ಗಾಜಾ ಯುದ್ಧ ನಿಲ್ಲಿಸಲು ಟ್ರಂಪ್ ಮಾಸ್ಟರ್ ಪ್ಲಾನ್, ಶಾಂತಿ ಮಂಡಳಿಗೆ ಯಾರೆಲ್ಲಾ ಎಂಟ್ರಿ?
ಗಾಜಾ ಪಟ್ಟಿಯಲ್ಲಿ ಯುದ್ಧ ಶುರುವಾಗಿ ಬರೋಬ್ಬರಿ 2 ವರ್ಷಕ್ಕೂ ಹೆಚ್ಚು ಸಮಯ ಆಗಿದೆ, ಇಸ್ರೇಲ್ ಮತ್ತು ಹಮಾಸ್ ನಡುವೆ ಶುರುವಾಗಿದ್ದ ಈ ಕಿರಿಕ್ ಹತ್ತಾರು ಸಾವಿರ ಜನರ ಜೀವ ಬಲಿ ಪಡೆದಿರುವ ಆರೋಪ ಕೂಡ ಇದೆ. ಹೀಗಾಗಿಯೇ ಗಾಜಾ ಪಟ್ಟಿಯಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕು ಎಂಬುದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಶಯ. ಹೀಗಿದ್ದರೂ ಏನೆಲ್ಲಾ
Gujarat | ಉದ್ಘಾಟನೆಗೂ ಮುನ್ನವೇ 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್ ಕುಸಿತ
ಸೂರತ್ ಜಿಲ್ಲೆಯ 33 ಹಳ್ಳಿಗಳ ಕುಡಿಯುವ ನೀರು ಯೋಜನೆಗೆ ಹಿನ್ನಡೆ
Sunita Williams: ಸುನಿತಾ ವಿಲಿಯಮ್ಸ್ ಬಾಹ್ಯಾಕಾಶ ಪಯಣಕ್ಕೆ ವಿದಾಯ, ನಾಸಾದಿಂದ ನಿವೃತ್ತಿ
ಟೆಕ್ಸಾಸ್: ರಾಷ್ಟ್ರೀಯ ವಾಯುಯಾನ ಮತ್ತು ಬಾಹ್ಯಾಕಾಶ ಆಡಳಿತದ (NASA) 27 ವರ್ಷಗಳಿಂದ ಗಗನಯಾನಿಯಾಗಿದ್ದ ಸುನಿತಾ ವಿಲಿಯಮ್ಸ್ (Astronaut Sunita Williams) 27 ಅವರು ನಿವೃತ್ತಿಯಾಗಿದ್ದಾರೆ. ಈ ಬಗ್ಗೆ ನಾಸಾ ಜನವರಿ 20ರಂದು ಮಂಗಳವಾರ ಅಧಿಕೃತ ಮಾಹಿತಿ ನೀಡಿದೆ.
ಜಂಟಿ ಅಧಿವೇಶನದಲ್ಲಿ ಸಿದ್ದು ಸರ್ಕಾರಕ್ಕೆ ಕಾದಿದ್ಯಾ ರಾಜ್ಯಪಾಲರ ಶಾಕ್? ಗೆಹ್ಲೋಟ್ ಅವರ ಮುಂದಿನ ನಡೆಯತ್ತ ಎಲ್ಲರ ಚಿತ್ತ
ತಮಿಳುನಾಡು ಮತ್ತು ಕೇರಳ ರಾಜ್ಯಪಾಲರ ನಡೆ ವಿವಾದಕ್ಕೆ ಕಾರಣವಾಗಿದ್ದು, ಕೇಂದ್ರ ಸರ್ಕಾರದ ವಿರುದ್ಧದ ಅಂಶಗಳನ್ನು ಭಾಷಣದಿಂದ ಕೈಬಿಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದೀಗ ಗುರುವಾರದಿಂದ ಕರ್ನಾಟಕ ವಿಧಾನಸಭೆಯ ಜಂಟಿ ಅಧಿವೇಶನ ಆರಂಭಗೊಳ್ಳಲಿದ್ದು, ಇದರಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರ ಸಿದ್ದಪಡಿಸಿರುವ ಭಾಷಣವನ್ನು ಓದಬೇಕಿದೆ. ಈ ವೇಳೆ ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣದಲ್ಲಿ ಕೇಂದ್ರದ ವಿರುದ್ಧದ ಅಂಶಗಳಿರಲಿವೆ ಎಂಬ ಮಾಹಿತಿ ಲಭ್ಯವಾಗಿದ್ದು, ರಾಜ್ಯಪಾಲನಡೆ ಬಗ್ಗೆ ನಡೆ ಏನಾಗಿರಲಿದೆ ಎಂಬ ಕುತೂಹಲ ಮೂಡಿಸಿದೆ. ತ.ನಾಡು ಹಾಗೂ ಕೇರಳ ರಾಜ್ಯಪಾಲರ ಮಾರ್ಗವನ್ನು ಅನುಸರಿಸುತ್ತಾರಾ ಅಥವಾ ಸಂಪೂರ್ಣವಾಗಿ ಭಾಷಣ ಓದುತ್ತಾರಾ ಎಂಬುದು ಸದ್ಯದ ಪ್ರಶ್ನೆಯಾಗಿದೆ.
ಲಕ್ಕುಂಡಿ ವಿಸ್ಮಯ: 10ನೇ ಶತಮಾನದ ಈಶ್ವರನ ಗರ್ಭಗುಡಿ, ಶಿವಲಿಂಗ ಪಾಣಿ ಬಟ್ಟಲು ಪತ್ತೆ
ಐತಿಹಾಸಿಕ ತಾಣವಾದ ಲಕ್ಕುಂಡಿ ದಿನೇ ದಿನೇ ಅಚ್ಚರಿಗಳ ತವರಾಗಿ ಮಾರ್ಪಾಡಾಗುತ್ತಿದೆ. ಇಲ್ಲಿನ ಪ್ರತಿ ಪ್ರದೇಶದಲ್ಲಿಯೂ ಇತಿಹಾಸ ಅಡಗಿದೆ ಎನ್ನುವದುದಕ್ಕೆ ಸದ್ಯ ಮನೆಯೊಂದು ಸಾಕ್ಷಿಯಾಗಿದೆ. ಗ್ರಾಮದ ನಿವಾಸಿಯೊಬ್ಬರ ಮನೆಯ ಹಾಲ್ ಪಕ್ಕದಲ್ಲಿ 10ನೇ ಶತಮಾನದ ಪುರಾತನ ಈಶ್ವರನ ಗರ್ಭಗುಡಿ ಪತ್ತೆಯಾಗಿದೆ. ಅಷ್ಟೇ ಅಲ್ಲದೇ ಉತ್ಖನನ ಸ್ಥಳದಲ್ಲೇ ಮಣ್ಣಿನ ಮಡಿಕೆಗಳು ಪತ್ತೆಯಾಗಿದ್ದು, ಅದರಲ್ಲಿ ಬಂಗಾರದ ನಾಣ್ಯಗಳಿರಬಹುದು ಎಂದು ಊಹಿಸಲಾಗಿದೆ.
ಇಎಸ್ಐ ಆರೋಗ್ಯ ಸೇವೆ ಸನ್ನಿಹಿತ? ಏಪ್ರಿಲ್ - ಮೇ ವೇಳೆಗೆ ಆಸ್ಪತ್ರೆ ಉದ್ಘಾಟನೆಯಾಗುವ ನಿರೀಕ್ಷೆ
ದೊಡ್ಡಬಳ್ಳಾಪುರದಲ್ಲಿ 85 ಕೋಟಿ ವೆಚ್ಚದ 100 ಹಾಸಿಗೆಯ ಇಎಸ್ಐ ಆಸ್ಪತ್ರೆ ಕಾರ್ಯಾರಂಭಕ್ಕೆ ಸನ್ನಿಹಿತವಾಗಿದೆ. ಒಂದು ದಶಕದ ಬಳಿಕ, ಅತ್ಯಾಧುನಿಕ ಸೌಲಭ್ಯಗಳೊಂದಿಗೆ ನಿರ್ಮಾಣಗೊಂಡ ಈ ಆಸ್ಪತ್ರೆ, ಲಕ್ಷಾಂತರ ಕಾರ್ಮಿಕರ ಆರೋಗ್ಯ ಸೇವಾ ಸಮಸ್ಯೆಗೆ ಪರಿಹಾರ ನೀಡುವ ನಿರೀಕ್ಷೆಯಿದೆ. ಶೀಘ್ರದಲ್ಲೇ ಉದ್ಘಾಟನೆಗೊಂಡು, ಬೆಂಗಳೂರಿಗೆ ಅಲೆದಾಟ ತಪ್ಪಲಿದೆ.
Rajeev Gowda: ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ
ಬೆಂಗಳೂರು: ಶಿಡ್ಲಘಟ್ಟ ಪಾರಾಯುಕ್ತೆ ಅಮೃತಾ ಅವರಿಗೆ ದೂರವಾಣಿ ಮೂಲಕ ಬೆದರಿಕೆ ಮತ್ತು ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಅವರನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ತರಾಟೆಗೆ ತೆಗೆದುಕೊಂಡಿದೆ ಮತ್ತು ಅವರ ಮೇಲೆ ಗಂಭೀರ ಆರೋಪಗಳನ್ನು ದಾಖಲಿಸದಿದ್ದಕ್ಕಾಗಿ ಸರ್ಕಾರವನ್ನು ಪ್ರಶ್ನಿಸಿದೆ. ಪ್ರಕರಣದಲ್ಲಿ ಅವರ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸುತ್ತಿದ್ದ
ಕಬ್ಬಾಳು ಕೆರೆಗಳಲ್ಲಿ ಜೆಸಿಬಿ, ಹಿಟ್ಯಾಚಿ ಯಂತ್ರಗಳಿಂದ ಅಗೆದ ಆಳವಾದ ಗುಂಡಿಗಳು ಪ್ರವಾಸಿಗರು, ಭಕ್ತರು, ವಿದ್ಯಾರ್ಥಿಗಳಿಗೆ ಮೃತ್ಯುಕೂಪಗಳಾಗಿ ಪರಿಣಮಿಸಿವೆ. ಇತ್ತೀಚೆಗೆ ಇಬ್ಬರು ವಿದ್ಯಾರ್ಥಿಗಳು ಹಾಗೂ ಭಿಕ್ಷುಕ ಸೇರಿದಂತೆ ಹಲವರು ಈಜಲು ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ. ಕೂಡಲೇ ಎಚ್ಚರಿಕೆ ಫಲಕ ಅಳವಡಿಸಿ, ತಡೆಗೋಡೆ ನಿರ್ಮಿಸಿ ಜೀವಹಾನಿ ತಡೆಯಲು ಗ್ರಾಮಸ್ಥರ ಆಗ್ರಹ.
ಸುರತ್ಕಲ್: ಎಂ.ಆರ್.ಪಿ.ಎಲ್. ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ
ಎಂ.ಆರ್.ಪಿ.ಎಲ್.ನ ಬೇಜವಾಬ್ದಾರಿ, ನಿರ್ಲಕ್ಷ್ಯತನವೇ ಘಟನೆಗೆ ಕಾರಣ: ಜೋಕಟ್ಟೆ ನಿವಾಸಿಗಳ ಆರೋಪ
ಹೊದಿಕೆ ಹೊದಿಸದೇ ಸರಕು ಸಾಗಣೆ, ನಿಯಮ ಗಾಳಿಗೆ, ಮರಳು ವಾಹನ ಸವಾರರ ಕಣ್ಣಿಗೆ!
ಬೆಳಗಾವಿ ಜಿಲ್ಲೆಯಲ್ಲಿ ರಸ್ತೆಗಳಲ್ಲಿ ಮರಳು, ಮಣ್ಣು, ಖಡಿ ಸಾಗಿಸುವ ವಾಹನಗಳು ನಿಯಮ ಉಲ್ಲಂಘಿಸುತ್ತಿವೆ. ಹೊದಿಕೆ ಹಾಕದೆ ಸಾಗಾಟದಿಂದ ರಸ್ತೆಗೆ ವಸ್ತುಗಳು ಬಿದ್ದು, ಧೂಳು ಹಾರುತ್ತಿದೆ. ಇದರಿಂದ ಬೈಕ್ ಸವಾರರು ಗಾಯಗೊಳ್ಳುತ್ತಿದ್ದಾರೆ. ಕಣ್ಣಿನ ಸಮಸ್ಯೆ, ಉಸಿರಾಟದ ತೊಂದರೆಗಳು ಹೆಚ್ಚಾಗುತ್ತಿವೆ. ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ಕಾಟಾಚಾರಕ್ಕೆ ದಂಡ ವಿಧಿಸಲಾಗುತ್ತಿದೆ.
27 ವರ್ಷಗಳ ಬಾಹ್ಯಾಕಾಶ ಪಯಣಕ್ಕೆ ನಿವೃತ್ತಿ; ನಾಸಾಗೆ ಸುನೀತಾ ವಿಲಿಯಮ್ಸ್ ಗುಡ್ ಬೈ
ಬಾಹ್ಯಾಕಾಶ ಲೋಕದ ದಂತಕಥೆ ಸುನಿತಾ ವಿಲಿಯಮ್ಸ್ ಅವರು ನಾಸಾದಲ್ಲಿನ ತಮ್ಮ ಇಪ್ಪತ್ತೇಳು ವರ್ಷದ ಪಯಣಕ್ಕೆ ನಿವೃತ್ತಿ ಘೋಷಿಸಿದ್ದಾರೆ. ನಾಸಾ ಆಡಳಿತಾಧಿಕಾರಿ ಜೇರೆಡ್ ಐಸಾಕ್ಮನ್ ಅವರು ಸುನೀತಾ ವಿಲಿಯಮ್ಸ್ ಬಗ್ಗೆ ಹೊಗಳಿ ಎಕ್ಸ್ನಲ್ಲಿ ಟ್ವೀಟ್ ಹಂಚಿಕೊಂಡಿದ್ದಾರೆ. ಸುನೀತಾ ಅವರ ಕಾರ್ಯ ಮುಂದಿನ ಪೀಳಿಗೆಗೆ ಮಾದರಿ ಎಂದು ಶ್ಲಾಘಿಸಿದ್ದಾರೆ.ಡಿಸೆಂಬರ್ 27ರಿಂದ ನಿವೃತ್ತಿ ಘೋಷಿಸಿದ್ದಾರೆ ಎಂದು ನಾಸಾ ಅಧಿಕೃತವಾಗಿ ಸ್ಪಷ್ಟನೆ ಕೊಟ್ಟಿದೆ.
ಬೆಚ್ಚನೆಯ ಸ್ವೆಟರ್, ಕ್ಯಾಪ್ ಏನೇ ಹಾಕಿದ್ರೂ ಚಳಿ ತಡೆಯಲು ಸಾಧ್ಯವಾಗ್ತಿಲ್ಲ ಅನ್ನೋದೆ ಬೆಂಗಳೂರು ಜನರ ಗೋಳು.. ಅದರಲ್ಲೂ ಕೆಲಸಕ್ಕಾಗಿ ಅನಿವಾರ್ಯವಾಗಿ ಹೊರಗೆ ಹೋಗೋರಿಗಂತೂ ಈ ಚಳಿಯ ವಾತಾವರಣ ಸಹಿಸಲು ಕಷ್ಟಸಾಧ್ಯವಾಗಿದೆ. ಇನ್ನು ಹಿರಿಯರು, ಮಕ್ಕಳು ಅನಾರೋಗ್ಯಕ್ಕೆ ತುತ್ತಾದ್ರೆ ಚೇತರಿಸಿಕೊಳ್ಳೋದು ತುಂಬಾ ನಿಧಾನವಾಗಿದ್ದು, ಚಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತಗೊಳಿಸಿದ ರೈಲ್ವೆ ಇಲಾಖೆ: ಕಾರಣವೇನು ಗೊತ್ತಾ?
ಮೈಸೂರು ಮತ್ತು ಕುಶಾಲನಗರ ನಡುವೆ ರೈಲು ಮಾರ್ಗ ನಿರ್ಮಾಣ ಮಾಡುವ ಬಹು ವರ್ಷಗಳ ಕನಸು ಭಗ್ನವಾಗಿದೆ. ರೈಲ್ವೆ ಇಲಾಖೆಯು ಈ ಯೋಜನೆಯನ್ನು ಕೈಬಿಟ್ಟಿದೆ. ಹೆಚ್ಚಿನ ಅನುದಾನದ ಅವಶ್ಯಕತೆ ಮತ್ತು ದೀರ್ಘಾವಧಿಯಲ್ಲಿ ಲಾಭದಾಯಕವಲ್ಲ ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಮರುಪರಿಶೀಲನೆಗೆ ಮನವಿ ಮಾಡಲಾಗುವುದು ಎಂದು ಸಂಸದರು ತಿಳಿಸಿದ್ದಾರೆ. ಇದು ಮೈಸೂರು-ಕೊಡಗು ಜನರ ಬಹುದಿನದ ಕನಸಾಗಿತ್ತು.
ಬಜೆಟ್ ಅಧಿವೇಶನದ ಬಳಿಕ ರಾಜ್ಯ ಸಂಪುಟ ಪುನಾರಚನೆ: 8-12 ಮಂತ್ರಿಗಳಿಗೆ ಗೇಟ್ಪಾಸ್? ಯಾರಿಗೆ ಸಿಗಲಿದೆ ಮಂತ್ರಿಗಿರಿ?
ಬೆಂಗಳೂರು: ಡಿ.ದೇವರಾಜ್ ಅರಸು ಅವರ ದಾಖಲೆಯನ್ನು ಹಿಂದಿಕ್ಕಿ ಕರ್ನಾಟಕದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಇತಿಹಾಸ ನಿರ್ಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೀಗ ನಾಯಕತ್ವ ಬದಲಾವಣೆಯಿಂದ ತಪ್ಪಿಸಿಕೊಳ್ಳಲು ಸಚಿವ ಸಂಪುಟ ಪುನಾರಚನೆ ಮಾಡಲು ಮುಂದಾಗಿದ್ದಾರೆ. ರಾಜ್ಯ ಬಜೆಟ್ ಬಳಿಕ ಸಚಿವ ಸಂಪುಟ ಪುನಾರಚನೆ ಮಾಡುವ ಮೂಲಕ ತಮ್ಮ ಸ್ಥಾನವನ್ನು ಮತ್ತಷ್ಟು ಬಲಪಡಿಸಿಕೊಳ್ಳಲು ಯೋಜಿಸಿದ್ದಾರೆ ಎಂದು ತಿಳಿದು ಬಂದಿದೆ.
ಜಿ ರಾಮ್ ಜಿ ಬಗ್ಗೆ ವಿಶೇಷ ಗ್ರಾಮ ಸಭೆ ಎಂಬ ಅಭಾಸ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏರಿಗೆ ಎಳೆದರೆ, ಅಧಿಕಾರಿಗಳು ಸರಕಾರವನ್ನು ನೀರಿಗೆ ಎಳೆಯುತ್ತಿದ್ದಾರೆಯೆ? ಕೇಂದ್ರದ ಕೆಲವು ಕಾಯ್ದೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಜನವಿರೋಧಿಯೆಂದು ತಿರಸ್ಕರಿಸಿದರೆ, ಸರಕಾರದೊಳಗಿರುವ ಅಧಿಕಾರಿಗಳು ಆ ಕಾಯ್ದೆಗಳನ್ನು, ಯೋಜನೆಗಳನ್ನು ಅನುಷ್ಠಾನಗೊಳಿಸಲು ತುದಿಗಾಲಿನಲ್ಲಿ ನಿಂತಿರುತ್ತಾರೆ. ಸಾರ್ವಜನಿಕ ವೇದಿಕೆಗಳಲ್ಲಿ ಕಾಂಗ್ರೆಸ್ ಮುಖಂಡರು ಆರೆಸ್ಸೆಸ್ ಮತ್ತು ಅದರ ಸೋದರ ಸಂಘಟನೆಗಳನ್ನು ಕಟು ಪದಗಳಿಂದ ಟೀಕಿಸುತ್ತಿರುವಾಗಲೇ ಇತ್ತ ಕನ್ನಡ ಸಂಸ್ಕೃತಿ ಇಲಾಖೆಯು ರಾಷ್ಟ್ರೋತ್ಥಾನದ ಸಹಯೋಗದ ಜೊತೆಗೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುತ್ತವೆ. ರಾಜ್ಯ ಸರಕಾರದ ಹಲವು ಇಲಾಖೆಗಳ ಅಧಿಕಾರಿ ವರ್ಗ ಇಂದಿಗೂ ಮಾನಸಿಕವಾಗಿ ಆರೆಸ್ಸೆಸ್ ಸಿದ್ಧಾಂತದ ಜೊತೆಗೆ ಒಲವನ್ನು ಇರಿಸಿಕೊಂಡವರಾಗಿದ್ದಾರೆ. ರಾಜ್ಯ ಸರಕಾರದ ಕೆಲವು ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲು ಕೆಲವೊಮ್ಮೆ ಅಧಿಕಾರಿಗಳೇ ಅಡ್ಡಿಯಾಗುತ್ತಾರೆ. ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಪ್ರಚಾರಗಳನ್ನು ನಡೆಸುವುದರಲ್ಲೂ ಈ ಅಧಿಕಾರಿ ವರ್ಗ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿವೆ. ಇದೀಗ ವಿಬಿ- ಜಿ ರಾಮ್ ಜಿ ಕಾನೂನು ಅನುಷ್ಠಾನಕ್ಕೆ ಸಂಬಂಧಿಸಿ ಗೊಂದಲ ಸೃಷ್ಟಿಯಾಗಿದ್ದು ಇದಕ್ಕೆ ಯಾರು ಕಾರಣ? ಎನ್ನುವುದು ಅಸ್ಪಷ್ಟವಾಗಿದೆ. ಒಂದೆಡೆ ರಾಜ್ಯ ಕಾಂಗ್ರೆಸ್ ನಾಯಕರು ಜಿ ರಾಮ್ ಜಿ ವಿರುದ್ಧ ಆಂದೋಲನವನ್ನು ರೂಪಿಸುತ್ತಿರುವಾಗಲೇ ಅತ್ತ ಗ್ರಾಮ ಮಟ್ಟದಲ್ಲಿ ಈ ಯೋಜನೆಗೆ ಸಂಬಂಧಿಸಿ ಜನರಲ್ಲಿ ಅರಿವು ಮೂಡಿಸುವುದಕ್ಕೆ ಸುತ್ತೋಲೆಗಳು ಹೋಗಿವೆ. ಮಹಾತ್ಮಾ ಗಾಂಧಿ ರಾಷ್ಟ್ರಿಯ ಉದ್ಯೋಗ ಖಾತರಿ ಕಾನೂನಿನ ಬದಲಿಗೆ ಕೇಂದ್ರ ಸರಕಾರ ತಂದಿರುವ ವಿಬಿ -ಜಿ ರಾಮ್ ಜಿ ಕಾನೂನನ್ನು ಕಾಂಗ್ರೆಸ್ ಪಕ್ಷ ಮತ್ತು ಕರ್ನಾಟಕದ ರಾಜ್ಯ ಸರಕಾರ ವಿರೋಧಿಸುತ್ತಿದೆ. ಈ ಹೊಸ ಕಾನೂನಿನ ನಕಾರಾತ್ಮಕ ಅಂಶಗಳ ಬಗ್ಗೆ ಕಾಂಗ್ರೆಸ್ ಪಕ್ಷ ಮತ್ತು ಅದರ ರಾಜ್ಯ ಸರಕಾರಕ್ಕಿರುವ ಆಕ್ಷೇಪಗಳನ್ನು ಈಗಾಗಲೇ ಸರಕಾರ ಹೇಳಿದೆ. ಈ ಕುರಿತು ವಿಶೇಷ ಅಧಿವೇಶನವನ್ನೂ ಕರೆಯುವ ನಿರ್ಧಾರವನ್ನು ಪ್ರಕಟಿಸಿದೆ. ಇದರೊಂದಿಗೆ ಉದ್ಯೋಗ ಖಾತರಿ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಸಂಘಟನೆಗಳೂ ಹೊಸ ಕಾನೂನಿನ ವಿರುದ್ಧ ಹೋರಾಡುವ ನಿರ್ಧಾರವನ್ನೂ ಮಾಡಿವೆ. ಹೊಸ ಕಾನೂನಿನಲ್ಲಿ ಇರುವ ಆಕ್ಷೇಪಾರ್ಹ ಸಂಗತಿಗಳನ್ನು ಈಗಾಗಲೇ ಕಾಂಗ್ರೆಸ್ ಪಕ್ಷ ಸಹಿತ ಎಲ್ಲರೂ ಎತ್ತಿ ಹೇಳಿದ್ದಾರೆ. ಬೇಡಿಕೆ ಆಧಾರಿತ ಕಾನೂನಿನಿಂದ ಸರಕಾರ ನೀಡುವ ಸವಲತ್ತಿನ ಮಟ್ಟಿಗೆ ಈ ಹೊಸ ಕಾನೂನು ಉದ್ಯೋಗ ಖಾತರಿಯನ್ನು ಮಾರ್ಪಡಿಸಿದೆಯಲ್ಲದೆ ಅನುದಾನದಲ್ಲಿ ರಾಜ್ಯ ಸರಕಾರದ ಪಾಲನ್ನು ಶೇ. 40ಕ್ಕೇರಿಸಿದೆ. ಅರ್ಥಾತ್ ತನ್ನ ಸಾಂವಿಧಾನಿಕ ಜವಾಬ್ದಾರಿಯಿಂದ ಹಿಂದೆ ಸರಿದಿದೆ. ಇದರೊಂದಿಗೆ ಎಲ್ಲಿ ಅನುಷ್ಠಾನ ಮಾಡಬೇಕೆಂಬುದನ್ನೂ ತಾನೇ ನಿರ್ಧರಿಸಲಿದೆ. ಹಾಗೆಯೇ ರಾಜ್ಯಗಳಿಗೆ ನೀಡುವ ಅನುದಾನದ ಮೊತ್ತವನ್ನು ಪ್ರತಿವರ್ಷವೂ ತಾನೇ ಮುಂಚಿತವಾಗಿ ನಿರ್ಧರಿಸಲಿದ್ದು, ಕೂಲಿ ನೀಡಿಕೆಯು, ಅನುದಾನದ ಲಭ್ಯತೆಯ ಮಾಮೂಲಿ ಸರಕಾರಿ ಯೋಜನೆಯಾಗಲಿದೆ. ಈ ಕೇಂದ್ರದ ಕಪಿಮುಷ್ಟಿಯ ಏಕಮೇವ ನಿರ್ಧಾರಗಳು ಒಕ್ಕೂಟದ ಆಶಯಕ್ಕೇ ವಿರುದ್ಧ ಅಷ್ಟೇ ಅಲ್ಲ, ಸ್ಥಳೀಯ ಸಂಸ್ಥೆಗಳ ಸ್ವಾಯತ್ತತೆಯನ್ನೂ ಅದುಮುವ ಪ್ರಕ್ರಿಯೆಯಾಗಿದೆ. ಇದರ ಹೊರತಾಗಿ ಈ ಯೋಜನೆಯ ಸ್ಥೂಲ ಕಾನೂನಾತ್ಮಕ ದಾಖಲೆಯಷ್ಟೇ ಪ್ರಕಟವಾಗಿದ್ದು ಅನುಷ್ಠಾನಕ್ಕೆ ಸಂಬಂಧಿಸಿದ ಮಾರ್ಗದರ್ಶಿ ಸೂಚಿಗಳು, ನಿಯಮಾವಳಿಗಳು ಇನ್ನೂ ಪ್ರಕಟವಾಗಿಲ್ಲ. ಅಂದರೆ ಈ ಕುರಿತು ಕಾನೂನಿನ ಅಂಶಗಳಾಚೆ ತಳಮಟ್ಟದಲ್ಲಿ ಅನುಷ್ಠಾನ ಹೇಗಾಗಬಹುದು ಎಂಬ ಯಾವ ಸ್ಪಷ್ಟತೆಯೂ ಇಲ್ಲ. ಈ ಬಗ್ಗೆ ಕಾನೂನಿನ ವಿವರಗಳ ಮೂಲಕ ಊಹಾತ್ಮಕವಾಗಿ ಚರ್ಚಿಸಬಹುದಷ್ಟೆ. ಹೀಗಿರುವಾಗ ಕೇಂದ್ರ ಸರಕಾರವು ಎಲ್ಲಾ ಗ್ರಾಮಪಂಚಾಯತ್ಗಳಲ್ಲಿ ಜಿ ರಾಮ್ ಜಿ ಯ ಬಗ್ಗೆ ಅರಿವು ಮೂಡಿಸಲು ವಿಶೇಷ ಗ್ರಾಮ ಸಭೆಯನ್ನು ಕರೆಯುವಂತೆ ಸುತ್ತೋಲೆ ಹೊರಡಿಸಿದೆ. ಹಾಗೆಯೇ ಈ ಕಾನೂನು ಎಷ್ಟು ಅನುಕೂಲಕರ, ಉದ್ಯೋಗ ಖಾತರಿಗಿಂತ ಉತ್ತಮ ಎಂಬ ವಿವರಣಾತ್ಮಕ ಮಾಹಿತಿ ಸಾಹಿತ್ಯವನ್ನು ಪ್ರಕಟಿಸಿದೆ. ಈ ಗ್ರಾಮ ಸಭೆಗಳಲ್ಲಿ ಸರಕಾರವು ಈ ಮಾಹಿತಿಗಳನ್ನು ಬಳಸುತ್ತದೆ ಎಂಬುದು ಸ್ಪಷ್ಟ. ಇನ್ನೊಂದೆಡೆ ಭಾಜಪವು ಹೊಸ ಯೋಜನೆಯ ಪರವಾಗಿ ಮಿಂಚಿನ ವೇಗದಲ್ಲಿ ಪ್ರಚಾರ ನಡೆಸುತ್ತಿದ್ದು ಪಂಚಾಯತ್ ಮಟ್ಟಕ್ಕೂ ತಲುಪಿದೆ ಎಂಬ ಮಾಹಿತಿ ಇದೆ. ಹೀಗಿರುವಾಗ ರಾಜ್ಯ ಸರಕಾರದ ಪಂಚಾಯತ್ ರಾಜ್ ಆಯುಕ್ತರು ಕೇಂದ್ರ ಸರಕಾರದ ಸುತ್ತೋಲೆಯನ್ನು ಶಿರಸಾ ವಹಿಸಿ ಪಾಲಿಸಿ, ಜನವರಿ 26ರಂದು ವಿಶೇಷ ಗ್ರಾಮ ಸಭೆ ಈ ಕುರಿತು ನಡೆಸಿ ಎಂಬ ಸುತ್ತೋಲೆಯನ್ನು ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಕಳಿಸಿದ್ದಾರೆ. ಈಗ ಅಚ್ಚರಿ ಮೂಡಿಸಿರುವುದು ರಾಜ್ಯ ಸರಕಾರ ಈ ಕಾನೂನನ್ನು ‘ನಾವು ವಿರೋಧಿಸುತ್ತಿದ್ದೇವೆ’ ಎಂದು ಹೇಳುತ್ತಿದೆ. ಅದರ ಕೈಕೆಳಗಿನ ತತ್ಸಂಬಂಧಿತ ಅಧಿಕಾರಿ ಈ ಗ್ರಾಮಸಭೆ ಬಗ್ಗೆ ಸುತ್ತೋಲೆ ಹೊರಡಿಸುತ್ತಾರೆ. ಏನು ನಡೆಯುತ್ತಿದೆ ಇಲ್ಲಿ ಎಂಬ ಗೊಂದಲಕ್ಕೆ ಇದು ಎಡೆ ಮಾಡಿಕೊಟ್ಟಿದೆ ಎಂಬುದು ನಿಸ್ಸಂಶಯ.ಈ ಕಾನೂನಿನ ಅನುಷ್ಠಾನ ವಿವರಗಳೇ ಲಭ್ಯವಿಲ್ಲದೆ ಗ್ರಾಮಸ್ಥರು ಚರ್ಚಿಸುವುದು ಹೇಗೆ? ಪಂಚಾಯತ್ಗಳ ಅವಧಿ ಮುಗಿದಿದ್ದು ಸರಕಾರ ಈಗಾಗಲೇ ಆಡಳಿತಾಧಿಕಾರಿಯನ್ನು ನೇಮಿಸಿದ್ದು, ಹೊಸದಾಗಿ ಚುನಾಯಿತ ಪ್ರತಿನಿಧಿಗಳು ಅಧಿಕಾರ ಸ್ವೀಕರಿಸುವವರೆಗೆ ಈ ಹೊಸ ಯೋಜನೆಯ ಬಗ್ಗೆ ಗ್ರಾಮಸ್ಥರು ನಿರ್ಧರಿಸುವುದು ಹೇಗೆ ಸಾಧ್ಯ? ಒಂದು ವೇಳೆ ಇದು ನಡೆದರೂ ಅದಕ್ಕೆ ಪ್ರಜಾಸತ್ತಾತ್ಮಕ ಮಾನ್ಯತೆ ಎಷ್ಟರ ಮಟ್ಟಿಗೆ ಇರುತ್ತದೆ? ಈ ಹೊಸ ಕಾನೂನಿನಲ್ಲಿರುವ ಆಕ್ಷೇಪಾರ್ಹ ವಿಷಯಗಳ ಬಗ್ಗೆ ಸವಿವರ ಮಾಹಿತಿ ಇನ್ನೂ ಗ್ರಾಮ ಮಟ್ಟಕ್ಕೆ ತಲುಪಿಸಲು ಕಾಂಗ್ರೆಸ್ ಪಕ್ಷ ವಿಫಲವಾಗಿದೆ. ಸರಕಾರವೂ ಈ ಬಗ್ಗೆ ನಿಲುವು ತಳೆದರೆ ಆ ಮಾಹಿತಿಯನ್ನೂ ಗ್ರಾಮಗಳಿಗೆ ತಲುಪಿಸಬೇಕಷ್ಟೆ. ಎರಡೂ ವಾದಗಳನ್ನು ನೋಡಿಯೇ ಗ್ರಾಮಸ್ಥರು ನಿರ್ಧರಿಸುವುದು ಸರಿಯಾದ ವಿಧಾನ. ಒಂದೆಡೆ ಹೊಸ ಕಾನೂನನ್ನು ವಿರೋಧಿಸುತ್ತಾ ಇನ್ನೊಂದೆಡೆ ಆಡಳಿತಾತ್ಮಕವಾಗಿ ಕೇಂದ್ರ ಸರಕಾರದ ಆದೇಶವನ್ನು ಪಾಲಿಸುವ ಸರಕಾರದ ದ್ವಂದ್ವ ಎದ್ದು ಕಾಣುತ್ತಿದೆ. ಸಂಘಟನೆಗಳೊಂದಿಗೆ ಹೊಸ ಕಾನೂನಿನ ವಿರುದ್ಧ ಜನಾಭಿಪ್ರಾಯ ಮೂಡಿಸುವ ಸಭೆಯನ್ನೂ, ಈ ಕುರಿತು ವಿಶೇಷ ಅಧಿವೇಶನವನ್ನೂ ಕರೆಯುವ ತುರ್ತನ್ನು ಪ್ರಕಟಿಸಿರುವ ಸರಕಾರ ಈ ನಡೆಯ ಬಗ್ಗೆ ಸ್ಪಷ್ಟತೆ ನೀಡದಿದ್ದರೆ ಸರಕಾರದ ನಿಲುವು ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತದೆ.
ʻಕರ್ತವ್ಯ ನಿಷ್ಠೆ ಮತ್ತು ಶಿಸ್ತು ಪಾಲನೆಯಿಂದ ಮಾತ್ರ ಏಳಿಗೆ ಸಾಧ್ಯʼ: MLAC ಕಾಲೇಜಿನ ಮಾಜಿ ಪ್ರಾಂಶುಪಾಲರ ಕಿವಿಮಾತು
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಮಹಿಳಾ ಕಾಲೇಜಿನಲ್ಲಿ ಜನವರಿ 19ರಂದು ‘ವೈಸ್ ಆಫ್ ಎಕ್ಸ್ಪೀರಿಎನ್ಸ್’ ಕಾರ್ಯಕ್ರಮ ಜರುಗಿತು. ಕಾಲೇಜಿನ ಮಾಜಿ ಪ್ರಾಂಶುಪಾಲರಾದ ಡಾ. ನಾಗಲಕ್ಷ್ಮಿ ಬಿ. ಎನ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು, ಯುವ ಶಿಕ್ಷಕರು ಹಾಗೂ ವಿದ್ಯಾರ್ಥಿಗಳೊಂದಿಗೆ ತಮ್ಮ ಸುದೀರ್ಘ ವೃತ್ತಿಜೀವನದ ಅನುಭವಗಳನ್ನು ಹಂಚಿಕೊಂಡರು. ಜೊತೆಗೆ ನಿಷ್ಠೆಯಿಂದ ಕೆಲಸ ಮಾಡುವುದು ಹಾಗೂ ಶಿಸ್ತು ಪಾಲನೆ ಮಾಡುವುದು ವೃತ್ತಿ ಜೀವನ ಏಳಿಗೆಗೆ ಉತ್ತಮ ಎಂದರು.
ಹನೂರು : ವಿದ್ಯುತ್ ತಂತಿ ತಗುಲಿ ಬೆಂಕಿ ಆಕಸ್ಮಿಕ; ಲಾರಿಯಲ್ಲಿ ಸಾಗಿಸುತ್ತಿದ್ದ ಮೇವು ಸಂಪೂರ್ಣ ಭಸ್ಮ
ಚಾಮರಾಜನಗರ: ವಿದ್ಯುತ್ ತಂತಿ ತಗುಲಿ ಜಾನುವಾರುಗಳಿಗೆ ಸಂಗ್ರಹಿಸಿಟ್ಟಿದ್ದ ಮೇವು ಬೆಂಕಿ ಪಾಲಾಗಿರುವ ಘಟನೆ ಜಿಲ್ಲೆಯ ಹನೂರು ತಾಲ್ಲೂಕಿನ ಪೆದ್ದನಪಾಳ್ಯದಲ್ಲಿ ನಡೆದಿದೆ. ಪೆದ್ದನಪಾಳ್ಯ ಗ್ರಾಮದ ಸಿದ್ದರಾಜು ಎಂಬ ರೈತ ಮೇವು ಖರೀದಿಸಿ, ಅದನ್ನು ಈಚರ್ ವಾಹನದಲ್ಲಿ ತುಂಬಿಕೊಂಡು ಸ್ವಗ್ರಾಮಕ್ಕೆ ಮರಳುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ಆಕಸ್ಮಿಕವಾಗಿ ಮೇವಿಗೆ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡಿದೆ. ವಾಹನ ಚಲಿಸುತ್ತಿದ್ದಂತೆಯೇ ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದ್ದು, ಮೇವು ಧಗಧಗನೆ ಉರಿಯಲಾರಂಭಿಸಿತು. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ನೀರು ಸುರಿದು ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಬೆಂಕಿ ಹೊತ್ತಿಕೊಂಡಿದ್ದರೂ ಚಾಲಕ ಸಮಯಪ್ರಜ್ಞೆ ಮೆರೆದು ವಾಹನವನ್ನು ನೀರಿರುವ ಸುರಕ್ಷಿತ ಜಾಗದತ್ತ ಚಲಾಯಿಸಿಕೊಂಡು ಹೋಗಿದ್ದಾರೆ. ಆದರೆ ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ ಮೇವು ಸಂಪೂರ್ಣವಾಗಿ ಭಸ್ಮವಾಗಿದೆ. ಅದೃಷ್ಟವಶಾತ್ ವಾಹನದಲ್ಲಿದ್ದ ಚಾಲಕ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಲ್ಯಾಣ ಕರ್ನಾಟಕದಲ್ಲಿ ಇಳಿಕೆ ಕಂಡ ತೀವ್ರ ಅಪೌಷ್ಟಿಕ ಮಕ್ಕಳ ಸಂಖ್ಯೆ
ಕಲ್ಯಾಣ ಕರ್ನಾಟಕದಲ್ಲಿ ತೀವ್ರ ಅಪೌಷ್ಟಿಕತೆ ಪ್ರಮಾಣ ಕಳೆದ ನಾಲ್ಕು ವರ್ಷಗಳಲ್ಲಿ ಶೇ.70ರಷ್ಟು ಇಳಿಕೆಯಾಗಿದೆ. ಸರ್ಕಾರದ ಯೋಜನೆಗಳು, ಆರೋಗ್ಯ ಮತ್ತು ಮಹಿಳಾ-ಮಕ್ಕಳ ಇಲಾಖೆಗಳ ಜಂಟಿ ಕಾರ್ಯದಿಂದ ಇದು ಸಾಧ್ಯವಾಗಿದೆ. ಅಂಗನವಾಡಿ, ಶಾಲೆಗಳಲ್ಲಿ ಪೌಷ್ಟಿಕ ಆಹಾರ ವಿತರಣೆ ಕೂಡ ಇದಕ್ಕೆ ಕಾರಣವಾಗಿದೆ.
ರಾಜಸ್ಥಾನ| ಭೀಕರ ರಸ್ತೆ ಅಪಘಾತ; ನಾಲ್ವರು ಯುವಕರು ಮೃತ್ಯು
ಉದಯಪುರ : ಅತಿ ವೇಗದಲ್ಲಿ ಕಾರನ್ನು ಚಲಾಯಿಸಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಅಪಘಾತಕ್ಕೀಡಾಗಿ ಸಂಭವಿಸಿದ ದುರಂತದಲ್ಲಿ ಮೂವರು ಅಪ್ರಾಪ್ತ ವಯಸ್ಸಿನ ಯುವಕರು ಸೇರಿದಂತೆ ನಾಲ್ಕು ಮಂದಿ ಮೃತಪಟ್ಟ ಘಟನೆ ವರದಿಯಾಗಿದೆ. ಕಾರು 120 ಕಿಲೋಮೀಟರ್ ವೇಗದಲ್ಲಿ ಚಲಿಸುತ್ತಿರುವ ನಡುವೆ ಕಾರಿನಲ್ಲಿದ್ದ ಇಬ್ಬರು ಸಿಗರೇಟ್ ಸೇದಿಕೊಂಡು ಸಂಗೀತ ಕೇಳುತ್ತಾ, ಪರದೆಯ ಮೇಲೆ ವಿಡಿಯೊ ವೀಕ್ಷಿಸುತ್ತಿರುವ ವಿಡಿಯೊ ಲಭ್ಯವಾಗಿದೆ. ಅಪಘಾತಕ್ಕೆ ಮುನ್ನ ಕಾರಿನ ವೇಗವನ್ನು ತಗ್ಗಿಸುವಂತೆ ಸ್ನೇಹಿತರಿಗೆ ಕೇಳಿಕೊಳ್ಳುತ್ತಿರುವ ಶಬ್ದವೂ ದಾಖಲಾಗಿದೆ. ಕಾರು ಅಪಘಾತಕ್ಕೀಡಾದ ಬಳಿಕ ಕತ್ತಲು ಆವರಿಸಿದ್ದರೂ, ಫೋನ್ ನಲ್ಲಿ ಚಿತ್ರೀಕರಣ ಮುಂದುವರಿದಿದೆ. ಗಾಯಾಳು ಯುವಕ ತನಗೆ ಉಸಿರಾಡಲು ಸಾಧ್ಯವಾಗುತ್ತಿಲ್ಲ; ನನ್ನನ್ನು ರಕ್ಷಿಸಿ ಎಂದು ಜನರ ಬಳಿ ದೈನ್ಯದಿಂದ ಬೇಡಿಕೊಳ್ಳುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ. ಉದಯಪುರದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಬಳಿಕ ಆರು ಮಂದಿ ಸ್ನೇಹಿತರು ಕಾರಿನಲ್ಲಿ ವಾಪಸ್ಸಾಗುತ್ತಿದ್ದ ವೇಳೆ ಹಳೆ ಅಹ್ಮದಾಬಾದ್ ಹೆದ್ದಾರಿಗೆ ಚಹಾ ಸೇವನೆಗಾಗಿ ತಿರುಗಿದ್ದರು. ಈ ವೇಳೆ ಗುಜರಾತ್ಗೆ ಹೊರಟಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಮೊಹ್ಮದ್ ಅಯಾನ್ (17), ಅದಿಲ್ ಖುರೇಷಿ (14), ಶೇರ್ ಮೊಹ್ಮದ್ (19) ಮತ್ತು ಗುಲಾಮ್ ಖ್ವಾಜಾ (17) ಮೃತಪಟ್ಟರು. ಕಾರಿನಲ್ಲಿದ್ದ ಇತರ ಇಬ್ಬರಿಗೆ ಹಾಗೂ ಮತ್ತೊಂದು ಕಾರಿನಲ್ಲಿದ್ದ ನಾಲ್ವರಿಗೆ ಗಾಯಗಳಾಗಿವೆ.
ಇಂದು ಮೊದಲ ಟಿ–20 ಪಂದ್ಯ; ಭಾರತ–ನ್ಯೂಝಿಲ್ಯಾಂಡ್ ಸೆಣಸಾಟ
ನಾಗಪುರ, ಜ.20: ನ್ಯೂಝಿಲ್ಯಾಂಡ್ ಕ್ರಿಕೆಟ್ ತಂಡದ ವಿರುದ್ಧ ಬುಧವಾರ ಆರಂಭವಾಗಲಿರುವ ಐದು ಪಂದ್ಯಗಳ ಟಿ–20 ಸರಣಿಯಲ್ಲಿ ಪಾಲ್ಗೊಳ್ಳುವ ಮೂಲಕ ಹಾಲಿ ಚಾಂಪಿಯನ್ ಟೀಮ್ ಇಂಡಿಯಾ, ತನ್ನದೇ ನೆಲದಲ್ಲಿ ಮುಂದಿನ ತಿಂಗಳು ನಡೆಯಲಿರುವ ಟಿ–20 ವಿಶ್ವಕಪ್ ಟೂರ್ನಿಗೆ ಅಂತಿಮ ತಾಲೀಮು ನಡೆಸಲಿದೆ. ನ್ಯೂಝಿಲ್ಯಾಂಡ್ ತಂಡವು ಒಂದು ವರ್ಷದೊಳಗೆ ಭಾರತ ನೆಲದಲ್ಲಿ ಭಾರತ ತಂಡದ ವಿರುದ್ಧ ಮೊದಲ ಬಾರಿ ಟೆಸ್ಟ್ ಹಾಗೂ ಏಕದಿನ ಸರಣಿಗಳನ್ನು ಗೆದ್ದುಕೊಂಡಿದೆ. 2012ರಲ್ಲಿ ಏಕೈಕ ಟಿ–20 ಪಂದ್ಯವನ್ನು ಗೆದ್ದಿದ್ದ ಕಿವೀಸ್, ಮೊದಲ ಬಾರಿಗೆ ಐದು ಪಂದ್ಯಗಳ ಟಿ–20 ಸರಣಿಯನ್ನು ಗೆಲ್ಲುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಟ್ಟಿದೆ. ಟಿ–20 ವಿಶ್ವಕಪ್ಗೆ ಮುನ್ನ ಕಿವೀಸ್ ಆಡಲಿರುವ ಕೊನೆಯ ಸರಣಿ ಇದಾಗಿದೆ. 2017 ಹಾಗೂ 2023ರಲ್ಲಿ ಉಭಯ ತಂಡಗಳು ಮೂರು ಪಂದ್ಯಗಳ ಟಿ–20 ಸರಣಿಯನ್ನು ಆಡಿದ್ದವು. ಎರಡೂ ಬಾರಿ ಭಾರತ 2–1 ಅಂತರದಿಂದ ಸರಣಿ ಗೆದ್ದುಕೊಂಡಿತ್ತು. ಇತ್ತೀಚೆಗೆ ಏಕದಿನ ಸರಣಿಯಲ್ಲಿ ಉಭಯ ತಂಡಗಳು ಪ್ರಮುಖ ಆಟಗಾರರ ಕೊರತೆಯನ್ನು ಎದುರಿಸಿದ್ದವು. ಆದರೆ ಟಿ–20 ಕ್ರಿಕೆಟ್ನಲ್ಲಿ ಸಂಪೂರ್ಣ ಶಕ್ತಿಶಾಲಿ ತಂಡಗಳನ್ನು ಕಣಕ್ಕಿಳಿಸಲಿವೆ. ಕಿವೀಸ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್, ರಚಿನ್ ರವೀಂದ್ರ, ಮ್ಯಾಟ್ ಹೆನ್ರಿ ಹಾಗೂ ಜೇಕಬ್ ಡಫಿ ವಾಪಸಾಗಿದ್ದಾರೆ. ಭಾರತ ತಂಡದಲ್ಲಿ ಹಿರಿಯ ವೇಗದ ಬೌಲರ್ ಜಸ್ಪ್ರಿತ್ ಬುಮ್ರಾ, ಪ್ರಮುಖ ಆಲ್ರೌಂಡರ್ಗಳಾದ ಹಾರ್ದಿಕ್ ಪಾಂಡ್ಯ ಹಾಗೂ ಅಕ್ಷರ್ ಪಟೇಲ್ ಲಭ್ಯವಿದ್ದಾರೆ. ಮೈಕಲ್ ಬ್ರೆಸ್ವೆಲ್ ರವಿವಾರ ನಡೆದ ಮೂರನೇ ಏಕದಿನ ಪಂದ್ಯದ ವೇಳೆ ಗಾಯಗೊಂಡಿರುವುದರಿಂದ, ಕಿವೀಸ್ ಪರ ಮೊದಲ ಟಿ–20 ಪಂದ್ಯದಲ್ಲಿ ಆಡುವ ಸಾಧ್ಯತೆ ಇಲ್ಲ. ಗ್ಲೆನ್ ಫಿಲಿಪ್ಸ್ ಆಡುವ 11ರ ಬಳಗಕ್ಕೆ ಸೇರ್ಪಡೆಯಾಗಲಿದ್ದಾರೆ. ಜೇಮ್ಸ್ ನೀಶಾಮ್ ಬದಲಿಗೆ ಆಡುವ ನಿರೀಕ್ಷೆ ಇದೆ. ಕಳೆದ ವರ್ಷ ಆಸ್ಟ್ರೇಲಿಯಾ ವಿರುದ್ಧ ಚೊಚ್ಚಲ ಟಿ–20 ಶತಕ ಸಿಡಿಸಿದ್ದ ಟಿಮ್ ರಾಬಿನ್ಸನ್, ನವೆಂಬರ್ನಲ್ಲಿ ಸ್ವದೇಶದಲ್ಲಿ ನಡೆದ ವಿಂಡೀಸ್ ವಿರುದ್ಧದ ಸರಣಿಯಲ್ಲೂ ಮಿಂಚಿದ್ದರು. ರಾಬಿನ್ಸನ್ ಕಿವೀಸ್ನ ಟಿ–20 ವಿಶ್ವಕಪ್ ತಂಡದಲ್ಲಿಲ್ಲ. ಭಾರತದಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಅವಕಾಶ ಸಿಗುವ ವಿಶ್ವಾಸದಲ್ಲಿದ್ದಾರೆ. 2024ರ ಜೂನ್ನಲ್ಲಿ ಟಿ–20 ವಿಶ್ವಕಪ್ ಗೆದ್ದ ನಂತರ ಭಾರತ ತಂಡವು ಸತತವಾಗಿ ಎಂಟು ದ್ವಿಪಕ್ಷೀಯ ಟಿ–20 ಸರಣಿಗಳನ್ನು ಗೆದ್ದುಕೊಂಡಿದೆ. ಟಿ–20 ಕ್ರಿಕೆಟ್ನಲ್ಲಿ 29–5 ದಾಖಲೆಯನ್ನು ಹೊಂದಿದ್ದು, ಇದರಲ್ಲಿ ಎರಡು ಸೂಪರ್ ಓವರ್ ಗೆಲುವುಗಳೂ ಸೇರಿವೆ. ಟಿ–20 ವಿಶ್ವಕಪ್ ಟೂರ್ನಿ ಆರಂಭಕ್ಕೆ ಮೂರು ವಾರಗಳಿಗಿಂತ ಕಡಿಮೆ ಸಮಯ ಬಾಕಿ ಉಳಿದಿದ್ದು, ಕಿವೀಸ್ ವಿರುದ್ಧದ ಟಿ–20 ಸರಣಿಯು ನಾಯಕ ಸೂರ್ಯಕುಮಾರ್ ಯಾದವ್ಗೆ ಸತ್ವ ಪರೀಕ್ಷೆಯಾಗಿದೆ. 2024ರಲ್ಲಿ ಭಾರತದ ಟಿ–20 ತಂಡದ ನಾಯಕತ್ವ ವಹಿಸಿಕೊಂಡ ನಂತರ ಸೂರ್ಯಕುಮಾರ್ ಅವರ ಗೆಲುವಿನ ಸರಾಸರಿ 72ರಷ್ಟಿದೆ. ಇದು ಅವರ ಕಳಪೆ ಬ್ಯಾಟಿಂಗ್ ಪ್ರದರ್ಶನವನ್ನು ಮರೆಮಾಚಿದೆ. ಭಾರತ ತಂಡವು ಸ್ವದೇಶದಲ್ಲಿ ಟಿ–20 ವಿಶ್ವಕಪ್ ಟ್ರೋಫಿಯನ್ನು ತನ್ನಲ್ಲೇ ಉಳಿಸಿಕೊಂಡ ಮೊದಲ ತಂಡವಾಗುವ ವಿಶ್ವಾಸದಲ್ಲಿದೆ. ಐಪಿಎಲ್ನಲ್ಲಿ ಶ್ರೇಷ್ಠ ಪ್ರದರ್ಶನ ನೀಡುವ ಮೂಲಕ ಕಳೆದ ಎರಡು ವರ್ಷಗಳಿಂದ ಭಾರತದ ಟಿ–20 ತಂಡ ಮೇಲುಗೈ ಸಾಧಿಸುತ್ತಾ ಬಂದಿದೆ. ಎಲ್ಲ ಮಾದರಿಯ ಕ್ರಿಕೆಟ್ನಲ್ಲಿ ಭಾರತ ನೆಲದಲ್ಲಿ ಐತಿಹಾಸಿಕ ಸಾಧನೆಗೈದಿರುವ ನ್ಯೂಝಿಲ್ಯಾಂಡ್ ಸದ್ಯ ಭಾರೀ ಆತ್ಮವಿಶ್ವಾಸದಲ್ಲಿದೆ. ಟಿ–20 ಕ್ರಿಕೆಟ್ನಲ್ಲಿ ಭಾರತ ಗೆಲ್ಲುವ ಫೇವರಿಟ್ ತಂಡವಾಗಿದ್ದರೂ, ಸೂರ್ಯಕುಮಾರ್ ಅವರ ಫಾರ್ಮ್ ಕಳವಳಕಾರಿಯಾಗಿದೆ. ಭಾರತ ಹಾಗೂ ನ್ಯೂಝಿಲ್ಯಾಂಡ್ ನಡುವಿನ ಟಿ–20 ಸರಣಿ ಜನವರಿ 21ರಿಂದ 31ರ ತನಕ ನಡೆಯಲಿದೆ. ತಿಲಕ್ ವರ್ಮಾ ಬದಲಿಗೆ ಇಶಾನ್ ಕಿಶನ್ ಕಿವೀಸ್ ವಿರುದ್ಧದ ಮೊದಲ ಟಿ–20 ಪಂದ್ಯದಲ್ಲಿ ಗಾಯಾಳು ತಿಲಕ್ ವರ್ಮಾ ಬದಲಿಗೆ ವಿಕೆಟ್ಕೀಪರ್ ಬ್ಯಾಟರ್ ಇಶಾನ್ ಕಿಶನ್ ಆಡುವ ಹೆಚ್ಚಿನ ಸಾಧ್ಯತೆ ಇದೆ. ನಾಗಪುರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ಈ ವಿಚಾರವನ್ನು ದೃಢಪಡಿಸಿದ್ದಾರೆ. ಭಾರತವು ಶ್ರೇಯಸ್ ಅಯ್ಯರ್ ಅವರನ್ನು ಕೈಬಿಟ್ಟು ಕಿಶನ್ ಅವರನ್ನು ಆಡಿಸಲಿದೆ. ಟಿ–20 ವಿಶ್ವಕಪ್ ಪೂರ್ವ ತಯಾರಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಹೆಜ್ಜೆ ಇಡಲಾಗಿದೆ. ಫೆಬ್ರವರಿ 7ರಂದು ಆರಂಭವಾಗಲಿರುವ ವಿಶ್ವಕಪ್ ಟೂರ್ನಿಗೆ ಕಿಶನ್ ಆಯ್ಕೆಯಾಗಿದ್ದಾರೆ. ತಿಲಕ್ ಅನುಪಸ್ಥಿತಿಯಲ್ಲಿ ನ್ಯೂಝಿಲ್ಯಾಂಡ್ ವಿರುದ್ಧದ ಮೊದಲ ಮೂರು ಟಿ–20 ಪಂದ್ಯಗಳಿಗೆ ಅಯ್ಯರ್ ಆಯ್ಕೆಯಾಗಿದ್ದಾರೆ. 2023ರ ನವೆಂಬರ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಟಿ–20 ಸರಣಿಯ ನಂತರ ಕಿಶನ್ ಭಾರತದ ಪರ ಆಡಿಲ್ಲ. ಕಿಶನ್ ಅವರು 32 ಟಿ–20 ಪಂದ್ಯಗಳಲ್ಲಿ 25.67ರ ಸರಾಸರಿಯಲ್ಲಿ 796 ರನ್ ಗಳಿಸಿದ್ದಾರೆ. ಅವರು ಬುಧವಾರ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಇಳಿಯುವ ನಿರೀಕ್ಷೆ ಇದೆ. ಎಂಟನೇ ಕ್ರಮಾಂಕದಲ್ಲಿ ಆಲ್ರೌಂಡರ್ ಶಿವಂ ದುಬೆ ಹಾಗೂ ಹರ್ಷಿತ್ ರಾಣಾ ನಡುವೆ ಪೈಪೋಟಿ ಏರ್ಪಟ್ಟಿದೆ. ಸೂರ್ಯಕುಮಾರ್ ಯಾದವ್ ಅವರು ತಮ್ಮ 100ನೇ ಟಿ–20 ಪಂದ್ಯವನ್ನಾಡಲು ಸಜ್ಜಾಗಿದ್ದಾರೆ. ಆದರೆ ಹಿಂದಿನ 22 ಟಿ–20 ಇನಿಂಗ್ಸ್ಗಳಲ್ಲಿ ಅವರು ಒಂದೂ ಅರ್ಧಶತಕವನ್ನು ಗಳಿಸಿಲ್ಲ. ಈ ಅವಧಿಯಲ್ಲಿ 12.84ರ ಸರಾಸರಿಯಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ತಂಡಗಳು (ಸಂಭಾವ್ಯ) ಭಾರತ: ಅಭಿಷೇಕ್ ಶರ್ಮಾ ಸಂಜು ಸ್ಯಾಮ್ಸನ್ (ವಿಕೆಟ್ಕೀಪರ್) ಸೂರ್ಯಕುಮಾರ್ ಯಾದವ್ (ನಾಯಕ) ಶ್ರೇಯಸ್ ಅಯ್ಯರ್ / ಇಶಾನ್ ಕಿಶನ್ ಹಾರ್ದಿಕ್ ಪಾಂಡ್ಯ ಅಕ್ಷರ್ ಪಟೇಲ್ ರಿಂಕು ಸಿಂಗ್ ಹರ್ಷಿತ್ ರಾಣಾ / ಶಿವಂ ದುಬೆ ಅರ್ಷದೀಪ್ ಸಿಂಗ್ / ಕುಲದೀಪ್ ಯಾದವ್ ಜಸ್ಪ್ರಿತ್ ಬುಮ್ರಾ ವರುಣ್ ಚಕ್ರವರ್ತಿ ನ್ಯೂಝಿಲ್ಯಾಂಡ್: ಟಿಮ್ ರಾಬಿನ್ಸನ್ ಡೆವೊನ್ ಕಾನ್ವೆ (ವಿಕೆಟ್ಕೀಪರ್) ರಚಿನ್ ರವೀಂದ್ರ ಡ್ಯಾರಿಲ್ ಮಿಚೆಲ್ ಗ್ಲೆನ್ ಫಿಲಿಪ್ಸ್ ಮಾರ್ಕ್ ಚಾಪ್ಮನ್ ಜೇಮ್ಸ್ ನೀಶಾಮ್ ಮಿಚೆಲ್ ಸ್ಯಾಂಟ್ನರ್ (ನಾಯಕ) ಮ್ಯಾಟ್ ಹೆನ್ರಿ ಇಶ್ ಸೋಧಿ ಜೇಕಬ್ ಡಫಿ ಅಂಕಿ–ಅಂಶಗಳು 2016ರ ಟಿ–20 ವಿಶ್ವಕಪ್ನಲ್ಲಿ ಉಭಯ ತಂಡಗಳು ಕೊನೆಯ ಬಾರಿ ನಾಗಪುರದಲ್ಲಿ ಮುಖಾಮುಖಿಯಾಗಿದ್ದವು. ಆಗ ಮೂವರು ವೇಗಿಗಳನ್ನು ಬದಿಗಿಟ್ಟು ಮೂವರು ಸ್ಪಿನ್ನರ್ಗಳನ್ನು ಆಡಿಸಿದ ದಿಟ್ಟ ನಿರ್ಧಾರ ಕೈಗೊಂಡ ಕಿವೀಸ್ ಪಡೆ ಭಾರತವನ್ನು 79 ರನ್ಗೆ ಆಲೌಟ್ ಮಾಡಿತ್ತು. ಹಾರ್ದಿಕ್ ಪಾಂಡ್ಯ ಪುರುಷರ ಟಿ–20 ಕ್ರಿಕೆಟ್ನಲ್ಲಿ 2,000 ರನ್ ಹಾಗೂ 100 ವಿಕೆಟ್ಗಳನ್ನು ಪಡೆದ ಐವರು ಆಲ್ರೌಂಡರ್ಗಳ ಪೈಕಿ ಒಬ್ಬರು. ಗ್ಲೆನ್ ಫಿಲಿಪ್ಸ್ ಪುರುಷರ ಟಿ–20 ಕ್ರಿಕೆಟ್ನಲ್ಲಿ 2,000 ರನ್ ಪೂರೈಸಿದ ನ್ಯೂಝಿಲ್ಯಾಂಡ್ನ ನಾಲ್ಕನೇ ಆಟಗಾರರಾಗಲು 71 ರನ್ ಅಗತ್ಯವಿದೆ. ಪಂದ್ಯ ಆರಂಭದ ಸಮಯ: ರಾತ್ರಿ 7:00
Bank Holiday: ಬ್ಯಾಂಕ್ ಸಿಬ್ಬಂದಿ ವಾರದಲ್ಲಿ ಎರಡು ದಿನ ರಜೆಗಳನ್ನು ನೀಡಬೇಕು ಎಂದು ಮನವಿ ಮಾಡುತ್ತಲೇ ಬಂದಿದ್ದರು. ಆದರೆ, ಈ ಬೇಡಿಕೆ ಈಡೇರಿರಲಿಲ್ಲ. ಆದ್ದರಿಂದ ಸಿಬ್ಬಂದಿಗಳು ಇದೀಗ ಮುಷ್ಕರಕ್ಕೆ ಮುಂದಾಗಿದ್ದು, ದೇಶಾದ್ಯಂತ ನಾಲ್ಕು ದಿನ ಬ್ಯಾಂಕ್ ವ್ಯವಹಾರ ಸ್ಥಗಿತಗೊಳ್ಳಲಿದೆ ಎನ್ನುವ ಮಾಹಿತಿಯಿದೆ. ಹಾಗಾದ್ರೆ ದಿನಾಂಕಗಳ ವಿವರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಸದ್ಯ ಬ್ಯಾಂಕ್ಗಳು ಪ್ರತಿ ತಿಂಗಳ ಎರಡು,
ರಾಯಚೂರಿನಲ್ಲಿ ಬೊಲೆರೋ ವಾಹನಗಳ ಮಧ್ಯೆ ಡಿಕ್ಕಿ; ಭೀಕರ ಅಪಘಾತದಲ್ಲಿ ಅಪ್ಪ-ಮಗ ಸೇರಿ ಐವರು ಬಲಿ
ರಾಯಚೂರಿನಲ್ಲಿನ ಸಿಂಧನೂರಿನ ಕನ್ಹೇರಿ ಕ್ರಾಸ್ ಬಳಿ ಎರಡು ಬೊಲೆರೋ ವಾಹನಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಹಿನ್ನೆಲೆ, ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ. ಮೃತರಲ್ಲಿ ಅಪ್ಪ ಮಗ ಸೇರಿದ್ದು, ಭೀಕರ ಅಪಘಾತದಿಂದ ವಾಹನದಲ್ಲಿದ್ದ ಸಾಕು ಪ್ರಾಣಿಗಳು ಮೃತಪಟ್ಟಿದೆ. ಇನ್ನು ಮೂವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ
ಕುರಿ-ಮೇಕೆ ಮಾಂಸ ಮಾರಾಟದಿಂದ ಕೋಟ್ಯಾಂತರ ರೂ. ವಹಿವಾಟು: ದಾಸನಪುರದಲ್ಲಿ ವೈಜ್ಞಾನಿಕ ಮಾರುಕಟ್ಟೆ ನಿರ್ಮಾಣಕ್ಕೆ ಸಿದ್ಧತೆ
ಬೆಂಗಳೂರಿನ ದಾಸನಪುರದಲ್ಲಿ ಕುರಿ ಮತ್ತು ಮೇಕೆಗಳಿಗಾಗಿ ವೈಜ್ಞಾನಿಕ ಮಾರುಕಟ್ಟೆ ನಿರ್ಮಿಸಲು ಎಪಿಎಂಸಿ ನಿರ್ಧರಿಸಿದೆ. ಬಿಎಂಟಿಸಿಗೆ ಸೇರಿದ 12.5 ಎಕರೆ ಜಾಗವನ್ನು ನೀಡುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹೆಚ್ಚುತ್ತಿರುವ ಬೇಡಿಕೆ ಮತ್ತು ವಹಿವಾಟಿನ ಹಿನ್ನೆಲೆಯಲ್ಲಿ ಈ ಮಾರುಕಟ್ಟೆ ನಿರ್ಮಾಣಕ್ಕೆ 2024-25ರ ಬಜೆಟ್ನಲ್ಲಿ ಘೋಷಣೆ ಮಾಡಲಾಗಿತ್ತು.
ಮೊಳಕಾಲ್ಮುರು ತಾಲೂಕು ಆಸ್ಪತ್ರೆಯ ಎಡವಟ್ಟು ಸದ್ಯ ಮಹಿಳೆಯೊಬ್ಬರಿಗೆ ಸಂಕಷ್ಟಕ್ಕೆ ದೂಡಿದೆ. ಅನಾರೋಗ್ಯದಿಂದ ಪತಿ ಮೃತಪಟ್ಟಿದ್ದರು. ಈ ಹಿನ್ನೆಲೆ ಮರಣ ಪ್ರಮಾಣಪತ್ರ ಕೇಳಲು ಹೋದ ಪತ್ನಿಗೇ ಆಕೆಯದ್ದೇ ಮರಣ ಪ್ರಮಾಣಪತ್ರ ನೀಡಲಾಗಿದೆ. ಇದರಿಂದಾಗಿ ಸರ್ಕಾರದ ಹಲವು ಗ್ಯಾರಂಟಿ ಸೌಲಭ್ಯಗಳಿಂದ ವಂಚಿತರಾಗಿ, ಮಗನ ವಿದ್ಯಾಭ್ಯಾಸಕ್ಕೂ ತೊಂದರೆಯಾಗುತ್ತಿದೆ ಎಂದು ಮಹಿಳೆ ಅಳಲು ತೋಡಿಕೊಂಡಿದ್ದಾರೆ. ಆಡಳಿತ ವೈದ್ಯಾಧಿಕಾರಿ ಸೂಚನೆಕೊಟ್ಟರೂ ಕ್ಯಾರೆ ಎನ್ನುತ್ತಿಲ್ಲ ಇಲ್ಲಿನ ಸಿಬ್ಬಂದಿ
ಯಾದಗಿರಿ ರೈಲು ನಿಲ್ದಾಣದಲ್ಲಿ ರಿಸರ್ವೇಶನ್ ಬೋಗಿಯೂ ರಶ್ಶೋ ರಶ್! ವಿಶೇಷ ರೈಲಿಗೆ ಕಲ್ಯಾಣದಿಂದ ಹೆಚ್ಚಿದ ಬೇಡಿಕೆ
ಮಕರ ಸಂಕ್ರಾಂತಿ ಹಬ್ಬ ಮುಗಿದರೂ ಯಾದಗಿರಿ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಕಡಿಮೆಯಾಗಿಲ್ಲ. ರಿಸರ್ವೇಶನ್ ಬೋಗಿಗಳೂ ಜನರಿಂದ ತುಂಬಿ ತುಳುಕುತ್ತಿದ್ದು, ನಿಂತುಕೊಳ್ಳಲೂ ಜಾಗವಿಲ್ಲದಂತಾಗಿದೆ. ಬೆಂಗಳೂರು, ಮುಂಬೈಗೆ ಗುಳೆ ಹೊರಟ ಕಾರ್ಮಿಕರಿಂದ ಈ ಪರಿಸ್ಥಿತಿ ಉಂಟಾಗಿದೆ. ಹೆಚ್ಚವರಿ ರೈಲು ಸೇರಿದಂತೆ ಯಾದಗಿರಿ ಜನರ ನಿರೀಕ್ಷೆಗಳೇನೇನು ನೋಡಿ
ಬೆಂಗಳೂರಿನಲ್ಲಿ ಮಿತಿ ಮೀರಿದ ಜಾಹೀರಾತು ಹಾವಳಿ; GBA ಚುನಾವಣೆ ಸನ್ನಿಹಿತವಾದ ಬೆನ್ನಲ್ಲೇ ಫ್ಲೆಕ್ಸ್, ಬ್ಯಾನರ್ ಅಬ್ಬರ
ಬೆಂಗಳೂರಿನಲ್ಲಿ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್ಸ್ ಜಾಹೀರಾತು ಫಲಕಗಳ ಹಾವಳಿ ಮತ್ತೆ ಹೆಚ್ಚಾಗಿದೆ. ನಗರದ ಸೌಂದರ್ಯ ಕೆಡುತ್ತಿದೆ. ಜಿಬಿಎ ಚುನಾವಣೆ ಸನ್ನಿಹಿತವಾದ ಹಿನ್ನೆಲೆ ರಸ್ತೆಗಳಲ್ಲಿ ರಾಜಕಾರಣಿಗಳ ಶುಭಾಶಯ ಫ್ಲೆಕ್ಸ್ಗಳು ಕಾಣುತ್ತಿವೆ. ಕಟ್ಟಡಗಳ ಮೇಲೆ ಎಲ್ಇಡಿ ಫಲಕಗಳಿಂದ ಅವಘಡ ಸಂಭವಿಸುತ್ತಿವೆ. 200 ಅಡಿಗೆ ಎರಡು ಜಾಹೀರಾತು ಅವಕಾಶ ನೀಡುವ ನಿಯಮ ಜಾರಿಯಾಗಿದೆ. ಆದರೂ ಅನಧಿಕೃತ ಫಲಕಗಳ ತೆರವು ಕಾರ್ಯಾಚರಣೆ ಸಮರ್ಪಕವಾಗಿಲ್ಲ. ಇದರಿಂದ ಟ್ರಾಫಿಕ್ ದಟ್ಟಣೆ ಉಂಟಾಗುತ್ತಿದೆ.
ಶಬರಿಮಲೆ ವಿಮಾನ ನಿಲ್ದಾಣ ಯೋಜನೆಗೆ ಹಿನ್ನಡೆ : ಕಾರಣ ಏನು ಗೊತ್ತಾ!
ಶಬರಿಮಲೆ ವಿಮಾನ ನಿಲ್ದಾಣ ಯೋಜನೆಗೆ ಗುರುತಿಸಲಾದ ಚೆರುವಳ್ಳಿ ಎಸ್ಟೇಟ್ನ ಮಾಲೀಕತ್ವ ವಿವಾದದಲ್ಲಿ ಕೇರಳ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಜಾಗದ ಮಾಲೀಕತ್ವ ಸಾಬೀತುಪಡಿಸಲು ಸರ್ಕಾರ ವಿಫಲವಾಗಿದ್ದು, ಪಾಲಾ ಸಬ್ ಕೋರ್ಟ್ ಅರ್ಜಿಯನ್ನು ತಿರಸ್ಕರಿಸಿದೆ. ಇದರಿಂದ ವಿಮಾನ ನಿಲ್ದಾಣದ ಭವಿಷ್ಯ ಅನಿಶ್ಚಿತತೆಗೆ ಜಾರಿದೆ.
ಲಕ್ಕುಂಡಿ ಚಿನ್ನ, ಮುತ್ತು, ರತ್ನ, ಹವಳಗಳ ಖಣಿ : ಬಸಪ್ಪ ಬಡಿಗೇರರಿಗೆ ಸಿಕ್ಕಿದೆ 30 ಲಕ್ಷ ರೂ ಮೌಲ್ಯದ ಆಭರಣಗಳ ಅವಶೇಷ
ಲಕ್ಕುಂಡಿಯಲ್ಲಿ ಮನೆ ನಿರ್ಮಾಣದ ವೇಳೆ 634 ಗ್ರಾಂ ಚಿನ್ನಾಭರಣ ಸಿಕ್ಕಿದ್ದು, ಗ್ರಾಮದ ಐತಿಹಾಸಿಕ ವೈಭವಕ್ಕೆ ಮತ್ತಷ್ಟು ಮೆರುಗು ನೀಡಿದೆ. 50 ವರ್ಷಗಳಿಂದ ಪ್ರಾಚ್ಯಾವಶೇಷಗಳನ್ನು ಸಂಗ್ರಹಿಸುತ್ತಿರುವ ಬಸಪ್ಪ ಬಡಿಗೇರ ಅವರು ಈವರೆಗೂ 30 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಪ್ರಾಧಿಕಾರಕ್ಕೆ ಹಸ್ತಾಂತರಿಸಿದ್ದಾರೆ.
ಶಿವಮೊಗ್ಗ - ವೃದ್ಧ ದಂಪತಿ ಅನುಮಾನಾಸ್ಪದ ಸಾವು - ಮೈಮೇಲೆ ಗಾಯಗಳಿಲ್ಲ! ಚಿನ್ನಾಭರಣ ಮಾತ್ರ ನಾಪತ್ತೆ!
ಶಿವಮೊಗ್ಗದ ಭದ್ರಾವತಿಯ ಭೂತನಗುಡಿ ಗ್ರಾಮದಲ್ಲಿ ವೃದ್ಧ ದಂಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಪ್ರಕರಣ ಬೆಳಕಿಗೆ ಬಂದಿದೆ. ನಿವೃತ್ತ ನೌಕರ ಚಂದ್ರಪ್ಪ (78) ಮತ್ತು ಪತ್ನಿ ಜಯಮ್ಮ (75) ಮೃತಪಟ್ಟಿದ್ದು, ಅವರ ಚಿನ್ನಾಭರಣ ನಾಪತ್ತೆಯಾಗಿದೆ. ದೇಹದಲ್ಲಿ ಯಾವುದೇ ಗಾಯದ ಗುರುತುಗಳಿಲ್ಲ. ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಹಳೇನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸ್ ಸಿಬ್ಬಂದಿಯ ಹಿತರಕ್ಷಣೆ, ಇಲಾಖೆಯ ಬಲವರ್ಧನೆಗೆ ಸರಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ : ಜಿ.ಪರಮೇಶ್ವರ್
ಕೋಲಾರ : ಪೊಲೀಸ್ ಸಿಬ್ಬಂದಿಯ ಹಿತರಕ್ಷಣೆ ಮತ್ತು ಇಲಾಖೆಯ ಬಲವರ್ಧನೆಗೆ ಸರಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಕೆಜಿಎಫ್ನ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ 10ನೇ ಬೆಟಾಲಿಯನ್ ಆವರಣದಲ್ಲಿ ನೂತನ ಪೊಲೀಸ್ ವಸತಿ ಗೃಹಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಸಮಾರಂಭದಲ್ಲಿ ಶಾಸಕಿ ಡಾ.ರೂಪಕಲಾ ಶಶಿಧರ್ ಅವರ ಅಭಿವೃದ್ಧಿ ಕಾಳಜಿಯನ್ನು ಶ್ಲಾಘಿಸಿದ ಸಚಿವರು, ರೂಪಕಲಾ ಅವರು ಕ್ಷೇತ್ರದ ಅಭಿವೃದ್ಧಿಗಾಗಿ ಅತ್ಯಂತ ವ್ಯವಸ್ಥಿತವಾದ ನೀಲನಕ್ಷೆ ಸಿದ್ಧಪಡಿಸಿದ್ದಾರೆ. ಅವರು ಮಾಡುತ್ತಿರುವ ಕೆಲಸ ಇತರರಿಗೆ ಮಾದರಿ, ಎಂದರು. ಇಲಾಖೆಯಲ್ಲಿ ಖಾಲಿ ಇರುವ 15,000 ಹುದ್ದೆಗಳ ಪೈಕಿ ಈ ವರ್ಷ 10,000 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಸೈಬರ್ ಅಪರಾಧ ತಡೆಯಲು 1.10 ಲಕ್ಷ ಸಿಬ್ಬಂದಿಗೆ ವಿಶೇಷ ತರಬೇತಿ ಹಾಗೂ ‘ಮನೆ ಮನೆಗೆ ಪೊಲೀಸ್’ ಯೋಜನೆಯ ಮೂಲಕ ಜನಸ್ನೇಹಿ ಆಡಳಿತ ನೀಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ, ಅರುಣ್ ಚಕ್ರವರ್ತಿ, ಕೇಂದ್ರ ಐಜಿಪಿ ನಗುರಂ, ಸಂದೀಪ್ ಕುಮಾರ್, ಅಪರ ಜಿಲ್ಲಾಧಿಕಾರಿ ಎಸ್.ಎಂ.ಮಂಗಳ, ಕೆಜಿಎಫ್ ತಹಶೀಲ್ದಾರ್ ಭರತ್, ಬಂಗಾರಪೇಟೆ ತಹಶೀಲ್ದಾರ್ ಸುಜಾತಾ ಇತರ ಅಧಿಕಾರಿಗಳು ಉಪಸ್ಥಿತರಿದ್ದರು. ಸುಮಾರು 100 ಎಕರೆ ವಿಸ್ತೀರ್ಣದ ಪ್ರದೇಶದಲ್ಲಿ ‘ಇಂಡಿಯನ್ ರಿಸರ್ವ್ ಪೊಲೀಸ್’ ತರಬೇತಿ ಕೇಂದ್ರದ ನಿರ್ಮಾಣಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಮೊದಲ ಹಂತದಲ್ಲಿ 30 ಕೋಟಿ ರೂ. ವೆಚ್ಚದಲ್ಲಿ ತರಬೇತಿ ಕೇಂದ್ರ ಮತ್ತು ವಸತಿ ಸಂಕೀರ್ಣ ನಿರ್ಮಾಣ ಮಾಡಲಾಗುವುದು. ಸುಮಾರು 1,000 ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಇಲ್ಲಿ ನೆಲೆ ಸಿಗಲಿದೆ. ಜನಸಂಖ್ಯೆ ಹೆಚ್ಚಳದಿಂದ ಸ್ಥಳೀಯ ವ್ಯಾಪಾರ-ವಹಿವಾಟುಗಳಿಗೆ ಉತ್ತೇಜನ ದೊರೆಯಲಿದೆ. -ಡಾ.ರೂಪಕಲಾ ಶಶಿಧರ್, ಶಾಸಕಿ
ಕರ್ನಾಟಕ ಒಲಿಂಪಿಕ್ಸ್ ಕ್ರೀಡಾಕೂಟ 2025-26 | ಅತ್ಲೆಟಿಕ್ಸ್ನಲ್ಲಿ 9 ಪದಕಗಳೊಂದಿಗೆ ಬೆಳಗಾವಿ ಶುಭಾರಂಭ
ತುಮಕೂರು : ಜಿಲ್ಲೆಯಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟ 2025-26ರ ಅತ್ಲೆಟಿಕ್ಸ್ನಲ್ಲಿ ಮೊದಲ ದಿನವೇ ಬೆಳಗಾವಿ ಅತ್ಲೆಟ್ಗಳು 9 ಪದಕಗಳನ್ನು ಗೆದ್ದು ಮೇಲುಗೈ ಸಾಧಿಸಿದ್ದಾರೆ. ಏತನ್ಮಧ್ಯೆ, ಉಡುಪಿಯ ಮಾಧುರ್ಯ ಒಂದು ಚಿನ್ನ ಸೇರಿ ಎರಡು ಪದಕ ಗೆದ್ದು ಬೀಗಿದ್ದಾರೆ. ಕೂಟದ ಐದನೇ ದಿನವಾದ ಮಂಗಳವಾರ ಅತ್ಲೆಟಿಕ್ಸ್, ವೇಟ್ಲಿಫ್ಟಿಂಗ್, ಟೇಬಲ್ ಟೆನಿಸ್, ಲಾನ್ ಟೆನಿಸ್ ಮತ್ತು ಈಜು ಸ್ಪರ್ಧೆಗಳಲ್ಲಿ ಪದಕ ಬೇಟೆ ನಡೆದವು. ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅತ್ಲೆಟಿಕ್ಸ್ನಲ್ಲಿ ಬೆಳಗಾವಿ ಜತೆ ಆತಿಥೇಯ ತುಮಕೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅತ್ಲೇಟ್ಗಳು ಒಂದೊಂದು ಸ್ಪರ್ಧೆಯಲ್ಲಿ ಎಲ್ಲಾ ಮೂರು ಪದಕ ಗೆದ್ದ ಸಾಧನೆಯನ್ನೂ ಮಾಡಿದ್ದಾರೆ. ಉಡುಪಿಯ ಮಾಧುರ್ಯ ಡಿಸ್ಕಸ್ ಥ್ರೋನಲ್ಲಿ ಸ್ವರ್ಣ ಮತ್ತು ಶಾಟ್ಪುಟ್ನಲ್ಲಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರು. ಪುರುಷರ 400 ಮೀ. ಓಟದಲ್ಲಿ ಬೆಳಗಾವಿಯ ಓಂ ಸುನಿಲ್ ಚೌಹಾಣ್, ವೀರೇಶ್ ಬಿ. ಕಾಂಬ್ಳೆ ಮತ್ತು ಸ್ವಯಂ ದಿನೇಶ್ ಜುವೇಕರ್ ಸ್ವರ್ಣ, ಬೆಳ್ಳಿ, ಕಂಚಿನ ಪದಕ ಗೆದ್ದರು; ಇದೇ ಸ್ಪರ್ಧೆಯ ಮಹಿಳೆಯರ ವಿಭಾಗದಲ್ಲಿ ದಕ್ಷಿಣ ಕನ್ನಡದ ಶ್ರಾವಣಿ ಭಾಟೆ, ರೇಖಾ ಬಸಪ್ಪ ಪಿರೊಜಿ ಮತ್ತು ಗೀತಾ ಬಿ. ಚೌಕಾಶಿ ಕ್ರಮವಾಗಿ ಮೊದಲ 3 ಸ್ಥಾನ ಗೆದ್ದರು. ಈ ಮಧ್ಯೆ, ಪುರುಷರ 10 ಸಾವಿರ ಮೀ.ನಲ್ಲಿ ತುಮಕೂರಿನ ಟಿ.ಸಿ. ಸಂದೀಪ್, ಎಲ್. ರಘುವೀರ್ ಮತ್ತು ಎಚ್.ಎ. ದರ್ಶನ್ ಅನುಕ್ರಮವಾಗಿ ಪೋಡಿಯಂ ಸ್ಥಾನ ಗಳಿಸಿ ಗಮನ ಸೆಳೆದರು. ಟೇಬಲ್ ಟೆನಿಸ್ ಡಬಲ್ಸ್- ಬೆಂಗಳೂರು, ಮಂಗಳೂರಿಗೆ ಪ್ರಶಸ್ತಿ: ಮಹಾತ್ಮಾ ಗಾಂಧಿ ಒಳಾಂಗಣ ಕ್ರೀಡಾಂಗಣ ದಲ್ಲಿ ನಡೆದ ಪುರುಷರ ಟೇಬಲ್ ಟೆನಿಸ್ ಡಬಲ್ಸ್ ವಿಭಾಗದಲ್ಲಿ ಬೆಂಗಳೂರಿನ ರೋಹಿತ್ ಶಂಕರ್-ರಾಮ್ ಕುಮಾರ್ ಜೋಡಿ 3-0 ಸೆಟ್ಗಳಿಂದ ಮಂಗಳೂರಿನ ಸನ್ಮಾನ್-ವಿನಯ್ ಕುಮಾರ್ ಜೋಡಿಯನ್ನು ಸೋಲಿಸಿ ಬಂಗಾರದ ಪದಕಕ್ಕೆ ಕೊರಳೊಡ್ಡಿತು. ಇದೇ ವೇಳೆ ಮಹಿಳೆಯರ ಡಬಲ್ಸ್ನಲ್ಲಿ ಮಂಗಳೂರಿನ ಪಿ.ಪ್ರೇಕ್ಷ -ನಹಲಾ ಜೋಡಿ 3-2 ಸೆಟ್ನಿಂದ ಬೆಂಗಳೂರು ನಗರದ ಸಹನಾ-ಕರ್ಣ ಜೋಡಿ ವಿರುದ್ಧ ಜಯಗಳಿಸಿ ಸ್ವರ್ಣ ಗೆದ್ದಿತು ಟೆನಿಸ್ನಲ್ಲಿ ಜೇಸನ್ ಡೇವಿಡ್, ಹೃದಯೇಶಿಗೆ ಸ್ವರ್ಣ: ತುಮಕೂರು ಜಿಲ್ಲಾ ಲಾನ್ ಟೆನಿಸ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆದ ಪುರುಷರ ಸಿಂಗಲ್ಸ್ ಫೈನಲ್ನಲ್ಲಿ ಜೇಸನ್ ಡೇವಿಡ್ 2-6, 6-2, 2-1 ಸೆಟ್ಗಳಿಂದ ನಿಶಿತ್ ನವೀನ್ ಅವರನ್ನು ಮಣಿಸಿ, ಸ್ವರ್ಣ ಪದಕ ಗೆದ್ದುಕೊಂಡಿದ್ದಾರೆ. ಆದರೆ 3ನೇ ಹಾಗೂ ನಿರ್ಣಾಯಕ ಸೆಟ್ನಲ್ಲಿ ನಿಶಿತ್ ಗಾಯಗೊಂಡು ನಿವೃತ್ತಿಯಾದ ಹಿನ್ನೆಲೆಯಲ್ಲಿ ಜೇಸನ್ ಡೇವಿಡ್ ವಿಜಯಿ ಎಂದು ಘೋಷಿಸಲಾಯಿತು. ಬೆಂಗಳೂರು ಸಿದ್ದಾಂತ ಶಾಸ್ತ್ರಿ ಬಳ್ಳಾರಿಯ ಧನುಶ್ ಸೋಲಿಸಿ ಕಂಚು ಗೆದ್ದರು. ಮಹಿಳೆಯರ ಸಿಂಗಲ್ಸ್ ಸ್ಪರ್ಧೆಯಲ್ಲಿ ಹೃದಯೇಶಿ ಪೈ 4-6, 6-1, 6-4 ಸೆಟ್ಗಳಿಂದ ಭಾರತಿಯನ್ ಬಿ. ಪೈ ವಿರುದ್ಧ ಗೆದ್ದರೆ, ಬೆಂಗಳೂರಿನ ಸುರಭಿ ಶ್ರೀನಿವಾಸ್ 6-0, 6-0 ಸೆಟ್ಗಳಿಂದ ತುಮಕೂರು ಸ್ವಾತಿ ಕುಮಾರ್ ಮಣಿಸಿ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು. ಪುರುಷರ ಡಬಲ್ಸ್ನಲ್ಲಿ ಬಳ್ಳಾರಿಯ ಅಭಿಷೇಕ್ ರೆಡ್ಡಿ-ಧನುಶ್ ಜೋಡಿಗೆ ಚಿನ್ನ. ತುಮಕೂರಿನ ಅಮೋಘ -ರಕ್ಷಿತ್ ಜೋಡಿಗೆ ಬೆಳ್ಳಿ. ಬೆಂಗಳೂರಿನ ನಿಶಿತ್ ನವೀನ್-ಸಿದ್ಧಾಂತ್ ಶಾಸ್ತ್ರಿ ಜೋಡಿಗೆ ಕಂಚಿನ ಪದಕ ಲಭಿಸಿತು. ಮಹಿಳಾ ಡಬಲ್ಸ್ ನಲ್ಲಿಬೆಂಗಳೂರಿನ ಭಾರತಿಯಾನ-ಹೃದೇಶಿ (ಸ್ವರ್ಣ), ತುಮಕೂರಿನ ಎಂ.ಎನ್.ರಂಜಿತಾ - ಸ್ವಾತಿ ಎಚ್. ಕುಮಾರ್ (ಬೆಳ್ಳಿ), ತುಮಕೂರಿನ ತಾನ್ಯಾ ಮೋರಸ್ - ಮೇಘನಾ ಸುರೇಶ್ (ಕಂಚು) ಅನುಕ್ರಮವಾಗಿ ಮೊದಲ ಮೂರು ಸ್ಥಾನ ಗಳಿಸಿದರು.
ಭೀಮಾ ಕೋರೆಗಾಂವ್ ಶೋಷಣೆ, ಅಸ್ಪೃಶ್ಯತೆ ವಿರುದ್ಧದ ಹೋರಾಟ : ಭೀಮ್ ರಾವ್ ವೈ.ಅಂಬೇಡ್ಕರ್
ಹಾಸನ : ಭೀಮಾ ಕೋರೆಗಾಂವ್ ಯುದ್ಧವಲ್ಲ, ಅದು ಶೋಷಣೆ, ಅಸ್ಪೃಶ್ಯತೆ ಮತ್ತು ಅನ್ಯಾಯದ ವಿರುದ್ಧ ನಡೆದ ಶಾಶ್ವತ ಆತ್ಮಗೌರವದ ಹೋರಾಟ ಎಂದು ಡಾ. ಬಿ.ಆರ್.ಅಂಬೇಡ್ಕರ್ ಅವರ ಮೊಮ್ಮಗ, ಭಾರತೀಯ ಬೌದ್ಧ ಮಹಾ ಸಭಾ (ಮುಂಬೈ)ದ ರಾಷ್ಟ್ರೀಯ ಕಾರ್ಯಾಧ್ಯಕ್ಷ ಭೀಮ್ ರಾವ್ ವೈ.ಅಂಬೇಡ್ಕರ್ ಹೇಳಿದ್ದಾರೆ. ಹಾಸನ ನಗರದಲ್ಲಿ ಪ್ರಥಮ ಬಾರಿಗೆ ಆಯೋಜಿಸಲಾದ 208ನೇ ಭೀಮಾ ಕೋರೆಗಾವ್ ವಿಜಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಭೀಮಾ ಕೋರೆಗಾಂವ್ ವಿಜಯೋತ್ಸವವನ್ನು ಕೇವಲ ಯುದ್ಧದ ವಿಜಯೋತ್ಸವವಾಗಿ ನೋಡಬಾರದು. ಅದು ಶೋಷಣೆ, ಅಸ್ಪೃಶ್ಯತೆ ಮತ್ತು ಅನ್ಯಾಯದ ವಿರುದ್ಧ ನಡೆದ ಆತ್ಮಗೌರವದ ಹೋರಾಟದ ಸಂಕೇತವಾಗಿದೆ. ಗೌರವಕ್ಕಾಗಿ, ಹಕ್ಕುಗಳಿಗಾಗಿ, ಸಂವಿಧಾನದ ಅನುಷ್ಠಾನಕ್ಕಾಗಿ ನಡೆಯುತ್ತಿರುವ ಹೋರಾಟ ಇದಾಗಿದೆ. ಡಾ.ಅಂಬೇಡ್ಕರ್ ನಮಗೆ ಕೊಟ್ಟ ಮಹಾಮಂತ್ರವೇ ‘ಶಿಕ್ಷಣ ಪಡೆಯಿರಿ, ಸಂಘಟಿತರಾಗಿರಿ, ಹೋರಾಡಿರಿ’. 2020ರ ನಂತರ ಕೇಂದ್ರ ಹಾಗೂ ಕೆಲವು ರಾಜ್ಯ ಸರಕಾರಗಳ ನೀತಿಗಳಿಂದಾಗಿ ಸಂವಿಧಾನಾತ್ಮಕ ಹಕ್ಕುಗಳು ದುರ್ಬಲಗೊಳ್ಳುತ್ತಿವೆ ಎಂದರು. ಮೀಸಲಾತಿ ನೀತಿಯ ಸರಿಯಾದ ಅನುಷ್ಠಾನವಾಗುತ್ತಿಲ್ಲ. ಸರಕಾರಿ ಸಂಸ್ಥೆಗಳ ಖಾಸಗೀಕರಣದಿಂದ ಉದ್ಯೋಗಾವಕಾಶಗಳು ಕಡಿಮೆಯಾಗಿವೆ ಎಂದು ಹೇಳಿದರು. ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈಗ ಜನರಿಗೆ ಭೀಮಾ ಕೋರೆಗಾಂವ್ ಇತಿಹಾಸ ತಿಳಿಯತೊಡಗಿದೆ. ಇದು ನಮ್ಮ ಸಮುದಾಯದ ಇತಿಹಾಸ ಮಾತ್ರವಲ್ಲ, ಸಮಾನತೆ, ನ್ಯಾಯ ಮತ್ತುಮಾನವೀಯ ಗೌರವಕ್ಕಾಗಿ ನಡೆದ ಹೋರಾಟದ ಇತಿಹಾಸ. ಈ ಸತ್ಯವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಜವಾಬ್ದಾರಿ ನಮ್ಮದು ಎಂದು ಹೇಳಿದರು. ನಿವೃತ್ತ ಡಿಸಿಪಿ ಎಸ್.ಸಿದ್ದರಾಜು, ಸಂಸದ ಶ್ರೇಯಸ್ ಪಟೇಲ್ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ದಲಿತ ಮುಖಂಡ ಸಂದೇಶ್ ವಹಿಸಿದ್ದರು, ಪ್ರಾಸ್ತಾವಿಕ ಭಾಷಣ ದಲಿತ ಮುಖಂಡ ಅಂಬುಗ ಮಲ್ಲೇಶ್ ನೆರವೇರಿಸಿದರು. ಪತ್ರಕರ್ತ ಹೆತ್ತೂರು ನಾಗರಾಜ್ ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು. ನಗರದ ರೈಲು ನಿಲ್ದಾಣದಿಂದ ಡಿಸಿ ಕಚೇರಿಯವರೆಗೆ ಭೀಮಾ ಕೋರೆಗಾಂವ್ ವಿಜಯ ಸ್ತಂಭದ ಬೃಹತ್ ಮೆರವಣಿಗೆ ನಡೆಯಿತು. ಡಿಸಿ ಕಚೇರಿ ಮುಂಭಾಗದ ಡಬಲ್ ರೋಡ್ (ಪ್ರಜಾಸೌಧಹತ್ತಿರ)ದಲ್ಲಿ ಸಾರ್ವಜನಿಕ ಸಮಾವೇಶ ನಡೆಯಿತು. ದಲಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗ, ಕಾರ್ಮಿಕ ಹಾಗೂ ಮಹಿಳಾ ಸಂಘಟನೆಗಳ ಒಗ್ಗೂಡಿಕೆ ಈ ಕಾರ್ಯಕ್ರಮದ ವಿಶೇಷವಾಗಿತ್ತು. ಕಾರ್ಯಕ್ರಮವನ್ನು ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ, ಭಾರತೀಯ ಭೌದ್ಧ ಮಹಾಸಭಾ (ರಿ.) ಹಾಗೂ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣಾ ಸಮಿತಿ, ಹಾಸನ ಸಂಯುಕ್ತವಾಗಿ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಸಮಿತಿಯ ಉಪಾಧ್ಯಕ್ಷೆ ಡಿ. ಶಿವಮ್ಮ, ಪ್ರಧಾನ ಕಾರ್ಯದರ್ಶಿ ಮಂಜು ತೇಜೂರು, ಹಣಕಾಸು ಸಮಿತಿ ಸದಸ್ಯ ಮಲ್ಲೇಶ್ ಅಂಬುಗ, ಸಮಿತಿ ಸದಸ್ಯರಾದ ಎಚ್.ಜೆ. ಉಮೇಶ್ ಹಾಚಗೋಡನಹಳ್ಳಿ, ಭಾಗ್ಯ ಕಲಿವೀರ್, ತೋಟೇಶ್ ನಿಟ್ಟೂರು, ರಾಮು ನರಸಿನಕುಪ್ಪೆ, ಕೃಷ್ಣದಾಸ್ , ರಾಜಶೇಖರ್ ಹುಲಿಕಲ್, ವೈಚಾರಿಕ ಪತ್ರಿಕೆಯ ಸಂಪಾದಕ ವೆಂಕಟೇಶ್ ಬ್ಯಾಕರವಳ್ಳಿ, ರಾಜು ಗೊರೂರು ಅನೇಕರು ಕಾರ್ಯಕ್ರಮದಲ್ಲಿ ಇದ್ದರು.
ಲಕ್ನೋ : ಪ್ರಜಾಪ್ರಭುತ್ವ ಅಂದರೆ ಸಮಯಕ್ಕೆ ಸರಿಯಾಗಿ ಕೇವಲ ಚುನಾವಣೆಗಳನ್ನು ನಡೆಸುವುದಲ್ಲ. ಚುನಾವಣೆಯ ಮೂಲಕ ಆಯ್ಕೆಯಾಗುವ ಜನಪ್ರತಿನಿಧಿಗಳು ತಮ್ಮ ಪ್ರಾಮಾಣಿಕತೆ, ಬದ್ಧತೆ ಮತ್ತು ಜನಪರ ಕಾಳಜಿಯೊಂದಿಗೆ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸಿ, ಜನಸಾಮಾನ್ಯರ ಆಶಯಗಳನ್ನು ಪ್ರತಿಬಿಂಬಿಸುವ ಕಾನೂನುಗಳನ್ನು ರೂಪಿಸುವ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಅದು ಪ್ರಜಾಪ್ರಭುತ್ವವನ್ನು ಬಲಿಷ್ಠಗೊಳಿಸುವ ಮೂಲ ಆಧಾರವಾಗಿದೆ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ. ಉತ್ತರ ಪ್ರದೇಶದ ವಿಧಾನ ಮಂಡಲದಲ್ಲಿ ಮಂಗಳವಾರ ನಡೆದ ಸ್ಪೀಕರ್ಗಳ ಸಮ್ಮೇಳನದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ವಿಧಾನ ಮಂಡಲವು ಪ್ರಜಾಪ್ರಭುತ್ವದ ಹೃದಯವಾಗಿದೆ. ಶಾಸಕರು ಮತ್ತು ಜನಪ್ರತಿನಿಧಿಗಳು ಅದರ ಪ್ರಮುಖ ಅಂಗಗಳಾಗಿದ್ದಾರೆ. ಜನರ ಆಶಯಗಳನ್ನು ಧ್ವನಿಯಾಗಿ ಪರಿವರ್ತಿಸಿ, ಸಮಾಜಕ್ಕೆ ಅಗತ್ಯವಾದ ಕಾನೂನುಗಳನ್ನು ರೂಪಿಸುವ ಮಹತ್ತರ ಹೊಣೆಗಾರಿಕೆ ಜನಪ್ರತಿನಿಧಿಗಳ ಮೇಲಿದೆ. ಆದ್ದರಿಂದ ಶಾಸಕರ ಹಾಗೂ ಜನಪ್ರತಿನಿಧಿಗಳ ಸಾಮರ್ಥ್ಯವರ್ಧನೆ ಇಂದಿನ ತುರ್ತು ಅಗತ್ಯವಾಗಿದೆ. ಈ ದಿಕ್ಕಿನಲ್ಲಿ ನಡೆಯುತ್ತಿರುವ ಚರ್ಚೆಗಳು ಅತ್ಯಂತ ಸ್ವಾಗತಾರ್ಹ ಎಂದು ಯು.ಟಿ.ಖಾದರ್ ನುಡಿದರು.
ಯಾದಗಿರಿ| ಅನವಾರ ಗ್ರಾಮದಲ್ಲಿ ವಿದ್ಯಾರ್ಥಿಗಳಿಗೆ ಬಸ್ ನಿಲುಗಡೆಗೆ ದಲಿತ ಸಂಘರ್ಷ ಸಮಿತಿ ಆಗ್ರಹ
ಯಾದಗಿರಿ: ಸುರಪುರ–ಯಾದಗಿರಿ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಅನವಾರ ಗ್ರಾಮದಲ್ಲಿ ಸಾರಿಗೆ ಬಸ್ಗಳು ನಿಲುಗಡೆ ಮಾಡದಿರುವುದರಿಂದ ಶಾಲಾ–ಕಾಲೇಜು ವಿದ್ಯಾರ್ಥಿಗಳು ದಿನನಿತ್ಯ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಯೋಜಕ ಶರಣರೆಡ್ಡಿ ಹತ್ತಿಗೂಡೂರು ಹೇಳಿದ್ದಾರೆ. ಅನವಾರ ಗ್ರಾಮದಿಂದ ಹತ್ತಿಗೂಡೂರ್ ಸರಕಾರಿ ಪ್ರೌಢಶಾಲೆ, ಶಹಾಪುರ ಕಾಲೇಜು ಹಾಗೂ ಯಾದಗಿರಿ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ಬಸ್ ನಿಲುಗಡೆ ಇಲ್ಲದಿರುವುದರಿಂದ ಪ್ರಯಾಣದಲ್ಲಿ ಅಸೌಕರ್ಯ ಎದುರಾಗುತ್ತಿದೆ. ಈ ಸಮಸ್ಯೆಯನ್ನು ತಕ್ಷಣ ಸರಿಪಡಿಸುವಂತೆ ಒತ್ತಾಯಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಸಂಯೋಜಕ) ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳೊಂದಿಗೆ ಯಾದಗಿರಿ ಜಿಲ್ಲಾ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಬಸ್ ನಿಲುಗಡೆ ವ್ಯವಸ್ಥೆಯನ್ನು ತಕ್ಷಣ ಜಾರಿಗೆ ತರದಿದ್ದರೆ ಅನವಾರ ಗ್ರಾಮದ ವಿದ್ಯಾರ್ಥಿಗಳು ಹಾಗೂ ಸಂಘಟನೆಯ ವತಿಯಿಂದ ರಸ್ತೆ ತಡೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಜಿಲ್ಲಾಧ್ಯಕ್ಷ ಹತ್ತಿಗೂಡೂರ್ ಶರಣರೆಡ್ಡಿ, ಸಿದ್ದಪ್ಪ ಹೊಸ್ಮನಿ, ವಿದ್ಯಾರ್ಥಿಗಳಾದ ಆಕಾಶ ದೊಡ್ಮನಿ, ರಾಮ ಪೂಜಾರಿ, ಸಾಬು ಗುತ್ತೇದಾರ್, ರಾಜು ಗುತ್ತೇದಾರ್, ಜೈ ಭೀಮ್ ಹೊಸ್ಮನಿ, ಬೀರಲಿಂಗ ಪೂಜಾರಿ, ಅಯ್ಯಾಳಪ್ಪ, ಸೌಂದರ್ಯ, ಯಶೋಧ, ಸಾನಿಯಾ, ಅನುಶಿಯಾ, ಸವಿತಾ, ಅಕ್ಷತಾ, ಶ್ರೀದೇವಿ, ಮಹಾಲಿಂಗಮ್ಮ ಮತ್ತಿತರರು ಉಪಸ್ಥಿತರಿದ್ದರು.
ಸಾಯಿಬಾಬಾರ ಮಾನವೀಯ ಸಂದೇಶಗಳಿಂದ ಸದೃಢ ಸಮಾಜ ನಿರ್ಮಾಣ: ನಟ ಡಾಲಿ ಧನಂಜಯ್
ಯಾದಗಿರಿ: ಈ ಭರತ ಭೂಮಿ ಪವಿತ್ರ ಶರಣರ, ಸೂಫಿ ಸಂತರ ನಾಡು. ಇಲ್ಲಿ ಆಧ್ಯಾತ್ಮಿಕಕ್ಕೆ ಮೊದಲಿನಿಂದಲೂ ಜನರು ಹೆಚ್ಚು ಪ್ರಾಮುಖ್ಯತೆ ಇರುವುದನ್ನು ಕಾಣುತ್ತೇವೆ, ಆಯಾ ಕಾಲಕ್ಕೆ ಆಧ್ಯಾತ್ಮಿಕ ಸಾಧಕರು ತಮ್ಮ ಬದುಕನ್ನೆ ಸಮಾಜದ ಪ್ರಗತಿಗೆ ಅರ್ಪಿಸಿದ್ದಾರೆ, ಅವರ ಸಾಲಿನಲ್ಲಿ ಶಿರಡಿ ಸಾಯಿಬಾಬಾ ಒಬ್ಬರು. ಅವರ ನೀಡಿರುವ ಮಾನವೀಯ ಸಂದೇಶಗಳನ್ನು ಎಲ್ಲರೂ ಅಳವಡಿಸಿಕೊಂಡು ಸದೃಢ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸುವುದು ಅವಶ್ಯಕವಾಗಿದೆ ಎಂದು ಕನ್ನಡದ ಖ್ಯಾತ ಚಲನಚಿತ್ರ ನಟ ಡಾಲಿ ಧನಂಜಯ್ ಹೇಳಿದರು. ಜಿಲ್ಲೆಯ ಶಹಾಪೂರ ತಾಲೂಕಿನ ಇಬ್ರಾಹಿಂಪೂರ ಗ್ರಾಮದಲ್ಲಿರುವ ಸಾಯಿ ಮಂದಿರದ ಆವರಣದಲ್ಲಿ ಹಮ್ಮಿಕೊಂಡಿದ್ದ ಅವರ 4ನೇ ವರ್ಷದ ಜಾತ್ರಾ ಮಹೋತ್ಸವದ ಧಾರ್ಮಿಕ ಸಭೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಸ್ಪರ್ಧಾತ್ಮಕ ಯುಗದಲ್ಲಿ ನಾವೆಲ್ಲರೂ ಮೊದಲು ಶಿಕ್ಷಣಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಬೇಕು, ನಮ್ಮ ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ, ಅವರಲ್ಲಿ ಉನ್ನತ ಗುರಿ ಮೂಡಿಸಿ ಸೂಕ್ತ ಪ್ರೋತ್ಸಾಹ ನೀಡಿದಾಗ ಮಾತ್ರ ಅವರು ಪರಿಶ್ರಮದಿಂದ ಗುರಿ ತಲುಪಿ ಸಮಾಜಕ್ಕೆ ತಮ್ಮದೇಯಾದ ಕೊಡುಗೆ ನೀಡುತ್ತಾರೆ ಎಂದು ಅಭಿಪ್ರಾಯ ಪಟ್ಟರು. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಜನರು ಬಹಳ ಮುಗ್ದರು, ಕನ್ನಡ ಚಲನಚಿತ್ರಗಳನ್ನು ಸದಾ ವೀಕ್ಷಿಸಿ, ಕಲಾವಿದರನ್ನು ಪ್ರೋತ್ಸಾಹಿಸಿದ ಪರಿಣಾಮ ಇನ್ನೂ ಕನ್ನಡ ಭಾಷೆ, ಸಂಸ್ಕೃತಿ ಗಟ್ಟಿಯಾಗಿ ಉಳಿದಿದೆ. ಈ ಭಾಗದಲ್ಲಿ ಕೂಡ ಹಲವಾರು ಪ್ರತಿಭೆಗಳಿವೆ. ನಾವೆಲ್ಲರೂ ಅವರಿಗೆ ಸೂಕ್ತ ವೇದಿಕೆ ಕಲ್ಪಿಸಿ, ಬೆಂಬಲ ನೀಡಬೇಕು ಇದರಿಂದ ಅವರ ಪ್ರತಿಭೆ ಸಾರ್ವಜನಿಕವಾಗಿ ಅನಾವರಣಗೊಂಡು ನಾಡಿಗೆ ಪರಿಚಯಿಸಲು ಸಹಕಾರಿಯಾಗುತ್ತದೆ ಎಂದು ಸಲಹೆ ನೀಡಿದರು. ಗಡಿ ಜಿಲ್ಲೆಯ ಜನರಲ್ಲಿ ಬಸವಾದಿ ಶರಣರ ವೈಚಾರಿಕೆ ಚಿಂತನೆಗಳನ್ನು ತಲುಪಿಸುವ ಮೂಲಕ ಸಾಮಾಜಿಕವಾಗಿ ಪರಿವರ್ತನೆಗೆ ಎಲ್ಲರೂ ಶ್ರಮಿಸುವುದು ಅವಶ್ಯಕ. ಈ ಕ್ಷೇತ್ರ ಬರುವ ದಿನಗಳಲ್ಲಿ ಇನ್ನೂ ಹೆಚ್ಚು ಅಭಿವೃದ್ಧಿ ಕಾಣುವ ಮೂಲಕ ಸಮಾಜ ಮುಖಿ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಎಲ್ಲರ ಗಮನ ಸೆಳೆಯಲಿ ಎಂದು ತಿಳಿಸಿದರು. ಕಾರ್ಯಕ್ರಮವನ್ನು ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಉದ್ಘಾಟಿಸಿ ಮಾತನಾಡಿ, ನಾವು ಇಂದು ಸದಾ ನಮ್ಮ ಚಟುವಟಿಕೆಗಳಿಗೆ ಹೆಚ್ಚು ಸಮಯ ನೀಡುತ್ತಿರುವುದರಿಂದ ಶಾಂತಿ, ನೆಮ್ಮದಿಯಿಂದ ದೂರವಾಗುತ್ತಿದ್ದೇವೆ ಎಂಬ ಅರಿವು ಕೂಡ ನಮಗಿದೆ, ಸ್ವಲ್ಪ ಸಮಯ ಇಂತಹ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ಎಲ್ಲಾ ವರ್ಗದ ಜನರೊಂದಿಗೆ ಬೆರೆತು ನಿಮ್ಮ ಕಾರ್ಯಗಳಲ್ಲಿ ನಾವು ತೊಡಗಿಸಿಕೊಳ್ಳಬೇಕು ಅಂದಾಗ ಮಾತ್ರ ಎಲ್ಲರಿಗೂ ಭಾವೈಕ್ಯತೆಯ ಭಗವಂತ ಸಾಯಿಬಾಬಾರ ಆಶೀರ್ವಾದ ಎಲ್ಲರಿಗೂ ಸಿಗುತ್ತದೆ ಎಂದು ಹೇಳಿದರು. ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ಮಹಿಳೆಯರಲ್ಲಿ ವಿಶೇಷವಾಗಿ ನಾವೇಲ್ಲರೂ ಜಾಗೃತಿ ಮೂಡಿಸುತ್ತಿದ್ದೇವೆ. ಆದರೂ ಅಲ್ಲಲ್ಲಿ ವಿದ್ಯಾರ್ಥಿನಿಯರ ಮೇಲೆ ಶೋಷಣೆ ಇನ್ನಿತರ ಘಟನೆಗಳು ಜರುಗುತ್ತಿವೆ. ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಇಲ್ಲಿ ಅಭಿವೃದ್ಧಿ ಸಾಧಿಸುವುದು ಬಹಳಷ್ಟಿದೆ ಎಂದು ಅಭಿಪ್ರಾಯ ಪಟ್ಟರು. ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿದ ಗುರುಮಿಠಕಲ್ ಖಾಸಾ ಮಠದ ಪೀಠಾಧಿಪತಿ ಶಾಂತವೀರ ಮಹಾಸ್ವಾಮೀಜಿ ಆಶೀರ್ವಚನ ನೀಡಿ ಇಂದು ನಾವು ಬದುಕಿನಲ್ಲಿ ದೈವದತ್ತವಾಗಿ ಒಲಿದಿರುವ ಕಾಯಕದಲ್ಲಿ ನಿಷ್ಠೆಯಿಂದ ಕೆಲಸ ಮಾಡಬೇಕು, ಆದಷ್ಟು ಕಡಿಮೆ ಆಸೆಗಳನ್ನು ಇಟ್ಟುಕೊಳ್ಳಬೇಕು. ಅಂದಾಗ ಮಾತ್ರ ಮನಸ್ಸಿಗೆ ಹೊಸ ಚೈತನ್ಯ ಶಕ್ತಿ ಪ್ರಾಪ್ತಿಯಾಗುತ್ತದೆ ಎಂದರು. ಸಮಾರಂಭದಲ್ಲಿ ಮಾಜಿ ಸಚಿವ ಕೆ.ಶಿವನಗೌಡ ನಾಯಕ, ಕರವೇ ಉತ್ತರ ಕರ್ನಾಟಕ ವಲಯ ಅಧ್ಯಕ್ಷ ಶರಣು ಗದ್ದುಗೆ ಮಾತನಾಡಿ ಈ ಭಾಗದಲ್ಲಿ ದಿಗ್ಗಿ ಪರಿವಾರದ ಯುವಕರು ಕೈಗೊಂಡಿರುವ ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳು ಇನ್ನೂ ವಿಸ್ತಾರವಾಗಿ ಎಲ್ಲರಿಗೂ ಅದರ ಲಾಭ ಸಿಗಲಿ ಎಂದರು. ಈ ವೇಳೆ ಅರಕೇರಾ ಬಿ. ಗುರುಲಿಂಗ ಸ್ವಾಮೀಜಿ, ಶಹಾಪೂರ ಕಾಳ ಹಸ್ತೇಂದ್ರ ಸ್ವಾಮೀಜಿ ನಿಖಿಲ್ರಾಜ್ ಮೌರ್ಯ, ತಿಪ್ಪೇಸ್ವಾಮಿ, ನವೀನ್ ಕುಮಾರ್, ವಿ. ರವಿ, ಟ್ರಸ್ಟಿನ್ ಅಧ್ಯಕ್ಷ ಮಹಾರಾಜ್ ದಿಗ್ಗಿ, ಸಿದ್ದಪ್ಪಾಜಿ, ಕು. ಲಲಿತಾ ಅನಪೂರ, ಬಸ್ಸುಗೌಡ ಬಿಳ್ಹಾರ, ಜಹೀರುದ್ದೀನ್ ಸವೇರಾ, ಬಾಳು ಬೆಳಗುಂದಿ, ಮಲ್ಲಣ್ಣ ಐಕೂರ, ಶ್ರೀಧರ ಸಾಹುಕಾರ, ಗೌಡಪ್ಪಗೌಡ ಆಲ್ದಾಳ, ಬಾಷುಮಿಯಾ ವಡಗೇರಾ, ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕೆಎಸ್ಬಿಸಿ ಚುನಾವಣೆ; ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಮತಪತ್ರ ಕೋರಿ ಹೈಕೋರ್ಟ್ಗೆ ರಿಟ್
ಬೆಂಗಳೂರು : ರಾಜ್ಯ ವಕೀಲರ ಪರಿಷತ್ತಿಗೆ (ಕೆಎಸ್ಬಿಸಿ) ಮಾರ್ಚ್ 11ರಂದು ನಡೆಯಲಿರುವ ಚನಾವಣೆಯಲ್ಲಿ ಮಹಿಳಾ ಮೀಸಲಾತಿ ಕೋಟಾದಡಿ ಸ್ಪರ್ಧಿಸುವ ಮಹಿಳಾ ಅಭ್ಯರ್ಥಿಗಳನ್ನು ಪ್ರತ್ಯೇಕ ವರ್ಗ ಎಂದು ಗುರುತಿಸಿ ಮತದಾನಕ್ಕೆ ಪ್ರತ್ಯೇಕ ಬ್ಯಾಲೆಟ್ ಪೇಪರ್ ವ್ಯವಸ್ಥೆ ಮಾಡಲು ನಿರ್ದೇಶಿಸುವಂತೆ ಕೋರಿ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ಚುನಾವಣಾ ಆಕಾಂಕ್ಷಿಯಾಗಿರುವ ವಕೀಲೆ ಸಂಧ್ಯಾ ಯು. ಪ್ರಭು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿದಾರರ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ಕೆಎಸ್ಬಿಸಿ, ಭಾರತೀಯ ವಕೀಲರ ಪರಿಷತ್ತು (ಬಿಸಿಐ) ಹಾಗೂ ಪರಿಷತ್ ಚುನಾವಣೆಯ ಚುನಾವಣಾಧಿಕಾರಿಗೆ ನೋಟಿಸ್ ಜಾರಿಗೊಳಿಸಿತಲ್ಲದೆ, ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿರುವ ವಿಷಯದ ಬಗ್ಗೆ ನಿಲುವು ತಿಳಿಸುವಂತೆ ಪ್ರತಿವಾದಿಗಳಿಗೆ ಸೂಚಿಸಿ ವಿಚಾರಣೆಯನ್ನು ಫೆಬ್ರವರಿ 6ಕ್ಕೆ ಮುಂದೂಡಿತು. ಇದೇ ವೇಳೆ, ಚುನಾವಣಾ ಪ್ರಕ್ರಿಯೆ ಸಂಬಂಧ 2026ರ ಜನವರಿ 5ರಂದು ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡಬೇಕೆಂಬ ಅರ್ಜಿದಾರರ ಮಧ್ಯಂತರ ಮನವಿ ಪರಿಗಣಿಸಲು ನಿರಾಕರಿಸಿದ ನ್ಯಾಯಪೀಠ, ಈ ಹಂತದಲ್ಲಿ ಚುನಾವಣೆಗೆ ತಡೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿತು. ಇದಕ್ಕೂ ಮುನ್ನ ಖುದ್ದು ವಾದ ಮಂಡಿಸಿದ ವಕೀಲೆ ಸಂಧ್ಯಾ ಯು. ಪ್ರಭು, ರಾಜ್ಯ ವಕೀಲರ ಪರಿಷತ್ತಿಗೆ 18 ಮಂದಿಯ ಆಯ್ಕೆಗೆ ಚುನಾವಣೆ ನಡೆಯಲಿದೆ. ಇದರಲ್ಲಿ ಮಹಿಳೆಯರಿಗೆ 7 ಸ್ಥಾನಗಳನ್ನು ಮೀಸಲಿರಿಸಲಾಗಿದೆ. ಇದರಲ್ಲಿ 2 ಸ್ಥಾನಗಳಿಗೆ ಬಿಸಿಐ ನೇರವಾಗಿ ನೇಮಕ ಮಾಡಲಿದೆ. ಉಳಿದ 5 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಪುರುಷರು-ಮಹಿಳೆಯರು ಸೇರಿ 200ಕ್ಕೂ ಹೆಚ್ಚು ಅಭ್ಯರ್ಥಿಗಳು ಆಗಬಹುದು. ಇಷ್ಟೊಂದು ಅಭ್ಯರ್ಥಿಗಳ ನಡುವೆ ಮಹಿಳಾ ಅಭ್ಯರ್ಥಿಗಳನ್ನು ಹುಡುಕುವುದು ಕಷ್ಟವಾಗುತ್ತದೆ. ಆದ್ದರಿಂದ, ಮಹಿಳಾ ಮೀಸಲಾತಿ ಕೋಟಾದಡಿ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಪ್ರತ್ಯೇಕ ವರ್ಗ ನಿಗದಿಪಡಿಸಿ ಮತದಾನಕ್ಕೆ ಪ್ರತ್ಯೇಕ ಬ್ಯಾಲೆಟ್ ಪೇಪರ್ ವ್ಯವಸ್ಥೆ ಮಾಡಲು ನಿರ್ದೇಶನ ನೀಡಬೇಕು ಎಂದು ಕೋರಿದರು.
ಭಾರತದ ಅಗ್ರಮಾನ್ಯ ಪೊಲೋ ವಾಲ್ಟರ್ ಗಳನ್ನು ಮುಂಬೈ ರೈಲಿಂದ ಕೆಳಗಿಳಿಸಿದರು! ಕಣ್ಣೀರಿಟ್ಟರೂ ಕರುಣೆ ತೋರಲಿಲ್ಲ!
India's Top Pole Vaulters- ಮಹಾರಾಷ್ಟ್ರದ ಪನ್ವೇಲ್ ರೈಲ್ವೆ ನಿಲ್ದಾಣದಲ್ಲಿ ಕ್ರೀಡಾಪಟುಗಳನ್ನು ಕೆಟ್ಟದಾಗಿ ನಡೆಸಿಕೊಂಡ ಘಟನೆ ವರದಿಯಾಗಿದೆ. ದೇಶದ ಅಗ್ರಮಾನ್ಯ ಪೋಲ್ ವಾಲ್ಟರ್ಗಳಾದ ದೇವ್ ಮೀನಾ ಮತ್ತು ಕುಲದೀಪ್ ಯಾದವ್ ಅವರ ಕ್ರೀಡಾ ಸಲಕರಣೆಗಳನ್ನು ರೈಲಿನ ಗಾತ್ರದ ಮಿತಿಯನ್ನು ಮೀರಿವೆ ಎಂದು ಹೇಳಿ ಯಾವುದೇ ಕರುಣೆ ತೋರದೆ ರೈಲಿನಿಂದ ಇಳಿಸಲಾಗಿದೆ. ಇದರಿಂದಾಗಿ ಆರು ಗಂಟೆಗಳ ಕಾಲ ನಿಲ್ದಾಣದಲ್ಲಿ ಕಾಯಬೇಕಾಯಿತು. ಆ ಮೇಲೆ ದಂಡ ಕಟ್ಟಿ ಪ್ರಯಾಣ ಮಾಡಬೇಕಾಯಿತು. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು ಕ್ರೀಡಾವಲಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಅಮೆರಿಕ &ಇರಾನ್ ತಿಕ್ಕಾಟದಲ್ಲಿ ಹೆಚ್ಚಾಯ್ತು ಪರಮಾಣು ದಾಳಿ ಭೀತಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಆತಂಕ
ಮಧ್ಯಪ್ರಾಚ್ಯ ಭಾಗದಲ್ಲಿ ಶಾಂತಿ ಎಂಬುದು ಮರೀಚಿಕೆಯಾಗಿ ಹೋಗಿದೆ, ಏಕೆಂದರೆ ಒಂದಲ್ಲ ಒಂದು ಯುದ್ಧ ಮಧ್ಯಪ್ರಾಚ್ಯ ಹೊತ್ತಿ ಉರಿಯುವಂತೆ ಮಾಡುತ್ತಿದೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಈ ಭಾಗದ ಬಹುತೇಕ ದೇಶಗಳು ಒಬ್ಬರ ಮೇಲೆ ಮತ್ತೊಬ್ಬರು ದಾಳಿ ಮಾಡಿಕೊಂಡಿವೆ. ಇಸ್ರೇಲ್ ಮತ್ತು ಹಲವು ದೇಶಗಳ ನಡುವೆ ಘೋರ ಕದನ ನಡೆದು ಹೋಗಿತ್ತು. ಇರಾನ್ &ಇಸ್ರೇಲ್ ಯುದ್ಧ ಕೊನೆಗೆ
ವಂಚನೆ ಆರೋಪ | ನಟ ಕಿಚ್ಚ ಸುದೀಪ್ ಸಹಿತ ಇಬ್ಬರ ವಿರುದ್ಧ ಪೊಲೀಸರಿಗೆ ದೂರು
ಬೆಂಗಳೂರು : ವಂಚನೆ ಆರೋಪದ ಮೇಲೆ ನಟ ಕಿಚ್ಚಸುದೀಪ್ ಮತ್ತು ಅವರ ವ್ಯವಸ್ಥಾಪಕ ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಚಿಕ್ಕಮಗಳೂರು ಮೂಲದ, ಕಾಫಿ ತೋಟದ ಮಾಲಕ ದೀಪಕ್ ಮಯೂರ್ ಪಟೇಲ್ ಎಂಬುವರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಮಂಗಳವಾರ ದೂರು ನೀಡಿದ್ದಾರೆ. ದೂರಿನಲ್ಲೇನಿದೆ..?: 2018ರಲ್ಲಿ ನಟ ಕಿಚ್ಚ ಸುದೀಪ್ ಅವರ ನಿರ್ಮಾಣ ಸಂಸ್ಥೆ ‘ಕಿಚ್ಚ ಕ್ರಿಯೇಷನ್ಸ್’ನಿಂದ ‘ವಾರಸ್ದಾರ’ ಎಂಬ ಧಾರಾವಾಹಿಯನ್ನು ನಿರ್ಮಿಸಲಾಗಿತ್ತು. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಈ ಧಾರಾವಾಹಿಯ ಚಿತ್ರೀಕರಣವನ್ನು ಚಿಕ್ಕಮಗಳೂರು ಜಿಲ್ಲೆಯ ಬೈಗೂರು ಗ್ರಾಮದಲ್ಲಿ ನಡೆಸಲಾಗಿತ್ತು. ಇದಕ್ಕಾಗಿ ದೀಪಕ್ ಮಯೂರ್ ಅವರ ಮನೆ ಹಾಗೂ ಕಾಫಿ ತೋಟವನ್ನು ಬಾಡಿಗೆಗೆ ಪಡೆಯಲಾಗಿತ್ತು. ಆದರೆ, ಹಣ ನೀಡಿಲ್ಲ ಎಂದು ದೀಪಕ್ ದೂರಿದ್ದಾರೆ. ‘ವಾರಸ್ದಾರ’ ಧಾರಾವಾಹಿ ಚಿತ್ರೀಕರಣಕ್ಕಾಗಿ ತಮ್ಮ ಕಾಫಿ ತೋಟ ಮತ್ತು ಮನೆಯನ್ನು ಎರಡು ವರ್ಷಗಳಿಗೆ ಅಗ್ರಿಮೆಂಟ್ ಮಾಡಿಸಿ ಬಾಡಿಗೆಗೆ ಪಡೆದುಕೊಂಡಿದ್ದರು. ಆದರೆ, ಕೇವಲ ಎರಡೇ ತಿಂಗಳಿಗೆ ಜಾಗ ಖಾಲಿ ಮಾಡಿದ್ದು, ಹಣ ನೀಡಿಲ್ಲ ಎಂದು ದೀಪಕ್ ಆರೋಪಿಸಿದ್ದಾರೆ. ಈ ಎರಡು ತಿಂಗಳ ಅವಧಿಯ ಚಿತ್ರೀಕರಣದ ನೆಪದಲ್ಲಿ ತಮ್ಮ ತೋಟದಲ್ಲಿ ಕಾಫಿ ಗಿಡಗಳು ಹಾಗೂ ಮರಗಳನ್ನು ನಾಶ ಮಾಡಿದ್ದಾರೆ. ಹೀಗಾಗಿ ತಮಗೆ ನಷ್ಟವಾಗಿದ್ದು, 95 ಲಕ್ಷ ಪರಿಹಾರ ನೀಡುವಂತೆ ಕೇಳಿದ್ದೆ. ಈ ವೇಳೆ ಸುದೀಪ್ ಅವರು 60 ಲಕ್ಷ ನೀಡುವುದಾಗಿ ಭರವಸೆ ನೀಡಿ ರಾಜಿ ಮಾಡಿಕೊಂಡಿದ್ದರು ಎಂದು ದೀಪಕ್ ತಿಳಿಸಿದ್ದಾರೆ. ಅದರೆ, ಆದರೆ ಇದುವರೆಗೆ ತಮಗೆ 10 ಲಕ್ಷ ರೂಪಾಯಿಯ ಚೆಕ್ ಮಾತ್ರವೇ ಬಂದಿದೆ. ಬಾಕಿ ಹಣ ನೀಡದೆ ಸತಾಯಿಸುತ್ತಿದ್ದು ನಟ ಸುದೀಪ್ ಹಾಗೂ ಚಕ್ರವರ್ತಿ ಚಂದ್ರಚೂಡ್ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಿ ತಮಗೆ ಪರಿಹಾರ ಕೊಡಿಸಬೇಕು ಎಂದು ದೀಪಕ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ವಿಕಲಚೇತನರಿಗೆ ಸರಕಾರಿ ಸೌಲಭ್ಯಗಳು ಸಕಾಲಕ್ಕೆ ಸಿಗುವಂತಾಗಬೇಕು: ಅಧಿಕಾರಿಗಳಿಗೆ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಸೂಚನೆ
ಯಾದಗಿರಿ: ವಿಕಲಚೇತನರಿಗೆ ಸರಕಾರ ನೀಡುವ ಸೌಲಭ್ಯಗಳನ್ನು ಸಕಾಲಕ್ಕೆ ತಲುಪಿಸುವ ಕೆಲಸ ಸಂಬಂಧಪಟ್ಟ ಅಧಿಕಾರಿಗಳು ಮಾಡಬೇಕೆಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಹೇಳಿದರು. ನಗರದ ಕಚೇರಿಯಲ್ಲಿ ಸೋಮವಾರ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲಿಕರಣ ಇಲಾಖೆಯಡಿ 2024-25 ಸಾಲಿನ ಯಾದಗಿರಿ ಮತಕ್ಷೇತ್ರದ ಫಲಾನುಭವಿಗಳಿಗೆ ತ್ರಿಚಕ್ರ ವಾಹನವನ್ನು ವಿತರಣೆ ಮಾಡಿ ಮಾತನಾಡಿದ ಚೆನ್ನಾರೆಡ್ಡಿ ಪಾಟೀಲ್, ವಿಕಲಚೇತನರಿಗೆ ಅನುಕಂಪದ ಬದಲಿಗೆ ಅವಕಾಶ ನೀಡಬೇಕು. ಅಂದಾಗಲೇ ಅವರಲ್ಲಿನ ಪ್ರತಿಭೆ ಹೊರಬರಲು ಸಾಧ್ಯವೆಂದರು. ವಿವಿಧ ಇಲಾಖೆಗಳಲ್ಲಿ ಇವರಿಗಾಗಿಯೇ ಪ್ರತ್ಯೇಕ ಬಜೆಟ್ ಇರುತ್ತದೆ. ಅನೇಕ ಸಲಕರಣೆಗಳು ನೀಡಲಾಗುತ್ತದೆ. ಅವುಗಳು ಅವಶ್ಯಕತೆ ಮತ್ತು ಅರ್ಹತೆ ಇದ್ದವರಿಗೆ ನೀಡಬೇಕೆಂದರು. ವಿಕಲಚೇತನ ಮಕ್ಕಳು ಸರಿಯಾಗಿ ಅಭ್ಯಾಸ ಮಾಡಿ ಉನ್ನತ ಸ್ಥಾನ ಪಡೆಯಬೇಕು. ನೌಕರಿಯಲ್ಲಿ ಕೂಡಾ ಮಿಸಲಾತಿ ಇದೆ. ಅದರ ಲಾಭ ಪಡೆಯಬೇಕು ಎಂದು ಹೇಳಿದರು. ಜಿಲ್ಲಾ ಅಂಗವಿಕರ ಕಲ್ಯಾಣಾಧಿಕಾರಿ ಶರಣಪ್ಪ ಪಾಟೀಲ್ ಮಾತನಾಡಿ, ತ್ರಿಚಕ್ರ ವಾಹನಗಳು ಸೇರಿದಂತೆಯೇ ಎಲ್ಲ ಸೌಲಭ್ಯಗಳು ಜಿಲ್ಲೆಯ ವಿಕಲಚೇತನರಿಗೆ ತಲುಪಿಸಲಾಗುತ್ತಿದೆ ಎಂದರು.
ಪಾನೀಯ ತಯಾರಿಕೆ ಮತ್ತು ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ವಿಜಯಪುರ ಜಿಲ್ಲೆ ಹೆಚ್ಚು ಸೂಕ್ತ : ಎಂ.ಬಿ.ಪಾಟೀಲ್
‘ಕೋಕ-ಕೋಲಾದ 25,760 ಕೋಟಿ ರೂ.ಹೂಡಿಕೆಯ ಬಹುಪಾಲು ರಾಜ್ಯಕ್ಕೆ ಸೆಳೆಯಲು ಪ್ರಯತ್ನ
ಫೆ.9ರಂದು ಆಲಮಟ್ಟಿಗೆ ರೈತರ ನಡೆ: ಕೃಷ್ಣಾ ಮೇಲ್ದಂಡೆ ಹಂತ-3 ತಕ್ಷಣ ಜಾರಿಗೆ ಆಗ್ರಹ
ಯಾದಗಿರಿ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ–3ನ್ನು ತಕ್ಷಣ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ ಫೆಬ್ರವರಿ 9ರಂದು ಆಲಮಟ್ಟಿ ಜಲಾಶಯದ ಬಳಿ ಬೃಹತ್ ರೈತ ಹೋರಾಟ ನಡೆಸಲು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ರಾಜ್ಯ ಸಮಿತಿ ನಿರ್ಣಯ ಕೈಗೊಂಡಿದೆ ಎಂದು ಸಂಘದ ರಾಜ್ಯ ಉಪಾಧ್ಯಕ್ಷ ಲಕ್ಷ್ಮೀಕಾಂತ ಎ. ಪಾಟೀಲ್ ಮದ್ದರಕಿ ತಿಳಿಸಿದರು. ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲಕ್ಷ್ಮೀಕಾಂತ ಎ. ಪಾಟೀಲ್, ಉತ್ತರ ಕರ್ನಾಟಕದ ರೈತರ ಹಿತದೃಷ್ಟಿಯಿಂದ ಈ ಹೋರಾಟವನ್ನು ಆಯೋಜಿಸಲಾಗಿದ್ದು, ವಿವಿಧ ಜಿಲ್ಲೆಗಳ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಯೋಜನೆಯ ಮೂರನೇ ಹಂತದಲ್ಲಿ ಆಲಮಟ್ಟಿ ಜಲಾಶಯದ ಎತ್ತರವನ್ನು 14 ಅಡಿ ಹೆಚ್ಚಿಸಲು ಅವಕಾಶವಿದ್ದರೂ ಇದುವರೆಗೆ ಜಾರಿಯಾಗಿಲ್ಲ. ಇದರಿಂದ 150 ಟಿಎಂಸಿ ನೀರು ಸಂಗ್ರಹಿಸಿ ಬಳಸುವ ಅವಕಾಶ ಕೈ ತಪ್ಪಿದ್ದು, ರೈತರಿಗೆ ಅಪಾರ ನಷ್ಟ ಉಂಟಾಗಿದೆ ಎಂದು ಆರೋಪಿಸಿದರು. ಮೂರನೇ ಹಂತದಲ್ಲಿ ಒಟ್ಟು 9 ಉಪಯೋಜನೆಗಳಿದ್ದು, ವಿಜಯಪುರ, ಬಾಗಲಕೋಟೆ, ರಾಯಚೂರು, ಕಲಬುರ್ಗಿ, ಯಾದಗಿರಿ, ಕೊಪ್ಪಳ ಮತ್ತು ಗದಗ ಜಿಲ್ಲೆಗಳ ಸುಮಾರು 5.49 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ಹೆಚ್ಚುವರಿ ನೀರಾವರಿ ಸೌಲಭ್ಯ ಒದಗಿಸುವ ಗುರಿ ಹೊಂದಿದೆ. ಆದರೆ ಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳಕ್ಕೆ ಸಂಬಂಧಿಸಿದ ಆಂಧ್ರ ಪ್ರದೇಶದ ತಗಾದೆ ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇರುವುದರಿಂದ ಯೋಜನೆ ಇತ್ಯರ್ಥವಾಗದೆ ಉತ್ತರ ಕರ್ನಾಟಕದ ಶೇ.11ರಷ್ಟು ರೈತರಿಗೆ ಅನ್ಯಾಯವಾಗುತ್ತಿದೆ ಎಂದರು. ಯಾದಗಿರಿ ಜಿಲ್ಲೆಯಲ್ಲಿ ಯೋಜನೆ ಜಾರಿಯಾದರೆ ವಡಗೇರಿ ತಾಲ್ಲೂಕಿನ ವಡಗೇರಿ, ತುಮಕೂರು, ಅಭಿವ್ಯಾಳ, ರೊಟ್ಟಡಿಗಿ, ಬೂದಿಯಾಳ, ಕದರಾಪುರ ಸೇರಿದಂತೆ ಹಲವು ಗ್ರಾಮಗಳಿಗೆ ಭೀಮಾ ಪ್ಲಾಂಟ್ ಯೋಜನೆಯಿಂದ ನೀರು ದೊರೆಯಲಿದೆ. ಸುರಪುರ ಹಾಗೂ ಶಹಾಪುರ ತಾಲ್ಲೂಕಿನ ಅನೇಕ ಗ್ರಾಮಗಳಿಗೆ ಮಲ್ಲಾಬಾದಿ ಏತನೀರಾವರಿ ಲಿಫ್ಟ್–1, 2 ಹಾಗೂ 3 ಹಂತಗಳ ಮೂಲಕ ನೀರು ಒದಗಿಸುವ ಉದ್ದೇಶವಿದೆ ಎಂದು ವಿವರಿಸಿದರು. ಸರ್ಕಾರದ ಇಚ್ಛಾಶಕ್ತಿ ಕೊರತೆಯಿಂದಾಗಿ ಕೊನೆ ಭಾಗದ ರೈತರಿಗೆ ಪ್ರತಿವರ್ಷ ನೀರು ಸಿಗದೆ ಭೂಮಿ ಬರಡಾಗುತ್ತಿದೆ. ಎರಡನೇ ಬೆಳೆಗೆ ನೀರು ಒದಗಿಸುವಂತೆ ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸರ್ಕಾರ ತಕ್ಷಣ ಕಾರ್ಯಪ್ರವೃತ್ತರಾಗಿ ಸುಪ್ರೀಂ ಕೋರ್ಟ್ನಲ್ಲಿರುವ ಪ್ರಕರಣ ಇತ್ಯರ್ಥಗೊಳಿಸಿ ಜಲಾಶಯ ಎತ್ತರ ಹೆಚ್ಚಳಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು. ಈ ಹೋರಾಟದಲ್ಲಿ ನಾಡಿನ ವಿವಿಧ ಮಠಾಧೀಶರು, ಸಂಘಟನೆಗಳ ಮುಖಂಡರು, ಚಿಂತಕರು, ಸಾಹಿತಿಗಳು, ಪತ್ರಕರ್ತರು, ನ್ಯಾಯವಾದಿಗಳು ಹಾಗೂ ಕೃಷಿ ಸಂಬಂಧಿ ಉದ್ಯಮದಾರರು ಸೇರಿದಂತೆ ಅಪಾರ ಸಂಖ್ಯೆಯ ರೈತರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಯಾದಗಿರಿ ಜಿಲ್ಲಾ ಅಧ್ಯಕ್ಷ ಮಹಾವೀರ ಲಿಂಗೇರಿ, ಕಲ್ಯಾಣ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಭೀಮರೆಡ್ಡಿ ಯರಗೋಳ, ಮಹಿಪಾಲರೆಡ್ಡಿ, ಸುಭಾಷ್ ನಡುವಿನಕೇರಿ, ಶಿವು ಯರಗೋಳ, ಮೊಹಮ್ಮದ್ ಗೌಸ್, ಶ್ರೀಕಾಂತ್ ಕುಂಬಾರ, ತಾಯಪ್ಪ ನಗಲಾಪೂರ, ಬಾಷ್ ಕುರುಕುಂದಿ, ಭವಾನಿಶಂಕರ, ಸೈದು ವಿಭೂತಿ, ಸಾಬರೆಡ್ಡಿ, ಶರಣು ಖಾನಾಪೂರ, ಅರುಣ ಸಾಹುಕಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Delhi AQI: ರಾಷ್ಟ್ರ ರಾಜಧಾನಿಗೆ ಹೊಗೆ ಕಂಟಕ, ಮಳೆ ಬರದೇ ಇದ್ದರೆ ಪರಿಸ್ಥಿತಿ ಮತ್ತಷ್ಟು ಭೀಕರ
ದೆಹಲಿ ಪರಿಸ್ಥಿತಿ ಮತ್ತಷ್ಟು ಭೀಕರವಾಗಿದೆ, ಚಳಿಗಾಲ ಬಂತು ಅಂದರೆ ಸಾಕು ದೆಹಲಿಯ ಜನ ಚಿಂತೆ ಮಾಡುವಂತೆ ಆಗುತ್ತದೆ. ಉಸಿರಾಡಲು ಕೂಡ ಪರದಾಡುವ ಪರಿಸ್ಥಿತಿ ದೆಹಲಿ ನಿವಾಸಿಗಳಿಗೆ ಪ್ರತಿವರ್ಷ ಎದುರಾಗುತ್ತದೆ. ಈ ವರ್ಷ ಕೂಡ ಅದೇ ರೀತಿಯಾಗಿ ದೆಹಲಿಯ ವಾತಾವರಣ ಹಾಳಾಗಿ ಹೋಗಿದ್ದು, ಜನರು ಒದ್ದಾಡುತ್ತಿದ್ದಾರೆ. ಇಂದು ಬೆಳಗ್ಗೆಯಿಂದಲೇ ದೆಹಲಿ ಸುತ್ತಮುತ್ತ ಭಾರಿ ದಟ್ಟ ಹೊಗೆ ಪದರ ಆವರಿಸಿತ್ತು,
ರಾಯಚೂರು| ಅಕ್ರಮ ಮದ್ಯ ಮಾರಾಟದ ವಿರುದ್ಧ ಕೆಆರ್ಎಸ್ ಪಕ್ಷದಿಂದ ಜನ ಜಾಗೃತಿ ಜಾಥಾ
ಲಿಂಗಸುಗೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಗ್ಗಿಲ್ಲದೆ ಹಳ್ಳಿ ಹಳ್ಳಿಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟದ ವಿರುದ್ಧ ಜನರಿಗೆ ಜಾಗೃತಿ ಮೂಡಿಸಿ ಮದ್ಯ ಮುಕ್ತ ಕಲ್ಯಾಣ ಕರ್ನಾಟಕದ ನಿರ್ಮಾಣಕ್ಕೆ ಕೆಆರ್ ಎಸ್ ಪಕ್ಷದ ವತಿಯಿಂದ ಲಿಂಗಸೂರು ತಾಲೂಕಿನ ಗುರುಗುಂಟ ಗ್ರಾಮದಲ್ಲಿ ಅರಿವಿನ ಕ್ರಾಂತಿ (ಕುಡಿತ ಬಿಡಿಸಿ ಸಂಸಾರ ಉಳಿಸಿ) ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ಗುರುಗುಂಟದ ಬಸ್ ನಿಲ್ದಾಣದಿಂದ ಪಕ್ಷದ ನೂರಾರು ಸೈನಿಕರ ನೇತೃತ್ವದಲ್ಲಿ ಆರಂಭವಾದ ಜಾಥಾವು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸರಾಯಿ ಬೇಡ, ಶಿಕ್ಷಣ ಬೇಕು. ನಮಗೆ ಬೀರು ಬೇಡ, ನೀರು ಬೇಕು ಎಂದು ಘೋಷಣೆ ಕೂಗುತ್ತಾ, ಅಕ್ರಮವಾಗಿ ಮದ್ಯ ಮಾರುವ ಅಂಗಡಿಗಳಿಗೆ ಭೇಟಿ ಮಾಡಿ ಅಕ್ರಮ ಮದ್ಯ ಮಾರುವುದನ್ನು ನಿಲ್ಲಿಸುವಂತೆ ಅಂಗಡಿ ಮಾಲೀಕರಿಗೆ ಮನವಿ ಮಾಡಲಾಯಿತು. ಸಭಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕೆ ಆರ್ ಎಸ್ ಪಕ್ಷದ ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ, ರಾಜ್ಯದಲ್ಲಿ ನಮ್ಮನ್ನು ಆಳುವ ಯಾವುದೇ ಸರ್ಕಾರಗಳು ಜಾರಿ ಮಾಡುತ್ತಿರುವ ಯಾವುದೇ ಜನ ಕಲ್ಯಾಣದ ಯೋಜನೆಗಳು ವಿಶೇಷವಾಗಿ ಬಡತನ ನಿರ್ವಣೆಯಂತಹ ವಿಶೇಷ ಯೋಜನೆಗಳು ಗಣನೀಯವಾಗಿ ಫಲ ನೀಡದೇ ಇರುವ ಕಾರಣ ಕಲ್ಯಾಣ ಕರ್ನಾಟಕದ ಹಳ್ಳಿ ಹಳ್ಳಿಗಳಲ್ಲಿ ಮದ್ಯ ಮಾರಾಟ ನಡೆಯುತ್ತಿದ್ದು ಇದರಿಂದಾಗಿ ಮಹಿಳೆಯರು, ಯುವಕರು, ಬಡವರು, ಹಿಂದುಳಿದವರು, ಸಾಮಾನ್ಯ ಜನರು ಬಲಿಯಾಗುತ್ತಿದ್ದಾರೆ. ಹಾಗಾಗಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಕಲ್ಯಾಣ ಕರ್ನಾಟಕದ ಭಾಗದ ಹಲವು ಜಿಲ್ಲೆಗಳಲ್ಲಿ ಈ ಜಾಥಾವು ಆಯೋಜಿಸಲಾಗಿದೆ ಎಂದು ಹೇಳಿದರು. ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ಶ್ರೀಮತಿ ಆಶಾ ವೀರೇಶ್ ಮಾತನಾಡಿ, ಅಧಿಕಾರಿಗಳ ಕರ್ತವ್ಯ ನಿರ್ಲಕ್ಷ್ಯದಿಂದಾಗಿ ಹಾಗೂ ಜನಪ್ರತಿನಿಧಿಗಳ ಸರಕಾರದ ಕಾನೂನು ನಿಯಮಗಳ ಉಲ್ಲಂಘನೆಯಿಂದಾಗಿ ಹಳ್ಳಿ ಹಳ್ಳಿಗಳಲ್ಲಿ, ಅಂಗಡಿ ಮುಂಗಟ್ಟುಗಳಲ್ಲಿ ಅಕ್ರಮವಾಗಿ ಸರಾಯಿ ಸಿಗುವಂತಾಗಿದ್ದು ಇದರಿಂದ ಸಾರ್ವಜನಿಕರು ಮದ್ಯ ವ್ಯಸನಿಗಳಾಗುತ್ತಿದ್ದಾರೆ. ಇದರಿಂದ ಸಾಮಾಜಿಕ, ಆರ್ಥಿಕ, ಕೌಟಂಬಿಕ ಸಮಸ್ಯೆಗಳಿಂದ ಖಿನ್ನತೆಗೆ ಒಳಗಾಗಿ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿರುವ ಪ್ರಸಂಗಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ಮದ್ಯಪಾನ ನಿಷೇಧ ಆಂದೋಲನದ ಮುಖ್ಯಸ್ಥೆ ಶ್ರೀಮತಿ ಮೋಕ್ಷಮ್ಮ, ರಾಜ್ಯ ಕಾರ್ಯದರ್ಶಿಗಳಾದ ರಮೇಶ್ ಗೌಡ, ಮಹಿಳಾ ಘಟಕದ ಉಪಾಧ್ಯಕ್ಷೆ ಶಕುಂತಲಾ, ಎಸ್ಸಿಎಸ್ಟಿ ಘಟಕದ ರಾಜ್ಯ ಉಪಾಧ್ಯಕ್ಷೆ ಮಹಾದೇವಿ, ಎಸ್ಸಿಎಸ್ಟಿ ಘಟಕದ ರಾಜ್ಯ ಕಾರ್ಯದರ್ಶಿ ಬಸವ ಪ್ರಭು, ರಾಜ್ಯ ರೈತ ಘಟಕದ ಕಾರ್ಯದರ್ಶಿಗಳಾದ ಶಿವರಾಜ ಕಪಗಲ್, ನಿರುಪಾದಿ ಕೆ ಗೋಮರ್ಸಿ, ಯುವ ಘಟಕದ ಕಾರ್ಯದರ್ಶಿ ದ್ಯಾವಣ್ಣ ಪುಲದಿನ್ನಿ, ರಾಯಚೂರು ಜಿಲ್ಲಾಧ್ಯಕ್ಷರಾದ ರಾಘವೇಂದ್ರ ಕಂಡೂರು, ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್, ಕಾರ್ಯದರ್ಶಿಗಳಾದ ವಿಶ್ವನಾಥ್ ನಾಯ್ಡು, ಅಲ್ಲಾಸಾಬ್, ಶಂಕರ ಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮರಳು ಗಣಿಗಾರಿಕೆ| ಅಮಾಯಕರ ಮೇಲೆ ಪ್ರಕರಣ ದಾಖಲು: ಚಂದಪ್ಪ ಅಕ್ಕರಕಿ ಆರೋಪ
ದೇವದುರ್ಗ: ದೇವದುರ್ಗದಲ್ಲಿ ಟ್ರ್ಯಾಕ್ಟರ್ ಮೂಲಕ ಮರಳು ತೆಗೆದುಕೊಂಡು ಹೋಗುವ ಅಮಾಯಕರ ಮೇಲೆ ಪೊಲೀಸರು ಪ್ರಕರಣ ದಾಖಲು ಮಾಡಿದ್ದು, ಕೂಲಿಕಾರರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂದು ಪುರಸಭೆ ಮಾಜಿ ಅಧ್ಯಕ್ಷ ಚಂದಪ್ಪ ಅಕ್ಕರಕಿ ಆಗ್ರಹಿಸಿದ್ದಾರೆ. ಪಟ್ಟಣದಲ್ಲಿ ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿದ ಚಂದಪ್ಪ ಅಕ್ಕರಕಿ, ತಾಲೂಕಿನಾದ್ಯಂತ ಮಟ್ಕಾ ಹಾವಳಿ ತೀವ್ರಗೊಂಡಿದ್ದು, ಬಡಜನತೆ ಬೀದಿ ಪಾಲಾಗುತ್ತಿದ್ದಾರೆ. ಗಾಂಜಾ ಮಾರಾಟ ಜಾಲ ಸಕ್ರಿಯವಾಗಿದೆ. ಅಹಿತಕರ ಚಟುವಟಿಕೆಗಳಿಗೆ ನಿಯಂತ್ರಣವೇ ಆಗುತ್ತಿಲ್ಲ. ಮನೆ ನಿರ್ಮಿಸಿಕೊಳ್ಳುವವರ ಒತ್ತಾಯದ ಬೇಡಿಕೆ ಆಧರಿಸಿ ಕೆಲ ಟ್ರ್ಯಾಕ್ಟರ್ ಮಾಲಕರು ಮರಳು ಪಡೆಯುವುದು ಸಾಮಾನ್ಯ. ಇಲ್ಲಿ ಯಾವುದೇ ಜೆಸಿಬಿ, ಇಟಾಚಿ ಯಂತ್ರಗಳನ್ನು ಬಳಸದೇ ಕೃಷಿ ಕೂಲಿಕಾರರಿಗೆ ಕೆಲಸ ನೀಡಿ ಕೂಲಿ ನೀಡುವ ಪರಿಪಾಠವಿದೆ. ಪ್ರಸಕ್ತ ಸಾಲಿನಲ್ಲಿ ಹೆಚ್ಚುವರಿ ಮಳೆ ಬಂದಿರುವ ಪರಿಣಾಮ ಕೃಷಿಕರು ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದರು. ಮರಳು ಸಾಗಾಣಿಕೆಯೇ ಅಕ್ರಮ ಎನ್ನುವುದಾದರೆ ಮನೆ ನಿರ್ಮಿಸಿಕೊಳ್ಳುವವರಿಗೆ ಅವಶ್ಯಕವಾದ ಮರಳು ನೀಡುವುದು ಹೇಗೆ? ಸರಕಾರಿ ಕಟ್ಟಡ ಕಾಮಗಾರಿಗಳಿಗೆ ಮರಳು ಬೇಕಿಲ್ಲವೇ? ಕೂಡಲೇ ತಾಲೂಕು ಮತ್ತು ಜಿಲ್ಲಾಡಳಿತ ಸಾಮಾನ್ಯರಿಗೆ ಬೇಕಾಗಿರುವ ಮರಳು ದೊರಕುವ ವ್ಯವಸ್ಥೆ ಕಲ್ಪಿಸಬೇಕು. ಜೊತೆಗೆ ಶಾಸಕರ ಮನೆಗೆ ಹೋಗಿರುವ ಅಮಾಯಕರ ಮೇಲೆ ಹಾಕಲಾದ ಪ್ರಕರಣವನ್ನು ಕೈಬಿಡಬೇಕೆಂದು ಚಂದಪ್ಪ ಅಕ್ಕರಕಿ ಆಗ್ರಹಿಸಿದ್ದಾರೆ.
ಮೂಡುಬಿದಿರೆ : ನಿವೃತ್ತ ಮುಖ್ಯ ಶಿಕ್ಷಕಿ, ಉದ್ಯಮಿ ಗೋಪಾಲ ಶೆಟ್ಟಿ ಅವರ ಪತ್ನಿ ಎಲ್. ವಿಲಾಸಿನಿ (80) ನಿಧನ ಹೊಂದಿದರು. ಪುತ್ರ ಉದ್ಯಮಿ ದೇವಿಪ್ರಸಾದ್ ಶೆಟ್ಟಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮಿಜಾರು, ಪ್ರಾಂತ್ಯ, ಮಾಸ್ತಿಕಟ್ಟೆ ಇಲ್ಲಿನ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕಿಯಾಗಿ, ಜ್ಯೋತಿನಗರ, ಹಂಡೇಲು ಶಾಲೆಗಳಲ್ಲಿ ಮುಖ್ಯ ಶಿಕ್ಷಕಿಯಾಗಿ ಒಟ್ಟು 35 ವರ್ಷ ಶಿಕ್ಷಣ ರಂಗದಲ್ಲಿ ಸೇವೆ ಸಲ್ಲಿಸಿದ್ದರು. ಆದರ್ಶ ಶಿಕ್ಷಕ ಪ್ರಶಸ್ತಿ, ರೋಟರ್ಯಾಕ್ಟ್ ಮತ್ತಿತರ ಸಂಘಟನೆಗಳಿಂದ ಸಮ್ಮಾನ ಸ್ವೀಕಸಿದ್ದರು.
ಶಾಸಕಿ ಕರೆಮ್ಮಾ ಜಿ. ನಾಯಕ್ಗೆ ಜೀವ ಬೆದರಿಕೆ ಆರೋಪ: 60 ಜನರ ವಿರುದ್ಧ ಪ್ರಕರಣ ದಾಖಲು
ರಾಯಚೂರು: ದೇವದುರ್ಗ ಶಾಸಕಿ ಕರೆಮ್ಮಾ ಜಿ. ನಾಯಕ್ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇರೆಗೆ ಶ್ರೀನಿವಾಸ ನಾಯಕ್ ಸೇರಿ 60 ಜನರ ಮೇಲೆ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಶ್ರೀದೇವಿ ನಾಯಕ್ ಸಹೋದರ ಶ್ರೀನಿವಾಸ ನಾಯಕ ನೇತೃತ್ವದ ತಂಡ ಮನೆಗೆ ಭೇಟಿ ನೀಡಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಶಾಸಕಿ ಕರೆಮ್ಮಾ ಜಿ. ನಾಯಕ್ ಆರೋಪಿಸಿದ್ದರು. ಜೆಡಿಎಸ್ ಮುಖಂಡ ವಕೀಲ ಹನುಮಂತರಾಯ್ ಅವರು ನೀಡಿದ ದೂರಿನ ಮೇರೆಗೆ ಶ್ರೀನಿವಾಸ್ ನಾಯಕ್, ರವಿ ಪ್ರಕಾಶ್ ಅಕ್ಕರಕಿ, ಸುರೇಶ್ ನಾಯಕ್ ಚಿಂತಲಕುಂಟ, ವೀರೇಶ ಗೌಡ, ಯಾಟಗಲ್, ಹನುಮಂತ್ರಾಯ ಕರಿಗುಡ್ಡ, ಅಮರೇಶ ಅಂಜಳ ಸೇರಿ ಇತರೆ 60 ಜನರ ವಿರುದ್ಧ ಕೊಲೆ ಬೆದರಿಕೆ ಪ್ರಕರಣ ದಾಖಲಾಗಿದೆ.
ಪವಿತ್ರಾ ಗೌಡ ಸೇರಿ ಮೂವರು ಆರೋಪಿಗಳಿಗೆ ಮನೆ ಊಟ; ಸೆಷನ್ಸ್ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್ಗೆ ವಾರಕೊಮ್ಮೆ ಮನೆಯಿಂದ ಊಟ ತರಿಸಿಕೊಳ್ಳಲು ಅನುಮತಿಸುವಂತೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳಿಗೆ ಸೂಚಿಸಿ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದೆ. ನಗರದ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜನವರಿ 12ರಂದು ಹೊರಡಿಸಿದ್ದ ಆದೇಶ ರದ್ದು ಕೋರಿ ಪ್ರಕರಣದ ತನಿಖಾಧಿಕಾರಿಗಳಾದ ನಗರದ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿತು. ಜತೆಗೆ, ಪ್ರತಿವಾದಿಗಳಾದ ಪವಿತ್ರಾಗೌಡ, ನಾಗರಾಜ್ ಮತ್ತು ಲಕ್ಷ್ಮಣ್ಗೆ ನೋಟಿಸ್ ಜಾರಿಗೊಳಿಸಿ ಅರ್ಜಿ ವಿಚಾರಣೆ ಮುಂದೂಡಿತು. ಆದೇಶದಲ್ಲೇನಿದೆ? ವಿಶೇಷ ಸರ್ಕಾರಿ ಅಭಿಯೋಜಕರು, ಪ್ರಕರಣದ ಆರೋಪಿಗಳಿಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ಕಲ್ಪಿಸಬಾರದು ಎಂದು ಸುಪ್ರಿಂಕೋರ್ಟ್ ಆದೇಶಿಸಿದೆ. ಆದೇಶ ಉಲ್ಲಂಘನೆಯಾದರೆ ಅಧಿಕಾರಿಗಳು ಕ್ರಮ ಎದುರಿಸಬೇಕಾಗುತ್ತದೆ. ಇನ್ನೂ ವಿಶೇಷ ಸಂದರ್ಭದಲ್ಲಿ ಮಾತ್ರ ಮನೆ ಊಟಕ್ಕೆ ಅವಕಾಶವಿದೆ. ಕಾನೂನು ಮುಂದೆ ಎಲ್ಲರೂ ಒಂದೇ. ಒಬ್ಬೊಬ್ಬರಿಗೆ ಒಂದು ರೀತಿಯ ಸೌಲಭ್ಯ ಕಲ್ಪಿಸುವುದು ಕಾನೂನುಬಾಹಿರವಾಗುತ್ತದೆ. ಜೈಲು ಕೈಪಿಡಿಯ ನಿಯಮಗಳನ್ನು ಉಪೇಕ್ಷಿಸಿ ಮೂವರು ಆರೋಪಿಗಳಿಗೆ ಮನೆ ಊಟ ಒದಗಿಸಲು ಸೆಷನ್ಸ್ ನ್ಯಾಯಾಲಯ ಆದೇಶಿಸಿರುವುದು ಸರಿಯಲ್ಲ ಎಂದು ವಾದ ಮಂಡಿಸಿದ್ದಾರೆ. ಈ ವಾದ ಪರಿಗಣಿಸಿ ಸೆಷನ್ಸ್ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಲಾಗುತ್ತಿದೆ ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ. ಎಸ್ಪಿಪಿ ವಾದವೇನು? ಇದಕ್ಕೂ ಮುನ್ನ ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ (ಎಸ್ಪಿಪಿ) ಬಿ.ಎನ್. ಜಗದೀಶ್ ವಾದ ಮಂಡಿಸಿ, ಪ್ರಕರಣದ ಆರೋಪಿಗಳಿಗೆ ಯಾವುದೇ ವಿಶೇಷ ಸೌಲಭ್ಯ ನೀಡಬಾರದು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ಆದರೆ, ಪವಿತ್ರಾ ಗೌಡ ಸೇರಿ ಮೂವರು ಆರೊಪಿಗಳಿಗೆ ವಾರಕೊಮ್ಮೆ ಮನೆ ಊಟ ತರಿಸಿಕೊಳ್ಳಲು ಅನುಮತಿಸುವಂತೆ ಜೈಲು ಅಧಿಕಾರಿಗಳಿಗೆ ಸೆಷನ್ಸ್ ನ್ಯಾಯಾಲಯ ನಿರ್ದೇಶಿಸಿದೆ. ಸುಪ್ರೀಂಕೋರ್ಟ್ ಆದೇಶ ಉಲ್ಲಂಘನೆಯಾದರೆ ಅಧಿಕಾರಿಗಳು ಕ್ರಮ ಎದುರಿಸಬೇಕಾಗುತ್ತದೆ. ಇನ್ನು ಜೈಲು ಆಹಾರ ಗುಣಮಟ್ಟದ ಬಗ್ಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ (ಎಫ್ಎಸ್ಎಸ್ಎಐ) ಪ್ರಾಧಿಕಾರ ನಾಲ್ಕು ಸ್ಟಾರ್ನ ಸರ್ಟಿಫಿಕೇಟ್ ನೀಡಿದೆ. ವೈದ್ಯರು ಸೂಚಿಸಿದರೆ ಮಾತ್ರ ಮನೆ ಊಟಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಆದ್ದರಿಂದ, ಸೆಷನ್ಸ್ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿದರು.
ನಾಳೆಯಿಂದ ವಿಧಾನಮಂಡಲ ಜಂಟಿ ಅಧಿವೇಶನ, ನರೇಗಾ ಬಗ್ಗೆ ವಿಶೇಷ ಚರ್ಚೆ: ಸಿದ್ದರಾಮಯ್ಯ
ಬೆಂಗಳೂರು: ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಜನವರಿ 22ರಿಂದ ಜನವರಿ 31ರವರೆಗೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈ ಅಧಿವೇಶನದಲ್ಲಿ ಮಹತ್ವದ ವಿಷಯವಾಗಿ ನರೇಗಾ (MGNREGA) ಯೋಜನೆ ಕುರಿತಂತೆ ವಿಶೇಷ ಚರ್ಚೆ ನಡೆಯಲಿದೆ ಎಂದು ಅವರು ತಿಳಿಸಿದರು. ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಜಂಟಿ ಅಧಿವೇಶನದ ಮೊದಲ ದಿನ ರಾಜ್ಯಪಾಲರ ಭಾಷಣ ನಡೆಯಲಿದ್ದು, ಅದರ
ಭಟ್ಕಳ: ‘ವಿಸ್ಡಮ್ ಸ್ಪೆಷಲ್ ಸ್ಕೂಲ್’ ಲೋಕಾರ್ಪಣೆ
ಭಟ್ಕಳ: ವಿಶೇಷ ಅಗತ್ಯವುಳ್ಳ ಮಕ್ಕಳ ಶೈಕ್ಷಣಿಕ, ಸಾಮಾಜಿಕ ಹಾಗೂ ಮಾನಸಿಕ ಸಬಲೀಕರಣದ ಉದ್ದೇಶದಿಂದ ಭಟ್ಕಳದಲ್ಲಿ ‘ವಿಸ್ಡಮ್ ಸ್ಪೆಷಲ್ ಸ್ಕೂಲ್’ ಎಂಬ ನೂತನ ವಿಶೇಷ ಶಾಲೆಯನ್ನು ಜಮಾಅತುಲ್ ಮುಸ್ಲಿಮೀನ್ ಪ್ರಧಾನ ಖಾಝಿ ಮೌಲಾನ ಅಬ್ದಲ್ ರಬ್ ಖತೀಬ್ ನದ್ವಿ ಹಾಗೂ ಮರ್ಕಝಿ ಖಲಿಫಾ ಜಮಾಅತ್ ನ ಪ್ರಧಾನ ಖಾಝಿ ಮೌಲಾನ ಕ್ವಾಜಾ ಮುಈನುದ್ದೀನ್ ಅಕ್ರಮಿ ಮದನಿ ನದ್ವಿ ಉದ್ಘಾಟಿದರು. ಈ ಸಂದರ್ಭದಲ್ಲಿ ಮಾತನಾಡಿದ . ಮೌಲಾನ ಅಬ್ದಲ್ ರಬ್ ಖತೀಬ್ ನದ್ವಿ, ವಿಶೇಷ ಮಕ್ಕಳ ಬದುಕನ್ನು ರೂಪಿಸುವುದು ಹಾಗೂ ಅವರಿಗೆ ಸಮಾಜದಲ್ಲಿ ಸಮಾನ ಅವಕಾಶ ಮತ್ತು ಗೌರವ ಒದಗಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು. ಮರ್ಕಝಿ ಖಲಿಫಾ ಜಮಾಅತ್ ನ ಪ್ರಧಾನ ಖಾಝಿ ಮೌಲಾನ ಕ್ವಾಜಾ ಮುಈನುದ್ದೀನ್ ಅಕ್ರಮಿ ಮಾತನಾಡಿ ಶುಭ ಹಾರೈಸಿದರು. ಸಮಾರಂಭದಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಎಸ್.ಎಂ.ಸೈಯ್ಯದ್ ಶಕೀಲ್, ಸಮುದಾಯದ ಹಲವಾರು ತಾಯಂದಿರು ತಮ್ಮ ವಿಶೇಷಚೇತನ ಮಕ್ಕಳ ಶಿಕ್ಷಣಕ್ಕಾಗಿ ದೂರದ ಸಂಸ್ಥೆಗಳ ಮೇಲೆ ಅವಲಂಬಿಸಬೇಕಾದ ಪರಿಸ್ಥಿತಿಯನ್ನು ಕಂಡು, ಈ ಶಾಲೆ ಸ್ಥಾಪಿಸುವ ಸಂಕಲ್ಪ ಮೂಡಿತು ಎಂದು ತಿಳಿಸಿದರು. ಸಮುದಾಯದ ಪ್ರತಿಯೊಂದು ಮಗು ಮುಂದುವರಿಯಬೇಕು, ಯಾವುದೇ ಮಗು ಹಿಂದೆ ಉಳಿಯಬಾರದು ಎಂಬ ದೃಢ ನಿಲುವಿನೊಂದಿಗೆ ನಿರಂತರ ಪರಿಶ್ರಮದಿಂದ ಈ ಸಂಸ್ಥೆಯನ್ನು ಆರಂಭಿಸಲಾಗಿದೆ ಎಂದರು ಮೌಲಾನ ಸೈಯ್ಯದ್ ಝುಬೇರ್ ಮಾತನಾಡಿ, ಭಟ್ಕಳದಲ್ಲಿ ನಡೆಸಿದ ಸಮೀಕ್ಷೆಯ ಪ್ರಕಾರ ಸುಮಾರು 200 ರಿಂದ 300 ವಿಶೇಷಚೇತನ ಮಕ್ಕಳು ಇದ್ದು, ಸೂಕ್ತ ಮಾರ್ಗದರ್ಶನ ಮತ್ತು ವ್ಯವಸ್ಥೆಗಳ ಕೊರತೆಯಿಂದ ಹಲವರು ಮನೆಗಳಲ್ಲೇ ಸೀಮಿತರಾಗಿದ್ದರು. ಅಂತಹ ಮಕ್ಕಳಿಗೆ ಶಿಕ್ಷಣ, ತರಬೇತಿ ಮತ್ತು ಆತ್ಮವಿಶ್ವಾಸ ನೀಡುವ ಉದ್ದೇಶ ದಿಂದ ಈ ಶಾಲೆ ಆರಂಭಿಸಲಾಗಿದೆ. ಮಕ್ಕಳನ್ನು ಕೇವಲ ನಾಲ್ಕು ಗೋಡೆಗಳೊಳಗೆ ಬಂಧಿಸದೇ, ಕ್ರೀಡೆ, ಚಿತ್ರಕಲೆ, ಸೃಜನಶೀಲ ಚಟುವಟಿಕೆಗಳು ಹಾಗೂ ದೃಶ್ಯಮಾಧ್ಯಮಗಳ ಮೂಲಕ ಬದುಕಿನ ಹೊಸ ಆಯಾಮಗಳನ್ನು ಪರಿಚಯಿಸುವ ಯೋಜನೆಯಿದೆ ಎಂದರು. ರಾಬಿತಾ ಸೂಸೈಟಿಯ ಪ್ರಧಾನ ಕಾರ್ಯದರ್ಶಿ ಡಾ.ಅತಿಕುರ್ರಹ್ಮಾನ್ ಮುನೀರಿ, ಈ ಸಂಸ್ಥೆ ಸಮುದಾಯಕ್ಕೆ ಮಾತ್ರವಲ್ಲ, ಸಮಾಜಕ್ಕೂ ಮಾದರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು. ಅಗತ್ಯವಿರುವ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ವಿಶೇಷ ಮಕ್ಕಳಿಗೆ ಕೇವಲ ಪಾಠವಲ್ಲ, ಪ್ರೀತಿ, ಮಾನವೀಯತೆ ಮತ್ತು ಆತ್ಮಗೌರವ ಕಲಿಸುವುದು ಇಂದಿನ ಅಗತ್ಯ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಅಂಜುಮನ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮುಹಮ್ಮದ್ ಯೂನೂಸ್ ಕಾಜಿಯಾ, ರಾಬಿತಾ ಸೂಸೈಟಿಯ ಅಧ್ಯಕ್ಷ ಫಾರೂಖ್ ಮುಸ್ಬಾ, ಪ್ರ.ಕಾ. ಡಾ.ಅತಿಕುರ್ರಹ್ಮಾನ್ ಮುನೀರಿ, ಜಿದ್ದಾ ಜಮಾಅತ್ ಅಧ್ಯಕ್ಷ ಖಮರ್ ಸಾದಾ, ದುಬೈ ಜಮಾಅತ್ ಕಾರ್ಯದರ್ಶಿ ಜೈಲಾನಿ ಮೊಹತೆಶಮ್, ಮುಸದ್ದೀಖ್ ಇಕ್ಕೇರಿ ಕಿಮಿಯಾ, ಮೌಲಾನ ಇಲ್ಯಾಸ್ ನದ್ವಿ, ಮತ್ತಿತರು ಭಾಗವಹಿಸಿ ಶುಭ ಹಾರೈಸಿದರು. ಮೌಲಾನ ಝೀಯಾವುರ್ರಹ್ಮಾನ್ ರುಕ್ನುದ್ದೀನ್ ನದ್ವಿಯವರ ಕುರಾನ್ ಪಠಣದೊಂದಿಗೆ ಕಾರ್ಯಕ್ರಮ ಆರಂಭ ಗೊಂಡಿತು. ವಿಸ್ಡಂ ವಿಶೇಷ ಶಾಲೆಯ ಕಾರ್ಯದರ್ಶಿ ಮೌಲಾನ ಸೈಯ್ಯದ್ ಯಾಸೀರ್ ನದ್ವಿ ಬರ್ಮಾವರ್ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಅರ್ಪಿಸಿದರು.
ರಾಯಚೂರು| ಸಿಂಧನೂರು–ಸಿರುಗುಪ್ಪ ಹೆದ್ದಾರಿಯಲ್ಲಿ ಭೀಕರ ಅಪಘಾತ: ಐವರು ಸ್ಥಳದಲ್ಲೇ ಮೃತ್ಯು
ಸಿಂಧನೂರು: ಟಾಟ ಏಸ್ ಹಾಗೂ ಬೊಲೆರೊ ಪಿಕ್ ಆಫ್ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಿಂಧನೂರು-ಸಿರುಗುಪ್ಪ ಹೆದ್ದಾರಿಯ ಬೂದಿವಾಳ ಕ್ಯಾಂಪಿನ ಬಳಿ ಮಂಗಳವಾರ ರಾತ್ರಿ ನಡೆದಿದೆ. ಮೃತರನ್ನು ಸಿರುಗುಪ್ಪಾ ತಾಲೂಕಿನ ಚಳ್ಳೆಕಡ್ಲೂರು ಗ್ರಾಮದ ನಿವಾಸಿಗಳಾದ ಸಣ್ಣಯಲ್ಲಯ್ಯ (40), ರಂಗನಾಥ ಕಲ್ಲೂರು ( 15), ಹರಿ (36) ಎಂದು ಗುರುತಿಸಲಾಗಿದೆ. ಇದಲ್ಲದೆ ಲಾರಿಯ ಚಾಲಕ ಮತ್ತು ಕ್ಲೀನರ್ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಅಪಘಾತದಲ್ಲಿ ಇನ್ನೂ ಕೆಲವರಿಗೆ ಗಾಯವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಳದ ಸಾಧ್ಯತೆ ಇದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಕ್ಷು ಸೇರಿ ಪೊಲೀಸ್ಅ ಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮನೆಗೆಲಸದ ಬಾಲಕಿಯ ಮೇಲೆ ದೈಹಿಕ ದೌರ್ಜನ್ಯ: CRPF ಅಧಿಕಾರಿ, ಪತ್ನಿ ಬಂಧನ
ಶೌಚಾಲಯದಲ್ಲಿ ಬಿದ್ದಿದ್ದಳು ಎಂದು ವೈದ್ಯರಿಗೆ ತಿಳಿಸಿದ್ದ ದಂಪತಿ
ದೇಶದ ಪ್ರಜೆಗೆ ಸಂವಿಧಾನವೇ ಗ್ರಂಥ: ವಿನಯಕುಮಾರ್ ಸೊರಕೆ
ಕನ್ನಂಗಾರ್ನಲ್ಲಿ ಧಾರ್ಮಿಕ ಕಾರ್ಯಕ್ರಮ
Matrimonial site ನಲ್ಲಿಯೂ ವಂಚನೆ!
ಭಾವನಾತ್ಮಕ ಕಥೆಗಳಿಗೆ ಮರುಳಾಗಬೇಡಿ.. ಇದು Cyber crime ಲೋಕ
ಶಿಕ್ಷಣ ಸಂಸ್ಥೆಗಳ ಪರಿಸರದ ಅಂಗಡಿಗಳ ತಪಾಸಣೆ ತೀವ್ರಗೊಳಿಸಲು ದ.ಕ. ಡಿಸಿ ಸೂಚನೆ
ಮಂಗಳೂರು: ಶಾಲಾ ಕಾಲೇಜುಗಳ ಆಸುಪಾಸಿನಲ್ಲಿ ಕಾರ್ಯಾಚರಿಸುವ ಅಂಗಡಿಗಳಲ್ಲಿ ಮಾದಕ ವಸ್ತು ಮತ್ತು ಧೂಮಪಾನ ಮಾರಾಟದ ಬಗ್ಗೆ ನಿರಂತರ ತಪಾಸಣೆ ನಡೆಸುವಂತೆ ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೂಚಿಸಿದ್ದಾರೆ. ನಗರದ ಪುರಭವನದಲ್ಲಿ ಮಂಗಳವಾರ ನಡೆದ ನಾರ್ಕೋ ಕೋ ಆರ್ಡಿನೇಶನ್ ಸೆಂಟರ್ನ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಾಲಾ ಕಾಲೇಜುಗಳಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಕಾರ್ಯಕ್ರಮಗಳನ್ನು ಆಗಾಗ ನಡೆಸಬೇಕು. ಕೆಲವೆಡೆ ವಿದ್ಯಾರ್ಥಿಗಳು ಪರೀಕ್ಷೆ ಒತ್ತಡದಿಂದಾಗಿ ಮಾದಕ ವಸ್ತುಗಳನ್ನು ಸೇವಿಸುವ ಬಗ್ಗೆ ವರದಿ ಬಂದಿದೆ. ಈ ನಿಟ್ಟಿನಲ್ಲಿ ಶಾಲೆ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ ನಡೆಸಬೇಕು ಎಂದರು. ಪದವಿಪೂರ್ವ ಕಾಲೇಜುಗಳಲ್ಲಿ ಇಂತಹ ಕಾರ್ಯಕ್ರಮ ನಡೆಸಲು ನಿರ್ಲಕ್ಷ್ಯ ವಹಿಸಿದ ಬಗ್ಗೆ ಅವರು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರಲ್ಲದೆ ಡ್ರಗ್ಸ್ ಪರೀಕ್ಷೆಯನ್ನು ಹೆಚ್ಚಿಸಲು ಆರೋಗ್ಯ ಇಲಾಖೆಗೆ ಹೆಚ್ಚಿನ ಕಿಟ್ಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು. ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ. ಮಾತನಾಡಿ ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಸಾರ್ವಜನಿಕರಲ್ಲಿ ಡ್ರಗ್ಸ್ ಮುಕ್ತ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು. ನಿರ್ಲಕ್ಷ್ಯ ವಹಿಸಿದರೆ ಅಂತಹ ಅಧಿಕಾರಿಗಳ ವಿರುದ್ಧವೇ ಕ್ರಮ ಕೈಗೊಳ್ಳಲಾಗುವುದು ಎಂದರಲ್ಲದೆ ನಗರದಲ್ಲಿ ಕಳೆದ ಡಿಸೆಂಬರ್ನಲ್ಲಿ ಡ್ರಗ್ಸ್ ಸೇವಿಸಿದ 62 ಮಂದಿಯನ್ನು ಹಾಗೂ 21 ಪೆಡ್ಲರ್ಗಳನ್ನು ಬಂಧಿಸಲಾಗಿದೆ ಎಂದು ಹೇಳಿದರು. ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಹೋಂಸ್ಟೇ ಮತ್ತು ಲಾಡ್ಜ್ಗಳಲ್ಲಿ ಆಗ್ಗಿಂದಾಗೆ ತಪಾಸಣೆ ನಡೆಸಬೇಕು. ಕರಾವಳಿ ಭದ್ರತಾ ಪೊಲೀಸರು ಬೋಟ್ಗಳನ್ನು ಅನಿರೀಕ್ಷಿತ ತಪಾಸಣೆ ನಡೆಸಬೇಕು. ಕೆಎಸ್ಆರ್ಟಿಸಿ ಬಸ್ಗಳಲ್ಲಿ ಪಾರ್ಸೆಲ್ಗಳ ಮೇಲೆ ನಿಗಾ ವಹಿಸಬೇಕು. ಕೈಗಾರಿಕಾ ಘಟಕಗಳಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸ ಬೇಕು. ರೈಲ್ವೆ ಮತ್ತು ವಿಮಾನ ನಿಲ್ದಾಣಗಳಲ್ಲಿ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಮೆಡಿಕಲ್ಗಳಲ್ಲಿ ಔಷಧದ ಮಾರಾಟದ ಬಗ್ಗೆ ಸೂಕ್ತ ದಾಖಲೆಯನ್ನು ನಿರ್ವಹಿಸದ ನಾಲ್ಕು ಮೆಡಿಕಲ್ಗಳಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ಉಪ ಪೊಲೀಸ್ ಆಯುಕ್ತ ಮಿಥುನ್ ಎಚ್.ಎನ್., ಎಎಸ್ಪಿ ಅನಿಲ್ ಕುಮಾರ್, ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ ಮತ್ತಿತರರಿದ್ದರು.
ಶಾಲೆಗಳ ಅಡುಗೆ ಮನೆ ಆಧುನೀಕರಣ | ಪಾತ್ರೆ-ಪರಿಕರಗಳ ಖರೀದಿಗಾಗಿ 18.91 ಕೋಟಿ ರೂ.ಬಿಡುಗಡೆ
ಬೆಂಗಳೂರು : ಸರಕಾರವು ರಾಜ್ಯದ 9,090 ಶಾಲೆಗಳ ಅಡುಗೆ ಮನೆಗಳನ್ನು ಆಧುನೀಕರಿಸಲು ಹಾಗೂ ಹೊಸ ಪಾತ್ರೆ-ಪರಿಕರಗಳನ್ನು ಒದಗಿಸಲು ಒಟ್ಟು 18.91 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಿ, ಮಂಗಳವಾರದಂದು ಆದೇಶ ಹೊರಡಿಸಿದೆ. ಬೆಂಗಳೂರು ನಗರ ಮತ್ತು ಧಾರವಾಡ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ 16 ಜಿಲ್ಲೆಗಳ 7,015 ಶಾಲೆಗಳಲ್ಲಿ ಅಕ್ಕಿ ಬೇಯಿಸಲು ಮತ್ತು ತೊಗರಿಬೇಳೆ ಸಾಂಬಾರು ತಯಾರಿಸಲು ಸ್ಟೀಲ್ ಪಾತ್ರೆಗಳನ್ನು ಒದಗಿಸಲು 12.56 ಕೋಟಿ ರೂ.ಗಳನ್ನು ಹಾಗೂ ಬೆಂಗಳೂರು ನಗರ ಮತ್ತು ಧಾರವಾಡ ಜಿಲ್ಲೆಗಳಲ್ಲಿನ 2075 ಶಾಲೆಗಳಿಗೆ ಮೊಟ್ಟೆ ಬೇಯಿಸಲು ಸ್ಟೀಲ್ ಪಾತ್ರೆಗಳು, ಎಲ್.ಪಿ.ಜಿ. ಸಿಲಿಂಡರ್ಗಳನ್ನು ಒದಗಿಸಲು 6.35 ಕೋಟಿ ರೂ.ಗಳನ್ನು ಒಳಗೊಂಡಂತೆ ಒಟ್ಟಾರೆ 18.91 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ. ಇಸ್ಕಾನ್ ಸಂಸ್ಥೆ ಹಾಗೂ ಅದಮ್ಯ ಚೇತನ ಸಂಸ್ಥೆಯಿಂದ ಮಧ್ಯಾಹ್ನದ ಬಿಸಿಯೂಟ ಸರಬರಾಜು ಮಾಡುತ್ತಿರುವ ಶಾಲೆಗಳಿಗೆ, ಒಂದು ವೇಳೆ ಸಂಸ್ಥೆಗಳು ಮೊಟ್ಟೆಯನ್ನು ಸರಬರಾಜು ಮಾಡಲು ನಿರಾಕರಿಸಿದರೆ ಮಾತ್ರ, ಅಂತಹ ಶಾಲೆಗಳಲ್ಲಿ ಮೊಟ್ಟೆ ಬೇಯಿಸಲು ಅಗತ್ಯವಿರುವ ಪಾತ್ರೆ ಪರಿಕರಗಳನ್ನು ಮತ್ತು ಇತರೆ ಸಾಮಗ್ರಿಗಳನ್ನು ಖರೀದಿಸಲು ಅಗತ್ಯವಿರುವ ಅನುದಾನವನ್ನು ಬಳಕೆ ಮಾಡಿಕೊಳ್ಳಬೇಕು. ಅನುದಾನ ಬಿಡುಗಡೆ ವಿವರಗಳನ್ನು ಹಾಗೂ ವೆಚ್ಚದ ವಿವರಗಳನ್ನು 15 ದಿನಗಳೊಳಗಾಗಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತರಿಗೆ ಸಲ್ಲಿಸಬೇಕು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಮ್ಮ ಇಲಾಖಾ ವೆಬ್ ಸೈಟ್ನಲ್ಲಿ ವಿವರಗಳನ್ನು ಕಡ್ಡಾಯವಾಗಿ ಪ್ರಕಟಿಸಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಕೊನೆಯ ಪೆಡ್ಲರ್ ಹಿಡಿಯುವವರೆಗೆ ಡ್ರಗ್ಸ್ ಮುಕ್ತ ಕಾರ್ಯಾಚರಣೆ: ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ
ಮಂಗಳೂರು: ಡ್ರಗ್ಸ್, ಗಾಂಜಾ ಮತ್ತಿತರ ಮಾದಕ ವಸ್ತುವಿನ ಪೆಡ್ಲರ್ಗಳ ವಿರುದ್ಧ ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರಗೊಳಿಸಿ ಕೊನೆಯ ಪೆಡ್ಲರ್ ಬಂಧನವಾಗುವವರೆಗೂ ಮುಂದುವರಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಡ್ರಗ್ಸ್, ಮಾದಕ ವಸ್ತುಗಳ ಜಾಗೃತಿ ಪ್ರಯುಕ್ತ ನಗರದ ಪುರಭವನದಲ್ಲಿ ಮಂಗಳವಾರ ನಡೆದ ವಿವಿಧ ಶಿಕ್ಷಣ ಸಂಸ್ಥೆಗಳ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಡ್ರಗ್ಸ್ ವಿತರಣಾ ಜಾಲವನ್ನು ನಿಲ್ಲಿಸಲು ಪೊಲೀಸ್ ಇಲಾಖೆಯು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದೆ. ಇತ್ತೀಚೆಗೆ ನಡೆದ ವಿದ್ಯಾರ್ಥಿಗಳ ತಪಾಸಣೆಯಲ್ಲಿ ಯಾವುದೇ ಡ್ರಗ್ಸ್ ಪಾಸಿಟಿವ್ ಕಂಡು ಬಂದಿಲ್ಲ. ಇದರಿಂದ ನಶಮುಕ್ತ ಮಂಗಳೂರು ಅಭಿಯಾನವು ಸಂಪೂರ್ಣ ಯಶಸ್ವಿಯಾಗುವ ವಿಶ್ವಾಸವಿದೆ ಎಂದು ಹೇಳಿದರು. ಎಲ್ಲಾ ಕಾಲೇಜುಗಳಲ್ಲಿ ಡ್ರಗ್ಸ್ ವಿರೋಧಿ ಸಮಿತಿ ಕ್ರಿಯಾಶೀಲಗೊಳಿಸಬೇಕು. ಮಾದಕ ವಸ್ತುಗಳ ಪ್ರಭಾವ ಕ್ಕೊಳಗಾದ ಸಂಶಯಾಸ್ಪದ ವಿದ್ಯಾರ್ಥಿಗಳನ್ನು ಗುರುತಿಸಿ ಅವರನ್ನು ಕೌನ್ಸೆಲಿಂಗ್ ಮೂಲಕ ಹೊರತರಬೇಕು. ಈ ನಿಟ್ಟಿನಲ್ಲಿ ಅಗತ್ಯ ನೆರವನ್ನು ಪೊಲೀಸ್ ಇಲಾಖೆ ನೀಡಲಿದೆ ಎಂದು ಸುಧೀರ್ ಕುಮಾರ್ ರೆಡ್ಡಿ ತಿಳಿಸಿದರು. ಶಿಕ್ಷಣ ಸಂಸ್ಥೆಗಳ ಕ್ಯಾಂಪಸನ್ನು ಶುದ್ಧಗೊಳಿಸುವ ಇಂತಹ ಚಟಗಳಿಂದ ಮುಕ್ತ ಮಾಡುವ ಈ ಅಭಿಯಾನದಲ್ಲಿ ಕಾಲೇಜುಗಳು ಕೈ ಜೋಡಿಸಬೇಕು. ಈ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳು ಆಗಾಗ ಭೇಟಿ ನೀಡಲಿದ್ದಾರೆ. ಡ್ರಗ್ಸ್ ಪ್ರಭಾವಿತ ವಿದ್ಯಾರ್ಥಿಗಳನ್ನು ಸಂತ್ರಸ್ತರೆಂದು ಪರಿಗಣಿಸಲಾಗುವುದು. ಆದರೆ ಡ್ರಗ್ಸ್ ಪೆಡ್ಲರ್ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾರ್ಯಾಚರಣೆ ನಡೆಸಲಾಗುವುದು ಎಂದು ಪೋಲಿಸ್ ಆಯುಕ್ತರು ತಿಳಿಸಿದರು. ಮಂಗಳೂರಿನಲ್ಲಿ ಡ್ರಗ್ಸ್ ವ್ಯಾಪಕವಾಗಿದೆ ಎಂದು ಕೇಳಿ ಬರುತ್ತಿದೆ. ಆದರೆ 2025ರ ಜೂನ್ 1ರಿಂದ 2026ರ ಜನವರಿ 17ರವರೆಗೆ ವಿವಿಧ ಕಾಲೇಜುಗಳಲ್ಲಿ 5,356 ಡ್ರಗ್ಸ್ ಪರೀಕ್ಷೆಗಳನ್ನು ಮಾಡಲಾಗಿದೆ. ಇದರಲ್ಲಿ ಕೇವಲ 14 ಪ್ರಕರಣಗಳು ಕಂಡು ಬಂದಿದೆ. ಇದು ಜಿಲ್ಲೆಯಲ್ಲಿ ಡ್ರಗ್ಸ್ ಚಟುವಟಿಕೆ ಕಡಿಮೆಯಾಗಿರುವ ಸಂಕೇತವಾಗಿದೆ ಎಂದು ಹೇಳಿದರು. *ಪಿಜಿಗಳಿಗೆ ಪೊಲೀಸ್ ಎನ್ಒಸಿ : ನಗರದ ಪೇಯಿಂಗ್ ಗೆಸ್ಟ್ (ಪಿಜಿ)ಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದು, ಪಿಜಿಗಳಿಗೆ ಲೈಸೆನ್ಸ್ ನೀಡುವ ಮೊದಲು ಪೊಲೀಸ್ ಇಲಾಖೆಯಿಂದ ನಿರಾಪೇಕ್ಷಣ ಪತ್ರ ಪಡೆಯುವ ಬಗ್ಗೆ ಪರಿಶೀಲಿಸುವುದಾಗಿ ಪೊಲೀಸ್ ಕಮಿಷನರ್ ತಿಳಿಸಿದರು. ಸಭೆಯಲ್ಲಿ ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕ ಅರುಣ್ ಕುಮಾರ್, ಉಪ ಪೊಲೀಸ್ ಆಯುಕ್ತ ಮಿಥುನ್ ಎಚ್.ಎನ್, ಮಂಗಳೂರು ಉಪ ವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಎಎಸ್ಪಿ ಅನಿಲ್ ಕುಮಾರ್ ಮತ್ತಿತರಿದ್ದರು.
ತಮ್ಮ ಮಹತ್ವಾಕಾಂಕ್ಷಿ ಗಾಜಾ ಶಾಂತಿ ಮಂಡಳಿಯನ್ನು ಸೇರುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಜಗತ್ತಿನ ಅನೇಕ ದೇಶಗಳಿಗೆ ಆಹ್ವಾನ ನೀಡಿದ್ದಾರೆ. ಟ್ರಂಪ್ ಅವರಿಂದ ಆಹ್ವಾನ ಪಡೆದ ದೇಶಗಳ ಪೈಕಿ ರಷ್ಯಾ ಮತ್ತು ಉಕ್ರೇನ್ ಕೂಡ ಸೇರಿವೆ. ಆದರೆ ಕಳೆದ ನಾಲ್ಕು ವರ್ಷಗಳಿಂದ ಪರಸ್ಪರ ಕಿತ್ತಾಡುತ್ತಿರುವ ರಷ್ಯಾ ಮತ್ತು ಉಕ್ರೇನ್ ಗಾಜಾದಲ್ಲಿ ಶಾಂತಿ ನೆಲೆಸುವಂತೆ ಮಾಡಬಲ್ಲರೇ ಎಂಬ ಪ್ರಶ್ನೆ ಇದಗ ಉದ್ಭವವಾಗಿದೆ. ಅಲ್ಲದೇ ಇಬ್ಬರೂ ನಾಯಕರು ಒಂದೇ ವೇದಿಕೆ ಹಂಚಿಕೊಳ್ಳುವುದೂ ಅನುಮಾನವಾಗಿದೆ.
Iranನಲ್ಲಿ ಪ್ರತಿಭಟನೆ: ಕನಿಷ್ಠ 4029 ಮಂದಿ ಮೃತ್ಯು!
ದುಬೈ, ಜ.26: ಇರಾನ್ ನಲ್ಲಿ ನಡೆದ ರಾಷ್ಟ್ರವ್ಯಾಪಿ ಆಡಳಿತ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 4029 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಮೆರಿಕ ಮೂಲದ ಮಾನವ ಹಕ್ಕುಗಳ ಸಂಸ್ಥೆ ವರದಿ ಮಾಡಿದೆ. ಮೃತರಲ್ಲಿ 3786 ಪ್ರತಿಭಟನಕಾರರು, 180 ಭದ್ರತಾ ಸಿಬ್ಬಂದಿ, 28 ಮಕ್ಕಳು ಸೇರಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಿರುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ. ಈ ಹಿನ್ನೆಲೆಯಲ್ಲಿ ದಾವೋಸ್ನಲ್ಲಿ ನಡೆಯುತ್ತಿರುವ ಜಾಗತಿಕ ಆರ್ಥಿಕ ವೇದಿಕೆಯ ಸಮಾವೇಶಕ್ಕೆ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿಗೆ ನೀಡಿದ್ದ ಆಹ್ವಾನವನ್ನು ಹಿಂಪಡೆಯಲಾಗಿದೆ.
ಬೆಂಗಳೂರು ಆರ್ಟಿಒ ಕರ್ಮಕಾಂಡ: ಹೊರರಾಜ್ಯದ ವಾಹನಗಳಿಗೆ ತಪಾಸಣೆ ಇಲ್ಲದೆ ‘ಫಿಟ್ನೆಸ್ ಸರ್ಟಿಫಿಕೇಟ್’ ಆರೋಪ
ಬೆಂಗಳೂರು: ನಗರದ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ (RTO) ತಪಾಸಣೆಯೇ ಇಲ್ಲದೇ ಹೊರರಾಜ್ಯದ ವಾಹನಗಳಿಗೆ ಫಿಟ್ನೆಸ್ ಸರ್ಟಿಫಿಕೇಟ್ ನೀಡಲಾಗುತ್ತಿದೆ ಎಂಬ ಗಂಭೀರ ಆರೋಪ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಗುಜರಾತ್ ಮತ್ತು ಮಹಾರಾಷ್ಟ್ರದ ವಾಹನಗಳಿಗೆ ಯಾವುದೇ ಭೌತಿಕ ತಪಾಸಣೆ ನಡೆಸದೇ ಅಕ್ರಮವಾಗಿ ಫಿಟ್ನೆಸ್ ಸರ್ಟಿಫಿಕೇಟ್ಗಳನ್ನು ‘ಮಾರಾಟ' ಮಾಡಲಾಗುತ್ತಿದೆ ಎಂಬ ಮಾಹಿತಿ ಗುಜರಾತ್ ಅಧಿಕಾರಿಗಳಿಂದಲೇ ಲಭಿಸಿದೆ ಎಂದು
ದ.ಕ. ಬಾರ್ ಅಸೋಸಿಯೇಶನ್ ರದ್ದು : ಆಕ್ಷೇಪಣೆ ಆಹ್ವಾನ
ಮಂಗಳೂರು: ನಗರದ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿರುವ ದ.ಕ.ಡಿಸ್ಟ್ರಿಕ್ಟ್ ಬಾರ್ ಅಸೋಸಿಯೇಶನ್ 1986ರ ಡಿ.3ರಂದು ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1960ರಡಿ ನೊಂದಣಿಗೊಂಡಿದೆ. ಆದರೆ ಇದರ ವಾರ್ಷಿಕ ಫೈಲಿಂಗ್ ಮಾಡದೆ 38 ವರ್ಷಗಳು ಕಳೆದಿದ್ದುದರಿಂದ ಸಂಘದ ಅಸ್ತಿತ್ವ ಇಲ್ಲವೆಂದು ಪರಿಗಣಿಸಿ ಇದರ ನೋಂದಣಿಯನ್ನು ರದ್ದುಗೊಳಿಸಬೇಕಾಗಿದೆ. ಈ ಸಂಬಂಧ ದ.ಕ. ಡಿಸ್ಟ್ರಿಕ್ಟ್ ಬಾರ್ ಅಸೋಸಿಯೇಶನ್ನ ನೋಂದಾಯಿತ ಸದಸ್ಯರು ಆಕ್ಷೇಪಣೆಗಳು ಇದ್ದಲ್ಲಿ ಈ ಪ್ರಕಟನೆಯ ದಿನಾಂಕದಿಂದ 7 ದಿನಗಳೊಳಗೆ ಜಿಲ್ಲಾ ಸಂಘಗಳ ನೋಂದಣಿ ಕಚೇರಿಗೆ ಸಲ್ಲಿಸಬೇಕು. ಇಲ್ಲದಿದ್ದಲ್ಲಿ ಯಾವುದೇ ಆಕ್ಷೇಪಣೆಗಳು ಇಲ್ಲವೆಂದು ಭಾವಿಸಿ ಇದರ ನೋಂದಣಿಯನ್ನು ರದ್ದುಗೊಳಿಸಲಾಗುವುದು ಎಂದು ಸಹಕಾರ ಸಂಘಗಳ ಉಪ ನಿಬಂಧಕರು ಹಾಗೂ ಸಂಘ-ಸಂಸ್ಥೆಗಳ ನೋಂದಣಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪೂರ್ವ ಜೆರುಸಲೇಂನಲ್ಲಿ ವಿಶ್ವಸಂಸ್ಥೆಯ ನೆರವು ಏಜೆನ್ಸಿ ಕಟ್ಟಡ ಧ್ವಂಸ
ಜೆರುಸಲೇಂ, ಜ.20: ಫೆಲೆಸ್ತೀನಿಯರಿಗೆ ನೆರವು ಒದಗಿಸುತ್ತಿರುವ ಮಾನವೀಯ ಸಂಘಟನೆಗಳ ಮೇಲಿನ ಹಿಡಿತವನ್ನು ಇಸ್ರೇಲ್ ಬಿಗಿಗೊಳಿಸಿದ್ದು, ಪೂರ್ವ ಜೆರುಸಲೇಂನಲ್ಲಿರುವ ವಿಶ್ವಸಂಸ್ಥೆಯ ಪರಿಹಾರ ಕಾರ್ಯಗಳ ಏಜೆನ್ಸಿ (ಯುಎನ್ಆರ್ಡಬ್ಲ್ಯುಎ) ಕಚೇರಿಯನ್ನು ನೆಲಸಮಗೊಳಿಸುವ ಕಾರ್ಯಾಚರಣೆ ಆರಂಭಿಸಿದೆ. ಶೇಖ್ ಜರಾಹ್ ಪ್ರದೇಶದಲ್ಲಿರುವ ಕಚೇರಿಯ ಸಾಮಗ್ರಿಗಳನ್ನು ವಶಪಡಿಸಿಕೊಂಡು ಸಿಬ್ಬಂದಿಯನ್ನು ಬಲವಂತವಾಗಿ ಹೊರದಬ್ಬಲಾಗಿದೆ ಎಂದು ಯುಎನ್ಆರ್ಡಬ್ಲ್ಯುಎ ತಿಳಿಸಿದೆ. ಇದು ಅಂತಾರಾಷ್ಟ್ರೀಯ ಕಾನೂನು ಮತ್ತು ವಿಶ್ವಸಂಸ್ಥೆಯ ಸವಲತ್ತುಗಳ ಗಂಭೀರ ಉಲ್ಲಂಘನೆ ಎಂದು ಹೇಳಿದೆ. ಯುಎನ್ಆರ್ಡಬ್ಲ್ಯುಎ ಹಮಾಸ್ ಜೊತೆ ನಂಟು ಹೊಂದಿದೆ ಎಂಬ ಆರೋಪವನ್ನು ಇಸ್ರೇಲ್ ದೀರ್ಘಕಾಲದಿಂದ ಮಾಡುತ್ತಿದ್ದು, ಸಂಸ್ಥೆ ಅದನ್ನು ನಿರಾಕರಿಸಿದೆ. ಇಸ್ರೇಲ್ ಸಂಸತ್ ಕಳೆದ ವರ್ಷ ಅಂಗೀಕರಿಸಿದ ಕಾನೂನಿನಡಿ ಸಂಸ್ಥೆಯನ್ನು ನಿಷೇಧಿಸಲಾಗಿದೆ ಎಂದು ಇಸ್ರೇಲ್ ಸ್ಪಷ್ಟಪಡಿಸಿದೆ.
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ನ ಸಂಚಾರ ಸಮಸ್ಯೆ| ತುರ್ತು ಪರಿಹಾರಕ್ಕೆ ಸಂಸದ ಬ್ರಿಜೇಶ್ ಚೌಟ ಸೂಚನೆ
ಮಂಗಳೂರು, ಜ.20: ನಗರದ ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ನಲ್ಲಿ ಪದೇಪದೇ ಗೂಡ್ಸ್ ರೈಲು ಹಾಗೂ ಖಾಲಿ ಪ್ಯಾಸೆಂಜರ್ ರೈಲು ಹಾದು ಹೋಗುವುದರಿಂದ ಸಾರ್ವಜನಿಕರಿಗೆ ಉಂಟಾಗುವ ತೊಂದರೆ ಹಾಗೂ ಟ್ರಾಫಿಕ್ ಸಮಸ್ಯೆ ತಪ್ಪಿಸಲು ತುರ್ತಾಗಿ ತಾತ್ಕಾಲಿಕ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಬ್ರಿಜೇಶ್ ಚೌಟ ರೈಲ್ವೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮಂಗಳೂರು ವ್ಯಾಪ್ತಿಯ ರೈಲ್ವೆ ಸಮಸ್ಯೆಗಳ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ನಡೆದ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ನಲ್ಲಿ ದಿನನಿತ್ಯ ಹತ್ತಾರು ಬಾರಿ ಗೂಡ್ಸ್ ಹಾಗೂ ಪ್ಯಾಸೆಂಜರ್ ರೈಲುಗಳು ಮಂಗಳೂರು ಸೆಂಟ್ರಲ್ನಿಂದ ಬಂದರ್ ಗೂಡ್ಸ್ ಶೆಡ್ಗೆ ಹಾದು ಹೋಗುವ ವೇಳೆ ರೈಲ್ವೆ ಗೇಟ್ ಹಾಕುವುದರಿಂದ ಜನರು ಹೆಚ್ಚು ಹೊತ್ತು ಕಾಯುವ ಪರಿಸ್ಥಿತಿಯಿದೆ. ಹೀಗಾಗಿ ಕೂಡಲೇ ರೈಲ್ವೆಗೇಟ್ ಬಳಿ ರೈಲು ಓಡಾಡುವ ಸಮಯದ ಬಗ್ಗೆ ಎಲ್ಇಡಿ ಡಿಸ್ಪ್ಲೇ ಬೋರ್ಡ್ ಹಾಕಬೇಕು. ಅಲ್ಲದೆ ಕಚೇರಿ ವೇಳೆಯಲ್ಲಿ ಈ ಮಾರ್ಗದಲ್ಲಿ ರೈಲುಗಳ ಓಡಾಟವನ್ನು ತಡೆ ಹಿಡಿಯುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ರೈಲ್ವೆ ಅಧಿಕಾರಿಗಳಿಗೆ ಬ್ರಿಜೇಶ್ ಚೌಟ ಸೂಚಿಸಿದ್ದಾರೆ. ಪಾಂಡೇಶ್ವರ ಲೆವಲ್ ಕ್ರಾಸಿಂಗ್ನಲ್ಲಿ ಪದೇಪದೇ ಗೇಟ್ ಹಾಕುವುದರಿಂದ ಈ ಭಾಗದಲ್ಲಿ ಓಡಾಡುವ ಸಾರ್ವಜನಿ ಕರು ಹಲವಾರು ವರ್ಷಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಿರುವಾಗ ಈ ಲೆವೆಲ್ ಕ್ರಾಸಿಂಗ್ನಲ್ಲಿ ಶಾಶ್ವತ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಮಂಗಳೂರು ಮಹಾನಗರ ಪಾಲಿಕೆ ಹಾಗೂ ರೈಲ್ವೆ ಅಧಿಕಾರಿ ಗಳು ಸಮನ್ವಯತೆಯಿಂದ ಸಮಗ್ರ ವರದಿಯನ್ನು ತಯಾರಿಸಬೇಕು. ಆ ವರದಿ ಆಧರಿಸಿ ರೈಲ್ವೆ ಇಲಾಖೆ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ-ಮಾರ್ಗೋಪಾಯಗಳ ಬಗ್ಗೆ ಅಂತಿಮ ತೀರ್ಮಾನ ತೆಗೆದು ಕೊಳ್ಳಬೇಕು ಎಂದು ಬ್ರಿಜೇಶ್ ಚೌಟ ಸಲಹೆ ನೀಡಿದ್ದಾರೆ. ಶಾಸಕ ವೇದವ್ಯಾಸ ಕಾಮತ್ ಮಾತನಾಡಿ ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ಮೂಲಕ ದಿನಕ್ಕೆ 10ರಿಂದ 15 ಸಲ ಖಾಲಿ ಪ್ಯಾಸೆಂಜರ್ ಮತ್ತು ಗೂಡ್ಸ್ ರೈಲುಗಳು ಬಂದರು ಯಾರ್ಡ್ಗೆ ಹೋಗುವುದರಿಂದ ಪ್ರತಿ ಬಾರಿ 15ರಿಂದ 20 ನಿಮಿಷ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಇದು ಪ್ರತಿನಿತ್ಯ ಬೆಳಗ್ಗೆ ಮತ್ತು ಸಂಜೆ ಶಾಲಾ-ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು, ಕೆಲಸಕ್ಕೆ ಹೋಗುವ ಉದ್ಯೋಗಿಗಳು, ಆಂಬುಲೆನ್ಸ್ ಮತ್ತಿತರ ತುರ್ತು ಸೇವೆ ವಾಹನ ಗಳಿಗೆ ಅಡಚಣೆಯಾಗುತ್ತಿದೆ. ಈ ಬಗ್ಗೆ ಸ್ಥಳೀಯರು ಹಲವು ಬಾರಿ ದೂರು ನೀಡಿದ್ದು, ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗುತ್ತಿದೆ ಎಂದರು. ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಮಾತನಾಡಿ ರೈಲು ಬರುವ ಸಮಯವನ್ನು ಆಯಾ ಪ್ರದೇಶಗಳಲ್ಲಿ ದೊಡ್ಡ ಪರದೆಯಲ್ಲಿ ಪ್ರದರ್ಶಿಸಿದರೆ ಸಾರ್ವಜನಿಕರಿಗೆ ಪರ್ಯಾಯ ಮಾರ್ಗ ಬಳಸಿಕೊಳ್ಳಲು ಅನುಕೂಲವಾಗುತ್ತದೆ. ಆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹೊಯಿಗೆ ಬಜಾರ್ ಲೆವೆಲ್ ಕ್ರಾಸಿಂಗ್ ಬಳಿಯೂ ಇದೇ ರೀತಿಯಲ್ಲಿ ಟ್ರಾಫಿಕ್ ಸಮಸ್ಯೆಯಾಗುತ್ತಿರುವ ಕಾರಣ ಯಾರ್ಡನ್ನೇ ಸ್ಥಳಾಂತರಿಸುವ ಬಗ್ಗೆ ಹಾಗೂ ಬೇರೆಡೆ ಸೂಕ್ತ ಜಾಗ ನಿರ್ಧರಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು. ಸಭೆಯಲ್ಲಿ ಪಾಲಿಕೆಯ ಆಯುಕ್ತ ರವಿಚಂದ್ರ ನಾಯಕ್, ಮಾಜಿ ಮೇಯರ್ಗಳಾದ ದಿವಾಕರ್ ಪಾಂಡೇಶ್ವರ, ಪ್ರೇಮಾನಂದ ಶೆಟ್ಟಿ, ಪಾಲಿಕೆಯ ಅಭಿಯಂತರ ನರೇಶ್ ಶೆಣೈ, ಪ್ರಮುಖರಾದ ಧರ್ಮರಾಜ್, ರವಿಶಂಕರ್ ಮಿಜಾರು, ನಿತಿನ್ ಕುಮಾರ್ ಉಪಸ್ಥಿತರಿದ್ದರು.
ಭಾರತ–ಯುರೋಪ್ ಒಕ್ಕೂಟ ನಡುವೆ ಶೀಘ್ರವೇ ಐತಿಹಾಸಿಕ ವ್ಯಾಪಾರ ಒಪ್ಪಂದ
► ದಾವೋಸ್ ಶೃಂಗಸಭೆಯಲ್ಲಿ ಉರ್ಸುಲಾ ವೊನ್ ಡೆರ್ ಲಿಯೆನ್ ಘೋಷಣೆ► 200 ಕೋಟಿ ಜನರನ್ನು ಒಳಗೊಂಡ ಮಾರುಕಟ್ಟೆ ಸೃಷ್ಟಿಯ ಸಾಧ್ಯತೆ
ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣ; ಜಿ.ಟಿ.ದಿನೇಶ್ ಕುಮಾರ್ ಜಾಮೀನು ಅರ್ಜಿ ವಜಾ
ಬೆಂಗಳೂರು : ಅಕ್ರಮ ನಿವೇಶನ ಹಂಚಿಕೆ ಹಗರಣದಲ್ಲಿ ಬಂಧನದಿಂದ ಮುಕ್ತಗೊಳಿಸುವಂತೆ ಕೋರಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಜಾರಿ ನಿರ್ದೇಶನಾಲಯದ (ಈಡಿ) ಬಂಧನದಲ್ಲಿರುವ ದಿನೇಶ್ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ಕುರಿತು ವಿಚಾರಣೆ ಪೂರ್ಣಗೊಳಿಸಿ, ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಪ್ರಕಟಿಸಿತು. ಅರ್ಜಿ ವಜಾಗೊಂಡಿರುವ ಹಿನ್ನೆಲೆಯಲ್ಲಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ದಿನೇಶ್ ಕುಮಾರ್ ಸೆರೆವಾಸ ಮುಂದುವರಿಯಲಿದೆ. ವಿಸ್ತೃತ ತೀರ್ಪಿನ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ. ವಿಚಾರಣೆ ವೇಳೆ ವಾದ ಮಂಡಿಸಿದ್ದ ದಿನೇಶ್ ಪರ ವಕೀಲರು, ಅರ್ಜಿದಾರರು ಪ್ರಕರಣದ ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡುತ್ತಿದ್ದಾರೆ. ನ್ಯಾಯಾಲಯ ವಿಧಿಸುವ ಷರತ್ತುಗಳನ್ನು ಪಾಲಿಸಲು ಸಿದ್ಧರಿದ್ದಾರೆ. ಆದ್ದರಿಂದ, ಪ್ರಕರಣದಲ್ಲಿ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ಕೋರಿದ್ದರು. ಇದನ್ನು ಆಕ್ಷೇಪಿಸಿದ್ದ ಈಡಿ ಪರ ವಕೀಲರು, ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ ಮೇಲ್ನೋಟಕ್ಕೆ ಸಾಕಷ್ಟು ಸಾಕ್ಷ್ಯಾಧಾರ ಲಭ್ಯವಾಗಿವೆ. ಈಗಾಗಲೇ ಆರೋಪಪಟ್ಟಿ ಸಲ್ಲಿಸಲಾಗಿದ್ದು, ಅದರಲ್ಲಿ ಎಲ್ಲ ವಿವರಗಳನ್ನು ಉಲ್ಲೇಖಿಸಲಾಗಿದೆ. ಆರೋಪಿ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಅವರನ್ನು ಬಿಡುಗಡೆ ಮಾಡಬಾರದು ಎಂದು ಕೋರಿದ್ದರು.
ಪ್ರಕರಣಗಳ ರಾಜೀ ಸಂಧಾನಕ್ಕೆ ವಿಶೇಷ ಮಧ್ಯಸ್ಥಿಕೆ ಅಭಿಯಾನ: ನ್ಯಾಯಾಧೀಶೆ ಜೈಬುನ್ನಿಸಾ
ಮಂಗಳೂರು,ಜ.20:ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0 ಎಂಬ 90 ದಿನಗಳ 2ನೇ ವಿಶೇಷ ಮಧ್ಯಸ್ಥಿಕಾ ಅಭಿಯಾನವು ಈಗಾಗಲೆ ಆರಂಭಗೊಂಡಿದೆ. ಹಾಗಾಗಿ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಎಲ್ಲಾ ರೀತಿಯ ಸಿವಿಲ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಚೆಕ್ಕು ಅಮಾನ್ಯ ಪ್ರಕರಣಗಳು, ವಾಣಿಜ್ಯ ಮತ್ತು ಸೇವಾ ಪ್ರಕರಣಗಳು, ರಾಜಿಯಾಗಬಲ್ಲ ಅಪರಾಧಿ ಪ್ರಕರಣಗಳು, ಗ್ರಾಹಕರ ವ್ಯಾಜ್ಯ ಪ್ರಕರಣಗಳು, ಡಿಆರ್ಟಿ ಪ್ರಕರಣಗಳು, ಭೂ-ಸ್ವಾಧೀನ ಪ್ರಕರಣಗಳು ಮತ್ತಿತರ ಸಿವಿಲ್ ಪ್ರಕರಣಗಳನ್ನು ರಾಜೀಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ತಮ್ಮ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ಇಚ್ಚಿಸಿದ್ದಲ್ಲಿ ನ್ಯಾಯಾಲಯಗಳಿಂದ ಪ್ರಕರಣಗಳನ್ನು ಮಧ್ಯಸ್ಥಿಕಾ ಕೇಂದ್ರಕ್ಕೆ ಸೂಚಿಸಲಾಗುತ್ತದೆ. ಅಂತಹ ಪ್ರಕರಣಗಳಲ್ಲಿ ಉಭಯ ಪಕ್ಷಗಾರರನ್ನು ಕರೆಸಿಕೊಂಡು ದ.ಕ. ನ್ಯಾಯಾಲಯದ ಸಮುಚ್ಚಯದಲ್ಲಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ತಾಲೂಕು ನ್ಯಾಯಾಲಯಗಳ ಆವರಣಗಳಲ್ಲಿರುವ ಮಧ್ಯಸ್ಥಿಕಾ ಕೇಂದ್ರಗಳಲ್ಲಿ ನುರಿತ ಸಂಧಾನಕಾರರು ರಾಜೀಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸುತ್ತಾರೆ. ಪ್ರಕರಣಗಳು ಹೈಕೋರ್ಟ್ ನಲ್ಲಿ ಬಾಕಿ ಇದ್ದಲ್ಲಿ ಬೆಂಗಳೂರು, ಧಾರವಾಡ ಮತ್ತು ಕಲಬುರಗಿ ಆವರಣಗಳಲ್ಲಿರುವ ಹೈಕೋರ್ಟ್ ಮಧ್ಯಸ್ಥಿಕಾ ಕೇಂದ್ರಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.ಉಚಿತ ಕಾನೂನು ಸಲಹೆಗಾಗಿ 15100 ಸಂಖ್ಯೆಗೆ ಕರೆ ಮಾಡಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನಿಸಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಭಾರತಕ್ಕಾಗಿ ಗುಂಡೇಟುಗಳನ್ನು ಎದುರಿಸಿದ್ದೇವೆ, ಇನ್ನೊಮ್ಮೆ ಅದಕ್ಕೂ ಸಿದ್ಧರಿದ್ದೇವೆ: ಫಾರೂಕ್ ಅಬ್ದುಲ್ಲಾ
ಶ್ರೀನಗರ, ಜ. 20: ಜಮ್ಮು–ಕಾಶ್ಮೀರದಲ್ಲಿ ಕಲ್ಲುತೂರಾಟ ಮತ್ತು ಭಯೋತ್ಪಾದನೆಯನ್ನು ಮರುಕಳಿಸಲು ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಪ್ರಯತ್ನಿಸುತ್ತಿದೆ ಎಂಬ ಬಿಜೆಪಿ ಆರೋಪಗಳನ್ನು ಮಂಗಳವಾರ ಇಲ್ಲಿ ತಿರಸ್ಕರಿಸಿದ ಎನ್ಸಿ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು, ಪಕ್ಷವು ಭಾರತಕ್ಕಾಗಿ ಗುಂಡೇಟುಗಳನ್ನು ಎದುರಿಸಿದೆ ಮತ್ತು ಅಗತ್ಯವಾದರೆ ಗುಂಡೇಟುಗಳನ್ನು ಇನ್ನೊಮ್ಮೆ ಎದುರಿಸಲು ಸಿದ್ಧವಾಗಿದೆ ಎಂದು ಹೇಳಿದರು. ಇಲ್ಲಿ ಎರಡು ದಿನಗಳ ಎನ್ಸಿ ಬ್ಲಾಕ್ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಸಮಾವೇಶದ ನೇಪಥ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಅಬ್ದುಲ್ಲಾ, ಎನ್ಸಿ ಮತ್ತು ಪಿಡಿಪಿ ಅಶಾಂತಿಯಲ್ಲಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತವೆ ಎಂಬ ಹಿರಿಯ ಬಿಜೆಪಿ ನಾಯಕರೋರ್ವರ ಆರೋಪವನ್ನು ತಳ್ಳಿಹಾಕಿದರು. ‘ಅಶಾಂತಿಯನ್ನು ಸೃಷ್ಟಿಸಲು ಬಯಸಿರುವವರು ಅವರೇ ಹೊರತು ನಾವಲ್ಲ ಎಂದು ಅವರಿಗೆ ಹೇಳಿ. ನಾವು ಭಾರತದೊಂದಿಗೆ ಇರುವುದಕ್ಕಾಗಿ ಗುಂಡೇಟುಗಳನ್ನು ಎದುರಿಸಿದ್ದೇವೆ; ಅಗತ್ಯವಾದರೆ ಮತ್ತೊಮ್ಮೆ ಅವುಗಳನ್ನು ಎದುರಿಸಲು ಸಿದ್ಧರಿದ್ದೇವೆ,’ ಎಂದರು. ಜಮ್ಮು–ಕಾಶ್ಮೀರದ ಹೊಸ ವಿಭಜನೆಯ ಬೇಡಿಕೆಗಳನ್ನು ತಿರಸ್ಕರಿಸಿದ ಅವರು, ಇಂತಹ ಸಲಹೆಗಳು ಮೂರ್ಖತನ ಮತ್ತು ಅಜ್ಞಾನದಿಂದ ಕೂಡಿವೆ ಎಂದು ಬಣ್ಣಿಸಿದರು. ಲಡಾಖ್ನ ಪ್ರತ್ಯೇಕತೆಯನ್ನು ತನ್ನ ಪಕ್ಷವು ಎಂದಿಗೂ ಬೆಂಬಲಿಸಿರಲಿಲ್ಲ ಎಂದು ಹೇಳಿದ ಅಬ್ದುಲ್ಲಾ, 2019ರಲ್ಲಿ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಿರುವ ಲಡಾಖ್ ಅಂತಿಮವಾಗಿ ಜಮ್ಮು–ಕಾಶ್ಮೀರದೊಂದಿಗೆ ಮತ್ತೆ ಒಂದಾಗುತ್ತದೆ ಎಂಬ ಆಶಯವನ್ನು ವ್ಯಕ್ತಪಡಿಸಿದರು. ಕೇಂದ್ರಾಡಳಿತ ಪ್ರದೇಶ ಜಮ್ಮು–ಕಾಶ್ಮೀರದಲ್ಲಿ ಹೆಚ್ಚುವರಿ ಜಿಲ್ಲೆಗಳ ರಚನೆಯನ್ನು ತಳ್ಳಿಹಾಕಿದ ಅವರು, ಪೀರ್ ಪಾಂಜಾಲ್ ಮತ್ತು ಚೆನಾಬ್ ಕಣಿವೆಗಳಿಗೆ ಪ್ರತ್ಯೇಕ ವಿಭಾಗಗಳ ಬೇಡಿಕೆಗಳನ್ನು ವಿರೋಧಿಸಿದರು.
ದ.ಕ. ಜಿಲ್ಲಾ ಮಾನವ ಅಭಿವೃದ್ಧಿ ವರದಿಗೆ ನಿಖರ ಮಾಹಿತಿ ನೀಡಲು ಜಿಪಂ ಸಿಇಒ ಸೂಚನೆ
ಮಂಗಳೂರು,ಜ.20: ದ.ಕ.ಜಿಲ್ಲಾ ಮಾನವ ಅಭಿವೃದ್ಧಿ ವರದಿ 2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ 2031ರ ವರದಿ ತಯಾರಿಕೆಗೆ ಎಲ್ಲಾ ಇಲಾಖೆಯ ಅಧಿಕಾರಿಗಳು ಮುತುವರ್ಜಿ ವಹಿಸಿ ಮಾಹಿತಿ ನೀಡುವ ಮೂಲಕ ತಮ್ಮ ಕರ್ತವ್ಯವನ್ನು ನಿಭಾಯಿಸಬೇಕು ಎಂದು ದ.ಕ.ಜಿಪಂ ಸಿಇಒ ನರ್ವಾಡೆ ನಾಯಕ ಕಾರ್ಬಾರಿ ಸೂಚಿಸಿದ್ದಾರೆ. ದ.ಕ.ಜಿಪಂನ ನೇತ್ರಾವತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಾನವ ಅಭಿವೃದ್ಧಿ ವರದಿ 2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ 2031ರ ವರದಿಗಳ ತಯಾರಿಕೆ ಕುರಿತ ಜಿಲ್ಲಾ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲಾ ಮಾನವ ಅಭಿವೃದ್ಧಿ ವರದಿಯು ಜಿಲ್ಲೆಯ ಮಾನವ ಅಭಿವೃದ್ಧಿಯ ಸಮಗ್ರ ಚಿತ್ರಣವನ್ನು ನೀಡಿ, ಜನರ ಆಯ್ಕೆ ಗಳನ್ನು ವಿಸ್ತರಿಸುವ ಮೂಲಕ ಸುಸ್ಥಿರ ಅಭಿವೃದ್ಧಿಗೆ ಸಹಾಯ ಮಾಡುತ್ತದೆ. ಜಿಲ್ಲಾ ಮಾನವ ಅಭಿವೃದ್ಧಿ ವರದಿಯು ಜಿಲ್ಲೆಯ ಜನರ ಕಲ್ಯಾಣ, ಶಿಕ್ಷಣ, ಆರೋಗ್ಯ ಮತ್ತು ಆದಾಯದಂತಹ ಅಂಶಗಳನ್ನು ಅಳೆಯುವ ಬಹಳ ಮುಖ್ಯವಾದ ವರದಿಯಾಗಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟದ ಮಾನವ ಅಭಿವೃದ್ಧಿ ಕೇವಲ ಆರ್ಥಿಕ ಬೆಳವಣಿಗೆಯಲ್ಲ. ಅದು ಜನರ ಬೇಡಿಕೆಗಳನ್ನು ಪೂರೈಸುವುದಾಗಿದೆ ಎಂದು ನರ್ವಾಡೆ ನಾಯಕ ಕಾರ್ಬಾರಿ ಹೇಳಿದರು. ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಮಾತನಾಡಿ ಎಲ್ಲಾ ಇಲಾಖೆ ಅಧಿಕಾರಿಗಳು ವರದಿ ತಯಾರಿಕೆ ಪ್ರಕ್ರಿಯೆಗೆ ಸಂಬಂಧಿಸಿದ ಮಾಹಿತಿ ನೀಡುವ ಮೂಲಕ ಜಿಲ್ಲೆಯ ಅಭಿವೃದ್ದಿಗೆ ಸಹಕರಿಸಬೇಕು. ಕರ್ನಾಟಕ ರಾಜ್ಯವು ಮಾನವ ಅಭಿವೃದ್ಧಿ ವರದಿಯಡಿ 11ನೇ ಸ್ಥಾನದಲ್ಲಿದೆ. ಪ್ರತಿಯೊಂದು ಕುಟುಂಬಕ್ಕೆ ಮೂಲಭೂತ ಸೌಕರ್ಯಗಳು ದೊರಕು ವಂತಾಗಬೇಕು. ಈ ನಿಟ್ಟಿನಲ್ಲಿ ಇಲಾಖಾಧಿಕಾರಿಗಳು ನಿಖರ ಮಾಹಿತಿ ನೀಡಿದರೆ ದ.ಕ.ಜಿಲ್ಲೆಯು ಉಳಿದ ಜಿಲ್ಲೆಗಳಿಗಿಂತ ಜಿಲ್ಲಾ ಮಾನವ ಅಭಿವೃದ್ಧಿಯಲ್ಲಿ ಮುಂದುವರಿಯಲಿದೆ ಎಂದು ಹೇಳಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಶ್ರೀನಿವಾಸ್ ರಾವ್ ಭಾಗವಹಿಸಿದ್ದರು. ಈ ಸಂದರ್ಭ ಜಿಪಂ ಮುಖ್ಯ ಯೋಜನಾಧಿಕಾರಿ ಸಂಧ್ಯಾ ಕೆ.ಎಸ್, ಯೋಜನಾ ಅಂದಾಜು ಮತ್ತು ಮೌಲ್ಯ ಮಾಪನಾಧಿಕಾರಿ ಕೆ.ಎಸ್. ಸುಷ್ಮಾ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಪೊರೇಟ್ ಹಿತಾಸಕ್ತಿಗಾಗಿ ಕೇಂದ್ರದಿಂದ ಎಂನರೇಗಾ ದುರ್ಬಲ: ರಾಹುಲ್ ಗಾಂಧಿ
ಹೊಸದಿಲ್ಲಿ, ಜ. 20: ಗೌತಮ್ ಅದಾನಿ ಹಾಗೂ ಮುಖೇಶ್ ಅಂಬಾನಿಯವರಂತಹ ಉದ್ಯಮಿಗಳ ಹಿತಾಸಕ್ತಿಯನ್ನು ಕಾಪಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂನರೇಗಾ) ಯನ್ನು ದುರ್ಬಲಗೊಳಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಆರೋಪಿಸಿದ್ದಾರೆ. ತಮ್ಮ ಲೋಕಸಭಾ ಕ್ಷೇತ್ರವಾದ ಉತ್ತರಪ್ರದೇಶದ ರಾಯ್ ಬರೇಲಿಗೆ ಭೇಟಿ ನೀಡಿದ ಸಂದರ್ಭ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅಧಿಕಾರವನ್ನು ಕೇಂದ್ರೀಕರಣಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂನರೇಗಾ)ಯ ಹೆಸರನ್ನು ಬದಲಾಯಿಸುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಮಹಾತ್ಮಾ ಗಾಂಧಿಗೆ ಅವಮಾನ ಮಾಡಿದೆ. ಜೊತೆಗೆ ದುರ್ಬಲ ವರ್ಗಗಳಿಗೆ ಒದಗಿಸಿದ್ದ ಭದ್ರತೆಯನ್ನು ಹಿಂತೆಗೆದುಕೊಂಡಿದೆ ಎಂದು ಅವರು ಹೇಳಿದರು. ಈ ಕ್ರಮವನ್ನು ಪ್ರಜಾಪ್ರಭುತ್ವದ ಬೇರುಗಳ ಮೇಲಿನ ದಾಳಿ ಎಂದು ರಾಹುಲ್ ಗಾಂಧಿ ವ್ಯಾಖ್ಯಾನಿಸಿದರು. ಎಂನರೇಗಾವನ್ನು ರಕ್ಷಿಸಲು ಕಾಂಗ್ರೆಸ್ ದೇಶವ್ಯಾಪಿ ಚಳುವಳಿ ನಡೆಸುತ್ತಿದೆ. ನಾವು ಕಾರ್ಮಿಕರ ಬೆಂಬಲಕ್ಕೆ ನಿಂತಿದ್ದು, ಅವರ ಹಕ್ಕುಗಳನ್ನು ರಕ್ಷಿಸಲು ಬದ್ಧರಾಗಿದ್ದೇವೆ ಎಂದು ಅವರು ತಿಳಿಸಿದರು. ದೇಶದ ಸಂಪತ್ತು ಗೌತಮ್ ಅದಾನಿ ಹಾಗೂ ಮುಖೇಶ್ ಅಂಬಾನಿಯವರಂತಹ ಕೈಗಾರಿಕೋದ್ಯಮಿಗಳ ಕೈಯಲ್ಲಿ ಕೇಂದ್ರೀಕೃತವಾಗಿರಬೇಕು ಎಂದು ಪ್ರಧಾನಿ ಬಯಸುತ್ತಾರೆ. ಒಂದೆಡೆ ನಾವು ಜನರನ್ನು ರಕ್ಷಿಸುತ್ತಿದ್ದೇವೆ; ಇನ್ನೊಂದೆಡೆ ನರೇಂದ್ರ ಮೋದಿ ಅವರು ದೇಶದ ಸಂಪೂರ್ಣ ಸಂಪತ್ತನ್ನು ಆಯ್ದ ಕೆಲವರಿಗೆ ವರ್ಗಾಯಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದರು.
ಬೀದಿ ನಾಯಿಗಳ ಪ್ರಕರಣದ ಕುರಿತ ಆದೇಶ | ಮನೇಕಾ ಗಾಂಧಿ ಟೀಕೆಗೆ 'ಸುಪ್ರೀಂ' ಅಸಮಾಧಾನ
ಹೊಸದಿಲ್ಲಿ, ಜ. 20: ಬೀದಿ ನಾಯಿಗಳ ಪ್ರಕರಣದ ಕುರಿತ ತನ್ನ ಆದೇಶವನ್ನು ಟೀಕಿಸಿ ಮಾಜಿ ಸಚಿವೆ ಮನೇಕಾ ಗಾಂಧಿ ನೀಡಿದ ಹೇಳಿಕೆಗೆ ಸುಪ್ರೀಂ ಕೋರ್ಟ್ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿದೆ. ಮನೇಕಾ ಗಾಂಧಿಯವರು ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ನ್ಯಾಯಾಲಯ ಹೇಳಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ನಾಥ್, ಸಂದೀಪ್ ಮೆಹ್ತಾ ಹಾಗೂ ಎನ್.ವಿ. ಅಂಜಾರಿಯಾ ಅವರ ಪೀಠ, ಮಾಜಿ ಸಚಿವೆ ಮನೇಕಾ ಗಾಂಧಿ ಅವರು ಯೋಚಿಸದೆ ಪ್ರತಿಯೊಬ್ಬರ ವಿರುದ್ಧ ಎಲ್ಲಾ ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ ಎಂದು ತಿಳಿಸಿದೆ. ಮನೇಕಾ ಗಾಂಧಿ ಅವರ ಪರವಾಗಿ ಹಾಜರಾದ ಹಿರಿಯ ನ್ಯಾಯವಾದಿ ರಾಜು ರಾಮಚಂದ್ರನ್ ಅವರನ್ನು ಪ್ರಶ್ನಿಸಿದ ಪೀಠ, “ನ್ಯಾಯಾಲಯ ತನ್ನ ಆದೇಶಗಳಲ್ಲಿ ಜಾಗರೂಕರಾಗಿರಬೇಕು ಎಂದು ನೀವು ಹೇಳಿದ್ದೀರಿ. ಆದರೆ, ಅವರು ಯಾವ ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ ಎಂದು ನೀವು ನಿಮ್ಮ ಕಕ್ಷಿದಾರರಲ್ಲಿ ಕೇಳಿದ್ದೀರಾ? ನೀವು ಅವರ ಪಾಡ್ಕಾಸ್ಟ್ ಕೇಳಿದ್ದೀರಾ? ಅವರು ಯಾವುದೇ ರೀತಿಯಲ್ಲಿ ಆಲೋಚನೆ ಮಾಡದೆ ಪ್ರತಿಯೊಬ್ಬರ ವಿರುದ್ಧ ಎಲ್ಲಾ ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ. ನೀವು ಅವರ ದೇಹಭಾಷೆಯನ್ನು ನೋಡಿದ್ದೀರಾ?” ಎಂದು ಪ್ರಶ್ನಿಸಿತು. ಆದರೆ, ಔದಾರ್ಯದ ಕಾರಣಕ್ಕಾಗಿ ನ್ಯಾಯಾಲಯ ಮನೇಕಾ ಗಾಂಧಿ ಅವರ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರಣೆ ನಡೆಸುವುದಿಲ್ಲ ಎಂದು ಪೀಠ ಸ್ಪಷ್ಟಪಡಿಸಿತು. ಬೀದಿ ನಾಯಿಗಳ ಸಮಸ್ಯೆ ಪರಿಹರಿಸಲು ಮನೇಕಾ ಗಾಂಧಿ ಅವರು ಬಜೆಟ್ನಲ್ಲಿ ಎಷ್ಟು ಹಣ ಮಂಜೂರು ಮಾಡಿದ್ದಾರೆ ಎಂದು ಸುಪ್ರೀಂ ಕೋರ್ಟ್ ನ್ಯಾಯವಾದಿ ರಾಜು ರಾಮಚಂದ್ರನ್ ಅವರನ್ನು ಪ್ರಶ್ನಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ರಾಜು ರಾಮಚಂದ್ರನ್, ತಾನು ಭಯೋತ್ಪಾದಕ ಅಜ್ಮಲ್ ಕಸಬ್ ಪರವಾಗಿಯೂ ನ್ಯಾಯಾಲಯದಲ್ಲಿ ಹಾಜರಾಗಿದ್ದೆ ಎಂದು ಹೇಳಿದರು ಹಾಗೂ ಇದು ಬಜೆಟ್ ಅನುದಾನ ನೀತಿಗೆ ಸಂಬಂಧಿಸಿದ ವಿಷಯ ಎಂದು ತಿಳಿಸಿದರು. ಇದಕ್ಕೆ ಉತ್ತರಿಸಿದ ನ್ಯಾಯಮೂರ್ತಿಗಳು, “ಅಜ್ಮಲ್ ಕಸಬ್ ನ್ಯಾಯಾಂಗ ನಿಂದನೆ ಮಾಡಿಲ್ಲ. ಆದರೆ, ನಿಮ್ಮ ಕಕ್ಷಿದಾರರು ನ್ಯಾಯಾಂಗ ನಿಂದನೆ ಮಾಡಿದ್ದಾರೆ,” ಎಂದು ಹೇಳಿದರು.
ನೋಯ್ಡಾದಲ್ಲಿ ಕಾರು ಗುಂಡಿಗೆ ಬಿದ್ದು ಟೆಕ್ಕಿ ಮೃತ್ಯು: ಬಿಲ್ಡರ್ ಬಂಧನ
ನೋಯ್ಡಾ, ಜ. 20: ನಿರ್ಮಾಣ ಕಾರ್ಯಕ್ಕಾಗಿ ಅಗೆಯಲಾಗಿದ್ದ, ನೀರಿನಿಂದ ತುಂಬಿದ್ದ 20 ಅಡಿ ಆಳದ ಗುಂಡಿಗೆ ಕಾರು ಸಹಿತ ಬಿದ್ದು ಸಾಫ್ಟ್ವೇರ್ ಇಂಜಿನಿಯರ್ ಯುವರಾಜ ಮೆಹ್ತಾ (27) ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಲ್ಡರ್ ಒಬ್ಬನನ್ನು ಬಂಧಿಸಿರುವುದಾಗಿ ನೋಯ್ಡಾ ಪೊಲೀಸರು ತಿಳಿಸಿದ್ದಾರೆ. ವಿಷ್ಟೌನ್ ಪ್ಲ್ಯಾನರ್ಸ್ ಪ್ರೈ.ಲಿ. ಮಾಲೀಕರಲ್ಲೊಬ್ಬನಾದ ಅಭಯ ಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದು, ಇನ್ನೊಬ್ಬ ಮಾಲೀಕ ಮನೀಷ್ ಕುಮಾರ್ ಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. 2021ರಲ್ಲಿ ನೋಯ್ಡಾದ ಸೆಕ್ಟರ್ 150ರಲ್ಲಿ ಮಾಲ್ ಒಂದರ ಬೇಸ್ಮೆಂಟ್ ನಿರ್ಮಾಣಕ್ಕಾಗಿ 20 ಅಡಿ ಆಳದ ಗುಂಡಿಯನ್ನು ಅಗೆಯಲಾಗಿತ್ತು. ಆದರೆ ನಂತರ ಅದು ನೀರಿನಿಂದ ತುಂಬಿತ್ತು. ಯುವರಾಜ ಸಾವಿನ ಬಳಿಕ ಅವರ ತಂದೆಯ ದೂರಿನ ಮೇರೆಗೆ ವಿಷ್ಟೌನ್ ಪ್ಲ್ಯಾನರ್ಸ್ ಮತ್ತು ಲೋಟಸ್ ಗ್ರೀನ್ಸ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ತಾನು 2019–20ರಲ್ಲಿ ನೋಯ್ಡಾ ಪ್ರಾಧಿಕಾರದ ಅನುಮತಿಯೊಂದಿಗೆ ಯೋಜನೆಯನ್ನು ವಿಷ್ಟೌನ್ ಪ್ಲ್ಯಾನರ್ಸ್ ಮತ್ತು ಗೃಹಪ್ರವೇಶ ಗ್ರೂಪ್ಗೆ ಮಾರಾಟ ಮಾಡಿದ್ದಾಗಿ ಲೋಟಸ್ ಗ್ರೀನ್ಸ್ ನಂತರ ಹೇಳಿಕೊಂಡಿತ್ತು. ಸೋಮವಾರ ಉತ್ತರ ಪ್ರದೇಶ ಸರ್ಕಾರವು ನೋಯ್ಡಾ ಪ್ರಾಧಿಕಾರದ ಸಿಇಒ ಲೋಕೇಶ್ ಎಂ. ಅವರನ್ನು ಹುದ್ದೆಯಿಂದ ವಜಾಗೊಳಿಸಿತ್ತು ಹಾಗೂ ಯುವರಾಜ ಸಾವಿನ ಕುರಿತು ತನಿಖೆಗಾಗಿ ವಿಶೇಷ ತನಿಖಾ ತಂಡ ರಚಿಸಲು ಆದೇಶಿಸಿತ್ತು. ರವಿವಾರ ಲೋಕೇಶ್ ಅವರು ಜ್ಯೂನಿಯರ್ ಇಂಜಿನಿಯರ್ ಒಬ್ಬರನ್ನು ವಜಾಗೊಳಿಸಿದ್ದರು. ಜೊತೆಗೆ ಸೆಕ್ಟರ್ 150ರಲ್ಲಿ ರಸ್ತೆ ಮತ್ತು ಸಂಚಾರ ಸಂಬಂಧಿತ ಕೆಲಸಗಳ ಮೇಲ್ವಿಚಾರಣೆಯ ಹೊಣೆಗಾರಿಕೆ ಹೊಂದಿದ್ದ ಇತರ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ಗಳನ್ನು ಜಾರಿಗೊಳಿಸಿದ್ದರು. ಶನಿವಾರ ಬೆಳಗಿನ ಜಾವ ಮನೆಗೆ ಮರಳುತ್ತಿದ್ದ ಯುವರಾಜ ಚಲಾಯಿಸುತ್ತಿದ್ದ ಕಾರು ದಟ್ಟ ಮಂಜಿನಿಂದಾಗಿ ರಸ್ತೆಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದು ನೀರಿನಿಂದ ತುಂಬಿದ್ದ ಗುಂಡಿಯಲ್ಲಿ ಬಿದ್ದಿತ್ತು. ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದರೂ, ಸುಮಾರು 90 ನಿಮಿಷಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ ಯುವರಾಜನನ್ನು ರಕ್ಷಿಸಲು ಸಾಧ್ಯವಾಗದೆ ಅವರು ಮೃತಪಟ್ಟಿದ್ದರು.
ವೆನ್ಲಾಕ್ ಆಸ್ಪತ್ರೆಯ ಒಪಿಡಿ ಕಟ್ಟಡ ನಿರ್ಮಾಣ: 35 ಕೋಟಿ ರೂ.ಮೊತ್ತದ ಕಾಮಗಾರಿಗೆ ಸರಕಾರದ ಆಡಳಿತಾತ್ಮಕ ಅನುಮೋದನೆ
ಮಂಗಳೂರು, ಜ.20: ನಗರದ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ವೆನ್ಲಾಕ್ ಆಸ್ಪತ್ರೆಯಲ್ಲಿ ಹೊರ ರೋಗಿ ವಿಭಾಗ (ಒಪಿಡಿ) ಕಟ್ಟಡದ 35 ಕೋಟಿ ರೂ. ವೆಚ್ಚದ ಮೊದಲ ಹಂತದ ಕಾಮಗಾರಿಗೆ ಸರಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಸರಕಾರ ಬಜೆಟ್ನಲ್ಲಿ ಘೋಷಿಸಿರುವಂತೆ 70 ಕೋಟಿ ರೂ. ವೆಚ್ಚದಲ್ಲಿ ಒಪಿಡಿ ಬ್ಲಾಕ್ ನಿರ್ಮಾಣದ ಮೊದಲ ಹಂತದ ಕಾಮಗಾರಿಗೆ 35 ಕೋಟಿ ರೂ. ಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆಯೊಂದಿಗೆ ಟೆಂಡರ್ ಆಹ್ವಾನಿಸಲು ಅನುಮತಿ ನೀಡಲಾಗಿದೆ ಎಂದು ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಪ್ರಭಾಕರ ಟಿ. ಜ.19ರಂದು ಹೊಡರಡಿಸಿರುವ ಆದೇಶ ತಿಳಿಸಿದೆ. ರಾಜ್ಯ ಸರಕಾರ 2025-26ನೇ ಸಾಲಿನ ಆಯವ್ಯಯ ಕಂಡಿಕೆ-138(3) ರಲ್ಲಿ ಮಾಲೂರು, ಮಾಗಡಿ, ಕುಶಾಲನಗರ, ಕೊರಟೆಗೆರೆ,ಜಗಳೂರು ಸವಣೂರು, ರಾಮದುರ್ಗ ಮತ್ತು ಸವದತ್ತಿ ತಾಲೂಕು ಮಟ್ಟದ ಆಸ್ಪತ್ರೆಗಳು, ದಾವಣಗೆರೆ ಜಿಲ್ಲಾಸ್ಪತ್ರೆ ಮತ್ತು ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯನ್ನು ಒಟ್ಟು 650 ಕೋಟಿ ರೂ. ವೆಚ್ಚದಲ್ಲಿ ನವೀಕರಣ ಮಾಡುವುದಾಗಿ ಸರಕಾರ ಬಜೆಟ್ನಲ್ಲಿ ಘೋಷಿಸಿತ್ತು.
ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೃತ್ಯು
ಕಾಪು, ಜ.20: ಮೀನುಗಾರಿಕೆ ಸಂದರ್ಭ ಬೋಟಿನಿಂದ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದ ಮೀನುಗಾರರೊಬ್ಬರ ಮೃತದೇಹ ಉದ್ಯಾವರ ಗ್ರಾಮದ ಪಡುಕೆರೆಯ ಪಾಪನಾಶಿನಿ ಹೊಳೆಯಲ್ಲಿ ಜ.19ರಂದು ಸಂಜೆ ವೇಳೆ ಪತ್ತೆಯಾಗಿದೆ. ಮೃತರನ್ನು ಕೋಟತಟ್ಟು ಮಧುವನ ನಿವಾಸಿ ಮಂಜುನಾಥ(61) ಎಂದು ಗುರುತಿಸಲಾಗಿದೆ. ಇವರು ಜ.17ರಂದು ಬೋಟಿನಲ್ಲಿ ಮೀನುಗಾರಿಕೆ ಕೆಲಸಕ್ಕೆ ತೆರಳಿದ್ದು, ಜ.18ರಂದು ವಾಪಾಸ್ಸು ಮಲ್ಪೆಯ ಬಂದರಿಗೆ ಬರುವಾಗ ಆಕಸ್ಮಿಕ ವಾಗಿ ಸಮುದ್ರದ ನೀರಿಗೆ ಬಿದ್ದು ನಾಪತ್ತೆಯಾಗಿದ್ದರು. ಇವರ ಮೃತದೇಹ ಜ.19ರಂದು ಸಂಜೆ ಪಡುಕೆರೆಯ ಪಾಪನಾಶಿನಿ ಹೊಳೆಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರ್ಯಾಯದಲ್ಲಿ ಅಸಂವಿಧಾನಿಕ ಕೃತ್ಯ ಎಸಗಿರುವ ಉಡುಪಿ ಡಿಸಿ ವಿರುದ್ಧ ಕ್ರಮಕ್ಕೆ ಸಹಬಾಳ್ವೆ ಆಗ್ರಹ
ಉಡುಪಿ, ಜ.20: ಉಡುಪಿ ಪರ್ಯಾಯ ಉತ್ಸವದಲ್ಲಿ ಭಾಗವಹಿಸಿದ ಉಡುಪಿಯ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆರ್ಎಸ್ಎಸ್ ಸಂಘಟನೆಯ ಧ್ವಜವನ್ನು ಹಿಡಿದು, ಬೀಸುತ್ತಾ ಪುರ ಪ್ರವೇಶಕ್ಕೆ ಸ್ವಾಗತ ನೀಡಿದ್ದು, ಜವಾಬ್ದಾರಿಯುತ ಸ್ಥಾನದಲ್ಲಿರುವ ಡಿಸಿಯ ಈ ವರ್ತನೆ ಖಂಡನೀಯ. ಜಿಲ್ಲಾಧಿಕಾರಿ ಸಂವಿಧಾನ ನಿಯಮಬಾಹಿರ ವರ್ತನೆಯನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಸಹಬಾಳ್ವೆ ಉಡುಪಿ ಆಗ್ರಹಿಸಿದೆ. ಜಿಲ್ಲಾಧಿಕಾರಿಯವರಾಗಲೀ ಜಿಲ್ಲಾಡಳಿತದ ಭಾಗವಾಗಿರುವ ಯಾವುದೇ ನೌಕರರು ಇರಲೀ, ಸಾರ್ವಜನಿಕವಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸು ವಾಗ ಸಂವಿಧಾನದ ನಿಯಮಗಳ ಒಳಗೆ ನಡೆದುಕೊಳ್ಳಬೇಕು. ಅದನ್ನು ಉಲ್ಲಂಘಿಸಿದರೆ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಲೇ ಬೇಕು. ತಮ್ಮ ಸಂವಿಧಾನ ವಿರೋಧಿ ನಡೆಗೆ ಸಮರ್ಥನೆಯಾಗಿ ಸ್ವರೂಪ, ತಾವು ಕಾರ್ಯಕ್ರಮದಲ್ಲಿ ಜಿಲ್ಲಾಡಳಿತದ ಪರವಾಗಿ, ನಾಗರಿಕ ಸ್ವಾಗತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ ಹೊರತು, ಅದರಲ್ಲಿ ಬೇರೆ ರಾಜಕೀಯ ಹಿತಾಸಕ್ತಿ ಇರಲಿಲ್ಲ ಎಂದಿದ್ದಾರೆ. ಜಿಲ್ಲಾಧಿಕಾರಿ ಜಿಲ್ಲಾಡಳಿತದ ಪರವಾಗಿ ಭಾಗವಹಿಸಿದಾಗ, ಸಂವಿಧಾನಿಕ ನಿಯಮಗಳನ್ನು ಪಾಲಿಸಬೇಕು ಎಂಬ ಜಾಗೃತಿ ಇಟ್ಟುಕೊಳ್ಳಬೇಕಿತ್ತು. ಯಾರೋ ದೊಣ್ಣೆ ನಾಯಕರು, ಸಂವಿಧಾನ ವಿರೋಧಿ, ಮತ ವಿಭಜಕ ಸಂಘಟನೆಯ ಧ್ವಜವನ್ನು ಮೆರೆಸಲು ಕುಮ್ಮಕ್ಕು ಕೊಟ್ಟರೆ, ತಮ್ಮ ಸ್ಥಾನಮಾನದ ಘನತೆ ತೋರಿ ನಿರಾಕರಿಸಬೇಕಿತ್ತು. ಅದನ್ನು ಬಿಟ್ಟು, ಈ ಬಗೆಯಲ್ಲಿ ವರ್ತಿಸಿದ್ದೇ ಅಲ್ಲದೇ, ತಮ್ಮ ನಡೆಯನ್ನು ತಮ್ಮ ಸ್ಥಾನವನ್ನು ಮುಂದು ಮಾಡಿ ಸಮರ್ಥಿಸಿಕೊಳ್ಳುವುದು ಜಿಲ್ಲೆಯ ಶಾಂತಿ ಭಂಜಕ ಶಕ್ತಿಗಳಿಗೆ ಏನು ಸಂದೇಶ ಕೊಡುತ್ತದೆ. ನಿರಂತರ ಹಲ್ಲೆಗೆ ತುತ್ತಾಗುತ್ತಿರುವ ಜನ ಸಮುದಾಯಗಳಿಗೆ ಯಾವ ರೀತಿಯ ಆತಂಕ ಹುಟ್ಟಿಸುತ್ತದೆ ಎಂಬ ಅರಿವು ಜಿಲ್ಲಾಧಿಕಾರಿಯ ವರಿಗೆ ಇದ್ದಂತಿಲ್ಲ ಎಂದು ಸಮಿತಿಯ ಪ್ರಧಾನ ಸಂಚಾಲಕ ಕೆ.ಫಣಿರಾಜ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
VB-G RAM G ಹೆಸರಲ್ಲಿ ಬಡವರಿಗೆ ಮೋಸ: ಬಿಜೆಪಿ ವಿರುದ್ಧ ಆಯೇಷಾ ಫರ್ಝಾನ ವಾಗ್ದಾಳಿ
ಕಲಬುರಗಿ: VB-G RAM G ಯೋಜನೆ ಹೆಸರಿನಲ್ಲಿ ಬಿಜೆಪಿ ಸರಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ ಎಂದು ಕೆಪಿಸಿಸಿ ವಕ್ತಾರೆ ಆಯೇಷಾ ಫರ್ಝಾನ್ ಹೇಳಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯೇಷಾ ಫರ್ಝಾನ್, ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಕಿತ್ತುಹಾಕಿದ ಬಿಜೆಪಿ ಬಡವರ ಅನ್ನ ಕಸಿದುಕೊಂಡಿದೆ. ಈ ಕರಾಳ ಕಾಯ್ದೆಯ ವಿರುದ್ಧ ದೇಶಾದ್ಯಂತ ಹೋರಾಟ ಕೈಗೊಳ್ಳಲಾಗುತ್ತಿದೆ ಎಂದರು. ಕೇಂದ್ರ ಸರಕಾರ ರಾಮನ ಹೆಸರಿನಲ್ಲಿ ದೇಶದ ಜನರಲ್ಲಿ ಭಾವನಾತ್ಮಕವಾಗಿ ಆಟವಾಡುತ್ತಿದೆ. ರಾಮನ ಹೆಸರಿನಲ್ಲಿ ಮೋಸದ ಕೆಲಸ ಮಾಡುತ್ತಿದೆ. ಯುಪಿಎ ಸರಕಾರವಿದ್ದಾಗ ಜಾರಿಗೊಳಿಸಿದ್ದ ನರೇಗಾ ಯೋಜನೆಯು ದೇಶದ ಬಡವರ ಹೊಟ್ಟೆ ತುಂಬಿಸುವ ಕೆಲಸ ಮಾಡಿತ್ತು. ಆದರೆ ಬಿಜೆಪಿ ಜಿಎಸ್ಟಿ, ಬೆಲೆ ಏರಿಕೆ, ನೋಟ್ ಬ್ಯಾನ್ ಮತ್ತಿತ್ತರ ವಿಷಯಗಳಿಂದ ಜನರನ್ನು ಮೂರ್ಖತನ್ನಾಗಿಸುತ್ತಿದೆ. ಇದರ ಬಗ್ಗೆ ಜನರು ಜಾಗೃತರಾಗಬೇಕೆಂದು ಕರೆ ನೀಡಿದರು. ಹೊಸ ಕಾಯ್ದೆಯ ಕುರಿತು ಸಂಸತ್ತಿನಲ್ಲಿ ಯಾವುದೇ ರೀತಿಯ ಚರ್ಚೆ ನಡೆಸದೆ ಬಿಜೆಪಿ ಜಾರಿ ಮಾಡಿದೆ. ಇದೊಂದು ಪ್ರಜಾಪ್ರಭುತ್ವದ ವಿರೋಧಿ ಧೋರಣೆಯಾಗಿದೆ. ನೂರು ದಿನದ ಉದ್ಯೋಗ ಖಾತ್ರಿಯನ್ನು 125 ದಿನಕ್ಕೆ ಹೆಚ್ಚಿಸುವುದಾಗಿ ಹೇಳುತ್ತಾ ರಾಜ್ಯ ಸರಕಾರಗಳ ಮೇಲೆ ಶೇಕಡಾ 40ರಷ್ಟು ಭಾರ ಹಾಕುತ್ತಿದೆ. ಮೊದಲೇ ಆರ್ಥಿಕ ಕಷ್ಟದಲ್ಲಿರುವ ರಾಜ್ಯಗಳಿಗೆ ಇದು ದೊಡ್ಡ ಹೊಡೆತವಾಗಲಿದೆ ಎಂದು ಹೇಳಿದ್ದಾರೆ. ನೂತನ ಕಾಯ್ದೆ ಜಾರಿಗೊಳಿಸುತ್ತಿರುವುದನ್ನು ಖಂಡಿಸಿ ಇದೇ ಜ.27ರಿಂದ ಫೆಬ್ರುವರಿ 7ರವರೆಗೆ ತಾಲೂಕಾ ಮಟ್ಟದಲ್ಲಿ, ಜ.31ರಿಂದ ಫೆಬ್ರವರಿ 6ರವರೆಗೆ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಸರಕಾರದ ನೀತಿ ವಿರುದ್ಧ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ, ಶಹನಾಜ್ ಅಖ್ತರ್ ಉಪಸ್ಥಿತರಿದ್ದರು.
121 ದಿನಕ್ಕೆ ಬೈಂದೂರು ರೈತರ ಹೋರಾಟ: ಬೈಕ್ ಜಾಥಾ
ಬೈಂದೂರು, ಜ.20: ರೈತರಿಗೆ ನ್ಯಾಯ ನೀಡಲು ಸರಕಾರದ ಮಟ್ಟದಲ್ಲಿ ಸಚಿವರು ಸಮ್ಮತಿ ನೀಡಿದರೂ ಅಧಿಕಾರಿಗಳು ಅನಗತ್ಯ ವಿಳಂಬ ಮಾಡುತ್ತಿದ್ದಾರೆ. ಈ ಕುರಿತು ಈ ಜಿಲ್ಲೆಯ ನಾಯಕರು ಒಮ್ಮತದಿಂದ ರೈತರ ಪರ ಧ್ವನಿ ಎತ್ತಬೇಕು ಎಂದು ಬೈಂದೂರು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಆಗ್ರಹಿಸಿದ್ದಾರೆ. ಗ್ರಾಮೀಣ ಭಾಗಗಳನ್ನು ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಕೈಬಿಡಬೇಕೆಂದು ಆಗ್ರಹಿಸಿ ಬೈಂದೂರು ತಾಲೂಕು ಆಡಳಿತ ಸೌಧದ ಎದುರು ಬೈಂದೂರು ರೈತ ಸಂಘದ ಮುಂದಾಳತ್ವದಲ್ಲಿ ನಡೆಯುತ್ತಿರುವ 121 ದಿನದ ಪ್ರತಿಭಟನೆ ಪ್ರಯುಕ್ತ ಮಂಗಳವಾರ ಬೈಕ್ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡುತಿದ್ದರು. ಮರಳುಗಾರಿಕೆಯಲ್ಲಿ ರಾಜಕೀಯ ಮರೆತು ಹೊಂದಾಣಿಕೆ ಮಾಡಿಕೊಳ್ಳುವ ನಾಯಕರು ರೈತರಿಗೆ ನ್ಯಾಯ ಕೊಡಲು ಮಾತ್ರ ಒಗ್ಗಟ್ಟು ತೋರಿಸುತ್ತಿಲ್ಲ. ರೈತರ ವಿಚಾರದಲ್ಲಿ ಅನ್ಯಾಯ ಮಾಡಿದರೆ ನಿಮ್ಮ ಭವಿಷ್ಯ ನಿರ್ನಾಮ ವಾಗುತ್ತದೆ ಎಂದು ಅವರು ಆರೋಪಿಸಿದರು. ಕೆಆರ್ಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ರಘುಪತಿ ಮಾತನಾಡಿ, ಉಡುಪಿ ಜಿಲ್ಲಾಡಳಿತ ಆಡಳಿತ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಈ ಜಿಲ್ಲೆಯ ಜಿಲ್ಲಾಧಿಕಾರಿ ನೂರು ದಿವಸ ರೈತರು ಬೀದಿಯಲ್ಲಿ ಕುಳಿತರು ಕನಿಷ್ಠ ಮಾತನಾ ಡಿಸುವ ಸೌಜನ್ಯವಿಲ್ಲದೆ ರಾಜಕೀಯ ಮುಖಂಡರ ಕೈಗೊಂಬೆಯಾಗಿದ್ದಾರೆ. ರೈತರು ನ್ಯಾಯಕ್ಕಾಗಿ ಆಗ್ರಹಿಸಿದರೆ ಜಿಲ್ಲಾಡಳಿತ ಮತ್ತು ರಾಜಕೀಯ ವ್ಯವಸ್ಥೆ ಬೈಂದೂರು ಉತ್ಸವದ ಸಿದ್ದತೆಯಲ್ಲಿರುವುದು ಇವರ ಮಾನಸಿಕ ದಿವಾಳಿತನವನ್ನು ಬಿಂಬಿಸುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಬೇಡಿಕೆಗಳಿಗೆ ಸ್ಪಂಧಿಸುವುದು ಜನಪ್ರತಿನಿಧಿಗಳ ಜವಬ್ದಾರಿಯಾಗಿದೆ ಎಂದರು. ಖಂಬದಕೋಣೆ ರೈತರ ಸೇವಾ ಸಹಾಕರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಬೈಂದೂರು ಗ್ರಾ.ಪಂ ಮಾಜಿ ಸದಸ್ಯ ಗಣೇಶ ಪೂಜಾರಿ, ನಾಗಪ್ಪ ಮರಾಠಿ, ಲಿಮೋನ್ ಬೈಂದೂರು, ಪದ್ಮಾಕ್ಷ ಗೋಳಿಬೇರು, ಹಿರಿಯರಾದ ಹೆರಿಯಣ್ಣ ಪೂಜಾರಿ ಗೋಳಿಬೇರು, ಸುಭಾಷ್ ಗಂಗನಾಡು, ಕೇಶವ ಪೂಜಾರಿ ಅಂತಾರ್, ರೈತ ಮುಖಂಡರು, ಗ್ರಾಮೀಣ ಭಾಗದ ರೈತರು ಹಾಗೂ ಕೆಆರ್ಎಸ್ ಪಕ್ಷದ ಸದಸ್ಯರು ಉಪಸ್ಥಿತರಿದ್ದರು. ಅರುಣ್ ಕುಮಾರ್ ಶಿರೂರು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿ ದರು. ಈ ಸಂದರ್ಭದಲ್ಲಿ ಬೈಂದೂರು ತಾಲೂಕು ಆಡಳಿತ ಸೌಧದಿಂದ ಕಿರಿಮಂಜೇಶ್ವರದವರೆಗೆ ಬೈಕ್ ಜಾಥಾ ನಡೆಸಲಾಯಿತು. ಜಾಥಾದಲ್ಲಿ ನೂರಾರು ರೈತರು ಭಾಗವಹಿಸಿದ್ದರು.
ಜ.21ರಂದು ಪೋಕ್ಸೋ, ಬಾಲನ್ಯಾಯ ಕಾಯ್ದೆ ಕುರಿತು ತರಬೇತಿ ಕಾರ್ಯಕ್ರಮ
ಉಡುಪಿ, ಜ.20: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಪೋಕ್ಸೋ ಕಾಯ್ದೆ ಹಾಗೂ ಬಾಲನ್ಯಾಯ ಕಾಯ್ದೆ ಕುರಿತು ಮಕ್ಕಳು ಹಾಗೂ ಮಕ್ಕಳ ರಕ್ಷಣಾಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ಜ.21ರಂದು ಬೆಳಗ್ಗೆ 10 ಗಂಟೆಗೆ ಮಣಿಪಾಲದ ಜಿಲ್ಲಾ ಪಂಚಾಯತ್ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ. ಉದ್ಘಾಟಿಸಲಿದ್ದು, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೋಕೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಕ್ಕಳ ವಿಶೇಷ ಪೊಲೀಸ್ ಘಟಕದ ಹಿರಿಯ ಮಕ್ಕಳ ಕಲ್ಯಾಣಾಧಿಕಾರಿ ಪ್ರಭು ಡಿ.ಟಿ, ಮಕ್ಕಳ ಕಲ್ಯಾಣ ಸಮಿತಿಯ ಜಿಲ್ಲಾ ಅಧ್ಯಕ್ಷೆ ಜೂಹಿ ದಾಮೋದರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅನುರಾಧ ಹಾದಿಮನಿ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ಉಪನಿರ್ದೇಶಕ ಮಾರುತಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಗೋಲ್ಡನ್ ಅವರ್ನಲ್ಲಿ ದೂರು ಕೊಟ್ಟ ಸಂತ್ರಸ್ತ; ಸೈಬರ್ ವಂಚಕರಿಂದ 2 ಕೋಟಿ ರೂ. ವಾಪಸ್ ಕೊಡಿಸಿದ ಬೆಂಗಳೂರು ಪೊಲೀಸ್!
ಸೈಬರ್ ಪೊಲೀಸರು 2.16 ಕೋಟಿ ರೂ. ವಂಚನೆಯನ್ನು ಯಶಸ್ವಿಯಾಗಿ ಭೇದಿಸಿದ್ದಾರೆ. ಇ-ಮೇಲ್ ಸ್ಪೂಫಿಂಗ್ ಮೂಲಕ ಹಣ ಕಳೆದುಕೊಂಡಿದ್ದ ರೆಡ್ಡೀಸ್ ಲ್ಯಾಬೋರೇಟರೀಸ್ ಗೆ ಪೊಲೀಸರು ಸಹಾಯ ಮಾಡಿದ್ದಾರೆ. ಗೋಲ್ಡನ್ ಅವರ್ ನಲ್ಲಿ ದೂರು ನೀಡಿದ್ದರಿಂದ ಹಣವನ್ನು ವಾಪಸ್ ಪಡೆಯಲು ಸಾಧ್ಯವಾಯಿತು. ವಂಚಕರು ನೈಜೀರಿಯಾದಿಂದ ಕಾರ್ಯಾಚರಣೆ ನಡೆಸಿದ್ದರು. ಪೊಲೀಸರು ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿ ಹಣವನ್ನು ವಾರಸುದಾರರಿಗೆ ನೀಡಿದ್ದಾರೆ.
ಧ್ವಜ ವಿವಾದ| ಕೇಸರಿ ಧ್ವಜ ಹಾರಿಸದೇ ಕಾಂಗ್ರೆಸ್ ಧ್ವಜ ಹಾರಿಸಬೇಕಿತ್ತೇ?: ಸುನಿಲ್ ಕುಮಾರ್ ಪ್ರಶ್ನೆ
ಕಾರ್ಕಳ, ಜ.20: ಉಡುಪಿ ಪರ್ಯಾಯದ ಮೆರವಣಿಗೆಯಲ್ಲಿ ಕೇಸರಿ ಧ್ವಜ ಹಾರಿಸದೇ ಕಾಂಗ್ರೆಸ್ ಬಾವುಟ ಪ್ರದರ್ಶನ ಮಾಡಬೇಕಿತ್ತೇ ? ಎಂದು ಮಾಜಿ ಸಚಿವ ವಿ ಸುನೀಲ್ ಕುಮಾರ್ ಪರ್ಯಾಯ ಮೆರವಣಿಗೆಯಲ್ಲಿ ಧ್ವಜ ವಿವಾದಕ್ಕೆ ಪ್ರತಿಕ್ರಿಯಿಸುತ್ತಾ ಪ್ರಶ್ನಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆಯೊಂದನ್ನು ಬಿಡುಗಡೆಗೊಳಿರುವ ಅವರು ಉಡುಪಿ ಪರ್ಯಾಯದಲ್ಲಿ ಭಾಗವಹಿಸಿದ ಜಿಲ್ಲಾಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಪ್ರಕರಣ ಕಾಂಗ್ರೆಸ್ ನಾಯಕರ ಕ್ಷುದ್ರ ಮನಸ್ಥಿತಿಗೆ ಇದು ಕೈಗನ್ನಡಿ. ಹಿಂದು ಧಾರ್ಮಿಕ ಕಾರ್ಯಕ್ರಮದಲ್ಲಿ ಕೇಸರಿ ಧ್ವಜವನ್ನು ಬಿಟ್ಟು ಕಾಂಗ್ರೆಸ್ ಅಥವಾ ಹಸಿರು ಧ್ವಜ ಪ್ರದರ್ಶಿಸುವುದು ಮಾತ್ರ ಧರ್ಮ ನಿರಪೇಕ್ಷತೆಯೇ ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಮಾನವ ಹಕ್ಕು ಹಾಗೂ ಕಾನೂನು ವಿಭಾಗದ ಅಧ್ಯಕ್ಷ ಹರೀಶ್ ಶೆಟ್ಟಿ ಸಿಎಂ ಹಾಗೂ ಡಿಸಿಎಂಗೆ ಪತ್ರ ಬರೆದು ಡಿಸಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ. ಉಡುಪಿ ಪರ್ಯಾಯ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿಗಳು ಮೊದಲಿನಿಂದಲೂ ಭಾಗವಹಿಸಿದ್ದನ್ನು ನಾವು ನೋಡಿದ್ದೇವೆ. ಆದರೆ ಈ ಬಾರಿ ಮಾತ್ರ ಕಾಂಗ್ರೆಸ್ ಕಣ್ಣಿಗೆ ಅದ್ಯಾವ ಲೋಪ ಕಂಡಿತು ? ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದು ಆಚರಣೆಗಳಲ್ಲಿ ತಪ್ಪು ಹುಡುಕುವುದೇ ಕಾಂಗ್ರೆಸ್ಗೆ ಚಟವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
West Bengal: ವ್ಯಕ್ತಿ ಮೃತಪಟ್ಟ ಘಟನೆಗೆ S I R ನೋಟಿಸ್ ಕಾರಣ: ಕುಟುಂಬ ಆರೋಪ
ಕೋಲ್ಕತಾ, ಜ. 20: ಪಶ್ಚಿಮಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಜಲಂಗಿಯಲ್ಲಿ 50 ವರ್ಷದ ವ್ಯಕ್ತಿಯೋರ್ವರು ಮಂಗಳವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಸಂಬಂಧಿತ ನೋಟಿಸ್ನಿಂದ ಉಂಟಾದ ತೀವ್ರ ಮಾನಸಿಕ ಒತ್ತಡವೇ ಸಾವಿಗೆ ಕಾರಣ ಎಂದು ಅವರ ಕುಟುಂಬ ಆರೋಪಿಸಿದೆ. ಮೃತಪಟ್ಟ ವ್ಯಕ್ತಿಯನ್ನು ನವ್ಡಾಪಾರ ಗ್ರಾಮದ ಅಕ್ಷತ್ ಅಲಿ ಮಂಡಲ್ ಎಂದು ಗುರುತಿಸಲಾಗಿದೆ. ಆರಕ್ಕಿಂತ ಹೆಚ್ಚು ಮಕ್ಕಳಿದ್ದಾರೆ ಎಂದು ತಪ್ಪಾಗಿ ಉಲ್ಲೇಖಿಸಲಾಗಿದ್ದ ನೋಟಿಸ್ ಬಂದ ಬಳಿಕ ಅವರು ತೀವ್ರ ಆತಂಕಕ್ಕೆ ಒಳಗಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮಂಡಲ್ ಏಕಾಂಗಿಯಾಗಿ ವಾಸಿಸುತ್ತಿದ್ದರು. ಅವರ ಐವರು ಪುತ್ರರು ಹೊರರಾಜ್ಯಗಳಲ್ಲಿ ಹಾಗೂ ಗಲ್ಫ್ ದೇಶಗಳಲ್ಲಿ ಕೆಲಸ ಮಾಡುತ್ತಿದ್ದರು ಎಂದು ಕುಟುಂಬ ತಿಳಿಸಿದೆ. ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನೋಟಿಸ್ ಮಂಡಲ್ಗೆ ತೀವ್ರ ಆತಂಕ ಉಂಟುಮಾಡಿತ್ತು. ತಮ್ಮ ಪುತ್ರರನ್ನು ಮರಳಿ ಕರೆತರುವುದು, ಅಧಿಕಾರಿಗಳ ಮುಂದೆ ಹಾಜರುಪಡಿಸುವುದು ಹಾಗೂ ಅಗತ್ಯ ದಾಖಲೆಗಳನ್ನು ಸಲ್ಲಿಸುವ ಬಗ್ಗೆ ಅವರು ನಿರಂತರವಾಗಿ ಚಿಂತಿಸುತ್ತಿದ್ದರು. ನೋಟಿಸ್ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಅವರು ಅನಾರೋಗ್ಯಕ್ಕೆ ತುತ್ತಾದರು. ಅವರನ್ನು ಸಾದಿಕಾರ್ಡಿಯಾರ್ ಗ್ರಾಮೀಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು ಎಂದು ಮಂಡಲ್ ಕುಟುಂಬದ ಸದಸ್ಯರೊಬ್ಬರು ತಿಳಿಸಿದ್ದಾರೆ. ತಮ್ಮ ಪತಿ ಸಾವನ್ನಪ್ಪುವ ಮೂರು ದಿನಗಳ ಮುನ್ನ ಈ ನೋಟಿಸ್ ಬಂದಿತ್ತು. ಆ ಬಳಿಕ ಅವರು ನಿರಂತರ ಭೀತಿಯಲ್ಲಿ ಬದುಕುತ್ತಿದ್ದರು ಎಂದು ಮಂಡಲ್ ಅವರ ಪತ್ನಿ ಸರೀಫಾ ಬೀಬಿ ತಿಳಿಸಿದ್ದಾರೆ. ಮಂಡಲ್ ಅವರ ನಾಲ್ವರು ಪುತ್ರರು ಕೇರಳದಲ್ಲಿ ಹಾಗೂ ಓರ್ವ ಪುತ್ರ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಪುತ್ರರ ಸಂಖ್ಯೆ ಕುರಿತು ನೋಟಿಸ್ನಲ್ಲಿ ನೀಡಿರುವ ತಪ್ಪು ಮಾಹಿತಿ ಮಂಡಲ್ ಅವರ ಸಾವಿಗೆ ಕಾರಣವಾಗಿದೆ ಎಂದು ಸ್ಥಳೀಯ ಪಂಚಾಯತ್ ಪ್ರಧಾನ್ ಮಹಬುಲ್ ಇಸ್ಲಾಮ್ ಹೇಳಿದ್ದಾರೆ. ಈ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನೋಟಿಸ್ ಜನರಲ್ಲಿ ಪ್ರಕ್ಷುಬ್ಧತೆಗೆ ಕಾರಣವಾಗಿದ್ದು, ಇಂತಹ ನೋಟಿಸ್ಗಳನ್ನು ಜಾರಿಗೊಳಿಸುವ ಹಿಂದಿನ ಆಡಳಿತಾತ್ಮಕ ಪ್ರಕ್ರಿಯೆಯ ಕುರಿತು ನಿವಾಸಿಗಳು ಪ್ರಶ್ನೆ ಎತ್ತುವಂತಾಗಿದೆ. ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಯೂಸುಫ್ ಅಲಿ ಈ ಘಟನೆಯನ್ನು ಅಮಾನವೀಯ ಕಿರುಕುಳ ಎಂದು ಹೇಳಿ, ಸಂಪೂರ್ಣ ತನಿಖೆಗೆ ಆಗ್ರಹಿಸಿದ್ದಾರೆ. Assam: ಜಾನುವಾರು ಕಳವು ಶಂಕಿಸಿ ಗುಂಪಿನಿಂದ ದಾಳಿ; ಓರ್ವ ಮೃತ್ಯು (W/F) ಕೊಕ್ರಝಾರ್, ಜ. 20: ಅಸ್ಸಾಂನ ಕೊಕ್ರಝಾರ್ ಜಿಲ್ಲೆಯಲ್ಲಿ ಜಾನುವಾರು ಕಳವು ಮಾಡಿದ್ದಾರೆ ಎಂಬ ಶಂಕೆಯ ಮೇರೆಗೆ ಗುಂಪೊಂದು ದಾಳಿ ನಡೆಸಿದ ಪರಿಣಾಮ ಓರ್ವ ಸಾವನ್ನಪ್ಪಿ, ಇತರ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಸಂತ್ರಸ್ತರು ರಸ್ತೆ ನಿರ್ಮಾಣ ಯೋಜನೆಗೆ ಸಂಬಂಧಿಸಿದವರು. ಅವರು ಸೋಮವಾರ ರಾತ್ರಿ ಔಡಾಂಗ್ ಪ್ರದೇಶದಲ್ಲಿ ಸ್ಥಳ ಪರಿಶೀಲನೆ ನಡೆಸಿ ವಾಹನದಲ್ಲಿ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಅವರ ವಾಹನ ಗೌರಿ ನಗರ–ಮಾಶಿಂಗ್ ರಸ್ತೆಗೆ ತಲುಪುತ್ತಿದ್ದಂತೆ ಸ್ಥಳೀಯ ಗ್ರಾಮಸ್ಥರ ಗುಂಪೊಂದು ಜಾನುವಾರು ಕಳ್ಳರೆಂದು ಶಂಕಿಸಿ ತಡೆದು ನಿಲ್ಲಿಸಲು ಪ್ರಯತ್ನಿಸಿತು. ಇದರಿಂದ ವಾಹನ ರಸ್ತೆಯಿಂದ ಜಾರಿತು. ಈ ಸಂದರ್ಭ ಗುಂಪು ಅದರಲ್ಲಿದ್ದವರ ಮೇಲೆ ದಾಳಿ ನಡೆಸಿ, ವಾಹನಕ್ಕೆ ಬೆಂಕಿ ಹಚ್ಚಿತು. ಪರಿಣಾಮ ಕೆಲವರಿಗೆ ಗಂಭೀರ ಸುಟ್ಟ ಗಾಯಗಳಾದವು ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಅವರಲ್ಲಿ ಗಂಭೀರ ಗಾಯಗೊಂಡಿದ್ದ ಸಿಖ್ನಾ ಜ್ವಾಹೌಲಾವೊ ಬಿಸ್ಮಿತ್ ಆಲಿ ಅಲಿಯಾಸ್ ರಾಜಾ ಮೃತಪಟ್ಟಿದ್ದಾರೆ. ಅವರು ಈ ಪ್ರದೇಶದಲ್ಲಿ ನಡೆಯುತ್ತಿರುವ ರಸ್ತೆ ನಿರ್ಮಾಣ ಯೋಜನೆಯ ಗುತ್ತಿಗೆದಾರ ಮೊರಾಂಡಾ ಬಸುಮತಾರಿ ಅವರ ಅಳಿಯ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಭಾತ್ ಬ್ರಹ್ಮಾ, ಜುಬಿರಾಜ್ ಬ್ರಹ್ಮಾ, ಸುನಿಲ್ ಮುರ್ಮು ಹಾಗೂ ಮಹೇಶ್ ಮುರ್ಮು ಗಂಭೀರ ಗಾಯಗೊಂಡಿದ್ದು, ಅವರನ್ನು ಕೊಕ್ರಝಾರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಭಾತ್ ಬ್ರಹ್ಮಾ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಯ ಸಂಬಂಧ ಕೆಲವರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದ್ದು, ತನಿಖೆ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
AAP ಸರಕಾರದ ಕ್ರಮದಿಂದ ಪಂಜಾಬ್ ಕೇಸರಿಗೆ ಮಧ್ಯಂತರ ಪರಿಹಾರ ನೀಡಿದ ಸುಪ್ರೀಂ ಕೋರ್ಟ್
ಹೊಸದಿಲ್ಲಿ, ಜ.20: ಪಂಜಾಬ್ ಕೇಸರಿ ಮಾಧ್ಯಮ ಸಮೂಹವು ಲೂಧಿಯಾನಾದಲ್ಲಿರುವ ತನ್ನ ಮುದ್ರಣಾಲಯದಲ್ಲಿ ಕಾರ್ಯಾಚರಣೆಗಳನ್ನು ಪುನರಾರಂಭಿಸಲು ಅವಕಾಶ ನೀಡುವಂತೆ ಸರ್ವೋಚ್ಚ ನ್ಯಾಯಾಲಯವು ಮಂಗಳವಾರ ಪಂಜಾಬ್ ಸರಕಾರಕ್ಕೆ ನಿರ್ದೇಶನ ನೀಡಿದೆ. ಮಾಧ್ಯಮ ಸಮೂಹವು ಸಲ್ಲಿಸಿರುವ ಅರ್ಜಿಯನ್ನು ಪಂಜಾಬ್ ಮತ್ತು ಹರ್ಯಾಣ ಉಚ್ಚ ನ್ಯಾಯಾಲಯವು ಇತ್ಯರ್ಥಗೊಳಿಸುವವರೆಗೆ, ಪಂಜಾಬ್ ಕೇಸರಿ ಪತ್ರಿಕೆಯ ಪ್ರಕಟಣೆಯ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ಕೈಗೊಳ್ಳದಂತೆ ನ್ಯಾಯಾಲಯವು ಸರಕಾರಕ್ಕೆ ತಾಕೀತು ಮಾಡಿತು. ಜಲಮಾಲಿನ್ಯಕ್ಕೆ ಸಂಬಂಧಿಸಿದ ನಿಯಮಗಳ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ, ಪಂಜಾಬ್ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶದ ಮೇರೆಗೆ ಜ.15ರಂದು ಮುದ್ರಣಾಲಯವನ್ನು ಮುಚ್ಚಲಾಗಿತ್ತು. ಆಡಳಿತಾರೂಢ ಆಮ್ ಆದ್ಮಿ ಪಾರ್ಟಿಯ (ಆಪ್) ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಕುರಿತು ತನ್ನ ವರದಿಯೇ ಸರಕಾರದ ಕ್ರಮಕ್ಕೆ ಕಾರಣವಾಗಿದೆ ಎಂದು ಪಂಜಾಬ್ ಕೇಸರಿ ಸಮೂಹ ಆರೋಪಿಸಿದೆ. ಸಮೂಹವು ಪಂಜಾಬ್ ಕೇಸರಿ, ಜಗ್ ಬಾಣಿ ಮತ್ತು ಹಿಂದ್ ಸಮಾಚಾರ್ ಸೇರಿದಂತೆ ರಾಜ್ಯದಲ್ಲಿ ಅತಿ ಹೆಚ್ಚಿನ ಪ್ರಸಾರವನ್ನು ಹೊಂದಿರುವ ಕೆಲವು ಪತ್ರಿಕೆಗಳನ್ನು ಪ್ರಕಟಿಸುತ್ತಿದೆ. ಮಂಗಳವಾರ ಹಿರಿಯ ವಕೀಲ ಮುಕುಲ್ ರೋಹಟ್ಗಿ ಅವರು ಜಗತ್ ವಿಜಯ ಪ್ರಿಂಟರ್ಸ್ ಮತ್ತು ಹಿಂದ್ ಸಮಾಚಾರ್ ಲಿ. ಸಲ್ಲಿಸಿರುವ ಅರ್ಜಿಯನ್ನು ತುರ್ತು ವಿಚಾರಣೆಗೆ ಉಲ್ಲೇಖಿಸಿದ ಬಳಿಕ, ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿಗಳಾದ ಜಾಯಮಾಲ್ಯ ಬಾಗ್ಚಿ ಮತ್ತು ವಿ.ಎಂ. ಪಂಚೋಲಿ ಅವರ ಪೀಠವು ಮುದ್ರಣಾಲಯದಲ್ಲಿ ಕಾರ್ಯಾಚರಣೆಗಳನ್ನು ಪುನರಾರಂಭಿಸುವಂತೆ ನಿರ್ದೇಶನ ನೀಡಿತು. ಹಿಂದ್ ಸಮಾಚಾರ್ ಲಿ. ಪಂಜಾಬ್ ಕೇಸರಿ ಸಮೂಹದ ಮಾತೃ ಸಂಸ್ಥೆಯಾಗಿದ್ದರೆ, ಜಗತ್ ವಿಜಯ ಪ್ರಿಂಟರ್ಸ್ ಸಮೂಹದ ಮುಖ್ಯ ಮುದ್ರಣ ಘಟಕವಾಗಿದೆ. ರಾಜ್ಯ ಸರಕಾರವನ್ನು ಟೀಕಿಸಿದ ಕೆಲವು ಲೇಖನಗಳನ್ನು ಪ್ರಕಟಿಸಿದ ಬಳಿಕ ಪಂಜಾಬ್ ಕೇಸರಿ ಸಮೂಹದ ಆಡಳಿತಕ್ಕೆ ಕಿರುಕುಳ ಆರಂಭಗೊಂಡಿತ್ತು. ವಿದ್ಯುತ್ ಕಡಿತ, ಮುದ್ರಣಾಲಯದ ವಿರುದ್ಧ ಮಾಲಿನ್ಯ ನಿಯಂತ್ರಣ ಮಂಡಳಿಯ ನೋಟಿಸ್ಗಳು, ಸಮೂಹ ನಡೆಸುತ್ತಿರುವ ಹೋಟೆಲ್ಗಳ ಮುಚ್ಚುಗಡೆ ಮತ್ತು ಎಫ್ಐಆರ್ಗಳ ದಾಖಲು ಇತ್ಯಾದಿಗಳು ಇದರಲ್ಲಿ ಒಳಗೊಂಡಿವೆ ಎಂದು ರೋಹಟ್ಗಿ ನ್ಯಾಯಾಲಯಕ್ಕೆ ತಿಳಿಸಿದರು. ತನ್ನ ಹೋಟೆಲ್ ಮತ್ತು ಮುದ್ರಣಾಲಯವನ್ನು ಮುಚ್ಚಿರುವುದನ್ನು ಪ್ರಶ್ನಿಸಿ ಸಮೂಹವು ಸಲ್ಲಿಸಿರುವ ಇಂತಹುದೇ ಅರ್ಜಿಗಳ ಮೇಲೆ ತೀರ್ಪನ್ನು ಸೋಮವಾರ ಪಂಜಾಬ್ ಮತ್ತು ಹರ್ಯಾಣ ಉಚ್ಚ ನ್ಯಾಯಾಲಯವು ಕಾಯ್ದಿರಿಸಿದೆ. ಆದರೆ ಯಾವುದೇ ಮಧ್ಯಂತರ ಪರಿಹಾರವನ್ನು ಒದಗಿಸಿಲ್ಲ ಎಂದು ರೋಹಟಗಿ ಸರ್ವೋಚ್ಚ ನ್ಯಾಯಾಲಯದ ಗಮನಕ್ಕೆ ತಂದಿದ್ದರು.
ಧ್ವಜ ವಿವಾದ: ಉಡುಪಿ ಜಿಲ್ಲಾಧಿಕಾರಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಮುಖ್ಯಮಂತ್ರಿಗೆ ಪತ್ರ ಬರೆದ ಕಾಂಗ್ರೆಸ್
ಉಡುಪಿ, ಜ.20: ಜ.18ರ ಮುಂಜಾನೆ ನಗರದ ಜೋಡುಕಟ್ಟೆ ಬಳಿ ನಡೆದ ಶೀರೂರು ಪರ್ಯಾಯದ ಪುರಮೆರವಣಿಗೆ ಸಂದರ್ಭ ಆರೆಸ್ಸೆಸ್ ಧ್ವಜ ಹಿಡಿದು ಹಾರಿಸುತ್ತಾ ಮೆರವಣಿಗೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾನೂನು ಮತ್ತು ಮಾನವ ಹಕ್ಕುಗಳ ಸೆಲ್ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಪತ್ರ ಬರೆದಿದೆ. ಮುಂಜಾನೆ 3:00ಗಂಟೆ ಸುಮಾರಿಗೆ ಮೆರವಣಿಗೆಯ ವೇಳೆ ಉಪಸ್ಥಿತರಿದ್ದ ಜಿಲ್ಲಾಧಿಕಾರಿಯವರ ಕೈಗೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರು ಆರೆಸ್ಸೆಸ್ ಧ್ವಜ (ಭಗವಾನ್ಧ್ವಜ) ಹಸ್ತಾಂತರಿಸಿದ್ದು, ಅವರು ಈ ಧ್ವಜವನ್ನು ಕೈಯಲ್ಲಿ ಹಿಡಿದು ಮೇಲಕ್ಕೆ ಎತ್ತಿ ಪ್ರದರ್ಶಿಸುತ್ತಾ ಮೆರವಣಿಗೆಗೆ ಚಾಲನೆ ನೀಡಿದ್ದರು ಎಂದು ಕಾಂಗ್ರೆಸ್ ಕಾನೂನು ಸೆಲ್ನ ಅಧ್ಯಕ್ಷ ಹರೀಶ್ ಶೆಟ್ಟಿ ಜ.19ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಪತ್ರದ ಪ್ರತಿಗಳನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯ ಕಾರ್ಯದರ್ಶಿ ಅವರಿಗೂ ಕಳುಹಿಸಲಾಗಿದೆ. ಜಿಲ್ಲಾಧಿಕಾರಿಯವರ ಈ ನಡೆ ಸರಕಾರಿ ಸೇವಾ ನಿಯಮಗಳು ಹಾಗೂ ಸಂವಿಧಾನದ ಧರ್ಮ ನಿರಪೇಕ್ಷತೆಯ ತತ್ವಗಳಿಗೆ ವಿರುದ್ಧವಾಗಿದ್ದು, ಈ ರೀತಿಯ ನಡೆ ಅತ್ಯಂತ ಆಕ್ಷೇಪಾರ್ಹವಾಗಿದೆ ಎಂದು ಹೇಳಿದ್ದಾರೆ. ಆದ್ದರಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಹರೀಶ್ ಶೆಟ್ಟಿ ಪತ್ರದಲ್ಲಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಸ್ಪಷ್ಟನೆ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಕೇಸರಿ ಧ್ವಜ ಬೀಸುತ್ತಾ ಮೆರವಣಿಗೆಗೆ ಚಾಲನೆ ನೀಡಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ಟೀಕೆಗಳು ಕೇಳಿ ಬಂದಾಗ ಸ್ಪಷ್ಟೀಕರಣ ನೀಡಿದ್ದ ಸ್ವರೂಪ ಟಿ.ಕೆ., ತಾನು ಶೀರೂರು ಪರ್ಯಾಯೋತ್ಸವದ ಅಂಗವಾಗಿ ನಡೆದ ಶೋಭಾಯಾತ್ರೆ ಯಲ್ಲಿ ಉಡುಪಿ ನಗರಸಭೆಯ ಆಡಳಿತಾಧಿಕಾರಿಯಾಗಿ ಭಾಗವಹಿಸಿ ಚಾಲನೆ ನೀಡಿದ್ದೇನೆ. ಅದೇ ರೀತಿ ನೂತನ ಯತಿಗಳಿಗೆ ಪೌರ ಸನ್ಮಾನ ಹಾಗೂ ಸರ್ವಜ್ಞ ಪೀಠ ಏರಿದ ನಂತರ ನಡೆಯುವ ದರ್ಬಾರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ ಹೊರತು ಯಾವುದೇ ರಾಜಕೀಯ ಪ್ರೇರಿತ ಉದ್ದೇಶ ಅದರಲ್ಲಿ ಇರಲಿಲ್ಲ ಎಂದು ತಿಳಿಸಿದ್ದರು. ಜಿಲ್ಲಾಧಿಕಾರಿಗೆ ಯಶಪಾಲ್ ಸುವರ್ಣ ಬೆಂಬಲ: ಈ ನಡುವೆ ಜಿಲ್ಲಾಧಿಕಾರಿಗಳ ಬೆಂಬಲಕ್ಕೆ ನಿಂತಿರುವ ಉಡುಪಿ ಶಾಸಕ ಯಶಪಾಲ್ ಸುವರ್ಣ, ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅತ್ಯಂತ ಯಶಸ್ವಿಯಾಗಿ ಪರ್ಯಾಯ ಮಹೋತ್ಸವವನ್ನು ನಡೆಸಿದ್ದು, ಇದನ್ನು ಸಹಿಸದ ಕೆಲವರು ಅನಗತ್ಯ ಟೀಕೆ ಮಾಡುತ್ತಿದ್ದಾರೆ ಎಂದಿದ್ದಾರೆ. ಜಿಲ್ಲಾಧಿಕಾರಿಗಳು ಭಗವಾಧ್ವಜದ ಮೂಲಕ ಪರ್ಯಾಯಕ್ಕೆ ಚಾಲನೆ ನೀಡಿದ್ದು, ಬಹುಶಃ ಕಾಂಗ್ರೆಸಿಗರು ಅದನ್ನು ಪಾಕಿಸ್ತಾನದ ಧ್ವಜ ಎಂಬ ರೀತಿಯಲ್ಲಿ ಟೀಕೆ ಮಾಡುತ್ತಿದ್ದಾರೆ. ಪರ್ಯಾಯ ಮಹೋತ್ಸವ ಅಷ್ಟ ಮಠಾಧೀಶರು ಭಾಗವಹಿಸಿದ್ದ ವೇದಿಕೆಯಾಗಿತ್ತು. ಕಳೆದ ಬಾರಿ ಕೂಡ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರು ಭಗವಾಧ್ವಜದ ಮೂಲಕವೇ ಚಾಲನೆ ನೀಡಿದ್ದರು ಎಂದವರು ಟೀಕೆಗೆ ಉತ್ತರಿಸಿದ್ದಾರೆ. ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕೂಡಾ ಭಗವಾಧ್ವಜದ ಮೂಲಕ ಚಾಲನೆ ನೀಡಿದ್ದಾರೆ. ಕಾಂಗ್ರೆಸ್ಸಿಗರಿಗೆ ಅದನ್ನು ಸಹಿಸಿಕೊಳ್ಳಲಾಗುತ್ತಿಲ್ಲ. ಕಾಂಗ್ರೆಸ್ಸಿಗರು ಮಾತನಾಡುವ ರೀತಿ ನೋಡಿದರೆ ಎಲ್ಲೋ ಪಾಕಿಸ್ತಾನದ ಧ್ವಜದ ಮೂಲಕ ಚಾಲನೆ ನೀಡಿದ್ದಾರೆ ಎಂಬ ರೀತಿಯಲ್ಲಿ ಟೀಕಿಸುತ್ತಿದ್ದಾರೆ ಎಂದು ಯಶ್ವಾಲ್ ಹೇಳಿದ್ದಾರೆ.
Syria: ISIL ಬಂಡುಕೋರರಿಗಾಗಿ ಎಸ್ಡಿಎಫ್ನಿಂದ ಶೋಧ ಕಾರ್ಯಾಚರಣೆ
ಡಮಾಸ್ಕಸ್: ಸಿರಿಯಾ ಸೇನೆ ಹಾಗೂ ಕುರ್ದಿಶ್ ನೇತೃತ್ವದ ಬಂಡುಕೋರರ ನಡುವೆ ಉತ್ತರ ಸಿರಿಯಾದಲ್ಲಿ ನಡೆಯುತ್ತಿರುವ ಗುಂಡಿನ ಕಾಳಗದ ನಡುವೆ, ಜೈಲಿನಿಂದ ತಪ್ಪಿಸಿಕೊಂಡಿರುವ ಹತ್ತಾರು ಐಸಿಲ್ ಬಂಡುಕೋರರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು Aljazeera ವರದಿ ಮಾಡಿದೆ. ಹಲವು ವಾರಗಳಿಂದ ನಡೆಯುತ್ತಿರುವ ಹೋರಾಟದ ಬಳಿಕ ಕದನ ವಿರಾಮ ಸಾಧ್ಯತೆಯ ಕುರಿತು ಅನಿಶ್ಚಿತತೆ ಮುಂದುವರಿದಿರುವಾಗಲೇ, ಸಿರಿಯಾ ಡೆಮಾಕ್ರಟಿಕ್ ಫೋರ್ಸ್ (ಎಸ್ಡಿಎಫ್) ಹಿಡಿತದಲ್ಲಿರುವ ಸಿರಿಯಾದ ಪೂರ್ವ ಭಾಗದ ಹಸಾಕ ನಗರತ್ತ ಸರಕಾರಿ ಪಡೆಗಳು ಧಾವಿಸತೊಡಗಿವೆ. ತೀವ್ರ ಸೇನಾ ಒತ್ತಡದ ಪರಿಣಾಮ, ಸಿರಿಯಾದ ಪ್ರಮುಖ ತೈಲ ಬಾವಿಗಳ ಮೇಲೆ ಹಲವಾರು ವರ್ಷಗಳಿಂದ ನಿಯಂತ್ರಣ ಹೊಂದಿದ್ದ ಅರಬ್ ಬಾಹುಳ್ಯ ಆಡಳಿತವಿರುವ ಎರಡು ನಗರಗಳಾದ ರಕ್ಕಾ ಹಾಗೂ ಡೈರ್ ಅಝ್ ಝೋರ್ನಿಂದ ಹಿಂದೆ ಸರಿಯಲು ಎಸ್ಡಿಎಫ್ ಸಮ್ಮತಿಸಿದೆ. ಈ ನಡುವೆ, ಸಿರಿಯಾದ ಅಧ್ಯಕ್ಷ ಅಹ್ಮದ್ ಅಲ್-ಶರಾ ಹಾಗೂ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಿರಿಯಾದಲ್ಲಿನ ಕ್ಷಿಪ್ರ ಬೆಳವಣಿಗೆಗಳ ಕುರಿತು ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಸಿರಿಯಾ ಪ್ರಾಂತ್ಯದ ಏಕತೆ ಮತ್ತು ಸ್ವಾತಂತ್ರ್ಯ ಹಾಗೂ ದೇಶದಲ್ಲಿರುವ ಕುರ್ದಿಶ್ ಜನರ ಹಕ್ಕುಗಳನ್ನು ಸಂರಕ್ಷಿಸುವ ಕುರಿತು ಇಬ್ಬರೂ ಸಮ್ಮತಿ ಸೂಚಿಸಿದ್ದಾರೆ ಎಂದು ವರದಿಯಾಗಿದೆ.
ಮುಡಾ ಹಗರಣ: ಕರ್ನಾಟಕ ಹೈಕೋರ್ಟ್ನಿಂದ ಮಾಜಿ ಆಯುಕ್ತ ಜಿಟಿ ದಿನೇಶ್ ಕುಮಾರ್ಗೆ ಶಾಕ್!
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕೋಟ್ಯಂತರ ರೂಪಾಯಿಗಳ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಡಾ ಮಾಜಿ ಆಯುಕ್ತ ಜಿಟಿ ದಿನೇಶ್ ಕುಮಾರ್ಗೆ ಕರ್ನಾಟಕ ಹೈಕೋರ್ಟ್ನಿಂದ ಹಿನ್ನಡೆಯಾಗಿದೆ. ಇ.ಡಿ. ಬಂಧನದಿಂದ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಸದ್ಯ ಅವರು ನ್ಯಾಯಾಂಗ ಬಂಧನದಲ್ಲೇ ಮುಂದುವರೆಯಲಿದ್ದಾರೆ.
ಎಸ್ಟಿ ಮೀಸಲಾತಿ ಲಾಟರಿಯಡಿ ಶಿವಸೇನೆ (ಯುಬಿಟಿ) ಮುಂಬೈ ಮೇಯರ್ ಹುದ್ದೆ ಪಡೆಯಬಹುದು: ಉದ್ಧವ್ ಠಾಕ್ರೆ ಸುಳಿವು
ಮುಂಬೈ, ಜ.20: 227 ಸದಸ್ಯರ ಬೃಹನ್ಮುಂಬೈ ಮಹಾನಗರ ಪಾಲಿಕೆಯಲ್ಲಿ ಬಹುಮತಕ್ಕೆ ಅಗತ್ಯವಾದ 114 ಸ್ಥಾನಗಳು ತನ್ನ ಪಕ್ಷ ಮತ್ತು ಅದರ ಮಿತ್ರಪಕ್ಷಗಳ ಬಳಿಯಿಲ್ಲದಿದ್ದರೂ, ದೇವರು ಬಯಸಿದರೆ ಮುಂಬೈನ ಮುಂದಿನ ಮೇಯರ್ ಹುದ್ದೆ ಶಿವಸೇನೆ (ಯುಬಿಟಿ)ಗೆ ದೊರೆಯಲಿದೆ ಎಂದು ಉದ್ಧವ ಠಾಕ್ರೆ ಹೇಳಿದ್ದಾರೆ. ಮೀಸಲಾತಿ ಲಾಟರಿಯೇ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ ಅವರ ಹೇಳಿಕೆಗೆ ಕಾರಣವಾಗಿದೆ. ಮುಂಬೈ ಮೇಯರ್ ಹುದ್ದೆಯು ಪರಿಶಿಷ್ಟ ಪಂಗಡದ (ಎಸ್ಟಿ) ಅಭ್ಯರ್ಥಿಗೆ ಮೀಸಲಾದರೆ ಪರಿಸ್ಥಿತಿ ಬದಲಾಗಲಿದೆ. ಏಕೈಕ ದೊಡ್ಡ ಪಕ್ಷವಾಗಿರುವ ಬಿಜೆಪಿ 89 ಸ್ಥಾನಗಳನ್ನು ಮತ್ತು ಅದರ ಮಿತ್ರಪಕ್ಷ ಏಕನಾಥ ಶಿಂದೆ ನೇತೃತ್ವದ ಶಿವಸೇನೆ 29 ಸ್ಥಾನಗಳನ್ನು ಗೆದ್ದಿದ್ದರೂ, ಮೇಯರ್ ಹುದ್ದೆಯು ಎಸ್ಟಿ ವರ್ಗಕ್ಕೆ ಮೀಸಲಾದರೆ ಅದಕ್ಕೆ ಹಕ್ಕು ಮಂಡಿಸಲು ಈ ಎರಡೂ ಪಕ್ಷಗಳಲ್ಲಿ ಆ ಸಮುದಾಯಕ್ಕೆ ಸೇರಿದ ನೂತನವಾಗಿ ಚುನಾಯಿತ ಕಾರ್ಪೊರೇಟರ್ಗಳಿಲ್ಲ. ಇನ್ನೊಂದೆಡೆ, ಶಿವಸೇನೆ (ಯುಬಿಟಿ)ಯ 65 ಕಾರ್ಪೊರೇಟರ್ಗಳ ಪೈಕಿ ಜಿತೇಂದ್ರ ವಳವಿ (ವಾರ್ಡ್ ನಂ.53) ಮತ್ತು ಪ್ರಿಯದರ್ಶಿನಿ ಠಾಕರೆ (ವಾರ್ಡ್ ನಂ.121) ಅವರು ಎಸ್ಟಿ ವರ್ಗಕ್ಕೆ ಸೇರಿದವರಾಗಿದ್ದಾರೆ. ಈ ಸನ್ನಿವೇಶದಲ್ಲಿ ಬಹುಮತಕ್ಕೆ ಕೊರತೆಯಿದ್ದರೂ ಶಿವಸೇನೆ (ಯುಬಿಟಿ) ಮೇಯರ್ ಹುದ್ದೆಯನ್ನು ಪಡೆಯಬಹುದು. ಏಕೆಂದರೆ ಎಸ್ಸಿ ಮತ್ತು ಎಸ್ಟಿಗೆ ಮೀಸಲಾದ ಹುದ್ದೆಗಳು ಪಕ್ಷದ ಬಲವನ್ನು ಪರಿಗಣಿಸದೆ, ಆ ವರ್ಗಗಳಿಗೆ ಸೇರಿದ ಚುನಾಯಿತ ಕಾರ್ಪೊರೇಟರ್ಗಳಿಗೆ ಸಿಗಬೇಕು ಎನ್ನುವುದನ್ನು ಮೀಸಲಾತಿ ನಿಯಮಗಳು ಕಡ್ಡಾಯಗೊಳಿಸಿವೆ. ರಾಜ್ಯ ಚುನಾವಣಾ ಆಯೋಗವು 29 ಮಹಾನಗರ ಪಾಲಿಕೆಗಳ ಮೇಯರ್ ಹುದ್ದೆಗಳಿಗೆ ಎಸ್ಸಿ, ಎಸ್ಟಿ, ಒಬಿಸಿ, ಒಬಿಸಿ ಮಹಿಳೆ, ಸಾಮಾನ್ಯ ವರ್ಗದ ಮಹಿಳೆ ಮತ್ತು ಸಾಮಾನ್ಯ ವರ್ಗಕ್ಕೆ ಮೀಸಲಾತಿಯನ್ನು ಜ.22ರಂದು ಮಂತ್ರಾಲಯದಲ್ಲಿ ಲಾಟರಿ ಮೂಲಕ ನಿರ್ಧರಿಸಲಿದೆ. ಮೀಸಲಾತಿ ನೀತಿಯಡಿ ಮೇಯರ್ ಹುದ್ದೆಗಳ ಶೇ.7ರಷ್ಟು ಎಸ್ಟಿಗಳಿಗೆ, ಶೇ.11.5ರಷ್ಟು ಎಸ್ಸಿಗಳಿಗೆ ಮತ್ತು ಶೇ.27ರಷ್ಟು ಒಬಿಸಿಗಳಿಗೆ ಸಿಗಲಿವೆ. ಉಳಿದ ಹುದ್ದೆಗಳು ಒಬಿಸಿ/ಸಾಮಾನ್ಯ ವರ್ಗದ ಮಹಿಳೆಯರು ಮತ್ತು ಸಾಮಾನ್ಯ ವರ್ಗಕ್ಕೆ ಮೀಸಲಾಗಲಿವೆ. 29 ಮಹಾನಗರ ಪಾಲಿಕೆಗಳಲ್ಲಿ ಕನಿಷ್ಠ ಎರಡು ಮೇಯರ್ ಹುದ್ದೆಗಳು ಎಸ್ಟಿಗಳಿಗೆ, ಮೂರು ಎಸ್ಸಿಗಳಿಗೆ, ಒಂಬತ್ತು ಒಬಿಸಿಗಳಿಗೆ ಸಿಗಲಿದ್ದು, ಉಳಿದ ಹುದ್ದೆಗಳು ಮಹಿಳೆಯರು (ಒಬಿಸಿ ಮತ್ತು ಸಾಮಾನ್ಯ ವರ್ಗ) ಹಾಗೂ ಸಾಮಾನ್ಯ ವರ್ಗದ ಪ್ರತಿನಿಧಿಗಳಿಗೆ ಹಂಚಿಕೆಯಾಗಲಿವೆ. ಇತ್ತೀಚಿಗೆ ಆಯ್ಕೆಯಾಗಿರುವ 29 ಮಹಾನಗರ ಪಾಲಿಕೆಗಳ ಸದಸ್ಯರನ್ನು ಹೊಸಬರು ಎಂದು ಪರಿಗಣಿಸಿದರೆ, ಆಯಾ ನಗರಗಳ ಮೇಯರ್ ಹುದ್ದೆಗಳಿಗೆ ವರ್ಗ ಮೀಸಲಾತಿಯನ್ನು ನಿರ್ಧರಿಸಲು ಜನಸಂಖ್ಯಾ ಮಾನದಂಡವನ್ನು ಬಳಸಲಾಗುತ್ತದೆ. ಅಂದರೆ ನಗರದ ಜನಸಂಖ್ಯೆಯಲ್ಲಿ ಎಸ್ಟಿಗಳು ಹೆಚ್ಚಿದ್ದರೆ ಅದು ಎಸ್ಟಿ ಮೇಯರ್ ಅನ್ನು ಪಡೆಯುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ ರಾಜ್ಯ ನಗರಾಭಿವೃದ್ಧಿ ಇಲಾಖೆಯು ಈ ಚುನಾವಣೆಯನ್ನು ಹೊಸದು ಎಂದು ಪರಿಗಣಿಸುವುದಿಲ್ಲ ಮತ್ತು ಹಿಂದಿನ ಚುನಾವಣೆಗಳಿಂದ ಮುಂದುವರಿಯುವ ನಿರಂತರ ಪ್ರಕ್ರಿಯೆಯನ್ನಾಗಿ ಪರಿಗಣಿಸುತ್ತದೆ. ಆಗ ಮೀಸಲಾತಿ ವರ್ಗವನ್ನು ನಿರ್ಧರಿಸುವಾಗ ಆವರ್ತನ ಪದ್ಧತಿಯನ್ನು ಬಳಸಲಾಗುತ್ತದೆ. ಹಿಂದಿನ ಸಲ ಮುಂಬೈ ಎಸ್ಸಿ ಮೇಯರ್ನ್ನು (ಸ್ನೇಹಲ್ ಅಂಬೇಕರ್) ಹೊಂದಿತ್ತು. ಮುಂದಿನ ಸರದಿ ಎಸ್ಟಿ, ಒಬಿಸಿ, ಒಬಿಸಿ ಮಹಿಳೆಯರು, ಮಹಿಳೆಯರು (ಸಾಮಾನ್ಯ) ಮತ್ತು ಸಾಮಾನ್ಯ ವರ್ಗದ್ದಾಗುತ್ತದೆ. ಆದ್ದರಿಂದ ಜ.22ರಂದು ಮಂತ್ರಾಲಯದಲ್ಲಿ ಮೇಯರ್ ಹುದ್ದೆ ಮೀಸಲಾತಿಗಾಗಿ ಲಾಟರಿಯನ್ನು ನಡೆಸುವ ಸಂದರ್ಭದಲ್ಲಿ ಅದರಲ್ಲಿರುವ ಹಲವಾರು ತಾಂತ್ರಿಕ ವಿಷಯಗಳನ್ನು ವಿವರಿಸಲಾಗುತ್ತದೆ ಎಂದು ಅಧಿಕಾರಿ ತಿಳಿಸಿದ್ದಾರೆ.
‘ಲೈಂಗಿಕ ಕಿರುಕುಳ’ ಆರೋಪದಿಂದ ನೊಂದು ವ್ಯಕ್ತಿ ಆತ್ಮಹತ್ಯೆ | ವೀಡಿಯೊ ಚಿತ್ರೀಕರಿಸಿದ್ದ ಕೇರಳ ಮಹಿಳೆ ವಿರುದ್ಧ ಪ್ರಕರಣ
ಕೋಝಿಕ್ಕೋಡ್, ಜ.20: 42 ವರ್ಷದ ವ್ಯಕ್ತಿಯೊಬ್ಬರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಿ ವೀಡಿಯೊವನ್ನು ಆನ್ಲೈನ್ ನಲ್ಲಿ ಪೋಸ್ಟ್ ಮಾಡಿದ್ದ ಶಿಮ್ಜಿತಾ ಮುಸ್ತಫಾ (35) ಎಂಬ ಮಹಿಳೆಯ ವಿರುದ್ಧ ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪದಲ್ಲಿ ಸ್ಥಳೀಯ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ. ವೈರಲ್ ಆಗಿರುವ ವೀಡಿಯೊದಲ್ಲಿ ಕಾಣಿಸಿಕೊಂಡಿದ್ದ ದೀಪಕ್ ಯು. ಅವರು ರವಿವಾರ ಆತ್ಮಹತ್ಯೆಗೆ ಶರಣಾಗಿದ್ದರು. ಅವರ ತಾಯಿ ಸಲ್ಲಿಸಿರುವ ದೂರಿನ ಆಧಾರದಲ್ಲಿ ಸೋಮವಾರ ಮಹಿಳೆಯ ವಿರುದ್ಧ ಜಾಮೀನುರಹಿತ ಕಲಮ್ನಡಿ ಪ್ರಕರಣ ದಾಖಲಾಗಿದೆ. ಇಲ್ಲಿನ ಗೋವಿಂದಪುರ ನಿವಾಸಿ ದೀಪಕ್ ರವಿವಾರ ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಲೈಂಗಿಕ ಕಿರುಕುಳದ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಬಳಿಕ ಅವರು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ದೀಪಕ್ ಶುಕ್ರವಾರ ಕಾರ್ಯನಿಮಿತ್ತ ಬಸ್ನಲ್ಲಿ ಕಣ್ಣೂರಿಗೆ ಪ್ರಯಾಣಿಸಿದ್ದರು. ಅದೇ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಶಿಮ್ಜಿತಾ ಅವರು ಲೈಂಗಿಕ ದುರ್ವರ್ತನೆಯ ಆರೋಪ ಮಾಡಿ ವೀಡಿಯೊ ಚಿತ್ರೀಕರಿಸಿದ್ದರು. ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಬಳಿಕ ದೀಪಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಲೈಂಗಿಕ ಕಿರುಕುಳದ ಆರೋಪವನ್ನು ನಿರಾಕರಿಸಿದ್ದರು. ಶಿಮ್ಜಿತಾ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಿದ್ಧಿಗಾಗಿ ಅವರ ಚಾರಿತ್ರ್ಯಹನನ ಮಾಡಿದ್ದಾಳೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ವೀಡಿಯೊ ಇಂಟರ್ನೆಟ್ನಲ್ಲಿ ಕಾಣಿಸಿಕೊಂಡ ಬೆನ್ನಲ್ಲೇ ದೀಪಕ್ ಭಾರೀ ಆಕ್ರೋಶವನ್ನು ಎದುರಿಸಿದ್ದರು ಎಂದೂ ಅವರು ತಿಳಿಸಿದ್ದಾರೆ. ಕೇರಳ ರಾಜ್ಯ ಮಾನವ ಹಕ್ಕುಗಳ ಆಯೋಗವು ಘಟನೆಯ ಕುರಿತು ಪೊಲೀಸ್ ತನಿಖೆಗೆ ಆದೇಶಿಸಿದೆ. ಒಂದು ವಾರದೊಳಗೆ ವರದಿಯನ್ನು ಸಲ್ಲಿಸುವಂತೆ ಅದು ಉತ್ತರ ವಲಯ ಡಿಜಿಪಿಗೆ ನಿರ್ದೇಶನ ನೀಡಿದೆ. ಫೆ.19ರಂದು ಕೋಝಿಕ್ಕೋಡ್ನಲ್ಲಿ ನಡೆಯುವ ಆಯೋಗದ ಸಭೆಯಲ್ಲಿ ಈ ಪ್ರಕರಣವನ್ನು ಪರಿಶೀಲಿಸಲಾಗುವುದು.
Australian Open: ದ್ವಿತೀಯ ಸುತ್ತಿಗೆ ಹಾಲಿ ಚಾಂಪಿಯನ್ ಜನ್ನಿಕ್ ಸಿನ್ನರ್
ಮೆಲ್ಬರ್ನ್, ಜ.20: ಫ್ರಾನ್ಸ್ ಆಟಗಾರ ಹ್ಯೂಗೊ ಗಾಸ್ಟನ್ ಮೊದಲೆರಡು ಸೆಟ್ಗಳನ್ನು 2–6, 1–6 ಅಂತರದಿಂದ ಸೋತ ನಂತರ ಗಾಯಗೊಂಡು ನಿವೃತ್ತಿಯಾದ ಕಾರಣ, ಹಾಲಿ ಚಾಂಪಿಯನ್ ಜನ್ನಿಕ್ ಸಿನ್ನರ್ ಆಸ್ಟ್ರೇಲಿಯನ್ ಓಪನ್ ಟೂರ್ನಿಯಲ್ಲಿ ಮಂಗಳವಾರ ದ್ವಿತೀಯ ಸುತ್ತಿಗೆ ತಲುಪಿದ್ದಾರೆ. ಎಟಿಪಿ ಫೈನಲ್ಸ್ ಟೂರ್ನಿಯಲ್ಲಿ ಕಾರ್ಲೊಸ್ ಅಲ್ಕರಾಝ್ರನ್ನು ಮಣಿಸಿದ ನಂತರ ಸಿನ್ನರ್ ಆಡಿರುವ ಮೊದಲ ಅಧಿಕೃತ ಪಂದ್ಯ ಇದಾಗಿದೆ. ಇಟಲಿಯ ವಿಶ್ವ ನಂ.1 ಆಟಗಾರ ಸಿನ್ನರ್ ಅವರು ಆಸ್ಟ್ರೇಲಿಯನ್ ಓಪನ್ನಲ್ಲಿ ಕಳೆದೆರಡು ವರ್ಷಗಳಿಂದ ಭರ್ಜರಿ ಫಾರ್ಮ್ನಲ್ಲಿದ್ದಾರೆ. ಎರಡನೇ ಸೆಟ್ ಸೋತ ನಂತರ ಗಾಸ್ಟನ್ ಅವರು ನೋವಿನಿಂದ ಪಂದ್ಯವನ್ನು ಮುಂದುವರಿಸಲಾಗದೆ ಕಣ್ಣೀರಿಟ್ಟರು. ಆಸ್ಟ್ರೇಲಿಯನ್ ಓಪನ್ನಲ್ಲಿ ಸತತ ಮೂರನೇ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿರುವ ಸಿನ್ನರ್, ಮುಂದಿನ ಸುತ್ತಿನಲ್ಲಿ ಜೇಮ್ಸ್ ಡಕ್ವರ್ತ್ ಅಥವಾ ಡಿನೊ ಪ್ರೈಝ್ಮಿಕ್ ಅವರನ್ನು ಎದುರಿಸಲಿದ್ದಾರೆ. *ಅಮೆರಿಕದ ನಂ.1 ಆಟಗಾರ ಶೆಲ್ಟನ್ಗೆ ಜಯ: ಎಂಟನೇ ಶ್ರೇಯಾಂಕದ ಬೆನ್ ಶೆಲ್ಟನ್ ಫ್ರಾನ್ಸ್ ಆಟಗಾರ ಯುಗೊ ಹಂಬರ್ಟ್ರನ್ನು 6–3, 7–6(2), 7–6(5) ಸೆಟ್ಗಳ ಅಂತರದಿಂದ ಮಣಿಸಿ ಆಸ್ಟ್ರೇಲಿಯನ್ ಓಪನ್ ಟೂರ್ನಿಯಲ್ಲಿ ಮಂಗಳವಾರ ದ್ವಿತೀಯ ಸುತ್ತು ತಲುಪಿದ್ದಾರೆ. ಕಳೆದ ವರ್ಷ ಸೆಮಿಫೈನಲ್ನಲ್ಲಿ ಸಿನ್ನರ್ಗೆ ಸೋತಿದ್ದ ಅಮೆರಿಕದ ನಂ.1 ಆಟಗಾರ ಶೆಲ್ಟನ್ ಅವರು ಮೊದಲ ಸೆಟ್ಟನ್ನು 6–3 ಅಂತರದಿಂದ ಗೆದ್ದುಕೊಂಡರು. ಆದರೆ ಹಂಬರ್ಟ್ ಉಳಿದ ಎರಡು ಸೆಟ್ಗಳಲ್ಲಿ ಮರು ಹೋರಾಟ ನೀಡಿ ಪಂದ್ಯವನ್ನು ಟೈಬ್ರೇಕರ್ಗೆ ಕೊಂಡೊಯ್ದರು. *ಸ್ಥಳೀಯ ಆಟಗಾರ ಡೆನ್ ಸ್ವೀನಿಗೆ ಸೋತ ಗೇಲ್ ಮೊನ್ಫಿಲ್ಸ್: ಫ್ರಾನ್ಸ್ನ ಹಿರಿಯ ಆಟಗಾರ ಗೇಲ್ ಮೊನ್ಫಿಲ್ಸ್ ತಮ್ಮ 20ನೇ ಹಾಗೂ ಕೊನೆಯ ಆಸ್ಟ್ರೇಲಿಯನ್ ಓಪನ್ ಟೂರ್ನಿಯಿಂದ ನೋವು ಹಾಗೂ ವಿಷಾದದೊಂದಿಗೆ ನಿರ್ಗಮಿಸಿದ್ದಾರೆ. ಮೊದಲ ಸುತ್ತಿನ ಪಂದ್ಯದಲ್ಲಿ ಗಾಯದ ಸಮಸ್ಯೆಗೆ ಒಳಗಾದ 39 ವರ್ಷದ ಮೊನ್ಫಿಲ್ಸ್ ಸ್ಥಳೀಯ ಕ್ವಾಲಿಫೈಯರ್ ಡೆನ್ ಸ್ವೀನಿ ವಿರುದ್ಧ 7–6(3), 5–7, 4–6, 5–7 ಅಂತರದಿಂದ ಸೋತಿದ್ದಾರೆ. ‘‘ನನ್ನ ಪ್ರಯಾಣವು 2003ರಲ್ಲಿ ನಿಮ್ಮೊಂದಿಗೆ ಆರಂಭವಾಯಿತು. ಈಗ ನಾವು 2026ರಲ್ಲಿ ಇದ್ದೇವೆ. ಇಂದು ಕೊನೆಯ ಬಾರಿ ಆಡಿದ್ದೇನೆ. ಈ ಅದ್ಭುತ ಪ್ರಯಾಣಕ್ಕೆ ತುಂಬಾ ಧನ್ಯವಾದಗಳು’’ ಎಂದು ತಮ್ಮನ್ನು ಹುರಿದುಂಬಿಸುತ್ತಿದ್ದ ಅಭಿಮಾನಿಗಳಿಗೆ ಮೊನ್ಫಿಲ್ಸ್ ತಿಳಿಸಿದರು. Australian Open: ಮೊದಲ ಸುತ್ತಿನಲ್ಲಿ ಎಡವಿದ ಪೂಣಚ್ಚ–ಇಸಾರೊ ಜೋಡಿ(w) ಮೆಲ್ಬರ್ನ್, ಜ.20: ಮೊದಲ ಸುತ್ತಿನ ಪುರುಷರ ಡಬಲ್ಸ್ ಪಂದ್ಯದಲ್ಲಿ ಪೆಡ್ರೊ ಮಾರ್ಟಿನೆಝ್ ಹಾಗೂ ಜೌಮ್ ಮುನಾರ್ ವಿರುದ್ಧ ವೀರೋಚಿತ ಸೋಲುಂಡಿರುವ ಭಾರತದ ನಿಕಿ ಪೂಣಚ್ಚ ಹಾಗೂ ಥಾಯ್ಲೆಂಡ್ನ ಪ್ರುಚ್ಯ ಇಸಾರೊ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಿಂದ ನಿರ್ಗಮಿಸಿದ್ದಾರೆ. ಮಂಗಳವಾರ ಒಂದು ಗಂಟೆ 51 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ ಇಂಡೋ–ಥಾಯ್ಲೆಂಡ್ ಜೋಡಿ ವೈಲ್ಡ್ಕಾರ್ಡ್ ಪಡೆದಿರುವ ಸ್ಪೇನ್ ಜೋಡಿಯ ಎದುರು 6–7(3), 5–7 ಸೆಟ್ಗಳ ಅಂತರದಿಂದ ಸೋತಿದ್ದಾರೆ. ಎರಡೂ ಜೋಡಿಗಳು ತೀವ್ರ ಹೋರಾಟ ನೀಡಿದ್ದವು. ಆದರೆ ಪೂಣಚ್ಚ ಹಾಗೂ ಇಸಾರೊ ಮೂರು ಬ್ರೇಕ್ಚಾನ್ಸ್ಗಳ ಪೈಕಿ ಕೇವಲ ಒಂದನ್ನು ಸದುಪಯೋಗಪಡಿಸಿಕೊಂಡರು. ಪಂದ್ಯದಲ್ಲಿ ಎರಡು ಬಾರಿ ಸರ್ವ್ ಕೈಬಿಟ್ಟರು. ಡಬಲ್ಸ್ ಪಂದ್ಯದಲ್ಲಿ ಭಾರತದ ಸವಾಲು ಇನ್ನೂ ಅಂತ್ಯವಾಗಿಲ್ಲ. ಯೂಕಿ ಭಾಂಬ್ರಿ ಅವರು ಸ್ವೀಡನ್ನ ಆಂಡ್ರೆ ಗೊರಾನ್ಸನ್ ಅವರೊಂದಿಗೆ ಸ್ಪರ್ಧಿಸಲು ಸಜ್ಜಾಗಿದ್ದಾರೆ. ಅಮೆರಿಕದ ಆಟಗಾರರಾದ ಜೇಮ್ಸ್ ಡಕ್ವರ್ತ್ ಹಾಗೂ ಕ್ರೂಝ್ ಹೆವಿಟ್ ಅವರನ್ನು ಎದುರಿಸುವ ಮೂಲಕ ಭಾಂಬ್ರಿ ಜೋಡಿ ಟೂರ್ನಿಯಲ್ಲಿ ತನ್ನ ಅಭಿಯಾನ ಆರಂಭಿಸಲಿದೆ. ಒಲಿಂಪಿಕ್ಸ್ ಪದಕ ವಿಜೇತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ನಿವೃತ್ತಿ(w/f) ಹೊಸದಿಲ್ಲಿ, ಜ.20: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಹಾಗೂ ಮಾಜಿ ವಿಶ್ವ ನಂ.1 ಆಟಗಾರ್ತಿ ಸೈನಾ ನೆಹ್ವಾಲ್ ಅವರು ಸ್ಪರ್ಧಾತ್ಮಕ ಆಟಗಳಿಗೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ ಸುಮಾರು ಎರಡು ದಶಕಗಳ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ತೆರೆ ಎಳೆದಿದ್ದಾರೆ. ‘‘ನಾನು ಎರಡು ವರ್ಷಗಳಿಂದ ಬ್ಯಾಡ್ಮಿಂಟನ್ ಆಡುತ್ತಿಲ್ಲ. ನನ್ನ ದೇಹವು ಆಟಕ್ಕೆ ಸ್ಪಂದಿಸುತ್ತಿಲ್ಲ. ನಾನು ನನ್ನದೇ ಉದ್ದೇಶಗಳಿಂದ ಆಟವಾಡಲು ಆರಂಭಿಸಿದೆ ಹಾಗೂ ನನ್ನದೇ ಉದ್ದೇಶಗಳಿಂದ ಬ್ಯಾಡ್ಮಿಂಟನ್ ಅಂಗಳದಿಂದ ಹಿಂದೆ ಸರಿದಿದ್ದೇನೆ’’ ಎಂದು ಸೈನಾ ನೆಹ್ವಾಲ್ ಅವರು ಪಾಡ್ಕಾಸ್ಟ್ನಲ್ಲಿ ಹೇಳಿದ್ದಾರೆ. ದೀರ್ಘಕಾಲದಿಂದ ಮೊಣಕಾಲಿನ ನೋವಿನಿಂದ ಬಳಲುತ್ತಿದ್ದ ನೆಹ್ವಾಲ್, ಕಳೆದ ಎರಡು ವರ್ಷಗಳಿಂದ ಬ್ಯಾಡ್ಮಿಂಟನ್ ಅಂಗಳದಿಂದ ದೂರ ಉಳಿದಿದ್ದರು. ಕೊನೆಯ ಬಾರಿ 2023ರ ಸಿಂಗಾಪುರ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಆಡಿದ್ದರು. ಸೈನಾ ಅವರು 2012ರ ಲಂಡನ್ ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ಜಯಿಸಿದ್ದರು. 2016ರ ರಿಯೋ ಒಲಿಂಪಿಕ್ಸ್ನಲ್ಲಿ ಮೊಣಕಾಲಿನ ಗಾಯಕ್ಕೆ ಒಳಗಾಗಿದ್ದು, ಇದು ಅವರ ವೃತ್ತಿಬದುಕಿನ ಮೇಲೆ ಗಾಢ ಪರಿಣಾಮ ಬೀರಿತು. ಗಾಯದಿಂದ ಮರಳಿದ ನಂತರ 2017ರ ವಿಶ್ವ ಚಾಂಪಿಯನ್ಶಿಪ್ನಲ್ಲಿ ಕಂಚು ಹಾಗೂ 2018ರ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಚಿನ್ನ ಗೆದ್ದಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಆಡಲು ಸಾಧ್ಯವಾಗದಿರುವುದರಿಂದ ನಿವೃತ್ತಿ ನಿರ್ಧಾರಕ್ಕೆ ಬಂದಿದ್ದಾರೆ. *ಸೈನಾ ಸಾಧನೆಗಳು ಬಿಡಬ್ಲ್ಯುಎಫ್ನ ಎಲ್ಲ ಪ್ರಮುಖ ಟೂರ್ನಿಗಳಲ್ಲಿ ಪದಕ ಗೆದ್ದ ಏಕೈಕ ಭಾರತೀಯ ಆಟಗಾರ್ತಿ ಬ್ಯಾಡ್ಮಿಂಟನ್ನಲ್ಲಿ ಒಲಿಂಪಿಕ್ಸ್ ಪದಕ ಗೆದ್ದ ಭಾರತದ ಮೊದಲ ಆಟಗಾರ್ತಿ ವಿಶ್ವ ಚಾಂಪಿಯನ್ಶಿಪ್ ಫೈನಲ್ಗೆ ತಲುಪಿದ ಭಾರತದ ಮೊದಲ ಆಟಗಾರ್ತಿ ವಿಶ್ವ ಜೂನಿಯರ್ ಚಾಂಪಿಯನ್ ಪಟ್ಟಕ್ಕೇರಿದ ಮೊದಲ ಭಾರತೀಯ ಆಟಗಾರ್ತಿ 2006ರಲ್ಲಿ 4 ಸ್ಟಾರ್ ಪ್ರಶಸ್ತಿ ಗೆದ್ದ ಏಶ್ಯದ ಕಿರಿಯ ಆಟಗಾರ್ತಿ ಬಿಡಬ್ಲ್ಯುಎಫ್ ಸೂಪರ್ ಸಿರೀಸ್ನಲ್ಲಿ ಚಾಂಪಿಯನ್ ಪಟ್ಟಕ್ಕೇರಿದ ಮೊದಲ ಭಾರತೀಯ ಆಟಗಾರ್ತಿ 2010 ಹಾಗೂ 2018ರ ಕಾಮನ್ವೆಲ್ತ್ ಗೇಮ್ಸ್ಗಳಲ್ಲಿ ಚಿನ್ನದ ಪದಕ 2018ರ ಏಶ್ಯನ್ ಗೇಮ್ಸ್ನಲ್ಲಿ ಕಂಚಿನ ಪದಕ 2012ರ ಲಂಡನ್ ಒಲಿಂಪಿಕ್ಸ್ನಲ್ಲಿ ಮಹಿಳೆಯರ ಸಿಂಗಲ್ಸ್ ಕಂಚಿನ ಪದಕ ಬಿಡಬ್ಲ್ಯುಎಫ್ ವರ್ಲ್ಡ್ ಚಾಂಪಿಯನ್ಶಿಪ್: 2015ರಲ್ಲಿ ಬೆಳ್ಳಿ, 2017ರಲ್ಲಿ ಕಂಚು ಬಿಡಬ್ಲ್ಯುಎಫ್ ವರ್ಲ್ಡ್ ಜೂನಿಯರ್ ಚಾಂಪಿಯನ್ಶಿಪ್: 2006ರಲ್ಲಿ ಬೆಳ್ಳಿ, 2008ರಲ್ಲಿ ಚಿನ್ನ *ಪ್ರಮುಖ ಪ್ರಶಸ್ತಿಗಳು 2008: ಬಿಡಬ್ಲ್ಯುಎಫ್ ವರ್ಷದ ಅತ್ಯಂತ ಭರವಸೆಯ ಆಟಗಾರ್ತಿ 2009: ಅರ್ಜುನ ಪ್ರಶಸ್ತಿ, ಮೇಜರ್ ಧ್ಯಾನ್ಚಂದ್ ಖೇಲ್ ರತ್ನ 2010: ಪದ್ಮ ಶ್ರೀ 2016: ಪದ್ಮ ಭೂಷಣ
ಗೋರಖ್ಪುರದಲ್ಲಿ, ಶಿಕ್ಷಕರು ಹೊಡೆಯುತ್ತಾರೆಂದು ಮಗಳು ಹೇಳಿದಾಗ, ತಂದೆಯೊಬ್ಬರು ನೇರವಾಗಿ ಶಾಲೆಗೆ ತೆರಳಿ, ತರಗತಿಯಲ್ಲಿಯೇ ಕುಳಿತು, ಮಗಳಿಗೆ ತಾಯಿ ಇಲ್ಲ, ತಾನೊಬ್ಬನೇ ಬೆಳೆಸಿದ್ದೇನೆ, ದಯವಿಟ್ಟು ಹೊಡೆಯಬೇಡಿ ಎಂದು ಶಿಕ್ಷಕರಿಗೆ ಕಣ್ಣೀರಿಟ್ಟು ಬೇಡಿಕೊಂಡ ಘಟನೆ ನಡೆದಿದೆ. ಈ ಹೃದಯಸ್ಪರ್ಶಿ ಘಟನೆ ತಂದೆಯ ಅಸಹಾಯಕತೆ ಮತ್ತು ಮಗಳ ಮೇಲಿನ ಪ್ರೀತಿಯನ್ನು ಎತ್ತಿ ತೋರಿಸಿದೆ.
Picture of the day : ಕುರ್ಚಿಯಲ್ಲಿ ನೂತನ ಬಾಸ್ - ಅವರ ಹಿಂದೆ ಬಿಜೆಪಿಯ ಶಿಸ್ತಿನ ಹಿರಿಯ ಕಾರ್ಯಕರ್ತರು
BJPs New Boss Nitin Boss : ಬಿಹಾರ ಮೂಲದ ನಿತಿನ್ ನಬೀನ್ ಬಿಜೆಪಿಯ ರಾಷ್ಟ್ರಾಧ್ಯಕ್ಷರಾಗಿ ಪದಗ್ರಹಣ ಮಾಡಿದ್ದಾರೆ. ಬಿಜೆಪಿಯ ಎಲ್ಲಾ ಹಿರಿಯ ನಾಯಕರು ಈ ವೇಳೆ ಹಾಜರಿದ್ದು, ನೂತನ ಬಾಸ್’ಗೆ ಶುಭವನ್ನು ಕೋರಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ನಬೀನ್ ಅವರನ್ನು ಬಾಸ್ ಎಂದು ಸಂಬೋಧಿಸಿದ್ದಾರೆ. ಮೋದಿ, ಶಾ ಆದಿಯಾಗಿ ನಿತಿನ್ ನಬೀನ್ ಹಿಂದೆ ನಿಂತಿರುವ ಫೋಟೋ, ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.
ಮೈಲಾರ ಜಾತ್ರೆಗೆ ಭದ್ರಾ ಡ್ಯಾಂನಿಂದ ನೀರು ಬಿಡುಗಡೆ; ಜಾತ್ರೆ ದಿನಾಂಕ ಏನು? ಗೊರವಯ್ಯನ ಕಾರ್ಣಿಕ ನುಡಿ ಯಾವಾಗ?
ಹಾವೇರಿ ಜಿಲ್ಲೆಯ ಮೈಲಾರ ಗ್ರಾಮದಲ್ಲಿ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ನಡೆಯಲಿದೆ. ಇದಕ್ಕಾಗಿ ಭದ್ರಾ ಜಲಾಶಯದಿಂದ ನದಿಗೆ 0.5 ಟಿಎಂಸಿ ನೀರು ಹರಿಸಲಾಗುತ್ತಿದೆ. ಜಾತ್ರೆ ಜನವರಿ 25 ರಿಂದ ಫೆಬ್ರವರಿ 5 ರವರೆಗೆ ನಡೆಯಲಿದ್ದು, ಫೆಬ್ರವರಿ 4 ರಂದು ಸಂಜೆ ಗೊರವಯ್ಯನಿಂದ ಕಾರ್ಣಿಕ ಜರುಗಲಿದೆ. ಭಕ್ತರು ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನ ಮಾಡಿ ದೇವರ ದರ್ಶನ ಪಡೆಯಲಿದ್ದಾರೆ.

16 C