್ಕೂಟವು ಇಡೀ ರಾಜ್ಯದಲ್ಲೇ ಹಾಲು ಉತ್ಪಾದಕರಿಗೆ ಅತೀ ಹೆಚ್ಚು ದರ ನೀಡಿ ಹೈನುಗಾರರನ್ನು ಪ್ರೋತ್ಸಾಹಿಸಿಸುತ್ತಿದೆ ಎಂದರು ದ.ಕ. ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಇದರ ಉಪಾಧ್ಯಕ್ಷರಾದ ಉದಯ ಎಸ್. ಕೋಟ್ಯಾನ್, ನಿರ್ದೇಶಕರಾದ ಸುಧಾಕರ ಶೆಟ್ಟಿ ಮುಡಾರು, ಕೆ. ಶಿವಮೂರ್ತಿ, ಶ್ರೀಮತಿ ಮಮತಾ ಆರ್. ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕರಾದ ವಿವೇಕ್ ಡಿ., ಶೇಖರಣೆ ಮತ್ತು ತಾಂತ್ರಿಕ ವಿಭಾಗ ಉಪವ್ಯವಸ್ಥಾಪಕರಾದ ಡಾ| ಮಾಧವ್ ಐತಾಳ್, ಹಿರ್ಗಾನ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಸಿರಿಯಣ್ಣ ಶೆಟ್ಟಿ, ಶ್ರೀ ಕ್ಷೇ. ಧ. ಗಾ.ಯೋಜನೆಯ ಮೇಲ್ವಿಚಾರಕರಾದ ಮಂಜುನಾಥ ವೇದಿಕೆಯಲ್ಲಿ ಉಪಸ್ಥಿತರಿದ್ದರು ಈ ಸಂಧರ್ಭದಲ್ಲಿ ಕಟ್ಟಡ ನಿರ್ಮಾಣ ಕಾರ್ಯಕ್ಕೆ ದೇಣಿಗೆ ನೀಡಿದ ದಾನಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಪ್ರಸಾದ ಐಸಿರ ಕಾರ್ಯಕ್ರಮ ನಿರೂಪಿಸಿದರು. ಸಂಘದ ಸ್ಥಾಪಕ ಅಧ್ಯಕ್ಷ ರವಿ ಶೆಟ್ಟಿ ಸ್ವಾಗತಿಸಿ, ಸಂಘದ ನಿರ್ದೇಶಕಿ ಶಶಿಕಲ ಪ್ರಾರ್ಥಿಸಿದರು. ಕಾರ್ಯದರ್ಶಿ ಐಶ್ವರ್ಯ ವರದಿ ಮಂಡಿಸಿದರು. ಉಪಾಧ್ಯಕ್ಷರಾದ ರಘುನಾಥ ಶೆಟ್ಟಿ ವಂದಿಸಿದರು.

ವಾರ್ತಾ ಭಾರತಿ 30 Dec 2025 8:38 pm

ಉತ್ತರಾಖಂಡ| ಕಮರಿಗೆ ಉರುಳಿದ ಬಸ್: 7 ಮಂದಿ ಮೃತ್ಯು, 11 ಜನರಿಗೆ ಗಾಯ

ಡೆಹ್ರಾಡೂನ್, ಡಿ. 30: ದ್ವಾರಾಹಾಟ್‌ನಿಂದ ರಾಮನಗರಕ್ಕೆ ಸಂಚರಿಸುತ್ತಿದ್ದ ಪ್ರಯಾಣಿಕರ ಬಸ್ಸೊಂದು ಮಂಗಳವಾರ ಬೆಳಗ್ಗೆ ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ 100 ಅಡಿ ಆಳದ ಕಮರಿಗೆ ಉರುಳಿ ಬಿದ್ದು ಸಂಭವಿಸಿದ ದುರಂತದಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಈ ದುರ್ಘಟನೆಯಲ್ಲಿ ಇತರ 11 ಮಂದಿ ಗಂಭೀರ ಗಾಯಗೊಂಡಿದ್ದಾರೆ. 19 ಮಂದಿ ಪ್ರಯಾಣಿಕರಿದ್ದ ಈ ಬಸ್ ಬಿಕಿಯಾಸೈಣ ಪ್ರದೇಶದ ಸಲ್ಪಾನ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡಿತು. ವಿನಾಯಕ್ ಹಾದು ಹೋದ ಬಳಿಕ ಬಸ್ ದುರಂತಕ್ಕೀಡಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಪೊಲೀಸರು ಹಾಗೂ ಸ್ಥಳೀಯಾಡಳಿತ ಸೇರಿದಂತೆ ಪರಿಹಾರ ಮತ್ತು ರಕ್ಷಣಾ ತಂಡಗಳು ಕಡಿದಾದ ಭೂಪ್ರದೇಶವನ್ನು ದಾಟಿ ಘಟನಾ ಸ್ಥಳ ತಲುಪಿವೆ. ‘‘ಬಸ್ ರಸ್ತೆಯಿಂದ ಸ್ಕಿಡ್ ಆಯಿತು ಹಾಗೂ ಕಂದರಕ್ಕೆ ಬಿದ್ದು ಸೆಕೆಂಡ್‌ಗಳಲ್ಲಿ ಕಾಣೆಯಾಯಿತು. ಬಸ್ ಬಿದ್ದ ಸದ್ದು ಭಯಾನಕವಾಗಿತ್ತು’’ ಎಂದು ನಿವಾಸಿಯೊಬ್ಬರು ತಿಳಿಸಿದ್ದಾರೆ. ರಕ್ಷಣಾ ತಂಡವನ್ನು ಸ್ಥಳಕ್ಕೆ ಕಳುಹಿಸಿ ಕೊಡಲಾಗಿದೆ ಎಂದು ಅಲ್ಮೋರಾ ಎಸ್‌ಪಿ ದೇವೇಂದ್ರ ಪಿಂಚಾ ತಿಳಿಸಿದ್ದಾರೆ.

ವಾರ್ತಾ ಭಾರತಿ 30 Dec 2025 8:37 pm

ಭಾಲ್ಕಿ | ಅಂಗನವಾಡಿಗಳಿಗೆ ಮೊಟ್ಟೆ, ಹಾಲಿನ ಪುಡಿ ಸರಬರಾಜು ಸ್ಥಗಿತ: ಅಧಿಕಾರಿಗಳನ್ನು ಅಮಾನತುಗೊಳಿಸಲು ಆಗ್ರಹಿಸಿ ಧರಣಿ

ಭಾಲ್ಕಿ : ಕಳೆದ ಮೂರು–ನಾಲ್ಕು ತಿಂಗಳುಗಳಿಂದ ಭಾಲ್ಕಿ ತಾಲೂಕಿನ ಎಲ್ಲಾ ಗ್ರಾಮಗಳ ಅಂಗನವಾಡಿ ಕೇಂದ್ರಗಳಿಗೆ ಮೊಟ್ಟೆ ಹಾಗೂ ಹಾಲಿನ ಪುಡಿ ಸರಬರಾಜು ನಿಲ್ಲಿಸಿರುವುದನ್ನು ಖಂಡಿಸಿ, ಯುವ ಕ್ರಾಂತಿ ಸಂಘಟನೆಯ ವತಿಯಿಂದ ಭಾಲ್ಕಿಯ ಶಿಶು ಅಭಿವೃದ್ಧಿ ಇಲಾಖೆಯ ಕಚೇರಿ ಆವರಣದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು. ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ಕಳೆದ ಜುಲೈ ಮತ್ತು ಆಗಸ್ಟ್ ತಿಂಗಳಿಂದಲೇ ಅಂಗನವಾಡಿ ಮಕ್ಕಳಿಗೆ ಪೋಷಕಾಂಶಯುಕ್ತ ಆಹಾರವಾಗಿರುವ ಮೊಟ್ಟೆ ಹಾಗೂ ಹಾಲಿನ ಪುಡಿ ನೀಡುವುದನ್ನು ಯಾವುದೇ ಸ್ಪಷ್ಟ ಕಾರಣವಿಲ್ಲದೆ ನಿಲ್ಲಿಸಲಾಗಿದೆ. ಇದರಿಂದ ಅಧಿಕಾರಿಗಳು ಮಕ್ಕಳ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಸಂಘಟನೆ ಆರೋಪಿಸಿದೆ. ಅಂಗನವಾಡಿ ಮಕ್ಕಳ ಪೌಷ್ಠಿಕತೆ ಕಾಪಾಡುವುದು ಸರ್ಕಾರದ ಮೂಲಭೂತ ಜವಾಬ್ದಾರಿಯಾಗಿದ್ದರೂ, ಸರಬರಾಜು ಸ್ಥಗಿತದಿಂದ ಮಕ್ಕಳು ಪೋಷಕಾಂಶದ ಕೊರತೆ ಎದುರಿಸುತ್ತಿದ್ದು, ಅವರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಈ ಕುರಿತು ಒಂದು ತಿಂಗಳ ಹಿಂದೆ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಇದರಿಂದ ಅಧಿಕಾರಿಗಳೂ ಈ ನಿರ್ಲಕ್ಷ್ಯದಲ್ಲಿ ಭಾಗಿಯಾಗಿರುವ ಶಂಕೆ ಮೂಡಿದೆ ಎಂದು ದೂರಲಾಗಿದೆ. ತಕ್ಷಣವೇ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮೊಟ್ಟೆ ಹಾಗೂ ಹಾಲಿನ ಪುಡಿ ಸರಬರಾಜು ಆರಂಭಿಸಬೇಕು. ಜೊತೆಗೆ ಹಲವು ತಿಂಗಳಿನಿಂದ ಪೌಷ್ಠಿಕ ಆಹಾರ ಸರಬರಾಜು ಮಾಡದಿರುವ ಹಿನ್ನಲೆಯಲ್ಲಿ ಸಂಭವಿಸಿರಬಹುದಾದ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ಸಂಘಟನೆ ಆಗ್ರಹಿಸಿದೆ. ವಿಳಂಬದ ಬಗ್ಗೆ ಸಮಗ್ರ ತನಿಖೆ ನಡೆಸಿ ಒಂದು ವಾರದೊಳಗೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳದಿದ್ದರೆ, ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಯುವ ಕ್ರಾಂತಿ ಸಂಘಟನೆ ಎಚ್ಚರಿಕೆ ನೀಡಿದೆ. ಈ ಸಂದರ್ಭದಲ್ಲಿ ಯುವ ಕ್ರಾಂತಿ ಸಂಘಟನೆಯ ಜಿಲ್ಲಾಧ್ಯಕ್ಷ ಸಂಗಮೇಶ್ ಭೂರೆ, ತಾಲ್ಲೂಕು ಅಧ್ಯಕ್ಷ ಬಲವಂತ್, ಕೆ.ಡಿ. ಗಣೇಶ್, ವಿನೋದ್ ಕಾರಮುಂಗೆ, ಕೈಲಾಸ್ ಪಾಟೀಲ್, ಪಪ್ಪುರಾಜ್ ಚತುರೆ, ಮಹೇಶ್ ಕಟ್ಟಿಮನಿ, ಸುಂದರ್ ಮೇತ್ರೆ, ಬಿಬಿಸೆನ ಬಿರಾದರ್, ಸಚಿನ್ ಶಿಂಧೆ, ಆನಂದ್ ತಳವಾಡೆ, ಸಿದ್ರಾಮ್ ಮೇತ್ರೆ ಹಾಗೂ ನರೇಂದ್ರ ಸೊಮಶೆಟ್ಟೆ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.    

ವಾರ್ತಾ ಭಾರತಿ 30 Dec 2025 8:36 pm

ಸರಕಾರದ ವತಿಯಿಂದಲೇ ‘ಆಂಬ್ಯುಲೆನ್ಸ್ ಸೇವೆ’ಗೆ ಸಿದ್ಧತೆ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಸರಕಾರದ ವತಿಯಿಂದಲೇ ರಾಜ್ಯಾದ್ಯಂತ ಆಂಬ್ಯುಲೆನ್ಸ್ ಸೇವೆ ನಿರ್ವಹಣೆ ಮಾಡಲು ಆರೋಗ್ಯ ಇಲಾಖೆ ಸಕಲ ಸಿದ್ಧತೆ ನಡೆಸುತ್ತಿದ್ದು, ಸದ್ಯದಲ್ಲಿಯೇ ಸೇವೆ ಪ್ರಾರಂಭಗೊಳ್ಳಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮಂಗಳವಾರ ಪ್ರಕಟನೆ ಹೊರಡಿಸಿರುವ ಅವರು, ಪ್ರಸ್ತುತ 108 - ಆರೋಗ್ಯ ಕವಚ ಆಂಬುಲೆನ್ಸ್ ಸೇವೆಯನ್ನು ಒಡಂಬಡಿಕೆ ಮಾದರಿಯಲ್ಲಿ ನಿರ್ವಹಣೆ ಮಾಡುತ್ತಿದ್ದು, ಸೇವೆಯ ಕುರಿತು ಸಾರ್ವಜನಿಕರಿಂದ ಹಲವಾರು ಆಕ್ಷೇಪಣೆಗಳು, ಸಮಸ್ಯೆಗಳು ದಾಖಲಾಗಿವೆ. ಹೀಗಾಗಿ ಸರಕಾರವೇ ಆಂಬುಲೆನ್ಸ್ ಸೇವೆಯನ್ನು ನೀಡಲಿದೆ. ಅವಶ್ಯಕವಾದ ತಂತ್ರಜ್ಞಾನ, ಕಮಾಂಡ್ ಕಂಟ್ರೋಲ್ ಸೆಂಟರ್ ಬೇಕಾದ ಮಾನವ ಸಂಪನ್ಮೂಲ ಸೇರಿದಂತೆ ಎಲ್ಲ ಸಿದ್ಧತೆಗಳು ಅಂತಿಮ ಹಂತ ತಲುಪಿದೆ ಎಂದಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳಡಿಯಲ್ಲಿ ಒಟ್ಟಾರೆ 1,841 ಆಂಬ್ಯುಲೆನ್ಸ್ ಲಭ್ಯವಿದ್ದು, ಇದರಲ್ಲಿ 108-ಆರೋಗ್ಯ ಕವಚ ಕಾರ್ಯಕ್ರಮದಡಿಯಲ್ಲಿ ಒಟ್ಟು 715 ಆಂಬ್ಯುಲೆನ್ಸ್ ಗಳು ಹಾಗೂ ರಾಜ್ಯ ವಲಯದ 1,126 ಆಂಬ್ಯುಲೆನ್ಸ್‌ ಗಳು ಲಭ್ಯವಿದೆ. ಮಾನದಂಡಗಳನ್ವಯ ಹಾಲಿ ಜನಸಂಖ್ಯೆಗೆ 813 ಆಂಬ್ಯುಲೆನ್ಸ್‌ ಗಳು ಅಗತ್ಯವಿದೆ ಎಂದು ಮಾಹಿತಿ ನೀಡಿದ್ದಾರೆ. 108-ಆರೋಗ್ಯ ಕವಚ ನಿರ್ವಹಣೆಗೆ ವಾರ್ಷಿಕ 162.40 ಕೋಟಿ ರೂ. ಅನುದಾನ ಅಗತ್ಯವಿದ್ದು, ಸರಕಾರದಿಂದ 180 ಕೋಟಿ ರೂ.ಗಳ ಅನುದಾನವು 108-ಆರೋಗ್ಯ ಕವಚ ಲೆಕ್ಕ ಶೀರ್ಷಿಕೆಯಡಿಯಲ್ಲಿ ಅನುಮೋದನೆಯಾಗಿದೆ. ಹಾಲಿ ಇರುವ 108-ಆರೋಗ್ಯ ಕವಚ ಸೇವೆಯ ಸೇವಾದಾರರಿಂದ ಸರಕಾರ ವಹಿಸಿಕೊಳ್ಳುವ ಸಮಯದಲ್ಲಿ ಚಿಕ್ಕಪುಟ್ಟ ಸಮಸ್ಯೆಗಳು ಇದ್ದರೂ, ಸಾರ್ವಜನಿಕರ ಸೇವೆಗೆ ಯಾವ ಸಮಸ್ಯೆಯೂ ಇರುವುದಿಲ್ಲ. ಇದು ತುರ್ತು ಆರೋಗ್ಯ ಸೇವೆಯಾಗಿರುವುದಿರಂದ ಇಲಾಖೆಯು ಜಾಗರೂಕತೆಯಿಂದ ನಿರ್ವಹಣೆ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

ವಾರ್ತಾ ಭಾರತಿ 30 Dec 2025 8:34 pm

ದಿಲ್ಲಿ ವಿಮಾನ ನಿಲ್ದಾಣದಲ್ಲಿ ದಟ್ಟ ಮಂಜು| 118 ವಿಮಾನಗಳ ಹಾರಾಟ ರದ್ದು

ಹೊಸದಿಲ್ಲಿ, ಡಿ.30: ದಿಲ್ಲಿಯಲ್ಲಿ ದಟ್ಟ ಮಂಜು ಕವಿದಿದ್ದರಿಂದ ವಿಮಾನಗಳ ಹಾರಾಟಕ್ಕೆ ಮಂಗಳವಾರ ಕೂಡ ಅಡಚಣೆ ಉಂಟಾಯಿತು. ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕನಿಷ್ಠ 118 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಯಿತು. 130 ವಿಮಾನಗಳು ವಿಳಂಬವಾಗಿ ಹಾರಾಟ ನಡೆಸಿದವು. ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರತಿದಿನ 1,300 ವಿಮಾನಗಳ ಹಾರಾಟ ನಡೆಯುತ್ತದೆ. ಆದರೆ, ಮಂಗಳವಾರ 60 ಆಗಮನ ಹಾಗೂ 58 ವಿಮಾನಗಳ ನಿರ್ಗಮನಗಳನ್ನು ರದ್ದುಗೊಳಿಸಲಾಗಿದೆ. 16 ವಿಮಾನಗಳ ಸಂಚಾರ ಪಥ ಬೇರೆಡೆಗೆ ತಿರುಗಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದಟ್ಟ ಮಂಜಿನ ಹಿನ್ನೆಲೆಯಲ್ಲಿ ಭಾರತದ ಹವಾಮಾನ ಇಲಾಖೆ (ಐಎಂಡಿ) ನಗರದಲ್ಲಿ ಬೆಳಗ್ಗೆ 9 ಗಂಟೆವರೆಗೆ ಯೆಲ್ಲೂ ಅಲರ್ಟ್ ಜಾರಿಗೊಳಿಸಿತ್ತು. ಸಫ್ದರ್‌ಜಂಗ್‌ನಲ್ಲಿ ಬೆಳಗ್ಗೆ 7.30ಕ್ಕೆ ದೃಗ್ಗೋಚರತೆ 100ರ ಮೀಟರ್‌ಗಳಷ್ಟಿತ್ತು. ನಂತರ ಬೆಳಗ್ಗೆ 8.30ರ ಹೊತ್ತಿಗೆ ದೃಗ್ಗೋಚರತೆ 200 ಮೀಟರ್‌ವರೆಗೆ ಸುಧಾರಿಸಿತು ಎಂದು ಹವಾಮಾನ ಇಲಾಖೆ ತಿಳಿಸಿದೆ.

ವಾರ್ತಾ ಭಾರತಿ 30 Dec 2025 8:34 pm

ಶಿಕ್ಷಣ, ಸಾಹಿತ್ಯದ ಶಕ್ತಿಯೊಂದಿಗೆ ಮಹಿಳೆಯರು ಸಶಕ್ತರಾಗಬೇಕು: ಶಕುಂತಲಾ ಶೆಟ್ಟಿ

ಬಲ್ಮಠ; ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಮಂಗಳೂರು,ಡಿ.30;ಮಹಿಳೆಯರು ಶಿಕ್ಷಣದ ಜೊತೆ ಸಾಹಿತ್ಯದ ಓದಿನೊಂದಿಗೆ ಇನ್ನಷ್ಟು ಸಶಕ್ತರಾಗಬೇಕು ಎಂದು ಮಾಜಿ ಶಾಸಕಿ ಹಾಗೂ ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ಅಧ್ಯಕ್ಷೆ ಶಕುಂತಲಾ ಶೆಟ್ಟಿ ತಿಳಿಸಿದ್ದಾರೆ. ಅವರು ಮಂಗಳವಾರ ನಗರದ ಬಲ್ಮಠ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಅಮೃತ ಪ್ರಕಾಶ ಪತ್ರಿಕೆಯ ಸಹಯೋಗದಲ್ಲಿ 116ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮದ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಾ, ಓದುವ ಹವ್ಯಾಸ ಮುಂದುವರಿಸಬೇಕು.ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡುವಂತಾಗಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲರಾದ ವನಿತಾ ದೇವಾಡಿಗ ವಹಿಸಿದರು. ಮುಖ್ಯ ಸಂಪನ್ಮೂಲ ಅತಿಥಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಬಿ.ಎನ್ ಸಾಹಿತ್ಯ ಅಭಿರುಚಿಯ ಬಗ್ಗೆ ಉಪನ್ಯಾಸ ನೀಡಿದರುಹಾಗೂ ನಿವೃತ್ತ ಪ್ರಾಂಶುಪಾ ಲರಾದ ಪ್ರೊ.ಕೃಷ್ಣಮೂರ್ತಿ ಯವರು ಸಾಹಿತ್ಯ ಅಭಿರುಚಿಗೆ ಆಸಕ್ತಿ ಮುಖ್ಯ ಎಂದರು. ನಿವೃತ್ತ ಶಿಕ್ಷಕಿ ಲೇಖಕಿ ಸುಧಾನಾಗೇಶ್ ಕಾರ್ಯಕ್ರಮ ನಿರೂಪಿಸಿದರು ಅಮೃತ ಪ್ರಕಾಶ ಪತ್ರಿಕೆ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಸ್ವಾಗತಿಸಿದರು. ಕನ್ನಡ ಉಪನ್ಯಾಸಕಿ ಯಶೋಧರವರು ವಂದಿಸಿದರು.      

ವಾರ್ತಾ ಭಾರತಿ 30 Dec 2025 8:32 pm

ಬೆಂಗಳೂರಿನಲ್ಲಿ 5ನೇ ಮಹಡಿಯಿಂದ ಜಿಗಿದು ಬಯೋಕಾನ್‌ ಸಂಸ್ಥೆಯ ಉದ್ಯೋಗಿ ಆತ್ಮಹತ್ಯೆ

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ 2ನೇ ಹಂತದಲ್ಲಿರುವ ಬಯೋಕಾನ್ ಕಂಪನಿಯ ಉದ್ಯೋಗಿಯೊಬ್ಬರು ಕಟ್ಟಡದ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಉದ್ಯೋಗಿಯನ್ನು ಬನಶಂಕರಿ ಮೂಲದ ಅನಂತ್ ಕುಮಾರ್ ಎಂದು ಗುರುತಿಸಲಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ ಆ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಎನ್ನಲಾಗಿದೆ.

ವಿಜಯ ಕರ್ನಾಟಕ 30 Dec 2025 8:32 pm

ಬೀದರ್ | ಗಡಿ ಭಾಗದ ಕನ್ನಡ ಶಾಲೆಗಳಲ್ಲಿ ಸಾಂಸ್ಕೃತಿಕ ಚಟುವಟಿಕೆ ನಿರಂತರವಾಗಿ ನಡೆಯಬೇಕು : ಸುನೀಲಕುಮಾರ ಸಿಂಗಾರೆ

ಬೀದರ್ : ಗಡಿ ಭಾಗದಲ್ಲಿರುವ ಕನ್ನಡ ಶಾಲೆಗಳಲ್ಲಿ ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ನಡೆಯಬೇಕು. ಜೊತೆಗೆ ಕನ್ನಡ ಭಾಷೆಯನ್ನು ಪ್ರತಿಯೊಬ್ಬರೂ ತಮ್ಮ ದಿನನಿತ್ಯದ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಇಂದಿರಾ ಗಾಂಧಿ ವಸತಿ ಶಾಲೆಯ ಪ್ರಾಚಾರ್ಯ ಸುನೀಲಕುಮಾರ್ ಸಿಂಗಾರೆ ಅವರು ಅಭಿಪ್ರಾಯಪಟ್ಟರು. ಮರಖಲ್ ಗ್ರಾಮದಲ್ಲಿರುವ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ರಂಗ ತರಂಗ ಸಾಮಾಜಿಕಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಗಡಿಭಾಗದ ಸರ್ಕಾರಿ ಶಾಲೆಗಳಲ್ಲಿ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಉಳಿವು, ಬೆಳವಣಿಗೆಗೆ ಶಾಲಾ ಹಂತದಲ್ಲಿಯೇ ಜಾಗೃತಿ ಮೂಡಿಸುವುದು ಅಗತ್ಯವಿದೆ ಎಂದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಕನ್ನಡದ ಸೇವಕ ಕುಪೇಂದ್ರ ಎಸ್. ಹೊಸಮನಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷ ಎಂ.ಪಿ. ಮುದಾಳೆ, ಕನ್ನಡ ಶಿಕ್ಷಕ ಪ್ರಕಾಶ್ ಎಸ್., ದೈಹಿಕ ಶಿಕ್ಷಕ ಮಹಾವೀರ್ ಹೋಳೋಳೆ, ಪದ್ಮಾವತಿ, ಸೈಯದ್ ಶಾಬಾದ್ ಅಲಿ, ರೇಣುಕಾ ಹಾಗೂ ರವಿ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಾರ್ತಾ ಭಾರತಿ 30 Dec 2025 8:31 pm

ಜಪಾನ್‌ನ್ನು ಹಿಂದಿಕ್ಕಿ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದ ಭಾರತ: ವರದಿ

ಹೊಸದಿಲ್ಲಿ,ಡಿ.30: ಭಾರತವು ಜಪಾನ್‌ನ್ನು ಹಿಂದಿಕ್ಕಿ ವಿಶ್ವದ ನಾಲ್ಕನೇ ಅತಿ ದೊಡ್ಡ ಆರ್ಥಿಕತೆಯಾಗಿದೆ ಮತ್ತು ಮುಂದಿನ ಮೂರು ವರ್ಷಗಳಲ್ಲಿ ಜರ್ಮನಿಯನ್ನು ಹಿಂದಿಕ್ಕುವ ಭರವಸೆಯನ್ನು ಅಧಿಕಾರಿಗಳು ಹೊಂದಿದ್ದಾರೆ ಎಂದು ಸರಕಾರದ ವರ್ಷಾಂತ್ಯದ ಆರ್ಥಿಕ ಪುನರ್‌ಪರಿಶೀಲನೆಯ ಲೆಕ್ಕಾಚಾರವು ಹೇಳಿದೆ. ಆದಾಗ್ಯೂ ಅಧಿಕೃತ ದೃಢೀಕರಣವು 2026ರಲ್ಲಿ ಬಿಡುಗಡೆಗೊಳ್ಳಲಿರುವ ಅಂತಿಮ ವಾರ್ಷಿಕ ಜಿಡಿಪಿ ದತ್ತಾಂಶಗಳನ್ನು ಅವಲಂಬಿಸಿರುತ್ತದೆ. ಭಾರತವು ಮುಂದಿನ ವರ್ಷ ಜಪಾನ್‌ನ್ನು ಹಿಂದಿಕ್ಕಲಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿಯು (ಐಎಂಎಫ್) ಸೂಚಿಸಿದೆ. ಭಾರತವು ವಿಶ್ವದ ಅತಿ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಗಳಲ್ಲಿ ಒಂದಾಗಿದೆ ಮತ್ತು ಈ ವೇಗವನ್ನು ಉಳಿಸಿಕೊಳ್ಳುವ ಉತ್ತಮ ಸ್ಥಿತಿಯಲ್ಲಿದೆ ಎಂದು ಸೋಮವಾರ ರಾತ್ರಿ ಬಿಡುಗಡೆಗೊಂಡ ಸರಕಾರದ ಸಂಕ್ಷಿಪ್ತ ಆರ್ಥಿಕ ಟಿಪ್ಪಣಿಯು ತಿಳಿಸಿದೆ. 4.18 ಲಕ್ಷ ಕೋಟಿ ಡಾಲರ್‌ ಜಿಡಿಪಿ ವೌಲ್ಯದೊಂದಿಗೆ ಭಾರತವು ಜಪಾನ್‌ನ್ನು ಹಿಂದಿಕ್ಕಿ ವಿಶ್ವದ ನಾಲ್ಕನೇ ಅತಿ ದೊಡ್ಡ ಆರ್ಥಿಕತೆಯಾಗಿದೆ ಮತ್ತು ಮುಂದಿನ ಎರಡೂವರೆ-ಮೂರು ವರ್ಷಗಳಲ್ಲಿ ಮೂರನೇ ಸ್ಥಾನದಲ್ಲಿರುವ ಜರ್ಮನಿಯನ್ನು ಕೆಳಕ್ಕೆ ತಳ್ಳಲಿದೆ. 2030ರ ವೇಳೆಗೆ ಭಾರತದ ಜಿಡಿಪಿ 7.3 ಲಕ್ಷ ಕೋಟಿ ಡಾಲರ್‌ಗಳನ್ನು ತಲುಪಲಿದೆ ಎಂದು ಅಂದಾಜಿಸಲಾಗಿದೆ ಎಂದು ಟಿಪ್ಪಣಿಯಲ್ಲಿ ಹೇಳಲಾಗಿದೆ. 2026ರಲ್ಲಿ ಜಪಾನ್‌ನ 4.46 ಲಕ್ಷ ಕೋಟಿ ಡಾಲರ್‌ಗೆ ಹೋಲಿಸಿದರೆ ಭಾರತವು 4.51 ಲಕ್ಷ ಕೋಟಿ ಡಾಲರ್‌ಗಳ ಆರ್ಥಿಕತೆಯಾಗಲಿದೆ ಎಂದು ಐಎಂಎಫ್ ಅಂದಾಜಿಸಿದೆ. ಕಳೆದ ಆಗಸ್ಟ್‌ನಲ್ಲಿ ರಷ್ಯಾದಿಂದ ತೈಲವನ್ನು ಖರೀದಿಸುತ್ತಿರುವುದಕ್ಕಾಗಿ ಅಮೆರಿಕವು ಭಾರತದ ಮೇಲೆ ಭಾರೀ ಸುಂಕವನ್ನು ವಿಧಿಸಿದ ಬಳಿಕ ಆರ್ಥಿಕ ಕಳವಳಗಳ ಹೊರತಾಗಿಯೂ ಈ ಆಶಾದಾಯಕ ವೌಲ್ಯಮಾಪನ ಹೊರಬಿದ್ದಿದೆ. ನಿರಂತರ ಬೆಳವಣಿಗೆಯು ನಿರಂತರ ಜಾಗತಿಕ ವ್ಯಾಪಾರ ಅನಿಶ್ಚಿತತೆಗಳ ನಡುವೆಯೂ ತನ್ನ ಪುಟಿದೇಳುವ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಭಾರತವು ಹೇಳಿದೆ. ಆದರೆ ಇತರ ಕ್ಷೇತ್ರಗಳಲ್ಲಿ ಭಾರತದ ಸಾಧನೆಗಳು ಅಷ್ಟೇನೂ ಹಸಿರಾಗಿಲ್ಲ. ಜನಸಂಖ್ಯೆಯ ವಿಷಯದಲ್ಲಿ,ಭಾರತವು 2023ರಲ್ಲಿ ನೆರೆಯ ಚೀನಾವನ್ನು ಹಿಂದಿಕ್ಕಿ ವಿಶ್ವದ ಅತ್ಯಂತ ಹೆಚ್ಚಿನ ಜನಸಂಖ್ಯೆಯ ದೇಶವಾಗಿದೆ. ಇತ್ತೀಚಿನ ವಿಶ್ವಬ್ಯಾಂಕ್ ಅಂಕಿಅಂಶಗಳಂತೆ ಭಾರತದ ತಲಾವಾರು ಜಿಡಿಪಿ 2024ರಲ್ಲಿ 2,694 ಡಾಲರ್‌ಗಳಾಗಿದ್ದು,ಇದು ಜಪಾನಿನ 32,487 ಡಾಲರ್‌ಗಿಂತ 12 ಪಟ್ಟು ಮತ್ತು ಜರ್ಮನಿಯ 56,103 ಡಾಲರ್‌ಗಿಂತ 20 ಪಟ್ಟು ಕಡಿಮೆಯಿದೆ.

ವಾರ್ತಾ ಭಾರತಿ 30 Dec 2025 8:30 pm

ಸನ್ ರೈಸರ್ಸ್ 13 ಕೋಟಿ ರೂಗೆ ಖರೀದಿಸಿದ್ದ ಆಲ್ರೌಂಡರ್ ಗೆ ಟಿ20 ವಿಶ್ವಕಪ್ ಆಡಲಿರುವ ಇಂಗ್ಲೆಂಡ್ ತಂಡದಲ್ಲಿಲ್ಲ ಸ್ಥಾನ!

ICC T20 World Cup Playing England Team- ಐಸಿಸಿ ಟಿ20 ವಿಶ್ವಕಪ್ 2026ರ ಟೂರ್ನಿಗೆ ಇದೀಗ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ತಂಡವನ್ನು ಪ್ರಕಟಿಸಿದೆ. ಆಶಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಜೋಶ್ ಟಂಗ್‌ಗೆ ಮೊದಲ ಬಾರಿಗೆ ಟಿ20 ತಂಡದಲ್ಲಿ ಸ್ಥಾನ ಸಿಕ್ಕಿದೆ. ಗಾಯಗೊಂಡಿದ್ದ ಜೋಫ್ರಾ ಆರ್ಚರ್‌ಗೂ ತಂಡದಲ್ಲಿ ಅವಕಾಶ ನೀಡಲಾಗಿದೆ. ಆದರೆ ಪ್ರಮುಖ ಆಲ್ರೌಂಡರ್ ಲಿಯಾಮ್ ಲಿವಿಂಗ್ ಸ್ಟೋನ್ ಗೆ ಸ್ಥಾನ ದೊರಕಿಲ್ಲ. ಸಿ ಬಣದಲ್ಲಿರುವ ಇಂಗ್ಲೆಂಡ್ ತಂಡವು ನೇಪಾಳ, ವೆಸ್ಟ್ ಇಂಡೀಸ್, ಬಾಂಗ್ಲಾದೇಶ ಮತ್ತು ಇಟಲಿಯೊಂದಿಗೆ ಸ್ಪರ್ಧಿಸಲಿದೆ.

ವಿಜಯ ಕರ್ನಾಟಕ 30 Dec 2025 8:25 pm

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಟಿಕೆಟ್ ನಿರಾಕರಣೆ|ಎನ್‌ಸಿಪಿ ಕಚೇರಿಯ ಟಿವಿ, ಕಿಟಕಿಗಳನ್ನು ಧ್ವಂಸಗೊಳಿಸಿದ ಕಾರ್ಯಕರ್ತರು

ನಾಗ್ಪುರ: ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಟಿಕೆಟ್ ನಿರಾಕರಿಸಿದ್ದರಿಂದ ಆಕ್ರೋಶಗೊಂಡ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಕಾರ್ಯಕರ್ತರು ಹಾಗೂ ಅವರ ಬೆಂಬಲಿಗರು ನಾಗ್ಪುರದಲ್ಲಿರುವ ಪಕ್ಷದ ಕಚೇರಿಯನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ನಾಗ್ಪುರ ನಗರ ಪಾಲಿಕೆ ಚುನಾವಣೆಯಲ್ಲಿ ಅವಿನಾಶ್ ಪರ್ದಿಕರ್ ಅವರಿಗೆ ಟಿಕೆಟ್ ನಿರಾಕರಿಸಿದ್ದರಿಂದ ಆಕ್ರೋಶಗೊಂಡ ಎನ್‌ಸಿಪಿ ಕಾರ್ಯಕರ್ತರು ಗಣೇಶ್ ಪೇಟ್ ಪ್ರದೇಶದಲ್ಲಿರುವ ಎನ್‌ಸಿಪಿ ಕಚೇರಿಯಲ್ಲಿನ ಟಿವಿ ಹಾಗೂ ಕಿಟಕಿಯ ಗಾಜುಗಳನ್ನು ಹಾನಿಗೊಳಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎನ್‌ಸಿಪಿ ನಗರ ಘಟಕದ ಮುಖ್ಯಸ್ಥ ಅನಿಲ್ ಅಹಿರ್ಕರ್, ಪಕ್ಷದ ಕಾರ್ಯಕರ್ತರು ಅಸಮಾಧಾನಗೊಳ್ಳುವುದು ಸಹಜವಾಗಿದೆ ಎಂದು ಹೇಳಿದ್ದಾರೆ. “ಒಂದು ಸ್ಥಾನಕ್ಕೆ 10ಕ್ಕೂ ಹೆಚ್ಚು ಮಂದಿ ಪೈಪೋಟಿ ನಡೆಸುತ್ತಿದ್ದರು. ಆದರೆ, ಕೇವಲ ಓರ್ವ ಅಭ್ಯರ್ಥಿಗೆ ಮಾತ್ರ ಟಿಕೆಟ್ ದೊರೆಯಲು ಸಾಧ್ಯ. ನಾವು ಎಲ್ಲರಿಗೂ ನ್ಯಾಯವನ್ನು ಖಾತರಿ ಪಡಿಸಲು ಪ್ರಯತ್ನಿಸಿದ್ದೇವೆ” ಎಂದು ತಿಳಿಸಿದ್ದಾರೆ. ಜನವರಿ 15ರಂದು ಮಹಾರಾಷ್ಟ್ರದ 29 ನಗರ ಪಾಲಿಕೆಗಳಿಗೆ ಚುನಾವಣೆ ನಡೆಯಲಿದ್ದು, ಮರುದಿನ ಮತ ಎಣಿಕೆ ನಡೆಯಲಿದೆ. ನಾಮಪತ್ರಗಳನ್ನು ಸಲ್ಲಿಸಲು ಮಂಗಳವಾರ ಕೊನೆಯ ದಿನವಾಗಿತ್ತು. ನಾಮಪತ್ರಗಳನ್ನು ಹಿಂಪಡೆಯಲು ಜನವರಿ 2 ಕೊನೆಯ ದಿನವಾಗಿದೆ.

ವಾರ್ತಾ ಭಾರತಿ 30 Dec 2025 8:24 pm

ಆಡಳಿತ ಸುಧಾರಣಾ ಆಯೋಗದ 10ನೇ ವರದಿ ಸಲ್ಲಿಕೆ

ಸುಧಾರಣಾ ಮೇಲ್ವಿಚಾರಣಾ ಘಟಕ ಸ್ಥಾಪಿಸಲು ಶಿಫಾರಸು : ಆರ್.ವಿ.ದೇಶಪಾಂಡೆ

ವಾರ್ತಾ ಭಾರತಿ 30 Dec 2025 8:22 pm

ಹುಣಸಗಿ | ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ತಾಯಂದಿರ ಪಾತ್ರ ಮಹತ್ವದ್ದು: ಮಾನಪ್ಪ ಸತ್ಯ

ಹುಣಸಗಿ : ಮಕ್ಕಳ ಉತ್ತಮ ಭವಿಷ್ಯ ನಿರ್ಮಾಣದಲ್ಲಿ ಮನೆಯೇ ಮೊದಲ ಪಾಠಶಾಲೆಯಾಗಿದ್ದು, ಈ ಪ್ರಕ್ರಿಯೆಯಲ್ಲಿ ತಾಯಂದಿರ ಪಾತ್ರ ಅತ್ಯಂತ ಹಿರಿದಾಗಿದೆ ಎಂದು ರಾಜನಕೋಳುರು ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲ ಮಾನಪ್ಪ ಸತ್ಯ ಹೇಳಿದರು. ಜಿಲ್ಲೆಯ ಹುಣಸಗಿ ತಾಲೂಕಿನ ರಾಜನಕೋಳುರು ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ (ಪ.ಪಂ.) ವಸತಿ ಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ತಾಯಂದಿರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳನ್ನು ಕೇವಲ ಶಾಲೆಗೆ ಕಳುಹಿಸಿದ ಮಾತ್ರಕ್ಕೆ ಪಾಲಕರ ಕರ್ತವ್ಯ ಮುಗಿಯುವುದಿಲ್ಲ. ಮನೆಯಲ್ಲಿಯೂ ಶೈಕ್ಷಣಿಕ ವಾತಾವರಣವನ್ನು ಕಲ್ಪಿಸಬೇಕಾದ ಅಗತ್ಯವಿದೆ ಎಂದು ತಿಳಿಸಿದರು. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಶಾಲೆಯಲ್ಲಿ ನಡೆಯುತ್ತಿರುವ ಇದು ಎರಡನೇ ಪಾಲಕರ ಸಭೆಯಾಗಿದ್ದು, ಪಾಲಕರು ಹಾಗೂ ಶಿಕ್ಷಕರು ಪರಸ್ಪರ ಸಹಕಾರದಿಂದ ಮಕ್ಕಳ ಭವಿಷ್ಯದ ಹಾದಿಗೆ ಉತ್ತಮ ಮಾರ್ಗ ರೂಪಿಸುವುದೇ ಈ ಸಭೆಯ ಉದ್ದೇಶವಾಗಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದ, ತಾಯಂದಿರು, ಪಾಲಕರು ಹಾಗೂ ಶಾಲೆಯ ಮಕ್ಕಳು ಸೇರಿದಂತೆ ಅನೇಕರು ಭಾಗವಹಿಸಿದ್ದರು.

ವಾರ್ತಾ ಭಾರತಿ 30 Dec 2025 8:21 pm

ಚಿತ್ತೂರಿನಲ್ಲಿ ಯಕ್ಷ ಕಿಶೋರ ಯಕ್ಷಗಾನ ಉದ್ಘಾಟನೆ

ಉಡುಪಿ, ಡಿ.30: ಬೈಂದೂರು ತಾಲೂಕು ಚಿತ್ತೂರಿನ ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆಯಲ್ಲಿ ಮೂರು ದಿನಗಳ ಕಿಶೋರ ಯಕ್ಷಗಾನ ಸೋಮವಾರ ಸಂಜೆ ಉದ್ಘಾಟನೆಗೊಂಡಿತು. ಉಡುಪಿಯ ಯಕ್ಷ ಶಿಕ್ಷಣ ಟ್ರಸ್ಟ್ ವತಿಯಿಂದ ನಡೆದಿರುವ ಈ ಕಿಶೋರ ಯಕ್ಷಗಾನ ಸಂಭ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದ ಶಾಸಕ ಗುರುರಾಜ ಗಂಟಿಹೊಳೆ, ಯಕ್ಷಗಾನ ಕಲಾರಂಗದ ಕಾರ್ಯ ವಿಸ್ತಾರವನ್ನು ಶ್ಲಾಘಿಸಿದರು. ಕಾರ್ಯಕ್ರಮ ನೀಡುವಲ್ಲಿ ಅವರು ತೋರುವ ಕಾಳಜಿ, ಅಚ್ಚುಕಟ್ಟುತನ, ಸಮಯಪಾಲನೆ ಸಾಮಾಜಿಕವಾಗಿ ಕೆಲಸ ಮಾಡುವ ಸಂಘಟನೆಗಳಿಗೆ ಮಾದರಿಯಾಗಿದೆ ಎಂದರು. ಕೊಲ್ಲೂರು ದೇವಳದ ಆಡಳಿತ ಸಮಿತಿ ಸದಸ್ಯ ಮಹಾಲಿಂಗ ನಾಯಕ್ ಮಾತನಾಡಿ, ಪ್ರೌಢಶಾಲೆಗಳಲ್ಲಿ ಯಕ್ಷ ಶಿಕ್ಷಣ ತರಬೇತಿ ನೀಡುವುದು ಅತ್ಯುತ್ತಮ ಕಾರ್ಯಕ್ರಮ. ಇದಕ್ಕೆ ದೇವಳದಿಂದ ಪ್ರತಿವಷರ್ ಅನುದಾನ ನೀಡಲಾಗುವುದು ಎಂದರು. ಉದ್ಯಮಿಗಳಾದ ಕೆ.ಎಲ್.ಜಯರಾಮ್ ಶೆಟ್ಟಿ, ರಾಜೀವ್ ಶೆಟ್ಟಿ ಜಿ.ಕೆ., ರವಿರಾಜ್ ಶೆಟ್ಟಿ, ಮುಖ್ಯಶಿಕ್ಷಕ ಸದಾನಂದ ಶೆಟ್ಟಿ ಕೆರಾಡಿ, ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್, ಎಸ್.ಡಿ.ಎಂ.ಸಿ. ಅಧ್ಯಕ್ಷೆ ಸುಗುಣ, ನಾರಾಯಣ ಎಂ. ಹೆಗಡೆ ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ನಾಗರಾಜ್ ಶೆಟ್ಟಿ ನೈಕಂಬ್ಳಿ ಸ್ವಾಗತಿಸಿದರು. ರಾಘವೇಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಮೊದಲ ದಿನದಂದು ಆಲೂರು ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ‘ರೇವತಿ ಪರಿಣಯ’ ಮತ್ತು ಕೊಲ್ಲೂರು ಮೂಕಾಂಬಿಕಾ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಚಕ್ರವ್ಯೆಹ-ಪದ್ಮವ್ಯೆಹ ಪ್ರಸಂಗಗಳು ಪ್ರದರ್ಶನಗೊಂಡವು.

ವಾರ್ತಾ ಭಾರತಿ 30 Dec 2025 8:19 pm

ಸಿದ್ದು ದಾಖಲೆಗೆ ನಾಟಿಕೋಳಿ ಔತಣಕೂಟದ ಸಂಭ್ರಮ! ಜನವರಿ 6 ಕ್ಕೆ ಅಭಿಮಾನಿಗಳಿಂದ ವಿಶಿಷ್ಟ ಕಾರ್ಯಕ್ರಮ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಸುದೀರ್ಘ ಅವಧಿಯ ಮುಖ್ಯಮಂತ್ರಿಯಾಗಿ ದಾಖಲೆ ಬರೆಯಲಿದ್ದಾರೆ. ಈ ವಿಶೇಷ ದಿನವನ್ನು ಆಚರಿಸಲು ಅಭಿಮಾನಿಗಳು ನಾಟಿಕೋಳಿ ಔತಣಕೂಟವನ್ನು ಏರ್ಪಡಿಸಿದ್ದಾರೆ. ನೆಲಮಂಗಲದ ಭಕ್ತನ ಪಾಳ್ಯದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ನಾಟಿಕೋಳಿ ಸಾಂಬಾರ್, ಮುದ್ದೆ, ಕಾಳು ಗೊಜ್ಜು, ರೈಸ್, ಪುಲಾವ್ ಮತ್ತು ಸಿಹಿತಿಂಡಿ ಇರಲಿದೆ. ಐದರಿಂದ ಹತ್ತು ಸಾವಿರ ಜನರು ಸೇರುವ ನಿರೀಕ್ಷೆ ಇದೆ.

ವಿಜಯ ಕರ್ನಾಟಕ 30 Dec 2025 8:19 pm

ರಂಗಶಿಕ್ಷಣ ಮಕ್ಕಳ ಜೀವನ ಪರಿವರ್ತನೆಗೆ ನಾಂದಿ: ಡಾ.ತಲ್ಲೂರು

ರಂಗಭೂಮಿ ರಂಗಶಿಕ್ಷಣ ಮಕ್ಕಳ ನಾಟಕೋತ್ಸವ ಸಮಾರೋಪ

ವಾರ್ತಾ ಭಾರತಿ 30 Dec 2025 8:17 pm

ಬೆಂಗಳೂರು ಶಿಕ್ಷಕರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿ ಪ್ರಕಟ

ಬೆಂಗಳೂರು : ‘ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿ ಪ್ರಕಟವಾಗಿದ್ದು, ಕ್ಷೇತ್ರದಲ್ಲಿ ಒಟ್ಟು 18,496 ಮತದಾರರಿದ್ದಾರೆ’ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮಹೇಶ್ವರ್ ರಾವ್ ತಿಳಿಸಿದ್ದಾರೆ. ಮಂಗಳವಾರ ಇಲ್ಲಿನ ಜಿಬಿಎ ಕೇಂದ್ರ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಕೇಂದ್ರದಲ್ಲಿ 2,709, ಉತ್ತರ 3,512, ದಕ್ಷಿಣ 3,464 ಮತ್ತು ಬೆಂಗಳೂರು ನಗರ 8,811 ಮತದಾರರಿದ್ದಾರೆ ಎಂದರು. ಒಟ್ಟು 18,496 ಮತದಾರರ ಪೈಕಿ ಗಂಡ 5,267 ಪುರುಷ ಮತ್ತು 13,229 ಮಹಿಳಾ ಮತದಾರರಿದ್ದಾರೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 40 ಮತಗಟ್ಟೆಗಳಿದ್ದು, ಬೆಂಗಳೂರು ಕೇಂದ್ರದಲ್ಲಿ 7, ಉತ್ತರ 7, ದಕ್ಷಿಣ 7 ಮತ್ತು ಬೆಂಗಳೂರು ನಗರ 19 ಮತಗಟ್ಟೆಗಳಿವೆ ಎಂದು ಅವರು ಮಾಹಿತಿ ನೀಡಿದರು. ಚುನಾವಣೆ ವಿಭಾಗದ ವಿಶೇಷ ಆಯುಕ್ತ ಆರ್. ರಾಮಚಂದ್ರನ್ ಮಾತನಾಡಿ, ಅಂತಿಮ ಪರಿಷ್ಕರಣೆಯಲ್ಲಿ ತಪ್ಪಿಹೋದ ಅರ್ಹ ಶಿಕ್ಷಕರು ಅಭ್ಯರ್ಥಿಗಳ ನಾಮನಿರ್ದೇಶನದ ಕೊನೆಯ ದಿನಾಂಕದವರೆಗೆ ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮತದಾರರ ನೋಂದಣಿ ಹಾಗೂ ನವೀಕರಣ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ ಎಂದು ತಿಳಿಸಿದರು. ಈ ವೇಳೆ ಬೆಂಗಳೂರು ಕೇಂದ್ರ/ದಕ್ಷಿಣ/ಉತ್ತರ/ನಗರ ವಿಭಾಗಗಳ ಅಪರ ಜಿಲ್ಲಾ ಚುನಾವಣಾಧಿಕಾರಿಗಳು, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ವಾರ್ತಾ ಭಾರತಿ 30 Dec 2025 8:17 pm

ಯಾದಗಿರಿ | ಮೂಢನಂಬಿಕೆ ಅಳಿಸಿ ವೈಜ್ಞಾನಿಕ ಮನೋಭಾವ ಬೆಳೆಸೋಣ: ಡಾ.ದಾಕ್ಷಾಯಣಿ ಎಸ್.ಅಪ್ಪ

ಯಾದಗಿರಿ: ಮೂಢನಂಬಿಕೆಗಳನ್ನು ಅಳಿಸಿ ಸಮಾಜದಲ್ಲಿ ವೈಜ್ಞಾನಿಕ ಚಿಂತನೆ ಬೆಳೆಸುವ ಉದ್ದೇಶದೊಂದಿಗೆ ಆಯೋಜಿಸಿದ್ದ ಈ ಕಾರ್ಯಕ್ರಮ ಅಪೂರ್ವ ಹಾಗೂ ಅರ್ಥಪೂರ್ಣವಾಗಿದೆ ಎಂದು ಶರಣಬಸವೇಶ್ವರ ಸಂಸ್ಥಾನದ ಡಾ.ದಾಕ್ಷಾಯಣಿ ಎಸ್. ಅಪ್ಪ ಹೇಳಿದರು. ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶಯ ನುಡಿಗಳನ್ನಾಡಿದ ಅವರು, ಉತ್ತಮ ಹಾಗೂ ಅರ್ಥಪೂರ್ಣ ಉಪನ್ಯಾಸಗಳೊಂದಿಗೆ ಪುರುಷ ಮತ್ತು ಸ್ತ್ರೀ ಸಾಧಕರನ್ನು ಸನ್ಮಾನಿಸಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮಾನವನು ಯಾವುದೇ ಕಾರ್ಯ ಕೈಗೊಳ್ಳುವ ಮುನ್ನ ಸೂಕ್ತವಾಗಿ ವಿಚಾರ ಮಾಡಬೇಕು ಎಂಬ ಬಸವಣ್ಣರ ನುಡಿಯನ್ನು ಸ್ಮರಿಸಿದ ಅವರು, ವೈಜ್ಞಾನಿಕ ಚಿಂತನೆಯಿಂದಲೇ ಯಾವುದು ಸರಿಯು, ಯಾವುದು ತಪ್ಪು ಎಂಬ ವಿವೇಕ ಮೂಡುತ್ತದೆ ಎಂದರು. ಮೂಢನಂಬಿಕೆ ಮತ್ತು ಅಪನಂಬಿಕೆಗಳನ್ನು ಹೊಡೆದೋಡಿಸಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಈ ಕಾರ್ಯಕ್ರಮ ಪರಿಣಾಮಕಾರಿಯಾಗಿ ಮಾಡಿದೆ ಎಂದು ಹೇಳಿದರು. ವಿಜ್ಞಾನವನ್ನು ಮಾನವನ ಕಲ್ಯಾಣ, ಪರಿಸರ ಸಂರಕ್ಷಣೆ, ಆರೋಗ್ಯ ರಕ್ಷಣೆ ಹಾಗೂ ಸುಸ್ಥಿರ ಅಭಿವೃದ್ಧಿಗೆ ಬಳಸಬೇಕು. ಮಾನವೀಯ ಮೌಲ್ಯಗಳೊಂದಿಗೆ ವಿಜ್ಞಾನವನ್ನು ಬೆಳೆಸಿದಾಗ ಮಾತ್ರ ಸಮಾಜ ಸರ್ವಾಂಗೀಣವಾಗಿ ಅಭಿವೃದ್ಧಿಯಾಗಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು. ಇಂತಹ ವೈಜ್ಞಾನಿಕ ಚಿಂತನೆಗೆ ಉತ್ತೇಜನ ನೀಡುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು. ಆಗ ಮಾತ್ರ ವೈಜ್ಞಾನಿಕ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಹೇಳಿದರು.

ವಾರ್ತಾ ಭಾರತಿ 30 Dec 2025 8:17 pm

ಅಮೆರಿಕದಿಂದ ಎಲ್‌ಪಿಜಿ ಆಮದು; ಬದಲಾಗಲಿದೆ ಅಡುಗೆ ಅನಿಲ ಸಬ್ಸಿಡಿ ಸೂತ್ರ!

ಅಡುಗೆ ಅನಿಲ ಪೂರೈಸುವ ಕಂಪೆನಿಗಳಿಗೆ ಹೊರಯಾಗಲಿದೆ ಹೊಸ ಒಪ್ಪಂದ

ವಾರ್ತಾ ಭಾರತಿ 30 Dec 2025 8:10 pm

ಕೋಗಿಲು ಒತ್ತುವರಿ ತೆರವು | ಕನ್ನಡಿಗರಿಗೆ ಮಾತ್ರ ಮನೆ, ಬೇರೆಯವರಿಗೆ ಇಲ್ಲ: ಝಮೀರ್ ಅಹ್ಮದ್ ಖಾನ್

ಬೆಂಗಳೂರು : ಕೋಗಿಲು ಬಳಿ ಸರಕಾರಿ ಜಾಗದಲ್ಲಿ ಅನಧಿಕೃತವಾಗಿ ಶೆಡ್‍ಗಳನ್ನು ನಿರ್ಮಿಸಿಕೊಂಡಿದ್ದ ಕನ್ನಡಿಗರಿಗೆ ಮಾತ್ರ ಸರಕಾರದ ವತಿಯಿಂದ ಮನೆಗಳನ್ನು ನೀಡಲಾಗುವುದು. ಬೇರೆಯವರೆಗೆ ಕೊಡಲು ಸಾಧ್ಯವಿಲ್ಲ ಎಂದು ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದರು. ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಲಿ ವಾಸವಿದ್ದ ಎಲ್ಲರ ಬಳಿಯೂ ಆಧಾರ್ ಕಾರ್ಡ್ ಇದೆ. ಮುಖ್ಯಮಂತ್ರಿ ಸೂಚನೆಗೆ ಮೇರೆಗೆ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ನಮ್ಮ ರಾಜ್ಯದವರಾಗಿದ್ದು, ಅವರಿಗೆ ಎಲ್ಲಿಯೂ ಮನೆ, ನಿವೇಶನ ಇಲ್ಲದಿದ್ದರೆ ಅಂತಹ ಅರ್ಹರಿಗೆ ಮಾತ್ರ ಮನೆಗಳನ್ನು ನೀಡುತ್ತೇವೆ ಎಂದು ಹೇಳಿದರು. ಬಾಂಗ್ಲಾದೇಶದಿಂದ ಬಂದಿರುವವರಿಗೆ ಸರಕಾರ ಮನೆಗಳನ್ನು ಕೊಡುತ್ತಿದೆ ಎಂದು ಬಿಜೆಪಿ ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿದ ಝಮೀರ್ ಅಹ್ಮದ್, ಎಲ್ಲೋ ಬಾಂಗ್ಲಾದೇಶದಿಂದ ಬಂದವರಿಗೆ ನಮ್ಮ ರಾಜ್ಯದಲ್ಲಿ ಮನೆ ಕೊಡಲು ಆಗುತ್ತಾ ? ನನಗಿರುವ ಮಾಹಿತಿ ಪ್ರಕಾರ ಇಲ್ಲಿ ಯಾರೂ ಬಾಂಗ್ಲಾದೇಶದವರು ಇಲ್ಲ ಎಂದು ತಿಳಿಸಿದರು. ಬೆಂಗಳೂರು ನಗರ ಜಿಲ್ಲಾಧಿಕಾರಿ, ಜಿಬಿಎ ಆಯುಕ್ತರು, ವಸತಿ ಇಲಾಖೆಯ ಅಧಿಕಾರಿಗಳು ಅಲ್ಲಿರುವವರ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಅವರು ಅರ್ಹರ ಪಟ್ಟಿಯನ್ನು ಸಿದ್ಧ ಮಾಡಿಕೊಡುತ್ತಾರೆ. ಆನಂತರವಷ್ಟೇ, ಮನೆಗಳನ್ನು ಮಂಜೂರು ಮಾಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಅವರು ತಿಳಿಸಿದರು. ಭಾರತದಲ್ಲಿ ಮುಸ್ಲಿಮರಿಗೆ ತೊಂದರೆ ಆಗುತ್ತಿದೆ ಎಂದು ಪಾಕಿಸ್ತಾನದ ವಿದೇಶಾಂಗ ಇಲಾಖೆಯ ವಕ್ತಾರ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಬಗ್ಗೆ ಮಾತನಾಡಲು ಅವರಿಗೆ ಯಾವ ಹಕ್ಕಿದೆ? ಪಾಕಿಸ್ತಾನಕ್ಕೂ ನಮಗೂ ಯಾವ ಸಂಬಂಧವು ಇಲ್ಲ. ನಮ್ಮ ದೇಶದಲ್ಲಿನ ಮುಸ್ಲಿಮರನ್ನು ನಾವು ನೋಡಿಕೊಳ್ಳುತ್ತೇವೆ. ಮೊದಲು ಅವರ ದೇಶದಲ್ಲಿರುವ ಸಮಸ್ಯೆಗಳ ಬಗ್ಗೆ ಗಮನ ಹರಿಸಲಿ ಎಂದು ತಿರುಗೇಟು ನೀಡಿದರು. ರಾಜ್ಯ ಸರಕಾರದ ಆಡಳಿತದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಝಮೀರ್ ಅಹ್ಮದ್, ನಮ್ಮದು ರಾಷ್ಟ್ರೀಯ ಪಕ್ಷ. ಅವರು ನಮ್ಮ ನಾಯಕರು. ಕರ್ನಾಟಕದಲ್ಲಿ ಇಂಥದೊಂದು ಸುದ್ದಿ ಆಗುತ್ತಿದೆ ಎಂದು ಮುಖ್ಯಮಂತ್ರಿಗೆ ಹೇಳಿದ್ದಾರೆ. ಅದರಂತೆ, ಮುಖ್ಯಮಂತ್ರಿ ಸಭೆ ಮಾಡಿ ಚರ್ಚೆ ನಡೆಸಿದ್ದಾರೆ. ನಮ್ಮ ರಾಜ್ಯದವರಿಗೆ ಮಾತ್ರ ಮನೆಗಳನ್ನು ನೀಡುವ ನಿರ್ಧಾರ ಮಾಡಿದ್ದಾರೆ. ಇದರಲ್ಲಿ ಹಸ್ತಕ್ಷೇಪದ ಮಾತು ಎಲ್ಲಿಂದ ಬರುತ್ತದೆ ಎಂದು ಹೇಳಿದರು.

ವಾರ್ತಾ ಭಾರತಿ 30 Dec 2025 8:09 pm

ಹುಣಸಗಿ | ರೈತ ಸಂಘದ ಮಹಿಳಾ ಘಟಕ ರಚನೆ

ಆಯ್ಕೆಯಾದ ಪದಾಧಿಕಾರಿಗಳು ರೈತ ಸಂಘದ ತತ್ವ ಸಿದ್ದಾಂತಕ್ಕೆ ಬದ್ಧರಾಗಿರಬೇಕು : ದೇಸಾಯಿಗುರು

ವಾರ್ತಾ ಭಾರತಿ 30 Dec 2025 8:09 pm

ಎಸ್‌ಸಿಡಿಸಿಸಿ ಬ್ಯಾಂಕಿನಲ್ಲಿ ಕೃಷಿತಜ್ಞ ಪ್ರತಿನಿಧಿಗಳ ಸಭೆ

ಮಂಗಳೂರು , ಡಿ.30: ಅಲ್ಪಾವಧಿ ಬೆಳೆ ಸಾಲ ಮಿತಿಯನ್ನು 2026-27ನೇ ಸಾಲಿಗೆ ನಿಗದಿಪಡಿಸುವ ಉದ್ದೇಶ ದಿಂದ ಜಿಲ್ಲಾ ಮಟ್ಟದ ಕೃಷಿತಜ್ಞ ಪ್ರತಿನಿಧಿಗಳ ಸಮಾಲೋಚನಾ ಸಭೆಯು ಎಸ್ಸಿಡಿಸಿಸಿ ಬ್ಯಾಂಕಿನಲ್ಲಿ ಮಂಗಳವಾರ ಬ್ಯಾಂಕಿನ ಅಧ್ಯಕ್ಷ ‘ಸಹಕಾರ ರತ್ನ’ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಎಸ್ಸಿಡಿಸಿಸಿ ಬ್ಯಾಂಕ್‌ನ 2025-26ನೇ ಸಾಲಿಗೆ ಬೆಳೆಸಾಲಗಳ ಗುರಿಯು ರೂ.2,150.00 ಕೋಟಿ ಆಗಿದ್ದು, ಈಗಾಗಲೇ ರೂ.1533.19 ಕೋಟಿ ಬೆಳೆಸಾಲ ನೀಡಲಾಗಿದೆ. 31-03-2025ರ ಅಂತ್ಯಕ್ಕೆ ಬೆಳೆಸಾಲಗಳ ಹೊರಬಾಕಿ ರೂ.2123.11 ಕೋಟಿ ಆಗಿದೆ ಎಂದರು. ನಬಾರ್ಡ್ ಪುರ್ನಧನ ಸಾಲ ಹಾಗೂ ಎಸ್ಸಿಡಿಸಿಸಿ ಬ್ಯಾಂಕಿನ ಸ್ವಂತ ಬಂಡವಾಳದಿಂದ ಕೃಷಿ ಉದ್ದೇಶಕ್ಕಾಗಿ 2024-25ನೇ ಸಾಲಿನಲ್ಲಿ ಒಟ್ಟು ರೂ.2300.74 ಕೋಟಿ ಅವಧಿ ಸಾಲವನ್ನು ನೀಡಲಾಗಿದ್ದು, 2025-26 ನೇ ಸಾಲಿಗೆ ಈಗಾಗಲೇ (ನವೆಂಬರ್ -2025ರವರೆಗೆ) ರೂ.107.45 ಕೋಟಿ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಸಾಲವನ್ನು ಬ್ಯಾಂಕ್ ನೀಡಿದೆ ಎಂದು ಸಭೆಯಲ್ಲಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದರು. 2026-27ನೇ ಸಾಲಿಗೆ ವಿವಿಧ ಬೆಳೆಗಳಿಗೆ ಕೊಡತಕ್ಕ ಅಲ್ಪಾವಧಿ ಬೆಳೆಸಾಲದ ಮಿತಿಯನ್ನು ಕೃಷಿತಜ್ಞ ಪ್ರತಿನಿಧಿ ಗಳೊಂದಿಗೆ, ನಬಾರ್ಡ್ ಲೀಡ್ ಬ್ಯಾಂಕ್, ಸಹಕಾರಿ ಇಲಾಖೆ, ತೋಟಗಾರಿಕೆ, ಕೃಷಿ ಹಾಗೂ ಇತರ ಇಲಾಖಾಧಿ ಕಾರಿಗಳ ಸಮಾಲೋಚನೆಯ ಮೂಲಕ ನಿಗದಿಪಡಿಸಲಾಯಿತು. ಸಭೆಯಲ್ಲಿ ಎಸ್ಸಿಡಿಸಿಸಿ ಬ್ಯಾಂಕಿನ ನಿರ್ದೇಶಕರುಗಳಾದ ಎಂ. ವಾದಿರಾಜ್ ಶೆಟ್ಟಿ, ಶಶಿಕುಮಾರ್ ರೈ ಬಾಲ್ಯೋಟ್ಟು , ದೇವಿಪ್ರಸಾದ್ ಶೆಟ್ಟಿ ಬೆಳಪು, ಅಶೋಕ್ ಕುಮಾರ್ ಶೆಟ್ಟಿ. ಮೋನಪ್ಪ ಶೆಟ್ಟಿ ಎಕ್ಕಾರು, ಕುಶಾಲಪ್ಪ ಗೌಡ, ಎಸ್. ಎನ್. ಮನ್ಮಥ, ಕೆ. ಜೈರಾಜ್ ಬಿ. ರೈ. ಸದಾಶಿವ ಉಳ್ಳಾಲ್, ರಾಜೇಶ್ ರಾವ್, ಮಹೇಶ್ ಹೆಗ್ಡೆ, ಎಸ್. ಬಿ. ಜಯರಾಮ ರೈ,ದ.ಕ ಹಾಗೂ ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರುಗಳಾದ ಎಚ್. ಎನ್. ರಮೇಶ್ ಮತ್ತು ಲಾವಣ್ಯ, ನಬಾರ್ಡ್ ಡಿಡಿಎಂ ಸಂಗೀತಾ ಕರ್ತಾ , ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ., ಮಂಗಳೂರು ಲೀಡ್ ಡಿಸ್ಟ್ರಿಕ್ಟ್ ಮೆನೇಜರ್ ಕವಿತಾ ಶೆಟ್ಟಿ, ಉಡುಪಿ ಲೀಡ್ ಡಿಸ್ಟ್ರಿಕ್ಟ್ ಮೆನೇಜರ್ ಕೆ.ಎಸ್.ಮಹಾದೇವಪ್ಪ , ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಹೊನ್ನಪ್ಪ ಗೌಡ, ಉಡುಪಿ ಜಿಲ್ಲೆಯ ಉಪ ನಿರ್ದೇಶಕರಾದ ಚಂದ್ರಶೇಖರ್ ನಾಯ್ಕ, ದಕ್ಷಿಣ ಕನ್ನಡ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ದರ್ಶನ್ ಜಿ., ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಡಾ.ಅರುಣ್ ಕುಮಾರ್. ಶೆಟ್ಟಿ, ಮೀನುಗಾರಿಕಾ ಇಲಾಖೆಯ ಉಪ ನಿರ್ದೇಶಕ ದಿಲೀಪ್ ಕುಮಾರ್ , ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಸುಮಲತಾ , ರಬ್ಬರ್ ಬೋರ್ಡ್ ಡೆವೆಲಪ್ ಮೆಂಟ್ ಅಫೀಸರ್ ಮಿನಿ ನೀನನ್, ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರ ಉಳ್ಳಾಲ್ ಇದರ ಅಸಿಸ್ಟೆಂಟ್ ಪ್ರೊಫೆಸರ್ ನಿಶ್ಮಿತಾ ,ಕೆ., ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ., ಸಹಕಾರ ಸಂಘಗಳ ಸಹಾಯಕ ನಿಬಂಧಕರುಗಳಾದ ತ್ರಿವೇಣಿ ರಾವ್ , ಸುಧೀರ್ ಕುಮಾರ್, ಎಸ್. ಎಂ. ರಘು,ಮತ್ತು ವಿವಿಧ ಸಹಕಾರಿ ಸಂಘಗಳ ಅಧ್ಯಕ್ಷರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. 

ವಾರ್ತಾ ಭಾರತಿ 30 Dec 2025 8:07 pm

ಯಾದಗಿರಿ | ತುಮಕೂರು ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ : ಗ್ರಾಮ ಪಂಚಾಯತ್ ನಿರ್ಲಕ್ಷ್ಯ

ಸ್ವಂತ ಹಣದಿಂದ ಚರಂಡಿ ಕ್ಲೀನ್ ಮಾಡಿಸಿದ ಖಾಸಿಂ ಅಲಿ ಸಾಬ್

ವಾರ್ತಾ ಭಾರತಿ 30 Dec 2025 8:02 pm

‘ವಿಬಿ: ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ಮುಂದೂಡಿ ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸಿ’ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು : ವಿಕಸಿತ ಭಾರತ-ಉದ್ಯೋಗ ಮತ್ತು ಜೀವನೋಪಾಯ ಭರವಸೆ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ)ಕಾಯ್ದೆಯನ್ನು ಅನುಷ್ಠಾನ ಮಾಡುವುದನ್ನು ತಾತ್ಕಾಲಿಕವಾಗಿ ಮುಂದೂಡಿ, ಅದರ ಸಾಧಕ-ಬಾಧಕಗಳ ಕುರಿತು ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಏನಿದೆ?: ವಿಬಿ-ಜಿ ರಾಮ್ ಜಿ ಕಾಯ್ದೆಯು, ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿಯ ಮೂಲ ಕಾಯ್ದೆಯ ಉದ್ದೇಶವನ್ನೇ ಹಾಳುಮಾಡುವ ಅಪಾಯ ಹೊಂದಿದೆ. ಹೊಸ ಕಾಯ್ದೆಯು ಉದ್ಯೋಗ ಭರವಸೆಯ ದಿನಗಳನ್ನು 100ರಿಂದ 125ಕ್ಕೆ ಹೆಚ್ಚಿಸುವುದಾಗಿ ಭರವಸೆ ನೀಡಿದರೂ, ಅದಕ್ಕೆ ತಕ್ಕಂತಹ ಸಮರ್ಪಕ ಯೋಜನೆ ಅಥವಾ ಕೇಂದ್ರ ಸರಕಾರದ ಖಚಿತ ಅನುದಾನದ ಭರವಸೆ ಇಲ್ಲ ಎಂದು ಅವರು ತಿಳಿಸಿದ್ದಾರೆ. ಈ ಕಾಯ್ದೆಯು ಪ್ರತಿ ರಾಜ್ಯದ ‘ಅಧಿಸೂಚಿತ’ ಪ್ರದೇಶಗಳಿಗೆ ಸಂಬಂಧಿಸಿದಂತೆ ‘ನಿಯಮಿತ ಅನುದಾನ’ಕ್ಕೆ ಮಾತ್ರ ಕೇಂದ್ರ ಸರಕಾರದ ಆರ್ಥಿಕ ಹೊಣೆಗಾರಿಕೆಯನ್ನು ಮಿತಿಗೊಳಿಸುತ್ತದೆ. ಹೆಚ್ಚಿನ ರಾಜ್ಯಗಳಲ್ಲಿ ಕೇಂದ್ರ ಸರಕಾರವು ಆ ಅನುದಾನದ ಕೇವಲ ಶೇ.60ರಷ್ಟನ್ನು ಮಾತ್ರ ನೀಡುತ್ತದೆ. ಇದರ ಪರಿಣಾಮವಾಗಿ, 125 ದಿನಗಳ ಕಾನೂನು ಬದ್ಧ ಉದ್ಯೋಗ ಭರವಸೆ ಈಡೇರುವುದು ಕಷ್ಟ ಸಾಧ್ಯ ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟಿದ್ದಾರೆ. ಕೇಂದ್ರ ಸರಕಾರ ಅಧಿಸೂಚಿಸುವ ಹಾಗೂ ನಿಗದಿಪಡಿಸುವ ನಿಯಮಿತ ಅನುದಾನ ಮಿತಿಗೆ ಇದು ಒಳಪಟ್ಟಿರುತ್ತದೆ. ಇದು ಉದ್ಯೋಗ ಭರವಸೆಯ ಮೂಲ ತತ್ವವನ್ನೆ ದುರ್ಬಲಗೊಳಿಸುತ್ತಿದ್ದು, ನಿಜವಾದ ಬೇಡಿಕೆ ಇದ್ದರೂ ಅನೇಕ ಗ್ರಾಮ ಪಂಚಾಯತಿಗಳಿಗೆ ಹಣಕಾಸಿನ ಕೊರತೆ ಉಂಟಾಗುವ ಸಾಧ್ಯತೆಯನ್ನು ಸೃಷ್ಟಿಸುತ್ತದೆ. ಹೊಸ ಕಾಯ್ದೆಯು ಪ್ರತಿ ವರ್ಷ “ವಸ್ತುನಿಷ್ಠ ಮಾನದಂಡಗಳ” ಆಧಾರದ ಮೇಲೆ ರಾಜ್ಯವಾರು ನಿಯಮಿತ ಅನುದಾನವನ್ನು ಕೇಂದ್ರ ಸರಕಾರವೆ ನಿಗದಿಪಡಿಸುವುದಾಗಿ ಹೇಳುತ್ತದೆ. ಆದರೆ ಈ ಮಾನದಂಡಗಳನ್ನು ಕಾಯ್ದೆಯಲ್ಲಿ ಸ್ಪಷ್ಟವಾಗಿ ಸೇರಿಸಲಾಗಿಲ್ಲ ಎಂದು ಅವರು ತಿಳಿಸಿದ್ದಾರೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಕಾರ್ಮಿಕ ಬಜೆಟ್‍ಗಳನ್ನು ತಯಾರಿಸಿ, ಗ್ರಾಮಗಳಿಂದ ಉಂಟಾಗುವ ಬೇಡಿಕೆಯ ಆಧಾರದಲ್ಲಿ ಅನುದಾನ ನೀಡುವ ವಿಧಾನಕ್ಕೆ ಇದು ವಿರುದ್ಧವಾಗಿದೆ. ಪಿಎಂ ಗತಿ ಶಕ್ತಿ ಮಾಸ್ಟರ್ ಪ್ಲಾನ್‍ಗೆ ಹೊಂದಾಣಿಕೆ ಮಾಡುವ ಪ್ರಯತ್ನ ಇದಾಗುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಪ್ರಸಕ್ತ ಜಾರಿಯಲ್ಲಿರುವ ಮನರೇಗಾ ಚೌಕಟ್ಟಿನ ಅಡಿಯಲ್ಲಿ, ಪ್ರಮುಖ ರಾಜ್ಯಗಳು ಕೇಂದ್ರ-ರಾಜ್ಯಗಳ ನಡುವೆ ಶೇ.90:10 ಹಣಕಾಸು ಹಂಚಿಕೆ ವ್ಯವಸ್ಥೆಯನ್ನು ಅನುಸರಿಸುತ್ತಿವೆ. ಆದರೆ ಹೊಸ ಕಾಯ್ದೆಯು ಇದನ್ನು ಬಹುತೇಕ ರಾಜ್ಯಗಳಿಗೆ ಶೇ.60:40ಕ್ಕೆ ಬದಲಾಯಿಸಿದೆ. ಇದರಿಂದ ಕಾನೂನುಬದ್ಧ ಭರವಸೆಯಾಗಿ ಇದ್ದ ಯೋಜನೆ ಒಂದು ಸಾಮಾನ್ಯ ಯೋಜನೆಯಾಗಿ ಪರಿವರ್ತನೆಯಾಗಿದೆ ಎಂದು ಅವರು ತಿಳಿಸಿದ್ದಾರೆ. ಈಗಾಗಲೇ ಜಿಎಸ್‍ಟಿ ಪರಿಹಾರ ಸಿಗದಿರುವುದು ಹಾಗೂ ತಾರತಮ್ಯಕರವಾದ ಹಣಕಾಸು ವಿಕೇಂದ್ರೀಕರಣದಿಂದ ಆರ್ಥಿಕ ಒತ್ತಡದಲ್ಲಿರುವ ರಾಜ್ಯಗಳ ಮೇಲೆ ಹೆಚ್ಚುವರಿ ಭಾರವನ್ನು ಹಾಕುತ್ತದೆ. ಈ ಬದಲಾವಣೆ ರಾಜ್ಯ ಸರಕಾರಗಳೊಂದಿಗೆ ಅರ್ಥಪೂರ್ಣ ಸಮಾಲೋಚನೆ ಇಲ್ಲದೆ ತರಲಾಗಿದೆ ಎಂಬುದು ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೊಸ ಕಾಯ್ದೆಯು ರಾಜ್ಯಕ್ಕೆ ನಿಗದಿಪಡಿಸಿದ ಮಾನದಂಡದ ಹಂಚಿಕೆಯ ಮೀರಿದ ಯಾವುದೆ ವೆಚ್ಚವನ್ನು ರಾಜ್ಯ ಸರಕಾರವೆ ಭರಿಸಬೇಕು ಎಂದು ಹೇಳುತ್ತದೆ. ಇದರಿಂದ ಕೇಂದ್ರ ನಿಗದಿಪಡಿಸಿದ ಮಿತಿಗಿಂತ ಹೆಚ್ಚಾದ ಬೇಡಿಕೆಗೆ ಸಂಬಂಧಿಸಿದಂತೆ ರಾಜ್ಯಗಳು ಶೇ. 100ರಷ್ಟು ಹೊಣೆಗಾರಿಕೆಯನ್ನು ಹೊರುವ ಪರಿಸ್ಥಿತಿ ಎದುರಾಗಬಹುದು. ಒಂದು ರಾಜ್ಯವು ನಿಗದಿತ ಅಥವಾ ಹೆಚ್ಚುವರಿ ವೆಚ್ಚವನ್ನು ಭರಿಸಲು ಅಸಮರ್ಥವಾದರೆ, ಉದ್ಯೋಗ ಪಡೆಯುವ ಹಕ್ಕು ಕೈ ತಪ್ಪುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಬಿತ್ತನೆ ಮತ್ತು ಕೊಯ್ಲಿನ ಗರಿಷ್ಠ ಅವಧಿಯಲ್ಲಿ ಒಟ್ಟು 60 ದಿನಗಳ ಕಾಲ ಈ ಕಾಯ್ದೆಯಡಿ ಕೆಲಸಗಳನ್ನು ಕೈಗೊಳ್ಳಲಾಗುವುದಿಲ್ಲ ಎಂಬುದನ್ನು ರಾಜ್ಯಗಳು ಮುಂಚಿತವಾಗಿ ಅಧಿಸೂಚನೆ ಮಾಡಬೇಕಾಗಿದೆ. ಆ ಅವಧಿಯಲ್ಲಿ ಕೃಷಿ ಚಟುವಟಿಕೆಗಳು ಹೆಚ್ಚಾಗಬಹುದು ಎಂಬುದು ಸತ್ಯವಾದರೂ, ಇಂತಹ ಸಮಗ್ರ ನಿಷೇಧವು ಇನ್ನೂ ಕೂಲಿ ಉದ್ಯೋಗ ಅಗತ್ಯವಿರುವ ಜನರ ಹಕ್ಕನ್ನು ಕಸಿದುಕೊಳ್ಳುತ್ತದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಆದಿವಾಸಿ ಮತ್ತು ದುರ್ಬಲ ವರ್ಗದವರಿಗೆ ಸಾಕಷ್ಟು ಕೃಷಿ ಕೆಲಸ ಸಿಗದಂತಾಗುತ್ತದೆ. ಇದರಿಂದಾಗಿ, ಜೀವನೋಪಾಯದ ಅಸ್ಥಿರತೆ ಹೆಚ್ಚಾಗಿ, ಕೂಲಿಗಾಗಿ ಕಾರ್ಮಿಕರು ನಗರ ಪ್ರದೇಶಗಳತ್ತ ವಲಸೆ ಹೋಗುತ್ತಾರೆ. ಸ್ಥಳೀಯವಾಗಿ ಅಗತ್ಯವಿರುವ ಗ್ರಾಮೀಣ ಆಸ್ತಿಗಳ ನಿರ್ಮಾಣದ ಮೇಲೆ ಕೇಂದ್ರೀಕೃತವಾಗಿರುವ ಮನರೇಗಾ ಮೂಲ ಉದ್ದೇಶದಿಂದ ದೂರ ಸರಿದು, ಗುತ್ತಿಗೆದಾರರ ನೇತೃತ್ವದ ಯೋಜನೆಗಳಿಗೆ ಉತ್ತೇಜನ ನೀಡುವ ಮಾದರಿಯತ್ತ ಸಾಗುತ್ತಿರುವಂತೆ ಕಾಣುತ್ತಿದೆ ಎಂದು ಅವರು ಹೇಳಿದ್ದಾರೆ. ಹೆಚ್ಚುವರಿ ತಂತ್ರಜ್ಞಾನ ಹಸ್ತಕ್ಷೇಪಗಳು ಅತ್ಯಂತ ಬಡ ಮತ್ತು ಡಿಜಿಟಲ್ ಸೌಲಭ್ಯಗಳಿಂದ ವಂಚಿತರಾದ ಗ್ರಾಮೀಣ ನಾಗರಿಕರನ್ನು, ವಿಶೇಷವಾಗಿ ದಲಿತ ಮತ್ತು ಆದಿವಾಸಿ ಸಮುದಾಯಗಳನ್ನು ಹೊರಗುಳಿಸಬಹುದಾದ ಅಪಾಯವಿದೆ. ಈ ಕಾಯ್ದೆಯನ್ನು ಏಕಪಕ್ಷೀಯವಾಗಿ ಹಾಗೂ ತುರ್ತಾಗಿ ಜಾರಿಗೆ ತರುವುದು ಸಂವಿಧಾನದ ಅನುಚ್ಛೇದಗಳು 258 ಮತ್ತು 280ಗಳಿಗೆ ವಿರುದ್ಧವಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಉದ್ಯೋಗ ಖಾತರಿ ಕಾಯ್ದೆ ಕೇವಲ ಕಲ್ಯಾಣ ಯೋಜನೆಯಲ್ಲ, ಗ್ರಾಮ ಸ್ವರಾಜ್ಯ ಮತ್ತು ಅಂತ್ಯೋದಯದ ಪ್ರತೀಕವಾದ ಮಹಾತ್ಮ ಗಾಂಧಿಯವರ ಹೆಸರನ್ನು ಹೊಂದಿದೆ. ಕಾನೂನಿನಿಂದ ಅವರ ಹೆಸರು ತೆಗೆದದ್ದು ದುರಾದೃಷ್ಟಕರ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ವಾರ್ತಾ ಭಾರತಿ 30 Dec 2025 7:59 pm

ಕರ್ನಾಟಕ ರಾಜ್ಯದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ : ಸಚಿವ ಈಶ್ವರ್ ಖಂಡ್ರೆ

ಬೀದರ್ : ಕರ್ನಾಟಕ ರಾಜ್ಯದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ತಿಳಿಸಿದರು. ಮಂಗಳವಾರ ನಗರದ ಪ್ರತಾಪ್ ನಗರದ ಘಾಳೆ ಲಕ್ಜುರೀಸ್ ಕನ್ವೆನ್ಷನ್ ಹಾಲ್‌ನಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಸರ್ಕಾರ ಪಂಚ ಗ್ಯಾರಂಟಿಗಳ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ 'ಗ್ಯಾರಂಟಿ ಕಾರ್ಯಾಗಾರ-ಗ್ಯಾರಂಟಿ ಉತ್ಸವ' ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ರಾಜ್ಯದ 4 ಕೋಟಿಗೂ ಹೆಚ್ಚು ಜನರು ಫಲಾನುಭವಿಗಳಾಗಿದ್ದಾರೆ. ಪ್ರತಿ ಪಕ್ಷಗಳು, ಬಂಡವಾಳಶಾಹಿಗಳು ಗ್ಯಾರಂಟಿಗಳನ್ನು ವಿರೋಧಿಸುವರು, ಟೀಕಿಸುವರು, ಅವರೇ ಇವಾಗ ದೇಶದ ಇತರೆ ರಾಜ್ಯಗಳಲ್ಲಿ ಗ್ಯಾರಂಟಿಗಳನ್ನು ಘೋಷಣೆ ಮಾಡುತ್ತಿದ್ದಾರೆ ಎಂದು ಹೇಳಿದ ಅವರು, ತಮ್ಮ ಸರ್ಕಾರ ನುಡಿದಂತೆ ನಡೆದಿದೆ. ಚುನಾವಣೆ ಪ್ರಣಾಳಿಕೆಯಲ್ಲಿ ತಿಳಿಸಿರುವ ಹಾಗೆ ಪಂಚ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದೇವೆ ಎಂದರು. ಬೀದರ್‌ ಜಿಲ್ಲೆಯಲ್ಲಿ ಗೃಹ ಲಕ್ಷ್ಮೀ ಯೋಜನೆಯಡಿ 3,44,855 ಮಹಿಳೆಯರು ಫಲಾನುಭವಿಗಳು ಇದ್ದು, ಇದುವರೆಗೆ ಯಾವುದೇ ಮಧ್ಯವರ್ತಿಗಳಿಲ್ಲದೆ ತಿಂಗಳಿಗೆ 2 ಸಾವಿರ ರೂ. ಅಂತೆ 1,552 ಕೋಟಿ ರೂ. ನೇರವಾಗಿ ಮಹಿಳೆಯರ ಖಾತೆಗೆ ಜಮಾ ಮಾಡಲಾಗಿದೆ. ಗೃಹ ಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ 3,48,617 ಫಲಾನುಭವಿಗಳಿದ್ದು, 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುತ್ತಿದ್ದು, 447 ಕೋಟಿ ರೂ. ಬಳಸಲಾಗಿದೆ. ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ 13,13,355 ಜನರು ಫಲಾನುಭವಿಗಳಾಗಿದ್ದು, ಶೇ.80 ರಷ್ಟು ಜನರು ಒಳಗೊಂಡಿದ್ದಾರೆ. ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ 11 ಕೋಟಿಗೂ ಹೆಚ್ಚು ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಇದರಿಂದಾಗಿ ಸರ್ಕಾರ ಕೆಎಸ್‌ಆರ್‌ಟಿಸಿಗೆ 315 ಕೋಟಿ ರೂ. ಪಾವತಿಸಿದೆ ಎಂದು ಹೇಳಿದರು. ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ ಅವರು ಮಾತನಾಡಿ, ರಾಜ್ಯದಲ್ಲಿ ತಮ್ಮ ಸರ್ಕಾರ ಜನಪರ, ಬಡವರ ಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಮೊದಲಿನಿಂದಲೂ ತಮ್ಮ ಸರ್ಕಾರ ಜನರು ಬದುಕು ಕಟ್ಟಿಕೊಳ್ಳುವಂತೆ ಮಾಡಿದೆ. ಉಳುವವನೇ ಭೂಮಿಯ ಒಡೆಯ, 20 ಅಂಶಗಳ ಕಾರ್ಯಕ್ರಮ ಯಶಸ್ವಿಯಾಗಿ ಜಾರಿಯಾಗಿದ್ದು, ಶಿಕ್ಷಣ, ಆರೋಗ್ಯ, ವಿಜ್ಞಾನ ತಂತ್ರಜ್ಞಾನದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದೆ ಎಂದರು. ಹಿರಿಯ ಪತ್ರಕರ್ತ ಹಾಗೂ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿ ಡಾ.ವಾಸು ಹೆಚ್. ವಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ (ಮೈಸೂರು ವಿಭಾಗ) ಉಪಾಧ್ಯಕ್ಷೆ ಪುಷ್ಪ ಅಮರನಾಥ್, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ (ಕಲಬುರಗಿ ವಿಭಾಗ) ಉಪಾಧ್ಯಕ್ಷ ಎಸ್.ಆರ್.ಮೆಹರೂಜ್ ಖಾನ್, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ (ಬೆಂಗಳೂರು-1 ವಿಭಾಗ) ಉಪಾಧ್ಯಕ್ಷ ಸೂರಜ್ ಹೆಗಡೆ, ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್, ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಹಾಗೂ ಕೃಷ್ಣ ಮೇಲ್ದಂಡೆ ಯೋಜನೆಯ ಅಧ್ಯಕ್ಷ ಬಾಬು ಹೊನ್ನನಾಯ್ಕ್, ಬುಡಾ ಅಧ್ಯಕ್ಷ ಬಸವರಾಜ್ ಜಾಬಶೆಟ್ಟಿ, ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗಿರೀಶ್ ಬದೋಲೆ ಹಾಗೂ ಅರಣ್ಯ ಇಲಾಖೆಯ ಉಪ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ ಸೇರಿದಂತೆ ಇತರೆ ಅಧಿಕಾರಿಗಳು, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ, ತಾಲೂಕು ಅಧ್ಯಕ್ಷರು, ಸದಸ್ಯರು, ಪಂಚ ಗ್ಯಾರಂಟಿಗಳ ಫಲಾನುಭವಿಗಳು ಉಪಸ್ಥಿತರಿದ್ದರು.    

ವಾರ್ತಾ ಭಾರತಿ 30 Dec 2025 7:54 pm

ಯುವಕ ಯುವತಿಯರಿಗೆ ಉಚಿತ ಕೌಶಲ್ಯ ತರಬೇತಿ

ಮಂಗಳೂರು: ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ)ಯು ನಗರದ ಕದ್ರಿಹಿಲ್ಸ್‌ನಲ್ಲಿರುವ ಮಹಿಳಾ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ ಅಡಿಯಲ್ಲಿ ಎಚ್.ವಿ.ಎ.ಸಿ. ಟೆಕ್ನಿಷನ್ , ಎಚ್‌ವಿಎಸಿ. ಇಂಜಿನಿಯರ್, ಗ್ಯಾಸ್ ಟಂಗ್‌ಸ್ಟ್‌ನ್ ಆರ್ಕ್ ವೆಲ್ಡಿಂಗ್ ಹಾಗೂ ಫಿಲ್ಡ್ ಟೆಕ್ನಿಷನ್ ನೆಟ್‌ವರ್ಕ್ ಸ್ಟೋರೆಜ್ ಒಳಗೊಂಡಂತೆ ಅಲ್ಪಾವಧಿ ಕೋರ್ಸ್‌ಗಳಲ್ಲಿ ಉಚಿತ ಕೌಶಲ್ಯ ತರಬೇತಿ ನೀಡಿ ಉದ್ಯೋಗಸ್ಥರನ್ನಾಗಿಸುವ ನಿಟ್ಟಿನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಐಟಿಐ, ಡಿಪ್ಲೋಮಾ ಹಾಗೂ ಪದವಿ ಪೂರೈಸಿರುವ ಅರ್ಹ ಯುವಕ ಯುವತಿಯರು ಕಚೇರಿ ವೇಳೆಯಲ್ಲಿ ನಗರದ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆಯನ್ನು ಸಂಪರ್ಕಿಸಿ ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2211477, 8277741731 ಸಂಪರ್ಕಿಸಬಹುದು ಎಂದು ಕೆಜಿಟಿಟಿಐ ನಿರ್ದೇಶಕರು ಪ್ರಕಟನೆೆಯಲ್ಲಿ ತಿಳಿಸಿದ್ದಾರೆ.

ವಾರ್ತಾ ಭಾರತಿ 30 Dec 2025 7:51 pm

ವಿಧಾನ ಪರಿಷತ್ ಚುನಾವಣೆ: ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಶರಣಪ್ಪ ಮಟ್ಟೂರಿಗೆ ಕಾಂಗ್ರೆಸ್‌ನಿಂದ ಟಿಕೆಟ್

ರಾಯಚೂರು: ರಾಜ್ಯ ವಿಧಾನ ಪರಿಷತ್ತಿನ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳನ್ನು ಮಂಗಳವಾರ ಘೋಷಿಸಿದೆ. ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಮಸ್ಕಿ ತಾಲೂಕಿನ ಶರಣಪ್ಪ ಮಟ್ಟೂರು ಅವರನ್ನು ಎರಡನೇ ಬಾರಿಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಕಳೆದ ಅವಧಿಯಲ್ಲಿಯೂ ಇದೇ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಪರಿಣಾಮಕಾರಿ ಕಾರ್ಯವೈಖರಿಯಿಂದ ಶಿಕ್ಷಕರ ವಲಯದಲ್ಲಿ ಉತ್ತಮ ಹೆಸರು ಗಳಿಸಿದ್ದರು. ಅವರ ಸಾಧನೆಯನ್ನು ಗುರುತಿಸಿ ಪಕ್ಷ ಮತ್ತೊಮ್ಮೆ ಅವರಿಗೆ ಮಣೆ ಹಾಕಿದೆ. ಮೂಲತಃ ಮಸ್ಕಿ ತಾಲೂಕಿನ (ಅಂದಿನ ಲಿಂಗಸುಗೂರು) ಕೃಷಿಕ ಕುಟುಂಬದಿಂದ ಬಂದ ಶರಣಪ್ಪ ಮಟ್ಟೂರು, ಕಾನೂನು ಪದವಿ ಪಡೆದು ವಕೀಲ ವೃತ್ತಿಯನ್ನು ಆರಂಭಿಸಿದರು. ಸುಮಾರು 25 ವರ್ಷಗಳ ಕಾಲ ಹೈಕೋರ್ಟ್ ವಕೀಲರಾಗಿ ಸೇವೆ ಸಲ್ಲಿಸಿದ ಬಳಿಕ ರಾಜಕೀಯ ಕ್ಷೇತ್ರಕ್ಕೆ ಬಂದ ಅವರು, ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದಿದ್ದರೂ ವಿಧಾನ ಪರಿಷತ್ ಸದಸ್ಯರಾಗಿ ಗಮನಾರ್ಹ ಕೆಲಸಗಳನ್ನು ಮಾಡಿದ್ದಾರೆ. ಕಳೆದ ಅವಧಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಜಯ ಗಳಿಸಿದ್ದ ಅವರು, ಡಿವಿಜನ್‌ಗೆ ಒಂದು ಪ್ರೌಢಶಾಲೆ ಮಂಜೂರು ಮಾಡಿಸುವುದು, ಶಿಕ್ಷಕರ ಹಾಗೂ ಉಪನ್ಯಾಸಕರ ಸಮಸ್ಯೆಗಳ ಪರಿಹಾರ, ಮುಖ್ಯೋಪಾಧ್ಯಾಯರ ಬಡ್ತಿ ಸೇರಿದಂತೆ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ವಿಚಾರಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡಿದ್ದಾರೆ. ಸುಮಾರು 15 ಸಾವಿರಕ್ಕೂ ಹೆಚ್ಚು ಶಿಕ್ಷಕರ ಹೆಸರುಗಳನ್ನು ನೆನಪಿಟ್ಟುಕೊಳ್ಳಬಲ್ಲರು ಎನ್ನುವುದು ಅವರ ಕಾರ್ಯನಿಷ್ಠೆಗೆ ಸಾಕ್ಷಿಯಾಗಿದೆ ಎಂದು ಅವರ ಆಪ್ತವಲಯ ಹೇಳುತ್ತದೆ. ಅವರು ಪ್ರಾಥಮಿಕ ಶಿಕ್ಷಣವನ್ನು ಮಟ್ಟೂರು ಗ್ರಾಮದಲ್ಲಿ, ಪ್ರೌಢಶಿಕ್ಷಣವನ್ನು ಮುದಗಲ್ ಪಟ್ಟಣದಲ್ಲಿ, ಪದವಿ ಪೂರ್ವ ಶಿಕ್ಷಣವನ್ನು ಲಿಂಗಸುಗೂರು ತಾಲೂಕಿನಲ್ಲೂ, ಪದವಿಯನ್ನು ರಾಯಚೂರಿನ ಎಲ್‌ವಿಡಿ ಕಾಲೇಜಿನಲ್ಲಿ ಹಾಗೂ ಕಾನೂನು ಪದವಿಯನ್ನು ಎಸ್‌ಸಿಎಬಿ ಕಾನೂನು ಮಹಾವಿದ್ಯಾಲಯದಲ್ಲಿ ಪೂರ್ಣಗೊಳಿಸಿದ್ದಾರೆ. ಪ್ರಸ್ತುತ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ವಾರ್ತಾ ಭಾರತಿ 30 Dec 2025 7:50 pm

ʻಜನಾಂಗೀಯ ದ್ವೇಷದಿಂದ ಅಂಜಲ್‌ ಚಕ್ಮಾ ಕೊಲೆಯಾಗಿಲ್ಲ, ಆವೇಶದಲ್ಲಿ ನಡೆದದ್ದುʼ; ಡೆಹಡ್ರೋನ್‌ ಪೊಲೀಸರು

ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ತ್ರಿಪುರ ಮೂಲದ ವಿದ್ಯಾರ್ಥಿ ಅಂಜಲ್‌ ಚಕ್ಮಾ ಎಂಬ ವಿದ್ಯಾರ್ಥಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಕೊಲೆ ಮಾಡುವ ಉದ್ದೇಶದಿಂದ ಮಾಡಿದ್ದಲ್ಲ. ಜನಾಂಗೀಯ ದ್ವೇಷದಿಂದ ಈ ಕೊಲೆ ನಡೆದಿಲ್ಲ ಎಂದು ಡೆಹಡ್ರೋನ್ ಪೊಲೀಸರು ತಿಳಿಸಿದ್ದಾರೆ.

ವಿಜಯ ಕರ್ನಾಟಕ 30 Dec 2025 7:49 pm