ಹೊನ್ನಾವರ: ವಿದ್ಯುತ್ ಶಾಕ್ಗೆ ದಂಪತಿ ಬಲಿ
ಹೊನ್ನಾವರ: ತಾಲೂಕಿನ ಕಾಸರಕೋಡದ ಬಟ್ಟೆ ವಿನಾಯಕಕೇರಿ ಪ್ರದೇಶದಲ್ಲಿ ವಿದ್ಯುತ್ ಅವಘಡದಲ್ಲಿ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಮೃತರನ್ನು ಸಂತೋಷ ಗೌಡ ಹಾಗೂ ಅವರ ಪತ್ನಿ ಶೀತು ಗೌಡ ಎಂದು ಗುರುತಿಸಲಾಗಿದೆ. ಮನೆಯ ಬಳಿಯಿಂದ ಹಾದು ಹೋಗುತ್ತಿದ್ದ ಹೈಟೆನ್ಷನ್ ವಿದ್ಯುತ್ ತಂತಿ ಅಕಸ್ಮಿಕವಾಗಿ ಹರಿದು ಬಿದ್ದು, ಅದರಿಂದ ಇಬ್ಬರೂ ಶಾಕ್ ತಗುಲಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಘಟನೆಯ ನಂತರ ಸ್ಥಳಕ್ಕೆ ಪೊಲೀಸರು ಹಾಗೂ ಹೆಸ್ಕಾಂ ಅಧಿಕಾರಿಗಳು ಧಾವಿಸಿದ್ದು, ಮೃತದೇಹಗಳನ್ನು ಹೊನ್ನಾವರ ಸರಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಆದರೆ, ಸ್ಥಳೀಯರು ಹಾಗೂ ಮೃತರ ಬಂಧುಗಳು “ಹೆಸ್ಕಾಂ ಇಲಾಖೆಯ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ” ಎಂದು ಆರೋಪಿಸಿ, “ನ್ಯಾಯ ಸಿಗುವವರೆಗೆ ಮೃತದೇಹಗಳನ್ನು ಸ್ವೀಕರಿಸುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಯಿಂದ ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಮೃತ ದಂಪತಿಗೆ ಇಬ್ಬರು ಪುತ್ರರು ಇದ್ದಾರೆ.
ಡಿಸಿಸಿ ಬ್ಯಾಂಕ್ ಚುನಾವಣೆ: ಜಾರಕಿಹೊಳಿ ಬಣಕ್ಕೆ ಮೇಲುಗೈ
ಬೆಳಗಾವಿ : ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ಸ್ಥಾನಗಳ ಚುನಾವಣೆಯು ರವಿವಾರ ನಡೆದಿದ್ದು, ರಾಜಕೀಯ ಕಾವು ಹೆಚ್ಚಿಸಿತು. ಒಟ್ಟು 16 ಸ್ಥಾನಗಳಲ್ಲಿ 9 ನಿರ್ದೇಶಕರು ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದ್ದರೆ, ಉಳಿದ 7 ಸ್ಥಾನಗಳಿಗೆ ಮತದಾನ ನಡೆಯಿತು. ಅದರಲ್ಲಿ ಮೂರು ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದ್ದು, ನಾಲ್ಕು ಕ್ಷೇತ್ರಗಳ ಫಲಿತಾಂಶವನ್ನು ನ್ಯಾಯಾಲಯದ ತಡೆಯಾಜ್ಞೆ ಹಿನ್ನೆಲೆಯಲ್ಲಿ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿದೆ. ಅಥಣಿ ಕ್ಷೇತ್ರದಲ್ಲಿ ಶಾಸಕ ಲಕ್ಷ್ಮಣ ಸವದಿ 122 ಮತಗಳನ್ನು ಪಡೆದು ಮಾಜಿ ಶಾಸಕ ಮಹೇಶ್ ಕುಮಠಳ್ಳಿ (3 ಮತ) ಅವರನ್ನು ಭಾರೀ ಅಂತರದಿಂದ ಸೋಲಿಸಿದರು. ರಾಮದುರ್ಗದಲ್ಲಿ ಮಲ್ಲಣ್ಣ ಯಾದವಾಡ (19 ಮತ) ಅವರು ಶ್ರೀಕಾಂತ ಢವಣ (16 ಮತ) ಅವರನ್ನು ಸೋಲಿಸಿ ವಿಜಯಶಾಲಿಯಾಗಿದರು. ರಾಯಭಾಗದಲ್ಲಿ ಬ್ಯಾಂಕಿನ ಹಾಲಿ ಅಧ್ಯಕ್ಷ ಅಪ್ಪಾಸಾಹೇಬ ಕುಲಗೂಡೆ 120 ಮತ ಪಡೆದು ಬಸಗೌಡ ಆಸಂಗಿ (64 ಮತ) ಅವರನ್ನು ಸೋಲಿಸಿದರು. ನಿಪ್ಪಾಣಿ (ಅಣ್ಣಾಸಾಹೇಬ ಜೊಲ್ಲೆ), ಹುಕ್ಕೇರಿ (ರಮೇಶ ಕತ್ತಿ), ಬೈಲಹೊಂಗಲ (ಮಹಾಂತೇಶ ದೊಡ್ಡಗಡರ) ಹಾಗೂ ಚನ್ನಮ್ಮನ ಕಿತ್ತೂರು (ನಾನಾಸಾಹೇಬ ಪಾಟೀಲ) ಕ್ಷೇತ್ರಗಳ ಫಲಿತಾಂಶವನ್ನು ಅಕ್ಟೋಬರ್ 28ರವರೆಗೆ ಪ್ರಕಟಿಸದಂತೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಈ ಚುನಾವಣೆಯಲ್ಲಿ ಜಾರಕಿಹೊಳಿ ಸಹೋದರರ ಬಣ ಮೇಲುಗೈ ಸಾಧಿಸಿದೆ.
ಹಾಸನಾಂಬ ಉತ್ಸವ ವೇದಿಕೆಯಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪ: ಪ್ರತಿಭಟನೆ ಕೈಬಿಟ್ಟ ಜೆಡಿಎಸ್ ಶಾಸಕರು
ಹಾಸನ : ಹಾಸನಾಂಬ ಉತ್ಸವದ ವೇದಿಕೆಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಗೌರವ ತೋರಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕ ಎಚ್.ಪಿ.ಸ್ವರೂಪ್, ಎ.ಮಂಜು, ಮಾಜಿ ಶಾಸಕರು ಮತ್ತು ಪಕ್ಷದ ಕಾರ್ಯಕರ್ತರು ಜಿಲ್ಲಾಡಳಿತದ ವಿರುದ್ಧ ಪ್ರತಿಭಟನೆ ಆರಂಭಿಸಿದರು. ‘‘ಜಿಲ್ಲಾಧಿಕಾರಿ ಕ್ಷಮೆ ಕೇಳುವವರೆಗೆ ಇಲ್ಲಿ ನಿಂತೇ ಇರುತ್ತೇವೆ’’ ಎಂದು ಪಟ್ಟು ಹಿಡಿದಿದ್ದ ಶಾಸಕರು, ಜಿಲ್ಲಾಧಿಕಾರಿ ಡಾ.ಲತಾ ಕುಮಾರಿ ಸ್ಥಳಕ್ಕೆ ಬಂದ ಕೂಡಲೇ ತಮ್ಮ ಶೈಲಿಯನ್ನೇ ಬದಲಿಸಿ ಕೊನೆಗೆ ಪ್ರತಿಭಟನೆ ಕೈಬಿಟ್ಟ ಪ್ರಸಂಗ ನಡೆದಿದೆ. ಜಿಲ್ಲಾಧಿಕಾರಿ ಬರುವ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎಚ್.ಪಿ.ಸ್ವರೂಪ್, ಹಾಸನಾಂಬ ಉತ್ಸವದಲ್ಲಿ ಸ್ಥಳೀಯ ಶಾಸಕರನ್ನು ಕಡೆಗಣಿಸಿರುವುದು ಮತ್ತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಅಗೌರವ ತೋರಿಸಿರುವುದನ್ನು ಖಂಡಿಸಿದರು. ಕೂಡಲೇ ಜಿಲ್ಲಾಧಿಕಾರಿ ಸ್ಥಳಕ್ಕೆ ಬಂದು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಜಿಲ್ಲಾಧಿಕಾರಿಯವರು ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ ಎಂದು ಸ್ಪಷ್ಟನೆ ನೀಡುತ್ತ, ಪರಿಸ್ಥಿತಿಯನ್ನು ಶಾಂತಗೊಳಿಸಲು ಎಚ್.ಡಿ. ಕುಮಾರಸ್ವಾಮಿಯವರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು. ಪರಿಸ್ಥಿತಿ ಶಮನಗೊಂಡ ಬಳಿಕ, ಜಿಲ್ಲಾಧಿಕಾರಿಯವರು ಹಾಸನಾಂಬೆ ದೇವಾಲಯದ ಪ್ರಸಾದವನ್ನು ಸ್ವತಃ ತರಿಸಿ ಶಾಸಕರಿಗೂ ಕಾರ್ಯಕರ್ತರಿಗೂ ನೀಡಿದರು. ಇದೆ ವೇಳೆ ಮಾಜಿ ಶಾಸಕ ಲಿಂಗೇಶ್, ಎಚ್.ಕೆ.ಕುಮಾರಸ್ವಾಮಿ, ಮೇಯರ್ ಗಿರೀಶ್ ಚನ್ನವೀರಪ್ಪ, ತಾಲೂಕು ಅಧ್ಯಕ್ಷ ಎಸ್. ದ್ಯಾವೇಗೌಡ, ಮಂಜೇಗೌಡ, ಸುಮುಖ ರಘು, ಬಿದರಿಕೆರೆ ಜಯರಾಂ, ಮಹಾನಗರ ಪಾಲಿಕೆ ಕಾರ್ಪೊರೇಟರ್ ಇತರರು ಉಪಸ್ಥಿತರಿದ್ದರು.
ಆರೆಸ್ಸೆಸ್ ವಿಚಾರದಲ್ಲಿ ಹೊಸ ನಿಯಮ ರೂಪಿಸಿಲ್ಲ: ಡಿ.ಕೆ.ಶಿವಕುಮಾರ್
ಬೆಂಗಳೂರು : ಸರಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗಳಿಗೆ ನಿಷೇಧ ಸಂಬಂಧ ರಾಜ್ಯ ಸರಕಾರ ಹೊಸ ನಿಯಮ ರೂಪಿಸಿಲ್ಲ. ಬದಲಾಗಿ, ಈ ಹಿಂದೆ ಬಿಜೆಪಿ ಸರಕಾರವೇ ಜಾರಿಗೊಳಿಸಿದ್ದ ಆದೇಶವನ್ನು ಚಾಲ್ತಿಗೆ ತರಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ರವಿವಾರ ಇಲ್ಲಿನ ಕೋರಮಂಗಲದ ವೀರ ಯೋಧ ಉದ್ಯಾನವನದಲ್ಲಿ ಹಮ್ಮಿಕೊಂಡಿದ್ದ ಬೆಂಗಳೂರು ನಡಿಗೆ ಅಭಿಯಾನದ ಅಂಗವಾಗಿ ನಾಗರಿಕರೊಂದಿಗೆ ಸಂವಾದ ನಡೆಸಿ, ಅಹವಾಲು ಆಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಆರೆಸ್ಸೆಸ್ ವಿಚಾರವಾಗಿ ನಾವು ಹೊಸ ನಿಯಮ ರೂಪಿಸಿಲ್ಲ. ಬಿಜೆಪಿ ಸರಕಾರದ ಆದೇಶವನ್ನೇ ಹೊರಡಿಸಿದ್ದೇವೆ. 2013ರಲ್ಲಿ ಜಗದೀಶ್ ಶೆಟ್ಟರ್ ಅವರ ಸರಕಾರದ ಆದೇಶವನ್ನು ಮತ್ತೇ ಜಾರಿಗೊಳಿಸುತ್ತಿದ್ದೇವೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ. ಮಾರ್ಗಸೂಚಿಯನ್ನು ಎಲ್ಲರೂ ಪಾಲನೆ ಮಾಡೋಣ ಎಂದರು. ಬೆಂಗಳೂರಿನ ಸೌಲಭ್ಯಗಳನ್ನು ಬಳಸಿಕೊಂಡು ಉದ್ಯಮ ಆರಂಭಿಸಿ ದೊಡ್ಡ ಮಟ್ಟಕ್ಕೆ ಬೆಳೆದವರು. ಈಗ ಬೆಂಗಳೂರಿನ ಬಗ್ಗೆ ಟೀಕೆ ಮಾಡಿ ಟ್ವೀಟ್ ಮಾಡುತ್ತಿದ್ದಾರೆ. ಆದರೆ, ನಾವು ನಮ್ಮ ಮೂಲವನ್ನು ಮರೆಯಬಾರದು, ಮೂಲವನ್ನು ಮರೆತರೆ ಯಶಸ್ಸು ಸಾಧಿಸುವುದಿಲ್ಲ ಎಂದು ನಾನು ನಂಬಿದ್ದೇನೆ ಎಂದು ತಿಳಿಸಿದರು. ನಗರದಾದ್ಯಂತ ಎಲ್ಲೆಲ್ಲಿ ರಸ್ತೆಗುಂಡಿಗಳಿವೆ ಎಂಬುದನ್ನು ಸಾರ್ವಜನಿಕರೇ ಫೋಟೊ ತೆಗೆದು ಅದನ್ನು ಮೊಬೈಲ್ ಆ್ಯಪ್ ಮೂಲಕ ಸರಕಾರದ ಗಮನಕ್ಕೆ ತರುವ ವ್ಯವಸ್ಥೆಯನ್ನು ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ನಾವು ರೂಪಿಸಿದ್ದೇವೆ. ಮಾಧ್ಯಮಗಳೂ ಸಹ ಸುದ್ದಿ ಮಾಡುತ್ತಿವೆ. ನಾನು ಟೀಕೆ ಹಾಗೂ ವಿಮರ್ಶೆಗಳನ್ನು ಸ್ವಾಗತಿಸುತ್ತೇನೆ. ಟೀಕೆಗಳು ಇದ್ದಾಗಲೇ ಪ್ರಜಾಪ್ರಭುತ್ವಕ್ಕೆ ಹೆಚ್ಚು ಮೌಲ್ಯ ಇರುತ್ತದೆ. ಆದರೆ ಕೆಲವರು ವಿಕೋಪಕ್ಕೆ ಹೋಗಿ ಟೀಕೆ ಮಾಡುತ್ತಿದ್ದಾರೆ. ಅಂತಹವರ ಟೀಕೆ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಯಿತು. ಇತಿಹಾಸ ಗಮನಿಸಿದರೆ ನಾವು ಮಾಡಿದಷ್ಟು ತೀರ್ಮಾನಗಳನ್ನು ಯಾರೂ ಸಹ ಮಾಡಿಲ್ಲ. ನಾವು ಮಾಡಿದ ಕೆಲಸಗಳ ಬಗ್ಗೆ ಸಾರ್ವಜನಿಕರಿಗೆ, ವಿರೋಧ ಪಕ್ಷದವರಿಗೆ ಎಲ್ಲರಿಗೂ ತಿಳಿದಿದೆ. ಇಡೀ ದೇಶದಲ್ಲಿ ಸಮಸ್ಯೆಯಿದೆ. ಅವರೆಲ್ಲಾ ಮಾಧ್ಯಮಗಳನ್ನು ನಿಯಂತ್ರಣ ಮಾಡುತ್ತಿದ್ದಾರೆ. ನಾವು ಮುಕ್ತವಾಗಿ ಬಿಟ್ಟಿದ್ದೇವೆ ಎಂದು ಅವರು ಹೇಳಿದರು.
ಟಿಇಟಿ ಪ್ರಮಾಣ ಪತ್ರ ಹೊಂದಿದ್ದರೆ 6, 7ನೆ ತರಗತಿಗೆ ಬೋಧಿಸಲು ಅರ್ಹ
ಬೆಂಗಳೂರು, ಅ.19: ರಾಜ್ಯದಲ್ಲಿ 1 ರಿಂದ 5ನೆ ತರಗತಿಗೆ ಬೋಧಿಸುವ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು ಟಿಇಟಿ ಪ್ರಮಾಣ ಪತ್ರವನ್ನು ಹೊಂದಿದ್ದಲ್ಲಿ, 6 ಮತ್ತು 7ನೆ ತರಗತಿಗೆ ಬೋಧಿಸಲು ಅರ್ಹರಾಗಿರುತ್ತಾರೆ ಎಂದು ರಾಜ್ಯ ಸರಕಾರವು ಅಧಿಸೂಚನೆ ಹೊರಡಿಸಿದೆ. ಎನ್ಸಿಟಿಇ(ಎನ್ಸಿಟಿಇ) ಮಾರ್ಗಸೂಚಿಗಳಲ್ಲಿ ನಿರ್ಧಿಷ್ಟಪಡಿಸಿದಂತೆ ಮತ್ತು ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗೆ ಜಾರಿಯಲ್ಲಿರುವ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿರುವಂತೆ ಅಗತ್ಯ ವಿಷಯಗಳಲ್ಲಿ ಪದವಿಯನ್ನು ಹಾಗೂ ಟಿಇಟಿ ಪ್ರಮಾಣ ಪತ್ರವನ್ನು ಹೊಂದಿದ್ದಲ್ಲಿ, 6 ಮತ್ತು 7ನೆ ತರಗತಿಗೆ ಬೋಧಿಸಲು ಅರ್ಹರಾಗುತ್ತಾರೆ ಎಂದು ಹೇಳಿದೆ. ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು(ಸಾರ್ವಜನಿಕ ಶಿಕ್ಷಣ ಇಲಾಖೆ) (ನೇಮಕಾತಿ) ನಿಯಮಗಳು-1967ಗೆ ತಿದ್ದುಪಡಿ ಮಾಡಿ, ಸರಕಾರವು ಅಧಿಸೂಚನೆ ಹೊರಡಿಸಿದೆ. ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶವನ್ನು ನೀಡಲಾಗಿದೆ. ಯಾವುದೇ ವ್ಯಕ್ತಿಯಿಂದ ನಿಗಧಿತ ಅವಧಿಯೊಳಗೆ ಸ್ವೀಕೃತವಾಗುವ ಯಾವುದೇ ಆಕ್ಷೇಪಣೆ ಅಥವಾ ಸಲಹೆಗಳನ್ನು ಪರಿಗಣಿಸಲಾಗುತ್ತದೆ. ಆಕ್ಷೇಪಣೆ ಮತ್ತು ಸಲಹೆಗಳನ್ನು ಸರಕಾರದ ಪ್ರಧಾನ ಕಾರ್ಯದರ್ಶಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, 6ನೆ ಮಹಡಿ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು - 560 001 ಇವರ ವಿಳಾಸಕ್ಕೆ ಕಳುಹಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಿದೆ.
ಬೆಳಗಾವಿ | ರಮೇಶ್ ಕತ್ತಿ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲು
ಬೆಳಗಾವಿ : ವಾಲ್ಮೀಕಿ ಸಮುದಾಯಕ್ಕೆ ಅಶ್ಲೀಲ ಪದ ಬಳಸಿ ಅವಹೇಳನ ಮಾಡಿದ ಆರೋಪವನ್ನು ಎದುರಿಸುತ್ತಿರುವ ಮಾಜಿ ಸಂಸದ ಹಾಗೂ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ರಮೇಶ್ ಕತ್ತಿ ವಿರುದ್ದ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ. ರವಿವಾರ ನಗರದಲ್ಲಿ ನಡೆದ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಗಳ ಮತದಾನ ಸಂದರ್ಭದಲ್ಲಿ ತಮ್ಮ ಬೆಂಬಲಿಗರೊಂದಿಗೆ ಮಾತನಾಡುತ್ತಿದ್ದ ರಮೇಶ್ ಕತ್ತಿ, ಜಾರಕಿಹೊಳಿ ಸಹೋದರರನ್ನು ಟೀಕಿಸುವ ವೇಳೆ ವಾಲ್ಮೀಕಿ ಸಮುದಾಯದ ಬಗ್ಗೆ ಅವಾಚ್ಯ ಪದ ಬಳಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಘಟನೆಯ ವೀಡಿಯೊ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅದನ್ನು ಆಧಾರವಾಗಿ ಸಮಾಜದ ಮುಖಂಡ ರಾಜಶೇಖರ ತಳವಾರ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಆದರೆ, ರಮೇಶ್ ಕತ್ತಿ ತಮ್ಮ ಹೇಳಿಕೆಯನ್ನು ತಿರಸ್ಕರಿಸಿದ್ದಾರೆ. ಅವರು ಸ್ಪಷ್ಟಪಡಿಸಿರುವಂತೆ, “ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಗೆಲುವಿನ ನಂತರ ಅಭಿಮಾನಿಗಳು ಸಂಗೀತ ಹಚ್ಚಿ ಮೆರವಣಿಗೆ ಮಾಡಲು ಒತ್ತಾಯಿಸಿದರು. ಆಗ ನಾನು 'ಬ್ಯಾಡರೋ (ಬೇಡ)' ಎಂದೆ. ನನ್ನ ಹೇಳಿಕೆಯನ್ನು ತಿರುಚಿ, ಜಾತಿ ನಿಂದನೆ ಮಾಡಿದಂತೆ ವೈರಲ್ ಮಾಡಲಾಗಿದೆ. ನಾನು ಯಾರನ್ನೂ ಉದ್ದೇಶಿಸಿ ಮಾತನಾಡಿಲ್ಲ. ಆದರೂ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ' ಎಂದು ತಿಳಿಸಿದ್ದಾರೆ.
ಮಹಾರಾಷ್ಟ್ರದ ಮತದಾರರ ಪಟ್ಟಿಯಲ್ಲಿ ಚುನಾವಣಾ ಆಯೋಗ 96 ಲಕ್ಷ ನಕಲಿ ಮತದಾರರನ್ನು ಸೇರಿಸಿದೆ : ರಾಜ್ ಠಾಕ್ರೆ ಆರೋಪ
ಮುಂಬೈ, ಅ. 19: ಮಹಾರಾಷ್ಟ್ರದ ಮತದಾರರ ಪಟ್ಟಿಯಲ್ಲಿ ಚುನಾವಣಾ ಆಯೋಗ 96 ಲಕ್ಷ ನಕಲಿ ಮತದಾರರನ್ನು ಸೇರಿಸಿದೆ ಎಂದು ಎಂಎನ್ಎಸ್ ಸ್ಥಾಪಕಾಧ್ಯಕ್ಷ ರಾಜ್ ಠಾಕ್ರೆ ರವಿವಾರ ಆರೋಪಿಸಿದ್ದಾರೆ. ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಟೀಕಿಸಿದರು. ಮತದಾರರ ಪಟ್ಟಿಯನ್ನು ಶುದ್ಧೀಕರಿಸುವಂತೆ ಹಾಗೂ ಈ ಶುದ್ಧೀಕರಣದಿಂದ ಎಲ್ಲಾ ಪಕ್ಷಗಳು ತೃಪ್ತರಾಗುವವರೆಗೆ ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸದಂತೆ ರಾಜ್ ಅವರು ಚುನಾವಣಾ ಆಯೋಗವನ್ನು ಆಗ್ರಹಿಸಿದರು. ಮುಂಬೈಯ ಗೋರೇಗಾಂವ್ನಲ್ಲಿರುವ ನೆಸ್ಕೊ ಸಂಕೀರ್ಣದಲ್ಲಿ ಎಂಎನ್ಎಸ್ನ ಬೂತ್ ಮಟ್ಟದ ಏಜೆಂಟರ ಸಭೆಯಲ್ಲಿ ಅವರು ಮಾತನಾಡಿದರು. ‘‘ಮತದಾರರ ಪಟ್ಟಿಯನ್ನು ತಿರುಚುವ ಮೂಲಕ ಚುನಾವಣೆ ನಡೆಸಿದರೆ, ಅದು ಮತದಾರರಿಗೆ ಮಾಡುವ ಅತಿ ದೊಡ್ಡ ಅವಮಾನ. ನೀವು ಮತ ಹಾಕಿ ಅಥವಾ ಹಾಕದಿರಿ, ಮ್ಯಾಚ್ ಫಿಕ್ಸ್ ಆಗಿರುತ್ತದೆ. ಫಲಿತಾಂಶ ನಿರ್ಧಾರವಾಗಿರುತ್ತದೆ. ನಾವು ಇದನ್ನು ಚುನಾವಣಾ ಆಯೋಗದ ಗಮನಕ್ಕೆ ತಂದಾಗ, ಆಡಳಿತಾರೂಢ ಪಕ್ಷ ಯಾಕೆ ಪ್ರತಿಕ್ರಿಯಿಸುತ್ತದೆ?’’ ಎಂದು ಅವರು ಪ್ರಶ್ನಿಸಿದ್ದಾರೆ. ‘‘ಪ್ರಾದೇಶಿಕ ಪಕ್ಷಗಳನ್ನು ಮುಗಿಸುವ ಪ್ರಯತ್ನ ನಡೆಯುತ್ತಿದೆ. ಮುಂಬರುವ ಚುನಾವಣೆಗೆ ಮಹಾರಾಷ್ಟ್ರದ ಮತದಾರರ ಪಟ್ಟಿಯಲ್ಲಿ 96 ಲಕ್ಷ ನಕಲಿ ಮತದಾರರನ್ನು ಸೇರಿಸಲಾಗಿದೆ ಎಂದು ನನಗೆ ತಿಳಿದು ಬಂದಿದೆೆ. ಅವರು ವಿಧಾನ ಸಭೆ ಚುನಾವಣೆಗೆ ಮುನ್ನವೇ ಇದನ್ನು ಮಾಡಿದ್ದಾರೆ’’ ಎಂದು ರಾಜ್ ಹೇಳಿದ್ದಾರೆ.
'ಬಿಗ್ ಬಾಸ್' ಅಖಾಡವನ್ನ ರಂಗೇರಿಸಲು ಬಂದಿರುವ ಈ ರಿಷಾ ಗೌಡ - ಸೂರಜ್ ಸಿಂಗ್ ಯಾರು? ಇವ್ರ ಹಿನ್ನೆಲೆ ಏನು?
'ಬಿಗ್ ಬಾಸ್ ಕನ್ನಡ ಸೀಸನ್ 12' ಶೋಗೆ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟಿರುವ ರಿಷಾ ಗೌಡ ಮತ್ತು ಸೂರಜ್ ಸಿಂಗ್ ಇಬ್ಬರೂ ಆರಂಭದಲ್ಲೇ ಗಮನ ಸೆಳೆದಿದ್ದಾರೆ. ಅಥ್ಲೀಟ್ ಆಗಿದ್ದ ರಿಷಾ ಗೌಡ ಸಿನಿಮಾ ರಂಗಕ್ಕೂ ಪ್ರವೇಶ ಕೊಟ್ಟಿದ್ದಾರೆ. ಮತ್ತೋರ್ವ ಸ್ಪರ್ಧಿ ಸೂರಜ್ ಸಿಂಗ್ ಈ ಶೋ ಮೂಲಕ ಹೊಸ ಬದುಕು ಕಟ್ಟಿಕೊಳ್ಳಲು ಬಂದಿದ್ದಾರೆ. ಇವರ ಹಿನ್ನೆಲೆ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.
ಬಳ್ಳಾರಿ: ಗ್ರಾಮ ಠಾಣೆಯಲ್ಲಿ ನೆಲೆಸಿರುವ ಕುಟುಂಬಗಳಿಗೆ ಎ ಖಾತಾ ನೀಡದೆ, ರಿಯಲ್ ಎಸ್ಟೇಟ್ದಾರರಿಗೆ ಬಿ ಖಾತಾ ನೀಡುತ್ತಿದ್ದು, ಇದರಲ್ಲಿ ಸಾಕಷ್ಟು ಅವ್ಯವಹಾರವಾಗಿದೆ. ಕೂಡಲೇ ತನಿಖೆ ನಡೆಸಿ, ಸಂಬಂದಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮವಹಿಸಲು, ಮೂಲ ಕುಟುಂಬಗಳಿಗೆ ನ್ಯಾಯ ಒದಗಿಸಿಕೊಡಬೇಕೆಂದು ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ರಾಜಶೇಖರ ಆಗ್ರಹಿಸಿದರು. ಕುಡತಿನಿ ಪಟ್ಟಣ ಪಂಚಾಯಿತಿ ಕಛೇರಿಯ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸರ್ವ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಹಿಂದಿನ ಬಂಗಾರಪ್ಪ ಸರ್ಕಾರದ ಅವಧಿ ವೇಳೆ ಕುಡತಿನಿ ಪಟ್ಟಣದಲ್ಲಿದ್ದ 10 ಎಕರೆ ಜಮೀನಿನಲ್ಲಿ ಎಸ್ಸಿ, ಎಸ್ಟಿಯ ಬಡ ಕುಟುಂಬಗಳಿಗೆ 30-40 ಅಳತೆಯ ಸೈಟ್ ಹಂಚಿಕೆ ಮಾಡಿಕೊಟ್ಟಿದ್ದರು. ಅದರಂತೆ ಇಲ್ಲಿನ ಸಾಕಷ್ಟು ಕುಟುಂಬಗಳು ಪಪಂಗೆ ತೆರಿಗೆ ಕಟ್ಟುವ ಮೂಲಕ ಜೀವನ ನಡೆಸುತ್ತಿದ್ದಾರೆ. ಆದರೆ, ಇಲ್ಲಿನ ಕುಟುಂಬಗಳಿಗೆ ನಮೂನೆ-3 ನೀಡಲು ಮೀನಾಮೇಷ ಎಳಿಸಲಾಗುತ್ತಿದೆ. ಗ್ರಾಮ ಠಾಣೆಯಲ್ಲಿ ಬರೀ 782 ಜನರಿಗೆ ಎ ಖಾತಾ ಇದ್ದು, ಬರೀ ಆರು ತಿಂಗಳಲ್ಲಿ 1240 ಜನರಿಗೆ ಬಿ ಖಾತಾ ಮಾಡಿದ್ದಾರೆ. ಇವರಿಗೆ ಬಡವರ ಕಾಳಜಿ ಇಲ್ಲ. ಬದಲಾಗಿ ರಿಯಲ್ ಎಸ್ಟೇಟ್ ದಾರರಿಗೆ ಹೆಚ್ಚಿನ ಆಧ್ಯತೆ ನೀಡಿದ್ದಾರೆ. ಇದರಲ್ಲಿ ಕಂದಾಯ ಇಲಾಖೆಯೂ ನೇರ ಹೊಣೆಯಾಗಿದೆ. ಮೂಲ ಕುಟುಂಬಗಳಿಗೆ ಅನ್ಯಾಯವಾಗುತ್ತಿದೆ. ಆದ್ದರಿಂದ ಕೂಡಲೇ ಸಂಬಂಧಿಸಿದ ಅಧಿಕಾರಿಗಳು 14, 15ನೇ ವಾರ್ಡಿನಲ್ಲಿರುವ ಕುಟುಂಬಗಳಿಗೆ ಫಾರಂ-3 ನೀಡಬೇಕು ಎಂದರು. ಇಲ್ಲಿನ ಸಭೆಯಲ್ಲಿ ಇನ್ನಿತರ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷೆ ಆರ್.ಸುಜಾತ ಸತ್ಯಪ್ಪ, ಉಪಾಧ್ಯಕ್ಷ ಪಂಪಾಪತಿ ಕನಕೇರಿ, ಮುಖ್ಯಾಧಿಕಾರಿ ತೀರ್ಥಪ್ರಸಾದ್, ಕಂದಾಯ ನಿರೀಕ್ಷಕಿ ತಾಯಮ್ಮ, ಸದಸ್ಯರು, ಸಿಬ್ಬಂದಿ ಇದ್ದರು.
ದೀಪಾವಳಿ ಹೊಸ ಬಟ್ಟೆ, ತಿಂಡಿಗಳಿಗೆ ಸೀಮಿತವಾಗದಿರಲಿ; ಹಬ್ಬದ ಮಹತ್ವದ ಅರಿವಿನಿಂದ – ಜೀವನ ತತ್ತ್ವದತ್ತ ಪಯಣ
ಹಬ್ಬಗಳು ಕೇವಲ ಹೊಸ ಬಟ್ಟೆ ಮತ್ತು ತಿಂಡಿಗಳಿಗೆ ಸೀಮಿತವಾಗುತ್ತಿವೆ. ಹಬ್ಬಗಳ ವೈಶಿಷ್ಟ್ಯತೆ ಮತ್ತು ಅವುಗಳ ಹಿಂದಿನ ತತ್ವಗಳನ್ನು ಅರಿಯುವುದು ಮುಖ್ಯ. ಆಧ್ಯಾತ್ಮಿಕ, ಆರೋಗ್ಯ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ತತ್ವಗಳು ಹಬ್ಬಗಳ ಆಚರಣೆಯ ಹಿಂದೆ ಅಡಗಿವೆ. ದೀಪಾವಳಿಯಂತಹ ಹಬ್ಬಗಳು ಜೀವನದ ಕತ್ತಲೆಯನ್ನು ನಿವಾರಿಸಿ ಬೆಳಕಿನ ಮಹತ್ವವನ್ನು ಸಾರುತ್ತವೆ. ಹಬ್ಬಗಳನ್ನು ಸಂಭ್ರಮಿಸಿ, ಸಂಸ್ಕೃತಿಯ ಸಾರವನ್ನು ಮುಂದಿನ ಪೀಳಿಗೆಗೆ ರವಾನಿಸಬೇಕು. ಈ ಕುರಿತ ಗೀತಾ ಪ್ರವೀಣ್ ಭಟ್ ಅವರ ವಿಶೇಷ ಲೇಖನ ಇಲ್ಲಿದೆ.
ಕಂಪ್ಲಿಯಲ್ಲಿ ಬಿಇಒ ಕಛೇರಿ ಆರಂಭಿಸುವಂತೆ ರಾಜ್ಯ ಮಟ್ಟದಲ್ಲಿ ಧ್ವನಿ ಎತ್ತುವೆ : ಶಶೀಲ್ ಜಿ.ನಮೋಶಿ
ಬಳ್ಳಾರಿ / ಕಂಪ್ಲಿ: ಕಂಪ್ಲಿಯಲ್ಲಿ ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸ್ಥಾಪನೆಗೆ ಸಂಬಂಧಿಸಿದಂತೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ಒತ್ತಡ ಹೇರಲಾಗುವುದು ಎಂದು ಕರ್ನಾಟಕ ವಿಧಾನ ಪರಿಷತ್ ಸದಸ್ಯ(ಈಶಾನ್ಯ ಶಿಕ್ಷಕರ ಕ್ಷೇತ್ರ) ಶಶೀಲ್ ಜಿ.ನಮೋಶಿ ಹೇಳಿದರು. ಅವರು ಶುಕ್ರವಾರ ಪಟ್ಟಣದ ಅತಿಥಿ ಗೃಹದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಗಣತಿಗೆ ಶಿಕ್ಷಕರನ್ನು ಬಳಸಿಕೊಂಡು, ಅವರಿಗೆ ತೊಂದರೆ ನೀಡುತ್ತಿದ್ದಾರೆ. ಕಂಪ್ಲಿ ಹೊಸ ತಾಲೂಕು ಕೇಂದ್ರವಾದ ಮೇಲೆ ಇಲ್ಲಿನ ಶಿಕ್ಷಕರ ಸಂಬಳಕ್ಕೆ ಸಂಬಂಧಿಸಿದಂತೆ ತಾಲೂಕುವಾರು ಹಣ ಹಂಚಿಕೆ ಮಾಡಿಲ್ಲ. ಆದ್ದರಿಂದ ಇಲ್ಲಿನ ಶಿಕ್ಷಕರಿಗೆ ಸಮಸ್ಯೆ ಉಂಟಾಗಿದೆ. ಕಲ್ಯಾಣ ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ಶಿಕ್ಷಕರ ಖಾಲಿ ಹುದ್ದೆಗಳಿವೆ. ಆದಷ್ಟು ಬೇಗ ಸರ್ಕಾರ ಶಿಕ್ಷಕರ ನೇಮಕ ಮಾಡಿಕೊಳ್ಳಬೇಕು. ಒಳ ಮೀಸಲಾತಿ ನೆಪದಲ್ಲಿ ಶಿಕ್ಷಕರ ನೇಮಕಾತಿ ಕಡೆಗಣಿಸಿದ್ದಾರೆ. ಅತಿಥಿ ಶಿಕ್ಷಕರ ಬಾಕಿ ವೇತನ ನೀಡಬೇಕು ಎಂದರು. ಈ ಸಂದರ್ಭದಲ್ಲಿ ಶಿಕ್ಷಕರಾದ ಶಿವರಾಜ, ರೋಶನ್, ಶಿವುಕುಮಾರ್, ನವೀನ್ ಸೇರಿದಂತೆ ಇತರರು ಇದ್ದರು.
ಭಾರತದ ಚೊಚ್ಚಲ ಆ್ಯಂಟಿ ಬಯೋಟಿಕ್ ‘ನಾಫಿಥ್ರೋಮೈಸಿನ್ʼ ಉಸಿರಾಟದ ಸೋಂಕುಗಳಿಗೆ ಪರಿಣಾಮಕಾರಿ : ಸಚಿವ ಡಾ.ಜೀತೇಂದ್ರ ಸಿಂಗ್
ಹೊಸದಿಲ್ಲಿ, ಅ,19: ಭಾರತವು ಸ್ವದೇಶಿಯಾಗಿ ಸಂಶೋಧಿಸಿದ ಪ್ರಪ್ರಥಮ ಆ್ಯಂಟಿ ಬಯೋಟಿಕ್ ‘ನಾಫಿಥ್ರೋಮೈಸಿನ್’ ಅನ್ನು ಅಭಿವೃದ್ಧಿಪಡಿಸಿದ್ದು, ಅದು ನ್ಯೂಮೋನಿಯಾ ಮತ್ತಿತರ ಉಸಿರಾಟದ ಸೋಂಕುಗಳಿಗೆ, ಕ್ಯಾನ್ಸರ್ರೋಗಿಗಳಿಗೆ ಮತ್ತು ತೀವ್ರ ಮಧುಮೇಹದಿಂದ ಬಳಲುತ್ತಿರುವ ರೋಗಿ ಗಳಿಗೆ ಉಪಯುಕ್ತವಾಗಿದೆಯೆಂದು ಕೇಂದ್ರ ವಿಜ್ಞಾನ ಹಾಗೂ ತಂತ್ರಜ್ಞಾನ (ಸ್ವತಂತ್ರ ನಿವರ್ ಹಣೆ) ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ. ಈ ಆ್ಯಂಟಿ ಬಯೋಟಿಕ್ ಔಷಧಿಯನ್ನು ಸಂಪೂರ್ಣವಾಗಿ ಭಾರತದಲ್ಲೇ ಸಂಶೋಧಿಸಿ, ಅಭಿವೃದ್ಧಿಪಡಿಸಲಾಗಿದ್ದು, ಕ್ಲಿನಿಕಲ್ ಮೌಲ್ಯಮಾಪನದಲ್ಲೂ ತೇರ್ಗಡೆಗೊಂಡಿದೆ. ಫಾರ್ಮಾಸ್ಯೂಟಿಕಲ್ ವಲಯದಲ್ಲಿ ಸ್ವಾವಲಂಬನೆಯನ್ನು ಸಾಧಿಸುವ ನಿಟ್ಟಿನಲ್ಲಿ ಇದೊಂದು ಮಹತ್ವದ ‘ಜಿಗಿತ’ವೆಂದು ಡಾ.ಸಿಂಗ್ ಬಣ್ಣಿಸಿದ್ದಾರೆ. ಮೂರು ದಶಕಗಳ ಸಂಶೋಧನೆಯ ಬಳಿಕ ಭಾರತವು ನಾಫಿಥ್ರೋಮೈಸಿನ್ಅನ್ನು ಅಭಿವೃದ್ಧಿಪಡಿಸಿದೆ ಎಂದವರು ಹೇಳಿದ್ದಾರೆ. ನಾಫಿಥ್ರೋಮೈಸಿನ್ ಔಷಧಿಯ ಸಂಶೋಧನೆಯನ್ನು ನ್ಯೂ ಇಂಗ್ಲೆಂಡ್ ಜರ್ನಲ್ ಆಫ್ ಮೆಡಿಸಿನ್ ನಿಯತಕಾಲಿಕೆಯಲ್ಲಿ ಪ್ರಕಟಗೊಂಡಿದೆ ಎಂದು ಡಾ.ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.
ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಟ್ರಂಪ್ರ ಪ್ರೇಯಸಿ : ಇಟಲಿ ರಾಜಕಾರಣಿಯ ವಿವಾದಾತ್ಮಕ ಹೇಳಿಕೆ
ರೋಮ್, ಅ.19: ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರ ಪ್ರೇಯಸಿ ಎಂದು ಉಲ್ಲೇಖಿಸುವ ಮೂಲಕ ಇಟಲಿಯ ಪ್ರಮುಖ ಕಾರ್ಮಿಕ ಸಂಘ `ಸಿಜಿಐಎಲ್'ನ ಅಧ್ಯಕ್ಷ ಮೌರಿಝಿಯೊ ಲ್ಯಾಂಡಿನಿ ವಿವಾದ ಸೃಷ್ಟಿಸಿದ್ದಾರೆ. ಮಂಗಳವಾರ ಈಜಿಪ್ಟ್ನಲ್ಲಿ ಟ್ರಂಪ್ ಅಧ್ಯಕ್ಷತೆಯಲ್ಲಿ ನಡೆದ ಗಾಝಾ ಶಾಂತಿ ಸಭೆಯಲ್ಲಿ ಮೆಲೋನಿ ಕೂಡ ಪಾಲ್ಗೊಂಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಲ್ಯಾಂಡಿನಿ ` ಗಾಝಾದಲ್ಲಿ ಶಾಂತಿಯನ್ನು ತರುವ ನಿಟ್ಟಿನಲ್ಲಿ ಮೆಲೋನಿ ಒಂದು ಬೆರಳನ್ನೂ ಎತ್ತಿರಲಿಲ್ಲ. ಅವರ ಪಾತ್ರ ಕೇವಲ ಟ್ರಂಪ್ ಅವರ `ಪ್ರೇಯಸಿ ಪಾತ್ರಕ್ಕೆ' ಸೀಮಿತಗೊಂಡಿತ್ತು. ಆದರೆ ಅದೃಷ್ಟವಶಾತ್ ಫೆಲೆಸ್ತೀನೀಯರ ಪರ ಇಟಲಿಯ ಜನತೆ ಬೀದಿಗಿಳಿದಿದ್ದರಿಂದ ಇಟಲಿಯ ಘನತೆ ಮತ್ತು ಗೌರವಕ್ಕೆ ಧಕ್ಕೆ ಬರಲಿಲ್ಲ' ಎಂದು ಹೇಳಿಕೆ ನೀಡಿರುವುದಾಗಿ `ದಿ ಗಾರ್ಡಿಯನ್' ಪತ್ರಿಕೆ ವರದಿ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮೆಲೋನಿ ` ಇಟಲಿಯಲ್ಲಿ ಹಲವಾರು ಫೆಲೆಸ್ತೀನ್ ಪರ ಪ್ರತಿಭಟನೆಗಳನ್ನು ಸಂಘಟಿಸಲು ಸಹಾಯ ಮಾಡಿದ ಲ್ಯಾಂಡಿನಿ ತಮ್ಮ ವಿರುದ್ಧ ಹೆಚ್ಚುತ್ತಿರುವ ಅಸಮಾಧಾನದಿಂದ ದಿಗಿಲುಗೊಂಡಿರುವುದು ಸ್ಪಷ್ಟವಾಗಿದೆ' ಎಂದು ಹೇಳಿದ್ದಾರೆ.
ಯೆಮನ್ | ವಿಶ್ವಸಂಸ್ಥೆಯ 20 ಸಿಬ್ಬಂದಿಗಳನ್ನು ವಶಕ್ಕೆ ಪಡೆದ ಹೌದಿ ಬಂಡುಕೋರರು : ವರದಿ
ಸನಾ, ಅ.19: ಯೆಮನ್ ರಾಜಧಾನಿ ಸನಾದಲ್ಲಿ ರವಿವಾರ ವಿಶ್ವಸಂಸ್ಥೆಯ ಸೌಲಭ್ಯದ ಮೇಲೆ ದಾಳಿ ನಡೆಸಿದ ಇರಾನ್ ಬೆಂಬಲಿತ ಹೌದಿ ಸಶಸ್ತ್ರ ಹೋರಾಟಗಾರರು 20 ಸಿಬ್ಬಂದಿಗಳನ್ನು ವಶಕ್ಕೆ ಪಡೆದಿರುವುದಾಗಿ ವಿಶ್ವಸಂಸ್ಥೆಯ ಅಧಿಕಾರಿಗಳು ಹೇಳಿದ್ದಾರೆ. ಯೆಮನ್ ರಾಜಧಾನಿ ಸನಾದ ನೈಋತ್ಯದಲ್ಲಿರುವ ಹಡಾ ನಗರದಲ್ಲಿರುವ ವಿಶ್ವಸಂಸ್ಥೆಯ ಕಚೇರಿಯೊಳಗೆ ನುಗ್ಗಿದ ಹೌದಿಗಳು 20 ಸಿಬ್ಬಂದಿಗಳನ್ನು ವಶಕ್ಕೆ ಪಡೆದ ಬಳಿಕ ಕಚೇರಿಯಲ್ಲಿದ್ದ ಫೋನ್ಗಳು, ಕಂಪ್ಯೂಟರ್ಗಳು, ಸರ್ವರ್ಗಳ ಸಹಿತ ಎಲ್ಲಾ ಸಂವಹನ ಸಾಧನಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ `ದಿ ಅಸೋಸಿಯೇಟೆಡ್ ಪ್ರೆಸ್' ವರದಿ ಮಾಡಿದೆ.
ಜಪಾನ್ | ಸಮ್ಮಿಶ್ರ ಸರಕಾರ ರಚನೆಗೆ ಒಗ್ಗೂಡಿದ ಎಲ್ಡಿಪಿ- ಇಷಿನ್ ಪಕ್ಷ
ಟೋಕಿಯೊ, ಅ.19: ಜಪಾನ್ನಲ್ಲಿ ಸಮ್ಮಿಶ್ರ ಸರಕಾರ ರಚನೆಗೆ ಲಿಬರಲ್ ಡೆಮಾಕ್ರಟಿಕ್ ಪಕ್ಷ (ಎಲ್ಡಿಪಿ) ಮತ್ತು ಬಲಪಂಥೀಯ ಸಣ್ಣ ಪಕ್ಷಗಳ ಒಕ್ಕೂಟ `ಇಷಿನ್' ಒಪ್ಪಿಕೊಂಡಿದ್ದು ಈ ಮೂಲಕ ಜಪಾನ್ನ ಪ್ರಪ್ರಥಮ ಮಹಿಳಾ ಪ್ರಧಾನಿಯ ಆಡಳಿತಕ್ಕೆ ವೇದಿಕೆ ಸಜ್ಜುಗೊಂಡಿದೆ ಎಂದು ಕ್ಯೊಡೊ ಸುದ್ದಿಸಂಸ್ಥೆ ರವಿವಾರ ವರದಿ ಮಾಡಿದೆ. ಕನ್ಸರ್ವೇಟಿವ್ ಎಲ್ಡಿಪಿ ಪಕ್ಷದ ನಾಯಕಿ ಸಾನೆ ತಕೈಚಿ ಹಾಗೂ ಸಣ್ಣ ಎಡಪಕ್ಷಗಳ ಒಕ್ಕೂಟ `ಇಷಿನ್'ನ ಮುಖ್ಯಸ್ಥ ಹಿರೊಫುಮಿ ಯೊಷಿಮುರಾ ನಡುವಿನ ಮಾತುಕತೆ ಯಶಸ್ವಿಯಾಗಿದ್ದು ಈ ಕುರಿತ ಒಪ್ಪಂದಕ್ಕೆ ಸೋಮವಾರ ಸಹಿ ಹಾಕುವ ನಿರೀಕ್ಷೆಯಿದೆ. ಒಪ್ಪಂದದ ಪ್ರಕಾರ ಸಾನೆ ತಕೈಚಿ ಜಪಾನಿನ ಪ್ರಥಮ ಮಹಿಳಾ ಪ್ರಧಾನಿ ಎಂಬ ಹಿರಿಮೆಗೆ ಪಾತ್ರವಾಗುವುದು ಬಹುತೇಕ ಖಚಿತವಾಗಿದೆ. ಮಂಗಳವಾರ ಸಂಸತ್ತಿನಲ್ಲಿ ನಡೆಯುವ ಮತದಾನದಲ್ಲಿ ತಕೈಚಿ ಪ್ರಧಾನಿಯಾಗಿ ಆಯ್ಕೆಗೊಂಡ ಬಳಿಕ ಸರಕಾರಕ್ಕೆ ಹೊರಗಿನಿಂದ ಬೆಂಬಲ ನೀಡಲು ಇಷಿನ್ ಪಕ್ಷ ನಿರ್ಧರಿಸಿದೆ ಎಂದು ವರದಿ ಹೇಳಿದೆ.
ಶಾಸಕ ಗಣೇಶ ನೇತೃತ್ವದಲ್ಲಿ 240 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ
ಬಳ್ಳಾರಿ / ಕಂಪ್ಲಿ: ಮೂಲ ನಿವಾಸಿಗಳಿಗೆ ಹಕ್ಕುಪತ್ರ ಕೊಟ್ಟರೆ, ಸರ್ಕಾರದ ಸೌಲಭ್ಯಗಳು ಸಕಾಲದಲ್ಲಿ ದೊರಕಲು ಸಾಧ್ಯ. ಆ ನಿಟ್ಟಿನಲ್ಲಿ ಇಲ್ಲಿನ 3/4ನೇ ವಾರ್ಡಿನ ಹರಿಜನ ಕಾಲೋನಿ(ಚಪ್ಪರದಹಳ್ಳಿ)ಯ ಹಲವು ದಶಕಗಳಿಂದ ನೆಲೆಸಿಕೊಂಡು ಬಂದ 240 ಕುಟುಂಬಗಳಿಗೆ ಹಕ್ಕುಪತ್ರ ನೀಡಿದ್ದು, ಇದರ ಸದುಪಯೋಗದೊಂದಿಗೆ ಸೌಲಭ್ಯ ಪಡೆಯಬೇಕು ಎಂದು ಶಾಸಕ ಜೆ.ಎನ್ ಗಣೇಶ ಹೇಳಿದರು. ಪಟ್ಟಣದ 4ನೇ ವಾರ್ಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಳಿಯಲ್ಲಿ ವಸತಿ ಇಲಾಖೆಯ ಕರ್ನಾಟಕ ಕೊಳಗೇರಿ ಅಭಿವೃಧ್ದಿ ಮಂಡಳಿಯ ಬಳ್ಳಾರಿ ಉಪವಿಭಾಗದಿಂದ ಶನಿವಾರ ಆಯೋಜಿಸಿದ್ದ ಹಕ್ಕುಪತ್ರ ವಿತರಣಾ ಕಾರ್ಯಕ್ರಮದಲ್ಲಿ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಿದ ನಂತರ ಮಾತನಾಡಿ, ಹರಿಜನ ಕೇರಿ ಮತ್ತು ಚಪ್ಪರದಹಳ್ಳಿಯಲ್ಲಿ ಸುಮಾರು 50-60 ವರ್ಷಗಳಿಂದ ವಾಸಿಸುತ್ತಾ ಬಂದಿದ್ದು, ಇವರಿಗೆ ಅನೇಕ ವರ್ಷಗಳಿಂದ ನಿವೇಶ ಹಕ್ಕು ಪತ್ರ ಇಲ್ಲದ ಪರಿಣಾಮ ಸೌಲಭ್ಯಗಳಿಂದ ಮರೀಚಿಕೆಯಾಗಿದ್ದರು. ಆದರೆ, ಈಗ ಹಕ್ಕುಪತ್ರಗಳು ದೊರಕಿದ್ದು, ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಮುಂದಾಗಬೇಕು ಎಂದರು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್, ಉಪಾಧ್ಯಕ್ಷೆ ಸುಶೀಲಮ್ಮ, ಸದಸ್ಯರಾದ ಕೆ.ಎಸ್.ಚಾಂದ್ ಬಾಷಾ, ನಾಗಮ್ಮ ಸತ್ಯಪ್ಪ, ಸಿ.ಆರ್.ಹನುಮಂತ, ಲೊಡ್ಡು ಹೊನ್ನೂರವಲಿ, ಕೊಳಗೇರಿ ಅಭಿವೃಧ್ದಿ ಮಂಡಳಿಯ ಅಧಿಕಾರಿ ತಿಮ್ಮಣ್ಣ, ಮುಖಂಡರಾದ ವಿ.ಸತ್ಯಪ್ಪ, ಎಂ.ಸುಧೀರ್, ಬಿ.ಸಿದ್ದಪ್ಪ, ಆಟೋ ರಾಘವೇಂದ್ರ, ಎಂ.ಸಿ.ಮಾಯಪ್ಪ, ಜಿ.ರಾಮಣ್ಣ, ನಾಗರಾಜ ಡೆಕೋರೇಶನ್, ಕನಕಪ್ಪ, ರಾಜು, ಯಲ್ಲಪ್ಪ, ಗಣೇಶ, ತಿಮ್ಮಪ್ಪ, ರಾಜಣ್ಣ, ಹೊನ್ನೂರಸಾಬ್ ಸೇರಿದಂತೆ ಅನೇಕರಿದ್ದರು.
Tailoring Training: ಟೈಲರಿಂಗ್ ಉಚಿತ ತರಬೇತಿ ಪಡೆಯಲು ಅರ್ಜಿ ಆಹ್ವಾನ, ಯಾರೆಲ್ಲಾ ಅರ್ಜಿ ಹಾಕಬಹುದು?
ಸ್ವಂತ ಉದ್ಯೋಗ ಶುರು ಮಾಡಬೇಕು ಅನ್ನೋದು ಬಹು ಜನರ ಆಸೆ, ಆದರೆ ಸರಿಯಾದ ಮಾರ್ಗದರ್ಶನ &ಕೌಶಲ್ಯ ಇಲ್ಲದೆ ಉದ್ಯೋಗ ಶುರು ಮಾಡುವುದು ಕಷ್ಟ. ಹಾಗೇ ದುಡಿಯಲು ಕೂಡ ಕೌಶಲ್ಯ ಬೇಕೆ ಬೇಕು. ಕರ್ನಾಟಕದಲ್ಲಿ ಕೂಡ ಈ ರೀತಿ ಸ್ಕಿಲ್ ಡೆವಲಪ್ ಮಾಡುವ ಹಲವು ಯೋಜನೆಗಳು ಜಾರಿಗೆ ಬರುತ್ತಿವೆ. ಸರ್ಕಾರದ ಮೂಲಕ ಹಾಗೂ ಖಾಸಗಿ ಸಂಸ್ಥೆಗಳ ಮೂಲಕ
ಮಹಿಳೆಯರ ವಿಶ್ವಕಪ್: ಹೀದರ್ ನೈಟ್ ಶತಕ, ಭಾರತ ವಿರುದ್ಧ ಇಂಗ್ಲೆಂಡ್ ಗೆ ರೋಚಕ ಜಯ
ಇಂದೋರ್, ಅ.19: ಐಸಿಸಿ ಮಹಿಳೆಯರ ವಿಶ್ವಕಪ್ನ 20ನೇ ಪಂದ್ಯದಲ್ಲಿ ಇಂಗ್ಲೆಂಡ್ ಕ್ರಿಕೆಟ್ ತಂಡವು ಹೀದರ್ ನೈಟ್ ಬಾರಿಸಿದ ಶತಕದ(109 ರನ್)ನೆರವಿನಿಂದ ಆತಿಥೇಯ ಭಾರತ ವಿರುದ್ಧ 4 ರನ್ ಅಂತರದಿಂದ ರೋಚಕ ಜಯ ಸಾಧಿಸಿದೆ. ರವಿವಾರ ಇಂಗ್ಲೆಂಡ್ ತಂಡವು ನಿಗದಿತ 50 ಓವರ್ಗಳಲ್ಲಿ 8 ವಿಕೆಟ್ಗಳ ನಷ್ಟಕ್ಕೆ 288 ರನ್ ಗಳಿಸಿತು. ಗೆಲ್ಲಲು 289 ರನ್ ಗುರಿ ಬೆನ್ನಟ್ಟಿದ ಭಾರತ ತಂಡವು 50 ಓವರ್ಗಳಲ್ಲಿ 6 ವಿಕೆಟ್ಗಳ ನಷ್ಟಕ್ಕೆ 284 ರನ್ ಗಳಿಸಿ ಸೋಲೊಪ್ಪಿಕೊಂಡಿತು. ಭಾರತದ ಪರ ಸ್ಮತಿ ಮಂಧಾನ(88 ರನ್,94 ಎಸೆತ, 8 ಬೌಂಡರಿ), ನಾಯಕಿ ಹರ್ಮನ್ಪ್ರೀತ್ ಕೌರ್(70 ರನ್, 70 ಎಸೆತ, 10 ಬೌಂಡರಿ) ಹಾಗೂ ದೀಪ್ತಿ ಶರ್ಮಾ(50 ರನ್, 57 ಎಸೆತ, 5 ಬೌಂಡರಿ)ಅರ್ಧಶತಕದ ಕೊಡುಗೆ ನೀಡಿದರು. ಭಾರತವು 42 ರನ್ಗೆ 2 ವಿಕೆಟ್ ಕಳೆದುಕೊಂಡಿತ್ತು. ಆಗ 3ನೇ ವಿಕೆಟ್ಗೆ 125 ರನ್ ಜೊತೆಯಾಟ ನಡೆಸಿದ ಹರ್ಮನ್ಪ್ರೀತ್ ಹಾಗೂ ಮಂಧಾನ ತಂಡವನ್ನು ಆಧರಿಸಿದರು. ಹರ್ಮನ್ಪ್ರೀತ್ ಔಟಾದ ನಂತರ ಮಂಧಾನ ಹಾಗೂ ದೀಪ್ತಿ ಶರ್ಮಾ 4ನೇ ವಿಕೆಟ್ಗೆ 67 ರನ್ ಸೇರಿಸಿ ತಂಡವನ್ನು ಗೆಲುವಿನತ್ತ ಮುನ್ನಡೆಸಲು ಯತ್ನಿಸಿದರು. ಇಂಗ್ಲೆಂಡ್ ಪರ ನ್ಯಾಟ್ ಸಿವೆರ್-ಬ್ರಂಟ್(2-47)ಯಶಸ್ವಿ ಪ್ರದರ್ಶನ ನೀಡಿದರು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ನಾಯಕಿ ಬ್ರಂಟ್ ನಿರ್ಧಾರವನ್ನು ಸಮರ್ಥಿಸಿದ ಆರಂಭಿಕ ಆಟಗಾರ್ತಿಯರಾದ ಟ್ಯಾಮಿ ಬ್ಯೂಮಂಟ್(22 ರನ್)ಹಾಗೂ ಎಮಿ ಜೋನ್ಸ್(56 ರನ್)ಮೊದಲ ವಿಕೆಟ್ಗೆ 73 ರನ್ಗಳ ಜೊತೆಯಾಟ ನಡೆಸಿದರು. ಈ ಪೈಕಿ ಜೋನ್ಸ್ ಆಕರ್ಷಕ ಅರ್ಧಶತಕ ಗಳಿಸಿದರೆ, ನಾಯಕಿ ಬ್ರಂಟ್ 38 ರನ್ಗಳ ಕೊಡುಗೆ ನೀಡಿದರು. 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಇಳಿದು ಭಾರತೀಯ ಬೌಲರ್ಗಳನ್ನು ದಿಟ್ಟವಾಗಿ ಎದುರಿಸಿದ ಹೀದರ್ ನೈಟ್ 91 ಎಸೆತಗಳಲ್ಲಿ 15 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 109 ರನ್ ಗಳಿಸಿ ಅಬ್ಬರಿಸಿದರು. ಇದು ಏಕದಿನ ಕ್ರಿಕೆಟ್ನಲ್ಲಿ 3ನೇ ಹಾಗೂ ಏಕದಿನ ವಿಶ್ವಕಪ್ನಲ್ಲಿ ಹೀದರ್ ಗಳಿಸಿದ 2ನೇ ಶತಕವಾಗಿದೆ. ಭಾರತದ ಪರ ದೀಪ್ತಿ ಶರ್ಮಾ(4-51)ಯಶಸ್ವಿ ಪ್ರದರ್ಶನ ನೀಡಿದರು. ಮಾತ್ರವಲ್ಲ ಏಕದಿನ ಕ್ರಿಕೆಟ್ನಲ್ಲಿ 150 ವಿಕೆಟ್ ಕಬಳಿಸಿದ ಭಾರತದ 2ನೇ ಬೌಲರ್ ಎನಿಸಿಕೊಂಡರು. ಭಾರತವು ಸೆಮಿ ಫೈನಲ್ ರೇಸ್ನಲ್ಲಿರಬೇಕಾದರೆ ಉಳಿದಿರುವ 3 ಪಂದ್ಯಗಳಲ್ಲಿ ಕನಿಷ್ಠ ಎರಡನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಸಂಕ್ಷಿಪ್ತ ಸ್ಕೋರ್ ಇಂಗ್ಲೆಂಡ್: 50 ಓವರ್ಗಳಲ್ಲಿ 288/8 (ಹೀದರ್ ನೈಟ್ 109, ಆ್ಯಮಿ ಜೋನ್ಸ್ 56, ಬ್ರಂಟ್ 38, ದೀಪ್ತಿ ಶರ್ಮಾ 4-51, ಶ್ರೀ ಚರಣಿ 2-68) *ಭಾರತ 262/6, ಮಂಧಾನ, ಹರ್ಮನ್ಪ್ರೀತ್, ದೀಪ್ತಿ ಅರ್ಧಶತಕ ಭಾರತ: 50 ಓವರ್ಗಳಲ್ಲಿ 284/6 (ಸ್ಮತಿ ಮಂಧಾನ 88, ಹರ್ಮನ್ಪ್ರೀತ್ 70, ದೀಪ್ತಿ ಶರ್ಮಾ 41, ಬ್ರಂಟ್ 2-47)
ಕದನ ವಿರಾಮ ಒಪ್ಪಂದದ ಬೆನ್ನಲ್ಲೇ ಅಫ್ಘಾನ್ ನಿರಾಶ್ರಿತರ ತೆರವು ಕಾರ್ಯಾಚರಣೆಗೆ ಪಾಕ್ ಚಾಲನೆ
ಲಾಹೋರ್, ಅ.19: ಅಫ್ಘಾನಿಸ್ತಾನದೊಂದಿಗೆ ಕದನ ವಿರಾಮ ಒಪ್ಪಂದದ ಬೆನ್ನಲ್ಲೇ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಸರಕಾರ ಕರಾಚಿಯಲ್ಲಿ 1983ರಿಂದಲೂ ವಾಸಿಸುತ್ತಿದ್ದ ಅಫ್ಘಾನ್ ನಿರಾಶ್ರಿತರನ್ನು ತೆರವುಗೊಳಿಸುವ ಕಾರ್ಯಾಚರಣೆಗೆ ಚಾಲನೆ ನೀಡಿರುವುದಾಗಿ ವರದಿಯಾಗಿದೆ. ಫೆಡರಲ್ ಸರಕಾರದ ಆದೇಶದಂತೆ ಕಾರ್ಯನಿರ್ವಹಿಸಿದ ಸಿಂಧ್ ಪೊಲೀಸರು ಕಂದಾಯ ಇಲಾಖೆಯ ನೆರವಿನಿಂದ ಸುಮಾರು 200 ಎಕರೆ ಪ್ರದೇಶದಲ್ಲಿದ್ದ ಸುಮಾರು 300 ಸಣ್ಣ ಮನೆಗಳನ್ನು ತೆರವುಗೊಳಿಸಿದ್ದಾರೆ. ಇಲ್ಲಿ ಕಳೆದ 42 ವರ್ಷಗಳಿಂದಲೂ ಸುಮಾರು 20,000 ಅಫ್ಘಾನಿಸ್ತಾನೀಯರು ವಾಸಿಸುತ್ತಿದ್ದರು. ಮನೆಗಳನ್ನು ತೆರವುಗೊಳಿಸುವ ಜೊತೆಗೆ ಅಫ್ಘಾನ್ ಪ್ರಜೆಗಳನ್ನು ಗುರುತಿಸಲು ಅನಿರೀಕ್ಷಿತ ತಪಾಸಣೆಗಳನ್ನೂ ಆರಂಭಿಸಲಾಗಿದೆ. ಅಫ್ಘಾನ್ ನಿರಾಶ್ರಿತರ ವಿರುದ್ಧದ ಕಾರ್ಯಾಚರಣೆ ಕರಾಚಿ ಸೇರಿದಂತೆ ಪ್ರಾಂತದಾದ್ಯಂತ ಮುಂದುವರಿಯಲಿದೆ. ಅಫ್ಘಾನ್ ನಿರಾಶ್ರಿತರ ಡೇರೆಗಳನ್ನು ತೆರವುಗೊಳಿಸುವಂತೆ ಪಾಕಿಸ್ತಾನ ಸರಕಾರ ಎಲ್ಲಾ ಪ್ರಾಂತೀಯ ಸರಕಾರಗಳಿಗೂ ಆದೇಶಿಸಿದೆ ಎಂದು ವರದಿಯಾಗಿದೆ.
ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ ಪ್ರವಾಹ ಪರಿಹಾರ ನಿಧಿ ಬಿಡುಗಡೆಗೆ ಅನುಮೋದನೆ; ಕರ್ನಾಟಕಕ್ಕೆ ಎಷ್ಟು ಹಣ?
ಕೇಂದ್ರ ಸರ್ಕಾರ ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ ಪ್ರವಾಹ ಪರಿಹಾರ ನಿಧಿಯ ಎರಡನೇ ಕಂತು ಬಿಡುಗಡೆಗೆ ಅನುಮೋದನೆ ನೀಡಿದೆ. ಈ ಮೊತ್ತವು ರಾಜ್ಯ ವಿಪತ್ತು ಪರಿಹಾರ ನಿಧಿಯ ಕೇಂದ್ರದ ಪಾಲಿನ ಭಾಗವಾಗಿದೆ. ಅತಿವೃಷ್ಟಿಯಿಂದ ಹಾನಿಗೊಳಗಾದ ರಾಜ್ಯಗಳಿಗೆ ಈ ಹಣವು ನೆರವಾಗಲಿದೆ. ಈಗಾಗಲೇ ಕೇಂದ್ರ ಸರ್ಕಾರ ಹಲವು ರಾಜ್ಯಗಳಿಗೆ ವಿಪತ್ತು ಪರಿಹಾರ ನಿಧಿಯನ್ನು ಬಿಡುಗಡೆ ಮಾಡಿದೆ.
ಭಾರತದ ಹೆಮ್ಮೆಯ ವಿಜ್ಞಾನಿ ಡಾ.ಅಬ್ದುಲ್ ಕಲಾಂ: ಅಹ್ಮದ್ ಪಟೇಲ್
ಕಲಬುರಗಿ: ಭಾರತದ ಹೆಮ್ಮೆಯ ವಿಜ್ಞಾನಿ, ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ನಮ್ಮ ದೇಶ ಮತ್ತು ಪ್ರಪಂಚ ಕಂಡ ಮಹಾನ್ ವಿಜ್ಞಾನಿ “ಮಿಸೈಲ್ ಮ್ಯಾನ್” ಎಂದೇ ಖ್ಯಾತಿ ಪಡೆದಿದ್ದರು ಎಂದು ನಗರಸಭೆ ಸದಸ್ಯ ಡಾ.ಅಹ್ಮದ್ ಪಟೇಲ್ ಹೇಳಿದರು. ಶಹಾಬಾದ ನಗರದ ಅಬ್ದುಲ್ ಕಲಾಂ ವೆಲ್ ಫೇರ್ ಟ್ರಸ್ಟ್ ವತಿಯಿಂದ ಡಾ. ಎಪಿಜೆ ಅಬ್ದುಲ್ ಕಲಾಂ ಜಯಂತಿ ಕಾರ್ಯಕ್ರಮ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಸರಳತೆ, ಪ್ರಾಮಾಣಿಕತೆ, ಮೇರು ವ್ಯಕ್ತಿತ್ವದ ದೇಶಪ್ರೇಮಿ ಮಿಸೈಲ್ ಮ್ಯಾನ್ ಆಫ್ ಇಂಡಿಯಾ ಎನಿಸಿಕೊಂಡಿದ್ದ ಕಲಾಂ ಅವರು ನಮ್ಮ ದೇಶದ ವಿಜ್ಞಾನಿಗಳಾಗಿ, ರಾಷ್ಟ್ರಪತಿಗಳಾಗಿ ಅನೇಕ ವೈಜ್ಞಾನಿಕ ಕೊಡುಗೆಗಳನ್ನು ನೀಡಿದ್ದಾರೆ. ಅವರು ತೋರಿದ ಮಾರ್ಗದಲ್ಲಿ ನಾವು ನೀವೆಲ್ಲರೂ ಸೇವೆಯನ್ನು ಮಾಡುವ ಮೂಲಕ ಅಪ್ಪಟ ದೇಶ ಪ್ರೇಮಿಗಳಾಗಬೇಕು. ಅವರ ಬದುಕಿನ ಮೌಲ್ಯಗಳು, ಸರಳ ಸಜ್ಜನಿಕಿಯ ವ್ಯಕ್ತಿತ್ವ ನಮ್ಮೆಲ್ಲರಿಗೂ ಪ್ರೇರಣೆಯಾಗಬೇಕು ಎಂದು ಅವರು ತಮ್ಮ ಇಡೀ ಜೀವನವನ್ನು ಭಾರತ ದೇಶದ ಏಳಿಗೆಗೆ ಮುಡಿಪಾಗಿಟ್ಟರು. ಇಂತಹ ಮಹಾನ್ ವ್ಯಕ್ತಿಗಳ ಜಯಂತಿಯನ್ನು ವಿಶೇಷ ರೀತಿಯಲ್ಲಿ ಆಚರಿಸಬೇಕು ಎಂದು ಅಭಿಪ್ರಾಯಪಟ್ಟರು ಮುಖಂಡರಾದ ಅನ್ವರ್ ಪಾಶಾ,ನಿಂಗಣ್ಣ ಸಂಗಾವಿಕರ್,ಕಿರಣಕುಮಾರ ಚವ್ಹಾಣ,ಶೇಖ ಚಾಂದ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹ್ಮದ್ ಜಾವೀದ್,ಅನ್ವರ್ ಪಾಶಾ, ನಿಂಗಣ್ಣ ಸಂಗಾವಿಕರ್, ಕಿರಣಕುಮಾರ ಚವ್ಹಾಣ,ಅಬ್ದುಲ್ ರಶೀದ್, ಶೇರ್ ಅಲಿ,ಶಮ್ಮಾಶ ಮರ್ಚಂಟ್,ಸಾಜೀದ್ ಗುತ್ತೆದಾರ, ಶಾಮ ದಂಡಗುಲಕರ್,ಮುನ್ನಾಫ್ ಪಟೇಲ್, ಸಲೀಂ ಸಾಬ ಇತರರು ಇದ್ದರು.
ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ: ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ಮಂಗಳೂರು ಅ.19: ‘‘ವೈದ್ಯಕೀಯ ಸೇವಾ ವೃತ್ತಿಯು ಪ್ರಾಮಾಣಿಕತೆ, ಮಾನವತೆ, ಸೇವಾ ಮನೋಭಾವದ ವ್ರತ್ತಿಯಾಗಿರಬೇಕು ಅಲ್ಲದೆ ವ್ಯಾವಹಾರಿಕವಾಗಿರಬಾರದು ಎಂದು ಬೆಂಗಳೂರು ಗ್ರಾಮೀಣ ಕ್ಷೇತ್ರದ ಸಂಸದ ಡಾ. ಸಿ. ಎನ್. ಮಂಜುನಾಥ್ ಸಲಹೆ ನೀಡಿದ್ದಾರೆ. ನಗರದ ಐಎಮ್ಎ ಸಭಾಂಗಣದಲ್ಲಿ ಶುಕ್ರವಾರ ನಡೆದ ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಶಾಖೆಯ 2025-26 ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಮಾತನಾಡಿದರು. ವೈದ್ಯರು ರೋಗಿಗಳ ಅಪೇಕ್ಷೆ ಮತ್ತು ನಿರೀಕ್ಷೆಯ ಮಟ್ಟಕ್ಕೆ ಸ್ಪಂಧಿಸಬೇಕು ಹಾಗೂ ಅವರ ಆರ್ಥಿಕ ಹಿನ್ನೆಲೆ ಮತ್ತು ಪರಿಸ್ಥಿತಿಯನ್ನು ಪರಿಗಣಿಸಿ ಶ್ರೇಷ್ಠ ಆಧುನಿಕ ಶೈಲಿಯ ಶಸ್ತ್ರತಜ್ಞ ಜ್ಞಾನವನ್ನು ಬಳಸಿ ಬಡವರಿಗೆ ಸೇವೆಯನ್ನು ನೀಡಬೇಕು ಎಂದರು. ದೇಶದಲ್ಲಿ ಲಕ್ಷಾಂತರ ಜನರು ರಸ್ತೆ ಅಘಾತದಲ್ಲಿ ಪ್ರತಿ ವರ್ಷ ಬಲಿಯಾಗುತ್ತಿದ್ದಾರೆ. ಅದನ್ನು ತಡೆಗಟ್ಟಲು ಸರಕಾರವು ರಸ್ತೆ ಪ್ರಯಾಣದ ಸುರಕ್ಷತೆಯನ್ನು ಕಾಪಾಡಲು ವಿವಿಧ ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಮಾಹಿತಿ ನೀಡಿದರು. ಬಳಿಕ ಸಂಸ್ಥೆಯ ಗೃಹ ವಾರ್ತಾಪತ್ರಿಕೆಯಾದ ‘‘ಮೆಡಿಲೋರ್’’ ಅನ್ನು ಬಿಡುಗಡೆಗೊಳಿಸಿದರು. ಭಾರತೀಯ ವೈದ್ಯಕೀಯ ಸಂಘದ ಮಾಜಿ ಅಧ್ಯಕ್ಷ ಡಾ. ವೆಂಕಟ್ರಾಯ ಪ್ರಭು ಪದಗ್ರಹಣ ಅಧಿಕಾರಿಯಾಗಿ ಭಾಗವಹಿಸಿ ಪದಾಧಿಕಾರಿಗಳ ಪದಗ್ರಹಣದ ವಿಧಿವಿಧಾನಗಳನ್ನು ನೆರವೇರಿಸಿ ತಂಡಕ್ಕೆ ಯಶಸ್ಸು ಕೋರಿದರು. ಈ ಸಂದರ್ಭದಲ್ಲಿ ನಗರದ ಖ್ಯಾತ ಶಸ್ತ್ರ ಚಿಕಿತ್ಸಾ ತಜ್ಞ ಹಾಗೂ ಸಿಟಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಭಾಸ್ಕರ್ ಶೆಟ್ಟಿ ವೈದ್ಯಕೀಯ ಕ್ಷೇತ್ರಕ್ಕೆ ನೀಡದ ಅಮೂಲ್ಯ ಕೊಡುಗೆ ಮತ್ತು ಸಲ್ಲಿಸಿದ ಅನುಪಮ ಸೇವೆಯನ್ನು ಪರಿಗಣಿಸಿ ಸನ್ಮಾನಿಸಲಾಯಿತು. ನೂತನ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ ಡಾ. ಸದಾನಂದ ಪೂಜಾರಿ ಇದೊಂದು ಅತ್ಯಂತ ಜವಾಬ್ದಾರಿಯುತ ಮತ್ತು ಸವಾಲುಗಳನ್ನು ಎದುರಿಸುವ ಹುದ್ದೆಯಾಗಿದ್ದು, ಅದನ್ನು ಧೈರ್ಯವಾಗಿ ಮತ್ತು ಯಶಸ್ವಿಯಾಗಿ ನಿರ್ವಹಿಸುತ್ತಿದ್ದೇನೆ ಎಂದು ಆಶ್ವಾಸನೆ ನೀಡಿ, ತಮ್ಮ ಅಧಿಕಾರವಧಿಯಲ್ಲಿ ಹಲವಾರು ಶೈಕ್ಷಣಿಕ, ವೈಜ್ಞಾನಿಕ, ವೈದ್ಯಕೀಯ ಶಿಬಿರ ಮತ್ತು ಮನೋರಂಜನಾ, ಕ್ರೀಡಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅದನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಸರ್ವ ಸದಸ್ಯರ ಉತ್ಸಾಹ ಮತ್ತು ಪ್ರೋತ್ಸಾಹ ಕೋರಿದರು. ಈ ಸಂದರ್ಭದಲ್ಲಿ ವೈದ್ಯರು ಎದುರಿಸುತ್ತಿರುವ ಹಲವಾರು ಸಮಸ್ಯೆಗಳಾದ ಹಲ್ಲೆ, ಬೆದರಿಕೆಗಳನ್ನು ಪರಿಹರಿಸಲು ಮುಖ್ಯ ಮಂತ್ರಿಗಳಿಗೆ ಸಂಭೋದಿಸಿದ ಮನವಿ ಪತ್ರವನ್ನು ಸಂಸದರ ಮುಖಾಂತರ ಹಸ್ತಾಂತರಿಸಲಾಯಿತು. ಎಮ್ಎಲ್ಸಿ ಐವನ್ ಡಿ ಸೋಜ ಗೌರವ ಅಥಿತಿಯಾಗಿ ಪಾಲ್ಗೊಂಡು ವೈದ್ಯರ ಅಮೂಲ್ಯ ಸೇವೆಯನ್ನು ಶ್ಲಾಘಿಸಿ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕವಾಗಿ ಪ್ರಯತ್ನ ಪಡುವುದಾಗಿ ಆಶ್ವಾಸನೆ ನೀಡಿದರು. ನಗರದ ವೆನ್ಲಾಕ್ ಆಸ್ಪತ್ರೆಯ ಮುಖ್ಯ ಶಸ್ತ್ರ ಚಿಕಿತ್ಸಕ ಹಾಗೂ ಆಧೀಕ್ಷಕ ಡಾ. ಶಿವಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿ ನೂತನ ತಂಡಕ್ಕೆ ಶುಭ ಹಾರೈಸಿದರು. ನಿರ್ಗಮಿಸುವ ಅಧ್ಯಕ್ಷೆ ಡಾ. ಜೆಸ್ಸಿ ಮರಿಯಾ ಡಿ ಸೋಜ ಸ್ವಾಗತಿಸಿದರು. ಕಾರ್ಯದರ್ಶಿ ಡಾ. ಅರ್ಚನಾ ಭಟ್ ವಾರ್ಷಿಕ ವರದಿ ವಾಚಿಸಿದರು. ವೇದಿಕೆಯಲ್ಲಿ ನಿರ್ಗಮನ ಕೋಶಾಧಿಕಾರಿ ಡಾ. ಮಧುಸೂಧನ್, ನೂತನ ಕೋಶಾಧಿಕಾರಿ ಡಾ. ಜೂಲಿಯನ್ ಸಲ್ಡಾನ್ಹ ಮತ್ತು ಮಹಿಳಾ ವೈದ್ಯ ವಿಭಾಗದ ಅಧ್ಯಕ್ಷೆ ಡಾ. ಪ್ರೇಮಾ ಡಿಕುನ್ಹಾ ಉಪಸ್ಥಿತರಿದ್ದರು. ಡಾ. ಸುನೀಲ್ ಜತ್ತನ್ನ ಮತ್ತು ಡಾ. ಮಧುರ ಭಟ್ ನಿರೂಪಿಸಿದ ಕಾರ್ಯಕ್ರಮದಲ್ಲಿ ನೂತನ ಕಾರ್ಯದರ್ಶಿ ಡಾ. ಪ್ರಕಾಶ್ ಹರಿಶ್ಚಂದ್ರ ವಂದಿಸಿದರು.
ರಫಾ ಕ್ರಾಸಿಂಗ್ ಮುಚ್ಚಿರುವುದರಿಂದ ಮೃತದೇಹ ಹಸ್ತಾಂತರ ವಿಳಂಬ : ಹಮಾಸ್
ಗಾಝಾ, ಅ.19: ಈಜಿಪ್ಟ್ ಮತ್ತು ಗಾಝಾದ ನಡುವಿನ ರಫಾ ಗಡಿದಾಟನ್ನು ಮುಚ್ಚಿರುವುದು ಒತ್ತೆಯಾಳುಗಳ ಮೃತದೇಹಗಳ ಹಸ್ತಾಂತರವನ್ನು ವಿಳಂಬಗೊಳಿಸಲಿದೆ ಎಂದು ಹಮಾಸ್ ಹೇಳಿದೆ. ಗಡಿ ದಾಟನ್ನು ಮುಚ್ಚಿರುವುದರಿಂದ ಗಾಝಾದಲ್ಲಿ ರಾಶಿಬಿದ್ದಿರುವ ಕಟ್ಟಡಗಳ ಅವಶೇಷಗಳಡಿಯಿಂದ ಮೃತದೇಹಗಳನ್ನು ಪತ್ತೆಹಚ್ಚಿ ಹೊರತೆಗೆಯುವ ಅತ್ಯಾಧುನಿಕ ಸಾಧನಗಳು ಗಾಝಾ ತಲುಪಲು ಸಾಧ್ಯವಾಗುತ್ತಿಲ್ಲ. ಇದರಿಂದ ಮೃತದೇಹಗಳನ್ನು ಪತ್ತೆಹಚ್ಚುವ ಮತ್ತು ಹಸ್ತಾಂತರಿಸುವ ಪ್ರಕ್ರಿಯೆಯಲ್ಲಿ ಗಣನೀಯ ವಿಳಂಬವಾಗುತ್ತಿದೆ' ಎಂದು ಹಮಾಸ್ನ ಹೇಳಿಕೆ ತಿಳಿಸಿದೆ. ಟ್ರಂಪ್ ಪ್ರಸ್ತಾಪಿಸಿದ್ದ ಕದನ ವಿರಾಮ ಒಪ್ಪಂದದ ಪ್ರಕಾರ ಇದುವರೆಗೆ ಹಮಾಸ್ 20 ಜೀವಂತ ಒತ್ತೆಯಾಳುಗಳನ್ನು ಮತ್ತು 9 ಇಸ್ರೇಲಿ, ಒಬ್ಬ ನೇಪಾಳಿ ಒತ್ತೆಯಾಳುವಿನ ಮೃತದೇಹವನ್ನು ಹಸ್ತಾಂತರಿಸಿದೆ.
ವಿಶೇಷ ಚೇತನ ಮಕ್ಕಳ ಬದುಕಿಗೆ ಬೆಳಕು: ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಆಶಯ
ಮಂಗಳೂರು , ಅ.19: ವಿಶೇಷ ಚೇತನ ಮಕ್ಕಳು ದೇವರ ಸಮಾನರಾಗಿದ್ದು ಅವರ ಬದುಕಿಗೆ ಬೆಳಕಾಗುವುದು ಸಮಾಜದ ಕರ್ತವ್ಯ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ರೈತ ಕುಡ್ಲ ಪ್ರತಿಷ್ಠಾನ ವತಿಯಿಂದ ನಗರದ ಕದ್ರಿ ಪಾರ್ಕ್ ನಲ್ಲಿ ಆಯೋಜಿಸಲಾದ ರೈತ ಮೇಳದಲ್ಲಿ ಚೇತನಾ ಬಾಲ ವಿಕಾಸ ಕೇಂದ್ರದ ಮಕ್ಕಳೊಂದಿಗೆ ದೀಪಾವಳಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ದೀಪಾವಳಿ ಕೃಷಿ ಬದುಕಿನ ಹಬ್ಬವಾಗಿದ್ದು, ರೈತ ಮೇಳದಲ್ಲಿ ಕೃಷಿ ಉತ್ಪನ್ನ ಗಳಿಗೆ ಮಾರುಕಟ್ಟೆ ಒದಗಿಸುವ ಮೂಲಕ ಕೃಷಿಕರ ಬದುಕಿ ಗೂ ಬೆಳಕು ನೀಡುವ ಕಾರ್ಯವಾಗಿದೆ ಎಂದು ಅವರು ಶ್ಲಾಘಿಸಿದರು. ಶಾಸಕರಾದ ಡಿ.ವೇದವ್ಯಾಸ್ ಕಾಮತ್, ಡಾ. ವೈ. ಭರತ್ ಶೆಟ್ಟಿ, ದೇರಳಕಟ್ಟೆ ವಿದ್ಯಾರತ್ನ ಶಿಕ್ಷಣ ಸಂಸ್ಥೆ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಉದ್ಯಮಿ ಸತ್ಯೇಂದ್ರ ಶರ್ಮ, ಋತ್ವಿಕ್ ಕದ್ರಿ , ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ .ಬಿ .ಹರೀಶ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ರೈತ ಕುಡ್ಲ ಪ್ರತಿಷ್ಠಾನದ ಅಧ್ಯಕ್ಷ ಭರತ್ ರಾಜ್ ಸೊರಕೆ ಸ್ವಾಗತಿಸಿ, ಕಾರ್ಯದರ್ಶಿ ಲತೇಶ್ ವಂದಿಸಿದರು.
10,650 ಹೆಚ್ಚುವರಿ ಎಂಬಿಬಿಎಸ್ ಸೀಟ್ಗಳು, 41 ಹೊಸ ಮೆಡಿಕಲ್ ಕಾಲೇಜುಗಳಿಗೆ ಎನ್ಎಂಸಿ ಅನುಮೋದನೆ
ಹೊಸದಿಲ್ಲಿ,ಅ.19: ರಾಷ್ಟ್ರೀಯ ವೈದ್ಯಕೀಯ ಆಯೋಗವು(ಎನ್ಎಂಸಿ) 2024-25ನೇ ಸಾಲಿಗೆ 10,650 ಹೆಚ್ಚುವರಿ ಎಂಬಿಬಿಎಸ್ ಸೀಟ್ಗಳಿಗೆ ಅನುಮೋದನೆಯನ್ನು ನೀಡಿದೆ. ಪ್ರಧಾನಿ ನರೇಂದ್ರ ಮೋದಿಯವರು ತನ್ನ ಸ್ವಾತಂತ್ರ್ಯ ದಿನ ಭಾಷಣದಲ್ಲಿ ಮುಂದಿನ ಐದು ವರ್ಷಗಳಲ್ಲಿ ಹೊಸದಾಗಿ 75,000 ಮೆಡಿಕಲ್ ಸೀಟ್ಗಳನ್ನು ಸೃಷ್ಟಿಸಲಾಗುವುದು ಎಂದು ಭರವಸೆ ನೀಡಿದ್ದರು. 41 ಹೊಸ ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೂ ಅನುಮತಿ ನೀಡಲಾಗಿದ್ದು,ಇದರೊಂದಿಗೆ ದೇಶದಲ್ಲಿಯ ಮೆಡಿಕಲ್ ಕಾಲೇಜುಗಳ ಸಂಖ್ಯೆ 816ಕ್ಕೇರಲಿದೆ. ಪದವಿ ತರಗತಿ(ಯುಜಿ) ಸೀಟ್ಗಳನ್ನು ಹೆಚ್ಚಿಸಲು ಕೋರಿ 41 ಸರಕಾರಿ ಕಾಲೇಜುಗಳು ಮತ್ತು 129 ಖಾಸಗಿ ಸಂಸ್ಥೆಗಳು ಸೇರಿದಂತೆ ಒಟ್ಟು 170 ಅರ್ಜಿಗಳನ್ನು ಸ್ವೀಕರಿಸಲಾಗಿತ್ತು. ಹೆಚ್ಚುವರಿಯಾಗಿ ಒಟ್ಟು 10,650 ಮೆಡಿಕಲ್ ಸೀಟ್ಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಎನ್ಎಂಸಿ ಮುಖ್ಯಸ್ಥ ಡಾ.ಅಭಿಜಿತ ಶೇಠ್ ಮಾಹಿತಿ ನೀಡಿದರು. ಇದರಿಂದಾಗಿ 2024-25ನೇ ಸಾಲಿಗೆ ಒಟ್ಟು ಮೆಡಿಕಲ್ ಸೀಟ್ಗಳ ಸಂಖ್ಯೆ 1,37,600ಕ್ಕೇರಲಿದೆ. ಸ್ನಾತಕೋತ್ತರ (ಪಿಜಿ) ಸೀಟ್ಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ಕೋರಿ 3,500ಕ್ಕೂ ಅಧಿಕ ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಆಯೋಗವು ಸುಮಾರು 5,000 ಪಿಜಿ ಸೀಟ್ಗಳ ಹೆಚ್ಚಳವನ್ನು ನಿರೀಕ್ಷಿಸಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಪಿಜಿ ಸೀಟ್ಗಳ ಸಂಖ್ಯೆ 67,000ಕ್ಕೇರಲಿದೆ. ಯುಜಿ ಮತ್ತು ಪಿಜಿಗಳಲ್ಲಿ ಈ ವರ್ಷ ಒಟ್ಟೂ ಅಂದಾಜು 15,000 ಹೆಚ್ಚುವರಿ ಸೀಟ್ಗಳು ಲಭಿಸಲಿವೆ ಎಂದು ಶೇಠ್ ತಿಳಿಸಿದರು.
ಹೊಸದಿಲ್ಲಿ: ಈ ವರ್ಷದ ನೈರುತ್ಯ ಮಾನ್ಸೂನ್ ವೇಳೆ ಸುರಿದ ಭಾರಿ ಮಳೆ ಹಾಗೂ ಪ್ರವಾಹದಿಂದ ಪೀಡಿತರಾಗಿರುವ ಜನರಿಗೆ ಪರಿಹಾರ ಒದಗಿಸಲು ಕೇಂದ್ರ ಸರಕಾರ ತನ್ನ ಪಾಲಿನ ಪರಿಹಾರದ ಎರಡನೆ ಕಂತಿನಲ್ಲಿ 384.40 ಕೋಟಿ ರೂ. ಮುಂಗಡ ಹಣವನ್ನು ರಾಜ್ಯ ವಿಪತ್ತು ಪರಿಹಾರ ನಿಧಿಗೆ ಬಿಡುಗಡೆ ಮಾಡಿದೆ ಎಂದು ರವಿವಾರ ಗೃಹ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಗೃಹ ಸಚಿವಾಲಯ, ಕರ್ನಾಟಕ ಮತ್ತು ಮಹಾರಾಷ್ಟ್ರಕ್ಕೆ ಒಟ್ಟು 1,950.80 ಕೋಟಿ ರೂ. ಮುಂಗಡ ಪರಿಹಾರ ಬಿಡುಗಡೆ ಮಾಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅನುಮೋದನೆ ನೀಡಿದ್ದಾರೆ ಎಂದು ಹೇಳಿದೆ. ಈ ವರ್ಷದ ಮಾನ್ಸೂನ್ ಋತುವಿನಲ್ಲಿ ಸುರಿದ ಭಾರಿ ಮಳೆ ಹಾಗೂ ಪ್ರವಾಹದಿಂದ ಬಾಧಿತರಾಗಿರುವ ಜನರಿಗೆ ತಕ್ಷಣವೇ ಪರಿಹಾರ ಒದಗಿಸಲು, ಈ ಪರಿಹಾರ ಮೊತ್ತದ ಪೈಕಿ ಮಹಾರಾಷ್ಟ್ರಕ್ಕೆ 1,556.40 ಕೋಟಿ ರೂ. ಹಾಗೂ ಕರ್ನಾಟಕಕ್ಕೆ 384.40 ಕೋಟಿ ರೂ. ಹಂಚಿಕೆ ಮಾಡಲಾಗಿದೆ ಎಂದು ಅದು ತಿಳಿಸಿದೆ. ಪ್ರವಾಹ, ಭೂಕುಸಿತ ಹಾಗೂ ಮೇಘಸ್ಫೋಟಗಳಿಂದ ಬಾಧಿತವಾಗಿರುವ ರಾಜ್ಯಗಳಿಗೆ ಅಗತ್ಯವಿರುವ ಎಲ್ಲ ನೆರವನ್ನು ಒದಗಿಸಲು ಕೇಂದ್ರ ಸರಕಾರ ಸಂಪೂರ್ಣ ಬದ್ಧವಾಗಿದೆ ಎಂದೂ ಈ ಪ್ರಕಟನೆಯಲ್ಲಿ ಹೇಳಲಾಗಿದೆ.
ಬೆಳಗಾವಿ ಡಿಸಿಸಿ ಚುನಾವಣೆ: 3 ಕ್ಷೇತ್ರಗಳ ಫಲಿತಾಂಶ ಪ್ರಕಟ; ಲಕ್ಷ್ಮಣ ಸವದಿಗೆ ಭರ್ಜರಿ ಗೆಲುವು! ಯಾರಿಗೆ ಎಷ್ಟು ಮತ?
ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಅಥಣಿ, ರಾಮದುರ್ಗ, ರಾಯಬಾಗ ಕ್ಷೇತ್ರಗಳಲ್ಲಿ ಲಕ್ಷ್ಮಣ ಸವದಿ, ಮಲ್ಲಣ್ಣ ಯಾದವಾಡ, ಅಪ್ಪಾಸಾಹೇಬ ಕುಲಗೋಡೆ ವಿಜಯ ಸಾಧಿಸಿದ್ದಾರೆ. ನಾಲ್ಕು ಕ್ಷೇತ್ರಗಳ ಫಲಿತಾಂಶ ಹೈಕೋರ್ಟ್ ಆದೇಶದಿಂದ ತಡೆಹಿಡಿಯಲಾಗಿದ್ದು, ಬೆಂಬಲಿಗರು ವಿಜಯೋತ್ಸವ ಆಚರಿಸಿದ್ದಾರೆ. ಒಟ್ಟು 16 ಕ್ಷೇತ್ರಗಳ ಪೈಕಿ 9 ಅವಿರೋಧವಾಗಿ ಆಯ್ಕೆಯಾಗಿದ್ದು, 7 ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು.
ಮಾದಕ ವಸ್ತು ಸೇವನೆ ಪ್ರಕರಣ: ಮೂವರ ಬಂಧನ
ಉಳ್ಳಾಲ: ಮಾದಕ ವಸ್ತುಗಳನ್ನು ಸೇವಿಸಿ ಸಾರ್ವಜನಿಕರಿಗೆ ತೊಂದರೆ ಆಗುವ ರೀತಿಯಲ್ಲಿ ವರ್ತಿಸುತ್ತಿದ್ದ ಮೂವರನ್ನು ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಮುನ್ನೂರು ಗ್ರಾಮದ ಕುತ್ತಾರು ಪಂಡಿತ್ ಹೌಸ್ ಬಳಿ ನಡೆದಿದೆ. ಸಾಹುಲ್ ಹಮೀದ್ ರಾಯೀಜ್ ,ಆಸೀಫ್ ,ಅಬ್ದುಲ್ ಮಜೀದ್ ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ. ಇವರನ್ನು ಬಂಧಿಸಿದ ಮಂಗಳೂರು ಸಿಸಿಬಿ ಘಟಕದ ಪಿಎಸ್ ಐ ನೇತೃತ್ವದ ಸಿಬ್ಬಂದಿ ನಗರದ ಕುಂಟಿಕಾನ ಎ.ಜೆ.ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಆರೋಪಿಗಳು ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಮಿಳುನಾಡು | ವಸತಿ ಕಟ್ಟಡವೊಂದರಲ್ಲಿ ಸ್ಫೋಟ : ನಾಲ್ವರು ಮೃತ್ಯು
ಅಕ್ರಮ ಪಟಾಕಿ ದಾಸ್ತಾನು ಕುರಿತು ಪೊಲೀಸರಿಂದ ತನಿಖೆ ಚೆನ್ನೈ,ಅ.19: ತಮಿಳುನಾಡಿನ ಆವಡಿ ಬಳಿಯ ದಂಡುರೈನಲ್ಲಿ ರವಿವಾರ ವಸತಿ ಕಟ್ಟಡವೊಂದರಲ್ಲಿ ಮನೆಯಲ್ಲಿ ತಯಾರಿಸಿದ ಪಟಾಕಿಗಳು ಸ್ಫೋಟಗೊಂಡು ಸಂಭವಿಸಿದ ಭೀಕರ ದುರಂತದಲ್ಲಿ ನಾಲ್ವರು ಮೃತಪಟ್ಟಿದ್ದು, ಪರಿಸರದಲ್ಲಿ ಆತಂಕದ ಸ್ಥಿತಿ ಸೃಷ್ಟಿಯಾಗಿದೆ. ತಿರುವಲ್ಲೂರು ಜಿಲ್ಲೆಯ ಪಟ್ಟಾಭಿರಾಮ ಪ್ರದೇಶದಲ್ಲಿನ ಮನೆಯೊಂದರಲ್ಲಿ ಈ ಸ್ಫೋಟ ಸಂಭವಿಸಿದ್ದು,ಅಲ್ಲಿ ದೀಪಾವಳಿ ಹಬ್ಬಕ್ಕೆ ಮುನ್ನ ಪಟಾಕಿಗಳನ್ನು ಮಾರಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಸ್ಫೋಟದಿಂದಾಗಿ ಮನೆ ಸಂಪೂರ್ಣವಾಗಿ ನಾಶಗೊಂಡಿದ್ದು, ಶಬ್ದ ಪ್ರದೇಶದಾದ್ಯಂತ ಕೇಳಿ ಬಂದಿತ್ತು. ಸ್ಥಳೀಯ ವರದಿಗಳ ಪ್ರಕಾರ ಸುನಿಲ್ ಪ್ರಕಾಶ್ ಮತ್ತು ಯಾಸಿನ್ ಎಂದು ಗುರುತಿಸಲಾಗಿರುವ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ತೀವ್ರವಾಗಿ ಗಾಯಗೊಂಡಿದ್ದ ಇತರ ಇಬ್ಬರು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಆವಡಿಯಿಂದ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ ಸಿಬ್ಬಂದಿಗಳು ಶೋಧ ಮತ್ತು ರಕ್ಷಣಾ ಕಾರ್ಯವನ್ನು ಕೈಗೊಂಡರು. ಪ್ರದೇಶದಲ್ಲಿ ಸಂಚಾರವನ್ನು ನಿರ್ಬಂಧಿಸಿರುವ ಪೊಲೀಸರು ಸ್ಫೋಟಕಗಳ ಮೂಲ ಮತ್ತು ಸ್ಫೋಟಕ್ಕೆ ಕಾರಣವಾದ ಸಂದರ್ಭಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಮನೆಯನ್ನು ಪಟಾಕಿಗಳ ಅನಧಿಕೃತ ದಾಸ್ತಾನು ಅಥವಾ ಮಾರಾಟಕ್ಕಾಗಿ ಬಳಸಲಾಗುತ್ತಿತ್ತು ಎಂದು ಪ್ರಾಥಮಿಕ ತನಿಖೆಯು ಬೆಟ್ಟು ಮಾಡಿದೆ. ಇಂತಹ ದುರಂತಗಳನ್ನು ತಡೆಯಲು ತಮ್ಮ ಪ್ರದೇಶಗಳಲ್ಲಿ ಅಕ್ರಮ ಪಟಾಕಿ ತಯಾರಿಕೆ ಅಥವಾ ದಾಸ್ತಾನು ಘಟಕಗಳಿದ್ದರೆ ವರದಿ ಮಾಡುವಂತೆ ಅಧಿಕಾರಿಗಳು ಜನರನ್ನು ಆಗ್ರಹಿಸಿದ್ದಾರೆ. ರವಿವಾರ ತಡ ಸಂಜೆಯವರೆಗೂ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿದ್ದು, ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದೆ ಎಂದು ಹಿರಿಯ ಪೋಲಿಸ್ ಅಧಿಕಾರಿಯೋರ್ವರು ತಿಳಿಸಿದರು. ರಾಜ್ಯ ಸರಕಾರವು ಮೃತರ ವಿವರಗಳು ದೃಢಪಟ್ಟ ಬಳಿಕ ಕುಟುಂಬಗಳಿಗೆ ಪರಿಹಾರ ಘೋಷಿಸುವ ನಿರೀಕ್ಷೆಯಿದೆ.
ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲಿ: ಕಿಶೋರ್ ಶೆಟ್ಟಿ
ಮುಲ್ಕಿ : ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸ ಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ ಪ್ರೋತ್ಸಾಹ ಅಗತ್ಯ. ಕಲಾವಿದರಿಗೆ ತೊಂದರೆಯಾದಾಗ ಒಗ್ಗಟ್ಟಿನ ಧ್ವನಿಯಾಗಲು ಹಿಂದೆ ಮುಂದೆ ನೋಡುವುದು ಬೇಡ. ಒಕ್ಕೂಟ ಇನ್ನಷ್ಟು ವೃದ್ಧಿಸಬೇಕು. ಪೋಷಕರಿಂದ ಇದು ಸಾಧ್ಯವಾಗಲು ಸಾಧ್ಯ ಎಂದು ಮಂಗಳೂರು ತುಳು ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ಕಿಶೋರ್ ಡಿ. ಶೆಟ್ಟಿ ಹೇಳಿದರು. ಅವರು ಕದ್ರಿ ಲಯನ್ಸ್ ಅಶೋಕ ಭವನದಲ್ಲಿ ನಡೆದ ತುಳು ನಾಟಕ ಕಲಾವಿದರ ಒಕ್ಕೂಟದ ವಾರ್ಷಿಕ ಮಹಾಸಭೆ ಯಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ 2026-27ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸದಸ್ಯರಿಗೆ ಸಹಾಯ ಧನವನ್ನು ಹಸ್ತಾಂತರಿಸಲಾಯಿತು. ಹೆಚ್ಚುವರಿಯಾಗಿ ಕಾರ್ಯಕಾರಿ ಮಂಡಳಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು. ವಲಯದಲ್ಲಿನ ಸಂಘಟನೆಯ ಬಗ್ಗೆ ವಿಶೇಷವಾಗಿ ಚರ್ಚೆ ನಡೆಸಲಾಯಿತು. ಒಕ್ಕೂಟದ ಉಪಾಧ್ಯಕ್ಷರುಗಳಾದ ತಾರನಾಥ ಶೆಟ್ಟಿ ಬೊಳಾರ, ಗೋಕುಲ್ ಕದ್ರಿ, ಕಲಾವಿದರ ಕ್ಷೇಮನಿಧಿ ಪ್ರಧಾನ ಸಂಚಾಲಕ ಪ್ರದೀಪ್ ಆಳ್ವಾ ಕದ್ರಿ, ಕೋಶಾಧಿಕಾರಿ ಮೋಹನ್ ಕೊಪ್ಪಲ ಕದ್ರಿ, ಸಂಘಟನಾ ಕಾರ್ಯದರ್ಶಿ ಮಧು ಬಂಗೇರ ಕಲ್ಲಡ್ಕ ಉಪಸ್ಥಿತರಿದ್ದರು. ಜೊತೆ ಕಾರ್ಯದರ್ಶಿ ತುಳಸೀದಾಸ್ ಉರ್ವ ವರದಿ ವಾಚಿಸಿದರು. ಪ್ರದೀಪ್ ಆಳ್ವಾ ಕದ್ರಿ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ್ ಕುಮಾರ್ ಮಲ್ಲೂರ್ ಸ್ವಾಗತಿಸಿ, ಲೆಕ್ಕಪತ್ರ ಮಂಡಿಸಿ, ಕಾರ್ಯಕ್ರಮ ನಿರೂಪಿಸಿದರು.
ಎಸ್ಕೆಎಸ್ಸೆಸ್ಸೆಫ್ ಕೊಲ್ನಾಡು ವತಿಯಿಂದ ಮಜ್ಜಿಸುನ್ನೂರ್, ಸಮಸ್ತ 100ನೇ ವರ್ಷಾಚರಣೆಯ ಪ್ರಚಾರ ಸಮ್ಮೇಳನ
ಮುಲ್ಕಿ: ಎಸ್ಕೆಎಸ್ಸೆಸ್ಸೆಫ್ ಕೊಲ್ನಾಡು ಶಾಖೆಯ ವತಿಯಿಂದ 4ನೇ ವರ್ಷದ ಮಜ್ಜಿಸುನ್ನೂರ್ ಹಾಗೂ ಸಮಸ್ತ 100ನೇ ವರ್ಷಾಚರಣೆಯ ಪ್ರಚಾರ ಸಮ್ಮೇಳನವು ಶನಿವಾರ ಎಸ್ಕೆಎಸ್ಸೆಸ್ಸೆಫ್ ಮುಲ್ಕಿ ಕೊಲ್ನಾಡು ಶಾಖೆಯ ವಠಾರದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಮುಖ್ಯ ಪ್ರಭಾಷಣಗೈದ ಕೊಲ್ಪೆ ಬದ್ರಿಯಾ ಜುಮಾ ಮಸೀದಿಯ ಖತೀಬ್ ಇಸ್ಹಾಕ್ ಫೈಝಿ ಕುಕ್ಕಿಲ ಅವರು, ಒಂದು ಊರಿನಲ್ಲಿ ಮಸೀದಿಗಳ ನಿರ್ಮಾಣಕಿಂತಲೂ ಮುನ್ನ ಮದರಸಗಳ ನಿರ್ಮಾಣವಾಗಬೇಕು. ಆ ಮೂಲಕ ಊರಿನ ಮಕ್ಕಳಿಗೆ ಧಾರ್ಮಿಕ ವಿದ್ಯಾಭ್ಯಾಸ ನೀಡಿ ಮಸೀದಿಯ ಮಹತ್ವ, ಅದರಲ್ಲಿ ಪಾಲಿಸಬೇಕಿರುವ ಬಾಧ್ಯತೆಗಳ ತಿಳಿಹೇಳುವ ಕೆಲಸವಾಗಬೇಕು. ಊರಿನ ಯುವಕರು ಒಳ್ಳೆಯವರಾದರೆ ಇಡೀ ಊರು ಒಳ್ಳೆಯದಾ ಗುತ್ತದೆ ಎಂದ ಅವರು, ಇಂದು ಲೋಕಾರ್ಪಣೆಗೊಂಡಿರುವ ಎಸ್ಕೆಎಸ್ಸೆಸ್ಸೆಫ್ ನ ಆ್ಯಂಬುಲೆನ್ಸ್ ಸರ್ವ ಧರ್ಮೀಯರೂ ಉಪಯೋಗಿಸಿಕೊಳ್ಳಬಹುದು ಎಂದರು. ಇದೇ ಸಂದರ್ಭ ಎಸ್ಕೆಎಸ್ಸೆಸ್ಸೆಫ್ ದ.ಕ. ವೆಸ್ಟ್ ಜಿಲ್ಲಾಧ್ಯಕ್ಷರಾದ ಅಸ್ಸಯ್ಯದ್ ಅಮೀರ್ ತಂಞಳ್ ಅಲ್ ಬುಖಾರಿ ಕಿನ್ಯಾ ಹಾಗೂ ಅಸ್ಪಯ್ಯದ್ ಇಬ್ರಾಹಿಂ ಬಾದುಶ ತಂಬಳ್ ಅಲ್ ಬುಖಾರಿ ಮುರ್ಶಿದಿ ಆನೆಕಲ್ಲು ಇವರ ನೇತೃತ್ವದಲ್ಲಿ ಮಜ್ಲಿಸುನ್ನೂರ್ ನಡೆಯಿತು. ಬೊಳ್ಳೂರು ಮುಹಿಯುದ್ದೀನ್ ಜುಮಾ ಮಸೀದಿಯ ಖತೀಬ್ ಅಲ್ ಹಾಜ್ ಅಝ್ ಹರ್ ಫೈಝಿ ಬೊಳ್ಳೂರು ಉಸ್ತಾದ್ ಅವರು ದುವಾ ಆಶೀರ್ವಚನೆ ಗೈದರು. ಸಭಾ ಕಾರ್ಯಕ್ರಮಕ್ಕೂ ಮುನ್ನ ಸಮಸ್ತ ಕೇಂದ್ರ ಮುಶಾವರದ ಸದಸ್ಯರಾದ ಉಸ್ಕಾನ್ ಫೈಝಿ ತೋಡಾರು ಅವರು ಕೊಲ್ನಾಡು ಯೂನಿಟ್ ನ ನೂತನ ಆಂಬುಲೆನ್ಸ್ ನ್ನು ಲೋಕಾರ್ಪಣೆಗೊಳಿಸಿದರು. ಸಮಾರಂಭವನ್ನು ಮುಲ್ಕಿ ಕೊಲ್ನಾಡು ಶಾಫಿ ಜುಮಾ ಮಸೀದಿಯ ಖತೀಬ್ ಶರೀಫ್ ದಾರಿಮಿ ಅಲ್ ಹೈತಮಿ ಉದ್ಘಾಟಿಸಿದರು. ಜಮಾಅತ್ ಅಧ್ಯಕ್ಷ ಬಶೀರ್ ಅಹ್ಮದ್ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭ ಎಸ್ಕೆಎಸ್ಸೆಸ್ಸೆಫ್ ಗಾಗಿ ಹಗಲಿರುಳು ಶ್ರಮಿಸಿದ ಹಿರಿಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಅಲ್ಲದೆ, ಸಮಸ್ತ ನೂರನೇ ವರ್ಷದ ಪೋಸ್ಟರ್ ಬಿಡುಗಡೆ ನಡೆಯಿತು. ಸಮಾರಂಭದಲ್ಲಿ ಅಂಗರಗುಡ್ಡೆ ಬದ್ರಿಯಾ ಜುಮಾ ಮಸೀದಿಯ ಖತೀಬ್ ಜಾಫರ್ ಫೈಝಿ, ತ್ವಯ್ಯಿಬ್ ಫೈಝಿ, ಎಸ್ಕೆಎಸ್ಸೆಸ್ಸೆಫ್ ಕೊಲ್ನಾಡು ಶಾಖೆಯ ಗೌರವಾಧ್ಯಕ್ಷ ಎಂ.ಎಂ. ಬಾವಾ, ಮುಲ್ಕಿ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಬಿ.ಎಂ. ಆಸೀಫ್, ಎಸ್ಕೆಎಸ್ಸೆಸ್ಸೆಫ್ ದ.ಕ. ವೆಸ್ಟ್ ಸಂಘಟನಾ ಕಾರ್ಯದರ್ಶಿ ಶಾಹುಲ್ ಹಮೀದ್ ಸೂರಿಂಜೆ, ಕರ್ನಾಟಕ ರಾಜ್ಯ ಸಹಚಾರಿ ಅಧ್ಯಕ್ಷ ಇಮ್ತಿಯಾಝ್ ಇಡ್ಯಾ, ಕೊಲ್ನಾಡ್ ಫ್ರೆಂಡ್ಸ್ ಅಧ್ಯಕ್ಷ ಇಮ್ರಾನ್ ಕೊಲ್ನಾಡ್, ಸಮಾಜ ಸೇವಕ ತೌಸೀಫ್ ಕೊಲ್ನಾಡ್, ಬ್ಲಡ್ ಹಲ್ಪ್ ಲೈನ್ ಕರ್ನಾಟಕ ಉಸ್ತುವಾರಿ ಅಝೀಝ್ ಕೊಲ್ನಾಡ್, ಬಾವಾಸ್ ಅಕಾಡೆಮಿಯ ಪ್ರಾಂಶುಪಾಲರಾದ ಯಾಸೀರ್ ಅರಾಫತ್, ಕೊಲ್ನಾಡು ಯುವಕ ವೃಂದ ಅಧ್ಯಕ್ಷ ಮುಹಮ್ಮದ್ ಅಲಿ, ಉದ್ಯಮಿಗಳಾದ ಎ.ಎಚ್. ರಫೀಕ್, ಮುಝಮ್ಮಿಲ್, ಮುಹಮ್ಮದ್ ಸಾದೀಕ್ ಮೊದಲಾದವರು ಉಪಸ್ಥಿತರಿದ್ದರು.
'ಬಿಗ್ ಬಾಸ್' ಮನೆಯೊಳಗೆ ಧೂಳೆಬ್ಬಿಸಲು 'ವೈಲ್ಡ್ ಕಾರ್ಡ್' ಸ್ಪರ್ಧಿಯಾಗಿ ಬಂದ 'ಕಾಂತಾರ: ಚಾಪ್ಟರ್ 1' ವಿಲನ್!
ʻಬಿಗ್ ಬಾಸ್ ಕನ್ನಡ ಸೀಸನ್ 12ʼರ ಕಾರ್ಯಕ್ರಮಕ್ಕೆ ಮೊದಲ ವೈಲ್ಡ್ ಕಾರ್ಡ್ ಸ್ಪರ್ಧಿ ಎಂಟ್ರಿಯಾಗಿದೆ. ವಿಲನ್ ಪಾತ್ರಗಳ ಮೂಲಕ ಗಮನ ಸೆಳೆದಿರುವ ʻಮ್ಯೂಟೆಂಟ್ ರಘುʼ ಅವರು ಇದೀಗ ದೊಡ್ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದಾರೆ.
ಜಾರ್ಖಂಡ್ | ವೆಜ್ ಗ್ರಾಹಕನಿಗೆ ನಾನ್ ವೆಜ್ ಬಿರಿಯಾನಿ ನೀಡಿದ ಆರೋಪ : ರೆಸ್ಟೋರೆಂಟ್ ಮಾಲಕನ ಗುಂಡಿಕ್ಕಿ ಹತ್ಯೆ
ರಾಂಚಿ, ಅ. 19: ವೆಜ್ ಗ್ರಾಹಕನಿಗೆ ನಾನ್ ವೆಜ್ ಬಿರಿಯಾನಿ ನೀಡಿದ ಆರೋಪದಲ್ಲಿ ರೆಸ್ಟೋರೆಂಟ್ ಮಾಲಕನನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ರಾಂಚಿಯಲ್ಲಿ ನಡೆದಿದೆ ಎಂದು ಪೊಲೀಸರು ರವಿವಾರ ತಿಳಿಸಿದ್ದಾರೆ. ಕಾಂಕೆ-ಪಿಠೋರಿಯಾ ರಸ್ತೆಯಲ್ಲಿರುವ ಹೊಟೇಲ್ನಲ್ಲಿ ಶನಿವಾರ ರಾತ್ರಿ ಸುಮಾರು 11.30ಕ್ಕೆ ಈ ಘಟನೆ ನಡೆದಿದೆ. ಗ್ರಾಹಕನೋರ್ವ ವೆಜ್ ಬಿರಿಯಾನಿಗೆ ಆರ್ಡರ್ ಮಾಡಿ ಪಾರ್ಸಲ್ ಪಡೆದುಕೊಂಡು ಹೋಗಿದ್ದ. ಅನಂತರ ಆತ ಇತರರೊಂದಿಗೆ ಹಿಂದಿರುಗಿ ಬಂದು, ತನಗೆ ನಾನ್ ವೆಜ್ ಬಿರಿಯಾನಿ ನೀಡಲಾಗಿದೆ ಎಂದು ಆರೋಪಿಸಿದ ಎಂದು ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಪ್ರವೀಣ್ ಪುಷ್ಕರ್ ಹೇಳಿದ್ದಾರೆ. ಈ ಸಂದರ್ಭ ಭೋಜನ ಸೇವಿಸುತ್ತಿದ್ದ ರೆಸ್ಟೋರೆಂಟ್ ಮಾಲಕ ಹಾಗೂ ಕಾಂಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬಿಠಾದ ನಿವಾಸಿ ವಿಜಯ್ ಕುಮಾರ್ ನಾಗ್ (47) ಅವರ ಮೇಲೆ ಓರ್ವ ಆಕ್ರಮಣಕಾರ ಗುಂಡು ಹಾರಿಸಿದ. ಅದು ನಾಗ್ ಅವರ ಎದೆಗೆ ಹೊಕ್ಕಿತು. ತೀವ್ರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ, ಅವರು ದಾರಿ ಮಧ್ಯೆ ಮೃತಪಟ್ಟರು ಎಂದು ಅವರು ಹೇಳದ್ದಾರೆ. ಶಂಕಿತರನ್ನು ಬಂಧಿಸಲು ಹಲವು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ‘‘ಆಕ್ರೋಶಿತರಾದ ಸ್ಥಳೀಯರು ರವಿವಾರ ಬೆಳಗ್ಗೆ ಕಾಂಕೆ-ಪಿಠೋರಿಯಾ ರಸ್ತೆ ತಡೆ ನಡೆಸಿದರು ಹಾಗೂ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಆಕ್ರಮಣಕಾರರನ್ನು ಶೀಘ್ರದಲ್ಲಿ ಬಂಧಿಸಲಾಗುವುದು ಎಂದು ಪೊಲೀಸರು ಭರವಸೆ ನೀಡಿದ ಬಳಿಕ ಅವರು ರಸ್ತೆ ತಡೆ ತೆರವುಗೊಳಿಸಿದರು’’ ಎಂದು ಕಾಂಕೆ ಪೊಲೀಸ್ ಠಾಣೆಯ ಉಸ್ತುವಾರಿ ಪ್ರಕಾಶ್ ರಾಜಕ್ ತಿಳಿಸಿದ್ದಾರೆ. ಈ ಘಟನೆಯ ಹಿಂದೆ ಬೇರೆ ಏನಾದರೂ ಉದ್ದೇಶ ಇದೆಯೇ ಎಂಬ ಬಗ್ಗೆ ನಿರ್ಧರಿಸಲು ತನಿಖೆ ನಡೆಯುತ್ತಿದೆ ಪೊಲೀಸರು ಹೇಳಿದ್ದಾರೆ.
1.6 ಕೋ.ರೂ. ಮೌಲ್ಯದ 1.2 ಕಿಲೋ.ಗ್ರಾಂ. ಚಿನ್ನ ಕಳ್ಳ ಸಾಗಾಟ : ಮುಂಬೈ ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಬಂಧನ
ಮುಂಬೈ, ಅ. 19: 1.6 ಕೋ. ರೂ. ಮೌಲ್ಯದ ವಿದೇಶಿ ಮೂಲದ 1.2 ಕಿ.ಗ್ರಾಂ. ಚಿನ್ನವನ್ನು ಅಕ್ರಮ ಸಾಗಾಟ ಮಾಡಲು ಪ್ರಯತ್ನಿಸಿದ ಆರೋಪದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್ಐ) ಅಧಿಕಾರಿಗಳು ಮುಂಬೈ ವಿಮಾನ ನಿಲ್ದಾಣದ ಇಬ್ಬರು ಸ್ವಚ್ಛತಾ ಸಿಬ್ಬಂದಿಯನ್ನು ಬಂಧಿಸಿದ್ದಾರೆ. ಚಿನ್ನ ಕಳ್ಳ ಸಾಗಾಟದ ಗುಂಪು ವಿಮಾನದಲ್ಲಿ ಚಿನ್ನವನ್ನು ಅಡಗಿಸಿ ಇಡಲು ವಿದೇಶದಿಂದ ಆಗಮಿಸುವ ಪ್ರಯಾಣಿಕರನ್ನು ಬಳಸುತ್ತದೆ. ಅನಂತರ ಈ ತಂತ್ರದ ಬಗ್ಗೆ ತಿಳಿದ ಅಥವಾ ನಿರ್ಬಂಧಿತ ಪ್ರದೇಶ ಪ್ರವೇಶಿಸಲು ಅನುಮತಿ ಹೊಂದಿದ ವಿಮಾನ ನಿಲ್ದಾಣದ ಸಿಬ್ಬಂದಿ ಅದನ್ನು ರಹಸ್ಯವಾಗಿ ಹೊರಗೆ ತೆಗೆಯುತ್ತಾರೆ ಎಂಬುದನ್ನು ತನಿಖೆ ಸೂಚಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಬ್ಬರು ಆರೋಪಿಗಳಾದ ವಿಮಾನ ನಿಲ್ದಾಣದ ಸೇವಾ ಕಂಪೆನಿಯ ಉದ್ಯೋಗಿಗಳನ್ನು ಶನಿವಾರ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇಲ್ಲಿನ ಛತ್ರಪತಿ ಶಿವಾಜಿ ಮಹಾರಾಜ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ವಿದೇಶಿ ಮೂಲದ ಚಿನ್ನವನ್ನು ವಿಮಾನದೊಳಗೆ ಬಚ್ಚಿಟ್ಟು ತರಲಾಗುತ್ತಿದೆ. ಅನಂತರ ವಿಮಾನ ನಿಲ್ದಾಣದ ಸಿಬ್ಬಂದಿ ಮೂಲಕ ಪಡೆಯಲಾಗುತ್ತಿದೆ ಎಂಬ ನಿರ್ದಿಷ್ಟ ಮಾಹಿತಿಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಹೊಂದಿತ್ತು. ಆದುದರಿಂದ ವಿಮಾನ ನಿಲ್ದಾಣದಲ್ಲಿ ನಿಗಾ ವಹಿಸಲಾಯಿತು. ಸ್ವಚ್ಛತಾ ಸಿಬ್ಬಂದಿಯ ತಂಡದ ನಾಯಕ ಲಗುಬಗೆಯಿಂದ ಪೊಟ್ಟಣವನ್ನು ಏರೋಬ್ರಿಜ್ ಸ್ಟೈರ್ಕೇಸ್ ಮೇಲೆ ಇರಿಸಿರುವುದನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು ಗಮನಿಸಿದರು. ನಂತರ ಪೊಟ್ಟಣವನ್ನು ವಶಪಡಿಸಿಕೊಂಡಾಗ, ಬಿಳಿ ಬಟ್ಟೆಯೊಳಗೆ ಮೇಣದ ರೂಪದಲ್ಲಿ ಚಿನ್ನದ ಹುಡಿ ಇರುವುದು ಪತ್ತೆಯಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಬ್ಬರು ಸಿಬ್ಬಂದಿಯನ್ನು ಕೂಡಲೇ ವಶಕ್ಕೆ ತೆಗೆದುಕೊಳ್ಳಲಾಯಿತು. ವಿಚಾರಣೆ ಸಂದರ್ಭ ಪತ್ತೆಯಾಗುವುದನ್ನು ತಪ್ಪಿಸಲು ಪೊಟ್ಟಣವನ್ನು ಅಡಗಿಸಿ ಇರಿಸಿರುವುದನ್ನು ಅವರು ಒಪ್ಪಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭೋಪಾಲ್,ಅ.19: ಹೆಣ್ಣುಮಕ್ಕಳು ಹಿಂದುಯೇತರರ ಮನೆಗಳಿಗೆ ಹೋಗದಂತೆ ಅವರನ್ನು ಪೋಷಕರು ತಡೆಯಬೇಕು. ಒಂದು ವೇಳೆ ಅವರು ಒಪ್ಪದೇ ಇದ್ದಲ್ಲಿ ಅವರ ಕಾಲುಗಳನ್ನು ಮುರಿದುಹಾಕಿ ಎಂದು ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಹೇಳಿರುವುದು ಭಾರೀ ವಿವಾದಕ್ಕೆ ಗ್ರಾಸವಾಗಿದೆ. ಪ್ರಜ್ಞಾಸಿಂಗ್ ಹೇಳಿಕೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದ್ದು, ಬಿಜೆಪಿಯು ದ್ವೇಷವನ್ನು ಹರಡುತ್ತಿದೆಯೆಂದು ಆಪಾದಿಸಿದೆ. ಈ ತಿಂಗಳ ಆರಂಭದಲ್ಲಿ ಭೋಪಾಲದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಜ್ಞಾ ಸಿಂಗ್ ಅವರು, ಒಂದು ವೇಳೆ ಪುತ್ರಿಯರು ಪಾಲಕರ ಇಚ್ಛೆಗೆ ವಿರುದ್ಧವಾಗಿ ನಡೆದುಕೊಂಡಲ್ಲಿ ಅವರನ್ನು ದೈಹಿಕವಾಗಿ ದಂಡಿಸಬೇಕೆಂದು ಕರೆ ನೀಡಿದ್ದರು. ‘‘ಒಂದು ವೇಳೆ ನಮ್ಮ ಪುತ್ರಿಯರು ನಮಗೆ ವಿಧೇಯರಾಗಿ ನಡೆದುಕೊಳ್ಳದಿದ್ದಲ್ಲಿ, ಆಕೆ ಹಿಂದುಯೇತರರ ಮನೆಗೆ ಹೋದಲ್ಲಿ ನಿಮ್ಮ ಮನಸ್ಸನ್ನು ಗಟ್ಟಿ ಮಾಡಿಕೊಂಡು, ಆಕೆಯ ಕಾಲುಗಳನ್ನು ಮುರಿಯುವಂತೆ ಮಾಡಿರಿ. ಮೌಲ್ಯಗಳನ್ನು ಪಾಲಿಸದೆ ಇದ್ದವರು ಹಾಗೂ ಅವರ ಪಾಲಕರ ಮಾತುಗಳನ್ನು ಕೇಳದೆ ಇದ್ದವರಿಗೆ ಶಿಕ್ಷೆಯಾಗಲೇಬೇಕು. ಅವರ ಒಳಿತಿಗಾಗಿ ನೀವು ನಿಮ್ಮ ಮಕ್ಕಳಿಗೆ ಹೊಡೆಯಬೇಕಿದ್ದಲ್ಲಿ, ಹಿಂದೇಟುಹಾಕಬೇಡಿ. ತಮ್ಮ ಮಕ್ಕಳ ಉತ್ತಮ ಭವಿಷ್ಯ ದೃಷ್ಟಿಯಿಂದ ಪಾಲಕರು ಈ ಕ್ರಮಗಳನ್ನು ಕೈಗೊಳ್ಳುವುದರಿಂದ ಅವರು ತಮ್ಮ ಮಕ್ಕಳು ತುಂಡುತುಂಡಾಗಿ ಕತ್ತರಿಸಲ್ಪಟ್ಟು ಸಾವನ್ನಪ್ಪದಂತೆ ನೋಡಿಕೊಳ್ಳುತ್ತಾರೆ’’ ಎಂದು ಪ್ರಜ್ಞಾ ಸಿಂಗ್ ಅವರು ಕಾರ್ಯಕ್ರಮದಲ್ಲಿ ಹೇಳಿದ್ದರು. ಈ ಭಾಷಣದ ವೀಡಿಯೊವನ್ನು ಅವರು ತನ್ನ ಫೇಸ್ಬುಕ್ನಲ್ಲಿ ಅಪ್ಲೋಡ್ ಮಾಡಿದ್ದು, ಬಾರೀ ವೈರಲ್ ಆಗಿದೆ. ‘‘ಮೌಲ್ಯಗಳನ್ನು ಅನುಸರಿಸದ, ಪಾಲಕರ ಮಾತು ಕೇಳದ, ಹಿರಿಯರನ್ನು ಗೌರವಿಸದ ಹಾಗೂ ಮನೆಯಿಂದ ಓಡಿಹೋಗಲು ಸಿದ್ಧವಿರುವಂತಹ ಹೆಣ್ಣುಮಕ್ಕಳ ಬಗ್ಗೆ ಕಟ್ಟುನಿಟ್ಟಿನ ನಿಗಾವಿರಿಸಿ. ಅವರನ್ನು ಮನೆಯಿಂದ ಹೊರಹೋಗಲು ಬಿಡದಿರಿ. ಅವರಿಗೆ ಹೊಡೆದು, ಬುದ್ದಿವಾದ ಹೇಳಿ. ಇಲ್ಲವೇ, ಅವರನ್ನು ಸಮಾಧಾನ ಪಡಿಸಿ, ಪ್ರೀತಿಸುತ್ತಾ ಅಥವಾ ಬೈದು ನಿಲ್ಲಿಸಿ ಎಂದು ಪ್ರಜ್ಞಾಸಿಂಗ್ ಹೇಳಿದ್ದರು. ಥಾಕೂರ್ ಅವರು ದ್ವೇಷದ ಭಾಷಣಕ್ಕೆ ಕಾಂಗ್ರೆಸ್ ವಕ್ತಾರ ಭೂಪೇಂದ್ರ ಗುಪ್ತಾ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮಧ್ಯಪ್ರದೇಶದಲ್ಲಿ ಮತಾಂತರದ ಕೇವಲ ಏಳು ಪ್ರಕರಣಗಳಷ್ಟೇ ವರದಿಯಾಗಿದ್ದು, ಅವುಗಳಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯೂ ಆಗಿದೆ. ಹೀಗಿರುವಾಗ ಯಾಕೆ ದ್ವೇಷ ಹಾಗೂ ಗದ್ದಲವನ್ನು ಹರಡಲಾಗುತ್ತಿದೆ ಎಂದು ಅವರು ಪ್ರಶ್ನಿಸಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ
ಮಂಗಳೂರು, ಅ.19: ದ.ಕ.ಜಿಲ್ಲೆಯ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಶನಿವಾರ ರಾತ್ರಿ ಮತ್ತು ರವಿವಾರ ಸಂಜೆ ಗುಡುಗು ಸಹಿತ ಮಳೆಯಾಗಿದೆ. ಜಿಲ್ಲೆಯಲ್ಲಿ ಶನಿವಾರ ಬೆಳಗ್ಗಿನ 8ರಿಂದ ರವಿವಾರ ಬೆಳಗ್ಗಿನ 8 ಗಂಟೆಯವರೆಗೆ 10.1 ಮಿಮಿ ಮಳೆ ದಾಖಲಾಗಿದೆ. ಜಿಲ್ಲೆಯಲ್ಲಿ ಇನ್ನೂ 10 ದಿನಗಳ ಕಾಲ ಭಾರೀ ಅಥವಾ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದ ಪ್ರಭಾವವು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಅದರ ಪರಿಣಾಮ ದ.ಕ.ಜಿಲ್ಲೆಯಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿವೆ ಎಂದು ಹವಾಮಾನ ಇಲಾಖೆಯು ಮಾಹಿತಿ ನೀಡಿದೆ. ರವಿವಾರ ಸಂಜೆ ಸುರಿದ ದಿಢೀರ್ ಮಳೆಗೆ ನಗರದ ಪಂಪ್ವೆಲ್ನಲ್ಲಿ ಸಂಚಾರ ಜಾಮ್ ಆಯಿತು. ಮಳೆ ನೀರು ಸರಾಗವಾಗಿ ಹರಿಯಲಾಗದೆ ರಸ್ತೆಯಲ್ಲೇ ನಿಂತ ಕಾರಣ ವಾಹನಿಗರು ಪರದಾಡಬೇಕಾಯಿತು. ಪ್ರತೀ ಬಾರಿಯ ಬಿರುಸಿನ ಮಳೆಗೆ ಪಂಪ್ವೆಲ್ ರಸ್ತೆಯು ಜಲಾವೃತವಾಗುತ್ತಿದ್ದು, ರವಿವಾರ ಸಂಜೆಯ ದೃಶ್ಯವು ವ್ಯಂಗ್ಯದೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.
ಕಾಂಗ್ರೆಸ್ ಸರ್ಕಾರದ ಪ್ರಚಾರಕ್ಕಾಗಿ 1076 ಕೋಟಿ ರೂಪಾಯಿ ಖರ್ಚು!
ಸಾಮಾನ್ಯವಾಗಿ ಕಾಂಗ್ರೆಸ್ ಪಕ್ಷವು ಪ್ರಚಾರಕ್ಕಾಗಿ ಬಿಜೆಪಿ ಕೋಟ್ಯಾಂತರ ರೂಪಾಯಿ ಹಣವನ್ನು ಖರ್ಚು ಮಾಡುತ್ತಿದೆ ಎಂದು ದೂರುತ್ತಿತ್ತು. ಇದೀಗ ಕಾಂಗ್ರೆಸ್ ಪಕ್ಷದ ಸರದಿ ಎನ್ನುವಂತಿದೆ. ಕಾಂಗ್ರೆಸ್ ಪಕ್ಷವು ಪ್ರಚಾರ ಕಾರ್ಯಕ್ಕಾಗಿ ಕೋಟ್ಯಾಂತರ ರೂಪಾಯಿ ವೆಚ್ಚ ಮಾಡಿದೆ ಎನ್ನುವ ವಿಷಯವು ಇದೀಗ ಬಹಿರಂಗವಾಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ. ಕರ್ನಾಟಕ ಕಾಂಗ್ರೆಸ್ ಪಕ್ಷವು ಈ ವಿಚಾರದಲ್ಲಿ ಭಾರೀ ಮುಜುಗರಕ್ಕೆ ಒಳಗಾಗಿದೆ. ಈ
ಜಾಮಿಯಾ ಸಅದಿಯಾ ಸನದುದಾನ ಸಮ್ಮೇಳನದ ಧ್ವಜಾರೋಹಣ
ಕಾಸರಗೋಡು: ಸಅದಿಯ್ಯ ಸನದುದಾನ, ತಾಜುಲ್ ಉಲಮಾ, ನೂರುಲ್ ಉಲಮಾ ವಾರ್ಷಿಕ ಹರಕೆ ಕಾರ್ಯಕ್ರಮಕ್ಕೆ ರವಿವಾರ ಧ್ವಜಾರೋಹಣ ನೆರವೇರಿಸಲಾಯಿತು. ಸಅದಿಯ್ಯ ಕಾರ್ಯದರ್ಶಿ ಸಯ್ಯಿದ್ ಝೈನುಲ್ ಆಬಿದೀನ್ ಮುತ್ತುಕೊಯ ಅಲ್ಅಹ್ದಲ್ ಕನ್ನವಂ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಖಜಾಂಚಿ ಕಲ್ಲಟ್ರ ಮಾಹಿನ್ ಹಾಜಿ, ಕಾರ್ಯದರ್ಶಿ ಕೆ.ಪಿ.ಹುಸೈನ್ ಸಅದಿ ಕೆ.ಸಿ.ರೋಡ್, ಕೆ.ಕೆ. ಹುಸೈನ್ ಬಾಖವಿ, ಸಯ್ಯಿದ್ ಜಾಫರ್ ಸ್ವಾದಿಕ್ ತಂಳ್ ಮಾಣಿಕ್ಕೋತ್, ಉಬೈದುಲ್ಲಾಹಿ ಸಅದಿ ನದ್ವಿ, ಮಕ್ಕಳಶೇರಿ ಅಬ್ದುಲ್ಲಾ ಬಾಖವಿ, ಇಬ್ರಾಹಿಂ ಕಲ್ಲತ್ರ, ಪಳ್ಳಂಕೋಡ್ ಅಬ್ದುಲ್ ಖಾದಿರ್ ಮದನಿ, ಮುಲ್ಲಚೇರಿ ಅಬ್ದುಲ್ ಖಾದಿರ್ ಹಾಜಿ, ಕೊಳ್ಳಂಪಾಡಿ ಅಬ್ದುಲ್ ಖಾದಿರ್ ಸಅದಿ, ಶಾಫಿ ಹಾಜಿ ಕೀಯೂರು, ಕರೀಂ ಸಅದಿ ಏಣಿಯಾಡಿ, ಮೊಯಿದು ಸಅದಿ ಚೇರೂರು, ಅಸ್ಕರ್ ಬಾಖವಿ, ಇಸ್ಮಾಯೀಲ್ ಸಅದಿ ಪಾರಪ್ಪಳ್ಳಿ, ಅಬ್ದುಲ್ಲಾ ಸಅದಿ ಚಿಯ್ಯೂರು, ಅಬ್ದುಲ್ ಫೈಝಿ ಮೊಗ್ರಾಲ್, ಇಸ್ಹಾಕ್ ಫೈಝಿ ಶಿರಿಯಾ, ಡಾ. ಸ್ವಲಾಹುದ್ದೀನ್ ಆಯ್ಯೂಬಿ, ಅಬ್ದುಲ್ ಹಮೀದ್ ಮೌಲವಿ ಆಲಂಪಾಡಿ, ಶರೀಫ್ ಸಅದಿ ಮಾವಿಳಾಡಂ, ಅಹ್ಮದಲಿ ಬೆಂಡಿಚಾಲ್, ಅಬ್ದುಲ್ ರಝಾಕ್ ಹಾಜಿ ರೋಸಿ ರೋಮಾಣಿ, ರಝಾಕ್ ಹಾಜಿ ಮೇಲ್ಪರಂಪ್, ಸಿ.ಪಿ. ಅಬ್ದುಲ್ಲಾ ಹಾಜಿ ಚೆರುಂಬ, ಅಬ್ದುಸ್ಸಲಾಂ ದೇಳಿ, ಅಬ್ದುಲ್ ಖಾದಿರ್ ಹಾಜಿ ರಿಫಾಈ, ಅಬ್ದುಲ್ ಖಾದಿರ್ ಸಅದಿ ಕೊಲ್ಲಂಬಾಡಿ, ಹಾಫಿಝ್ ಅಹ್ಮದ್ ಸಅದಿ, ಶರಫುದ್ದೀನ್ ಸಅದಿ, ಶಾಫಿ ಸಅದಿ ಶಿರಿಯಾ, ಅಬ್ದುಲ್ ಹಮೀದ್ ಸಅದಿ, ಶಿಹಾಬ್ ಪಾರಪ್ಪ, ತಾಜುದ್ದೀನ್ ಉದುಮ ಮತ್ತಿತರರು ಉಪಸ್ಥಿತರಿದ್ದರು.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ನಿರಾಶೆ ಅನುಭವಿಸಿದೆ. ಮಳೆಯಿಂದಾಗಿ ಡಕ್ ವರ್ತ್-ಲೂಯಿಸ್-ಸ್ಟರ್ನ್ ನಿಯಮದ ಅನ್ವಯ ಭಾರತ-ಆಸ್ಟ್ರೇಲಿಯಾ ಏಕದಿನ ಪಂದ್ಯದ ಗುರಿ ಬದಲಾಯಿತು. ಭಾರತ ಗಳಿಸಿದ 136 ರನ್ಗಳಿಗೆ ಪ್ರತಿಯಾಗಿ ಆಸ್ಟ್ರೇಲಿಯಾಕ್ಕೆ 131 ರನ್ ಗಳ ಗುರಿ ನೀಡಲಾಯಿತು. ಗುರಿಯನ್ಜು ಹೆಚ್ಚು ಮಾಡುವ ಬದಲು ಕಡಿತಗಳಿಸಲಾಯಿತು. ಇದನ್ನು ಸರಿಯಾಗಿ ಬಳಕೆ ಮಾಡಿಕೊಂಡ ಆಸ್ಟ್ರೇಲಿಯಾ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು. ರೋಹಿತ್, ಕೊಹ್ಲಿ ವೈಫಲ್ಯ ಭಾರತಕ್ಕೆ ಹಿನ್ನಡೆ ತಂದಿತು.
ಮಂಗಳೂರು: ವಿಡಿಯೋ ವೈರಲ್ ಮಾಡಿದ ಆರೋಪ; ಯುವತಿ ಸೆರೆ
ಮಂಗಳೂರು,ಅ.19: ಇಬ್ಬರು ಸ್ನೇಹಿತೆಯರು ಬಟ್ಟೆ ಬದಲಾಯಿಸುವ ವೇಳೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ಆರೋಪದಡಿ ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಳಸದ ಪ್ರಸಕ್ತ ನಗರದ ಕಂಕನಾಡಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ನಿರೀಕ್ಷಾ ಎಂಬಾಕೆಯನ್ನು ಕದ್ರಿ ಪೋಲೀಸರು ರವಿವಾರ ಬಂಧಿಸಿದ್ದಾರೆ. ಆರೋಪಿ ನಿರೀಕ್ಷಾಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆಕೆಗೆ ಎರಡು ವಾರಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನಿರೀಕ್ಷಾಳ ಸ್ನೇಹಿತೆಯರಾದ ಇಬ್ಬರು ಯುವತಿಯರು ಕದ್ರಿ ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ. ಕಾರ್ಕಳದ ನಿಟ್ಟೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಅಭಿಷೇಕ್ ಆಚಾರ್ಯ ತನ್ನ ಡೆತ್ನೋಟ್ನಲ್ಲಿ ನಿರೀಕ್ಷಾ ತನ್ನ ಸ್ನೇಹಿತೆಯರು ಬಟ್ಟೆ ಬದಲಾಯಿಸುವ ವಿಡಿಯೋ ಮಾಡಿ ಬೇರೆಯವರಿಗೆ ಕಳುಹಿಸಿರುವುದಾಗಿ ಬರೆದಿದ್ದುದು ಕೂಡಾ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆರೋಪಿ ನಿರೀಕ್ಷಾಳು ಅಭಿಷೇಕ್ಗೂ ವಿಡಿಯೋ ಕಳುಹಿಸಿದ್ದಳು. ಆ ವಿಡಿಯೋ ಅಭಿಷೇಕ್ ಅಡ್ಮಿನ್ ಆಗಿದ್ದ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಫಾರ್ವರ್ಡ್ ಆಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಬೆಂಗಳೂರಿನಲ್ಲಿ ಮನೆಗೆಲಸದ ಮಹಿಳೆಗೆ ತಿಂಗಳಿಗೆ 45,000 ರೂ. ಸಂಬಳ ನೀಡುವ ವಿದೇಶಿ ಮಹಿಳೆ! ಜಾಲತಾಣದಲ್ಲಿ ಭಾರೀ ಚರ್ಚೆ
ಬೆಂಗಳೂರಿನಲ್ಲಿ ರಷ್ಯಾದ ಮಹಿಳೆಯೊಬ್ಬರು ತಮ್ಮ ಮನೆಗೆಲಸದವರಿಗೆ 45,000 ರೂ. ಸಂಬಳ ನೀಡುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕೆಲಸದ ಗುಣಮಟ್ಟಕ್ಕೆ ಒತ್ತು ನೀಡುವ ಅವರು, ಹಂತ ಹಂತವಾಗಿ ಸಂಬಳ ಏರಿಕೆ ಮತ್ತು ಉದ್ಯೋಗಿಗಳಿಗೆ ಬೆಂಬಲ ನೀಡುವ ಮೂಲಕ ವೃತ್ತಿಪರತೆಯನ್ನು ಪ್ರೋತ್ಸಾಹಿಸುತ್ತಾರೆ. ಈ ಬಗ್ಗೆ ವಿವರ ಇಲ್ಲಿದೆ.
ಹೊಸದಿಲ್ಲಿ: ಪ್ರತಿ ವರ್ಷ ಅಕ್ಟೋಬರ್ 21 ರಂದು ಭಾರತವು ಪೊಲೀಸ್ ಸಂಸ್ಮರಣಾ ದಿನವನ್ನು (Police Commemoration Day) ಆಚರಿಸುತ್ತದೆ. ಇದು ದೇಶದ ಆಂತರಿಕ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆಗಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟ ವೀರ ಪೊಲೀಸ್ ಸಿಬ್ಬಂದಿಯ ತ್ಯಾಗ, ಬಲಿದಾನ ಮತ್ತು ಸೇವೆಗೆ ಇಡೀ ರಾಷ್ಟ್ರ ಕೃತಜ್ಞತೆ ಸಲ್ಲಿಸುವ ಪವಿತ್ರ ದಿನವಾಗಿದೆ. ಸಮಾಜದ ಶಾಂತಿಗಾಗಿ ಹಗಲಿರುಳು ಶ್ರಮಿಸುವಾಗ ತಮ್ಮ ಪ್ರಾಣವನ್ನೇ ಅರ್ಪಿಸಿದ ಸಾವಿರಾರು ಪೊಲೀಸರ ಶೌರ್ಯವನ್ನು ಸ್ಮರಿಸಲು ಈ ದಿನವನ್ನು ಮೀಸಲಿಡಲಾಗಿದೆ. ಈ ದಿನಾಚರಣೆಯ ಹಿಂದೆ ಒಂದು ಶೌರ್ಯದ ಮತ್ತು ದುರಂತದ ಕಥೆಯಿದೆ. October 21, 1959 ರಂದು ಲಡಾಖ್ನ ಹಾಟ್ ಸ್ಪ್ರಿಂಗ್ಸ್ ಎಂಬ ಪ್ರದೇಶದಲ್ಲಿ, ಚೀನಾದ ಸೈನಿಕರು ಹೊಂಚು ಹಾಕಿ ಭಾರತದ ಗಡಿ ಕಾಯುತ್ತಿದ್ದ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (CRPF) ಮೇಲೆ ಭೀಕರ ದಾಳಿ ನಡೆಸಿದರು. ಈ ದಾಳಿಯಲ್ಲಿ, ಹತ್ತು ವೀರ ಭಾರತೀಯ ಪೊಲೀಸರು ದೇಶಕ್ಕಾಗಿ ತಮ್ಮ ಪ್ರಾಣವನ್ನು ಬಲಿದಾನ ಮಾಡಿದರು. ಅದರಲ್ಲಿ ಸರ್ವಧರ್ಮೀಯರೂ ಇದ್ದರು. ಅವರ ಈ ಅಪ್ರತಿಮ ಶೌರ್ಯ ಮತ್ತು ತ್ಯಾಗದ ನೆನಪಿಗಾಗಿ, ಪ್ರತಿ ವರ್ಷ ಅಕ್ಟೋಬರ್ 21 ಅನ್ನು ಪೊಲೀಸ್ ಸಂಸ್ಮರಣಾ ದಿನವನ್ನಾಗಿ ಆಚರಿಸಲು ನಿರ್ಧರಿಸಲಾಯಿತು. ಅಂದಿನಿಂದ, ಈ ದಿನವು ರಾಜ್ಯ ಪೊಲೀಸ್ ಪಡೆಗಳು ಮತ್ತು ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳ (CAPFs) ಎಲ್ಲಾ ಹುತಾತ್ಮರಿಗೆ ಗೌರವ ಸಲ್ಲಿಸುವ ದಿನವಾಗಿ ಆಚರಿಸಲ್ಪಡುತ್ತಿದೆ. ಈ ವರ್ಷ ಪೊಲೀಸ್ ಸಂಸ್ಮರಣಾ ದಿನ ಮುಖ್ಯ ಕಾರ್ಯಕ್ರಮವು ನವದೆಹಲಿಯ ಚಾಣಕ್ಯಪುರಿಯಲ್ಲಿರುವ ರಾಷ್ಟ್ರೀಯ ಪೊಲೀಸ್ ಸ್ಮಾರಕದಲ್ಲಿ ನಡೆಯಲಿದೆ. ಈ ಸ್ಮಾರಕವನ್ನು 2018 ರಲ್ಲಿ ಇದೇ ದಿನದಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರಕ್ಕೆ ಸಮರ್ಪಿಸಿದ್ದರು. ಇದು ದೇಶಕ್ಕಾಗಿ ಪ್ರಾಣ ತೆತ್ತ ಪೊಲೀಸರ ಶೌರ್ಯದ ಸಂಕೇತವಾಗಿದೆ. ಇಲ್ಲಿರುವ 30 ಅಡಿ ಎತ್ತರದ ಗ್ರಾನೈಟ್ ಶಿಲ್ಪವು ಪೊಲೀಸರ ಶಕ್ತಿ ಮತ್ತು ತ್ಯಾಗದ ಸಂಕೇತವಾಗಿ ನಿಂತಿದೆ. ಅದರ ಜೊತೆಗೆ, 'ಶೌರ್ಯದ ಗೋಡೆ' (Wall of Valour) ಮೇಲೆ ದೇಶಕ್ಕಾಗಿ ತಮ್ಮನ್ನು ಅರ್ಪಿಸಿಕೊಂಡ ಸಾವಿರಾರು ಹುತಾತ್ಮರ ಹೆಸರುಗಳನ್ನು ಕೆತ್ತಲಾಗಿದೆ. ಬೆಳಿಗ್ಗೆ ನಡೆಯುವ ಕಾರ್ಯಕ್ರಮದಲ್ಲಿ, ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ಮತ್ತು ದೆಹಲಿ ಪೊಲೀಸ್ ಜಂಟಿ ಪಥಸಂಚಲನವನ್ನು ನಡೆಸಲಿವೆ. ರಕ್ಷಣಾ ಸಚಿವರಾದ ರಾಜ್ನಾಥ್ ಸಿಂಗ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅವರೊಂದಿಗೆ, ಕೇಂದ್ರ ಗೃಹ ಖಾತೆ ರಾಜ್ಯ ಸಚಿವರು, ಪೊಲೀಸ್ ಹಿನ್ನೆಲೆಯುಳ್ಳ ಸಂಸದರು, ಮತ್ತು ಎಲ್ಲಾ CAPFs/CPOs ಮುಖ್ಯಸ್ಥರು NPM ನಲ್ಲಿ ಹುತಾತ್ಮರಿಗೆ ಗೌರವ ನಮನ ಸಲ್ಲಿಸಲಿದ್ದಾರೆ. ಈ ಕಾರ್ಯಕ್ರಮವನ್ನು ದೂರದರ್ಶನದಲ್ಲಿ ನೇರ ಪ್ರಸಾರ ಮಾಡಲಾಗುವುದು, ಪೊಲೀಸ್ ವೆಬ್ಸೈಟ್ಗಳಲ್ಲಿ ವೆಬ್ಕಾಸ್ಟ್ ಮಾಡಲಾಗುವುದು ಮತ್ತು ಆಲ್ ಇಂಡಿಯಾ ರೇಡಿಯೋ ಹಾಗೂ ಮಾಧ್ಯಮಗಳು ವ್ಯಾಪಕ ಪ್ರಚಾರ ನೀಡಲಿವೆ. ದೆಹಲಿಯ ಮುಖ್ಯ ಕಾರ್ಯಕ್ರಮದ ಜೊತೆಗೆ, ದೇಶದಾದ್ಯಂತ ಪೊಲೀಸ್ ಪಡೆಗಳು ತಮ್ಮ ವೀರರಿಗೆ ಗೌರವ ಸಲ್ಲಿಸಲಿವೆ. CAPFs/CPOs ವತಿಯಿಂದ October 22 ರಿಂದ 30 ರವರೆಗೆ ವಿವಿಧ ಸ್ಮರಣಾರ್ಥ ಕಾರ್ಯಕ್ರಮ ಗಳನ್ನು ಆಯೋಜಿಸಲಾಗುವುದು. ಈ ಕಾರ್ಯಕ್ರಮಗಳಲ್ಲಿ ಹುತಾತ್ಮರ ಕುಟುಂಬ ಸದಸ್ಯರು ಕೂಡ ಭಾಗವಹಿಸಲಿದ್ದಾರೆ. ಅದೇ ರೀತಿ, ಎಲ್ಲಾ ರಾಜ್ಯ ಪೊಲೀಸ್ ಪಡೆಗಳು ತಮ್ಮ ರಾಜ್ಯಗಳಲ್ಲಿ ಇದೇ ರೀತಿಯ ಕಾರ್ಯಕ್ರಮಗಳನ್ನು ನಡೆಸಲಿವೆ. ದೇಶಾದ್ಯಂತ ಸ್ಮರಣಾರ್ಥ ಕಾರ್ಯಕ್ರಮಗಳು ದೆಹಲಿಯ ಮುಖ್ಯ ಕಾರ್ಯಕ್ರಮದ ಜೊತೆಗೆ, ದೇಶದಾದ್ಯಂತ ಪೊಲೀಸ್ ಪಡೆಗಳು ತಮ್ಮ ವೀರರಿಗೆ ಗೌರವ ಸಲ್ಲಿಸಲಿವೆ. ಅಕ್ಟೋಬರ್ 22 ರಿಂದ 30 ರವರೆಗೆ, ಪೊಲೀಸ್ ಬ್ಯಾಂಡ್ ಪ್ರದರ್ಶನಗಳು, ಮೋಟಾರ್ ಸೈಕಲ್ ರ್ಯಾಲಿಗಳು, 'ಹುತಾತ್ಮರಿಗಾಗಿ ಓಟ' (Run for Martyrs), ರಕ್ತದಾನ ಶಿಬಿರಗಳು ಹಾಗೂ ಮಕ್ಕಳಿಗಾಗಿ ಪ್ರಬಂಧ ಮತ್ತು ಚಿತ್ರಕಲಾ ಸ್ಪರ್ಧೆಗಳಂತಹ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಈ ಕಾರ್ಯಕ್ರಮಗಳು ಭಾರತೀಯ ಪೊಲೀಸರ ಶೌರ್ಯ, ಶಿಸ್ತು ಮತ್ತು ನಿಸ್ವಾರ್ಥ ಸೇವೆಯ ಮನೋಭಾವವನ್ನು ಎತ್ತಿ ಹಿಡಿಯುತ್ತವೆ.
School Holiday: ಜಾತಿಗಣತಿ ಅಕ್ಟೋಬರ್ 31 ಶುಕ್ರವಾರ ತನಕ ದಿಢೀರ್ ವಿಸ್ತರಣೆ, ಶಾಲಾ &ಕಾಲೇಜುಗಳ ರಜೆ...
ಶಾಲಾ &ಕಾಲೇಜುಗಳಿಗೆ ರಜೆ ಘೋಷಣೆ... ಶಾಲಾ &ಕಾಲೇಜುಗಳಿಗೆ ರಜೆ ಘೋಷಣೆ... ಅಂತಾನೇ ಕರ್ನಾಟಕದ ವಿದ್ಯಾರ್ಥಿಗಳು ಕನವರಿಸುವ ರೀತಿ ಆಗಿ ಹೋಗಿದೆ. ಯಾಕಂದ್ರೆ ಕರ್ನಾಟಕದ ಶಾಲಾ &ಕಾಲೇಜುಗಳಿಗೆ ಪದೇ ಪದೇ ರಜೆ ಘೋಷಣೆ ಆಗುತ್ತಿದ್ದು, ಜೂನ್ &ಜುಲೈ ಹಾಗೂ ಆಗಸ್ಟ್ ತಿಂಗಳು ಪೂರ್ತಿ ಮಳೆ ಕಾರಣಕ್ಕೆ ಸಾಲು ಸಾಲು ರಜೆ ಸಿಕ್ಕಿವೆ. ಆ
ಉಡುಪಿ, ಅ.19: ಕಾರ್ಕಳ ತಾಲೂಕಿನ ನಿಟ್ಟೆ ಪರಪ್ಪಾಡಿಯ ಅಭಿಷೇಕ್ ಆಚಾರ್ಯ(23) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೂಲಂಕಷವಾಗಿ ತನಿಖೆ ನಡೆಸಲಾಗಿದ್ದು, ಇದರಲ್ಲಿ ಈವರೆಗೆ ಹನಿಟ್ರ್ಯಾಪ್ ಸಂಬಂಧಿತ ಯಾವುದೇ ಸಾಕ್ಷ್ಯಗಳು ದೊರೆತಿಲ್ಲ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ. ಯುವತಿ ಸೇರಿದಂತೆ ನಾಲ್ವರು ಗೆಳೆಯರು ಹಣಕ್ಕಾಗಿ ಬ್ಲಾಕ್ಮೆಲ್ ಮಾಡಿ ಕಿರುಕುಳ ನೀಡುತ್ತಿರುವುದಾಗಿ ಡೆತ್ನೋಟು ಬರೆದಿಟ್ಟು ಮಂಗಳೂರು ಲೇಡಿ ಗೋಷನ್ ಆಸ್ಪತ್ರೆಯ ಬಯೋ ಮೆಡಿಕಲ್ ಆಗಿದ್ದ ಅಭಿಷೇಕ್ ಆಚಾರ್ಯ ಅ.9ರಂದು ಬೆಳ್ಮಣ್ನ ಲಾಡ್ಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಪೊಲೀಸರು ಆರೋಪಿಗಳ ಮೊಬೈಲ್, ಲ್ಯಾಪ್ ಟಾಪ್ ಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ಮೊಬೈಲ್, ಬ್ಯಾಂಕ್ ವಹಿವಾಟು, ಫೋನ್ ಕರೆ ಹಾಗೂ ಚಾಟ್ ದಾಖಲೆಗಳನ್ನು ಆಧರಿಸಿ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಅದೇ ರೀತಿ ಅಭಿಷೇಕನ ಸ್ನೇಹಿತರು, ಬಂಧುಗಳು ಮತ್ತು ಸಂಬಂಧಿಕರನ್ನು ಕೂಡ ವಿಚಾರಣೆ ಮಾಡಿದ್ದಾರೆ. ಯುವತಿ ವಿಡಿಯೋ ಕಳುಹಿಸಿಲ್ಲ: ‘ಆರೋಪಿ ಯುವತಿಯ ಮೊಬೈಲ್ನಲ್ಲಿ ಯಾವುದೇ ರೀತಿಯ ಅಶ್ಲೀಲ ಫೋಟೋ ಅಥವಾ ವಿಡಿಯೋಗಳು ಸಿಕ್ಕಿಲ್ಲ ಮತ್ತು ಆಕೆ ಯಾವುದೇ ವಿಡಿಯೋವನ್ನು ಯಾರಿಗೂ ಕಳುಹಿಸಿರುವುದಿಲ್ಲ ಎಂಬುದು ತನಿಖೆಯಿಂದ ಗೊತ್ತಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ಅಭಿಷೇಕ್ ಯುವತಿಗೆ ಕಳುಹಿಸಿದ್ದ ಹಣವನ್ನು ಅವಳು ಅದೇ ದಿನ ವಾಪಾಸ್ಸು ಕೊಟ್ಟಿರುವುದು ಕಂಡು ಬಂದಿದೆ’ ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ. ಆತ್ಮಹತ್ಯೆಗೂ ಮುನ್ನ ಅಭಿಷೇಕ್ ಆರೋಪಿ ಯುವತಿಯ ಅಶ್ಲೀಲ ವಿಡಿಯೋವನ್ನು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯ ಸಹೋದ್ಯೋಗಿ ಗಳ ವಾಟ್ಸಾಪ್ ಗ್ರೂಪ್ಗೆ ಹಂಚಿದ್ದು, ಈ ವಿಷಯ ತಿಳಿದ ನಂತರ, ಆಕೆ ಈ ಕುರಿತು ಪೊಲೀಸರಿಗೆ ದೂರು ನೀಡುವುದಾಗಿ ಆತನಿಗೆ ತಿಳಿಸಿದ್ದಳು. ಈಗ ವೈರಲ್ ಆಗುತ್ತಿರುವ ವಿಡಿಯೋವನ್ನು ಆರೋಪಿ ಯುವತಿಯ ಸ್ನೇಹಿತೆಯೇ ತನ್ನ ಉಡುಪು ಬದಲಿಸುವ ಸಮಯದಲ್ಲಿ ಸ್ವತಃ ರೆಕಾರ್ಡ್ ಮಾಡಿ, ಆ ಯುವತಿಗೆ ಖಾಸಗಿ ರೀತಿಯಲ್ಲಿ ವಾಟ್ಸಾಪ್ ಮೂಲಕ ಕಳುಹಿಸಿದ್ದಳು. ಆದರೆ ಆ ವಿಡಿಯೋವನ್ನು ಅಭಿಷೇಕ್, ಯುವತಿಯ ವಾಟ್ಸಾಪ್ ಮೂಲಕ ಪಡೆದಿದ್ದನು ಎಂದು ಎಸ್ಪಿ ತಿಳಿಸಿದ್ದಾರೆ. ಅಭಿಷೇಕ್ ಮೊಬೈಲ್ ಎಫ್ಎಸ್ಎಲ್ಗೆ! ಅಭಿಷೇಕ್ನ ಮೊಬೈಲ್ನ್ನು ಹೆಚ್ಚಿನ ಪರಿಶೀಲನೆಗಾಗಿ ಎಫ್ಐಎಲ್ಗೆ ಕಳುಹಿಸಲಾಗಿದ್ದು, ಅದರಲ್ಲಿನ ವಿವರದ ಮಾಹಿತಿ ಪಡೆಯಲು ಬಾಕಿ ಇದೆ. ಮಂಗಳೂರು ಲೇಡಿಗೋಷನ್ ಆಸ್ಪತ್ರೆಯಲ್ಲಿ ಆರೋಪಿ, ಯುವತಿ ಯೋರ್ವಳ ಸ್ನೇಹಿತೆಯ ಉಡುಪು ಬದಲಿಸುವ ವಿಡಿಯೋ ತೆಗೆದ ಕಾರಣ ಹಾಗೂ ಅದನ್ನು ದುರುದ್ದೇಶಕ್ಕಾಗಿ ಬಳಸಲಾಗಿದೆಯೇ ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಡೆತ್ನೋಟ್ನಲ್ಲಿನ ಕೈಬರಹ ದೃಢೀಕರಣ ಕಾರ್ಯ ಪ್ರಗತಿಯಲ್ಲಿದೆ ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದರು. ಈ ಬಗ್ಗೆ ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮೃತ ಅಭಿಷೇಕ್ ಮತ್ತು ಆರೋಪಿ ಯುವತಿ ಕುರಿತು ಅಶ್ಲೀಲ ಪೋಸ್ಟ್ಗಳು ಹರಿದಾಡುತ್ತಿದ್ದು, ಇದು ಕಾನೂನಾತ್ಮಕವಾಗಿ ಶಿಕ್ಷಾರ್ಹ ವಾಗಿವೆ. ಈ ಕುರಿತು ಕಾರ್ಕಳ ಸಹಾಯಕ ಪೊಲೀಸ್ ಅಧೀಕ್ಷಕ ಹರ್ಷ ಪ್ರಿಯಂವದ, ಅಭಿಷೇಕ್ ಅವರ ಕುಟುಂಬ ಹಾಗೂ ಸ್ಥಳೀಯ ನಾಯಕರೊಂದಿಗೆ ನೇರವಾಗಿ ಮಾತನಾಡಿ ಪರಿಸ್ಥಿತಿಯನ್ನು ವಿವರಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ‘ಡ್ರೆಸ್ ಬದಲಿಸುವ ವಿಡಿಯೋದಲ್ಲಿ ಕಾಣಿಸಿಕೊಂಡ ಯುವತಿ, ತನ್ನ ಅನುಮತಿಯಿಲ್ಲದೆ ವಿಡಿಯೋ ತೆಗೆದ ಬಗ್ಗೆ ಮಂಗಳೂರು ನಗರದ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅದರಂತೆ ಪ್ರಕರಣ ದಾಖಲಾಗಿದೆ. ಅದೇ ರೀತಿ, ಆರೋಪಿ ಯುವತಿಯ ಖಾಸಗಿ ವಿಡಿಯೋ ವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿದ ಪ್ರಕರಣದ ಬಗ್ಗೆಯೂ ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ’ -ಹರಿರಾಂ ಶಂಕರ್, ಎಸ್ಪಿ, ಉಡುಪಿ
ಹಿರಿಯ ನೇತಾರ ಮಾಣಿ ಗೋಪಾಲರ ‘ನಾನು ಮಾಣಿಗೋಪಾಲ’ ಆತ್ಮಕಥನ ಬಿಡುಗಡೆ
ಕುಂದಾಪುರ: ಮಾಣಿಗೋಪಾಲರು ಶ್ರೀಸಾಮಾನ್ಯರ ಜತೆಯಲ್ಲಿದ್ದುಕೊಂಡು, ಬಡವರ ಪರ, ಮೂರ್ತೆದಾರರ ಪರ ಹೋರಾಟ ಮಾಡಿದವರು. ಆ ಕಾಲದಲ್ಲಿ ಅಂತಹ ಹೋರಾಟ ಮಾಡಲು ಗಟ್ಟಿತನ ಇರಬೇಕು. ಬದುಕಿಗೊಂದು ಸ್ಪಷ್ಟ ನಿಲುವು ಬೇಕಿತ್ತು. ಅದೆರಡು ಅವರಲ್ಲಿತ್ತು. ಇಡೀ ಬದುಕಿನುದ್ದಕ್ಕೂ ಸತ್ಯ, ನ್ಯಾಯ, ಧರ್ಮದ ಪರ ಹೋರಾಡಿ, ರಾಜಕೀಯದಲ್ಲೂ ಶುದ್ಧ ಚಾರಿತ್ರ್ಯವನ್ನು ಉಳಿಸಿಕೊಂಡು, ಶುದ್ಧ ಹಸ್ತದ ರಾಜಕಾರಣಕ್ಕೆ ಹೆಸರಾದ ಕುಂದಾಪುರದ ಸಾಕ್ಷಿ ಪ್ರಜ್ನೆಯಂತಿದ್ದರು ಎಂದು ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಹೇಳಿದ್ದಾರೆ. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕುಂದಾಪುರ ತಾಲೂಕು ಘಟಕ ವತಿಯಿಂದ ಶನಿವಾರ ಕುಂದಾಪುರ ಬೋರ್ಡ್ ಹೈಸ್ಕೂಲ್ ವಠಾರದ ರೋಟರಿ ಕಲಾಮಂದಿರದಲ್ಲಿ ಸಾಮಾಜಿಕ ಹೋರಾಟಗಾರ, ಹಿರಿಯ ನೇತಾರ ಮಾಣಿ ಗೋಪಾಲ್ ಅವರ ಆತ್ಮಕಥನ ‘ನಾನು ಮಾಣಿಗೋಪಾಲ’ ಪುಸ್ತಕವನ್ನು ಬಿಡುಗಡೆಗೊಳಿಸಿ ಅವರು ಮಾತನಾಡುತಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಅವರೊಂದಿಗೆ ನಮ್ಮ ಕುಟುಂಬಕ್ಕೆ ದೀರ್ಘಕಾಲದ ಒಡನಾಟವಿದೆ. ಬೇರೆ ಬೇರೆ ಪಕ್ಷದಲ್ಲಿದ್ದರೂ, ಸ್ನೇಹ, ವಿಶ್ವಾಸ ಇಂದಿಗೂ ಹಾಗೆಯೇ ಇದೆ. ಶಾಸಕರಾಗುವ ಯೋಗ್ಯತೆಯಿತ್ತು. ಆದರೆ ಯೋಗ ಮಾತ್ರ ಇರಲಿಲ್ಲ. ಅವರೊಬ್ಬ ಅಜಾತಶತ್ರುವಾಗಿದ್ದರು ಎಂದರು. ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಮಾತನಾಡಿ, ಮಾಣಿ ಗೋಪಾಲರು ಧ್ವನಿಯಿಲ್ಲದವರಿಗೆ ಧ್ವನಿಯಾದವರು. ಮೂರ್ತೆದಾರಿಕೆ ನಿಷೇಧ ಆದಾಗ ಸಹಿ ಮಾಡಲು ಸಹ ಬಾರದ ಮೂರ್ತೆದಾರರ ಪರ ಗಟ್ಟಿ ಧ್ವನಿಯಲ್ಲಿ ನಿಂತು ಹೋರಾಡಿದವರು. ಅವರ ಹೋರಾಟದ ಫಲವಾಗಿ ಬಂಗಾರಪ್ಪರು ಮುಖ್ಯಮಂತ್ರಿಯಾಗಿ ನಡೆಸಿದ ಮೊದಲ ಸಂಪುಟ ಸಭೆಯಲ್ಲಿಯೇ ನಿಷೇಧವನ್ನು ವಾಪಾಸು ತೆಗೆದುಕೊಂಡರು ಎಂದು ತಿಳಿಸಿದರು. ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾಣಿಗೋಪಾಲ್ ಹಾಗೂ ಗಿರಿಜಾ ದಂಪತಿಯನ್ನು ಸಮ್ಮಾನಿಸಲಾಯಿತು. ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅಧ್ಯಕ್ಷತೆ ವಹಿಸಿದ್ದರು. ಕಸಾಪ ಸ್ಥಾಪಕಾಧ್ಯಕ್ಷ ಎ.ಎಸ್.ಎನ್.ಹೆಬ್ಬಾರ್, ಕಸಾಪ ತಾಲೂಕು ಅಧ್ಯಕ್ಷ ಡಾ.ಉಮೇಶ್ ಪುತ್ರನ್, ಪುರಸಭೆ ಅಧ್ಯಕ್ಷ ಮೋಹನದಾಸ್ ಶೆಣೈ, ಪುಸ್ತಕ ರಚಿಸಿದ ಕೇಶವ ಸಸಿಹಿತ್ಲು, ಪುತ್ರ ರಂಜನ್ ಮಾಣಿಗೋಪಾಲ್ ಮೊದಲಾದವರು ಉಪಸ್ಥಿತರಿದ್ದರು. ಕಸಾಪದ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಪ್ರಸ್ತಾವಿಸಿದರು. ನರೇಂದ್ರ ಕುಮಾರ್ ಕೋಟ ಸ್ವಾಗತಿಸಿ, ಮನೋಹರ್ ಭಟ್ ವಂದಿಸಿದರು. ಕುಂದಪ್ರಭದ ಯು.ಎಸ್.ಶೆಣೈ ಪುಸ್ತಕ ಪರಿಚಯಿಸಿದರು. ದಿನಕರ ಆರ್. ಶೆಟ್ಟಿ, ಮಂಜುನಾಥ ಕೆ.ಎಸ್., ಅಕ್ಷತಾ ಗಿರೀಶ್ ಕಾರ್ಯಕ್ರಮ ನಿರೂಪಿಸಿದರು.
ಕೇಂದ್ರ ಸರಕಾರ ರೈತರ ಅಭ್ಯುದಯಕ್ಕೆ ಬದ್ಧ : ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು, ಅ.19: ಭತ್ತದಂತಹ ಬೆಳೆಗಳ ಜೊತೆಗೆ ಬೇಳೆಕಾಳುಗಳನ್ನು ಬೆಳೆಯಲು ಹೆಚ್ಚು ರೈತರು ಮುಂದಾಗಬೇಕು. ಇದರಿಂದ ಬೇಳೆ ಕಾಳುಗಳ ಆಮದು ತಗ್ಗಲಿದೆ. ಕೇಂದ್ರ ಸರಕಾರ ರೈತರ ಕಲ್ಯಾಣಕ್ಕೆ ಹಲವು ಯೋಜನೆಗಳನ್ನು ಕೈಗೊಂಡಿದೆ. ಕೃಷಿ ಕ್ಷೇತ್ರದ ಪ್ರತಿ ಹಂತವನ್ನು ಪ್ರೊತ್ಸಾಹಿಸುತ್ತಿದೆ. ರೈತರ ಕಲ್ಯಾಣ ಹಾಗೂ ಅಭ್ಯುದಯಕ್ಕೆ ಬದ್ಧವಾಗಿದೆ ಎಂದು ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆಗಳ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ರವಿವಾರ ನಗರದ ಯಲಹಂಕದಲ್ಲಿರುವ ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲ ಬ್ಯೂರೋದ 33ನೆ ಸಂಸ್ಥಾಪನಾ ದಿನಾಚರಣೆ ಹಾಗೂ 3ನೆ ಕೃಷಿ ಕೀಟ ಜೈವಿಕ ನಿಯಂತ್ರಣ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೀಟನಾಶಕಗಳಿಂದ ಮಣ್ಣಿನ ಫಲವತ್ತತೆ ಕಡಿಮೆಯಾಗಲಿದೆ. ಇದರಿಂದ ರೈತರು ಸಹಜ ಕೃಷಿಗೆ ಒತ್ತು ನೀಡಬೇಕು. ಐಸಿಎಆರ್-ಎನ್ಬಿಎಐಆರ್ ರೈತರಿಗೆ ಬಲ ತುಂಬುವ ಕೆಲಸ ಮಾಡುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರಕಾರದಲ್ಲಿ, ಭಾರತ ವಿಶ್ವದ ಐದು ಆರ್ಥಿಕ ಶಕ್ತಿಗಳಲ್ಲಿ ಒಂದಾಗಿದ್ದು, ಮೂರನೆ ಆರ್ಥಿಕ ಶಕ್ತಿಶಾಲಿ ದೇಶವಾಗಲಿದೆ ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ಕೇಂದ್ರ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಹಾಗೂ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ನಮ್ಮ ಹಿಂದಿನ ಪೀಳಿಗೆಯ ಕೃಷಿಕರು ರೈತಮಿತ್ರ ಕೀಟಗಳ ಬಗ್ಗೆ ಹೆಚ್ಚು ಮಾಹಿತಿ ಹೊಂದಿದ್ದರು. ಇಂದಿನ ರೈತರಿಗೂ ಇವುಗಳ ಕುರಿತು ಮಾಹಿತಿ ನೀಡುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ರೈತರು, ಸಂಶೋಧಕರು ಮತ್ತು ವಿಜ್ಞಾನಿಗಳನ್ನು ಸಾವಯವ ಕೃಷಿಯ ಅರಿವು ಮೂಡಿಸಲಾಗುತ್ತಿದೆ. ಅಷ್ಟೇ ಅಲ್ಲದೆ ನೈಸರ್ಗಿಕ ಕೃಷಿ ಅಳವಡಿಸಿಕೊಳ್ಳುವ ರೈತರಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ರೈತರು ಆರೋಗ್ಯಕರ, ಔಷಧ ರಹಿತ ಬೆಳೆಗಳನ್ನು ಬೆಳೆದಾಗ ಮಾತ್ರ ನಾವು ಗುಣಮಟ್ಟದ ಪದಾರ್ಥಗಳನ್ನು ಸೇವಿಸಲು ಸಾಧ್ಯ ಎಂದು ಶೋಭಾ ಕರಂದ್ಲಾಜೆ ತಿಳಿಸಿದರು. ಸಂಸದ ಡಾ.ಸಿ.ಎನ್.ಮಂಜುನಾಥ್ ಮಾತನಾಡಿ, ಮನುಷ್ಯನ ಅರೋಗ್ಯ ನಮ್ಮ ಬೆಳೆಗಳ ಮೇಲೆ ಮತ್ತು ಮಣ್ಣಿನ ಫಲವತ್ತತೆ ಮನುಷ್ಯನ ಆರೋಗ್ಯದ ಮೇಲೆ ಅವಲಂಬಿತವಾಗಿದೆ. ಜೈವಿಕ ಪದ್ಧತಿಯನ್ನು ನಾವು ಹೆಚ್ಚು ಬಳಸುವ ಅಗತ್ಯವಿದೆ. ಸಾವಯವ ಪದ್ಧತಿ ಅಳವಡಿಸಿಕೊಂಡಾಗ ಹೆಚ್ಚಿನ ರೋಗಗಳನ್ನು ತಡೆಯಬಹುದು. ಕೀಟನಾಶಕ ಹಾಗೂ ರಸಗೊಬ್ಬರ ಬಳಕೆ ತಗ್ಗಿಸುವುದು ಅಗತ್ಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಉತ್ತಮ ಸಾಧನೆ ಮಾಡಿದ ಕೃಷಿಕರು ಹಾಗೂ ಐಸಿಎಆರ್-ಎನ್ಬಿಎಐಆರ್ನ ವಿಜ್ಞಾನಿಗಳನ್ನು ಗೌರವಿಸಲಾಯಿತು. ಈ ವೇಳೆ ಸಂಸ್ಥೆಯ ನಿರ್ದೇಶಕ ಡಾ.ಎಸ್.ಎನ್.ಸುಶೀಲ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು | ಸಿಲಿಂಡರ್ ಸ್ಫೋಟ: ಮಾಜಿ ಸೈನಿಕನಿಗೆ ಗಾಯ
ಬೆಂಗಳೂರು, ಅ.19: ಇಲ್ಲಿನ ಅಂದ್ರಹಳ್ಳಿ ಸಮೀಪದ ಬ್ಯಾಡರಹಳ್ಳಿಯ ವಿದ್ಯಾಮಾನ್ಯ ನಗರದಲ್ಲಿನ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮಾಜಿ ಸೈನಿಕರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಮಡಿಕೇರಿ ಮೂಲದ ಜನಾರ್ದನ್(60) ಗಾಯಾಳು. ಇವರು ವಾಸವಿದ್ದ ಬಾಡಿಗೆ ಮನೆಯಲ್ಲಿ ಸಿಲಿಂಡರ್ ಸೋರಿಕೆಯಾಗಿತ್ತು. ಅ.17ರ ಶುಕ್ರವಾರ ರಾತ್ರಿ 9 ಗಂಟೆಯಲ್ಲಿ ಅಡುಗೆ ಮಾಡಲು ಸ್ಟವ್ ಹಚ್ಚುತ್ತಿದ್ದಂತೆ ಸಿಲಿಂಡರ್ ಸ್ಪೋಟಗೊಂಡಿತ್ತು. ಇದರ ತೀವ್ರತೆಗೆ ಮನೆಯ ಗೋಡೆಗಳು ಬಿರುಕು ಬಿಟ್ಟಿವೆ. ಗಾಯಗೊಂಡಿರುವ ಜನಾರ್ದನ್ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಸುಧಾಮೂರ್ತಿ ಅವರನ್ನು ಟೀಕಿಸುವುದು ನ್ಯಾಯಾಂಗ ನಿಂದನೆ : ಆರ್.ಅಶೋಕ್
ಬೆಂಗಳೂರು, ಅ.19: ಇನ್ಫೋಸಿಸ್ ಸಹ ಸಂಸ್ಥಾಪಕಿ ಸುಧಾಮೂರ್ತಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿರುವುದು ನ್ಯಾಯಾಂಗ ನಿಂದನೆಯಾಗಿದೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮೀಕ್ಷೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇನ್ಫೋಸಿಸ್ ಸಹ ಸಂಸ್ಥಾಪಕಿ ಸುಧಾಮೂರ್ತಿ ಅವರನ್ನು ಬೃಹಸ್ಪತಿಗಳಾ ಎಂದು ಕೇಳುತ್ತಾರೆ. ಆದರೆ, ಇಷ್ಟ ಇದ್ದರೆ ಮಾತ್ರ ಮಾಹಿತಿ ನೀಡಿ ಎಂದು ಹೈಕೋರ್ಟ್ ಹೇಳಿದೆ. ಆದರೂ ಅವರನ್ನು ಟೀಕಿಸುವುದು ನ್ಯಾಯಾಂಗ ನಿಂದನೆಯಾಗಿದೆ ಎಂದರು. ರಾಜ್ಯ ಸರಕಾರ ಆರೆಸ್ಸೆಸ್ ವಿರುದ್ಧ ಕೈಗೊಳ್ಳುವ ಕ್ರಮಗಳು ಮುಂದೆ ಕಾಂಗ್ರೆಸ್ಗೆ ತಿರುಗುಬಾಣವಾಗಲಿದೆ. ಪಥ ಸಂಚಲನದ ಅನುಮತಿಗೆ ಸಂಬಂಧಿಸಿದಂತೆ ಕೋರ್ಟ್ ಸರಕಾರಕ್ಕೆ ಛೀಮಾರಿ ಹಾಕಿದೆ. ಯಾವುದೇ ಸಂಘಟನೆಗಳ ಕಾರ್ಯಕ್ರಮಕ್ಕೆ ನಾವು ಎಂದೂ ಕಡಿವಾಣ ಹಾಕಿಲ್ಲ. ಅದೇ ರೀತಿ ಕಾಂಗ್ರೆಸ್ ಕೂಡ ನಡೆದುಕೊಳ್ಳಬೇಕು ಎಂದು ಹೇಳಿದರು.
ತುರ್ತು ಪಥಸಂಚಲನದಿಂದ ಸಾಧನೆ ಏನು?: ಪ್ರಿಯಾಂಕ್ ಖರ್ಗೆ ಪ್ರಶ್ನೆ
ಬೆಂಗಳೂರು, ಅ.19: ಆರೆಸ್ಸೆಸ್ನವರು ತುರ್ತು ಪಥಸಂಚಲನ ಮಾಡಿ ಏನು ಸಾಧಿಸಬೇಕಿತ್ತು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಥಸಂಚಲನ ಅನುಮತಿ ಸಂಬಂಧ ಮತ್ತೊಮ್ಮೆ ಅರ್ಜಿ ಹಾಕಿದರೆ ಪರಿಗಣಿಸಿ ಎಂದು ಕೋರ್ಟ್ ಹೇಳಿದೆ. ಆದರೆ ಇವತ್ತು ಮಾಡುವಂತಿಲ್ಲ. ಮಾಡಲೂಬಾರದೆಂದು ಕೋರ್ಟ್ ಪ್ರಕಾರ ಇದೆ. ಮತ್ತೊಮ್ಮೆ ಅರ್ಜಿ ಕೊಡಲಿ, ಆಗ ಸರಕಾರ ಮತ್ತೆ ಯೋಚನೆ ಮಾಡುತ್ತದೆ. ಇದು ಸ್ಪಷ್ಟ ಸಂದೇಶ ಎಂದು ತಿಳಿಸಿದರು. ಅನುಮತಿ ಸಂಬಂಧ ಸಂಘದ ನೋಂದಣಿ ಪ್ರಮಾಣ ಪತ್ರ ಸಲ್ಲಿಸಿಲ್ಲ. ಈ ಪ್ರಶ್ನೆಗಳಿಗೆ ಪಥಸಂಚಲನ ನಡೆಸುವವರು ಮಾಹಿತಿಯೇ ನೀಡಿಲ್ಲ. ನಿನ್ನೆ ರಾತ್ರಿ ಸಂಘ ಯಾವುದೇ ನೋಂದಾಯಿತ ಇಲ್ಲವೆಂದು ಬರೆದುಕೊಟ್ಟಿದ್ದಾರೆ. ಇದನ್ನು ಪ್ರಶ್ನಿಸಿ ಕೋರ್ಟ್ಗೆ ಹೋಗಿದ್ದಾರೆ. ಕೋರ್ಟ್ನಲ್ಲಿ ಬಹಳಷ್ಟು ಚರ್ಚೆ ಆಗಿದೆ. ಸಮಾಜದಲ್ಲಿ ಶಾಂತಿ ಕಾಪಾಡುವ ಜವಾಬ್ದಾರಿ ಸರಕಾರದ್ದು ಎಂದು ನ್ಯಾಯಾಲಯ ಹೇಳಿದೆ ಎಂದರು.
ಬೆಳಗಾವಿಯಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲು!
ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ವಾಲ್ಮೀಕಿ ಸಮಾಜದ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪದಡಿ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹೇಳಿಕೆ ವಿರೋಧಿಸಿ ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಲಾಗಿದ್ದು, ಬೆಳಗಾವಿಯಲ್ಲಿ ಪ್ರತಿಭಟನೆಗೆ ಸಿದ್ಧತೆ ನಡೆದಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಸುರತ್ಕಲ್: “ಯಕ್ಷ ಸಿರಿ” ಯಕ್ಷಗಾನ ತರಬೇತಿ ಕೇಂದ್ರದ ತೃತೀಯ ವಾರ್ಷಿಕೋತ್ಸವ
ಸುರತ್ಕಲ್: ಬಂಟರ ಸಂಘ(ರಿ) ಸುರತ್ಕಲ್ ಇದರ ವತಿಯಿಂದ ನಡೆಸಲ್ಪಡುವ “ಯಕ್ಷ ಸಿರಿ” ಯಕ್ಷಗಾನ ತರಬೇತಿ ಕೇಂದ್ರದ ತೃತೀಯ ವಾರ್ಷಿಕೋತ್ಸವ ಸಮಾರಂಭ ಸುರತ್ಕಲ್ ಬಂಟರ ಸಂಘದ ವಠಾರದಲ್ಲಿ ಜರುಗಿತು. ಗೋವಿಂದದಾಸ ಕಾಲೇಜು ಸುರತ್ಕಲ್ ಇದರ ಆಡಳಿತಾತ್ಮಕ ನಿರ್ದೇಶಕ ರಮೇಶ್ ಭಟ್ ಎಸ್.ಜಿ. ಇವರು ದೀಪ ಬೆಳಗಿಸಿ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತಾಡಿದ ಅವರು, “ನಾನು ಸುರತ್ಕಲ್ ಬಂಟರ ಸಂಘ ವನ್ನು ಹತ್ತಿರದಿಂದ ಗಮನಿಸುತ್ತ ಬಂದವನು. ಪ್ರತೀ ಸ್ಪರ್ಧೆಯಲ್ಲೂ ಸುರತ್ಕಲ್ ಬಂಟರ ಸಂಘ ಪ್ರಶಸ್ತಿ ಪಡೆದುಕೊಂಡೇ ಬಂದಿದೆ. ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಸಂಘ ಸದಾ ಮುಂದಿದೆ. ಬಹುಷಃ ಇದೇ ಕಾರಣಕ್ಕೆ ರಾಜ್ಯೋತ್ಸವ ಪ್ರಶಸ್ತಿಗೂ ಸಂಘ ಭಾಜನವಾಗಿದೆ. ಯಕ್ಷಗಾನ ಅನ್ನುವುದು ಶ್ರೇಷ್ಠವಾದ ಕಲೆ. ಯಕ್ಷಗಾನ ಕಲಾವಿದನಿಗೆ ಭಾಷಾ ಶುದ್ಧಿ ಮತ್ತು ಸಂವಹನಾ ಸಾಮರ್ಥ್ಯವಿದೆ. ಪುರಾಣದ ಜ್ಞಾನ ಸಂಪಾದನೆಗೆ ಯಕ್ಷಗಾನ ಕಲೆ ಪೂರಕ. ಪುರಾಣ ಪುರುಷರ ಆದರ್ಶ ಚರಿತ್ರೆ ಮಕ್ಕಳಿಗೆ ತಿಳಿಯುತ್ತದೆ. ಹೀಗಾಗಿ ಇಂದಿನ ಮಕ್ಕಳಿಗೆ ಇದರ ತರಬೇತಿ ಅವಶ್ಯ. ಮಕ್ಕಳ ವ್ಯಕ್ತಿತ್ವದ ಸಕಾರಾತ್ಮಕ ಬೆಳವಣಿಗೆಗೆ ಇದು ಸಹಕಾರಿ. ಇಷ್ಟು ಮಾತ್ರವಲ್ಲದೆ ಕಲೆಯಲ್ಲಿ ಮುಂದಿ ರುವ ಮಕ್ಕಳು ಕಲಿಕೆಯಲ್ಲೂ ಮುಂದಿದ್ದಾರೆ ಎನ್ನುವುದನ್ನು ಸಾಧಿಸಿ ತೋರಿಸಲು ಯಕ್ಷಸಿರಿಯ ಮಕ್ಕಳ ಶೈಕ್ಷಣಿಕ ಸಾಧನೆಗಾಗಿ ಅಭಿನಂದಿನಾ ಕಾರ್ಯಕ್ರಮ ಹಮ್ಮಿಕೊಂಡಿರುವ ಸಂಘಕ್ಕೆ ಅಭಿನಂದನೆಯನ್ನು ಸಲ್ಲಿಸುತ್ತೇನೆ“ ಎಂದರು. ಬಂಟರ ಸಂಘ ಸುರತ್ಕಲ್ ಇದರ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಅಧ್ಯಕ್ಷತೆ ವಹಿಸಿ ಮಾತಾಡಿದರು. ಮುಖ್ಯ ಅತಿಥಿ ಗಳಾಗಿ ಉದ್ಯಮಿ ಸತೀಶ್ ಮುಂಚೂರು, ದ.ಕ ಜಿಲ್ಲಾ ಬಿ.ಜೆ.ಪಿ. ವಕ್ತಾರ ರಾಜ್ ಗೋಪಾಲ್ ರೈ, ಹೋಟೆಲ್ ಉದ್ಯಮಿ ಚಂದ್ರಹಾಸ ಶೆಟ್ಟಿ ಕಂಫಟ್೯, ದೀಪಕ್ ಶೆಟ್ಟಿ ಲಿಂಗಮಾರುಗುತ್ತು, ಮಮತ ಪ್ರೇಮ್ ನಾಥ್ ಹೆಗ್ಡೆ, ಸೀಮಾ ಶೆಟ್ಟಿ ಸುಭಾಷಿತನಗರ, ಸಹನಾ ರಾಜೇಶ್ ರೈ, ಯಕ್ಷ ಗುರು ರಾಕೇಶ್ ರೈ ಅಡ್ಕ, ಸಂಘದ ಮಾಜಿ ಅಧ್ಯಕ್ಷ ಸುಧಾ ಕರ್ ಎಸ್.ಪೂಂಜಾ, ಸಂಘದ ಉಪಾಧ್ಯಕ್ಷ ಪ್ರವೀಣ್ ಪಿ. ಶೆಟ್ಟಿ, ಕೋಶಾಧಿಕಾರಿ ರತ್ನಾಕರ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ ಕುಡುಂಬೂರು, ಸಾಂಸ್ಕೃತಿಕ ಕಾರ್ಯದರ್ಶಿ ದೇವೇಂದ್ರ ಶೆಟ್ಟಿ, ಕ್ರೀಡಾ ಕಾರ್ಯ ದರ್ಶಿ ಪುಷ್ಪರಾಜ್ ಶೆಟ್ಟಿ ಮಧ್ಯ, ಮಹಿಳಾ ವೇದಿಕೆಯ ಅಧ್ಯೆಕ್ಷೆ ಸರೋಜ ತಾರಾನಾಥ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ್ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು. ಅನೂಪ್ ಶೆಟ್ಟಿ ಕಟ್ಲ ದೇವರನ್ನು ಸ್ತುತಿಸಿದರು. ಕವಿತಾ ಪುಷ್ಪರಾಜ್ ಶೆಟ್ಟಿ ಧನ್ಯವಾದ ಸಮರ್ಪಿಸಿದರು. ಡಾ.ಸುಧಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ದರು. ಇದೇ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ರಾಷ್ಟ್ರಮಟ್ಟದಲ್ಲಿ ಸಾಧನೆಗೈದ ಹಾಗೂ ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ.ಯಲ್ಲಿ ಶೇ. 90ಕ್ಕಿಂತ ಹೆಚ್ಚಿನ ಅಂಕ ಗಳಿಸಿದ “ಯಕ್ಷಸಿರಿಯ ವಿದ್ಯಾರ್ಥಿ ಗಳನ್ನು ಸಮಾರಂಭದಲ್ಲಿ ಅಭಿನಂದಿಸಲಾಯಿತು. ಸಭಾ ಕಾರ್ಯಕ್ರಮದ ಬಳಿಕ ಯಕ್ಷಸಿರಿಯ ವಿದ್ಯಾರ್ಥಿಗಳು ಮತ್ತು ಇತರ ಕಲಾವಿದರ ಕೂಡುವಿಕೆಯೊಂದಿಗೆ ಶ್ರೀ ದೇವಿ ಮಹಾತ್ಮೆʼ ಯಕ್ಷಗಾನ ಬಯಲಾಟ ನಡೆಯಿತು.
ರಾಯಚೂರು: ಪತ್ರಕರ್ತರ ಸಂಘದ ಚುನಾವಣೆಗೆ ಉಮೇದುವಾರಿಕೆ ಸಲ್ಲಿಕೆ
ರಾಯಚೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ 2025-28ರ ಅವಧಿಗೆ ನಡೆಯುವ ಚುನಾವಣೆಗೆ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ಹಿರಿಯ ಪತ್ರಕರ್ತ ಬಸವರಾಜ ಭೋಗಾವತಿ ಹಾಗೂ ಜಿಲ್ಲಾ ಸಮಿತಿ ಸದಸ್ಯ ಸ್ಥಾನಕ್ಕೆ ರಾಯಚೂರು ಧ್ವನಿ ಪತ್ರಿಕೆ ಸಂಪಾದಕ ಲಕ್ಷ್ಮಣರಾವ್ ಕಪಗಲ್ ಉಮೇದುವಾರಿಕೆ ಸಲ್ಲಿಸಿದರು. ಇಬ್ಬರು ಪ್ರತ್ಯೇಕವಾಗಿ ರವಿವಾರ ಚುನಾವಣಾಧಿಕಾರಿ ಮಲ್ಲಣ್ಣ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಪತ್ರಕರ್ತರಾದ ಪಿ. ಪರಮೇಶ, ಹನುಮಂತಪ್ಪ ಕೊಟ್ನೆಕಲ್, ಮಾರೆಪ್ಪ ದೊಡ್ಡಮನಿ, ಲಕ್ಷ್ಮಣ ಕಪಗಲ್, ತುಂಗಬಿಂಬ ಪತ್ರಿಕೆಯ ಸಂಪಾದಕರಾದ ಗುರುಗೌಡ, ಕಲ್ಯಾಣ ಸಂಜೆ ಪ್ರಧಾನ ಸಂಪಾದಕರಾದ ಈಶಪ್ಪ ಬೈಲ್ ಮರ್ಚೆಡ್, ನಮ್ಮ ನೆಲ ಸಂಪಾದಕರಾದ ಪ್ರಭಕಾರ ಹುಡೇದ್, ಪತ್ರಕರ್ತರಾದ ಅಶೋಕ ತಡಕಲ್, ದೇವಪ್ಪ ಬ್ಯಾಗವಾಟ, ವಾಗೇಶ ಪಾಟೀಲ್, ಹನುಮಂತರಾಯ ಕಪಗಲ್, ಶಿವಕುಮಾರ ಬಿ, ಸೇರಿದಂತೆ ಅನೇಕರು ಇದ್ದರು. ಸಹಾಯಕ ಚುನಾವಣಾಧಿಕಾರಿ ಸುರೇಶ ರೆಡ್ಡಿ ಉಪಸ್ಥಿತರಿದ್ದರು.
ಬೆಂಗಳೂರು | ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು
ಬೆಂಗಳೂರು, ಅ.19: ವೇಗವಾಗಿ ಬರುತ್ತಿದ್ದ ದ್ವಿಚಕ್ರ ವಾಹನ ಸವಾರನೊಬ್ಬ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಇಲ್ಲಿನ ಎಚ್ಎಎಲ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುಮಾರು 19 ವರ್ಷದ ಮೃತ ಯುವಕನನ್ನು ಅಸ್ಸಾಂ ಮೂಲದವನು ಎಂದು ಗುರುತಿಸಲಾಗಿದೆ. ಸದ್ಯ ಆತನ ಹೆಸರು ಮತ್ತು ವಿಳಾಸದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಅ.19ರ ರವಿವಾರ ಬೆಳಗಿನ ಜಾವ ಎಚ್ಎಎಲ್ ಸಂಚಾರ ಠಾಣೆ ವ್ಯಾಪ್ತಿಯ ಕರಿಯಮ್ಮನ ಅಗ್ರಹಾರ ಮುಖ್ಯರಸ್ತೆಯ ಕಾಡಬೀಚನಹಳ್ಳಿ ಸಮೀಪದಲ್ಲಿ ಈ ಘಟನೆ ನಡೆದಿದ್ದು, ಯುವಕ ಅತಿ ವೇಗದಲ್ಲಿ ದ್ವಿಚಕ್ರ ವಾಹನ ಚಲಿಸುತ್ತಿದ್ದಾಗ ನಿಯಂತ್ರಣ ಕಳೆದುಕೊಂಡು ಮರಕ್ಕೆ ಢಿಕ್ಕಿ ಹೊಡೆದಿದ್ದಾನೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಎಚ್ಎಎಲ್ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮೃತದೇಹವನ್ನು ಸ್ಥಳೀಯ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
ರಾಯಚೂರು: ದಾಳಿಂಬೆ ಪಪ್ಪಾಯಿ ಬೆಳೆಗಾರರಿಗೆ ಪರಿಹಾರ ನೀಡಲು ಆಗ್ರಹ
ರಾಯಚೂರು: ಸತತ ಮಳೆಯಿಂದ ದಾಳಿಂಬೆ, ಪಪ್ಪಾಯಿ ಹಾಗೂ ಪೇರಲ ಬೆಳೆಯೆಲ್ಲ ಹಾಳಾಗಿದ್ದು, ರೈತರಿಗೆ ಸೂಕ್ತ ನಷ್ಟ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ರೈತರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ನಗರದ ನೂತನ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ರೈತರು, ಬಳಿಕ ಡಿಸಿ ಕಚೇರಿ ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಕಳೆದ ತಿಂಗಳು ಎಡೆಬಿಡದೆ ಸುರಿದ ಭಾರೀ ಮಳೆಯಿಂದ ಸಾಕಷ್ಟು ಬೆಳೆಗಳು ಹಾಳಾಗಿದ್ದವು. ಅದರಲ್ಲೂ ಪಪ್ಪಾಯಿ, ದಾಳಿಂಬೆ ಹಾಗೂ ಪೇರಲ ಗಿಡಗಳಲ್ಲಿ ಹೂ ಕಾಯಿಗಳೆಲ್ಲ ಉದುರಿ ಹೋಗಿವೆ. ಎಕರೆಗೆ ಏನಿಲ್ಲವೆಂದರೂ 4.5 ಲಕ್ಷ ರೂವರೆಗೂ ಖರ್ಚು ಮಾಡಲಾಗುತ್ತಿದೆ. ಇದರಿಂದ ಲಕ್ಷಾಂತರ ರೂ. ಖರ್ಚು ಮಾಡಿದ್ದ ಬೆಳೆಗಳೆಲ್ಲ ಹಾಳಾಗಿ ಹೋಗಿವೆ. ರೈತರು ಮತ್ತೆ ಸಾಲದ ಸುಳಿಗೆ ಸಿಲುಕುವಂತಾಯಿತು ಎಂದು ಅಲವತ್ತುಕೊಂಡರು. ಇನ್ನೂ ತೋಟಗಾರಿಕೆ ಬೆಳೆಗಾರರು ಪ್ರತಿ ವರ್ಷ ವಿಮೆ ಹಣ ಪಾವತಿಸುತ್ತೇವೆ. ಆದರೆ, ಸರ್ಕಾರ ಮಾತ್ರ ಬೆಳೆ ಹಾಳಾದಾಗ ವಿಮೆ ಹಣ ಬಿಡುಗಡೆ ಮಾಡುತ್ತಿಲ್ಲ. ಈ ವರ್ಷ ಸರ್ಕಾರವೇ ರಾಯಚೂರು ಜಿಲ್ಲೆಯನ್ನು ಬೆಳೆ ಹಾನಿ ಪ್ರದೇಶ ಎಂದು ಘೋಷಿಸಿದ್ದು, ಕೂಡಲೇ ರೈತರಿಗೆ ಸೂಕ್ತ ನಷ್ಟ ಪರಿಹಾರ ಕೊಡಿಸುವ ಕೆಲಸವಾಗಬೇಕಿದೆ ಎಂದು ಒತ್ತಾಯಿಸಿದರು. ಜಿಲ್ಲೆಯ ವಿವಿಧ ತೋಟಗಾರಿಕೆ ಬೆಳೆಗಾರರು ಇದ್ದರು.
‘ಮುಂದಿನ ಕ್ವಾಂಟಮ್ ಸಮ್ಮೇಳನ’; ವಿಶ್ವವಿಖ್ಯಾತ ಕ್ವಾಂಟಮ್ ವಿಜ್ಞಾನಿಗಳಿಗೆ ಸಚಿವ ಎನ್.ಎಸ್.ಭೋಸರಾಜು ಆಹ್ವಾನ
ಝ್ಯೂರಿಕ್/ಬೆಂಗಳೂರು, ಅ.19: ಸೂಪರ್ ಕಂಡಕ್ಟಿಂಗ್ ಕ್ಯೂಬಿಟ್ ಮತ್ತು ಟ್ರಾಪ್ಡ್ ಐಯಾನ್ ಸಿಸ್ಟಮ್ಸ್ ಗಳ ಕುರಿತ ಸಂಶೋಧನೆಯಲ್ಲಿ ಇಪ್ಪತ್ತು ವರ್ಷಗಳಿಂದ ಪ್ರವರ್ತಕರಾಗಿ ಗುರುತಿಸಿಕೊಂಡಿರುವಂತಹ, ಇಟಿಎಚ್ ಝ್ಯೂರಿಕ್ ಕ್ವಾಂಟಮ್ ಸೆಂಟರ್ ನ ನಿರ್ದೇಶಕ ವಿಶ್ವವಿಖ್ಯಾತ ಕ್ವಾಂಟಮ್ ವಿಜ್ಞಾನಿ ಪ್ರೊ.ಆಂಡ್ರಿಯಾಸ್ ವಾಲ್ರಾಫ್ ಹಾಗೂ ಪ್ರೊ.ಜೊನಾಥನ್ ಹೋಮ್ ಮತ್ತು ಪ್ರೊ.ಕ್ಲಾಸ್ ಎನ್ಸ್ಸ್ಲಿನ್ ಅವರನ್ನು ಮುಂದಿನ ಕ್ವಾಂಟಮ್ ಇಂಡಿಯಾ ಸಮ್ಮೇಳನದಲ್ಲಿ ಭಾಗವಹಿಸುವಂತೆ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಆಹ್ವಾನಿಸಿದ್ದಾರೆ. ವಿಶ್ವದ ಅಗ್ರಗಣ್ಯ ವಿಜ್ಞಾನ ಸಂಸ್ಥೆಯಾದ ಇಟಿಎಚ್ ಝ್ಯೂರಿಕ್ನ ಕ್ವಾಂಟಮ್ ಸೆಂಟರ್ಗೆ ಭೇಟಿ ನೀಡಿದ ಅವರು, ಕ್ವಾಂಟಮ್ ಕ್ಷೇತ್ರದಲ್ಲಿ ಆಗಿರುವಂತಹ ಸಂಶೋಧನೆಗಳ ಬಗ್ಗೆ ವಿಸ್ತೃತ ಮಾಹಿತಿ ಪಡೆದುಕೊಂಡರು. ಇಟಿಎಚ್ ಝ್ಯೂರಿಕ್ ಕೇಂದ್ರವು ಆಧುನಿಕ ಕ್ವಾಂಟಮ್ ಕಂಪ್ಯೂಟಿಂಗ್ನ ಜನ್ಮಸ್ಥಳಗಳಲ್ಲಿ ಒಂದಾಗಿದೆ. ಇಲ್ಲಿನ ಸಂಶೋಧನೆಯಿಂದಲೆ ಕ್ವಾಂಟಮ್ ವಿಜ್ಞಾನವು ಸೈದ್ಧಾಂತಿಕ ಹಂತದಿಂದ ನಿಜವಾದ ತಂತ್ರಜ್ಞಾನ ಹಂತಕ್ಕೆ ತಲುಪಿದೆ. ಕರ್ನಾಟಕ ರಾಜ್ಯದಲ್ಲಿ ಉದಯವಾಗುತ್ತಿರುವ ಕ್ವಾಂಟಮ್ ಪರಿಸರವನ್ನು ಇಂತಹ ವಿಶ್ವದರ್ಜೆಯ ಪರಿಣಿತರೊಂದಿಗೆ ಸಂಪರ್ಕಿಸುವುದು ನಮಗೆ ಹೆಮ್ಮೆಯ ವಿಷಯವಾಗಿದೆ ಎಂದು ಭೋಸರಾಜು ಹೇಳಿದರು. ಕರ್ನಾಟಕ ತಂಡವು ಸೂಪರ್ ಕಂಡಕ್ಟಿಂಗ್ ಕ್ಯೂಬಿಟ್ ಲ್ಯಾಬ್ ಮತ್ತು ಟ್ರಾಪ್ಡ್ ಐಯಾನ್ ಲ್ಯಾಬ್ಗಳಿಗೆ ಭೇಟಿ ನೀಡಿ, ಸ್ವಿಟ್ಜಲ್ಯಾಂಡ್ ನಾದ್ಯಂತ ಸಂಶೋಧನಾ ಸಹಭಾಗಿತ್ವವನ್ನು ಇಟಿಎಚ್ ಕ್ವಾಂಟಮ್ ಸೆಂಟರ್ ಹೇಗೆ ಒಂದು ಮಾದರಿಯಾಗಿ ಸಮನ್ವಯಗೊಳಿಸುತ್ತಿದೆ ಎಂಬುದನ್ನು ತಿಳಿದುಕೊಂಡಿತು. ಇಟಿಎಚ್ ನ ಈ ಮಾದರಿಯನ್ನು ಅನುಸರಿಸಿ ಕರ್ನಾಟಕ ಸರಕಾರವು ಬೆಂಗಳೂರಿನ ಕ್ಯೂ-ಸಿಟಿಯಲ್ಲಿ ಸಂಶೋಧನೆ ಮತ್ತು ನವೋತ್ಪಾದನೆಯ ಸಂಯೋಜಿತ ವೇದಿಕೆಯನ್ನು ನಿರ್ಮಿಸುವ ಉದ್ದೇಶವನ್ನು ಹೊಂದಿದೆ ಎಂದು ಅವರು ತಿಳಿಸಿದರು. ಇದೇ ವೇಳೆ ಇಟಿಎಚ್ ತಂಡವು, ತಮ್ಮ ಪ್ರಯೋಗಾಲಯಗಳಲ್ಲಿ ಅಭಿವೃದ್ಧಿಯಾದ ತಂತ್ರಜ್ಞಾನಗಳು ಹೇಗೆ ಯಶಸ್ವಿ ಕ್ವಾಂಟಮ್ ನವೋದ್ಯಮಗಳಾಗಿ ಬೆಳೆದಿವೆ ಎಂಬುದನ್ನು ಪ್ರದರ್ಶಿಸಿತು. ತಂಡವು ಝ್ಯೂರಿಕ್ ಇನ್ಸ್ಟ್ರುಮೆಂಟ್ಸ್ ನಂತಹ ಕಂಪನಿಗೆ ಭೇಟಿ ನೀಡಿತು. ಈ ಕಂಪನಿ ವಿಶ್ವದಾದ್ಯಂತ, ಭಾರತ ಸೇರಿದಂತೆ, ಕ್ವಾಂಟಮ್ ಕಂಪ್ಯೂಟರ್ಗಳಿಗಾಗಿ ಅಂಪ್ಲಿಫೈಯರ್ಗಳು ಮತ್ತು ಸಿಗ್ನಲ್ ಸಿಸ್ಟಮ್ಗಳು ತಯಾರಿಸುತ್ತಿದೆ ಎಂದು ಭೋಸರಾಜು ಹೇಳಿದರು.
ಪ್ರತಿಭೆಗಳು ಅನಾವಣಗೊಳ್ಳಲು ಸ್ಪಧೆ೯ಗಳು ಸಹಕಾರಿ : ಅಭಯಚಂದ್ರ ಜೈನ್
ಮೂಡುಬಿದಿರೆ: ವಿವಿಧ ಸ್ಪಧೆ೯ಗಳಲ್ಲಿ ಭಾಗವಹಿಸುವುದರಿಂದ ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಸಹಕಾರಿಯಾಗುತ್ತದೆ ಎಂದು ಮಾಜಿ ಸಚಿವ, ಸಮಾಜಮಂದಿರ ಸಭಾದ ಅಧ್ಯಕ್ಷ ಕೆ.ಅಭಯಚಂದ್ರ ಜೈನ್ ಹೇಳಿದರು. ಅವರು ದೀಪಾವಳಿ ಹಬ್ಬದ ಪ್ರಯುಕ್ತ ಸಮಾಜ ಮಂದಿರ ಸಭಾ(ರಿ) ಮತ್ತು ಯುವವಾಹಿನಿ ಮೂಡುಬಿದಿರೆ ಘಟಕ ಜಂಟಿಯಾಗಿ ಸಾರ್ವಜನಿಕರಿಗಾಗಿ ಸಮಾಜ ಮಂದಿರದಲ್ಲಿ ಶನಿವಾರ ಸಂಜೆ ಏಪ೯ಡಿಸಿದ್ದ 4ನೇ ವರ್ಷದ ಗೂಡು ದೀಪ ಮತ್ತು ರಂಗೋಲಿ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಡಾ.ಎಂ ಮೋಹನ ಆಳ್ವ ಅವರು ತಮ್ಮ ವಿಶಿಷ್ಟ ಕಾರ್ಯಕ್ರಮಗಳ ಮೂಲಕ ಬುನಾದಿ ಹಾಕಿಕೊಟ್ಟಿದ್ದಾರೆ ಎಂದರು. ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷ ಮುರಳೀಧರ ಕೋಟ್ಯಾನ್ ಅಧ್ಯಕ್ಷತೆ ವಹಿಸಿದರು. ಪಶುವೈದ್ಯಕೀಯ ಇಲಾಖೆಯ ಸಿಬ್ಬಂದಿ, ಯುವವಾಹಿನಿಯ ಸಲಹೆಗಾರ್ತಿ ವಿನುತಾ ಆನಂದ್ ಗಾಂಧಿನಗರ, 25 ಬಾರಿ ರಕ್ತದಾನ ಮಾಡಿದ ಯುವವಾಹಿನಿಯ ಉಪಾಧ್ಯಕ್ಷ ಗಿರೀಶ್ ಕೋಟ್ಯಾನ್ ಅವರನ್ನು ಸನ್ಮಾನಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ವಿವೇಕ್ ಆಳ್ವ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಪ್ರತಿಯೊಬ್ಬರು ತಮ್ಮ ಪ್ರತಿಭೆಯ ಮೂಲಕ ಇಲ್ಲಿ ಗೂಡುದೀಪ, ರಂಗೋಲಿಯನ್ನು ರಚಿಸಿದ್ದಾರೆ. ಎಲ್ಲರು ಬಹುಮಾನವನ್ನು ಗೆಲ್ಲಲು ಸಾಧ್ಯವಿಲ್ಲದಿದ್ದರೂ ತಮ್ಮ ಪ್ರತಿಭೆ ಮೂಲಕ ಮನಸ್ಸನ್ನು ಗೆದ್ದಿದ್ದಾರೆ. ಇಂತಹ ಪ್ರಯತ್ನಗಳು ಯುವವಾಹಿನಿ ಘಟಕದ ಮುಖಾಂತರ ಸದಾ ನಡೆಯುತ್ತಿರಲಿ ಎಂದು ಶುಭ ಹಾರೈಸಿದರು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಸಮಿತಿಯ ಸದಸ್ಯವಾಗ್ಮಿ ಅಜಿತ್ ಕುಮಾರ್ ಪಾಲೇರಿ ದೀಪಾವಳಿಯ ಸಂದೇಶ ನೀಡಿದರು. ಉದ್ಯಮಿಗಳಾದ ಅಬುಲ್ ಅಲಾ ಪುತ್ತಿಗೆ, ಜಾವೇದ್ ಶೇಖ್, ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ಕೂಳೂರು, ಯುವವಾಹಿನಿ ಸಲಹೆಗಾರ ಕುಮಾರ್ ಪೂಜಾರಿ ಇರುವೈಲು, ಪುರಸಭೆ ಸದಸ್ಯರಾದ ಸುರೇಶ್ ಪ್ರಭು, ಸುರೇಶ್ ಕೋಟ್ಯಾನ್. ಯುವವಾಹಿನಿ ಕಾರ್ಯದರ್ಶಿ ವಿನೀತ್ ಮತ್ತಿತರರಿದ್ದರು. ಜಗದೀಶ್ಚಂದ್ರ ಡಿ.ಕೆ ಪ್ರಾಸ್ತವನೆಗೈದು ಸ್ವಾಗತಿಸಿದರು.ನವಾನಂದ ಬಹುಮಾನ ವಿಜೇತರ ವಿವರ ನೀಡಿದರು. ಶಂಕರ್ ಕೋಟ್ಯಾನ್ ಹಾಗೂ ಸುಧಾಕರ್ ಅಳಿಯೂರ್ ಕಾಯ೯ಕ್ರಮ ನಿರೂಪಿಸಿದರು. ಜತೆ ಕಾರ್ಯದರ್ಶಿ ಮೇಘನಾ ವಂದಿಸಿದರು. ಸ್ಪಧಾ೯ ಫಲಿತಾಂಶ : ಫಲಿತಾಂಶ:- ಗೂಡುದೀಪ: ಸಾಂಪ್ರದಾಯಿಕ ವಿಭಾಗ: ರಕ್ಷಿತ್ ಕುಮಾರ್ (ಪ್ರಥಮ), ಸುರೇಂದ್ರ ಅಮೀನ್ (ದ್ವಿತೀಯ) ಹಾಗೂ ಭೋಜ ಅಚ್ಚರಕಟ್ಟೆ (ತೃತೀಯ) ಆಧುನಿಕ ವಿಭಾಗ : ವಿಠಲ್ ಭಟ್ ಮಂಗಳೂರು (ಪ್ರಥಮ), ವೈಶಲ್ ಅಂಚನ್ ಸುಂಕದಕಟ್ಟೆ (ದ್ವಿತೀಯ) ಹಾಗೂ ಜನಾರ್ಧನ ನಿಡ್ಡೋಡಿ(ತೃತೀಯ) ಮಾದರಿ ವಿಭಾಗ: ರೋಹಿತ್ ನಾಯ್ಕ್ ಸಂಪಿಗೆ (ಪ್ರಥಮ), ರಂಜಿತ್ (ದ್ವಿತೀಯ) ಹಾಗೂ ಯತೀಶ್ ಆಚಾರ್ಯ (ತೃತೀಯ) ರಂಗೋಲಿ ಸ್ಪಧೆ: ಶ್ರೇಯಾ (ಪ್ರಥಮ), ಶ್ರವಣ್ಯಾ ಎಸ್. ಆಚಾರ್ಯ (ದ್ವಿತೀಯ) ಹಾಗೂ ಸಾನ್ವಿ (ತೃತೀಯ) ಸಮಾಧನಕಾರ ಬಹುಮಾನ: ಅನುಷಾ, ಪ್ರೇರಣಾ, ಸಹನ್ಯಾ ಕೋಟ್ಯಾನ್ ಅವರು ಪಡೆದುಕೊಂಡರು.
ಅ.20: ದಾರುಲ್ ಅಶ್-ಅರಿಯ ಎಜುಕೇಷನಲ್ ಸೆಂಟರ್ ಸುರಿಬೈಲ್ಗೆ ಎಪಿ ಉಸ್ತಾದ್ ಆಗಮನ
ಆಂಡ್ ನೇರ್ಚೆ ಮತ್ತು ಅಶ್-ಅರಿಯ್ಯ ಸನದುದಾನ
ಕೊಣಾಜೆ: ' ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್-2025' ಉದ್ಘಾಟನೆ
ಕೊಣಾಜೆ: ಕ್ರೀಡಾಕೂಟಗಳು ನಮ್ಮಲ್ಲಿ ಆತ್ಮಸ್ಥೈರ್ಯ, ನಾಯಕತ್ವ ಗುಣವನ್ನು ಬೆಳೆಸುವುದೊಂದಿಗೆ ಸಂಘಟನಾತ್ಮಕ ಮನೋಭಾವವನ್ನು ಬೆಳೆಸಲು ಸಾಧ್ಯ. ಕೊಣಾಜೆ ಯುವವಾಹಿನಿ ಘಟಕದ ಸಮಾಜಮುಖಿ ಕಾರ್ಯಗಳು ಮಾದರಿಯಾಗಿದ್ದು, ಇದೀಗ ಉತ್ತಮ ಉದ್ದೇಶದೊಂದಿಗೆ ಬ್ಯಾಡ್ಮಿಂಟನ್ ಪಂದ್ಯಾಟವನ್ನು ಆಯೋಜಿಸಿರುವುದು ಮಾದರಿಯಾಗಿದೆ ಎಂದು ಸಹ್ಯಾದ್ರಿ ಕೋ ಅಪರೇಟಿವ್ ಸೊಸೈಟಿ, ತೊಕ್ಕೊಟ್ಟು ಇದರ ಅಧ್ಯಕ್ಷರಾದ ಕೆ ಟಿ ಸುವರ್ಣ ಅವರು ಹೇಳಿದರು. ಯುವ ವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಹಾಗೂ ಗ್ರಾಮಚಾವಡಿ ಕೊಣಾಜೆ ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಗ್ರಾಮಚಾವಡಿ ಕೊಣಾಜೆ ಇದರ ಸಹಯೋಗದೊಂದಿಗೆ ಯುವ ಸಂಜೀವಿನಿ ಸೇವಾ ಯೋಜನೆಯ ಸಹಾಯಾರ್ಥವಾಗಿ ಪುರುಷ ಮತ್ತು ಮಹಿಳೆಯರ ಅಂತರ್ ಘಟಕ ಶಟಲ್ ಬ್ಯಾಡ್ಮಿಂಟನ್ (ಜಿಸಿಕೆ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್-2025 ) ಪಂದ್ಯಾಟವನ್ನು ಮಂಗಳೂರು ವಿವಿಯ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಗ್ರಾಮ ಚಾವಡಿ ಕೊಣಾಜೆ ಘಟಕ ದ ಅಧ್ಯಕ್ಷರಾದ ಬಾಬು ಬಂಗೇರ ಕೊಣಾಜೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅಮ್ಮೆಂಬಳ ಸೇವಾ ಸಹಕಾರಿ ಸಂಘ ನಿ. ಮುಡಿಪು ಇದರ ಅಧ್ಯಕ್ಷರಾದ ಟಿ. ಜಿ. ರಾಜಾರಾಮ ಭಟ್, ಆತ್ಮ ಶಕ್ತಿ ವಿವಿದೋದ್ದೇಶ ಸಹಕಾರಿ ಸಂಘ ಅಧ್ಯಕ್ಷರಾದ ಚಿತ್ತರಂಜನ್ ಬೋಳಾರ್, ಯುವವಾಹಿನಿ ಕೇಂದ್ರಸಮಿತಿ, ಮಂಗಳೂರು ಇದರ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕೂಳೂರು , ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಗ್ರಾಮಚಾವಡಿ ಕೊಣಾಜೆ ಇದರ ಅಧ್ಯಕ್ಷರಾದ ವಿಜೇತ್ ಪಜೀರು, ಮಂಗಳೂರು ದೈಹಿಕ ಶಿಕ್ಷಣ ವಿಭಾಗದ ಪರಿವೀಕ್ಷಣಾಧಿಕಾರಿ ಲಿಲ್ಲಿ ಪಾಯಸ್, ಎಸ್ ಎಸ್ ಗ್ರೂಪ್ ನ ಮ್ಯಾನೇಜಿಂಗ್ ಡೈರೆಕ್ಟರ್ ದಿವ್ಯಾ ನವೀನ್ ಸುವರ್ಣ, ಮೆಸ್ಕಾಂ ಉದ್ಯೋಗಿ ವಿನಯ ನಿತಿನ್, ಉದ್ಯಮಿ ರೋಝಿ ವ್ಯೋಂಗ್, ಕೊಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗೀತಾ ಡಿ ಕುಂದರ್, ಅರ್ಚಕರಾದ ಹರೀಶ್ ಶಾಂತಿ, ಬಿಜೆಪಿ ಮಂಡಲ ಅಧ್ಯಕ್ಷರಾದ ಜಗದೀಶ್ ಆಳ್ವ ಕುವೆತ್ತಬೈಲ್, ನಿವೃತ್ತ ಪ್ರಾಧ್ಯಾಪಕ ಪ್ರೊ.ಬಾಲಕೃಷ್ಣ ರಾವ್, ಮುಖಂಡರಾದ ಸೀತಾರಾಂ ಕರ್ಕೇರ, ಯುವವಾಹಿನಿ ಕೇಂದ್ರ ಸಮಿತಿ ಕಾರ್ಯದರ್ಶಿ ಬಾಬು ಪೂಜಾರಿ, ಕೇಂದ್ರ ಸಮಿತಿ ಕ್ರೀಡಾ ನಿರ್ದೆಶಕ ತಾರಾನಾಥ್ ಕೋಟ್ಯಾನ್ , ಲೋಕೇಶ್ ಕೊಟ್ಯಾನ್, ನಿವೃತ್ತ ಶಿಕ್ಷಕಿ ಕ್ಯಾತರಿನ್ ಪಲ್ಲಟಿ, ನಿವೃತ್ತ ಶಿಕ್ಷಕ ಆನಂದ, ಕಾರ್ಯದರ್ಶಿ ಮಿಥುನ್ ಪಜೀರು ಮೊದಲಾದವರು ಭಾಗವಹಿಸಿದ್ದರು. ಕ್ರೀಡಾ ನಿರ್ದೆಶಕರಾದ ಸುರೇಖಾ ಹರೀಶ್ ಪೂಜಾರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಮಿಥುನ್ ಪಜೀರು ವಂದಿಸಿಸರು. ವಿದ್ಯಾ ರಾಕೇಶ್ ಕಾರ್ಯಕ್ರಮ ನಿರೂಪಿಸಿದರು. ಪಂದ್ಯಾಟದಲ್ಲಿ ಯುವವಾಹಿನಿ ಘಟಕದ ರಾಜ್ಯದ ವಿವಿಧ ತಂಡಗಳು ಭಾಗವಹಿಸಿದ್ದವು.
ಸ್ವಾಸ್ಥ್ಯ ಸಮಾಜ ನಿರ್ಮಿಸುವ ಶಿಕ್ಷಣಕ್ಕೆ ಒತ್ತು ನೀಡಬೇಕಾಗಿದೆ: ಡಾ.ಎಸ್.ಎಲ್. ಭೋಜೇಗೌಡ
ಮಂಗಳೂರು: ಸ್ವಾಸ್ಥ್ಯ ಸಮಾಜ ನಿರ್ಮಿಸುವ ಶಿಕ್ಷಣಕ್ಕೆ ಒತ್ತು ನೀಡಬೇಕಾಗಿದೆ. ನಾಡು ಕಟ್ಟುವ ಪಠ್ಯ ಗಳನ್ನು ಮಾಡಬೇಕಾಗಿದೆ ಇಂತಹ ವಿಚಾರದಲ್ಲಿ ರಾಜಕೀಯ ಸಲ್ಲದು ಎಂದು ವಿಧಾನ ಪರಿಷತ್ ಸದಸ್ಯ ಡಾ.ಎಸ್.ಎಲ್. ಭೋಜೇ ಗೌಡ ತಿಳಿಸಿದ್ದಾರೆ. ಅವರು ರವಿವಾರ ನಗರದ ಒಶಿಯನ್ ಪರ್ಲ್ ಹೊಟೇಲ್ ಸಭಾಂಗಣದಲ್ಲಿ ಕರ್ನಾಟಕ ಅನುದಾನ ರಹಿತ ಪದವಿ ಪೂರ್ವ ಆಡಳಿತ ಮಂಡಳಿಗಳ ಸಂಘ,ರಿ.(ಕುಪ್ಮಾ) ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾ ಡುತ್ತಾ, ಸರಕಾರಿ ಶಿಕ್ಷಣ ಸಂಸ್ಥೆಗಳಿಗೂ ಉತ್ತಮ ಸೌಲಭ್ಯಗಳನ್ನು ನೀಡುತ್ತಾ,ಪೂರ್ಣ ಪ್ರಮಾಣದ ಶಿಕ್ಷಕರನ್ನು ನೇಮಿಸಿ ಗುಣಮಟ್ಟ ವನ್ನು ಉನ್ನತೀಕರಿಸಬೇಕಾಗಿದೆ ಎಂದರು. ಮಾಹಿತಿ ಹಕ್ಕು ಕಾರ್ಯ ಕರ್ತರ ಹೆಸರಿನಲ್ಲಿ ಶಿಕ್ಷಣ ಸಂಸ್ಥೆಗಳನ್ನು ಗುರಿ ಮಾಡಿ ಕಿರುಕುಳ ನೀಡುವುದು ಸರಿಯಲ್ಲ ಎಂದು ಭೋಜೇ ಗೌಡರು ಟೀಕಿಸಿದ್ದಾರೆ. ಕುಪ್ಮಾ ರಾಜ್ಯ ಸಮಿತಿಯ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಮಾತನಾ ಡುತ್ತಾ,ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಕುಪ್ಮಾ ಸಂಘಟನೆಗಳನ್ನು ವಿಸ್ತರಿಸಿ ಸಂಘಟ ನೆಯನ್ನು ಬಲಿಷ್ಠಗೊಳಿಸಬೇಕಾಗಿದೆ ಎಂದು ತಿಳಿಸಿದ್ದಾರೆ.ರಾಜ್ಯದಲ್ಲಿ ವಿವಿಧ ಹಂತದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಶೇ.60ರಷ್ಟು ಶಿಕ್ಷಣ ನೀಡುತ್ತಿವೆ.ಇಂತಹ ಸನ್ನಿವೇಶದಲ್ಲಿ ಸರಕಾರ ಖಾಸಗಿ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಅಗತ್ಯವಿದೆ ಎಂದರು. ಜಿಲ್ಲೆಯ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ದಕ್ಷಿಣ ಕನ್ನಡ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ರಾಜೇಶ್ವರಿ ಎಚ್ ಎಚ್ ಜಿಲ್ಲೆಯ ಶಿಕ್ಷಣ ಕ್ಷೇತ್ರದಲ್ಲಿ ಖಾಸಗಿ ಸಂಸ್ಥೆಗಳು ಮಹತ್ವದ ಪಾತ್ರವಹಿ ಸುತ್ತಾ ಬಂದಿದೆ ಎಂದು ಶ್ಲಾಘಿಸಿದರು. ಸಮಾರಂಭದಲ್ಲಿ ಕುಪ್ಮಾ ರಾಜ್ಯ ಸಮಿತಿಯ ಗೌರವಾಧ್ಯಕ್ಷ ಕೆ.ರಾಧಾಕೃಷ್ಣ ಶೆಣೈ, ಡಾ.ಎಂ.ಬಿ. ಪುರಾಣಿಕ್, ಡಾ.ಕೆ.ಸಿ. ನಾಯ್ಕ್, ರಾಜ್ಯ ಸಮಿತಿಯ ಕಾರ್ಯದರ್ಶಿ ಪ್ರೊ.ನರೇಂದ್ರ ಎಲ್ ನಾ ಉಪಸ್ಥಿತರಿದ್ದರು. ಜಿಲ್ಲಾ ಅಧ್ಯಕ್ಷ ಯುವ ರಾಜ ಜೈನ್ ಸ್ವಾಗತಿಸಿದರು. ಸುನಿಲ್ ಪಲ್ಲಮಜಲು ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಕಾರ್ಯದರ್ಶಿ ಡಾ.ಮಂಜುನಾಥ ಎಸ್ ರೇವಣ್ಕರ್ ವಂದಿಸಿದರು.
ರಕ್ತಸಿಕ್ತ ಗಡಿಗಳು: ತಾಲಿಬಾನ್ ಜೊತೆ ಪಾಕಿಸ್ತಾನದ ಮುಗಿಯದ ಯುದ್ಧ
ಮಿಲಿಟರಿ ಶಕ್ತಿಯಲ್ಲಿ ಮುಂಚೂಣಿಯಲ್ಲಿರುವ ಪಾಕಿಸ್ತಾನ, ತನ್ನ ಪಶ್ಚಿಮ ಗಡಿಯಲ್ಲಿ ತಾಲಿಬಾನ್ ದಾಳಿಗಳಿಂದ ತೀವ್ರ ಸಂಕಷ್ಟ ಎದುರಿಸುತ್ತಿದೆ. ತನ್ನದೇ ಸೃಷ್ಟಿಯಾದ ತಾಲಿಬಾನ್ ಈಗ ಪಾಕ್ ಪಡೆಗಳ ಮೇಲೆ ದಾಳಿ ನಡೆಸುತ್ತಿದ್ದು, ದೇಶವು ಗಂಭೀರ ಬಿಕ್ಕಟ್ಟಿನಲ್ಲಿದೆ. ಪಾಕಿಸ್ತಾನಕ್ಕೆ ತಾಲಿಬಾನ್ ದೊಡ್ಡ ಸವಾಲಾಗಿ ಪರಿಣಮಿಸಿದ್ದು, ಉಭಯ ದೇಶಗಳು ಗಂಭೀರ ಬಿಕ್ಕಟ್ಟಿನಲ್ಲಿ ಸಿಲುಕಿವೆ. ಗಡಿಯಲ್ಲಿ ಪಾಕ್ ತನ್ನ ಸೈನಿಕರನ್ನು ರವಾನಿಸಿದೆ. ತಾಲಿಬಾನಿಗಳು ಹೊಂಚುಹಾಕಿ ನಡೆಸುತ್ತಿರುವ ದಾಳಿಗೆ ಪಾಕ್ ಸೈನಿಕರು ಬಲಿಯಾಗುತ್ತಿದ್ದಾರೆ. ಶಾಂತಿಯುತ ರಾಜತಾಂತ್ರಿಕ ಮಾತುಕತೆಗಳೇ ಸದ್ಯಕ್ಕೆ ಉತ್ತಮ ಆಯ್ಕೆಯಾಗಿದೆ.
ಅ. 22ರಂದು ಕೇಂದ್ರದೊಂದಿಗೆ ಮಾತುಕತೆ: ಲಡಾಖ್ ಅಪೆಕ್ಸ್ ಬಾಡಿ
ಲೇಹ್: ಅ.22ರಂದು ಗೃಹ ವ್ಯವಹಾರಗಳ ಸಚಿವಾಲಯದ ಉಪ ಸಮಿತಿಯೊಂದಿಗೆ ಲಡಾಖ್ ಪ್ರತಿನಿಧಿಗಳು ದಿಲ್ಲಿಯಲ್ಲಿ ಮಾತುಕತೆ ನಡೆಸಲಿದ್ದಾರೆ ಎಂದು ರವಿವಾರ ಲೇಹ್ ಅಪೆಕ್ಸ್ ಬಾಡಿಯ ಸಹ ಅಧ್ಯಕ್ಷ ಚೆರಿಂಗ್ ದೊರ್ಜೆ ತಿಳಿಸಿದ್ದಾರೆ. ಲಡಾಖ್ ಗೆ ರಾಜ್ಯ ಸ್ಥಾನಮಾನ ನೀಡಬೇಕು ಹಾಗೂ ಕೇಂದ್ರಾಡಳಿತ ಪ್ರದೇಶಕ್ಕೆ ರಕ್ಷಣೆ ನೀಡಲು ಸಂವಿಧಾನದ ಆರನೆ ಪರಿಚ್ಛೇದದಡಿ ಸೇರ್ಪಡೆ ಮಾಡಬೇಕು ಎಂದು ಈ ಮಾತುಕತೆಯ ವೇಳೆ ಲೇಹ್ ಅಪೆಕ್ಸ್ ಬಾಡಿ ಹಾಗೂ ಕಾರ್ಗಿಲ್ ಡೆಮಾಕ್ರಟಿಕ್ ಅಲಯನ್ಸ್ ನ ಮೂವರು ಪ್ರತಿನಿಧಿಗಳು ಪ್ರಾಥಮಿಕ ಬೇಡಿಕೆ ಮಂಡಿಸುವ ಉದ್ದೇಶ ಹೊಂದಿದ್ದಾರೆ ಎಂದು ಲಾಕ್ರೂಕ್ ಸುದ್ದಿಗಾರರಿಗೆ ತಿಳಿಸಿದ್ದಾರೆ. “ಅಕ್ಟೋಬರ್ 22ರಂದು ಉಪ ಸಮಿತಿಯ ಸಭೆಯನ್ನು ಆಯೋಜಿಸಲಾಗಿದೆ ಎಂದು ಗೃಹ ಸಚಿವಾಲಯ ನಮಗೆ ಮಾಹಿತಿ ನೀಡಿದ್ದು, ಲೇಹ್ ಅಪೆಕ್ಸ್ ಬಾಡಿ ಹಾಗೂ ಕಾರ್ಗಿಲ್ ಡೆಮಾಕ್ರಟಿಕ್ ಅಲಯನ್ಸ್ ಎರಡನ್ನೂ ಈ ಸಭೆಗೆ ಆಹ್ವಾನಿಸಲಾಗಿದೆ. ನಮ್ಮನ್ನು ಮಾತುಕತೆಗೆ ಆಹ್ವಾನಿಸುವ ಭಾರತ ಸರಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ ಹಾಗೂ ಮಾತುಕತೆಯಲ್ಲಿ ಸಕಾರಾತ್ಮಕ ಫಲಿತಾಂಶ ಬರುವುದನ್ನು ಎದುರು ನೋಡುತ್ತಿದ್ದೇವೆ” ಎಂದೂ ಅವರು ಹೇಳಿದ್ದಾರೆ. ಲಡಾಖ್ ಗೆ ರಾಜ್ಯ ಸ್ಥಾನಮಾನ ನೀಡಬೇಕು ಹಾಗೂ ಲಡಾಖ್ ಅನ್ನು ಸಂವಿಧಾನದ ಆರನೆಯ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು ಎಂಬ ಬೇಡಿಕೆಗಳ ಕುರಿತ ಮಾತುಕತೆಯನ್ನು ಮುಂಚಿತವಾಗಿ ನಡೆಸಬೇಕು ಎಂದು ಆಗ್ರಹಿಸಿ ಲೇಹ್ ಅಪೆಕ್ಸ್ ಬಾಡಿ ಕರೆ ನೀಡಿದ್ದ ಬಂದ್ ವೇಳೆ, ಸೆಪ್ಟೆಂಬರ್ 24ರಂದು ಲೇಹ್ ನಲ್ಲಿ ವ್ಯಾಪಕ ಹಿಂಸಾಚಾರಗಳು ನಡೆದಿದ್ದವು.
ಫೆಲೆಸ್ತೀನ್ ನಾಗರಿಕರ ಮೇಲೆ ದಾಳಿಗೆ ಹಮಾಸ್ ಯೋಜನೆ : ಅಮೆರಿಕ ಆರೋಪ
ವಾಷಿಂಗ್ಟನ್, ಅ.19: ಫೆಲೆಸ್ತೀನ್ ಸಶಸ್ತ್ರ ಗುಂಪು ಹಮಾಸ್ ಗಾಝಾದಲ್ಲಿ ಫೆಲೆಸ್ತೀನ್ ನಾಗರಿಕರ ಮೇಲೆ `ಸನ್ನಿಹಿತ' ದಾಳಿಯನ್ನು ಯೋಚಿಸುತ್ತಿದೆ ಎಂಬ ವಿಶ್ವಾಸಾರ್ಹ ವರದಿ ಲಭಿಸಿದೆ ಎಂದು ಅಮೆರಿಕಾದ ವಿದೇಶಾಂಗ ಇಲಾಖೆ ಶನಿವಾರ ಹೇಳಿದೆ. `ಫೆಲೆಸ್ತೀನ್ ನಾಗರಿಕರ ವಿರುದ್ಧದ ಈ ಯೋಜಿತ ಆಕ್ರಮಣವು ಕದನ ವಿರಾಮ ಒಪ್ಪಂದದ ಗಂಭೀರ ಮತ್ತು ನೇರ ಉಲ್ಲಂಘನೆಯಾಗುತ್ತದೆ. ಮತ್ತು ಮಧ್ಯಸ್ಥಿಕೆ ಪ್ರಯತ್ನಗಳ ಮೂಲಕ ಸಾಧಿಸಲಾದ ಗಮನಾರ್ಹ ಪ್ರಗತಿಯನ್ನು ದುರ್ಬಲಗೊಳಿಸುತ್ತದೆ' ಎಂದು ವಿದೇಶಾಂಗ ಇಲಾಖೆ ವೆಬ್ಸೈಟ್ನಲ್ಲಿ ಹೇಳಿಕೆ ಬಿಡುಗಡೆಗೊಳಿಸಿದೆ. ಈ ದಾಳಿಯೊಂದಿಗೆ ಹಮಾಸ್ ಮುಂದುವರಿದರೆ ಗಾಝಾದ ಜನರನ್ನು ರಕ್ಷಿಸಲು ಮತ್ತು ಕದನ ವಿರಾಮದ ಸಮಗ್ರತೆಯನ್ನು ಕಾಪಾಡಲು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ನಾಗರಿಕರ ಸುರಕ್ಷತೆಯನ್ನು ಖಾತರಿಪಡಿಸುವ, ಶಾಂತಿಯನ್ನು ಉಳಿಸಿಕೊಳ್ಳುವ ಮತ್ತು ಗಾಝಾ ಹಾಗೂ ಈ ಸಂಪೂರ್ಣ ವಲಯಕ್ಕೆ ಶಾಂತಿ ಮತ್ತು ಸಮೃದ್ಧಿಯನ್ನು ಮುಂದುವರಿಸುವ ತಮ್ಮ ಬದ್ಧತೆಯನ್ನು ಖಾತರಿಪಡಿಸಲು ಅಮೆರಿಕಾ ಹಾಗೂ ಇತರ ಮಧ್ಯಸ್ಥಿಕೆದಾರರು ದೃಢ ಸಂಕಲ್ಪ ಮಾಡಿದ್ದಾರೆ' ಎಂದು ಎಚ್ಚರಿಕೆಯನ್ನೂ ನೀಡಿದೆ. ಕಣ್ಣಿಗೆ ಬಟ್ಟೆ ಕಟ್ಟಲಾದ 8 ಮಂದಿ ಶಂಕಿತರನ್ನು ರಸ್ತೆಯಲ್ಲಿ ಗುಂಡಿಟ್ಟು ಹತ್ಯೆ ಮಾಡುವ ವೀಡಿಯೊವನ್ನು ಹಮಾಸ್ ಬಿಡುಗಡೆಗೊಳಿಸಿದ ಬಳಿಕ ಅಮೆರಿಕ ಈ ಎಚ್ಚರಿಕೆ ರವಾನಿಸಿದೆ. `ಶತ್ರುಗಳೊಂದಿಗೆ ಕೈ ಜೋಡಿಸಿರುವ ದ್ರೋಹಿಗಳಿಗೆ ಇದೇ ಶಿಕ್ಷೆ' ಎಂದು ಹಮಾಸ್ ಹೇಳಿರುವುದಾಗಿ ವರದಿಯಾಗಿದೆ.
ಆರೆಸ್ಸೆಸ್ ವಿಚಾರ ಪ್ರಜಾಪ್ರಭುತ್ವ ವ್ಯವಸ್ಥೆಗೆ ಹೊಂದಾಣಿಕೆ ಆಗಲ್ಲ: ಜಿ.ಪರಮೇಶ್ವರ್
ಬೆಂಗಳೂರು : ಆರೆಸ್ಸೆಸ್ ಸಂಸ್ಥೆಗೆ ನೂರು ವರ್ಷಗಳು ತುಂಬಿವೆ. ಆದರೆ, ಇದರ ವಿಚಾರಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ಹೊಂದಾಣಿಕೆ ಆಗುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೆಸ್ಸೆಸ್ ಹೊಸದೇನಲ್ಲ, ನೂರು ವರ್ಷವಾಗಿದೆ. ಆದರೆ, ಆರೆಸ್ಸೆಸ್ ವಿಚಾರಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ಹೊಂದಾಣಿಕೆ ಆಗುವುದಿಲ್ಲ. ಅದರ ಬಗ್ಗೆ ಆಗಿಂದಾಗ್ಗೆ ಚರ್ಚೆಗಳು ನಡೆಯುತ್ತಿವೆ ಎಂದು ತಿಳಿಸಿದರು. ಬಿಜೆಪಿ ಅಂಗ ಸಂಸ್ಥೆ ಎಂದು ಹೇಳುವ ಆರೆಸ್ಸೆಸ್ ಚಟುವಟಿಕೆಗಳನ್ನು ನಿಷೇಧಿಸಿ ರಾಜ್ಯದಲ್ಲಿ 2013ರಲ್ಲಿಯೇ ಅಂದಿನ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಆದೇಶ ಮಾಡಿದ್ದರು. ಆದರೆ, ಈಗ ನಾವು ಆದೇಶ ಮಾಡಿದರೆ ಮಾತ್ರ ಪ್ರಶ್ನೆ ಮಾಡುತ್ತಾರೆ. ಅವರು ಮಾಡಿದರೆ ಗೊಂದಲ ಆಯಿತು ಎನ್ನುತ್ತಾರೆ ಎಂದು ವ್ಯಂಗ್ಯವಾಡಿದರು. ಆರೆಸ್ಸೆಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ರಾಯಚೂರಿನ ಪಿಡಿಒವೊಬ್ಬರನ್ನು ಅಮಾನತು ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಸರಕಾರಿ ನೌಕರರು ಸಂಘಟನೆಗಳಲ್ಲಿ ಭಾಗವಹಿಸುವಂತಿಲ್ಲ. ಸಂಘಟನೆಗಳ ಸದಸ್ಯತ್ವ ಪಡೆಯುವಂತಿಲ್ಲ. ಸದಸ್ಯರಾಗಲು ನೌಕರರಿಗೆ ಅವಕಾಶ ಇಲ್ಲ. ಅದಕ್ಕಾಗಿಯೇ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಕದನ ವಿರಾಮ ಉಲ್ಲಂಘನೆ : ದಕ್ಷಿಣ ಗಾಝಾ ಮೇಲೆ ಇಸ್ರೇಲ್ನಿಂದ ವೈಮಾನಿಕ ದಾಳಿ
ಜೆರುಸಲೇಂ, ಅ.19: ದಕ್ಷಿಣ ಗಾಝಾದ ರಫಾ ಹಾಗೂ ಇತರ ಪ್ರದೇಶಗಳಲ್ಲಿ ರವಿವಾರ ವೈಮಾನಿಕ ದಾಳಿ ನಡೆಸಿರುವುದಾಗಿ ಇಸ್ರೇಲಿ ಮಿಲಿಟರಿಯ ಮೂಲಗಳನ್ನು ಉಲ್ಲೇಖಿಸಿ ಇಸ್ರೇಲ್ನ `ಚಾನೆಲ್ 12' ಸುದ್ದಿವಾಹಿನಿ ವರದಿ ಮಾಡಿದೆ. ಹಮಾಸ್ ಸದಸ್ಯರೊಂದಿಗೆ ಗುಂಡಿನ ಚಕಮಕಿಯ ಬಳಿಕ ವೈಮಾನಿಕ ದಾಳಿ ನಡೆದಿರುವುದಾಗಿ ವರದಿಯಾಗಿದೆ. ರಫಾದಲ್ಲಿ ಸುಧಾರಿತ ಸ್ಫೋಟಕ ಸಾಧನ(ಐಇಡಿ)ವನ್ನು ಸ್ಫೋಟಿಸಿದಾಗ ಇಸ್ರೇಲ್ ಯೋಧರು ಗಾಯಗೊಂಡಿದ್ದಾರೆ. ಯುದ್ಧದ ಸಂದರ್ಭ ಇಸ್ರೇಲಿ ಸೇನೆಯೊಂದಿಗೆ ಕಾರ್ಯನಿರ್ವಹಿಸುತ್ತಿದ್ದ ಸಶಸ್ತ್ರ ಹೋರಾಟಗಾರರ ತಂಡ ರಫಾದಲ್ಲಿ ಉಪಸ್ಥಿತಿ ಮುಂದುವರಿಸಿರುವುದು ಬಿಕ್ಕಟ್ಟಿಗೆ ಮೂಲ ಕಾರಣವಾಗಿದೆ ಎಂದು `ಅಲ್ ಜಝೀರಾ' ವರದಿ ಮಾಡಿದೆ. ಇನ್ನೂ ಇಸ್ರೇಲ್ನ ನಿಯಂತ್ರಣದಲ್ಲಿರುವ ರಫಾ ನಗರದಲ್ಲಿ ಹಮಾಸ್ ಹೋರಾಟಗಾರರು ರಾಕೆಟ್ ಚಾಲಿತ ಗ್ರೆನೇಡ್ಗಳಿಂದ ಇಸ್ರೇಲಿ ಪಡೆಗಳ ಮೇಲೆ ದಾಳಿ ನಡೆಸಿದ ಬಳಿಕ ಎರಡು ವೈಮಾನಿಕ ದಾಳಿ ನಡೆದಿರುವುದಾಗಿ ಮತ್ತೊಂದು ಮೂಲಗಳನ್ನು ಉಲ್ಲೇಖಿಸಿ ಎಎಫ್ಪಿ ಸುದ್ದಿಸಂಸ್ಥೆ ವರದಿ ಮಾಡಿದೆ. ಇಸ್ರೇಲ್ ಕದನ ವಿರಾಮವನ್ನು ಉಲ್ಲಂಘಿಸಿರುವುದಾಗಿ ಹಮಾಸ್ ಆರೋಪಿಸಿದೆ. `ಕದನ ವಿರಾಮ ಒಪ್ಪಂದಕ್ಕೆ ತಮ್ಮದೇ ಸರಕಾರದ ಮಿತ್ರಪಕ್ಷಗಳ ತೀವ್ರ ವಿರೋಧದಿಂದ ಒತ್ತಡಕ್ಕೆ ಒಳಗಾಗಿರುವ ನೆತನ್ಯಾಹು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದು ಮಧ್ಯವರ್ತಿಗಳು ಮತ್ತು ಖಾತರಿದಾರ ದೇಶಗಳ ಹೆಗಲಿಗೆ ಜವಾಬ್ದಾರಿ ವರ್ಗಾಯಿಸಲು ಬಯಸಿದ್ದಾರೆ' ಎಂದು ಹಮಾಸ್ನ ಉನ್ನತ ಅಧಿಕಾರಿ ಪ್ರತಿಪಾದಿಸಿದ್ದಾರೆ.
ರಸ್ತೆ ಗುಂಡಿ ಮುಚ್ಚುವ ಬದಲು ಕಿರಣ್ ಮುಜುಂದಾರ್ರನ್ನು ಟೀಕಿಸುವುದು ನಿರರ್ಥಕ : ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು, ಅ.19: ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಿ, ರಸ್ತೆಗಳನ್ನು ದುರಸ್ಥಿ ಮಾಡುವ ಬದಲು ಉದ್ಯಮಿ ಕಿರಣ್ ಮುಜುಂದಾರ್ ಶಾ ಅವರನ್ನು ಟೀಕೆ ಮಾಡುವುದರಿಂದ ಯಾವುದೆ ಪ್ರಯೋಜನ ಇಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ರವಿವಾರ ನಗರದ ಯಲಹಂಕದಲ್ಲಿರುವ ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲ ಬ್ಯೂರೋದ 33ನೆ ಸಂಸ್ಥಾಪನಾ ದಿನಾಚರಣೆ ಹಾಗೂ 3ನೆ ಕೃಷಿ ಕೀಟ ಜೈವಿಕ ನಿಯಂತ್ರಣ ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಕಿರಣ್ ಮುಜುಂದಾರ್ ಶಾ ಅವರು ಹೇಳಿದ್ದು ಒಂದೆಡೆ ಇರಲಿ, ದಿನನಿತ್ಯವೂ ಮಾಧ್ಯಮಗಳು ತೋರಿಸುತ್ತಿರುವುದು ಸುಳ್ಳೇ? ವಾಸ್ತವಾಂಶವನ್ನು ಮಾಧ್ಯಮಗಳೆ ತೋರಿಸುತ್ತಿವೆ. ಗುಂಡಿಗಳನ್ನು ಮುಚ್ಚಿ ಸಮಸ್ಯೆ ಬಗೆಹರಿಸುವುದು ಬಿಟ್ಟು ಶಾ ಅವರನ್ನು ಟೀಕಿಸುವುದರಲ್ಲಿ ಈ ಸರಕಾರ ಮತ್ತು ಕಾಂಗ್ರೆಸ್ ನಾಯಕರು ಮಗ್ನರಾಗಿರುವುದು ಸರಿಯಲ್ಲ ಎಂದು ಕುಮಾರಸ್ವಾಮಿ ಟೀಕಿಸಿದರು. ರಾಜ್ಯ ಕಾಂಗ್ರೆಸ್ ಸರಕಾರವು ಜನರ ಕೆಲಸ ಮಾಡುವುದು ಬಿಟ್ಟು, ಕ್ಷುಲ್ಲಕ ವಿಚಾರಗಳ ಮೇಲೆ ಗಮನವಿಟ್ಟು ಸಮಯ ಪೋಲು ಮಾಡುತ್ತಿದೆ. ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಸರಕಾರವನ್ನು ಎಚ್ಚರಿಸಿದ ಕಿರಣ್ ಮುಜುಂದಾರ್ ಶಾ ಅವರ ಟ್ವೀಟ್ ಗೆ ಈ ಸರಕಾರ ಪ್ರತಿ ಟೀಕೆ ಮಾಡುತ್ತಿರುವುದು ಸರಿಯಲ್ಲ. ಒಂದು ಸರಕಾರದ ವರ್ತನೆ ಇರಬೇಕಾದದ್ದು ಹೀಗಲ್ಲ ಎಂದು ಅವರು ಹೇಳಿದರು. ರಸ್ತೆಗುಂಡಿಗಳಿಂದಾಗಿ ಬೆಂಗಳೂರಿನಲ್ಲಿ ಸಾಕಷ್ಟು ಜನರಿಗೆ ಬಹಳ ತೊಂದರೆ ಆಗಿದೆ. ನಾನು ಮುಖ್ಯಮಂತ್ರಿ ಆಗಿದ್ದಾಗ ನನ್ನ ಕಾಲದ ಎರಡೂ ಅವಧಿಯಲ್ಲೂ ಗುಂಡಿಗಳ ಬಗ್ಗೆ ಯಾವ ಉದ್ಯಮಿಗಳೂ ಟೀಕೆ ಮಾಡಲಿಲ್ಲ. 2006-07ರಲ್ಲಿ 59 ರಸ್ತೆಗಳ ಅಗಲೀಕರಣಕ್ಕೆ ಮಂಜೂರಾತಿ ನೀಡಿ ಐದಾರು ತಿಂಗಳಲ್ಲೆ ಮುಗಿಸಲಾಗಿತ್ತು. ಇವರಿಗೆ ಕೆಲಸ ಮಾಡಲು ಏನು ಅಡ್ಡಿ ಎಂದು ಕುಮಾರಸ್ವಾಮಿ ಖಾರವಾಗಿ ಪ್ರಶ್ನಿಸಿದರು. ಈಗಲೂ ಇವರು ಮಾಡುತ್ತಿರುವ ಕೆಲಸಗಳು ನನ್ನ ಅವಧಿಯಲ್ಲಿ ನಾನು ಮಂಜೂರಾತಿ ನೀಡಿದ್ದು. ಈ ಸರಕಾರ ಜನರ ಕೆಲಸ ಮಾಡುವುದು ಬಿಟ್ಟು ವಿನಾಕಾರಣ ಕಾಲಹರಣ ಮಾಡುತ್ತಿದೆ. ಬೇರೆ ರಾಜ್ಯಗಳಲ್ಲಿ ಉದ್ಯಮಿಗಳಿಗೆ ಕೊಡುವ ಸವಲತ್ತು, ರಿಯಾಯ್ತಿಗಳ ಬಗ್ಗೆ ಹೇಳಿದರೆ ಅಲ್ಲಿಗೆ ಹೋಗಲಿ, ಇಲ್ಲಿಗ್ಯಾಕೆ ಬಂದ್ರು ಅಂತಾರೆ. ಹೀಗೆ ಹೇಳಿದರೆ ಯಾವ ಉದ್ಯಮ ರಾಜ್ಯಕ್ಕೆ ಬರುತ್ತದೆ ಎಂದು ಅವರು ಕಿಡಿಕಾರಿದರು. ಈಗ ದಿನವೂ ಆರೆಸ್ಸೆಸ್, ಆರೆಸ್ಸೆಸ್ ಎಂದು ಜಪ ಮಾಡುತ್ತಿದೆ ಕಾಂಗ್ರೆಸ್ ಸರಕಾರ. ಇದು ಆರೆಸ್ಸೆಸ್ ಬಗ್ಗೆ ಚರ್ಚೆ ಮಾಡುವ ಸಂದರ್ಭವೇ? ರಾಜ್ಯದಲ್ಲಿ ಎಷ್ಟೊಂದು ಸಮಸ್ಯೆಗಳಿವೆ, ಅವುಗಳನ್ನು ನಿವಾರಿಸುವುದು ಬಿಟ್ಟು ಒಂದು ಸಂಘಟನೆ ವಿರುದ್ಧ ಚರ್ಚಿಸುತ್ತಿದ್ದರೆ ಉಪಯೋಗ ಏನು? ಇಂದು ಕುಮಾರಸ್ವಾಮಿ ಪ್ರಶ್ನಿಸಿದರು. ಚನ್ನಪಟ್ಟಣದಲ್ಲಿ ಖವ್ವಾಲಿ ಕಾರ್ಯಕ್ರನದಲ್ಲಿ ಪೊಲೀಸರ ಮೇಲೆ ಹಣ ಎರಚಿದ ಘಟನೆ ನಡೆದಿದೆ. ಚನ್ನಪಟ್ಟಣದಲ್ಲಿ ಪೊಲೀಸರ ಮುಂದೆ ಡಾನ್ಸ್ ಮಾಡುತ್ತಾರೆ, ಪೊಲೀಸರ ಮೇಲೆ ಹಣ ಎರಚುತ್ತಾರೆ, ಹಣ ಎರಚಿಕೊಂಡವರ, ಎರಚಿದವರ ಮೇಲೆ ಕ್ರಮ ಇಲ್ಲ. ಆದರೆ ಆರೆಸ್ಸೆಸ್ ಪಥ ಸಂಚಲನದಲ್ಲಿ ಗಣವೇಷಧಾರಿ ಆಗಿದ್ದ ಪಿಡಿಓ ಮೇಲೆ ಕ್ರಮ ಕೈಗೊಳ್ಳುತ್ತಾರೆ. ಕಲಬುರಗಿಯಲ್ಲಿ ಕ್ರಮ ವಹಿಸಿದ ಮೇಲೆ ಚನ್ನಪಟ್ಟಣದಲ್ಲಿ ಕ್ರಮ ಯಾಕಿಲ್ಲ? ಎಂದು ಸರಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಹಾಸನಾಂಬೆ ದರ್ಶನ ವೇಳೆ ಜಿಲ್ಲಾಡಳಿತದಿಂದ ಶಿಷ್ಟಾಚಾರ ಪಾಲನೆ ಮಾಡದೆ ತಮಗೆ ಅಪಮಾನ ಮಾಡಲಾಗಿದೆಯೇ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ಶಿಷ್ಟಾಚಾರಕ್ಕೆ ಆದ್ಯತೆ ಕೊಡಲ್ಲ, ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಅಧಿಕಾರಿಗಳಿಗೇಕೆ ತೊಂದರೆ ಕೊಡಬೇಕು? ದೇವಿಯ ದರ್ಶನ ಮುಖ್ಯ, ನನಗೆ ದರ್ಶನ ಆಗಿದೆ. ಸಾರ್ವಜನಿಕರು ಯಾವುದೇ ತೊಂದರೆಗೆ ಒಳಗಾಗದೆ ನೆಮ್ಮದಿಯಾಗಿ ತಾಯಿಯ ದರ್ಶನ ಮಾಡುತ್ತಿದ್ದಾರೆ. ಉತ್ತಮವಾಗಿ ವ್ಯವಸ್ಥೆ ಮಾಡಲಾಗಿದೆ. ಅದು ಮುಖ್ಯವೆ ಹೊರತು ಶಿಷ್ಟಾಚಾರರವಲ್ಲ ಎಂದರು. ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತಿದ್ದಾಗ ಅಧಿಕಾರಿಗಳು ಹೊರಗೆ ಮಲಗುತ್ತಿದ್ದರು. ನನ್ನಿಂದ ಅವರಿಗೆ ತೊಂದರೆ ಆಗಿದೆ. ಹೀಗಾಗಿ ನಾನು ಶಿಷ್ಟಾಚಾರದ ಬಗ್ಗೆ ತಲೆಕೆಡಿಸಿಕೊಳ್ಳಲಾರೆ ಎಂದು ಕುಮಾರಸ್ವಾಮಿ ಹೇಳಿದರು. ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಸಂಘಟನೆ ಮಾಡುವ ಉದ್ದೇಶದಿಂದ, ಪಕ್ಷದ ಕೋರ್ ಕಮಿಟಿಯನ್ನು ಪುನರ್ ರಚನೆ ಮಾಡಲಾಗುತ್ತಿದ್ದು, ಎರಡು ಮೂರು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರ ನೀಡಿದರು.
ಮಗುವಿನೊಳಗೊಂದು ಮಗು ಕರ್ನಾಟಕದಲ್ಲಿ ಅಪರೂಪದ ಪ್ರಕರಣ!
ಮಗುವಿನೊಳಗೆ ಮಗು ಜಗತ್ತಿನಲ್ಲಿಯೇ ಅತೀ ವಿರಳ ಪ್ರಕರಣವಾಗಿದ್ದು, ಸರಾಸರಿ 5 ಲಕ್ಷ ಜನ್ಮಗಳಲ್ಲಿ ಒಂದಾಗಿರುತ್ತದೆ. ಅಂತಹ ಅಪರೂಪದ ಪ್ರಕರಣವನ್ನು ಶಸ್ತ್ರ ಚಿಕಿತ್ಸೆ ಮೂಲಕ ಯಶಸ್ವಿಯಾಗಿ ಮಾಡಲಾಗಿದೆ ಎಂದು ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ (ಧಾರವಾಡ) ನಿರ್ದೇಶಕರಾದ ಡಾ.ಈಶ್ವರ ಹೊಸಮನಿ ಅವರು ತಿಳಿಸಿದ್ದಾರೆ. ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಆವರಣದಲ್ಲಿ ಮಾತನಾಡಿದ ಅವರು,
ಬಿಂದು ಜ್ಯುವೆಲ್ಲರಿ ಮಂಗಳೂರು ಶಾಖೆ ಶುಭಾರಂಭ
ಮಂಗಳೂರು, ಅ.19: ಕೇರಳ ಮತ್ತು ಕರ್ನಾಟಕದಲ್ಲಿ ಕಾರ್ಯಚರಿಸುತ್ತಿರುವ ಬಿಂದು ಜ್ಯುವೆಲ್ಲರಿಯ ಮಂಗಳೂರು ಶಾಖೆಯು ನಗರದ ಬೆಂದೂರ್ನಲ್ಲಿ ರವಿವಾರ ಕಾರ್ಯರಂಭಗೊಂಡಿತು. ಬಹುಭಾಷಾ ನಟಿ ಸ್ನೇಹಾ ಪ್ರಸನ್ನ ಶೋರೂಮ್ ಉದ್ಘಾಟಿಸಿ, ತಾನು ಮಂಗಳೂರಿಗೆ ಪ್ರಥಮ ಬಾರಿಗೆ ಆಗಮಿಸಿದ್ದು, ನಗರ ಸುಂದರವಾಗಿದೆ. 40 ವರ್ಷಗಳ ಪರಂಪರೆಯ ಬಿಂದು ಜ್ಯುವೆಲ್ಲರಿಯ ಶಾಖೆ ಉದ್ಘಾಟಿಸಲು ಹೆಮ್ಮೆಯಾಗಿದೆ. ಸ್ಥಾಪಕರ ಪರಿಶ್ರಮ, ಉತ್ತಮ ಗುಣಮಟ್ಟ ಮತ್ತು ಬದ್ಧತೆಯ ಸೇವೆಯಿಂದ ಬಿಂದು ಜ್ಯುವೆಲ್ಲರಿ ಅಭಿವೃದ್ಧಿಯಾಗಿದೆ. ಈ ಉದ್ಯಮ ಇನ್ನಷ್ಟು ಬೆಳೆಯಲಿ ಎಂದು ಹಾರೈಸಿದರು. ಸುವರ್ಣ ಬಿಂದು: ಮಹಿಳಾ ಸಬಲೀಕರಣದ ಸಿಎಸ್ಆರ್ ಚಟುವಟಿಕೆ ‘ಸುವರ್ಣ ಬಿಂದು’ ಬಿಡುಗಡೆ, ‘ಮೈ ಬ್ಲೂ ಡೈಮಂಡ್’ ಐಷಾರಾಮಿ ಬ್ರ್ಯಾಂಡ್ನ್ನು ನಟಿ ಸ್ನೇಹಾ ಪ್ರಸನ್ನ ಅನಾವರಣಗೊಳಿಸಿದರು. ಉದ್ಘಾಟನೆಯ ಸುಸಂದರ್ಭದಲ್ಲಿ ಪ್ರತೀ ಆಭರಣ ಖರೀದಿಗೆ ಆಕರ್ಷಕ ಉಡುಗೊರೆ , ಪ್ರತೀ ಕ್ಯಾರೆಟ್ ವಜ್ರದ ಮೇಲೆ 5000 ರೂ. ರಿಯಾಯಿತಿ, ಮೇಕಿಂಗ್ ಚಾರ್ಜಸ್ ಮೇಲೆ ಶೇ.30 ರಿಯಾಯಿತಿ, ಅದೃಷ್ಟವಂತ ಗ್ರಾಹಕರಿಗೆ ಕಾರು ಬಂಪರ್ ಬಹುಮಾನವನ್ನು ಬಿಂದು ಜುವೆಲ್ಲರಿ ಇದೇ ಸಂದರ್ಭದಲ್ಲಿ ಘೋಷಿಸಿದೆ. ಕರ್ನಾಟಕ ಮತ್ತು ಕೇರಳದ ಗ್ರಾಹಕರಿಗೆ ಚಿನ್ನದ ಪರಿಶುದ್ಧತೆಯ ಬದ್ಧತೆಯೊಂದಿಗೆ ನವನವೀನ ವಿನ್ಯಾಸ ಒದಗಿ ಸುವ ಮೂಲಕ ಅವರ ವಿಶ್ವಾಸ ಗಳಿಸಿದೆ. ಹೊಸ ಶಾಖೆಯಲ್ಲಿಯೂ ಬಿಂದು ಜುವೆಲ್ಲರಿಯಿಂದ ‘ಅಕ್ಷಯ ನಿಧಿ’ ಮತ್ತು ‘ಸ್ವರ್ಣ ಬಿಂದು’ ಮಾಸಿಕ ಉಳಿತಾಯ ಯೋಜನೆ ಇದೆ ಎಂದು ಜುವೆಲ್ಲರಿಯ ವ್ಯವಸ್ಥಾಪಕ ನಿರ್ದೇಶಕ ಅಭಿಲಾಷ್ ಕೆ.ವಿ.ಮತ್ತು ಡಾ.ಅಜಿತೇಶ್ ಕೆ.ವಿ ಮಾಹಿತಿ ನೀಡಿದ್ದಾರೆ. ಮಂಗಳೂರು ರಾಮಕೃಷ್ಣ ಮಠದ ಸ್ವಾಮಿ ಯುಗೇಶಾನಂದಜಿ, ಶಾಸಕರಾದ ಡಿ.ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ ವೈ., ಕರ್ನಾಟಕ ರಾಜ್ಯ ಅಲೈಡ್ ಆಂಡ್ ಹೆಲ್ತ್ ಕೇರ್ ಕೌನ್ಸಿಲ್ ಅಧ್ಯಕ್ಷ ಡಾ.ಯು.ಟಿ.ಇಫ್ತಿಕರ್ ಅಲಿ ಫರೀದ್, ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಪಿ.ಬಿ. ಅಹ್ಮದ್ ಮುದಸ್ಸರ್ ಮುಖ್ಯ ಅತಿಥಿಯಾಗಿ ಶುಭ ಹಾರೈಸಿದರು. ಬಿಂದು ಜುವೆಲ್ಲರಿಯ ವ್ಯವಸ್ಥಾಪಕ ನಿರ್ದೇಶಕರಾದ ಅಭಿಲಾಷ್ ಕೆ.ವಿ., ಡಾ.ಅಜಿತೇಶ್ ಕೆವಿ , ಅವರ ಮಾತೃಶ್ರೀ ಶೋಭನಾ, ಸಿನಿಮಾ ನಟರಾದ ಶೋಧನ್ ಶೆಟ್ಟಿ, ಅನೀಶ್ ಮತ್ತಿತರರು ಉಪಸ್ಥಿತರಿದ್ದರು. ಶರ್ಮಿಳಾ ಅಮೀನ್ ಕಾರ್ಯಕ್ರಮ ನಿರೂಪಿಸಿದರು.
ಏಕದಿನ ಕ್ರಿಕೆಟ್ | ನಾಯಕನಾಗಿ ಆಡಿದ ಮೊದಲ ಪಂದ್ಯದಲ್ಲಿ ಸೋತ ಶುಭಮನ್ ಗಿಲ್
ಪರ್ತ್, ಅ.19: ಭಾರತದ ಏಕದಿನ ಕ್ರಿಕೆಟ್ ತಂಡದ ನಾಯಕನಾಗಿ ಆಡಿರುವ ತನ್ನ ಮೊದಲ ಪಂದ್ಯದಲ್ಲಿ ಶುಭಮನ್ ಗಿಲ್ ಸೋಲನುಭವಿಸಿದ್ದಾರೆ. ಆಸ್ಟ್ರೇಲಿಯ ವಿರುದ್ಧ ರವಿವಾರ ನಡೆದ 3 ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಗಿಲ್ ನಾಯಕತ್ವದ ಭಾರತ ತಂಡವು 7 ವಿಕೆಟ್ಗಳ ಅಂತರದಿಂದ ಸೋಲುಂಡಿದೆ. ಈ ಮೂಲಕ ಗಿಲ್ ಅವರು ವಿರಾಟ್ ಕೊಹ್ಲಿ ಅವರ ಹೆಜ್ಜೆ ಅನುಸರಿಸಿದರು. ತನ್ನ ಮೊದಲ ಪಂದ್ಯದಲ್ಲಿ ಸೋತ ಭಾರತೀಯ ನಾಯಕರ ಅನಪೇಕ್ಷಿತ ದಾಖಲೆಯ ಪಟ್ಟಿಗೆ ಗಿಲ್ ಸೇರ್ಪಡೆಯಾದರು. ಮಳೆಯಿಂದಾಗಿ 26 ಓವರ್ಗಳಿಗೆ ಕಡಿತಗೊಳಿಸಲ್ಪಟ್ಟ ಪಂದ್ಯದಲ್ಲಿ ಭಾರತದ ಅಗ್ರ ಸರದಿಯು ಭಾರೀ ವೈಫಲ್ಯ ಕಂಡಿತು. ಹೀಗಾಗಿ ಗಿಲ್ ನಾಯಕತ್ವದಲ್ಲಿ ಭಾರತಕ್ಕೆ ಗೆಲುವು ಮರೀಚಿಕೆಯಾಯಿತು. ‘‘ಪವರ್ ಪ್ಲೇನಲ್ಲಿ 3 ವಿಕೆಟ್ಗಳನ್ನು ಕಳೆದುಕೊಂಡ ನಂತರ ಪಂದ್ಯವನ್ನು ಆಡುವುದು ತುಂಬಾ ಕಷ್ಟಕರ. ಈ ಪಂದ್ಯದಿಂದ ನಾವು ಸಾಕಷ್ಟು ಕಲಿತ್ತಿದ್ದೇವೆ. ಸಾಕಷ್ಟು ಸಕಾರಾತ್ಮಕ ಅಂಶವೂ ಲಭಿಸಿದೆ’’ ಎಂದು ಗಿಲ್ ಹೇಳಿದರು. ಭಾರತ ತಂಡವು ಈ ವಾರ ಅಡಿಲೇಡ್ ಹಾಗೂ ಸಿಡ್ನಿಯಲ್ಲಿ ಇನ್ನೆರಡು ಏಕದಿನ ಪಂದ್ಯಗಳನ್ನು ಆಡಲಿದೆ. ಆ ನಂತರ ಅ.29ರಂದು 5 ಪಂದ್ಯಗಳ ಟಿ-20 ಸರಣಿಯನ್ನು ಆಡಲಿದೆ. 500ನೇ ಅಂತರ್ರಾಷ್ಟ್ರೀಯ ಪಂದ್ಯವನ್ನಾಡಿದ ಭಾರತದ 5ನೇ ಬ್ಯಾಟರ್ ರೋಹಿತ್ ಭಾರತದ ಮಾಜಿ ನಾಯಕ ರೋಹಿತ್ ಶರ್ಮಾ ತನ್ನ ದೇಶದ ಪರ 500ನೇ ಅಂತರ್ರಾಷ್ಟ್ರೀಯ ಪಂದ್ಯವನ್ನಾಡಿದ 5ನೇ ಬ್ಯಾಟರ್ ಎನಿಸಿಕೊಂಡು ಇತಿಹಾಸ ನಿರ್ಮಿಸಿದ್ದಾರೆ. ಆಸ್ಟ್ರೇಲಿಯದ ವಿರುದ್ಧ ರವಿವಾರ ನಡೆದ ಮೊದಲ ಏಕದಿನ ಪಂದ್ಯದ ವೇಳೆ ಈ ಮೈಲಿಗಲ್ಲು ತಲುಪಿದರು. ಇದರೊಂದಿಗೆ ರೋಹಿತ್ ಅವರು ಸಚಿನ್ ತೆಂಡುಲ್ಕರ್(664 ಪಂದ್ಯಗಳು), ವಿರಾಟ್ ಕೊಹ್ಲಿ(551 ಪಂದ್ಯಗಳು), ಎಂ.ಎಸ್. ಧೋನಿ(538 ಪಂದ್ಯಗಳು)ಹಾಗೂ ರಾಹುಲ್ ದ್ರಾವಿಡ್(509 ಪಂದ್ಯಗಳು)ಅವರನ್ನೊಳಗೊಂಡ ಭಾರತೀಯರ ಪಟ್ಟಿಗೆ ಸೇರ್ಪಡೆಯಾದರು. ಈ ಎಲ್ಲ ಆಟಗಾರರು ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು 500ಕ್ಕೂ ಅಧಿಕ ಪಂದ್ಯಗಳಲ್ಲಿ ಪ್ರತಿನಿಧಿಸಿದ್ದಾರೆ. ಜಾಗತಿಕ ಮಟ್ಟದಲ್ಲಿ 500ನೇ ಪಂದ್ಯವನ್ನಾಡಿದ 11ನೇ ಆಟಗಾರ ರೋಹಿತ್ ಶರ್ಮಾ. 38ರ ಹರೆಯದ ರೋಹಿತ್ ರವಿವಾರ ತನ್ನ 274ನೇ ಏಕದಿನ ಪಂದ್ಯವನ್ನಾಡಿದರು. 67 ಟೆಸ್ಟ್ ಹಾಗೂ 159 ಟಿ-20 ಪಂದ್ಯಗಳನ್ನೂ ಆಡಿದ್ದಾರೆ. ಕಳೆದ ವರ್ಷ ಜೂನ್ನಲ್ಲಿ ಭಾರತ ತಂಡ ವಿಶ್ವಕಪ್ ಜಯಿಸಿದ ನಂತರ ಟಿ-20 ಕ್ರಿಕೆಟ್ನಿಂದ ನಿವೃತ್ತಿಯಾಗಿದ್ದರು. ಈ ವರ್ಷಾರಂಭದಲ್ಲಿ ಟೆಸ್ಟ್ ಕ್ರಿಕೆಟಿಗೆ ವಿದಾಯ ಹೇಳಿದ್ದರು. ಈ ವರ್ಷದ ಮಾರ್ಚ್ನಲ್ಲಿ ನ್ಯೂಝಿಲ್ಯಾಂಡ್ ವಿರುದ್ಧ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯ ಆಡಿದ ನಂತರ ರೋಹಿತ್ ಆಸ್ಟ್ರೇಲಿಯ ವಿರುದ್ಧ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಆಡಿ ಅಂತರ್ರಾಷ್ಟ್ರೀಯ ಕ್ರಿಕೆಟಿಗೆ ವಾಪಸಾದರು. ರೋಹಿತ್ ಭಾರತದ ಪರ ಅತಿ ಹೆಚ್ಚು ಟಿ-20 ಪಂದ್ಯವನ್ನಾಡಿದ ದಾಖಲೆ ಹೊಂದಿದ್ದಾರೆ. ಅಂತರ್ರಾಷ್ಟ್ರೀಯ ಪಂದ್ಯಗಳ ಸಾರ್ವಕಾಲಿಕಪಟ್ಟಿಯಲ್ಲಿ ತೆಂಡುಲ್ಕರ್(664 ಪಂದ್ಯಗಳು) ಮೊದಲ ಸ್ಥಾನದಲ್ಲಿದ್ದರೆ, ಮಹೇಲ ಜಯವರ್ಧನೆ(652), ಕುಮಾರ ಸಂಗಕ್ಕರ(594), ಸನತ್ ಜಯಸೂರ್ಯ(586), ರಿಕಿ ಪಾಂಟಿಂಗ್(560), ವಿರಾಟ್ ಕೊಹ್ಲಿ(551*), ಎಂ.ಎಸ್.ಧೋನಿ(538), ಶಾಹೀದ್ ಅಫ್ರಿದಿ(524), ಜಾಕಸ್ ಕಾಲಿಸ್(519) ಹಾಗೂ ರಾಹುಲ್ ದ್ರಾವಿಡ್(509) ಅವರಿದ್ದಾರೆ.
ಬಂಟಕಲ್ಲು: ಪ್ರತಿಭಾ ಪುರಸ್ಕಾರ- ಸಾಧಕರಿಗೆ ಸನ್ಮಾನ
ಶಿರ್ವ, ಅ.19: ರಾಜಾಪುರ ಸಾರಸ್ವತ ಸೇವಾ ವೃಂದ ವತಿಯಿಂಜ 29ನೇ ವರ್ಷದ ದುರ್ಗಾಹೋಮ ಸೇವಾ-ಪ್ರತಿಭಾ ಪುರಸ್ಕಾರ-ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ರವಿವಾರ ಶ್ರೀಕ್ಷೇತ್ರ ಬಂಟಕಲ್ಲು ಶ್ರೀದುರ್ಗಾ ಪರಮೇಶ್ವರೀ ದೇವಳದಲ್ಲಿ ಆಯೋಜಿಸಲಾಗಿತ್ತು. ಪ್ರಗತಿಪರ ಕೃಷಿಕ ಲಕ್ಷ್ಮಣ ನಾಯಕ್, ಬೆದ್ರಬೆಟ್ಟು, ನಿಂಜೂರು, ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತ ಭುವನೇಶ್ ಪ್ರಭು ಹಿರೇಬೆಟ್ಟು, ಉತ್ತಮ ಚಲನಚಿತ್ರ ಪ್ರಶಸ್ತಿ ವಿಜೇತ ಲೈಟ್ಹೌಸ್ ಚಲನಚಿತ್ರದ ನಿರ್ದೇಶಕ ಸಂದೀಪ್ ಕಾಮತ್ ಅಜೆಕಾರು ಹಾಗೂ ಎಸ್ಎಸ್ಎಲ್ಸಿ, ಪಿಯುಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಾಯಿತು. ಮೋಂತಿಮಾರು ಶ್ರೀದೇವಳದ ಆಡಳಿತ ಮೊಕ್ತೇಸರರು ಹಾಗೂ ಸಹಕಾರಿ ಕ್ಷೇತ್ರದ ಧುರೀಣ ಎಸ್.ಆರ್. ಸತೀಶ್ಚಂದ್ರ ಮಾತನಾಡಿ, ಸಾರಸ್ವತರು ಶ್ರಮ ಜೀವಿಗಳು. ಇಂದು ಶೇ.95 ಅಕ್ಷರಸ್ಥರಾಗಿದ್ದು, ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಮಾದರಿಯಾಗಿ ಮುಂದೆ ಬಂದಿದ್ದಾರೆ. ಈಗಿನ ಪವರ್ಫುಲ್ ಕ್ಷೇತ್ರದಲ್ಲಿ ಸಾಧನೆ ಮಾಡಿ ಸಾಧನಾ ಶಿಖರವನ್ನು ಏರಿದವರು ನಮ್ಮ ಸಮಾಜಕ್ಕೆ ಹೆಮ್ಮೆ ಎಂದು ತಿಳಿಸಿದರು. ಮುಖ್ಯ ಅತಿಥಿಯಾಗಿ ಕೇರಳ ರಾಜ್ಯದ ಮಂಜೇಶ್ವರ ಎಣ್ಮಕಜೆ ಗ್ರಾಪಂ ಅಧ್ಯಕ್ಷ ಸೋಮಶೇಖರ್ ಜೆ.ಎಸ್. ಮಾತನಾಡಿ, ನಾವು ಯಾವುದೇ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದರೂ ಸಮಾಜದ ಬಗ್ಗೆ ಕಾಳಜಿ ವಹಿಸಿ ಮಾಡಬೇಕು ಎಂದರು. ಕಾರವಾರ ಸರಕಾರಿ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲೆ ಡಾ.ಶಾಂತಲಾ ಮಾತನಾಡಿ, ಇಂದು ಸಮಾಜದ ವಿದ್ಯಾರ್ಥಿಗಳು ಸಾಧನೆ ಮಾಡಿ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲೂ ಗುರುತಿಸಿ ಕೊಳ್ಳುತ್ತಿರುವುದು ಅಭಿಮಾನದ ಸಂಗತಿ ಎಂದರು. ಕ್ಷೇತ್ರದ ಆಡಳಿತ ಮೊಕ್ತೇಸರ ಗಂಪದಬೈಲು ಜಯರಾಮ ಪ್ರಭು ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಸೇವಾ ವೃಂದದ ಅಧ್ಯಕ್ಷ ಕೆ.ಆರ್.ಪಾಟ್ಕರ್ ವಹಿಸಿದ್ದರು. ಈ ಸಂದರ್ಭದಲ್ಲಿ ಬಾಲಪ್ರತಿಭೆ ವೀಣಾವಾದಕಿ ಶ್ರೇಯಾ ಯು.ನಾಯಕ್ ಇವರನ್ನು ಸನ್ಮಾನಿಸಲಾಯಿತು. ಸೇವಾ ವೃಂದದ ಸದಸ್ಯರಾದ ರಾಮದಾಸ್ ಪ್ರಭು, ಉಮೇಶ ಪಾಟ್ಕರ್ ಪರಿಚುಸಿದರು. ದೇವದಾಸ್ ಪಾಟ್ಕರ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ವಿಶ್ವನಾಥ್ ಬಾಂದೇಲ್ಕರ್ ವಂದಿಸಿದರು. ಅನಂತರಾಮ ವಾಗ್ಲೆ, ರಾಘವೇಂದ್ರ ನಾಯಕ್ ಪಾಲಮೆ ಸಹಕರಿಸಿದರು. ಬಾಲ ಪ್ರತಿಭೆ ಕುಮಾರಿ ಶ್ರೇಯಾ ಯು.ನಾಯಕ್ ಇವರಿಂದ ವೀಣಾ ವಾದನ ಕಾರ್ಯಕ್ರಮ ಜರುಗಿತು.
ಮಂಡ್ಯ | ಸಾರಿಗೆ ಬಸ್ಗಳ ನಡುವೆ ಸರಣಿ ಅಪಘಾತ; ಮೂವರು ಮೃತ್ಯು, 70ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಮಂಡ್ಯ/ಮಳವಳ್ಳಿ, ಅ.19: ಮೂರು ಸಾರಿಗೆ ಬಸ್ಸುಗಳ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಮೂವರು ಪ್ರಯಾಣಿಕರು ಸಾವನ್ನಪ್ಪಿ, ಸುಮಾರು 60 ರಿಂದ 70 ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ರವಿವಾರ ಸಂಜೆ ನಡೆದಿರುವುದು ವರದಿಯಾಗಿದೆ. ಅಪಘಾತದ ರಭಸಕ್ಕೆ ಮೂರು ಬಸ್ ಗಳ ಮುಂಭಾಗ ನಜ್ಜುಗುಜ್ಜಾಗಿದೆ. ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು, ಓರ್ವ ಪುರುಷ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದು, ಗಾಯಗೊಂಡವರ ಪೈಕಿ ಹತ್ತಕ್ಕೂ ಹೆಚ್ಚು ಮಂದಿ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಮೃತಪಟ್ಟವರು ಮತ್ತು ಗಾಯಗೊಂಡವರ ಹೆಸರು ವಿಳಾಸ ಇನ್ನೂ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಮಂಡ್ಯ ಜಿಲ್ಲಾ ಆಸ್ಪತ್ರೆ, ಮೈಸೂರು, ಹತ್ತಿರದ ಇನ್ನಿತರ ಆಸ್ಪತ್ರೆಗಳಿಗೆ ಸಾರ್ವಜನಿಕರ ನೆರವಿನಿಂದ ಪೊಲೀಸರು ರವಾನಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ತೀವ್ರ ಮಳೆ ಸುರಿಯುತ್ತಿದ್ದ ಹಿನ್ನೆಲೆಯಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲು ತೀವ್ರ ತೊಂದರೆ ಉಂಟಾಯಿತು ಎಂದು ವರದಿಯಾಗಿದೆ. ಕೊಳ್ಳೇಗಾಲ ಕಡೆಯಿಂದ ಬರುತ್ತಿದ್ದ ಸಾರಿಗೆ ಬಸ್ಸಿನ ಚಾಲಕ ರಸ್ತೆಯ ತಿರುವಿನಲ್ಲಿ ದ್ವಿಚಕ್ರವಾಹವನ್ನು ಹಿಂದಿಕ್ಕಲು ಯತ್ನಿಸಿದಾಗ ಎದುರಿನಿಂದ ಬರುತ್ತಿದ್ದ ಸಾರಿಗೆ ಸಂಸ್ಥೆಯ ಮತ್ತೊಂದು ಬಸ್ಸಿಗೆ ಢಿಕ್ಕಿ ಹೊಡೆದಿದೆ. ಇದೇ ವೇಳೆ ಮಾರ್ಗದಲ್ಲೇ ಬರುತ್ತಿದ್ದ ಬಿಎಂಟಿಸಿಗೆ ಸೇರಿದ ಮತ್ತೊಂದು ಬಸ್ಸು ಅಪಘಾತಕ್ಕೀಡಾಗಿದ್ದ ಸಾರಿಗೆ ಬಸ್ಗೆ ಢಿಕ್ಕಿ ಹೊಡೆದಿದ್ದರಿಂದ ಹೆಚ್ಚಿನ ಅನಾಹುತಕ್ಕೆ ಕಾರಣವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಎಎಸ್ಪಿ ತಿಮ್ಮಯ್ಯ, ಸಿ ಪಿ ಐ ಶ್ರೀಧರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮಳವಳ್ಳಿ ಗ್ರಾಮತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಬ್ರಿಯಲ್ಲಿ ಶ್ರೀಧನ್ವಂತರಿ ಜಯಂತಿ ಆಚರಣೆ
ಹೆಬ್ರಿ, ಅ.19: ಆರೋಗ್ಯ ಭಾರತಿ ಉಡುಪಿ ಜಿಲ್ಲಾ ಸಮಿತಿ ಮತ್ತು ಆರೋಗ್ಯ ಭಾರತಿ ಹೆಬ್ರಿ ತಾಲೂಕು ಸಮಿತಿ ಸಹಭಾಗಿತ್ವದಲ್ಲಿ ಶ್ರೀಧನ್ವಂತರಿ ಜಯಂತಿಯನ್ನು ರವಿವಾರ ಹೆಬ್ರಿಯ ಶ್ರೀರಾಮಮಂದಿರದಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಂಶುಪಾಲ ಮತ್ತು ಲೇಖಕ ಡಾ.ಸತ್ಯನಾರಾಯಣ ಭಟ್, ಆರೋಗ್ಯ ಭಾರತಿ ಉಡುಪಿ ಜಿಲ್ಲಾಧ್ಯಕ್ಷ ಡಾ.ದಿನೇಶ್ ನಾಯಕ್, ಜಿಲ್ಲಾ ಕಾರ್ಯದರ್ಶಿ ಪ್ರಭಾಕರ ಭಟ್, ಸಹ ಕಾರ್ಯದರ್ಶಿ ಕೃಷ್ಣರಾಜ ಸಾಮಗ, ಜಿಲ್ಲಾ ಸಂಯೋಜಕ ಗಣೇಶ ಶೆಣೈ ಬೈಲೂರು, ಹೆಬ್ರಿ ತಾಲೂಕು ಅಧ್ಯಕ್ಷ ಡಾ.ರವಿಪ್ರಸಾದ ಹೆಗ್ಡೆ, ಉಪಾಧ್ಯಕ್ಷೆ ಡಾ.ಭಾರ್ಗವಿ ಐತಾಳ್, ಡಾ.ಸರಿತಾ, ಡಾ.ಸುಷ್ಮಾ ಹೆಗ್ಡೆ, ಹಿರಿಯರಾದ ಬಾಲಕೃಷ್ಣ ಮಲ್ಯ, ಸುಧೀರ ನಾಯಕ್, ಕೃಷ್ಣ ಪ್ರಭು, ಉದ್ಯಮಿ ಬಾಲಕೃಷ್ಣ ನಾಯಕ್, ಸದಾನಂದ ನಾಯಕ್ ಹೆಬ್ರಿ, ರಾಮಮಂದಿರದ ವ್ಯವಸ್ಥಾಪಕ ಉಮೇಶ ನಾಯಕ್ ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಡಾ.ಸತ್ಯನಾರಾಯಣ ಭಟ್ ಬರೆದ ಆಯುರ್ವೇದ ಭೀಷ್ಮ ಎಡತೊರೆ ಪಾರ್ಥನಾರಾಯಣ ಪಂಡಿತರು ಪುಸ್ತಕವನ್ನು ಬಿಡುಗಡೆ ಗೊಳಿಸಲಾಯಿತು. ಡಾ.ರವಿಪ್ರಸಾದ ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ಹೆಬ್ರಿ ತಾಲೂಕು ಕಾರ್ಯದರ್ಶಿ ಹೆಬ್ರಿ ಕೇಶವ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಸಹ ಕಾರ್ಯದರ್ಶಿ ವಿಘ್ನೇಶ ನಾಯಕ್ ವಂದಿಸಿದರು.
ರೋಗಿಗಳಿಗಾಗಿ ಗಾಲಿ ಕುರ್ಚಿಗಳು - ವಾಕರ್ ವಿತರಣೆ
ಉಡುಪಿ, ಅ.19: ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಕತ್ವದಲ್ಲಿ ಉದ್ಯಾವರ ಎಸ್ಡಿಎಂ ಆಯುರ್ವೇದ ಆಸ್ಪತ್ರೆಗೆ ರೋಗಿಗಳ ಅನುಕೂಲಕ್ಕಾಗಿ ಎರಡು ಗಾಲಿ ಕುರ್ಚಿಗಳು ಮತ್ತು ವಾಕರ್ಗಳನ್ನು ನೀಡಲಾಯಿತು. ಆಸ್ಪತ್ರೆಯ ಉಪ ವೈದ್ಯಕೀಯ ಅಧೀಕ್ಷಕ ಡಾ.ದೀಪಕ್ ಎಸ್.ಎಂ. ಈ ಕೊಡುಗೆಗಳನ್ನು ಸ್ವೀಕರಿಸಿ ಸಂಸ್ಥೆಗೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಕೆ.ನಿಶಾಂತ್ ಪೈ, ಡಾ.ಸದಾ ನಂದ ಭಟ್, ರಮಾನಂದ ಕಾರಂತ್, ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ., ಪತ್ರಿಕಾ ಛಾಯಾಗ್ರಹ ಅಸ್ಟ್ರೋ ಮೋಹನ್, ಕಸಾಪ ಪದಾಧಿಕಾರಿಗಳಾದ ರಂಜನಿ ವಸಂತ್, ಸಿದ್ದ ಬಸಯ್ಯ ಸ್ವಾಮಿ ಚಿಕ್ಕಮಠ, ವಸಂತ್, ರಾಘವೇಂದ್ರ ಪ್ರಭು ಕರ್ವಾಲು, ಉದ್ಯಮಿ ಪ್ರಶಾಂತ್ ಕಾಮತ್ ಮುಂತಾದವರು ಉಪಸ್ಥಿತರಿದ್ದರು.
ಆರ್.ಜಾಲಪ್ಪ ವ್ಯಕ್ತಿತ್ವ ನೇರ-ನಿಷ್ಠುರ ಮತ್ತು ಹೃದಯವಂತಿಕೆಯಿಂದ ಕೂಡಿತ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ
ದೊಡ್ಡಬಳ್ಳಾಪುರ, ಅ19: ಮಾಜಿ ಸಚಿವ ಆರ್.ಎಲ್.ಜಾಲಪ್ಪ ಅವರ ವ್ಯಕ್ತಿತ್ವ ನೇರ-ನಿಷ್ಠುರ ಮತ್ತು ಹೃದಯವಂತಿಕೆಯಿಂದ ಕೂಡಿತ್ತು. ಜಾಲಪ್ಪನವರಿಗೆ ಸಮಯ ಪ್ರಜ್ಞೆ ಇತ್ತು. ಒಬ್ಬ ದಕ್ಷ ಆಡಳಿತಗಾರರಾಗಿದ್ದ ಅವರು ನಿರ್ವಹಿಸಿದ ಎಲ್ಲ ಖಾತೆಗಳಲ್ಲೂ ತಮ್ಮದೆ ಆದ ಹೆಜ್ಜೆ ಗುರುತುಗಳನ್ನು ದಾಖಲಿಸಿದ್ದು ಮಾತ್ರವಲ್ಲ, ರೈತರಿಗೆ, ಕೃಷಿಗೆ ಅತ್ಯಂತ ಮಹತ್ವ ನೀಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು. ರವಿವಾರ ದೊಡ್ಡಬಳ್ಳಾಪುರದಲ್ಲಿ ಆರ್.ಎಲ್.ಜಾಲಪ್ಪ ಜನ್ಮ ಶತಮಾನೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಾಲಪ್ಪ ಅಕಾಡಮಿ, ಜಾಲಪ್ಪ ಕಾನೂನು ಮಹಾವಿದ್ಯಾಲಯ, ಶತಮಾನೋತ್ಸವ ಭವನಗಳನ್ನು ಉದ್ಘಾಟಿಸಿ ಹಾಗೂ ದೇವರಾಜ ಅರಸು ವಸತಿ ಶಾಲೆ ನೂತನ ಕಟ್ಟಡಗಳ ಶಿಲಾನ್ಯಾಸ ನೆರವೇರಿಸಿ ‘ಹೃದಯವಂತ ಆರ್.ಎಲ್.ಜಾಲಪ್ಪ ಜೀವನ ಪಥ’ ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ನಾನು ಮೊದಲ ಬಾರಿ ಸಚಿವನಾಗಲು ರಾಚಯ್ಯನವರಷ್ಟೇ ಜಾಲಪ್ಪ ಅವರೂ ಕಾರಣ. ಜಾಲಪ್ಪನವರಿಗೆ ಹಿಂದುಳಿದವರ ಏಳಿಗೆಯ ವಿಚಾರದಲ್ಲಿ ದೂರದೃಷ್ಟಿ ಇತ್ತು. ಹೀಗಾಗಿ ಆಗಲೆ ವೈದ್ಯಕೀಯ ಕಾಲೇಜು ಸ್ಥಾಪಿಸಿದರು. ಮೊದಲಿಗೆ 150 ವಿದ್ಯಾರ್ಥಿಗಳಿಂದ ಆರಂಭವಾದ ಸಂಸ್ಥೆ ಈಗ 40 ಸಾವಿರದಷ್ಟು ವಿದ್ಯಾರ್ಥಿಗಳು ನಾನಾ ವಿಭಾಗಗಳಲ್ಲಿ ಓದುತ್ತಿದ್ದಾರೆ ಎಂದು ಅವರು ಶ್ಲಾಘಿಸಿದರು. ಬಹಳ ಸ್ವಾಭಿಮಾನಿ ಆಗಿದ್ದ ಜಾಲಪ್ಪನವರು ನನ್ನ ರಾಜಕೀಯ ಏಳಿಗೆಗೆ ಕಾರಣಕರ್ತರು. ನನ್ನನ್ನು ಮುಖ್ಯಮಂತ್ರಿ ಮಾಡಲೇಬೇಕು ಎಂದು ಜಾಲಪ್ಪನವರು ದೇವೇಗೌಡರ ಎದುರು ಹಠ ಹಿಡಿದು ಆಗ್ರಹ ಪೂರ್ವಕವಾಗಿ ಒತ್ತಾಯಿಸಿದ್ದರು. ನನ್ನ ಹಾಗೂ ಜೆ.ಎಚ್.ಪಟೇಲ್ ನಡುವೆ ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ಚರ್ಚೆ ನಡೆಯುತ್ತಿದ್ದಾಗ, ನನ್ನ ಪರವಾಗಿ ಗಟ್ಟಿಯಾಗಿ ನಿಂತು ದೇವೇಗೌಡರಿಗೆ ನನ್ನನ್ನೇ ಮುಖ್ಯಮಂತ್ರಿ ಮಾಡಬೇಕು ಎಂದು ಜಾಲಪ್ಪ ಒತ್ತಾಯಿಸಿದ್ದರು ಎಂದು ಸಿದ್ದರಾಮಯ್ಯ ಸ್ಮರಿಸಿಕೊಂಡರು. ನಾನು ಮೊದಲ ಬಾರಿ ಹಣಕಾಸು ಸಚಿವನಾಗುವಾಗಲೂ ಜಾಲಪ್ಪನವರ ಪ್ರಯತ್ನ ಇದೆ. ನಾನು ಕಂದಾಯ ಸಚಿವನಾಗಬೇಕು ಎಂದುಕೊಂಡಿದ್ದೆ. ಆದರೆ, ನಾನು ಹಣಕಾಸು ಸಚಿವ ಆಗಲೇಬೇಕು ಎಂದು ಸೂಚಿಸಿದರು. ಅವರ ಕಾರಣದಿಂದ ನಾನು ಇಂದು ಹದಿನಾರು ಬಜೆಟ್ ಗಳನ್ನು ಮಂಡಿಸುವಂತಾಯಿತು. ಇಂದು ನಾನು ರಾಜಕೀಯವಾಗಿ ಈ ಮಟ್ಟದ ಏಳಿಗೆ ಆಗಿದ್ದರೆ ಅದರಲ್ಲಿ ಜಾಲಪ್ಪನವರ ಪಾತ್ರ ದೊಡ್ಡದಿದೆ ಎಂದು ಸಿದ್ದರಾಮಯ್ಯ ಹೇಳಿದರು. ಅತ್ಯಂತ ಹೃದಯವಂತರಾಗಿದ್ದ ಜಾಲಪ್ಪನವರು ಆತಿಥ್ಯದಲ್ಲೂ ಎತ್ತಿದ ಕೈ. ತುಪ್ಪದ ದೋಸೆ ಮಾಡಿ ಸ್ವತಃ ಬಡಿಸಿದ್ದರು. ಸಾಮಾಜಿಕ ನ್ಯಾಯದ ಪರವಾಗಿ ತಮ್ಮ ರಾಜಕೀಯ ಜೀವನವನ್ನು ಮುಡಿಪಾಗಿ ಇಟ್ಟಿದ್ದರು. ಅತ್ಯಂತ ಧೈರ್ಯವಂತರಾಗಿದ್ದ ಜಾಲಪ್ಪ ಅವರು ಸತ್ಯ ಹೇಳುವಾಗ ಮುಲಾಜಿಲ್ಲದೆ ಎದೆಗಾರಿಕೆ ಪ್ರದರ್ಶಿಸುತ್ತಿದ್ದರು ಎಂದು ಸ್ಮರಿಸಿ ಮುಖ್ಯಮಂತ್ರಿ ಅಭಿನಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್, ಶಾಸಕ ಬೇಳೂರು ಗೋಪಾಲಕೃಷ್ಣ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ವಿಧಾನಪರಿಷತ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ನಿಂಗ್ಬೊ ಓಪನ್ ಟೆನಿಸ್ ಟೂರ್ನಿ : ಎಲೆನಾ ರೈಬಾಕಿನಾ ಚಾಂಪಿಯನ್
ನಿಂಗ್ಬೊ(ಚೀನಾ),ಅ.18: ರಶ್ಯದ ಎಕಟೆರಿನಾ ಅಲೆಕ್ಸಾಂಡ್ರೋವಾರನ್ನು 3-6, 6-0, 6-2 ನೇರ ಸೆಟ್ಗಳ ಅಂತರದಿಂದ ಮಣಿಸಿರುವ ಕಝಕ್ಸ್ತಾನದ ಆಟಗಾರ್ತಿ ಎಲೆನಾ ರೈಬಾಕಿನಾ ನಿಂಗ್ಬೊ ಓಪನ್ ಟೆನಿಸ್ ಟೂರ್ನಿಯಲ್ಲಿ ಮಹಿಳೆಯರ ಸಿಂಗಲ್ಸ್ ಪ್ರಶಸ್ತಿಯನ್ನು ಎತ್ತಿ ಹಿಡಿದಿದ್ದಾರೆ. ಈ ಮೂಲಕ ಈ ವರ್ಷದ ಡಬ್ಲ್ಯುಟಿಎ ಫೈನಲ್ಸ್ಗೆ ಅರ್ಹತೆ ಪಡೆಯುವ ವಿಶ್ವಾಸವನ್ನು ಹೆಚ್ಚಿಸಿಕೊಂಡಿದ್ದಾರೆ. ವೃತ್ತಿಜೀವನದಲ್ಲಿ 10ನೇ ಪ್ರಶಸ್ತಿಯನ್ನು ಜಯಿಸಿರುವ ರೈಬಾಕಿನಾ ಈ ವಾರ ಟೋಕಿಯೊದಲ್ಲಿ ಪಾನ್ ಪೆಸಿಫಿಕ್ ಓಪನ್ನಲ್ಲಿ ಸೆಮಿ ಫೈನಲ್ಗೆ ತಲುಪಿದರೆ ರಶ್ಯದ ಯುವ ಆಟಗಾರ್ತಿ ಮಿರ್ರಾ ಆಂಡ್ರೀವಾರನ್ನು ಹಿಂದಿಕ್ಕಿ ಡಬ್ಲ್ಯುಟಿಎ ಫೈನಲ್ಸ್ಗೆ ಅರ್ಹತೆ ಪಡೆಯಲಿದ್ದಾರೆ. ಸೌದಿ ಅರೇಬಿಯದ ರಾಜಧಾನಿ ರಿಯಾದ್ನಲ್ಲಿ ನ.1ರಿಂದ 8ರ ತನಕ ನಡೆಯಲಿರುವ ಡಬ್ಲ್ಯುಟಿಎ ಫೈನಲ್ಸ್ನಲ್ಲಿ ಆರ್ಯನಾ ಸಬಲೆಂಕಾ, ಇಗಾ ಸ್ವಿಯಾಟೆಕ್, ಕೊಕೊ ಗೌಫ್, ಅಮಂಡಾ ಅನಿಸಿಮೋವಾ, ಜೆಸ್ಸಿಕಾ ಪೆಗುಲಾ, ಮ್ಯಾಡಿಸನ್ ಕೀಸ್ ಹಾಗೂ ಜಾಸ್ಮಿನ್ ಪಯೋಲಿನಿ ಈಗಾಗಲೆ ಅರ್ಹತೆ ಪಡೆದಿದ್ದಾರೆ. ವಿಶ್ವದ ನಂ.9ನೇ ಆಟಗಾರ್ತಿ ರೈಬಾಕಿನಾ ಈ ವರ್ಷ ತನ್ನ 2ನೇ ಟ್ರೋಫಿಯನ್ನು ಗೆದ್ದಿದ್ದಾರೆ.
ಅಕ್ಟೋಬರ್ ಅಂತ್ಯಕ್ಕೆ ಮೂರು ಧೂಮಕೇತುಗಳು ಗೋಚರ
ಉಡುಪಿ, ಅ.19: ಅಕ್ಟೋಬರ್ ಅಂತ್ಯಕ್ಕೆ ದೀರ್ಘವೃತ್ತದಲ್ಲಿ ಸೂರ್ಯನನ್ನು ಸುತ್ತು ಹೊಡೆಯುತ್ತಿರುವ ಅವು ಲೆಮೆನ್, ಸ್ವಾನ್ ಹಾಗೂ ಅಟ್ಲಸ್ ಎಂಬ ಮೂರು ಧೂಮಕೇತುಗಳು ಗೋಚರಿಸಲಿವೆ. ಇವುಗಳಲ್ಲಿ ಲೆಮೆನ್ ಧೂಮಕೇತು ಮಾತ್ರ ಬರಿಗಣ್ಣಿಗೆ ಕಾಣಿಸುತ್ತಿದೆ ಎಂದು ಎಂದು ಖಗೋಳ ಶಾಸ್ತ್ರಜ್ಞ ಡಾ.ಎ.ಪಿ.ಭಟ್ ಉಡುಪಿ ತಿಳಿಸಿದ್ದಾರೆ. ಲೆಮೆನ್ ಅ.21ರಂದು ಭೂಮಿಗೆ ಸುಮಾರು 90 ಮಿಲಿಯ ಕಿ.ಮೀ. ಸಮೀಪ ಬಂದು ಸಂಜೆಯ ಕೆಲ ಸಮಯ ಪಶ್ಚಿಮೋತ್ತರ ಆಕಾಶದಲ್ಲಿ ಸಪ್ತಋಷಿ ಆಕಾಶಪುಂಜದ ಬಾಲದಲ್ಲಿರುವ ಮರೀಚಿ ನಕ್ಷತ್ರದ ಪಕ್ಕ ಹಾದು ಸ್ವಾತಿ ನಕ್ಷತ್ರದ ಸಮೀಪ ಕಾಣಿಸಲಿದೆ. ನ.8ರಂದು ಸೂರ್ಯ ಸಮೀಪ ತಲುಪಿ ಹಿಂತಿರುಗುತ್ತದೆ. ಸುಮಾರು 1350 ವರ್ಷಗಳಿಗೊಮ್ಮೆ ಈ ಲೆಮೆನ್ ಧೂಮಕೇತು ಸೂರ್ಯನ ಸಮೀಪ ಬಂದು ಹೋಗುತ್ತಿದೆ. ಉಳಿದ ಎರಡು ಧೂಮಕೇತುಗಳಲ್ಲಿ ಅಟ್ಲಸ್ ಭಾರೀ ವಿಶೇಷ. ಅದು ಉಳಿದ ಲೆಮನ್ ಹಾಗೂ ಸ್ವಾನ್ ಧೂಮ ಕೇತುಗಳಂತೆ ನಮ್ಮ ಸೌರವ್ಯೆಹದ ಹೊರವಲಯ ಊರ್ಸ್ ಕ್ಲೌಡ್ನಿಂದ ಬಂದುದಲ್ಲ. ಈ ಅಟ್ಲಸ್ ನಮ್ಮ ಸೌರವ್ಯೆಹದ ಹೊರಗಿನಿಂದ ಅನಂತ ಆಕಾಶದಿಂದ ಬಂದಿದೆ ಎಂದು ತಿಳಿದಿದೆ. ಅದರ ಅಧ್ಯಯನ ಹೊಸ ಹೊಸ ವಿಚಾರಗಳನ್ನು ಬಹಿರಂಗ ಪಡಿಸಿದೆ. ಅದರಲ್ಲಿರುವ ಖನಿಜಗಳು ವಿಶ್ವ ಸೃಷ್ಟಿಯ ಅಧ್ಯಯನಕ್ಕೆ ಹೊಸ ಆಯಾಮವನ್ನು ಕೊಡುತ್ತಿದೆ. ಚಂದ್ರನನ್ನ ಬಿಟ್ಟರೆ ರಾತ್ರಿಯ ಆಕಾಶದಲ್ಲಿ ಧೂಮಕೇತುಗಳೇ ಚೆಂದ. ಸೂರ್ಯನ ಸಮೀಪದಲ್ಲಿರುವಾಗ ಉದ್ದುದ್ದ ಬಾಲಬೆಳೆಸಿಕೊಂಡು ಖಗೋಳ ವೀಕ್ಷಕನ ಮನ ಸೂರೆಗೊಳ್ಳುತ್ತವೆ. ಈಗ ಈ ಧೂಮಕೇತುಗಳೂಂದಿಗೆ ಪ್ರತೀವರ್ಷ ಈ ಸಮಯದಲ್ಲಿ ಸಂಭವಿಸುವ ಹ್ಯಾಲಿ ಧೂಮಕೇತುವಿನ ದೂಳಿನ ಉಲ್ಕಾಪಾತ, ಅಮಾವಾಸ್ಯೆಯ ಕತ್ತಲ ಆಕಾಶ ವನ್ನು ರಂಗೇರಿಸಲಿವೆ ಎಂದು ಖಗೋಳ ಶಾಸ್ತ್ರಜ್ಞ ಡಾ.ಎ.ಪಿ.ಭಟ್ ಉಡುಪಿ ತಿಳಿಸಿದ್ದಾರೆ.
ವಿಶ್ವ ಜೂನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ | ಬೆಳ್ಳಿ ಪದಕ ಗೆದ್ದ ಭಾರತದ ತನ್ವಿ ಶರ್ಮಾ
ಗುವಾಹಟಿ, ಅ.19: ಭಾರತದ ಯುವ ಬ್ಯಾಡ್ಮಿಂಟನ್ ತಾರೆ ತನ್ವಿ ಶರ್ಮಾ ಬಿಡಬ್ಲ್ಯುಎಫ್ ವಿಶ್ವ ಜೂನಿಯರ್ ಚಾಂಪಿಯನ್ಶಿಪ್ನ ಮಹಿಳೆಯರ ಸಿಂಗಲ್ಸ್ ವಿಭಾಗದ ಫೈನಲ್ನಲ್ಲಿ ಥಾಯ್ಲೆಂಡ್ನ ಅನ್ಯಪತ್ ಫಿಚಿತ್ಪ್ರೀಚಾಸಕ್ ವಿರುದ್ಧ ಸೋಲನುಭವಿಸಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟರು. ಸೈನಾ ನೆಹ್ವಾಲ್ ಹಾಗೂ ಅಪರ್ಣಾ ಪೋಪಟ್ ನಂತರ ಪಂದ್ಯಾವಳಿಯಲ್ಲಿ ಫೈನಲ್ಗೆ ತಲುಪಿದ ಭಾರತದ 3ನೇ ಮಹಿಳಾ ಶಟ್ಲರ್ ಎನಿಸಿಕೊಂಡಿರುವ 16ರ ವಯಸ್ಸಿನ ತನ್ವಿ ರವಿವಾರ 2ನೇ ಶ್ರೇಯಾಂಕದ ಥಾಯ್ಲೆಂಡ್ ಆಟಗಾರ್ತಿಯ ಎದುರು 7-15, 12-15 ಗೇಮ್ಗಳ ಅಂತರದಿಂದ ಸೋತಿದ್ದಾರೆ. ತನ್ವಿ 17 ವರ್ಷಗಳ ನಂತರ ವಿಶ್ವ ಜೂನಿಯರ್ ಚಾಂಪಿಯನ್ಶಿಪ್ನಲ್ಲಿ ಭಾರತಕ್ಕೆ ಮೊದಲ ಬಾರಿ ಬೆಳ್ಳಿ ಪದಕ ಗೆದ್ದುಕೊಟ್ಟರು. ಈ ಹಿಂದೆ ಸೈನಾ 2008ರಲ್ಲಿ ಚಿನ್ನ ಹಾಗೂ 2006ರಲ್ಲಿ ಬೆಳ್ಳಿ ಪದಕ ಜಯಿಸಿದ್ದರು. ಅಪರ್ಣಾ 1996ರಲ್ಲಿ ಬೆಳ್ಳಿ ಗೆದ್ದಿದ್ದರು. ತನ್ವಿ ಇದೀಗ ವಿಶ್ವ ಜೂನಿಯರ್ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಪದಕ ಗೆದ್ದ ಭಾರತದ 5ನೇ ಬ್ಯಾಡ್ಮಿಂಟನ್ ತಾರೆ ಎನಿಸಿಕೊಂಡರು. ಅಪರ್ಣಾ ಪೋಪಟ್(1996), ಸೈನಾ ನೆಹ್ವಾಲ್(2006), ಸಿರಿಲ್ ವರ್ಮಾ(2015)ಹಾಗೂ ಶಂಕರ್ ಮುತ್ತುಸ್ವಾಮಿ(2022)ಈ ಹಿಂದೆ ಈ ಸಾಧನೆ ಮಾಡಿದ್ದರು. ಸೈನಾ ಮಾತ್ರ ವಿಶ್ವ ಜೂನಿಯರ್ ಚಾಂಪಿಯನ್ಶಿಪ್ನಲ್ಲಿ ಚಿನ್ನ ಗೆದ್ದಿರುವ ಭಾರತದ ಏಕೈಕ ಆಟಗಾರ್ತಿಯಾಗಿದ್ದಾರೆ. ಸೈನಾ 2008ರಲ್ಲಿ ಬಂಗಾರ ಗೆದ್ದಿದ್ದರು. ಪಂದ್ಯದ ಆರಂಭದಲ್ಲಿ ತೀವ್ರ ಸ್ಪರ್ಧೆ ಕಂಡುಬಂದಿದ್ದು, ಇಬ್ಬರು ಆಟಗಾರ್ತಿಯರು 2-2 ಹಾಗೂ 4-4ರಿಂದ ಸಮಬಲಗೊಳಿಸಿದರು. ಥಾಯ್ಲೆಂಡ್ ಆಟಗಾರ್ತಿ ಮೊದಲ ಗೇಮ್ನಲ್ಲಿ 10-5 ಮುನ್ನಡೆ ಸಾಧಿಸಿ ಪಂದ್ಯದ ಮೇಲೆ ಹಿಡಿತ ಸಾಧಿಸಿದರು. 2ನೇ ಗೇಮ್ನಲ್ಲಿ ತನ್ವಿ 6-1 ಮುನ್ನಡೆ ಸಾಧಿಸಿ ಉತ್ತಮ ಆರಂಭ ಪಡೆದರು. ಆದರೆ ಕೆಲವೊಂದು ತಪ್ಪುಗಳ ಮೂಲಕ ಥಾಯ್ಲೆಂಡ್ ಆಟಗಾರ್ತಿ ತಿರುಗೇಟು ನೀಡಲು ನೆರವಾದರು.
ರಾಜ್ಯದಲ್ಲಿ 1,500ಕ್ಕೂ ಹೆಚ್ಚು ಇ.ವಿ. ಚಾರ್ಜಿಂಗ್ ಕೇಂದ್ರ ಸ್ಥಾಪಿಸಲು ಪ್ರಸ್ತಾವ
ಬೆಂಗಳೂರು, ಅ.19: ರಾಜ್ಯ ಸರಕಾರವು ಭಾರಿ ವಾಹನಗಳ ಚಾರ್ಜಿಂಗ್ ಉದ್ದೇಶಕ್ಕಾಗಿಯೇ ರಾಜ್ಯದಲ್ಲಿ 1,500ಕ್ಕೂ ಹೆಚ್ಚು ಇ.ವಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು ಕೇಂದ್ರ ಸರಕಾರಕ್ಕೆ ಪ್ರಸ್ತಾವ ಸಲ್ಲಿಸಲಿದೆ. ಇವು 60 ಕಿಲೋ ವ್ಯಾಟ್ನಿಂದ 120 ಕಿಲೋ ವ್ಯಾಟ್ ಸಾಮರ್ಥ್ಯ ಹೊಂದಿದ್ದು, ಬಸ್ ಮತ್ತು ಟ್ರಕ್ಗಳಂತಹ ವಾಹನಗಳು ತ್ವರಿತವಾಗಿ ಚಾರ್ಜ್ ಆಗಲಿವೆ. ವಿದ್ಯುತ್ ಚಾಲಿತ(ಇ.ವಿ) ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ಕ್ಷೇತ್ರದಲ್ಲಿ ಕ್ರಾಂತಿ ಮಾಡಿರುವ ರಾಜ್ಯವು, ಬಸ್ ಹಾಗೂ ಟ್ರಕ್ಗಳಂತಹ ಭಾರಿ ವಾಹನಗಳನ್ನು ವಿದ್ಯುದೀಕರಣ ಮಾಡಲು ಮುಂದಾಗಿದೆ. ಹೀಗಾಗಿ ಕೇಂದ್ರದ ಪಿಎಂ ಇ-ಡ್ರೈವ್ ಯೋಜನೆಯಡಿ ಪ್ರಸ್ತಾವ ಸಲ್ಲಿಸಲಿದೆ. ಇ.ವಿ. ಚಾರ್ಜಿಂಗ್ ಕೇಂದ್ರಗಳಲ್ಲಿ ವಾಹನಗಳು ತ್ವರಿತವಾಗಿ ಚಾರ್ಜ್ ಆಗಲಿವೆ. ಲಘು ವಾಹನಗಳನ್ನು ಮೀರಿ ವಿದ್ಯುತ್ ಚಾಲಿತ ಬಸ್ ಹಾಗೂ ಟ್ರಕ್ಗಳನ್ನು ಈ ಕೇಂದ್ರಗಳಲ್ಲಿ ಚಾರ್ಜ್ ಮಾಡಬಹುದು. ದೂರದ ಪ್ರಯಾಣದ ಹಾಗೂ ಸರಕು ಸಾಗಣೆ ವಾಹನಗಳ ಕಾರ್ಯಾಚರಣೆಗೆ ಈ ಚಾರ್ಜಿಂಗ್ ಕೇಂದ್ರಗಳು ಬಲ ತುಂಬಲಿವೆ. ರಾಜ್ಯದಲ್ಲಿ ಸದ್ಯ 6 ಸಾವಿರಕ್ಕೂ ಹೆಚ್ಚು ಇ.ವಿ. ಚಾರ್ಜಿಂಗ್ ಕೇಂದ್ರಗಳಿದ್ದು, ಕರ್ನಾಟಕವು ಪ್ರಸ್ತುತ ಇ.ವಿ ಚಾರ್ಜಿಂಗ್ ಮೂಲಸೌಕರ್ಯದಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ. ಹೊಸ ಯೋಜನೆಯ ಭಾಗವಾಗಿ, ಇಂಧನ ಇಲಾಖೆಯು ಹೆಚ್ಚಿನ ಸಾಮರ್ಥ್ಯದ ಚಾರ್ಜಿಂಗ್ ಸೌಲಭ್ಯಗಳನ್ನು ಸ್ಥಾಪಿಸಲು ಬಸ್ ಡಿಪೋಗಳು, ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳು, ಸರಕು ಸಾಗಣೆ ಕಾರಿಡಾರ್ ಹಾಗೂ ಲಾಜಿಸ್ಟಿಕ್ ಹಬ್ಗಳಂತಹ ಸ್ಥಳಗಳನ್ನು ಗುರುತಿಸುತ್ತಿದೆ. ವಿದ್ಯುತ್ ಚಾಲಿತ ವಾಹನಗಳ ಬಳಕೆ ಹೆಚ್ಚಿಸುವುದು, ಚಾರ್ಜಿಂಗ್ ಜಾಲ ಬಲಪಡಿಸುವುದು ಮತ್ತು ಸ್ಥಳೀಯವಾಗಿ ವಿದ್ಯುತ್ ಚಾಲಿತ ವಾಹನಗಳ ಬಿಡಿ ಭಾಗಗಳ ಉತ್ಪಾದನೆ ಉತ್ತೇಜಿಸುವುದು ಪಿಎಂ ಇ-ಡ್ರೈವ್ ಯೋಜನೆಯ ಗುರಿಯಾಗಿದೆ. ರಾಜ್ಯದಲ್ಲಿ ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆಗೆ ಬೆಸ್ಕಾಂ ಅನ್ನು ನೋಡಲ್ ಏಜೆನ್ಸಿಯನ್ನಾಗಿ ನೇಮಿಸಲಾಗಿದೆ. ಯೋಜನೆಯಡಿ ಟ್ರಾನ್ಸ್ ಫಾರ್ಮರ್ ಮತ್ತು ಕಂಡಕ್ಟರ್ ಘಟಕಗಳಿಗೆ ಶೇ.100ರಷ್ಟು ಹಾಗೂ ಇತರೆ ಸಲಕರಣೆಗಳಿಗೆ ಶೇ.70ರವರೆಗೆ ಕೇಂದ್ರದಿಂದ ರಾಜ್ಯಕ್ಕೆ ಸಹಾಯಧನ ಸಿಗಲಿದೆ. ಡಾ.ಎನ್.ಶಿವಶಂಕರ್, ವ್ಯವಸ್ಥಾಪಕ ನಿರ್ದೇಶಕ, ಬೆಸ್ಕಾಂ
ಕಲಬುರಗಿ| ಚಂದ್ರಶೇಖರ ಶಿಲ್ಪಿಗೆ ರಾಷ್ಟ್ರೀಯ ಕರಕುಶಲ ಪ್ರಶಸ್ತಿ
ಕಲಬುರಗಿ: ಇಲ್ಲಿಯ ಖ್ಯಾತ ಕಲಾವಿದ, ಸಾಂಪ್ರದಾಯಿಕ ಕುಸುರಿ ಕೆತ್ತನೆಯಲ್ಲಿ ಹೆಸರು ಮಾಡಿರುವ ಚಂದ್ರಶೇಖರ ವೈ. ಶಿಲ್ಪಿ ಅವರಿಗೆ ಭಾರತ ಸರ್ಕಾರದ ಜವಳಿ ಸಚಿವಾಲಯ ನೀಡುವ 2024ನೇ ರಾಷ್ಟ್ರೀಯ ಕರಕುಶಲ ಪ್ರಶಸ್ತಿ ದೊರೆತಿದೆ. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರೂ ಆಗಿರುವ ಶಿಲ್ಪಿ ಅವರು ಕೆತ್ತನೆ ಮಾಡಿರುವ ಅಪರೂಪದ ಕಲಾ ನೈಪುಣ್ಯತೆ ಹೊಂದಿರುವ ದ್ವಾರಬಾಗಿಲಿಗೆ ಕರಕುಶಲ ಪ್ರಶಸ್ತಿ ದೊರೆತಿದ್ದು, ಡಿಸೆಂಬರ್ 9ರಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿಯು 2 ಲಕ್ಷ ರೂ. ನಗದು ಬಹುಮಾನ, ಪ್ರಶಸ್ತಿ ಫಲಕವನ್ನು ಹೊಂದಿದೆ. ಕಳೆದ ನಾಲ್ಕು ದಶಕಗಳಿಂದ ಶಿಲ್ಪಕಲೆ, ದ್ವಾರ ಬಾಗಿಲಿನ ಕೆತ್ತನೆಯಲ್ಲಿ ತೊಡಗಿಸಿಕೊಂಡಿರುವ ಚಂದ್ರಶೇಖರ ಶಿಲ್ಪಿ ಅವರು ಮೂಲತಃ ಯಾದಗಿರಿ ಜಿಲ್ಲೆ ಹುಣಸಗಿ ತಾಲ್ಲೂಕಿನ ಕಕ್ಕೇರಾ ಗ್ರಾಮದವರು. ಗೋನಾಲ ಗ್ರಾಮದ ಕಲಾವಿದ ನಾಗಣ್ಣ ಬಡಿಗೇರ ಅವರಿಂದ ದ್ವಾರ ಬಾಗಿಲು, ಪೂಜಾ ಬಾಗಿಲು ಕೆತ್ತನೆ ಹಾಗೂ ಶಿಲ್ಪಕಲೆಯನ್ನು ಕಲಿತ ಚಂದ್ರಶೇಖರ ಶಿಲ್ಪಿ ಅವರು ಕಲ್ಯಾಣ ಕರ್ನಾಟಕದ ಯಾದಗಿರಿ, ಕಲಬುರಗಿ ಭಾಗದಲ್ಲಿ ಪ್ರಸಿದ್ಧಿಯಾದ ಸಗರನಾಡು ಕಲಾ ಶೈಲಿಗೆ ಸಾಂಪ್ರದಾಯಿಕ ಶೈಲಿಯನ್ನು ಸಂಯೋಜಿಸಿ ಇನ್ನಷ್ಟು ಎತ್ತರಕ್ಕೆ ಕೊಂಡೊಯ್ದಿದ್ದಾರೆ ಎಂದು ಆಯ್ಕೆ ಸಮಿತಿ ತಿಳಿಸಿದೆ. ಶಿಲ್ಪಿ ಅವರು ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಸದಸ್ಯರಾಗಿ, ಅಮರಶಿಲ್ಪಿ ಜಕಣಾಚಾರಿ ಪ್ರಶಸ್ತಿ ಆಯ್ಕೆ ಸಮಿತಿ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ಬಸವಕಲ್ಯಾಣದ ಆರೆಸ್ಸೆಸ್ ಪಥ ಸಂಚಲನದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ಭಾಗಿ; ವಿಡಿಯೋ ವೈರಲ್
ಬೀದರ್ : ಬಸವಕಲ್ಯಾಣದಲ್ಲಿ ನಡೆದ ಆರೆಸ್ಸೆಸ್ ಪಥ ಸಂಚಲನದಲ್ಲಿ ಕಲಬುರಗಿ ಜಿಲ್ಲೆಯ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಮಹೇಶ್ ಪಾಟೀಲ್ ಅವರು ಗಣವೇಶ ಧರಿಸಿ ಭಾಗವಹಿಸಿದ ವಿಡಿಯೋ ವೈರಲ್ ಆಗಿದೆ. ಇತ್ತೀಚಿಗೆ ಬಸವಕಲ್ಯಾಣ ನಗರದಲ್ಲಿ ಆರೆಸ್ಸೆಸ್ ನ 100ನೇ ವರ್ಷದ ಸಂಭ್ರಮಾಚರಣೆಯ ಹಿನ್ನಲೆಯಲ್ಲಿ ಪಥಸಂಚಲನ ನಡೆಸಲಾಗಿತ್ತು. ಆ ಪಥ ಸಂಚಲನದಲ್ಲಿ ನೂರಾರು ಆರೆಸ್ಸೆಸ್ ಕಾರ್ಯಕರ್ತರು ಭಾಗವಹಿಸಿದ್ದರು. ಪಥ ಸಂಚಲನವು ನಗರದ ಪ್ರಮುಖ ರಸ್ತೆಗಳಲ್ಲಿ ನಡೆಸಲಾಗಿತ್ತು. ಇಲ್ಲಿ ನಡೆದ ಪಥ ಸಂಚಲನದಲ್ಲಿ ಕಲಬುರಗಿ ಜಿಲ್ಲೆಯ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಮಹೇಶ್ ಪಾಟೀಲ್ ಅವರು ಭಾಗವಹಿಸಿದ ವಿಡಿಯೋ ವೈರಲ್ ಆಗಿದೆ.
ಬೆಂಗಳೂರು | ಪತ್ನಿಯ ಹತ್ಯೆಗೈದು ಕೃತ್ಯ ಮರೆಮಾಚಲು ಯತ್ನಿಸಿದ ಪ್ರಕರಣ: ಪತಿಯ ಬಂಧನ
ಬೆಂಗಳೂರು, ಅ.19: ಅಕ್ರಮ ಸಂಬಂಧ ಹೊಂದಿರುವುದಾಗಿ ಶಂಕಿಸಿ ಪತ್ನಿಯನ್ನು ಹತ್ಯೆಗೈದು ಬಳಿಕ ಕೃತ್ಯ ಮರೆ ಮಾಚಲು ಯತ್ನಿಸಿದ ಪ್ರಕರಣದಡಿ ಪತಿಯನ್ನು ಇಲ್ಲಿನ ಹೆಬ್ಬಗೋಡಿ ಠಾಣೆಯ ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ. ರೇಷ್ಮಾ(32) ಹತ್ಯೆಗೊಳಗಾದವರು. ಹತ್ಯೆ ಮಾಡಿದ ಆರೋಪದಡಿ ಪತಿ ಪ್ರಶಾಂತ್(25) ಎಂಬಾತನನ್ನು ಬಂಧಿಸಲಾಗಿದೆ. ರೇಷ್ಮಾ ಸಹೋದರಿ ರೇಣುಕಾ ಎಂಬುವರು ನೀಡಿದ ದೂರಿನ ಮೇರೆಗೆ ಹತ್ಯೆ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಹೆಬ್ಬಗೋಡಿಯ ಮರಗೊಂಡಹಳ್ಳಿ ನಿವಾಸಿ ರೇಷ್ಮಾ ಅವರು 15 ವರ್ಷಗಳ ಹಿಂದೆ ಸುರೇಂದರ್ ಎಂಬುವರೊಂದಿಗೆ ಮದುವೆ ಮಾಡಿಕೊಂಡಿದ್ದರು. ವಿವಾಹವಾದ ಒಂದೇ ವರ್ಷದಲ್ಲಿ ಮೊದಲ ಪತಿ ಅನಾರೋಗ್ಯದಿಂದಾಗಿ ಸಾವನ್ನಪ್ಪಿದ್ದ. ಈ ದಂಪತಿಗೆ 14 ವರ್ಷದ ಮಗಳಿದ್ದಾರೆ. 9 ತಿಂಗಳ ಹಿಂದೆ ರೇರೇಷ್ಮಾ ಗೆ ಸಾಮಾಜಿಕ ಜಾಲತಾಣದ ಮುಖಾಂತರ ಪ್ರಶಾಂತ್ ಎಂಬಾತನ ಪರಿಚಯವಾಗಿದೆ. ಕಾಲಕ್ರಮೇಣ ಪ್ರೀತಿಗೆ ತಿರುಗಿ ಇಬ್ಬರು ಮದುವೆ ಮಾಡಿಕೊಂಡಿದ್ದರು. ಮದುವೆ ಬಳಿಕ ಆರಂಭದಲ್ಲಿ ದಂಪತಿ ಅನೋನ್ಯವಾಗಿದ್ದರು. ಕೆಲ ತಿಂಗಳಿಂದ ಪತ್ನಿಗೆ ಬೇರೆ ಸಂಬಂಧ ಇರುವುದಾಗಿ ಶಂಕಿಸಿ ಪ್ರಶಾಂತ್ ಗಲಾಟೆ ಮಾಡುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅ.15ರಂದು ಇದೇ ವಿಚಾರಕ್ಕಾಗಿ ಇಬ್ಬರ ನಡುವೆ ಜಗಳವಾಗಿದೆ. ಎಂದಿನಂತೆ ಶಾಲೆ ಮುಗಿಸಿಕೊಂಡು ಮನೆಗೆ ಬಂದಿದ್ದ ಮಗಳು ಶೌಚಾಲಯದಲ್ಲಿ ಬಾಗಿಲು ಚಿಲಕ ಹಾಕಿರುವುದನ್ನು ಗಮನಿಸಿ ತೆಗೆದು ಒಳ ಹೋದಾಗ ರೇಷ್ಮಾ ಅಸ್ವಸ್ಥತೆಯಿಂದ ಬಿದ್ದಿರುವುದನ್ನು ನೋಡಿ ಆಂತಕಗೊಂಡು ತನ್ನ ದೊಡ್ಡಮ್ಮ ರೇಣುಕಾಳಿಗೆ ಕರೆ ಮಾಡಿ ವಿಷಯ ತಿಳಿಸಿದ್ದಳು. ಸ್ಥಳೀಯರ ನೆರವಿನಿಂದ ಖಾಸಗಿ ಆಸ್ಪತ್ರೆಗೆ ಸೇರಿಸಿದರೂ ಮಾರ್ಗ ಮಧ್ಯೆ ರೇಷ್ಮಾ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ. ಈ ಬಗ್ಗೆ ಆರೋಪಿ ಪ್ರಶಾಂತ್ನನ್ನು ಪ್ರಶ್ನಿಸಿದಾಗ ಶೌಚಾಲಯದಲ್ಲಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿರಬಹುದು ಎಂಬುದಾಗಿ ಕಥೆ ಕಟ್ಟಿದ್ದ. ಇದರಿಂದ ಅನುಮಾನಗೊಂಡು ಬಾಲಕಿಯನ್ನು ಪ್ರಶ್ನಿಸಿದಾಗ ಬೇರೆ ಗಂಡಸಿನೊಂದಿಗೆ ಮಾತನಾಡಿದ್ದನ್ನು ಅಪ್ಪ ಕೋಪಿಸಿ ಗಲಾಟೆ ಮಾಡಿದ್ದರು ಎಂದು ಹೇಳಿದ್ದಳು. ಈ ಸಂಬಂಧ ಆರೋಪಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಿದಾಗ ಕೃತ್ಯವೆಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣೆ | 25 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಎಐಎಂಐಎಂ
ಪಾಟ್ನಾ,ಅ.19: ಎಐಎಂಐಎಂ ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗಾಗಿ ತನ್ನ 25 ಅಭ್ಯರ್ಥಿಗಳ ಪಟ್ಟಿಯನ್ನು ರವಿವಾರ ಬಿಡುಗಡೆಗೊಳಿಸಿದೆ. ‘ಬಿಹಾರ ವಿಧಾನಸಭಾ ಚುನಾವಣೆಗಾಗಿ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ರಾಜ್ಯ ಘಟಕವು ರಾಷ್ಟ್ರೀಯ ನಾಯಕತ್ವದೊಂದಿಗೆ ಸಮಾಲೋಚಿಸಿ ಸಿದ್ಧಪಡಿಸಿದೆ. ನಾವು ಬಿಹಾರದಲ್ಲಿ ಅತ್ಯಂತ ಶೋಷಿತ ಜನರ ಧ್ವನಿಯಾಗುವ ಭರವಸೆಯನ್ನು ಹೊಂದಿದ್ದೇವೆ’ ಎಂದು ಎಐಎಂಐಎಂ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದೆ. ಈ ನಡುವೆ ಶನಿವಾರ ಕಾಂಗ್ರೆಸ್ ಐವರು ಅಭ್ಯರ್ಥಿಗಳ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಅ.17ರಂದು ಅದು 48 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿತ್ತು. ಬಿಹಾರ ಚುನಾವಣೆಯ ಮೊದಲ ಹಂತಕ್ಕಾಗಿ ನಾಮಪತ್ರ ಸಲ್ಲಿಕೆ ಶುಕ್ರವಾರ ಅಂತ್ಯಗೊಂಡಿದ್ದು,ಅದಕ್ಕೂ ಮುನ್ನ ಸ್ಥಾನ ಹಂಚಿಕೆಯನ್ನು ಅಂತಿಮಗೊಳಿಸಲು ಮಹಾಘಟಬಂಧನ್ಗೆ ಸಾಧ್ಯವಾಗಿರಲಿಲ್ಲ. ಹೀಗಾಗಿ ಕೆಲವು ಕ್ಷೇತ್ರಗಳಲ್ಲಿ ಮಹಾಘಟಬಂಧನ್ನ ಅಂಗಪಕ್ಷಗಳು ಪರಸ್ಪರ ಎದುರಾಳಿಗಳಾಗುವ ಸಾಧ್ಯತೆಯಿದೆ. 243 ಸದಸ್ಯ ಬಲದ ಬಿಹಾರ ವಿಧಾನಸಭಾ ಚುನಾವಣೆ ನ.6 ಮತ್ತು ನ.11ರಂದು ನಡೆಯಲಿದ್ದು,ನ.14ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.
ಪ್ಯಾರಿಸ್ ನ ಲೂವ್ರಾ ಮ್ಯೂಸಿಯಂನಿಂದ ನೆಪೋಲಿಯನ್ ಕಾಲಘಟ್ಟದ ಆಭರಣಗಳ ಕಳವು
ಕೇವಲ 7 ನಿಮಿಷಗಳಲ್ಲಿ ಕೈಚಳಕ ತೋರಿಸಿದ ಕಳ್ಳರು
ಪ್ಯಾರಿಸ್ನ ಲೌವ್ರೆ ಮ್ಯೂಸಿಯಂನಿಂದ ನೆಪೋಲಿಯನ್ ಕಾಲದ ಒಂಬತ್ತು ಅಮೂಲ್ಯ ಆಭರಣಗಳನ್ನು ಕಳ್ಳರು ಕೇವಲ ಏಳು ನಿಮಿಷಗಳಲ್ಲಿ ಸಿನಿಮೀಯ ರೀತಿಯಲ್ಲಿ ಕಳವು ಮಾಡಿದ್ದಾರೆ. ನಿರ್ಮಾಣ ಹಂತದಲ್ಲಿರುವ ಪ್ರವೇಶದ್ವಾರದ ಮೂಲಕ ನುಗ್ಗಿ, ಹೈಡ್ರಾಲಿಕ್ ಏಣಿ ಬಳಸಿ ಅಪೊಲೊ ಗ್ಯಾಲರಿಯನ್ನು ತಲುಪಿದ ಕಳ್ಳರು, ವಸ್ತುಸಂಗ್ರಹಾಲಯದ ಭದ್ರತೆಯನ್ನು ಮೀರಿ ಪರಾರಿಯಾಗಿದ್ದಾರೆ. ಈ ಘಟನೆಯಿಂದಾಗಿ ವಸ್ತುಸಂಗ್ರಹಾಲಯವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಈ ಘಟನೆ ಈಗ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. ಈ ಘಟನೆ ಬಾಲಿವುಡ್ನ ಧೂಮ್ ಚಿತ್ರದಲ್ಲಿನ ತೋರಿಸಲಾದ ಕಳ್ಳತನ ದೃಶ್ಯವನ್ನು ನೆನಪಿಸಿದೆ.
ಸ್ಪೀಕರ್ ಖಾದರ್ರಿಂದ ಗ್ರಾಮದ ಅಭಿವೃದ್ಧಿಗೆ ಅಧಿಕ ಅನುದಾನ: ಮುಸ್ತಫಾ ಹರೇಕಳ
ಮಂಗಳೂರು, ಅ.19: ಸ್ಪೀಕರ್ ಯು.ಟಿ.ಖಾದರ್ ಕಳೆದ ಎರಡೂವರೆ ವರ್ಷಗಳಲ್ಲಿ ಇತರ ಗ್ರಾಮಗಳಿಗಿಂತಲೂ ಹರೇಕಳ ಗ್ರಾಮಕ್ಕೆ ಹೆಚ್ಚಿನ ಅನುದಾನ ನೀಡಿ ಅಭಿವೃದ್ಧಿಗೆ ಸಹಕರಿಸಿದ್ದಾರೆ ಎಂದು ಮಂಗಳೂರು ತಾಪಂ ಮಾಜಿ ಸದಸ್ಯ ಮುಸ್ತಫಾ ಹರೇಕಳ ತಿಳಿಸಿದರು. ಸ್ಪೀಕರ್ ಖಾದರ್ರ ಅನುದಾನದಲ್ಲಿ ಹರೇಕಳ ಗ್ರಾಮದ ಆಲಡ್ಕ ಅನ್ಸಾರುಲ್ ಮಸಾಕೀನ್ ದಫ್ ಕಮಿಟಿ ಕಚೇರಿ ಬಳಿ ತಡೆಗೋಡೆ ಹಾಗೂ ನೂತನ ರಸ್ತೆ ನಿರ್ಮಾಣ ಕೆಲಸಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಗ್ರಾಪಂ ಉಪಾಧ್ಯಕ್ಷ ಮಜೀದ್ ಎಂ.ಪಿ., ಮಾಜಿ ಅಧ್ಯಕ್ಷ ಬದ್ರುದ್ದೀನ್ ಫರೀದ್ ನಗರ ಮಾತನಾಡಿದರು. ಬದ್ರಿಯಾ ಜುಮಾ ಮಸೀದಿಯ ಮಾಜಿ ಅಧ್ಯಕ್ಷ ಉಮರಬ್ಬ ಶಿಲಾನ್ಯಾಸಗೈದರು. ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷ ಬಶೀರ್ ಉಂಬುದ, ಗ್ರಾಪಂ ಸದಸ್ಯರಾದ ಸತ್ತಾರ್ ಬಾವಲಿಗುರಿ, ಅಬೂಬಕ್ಕರ್ ಸಿದ್ದೀಕ್, ಮುಹಮ್ಮದ್ ರಫೀಕ್, ಪ್ರಮುಖರಾದ ಅಣ್ಣಿ ಪೂಜಾರಿ, ರಫೀಕ್, ಲತೀಫ್ ಆಲಡ್ಕ, ಅಹ್ಮದ್, ಸತ್ತಾರ್, ಜಲೀಲ್, ಲತೀಫ್, ಖಾದರ್, ರಝಾಕ್, ಸಫ್ವಾನ್, ಇಬ್ರಾಹಿಂ, ಬದ್ರುದ್ದೀನ್, ಮುನೀರ್, ಅಶ್ರಫ್ ಉಪಸ್ಥಿತರಿದ್ದರು.
ಬಿಲ್ಲವರು-ಮೊಗವೀರರು ಒಂದಾಗಬೇಕು: ನಾಡೋಜ ಡಾ.ಜಿ.ಶಂಕರ್
ಮಂಗಳೂರು, ಅ.19: ಬಿಲ್ಲವರು ಮತ್ತು ಮೊಗವೀರ ಸಮಾಜ ರಾಜಕೀಯ ರಹಿತವಾಗಿ ಒಂದಾಗಬೇಕು. ಬಿಲ್ಲವ ಮತ್ತು ಮೊಗವೀರ ಸಮಾಜದ ನಡುವೆ ರಾಜಕೀಯ ಪ್ರಜ್ಞೆಯ ಕೊರತೆಯಿಂದ ಬಿಲ್ಲವ ಸಮಾಜದ ಅಭ್ಯರ್ಥಿಗಳು ಚುನಾವಣೆ ನಿಂತಾಗ ಮೊಗವೀರ ಸಮಾಜ ಸ್ಪಂದಿಸಲಿಲ್ಲ ಅದೇ ರೀತಿ ಮೊಗವೀರ ಸಮಾಜ ಚುನಾವಣೆಗೆ ನಿಂತಾಗ ಬಿಲ್ಲವ ಸಮಾಜ ಸ್ಪಂದಿಸಲಿಲ್ಲ. ಇದರಿಂದಾಗಿ ಬಿಲ್ಲವ ಮತ್ತು ಮೊಗವೀರ ಸಮಾಜಕ್ಕೆ ಸರಿಯಾದ ರಾಜಕೀಯ ಪ್ರಾತಿನಿಧ್ಯ ಸಿಕ್ಕಿಲ್ಲ. ಇದರಿಂದ ಸಮಾಜದ ಅಭಿವೃದ್ಧಿಗೆ ತೊಂದರೆ ಆಗುತ್ತದೆ. ಮುಂದಿನ ದಿನಗಳಲ್ಲಿ ಬಿಲ್ಲವ ಮತ್ತು ಮೊಗವೀರ ಸಮಾಜದ ವ್ಯಕ್ತಿಗಳು ಯಾವುದೇ ಪಕ್ಷದಲ್ಲಿ ನಿಂತರೂ ಪಕ್ಷ ಭೇದ ಮರೆತು ಒಂದಾಗ ಬೇಕು ಎಂದು ಮೊಗವೀರ ರತ್ನ, ನಾಡೋಜ ಡಾ. ಜಿ. ಶಂಕರ್ ಕರೆ ನೀಡಿದರು. ಮಂಗಳೂರು ದಸರಾದ ಗೌರವ ಸಮ್ಮಾನ್ 2025 ಪ್ರಶಸ್ತಿ ಸ್ವೀಕರಿಸಲು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಆಗಮಿಸಿದ ಅವರು ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ವಂದಿಸಿದ ಬಳಿಕ ಮಾತನಾಡಿದರು. ಈ ಸಂದರ್ಭ ಕ್ಷೇತ್ರದ ಅಧ್ಯಕ್ಷ ಜಯರಾಜ್ ಸೋಮಸುಂದರಂ, ಕಾರ್ಯದರ್ಶಿ ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಟ್ರಸ್ಟಿಗಳಾದ ಕಿಶೋರ್ ದಂಡಕೇರಿ, ಕೃತಿನ್ ಅಮೀನ್, ಅಭಿವೃದ್ಧಿ ಸಮಿತಿ ಸದಸ್ಯ ಹಾಗೂ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಚಂದನ್ದಾಸ್, ಲೀಲಾಕ್ಷ ಕರ್ಕೇರ, ರಮಾನಾಥ ಕಾರಂದೂರು, ರಾಧಾಕೃಷ್ಣ, ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನ ಅಧ್ಯಕ್ಷ ಜಯ ಕೋಟ್ಯಾನ್ ಉಪಸ್ಥಿತರಿದ್ದರು.
ನ್ಯಾಯಾಲಯದ ನಿರ್ದೇಶನಗಳನ್ನು ತಪ್ಪಾಗಿ ನಿರೂಪಣೆ ಮಾಡುತ್ತಿರುವ ಬಿಜೆಪಿ : ಪ್ರಿಯಾಂಕ್ ಖರ್ಗೆ
ಬೆಂಗಳೂರು : ನಿರೀಕ್ಷೆಯಂತೆ, ರಾಜ್ಯ ಬಿಜೆಪಿ ನ್ಯಾಯಾಲಯದ ನಿರ್ದೇಶನಗಳನ್ನು ತಪ್ಪಾಗಿ ನಿರೂಪಣೆ ಮಾಡಲು ಪ್ರಯತ್ನಿಸುತ್ತಿದೆ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತು ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಸುಳ್ಳು ಮಾಹಿತಿಯನ್ನು ಹರಡಲಾಗುತ್ತಿದೆ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ರವಿವಾರ ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ಚಿತ್ತಾಪುರದಲ್ಲಿ ಇಂದು ಆರೆಸ್ಸೆಸ್ ಮೆರವಣಿಗೆ ಯಾವಾಗ ಹಾಗೂ ಎಲ್ಲಿ ನಡೆಯುತ್ತಿದೆ ಎಂಬುದನ್ನು ಬಿಜೆಪಿ ನಾಯಕರು ತಿಳಿಸಬಹುದೇ? ಎಂದು ಪ್ರಶ್ನಿಸಿದ್ದಾರೆ. ಸತ್ಯ ಸರಳವಾಗಿದೆ: ಚಿತ್ತಾಪುರದಲ್ಲಿ ನಿಗದಿಯಾಗಿರುವ ಆರೆಸ್ಸೆಸ್ ಕಾರ್ಯಕ್ರಮಕ್ಕೆ ಅನುಮತಿ ನೀಡಲಾಗಿಲ್ಲ. ಹೈಕೋರ್ಟ್ ಅರ್ಜಿದಾರರಿಗೆ (ಆರೆಸ್ಸೆಸ್) ನ.2 ತಾರೀಖನ್ನು ತಮ್ಮ ಪಥಸಂಚಲನದ ದಿನವಾಗಿಸಿ ಹೊಸ ಅರ್ಜಿಯನ್ನು ಸಲ್ಲಿಸಲು ನಿರ್ದೇಶಿಸಿದ್ದು, ಆ ಅರ್ಜಿಯ ಕುರಿತು ತನ್ನ ನಿರ್ಧಾರವನ್ನ ಸರಕಾರ ಕೋರ್ಟ್ ಗೆ ಅ.24ರಂದು ತಿಳಿಸಲು ನಿರ್ದೇಶಿಸಿದೆ ಎಂದು ಅವರು ಹೇಳಿದ್ದಾರೆ. ಸಾಮಾಜಿಕ ಸುವ್ಯವಸ್ಥೆಯನ್ನು ಸಂರಕ್ಷಿಸುವ, ರಾಜ್ಯದ ಕಾನೂನು ಹಾಗೂ ಸುವ್ಯವಸ್ಥೆಯನ್ನು ಕಾಪಾಡುವ ಪ್ರಾಥಮಿಕ ಕರ್ತವ್ಯ, ಅಂತಿಮವಾಗಿ ಅಧಿಕಾರ ಹೊಂದಿರುವ ರಾಜ್ಯ ಸರಕಾರದ ಕರ್ತವ್ಯ. ನಾಗರಿಕರು ಅಥವಾ ಸಂಘಟನೆಯಿಂದ ಮಾಡಿದ ವಿನಂತಿಯನ್ನು ಮಂಜೂರು ಮಾಡಲು ಅಥವಾ ನಿಯಂತ್ರಿಸಲು ಸಮಂಜಸವಾದ ನಿರ್ಧಾರವನ್ನು ಅಧಿಕಾರಿಗಳು ತೆಗೆದುಕೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಪರಿಸ್ಥಿತಿಯ ವಾಸ್ತವತೆಯನ್ನು ಅರಿತು ಮತ್ತು ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿಗಾಗಿ ಸೂಕ್ತ ತೀರ್ಮಾನವನ್ನು ತಲುಪುವುದು ಉತ್ತಮ. ಆದುದರಿಂದ, ನ್ಯಾಯಾಲಯದ ನಿರ್ದೇಶನದಂತೆ ಅನುಮತಿ ಕೋರಿ ದಯವಿಟ್ಟು ನಿಮ್ಮ ಅರ್ಜಿಯನ್ನು ಮತ್ತೊಮ್ಮೆ ಸಲ್ಲಿಸಿ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. As expected, @BJP4Karnataka continues to misread court directions and peddle misinformation led by LoP @RAshokaBJP and President @BYVijayendra . Can BJP Leaders clarify when and where the RSS march is happening in Chittapur today? The truth is simple: the RSS event scheduled in… — Priyank Kharge / ಪ್ರಿಯಾಂಕ್ ಖರ್ಗೆ (@PriyankKharge) October 19, 2025
ಕಲಬುರಗಿ | ಪೊಲೀಸರೊಂದಿಗೆ ವಾಗ್ವಾದ: ಸೇಡಂನಲ್ಲಿ ಆರೆಸ್ಸೆಸ್ ಗಣವೇಷಧಾರಿಗಳ ಬಂಧನ
ಕಲಬುರಗಿ : ಆರೆಸ್ಸೆಸ್ ಪಥ ಸಂಚಲನಕ್ಕೆ ಕೊನೆಯ ಹಂತದಲ್ಲಿ ಅನುಮತಿ ನಿರಾಕರಣೆ ಮಾಡಿದ್ದರಿಂದ ಪೊಲೀಸರೊಂದಿಗೆ ಗಣವೇಷಧಾರಿಗಳ ವಾಗ್ವಾದ ನಡೆಸಿದ್ದು, ವಾಗ್ವಾದ ತೀವ್ರಗೊಳ್ಳುತ್ತಿದ್ದಂತೆಯೇ ಆರೆಸ್ಸೆಸ್ ಗಣವೇಷಧಾರಿಗಳನ್ನು ಬಂಧಿಸಿರುವ ಘಟನೆ ರವಿವಾರ ಸಂಜೆ ನಡೆದಿದೆ. ಸೇಡಂ ಪಟ್ಟಣದಲ್ಲಿ ಸಂಜೆ 4 ಗಂಟೆಗೆ ಪಥ ಸಂಚಲನ ನಿಗದಿ ಮಾಡಲಾಗಿತ್ತು. ಆದರೆ ಸೇಡಂ ಪುರಸಭೆಯು 3 ಗಂಟೆಯ ಬಳಿಕ ಪಥ ಸಂಚಲನಕ್ಕೆ ಅನುಮತಿ ನಿರಾಕರಿಸಿದೆ. ಪಥ ಸಂಚಲನಕ್ಕೆ ಎಲ್ಲಾ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದರೆ, ಸಿದ್ಧತೆ ಬಳಿಕ ಕಾರ್ಯಕ್ರಮವನ್ನು ನಿರಾಕರಣೆ ಮಾಡಿದರೆ ಹೇಗೆ? ಎಂದು ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ ಪ್ರಶ್ನಿಸಿದ್ದಾರೆ. ಇದೇ ವೇಳೆಯಲ್ಲಿ ಮಧ್ಯಪ್ರವೇಶಿಸಿದ ಆರೆಸ್ಸೆಸ್ ಗಣವೇಷಧಾರಿಗಳು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಈ ಸಂದರ್ಭದಲ್ಲಿ ಪೊಲೀಸರು, ಗಣವೇಷಧಾರಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬಿಜೆಪಿ ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ, ರಾಜಶೇಖರ ನಿಲಂಗಿ, ಶಿವಕುಮಾರ್ ಜಿಕೆ ಪಾಟೀಲ್ ತೆಲ್ಕೂರ, ಶಿವಕುಮಾರ್ ಬೋಳಖೇಟ್ಟಿ, ಕಾಶಿನಾಥ್ ನಿಡಗುಂದಾ ಸೇರಿದಂತೆ ಹಲವರನ್ನು ವಶಕ್ಕೆ ಪಡೆದುಕೊಂಡರು.
ಬಿಹಾರ ಚುನಾವಣೆ | RJD ಟಿಕೆಟ್ ನಿರಾಕರಣೆ: ಬಟ್ಟೆ ಹರಿದುಕೊಂಡು, ಕಣ್ಣೀರಿಟ್ಟ ಟಿಕೆಟ್ ಆಕಾಂಕ್ಷಿ
ಪಾಟ್ನಾ: ರವಿವಾರ RJD ವರಿಷ್ಠ ಲಾಲೂ ಪ್ರಸಾದ್ ಯಾದವ್ ನಿವಾಸದೆದುರು ಬಿಹಾರ ವಿಧಾನಸಭಾ ಚುನಾವಣೆಗೆ ಪಕ್ಷದ ಟಿಕೆಟ್ ನಿಂದ ವಂಚಿತರಾದ ಆಕಾಂಕ್ಷಿಯೊಬ್ಬರು, ಬಟ್ಟೆ ಹರಿದುಕೊಂಡು, ಕಣ್ಣೀರಿಡುತ್ತಾ, ರಸ್ತೆಯ ಮೇಲೆಲ್ಲ ಉರುಳಾಡಿರುವ ಘಟನೆ ನಡೆದಿದೆ. ಟಿಕೆಟ್ ವಂಚಿತ ಆಕಾಂಕ್ಷಿ ಮದನ್ ಶಾ ಅವರ ವರ್ತನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. “ನಾನು ದೀರ್ಘಕಾಲದಿಂದ ಪಕ್ಷದೊಂದಿಗೆ ಸಂಬಂಧ ಹೊಂದಿದ್ದೇನೆ. ಹೀಗಾಗಿ, ನಾನು ಮಧುಬನ್ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದೆ” ಎಂದು ಅವರು ಅಳಲು ತೋಡಿಕೊಂಡಿದ್ದಾರೆ. 2020ರಲ್ಲಿ ನಡೆದಿದ್ದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯೆದುರು ಅಲ್ಪ ಅಂತರದಲ್ಲಿ ಪರಾಭವಗೊಂಡಿದ್ದ ಅವರು, ಎರಡನೆ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು. “ಟಿಕೆಟ್ ನೀಡಲು ನನ್ನ ಬಳಿ 2.70 ಕೋಟಿ ರೂಪಾಯಿಗೆ ಬೇಡಿಕೆ ಇಡಲಾಗಿತ್ತು. ನಾನು ನನ್ನ ಮಕ್ಕಳ ವಿವಾಹವನ್ನು ಮುಂದೆ ಹಾಕುವ ಮೂಲಕ, ಆ ಮೊತ್ತವನ್ನು ನೀಡುವಲ್ಲಿ ಯಶಸ್ವಿಯಾಗಿದ್ದೆ. ನಾನೀಗ ಮುಗಿದು ಹೋಗಿದ್ದೇನೆ. ಕನಿಷ್ಠ ಅವರು ನನ್ನ ದುಡ್ಡನ್ನು ಮರಳಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ. ಆದರೆ, ಚುನಾವಣಾ ಆಕಾಂಕ್ಷಿಗಳಿಗೆ ಟಿಕೆಟ್ ನೀಡಲು ಹಣಕ್ಕೆ ಬೇಡಿಕೆ ಇಡಲಾಗಿದೆ ಎಂಬ ಆರೋಪಗಳ ಕುರಿತು RJD ನಾಯಕರು ಇದುವರೆಗೆ ತುಟಿ ಬಿಚ್ಚಿಲ್ಲ. ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ನಾಮಪತ್ರಗಳನ್ನು ಸಲ್ಲಿಸಲು ನಾಳೆ ಕೊನೆಯ ದಿನವಾಗಿದ್ದು, ಮಧುಬನ್ ವಿಧಾನಸಭಾ ಕ್ಷೇತ್ರದಿಂದ RJD ಪಕ್ಷವೇ ಸ್ಪರ್ಧಿಸಲಿದೆಯೊ ಅಥವಾ ಅದರ ಮೈತ್ರಿ ಪಕ್ಷಗಳು ಸ್ಪರ್ಧಿಸಲಿವೆಯೊ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ದೇವಿರಮ್ಮ ದರ್ಶನ ಆರಂಭ; ಬೆಟ್ಟ ಹತ್ತಿ ದರ್ಶನ ಪಡೆದ ಭಕ್ತರು; ಈ ಬಾರಿ ಹೆಚ್ಚುವರಿ 1 ದಿನ ಅವಕಾಶ! ಯಾವತ್ತು ಕೊನೆ?
ಚಿಕ್ಕಮಗಳೂರು ಜಿಲ್ಲೆಯ ಮಲ್ಲೇನಹಳ್ಳಿಯಲ್ಲಿ ಬಿಂಡಿಗ ದೇವಿರಮ್ಮ ದೇವಿಯ ದರ್ಶನಕ್ಕೆ ಭಾನುವಾರ ಸಾವಿರಾರು ಭಕ್ತರು ಆಗಮಿಸಿದ್ದಾರೆ. ಮಳೆ ಮತ್ತು ಜಾರುವ ರಸ್ತೆಯ ನಡುವೆಯೂ ಭಕ್ತರು ಸುರಕ್ಷಿತವಾಗಿ ಬೆಟ್ಟ ಹತ್ತಿ ದೇವಿಯ ಕೃಪೆಗೆ ಪಾತ್ರರಾಗಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಭಕ್ತರಿಗೆ ನೆರವಾಗಿದ್ದಾರೆ. ಸೋಮವಾರವೂ ದೇವಿಯ ದರ್ಶನಕ್ಕೆ ಅವಕಾಶವಿದೆ. ಸಂಜೆ ದೀಪೋತ್ಸವ ನಡೆಯಲಿದೆ.